<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 12:15:03 +0530</lastBuildDate>
        <atom:link href="https://kannada.asianetnews.com/rss/kalaburagi" rel="self" type="application/rss+xml"/>
        <item>
            <title><![CDATA[ಭಕ್ತನಂತೆ ಬರ್ತಾನೆ, ದೇವರ ಆಭರಣ ಕದ್ದು ಪರಾರಿಯಾಗ್ತಾನೆ: ಕಲಬುರ್ಗಿ ಖದೀಮ ಯಾರು ನೋಡಿ]]></title>
            <link>https://kannada.asianetnews.com/crime/comes-as-a-devotee-steals-gods-jewelry-and-escapes-mohemmed-shaikh-arrested-suc/articleshow-00yttho</link>
            <guid isPermaLink="true">https://kannada.asianetnews.com/crime/comes-as-a-devotee-steals-gods-jewelry-and-escapes-mohemmed-shaikh-arrested-suc/articleshow-00yttho</guid>
            <pubDate>Sat, 02 May 2026 19:06:41 +0530</pubDate>
            <description><![CDATA[ಕಲಬುರ್ಗಿಯ ಅಡ್ವೊಕೇಟ್ ಕಾಲನಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ, 1.37 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಮೊಹಮ್ಮದ್ ಶೇಖ್&zwnj;ನನ್ನು ಬಂಧಿಸಿ, ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqmeez2xysq3f0jp4fgsam2z,imgname-theft-1777728978013.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಲಬುರ್ಗಿಯಲ್ಲಿ ಈಚೆಗೆ ನಡೆದಿದ್ದ ಅಡ್ವೊಕೇಟ್ ಕಾಲನಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಸುಮಾರು 1.37 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಖದೀಮ ಪರಾರಿಯಾಗಿದ್ದ. ಇದಕ್ಕೂ ಮುನ್ನ ಕೆಲವು ದೇವಸ್ಥಾನದಲ್ಲಿ ಇದೇ ರೀತಿ ಕಳ್ಳತನವಾಗಿದ್ದರೂ ಕಳ್ಳನ ಸುಳಿವು ಸಿಕ್ಕಿರಲಿಲ್ಲ. ಇದೀಗ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ನೋಡಿ ಪೊಲೀಸರು ಬೆನ್ನತ್ತಿದ್ದರು. ದೇವಿಯ ಮುಖವಾಡ, ತಾಳಿ ಸೇರಿದಂತೆ ಸುಮಾರು 1.37 ಲಕ್ಷ ಮೌಲ್ಯದ ಆಭರಣಗಳನ್ನು ಈತ ಕದ್ದು ಪರಾರಿಯಾಗಿದ್ದ.&lt;/p&gt;&lt;h2&gt;&lt;strong&gt;ಸಿಸಿಟಿವಿಯಲ್ಲಿ ದೃಶ್ಯ ಸೆರೆ&lt;/strong&gt;&lt;/h2&gt;&lt;p&gt;ಸಿಸಿಟಿವಿಯಲ್ಲಿ ಈತನ ದೃಶ್ಯ ಸೆರೆಯಾಗಿತ್ತು. ಮಾಸ್ಕ್​ ಧರಿಸಿ ಬಂದಿದ್ದ ಈತ, ಅಲ್ಲಿ ಸಿಸಿಟಿವಿ ಇರುವುದನ್ನು ಗಮನಿಸದೇ (ಗಮನಿಸಿದರೂ ಹಿಂದೆ ಸಿಕ್ಕಿಬಿದಿಲ್ಲ ಎನ್ನುವ ಧೈರ್ಯದಿಂದಲೋ ಏನೋ) ಆರಾಮಾಗಿ ಒಳಗೆ ನುಗ್ಗಿದ್ದ. ದೇವಾಲಯದ ಪುರೋಹಿತರು ಹಿಂದಿನ ರಾತ್ರಿ ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದರು. ಮಾರನೆಯ ದಿನ ಬಂದಾಗ ಬಾಗಿಲು ಒಡೆದದ್ದು ಕಂಡು ಗಾಬರಿಯಾದರು. ಒಳಗೆ ಹೋಗಿ ನೋಡಿದರೆ ಆಭರಣಗಳೆಲ್ಲಾ ಕಾಣೆಯಾಗಿದ್ದವು. ಕೊನೆಗೆ ಅವರು ಪೊಲೀಸರಿಗೆ ದೂರು ನೀಡಿದರು.&lt;/p&gt;&lt;h3&gt;&lt;strong&gt;ಕೊನೆಗೂ ಸಿಕ್ಕಿಬಿದ್ದ&lt;/strong&gt;&lt;/h3&gt;&lt;p&gt;ಈ ಹಿಂದೆ ದೇವಸ್ಥಾನಗಳ ಕಳ್ಳತನ ಮಾಡಿ ಸಿಗದೇ ಪರಾರಿಯಾದ್ದ ಖದೀಮ ಕೊನೆಗೂ ಸಿಕ್ಕ. ಅವನ ಹೆಸರು ಮೊಹಮ್ಮದ್​ ಶೇಖ್​. ಅಫಜಲಪಟ್ಟಣದ ನಿವಾಸಿ. ಆತನಿಂದ ಪೊಲೀಸರು 1.37 ಲಕ್ಷ ಮೌಲ್ಯದ 9 ಗ್ರಾಂ ಚಿನ್ನಾಭರಣ ಮತ್ತು 100 ಗ್ರಾಂನಷ್ಟು ಇರುವ ಬೆಳ್ಳಿಯ ದೇವಿಯ ಮುಖವಾಡ ವಶಪಡಿಸಿಕೊಂಡಿದ್ದಾರೆ.&lt;/p&gt;&lt;p&gt;ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್​ ಕಮಿಷನರ್​ ಶರಣಪ್ಪ ಎಸ್​.ಡಿ. ಮಾಹಿತಿ ನೀಡಿದ್ದಾರೆ. ಈ ಹಿಂದೆ ಕೂಡ ಇದೇ ರೀತಿ ಕೆಲವು ದೇವಾಲಯಗಳ ಕಳ್ಳತನವನ್ನು ಈತ ಮಾಡಿದ್ದು, ಈತನ ವಿರುದ್ಧ ಆರೋಪಗಳಿವೆ ಎಂದರು. ಸದ್ಯ ಪೊಲೀಸರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜನರು ಕಾಯುತ್ತಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kalaburagi</category>
            <dc:creator>Suchethana D</dc:creator>
            <atom:link href="https://kannada.asianetnews.com/crime/comes-as-a-devotee-steals-gods-jewelry-and-escapes-mohemmed-shaikh-arrested-suc/articleshow-00yttho"/>
        </item>
        <item>
            <title><![CDATA[ಇಂಧನ ಉಳಿಸಿ ಎಂದ ಪ್ರಧಾನಿ ಮೋದಿ, ತಾವೇ 53 ನಗರ ಸುತ್ತಾಡಿದರು: ಪ್ರಿಯಾಂಕ್ ಖರ್ಗೆ ಟೀಕೆ]]></title>
            <link>https://kannada.asianetnews.com/karnataka-districts/priyank-kharge-slams-pm-modi-over-fuel-crisis-gvd/articleshow-0ylxxp2</link>
            <guid isPermaLink="true">https://kannada.asianetnews.com/karnataka-districts/priyank-kharge-slams-pm-modi-over-fuel-crisis-gvd/articleshow-0ylxxp2</guid>
            <pubDate>Tue, 02 Jun 2026 00:26:54 +0530</pubDate>
            <description><![CDATA[&lt;p&gt;ಜಾಲತಾಣದ ಪ್ರಭಾವಿ ಇನ್&zwnj;ಫ್ಲೂಯೆನ್ಸರ್ ಹಾಗೂ ವಿಷಯ ರಚನಾಕಾರ ಮಹಾಮಾನವ ಮೋದಿ ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಓಡಾಡುತ್ತಿದ್ದರು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಮೋದಿ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk67zh6mptcmb3mr46h0kb1y,imgname----------------------95--1772957451476.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಜೂ.02): &lt;/strong&gt;ಒಂದು ಕಡೆ ಇಡೀ ದೇಶ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೇಲ್ ಕೊರತೆ ಎದುರಿಸುತ್ತಿದ್ದಾಗ, ಮತ್ತೊಂದು ಕಡೆ ಭಾರತದ ಸಾಮಾಜಿಕ ಜಾಲತಾಣದ ಪ್ರಭಾವಿ ಇನ್&zwnj;ಫ್ಲೂಯೆನ್ಸರ್ ಹಾಗೂ ವಿಷಯ ರಚನಾಕಾರ ಮಹಾಮಾನವ ಮೋದಿ ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಓಡಾಡುತ್ತಿದ್ದರು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಮೋದಿ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.&lt;/p&gt;&lt;p&gt;ದಿ ವೈರ್ ವೆಬ್ ಸೈಟ್ ನ್ಯೂಸ್ ಪೋರ್ಟಲ್ ನಲ್ಲಿ ಪ್ರಕಟವಾದ ಸುದ್ದಿಯ ಲಿಂಕ್ ನ್ನು ಎಕ್ಸ್ ನಲ್ಲಿ ಹಂಚಿಕೊಂಡು ಬರೆದುಕೊಂಡಿರುವ ಖರ್ಗೆ, ಇಂಧನ ಉಳಿಸುವಂತೆ ಮೇ 10ರಂದು ಸಾರ್ವಜನಿಕರಿಗೆ ಕರೆ ನೀಡಿದ್ದ ಮೋದಿ ಪ್ರತಿಯೊಬ್ಬರು ಕಾರ್ ಬಳಸುವ ಬದಲು ಸಾರ್ವಜನಿಕ ಸಾರಿಗೆ ಬಳಸುವ ಮೂಲಕ ಇಂಧನ ಉಳಿಸುವಂತೆ ಹೇಳಿದ್ದರು.&lt;/p&gt;&lt;p&gt;ಆದರೆ, ಯುದ್ದ ಪ್ರಾರಂಭವಾದ 70 ದಿನಗಳ ನಂತರವೂ, ಮೋದಿ ದೇಶದ 12 ರಾಜ್ಯಗಳ 53 ನಗರಗಳಿಗೆ ಭೇಟಿ ನೀಡಿ 25 ರೋಡ್ ಶೋ ಗಳು ಸೇರಿದಂತೆ 81 ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ಈ 81ರಲ್ಲಿ ಕೇವಲ 13 ಸಮಾರಂಭಗಳು ಮಾತ್ರ ಸರ್ಕಾರಿ ಕಾರ್ಯಕ್ರಮಗಳಾಗಿವೆ ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಬಿಜೆಪಿ ವಿರುದ್ಧ ವಾಗ್ದಾಳಿ&lt;/strong&gt;&lt;/h2&gt;&lt;p&gt;ಏರುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಿಂದಾಗಿ ವ್ಯಾಪಾರ ವ್ಯವಹಾರಗಳು ನಿಂತುಹೋಗಿ, ಜನರು ಅಡುಗೆ ಅ&zwnj;ನಿಲ ಪಡೆದುಕೊಳ್ಳಲು ಸರದಿಯಲ್ಲಿ ನಿಂತಿರುವಾಗ, ಮೋದಿ ಅವರು ತಮ್ಮ ಸಾರ್ವಜನಿಕ ಕಾರ್ಯಕ್ರಮಕ್ಕಾಗಿ ಆಯೋಜಿಸಲಾದ ಭಾರತೀಯ ವಾಯುಪಡೆಯ ಏರೋಬ್ಯಾಟಿಕ್ ಪ್ರದರ್ಶನ ಮತ್ತು ಹೆಲಿಕಾಪ್ಟರ್ ಪುಷ್ಪ ವೃಷ್ಟಿಯನ್ನು ನೋಡಿ ಆನಂದಿಸುತ್ತಿದ್ದರು ಎಂದು ಕುಟುಕಿದ್ದಾರೆ.&lt;/p&gt;&lt;p&gt;ಚುನಾವಣೆ ಫಲಿತಾಂಶ ಘೋಷಣೆಯಾದ ನಂತರದ 10 ದಿನಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರಗಳನ್ನು ನಾಲ್ಕು ಸಲ ಏರಿಸಲಾಯಿತು. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಪದೇ ಪದೇ ಮಾಡುತ್ತಿರುವ ಹೆಚ್ಚಳ ಸಾಮಾನ್ಯ ಜನರ ಮೇಲೆ ಬಿಜೆಪಿ ನಡೆಸುತ್ತಿರುವ ವಂಚನೆ ಹಾಗೂ ಕ್ರೌರ್ಯಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.&lt;/p&gt;]]></content:encoded>
            <category>kalaburagi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/priyank-kharge-slams-pm-modi-over-fuel-crisis-gvd/articleshow-0ylxxp2"/>
        </item>
        <item>
            <title><![CDATA[Kalaburagi heatwave record: ಕಲಬುರಗಿಯಲ್ಲಿ ಈ  ಬೇಸಿಗೆಯ ದಾಖಲೆ 45 ಡಿಗ್ರಿ ತಾಪಮಾನ; ಸುರಪುರದಲ್ಲಿ ಕಾರ್ಮಿಕ ಸಾವು!]]></title>
            <link>https://kannada.asianetnews.com/state/record-45-degree-summer-temperature-in-kalaburagi-laborer-dies-in-surapura-rav/articleshow-1m1i2w4</link>
            <guid isPermaLink="true">https://kannada.asianetnews.com/state/record-45-degree-summer-temperature-in-kalaburagi-laborer-dies-in-surapura-rav/articleshow-1m1i2w4</guid>
            <pubDate>Sun, 03 May 2026 04:33:28 +0530</pubDate>
            <description><![CDATA[ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಗರಿಷ್ಠ 45.4 ಡಿಗ್ರಿ ಸೆಲ್ಸಿಯಸ್&zwnj; ತಾಪಮಾನ ದಾಖಲಾಗಿದ್ದು, ಇದು ಈ ಬೇಸಿಗೆಯ ಅತ್ಯಧಿಕ ತಾಪಮಾನವಾಗಿದೆ. ಈ ತೀವ್ರ ಬಿಸಿಲಿನ ತಾಪಕ್ಕೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpt7saq90h94gm2mzq05p5jz,imgname-fotojet--80--1776849562345.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಮೇ.3): &lt;/strong&gt;ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, &lsquo;ಬಿಸಿಲ ನಗರಿ&rsquo; ಕಲಬುರಗಿ ಅಕ್ಷರಶಃ ಕೆಂಡದಂತಾಗಿದೆ. ಜಿಲ್ಲೆಯ ಕಾಳಗಿಯ ಕೋಡ್ಲಿ ಗ್ರಾಮದಲ್ಲಿ ಶನಿವಾರ ರಾಜ್ಯದಲ್ಲೇ ಗರಿಷ್ಠ ತಾಪಮಾನ 45.4 ಡಿಗ್ರಿ ಸೆಲ್ಸಿಯಸ್&zwnj; ದಾಖಲಾಗಿದ್ದು, ಇದು ಈ ಬೇಸಿಗೆಯ ಅತ್ಯಧಿಕ ತಾಪಮಾನ ಎನಿಸಿದೆ.&lt;/p&gt;&lt;p&gt;ಹವಾಮಾನ ಇಲಾಖೆಯ ವರದಿಗಳ ಪ್ರಕಾರ ಶನಿವಾರ, ಕಾಳಗಿಯ ಕೋಡ್ಲಿ ಗ್ರಾಮದಲ್ಲಿ 45.4 ಡಿಗ್ರಿ ಸೆಲ್ಸಿಯಸ್&zwnj;, ಚಿಂಚಳಿಯ ಐನಾಪುರದಲ್ಲಿ 45 ಡಿಗ್ರಿ, ಆಳಂದದ ನರೋಣಾದಲ್ಲಿ 44. 7 ಡಿಗ್ರಿ, ಅಫಜಲಪುರದ ಆತನೂರಲ್ಲಿ 44.6 ಡಿಗ್ರಿ ತಾಪಮಾನ ದಾಖಲಾಗಿದೆ.&lt;/p&gt;&lt;p&gt;ಜಿಲ್ಲೆಯಲ್ಲಿ ಶನಿವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 44 ಡಿಗ್ರಿಗಿಂತ ಅಧಿಕ ಪ್ರಮಾಣದಲ್ಲಿಯೇ ದಾಖಲಾಗಿತ್ತು. ಜಿಲ್ಲೆಯಾದ್ಯಂತ ಬಿಸಿಗಾಳಿ ಮುಂದುವರಿದಿದ್ದು, ಜನರು ಬೆಳಗ್ಗೆ 10 ಗಂಟೆಯ ನಂತರ ಸಂಜೆ 5 ಗಂಟೆವರೆಗೂ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ.&lt;/p&gt;&lt;p&gt;ಇದಕ್ಕೂ ಮೊದಲು, ಏ.22ರಿಂದ 3 ದಿನ ಕಲಬುರಗಿಯಲ್ಲಿ ಬಿಸಿಗಾಳಿಯ ಅಲೆ ಎದುರಾಗಿತ್ತು. ಆಗಲೂ ತಾಪಮಾನ 45.4 ಡಿಗ್ರಿ ದಾಖಲಾಗಿ ಅದು ಏಪ್ರಿಲ್&zwnj; ತಿಂಗಳ 53 ವರ್ಷಗಳ ದಾಖಲೆಯನ್ನೇ ಮುರಿದಿತ್ತು. ಶನಿವಾರ ಕೂಡ 45.4 ಡಿಗ್ರಿ ಸೆಲ್ಸಿಯಸ್&zwnj; ತಾಪಮಾನ ದಾಖಲಾಗುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲೇ ಈ ಬೇಸಿಗೆಯ ಅತ್ಯಧಿಕ ತಾಪಮಾನವಾಗಿ ಗಮನ ಸೆಳೆದಿದೆ.&lt;/p&gt;&lt;h2&gt;--ಸುರಪುರದಲ್ಲಿ ಬಿಸಿಲ ತಾಪಕ್ಕೆ ಕಾರ್ಮಿಕ ಸಾವು&lt;/h2&gt;&lt;p&gt;ಯಾದಗಿರಿ ಜಿಲ್ಲೆ ಸುರಪುರ ಸಮೀಪದ ಸತ್ಯಂಪೇಟೆ ಗ್ರಾಮದಲ್ಲಿ ಬಿಸಿಲ ತಾಪದಿಂದ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.&lt;/p&gt;&lt;p&gt;ಸಿದ್ದಪ್ಪ ಶರಣಪ್ಪ ಕೊಂಡಗೂಳಿ (30) ಮೃತರು. ಸುರಪುರದ ಹಸನಾಪುರ ಪೆಟ್ರೋಲ್ ಬಂಕ್ ಸಮೀಪ ಕೂಲಿ ಕೆಲಸಕ್ಕೆ ತೆರಳಿದ್ದ ಸಿದ್ದಪ್ಪ, ಬಿಸಿಲಿನ ತಾಪದಿಂದ ಆಯಾಸಗೊಂಡು ಮನೆಗೆ ಮರಳಿದ ಕೆಲವೇ ಕ್ಷಣಗಳಲ್ಲಿ ಬಳಲಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಕೊನೆಯುಸಿರೆಳೆದಿದ್ದರು. ಸುರಪುರದಲ್ಲಿ ಶನಿವಾರ 42 ಡಿಗ್ರಿ ಸೆಲ್ಸಿಯಸ್&zwnj; ತಾಪಮಾನ ದಾಖಲಾಗಿತ್ತು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/record-45-degree-summer-temperature-in-kalaburagi-laborer-dies-in-surapura-rav/articleshow-1m1i2w4"/>
        </item>
        <item>
            <title><![CDATA[ಕರ್ನಾಟಕದಿಂದ ಸೋಲಾಪುರ ಮಾರ್ಗವಾಗಿ ಹೋಗುವ ಹಲವು ರೈಲು ಸಂಚಾರ ನಿರ್ಬಂಧ, ಜೂ. 5ರಿಂದ10ರವರೆಗೆ ಹಲವು ಟ್ರೈನ್ ರದ್ದು!]]></title>
            <link>https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep</link>
            <guid isPermaLink="true">https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep</guid>
            <pubDate>Fri, 05 Jun 2026 12:14:53 +0530</pubDate>
            <description><![CDATA[ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್&zwnj;ನಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಯಿಂದಾಗಿ ಕೇಂದ್ರ ರೈಲ್ವೆಯು ಜೂನ್ 5 ರಿಂದ 10 ರವರೆಗೆ ಹಲವು ರೈಲುಗಳ ಸಂಚಾರವನ್ನು ನಿರ್ಬಂಧಿಸಿದೆ. ಈ ಅವಧಿಯಲ್ಲಿ ಕೆಲವು ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ ಹಾಗೂ ಸೋಲಾಪುರ-ಕಲಬುರಗಿ ವಿಶೇಷ ರೈಲು ರದ್ದತಿಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks4rgymmydvxhdywfct5zw88,imgname-indian-railways--2--1779350141588.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್&zwnj;ನಲ್ಲಿ ಮೇಲ್ದರ್ಜೆ ಕಾಮಗಾರಿಗೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಇಂಟರ್&zwnj;ಲಾಕಿಂಗ್&zwnj;ನ್ನು ನಿಯೋಜಿಸಲು ಪೂರ್ವ-ಇಂಟರ್&zwnj;ಲಾಕಿಂಗ್ ಅಲ್ಲದ ಮತ್ತು ಇಂಟರ್&zwnj;ಲಾಕಿಂಗ್ ಅಲ್ಲದ ಕೆಲಸದಿಂದಾಗಿ ಜೂನ್ 5ರಿಂದ 10ರವರೆಗೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಹಲವು ರೈಲುಗಳ ಮೇಲೆ ಸಂಚಾರ ನಿರ್ಬಂಧ ವಿಧಿಸಿದೆ.&lt;/p&gt;&lt;h2&gt;ನಿಯಂತ್ರಣ ಯಾವ ರೈಲುಗಳ ಮೇಲೆ ?&lt;/h2&gt;&lt;p&gt;ಜೂನ್&zwnj; 5 ರಂದು ರೈಲು ಸಂಖ್ಯೆ 11311 ಸೋಲಾಪುರ-ಹಾಸನ ಎಕ್ಸ್&zwnj;ಪ್ರೆಸ್ ಹಾಗೂ ರೈಲು ಸಂಖ್ಯೆ 17308 ಬಾಗಲಕೋಟೆ- ಮೈಸೂರು ಬಸವಾ ಎಕ್ಸ್&zwnj;ಪ್ರೆಸ್ ಸಂಚಾರದ ಮೇಲೆ 45 ನಿಮಿಷಗಳ ನಿಯಂತ್ರಣವಿರಲಿದೆ. ಜೂ. 8 ರಂದು ರೈಲು ಸಂಖ್ಯೆ 18520 ಎಲ್&zwnj;ಟಿಟಿ ಮುಂಬೈ- ವಿಶಾಖಪಟ್ಟಣ ಎಕ್ಸ್&zwnj;ಪ್ರೆಸ್ಜೂ 2 ಗಂಟೆ, ರೈಲು ಸಂಖ್ಯೆ 01465 ಸೋಲಾಪುರ-ಕಲಬುರಗಿ ವಿಶೇಷ 1 ಗಂಟೆ 30 ನಿಮಿಷ, ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್&zwnj;ಪ್ರೆಸ್ 30 ನಿಮಿಷ, ರೈಲು ಸಂಖ್ಯೆ 11301 ಸಿಎಸ್&zwnj;ಎಂಟಿ ಮುಂಬೈ-ಕೆಎಸ್&zwnj;ಆರ್ ಬೆಂಗಳೂರು ಉದ್ಯಾನ ಎಕ್ಸ್&zwnj;ಪ್ರೆಸ್ 30 ನಿಮಿಷ ನಿಯಂತ್ರಣದಲ್ಲಿರಲಿವೆ.&lt;/p&gt;&lt;p&gt;ಜೂನ್&zwnj; 9 ರಂದು ರೈಲು ಸಂಖ್ಯೆ 16382 ಕನ್ಯಾಕುಮಾರಿ-ಪುಣೆ ಎಕ್ಸ್&zwnj;ಪ್ರೆಸ್ 1 ಗಂಟೆ 15 ನಿಮಿಷ, ರೈಲು ಸಂಖ್ಯೆ 11020 ಭುವನೇಶ್ವರ- ಸಿಎಸ್&zwnj;ಎಂಟಿ ಮುಂಬೈ ಎಕ್ಸ್&zwnj;ಪ್ರೆಸ್ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.&lt;/p&gt;&lt;h2&gt;ಕೆಲವು ರೈಲು ಮಾರ್ಗ ಬದಲಾವಣೆ:&lt;/h2&gt;&lt;p&gt;ರೈಲು ಸಂಖ್ಯೆ 57662 ವಿಜಯಪುರ-ರಾಯಚೂರು ಪ್ಯಾಸೆಂಜರ್ ಜೂ. 5 ರಿಂದ 10 ರ ವರೆಗೆ ವಿಜಯಪುರ-ಹೋಟ್ಗಿ-ವಾಡಿ ಮಾರ್ಗ, ರೈಲು ಸಂಖ್ಯೆ 57661 ರಾಯಚೂರು-ವಿಜಯಪುರ ಪ್ಯಾಸೆಂಜರ್ ವಾಡಿ-ಹೋಟ್ಗಿ-ವಿಜಯಪುರ ಮೂಲಕ ಮಾರ್ಗ ಬದಲಾವಣೆ ಮಾಡಲಾಗುತ್ತದೆ.&lt;/p&gt;&lt;p&gt;ಕೆಳಗಿನ ರೈಲುಗಳನ್ನು ನಿರ್ದಿಷ್ಟಪಡಿಸಿದಂತೆ ಮರುಹೊಂದಿಸಲಾಗುತ್ತದೆ. ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್&zwnj;ಪ್ರೆಸ್ ಜೂ. 10 ರಂದು 2 ಗಂಟೆ 20 ನಿಮಿಷಗಳ ಕಾಲ ಮತ್ತು ರೈಲು ಸಂಖ್ಯೆ 11301 ಸಿಎಸ್&zwnj;ಎಂಟಿ ಮುಂಬೈ-ಕೆಎಸ್&zwnj;ಆರ್ ಬೆಂಗಳೂರು ಉದ್ಯಾನ ಎಕ್ಸ್&zwnj;ಪ್ರೆಸ್ 2 ಗಂಟೆ 15 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.&lt;/p&gt;&lt;p&gt;ರೈಲು ಸಂಖ್ಯೆ 01465 ಸೋಲಾಪುರ- ಕಲಬುರಗಿ ಮತ್ತು ರೈಲು ಸಂಖ್ಯೆ 01466 ಕಲಬುರಗಿ- ಸೋಲಾಪುರ ಈ ರೈಲು ಜೂ. 10 ರಂದು ರದ್ದು ಮಾಡಲಾಗಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep"/>
        </item>
        <item>
            <title><![CDATA[ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಯೋಗ್ಯ ಎಂಬ ಸುದ್ದಿಗೆ  'ನಮಗೆ ಹಣೆಬರಹವೂ ಇರಬೇಕು' ಎಂದ ಮಲ್ಲಿಕಾರ್ಜುನ ಖರ್ಗೆ]]></title>
            <link>https://kannada.asianetnews.com/politics/aicc-chief-mallikarjun-kharge-on-karnataka-leadership-row-says-issue-will-be-resolved-soon-gdp/articleshow-a266ygs</link>
            <guid isPermaLink="true">https://kannada.asianetnews.com/politics/aicc-chief-mallikarjun-kharge-on-karnataka-leadership-row-says-issue-will-be-resolved-soon-gdp/articleshow-a266ygs</guid>
            <pubDate>Thu, 30 Apr 2026 16:36:30 +0530</pubDate>
            <description><![CDATA[ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ನಾಯಕತ್ವ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಿಎಂ ಬದಲಾವಣೆ ಸದ್ಯಕ್ಕಿಲ್ಲ ಎಂದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆಯೂ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಕೆಲವು ರಾಜ್ಯಗಳಲ್ಲಿ ಮೈತ್ರಿಕೂಟಗಳಿಗೆ ಗೆಲುವಿನ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-ani20250220153044,imgname-image-17551429-79d6-4e7a-b4ad-a51f7fa1932a.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ಮಹತ್ವದ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ರಾಜಕೀಯದ ನಾಯಕತ್ವ ಗೊಂದಲದಿಂದ ಹಿಡಿದು ಪಂಚರಾಜ್ಯ ಚುನಾವಣೆಗಳ ಫಲಿತಾಂಶದವರೆಗೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.&lt;/p&gt;&lt;h2&gt;ರಾಜ್ಯದಲ್ಲಿ ನಾಯಕತ್ವ ಗೊಂದಲ ಬಗ್ಗೆ ಹೇಳಿದ್ದೇನು?&lt;/h2&gt;&lt;p&gt;ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಉಂಟಾಗಿರುವ ಗೊಂದಲದ ಬಗ್ಗೆ ಮಾತನಾಡಿದ ಖರ್ಗೆ, ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಹೇಳಿದರು. ತಮ್ಮನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಯೋಗ್ಯ ಎಂದು ಕೆಲವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಹೇಳ್ತಾರೆ, ನೀವು ಹೇಳ್ತೀರಿ, ಮೇಲಿನವರು (ಹೈಕಮಾಂಡ್) ಹೇಳ್ತಾರೆ. ಆದರೆ ನಮ್ಮ ಹಣೆಬರಹವೂ ಇರಬೇಕು. ಹಣೆಬರಹ ಅಂದರೆ ಅದು ಕೇವಲ ಅದೃಷ್ಟವಲ್ಲ, ಅದು ನಮ್ಮ ಐಡಿಯಾಲಜಿ, ಮತ್ತು ಪಕ್ಷಕ್ಕಾಗಿ ನಾವು ಇಷ್ಟು ವರ್ಷಗಳಿಂದ ಮಾಡಿದ ಶ್ರಮವೂ ಸೇರಿದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.&lt;/p&gt;&lt;h2&gt;ಹೈಕಮಾಂಡ್ ಪಾತ್ರ ಮತ್ತು ಸಿಎಂ ಬದಲಾವಣೆ ಪ್ರಶ್ನೆ&lt;/h2&gt;&lt;p&gt;ಪಕ್ಷದ ಪ್ರಮುಖ ನಿರ್ಧಾರಗಳನ್ನು ಸಾಮಾನ್ಯವಾಗಿ ಸೋನಿಯಾ ಗಾಂಧಿ ಅವರು ಕೈಗೊಳ್ಳುತ್ತಾರೆ ಎಂದು ಖರ್ಗೆ ತಿಳಿಸಿದರು. ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಆದ್ದರಿಂದ ಸಿಎಂ ಬದಲಾವಣೆ ಬಗ್ಗೆ ತಕ್ಷಣದ ಯಾವುದೇ ಪ್ರಶ್ನೆ ಇಲ್ಲ. ಆದರೆ ಅಂತಹ ಪರಿಸ್ಥಿತಿ ಬಂದರೆ, ನಾವು ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ನಾವು ಎಲ್ಲರೂ ಕೂಡಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಸಿಎಂ ಬದಲಾವಣೆ ಬಗ್ಗೆ ಮಾತನಾಡುವ ಸಮಯ ಬಂದಿಲ್ಲ; ಸಮಯ ಬಂದಾಗ ನೋಡೋಣ ಎಂದು ಹೇಳಿದರು.&lt;/p&gt;&lt;h2&gt;ತಮಿಳುನಾಡು ಮತ್ತು ಕೇರಳದಲ್ಲಿ ಮೈತ್ರಿಗೆ ಮುನ್ನಡೆ&lt;/h2&gt;&lt;p&gt;ಪಂಚರಾಜ್ಯ ಚುನಾವಣೆಗಳ ಫಲಿತಾಂಶದ ಕುರಿತು ಮಾತನಾಡಿದ ಖರ್ಗೆ, ಕೆಲವು ರಾಜ್ಯಗಳಲ್ಲಿ ಸ್ಪಷ್ಟತೆ ಇದ್ದರೂ, ಇನ್ನೂ ಕೆಲವು ಕಡೆ ಗೊಂದಲದ ಸ್ಥಿತಿ ಇದೆ ಎಂದು ಹೇಳಿದರು. ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇದೆ ಎಂದು ಖರ್ಗೆ ಹೇಳಿದರು. ಅದೇ ರೀತಿ ಕೇರಳದಲ್ಲಿ ಯುಡಿಎಫ್ ಮೈತ್ರಿಗೆ ಬಹುಮತ ಲಭ್ಯವಾಗುವ ನಿರೀಕ್ಷೆಯೂ ಇದೆ ಎಂದು ಅವರು ತಿಳಿಸಿದ್ದಾರೆ.&lt;/p&gt;&lt;h2&gt;ಅಸ್ಸಾಂ ಮತ್ತು ಪಾಂಡಿಚೇರಿ, ಸ್ಪರ್ಧಾತ್ಮಕ ಪೈಪೋಟಿ&lt;/h2&gt;&lt;p&gt;ಅಸ್ಸಾಂನಲ್ಲಿ ಪಕ್ಷ ನಿರೀಕ್ಷಿಸಿದ್ದಷ್ಟು ಸ್ಥಾನಗಳು ಸಿಗುತ್ತಿಲ್ಲ ಎಂಬ ವರದಿಗಳು ಇದ್ದರೂ, ಅಂತಿಮ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಖರ್ಗೆ ಹೇಳಿದ್ದಾರೆ. ಪಾಂಡಿಚೇರಿಯಲ್ಲಿ ಬಿಜೆಪಿ ವಿರುದ್ಧ ಸಮಬಲದ ಹೋರಾಟ ನಡೆದಿದ್ದು, ಅಲ್ಲಿ ಕೂಡ ತೀವ್ರ ಪೈಪೋಟಿ ಕಂಡುಬಂದಿದೆ ಎಂದು ಅವರು ಹೇಳಿದರು.&lt;/p&gt;&lt;h2&gt;ಪಶ್ಚಿಮ ಬಂಗಾಳದಲ್ಲಿ ಹಣಾಹಣಿ&lt;/h2&gt;&lt;p&gt;ಪಶ್ಚಿಮ ಬಂಗಾಳದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಖರ್ಗೆ ಹೇಳಿದರು. ಟಿಎಂಸಿಗೆ ಮುನ್ನಡೆ ಇದೆ ಎಂಬ ಮಾಹಿತಿ ಇದ್ದರೂ, ಬಿಜೆಪಿ ಮತ್ತು ಅವರ ಮೈತ್ರಿ ಪಕ್ಷಗಳು ಒತ್ತಡ ತಂತ್ರಗಳನ್ನು ಬಳಸಿಕೊಂಡಿವೆ. ಕೇಂದ್ರ ಪಡೆಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ದಬ್ಬಾಳಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷ ಮೊದಲು ಬಲವಾಗಿರಲಿಲ್ಲ. ಈ ಬಾರಿ ನಾವು ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ. ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದು, ಈ ಬಾರಿ ಉತ್ತಮ ಬೆಳವಣಿಗೆ ಕಾಣಬಹುದು,&rdquo; ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;h2&gt;ಟಿಎಂಸಿ ಬೆಂಬಲ ಪ್ರಶ್ನೆ&lt;/h2&gt;&lt;p&gt;ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಬೆಂಬಲ ನೀಡುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, &ldquo;ಮೊದಲು ಫಲಿತಾಂಶ ಬರಲಿ, ನಂತರ ನೋಡೋಣ,&rdquo; ಎಂದು ತಿಳಿಸಿದ್ದಾರೆ. ಒಟ್ಟಾರೆ, ರಾಜ್ಯದಲ್ಲಿ ನಾಯಕತ್ವ ಗೊಂದಲ ಶೀಘ್ರದಲ್ಲೇ ನಿವಾರಣೆಯಾಗಲಿದೆ ಎಂಬ ಭರವಸೆ ನೀಡಿದ ಖರ್ಗೆ, ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ತುರ್ತು ನಿರ್ಧಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಪಂಚರಾಜ್ಯ ಚುನಾವಣೆಯ ಫಲಿತಾಂಶಗಳು ಮಿಶ್ರವಾಗಿದ್ದರೂ, ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/politics/aicc-chief-mallikarjun-kharge-on-karnataka-leadership-row-says-issue-will-be-resolved-soon-gdp/articleshow-a266ygs"/>
        </item>
        <item>
            <title><![CDATA[ಮತ್ತೆ ಗರಿಗೆದರಿದ ಕಲಬುರಗಿ-ಬೆಂಗಳೂರು ವಿಮಾನಯಾನ ಕನಸು, ಕೆಕೆಆರ್‌ಡಿಬಿಯಿಂದ 80% ಸರ್ಕಾರದಿಂದ 20% ನೆರವು]]></title>
            <link>https://kannada.asianetnews.com/karnataka-districts/kalaburagi-bengaluru-flight-services-set-to-resume-with-kkrdb-and-government-subsidy-support-gdp/articleshow-aqugwq2</link>
            <guid isPermaLink="true">https://kannada.asianetnews.com/karnataka-districts/kalaburagi-bengaluru-flight-services-set-to-resume-with-kkrdb-and-government-subsidy-support-gdp/articleshow-aqugwq2</guid>
            <pubDate>Mon, 11 May 2026 23:15:07 +0530</pubDate>
            <description><![CDATA[ವಾಣಿಜ್ಯ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಲಬುರಗಿ-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು 'ವೈಯಬಿಲಿಟಿ ಗ್ಯಾಪ್ ಫಂಡಿಂಗ್' ಯೋಜನೆಯಡಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ. ಈ ಯೋಜನೆಯಲ್ಲಿ ಕೆಕೆಆರ್&zwnj;ಡಿಬಿ ಶೇ. 80 ರಷ್ಟು ಮತ್ತು ರಾಜ್ಯ ಸರ್ಕಾರ ಶೇ. 20 ರಷ್ಟು ವೆಚ್ಚವನ್ನು ಭರಿಸಲಿದ್ದು, ಶೀಘ್ರದಲ್ಲೇ ಸೇವೆ ಪುನಾರಂಭಗೊಳ್ಳುವ ನಿರೀಕ್ಷೆಯಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krc1ggjh20q4mz0zyvf7smwf,imgname-kalaburagi-airport-1778520703568.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ಜಿಲ್ಲೆಯ ಜನತೆಯ ಬಹುದಿನದ ಬೇಡಿಕೆಯಾದ ಕಲಬುರಗಿ-ಬೆಂಗಳೂರು ನಡುವಿನ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ವಾಣಿಜ್ಯ ಕಾರಣಗಳಿಂದ ಸ್ಥಗಿತಗೊಂಡಿದ್ದ ಈ ಮಾರ್ಗದ ಕಾರ್ಯಾಚರಣೆಗೆ ಜೀವ ತುಂಬಲು &lsquo;ವೈಯಬಿಲಿಟಿ ಗ್ಯಾಪ್ ಫಂಡಿಂಗ್&rsquo; (ವಿಜಿಎಪ್&zwnj;) ಯೋಜನೆಯಡಿ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದೆ. ಹೀಗಾಗಿ ಸ್ಥಗಿತಗೊಂಡಿರುವ ಕಲಬುರಗಿ ಹಾಗೂ ಬೆಂಗಳೂರು ನಡುವಿನ ವಿಮಾನ ಸೇವೆ ಪುನಾರಂಭಗೊಳ್ಳಲು ಎಲ್ಲ ರೀತಿಯ ಸಿದ್ಧತೆಗಳು ನಡೆದಂತಾಗಿದೆ.&lt;/p&gt;&lt;h2&gt;ಅಂದಾಜು ರು. 2.50 ಕೋಟಿ ಆರ್ಥಿಕ ಬೆಂಬಲ&lt;/h2&gt;&lt;p&gt;ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಪಂಚಾಯತ್ ರಾಜ್ ಮತ್ತು ಐ.ಟಿ. ಇಲಾಖೆಯ ಮಂತ್ರಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಮಂತ್ರಿಗಳು, ಪೌರಾಡಳಿತ ಮತ್ತು ಹಜ್ ಇಲಾಖೆಯ ಮಂತ್ರಿಗಳ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ವಿಮಾನಯಾನ ಸಂಸ್ಥೆಗಳು ಪ್ರತಿದಿನ ಕಾರ್ಯಾಚರಣೆ ನಡೆಸಲು ಆಸಕ್ತಿ ತೋರಿದ್ದು, ಇದಕ್ಕಾಗಿ ವರ್ಷಕ್ಕೆ ಅಂದಾಜು ರು. 2.50 ಕೋಟಿ ಆರ್ಥಿಕ ಬೆಂಬಲದ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ ಎಂದು ಕೆಕೆಆರ್&zwnj;ಡಿಬಿ ಅಧ್ಯಕ್ಷ ಡಾ. ಅಜಯ್&zwnj; ಸಿಂಗ್&zwnj; ಹೇಳಿದ್ದಾರೆ.&lt;/p&gt;&lt;p&gt;ವಿಮಾನಯಾನ ಸಂಸ್ಥೆಗಳಿಗೆ ನೀಡಬೇಕಾದ ಈ ಮೊತ್ತದಲ್ಲಿ ಸಿಂಹಪಾಲು ಅಂದರೆ ಶೇ. 80 ರಷ್ಟನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಭರಿಸಲಿದ್ದು, ಉಳಿದ ಶೇ. 20 ರಷ್ಟನ್ನು ರಾಜ್ಯ ಸರ್ಕಾರ ನೀಡಲಿದೆ. ಈಗಾಗಲೇ ಬೀದರ್-ಬೆಂಗಳೂರು ಮಾರ್ಗಕ್ಕಾಗಿ 2025-26ನೇ ಸಾಲಿನಲ್ಲಿ 12.20 ಕೋಟಿ ರು. ಮಂಡಳಿಯಿಂದ ಮಂಜೂರು ಮಾಡಲಾಗಿದ್ದು, ಇದೇ ಮಾದರಿಯಲ್ಲಿ ಕಲಬುರಗಿ ಮಾರ್ಗಕ್ಕೂ ಅನುದಾನ ಒದಗಿಸಲು ಮಂಡಳಿಯ ಕ್ರಿಯಾ ಯೋಜನೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಾ. ಅಜಯ್&zwnj; ಸಿಂಗ್&zwnj; ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;ಹಿನ್ನೆಲೆ ಮತ್ತು ಸವಾಲು:&lt;/h2&gt;&lt;p&gt;ಕಲಬುರಗಿ ವಿಮಾನ ನಿಲ್ದಾಣವು ಕೇವಲ ಜಿಲ್ಲೆಗೆ ಮಾತ್ರವಲ್ಲದೆ, ಸುತ್ತಮುತ್ತಲಿನ ಆರು ಜಿಲ್ಲೆಗಳು ಹಾಗೂ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣದ ಪ್ರಯಾಣಿಕರಿಗೂ ಆಸರೆಯಾಗಿದೆ. ಏರ್&zwnj;ಬಸ್&zwnj; 320 ಹಾಗೂ ಬೋಯಿಂಗ್-737 ನಂತಹ ಬೃಹತ್ ವಿಮಾನಗಳ ಸಂಚಾರಕ್ಕೆ ಬೇಕಾದ ಅತ್ಯಾಧುನಿಕ ಮೂಲಸೌಕರ್ಯಗಳಿವೆ. ಆದರೆ, ಈ ಹಿಂದೆ ಸೇವೆ ನೀಡುತ್ತಿದ್ದ ಘೋಡಾವತ್ ಸಂಸ್ಥೆಯು ಪ್ರಯಾಣಿಕರ ಕೊರತೆ ಮತ್ತು ಆರ್ಥಿಕ ನಷ್ಟದ ಕಾರಣ ನೀಡಿ ಅಕ್ಟೋಬರ್ 15, 2025 ರಿಂದ ಸೇವೆಯನ್ನು ಸ್ಥಗಿತಗೊಳಿಸಿತ್ತು.&lt;/p&gt;&lt;p&gt;ಸರ್ಕಾರ ಹಾಗೂ ಕೆಕೆಆರ್&zwnj;ಡಿಬಿಯ ಸಹಯೋಗದಲ್ಲಿ ವಿಮಾನಯಾನ ಸಂಸ್ಥೆಗಳು ಪ್ರತಿದಿನ ಕಾರ್ಯಾಚರಣೆ ನಡೆಸಲು ಇದಕ್ಕಾಗಿ ವರ್ಷಕ್ಕೆ ಅಂದಾಜು ರು. 12.50 ಕೋಟಿ ಆರ್ಥಿಕ ಬೆಂಬಲದ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಈ ನಿರ್ಧಾರದಿಂದಾಗಿ ಕಲಬುರಗಿ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ ಪ್ರತಿನಿತ್ಯ ವಿಮಾನ ಸಂಚಾರ ಆರಂಭವಾಗುವ ನಿರೀಕ್ಷೆಯಿದ್ದು, ಇದು ಈ ಭಾಗದ ಕೈಗಾರಿಕಾ ಮತ್ತು ಶೈಕ್ಷಣಿಕ ಪ್ರಗತಿಗೆ ಹೊಸ ವೇಗ ನೀಡಲಿದೆ ಎಂದು ಡಾ. ಅಜಯ್&zwnj; ಸಿಂಗ್&zwnj; ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/kalaburagi-bengaluru-flight-services-set-to-resume-with-kkrdb-and-government-subsidy-support-gdp/articleshow-aqugwq2"/>
        </item>
        <item>
            <title><![CDATA[ಡಿಕೆ ಸಂಪುಟ ರಚನೆ ಹೇಗೆ ಅಗುತ್ತೆ? ಯಾರಿಗೆಲ್ಲಾ ಸಿಗುತ್ತೆ ಸ್ಥಾನ? ಖರ್ಗೆ ಹೇಳಿದ ರಹಸ್ಯಗಳು]]></title>
            <link>https://kannada.asianetnews.com/karnataka-districts/karnataka-politics-update-how-will-dk-shivakumar-s-cabinet-be-formed-who-will-get-a-place-mrq/articleshow-bzrogfe</link>
            <guid isPermaLink="true">https://kannada.asianetnews.com/karnataka-districts/karnataka-politics-update-how-will-dk-shivakumar-s-cabinet-be-formed-who-will-get-a-place-mrq/articleshow-bzrogfe</guid>
            <pubDate>Mon, 01 Jun 2026 05:46:10 +0530</pubDate>
            <description><![CDATA[ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ಸಂಪುಟ ರಚನೆಯು ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಕಲಬುರಗಿಯಲ್ಲಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 8-10 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ನಂತರ ಸಂಪುಟ ವಿಸ್ತರಣೆಯಾಗಲಿದೆ. ಅಲ್ಲದೆ, ಡಿಕೆಶಿ ಸಿಎಂ ಆದ ಬಳಿಕ ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kt08gxdz3yy6vy1nshzgqh25,imgname-mallikarjun-kharge-1780272887231.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ : &lt;/strong&gt;ಜೂನ್&zwnj; 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್&zwnj; ಅವರೊಂದಿಗೆ ಮೊದಲ ಹಂತದಲ್ಲಿ ಎಂಟೋ, ಹತ್ತೋ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಾದ ನಂತರ, 15 ದಿನಗಳು ಅಥವಾ ತಿಂಗಳೊಳಗೆ ಮತ್ತೊಮ್ಮೆ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.&lt;/p&gt;&lt;p&gt;ಅಧಿಕ ಜೇಷ್ಠ ಪೂರ್ಣಿಮೆ ದಿನವಾದ ಭಾನುವಾರ, ಕಲಬುರಗಿಯ ಬುದ್ಧವಿಹಾರದಲ್ಲಿ ಪೂರ್ಣಿಮೆ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಮಾಹಿತಿ ನೀಡಿದರು.&lt;/p&gt;&lt;h2&gt;&lt;strong&gt;ತಿಂಗಳಲ್ಲಿ ಮತ್ತೊಮ್ಮೆ ಸಂಪುಟ ವಿಸ್ತರಣೆ&lt;/strong&gt;&lt;/h2&gt;&lt;p&gt;ಸಂಪುಟ ಸೇರಲಿರುವ ಸಚಿವರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜೂನ್&zwnj; 3ರಂದು ಮೊದಲ ಹಂತದಲ್ಲಿ ಎಂಟೋ, ಹತ್ತೋ ಸಚಿವರ ಪ್ರಮಾಣವಚನ ನಡೆಯಬಹುದು. ಅದಾದ 15 ದಿನ ಅಥವಾ ಒಂದು ತಿಂಗಳೊಳಗೆ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳುವ ಮೂಲಕ 2 ಹಂತದಲ್ಲಿ ಡಿ.ಕೆ.ಶಿವಕುಮಾರ್&zwnj; ಸರ್ಕಾರದ ಸಂಪುಟ ರಚನೆಯಾಗುವ ಸುಳಿವು ನೀಡಿದರು.&lt;/p&gt;&lt;p&gt;ಹೊಸ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಹೊಸ ಸಂಪುಟ ರಚನೆಯ ಬಗ್ಗೆ ನನ್ನ ಬಳಿಗೆ ಇದುವರೆಗೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕವೇ ಡಿಸಿಎಂ ಹಾಗೂ ಸಚಿವರ ಸಂಖ್ಯೆ ತೀರ್ಮಾನವಾಗಲಿದೆ. ಸಿಎಂ ಮೊದಲು ಸಚಿವರ ಲಿಸ್ಟ್ ಅನ್ನು ನಮಗೆ ಕೊಡಲಿ. ಅದಾದ ನಂತರವಷ್ಟೇ ಎಷ್ಟು ಡಿಸಿಎಂ ಮಾಡಬೇಕು?, ಎಷ್ಟು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು? ಎಂಬುದನ್ನು ತೀರ್ಮಾನಿಸಲಾಗುವುದು. ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನೂ ಜೊತೆಯಲ್ಲೇ ಮಾಡಬೇಕಾ? ಎನ್ನುವ ಚರ್ಚೆ ಸಹ ನಡೆದಿದೆ. ಇವೆಲ್ಲವನ್ನೂ ಜೂನ್&zwnj; 3ರ ನಂತರ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.&lt;/p&gt;&lt;h3&gt;&lt;strong&gt;ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಯಾರು?&lt;/strong&gt;&lt;/h3&gt;&lt;p&gt;ಕೆಪಿಸಿಸಿ ಅಧ್ಯಕ್ಷ ಹುದ್ದೆ ಕುರಿತು ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್&zwnj; ಅವರು ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಸಹಜ. ಮುಂಬರುವ ಚುನಾವಣೆ ದೃಷ್ಟಿಯಿಂದ ಎಲ್ಲರನ್ನೂ ಒಗ್ಗಟ್ಟಾಗಿ ಕೊಂಡೊಯ್ಯುವ, ಸಿಎಂ ಜೊತೆ ಉತ್ತಮ ಸಮನ್ವಯ ಹೊಂದಿರುವ ಸೂಕ್ತ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.&lt;/p&gt;&lt;p&gt;ಚುನಾವಣೆಗೆ ಕೇವಲ 2 ವರ್ಷ ಮಾತ್ರ ಬಾಕಿಯಿದೆ. ಬಹಳ ವೇಗವಾಗಿ ಕೆಲಸ ಮಾಡಬೇಕಿದೆ. ವೇಗವಾಗಿ ಕೆಲಸ ಮಾಡುವ, ಸಾಮೂಹಿಕವಾಗಿ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಇರುವ ನಾಯಕನನ್ನು ಹುಡುಕಬೇಕಿದೆ. ಜೊತೆಗೆ, ಅವರಿಗೆ ಸಹಕಾರ ನೀಡುವ ತಂಡವೂ ಇರಬೇಕಾಗುತ್ತದೆ. ಇವೆಲ್ಲವನ್ನೂ ವಿಚಾರ ಮಾಡಿ ನಾವು ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುತ್ತೇವೆ ಎಂದರು.&lt;/p&gt;&lt;p&gt;ಹೊಸ ಸಚಿವ ಸಂಪುಟ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕಸರತ್ತಿಗೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ತೀವ್ರ ಚರ್ಚೆಗಳ ನಡುವೆಯೇ ಖರ್ಗೆಯವರ ಕಲಬುರಗಿಯ ಈ ಭೇಟಿ, ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.&lt;/p&gt;&lt;p&gt;ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ, ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬ ಕೂಗು ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ. ಈ ಸಂದರ್ಭದಲ್ಲಿಯೇ ಖರ್ಗೆಯವರು ತಮ್ಮ ತವರು ಜಿಲ್ಲೆಯಾದ ಕಲಬುರಗಿಗೆ ಭೇಟಿ ನೀಡಿದ್ದಾರೆ. ಸ್ಥಳೀಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಶಾಸಕರು ಹಾಗೂ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಿ, ಗಮನ ಸೆಳೆದಿದ್ದಾರೆ.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/karnataka-politics-update-how-will-dk-shivakumar-s-cabinet-be-formed-who-will-get-a-place-mrq/articleshow-bzrogfe"/>
        </item>
        <item>
            <title><![CDATA[ರೈಲು ಪ್ರಯಾಣಿಕರೇ ಗಮನಿಸಿ: ಜೂನ್ 1ರಿಂದ ಕಲಬುರಗಿ, ಗಾಣಗಾಪುರ ಮಾರ್ಗದ ಪ್ರಮುಖ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ!]]></title>
            <link>https://kannada.asianetnews.com/karnataka-districts/karnataka-railways-solapur-division-revises-train-timetables-at-kalaburagi-ganagapur-road-hotgi-stations-from-june1-gdp/articleshow-dx152ao</link>
            <guid isPermaLink="true">https://kannada.asianetnews.com/karnataka-districts/karnataka-railways-solapur-division-revises-train-timetables-at-kalaburagi-ganagapur-road-hotgi-stations-from-june1-gdp/articleshow-dx152ao</guid>
            <pubDate>Sat, 30 May 2026 19:39:57 +0530</pubDate>
            <description><![CDATA[ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಕಲಬುರಗಿ, ಗಾಣಗಾಪುರ ರಸ್ತೆ, ಮತ್ತು ಹೊಟ್ಲಿ ನಿಲ್ದಾಣಗಳ ಮೂಲಕ ಹಾದುಹೋಗುವ ಕೆಲವು ಪ್ರಮುಖ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಹೊಸ ವೇಳಾಪಟ್ಟಿಯು ಜೂನ್ 1 ರಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಪ್ರಯಾಣಿಕರು ನವೀಕೃತ ಸಮಯವನ್ನು ಪರಿಶೀಲಿಸಲು ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knzr06zeea1hqff78krd0yts,imgname-indian-railways-2026-reforms-vande-bharat-sleeper-hydrogen-train-ticket-refund-cancellation-board-change-policy-2-1775960595438.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ರೈಲು ಪ್ರಯಾಣಿಕರ ಅನುಕೂಲತೆ, ಕಟ್ಟುನಿಟ್ಟಿನ ಸಮಯಪಾಲನೆ ಹಾಗೂ ರೈಲು ಕಾರ್ಯಾಚರಣೆಯ ಒಟ್ಟಾರೆ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಈ ವಲಯದ ವ್ಯಾಪ್ತಿಗೆ ಬರುವ ಕಲಬುರಗಿ, ಗಾಣಗಾಪುರ ರಸ್ತೆ ಹಾಗೂ ಹೊಟ್ಲಿ ರೈಲು ನಿಲ್ದಾಣಗಳ ಮಾರ್ಗವಾಗಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್&zwnj;ಪ್ರೆಸ್ ಮತ್ತು ಸಾಪ್ತಾಹಿಕ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;&lt;p&gt;ಈ ನೂತನ ಪರಿಷ್ಕೃತ ವೇಳಾಪಟ್ಟಿಯು ಜೂನ್ 1ರಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ಈ ಕೆಳಗಿನ ಬದಲಾವಣೆಗಳನ್ನು ಕಡ್ಡಾಯವಾಗಿ ಗಮನಿಸಬೇಕಿದೆ.&lt;/p&gt;&lt;h2&gt;ನಿಲ್ದಾಣವಾರು ಪರಿಷ್ಕೃತ ವೇಳಾಪಟ್ಟಿಯ ಸಂಪೂರ್ಣ ವಿವರಗಳು:&lt;/h2&gt;&lt;p&gt;ವಿವಿಧ ರೈಲು ನಿಲ್ದಾಣಗಳಲ್ಲಿ ರೈಲುಗಳ ಆಗಮನ (Arrival) ಮತ್ತು ನಿರ್ಗಮನ (Departure) ಸಮಯವನ್ನು ಬದಲಾಯಿಸಲಾಗಿದ್ದು, ಅದರ ಅಧಿಕೃತ ಮಾಹಿತಿ ಇಲ್ಲಿದೆ.&lt;/p&gt;&lt;h3&gt;1. ಹೊಟ್ಲಿ ರೈಲು ನಿಲ್ದಾಣ (Hotgi Station)&lt;/h3&gt;&lt;p&gt;ಬಾಗಲಕೋಟೆ - ಮೈಸೂರು ಬಸವ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 17308): ಈ ರೈಲಿನ ಸಂಚಾರ ಸಮಯವನ್ನು 10 ನಿಮಿಷಗಳಷ್ಟು ಮುಂಚಿತಗೊಳಿಸಲಾಗಿದೆ. ಜೂನ್ 1ರಿಂದ ಅನ್ವಯವಾಗುವಂತೆ ಈ ರೈಲು ಸಂಜೆ 6:18ಕ್ಕೆ ಹೊಟ್ಲಿ ನಿಲ್ದಾಣಕ್ಕೆ ಆಗಮಿಸಿ, 6:20ಕ್ಕೆ ಮೈಸೂರಿನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರಿಸಲಿದೆ.&lt;/p&gt;&lt;h3&gt;2. ಗಾಣಗಾಪುರ ರಸ್ತೆ ನಿಲ್ದಾಣ (Ganagapur Road Station)&lt;/h3&gt;&lt;p&gt;ಹೈದರಾಬಾದ್ - ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 17050): ದತ್ತಾತ್ರೇಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಪ್ರಮುಖವಾಗಿರುವ ಈ ರೈಲಿನ ಸಮಯದಲ್ಲೂ ಮಾರ್ಪಾಡು ಮಾಡಲಾಗಿದೆ. ಜೂನ್ 1ರಿಂದ ಈ ರೈಲು ರಾತ್ರಿ 8:28ಕ್ಕೆ ನಿಲ್ದಾಣಕ್ಕೆ ಆಗಮಿಸಲಿದ್ದು, ರಾತ್ರಿ 8:30ಕ್ಕೆ ಹುಬ್ಬಳ್ಳಿಯ ಕಡೆಗೆ ಹೊರಡಲಿದೆ.&lt;/p&gt;&lt;h3&gt;3. ಕಲಬುರಗಿ ರೈಲು ನಿಲ್ದಾಣ (Kalaburagi Junction)&lt;/h3&gt;&lt;p&gt;ಕಲಬುರಗಿ ನಿಲ್ದಾಣದ ಮೂಲಕ ಹಾದುಹೋಗುವ ಹಲವು ದೂರಪ್ರಯಾಣದ ಮತ್ತು ಸಾಪ್ತಾಹಿಕ ಪ್ರೀಮಿಯಂ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ:&lt;/p&gt;&lt;ul&gt; &lt;li&gt;ಚೆನ್ನೈ ಸೆಂಟ್ರಲ್ - ಸಿಎಸ್&zwnj;ಎಂಟಿ ಮುಂಬೈ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 22160): ಜೂನ್ 1ರಿಂದ ಅನ್ವಯವಾಗುವಂತೆ ಈ ರೈಲು ಮಧ್ಯರಾತ್ರಿ ನಂತರ 1:50ಕ್ಕೆ ಕಲಬುರಗಿ ನಿಲ್ದಾಣಕ್ಕೆ ಆಗಮಿಸಿ, 1:53ಕ್ಕೆ ಮುಂಬೈ ಕಡೆಗೆ ಹೊರಡಲಿದೆ.&lt;/li&gt; &lt;li&gt;ಚೆನ್ನೈ ಸೆಂಟ್ರಲ್ - ಸಾಯಿನಗರ ಶಿರಡಿ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 22601): ಈ ಸಾಪ್ತಾಹಿಕ ರೈಲಿನ ಹೊಸ ಸಮಯವು ಜೂನ್ 3 ರಿಂದ ಜಾರಿಗೆ ಬರಲಿದ್ದು, ರಾತ್ರಿ 1:45ಕ್ಕೆ ನಿಲ್ದಾಣಕ್ಕೆ ಬಂದು 1:48ಕ್ಕೆ ನಿರ್ಗಮಿಸಲಿದೆ.&lt;/li&gt; &lt;li&gt;ಯಶವಂತಪುರ - ಜೈಪುರ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 20667): ಈ ರೈಲಿನ ಪರಿಷ್ಕೃತ ಸಮಯವು ಜೂನ್ 4 ರಿಂದ ಜಾರಿಗೆ ಬರಲಿದ್ದು, ರಾತ್ರಿ 1:45ಕ್ಕೆ ಕಲಬುರಗಿಗೆ ಆಗಮಿಸಿ, 1:48ಕ್ಕೆ ಜೈಪುರದ ಕಡೆಗೆ ಸಂಚರಿಸಲಿದೆ.&lt;/li&gt; &lt;li&gt;ಯಶವಂತಪುರ - ಅಹಮದಾಬಾದ್ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 22690): ಈ ರೈಲಿನ ವೇಳಾಪಟ್ಟಿಯು ಜೂನ್ 7 ರಿಂದ ಬದಲಾಗಲಿದ್ದು, ರಾತ್ರಿ 1:45ಕ್ಕೆ ನಿಲ್ದಾಣಕ್ಕೆ ಬಂದು 1:48ಕ್ಕೆ ಅಹಮದಾಬಾದ್ ಕಡೆಗೆ ತನ್ನ ಪ್ರಯಾಣ ಮುಂದುವರಿಸಲಿದೆ.&lt;/li&gt;&lt;/ul&gt;&lt;h2&gt;ಇತರೆ ನಿಲ್ದಾಣಗಳಲ್ಲಿ ಬದಲಾವಣೆ ಇಲ್ಲ: ರೈಲ್ವೆ ಇಲಾಖೆ ಸ್ಪಷ್ಟನೆ&lt;/h2&gt;&lt;p&gt;ಈ ನಿರ್ದಿಷ್ಟ ರೈಲುಗಳ ವೇಳಾಪಟ್ಟಿಯು ಕೇವಲ ಸೂಚಿಸಲಾದ ನಿಲ್ದಾಣಗಳಲ್ಲಿ ಮಾತ್ರ ಬದಲಾಗಲಿದ್ದು, ಉಳಿದ ಯಾವುದೇ ನಿಲ್ದಾಣಗಳ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಸೋಲಾಪುರ ವಿಭಾಗದ ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;ಪ್ರಯಾಣಿಕರಿಗೆ ಪ್ರಮುಖ ಸಲಹೆ&lt;/h2&gt;&lt;p&gt;ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯದಲ್ಲಿ ನಿಮಿಷಗಳ ವ್ಯತ್ಯಾಸವಿರುವುದರಿಂದ ಪ್ರಯಾಣಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ನಿಲ್ದಾಣಕ್ಕೆ ಹೊರಡುವ ಮುನ್ನ ಅಧಿಕೃತ ರೈಲ್ವೆ ಮಾಹಿತಿ ಕೇಂದ್ರಗಳ ಮೂಲಕ ಅಥವಾ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (NTES) ಮೊಬೈಲ್ ಆ್ಯಪ್ ಹಾಗೂ ಐಆರ್&zwnj;ಸಿಟಿಸಿ (IRCTC) ಪೋರ್ಟಲ್ ಮೂಲಕ ರೈಲುಗಳ ನವೀಕೃತ ವೇಳಾಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ವಿನಂತಿಸಿದೆ.&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-railways-solapur-division-revises-train-timetables-at-kalaburagi-ganagapur-road-hotgi-stations-from-june1-gdp/articleshow-dx152ao"/>
        </item>
        <item>
            <title><![CDATA[ಜೂನ್‌ನಿಂದ ಬೀದರ್‌-ಕಲಬುರಗಿಗೆ ಬೆಂಗ್ಳೂರಿಂದ ವಿಮಾನ ಸೇವೆ ಪುನರಾರಂಭ; ಮುಂಗಡ ಬುಕ್ಕಿಂಗ್ ಶುರು]]></title>
            <link>https://kannada.asianetnews.com/travel/flight-service-from-bengaluru-to-bidar-kalaburagi-to-start-from-june-mrq/articleshow-e330gq1</link>
            <guid isPermaLink="true">https://kannada.asianetnews.com/travel/flight-service-from-bengaluru-to-bidar-kalaburagi-to-start-from-june-mrq/articleshow-e330gq1</guid>
            <pubDate>Sat, 23 May 2026 05:14:13 +0530</pubDate>
            <description><![CDATA[ಕಲ್ಯಾಣ ಕರ್ನಾಟಕ ಭಾಗದ ಬೀದರ್&zwnj; ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನರಾರಂಭಗೊಳ್ಳಲಿದೆ. ಸ್ಟಾರ್&zwnj; ಏರ್&zwnj;ಲೈನ್ಸ್&zwnj; ಈ ಸೇವೆಯನ್ನು ಒದಗಿಸಲಿದ್ದು, ಪ್ರಾದೇಶಿಕ ಸಂಪರ್ಕ ವೃದ್ಧಿಸುವ ಉದ್ದೇಶದಿಂದ ಸರ್ಕಾರವು ವಯಾಬಲಿಟಿ ಗ್ಯಾಪ್&zwnj; ಫಂಡಿಂಗ್&zwnj; ಮೂಲಕ ಆರ್ಥಿಕ ಬೆಂಬಲ ನೀಡುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks911arvcb7n05wjsvjc0j7p,imgname-airport-1779493284635.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಕಲ್ಯಾಣ ಕರ್ನಾಟಕ ಭಾಗದ ಬೀದರ್&zwnj; ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ಕ್ರಮವಾಗಿ ಜೂ.1 ಮತ್ತು ಜೂ.10ರಿಂದ ವಿಮಾನಯಾನ ಸೇವೆ ಪುನರಾರಂಭಿಸಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಾರ್&zwnj; ಏರ್&zwnj;ಲೈನ್ಸ್&zwnj; ಸಂಸ್ಥೆಯು ಬೆಂಗಳೂರಿನಿಂದ ಬೀದರ್&zwnj;, ಕಲಬುರಗಿಗೆ ವಿಮಾನಯಾನ ಸೇವೆ ಒದಗಿಸಲಿದೆ. ಅದಕ್ಕೆ ಬೆಂಬಲ ನೀಡಲು ಸರ್ಕಾರವು 28.47 ಕೋಟಿ ರು.ಗಳನ್ನು ವಯಾಬಲಿಟಿ ಗ್ಯಾಪ್&zwnj; ಫಂಡಿಂಗ್&zwnj; ಆಗಿ ಕೊಡುತ್ತಿದೆ. ಎರಡೂ ಕರೆಯ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕ್ಕಿಂಗ್&zwnj; ಆರಂಭಿಸಲಾಗಿದೆ ಎಂದರು.&lt;/p&gt;&lt;h2&gt;&lt;strong&gt;ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮ&lt;/strong&gt;&lt;/h2&gt;&lt;p&gt;ಈ ಹಿಂದೆ ಕಲಬುರಗಿಗೆಯಿದ್ದ ವಿಮಾನಸೇವೆ ನಷ್ಟದ ಕಾರಣ ಸ್ಥಗಿತಗೊಂಡಿತ್ತು. ಬೀದರ್&zwnj;ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವಿಶೇಷ ನೆರವಿನಿಂದ ಒಂದು ವಿಮಾನ ಸೇವೆ ನೀಡಲಾಗುತ್ತಿತ್ತು. ಅದೂ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಬೆಳವಣಿಗೆ ಪರಿಗಣಿಸಿ ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮದಡಿ ವಿಮಾನ ಸೇವೆ ಮತ್ತೆ ಆರಂಭಿಸಲಾಗುತ್ತಿದೆ. ಅಲ್ಲದೆ, ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಿಗೆ ವಿಮಾನ ಸಂಪರ್ಕ ಒದಗಿಸಬೇಕು ಎನ್ನುವುದು ಸರ್ಕಾರದ ಕಾಳಜಿಯಾಗಿದೆ. ಅದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಜತೆಗೆ ಮೂಲಸೌಕರ್ಯ ಕೂಡ ಸುಧಾರಿಸಲಿದೆ ಎಂದು ವಿವರಿಸಿದರು.&lt;/p&gt;&lt;p&gt;&amp;nbsp;&lt;/p&gt;&lt;p&gt;ಜೂನ್ 1ರಿಂದ ಬೀದರ್ ಗೆ, ಜೂನ್ 10ರಿಂದ ಕಲಬುರಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ!ಕಲ್ಯಾಣ ಕರ್ನಾಟಕ ಭಾಗದ ಬೀದರ್ ಹಾಗೂ ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನಾರಂಭಿಸಲಾಗುವುದು.ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು&hellip; pic.twitter.com/Kr2tJyaH4u&lt;/p&gt;&lt;p&gt;&mdash; M B Patil (@MBPatil) May 22, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/travel/flight-service-from-bengaluru-to-bidar-kalaburagi-to-start-from-june-mrq/articleshow-e330gq1"/>
        </item>
        <item>
            <title><![CDATA[ಸಂಧಾನದ ನಂತರವೂ ಸರಿಹೋಗದ ಸಂಸಾರ: 4 ದಿನದ ಹಿಂದಷ್ಟೇ ಮನೆಗೆ ಬಂದ ಪತ್ನಿಯ ಕೊಂದು ಮಗುವಿನೊಂದಿಗೆ ಬಾವಿಗೆ ಜಿಗಿದ ಪತಿ]]></title>
            <link>https://kannada.asianetnews.com/crime/kalaburgi-husband-kills-wife-who-came-home-just-4-days-ago-and-jumps-into-well/articleshow-ebuxb3i</link>
            <guid isPermaLink="true">https://kannada.asianetnews.com/crime/kalaburgi-husband-kills-wife-who-came-home-just-4-days-ago-and-jumps-into-well/articleshow-ebuxb3i</guid>
            <pubDate>Tue, 28 Apr 2026 15:57:23 +0530</pubDate>
            <description><![CDATA[&lt;p&gt;ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಸ್ಥಳೀಯರು ಕೂಡಲೇ ಮಗುವನ್ನು ರಕ್ಷಿಸಿದರೂ, ಪತಿ ಪತ್ನಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq9ryzhnv663jntsdvhkxh6x,imgname-kalburgi-husband-suicide-killing-his-wife-1777370889781.jpeg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯ ಕೊಂದು ಸಾವಿಗೆ ಶರಣಾದ ಪತಿ&lt;/strong&gt;&lt;/h2&gt;&lt;p&gt;ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಸಾವಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿ ಪತಿ ಮಗುವಿನೊಂದಿಗೆ ಬಾವಿಗೆ ಹಾರಿದ್ದಾನೆ. ಆದರೆ ಈ ವೇಳೆ ಸಮಯಪ್ರಜ್ಞೆ ಮೆರೆದ ಸ್ಥಳೀಯರು ಕೂಡಲೇ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ. ಆದರೆ ಬಾವಿಯಲ್ಲಿ ಮುಳುಗಿ ಪತಿ ಸಾವಿಗೆ ಶರಣಾಗಿದ್ದಾನೆ. ಗಂಡನಿಂದಲೇ ಕೊಲೆಯಾದ ಮಹಿಳೆಯನ್ನು 23 ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ಹಾಗೆಯೇ ಲಕ್ಷ್ಮೀಕಾಂತ ಎಂಬಾತನೇ ಪತ್ನಿಯನ್ನು ಕೊಂದು ಸಾವಿಗೆ ಶರಣಾದಂತಹ ವ್ಯಕ್ತಿ.&lt;/p&gt;&lt;p&gt;&lt;strong&gt;ಪತ್ನಿ ಕೊಂದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ&lt;/strong&gt;&lt;/p&gt;&lt;p&gt;ಮನೆಯೊಳಗೆ ಹೆಂಡತಿ ಕೊಲೆ ಮಾಡಿದ ಲಕ್ಷ್ಮೀಕಾಂತ ಬಳಿಕ ಮನೆಯ ಹೊರಗಿದ್ದ ಬಾವಿಗೆ ಹಾರಿದ್ದ. ಪತ್ನಿ ಅಂಜಲಿ ಹಾಗೂ ಪತಿ ಲಕ್ಷ್ಮೀಕಾಂತ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿದ್ದವು, ಕೌಟುಂಬಿಕ ಕಲಹದಿಂದಾಗಿ ಪತ್ನಿ ಅಂಜಲಿ ಗಂಡನ ಕಾಟ ತಾಳದೇ ಒಂದೂವರೆ ವರ್ಷದ ಹಿಂದೆಯೇ ತವರಿಗೆ ಹೋಗಿದ್ದಳು. ಅಂಜಲಿ ಮೂಲತಃ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಚಿಕ್ಕೆಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಅಲ್ಲಿಯೇ ನೆಲೆಸಿದ್ದಳು. ಅಂಜಲಿಗೆ ಮದರಾ ಕೆ ಗ್ರಾಮದಲ್ಲಿ ನೆಲೆಸುವುದು ಇಷ್ಟವಿರಲಿಲ್ಲ, ಮಹಾರಾಷ್ಟ್ರದ ಪೂನಾದಲ್ಲಿ ಕೆಲಸ ಮಾಡಿ ಬದುಕಬೇಕು ಎಂಬುದು ಆಕೆಯ ಬೇಡಿಕೆಯಾಗಿತ್ತು. ಇದೇ ವಿಚಾರಕ್ಕೆ ಗಂಡ ಹೆಂಡತಿ ಮಧ್ಯೆ ಆಗಾಗ ಜಗಳ ನಡೆದಿತ್ತು. ಹೀಗಾಗಿ ಕೇವಲ ನಾಲ್ಕೆ ನಾಲ್ಕು ದಿನಗಳ ಹಿಂದಷ್ಟೇ ಗ್ರಾಮಸ್ಥರು ಹಾಗೂ ಸಂಬಂಧಿಕರು ದಂಪತಿಗಳ ನಡುವೆ ರಾಜೀ ಪಂಚಾಯತಿ ಮಾಡಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನಾಸಿಕ್ ಟಿಸಿಎಸ್ ಜಿಹಾದ್ ಪ್ರಕರಣ: ಮತಾಂತರಕ್ಕೆ ಬುರ್ಖಾ, ಇಸ್ಲಾಮಿಕ್ ಪುಸ್ತಕ, ಹೆಸರು ಬದಲಿಸಲು ಸಂತ್ರಸ್ತರಿಗೆ ಒತ್ತಾಯ&lt;/strong&gt;&lt;/p&gt;&lt;p&gt;&lt;strong&gt;4 ದಿನದ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದ ಅಂಜಲಿ:&lt;/strong&gt;&lt;/p&gt;&lt;p&gt;ಹೀಗಾಗಿ ನಾಲ್ಕು ದಿನಗಳ ಹಿಂದಷ್ಟೇ ಅಂಜಲಿ ಗಂಡನ ಮನೆಗೆ ಬಂದಿದ್ದಳು. ಆದರೆ ಸಂಧಾನದ ನಂತರ ಹೊಸ ಬದುಕಿ ಭರವಸೆಯೊಂದಿಗೆ ಗಂಡನ ಮನೆಗೆ ಬಂದಿದ್ದ ಅಂಜಲಿ ಇಂದು ಗಂಡನ ಕೈಯಲ್ಲೇ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಪತ್ನಿಯನ್ನು ಕೊಂದ ನಂತರ ಎರಡು ವರ್ಷದ ಮಗುವಿನ ಜೊತೆಗೆ ಲಕ್ಷ್ಮೀಕಾಂತ ಬಾವಿಗೆ ಹಾರಿದ್ದಾನೆ. ಇದನ್ನು ನೋಡಿದ ಅಲ್ಲಿದ್ದ ಸ್ಥಳೀಯರು ಕೂಡಲೇ ಬಾವಿಗೆ ಜಿಗಿದು ಮಗುವನ್ನು ರಕ್ಷಿಸಿದ್ದಾರೆ ಆದರೆ ಲಕ್ಷ್ಮೀಕಾಂತ ಮಾತ್ರ ಸಾವಿಗೀಡಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ರೇವೋರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಜ್ಯೂಸ್ ಬಾಟಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕನ ನೆರವಿಗೆ ಧಾವಿಸದೇ ಬಿಟ್ಟಿಯಾಗಿ ಸಿಕ್ಕ ಜ್ಯೂಸ್&zwnj;ಗೆ ಮುಗಿಬಿದ್ದ ಜನ&lt;/strong&gt;&lt;/p&gt;]]></content:encoded>
            <category>kalaburagi</category>
            <dc:creator>Anusha Kb</dc:creator>
            <atom:link href="https://kannada.asianetnews.com/crime/kalaburgi-husband-kills-wife-who-came-home-just-4-days-ago-and-jumps-into-well/articleshow-ebuxb3i"/>
        </item>
        <item>
            <title><![CDATA[ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು; ಕ್ರೂಸರ್-ಲಾರಿ ನಡುವೆ ಡಿಕ್ಕಿ]]></title>
            <link>https://kannada.asianetnews.com/gallery/karnataka-districts/kalaburgi-five-members-of-the-same-family-die-on-the-spot-in-a-horrific-accident-cruiser-lorry-collision-mrq-f1gwlan</link>
            <guid isPermaLink="true">https://kannada.asianetnews.com/gallery/karnataka-districts/kalaburgi-five-members-of-the-same-family-die-on-the-spot-in-a-horrific-accident-cruiser-lorry-collision-mrq-f1gwlan</guid>
            <pubDate>Sat, 23 May 2026 08:05:20 +0530</pubDate>
            <description><![CDATA[ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks9akzrrtb5va5zf3dxt7eh7,imgname-accident--1--1779503333144.jpg" type="image/jpeg" height="390" width="690"/>
            <content:encoded><![CDATA[ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;img&gt;&lt;p&gt;ರಾತ್ರಿ ಕ್ರೂಸರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಭೀಕರ ಅಪಘಾತ ಸಂಭವಿಸಿದೆ.&lt;/p&gt;&lt;img&gt;&lt;p&gt;ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಕ್ರೂಸರ್ ಚಾಲಕ ಟೋಲು ಪಾಶಾ ( 27 ), ಮಹಿಬೂಬ್ (45), ಹುಸೇನಿ ಬುಡಾನ್ ಶಾಹಾ (48), ರಸೂಲ್ ಬಿ (42) , ಫಾತಿಮಾ (38) ಇನ್ನೊಬ್ಬ ಸೇರಿ ಐವರು ಸಾವನ್ನಪ್ಪಿದ್ದಾರೆ.&lt;/p&gt;&lt;img&gt;&lt;p&gt;ಇಂಗಳಗಿಯಿಂದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಿ ಐವರು ಕ್ರೂಸರನಲ್ಲಿ ವಾಪಾಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.&lt;/p&gt;&lt;img&gt;&lt;p&gt;ಘಟನಾ ಸ್ಥಳಕ್ಕೆ ವಾಡಿ ಪೊಲೀಸರು ಧಾವಿಸಿ, ಶವಗಳನ್ನು ವಾಡಿ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.ವಾಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಆಸ್ಪತ್ರೆಯತ್ತ ಮೃತರ ಕುಟುಂಬಸ್ಥರು ಜಮಾಯಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;]]></content:encoded>
            <category>kalaburagi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/kalaburgi-five-members-of-the-same-family-die-on-the-spot-in-a-horrific-accident-cruiser-lorry-collision-mrq-f1gwlan"/>
        </item>
        <item>
            <title><![CDATA[NEET: ನೀಟ್‌ ಬರೆದಿದ್ದ ಕಲಬುರಗಿ ಹುಡ್ಗಿ ಸಾವಿಗೆ ಶರಣು; ಪರೀಕ್ಷೆ ರದ್ದಾದ ಬಳಿಕ ರಾಜ್ಯದಲ್ಲಿ 2ನೇಬಲಿ!]]></title>
            <link>https://kannada.asianetnews.com/karnataka-districts/neet-kalaburagi-student-dies-second-death-in-karnataka-after-exam-cancellation-rav/articleshow-fgrwsnd</link>
            <guid isPermaLink="true">https://kannada.asianetnews.com/karnataka-districts/neet-kalaburagi-student-dies-second-death-in-karnataka-after-exam-cancellation-rav/articleshow-fgrwsnd</guid>
            <pubDate>Sun, 24 May 2026 04:51:06 +0530</pubDate>
            <description><![CDATA[&lt;p&gt;ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಕೋರ್ಸ್&zwnj;ಗಳ ಪ್ರವೇಶ ಪರೀಕ್ಷೆ &lsquo;ನೀಟ್&zwnj;&rsquo; ರದ್ದಾದ ಬೆನ್ನಲ್ಲೇ, ಆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krskynz3fssbygfb6bg2n6dp,imgname-----------------------2026-05-17t053344.669-1778976249827.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ ಮೇ.24&lt;/strong&gt;: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಕೋರ್ಸ್&zwnj;ಗಳ ಪ್ರವೇಶ ಪರೀಕ್ಷೆ &lsquo;ನೀಟ್&zwnj;&rsquo; ರದ್ದಾದ ಬೆನ್ನಲ್ಲೇ, ಆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.&amp;nbsp;&lt;/p&gt;&lt;h2&gt;ನೀಟ್ ಪರೀಕ್ಷ ರದ್ದು; ರಾಜ್ಯದಲ್ಲಿ ಎರಡನೇ ದುರಂತ ಸಾವು&lt;/h2&gt;&lt;p&gt;ನೀಟ್&zwnj; ರದ್ದಾದ ನಂತರ ಆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಆತ್ಮ೧ಹತ್ಯೆ ಮಾಡಿಕೊಂಡ ರಾಜ್ಯದ 2ನೇ ಪ್ರಕರಣ ಇದಾಗಿದೆ. ಕೆಲವು ದಿನಗಳ ಹಿಂದೆ ಗೋವಾದಲ್ಲಿ ತರಬೇತಿಗೆಂದು ತೆರಳಿದ್ದ ವೇಳೆ ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಸಾವಿಗೆ ಶರಣಾಗಿದ್ದ. ಕಲಬುರಗಿಯ ನಿವಾಸಿ ರಾಜಶೇಖರ್ ಅವರ ಪುತ್ರಿ ಭಾಗ್ಯಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 92 ಅಂಕಗಳನ್ನು ಗಳಿಸಿ ತೇರ್ಗಡೆ ಆಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಮೇ 2ರಂದು ನೀಟ್ ಪರೀಕ್ಷೆ ಬರೆದಿದ್ದಳು.&lt;/p&gt;&lt;h2&gt;ತಂದೆಯ ಕಣ್ಣೀರು:&lt;/h2&gt;&lt;p&gt;ತಂದೆ ರಾಜಶೇಖರ್ ಅವರು ಕಣ್ಣೀರಿಡುತ್ತಾ ಅಳಲು ತೋಡಿಕೊಂಡಿದ್ದಾರೆ. ಆಕೆಗೆ ನೀಟ್ ಪರೀಕ್ಷೆಯ ಬಗ್ಗೆ ಬಹಳ ನಿರೀಕ್ಷೆಗಳಿದ್ದವು. ಆದರೆ ಒಳಗೊಳಗೇ ಪರೀಕ್ಷೆಯ ಫಲಿತಾಂಶದ ಬಗ್ಗೆ ಏನಾದರೂ ಆತಂಕ ಇತ್ತೋ ಏನೋ ತಿಳಿಯದು ಎಂದಿದ್ದಾರೆ.&lt;/p&gt;&lt;p&gt;. ಆಕೆ ಯಾವುದೇ ಡೆತ್&zwnj;ನೋಟ್ ಬರೆದಿಲ್ಲ, ಕಾರಣವನ್ನೂ ಹೇಳಿಲ್ಲ. ಕುಟುಂಬಸ್ಥರ ಜತೆ ತುಂಬಾ ಚೆನ್ನಾಗಿಯೇ ಇದ್ದಳು. ಇವಾಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ, ನಾವು ಯಾರ ಮೇಲೆ ದೂರೋಣ? ನಾವು ಯಾರ ಮೇಲೆಯೂ ಅಪಾದನೆ ಮಾಡುವುದಿಲ್ಲ ಎಂದು ಅವರು ಅತ್ಯಂತ ದುಃಖದಿಂದ ನುಡಿದಿದ್ದಾರೆ. ನೀಟ್ ಪರೀಕ್ಷೆ ಬರೆದಿದ್ದ ಯುವತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋರ್ಟ್ ವೃತ್ತದ ಬಳಿಯ ಅಪಾರ್ಟ್&zwnj;ಮೆಂಟ್&zwnj;ನಲ್ಲಿ ನಡೆದಿದೆ.&lt;/p&gt;&lt;p&gt;ಮೇ 2ರಂದು ನಡೆದಿದ್ದ ನೀಟ್&zwnj; ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರಿಂದ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದು ಮಾಡಿತ್ತು. ಇದಕ್ಕೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಲಬುರಗಿಯಲ್ಲಿ ನೀಟ್&zwnj; ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಇದರೊಂದಿಗೆ ರಾಜ್ಯದಲ್ಲಿ ಆತ್ಮ೧ಹತ್ಯೆ ಮಾಡಿಕೊಂಡ ಘಟನೆಯಲ್ಲಿ ಇದು ಎರಡನೇ ಘಟನೆ ಆಗಿದೆ. ಬೆಂಗಳೂರಿನ ವಿದ್ಯಾರ್ಥಿ ಗೋವಾದಲ್ಲಿ ತರಬೇತಿ ಪಡೆಯುತ್ತಿದ್ದು, ಆತ್ಮ೧ಹತ್ಯೆ ಮಾಡಿಕೊಂಡಿದ್ದ.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/neet-kalaburagi-student-dies-second-death-in-karnataka-after-exam-cancellation-rav/articleshow-fgrwsnd"/>
        </item>
        <item>
            <title><![CDATA[ಪ್ರಾಣಿ ಪ್ರಿಯರಿಗೀಗ ಹೊಸ ಡೆಸ್ಟಿನೇಷನ್‌! ಕಲಬುರಗಿಯಲ್ಲಿ ಅತ್ಯಾಕರ್ಷಕ ಮೃಗಾಲಯ ಲೋಕಾರ್ಪಣೆ, ಎಷ್ಟು ಬಗೆಯ ಪ್ರಾಣಿ-ಪಕ್ಷಿಗಳಿವೆ ಗೊತ್ತಾ?]]></title>
            <link>https://kannada.asianetnews.com/state/new-destination-for-animal-lovers-spectacular-zoo-inaugurated-in-kalaburagi-check-details-rav/articleshow-g545efa</link>
            <guid isPermaLink="true">https://kannada.asianetnews.com/state/new-destination-for-animal-lovers-spectacular-zoo-inaugurated-in-kalaburagi-check-details-rav/articleshow-g545efa</guid>
            <pubDate>Tue, 19 May 2026 07:53:52 +0530</pubDate>
            <description><![CDATA[&lt;p&gt;ಕಲಬುರಗಿಯ ಚಿತ್ತಾಪುರದಲ್ಲಿ ಮಾಡಬೂಳದಲ್ಲಿ 35 ಕೋಟಿ ರೂ. ವೆಚ್ಚದ 43 ಎಕರೆ ವಿಸ್ತೀರ್ಣದ ನೂತನ ಮೃಗಾಲಯ ಲೋಕಾರ್ಪಣೆಗೊಂಡಿದೆ. ಇದು ಕಲ್ಯಾಣ ಕರ್ನಾಟಕದ ಎರಡನೇ, ರಾಜ್ಯದ ಒಂಬತ್ತನೇ ಮೃಗಾಲಯವಾಗಿದೆ. ಇದರ ಪ್ರಮುಖ ಉದ್ದೇಶ ವನ್ಯಜೀವಿ ಸಂರಕ್ಷಣೆ, ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಹಾಗೂ ಪ್ರವಾಸೋದ್ಯಮ ಉತ್ತೇಜನ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krz0azj52wsbx6s9r8asspt1,imgname-----------------------2026-05-19t073459.779-1779157007941.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಮೇ.19) &lt;/strong&gt;ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಪ್ರಾಣಿ, ಪಕ್ಷಿ, ಸಸ್ಯ, ಕೀಟ ಪ್ರಬೇಧಗಳ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕಲಬುರಗಿ ಅತ್ಯಾಕರ್ಷಕ ಮೃಗಾಲಯವು ವನ್ಯಜೀವಿಗಳ ಮೇಲಿನ ಕಾಳಜಿ ಹೆಚ್ಚಿಸುವುದರ ಜೊತೆಗೆ ಪ್ರದೇಶದ ಪರಿಸರ ಪ್ರೇಮಿ, ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹಾಗೂ ಪ್ರವಾಸಿ ತಾಣವಾಗಿ ಇದು ರೂಪಗೊಳ್ಳಲಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.&lt;/p&gt;&lt;p&gt;ಜಿಲ್ಲಾಡಳಿತ, ಅರಣ್ಯ ಇಲಾಖೆ, ಕೆ.ಕೆ.ಆರ್.ಡಿ.ಬಿ. ಮಂಡಳಿ ಹಾಗೂ ಮೂರ್ತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸುಮಾರು 43 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿ 35 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕಲಬುರಗಿ ಮೃಗಾಲಯವನ್ನು&lt;/p&gt;&lt;p&gt;ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.&lt;/p&gt;&lt;p&gt;ನಮ್ಮ&zwnj; ಸರ್ಕಾರ ಬಂದ ಮೇಲೆ ನೆನೆಗುದ್ದಿಗೆ ಬಿದಿದ್ದ ಈ ಕಾರ್ಯಕ್ಕೆ ಸಚಿವ ಪ್ರಿಯಾಂಕ್&zwnj; ಖರ್ಗೆ ಅವರು ವಿಶೇಷ ಆಸಕ್ತಿ ವಹಿಸಿ ಚುರುಕು&zwnj;ಗೊಳಿಸಿದ ಪರಿಣಾಮ&zwnj; ಇಂದಿಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಂಪಿ ಹೊರತುಪಡಿಸಿದರೆ ಎರಡನೇ ಮೃಗಾಲಯ ಪ್ರದೇಶಕ್ಕೆ ಲೋಕಾರ್ಪಣೆ ಮಾಡಲಾಗಿದ್ದು, ಎಲ್ಲಾ ವಯೋಮಾನದವರಿಗೆ ಜನಾಕರ್ಷಣೆಯಾಗಲಿದೆ ಎಂದರು.&lt;/p&gt;&lt;p&gt;ಕೆ.ಕೆ.ಆರ್.ಡಿ.ಬಿ. ಮಂಡಳಿ&zwnj;ಯಿಂದ 29 ಕೋಟಿ ರು., ಮೃಗಾಲಯ ಪ್ರಾಧಿಕಾರದಿಂದ 6 ಕೋಟಿ ರು. ಹಾಗೂ ಇನ್ಫೋಸಿಸ್ ಸಂಸ್ಥೆಯ 3.20 ಕೋಟಿ ರು. ನೆರವಿನಿಂದ ಇಂದಿಲ್ಲಿ ಸುಂದರ&zwnj; ಮೃಗಾಲಯ ಸ್ಥಾಪನೆಯಾಗಿದೆ. ಕಲಬುರಗಿ ಮೃಗಾಲಯ ರಾಜ್ಯದ 9ನೇ ಮೃಗಾಲಯವಾಗಿದ್ದು, ದೇಶದಲ್ಲಿ ಮೃಗಾಲಯ ಸಂಖ್ಯೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದ ಅವರು, 2022ರ ಪ್ರಾಣಿ&zwnj; ಜನಗಣತಿ ಪ್ರಕಾರ ರಾಜ್ಯದಲ್ಲಿ 6,395 ಆನೆ, 563 ಹುಲಿಗಳಿವೆ ಎಂದರು.&lt;/p&gt;&lt;p&gt;ನೂತನ ಮೃಗಾಲಯದಲ್ಲಿ 56 ವಿವಿಧ ಪ್ರಭೇದದ ಪ್ರಾಣಿ-ಪಕ್ಷಿಗಳು ವೀಕ್ಷಣೆಗೆ ಲಭ್ಯ ಇರಲಿವೆ. ಎರಡು ಸಿಂಹಗಳನ್ನು ಬನ್ನೇರುಘಟ್ಟದಿಂದ ಈಗಾಗಲೇ ತರಲಾಗಿದೆ. ಮೊಸಳೆ, ನರಿ, ಇತ್ಯಾದಿ ಪ್ರಾಣಿಗಳು ನೋಡಲು ಸಿಗುತ್ತಿವೆ. ಮುಂಬರುವ ದಿನಗಳಲ್ಲಿ ಬೇರೆ ಬೇರೆ ಪ್ರಭೇದ ಪ್ರಾಣಿ, ಪಕ್ಷಿಗಳನ್ನು ತರಿಸಲಾಗುವುದು ಎಂದರು.&lt;/p&gt;&lt;p&gt;ಕ.ಕ ಭಾಗದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಕ್ರಮ: ಕಲ್ಯಾಣ ಕರ್ನಾಟಕ ಭಾಗದ ಲಭ್ಯ ಹಸಿರು ಹೊದಿಕೆ ಕೊರತೆ ಇದೆ. ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು ಹೀಗೆ ಜಿಲ್ಲೆಗಳಲ್ಲಿ&zwnj; ಶೇ.5ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಹೊಂದಿದೆ. ಈ ಬಗ್ಗೆ ಕೆ&zwnj;.ಕೆ.ಆರ್.ಡಿ.ಬಿ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದರು.&lt;/p&gt;&lt;p&gt;ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ&zwnj; ಮೂರು ವರ್ಷದಲ್ಲಿ&zwnj; ಕಲ್ಯಾಣ ಕರ್ನಾಟಕ ಭಾಗದಲ್ಲಿ 11 ಲಕ್ಷ ಸಸಿ ನೆಡಲಾಗಿದೆ. ಅವುಗಳನ್ನು ಸುಮಾರು&zwnj; ಶೇ.80 ನೆಟ್ಟ ಸಸಿಗಳು ಬದುಕುಳಿದಿವೆ ಎಂದರು.&lt;/p&gt;&lt;p&gt;ಅರಣ್ಯ&zwnj;ಇಲಾಖೆಯಲ್ಲಿ ಪಶುವೈದ್ಯಕೀಯ ಸಿಬ್ಬಂದಿ&zwnj; ಹೆಚ್ಚಿಸಲು ಸಿಎಂ ಅವರು ಅರಣ್ಯ ಇಲಾಖೆಗೆ ಅನುಮತಿ&zwnj; ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದು&zwnj; ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.&lt;/p&gt;&lt;p&gt;ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ: ರಾಜ್ಯದ ಅರಣ್ಯ ಭೂಮಿ ತೆರವಿಗೆ ಕ್ರಮವಹಿಸಲಾಗಿದ್ದು, ರಾಜ್ಯದಲ್ಲಿ ಈಗಾಗಲೇ 10,000 ಕೋಟಿ ರು. ಮೌಲ್ಯದ ಬೆಂಗಳೂರು ಒಂದರಲ್ಲೇ 250 ಎಕರೆ ಅರಣ್ಯ ಭೂಮಿ ತೆರವು ಮಾಡಲಾಗಿದೆ. ಸುಮಾರು 1 ಕೋಟಿ ಎಕರೆ ಅರಣ್ಯ, ಕಂದಾಯ ಒತ್ತುವರಿ ಜಮೀನು ತೆರವು ಹಂತ ಹಂತವಾಗಿ ನಡೆಯಲಿದೆ ಎಂದರು.ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ. ಶರಣಪ್ರಕಾಶ ಪಾಟೀಲ, ಕರ್ನಾಟಕ&zwnj; ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ವಿಪ ಸದಸ್ಯ ಜಗದೇವ ಗುತ್ತೇದಾರ, ಬಿ.ಜಿ.ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ&zwnj; ಅರುಣಕುಮಾರ ಪಾಟೀಲ, ಕಲಬುರಗಿ ಕಾಡಾ ಅಧ್ಯಕ್ಷ ಡಾ.ಎಂ.ಎ.ರಶೀದ್, ಕರ್ನಾಟಕ&zwnj; ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ, ಅರಣ್ಯ ಪಡೆ ಮುಖ್ಯಸ್ಥರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮೀನಾಕ್ಷಿ ನೇಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ ಪುಷ್ಕರ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಶಂಕರ&zwnj; ಎಸ್. ಎಸ್., ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನುವಾಸುಲು, ಜಿಪಂ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕಲಬುರಗಿ&zwnj; ಮಹಾನಗರ ಪಾಲಿಕೆ ಡಿ.ಸಿ.ಎಫ್ ಸುಮಿತ್ ಪಾಟೀಲ, ಇನ್ಫೋಸಿಸ್ ಸಂಸ್ಥೆಯ ಪ್ರತಿನಿಧಿ ಪ್ರಿಯಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಸವರಾಜ&zwnj; ಎಸ್. ಡಾಂಗೆ, ಸುನೀಲಕುಮಾರ್, ವಲಯ ಅರಣ್ಯಾಧಿಕಾರಿಗಳಾದ ನಾಗೇಶ, ವಿಜಯ ಕುಮಾರ ಸೇರಿದಂತೆ ಅರಣ್ಯ ಇಲಾಖೆಯ ಅನೇಕ ಅಧಿಕಾರಿ-ಸಿಬ್ಬಂದಿಗಳಿದ್ದರು.&lt;/p&gt;&lt;h2&gt;ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ವೀಕ್ಷಣೆಗೆ ಲಭ್ಯ&lt;/h2&gt;&lt;p&gt;ಮೃಗಾಲಯವು ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ತೆರೆಯಲಿದ್ದು, ಪ್ರಾಣಿ-ಪಕ್ಷಿಗಳ ವೀಕ್ಷಣೆಗೆ ಲಭ್ಯವಾಗಿರಲಿದೆ. ಪ್ರತಿ ಮಂಗಳವಾರ ರಜೆ ಇರಲಿದೆ. 12 ವರ್ಷ ಮೇಲ್ಪಟ್ಟವರಿಗೆ 75 ರು., 12 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 40 ರು. ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 25 ರು. ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೃಗಾಲಯದ ಟಿಕೆಟ್ ಕೌಂಟರ್&zwnj;ನಲ್ಲಿಯೆ ಟಿಕೆಟ್ ಪಡೆದು ವೀಕ್ಷಣೆ ಮಾಡಬಹುದಾಗಿದೆ&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/new-destination-for-animal-lovers-spectacular-zoo-inaugurated-in-kalaburagi-check-details-rav/articleshow-g545efa"/>
        </item>
        <item>
            <title><![CDATA[ಅಯ್ಯಯ್ಯೋ! ಪೊಲೀಸ್ರೇ ಹೆಣ ಬಿದ್ದಿದೆ ಬನ್ನಿ ಎಂದ ಮಹಿಳೆ, ಹೋಗಿ ನೋಡಿದರೆ ಸತ್ತು ಬಿದ್ದಿರೋದು ಹೆಗ್ಗಣ!]]></title>
            <link>https://kannada.asianetnews.com/karnataka-districts/kalaburagi-woman-call-to-112-cops-win-hearts-by-removing-dead-bandicoot-rat-sat/articleshow-grcgct6</link>
            <guid isPermaLink="true">https://kannada.asianetnews.com/karnataka-districts/kalaburagi-woman-call-to-112-cops-win-hearts-by-removing-dead-bandicoot-rat-sat/articleshow-grcgct6</guid>
            <pubDate>Sun, 24 May 2026 15:52:24 +0530</pubDate>
            <description><![CDATA[&lt;p&gt;ಅಯ್ಯಯ್ಯೋ ಪೊಲೀಸರೇ ನಮ್ಮ ಮನೆಯ ಬಳಿ ಯಾವುದೇ ಹೆಣ ಬಿದ್ದಿರಬೇಕು. ಕೊಳೆತು ಗಬ್ಬು ವಾಸನೆ ಬರ್ತಿದೆ ಒಮ್ಮೆ ಬಂದುಹೋಗಿ ಎಂದು ಮಹಿಳೆ ಕರೆ ಮಾಡಿದ್ದಾರೆ. ಪೊಲೀಸರು ಹೋಗಿ ನೋಡಿದರೆ ಅಲ್ಲಿ ಸತ್ತು ಬಿದ್ದಿದ್ದು ಹೆಗ್ಗಣ ಎನ್ನುವುದು ಗೊತ್ತಾಗಿದೆ. ಮುಂದೇನಾಯ್ತು ನೀವೇ ನೋಡಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kscqyrwmfz58vrc6kcsz9qm3,imgname-kalaburagi-police-1779617981332.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಮೇ 24): ಸ&lt;/strong&gt;ಮಾಜದಲ್ಲಿ ಯಾವುದೇ ಅನಾಹುತ ನಡೆದು ಹೆಣ ಬಿದ್ದರೂ ಪೊಲೀಸರೇ ಬರಬೇಕು.. ಕೊನೆಗೆ ಮನೆ ಮುಂದೆ ಹೆಗ್ಗಣ ಸತ್ತು ಬಿದ್ದರೂ ಆ ಹೆಗ್ಗಣ ಎತ್ತಲು ಪೊಲೀಸರೇ ಬರಬೇಕು! - ಇದು ಸದ್ಯ ಕಲಬುರಗಿ ನಗರದಲ್ಲಿ ಸಾರ್ವಜನಿಕರು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ, ಪೊಲೀಸರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿರುವ ಪರಿ. ಮಹಾನಗರ ಪಾಲಿಕೆಯ ಸ್ವಚ್ಛತಾ ಸಿಬ್ಬಂದಿ ಮಾಡಬೇಕಿದ್ದ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸಿದ ಪೊಲೀಸ್ ಸಿಬ್ಬಂದಿಯ ಮಾನವೀಯ ನಡೆ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;h3&gt;&lt;strong&gt;ಮೂರು ದಿನಗಳಿಂದ ನಾರುತ್ತಿದ್ದ ಹೆಗ್ಗಣ, ಪಾಲಿಕೆಯ ಅತಿಯಾದ ನಿರ್ಲಕ್ಷ್ಯ!&lt;/strong&gt;&lt;/h3&gt;&lt;p&gt;ಕಲಬುರಗಿ ನಗರದ ಖಾದ್ರಿ ಚೌಕ್ ಬಳಿಯ ಮನೆಯೊಂದರ ಮುಂದೆ ಕಳೆದ ಮೂರು ದಿನಗಳ ಹಿಂದೆ ದೊಡ್ಡ ಹೆಗ್ಗಣವೊಂದು ಸತ್ತು ಬಿದ್ದಿತ್ತು. ಬಿಸಿಲಿನ ತಾಪಕ್ಕೆ ಸತ್ತ ಹೆಗ್ಗಣ ಸಂಪೂರ್ಣವಾಗಿ ಕೊಳೆತು ಹೋಗಿ, ಇಡೀ ಬಡಾವಣೆಯ ತುಂಬಾ ಅಸಹನೀಯ ವಾಸನೆ ಹರಡಿತ್ತು. ಇದರಿಂದ ಕಂಗಾಲಾದ ಆ ಮನೆಯ ಮಹಿಳೆ ತಕ್ಷಣವೇ ಕಲಬುರಗಿ ಮಹಾನಗರ ಪಾಲಿಕೆಯ (Mahanagara Palike) ಸಂಬಂಧಪಟ್ಟ ಅಧಿಕಾರಿ ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಕರೆ ಮಾಡಿ ಸತ್ತ ಜೀವಿ ಇರುವುದನ್ನು ವಿಲೇವಾರಿ ಮಾಡುವಂತೆ ತಿಳಿಸಿದ್ದರು. ಆದರೆ, ಅಧಿಕಾರಿಗಳು ಮಾತ್ರ 'ಇವತ್ತು ಬರ್ತೀವಿ, ನಾಳೆ ಬರ್ತೀವಿ' ಎನ್ನುತ್ತಾ ಮೂರು ದಿನಗಳ ಕಾಲ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ.&lt;/p&gt;&lt;h2&gt;&lt;strong&gt;ಕೊನೆಗೆ '112' ಸಹಾಯವಾಣಿಗೆ ಕರೆ ಮಾಡಿದ ಮಹಿಳೆ!&lt;/strong&gt;&lt;/h2&gt;&lt;p&gt;ವಾಸನೆ ತಡೆಯಲಾರದೆ ಹಾಗೂ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತ ಮಹಿಳೆ, ಕೊನೆಗೆ ಯಾವುದೇ ದಾರಿ ಕಾಣದೆ ತಕ್ಷಣವೇ ಪೊಲೀಸ್ ತುರ್ತು ಸಹಾಯವಾಣಿ ಸಂಖ್ಯೆ ಆರ್.ಎಸ್.ಎಸ್ 112 (ERSS 112) ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಇನ್ಸಿಡೆಂಟ್ ರಿಪೋರ್ಟ್ ಆದ ತಕ್ಷಣವೇ ಕಾರ್ಯಾಚರಣೆಗೆ ಇಳಿಯುವ 112 ಸಿಬ್ಬಂದಿ, ಕರೆಯ ಜಾಡು ಹಿಡಿದು ಖಾದ್ರಿ ಚೌಕ್&zwnj;ನ ಸದರಿ ಮಹಿಳೆಯ ಮನೆಗೆ ದೌಡಾಯಿಸಿದ್ದಾರೆ.&lt;/p&gt;&lt;h2&gt;&lt;strong&gt;ಸ್ಥಳಕ್ಕೆ ಬಂದ ಪೊಲೀಸರಿಗೆ ಕಾದಿತ್ತು ದೊಡ್ಡ ಶಾಕ್!&lt;/strong&gt;&lt;/h2&gt;&lt;p&gt;ಯಾವುದೋ ದೊಡ್ಡ ಗಲಾಟೆ ಅಥವಾ ಗಂಭೀರ ಪ್ರಕರಣ ಇರಬಹುದೆಂದು ಸೈರನ್ ಹಾಕಿಕೊಂಡು ಬಂದ ಪೊಲೀಸರಿಗೆ ಸ್ಥಳಕ್ಕೆ ಬಂದಾಗ ಅಸಲಿ ಶಾಕ್ ಕಾದಿತ್ತು. ಅಲ್ಲಿ ಯಾವುದೇ ಅಪರಾಧ ನಡೆದಿರಲಿಲ್ಲ, ಬದಲಾಗಿ ಮೂರು ದಿನಗಳಿಂದ ಸತ್ತು ಕೊಳೆಯುತ್ತಿದ್ದ ಹೆಗ್ಗಣ ಬಿದ್ದಿತ್ತು. ತುರ್ತು ಸೇವೆಗೆ ಬರುವ ಪೊಲೀಸರಿಗೆ ಇದು ತಮ್ಮ ವ್ಯಾಪ್ತಿಯ ಕೆಲಸವಲ್ಲದಿದ್ದರೂ, ಸ್ಥಳದಲ್ಲಿದ್ದ ಮಹಿಳೆಯ ಅಸಹಾಯಕತೆ ಮತ್ತು ಕಷ್ಟವನ್ನು ಕಂಡು ಅವರು ಸುಮ್ಮನೆ ಮರಳಲಿಲ್ಲ.&lt;/p&gt;&lt;p&gt;'ಯಾರೋ ಮಾಡಿದ ತಪ್ಪಿಗೆ ಈ ಜನ ಕಷ್ಟಪಡಬಾರದು, ಹೆಂಗೂ ಸ್ಥಳಕ್ಕೆ ಬಂದಾಯ್ತಲ್ಲ ಮಹಿಳೆಯ ಕಷ್ಟ ನಿವಾರಣೆ ಮಾಡೋಣ' ಎಂದು ಯೋಚಿಸಿದ ಸಿಬ್ಬಂದಿ, ತಾವೇ ಖುದ್ದಾಗಿ ಮುನ್ನಡೆದು ಆ ಸತ್ತ ಹೆಗ್ಗಣವನ್ನು ಎತ್ತಿ, ಸುರಕ್ಷಿತವಾಗಿ ಡಿಸ್ಪ್ಯಾಚ್ (ವಿಲೇವಾರಿ) ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.&lt;/p&gt;&lt;p&gt;&lt;img&gt;&lt;/p&gt;&lt;h3&gt;&lt;strong&gt;ಪಾಲಿಕೆಗೆ ಧಿಕ್ಕಾರ, ಪೊಲೀಸರಿಗೆ ಜಯಕಾರ!&lt;/strong&gt;&lt;/h3&gt;&lt;p&gt;ತಮ್ಮದಲ್ಲದ ಕೆಲಸವಾಗಿದ್ದರೂ ಸಾರ್ವಜನಿಕರ ಆರೋಗ್ಯ ಮತ್ತು ನೆಮ್ಮದಿಯ ದೃಷ್ಟಿಯಿಂದ ತಾವೇ ಮುಂದೆ ನಿಂತು ಸತ್ತ ಹೆಗ್ಗಣ ಎತ್ತಿದ ಪೊಲೀಸರ ಈ ಅದ್ಭುತ ಕಾರ್ಯಕ್ಕೆ ಇಡೀ ಕಲಬುರಗಿ ಜನತೆ ಪ್ರಶಂಸೆಗಳ ಸುರಿಮಳೆಗೈದಿದೆ. ಇದೇ ವೇಳೆ, ಸಾರ್ವಜನಿಕರಿಂದ ತೆರಿಗೆ ವಸೂಲಿ ಮಾಡಿ, ಸಣ್ಣದೊಂದು ಸತ್ತ ಪ್ರಾಣಿಯನ್ನು ವಿಲೇವಾರಿ ಮಾಡಲಾಗದ ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಖಾಕಿ ಪಡೆಯ ಈ ಜನಸ್ನೇಹಿ ನಡೆ ಇಲಾಖೆಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ.&lt;/p&gt;]]></content:encoded>
            <category>kalaburagi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/kalaburagi-woman-call-to-112-cops-win-hearts-by-removing-dead-bandicoot-rat-sat/articleshow-grcgct6"/>
        </item>
        <item>
            <title><![CDATA[ಹಿಂದುಗಳ ಮೇಲೆ ದೌರ್ಜನ್ಯ ನಡೆದರೆ ಠಾಣೆಗೂ ಮುತ್ತಿಗೆ: ಬಿ.ವೈ.ವಿಜಯೇಂದ್ರ ಎಚ್ಚರಿಕೆ]]></title>
            <link>https://kannada.asianetnews.com/karnataka-districts/by-vijayendra-warns-protests-over-attacks-on-hindus-kalaburagi-gvd/articleshow-m043ytg</link>
            <guid isPermaLink="true">https://kannada.asianetnews.com/karnataka-districts/by-vijayendra-warns-protests-over-attacks-on-hindus-kalaburagi-gvd/articleshow-m043ytg</guid>
            <pubDate>Tue, 02 Jun 2026 19:11:36 +0530</pubDate>
            <description><![CDATA[&lt;p&gt;ರಾಜ್ಯದ ಯಾವ ಮೂಲೆಯಲ್ಲೆ ಹಿಂದುಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದರೂ ಪ್ರತಿಭಟಿಸುತ್ತೇವೆ, ಕೇಸ್&zwnj; ಮಾಡದೆ ಹೋದರೆ ಪೊಲೀಸ್ ಠಾಣೆಗೂ ಮುತ್ತಿಗೆ ಹಾಕುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wp2b5v03z6v8krfh3yrqaf,imgname-gnghmn-1757604293819.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಜೂ.02):&lt;/strong&gt; ರಾಜ್ಯದ ಯಾವ ಮೂಲೆಯಲ್ಲೆ ಹಿಂದುಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದರೂ ಪ್ರತಿಭಟಿಸುತ್ತೇವೆ, ಕೇಸ್&zwnj; ಮಾಡದೆ ಹೋದರೆ ಪೊಲೀಸ್ ಠಾಣೆಗೂ ಮುತ್ತಿಗೆ ಹಾಕುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ. ಕಾಂಗ್ರೆಸ್&zwnj; ಹಿಂದು ವಿರೋಧಿ, ಕಳೆದ 3 ವರ್ಷಗಳ ಕಾಂಗ್ರೆಸ್&zwnj; ಆಡಳಿತದಲ್ಲಿ ರಾಜ್ಯದಲ್ಲಿ ನೂರಾರು ಹಿಂದು ವಿರೋಧಿ ಕೆಲಸಗಳೇ ಆಗಿವೆ ಎಂದು ಕಾಂಗ್ರೆಸ್&zwnj; ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.&lt;/p&gt;&lt;p&gt;ಬಿಜೆಪಿ ಕಲಬುರಗಿ ಘಟಕ ಮಿನಿ ವಿಧಾನಸೌಧ ಕಚೇರಿ ಎದುರು ರಾಜ್ಯದ ಕಾಂಗ್ರೆಸ್ ಸರ್ಕಾರವು ಆಳಂದ ನಗರದ ಲಾಡ್ಲೇ ಮಶಾಕ್&zwnj;, ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಅಡ್ಡಿಪಡಿಸಿದವರ ಮೇಲಿನ ಕೇಸ್ ವಾಪಸ್ ಪಡೆದಿರುವುದರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.&lt;/p&gt;&lt;p&gt;ಈಚೆಗೆ ದಕ್ಷಿಣ ಕನ್ನಡದಲ್ಲಿ ಮಧ್ಯರಾತ್ರಿ ಹಿಂದು ಕಾರ್ಯಕರ್ತನ ಮನೆಗೆ ಹೋಗಿ ಪೊಲೀಸರು ಫೋಟೋ ತೆಗೆದು ವಶಕ್ಕೆ ಪಡೆದಿದ್ದಾರೆ, ಇಂತಹ ಹಲವು ಘಟನೆಗಳಾಗುತ್ತಿವೆ. ಇವನ್ನೆಲ್ಲ ನೋಡಿ ಸುಮ್ಮನಿರೋದಿಲ್ಲ. ರಾಜ್ಯಾದ್ಯಂತ ಎಲ್ಲೇ ಇಂತಹ ಘಟನೆಗಳಾದರೂ ತಕ್ಷಣ ಪ್ರತಿಭಟಿಸುವಂತೆ ಬಿಜೆಪಿ ಜಿಲ್ಲಾ ಘಟಕಗಳಿಗೆ ಕರೆ ನೀಡಿದ ವಿಜಯೇಂದ್ರ, ಕೇಸ್&zwnj; ದಾಖಲಿಸಲು ಹಿಂದೆ ಮುಂದೆ ಪೊಲೀಸರು ನೋಡಿದರೆ ಠಾಣೆಗೂ ಮುತ್ತಿಗೆ ಹಾಕುವಂತೆ ಕರೆ ನೀಡಿದರು.&lt;/p&gt;&lt;p&gt;2028ರಲ್ಲಿ ಬಿಜೆಪಿಯೇ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ, ಬಿಜೆಪಿ ಸರ್ಕಾರ ರಚನೆಯಾದ 24 ಗಂಟೆಯೊಳಗೆ ಎಲ್ಲಾ ಹಿಂದು ಕಾರ್ಯಕರ್ತರ ಮೇಲೆ ಹಾಕಲಾಗಿರುವ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಕೇಸ್&zwnj;ಗಳನ್ನು ವಾಪಸ್&zwnj; ಪಡೆಯುತ್ತೇವೆಂದು ಘೋಷಿಸಿದರು.&lt;/p&gt;&lt;p&gt;ಆಳಂದ ಲಾಡ್ಲೆ ಮಶಾಕ್&zwnj; ದರ್ಗಾ, ರಾಘವ ಚೈತನ್ಯ ಶಿವಲಿಂಗ ಪೂಜೆಯ ವಿವಾದ, ಗಲಭೆಯ ಕೇಸ್&zwnj;ಗಳನ್ನು ಸರ್ಕಾರ ವಾಪಸ್ ಪಡೆದುದರ ವಿರುದ್ಧ ಬಿಜೆಪಿ ಹೋರಾಟ ಮುಂದುವರೆಯಲಿದೆ. ಕೋರ್ಟ್&zwnj; ಮೆಟ್ಟಿಲು ಹತ್ತಿ ನ್ಯಾಯ ಕೋರುತ್ತೇವೆ. ಕಲಬುರಗಿಗೆ ಬಂದು ಗಿಮಿಕ್&zwnj; ಮಾಡೋದಲ್ಲ, ಇದು ನಮ್ಮ ಪ್ರಾಮಾಣಿಕ ಹೋರಾಟ ಅನ್ನೋದನ್ನು ಯಾರೂ ಮರೆಯಬಾರದು ಎಂದು ವಿಜಯೇಂದ್ರ ಹೇಳಿದರು.&lt;/p&gt;&lt;h2&gt;&lt;strong&gt;ಕೇಸ್&zwnj; ವಾಪಸ್&zwnj;&lt;/strong&gt;&lt;/h2&gt;&lt;p&gt;ಆಳಂದದಲ್ಲಿ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜಿಸಲು ತೆರಳುತ್ತಿದ್ದ ಹಿಂದುಗಳ ಮೇಲೆ ಮುಸ್ಲಿಂ ಸಮುದಾಯದ ಗೂಂಡಾಗಳು ದಾಳಿ ನಡೆಸಿದ್ದನ್ನು ಅಲ್ಲಿನ ಶಾಸಕ ಬಿ.ಆರ್&zwnj;.ಪಾಟೀಲ್&zwnj; ಖಂಡಿಸಬೇಕಿತ್ತು, ಅದನ್ನು ಬಿಟ್ಟು ಯು.ಟಿ.ಖಾದರ್&zwnj; ಪತ್ರ ಮುಂದೆ ಮಾಡಿ ಗೂಂಡಾಗಳ ಮೇಲಿನ ಕೇಸ್&zwnj; ವಾಪಸ್&zwnj; ಮಾಡಿಸಿದ್ದಾರೆ. ಇಂತಹವರು ಹಿಂದುಗಳು ಎನ್ನಲಾದೀತೆ? ಹಿಂದುಗಳು ಇನ್ನಾದರೂ ಎಚ್ಚರವಾಗಬೇಕು, ಹಿಂದುಗಳಿಗೆ ಎಲ್ಲೇ ಸಂಕಷ್ಟ ಎದುರಾದರೂ ಬಿಜೆಪಿಯ ರಾಜ್ಯ, ಜಿಲ್ಲಾ ಮುಖಂಡರು, ಹಾಲಿ, ಮಾಜಿ ಶಾಸಕರು ಅಲ್ಲಿ ಧಾವಿಸುತ್ತೇವೆ, ನೊಂದ ಹಿಂದುಗಳ ನೆರವಿಗೆ ನಿಲ್ಲುತ್ತೇವೆಂದು ಹೇಳಿದರು.&lt;/p&gt;]]></content:encoded>
            <category>kalaburagi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/by-vijayendra-warns-protests-over-attacks-on-hindus-kalaburagi-gvd/articleshow-m043ytg"/>
        </item>
        <item>
            <title><![CDATA[ನೀಟ್ ರದ್ದಾಗಿದ್ದಕ್ಕೆ ಜೀವ ಕಳಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪಾಲಕರಿಗೆ ಸುಳ್ಳು]]></title>
            <link>https://kannada.asianetnews.com/karnataka-districts/kalaburgi-big-twist-in-the-case-of-the-student-who-lost-her-life-due-to-neet-cancellation-mrq/articleshow-n9vpqmp</link>
            <guid isPermaLink="true">https://kannada.asianetnews.com/karnataka-districts/kalaburgi-big-twist-in-the-case-of-the-student-who-lost-her-life-due-to-neet-cancellation-mrq/articleshow-n9vpqmp</guid>
            <pubDate>Mon, 25 May 2026 05:45:48 +0530</pubDate>
            <description><![CDATA[&lt;p&gt;ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ಆಕೆ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kse7seegn3d44e282eteyawn,imgname-neet-1779668138448.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ:&lt;/strong&gt; ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದ್ದ ಕಲಬುರಗಿಯ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ ಪೊಲೀಸ್ ತನಿಖೆಯಲ್ಲಿ ಹೊಸ ತಿರುವು ದೊರೆತಿದ್ದು, ಆಕೆ ಪಿಯುಸಿ ಪರೀಕ್ಷೆಯಲ್ಲಿ ಫೇಲ್&zwnj; ಆಗಿದ್ದ ಸಂಗತಿ ಬೆಳಕಿಗೆ ಬಂದಿದೆ. ಅಲ್ಲದೇ, ತನ್ನ ಪಾಲಕರಿಗೆ ಪಾಸ್&zwnj; ಆಗಿದ್ದೆನೆಂದು ಸುಳ್ಳು ಹೇಳಿರುವ ವಿಚಾರ ಗೊತ್ತಾಗಿದೆ.&lt;/p&gt;&lt;p&gt;ಭಾಗ್ಯಶ್ರೀ (18) ಶನಿವಾರ ಆತ್ಮ*ಹತ್ಯೆ ಮಾಡಿಕೊಂಡಿದ್ದಳು. ಈಕೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ರದ್ದಾದ ಕಾರಣ ಸಾವಿಗೆ ಶರಣಾಗಿದ್ದಾರೆ ಎಂದು ಮೃತಳ ಮನೆಯವರೇ ಮಾಹಿತಿ ನೀಡಿದ್ದರು.&lt;/p&gt;&lt;h2&gt;&lt;strong&gt;ನೀಟ್&zwnj; ಕೋಚಿಂಗ್ ಕೊಡಿಸಿದ್ದರು ಪೋಷಕರು&lt;/strong&gt;&lt;/h2&gt;&lt;p&gt;ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ಭಾಗ್ಯಶ್ರೀ ತಾನು ಶೇ.92ರಷ್ಟು ಅಂಕ ಪಡೆದು ಪಾಸ್ ಆಗಿರುವುದಾಗಿ ಹೆತ್ತವರ ಬಳಿ ಹೇಳಿಕೊಂಡಿದ್ದಳು. ಮಗಳ ಮಾತನ್ನು ನಂಬಿದ್ದ ಪಾಲಕರು, ಆಕೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ನೀಟ್ ಪರೀಕ್ಷೆ ಬರೆಯಲು ಸಂಪೂರ್ಣ ಬೆಂಬಲ ನೀಡಿ ಕೋಚಿಂಗ್ ಕೊಡಿಸಿದ್ದರು. ಇತ್ತೀಚೆಗಷ್ಟೇ ಭಾಗ್ಯಶ್ರೀ ನೀಟ್ ಪರೀಕ್ಷೆ ಬರೆದಿದ್ದಳು. ಸುಳ್ಳು ಹೇಳಿದ ವಿಷಯ ಮನೆಯವರಿಗೆ ಗೊತ್ತಾದರೆ ಎಲ್ಲಿ ಬೈಯುತ್ತಾರೋ ಅಥವಾ ಪಾಲಕರ ನಿರೀಕ್ಷೆ ಸುಳ್ಳಾಯಿತಲ್ಲ ಎಂಬ ಭಯದಿಂದಲೇ ಆತ್ಮಹತ್ಯೆಯ ಮಾಡಿಕೊಂಡಿರಬಹುದು ಎಂಬ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಆದರೀಗ ಯಾರಿಗೂ ಊಹಿಸಲಾಗದ ರೀತಿ ಸತ್ಯ ಬಯಲಾಗಿದ್ದು, ಪೊಲೀಸರ ತನಿಖೆಯಲ್ಲಿ ಭಾಗ್ಯಶ್ರೀ ಪಿಯುಸಿ ಫಲಿತಾಂಶ ಪರಿಶೀಲಿಸಿದಾಗ ಆಕೆ ಪಾಲಕರಿಗೂ ಸುಳ್ಳು ಹೇಳಿರುವ ವಿಷಯ ತಿಳಿದು ಬಂದಿದೆ.&lt;/p&gt;&lt;p&gt;ಇದೀಗ ಭಾಗ್ಯಶ್ರೀ ಆತ್ಮ*ಹತ್ಯೆ ಕೇಸ್&zwnj; ತನಿಖೆ ನಡೆಸಿದ ಪೊಲೀಸರು ಆಕೆಯ ಫಲಿತಾಂಶ ಪರಿಶೀಲಿಸಿದ್ದು, ಮೊದಲ ಪರೀಕ್ಷೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ಪರೀಕ್ಷೆಯಲ್ಲಿ ಫೇಲ್&zwnj; ಆಗಿರುವ ಸತ್ಯ ಸಂಗತಿ ಬಯಲಾಗಿದೆ. ಬಳಿಕ ಅವಳು ಎರಡೂ ವಿಷಯಗಳಿಗೆ ಮರು ಪರೀಕ್ಷೆ ಬರೆದಿದ್ದು, ಮೇ 21 ರಂದು ಪ್ರಕಟವಾದ ಫಲಿತಾಂಶದಲ್ಲಿ ಭೌತಶಾಸ್ತ್ರಕ್ಕೆ 51 ಅಂಕ ಪಡೆದು ತೇರ್ಗಡೆಯಾಗಿ ಗಣಿತದಲ್ಲಿ 24 ಅಂಕ ಪಡೆದು ಅನುತ್ತೀರ್ಣಗೊಂಡಿದ್ದಳು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kalaburgi-big-twist-in-the-case-of-the-student-who-lost-her-life-due-to-neet-cancellation-mrq/articleshow-n9vpqmp"/>
        </item>
        <item>
            <title><![CDATA[Kalaburagi: ಬಕ್ರೀದ್ ಹಬ್ಬಕ್ಕೆ ಗೋಶಾಲೆಗೆ ಮೇವು ದೇಣಿಗೆ ನೀಡಿದ ಮುಸ್ಲಿಂ ಕುಟುಂಬ]]></title>
            <link>https://kannada.asianetnews.com/karnataka-districts/kalaburgi-chittapur-muslim-family-donates-fodder-to-cowshed-on-the-occasion-of-bakrid-festival-mrq/articleshow-p8pdhgo</link>
            <guid isPermaLink="true">https://kannada.asianetnews.com/karnataka-districts/kalaburgi-chittapur-muslim-family-donates-fodder-to-cowshed-on-the-occasion-of-bakrid-festival-mrq/articleshow-p8pdhgo</guid>
            <pubDate>Sat, 30 May 2026 10:50:06 +0530</pubDate>
            <description><![CDATA[ಕಲಬುರಗಿಯಲ್ಲಿ ಮುಸ್ಲಿಂ ಕುಟುಂಬವೊಂದು ಬಕ್ರೀದ್ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದೆ. ತಮ್ಮ ಹಿರಿಯರ ಸ್ಮರಣಾರ್ಥ ಗೋಶಾಲೆಗೆ 25 ಸಾವಿರ ಮೌಲ್ಯದ ಮೇವು ದಾನ ಮಾಡಿ, ಪ್ರಾಣಿ ದಯೆ ಮತ್ತು ಸೌಹಾರ್ದತೆಯ ಸಂದೇಶ ಸಾರಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvn1wxvtfqnjapb268cfgqw,imgname-kalaburgi-go-shala-1780118254523.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ದೇಶಾದ್ಯಂತ ಬಕ್ರೀದ್ ಹಬ್ಬವನ್ನು ಸಂಬ್ರಮದಿಂದ ಆಚರಿಸುತ್ತಿದ್ದು ಮುಸ್ಲಿಂ ಸಮುದಾಯದ ಕುಟುಂಬವೊಂದು ಗೋಶಾಲೆಗೆ 25 ಸಾವಿರ ಮೌಲ್ಯದ ಮೇವು ದೇಣಿಗೆ ನೀಡುವ ಮೂಲಕ ಬಕ್ರೀದ್ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ಮುಸ್ಲಿಂ ಸಮುದಾಯದ ಮುಖಂಡರಾದ ಸೈಯದ ಜಾಫರ್ ಉಲ್ ಹಸನ್ ಅವರು ತಮ್ಮ ತಂದೆ ಸೈಯದ್ ಹಫಿಸ್ ಉಲ್ ಹಸನ್, ತಾಯಿ ಸೈದಾ ಕೌಸರ್ ಆಫೀಸ್ ಹಾಗೂ ಸಹೋದರಿ ಸೆಮಿಸ್ ಬೇಗಂ ಅವರ ಪವಿತ್ರ ಸ್ಮರಣಾರ್ಥ ಗೋಶಾಲೆಗೆ ಭೇಟಿ ನೀಡಿ ಗೊವುಗಳ ಹಸಿವು ನೀಗಿಸಲು ಒಂದು ಟ್ರ್ಯಾಕ್ಟರ್&zwnj; ಕಣಕಿಯನ್ನು ದೇಣಿಗೆ ನೀಡಿದರು.&lt;/p&gt;&lt;h2&gt;&lt;strong&gt;ಕಂಬಳೇಶ್ವರ ಸೊಮಶೇಖರ ಶಿವಾಚಾರ್ಯರ ಹೇಳಿಕೆ&lt;/strong&gt;&lt;/h2&gt;&lt;p&gt;ಕಂಬಳೇಶ್ವರ ಸೊಮಶೇಖರ ಶಿವಾಚಾರ್ಯರು, ಹಬ್ಬ ಹರಿದಿನಗಳ ಹೆಸರಿನಲ್ಲಿ ಗೋವುಗಳನ್ನು ಕಡಿಯುವುದನ್ನು ಹಿಂಸಿಸುವುದನ್ನು ನಾವು ಹೆಚ್ಚಾಗಿ ನೋಡುತ್ತಿದ್ದೇವೆ. ಆದರೆ, ಇಂದಿನ ಬಕ್ರೀದ್ ಹಬ್ಬದ ಪವಿತ್ರ ದಿನದಂದು ಮುಸ್ಲಿಂ ಸಮುದಾಯದ ಸೈಯದ ಜಫರ್ ಅವರ ಕುಟುಂಬವು ತಮ್ಮ ಹಿರಿಯರ ಸ್ಮರಣಾರ್ಥ ಗೋಶಾಲೆಗೆ ಬಂದು ಗೋವುಗಳ ರಕ್ಷಣೆಗೆ ಧಾವಿಸಿರುವದು ಅವುಗಳಿಗೆ ಮೇವು ನೀಡಿರುವದು ನಿಜಕ್ಕೂ ಶ್ಲಾಘನೀಯ.&lt;/p&gt;&lt;p&gt;ಧರ್ಮ ಯಾವುದಾದರೂ ಮಾನವೀಯತೆ ಮತ್ತು ಪ್ರಾಣಿದಯೇ ಎಲ್ಲಕ್ಕಿಂತ ದೊಡ್ಡದು, ಸಮಾಜದಲ್ಲಿ ಇಂತಹ ಸೌಹಾರ್ದಯುತ ಚಿಂತನೆಗಳು ಹೆಚ್ಚಾಗಬೇಕು. ಗೋವುಗಳ ಕಡಿಯುವ ಕೈಗಳ ಮಧ್ಯ ಗೋವುಗಳನ್ನು ಕಾಯುವ ಮತ್ತು ಅವುಗಳ ಹಸಿವು ನೀಗಿಸುವ ಉದಾತ್ತ ಮನಸ್ಸುಗಳನ್ನು ನಾವಿಂದು ನೊಡುತ್ತಿರುವದು ಸಂತಸ ತಂದಿದೆ. ಈ ಕುಟುಂಬದ ಸತ್ಕಾರ್ಯ ಚಿತ್ತಾಪುರ ತಾಲೂಕಷ್ಟೆ ಅಲ್ಲದೇ ಇಡೀ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಹರಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಗೊಶಾಲೆಯ ಅಧ್ಯಕ್ಷರಾದ ರಮೇಶ ಬೊಮ್ಮನಳ್ಳಿ, ಮುಖಂಡರಾದ ಧನರಾಜ ದೇಶಪಾಂಡೆ, ಮಲ್ಲಿಕಾರ್ಜುನ ರೆಡ್ಡಿ ಇಜಾರ್, ಲಕ್ಷ್ಮೀ ಮಟ್ಟಿ, ನಟರಾಜ ಶಿಲ್ಪಿ, ಮಂಜುನಾಥ ಶಾಸ್ತ್ರೀ, ಗೋಪಾಲಕರಾದ ಚನ್ನಬಸಪ್ಪ, ಆಕಾಶ ಇದ್ದರು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kalaburgi-chittapur-muslim-family-donates-fodder-to-cowshed-on-the-occasion-of-bakrid-festival-mrq/articleshow-p8pdhgo"/>
        </item>
        <item>
            <title><![CDATA[Confusion over Karnataka CM Post: ಸಿಎಂ ಬದಲಾವಣೆಗೆ ಇನ್ನೂ ಡೇಟ್ ಫಿಕ್ಸ್ ಆಗಿಲ್ಲ ಎಂದ ಖರ್ಗೆ]]></title>
            <link>https://kannada.asianetnews.com/politics/karnataka-politics-no-date-fixed-for-karnataka-cm-change-says-mallikarjun-kharge-clarifies-rav/articleshow-rb9xwuf</link>
            <guid isPermaLink="true">https://kannada.asianetnews.com/politics/karnataka-politics-no-date-fixed-for-karnataka-cm-change-says-mallikarjun-kharge-clarifies-rav/articleshow-rb9xwuf</guid>
            <pubDate>Sat, 02 May 2026 04:28:20 +0530</pubDate>
            <description><![CDATA[ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳುವ ಮೂಲಕ ಹೊಸ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಬದಲಾವಣೆ ಇಲ್ಲ ಎಂದಿದ್ದ ಅವರು, ಇದೀಗ ಹೈಕಮಾಂಡ್ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knqxaacjkktrtqw8rra40m29,imgname-----------------------2026-04-09t065154.760-1775697734034.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ (ಮೇ.2): &lt;/strong&gt;ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ಡೇಟ್&zwnj; ಫಿಕ್ಸ್ ಆಗಿಲ್ಲ. ದಿನಾಂಕವೇ ನಿಗದಿಯಾಗದೆ ಇರುವಾಗ ಮುಖ್ಯಮಂತ್ರಿ ಬದಲಾಗುತ್ತಾರೆ, ಬದಲಾಗಲ್ಲ ಎಂದು ನಾನು ಹೇಗೆ ಹೇಳಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಗುರುವಾರವಷ್ಟೇ &lsquo;ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ&rsquo; ಎಂದಿದ್ದ ಖರ್ಗೆಯವರು ಶುಕ್ರವಾರ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡುತ್ತಾ, &lsquo;ಸಿಎಂ ಬದಲಾವಣೆಗೆ ಇನ್ನೂ ಸಮಯ ನಿಗದಿಯಾಗಿಲ್ಲ&rsquo; ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿ ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ&rsquo; ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಖರ್ಗೆ, ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇಳಿದರೆ ನಾನೇನು ಹೇಳಲಿ? ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಡೇಟ್&zwnj; ಫಿಕ್ಸ್&zwnj; ಆದ ಮೇಲೆ ನಾವೆಲ್ಲ ಅಂದರೆ, ನಾನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಸೇರಿ ಒಟ್ಟಾಗಿ ಚರ್ಚಿಸಿ, ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.&lt;/p&gt;&lt;p&gt;ಯಾವುದೇ ನಿರ್ಣಯ ಕೈಗೊಂಡರೂ ಅದರ ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದುವರಿಯುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬೆಂಬಲ ನೀಡಬೇಕು. ಈಗಲೇ ಈ ಬಗ್ಗೆ ಯಾವುದೇ ಊಹಾಪೋಹ ಮಾಡಬೇಡಿ. ನಾನೊಂದು ಹೇಳಿದರೆ ನೀವು ಇನ್ನೊಂದನ್ನು ಅರ್ಥೈಸಬೇಡಿ. ಸುಮ್ಮನೆ ತಪ್ಪು ಸಂದೇಶ ನೀಡಬೇಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿದರು.&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-politics-no-date-fixed-for-karnataka-cm-change-says-mallikarjun-kharge-clarifies-rav/articleshow-rb9xwuf"/>
        </item>
        <item>
            <title><![CDATA[ಬೀದರ್‌ನ ಬಾನಿಗೆ ಮರಳಿದ ಲೋಹದ ಹಕ್ಕಿ! ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್]]></title>
            <link>https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</link>
            <guid isPermaLink="true">https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</guid>
            <pubDate>Fri, 01 May 2026 16:39:34 +0530</pubDate>
            <description><![CDATA[ಸ್ಥಗಿತಗೊಂಡಿದ್ದ ಬೀದರ್&zwnj;-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಈ ಸೇವೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ಅನುದಾನ ಒದಗಿಸಲಾಗುತ್ತಿದ್ದು, ಇದು ಜಿಲ್ಲೆಯ ಸಂಪರ್ಕ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhkkstz3m20dc86284nr8mz,imgname-star-air-bidar-flights--1--1777633716063.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್&zwnj; ಜಿಲ್ಲೆಗೆ ಮಹತ್ವದ ಬೆಳವಣಿಗೆಯಾಗಿ, ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮತ್ತೆ ಆರಂಭಗೊಳ್ಳಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬೀದರ್&zwnj;&ndash;ಬೆಂಗಳೂರು ನಡುವೆ ಕಾರ್ಯನಿರ್ವಹಿಸುತ್ತಿದ್ದ ವಿಮಾನ ಸೇವೆ ಪುನರಾರಂಭವಾಗಲಿದ್ದು, ಟರ್ಮಿನಲ್ ಕಾರ್ಯಾಚರಣೆಗಳು ಮತ್ತೆ ಚೇತರಿಸಿಕೊಳ್ಳಲು ದಾರಿ ಸುಗಮವಾಗಿದೆ.&lt;/p&gt;&lt;p&gt;ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಸಂಬಂಧ ಮನವಿ ಸಲ್ಲಿಸಿದ್ದರು. ಅವರ ಪ್ರಸ್ತಾವನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು, ಬೀದರ್&zwnj;ನ ನಾಗರಿಕ ವಿಮಾನಯಾನ ಸೇವೆಗೆ ಅಗತ್ಯ ಅನುದಾನ ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.&lt;/p&gt;&lt;h2&gt;ವಿಮಾನಯಾನ ಸಂಸ್ಥೆ ಎದುರಿಸುವ ನಷ್ಟವನ್ನು ಭರಿಸಲು VGF ವ್ಯವಸ್ಥೆಯಡಿ ಅನುದಾನ&lt;/h2&gt;&lt;p&gt;ಈ ನಿರ್ಧಾರದ ಭಾಗವಾಗಿ, ವಿಮಾನಯಾನ ಸಂಸ್ಥೆಗಳು ಎದುರಿಸುವ ನಷ್ಟವನ್ನು ಭರಿಸಲು Viability Gap Funding (VGF) ವ್ಯವಸ್ಥೆಯಡಿ ಅನುದಾನ ನೀಡಲಾಗುತ್ತದೆ. ಈ ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ಭರಿಸಲಾಗುವುದು. ಇದರಿಂದ ವಿಮಾನ ಸೇವೆ ನಿರಂತರವಾಗಿ ಕಾರ್ಯನಿರ್ವಹಿಸಲು ಸಹಾಯವಾಗಲಿದ್ದು, ಜಿಲ್ಲೆಯ ಸಂಪರ್ಕ ವ್ಯವಸ್ಥೆಗೆ ಮಹತ್ವದ ಉತ್ತೇಜನ ದೊರೆಯಲಿದೆ.&lt;/p&gt;&lt;p&gt;ಇತ್ತೀಚೆಗೆ, ನಾಗರಿಕ ವಿಮಾನಯಾನ ಸೇವೆಯನ್ನು ನಿರ್ವಹಿಸುತ್ತಿದ್ದ ಸ್ಟಾರ್ ಏರ್ ಸಂಸ್ಥೆಯು ಸರ್ಕಾರದೊಂದಿಗೆ ಮಾಡಿಕೊಂಡಿದ್ದ ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಿಂದ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಕಳೆದ ವರ್ಷ ಸರ್ಕಾರವು ಕೆಕೆಆರ್&zwnj;ಡಿಬಿ ನಿಧಿಯಿಂದ ಸುಮಾರು 13 ಕೋಟಿ ರೂಪಾಯಿ ಅನುದಾನವನ್ನು ನೀಡಿತ್ತು. ಇದೀಗ ಹೊಸ ಅವಧಿಗೆ ಸ್ಟಾರ್ ಏರ್ ಸಂಸ್ಥೆಯು 20 ಕೋಟಿ ರೂಪಾಯಿಗಿಂತ ಹೆಚ್ಚು ಅನುದಾನ ಬೇಡಿಕೆ ಇಟ್ಟಿದ್ದುದಾಗಿ ಮೂಲಗಳು ತಿಳಿಸಿವೆ.&lt;/p&gt;&lt;p&gt;ಸಚಿವ ಈಶ್ವರ ಖಂಡ್ರೆ ಅವರ ಸತತ ಪ್ರಯತ್ನದ ಫಲವಾಗಿ ಸರ್ಕಾರ ಮತ್ತೆ ಅನುದಾನ ನೀಡಲು ಸಮ್ಮತಿಸಿರುವುದರಿಂದ, ಬೀದರ್&zwnj;ನಲ್ಲಿ ವಿಮಾನ ಸೇವೆ ಪುನರಾರಂಭವಾಗುವುದು ಖಚಿತವಾಗಿದೆ. ಈ ಕ್ರಮದಿಂದ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ವಲಯಗಳಿಗೆ ಮಹತ್ತರ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.&lt;/p&gt;&lt;h2&gt;ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಅನುಕೂಲ&lt;/h2&gt;&lt;p&gt;ಇದರಿಂದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಸಹ ಹೆಚ್ಚಿನ ಅನುಕೂಲ ಸಿಗಲಿದೆ, ಏಕೆಂದರೆ ಅವರು ಕೂಡ ಬೀದರ್ ವಿಮಾನ ನಿಲ್ದಾಣವನ್ನು ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಒಟ್ಟಿನಲ್ಲಿ, ಈ ನಿರ್ಧಾರ ಉತ್ತರ ಕರ್ನಾಟಕ ಭಾಗದ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.&lt;/p&gt;&lt;p&gt;ಬೀದರ್&zwnj; &ndash; ಬೆಂಗಳೂರು ನಡುವೆ ಮತ್ತೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗಲಿದ್ದು, ಸರ್ಕಾರಕ್ಕೆ ಹಾಗೂ ಕೆಕೆಆರ್&zwnj;ಡಿಬಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಹಾಗೂ ಬೀದರ್ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ.&lt;/p&gt;&lt;p&gt;- ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ&lt;/p&gt;]]></content:encoded>
            <category>kalaburagi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1"/>
        </item>
        <item>
            <title><![CDATA[ಕಡಲಾಚೆ ಪಯಣ ಬೆಳೆಸಿದ ನಮ್ಮ ಕಲಬುರಗಿಯ  ಪ್ರಸಿದ್ಧ ಜೋಳದ ರೊಟ್ಟಿ; ವಿದೇಶಗಳಿಗೆ ರಫ್ತು]]></title>
            <link>https://kannada.asianetnews.com/karnataka-districts/kalaburagi-s-famous-jolada-rotti-is-now-being-exported-to-countries-like-america-canada-and-australia-mrq/articleshow-xafgce1</link>
            <guid isPermaLink="true">https://kannada.asianetnews.com/karnataka-districts/kalaburagi-s-famous-jolada-rotti-is-now-being-exported-to-countries-like-america-canada-and-australia-mrq/articleshow-xafgce1</guid>
            <pubDate>Mon, 18 May 2026 05:25:28 +0530</pubDate>
            <description><![CDATA[ಕಲಬುರಗಿಯ ಪ್ರಸಿದ್ಧ ಜೋಳದ ರೊಟ್ಟಿಯು ಈಗ ಅಮೆರಿಕ, ಕೆನಡಾ, ಮತ್ತು ಆಸ್ಟ್ರೇಲಿಯಾದಂತಹ ದೇಶಗಳಿಗೆ ರಫ್ತಾಗುತ್ತಿದೆ. ಜಿಲ್ಲಾಡಳಿತದ ಈ ಉಪಕ್ರಮವು ಸಾವಿರಾರು ಮಹಿಳೆಯರಿಗೆ ಉದ್ಯೋಗ ನೀಡಿ, ಅವರ ಆದಾಯವನ್ನು ಹೆಚ್ಚಿಸಿದೆ ಮತ್ತು ಈ ಉದ್ಯಮವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೆಲೆಯೂರುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krw5rw8zy8w97gnn580xysn2,imgname-rotti-1779062042911.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶೇಷಮೂರ್ತಿ ಅವಧಾನಿ&lt;/strong&gt;&lt;/p&gt;&lt;p&gt;&lt;strong&gt;ಕಲಬುರಗಿ: &lt;/strong&gt;ಈ ನೆಲ ಮೂಲದ ಅತ್ಯಂತ ಜನಪ್ರಿಯ ಖಾದ್ಯ ಜೋಳದ ರೊಟ್ಟಿ ಸಾಗರೋಲ್ಲಂಘನ ಮಾಡಿದೆ. ಅಮೇಜಾನ್&zwnj;, ಲೋಕಲ್&zwnj; ಏಜನ್ಸಿಗಳ ಮೂಲಕ ಆನ್&zwnj;ಲೈನ್&zwnj;ನಲ್ಲಿ ದೇಶಾದ್ಯಂತ ಗ್ರಾಹಕರನ್ನು ಸೆಳೆದಿರುವ ಕಲಬುರಗಿ ರೊಟ್ಟಿ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.&lt;/p&gt;&lt;p&gt;ಪುಣೆಯಲ್ಲಿರುವ ಅಷ್ಟಮ ಟ್ರೇಡರ್ಸ್&zwnj; ಜೊತೆ ಒಪ್ಪಂದ ಮಾಡಿಕೊಂಡಿರುವ ಜಿಲ್ಲಾಡಳಿತ ಅಮೆರಿಕ, ಕೆನಡಾ, ಆಸ್ಟ್ರೇಲಿಯಾಕ್ಕೆ ಮಾಸಿಕ 25 ಸಾವಿರದಂತೆ ವಾರ್ಷಿಕ 3 ಲಕ್ಷಕ್ಕೂ ಅಧಿಕ ರೊಟ್ಟಿ ರಫ್ತು ಮಾಡಲು ಮುಂದಾಗಿದೆ. ಪುಣೆಯ ಅಷ್ಟಮ ಟ್ರೇಡರ್ಸ್&zwnj;ನ ರಮೇಶ ಕಡಗಂಚಿ ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಕೆನಡಾ ಸೇರಿದಂತೆ 25ಕ್ಕೂ ಹೆಚ್ಚು ದೇಶಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ. ಭಾರತೀಯರು, ಮಹಾರಾಷ್ಟ್ರ, ಕರ್ನಾಟಕ, ಅದರಲ್ಲೂ ಉತ್ತರ ಕರ್ನಾಟಕದವರು ಎಲ್ಲೆಲ್ಲಿ ಹೆಚ್ಚಾಗಿದ್ದಾರೆ ಎಂಬುದರ ಲೆಕ್ಕ ಹಾಕಿದ್ದಾರೆ. ಮೊದಲ ಹಂತದಲ್ಲಿ 3 ದೇಶಗಳಿಗೆ ಮಾಸಿಕ 25 ಸಾವಿರದಂತೆ ರೊಟ್ಟಿ ರಫ್ತು ಮಾಡಲಿದ್ದಾರೆ. ಇನ್ನುಳಿದ ದೇಶಗಳಲ್ಲೂ ರೊಟ್ಟಿ ರಫ್ತಿಗೆ ಅವಕಾಶಗಳಿವೆ ಎಂಬುದು ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ&lt;/p&gt;&lt;h2&gt;&lt;strong&gt;ರೊಟ್ಟಿ ಉದ್ಯಮದಿಂದಬದಲಾಯ್ತು ಬದುಕು&lt;/strong&gt;&lt;/h2&gt;&lt;p&gt;ಜಿಲ್ಲಾಡಳಿತದ ಕಲಬುರಗಿ ರೊಟ್ಟಿ ಬ್ರ್ಯಾಂಡ್&zwnj; ಉಪಕ್ರಮದಲ್ಲಿ 150 ಸ್ವಹಾಯ ಸಂಘಗಳು, ಸಾವಿರಕ್ಕೂ ಹೆಚ್ಚು ಮಹಿಳೆಯರಿದ್ದು, ರೊಟ್ಟಿ ಸಿದ್ಧಪಡಿಸುವ ಕಾಯಕ ನಿರತ ಪ್ರತಿಯೋರ್ವ ಮಹಿಳೆ ಮಾಸಿಕ 15 ರಿಂದ 200 ಸಾವಿರ ರು. ಆದಾಯ ಗಳಿಸುತ್ತಿದ್ದಾರೆ. ಸದ್ಯ ಸ್ಥಳೀಯ ಮಾರುಕಟ್ಟೆಯಲ್ಲಿ ಒಂದು ರೊಟ್ಟಿ ಬೆಲೆ ₹10ರಿಂದ ₹12 ಇದೆ, ವಿದೇಶಿ ರಫ್ತು, ಮಾರುಕಟ್ಟೆಯಲ್ಲಿ ಇದೇ ರೊಟ್ಟಿ ಬೆಲೆ ₹30ರಿಂದ ₹35 ಆಗಲಿದ್ದು ಶೇ.80ರಿಂದ ಶೇ.100 ಆದಾಯ ರೊಟ್ಟಿ ಉದ್ಯಮದಲ್ಲಿರೋ ಮಹಿಳೆಯರ ಕೈ ಸೇರಲಿದೆ.&lt;/p&gt;&lt;h3&gt;&lt;strong&gt;₹55 ಲಕ್ಷ ವೆಚ್ಚದ ಪ್ಯಾಕೇಜ್&zwnj; ಘಟಕ&lt;/strong&gt;&lt;/h3&gt;&lt;p&gt;ಎಚ್&zwnj;ಡಿಎಫ್&zwnj;ಸಿ ಬ್ಯಾಂಕ್&zwnj; ತನ್ನ ಸಿಎಸ್&zwnj;ಆರ್&zwnj; ಅನುದಾನದಲ್ಲಿ ₹55 ಲಕ್ಷ ಒದಗಿಸಿ ರೊಟ್ಟಿ ಮಹಿಳೆಯರಿಗೆ ಹೊಚ್ಚಹೊಸ ಪ್ಯಾಕಿಂಗ್&zwnj; ಘಟಕ ಕೊಡುಗೆ ನೀಡಿದೆ. ಜಿಲ್ಲಾಡಳಿತ ಜಿಲ್ಲಾ ಖನೀಜ ನಿಧಿಯಲ್ಲಿ ₹32 ಲಕ್ಷ ನೀಡಿದೆ. ಕಟನೂರ್&zwnj; ಡಿ ಬಳಿಯ ಬೀಜೋತ್ಪಾದನಾ ಕೇಂದ್ರದಲ್ಲೇ ಹೊಸ ಪ್ಯಾಕಿಂಗ್&zwnj; ಘಟಕ ನಿರ್ಮಾಣವಾಗುತ್ತಿದೆ.&lt;/p&gt;&lt;p&gt;ಸ್ಥಳೀಯವಾಗಿ ಸ್ವಸಹಾಯ ಸಂಘಗಳ ಮೂಲರಕ ತಯಾರಿಸುವ ಕಲಬುರಗಿ ರೊಟ್ಟಿ ಇದೀಗ ವಿದೇಶದಲ್ಲಿ ಲಭ್ಯವಾಗುತ್ತಿದೆ. 2 ವರ್ಷದಲ್ಲೇ ಕಲಬುರಗಿ ರೊಟ್ಟಿ ವಿದೇಶಿ ಮಾರುಕಟ್ಟೆಯಲ್ಲಿ ಸಿಗುವಂತೆ ಕ್ರಮವಹಿಸಲಾಗಿದ್ದು ಇದು ಹೆಮ್ಮೆಯ ವಿಷಯ. ಇದರಿಂದ ಗ್ರಾಮೀಣ ಮಹಿಳಾ ಉದ್ಯಮ ಶೀಲತೆಗೂ ಬಲ ಬಲಿದೆ, ರೈತರು ಬೆಳೆಯುವ ಜೋಳಕ್ಕೂ ಬೆಲೆ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳುತ್ತಾರೆ.&lt;/p&gt;&lt;p&gt;ರೊಟ್ಟಿ ಮಾಡುತ್ತ ಇಲ್ಲೇ ಮಾರುತ್ತಿದ್ದೆವು. ಇದೀಗ ನಮ್ಮ ರೊಟ್ಟಿ ದೇಶ, ವಿದೇಶದಲ್ಲಿ ಮಾರಾಟ ಆಗುತ್ತಿವೆ. ನಮಗೆ ಕೈ ತುಂಬಾ ಕೆಲಸ, ಆದಾಯ ಸಿಗುತ್ತಿದೆ. ಈಗ ರೊಟ್ಟಿ ಮಾಡಲು ಯಂತ್ರ ಬಳಸುತ್ತಿದ್ದು ಇದರಿಂದ ಇನ್ನೂ ಗುಣಮಟ್ಟದ ರೊಟ್ಟಿ ಗ್ರಾಹಕರಿಗೆ ಪೂರೈಸಲು ಅನುಕೂಲ ಆಗಿದೆ. ಜಿಲ್ಲಾಡಳಿತ, ಜಿಲ್ಲಾ ಸಚಿವರಿಗೆ ಧನ್ಯವಾದಗಳು ರೊಟ್ಟಿ ಉತ್ಪಾದಕಿ ಶರಣವ್ವ ಹೇಳಿದ್ದಾರೆ.&amp;nbsp;&lt;/p&gt;&lt;p&gt;&amp;nbsp;&lt;/p&gt;&lt;p&gt;Kalaburagi Rotti, a product deeply rooted in my region&rsquo;s identity and food culture, is now reaching global markets.I recently flagged off the first export consignments of Kalaburagi Rotti to Australia, USA and Canada. Export volumes are expected to reach 10,000 rotis per month&hellip; pic.twitter.com/C3XBkc9dhV&lt;/p&gt;&lt;p&gt;&mdash; Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 13, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kalaburagi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kalaburagi-s-famous-jolada-rotti-is-now-being-exported-to-countries-like-america-canada-and-australia-mrq/articleshow-xafgce1"/>
        </item>
    </channel>
</rss>
