<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 09 May 2026 13:00:04 +0530</lastBuildDate>
        <atom:link href="https://kannada.asianetnews.com/rss/karnataka-districts" rel="self" type="application/rss+xml"/>
        <item>
            <title><![CDATA[Sirsi: ಯಕ್ಷಗಾನ ನಡೆಸುವ ಜಾಗದ ವಿಚಾರ; ಚಪ್ಪಲಿ, ಪೊರಕೆಯಲ್ಲಿ ಹೊಡೆದಾಡಿಕೊಂಡ ಶಿರಸಿಯ ದಾಯಾದಿಗಳು!]]></title>
            <link>https://kannada.asianetnews.com/karnataka-districts/uttara-kannada-sirsi-family-dispute-for-yakshagana-place/articleshow-cbmhgiw</link>
            <guid isPermaLink="true">https://kannada.asianetnews.com/karnataka-districts/uttara-kannada-sirsi-family-dispute-for-yakshagana-place/articleshow-cbmhgiw</guid>
            <pubDate>Sat, 09 May 2026 12:59:57 +0530</pubDate>
            <description><![CDATA[&lt;p&gt;Sirsi Family Dispute: ಖಾಸಗಿ ಜಮೀನಿನಲ್ಲಿ ಯಕ್ಷಗಾನ ಮಾಡುವ ಬಗ್ಗೆ ದಾಯಾದಿಗಳು ಜಗಳ ಆಡಿಕೊಂಡಿದ್ದಾರೆ. ಚಪ್ಪಲಿಯಲ್ಲಿ, ಕೋಲಿನಲ್ಲಿ ಹೊಡೆದುಕೊಳ್ಳುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್&zwnj; ಆಗ್ತಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5t8rgjv48v5x7fhvk9xb4m,imgname-new-project---2026-05-09t124250.864-1778311782930.jpg" type="image/jpeg" height="390" width="690"/>
            <content:encoded><![CDATA[&lt;p&gt;ಖಾಸಗಿ ಜಮೀನಿನಲ್ಲಿ ಯಕ್ಷಗಾನ ನಡೆಸುವ ವಿಚಾರವಾಗಿ ಘರ್ಷಣೆಯಾಗಿದ್ದು, ಈಗ ಆಸ್ಪತ್ರೆ ಸೇರುವ ಹಾಗೆ ಆಗಿದೆ. ಹೌದು, ದಾಯಾದಿಗಳಿಬ್ಬರು ಕಲಹ ಮಾಡಿಕೊಂಡಿದ್ದಾರೆ. ಪೊರಕೆ, ಚಪ್ಪಲಿಯಿಂದ, ಕೋಲಿನಿಂದ ಹಲ್ಲೆ ಮಾಡಿರುವ ವಿಡಿಯೋ ವೈರಲ್&zwnj; ಆಗ್ತಿದೆ.&lt;/p&gt;&lt;h2&gt;ಎಲ್ಲಿ? ಏನಾಯ್ತು?&lt;/h2&gt;&lt;p&gt;ಚಂದ್ರಶೇಖರ ಹಾಗೂ ನೇತ್ರವತಿ ಅವರು ಮಂಜುನಾಥ್ ಹಾಗೂ ಭಾರತಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಶಿರಸಿಯ ಕಲಗಾರ ಒಡ್ಡು ಬಳಿ ಈ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಘಟನೆ ನಡೆದಿದೆ.&lt;/p&gt;&lt;h2&gt;ಯಕ್ಷಗಾನ ಪ್ರಿಯರಿದ್ದಾರೆ&lt;/h2&gt;&lt;p&gt;ಉತ್ತರ ಕನ್ನಡ ಹಾಗೂ ಮಂಗಳೂರು ಬಳಿ ಯಕ್ಷಗಾನ ಪ್ರಿಯರು ಹೆಚ್ಚಿದ್ದಾರೆ. ಹಾಗೆಯೇ ಶಿರಸಿಯಲ್ಲಿಯೂ ಕೂಡ ಯಕ್ಷಗಾನ ಮಾಡಲು ಯೋಜನೆ ಹಾಕಲಾಗಿತ್ತು. ಈಗ ಜಾಗದ ವಿಚಾರವಾಗಿ ಜಗಳ ಆಗಿದೆ.&lt;/p&gt;&lt;p&gt;ಆಸ್ಪತ್ರೆ ದಾಖಲಾಗಿದ್ದಾರೆ&lt;/p&gt;&lt;p&gt;ಹಲ್ಲೆಗೊಳಗಾದ ಮಂಜುನಾಥ್ ಹಾಗೂ ಭಾರತಿ ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಾಗಿದೆ. ಈ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಕೇಸ್&zwnj; ದಾಖಲಾಗಿದೆಯಾ? ಇಲ್ಲವಾ ಎಂದು ಕಾದು ನೋಡಬೇಕಿದೆ. ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>karnataka-districts</category>
            <dc:creator>Padmashree Bhat</dc:creator>
            <atom:link href="https://kannada.asianetnews.com/karnataka-districts/uttara-kannada-sirsi-family-dispute-for-yakshagana-place/articleshow-cbmhgiw"/>
        </item>
        <item>
            <title><![CDATA[ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಹುಲಿ ಗಣನೆಗೆ ಅಳವಡಿಸಿದ್ದ ಕ್ಯಾಮೆರಾ ಕಳ್ಳತನ, ಅರಣ್ಯ ಇಲಾಖೆಗೆ ಹೊಡೆತ]]></title>
            <link>https://kannada.asianetnews.com/state/camera-installed-for-tiger-census-stolen-in-muttodi-forest-major-blow-to-forest-department-rav/articleshow-7fum4t7</link>
            <guid isPermaLink="true">https://kannada.asianetnews.com/state/camera-installed-for-tiger-census-stolen-in-muttodi-forest-major-blow-to-forest-department-rav/articleshow-7fum4t7</guid>
            <pubDate>Sat, 09 May 2026 12:54:46 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನ ಮುತ್ತೋಡಿ ಅಭಯಾರಣ್ಯದಲ್ಲಿ ಹುಲಿ ಗಣನೆಗೆ ಅಳವಡಿಸಿದ್ದ ಕ್ಯಾಮೆರಾಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಘಟನೆಯು ಅರಣ್ಯ ಇಲಾಖೆಯ ಕಾರ್ಯವೈಖರಿ ಮತ್ತು ಕಾಡುಪ್ರಾಣಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5swz5wzbsy77wgqfr8asmc,imgname-----------------------2026-05-09t125239.911-1778311396540.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ : ಆಲ್ದೂರು&zwnj;ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಮೇ.9):&lt;/strong&gt; ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.&zwnj;ನಾಡು ಮುಗೀತು.. ಕಾಡಲ್ಲೂ ಕಳ್ಳರ ಕಾಟ ಸ್ಪಾರ್ಟ್ ಆಯ್ತು ಎನ್ನುವ ಪ್ರಶ್ನೆ ಮೂಡಿಸಿದೆ. ಇದರ ಜೊತೆಗೆ &zwnj; ಈ ಘಟನೆ ಅರಣ್ಯ ಇಲಾಖೆಯ ಕಾರ್ಯಚಟುವಟಿಕೆಗಳ ಮೇಲೆ ಮಾತ್ರವಲ್ಲ, ಕಾಡುಪ್ರಾಣಿಗಳ ಸುರಕ್ಷತೆ ಮೇಲೂ ಪ್ರಶ್ನೆ ಎತ್ತಿದೆ.&lt;/p&gt;&lt;h2&gt;ಅರಣ್ಯಾಧಿಕಾರಿಗಳಿಂದ&zwnj; ದೂರು :&lt;/h2&gt;&lt;p&gt;ಮುತ್ತೋಡಿ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕ್ಯಾಮೆರಾಗಳು ಮೇ 4ರವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಮೇ 5ರಂದು ಈ ಕ್ಯಾಮೆರಾಗಳು ಅಳವಡಿಸಿದ್ದ ಸ್ಥಳದಿಂದ ನಾಪತ್ತೆಯಾಗಿವೆ. ಈ ಕ್ಯಾಮೆರಾಗಳ ಒಟ್ಟು ಮೌಲ್ಯ 40,000 ಆಗಿದೆ.ಉಪವಲಯ ಅರಣ್ಯಾಧಿಕಾರಿ ಯಾಸೀನ್ ಬಾಷಾ ಮಾಹಿತಿ ನೀಡಿದ್ದು, ಕಾರ್ಯಾಚರಣೆ ವೇಳೆ ಅರಣ್ಯ ಪಾಲಕ ನಂದೀಶ್ ಅವರೊಂದಿಗೆ ಗಸ್ತಿನ ವೇಳೆ ಕಳ್ಳತನ ಬೆಳಕಿಗೆ ಬಂದಿದೆ. ಈ ಕಳ್ಳತನ ಪ್ರಕರಣವು ತಕ್ಷಣವೇ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಅರಣ್ಯ ಇಲಾಖೆ ಹುಲಿ ಗಣನೆ ಕಾರ್ಯಾಚರಣೆಗೆ ಈ ಕ್ಯಾಮೆರಾಗಳನ್ನು ಕಡ್ಡಾಯ ಅನುಮತಿಯೊಂದಿಗೆ ಅರಣ್ಯ ಪ್ರದೇಶದಲ್ಲಿ ಅಳವಡಿಸಿದ್ದರೂ, ಕಳ್ಳರು ಕ್ಯಾಮೆರಾಗಳನ್ನು ಹೊತ್ತೊಯ್ದಿರುವುದು ಭದ್ರತೆಯ ವ್ಯತ್ಯಯವನ್ನೂ ತೋರಿಸುತ್ತದೆ.&lt;/p&gt;&lt;h3&gt;ಕಾಡು ಪ್ರಾಣಿಗಳ ಸಂರಕ್ಷಣೆಯ ಪ್ರಶ್ನೆ ಉದ್ಬವ :&lt;/h3&gt;&lt;p&gt;ಈ ಘಟನೆ ಕಾಡುಪ್ರಾಣಿಗಳ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯ ನಿರಂತರ ಪರಿಶೀಲನೆಗೆ ತಡೆಯಾಗಿದೆ.ಸ್ಥಳೀಯ ವಾಸಿಗಳಿಗೆ ಈ ಕಳ್ಳತನವು ಆತಂಕದ ವಿಷಯವಾಗಿದೆ. ಕಾಡುಪ್ರಾಣಿ ಬೇಟೆಗಾರರು ಮತ್ತು ಮರಗಳ್ಳರು ಈ ಕಳ್ಳತನಕ್ಕೆ ಸಂಬಂಧ ಹೊಂದಿರುವ ಶಂಕೆಯಡಿಯಲ್ಲಿ ಪರಿಶೀಲನೆ ನಡೆಯುತ್ತಿದೆ. ತಕ್ಷಣದ ತನಿಖೆಯಲ್ಲಿ ಕಳ್ಳರು ಅನುಮತಿರಹಿತವಾಗಿ ಅಭಯಾರಣ್ಯಕ್ಕೆ ಪ್ರವೇಶ ಪಡೆದಿರುವ ಸಾಧ್ಯತೆಯೂ ಇದೆ.&lt;/p&gt;&lt;p&gt;ಅರಣ್ಯ ಇಲಾಖೆ ಈಗ ಕಾಡುಪ್ರಾಣಿಗಳ ನಿರೀಕ್ಷಿತ ಕಾರ್ಯಚಟುವಟಿಕೆಗಳನ್ನು ಕಾಪಾಡಲು ಮತ್ತು ಕಳ್ಳತನ ಪ್ರಕರಣವನ್ನು ಪತ್ತೆಮಾಡಲು ತ್ವರಿತ ಕ್ರಮ ಕೈಗೊಂಡಿದೆ. ಹುಲಿ ಗಣನೆ ಕಾರ್ಯಾಚರಣೆ ಮತ್ತು ಕಾಡು ಪ್ರಾಣಿಗಳ ಮೇಲಿನ ಅಧ್ಯಯನದ ಸುತ್ತಲೂ ಸಾರ್ವಜನಿಕರು ಮತ್ತು ಪರಿಸರ ಸಂರಕ್ಷಕರಲ್ಲಿ ಆತಂಕ ವ್ಯಕ್ತವಾಗಿದೆ.ಈ ಕಳ್ಳತನ ಘಟನೆ ಮುತ್ತೋಡಿ ಅಭಯಾರಣ್ಯದ ಭದ್ರತೆ, ಕಾಡುಪ್ರಾಣಿಗಳ ಮೇಲಿನ ನಿಗಾವಳಿ ಮತ್ತು ಅರಣ್ಯ ಇಲಾಖೆ ಕಾರ್ಯಕ್ಷಮತೆ ಬಗ್ಗೆ ಮಹತ್ವದ ಪ್ರಶ್ನೆಗಳನ್ನು ಎತ್ತಿದೆ.&lt;/p&gt;]]></content:encoded>
            <category>karnataka-districts</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/camera-installed-for-tiger-census-stolen-in-muttodi-forest-major-blow-to-forest-department-rav/articleshow-7fum4t7"/>
        </item>
        <item>
            <title><![CDATA[ಬೆಂಗಳೂರು: ಸಂಸಾರ ತ್ಯಜಿಸಿದ ಮಹಿಳೆ ಜತೆ ಚಿತ್ರದುರ್ಗ ಯುವಕನ ಲಿವ್-ಇನ್, ಪ್ರೇಮಕಥೆಯಲ್ಲಿ ಅನುಮಾನದ ಸಾವು!]]></title>
            <link>https://kannada.asianetnews.com/karnataka-districts/chitradurga-man-found-dead-in-suspected-death-live-in-bengaluru-partner-missing-gdp/articleshow-8sffecr</link>
            <guid isPermaLink="true">https://kannada.asianetnews.com/karnataka-districts/chitradurga-man-found-dead-in-suspected-death-live-in-bengaluru-partner-missing-gdp/articleshow-8sffecr</guid>
            <pubDate>Sat, 09 May 2026 12:34:28 +0530</pubDate>
            <description><![CDATA[ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಚಿತ್ರದುರ್ಗ ಮೂಲದ ಯುವಕ ತಿಪ್ಪೇಸ್ವಾಮಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ವಾಸಿಸುತ್ತಿದ್ದ ಆತನ ಸಾವಿಗೆ ಆಕೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jj94qynb58eq46thnazwnymz,imgname-Live-in-relationship-1737621240491.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು &lt;/strong&gt;ನಗರದ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಫ್ಯಾನಿಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮ*ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ಬಗ್ಗೆ ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.&lt;/p&gt;&lt;p&gt;ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಆತ ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇದೇ ವೇಳೆ, ದಾವಣಗೆರೆ ಮೂಲದ ಮಹಿಳೆಯೊಬ್ಬಳೊಂದಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿಬಳಿಕ ಇಬ್ಬರೂ ಒಂದೇ ಗಾರ್ಮೆಂಟ್ಸ್&zwnj;ನಲ್ಲಿ ಕೆಲಸ ಮಾಡುತ್ತಾ ಹತ್ತಿರವಾಗಿದ್ದರು. ಕಳೆದ ಎರಡು ತಿಂಗಳಿನಿಂದ ಅವರು ಲಿವ್-ಇನ್ ಸಂಬಂಧದಲ್ಲಿದ್ದು, ಶ್ರೀಗಂಧನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದರು.&lt;/p&gt;&lt;h2&gt;ಮದುವೆಯಾಗಿ ಇಬ್ಬರು ಮಕ್ಕಳ ತಾಯಿ&lt;/h2&gt;&lt;p&gt;ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ, ಆ ಮಹಿಳೆ ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ತಿಪ್ಪೇಸ್ವಾಮಿ ಜೊತೆ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ಮನೆ ಮಾಲೀಕರಿಗೆ ನಾವಿಬ್ಬರೂ ಗಂಡ-ಹೆಂಡತಿ ಎಂದು ಹೇಳಿದ ಜೋಡಿ ತಿಂಗಳಿಗೆ ಸುಮಾರು 3 ಸಾವಿರ ರೂಪಾಯಿ ಬಾಡಿಗೆ ನೀಡಿ ಜೊತೆಯಾಗಿ ವಾಸಿಸುತ್ತಿದ್ದರು.&lt;/p&gt;&lt;h2&gt;ಇಬ್ಬರ ಮಧ್ಯೆ ಕಲಹ&lt;/h2&gt;&lt;p&gt;ಆದರೆ ಕೆಲ ದಿನಗಳಿಂದ ಜೋಡಿಗಳಿಬ್ಬರ ನಡುವೆ ಕಲಹ ಉಂಟಾಗಿತ್ತಂತೆ, &ldquo;ನನ್ನನ್ನು ನೋಡಿಕೊಳ್ಳಲು ಆಗುವುದಿಲ್ಲ, ನನ್ನನ್ನು ಬಿಟ್ಟುಬಿಡು&rdquo; ಎಂದು ಮಹಿಳೆ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮನನೊಂದ ತಿಪ್ಪೇಸ್ವಾಮಿ ಆತ್ಮ*ಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.&lt;/p&gt;&lt;p&gt;ಇದೇ ವೇಳೆ, ತಿಪ್ಪೇಸ್ವಾಮಿ ಸಾವಿಗೆ ಪ್ರಿಯಾಂಕಾ ಎಂಬ ಮಹಿಳೆಯೇ ಕಾರಣ ಎಂದು ಮೃತನ ಕುಟುಂಬಸ್ಥರು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-man-found-dead-in-suspected-death-live-in-bengaluru-partner-missing-gdp/articleshow-8sffecr"/>
        </item>
        <item>
            <title><![CDATA[IPL Final match shift row: ಶಾಸಕರಿಗೆ ಕೊಡೋದೇ 2 ಫ್ರೀ ಟಿಕೆಟ್‌ ಅಷ್ಟೇ : ಲಾಭಕ್ಕಾಗಿ ಐಪಿಎಲ್ ಫೈನಲ್ ಶಿಫ್ಟ್: ಪರಂ]]></title>
            <link>https://kannada.asianetnews.com/politics/mlas-given-only-2-free-tickets-ipl-final-shifted-for-profit-slams-parameshwara-rav/articleshow-41c5nkh</link>
            <guid isPermaLink="true">https://kannada.asianetnews.com/politics/mlas-given-only-2-free-tickets-ipl-final-shifted-for-profit-slams-parameshwara-rav/articleshow-41c5nkh</guid>
            <pubDate>Sat, 09 May 2026 12:10:24 +0530</pubDate>
            <description><![CDATA[&lt;p&gt;ಶಾಸಕರು ಟಿಕೆಟ್&zwnj; ಕೇಳಿದ್ದರಿಂದ ಐಪಿಎಲ್&zwnj; ಫೈನಲ್&zwnj; ಪಂದ್ಯವನ್ನು ಗುಜರಾತ್&zwnj;ಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್&zwnj; ನಿರಾಕರಿಸಿದ್ದಾರೆ. ಹೆಚ್ಚಿನ ಲಾಭಕ್ಕಾಗಿ ಅಹಮದಾಬಾದ್&zwnj;ಗೆ ಪಂದ್ಯ ಸ್ಥಳಾಂತರಿಸಲಾಗಿದೆ ಎಂದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hxzeg4p7djy5gnvfgac8w94h,imgname-1.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.9): &lt;/strong&gt;ಶಾಸಕರು ಟಿಕೆಟ್&zwnj; ಕೇಳಿದ್ದಕ್ಕಾಗಿ ಐಪಿಎಲ್&zwnj; ಫೈನಲ್&zwnj; ಪಂದ್ಯವನ್ನು ಗುಜರಾತ್&zwnj;ಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪ ಆಧಾರ ರಹಿತ. ಈ ಕುರಿತು ಬಿಸಿಸಿಐ ಅಥವಾ ಕರ್ನಾಟಕ ಕ್ರಿಕೆಟ್&zwnj; ಅಸೋಸಿಯೇಷನ್&zwnj; (ಕೆಎಸ್&zwnj;ಸಿಎ) ನೇರವಾಗಿ ಹೇಳಿಕೆ ನೀಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್&zwnj; ಹೇಳಿದ್ದಾರೆ.&lt;/p&gt;&lt;p&gt;ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ವಿಧಾನಸಭೆ, ವಿಧಾನ ಪರಿಷತ್&zwnj; ಎರಡೂ ಸೇರಿ 300 ಶಾಸಕರಿದ್ದಾರೆ. ಒಬ್ಬರಿಗೆ ಎರಡು ಟಿಕೆಟ್&zwnj;ಗಳನ್ನು ನೀಡಲಾಗುತ್ತಿದ್ದು ಒಟ್ಟು 600 ಟಿಕೆಟ್&zwnj; ನೀಡುವ ಕಾರಣಕ್ಕಾಗಿ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಹೇಳಲಿ. ಯಾರಿಗೆಲ್ಲ ಟಿಕೆಟ್&zwnj; ಕೊಟ್ಟಿದ್ದಾರೆ? ಎಷ್ಟು ಜನರಿಗೆ ಟಿಕೆಟ್&zwnj; ಕೊಟ್ಟಿದ್ದಾರೆ ಹೇಳಲಿ. ಎದುರಾಳಿ ತಂಡದ ಸಿಎಸ್&zwnj;&zwj;ಕೆಯವರೂ ಯಾರಿಗೆಲ್ಲ ಟಿಕೆಟ್&zwnj; ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.&lt;/p&gt;&lt;p&gt;ಏನು ಬೇಕಿದ್ರೂ ಟೀಕೆ ಮಾಡಲಿ:&lt;/p&gt;&lt;p&gt;ಬಿಜೆಪಿ, ಜೆಡಿಎಸ್&zwnj;&zwj;ನವರು ಏನಾದರೂ ಟೀಕೆ ಮಾಡಿಕೊಳ್ಳಲಿ. ಅವರ ಅವಧಿಯಲ್ಲಿ ಕ್ರೀಡೆಗೆ ಎಷ್ಟು ಪ್ರೋತ್ಸಾಹ ನೀಡುತ್ತಿದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದ ಗೃಹ ಸಚಿವರು, ಅಹಮದಾಬಾದ್&zwnj; ಸ್ಟೇಡಿಯಂನಲ್ಲಿ 1 ಲಕ್ಷ ಆಸನಗಳಿವೆ. ಹೆಚ್ಚಿನ ಲಾಭವಾಗುತ್ತದೆ ಎಂಬ ಕಾರಣಕ್ಕೆ ಫೈನಲ್&zwnj; ಸ್ಥಳಾಂತರ ಮಾಡಲಾಗಿದೆ. ಇದಕ್ಕೂ, ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ ಎಂದರು.&lt;/p&gt;&lt;p&gt;ಐಪಿಎಲ್&zwnj; ಪಂದ್ಯಾವಳಿಗಳು ಬೆಂಗಳೂರಿನಿಂದ ಸ್ಥಳಾಂತರವಾಗಬಾರದು ಎಂಬ ಕಾರಣಕ್ಕಾಗಿ ಸಂಕಷ್ಟದ ಸಂದರ್ಭದಲ್ಲೂ ಅನುಮತಿ ನೀಡಲಾಗಿತ್ತು. ನ್ಯಾಯಮೂರ್ತಿ ಮೈಕಲ್&zwnj; ಕುನ್ಹಾ ಅವರ ವರದಿ ಪ್ರಕಾರ ಹಲವು ಕೆಲಸಗಳನ್ನು ಕೈಗೊಳ್ಳಬೇಕಿತ್ತು. ಅವುಗಳಲ್ಲಿ ದೀರ್ಘಾವಧಿ, ಅಲ್ಪಾವಧಿ ಎಂದು ವಿಂಗಡಿಸಲಾಗಿತ್ತು. ಅಲ್ಪಾವಧಿ ಕೆಲಸಗಳನ್ನು ತ್ವರಿತವಾಗಿ ಕೈಗೊಂಡು ಐಪಿಎಲ್&zwnj; ಪಂದ್ಯಾವಳಿ ನಡೆಸಲು ಅನುವು ಮಾಡಿಕೊಡಲಾಗಿತ್ತು. ಈಗ&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/mlas-given-only-2-free-tickets-ipl-final-shifted-for-profit-slams-parameshwara-rav/articleshow-41c5nkh"/>
        </item>
        <item>
            <title><![CDATA[BSY ಅಭಿಮಾನೋತ್ಸವಕ್ಕೆ 112 ಅಡಿ ಉದ್ದ, 40 ಅಡಿ ಅಗಲದ ವೇದಿಕೆ! ಚಿತ್ರದುರ್ಗದಲ್ಲಿ ನಡೆಯುತ್ತಿರೋದೇನು?]]></title>
            <link>https://kannada.asianetnews.com/karnataka-districts/bsy-abhimanotsava-a-grand-stage-measuring-112-feet-long-and-40-feet-wide-rav/articleshow-hc6r409</link>
            <guid isPermaLink="true">https://kannada.asianetnews.com/karnataka-districts/bsy-abhimanotsava-a-grand-stage-measuring-112-feet-long-and-40-feet-wide-rav/articleshow-hc6r409</guid>
            <pubDate>Sat, 09 May 2026 11:58:04 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ 50 ವರ್ಷದ ರಾಜಕೀಯ ಬದುಕಿನ ನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಜನರಿಗೆ ಆಸನದ ವ್ಯವಸ್ಥೆ, ಬೃಹತ್ ವೇದಿಕೆ, ಸಾವಿರಾರು ಜನರಿಂದ ಅಡುಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5pf9xtrvcyj3barwm6sjfp,imgname-----------------------2026-05-09t115256.572-1778307803066.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಮೇಶ್ ಬಿದರಕೆರೆ&lt;/strong&gt;&lt;/p&gt;&lt;p&gt;&lt;strong&gt;ಚಿತ್ರದುರ್ಗ :&lt;/strong&gt; ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಹಿಂಭಾಗದಲ್ಲಿ ಸುಮಾರು 60 ಎಕರೆಗೂ ಹೆಚ್ಚು ಜಾಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ 50 ವರ್ಷದ ರಾಜಕೀಯ ಬದುಕಿನ ನೆನಪಿಗಾಗಿ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿರು ಬಿಸಿಲಿನ ನಡುವೆಯೂ ಭರದ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಷಣಗಣನೆ ಆರಂಭವಾಗಿದೆ.&lt;/p&gt;&lt;h2&gt;112 ಅಡಿ ಉದ್ದ ಹಾಗೂ 40 ಅಡಿ ಅಗಲದ ಬೃಹತ್ ವೇದಿಕೆ&lt;/h2&gt;&lt;p&gt;ನಾಡಿನ ವಿವಿಧ ಮಠಗಳ ಸ್ವಾಮೀಜಿಗಳಿಗೆ, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಸಭಾಂಗಣ ವ್ಯವಸ್ಥೆ ಮಾಡಲಾಗಿದೆ. ಅಭಿಮಾನೋತ್ಸವ ಕಾರ್ಯಕ್ರಮಕ್ಕೆ 112 ಅಡಿ ಉದ್ದ ಹಾಗೂ 40 ಅಡಿ ಅಗಲ, ಹತ್ತು ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. 150ಕ್ಕೂ ಹೆಚ್ಚು ಕಾರ್ಮಿಕರ ಶ್ರಮದಿಂದ ಸುಂದರ ಹಾಗೂ ವಿಶಾಲವಾದ ವೇದಿಕೆ ತಯಾರಾಗಿದೆ. ಸುಮಾರು ಮೂವತ್ತಕ್ಕೂ ಹೆಚ್ಚು ಎಲ್&zwnj;ಇಡಿ ವಾಲ್&zwnj;ಗಳನ್ನು ಅಳವಡಿಸಿದ್ದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಕಾರ್ಯಕ್ರಮ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.&lt;/p&gt;&lt;p&gt;ಬೃಹತ್ ವೇದಿಕೆಯಲ್ಲಿ ಅತಿಥಿಗಳಿಗೆ ಮೊದಲ ಸಾಲಿನಲ್ಲಿ 25 ಮತ್ತು ಅವುಗಳ ಹಿಂಭಾಗ 25 ಆಸನಗಳನ್ನು ಹಾಕಲಾಗಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಬೆಂಗಳೂರು, ಚಿತ್ರದುರ್ಗ, ಮೈಸೂರು ಕಡೆಯ ಐದು ಕೌoಟರ್ ಗಳಲ್ಲಿ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಅಡುಗೆ ತಯಾರಿ ಮಾಡಲಾಗುತ್ತಿದೆ. ಒಂದೊಂದು ಕೌoಟರ್&zwnj;ನಲ್ಲಿ ಅಡುಗೆ ಭಟ್ಟರು ಜತೆಗೆ ಸಹಾಯಕರು ಸೇರಿ ಸುಮಾರು 250ಕ್ಕೂ ಅಧಿಕ ಮಂದಿ ಅಡುಗೆ ತಯಾರಿಕೆಯಲ್ಲಿ ನಿರತರಾಗಿದ್ದಾರೆ.&lt;/p&gt;&lt;h3&gt;ಸಾವಿರಾರು ಜನರು ಅಡುಗೆ ತಯಾರಿಕೆಗೆ&lt;/h3&gt;&lt;p&gt;ಐದು ಕೌoಟರ್ ಸೇರಿ ಸಾವಿರಾರು ಜನರು ಅಡುಗೆ ತಯಾರಿಕೆಗೆ ಕೆಲಸ ಮಾಡುತ್ತಿದ್ದಾರೆ.ಯಲಹಂಕ ಶಾಸಕ ವಿಶ್ವನಾಥ್, ಊಟದ ಉಸ್ತುವಾರಿ ವಹಿಸಿದ್ದು ಬರುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಚಿತ್ರದುರ್ಗದ ಸುತ್ತಮುತ್ತಲಿನ ಹಳ್ಳಿಗಳ ನೂರಾರು ಯುವಕರನ್ನು ಕೆಲಸಕ್ಕೆ ಪಡೆದು ಅಡುಗೆ, ಶಾಮಿಯಾನ, ಕುರ್ಚಿಗಳನ್ನು ಹಾಕಲಾಗುತ್ತಿದೆ.ಕಾರ್ಯಕ್ರಮಕ್ಕೆ ಬರುವ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮೊಸರನ್ನ, ಪಲಾವ್ ಹಾಗೂ ಮೈಸೂರು ಪಾಕ್&zwnj; ಊಟ ಕೊಡುವ ತಯಾರಿ ನಡೆದಿದ್ದು ರಾಶಿ ರಾಶಿ ತರಕಾರಿ ಗುಡ್ಡೆಗಳೇ ಕಂಡು ಬಂದವು.&lt;/p&gt;&lt;p&gt;ಕಾರ್ಯಕ್ರಮದ ಬಂದೋಬಸ್ತ್&zwnj;ಗಾಗಿ ಸುಮಾರು 2500 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದ್ದು ವ್ಯವಸ್ಥಿತ ಕಾರ್ಯಕ್ರಮ ಜರುಗಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೇದಿಕೆಯ ಬಳಿಯ ಮುಖ್ಯ ರಸ್ತೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಾಗತಕ್ಕೆ ಅದ್ದೂರಿ ತಯಾರಿ ನಡೆಸಲಾಗಿದೆ. ಕಾರ್ಯಕ್ರಮದ ಸ್ಥಳ ತಲುಪುವ ಮುಖ್ಯ ರಸ್ತೆಗಳಲ್ಲಿ ಸಾಲು ಸಾಲು ಫ್ಲೆಕ್ಸ್, ಕಟೌಟ್&zwnj;ಗಳನ್ನು ನಿಲ್ಲಿಸಲಾಗಿದೆ.&lt;/p&gt;&lt;p&gt;ಬಿರು ಬೇಸಗೆ ಧಗೆ ಹಿನ್ನೆಲೆ ಸುಮಾರು 30 ಕ್ಕೂ ಹೆಚ್ಚು ಹೆಲಿಕಾಪ್ಟರ್ ಫ್ಯಾನ್&zwnj;ಗಳನ್ನು ಅಳವಡಿಸಲಾಗಿದ್ದು ಒಂದೊಂದು ಫ್ಯಾನ್ ಸಹ ಸುಮಾರು 1500 ಇಂದ 2000 ಜನರಿಗೆ ಗಾಳಿ ಒದಗಿಸಲಿವೆ ಎನ್ನಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bsy-abhimanotsava-a-grand-stage-measuring-112-feet-long-and-40-feet-wide-rav/articleshow-hc6r409"/>
        </item>
        <item>
            <title><![CDATA[BSY old Ambassador car: ಬಿಎಸ್‌ವೈ ಅಭಿಮಾನೋತ್ಸವ, ಪ್ರಮುಖ ಆಕರ್ಷಣೆ ಆಗಿರುವ ಅಂಬಾಸಿಡರ್ ಕಾರಿನ ಹಿಂದಿನ ಕಥೆಯೇನು?]]></title>
            <link>https://kannada.asianetnews.com/state/bsy-abhimanotsavathe-story-behind-the-ambassador-car-that-is-a-major-attraction-rav/articleshow-wd966fx</link>
            <guid isPermaLink="true">https://kannada.asianetnews.com/state/bsy-abhimanotsavathe-story-behind-the-ambassador-car-that-is-a-major-attraction-rav/articleshow-wd966fx</guid>
            <pubDate>Sat, 09 May 2026 11:33:22 +0530</pubDate>
            <description><![CDATA[ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ, ಅವರ ರಾಜಕೀಯ ಜೀವನದ ಆರಂಭದಲ್ಲಿ ಬಳಸಿದ CKR 45 ನಂಬರಿನ ಅಂಬಾಸಿಡರ್ ಕಾರು ಪ್ರಮುಖ ಆಕರ್ಷಣೆಯಾಗಿದೆ. ಈ ಕಾರು ಪಕ್ಷ ಸಂಘಟನೆಯಲ್ಲಿ ಯಡಿಯೂರಪ್ಪನವರಷ್ಟೇ ಪ್ರಮುಖ ಪಾತ್ರ ವಹಿಸಿದೆ ಎಂದು ಬಿ.ವೈ. ವಿಜಯೇಂದ್ರ ಸ್ಮರಿಸಿಕೊಂಡರು.]]></description>
            <media:content url="https://static.asianetnews.com/images/w-1280,h-720,format-jpg,imgid-01kr5n7sjmhc8c06y609dmdpt2,imgname-----------------------2026-05-09t113110.990-1778306508372.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮೇ.9): &lt;/strong&gt;ಜಿಲ್ಲೆಯಲ್ಲಿ ಶನಿವಾರ ನಡೆಯಲಿರುವ ಬಿಎಸ್ ವೈ ಅಭಿಮಾನೋತ್ಸವಕ್ಕೆ ಎಲ್ಲರನ್ನೂ, ಎಲ್ಲವನ್ನೂ ಒಳಗೊಳ್ಳುವ ಸೂತ್ರಪಾಲನೆಗೆ ಸಂಘಟಕರು ಮುಂದಾಗಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜಾರಿಗೊಳಿಸಿದ ಯೋಜನೆಗಳಿಗೆ ಸ್ತಬ್ಧಚಿತ್ರಗಳ ಸ್ವರೂಪ ನೀಡಿದ್ದರೆ ರಾಜಕೀಯ ಆರಂಭದ ದಿನಗಳಲ್ಲಿ ಅವರು ಬಳಸಿದ್ದ ಅಂಬಾಸಿಡರ್ ಕಾರನ್ನು ಕಾರ್ಯಕ್ರಮ ನಡೆಯವ ಪ್ರದೇಶಕ್ಕೆ ತಂದು ಜನರನ್ನು ಆಕರ್ಷಿಸಲಾಗುತ್ತಿದೆ.&lt;/p&gt;&lt;p&gt;ಬಿ.ಎಸ್.ಯಡಿಯೂರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಬಳಸಿದ ಸಿಕೆಆರ್ 45 ನಂಬರಿನ ಹಿಂದೂಸ್ತಾನ್ ಅಂಬಾಸಿಡರ್ ಕಾರಿನ ಬಗ್ಗೆ ಮಾಹಿತಿ ನೀಡಿದ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ.ವಿಜಯೇಂದ್ರ ಈ ಕಾರನ್ನು ರಾಜ್ಯದ ಜನ ಈಗಲೂ ನೆನಪಿನಲ್ಲಿ ಇಟ್ಟುಕೊಡಿದ್ದಾರೆ ಎಂದರು.&lt;/p&gt;&lt;p&gt;ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ರೈತನಾಯಕ ಎಂದು ಜನ ಗುರುತಿಸುತ್ತಾರೆ, ಪ್ರೀತಿಸುತ್ತಾರೆ. ಯಡಿಯೂರಪ್ಪ ಅವರ ಮೇಲೆ ನಾಡಿನ ಜನ ಯಾವ ರೀತಿಯ ಪ್ರೀತಿ ಮತ್ತು ಅಭಿಮಾನ ತೋರುತ್ತಾರೋ ಅದೇ ಸಿಕೆಆರ್ 45 ನಂಬರಿನ ಕಾರಿಗೂ ಜನ ಪ್ರೀತಿ ತೋರುತ್ತಾರೆ. ಆ ಕಾಲದಲ್ಲಿ ಕೇವಲ ನಗರಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿಹಳ್ಳಿಗೆ ತೆಗೆದುಕೊಂಡು ಹೋಗಿ ಪಕ್ಷದ ಸಂಘಟನೆ ಬಲಪಡಿಸಲು ಬಿಎಸ್&zwj;ವೈ ಸಾಕಷ್ಟು ಶ್ರಮಿಸಿದರು. ಪಕ್ಷ ಸಂಘಟನೆಯಲ್ಲಿ ಯಡಿಯೂರಪ್ಪ ಅವರ ಪಾತ್ರ ಎಷ್ಟಿದೆಯೊ ಈ ಕಾರಿನ ಪಾತ್ರವೂ ಅಷ್ಟೇ ಇತ್ತು ಎಂದರು.&lt;/p&gt;&lt;p&gt;ಬಿಎಸ್&zwj;ವೈ ಅವರೊಂದಿಗೆ ಅನಂತ ಕುಮಾರ್, ಡಿ.ಎಚ್.ಶಂಕರಮೂರ್ತಿ ಅವರು ಇದೇ ಕಾರಿನಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಆ ದಿನಗಳಲ್ಲಿ ರಸ್ತೆಗಿಂತ ಗುಂಡಿಗಳೇ ಹೆಚ್ಚಿದ್ದವು. ಯಡಿಯೂರಪ್ಪ ಇದೇ ಕಾರನ್ನು ಸದಾ ಬಳಸುತ್ತಿದ್ದರು. ಅವರ ಪ್ರವಾಸಕ್ಕೆ ಶಕ್ತಿ ತುಂಬಿದ್ದು ಈ ಕಾರು ಎಂದರು.&lt;/p&gt;&lt;p&gt;ಶಂಕರ್ ಎಂಬುವರು ಹತ್ತಾರು ವರ್ಷ ಚಾಲಕರಾಗಿದ್ದರು. ಮಂಜಣ್ಣ ಎಂಬ ಮತ್ತೊಬ್ಬರು ಚಾಲಕರಾಗಿದ್ದರು. ಅವರು ನಮ್ಮ ಕುಟುಂಬ ಸದಸ್ಯರಂತೆ ಹದಿನೈದು ವರ್ಷ ಕಾರು ಓಡಿಸಿದ್ದಾರೆ. ಒಮ್ಮೆ ಮಾತ್ರ ಕಾರು ಅಡಿಮೇಲಾಗಿದ್ದು ಮತ್ತೆ ಯಾವುದೇ ಅವಘಡ ಸಂಭವಿಸಿಲ್ಲ. ಸುರಕ್ಷಿತವಾಗಿ ಇಡೀ ರಾಜ್ಯದಲ್ಲಿ ಬಿಎಸ್ ವೈ ಅವರನ್ನು ಈ ಕಾರು ಸುತ್ತಾಡಿಸಿದೆ ಎಂದರು.&lt;/p&gt;&lt;p&gt;ಅಭಿಮಾನೋತ್ಸವದಲ್ಲಿ ಈ ಕಾರು ಪ್ರಮುಖ ಆಕರ್ಷಣೆಯಾಗಿದ್ದು ಎಲ್ಲರೂ ಬಂದು ಕಾರಿನ ಬಳಿ ಪೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bsy-abhimanotsavathe-story-behind-the-ambassador-car-that-is-a-major-attraction-rav/articleshow-wd966fx"/>
        </item>
        <item>
            <title><![CDATA[ಬೆಂಗಳೂರಿನ ಘನತೆಗೆ 'ವರದಕ್ಷಿಣೆ' ಕಪ್ಪುಚುಕ್ಕೆ: ಮೆಟ್ರೋ ನಗರಗಳ ಒಟ್ಟು ಕೇಸ್‌ಗಳಲ್ಲಿ ಶೇ. 87ರಷ್ಟು ಪಾಲು ಸಿಲಿಕಾನ್ ಸಿಟಿಯದ್ದೇ!]]></title>
            <link>https://kannada.asianetnews.com/gallery/bengaluru-urban/bengaluru-highest-dowry-cases-ncrb-report-2024-crimes-against-women-data-san-kmtbs1q</link>
            <guid isPermaLink="true">https://kannada.asianetnews.com/gallery/bengaluru-urban/bengaluru-highest-dowry-cases-ncrb-report-2024-crimes-against-women-data-san-kmtbs1q</guid>
            <pubDate>Sat, 09 May 2026 11:13:19 +0530</pubDate>
            <description><![CDATA[&lt;p&gt;ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) 2024ರ ವರದಿಯ ಪ್ರಕಾರ, ದೇಶದ ಮೆಟ್ರೋ ನಗರಗಳ ಪೈಕಿ ಬೆಂಗಳೂರು ಅತಿ ಹೆಚ್ಚು ವರದಕ್ಷಿಣೆ ಪ್ರಕರಣಗಳನ್ನು ಹೊಂದಿದೆ. ಕೇವಲ ವರದಕ್ಷಿಣೆ ಮಾತ್ರವಲ್ಲದೆ, ಮಹಿಳೆಯರ ಮೇಲಿನ ದೌರ್ಜನ್ಯ ಕೇಸ್&zwnj;ಗಳಲ್ಲೂ ಬೆಂಗಳೂರು ಮುಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5kwvt3v1fgb8d9610npfr1,imgname-dowry-cases-bengaluru-ncrb--2--1778305101635.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) 2024ರ ವರದಿಯ ಪ್ರಕಾರ, ದೇಶದ ಮೆಟ್ರೋ ನಗರಗಳ ಪೈಕಿ ಬೆಂಗಳೂರು ಅತಿ ಹೆಚ್ಚು ವರದಕ್ಷಿಣೆ ಪ್ರಕರಣಗಳನ್ನು ಹೊಂದಿದೆ. ಕೇವಲ ವರದಕ್ಷಿಣೆ ಮಾತ್ರವಲ್ಲದೆ, ಮಹಿಳೆಯರ ಮೇಲಿನ ದೌರ್ಜನ್ಯ ಕೇಸ್&zwnj;ಗಳಲ್ಲೂ ಬೆಂಗಳೂರು ಮುಂದಿದೆ.&lt;/p&gt;&lt;img&gt;&lt;p&gt;ತಂತ್ರಜ್ಞಾನ ಮತ್ತು ನಾವೀನ್ಯತೆಗೆ ಹೆಸರಾದ ಬೆಂಗಳೂರು ನಗರ, ಈಗ ಅಪರಾಧ ಲೋಕದ ಕರಾಳ ಮುಖವನ್ನೂ ಅನಾವರಣಗೊಳಿಸಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ &lsquo;ಕ್ರೈಮ್ ಇನ್ ಇಂಡಿಯಾ 2024&rsquo; ವರದಿಯ ಪ್ರಕಾರ, ದೇಶದ ಮೆಟ್ರೋ ನಗರಗಳಲ್ಲಿ ದಾಖಲಾಗುವ ಒಟ್ಟು ವರದಕ್ಷಿಣೆ ಪ್ರಕರಣಗಳಲ್ಲಿ ಸಿಂಹಪಾಲು ಬೆಂಗಳೂರಿನದ್ದೇ ಆಗಿದೆ.&lt;/p&gt;&lt;img&gt;&lt;p&gt;ವರದಿಯ ಪ್ರಕಾರ, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಒಟ್ಟು 1,008 ವರದಕ್ಷಿಣೆ ನಿಷೇಧ ಕಾಯ್ದೆ (1961) ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಬೆಂಗಳೂರು ಒಂದರಲ್ಲೇ 878 ಪ್ರಕರಣಗಳು ವರದಿಯಾಗಿವೆ. ಅಂದರೆ ಮೆಟ್ರೋ ನಗರಗಳ ಒಟ್ಟು ಪ್ರಕರಣಗಳಲ್ಲಿ ಸುಮಾರು ಶೇ. 87ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಲಕ್ನೋ 48 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.&lt;/p&gt;&lt;img&gt;&lt;p&gt;ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ 2024ರಲ್ಲಿ ಬೆಂಗಳೂರಿನಲ್ಲಿ 25 ಸಾವುಗಳು ಸಂಭವಿಸಿವೆ. ದೆಹಲಿಯಲ್ಲಿ ದಾಖಲಾದ 109 ಸಾವುಗಳಿಗೆ ಹೋಲಿಸಿದರೆ ಈ ಸಂಖ್ಯೆ ಕಡಿಮೆಯಿದ್ದರೂ, ದಕ್ಷಿಣ ಭಾರತದ ಇತರ ನಗರಗಳಾದ ಚೆನ್ನೈ, ಕೊಚ್ಚಿ ಮತ್ತು ಕೊಯಮತ್ತೂರಿಗೆ ಹೋಲಿಸಿದರೆ ಬೆಂಗಳೂರಿನ ಸ್ಥಿತಿ ಶೋಚನೀಯವಾಗಿದೆ. ಈ ನಗರಗಳಲ್ಲಿ ವರದಕ್ಷಿಣೆ ಸಾವು ಶೂನ್ಯ ದಾಖಲಾಗಿರುವುದು ಗಮನಾರ್ಹ.&lt;/p&gt;&lt;img&gt;&lt;p&gt;ಕೇವಲ ವರದಕ್ಷಿಣೆ ಮಾತ್ರವಲ್ಲದೆ, ಮಹಿಳೆಯರ ವಿರುದ್ಧದ ಇತರ ಅಪರಾಧಗಳಲ್ಲೂ ಬೆಂಗಳೂರು ಕುಖ್ಯಾತಿ ಪಡೆದಿದೆ. ವಿಶೇಷ ಮತ್ತು ಸ್ಥಳೀಯ ಕಾನೂನು (SLL) ಕಾಯ್ದೆಯಡಿ ಮಹಿಳೆಯರ ವಿರುದ್ಧ ನಡೆದ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು 1,501 ಪ್ರಕರಣಗಳೊಂದಿಗೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.&lt;/p&gt;&lt;img&gt;&lt;p&gt;ಮಹಿಳೆಯರ ಮೇಲೆ ದೈಹಿಕ ಬಲ ಪ್ರಯೋಗಿಸಿ ವಿನಯಭಂಗ ಮಾಡಿದ ಪ್ರಕರಣಗಳಲ್ಲಿ ಬೆಂಗಳೂರು 897 ಕೇಸ್&zwnj;ಗಳೊಂದಿಗೆ ಮುಂಚೂಣಿಯಲ್ಲಿದೆ. ಮುಂಬೈ (857) ನಂತರದ ಸ್ಥಾನದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಕಾನೂನು ಜಾಗೃತಿ ಹೆಚ್ಚಿರುವುದರಿಂದ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆಯೇ ಅಥವಾ ನಿಜಕ್ಕೂ ಅಪರಾಧಗಳ ಸಂಖ್ಯೆ ಹೆಚ್ಚಿದೆಯೇ ಎಂಬುದು ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/bengaluru-urban/bengaluru-highest-dowry-cases-ncrb-report-2024-crimes-against-women-data-san-kmtbs1q"/>
        </item>
        <item>
            <title><![CDATA[ಬೆಂಗಳೂರಿನಿಂದ ಹಂಪಿಗೆ ನೇರ ಪಲ್ಲಕ್ಕಿ ಬಸ್; ಒಂದು ದಿನದ ಟ್ರಿಪ್‌ಗೆ ಬೆಸ್ಟ್ ಆಯ್ಕೆ]]></title>
            <link>https://kannada.asianetnews.com/gallery/travel/direct-ksrtc-pallakki-bus-from-bengaluru-to-hampi-via-hosapete-chitradurga-best-option-for-a-day-trip-mrq-260uevd</link>
            <guid isPermaLink="true">https://kannada.asianetnews.com/gallery/travel/direct-ksrtc-pallakki-bus-from-bengaluru-to-hampi-via-hosapete-chitradurga-best-option-for-a-day-trip-mrq-260uevd</guid>
            <pubDate>Sat, 09 May 2026 11:09:46 +0530</pubDate>
            <description><![CDATA[&lt;p&gt;ಬೆಂಗಳೂರಿನಿಂದ ಹಂಪಿಗೆ ಪ್ರವಾಸ ಯೋಜಿಸುತ್ತಿರುವವರಿಗೆ ಕೆಎಸ್&zwnj;ಆರ್&zwnj;ಟಿಸಿ ನೇರ ಬಸ್ ಸೌಲಭ್ಯವನ್ನು ಒದಗಿಸಿದೆ. ರಾತ್ರಿ ಬೆಂಗಳೂರಿನಿಂದ ಹೊರಡುವ ಈ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್, ಮರುದಿನ ಬೆಳಗ್ಗೆ ಹಂಪಿ ತಲುಪಲಿದ್ದು, ಅದರ ಸಮಯ, ದರ ಮತ್ತು ಬುಕ್ಕಿಂಗ್ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5kdzktqecff2t9pdrew7e8,imgname-hampi-pallakki-bus-1778304614010.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನಿಂದ ಹಂಪಿಗೆ ಪ್ರವಾಸ ಯೋಜಿಸುತ್ತಿರುವವರಿಗೆ ಕೆಎಸ್&zwnj;ಆರ್&zwnj;ಟಿಸಿ ನೇರ ಬಸ್ ಸೌಲಭ್ಯವನ್ನು ಒದಗಿಸಿದೆ. ರಾತ್ರಿ ಬೆಂಗಳೂರಿನಿಂದ ಹೊರಡುವ ಈ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್, ಮರುದಿನ ಬೆಳಗ್ಗೆ ಹಂಪಿ ತಲುಪಲಿದ್ದು, ಅದರ ಸಮಯ, ದರ ಮತ್ತು ಬುಕ್ಕಿಂಗ್ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.&lt;/p&gt;&lt;img&gt;&lt;p&gt;ಬೇಸಿಗೆ ರಜೆಗೆ ಹಂಪಿಗೆ ಹೋಗಲು ಬಯಸುತ್ತಿದ್ದೀರಾ? ಬೆಂಗಳೂರು ನಗರದಿಂದ ನೇರ ಬಸ್ ಸೌಲಭ್ಯವಿದೆ. ರಾತ್ರಿ ಬೆಂಗಳೂರಿನಿಂದ ಹೊರಟರೆ ಬೆಳಗ್ಗೆ ಹಂಪಿ ತಲುಪುಬಹುದು. ಇಡೀ ದಿನವೆಲ್ಲಾ ಹಂಪಿ ವೈಭೋಗ ನೋಡಿ ಸಂಜೆ ಇದೇ ಬಸ್&zwnj;ನಿಂದ ಮತ್ತೆ ಬೆಂಗಳೂರಿಗೆ ಬರಬಹುದಾಗಿದೆ. ಈ ಬಸ್ ಟೈಮಿಂಗ್, ದರ ಸೇರಿದಂತೆ ಇನ್ನುಳಿದ ಎಲ್ಲಾ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.&lt;/p&gt;&lt;img&gt;&lt;p&gt;ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಪ್ರತಿದಿನ ರಾತ್ರಿ 10.59ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣದಿಂದ ತನ್ನ ಪ್ರಯಾಣ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 6ಕ್ಕೆ ಹೊಸಪೇಟೆ ಮತ್ತು 6.30ರ ವೇಳೆಗೆ ಹಂಪಿಯನ್ನು ತಲುಪಲಿದೆ. ಈ ಬಸ್ ವಾರದ ಏಳು ದಿನವೂ ಸಂಚರಿಸುತ್ತದೆ. ಒಂದು ಟಿಕೆಟ್ ಬೆಲೆ 832 ರೂ. ಆಗಿದೆ.&lt;/p&gt;&lt;img&gt;&lt;p&gt;ಮೆಜೆಸ್ಟಿಕ್&zwnj;ನ ಬಿಎಸ್ ಟರ್ಮಿನಲ್ 1ರಿಂದ ಪ್ರಯಾಣ ಆರಂಭಿಸುವ ಈ ಬಸ್, ನವರಂಗ ಪಾರ್ಕ್, ಯಶವಂತಪುರ ಗೋವರ್ಧನ್ ಥಿಯೇಟರ್, ಗೊರಗುಂಟೆಪಾಳ್ಯ ಕೆಎಲ್&zwnj;ಟಿ ಡೆಂಟಲ್ ಕಾಲೇಜ್, ಜಾಲಹಳ್ಳಿ ಕ್ರಾಸ್ ಮತ್ತು ನೆಲಮಂಗಲ ಕುಣಿಗಲ್ ಬೈಪಾಸ್&zwnj;ನಲ್ಲಿ ನಿಲುಗಡೆಯನ್ನು ಹೊಂದಿದೆ. ಚಿತ್ರದುರ್ಗ, ಕೂಡ್ಲಗಿ ಮಾರ್ಗವಾಗಿ ಹಂಪಿಯನ್ನು ತಲುಪುತ್ತದೆ.&lt;/p&gt;&lt;img&gt;&lt;p&gt;ಹಂಪಿ ನಿಲ್ದಾಣದಿಂದ ರಾತ್ರಿ 8 ಗಂಟೆಗೆ ಪ್ರಯಾಣ ಆರಂಭಿಸುವ ಪಲ್ಲಕ್ಕಿ ಬಸ್ ಹೊಸಪೇಟೆ ನಿಲ್ದಾಣದಲ್ಲಿ ನಿಲುಗಡೆಯನ್ನು ಹೊಂದಿದೆ. 8.30ಕ್ಕೆ ಹೊಸಪೇಟೆಯಿಂದ ಹೊರಟ ಬಸ್ ಮರುದಿನ ಬೆಳಗಿನ ಜಾವ 4.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣ ತಲುಪಲಿದೆ. ಇಲ್ಲಿಂದ ಶಾಂತಿನಗರ ನಿಲ್ದಾಣ ತಲುಪಿ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸುತ್ತದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗೋವಾ ಟ್ರಿಪ್&zwnj;ಗೆ ಹೋಗಬೇಕಾದ್ರೆ ಹುಡುಗಿಯರು ಮಾಡಬೇಕು ಸ್ಮಾರ್ಟ್&zwnj; ಪ್ಲಾನಿಂಗ್! ಇಲ್ಲಿದೆ ಟಿಪ್ಸ್&lt;/strong&gt;&lt;/p&gt;&lt;img&gt;&lt;p&gt;ಪ್ರಯಾಣಿಕರು ಕೆಎಸ್&zwnj;ಆರ್&zwnj;ಟಿಸಿ ವೆಬ್&zwnj;ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಈ ಬಸ್ ಹೊರತುಪಡಿಸಿದ್ರೆ ಪ್ರಯಾಣಿಕರು ಹೊಸಪೇಟೆಗೆ ತೆರಳಿ ಅಲ್ಲಿಂದ ಹಂಪಿಗೆ ಹೋಗಬಹುದಾಗಿ. ಬೆಂಗಳೂರಿನಿಂದ ಹೊಸಪೇಟೆಗೆ ಹಲವು ಸಾರಿಗೆ ಬಸ್&zwnj;ಗಳಿವೆ. ಹೆಚ್ಚಿನ ಮಾಹಿತಿಗಾಗಿ ಸಾರಿಗೆ ಸಂಸ್ಥೆಯ ವೆಬ್&zwnj;ಸೈಟ್&zwnj;ಗೆ &lt;strong&gt;https://ksrtc.in/&lt;/strong&gt; ಭೇಟಿ ನೀಡಿ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್&zwnj;ಪ್ರೆಸ್ ಯಾವಾಗ? ಸಂಸದರ ಉತ್ತರ ಏನು?&lt;/strong&gt;&lt;/p&gt;]]></content:encoded>
            <category>karnataka-districts</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/travel/direct-ksrtc-pallakki-bus-from-bengaluru-to-hampi-via-hosapete-chitradurga-best-option-for-a-day-trip-mrq-260uevd"/>
        </item>
        <item>
            <title><![CDATA[ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವ: ಕಾರ್ಯಕ್ರಮಕ್ಕೆ ಬರುವ ವಾಹನ ಪಾರ್ಕಿಂಗ್ ಸ್ಥಳಗಳಿಗೆ ನಾಡಿನ ನದಿಗಳ ಹೆಸರು!]]></title>
            <link>https://kannada.asianetnews.com/karnataka-districts/bsy-abhimanotsava-in-chitradurga-parking-zones-named-karnataka-s-rivers-rav/articleshow-5uxvl47</link>
            <guid isPermaLink="true">https://kannada.asianetnews.com/karnataka-districts/bsy-abhimanotsava-in-chitradurga-parking-zones-named-karnataka-s-rivers-rav/articleshow-5uxvl47</guid>
            <pubDate>Sat, 09 May 2026 11:03:26 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ 'ಅಭಿಮಾನೋತ್ಸವ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ವಿಶೇಷತೆಯೆಂದರೆ, ವಾಹನ ನಿಲುಗಡೆ ಸ್ಥಳಗಳಿಗೆ ಕಾವೇರಿ, ವೇದಾವತಿ, ಭದ್ರಾ, ತುಂಗಾ ಎಂಬ ನದಿಗಳ ಹೆಸರಿಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5k9enjcd1c0hmnt913s858,imgname-----------------------2026-05-09t105419.356-1778304465586.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಡೇಕುಂಟೆ ಮಂಜುನಾಥ್&lt;/strong&gt;&lt;/p&gt;&lt;p&gt;ಚಿತ್ರದುರ್ಗ (ಮೇ.9): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕಾರಣಕ್ಕೆ ಬಂದು 50 ವರ್ಷ ತುಂಬಿದ ಹಿನ್ನೆಲೆ ಚಿತ್ರದುರ್ಗದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚೆನ್ನಯ್ಯ ಗುರುಪೀಠದ ಹಿಂಭಾಗದ ವಿಶಾಲ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಆಯೋಜಿಸಿರುವ ಅಭಿಮಾನೋತ್ಸವ ಎಂಬ ವಿನೂತನ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳು, ಕಾರ್ಯಕರ್ತರ ವಾಹನಗಳೂ ಸೇರಿದಂತೆ ವಿಐಪಿ, ವಿವಿಐಪಿಗಳ ವಾಹನ ನಿಲುಗಡೆಯ ಸ್ಥಳಗಳಿಗೆ ನಾಡಿನ ಪ್ರಮುಖ ನದಿಗಳ ಹೆಸರುಗಳನ್ನು ಸೂಚಿಸುವ ಮೂಲಕ ಪೋಲೀಸ್ ಇಲಾಖೆ ನಾಡಿನ ಹಿರಿಮೆಯನ್ನು ಸಾರುವ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸಕ್ಕೆ ಮುಂದಾಗಿದೆ.&lt;/p&gt;&lt;p&gt;ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾವೇರಿ ಕಡೆಯಿಂದ ಬರುವ ವಾಹನಗಳಿಗೆ ದಾವಣಗೆರೆ ರಸ್ತೆಯ ಮಡಿವಾಳ ಮಾಚಿದೇವ ಮಠದ ಕಡೆಗೆ ವೇದಾವತಿ ವಾಹನ ನಿಲುಗಡೆ ಪ್ರದೇಶ ಎಂದು ಗುರುತಿಸಲಾಗಿದೆ.&lt;/p&gt;&lt;p&gt;ಬೃಹತ್ ವೇದಿಕೆ ಬಲಭಾಗದ ಹಿಂಭಾಗದಲ್ಲಿ ವಿಐಪಿ, ವಿವಿಐಪಿಗಳಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಈ ಪ್ರದೇಶಕ್ಕೆ ಕಾವೇರಿ ಎಂದು ನಾಮಕರಣ ಮಾಡಲಾಗಿದೆ.&lt;/p&gt;&lt;p&gt;ಬೆಂಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು ಕಡೆಗಳಿಂದ ಬರುವ ವಾಹನಗಳಿಗೆ ಎಸ್ ಜೆ ಎಂ ಹೆಲಿಪ್ಯಾಡ್ ಹಿಂಭಾಗದ ಮೂರು ಎಕರೆ ಪ್ರದೇಶದಲ್ಲಿ ಭದ್ರಾ ಹೆಸರಿನ ನಿಲುಗಡೆ ಪ್ರದೇಶವನ್ನು ಮೀಸಲಿಡಲಾಗಿದೆ.&lt;/p&gt;&lt;p&gt;ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಕಡೆಗಳಿಂದ ಬರುವ ವಾಹನಗಳಿಗೆ ಈಚಲನಾಗೇನಹಳ್ಳಿ ಹತ್ತಿರ ತುಂಗಾ ಹೆಸರಿನ ನಿಲುಗಡೆ ಪ್ರದೇಶದಲ್ಲಿ ವ್ಯವಸ್ಥೆ ಮಾಡಲಾಗಿದೆ.&lt;/p&gt;&lt;h2&gt;ವೇದಿಕೆ ಹತ್ತಿರವೇ ಹೆಲಿಪ್ಯಾಡ್:&lt;/h2&gt;&lt;p&gt;ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಸಿ ನೇರವಾಗಿ ಶಿವಮೊಗ್ಗದ ವಿಮಾನ ನಿಲ್ಧಾಣಕ್ಕೆ ಬಂದಿಳಿದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ಪ್ರೇವೇಶಿಸಲಿದ್ದಾರೆ. ಇದಕ್ಕಾಗಿಯೇ ಮಾದಾರ ಚೆನ್ನಯ್ಯ ಮಠದ ಹತ್ತಿರ ಅಂದರೆ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು. ಯಾವುದೇ ಸಾರ್ವಜನಿಕ ಕಿರಿಕಿರಿಗೆ ಅವಕಾಶ ನೀಡದೇ ನೇರವಾಗಿ ವೇದಿಕೆಗೆ ಕರೆತರಲಾಗುವುದು ಎಂದು ಸಂಘಟಕರು ಹೇಳಿದ್ದಾರೆ.&lt;/p&gt;&lt;p&gt;ಚಳ್ಳಕೆರೆ ಗೇಟ್ ಹತ್ತಿರ ಮುರುಘರಾಜೇಂದ್ರ ಕ್ರೀಡಾಂಗಣ ಮತ್ತು ಎಸ್ ಜೆ ಎಂ ಕ್ರೀಡಾಂಗಣ ಎರಡು ಹೆಲಿಪ್ಯಾಡ್ ಗಳು ಇದ್ದರೂ ಹೊಸದಾಗಿ ನಿರ್ಮಿಸಿರುವ ವೇದಿಕೆ ಹಿಂಭಾಗದ ಹೆಲಿಪ್ಯಾಡ್ ನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಂದಿಳಿಯಲಿದ್ದಾರೆ.&lt;/p&gt;&lt;h3&gt;ಬೃಹತ್ ಕಟೌಟುಗಳು:&lt;/h3&gt;&lt;p&gt;ಯಡಿಯೂರಪ್ಪ ಅವರ ಬಣ್ಣ ಬಣ್ಣದ ಕಟೌಟ್ ಗಳು, ಪ್ಲೆಕ್ಸ್&zwnj;ಗಳು, ಕೇಸರಿ ಬಣ್ಣದಲ್ಲಿ ವಿವಿಧ ಅಲಂಕಾರಗಳನ್ನು ಮಾಡಲಾಗಿದೆ. ಯಡಿಯೂರಪ್ಪ ಅವರ ಜೊತೆಗೆ ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ, ಬಿ.ವೈ.ವಿಜಯೇಂದ್ರ ಅವರ ಕಟೌಟುಗಳು ಎಲ್ಲರ ಗಮನಸೆಳೆಯುತ್ತಿವೆ. ಮಾದಾರ ಚೆನ್ನಯ್ಯ ಗುರುಪೀಠದ ಸರ್ವಿಸ್ ರಸ್ತೆಯಿಂದ ಸೀದಾ ವೇದಿಕೆಗೆ ಹೋಗಲು ಮುಖ್ಯ ದ್ವಾರವನ್ನು ಹೊಕ್ಕು ಒಳಹೋಗುತ್ತಿದ್ದರೆ ಯಾವುದೋ ಬೇರೆ ಲೋಕಕ್ಕೆ ಹೋಗುತ್ತಿದ್ದೇವಾ ಎಂಬಷ್ಟರ ಮಟ್ಟಿಗೆ ವಿಜೃಂಭಣೆಯಿಂದ ಅಲಕಾಂರ ಮಾಡಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bsy-abhimanotsava-in-chitradurga-parking-zones-named-karnataka-s-rivers-rav/articleshow-5uxvl47"/>
        </item>
        <item>
            <title><![CDATA[ಚಿತ್ರದುರ್ಗದಲ್ಲಿ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಬರುವ 10 ಲಕ್ಷ ಜನರಿಗೆ ಊಟದ ವ್ಯವಸ್ಥೆ! ಊಟದ ಮೇನುವಿನಲ್ಲಿ ಏನಿದೆ?]]></title>
            <link>https://kannada.asianetnews.com/state/bsy-abhimanotsav-grand-event-in-chitradurga-food-arrangement-made-for-10-lakh-people-rav/articleshow-3rut99w</link>
            <guid isPermaLink="true">https://kannada.asianetnews.com/state/bsy-abhimanotsav-grand-event-in-chitradurga-food-arrangement-made-for-10-lakh-people-rav/articleshow-3rut99w</guid>
            <pubDate>Sat, 09 May 2026 10:49:20 +0530</pubDate>
            <description><![CDATA[ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗಾಗಿ ಟೊಮೆಟೋ ಬಾತ್, ಮೊಸರನ್ನ ಹಾಗೂ ಮೈಸೂರು ಪಾಕ್ ಒಳಗೊಂಡ ಸರಳ ಊಟದ ವ್ಯವಸ್ಥೆ ಮಾಡಲಾಗಿದ್ದು, 5 ನಗರಗಳ ಬಾಣಸಿಗರು ಇದನ್ನು ನಿರ್ವಹಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr5jdnpz8n5sn2s68d116597,imgname-----------------------2026-05-09t104204.963-1778303555295.jpg" type="image/jpeg" height="390" width="690"/>
            <content:encoded><![CDATA[&lt;p&gt;- ಮೆನುನಲ್ಲಿ ಟೊಮೆಟೋ ಬಾತ್, ಮೊಸರನ್ನ, ಮೈಸೂರು ಪಾಕ್ । 5 ಊರಿಂದ ಬಂದಿರುವ ಬಾಣಸಿಗರು&lt;/p&gt;&lt;p&gt;ಚಿತ್ರದುರ್ಗ (ಮೇ.9): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ, ಪುರಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳ ಹಸಿವು ನೀಗಿಸಲು ಟೊಮೆಟೋ ಬಾತ್, ಮೊಸರನ್ನ, ಮೈಸೂರು ಪಾಕ್ ಸಿದ್ಧವಾಗುತ್ತಿದೆ.&lt;/p&gt;&lt;p&gt;ಹತ್ತು ಲಕ್ಷ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿದೆ. ಸರಾಗಗೊಳಿಸುವ ನಿಟ್ಟಿನಲ್ಲಿ ಸರಳ ಊಟದ ವ್ಯವಸ್ಥೆಗೆ ಮೊರೆ ಹೋಗಲಾಗಿದೆ. ಟೊಮೆಟೋ ಬಾತ್, ಮೊಸರನ್ನ ಸೂಕ್ತವೆಂದು ತೀರ್ಮಾನಿಸಲಾಗಿದೆ. ಶುಕ್ರವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದ ಗೋವಿಂದ ಕಾರಜೋಳ, .ಮೈಸೂರು, ಬೆಂಗಳೂರು, ಚಿತ್ರದುರ್ಗ, ತುಮಕೂರು ಮೊದಲಾದ 5 ಕಡೆಯ ಪ್ರಮುಖ ಅಡುಗೆಯವರಿಗೆ ನಿರ್ವಹಣೆ ಕೊಟ್ಟಿದ್ದೇವೆ. ಊಟ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಅರ್ಧ ಲೀಟರ್ ಕುಡಿಯುವ ನೀರನ್ನೂ ಕೊಡುತ್ತೇವೆ. ಸಂಜೆ 6ರವರೆಗೂ ಊಟ ಮುಂದುವರೆಯುತ್ತದೆ ಎಂದರು.&lt;/p&gt;&lt;p&gt;ಒಂದೊಂದು ಅಡುಗೆ ಮನೆ ಬಳಿ ಬೆಂಗಳೂರಿನ ಶಾಸಕರ ಜೊತೆ 100ರಂತೆ ಸ್ವಯಂಸೇವಕರೂ ಇರುತ್ತಾರೆ. ಹಂತ ಹಂತವಾಗಿ ಬಿಸಿಯೂಟವನ್ನೇ ಕೊಡಲು ಕ್ರಮ ಕೈಗೊಳ್ಳಲಿದ್ದಾರೆ. ಸರತಿ ಸಾಲಿನಲ್ಲೂ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bsy-abhimanotsav-grand-event-in-chitradurga-food-arrangement-made-for-10-lakh-people-rav/articleshow-3rut99w"/>
        </item>
        <item>
            <title><![CDATA[ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌: ಬಿಸಿಸಿಐ ಹೇಳಿಕೆಯೇ ಬೋಗಸ್ ಎಂದ ಡಿಕೆಶಿ!]]></title>
            <link>https://kannada.asianetnews.com/politics/ipl-final-shifted-using-political-influence-karnataka-dcm-dk-shivakumar-slams-bcci-statement-as-bogus-rav/articleshow-vh72970</link>
            <guid isPermaLink="true">https://kannada.asianetnews.com/politics/ipl-final-shifted-using-political-influence-karnataka-dcm-dk-shivakumar-slams-bcci-statement-as-bogus-rav/articleshow-vh72970</guid>
            <pubDate>Sat, 09 May 2026 10:14:06 +0530</pubDate>
            <description><![CDATA[&lt;p&gt;ಐಪಿಎಲ್&zwnj; ಫೈನಲ್&zwnj; ಪಂದ್ಯವನ್ನು ರಾಜಕೀಯ ಪ್ರಭಾವ ಬಳಸಿ ಬೆಂಗಳೂರಿನಿಂದ ಅಹಮದಾಬಾದ್&zwnj;ಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬಿಸಿಸಿಐ ಸುಳ್ಳು ಹೇಳುತ್ತಿದ್ದು, ಗುಜರಾತ್&zwnj;ಗೆ ಆರ್ಥಿಕ ಲಾಭ ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5g2g9d9e3m1b7d20e1pnvx,imgname-----------------------2026-05-09t100052.692-1778301092141.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು (ಮೇ.9): ಐಪಿಎಲ್&zwnj; ಫೈನಲ್&zwnj; ಪಂದ್ಯ ಅಹಮದಾಬಾದ್&zwnj;ಗೆ ಸ್ಥಳಾಂತರಿಸಿರುವ ವಿಚಾರದಲ್ಲಿ ಬಿಸಿಸಿಐ ಸಂಪೂರ್ಣ ಮಾಹಿತಿ ನೀಡದೆ, ಸುಳ್ಳು ಹೇಳುತ್ತಿದೆ. ರಾಜಕೀಯ ಪ್ರಭಾವ ಬಳಸಿ ಐಪಿಎಲ್&zwnj; ಫೈನಲ್&zwnj; ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್&zwnj;ಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್&zwnj; ಕಿಡಿಕಾರಿದ್ದಾರೆ.&lt;/p&gt;&lt;p&gt;ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್&zwnj;, ಬಿಸಿಸಿಐ ಕಾರ್ಯದರ್ಶಿ ಬೋಗಸ್&zwnj; ಹೇಳಿಕೆ ನೀಡುತ್ತಿದ್ದು, ಸಂಪೂರ್ಣ ಮಾಹಿತಿ ನೀಡಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್&zwnj; ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್&zwnj; ನೀಡುತ್ತಿದ್ದರು. ಅದು ಹೆಚ್ಚಾಗುತ್ತದೆಯೇ? ನಮ್ಮ ಮೇಲೆ ಆರೋಪಿಸುತ್ತಿರುವ ಬಿಜೆಪಿ-ಜೆಡಿಎಸ್&zwnj; ನಾಯಕರು, ತಾವು ಪಡೆದಿದ್ದ ಟಿಕೆಟ್&zwnj; ವಾಪಸ್&zwnj; ಕೊಡಬೇಕಿತ್ತು. ನಮ್ಮ ಶಾಸಕರಿಗೆ ಅವರದ್ದೇ ಸ್ಥಾನ, ಗೌರವವಿದೆ ಎಂದರು.&lt;/p&gt;&lt;p&gt;ಐಪಿಎಲ್&zwnj; ಪಂದ್ಯ ಸ್ಥಳಾಂತರ ಬಿಜೆಪಿ ನಾಯಕತ್ವದಲ್ಲಿ ನಡೆಯುತ್ತಿದೆ. ಗುಜರಾತ್&zwnj;ಗೆ ದೊಡ್ಡ ಆರ್ಥಿಕ ಅನುಕೂಲ ಮಾಡಿಕೊಡಲು ಸ್ಥಳಾಂತರ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 30 ಸಾವಿರ ಆಸನ ಸಾಮರ್ಥ್ಯವಿದೆ. ಅಹಮದಾಬಾದ್&zwnj;ನಲ್ಲಿ 1 ಲಕ್ಷದವರೆಗೆ ಆಸನವಿದೆ. ಅದರಿಂದ ದೊಡ್ಡ ಲಾಭವಾಗುತ್ತದೆ ಎಂದು ಬಿಸಿಸಿಐ ಈ ಕ್ರಮ ಕೈಗೊಂಡಿದೆ. ಅದರ ಜತೆಗೆ ರಾಜಕೀಯ ಪ್ರಭಾವವೂ ಇದಕ್ಕೆ ಕಾರಣ. ಪ್ರತಿವರ್ಷ ಇದೇ ರೀತಿ ಐಪಿಎಲ್&zwnj; ಫೈನಲ್&zwnj; ಪಂದ್ಯ ಸ್ಥಳಾಂತರಿಸಲಾಗುತ್ತಿದೆ ಎಂದರು.&lt;/p&gt;&lt;p&gt;ಅಹಮದಾಬಾದ್&zwnj; ಕ್ರೀಡಾಂಗಣ ಮಾದರಿಯಲ್ಲೇ ರಾಜ್ಯದಲ್ಲೂ ದೊಡ್ಡ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 2 ಕ್ರೀಡಾಂಗಣ ನಿರ್ಮಾಣಕ್ಕೆ ಅನುಮತಿಸಲಾಗಿದೆ. ಅದರ ಜತೆಗೆ ಚಿನ್ನಸ್ವಾಮಿ ಕ್ರೀಡಾಂಗಣವನ್ನು 60 ಸಾವಿರ ಆಸನ ಸಾಮರ್ಥ್ಯಕ್ಕೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಎಸ್&zwnj;ಸಿಎ ಜತೆಗೂ ಮಾತನಾಡಲಾಗಿದ್ದು, ಅದಕ್ಕೆ ಸರ್ಕಾರ ನೆರವು ನೀಡಲಿದೆ ಎಂದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/ipl-final-shifted-using-political-influence-karnataka-dcm-dk-shivakumar-slams-bcci-statement-as-bogus-rav/articleshow-vh72970"/>
        </item>
        <item>
            <title><![CDATA[ವಿಜಯನಗರ: ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರವೆಸಗಿದ  ಆಸ್ಪತ್ರೆ  ನೌಕರ!]]></title>
            <link>https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</link>
            <guid isPermaLink="true">https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</guid>
            <pubDate>Sat, 09 May 2026 09:59:34 +0530</pubDate>
            <description><![CDATA[ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ, ಗ್ರೂಪ್ &lsquo;ಡಿ&rsquo; ನೌಕರನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ನಂಬಿಸಿ, ಕ್ವಾರ್ಟರ್ಸ್&zwnj;ಗೆ ಕರೆದೊಯ್ದು ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr5fw7c89a7qp4hbqykppja9,imgname-vijayanagara-hospital-assault-case-1778300886406.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ &lt;/strong&gt;ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು.&lt;/p&gt;&lt;h2&gt;ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರ&lt;/h2&gt;&lt;p&gt;ಆರೋಪಿಯು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್&zwnj;ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;ಪೋಕ್ಸೋ ಅಡಿ ಪ್ರಕರಣ ದಾಖಲು&lt;/h2&gt;&lt;p&gt;ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.&lt;/p&gt;&lt;p&gt;ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಗೆ ಅಗತ್ಯ ಚಿಕಿತ್ಸೆ ಹಾಗೂ ಮನೋವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132"/>
        </item>
        <item>
            <title><![CDATA[ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಸುಳಿವು ನೀಡಿದ ದಿನೇಶ್ ಗುಂಡೂರಾವ್, ಹೇಳಿದ್ದೇನು?]]></title>
            <link>https://kannada.asianetnews.com/politics/minister-dinesh-gundu-rao-gives-major-hint-about-cabinet-expansion-what-did-he-say-rav/articleshow-o780g7g</link>
            <guid isPermaLink="true">https://kannada.asianetnews.com/politics/minister-dinesh-gundu-rao-gives-major-hint-about-cabinet-expansion-what-did-he-say-rav/articleshow-o780g7g</guid>
            <pubDate>Sat, 09 May 2026 09:52:59 +0530</pubDate>
            <description><![CDATA[ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ತೀರ್ಮಾನವಿದೆ. ಕೇರಳದಲ್ಲಿ ಸರ್ಕಾರ ರಚನೆಯಾದ ನಂತರ ವರಿಷ್ಠರು ಕರ್ನಾಟಕದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ದಿನೇಶ್&zwnj; ಗುಂಡೂರಾವ್&zwnj; ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jx1gjez9aff1ggdmjvvwzczc,imgname-----------------------2025-06-06t074851.327-1749176368105.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು (ಮೇ.9):&lt;/strong&gt; ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ತೀರ್ಮಾನವಿದ್ದು, ಕೇರಳದಲ್ಲಿ ಸರ್ಕಾರ ರಚನೆ ಆದ ನಂತರ ನಮ್ಮ ವರಿಷ್ಠರು ಕರ್ನಾಟಕದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ದಿನೇಶ್&zwnj; ಗುಂಡೂರಾವ್&zwnj; ತಿಳಿಸಿದರು.&amp;nbsp;&lt;/p&gt;&lt;p&gt;ಸುದ್ದಿಗಾರರ ಜತೆ ಮಾತನಾಡಿ, &lsquo;ಪಕ್ಷದಲ್ಲಿ ಯಾರು ಏನೇನು ಪ್ರಯತ್ನ ಮಾಡ್ತಾ ಇದಾರೋ ನನಗೆ ಗೊತ್ತಿಲ್ಲ. ಯಾರು ಯಾವ ದಿನಾಂಕ ನಿಗದಿ ಮಾಡಲು ಸಾಧ್ಯವಿಲ್ಲ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್, ಸೋನಿಯಾ ತೀರ್ಮಾನ ತಗೆದುಕೊಳ್ಳುತ್ತಾರೆ. ಸಮಯ, ಮುಹೂರ್ತ ಎಲ್ಲಾ ಅವರ ವಿವೇಚನೆಗೆ ಬಿಟ್ಟದ್ದು&rsquo; ಎಂದರು.&lt;/p&gt;&lt;p&gt;ತಮಿಳುನಾಡಿನಲ್ಲಿ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಭಿಕ್ಷೆ ಬೇಡುತ್ತಿದೆ ಎಂಬ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹೆಸರು ಓಡ್ತಾ ಇರ್ಬೇಕು ಅಂತಾ ಇಂತಹ ಹೇಳಿಕೆ ಕೊಡ್ತಾರೆ. ಅಂತಹ ಪ್ರಶ್ನೆಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ರಾಹುಲ್ ಗಾಂಧಿ ಮತ್ತು ಟಿವಿಕೆ ಪಕ್ಷದ ನಾಯಕ, ನಟ ವಿಜಯ್&zwnj;ಗೆ ಮೊದಲಿಂದನೂ ಸ್ನೇಹ-ಸಂಪರ್ಕವಿತ್ತು. ಅವರು ಎನ್&zwnj;ಎಸ್&zwnj;ಯುಐಗೆ ಬರಬೇಕು ಅಂತ 8 ವರ್ಷದ ಹಿಂದೆ ಮಾತುಕತೆ ನಡೆದಿತ್ತು ಎಂದು ತಿಳಿಸಿದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/minister-dinesh-gundu-rao-gives-major-hint-about-cabinet-expansion-what-did-he-say-rav/articleshow-o780g7g"/>
        </item>
        <item>
            <title><![CDATA[ಮೂಲ್ಕಿ, ಸುಳ್ಯ, ಬಂಟ್ವಾಳ, ಪುತ್ತೂರಿನಲ್ಲಿ ಮಳೆ: ಕೆರೆಗಳಾದ ರಸ್ತೆಗಳು,  ಕೃತಕ ನೆರೆ ಸೃಷ್ಟಿ]]></title>
            <link>https://kannada.asianetnews.com/gallery/karnataka-districts/summer-pre-monsson-rain-in-mulki-sullia-bantwal-puttur-roads-turned-into-lakes-artificial-floods-created-mrq-6n28iko</link>
            <guid isPermaLink="true">https://kannada.asianetnews.com/gallery/karnataka-districts/summer-pre-monsson-rain-in-mulki-sullia-bantwal-puttur-roads-turned-into-lakes-artificial-floods-created-mrq-6n28iko</guid>
            <pubDate>Sat, 09 May 2026 09:00:10 +0530</pubDate>
            <description><![CDATA[&lt;p&gt;ಮೂಲ್ಕಿ, ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮೂಲ್ಕಿ ತಾಲೂಕಿನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳಲ್ಲಿ ನೀರು ನಿಂತು ಕೃತಕ ನೆರೆ ಸೃಷ್ಟಿಯಾಗಿದ್ದು, ವಾಹನ ಸಂಚಾರಕ್ಕೆ ಮತ್ತು ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5c7qdympm72fp8z2nk0f2p,imgname-mulki-rain-1778297068990.jpg" type="image/jpeg" height="390" width="690"/>
            <content:encoded><![CDATA[&lt;p&gt;ಮೂಲ್ಕಿ, ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮೂಲ್ಕಿ ತಾಲೂಕಿನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳಲ್ಲಿ ನೀರು ನಿಂತು ಕೃತಕ ನೆರೆ ಸೃಷ್ಟಿಯಾಗಿದ್ದು, ವಾಹನ ಸಂಚಾರಕ್ಕೆ ಮತ್ತು ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ.&lt;/p&gt;&lt;img&gt;&lt;p&gt;ಮೂಲ್ಕಿ, ಹಳೆಯಂಗಡಿ, ಕಿನ್ನಿಗೋಳಿ, ಕಟೀಲು ಸೇರಿದಂತೆ ಮೂಲ್ಕಿ ಪರಿಸರದಲ್ಲಿ ಶುಕ್ರವಾರ ಸಂಜೆ ಬಳಿಕ ಸಾಧಾರಣ ಮಳೆಯಾಗಿದೆ. ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನ ಸುರಿದ ಭಾರಿ ಮಳೆಗೆ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಯಾಗಿದ್ದು, ಮೂಲ್ಕಿ ತಾಲೂಕು ವ್ಯಾಪ್ತಿಯ ಕಿಲ್ಪಾಡಿ ಹಾಗೂ ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಗ್ರಾಮೀಣ ಭಾಗದ ರಸ್ತೆಗಳು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದು, ರಸ್ತೆಯಲ್ಲಿ ಕೆಲ ಕಡೆ ಕೃತಕ ಕೆರೆ ಸೃಷ್ಟಿಯಾಗಿದೆ.&amp;nbsp;&lt;/p&gt;&lt;p&gt;ಮೂಲ್ಕಿ-ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕುಬೆವೂರು ರೈಲ್ವೆ ಮೇಲ್ಸೇತುವೆಯಿಂದ ಒಳ ರಸ್ತೆ ಶಿಮಂತೂರು ದೇವಸ್ಥಾನದ ರಸ್ತೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಅವ್ಯವಸ್ಥೆಯ ಆಗರವಾಗಿದೆ. ಪ್ರತಿ ಮಳೆಗಾಲದಲ್ಲಿ ಈ ರಸ್ತೆಯ ಕೆಲವು ಕಡೆಗಳಲ್ಲಿ ಕೃತಕ ನೆರೆ ಉಂಟಾಗುತ್ತಿದೆ.&lt;/p&gt;&lt;img&gt;&lt;p&gt;ಗುರುವಾರ ಬೆಳಗ್ಗೆ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ತುಂಬಾ ನೀರುನಿಂತಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ಪ್ರತಿ ಮಳೆಗಾಲದಲ್ಲಿ ಈ ಭಾಗದಲ್ಲಿ ಕೃತಕ ನೆರೆ ಉಂಟಾಗಿ ರಸ್ತೆ ಮುಳುಗುತ್ತದೆ ಅಲ್ಲದೆ ಕೃಷಿ ನಾಶ ಸಂಭವಿಸುತ್ತದೆ. ಈ ಬಗ್ಗೆ ಅನೇಕ ಬಾರಿ ಸ್ಥಳೀಯರು ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.&amp;nbsp;&lt;/p&gt;&lt;img&gt;&lt;p&gt;ಪ್ರಥಮ ಮಳೆಗೆ ಹೀಗಾದರೆ ಮುಂದಿನ ಮಳೆಗಾಲ ಕಳೆಯುವುದು ಹೇಗೆ? ಈ ಭಾಗದ ಜನರ ಸಮಸ್ಯೆ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಸ್ಥಳೀಯರಾದ ಸುಗಂಧಿ ಪೂಜಾರಿ ತಿಳಿಸಿದ್ದಾರೆ. ರಸ್ತೆ ಕೆಸರುಮಯವಾಗಿ ಸಂಚಾರ ದುಃಸ್ತರವಾಗಿ ಪರಿಣಮಿಸಿದ್ದು, ಕೂಡಲೇ ಪಂಚಾಯಿತಿ ಆಡಳಿತ ಎಚ್ಚೆತ್ತು ರಸ್ತೆಗೆ ಸೂಕ್ತ ಚರಂಡಿ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.&lt;/p&gt;&lt;img&gt;&lt;p&gt;ಸುಳ್ಯ/ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಸುಡುಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಮಳೆ ತಂಪೆರೆದಿದೆ. ಸುಳ್ಯದಲ್ಲಿ ಒಂದು ಗಂಟೆ ಕಾಲ ಗುಡುಗು ಸಹಿತ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನಲ್ಲಿ ವಿವಿಧೆಡೆ ಭಾರಿ ಗಾಳಿ ಮಳೆಯಾಗಿದೆ. ಗುಡುಗು ಸಿಡಿಲಿಗೆ ವಿದ್ಯುತ್ ಸರಬರಾಜು ವ್ಯತ್ಯಯಗೊಂಡಿದೆ.&lt;/p&gt;&lt;img&gt;&lt;p&gt;ಪುತ್ತೂರು: ಪುತ್ತೂರಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗಿದೆ. ಸಂಜೆ ಸುಮಾರು 6 ಗಂಟೆಗೆ ಆರಂಭಗೊಂಡ ಮಳೆಯು ಸುಮಾರು ಒಂದು ಗಂಟೆ ಸುರಿಯಿತು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/summer-pre-monsson-rain-in-mulki-sullia-bantwal-puttur-roads-turned-into-lakes-artificial-floods-created-mrq-6n28iko"/>
        </item>
        <item>
            <title><![CDATA[ಬೆಂಗಳೂರು: ತಡರಾತ್ರಿ ಹೊಟೇಲ್ ನಲ್ಲಿ ಅಗ್ನಿ ದುರಂತ, ಗಾಢ ನಿದ್ರೆಯಲ್ಲಿದ್ದ ಓರ್ವ ಉಸಿರುಗಟ್ಟಿ ಸಾವು]]></title>
            <link>https://kannada.asianetnews.com/karnataka-districts/bengaluru-fire-tragedy-one-dead-four-critical-in-hotel-blaze-gdp/articleshow-vx88fyd</link>
            <guid isPermaLink="true">https://kannada.asianetnews.com/karnataka-districts/bengaluru-fire-tragedy-one-dead-four-critical-in-hotel-blaze-gdp/articleshow-vx88fyd</guid>
            <pubDate>Sat, 09 May 2026 08:55:02 +0530</pubDate>
            <description><![CDATA[ಬೆಂಗಳೂರಿನಲ್ಲಿ ತಡರಾತ್ರಿ ಎರಡು ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿವೆ. ನಾಗರಬಾವಿ ಬಳಿಯ ಹೊಟೇಲ್&zwnj;ನಲ್ಲಿ ನಡೆದ ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು ನಾಲ್ವರು ಗಾಯಗೊಂಡರೆ, ಕೆ.ಆರ್ ಪುರಂ ಬಳಿಯ ಬೈಕ್ ಶೋರೂಂನಲ್ಲಿ 20 ಹೊಸ ಬೈಕ್&zwnj;ಗಳು ಸುಟ್ಟು ಕರಕಲಾಗಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmhry3sy438mejnm9wsj4n43,imgname-fire-sea-1774418071358.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು ನಗರದಲ್ಲಿ ತಡರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳು ಅನಾಹುತ ಸಂಭವಿಸಿದೆ. ಒಂದರಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಇನ್ನೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ನಾಶವಾಗಿದೆ.&lt;/p&gt;&lt;h2&gt;ಹೊಟೇಲ್&zwnj; ನಲ್ಲಿ ಅಗ್ನಿ ದುರಂತ ಓರ್ವ ಸಾವು, ನಾಲ್ವರು ಗಂಭೀರ&lt;/h2&gt;&lt;p&gt;ನಗರದ ನಾಗರಬಾವಿ ಸಮೀಪದ ಮಾಳಗಾಳದಲ್ಲಿ ಇರುವ ಹೋಟೆಲ್&zwnj;ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೋಟೆಲ್&zwnj;ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್&zwnj;ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಅದು ವ್ಯಾಪಕವಾಗಿ ಹರಡಿದೆ. ಹೋಟೆಲ್&zwnj;ನ ಮೇಲ್ಮಹಡಿಯಲ್ಲಿ ವಾಸವಾಗಿದ್ದ ಸಿಬ್ಬಂದಿ ಕೊಠಡಿಗಳಿಗೂ ಬೆಂಕಿ ತಗುಲಿರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ.&lt;/p&gt;&lt;p&gt;ಘಟನೆಯ ವೇಳೆ ಹೋಟೆಲ್&zwnj;ನಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಮೇಲ್ಮಹಡಿಯಲ್ಲಿ ನಿದ್ರಿಸುತ್ತಿದ್ದರು. ರಾತ್ರಿ ಹೊತ್ತಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಕಾರಣ, ನಿದ್ರೆಯಲ್ಲಿದ್ದ ಅವರಿಗೆ ಹೊರಬರಲು ಸಾಧ್ಯವಾಗದೆ ಒಳಗೇ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಕಿಯ ತೀವ್ರತೆ ಹೆಚ್ಚಾದಂತೆ, ಮೇಲಿನ ಮಹಡಿಯನ್ನೇ ಆವರಿಸಿಕೊಂಡಿದ್ದು, ಒಳಗಿದ್ದವರ ರಕ್ಷಣೆ ಕಷ್ಟಕರವಾಗಿತ್ತು.&lt;/p&gt;&lt;p&gt;ಈ ದುರ್ಘಟನೆಯಲ್ಲಿ ಮಧ್ಯಪ್ರದೇಶ ಮೂಲದ ರಾಜ್ ಕುಮಾರ್ (40) ಎಂಬ ಕಾರ್ಮಿಕ ದುರ್ಮರಣಕ್ಕೀಡಾಗಿದ್ದಾನೆ. ಉಳಿದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಹಲವು ಗಂಟೆಗಳ ಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.&lt;/p&gt;&lt;p&gt;ಹೋಟೆಲ್ ನಲ್ಲಿ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಗಾ ಗ್ರ್ಯಾಂಡ್ ಮ್ಯಾನೇಜರ್ ಯತೀಶ್ ಹೇಳಿಕೆ ನೀಡಿ, ಬೆಳಗಿನ ಜಾವ ಈ ಘಟನೆ ನಡೆದಿದೆ. 30-35 ಜನ ಹೋಟೆಲ್ ನಲ್ಲಿ ಕೆಲಸ ಮಾಡ್ತಾ ಇದ್ರು. ಕೆಲಸಗಾರರು ಒಂದನೇ ಮಹಡಿಯಲ್ಲಿ ಮಲಗಿದ್ದರು. ಐವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಬೆಂಕಿ ಬಿದ್ದಿದ್ದೇ ಹೊರಗಡೆ ಬರೋಕೆ ಪ್ರಯತ್ನ ಮಾಡಿದ್ದಾರೆ. ಈ ವೇಳೆ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ಮಾತ್ರ ಹೊಗೆಯಿಂದ ಉಸಿರಾಡಲು ಆಗಿಲ್ಲ. ಈತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ, ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ. 15 ದಿನಗಳ ಹಿಂದೆಯಷ್ಟೇ ರಾಜಕುಮಾರ್ ಕೆಲಸಕ್ಕೆ ಸೇರಿದ್ದ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಆಗಿರಬಹುದು. ಪೊಲೀಸರು ಬಂದಿದ್ರೂ ತನಿಖೆ ಮಾಡ್ತಾ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.&lt;/p&gt;&lt;h2&gt;20 ಹೊಸ ಬೈಕ್&zwnj;ಗಳು ಸಂಪೂರ್ಣವಾಗಿ ಸುಟ್ಟು ಭಸ್ಮ!&lt;/h2&gt;&lt;p&gt;ಇದಕ್ಕೂ ಬೆನ್ನಲ್ಲೇ ನಗರದ ಕೆ.ಆರ್ ಪುರಂ ಟಿನ್ ಫ್ಯಾಕ್ಟರಿ ಪ್ರದೇಶದ ಸಮೀಪದಲ್ಲಿರುವ ಹೋಂಡಾ ಬೈಕ್ ಶೋ ರೂಮ್&zwnj;ನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಿನ್ನೆ ತಡರಾತ್ರಿ ನಡೆದ ಈ ಘಟನೆಯಲ್ಲಿ ಶೋ ರೂಮ್&zwnj;ನೊಳಗೆ ಇರಿಸಲಾಗಿದ್ದ ಸುಮಾರು 20 ಹೊಸ ಬೈಕ್&zwnj;ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.&lt;/p&gt;&lt;p&gt;ಬೆಂಕಿ ಕಾಣಿಸಿಕೊಂಡ ತಕ್ಷಣ ಮಹಾದೇವಪುರ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡವು. ಅಗ್ನಿ ಅವಘಡದಿಂದ ಉಂಟಾದ ನಷ್ಟದ ಅಂದಾಜು ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಾಥಮಿಕವಾಗಿ ಇಲ್ಲಿ ಕೂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.&lt;/p&gt;&lt;p&gt;ಈ ಎರಡೂ ಘಟನೆಗಳು ನಗರದಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೆ ಪ್ರಶ್ನೆ ಎಬ್ಬಿಸುತ್ತಿದ್ದು, ವಿಶೇಷವಾಗಿ ವಾಣಿಜ್ಯ ಕಟ್ಟಡಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯತೆ ತೀವ್ರವಾಗಿ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-fire-tragedy-one-dead-four-critical-in-hotel-blaze-gdp/articleshow-vx88fyd"/>
        </item>
        <item>
            <title><![CDATA[ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ: 1 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್!]]></title>
            <link>https://kannada.asianetnews.com/gallery/karnataka-districts/yadagiri-district-gurumitkal-cpi-veeranna-lokayukta-arrested-for-accepting-a-bribe-of-rs-1-lakh-mrq-frm90zc</link>
            <guid isPermaLink="true">https://kannada.asianetnews.com/gallery/karnataka-districts/yadagiri-district-gurumitkal-cpi-veeranna-lokayukta-arrested-for-accepting-a-bribe-of-rs-1-lakh-mrq-frm90zc</guid>
            <pubDate>Sat, 09 May 2026 08:46:21 +0530</pubDate>
            <description><![CDATA[&lt;p&gt;Corruption&quot; ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್&zwnj;. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5bckk41gs6k430mwmf7qkf,imgname-cpi-veeranna-doddamani-1778296180324.jpg" type="image/jpeg" height="390" width="690"/>
            <content:encoded><![CDATA[&lt;p&gt;Corruption&quot; ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್&zwnj;. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.&lt;/p&gt;&lt;img&gt;&lt;p&gt;ಸುಮಾರು 1 ಲಕ್ಷ ರೂಪಾಯಿ ಪಡೆಯುತ್ತಿರುವ ಸಂದರ್ಭದಲ್ಲಿ ಗುರುಮಠಕಲ್ ಸಿಪಿಐ ವೀರಣ್ಣ ಎಸ್&zwnj;. ದೊಡ್ಡಮನಿ ಎಂಬವರನ್ನು ಲೋಕಾಯಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ವೀರಣ್ಣ ದೊಡ್ಡಮನಿ ಬೇಡಿಕೆ ಇರಿಸಿರುವ ಆರೋಪ ಕೇಳಿ ಬಂದಿದೆ.&lt;/p&gt;&lt;img&gt;&lt;p&gt;ವೀರಣ್ಣ ಎಸ್.ದೊಡ್ಡಮನಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಆರೋಪಿಸಿ ಆನಂದ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶುಕ್ರವಾರ ರಾತ್ರಿ ಗುರುಮಠಕಲ್ ಪಟ್ಟಣದ ಸಿಪಿಐ ಕ್ವಾಟರ್ಸ್&zwnj;ನಲ್ಲಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.&lt;/p&gt;&lt;img&gt;&lt;p&gt;ಸದ್ಯ ಲೋಕಾಯುಕ್ತ ಪೊಲೀಸರು ವೀರಣ್ಣ ಎಸ್. ದೊಡ್ಡಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್&zwnj;ಪಿ ಜೆ.ಹೆಚ್. ಇನಾಮದಾರ, ಪಿಐ ಸಿದ್ದರಾಯ ಬೆಳ್ಳೂರಗಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.&lt;/p&gt;]]></content:encoded>
            <category>karnataka-districts</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/yadagiri-district-gurumitkal-cpi-veeranna-lokayukta-arrested-for-accepting-a-bribe-of-rs-1-lakh-mrq-frm90zc"/>
        </item>
        <item>
            <title><![CDATA[ಹುಬ್ಬಳ್ಳಿ ಮೇಲ್ಸೇತುವೆ ಸಂಚಾರಕ್ಕೆ ಯಾವಾಗ ಮುಕ್ತ; ಇಲ್ಲಿಗೆ ಕಾಮಗಾರಿಯ ಲೇಟೆಸ್ಟ್ ಮಾಹಿತಿ]]></title>
            <link>https://kannada.asianetnews.com/gallery/karnataka-districts/when-will-the-hubballi-flyover-be-open-for-traffic-latest-information-on-the-work-here-mrq-tykmxbv</link>
            <guid isPermaLink="true">https://kannada.asianetnews.com/gallery/karnataka-districts/when-will-the-hubballi-flyover-be-open-for-traffic-latest-information-on-the-work-here-mrq-tykmxbv</guid>
            <pubDate>Sat, 09 May 2026 08:24:13 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿಯು ಶೇ.70ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಶಾಸಕ ಮಹೇಶ ಟೆಂಗಿನಕಾಯಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5a56xpcg7vtg8xm6n55v8b,imgname-hubballi-fly-over--6--1778294889398.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿಯ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿಯು ಶೇ.70ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಶಾಸಕ ಮಹೇಶ ಟೆಂಗಿನಕಾಯಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಹುಬ್ಬಳ್ಳಿ: ನಗರದ ನಡೆಯುತ್ತಿರುವ ಮೇಲ್ಸೇತುವೆಯ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದ್ದು ಡಿಸೆಂಬರ್&zwnj;ಗೆ ಮುಗಿಯಲಿದೆ. ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು. ಶುಕ್ರವಾರ ಕೋರ್ಟ್ ವೃತ್ತದಿಂದ ಹೊಸೂರ ವೃತ್ತದ ವರೆಗೂ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.&lt;/p&gt;&lt;img&gt;&lt;p&gt;ಪಂಚ ರಾಜ್ಯ ಚುನಾವಣೆ ಹಿನ್ನೆಲೆ ಕಾರ್ಮಿಕರು ಅಲ್ಲಿಗೆ ತೆರಳಿದ್ದರಿಂದ ಕಾಮಗಾರಿ ವಿಳಂಬವಾಗಿತ್ತು. ಇದೀಗ ಎಲ್ಲ ಕಾರ್ಮಿಕರು ಆಗಮಿಸಿದ್ದು ಕಾಮಗಾರಿ ಭರದಿಂದ ಸಾಗಿದೆ ಎಂದ ಅವರು, ಬಹುತೇಕ ಕೆಲಸ ಪೂರ್ಣಗೊಂಡಿದ್ದು ಗಲ್ಡರ್&zwnj; ಅಳವಡಿಸಲಾಗಿದೆ. ಕಾಮಗಾರಿ ಮುಗಿದ ಜಾಗದಲ್ಲಿ ₹ 13 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಕೇಂದ್ರದ ಅನುಮೋದನೆ ದೊರೆಕಿದೆ ಎಂದರು.&lt;/p&gt;&lt;img&gt;&lt;p&gt;ಮೊದಲ ಹಂತದಲ್ಲಿ ಹೊಸೂರ ವೃತ್ತದಿಂದ ಹಳೇ ಬಸ್ ನಿಲ್ದಾಣದ ವರೆಗೆ ಸಿಸಿ ರಸ್ತೆ ಕಾಮಗಾರಿ ಆರಂಭವಾಗಿದ್ದು, 15 ದಿನದಲ್ಲಿ ಮುಗಿಯಲಿದೆ. ಎರಡನೇ ಹಂತದಲ್ಲಿ ಚೆನ್ನಮ್ಮ ವೃತ್ತದಿಂದ ಭವಾನಿ ಆರ್ಕೆಡ್ ವರೆಗೆ ಕೈಗೊಳ್ಳಲು ಸೂಚಿಸಲಾಗಿದೆ. ದೇಸಾಯಿ ವೃತ್ತದಿಂದ ಕೋರ್ಟ್ ವೃತ್ತದ ವರೆಗಿನ ರಸ್ತೆ ಕಾಮಗಾರಿ ಆರಂಭಿಸಲಾಗಿದೆ. ಗದಗ ರಸ್ತೆಯಲ್ಲಿ ಕೆಲವು ಸಮಸ್ಯೆಗಳಿದ್ದು, ಪರಿಹರಿಸಿ ಕಾಮಗಾರಿ ಆರಂಭಿಸಲಿದ್ದಾರೆ ಎಂದು ಮಾಹಿತಿ ನೀಡಿದರು.&lt;/p&gt;&lt;img&gt;&lt;p&gt;ಬಿಆರ್&zwnj;ಟಿಎಸ್ ಬಸ್ ನಿಲ್ದಾಣದಲ್ಲಿ ಕೆಲವು ಸಮಸ್ಯೆಗಳಿದ್ದು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬಸ್ ನಿಲ್ದಾಣ ಎದುರಿರುವ ಬಿಆರ್&zwnj;ಟಿಎಸ್ ಬಸ್ ನಿಲ್ದಾಣ ತೆರವುಗೊಳಿಸಿದ್ದು, ಅದನ್ನು ಗಾಳಿ ದುರ್ಗಮ್ಮ ದೇವಸ್ಥಾನ ಹತ್ತಿರ ವಾಹನ ಸವಾರರಿಗೆ ತೊಂದರೆಯಾಗದಂತೆ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.&lt;/p&gt;&lt;img&gt;&lt;p&gt;ಸದ್ಯಕ್ಕೆ ಪಾಲಿಕೆ ಎದುರಿಗಿರುವ ಬಸ್ ನಿಲ್ದಾಣ ತೆರವುಗೊಳಿಸಲು ನಿರ್ಧರಿಸಿದ್ದು ಕಾಮಗಾರಿ ಮುಗಿದ ಮೇಲೆ ಎಲ್ಲಿಗೆ ಸ್ಥಳಾಂತರಿಸಬೇಕು ಎಂಬುದನ್ನು ಚರ್ಚಿಸಲಾಗಿದೆ ಎಂದು ಹೇಳಿದರು. ಈ ವೇಳೆ ಉಪಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯೆ ಮೀನಾಕ್ಷಿ ವಂಟಮೂರಿ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಡಿಸಿಪಿ ರವೀಶ್ ಸಿ.ಆರ್., ಎಸಿಪಿ ವೀರೇಶ ಪಾಟೀಲ, ಬಿಜೆಪಿ ಮುಖಂಡ ರವಿ ನಾಯಕ, ಈಶ್ವರಗೌಡ ಪಾಟೀಲ, ಸಾಯಿನಾಥ ದಲಬಂಜನ ಸೇರಿದಂತೆ ಅನೇಕರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸೂರ್ಯಕಾಂತಿ ರೈತರಿಗೆ ಸಿಹಿಸುದ್ದಿ ನೀಡಿದ ಸರ್ಕಾರ; ಫಿಕ್ಸ್ ಆಯ್ತು ಪ್ರತಿ ಕ್ವಿಂಟಾಲ್&zwnj; ದರ&lt;/strong&gt;&lt;/p&gt;&lt;img&gt;&lt;p&gt;ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದ ಒಟ್ಟು 87 ಫೌಂಡೇಶನ್&zwnj;ನಲ್ಲಿ 84 ಫೌಂಡೇಶನ್&zwnj; ಸ್ಥಾಪಿಸಲಾಗಿದೆ. ಆರು ಪೀಯರ್ ಕ್ಯಾಪ್ (ಸೇತುವೆ ಕಂಬದ ಮೇಲ್ಭಾಗ ರಚನೆ) ಅಳಡಿಸಬೇಕಿದೆ. 294 ಗಲ್ಡರ್&zwnj;ನಲ್ಲಿ 262 ಅಳವಡಿಸಿದ್ದು 25 ಗಲ್ಡರ್&zwnj;ಗಳ ತಯಾರಿಸಬೇಕಿದೆ. 32 ಸ್ಲ್ಯಾಬ್ ಅಳವಡಿಸುವುದು ಬಾಕಿ ಇದ್ದು, ಗಲ್ಡರ್ ಅಳವಡಿಸಿದ ಬಳಿಕ ಸ್ಲ್ಯಾಬ್ ಹಾಕಲಾಗುವುದು. ಚೆನ್ನಮ್ಮ ವೃತ್ತದಲ್ಲಿ ಬಾಕ್ಸ್ ಗಲ್ಡರ್ ಹಾಕುವುದು ಸ್ವಲ್ಪ ವಿಳಂಬವಾಗಲಿದೆ. ಫ್ಲೈಓವರ್ ಕಾಮಗಾರಿ ಮುಗಿದ ಸ್ಥಳದಲ್ಲಿ ಒಂದುವರೆ ತಿಂಗಳೊಳಗೆ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಲೋಕೋಪಯೋಗಿ ಅಧಿಕಾರಿ ಸತೀಶ ನಾಗನೂರ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Umesh Meti Kodimath visit: ಕೋಡಿಮಠ ಶ್ರೀಗಳಗೆ ಬೆಳ್ಳಿ ಕೀರಿಟ ಅರ್ಪಿಸಿದ ಶಾಸಕ ಉಮೇಶ್ ಮೇಟಿ&lt;/strong&gt;&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/when-will-the-hubballi-flyover-be-open-for-traffic-latest-information-on-the-work-here-mrq-tykmxbv"/>
        </item>
        <item>
            <title><![CDATA[Karnataka temperature: ಮಳೆಯಿಂದಾಗಿ ತಾಪಮಾನ 3-5°C ಇಳಿಕೆ! ರಾಜ್ಯದ ಬಹುತೇಕ ಕಡೆ ಈಗ 40 ಡಿಗ್ರಿಗಿಂತ ಕಮ್ಮಿ!]]></title>
            <link>https://kannada.asianetnews.com/state/karnataka-temperature-drops-below-40-degrees-in-most-places-rav/articleshow-xy4to4h</link>
            <guid isPermaLink="true">https://kannada.asianetnews.com/state/karnataka-temperature-drops-below-40-degrees-in-most-places-rav/articleshow-xy4to4h</guid>
            <pubDate>Sat, 09 May 2026 08:02:08 +0530</pubDate>
            <description><![CDATA[ಉತ್ತರ ಒಳನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್&zwnj;ನಷ್ಟು ಇಳಿಕೆಯಾಗಿದೆ. ಕಲಬುರಗಿಯಂತಹ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಇದು ನಿರಾಳತೆ ತಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqbw0eca4f2ch23b4bsab9wr,imgname-wet-bulb-temperature--5--1777441192330.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.9): &lt;/strong&gt;ಉತ್ತರ ಒಳನಾಡು, ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಿರುವುದರಿಂದ ಶುಕ್ರವಾರದಂದು ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್&zwnj;ನಷ್ಟು ಇಳಿಕೆಯಾಗಿದೆ. ಭಾರೀ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ಸ್ವಲ್ಪ ನಿರಾಳರಾಗಿದ್ದಾರೆ.&lt;/p&gt;&lt;p&gt;ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರದಲ್ಲಿ ತಾಪಮಾನವು ಗರಿಷ್ಠ 5 ಡಿಗ್ರಿ ಸೆಲ್ಸಿಯಸ್&zwnj;ವರೆಗೆ ಕಡಿಮೆಯಾಗಿದೆ. ಹೊನ್ನಾವರ, ವಿಜಯಪುರ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಉಷ್ಣಾಂಶ ಇಳಿಕೆಯಾಗಿದೆ.&lt;/p&gt;&lt;p&gt;ಉತ್ತರ ಒಳನಾಡಿನ ಕಲಬುರಗಿ, ಬೀದರ್ ಮತ್ತಿತರ ಜಿಲ್ಲೆಗಳಲ್ಲಿ 43 ಡಿಗ್ರಿ ಸೆಲ್ಸಿಯಸ್&zwnj;ವರೆಗೆ ಇರುತ್ತಿದ್ದ ಗರಿಷ್ಠ ತಾಪಮಾನ, ಶುಕ್ರವಾರದಂದು ಕಲಬುರಗಿಯಲ್ಲಿ ಗರಿಷ್ಠ 38.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೀದರ್&zwnj;ನಲ್ಲಿ 37.8, ಬಳ್ಳಾರಿ 37.3, ವಿಜಯಪುರ ಮತ್ತು ಧಾರವಾಡದಲ್ಲಿ ತಲಾ 37 ಹಾಗೂ ಬಾಗಲಕೋಟೆಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.&lt;/p&gt;&lt;p&gt;ದಕ್ಷಿಣ ಒಳನಾಡಿನ ಮೂಡಿಗೆರೆ, ಬೆಂಗಳೂರು ಜಿಕೆವಿಕೆ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.6 ಡಿಗ್ರಿ ಸೆಲ್ಸಿಯಸ್, ಚಂದೂರಾಯನಹಳ್ಳಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.&lt;/p&gt;&lt;p&gt;ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದ್ದು, ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-temperature-drops-below-40-degrees-in-most-places-rav/articleshow-xy4to4h"/>
        </item>
        <item>
            <title><![CDATA[ಸೂರ್ಯಕಾಂತಿ ರೈತರಿಗೆ ಸಿಹಿಸುದ್ದಿ ನೀಡಿದ ಸರ್ಕಾರ; ಫಿಕ್ಸ್ ಆಯ್ತು ಪ್ರತಿ ಕ್ವಿಂಟಾಲ್‌ ದರ]]></title>
            <link>https://kannada.asianetnews.com/karnataka-districts/minister-shivanand-patil-order-to-purchase-sunflower-at-rs-7721-per-quintal-under-support-price-scheme-mrq/articleshow-tbfgwo0</link>
            <guid isPermaLink="true">https://kannada.asianetnews.com/karnataka-districts/minister-shivanand-patil-order-to-purchase-sunflower-at-rs-7721-per-quintal-under-support-price-scheme-mrq/articleshow-tbfgwo0</guid>
            <pubDate>Sat, 09 May 2026 07:57:27 +0530</pubDate>
            <description><![CDATA[ಸಚಿವ ಶಿವಾನಂದ ಪಾಟೀಲ ಅವರು 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್&zwnj;ಗೆ ₹7,721 ದರದಲ್ಲಿ ಖರೀದಿಸಲು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯದ 11 ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗೆ ನಿರ್ದಿಷ್ಟ ಸಂಸ್ಥೆಗಳನ್ನು ನೇಮಕ ಮಾಡಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr587mpzdsxd53gtyc07aab1,imgname-sunflower-1778292871903.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ:&lt;/strong&gt; ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್&zwnj;ಗೆ ₹7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶಿಸಿದ್ದಾರೆ.&lt;/p&gt;&lt;h2&gt;&lt;strong&gt;ಖರೀದಿ ಕೇಂದ್ರ ತೆರೆತಲಯ&lt;/strong&gt;&lt;/h2&gt;&lt;p&gt;ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದಾರೆ.&amp;nbsp;&lt;/p&gt;&lt;p&gt;ನಾಫೆಡ್&zwnj; ಮತ್ತು ಎನ್&zwnj;ಸಿಸಿಎಫ್&zwnj; ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಲಾಗಿದೆ.&lt;/p&gt;&lt;h3&gt;&lt;strong&gt;ನೋಂದಣಿ ಅವಧಿ 60 ದಿನಕ್ಕೆ ಹೆಚ್ಚಳ&lt;/strong&gt;&lt;/h3&gt;&lt;p&gt;ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದೆ. ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್&zwnj; ಫೋರ್ಸ್&zwnj; ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು. ನೋಂದಣಿ ಮತ್ತು ಖರೀದಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಸಿದ್ಧತೆ ಮಾಡಿಕೊಂಡು ಪ್ರಕ್ರಿಯೆ ಆರಂಭಿಸಬೇಕು ಎಂದು ಸೂಚಿಸಿದ್ದಾರೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕಾಂಗ್ರೆಸ್ಸಿಂದ ನಮ್ಮನ್ನು ದೂರ ಕೂರಿಸಿ; ಸ್ಪೀಕರ್&zwnj;ಗೆ ಡಿಎಂಕೆ ಮನವಿ, ಇಂಡಿ ಕೂಟಕ್ಕೂ ವಿದಾಯ ಸಂಭವ&lt;/strong&gt;&lt;/p&gt;&lt;p&gt;ರೈತರ ಹೆಸರಿನಲ್ಲಿ ವರ್ತಕರು ಮತ್ತು ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು. ಖರೀದಿ ಪ್ರಗತಿ ವಿವರವನ್ನು ಪ್ರತಿ ದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಒದಗಿಸಬೇಕು ಎಂದು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಂಗಾಳಕ್ಕೆ ಸುವೇಂದು ಅಧಿಕಾರಿ ಮೊದಲ ಬಿಜೆಪಿ ಸಿಎಂ! ದೀದಿ ಆಳ್ವಿಕೆಗೆ ಅಂತ್ಯ, ದಾದಾ ಸಾಮ್ರಾಜ್ಯ ಆರಂಭ!&lt;/strong&gt;&lt;/p&gt;&lt;p&gt;------&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/minister-shivanand-patil-order-to-purchase-sunflower-at-rs-7721-per-quintal-under-support-price-scheme-mrq/articleshow-tbfgwo0"/>
        </item>
        <item>
            <title><![CDATA[Umesh Meti Kodimath visit: ಕೋಡಿಮಠ ಶ್ರೀಗಳಗೆ ಬೆಳ್ಳಿ ಕೀರಿಟ ಅರ್ಪಿಸಿದ ಶಾಸಕ ಉಮೇಶ್ ಮೇಟಿ]]></title>
            <link>https://kannada.asianetnews.com/karnataka-districts/bagalkote-new-mla-umesh-meti-presents-silver-crown-to-kodimath-sri-rav/articleshow-y03eqi4</link>
            <guid isPermaLink="true">https://kannada.asianetnews.com/karnataka-districts/bagalkote-new-mla-umesh-meti-presents-silver-crown-to-kodimath-sri-rav/articleshow-y03eqi4</guid>
            <pubDate>Sat, 09 May 2026 07:43:12 +0530</pubDate>
            <description><![CDATA[ಬಾಗಲಕೋಟೆ ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕ ಉಮೇಶ್ ಮೇಟಿ, ಅರಸೀಕೆರೆಯ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿದರು. ಅವರು ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರಿಗೆ ಬೆಳ್ಳಿ ಕಿರೀಟ ಅರ್ಪಿಸಿ, ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kr57tap3vw5q41d5wtdxz274,imgname-----------------------2026-05-09t073644.901-1778292435651.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಅರಸೀಕೆರೆ ಮೇ.9): &lt;/strong&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ನೂತನ ಶಾಸಕ ಉಮೇಶ್ ಮೇಟಿ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಬೆಳ್ಳಿ ಕಿರೀಟ ಅರ್ಪಿಸಿ ಆಶೀರ್ವಾದ ಪಡೆದರು.&lt;/p&gt;&lt;p&gt;ಗುರುವಾರ ರಾತ್ರಿ ಮಠಕ್ಕೆ ಆಗಮಿಸಿದ ಉಮೇಶ್ ಮೇಟಿ ಮಠದಲ್ಲಿನ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಸ್ವಾಮೀಜಿಗೆ ರಜತ ಕಿರೀಟ ಧಾರಣೆ ಮಾಡಿ ಭಕ್ತಿಭಾವ ಸಮರ್ಪಿಸಿದರು. ಉಮೇಶ್ ಮೇಟಿ ಹಾಗೂ ಶ್ರೀಗಳ ನಡುವೆ 1 ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆದಿರುವುದು ವಿಶೇಷ ಗಮನ ಸೆಳೆಯಿತು.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Blackmail Utsav: ಯಾವ ಪುರುಷಾರ್ಥಕ್ಕೆ ಯಡಿಯೂರಪ್ಪ ಅಭಿಮಾನೋತ್ಸವ? ಯತ್ನಾಳ್ ಟೀಕೆ&lt;/p&gt;&lt;p&gt;ರಾಜಕೀಯವಾಗಿ ತಮ್ಮ ಮುಂದಿನ ನಡೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ವಿಚಾರಗಳ ಕುರಿತು ಶ್ರೀಗಳ ಮಾರ್ಗದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಮಠದ ಮೂಲಗಳಿಂದ ತಿಳಿದುಬಂದಿದೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkote-new-mla-umesh-meti-presents-silver-crown-to-kodimath-sri-rav/articleshow-y03eqi4"/>
        </item>
        <item>
            <title><![CDATA[ಚಾಮರಾಜನಗರ: ಸಲೂನ್‌ಗೆ ಬಂದ ಮಂಗಕ್ಕೆ ಹೇರ್‌ ಕಟ್ ಮಾಡಿಸಿದ ಕ್ಷೌರಿಕ!]]></title>
            <link>https://kannada.asianetnews.com/karnataka-districts/chamarajanagar-barber-gives-haircut-to-monkey-that-walked-into-salon-rav/articleshow-0ng3k3m</link>
            <guid isPermaLink="true">https://kannada.asianetnews.com/karnataka-districts/chamarajanagar-barber-gives-haircut-to-monkey-that-walked-into-salon-rav/articleshow-0ng3k3m</guid>
            <pubDate>Sat, 09 May 2026 07:18:38 +0530</pubDate>
            <description><![CDATA[ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಸಲೂನ್&zwnj; ಒಂದಕ್ಕೆ ನಿತ್ಯ ಭೇಟಿ ನೀಡುತ್ತಿದ್ದ ಕೋತಿಗೆ, ಅದರ ಮಾಲೀಕ ದೇವರಾಜ್ ತಮಾಷೆಗಾಗಿ ಹೇರ್&zwnj; ಸ್ಟೈಲ್ ಮಾಡಿದ್ದಾರೆ. ಮನುಷ್ಯರಂತೆ ತಲೆಬಗ್ಗಿಸಿ ಕುಳಿತು ಕೋತಿ ಸಹಕರಿಸಿದ್ದು, ಈ ಅಪರೂಪದ ಘಟನೆಯನ್ನು ಗ್ರಾಹಕರೊಬ್ಬರು ವೀಡಿಯೋ ಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr56eg5jzpnzvf2wz48pn8pc,imgname-----------------------2026-05-09t071229.412-1778290999474.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಚಾಮರಾಜನಗರ (ಮೇ.9) &lt;/strong&gt;ಚೇಷ್ಟೆಗೆ ಹೆಸರಾಗಿರುವ ಕೋತಿಗಳು ಒಮ್ಮೊಮ್ಮೆ ತಮ್ಮ ವಿಶೇಷ ವರ್ತನೆಗಳಿಂದ ಎಲ್ಲರ ಗಮನ ಸೆಳೆಯುತ್ತವೆ. ಜೊತೆಗೆ, ನೋಡುಗರ&zwnj;&zwnj; ಮೊಗದಲ್ಲಿ ನಗುವನ್ನು ಉಕ್ಕಿಸುತ್ತವೆ. ಅದರಂತೆ, ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಕೋತಿಗೆ ಹೇರ್&zwnj; ಸ್ಟೈಲ್ ಮಾಡಿದ ಅಪರೂಪದ ಘಟನೆ ನಡೆದಿದೆ.&lt;/p&gt;&lt;p&gt;ಗ್ರಾಮದ ದೇವು ಸಲೂನ್ ಎಂಬಲ್ಲಿಗೆ ಕೋತಿಯೊಂದು ದಿನವೂ ಬಂದು ಹೋಗುತ್ತಿತ್ತು.&zwnj; ಕನ್ನಡಿ&zwnj; ನೋಡುತ್ತಾ ಕುಳಿತುಕೊಳ್ಳುತ್ತಿತ್ತು.&zwnj; ಇದನ್ನು ಗಮನಿಸಿದ ಸಲೂನ್ ಮಾಲೀಕ ದೇವರಾಜ್&zwnj; ಗದರಿಸಿದರೂ&zwnj; ಕೋತಿ ಸಲೂನ್ ಬಿಟ್ಟು ಹೋಗುತ್ತಿರಲಿಲ್ಲ.&lt;/p&gt;&lt;p&gt;ಗುರುವಾರದಂದು ಸಲೂನ್&zwnj;ಗೆ ಬಂದ ಮಂಗನನ್ನು ಕಂಡ ದೇವರಾಜ್ ಮೊದಲು ತಲೆ ಬಾಚಿದ್ದಾರೆ. ಪ್ರೀತಿಯಿಂದ ತಲೆ ಬಾಚಿದ್ದನ್ನು ಗಮನಿಸಿದ ಕೋತಿ ಮನುಷ್ಯರಂತೆ ತಲೆ ಬಗ್ಗಿಸಿ ಕುಳಿತಿದೆ.&zwnj; ನಂತರ ಹೇರ್&zwnj; ಸ್ಟೈಲ್ ಮಾಡಿದ್ದು, ಅಲ್ಲಿಯೇ ಇದ್ದ ಗ್ರಾಹಕರೊಬ್ಬರು ವಿಡಿಯೋ ಸೆರೆ ಹಿಡಿದಿದ್ದಾರೆ.&lt;/p&gt;&lt;p&gt;ಈ ಕುರಿತು ದೇವರಾಜು ಮಾತನಾಡಿ, ಗುಂಪೊಂದರಲ್ಲಿ ಇದ್ದ ಈ ಮಂಗ ದಿನನಿತ್ಯ ಸಲೂನ್ ಬಳಿ ಬರುತ್ತಿತ್ತು. ಎಷ್ಟೇ ಗದರಿಸಿದರೂ ನನ್ನ ಕೆಲಸ ಮುಗಿಯುವವರೆಗೂ ಅಲ್ಲಿಂದ ಕದಲುತ್ತಿರಲಿಲ್ಲ. ತಮಾಷೆಗಾಗಿ ತಲೆ ಬಾಚಿದೆ, ಕೋತಿ ತಲೆ ಬಗ್ಗಿಸಿ ಕುಳಿತು ಮತ್ತಷ್ಟು ತಲೆ ಬಾಚುವಂತೆ ಕೇಳಿಕೊಳ್ಳುವಂತೆ ವರ್ತಿಸಿದಾಗ ಹೇರ್&zwnj;ಸ್ಟೈಲ್ ಮಾಡಿದೆ ಎಂದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chamarajanagar-barber-gives-haircut-to-monkey-that-walked-into-salon-rav/articleshow-0ng3k3m"/>
        </item>
        <item>
            <title><![CDATA[ಕಾಣೆಯಾಗಿದ್ದ 1.5 ವರ್ಷದ ಮಗು, ಇಡೀ ರಾತ್ರಿ ಕತ್ತಲು, ಮಳೆಗೆ ಹಳ್ಳದಲ್ಲೇ ಕೂತಿದ್ದ ಕಂದನ ಪೊಲೀಸರು ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?]]></title>
            <link>https://kannada.asianetnews.com/karnataka-districts/rescue-of-1-5-year-old-child-trapped-in-ditches-overnight-at-kottigehar-chikkamagaluru-rav/articleshow-zht6fw8</link>
            <guid isPermaLink="true">https://kannada.asianetnews.com/karnataka-districts/rescue-of-1-5-year-old-child-trapped-in-ditches-overnight-at-kottigehar-chikkamagaluru-rav/articleshow-zht6fw8</guid>
            <pubDate>Sat, 09 May 2026 07:04:30 +0530</pubDate>
            <description><![CDATA[ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಸ್ಟೇಟೊಂದರಲ್ಲಿ ಕಾಣೆಯಾಗಿದ್ದ ಒಂದೂವರೆ ವರ್ಷದ ಮಗುವನ್ನು ಪೊಲೀಸರು 12 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಸುರಕ್ಷಿತವಾಗಿ ಪತ್ತೆಹಚ್ಚಿದ್ದಾರೆ. ಡ್ರೋನ್&zwnj; ಹಾಗೂ ಶ್ವಾನ ದಳ ಬಳಸಿ ನಡೆಸಿದ ಶೋಧದಲ್ಲಿ, ಮಗು ಮನೆಯ ಸಮೀಪದ ಹಳ್ಳದಲ್ಲಿ ಪತ್ತೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr55y4zwf47029p8yp61n6xy,imgname-----------------------2026-05-09t065133.151-1778290463740.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಚಿಕ್ಕಮಗಳೂರಿನ ಎಸ್ಟೇಟಲ್ಲಿ ಕಾಣೆ ಆಗಿದ್ದ ಮಗು&lt;/li&gt; &lt;li&gt;ಮಗುವಿಗಾಗಿ 12 ಗಂಟೆ ಹುಡುಕಾಟಿದ ಪೊಲೀಸರು&lt;/li&gt;&lt;/ul&gt;&lt;p&gt;&lt;strong&gt;ಕೊಟ್ಟಿಗೆಹಾರ (ಚಿಕ್ಕಮಗಳೂರು): &lt;/strong&gt;ಸತತ 12 ಗಂಟೆ ಕಾಲ ಏಕಾಂಗಿಯಾಗಿ ಕಡು ಕತ್ತಲೆ, ಮಳೆಯಲ್ಲಿ ಇಡೀ ರಾತ್ರಿ ಕಳೆದ ಒಂದೂವರೆ ವರ್ಷದ ಮಗುವನ್ನು ಪೊಲೀಸರು ಸುರಕ್ಷಿತವಾಗಿ ಪತ್ತೆ ಮಾಡಿ ಸಂರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣೆ ವ್ಯಾಪ್ತಿ ನಡೆದಿದೆ.&lt;/p&gt;&lt;p&gt;ಮಧ್ಯಪ್ರದೇಶದ ಭೋಪಾಲ್ ಮೂಲದ ಗೋನು ಹಾಗೂ ಸೋನಾ ದಂಪತಿ ಮೂರು ದಿನಗಳ ಹಿಂದೆ ಕೆಲಸಕ್ಕಾಗಿ ಕೆಳಗೂರು ಟೀ ಎಸ್ಟೇಟ್&zwnj;ಗೆ ಬಂದಿದ್ದರು. ಇವರ ಮಗ ಒಂದೂವರೆ ವರ್ಷದ ಶಿವಂ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಾಣೆಯಾಗಿದ್ದನು. ಹುಡುಕಾಟ ನಡೆಸಿದ ಫೋಷಕರು ಬಾಳೂರು ಪೊಲೀಸ್&zwnj; ಠಾಣೆಗೆ ದೂರು ಸಲ್ಲಿಸಿದ್ದರು. ಪೊಲೀಸರು, ಎಸ್ಟೇಟ್&zwnj; ಸಿಬ್ಬಂದಿ, ಪೋಷಕರು ಗುರುವಾರ ತಡ ರಾತ್ರಿ ವರೆಗೆ ಹುಡುಕಾಟ ನಡೆಸಿದ್ದರು. ಆದರೂ ಮಗು ಪತ್ತೆಯಾಗಿರಲಿಲ್ಲ.&lt;/p&gt;&lt;p&gt;ಶುಕ್ರವಾರ ಬೆಳಗ್ಗೆ ಡಾಗ್&zwnj; ಸ್ಕ್ವಾಡ್&zwnj; ಹಾಗೂ ಥರ್ಮಲ್&zwnj; ಡ್ರೋನ್&zwnj; ಬಳಸಿ ಕಾರ್ಯಾಚರಣೆ ಮುಂದುವರಿಸಲಾಯಿತು. ಈ ವೇಳೆ ಮನೆಯಿಂದ ಸುಮಾರು 350 ಮೀಟರ್&zwnj; ದೂರದಲ್ಲಿ ಇರುವ ಹಳ್ಳದಲ್ಲಿ ಮಗು ಪತ್ತೆಯಾಗಿದೆ. ಮಗುವನ್ನು ಫೋಷಕರಿಗೆ ನೀಡಲಾಗಿದೆ. ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್ ನೇತೃತ್ವದಲ್ಲಿ ತೀವ್ರ ಶೋಧ ನಡೆಸಿ, ಸುಮಾರು 12 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಕಾಣೆಯಾಗಿದ್ದ ಶಿವಂನನ್ನು ಪೊಲೀಸರು ಸುರಕ್ಷಿತವಾಗಿ ಪತ್ತೆ ಹಚ್ಚಿ ಕುಟುಂಬದವರಿಗೆ ಒಪ್ಪಿಸಿದ್ದಾರೆ.&lt;/p&gt;&lt;p&gt;ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿದ ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್, ದೂರು ಬಂದ ತಕ್ಷಣ ಹುಡುಕಾಟ ಆರಂಭಿಸಲಾಯಿತು. ಆದರೂ ಮಗು ಪತ್ತೆಯಾಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ಮುಂದುವರಿಸಲಾಯಿತು. ಫೋಷಕರು ವಾಸವಿದ್ದ, ಮನೆಯಿಂದ ಕೇವಲ 350 ಮೀ. ದೂರದ ಸುಮಾರು 9 ಅಡಿ ಹಳ್ಳದಲ್ಲಿ ಮಗು ಪತ್ತೆಯಾಗಿದೆ. ರಾತ್ರಿ ಇಡೀ ಮಗು ಏಕಾಂಗಿಯಾಗಿ ಹಳ್ಳದಲ್ಲಿತ್ತು. ಸುಮಾರು 150ಕ್ಕೂ ಅಧಿಕ ಸಿಬ್ಬಂದಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು ಎಂದು ಹೇಳಿದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rescue-of-1-5-year-old-child-trapped-in-ditches-overnight-at-kottigehar-chikkamagaluru-rav/articleshow-zht6fw8"/>
        </item>
        <item>
            <title><![CDATA[ಪ್ರಧಾನಿ ಮೋದಿ ಆಗಮನ: ನಾಳೆ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲು]]></title>
            <link>https://kannada.asianetnews.com/state/pm-modi-s-arrival-bengaluru-vehicle-traffic-route-changes-in-the-city-tomorrow-rav/articleshow-pkyy26u</link>
            <guid isPermaLink="true">https://kannada.asianetnews.com/state/pm-modi-s-arrival-bengaluru-vehicle-traffic-route-changes-in-the-city-tomorrow-rav/articleshow-pkyy26u</guid>
            <pubDate>Sat, 09 May 2026 06:33:59 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ, ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆಗಳನ್ನು ಮಾಡಲಾಗಿದೆ. ಕನಕಪುರ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, &amp;nbsp;ನೈಸ್ ರಸ್ತೆ ತಾತ್ಕಾಲಿಕ ನಿರ್ಬಂಧ. ಸಾರ್ವಜನಿಕರ ಅನುಕೂಲಕ್ಕಾಗಿ ಪೊಲೀಸರು ಪರ್ಯಾಯ ಮಾರ್ಗಗಳು ಸೂಚನೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr53xq8mccw3p9ks6tgfk5df,imgname-----------------------2026-05-09t062853.264-1778288352531.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು ಮೇ.(9): &lt;/strong&gt;ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಅವರ ಆರ್ಟ್&zwnj; ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ನಗರಕ್ಕೆ ಪ್ರಧಾನಿ ಮಂತ್ರಿ ಅವರು ಆಗಮಿಸಲಿದ್ದಾರೆ. ಅದೇ ದಿನ ಎಚ್&zwnj;ಎಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಲಿರುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.&lt;/p&gt;&lt;p&gt;&lt;strong&gt;ತಾತ್ಕಾಲಿಕ ಸಂಚಾರ-ನಿಲುಗಡೆ ನಿರ್ಬಂಧಿತ ಸ್ಥಳಗಳು&lt;/strong&gt;&lt;/p&gt;&lt;ul&gt; &lt;li&gt;ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿ&lt;/li&gt; &lt;li&gt;ಹೆಚ್&zwnj;ಎಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್&zwnj;ನಿಂದ ಗೇಟ್ ನಂ.30 ರವರೆಗೆ&lt;/li&gt; &lt;li&gt;ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್&zwnj;ಡಿ ರಸ್ತೆ ಜಂಕ್ಷನ್&zwnj;ನಿಂದ ಟ್ರಿನಿಟಿ ಜಂಕ್ಷನ್&zwnj;&lt;/li&gt; &lt;li&gt;ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ನೈಸ್ ರಸ್ತೆಯಲ್ಲಿ ಸಂಚಾರ ನಿರ್ಬಂಧ&lt;/li&gt;&lt;/ul&gt;&lt;h3&gt;ಎಲ್ಲೆಲ್ಲಿ ವಾಹನ ನಿಲುಗಡೆ ಸ್ಥಳಗಳು&lt;/h3&gt;&lt;p&gt;ಗಣ್ಯರು ಮತ್ತು ಹಿರಿಯ ಅಧಿಕಾರಿಗಳಿಗೆ- ಹೆಚ್.ಎ.ಎಲ್ ಟ್ರಾನ್ಸ್&zwnj;ಪೋರ್ಟ್ ಡಿಪಾರ್ಟ್&zwnj;ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್). ಹೆಚ್&zwnj;ಎಎಲ್ ಬಸ್ ಯಾರ್ಡ್ ಪಾರ್ಕಿಂಗ್ (ಸುರಂಜನ್ ದಾಸ್ ರಸ್ತೆ). ಸಾರ್ವಜನಿಕರಿಗೆ- 08:30ರ ಒಳಗಾಗಿ ಏರ್ಪೋರ್ಟ್ ಎಕ್ಸಿಟ್ ರಸ್ತೆ ಗೇಟ್ ನಂ 2 ಮಾರ್ಗವಾಗಿ ವಿಶ್ವೇಶ್ವರಯ್ಯ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.&lt;/p&gt;&lt;h3&gt;ಪರ್ಯಾಯ ಮಾರ್ಗಗಳು&amp;nbsp;&lt;/h3&gt;&lt;p&gt;ತುಮಕೂರು ರಸ್ತೆಯಿಂದ ನೈಸ್ ರಸ್ತೆ ಮೂಲಕ ಕನಕಪುರ ರಸ್ತೆಗೆ ಹೋಗುವವರು: ಸಿ.ಎಂ.ಟಿ.ಐ ಜಂಕ್ಷನ್ ಬಳಿ ಬಲ ತಿರುವು ಪಡೆದು ರಾಜಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಾಗಬೇಕು.ನಗರದ ಒಳಗಿನಿಂದ ತುಮಕೂರು ರಸ್ತೆ ಮೂಲಕ ಕನಕಪುರ ರಸ್ತೆಗೆ ಹೋಗುವವರು: ಸಿ.ಎಂ.ಟಿ.ಐ ಜಂಕ್ಷನ್ ಬಳಿ ಎಡ ತಿರುವು ಪಡೆದು ರಾಜಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು.&lt;/p&gt;&lt;p&gt;ಮಾಗಡಿ ರಸ್ತೆಯಿಂದ ಕನಕಪುರ ರಸ್ತೆಗೆ: ಸುಮನ್ ಹಳ್ಳಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಸಾಗಬೇಕು, ನಗರದಿಂದ ಮಾಗಡಿ ರಸ್ತೆ ಮೂಲಕ ಕನಕಪುರ ರಸ್ತೆಗೆ: ಸುಮನ್ ಹಳ್ಳಿ ಜಂಕ್ಷನ್ ಬಳಿ ಎಡ ತಿರುವು ಪಡೆದು ಸಾಗಬೇಕು. ಮೈಸೂರು ರಸ್ತೆ (ಕೆಂಗೇರಿ) ಕನಕಪುರ ರಸ್ತೆಗೆ: ನಾಯಂಡಹಳ್ಳಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಸಾಗಬೇಕು. ಮೈಸೂರು ರಸ್ತೆ ಮತ್ತು ಹೊಸಕೆರೆಹಳ್ಳಿ ರಸ್ತೆ ಮೂಲಕ ಕನಕಪುರ ರಸ್ತೆಗೆ: ನಾಯಂಡಹಳ್ಳಿ ಜಂಕ್ಷನ್ ಬಳಿ ಎಡ ಮತ್ತು ಬಲ ತಿರುವು ಪಡೆದು ಔಟರ್&zwnj;ರಿಂಗ್&zwnj; ರಸ್ತೆಯಲ್ಲಿ ಸಾಗಬೇಕು.&lt;/p&gt;&lt;p&gt;ನೈಸ್ ರಸ್ತೆ ಸೋಂಪುರ ಕ್ಲೋವರ್ ಲೀಫ್ ಜಂಕ್ಷನ್&zwnj;ನಿಂದ ಕನಕಪುರ ಮುಖ್ಯರಸ್ತೆಯವರೆಗೆ: ಮೈಸೂರು ರಸ್ತೆ ಕೆಂಗೇರಿ ಮೂಲಕ ಉತ್ತರಹಳ್ಳಿ, ವಸಂತಪುರ ಕ್ರಾಸ್ ಸೇರಿ ಕೋಣನಕುಂಟೆ ಕ್ರಾಸ್&zwnj; ಹಾದು ಬನ್ನೇರುಘಟ್ಟ ರಸ್ತೆ ಸೇರಬೇಕು.&lt;/p&gt;&lt;p&gt;ಕನಕಪುರ ಮುಖ್ಯರಸ್ತೆ ನೈಸ್ ರಸ್ತೆ ಜಂಕ್ಷನ್&zwnj;ನಿಂದ ಸೋಂಪುರ ಕ್ಲೋವರ್ ಲೀಫ್ ಜಂಕ್ಷನ್&zwnj;ವರೆಗೆ: ಎಲೆಕ್ಟ್ರಾನಿಕ್ ಸಿಟಿ/ಬನ್ನೇರುಘಟ್ಟ ಕಡೆಯಿಂದ ಬರುವವರು ಬಿಡಿಎ ಜಂಕ್ಷನ್&zwnj;ನಲ್ಲಿ ಎಡಕ್ಕೆ ತಿರುಗಿ ಅಂಜನಾಪುರ 80 ಅಡಿ ರಸ್ತೆ ಮೂಲಕ ಕೆ.ಎಸ್.ಐ.ಟಿ ಜಂಕ್ಷನ್ ತಲುಪಿ ಕೆಂಗೇರಿ/ಮೈಸೂರು ರಸ್ತೆ ಸೇರಬೇಕು.&lt;/p&gt;&lt;h3&gt;ಕನಕಪುರ ಮುಖ್ಯರಸ್ತೆ ಎ2ಬಿ &amp;nbsp;ಜಂಕ್ಷನ್&zwnj;ನಿಂದ ನೈಸ್ ರಸ್ತೆ ಜಂಕ್ಷನ್&zwnj;ವರೆಗೆ&amp;nbsp;&lt;/h3&gt;&lt;p&gt;ಮಾರ್ಗ-01:ಕೋಣನಕುಂಟೆ ಕ್ರಾಸ್&zwnj;ನಲ್ಲಿ ಬಲ ತಿರುವು ಪಡೆದು ಉತ್ತರಹಳ್ಳಿ ಮೂಲಕ ಕೆಂಗೇರಿ ಮೈಸೂರು ರಸ್ತೆ ತಲುಪಿ, ನಂತರ ಅಗ್ರ, ಬಂಜಾರಪಾಳ್ಯ ರಸ್ತೆ ಮೂಲಕ ಕಗ್ಗಲಿಪುರದಲ್ಲಿ ಬಲಕ್ಕೆ ತಿರುಗಿ ಕನಕಪುರ ರಸ್ತೆ ಸೇರುವುದು. ಮಾರ್ಗ-02: ಕನಕಪುರ ಮುಖ್ಯರಸ್ತೆ ಎ2ಬಿ ಜಂಕ್ಷನ್&zwnj;ನಲ್ಲಿ ಎಡ ತಿರುವು ಪಡೆದು ನಾರಾಯಣ ನಗರ ಜೋಡಿ ರಸ್ತೆ, ಅಂಜನಾಪುರ 80 ಅಡಿ ರಸ್ತೆ ಮೂಲಕ ಬನ್ನೇರುಘಟ್ಟ ಮುಖ್ಯರಸ್ತೆಯ ಮೂಲಕ ಕಗ್ಗಲಿಪುರಕ್ಕೆ ಸಾಗಬಹುದು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/pm-modi-s-arrival-bengaluru-vehicle-traffic-route-changes-in-the-city-tomorrow-rav/articleshow-pkyy26u"/>
        </item>
        <item>
            <title><![CDATA[ಬಂಗಾಳದಲ್ಲಿ SIR ಗೆ ಸೋತ ಮೇಡಂ; ರಾಜ್ಯದಲ್ಲಿ 'ಕೈ' ಅಲರ್ಟ್!]]></title>
            <link>https://kannada.asianetnews.com/state/karnataka-voter-list-revision-alert-cm-dcm-hold-emergency-meeting-rav/articleshow-l7nhr7m</link>
            <guid isPermaLink="true">https://kannada.asianetnews.com/state/karnataka-voter-list-revision-alert-cm-dcm-hold-emergency-meeting-rav/articleshow-l7nhr7m</guid>
            <pubDate>Sat, 09 May 2026 04:46:46 +0530</pubDate>
            <description><![CDATA[&lt;p&gt;ಪಶ್ಚಿಮ ಬಂಗಾಳದಲ್ಲಿ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ (ಎಸ್&zwnj;ಐಆರ್&zwnj;) ಪ್ರಕ್ರಿಯೆ ಬಗ್ಗೆ ಕರ್ನಾಟಕದಲ್ಲಿಯೂ ಆತಂಕ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ. ರಾಜ್ಯದಲ್ಲಿ ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲು ವಿವಿಧ ಸಂಘಟನೆಗಳು ಒತ್ತಾಯಿಸಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr4xzrm0qgzk4a6dspeca4z6,imgname-----------------------2026-05-09t044509.546-1778282127999.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಪಶ್ಚಿಮ ಬಂಗಾಳದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ&lt;/li&gt; &lt;li&gt;ರಾಜ್ಯದಲ್ಲೂ ಪರಿಷ್ಕರಣೆಗೆ ಪೂರ್ವ ಪ್ರಕ್ರಿಯೆಗಳಿಗೆ ಚುನಾವಣಾ ಆಯೋಗದ ಸಿದ್ಧತೆ ಶುರು&lt;/li&gt; &lt;li&gt;ಈ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ಜೊತೆಗೆ ವಿವಿಧ ಸಂಘಟನೆಗಳಿಂದ ಸಮಾಲೋಚನೆ&lt;/li&gt; &lt;li&gt;ರಾಜ್ಯದಲ್ಲಿ ಪರಿಷ್ಕರಣೆ ತಡೆ ಇಲ್ಲವೇ ಪ್ರಕ್ರಿಯೆ ಮೇಲೆ ತೀವ್ರ ನಿಗಾಕ್ಕೆ ಸರ್ಕಾರಕ್ಕೆ ಮನವಿ&lt;/li&gt; &lt;li&gt;ಶಾಸಕರ ಜೊತೆಗೆ ಚರ್ಚಿಸಿ ಮತ್ತೊಮ್ಮೆ ನಿಮ್ಮೊಂದಿಗೆ ಸಮಾಲೋಚಿಸುವೆ: ಸಭೆಗೆ ಸಿಎಂ&lt;/li&gt;&lt;/ul&gt;&lt;p&gt;&lt;strong&gt;ಬೆಂಗಳೂರು (ಮೇ.9):&lt;/strong&gt; ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ (ಎಸ್&zwj;ಐಆರ್) ಉಂಟಾಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ್ದು, ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಅರ್ಹರ ಮತದಾನದ ಹಕ್ಕು ಸಂರಕ್ಷಿಸಬೇಕು ಎಂದು ಚರ್ಚಿಸಲಾಗಿದೆ.&lt;/p&gt;&lt;p&gt;ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಸೇರಿ ಪ್ರಮುಖ ಸಚಿವರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.&lt;/p&gt;&lt;p&gt;ಎಸ್&zwnj;ಐಆರ್&zwnj; ಜಾರಿಗೆ ಈಗಾಗಲೇ ಮ್ಯಾಪಿಂಗ್&zwnj; ಶುರುವಾಗಿದ್ದು, ಇದರಲ್ಲಿ ಸಾಕಷ್ಟು ಲೋಪದೋಷಗಳಿವೆ. ಆದರೂ ಈ ಬಗ್ಗೆ ಸರ್ಕಾರ ಇನ್ನೂ ವಿರೋಧ ವ್ಯಕ್ತಪಡಿಸಿಲ್ಲ. ಪಶ್ಚಿಮ ಬಂಗಾಳ ಸೇರಿ ಎಸ್ಐಆರ್&zwnj; ನಡೆದಿರುವ 10 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶದಲ್ಲಿ 7 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಎಸ್&zwnj;ಐಆರ್&zwnj;ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರನ್ನು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು.&lt;/p&gt;&lt;p&gt;ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್&zwnj;ಐಆರ್&zwnj; ಬಗ್ಗೆ ಎಲ್ಲಾ ರಾಜ್ಯಗಳಲ್ಲೂ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದಲ್ಲಿ 90 ಲಕ್ಷ ಮತದಾರರನ್ನು ಪಟ್ಟಿಯಿಂದ ಕಿತ್ತು ಹಾಕಿದ್ದು, 27 ಲಕ್ಷ ಮತದಾರರ ಪರಿಶೀಲನಾ ಅರ್ಜಿ ಬಾಕಿ ಇರುವಾಗಲೇ ಚುನಾವಣೆ ಮುಗಿದು ಹೋಗಿದೆ. ಅಷ್ಟೂ ಮಂದಿ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ.&lt;/p&gt;&lt;p&gt;ಇದು ಚುನಾವಣಾ ಕಣದಿಂದ ಮತದಾರರನ್ನು ಹೊರನೂಕುವ, ಪ್ರಜಾಸತ್ತಾತ್ಮಕ ವಿರೋಧಿ, ಅವೈಜ್ಞಾನಿಕ ಪ್ರಕ್ರಿಯೆ. ಹೀಗಾಗಿ ರಾಜ್ಯದಲ್ಲಿ ವ್ಯವಸ್ಥಿತವಾಗಿ ಎಸ್&zwnj;ಐಆರ್&zwnj; ಜಾರಿಗೆ ಹಾಗೂ ಎಸ್&zwnj;ಐಆರ್&zwnj; ಬಳಿಕವೂ ಮತದಾರರ ಹಕ್ಕು ರಕ್ಷಿಸಿಕೊಳ್ಳಲು ಏನು ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಯಿತು.&lt;/p&gt;&lt;h2&gt;ಸಭೆಯಲ್ಲಿ ವ್ಯಕ್ತವಾದ ಸಲಹೆಗಳೇನು?:&lt;/h2&gt;&lt;p&gt;- ಚುನಾವಣಾ ಆಯೋಗವು 2025ರ ಜೂನ್&zwj;ನಿಂದ ಎಸ್&zwj;ಐಆರ್ ಅನ್ನು ಪರಿಚಯಿಸಿತು. ಬಳಿಕ ಅದನ್ನು ಅನುಷ್ಠಾನಗೊಳಿಸಿದ ರೀತಿಯಿಂದಾಗಿ ಎಸ್ಐಆರ್&zwnj; ವಿಶ್ವಾಸಾರ್ಹತೆ ಕಳೆದುಕೊಂಡಿದೆ. ಸಂವಿಧಾನದ 324ನೇ ವಿಧಿ ಪ್ರಕಾರ ತನ್ನ ಕರ್ತವ್ಯ ನಿಭಾಯಿಸಲು ಆಯೋಗ ಸಂಪೂರ್ಣ ವಿಫಲವಾಗಿದೆ. ಜನರ ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ಹಕ್ಕು ರಕ್ಷಿಸಲು ಸುಪ್ರೀಂ ಕೋರ್ಟ್ ಸಹ ವಿಫಲವಾಗಿದೆ. ಹೀಗಾಗಿ ರಾಜ್ಯದಲ್ಲಿ ಎಸ್ಐಆರ್&zwnj; ಜಾರಿ ವೇಳೆ ತುಂಬಾ ಎಚ್ಚರಿಕೆ ವಹಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.&lt;/p&gt;&lt;p&gt;ಈ ಹಂತದಲ್ಲಿ ಎಸ್&zwnj;ಐಆರ್&zwnj; ಜಾರಿಗೆ ಬರುವುದಾದರೂ 3 ತಿಂಗಳ ಬದಲಿಗೆ ಆರು ತಿಂಗಳಿಗೆ ವಿಸ್ತರಿಸಬೇಕು. ತರಾತುರಿಯಲ್ಲಿ ಜಾರಿಗೆಗೆ ಬರಬಾರದು. ಎಲ್ಲಾ ಗ್ರಾಪಂ, ವಾರ್ಡ್&zwnj;ಗಳಲ್ಲಿ ಮತದಾರರ ನೆರವಿನ ಕೇಂದ್ರ ಸ್ಥಾಪಿಸಬೇಕು. ಸೂಕ್ತ ದಾಖಲೆ ಇಲ್ಲದ ಜನರಿಗೆ ದಾಖಲೆ ನೀಡಲು ಸರ್ಕಾರ ನೆರವಾಗಬೇಕು. ಡಿಲೀಟ್ ಆದ ಮತದಾರರು ಮನವಿ ಸಲ್ಲಿಸಲು ಸೂಕ್ತ ಸಮಯಾವಕಾಶ ನೀಡಬೇಕು. ಕರ್ನಾಟಕ ಸ್ವಾವಲಂಬಿಯಾದ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು.&lt;/p&gt;&lt;p&gt;ಇದನ್ನು ಸಮರ್ಥ ರೀತಿಯಲ್ಲಿ ಕಾರ್ಯರೂಪಕ್ಕೆ ತರಬೇಕು. ಸೋಷಿಯಲ್ ಆಡಿಟಿಂಗ್ ಪದ್ಧತಿ ಬಳಸಿ ರಾಜ್ಯದ ಮತದಾರರ ಪಟ್ಟಿ ಪರಿಷ್ಕರಿಸಬೇಕು. ಈ ನಾಲ್ಕು ಅಂಶಗಳನ್ನೂ ಗಮನದಲ್ಲಿಟ್ಟು ರಾಜ್ಯ ಸರ್ಕಾರ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಸಲಹೆ ನೀಡಿದರು.&lt;/p&gt;&lt;h3&gt;ಮತ್ತೊಂದು ಸುತ್ತಿನ ಸಭೆ ಭರವಸೆ:&lt;/h3&gt;&lt;p&gt;ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಶೀಘ್ರದಲ್ಲೇ ವಿಸ್ತೃತ ಸಭೆ ಕರೆಯುತ್ತೇವೆ. ಎಲ್ಲರ ಜೊತೆಯೂ ಸಮಾಲೋಚನೆ ನಡೆಸಿ, ನಂತರ ನಿಮ್ಮೊಟ್ಟಿಗೆ ಮತ್ತೊಮ್ಮೆ ಮಾತನಾಡುತ್ತೇನೆ ಎಂದು ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.&lt;/p&gt;&lt;p&gt;ಸಭೆಯಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್&zwnj; ಪತಿ ಪರಕಾಲ ಪ್ರಭಾಕರ್, ಕರ್ನಾಟಕ ಮುಸ್ಲಿಂ ಮುತ್ತಹಿದ ಮಹಾಜ್&zwnj;ನ ಮೊಹಮ್ಮದ್&zwnj; ಯೂಸುಫ್&zwnj; ಕನ್ನಿ, ಮಾಜಿ ಸಚಿವರೂ ಆದ ಲೇಖಕಿ ಬಿ.ಟಿ. ಲಲಿತಾ ನಾಯ್ಕ್, ಮತದಾನ ಹಕ್ಕು ಚಳವಳಿಯ ಥಾಮಸ್ ಫ್ರಾಂಕೋ, ನನ್ನ ಮತ ನನ್ನ ಹಕ್ಕು ಹೋರಾಟ ವೇದಿಕೆಯ ವಿನಯ್&zwnj; ಶ್ರೀನಿವಾಸ್&zwnj;, ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ, ಕರ್ನಾಟಕ ಕೋಮುಸೌಹಾರ್ದ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಜರಿದ್ದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-voter-list-revision-alert-cm-dcm-hold-emergency-meeting-rav/articleshow-l7nhr7m"/>
        </item>
        <item>
            <title><![CDATA[BSY Abhimanotsav: ನಾನು, ಅನಂತ್‌ ಸೈಕಲ್‌ನಲ್ಲಿ ಸುತ್ತಾಡಿ ಪಕ್ಷ ಕಟ್ಟಿದೆವು -ಬಿಎಸ್‌ವೈ]]></title>
            <link>https://kannada.asianetnews.com/state/chitradurga-bsy-abhimanotsav-grand-event-today-yadiyurappa-reacts-at-davanagere-rav/articleshow-0yhukwa</link>
            <guid isPermaLink="true">https://kannada.asianetnews.com/state/chitradurga-bsy-abhimanotsav-grand-event-today-yadiyurappa-reacts-at-davanagere-rav/articleshow-0yhukwa</guid>
            <pubDate>Sat, 09 May 2026 04:33:04 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ದಾವಣಗೆರೆಗೆ ಆಗಮಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾರ್ಯಕ್ರಮದ ನಂತರ ಮಾತನಾಡುವುದಾಗಿ ತಿಳಿಸಿದ್ದಾರೆ. ಪಕ್ಷ ಕಟ್ಟಲು ತಾವು ಮತ್ತು ಅನಂತಕುಮಾರ್ ಪಟ್ಟ ಶ್ರಮವನ್ನು ಸ್ಮರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr4x7jqf4931g8c5v02tw0xf,imgname-----------------------2026-05-09t042551.278-1778281335534.jpg" type="image/jpeg" height="390" width="690"/>
            <content:encoded><![CDATA[&lt;p&gt;- ನಾವಿಬ್ಬರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೆವು&lt;/p&gt;&lt;p&gt;- ನಮ್ಮ ಪರಿಶ್ರಮದಿಂದ ಬಿಜೆಪಿ ಅಧಿಕಾರಿಕ್ಕೆ ಬಂತು&lt;/p&gt;&lt;p&gt;&lt;strong&gt;ದಾವಣಗೆರೆ (ಮೇ.9): &lt;/strong&gt;ಚಿತ್ರದುರ್ಗದಲ್ಲಿ ಮೇ 9ಕ್ಕೆ ಅಭಿಮಾನೋತ್ಸವಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಜನ ಸೇರುವ ನಿರೀಕ್ಷೆಯಿದೆ. ಆ ಕಾರ್ಯಕ್ರಮದ ನಂತರ ನಾನು ಮಾತನಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನೋತ್ಸವದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ನಗರದ ಹೊರವಲಯದ ರೆಸಾರ್ಟ್&zwnj;ಗೆ ಶುಕ್ರವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಹಳ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಸೇರಿ, ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದರು.&lt;/p&gt;&lt;p&gt;ಸೈಕಲ್&zwnj;ನಲ್ಲಿ ನಾನು, ಅನಂತಕುಮಾರ್&zwnj; ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆವು. ಇದೆಲ್ಲದರ ಕಾರಣದಿಂದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. 2028ರ ಚುನಾವಣೆಗೆ ಅಭಿನಂದನೋತ್ಸವ ರಣಕಹಳೆಯ ಎಂಬುದನ್ನು ಕಾದು ನೋಡೋಣ ಎಂದು ಅವರು ತಿಳಿಸಿದರು.&lt;/p&gt;&lt;p&gt;ರೆಸಾರ್ಟ್&zwnj;ಗೆ ಕಾರ್ಯಕರ್ತರು: ಯಡಿಯೂರಪ್ಪನವರ ಪುತ್ರಿ ಅರುಣಾದೇವಿ ಸೇರಿದಂತೆ ಇಡೀ ಕುಟುಂಬ ಸದಸ್ಯರು ರೆಸಾರ್ಟ್&zwnj;ಗೆ ಬಂದಿದ್ದರು. ಯಡಿಯೂರಪ್ಪ ಅವರನ್ನು ನೋಡಲು, ಭೇಟಿಯಾಗಲು ಅನೇಕ ಕಾರ್ಯಕರ್ತರು, ಅಭಿಮಾನಿಗಳು ರೆಸಾರ್ಟ್&zwnj;ಗೆ ಆಗಮಿಸಿದ್ದರು.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/chitradurga-bsy-abhimanotsav-grand-event-today-yadiyurappa-reacts-at-davanagere-rav/articleshow-0yhukwa"/>
        </item>
        <item>
            <title><![CDATA[BSY Abhimanotsav: ಇಂದು ಅಭಿಮಾನೋತ್ಸವ ಹಿನ್ನೆಲೆ, ನಿನ್ನೆ ಚಿತ್ರದುರ್ಗ ಪುರಪ್ರವೇಶ ಬಿಎಸ್‌ವೈಗೆ ಅದ್ಧೂರಿ ಸ್ವಾಗತ!]]></title>
            <link>https://kannada.asianetnews.com/state/chitradurga-welcomes-bs-yediyurappa-with-grand-event-for-abhimanotsava-rav/articleshow-mfr3gas</link>
            <guid isPermaLink="true">https://kannada.asianetnews.com/state/chitradurga-welcomes-bs-yediyurappa-with-grand-event-for-abhimanotsava-rav/articleshow-mfr3gas</guid>
            <pubDate>Sat, 09 May 2026 04:20:42 +0530</pubDate>
            <description><![CDATA[ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ 'ಅಭಿಮಾನೋತ್ಸವ' ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಬಿಎಸ್&zwnj;ವೈ ಅವರಿಗೆ ಕೋಟೆನಾಡಿನ ಜನತೆ 'ಮಿನಿ ದಸರಾ' ಮಾದರಿಯಲ್ಲಿ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಅದ್ಧೂರಿ ಸ್ವಾಗತ ಕೋರಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kr4w78je3t4c64zjmtmnwdxy,imgname-----------------------2026-05-09t041410.250-1778280276558.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮೇ.9)&lt;/strong&gt;: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಜೀವನಕ್ಕೆ ಐವತ್ತು ವರ್ಷ ಸಂದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿರುವ &lsquo;ಬಿಎಸ್&zwnj;ವೈ ಅಭಿಮಾನೋತ್ಸವ&rsquo;ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಅವರು ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿದಾಗ ಕೋಟೆ ನಾಡಿನ ಜನ ಅದ್ಧೂರಿಯಾಗಿ ಸ್ವಾಗತ ಕೋರಿದರು. &lsquo;ಮಿನಿ ದಸರಾ&rsquo; ಮಾದರಿಯಲ್ಲಿ ಮೆರವಣಿಗೆ ಮಾಡಿದ್ದು ವಿಶೇಷವಾಗಿತ್ತು.&lt;/p&gt;&lt;h2&gt;ಬಿಎಸ್&zwnj;ವೈ ಅದ್ಧೂರಿ ಪುರಪ್ರವೇಶ&lt;/h2&gt;&lt;p&gt;ಸಂಜೆ ನಾಲ್ಕು ಗಂಟೆಗೆ ಯಡಿಯೂರಪ್ಪ ಚಿತ್ರದುರ್ಗ ಪುರಪ್ರವೇಶ ಮಾಡಬೇಕಿತ್ತು. ಆದರೆ ಬಿಎಸ್&zwnj;ವೈ ಆಗಮನ ಆದಾಗ ಸೂರ್ಯ ನಿಧಾನವಾಗಿ ಮೋಡದಿಂದ ಮರೆಯಾಗುತ್ತಿದ್ದ. ಇದೇ ಗೋಧೂಳಿ ಸಮಯದಲ್ಲಿ ನೇರವಾಗಿ ಪುಷ್ಪಾಲಂಕೃತ ವಾಹನ ಏರಿದ ಯಡಿಯೂರಪ್ಪ ಅವರು ನೆರೆದಿದ್ದ ಅಭಿಮಾನಿ ಸಮೂಹದತ್ತ ಕೈ ಬೀಸಿದರು. ರಾಜಕೀಯ ನಾಯಕರು ಹಾಗೂ ರೈತರು ಗಾಳಿಯಲ್ಲಿ ಹಸಿರು ಶಾಲು ಬೀಸಿ ಯಡಿಯೂರಪ್ಪ ಅವರ ರೈತ ಪರ ಹೋರಾಟದ ನೆನಪು ಮಾಡಿದರು. ಸಾವಿರಕ್ಕೂ ಹೆಚ್ಚು ಮಂದಿ ಕೈಯಲ್ಲಿ ನೇಗಿಲು ಎತ್ತಿ ಹಿಡಿದು ಮೆರವಣಿಗೆಗೆ ಒಕ್ಕಲುತನದ ಸ್ಪರ್ಶ ನೀಡಿದರು. ಕ್ರೇನ್ ಸಹಾಯದಿಂದ ಬಿಎಸ್&zwnj;ವೈ ಅವರ ಮೇಲೆ ಹೂ ಮಳೆಗರೆಯಲಾಯಿತು.&lt;/p&gt;&lt;p&gt;ಯಡಿಯೂರಪ್ಪ ಅವರು ಪುಷ್ಪಾಲಂಕೃತ ಸಾರೋಟ್&zwnj;ನಲ್ಲಿ ಸಾಗಬೇಕಾಗಿತ್ತು. ಆದರೆ ಅವರ ಜೊತೆಗೆ ಬಹಳಷ್ಟು ನಾಯಕರು ಸಾಗುವುದು ಕಷ್ಟವೆಂಬ ಕಾರಣಕ್ಕೆ ವಾಹನವೊಂದಕ್ಕೆ ಪುಷ್ಪಾಲಂಕಾರ ಮಾಡಿ ಅದರಲ್ಲಿ ಬಿಎಸ್&zwnj;ವೈ ಅವರ ಮೆರಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ನೂರಾರು ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರೆ ಮತ್ತೊಂದಿಷ್ಟು ಮಂದಿ ಕೈಲಿ ಒನಕೆ ಹಿಡಿದು ಹೆಜ್ಜೆ ಹಾಕಿದರು. ಈ ಮೂಲಕ ಬಿಎಸ್&zwnj;ವೈ ಪುರಪ್ರವೇಶಕ್ಕೆ ಸಂಭ್ರಮದ ಕಳೆ ತಂದರು. ಇದರೊಂದಿಗೆ ತನ್ನ ಐದು ದಶಕಗಳ ರಾಜಕೀಯ ಬದುಕಿನಲ್ಲಿ ಬಡವರ, ರೈತರ, ಮಹಿಳೆಯರ ಪರ ಹೋರಾಡಿದ ಕುರುಹುಗಳು ಸಾಂಕೇತಿಕವಾಗಿ ಪುರಪ್ರವೇಶದ ಸಂದರ್ಭದಲ್ಲಿ ಅನಾವರಣಗೊಂಡವು.&lt;/p&gt;&lt;p&gt;ಬುಡಕಟ್ಟು ಸಾಂಸ್ಕೃತಿಕ ಪರಂಪರೆ ಸಾರುವ ಚಿತ್ರದುರ್ಗ ಜಿಲ್ಲೆಯ ಕಾಡುಗೊಲ್ಲ-ಮ್ಯಾಸಬೇಡ ಸಮುದಾಯಗಳ ಸಾಂಸ್ಕೃತಿಕ ಆಚರಣೆಯನ್ನು ಮೇಳೈಸುವ ಕೋಲಾಟ ಸೇರಿದಂತೆ ಹಲವು ಕಲಾ ತಂಡಗಳ ಜತೆಗೆ ಕಂಸಾಳೆ, ಉರಿಮೆ, ತಮಟೆ, ಗೊರವರ ಕುಣಿತ, ನಂದಿಕೋಲು, ವೀರಗಾಸೆ, ವಿವಿಧ ಜಾನಪದ ನೃತ್ಯಗಳು ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ತಂಪನೆಯ ಸಮಯದಲ್ಲಿ ನಗುಮೊಗದೊಂದಿಗೆ ಮದುಮಗನಂತೆ ಕಂಗೊಳಿಸುತ್ತಿದ್ದ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ, ತೆರೆದ ವಾಹನದಲ್ಲಿ ಎಲ್ಲರತ್ತ ಕೈಬೀಸಿ ನಗುಮುಖದಲ್ಲಿ ಸಾಗುತ್ತಿದ್ದರು.&lt;/p&gt;&lt;p&gt;ಪ್ರವಾಸಿ ಮಂದಿರದ ಬಳಿ ಅಭಿಮಾನಿಗಳು ಬೃಹದಾಕಾರದ ಸೇಬು ಹಾರ ಹಾಕಿದರೆ, ಅಂಬೇಡ್ಕರ್ ಪ್ರತಿಮೆ ಬಳಿ ಮಾದಿಗ ಸಮುದಾಯದ ಮುಖಂಡರು ತಮ್ಮ ಸಾಂಸ್ಕೃತಿಕ ಪರಿಕರವಾದ ಹಲಗೆಯನ್ನೇ ಪೋಣಿಸಿ ಹಾರ ಮಾಡಿ ಯಡಿಯೂರಪ್ಪ ಅವರಿಗೆ ಹಾಕಿದ್ದು ವಿಶೇಷವಾಗಿ ಕಂಡಿತು.&lt;/p&gt;&lt;p&gt;ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಂಸದ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಶ್ರೀರಾಮುಲು, ರೇಣುಕಾಚಾರ್ಯ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಸಿ.ಟಿ.ರವಿ, ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್ ಸೇರಿ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.&lt;/p&gt;&lt;p&gt;ಆರು ಗಂಟೆಗೆ ಆರಂಭವಾದ ಮೆರವಣಿಗೆ ಮದಕರಿನಾಯಕ ಪ್ರತಿಮೆ ಬಳಿ ಬಂದಾಗ ವೇಳೆ ಎಂಟು ಗಂಟೆಯಾಗಿತ್ತು. ಸರಿ ಸುಮಾರು ಎರಡು ತಾಸು ಮೆರವಣಿಗೆ ನಡೆಯಿತು. ನಂತರ ಯಡಿಯೂರಪ್ಪ ಅವರು ವೀರಶೈವ ಬ್ಯಾಂಕ್ ಅಧ್ಯಕ್ಷ ಪಟೇಲ್ ಶಿವಕುಮಾರ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದರು.&lt;/p&gt;&lt;p&gt;ನಾನು, ಅನಂತ್&zwnj; ರಾಜ್ಯ ಸುತ್ತಿದ್ದಕ್ಕೆ ಅಧಿಕಾರ&lt;/p&gt;&lt;p&gt;ಅಭಿಮಾನೋತ್ಸವಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಜನ ಸೇರುವ ನಿರೀಕ್ಷೆಯಿದೆ. ಬಹಳ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಸೇರಿ, ಕಾರ್ಯಕ್ರಮ ಮಾಡುತ್ತಿದ್ದಾರೆ. ಸೈಕಲ್&zwnj;ನಲ್ಲಿ ನಾನು, ಅನಂತಕುಮಾರ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆವು. ಇದೆಲ್ಲದರ ಕಾರಣದಿಂದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. 2028ರ ಚುನಾವಣೆಗೆ ಅಭಿನಂದನೋತ್ಸವ ರಣಕಹಳೆಯಾಗುತ್ತದೆಯಾ ಎಂಬುದನ್ನು ಕಾದು ನೋಡೋಣ.&lt;/p&gt;&lt;p&gt;&lt;strong&gt;-ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ&lt;/strong&gt;&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/chitradurga-welcomes-bs-yediyurappa-with-grand-event-for-abhimanotsava-rav/articleshow-mfr3gas"/>
        </item>
        <item>
            <title><![CDATA[ಡಿಎಂಕೆ-ಎಐಎಡಿಎಂಕೆ ಸೇರಿ ಸರ್ಕಾರ ಮಾಡೋ ನಂಬಿಕೆ ನನಗಿಲ್ಲ: ಎಚ್.ಡಿ.ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/hd-kumaraswamy-on-tamil-nadu-politics-congress-tvk-govt-gvd/articleshow-ithupmd</link>
            <guid isPermaLink="true">https://kannada.asianetnews.com/karnataka-districts/hd-kumaraswamy-on-tamil-nadu-politics-congress-tvk-govt-gvd/articleshow-ithupmd</guid>
            <pubDate>Sat, 09 May 2026 00:26:33 +0530</pubDate>
            <description><![CDATA[&lt;p&gt;ಕೆಲವೊಂದು ಸಂದರ್ಭದಲ್ಲಿ ಸರ್ಕಾರ ರಚನೆ ವಿಚಾರದಲ್ಲಿ ಆಯಾ ರಾಜ್ಯದ ರಾಜ್ಯಪಾಲರು ಅವರದ್ದೇ ಆದ ಕಾನೂನು ಪಂಡಿತರ ಸಲಹೆ ಮೇರೆಗೆ ನಿರ್ಧಾರವನ್ನು ತೆಗೆದುಕೊಂಡಿದ್ದನ್ನು ಕಂಡಿದ್ದೇವೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh4e3cpb1nh2cfx2c6c52gr,imgname-hd-kumaraswamy-1772249091477.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳೆನರಸೀಪುರ (ಮೇ.09): &lt;/strong&gt;ಕೆಲವೊಂದು ಸಂದರ್ಭದಲ್ಲಿ ಸರ್ಕಾರ ರಚನೆ ವಿಚಾರದಲ್ಲಿ ಆಯಾ ರಾಜ್ಯದ ರಾಜ್ಯಪಾಲರು ಅವರದ್ದೇ ಆದ ಕಾನೂನು ಪಂಡಿತರ ಸಲಹೆ ಮೇರೆಗೆ ನಿರ್ಧಾರವನ್ನು ತೆಗೆದುಕೊಂಡಿದ್ದನ್ನು ಕಂಡಿದ್ದೇವೆ. ಅವರು ಸ್ಪಷ್ಟ ಬಹುಮತದ ಸಂಖ್ಯೆ ಸ್ಪಷ್ಟಪಡಿಸಿ ಎಂದಿದ್ದಾರೆ. ಡಿಎಂಕೆ-ಎಐಎಡಿಎಂಕೆ ಎರಡು ಪಕ್ಷಗಳು ಸೇರಿ ಸರ್ಕಾರ ಮಾಡುವುದನ್ನು ನಾನಂತೂ ನಿರೀಕ್ಷೆ ಮಾಡಲ್ಲ. ಅದೆಲ್ಲಾ ಉಹಾಪೋಹ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.&lt;/p&gt;&lt;p&gt;ತಾಲೂಕಿನ ಹಳೇಕೋಟೆಯ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು. ವಿಜಯ್ ಅವರು ಸಹ ಬಹುಮತ ಸಾಬೀತುಪಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಮತ್ತು ಎರಡು ದಿನದಲ್ಲಿ ಅಸ್ಪಷ್ಟತೆ ಸರಿಪಡಿಸುವ ಸಾಧ್ಯತೆ ಇದೆ. ಜತೆಗೆ ಸ್ಟಾಲಿನ್ ಅವರು ಆರು ತಿಂಗಳು ಸರ್ಕಾರ ನಡೆಸಲಿ ತೊಂದರೆ ಕೊಡಲ್ಲ ಎಂದಿದ್ದಾರೆ. ಟಿವಿಕೆಗೆ ಕಾಂಗ್ರೆಸ್ ಬೆಂಬಲ ಕುರಿತು ಮಾತನಾಡಿ, ಕಾಂಗ್ರೆಸ್ ಪಕ್ಷದ ನಡವಳಿಕೆ ಬಗ್ಗೆ ಸಾಕಷ್ಟು ಕಂಡಿದ್ದೇವೆ, ಕಾಂಗ್ರೆಸ್ ಪಕ್ಷ ಯಾವ್ಯಾವ ಸಂದರ್ಭದಲ್ಲಿ, ಯಾವ್ಯಾವ್ಯ ರೀತಿ ಸರ್ಕಾರಗಳನ್ನು ಅಸ್ಥಿರಗೊಳಿಸಿದ್ದಾರೆ.&lt;/p&gt;&lt;p&gt;ಕೇಂದ್ರದಲ್ಲಿದ್ದಂತಹ ಚರಣ್ ಸಿಂಗ್ ಅವರಿಂದ ಪ್ರಾರಂಭವಾಗಿ ವಿಪಿ ಸಿಂಗ್, ಚಂದ್ರಶೇಖರ್, ಅದೇ ರೀತಿ ದೇವೇಗೌಡರು ಅಧಿಕಾರದಲ್ಲಿದ್ದಾಗ ಯಾವ ಕಾರಣಗಳನ್ನು ಕೊಟ್ಟು ಸರ್ಕಾರ ತೆಗೆದರು. ಕಾಂಗ್ರೆಸ್&zwnj;ನಲ್ಲಿ ಅವರಿಗೆ ಬೇಕಾದ ರೀತಿಯಲ್ಲಿ ತೀರ್ಮಾನ ಮಾಡುವ ಹಲವಾರು ಉಧಾಹರಣೆಗಳನ್ನು ಕೊಡಬಹುದು. ಇವತ್ತು ಡಿಎಂಕೆ ಜೊತೆ ಇಪ್ಪತ್ತು ವರ್ಷದ ಸಂಬಂಧ ಕಡಿದು ವಿಜಯ್ ಅವರ ಜೊತೆ ಸೇರಿದ್ದಾರೆ. ಅವರ ಪಕ್ಷದ ಮುಂದಿನ ಭವಿಷ್ಯದ ದೃಷ್ಟಿಯಿಂದ ತೀರ್ಮಾನ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನೇಕೆ ಚರ್ಚೆ ಮಾಡಲಿ. ಕಾಲ ಅದಕ್ಕೆ ಉತ್ತರ ಕೊಡುತ್ತದೆ ಎಂದರು.&lt;/p&gt;&lt;p&gt;&lt;strong&gt;ಗ್ಯಾರಂಟಿ ನೀಡಲು 6ರಿಂದ 7 ಲಕ್ಷ ಕೋಟಿ ಬೇಕು: &lt;/strong&gt;ತಮಿಳುನಾಡಿನಲ್ಲಿ ನಾನಂತೂ ನಿರೀಕ್ಷೆ ಮಾಡಿದ್ದೆ, ಒಂದು ತಿಂಗಳ ಹಿಂದೆ ನಮ್ಮ ಸ್ನೇಹಿತರಿಗೆ ಹೇಳಿದ್ದೆ. ಕಳೆದ ಐವತ್ತು ವರ್ಷಗಳಿಂದ ಎರಡು ದ್ರಾವಿಡ ಪಕ್ಷಗಳ ಆಡಳಿತ ಏನೆಂದು ಅಲ್ಲಿಯ ಜನ ನೋಡಿದ್ರು, ಆದ್ದರಿಂದ ಒಂದು ಹೊಸ ವ್ಯವಸ್ಥೆ ತರಲು ಜನಸಾಮಾನ್ಯರು ನಿರ್ಧಾರ ಮಾಡ್ತಾರೆ ಎನ್ನುವ ನಿರೀಕ್ಷೆ ಇಟ್ಟಿದ್ದೆ ಎಂದರು. ತಮಿಳುನಾಡಿನಲ್ಲಿ ಸ್ವಲ್ಪ ಸಿನಿಮಾದ ಪ್ರಭಾವಕ್ಕೆ ಒಳಗಾಗುತ್ತಾರೆ, ಹಲವಾರು ಸಂದರ್ಭದಲ್ಲಿ ನಡೆದಿದೆ, ಈಗಲೂ ನಡೆದಿದೆ. ಒಂದು ಹೊಸ ಮುಖ, ವ್ಯಕ್ತಿ ಅಧಿಕಾರ ಕೊಡಬೇಕು ಎಂದು ಕೊಟ್ಟಿದ್ದಾರೆ.&lt;/p&gt;&lt;p&gt;ಉಚಿತ ಗ್ಯಾರಂಟಿಗಳ ಬಗ್ಗೆ ದೇವರು ಕಾಪಾಡಬೇಕು, ವಿಜಯ್ ಅವರಿಗೆ ಯಾರು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲು ಯಾರು ಪ್ರಭಾವ ಬೀರಿದ್ರೊ ಗೊತ್ತಿಲ್ಲ, ಅಲ್ಲಿಯ ಬಜೆಟ್ ವರ್ಷಕ್ಕೆ 3.40 ಲಕ್ಷ ಕೋಟಿ ಇದೆ ಮತ್ತು ಅವರ ಉಚಿತ ಗ್ಯಾರಂಟಿಗಳನ್ನು ನೀಡಲು 6 ರಿಂದ 7 ಲಕ್ಷ ಕೋಟಿ ಬೇಕು ಎಂದು ತಿಳಿಸಿ, ಅದ್ಯಾವ ತರ ಹಣ ಹೊಂದಿಸುತ್ತಾರೆ ಕಾದು ನೋಡಬೇಕು ಎಂದು ಮಾರ್ಮಿಕವಾಗಿ ನುಡಿದರು. ಈಗೀನ ಪಂಚರಾಜ್ಯಗಳ ಫಲಿತಾಂಶವನ್ನು ಬಹಳ ಜನ ನಿರೀಕ್ಷೆ ಮಾಡಿದ್ರು. ಆದರೆ ತಮಿಳುನಾಡಿನಲ್ಲಿ ಡಿಎಂಕೆ ಬರುತ್ತೆ ಅಂಥ ಮಾಧ್ಯಮಗಳಲ್ಲಿ ಬರುತ್ತಿತ್ತು, ಆದರೆ ಯಾರೂ ಸಹ ವಿಜಯ್ ಅವರ ಈಗೀನ ಸಾಧನೆಯನ್ನು ನಿರೀಕ್ಷೆ ಮಾಡಿರಲಿಲ್ಲ, ಅದೊಂದು ಮಾತ್ರ ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ ಎಂದರು.&lt;/p&gt;&lt;p&gt;ಶೃಂಗೇರಿ ಮರುಎಣಿಕೆ ಸಂಬಂಧ ಪ್ರತಿಕ್ರಿಯಿಸಿ, ಎಫ್&zwnj;ಐಆರ್ ಆಗಿದೆ, ರಾಜೇಗೌಡ್ರು ಚುನಾವಣೆ ಆಯೋಗಕ್ಕೆ ಮತ್ತೊಂದು ದೂರು ಕೊಟ್ಟಿದ್ದಾರೆ. ಏನೇನು ಬೆಳವಣಿಗೆ ಆಗುತ್ತೆ ಅಂಥ ಮುಂದೆ ನೋಡೋಣ. ಈಗಿನ ಪರಿಸ್ಥಿತಿಯಲ್ಲಿ ಓಟ್ ಚೋರಿ ಬಗ್ಗೆ ಚರ್ಚೆ ಮಾಡ್ತರಲ್ಲಾ ಅದಕ್ಕೆ ಯಾವುದೇ ಅರ್ಥ ಇಲ್ಲ. ಓಟ್ ಚೋರಿ ಬಗ್ಗೆ ಚರ್ಚೆ ಮಾಡುವ ನೈತಿಕತೆಯೂ ಇಲ್ಲ. ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಬದಲಾವಣೆ ಆಗಬಹುದು ಎಂಬುದು ಜನಸಾಮಾನ್ಯರ ಚರ್ಚೆ ಇದೆ. ಕಾದು ನೋಡೋಣ ಏನೇನು ಆಗುತ್ತೆ ಅಂಥ ಮತ್ತು ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲ, ಇಲ್ಲಿಯ ರಾಜಕಾರಣಕ್ಕೂ, ಬೇರೆ ರಾಜ್ಯಗಳ ರಾಜಕಾರಣಕ್ಕೂ ಬಹಳಷ್ಟು ವ್ಯತ್ಯಾಸವಿದೆ ಎಂದರು.&lt;/p&gt;&lt;h2&gt;&lt;strong&gt;ದೀದಿಯದ್ದು ಬಾಲಿಶ ಹೇಳಿಕೆ&lt;/strong&gt;&lt;/h2&gt;&lt;p&gt;ಇಡಿ, ಐಟಿ ದುರುಪಯೋಗ ಎಂಬ ಕಾಂಗ್ರೆಸ್ ಆರೋಪ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿ, ಅವರಿಗೆ ಬೇಕಾದಂತೆ ಕಾಂಗ್ರೆಸ್&zwnj;ನವರು ವ್ಯಾಖ್ಯಾನ ಮಾಡ್ತಾರೆ, ಅವರಿಗೆ ಬೇಕಾದಾಗ ಚೆನ್ನಾಗಿದೆ ಅಂತರೆ, ಸೋತಾಗ ಚೆನ್ನಾಗಿಲ್ಲ ಅಂತಾರೆ, ಪಶ್ಚಿಮ ಬಂಗಾಳದಲ್ಲಿ ಸ್ಪಷ್ಟ ಬಹುಮತ ಬಂದಿದೆ ಎಂದು ಎಲೆಕ್ಷನ್ ಕಮಿಷನ್&zwnj;ನಿಂದ ಘೋಷಣೆ ಆದ ಮೇಲೆ ಮುಗಿತು, ಮಮತಾ ಬ್ಯಾನರ್ಜಿಯವರು ರಾಜೀನಾಮೆ ಕೊಡಲ್ಲ ಎನ್ನುವುದು ಬಾಲಿಶವಾದ ಹೇಳಿಕೆ, ಆ ರೀತಿಯ ವಾತಾವರಣ ನಮ್ಮ ಸಂವಿಧಾನದಲ್ಲಿ ಇಲ್ಲ ಮದು ಮಮತ ಬ್ಯಾನರ್ಜಿ ವರ್ತನೆಗೆ ಬೇಸರ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ವಿಚಾರದಲ್ಲಿ ಮಾತನಾಡಿ, ಯಡಿಯೂರಪ್ಪ ಅವರ ಐವತ್ತು ವರ್ಷದ ಸಾಧನೆ ಬಗ್ಗೆ, ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಬಗ್ಗೆ ಬಿಜೆಪಿ ಪಕ್ಷದಿಂದ ಕಾರ್ಯಕ್ರಮ ನಡೀತಿದೆ ಮತ್ತು ಬೇರೆ ಕಾರ್ಯಕ್ರಮ ಇರುವುದರಿಂದ ಹೋಗ್ತಾ ಇಲ್ಲ ಎಂದು ತಿಳಿಸಿದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-on-tamil-nadu-politics-congress-tvk-govt-gvd/articleshow-ithupmd"/>
        </item>
        <item>
            <title><![CDATA[ಕಾಂಗ್ರೆಸ್‌ನಲ್ಲಿ ಎಲ್ಲ ನಿರ್ಧಾರವೂ ಹೈಕಮಾಂಡ್‌ನದ್ದೇ: ಸಚಿವ ಎಂ.ಬಿ.ಪಾಟೀಲ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/minister-mb-patil-congress-high-command-supreme-statement-gvd/articleshow-bpvd6mq</link>
            <guid isPermaLink="true">https://kannada.asianetnews.com/karnataka-districts/minister-mb-patil-congress-high-command-supreme-statement-gvd/articleshow-bpvd6mq</guid>
            <pubDate>Fri, 08 May 2026 22:27:00 +0530</pubDate>
            <description><![CDATA[&lt;p&gt;ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ, ಕರ್ನಾಟಕದಲ್ಲೂ ಸುಪ್ರೀಂ, ತಮಿಳುನಾಡಿನಲ್ಲೂ ಸುಪ್ರೀಂ, ವೆಸ್ಟ್ ಬೆಂಗಾಲದಲ್ಲೂ ಸುಪ್ರೀಂ, ಎಲ್ಲ ಕಡೆ ಸುಪ್ರೀಂ. ಎಲ್ಲವನ್ನು ಹೈಕಮಾಂಡ್&zwnj;ದವರೇ ನಿರ್ಣಯ ಮಾಡುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7907669v3sy433fx9m4prw4,imgname-minister-mb-patil-1760165075145.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮೇ.08): &lt;/strong&gt;ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವನ್ನೆಲ್ಲ ಕಾಂಗ್ರೆಸ್ ಪಕ್ಷದ ವರಿಷ್ಠ ಮಂಡಳಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ, ಕರ್ನಾಟಕದಲ್ಲೂ ಸುಪ್ರೀಂ, ತಮಿಳುನಾಡಿನಲ್ಲೂ ಸುಪ್ರೀಂ, ವೆಸ್ಟ್ ಬೆಂಗಾಲದಲ್ಲೂ ಸುಪ್ರೀಂ, ಎಲ್ಲ ಕಡೆ ಸುಪ್ರೀಂ. ಎಲ್ಲವನ್ನು ಹೈ ಕಮಾಂಡ್&zwnj;ದವರೇ ನಿರ್ಣಯ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಕರೆದರೆ ಹೋಗಲೇಬೇಕಾಗುತ್ತದೆ ಎಂದು ಸ್ವತಹ ಮುಖ್ಯಮಂತ್ರಿಗಳೇ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಎಲ್ಲದಕ್ಕೂ ಹೈಕಮಾಂಡ್ ಸುಪ್ರೀಂ. ಕೇರಳದಲ್ಲಿ ಸಿಎಂ ವೇಣುಗೋಪಾಲ ಆಗ್ತಾರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ವೇಣುಗೋಪಾಲ ಅವರು ಹೈ ಕಮಾಂಡ್&zwnj;ನ ಒಂದು ಭಾಗ. ಎಲ್ಲ ನಿರ್ಣಯವನ್ನು ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ ಎಂದರು.&lt;/p&gt;&lt;p&gt;ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ಕಾನೂನಾತ್ಮಕವಾಗಿ, ಸಂವಿಧಾನಾತ್ಮಕವಾಗಿ ಏನಾಗುತ್ತದೋ ಆಗುತ್ತದೆ ಅದನ್ನು ನೊಡೋಣ. ಅವರು ರಾಜೀನಾಮೆ ಕೊಡುವುದಿಲ್ಲ ಎಂಬುವು ಸಂವಿಧಾನದಲ್ಲಿ ಏನಿದೆಯೋ ಅದು ತೀರ್ಮಾನವಾಗಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಅವರಿಗೆ ಸಾಕಷ್ಟು ಅನ್ಯಾಯವಾಗಿರುವುದು ಸತ್ಯವಾಗಿದೆ. ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ಬಿಜೆಪಿಯವರು ಅಧಿಕಾರಿಗಳನ್ನಿಟ್ಟುಕೊಂಡು, ವಾಮ ಮಾರ್ಗಗಳಿಂದ ಜಯಗಳಿಸಿದ್ದಾರೆ ಎಂದರು.&lt;/p&gt;&lt;p&gt;ತಮಿಳುನಾಡಿಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ವಿಚಾರವಾಗಿ ಮಾತನಾಡಿ, ಕೆಲವು ಬಿಜೆಪಿಯಂತಹ ಕೋಮುವಾದಿ ಶಕ್ತಿಗಳನ್ನು ಅಲ್ಲಿನ ಜನರು ದೂರಿಟ್ಟಿದ್ದಾರೆ. ತಮಿಳುನಾಡಿನಲ್ಲಿ ಪರ್ಯಾಯವಾಗಿ ಜ್ಯಾತ್ಯಾತೀತ ಹಿನ್ನೆಲೆಯಲ್ಲಿ ಬಂದಿರುವ ಟಿವಿಕೆಯ ಯುವಕ ವಿಜಯಗೆ ಜನ ಬಹುದೊಡ್ಡ ಮನ್ನಣೆ ಕೊಟ್ಟಿದ್ದಾರೆ. ಜನರ ತೀರ್ಪು ಹುಸಿಯಾಗಬಾರದು, ಜನರ ತೀರ್ಪಿಗೆ ನಾವು ತಲೆಬಾಗಬೇಕು ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ನಮ್ಮನ್ನು ಕ್ಷಮಿಸುವುದಿಲ್ಲ&lt;/strong&gt;&lt;/h2&gt;&lt;p&gt;ಕೋಮುವಾದಿ ಶಕ್ತಿಗಳಿಗೆ ವಿರುದ್ಧವಾಗಿ ಇಂದು ಟಿವಿಕೆನವರು ಗೆದ್ದಿದ್ದು, ಅವರನ್ನು ಬೆಂಬಲಿಸುವಲ್ಲಿ ನಾವು ವಿಫಲವಾದರೇ ಕೋಮುವಾದಿ ಶಕ್ತಿಗಳನ್ನು ಬೆಳೆಸಲು ಅವಕಾಶ ಕೊಟ್ಟಂತಾಗುತ್ತದೆ. ಹಾಗಾಗಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ಸಿಕ್ಕಿದೆ. ಟಿವಿಕೆ ಸರ್ಕಾರ ರಚನೆ ಮಾಡುವಲ್ಲಿ ನಾವು ಬೆಂಬಲ ಕೊಟ್ಟಿದ್ದೇವೆ. ಟಿವಿಕೆಗೆ ಬಂಬಲ ಕೊಡದಿದ್ದರೇ ಜನರು ನಮ್ಮನ್ನು ಕ್ಷಮಿಸುವುದಿಲ್ಲ. ನಾವು ಕಾಂಗ್ರೆಸ್ ನವರು ಅವರಿಗೆ ಬೆಂಬಲಿಸದಿದ್ದರೆ ಜನರು ನಮ್ಮನ್ನು ತಪ್ಪಿತಸ್ಥರನ್ನಾಗಿ ಮಾಡುತ್ತಾರೆ. ಜನರ ತೀರ್ಪಿಗೆ ವಿರೋಧವಾಗಿ ಹೋಗುವುದು ಆಗಬಾರದು ಎಂದು ನಾವು ಟಿವಿಕೆಗೆ ಬೆಂಬಲ ಕೊಡುತ್ತಿದ್ದೇವೆ. ಎಲ್ಲೊ ಒಂದುಕಡೆ ನಮ್ಮ ತತ್ವ ಸಿದ್ಧಾಂತಕ್ಕೆ ವಿರೋಧಿಸಿದಂತಾಗುತ್ತದೆ. ಅದರರ್ಥ ಡಿಎಂಕೆಗೆ ನಾವು ಬೆನ್ನಿಗೆ ಚೂರಿ ಹಾಕಿದೆವು ಅಂತಲ್ಲ. ಡಿಎಂಕೆ ಪಕ್ಷದ ಜೊತೆಗೂ ಮಾತನಾಡುತ್ತೇವೆ ಎಂದರು.&lt;/p&gt;&lt;p&gt;ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕಾಗುತ್ತದೆ. ಪ್ರತಿವರ್ಷ ನಾವು ಆಲಮಟ್ಟಿ ಡ್ಯಾಂ ನಲ್ಲಿ ಜೂನ್ 15ರವರೆಗೆ ಲೆಕ್ಕಾಚಾರ ಹಾಕಿ ನೀರು ಕೊಡುತ್ತಿದ್ದೇವು. ಇದೀಗ ಪರಿಸ್ಥಿತಿ ಬದಲಾಗಬಹುದು, ನಾರ್ಮಲ್&zwnj; ಆಗಿ ಮಳೆ ಬಂದರೆ ಜೂ.15ರವರೆಗೆ ಆಗುತ್ತದೆ. ಇಲ್ಲವಾದಲ್ಲಿ ಆ.15ರವರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗುತ್ತದೆ. ಕೃಷಿಗಿಂತ ಮೊದಲು ನಾವು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಾಗುತ್ತದೆ ಎಂದರು.&lt;/p&gt;&lt;p&gt;ಪುಣೆಯಲ್ಲಿರುವ ಅದಾನಿ ಕಂಪನಿಗೆ ಜಿಲ್ಲೆಯ ಎನ್&zwnj;ಟಿಪಿಸಿಯಿಂದ ವಿದ್ಯುತ್ ಲೈನ್ ಹೊರಟಿದ್ದು, ರೈತರಿಗೆ ಸಮಸ್ಯೆಯಾಗುತ್ತಿರುವ ವಿಚಾರವಾಗಿ ಮಾತನಾಡಿ, ಅದು ಕೇಂದ್ರ ಸರ್ಕಾರದ ಯೋಜನೆ, ಕೇಂದ್ರದ ಆಕ್ಟ್ ಪ್ರಕಾರ ಕೊಡುವ ಪರಿಹಾರವನ್ನು 95 ಪರ್ಸೆಂಟ್ ರೈತರು ಒಪ್ಪಿಕೊಂಡಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರವಾಗಿ ಮಾಹಿತಿ ಕೊಡುವಂತೆ ತಿಳಿಸಿದ್ದೇನೆ. ಕೆಲವರು ಬ್ಲಾಕಮೇಲ್ ಮಾಡುವ ತಂತ್ರ ಮಾಡುತ್ತಿದ್ದಾರೆ. ಈ ಬ್ಲಾಕಮೇಲ್ ಮಾಡುವ ತಂತ್ರ ನಿಲ್ಲಬೇಕು ಎಂದು ತಿಳಿಸಿದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-mb-patil-congress-high-command-supreme-statement-gvd/articleshow-bpvd6mq"/>
        </item>
        <item>
            <title><![CDATA[ಸಿಎಂ ಕುರ್ಚಿ ಗುದ್ದಾಟದಿಂದ ಕಾಂಗ್ರೆಸ್ ಸರ್ಕಾರ ಪತನ: ನಿಖಿಲ್ ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/nikhil-kumaraswamy-congress-government-collapse-statement-gvd/articleshow-1mmkvo9</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-congress-government-collapse-statement-gvd/articleshow-1mmkvo9</guid>
            <pubDate>Fri, 08 May 2026 21:55:52 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಗುದ್ದಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jdyxfep0fmty5zj9fgq4yphm,imgname--.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮದ್ದೂರು (ಮೇ.08): &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಗುದ್ದಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಪಟ್ಟಣದ ಎಂ.ಎಸ್.ಸಿದ್ದರಾಜು ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಪರಿಮಳ ಬೇಕರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಡಲು ಸಿದ್ದರಾಮಯ್ಯ ಒಂದೆಡೆ ಹೋರಾಟ ಮಾಡುತ್ತಿದ್ದಾರೆ.&lt;/p&gt;&lt;p&gt;ಅದೇ ರೀತಿ ಸಿಎಂ ಕುರ್ಚಿ ಪಡೆಯಲು ಡಿ.ಕೆ. ಶಿವಕುಮಾರ್ ಮತ್ತೊಂದು ರೀತಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಇಬ್ಬರ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಟೀಕಿಸಿದರು. 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಕಾರ್ಯಕರ್ತರ ಅಭಿಪ್ರಾಯವಾಗಿದೆ. ಚುನಾವಣೆ ನಂತರ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ರಾಜ್ಯದ ಮುಂದಿನ ಆಶಾಕಿರಣ ನಿಖಿಲ್: ಸಿ.ಎಸ್.ಪುಟ್ಟರಾಜು&lt;/strong&gt;&lt;/h2&gt;&lt;p&gt;ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸುನಾಮಿಯಂತೆ ಮೇಲೆದ್ದು ಬಂದಂತೆ 2028ರ ಚುನಾವಣೆಯಲ್ಲಿ ದೇವೇಗೌಡರ ವಂಶದ ಕುಡಿ ಮೇಲೆದ್ದು ಬರಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಭವಿಷ್ಯ ನುಡಿದರು. ನಿಖಿಲ್ ಮೇಲೆ ದೈವಶಕ್ತಿ ಇದೆ, ನಿಖಿಲ್ ಅವರು ರಾಜ್ಯದಲ್ಲಿ ಜೆಡಿಎಸ್ ಅಲೆ ಎಬ್ಬಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಶಕ್ತಿ ಅವರಿಗಿದೆ. ಅದಕ್ಕಾಗಿ ಪಾಂಡವರು ಹೋರಾಡಿದ ಮಣ್ಣಿನಿಂದಲೇ ಅದಕ್ಕೆ ಚಾಲನೆಯನ್ನು ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದುಬಂದು ರಾಜ್ಯದ ಆಶಾಕಿರಣವಾಗಲಿದ್ದಾರೆ. ಅವರಿಂದ ಹೊಸದೊಂದು ಅಧ್ಯಾಯ ಶುರುವಾಗಲಿದೆ ಎಂದು ವಿಶ್ವಾಸದಿಂದ ನುಡಿದರು.&lt;/p&gt;&lt;p&gt;ದೇವೇಗೌಡರು 1983ರಲ್ಲಿ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದರು. 1991ರಲ್ಲಿ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ 1994ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಶಾಸಕನಂತೆ ಕೆಲಸ ಮಾಡಿದೆ. 1998ರಲ್ಲಿ ರಾಮನಗರದಲ್ಲಿ ಅಂಬರೀಶ್ ಗೆಲ್ಲಲಾಗದೆ ಸೋತರು, ಅವರನ್ನು ಎಸ್.ಡಿ.ಜಯರಾಂ ಮಂಡ್ಯಕ್ಕೆ ಕರೆತಂದು ಲೋಕಸಭೆಯಿಂದ ಕಣಕ್ಕಿಳಿಸಿ ಗೆಲ್ಲಿಸಿದರು. ಅಂಬರೀಶ್ ಕಾಂಗ್ರೆಸ್ ಪಕ್ಷ ಸೇರಿಕೊಂಡಾಗ ನನ್ನನ್ನೂ ಬಲವಂತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಆಗ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ನೀವೇನಾದರೂ ಕಾಂಗ್ರೆಸ್ ಸೇರಿದರೆ ವಿಷ ಕುಡಿಯುವುದಾಗಿ ಧಮಕಿ ಹಾಕಿದರು. ಆಗ ನಾನು ಜೆಡಿಎಸ್ ಬಿಟ್ಟು ಯಾವುದೇ ಪಕ್ಷವನ್ನು ಸೇರುವುದಿಲ್ಲ ಎಂದು ಖಡಕ್ಕಾಗಿ ಹೇಳಿ ಬಂದಿದ್ದಾಗಿ ತಿಳಿಸಿದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-congress-government-collapse-statement-gvd/articleshow-1mmkvo9"/>
        </item>
        <item>
            <title><![CDATA[ರೈತರ ಬದುಕು ಹಸನಾಗಿಸಲು ಜಿಲ್ಲೆಗೆ 2500 ಕೋಟಿ ಅನುದಾನ ಬಿಡುಗಡೆ: ಡಿ.ಕೆ.ಶಿವಕುಮಾರ್]]></title>
            <link>https://kannada.asianetnews.com/karnataka-districts/dk-shivakumar-mandya-irrigation-project-2500-crore-gvd/articleshow-hrgq1wr</link>
            <guid isPermaLink="true">https://kannada.asianetnews.com/karnataka-districts/dk-shivakumar-mandya-irrigation-project-2500-crore-gvd/articleshow-hrgq1wr</guid>
            <pubDate>Fri, 08 May 2026 21:27:57 +0530</pubDate>
            <description><![CDATA[&lt;p&gt;ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ ₹2500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನಾಲೆಗಳ ಆಧುನೀಕರಣ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01khfee2pzd9xkawvh1ewnz2n4,imgname-dk-shivakumar-1771118725855.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮದ್ದೂರು (ಮೇ.08): &lt;/strong&gt;ಕೆಆರ್ ಎಸ್ ಜಲಾಶಯದಿಂದ ಕೊನೆ ಭಾಗದ ರೈತರ ಬೇಸಾಯಕ್ಕೆ ಸರಾಗವಾಗಿ ನೀರನ್ನು ಹರಿಸುವ ಮೂಲಕ ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ ₹2500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನಾಲೆಗಳ ಆಧುನೀಕರಣ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಹೋರಾಟ ಮಾಡುವ ಮೂಲಕ ಮದ್ದೂರಿನ ಈ ಪುಣ್ಯಭೂಮಿ ಚರಿತ್ರೆಯ ಪುಟಗಳಲ್ಲಿ ದಾಖಲಾಗಿದೆ.&lt;/p&gt;&lt;p&gt;ಹಲವು ಘಟಾನುಘಟಿ ನಾಯಕರುಗಳಿಗೆ ಜನ್ಮ ನೀಡಿರುವ ಗಂಡು ಮೆಟ್ಟಿದ ನಾಡಿದು. ಈ ಕ್ಷೇತ್ರದಲ್ಲಿ ಹಲವರು ಜನ ನಾಯಕರು ತಮ್ಮದೇ ಆದ ಅಭಿವೃದ್ಧಿ ಕಾರ್ಯಗಳ ಸಾಕ್ಷಿ ಗುಡ್ಡೆಯನ್ನು ಬಿಟ್ಟು ಹೋಗಿದ್ದಾರೆ ಎಂದರು. ಶಾಸಕ ಉದಯ್ ಆಯ್ಕೆಯಾದ ಮೂರೇ ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ₹2 ಸಾವಿರ ಕೋಟಿ ಅನುದಾನವನ್ನು ತಂದು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ ಎಂದು ಶ್ಲಾಘಿಸಿದರು.&lt;/p&gt;&lt;p&gt;ಮದ್ದೂರು ಕ್ಷೇತ್ರಕ್ಕೆ ಮೆಟ್ರೋ, ಏರ್ ಪೋರ್ಟ್ ನಂತಹ ಯೋಜನೆಗಳು ಬೇಡ. ನೀರಾವರಿಗೆ ಹೆಚ್ಚಿನ ಅನುದಾನ ನೀಡಿ ಎಂದು ಶಾಸಕ ಉದಯ್ ಬೇಡಿಕೆ ಇಟ್ಟಿದ್ದರು, ಹೀಗಾಗಿ ತಾಲೂಕಿನ ಕೊನೆಭಾಗಕ್ಕೂ ಸರಾಗವಾಗಿ ನೀರು ಹರಿದು ರೈತರ ಬೇಸಾಯಕ್ಕೆ ನೀರನ್ನು ಹರಿಸುವ ಮೂಲಕ ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ ₹2500 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;₹800 ಕೋಟಿಯನ್ನು ಮದ್ದೂರು ಕ್ಷೇತ್ರಕ್ಕೆ ಬಿಡುಗಡೆ ಮಾಡುವ ಮೂಲಕ ಸೂಳೆಕೆರೆ, ಮದ್ದೂರು ಕೆರೆಗಳ ಒತ್ತುವರಿ ತೆರವು ಮಾಡಿ ಅಭಿವೃದ್ಧಿಗೊಳಿಸಿ ನಾಲೆಗಳ ಆಧುನೀಕರಣ ಮಾಡಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಿದ್ದಾರೆ. ಇನ್ನು ಮೇಕೆದಾಟು ಯೋಜನೆಗೂ ಕೂಡ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಈ ಯೋಜನೆ ಜಾರಿಗೆ ಬಂದ ಬಳಿಕ ಈ ಭಾಗದ ನೀರಾವರಿ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ರೈತರಿಗೆ ಹೆಚ್ಚಿನ ಬೆಂಬಲ&lt;/strong&gt;&lt;/h2&gt;&lt;p&gt;ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಶಾಸಕ ಉದಯ್ ಅವರು ಅಭಿವೃದ್ಧಿ ಜೊತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಬೃಹತ್ ರಾಸುಗಳ ಜಾತ್ರೆ ಆಯೋಜಿಸಿ ಲಕ್ಷಾಂತರ ರುಪಾಯಿ ಬಹುಮಾನ ನೀಡುವ ಮೂಲಕ ರೈತರಿಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ&zwnj; ಎಂದರು.&lt;/p&gt;&lt;p&gt;ರಾಮನಗರ, ತುಮಕೂರು ಜಿಲ್ಲೆಗೆ ಸೀಮಿತವಾಗಿದ್ದ ಉತ್ಸವ ಕಾರ್ಯಕ್ರಮಗಳು ಮಂಡ್ಯ ಜಿಲ್ಲೆಗೂ ಕಾಲಿಟ್ಟಿದ್ದು, ಪ್ರಥಮವಾಗಿ ಮದ್ದೂರು ಉತ್ಸವ ಎಂಬ ಬೃಹತ್ ಕಾರ್ಯಕ್ರಮ ಆಯೋಜಿಸಿ ಮನರಂಜನೆ ಜೊತೆಗೆ ಹಲವು ಪ್ರತಿಭೆಗಳನ್ನು ಗುರುತಿಸುವ ಮೂಲಕ ಅವರನ್ನು ಗೌರವಿಸಿದ್ದಾರೆ ಎಂದರು.&lt;/p&gt;&lt;p&gt;ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಜನರ ನಿರೀಕ್ಷೆಗೂ ಮೀರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ. ಈ ಹಿಂದೆ ಆಡಳಿತ ನಡೆಸಿದ್ದ ಯಾವ ಶಾಸಕರೂ ಮಾಡದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಹೊಸ ಹೊಸ ಚಿಂತನೆಗಳ ಮೂಲಕ ಕ್ಷೇತ್ರಕ್ಕೆ ಹೊಸ ರೂಪವನ್ನು ನೀಡುತ್ತಿದ್ದಾರೆ ಎಂದು ಬಣ್ಣಿಸಿದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dk-shivakumar-mandya-irrigation-project-2500-crore-gvd/articleshow-hrgq1wr"/>
        </item>
        <item>
            <title><![CDATA[ಚಿಕ್ಕಮಗಳೂರು ಸೈಬರ್ ವಂಚನೆ: ಮೊಬೈಲ್‌ಗೆ Apk ಫೈಲ್ ಬಂದಿಲ್ಲ, OTP ಇಲ್ಲ; ಆದ್ರೂ ಖಾತೆಯಿಂದ ₹18 ಲಕ್ಷ ಮಾಯ!]]></title>
            <link>https://kannada.asianetnews.com/karnataka-districts/chikkamagaluru-cyber-crime-rs-18-lakh-fraud-without-otp-and-any-apk-link/articleshow-koa6rzg</link>
            <guid isPermaLink="true">https://kannada.asianetnews.com/karnataka-districts/chikkamagaluru-cyber-crime-rs-18-lakh-fraud-without-otp-and-any-apk-link/articleshow-koa6rzg</guid>
            <pubDate>Fri, 08 May 2026 21:21:58 +0530</pubDate>
            <description><![CDATA[&lt;p&gt;ಕಾಫಿನಾಡು ಚಿಕ್ಕಮಗಳೂರಿನಲ್ಲಿ&zwnj; ಸೈಬರ್ ಕ್ರೈಂ ಹೆಚ್ಚಳ&zwnj;, ಜನವರಿಯಿಂದ ಇಲ್ಲಿತನಕ 29 ಪ್ರಕರಣ ದಾಖಲು. OTP ಇಲ್ಲ, APK ಲಿಂಕ್ ಇಲ್ಲ&hellip; ಖಾತೆಯಿಂದ 18.24 ಲಕ್ಷ ರೂ. ಮಾಯ ಆಗಿದ್ದು ಹೇಗೆ? ಇಲ್ಲಿದೆ ನೋಡಿ ವಿಶೇಷ ವರದಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr44ftt0ccg5g12hp1w8ykvm,imgname-gemini-generated-image-h3y8c1h3y8c1h3y8--1--1778255391551.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ : ಆಲ್ದೂರು&zwnj; ಕಿರಣ್, ಏಷ್ಯಾನೆಟ್ ಸುವರ್ಣ &zwnj;ನ್ಯೂಸ್&amp;nbsp;&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಮೇ 08) : &lt;/strong&gt;ಸೈಬರ್ ಕ್ರಿಮಿಗಳ ಅಟ್ಟಹಾಸಕ್ಕೆ ಕಾಫಿನಾಡ ಜನತೆ ಬೆಚ್ಚಿಬಿದ್ದಿದ್ದು, ಇದೀಗ ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಮಹಿಳೆಗೆ ಯಾವುದೇ ಆಪ್&zwnj;ನ ಲಿಂಕ್ ಬಂದಿಲ್ಲ, ಒಟಿಪಿಯೂ ಬಂದಿಲ್ಲ. ಆದರೂ ಹಂತ ಹಂತವಾಗಿ 18 ಲಕ್ಷ ರೂ. ಬ್ಯಾಂಕ್ ಖ್ಯಾತೆಯಿಂದ ಮಂಗಮಾಯಾಗಿದೆ. ಇಲ್ಲಿದೆ ನೋಡಿ ಸೈಬರ್ ವಂಚಕರ ಹೊಸ ವರಸೆ.&lt;/p&gt;&lt;p&gt;ರಾಷ್ಟ್ರದ ಪ್ರಮುಖ ಬ್ಯಾಂಕ್&zwnj;ಗಳಲ್ಲಿ ಒಂದಾಗಿರುವ ಐ.ಡಿ.ಎಫ್&zwnj;.ಸಿ. ಫಸ್ಟ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 18.24 ಲಕ್ಷ ರೂಪಾಯಿ ಹಣ ವಂಚಕರು ವರ್ಗಾವಣೆ ಮಾಡಿಕೊಂಡಿರುವುದು ಬ್ಯಾಂಕ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಮಹಿಳೆಯ ಖಾತೆಯಿಂದ ಮಾರ್ಚ್ 4ರಿಂದ ಏಪ್ರಿಲ್ 21ರವರೆಗೆ ವಿವಿಧ ದಿನಾಂಕಗಳಲ್ಲಿ ಹಣ ಕಡಿತವಾಗಿದೆ. ಈ ಮಹಿಳೆಯ ಖಾತೆಯಿಂದ ಹಲವು ಅಪರಿಚಿತ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಶಂಕಿಸಲಾಗಿದೆ. ವಿಶೇಷವೆಂದರೆ, ಹಣ ವರ್ಗಾವಣೆ ನಡೆದಿದ್ದರೂ ಮೊಬೈಲ್&zwnj;ಗೆ ಯಾವುದೇ OTP, ಅಲರ್ಟ್ ಸಂದೇಶ ಅಥವಾ ಅನುಮಾನಾಸ್ಪದ APK ಲಿಂಕ್ ಬಂದಿಲ್ಲ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಖಾತೆಯಿಂದ ಹಣ ಕಣ್ಮರೆ ಆತಂಕ :&lt;/strong&gt;&lt;/h2&gt;&lt;p&gt;ಸಾಮಾನ್ಯವಾಗಿ ಸೈಬರ್ ವಂಚಕರು OTP ಪಡೆದು ಅಥವಾ ನಕಲಿ ಲಿಂಕ್&zwnj;ಗಳನ್ನು ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಪ್ರಕರಣಗಳು ಹೆಚ್ಚಾಗಿರುವ ಸಂದರ್ಭದಲ್ಲಿ, ಯಾವುದೇ ರೀತಿಯ ಎಚ್ಚರಿಕೆ ಇಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಕಣ್ಮರೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬ್ಯಾಂಕ್ ಖಾತೆ ಪರಿಶೀಲನೆ ನಡೆಸಿದಾಗಲೇ ವಂಚನೆ ನಡೆದಿರುವುದು ಮಹಿಳೆಗೆ ತಿಳಿದಿದೆ. ಈ ಸಂಬಂಧ ಮಹಿಳೆ ಚಿಕ್ಕಮಗಳೂರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಳೆದುಕೊಂಡ ಹಣವನ್ನು ವಾಪಸ್ ಕೊಡಿಸುವಂತೆ ಹಾಗೂ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಣ ವರ್ಗಾವಣೆಯಾದ ಖಾತೆಗಳ ಮಾಹಿತಿ ಸಂಗ್ರಹಿಸುತ್ತಿದ್ದು, ತಾಂತ್ರಿಕ ಪರಿಶೀಲನೆ ನಡೆಸುತ್ತಿದ್ದಾರೆ. ವಿವಿಧ ಬ್ಯಾಂಕ್ ಖಾತೆಗಳು ಮತ್ತು ಡಿಜಿಟಲ್ ವಾಲೆಟ್&zwnj;ಗಳ ಮೂಲಕ ಹಣ ವರ್ಗಾವಣೆ ಆಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h3&gt;&lt;strong&gt;ಜಿಲ್ಲೆಯಲ್ಲಿ ಸೈಬರ್ ವಂಚನೆ ಹೆಚ್ಚಳ&lt;/strong&gt;&lt;/h3&gt;&lt;p&gt;ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 29 ವಿವಿಧ ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿವರೆಗೆ ಹಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಈವರೆಗೆ ದಾಖಲಾಗಿರುವ ಪ್ರಕರಣಗಳಲ್ಲಿ ಹಣ ದ್ವಿಗುಣಗೊಳಿಸುವ ಆಮಿಷ, ಆನ್&zwnj;ಲೈನ್ ಹೂಡಿಕೆ ವಂಚನೆ, ನಕಲಿ ಲಿಂಕ್&zwnj;ಗಳು, ಬ್ಯಾಂಕ್ KYC ಅಪ್ಡೇಟ್ ಹೆಸರಿನಲ್ಲಿ ಮೋಸ ಮಾಡುವ ಪ್ರಕರಣಗಳೇ ಹೆಚ್ಚಾಗಿವೆ. ಈವರೆಗೆ ದಾಖಲಾಗಿರುವ 29 ಪ್ರಕರಣಗಳಲ್ಲಿ 6 ಪ್ರಕರಣಗಳನ್ನು ಮಾತ್ರ ಪೊಲೀಸರು ಭೇದಿಸಿದ್ದು, ಉಳಿದ ಪ್ರಕರಣಗಳ ತನಿಖೆ ಮುಂದುವರೆದಿದೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರಿಗೆ ಪೊಲೀಸರ ಎಚ್ಚರಿಕೆ&lt;/strong&gt;&lt;/h3&gt;&lt;p&gt;ಸೈಬರ್ ಠಾಣೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಅಪರಿಚಿತ ಕರೆಗಳು, ಹೂಡಿಕೆ ಆಮಿಷಗಳು, ಬ್ಯಾಂಕ್ ಮಾಹಿತಿ ಕೇಳುವ ಸಂದೇಶಗಳು ಹಾಗೂ ಅನುಮಾನಾಸ್ಪದ ಲಿಂಕ್&zwnj;ಗಳ ಬಗ್ಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಯಾವುದೇ ಅನುಮಾನಾಸ್ಪದ ವ್ಯವಹಾರ ಕಂಡುಬಂದರೆ ತಕ್ಷಣ ಬ್ಯಾಂಕ್ ಮತ್ತು ಸೈಬರ್ ಸಹಾಯವಾಣಿ 1930ಕ್ಕೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-cyber-crime-rs-18-lakh-fraud-without-otp-and-any-apk-link/articleshow-koa6rzg"/>
        </item>
        <item>
            <title><![CDATA[ರಾಯಚೂರು: ಮಹಿಂದ್ರಾ ಥಾರ್ ರಿವರ್ಸ್ ಮಾಡುವಾಗ 5 ವಿದ್ಯಾರ್ಥಿನಿಯರಿಗೆ ಡಿಕ್ಕಿ, ಓರ್ವಬಾಲಕಿ ಸಾವು!]]></title>
            <link>https://kannada.asianetnews.com/karnataka-districts/raichur-sindhanur-accident-mahindra-thar-hits-college-students-one-dead-many-injury/articleshow-icupuw7</link>
            <guid isPermaLink="true">https://kannada.asianetnews.com/karnataka-districts/raichur-sindhanur-accident-mahindra-thar-hits-college-students-one-dead-many-injury/articleshow-icupuw7</guid>
            <pubDate>Fri, 08 May 2026 20:44:06 +0530</pubDate>
            <description><![CDATA[ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ, ಅತಿವೇಗವಾಗಿ ಕಾರನ್ನು ರಿವರ್ಸ್ ತೆಗೆದಾಗ ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr42d13bvn7q0shqx9m929z9,imgname-raichur-mahindra-thar-accident-1778253202537.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ 08): ಜಿ&lt;/strong&gt;ಲ್ಲೆಯ ಸಿಂಧನೂರು ಪಟ್ಟಣದಲ್ಲಿ ಇಂದು ಮಧ್ಯಾಹ್ನ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ರಿವರ್ಸ್ ಮಾಡುವಾಗ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಸಿಂಧನೂರು ಪಟ್ಟಣದ ಚೇತನ ಆಸ್ಪತ್ರೆಯ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಐವರು ವಿದ್ಯಾರ್ಥಿನಿಯರು ಕಾಲೇಜು ಮುಗಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅಲ್ಲಿ ನಿಲ್ಲಿಸಿದ್ದ ಮಹೇಂದ್ರ ಥಾರ್ (Mahindra Thar) ಕಾರನ್ನು ಚಾಲಕ ಏಕಾಏಕಿ ವೇಗವಾಗಿ ರಿವರ್ಸ್ ತೆಗೆದಿದ್ದಾನೆ. ನಿಯಂತ್ರಣ ತಪ್ಪಿದ ಕಾರು ನೇರವಾಗಿ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.&lt;/p&gt;&lt;h2&gt;&lt;strong&gt;ಓರ್ವ ಬಲಿ, ಮೂವರಿಗೆ ಗಾಯ:&lt;/strong&gt;&lt;/h2&gt;&lt;p&gt;ಈ ಭೀಕರ ಅಪಘಾತದಲ್ಲಿ ಜವಳಗೇರಾ ಗ್ರಾಮದ ನಿವಾಸಿ ಭೂಮಿಕಾ (17) ಎಂಬ ವಿದ್ಯಾರ್ಥಿನಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಉಳಿದಂತೆ ಮೇಘನಾ (17), ಮಹೇಶ್ವರಿ (17) ಮತ್ತು ಜಹೀದಾ (17) ಎಂಬ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ವಿದ್ಯಾರ್ಥಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.&lt;/p&gt;&lt;h3&gt;&lt;strong&gt;ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ:&lt;/strong&gt;&lt;/h3&gt;&lt;p&gt;ಅಪಘಾತದ ದೃಶ್ಯವು ಚೇತನ ಆಸ್ಪತ್ರೆಯ ಮುಂಭಾಗದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಎಷ್ಟು ವೇಗವಾಗಿ ರಿವರ್ಸ್ ಬಂದಿದೆ ಎಂದರೆ ವಿದ್ಯಾರ್ಥಿನಿಯರಿಗೆ ತಪ್ಪಿಸಿಕೊಳ್ಳಲು ಸಮಯವೇ ಸಿಕ್ಕಿಲ್ಲ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.&lt;/p&gt;&lt;h3&gt;&lt;strong&gt;ಚಾಲಕ ಮತ್ತು ಕಾರು ಪೊಲೀಸ್ ವಶಕ್ಕೆ:&lt;/strong&gt;&lt;/h3&gt;&lt;p&gt;ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಂಧನೂರು ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಮಹೇಂದ್ರ ಥಾರ್ ಕಾರು ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/raichur-sindhanur-accident-mahindra-thar-hits-college-students-one-dead-many-injury/articleshow-icupuw7"/>
        </item>
        <item>
            <title><![CDATA[ರಾಜ್ಯದಲ್ಲಿ ಎನ್‌ಫೀಲ್ಡ್‌ ಶೋರೂಮ್‌ ಮೇಲೆ ಕನ್ನಡ ಕಾರ್ಯರ್ಕತರ ದಾಳಿ, ಇನ್ನೊಂದೆಡೆ ಆಂಧ್ರದಲ್ಲಿ ಭಾರೀ ಹೂಡಿಕೆ ಘೋಷಿಸಿದ ಕಂಪನಿ!]]></title>
            <link>https://kannada.asianetnews.com/business/royal-enfield-new-plant-andhra-pradesh-2200-crore-karnataka-showroom-protest-san/articleshow-g4rx119</link>
            <guid isPermaLink="true">https://kannada.asianetnews.com/business/royal-enfield-new-plant-andhra-pradesh-2200-crore-karnataka-showroom-protest-san/articleshow-g4rx119</guid>
            <pubDate>Fri, 08 May 2026 20:31:56 +0530</pubDate>
            <description><![CDATA[&lt;p&gt;ರಾಯಲ್ ಎನ್&zwnj;ಫೀಲ್ಡ್ ಸಂಸ್ಥೆಯು ಆಂಧ್ರಪ್ರದೇಶದಲ್ಲಿ ₹2200 ಕೋಟಿ ವೆಚ್ಚದ ಬೃಹತ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿದೆ, ಇದು 5000ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲಿದೆ. ಇದೇ ಸಮಯದಲ್ಲಿ, ಕರ್ನಾಟಕದ ಕೋಲಾರದಲ್ಲಿ ನಾಮಫಲಕ ವಿಚಾರವಾಗಿ ರಾಯಲ್ ಎನ್&zwnj;ಫೀಲ್ಡ್ ಶೋರೂಮ್ ದಾಳಿ ನಡೆಸಿದ ಘಟನೆ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr41h97bggckh5240t01rdh2,imgname-royal-enfield-andhra-pradesh-1778252293355.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.8): &lt;/strong&gt;ಒಂದೆಡೆ ರಾಜ್ಯದಲ್ಲಿ ಕನ್ನಡ ಕಾರ್ಯಕರ್ತರು ರಾಯಲ್&zwnj; ಎನ್&zwnj;ಫೀಲ್ಡ್&zwnj; ಶೋರೂಮ್&zwnj;ನಲ್ಲಿ ಕನ್ನಡ ವಿಚಾರವಾಗಿ ದಾಳಿ ಮಾಡಿರುವ ದಿನವೇ ಕಂಪನಿ ಆಂಧ್ರಪ್ರದೇಶದಲ್ಲಿ ತನ್ನ ಮೇಜರ್&zwnj; ಪ್ಲ್ಯಾಂಟ್&zwnj; ಘೋಷಣೆ ಮಾಡಿದೆ. ಈ ಎರಡೂ ವಿಚಾರ ಕಾಕತಾಳೀಯವಾಗಿದ್ದರೂ, ಹೂಡಿಕೆಯ ವಿಚಾರದಲ್ಲಿ ಕರ್ನಾಟಕ ಮತ್ತೊಂದು ಪ್ರಮುಖ ಅವಕಾಶವನ್ನು ತಪ್ಪಿಸಿಕೊಂಡಂತಾಗಿದೆ. ಅದಾಗಲೇ ತಮಿಳುನಾಡಿನಲ್ಲಿ ಒಂದು ಉತ್ಪಾದನಾ ಘಟಕ ಹೊಂದಿರುವ ರಾಯಲ್&zwnj; ಎನ್&zwnj;ಫೀಲ್ಡ್&zwnj; ತಮಿಳುನಾಡು ಹೊರತಾಗಿ ಮತ್ತೊಂದು ರಾಜ್ಯದಲ್ಲಿ ಉತ್ಪಾದನಾ ಘಟಕವನ್ನು ತೆರೆಯುವ ಬಗ್ಗೆ ವರ್ಷಗಳ ಹಿಂದೆ ವಿಚಾರ ಮಾಡಿತ್ತು. ಈಗ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಆಫರ್&zwnj; ಒಪ್ಪಿರುವ ಕಂಪನಿ, ಅಂದಾಜು 2200 ಕೋಟಿ ರೂಪಾಯಿ ಹೂಡಿಕೆಯ ಪ್ಲ್ಯಾಂಟ್&zwnj;ಅನ್ನು ರಾಯಲ್&zwnj;ಸೀಮಾ ಭಾಗದಲ್ಲಿ ನಿರ್ಮಾಣ ಮಾಡಲು ಒಪ್ಪಂದ ಮಾಡಿಕೊಂಡಿದೆ.&lt;/p&gt;&lt;p&gt;ಖ್ಯಾತ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆ 'ರಾಯಲ್ ಎನ್&zwnj;ಫೀಲ್ಡ್' (Royal Enfield), ಆಂಧ್ರಪ್ರದೇಶದಲ್ಲಿ ತನ್ನ ನೂತನ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಆಸಕ್ತಿ ವ್ಯಕ್ತಪಡಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. 1950ರ ದಶಕದಲ್ಲಿ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಿದ ನಂತರ, ಕಂಪನಿಯು ತಮಿಳುನಾಡಿನಿಂದ ಹೊರಗೆ ಸ್ಥಾಪಿಸುತ್ತಿರುವ ಮೊದಲ ಬೃಹತ್ ಉತ್ಪಾದನಾ ಘಟಕ ಇದಾಗಲಿದೆ.&lt;/p&gt;&lt;p&gt;ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಯ ಸಮೀಪವಿರುವ ತಿರುಪತಿ ಜಿಲ್ಲೆಯ ಸತ್ಯವೇಡು ಎಂಬಲ್ಲಿ ಈ ನೂತನ ಘಟಕ ತಲೆ ಎತ್ತಲಿದೆ. ಆಂಧ್ರಪ್ರದೇಶ ರಾಜ್ಯ ಹೂಡಿಕೆ ಉತ್ತೇಜನಾ ಮಂಡಳಿಯ (SIPB) ಭಾಗವಾಗಿರುವ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಈ ಯೋಜನೆಗೆ ವೈಯಕ್ತಿಕವಾಗಿ ಅನುಮೋದನೆ ನೀಡಿದ್ದಾರೆ ಎಂದು ವರದಿಯಾಗಿದೆ.&lt;/p&gt;&lt;h2&gt;&lt;strong&gt;5 ಸಾವಿರಕ್ಕೂ ಅಧಿಕ ಉದ್ಯೋಗ&lt;/strong&gt;&lt;/h2&gt;&lt;p&gt;ಎರಡು ಹಂತಗಳಲ್ಲಿ ಕಂಪನಿಯು ಸುಮಾರು 2,200 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಿದೆ. ಈ ಘಟಕವು ವಾರ್ಷಿಕ 9 ಲಕ್ಷ ಯುನಿಟ್&zwnj;ಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿರಲಿದೆ. ಈ ಯೋಜನೆಯಿಂದ ಈ ಭಾಗದಲ್ಲಿ ಸುಮಾರು 5,000 ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ.&lt;/p&gt;&lt;h2&gt;&lt;strong&gt;ವೆಂಡರ್ ಪಾರ್ಕ್ ಸೌಲಭ್ಯ&lt;/strong&gt;&lt;/h2&gt;&lt;p&gt;ಕಂಪನಿಗೆ ಸುಮಾರು 267 ಎಕರೆ ಭೂಮಿಯನ್ನು ನಿಗದಿಪಡಿಸಲಾಗಿದ್ದು, ಉತ್ಪಾದನಾ ಘಟಕದ ಜೊತೆಗೆ ಪ್ರತ್ಯೇಕ 'ವೆಂಡರ್ ಪಾರ್ಕ್' (Vendor Park) ಅನ್ನು ಕೂಡ ಇಲ್ಲಿ ನಿರ್ಮಿಸಲಾಗುತ್ತಿದೆ. ಇದರಿಂದ ಬಿಡಿಭಾಗಗಳ ಪೂರೈಕೆ ವ್ಯವಸ್ಥೆ ಸುಗಮವಾಗಲಿದ್ದು, ಸಾರಿಗೆ ವೆಚ್ಚ ಕಡಿಮೆಯಾಗುವುದಲ್ಲದೆ ಉತ್ಪಾದನಾ ಪ್ರಕ್ರಿಯೆಯೂ ವೇಗವನ್ನು ಪಡೆದುಕೊಳ್ಳಲಿದೆ.&lt;/p&gt;&lt;h2&gt;&lt;strong&gt;ಯೋಜನೆಯ ಕಾಲಮಿತಿ&lt;/strong&gt;&lt;/h2&gt;&lt;p&gt;ರಾಯಲ್ ಎನ್&zwnj;ಫೀಲ್ಡ್&zwnj;ನ ಈ ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹಂತವು 2029 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಮತ್ತು ಎರಡನೇ ಹಂತವು 2032 ರ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ರಾಯಲ್ ಎನ್&zwnj;ಫೀಲ್ಡ್ ಬೈಕ್&zwnj;ಗಳಿಗೆ ಇರುವ ಭಾರಿ ಬೇಡಿಕೆಯನ್ನು ಪೂರೈಸಲು ಈ ಘಟಕವು ಪೂರಕವಾಗಲಿದೆ.&lt;/p&gt;&lt;h2&gt;&lt;strong&gt;ಕೋಲಾರದಲ್ಲಿ ರಾಯಲ್&zwnj; ಎನ್&zwnj;ಫೀಲ್ಡ್&zwnj; ಶೋರೂಮ್&zwnj; ಮೇಲೆ ದಾಳಿ&lt;/strong&gt;&lt;/h2&gt;&lt;p&gt;ಒಂದೆಡೆ ಕಂಪನಿ ತನ್ನ ಪ್ರಮುಖ ಉತ್ಪಾದನಾ ಘಟಕವನ್ನು ಘೋಷಣೆ ಮಾಡಿರುವ ದಿನವೇ ಸೋಶಿಯಲ್&zwnj; ಮೀಡಿಯಾದಲ್ಲಿ ಕರ್ನಾಟಕದ ಕೋಲಾರದಲ್ಲಿರುವ ರಾಯಲ್&zwnj; ಎನ್&zwnj;ಫೀಲ್ಡ್&zwnj; ಶೋರೂಮ್&zwnj; ಮೇಲೆ ಕನ್ನಡ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಕನ್ನಡ ನಾಮಫಲಕದ ವಿಚಾರವಾಗಿ ದಾಳಿ ಮಾಡಿರುವ ಕರ್ನಾಟಕ ನಾಡು ನುಡಿ ಸ್ವಾಭಿಮಾನಿ ವೇದಿಕೆ, ಶೋರೂಮ್&zwnj;ನ ಅಧಿಕಾರಿಗಳಿಗೆ ನೋಟಿಸ್&zwnj; ನೀಡಿ ಎಚ್ಚರಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>karnataka-districts</category>
            <dc:creator>Santosh Naik</dc:creator>
            <atom:link href="https://kannada.asianetnews.com/business/royal-enfield-new-plant-andhra-pradesh-2200-crore-karnataka-showroom-protest-san/articleshow-g4rx119"/>
        </item>
        <item>
            <title><![CDATA[ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ: ಅಂತಿಮ ಹಂತಕ್ಕೆ ತಲುಪಿದ ಈಜೀಪುರ ಮೇಲ್ಸೇತುವೆ ಕಾಮಗಾರಿ, ಅಕ್ಟೋಬರ್‌ಗೆ ಸಂಚಾರ ಆರಂಭ!]]></title>
            <link>https://kannada.asianetnews.com/gallery/karnataka-districts/bengaluru-awaited-ejipura-kendriya-sadan-flyover-completion-at-october-will-be-open-traffic-stbrt37</link>
            <guid isPermaLink="true">https://kannada.asianetnews.com/gallery/karnataka-districts/bengaluru-awaited-ejipura-kendriya-sadan-flyover-completion-at-october-will-be-open-traffic-stbrt37</guid>
            <pubDate>Fri, 08 May 2026 20:03:19 +0530</pubDate>
            <description><![CDATA[ದಶಕದಿಂದ ವಿಳಂಬವಾಗಿದ್ದ ಬೆಂಗಳೂರಿನ ಈಜೀಪುರ ಮೇಲ್ಸೇತುವೆ ಕಾಮಗಾರಿಯು ಈಗ ಅಂತಿಮ ಹಂತ ತಲುಪಿದೆ. ಸೆಂಟ್ ಜಾನ್ಸ್ ಆಸ್ಪತ್ರೆ ಬಳಿಯ ಭೂಸ್ವಾಧೀನ ಸಮಸ್ಯೆ ಬಗೆಹರಿದ ನಂತರ ಕಾಮಗಾರಿ ವೇಗ ಪಡೆದುಕೊಂಡಿದ್ದು, ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಂಡು, ಹೊಸ ವರ್ಷದ ವೇಳೆಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr3zjaa3m4sabfk09zhhnhh2,imgname-bengaluru-ejipura-flyover-update-1778250230083.jpg" type="image/jpeg" height="390" width="690"/>
            <content:encoded><![CDATA[ದಶಕದಿಂದ ವಿಳಂಬವಾಗಿದ್ದ ಬೆಂಗಳೂರಿನ ಈಜೀಪುರ ಮೇಲ್ಸೇತುವೆ ಕಾಮಗಾರಿಯು ಈಗ ಅಂತಿಮ ಹಂತ ತಲುಪಿದೆ. ಸೆಂಟ್ ಜಾನ್ಸ್ ಆಸ್ಪತ್ರೆ ಬಳಿಯ ಭೂಸ್ವಾಧೀನ ಸಮಸ್ಯೆ ಬಗೆಹರಿದ ನಂತರ ಕಾಮಗಾರಿ ವೇಗ ಪಡೆದುಕೊಂಡಿದ್ದು, ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಂಡು, ಹೊಸ ವರ್ಷದ ವೇಳೆಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.&lt;img&gt;&lt;p&gt;ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತಿ ದೀರ್ಘ ಅವಧಿಯವರೆಗೆ ಯಾವುದಾದರೂ ಒಂದು ಕಾಮಗಾರಿ ನಡೆದಿದೆ ಎಂದರೆ ಅದು ಈಜಿಪುರ ಮೇಲ್ಸೇತುವೆ ಕಾಮಗಾರಿ ಎಂದರೆ ತಪ್ಪಾಗಲಾರದು. ಕೆಲಸ ಆರಂಭವಾಗಿ ದಶಕದ ಹತ್ತಿರ ಬರುತ್ತಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿ ಕೊನೆಗೂ ಅಂತ್ಯದ ಹಂತಕ್ಕೆ ತಲುಪಿದೆ.&amp;nbsp;&lt;/p&gt;&lt;p&gt;ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಈ ಪ್ರಮುಖ ಯೋಜನೆಯು ಅಕ್ಟೋಬರ್ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದ್ದು, ಇದೇ ವರ್ಷ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಯೋಜನೆಯ ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಕಳೆದ ಹಲವು ವರ್ಷಗಳಿಂದ ಸೆಂಟ್ ಜಾನ್ಸ್ ಆಸ್ಪತ್ರೆ ಸಮೀಪದ ಭೂಸ್ವಾಧೀನ ಪ್ರಕ್ರಿಯೆ ಮತ್ತು 'ಪೋರ್ಟಲ್ ಫ್ರೇಮ್' ನಿರ್ಮಾಣದ ಜಟಿಲತೆಯಿಂದಾಗಿ ಕಾಮಗಾರಿ ಕುಂಟುತ್ತಾ ಸಾಗಿತ್ತು. ಆದರೆ, ಫೆಬ್ರವರಿ 2026ರಲ್ಲಿ ಈ ಸಮಸ್ಯೆಯನ್ನು ಯಶಸ್ವಿಯಾಗಿ ನಿವಾರಿಸಲಾಗಿದೆ. ಉಪ ಮುಖ್ಯಮಂತ್ರಿಗಳು ಹಾಗೂ ಸ್ಥಳೀಯ ಶಾಸಕರಾದ ಸಾರಿಗೆ ಸಚಿವರ ನಿರಂತರ ಮೇಲ್ವಿಚಾರಣೆಯಿಂದಾಗಿ ಸೆಂಟ್ ಜಾನ್ಸ್ ಆಡಳಿತ ಮಂಡಳಿಯು ಜಮೀನು ನೀಡಲು ಒಪ್ಪಿಗೆ ಸೂಚಿಸಿದ್ದು, ಈಗ ಕಾಮಗಾರಿ ಯುದ್ಧೋಪಾದಿಯಲ್ಲಿ ಸಾಗುತ್ತಿದೆ.&lt;/p&gt;&lt;img&gt;&lt;p&gt;ಈ ಯೋಜನೆಯು ಮೊದಲು ಮೇ 2017ರಲ್ಲಿ 203.20 ಕೋಟಿ ರೂ. ಮೊತ್ತದಲ್ಲಿ ಆರಂಭವಾಗಿತ್ತು. ಆದರೆ, ಮೊದಲ ಗುತ್ತಿಗೆದಾರ ಸಂಸ್ಥೆಯಾದ ಮೆ. ಸಿಂಪ್ಲೆಕ್ಸ್ ಇನ್&zwnj;ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ 4 ವರ್ಷಗಳಲ್ಲಿ ಕೇವಲ ಶೇ. 42.80 ರಷ್ಟು ಮಾತ್ರ ಕೆಲಸ ಮಾಡಿತ್ತು. ಇದರಿಂದಾಗಿ ಸಾರ್ವಜನಿಕರು ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ಹೈಕೋರ್ಟ್ ಮಧ್ಯಪ್ರವೇಶದ ನಂತರ, ಹಳೆಯ ಗುತ್ತಿಗೆ ರದ್ದುಗೊಳಿಸಿ ನವೆಂಬರ್ 2023 ರಲ್ಲಿ ಬಿ.ಎಸ್.ಸಿ.ಪಿ.ಎಲ್ ಇನ್&zwnj;ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್&zwnj;ಗೆ ಬಾಕಿ ಕೆಲಸವನ್ನು ವಹಿಸಲಾಯಿತು.&lt;/p&gt;&lt;img&gt;&lt;p&gt;&lt;strong&gt;ಯೋಜನೆಯು ಈಗ ಅಂತಿಮ ಹಂತಕ್ಕೆ ತಲುಪಿದ್ದು, ಅಂಕಿಅಂಶಗಳು ಹೀಗಿವೆ:&lt;/strong&gt;&lt;/p&gt;&lt;p&gt;&lt;strong&gt;ಅಡಿಪಾಯ: &lt;/strong&gt;ಎಲ್ಲಾ ಪೈಲ್ಸ್ ಮತ್ತು ಪಿಯರ್ಸ್ (ಕಂಬಗಳು) ನಿರ್ಮಾಣ ಪೂರ್ಣಗೊಂಡಿವೆ.&lt;/p&gt;&lt;p&gt;&lt;strong&gt;ಸೆಗ್ಮೆಂಟ್&zwnj;ಗಳು:&lt;/strong&gt; ಒಟ್ಟು 762 ಸೆಗ್ಮೆಂಟ್&zwnj;ಗಳಲ್ಲಿ 728 ಈಗಾಗಲೇ ಸಿದ್ಧವಾಗಿವೆ. ಕೇವಲ 15 ಸ್ಪಾನ್&zwnj;ಗಳ ಅಳವಡಿಕೆ ಮಾತ್ರ ಬಾಕಿ ಉಳಿದಿದೆ.&lt;/p&gt;&lt;p&gt;&lt;strong&gt;ರಸ್ತೆ ಅಗಲೀಕರಣ:&lt;/strong&gt; ಸೆಂಟ್ ಜಾನ್ಸ್ ಸೇರಿದಂತೆ ಸುಮಾರು 5,998 ಚ.ಮೀ ಜಮೀನು ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಪಾದಚಾರಿ ಮಾರ್ಗ ಮತ್ತು ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.&lt;/p&gt;&lt;img&gt;&lt;p&gt;ಡಾ. ರಾಘವೇಂದ್ರ ಪ್ರಸಾದ್ ಅವರ ಪ್ರಕಾರ, ಮುಖ್ಯ ಮೇಲ್ಸೇತುವೆ ಕೆಲಸ ಅಕ್ಟೋಬರ್ ಅಂತ್ಯಕ್ಕೆ ಮುಗಿಯಲಿದೆ. ನಂತರ ರ್ಯಾಂಪ್&zwnj;ಗಳು ಮತ್ತು ಫಿನಿಶಿಂಗ್ ಕೆಲಸಗಳನ್ನು ಮುಗಿಸಿ, ಹೊಸ ವರ್ಷದ ಹೊತ್ತಿಗೆ ಈಜೀಪುರ ಮತ್ತು ಕೇಂದ್ರೀಯ ಸದನ ನಡುವಿನ ಟ್ರಾಫಿಕ್ ಸಮಸ್ಯೆ ನಿವಾರಿಸಲು ಸಂಚಾರ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bengaluru-awaited-ejipura-kendriya-sadan-flyover-completion-at-october-will-be-open-traffic-stbrt37"/>
        </item>
        <item>
            <title><![CDATA[ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಣ್ಣ ಚಿತ್ರಗಾರ ಇನ್ನಿಲ್ಲ: ಕಲಾಲೋಕಕ್ಕೆ ಅಪಾರ ನಷ್ಟ]]></title>
            <link>https://kannada.asianetnews.com/karnataka-districts/state-award-winning-sculptor-venkanna-chitragara-death-gvd/articleshow-pdho11o</link>
            <guid isPermaLink="true">https://kannada.asianetnews.com/karnataka-districts/state-award-winning-sculptor-venkanna-chitragara-death-gvd/articleshow-pdho11o</guid>
            <pubDate>Fri, 08 May 2026 19:49:32 +0530</pubDate>
            <description><![CDATA[&lt;p&gt;ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗು ಕಲಾವಿದ, ಖ್ಯಾತ ಶಿಲ್ಪಿ ವೆಂಕಣ್ಣ ಚಿತ್ರಗಾರ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನಿಧನರಾದರು. ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಮೃತರಿಗೆ 76 ವರ್ಷಗಳಾಗಿದ್ದವು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3z9nzqqzrjqa64kw4e35bs,imgname-xxjjn-1778249947127.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗಂಗಾವತಿ (ಮೇ.08): &lt;/strong&gt;ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗು ಕಲಾವಿದ, ಖ್ಯಾತ ಶಿಲ್ಪಿ ವೆಂಕಣ್ಣ ಚಿತ್ರಗಾರ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನಿಧನರಾದರು. ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಮೃತರಿಗೆ 76 ವರ್ಷಗಳಾಗಿದ್ದವು. ಮೂವರು ಪುತ್ರಿಯರು, ಇಬ್ಬರು ಪುತ್ರರರು ಸೇರಿದಂತೆ ಅಪಾರ ಬಳಗ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿರುವ ಪ್ರಸಿದ್ಧ ದೇವಸ್ಥಾನಗಳ ರಥ( ತೇರುಗಳ)ಗಳನ್ನು ನಿರ್ಮಾಣ ಮಾಡಿದ ಕೀರ್ತಿ ವೆಂಕಣ್ಣ ಅವರಿಗೆ ಸಲ್ಲುತ್ತದೆ.&lt;/p&gt;&lt;p&gt;ಕಟ್ಟಿಗೆಯ ಕೆಲಸದಲ್ಲಿ ನೈಪುಣ್ಯತೆ, ಗಣೇಶ ಮೂರ್ತಿಗಳ ತಯಾರಿ. ಗೊಂಬೆಗಳ ತಯಾರಿಯಲ್ಲಿ ಚಾಪು ಮೂಡಿಸಿದ್ದ ವೆಂಕಣ್ಣ ಅವರಿಗೆ 2023-24 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ನಿಧನಕ್ಕೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ಇವರ ಅಂತ್ಯಕ್ರಿಯೆ ಮೇ.9 ಶನಿವಾರ ಬೆಳಿಗ್ಗೆ 10 ಗಂಟೆಗೆ ಗಂಗಾವತಿಯಲ್ಲಿ ನಡೆಯಲಿದೆ.&lt;/p&gt;&lt;h2&gt;&lt;strong&gt;ಹೆಮ್ಮೆಯ ಶಿಲ್ಪಿ&lt;/strong&gt;&lt;/h2&gt;&lt;p&gt;ಗಂಗಾವತಿಯ ವೆಂಕಣ್ಣ ಚಿತ್ರಗಾರ ಅವರು ಸುಮಾರು ಐವತ್ತು ವರ್ಷಗಳಿಂದ ರಥ ನಿರ್ಮಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 100ಕ್ಕೂ ಅಧಿಕ ರಥಗಳು ಇವರ ಕೈಯ್ಯಲ್ಲಿ ಅರಳಿವೆ. ಇವರು ನಿರ್ಮಿಸಿರುವ ರಥಗಳು ವಿಜಯನಗರ ಶೈಲಿಯ ವಾಸ್ತುಪ್ರಕಾರ ಹೊಂದಿದ್ದು, ಕೇವಲ ಕೊಪ್ಪಳ ಜಿಲ್ಲೆಗೆ ಮಾತ್ರ ಸೀಮಿತವಾಗದೆ ನೆರೆಯ ರಾಜ್ಯಗಳಾದ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಕಾಣಬಹುದು.&lt;/p&gt;&lt;p&gt;ಪರಿಸರಸ್ನೇಹಿ ಸುಂದರವಾದ ಮಣ್ಣಿನ ಮೂರ್ತಿಗಳನ್ನೂ ಸಹ ಮಾಡುವಲ್ಲಿ ಪ್ರಸಿದ್ಧಿ ಹೊಂದಿರುವ ಇವರು ಅನೇಕ ಗ್ರಾಮದೇವತೆಗಳು, ಪಲ್ಲಕ್ಕಿ, ಪೂಜಾ ಮಂಟಪ, ದೇವರ ತೊಟ್ಟಿಲು, ಛತ್ರಿ, ಸಿಂಹಾಸನ ಇತ್ಯಾದಿ ಕರಕುಶಲ ಕೆಲಸಗಳನ್ನು ಮಾಡುತ್ತಾರೆ. ಅನೇಕ ಸಂಘ ಸಂಸ್ಥೆಗಳು ಇವರ ಕಲಾನೈಪುಣ್ಯತೆಯನ್ನು ಗುರುತಿಸಿ, ಪ್ರಶಸ್ತಿ ಸನ್ಮಾನಗಳನ್ನು ನೀಡಿ ಗೌರವಿಸಿದೆ. &lsquo;ರಥರಚನ ಕೋವಿದ&rsquo; ಹಾಗೂ &lsquo;ಕದಂಬ&rsquo;ಪ್ರಶಸ್ತಿ ಇವರದ್ದಾಗಿವೆ.&lt;/p&gt;]]></content:encoded>
            <category>karnataka-districts</category>
            <dc:creator>Asianet News</dc:creator>
            <atom:link href="https://kannada.asianetnews.com/karnataka-districts/state-award-winning-sculptor-venkanna-chitragara-death-gvd/articleshow-pdho11o"/>
        </item>
        <item>
            <title><![CDATA[ಬೆಂಗಳೂರಿನಲ್ಲಿ ಮೇ 9 ರಿಂದ 3 ದಿನಗಳ ಅಂತರರಾಷ್ಟ್ರೀಯ ಅಗರಬತ್ತಿ ಮತ್ತು ಸುಗಂಧ ದ್ರವ್ಯ ಪ್ರದರ್ಶನ ಆರಂಭ]]></title>
            <link>https://kannada.asianetnews.com/state/international-agarbatti-perfume-expo-2026-bengaluru-biec-details-sat/articleshow-kvrdezx</link>
            <guid isPermaLink="true">https://kannada.asianetnews.com/state/international-agarbatti-perfume-expo-2026-bengaluru-biec-details-sat/articleshow-kvrdezx</guid>
            <pubDate>Fri, 08 May 2026 19:22:46 +0530</pubDate>
            <description><![CDATA[&lt;p&gt;ಬೆಂಗಳೂರಿನಲ್ಲಿ ಮೇ 9 ರಿಂದ 11, 2026 ರವರೆಗೆ ದೇಶದ ಅತಿದೊಡ್ಡ 'ಅಂತರರಾಷ್ಟ್ರೀಯ ಅಗರಬತ್ತಿ ಮತ್ತು ಸುಗಂಧ ದ್ರವ್ಯ ಪ್ರದರ್ಶನ' ನಡೆಯಲಿದೆ. ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುವ 12ನೇ ಆವೃತ್ತಿಯ B2B ಎಕ್ಸ್&zwnj;ಪೋದಲ್ಲಿ 10 ದೇಶಗಳ 150ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸುತ್ತಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3xnvr1rp73aj203805case,imgname-international-agarbatti-perfume-expo-2026-1778248249087.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: ಸು&lt;/strong&gt;ಗಂಧ ದ್ರವ್ಯ ಮತ್ತು ಧೂಪದ್ರವ್ಯ ಉದ್ಯಮದ ಜಾಗತಿಕ ಕೇಂದ್ರವೆಂದೇ ಖ್ಯಾತಿ ಪಡೆದಿರುವ ಬೆಂಗಳೂರು ನಗರವು ಈಗ ಮತ್ತೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಸಿದ್ಧವಾಗಿದೆ. ಭಾರತದ ಅತಿದೊಡ್ಡ 'ಅಂತರರಾಷ್ಟ್ರೀಯ ಅಗರಬತ್ತಿ ಮತ್ತು ಸುಗಂಧ ದ್ರವ್ಯ ಪ್ರದರ್ಶನ-2026'ರ (12th International Agarbatti &amp;amp; Perfume Expo) 12ನೇ ಆವೃತ್ತಿಯು ಇದೇ ಮೇ 9 ರಿಂದ 11 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ಅದ್ಧೂರಿಯಾಗಿ ನಡೆಯಲಿದೆ.&lt;/p&gt;&lt;h3&gt;&lt;strong&gt;ಸುಗಂಧ ರಾಜಧಾನಿಯಲ್ಲಿ ಉದ್ಯಮದ ಹಬ್ಬ:&lt;/strong&gt;&lt;/h3&gt;&lt;p&gt;ಇನ್ಸೆನ್ಸ್ ಮೀಡಿಯಾ ಆಯೋಜಿಸಿರುವ ಈ ಬೃಹತ್ ಬಿ2ಬಿ (B2B) ಪ್ರದರ್ಶನವು ಸುಗಂಧ ದ್ರವ್ಯ, ಧೂಪದ್ರವ್ಯ ಮತ್ತು ಪೂಜಾ ಉತ್ಪನ್ನಗಳ ವಲಯದಲ್ಲಿ ಭಾರತದ ಅತಿದೊಡ್ಡ ವೇದಿಕೆಯಾಗಿದೆ. ಈ ಹಿಂದೆ ಮುಂಬೈನಲ್ಲಿ ನಡೆದ 11ನೇ ಆವೃತ್ತಿಯ ಅಭೂತಪೂರ್ವ ಯಶಸ್ಸಿನ ನಂತರ, ಈಗ ಈ ಉದ್ಯಮದ ಉತ್ಪಾದನಾ ಹಬ್ ಆಗಿರುವ ಬೆಂಗಳೂರಿನಲ್ಲಿ ಈ ಎಕ್ಸ್&zwnj;ಪೋ ಆಯೋಜನೆಯಾಗಿದೆ. ಈ ಪ್ರದರ್ಶನವು ಕೇವಲ ವ್ಯಾಪಾರಕ್ಕೆ ಸೀಮಿತವಾಗದೆ, ಸಂಪ್ರದಾಯ ಮತ್ತು ಆಧುನಿಕ ತಂತ್ರಜ್ಞಾನದ ಸಂಗಮವಾಗಿ ಹೊರಹೊಮ್ಮಲಿದೆ.&lt;/p&gt;&lt;h2&gt;&lt;strong&gt;ಜಾಗತಿಕ ಮಟ್ಟದ ಭಾಗವಹಿಸುವಿಕೆ:&lt;/strong&gt;&lt;/h2&gt;&lt;p&gt;ಈ ಮೂರು ದಿನಗಳ ಪ್ರದರ್ಶನದಲ್ಲಿ 150ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಭಾರತ ಮಾತ್ರವಲ್ಲದೆ ಜಮೈಕಾ, ಶ್ರೀಲಂಕಾ ಮತ್ತು ಮಲೇಷ್ಯಾ ಸೇರಿದಂತೆ ವಿಶ್ವದ 10ಕ್ಕೂ ಹೆಚ್ಚು ದೇಶಗಳ ಉದ್ಯಮಿಗಳು, ಜಾಗತಿಕ ಖರೀದಿದಾರರು ಮತ್ತು ವ್ಯಾಪಾರ ಸಂದರ್ಶಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಗರಬತ್ತಿ, ಧೂಪ, ಸಾಂಬ್ರಾಣಿ, ಪೂಜಾ ಕಿಟ್&zwnj;ಗಳು, ಕರ್ಪೂರ ಮತ್ತು ಸುಗಂಧ ದ್ರವ್ಯ ತಯಾರಕರಿಗೆ ಇದು ಅಂತರರಾಷ್ಟ್ರೀಯ ಮಟ್ಟದ ವೇದಿಕೆ ಒದಗಿಸಲಿದೆ.&lt;/p&gt;&lt;h3&gt;&lt;strong&gt;ಭವಿಷ್ಯದ ಪರಿಮಳ (Future of Fragrance):&lt;/strong&gt;&lt;/h3&gt;&lt;p&gt;ಈ ಬಾರಿಯ ಪ್ರದರ್ಶನವು 'ಭವಿಷ್ಯದ ಪರಿಮಳ' ಎಂಬ ಆಶಯದೊಂದಿಗೆ ನಡೆಯುತ್ತಿದೆ. ಸಾಂಪ್ರದಾಯಿಕ ಸುಗಂಧ ತಯಾರಿಕಾ ಪದ್ಧತಿಗಳನ್ನು ಇಂದಿನ ಆಧುನಿಕ ಉತ್ಪಾದನಾ ತಂತ್ರಜ್ಞಾನದೊಂದಿಗೆ ಜೋಡಿಸುವುದು ಈ ಎಕ್ಸ್&zwnj;ಪೋದ ಪ್ರಮುಖ ಗುರಿಯಾಗಿದೆ. ಇನ್ಸೆನ್ಸ್ ಮೀಡಿಯಾದ ಸಂಸ್ಥಾಪಕ ದೀಪಕ್ ಗೋಯಲ್ ಮಾತನಾಡಿ, 'ಬೆಂಗಳೂರು ಈ ಉದ್ಯಮದ ಶಕ್ತಿ ಕೇಂದ್ರವಾಗಿದೆ. ಇಲ್ಲಿನ ಕುಶಲಕರ್ಮಿಗಳು ಮತ್ತು ದೊಡ್ಡ ಪ್ರಮಾಣದ ತಯಾರಕರು ಜಾಗತಿಕ ಪಾಲುದಾರರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಈ ಎಕ್ಸ್&zwnj;ಪೋ ಒಂದು ಸೇತುವೆಯಾಗಲಿದೆ' ಎಂದು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಪ್ರದರ್ಶನದ ಪ್ರಮುಖ ಮುಖ್ಯಾಂಶಗಳು:&lt;/strong&gt;&lt;/h2&gt;&lt;p&gt;&lt;strong&gt;ನೆಟ್&zwnj;ವರ್ಕಿಂಗ್: &lt;/strong&gt;ತಯಾರಕರು, ವಿತರಕರು ಮತ್ತು ಅಂತರರಾಷ್ಟ್ರೀಯ ಖರೀದಿದಾರರೊಂದಿಗೆ ನೇರ ಮಾತುಕತೆಗೆ ಅವಕಾಶ.&lt;/p&gt;&lt;p&gt;&lt;strong&gt;ಉದ್ಯಮದ ಒಳನೋಟ: &lt;/strong&gt;ಸುಗಂಧ ದ್ರವ್ಯದ ಪ್ರವೃತ್ತಿಗಳು ಮತ್ತು ಸುಸ್ಥಿರ ಪ್ಯಾಕೇಜಿಂಗ್ ಕುರಿತು ತಜ್ಞರಿಂದ ವಿಚಾರ ಸಂಕಿರಣಗಳು.&lt;/p&gt;&lt;p&gt;&lt;strong&gt;ತಾಂತ್ರಿಕ ಪ್ರದರ್ಶನ: &lt;/strong&gt;ಅಗರಬತ್ತಿ ತಯಾರಿಕಾ ಯಂತ್ರೋಪಕರಣಗಳು, ಕಚ್ಚಾ ವಸ್ತುಗಳು ಮತ್ತು ಪ್ಯಾಕೇಜಿಂಗ್ ಪರಿಹಾರಗಳ ಪ್ರದರ್ಶನ.&lt;/p&gt;&lt;p&gt;&lt;strong&gt;ಕಲಿಕೆ:&lt;/strong&gt; ಸುವಾಸನೆಯ ಪ್ರೊಫೈಲಿಂಗ್ ಮತ್ತು ಮಿಶ್ರಣ ತಂತ್ರಗಳ ಕುರಿತು ಸಂವಾದಾತ್ಮಕ ಕಾರ್ಯಾಗಾರಗಳು.&lt;/p&gt;&lt;h3&gt;&lt;strong&gt;ಕಾರ್ಯಕ್ರಮದ ವಿವರಗಳು:&lt;/strong&gt;&lt;/h3&gt;&lt;p&gt;&lt;strong&gt;ದಿನಾಂಕ:&lt;/strong&gt; ಮೇ 9&ndash;11, 2026&lt;/p&gt;&lt;p&gt;&lt;strong&gt;ಸ್ಥಳ:&lt;/strong&gt; ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ (BIEC), ತುಮಕೂರು ರಸ್ತೆ.&lt;/p&gt;&lt;p&gt;&lt;strong&gt;ಸಮಯ:&lt;/strong&gt; ಬೆಳಿಗ್ಗೆ 10:00 ರಿಂದ ಸಂಜೆ 6:00 ರವರೆಗೆ.&lt;/p&gt;&lt;p&gt;&lt;strong&gt;ನೋಂದಣಿ:&lt;/strong&gt; ಆನ್&zwnj;ಲೈನ್&zwnj;ನಲ್ಲಿ ಮೇ 8ರವರೆಗೆ ₹100, ಸ್ಥಳದಲ್ಲೇ ನೋಂದಣಿಗೆ ₹200 ಶುಲ್ಕವಿರುತ್ತದೆ.&lt;/p&gt;&lt;p&gt;ಹೆಚ್ಚಿನ ಮಾಹಿತಿಗಾಗಿ ಆಸಕ್ತರು www.incensemedia.in ವೆಬ್&zwnj;ಸೈಟ್&zwnj;ಗೆ ಭೇಟಿ ನೀಡಬಹುದು ಅಥವಾ +91 9549404000 ಸಂಖ್ಯೆಯನ್ನು ಸಂಪರ್ಕಿಸಬಹುದು.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/international-agarbatti-perfume-expo-2026-bengaluru-biec-details-sat/articleshow-kvrdezx"/>
        </item>
        <item>
            <title><![CDATA[ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್ ಸಂಚಾರ ಆರಂಭ; ಕೇವಲ 3 ಸ್ಟಾಪ್, ಟಿಕೆಟ್ ದರ ಎಷ್ಟು ಗೊತ್ತಾ?]]></title>
            <link>https://kannada.asianetnews.com/gallery/state/good-news-for-bengaluru-and-channapatna-commuters-bmtc-launches-ac-bus-service-sat-sv9fb1d</link>
            <guid isPermaLink="true">https://kannada.asianetnews.com/gallery/state/good-news-for-bengaluru-and-channapatna-commuters-bmtc-launches-ac-bus-service-sat-sv9fb1d</guid>
            <pubDate>Fri, 08 May 2026 17:53:31 +0530</pubDate>
            <description><![CDATA[&lt;p&gt;ಬೆಂಗಳೂರು ಮತ್ತು ಚನ್ನಪಟ್ಟಣ ನಡುವೆ 8 ಬಿಎಂಟಿಸಿ ಎಸಿ ಬಸ್&zwnj;ಗಳ ಸಂಚಾರ ಆರಂಭವಾಗಿದೆ. ಶಾಸಕ ಸಿ.ಪಿ. ಯೋಗೇಶ್ವರ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಚಾಲನೆ ನೀಡಿದರು.ಈ ಬಸ್ ರಾಮನಗರ ಮತ್ತು ಕೆಂಗೇರಿಯಲ್ಲಿ ಸ್ಟಾಪ್ ನೀಡಲಿದೆ. ಆದರೆ, ಟಿಕೆಟ್ ಬೆಲೆ ಎಷ್ಟಿದೆ ನೋಡಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3r39v1bxgtzyb9yh95sx8c,imgname-bengaluru-channapatna-bmtc-bus-1778242398049.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು ಮತ್ತು ಚನ್ನಪಟ್ಟಣ ನಡುವೆ 8 ಬಿಎಂಟಿಸಿ ಎಸಿ ಬಸ್&zwnj;ಗಳ ಸಂಚಾರ ಆರಂಭವಾಗಿದೆ. ಶಾಸಕ ಸಿ.ಪಿ. ಯೋಗೇಶ್ವರ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಚಾಲನೆ ನೀಡಿದರು.ಈ ಬಸ್ ರಾಮನಗರ ಮತ್ತು ಕೆಂಗೇರಿಯಲ್ಲಿ ಸ್ಟಾಪ್ ನೀಡಲಿದೆ. ಆದರೆ, ಟಿಕೆಟ್ ಬೆಲೆ ಎಷ್ಟಿದೆ ನೋಡಿ..&lt;/p&gt;&lt;img&gt;&lt;p&gt;ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇನ್ಮುಂದೆ ಜನರು ಬಿರು ಬೇಸಿಗೆಯಲ್ಲೂ ತಂಪಾಗಿ, ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ.&lt;/p&gt;&lt;img&gt;&lt;p&gt;&lt;strong&gt;ದಳಪತಿ ಮತ್ತು ಸಾಹುಕಾರನ ಸಮಾಗಮ:&lt;/strong&gt;&lt;/p&gt;&lt;p&gt;ಚನ್ನಪಟ್ಟಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಸಿ.ಪಿ. ಯೋಗೇಶ್ವರ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಜಂಟಿಯಾಗಿ ಎಂಟು ಬಿಎಂಟಿಸಿ ಎಸಿ ಬಸ್&zwnj;ಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ, ಜನರ ಅನುಕೂಲಕ್ಕಾಗಿ ಇಬ್ಬರು ನಾಯಕರು ಒಟ್ಟಾಗಿ ಈ ಯೋಜನೆಗೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.&lt;/p&gt;&lt;img&gt;&lt;p&gt;&lt;strong&gt;ದಿನಕ್ಕೆ 44 ಟ್ರಿಪ್&zwnj;ಗಳ ಸಂಚಾರ:&lt;/strong&gt;&lt;/p&gt;&lt;p&gt;ಬೆಂಗಳೂರು ಮತ್ತು ಚನ್ನಪಟ್ಟಣದ ನಡುವೆ ಕೇವಲ ಎಸಿ ಬಸ್&zwnj;ಗಳ ಸಂಚಾರ ಮಾತ್ರವಲ್ಲದೆ, ದಿನಕ್ಕೆ ಒಟ್ಟು 44 ಟ್ರಿಪ್&zwnj;ಗಳನ್ನು ಈ ಬಸ್&zwnj;ಗಳು ಕೈಗೊಳ್ಳಲಿವೆ. ಒಟ್ಟು 8 ಐಷಾರಾಮಿ ಎಸಿ ಬಸ್&zwnj;ಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಇದರಿಂದಾಗಿ ಪ್ರತಿ ಅರ್ಧ ಅಥವಾ ಒಂದು ಗಂಟೆಗೊಮ್ಮೆ ಪ್ರಯಾಣಿಕರಿಗೆ ಎಸಿ ಬಸ್ ಸೌಲಭ್ಯ ದೊರೆಯಲಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬರುವ ನೂರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳಿಗೆ ಇದು ವರದಾನವಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಟಿಕೆಟ್ ದರ ಮತ್ತು ನಿಲ್ದಾಣಗಳು:&lt;/strong&gt;&lt;/p&gt;&lt;p&gt;ಮೆಜೆಸ್ಟಿಕ್&zwnj;ನಿಂದ (ಬೆಂಗಳೂರು) ಚನ್ನಪಟ್ಟಣಕ್ಕೆ ಪ್ರಯಾಣಿಸಲು ಬಿಎಂಟಿಸಿ 105 ರೂಪಾಯಿ ಟಿಕೆಟ್ ದರವನ್ನು ನಿಗದಿಪಡಿಸಿದೆ. ರೈಲು ಪ್ರಯಾಣಕ್ಕೆ ಹೋಲಿಸಿದರೆ ಸ್ವಲ್ಪ ದರ ಹೆಚ್ಚಿದ್ದರೂ, ಆರಾಮದಾಯಕ ಪ್ರಯಾಣ ಮತ್ತು ಸಮಯದ ಉಳಿತಾಯವನ್ನು ಗಮನಿಸಿದರೆ ಇದು ಸೂಕ್ತವಾಗಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಈ ಬಸ್&zwnj;ಗಳು ಚನ್ನಪಟ್ಟಣದಿಂದ ಹೊರಟು ರಾಮನಗರ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ. ಇದರಿಂದ ಈ ಎರಡು ಪ್ರಮುಖ ನಗರಗಳ ಪ್ರಯಾಣಿಕರಿಗೂ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಬಿರು ಬೇಸಿಗೆಯಲ್ಲಿ ತಂಪು ಪ್ರಯಾಣ:&lt;/strong&gt;&lt;/p&gt;&lt;p&gt;ಪ್ರಸ್ತುತ ರಾಜ್ಯದಲ್ಲಿ ತಾಪಮಾನ ಏರುತ್ತಿದ್ದು, ಜನರು ಬಸ್ಸಿನಲ್ಲಿ ಪ್ರಯಾಣಿಸಲು ಹೈರಾಣಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಎಸಿ ಬಸ್ ಸೌಲಭ್ಯ ಕಲ್ಪಿಸಿರುವುದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ. ಬಸ್&zwnj;ಗಳ ಒಳಾಂಗಣ ವಿನ್ಯಾಸ ಮತ್ತು ಆಸನ ವ್ಯವಸ್ಥೆಯು ಅತ್ಯಂತ ಆರಾಮದಾಯಕವಾಗಿದ್ದು, ದೂರದ ಪ್ರಯಾಣದ ದಣಿವು ತಿಳಿಯದಂತೆ ಮಾಡುತ್ತದೆ. ಒಟ್ಟಾರೆಯಾಗಿ, ಚನ್ನಪಟ್ಟಣ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಬಿಎಂಟಿಸಿ ಹೊಸ ವೇಗ ಮತ್ತು ಸೌಕರ್ಯವನ್ನು ನೀಡಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/good-news-for-bengaluru-and-channapatna-commuters-bmtc-launches-ac-bus-service-sat-sv9fb1d"/>
        </item>
        <item>
            <title><![CDATA[ನಾಯಕತ್ವ ಗೊಂದಲ ಬಗೆಹರಿದರೆ 2028ರಲ್ಲೂ ಪಕ್ಷ ಅಧಿಕಾರಕ್ಕೆ: ಸಚಿವ ರಾಮಲಿಂಗಾರೆಡ್ಡಿ]]></title>
            <link>https://kannada.asianetnews.com/karnataka-districts/ramalinga-reddy-congress-leadership-confusion-karnataka-gvd/articleshow-gl3gg9a</link>
            <guid isPermaLink="true">https://kannada.asianetnews.com/karnataka-districts/ramalinga-reddy-congress-leadership-confusion-karnataka-gvd/articleshow-gl3gg9a</guid>
            <pubDate>Fri, 08 May 2026 17:53:10 +0530</pubDate>
            <description><![CDATA[&lt;p&gt;ನಾಯಕತ್ವ ವಿಚಾರದಲ್ಲಿರುವ ಗೊಂದಲವನ್ನು ಹೈಕಮಾಂಡ್&zwnj; ಶೀಘ್ರ ಎಚ್ಚರಿಕೆಯಿಂದ ನಿವಾರಿಸಿದರೆ ಒಳ್ಳೆಯದು. ಗೊಂದಲದಿಂದ ಆಂತರಿಕವಾಗಿ ಪಕ್ಷಕ್ಕೆ ನಷ್ಟವಾಗಿದ್ದು, ಗೊಂದಲ ಬಗೆಹರಿಸಿದರೆ 2028ರಲ್ಲೂ ಮತ್ತೆ ಅಧಿಕಾರಕ್ಕೆ ಬರುವ ಅವಕಾಶ ಇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k2r8h86wx9cj02k188dzrdaa,imgname-minister-ramalinga-reddy-on-dharmasthala-case-1755308400860.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.08):&lt;/strong&gt; ನಾಯಕತ್ವ ವಿಚಾರದಲ್ಲಿರುವ ಗೊಂದಲವನ್ನು ಹೈಕಮಾಂಡ್&zwnj; ಶೀಘ್ರ ಎಚ್ಚರಿಕೆಯಿಂದ ನಿವಾರಿಸಿದರೆ ಒಳ್ಳೆಯದು. ಗೊಂದಲದಿಂದ ಆಂತರಿಕವಾಗಿ ಪಕ್ಷಕ್ಕೆ ನಷ್ಟವಾಗಿದ್ದು, ಗೊಂದಲ ಬಗೆಹರಿಸಿದರೆ 2028ರಲ್ಲೂ ಮತ್ತೆ ಅಧಿಕಾರಕ್ಕೆ ಬರುವ ಅವಕಾಶ ಇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ, ನಾಯಕತ್ವ ಕುರಿತು ಪಕ್ಷದೊಳಗಿನ ಗೊಂದಲ ನಿವಾರಿಸಬೇಕು. ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆ ಬರಲಿದ್ದು, ಅಷ್ಟರೊಳಗೆ ಗೊಂದಲ ನಿವಾರಿಸಬೇಕು. ಕಳೆದ ಮೂರು ವರ್ಷಗಳಿಂದ ಸರ್ಕಾರ ಉತ್ತಮ ಕಾರ್ಯಕ್ರಮ ನೀಡಿದೆ. ನಾಯಕತ್ವ ಗೊಂದಲ ಮೂರು ವರ್ಷಗಳಿಂದ ಇದೆ. ಇದರಿಂದ ಆಂತರಿಕವಾಗಿ ನಮಗೆ ನಷ್ಟವಾಗಿದೆ. ಮುಂದಿನ ಎರಡು ವರ್ಷ ತಮ್ಮನ್ನೂ ಸೇರಿ ಎಲ್ಲರೂ ಮಾಧ್ಯಮಗಳ ಮುಂದೆ ಸುಮ್ಮನೆ ಮಾತನಾಡದೆ ಕೆಲಸ ಮಾಡಿಕೊಂಡು ಹೋಗಬೇಕು. ಈವರೆಗಿನ ಚುನಾವಣೆಯಲ್ಲಿ ಬೇರೆ ರಾಜ್ಯಗಳಲ್ಲಿನ ಫಲಿತಾಂಶ ನಮ್ಮ ಮುಂದಿದೆ. ಅದನ್ನು ಗಮನಿಸಬೇಕು ಎಂದರು.&lt;/p&gt;&lt;p&gt;ಸಚಿವ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿ, ಸಚಿವ ಸಂಪುಟ ಪುನಾರಚನೆ ಆಗಬಹುದು. ಸರ್ಕಾರ ರಚನೆಯಾಗಿ ಎರಡೂವರೆ ವರ್ಷಕ್ಕೆ ಸಂಪುಟ ಪುನಾರಚನೆಯಾಗುತ್ತದೆ ಎಂದು ಕೆಲವರು ಭಾವಿಸಿದ್ದರು. ಸಚಿವರಾಗಬೇಕು ಎಂಬ ಆಸೆ ಇದ್ದವರು ಈಗಾಗಲೇ ದೆಹಲಿಗೂ ಹೋಗಿ ಬಂದಿದ್ದಾರೆ. ಇದರ ಬಗ್ಗೆ ಗೊಂದಲ ಹೆಚ್ಚುವುದಕ್ಕೂ ಮುನ್ನ ಹೈಕಮಾಂಡ್&zwnj; ನಾಯಕರು ಸಿಎಂ, ಡಿಸಿಎಂ ಜತೆ ಮಾತಾಡಿ ನಿರ್ಧರಿಸಬೇಕು. ಅನೇಕ ಹಿರಿಯರಿದ್ದಾರೆ, ಅವರಿಗೂ ಅವಕಾಶ ಸಿಗಬೇಕು ಎಂದರು.&lt;/p&gt;&lt;h2&gt;&lt;strong&gt;ಬಿಜೆಪಿಗೆ ನೈತಿಕತೆಯಿಲ್ಲ&lt;/strong&gt;&lt;/h2&gt;&lt;p&gt;ತಮಿಳುನಾಡಿನಲ್ಲಿ ಕಾಂಗ್ರೆಸ್&zwnj; ಡಿಎಂಕೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ತಮಿಳುನಾಡಿನಲ್ಲಿ ಹಲವು ವರ್ಷಗಳಿಂದ ಡಿಎಂಕೆ ಜತೆಗೆ ನಾವಿದ್ದೇವು. ಈಗ ಸ್ಪಷ್ಟ ಬಹುಮತವಿಲ್ಲ ಎಂಬ ಕಾರಣಕ್ಕಾಗಿ ಎಐಸಿಸಿ ತೀರ್ಮಾನ ತೆಗೆದುಕೊಂಡಿದೆ. ಆದರೆ, ಬಿಜೆಪಿ ಯಾವ ನೈತಿಕತೆ ಇಟ್ಟುಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಬಿ.ಎಸ್&zwnj;.ಯಡಿಯೂರಪ್ಪ ಈ ಹಿಂದೆ 17 ಶಾಸಕರನ್ನು ತೆಗೆದುಕೊಂಡು ಸರ್ಕಾರ ರಚಿಸಿದರು. ಎಲ್ಲಕ್ಕಿಂತ ಮುಖ್ಯವಾಗಿ ಜನರಿಗೆ ಬಿಜೆಪಿ ಮೋಸ ಮಾಡಿತು ಎಂದು ಹೇಳಿದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ramalinga-reddy-congress-leadership-confusion-karnataka-gvd/articleshow-gl3gg9a"/>
        </item>
        <item>
            <title><![CDATA[ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ನಿಲ್ದಾಣಗಳ 73 ಕಿಮೀ ನೂತನ ಮೆಟ್ರೋ ಲೈನ್,  ಹೊಸ ಕ್ರಿಕೆಟ್ ಕ್ರೀಡಾಂಗಣವೇ ಟಾರ್ಗೆಟ್‌!]]></title>
            <link>https://kannada.asianetnews.com/karnataka-districts/bengaluru-plans-73km-longest-metro-corridor-from-kalena-agrahara-to-kadugodi-tree-park-international-cricket-stadium-gdp/articleshow-dbree8u</link>
            <guid isPermaLink="true">https://kannada.asianetnews.com/karnataka-districts/bengaluru-plans-73km-longest-metro-corridor-from-kalena-agrahara-to-kadugodi-tree-park-international-cricket-stadium-gdp/articleshow-dbree8u</guid>
            <pubDate>Fri, 08 May 2026 17:39:41 +0530</pubDate>
            <description><![CDATA[ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು, ದಕ್ಷಿಣದ ಕಾಳೇನ ಅಗ್ರಹಾರದಿಂದ ಪೂರ್ವದ ಕಾಡುಗೋಡಿ ಟ್ರೀ ಪಾರ್ಕ್&zwnj;ವರೆಗೆ 73 ಕಿ.ಮೀ ಉದ್ದದ ಹೊಸ ಮೆಟ್ರೋ ಕಾರಿಡಾರ್ ನಿರ್ಮಾಣಕ್ಕೆ ಕಾರ್ಯಸಾಧ್ಯತಾ ಅಧ್ಯಯನ ಪೂರ್ಣಗೊಂಡಿದೆ. ಈ ಮಾರ್ಗವು ಸರ್ಜಾಪುರ, ಅತ್ತಿಬೆಲೆಯಂತಹ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವುದಲ್ಲದೆ, ಆನೇಕಲ್&zwnj;ನಲ್ಲಿ ನಿರ್ಮಾಣವಾಗಲಿರುವ ಕ್ರಿಕೆಟ್ ಕ್ರೀಡಾಂಗಣಕ್ಕೂ ನೇರ ಸಂಪರ್ಕ ಕಲ್ಪಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr3qvtm0cddq5yk3rkppbg80,imgname-metro-to-cricket-stadium-bengaluru-1778242153088.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಜೊತೆಗೆ ವೇಗವಾಗಿ ಬೆಳೆಯುತ್ತಿರುವ ಹೊರವಲಯ ಪ್ರದೇಶಗಳನ್ನು ಸಂಪರ್ಕಿಸುವ ಉದ್ದೇಶದಿಂದ ಬಿಎಂಆರ್&zwnj;ಸಿಎಲ್&zwnj; ವತಿಯಿಂದ ನಮ್ಮ ಮೆಟ್ರೋ ಮಹತ್ವಾಕಾಂಕ್ಷಿ ಬೃಹತ್ ಯೋಜನೆಗೆ ಚಿಂತನೆ ನಡೆಸಿದೆ . ದಕ್ಷಿಣ ಬೆಂಗಳೂರಿನ ಕಾಳೇನ ಅಗ್ರಹಾರದಿಂದ ಪೂರ್ವ ಭಾಗದ ಕಾಡುಗೋಡಿ ಟ್ರೀ ಪಾರ್ಕ್&zwnj;ವರೆಗೆ ಸಂಪರ್ಕ ಕಲ್ಪಿಸುವ ಸುಮಾರು 73 ಕಿಲೋಮೀಟರ್ ಉದ್ದದ ಎತ್ತರದ ಮೆಟ್ರೋ ಕಾರಿಡಾರ್&zwnj;ಗೆ ಸಂಬಂಧಿಸಿದ ಕಾರ್ಯಸಾಧ್ಯತಾ ಅಧ್ಯಯನ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್&zwnj;ಸಿಎಲ್) ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.&lt;/p&gt;&lt;p&gt;ಈ ಕಾರ್ಯಸಾಧ್ಯತಾ ವರದಿಯನ್ನು ಇಂಟ್ರೋಸಾಫ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಿದ್ಧಪಡಿಸಿದ್ದು, ವರದಿ ಸಲ್ಲಿಕೆಯ ನಂತರ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಮುಂದಿನ ಹಂತವಾಗಿ &lsquo;ವಿವರವಾದ ಯೋಜನಾ ವರದಿ&rsquo; (ಡಿಪಿಆರ್) ಸಿದ್ಧಪಡಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ.&lt;/p&gt;&lt;h2&gt;ದಕ್ಷಿಣ&ndash;ಪೂರ್ವ ಟೆಕ್ ಕಾರಿಡಾರ್&zwnj;ಗೆ ಸಂಪರ್ಕ&lt;/h2&gt;&lt;p&gt;ಪ್ರಸ್ತಾವಿತ ಈ ಮೆಟ್ರೋ ಮಾರ್ಗವು ಬೆಂಗಳೂರಿನ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಉಪನಗರ ಪ್ರದೇಶಗಳಾದ ಬನ್ನೇರುಘಟ್ಟ, ಜಿಗಣಿ, ಅತ್ತಿಬೆಲೆ, ಸರ್ಜಾಪುರ, ದೊಮ್ಮಸಂದ್ರ ವೃತ್ತ ಮತ್ತು ವರ್ತೂರು ಕೋಡಿ ಮೂಲಕ ಹಾದುಹೋಗುವಂತೆ ವಿನ್ಯಾಸಗೊಳಿಸಲಾಗಿದೆ. ಈ ಮೂಲಕ ನಗರದ ದಕ್ಷಿಣ ಮತ್ತು ಪೂರ್ವ ತಂತ್ರಜ್ಞಾನ ಕಾರಿಡಾರ್&zwnj;ಗಳನ್ನು ಒಂದೇ ಮಾರ್ಗದಲ್ಲಿ ಸಂಪರ್ಕಿಸುವ ಮಹತ್ವದ ಯೋಜನೆಯಾಗಿದೆ.&lt;/p&gt;&lt;p&gt;ಈ ಮಾರ್ಗವು ಸಂಪೂರ್ಣ ಎಲಿವೇಟೆಡ್ (ಮೇಲ್ಸೇತುವೆ) ಆಗಿದ್ದು, ಸುಮಾರು 50ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ಹೊಂದಿರಲಿದೆ. ಇವುಗಳಲ್ಲಿ ಹಲವಾರು ಪ್ರದೇಶಗಳು ಇನ್ನೂ ಅಭಿವೃದ್ಧಿ ಹಂತದಲ್ಲಿರುವುದರಿಂದ, ನಿಲ್ದಾಣಗಳ ನಡುವಿನ ಅಂತರ ಇತರ ಮೆಟ್ರೋ ಮಾರ್ಗಗಳಿಗಿಂತ ಹೆಚ್ಚಿರಬಹುದು ಎಂದು ಅಂದಾಜು ಮಾಡಲಾಗಿದೆ.&lt;/p&gt;&lt;h2&gt;ಕ್ರಿಕೆಟ್ ಕ್ರೀಡಾಂಗಣಕ್ಕೆ ನೇರ ಮೆಟ್ರೋ ಸಂಪರ್ಕ&lt;/h2&gt;&lt;p&gt;ಈ ಯೋಜನೆಯ ವಿಶೇಷ ಆಕರ್ಷಣೆ ಎಂದರೆ ಆನೇಕಲ್ ತಾಲೂಕಿನಲ್ಲಿ ನಿರ್ಮಾಣಗೊಳ್ಳಲಿರುವ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣಕ್ಕೆ ನೇರ ಸಂಪರ್ಕ ಕಲ್ಪಿಸುವ 5 ಕಿ.ಮೀ ಉದ್ದದ ಸ್ಪರ್ ಲೈನ್. ಜಿಗಣಿ ನಿಲ್ದಾಣದ ನಂತರ ಈ ಮಾರ್ಗವು ವಿಭಜನೆಯಾಗಿ ಕ್ರೀಡಾಂಗಣದತ್ತ ಸಾಗಲಿದೆ. ಈ ಸ್ಪರ್ ಲೈನ್&zwnj;ನಲ್ಲಿ ಎರಡು ಹೆಚ್ಚುವರಿ ನಿಲ್ದಾಣಗಳನ್ನು ನಿರ್ಮಿಸಲು ಪ್ಲ್ಯಾನಿಂಗ್ ಮಾಡಲಾಗಿದೆ. ಒಂದು ನಿಲ್ದಾಣವನ್ನು ಕ್ರೀಡಾಂಗಣದ ಪಕ್ಕದಲ್ಲೇ ನಿರ್ಮಿಸಿ ನೇರ ಸಂಪರ್ಕ ಕಲ್ಪಿಸಲಾಗುತ್ತದೆ. ಮತ್ತೊಂದು ನಿಲ್ದಾಣವನ್ನು ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಿಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕಿಸುವಂತೆ ಮಾಡಲಾಗುತ್ತದೆ.&lt;/p&gt;&lt;p&gt;ಈ ಪ್ರಸ್ತಾವಿತ ಕ್ರೀಡಾ ಸಂಕೀರ್ಣವು ಸುಮಾರು 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣವಾಗಿದ್ದು, 24 ವಿವಿಧ ಕ್ರೀಡೆಗಳಿಗೆ ಸೌಲಭ್ಯಗಳು ಮತ್ತು 30,000 ಆಸನಗಳ ಸಭಾಂಗಣವನ್ನು ಒಳಗೊಂಡಿರಲಿದ್ದು, ಒಲಿಂಪಿಕ್ ಗ್ರಾಮಕ್ಕೆ ಸಮಾನ ಪ್ರಮಾಣದ ಯೋಜನೆಯಾಗಿ ಪರಿಗಣಿಸಲಾಗಿದೆ.&lt;/p&gt;&lt;h2&gt;ಮುಂದಿನ ಹಂತಗಳು ಮತ್ತು ಸಮಯಾವಕಾಶ&lt;/h2&gt;&lt;p&gt;ಕಾರ್ಯಸಾಧ್ಯತಾ ವರದಿಯನ್ನು ರಾಜ್ಯ ಸರ್ಕಾರ ಪರಿಶೀಲಿಸಿದ ನಂತರ ಡಿಪಿಆರ್ ಸಿದ್ಧಪಡಿಸುವ ಬಗ್ಗೆ ತೀರ್ಮಾಣ ಮಾಡಲಾಗುತ್ತದೆ. ಡಿಪಿಆರ್ ಸಿದ್ಧಪಡಿಸಲು ಸುಮಾರು ಒಂದು ವರ್ಷ ಕಾಲ ಬೇಕಾಗಬಹುದು. ಬಳಿಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅಗತ್ಯ ಅನುಮತಿಗಳು ದೊರೆತರೆ, 2029ರ ಸುಮಾರಿಗೆ ಕಾಮಗಾರಿ ಪ್ರಾರಂಭವಾಗುವ ಲಕ್ಷಣ ಕಾಣಬಹುದು. ಈ ಯೋಜನೆ ಪೂರ್ಣಗೊಳ್ಳಲು 5ರಿಂದ 10 ವರ್ಷಗಳವರೆಗೆ ಸಮಯ ಹಿಡಿಯಬಹುದು ಎಂಬ ಅಂದಾಜು ಇದೆ.&lt;/p&gt;&lt;h2&gt;ಬಿಎಂಆರ್&zwnj;ಸಿಎಲ್ ವಿಸ್ತರಣಾ ಯೋಜನೆಯ ಭಾಗ&lt;/h2&gt;&lt;p&gt;ಈ 73 ಕಿ.ಮೀ ಉದ್ದದ ಕಾರಿಡಾರ್, ಬಿಎಂಆರ್&zwnj;ಸಿಎಲ್&zwnj;ನ ಒಟ್ಟು 210.9 ಕಿ.ಮೀ ವಿಸ್ತರಣಾ ಯೋಜನೆಯ ಪ್ರಮುಖ ಭಾಗವಾಗಿದೆ. ಈ ಯೋಜನೆ ಪೂರ್ಣಗೊಂಡ ನಂತರ ಬೆಂಗಳೂರಿನ &amp;nbsp;ಒಟ್ಟು ಮೆಟ್ರೋ ಜಾಲವು ಸುಮಾರು 468 ಕಿ.ಮೀ ವರೆಗೆ ವಿಸ್ತರಣೆಯಾಗಲಿದೆ.&lt;/p&gt;&lt;p&gt;ತುಮಕೂರು, ಬಿಡದಿ, ಹೊಸಕೋಟೆ ಮುಂತಾದ ನೆರೆಹೊರೆಯ ನಗರಗಳಿಗೆ ವಿಸ್ತರಣೆಗಿಂತ, ವೇಗವಾಗಿ ಬೆಳೆಯುತ್ತಿರುವ ಉಪನಗರ ಪ್ರದೇಶಗಳನ್ನು ಸಂಪರ್ಕಿಸುವುದೇ ಈ ಯೋಜನೆಯ ಮುಖ್ಯ ಗುರಿ. ಇದೇ ವೇಳೆ, ಬೊಮ್ಮಸಂದ್ರದಿಂದ ತಮಿಳುನಾಡಿನ ಹೊಸೂರುವರೆಗೆ ಅಂತಾರಾಜ್ಯ ಮೆಟ್ರೋ ನಿರ್ಮಾಣದ ಪ್ರಸ್ತಾಪಕ್ಕೆ ಹೆಚ್ಚು ಆಸಕ್ತಿ ತೋರದ ಬಿಎಂಆರ್&zwnj;ಸಿಎಲ್, ಹಳದಿ ಮಾರ್ಗವನ್ನು ಬೊಮ್ಮಸಂದ್ರದಿಂದ ಅತ್ತಿಬೆಲೆಯವರೆಗೆ 11 ಕಿ.ಮೀ ವಿಸ್ತರಿಸುವ ಯೋಜನೆಗೂ ಒತ್ತು ನೀಡುತ್ತಿದೆ.&lt;/p&gt;&lt;h2&gt;ಸಂಚಾರ ದಟ್ಟಣೆ ನಿವಾರಣೆಗೆ ಪ್ರಮುಖ ಹೆಜ್ಜೆ&lt;/h2&gt;&lt;p&gt;ಒಟ್ಟಾರೆ, ಈ ಬೃಹತ್ ಮೆಟ್ರೋ ಯೋಜನೆ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ದೀರ್ಘಕಾಲೀನ ಪರಿಹಾರ ಒದಗಿಸುವತ್ತ ಪ್ರಮುಖ ಹೆಜ್ಜೆಯಾಗಲಿದೆ. ನಗರ ವಿಸ್ತರಣೆ ಮತ್ತು ಐಟಿ ಕಾರಿಡಾರ್ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಈ ಯೋಜನೆ, ಭವಿಷ್ಯದ ನಗರ ಸಾರಿಗೆ ವ್ಯವಸ್ಥೆಗೆ ಹೊಸ ಭಾಷ್ಯ ಬರೆಯುವುದರಲ್ಲಿ ಅನುಮಾನವಿಲ್ಲ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-plans-73km-longest-metro-corridor-from-kalena-agrahara-to-kadugodi-tree-park-international-cricket-stadium-gdp/articleshow-dbree8u"/>
        </item>
        <item>
            <title><![CDATA[ಶೃಂಗೇರಿ ಕ್ಷೇತ್ರದಲ್ಲಿ ಅಂಚೆ‌ ಮತ ಮರು ಎಣಿಕೆ ವಿವಾದ: ಆಣೆ-ಪ್ರಮಾಣ-ಪ್ರಾರ್ಥನೆ ರಾಜಕೀಯ ಶುರು]]></title>
            <link>https://kannada.asianetnews.com/karnataka-districts/sringeri-postal-vote-recount-bjp-congress-controversy-gvd/articleshow-x98a0ez</link>
            <guid isPermaLink="true">https://kannada.asianetnews.com/karnataka-districts/sringeri-postal-vote-recount-bjp-congress-controversy-gvd/articleshow-x98a0ez</guid>
            <pubDate>Fri, 08 May 2026 17:39:30 +0530</pubDate>
            <description><![CDATA[&lt;p&gt;ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು&zwnj; ಎಣಿಕೆಯಲ್ಲಿ ಮೂರು ವರ್ಷಗಳ ಬಳಿಕ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ ಬಳಿಕ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಆಣೆ-ಪ್ರಮಾಣ-ಪ್ರಾರ್ಥನೆಯ ರಾಜಕೀಯ ಜನ್ಮ ಪಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3qvwy4dsgrbqxsn220zzk6,imgname-xgg-1778242155460.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು &zwnj;&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಮೇ.08): &lt;/strong&gt;ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು&zwnj; ಎಣಿಕೆಯಲ್ಲಿ ಮೂರು ವರ್ಷಗಳ ಬಳಿಕ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ ಬಳಿಕ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಆಣೆ-ಪ್ರಮಾಣ-ಪ್ರಾರ್ಥನೆಯ ರಾಜಕೀಯ ಜನ್ಮ ಪಡೆದಿದೆ. 2023ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.&lt;/p&gt;&lt;p&gt;2026ರ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ 52 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಈಗ 2023ರಲ್ಲಿ ಬಿಜೆಪಿ ಪಕ್ಷದಿಂದ&zwnj; ಚುನಾವಣಾ ಮತ ಎಣಿಕೆ ಕೇಂದ್ರದ ಏಜೆಂಟ್ ಆಗಿದ್ದ ರಾಮಸ್ವಾಮಿ ಶೆಟ್ಟಿಗದ್ದೆ ಹಾಗೂ ಸತೀಶ್&zwnj; ಅದ್ದಡ ಕೊಪ್ಪ ತಾಲೂಕಿನ ವೀರಭದ್ರಸ್ವಾಮಿ ಹಾಗೂ ಗಬ್ಬಾನೆ ಬೂತರಾಯನ ದೇಗುಲದಲ್ಲಿ ಪ್ರಮಾಣ ಮಾಡಿದ್ದು 2023ರ ಮತ ಎಣಿಕೆ ಸರಳ ಹಾಗೂ ಪಾರದರ್ಶಕವಾಗಿ ನಡೆದಿದೆ ಎಂದು ನಮಗೆ ಅನ್ನಿಸಿದೆ ಎಂದು ದೇವರ ಮುಂದೆ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಅಂದು ರಾಮಸ್ವಾಮಿ ಶೆಟ್ಟಿಗದ್ದೆ ಇವಿಎಂ ಕೌಂಟ್ ನೋಡಿಕೊಳ್ಳುತ್ತಿದ್ದರೆ, ಸತೀಶ್ ಅದ್ದಡ ಅಂಚೆ ಮತಗಳ ಎಣಿಕೆ ನೋಡಿಕೊಳ್ಳುತ್ತಿದ್ದರು. ಇಂದು ಇಬ್ಬರು ದೇವಸ್ಥಾನದಲ್ಲಿ ಮತ ಎಣಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜೀವರಾಜ್ ಗೆಲ್ಲುತ್ತಿದ್ದಂತೆ ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷ ವಿರೋಧಿ ಕೆಲಸ ಮಾಡಿದವರಿಗೆ ಯಾವಾಗ ಗೇಟ್ ಪಾಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದರು. ರಾಮಸ್ವಾಮಿ ಹಾಗೂ ಸತೀಶ್ ಕಾಂಗ್ರೆಸ್ ಜೊತೆ ಕೈ ಸೇರಿಸಿ ಬಿಜೆಪಿ ಸೋಲಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು.&lt;/p&gt;&lt;h2&gt;&lt;strong&gt;ದೇವರೇ ನೋಡಿಕೊಳ್ಳಲಿ&lt;/strong&gt;&lt;/h2&gt;&lt;p&gt;ಆ ಕಾರಣಕ್ಕಾಗಿ ಇಂದು ರಾಮಸ್ವಾಮಿ ಹಾಗೂ ಸತೀಶ್ ದೇವರ ಮುಂದೆ ಪ್ರಮಾಣ ಮಾಡಿ ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಮತ ಎಣಿಕೆ ಪಾರದರ್ಶಕವಾಗಿತ್ತು. ನಮ್ಮ ವಿರುದ್ಧ ಅಪಪ್ರಚಾರ ಮಾಡುವವರಿಗೆ ದೇವರೇ ನೋಡಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ನಾಳೆ ಕೊಪ್ಪದ ವೀರಭದ್ರಸ್ವಾಮಿ ದೇಗುಲದಲ್ಲಿ ಅಂಚೆ ಮತದ ಕಳ್ಳತನದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/sringeri-postal-vote-recount-bjp-congress-controversy-gvd/articleshow-x98a0ez"/>
        </item>
        <item>
            <title><![CDATA[ಬೆಂಗಳೂರು: ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ ಮರುದಿನವೇ ರೋಗಿಯ ಚಿನ್ನಾಭರಣ ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್!]]></title>
            <link>https://kannada.asianetnews.com/gallery/karnataka-districts/bengaluru-hennur-hospital-jewelry-theft-housekeeping-staff-arrested-cctv-sat-utd2187</link>
            <guid isPermaLink="true">https://kannada.asianetnews.com/gallery/karnataka-districts/bengaluru-hennur-hospital-jewelry-theft-housekeeping-staff-arrested-cctv-sat-utd2187</guid>
            <pubDate>Fri, 08 May 2026 16:40:55 +0530</pubDate>
            <description><![CDATA[ಬೆಂಗಳೂರಿನ ಹೆಣ್ಣೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ, ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳಾ ರೋಗಿಯ ಚಿನ್ನಾಭರಣಗಳನ್ನು ಹೌಸ್ ಕೀಪಿಂಗ್ ಸಿಬ್ಬಂದಿ ಕಳವು ಮಾಡಿದ್ದಾಳೆ. ಕೆಲಸಕ್ಕೆ ಸೇರಿದ ಮರುದಿನವೇ ಈ ಕೃತ್ಯ ಎಸಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr3m4d9k803ev4m35p8tgtn4,imgname-bengaluru-lady-hospital-gold-theft-1778238240051.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರಿನ ಹೆಣ್ಣೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ, ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳಾ ರೋಗಿಯ ಚಿನ್ನಾಭರಣಗಳನ್ನು ಹೌಸ್ ಕೀಪಿಂಗ್ ಸಿಬ್ಬಂದಿ ಕಳವು ಮಾಡಿದ್ದಾಳೆ. ಕೆಲಸಕ್ಕೆ ಸೇರಿದ ಮರುದಿನವೇ ಈ ಕೃತ್ಯ ಎಸಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.&lt;img&gt;&lt;p&gt;ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಮಹಿಳೆಯೊಬ್ಬಳು ಮೊದಲ ದಿನವೇ ಪಂಗನಾಮ ಹಾಕಿದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳಾ ರೋಗಿಯ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.&lt;/p&gt;&lt;img&gt;&lt;p&gt;ಹೆಣ್ಣೂರು ಮೂಲದ ಸ್ವಪ್ನ ಎಂಬ ಮಹಿಳೆ ಕಳೆದ 1ನೇ ತಾರೀಖಿನಂದು ಶಸ್ತ್ರಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಥಿಯೇಟರ್&zwnj;ಗೆ ಕರೆದೊಯ್ಯುವ ಮುನ್ನ ವೈದ್ಯಕೀಯ ನಿಯಮದಂತೆ ಆಸ್ಪತ್ರೆಯ ಸಿಬ್ಬಂದಿ ಅವರ ಮೈಮೇಲಿದ್ದ ಆಭರಣಗಳನ್ನು ತೆಗೆಯುವಂತೆ ಸೂಚಿಸಿದ್ದರು. ಅದರಂತೆ ಸ್ವಪ್ನ ಅವರು ತಮ್ಮ ಮಾಂಗಲ್ಯ ಸರ, ಕಿವಿಯೋಲೆ ಹಾಗೂ ಕಾಲುಂಗುರಗಳನ್ನು ತೆಗೆದು ಪಕ್ಕದ ರೂಮಿನಲ್ಲಿಟ್ಟಿದ್ದರು. ಇದೇ ಸಂದರ್ಭವನ್ನು ಹೊಂಚು ಹಾಕುತ್ತಿದ್ದ ಆಸ್ಪತ್ರೆಯ ಹೌಸ್ ಕೀಪಿಂಗ್ ಕೆಲಸದವಳು ತನ್ನ ಕೈಚಳಕ ತೋರಿಸಿದ್ದಾಳೆ.&lt;/p&gt;&lt;img&gt;&lt;p&gt;ಬಂಧಿತ ಆರೋಪಿಯನ್ನು ವನಜಾಕ್ಷಿ ಎಂದು ಗುರುತಿಸಲಾಗಿದೆ. ಈಕೆ ಈ ಆಸ್ಪತ್ರೆಗೆ ಹೌಸ್ ಕೀಪಿಂಗ್ ಕೆಲಸಕ್ಕೆ ಸೇರಿ ಕೇವಲ ಒಂದು ದಿನವಷ್ಟೇ ಆಗಿತ್ತು. ಕೆಲಸ ಸಿಕ್ಕ ಮರುದಿನವೇ ಈಕೆ ತನ್ನ ನೈಜ ಗುಣವನ್ನು ಪ್ರದರ್ಶಿಸಿದ್ದಾಳೆ. ರೋಗಿ ಶಸ್ತ್ರಚಿಕಿತ್ಸೆಗೆ ಹೋದ ಸಮಯ ನೋಡಿ, ನೆಲ ವರೆಸುವ ನೆಪದಲ್ಲಿ ರೂಮ್ ಒಳಗೆ ನುಗ್ಗಿದ ವನಜಾಕ್ಷಿ, ಕ್ಷಣಾರ್ಧದಲ್ಲಿ ಬೆಲೆಬಾಳುವ ಚಿನ್ನಾಭರಣಗಳನ್ನು ಗುಳುಂ ಮಾಡಿದ್ದಾಳೆ.&lt;/p&gt;&lt;p&gt;&lt;strong&gt;ಸಿಸಿಟಿವಿಯಲ್ಲಿ ಬಯಲಾದ ಖತರ್ನಾಕ್ ಕಳ್ಳಾಟ:&lt;/strong&gt;&lt;/p&gt;&lt;p&gt;ಶಸ್ತ್ರಚಿಕಿತ್ಸೆ ಮುಗಿಸಿ ಬಂದ ಸ್ವಪ್ನ ಅವರಿಗೆ ತಮ್ಮ ಒಡವೆಗಳು ಕಾಣದಿದ್ದಾಗ ಆತಂಕಕ್ಕೊಳಗಾಗಿ ಆಸ್ಪತ್ರೆ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಕೂಡಲೇ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ವನಜಾಕ್ಷಿ ನೆಲ ವರೆಸುತ್ತಾ ರೂಮ್ ಒಳಗೆ ಹೋಗಿ, ಯಾರಿಗೂ ಅನುಮಾನ ಬರದಂತೆ ಒಡವೆಗಳನ್ನು ಕದ್ದು ತನ್ನ ಜೇಬಿಗೆ ಹಾಕಿಕೊಳ್ಳುವುದು ಸ್ಪಷ್ಟವಾಗಿ ಸೆರೆಯಾಗಿದೆ.&lt;/p&gt;&lt;img&gt;&lt;p&gt;ಕಳ್ಳತನ ಮಾಡಿದ ಬಳಿಕ ಕೆಲಸಕ್ಕೆ ಬಾರದೆ ತಲೆಮರೆಸಿಕೊಂಡಿದ್ದ ವನಜಾಕ್ಷಿಯನ್ನು ಪೊಲೀಸರು ತಾಂತ್ರಿಕ ಕಾರ್ಯಾಚರಣೆಯ ಮೂಲಕ ಪತ್ತೆ ಹಚ್ಚಿದ್ದಾರೆ. ತನಿಖೆಯ ವೇಳೆ ಈಕೆ ಕದ್ದ ಚಿನ್ನಾಭರಣಗಳನ್ನು ತುಮಕೂರಿನ ಹಣಕಾಸು ಸಂಸ್ಥೆಯೊಂದರಲ್ಲಿ ಅಡವಿಟ್ಟಿರುವುದು ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಹೆಣ್ಣೂರು ಪೊಲೀಸರು, ಆಕೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.&lt;/p&gt;&lt;p&gt;ಆಸ್ಪತ್ರೆಗಳು ಕೆಲಸಕ್ಕೆ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅವರ ಹಿನ್ನೆಲೆಯನ್ನು ಸರಿಯಾಗಿ ಪರಿಶೀಲಿಸಬೇಕು ಎಂಬುದಕ್ಕೆ ಈ ಘಟನೆ ಮತ್ತೊಂದು ಸಾಕ್ಷಿಯಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bengaluru-hennur-hospital-jewelry-theft-housekeeping-staff-arrested-cctv-sat-utd2187"/>
        </item>
        <item>
            <title><![CDATA[ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಮೇ 10ರ ಭಾನುವಾರ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ]]></title>
            <link>https://kannada.asianetnews.com/gallery/karnataka-districts/bengaluru-namma-metro-alert-purple-line-services-partially-suspended-on-may-10-sat-otsfor7</link>
            <guid isPermaLink="true">https://kannada.asianetnews.com/gallery/karnataka-districts/bengaluru-namma-metro-alert-purple-line-services-partially-suspended-on-may-10-sat-otsfor7</guid>
            <pubDate>Fri, 08 May 2026 16:11:46 +0530</pubDate>
            <description><![CDATA[&lt;p&gt;ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಯಿಂದಾಗಿ, ಮೇ 10, 2026ರ ಭಾನುವಾರದಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಸಂಚಾರ ಸ್ಥಗಿತಗೊಳ್ಳಲಿದೆ. 9 ಗಂಟೆಯ ನಂತರ ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4yppefvemjfw7v3bmza2zy9,imgname-namma-metro-fares-to-rise-1757672061435.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಯಿಂದಾಗಿ, ಮೇ 10, 2026ರ ಭಾನುವಾರದಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಸಂಚಾರ ಸ್ಥಗಿತಗೊಳ್ಳಲಿದೆ. 9 ಗಂಟೆಯ ನಂತರ ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭವಾಗಲಿದೆ.&lt;/p&gt;&lt;img&gt;&lt;p&gt;ಬೆಂಗಳೂರು (ಮೇ 08): ಸಿಲಿಕಾನ್ ಸಿಟಿಯ ಜೀವನಾಡಿ 'ನಮ್ಮ ಮೆಟ್ರೋ'ದ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಜನರಿಗೆ ಮಹತ್ವದ ಸುದ್ದಿಯೊಂದಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಬರುವ ಭಾನುವಾರ, ಅಂದರೆ 2026ರ ಮೇ 10ರಂದು ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.&lt;/p&gt;&lt;img&gt;&lt;p&gt;ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೀಡಿರುವ ಪ್ರಕಟಣೆಯ ಪ್ರಕಾರ, ಅಂದು ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಕಾಲ ಮೆಟ್ರೋ ಸೇವೆ ಇರುವುದಿಲ್ಲ. ಈ ಅವಧಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.&lt;/p&gt;&lt;img&gt;&lt;p&gt;ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ ನಡುವೆ ತುರ್ತು ಮತ್ತು ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ಈ ತಾಂತ್ರಿಕ ನಿರ್ವಹಣೆ ಅನಿವಾರ್ಯವಾಗಿದೆ ಎಂದು ಬಿಎಂಆರ್&zwnj;ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಸಂಚಾರ ವ್ಯತ್ಯಯದ ನಡುವೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಎಂದಿನಂತೆ ಬೆಳಿಗ್ಗೆ 7 ಗಂಟೆಯಿಂದಲೇ ರೈಲುಗಳು ಸಂಚರಿಸಲಿವೆ:&lt;/p&gt;&lt;p&gt;&lt;strong&gt;ಚಲ್ಲಘಟ್ಟ &ndash; ವಿಜಯನಗರ&lt;/strong&gt;: ಈ ನಿಲ್ದಾಣಗಳ ನಡುವೆ ರೈಲುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.&lt;/p&gt;&lt;p&gt;&lt;strong&gt;ಎಂ.ಜಿ. ರಸ್ತೆ &ndash; ವೈಟ್&zwnj;ಫೀಲ್ಡ್ (ಕಾಡುಗೋಡಿ):&lt;/strong&gt; ಈ ಭಾಗದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ.&lt;/p&gt;&lt;p&gt;&lt;strong&gt;ಹಸಿರು ಮಾರ್ಗ (Green Line): &lt;/strong&gt;ಮಾದಾವರದಿಂದ ಸಿಲ್ಕ್ ಇನ್&zwnj;ಸ್ಟಿಟ್ಯೂಟ್ ವರೆಗಿನ ಹಸಿರು ಮಾರ್ಗದ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.&lt;/p&gt;&lt;p&gt;&lt;strong&gt;ಹಳದಿ ಮಾರ್ಗ: &lt;/strong&gt;ಆರ್.ವಿ. ರಸ್ತೆ &ndash; ಬೊಮ್ಮಸಂದ್ರ ನಡುವೆಯೂ ರೈಲುಗಳು ಎಂದಿನಂತೆ ಸಂಚರಿಸಲಿವೆ.&lt;/p&gt;&lt;img&gt;&lt;p&gt;ಬೆಳಿಗ್ಗೆ 9:00 ಗಂಟೆಯ ನಂತರ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಡುವೆ ಹಾಗೂ ಇಡೀ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭವಾಗಲಿದೆ. ಭಾನುವಾರ ಬೆಳಿಗ್ಗೆ ಕೆಲಸಕ್ಕೆ ಹೋಗುವವರು ಅಥವಾ ಬೇರೆ ಕಾರ್ಯಕ್ರಮಗಳಿದ್ದವರು ಈ ಎರಡು ಗಂಟೆಗಳ ಕಾಲ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಎಂಆರ್&zwnj;ಸಿಎಲ್ ಕೋರಿದೆ.&lt;/p&gt;&lt;img&gt;&lt;p&gt;ಮೆಟ್ರೋ ರೈಲು ನಿಗಮವು ಕಾಲಕಾಲಕ್ಕೆ ಇಂತಹ ನಿರ್ವಹಣಾ ಕಾಮಗಾರಿಗಳನ್ನು ನಡೆಸುವುದು ಸಾಮಾನ್ಯವಾಗಿದ್ದು, ಪ್ರಯಾಣಿಕರು ಸಂಸ್ಥೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಮೆಟ್ರೋ ನಿಲ್ದಾಣದ ಸಿಬ್ಬಂದಿಯನ್ನು ಅಥವಾ ಬಿಎಂಆರ್&zwnj;ಸಿಎಲ್ ಅಧಿಕೃತ ವೆಬ್&zwnj;ಸೈಟ್&zwnj; ಅನ್ನು ಸಂಪರ್ಕಿಸಬಹುದಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bengaluru-namma-metro-alert-purple-line-services-partially-suspended-on-may-10-sat-otsfor7"/>
        </item>
        <item>
            <title><![CDATA[ಕೊಪ್ಪಳದ ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ ಮೌಲ್ಯದ ಚಿನ್ನದ ಆಭರಣ ದೇಣಿಗೆ ನೀಡಿದ ಹೈದರಾಬಾದ್ ಉದ್ಯಮಿ!]]></title>
            <link>https://kannada.asianetnews.com/gallery/karnataka-districts/hyderabad-businessman-mahesh-reddy-donates-rs2-5-crore-worth-gold-ornaments-to-anjanadri-hanuman-temple-in-koppal-gdp-16r2a1t</link>
            <guid isPermaLink="true">https://kannada.asianetnews.com/gallery/karnataka-districts/hyderabad-businessman-mahesh-reddy-donates-rs2-5-crore-worth-gold-ornaments-to-anjanadri-hanuman-temple-in-koppal-gdp-16r2a1t</guid>
            <pubDate>Fri, 08 May 2026 15:11:34 +0530</pubDate>
            <description><![CDATA[&lt;p&gt;ಕೊಪ್ಪಳದ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿಗೆ, ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ಅವರು ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಿರೀಟ, ಗದೆ ಮತ್ತು ಪ್ರಭಾವಳಿಯನ್ನು ಸಮರ್ಪಿಸಿದ್ದಾರೆ. ಈ ಐತಿಹಾಸಿಕ ದೇಣಿಗೆಯ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ ಗಣ್ಯರು ಉಪಸ್ಥಿತರಿದ್ದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3er26v49pv0emr66s91681,imgname-anjanadri-hanuman-temple-donation-1778232592603.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೊಪ್ಪಳದ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿಗೆ, ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ಅವರು ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಿರೀಟ, ಗದೆ ಮತ್ತು ಪ್ರಭಾವಳಿಯನ್ನು ಸಮರ್ಪಿಸಿದ್ದಾರೆ. ಈ ಐತಿಹಾಸಿಕ ದೇಣಿಗೆಯ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ ಗಣ್ಯರು ಉಪಸ್ಥಿತರಿದ್ದರು.&lt;/p&gt;&lt;img&gt;&lt;p&gt;ಕೊಪ್ಪಳ: ತಾಲೂಕಿನ ಐತಿಹಾಸ ಪ್ರಸಿದ್ಧ ಆಂಜನೇಯಸ್ವಾಮಿ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯಸ್ವಾಮಿಗೆ ಚಿನ್ನದ ಕಿರೀಟ, ಗದೆ ಮತ್ತು ಪ್ರಭಾವಳಿಯನ್ನು ಮೇ 8 ರಂದು ಸಮರ್ಪಣೆ ಮಾಡಲಾಗಿದೆ. ಆಂಜನೇಯ ದೇಗುಲಕ್ಕೆ ಇದೇ ಮೊದಲ ಬಾರಿಗೆ ಭಾರೀ ಮೊತ್ತದ ಬಂಗಾರದ ಆಭರಣ ದೇಣಿಗೆ ನೀಡಲಾಗಿದೆ. ಹೈದರಾಬಾದ್ ನೆಲ್ಲೂರು ಮೂಲದ ಉದ್ಯಮಿ ಹಾಗೂ ಎಎಂಆರ್ ಸಮೂಹ ಸಂಸ್ಥೆಯ ಮಾಲಿಕ ಮಹೇಶ್ ರೆಡ್ಡಿ ಅವರು ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳನ್ನು ಹನುಮಂತನಿಗೆ ಸಮರ್ಪಣೆ ಮಾಡಿದ್ದಾರೆ.&lt;/p&gt;&lt;img&gt;&lt;p&gt;ಭಾರತದ ಖ್ಯಾತ ಕನ್ಸ್ಟ್ರಕ್ಷನ್ ಸಂಸ್ಥೆ ಎ.ಎಂ.ಆರ್ ಗ್ರುಪ್&zwnj;ನ ಅಧ್ಯಕ್ಷ ಡಾ. ಎ.ಮಹೇಶ್ ರೆಡ್ಡಿ ಹಾಗೂ ಕುಟುಂಬದಿಂದ ಆಂಜನೇಯ ಸ್ವಾಮಿಗೆ ಚಿನ್ನದ ಪ್ರಭಾವಳಿ, ಕಿರೀಟ ಹಾಗೂ ಗದೆಯನ್ನು ಭಕ್ತಿಪೂರ್ವಕವಾಗಿ ಅರ್ಪಿಸಲಾಗಿದೆ.1.50 ಕೆಜಿ ಅಂದಾಜು ₹ 2.50 ಕೋಟಿ ಮೌಲ್ಯದ ಆಭರಣ ಹೈದ್ರಾಬಾದನಲ್ಲಿ ತಯಾರಿಸಲಾಗಿದ್ದು, ತಯಾರಕರೇ ಆಗಮಿಸಿ ಆಂಜನೇಯಸ್ವಾಮಿಗೆ ಅಲಂಕರಿಸಲಿದ್ದಾರೆ. ಈ ಹಿನ್ನೆಲೆ ಬೆಳಗ್ಗೆ 5 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಆಂಧ್ರ, ಕರ್ನಾಟಕದಿಂದ ಪಂಡಿತರು ಆಗಮಿಸಿದ್ದು ಹೋಮ ಹವನಗಳು ಸೇರಿದಂತೆ ವಿವಿಧ ಕಾರ್ಯಕ್ರಮ ನೆರವೇರಿಸಿದರು.&lt;/p&gt;&lt;img&gt;&lt;p&gt;ಉದ್ಯಮಿ ಮಹೇಶ್ ರೆಡ್ಡಿ ಅವರು ತಮ್ಮ ಪತ್ನಿಯೊಂದಿಗೆ ದೇಗುಲಕ್ಕೆ ಆಗಮಿಸಿ, ಅತ್ಯಂತ ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಬಂಗಾರದ ಪ್ರಭಾವಳಿ, ಚತ್ರಿ, ಕಿರೀಟ ಹಾಗೂ ಗದೆಯನ್ನು ಶ್ರೀ ಆಂಜನೇಯ ಸ್ವಾಮಿಗೆ ಅರ್ಪಿಸುವ ಮೂಲಕ ತಮ್ಮ ಸೇವೆ ಸಲ್ಲಿಸಿದರು. ಈ ವೇಳೆ ದೇವಾಲಯದ ಅರ್ಚಕರು ವೇದಮಂತ್ರಗಳೊಂದಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಸಮರ್ಪಿತ ಆಭರಣಗಳಿಗೆ ಪೂಜೆ ಸಲ್ಲಿಸಿದರು. ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಆಭರಣಗಳನ್ನು ಹಸ್ತಾಂತರ ಮಾಡಿದರು. ಆಂಜನೇಯ ಸ್ವಾಮಿಗೆ ವಿಶೇಷ ಸಂಕಲ್ಪ ಪೂಜೆ, ಸುಪ್ರಭಾತ ಸೇವೆ ಸಲ್ಲಿಸಿ, ಭಕ್ತಿ ಭಾವದಿಂದ ಬಂಗಾರದ ಪ್ರಭಾವಳಿ, ಚಕ್ರ, ಕಿರೀಟ ಹಾಗೂ ಗದೆ ಸೇರಿದಂತೆ ವಿವಿಧ ಆಭರಣಗಳನ್ನು ಒಪ್ಪಿಸಿದರು.&lt;/p&gt;&lt;img&gt;&lt;p&gt;ಈ ಸಂದರ್ಭದಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಶಾಸಕ ಜನಾರ್ದನ ರೆಡ್ಡಿ ಅವರ ಆಪ್ತ ಸ್ನೇಹಿತರಾಗಿರುವ ಮಹೇಶ್ ರೆಡ್ಡಿ, ಧಾರ್ಮಿಕ ಕಾರ್ಯಗಳಲ್ಲಿ ಸದಾ ಮುಂದಿರುವ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು ಹಲವು ದೇವಾಲಯಗಳಿಗೆ ದೇಣಿಗೆ ನೀಡಿದ್ದಾರೆ.&lt;/p&gt;&lt;p&gt;ದೇವಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಮೊತ್ತದಲ್ಲಿ ಬಂಗಾರದ ಆಭರಣ ದೇಣಿಗೆಯಾಗಿ ಬಂದಿರುವುದು ವಿಶೇಷವಾಗಿದೆ. ದೇಣಿಗೆಯಾಗಿ ನೀಡಲಾದ ಆಭರಣಗಳನ್ನು ಗಂಗಾವತಿ ತಾಲೂಕು ಆಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಗಿದ್ದು, ಅವುಗಳನ್ನು ದೇವಾಲಯದ ನಿಯಮಾನುಸಾರ ಮುಂದಿನ ಕ್ರಮಗಳಲ್ಲಿ ಬಳಸಲಾಗುತ್ತದೆ.&lt;/p&gt;&lt;img&gt;&lt;p&gt;ಹೈದರಾಬಾದ್&zwnj;ನ ನೆಲ್ಲೂರು ಮೂಲದ ಮಹೇಶ್ ರೆಡ್ಡಿ ಅವರು ಎಎಂಆರ್ ಕನ್ಸ್ಟ್ರಕ್ಷನ್ ಕಂಪನಿಯ ಮಾಲಿಕರಾಗಿದ್ದು, ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೂ ಸುಮಾರು 140 ಕೆ.ಜಿ. ಬಂಗಾರ ದೇಣಿಗೆ ನೀಡಿದ್ದರು. ಇದೀಗ ಅಂಜನಾದ್ರಿ ದೇವಸ್ಥಾನಕ್ಕೂ ದೇಣಿಗೆ ನೀಡುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಈ ದೇಣಿಗೆ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು. ಈ ಬೆಳವಣಿಗೆ ಅಂಜನಾದ್ರಿ ದೇವಸ್ಥಾನದ ಮಹತ್ವವನ್ನು ಇನ್ನಷ್ಟು ಹೆಚ್ಚಿಸಿದೆ.&lt;/p&gt;&lt;img&gt;&lt;p&gt;ಈ ಸಂದರ್ಭದಲ್ಲಿ ಗಂಗಾವತಿ ತಹಸಿಲ್ದಾರರಾದ ವಸಂತ ಕುಮಾರಿ, ಕನಕಗಿರಿ ತಹಸಿಲ್ದಾರರಾದ ವಿಶ್ವನಾಥ್, ಗ್ರೇಡ್ 2 ತಹಶೀಲ್ದಾರರಾದ ಮಹಾಂತಗೌಡ ಪಾಟೀಲ್, ಮಾಜಿ ಸಂಸದರಾದ ಶಿವರಾಮಗೌಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ್, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಚಂದ್ರು ಹಿರೂರು, ಮುಖಂಡರಾದ ಮನೋಹರ ಗೌಡ ಹೇರೂರು, ಯಮನೂರು ಚೌಡ್ಕಿ, ವೀರೇಶ್ ಬಲಕುಂದಿ, ಮಲ್ಲಿಕಾರ್ಜುನ ಸ್ವಾಮಿ, ಬಾಬು ರೆಡ್ಡಿ, ಗಂಗಾಧರ ಸ್ವಾಮಿ, ಸಂಗಮೇಶ್ ಬಾದವಾಡಿಗಿ, ವೆಂಕಟೇಶ್ ಜಬ್ಬಲಗುಡ್ಡ, ರಮೇಶ್ ಹೊಸಮಲಿ, ಮಂಜುನಾಥ ಗೊಂದಿ, ಮಂಜುನಾಥ ಕಲಾಲ್, ಅರ್ಜುನ್ ರಾಯ್ಕರ್, ವೀರೇಶ್ ಅಂಜನಾದ್ರಿ ಹಾಗೂ ತಾಲೂಕು ಆಡಳಿತ ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/hyderabad-businessman-mahesh-reddy-donates-rs2-5-crore-worth-gold-ornaments-to-anjanadri-hanuman-temple-in-koppal-gdp-16r2a1t"/>
        </item>
        <item>
            <title><![CDATA[ರಾತ್ರಿಯ ಕಗ್ಗತ್ತಲು, ಸುರಿವ ಮಳೆಯಲ್ಲಿ ಹಳ್ಳದಲ್ಲಿ ಕಳೆದ ಹೋದ ಮಗು; 12 ಗಂಟೆ ಬಳಿಕ ಕಂದಮ್ಮ ಪತ್ತೆ!]]></title>
            <link>https://kannada.asianetnews.com/karnataka-districts/chikkamagaluru-missing-child-found-after-12-hours-mudigere-coffee-estate-sat/articleshow-k73l3ao</link>
            <guid isPermaLink="true">https://kannada.asianetnews.com/karnataka-districts/chikkamagaluru-missing-child-found-after-12-hours-mudigere-coffee-estate-sat/articleshow-k73l3ao</guid>
            <pubDate>Fri, 08 May 2026 14:16:40 +0530</pubDate>
            <description><![CDATA[ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಾಫಿ ಎಸ್ಟೇಟ್&zwnj;ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಮಗು, 12 ಗಂಟೆಗಳ ತೀವ್ರ ಹುಡುಕಾಟದ ನಂತರ ಪತ್ತೆಯಾಗಿದೆ. ಇಡೀ ರಾತ್ರಿ ಮಳೆ ಮತ್ತು ಕಾಡು ಪ್ರಾಣಿಗಳ ನಡುವೆ ಹಳ್ಳವೊಂದರಲ್ಲಿ ಸಿಲುಕಿದ್ದ ಮಗು ಪವಾಡಸದೃಶವಾಗಿ ಬದುಕುಳಿದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr3c7zky8f4s7nfq6c7hzgeg,imgname-chikkamagaluru-child-found-1778229968510.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ 08): ಮೂ&lt;/strong&gt;ಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್&zwnj;ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆಯಾಗಿದೆ. ಇಡೀ ರಾತ್ರಿ ಸುರಿಯುವ ಮಳೆಯ ನಡುವೆ, ದಟ್ಟವಾದ ಕಾಫಿ ತೋಟದ ಹಳ್ಳವೊಂದರಲ್ಲಿ ಹಸಿವು ಮತ್ತು ಚಳಿಯಿಂದ ನಡುಗುತ್ತಿದ್ದ ಮಗುವನ್ನು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಮಧ್ಯಪ್ರದೇಶ ಮೂಲದ ಗೋನು ಮತ್ತು ಸೋನು ದಂಪತಿ ಕಳೆದೊಂದು ವಾರದ ಹಿಂದಷ್ಟೇ ಕೆಲಸ ಅರಸಿ ಕೆಳಗೂರು ಎಸ್ಟೇಟ್&zwnj;ಗೆ ಬಂದಿದ್ದರು. ಕೂಲಿ ಕೆಲಸಕ್ಕೆ ಹೋಗುವಾಗ ತಮ್ಮ ಐವರು ಮಕ್ಕಳನ್ನು ನೋಡಿಕೊಳ್ಳಲು ಓರ್ವ ಮಹಿಳೆಯನ್ನು ನೇಮಿಸಿದ್ದರು. ಆದರೆ, ಶುಕ್ರವಾರ ಮಧ್ಯಾಹ್ನ ಮಗು ಅಳುತ್ತಿದೆ ಎಂಬ ಕಾರಣಕ್ಕೆ ಆ ಮಹಿಳೆ, 8 ವರ್ಷದ ಬಾಲಕಿಯ ಜೊತೆ ಮಗುವನ್ನು ಎಸ್ಟೇಟ್ ಬಳಿ ಕಳುಹಿಸಿದ್ದರು. ಕಾಫಿ ತೋಟದ ನಡುವೆ ಅಡ್ಡಾಡಿ ಸುಸ್ತಾಗಿದ್ದ ಮಕ್ಕಳು ಮಧ್ಯಾಹ್ನ ಊಟ ಮಾಡಿ ಅಲ್ಲೇ ಮಲಗಿದ್ದಾರೆ. ಈ ವೇಳೆ 8 ವರ್ಷದ ಬಾಲಕಿ, ಒಂದೂವರೆ ವರ್ಷದ ಶಿವಂ ಎಂಬ ಮಗುವನ್ನು ರಸ್ತೆಯಲ್ಲೇ ಬಿಟ್ಟು ಮನೆಗೆ ಮರಳಿದ್ದಾಳೆ.&lt;/p&gt;&lt;h2&gt;&lt;strong&gt;12 ಗಂಟೆಗಳ ಕಾಲ ನಡೆದ ಹುಡುಕಾಟ:&lt;/strong&gt;&lt;/h2&gt;&lt;p&gt;ಸಂಜೆ ಪೋಷಕರು ಕೆಲಸ ಮುಗಿಸಿ ಮನೆಗೆ ಬಂದಾಗ ಮಗು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಬಾಳೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು, ಶ್ವಾನ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ಆರಂಭಿಸಿದರು. ಕಾಫಿ ತೋಟದ ಅಂಚಿನಲ್ಲಿ ರಾತ್ರಿಯಿಡೀ ಹುಡುಕಾಟ ನಡೆಸಲಾಯಿತಾದರೂ ಕಾಡು ಪ್ರಾಣಿಗಳ ಭಯ ಮತ್ತು ಸುರಿಯುವ ಮಳೆಯಿಂದಾಗಿ ಹುಡುಕಾಟ ಕಷ್ಟವಾಗಿತ್ತು. ಇಡೀ ರಾತ್ರಿ ಪೋಷಕರು ಕಣ್ಣೀರು ಹಾಕುತ್ತಾ ಮಗುವಿಗಾಗಿ ಕಾದು ಕುಳಿತಿದ್ದರು.&lt;/p&gt;&lt;h3&gt;&lt;strong&gt;ಪವಾಡದಂತೆ ಬದುಕುಳಿದ ಮಗು:&lt;/strong&gt;&lt;/h3&gt;&lt;p&gt;ಇಂದು ಮುಂಜಾನೆ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿರುವ ಹಳ್ಳದ ಬಳಿ ಹುಡುಕಾಟ ನಡೆಸಿದಾಗ, ಮಗು ಶಿವಂ ಅಲ್ಲಿ ನಡುಗುತ್ತಾ ಕುಳಿತಿರುವುದು ಕಂಡುಬಂದಿದೆ. ರಾತ್ರಿಯಿಡೀ ಸುರಿದ ಮಳೆ ಹಾಗೂ ಕತ್ತಲೆಯಲ್ಲಿ ಕಾಡು ಪ್ರಾಣಿಗಳ ನಡುವೆಯೂ ಮಗು ಪ್ರಾಣಾಪಾಯದಿಂದ ಪಾರಾಗಿರುವುದು ಒಂದು ಪವಾಡವೇ ಸರಿ. ಸದ್ಯ ಮಗುವನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಮಗು ಪತ್ತೆಯಾದ ಸುದ್ದಿ ಕೇಳಿ ಪೋಷಕರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-missing-child-found-after-12-hours-mudigere-coffee-estate-sat/articleshow-k73l3ao"/>
        </item>
        <item>
            <title><![CDATA[ಖಾನಾಪುರ–ತಾಳಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು-ಟ್ರಕ್ ನಡುವೆ ಡಿಕ್ಕಿ, ಐವರಿಗೆ ಗಂಭೀರ ಗಾಯ]]></title>
            <link>https://kannada.asianetnews.com/karnataka-districts/karwar-haliyal-road-accident-car-truck-collision-injured-updates-sat/articleshow-s3gcpro</link>
            <guid isPermaLink="true">https://kannada.asianetnews.com/karnataka-districts/karwar-haliyal-road-accident-car-truck-collision-injured-updates-sat/articleshow-s3gcpro</guid>
            <pubDate>Fri, 08 May 2026 13:08:29 +0530</pubDate>
            <description><![CDATA[&lt;p&gt;ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಅತಿ ವೇಗದಿಂದ ಬಂದ ಕಾರು ಟ್ರಕ್&zwnj;ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr38b0xyb65jwf2zv7xnt4bd,imgname-uttara-kannada-accident-1778225873854.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ (ಮೇ 08): ಜಿ&lt;/strong&gt;ಲ್ಲೆಯ ಹಳಿಯಾಳ ತಾಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾನಾಪುರ&ndash;ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಘಟನೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ನೇರ ಡಿಕ್ಕಿಯಾಗಿದ್ದು, ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮದ ಸಮೀಪ ಈ ಅಪಘಾತ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ಹತೋಟಿ ತಪ್ಪಿ, ಎದುರಿಗೆ ಬರುತ್ತಿದ್ದ ಟ್ರಕ್&zwnj;ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಮುಂಭಾಗದಿಂದ ಸಂಪೂರ್ಣವಾಗಿ ಜಖಂಗೊಂಡಿದ್ದು, ನೋಡುಗರ ಎದೆ ಝಲ್ಲೆನ್ನುವಂತಿತ್ತು.&lt;/p&gt;&lt;h2&gt;&lt;strong&gt;ಗಾಯಾಳುಗಳ ಸ್ಥಿತಿ:&lt;/strong&gt;&lt;/h2&gt;&lt;p&gt;ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಟ್ರಕ್&zwnj;ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಐವರಿಗೂ ತೀವ್ರ ಸ್ವರೂಪದ ಗಾಯಗಳಾಗಿವೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆಯಲು ನೆರವಾಗಿದ್ದಾರೆ. ಸದ್ಯ ಗಾಯಾಳುಗಳನ್ನು ತುರ್ತಾಗಿ ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.&lt;/p&gt;&lt;h3&gt;&lt;strong&gt;ಸಂಚಾರ ಅಸ್ತವ್ಯಸ್ತ:&lt;/strong&gt;&lt;/h3&gt;&lt;p&gt;ಈ ಅಪಘಾತವು ಹಳಿಯಾಳಕ್ಕೆ ಬರುತ್ತಿದ್ದ ಟ್ರಕ್ ಮತ್ತು ಅಳ್ನಾವರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ನಡೆದಿದೆ. ರಾಜ್ಯ ಹೆದ್ದಾರಿಯ ಮಧ್ಯದಲ್ಲೇ ಅಪಘಾತ ಸಂಭವಿಸಿದ ಕಾರಣ, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರಿಂದಾಗಿ ಹೆದ್ದಾರಿಯ ಎರಡೂ ಬದಿಗಳಲ್ಲಿ ಕಿಲೋಮೀಟರ್&zwnj;ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು.&lt;/p&gt;&lt;h3&gt;&lt;strong&gt;ಪೊಲೀಸ್ ಭೇಟಿ:&lt;/strong&gt;&lt;/h3&gt;&lt;p&gt;ವಿಷಯ ತಿಳಿದ ಕೂಡಲೇ ಹಳಿಯಾಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಖಂಗೊಂಡ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅತಿ ವೇಗ ಮತ್ತು ಅಜಾಗರೂಕತೆಯೇ ಇಂತಹ ಅಪಘಾತಗಳಿಗೆ ಕಾರಣವಾಗುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karwar-haliyal-road-accident-car-truck-collision-injured-updates-sat/articleshow-s3gcpro"/>
        </item>
        <item>
            <title><![CDATA[ಚಿಕ್ಕಮಗಳೂರು: ದೇವಸ್ಥಾನ ಕಟ್ಟಲು 20 ವರ್ಷ ವಾಸವಿದ್ದ ಮನೆ ಧ್ವಂಸ, ದಲಿತ ಕುಟುಂಬದ ಸಂಸಾರ ಹಾಳು ಮಾಡಿದ ಗ್ರಾಮಸ್ಥರು!]]></title>
            <link>https://kannada.asianetnews.com/gallery/karnataka-districts/chikkamagaluru-tarikeri-dalit-family-house-demolished-by-villegers-for-temple-3yb7ggt</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-tarikeri-dalit-family-house-demolished-by-villegers-for-temple-3yb7ggt</guid>
            <pubDate>Fri, 08 May 2026 12:48:51 +0530</pubDate>
            <description><![CDATA[&lt;p&gt;Chikkamagaluru tarikeri dalit family house demolished ಯಾವ ಮನೆಯಲ್ಲಿ ಹದಿನೆಂಟು-ಇಪ್ಪತ್ತು ವರ್ಷಗಳಿಂದ ಪುಟ್ಟ ಮನೆ, ಸುಂದರ ಕನಸುಗಳನ್ನು ಕಟ್ಟಿಕೊಂಡಿದ್ದರೋ, ನೆಮ್ಮದಿಯಿಂದ ಬದುಕಿದ್ದರೋ ಅದೇ ಮನೆಯಿಂದ ಹೊರಬಿದ್ದು ಆ ಕುಟುಂಬ ಅಕ್ಷರಶಃ ಬೀದಿಪಾಲಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3730h4v70zrvhpwtm1yw13,imgname-----------------------2026-05-08t124544.743-1778224562724.jpg" type="image/jpeg" height="390" width="690"/>
            <content:encoded><![CDATA[&lt;p&gt;Chikkamagaluru tarikeri dalit family house demolished ಯಾವ ಮನೆಯಲ್ಲಿ ಹದಿನೆಂಟು-ಇಪ್ಪತ್ತು ವರ್ಷಗಳಿಂದ ಪುಟ್ಟ ಮನೆ, ಸುಂದರ ಕನಸುಗಳನ್ನು ಕಟ್ಟಿಕೊಂಡಿದ್ದರೋ, ನೆಮ್ಮದಿಯಿಂದ ಬದುಕಿದ್ದರೋ ಅದೇ ಮನೆಯಿಂದ ಹೊರಬಿದ್ದು ಆ ಕುಟುಂಬ ಅಕ್ಷರಶಃ ಬೀದಿಪಾಲಾಗಿದೆ.&amp;nbsp;&lt;/p&gt;&lt;img&gt;&lt;p&gt;ಯಾವ ಮನೆಯಲ್ಲಿ ಹದಿನೆಂಟು-ಇಪ್ಪತ್ತು ವರ್ಷಗಳಿಂದ ಪುಟ್ಟ ಮನೆ, ಸುಂದರ ಕನಸುಗಳನ್ನು ಕಟ್ಟಿಕೊಂಡಿದ್ದರೋ, ನೆಮ್ಮದಿಯಿಂದ ಬದುಕಿದ್ದರೋ ಅದೇ ಮನೆಯಿಂದ ಹೊರಬಿದ್ದು ಆ ಕುಟುಂಬ ಅಕ್ಷರಶಃ ಬೀದಿಪಾಲಾಗಿದೆ. ದೇವಸ್ಥಾನ ಕಟ್ಟುವ ನೆಪದಲ್ಲಿ, ತಮ್ಮದೇ ಸಮುದಾಯದವರಿಂದಲೇ ಒಂದು ದಲಿತ ಕುಟುಂಬ ಬೀದಿಗೆ ಬಿದ್ದಿರುವ ಕರುಣಾಜನಕ ಘಟನೆ ತರೀಕೆರೆ ತಾಲೂಕಿನ ಎರೇಹಳ್ಳಿ ತಾಂಡ್ಯದಲ್ಲಿ ನಡೆದಿದೆ&lt;/p&gt;&lt;img&gt;&lt;p&gt;ಬಡ ಕುಟುಂಬ ವಾಸವಿದ್ದ ಜಾಗಕ್ಕೆ ಸೂಕ್ತ ದಾಖಲೆಗಳಿಲ್ಲ ಎನ್ನುವ ಕಾರಣವನ್ನೇ ಅಸ್ತ್ರವಾಗಿಸಿಕೊಂಡ ಗ್ರಾಮಸ್ಥರು, ಆ ಕುಟುಂಬದ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ನ್ಯಾಯಾಲಯದಿಂದ 'ಇಂಜಕ್ಷನ್ ಆರ್ಡರ್' ಇದ್ದರೂ, ಯಥಾಸ್ಥಿತಿ ಕಾಪಾಡುವಂತೆ ಕೋರ್ಟ್ ಆದೇಶ ನೀಡಿದ್ದರೂ, ಕಿಡಿಗೇಡಿಗಳ ಅಟ್ಟಹಾಸಕ್ಕೆ ಮಾತ್ರ ಬ್ರೇಕ್ ಬಿದ್ದಿಲ್ಲ. ದೇವಸ್ಥಾನದ ಹೆಸರಿನಲ್ಲಿ ನಿರಂತರ ಕಿರುಕುಳ ನೀಡುತ್ತಾ ಬಂದಿದ್ದ ಗುಂಪು, ಕೊನೆಗೂ ಆ ಮನೆಯನ್ನು ನೆಲಸಮ ಮಾಡಿಯೇ ಬಿಟ್ಟಿದೆ.&lt;/p&gt;&lt;img&gt;&lt;p&gt;ಸುಮಾರು 30ಕ್ಕೂ ಹೆಚ್ಚು ಜನರ ಗುಂಪು ಏಕಾಏಕಿ ದಾಳಿ ನಡೆಸಿದಾಗ ಅವರಲ್ಲಿ ಕಾನೂನಿನ ಭಯವೇ ಇರಲಿಲ್ಲ. ಗ್ರಾಮದ ಮಹಿಳೆಯರೇ ಸೇರಿ ಮನೆಯ ಸಿಮೆಂಟ್ ಪಿಲ್ಲರ್&zwnj;ಗಳನ್ನು ಮುರಿದು ಹಾಕಿದರೆ, ಅತ್ತ ಪುರುಷರು ಮನೆಯಲ್ಲಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಾನವೀಯತೆ ಮರೆತ ಮನುಷ್ಯರು ಅಲ್ಲಿ ಕ್ರೌರ್ಯದ ನರ್ತನವಾಡಿದ್ದಾರೆ.&lt;/p&gt;&lt;img&gt;&lt;p&gt;ಘಟನಾ ಸ್ಥಳಕ್ಕೆ ಪೊಲೀಸರು ಬಂದು ಹೋದ ಬಳಿಕ ಪರಿಸ್ಥಿತಿ ತಿಳಿಯಾಯಿತು ಅಂದುಕೊಂಡರೆ ಅದು ಆಗಲಿಲ್ಲ, ಪೊಲೀಸರು ಮರೆಯಾದ ಬೆನ್ನಲ್ಲೇ ಮತ್ತೆ ಕುಟುಂಬದ ಮೇಲೆ ಮುಗಿಬಿದ್ದ ಕಿಡಿಗೇಡಿಗಳು, ಮನೆಯ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾರೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ದಿನಸಿ, ಬಟ್ಟೆಬರೆ ಎಲ್ಲವೂ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಮಣ್ಣು ಪಾಲಾಗಿವೆ.&lt;/p&gt;&lt;img&gt;&lt;p&gt;ನೆಲೆ ಇಲ್ಲದ ಆ ಕುಟುಂಬ ಇಂದು ಅಕ್ಷರಶಃ ಬೀದಿಗೆ ಬಿದ್ದಿದೆ. ತಲೆಯ ಮೇಲೆ ಸೂರಿಲ್ಲದೆ, ಹೊಟ್ಟೆಗೆ ಹಿಟ್ಟಿಲ್ಲದೆ, ಪುಟ್ಟ ಮಕ್ಕಳೊಂದಿಗೆ ಮರದ ಕೆಳಗೆ ಆಶ್ರಯ ಪಡೆದಿದೆ. ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ರಮೇಶ್ ಎಂಬುವವರ ಮೇಲೆಯೂ ಈ ದೌರ್ಜನ್ಯದ ಆರೋಪ ಕೇಳಿಬಂದಿದ್ದು,&amp;nbsp;&lt;/p&gt;&lt;img&gt;&lt;p&gt;ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಮುರಿದು ಹೋದ ಬದುಕನ್ನು ಮತ್ತೆ ಕಟ್ಟಿಕೊಡುವವರು ಯಾರು ಎಂಬ ಪ್ರಶ್ನೆ ಮಾತ್ರ ಹಾಗೆಯೇ ಉಳಿದಿದೆ.&lt;/p&gt;]]></content:encoded>
            <category>karnataka-districts</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/chikkamagaluru-tarikeri-dalit-family-house-demolished-by-villegers-for-temple-3yb7ggt"/>
        </item>
        <item>
            <title><![CDATA[ರಕ್ಷಕರೇ ಭಕ್ಷಕರು, ಅಕ್ರಮ ಅಕ್ಕಿ ಸಾಗಣೆದಾರರಿಂದ ವಸೂಲಿ ದಂಧೆ, ಬಳ್ಳಾರಿ ಎಸ್‌ಪಿ ಸುಮನ್ ಪನ್ನೇಕರ್ ಗನ್‌ಮ್ಯಾನ್ ಬಂಧನ!]]></title>
            <link>https://kannada.asianetnews.com/karnataka-districts/ballari-sp-suman-pennaker-personal-gunman-arrested-for-extorting-rs-3-lakh-from-ration-rice-smuggler-gdp/articleshow-312qci6</link>
            <guid isPermaLink="true">https://kannada.asianetnews.com/karnataka-districts/ballari-sp-suman-pennaker-personal-gunman-arrested-for-extorting-rs-3-lakh-from-ration-rice-smuggler-gdp/articleshow-312qci6</guid>
            <pubDate>Fri, 08 May 2026 12:40:50 +0530</pubDate>
            <description><![CDATA[ಬಳ್ಳಾರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದವರಿಂದ 'ಎಸ್ಪಿ ಸ್ಕ್ವಾಡ್' ಎಂದು ಹೇಳಿಕೊಂಡು ಹಣ ವಸೂಲಿ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಗನ್&zwnj;ಮ್ಯಾನ್ ದೇವರಾಜ್ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣವು ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr369xa5w7nty0xb356yw689,imgname-ballari-sp-suman-pennaker-personal-gunman-1778223740229.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಜಿಲ್ಲೆಯಲ್ಲಿನ ಅಕ್ರಮ ಪಡಿತರ ಅಕ್ಕಿ ಸಾಗಣೆ ವಿರುದ್ಧ ಪೊಲೀಸರು ನಿರಂತರವಾಗಿ ಕಠಿಣ ಕ್ರಮ ಕೈಗೊಳ್ಳುತ್ತಿರುವ &amp;nbsp;ಮಧ್ಯೆಯೇ ಪೊಲೀಸರೇ ಹಣ ವಸೂಲಿ ಮಾಡಿದ ಘಟನೆ &amp;nbsp;ಈಗ ಬಯಲಾಗಿದೆ. ಈ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸುಮನ್ ಪನ್ನೇಕರ್ ಅವರ ಗನ್ ಮ್ಯಾನ್ ಆಗಿದ್ದ ದೇವರಾಜ್ ಹಾಗೂ ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುದ್ದು ಸುಮನ್ ಪನ್ನೇಕರ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆಂದು ತಿಳಿದುಬಂದಿದೆ.&lt;/p&gt;&lt;h2&gt;ಆಂಧ್ರಪ್ರದೇಶದತ್ತ ಅಕ್ರಮವಾಗಿ ಅಕ್ಕಿ ತುಂಬಿ ಹೊರಟಿದ್ದ ಲಾರಿ&lt;/h2&gt;&lt;p&gt;ಶರಭಯ್ಯ ಎಂಬ ವ್ಯಕ್ತಿ ಅಕ್ರಮ ಪಡಿತರ ಅಕ್ಕಿ ಸಾಗಣೆದಾರನಾಗಿದ್ದು, ಆಂಧ್ರಪ್ರದೇಶದತ್ತ ಅಕ್ಕಿ ತುಂಬಿದ ಎರಡು ಲಾರಿಗಳೊಂದಿಗೆ ಪ್ರಯಾಣಿಸುತ್ತಿದ್ದ. ಈ ವೇಳೆ &amp;nbsp;ಎಸ್&zwnj;ಪಿ ಗನ್&zwnj;ಮ್ಯಾನ್ ದೇವರಾಜ್ ಮತ್ತು ಆತನ ತಂಡ ಲಾರಿಗಳನ್ನು ಅಡ್ಡಗಟ್ಟಿ ತಾವು &lsquo;ಎಸ್ಪಿ ಸ್ಕ್ವಾಡ್&rsquo; ಸದಸ್ಯರು ಎಂದು ಹೇಳಿಕೊಂಡು &amp;nbsp;ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಟ್ಟರೆ ಪ್ರಕರಣ ದಾಖಲಿಸದೇ ಬಿಡುವುದಾಗಿ ಹೇಳಿ 5 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಷ್ಟು ಕೊಡಲು ನನ್ನಲ್ಲಿ ಇಲ್ಲ ಎಂದು ಶರಭಯ್ಯ ಹೇಳಿದ್ದು ಬಳಿಕ ಮಾತುಕತೆಯ ಮೂಲಕ 3 ಲಕ್ಷ ರೂ.ಗಳಿಗೆ ಒಪ್ಪಂದ ಮಾಡಿಕೊಂಡು. ಆ ಹಣವನ್ನು ಆರೋಪಿಗಳು ಶರಭಯ್ಯನಿಂದ ವಸೂಲಿ ಮಾಡಿದ್ದಾರೆ.&lt;/p&gt;&lt;h2&gt;3 ಲಕ್ಷ ಕೊಟ್ಟು ದೂರು ಕೊಟ್ಟ ಶರಭಯ್ಯ&lt;/h2&gt;&lt;p&gt;3 ಲಕ್ಷ ಕೊಟ್ಟು ಕಂಗೆಟ್ಟ ಶರಭಯ್ಯ ಮೋಕಾ ಪೊಲೀಸ್ ಠಾಣೆಗೆ ದೂರು ನೀಡಿದರು. ಹಣ ನೀಡದಿದ್ದರೆ ಲಾರಿಗಳನ್ನು ಸೀಜ್ ಮಾಡಿ ಜೈಲಿಗೆ ಕಳುಹಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಂದಯ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಹಣ ವಸೂಲಿ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನವಾಗಿದೆ.&lt;/p&gt;&lt;p&gt;ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಪಿ ಸುಮನ್ ಪನ್ನೇಕರ್ ಸ್ವತಃ ಮೋಕಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಶಾಕಿಂಗ್ ಸಂಗತಿಯೆಂದರೆ, ಜಿಲ್ಲೆಯಲ್ಲಿನ ಅಕ್ರಮ ಪಡಿತರ ಅಕ್ಕಿ ದಂಧೆ ವಿರುದ್ಧ ಈಗಾಗಲೇ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದು, ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ, ಪೊಲೀಸ್ ಸಿಬ್ಬಂದಿಯೇ ದಂಧೆಕೋರರಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿರುವುದು ಇಲಾಖೆಗೆ ಮುಜುಗರ ತಂದಿಟ್ಟ ಪ್ರಕರಣವಾಗಿದೆ.&lt;/p&gt;&lt;p&gt;ಈ ಘಟನೆ ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ್ದು, ಪೊಲೀಸರ ಕಾರ್ಯ ವೈಖರಿ ಬಗ್ಗೆ ಪ್ರಶ್ನೆ ಹುಟ್ಟುವಂತೆ ಮಾಡಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/ballari-sp-suman-pennaker-personal-gunman-arrested-for-extorting-rs-3-lakh-from-ration-rice-smuggler-gdp/articleshow-312qci6"/>
        </item>
        <item>
            <title><![CDATA[ಸಿಎಂ ಡಿಸಿಎಂ ಗೈರು ಬೆನ್ನಲೆ ವಿಧಾನಸೌಧದಿಂದ ರಾಜ್ಯ ಚುನಾವಣಾ ಆಯೋಗ ಕಚೇರಿಗೆ ಶಿಫ್ಟ್ ಆದ ಜಿಬಿಎ  ಎಲೆಕ್ಷನ್ ಸಭೆ]]></title>
            <link>https://kannada.asianetnews.com/karnataka-districts/cm-siddaramaiah-dcm-dk-shivakumar-skip-key-gba-election-meeting-sec-pushes-for-june-polls-gdp/articleshow-s1ex4w1</link>
            <guid isPermaLink="true">https://kannada.asianetnews.com/karnataka-districts/cm-siddaramaiah-dcm-dk-shivakumar-skip-key-gba-election-meeting-sec-pushes-for-june-polls-gdp/articleshow-s1ex4w1</guid>
            <pubDate>Fri, 08 May 2026 11:59:30 +0530</pubDate>
            <description><![CDATA[ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ನಗರ ಪಾಲಿಕೆಗಳ ಚುನಾವಣಾ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರುಹಾಜರಾಗಿದ್ದಾರೆ. ಜೂನ್&zwnj;ನಲ್ಲಿ ಚುನಾವಣೆ ನಡೆಸಲು ಆಯೋಗ ಪಟ್ಟುಹಿಡಿದರೆ, ಸರ್ಕಾರ ಸೆಪ್ಟೆಂಬರ್&zwnj;ವರೆಗೆ ಕಾಲಾವಕಾಶ ಕೇಳಿದೆ. ನಾಯಕರ ಅನುಪಸ್ಥಿತಿಯ ನಡುವೆಯೂ ಅಧಿಕಾರಿಗಳು ಸಭೆಯನ್ನು ಮುಂದುವರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpmdb96yp6jnbyva1rc207n4,imgname-greater-bengaluru-1776654066910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಮಹತ್ವದ ಸಭೆ ಇಂದು ನಡೆಯಬೇಕಾಗಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರು ಹಾಜರಾತಿಯಿಂದ ಸಭೆಯಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಜೂನ್&zwnj;ನಲ್ಲಿ ನಡೆಸಬೇಕೆಂದು ಆಯೋಗ ಪಟ್ಟು ಹಿಡಿದಿದೆ. ರಾಜ್ಯ ಸರ್ಕಾರ ಮಾತ್ರ ಸೆಪ್ಟೆಂಬರ್ ತನಕ ಕಾಲಾವಕಾಶ ಕೇಳಿದೆ. ರಾಜ್ಯ ಚುನಾವಣಾ ಆಯೋಗ ಕರೆದಿದ್ದ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಬೇಕಾಗಿತ್ತು. ಆದರೆ, ಇಬ್ಬರು ನಾಯಕರು ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಸಭೆಗೆ ಗೈರಾಗಿದ್ದಾರೆ. ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಕೂಡ ಅಭೆಯಲ್ಲಿ ಭಾಗವಹಿಸಿದ್ದಾರೆ.&lt;/p&gt;&lt;h2&gt;ವಿಧಾನಸೌಧದಿಂದ ಆಯೋಗ ಕಚೇರಿಗೆ ಸಭೆ ಸ್ಥಳಾಂತರ&lt;/h2&gt;&lt;p&gt;ಮೊದಲು ವಿಧಾನಸೌಧದಲ್ಲಿ ನಡೆಯಬೇಕಿದ್ದ ಈ ಸಭೆಯನ್ನು ನಂತರ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಸ್ಥಳಾಂತರಿಸಲಾಗಿದೆ. ಸಿಎಂ ಮತ್ತು ಡಿಸಿಎಂ ಗೈರಾಗಿದ್ದರೂ, ಅಧಿಕಾರಿಗಳು ಸಭೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಕೂಡ ಭಾಗವಹಿಸುತ್ತಿದ್ದಾರೆ. ಜಿಬಿಎ ಚುನಾವಣೆ ಕುರಿತ ಸಿದ್ಧತೆಗಳು, ವೇಳಾಪಟ್ಟಿ ಹಾಗೂ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.&lt;/p&gt;&lt;h2&gt;ಸಿಎಂ-ಡಿಸಿಎಂ ಪರವಾಗಿ ಮುಖ್ಯ ಆಯುಕ್ತರ ಹಾಜರಾತಿ&lt;/h2&gt;&lt;p&gt;ಸಭೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಜರಾಗದ ಹಿನ್ನೆಲೆಯಲ್ಲಿ, ಅವರ ಪರವಾಗಿ ಜಿಬಿಎ ಮುಖ್ಯ ಆಯುಕ್ತರು ಭಾಗವಹಿಸಿದ್ದಾರೆ. ಸಭೆಗೆ ಹಾಜರಾಗುವಂತೆ ಆಯೋಗದಿಂದ ಸಿಎಂ, ಡಿಸಿಎಂ ಸೇರಿದಂತೆ ಜಿಬಿಎ ಸದಸ್ಯರಿಗೆ ಆಹ್ವಾನ ನೀಡಲಾಗಿತ್ತು. ಆದರೂ ಪ್ರಮುಖ ರಾಜಕೀಯ ನಾಯಕರ ಗೈರು ಗಮನಾರ್ಹವಾಗಿದೆ.&lt;/p&gt;&lt;p&gt;ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಕುರಿತಾಗಿ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಚುನಾವಣಾ ದಿನಾಂಕ ನಿಗದಿ ವಿಚಾರ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದಿರುವ ಸಭೆ ರಾಜಕೀಯವಾಗಿ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದೆ.&lt;/p&gt;&lt;p&gt;ಒಟ್ಟಿನಲ್ಲಿ, ಸಿಎಂ ಮತ್ತು ಡಿಸಿಎಂ ಗೈರಾಗಿದ್ದರೂ ಅಧಿಕಾರಿಗಳು ಸಭೆಯನ್ನು ಮುಂದುವರಿಸಿರುವುದು ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ಪ್ರಯತ್ನವೆಂದು ವಿಶ್ಲೇಷಿಸಲಾಗುತ್ತಿದೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/cm-siddaramaiah-dcm-dk-shivakumar-skip-key-gba-election-meeting-sec-pushes-for-june-polls-gdp/articleshow-s1ex4w1"/>
        </item>
        <item>
            <title><![CDATA[Koh-i-Noor: ಕೋಹಿನೂರ್ ವಾಪಸ್‌ ಕೊಡಿ: ಬ್ರಿಟನ್‌ ರಾಜನಿಗೆ ನ್ಯೂಯಾರ್ಕ್‌ ಮೇಯರ್‌ ಕೋರಿಕೆ]]></title>
            <link>https://kannada.asianetnews.com/gallery/state/mamdani-says-he-would-ask-king-charles-to-return-kohi-noor-rav-ucetrch</link>
            <guid isPermaLink="true">https://kannada.asianetnews.com/gallery/state/mamdani-says-he-would-ask-king-charles-to-return-kohi-noor-rav-ucetrch</guid>
            <pubDate>Fri, 08 May 2026 11:59:16 +0530</pubDate>
            <description><![CDATA[&lt;p&gt;ವಿಶ್ವಪ್ರಸಿದ್ಧ ಕೋಹಿನೂರ್&zwnj; ವಜ್ರವನ್ನು ಭಾರತಕ್ಕೆ ಹಿಂತಿರುಗಿಸಬೇಕೆಂಬ ಒತ್ತಾಸೆಯ ದನಿ ಇದೀಗ ವಿಶ್ವದೆಲ್ಲೆಡೆ ಪ್ರತಿಧ್ವನಿಸುತ್ತಿದೆ. ಕೋಹಿನೂರ್&zwnj; ಕುರಿತು, ಅಮೆರಿಕದ ನ್ಯೂಯಾರ್ಕ್&zwnj;ನ ಮೇಯರ್&zwnj;, ಪ್ರಭಾವಿ ಯುವ ರಾಜಕಾರಣಿ ಜೋಹ್ರನ್&zwnj; ಮಮ್ದಾನಿಯ ಇತ್ತೀಚಿನ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr33585wq4h6s0gxyzw58ej1,imgname-whatsapp-image-2026-05-08-at-11.01.02-am-1778220441788.jpeg" type="image/jpeg" height="390" width="690"/>
            <content:encoded><![CDATA[&lt;p&gt;ವಿಶ್ವಪ್ರಸಿದ್ಧ ಕೋಹಿನೂರ್&zwnj; ವಜ್ರವನ್ನು ಭಾರತಕ್ಕೆ ಹಿಂತಿರುಗಿಸಬೇಕೆಂಬ ಒತ್ತಾಸೆಯ ದನಿ ಇದೀಗ ವಿಶ್ವದೆಲ್ಲೆಡೆ ಪ್ರತಿಧ್ವನಿಸುತ್ತಿದೆ. ಕೋಹಿನೂರ್&zwnj; ಕುರಿತು, ಅಮೆರಿಕದ ನ್ಯೂಯಾರ್ಕ್&zwnj;ನ ಮೇಯರ್&zwnj;, ಪ್ರಭಾವಿ ಯುವ ರಾಜಕಾರಣಿ ಜೋಹ್ರನ್&zwnj; ಮಮ್ದಾನಿಯ ಇತ್ತೀಚಿನ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ&lt;/p&gt;&lt;img&gt;&lt;p&gt;ಯಾದಗಿರಿ : ವಿಶ್ವಪ್ರಸಿದ್ಧ ಕೋಹಿನೂರ್&zwnj; ವಜ್ರವನ್ನು ಭಾರತಕ್ಕೆ ಹಿಂತಿರುಗಿಸಬೇಕೆಂಬ ಒತ್ತಾಸೆಯ ದನಿ ಇದೀಗ ವಿಶ್ವದೆಲ್ಲೆಡೆ ಪ್ರತಿಧ್ವನಿಸುತ್ತಿದೆ. ಕೋಹಿನೂರ್&zwnj; ಕುರಿತು, ಅಮೆರಿಕದ ನ್ಯೂಯಾರ್ಕ್&zwnj;ನ ಮೇಯರ್&zwnj;, ಪ್ರಭಾವಿ ಯುವ ರಾಜಕಾರಣಿ ಜೋಹ್ರನ್&zwnj; ಮಮ್ದಾನಿಯ ಇತ್ತೀಚಿನ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುಂಬೈ ಮೂಲದ ಮೊಹ್ಮದ್&zwnj; ಮಮ್ದಾನಿ ಹಾಗೂ ಭಾರತೀಯ ಚಲನಚಿತ್ರರಂಗದ ಪ್ರಸಿದ್ಧ ನಿರ್ಮಾಪಕಿ ಮೀರಾ ನಾಯರ್&zwnj; ಪುತ್ರ ಜೋಹ್ರನ್&zwnj; ಮಮ್ದಾನಿ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.&lt;/p&gt;&lt;img&gt;&lt;p&gt;9/11 ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಲು ನ್ಯೂಯಾರ್ಕ್&zwnj;ಗೆ ಬುಧವಾರ ಬ್ರಿಟನ್&zwnj; ರಾಜ ಚಾರ್ಲ್ಸ್ ಆಗಮಿಸಿದ್ದರು. ಈ ವೇಳೆ, ಅಲ್ಲಿನ ಮೇಯರ್&zwnj; ಜೋಹ್ರನ್&zwnj; ಮಮ್ದಾನಿ ಭೇಟಿ ನಿಗದಿಯಾಗಿತ್ತು. ಭೇಟಿಗೂ ಮುನ್ನ, ಮಾಧ್ಯಗಳೊಂದಿಗೆ ಮಾತನಾಡಿದ ಮಮ್ದಾನಿ, &quot;ನಾನು ರಾಜನೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅವಕಾಶ ಸಿಕ್ಕರೆ, ಕೋಹಿನೂರ್ ವಜ್ರವನ್ನು ಹಿಂದಿರುಗಿಸುವಂತೆ ಕೇಳುತ್ತೇನೆ.&quot; ಎಂದು ಹೇಳಿದ್ದರು&lt;/p&gt;&lt;img&gt;&lt;p&gt;ನಂತರದಲ್ಲಿ ಅವರಿಬ್ಬರು ಈ ವಿಷಯದ ಬಗ್ಗೆ ಚರ್ಚೆ ನಡೆಸಿದರೋ ಅಥವಾ ಇಲ್ಲವೋ ಸ್ಪಷ್ಟವಾಗಿಲ್ಲವಾದರೂ, ಆದರೆ, ವಜ್ರ ಹಿಂತಿರುಗಿಸುವ ಕುರಿತು ಮಮ್ದಾನಿ ಹೇಳಿಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;img&gt;&lt;p&gt;ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಗ್ರಾಮದ ಕೃಷ್ಣಾ ನದಿಯಲ್ಲಿ ಕೋಹಿನೂರ್&zwnj; ವಜ್ರ ಸಿಕ್ಕ ಐತಿಹ್ಯದ ದಾಖಲೆಗಳಿವೆ. ಬ್ರಿಟಿಷ್&zwnj; ಪ್ರವಾಸಿಗ, ಲೇಖಕ ರಾಬರ್ಟ್&zwnj; ಸೀವೆಲ್&zwnj; ಬರೆದ &quot;ಎ ಫಾರಗಟನ್&zwnj; ಎಂಪಾಯರ್&zwnj;- ವಿಜಯನಗರ&quot; ಹಾಗೂ ವಿಲಿಯಂ ಡೇಲಿಂಪ್ಲ್&zwnj; ಮತ್ತು ಅನಿತಾ ಆನಂದ್&zwnj; ಅವರ 2017ರಲ್ಲಿ ಪ್ರಕಟವಾದ &quot; ಕೋಹಿನೂರ್&zwnj; : ದ ಹಿಸ್ಟರಿ ಆಫ್&zwnj; ವರ್ಲ್ಡ್&zwnj; ಮೋಸ್ಟ್&zwnj; ಇನ್&zwnj;ಫೇಮಸ್ ಡೈಮಂಡ್&zwnj;&quot; ಪುಸ್ತಕದಲ್ಲಿ ಈ ಬಗ್ಗೆ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಇತಿಹಾಸ ಸಂಶೋಧಕರಾಗಿದ್ದ ಶಹಾಪುರದ ದಿ. ಭಾಸ್ಕರರಾವ್&zwnj; ಮುಡಬೂಳ್&zwnj; ಅವರು ಈ ಬಗ್ಗೆ ದಾಖಲೆಗಳ ಸಂಗ್ರಹಕ್ಕೆ ಪ್ರಯತ್ನಿಸಿದ್ದರು. ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್&zwnj; ಗೋಯಲ್&zwnj; ಅವರು, ಅಂದಿನ ಎಚ್ಕೆಡಿಬಿ ಕಾರ್ಯದರ್ಶಿಯಾಗಿದ್ದ ವೇಳೆ ಇಲ್ಲಿನ ಸರ್ವೆ ನಂ.337 ಹಾಗೂ 342ರಲ್ಲಿನ ಒಟ್ಟು 8 ಎಕರೆ 19 ಗುಂಟೆ ಪ್ರದೇಶವನ್ನು ಸಂರಕ್ಷಿತ ಸ್ಥಳವೆಂದು ಗುರುತಿಸಿದ್ದರಲ್ಲದೆ, ಪ್ರವಾಸೋದ್ಯಮ ಇಲಾಖೆಯ ಮೂಲಕ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಿದ್ದರು. ಇಲ್ಲಿನ ಉತ್ಕೃಷ್ಟ ಮರಳಿಗೆ ಕನ್ನ ಹಾಕುತ್ತಿದ್ದವರ ತಡೆದು, ಇಲ್ಲಿ ಮರಳು ಗಣಿಗಾರಿಕೆ ನಿಷೇಧ ಹೇರಿ ಆದೇಶಿಸಲಾಗಿದೆ&lt;/p&gt;&lt;img&gt;&lt;p&gt;ಕೋಹ್&zwnj;-ಎ-ನೂರ್&zwnj;&quot;, ಪರ್ಷಿಯನ್&zwnj; ಭಾಷೆಯಲ್ಲಿನ ಈ ಪದದ ಅರ್ಥ ಬೆಳಕಿನ ಪರ್ವತ (ಕೋಹ್&zwnj; ಅಂದರೆ ಪರ್ವತ, ನೂರ್&zwnj; ಅಂದರೆ ಬೆಳಕು). ವಿಶ್ವದಲ್ಲಿನ ಅತಿ ದೊಡ್ಡ ಕತ್ತರಿಸಿದ ವಜ್ರಗಳಲ್ಲೊಂದು.&lt;/p&gt;&lt;img&gt;&lt;p&gt;105.6 ಕ್ಯಾರೆಟ್ ತೂಕದ, ಒಂದು ಕೋಳಿ ಮೊಟ್ಟೆಯಷ್ಟು ಗಾತ್ರದ ಕೋಹಿನೂರ್&zwnj; ವಜ್ರವನ್ನು 1849ರಲ್ಲಿ ಬ್ರಿಟಿಷರು ಸಿಖ್ ಸಾಮ್ರಾಜ್ಯದ 10 ವರ್ಷದ ಮಹಾರಾಜ ದುಲೀಪ್&zwnj; ಸಿಂಗ್&zwnj; ಅವರಿಂದ ಪಡೆಯಲಾಗಿತ್ತು. ಕಾಕತೀಯರು ಹಾಗೂ ಮೊಗಲರ ನಂತರ ಸಿಖ್&zwnj; ದೊರೆಗಳ ವಶದಲ್ಲಿತ್ತು. ಒಪ್ಪಂದವೊಂದಕ್ಕೆ ಸಹಿ ಹಾಕುವ ವೇಳೆ ದುಲೀಪ್&zwnj; ಸಿಂಗ್&zwnj;ರಿಂದ ಪಡೆದು, ವಿಕ್ಟೋರಿಯಾ ರಾಣಿಗೆ ಒಪ್ಪಿಸಲಾಗಿತ್ತು.&lt;/p&gt;&lt;img&gt;&lt;p&gt;ಸದ್ಯ, ಕೋಹಿನೂರ್&zwnj; ವಜ್ರ ಬ್ರಿಟನ್&zwnj; ರಾಜಮನೆತನದ ಎಲಿಜೆಬೆತ್&zwnj; ರಾಣಿ ಕಿರೀಟದಲ್ಲಿ ಅಳವಡಿಸಲಾಗಿದ್ದು, ಲಂಡನ್ ಟವರ್&zwnj;ನಲ್ಲಿರುವ ಕ್ರೌನ್ ಜುವೆಲ್ಸ್ ಮ್ಯೂಸಿಯಂನಲ್ಲಿ ಪ್ರದರ್ಶನದಲ್ಲಿದೆ. 2002ರಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಸಾರ್ವಜನಿಕವಾಗಿ ವಜ್ರ ಕೊನೆಯ ಬಾರಿ ಕಂಡುಬಂದಿತ್ತು.&lt;/p&gt;&lt;img&gt;&lt;p&gt;ಬ್ರಿಟನ್ ಪ್ರಧಾನಿಯಾಗಿದ್ದ ಡೇವಿಡ್&zwnj; ಕೆಮರೂನ್&zwnj; 2010ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ, ಕೋಹಿನೂರ್ ವಜ್ರವನ್ನು ಭಾರತಕ್ಕೆ ಹಿಂದಿರುಗಿಸುವ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಆಗ, ಇದಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದ ಡೇವಿಡ್&zwnj;, ಬ್ರಿಟನ್&zwnj;ನಲ್ಲಿ ಗ್ರೀಸ್, ಈಜಿಪ್ಟ್ ಮುಂತಾದವು ಸೇರಿದಂತೆ ವಿವಿಧ ರಾಷ್ಟ್ರಗಳ ಅನೇಕ ವಸ್ತುಗಳನ್ನು ಸಂಗ್ರಹಿಸಲ್ಪಟ್ಟಿವೆ. ಒಂದು ವಸ್ತುವನ್ನು ಹಿಂದಿರುಗಿಸಿದರೆ, ಭಾರತ ಮಾತ್ರವಲ್ಲ ಇತರ ದೇಶಗಳೂ ಅದೇ ಬೇಡಿಕೆಯನ್ನು ಮುಂದಿಡುತ್ತವೆ ಎಂದಿದ್ದರು.&lt;/p&gt;&lt;img&gt;&lt;p&gt;ಇನ್ನು, 2016ರಲ್ಲಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆಯ ವೇಳೆ, ಸ್ನೇಹಪೂರ್ವಕವಾಗಿ ಕೋಹಿನೂರ್&zwnj; ವಜ್ರ ವಾಪಸ್&zwnj; ಪಡೆಯಲಾಗುವುದು ಎಂದು ಸರ್ಕಾರದ ಪರ ವಕೀಲರು ಸುಪ್ರೀಂಕೋರ್ಟಿಗೆ ತಿಳಿಸಿದ್ದರು. ಆದರೆ, ಮ್ಯೂಸಿಯಂ ಕಾಯ್ದೆ ಪ್ರಕಾರ ವಸ್ತುಗಳನ್ನು ಹಿಂತಿರುಗಿಸುವುದು ಕಷ್ಟಕರ ಎಂದು ಬ್ರಿಟನ್&zwnj; ಸ್ಪಷ್ಟಪಡಿಸಿತ್ತು. ಸದ್ಯ, ಮಮ್ದಾನಿ ಅವರ ಹೇಳಿಕೆ ಮತ್ತೇ ಈ ವಿಚಾರವನ್ನು ಜಾಗತಿಕ ಮಟ್ಟದಲ್ಲಿ ಮುಂದಿಟ್ಟಂತಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/state/mamdani-says-he-would-ask-king-charles-to-return-kohi-noor-rav-ucetrch"/>
        </item>
        <item>
            <title><![CDATA[Bannerghatta aquarium project: ಬನ್ನೇರುಘಟ್ಟದಲ್ಲಿ ₹144.4 ಕೋಟಿ ವೆಚ್ಚದ, ವಿಶ್ವದರ್ಜೆಯ ಅಕ್ವೇರಿಯಂಗೆ ಸಚಿವ ಸಂಪುಟದ ಮಹತ್ವದ ನಿರ್ಧಾರ]]></title>
            <link>https://kannada.asianetnews.com/state/karnataka-cabinet-major-decision-for-a-rs-144-crore-world-class-aquarium-in-bannerghatta-bengaluru-rav/articleshow-exs5gui</link>
            <guid isPermaLink="true">https://kannada.asianetnews.com/state/karnataka-cabinet-major-decision-for-a-rs-144-crore-world-class-aquarium-in-bannerghatta-bengaluru-rav/articleshow-exs5gui</guid>
            <pubDate>Fri, 08 May 2026 09:57:20 +0530</pubDate>
            <description><![CDATA[&lt;p&gt;ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 144.4 ಕೋಟಿ ರು. ವೆಚ್ಚದಲ್ಲಿ ಸಾರ್ವಜನಿಕ ಮತ್ಸ್ಯಾಗಾರ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಾಣವಾಗಲಿರುವ ಈ ಅಕ್ವೇರಿಯಂ, ವಾಕ್&zwnj; ಥ್ರೂ ಸುರಂಗಗಳು ಮತ್ತು 5ಡಿ ಥಿಯೇಟರ್&zwnj;ನಂತಹ ಹಲವು ವಿಶೇಷ ಆಕರ್ಷಣೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2wwggdmzqaynw471qpeca6,imgname-----------------------2026-05-08t094724.861-1778213863949.jpg" type="image/jpeg" height="390" width="690"/>
            <content:encoded><![CDATA[&lt;p&gt;- ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ&lt;/p&gt;&lt;p&gt;- ಪಿಪಿಪಿ ಮಾದರಿಯಲ್ಲಿ ಕಾಮಗಾರಿ, ನಿರ್ವಹಣೆ&lt;/p&gt;&lt;p&gt;&lt;strong&gt;ಬೆಂಗಳೂರು (ಮೇ.8): &lt;/strong&gt;ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಅತ್ಯಾಕರ್ಷಣೀಯ ಸಾರ್ವಜನಿಕ ಮತ್ಸ್ಯಾಗಾರವನ್ನು (ಅಕ್ವೇರಿಯಂ) 144.4 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.&lt;/p&gt;&lt;p&gt;ಸಾರ್ವಜನಿಕ- ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ (ಪಿಪಿಪಿ) 30 ವರ್ಷಗಳ ಅವಧಿಗೆ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಆಧಾರದ ಮೇಲೆ ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ. ಮುಖ್ಯವಾಗಿ ಅಕ್ವೇರಿಯಂನಲ್ಲಿ ಅಕ್ವೇರಿಯಂ ಮೀನುಗಳು, ಸಿಹಿ ನೀರು, ಸಮುದ್ರ ಹಾಗೂ ಉಪ್ಪು ನೀರಿನ ಜಲಚರಗಳ ಆಕರ್ಷಕ ಪ್ರದರ್ಶನವನ್ನು ಏರ್ಪಡಿಸಲಾಗುತ್ತದೆ.&amp;nbsp;&lt;/p&gt;&lt;p&gt;7.5 ಎಕರೆ ವಿಸ್ತೀರ್ಣದಲ್ಲಿರುವ ಅಕ್ವೇರಿಯಂನಲ್ಲಿ ಏಷ್ಯನ್&zwnj;, ಅಮೇಜಾನ್&zwnj;, ಆಫ್ರಿಕಾ, ಕೋರಲ್&zwnj; ರೀಫ್&zwnj;ಗಳ ಪ್ರದರ್ಶನ ಇರಲಿದೆ. ಜತೆಗೆ ಪಾರದರ್ಶಕ ವಾಕ್&zwnj; ಥ್ರೂ ಸುರಂಗಗಗಳನ್ನು ಮಾಡಲು ತೀರ್ಮಾನಿಸಲಾಗಿದೆ. 3ಡಿ, 4ಡಿ, 5ಡಿ ಇಮ್ಮರ್ಸಿವ್&zwnj; ಥಿಯೇಟರ್&zwnj;, ಗ್ಲಾಸ್&zwnj; ಬಾಟಮ್&zwnj; ಬೋಟ್&zwnj; ರೈಡ್&zwnj;, ಸ್ಕ್ಯೂಬಾ ಡೈವಿಂಗ್&zwnj;, ಅಂಡರ್&zwnj; ವಾಟರ್&zwnj; ಶೋ ಸಹ ಇರಲಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-cabinet-major-decision-for-a-rs-144-crore-world-class-aquarium-in-bannerghatta-bengaluru-rav/articleshow-exs5gui"/>
        </item>
        <item>
            <title><![CDATA[ಕಾರ್ಮಿಕರ ಕಲ್ಯಾಣ ಮಂಡಳಿ ಇನ್ನು ಸಾರಿಗೆ ಇಲಾಖೆ ವ್ಯಾಪ್ತಿಗೆ; - ರಾಜ್ಯ ಸಚಿವ ಸಂಪುಟದಿಂದ ಮಹತ್ವದ ನಿರ್ಧಾರ!]]></title>
            <link>https://kannada.asianetnews.com/state/labour-welfare-board-now-under-transport-department-major-decision-by-karnataka-govt-rav/articleshow-i44w696</link>
            <guid isPermaLink="true">https://kannada.asianetnews.com/state/labour-welfare-board-now-under-transport-department-major-decision-by-karnataka-govt-rav/articleshow-i44w696</guid>
            <pubDate>Fri, 08 May 2026 09:33:31 +0530</pubDate>
            <description><![CDATA[&lt;p&gt;ಕಾರ್ಮಿಕ ಇಲಾಖೆಯಡಿಯಲ್ಲಿದ್ದ ಕರ್ನಾಟಕ ಮೋಟಾರು ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸಾರಿಗೆ ಇಲಾಖೆ ವ್ಯಾಪ್ತಿಗೆ ತರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ತಿದ್ದುಪಡಿಯಿಂದಾಗಿ, ಸಾರಿಗೆಯೇತರ ವಾಹನಗಳಿಂದ ಸಂಗ್ರಹಿಸಿದ ಸೆಸ್ ನಿಧಿಯನ್ನು &amp;nbsp;ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2vwaefdrf278mb6sj690er,imgname-----------------------2026-05-08t092954.550-1778212809167.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.8) &lt;/strong&gt;ಸಾರಿಗೆ ವ್ಯಾಪ್ತಿಗೆ ಬರುವ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕ ಇಲಾಖೆಯಡಿ ರಚಿಸಿರುವ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿಯನ್ನು ಸಾರಿಗೆ ಇಲಾಖೆ ವ್ಯಾಪ್ತಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.&lt;/p&gt;&lt;p&gt;&lsquo;ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿಧೇಯಕ- 2026&rsquo; ಅಡಿ ಸಾರಿಗೆಯೇತರ ವಾಹನಗಳಿಂದ ಸಂಗ್ರಹಿಸುವ ನಿಧಿಯನ್ನು ಸಾರಿಗೆ ಇಲಾಖೆ ಮೂಲಕವೇ ಬಳಸಲು ಸಚಿವ ಸಂಪುಟ ತೀರ್ಮಾನಿಸಿದೆ.&lt;/p&gt;&lt;p&gt;ಪ್ರಸ್ತುತ ವಿಧೇಯಕದಡಿ ಸಾರಿಗೆ ಇಲಾಖೆ ಸಾರಿಗೆಯೇತರ (ವಾಣಿಜ್ಯ) ವಾಹನಗಳಿಂದ ಸೆಸ್&zwnj; ಸಂಗ್ರಹಿಸಿ, ಅದನ್ನು ಕಾರ್ಮಿಕ ಇಲಾಖೆ ಅಡಿ ಬರುವ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿಗೆ ನೀಡುತ್ತಿತ್ತು. ಮಂಡಳಿಯು ಸಾರಿಗೆ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಈಗ ಆ ಮಂಡಳಿಯನ್ನು ಸಾರಿಗೆ ಇಲಾಖೆ ಅಧೀನಕ್ಕೆ ತರುವ ಸಂಬಂಧ ಅಗತ್ಯ ತಿದ್ದುಪಡಿ ತರಲಾಗಿದೆ.&lt;/p&gt;&lt;p&gt;ತಿದ್ದುಪಡಿಯಿಂದಾಗಿ ಇನ್ನು ಮುಂದೆ ಸಾರಿಗೆ ಇಲಾಖೆ ಸಂಗ್ರಹಿಸುವ ನಿಧಿಯಿಂದ ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಸಾರಿಗೆ ಇಲಾಖೆಯೇ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್&zwnj;.ಕೆ. ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.&lt;/p&gt;&lt;p&gt;ಪ್ರಸ್ತುತ ವಿಧೇಯಕದಡಿ ಸಾರಿಗೆಯೇತರ ವಾಹನಗಳಾದ ದ್ವಿಚಕ್ರ ಮತ್ತು ಕಾರುಗಳಿಗೆ ಕ್ರಮವಾಗಿ 500 ರು. ಹಾಗೂ ಸಾವಿರ ರು. ಸೆಸ್&zwnj; ವಿಧಿಸಲಾಗುತ್ತಿದೆ. 2025ರ ಏಪ್ರಿಲ್&zwnj;ನಿಂದ ಡಿಸೆಂಬರ್&zwnj;ವರೆಗೆ ವಾಹನಗಳ ಮೇಲೆ ಶೇ.3ರಂತೆ ವಿಧಿಸಿದ ಹೆಚ್ಚುವರಿ ಸೆಸ್&zwnj; ಹಾಗೂ ದ್ವಿಚಕ್ರ ಮತ್ತು ಕಾರುಗಳಿಗೆ ವಿಧಿಸಲಾದ ಸೆಸ್&zwnj;ನಿಂದ ಒಟ್ಟಾರೆ 92.25 ಕೋಟಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/labour-welfare-board-now-under-transport-department-major-decision-by-karnataka-govt-rav/articleshow-i44w696"/>
        </item>
        <item>
            <title><![CDATA[ದುರಂತದ ಬಳಿಕ ಎಚ್ಚೆತ್ತ ಬೆಂಗಳೂರು, 350 ಕಟ್ಟಡ ಧ್ವಂಸಕ್ಕೆ ಜಿಬಿಎ ಆಯುಕ್ತರ ನೋಟಿಸ್]]></title>
            <link>https://kannada.asianetnews.com/state/bengaluru-cracks-down-after-tragedy-gba-commissioner-issues-notices-to-350-buildings/articleshow-ig3xty6</link>
            <guid isPermaLink="true">https://kannada.asianetnews.com/state/bengaluru-cracks-down-after-tragedy-gba-commissioner-issues-notices-to-350-buildings/articleshow-ig3xty6</guid>
            <pubDate>Fri, 08 May 2026 09:20:07 +0530</pubDate>
            <description><![CDATA[&lt;p&gt;ದುರಂತದ ಬಳಿಕ ಎಚ್ಚೆತ್ತ ಬೆಂಗಳೂರು, 350 ಕಟ್ಟಡ ಧ್ವಂಸಕ್ಕೆ ಜಿಬಿಎ ಆಯುಕ್ತರ ನೋಟಿಸ್, ಶಿಥಿಲಾವಸ್ಥೆಯಲ್ಲಿರುವ ಕಾಂಪೌಂಡ್ ಹಗೂ ಕಟ್ಟಡಗಳು ಮಳೆಗೆ ಧರೆಗುರುಳಿ ಅನಾಹುತ ಸಂಭವಿಸುವ ಮೊದಲೇ ಧ್ವಂಸಗೊಳಿಸಲು ಸೂಚಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqcrth3ekkx3q5mppgq40jhb,imgname-2-1777471407214.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.08) &lt;/strong&gt;ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಒಂದು ಮಳೆಗೆ ಭಾರಿ ಅನಾಹುತ ಸಂಭವಿಸಿತ್ತು. ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿಯ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟಿದ್ದರು. ಇತ್ತ ವಿದ್ಯುತ್ ಸ್ಪರ್ಶಿಸಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದರು. ಈ ದುರಂತ ಘಚನೆ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಚ್ಚೆತ್ತುಕೊಂಡಿದೆ. ಇದೀಗ ಶಿಥಿಲಾವಸ್ಥೆಯಲ್ಲಿರುವ ಕಾಂಪೌಂಡ್ ಹಾಗೂ ಕಟ್ಟಡಗಳನ್ನು ಧ್ವಂಸಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ನೋಟಿಸ್ ನೀಡಿದೆ.&lt;/p&gt;&lt;h2&gt;ಬೃಹತ್ ಬೆಂಗಳೂರಿನ 350 ಕಟ್ಟಡ ಧ್ವಂಸ ಮಾಡಲು ಜಿಬಿಎ ನೋಟಿಸ್&lt;/h2&gt;&lt;p&gt;ಬೆಂಗಳೂರಿನಲ್ಲಿರುವ 350 ಕಟ್ಟಡಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಈ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ. ಹೀಗಾಗಿ ತಕ್ಷಣವೇ ಈ ಕಟ್ಟಡಗಳನ್ನು ಧ್ವಂಸಗೊಳಿಸಲು ಸೂಚಿಸಲಾಗಿದೆ. ಗುರುತಿಸಿರುವ 350 ಕಟ್ಟಡಗಳ ಪೈಕಿ ಹಲವು ಕಟ್ಟಡಗಳಲ್ಲಿ ಜನರ ವಸತಿ ಇದೆ. ಕೆಲ ಕಟ್ಟಡಗಳಲ್ಲಿ ಅಂಗಡಿ ಮುಂಗಟ್ಟುಗಳಿವೆ. ಈ ಕಟ್ಟಡಗಳು ಅಪಾಯಕಾರಿಯಾಗಿದ್ದು, ಭಾರಿ ಮಳೆಗೆ ಅನಾಹುತ ಸೃಷ್ಟಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಹೀಗಾಗಿ ಈ 350 ಕಟ್ಟಡಗಳನ್ನು ಧ್ವಂಸಗೊಳಿಸಲು ಸೂಚಿಸಲಾಗಿದೆ.&lt;/p&gt;&lt;h2&gt;ಜಿಬಿಎ ಆಯುಕ್ತರ ನೋಟಿಸ್&lt;/h2&gt;&lt;p&gt;ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಉರುಳಿದ ಮೇಲೆ ಶಿಥಿಲಾವಸ್ಥೆ ಕಟ್ಟಡಗಳ ತೆರವು ಕಾರ್ಯಾಚಣೆ ಆರಂಭಿಸಿದೆ. ಈ ಕುರಿತು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಹತ್ವದ ನೋಟಿಸ್ ನೀಡಿದ್ದಾರೆ.ನೋಟಿಸ್ ಕಾಲವಾಧಿ ಒಳಗೆ ಶಿಥಿಲಾವಸ್ಥೆ ಕಟ್ಟಡ ಧ್ವಂಸಗೊಳಿಸಬೇಕು ಇಲ್ಲವೇ ಜಿಬಿಎ ತಂಡವೇ ಆ ಕೆಲಸ ಮಾಡಿ ಶುಲ್ಕ ವಿಧಿಸಲಿದೆ ಎಂದು ಮಹೇಶ್ವರ್ ರಾವ್ ಎಚ್ಚರಿಸಿದ್ದಾರೆ. ಮಳೆಯಲ್ಲಿ ಉರುಳಿಬಿದ್ದು ಜನರ ಸಾವು ನೋವಾಗುವ ಮುನ್ನವೇ ಎಚ್ಚೆತ್ತುಕೊಂಡ ಸಹಕರಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮನವಿ ಮಾಡಿದ್ದಾರೆ.&lt;/p&gt;&lt;h2&gt;15 ಕಾಂಪೌಂಡ್ ತೆರೆವು&lt;/h2&gt;&lt;p&gt;ಬೌರಿಂಗ್ ಆಸ್ಪತ್ರೆ ಬಳಿಯ ಕಾಂಪೌಂಡ್ ಕುಸಿತ ಘಟನೆ ಬಳಿಕ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಈಗಾಗಲೇ 15 ಶಿಥಿಲಾವಸ್ಥೆಯ ಕಾಂಪೌಂಡ್ ತೆರವುಗೊಳಿಸಿದ್ದಾರೆ.&lt;/p&gt;&lt;p&gt;ಬೆಂಗಳೂರು ದಕ್ಷಿಣ ಪಾಲಿಕೆಯಲ್ಲೇ ಅತಿ ಹೆಚ್ಚು ಹಳೇ ಕಟ್ಟಡ ಪತ್ತೆಯಾಗಿದೆ. ಹಳೇ ಕಟ್ಟಡಗಳು ಕುಸಿದು ಬೀಳುವ ಆತಂಕದಲ್ಲಿದ್ದರೂ ಕಾರ್ಯನಿರ್ವಹಿಸುತ್ತಿದೆ. ಇದು ಮತ್ತಷ್ಟು ಅಪಾಯಕ್ಕೆ ದಾರಿ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪಾಲಿಕೆವಾರು ಶಿಥಿಲಾವಸ್ಥೆ ಕಟ್ಟಡಗಳ ಮಾಹಿತಿ ಹೀಗಿದೆ&lt;/p&gt;&lt;ol&gt; &lt;li&gt;ಬೆಂಗಳೂರು ದಕ್ಷಿಣ ಪಾಲಿಕೆ - 106&lt;/li&gt; &lt;li&gt;ಬೆಂಗಳೂರು ಉತ್ತರ ಪಾಲಿಕೆ - 84&lt;/li&gt; &lt;li&gt;ಬೆಂಗಳೂರು ಕೇಂದ್ರ ಪಾಲಿಕೆ - 49&lt;/li&gt; &lt;li&gt;ಬೆಂಗಳೂರು ಪೂರ್ವ ಪಾಲಿಕೆ - 51&lt;/li&gt; &lt;li&gt;ಬೆಂಗಳೂರು ಪಶ್ಚಿಮ ಪಾಲಿಕೆ - 60&lt;/li&gt;&lt;/ol&gt;&lt;p&gt;&amp;nbsp;&lt;/p&gt;]]></content:encoded>
            <category>karnataka-districts</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/bengaluru-cracks-down-after-tragedy-gba-commissioner-issues-notices-to-350-buildings/articleshow-ig3xty6"/>
        </item>
        <item>
            <title><![CDATA[ಜಿಬಿಎ ಚುನಾವಣೆ ಜೂನ್ ನಲ್ಲೇ ನಡೆಸಲು ಪಟ್ಟು ಹಿಡಿದ ರಾಜ್ಯ ಚುನಾವಣಾ ಆಯೋಗ, ಇಂದು ಸರ್ಕಾರ ನಿರ್ಣಾಯಕ ಸಭೆ]]></title>
            <link>https://kannada.asianetnews.com/politics/karnataka-state-election-commission-pushes-for-june-polls-in-greater-bengaluru-authority-high-stakes-meeting-today-gdp/articleshow-vw3d3wi</link>
            <guid isPermaLink="true">https://kannada.asianetnews.com/politics/karnataka-state-election-commission-pushes-for-june-polls-in-greater-bengaluru-authority-high-stakes-meeting-today-gdp/articleshow-vw3d3wi</guid>
            <pubDate>Fri, 08 May 2026 08:54:49 +0530</pubDate>
            <description><![CDATA[ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್&zwnj;ನಲ್ಲೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಪಟ್ಟು ಹಿಡಿದಿದೆ. ಆದರೆ, ಸಿಬ್ಬಂದಿ ಕೊರತೆಯ ಕಾರಣ ನೀಡಿ ಸರ್ಕಾರ ಸೆಪ್ಟೆಂಬರ್&zwnj;ವರೆಗೆ ಕಾಲಾವಕಾಶ ಕೇಳಿದ್ದು, ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kk82q6byytxcv8x2jjv36378,imgname-----------------------2026-03-09t064657.095-1773019044222.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯ ಚುನಾವಣಾ ಆಯೋಗ ಜೂನ್ ತಿಂಗಳಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ ತನ್ನ ನಿಲುವನ್ನು ಮತ್ತೊಮ್ಮೆ ದೃಢಪಡಿಸಿದೆ. ಇದೇ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಮಹತ್ವದ ಹಾಗೂ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆಗೆ ವೇದಿಕೆ ಸಜ್ಜಾಗಿದೆ.&lt;/p&gt;&lt;p&gt;ಇನ್ನೊಂದೆಡೆ, ಕರ್ನಾಟಕ ರಾಜ್ಯ ಸರ್ಕಾರ ಜನಗಣತಿ ಕಾರ್ಯಾಚರಣೆ ಹಿನ್ನೆಲೆ ಸಿಬ್ಬಂದಿಗಳ ಕೊರತೆಯನ್ನು ಉಲ್ಲೇಖಿಸಿ ಸೆಪ್ಟೆಂಬರ್ ವರೆಗೆ ಕಾಲಾವಕಾಶ ನೀಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ನಾವು ಜೂನ್&zwnj;ನಲ್ಲೇ ಚುನಾವಣೆಗೆ ಸಿದ್ಧ, ಸರ್ಕಾರವೇ ಸಿದ್ಧವಾಗಿಲ್ಲ ಎಂದು ಆಯೋಗವು ನ್ಯಾಯಾಲಯದ ಗಮನಕ್ಕೂ ತಂದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.&lt;/p&gt;&lt;h2&gt;ವಿಧಾನಸೌಧದಲ್ಲಿ ನಿರ್ಣಾಯಕ ಸಭೆ&lt;/h2&gt;&lt;p&gt;ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರಲ್ಲಿ ಈ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಮೂಲತಃ ರಾಜ್ಯ ಚುನಾವಣಾ ಆಯೋಗದ ಸಭಾಂಗಣದಲ್ಲಿ ನಡೆಯಬೇಕಿದ್ದ ಈ ಸಭೆಯನ್ನು ನಂತರ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ. ಇದಕ್ಕೂ ಮೊದಲು ಎರಡು ಬಾರಿ ಸಭೆ ಮುಂದೂಡಲ್ಪಟ್ಟಿದ್ದು, ನಿನ್ನೆ ನಡೆಯಬೇಕಿದ್ದ ಸಭೆಯೂ ಮುಖ್ಯಮಂತ್ರಿ ಇತರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ಹಿನ್ನೆಲೆ ಮುಂದೂಡಲಾಗಿತ್ತು. ಇದೀಗ ಅದೇ ಸಭೆಯನ್ನು ಇಂದು ಮರುನಿಗದಿಪಡಿಸಲಾಗಿದೆ.&lt;/p&gt;&lt;p&gt;ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರು, ಸದಸ್ಯರು, ರಾಜ್ಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಭಾಗವಹಿಸಲಿದ್ದಾರೆ.&lt;/p&gt;&lt;h2&gt;ಕಾನೂನು ಹಿನ್ನೆಲೆ ಮತ್ತು ಸುಪ್ರೀಂ ಕೋರ್ಟ್ ಸೂಚನೆ&lt;/h2&gt;&lt;p&gt;ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ-2024ರ ಕಲಂ 34(4) ಪ್ರಕಾರ, ಚುನಾವಣಾ ದಿನಾಂಕ ನಿಗದಿ ಮಾಡುವ ಮೊದಲು ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆ ಸಮಾಲೋಚನೆ ನಡೆಸಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಜಿಬಿಎ ರಚನೆಯ ನಂತರ ಹೊಸದಾಗಿ ಸ್ಥಾಪಿತವಾಗಿರುವ ಐದು ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿರುವುದು ಈ ಪ್ರಕ್ರಿಯೆಗೆ ವೇಗ ನೀಡಿದೆ.&lt;/p&gt;&lt;h2&gt;ಸಭೆಯಲ್ಲಿ ಚರ್ಚೆಯಾಗುವ ಪ್ರಮುಖ ಅಂಶಗಳು&lt;/h2&gt;&lt;p&gt;ಇಂದಿನ ಸಭೆಯಲ್ಲಿ ಚುನಾವಣಾ ವೇಳಾಪಟ್ಟಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಮತದಾರರ ಪಟ್ಟಿ ಸಿದ್ಧತೆ, ವಾರ್ಡ್&zwnj;ಗಳ ಪುನರ್&zwnj;ವ್ಯವಸ್ಥೆ, ಮೀಸಲಾತಿ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ಸಿದ್ಧತೆಗಳ ಕುರಿತು ಸಮಗ್ರ ವಿಮರ್ಶೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಗೆ ಹಸಿರು ನಿಶಾನೆ ಸಿಗುವ ಸಾಧ್ಯತೆ ಕೂಡ ಹೆಚ್ಚಿದೆ.&lt;/p&gt;&lt;p&gt;ಆದರೆ ಜನಗಣತಿ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಕೊರತೆಯನ್ನು ಉಲ್ಲೇಖಿಸಿ ಜಿಬಿಎ ನೀಡಿರುವ ಮನವಿಗೂ ಸಭೆಯಲ್ಲಿ ಮಹತ್ವ ಸಿಗಬಹುದು. ಈ ಅಂಶದ ಮೇಲೆ ಚರ್ಚೆ ನಡೆಸಿ ಸರ್ಕಾರದ ಬೇಡಿಕೆಯನ್ನು ಭಾಗಶಃ ಪರಿಗಣಿಸುವ ಸಾಧ್ಯತೆಯೂ ತಳ್ಳಿ ಹಾಕಲಾಗುವುದಿಲ್ಲ.&lt;/p&gt;&lt;h2&gt;ಜಿಬಿಎ ಮುಖ್ಯ ಆಯುಕ್ತರ ಪ್ರತಿಕ್ರಿಯೆ&lt;/h2&gt;&lt;p&gt;ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, &ldquo;ರಾಜ್ಯ ಚುನಾವಣಾ ಆಯೋಗ ಕರೆದಿರುವ ಸಭೆಯಲ್ಲಿ ನಾವು ಭಾಗವಹಿಸುತ್ತಿದ್ದೇವೆ. ಜನಗಣತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಕೊರತೆ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಾಗುತ್ತದೋ ಅದಕ್ಕೆ ಬದ್ದರಾಗಿರುತ್ತೇವೆ. ಆಯೋಗ ಸೂಚನೆ ನೀಡಿದರೆ ಚುನಾವಣೆ ನಡೆಸಲು ನಾವು ಸಿದ್ಧ&rdquo; ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಒಟ್ಟಿನಲ್ಲಿ, ಜೂನ್&zwnj;ನಲ್ಲಿ ಚುನಾವಣೆ ನಡೆಸುವ ಆಯೋಗದ ಹಠ ಹಾಗೂ ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರುವ ಸರ್ಕಾರದ ಮನವಿ ನಡುವಿನ ಸಂಘರ್ಷದ ನಡುವೆ ಇಂದಿನ ಸಭೆ ಅತ್ಯಂತ ನಿರ್ಣಾಯಕವಾಗಿದ್ದು, ರಾಜ್ಯ ರಾಜಕೀಯದ ಗಮನ ಸಂಪೂರ್ಣವಾಗಿ ಈ ಸಭೆಯತ್ತ ನೆಟ್ಟಿದೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/politics/karnataka-state-election-commission-pushes-for-june-polls-in-greater-bengaluru-authority-high-stakes-meeting-today-gdp/articleshow-vw3d3wi"/>
        </item>
        <item>
            <title><![CDATA[ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ]]></title>
            <link>https://kannada.asianetnews.com/gallery/state/karnataka-weather-update-yellow-alert-in-18-districts-bengaluru-to-receive-heavy-rain-ag24zb1</link>
            <guid isPermaLink="true">https://kannada.asianetnews.com/gallery/state/karnataka-weather-update-yellow-alert-in-18-districts-bengaluru-to-receive-heavy-rain-ag24zb1</guid>
            <pubDate>Fri, 08 May 2026 08:45:31 +0530</pubDate>
            <description><![CDATA[&lt;p&gt;ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ, ಇಂದು ಮುಂಜಾನೆಯಿಂದಲೇ ಹಲೆವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಅಲರ್ಟ್ ಮೆಸೇಜ್ ಬಂದಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k1qyk96cmm1cafcc3k7nvbe3,imgname-rain-1754224239820.png" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ, ಇಂದು ಮುಂಜಾನೆಯಿಂದಲೇ ಹಲೆವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಅಲರ್ಟ್ ಮೆಸೇಜ್ ಬಂದಿದೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಕರ್ನಾಟಕದ ಬಹುತೇಕ ಜಿಲ್ಲೆಗಳು ಉರಿ ಬಿಸಿಲಿನಿಂದ ತತ್ತರಿಸಿ ಹೋಗಿದೆ. ಇದರ ನಡುವೆ ಅಲ್ಲೊಂದು ಇಲ್ಲೊಂದು ಮಳೆಯಾಗಿದ್ದರು ಭೂಮಿ ತಂಪಾಗಿಲ್ಲ. ಇದೀಗ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸೂಚನೆ ನೀಡಲಾಗಿದೆ.&lt;/p&gt;&lt;img&gt;&lt;p&gt;ಇಂದು ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ಭಾರಿ ಮಳೆ ಸೂಚನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇಂದಿನಿಂದ ಭಾರಿ ಮಳೆಯಾಗಲಿದೆ ಎಂದಿದೆ.&lt;/p&gt;&lt;img&gt;&lt;p&gt;ಬೆಳಗಾವಿ, ಬಾಗಲಕೋಟೆ, ರಾಯಚೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಧಾರವಾಡ, ಕೊಪ್ಪಳ, ಹಾವೇರಿ, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.&lt;/p&gt;&lt;img&gt;&lt;p&gt;ಇಂದಿನಿಂದ ಮೇ 11ರ ವರಗೆ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಆದರೆ ಇದು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಯಾವುದೇ ಅಲರ್ಟ್ ಸೂಚನೆ ನೀಡಿಲ್ಲ. ಆದರೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.&lt;/p&gt;&lt;img&gt;&lt;p&gt;ಇತ್ತೀಚೆಗೆ ಸುರಿದ ಮೊದಲ ಮಳೆಗೆ ಬೆಂಗಳೂರಿನಲ್ಲಿ ಭಾರಿ ಅನಾಹುತ ಸಂಭವಿಸಿತ್ತು. ಬೌರಿಂಗ್ ಆಸ್ಪತ್ರೆ ಬಳಿಕ ಗೋಡೆ ಕುಸಿದು ಹಲವರು ಬಲಿಯಾಗಿದ್ದರು. ಇತ್ತ ವಿದ್ಯುತ್ ಸ್ಪರ್ಶಿಸಿ ಕೆಲವರು ಬಲಿಯಾಗಿದ್ದರು. ಹೀಗಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದ್ದು, ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.&lt;/p&gt;&lt;h2&gt;ಬೆಂಗಳೂರಲ್ಲಿ ಅಧಿಕಾರಿಗಳು ಅಲರ್ಟ್&lt;/h2&gt;]]></content:encoded>
            <category>karnataka-districts</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/karnataka-weather-update-yellow-alert-in-18-districts-bengaluru-to-receive-heavy-rain-ag24zb1"/>
        </item>
        <item>
            <title><![CDATA[ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ]]></title>
            <link>https://kannada.asianetnews.com/gallery/state/bus-driver-suffers-heart-attack-while-driving-near-madikeri-condition-critical-395msov</link>
            <guid isPermaLink="true">https://kannada.asianetnews.com/gallery/state/bus-driver-suffers-heart-attack-while-driving-near-madikeri-condition-critical-395msov</guid>
            <pubDate>Fri, 08 May 2026 08:22:08 +0530</pubDate>
            <description><![CDATA[&lt;p&gt;ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಇಂದು ಮುಂಜಾನೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2qhgw23rqf34v2mmcje0wr,imgname-madikeri-accident-1778208260994.png" type="image/jpeg" height="390" width="690"/>
            <content:encoded><![CDATA[&lt;p&gt;ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಇಂದು ಮುಂಜಾನೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.&lt;/p&gt;&lt;img&gt;&lt;p&gt;ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ಇಳಿದು ವಾಲಿಕೊಂಡು ನಿಂತಿದೆ. ಅದೃಷ್ಠವಶಾತ್ ಅನಾಹುತ ಸಂಭವಿಸಿಲ್ಲ.&lt;/p&gt;&lt;img&gt;&lt;p&gt;ಚಾಲಕನಿಗೆ ತೀವ್ರ ಹೃದಯಘಾತ ಸಂಭವಿಸಿದೆ. ಆದರೆ ಬಸ್ ರಸ್ತೆಯ ಬದಿಗೆ ಇಳಿದ ಚಾಲಕ ಹಲವರ ಪ್ರಾಣ ಕಾಪಾಡಿದ್ದಾನೆ. ಇತ್ತ ಚಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಚಾಲಕನನ್ನು ಮಡಿಕೇರಿ ಬಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;img&gt;&lt;p&gt;ತನಗೆ ಹೃದಯಘಾತವಾಗುತ್ತಿದ್ದಂತೆ ಬಸ್ ಚಾಲಕನ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಅಷ್ಟೊರಳಗೆ ತೀವ್ರವಾಗಿ ಹೃದಯಾಘಾತವಾಗಿದೆ. ಆಧರೂ ಬಸ್ ಚರಂಡಿಯತ್ತ ಇಳಿಸಿದ್ದಾನೆ. ಇದರಿಂದ ಬಸ್ ವಾಲಿಕೊಂಡು ನಿಂತಿದೆ. ಇದರ ಪರಿಣಾಮ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.&lt;/p&gt;&lt;img&gt;&lt;p&gt;ನಿನ್ನೆ (ಮೇ.07) ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಪ್ರಯಾಣಿಕರ ಹೊತ್ತು ಸಾಗಿತ್ತು. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪರಿಣಾಮ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;img&gt;&lt;p&gt;ರಸ್ತೆ ಬದಿಯಲ್ಲಿ ಬಸ್ ವಾಲಿಕೊಂಡು ನಿಂತ ಕಾರಣ ಹೆದ್ದಾರಿಯಲ್ಲಿ ಇತರ ವಾಹನ ಸಂಚಾರಕ್ಕೆ ಯಾವುದೇ ಅಡೆ ತಡೆ ಆಗಿಲ್ಲ. ಇತ್ತ ಬಸ್&zwnj;ನಲ್ಲಿದ್ದ ಪ್ರಯಾಣಿಕರು ಕೆಲ ಕಾಲ ಆತಂಕಗೊಂಡಿದ್ದರು. ಪ್ರಯಾಣಿಕರಿಗೆ ಇತರ ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/bus-driver-suffers-heart-attack-while-driving-near-madikeri-condition-critical-395msov"/>
        </item>
        <item>
            <title><![CDATA[Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್: ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌]]></title>
            <link>https://kannada.asianetnews.com/state/government-s-adidvara-app-for-employment-of-persons-with-disabilities-rav/articleshow-9ydar7k</link>
            <guid isPermaLink="true">https://kannada.asianetnews.com/state/government-s-adidvara-app-for-employment-of-persons-with-disabilities-rav/articleshow-9ydar7k</guid>
            <pubDate>Fri, 08 May 2026 08:03:46 +0530</pubDate>
            <description><![CDATA[ವಿಶೇಷ ಚೇತನರಿಗೆ ಉದ್ಯೋಗ ಮತ್ತು ಕೌಶಲ್ಯ ವೇದಿಕೆ ಒದಗಿಸುವ 'ಆದಿದ್ವಾರ' ಆ್ಯಪ್ ಬಿಡುಗಡೆಯಾಗಿದೆ. ಇದರೊಂದಿಗೆ, ಆಗಸ್ಟ್&zwnj;ನಲ್ಲಿ ಬೆಂಗಳೂರಿನಲ್ಲಿ ದಿವ್ಯಾಂಗರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣ ಪ್ರಕಾಶ ಪಾಟೀಲ್&zwnj; ಘೋಷಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr2ppsjt8vcy50hxtk59f0cn,imgname-----------------------2026-05-08t075514.505-1778207385178.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.8): &lt;/strong&gt;ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಮತ್ತು ಕೌಶಲ್ಯಾಭಿವೃದ್ಧಿಗೆ ವೇದಿಕೆ ಒದಗಿಸುವ &lsquo;ಆದಿದ್ವಾರ&rsquo; ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆಗೊಳಿಸಲಾಯಿತು.&amp;nbsp;&lt;/p&gt;&lt;p&gt;ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್&zwnj; ಈ ಆ್ಯಪ್&zwnj; ಬಿಡುಗಡೆ ಮಾಡಿದರು. ಇದೇ ವೇಳೆ, ಬರುವ ಆಗಸ್ಟ್&zwnj;ನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷಚೇತನರಿಗಾಗಿ (ಪಿಡಬ್ಲ್ಯುಡಿಗಳು) ವಿಶೇಷ ಉದ್ಯೋಗ ಮೇಳ ನಡೆಸುವುದಾಗಿ ಘೋಷಿಸಿ, ಉದ್ಯೋಗ ಮೇಳದ ಅಧಿಕೃತ ಲೋಗೋ ಅನಾವರಣಗೊಳಿಸಿದರು.&lt;/p&gt;&lt;h2&gt;ಸಮಾನ ಅವಕಾಶ ನೀಡಬೇಕು:&lt;/h2&gt;&lt;p&gt;ಬಳಿಕ ಮಾತನಾಡಿದ ಅವರು, ಆದಿದ್ವಾರ ವೇದಿಕೆಯು ಉದ್ಯೋಗಾವಕಾಶಗಳು, ಇಂಟರ್ನ್&zwnj;ಶಿಪ್&zwnj;ಗಳು, ಕೌಶಲ್ಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತದೆ. ಉದ್ಯೋಗದಾತರು ಸಮಗ್ರ ಉದ್ಯೋಗ ಪಾತ್ರಗಳನ್ನು ಪೋಸ್ಟ್ ಮಾಡಲು ನೆರವಾಗಲಿದೆ. ದಿವ್ಯಾಂಗರು ಯಾರಿಗೂ ಕಡಿಮೆ ಇಲ್ಲ. ಅವರಿಗೆ ವಿಶೇಷ ಪ್ರತಿಭೆ ಇರುತ್ತದೆ. ಕಾರ್ಪೊರೇಟ್&zwnj; ಸಂಸ್ಥೆಗಳು ನೇಮಕಾತಿ ಸಮಯದಲ್ಲಿ ಅವರಿಗೆ ಸಮಾನ ಅವಕಾಶ ನೀಡಬೇಕು ಎಂದು ಹೇಳಿದರು.&lt;/p&gt;&lt;p&gt;ಉದ್ಯೋಗ ಮೇಳದಲ್ಲಿ 3,000ಕ್ಕೂ ಹೆಚ್ಚು ಅಂಗವಿಕಲ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ತರಬೇತಿ ಪಾಲುದಾರರು ಮತ್ತು ಸಹಾಯಕ ತಂತ್ರಜ್ಞಾನ ಸ್ಟಾರ್ಟ್&zwnj;ಅಪ್&zwnj;ಗಳೊಂದಿಗೆ ಸಂಪರ್ಕಿಸಲು ದೊಡ್ಡ ವೇದಿಕೆ ಸಿಗಲಿದೆ. ವೃತ್ತಿ ಮಾರ್ಗದರ್ಶನ ಅವಧಿಗಳು, ಕೌಶಲ್ಯ ಮಾರ್ಗ ಜಾಗೃತಿ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.&lt;/p&gt;&lt;p&gt;ವಿಧಾನ ಪರಿಷತ್&zwnj; ಸದಸ್ಯ ಸುಧಾಮ್ ದಾಸ್, ಎಟಿಎಫ್ ಸಿಇಒ ಪ್ರತೀಕ್ ಮಾಧವ್ ಸೇರಿ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.&lt;/p&gt;&lt;p&gt;- ಆಗಸ್ಟ್&zwnj;ನಲ್ಲಿ ದಿವ್ಯಾಂಗರಿಗೆ ವಿಶೇಷ ಉದ್ಯೋಗ ಮೇಳ&lt;/p&gt;&lt;p&gt;- ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜನೆ&lt;/p&gt;&lt;p&gt;- ಲೋಗೋ ಬಿಡುಗಡೆ ಮಾಡಿದ ಸಚಿವ ಡಾ.ಶರಣ ಪ್ರಕಾಶ್&zwnj;&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/government-s-adidvara-app-for-employment-of-persons-with-disabilities-rav/articleshow-9ydar7k"/>
        </item>
        <item>
            <title><![CDATA[ರಾಯಚೂರು ಲೇಡಿ ಕಾನ್ಸ್‌ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಬಂಧನ ಭೀತಿ]]></title>
            <link>https://kannada.asianetnews.com/gallery/state/karnataka-cop-controversy-yadgir-psi-faces-arrest-fear-in-relationship-case-va7nocg</link>
            <guid isPermaLink="true">https://kannada.asianetnews.com/gallery/state/karnataka-cop-controversy-yadgir-psi-faces-arrest-fear-in-relationship-case-va7nocg</guid>
            <pubDate>Fri, 08 May 2026 07:55:34 +0530</pubDate>
            <description><![CDATA[&lt;p&gt;ರಾಯಚೂರು ಲೇಡಿ ಕಾನ್ಸ್&zwnj;ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಈ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಮಹಿಳಾ ಪೇದಿ ದೂರು ನೀಡಿದ್ದು, ಇದೀಗ ಇಡೀ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಪಿಎಸ್ಐ ವಿರುದ್ಧ ಹಲವು ಕೇಸ್ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2p55ceyqwt0y80skhb4ybs,imgname-raichuru-police-case-1778206807437.png" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರು ಲೇಡಿ ಕಾನ್ಸ್&zwnj;ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಈ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಮಹಿಳಾ ಪೇದಿ ದೂರು ನೀಡಿದ್ದು, ಇದೀಗ ಇಡೀ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಪಿಎಸ್ಐ ವಿರುದ್ಧ ಹಲವು ಕೇಸ್ ದಾಖಲಾಗಿದೆ.&lt;/p&gt;&lt;img&gt;&lt;p&gt;ಯಾದಗಿರಿ ಪಿಎಸ್ಐ ಹಾಗೂ ರಾಯಚೂರು ಲೇಡಿ ಕಾನ್ ಸ್ಟೇಬಲ್ ಲವ್, ಸೆಕ್ಸ್ ದೋಖಾ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರೀತಿ ಹೆಸರಲ್ಲಿ ಮೋಸ ಮಾಡಿ ಇದೀಗ ನಾನವನಲ್ಲ ಎಂದ ಪ್ರಕರಣದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದೆ. ಯಾದಿಗಿರಿ ಪಿಎಸ್ಐ ವಿರೇಶ್ ವಿರುದ್ಧ ರಾಯಚೂರು ಮಹಿಳಾ ಪೇದೆ ಜಯಶ್ರಿ ದೂರು ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ವಿರೇಶ್ ಪ್ರೀತಿ ಹೆಸರಲ್ಲಿ ತನ್ನನ್ನು ಹಲವು ಕಡೆ ಕರೆದುಕೊಂಡು ಹೋಗಿದ್ದ. ಕೊಪ್ಪಳದಲ್ಲಿ ತನ್ನ ಮೇಲೆ ಅತ್ಯಾ**ರ ನಡೆಸಿರುವುದಾಗಿ ಮಹಿಳಾ ಪೇದೆ ಜಯಶ್ರಿ ಆರೋಪಿಸಿದ್ದಾರೆ. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸ್ತಿರೋ ಜಯಶ್ರೀ ಇದೀಗ ಆರೋಪಗಳ ಸುರಿಮಳೆಗೈದಿದ್ದಾರೆ.&lt;/p&gt;&lt;img&gt;&lt;p&gt;ವಿರೇಶ್ ತನ್ನ ಮೇಲೆ ಅತ್ಯಾ**ರ ಎಸಗಿದ್ದಾನೆ. ಪರಿಣಾಮ ಎರಡು ಬಾರಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಜಯಶ್ರಿ ಆರೋಪಿಸಿದ್ದಾರೆ. ಇತ್ತ ವಿರೇಶ್ ಮೇಲೆ ಅಪಹರಣ ಪ್ರಕರಣ ಕೂಡ ದಾಖಲಾಗಿದೆ. ಬಲ*ತ್ಕಾರ, ಅಪಹರಣ ಮತ್ತು ಜಾತಿನಿಂದನೆ SC/ST ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.&lt;/p&gt;&lt;img&gt;&lt;p&gt;ಜಯಶ್ರಿ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಇವರ ಪ್ರೇಮ ಪ್ರಸಂಗದ ಹಲವು ವಿಡಿಯೋಗಳು, ಫೋಟೋಗಳು ವೈರಲ್ ಆಗಿದೆ. ಇದರ ಬೆನ್ನಲ್ಲೇ ಪಿಎಸ್ಐ ವಿರೇಶ್ ರಜೆ ಮೇಲೆ ತೆರಳಿದ್ದಾರೆ. ಇದೀಗ ವಿರೇಶ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣದಿಂದ ವಿರೇಶ್ ರಜೆ ಮೇಲೆ ತೆರಳಿದ್ದಾರೆ.&lt;/p&gt;&lt;img&gt;&lt;p&gt;ಮಹಿಳಾ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಶ್ರಿ ಗಂಭೀರ ಆರೋಪಗಳ ಪ್ರಕರಣ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/karnataka-cop-controversy-yadgir-psi-faces-arrest-fear-in-relationship-case-va7nocg"/>
        </item>
        <item>
            <title><![CDATA[Karnataka vs Centre:  ಜಿ ರಾಮ್‌ ಜಿ ವಿರುದ್ಧ ಕೋರ್ಟ್‌ಗೆ ಮೊರೆ; ಸಂಪುಟ ನಿರ್ಧಾರ ನರೇಗಾದಡಿಯೇ ಕಾಮಗಾರಿಗಾಗಿ ಹೋರಾಟ]]></title>
            <link>https://kannada.asianetnews.com/state/karnataka-govt-move-supreme-court-on-sticking-to-mgnrega-rav/articleshow-ognob9a</link>
            <guid isPermaLink="true">https://kannada.asianetnews.com/state/karnataka-govt-move-supreme-court-on-sticking-to-mgnrega-rav/articleshow-ognob9a</guid>
            <pubDate>Fri, 08 May 2026 07:52:18 +0530</pubDate>
            <description><![CDATA[ಕೇಂದ್ರ ಸರ್ಕಾರವು ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್&zwnj; ಜಿ ಯೋಜನೆ ಜಾರಿಗೊಳಿಸಲು ಮುಂದಾಗಿರುವುದನ್ನು ರಾಜ್ಯ ಸರ್ಕಾರ ವಿರೋಧಿಸಿದೆ. ಈ ಏಕಪಕ್ಷೀಯ ನಿರ್ಧಾರದ ವಿರುದ್ಧ ಹಾಗೂ ಪ್ರಸಕ್ತ ಸಾಲಿನಲ್ಲಿ ಮನರೇಗಾ ಮುಂದುವರಿಸಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr2p51nxzw92gdr4gfcw3pt7,imgname-----------------------2026-05-08t074946.266-1778206803645.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.8): &lt;/strong&gt;ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ರದ್ದುಪಡಿಸಿ ವಿಬಿ ಜಿ ರಾಮ್&zwnj; ಜಿ ಯೋಜನೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.&lt;/p&gt;&lt;p&gt;ವಿಬಿ ಜಿ ರಾಮ್&zwnj; ಜಿ ಬದಲಿಗೆ ಮನರೇಗಾ ಅಡಿಯಲ್ಲೇ ರಾಜ್ಯದಲ್ಲಿ ಪ್ರಸಕ್ತ ಸಾಲಿನ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಿ ಜಾರಿಗೊಳಿಸಲು ಅನುಮತಿ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.&lt;/p&gt;&lt;p&gt;ಜತೆಗೆ, ರಾಜ್ಯಗಳ ಜತೆ ಚರ್ಚಿಸದೆ ಏಕಪಕ್ಷೀಯವಾಗಿ ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್&zwnj; ಜಿ ಯೋಜನೆ ಜಾರಿ ಮಾಡಿರುವ ಕೇಂದ್ರದ ಧೋರಣೆ ವಿರುದ್ಧವೂ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ.&lt;/p&gt;&lt;p&gt;ಆ ಮೂಲಕ ವಿಬಿ ಜಿ ರಾಮ್&zwnj; ಜಿ ಯೋಜನೆ ಖಂಡಿಸಿ ವಿಧಾನಮಂಡಲ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದ್ದ ಕಾಂಗ್ರೆಸ್&zwnj; ಸರ್ಕಾರ ತನ್ನ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಜ್ಜಾಗಿದೆ.&lt;/p&gt;&lt;p&gt;ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್&zwnj;, ಪ್ರಸಕ್ತ ಸಾಲಿನಲ್ಲಿ ಮನರೇಗಾದಲ್ಲಿ ಯಥಾಸ್ಥಿತಿ ಮುಂದುವರಿಸುವ ಸಲುವಾಗಿ ಅಗತ್ಯ ಕ್ರಿಯಾಯೋಜನೆ ರೂಪಿಸಲು ಅವಕಾಶ ಕಲ್ಪಿಸುವಂತೆ ನ್ಯಾಯಾಲಯವನ್ನು ಕೋರಲು ತೀರ್ಮಾನಿಸಲಾಗಿದೆ. ಜತೆಗೆ ಮನರೇಗಾ ರದ್ದುಗೊಳಿಸಿ ವಿಬಿ ಜಿ ರಾಮ್&zwnj; ಜಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕೈಗೊಂಡ ತೀರ್ಮಾನದ ಮೂಲಕ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ದಮನಗೊಳಿಸಿರುವುದನ್ನು ಸಹ ಪ್ರಶ್ನಿಸಲಾಗುವುದು ಎಂದರು.&lt;/p&gt;&lt;h2&gt;ಪರ್ಯಾಯ ವ್ಯವಸ್ಥೆ ಮಾಡಿಲ್ಲ-ಎಚ್ಕೆಪಿ:&lt;/h2&gt;&lt;p&gt;2005ರಲ್ಲಿ ಜಾರಿಗೆ ತಂದಿದ್ದ ಮನರೇಗಾ ಕಾಯ್ದೆ ರದ್ದುಗೊಳಿಸಿ, ವಿಬಿ ಜಿ ರಾಮ್&zwnj; ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಆದರೆ, ವಿಬಿ ಜಿ ರಾಮ್&zwnj; ಜಿ ಜಾರಿಗೊಳಿಸಲು ಈವರೆಗೆ ಅಧಿಸೂಚನೆ ಹೊರಡಿಸಿಲ್ಲ ಹಾಗೂ ಪರ್ಯಾಯ ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ. ಇದರಿಂದ ಗ್ರಾಮೀಣ ಜನರ ಉದ್ಯೋಗ ಹಕ್ಕು ಕಸಿದಂತಾಗಿದೆ ಎಂದು ಎಚ್.ಕೆ. ಪಾಟೀಲ್&zwnj; ಹೇಳಿದರು.&lt;/p&gt;&lt;p&gt;ಕೇಂದ್ರ ಸರ್ಕಾರವು ವಿಬಿ ಜಿ ರಾಮ್&zwnj; ಜಿ ಯೋಜನೆ ಜಾರಿ ಮಾಡಿಲ್ಲ. ಬದಲಿಗೆ ಮನರೇಗಾ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸುವಂತೆ ರಾಜ್ಯಗಳಿಗೆ ಹೇಳಿದೆ. ಈ ವರ್ಷದ ಕಾಮಗಾರಿಗಳಿಗೆ ಅವಕಾಶ ನೀಡಿಲ್ಲ. ಹೀಗಾಗಿ ಮನರೇಗಾ ಮುಂದುವರಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅನಿವಾರ್ಯ. ಈ ಕುರಿತು ಕ್ರಿಯಾಯೋಜನೆ ಸಿದ್ಧಪಡಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ಕಲ್ಪಿಸುವಂತೆ ಕೋರ್ಟ್&zwnj; ಮೊರೆಹೋಗಲು ಸರ್ಕಾರ ತೀರ್ಮಾನಿಸಿದ್ದೇವೆ ಎಂದರು.&lt;/p&gt;&lt;h3&gt;ಹಿಂದಿನ ಮನರೇಗಾಗೆ ಮನವಿ:&lt;/h3&gt;&lt;p&gt;ಮನರೇಗಾ ಎಂಬುದು ಕೇಂದ್ರ ಪುರಸ್ಕೃತ ಯೋಜನೆ. ಅದನ್ನು ಯಥಾವತ್ತಾಗಿ ಮುಂದುವರಿಸಲು ಅಗತ್ಯ ಕ್ರಿಯಾಯೋಜನೆ ರೂಪಿಸಲು ಕಾನೂನು ಮೊರೆ ಹೋಗುತ್ತಿದ್ದೇವೆ. ಆದಷ್ಟು ಬೇಗ ಕೋರ್ಟ್&zwnj;ನಲ್ಲಿ ಸರ್ಕಾರ ಪ್ರಶ್ನಿಸಲಿದೆ. ಅನುದಾನ ಹಂಚಿಕೆ ಕೂಡ ಮನರೇಗಾ ಅಡಿ ಜಾರಿಯಲ್ಲಿ ಇದ್ದಂತೆಯೇ ಇದಕ್ಕೂ ಅನ್ವಯ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.&lt;/p&gt;&lt;h3&gt;ರಾಜ್ಯದ ಸರ್ಕಾರದ ಆರೋಪವೇನು?:&lt;/h3&gt;&lt;p&gt;ಕೇಂದ್ರ ಸರ್ಕಾರವು ಮನರೇಗಾ ಅಡಿ 90:10 ರಷ್ಟಿದ್ದ ಕೇಂದ್ರ ಹಾಗೂ ರಾಜ್ಯದ ಅನುದಾನ ಹಂಚಿಕೆಯನ್ನು ವಿಬಿ ಜಿ ರಾಮ್&zwnj; ಜಿ ಅಡಿ 60:40 ಅನುಪಾತಕ್ಕೆ ಬದಲಿಸಿದೆ. ಇದು ರಾಜ್ಯ ಸರ್ಕಾರಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಹೇರಲಿದೆ. ಮನರೇಗಾ ಅಡಿ ವರ್ಷದ 365 ದಿನಗಳ ಕಾಲ ಕೆಲಸ ಕೇಳಬಹುದಿತ್ತು. ಕಾರ್ಮಿಕರು ಅವರ ಊರಿನಲ್ಲೇ ಸ್ವಂತ ಜಮೀನಿನಲ್ಲೇ ಕೆಲಸ ಮಾಡಬಹುದಿತ್ತು. ಹೊಸ ಕಾಯ್ದೆ ಅಡಿ ಅದು ಸಾಧ್ಯವಿಲ್ಲ ಎಂಬುದು ಸೇರಿ ನೂತನ ಯೋಜನೆ ಬಗ್ಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.&lt;/p&gt;&lt;h3&gt;ಕ್ರೀಡಾ ಸಾಧಕರಿಗೆ ಸಿವಿಲ್&zwnj; ಹುದ್ದೆಗಳಲ್ಲಿ ಶೇ.2 ಮೀಸಲಾತಿ&lt;/h3&gt;&lt;p&gt;ಬೆಂಗಳೂರು: ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್&zwnj; ಸೇವೆಗಳಲ್ಲಿ ಹುದ್ದೆಗಳ ನೇಮಕಾತಿಯಲ್ಲಿ ಶೇ.2 ರಷ್ಟು ಮೀಸಲಾತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್&zwnj; ತಿಳಿಸಿದ್ದಾರೆ.&lt;/p&gt;&lt;p&gt;--&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-govt-move-supreme-court-on-sticking-to-mgnrega-rav/articleshow-ognob9a"/>
        </item>
        <item>
            <title><![CDATA[BSY Abhimanotsav: ದಣಿವರಿಯದ ಅವಿಶ್ರಾಂತ ಚೇತನ ಯಡಿಯೂರಪ್ಪ - ಪ್ರಲ್ಹಾದ್ ಜೋಶಿ ಅಂಕಣ]]></title>
            <link>https://kannada.asianetnews.com/politics/bsy-abhimanotsav-50-years-of-relentless-service-bsy-celebrated-as-a-tireless-leader-in-chitradurga-rav/articleshow-7xyb706</link>
            <guid isPermaLink="true">https://kannada.asianetnews.com/politics/bsy-abhimanotsav-50-years-of-relentless-service-bsy-celebrated-as-a-tireless-leader-in-chitradurga-rav/articleshow-7xyb706</guid>
            <pubDate>Fri, 08 May 2026 07:19:20 +0530</pubDate>
            <description><![CDATA[&lt;p&gt;ಬಿ.ಎಸ್. ಯಡಿಯೂರಪ್ಪನವರು ಅಧಿಕಾರಕ್ಕಿಂತ ಹೆಚ್ಚಾಗಿ ಹೋರಾಟದ ಮೂಲಕ ಗುರುತಿಸಿಕೊಂಡ ಧೀಮಂತ ನಾಯಕ. ಶೂನ್ಯದಿಂದ ಪಕ್ಷವನ್ನು ಕಟ್ಟಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಅವರು, ತಮ್ಮ 50 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಜನಪರ ಯೋಜನೆಗಳ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2m0p6w1qm8cpvxv37fsmc1,imgname-----------------------2026-05-08t071054.374-1778204563676.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;-ಪ್ರಲ್ಹಾದ ಜೋಶಿ, ಕೇಂದ್ರ ಸಚಿವರು.&lt;/strong&gt;&lt;/p&gt;&lt;p&gt;&lsquo;ಈ ಅರ್ಥಪೂರ್ಣ ಮಾತು ಹುಟ್ಟು ಹೋರಾಟಗಾರ ಹಾಗೂ ಕರ್ನಾಟಕ ಕಂಡ ಧೀಮಂತ ನಾಯಕ ಶ್ರೀ ಯಡಿಯೂರಪ್ಪ ಅವರಿಗೆ ಪೂರ್ತಿಯಾಗಿ ಅನ್ವಯಿಸುತ್ತದೆ.&lt;/p&gt;&lt;p&gt;ರಾಜಕೀಯವೆಂದರೆ ಕೇವಲ ಅಧಿಕಾರವಲ್ಲ, ಅದು ನಿರಂತರ ಹೋರಾಟ ಮತ್ತು ಜನರೊಂದಿಗಿನ ಅವಿನಾಭಾವ ಸಂಬಂಧ ಎಂಬುದನ್ನು ಸಾಬೀತುಪಡಿಸಿದವರು ಬಿ.ಎಸ್. ಯಡಿಯೂರಪ್ಪನವರು. ಅವರು ಸಾರ್ವಜನಿಕ ಜೀವನದಲ್ಲಿ 50 ವರ್ಷಗಳನ್ನು ಪೂರೈಸುತ್ತಿರುವುದು ಕೇವಲ ಒಬ್ಬ ವ್ಯಕ್ತಿಯ ಸಾಧನೆಯಲ್ಲ, ಅದು ಒಂದು ಸುದೀರ್ಘ ಕ್ರಾಂತಿಯ ಪಯಣ.&lt;/p&gt;&lt;p&gt;ಇವರನ್ನು ರಾಜಕಾರಣಿ ಎನ್ನುವುದಕ್ಕಿಂತ ಜನಪರ ಚಿಂತನೆಗಳಿರೋ ಅಪ್ಪಟ ಹೋರಾಟಗಾರ ಎನ್ನುವುದು ಸೂಕ್ತ. ಧರಣಿ, ಸತ್ಯಾಗ್ರಹದಿಂದ ಹಿಡಿದು ಭಾರಿ ಬಹಿರಂಗ ಸಭೆಯವರೆಗೆ, ಜಿಲ್ಲಾಧಿಕಾರಿ ಕಚೇರಿಯಿಂದ ವಿಧಾನಸೌಧದವರೆಗೆ, ಮುತ್ತಿಗೆಯಿಂದ ಹಿಡಿದು ರಸ್ತೆತಡೆ, ರೈಲು ತಡೆ, ಮೆಕ್ಕೆಜೋಳದಿಂದ ಹಿಡಿದು ನಕಲಿ ಛಾಪಾ ಕಾಗದದವರೆಗೆ, ಕೆಪಿಟಿಸಿಎಲ್ ಮುತ್ತಿಗೆಯಿಂದ ಹಿಡಿದು ಬಗರ್ ಹುಕುಂ ಸಾಗುವಳಿದಾರರಿಗೆ, ಬಡರೈತನಿಗೆ ವಿಮೆ ಕೊಡಿಸುವವರೆಗೆ. ಹೀಗೆ ಸಾಲು, ಸಾಲು ಹೋರಾಟಗಳು ಇವರ ದಾಖಲೆಯಲ್ಲಿವೆ. ಇದು ಕೇವಲ ದಾಖಲೆಗಾಗಿ ನಡೆಸಿದ ಹೋರಾಟವಲ್ಲ. ಬದಲಾಗಿ ನಮ್ಮನ್ನಾಳುವ ಮಂದಿ ಎಚ್ಚರ ತಪ್ಪಿದಾಗ, ಹಾದಿ ತೊರೆದಾಗ, ಅವರನ್ನು ಸದಾ ಎಚ್ಚರಿಸುತ್ತಾ ಸರಿದಾರಿಗೆ ತಂದ ಸಾಧನೆ ಇದಾಗಿದೆ.&lt;/p&gt;&lt;p&gt;ಹಗಲು ರಾತ್ರಿ ಧರಣಿ ಪ್ರವರ್ತಕ ಯಡಿಯೂರಪ್ಪ:&lt;/p&gt;&lt;p&gt;ಹೀಗಾಗಿ ಯಡಿಯೂರಪ್ಪ ಯಾವುದೇ ಚಳುವಳಿಗೆ ಧುಮುಕಿದರೂ ಆಡಳಿತ ಪಕ್ಷ ಥರಗುಟ್ಟುತ್ತದೆ. ಈ ಕಾರಣದಿಂದಾಗಿಯೇ ಯಡಿಯೂರಪ್ಪ ಅವರ ಚಳುವಳಿಗೊಂದು ಮೌಲ್ಯ ಇರುವುದು. ಎಂಥಹ ಪ್ರತಿಕೂಲ ಪರಿಸ್ಥಿತಿಯನ್ನೂ ಅನುಕೂಲಕರವಾಗಿ ಪರಿವರ್ತಿಸಿಕೊಳ್ಳುವ ಚಾಣಕ್ಷ್ಯ ವ್ಯಕ್ತಿಯ ಮನೋಭಾವ. ಅದೇ ರೀತಿಯಲ್ಲಿ ತಮ್ಮ ಜೀವನದಲ್ಲಿ ತಲೆದೋರಿದ ಪ್ರತಿಯೊಂದು ಕಷ್ಟಕಾರ್ಪಣ್ಯಗಳನ್ನೂ ಜೀರ್ಣಿಸಿಕೊಂಡು ಅವುಗಳನ್ನು ಜೀವನದ ಏಳ್ಗೆಯ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಯಶಸ್ವಿನ ಶಿಖರಕ್ಕೆ ಏರಿದರು.&lt;/p&gt;&lt;p&gt;1975ರ ಹೊತ್ತಿಗೆ ಅದೇ ಶಿಕಾರಿಪುರ ಪುರಸಭಾ ಸದಸ್ಯರಾಗಿ, ಅಧ್ಯಕ್ಷರೂ ಆಗುತ್ತಾರೆ. ಶಿಕಾರಿಪುರದಲ್ಲಿ ಅವರ ಮೇಲೆ ಮಾರಣಾಂತಿಕ ಹಲ್ಲೆಯಾಗುತ್ತದೆ. ಯಾವುದಕ್ಕೂ ಜಗ್ಗದ-ಬಗ್ಗದ ಛಾತಿಯ ಯಡಿಯೂರಪ್ಪ ಮತ್ತಷ್ಟು ಪ್ರಖರ ಹೋರಾಟಗಾರರಾಗಿ ಹೊರಹೊಮ್ಮುತ್ತಾರೆ. 1977ರ ಎಮರ್ಜೆನ್ಸಿಯಲ್ಲಿ ಸೆರೆಮನೆ ವಾಸ. ಜನತಾರಂಗದೊಳಗೆ ವಿಲೀನವಾಗಿದ್ದ ಜನಸಂಘ 1980ರಲ್ಲಿ ಬಿಜೆಪಿಯಾಗಿ ರೂಪುಗೊಂಡ ನಂತರ 1983ರಲ್ಲಿ ಶಿವಮೊಗ್ಗ ಜಿಲ್ಲಾಧ್ಯಕ್ಷ ಹಾಗೂ ಆ ನಂತರದ ಮೂರೇ ವರ್ಷಗಳಲ್ಲಿ ರಾಜ್ಯಾಧ್ಯಕ್ಷರೂ ಆಗಿ ಬಿಡುತ್ತಾರೆ. ಹೀಗೆ ಹಿಂದಿರುಗಿ ನೋಡದ ರಾಜಕೀಯ ಪಯಣದಲ್ಲಿ ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆಗಳಲ್ಲಿ ಸದಸ್ಯರಾಗಿ, ಮೂರು ಸಲ ವಿರೋಧ ಪಕ್ಷದ ನಾಯಕರಾಗುತ್ತಾರೆ. ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯೂ ಆಗುತ್ತಾರೆ.&lt;/p&gt;&lt;p&gt;ತುರ್ತು ಪರಿಸ್ಥಿತಿ ಸಂದರ್ಭ ಜೈಲಿನಲ್ಲಿದ್ದಾಗಲೂ ಅವರು ತಮ್ಮ ಚಳುವಳಿ ಬಿಡಲಿಲ್ಲ. ಜೈಲಿನಲ್ಲಿ ಕೊಡುತ್ತಿದ್ದ ಚಪಾತಿ ಮತ್ತು ಅನ್ನದಲ್ಲಿ ಹುಳು ಕಲ್ಲುಗಳು, ಸರಿಯಾಗಿ ಬೇಯಿಸದಿರುವುದರಿಂದ ಅವರು ರೋಸಿ ಹೋಗಿದ್ದರು. ಕೈದಿಗಳು ಕಣ್ಣು ಮುಚ್ಚಿಕೊಂಡು ಅದನ್ನೇ ತಿನ್ನುತ್ತಿದ್ದರು. ಯಡಿಯೂರಪ್ಪ ಜೈಲಿಗೆ ಹೋಗಿ ಒಂದು ವಾರ ಕಳೆಯಿತು. ಅಷ್ಟೊತ್ತಿಗಾಗಲೆ ಅಲ್ಲಿನ ಅವ್ಯವಸ್ಥೆಯ ಅರಿವಾಗಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತರು. ಇದರಿಂದಾಗಿ ಜೈಲಿನ ಅವ್ಯವಸ್ಥೆ ಸರಿದಾರಿಗೆ ಬಂತು. ಈ ಘಟನೆ ಬಳಿಕ ಕೇವಲ ಶಿಕಾರಿಪುರಕ್ಕೆ ಸೀಮಿತವಾಗಿದ್ದ ಯಡಿಯೂರಪ್ಪ ರಾಜ್ಯವ್ಯಾಪಿ ಗುರುತಿಸಿಕೊಂಡರು. ಸಂಘಟನೆ, ಹೋರಾಟ, ಸಾಧನೆಗಳಲ್ಲಿಯೇ ಬದುಕಿನ ಸಾರ್ಥಕ್ಯವನ್ನು ಕಂಡುಕೊಂಡಿರುವ ಯಡಿಯೂರಪ್ಪ ಅವರಲ್ಲಿ ಸಾಧಿಸಬೇಕೆಂಬ ಛಲ ಇನ್ನೂ ಇದೆ. 83ರ ಇಳಿವಯಸ್ಸಿನಲ್ಲೂ 20ರ ಯುವಕನಂತೆ ಕೆಲಸ ಮಾಡುವ, ಮುಂಜಾನೆ ಬೇಗನೆ ಎದ್ದು ವಾಕಿಂಗ್ ಮಾಡಿ ಬೆಳಗ್ಗೆ 8ಕ್ಕೆ ಮುನ್ನ ಕೆಲಸದಲ್ಲಿ ತೊಡಗಿಸಿಕೊಳ್ಳುವ ಅವರ ಗುಣ ಇತರರಿಗೆ ಅನುಕರಣೀಯ. ತಾನೂ ಬೆಳೆದು, ತನ್ನವರನ್ನೂ ಬೆಳೆಸುವ ತನ್ಮೂಲಕ ಸಮಾಜವನ್ನು ಬಲಪಡಿಸುವ ಅವರ ಆಶಯ ಇತರರಿಗೆ ಮಾದರಿ. ಹಲವಾರು ಹೋರಾಟಗಳನ್ನು ಕಂಡಿರುವ ಧೀಮಂತ ನಾಯಕ ಯಡಿಯೂರಪ್ಪ ಶಿಸ್ತಿನ ಸಿಪಾಯಿಯಂತೆ, ದಣಿವರಿಯದ ನಾಯಕನಂತೆ ಪಕ್ಷಕ್ಕೆ ದುಡಿದಿದ್ದಾರೆ.&lt;/p&gt;&lt;p&gt;ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ದಾಸಶ್ರೇಷ್ಠ ಕನಕದಾಸರ ಜನ್ಮದಿನವನ್ನು ಸರ್ಕಾರಿ ಹಬ್ಬವನ್ನಾಗಿ ಆಚರಿಸಲು ಆದೇಶಿಸಿ, ಅಂದು ಸಾರ್ವಜನಿಕ ರಜೆಯನ್ನು ಘೋಷಿಸಿದರಲ್ಲದೇ, ರಾಮಾಯಣ ರಚಿಸಿದ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸಹ ಸರ್ಕಾರಿ ಮಟ್ಟದಲ್ಲಿ ಆಚರಿಸಲು ಮತ್ತು ಸಾರ್ವಜನಿಕ ರಜೆ ನೀಡಲು ಯಡಿಯೂರಪ್ಪ ಅವರ ಸರ್ಕಾರವೇ ಆದೇಶ ಹೊರಡಿಸಿತ್ತು. ಹಿಂದೂ ಧರ್ಮ ಮತ್ತು ಸ್ವರಾಜ್ಯದ ರಕ್ಷಣೆಗಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆಯನ್ನು ಸ್ಮರಿಸಲು ಕರ್ನಾಟಕದಲ್ಲಿ ಸರ್ಕಾರಿ ಮಟ್ಟದ ಜಯಂತಿ ಆಚರಣೆಗೆ ಯಡಿಯೂರಪ್ಪ ಅವರು ಚಾಲನೆ ನೀಡಿದ್ದರು.&lt;/p&gt;&lt;p&gt;ಶೂನ್ಯದಿಂದ ಸೃಷ್ಟಿಸಿದ ಸಾಮ್ರಾಜ್ಯ:ಯಡಿಯೂರಪ್ಪನವರು ಪಕ್ಷ ಕಟ್ಟಲು ಜಾಥಾ, ಕಾಲ್ನಡಿಗೆ, ಪಾದಯಾತ್ರೆ, ಸೈಕಲ್ ಮೇಲೆ ಊರೂರು ಸುತ್ತಿದ ದಿನಗಳನ್ನು ನಾವು ಮರೆಯಲು ಸಾಧ್ಯವಿಲ್ಲ. ಅಂದು ಅವರು ಬಿತ್ತಿದ ಸಣ್ಣ ಸಸಿ ಇಂದು ನಾಡಿನಲ್ಲಿ ಬಿಜೆಪಿಯೆಂಬ ಹೆಮ್ಮರವಾಗಿ ಬೆಳೆದು ನಿಂತಿದೆ. ಬಿಜೆಪಿಯನ್ನು ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದಲ್ಲಿ ಅಧಿಕಾರಕ್ಕೆ ತರುವ ಮೂಲಕ ಅವರು ಇತಿಹಾಸ ನಿರ್ಮಿಸಿದರು.&lt;/p&gt;&lt;p&gt;ಧೀಮಂತ ಹೋರಾಟಗಾರ:&lt;/p&gt;&lt;p&gt;ಅವರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿದವರಲ್ಲ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಹೋರಾಟದಿಂದ ಹಿಡಿದು ಅಯೋಧ್ಯೆ ರಾಮ ಮಂದಿರ ಚಳವಳಿಯವರೆಗೆ ಅವರ ಪಾತ್ರ ದೊಡ್ಡದು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಕಾರ್ಯಕರ್ತರಿಗೆ ಧೈರ್ಯ ತುಂಬುವ ಹೋರಾಟಕ್ಕಿಳಿಯುವ ಅವರ ಗುಣ ಅನನ್ಯ.&lt;/p&gt;&lt;p&gt;ಮಾರ್ಗದರ್ಶಕ ಶಕ್ತಿ:&lt;/p&gt;&lt;p&gt;&lsquo;ಶೀಘ್ರ ಕೋಪಿ ಆದರೆ ದೀರ್ಘ ದ್ವೇಷಿಯಂತೂ ಅಲ್ಲ&rsquo; ಎಂಬ ಮಾತು ಯಡಿಯೂರಪ್ಪನವರಿಗೆ ಅನ್ವಯಿಸುತ್ತದೆ. ಒಮ್ಮೊಮ್ಮೆ ಭಿನ್ನಾಭಿಪ್ರಾಯಗಳು ಮೂಡಿದರೂ, ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಒಗ್ಗೂಡಿ ಕೆಲಸ ಮಾಡುವ ಅವರ ದೊಡ್ಡಗುಣ ನಮಗೆಲ್ಲರಿಗೂ ಆದರ್ಶ. ಕರ್ನಾಟಕದ ರಾಜಕೀಯ ಭೂಪಟದಲ್ಲಿ ಬಿ.ಎಸ್.ಯಡಿಯೂರಪ್ಪ ಎಂಬ ಹೆಸರು ಒಂದು ಶಕ್ತಿ. ಶೂನ್ಯದಿಂದ ಅಧಿಕಾರದ ಶಿಖರದವರೆಗೆ ಅವರು ನಡೆದು ಬಂದ ಹಾದಿ ಅಸಾಧಾರಣವಾದುದು. ಶಿಕಾರಿಪುರದ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಯಾನ ಆರಂಭಿಸಿ, ಇಂದು ದೇಶದ ಪ್ರಭಾವಿ ನಾಯಕರಾಗಿ ಬೆಳೆದಿದ್ದಾರೆ.&lt;/p&gt;&lt;p&gt;ಉದ್ಯಮಃ ಸಾಹಸಂ ಧೈಯರ್ಂ ಬುದ್ಧಿಃ ಶಕ್ತಿಃ ಪರಾಕ್ರಮಃ&lt;/p&gt;&lt;p&gt;ಷಡೇತೇ ಯತ್ರ ವತರ್ಂತೇ ತತ್ರ ದೇವಃ ಸಹಾಯಕೃತ್ ॥&lt;/p&gt;&lt;p&gt;(ಉದ್ಯೋಗ, ಸಾಹಸ, ಧೈರ್ಯ, ಬುದ್ಧಿ, ಶಕ್ತಿ ಮತ್ತು ಪರಾಕ್ರಮ, ಈ ಆರು ಗುಣಗಳು ಯಾರಲ್ಲಿ ಇರುತ್ತವೆಯೋ ಅವರಿಗೆ ದೈವವು ಸಹಾಯ ಮಾಡುತ್ತದೆ.)&lt;/p&gt;&lt;p&gt;ಯಡಿಯೂರಪ್ಪನವರು ಹಳ್ಳಿ ಹಳ್ಳಿಗಳನ್ನು ಸುತ್ತಿ ಪಕ್ಷ ಸಂಘಟಿಸಿದ ರೀತಿ ಅವರ &lsquo;ಉದ್ಯಮ&rsquo; ಮತ್ತು &lsquo;ಸಾಹಸ&rsquo;ಕ್ಕೆ ಸಾಕ್ಷಿ. 2021ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ, ಅವರನ್ನು ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿಯಾದ ಸಂಸದೀಯ ಮಂಡಳಿಗೆ (Parliamentary Board) ನೇಮಕ ಮಾಡಲಾಯಿತು. ಕರ್ನಾಟಕದಲ್ಲಿ ಬಿಜೆಪಿಯ ಅಸ್ತಿತ್ವಕ್ಕೆ ಆಧಾರವಾಗಿರುವ &lsquo;ಧ್ರುವತಾರೆ&rsquo; ಎಂದೇ ಪರಿಗಣಿಸುತ್ತಾರೆ. ಒಟ್ಟಾರೆಯಾಗಿ, ಯಡಿಯೂರಪ್ಪ ಅವರು ಕೇವಲ ಒಬ್ಬ ಪ್ರಾದೇಶಿಕ ನಾಯಕರಾಗಿ ಉಳಿಯದೆ, ಕರ್ನಾಟಕದಲ್ಲಿ ಬಿಜೆಪಿಯ ಅಸ್ತಿತ್ವಕ್ಕೆ ಅಡಿಪಾಯ ಹಾಕಿದರು. ಕರ್ನಾಟಕದಲ್ಲಿ ಬಿಜೆಪಿ ಅಸ್ಥಿತ್ವ ಬೇರೂರುವುದೇ ಎಂಬ ಪ್ರಶ್ನೆ ಇದ್ದ ಸಂದರ್ಭದಲ್ಲಿ ಹೋರಾಟ ಹಾಗೂ ರಾಜಕೀಯ ಚಾಣಕ್ಷರೇ ಆಗಿದ್ದ ಯಡಿಯೂರಪ್ಪ ಅವರ ಸಂಘಟಿತ ದುಡಿಮೆ ಇಲ್ಲದಿದ್ದರೆ ಇಂದು ಪಕ್ಷ ರಾಜ್ಯದಲ್ಲಿ ಉನ್ನತಸ್ಥಿತಿಯಲ್ಲಿ ಇರುತ್ತಿರಲಿಲ್ಲ ಎಂಬುದು ಸರ್ವವಿದಿತ.&lt;/p&gt;&lt;p&gt;ಮುಖಂಡರನ್ನು ಬೆಳೆಸಿದ ಬಿಎಸ್&zwnj;ವೈ:&lt;/p&gt;&lt;p&gt;ಕರ್ನಾಟಕದಲ್ಲಿ ಮೊದಲು ಕಾಂಗ್ರೆಸ್ ಪಾರಮ್ಯವಿದ್ದರೆ ಎಂಬತ್ತರ ದಶಕದಿಂದ ಜನತಾ ಪರಿವಾರದ ಇನ್ನಿಂಗ್ಸ್ ಪ್ರಾರಂಭವಾಗಿತ್ತು. ಇದರ ಮಧ್ಯೆ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದ ಬಿಜೆಪಿಗೆ ಕರ್ನಾಟಕದಲ್ಲಿ ನೆಲೆ ಕಲ್ಪಿಸಲು ಶ್ರಮ ವಹಿಸಿದವರು ಬಿ.ಎಸ್.ಯಡಿಯೂರಪ್ಪ. ಕರ್ನಾಟಕ ಬಿಜೆಪಿಗೆ ಅಂದಿನಿಂದ ಇಂದಿನ ವರೆಗೂ ಯಡಿಯೂರಪ್ಪ ಮಹಾರಥಿ. ಅವರ ಪರಿಶ್ರಮದ ಫಲವಾಗಿ ಹಲವು ಮುಖಂಡರು ಬೆಳೆದಿದ್ದಾರೆ. ಅವರನ್ನೆಲ್ಲ ಮುಂಬೆಳಕಿಗೆ ತಂದು ತಯಾರು ಮಾಡಿದವರು ಯಡಿಯೂರಪ್ಪ. ಹಾಗಾಗಿ ಕರ್ನಾಟಕ ಬಿಜೆಪಿ ಮತ್ತು ಬಿ.ಎಸ್.ವೈ ಎಂಬ ಹೆಸರುಗಳು ಆವಿನಾಭಾವದ ನಿದರ್ಶನ.&lt;/p&gt;&lt;p&gt;ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಿ ದಿಲ್ಲಿಗೆ ಕಳುಹಿಸಿ ಕೊಡುವುದರಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. 2019ರ ಪಾರ್ಲಿಮೆಂಟ್ ಎಲೆಕ್ಷನ್&zwnj;ನಲ್ಲಿ ರಾಜ್ಯ ಬಿಜೆಪಿಯಿಂದ 25 ಸಂಸದರು ಆಯ್ಕೆಯಾಗಿರುವುದು ಅಭೂತಪೂರ್ವ ಸಾಧನೆ. ಬಿಜೆಪಿ ಈ ಯಶೋಗಾಥೆಯಲ್ಲಿ ಯಡಿಯೂರಪ್ಪ ಅವರ ಯೋಗದಾನ ಬಹಳ ದೊಡ್ಡದು.&lt;/p&gt;&lt;p&gt;ಸುದೀರ್ಘ ರಾಜಕೀಯ ಹೋರಾಟದಲ್ಲಿ ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲೇ ಹೆಚ್ಚು ಸಮಯವಿದ್ದರು ಎಂದರೆ ತಪ್ಪಲ್ಲ. ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇಲ್ಲದಿದ್ದಾಗಲೂ ಲೋಕಸಭೆಗೆ ಹೆಚ್ಚಿನ ಸಂಸದರನ್ನು ಕಳುಹಿಸುವ ದಿಸೆಯಲ್ಲಿ ಸಂಘಟನೆ ಕೈಗೊಂಡಿದ್ದು ಸಣ್ಣ ಸಾಧನೆಯಲ್ಲ. ಈಗಲೂ ಪಕ್ಷಕ್ಕಾಗಿ ಅವರು ಅವಿರತವಾಗಿ ದುಡಿಯುತ್ತಿದ್ದಾರೆ. ಯಡಿಯೂರಪ್ಪ ಅವರ ಈ ಕಾರ್ಯ ನಿಷ್ಠೆ ಕೆಳ ಹಂತದ ಕಾರ್ಯಕರ್ತನಿಂದ ಉನ್ನತ ಮಟ್ಟದ ನಾಯಕರವರೆಗೂ ಮಾದರಿಯಾಗಿದೆ ಎಂದು ಧಾರಾಳವಾಗಿ ಹೇಳಬಹುದು.&lt;/p&gt;&lt;p&gt;ಭಾಗ್ಯಲಕ್ಷ್ಮಿ ಯೋಜನೆ, ಸಂಧ್ಯಾ ಸುರಕ್ಷಾ ಮತ್ತು ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಮೂಲಕ ಅವರು ಈ ಶ್ಲೋಕದ ಆಶಯವನ್ನು ಜಾರಿಗೆ ತಂದರು.&lt;/p&gt;&lt;p&gt;ಭಗವದ್ಗೀತೆಯಲ್ಲಿ ಹೇಳಿದಂತೆ...&lt;/p&gt;&lt;p&gt;ಯದ್ಯದಾಚರತಿ ಶ್ರೇಷ್ಠಸ್ತತ್ತದೇವೇತರೋ ಜನಃ&lt;/p&gt;&lt;p&gt;ಸ ಯತ್ಪ್ರಮಾಣಂ ಕುರುತೇ ಲೋಕಸ್ತದನುವರ್ತತೇ ॥&lt;/p&gt;&lt;p&gt;(ಶ್ರೇಷ್ಠ ವ್ಯಕ್ತಿಯು ಏನನ್ನು ಆಚರಿಸುತ್ತಾನೋ, ಇತರರು ಅದನ್ನೇ ಅನುಸರಿಸುತ್ತಾರೆ. ಅವನು ಏನನ್ನು ಪ್ರಮಾಣವೆಂದು ಒಪ್ಪುತ್ತಾನೋ, ಲೋಕವು ಅದನ್ನೇ ಪಾಲಿಸುತ್ತದೆ.)&lt;/p&gt;&lt;p&gt;ಸಮಾಜದಲ್ಲಿ ಗೌರವಾನ್ವಿತ ಸ್ಥಾನದಲ್ಲಿರುವವರು ತಮ್ಮ ನಡವಳಿಕೆಯ ಮೂಲಕ ಸಾಮಾನ್ಯ ಜನರಿಗೆ ಮಾದರಿಯಾಗುತ್ತಾರೆ. ಇಂದು ಕರ್ನಾಟಕ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನಿಗೂ ಯಡಿಯೂರಪ್ಪನವರೇ ಅತಿ ದೊಡ್ಡ ಪ್ರೇರಣೆ. ಯಡಿಯೂರಪ್ಪನವರ ಜೀವನವು &lsquo;ಸೇವೆಯೇ ಪರಮೋಚ್ಚ&rsquo; ಎಂಬ ತತ್ವಕ್ಕೆ ಸಾಕ್ಷಿಯಾಗಿದೆ. ಅವರ ಅನುಭವ ಮತ್ತು ಮಾರ್ಗದರ್ಶನ ಮುಂದಿನ ಪೀಳಿಗೆಗೂ ಪಕ್ಷಕ್ಕೆ ದಾರಿದೀಪವಾಗಿದೆ. ಈ ಐತಿಹಾಸಿಕ ಸಮಾರಂಭವು ಅತ್ಯಂತ ಯಶಸ್ವಿಯಾಗಿ ನಡೆಯಲಿ ಮತ್ತು ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕನಿಗೆ ಗೌರವ ಸಲ್ಲಿಸುವ ಈ ಕ್ಷಣ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸೋಣ.&lt;/p&gt;&lt;p&gt;ಚಿತ್ರದುರ್ಗದ ಈ &lsquo;ಅಭಿಮಾನೋತ್ಸವ&rsquo; ಕೇವಲ ಒಂದು ಸಮಾವೇಶವಲ್ಲ, ಇದು ಐದು ದಶಕಗಳ ಕಾಲ ನಾಡಿಗಾಗಿ ಮಿಡಿದ ಹೃದಯಕ್ಕೆ ಜನತೆ ಸಲ್ಲಿಸುತ್ತಿರುವ ಗೌರವ ಸಮರ್ಪಣೆ. ಯಡಿಯೂರಪ್ಪನವರು ಹಾಕಿಕೊಟ್ಟ ಜನಸೇವೆಯ ಹಾದಿ ಮುಂದಿನ ತಲೆಮಾರಿನ ರಾಜಕಾರಣಿಗಳಿಗೆ ದಾರಿದೀಪ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/bsy-abhimanotsav-50-years-of-relentless-service-bsy-celebrated-as-a-tireless-leader-in-chitradurga-rav/articleshow-7xyb706"/>
        </item>
        <item>
            <title><![CDATA[Abhimanotsav: ಗ್ರಾಮಗಳಿಗೆ ನೀರು ಕೊಟ್ಟ ಭಗೀರಥ ಬಿಎಸ್‌ವೈ:  ತರಳಬಾಳು ಜಗದ್ಗುರು]]></title>
            <link>https://kannada.asianetnews.com/state/bsy-bhagiratha-who-brought-water-to-our-villages-taralabalu-seer-dr-shivamurthy-shivacharya-swamiji-rav/articleshow-i30a5de</link>
            <guid isPermaLink="true">https://kannada.asianetnews.com/state/bsy-bhagiratha-who-brought-water-to-our-villages-taralabalu-seer-dr-shivamurthy-shivacharya-swamiji-rav/articleshow-i30a5de</guid>
            <pubDate>Fri, 08 May 2026 07:05:06 +0530</pubDate>
            <description><![CDATA[&lt;p&gt;ಸಿರಿಗೆರೆಯ ತರಳಬಾಳು ಜಗದ್ಗುರುಗಳು, ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಠಕ್ಕೆ ಸಹಾಯ ಮಾಡಲು ಮುಂದಾದಾಗ, ಅದರ ಬದಲು ಸಿರಿಗೆರೆ ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ ಕೇಳಿದರು. ಯಡಿಯೂರಪ್ಪ ತಕ್ಷಣವೇ ಸೂಳೆಕೆರೆಯಿಂದ ನೀರು ಪೂರೈಸುವ ಯೋಜನೆಗೆ ಅನುಮೋದನೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jygastagxbc4xtqssbmztxdg,imgname-----------------------2025-06-24t121237.239-1750747375952.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;-ಡಾ। ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,&lt;/strong&gt;&lt;/p&gt;&lt;p&gt;ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ&lt;/p&gt;&lt;p&gt;ಸುಮಾರು ಹನ್ನೆರಡು ವರ್ಷಗಳ ಹಿಂದಿನ ಘಟನೆ. ಆಗ ದೆಹಲಿಯಲ್ಲಿ ಯಾವುದೋ ಒಂದು ಕಾರ್ಯಕ್ರಮವಿತ್ತು. ಅದಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ನಮ್ಮ ಪ್ರಯಾಣ ಸಾಗಿತ್ತು. ಮಾರ್ಗಮಧ್ಯೆ ಇದ್ದಕ್ಕಿದ್ದಂತೆ ನಮ್ಮ ಮೊಬೈಲ್&zwnj; ರಿಂಗಣಿಸಿತು. ಉತ್ತರಿಸಲು ಕೈಗೆತ್ತಿಕೊಂಡಾಗ ಕಾಣಿಸಿದ್ದು ಕರೆ ಮಾಡಿದವರು ರಾಜ್ಯದ ಆಗಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.&zwnj; ಯಡಿಯೂರಪ್ಪ ಅವರು. ತೀರಾ ಅನಿರೀಕ್ಷಿತವಾದ ಕರೆ. ಮುಖ್ಯಮಂತ್ರಿಗಳಾಗಿ ಅವರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ತಪ್ಪದೆ ನಮಗೆ ದೂರವಾಣಿ ಕರೆ ಮಾಡಿ ಆಶೀರ್ವಾದ ಬೇಡುತ್ತಾ ಬಂದಿರುವುದು ಅವರು ರೂಢಿಸಿಕೊಂಡು ಬಂದ ಧಾರ್ಮಿಕ ಶ್ರದ್ಧೆ. ಆದರೆ ಅಂದಿನ ಕರೆಯ ಉದ್ದೇಶ ಬೇರೆಯೇ ಆಗಿತ್ತು.&lt;/p&gt;&lt;p&gt;ಉಭಯ ಕುಶಲೋಪರಿಯ ನಂತರ ಅವರು &lsquo;ಬುದ್ದಿ, ನಾಳೆ ನಾನು ರಾಜ್ಯದ ಬಜೆಟ್&zwnj; ಮಂಡಿಸಲಿದ್ದೇನೆ. ತಮ್ಮ ಆಶೀರ್ವಾದ ಬೇಕು. ಮಠಕ್ಕಾಗಿ ಏನಾದರೂ ಮಾಡಬೇಕೆಂದಿದ್ದೇನೆ. ಏನು ಮಾಡಲಿ?&rsquo; ಎಂದು ಕೇಳಿದರು. ಅವರ ಧಾರ್ಮಿಕ ಶ್ರದ್ಧೆ ನಿಷ್ಕಳಂಕವಾಗಿದ್ದರೂ, ಅವರು ನಾಡಿನ ಮುಖ್ಯಮಂತ್ರಿಗಳಾಗಿ ಯಾವುದೇ ತಾರತಮ್ಯ ಮಾಡದೆ ಎಲ್ಲ ಜನಾಂಗದವರ ಧಾರ್ಮಿಕ ಸಂಸ್ಥೆಗಳಿಗೆ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. &lsquo;ನಮ್ಮ ಮಠಕ್ಕೆ ಏನು ಮಾಡಲಿ&rsquo; ಎಂದು ಕೇಳಿದ ಪ್ರಶ್ನೆ ನಮಗೆ ಸರಿ ಕಾಣಲಿಲ್ಲ. &lsquo;ಮಠಕ್ಕೆ ಕಾಣಿಕೆ ಕೊಡಲು ಮಠದ ಶಿಷ್ಯರಿದ್ದಾರೆ, ನೀವು ಸ್ವಜಾತಿಯ ಮಠಕ್ಕೆ ಸಹಾಯ ಮಾಡಿದರೆ ಕೆಟ್ಟ ಹೆಸರು ತೆಗೆದುಕೊಳ್ಳುತ್ತೀರಿ&rsquo; ಎಂದು ಕಟುವಾಗಿ ಪ್ರತಿಕ್ರಿಯಿಸಿದಾಗ ಅವರು ನಿರುತ್ತರರಾದರು. &lsquo;ಹಾಗಾದರೆ ನಾನೇನು ಮಾಡಲಿ?&rsquo; ಎಂದು ವಿನಮ್ರತೆಯಿಂದ ಮರು ಸವಾಲು ಹಾಕಿ ನಮ್ಮನ್ನು &lsquo;ಭಕ್ತಿಕಂಪಿತ&rsquo;ರನ್ನಾಗಿ ಮಾಡಿದರು.&lt;/p&gt;&lt;h2&gt;ಗ್ರಾಮೀಣರಿಗೆ ನೀರು ಕೊಟ್ಟ ನಾಯಕ:&lt;/h2&gt;&lt;p&gt;ಆಗ ನಮ್ಮ ಕಣ್ಮುಂದೆ ಸುಳಿದಾಡಿದ್ದು ಬೇಸಿಗೆಯ ಕಾಲದಲ್ಲಿ ಬೆಳಗಿನ ಹೊತ್ತು ವಾಯುವಿಹಾರದಿಂದ ಹಿಂದಿರುಗುವಾಗ ಸಾಲುಸಾಲಾಗಿ ನಿಂತು ಬೀದಿ ನಲ್ಲಿಯಲ್ಲಿ ನೀರು ಹಿಡಿಯಲು ಕೈಯಲ್ಲಿ ಬಿಂದಿಗೆಗಳನ್ನು ಹಿಡಿದು ನಿಂತ ಮಹಿಳೆಯರ ದೃಶ್ಯ! ತಕ್ಷಣವೇ ನಮ್ಮ ಉತ್ತರವನ್ನೇ ನಿರೀಕ್ಷಿಸುತ್ತಿದ್ದ ಮುಖ್ಯಮಂತ್ರಿಗಳಿಗೆ &lsquo;ಸಿರಿಗೆರೆ ಮತ್ತು ಸುತ್ತಮುತ್ತಲಿನ ೫೦ - ೬೦ ಹಳ್ಳಿಗಳ ಜನರಿಗೆ ಕುಡಿಯುವ ನೀರಿನ ತೊಂದರೆ ಇದೆ. ಸಮೀಪದ ಚನ್ನಗಿರಿ ತಾಲೂಕಿನ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಕೆ ಆಗುವಂತೆ ಒಂದು ಯೋಜನೆಯನ್ನು ಮಂಜೂರು ಮಾಡಿಕೊಟ್ಟರೆ ತುಂಬಾ ಪುಣ್ಯಕಾರ್ಯ ಮಾಡಿದಂತಾಗುತ್ತದೆ&rsquo; ಎಂದಾಗ ಯಡಿಯೂರಪ್ಪ ಅವರು ತಡಮಾಡದೆ &lsquo;ಹಾಗೆಯೇ ಆಗಲಿ, ತಮ್ಮ ಅಪೇಕ್ಷೆಯಂತೆ ಮಾಡುತ್ತೇನೆ&rsquo; ಎಂದು ಭರವಸೆ ಕೊಟ್ಟರು.&lt;/p&gt;&lt;h3&gt;ಮರುದಿನವೇ ಬಜೆಟ್&zwnj;ನಲ್ಲಿ ಘೋಷಣೆ.&lt;/h3&gt;&lt;p&gt;ಸಾಮಾನ್ಯವಾಗಿ ರಾಜಕೀಯ ಧುರೀಣರು ಕೊಡುವ ಪೊಳ್ಳು ಭರವಸೆ ಅದಾಗಿರಲಿಲ್ಲ. ಮಾರನೆಯ ದಿನವೇ ವಿಧಾನಸಭೆಯಲ್ಲಿ ಅವರು ಮಂಡಿಸಿದ ಬಜೆಟ್&zwnj;ನಲ್ಲಿ ಮೇಲ್ಕಂಡ ಕುಡಿಯುವ ನೀರಿನ ಯೋಜನೆಗೆ ಅವರು ₹೨೫ ಕೋಟಿ ಸೇರ್ಪಡೆ ಮಾಡಿದ್ದು ಈ ಭಾಗದ ಹಳ್ಳಿಯ ಜನರನ್ನು ನಿಬ್ಬೆರಗುಗೊಳಿಸಿತು. ಕ್ರಮೇಣ ಸಿರಿಗೆರೆ ಮತ್ತು ಸುತ್ತಮುತ್ತಲಿನ ಅನೇಕ ಹಳ್ಳಿಗಳು ಹೊಸದಾಗಿ ಸೇರ್ಪಡೆಯಾಗಿ ಯೋಜನೆಯ ಗಾತ್ರ ₹೮೦ ಕೋಟಿಗಳಿಗೆ ಹಿಗ್ಗಿತು. ಆರಂಭದಲ್ಲಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಆಗುತ್ತಿದ್ದಾಗ ಅಷ್ಟಾಗಿ ಈ ಯೋಜನೆಯ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇದ್ದ ಹಳ್ಳಿಗರು ಈಗ ಅಂತರ್ಜಲ ಬತ್ತಿರುವುದರಿಂದ ಈ ಯೋಜನೆಯು ಕಾರ್ಯರೂಪಕ್ಕೆ ಬರದೇ ಹೋಗಿದ್ದರೆ ತಮ್ಮ ಗತಿ ಏನಾಗುತ್ತಿತ್ತು ಎಂದು ಉದ್ಗರಿಸುತ್ತಿದ್ದಾರೆ!&lt;/p&gt;&lt;p&gt;ಯಡಿಯೂರಪ್ಪ ಅವರು ಮತ್ತು ನಮ್ಮ ಸಂಬಂಧ ನಿನ್ನೆ ಮೊನ್ನೆಯದಲ್ಲ. ನಮ್ಮ ಮಠದ ವಾರ್ಷಿಕ ಸಮಾರಂಭವಾದ &lsquo;ಸರ್ವಜನಾಂಗದ ಶಾಂತಿಯ ತೋಟ&rsquo;ವೆಂದೇ ಜನಮಾನಸದಲ್ಲಿ ನೆಲೆಗೊಂಡಿರುವ &lsquo;ತರಳಬಾಳು ಹುಣ್ಣಿಮೆ ಮಹೋತ್ಸವ&rsquo;ವು ೩೭ ವರ್ಷಗಳ ಹಿಂದೆ (೧೯೮೫) ಶಿಕಾರಿಪುರದಲ್ಲಿ ನಡೆದಾಗ ಅವರು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಆಗಿದ್ದರು. ಅಂದಿನಿಂದಲೂ ನಮ್ಮೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿರಲಿ, ಆಡಳಿತ ಪಕ್ಷದಲ್ಲಿರಲಿ, ಮಂತ್ರಿಗಳಾಗಿರಲಿ, ಮಾಜಿ ಮಂತ್ರಿಗಳಾಗಿರಲಿ ನಮ್ಮ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸೇವಾ ಕಾರ್ಯಗಳಲ್ಲಿ ಅನನ್ಯವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.&lt;/p&gt;&lt;h3&gt;ಸದಾ ಜನಕಲ್ಯಾಣದ ಕನಸು:&lt;/h3&gt;&lt;p&gt;ಯಡಿಯೂರಪ್ಪನವರು ಕನ್ನಡ ನಾಡು ಕಂಡ ಅಪ್ರತಿಮ ರೈತಪರ ಹೋರಾಟಗಾರರು. ಅಪಾರ ಜನಪರ ಕಾಳಜಿ ಉಳ್ಳವರು. ಜನರ ಮಧ್ಯೆ ಬೆಳೆದು ಬಂದ ಅವರು ಕರೋನಾ ಬಿಕ್ಕಟ್ಟಿನಲ್ಲಿ ಬೆಂಗಳೂರಿನ ಗೃಹಕಚೇರಿಯಲ್ಲಿ ಅಣೆಕಟ್ಟೆಯಲ್ಲಿ ಹಿಡಿದಿಟ್ಟ ಅಪಾರ ಶಕ್ತಿಯುಳ್ಳ ಜಲರಾಶಿಯಂತೆ ಬಂಧಿಯಾಗಿದ್ದರೂ ನಾಡಿನ ಜನರ ಕಲ್ಯಾಣದ ಕನಸನ್ನೇ ಸದಾ ಕಾಣುತ್ತಿದ್ದರು. ಅವರು ರಾಜ್ಯದ ಅನೇಕ ತಾಲೂಕುಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ನಮ್ಮ ಯೋಜನೆಗಳಿಗೆ ಹಿಂದುಮುಂದು ನೋಡದೆ ಸರ್ಕಾರದ ಒಪ್ಪಿಗೆಯನ್ನು ನೀಡಿ ಉದಾರವಾಗಿ ಅನುದಾನ ನೀಡಿ ಸಹಕರಿಸಿರುವುದನ್ನು ನಾವೆಂದೂ ಮರೆಯಲಾರೆವು.&lt;/p&gt;&lt;p&gt;ಚನ್ನಗಿರಿಯ ಉಬ್ರಾಣಿ-ಅಮೃತಾಪುರ, ಹರಿಹರದ ರಾಜನಹಳ್ಳಿ, ಹೊನ್ನಾಳಿಯ ಸಾಸ್ವೆಹಳ್ಳಿ, ಬ್ಯಾಡಗಿ ತಾಲೂಕಿನ ಅಣೂರು ಮತ್ತು ಬುಡಪನಹಳ್ಳಿ, ಜಗಳೂರು ಮತ್ತು ಭರಮಸಾಗರ ಇತ್ಯಾದಿ ಯಾವುದೇ ಏತ ನೀರಾವರಿ ಯೋಜನೆ ಇರಲಿ, ಯಾವುದೇ ಸರಕಾರವಿದ್ದಾಗ ಕೋಟ್ಯಂತರ ರು.ಗಳ ಹಣ ಬಿಡುಗಡೆ ಮಾಡಿದ ಶ್ರೇಯಸ್ಸು ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ.&lt;/p&gt;&lt;h3&gt;ಕೊನೆಗೂ ನಮ್ಮ ಆಶಯ ಸಾಕಾರ:&lt;/h3&gt;&lt;p&gt;ಈ ಹಿಂದೆ ಇಂತಹ ಯೋಜನೆಗಳಿಗೆ ಧಾರಾಳವಾಗಿ ಹಣ ಮಂಜೂರು ಮಾಡುತ್ತಿದ್ದ ಅವರು ಭರಮಸಾಗರ ಮತ್ತು ಜಗಳೂರು ಏತ ನೀರಾವರಿಗೆ ಒಂದೇ ಕಂತಿನಲ್ಲಿ ಅನುದಾನ ನೀಡಲು ರಾಜ್ಯದ ಆರ್ಥಿಕ ದುರ್ಭರತೆಯ ಕಾರಣದಿಂದ ಹಿಂದೇಟು ಹಾಕಿದರು. ₹೧,೨೨೦ ಕೋಟಿಗಳ ಜಗಳೂರು ಮತ್ತು ಭರಮಸಾಗರ ಬೃಹತ್&zwnj; ಏತನೀರಾವರಿ ಯೋಜನೆಗಳನ್ನು ₹೨೨೫ ಕೋಟಿಗಳಿಗೆ ಸೀಮಿತಗೊಳಿಸಿ ಆದೇಶ ಹೊರಡಿಸಿದ್ದು ನಮಗೆ ಅಸಂತುಷ್ಟಿಯನ್ನುಂಟು ಮಾಡಿತು. ನಂತರ ನಮ್ಮ ಒತ್ತಾಸೆಗೆ ಮಣಿದು ಒಂದೇ ವಾರದಲ್ಲಿ ಮೇಲ್ಕಂಡ ಸರಕಾರದ ಆದೇಶವನ್ನು ಹಿಂಪಡೆದು ಪೂರಾ ಹಣವನ್ನು ಒಂದೇ ಕಂತಿನಲ್ಲಿ ಮಂಜೂರು ಮಾಡಿ ಮರು ಆದೇಶ ಹೊರಡಿಸಿದರು. ಈ ಎರಡೂ ಯೋಜನೆಗಳ ಕಾಮಗಾರಿ ಕರೋನಾ ಬಿಕ್ಕಟ್ಟಿನ ನಡುವೆಯೂ ಭರದಿಂದ ಸಾಗಿ ಸುಮಾರು ೧೦೦ ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಯಿತು.&lt;/p&gt;&lt;p&gt;ಸುಮಾರು ೧೦೦ ಕೆರೆಗಳಿಗೆ ದುಮ್ಮಿಕ್ಕಿ ಹರಿಯುತ್ತಿರುವ ತುಂಗಭದ್ರೆಯ ಜಲರಾಶಿಯು ಈ ಭಾಗದ ಜನರ ಆರ್ಥಿಕ ಚೈತನ್ಯವನ್ನು ಅಭಿವೃದ್ಧಿಗೊಳಿಸಿ ಅವರ ಭಾವಕೋಶದಲ್ಲಿ ಹೊಸ ಕೃಷಿ ಚಟುವಟಿಕೆಯ ಭಾಷ್ಯ ಬರೆದಿದೆ.&lt;/p&gt;&lt;p&gt;ಶತಮಾನಗಳಿಂದ ಬರಗಾಲದ ಬೇಗೆಯಿಂದ ತತ್ತರಿಸಿದ ಈ ಭಾಗದ ಗ್ರಾಮೀಣ ಜನರು &lsquo;ಇಳಿದು ಬಾ ತಾಯೆ, ಇಳಿದು ಬಾ...&rsquo; ಎಂಬ ಕವಿವಾಣಿಯನ್ನು ಈಗ ಮನೆ ಮನಗಳಲ್ಲಿ ಜಪಿಸುತ್ತಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bsy-bhagiratha-who-brought-water-to-our-villages-taralabalu-seer-dr-shivamurthy-shivacharya-swamiji-rav/articleshow-i30a5de"/>
        </item>
        <item>
            <title><![CDATA[H Vishwanath ಚುನಾವಣಾ ರಾಜಕಾರಣಕ್ಕೆ ಎಚ್‌.ವಿಶ್ವನಾಥ್ ಗುಡ್‌ ಬೈ!]]></title>
            <link>https://kannada.asianetnews.com/politics/h-vishwanath-retires-from-electoral-politics-rules-out-future-contests-for-himself-and-his-sons/articleshow-23s93kt</link>
            <guid isPermaLink="true">https://kannada.asianetnews.com/politics/h-vishwanath-retires-from-electoral-politics-rules-out-future-contests-for-himself-and-his-sons/articleshow-23s93kt</guid>
            <pubDate>Fri, 08 May 2026 06:53:16 +0530</pubDate>
            <description><![CDATA[&lt;p&gt;ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್&zwnj; ಅವರು ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕನಿಷ್ಠ ₹50 ಕೋಟಿ ಬೇಕಾಗಿದ್ದು, ಅಷ್ಟು ಹಣ ತಮ್ಮ ಬಳಿ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kky3957ykh6500xwyaht3dsk,imgname-h-vishwanath-1773757830398.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು: &lt;/strong&gt;&lsquo;ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ&rsquo; ಎಂದು ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್&zwnj; ಘೋಷಿಸಿದ್ದಾರೆ.&amp;nbsp;&lt;/p&gt;&lt;h2&gt;ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು&lt;/h2&gt;&lt;p&gt;ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಈ ಹಿಂದೆ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಜನರೇ ಖರ್ಚಿಗೆ ಹಣ ನೀಡಿ ಆಶೀರ್ವದಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು. ರಿಯಲ್&zwnj; ಎಸ್ಟೇಟ್&zwnj; ವ್ಯವಹಾರದಲ್ಲಿ ತೊಡಗಿದವರು ತಮ್ಮ ಜಮೀನು, ಮನೆ ಮಾರಿ ಸ್ಪರ್ಧಿಸಬಹುದು. ಆದರೆ, ನಮ್ಮಿಂದ ಅದು ಸಾಧ್ಯವಿಲ್ಲ ಎಂದರು.&lt;/p&gt;&lt;h3&gt;ನನ್ನ ಬಳಿ ಒಂದು ಮನೆ, ಒಂದು ನಿವೇಶನ ಮಾತ್ರ ಇದೆ&lt;/h3&gt;&lt;p&gt;ನನ್ನ ಬಳಿ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಹೀಗಿರುವಾಗ ಸ್ಪರ್ಧೆ ಹೇಗೆ ಸಾಧ್ಯ?. ಅಲ್ಲದೇ, ನನ್ನ ಮಕ್ಕಳು ಕೂಡ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ತಮ್ಮ ಶಕ್ತ್ಯಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದರು.&lt;/p&gt;&lt;p&gt;- ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನಲ್ಲಿಲ್ಲ: ಎಂಎಲ್&zwnj;ಸಿ&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/h-vishwanath-retires-from-electoral-politics-rules-out-future-contests-for-himself-and-his-sons/articleshow-23s93kt"/>
        </item>
        <item>
            <title><![CDATA[BS Yadiyurapa: ‘ಅಭಿಮಾನೋತ್ಸವ: ಬಿಎಸ್‌ವೈ ಕೊಡುಗೆಗಳ ‘ಸ್ತಬ್ಧಚಿತ್ರ’]]></title>
            <link>https://kannada.asianetnews.com/state/abhimanotsava-tableaux-to-showcase-bs-yediyurappa-s-life-long-contributions-rav/articleshow-p360rkm</link>
            <guid isPermaLink="true">https://kannada.asianetnews.com/state/abhimanotsava-tableaux-to-showcase-bs-yediyurappa-s-life-long-contributions-rav/articleshow-p360rkm</guid>
            <pubDate>Fri, 08 May 2026 06:43:43 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ 'ಯಡಿಯೂರಪ್ಪ ಅಭಿಮಾನೋತ್ಸವ' ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಅವರ ಜನಪ್ರಿಯ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಸಾಂಸ್ಕೃತಿಕ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆಯ ಮೂಲಕ ಸ್ವಾಗತಿಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2javrwxvz819a24h3yqgj5,imgname-----------------------2026-05-08t063653.313-1778202799900.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ &lsquo;ಯಡಿಯೂರಪ್ಪ ಅಭಿಮಾನೋತ್ಸವ&rsquo; ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಲಿದ್ದು, ಅದ್ದೂರಿ ಮೆರವಣಿಗೆ ಮೂಲಕ ಅವರನ್ನು ನಗರಕ್ಕೆ ಕರೆತರಲಾಗುವುದು. ಮೆರವಣಿಗೆಯಲ್ಲಿ ಬಿಎಸ್&zwnj;ವೈ ಕೊಡುಗೆಗಳ &lsquo;ಸ್ತಬ್ಧಚಿತ್ರ&rsquo;ಗಳು ಪ್ರಮುಖ ಆಕರ್ಷಣೆಯಾಗಲಿವೆ.&lt;/p&gt;&lt;p&gt;ಯಡಿಯೂರಪ್ಪ ಅವರು ರಾಜಕೀಯ ಪ್ರವೇಶಿಸಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲು ಚಿತ್ರದುರ್ಗದಲ್ಲಿ &lsquo;ಯಡಿಯೂರಪ್ಪ ಅಭಿಮಾನೋತ್ಸವ&rsquo; ಆಯೋಜಿಸಲಾಗಿದ್ದು, ರೈತನಾಯಕನ ಸ್ವಾಗತಕ್ಕೆ ಕೋಟೆನಗರಿ, ಚಿತ್ರದುರ್ಗ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ.&lt;/p&gt;&lt;p&gt;ಅಭಿಮಾನೋತ್ಸವದ ಮುನ್ನಾದಿನ, ಶುಕ್ರವಾರ ಸಂಜೆ 4 ಗಂಟೆಗೆ ಅವರು ನಗರ ಪ್ರವೇಶಿಸಲಿದ್ದು, ಅವರು ಚಿತ್ರದುರ್ಗ ಪ್ರವೇಶಿಸುವ ಕ್ಷಣಗಳನ್ನು ಸಾರ್ಥಕಗೊಳಿಸುವ ಸಂಬಂಧ ಸಾಂಸ್ಕೃತಿಕ ಲೋಕವನ್ನೇ ಸೃಷ್ಠಿಸಲಾಗುತ್ತಿದೆ. ಯಡಿಯೂರಪ್ಪ ಅವರ ಪುರಪ್ರವೇಶಕ್ಕೆ ಇಡೀ ಚಿತ್ರದುರ್ಗ ನಗರವನ್ನು ಸಿಂಗರಿಸಲಾಗಿದೆ.&lt;/p&gt;&lt;p&gt;ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹೊಳಲ್ಕೆರೆ ರಸ್ತೆಯ ಕನಕ ವೃತ್ತಕ್ಕೆ ಆಗಮಿಸುವ ಯಡಿಯೂರಪ್ಪ ಅವರನ್ನು ಒಂದು ಸಾವಿರ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರೈತರು ಸಾಂಪ್ರದಾಯಿಕ ರಾಶಿ ಪೂಜೆಯೊಂದಿಗೆ ರೈತ ಗೌರವ ಸಲ್ಲಿಸಲಿದ್ದಾರೆ. ಕನಕದಾಸ ವೃತ್ತದ ಸಮೀಪ ಚಂದ್ರವಳ್ಳಿ ಮೈದಾನದಿಂದ ಸಾಗುವ ಮೆರವಣಿಗೆಯಲ್ಲಿ ಯಡಿಯೂರಪ್ಪನವರನ್ನು ಪುಷ್ಪಾಲಂಕೃತ ಸಾರೋಟ್&zwnj;ನಲ್ಲಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ಕರೆ ತರಲಾಗುವುದು.&lt;/p&gt;&lt;p&gt;2000ಕ್ಕೂ ಹೆಚ್ಚಿನ ಸಂಖ್ಯೆಯ ರೈತರು ನೇಗಿಲು ಹಿಡಿದು ಶಿಸ್ತುಬದ್ಧವಾಗಿ ಮೆರವಣಿಗೆಯಲ್ಲಿ ರೈತ ಘೋಷಣೆಯೊಂದಿಗೆ ನಡೆದು ಬರಲಿದ್ದಾರೆ. ಒನಕೆ ಓಬವ್ವನ ನೆಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ &lsquo;ನಾರಿ ಶಕ್ತಿ ವಂದನ್&zwnj;ʼ ಕಾಯ್ದೆಗೆ ಗೌರವ ಸಲ್ಲಿಸಲು 200ಕ್ಕೂ ಹೆಚ್ಚು ಮಹಿಳೆಯರು ಒನಕೆ ಓಬವ್ವನ ಪಾತ್ರಧಾರಿಗಳಾಗಿ ಶಿಸ್ತುಬದ್ಧವಾಗಿ ಮೆರವಣಿಗೆಯಲ್ಲಿ ನಡೆದು ಬರಲಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಿರುವ ಸುಮಾರು 25ಕ್ಕೂ ಹೆಚ್ಚು ಸಾಂಸ್ಕೃತಿಕ ಹಾಗೂ ಜನಪದ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸುತ್ತಿವೆ.&lt;/p&gt;&lt;h2&gt;ಅಂಬಾಸಿಡರ್&zwnj; ಕಾರು ಪ್ರಮುಖ ಆಕರ್ಷಣೆ:&lt;/h2&gt;&lt;p&gt;ಯಡಿಯೂರಪ್ಪನವರ ಹೋರಾಟದ ದಿನಗಳ ನೆನಪಾಗಿ ಉಳಿದಿರುವ ಅವರ ವಾಹನ (ಅಂಬಾಸಿಡರ್&zwnj; ಕಾರು ಸಿಕೆಆರ್&zwnj; 45) ಸಹ ಪ್ರಮುಖ ಆಕರ್ಷಣೆಯಾಗಲಿದೆ. ಮೆರವಣಿಗೆಗೆ ವಿಶೇಷ ಮೆರಗು ನೀಡಲು ಹಾಗೂ ಯಡಿಯೂರಪ್ಪನವರು ನಡೆದು ಬಂದ ಹಾದಿ, ಸಾಧನೆ ಹಾಗೂ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೀಡಲಾದ ಜನಪ್ರಿಯ ಯೋಜನೆಗಳಾದ ಭಾಗ್ಯಲಕ್ಷ್ಮಿ, ಹೆಣ್ಣುಮಕ್ಕಳಿಗೆ ಸೈಕಲ್&zwnj; ವಿತರಣೆ, ಕೃಷಿ ಬಜೆಟ್&zwnj; ಮೊದಲಾದವುಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಗಳಾಗಲಿವೆ.&lt;/p&gt;&lt;p&gt;ಮೆರವಣಿಗೆಯಲ್ಲಿ ಆರು ಎಲ್&zwj;ಇಡಿಗಳು ಇರಲಿದ್ದು, ಒಂದೊಂದರಲ್ಲಿ ಯಡಿಯೂರಪ್ಪನವರ ಬಾಲ್ಯದಿಂದ ಹಿಡಿದು ವಿಧಾನಸೌಧದವರೆಗೂ ಅವರ ಜೀವನ ಚರಿತ್ರೆಯನ್ನು ಪ್ರಸ್ತುತ ಪಡಿಸಲಾಗುವುದು. ಯಡಿಯೂರಪ್ಪ ಅವರ ಸಾಧನೆಯ ಹಾದಿಯನ್ನು ಈ ಸ್ತಬ್ಧಚಿತ್ರಗಳ ಮೂಲಕ ತೆರೆದಿಡಲಾಗುವುದು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ.&lt;/p&gt;&lt;p&gt;ಮುಖ್ಯಮಂತ್ರಿಯಾಗಿದ್ದಾಗ ಅವರು ಮಾಡಿದ ಜನಪ್ರಿಯ ಯೋಜನೆಗಳಾದ ಭಾಗ್ಯಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಸೈಕಲ್ ವಿತರಣೆ, ಕೃಷಿ ಬಜೆಟ್ ಮೊದಲಾದವುಗಳ ಪ್ರದರ್ಶನದ ಸ್ತಬ್ದ ಚಿತ್ರಗಳು ಶುಕ್ರವಾರ ಮಧ್ಯಾಹ್ನದ ವೇಳೆಗೆ ಸಜ್ಜಾಗಲಿವೆ.&lt;/p&gt;&lt;p&gt;ರಾಜ್ಯದ ವಿವಿಧೆಡೆಗಳಿಂದ ಪೂಜಾ ಕುಣಿತ, ಪಟ ಕುಣಿತ, ಕೋಲಾಟ, ಗಾರುಡಿ ಗೊಂಬೆ, ಚಿಟ್ಟೆಮೇಳ, ಮಹಿಳಾ ವೀರಗಾಸೆ, ಮಹಿಳಾ ತಮಟೆ, ವೀರಗಾಸೆ, ಗೊರವರ ಕುಣಿತ, ಬೇಡರವೇಷ, ಹಗಲು ವೇಷ, ಡೊಳ್ಳು ಕುಣಿತ, ಕಂಸಾಳೆ, ಕೊಂಬು ಕಹಳೆ, ಲಂಬಾಣಿ ನೃತ್ಯ, ಕೀಲು ಕುದುರೆ, ರಾಜರಾಣಿ, ಉಗ್ರನರಸಿಂಹ, ಮಹಿಷಾಸುರ ಜೋಕರ್, ನಂಧಿ ಧ್ವಜ, ವೀರಭದ್ರ ಕುಣಿತ, ನಗಾರಿ, ಸೋಮನ ಕುಣಿತ, ಚಂಡೆವಾದನ, ರಂಗ ಕುಣಿತ, ಗೋರುಕಾನ ನೃತ್ಯ ಸೇರಿದಂತೆ 25ಕ್ಕೂ ಹೆಚ್ಚು ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳು ಭಾಗವಹಿಸಲಿವೆ.&lt;/p&gt;&lt;p&gt;ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/abhimanotsava-tableaux-to-showcase-bs-yediyurappa-s-life-long-contributions-rav/articleshow-p360rkm"/>
        </item>
        <item>
            <title><![CDATA[ಮಿನಿ ದಸರಾ ರೀತಿ ಇಂದು ಬಿಎಸ್‌ವೈ ಪುರಪ್ರವೇಶ! ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್‌ವೈ ಅಭಿಮಾನೋತ್ಸವ’]]></title>
            <link>https://kannada.asianetnews.com/state/mini-dasar-style-entry-bs-yediyurappa-to-arrive-in-chitradurga-today-for-abhimanotsava-rav/articleshow-rekdnl4</link>
            <guid isPermaLink="true">https://kannada.asianetnews.com/state/mini-dasar-style-entry-bs-yediyurappa-to-arrive-in-chitradurga-today-for-abhimanotsava-rav/articleshow-rekdnl4</guid>
            <pubDate>Fri, 08 May 2026 06:33:19 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಸವಿನೆನಪಿಗಾಗಿ ಚಿತ್ರದುರ್ಗದಲ್ಲಿ 'ಬಿಎಸ್&zwnj;ವೈ ಅಭಿಮಾನೋತ್ಸವ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು, ರೈತರು, ಸಾಂಸ್ಕೃತಿಕ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ &amp;nbsp;ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jygastagxbc4xtqssbmztxdg,imgname-----------------------2025-06-24t121237.239-1750747375952.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಚಿತ್ರದುರ್ಗ:&lt;/strong&gt; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜಕೀಯ ಪ್ರವೇಶಿಸಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲು ಶನಿವಾರ ಮಧ್ಯಾಹ್ನ ಚಿತ್ರದುರ್ಗದಲ್ಲಿ ಆಯೋಜಿಸಿರುವ &lsquo;ಬಿಎಸ್&zwnj;ವೈ ಅಭಿಮಾನೋತ್ಸವ&rsquo;ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರೈತ ನಾಯಕನ ಅದ್ಧೂರಿ ಸ್ವಾಗತಕ್ಕೆ ಕೋಟೆ ನಗರಿ ಸಜ್ಜಾಗಿದೆ.&lt;/p&gt;&lt;p&gt;ಶುಕ್ರವಾರ ಸಂಜೆ 4 ಗಂಟೆಗೆ ಹೊಳಲ್ಕೆರೆ ರಸ್ತೆಯ ಕನಕ ವೃತ್ತಕ್ಕೆ ಆಗಮಿಸುವ ಯಡಿಯೂರಪ್ಪ ಅವರನ್ನು ಒಂದು ಸಾವಿರ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಲಿದ್ದಾರೆ. ರೈತರು ಸಾಂಪ್ರದಾಯಿಕ ರಾಶಿ ಪೂಜೆಯೊಂದಿಗೆ ರೈತ ಗೌರವ ಸಲ್ಲಿಸಲಿದ್ದಾರೆ. ಬಳಿಕ, ಯಡಿಯೂರಪ್ಪ ಅವರನ್ನು ಪುಷ್ಪಾಲಂಕೃತ ಸಾರೋಟಿನಲ್ಲಿ ಕುಳ್ಳಿರಿಸಿ, ಕನಕದಾಸ ವೃತ್ತದ ಸಮೀಪ ಚಂದ್ರವಳ್ಳಿ ಮೈದಾನದಿಂದ ಅದ್ಧೂರಿ ಮೆರವಣಿಗೆಯಲ್ಲಿ ಕರೆತರಲಾಗುವುದು.&lt;/p&gt;&lt;p&gt;&lsquo;ಮಿನಿ ದಸರಾ&rsquo; ರೀತಿ ಸಾಗಲಿರುವ ಈ ಮೆರವಣಿಗೆಯಲ್ಲಿ 2,000ಕ್ಕೂ ಹೆಚ್ಚಿನ ಸಂಖ್ಯೆಯ ರೈತರು ನೇಗಿಲು ಹಿಡಿದು ಶಿಸ್ತುಬದ್ಧವಾಗಿ ರೈತ ಘೋಷಣೆಯೊಂದಿಗೆ ನಡೆದು ಬರಲಿದ್ದಾರೆ. ಒನಕೆ ಓಬವ್ವನ ನೆಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ &lsquo;ನಾರಿ ಶಕ್ತಿ ವಂದನ್&zwnj;ʼ ಕಾಯ್ದೆಗೆ ಗೌರವ ಸಲ್ಲಿಸಲು 200ಕ್ಕೂ ಹೆಚ್ಚು ಮಹಿಳೆಯರು ಒನಕೆ ಓಬವ್ವನ ಪಾತ್ರಧಾರಿಗಳಾಗಿ ಶಿಸ್ತುಬದ್ಧವಾಗಿ ಮೆರವಣಿಗೆಯಲ್ಲಿ ನಡೆದು ಬರಲಿದ್ದಾರೆ. 25ಕ್ಕೂ ಹೆಚ್ಚು ಸಾಂಸ್ಕೃತಿಕ ಹಾಗೂ ಜಾನಪದ ಕಲಾತಂಡಗಳು ಯಡಿಯೂರಪ್ಪನವರು ನಡೆದು ಬಂದ ಹಾದಿ, ಸಾಧನೆ ಹಾಗೂ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನೀಡಲಾದ ಜನಪ್ರಿಯ ಯೋಜನೆಗಳಾದ ಭಾಗ್ಯಲಕ್ಷ್ಮಿ, ಹೆಣ್ಣುಮಕ್ಕಳಿಗೆ ಸೈಕಲ್&zwnj; ವಿತರಣೆ, ಕೃಷಿ ಬಜೆಟ್&zwnj; ಮೊದಲಾದವುಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿ ಬರಲಿವೆ.&lt;/p&gt;&lt;p&gt;ಯಡಿಯೂರಪ್ಪನವರ ಹೋರಾಟದ ದಿನಗಳ ನೆನಪಾಗಿ ಉಳಿದಿರುವ ಅವರ ವಾಹನ (ಅಂಬಾಸಿಡರ್&zwnj; ಕಾರು ಸಿಕೆಆರ್&zwnj; 45) ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಚಿವ ಶ್ರೀರಾಮುಲು ಸೇರಿ ಜನಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.&lt;/p&gt;&lt;p&gt;ಯಡಿಯೂರಪ್ಪ ಅವರ ಪುರಪ್ರವೇಶಕ್ಕೆ ಇಡೀ ಚಿತ್ರದುರ್ಗ ನಗರವನ್ನು ಸಿಂಗರಿಸಲಾಗಿದೆ. ಎಲ್ಲೆಡೆ ಕೇಸರಿ ಬಾವುಟಗಳು ಹಾರಾಡುತ್ತಿವೆ. ನಗರದ ತುಂಬೆಲ್ಲಾ ಯಡಿಯೂರಪ್ಪ ಅವರನ್ನು ಸ್ವಾಗತಿಸುವ, ಅಭಿನಂದಿಸುವ ಕಟೌಟ್&zwnj;ಗಳು ರಾರಾಜಿಸುತ್ತಿವೆ.&lt;/p&gt;&lt;p&gt;&lt;strong&gt;10 ಲಕ್ಷ ಜನರ ಸಮ್ಮುಖ ನಾಳೆ ಅಭಿಮಾನೋತ್ಸವ&lt;/strong&gt;&lt;/p&gt;&lt;p&gt;ಶನಿವಾರ ಮಧ್ಯಾಹ್ನ ನಡೆಯಲಿರುವ ಅಭಿಮಾನೋತ್ಸವವನ್ನು ಕೇಂದ್ರ ಗೃಹ ಸಚಿವ ಅಮಿತ್&zwnj; ಶಾ ಉದ್ಘಾಟಿಸಲಿದ್ದಾರೆ. ಸಾವಿರಕ್ಕೂ ಹೆಚ್ಚು ಮಠಾಧೀಶರು, 10 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕಾಗಿ ಬೃಹತ್&zwnj; ವೇದಿಕೆ ನಿರ್ಮಿಸಲಾಗಿದೆ. ಈ ವೇಳೆ, &lsquo;ಕೆಂದಾವರೆ-ಕಮಲದಲ್ಲಿ ಅರಳಿದ ಹೂ&rsquo; ಹಾಗೂ &lsquo;ಸದನದಲ್ಲಿ ಶಿಕಾರಿ&rsquo; ಎಂಬ ಎರಡು ಅಭಿನಂದನಾ ಗ್ರಂಥಗಳನ್ನು ಬಿಡುಗಡೆಗೊಳಿಸಲಾಗುವುದು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>karnataka-districts</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/mini-dasar-style-entry-bs-yediyurappa-to-arrive-in-chitradurga-today-for-abhimanotsava-rav/articleshow-rekdnl4"/>
        </item>
        <item>
            <title><![CDATA[ರಾಜಕೀಯದಲ್ಲಿ ಸಕ್ರಿಯ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ: ಎಂಎಲ್‌ಸಿ ಎಚ್‌.ವಿಶ್ವನಾಥ್]]></title>
            <link>https://kannada.asianetnews.com/karnataka-districts/mlc-h-vishwanath-on-karnataka-politics-and-elections-gvd/articleshow-xta8yss</link>
            <guid isPermaLink="true">https://kannada.asianetnews.com/karnataka-districts/mlc-h-vishwanath-on-karnataka-politics-and-elections-gvd/articleshow-xta8yss</guid>
            <pubDate>Thu, 07 May 2026 23:26:59 +0530</pubDate>
            <description><![CDATA[&lt;p&gt;ಈಗ ಪರಿಸ್ಥಿತಿ ಬದಲಾಗಿದೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್ ಘೋಷಿಸಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kky3957ykh6500xwyaht3dsk,imgname-h-vishwanath-1773757830398.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ.07):&lt;/strong&gt; ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್&zwnj; ಘೋಷಿಸಿದರು. ನಾನು ಈ ಹಿಂದೆ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಜನರೇ ಖರ್ಚಿಗೆ ಹಣ ನೀಡಿ ಆಶೀರ್ವದಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ 50 ಕೋಟಿ ರು. ಬೇಕು. ರಿಯಲ್&zwnj; ಎಸ್ಟೇಟ್&zwnj; ವ್ಯವಹಾರದಲ್ಲಿ ತೊಡಗಿದವರು ತಮ್ಮ ಜಮೀನು, ಮನೆ ಮಾರಿ ಸ್ಪರ್ಧಿಸಬಹುದು. ಆದರೆ, ನಮ್ಮಿಂದ ಅದು ಸಾಧ್ಯವಿಲ್ಲ ಎಂದರು. ನನ್ನ ಬಳಿ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಹೀಗಿರುವಾಗ ಸ್ಪರ್ಧೆ ಹೇಗೆ ಸಾಧ್ಯ?.&lt;/p&gt;&lt;p&gt;ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸುವುದು ಸಾಮಾನ್ಯ ವ್ಯಕ್ತಿಗೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ಮುಂದಿನ ಯಾವುದೇ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ. ಸಧ್ಯದ ಪರಿಸ್ಥಿತಿ ಗಮನಿಸಿದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಅಪಾರ ಹಣದ ಅವಶ್ಯಕತೆ ಇದೆ. ಅಷ್ಟು ದೊಡ್ಡ ಮೊತ್ತ ಖರ್ಚು ಮಾಡುವ ಶಕ್ತಿ ನನ್ನಲ್ಲಿಲ್ಲ. ಅಲ್ಲದೇ, ನನ್ನ ಮಕ್ಕಳು ಕೂಡ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ತಮ್ಮ ಶಕ್ತಿ ಅನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದರು.&lt;/p&gt;&lt;p&gt;ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಕ್ರಮಕ್ಕೆ ಸರಿಯಲ್ಲ. ಹಿರಿಯ ಅಧಿಕಾರಿ ರಾಮಚಂದ್ರರಾವ್ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರನ್ನು ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಕರ್ತವ್ಯಕ್ಕೆ ಮರು ನಿಯೋಜಿಸಿರುವುದು ಸರಿಯಲ್ಲ. ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದ್ದು, ಗೃಹ ಇಲಾಖೆಯನ್ನು ಪರಮೇಶ್ವರ್ ನಡೆಸುತ್ತಿದ್ದಾರೋ ಅಥವಾ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನಡೆಸುತ್ತಿದ್ದಾರಾ? ಎಂಬ ಅನುಮಾನವಿದೆ. ರಾಮಚಂದ್ರ ರಾವ್ ಅವರ ಅಮಾನತು ಆದೇಶ ಹಿಂಪಡೆಯಲು ದೊಡ್ಡಮಟ್ಟದ ಕಿಕ್ ಬ್ಯಾಕ್ ಪಡೆದಿರುವ ಸಾಧ್ಯತೆ ಇದೆ ಎಂದು ದೂರಿದರು.&lt;/p&gt;&lt;p&gt;ಈ ಹಿಂದೆ ಕೇರಳ ಬಸ್&zwnj;ನಲ್ಲಿ ಸಿಕ್ಕಿದ್ದ 2 ಕೋಟಿ ಹಣವನ್ನು ಕೊಂಡೊಯ್ದು ಇನ್&zwnj; ಸ್ಪೆಕ್ಟರ್&zwnj; ವಿರುದ್ಧ ಪ್ರಕರಣ ದಾಖಲಿಸಿದ್ದ ರಾಮಚಂದ್ರರಾವ್. ಅವರ ಸಾಕು ಮಗಳು ರನ್ಯಾರಾವ್ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಪರಿಣಾಮ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ, ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೂಡ ಕೇಳಿಬಂದಿತ್ತು. ನ್ಯಾಯ ಕೇಳಲು ಬಂದಿದ್ದ ಮಹಿಳೆಯ ಮೇಲೆ ರಾಮಚಂದ್ರ ರಾವ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ವಿಡಿಯೋ ನನ್ನದಲ್ಲ ಎಂದು ವಾದಿಸಿದ್ದರು. ಆ ನಂತರ ವಿಧಿವಿಜ್ಞಾನ ಪ್ರಯೋಗಾಲಯ ನೀಡಿದ ವರದಿಯಲ್ಲಿ ಆ ವಿಡಿಯೋ ರಾಮಚಂದ್ರರಾವ್ ಅವರದ್ದೇ ಎಂಬುದು ಸಾಬೀತಾದ ಕಾರಣ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿರುವುದು ಸರಿಯಲ್ಲ. ಈ ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ ಅವರು, ರಾಜ್ಯದಲ್ಲಿ ಯಾವ ಸೀಮೆಯ ಅಧಿಕಾರ ನಡೆಯುತ್ತಿದೆ ಎಂದು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಪೋಕ್ಸೋ ಪ್ರಕರಣ ಎದುರಿಸಿದವರ ಅಭಿಮಾನೋತ್ಸವ&lt;/strong&gt;&lt;/h2&gt;&lt;p&gt;ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಬಿಎಸ್&zwnj;ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿರುವ ಎಚ್&zwnj;.ವಿಶ್ವನಾಥ್, ಪೋಕ್ಸೋ ಪ್ರಕರಣಕ್ಕೆ ಯಡಿಯೂರಪ್ಪ ಗುರಿಯಾಗಿದ್ದು, ಇದು ಗಂಭೀರ ಪ್ರಕರಣ. ಆದರೂ ಇದೀಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್&zwnj; ಶಾ ಆಗಮಿಸುತ್ತಿರುವುದು ಹಾಸ್ಯಾಸ್ಪದ ಎಂದರು. ಒಟ್ಟಾರೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮೇಲಿನ ಅಮಾನತು ಆದೇಶ ಹಿಂದಕ್ಕೆ ಹಾಗೂ ಪೋಕ್ಸೊ ಕೇಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ಅವರ ಅಭಿಮಾನೋತ್ಸವ ರಾಜ್ಯಕ್ಕೆ ಎರಡು ಕಪ್ಪುಚುಕ್ಕೆ ಪ್ರಕರಣಗಳು ಎಂದರು.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mlc-h-vishwanath-on-karnataka-politics-and-elections-gvd/articleshow-xta8yss"/>
        </item>
        <item>
            <title><![CDATA[ಅಂಜನಾದ್ರಿ ಹನುಮ ದೇವರಿಗೆ ₹2.5 ಕೋಟಿ ಮೌಲ್ಯದ ಬಂಗಾರದ ಕಿರೀಟ, ಗದೆ: ಎ.ಎಂ.ಆರ್ ಗ್ರೂಪ್ ಮಹೇಶ್ ರೆಡ್ಡಿ ಅರ್ಪಣೆ!]]></title>
            <link>https://kannada.asianetnews.com/gallery/state/hampi-near-anjanadri-hill-hanuman-gold-crown-mace-offering-amr-group-mahesh-reddy-sat-q5a71b3</link>
            <guid isPermaLink="true">https://kannada.asianetnews.com/gallery/state/hampi-near-anjanadri-hill-hanuman-gold-crown-mace-offering-amr-group-mahesh-reddy-sat-q5a71b3</guid>
            <pubDate>Thu, 07 May 2026 21:30:28 +0530</pubDate>
            <description><![CDATA[&lt;p&gt;ಕೊಪ್ಪಳದ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿಗೆ, ಎ.ಎಂ.ಆರ್ ಗ್ರೂಪ್&zwnj;ನ ಅಧ್ಯಕ್ಷರಾದ ಡಾ. ಎ. ಮಹೇಶ್ ರೆಡ್ಡಿ ಅವರು 2.50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ, ಗದೆ ಹಾಗೂ ಪ್ರಭಾವಳಿಯನ್ನು ಹರಕೆಯಾಗಿ ಸಮರ್ಪಿಸಿದ್ದಾರೆ. ಈ ಅಂಗವಾಗಿ ಮೇ 8 ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr1hn3dp6sw6w2adph3pxmne,imgname-anjanadri-temple-janardhana-reddy-gold-gift-1778168532406.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೊಪ್ಪಳದ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿಗೆ, ಎ.ಎಂ.ಆರ್ ಗ್ರೂಪ್&zwnj;ನ ಅಧ್ಯಕ್ಷರಾದ ಡಾ. ಎ. ಮಹೇಶ್ ರೆಡ್ಡಿ ಅವರು 2.50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ, ಗದೆ ಹಾಗೂ ಪ್ರಭಾವಳಿಯನ್ನು ಹರಕೆಯಾಗಿ ಸಮರ್ಪಿಸಿದ್ದಾರೆ. ಈ ಅಂಗವಾಗಿ ಮೇ 8 ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.&lt;/p&gt;&lt;img&gt;&lt;p&gt;&lt;strong&gt;ಕೊಪ್ಪಳ (ಮೇ 07): ಶ್ರೀ&lt;/strong&gt;ರಾಮನ ಭಂಟ ಹನುಮಂತನ ಜನ್ಮಸ್ಥಳವಾಗಿ ವಿಶ್ವವಿಖ್ಯಾತಿ ಪಡೆದಿರುವ ಅಂಜನಾದ್ರಿ ಬೆಟ್ಟದಲ್ಲಿ ಭಕ್ತಿಯ ಪರಾಕಾಷ್ಠೆ ಕಂಡುಬಂದಿದೆ. ಅಂಜನಾದ್ರಿಯ ಶ್ರೀ ಆಂಜನೇಯ ಸ್ವಾಮಿಗೆ ಭಕ್ತರೊಬ್ಬರು ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಹರಕೆ ತೀರಿಸಿದ್ದಾರೆ.&lt;/p&gt;&lt;img&gt;&lt;p&gt;ಭಾರತದ ಖ್ಯಾತ ಕನ್ಸ್ಟ್ರಕ್ಷನ್ ಸಂಸ್ಥೆಯಾದ ಎ.ಎಂ.ಆರ್ (AMR) ಗ್ರೂಪ್&zwnj;ನ ಅಧ್ಯಕ್ಷರಾದ ಡಾ. ಎ. ಮಹೇಶ್ ರೆಡ್ಡಿ ಹಾಗೂ ಅವರ ಕುಟುಂಬದವರು ಈ ಧಾರ್ಮಿಕ ಕಾರ್ಯಕ್ಕೆ ಮುಂದಾಗಿದ್ದಾರೆ. ಶ್ರೀ ಸ್ವಾಮಿಯ ಮೇಲಿನ ಅತೀವ ಭಕ್ತಿಯಿಂದಾಗಿ ಅವರು ಸುಮಾರು 2.50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿದ್ಧಪಡಿಸಲಾದ ಸುಂದರ ಬಂಗಾರದ ಕಿರೀಟ, ಗದೆ ಹಾಗೂ ಭವ್ಯವಾದ ಪ್ರಭಾವಳಿಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಈ ಆಭರಣಗಳು ಆಂಜನೇಯ ಸ್ವಾಮಿಯ ವಿಗ್ರಹಕ್ಕೆ ಮತ್ತಷ್ಟು ಕಳೆಯನ್ನು ನೀಡಲಿವೆ.&lt;/p&gt;&lt;img&gt;&lt;p&gt;ಈ ಕಾಣಿಕೆ ಅರ್ಪಣೆಯ ಅಂಗವಾಗಿ ಮೇ 8 ರಂದು ಬೆಳಿಗ್ಗೆಯಿಂದಲೇ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಶ್ರೀ ದೇವರಿಗೆ ಅರ್ಪಿಸುವ ಮೊದಲು ಹಸಿರು ಬೆಟ್ಟದ ಮಡಿಲಲ್ಲಿ ಹವನ, ಹೋಮ ಹಾಗೂ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ವೇದಮೂರ್ತಿಗಳ ಸಾರಥ್ಯದಲ್ಲಿ ನಡೆಯುವ ಈ ಪೂಜಾ ಕಾರ್ಯಕ್ರಮಗಳಲ್ಲಿ ಮಹೇಶ್ ರೆಡ್ಡಿ ಅವರ ಕುಟುಂಬದವರು ಪಾಲ್ಗೊಳ್ಳಲಿದ್ದಾರೆ.&lt;/p&gt;&lt;img&gt;&lt;p&gt;ಈ ಮಹತ್ವದ ಧಾರ್ಮಿಕ ಸಮಾರಂಭದಲ್ಲಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನರೆಡ್ಡಿ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹೊಂದಿರುವ ಶಾಸಕರು, ಈ ಭಕ್ತಿಪೂರ್ವಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.&lt;/p&gt;&lt;img&gt;&lt;p&gt;ಇತ್ತೀಚಿನ ದಿನಗಳಲ್ಲಿ ಅಂಜನಾದ್ರಿ ಬೆಟ್ಟಕ್ಕೆ ದೇಶ-ವಿದೇಶಗಳಿಂದ ಭಕ್ತರ ಆಗಮನ ಹೆಚ್ಚಾಗಿದೆ. ದೇವಸ್ಥಾನಕ್ಕೆ ಬಂಗಾರದ ಆಭರಣಗಳು ಅರ್ಪಣೆಯಾಗುತ್ತಿರುವುದು ಭಕ್ತರಲ್ಲಿ ಸಂತಸ ಮೂಡಿಸಿದೆ. ಹನುಮ ಜನ್ಮಸ್ಥಳದ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯುವ ಇಂತಹ ಕಾರ್ಯಗಳು ಪ್ರವಾಸೋದ್ಯಮ ಮತ್ತು ಧಾರ್ಮಿಕ ದೃಷ್ಟಿಯಿಂದಲೂ ಮಹತ್ವ ಪಡೆದಿವೆ.&lt;/p&gt;&lt;img&gt;&lt;p&gt;ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿಗೆ ಬಂಗಾರದ ಮೆರುಗು ಬಂದಿರುವುದು ಹನುಮ ಮಾಲೆಧಾರಿಗಳು ಹಾಗೂ ಭಕ್ತ ಸಮೂಹಕ್ಕೆ ಹಬ್ಬದ ಸಡಗರ ತಂದಿದೆ. ಇನ್ನುಮುಂದೆ ದೇವಸ್ಥಾನಕ್ಕೆ ಭದ್ರತೆಯನ್ನೂ ಹೆಚ್ಚಿಸಲಾಗುತ್ತದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/hampi-near-anjanadri-hill-hanuman-gold-crown-mace-offering-amr-group-mahesh-reddy-sat-q5a71b3"/>
        </item>
        <item>
            <title><![CDATA[ಗ್ರೇಟರ್ ರಾಜಾಸೀಟು ಕಾಮಗಾರಿಯಲ್ಲಿ ಹಣ ದುರುಪಯೋಗ: ಲೋಕಾಯುಕ್ತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ]]></title>
            <link>https://kannada.asianetnews.com/karnataka-districts/madikeri-greater-raja-seat-corruption-lokayukta-report-gvd/articleshow-qg2zm27</link>
            <guid isPermaLink="true">https://kannada.asianetnews.com/karnataka-districts/madikeri-greater-raja-seat-corruption-lokayukta-report-gvd/articleshow-qg2zm27</guid>
            <pubDate>Thu, 07 May 2026 20:55:17 +0530</pubDate>
            <description><![CDATA[&lt;p&gt;ಪ್ರವಾಸಿಗರ ಹಾಟ್ ಸ್ಪಾಟ್ ಆಗಿರುವ ಮಡಿಕೇರಿಯ ರಾಜಾಸೀಟಿಗೆ ಹೊಂದಿಕೊಂಡಂತೆ ಇರುವ ಗ್ರೇಟರ್ ರಾಜಾಸೀಟಿನಲ್ಲಿ ನಡೆದಿರುವ ಅವ್ಯವಹಾರ ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ. ಹೌದು ಮಡಿಕೇರಿಯ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hdz6g0fv3v334y6r6baa16zp,imgname-lokayukta.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಮೇ.07):&lt;/strong&gt; ಪ್ರವಾಸಿಗರ ಹಾಟ್ ಸ್ಪಾಟ್ ಆಗಿರುವ ಮಡಿಕೇರಿಯ ರಾಜಾಸೀಟಿಗೆ ಹೊಂದಿಕೊಂಡಂತೆ ಇರುವ ಗ್ರೇಟರ್ ರಾಜಾಸೀಟಿನಲ್ಲಿ ನಡೆದಿರುವ ಅವ್ಯವಹಾರ ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ. ಹೌದು ಮಡಿಕೇರಿಯ ರಾಜಾಸೀಟಿನ ಮತ್ತೊಂದು ಭಾಗವಾಗಿರುವ ಗ್ರೇಟರ್ ರಾಜಾಸೀಟಿನಲ್ಲಿ 4.5 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ನಡೆಸಿದ ಕಾಮಗಾರಿಯಲ್ಲಿ ಹಣ ದುರುಪಯೋಗ ಆಗಿರುವುದನ್ನು ಉಲ್ಲೇಖಿಸಲಾಗಿದೆ. 2019 ರಲ್ಲಿ ಲೋಕೋಪಯೋಗಿ ಇಲಾಖೆ ಮಡಿಕೇರಿ ಉಪವಿಭಾಗ ಕಚೇರಿಯಿಂದ ಕಾಮಗಾರಿ ಮಾಡಲಾಗಿತ್ತು.&lt;/p&gt;&lt;p&gt;ಆದರೆ ಸಾಕಷ್ಟು ಕಾಮಗಾರಿಗಳನ್ನು ಮಾಡದೆ ಅಪೂರ್ಣ ಕಾಮಗಾರಿಯಾಗಿದ್ದರೂ 2023 ಮಾರ್ಚ್ 18 ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಗ್ರೇಟರ್ ಉದ್ಯಾನವನವನ್ನು ಉದ್ಘಾಟಿಸಲಾಗಿತ್ತು. ಬಳಿಕ ಇದರ ವಿರುದ್ಧ ತನ್ನೀರಾ ಮೈನಾ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಲೋಕಾಯುಕ್ತ ತನಿಖೆ ಮಾಡಿದ್ದು ಕಾಮಗಾರಿ ವೇಳೆ ಹಣ ದುರುಪಯೋಗ, ಅಪೂರ್ಣ ಕಾಮಗಾರಿ ಆಗಿರುವುದು ಪತ್ತೆಯಾಗಿದೆ. ಇದೀಗ ಲೋಕಾಯುಕ್ತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.&lt;/p&gt;&lt;p&gt;ಹೀಗಾಗಿ ಸರ್ಕಾರ ಅವ್ಯವಹಾರ ನಡೆಸಿರುವವರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂದು ವರದಿ ನೀಡುವಂತೆ ಕೇಳಿದೆ. ಲೋಕಾಯುಕ್ತ ಪೊಲೀಸರಿಂದ ವರದಿ ಕೇಳಿದೆ. ತೋಟಗಾರಿಕೆ ಇಲಾಖೆಯ ಜಾಗದಲ್ಲಿ, ಪ್ರವಾಸೋದ್ಯಮ ಇಲಾಖೆ ಅನುದಾನದಿಂದ ಕಾಮಗಾರಿ ಮಾಡಲಾಗಿತ್ತು. ಉದ್ಯಾನವನ ಉದ್ಘಾಟನೆ ಆದ 6 ತಿಂಗಳ ಬಳಿಕ ಉಳಿದ ಕಾಮಗಾರಿಗಳ ಪೂರ್ಣಗೊಳಿಸಿ ಅದನ್ನು ತಮಗೆ ಹಸ್ತಾಂತರಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದಾರೆ.&lt;/p&gt;&lt;p&gt;ಆದರೆ ಇಂದಿಗೂ ಕಾಮಗಾರಿ ಪೂರ್ಣಗೊಳಿಸದೆ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆಗೆ ಉದ್ಯಾನವನವನ್ನು ಹಸ್ತಾಂತರಿಸಿಲ್ಲ. ಗ್ರೇಟರ್ ರಾಜಾಸೀಟಿಗೆ ಅಲಂಕಾರಿಕ ವಿದ್ಯುತ್ ಅಳವಡಿಕೆ ಮಾಡಬೇಕಾಗಿತ್ತು, ವಿದೇಶಿ ತಳಿಯ ಗಿಡಗಳ ಬೆಳೆಸಬೇಕಾಗಿತ್ತು, ಅವುಗಳಿಗೆ ಬೇಕಾಗಿದ್ದ ನೀರು ಪೂರೈಕೆಗೆ ಪೈಪ್ ಲೈನ್ ಅವಳಡಿಸಬೇಕಾಗಿತ್ತು. ಅದ್ಯಾವ ಕಾಮಗಾರಿ ಮಾಡದೆ ಉದ್ಯಾನವನ್ನು ಅಧಿಕಾರಿಗಳು ಅಂದಿನ ಸಿಎಂ ಅವರಿಂದ ಉದ್ಘಾಟಿಸಿದ್ದರು.&lt;/p&gt;&lt;h2&gt;&lt;strong&gt;ಸರ್ಕಾರಕ್ಕೆ ವರದಿ&lt;/strong&gt;&lt;/h2&gt;&lt;p&gt;ಹೀಗಾಗಿ ಮಡಿಕೇರಿಯ ತನ್ನೀರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರು ಆಧರಿಸಿ ತನಿಖೆಗೆ ಆದೇಶಿಸಿದ್ದ ಇಂದಿನ ಸರ್ಕಾರ, ಲೋಕಾಯುಕ್ತ ಪೊಲೀಸರಿಂದ ಕಾಮಗಾರಿ ಕುರಿತು ತನಿಖೆ ಮಾಡಲಾಗಿತ್ತು. ತನಿಖೆಯಲ್ಲಿ ಕಾಮಗಾರಿ ಕಳಪೆ ಹಾಗೂ ಹಣ ದುರುಪಯೋಗವಾಗಿರುವುದು ಸಾಬೀತಾಗಿದೆ. ಅವ್ಯವಹಾರ ಆಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.&lt;/p&gt;&lt;p&gt;ಹೀಗಾಗಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ವರದಿ ಸಲ್ಲಿಸುವಂತೆ ಇಲಾಖೆ ಮುಖ್ಯ ಕಾರ್ಯದರ್ಶಿ ಕೇಳಿದ್ದಾರೆ. ಜೊತೆಗೆ ಅಂದಿನ ಎಂಜಿನಿಯರ್ ವಿರುದ್ಧ ವಿಚಾರಣೆಗೆ ಲೋಕಾಯುಕ್ತಕ್ಕೆ ವಹಿಸಿದೆ. ಈ ಕುರಿತು ಮಾತನಾಡಿರುವ ತನ್ನೀರಾ ಮೈನಾ ಅಂದಿನ ಸಿಎಂ ಅವರಿಗೆ ಸುಳ್ಳು ಮಾಹಿತಿ ನೀಡಿ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಉದ್ಘಾಟಿಸಿರುವ ಅಂದಿನ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು, ಅಂದಿನ ಶಾಸಕರು ಜಿಲ್ಲೆಯ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/madikeri-greater-raja-seat-corruption-lokayukta-report-gvd/articleshow-qg2zm27"/>
        </item>
        <item>
            <title><![CDATA[ವಿಜಯಪುರ ಟಿಸಿ ರಿಪೇರಿಗೆ ಮೇಲೆ ಹತ್ತಿಸಿ, ಕರೆಂಟ್ ಚಾರ್ಜ್ ಮಾಡಿದ ಕೆಇಬಿ; ಕಂಬದಲ್ಲೇ ಪ್ರಾಣಬಿಟ್ಟ ಲೈನ್‌ಮ್ಯಾನ್!]]></title>
            <link>https://kannada.asianetnews.com/gallery/karnataka-districts/vijayapura-lineman-sridhar-lamani-electrocuted-to-death-ukkali-village-sat-bvp5cap</link>
            <guid isPermaLink="true">https://kannada.asianetnews.com/gallery/karnataka-districts/vijayapura-lineman-sridhar-lamani-electrocuted-to-death-ukkali-village-sat-bvp5cap</guid>
            <pubDate>Thu, 07 May 2026 20:34:33 +0530</pubDate>
            <description><![CDATA[&lt;p&gt;ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದಲ್ಲಿ, ಟಿಸಿ ರಿಪೇರಿ ಮಾಡುತ್ತಿದ್ದ 21 ವರ್ಷದ ಲೈನ್&zwnj;ಮ್ಯಾನ್ ಶ್ರೀಧರ್ ಲಮಾಣಿ ವಿದ್ಯುತ್ ಶಾಕ್&zwnj;ನಿಂದ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ ಲೈನ್ ಕ್ಲಿಯರೆನ್ಸ್ (LC) ಪಡೆದಿದ್ದರೂ ವಿದ್ಯುತ್ ಪ್ರವಹಿಸಿದ್ದರಿಂದ ಈ ದುರಂತ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr1f02n4m3ar1kqmw1cnrcrm,imgname-lineman-sridhar-lamani-1778165746339.jpg" type="image/jpeg" height="390" width="690"/>
            <content:encoded><![CDATA[&lt;p&gt;ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದಲ್ಲಿ, ಟಿಸಿ ರಿಪೇರಿ ಮಾಡುತ್ತಿದ್ದ 21 ವರ್ಷದ ಲೈನ್&zwnj;ಮ್ಯಾನ್ ಶ್ರೀಧರ್ ಲಮಾಣಿ ವಿದ್ಯುತ್ ಶಾಕ್&zwnj;ನಿಂದ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ ಲೈನ್ ಕ್ಲಿಯರೆನ್ಸ್ (LC) ಪಡೆದಿದ್ದರೂ ವಿದ್ಯುತ್ ಪ್ರವಹಿಸಿದ್ದರಿಂದ ಈ ದುರಂತ ಸಂಭವಿಸಿದೆ.&lt;/p&gt;&lt;img&gt;&lt;p&gt;ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಉಕ್ಕಲಿ ಗ್ರಾಮದಲ್ಲಿ ಶನಿವಾರ ಘೋರ ದುರಂತವೊಂದು ಸಂಭವಿಸಿದೆ. ವಿದ್ಯುತ್ ಪರಿವರ್ತಕ (TC) ರಿಪೇರಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ, 21 ವರ್ಷದ ಯುವ ಲೈನ್ ಮನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಕೆಇಬಿ (ಹೆಸ್ಕಾಂ) ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.&lt;/p&gt;&lt;img&gt;&lt;p&gt;ಮೃತ ಲೈನ್ ಮನ್ ಅನ್ನು ಶ್ರೀಧರ್ ಲಮಾಣಿ (21) ಎಂದು ಗುರುತಿಸಲಾಗಿದೆ. ಇವರು ವಿಜಯಪುರ ಜಿಲ್ಲೆಯ ಉಕ್ಕಲಿ ಸಬ್ ಸ್ಟೇಷನ್&zwnj;ನಲ್ಲಿ ಲೈನ್ ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಕ್ಕಲಿ ಗ್ರಾಮದ ಜಮೀನೊಂದರಲ್ಲಿ ವಿದ್ಯುತ್ ಪರಿವರ್ತಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಶ್ರೀಧರ್ ಅವರು ಸ್ಥಳಕ್ಕೆ ತೆರಳಿದ್ದರು.&lt;/p&gt;&lt;img&gt;&lt;p&gt;ಯಾವುದೇ ವಿದ್ಯುತ್ ಲೈನ್ ರಿಪೇರಿ ಮಾಡುವ ಮೊದಲು ವಿದ್ಯುತ್ ಸಂಪರ್ಕ ಕಡಿತಗೊಳಿಸಲು 'ಲೈನ್ ಕ್ಲಿಯರೆನ್ಸ್' (LC) ಪಡೆಯುವುದು ಕಡ್ಡಾಯ. ಅದರಂತೆ ಶ್ರೀಧರ್ ಅವರು ಕೂಡ ಕೆಇಬಿ ಕಚೇರಿಯಿಂದ ಅಧಿಕೃತವಾಗಿ ಎಲ್ಸಿ ಪಡೆದೇ ಟಿಸಿ ಮೇಲೆ ಏರಿ ರಿಪೇರಿ ಕಾರ್ಯ ಆರಂಭಿಸಿದ್ದರು.&lt;/p&gt;&lt;p&gt;ಆದರೆ, ದುರಂತವೆಂದರೆ ಶ್ರೀಧರ್ ಅವರು ಕೆಲಸ ಮಾಡುತ್ತಿರುವಾಗಲೇ ಏಕಾಏಕಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ವೇಳೆ ವಿದ್ಯುತ್ ಪ್ರವಹಿಸಿ ಶ್ರೀಧರ್ ಅವರು ಕಂಬದ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ.&lt;/p&gt;&lt;img&gt;&lt;p&gt;ಕೇವಲ 21 ವರ್ಷದ ಹರೆಯದಲ್ಲೇ ಶ್ರೀಧರ್ ಸಾವನ್ನಪ್ಪಿರುವುದು ಅವರ ಕುಟುಂಬಸ್ಥರಲ್ಲಿ ಮಡುಗಟ್ಟಿದ ಹತಾಶೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಬಡತನದ ಹಿನ್ನೆಲೆಯಲ್ಲಿ ಕೆಲಸಕ್ಕೆ ಸೇರಿದ್ದ ಮಗ, ಇಲಾಖೆಯ ನಿರ್ಲಕ್ಷ್ಯದಿಂದಾಗಿ ಹೆಣವಾಗಿ ಮನೆಗೆ ಮರಳಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. &lsquo;ಎಲ್ಸಿ ಪಡೆದ ಮೇಲೂ ವಿದ್ಯುತ್ ಸಂಪರ್ಕ ನೀಡಿದ್ದು ಯಾರು? ನನ್ನ ಮಗನ ಸಾವಿಗೆ ಯಾರು ಹೊಣೆ?&rsquo; ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.&lt;/p&gt;&lt;img&gt;&lt;p&gt;ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀಧರ್ ಅವರ ಮೃತದೇಹವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಯಾರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂಬ ಬಗ್ಗೆ ತನಿಖೆ ಆರಂಭವಾಗಿದೆ.&lt;/p&gt;&lt;img&gt;&lt;p&gt;ವಿದ್ಯುತ್ ಇಲಾಖೆಯ ಸಿಬ್ಬಂದಿಗಳು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಆದರೆ, ಅತೀ ಸಣ್ಣ ನಿರ್ಲಕ್ಷ್ಯವೂ ಇಂತಹ ದೊಡ್ಡ ಪ್ರಾಣಾಪಾಯಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/vijayapura-lineman-sridhar-lamani-electrocuted-to-death-ukkali-village-sat-bvp5cap"/>
        </item>
        <item>
            <title><![CDATA[ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು: ಪಟ್ಟಣಶೆಟ್ಟಿ ಟೀಕೆ]]></title>
            <link>https://kannada.asianetnews.com/karnataka-districts/gangavathi-congress-internal-conflict-somanath-patnashetty-gvd/articleshow-m5b0q18</link>
            <guid isPermaLink="true">https://kannada.asianetnews.com/karnataka-districts/gangavathi-congress-internal-conflict-somanath-patnashetty-gvd/articleshow-m5b0q18</guid>
            <pubDate>Thu, 07 May 2026 19:09:42 +0530</pubDate>
            <description><![CDATA[&lt;p&gt;ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಪಕ್ಷದವರೇಯಾಗಿರುವ ಮುಖಂಡ ಹಾಗು ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿ ಟೀಕಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr1amp5ttxxwmqt5kw1zgtst,imgname-whatsapp-image-2026-05-07-at-6.46.42-pm-1778161178810.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗಂಗಾವತಿ (ಮೇ.07): &lt;/strong&gt;ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಪಕ್ಷದವರೇಯಾಗಿರುವ ಮುಖಂಡ ಹಾಗು ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿ ಟೀಕಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರುಗಳ ಒಗ್ಗಟ್ಟಿನ ಕೊರತೆ ಕಾಣುತ್ತದೆ.&lt;/p&gt;&lt;p&gt;ಇದರಿಂದ ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಇದೇಯೋ ಇಲ್ಲವೋ ಎನ್ನುವಂತಾಗಿದೆ ಎಂದು ತಿಳಿಸಿದ್ದಾರೆ. ಗಂಗಾವತಿ ನಗರದಲ್ಲಿ ಕಾಂಗ್ರೆಸ್ ಪಕ್ಷದವರೇ ಆಗಿರುವ ಇಬ್ಬರು ಮಾಜಿ ಸಚಿವರು, ಮಾಜಿ ಶಾಸಕರು ಇದ್ದರು. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ದೂರಿದ್ದಾರೆ.&lt;/p&gt;&lt;p&gt;ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮತ್ತು ಕೊಪ್ಪಳ ಸಂಸದರು ಕಾಂಗ್ರೆಸ್ ಮತ್ತು ಸಚಿವರು ಕಾಂಗ್ರೆಸ್ ಇದ್ದರು ಸಹ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಕುಂಠಿತವಾಗಿದೆ ಎಂದು ದೂರಿರುವ ಅವರು ಆದರೆ ತಾವು ಪಕ್ಷದ ಸಂಘಟನೆಗೆ ಶ್ರಮಿಸುತ್ತೆನೆ ಎಂದು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಭಿನ್ನಾಭಿಪ್ರಾಯ ಬಿಡಿ&lt;/strong&gt;&lt;/h2&gt;&lt;p&gt;ಈ ಹಿಂದೆ ಕಾಂಗ್ರೆಸ್ ಸರಕಾರ ಬಡವರ ಹಿತ ಕಾಪಾಡಿದ ಇತಿಹಾಸ ಇದೆ. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇದೆ ಮುಖಂಡರುಗಳು ಭಿನ್ನಾಭಿಪ್ರಾಯ ಬಿಟ್ಟು ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಹಿತ ಕಾಪಾಡಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ. ಮುಂಬರುವ ಎಲ್ಲಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮುಖಂಡರು ಪಕ್ಷದ ಶ್ರೇಯೋಭಿವೃದ್ಧಿಗೆ ದುಡಿಯಬೇಕಾಗಿದೆ ಎಂದರು.&lt;/p&gt;]]></content:encoded>
            <category>karnataka-districts</category>
            <dc:creator>Asianet News</dc:creator>
            <atom:link href="https://kannada.asianetnews.com/karnataka-districts/gangavathi-congress-internal-conflict-somanath-patnashetty-gvd/articleshow-m5b0q18"/>
        </item>
        <item>
            <title><![CDATA[ದುಬಾರೆಯಲ್ಲಿ 7.30 ಕೋಟಿ ರೂ. ವೆಚ್ಚದ ತೂಗು ಸೇತುವೆ, ಮಾನವ ವನ್ಯಜೀವಿ ಸಂಘರ್ಷಕ್ಕೆ ಸಿಗುವುದೇ ಮುಕ್ತಿ?]]></title>
            <link>https://kannada.asianetnews.com/karnataka-districts/kushalnagar-dubare-development-rs-7-3-crore-hanging-bridge-announced-focus-on-human-elephant-conflict-gdp/articleshow-6ufxh8u</link>
            <guid isPermaLink="true">https://kannada.asianetnews.com/karnataka-districts/kushalnagar-dubare-development-rs-7-3-crore-hanging-bridge-announced-focus-on-human-elephant-conflict-gdp/articleshow-6ufxh8u</guid>
            <pubDate>Thu, 07 May 2026 18:05:36 +0530</pubDate>
            <description><![CDATA[ಕೊಡಗಿನ ದುಬಾರೆಯಲ್ಲಿ 7.30 ಕೋಟಿ ರೂ. ವೆಚ್ಚದ ತೂಗು ಸೇತುವೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸೇತುವೆಯು 150ಕ್ಕೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಕಲ್ಪಿಸಲಿದ್ದು, ಇದೇ ವೇಳೆ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ವನ್ಯಜೀವಿಗಳ ಸಂತಾನ ನಿಯಂತ್ರಣದಂತಹ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kr16phy59ytgy0ty9je380pq,imgname-dubare-1778157045701.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಶಾಲನಗರ:&lt;/strong&gt; ಕೊಡಗು ಜಿಲ್ಲೆಯ ಕುಶಾಲನಗರ ವಲಯದ ದುಬಾರೆ ಪ್ರದೇಶದಲ್ಲಿ ವನ್ಯಜೀವಿ ಸಂರಕ್ಷಣೆ, ಮಾನವ-ಆನೆ ಸಂಘರ್ಷ ನಿಯಂತ್ರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳು ನಡೆದಿವೆ. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ದುಬಾರೆ ಕಾವೇರಿ ಹೊಳೆಯಲ್ಲಿ ನಿರ್ಮಿಸಲಾಗುತ್ತಿರುವ ತೂಗು ಸೇತುವೆ ಮತ್ತು ಅಧಿಕಾರಿಗಳ ವಸತಿ ಗೃಹಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.&lt;/p&gt;&lt;p&gt;ವನ್ಯಜೀವಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಳ್ಳುತ್ತಿರುವುದನ್ನು ಉಲ್ಲೇಖಿಸಿದ ಸಚಿವರು, ಜನರ ಜೀವ ಹಾಗೂ ಬೆಳೆ ಹಾನಿ ತಡೆಗಟ್ಟಲು ಆಯ್ದ ಪ್ರದೇಶಗಳಲ್ಲಿ ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಬಗ್ಗೆ ತಜ್ಞರ ಸಲಹೆಗಳು ಬಂದಿವೆ ಎಂದು ತಿಳಿಸಿದರು. ಈ ವಿಷಯದ ಕುರಿತು ಸಾರ್ವಜನಿಕ ಮಟ್ಟದಲ್ಲಿ ಹಾಗೂ ತಜ್ಞರ ನಡುವೆ ವ್ಯಾಪಕ ಚರ್ಚೆ ನಡೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.&lt;/p&gt;&lt;p&gt;ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ಈಗಾಗಲೇ ವರದಿ ಸಲ್ಲಿಸಿದ್ದಾರೆ. ಕಾಡಿನಂಚಿನ ಗ್ರಾಮಸ್ಥರು ಕೂಡ ತಮ್ಮ ಅನುಭವ ಹಾಗೂ ಸಲಹೆಗಳನ್ನು ಹಂಚಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು. ರೈಲ್ವೆ ಬ್ಯಾರಿಕೇಡ್&zwnj;ಗಳು, ಆನೆ ಕಂದಕಗಳ ನಿರ್ಮಾಣಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ತಿಳಿಸಿದ ಅವರು, ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.&lt;/p&gt;&lt;p&gt;ಅರಣ್ಯವಾಸಿಗಳು ಹಾಗೂ ಕಾಡಿನಂಚಿನ ಜನರು ದೀರ್ಘಕಾಲದಿಂದ ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಆದರೆ ಇತ್ತೀಚೆಗೆ ಹೆಚ್ಚುತ್ತಿರುವ ಸಂಘರ್ಷದಿಂದ ಜೀವಹಾನಿ ಸಂಭವಿಸುತ್ತಿರುವುದು ದುಃಖಕರವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಸಚಿವರು ಸೂಚಿಸಿದರು.&lt;/p&gt;&lt;h2&gt;7.30 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ&lt;/h2&gt;&lt;p&gt;ಪ್ರವಾಸೋದ್ಯಮ ಮತ್ತು ಸ್ಥಳೀಯರ ಸಂಚಾರ ಸುಗಮತೆಗೆ ದುಬಾರೆ ಕಾವೇರಿ ನದಿಗೆ ಸುಮಾರು 7.30 ಕೋಟಿ ರೂಪಾಯಿ ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ. ಈ ಯೋಜನೆ ದುಬಾರೆ ಹಾಡಿಯಲ್ಲಿ ವಾಸಿಸುವ 150ಕ್ಕೂ ಹೆಚ್ಚು ಕುಟುಂಬಗಳ ದೀರ್ಘಕಾಲದ ಬೇಡಿಕೆಯಾಗಿದ್ದು, ತುರ್ತು ಸಂದರ್ಭಗಳಲ್ಲಿ ನಗರಕ್ಕೆ ಸಂಪರ್ಕ ಸಾಧಿಸಲು ಬಹಳ ಸಹಾಯಕವಾಗಲಿದೆ ಎಂದು ಸಚಿವರು ಹೇಳಿದರು.&lt;/p&gt;&lt;h2&gt;150 ಕುಟುಂಬಗಳಿಗೆ ಅನುಕೂಲ&lt;/h2&gt;&lt;p&gt;ಈ ಸೇತುವೆ ನಿರ್ಮಾಣದಿಂದ ದುಬಾರೆ ಹಾಡಿಯ ನಿವಾಸಿಗಳು, ಸಾಕಾನೆ ಶಿಬಿರದ ಸಿಬ್ಬಂದಿ ಹಾಗೂ ಪ್ರವಾಸಿಗರಿಗೆ ದೊಡ್ಡ ಮಟ್ಟದ ಅನುಕೂಲ ಸಿಗಲಿದೆ. ಇದುವರೆಗೆ ಮಳೆಗಾಲದಲ್ಲಿ ಹೊಳೆ ದಾಟುವುದು ಕಷ್ಟಕರವಾಗಿದ್ದು, ಕೆಲವು ಸಂದರ್ಭಗಳಲ್ಲಿ ಮೀಸಲು ಅರಣ್ಯದ ಒಳಗಡೆ ಸುಮಾರು 10 ಕಿಮೀ ಸುತ್ತು ಹೊಡೆದು ತೆರಳಬೇಕಾಗುತ್ತಿತ್ತು. ಹೊಸ ಸೇತುವೆಯಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.&lt;/p&gt;&lt;h2&gt;ದುಬಾರೆ ಆನೆ ಶಿಬಿರದ ವೈಭವ&lt;/h2&gt;&lt;p&gt;ದುಬಾರೆ ಆನೆ ಶಿಬಿರಕ್ಕೆ ಶತಮಾನಕ್ಕೂ ಹೆಚ್ಚು ಇತಿಹಾಸವಿದ್ದು, ಇಲ್ಲಿ ಸುಮಾರು 15 ಕುಮ್ಕಿ ಆನೆಗಳಿವೆ. ಇವುಗಳು ಮೈಸೂರು ದಸರಾ ಮಹೋತ್ಸವ ಸೇರಿದಂತೆ ವಿವಿಧ ಸರ್ಕಾರಿ ಕಾರ್ಯಾಚರಣೆಗಳಲ್ಲಿ ಭಾಗವಹಿಸುತ್ತವೆ. ಆನೆಗಳಿಗೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದ್ದು, ವನ್ಯಜೀವಿ ಸಂರಕ್ಷಣೆಯತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸಚಿವರು ಹೇಳಿದರು.&lt;/p&gt;&lt;h2&gt;ಶಾಸಕರಿಂದ ಬೇಡಿಕೆಗಳ ಪಟ್ಟಿ&lt;/h2&gt;&lt;p&gt;ಈ ಸಂದರ್ಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಅರಣ್ಯ ಇಲಾಖೆಯ ವಿವಿಧ ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆದರು. ಮಾನವ-ಆನೆ ಸಂಘರ್ಷದಲ್ಲಿ ಜೀವ ಕಳೆದುಕೊಂಡವರಿಗೆ ನೀಡುವ ಪರಿಹಾರ ಮೊತ್ತವನ್ನು 20 ಲಕ್ಷದಿಂದ 50 ಲಕ್ಷ ರೂಪಾಯಿಗೆ ಹೆಚ್ಚಿಸುವಂತೆ ಅವರು ಆಗ್ರಹಿಸಿದರು. ಜೊತೆಗೆ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವುದು ಮತ್ತು ತೋಟದ ಆನೆಗಳನ್ನು ಸ್ಥಳಾಂತರಿಸುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.&lt;/p&gt;&lt;h2&gt;ಜನಸಂಪರ್ಕ ಕಾರ್ಯಕ್ರಮ&lt;/h2&gt;&lt;p&gt;ಅರಣ್ಯ ಇಲಾಖೆಯ ಜನಸಂಪರ್ಕ ಕಾರ್ಯಕ್ರಮದಡಿ ಸ್ಥಳೀಯ ಫಲಾನುಭವಿಗಳಿಗೆ ಜೇನು ಸಾಕಾಣಿಕೆ ಪೆಟ್ಟಿಗೆಗಳು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮೀನಾಕ್ಷಿ ನೇಗಿ, ಕುಮಾರ್ ಪುಷ್ಕರ್, ಅಭಿಷೇಕ್ ಸೇರಿದಂತೆ ಹಲವು ಅಧಿಕಾರಿಗಳು, ಮಠಾಧೀಶರು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಿದ್ದರು.&lt;/p&gt;&lt;h2&gt;ಬಾಲ್ಯದ ನೆನಪು ಹಂಚಿಕೊಂಡ ಶಾಸಕ&lt;/h2&gt;&lt;p&gt;ಕಾರ್ಯಕ್ರಮದ ವೇಳೆ ಮಾತನಾಡಿದ ಶಾಸಕ ಮಂತರ್ ಗೌಡ ಅವರು, &ldquo;ಬಾಲ್ಯದಲ್ಲಿ ತಾಯಿಯೊಂದಿಗೆ ದುಬಾರೆ ಶಿಬಿರಕ್ಕೆ ಬಂದಿದ್ದೆ. ಆಗ ನದಿ ದಾಟಲು ದೋಣಿ ಬಳಸುತ್ತಿದ್ದೆವು. ಈಗ ನನ್ನ ಅವಧಿಯಲ್ಲೇ ತೂಗು ಸೇತುವೆ ನಿರ್ಮಾಣವಾಗುತ್ತಿರುವುದು ಸಂತೋಷ ತಂದಿದೆ. ಮುಂದಿನ ಮಳೆಗಾಲದೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ&rdquo; ಎಂದು ಹೇಳಿದರು.&lt;/p&gt;&lt;p&gt;ಒಟ್ಟಾರೆ, ದುಬಾರೆ ಪ್ರದೇಶದಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಗಳು ವನ್ಯಜೀವಿ ಸಂರಕ್ಷಣೆ, ಮಾನವ ಸುರಕ್ಷತೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿವೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/kushalnagar-dubare-development-rs-7-3-crore-hanging-bridge-announced-focus-on-human-elephant-conflict-gdp/articleshow-6ufxh8u"/>
        </item>
        <item>
            <title><![CDATA[ರಾಜ್ಯದಲ್ಲಿ ಮಳೆ ಆರ್ಭಟ: ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ ಮುನ್ನೆಚ್ಚರಿಕೆ, ಬೆಂಗಳೂರಿನಲ್ಲೂ ವರುಣನ ಸಿಂಚನ!]]></title>
            <link>https://kannada.asianetnews.com/gallery/state/karnataka-weather-forecast-heavy-rain-thunderstorm-warning-may-2026-bengaluru-imd-sat-ogrmncf</link>
            <guid isPermaLink="true">https://kannada.asianetnews.com/gallery/state/karnataka-weather-forecast-heavy-rain-thunderstorm-warning-may-2026-bengaluru-imd-sat-ogrmncf</guid>
            <pubDate>Thu, 07 May 2026 16:02:51 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ ಇಂದಿನಿಂದ ಮೇ 11ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮಳೆ ವಿವರ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knds8w34zxderfy8e77w0egc,imgname-delhi-ncr-weather-alert-rain-hailstorm-thunderstorm-western-disturbance-imd-warning-wind-speed-storm-india-4-1775357948004.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ ಇಂದಿನಿಂದ ಮೇ 11ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮಳೆ ವಿವರ ಇಲ್ಲಿದೆ.&lt;/p&gt;&lt;img&gt;&lt;p&gt;ರಾಜ್ಯದ ಹಲವೆಡೆ ಮುಂದಿನ ಒಂದು ವಾರಗಳ ಕಾಲ ಮಳೆಯ ಅಬ್ಬರ ಜೋರಿರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಆಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದ ಸಮೀಪ ಕೇರಳ ಕರಾವಳಿಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದು ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ಹರಡಿದೆ. ಇದರ ಪ್ರಭಾವದಿಂದಾಗಿ ಒಳನಾಡು ಕರ್ನಾಟಕದ ಮೂಲಕ ಹಾದುಹೋಗುವ ಮಾರುತಗಳಲ್ಲಿ ಏರುಪೇರಾಗಿದ್ದು, ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.&lt;/p&gt;&lt;img&gt;&lt;p&gt;ಮೇ 7 ಮತ್ತು 8ರಂದು ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಂಭವವಿದೆ.&lt;/p&gt;&lt;p&gt;&lt;strong&gt;ಮೇ 7: &lt;/strong&gt;ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ವರುಣನ ಅಬ್ಬರ ಜೋರಿರಲಿದೆ.&lt;/p&gt;&lt;p&gt;&lt;strong&gt;ಮೇ 8: &lt;/strong&gt;ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಮಳೆಯ ಜೊತೆಗೆ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.&lt;/p&gt;&lt;p&gt;&lt;strong&gt;ಉತ್ತರ ಒಳನಾಡು: &lt;/strong&gt;ಮೇ 7 ರಿಂದ 11 ರವರೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗುವ ಸಾಧ್ಯತೆಯಿದೆ.&lt;/p&gt;&lt;p&gt;&lt;strong&gt;ದಕ್ಷಿಣ ಒಳನಾಡು:&lt;/strong&gt; ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.&lt;/p&gt;&lt;p&gt;&lt;strong&gt;ಕರಾವಳಿ: &lt;/strong&gt;ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 8 ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ನಂತರದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿ ದಾಖಲಾಗಿದೆ. ಆದರೆ, ಮಳೆಯ ಪ್ರಭಾವದಿಂದಾಗಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.&amp;nbsp;&lt;/p&gt;&lt;p&gt;ಮಳೆಯ ಮುನ್ಸೂಚನೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಗುಡುಗು ಸಿಂಚನದ ವೇಳೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಬಿರುಗಾಳಿಯಿಂದ ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-weather-forecast-heavy-rain-thunderstorm-warning-may-2026-bengaluru-imd-sat-ogrmncf"/>
        </item>
        <item>
            <title><![CDATA[ಖಾತೆ ಬದಲಾವಣೆಗೆ ಲಂಚದ ಆರೋಪ, ದಾವಣಗೆರೆ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತರ ತೀವ್ರ ಶೋಧ!]]></title>
            <link>https://kannada.asianetnews.com/karnataka-districts/davanagere-lokayukta-raid-bribery-allegations-in-property-and-khata-transfer-services-gdp/articleshow-fgicvzq</link>
            <guid isPermaLink="true">https://kannada.asianetnews.com/karnataka-districts/davanagere-lokayukta-raid-bribery-allegations-in-property-and-khata-transfer-services-gdp/articleshow-fgicvzq</guid>
            <pubDate>Thu, 07 May 2026 15:52:13 +0530</pubDate>
            <description><![CDATA[ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-1 ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಇಸ್ವತ್ತು ಮತ್ತು ಖಾತೆ ಬದಲಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr0z671r41jnqe50saee1mcq,imgname-davanagere-lokayukta-raid-1778149170232.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಮಹಾನಗರ ಪಾಲಿಕೆಯಲ್ಲಿನ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ ಘಟನೆ ನಗರದಲ್ಲಿ ಚರ್ಚೆಗೆ ಕಾರಣವಾಗಿದೆ. ಇಸ್ವತ್ತು (e-swathu) ಹಾಗೂ ಖಾತೆ ಬದಲಾವಣೆಯಂತಹ ಸೇವೆಗಳಿಗಾಗಿ ಸಾರ್ವಜನಿಕರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.&lt;/p&gt;&lt;h2&gt;8ಕ್ಕೂ ಹೆಚ್ಚು ಅಧಿಕಾರಿಗಳ ದಾಳಿ&lt;/h2&gt;&lt;p&gt;ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಇರುವ ಮಹಾನಗರ ಪಾಲಿಕೆ ವಲಯ ಕಚೇರಿ-1 ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ಸುಮಾರು ಎಂಟುಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ಗಂಟೆಗಳಿಗಿಂತ ಹೆಚ್ಚು ಕಾಲದಿಂದ ದಾಖಲೆಗಳು ಮತ್ತು ಕಚೇರಿ ಕಾರ್ಯಪದ್ಧತಿಯ ಕುರಿತು ತೀವ್ರ ಪರಿಶೀಲನೆ ಮುಂದುವರಿದಿದೆ.&lt;/p&gt;&lt;h2&gt;ಇಸ್ವತ್ತು ಪ್ರಮಾಣಪತ್ರ ಹಾಗೂ ಖಾತೆ ಬದಲಾವಣೆ ವೇಳೆ ಹಣ&lt;/h2&gt;&lt;p&gt;ಸಾರ್ವಜನಿಕರಿಂದ ಬಂದ ದೂರಿನಲ್ಲಿ, ಇಸ್ವತ್ತು ಪ್ರಮಾಣಪತ್ರ ಹಾಗೂ ಖಾತೆ ಬದಲಾವಣೆ ಪ್ರಕ್ರಿಯೆಗೆ ಸಿಬ್ಬಂದಿ ಅನಧಿಕೃತವಾಗಿ ಹಣ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಚ್ಚರಿ ದಾಳಿ ನಡೆಸಿ, ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;p&gt;ದಾಳಿಯ ವೇಳೆ ಕಚೇರಿಯಲ್ಲಿನ ದಾಖಲೆಗಳು, ಅರ್ಜಿಗಳ ಪ್ರಕ್ರಿಯೆ ಹಾಗೂ ಹಣಕಾಸು ವ್ಯವಹಾರಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಯಾವುದೇ ಅಕ್ರಮ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.&lt;/p&gt;&lt;p&gt;ಪ್ರಸ್ತುತ ಪರಿಶೀಲನೆ ಮುಂದುವರಿದಿದ್ದು, ದಾಳಿಯ ಪೂರ್ಣ ವರದಿ ನಂತರ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಈ ಘಟನೆ ಮಹಾನಗರ ಪಾಲಿಕೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದ್ದು, ಪಾರದರ್ಶಕತೆಗೆ ಒತ್ತಾಯ ಹೆಚ್ಚಿಸಿದೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/davanagere-lokayukta-raid-bribery-allegations-in-property-and-khata-transfer-services-gdp/articleshow-fgicvzq"/>
        </item>
        <item>
            <title><![CDATA[ಚಿಕ್ಕಮಗಳೂರು ಸೈಬರ್ ವಂಚನೆ: ಗೋಲ್ಡ್ ಲೋನ್ ಪಡೆದು ಬ್ಯಾಂಕ್ ನಿಂದ ಹೊರಬಂದ ತಕ್ಷಣ  ಹಣ ಮಾಯ!]]></title>
            <link>https://kannada.asianetnews.com/karnataka-districts/cyber-fraud-in-chikkamagaluru-rs1-lakh-stolen-instantly-after-gold-loan-credit-without-otp-gdp/articleshow-piy3oth</link>
            <guid isPermaLink="true">https://kannada.asianetnews.com/karnataka-districts/cyber-fraud-in-chikkamagaluru-rs1-lakh-stolen-instantly-after-gold-loan-credit-without-otp-gdp/articleshow-piy3oth</guid>
            <pubDate>Thu, 07 May 2026 15:31:40 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರು ಚಿನ್ನದ ಸಾಲ ಪಡೆದ ಕೆಲವೇ ಕ್ಷಣಗಳಲ್ಲಿ, ಅವರ ಬ್ಯಾಂಕ್ ಖಾತೆಯಿಂದ ಸುಮಾರು ಒಂದು ಲಕ್ಷ ರೂಪಾಯಿ ಸೈಬರ್ ವಂಚಕರಿಂದ ಕಳುವಾಗಿದೆ. ಯಾವುದೇ ಓಟಿಪಿ ಅಥವಾ ಲಿಂಕ್ ಇಲ್ಲದೆ ಹಣ ವರ್ಗಾವಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr0xzc3h87gz7ckpfhjf19ra,imgname-cyber-fraud-in-chikkamagaluru-1778147897457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು:&lt;/strong&gt; ನಗರದೊಳಗೆ ಮತ್ತೊಂದು ಬೆಚ್ಚಿಬೀಳಿಸುವ ಸೈಬರ್ ವಂಚನೆ ಬೆಳಕಿಗೆ ಬಂದಿದೆ. ಚಿನ್ನ ಅಡವಿಟ್ಟು ಬ್ಯಾಂಕ್ ಖಾತೆಗೆ ಹಣ ಜಮೆಯಾದ ಕೆಲವೇ ಕ್ಷಣಗಳಲ್ಲಿ, ಸುಮಾರು ಒಂದು ಲಕ್ಷ ರೂಪಾಯಿ ಸೈಬರ್ ವಂಚಕರ ಕೈಗೆ ಸಿಕ್ಕಿರುವುದು ಆತಂಕ ಮೂಡಿಸಿದೆ. ಓಟಿಪಿ ಅಥವಾ ಯಾವುದೇ ಅನುಮಾನಾಸ್ಪದ ಲಿಂಕ್ ಬಂದಿಲ್ಲದಿದ್ದರೂ ಹಣ ಕಳೆದುಕೊಂಡಿರುವ ಪ್ರಕರಣ ಆಶ್ಚರ್ಯವಾಗಿದೆ.&lt;/p&gt;&lt;h2&gt;ಗೋಲ್ಡ್&zwnj; ಲೋನ್ ನಿಂದ ಕಳೆದುಕೊಂಡ ಹಣ&lt;/h2&gt;&lt;p&gt;ಚಿಕ್ಕಮಗಳೂರು ಮೂಲದ ವಕೀಲರೊಬ್ಬರು ಚಿನ್ನವನ್ನು ಅಡವಿಟ್ಟು 4.14 ಲಕ್ಷ ರೂಪಾಯಿಗಳ ಗೋಲ್ಡ್ ಲೋನ್ ಪಡೆದಿದ್ದರು. ಈ ಮೊತ್ತ ಅವರ ಬ್ಯಾಂಕ್ ಖಾತೆಗೆ ಜಮೆಯಾದ ತಕ್ಷಣವೇ, ಇನ್ನೂ ಬ್ಯಾಂಕ್ ಆವರಣದಲ್ಲಿದ್ದಾಗಲೇ ಖಾತೆಯಿಂದ ಹಣ ವಾಪಸು ತೆಗೆದುಕೊಳ್ಳಲಾಗಿದೆ. ಕ್ಷಣಾರ್ಧದಲ್ಲೇ ನಡೆದ ಈ ಘಟನೆಯಿಂದ ವಕೀಲರು ಬೆಚ್ಚಿಬಿದ್ದಿದ್ದಾರೆ.&lt;/p&gt;&lt;p&gt;ಸೈಬರ್ ಅಪರಾಧಿಗಳು ಸುಮಾರು 99,584 ರೂಪಾಯಿಗಳನ್ನು ಅಮೆಜಾನ್ ಪೇ ಮೂಲಕ ಎಗರಿಸಿರುವುದು ಬೆಳಕಿಗೆ ಬಂದಿದೆ. ಯಾವುದೇ ಓಟಿಪಿ ಸಂದೇಶ ಬಂದಿಲ್ಲ, ಅಥವಾ ಎಪಿಕೆ ಲಿಂಕ್&zwnj;ಗಳ ಮೂಲಕ ಮೋಸ ನಡೆದಿದೆ ಎಂಬ ಸುಳಿವೂ ಇಲ್ಲದಿರುವುದು ಪ್ರಕರಣದ ತನಿಖೆಯನ್ನು ಮತ್ತಷ್ಟು ಗಂಭೀರವಾಗಿಸಿದೆ.&lt;/p&gt;&lt;h2&gt;ತನಿಖೆ ಆರಂಭ&lt;/h2&gt;&lt;p&gt;ಘಟನೆ ತಿಳಿದ ಕೂಡಲೇ ವಕೀಲರು ಚಿಕ್ಕಮಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಣ ವರ್ಗಾವಣೆಯ &amp;nbsp;ರೀತಿಯನ್ನು ಪತ್ತೆಹಚ್ಚಲು ಹಾಗೂ ಅಪರಾಧಿಗಳನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.&lt;/p&gt;&lt;p&gt;ಈ ಘಟನೆ ಸೈಬರ್ ಭದ್ರತೆ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ಕರೆಗಂಟೆ ಮೂಳಗಿಸಿದೆ. ಬ್ಯಾಂಕ್ ಖಾತೆಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದ ತಕ್ಷಣವೇ ಬ್ಯಾಂಕ್ ಹಾಗೂ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವೆಂದು ತಜ್ಞರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ತಮ್ಮ ಬ್ಯಾಂಕ್ ವಿವರಗಳನ್ನು ಸುರಕ್ಷಿತವಾಗಿಟ್ಟುಕೊಳ್ಳುವಂತೆ ಮತ್ತು ಅಪರಿಚಿತ ವ್ಯವಹಾರಗಳ ಬಗ್ಗೆ ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/cyber-fraud-in-chikkamagaluru-rs1-lakh-stolen-instantly-after-gold-loan-credit-without-otp-gdp/articleshow-piy3oth"/>
        </item>
        <item>
            <title><![CDATA[ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?]]></title>
            <link>https://kannada.asianetnews.com/karnataka-districts/karnataka-psi-files-complaint-over-love-dispute-with-former-woman-constable-gdp-videoshow-tbvaht8</link>
            <guid isPermaLink="true">https://kannada.asianetnews.com/karnataka-districts/karnataka-psi-files-complaint-over-love-dispute-with-former-woman-constable-gdp-videoshow-tbvaht8</guid>
            <pubDate>Thu, 07 May 2026 14:47:31 +0530</pubDate>
            <description><![CDATA[ಪೊಲೀಸ್ ಸಬ್ ಇನ್ಸ್​​ಪೆಕ್ಟರ್ ಒಬ್ಬರು, ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಲೇಡಿ ಕಾನ್ಸ್​​ಟೇಬಲ್ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆಕೆ ಬೇರೊಬ್ಬರೊಂದಿಗೆ ಮದುವೆಯಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಕೋರಿ ಪಿಎಸ್ಐ ಮತ್ತೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.]]></description>
            <media:content url="https://geo.dailymotion.com/player/x1tbu.html?video=xa8e0gq" medium="video" height="768" width="1024"/>
            <content:encoded><![CDATA[&lt;p&gt;ಆತ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್​​.. ಕಷ್ಟಪಟ್ಟು ಓದಿ ಆ ಹುದ್ದೆಗೇರಿದ್ರು.. ಕ್ರೈಂ ಆಗಲಿ.. ಮೋಸವಾಗಲಿ.. ಕಳ್ಳತನವಾಗಲಿ.. ಆ ಭಾಗದ ಜನ ಈತನ ಬಳಿಯೇ ಬರ್ತಿದ್ರು.. ಪ್ರತೀ ನಿತ್ಯ ಹತ್ತಾರು ಮಂದಿಯ ಕಷ್ಟ ಆಲಿಸುತ್ತಿದ್ದ ಇದೇ ಪೊಲೀಸಪ್ಪ ಇವತ್ತು ತಾನೇ ನ್ಯಾಯ ಕೊಡಿಸಿ ಅಂತ ಮತ್ತೊಂದು ಪೊಲೀಸ್​​ ಠಾಣೆ ಏರಿದ್ದಾನೆ.. ಇನ್ನೂ ಆತನಿಗೆ ಮೋಸವಾಗಿರೋದು ತನ್ನದೇ ಠಾಣೆಯಲ್ಲಿ ಒಂದು ಸಮಯದಲ್ಲಿ ಕೆಲಸ ಮಾಡ್ತಿದ್ದ ಲೇಡಿ ಕಾನ್ಸ್​​ಟೇಬಲ್​ನಿಂದ.. ಆ ಲೇಡಿ ಕಾನ್ಸ್​ಟೇಬಲ್​ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ರಂತೆ.. ಅಷ್ಟಕ್ಕೂ ಆ ಲೇಡಿ ಕಾನ್ಸ್​​ಟೇಬಲ್​ ಯಾರು..? ಇವರ ಪ್ರೀತಿ ಹುಟ್ಟಿದ್ದೇಗೆ..? ಆಕೆ ಮಾಡಿದ ಮೋಸ ಎಂಥದ್ದು..? ಒಂದು ಪೊಲೀಸ್​​ ಲವ್​ ಸ್ಟೋರಿಯ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್​​&lt;/p&gt;&lt;p&gt;ಇವತ್ತು ಪೊಲೀಸಪ್ಪನ ಲವ್​ ಸ್ಟೋರಿ ಬೀದಿಗೆ ಬಂದಿದೆ.. ನಾಳೆ ಆ ಹೆಣ್ಣುಮಗಳ ಮದುವೆ.. &amp;nbsp;ಮದುವೆ ನಿಲ್ಲಿಸಿ ಅಂತ ಪಿಎಸ್​​ಐ ಠಾಣೆ ಮೆಟ್ಟಿಲ್ಲೇರಿದ್ದಾರೆ.. ಮುಂದೆ ಏನ್ಮಾಡಬೇಕು ಅನ್ನೋದನ್ನ ಕಾನೂನು ಹೆಳುತ್ತೆ.. ಆದ್ರೆ ಒಬ್ಬ ಹೆಣ್ಣುಮಗಳು ನೀನು ಬೇಡ ಅಂತ ತಿರಸ್ಕರಿಸಿ ಹೊಸ ದಾರಿಯನ್ನ ಹಿಡಿದಿದ್ದಾಳೆ.. ಅವಳ ಪಾಡಿಗೆ ಅವಳನ್ನ ಬಿಟ್ರೆ ಒಳ್ಳೆದು..&amp;nbsp;&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-psi-files-complaint-over-love-dispute-with-former-woman-constable-gdp-videoshow-tbvaht8"/>
        </item>
        <item>
            <title><![CDATA[ರಮ್ಮಿ ಕಲ್ಚರ್ ಆ್ಯಪ್ ಹೆಸರಲ್ಲಿ ಕೋಟ್ಯಂತರ ವಂಚನೆ: ಬೆಂಗಳೂರು ಸೇರಿ 16 ಕಡೆಗಳಲ್ಲಿ ‘ಇಡಿ’ ಮಿಂಚಿನ ದಾಳಿ!]]></title>
            <link>https://kannada.asianetnews.com/state/enforcement-directorate-ed-raids-16-locations-in-bengaluru-and-delhi-over-rummy-culture-app-fraud-sat/articleshow-7b4qwoi</link>
            <guid isPermaLink="true">https://kannada.asianetnews.com/state/enforcement-directorate-ed-raids-16-locations-in-bengaluru-and-delhi-over-rummy-culture-app-fraud-sat/articleshow-7b4qwoi</guid>
            <pubDate>Thu, 07 May 2026 14:31:39 +0530</pubDate>
            <description><![CDATA[&lt;p&gt;ಆನ್&zwnj;ಲೈನ್ ಗೇಮಿಂಗ್ ಆ್ಯಪ್ 'ರಮ್ಮಿ ಕಲ್ಚರ್' ಮೂಲಕ ನಡೆದಿದೆ ಎನ್ನಲಾದ ವಂಚನೆ ಕೇಸಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರು ಮತ್ತು ದೆಹಲಿಯ 16 ಕಡೆಗಳಲ್ಲಿ ದಾಳಿ ನಡೆಸಿದೆ. ದೆಹಲಿಯಲ್ಲಿ ದಾಖಲಾದ ಎಫ್&zwnj;ಐಆರ್&zwnj; ಆಧರಿಸಿ, ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಈ ತನಿಖೆ ಕೈಗೊಳ್ಳಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01e4dsw3zh144ra82z71r1j47k,imgname-2020-01-29--1---2--jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ 07): ಆ&lt;/strong&gt;ನ್&zwnj;ಲೈನ್ ಗೇಮಿಂಗ್ ಆ್ಯಪ್&zwnj;ಗಳ ಮೂಲಕ ಹಣ ದುಪ್ಪಟ್ಟು ಮಾಡುವ ಆಮಿಷವೊಡ್ಡಿ ಜನ ಸಾಮಾನ್ಯರಿಗೆ ವಂಚಿಸುತ್ತಿದ್ದ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಮರ ಸಾರಿದೆ. ಜನಪ್ರಿಯ ಆನ್&zwnj;ಲೈನ್ ಗೇಮಿಂಗ್ ಆ್ಯಪ್ ಆದ 'ರಮ್ಮಿ ಕಲ್ಚರ್' (Rummy Culture) ಮೂಲಕ ನಡೆದಿದೆ ಎನ್ನಲಾದ ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ದೆಹಲಿಯ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.&lt;/p&gt;&lt;h3&gt;&lt;strong&gt;16 ಕಡೆಗಳಲ್ಲಿ ತಪಾಸಣೆ:&lt;/strong&gt;&lt;/h3&gt;&lt;p&gt;ಸೋಮವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿರುವ ಇಡಿ ಅಧಿಕಾರಿಗಳು, ಬೆಂಗಳೂರಿನ 12 ಕಡೆ ಹಾಗೂ ದೆಹಲಿಯ 4 ಕಡೆ ಸೇರಿದಂತೆ ಒಟ್ಟು 16 ಸ್ಥಳಗಳಲ್ಲಿ ಜಾಲಿಯಾಡುತ್ತಿದ್ದಾರೆ. ರಮ್ಮಿ ಕಲ್ಚರ್ ಆ್ಯಪ್&zwnj;ನ ವ್ಯವಹಾರಗಳಿಗೆ ಸಂಬಂಧಿಸಿದ ಕಚೇರಿಗಳು ಹಾಗೂ ಈ ಆ್ಯಪ್&zwnj;ನ ಪ್ರಮುಖ ನಿರ್ವಾಹಕರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ದೆಹಲಿ ಎಫ್&zwnj;ಐಆರ್ ಆಧರಿಸಿ ಕ್ರಮ:&lt;/strong&gt;&lt;/h2&gt;&lt;p&gt;ಮೂಲಗಳ ಪ್ರಕಾರ, ರಮ್ಮಿ ಕಲ್ಚರ್ ಆ್ಯಪ್ ಮೂಲಕ ಹಣ ಕಳೆದುಕೊಂಡ ಸಂತ್ರಸ್ತರು ದೆಹಲಿಯಲ್ಲಿ ನೀಡಿದ ದೂರುಗಳ ಅನ್ವಯ ಅಲ್ಲಿನ ಪೊಲೀಸರು ನಾಲ್ಕು ಪ್ರತ್ಯೇಕ ಎಫ್&zwnj;ಐಆರ್ (FIR) ದಾಖಲಿಸಿದ್ದರು. ಈ ಎಫ್&zwnj;ಐಆರ್&zwnj;ಗಳಲ್ಲಿನ ಗಂಭೀರ ಆರೋಪಗಳ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಪ್ರಕರಣ ದಾಖಲಿಸಿಕೊಂಡು ಈ ಬೃಹತ್ ಕಾರ್ಯಾಚರಣೆ ಕೈಗೊಂಡಿದೆ.&lt;/p&gt;&lt;h3&gt;&lt;strong&gt;ಹೇಗೆ ನಡೆಯುತ್ತಿತ್ತು ವಂಚನೆ?&lt;/strong&gt;&lt;/h3&gt;&lt;p&gt;ರಮ್ಮಿ ಕಲ್ಚರ್ ಆ್ಯಪ್ ಮೂಲಕ ಆರಂಭದಲ್ಲಿ ಬಳಕೆದಾರರಿಗೆ ಲಾಭದ ಆಸೆ ತೋರಿಸಲಾಗುತ್ತಿತ್ತು. ಒಮ್ಮೆ ಬಳಕೆದಾರರು ದೊಡ್ಡ ಮೊತ್ತದ ಹಣವನ್ನು ಆಟಕ್ಕೆ ತೊಡಗಿಸಿದ ನಂತರ, ತಾಂತ್ರಿಕ ಕೈಚಳಕದ ಮೂಲಕ ಅಥವಾ ವಂಚನೆಯ ಮಾರ್ಗಗಳನ್ನು ಬಳಸಿ ಹಣವನ್ನು ಗುಳುಂ ಮಾಡಲಾಗುತ್ತಿತ್ತು ಎಂಬ ದೂರುಗಳಿವೆ. ಈ ಹಣವನ್ನು ವಿದೇಶಗಳಿಗೆ ಅಥವಾ ಬೇರೆ ಬೇರೆ ಬೇನಾಮಿ ಖಾತೆಗಳಿಗೆ ವರ್ಗಾಯಿಸಲಾಗಿದೆಯೇ ಎಂಬ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಬೆಂಗಳೂರಿನಲ್ಲಿ ತೀವ್ರಗೊಂಡ ತಪಾಸಣೆ:&lt;/strong&gt;&lt;/h2&gt;&lt;p&gt;ಈ ವಂಚನೆ ಜಾಲದ ಕಚೇರಿಗಳು ಮತ್ತು ಪ್ರಮುಖ ವ್ಯವಹಾರಗಳು ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಸಿಲಿಕಾನ್ ಸಿಟಿಯ 12ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಡಿಜಿಟಲ್ ಪುರಾವೆಗಳು, ಬ್ಯಾಂಕ್ ಖಾತೆಗಳ ಮಾಹಿತಿ ಹಾಗೂ ಹೂಡಿಕೆಯ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/enforcement-directorate-ed-raids-16-locations-in-bengaluru-and-delhi-over-rummy-culture-app-fraud-sat/articleshow-7b4qwoi"/>
        </item>
        <item>
            <title><![CDATA[ಕೊಪ್ಪಳ ಹೋಟೆಲ್ ನಲ್ಲಿ ಅಪ್ರಾಪ್ತೆಯೊಂದಿಗೆ ಸಿಕ್ಕಿಬಿದ್ದ ಅನ್ಯಕೋಮಿನ ಯುವಕ, ಭುಗಿಲೆದ್ದ ವಿವಾದ]]></title>
            <link>https://kannada.asianetnews.com/karnataka-districts/minor-girl-found-with-youth-in-koppal-hotel-sparks-tension-police-detain-8-probe-underway-gdp/articleshow-ssyfg1v</link>
            <guid isPermaLink="true">https://kannada.asianetnews.com/karnataka-districts/minor-girl-found-with-youth-in-koppal-hotel-sparks-tension-police-detain-8-probe-underway-gdp/articleshow-ssyfg1v</guid>
            <pubDate>Thu, 07 May 2026 13:53:46 +0530</pubDate>
            <description><![CDATA[ಕೊಪ್ಪಳದ ಹೋಟೆಲ್ ಒಂದರಲ್ಲಿ ಮುಸ್ಲಿಂ ಯುವಕನೊಂದಿಗೆ ಅಪ್ರಾಪ್ತ ಹಿಂದೂ ಯುವತಿ ಪತ್ತೆಯಾದ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಈ ಸಂಬಂಧ ಭಜರಂಗ ದಳದ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕ್ರಮಕ್ಕೆ ಆಗ್ರಹಿಸಿವೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr0rehr6e1n6cjgyzh7t5gqq,imgname-koppal-hotel-1778142103302.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ: &lt;/strong&gt;ಕೊಪ್ಪಳದಲ್ಲಿ ಮತ್ತೊಂದು ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಅಪ್ರಾಪ್ತ ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕ ಹರ್ಷಾ ಹೋಟೆಲ್ ನಲ್ಲಿ ಪತ್ತೆಯಾಗಿದ್ದು, ಪ್ರಶ್ನೆ ಮಾಡಿದ ಭಜರಂಗ ದಳದ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲು ಮಾಡಿರುವ ಆರೋಪ ಕೇಳಿಬಂದಿದೆ. ಶಮೀರ್ ಎಂಬಾತನ ಜೊತೆ ಅಪ್ರಾಪ್ತ ಹಿಂದೂ ಯುವತಿ ಪತ್ತೆಯಾದಳು. ಅಪ್ರಾಪ್ತೆಯನ್ನ ಕರೆತಂದಿರೋ ಬಗ್ಗೆ ಭಜರಂಗದಳದ ಕಾರ್ಯಕರ್ಯರು ಪ್ರಶ್ನೆ ಮಾಡಿದ್ದರು. ಪ್ರಶ್ನೆ ಮಾಡಿದ್ದಕ್ಕೆ ಭಜರಂಗದಳದ 8 ಜನರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿವಿಧ &amp;nbsp;ಆಯಾಮಗಳಲ್ಲಿ ವಿಚಾರಣೆ ನಡೆಯುತ್ತಿದ್ದು, ಹಿಂದೂಪರ ಸಂಘಟನೆಗಳು ಮತ್ತು ಪೊಲೀಸರ ನಡುವೆ ವಾಗ್ವಾದ ಹೆಚ್ಚಾಗಿದೆ.&lt;/p&gt;&lt;p&gt;ಮಾಹಿತಿ ಪ್ರಕಾರ, ಶಮೀರ್ ಎಂಬ ಯುವಕನೊಂದಿಗೆ ಅಪ್ರಾಪ್ತೆಯೊಬ್ಬಳು ಹರ್ಷಾ ಹೋಟೆಲ್&zwnj;ನಲ್ಲಿ ಇದ್ದ ವೇಳೆ, ಕೆಲವು ಭಜರಂಗ ದಳದ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಅಪ್ರಾಪ್ತೆಯನ್ನ ಹೋಟೆಲ್&zwnj;ಗೆ ಕರೆತಂದ ಹಿನ್ನೆಲೆ ಬಗ್ಗೆ ಪ್ರಶ್ನೆ ಕೇಳಿದ ವೇಳೆ ವಾಗ್ವಾದ ಉಂಟಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಬಳಿಕ ಪರಿಸ್ಥಿತಿ ತೀವ್ರಗೊಂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.&lt;/p&gt;&lt;h2&gt;ಭಜರಂಗ ದಳದ ಎಂಟು ಮಂದಿ ಕಾರ್ಯಕರ್ತರ ಬಂಧನ&lt;/h2&gt;&lt;p&gt;ಈ ಸಂಬಂಧವಾಗಿ ಪೊಲೀಸರು ಭಜರಂಗ ದಳದ ಎಂಟು ಮಂದಿ ಕಾರ್ಯಕರ್ತರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ಅಪ್ರಾಪ್ತೆಯೊಂದಿಗೆ ಇದ್ದ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕಾಗಿತ್ತು ಎಂದು ಆಗ್ರಹ ವ್ಯಕ್ತಪಡಿಸಿವೆ. ಅವರ ಪ್ರಕಾರ, ಯುವಕನ ಮೇಲೆ ಕ್ರಮ ಕೈಗೊಳ್ಳದೇ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಅನ್ಯಾಯಕರ ಕ್ರಮ ಎಂದು ಆರೋಪಿಸಲಾಗಿದೆ.&lt;/p&gt;&lt;p&gt;ಘಟನೆಗೆ ಸಂಬಂಧಿಸಿದಂತೆ ವಿಎಚ್&zwnj;ಪಿ, ಭಜರಂಗ ದಳ ಹಾಗೂ ಬಿಜೆಪಿ ಕಾರ್ಯಕರ್ತರು ಕೊಪ್ಪಳ ನಗರ ಪೊಲೀಸ್ ಠಾಣೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಠಾಣೆ ಎದುರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ ಪರಿಣಾಮ ಕೆಲವು ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.&lt;/p&gt;&lt;h2&gt;ಪೊಲೀಸರಿಂದ ಹೆಚ್ಚಿನ ತನಿಖೆ&lt;/h2&gt;&lt;p&gt;ಈ ವೇಳೆ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್&zwnj;ಪಿ) ಡಾ. ರಾಮ್ ಎಲ್. ಅರಸಿದ್ದಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿದರು. ಜೊತೆಗೆ ಎಂಎಲ್&zwnj;ಸಿ ಹೇಮಲತಾ ನಾಯಕ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಕೂಡ ಠಾಣೆಗೆ ಭೇಟಿ ನೀಡಿ, ಆರೋಪಿಯಾಗಿರುವ ಶಮೀರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.&lt;/p&gt;&lt;p&gt;ಪ್ರಸ್ತುತ ಪ್ರಕರಣದ ಕುರಿತಾಗಿ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಅಪ್ರಾಪ್ತೆಯ ಸುರಕ್ಷತೆ ಹಾಗೂ ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ.&lt;/p&gt;]]></content:encoded>
            <category>karnataka-districts</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/minor-girl-found-with-youth-in-koppal-hotel-sparks-tension-police-detain-8-probe-underway-gdp/articleshow-ssyfg1v"/>
        </item>
        <item>
            <title><![CDATA[ಪಶ್ಚಿಮ ಬಂಗಾಳ ಗೆಲುವಿನ ಬೆನ್ನಲ್ಲೇ ಮೇ 10ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ; ಸಂಸದ ಡಾ.ಸಿ.ಎನ್. ಮಂಜುನಾಥ್]]></title>
            <link>https://kannada.asianetnews.com/state/west-bengal-politics-bjp-cm-oath-taking-pm-modi-karnataka-visit-dr-cn-manjunath-sat/articleshow-y69iq6s</link>
            <guid isPermaLink="true">https://kannada.asianetnews.com/state/west-bengal-politics-bjp-cm-oath-taking-pm-modi-karnataka-visit-dr-cn-manjunath-sat/articleshow-y69iq6s</guid>
            <pubDate>Thu, 07 May 2026 13:05:36 +0530</pubDate>
            <description><![CDATA[&lt;p&gt;ದೇಶದ ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಜಯಶಾಲಿಯಾಗಿದೆ. ಇದರ ಬೆನ್ನಲ್ಲಿಯೇ ಮೋದಿ ರಾಜ್ಯಕ್ಕೆ ಆಗಮಿಸಿ ಸ್ಥಳೀಯ ಬಿಜೆಪಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದುಂ ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr0n6mqzn22rv9bymfg8q9s0,imgname-narendra-modi-visit-karnataka-dr-cn-manjunath-1778138698495.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ 07): &lt;/strong&gt;&lsquo;ಮೇ 10ರಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ಹೆಚ್&zwnj;ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಗಳನ್ನು ರಾಜ್ಯ ಬಿಜೆಪಿಯಿಂದ ಅಭಿನಂದಿಸಲಾಗುವುದು. ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ&rsquo; ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾಹಿತಿ ನೀಡಿದರು&lt;strong&gt;.&lt;/strong&gt;&lt;/p&gt;&lt;h3&gt;&lt;strong&gt;ಬಂಗಾಳದಲ್ಲಿ ಸಂವಿಧಾನ ವಿರೋಧಿ ಧೋರಣೆ:&lt;/strong&gt;&lt;/h3&gt;&lt;p&gt;ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಮಂಜುನಾಥ್, 'ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವದ ಕದನ ಕುತೂಹಲ ಮೂಡಿಸಿದೆ. ಒಂದು ಅಸೆಂಬ್ಲಿಗೆ ನಿರ್ದಿಷ್ಟ ಅವಧಿ ಎಂಬುದು ಇರುತ್ತದೆ. ಇವತ್ತಿಗೆ ಆ ಅವಧಿ ಪೂರ್ಣಗೊಂಡಿದೆ. ನೈತಿಕವಾಗಿ ಮಮತಾ ಬ್ಯಾನರ್ಜಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು. ಒಂದು ವೇಳೆ ಅವರು ಮೊಂಡುಹಠ ಮುಂದುವರಿಸಿದರೆ, ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಆಟೋಮ್ಯಾಟಿಕ್ ಆಗಿ ಕ್ರಮ ಕೈಗೊಳ್ಳಲಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನವಿದ್ದರೆ ಕೋರ್ಟ್ ಮೆಟ್ಟಿಲೇರಬಹುದೇ ಹೊರತು, ಈ ರೀತಿ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವುದು ಸರಿಯಲ್ಲ' ಎಂದು ಕಿಡಿಕಾರಿದರು.&lt;/p&gt;&lt;h2&gt;&lt;strong&gt;ಮೇ 9ಕ್ಕೆ ಬಿಜೆಪಿ ಮುಖ್ಯಮಂತ್ರಿ ಪಟ್ಟ?&lt;/strong&gt;&lt;/h2&gt;&lt;p&gt;ಪಶ್ಚಿಮ ಬಂಗಾಳದ ರಾಜಕೀಯ ಹೈಡ್ರಾಮಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದ ಸಂಸದರು, 'ಬರುವ ಮೇ 9ರಂದು ಬೆಳಿಗ್ಗೆ 11 ಗಂಟೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಕೇಂದ್ರ ನಾಯಕರು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ' ಎಂಬ ಆಶ್ಚರ್ಯಕರ ಮಾಹಿತಿ ಹಂಚಿಕೊಂಡರು.&lt;/p&gt;&lt;h3&gt;&lt;strong&gt;ಹಿಂಸಾಚಾರದ ವಿರುದ್ಧ ಆಕ್ರೋಶ:&lt;/strong&gt;&lt;/h3&gt;&lt;p&gt;ಟಿಎಂಸಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಪಿಎ ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. 'ಬಂಗಾಳದಲ್ಲಿ ಇದುವರೆಗೆ ಸುಮಾರು 450ಕ್ಕೂ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ. ಸೋತ ಮೇಲೂ ಟಿಎಂಸಿ ಕಾರ್ಯಕರ್ತರು ಹಿಂಸಾಚಾರದಲ್ಲಿ ತೊಡಗಿರುವುದು ಸಂವಿಧಾನ ವಿರೋಧಿ ಧೋರಣೆಯಾಗಿದೆ. ಜನರ ರಕ್ಷಣೆಗಾಗಿ ಬಿಜೆಪಿ ಸರ್ಕಾರ ಬಂದ ಮೇಲೂ ಆರು ತಿಂಗಳ ಕಾಲ ಅಲ್ಲಿ ಸಿಆರ್&zwnj;ಪಿಎಫ್ (CRPF) ನಿಯೋಜನೆ ಮುಂದುವರಿಯಲಿದೆ. ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತ ಅಂತ್ಯವಾಗಿ ಹೊಸ ಅಧ್ಯಾಯ ಶುರುವಾಗಲಿದೆ' ಎಂದರು.&lt;/p&gt;&lt;h3&gt;&lt;strong&gt;ಮೇ 10ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ:&lt;/strong&gt;&lt;/h3&gt;&lt;p&gt;ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿಯ ಬಗ್ಗೆಯೂ ಮಾಹಿತಿ ನೀಡಿದ ಡಾ. ಮಂಜುನಾಥ್, 'ಮೇ 10ರಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ಹೆಚ್&zwnj;ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಗಳನ್ನು ರಾಜ್ಯ ಬಿಜೆಪಿಯಿಂದ ಅಭಿನಂದಿಸಲಾಗುವುದು. ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತದನಂತರ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ (Art of Living) ಆಶ್ರಮಕ್ಕೆ ತೆರಳಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ' ಎಂದು ತಿಳಿಸಿದರು.&lt;/p&gt;&lt;p&gt;ಒಟ್ಟಾರೆಯಾಗಿ, ಪಶ್ಚಿಮ ಬಂಗಾಳದ ರಾಜಕೀಯ ಬದಲಾವಣೆ ಮತ್ತು ಪ್ರಧಾನಿಗಳ ಭೇಟಿ ಎರಡೂ ವಿಚಾರಗಳಲ್ಲಿ ಸಂಸದರ ಹೇಳಿಕೆಗಳು ಈಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ.&lt;/p&gt;]]></content:encoded>
            <category>karnataka-districts</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/west-bengal-politics-bjp-cm-oath-taking-pm-modi-karnataka-visit-dr-cn-manjunath-sat/articleshow-y69iq6s"/>
        </item>
    </channel>
</rss>
