<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 26 Apr 2026 06:02:14 +0530</lastBuildDate>
        <atom:link href="https://kannada.asianetnews.com/rss/kalaburagi" rel="self" type="application/rss+xml"/>
        <item>
            <title><![CDATA[ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ  ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ!]]></title>
            <link>https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na</link>
            <guid isPermaLink="true">https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na</guid>
            <pubDate>Fri, 17 Apr 2026 12:03:57 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಸುರಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್&zwnj;ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd28gy82ct386kxm2tnn8g5,imgname-yadagiri-accident-news-1776407561160.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಭಯಾನಕ ಅಪಘಾತದಲ್ಲಿ ಕನಿಷ್ಠ 6 ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಕಾರು ಮತ್ತು ಖಾಸಗಿ ಬಸ್ ನಡುವಿನ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಅಪಘಾತದ ಭೀಕರತೆ ಎಷ್ಟಿದೆ ಎಂದರೆ ಮೃತರ ತಲೆಬುರುಡೆಗಳು ಕಾರಿನಲ್ಲಿ ಕಾಣಿಸಿದೆ.&lt;/p&gt;&lt;h2&gt;ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್&lt;/h2&gt;&lt;p&gt;ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಏಸಿ ಬಸ್ ಮತ್ತು ಯಾದಗಿರಿಯಿಂದ ರಾಯಚೂರಿನ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡು ಸಜೀವ ದಹನಗೊಂಡಿದ್ದಾರೆ. ಕಾರು ಸಂಪೂರ್ಣವಾಗಿ ಕರಕಲಾಗಿದ್ದು, ಅದರಲ್ಲಿದ್ದ 6 ಮಂದಿ ಸ್ಥಳದಲ್ಲೇ &amp;nbsp;ಭಸ್ಮವಾಗಿದ್ದಾರೆ. ಬಸ್&zwnj;ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.&lt;/p&gt;&lt;h2&gt;ಬಸ್&zwnj;ಗೂ ವ್ಯಾಪಿಸಿದ ಬೆಂಕಿ&lt;/h2&gt;&lt;p&gt;ಅಪಘಾತದ ಹೊಡೆತಕ್ಕೆ ಬಸ್&zwnj;ಗೂ ಬೆಂಕಿ ತಗುಲಿದ್ದು, ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯರು ಹಾಗೂ ತಕ್ಷಣ ಆಗಮಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾದರು. ಆದರೆ ಕಾರು ಅಪ್ಪಚ್ಚಿಯಾಗಿ &amp;nbsp;ಡೋರ್ ಓಪನ್ &amp;nbsp;ಆಗಲೇ ಇಲ್ಲ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಹರಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿ ನಂದಿಸಿದ ನಂತರ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಆರಂಭಿಸಲಾಗಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸುರಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣವನ್ನು ತಿಳಿಯುವ ಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;ಈ ದುರಂತದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮತ್ತೆ ಖಾಸಗಿ ಬಸ್ ಅಪಘಾತದ ಭೀತಿ ಮೂಡಿಸಿದೆ. ರಸ್ತೆ ಸುರಕ್ಷತೆ ಕುರಿತು ಪ್ರಶ್ನೆಗಳು ಮತ್ತೆ ಉದ್ಭವಿಸಿವೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na"/>
        </item>
        <item>
            <title><![CDATA[ಕಲಬುರಗಿಯಲ್ಲಿ ಮಾಜಿ ಸಚಿವರ ಅಳಿಯನ ಬರ್ಬರ ಹ*ತ್ಯೆ: ಕಚೇರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿದ ದುಷ್ಕರ್ಮಿಗಳು!]]></title>
            <link>https://kannada.asianetnews.com/state/kalaburagi-former-minister-relative-anil-rathod-murder-case-police-investigation-san/articleshow-36mebw5</link>
            <guid isPermaLink="true">https://kannada.asianetnews.com/state/kalaburagi-former-minister-relative-anil-rathod-murder-case-police-investigation-san/articleshow-36mebw5</guid>
            <pubDate>Fri, 03 Apr 2026 07:41:54 +0530</pubDate>
            <description><![CDATA[ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಸಂಬಂಧಿ, ಉದ್ಯಮಿ ಅನಿಲ್ ರಾಠೋಡ್ ಅವರನ್ನು ಅವರ ಕಚೇರಿಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಹಣಕಾಸಿನ ವೈಷಮ್ಯವೇ ಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn8hrw19bwgn3gpnf2j7q8fx,imgname-anil-rathod-murder-in-kalaburagi-1775182311465.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಶರಣಯ್ಯ ಎಸ್&zwnj; ಹೀರೇಮಠ, ಏಷ್ಯಾನೆಟ್&zwnj; ಸುವರ್ಣ ನ್ಯೂಸ್&zwnj; ಕಲಬುರಗಿ ಪ್ರತಿನಿಧಿ&lt;/strong&gt;&lt;/p&gt;&lt;p&gt;&lt;strong&gt;ಕಲಬುರಗಿ (ಏ.3): &lt;/strong&gt;ನಗರದ ಹೃದಯಭಾಗದಲ್ಲಿರುವ ಪಿ ಆಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್&zwnj;ನಲ್ಲಿ ತಡರಾತ್ರಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನ ಸಹೋದರ ಅನಿಲ್ ರಾಠೋಡ್ (45) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯು ಕಲಬುರಗಿ ನಗರದಲ್ಲಿ ಭಾರಿ ಆತಂಕ ಮತ್ತು ಸಂಚಲನ ಮೂಡಿಸಿದೆ.&lt;/p&gt;&lt;p&gt;ಅನಿಲ್ ರಾಠೋಡ್ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್&zwnj;ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ನೇರವಾಗಿ ಕಚೇರಿ ಒಳಗೆ ನುಗ್ಗಿದೆ. ಯಾವುದೇ ಮುನ್ಸೂಚನೆ ಇಲ್ಲದೆ ಮಾರಕಾಸ್ತ್ರಗಳಿಂದ ಅನಿಲ್ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಹಂತಕರು ಅದೇ ಆಟೋದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.&lt;/p&gt;&lt;h2&gt;&lt;strong&gt;ವ್ಯಾಪಾರ ಮತ್ತು ಆರ್ಥಿಕ ವೈಷಮ್ಯದ ಶಂಕೆ&lt;/strong&gt;&lt;/h2&gt;&lt;p&gt;ಮೃತ ಅನಿಲ್ ರಾಠೋಡ್ ಅವರು ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರದಲ್ಲಿ ಸಕ್ರಿಯರಾಗಿದ್ದರು. ಅವರ ಹತ್ಯೆಗೆ ಹಣಕಾಸಿನ ವಿಚಾರವೇ ಪ್ರಮುಖ ಕಾರಣವಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ. ವೈಯಕ್ತಿಕ ಅಥವಾ ವ್ಯವಹಾರಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ.&lt;/p&gt;&lt;p&gt;ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳಿವುಗಳನ್ನು ಪತ್ತೆ ಹಚ್ಚಲು ಶ್ವಾನ ದಳ (Dog Squad) ಮತ್ತು ಫಿಂಗರ್ ಪ್ರಿಂಟ್ ತಜ್ಞರ ತಂಡ ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸಿದೆ.&lt;/p&gt;&lt;p&gt;ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಆಟೋದಲ್ಲಿ ಬಂದಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿರುವುದರಿಂದ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಶೀಘ್ರವೇ ಹಂತಕರನ್ನು ಸೆರೆ ಹಿಡಿಯುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kalaburagi</category>
            <dc:creator>Santosh Naik</dc:creator>
            <atom:link href="https://kannada.asianetnews.com/state/kalaburagi-former-minister-relative-anil-rathod-murder-case-police-investigation-san/articleshow-36mebw5"/>
        </item>
        <item>
            <title><![CDATA[ಎರಡು ಜಿಲ್ಲೆಯ ರೈತರಿಗೆ ಸುಮಾರು 20 ಸಾವಿರ ಹಸು ವಿತರಣೆ ಯೋಜನೆ  ಘೋಷಿಸಿದ ರಾಜ್ಯ ಸರ್ಕಾರ]]></title>
            <link>https://kannada.asianetnews.com/karnataka-districts/government-has-announced-a-scheme-to-distribute-about-20000-cows-to-farmers-in-belagavi-kalaburgi-mrq/articleshow-6cnz45t</link>
            <guid isPermaLink="true">https://kannada.asianetnews.com/karnataka-districts/government-has-announced-a-scheme-to-distribute-about-20000-cows-to-farmers-in-belagavi-kalaburgi-mrq/articleshow-6cnz45t</guid>
            <pubDate>Sun, 26 Apr 2026 06:02:08 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆಯಂದು ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ಪಶು ಸಂಗೋಪನೆ ಸಚಿವರು 2 ಜಿಲ್ಲೆಗಳ ರೈತರಿಗೆ ಶೇ.25ರ ಸಬ್ಸಿಡಿಯೊಂದಿಗೆ 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwmwqz7q9t758y9z0x56x99t,imgname-cows-1748752923894.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ಗ್ರಾಮೀಣ ಭಾಗದ ಜನರಿಗೆ ಹೈನುಗಾರಿಕೆ ಆದಾಯದ ಪ್ರಮುಖ ಮೂಲವಾಗಿದ್ದು, ಸರ್ಕಾರದಿಂದ ಈ ಕ್ಷೇತ್ರಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.&lt;/p&gt;&lt;p&gt;ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆ ಅಂಗವಾಗಿ 9ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.&amp;nbsp;&lt;/p&gt;&lt;h2&gt;&lt;strong&gt;20 ಸಾವಿರ ಹಸುಗಳನ್ನು ವಿತರಿಸುವ ಯೋಜನೆ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ದಿನಕ್ಕೆ 70-80 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಸರ್ಕಾರದ ಪ್ರೋತ್ಸಾಹದಿಂದ ಇದು 1 ಕೋಟಿಗೂ ಹೆಚ್ಚು ಲೀಟರ್&zwnj;ಗೆ ಏರಿಕೆಯಾಗಿದೆ. ಬಡ ರೈತರಿಗೆ ಹಸು ಖರೀದಿಸಲು ಅನುಕೂಲವಾಗಲು ಶೇ.25 ಸಬ್ಸಿಡಿ ನೀಡಲಾಗಿದ್ದು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಮಾರು 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆ ಕೈಗೊಳ್ಳಲಾಗಿದೆ ಎಂದು ಹೇಳಿದರು.&lt;/p&gt;&lt;p&gt;ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಲಸಿಕಾ ಕಾರ್ಯಕ್ರಮ ಅತ್ಯಂತ ಅಗತ್ಯವಾಗಿದೆ. ಪ್ರತಿಯೊಂದು ಗ್ರಾಮ ಹಾಗೂ ಕುಟುಂಬಕ್ಕೂ ಇದರ ಪ್ರಯೋಜನ ತಲುಪಬೇಕು ಎಂದರು.&lt;/p&gt;&lt;p&gt;ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಹೈನುಗಾರಿಕೆ ಮಹಿಳೆಯರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಬೇಕು. ಎಲ್ಲ ಜಾನುವಾರುಗಳಿಗೆ ಸೂಕ್ತ ಲಸಿಕೆ ನೀಡುವಂತೆ ಕರೆ ನೀಡಿದರು.&lt;/p&gt;&lt;p&gt;ಅಧ್ಯಕ್ಷತೆ ವಹಿಸಿದ ಶಾಸಕ ಆಸೀಫ್ ಸೇಠ್, ಪಶುಸಂಗೋಪನೆಯನ್ನು ಉತ್ತೇಜಿಸಿ ಜಾನುವಾರುಗಳ ಸಮರ್ಪಕ ಆರೈಕೆ ಮಾಡಬೇಕು ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;ಲಸಿಕಾ ಕಾರ್ಯಕ್ರಮ ಯಶಸ್ವಿ&lt;/strong&gt;&lt;/h3&gt;&lt;p&gt;ಪಶುಪಾಲನೆ ಇಲಾಖೆ ಆಯುಕ್ತ ಶಿಲ್ಪಾ ನಾಗ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಾದ್ಯಂತ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿ ಶಾಸಕ ಗಣೇಶ ಹುಕ್ಕೇರಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಉಪ ಮೇಯರ್&zwnj; ಹನುಮಂತ ಕೊಂಗಾಲಿ, ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶಿವಶರಣಪ್ಪ ಯಲಗೋಡ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ.ಪಿ.ಶ್ರೀನಿವಾಸು, ಅಪರ ನಿರ್ದೇಶಕ ಡಾ.ಶಿವರುದ್ರಪ್ಪ, ಕೆ.ಎಲ್.ಅಪರ ನಿರ್ದೇಶಕ ಡಾ.ಪ್ರಸಾದ ಮೂರ್ತಿ, ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಜಿಪಂ ಸಿಇಒ ರಾಹುಲ್ ಶಿಂಧೆ, ಜಂಟಿ ನಿರ್ದೇಶಕ ಡಾ.ಹೆಚ್.ನಾಗರಾಜ್, ಬೆಳಗಾವಿ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಕಾಂತ.ವಿ.ಎನ್, ಅಧಿಕಾರಿಗಳು ಉಪಸ್ಥಿತರಿದ್ದರು&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/government-has-announced-a-scheme-to-distribute-about-20000-cows-to-farmers-in-belagavi-kalaburgi-mrq/articleshow-6cnz45t"/>
        </item>
        <item>
            <title><![CDATA[ಕಲಬುರಗಿ: ದೇವಸ್ಥಾನಕ್ಕೆ ಹರಕೆ ತೀರಿಸಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಮುಳುಗಿ ಸಾವು!]]></title>
            <link>https://kannada.asianetnews.com/karnataka-districts/kalaburagi-afzalpur-mannur-two-students-drown-in-bhima-river-they-came-temple-sat/articleshow-8egpbpa</link>
            <guid isPermaLink="true">https://kannada.asianetnews.com/karnataka-districts/kalaburagi-afzalpur-mannur-two-students-drown-in-bhima-river-they-came-temple-sat/articleshow-8egpbpa</guid>
            <pubDate>Sun, 05 Apr 2026 13:29:48 +0530</pubDate>
            <description><![CDATA[&lt;p&gt;ಕಲಬುರಗಿಯ ಅಫಜಲಪುರ ತಾಲೂಕಿನಲ್ಲಿ, ದೇವಸ್ಥಾನಕ್ಕೆ ಹರಕೆ ತೀರಿಸಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಈಜಲು ಹೋಗಿ ಜಲಸಮಾಧಿಯಾಗಿದ್ದಾರೆ. ಮಣ್ಣೂರ್ ಯಲ್ಲಮ್ಮ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಇತ್ತೀಚೆಗೆ ಸುರಿದ ಮಳೆಯಿಂದ ನೀರಿನ ಹರಿವು ಹೆಚ್ಚಾಗಿದ್ದೇ ಘಟನೆಗೆ ಕಾರಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knead61k6419nkaenrjhkrb8,imgname-kalaburagi-bhima-river-death-1775375915059.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಏ.05): ಜಿ&lt;/strong&gt;ಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ದೈವದ ಹರಕೆ ತೀರಿಸಲು ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಈಜಲು ಹೋಗಿ ಜಲಸಮಾಧಿಯಾದ ದಾರುಣ ಘಟನೆ ಮಣ್ಣೂರ್ ಗ್ರಾಮದಲ್ಲಿ ನಡೆದಿದೆ.&lt;/p&gt;&lt;h3&gt;&lt;strong&gt;ಏನಿದು ಘಟನೆ?&lt;/strong&gt;&lt;/h3&gt;&lt;p&gt;ಮೃತ ವಿದ್ಯಾರ್ಥಿಗಳನ್ನು ಅಫಜಲಪುರ ತಾಲೂಕಿನ ಗೌರ್ (ಕೆ) ಗ್ರಾಮದ ನಿವಾಸಿಗಳಾದ ಪುಂಡಲಿಕ್ ಮೂಲಿಮನಿ (17) ಮತ್ತು ಮಹೇಶ್ (16) ಎಂದು ಗುರುತಿಸಲಾಗಿದೆ. ಈ ಇಬ್ಬರು ಸ್ನೇಹಿತರು ತಮ್ಮ ಕುಟುಂಬಸ್ಥರೊಂದಿಗೆ ಮಣ್ಣೂರ್ ಗ್ರಾಮದ ಪ್ರಸಿದ್ಧ ಮಣ್ಣೂರ್ ಯಲ್ಲಮ್ಮನ ದೇವಸ್ಥಾನಕ್ಕೆ ಹರಕೆ ತೀರಿಸುವ ಸಲುವಾಗಿ ಆಗಮಿಸಿದ್ದರು. ದೇವಸ್ಥಾನದಲ್ಲಿ ಪೂಜೆ ಮುಗಿಸಿ ದರ್ಶನ ಪಡೆದ ನಂತರ, ಮಧ್ಯಾಹ್ನದ ಸಮಯದಲ್ಲಿ ದೇವಸ್ಥಾನದ ಸಮೀಪದಲ್ಲೇ ಹರಿಯುವ ಭೀಮಾ ನದಿಯಲ್ಲಿ ಸ್ನಾನ ಮಾಡಲು ಮತ್ತು ಈಜಲು ತೆರಳಿದ್ದರು.&lt;/p&gt;&lt;h2&gt;&lt;strong&gt;ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ದುರಂತ:&lt;/strong&gt;&lt;/h2&gt;&lt;p&gt;ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಭೀಮಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನದಿಯ ಮೇಲ್ಭಾಗದಿಂದ ನೀರಿನ ಒಳಹರಿವು ಹೆಚ್ಚಾಗಿದ್ದರಿಂದ ನೀರಿನ ಹರಿವಿನ ವೇಗವು ಜೋರಾಗಿತ್ತು. ಇದನ್ನು ಗಮನಿಸದ ವಿದ್ಯಾರ್ಥಿಗಳು ಈಜಲು ನದಿಗೆ ಇಳಿದಿದ್ದಾರೆ. ಆದರೆ, ನೀರಿನ ಸೆಳೆತಕ್ಕೆ ಸಿಲುಕಿದ ವಿದ್ಯಾರ್ಥಿಗಳು ದಡಕ್ಕೆ ಬರಲಾಗದೆ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲೇ ವಿದ್ಯಾರ್ಥಿಗಳು ನೀರಿನಲ್ಲಿ ಮರೆಯಾಗಿದ್ದರು.&lt;/p&gt;&lt;h2&gt;&lt;strong&gt;ಕುಟುಂಬಸ್ಥರ ಆಕ್ರಂದನ:&lt;/strong&gt;&lt;/h2&gt;&lt;p&gt;ಹರಕೆ ತೀರಿಸಿ ಸಂತೋಷದಿಂದ ಮನೆಗೆ ಮರಳಬೇಕಿದ್ದ ಕುಟುಂಬದಲ್ಲಿ ಈಗ ಮಗುವನ್ನು ಕಳೆದುಕೊಂಡ ಆಕ್ರಂದನ ಮುಗಿಲು ಮುಟ್ಟಿದೆ. ದೇವಸ್ಥಾನಕ್ಕೆಂದು ಬಂದವರು ಹೆಣವಾಗಿ ಮರಳುತ್ತಿರುವುದನ್ನು ಕಂಡು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ. ಪುಂಡಲಿಕ್ ಮತ್ತು ಮಹೇಶ್ ಇಬ್ಬರೂ ಪ್ರತಿಭಾವಂತ ವಿದ್ಯಾರ್ಥಿಗಳಾಗಿದ್ದು, ಅವರ ಅಕಾಲಿಕ ಮರಣವು ಇಡೀ ಗೌರ್ (ಕೆ) ಗ್ರಾಮವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಕೆಟ್ ನೀರಲ್ಲಿ ಮುಳುಗಿ ಸತ್ತ 11 ತಿಂಗಳ ಮಗು; ಪತ್ರ ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ ತಾಯಿ&lt;/strong&gt;&lt;/p&gt;&lt;h2&gt;&lt;strong&gt;ಪೊಲೀಸ್ ತನಿಖೆ:&lt;/strong&gt;&lt;/h2&gt;&lt;p&gt;ವಿಷಯ ತಿಳಿದ ಕೂಡಲೇ ಅಫಜಲಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರು ಮತ್ತು ಈಜುಗಾರರ ಸಹಾಯದಿಂದ ನದಿಯಲ್ಲಿದ್ದ ವಿದ್ಯಾರ್ಥಿಗಳ ಶವಗಳನ್ನು ಹೊರತೆಗೆಯಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕ್ರಿಯೆ ಮುಗಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;&lt;h3&gt;&lt;strong&gt;ನದಿ ತೀರದಲ್ಲಿ ಎಚ್ಚರಿಕೆ ಅಗತ್ಯ:&lt;/strong&gt;&lt;/h3&gt;&lt;p&gt;ಮಳೆಗಾಲದ ಸಮಯದಲ್ಲಿ ಅಥವಾ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಾದಾಗ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿಗೆ ಇಳಿಯಬಾರದು ಎಂದು ಜಿಲ್ಲಾಡಳಿತ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ವಿಶೇಷವಾಗಿ ಯುವಕರು ಮತ್ತು ವಿದ್ಯಾರ್ಥಿಗಳು ನೀರಿನ ಆಳ ತಿಳಿಯದೆ ಸಾಹಸಕ್ಕೆ ಕೈಹಾಕಿ ಪ್ರಾಣ ಕಳೆದುಕೊಳ್ಳುತ್ತಿರುವುದು ವಿಷಾದನೀಯ.&lt;/p&gt;]]></content:encoded>
            <category>kalaburagi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/kalaburagi-afzalpur-mannur-two-students-drown-in-bhima-river-they-came-temple-sat/articleshow-8egpbpa"/>
        </item>
        <item>
            <title><![CDATA[Kalaburagi: ಮಗ ಬಂಗಾರ ಪದಕ ಪಡೆಯುವುದನ್ನು ನೋಡಬೇಕಿದ್ದ ತಂದೆ ಅಪಘಾತಕ್ಕೆ ಬಲಿ]]></title>
            <link>https://kannada.asianetnews.com/karnataka-districts/father-dies-in-accident-while-attending-son-s-college-event-cuk-convocation-kalaburagi-mrq/articleshow-8slktl2</link>
            <guid isPermaLink="true">https://kannada.asianetnews.com/karnataka-districts/father-dies-in-accident-while-attending-son-s-college-event-cuk-convocation-kalaburagi-mrq/articleshow-8slktl2</guid>
            <pubDate>Thu, 23 Apr 2026 07:33:47 +0530</pubDate>
            <description><![CDATA[ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಸ್ವೀಕರಿಸಬೇಕಿದ್ದ ವಿದ್ಯಾರ್ಥಿಯ ತಂದೆ, ಸಮಾರಂಭಕ್ಕೆ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಿಂದ ಮಗನ ಸಂಭ್ರಮ ಕಣ್ತುಂಬಿಕೊಳ್ಳಲು ಬಂದಿದ್ದ ತಂದೆಯ ದುರಂತ ಸಾವು, ಪದಕ ವಿಜೇತ ವಿದ್ಯಾರ್ಥಿಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpw1899x5myx88ekcky0ytfv,imgname-accident-1776909821245.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಘಟಿಕೋತ್ಸವದಲ್ಲಿ ಪುತ್ರ ಚಿನ್ನದ ಪದಕ ಪಡೆಯುವ ಸಂಭ್ರಮವನ್ನು ಕಣ್ಣು ತುಂಬಿಕೊಳ್ಳಲು ಮಧ್ಯಪ್ರದೇಶದಿಂದ ಬಂದಿದ್ದ ತಂದೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಕಲಬುರಗಿಯಲ್ಲಿ ನಡೆದಿದೆ.&lt;/p&gt;&lt;h2&gt;&lt;strong&gt;ದಿವ್ಯಾಂಶು ತಂದೆ ರಸ್ತೆ ಅಪಘಾತದಲ್ಲಿ ಸಾವು&lt;/strong&gt;&lt;/h2&gt;&lt;p&gt;ಸಿಯುಕೆಯಲ್ಲಿ ಅಧ್ಯಯನ ಮಾಡುತ್ತಿರುವ ಮಧ್ಯಪ್ರದೇಶದ ಉಜ್ಜಯಿನಿ ನಿವಾಸಿ ದಿವ್ಯಾಂಶು ಸಕ್ಸೇನಾ ಎಂಬ ವಿದ್ಯಾರ್ಥಿ ಇಲೆಕ್ಟಾನಿಕ್ಸ್&zwnj; ಮತ್ತು ಕಮ್ಯೂನಿಕೇಷನ್&zwnj; ಎಂಜಿನಿಯರಿಂಗ್&zwnj; ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದು ಡಬ್ಬಲ್&zwnj; ಗೋಲ್ಡ್&zwnj; ಮೆಡಲ್&zwnj; ಬಾಚಿಕೊಂಡಿದ್ದ. ಬುಧವಾರ ನಡೆದ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಅವರಿಂದ ಚಿನ್ನದ ಪದಕ ಪಡೆಯಬೇಕಿತ್ತು. ಆದರೆ, ಸಮಾರಂಭಕ್ಕೆ 4 ಗಂಟೆ ಬಾಕಿ ಇರುವಾಗಲೇ ದಿವ್ಯಾಂಶು ತಂದೆ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.&lt;/p&gt;&lt;h3&gt;&lt;strong&gt;ಸಹಪಾಠಿಗಳು ಕಣ್ಣೀರು&lt;/strong&gt;&lt;/h3&gt;&lt;p&gt;ಮಗನ ಚಿನ್ನದ ನಗು ಕಣ್ಣು ತುಂಬಿಕೊಳ್ಳಲು ಮಧ್ಯಪ್ರದೇಶದ ಉಜ್ಜಯಿನಿಯಿಂದ ಕಲಬುರಗಿಗೆ ಬಂದಿದ್ದ ತಂದೆ ಶಿವಕುಮಾರ್&zwnj; ಹಾಗೂ ತಾಯಿ ಮಾಲತಿ ಅವರು ನಗರದಿಂದ 18 ಕಿ.ಮೀ. ದೂರದ್ಲಲಿರುವ ವಿವಿಯ ಕ್ಯಾಂಪಸ್&zwnj;ಗೆ ಬರುವಾಗ ಅವರು ಪ್ರಯಾಣಿಸುತ್ತಿದ್ದ ಆಟೋ ಪಲ್ಟಿ ಹೊಡೆದಿದ್ದು, ದುರಂತದಲ್ಲಿ ಶಿವಕುಮಾರ್&zwnj; ತಲೆಗೆ ಭಾರಿ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿನ್ನದ ಪಕಗಳಿಗೆ ಕೊರಳಿಗೆ ಹಾಕಿಕೊಂಡು ಸಂಭ್ರಮಿಸಬೇಕಿದ್ದ ದಿವ್ಯಾಂಶು ತಂದೆ ಶವದ ಮುಂದೆ ಕಣ್ಣೀರು ಹಾಕುವ ದುರಂತ ಕಂಡು ಆತನ ಸಹಪಾಠಿಗಳು ಸಹ ಕಣ್ಣೀರು ಹಾಕಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕಾಂಗ್ರೆಸ್&zwnj; ಸರ್ಕಾರ ಮಹಿಳಾ ಮೀಸಲಾತಿ ವಿರೋಧಿ ಪಕ್ಷ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ : &lt;/strong&gt;&lt;strong&gt;ಬೆಂಗಳೂರು ನಗರದಲ್ಲಿ ಅಸಹನೀಯ ಬೇಸಿಗೆ, ಹೀಟ್ ಸ್ಟ್ರೋಕ್&zwnj;: ಅಂಗಾಂಗ ವೈಫಲ್ಯ ಭೀತಿ!&lt;/strong&gt;&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/father-dies-in-accident-while-attending-son-s-college-event-cuk-convocation-kalaburagi-mrq/articleshow-8slktl2"/>
        </item>
        <item>
            <title><![CDATA[ಆರ್‌ಡಿ ಪಾಟೀಲ್ ಜೈಲು ವರ್ಗಾವಣೆ ರದ್ದು, ಹೈಕೋರ್ಟ್ ಮಹತ್ವದ ತೀರ್ಪು ಮತ್ತೆ ಕಲಬುರಗಿಗೆ ಶಿಫ್ಟ್]]></title>
            <link>https://kannada.asianetnews.com/karnataka-districts/karnataka-high-court-quashes-psi-scam-accused-rd-patil-jail-transfer-order-gdp/articleshow-atsyoa0</link>
            <guid isPermaLink="true">https://kannada.asianetnews.com/karnataka-districts/karnataka-high-court-quashes-psi-scam-accused-rd-patil-jail-transfer-order-gdp/articleshow-atsyoa0</guid>
            <pubDate>Sat, 11 Apr 2026 18:50:00 +0530</pubDate>
            <description><![CDATA[ಪಿಎಸ್&zwnj;ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್&zwnj;ಡಿ ಪಾಟೀಲ್ ಅವರನ್ನು ಮೈಸೂರು ಜೈಲಿಗೆ ವರ್ಗಾಯಿಸಿದ್ದ ಕೆಳಹಂತದ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ನೈಸರ್ಗಿಕ ನ್ಯಾಯತತ್ವಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟ ಪೀಠ, ಪಾಟೀಲ್ ಅವರನ್ನು ತಕ್ಷಣವೇ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಮರಳಿ ಸ್ಥಳಾಂತರಿಸಲು ಆದೇಶಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kdwes8n7s58fx7fcnw53dwez,imgname-rd-patil--1--1767260332711.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಲಬುರಗಿ: ಪಿಎಸ್&zwnj;ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ (ಆರ್&zwnj;ಡಿ ಪಾಟೀಲ್) ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ವರ್ಗಾಯಿಸುವ ಕುರಿತು ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್&zwnj;ನ ಕಲಬುರಗಿ ಪೀಠ ರದ್ದುಗೊಳಿಸಿದೆ. ಇದರೊಂದಿಗೆ ಆರ್&zwnj;ಡಿ ಪಾಟೀಲ್ ಮತ್ತೆ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಮರಳುವಂತಾಗಿದೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2026ರ ಜನವರಿ 27ರಂದು ಆರ್&zwnj;ಡಿ ಪಾಟೀಲ್ ಅವರನ್ನು ಮೈಸೂರು ಜೈಲಿಗೆ ವರ್ಗಾಯಿಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವರ ಪತ್ನಿ ಶೋಭಾ ಹೈಕೋರ್ಟ್&zwnj;ಗೆ ಮೊರೆ ಹೋಗಿ ರಿಟ್ ಅರ್ಜಿ ಸಲ್ಲಿಸಿದ್ದರು.&lt;/p&gt;&lt;h2&gt;ಭದ್ರತಾ ಕಾರಣ ನೀಡಿರುವುದಕ್ಕೆ ಅಸಮಾಧಾನ&lt;/h2&gt;&lt;p&gt;ಈ ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ವಿಚಾರಣಾಧೀನ ಕೈದಿಯನ್ನು ವರ್ಗಾವಣೆ ಮಾಡುವ ಮುನ್ನ ಆತನಿಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಲು ಅಥವಾ ವಾದ ಮಂಡಿಸಲು ಅವಕಾಶ ನೀಡದಿರುವುದು ನೈಸರ್ಗಿಕ ನ್ಯಾಯತತ್ವಗಳ ಉಲ್ಲಂಘನೆ ಎಂದು ಸ್ಪಷ್ಟಪಡಿಸಿದೆ. ಜಿಲ್ಲಾ ನ್ಯಾಯಾಲಯ ಯಾವುದೇ ಸ್ಪಷ್ಟ ಹಾಗೂ ಸಮರ್ಪಕ ಕಾರಣಗಳನ್ನು ನೀಡದೆ ಕೇವಲ &lsquo;ಭದ್ರತಾ ಕಾರಣ&rsquo; ಎಂಬ ಸಾಮಾನ್ಯ ಪದ ಬಳಸಿ ಆದೇಶ ಹೊರಡಿಸಿರುವುದನ್ನೂ ಹೈಕೋರ್ಟ್ ತೀವ್ರವಾಗಿ ಟೀಕಿಸಿದೆ.&lt;/p&gt;&lt;p&gt;ಅರ್ಜಿದಾರರ ಪರ ವಕೀಲರು, ವಿಚಾರಣಾಧೀನ ಕೈದಿಯ ಹಕ್ಕುಗಳನ್ನು ಕಡೆಗಣಿಸಿ ಅವನನ್ನು ವರ್ಗಾವಣೆ ಮಾಡಲಾಗಿದೆ ಎಂದು ವಾದಿಸಿದ್ದರು. ಈ ವಾದವನ್ನು ಪರಿಗಣಿಸಿದ ಹೈಕೋರ್ಟ್, ವಿಚಾರಣಾಧೀನ ವ್ಯಕ್ತಿಗೆ ಕೇಳುವ ಹಕ್ಕು ನೀಡದೇ ತೆಗೆದುಕೊಂಡ ನಿರ್ಧಾರ ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿದೆ. ಇನ್ನೊಂದೆಡೆ, ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಜೈಲಿನ ಭದ್ರತೆಯ ದೃಷ್ಟಿಯಿಂದ ಈ ವರ್ಗಾವಣೆ ಅಗತ್ಯವಾಗಿತ್ತು ಎಂದು ವಾದಿಸಿದರು. ಆದರೆ, ವರ್ಗಾವಣೆ ಆದೇಶ ಹೊರಡಿಸುವ ಮೊದಲು ಆರೋಪಿ ತನ್ನ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿಲ್ಲ ಎಂಬುದನ್ನು ಅವರು ಒಪ್ಪಿಕೊಂಡರು.&lt;/p&gt;&lt;h2&gt;ಮೈಸೂರು ಜೈಲಿನಿಂದ ಕಲಬುರಗಿ ಕೇಂದ್ರ ಕಾರಾಗೃಹ&lt;/h2&gt;&lt;p&gt;ಈ ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ, ತಕ್ಷಣವೇ ಆರ್&zwnj;ಡಿ ಪಾಟೀಲ್ ಅವರನ್ನು ಮೈಸೂರು ಜೈಲಿನಿಂದ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಮರು ವರ್ಗಾವಣೆ ಮಾಡುವಂತೆ ಸೂಚಿಸಿದೆ. ಆದಾಗ್ಯೂ, ನ್ಯಾಯಾಲಯ ತನ್ನ ಆದೇಶದಲ್ಲಿ ಒಂದು ಮಹತ್ವದ ವಿಷಯವನ್ನು ಸ್ಪಷ್ಟಪಡಿಸಿದ್ದು, ಜೈಲು ಅಧಿಕಾರಿಗಳು ಕಾನೂನುಬದ್ಧ ವಿಧಾನಗಳನ್ನು ಅನುಸರಿಸಿ, ಸಮರ್ಪಕ ಕಾರಣಗಳನ್ನು ನೀಡುವ ಮೂಲಕ ಮುಂದಿನ ದಿನಗಳಲ್ಲಿ ವರ್ಗಾವಣೆ ಮಾಡಲು ಬಯಸಿದರೆ ಅದಕ್ಕೆ ಅವಕಾಶವಿದೆ ಎಂದು ಹೇಳಿದೆ.&lt;/p&gt;&lt;p&gt;ಒಟ್ಟಿನಲ್ಲಿ, ಹೈಕೋರ್ಟ್ ತೀರ್ಪು ವಿಚಾರಣಾಧೀನ ಕೈದಿಗಳ ಹಕ್ಕುಗಳ ರಕ್ಷಣೆಯ ಮಹತ್ವವನ್ನು ಮತ್ತೊಮ್ಮೆ ಒತ್ತಿಹೇಳಿದ್ದು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ನೈಸರ್ಗಿಕ ನ್ಯಾಯತತ್ವಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಸಂದೇಶವನ್ನು ನೀಡಿದೆ. ಈ ತೀರ್ಪಿನಿಂದ ಆರ್&zwnj;ಡಿ ಪಾಟೀಲ್ ಅವರ ಕುಟುಂಬಕ್ಕೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-high-court-quashes-psi-scam-accused-rd-patil-jail-transfer-order-gdp/articleshow-atsyoa0"/>
        </item>
        <item>
            <title><![CDATA[ಕೇಳಿದ್ದೆಲ್ಲವನ್ನೂ ಕೊಡ್ತಿದ್ದ 57ರ ಸರ್ಕಾರಿ ಶಾಲಾ ಶಿಕ್ಷಕಿಯ 27ರ ಹರೆಯದ ಪ್ರೇಮಿ: ಏಕಾಏಕಿ ಸುಟ್ಟು ಹಾಕಿದ್ದೇಕೆ?]]></title>
            <link>https://kannada.asianetnews.com/relationship/20-year-age-gap-kalaburagi-57-year-old-jyoti-teacher-murder-case-27-year-old-amar-guddalli-arrested-sat/articleshow-b22l1y0</link>
            <guid isPermaLink="true">https://kannada.asianetnews.com/relationship/20-year-age-gap-kalaburagi-57-year-old-jyoti-teacher-murder-case-27-year-old-amar-guddalli-arrested-sat/articleshow-b22l1y0</guid>
            <pubDate>Wed, 08 Apr 2026 17:34:50 +0530</pubDate>
            <description><![CDATA[&lt;p&gt;ಕಲಬುರಗಿಯಲ್ಲಿ 57 ವರ್ಷದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ತಮ್ಮ ಮಗನ ವಯಸ್ಸಿನ ಯುವಕನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಆರೋಪಿ ಆಕೆಯನ್ನು ಕೊಲೆ ಮಾಡಿ ಶವವನ್ನು ಸುಟ್ಟುಹಾಕಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knpff7ybcznn98k5td84rdte,imgname-kalaburagi-teacher-1775649660875.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಏ.08): &lt;/strong&gt;ಪ್ರೀತಿಗೆ ವಯಸ್ಸಿನ ಹಂಗಿಲ್ಲ ಎನ್ನುತ್ತಾರೆ. ಆದರೆ ಅದೇ ಪ್ರೀತಿ ಹಾದಿ ತಪ್ಪಿದಾಗ, ಹಣದ ವ್ಯಾಮೋಹ ಬೆರೆತಾಗ ಎಂತಹ ಭೀಕರ ಅಂತ್ಯ ಕಾಣುತ್ತದೆ ಎಂಬುದಕ್ಕೆ ಕಲಬುರಗಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಮಗನ ವಯಸ್ಸಿನ ಯುವಕನೊಂದಿಗೆ ಸಲ್ಲದ ಸಂಬಂಧ ಬೆಳೆಸಿದ್ದ 57 ವರ್ಷದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಅದೇ ಯುವಕನ ಕೈಯಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ. ಕೊಲೆ ಮಾಡಿದ ಬಳಿಕ ಶವವನ್ನು ಸುಟ್ಟು ಹಾಕಿದ್ದ ಕಿರಾತಕ ಈಗ ಪೊಲೀಸರ ಅತಿಥಿಯಾಗಿದ್ದಾನೆ.&lt;/p&gt;&lt;h2&gt;&lt;strong&gt;ಸುಟ್ಟು ಕರಕಲಾಗಿದ್ದ ಶವದ ರಹಸ್ಯ:&lt;/strong&gt;&lt;/h2&gt;&lt;p&gt;ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲಮೂಡ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅರ್ಧಮರ್ದ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಶವ ಸಂಪೂರ್ಣ ಸುಟ್ಟು ಹೋಗಿದ್ದರಿಂದ ಗುರುತು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು. ತನಿಖೆ ಚುರುಕುಗೊಳಿಸಿದ ಕಮಲಾಪುರ ಪೊಲೀಸರಿಗೆ ಇದು ಕಲಬುರಗಿ ನಿವಾಸಿ ಜ್ಯೋತಿ ಕಪಾಳೆ (57) ಅವರ ಶವ ಎಂದು ತಿಳಿದುಬಂದಿದೆ. ಜ್ಯೋತಿ ಅವರು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಾಂಜರಖೇಡ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.&lt;/p&gt;&lt;h2&gt;&lt;strong&gt;ಅಕ್ರಮ ಸಂಬಂಧ ಮತ್ತು ಹಣದ ವ್ಯವಹಾರ:&lt;/strong&gt;&lt;/h2&gt;&lt;p&gt;ಅವಿವಾಹಿತೆಯಾಗಿದ್ದ ಜ್ಯೋತಿ ಅವರು ಭಾಲ್ಕಿಯಲ್ಲಿ ವಾಸವಿದ್ದರು. ರಜೆ ದಿನಗಳಲ್ಲಿ ಕಲಬುರಗಿಯ ಆನಂದ ನಗರದಲ್ಲಿರುವ ತಾಯಿ ಮನೆಗೆ ಬರುತ್ತಿದ್ದರು. ಈ ವೇಳೆ ಅವರಿಗೆ ನೆರೆಯ ನಿವಾಸಿ ಅಮರ ಗುಡ್ಡಳ್ಳಿ (27) ಎಂಬಾತನ ಪರಿಚಯವಾಗಿತ್ತು. ಕಳೆದ ಐದು ವರ್ಷಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧವಿತ್ತು. 27ರ ಹರೆಯದ ಅಮರನಿಗೆ ಮದುವೆಯಾಗಿ ಹೆಂಡತಿ ಮಕ್ಕಳಿದ್ದರೂ, ಟೀಚರ್ ಜ್ಯೋತಿ ನೀಡುತ್ತಿದ್ದ ಹಣದ ಆಮಿಷಕ್ಕೆ ಬಿದ್ದು ಆಕೆಯೊಂದಿಗೆ ಸಂಬಂಧ ಮುಂದುವರಿಸಿದ್ದ. ಜ್ಯೋತಿ ನೀಡಿದ್ದ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣದಲ್ಲಿ ಅಮರ್ ಐಷಾರಾಮಿ 'ಥಾರ್' ಕಾರನ್ನು ಕೂಡ ಖರೀದಿಸಿದ್ದ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;40 ವರ್ಷದ ಗಂಡ ಬೇಡ, ಪ್ರಿಯತಮ ಬೇಕು: ಯುವತಿ ಕೋರಿಕೆಗೆ ನ್ಯಾಯಾಲಯದಿಂದ ಮಹತ್ವದ ತೀರ್ಪು&lt;/strong&gt;&lt;/p&gt;&lt;h3&gt;&lt;strong&gt;ಕೊಲೆಗೆ ಕಾರಣವಾಯ್ತು ಹಣದ ಒತ್ತಡ:&lt;/strong&gt;&lt;/h3&gt;&lt;p&gt;ಇತ್ತೀಚಿನ ದಿನಗಳಲ್ಲಿ ಜ್ಯೋತಿ ಅವರು ತಾನು ನೀಡಿದ್ದ ಹಣವನ್ನು ಮರಳಿ ನೀಡುವಂತೆ ಅಮರನಿಗೆ ಒತ್ತಡ ಹೇರಲಾರಂಭಿಸಿದ್ದರು. ಇದರಿಂದ ಆಕ್ರೋಶಗೊಂಡ ಅಮರ್, ಜ್ಯೋತಿಯನ್ನು ಹಾದಿಯಿಂದ ತಪ್ಪಿಸಲು ಸಂಚು ರೂಪಿಸಿದ್ದಾನೆ. ಏಪ್ರಿಲ್ 3 ರಂದು ಜ್ಯೋತಿಯನ್ನು ತನ್ನ ಥಾರ್ ಕಾರಿನಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಸೇರಿದಂತೆ ವಿವಿಧೆಡೆ ಸುತ್ತಾಡಿಸಿದ್ದಾನೆ. ರಾತ್ರಿ ವೇಳೆಗೆ ಕಲಮೂಡ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಮೊದಲೇ ಸಿದ್ಧಪಡಿಸಿಕೊಂಡಿದ್ದ ಹರಿತವಾದ ಆಯುಧದಿಂದ ಜ್ಯೋತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸಾಕ್ಷ್ಯ ನಾಶಪಡಿಸಲು ಕಾರಿನ ಡಿಕ್ಕಿಯಲ್ಲಿ ತಂದಿದ್ದ ಪೆಟ್ರೋಲ್ ಸುರಿದು ಶವಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದ.&lt;/p&gt;&lt;h2&gt;&lt;strong&gt;ಪೊಲೀಸರ ಬಲೆಗೆ ಬಿದ್ದ ಕಿರಾತಕ:&lt;/strong&gt;&lt;/h2&gt;&lt;p&gt;ಮೊಬೈಲ್ ಕರೆಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಅಮರನ ಮೇಲೆ ಅನುಮಾನ ಬಂದಿತ್ತು. ತಲೆಮರೆಸಿಕೊಂಡಿದ್ದ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಡೀ ಕೊಲೆ ರಹಸ್ಯ ಬಯಲಾಗಿದೆ. ಆರೋಪಿಯಿಂದ ಕೊಲೆಗೆ ಬಳಸಿದ ಆಯುಧ, ಪೆಟ್ರೋಲ್ ಕ್ಯಾನ್ ಹಾಗೂ ಥಾರ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಹಂತಕ ಅಮರ ಕಲಬುರಗಿ ಕೇಂದ್ರ ಕಾರಾಗೃಹ ಸೇರಿದ್ದಾನೆ. ಒಟ್ಟಿನಲ್ಲಿ, ಸಲ್ಲದ ಸಂಬಂಧ ಮತ್ತು ಹಣದ ಹಪಾಹಪಿ ಒಬ್ಬ ಶಿಕ್ಷಕಿಯ ಪ್ರಾಣವನ್ನು ಬಲಿ ಪಡೆದರೆ, ಒಬ್ಬ ಯುವಕನ ಜೀವನವನ್ನು ಜೈಲು ಪಾಲಾಗುವಂತೆ ಮಾಡಿದೆ.&lt;/p&gt;]]></content:encoded>
            <category>kalaburagi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/relationship/20-year-age-gap-kalaburagi-57-year-old-jyoti-teacher-murder-case-27-year-old-amar-guddalli-arrested-sat/articleshow-b22l1y0"/>
        </item>
        <item>
            <title><![CDATA[ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಬಾಳಿ, ಮೂಢನಂಬಿಕೆ ಬಿಟ್ಬಾಕಿ: ಸಿಎಂ ಸಿದ್ದರಾಮಯ್ಯ]]></title>
            <link>https://kannada.asianetnews.com/karnataka-districts/cm-siddaramaiah-caste-free-society-message-kalaburagi-gvd/articleshow-e37img6</link>
            <guid isPermaLink="true">https://kannada.asianetnews.com/karnataka-districts/cm-siddaramaiah-caste-free-society-message-kalaburagi-gvd/articleshow-e37img6</guid>
            <pubDate>Sun, 12 Apr 2026 18:30:50 +0530</pubDate>
            <description><![CDATA[&lt;p&gt;ದ್ವೇಷ ಬಿಟ್ಟು ಎಲ್ಲರೂ ಪರಸ್ಪರ&zwnj; ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಮನುಷ್ಯರಾಗಿ ಬಾಳಬೇಕಿದೆ. ಮೂಢನಂಬಿಕೆ&zwnj; ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kezraqgntjngtebfj526shcc,imgname-siddaramaiah-1768444747285.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಏ.12):&lt;/strong&gt; ಜಾತಿ ರಹಿತ ಸಮ&zwnj;-ಸಮಾಜ ನಿರ್ಮಾಣವಾಗಬೇಕಾದರೆ ದ್ವೇಷ ಬಿಟ್ಟು ಎಲ್ಲರೂ ಪರಸ್ಪರ&zwnj; ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಮನುಷ್ಯರಾಗಿ ಬಾಳಬೇಕಿದೆ. ಮೂಢನಂಬಿಕೆ&zwnj; ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಗೂರ (ಎನ್) ಗ್ರಾಮದಲ್ಲಿ ಮಹಾತ್ಮ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದಿಂದ ಆಯೋಜಿಸಿದ ಭೋಜಲಿಂಗೇಶ್ವರರ ನೂತನ ದೇವಸ್ಥಾನ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾಪನೆ, ನೂತನ ಬೆಳ್ಳಿ ರಥೋತ್ಸವ ಚಾಲನೆ ಹಾಗೂ ಕಲ್ಯಾಣ ಮಂಟಪ ಉದ್ಘಾಟಿಸಿ ಮಾತನಾಡಿದರು.&lt;/p&gt;&lt;p&gt;ಸಮಾಜದಲ್ಲಿ ಅನೇಕ ಜಾತಿ ಧರ್ಮಗಳಿವೆ, ಅನೇಕ ಭಾಷೆ ಸಂಸ್ಕೃತಿಗಳಿವೆ. ವೈವಿದ್ಯತೆ ಇರುವ ಸಮಾಜದಲ್ಲಿ ಏಕತೆ ಪ್ರದರ್ಶನ ಮಾಡುವುದು ಅತ್ಯವಶ್ಯಕ. ಯಾವುದೇ ಧರ್ಮ ದ್ವೇಷ ಮಾಡಲು ಹೇಳುವುದಿಲ್ಲ ಎಲ್ಲರನ್ನೂ ಪ್ರೀತಿಸಿದಾಗಲೇ ಮಾನವ ಸಮಾಜ ನಿರ್ಮಾಣ ಸಾಧ್ಯ ಎಂದ ಅವರು, ಇದೇ ತತ್ವವನ್ನು ಸಾರಿದ ಮತ್ತು ಸತ್ಯದ ಹಾದಿ ತೋರಿದ ಭೋಜಲಿಂಗೇಶ್ವರ ಮಠ ಸರ್ವ&zwnj; ಧರ್ಮದ ಭಕ್ತ ವೃಂದದ ಉದ್ದಾರಕ್ಕೆ ಶ್ರಮಿಸುವ ಜಾತ್ಯಾತೀತ ಮಠವಾಗಿ ಬೆಳೆಯಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.&lt;/p&gt;&lt;p&gt;ಧರ್ಮದ ಹೆಸರಲ್ಲಿ ಜಾತಿಯನ್ನು ಒಡೆದು, ಒಂದು ಧರ್ಮದ ಜನರನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುವ ಪಟ್ಟಭದ್ರ ಹಿತಾಸಕ್ತಿಗಳು ನಮ್ಮ ನಡುವೆ ಇದ್ದಾರೆ. ನೀವು ಅಂತಹ ಪಟ್ಟಭದ್ರರ ಮಾತು ಕೇಳಬಾರದು. ಸರ್ವರನ್ನು ಪ್ರೀತಿಸುವ ಮನೋಬಾವನೆ ಬೆಳೆಸಿಕೊಳ್ಲಬೇಕು ಮತ್ತು ಒಗ್ಗಟ್ಟಾಗಿರಬೇಕು ಎಂದು ಸಮುದಾಯಕ್ಕೆ ಕರೆ ನೀಡಿದ ಸಿ.ಎಂ. ಅವರು, ಇದನ್ನೆ ಭೋಜಲಿಂಗೇಶ್ವರ ಹೇಳಿದ್ದಾರೆ ಎಂದು ಪುನರುಚ್ಚರಿಸಿದರು.&lt;/p&gt;&lt;p&gt;ಸ್ವಚ್ಛ ಮನಸಿನಿಂದ ದೇವಸ್ಥಾನಕ್ಕೆ ಹೋಗಿ ನಮಗಷ್ಟೇ ಅಲ್ಲದೇ ಎಲ್ಲರಿಗೂ ಒಳ್ಳೆಯದು ಮಾಡು ಎಂದು ಪ್ರಾರ್ಥಿಸಿದಾಗ ಮಾತ್ರ ಫಲ ಸಿಗುತ್ತದೆ. ಬಸವಣ್ಣ, ಸೂಫಿ, ಸಂತರು ಕೂಡಾ ಇದನ್ನೇ ಪ್ರತಿಪಾದಿಸಿದರು. ಬಸವಣ್ಣ ಕಾಯಕ ಹಾಗೂ ದಾಸೋಹ ಎರಡನ್ನು ಒತ್ತಿ ಹೇಳಿದ್ದಾರೆ. ಎಲ್ಲರೂ ಕಷ್ಟಪಟ್ಟು ದುಡಿಯಬೇಕು. ಸಮಾನವಾಗಿ ಹಂಚಿಕೊಳ್ಳಬೇಕು. ಕಾಯಕ ಹಾಗೂ ದಾಸೋಹಗಳನ್ನು ಎಲ್ಲರೂ ಮಾಡಬೇಕು. ಕೆಲವರೇ ಮಾಡಿದರೆ ಅಸಮಾನತೆ ಸಮಾಜ&zwnj; ನಿರ್ಮಾಣವಾಗುತ್ತದೆ. ಪ್ರತಿಯೊಬ್ಬರಿಗೆ ಸಮಾನತೆ ಹಾಗೂ ಆರ್ಥಿಕ&zwnj;ಶಕ್ತಿ ಬಂದಾಗ ಮಾತ್ರ ಸಮಾನತೆ&zwnj; ಬರಲು ಸಾಧ್ಯ ಎಂದರು.&lt;/p&gt;&lt;p&gt;ಭೋಜಲಿಂಗೇಶ್ವರ ದೇವಾಲಯದ ಶಕ್ತಿ ಜನರಿಗೆ ತಿಳಿಸುವ ಕೆಲಸ ನೀವೆಲ್ಲ ಮಾಡಬೇಕು ಎಂದು ಹೇಳಿದ ಸಿಎಂ, ಬಸವಣ್ಣನವರ ಇವನಾರವ ಇವನಾರವ ಎಂದೆನಿಸದಿರಯ್ಯ ಎನ್ನುವ ವಚನ ಹಾಗೂ ಕನಕದಾಸರ ಕುಲಕುಲವೆಂದು ಹೊಡದಾಡದಿರಿ ಎನ್ನುವ ವಾಣಿಯನ್ನು ಸಿಎಂ ಉಚ್ಚರಿಸಿದರು.&lt;/p&gt;&lt;p&gt;ಬಸವಣ್ಣನವರ,&zwnj; ಕನಕದಾಸರ ಶರಣರ, ಸಾಧು ಸಂತರ ಸಮಾನತೆಯ ತತ್ವಗಳು ಇದ್ದರೂ ಇನ್ನೂ&zwnj; ಜಾತಿ ವ್ಯವಸ್ಥೆ ಹೋಗಿಲ್ಲ. ಇವನಾರವ ಎನ್ನುತ್ತೇವೆ ಹೊರತು ಇವ ನಮ್ಮವ ಎನ್ನುತ್ತಿಲ್ಲ. ಕನಕದಾಸರ ಉಕ್ತಿ ಯಂತೆ ಕುಲದ ಆಚೆಗೆ ನಾವೆಲ್ಲ&zwnj; ಮನುಷ್ಯರಾಗಿ ಬಾಳಬೇಕು ಎಂದು ಕರೆ ನೀಡಿದ ಸಿಎಂ, ಡಾ ಅಂಬೇಡ್ಕರ್ ಅವರ ಆಶಯದಂತೆ ಎಲ್ಲರೂ ಸಮಾನವಾಗಿ ಬಾಳಬೇಕು. ಈ ಎಲ್ಲ ತತ್ವಗಳು ಜಾರಿಗೆ ಬರಲು ಪ್ರತಿಯೊಬ್ಬರು ಆಚರಣೆ ಮಾಡಬೇಕು. ಜಾತಿ ವ್ಯವಸ್ಥೆಯ ವಿರುದ್ಧ ಚಾಲನೆ ಸಿಗಬೇಕೆಂದರೆ ಶಿಕ್ಷಣ ದೊರಕಿದಾಗ ಮಾತ್ರ ಸಮಾನತೆ ಸಿಗುತ್ತದೆ. ದೇವಸ್ಥಾನ ಉದ್ಘಾಟನೆ ನೆರವೇರಿಸಿದ್ದೇನೆ. ಇದು ಸಾರ್ಥಕವಾಗಬೇಕಾದರೆ ನೀವೆಲ್ಲ ಮನುಷ್ಯರಾಗಿ ಬಾಳಬೇಕು ಎಂದರು.&lt;/p&gt;&lt;p&gt;ಜಾತಿ ವ್ಯವಸ್ಥೆ ಸ್ವಲ್ಪ&zwnj; ಕಡಿಮೆಯಾಗಿದೆಯಾದರು ಇನ್ನೂ ಪೂರ್ಣವಾಗಿ ಹೋಗಿಲ್ಲ. ಅದು ತುಂಬಾ ಜಡತ್ವ ಹೊಂದಿದೆ. ಪ್ರತಿಯೊಬ್ಬರು ವೈಚಾರಿಕತೆ ಹಾಗೂ ವೈಜ್ಞಾನಿಕ ಹಿನ್ನೆಲೆಯ ಇರುವ ವಿದ್ಯೆ ಪಡೆದುಕೊಳ್ಳಬೇಕು. ಸಮಾಜದಲ್ಲಿ ಮೂಢನಂಬಿಕೆಗಳ ದಾಸರಾಗಬೇಡಿ. ಬಸವಣ್ಣನವರು ಆ ಕಾಲದಲ್ಲಿಯೇ ಕರ್ಮ ಸಿದ್ಧಾಂತ ತಿರಸ್ಕಾರ ಮಾಡಿದ್ದರು. ಈಗಲೂ ವಿದ್ಯಾವಂತರು ಇದನ್ನು&zwnj; ನಂಬುತ್ತಿರುವುದು ದುರಂತ. ಕರ್ಮ&zwnj;ಸಿದ್ದಾಂತವೇ ಶುದ್ಧ ಸುಳು. ಅದನ್ನು ನಂಬಬೇಡಿ ಎಂದು ಜನ ಸಮುದಾಯಕ್ಕೆ ಕರೆ&zwnj;ನೀಡಿದರು.&lt;/p&gt;&lt;h2&gt;&lt;strong&gt;ವಸತಿ ನಿಲಯ, ಯಾತ್ರಿಕ ನಿವಾಸಕ್ಕೆ ಅನುದಾನ&lt;/strong&gt;&lt;/h2&gt;&lt;p&gt;ಹಿರಗಪ್ಪ ತಾತನವರ ಬೇಡಿಕೆಯಂತೆ ಸುಕ್ಷೇತ್ರದಲ್ಲಿ ವಸತಿ&zwnj; ನಿಲಯ ನಿರ್ಮಾಣ ಹಾಗೂ ಭಕ್ತಾದಿಗಳಿಗೆ ಯಾತ್ರಿ ನಿವಾಸ ಸ್ಥಾಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಯಾತ್ರಿ&zwnj; ನಿವಾಸಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು 1 ಕೋಟಿ ರೂ. ಹಣ ನೀಡುವ ಭರವಸೆ ನೀಡಿದ್ದಾರೆ. ವಸತಿ ನಿಲಯ ಪ್ರಾರಂಭಕ್ಕೆ&zwnj; ಸರ್ಕಾರ ಸಹಾಯ ಮಾಡಲಿದೆ ಎಂದು ಭರವಸೆ ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಭಕ್ತರ ಕೋರಿಕೆಯಂತೆ ಸುಕ್ಷೇತ್ರದ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ನೀಡಲಾಗುವುದು. ಇದಲ್ಲದೆ ಭಕ್ತರಿಂದ ನಿರ್ಮಿಸಲಾದ ದೇವಸ್ಥಾನದ ಜೀರ್ಣೋದ್ಧಾರಕ್ಕು ಸಹ ತಾವು ಬದ್ದ ಇರುವುದಾಗಿ ತಿಳಿಸಿದರು.&lt;/p&gt;]]></content:encoded>
            <category>kalaburagi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/cm-siddaramaiah-caste-free-society-message-kalaburagi-gvd/articleshow-e37img6"/>
        </item>
        <item>
            <title><![CDATA[ಧಾರವಾಡ ವಿದ್ಯಾರ್ಥಿಗಳ ಪ್ರತಿಭಟನೆ ರೀತಿ ಕಲಬುರಗಿಯಲ್ಲೂ ಉದ್ಯೋಗ ಆಕಾಂಕ್ಷಿಗಳ ಹೋರಾಟ]]></title>
            <link>https://kannada.asianetnews.com/karnataka-districts/job-aspirants-protest-spreads-kalaburagi-joins-dharwad-style-stir-over-recruitment-rav/articleshow-gdbn8qe</link>
            <guid isPermaLink="true">https://kannada.asianetnews.com/karnataka-districts/job-aspirants-protest-spreads-kalaburagi-joins-dharwad-style-stir-over-recruitment-rav/articleshow-gdbn8qe</guid>
            <pubDate>Sat, 28 Mar 2026 10:58:27 +0530</pubDate>
            <description><![CDATA[&lt;p&gt;ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmsea8v589zjtg39mhfgw1wr,imgname----------------------66--1774675370853.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡದ ರೀತಿಯಲ್ಲೇ ವಿದ್ಯಾರ್ಥಿಗಳ ಬೃಹತ್ ಧರಣಿ । ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ&lt;/p&gt;&lt;p&gt;&amp;nbsp;&lt;strong&gt;ಕಲಬುರಗಿ (ಮಾ.28): &lt;/strong&gt;ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಗದಿತ ಕಾಲಮಿತಿಯಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದ ಮಾದರಿಯಲ್ಲಿಯೇ ಶುಕ್ರವಾರ ಕಲಬುರಗಿಯಲ್ಲಿಯೂ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್&zwnj; ಪ್ರತಿಭಟನೆ ನಡೆಯಿತು.&lt;/p&gt;&lt;p&gt;ಅಕ್ಸಾ ಸಂಘಟನೆಯ ಕರೆಯ ಮೇರೆಗೆ ಸ್ಥಳೀಯ ವಿದ್ಯಾರ್ಥಿ ಸಂಘಟನೆಗಳು, ನಿರುದ್ಯೋಗಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಸುಡು ಬಿಸಿಲಿನಲ್ಲಿಯೇ ನಗರದ ಜಗತ್&zwnj; ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ಘೋಷಣೆ ಕೂಗುತ್ತಲೇ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 56 ಸಾವಿರ ಹುದ್ದೆ ಭರ್ತಿ ಮಾಡೋದಾಗಿ ಸರ್ಕಾರ ಹೇಳಿದ್ದು, ಭರ್ತಿ ಪ್ರಕ್ರಿಯೆಗೆ ಕಾಲಮಿತಿ ಹಾಕಬೇಕು. ಜೊತೆಗೆ ಕೆಪಿಎಸ್&zwnj;ಸಿ ಹಗರಣಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.&lt;/p&gt;&lt;h2&gt;.80 ಲಕ್ಷ ಹುದ್ದೆ ಖಾಲಿ:&amp;nbsp;&lt;/h2&gt;&lt;p&gt;ಕಳೆದ ದಶಕದಿಂದ ನೇಮಕಾತಿ ಮಾಡದ್ದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇವೆ. ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, 30 ದಿನಗಳಲ್ಲಿ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ ಶುರು ಮಾಡಬೇಕು ಎಂದು ಕಾಂತಕುಮಾರ್&zwnj; ಒತ್ತಾಯಿಸಿದರು.&lt;/p&gt;&lt;p&gt;ಕಳೆದ ಫೆಬ್ರವರಿಯಲ್ಲಿ ಧಾರವಾಡದಲ್ಲಿ ಗಮನ ಸೆಳೆಯುವಂತೆ ಹೋರಾಟ ಮಾಡಿ ಸುದ್ದಿಯಾಗಿದ್ದ &lsquo;ಅಕ್ಸಾ&rsquo; ಸಂಘಟನೆ ಕಲಬುರಗಿಯಲ್ಲಿ ಮಾ.23ರಂದು ನಡೆಸಲು ಉದ್ದೇಶಿಸಿದ್ದ ಹೋರಾಟಕ್ಕೆ ಪೊಲೀಸರು ಪರವಾನಿಗೆ ನಿರಾಕರಿಸಿದಾಗ ಸಂಘಟಕರು ಹೈಕೋರ್ಟ್&zwnj;ನಲ್ಲಿ ಪ್ರಶ್ನಿಸಿ ಪರವಾನಿಗೆ ಪಡೆದಿದ್ದರಿಂದ ಹೋರಾಟವು ಗಮನ ಸೆಳೆಯುವಂತೆ ಮಾಡಿತ್ತು.&lt;/p&gt;&lt;p&gt;ಅಕ್ಸಾ ಅಧ್ಯಕ್ಷ ಕಾಂತಕುಮಾರ್&zwnj; ಹೋರಾಟದ ನೇತೃತ್ವ ವಹಿಸಿದ್ದರು. ಸ್ಥಳೀಯ ಬಿಜೆಪಿ, ಶಿವಸೇನೆ ಸೇರಿ ವಿವಿಧ ಸಂಘಟನೆಗಳ ಮುಖಂಡರು ಹೋರಾಟಕ್ಕೆ ಬೆಂಬಲಿಸಿದರು. ಶಿವಸೇನಾ ರಾಜ್ಯಾಧ್ಯಕ್ಷರೂ ಆಗಿರುವ ಆಂದೋಲಾ ಸಿದ್ದಲಿಂಗ ಸ್ವಾಮೀಜಿ, ಪಾಳಾ ಗುರುಮೂರ್ತಿ ಶಿವಾಚಾರ್ಯರು, ಆರ್&zwnj;ಟಿಐ ಕಾರ್ಯಕರ್ತ ಸಿದ್ರಾಮಯ್ಯ ಹಿರೇಮಠ, ಬಿಜೆಪಿ ನಗರಾಧ್ಯಕ್ಷ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.&lt;/p&gt;&lt;h3&gt;ಪ್ರತಿಭಟನೆಯುದ್ದಕ್ಕೂ ಪೊಲೀಸ್&zwnj; ಸರ್ಪಗಾವಲು&lt;/h3&gt;&lt;p&gt;ಪ್ರತಿಭಟನೆಯಲ್ಲಿ ನೂರಾರು ಯುವಕರು ಸೇರಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಕ್ರಮ ಪೊಲೀಸರು ಕೈಗೊಂಡಿದ್ದರು. ದಾರಿಯುದ್ದಕ್ಕೂ ನಗರ ಪೊಲೀಸ್&zwnj; ಸರ್ಪಗಾವಲು ಹಾಕಲಾಗಿತ್ತು. ಪ್ರತಿಭಟನಾ ಮೇರವಣಿಗೆ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ತೆರಳಿತು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/job-aspirants-protest-spreads-kalaburagi-joins-dharwad-style-stir-over-recruitment-rav/articleshow-gdbn8qe"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ಕಲಬುರಗಿ ಸರ್ಕಾರಿ ಶಿಕ್ಷಕಿ ಹತ್ಯೆ ರಹಸ್ಯ ಬಯಲು; ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆ!]]></title>
            <link>https://kannada.asianetnews.com/karnataka-districts/kalaburagi-government-teacher-murdered-for-demanding-money-back-rav/articleshow-m56hg61</link>
            <guid isPermaLink="true">https://kannada.asianetnews.com/karnataka-districts/kalaburagi-government-teacher-murdered-for-demanding-money-back-rav/articleshow-m56hg61</guid>
            <pubDate>Wed, 08 Apr 2026 06:58:17 +0530</pubDate>
            <description><![CDATA[ಕಮಲಾಪುರ ತಾಲೂಕಿನ ಕಲಮೂಡ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಶಿಕ್ಷಕಿ ಜ್ಯೋತಿ ಕಪಾಳ ಹತ್ಯೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸ್ನೇಹಿತನೇ ಜ್ಯೋತಿಯನ್ನು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಹಾಕಿ ಸುಟ್ಟಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knnb5fy82y3rq8vs724591n1,imgname----------------------92--1775611592648.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಮಲಾಪುರ (ಏ.8): &lt;/strong&gt;ತಾಲೂಕಿನ ಕಲಮೂಡ ಬಳಿ ಸುಟ್ಟ ಸ್ಥಿತಿಯಲ್ಲಿ ಶಿಕ್ಷಕಿ ಜ್ಯೋತಿ ಕಪಾಳ ಶವ ಶನಿವಾರ ಪತ್ತೆಯಾದ ಪ್ರಕರಣ ಕಳೆದ 24 ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.&amp;nbsp;&lt;/p&gt;&lt;p&gt;ಚಿಂಚೋಳಿ ತಾಲೂಕಿನ ಭುಂಯರ್ ಗ್ರಾಮದ ಅಮರ್ ಕುಡ್ದಳ್ಳಿ ಬಂಧಿತ ಆರೋಪಿ. ಕಷ್ಟ ಕಾಲದಲ್ಲಿ ಕೊಟ್ಟಿದ್ದ ಹಣವನ್ನು ವಾಪಸ್ ಕೇಳಿದ್ದಕ್ಕೆ ಜ್ಯೋತಿ ಅವರನ್ನು ಆರೋಪಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಮರ್ ಹಾಗೂ ಜ್ಯೋತಿ ಮೊದಲಿನಿಂದಲೇ ಸ್ನೇಹಿತರು. ಜ್ಯೋತಿ ಅವರಿಂದ ಅಮರ್ ₹14 ಲಕ್ಷ ಹಣ ಪಡೆದು ನಂದಿನಿ ಪಾರ್ಲರ್ ತೆರೆದಿದ್ದ. ಇತ್ತೀಚೆಗೆ ಜ್ಯೋತಿ ಹಣ ವಾಪಸ್ ಕೇಳಿದ್ದರು. 5 ದಿನ ಹಿಂದೆ ಹಣ ಕೊಡುತ್ತೇನೆ ಎಂದು ಹೇಳಿ ಜ್ಯೋತಿಯನ್ನು ಕಾರಲ್ಲಿ ಸುತ್ತಾಡಿಸಿ ಮಧ್ಯರಾತ್ರಿ 1ಕ್ಕೆ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಚಾಕುವಿನಿಂದ ಹತ್ಯೆ ಮಾಡಿದ್ದಾನೆ. ಬಳಿಕ ಸಾಕ್ಷಿ ನಾಶಪಡಿಸಲು ಮೃತದೇಹವನ್ನು ಪೆಟ್ರೋಲ್ ಹಾಕಿ ಸುಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.&lt;/p&gt;&lt;p&gt;ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್ ಮಾರ್ಗದರ್ಶನದಲ್ಲಿ ಸಿಪಿಐ ಶಿವಶಂಕರ್ ಸಾಹು ಪಿಎಸ್ಐ ಸುಖಾನಂದ ಸಿಂಗೆ ನೇತೃತ್ವದ ತಂಡ ಉಪೇಂದ್ರ, ಹುಸೇನ್ ಪಟೇಲ್, ರಾಕೇಶ್, ಸಿಬ್ಬಂದಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kalaburagi-government-teacher-murdered-for-demanding-money-back-rav/articleshow-m56hg61"/>
        </item>
        <item>
            <title><![CDATA[ಕಲಬುರಗಿ: ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ]]></title>
            <link>https://kannada.asianetnews.com/karnataka-districts/kalaburagi-devotee-dies-after-hit-by-chariot-during-sharanabasaveshwara-rathtsava/articleshow-mwgdtsn</link>
            <guid isPermaLink="true">https://kannada.asianetnews.com/karnataka-districts/kalaburagi-devotee-dies-after-hit-by-chariot-during-sharanabasaveshwara-rathtsava/articleshow-mwgdtsn</guid>
            <pubDate>Wed, 08 Apr 2026 10:55:48 +0530</pubDate>
            <description><![CDATA[ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದ ಶ್ರೀ ಶರಣಬಸವೇಶ್ವರ ರಥೋತ್ಸವದ ವೇಳೆ ದುರಂತವೊಂದು ಸಂಭವಿಸಿದೆ. ರಥ ಎಳೆಯುವಾಗ ನೂಕುನುಗ್ಗಲಿನಲ್ಲಿ ಆಯತಪ್ಪಿ ಬಿದ್ದ ಭಕ್ತ ವಿನೋದ ರೆಡ್ಡಿ (49) ಅವರ ಮೇಲೆ ರಥದ ಚಕ್ರ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knnrmzxxqd7dnjxjvfef5nee,imgname----------------------97--1775625732029.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಏ.8): &lt;/strong&gt;ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ.&lt;/p&gt;&lt;p&gt;ಹಾಗರ ಗುಂಡಗಿಯಲ್ಲಿ ಪ್ರತಿ ವರ್ಷದಂತೆ ಶ್ರೀ ಶರಣಬಸವೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಬ್ಬದ ಸಂಭ್ರಮ ಮನೆ ಮಾಡಿದ್ದ ಗ್ರಾಮ ಕ್ಷಣಾರ್ಧದಲ್ಲಿ ಸ್ಮಶಾನ ಮೌನವಾಗಿ ಮಾರ್ಪಟ್ಟಿದೆ. ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ.&lt;/p&gt;&lt;p&gt;ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಅದ್ದೂರಿಯಾಗಿ ನಡೆಯುತ್ತಿತ್ತು. ಸಾವಿರಾರು ಭಕ್ತರು ಆಗಮಿಸಿದ್ದರು. ಜಯಘೋಷ ಹಾಕುತ್ತಾ ರಥವನ್ನು ಎಳೆಯುತ್ತಿದ್ದಾಗ ನಡೆದುಹೋಯ್ತು ದುರಂತ.&lt;/p&gt;&lt;p&gt;ರಥ ಎಳೆಯುವ ಸಂದರ್ಭದಲ್ಲಿ ಭಕ್ತರ ನೂಕುನುಗ್ಗಲಿನಲ್ಲಿ ಮೃತ ವಿನೋದ ರೆಡ್ಡಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಚಲಿಸುತ್ತಿದ್ದ ರಥದ ಬೃಹತ್ ಚಕ್ರವು ನೇರವಾಗಿ ವಿನೋದ ರೆಡ್ಡಿ ತೊಡೆಯ ಮೇಲಿಂದ ಹರಿದು ಹೋಗಿದೆ.&lt;/p&gt;&lt;p&gt;ಚಕ್ರದಡಿ ಸಿಲುಕಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ವಿನೋದ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಣ್ಣೆದುರೇ ನಡೆದ ಈ ಭೀಕರ ಅಪಘಾತದಿಂದಾಗಿ ಜಾತ್ರೆಗೆ ಬಂದಿದ್ದ ಭಕ್ತರು ದಿಕ್ಕೆಟ್ಟು ಓಡಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.&lt;/p&gt;&lt;p&gt;ಈ ಕುರಿತು ಮಾಹಿತಿ ಪಡೆದ *ಫರಹತಾಬಾದ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kalaburagi</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/kalaburagi-devotee-dies-after-hit-by-chariot-during-sharanabasaveshwara-rathtsava/articleshow-mwgdtsn"/>
        </item>
        <item>
            <title><![CDATA[ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸುಧಾರಣೆಯಾದ್ರೂ ಕೊನೆ ಸ್ಥಾನದಲ್ಲಿಯೇ ಉಳಿದ ಕಲಬುರಗಿ]]></title>
            <link>https://kannada.asianetnews.com/gallery/education/despite-improvement-in-sslc-results-kalaburagi-remains-at-the-bottom-35th-place-mrq-noffx0a</link>
            <guid isPermaLink="true">https://kannada.asianetnews.com/gallery/education/despite-improvement-in-sslc-results-kalaburagi-remains-at-the-bottom-35th-place-mrq-noffx0a</guid>
            <pubDate>Thu, 23 Apr 2026 13:32:43 +0530</pubDate>
            <description><![CDATA[ಎಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದರೂ ಕಳೆದ ವರ್ಷಕ್ಕಿಂತ ಶೇ.28.17ರಷ್ಟು ಫಲಿತಾಂಶದಲ್ಲಿ ಏರಿಕೆ ಕಂಡಿದೆ. ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಸರ್ಕಾರವು ಶುಲ್ಕ ರಹಿತ ಮರುಪರೀಕ್ಷೆಯನ್ನು ಘೋಷಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khfjfhd2d90hftg9dd30nk1r,imgname-sslc-exam-1771122967970.jpg" type="image/jpeg" height="390" width="690"/>
            <content:encoded><![CDATA[ಎಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದರೂ ಕಳೆದ ವರ್ಷಕ್ಕಿಂತ ಶೇ.28.17ರಷ್ಟು ಫಲಿತಾಂಶದಲ್ಲಿ ಏರಿಕೆ ಕಂಡಿದೆ. ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಸರ್ಕಾರವು ಶುಲ್ಕ ರಹಿತ ಮರುಪರೀಕ್ಷೆಯನ್ನು ಘೋಷಿಸಿದೆ.&lt;img&gt;&lt;p&gt;ಇಂದು ಎಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ ಮೊದಲ, ಎರಡನೇ ಸ್ಥಾನದಲ್ಲಿವೆ. ಪಿಯು ಫಲಿತಾಂಶದಲ್ಲಿಯೂ ಕಲಬುರಗಿ 29ನೇ ಸ್ಥಾನದಲ್ಲಿತ್ತು. ಒಟ್ಟು ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕ ಭಾಗದಲ್ಲಿ ನಾವು ಹೆಚ್ಚು ಶ್ರಮ ಹಾಕಿದ ಪರಿಣಾಮ ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ಜಿಲ್ಲೆಯ ಅಧಿಕಾರಿಗಳು ವಿಶೇಷ ಕ್ಲಾಸ್, ಕೆಲವು ನಿಯಮಗಳನ್ನು ರೂಪಿಸುವ ಮೂಲಕ ಫಲಿತಾಂಶ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.&lt;/p&gt;&lt;img&gt;&lt;p&gt;2025ರಲ್ಲಿ ಕಲಬುರಗಿ ಶೇ.56.89 ಫಲಿತಾಂಶ ಪಡೆದುಕೊಂಡು 35ನೇ ಸ್ಥಾನದಲ್ಲಿತ್ತು. ಈ ವರ್ಷ (2026) ಶೇ.85.06 ಫಲಿತಾಂಶವನ್ನು ಕಲಬುರಗಿ ಜಿಲ್ಲೆ ದಾಖಲಿಸಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ.28.17ರಷ್ಟು ಫಲಿತಾಂಶ ಏರಿಕೆಯಾಗಿದೆ. ಶೇ.90.26 ಫಲಿತಾಂಶದ ಮೂಲಕ ಮಧುಗಿರಿ 34ನೇ ಸ್ಥಾನದಲ್ಲಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Breaking ಎಸ್&zwnj;ಎಸ್&zwnj;ಎಲ್&zwnj;ಸಿ 2026 ಫಲಿತಾಂಶ ಪ್ರಕಟ, ಈ ಬಾರಿ ದಾಖಲೆಯ ಶೇ.94.10 ಫಲಿತಾಂಶ!&lt;/strong&gt;&lt;/p&gt;&lt;img&gt;&lt;p&gt;SSLC ಪರೀಕ್ಷೆಯನ್ನು ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳ ಮರು ಪರೀಕ್ಷೆ ಮೇ.18 ರಿಂದ 25 ವರೆಗೆ ನಡೆಯಲಿದೆ. ಈ ಮರುಪರೀಕ್ಷೆಗೆ ಯಾವುದೇ ಶುಲ್ಕವಿರಲ್ಲ. ಈ ಹಿಂದೆ ಪ್ರತಿ ವಿಷಯಕ್ಕೆ ವಿದ್ಯಾರ್ಥಿಗಳು 250 ರೂಪಾಯಿ ಕಟ್ಟಬೇಕಿತ್ತು. ಈ ಬಾರಿ ಸರ್ಕಾರವನ್ನು ಶುಲ್ಕವನ್ನು ಮನ್ನಾ ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್, ಯಾವ ಜಿಲ್ಲೆಗೆ ಎಷ್ಟು ಬಂತು?&lt;/strong&gt;&lt;/p&gt;&lt;img&gt;&lt;p&gt;S.S.L.C ಫಲಿತಾಂಶ ಬಂದಿದೆ ಟ್ವೀಟ್ ಎಲ್ಲಿ ಮಹಾಜ್ಞಾನಿ Priyank Kharge ? ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.&amp;nbsp;&lt;/p&gt;&lt;p&gt;S.S.L.C ಫಲಿತಾಂಶ ಬಂದಿದೆ ಟ್ವೀಟ್ ಎಲ್ಲಿ ಮಹಾಜ್ಞಾನಿ @PriyankKharge ?#KhargeFailsKalaburgi pic.twitter.com/8iM5BJjHym&lt;/p&gt;&lt;p&gt;&mdash; BJP Karnataka (@BJP4Karnataka) April 23, 2026&lt;/p&gt;]]></content:encoded>
            <category>kalaburagi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/education/despite-improvement-in-sslc-results-kalaburagi-remains-at-the-bottom-35th-place-mrq-noffx0a"/>
        </item>
        <item>
            <title><![CDATA[ಕಲಬುರಗಿಯಲ್ಲಿ ಗ್ಯಾಸ್‌ ಸಿಲಿಂಡರ್‌ಗಾಗಿ ಪರದಾಟ, ಕ್ಯೂ ತಪ್ಪದಂತೆ ನಡುರಸ್ತೆಯಲ್ಲೇ ಹಾಸಿಗೆ ಹಾಸಿ ಮಲಗಿದ ಜನ!]]></title>
            <link>https://kannada.asianetnews.com/karnataka-districts/massive-lpg-shortage-in-kalaburagi-residents-queue-up-overnight-on-streets-rav/articleshow-rd69pp0</link>
            <guid isPermaLink="true">https://kannada.asianetnews.com/karnataka-districts/massive-lpg-shortage-in-kalaburagi-residents-queue-up-overnight-on-streets-rav/articleshow-rd69pp0</guid>
            <pubDate>Sun, 29 Mar 2026 12:42:37 +0530</pubDate>
            <description><![CDATA[ಇರಾನ್-ಇಸ್ರೇಲ್ ಯುದ್ಧ ಸಂಘರ್ಷದಿಂದಾಗಿ ಕಲಬುರಗಿಯ ಆಳಂದ ಪಟ್ಟಣದಲ್ಲಿ ತೀವ್ರ ಎಲ್&zwnj;ಪಿಜಿ ಗ್ಯಾಸ್ ಕೊರತೆ ಉಂಟಾಗಿದೆ. ಸಿಲಿಂಡರ್&zwnj;ಗಾಗಿ ಜನರು ರಾತ್ರಿಯಿಡೀ ರಸ್ತೆಯಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿದ್ದು, ಅಡುಗೆ ಮಾಡಲು ಪರದಾಡುತ್ತಿದ್ದಾರೆ. ಈ ಸಮಸ್ಯೆಯಿಂದಾಗಿ ಪಟ್ಟಣದ ಜನಜೀವನ ಅಸ್ತವ್ಯಸ್ತಗೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmw6hp3gkrmdmdan2hwch9gy,imgname-whatsapp-image-2026-03-29-at-11.15.15-am-1774767888496.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಮಾ.29&lt;/strong&gt;): ಇರಾನ್, ಇಸ್ರೇಲ್ ಅಮೆರಿಕ ನಡುವಿನ ಯುದ್ಧಸಂಘರ್ಷ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಭಾರತಕ್ಕೂ ಇದರ ಪರಿಣಾಮ ತೀವ್ರವಾಗಿ ತಟ್ಟಿದ್ದು ಎಲ್&zwnj;ಪಿಜಿ ಗ್ಯಾಸ್ ಗ್ಯಾಸ್ ಕೊರತೆಯಿಂದಾಗಿ ಜನರು ಬೀದಿಗೆ ಬರುವಂತಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಜನ ಸಾಮಾನ್ಯರ ಬದುಕು ಬರ್ಬದ್ ಆಗಿದೆ. ಮನೆಯಲ್ಲಿ ಅಡುಗೆ ಮಾಡೋಣವೆಂದರೆ ಸಿಲಿಂಡರ್ ಖಾಲಿ, ಸೌದೆಯೂ ಸಿಗುತ್ತಿಲ್ಲ, ಸೌದೆಗಾಗಿ ಪ್ರತ್ಯೇಕ ಒಲೆಯೂ ಇಲ್ಲದೆ ಜನರ ಪರದಾಟ ಹೇಳತೀರದಾಗಿದೆ. ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಭಾರಿ ವ್ಯತ್ಯಯದಿಂದಾಗಿ ಪಟ್ಟಣದಲ್ಲಿ ಕುಡಿಯುವ ನೀರಿನಂತೆ ಗ್ಯಾಸ್&zwnj;ಗಾಗಿ ಅಕ್ಷರಶಃ ಹಾಹಾಕಾರ ಶುರುವಾಗಿದೆ.&lt;/p&gt;&lt;h2&gt;ಬೆಳ್ಳಂಬೆಳಗ್ಗೆ ಅಲ್ಲ, ರಾತ್ರಿಯಿಂದಲೇ ರಸ್ತೆಯ ಮೇಲೆ ಸಿಲಿಂಡರ್ ಸಾಲು!&lt;/h2&gt;&lt;p&gt;ಆಳಂದ ಪಟ್ಟಣದ ಗಲ್ಲಿ ಗಲ್ಲಿಗಳಲ್ಲಿ ಈಗ ಸಿಲಿಂಡರ್ ಪಡೆಯುವುದೇ ಒಂದು ದೊಡ್ಡ ಸವಾಲಾಗಿದೆ. ಜನ ಬೆಳ್ಳಂಬೆಳಗ್ಗೆ ಎದ್ದು ಬಂದರೂ ಗ್ಯಾಸ್ ಸಿಗುವುದು ಗ್ಯಾರಂಟಿ ಇಲ್ಲ ಎಂದು ರಾತ್ರಿಯೇ ರಸ್ತೆ ಮೇಲೆ ಸರತಿ ಸಾಲಿಗೆ ಗ್ಯಾಸ್ ಸಿಲಿಂಡರ್ ಇಟ್ಟು ಅದರ ಪಕ್ಕದಲ್ಲೇ ಹಾಸಿಗೆ ಹಾಸಿ ಮಲಗಿ ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ. ಸಿಲಿಂಡರ್ ಸಿಗದೇ ಹೋದರೆ ಒಲೆ ಉರಿಯಲ್ಲ ಎಂಬ ಆತಂಕದಲ್ಲಿ ಜನರು ನಡುರಸ್ತೆಯಲ್ಲೇ ನಿದ್ದೆಗೆಟ್ಟು ಪಾಳಿ ಹಚ್ಚಿರುವ ದೃಶ್ಯ ಮನಕಲಕುವಂತಿದೆ.&lt;/p&gt;&lt;h3&gt;ಸಿಲಿಂಡರ್ ಬದಲು ಬಕೆಟ್, ಕೊಡಗಳನ್ನಿಟ್ಟ ಮಹಿಳೆಯರು&lt;/h3&gt;&lt;p&gt;ಸಿಲಿಂಡರ್ ಲಾರಿ ಬರುವ ಸುಳಿವು ಸಿಗುತ್ತಿದ್ದಂತೆಯೇ ಮಹಿಳೆಯರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಒಬ್ಬೊಬ್ಬರು ತಮ್ಮ ಸರದಿ ತಪ್ಪಬಾರದೆಂದು ಸಿಲಿಂಡರ್ ಜೊತೆಗೆ ನೀರು ತುಂಬುವ ಕೊಡಗಳು ಮತ್ತು ಬಕೇಟ್&zwnj;ಗಳನ್ನು ಇಟ್ಟು ಸಾಲನ್ನು ಕಾಯ್ದಿರಿಸುತ್ತಿದ್ದಾರೆ. ಪಟ್ಟಣದ ಸುಲ್ತಾನ್&zwnj;ಪುರ ಏರಿಯಾ, ಏಕಾಂತರಾಮಯ್ಯ ಮಂದಿರ ಹಾಗೂ ಮಹಾದೇವ ಮಂದಿರದ ಬಳಿ ಕಿಲೋಮೀಟರ್&zwnj;ಗಟ್ಟಲೆ ಉದ್ದದ ಸಾಲು ಕಂಡುಬರುತ್ತಿದೆ.&lt;/p&gt;&lt;p&gt;&lt;strong&gt;ಸಾಮಾನ್ಯರ ಪರದಾಟಕ್ಕೆ ಮುಕ್ತಿ ಯಾವಾಗ?&lt;/strong&gt;&lt;/p&gt;&lt;p&gt;ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಈ ಯುದ್ಧದ ಬೆಳವಣಿಗೆಗಳು ಅನಿಲ ಪೂರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಹೇಳಲಾಗುತ್ತಿದೆ. ಪೂರೈಕೆಯಲ್ಲಿ ಉಂಟಾಗಿರುವ ಈ ವ್ಯತ್ಯಯದಿಂದಾಗಿ ಆಳಂದದ ಜನ ಹೈರಾಣಾಗಿದ್ದಾರೆ. ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಪರ್ಯಾಯ ವ್ಯವಸ್ಥೆ ಮಾಡದಿದ್ದರೆ ಪಟ್ಟಣದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ದಟ್ಟವಾಗಿದೆ.&lt;/p&gt;]]></content:encoded>
            <category>kalaburagi</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/massive-lpg-shortage-in-kalaburagi-residents-queue-up-overnight-on-streets-rav/articleshow-rd69pp0"/>
        </item>
        <item>
            <title><![CDATA[ಕಲಬುರಗಿ: ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ]]></title>
            <link>https://kannada.asianetnews.com/crime/kalaburagi-government-school-teacher-brutally-murdered-in-the-middle-of-the-road/articleshow-tufagoc</link>
            <guid isPermaLink="true">https://kannada.asianetnews.com/crime/kalaburagi-government-school-teacher-brutally-murdered-in-the-middle-of-the-road/articleshow-tufagoc</guid>
            <pubDate>Mon, 06 Apr 2026 09:48:49 +0530</pubDate>
            <description><![CDATA[&lt;p&gt;&lt;strong&gt;Kalaburagi teacher murder case: &lt;/strong&gt;ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ (57) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಶವವನ್ನು ಸುಟ್ಟು ಹಾಕಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kngf7y2v3zhcn8qvdgfdkndv,imgname-government-school-teacher-murder-1775448094811.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ&lt;/strong&gt;&lt;/h2&gt;&lt;p&gt;ಕಲಬುರಗಿ: ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಶಿಕ್ಷಕಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ರಸ್ತೆಬದಿಯಲ್ಲೇ ಸುಟ್ಟು ಹಾಕಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಈ ಭಯಾನಕ ಘಟನೆ ನಡೆದಿದೆ. ಕಲ್ಮೂಡ ಗ್ರಾಮದ ರಸ್ತೆಯ ಪಕ್ಕದಲ್ಲಿ ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ಅಲ್ಲೇ ರಸ್ತೆ ಬದಿ ಸುಟ್ಟು ಹಾಕಿದ್ದಾರೆ.&lt;/p&gt;&lt;p&gt;ಕೊಲೆಯಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ (57) ಎಂದು ಗುರುತಿಸಲಾಗಿದೆ. ಮೃತ ಜ್ಯೋತಿ ಕಪಾಳೆ ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡ್ತಿದ್ದರು. ಹೀಗಾಗಿ ಬೀದರ್&zwnj;ನಲ್ಲೇ ಮನೆ ಮಾಡಿದ್ದ ಜ್ಯೋತಿ ಅಲ್ಲಿಂದಲೇ ಶಾಲೆಗೆ ಹೋಗಿ ಬರ್ತಿದ್ದರು. ವಾರಕ್ಕೊಮ್ಮೆ ಕಲಬುರಗಿಯಲ್ಲಿರುವ ಮನೆಗೆ ಬರುತ್ತಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪತ್ನಿಯ ಕೊಲ್ಲಲು ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಟೆಕ್ಕಿ ಪತಿ ಮುರುಗನ್&lt;/strong&gt;&lt;/p&gt;&lt;p&gt;ಆದರೆ ಈಗ ಕಲಬುರಗಿಯಿಂದ ಬೀದರ್&zwnj;ಗೆ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ&zwnj; ಕಲ್ಮೂಡ ಎಂಬಲ್ಲಿ ಜ್ಯೋತಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿಕ್ಷಕಿ ಜ್ಯೋತಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪೊಲೀಸರ ತನಿಖೆಯ ನಂತರವೇ ಶಿಕ್ಷಕಿಯ ಕೊಲೆಗೆ ಕಾರಣ ತಿಳಿಯಲಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಎಲ್&zwnj;&amp;amp;ಟಿಯ ₹57 ಕೋಟಿ ಹಣ ಕೆ-ರೈಡ್&zwnj;ನಿಂದ ಮುಟ್ಟುಗೋಲು&lt;/strong&gt;&lt;/p&gt;]]></content:encoded>
            <category>kalaburagi</category>
            <dc:creator>Anusha Kb</dc:creator>
            <atom:link href="https://kannada.asianetnews.com/crime/kalaburagi-government-school-teacher-brutally-murdered-in-the-middle-of-the-road/articleshow-tufagoc"/>
        </item>
        <item>
            <title><![CDATA[ರಾಸಣಗಿ ಬಲಭೀಮಸೇನ ದೇವರಿಗೆ ಪಾದರಕ್ಷೆ ಸಮರ್ಪಣೆ; 5 ವರ್ಷಕ್ಕೊಮ್ಮೆ ನಡೆಯುವ ಸಂಪ್ರದಾಯ]]></title>
            <link>https://kannada.asianetnews.com/karnataka-districts/offering-footwear-to-the-god-of-rasanagi-balabhimasena-jevargi-religious-customs-kalaburagi-mrq/articleshow-ubfx8qu</link>
            <guid isPermaLink="true">https://kannada.asianetnews.com/karnataka-districts/offering-footwear-to-the-god-of-rasanagi-balabhimasena-jevargi-religious-customs-kalaburagi-mrq/articleshow-ubfx8qu</guid>
            <pubDate>Tue, 21 Apr 2026 10:57:44 +0530</pubDate>
            <description><![CDATA[&lt;p&gt;ರಾಸಣಗಿ ಬಲಭೀಮಸೇನ ದೇವರಿಗೆ ಅಕ್ಷಯ ತದಿಗೆಯಂದು ಪುರಾತನ ಪದ್ಧತಿಯಂತೆ ಪಾದರಕ್ಷೆ ಸಮರ್ಪಿಸಲಾಯಿತು. ಹರವಾಳ ಗ್ರಾಮದ ಹೇರೂರ ಮನೆತನದವರು 4 ಕಿ.ಮೀ. ಪಾದಯಾತ್ರೆ ಮೂಲಕ ಚಮ್ಮಾವುಗೆಗಳನ್ನು ತಂದು ದೇವರಿಗೆ ಅರ್ಪಿಸಿದರು. ಈ ವಿಶಿಷ್ಟ ಸಂಪ್ರದಾಯವು ಪ್ರತಿ 5 ವರ್ಷಕ್ಕೊಮ್ಮೆ ನಡೆಯುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpq7zwkfveh1kz7d3592sd84,imgname-rasanagi-balabhimasena-1776749113967.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ:&lt;/strong&gt; ಜೇವರ್ಗಿ ತಾಲೂಕಿನ ಭೀಮಾನದಿ ತೀರದ ಸುಕ್ಷೇತ್ರ ರಾಸಣಗಿಯ ಮಹಾಮಹಿಮ ಬಲಭೀಮಸೇನ ದೇವರಿಗೆ ಅಕ್ಷಯ ತದಿಗೆ ದಿನ ಪುರಾತನ ಪದ್ಧತಿಯಂತೆ ನೂತನ ಚಮ್ಮಾವುಗೆ (ಪಾದರಕ್ಷೆ) ಸಮರ್ಪಿಸಲಾಯಿತು. ಹರವಾಳ ಗ್ರಾಮದ ಹೆರೂರ ಮನೆತನದ ಗಂಗಮ್ಮಾ ದಿ. ಶ್ರೀ ಹುಲೆಪ್ಪ ಹೇರೂರ ಮು. ಹರವಾಳ ರವರ ಕುಟುಂಸ್ಥರು ನಡೆಸಿಕೊಡುತ್ತಾರೆ.&lt;/p&gt;&lt;h2&gt;&lt;strong&gt;ಪಾದರಕ್ಷೆ ಸಮರ್ಪಣೆ ಪ್ರಕ್ರಿಯೆ ಹೇಗಿರುತ್ತೆ?&lt;/strong&gt;&lt;/h2&gt;&lt;p&gt;ಅಕ್ಷಯ ತೃತೀಯಗೆ ಬೆಳಗಿನ ಜಾವ ಈ ಬಾರಿಯ ಪಾದರಕ್ಷೆ ಸಮರ್ಪಣೆ ಪ್ರಕ್ರಿಯೆ ಆರಂಭವಾದವು. ಬೆಳಗ್ಗೆ 8 ಗಂಟೆಗೆ ಹರ&zwnj;ವಾಳ ಗ್ರಾಮದಿಂದ ಕಂಟೆಪ್ಪ ಹುಲೆಪ್ಪ ಹೇರೂರ ಹರವಾಳ ಅವರು ತಲೆಯ ಮೇಲೆ ಚಮ್ಮಾವುಗೆ ಇಟ್ಟುಕೊಂಡು ರಾಸಣಗಿವರೆಗೆ 4 ಕಿ.ಮೀ. ಗ್ರಾಮಸ್ಥರು ಮತ್ತು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಕಲ ವಾದ್ಯಗಳೊಂದಿಗೆ ನಡೆದುಕೊಂಡು ಬಂದರು.&lt;/p&gt;&lt;p&gt;ವಿಶೇಷವಾಗಿ ಡೊಳ್ಳು ಹಲಿಗೆ ಮತ್ತು ಬಾಜ, ಭಜಂತ್ರಿಗಳೊಂದಿಗೆ ಪಾದಯಾತ್ರೆ ಮೂಲಕ ಆಗಮಿಸಿದರು. ರಾಸಣಗಿ ಶ್ರೀ ಬಲಭೀಮ ದೇವಸ್ಥಾನ ಟ್ರಸ್ಟ್ ನವರು ಮತ್ತು ರಾಸಣಗಿ ಗ್ರಾಮಸ್ಥರು ಚಮ್ಮಾವೂಗೆಗಳನ್ನು ಪುರಪ್ರವೇಶ ಮಾಡಿಕೊಂಡು ದೇವಸ್ಥಾನಕ್ಕೆ ತಂದರು. ವಿಶೇಷ ವಿಧಿ ವಿಧಾನಗಳ ಮೂಲಕ ಚಮ್ಮಾವುಗೆ ದೇವರಿಗೆ ಅರ್ಪಿಸಲಾಯಿತು. ಬಲಭೀಮಸೇನ ದೇವರಿಗೆ ಪಂಚಾಮೃತ ಅಭಿಷೇಕ ಗಂಧಲೇಪನ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ನಡೆಯಿತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Dharwad: 16 ವರ್ಷಗಳ ಬಳಿಕ ದೇವಸ್ಥಾನದ ಬಾಗಿಲು ಓಪನ್; ಗುಂಪುಗಳ ಭಿನ್ನಾಭಿಪ್ರಾಯ ಇತ್ಯರ್ಥ&lt;/strong&gt;&lt;/p&gt;&lt;h3&gt;&lt;strong&gt;5 ವರ್ಷಕ್ಕೊಮ್ಮೆ ನಡೆಯುವ ವಿಶೇಷ ಜಾತ್ರೆ&lt;/strong&gt;&lt;/h3&gt;&lt;p&gt;ಈ ಎಲ್ಲಾ ಕಾರ್ಯಕ್ರಮದ ಸೇವೆಯನ್ನು ಶರಣಮ್ಮ ಕಂಟೆಪ್ಪ ಹೇರೂರ ಮು. ಹರವಾಳ ಹಾಗೂ ಸಹೋದರರು ನಡೆಸಿಕೊಟ್ಟರು. 5 ವರ್ಷಕ್ಕೊಮ್ಮೆ ನಡೆಯುವ ಪುರಾತನ ಪದ್ಧತಿಯಂತೆ ನೂತನ ಚಮ್ಮಾವುಗೆಗಳನ್ನು ಭಕ್ತರು ಅರ್ಪಿಸಲಾಗುತ್ತದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದೂದಿಹಳ್ಳಿ ಗ್ರಾಮದ ಕೆರೆಯ ಹೂಳು ತೆಗೆಯುವಾಗ ಸಿಕ್ತು 3 ಅಡಿ ಎತ್ತರದ ನಂದಿ ಮೂರ್ತಿ&lt;/strong&gt;&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/offering-footwear-to-the-god-of-rasanagi-balabhimasena-jevargi-religious-customs-kalaburagi-mrq/articleshow-ubfx8qu"/>
        </item>
        <item>
            <title><![CDATA[ಎಸ್ಸೆಸ್ಸೆಲ್ಸಿ ಫಲಿತಾಂಶ:  ಕರಾವಳಿ ಜಿಲ್ಲೆಗಳ ಕಮಾಲ್, ಕಲಬುರಗಿ ಕೊನೆ ಸ್ಥಾನ, ನಿಮ್ಮ ಜಿಲ್ಲೆಗೆ ಎಷ್ಟನೇ ಸ್ಥಾನ?]]></title>
            <link>https://kannada.asianetnews.com/education/karnataka-sslc-result-2026-announced-dakshina-kannada-top-kalaburagi-ranks-last-check-district-wise-results-gdp/articleshow-usbvvgs</link>
            <guid isPermaLink="true">https://kannada.asianetnews.com/education/karnataka-sslc-result-2026-announced-dakshina-kannada-top-kalaburagi-ranks-last-check-district-wise-results-gdp/articleshow-usbvvgs</guid>
            <pubDate>Thu, 23 Apr 2026 13:06:30 +0530</pubDate>
            <description><![CDATA[2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 94.1ರಷ್ಟು ಉತ್ತೀರ್ಣ ಪ್ರಮಾಣ ದಾಖಲಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಕಲಬುರಗಿ ಜಿಲ್ಲೆಯು ಸತತವಾಗಿ ಕಳಪೆ ಪ್ರದರ್ಶನ ನೀಡಿ ಕೊನೆಯ ಸ್ಥಾನದಲ್ಲೇ ಮುಂದುವರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01hxfab2pjfxnzca3pghha8m3x,imgname-tn-sslc-results.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: 2026ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.1 ಆಗಿದ್ದು, ಕಳೆದ ವರ್ಷಗಳಿಗಿಂತ ಉತ್ತಮ ಸಾಧನೆ ದಾಖಲಾಗಿದೆ. ವಿದ್ಯಾರ್ಥಿಗಳ ಸಾಧನೆ, ಜಿಲ್ಲಾವಾರು ಫಲಿತಾಂಶ ಮತ್ತು ಗ್ರಾಮೀಣ ಪ್ರದೇಶಗಳ ಮೇಲುಗೈ&mdash;allವು ಈ ಬಾರಿ ವಿಶೇಷ ಚರ್ಚೆಗೆ ಕಾರಣವಾಗಿವೆ.&lt;/p&gt;&lt;h2&gt;ಯಾರು ಲಾಸ್ಟ್? ಯಾರು ಫಸ್ಟ್?&lt;/h2&gt;&lt;p&gt;ಜಿಲ್ಲಾವಾರು ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳು ಮತ್ತೆ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 98.40 ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕಲಬುರಗಿ ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿಯೂ ಕಲಬುರಗಿ ಕಲಬುರಗಿ ಕೊನೆಯ ಸ್ಥಾನ ಪಡೆದಿತ್ತು. 2025ರಲ್ಲಿ 56.89 ಬಂದಿತ್ತು. &amp;nbsp;ಈ ಬಾರಿ 28.17 ಶೇಕಡ ಏರಿಕೆಯನ್ನೂ ದಾಖಲಿಸಿದರೂ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಫಲಿತಾಂಶವನ್ನು ಉತ್ತಮಗೊಳಿಸುವ ಮಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆ ಮಹತ್ವದ ಕಾರ್ಯಗಳನ್ನು ಮಾಡಿತ್ತು.&lt;/p&gt;&lt;h2&gt;ಇಳಿಕೆಯತ್ತಲೇ ಸಾಗಿದ ಕಲಬುರಗಿ, ಏರಿಕೆ ಯಾವಾಗ?&lt;/h2&gt;&lt;p&gt;ಕಳೆದ ಬಾರಿಗಿಂತ ಈ ಬಾರಿ 28.17 ಶೇಕಡ ಏರಿಕೆಯನ್ನೂ ದಾಖಲಿಸಿದರೂ ಕೊನೆಯ ಸ್ಥಾನದಲ್ಲಿ ಇರುವ ಕಲಬುರಗಿ 2023 ನೇ ಸಾಲಿನಿಂದಲೇ &amp;nbsp;ಇಳಿಕೆಯತ್ತ ಫಲಿತಾಂಶವನ್ನು ದಾಖಲಿಸುತ್ತಲೇ ಬಂದಿದೆ. &amp;nbsp;2023ರಲ್ಲಿ 29ನೇ ಸ್ಥಾನದಲ್ಲಿತ್ತು, 2024ರಲ್ಲಿ 34ನೇ ಸ್ಥಾನ ಗಳಿಸಿತ್ತು. 2025ರಲ್ಲಿ 35ನೇ ಸ್ಥಾನ &amp;nbsp;ಪಡೆದು ಕೊನೆಯ ಸ್ಥಾನ ಪಡೆದಿತ್ತು. ಇದೀಗ ಈ ಸಾಲಿನಲ್ಲೂ ಕೊನೆಯ ಸ್ಥಾನದಲ್ಲೇ ಮುಂದುವರೆದಿದೆ.&lt;/p&gt;&lt;h2&gt;ಜಿಲ್ಲಾವಾರು ಫಲಿತಾಂಶ ಹೀಗಿದೆ&lt;/h2&gt;&lt;p&gt;ದಕ್ಷಿಣ ಕನ್ನಡ 98.40&lt;/p&gt;&lt;p&gt;ಉಡುಪಿ 98.18&lt;/p&gt;&lt;p&gt;ಉತ್ತರ ಕನ್ನಡ 98.09&lt;/p&gt;&lt;p&gt;ಹಾಸನ 97.51&lt;/p&gt;&lt;p&gt;ಮಂಡ್ಯ 97.45&lt;/p&gt;&lt;p&gt;ಸಿರ್ಸಿ 97.21&lt;/p&gt;&lt;p&gt;ಹಾವೇರಿ 96.87&lt;/p&gt;&lt;p&gt;ಕೊಡಗು 96.70&lt;/p&gt;&lt;p&gt;ಶಿವಮೊಗ್ಗ 96.56&lt;/p&gt;&lt;p&gt;ವಿಜಯನಗರ 96.39&lt;/p&gt;&lt;p&gt;ಬೆಂಗಳೂರು ಗ್ರಾಮಾಂತರ 95.84&lt;/p&gt;&lt;p&gt;ಧಾರವಾಡ 95.59&lt;/p&gt;&lt;p&gt;ಕೋಲಾರ 95.50&lt;/p&gt;&lt;p&gt;ಬಾಗಲಕೋಟೆ 95.42&lt;/p&gt;&lt;p&gt;ಬೆಂಗಳೂರು ಉತ್ತರ 95.34&lt;/p&gt;&lt;p&gt;ಗದಗ 95.24&lt;/p&gt;&lt;p&gt;ಚಿಕ್ಕಮಗಳೂರು 94.99&lt;/p&gt;&lt;p&gt;ಬೆಳಗಾವಿ 94.75&lt;/p&gt;&lt;p&gt;ದಾವಣಗೆರೆ 94.64&lt;/p&gt;&lt;p&gt;ಮೈಸೂರು 94.50&lt;/p&gt;&lt;p&gt;ರಾಯಚೂರು 94.41&lt;/p&gt;&lt;p&gt;ವಿಜಯಪುರ 94.17&lt;/p&gt;&lt;p&gt;ಚಿಕ್ಕೋಡಿ 94.09&lt;/p&gt;&lt;p&gt;ಬಳ್ಳಾರಿ 93.36&lt;/p&gt;&lt;p&gt;ಕೊಪ್ಪಳ 93.10&lt;/p&gt;&lt;p&gt;ರಾಮನಗರ 92.83&lt;/p&gt;&lt;p&gt;ಚಿತ್ರದುರ್ಗ 92.25&lt;/p&gt;&lt;p&gt;ಬೀದರ 92.18&lt;/p&gt;&lt;p&gt;ತುಮಕೂರು 92.04&lt;/p&gt;&lt;p&gt;ಚಾಮರಾಜನಗರ 91.89&lt;/p&gt;&lt;p&gt;ಯಾದಗಿರಿ 91.89&lt;/p&gt;&lt;p&gt;ಬೆಂಗಳೂರು ದಕ್ಷಿಣ 91.65&lt;/p&gt;&lt;p&gt;ಚಿಕ್ಕಬಳ್ಳಾಪುರ 90.88&lt;/p&gt;&lt;p&gt;ಮಧುಗಿರಿ 90.26&lt;/p&gt;&lt;p&gt;ಕಲಬುರಗಿ 85.06&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/education/karnataka-sslc-result-2026-announced-dakshina-kannada-top-kalaburagi-ranks-last-check-district-wise-results-gdp/articleshow-usbvvgs"/>
        </item>
        <item>
            <title><![CDATA[ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸುವ ಮಾರ್ಗ ಅಂತಿಮ]]></title>
            <link>https://kannada.asianetnews.com/karnataka-districts/indian-railways-new-bengaluru-mumbai-vande-bharat-sleeper-train-runs-through-kalaburagi-route-mrq/articleshow-uzd74sd</link>
            <guid isPermaLink="true">https://kannada.asianetnews.com/karnataka-districts/indian-railways-new-bengaluru-mumbai-vande-bharat-sleeper-train-runs-through-kalaburagi-route-mrq/articleshow-uzd74sd</guid>
            <pubDate>Tue, 14 Apr 2026 14:53:27 +0530</pubDate>
            <description><![CDATA[&lt;p&gt;ಬಹುನಿರೀಕ್ಷಿತ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕದ ಕಲಬುರಗಿ, ಸೊಲ್ಲಾಪುರ ಮಾರ್ಗವಾಗಿ ಸಂಚರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಚಿತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp5mp54ztjf6gk3z0b2atrw8,imgname-vande-bharat-1776158446751.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ: &lt;/strong&gt;ಬೆಂಗಳೂರು-ಮುಂಬೈ ವಂದೇ ಭಾರತ್&zwnj; ಸ್ಲೀಪರ್ ರೈಲಿನ ಮಾರ್ಗ ಖಚಿತವಾಗಿದೆ. ಬೆಂಗಳೂರು, ಕಲಬುರಗಿ, ಸೊಲ್ಲಾಪುರ ಮಾರ್ಗವಾಗಿ ಈ ರೈಲು ಸಂಚರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್&zwnj; ಜೋಶಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ &lsquo;ಎಕ್ಸ್&zwnj;&rsquo; ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯಕ್ಕೆ ಹೊಸ ರೈಲು ನೀಡಿರುವುದಕ್ಕೆ ಪ್ರಧಾನಿ ಮೋದಿ ಹಾಗೂ ರೈಲ್ವೆ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸುವಂತೆ ನಾನು ಮನವಿ ಮಾಡಿದ್ದೆ, ನನ್ನ ಮನವಿಗೆ ರೈಲ್ವೆ ಇಲಾಖೆ ಮನ್ನಣೆ ನೀಡಿದೆ ಎಂದು ಜೋಶಿ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಟ್ವೀಟ್ ಮೂಲಕ ಖಚಿತಪಡಿಸಿದ ಜೋಶಿ&lt;/strong&gt;&lt;/h2&gt;&lt;p&gt;ಬಹುನಿರೀಕ್ಷಿತ ಬೆಂಗಳೂರು ಮುಂಬೈ ವಂದೇ ಭಾರತ್&zwnj; ಸ್ಲೀಪರ್&zwnj; ರೈಲು ಸಂಚಾರ ಮಾರ್ಗ ಎಲ್ಲಿಂದ ಎಂಬುದರ ಕುರಿತು ಖಚಿತ ಪಡಿಸಿರಲಿಲ್ಲ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಪುಣೆ ಮಾರ್ಗವೋ ಅಥವಾ ಬೆಂಗಳೂರು, ಕಲಬುರಗಿ, ಸೊಲ್ಲಾಪುರ, ಪುಣೆ ಮಾರ್ಗವೋ ಎಂಬ ಗೊಂದಲ ಪ್ರಯಾಣಿಕರಲ್ಲಿತ್ತು. ಸದ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್&zwnj; ಮಾಡಿ ಯಾವ ಮೂರ್ಗದ ಮೂಲಕ ರೈಲು ಸಂಚರಿಸಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಜೋಶಿ ಅವರ ಟ್ವಿಟ್&zwnj;ನಲ್ಲೇನಿದೆ?&lt;/strong&gt;&lt;/p&gt;&lt;p&gt;ನನ್ನ ಮನವಿಗೆ ಸ್ಪಂದಿಸಿ, ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆ&zwnj;ಎಸ್&zwnj;ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್&zwnj;ಗೆ ಸಂಚರಿಸಲಿದೆ. ಹಾಗೂ ಬೆಂಗಳೂರಿನಿಂದ ಕರ್ನಾಟಕದ ಮಧ್ಯ ಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ನನ್ನ ಮನವಿಯ ಮೇರೆಗೆ ಈಗಾಗಲೇ ಅನುಮೋದನೆ ನೀಡಲಾಗಿತ್ತು.&amp;nbsp;&lt;/p&gt;&lt;p&gt;&amp;nbsp;&lt;/p&gt;&lt;p&gt;ಬೆಂಗಳೂರಿನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸಲು ನನ್ನ ಮನವಿಗೆ ಸ್ಪಂದಿಸಿ, ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆ&zwnj; ಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್&hellip; pic.twitter.com/wdxvhqF2HV&lt;/p&gt;&lt;p&gt;&mdash; Pralhad Joshi (@JoshiPralhad) April 13, 2026&lt;/p&gt;&lt;p&gt;&amp;nbsp;&lt;/p&gt;&lt;p&gt;ಈ ಸೂಪರ್ ಫಾಸ್ಟ್ ರೈಲನ್ನು ಶೀಘ್ರವೇ ಪ್ರಾರಂಭಿಸುವುದಾಗಿ, ತದನಂತರದ ದಿನಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವಂತೆ ನನ್ನ ಪ್ರಸ್ತಾವನೆಯನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹೇಳಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು ಎಂದು ತಮ್ಮ &quot;ಎಕ್ಸ್&zwnj;&quot; ಖಾತೆಯಲ್ಲಿ ಪೋಸ್ಟ್&zwnj; ಮಾಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ; ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲು!&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿನ ಆಗಮನ ; ಎಷ್ಟು ಸಮಯ ಉಳಿತಾಯ?&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಾಧುನಿಕ 'ವಂದೇ ಭಾರತ್ ಸ್ಲೀಪರ್' ರೈಲು ಸಂಚಾರಕ್ಕೆ ಅನುಮೋದನೆ ದೊರೆತಿದೆ. ಈ ಮಹತ್ವದ ನಿರ್ಧಾರಕ್ಕಾಗಿ ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವ ಶ್ರೀ @AshwiniVaishnaw ಹಾಗೂ ಶ್ರೀ @VSOMANNA_BJP ಅವರಿಗೆ ಹೃತ್ಪೂರ್ವಕ&hellip; pic.twitter.com/TkLKLp77zk&lt;/p&gt;&lt;p&gt;&mdash; BJP Karnataka (@BJP4Karnataka) April 13, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/indian-railways-new-bengaluru-mumbai-vande-bharat-sleeper-train-runs-through-kalaburagi-route-mrq/articleshow-uzd74sd"/>
        </item>
        <item>
            <title><![CDATA[ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ: ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಲೋಕಾಬಲೆಗೆ]]></title>
            <link>https://kannada.asianetnews.com/state/lokayukta-raid-in-kalaburgi-computer-operator-arrested-taking-bribe/articleshow-vgbdpbr</link>
            <guid isPermaLink="true">https://kannada.asianetnews.com/state/lokayukta-raid-in-kalaburgi-computer-operator-arrested-taking-bribe/articleshow-vgbdpbr</guid>
            <pubDate>Wed, 22 Apr 2026 18:16:57 +0530</pubDate>
            <description><![CDATA[&lt;p&gt;ಕಲಬುರಗಿಯ ಯಡ್ರಾಮಿ ತಾಲೂಕಿನಲ್ಲಿ ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು ₹20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್&zwnj;ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಫಲಾನುಭವಿಯೊಬ್ಬರ ದೂರಿನ ಮೇರೆಗೆ ಈ ದಾಳಿ ನಡೆದಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kptk6r87ctr0eqf160gqj28x,imgname-lokayukta-raid-1776861536518.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ&lt;/strong&gt;&lt;/h2&gt;&lt;p&gt;ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ ಬಿದ್ದಿದ್ದಾರೆ. ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡುವುದಕ್ಕೆ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್&zwnj;ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಲೋಕಾ ಬಲೆಗೆ ಬಿದ್ದವ.&lt;/p&gt;&lt;h3&gt;&lt;strong&gt;ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಲೋಕಾಬಲೆಗೆ&lt;/strong&gt;&lt;/h3&gt;&lt;p&gt;ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಮಲ್ಲಿಕಾರ್ಜುನ ಮಳ್ಳಿ ಎನ್ನುವ ಫಲಾನುಭವಿ ಬಳಿ ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದ. ಮುಂಗಡವಾಗಿ 5 ಸಾವಿರ ರೂ. ನಗದು ಹಾಗೂ 3 ಸಾವಿರ ರೂಪಾಯಿ ಫೋನ್ ಪೇ ಮೂಲಕ ಲಂಚ ಪಡೆದಿದ್ದ. ಈ ಸಂಬಂಧ ಮಲ್ಲಿಕಾರ್ಜುನ ಮಳ್ಳಿ ಲೋಕಾಯುಕ್ತಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಲೋಕಾಯುಕ್ತ ಎಸ್ ಪಿ ಸಿದ್ದರಾಜು ಸಿ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಮನೆಯಲ್ಲೇ ಲೈಂ*ಗಿಕ ದೌರ್ಜನ್ಯವೆಸಗಿ ಐಆರ್&zwnj;ಎಸ್ ಅಧಿಕಾರಿಯ 22ರ ಹರೆಯದ ಪುತ್ರಿಯ ಭೀಕರ ಹತ್ಯೆ&lt;/p&gt;]]></content:encoded>
            <category>kalaburagi</category>
            <dc:creator>Anusha Kb</dc:creator>
            <atom:link href="https://kannada.asianetnews.com/state/lokayukta-raid-in-kalaburgi-computer-operator-arrested-taking-bribe/articleshow-vgbdpbr"/>
        </item>
        <item>
            <title><![CDATA[ಕಲಬುರಗಿ: ಬಜೆಟ್‌ಗೂ ಮುನ್ನ ಖಮೇನಿಗೆ ಸಂತಾಪ! ಪಾಲಿಕೆಗೂ ಇರಾನ್ ನಾಯಕನಿಗೂ ಏನು ಸಂಬಂಧ?]]></title>
            <link>https://kannada.asianetnews.com/karnataka-districts/kalaburagi-corporation-row-condolences-for-khamenei-before-budget-session-rav/articleshow-vkgu5ty</link>
            <guid isPermaLink="true">https://kannada.asianetnews.com/karnataka-districts/kalaburagi-corporation-row-condolences-for-khamenei-before-budget-session-rav/articleshow-vkgu5ty</guid>
            <pubDate>Thu, 02 Apr 2026 06:01:50 +0530</pubDate>
            <description><![CDATA[&lt;p&gt;ಇರಾನ್ ಸರ್ವೋಚ್ಚ ನಾಯಕ ಆಯತೋಲ್ಲಾ ಖಮೇನಿ ಸಾವಿಗೆ ಕಲಬುರಗಿ ಪಾಲಿಕೆಯಲ್ಲಿ ಸಂತಾಪ ಸೂಚಿಸಿದ್ದನ್ನು ಶಿವಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತೀವ್ರ ಆಕ್ರೋಶ. ಪಾಲಿಕೆಗೂ ಖಮೇನಿಗೂ ಏನು ಸಂಬಂ? ಸರ್ಕಾರಿ ಕಚೇರಿಯಲ್ಲಿ ಈ ರೀತಿ ಮೌನಾಚರಣೆ ನಡೆಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn5s4m2qfb1z5pj3w22j9r6j,imgname----------------------32--1775089373271.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಏ.2): &lt;/strong&gt;ಅಮೇರಿಕಾ ಹಾಗೂ ಇಸ್ರೇಲ್&zwnj; ಜಂಟಿ ದಾಳಿಗೆ ಹತನಾಗಿರುವ ಇರಾನ್&zwnj; ಸರ್ವೋಚ್ಚ ನಾಯಕ ಆಯತೋಲ್ಲಾ ಖಮೇನಿ ಸಾವಿಗೆ ಕಲಬುರಗಿ ಪಾಲಿಕೆಯಲ್ಲಿ ಕಂಬನಿ ಮಿಡಿದು ಮೌನಾಚರಣೆ ಶ್ರದ್ದಾಂಜಲಿ ಸಲ್ಲಿಸಿರೋದನ್ನ ತೀವ್ರವಾಗಿ ಖಂಡಿಸಿರುವ ಶಿವಸೇನೆ ಪಕ್ಷದ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿಗೂ ಪಾಲಿಕೆಗೂ ಖಮೇನಿಗೂ ಅದೇನ್&zwnj; ಸಂಬಂಧ? ಇಲ್ಯಾಕೆ ಇಂತಹ ಮೌನಾಚರಣೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್&zwnj; ದಾಳಿಯನ್ನು ಖಂಡಿಸಲಿಲ್ಲ, ಕಂಬನಿ ಸುರಿಸಲಿಲ್ಲ, ತಮ್ಮ ಸಮುದಾಯದ ಯುವತಿಯ ಹತ್ಯೆಗೂ ಮರುಗಲಿಲ್ಲ, ದೂರದ ಇರಾನ್&zwnj; ನಾಯಕ ಸತ್ತರೆ ಇವರಿಲ್ಲಿ ಕಂಬನಿ ಸುರಿಸುತ್ತಾರೆ. ವಾರ್ಡ್&zwnj; 24ರ ಸದಸ್ಯೆ ಸಯೀದಾ ನೂರ್&zwnj; ಫಾತೀಮಾಗೂ ಖಮೇನಿಗೂ ಅದೇನ್ ಸಂಬಂಧ? ಇವರೊಂದಿಗೆ ಬಿಜೆಪಿಯವರೂ ಕೂಡಾ ಸೇರಿಕೊಂಡು ಕಂಬನಿ ಮಿಡಿದು ಸಂತಾಪ ಸೂಚಿಸಿರೋದು ನೋಡಿದರೆ, ಪಾಲಿಕೆಯಲ್ಲಿ ವಿರೋಧ ಪಕ್ಷ ಅದೆಷ್ಟು ದುರ್ಬಲವಾಗಿದೆ ಅನ್ನೋದು ಗೊತ್ತಾಗುತ್ತದೆ. ಸರ್ಕಾರಿ ಕಚೇರಿಯಲ್ಲಿ ಖಮೇನಿಗೆ ಕಂಬನಿ ಮಿಡಿದವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ಕಿಡಿ ಕಾರಿದ್ದಾರೆ.&lt;/p&gt;&lt;p&gt;ಖಮೇನಿ ಸಾವಿಗೆ ಸದನದಲ್ಲಿ, ಸಂಸತ್&zwnj;ನಲ್ಲಿ ಸಂತಾಪ ಸೂಚಿಸಲಿಲ್ಲ. ಅಲ್ಲೆಲ್ಲಾ ಇಲ್ಲದ ಕಂಬನಿ ಮಿಡಿತ ಪಾಲಿಕೆಯಲ್ಯಾಕೆ? ಪಾಲಿಕೆ ಮೇಯರ್&zwnj; ಪತಿ ರಾಜೀವ್&zwnj; ಜಾನೆ ಇವರು ಕಾನೂನು ಉಲ್ಲಂಘಿಸಿ ಸಭೆಗಳಲ್ಲಿ ಕಾಣಿಸುತ್ತಿದ್ದಾರೆ. ಇವೆಲ್ಲ ನೋಡಿದರೆ ಜಿಲ್ಲಾ ಉಸ್ತುವಾರಿ ಸಚಿವರ ಕೃಪಾಕಟಾಕ್ಷದಿಂದಲೇ ಘಜನಿ ಘೋರಿ ಸಂತತಿ ಪಾಲಿಕೆಯಲ್ಲಿ ಪಳಿಯುಳಿಕೆ ರೂಪದಲ್ಲಿನ್ನೂ ಉಳಿದಂತಿದೆ ಎಂದು ಸಿದ್ದಲಿಂಗ ಸ್ವಾಮೀಜಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;p&gt;ಖರ್ಗೆಯವರು ಮುಸ್ಲಿಂ ದೇಶಗಳಿಂದ ಭಾರತಕ್ಕೆ ಬರುವ ಪರಿಕರಗಳ ಬಗ್ಗೆ ಮಾತನಾಡುತ್ತ, ತೊಡುವ ಕೇಸರಿ ವಿದೇಶಗಳಿಂದ ಬುರುತ್ತದೆಂದು ಹೇಳಿದ್ದರು, ಇದು ಶುದ್ಧ ಸುಳ್ಳು. ನಮ್ಮ ಬಟ್ಟೆಗಳೇ ವಿದೇಶಗಳಿಗೆ ರಫ್ತಾಗೋದು ಅನ್ನೋದು ವಿಶ್ವದ 9ನೇ ನಾಯಕ ಅರಿಯಲಿ ಎಂದು ಟಾಂಗ್&zwnj; ನೀಡಿದರು. ಕೇಸರಿಗೆ ಅಪಮಾನ ಮಾಡುತ್ತ ಹಿಂದುಗಳನ್ನು ಅಪಮಾನಿಸುತ್ತಿದ್ದಾರೆ, ಇದು ನಿಲ್ಲಬೇಕು, ಇವರು ಬೇಕಾದರೆ ಹೋಗಿ ಪಾಕಿಸ್ತಾನದಲ್ಲಿ ಬಾಷಣ ಮಾಡಲಿ, ನಮ್ಮದೇನು ಅಭ್ಯಂತರವಿಲ್ಲವೆಂದರು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kalaburagi-corporation-row-condolences-for-khamenei-before-budget-session-rav/articleshow-vkgu5ty"/>
        </item>
    </channel>
</rss>
