<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 03 Apr 2026 13:20:39 +0530</lastBuildDate>
        <atom:link href="https://kannada.asianetnews.com/rss/kodagu" rel="self" type="application/rss+xml"/>
        <item>
            <title><![CDATA[ಮಡಿಕೇರಿ ಸಮೀಪ ಕಾಫಿತೋಟದಲ್ಲಿ ಹುಲಿ ಓಡಾಟ:  ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ]]></title>
            <link>https://kannada.asianetnews.com/state/cctv-footage-shows-tiger-roaming-in-coffee-plantation-kodagu/articleshow-1gycltg</link>
            <guid isPermaLink="true">https://kannada.asianetnews.com/state/cctv-footage-shows-tiger-roaming-in-coffee-plantation-kodagu/articleshow-1gycltg</guid>
            <pubDate>Wed, 25 Mar 2026 11:30:59 +0530</pubDate>
            <description><![CDATA[&lt;p&gt;tiger in coffee plantation kodagu: ಮಡಿಕೇರಿ ಸಮೀಪದ ಇಬ್ಬನಿವಳವಾಡಿ ಗ್ರಾಮದ ಕಾಫಿತೋಟವೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಸಿಸಿ ಕ್ಯಾಮರಾದಲ್ಲಿ ಇದರ ದೃಶ್ಯ ಸೆರೆಯಾಗಿದೆ. ಈ ಘಟನೆಯಿಂದಾಗಿ ಸ್ಥಳೀಯ ಗ್ರಾಮಸ್ಥರು ಮತ್ತು ಕಾರ್ಮಿಕರಲ್ಲಿ ತೀವ್ರ ಆತಂಕ ಮನೆಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmhrzyr6bqa8f6m4swccjdh5,imgname-tiger-in-coffee-plantation-kodagu-1774418131718.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಕಾಫಿತೋಟದಲ್ಲಿ ಹುಲಿ ಓಡಾಟ:&amp;nbsp;&lt;/strong&gt;&lt;/h2&gt;&lt;p&gt;ಕೊಡಗು: ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಕೆಲವೇ ಕಿಲೋ ಮೀಟರ್ ದೂರದಲ್ಲಿರುವ ಕಾಫಿತೋಟದಲ್ಲಿ ಹುಲಿಯೊಂದು ಓಡಾಡುತ್ತಿರುವ ದೃಶ್ಯ ಕಂಡು ಬಂದಿದ್ದು, ಇದು ಆ ಪ್ರದೇಶದ ಜನರಲ್ಲಿ ಹಾಗೂ ಕಾಫಿತೋಟಕ್ಕೆ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರಲ್ಲಿ ಭೀತಿಗೆ ಕಾರಣವಾಗಿದೆ. ಮಡಿಕೇರಿ&zwnj; ನಗರದಿಂದ&zwnj; ಕೇವಲ&zwnj; ಎರಡು ಕಿ ಮೀ ದೂರದಲ್ಲಿರುವ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ. ಗ್ರಾಮದ ಪೊನ್ನಚೆಟ್ಟಿರ ಸಂದೀಪ್&zwnj; ಎಂಬುವರ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಡುತ್ತಿರುವ ದೃಶ್ಯ ಕಾಫಿತೋಟದಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಿಂದಾಗಿ ಈಗ ಇಬ್ಬನಿವಳವಾಡಿ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿದೆ.&lt;/p&gt;&lt;p&gt;&lt;strong&gt;ಸಿಸಿಟಿವಿಯಲ್ಲಿ ದೃಶ್ಯ ಸೆರೆ:&lt;/strong&gt;&lt;/p&gt;&lt;p&gt;ಹುಲಿಯೊಂದು ಕಾಫಿತೋಟದಲ್ಲಿ ಓಡಾಡ್ತಿದೆ ಎಂಬ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದ ಏಳೆಂಟು ಕಿ.ಮಿ ವ್ಯಾಪ್ತಿಯಲ್ಲಿ ಹುಲಿ ಹೋಲುವ ಪ್ರಾಣಿ ಓಡಾಟದ ಮಾಹಿತಿ ಇತ್ತು. ಹುಲಿಯೋ, ಪೆರ್ಪಣವೋ ಎಂಬ ಗೊಂದಲ ಇತ್ತು. (ಪೆರ್ಪಣವೆಂದರೆ ಚಿರತೆಯನ್ನೇ ಹೋಲುವ ಅಪರೂಪದ ವನ್ಯಜೀವಿಯಾಗಿದೆ ಲಿಪರ್ಡ್ ಕ್ಯಾಟ್ ಎಂದೂ ಕೂಡ ಇದನ್ನು ಕರೆಯಲಾಗುತ್ತದೆ.) ಆದರೆ ಈಗ ಅದು ಹುಲಿ ಎಂಬುದು ಖಚಿತವಾಗಿದೆ ಎಂದ ಡಿಎಫ್ಓ ಹೇಳಿದ್ದಾರೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಇಡಿ ದಾಳಿಗೆ ಅಡ್ಡಿಯಾದ ಮಮತಾ ಬ್ಯಾನರ್ಜಿಗೆ ಸುಪ್ರೀಂಕೋರ್ಟ್ ತರಾಟೆ&lt;/strong&gt;&lt;/p&gt;&lt;p&gt;ಹುಲಿ ಸೆರೆಗೆ ಸರ್ಕಾರಕ್ಕೆ&zwnj; ಮನವಿ ಮಾಡಲಾಗಿದೆ ಎಂದು ಮಡಿಕೇರಿ ಡಿಸಿಎಫ್&zwnj; ಅಭಿಷೇಕ್ ಮಾಹಿತಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ&zwnj; ಇರುವಂತೆ ಮನವಿ ಮಾಡಿದ್ದಾರೆ. ಹುಲಿ ಕಾಫಿತೋಟದಲ್ಲಿ ಓಡಾಡ್ತಿದೆ ಎಂಬ ವಿಚಾರ ತಿಳಿದ ಶಾಸಕ ಮಂತರ್ ಗೌಡ್ ಕೂಡಲೇ ಕಾರ್ಯಾಚರಣೆ ನಡೆಸುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಇರಾನ್ ತನಗೆ ದುಬಾರಿ ಮೊತ್ತದ ಹರ್ಮುಜ್ ಉಡುಗೊರೆ ನೀಡಿದೆ ಎಂದ ಟ್ರಂಪ್&lt;/strong&gt;&lt;/p&gt;]]></content:encoded>
            <category>kodagu</category>
            <dc:creator>Anusha Kb</dc:creator>
            <atom:link href="https://kannada.asianetnews.com/state/cctv-footage-shows-tiger-roaming-in-coffee-plantation-kodagu/articleshow-1gycltg"/>
        </item>
        <item>
            <title><![CDATA[ಕೊಡಗಿನ ಆತಂಕಕ್ಕೆ ತೆರೆ: ಹಲವರನ್ನ ಬಲಿ ಪಡೆದ  ಕಾಡಿನ ಒಂಟಿ ಸಲಗ ಕೊನೆಗೂ ಸೆರೆ]]></title>
            <link>https://kannada.asianetnews.com/karnataka-districts/kodagu-forest-department-captures-rogue-elephant-that-killed-man-in-coffee-plantation/articleshow-52k2m40</link>
            <guid isPermaLink="true">https://kannada.asianetnews.com/karnataka-districts/kodagu-forest-department-captures-rogue-elephant-that-killed-man-in-coffee-plantation/articleshow-52k2m40</guid>
            <pubDate>Fri, 13 Mar 2026 22:52:01 +0530</pubDate>
            <description><![CDATA[ಕೊಡಗು ಜಿಲ್ಲೆಯ ಸಿದ್ದಾಪುರ, ಪಾಲಿಬೆಟ್ಟ, ಮತ್ತು ಅಮ್ಮತ್ತಿ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಆತಂಕ ಸೃಷ್ಟಿಸಿ, ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯು ಯಶಸ್ವಿಯಾಗಿ ಸೆರೆ ಹಿಡಿದಿದೆ. ಸಾಕಾನೆಗಳ ಸಹಾಯದಿಂದ ನಡೆಸಿದ ಈ ಕಾರ್ಯಾಚರಣೆಯು ಸ್ಥಳೀಯ ಗ್ರಾಮಸ್ಥರಲ್ಲಿ ನೆಮ್ಮದಿ ತಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkm3cw9yjf2avykaej9mzkht,imgname-rogue-elephant-1773422407998.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಗ್ರಾಮಸ್ಥರಿಗೆ ಭೀತಿಯುಂಟು ಮಾಡುತ್ತಿದ್ದ ಸುಮಾರು 35 ವರ್ಷ ಪ್ರಾಯದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಈ ಕಾರ್ಯಾಚರಣೆ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.&lt;/p&gt;&lt;h2&gt;ಕಾಫಿ ತೋಟಗಳಲ್ಲಿ ಉಪಟಳ&lt;/h2&gt;&lt;p&gt;ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಕಾಫಿ ತೋಟಗಳಲ್ಲಿ ಈ ಕಾಡಾನೆ ಕಳೆದ ಕೆಲ ದಿನಗಳಿಂದ ಅಲೆದಾಡುತ್ತಿತ್ತು. ರಾತ್ರಿ ವೇಳೆ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುವುದು ಮಾತ್ರವಲ್ಲದೆ, ಜನರಿಗೂ ಭೀತಿ ಉಂಟು ಮಾಡುತ್ತಿತ್ತು. ಇದರ ಪರಿಣಾಮವಾಗಿ ಸ್ಥಳೀಯರು ಆತಂಕದಲ್ಲಿ ದಿನ ಕಳೆಯುವಂತಾಗಿತ್ತು.&lt;/p&gt;&lt;h2&gt;ವ್ಯಕ್ತಿಯೊಬ್ಬರ ಬಲಿ&lt;/h2&gt;&lt;p&gt;ನಿನ್ನೆ ನಡೆದ ದುರ್ಘಟನೆಯಲ್ಲಿ ಗುಹ್ಯ ಗ್ರಾಮದಲ್ಲಿ ಗಣಪತಿ ಎಂಬ ವ್ಯಕ್ತಿ ಈ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈ ಘಟನೆ ನಂತರ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಕಾಡಾನೆಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು.&lt;/p&gt;&lt;h2&gt;ಬೆಳಗ್ಗಿನಿಂದಲೇ ಕಾರ್ಯಾಚರಣೆ&lt;/h2&gt;&lt;p&gt;ಘಟನೆಯ ಗಂಭೀರತೆಯನ್ನು ಗಮನಿಸಿದ ಅರಣ್ಯ ಇಲಾಖೆ ಇಂದು ಬೆಳಗ್ಗಿನಿಂದಲೇ ಕಾರ್ಯಾಚರಣೆಯನ್ನು ಆರಂಭಿಸಿತು. ಸುಮಾರು ಆರು ಸಾಕಾನೆಗಳ ಸಹಾಯದಿಂದ ವಿಶೇಷ ತಂಡವನ್ನು ರಚಿಸಿ ಸಿದ್ದಾಪುರ, ಪಾಲಿಬೆಟ್ಟ ಮತ್ತು ಅಮ್ಮತ್ತಿ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.&lt;/p&gt;&lt;h2&gt;ಕಾಫಿ ತೋಟದಲ್ಲಿ ಪತ್ತೆಯಾದ ಕಾಡಾನೆ&lt;/h2&gt;&lt;p&gt;ವಿಸ್ತೃತ ಶೋಧದ ನಂತರ ಚೆನ್ನೈನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಈ ಒಂಟಿ ಸಲಗ ಪತ್ತೆಯಾಯಿತು. ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಕ್ತ ತಂತ್ರವನ್ನು ಅನುಸರಿಸಿ ಕಾಡಾನೆಗೆ ಅರವಳಿಕೆ ನೀಡಿ ಅದನ್ನು ನಿಯಂತ್ರಣಕ್ಕೆ ತಂದರು.&lt;/p&gt;&lt;h2&gt;ಅರಣ್ಯ ಇಲಾಖೆಯ ಯಶಸ್ಸು&lt;/h2&gt;&lt;p&gt;ಅರವಳಿಕೆ ನೀಡಿದ ಬಳಿಕ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹೆಚ್ಚಿನ ಜಾಗ್ರತೆ ವಹಿಸಿ ಕಾರ್ಯ ನಿರ್ವಹಿಸಿದರು.&lt;/p&gt;&lt;h2&gt;ಶಾಸಕರ ಸೂಚನೆ&lt;/h2&gt;&lt;p&gt;ಘಟನೆ ಬಗ್ಗೆ ಮಾಹಿತಿ ಪಡೆದ ಬಳಿಕ ಸ್ಥಳೀಯ ಶಾಸಕ ಎಂ ಎಸ್ ಪೊನ್ನಣ್ಣ ಕೂಡ ಅರಣ್ಯ ಇಲಾಖೆಗೆ ತಕ್ಷಣ ಕಾಡಾನೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯ ನಂತರ ಕಾರ್ಯಾಚರಣೆಗೆ ಮತ್ತಷ್ಟು ವೇಗ ನೀಡಲಾಗಿತ್ತು.&lt;/p&gt;&lt;h2&gt;ಗ್ರಾಮಸ್ಥರಿಗೆ ನೆಮ್ಮದಿ&lt;/h2&gt;&lt;p&gt;ಕಾಡಾನೆ ಸೆರೆ ಹಿಡಿಯಲ್ಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಭೀತಿಯಲ್ಲಿ ಬದುಕುತ್ತಿದ್ದ ಜನರಿಗೆ ಇದೀಗ ಭದ್ರತೆ ಭಾವನೆ ಮೂಡಿದೆ. ಈ ಯಶಸ್ವಿ ಕಾರ್ಯಾಚರಣೆ ಮೂಲಕ ಅರಣ್ಯ ಇಲಾಖೆ ದೊಡ್ಡ ಅಪಾಯವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/kodagu-forest-department-captures-rogue-elephant-that-killed-man-in-coffee-plantation/articleshow-52k2m40"/>
        </item>
        <item>
            <title><![CDATA[Karnataka Budget 2026: ರಾಜ್ಯ ಬಜೆಟ್ ಮೇಲೆ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಅಪಾರ ನಿರೀಕ್ಷೆ]]></title>
            <link>https://kannada.asianetnews.com/state/state-budget-2026-high-stakes-and-huge-expectations-for-the-small-district-of-kodagu/articleshow-60za793</link>
            <guid isPermaLink="true">https://kannada.asianetnews.com/state/state-budget-2026-high-stakes-and-huge-expectations-for-the-small-district-of-kodagu/articleshow-60za793</guid>
            <pubDate>Fri, 06 Mar 2026 08:38:31 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ರಾಜ್ಯ ಬಜೆಟ್ ಮೇಲೆ ಕೊಡಗು ಜಿಲ್ಲೆ ಅಪಾರ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ವನ್ಯಪ್ರಾಣಿ ಹಾವಳಿ ನಿಯಂತ್ರಣ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ರಸ್ತೆ ಅಭಿವೃದ್ಧಿ, ಮತ್ತು ಪ್ರವಾಸೋದ್ಯಮಕ್ಕೆ ವಿಶೇಷ ಅನುದಾನ ಸಿಗಬಹುದೆಂಬ ನಿರೀಕ್ಷೆ ಹೆಚ್ಚಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjz62am775vtmrpzkvv6wv4f,imgname----------------------70--1772720564871.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಘ್ನೇಶ್ ಎಂ. ಭೂತನಕಾಡು&lt;/strong&gt;&lt;/p&gt;&lt;p&gt;&amp;nbsp;&lt;strong&gt;ಮಡಿಕೇರಿ (ಮಾ.6): &lt;/strong&gt;ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 17ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವನ್ಯಪ್ರಾಣಿ ಹಾವಳಿ ನಿಯಂತ್ರಣ, ಕ್ರೀಡಾ ಕ್ಷೇತ್ರದ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿಗೆ ಅನುದಾನ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಪ್ರವಾಸೋದ್ಯಮ ಅಭಿವೃದ್ಧಿ ಸೇರಿದಂತೆ ಅಪಾರ ನಿರೀಕ್ಷೆಗಳಿದೆ.&lt;/p&gt;&lt;p&gt;ಕೊಡಗು ಜಿಲ್ಲೆಯಲ್ಲಿನ ಎರಡೂ ವಿಧಾನಸಭಾ ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಶಾಸಕರಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಂಬಾ ಹತ್ತಿರ ಇದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಕೂಡ ಆತ್ಮೀಯರಾಗಿದ್ದಾರೆ. ಇದರಿಂದ ಕೊಡಗು ಜಿಲ್ಲೆಗೆ ಈ ಬಾರಿಯ ಬಜೆಟ್ ನಲ್ಲಿ ಪ್ರಮುಖ ಯೋಜನೆಗಳು ಘೋಷಣೆಯಾಗುವ ಸಾಧ್ಯತೆಯಿದೆ.&lt;/p&gt;&lt;p&gt;ಕೊಡಗು ಜಿಲ್ಲೆಯಲ್ಲಿನ ಬಹುತೇಕ ರಸ್ತೆಗಳು ಹಾನಿಗೊಳಗಾಗಿದೆ. ಕಳೆದ ಬಾರಿಯ ಬಜೆಟ್ ನಲ್ಲಿ ರಸ್ತೆಗೆ ಅನುದಾನ ದೊರಕಿತ್ತು. ಈ ಬಾರಿಯ ಬಜೆಟ್ ನಲ್ಲಿ ಕೂಡಾ ರಸ್ತೆ ಅಭಿವೃದ್ಧಿಗೆ ಮತ್ತಷ್ಟು ಅನುದಾನ ದೊರಕುವ ಬಗ್ಗೆ ಜಿಲ್ಲೆಯ ಜನರು ನಿರೀಕ್ಷೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆಳಿಲ್ಲ. ತೀರಾ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಪಕ್ಕದ ಮೈಸೂರು, ಮಂಗಳೂರಿಗೆ ತೆರಳಬೇಕಾದ ಪರಿಸ್ಥಿತಿಯಿದೆ. ಆದ್ದರಿಂದ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಕೂಗು ಈ ಹಿಂದಿನಿಂದಲೇ ಇದೆ. ಈ ಬಾರಿಯ ಬಜೆಟ್ ನಲ್ಲಾದರೂ ಘೋಷಣೆಯಾಗಬಹುದೆಂಬ ನಿರೀಕ್ಷೆಯಿದೆ.&lt;/p&gt;&lt;h2&gt;ಹೆಚ್ಚಿನ ಅನುದಾನ ಒದಗಿಸುವ ನಿರೀಕ್ಷೆ:&lt;/h2&gt;&lt;p&gt;ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಪ್ರಾಣಿ-ಮಾನವ ಸಂಘರ್ಷ ಸಮಸ್ಯೆ ತಾರಕಕ್ಕೆ ಏರಿದ್ದು, ಜನರು ಕಾಡಾನೆ ದಾಳಿಗೆ ಒಳಗಾಗಿ ಮೃತಪಡುತ್ತಿದ್ದಾರೆ. ಆನೆ ದಾಳಿಯಿಂದ ಮೃತಪಟ್ಟವರಿಗೆ ಸರ್ಕಾರ ಪರಿಹಾರ ನೀಡುತ್ತಿದೆ. ಆದರೆ ಈ ಸಂಘರ್ಷ ಮಾತ್ರ ನಿಂತಿಲ್ಲ. ನಿರಂತರವಾಗಿ ಸಂಘರ್ಷ ನಡೆಯುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಮಾತ್ರ ಇನ್ನೂ ಕಂಡಿಲ್ಲ. ಹೆಚ್ಚು ವೆಚ್ಚ ಆಗುವುದರಿಂದ ಅರಣ್ಯದ ಗಡಿಯ ಎಲ್ಲಾ ಕಡೆಗಳಲ್ಲಿ ರೈಲ್ವೇ ಬೇಲಿ ಅಳವಡಿಸಿಲ್ಲ. ಆದ್ದರಿಂದ ಈ ಬಾರಿಯ ಬಜೆಟ್ ನಲ್ಲಿ ಅರಣ್ಯ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸುವ ನಿರೀಕ್ಷೆಯಿದೆ.&lt;/p&gt;&lt;p&gt;ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಕ್ರೀಡಾಪಟುಗಳಿದ್ದು, ರಾಜ್ಯ, ರಾಷ್ಟ್ರ ಸೇರಿದಂತೆ ಹಲವು ಕಡೆಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಆದರೆ ಜಿಲ್ಲಾ ಕ್ರೀಡಾಂಗಣದಲ್ಲಿರುವ ಮೈದಾನದ ಪರಿಸ್ಥಿತಿ ತೀರಾ ಶೋಚನೀಯ ಸ್ಥಿತಿಯಲ್ಲಿದೆ ಆದ್ದರಿಂದ ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸುಸಜ್ಜಿತ ಮೈದಾನ ಆಗಬೇಕೆಂಬ ಬೇಡಿಕೆಯಿದ್ದು, ಈ ಬಾರಿ ಆಗಲಿದೆ ಎಂಬ ಭರವಸೆಯಲ್ಲಿ ಜಿಲ್ಲೆಯ ಕ್ರೀಡಾಪ್ರೇಮಿಗಳಿದ್ದಾರೆ.&lt;/p&gt;&lt;h3&gt;ಜಿಲ್ಲೆ ಗಮನ ಸೆಳೆದಿದೆ:&lt;/h3&gt;&lt;p&gt;ಸಾಕಷ್ಟು ಪ್ರವಾಸಿ ತಾಣಗಳ ಮೂಲಕ ಕೊಡಗು ಜಿಲ್ಲೆ ಗಮನ ಸೆಳೆದಿದೆ. ಆದರೆ ಇಂದಿಗೂ ಕೂಡ ಹಲವು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯ ವ್ಯವಸ್ಥೆ ಕೊರತೆ ಇದೆ. ಅಲ್ಲದೆ ಪ್ರವಾಸಿ ತಾಣಗಳನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಅನುದಾನ ದೊರಕುವ ನಿರೀಕ್ಷೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಿಗಳಿದ್ದಾರೆ.&lt;/p&gt;&lt;p&gt;&lt;strong&gt;ಕಳೆದ ಬಾರಿಯ ಕೊಡುಗೆ&lt;/strong&gt;&lt;/p&gt;&lt;p&gt;ವಿರಾಜಪೇಟೆಯಲ್ಲಿ ಸುಮಾರು 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಪೊನ್ನಂಪೇಟೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಕುಶಾಲನಗರ ತಾಲೂಕು ಆಸ್ಪತ್ರೆಯಲ್ಲಿ ನವೀಕರಿಸುವುದು, ಕೊಡಗು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಿಂದ ಹಾನಿಯಾದ ರಸ್ತೆ, ಸೇತುವೆಗಳ ಪುನರ್ ನಿರ್ಮಾಣಕ್ಕೆ ರು.200 ಕೋಟಿ, ಕೂಡಿಗೆ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕೆ ರು.3 ಕೋಟಿ, ಮಡಿಕೇರಿ-ದೋಣಿಗಲ್(ಎನ್ ಹೆಚ್ 75), (ಮಾದಾಪುರ-ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಮಾರ್ಗ)95 ಕಿ.ಮೀ ರಸ್ತೆಯನ್ನು ಕೆ-ಶಿಪ್-4 ಯೋಜನೆಯಡಿ ರಸ್ತೆ ಅಭಿವೃದ್ಧಿ, ಬುಡಕಟ್ಟು ವಸತಿ ಶಾಲೆ 12ನೇ ತರಗತಿಯ ವರೆಗೆ ವಿಸ್ತರಣೆ ಮತ್ತಿತರ ಯೋಜನೆ ಘೋಷಣೆ ಮಾಡಲಾಗಿತ್ತು.&lt;/p&gt;&lt;p&gt;ಈ ಬಾರಿಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಅಪಾರ ನಿರೀಕ್ಷೆಯಿದೆ. ಈ ಬಗ್ಗೆ ಜಿಲ್ಲೆಯ ಶಾಸಕರಾದ ಪೊನ್ನಣ್ಣ ಹಾಗೂ ಡಾ. ಮಂತರ್ ಗೌಡ ಅವರು ಸರ್ಕಾರಕ್ಕೆ ಮನವಿ ನೀಡಿದ್ದು, ಅದರಂತೆ ಪ್ರಮುಖ ಯೋಜನೆಗಳು ಕೊಡಗಿಗೆ ಘೋಷಣೆಯಾಗುವ ನಿರೀಕ್ಷೆಯಿದೆ.&lt;/p&gt;&lt;p&gt;&lt;strong&gt;-ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು&lt;/strong&gt;&lt;/p&gt;&lt;p&gt;ಕೊಡಗು ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಕ್ರೀಡಾಂಗಣ ಇಲ್ಲ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕೂಡ ಇಲ್ಲ. ಜಿಲ್ಲೆಯ ಬಹುತೇಕ ರಸ್ತೆಗಳು ಹದಗೆಟ್ಟಿದೆ. ಕಾಡಾನೆ-ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದೆ. ಆದ್ದರಿಂದ ಈ ಬಾರಿಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ವಿಶೇಷ ಯೋಜನೆಗಳನ್ನು ಘೋಷಣೆ ಮಾಡಬೇಕು.&lt;/p&gt;&lt;p&gt;&lt;strong&gt;-ಎಡಿಕೇರಿ ಪ್ರಸನ್ನ, ಉದ್ಯಮಿ, ಸಮಾಜ ಸೇವಕರು&lt;/strong&gt;&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/state-budget-2026-high-stakes-and-huge-expectations-for-the-small-district-of-kodagu/articleshow-60za793"/>
        </item>
        <item>
            <title><![CDATA[ಬಿಜೆಪಿ ಆನೆ ದಾಳಿಯಿಂದಾದ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ: ಎ.ಎಸ್.ಪೊನ್ನಣ್ಣ ಅಸಮಾಧಾನ]]></title>
            <link>https://kannada.asianetnews.com/politics/as-ponnanna-slams-bjp-elephant-attack-politics-kodagu-gvd/articleshow-6fr5fzt</link>
            <guid isPermaLink="true">https://kannada.asianetnews.com/politics/as-ponnanna-slams-bjp-elephant-attack-politics-kodagu-gvd/articleshow-6fr5fzt</guid>
            <pubDate>Sat, 21 Mar 2026 18:27:25 +0530</pubDate>
            <description><![CDATA[&lt;p&gt;ಆನೆ ದಾಳಿ ಮುಂದಿಟ್ಟುಕೊಂಡು ಆನೆ ದಾಳಿಯ ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಿರಾಜಪೇಟೆ ಶಾಸಕ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಕೊಡಗು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km87hcdq7gdv5w5ebzw3n891,imgname-jj-1774097838519.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಮಾ.21):&lt;/strong&gt; ಕೊಡಗು ಜಿಲ್ಲೆಯಲ್ಲಿ ಆನೆ ಮಾನ ಸಂಘರ್ಷ ಮಿತಿ ಮೀರಿದ್ದು, ಆನೆ ದಾಳಿಯಿಂದ ಸಾವನ್ನಪ್ಪುತ್ತಿರುವುದು ಬಹಳ ನೋವು ತಂದಿದೆ. ಆದರೆ ಆನೆ ದಾಳಿ ಮುಂದಿಟ್ಟುಕೊಂಡು ಆನೆ ದಾಳಿಯ ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಿರಾಜಪೇಟೆ ಶಾಸಕ, ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕೊಡಗು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಮಾಧ್ಯಮಗಳಿಗೆ ಪ್ರಕಟಿಸಿರುವ ಮಾಹಿತಿ ಸುಳ್ಳು.&lt;/p&gt;&lt;p&gt;ಸಾವಿನಲ್ಲೂ ಪ್ರತಿಭಟನೆ ಮಾಡಿ ರಾಜಕೀಯ ಮಾಡುವುದು ಬಿಜೆಪಿಗೆ ಹೊಸದೇನಲ್ಲ, ಹಿಂದಿನಿಂದಲೂ ಇದನ್ನೇ ಮಾಡಿದೆ. ಬಿಜೆಪಿ ಬಹಳ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋವಿನಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಬೇಕಾಗಿತ್ತು. ಆನೆ ದಾಳಿ ಬಳಿಕ ಕಲಾಪದಲ್ಲೂ ಕೂಡ ನಾನು ಸ್ಪೀಕರ್ ಗಮನಕ್ಕೆ ತಂದಿದ್ದೇನೆ. ನಾವು ಕೂಡ ಆನೆ ಮಾನವ ಸಂಘರ್ಷ ತಡೆಗೆ ಕ್ರಮಕ್ಕೆ ಮುಂದಾಗಿದ್ದೇವೆ. ಕಳೆದ ಇಪ್ಪತ್ತೈದು ವರ್ಷದಿಂದ ಬಿಜೆಪಿ ಶಾಸಕರು ಇಲ್ಲಿ ಅಧಿಕಾರದಲ್ಲಿದ್ದರು.&lt;/p&gt;&lt;p&gt;ಇಪ್ಪತ್ತೈದು ವರ್ಷದಲ್ಲಿ ಆನೆ ದಾಳಿಯಿಂದ ಯಾರು ಸತ್ತೆ ಇಲ್ವಾ? ಎಂದ ಅವರು ವಾರ್ಷಿಕವಾರು ಅಂಕಿ ಅಂಶಗಳನ್ನು ತೆರೆದಿಟ್ಟರು. 2019- 20 ರಲ್ಲಿ 6 ಜನ, 2020-21 13 ಜನ, 2021-22 ರಲ್ಲಿ 15 ಜನ, 2023-2024ರಲ್ಲಿ 10 ಜನ, 2024-25 ರಲ್ಲಿ 8 ಜನ ಸಾವಿಗಿಡಾಗಿದ್ರೆ 2025-26 ರಲ್ಲಿ ಇಲ್ಲಿಯವರೆಗೆ 12 ಮಂದಿ ಸಾವಿಗೀಡಾಗಿದ್ದಾರೆ. ಅಷ್ಟೊಂದು ಜನರು ಆನೆ ದಾಳಿಯಿಂದ ಸತ್ತಾಗ ಯಾರು ಸಚಿವರು ಇದ್ರು. ಅವರನ್ನ ಎಲ್ಲಿಗೆ ಕಳುಹಿಸ ಬೇಕೆಂದು ಪೊನ್ನಣ್ಣ ಪ್ರಶ್ನಿಸಿದರು. ಹಿಂದೆ ಬಿಜೆಪಿ ಶಾಸಕರು ಇದ್ದ ಸಮಯದಲ್ಲೇ ಅತಿ ಹೆಚ್ಚು ಆನೆ ದಾಳಿ ಆಗಿರೋದು.&lt;/p&gt;&lt;p&gt;ಪ್ರತಿ ವರ್ಷ ಆನೆ ದಾಳಿಯಾದಾಗ ಹಿಂದೆ ಇದ್ದ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಬಿಜೆಪಿ ನಾಯಕರಿಗೆ ಶಾಸಕ ಪೊನ್ನಣ್ಣ ನೇರ ಪ್ರಶ್ನೆ ಮಾಡಿದರು. ಪ್ರತಿಭಟನೆ ಹೋರಾಟದಿಂದ ಓಟು ಹೆಚ್ಚಾಗಲು ಸಾಧ್ಯವಿಲ್ಲ. ಎಲ್ಲಿ ಸಾವಾಗುತ್ತೆ ಅನ್ನೋದನ್ನ ಕಾಯುವ ಸ್ಥಿತಿ ಸದ್ಯ ಬಿಜೆಪಿ ಬಂದಿದೆ ಎಂದು ಟೀಕಿಸಿದರು. 15 ಲಕ್ಷ ದಿಂದ 20 ಲಕ್ಷಕ್ಕೆ ಪರಿಹಾರ ಏರಿಸಿರೋದು ನಮ್ಮ ಸರ್ಕಾರ. ಅರಣ್ಯ ವಿಚಾರದಲ್ಲಿ ರಾಜ್ಯದ ಜೊತೆಗೆ ಕೇಂದ್ರದ ಮೇಲು ಹೆಚ್ಚು ಜವಾಬ್ದಾರಿ ಇದೆ. ಪ್ರಾಜೆಕ್ಟ್ ಎಲಿಫೆಂಟ್, ಪ್ರಾಜೆಕ್ಟ್ ಟೈಗರ್ ಸ್ಕೀಮ್ ಕೂಡ ಇದೆ.&lt;/p&gt;&lt;h2&gt;&lt;strong&gt;ಸಚಿವರಿಗೆ ಏನು ಹೇಳ್ತಿರಾ?&lt;/strong&gt;&lt;/h2&gt;&lt;p&gt;12 ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಿದೆ. ಬಹುಪಾಲು ಪರಿಹಾರದ ಹಣವನ್ನ ಕೇರಳಕ್ಕೆ ಕಳುಹಿಸಿದ್ದಾರೆ. ರಾಜ್ಯಕ್ಕೆ ಒಂದು ನಯಾ ಪೈಸೆಯನ್ನು ಕೇಂದ್ರ ಬಿಡುಗಡೆ ಮಾಡಿಲ್ಲ. ಇದಕ್ಕೆ ನಿಮ್ಮ ಕೇಂದ್ರ ಸರ್ಕಾರ, ಸಚಿವರಿಗೆ ಏನು ಹೇಳ್ತಿರಾ? ಎಂದು ಬಿಜೆಪಿ ನಾಯಕರನ್ನ ಶಾಸಕ ಪೊನ್ನಣ್ಣ ಪಶ್ನಿಸಿದ್ದಾರೆ. ಕೇಂದ್ರದಲ್ಲಿ ಮ್ಯಾನ್ ಅನಿಮಲ್ ಕಾನ್ ಫ್ಲಿಕ್ಟ್ ಕಾಯ್ದೆಯಲ್ಲಿ 290 ಕೋಟಿ ಅನುದಾನ ಇದೆ, ಇದರಲ್ಲಿ ಕೇಂದ್ರದ ಅನುದಾನ ಕರ್ನಾಟಕ ರಾಜ್ಯಕ್ಕೆ ಬರಲಿಲ್ಲ ಅಂತ ಪೊನ್ನಣ್ಣ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ.&lt;/p&gt;&lt;p&gt;ಬೇರೆ ರಾಜ್ಯಕ್ಕೆ ಕೊಡಲು ಹಣ ಇದೆ ನಮ್ಮ ರಾಜ್ಯಕ್ಕೆ ಕೊಡಲು ಹಣ ಇಲ್ಲವೇ. ಜನಪರ ಕೆಲಸ ಮಾಡದೆ ರಾಜಕೀಯ ಮಾಡ್ತಾರೆಂದ ಪೊನ್ನಣ್ಣ ಆನೆ ಮಾನವ ಸಂಘರ್ಷಕ್ಕೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಕೇಂದ್ರದಿಂದ ಹಣ ತಂದು ವನ್ಯಜೀವಿ ಸಮಸ್ಯೆ ಬಗೆಹರಿಸಿ. ರಾಜ್ಯದ ಹೊಣೆಗಾರಿಕೆ ಜೊತೆಗೆ ಕೇಂದ್ರದ ಹೊಣೆಗಾರಿಕೆ ಬಹಳ ಇದೆ. ಕೇಂದ್ರದ ನಾಯಕರು ಇದರ ಬಗ್ಗೆ ಸಂಸತ್ ನಲ್ಲಿ ಯಾವುದೇ ಪ್ರಶ್ನೆ ಮಾಡಿಲ್ಲ ಎಂದು ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಶಾಸಕ ಪೊನ್ನಣ್ಣ ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/as-ponnanna-slams-bjp-elephant-attack-politics-kodagu-gvd/articleshow-6fr5fzt"/>
        </item>
        <item>
            <title><![CDATA[ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಫುಲ್ ಕೂಲ್! ಆದ್ರೆ ಮಾವಿನ ಬೆಳೆಗೆ ಟ್ರಬಲ್]]></title>
            <link>https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp</link>
            <guid isPermaLink="true">https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp</guid>
            <pubDate>Mon, 16 Mar 2026 20:07:42 +0530</pubDate>
            <description><![CDATA[&lt;p&gt;ರಾಜ್ಯದ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಈ ಅಕಾಲಿಕ ಮಳೆಯು ಬಿಸಿಲಿನಿಂದ ಜನರಿಗೆ ತಂಪೆರೆದರೂ, ರಾಯಚೂರಿನ ಮಾವು ಬೆಳೆಗಾರರು ಮತ್ತು ಇತರೆ ರೈತರಿಗೆ ಬೆಳೆ ಹಾನಿಯ ಭೀತಿಯನ್ನು ತಂದೊಡ್ಡಿದೆ. ಮೈಸೂರಿನಲ್ಲಿ ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkvgt0sc0bgmx9eqms2wcyy2,imgname-mysuru-hailstones-rain-1773671351084.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಈ ಅಕಾಲಿಕ ಮಳೆಯು ಬಿಸಿಲಿನಿಂದ ಜನರಿಗೆ ತಂಪೆರೆದರೂ, ರಾಯಚೂರಿನ ಮಾವು ಬೆಳೆಗಾರರು ಮತ್ತು ಇತರೆ ರೈತರಿಗೆ ಬೆಳೆ ಹಾನಿಯ ಭೀತಿಯನ್ನು ತಂದೊಡ್ಡಿದೆ. ಮೈಸೂರಿನಲ್ಲಿ ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಇಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಸುಡುವ ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ ತಂದಿದೆ. ಆದರೆ, ಕೆಲವು ಕಡೆ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಂಕಷ್ಟವೂ ಎದುರಾಗಿದೆ.&lt;/p&gt;&lt;img&gt;&lt;p&gt;ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸುತ್ತಮುತ್ತ ವರ್ಷದ ಮೊದಲ ಮಳೆಯಾಗಿದೆ. ಆದರೆ, ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಪಿರಿಯಾಪಟ್ಟಣ ಪಟ್ಟಣದಲ್ಲಿ ಸಿಡಿಲು ಬಡಿದ ರಭಸಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ. ಮಳೆ ಸುರಿಯುತ್ತಿದ್ದರೂ ಮರದ ಮೇಲ್ಭಾಗದಲ್ಲಿ ಬೆಂಕಿ ಆವರಿಸಿದ್ದು ನೋಡುಗರನ್ನು ಆತಂಕಕ್ಕೀಡು ಮಾಡಿತ್ತು.&lt;/p&gt;&lt;img&gt;&lt;p&gt;ಹಾಸನ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಳೆಯ ತೀವ್ರತೆಗೆ ರಸ್ತೆ ಬದಿಯಲ್ಲಿ ಮತ್ತು ಮನೆಗಳ ಮೇಲೆ ಆಲಿಕಲ್ಲುಗಳು ರಾಶಿ ರಾಶಿಯಾಗಿ ಬಿದ್ದಿದ್ದವು. ರಸ್ತೆಯಲ್ಲಿ ಆಲಿಕಲ್ಲುಗಳನ್ನು ನೋಡಿ ಮಕ್ಕಳು ಮತ್ತು ಸಾರ್ವಜನಿಕರು ಖುಷಿಯಿಂದ ಆಟವಾಡಿದ ದೃಶ್ಯಗಳು ಕಂಡುಬಂದವು. ವರ್ಷದ ಮೊದಲ ಮಳೆ ಇದಾಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಸ್ವಲ್ಪ ಮಟ್ಟಿಗೆ ಪರದಾಟ ನಡೆಸಬೇಕಾಯಿತು.&lt;/p&gt;&lt;img&gt;&lt;p&gt;ಬಿಸಿಲ ನಾಡು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡು ಸೇರಿದಂತೆ ವಿವಿಧೆಡೆ ಸುಮಾರು ಒಂದು ಗಂಟೆ ಕಾಲ ನಿರಂತರ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪು ನೀಡಿದ್ದರೂ, ಆಲಿಕಲ್ಲುಗಳ ಅಬ್ಬರ ಮಾವು ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೂವು ಬಿಟ್ಟಿದ್ದ ಮಾವಿನ ಗಿಡಗಳಿಗೆ ಆಲಿಕಲ್ಲು ಮಳೆ ಏಟು ನೀಡಿದ್ದು, ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ.&lt;/p&gt;&lt;img&gt;&lt;p&gt;ಕೊಡಗು ಜಿಲ್ಲೆಯ ಶಿರಂಗಾಲ, ಹೆಬ್ಬಾಲೆ, ಬೇತ್ರಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಹೊಲ ಮತ್ತು ಗದ್ದೆಗಳಿಗೆ ನೀರು ನುಗ್ಗುವಂತೆ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಇಳೆಗೆ ಚೈತನ್ಯ ನೀಡಿದೆ. ಕಾಫಿ ಮತ್ತು ಕರಿಮೆಣಸು ಬೆಳೆಗಾರರಿಗೆ ಈ ಮಳೆ ವರದಾನವಾಗಿ ಪರಿಣಮಿಸುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ, ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಈ ದಿಢೀರ್ ಮಳೆ ಬಿಸಿಲಿನ ತಾಪವನ್ನು ಕಡಿಮೆ ಮಾಡಿದ್ದರೂ, ಆಲಿಕಲ್ಲು ಮತ್ತು ಸಿಡಿಲಿನ ಅಬ್ಬರ ಕೆಲವು ಅನಾಹುತಗಳಿಗೂ ಕಾರಣವಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp"/>
        </item>
        <item>
            <title><![CDATA[ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಹೋಗಿದ್ದೇಕೆ?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಕಿಡಿ]]></title>
            <link>https://kannada.asianetnews.com/politics/as-ponanna-slams-centre-israel-visit-russia-iran-relations-india-gvd/articleshow-czouc0y</link>
            <guid isPermaLink="true">https://kannada.asianetnews.com/politics/as-ponanna-slams-centre-israel-visit-russia-iran-relations-india-gvd/articleshow-czouc0y</guid>
            <pubDate>Sat, 21 Mar 2026 18:15:41 +0530</pubDate>
            <description><![CDATA[&lt;p&gt;ನಮಗೆ ಸ್ವಾತಂತ್ರ್ಯ ಬಂದಾಗಿನಿಂದಲೂ ಅವತ್ತಿನ ಸೋವಿಯತ್ ಒಕ್ಕೂಟ ಇಂದಿನ ರಷ್ಯಾ ನಮ್ಮ ಸ್ನೇಹ ರಾಷ್ಟ್ರ. ನೆಹರು ಕಾಲದಿಂದಲೂ ಐತಿಹಾಸಿಕ ಸ್ನೇಹ ರಾಷ್ಟ್ರ. ಆದರೆ ಪ್ರಧಾನಿಯವರು ಇಂದು ಅದನ್ನು ಕೆಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km86vyys2tz09y3d7rc2taft,imgname-hfjhgvj-1774097136601.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಮಾ.21):&lt;/strong&gt; 1953 ರಲ್ಲಿ ಭಾರತ ಮತ್ತು ಇರಾನ್ ನಡುವೆ ಒಪ್ಪಂದವಾಗಿದ್ದು, ಇರಾನ್ ಮತ್ತು ಭಾರತದ್ದು 75 ವರ್ಷಗಳ ಸ್ನೇಹ. ಯುದ್ಧ ಆರಂಭವಾಗಿರುವುದರಿಂದ ಹರ್ಮುಜ್ ಮಾರ್ಗವನ್ನು ಬಂದ್ ಮಾಡಿಬಿಟ್ಟಿದ್ದಾರೆ. ಆದರೆ ನಮ್ ದೇಶದ ಪ್ರಧಾನಿಯವರು ಯಾವ ಉದ್ದೇಶಕ್ಕೆ ಇಸ್ರೇಲ್ ಗೆ ಹೋಗಿದ್ದರು. ಅದನ್ನು ಈಗ ಸಂಸತ್ ಕಲಾಪ ನಡೆಯುತ್ತಿದ್ದು ಅಲ್ಲಿಯೇ ದೇಶದ ಜನರಿಗೆ ಹೇಳಲಿ ಎಂದು ಸಿಎಂ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆಗ್ರಹಿಸಿದ್ದಾರೆ.&lt;/p&gt;&lt;p&gt;ಮಡಿಕೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಸಂದರ್ಭ ರಾಜ್ಯಕ್ಕೆ ಅಗತ್ಯದಷ್ಟು ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಗೆ ಸಿಎಂ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಅಷ್ಟೇ ಅಲ್ಲ, ದೇಶದಲ್ಲಿಯೇ ಸಿಲಿಂಡರ್ ಕೊರತೆ ಇರುವುದು ನಿಜ. ಆದರೆ ಕೊರತೆಗೆ ಕಾರಣ ಏನು ಹುಡುಕಬೇಕಲ್ಲವೆ.? ಇಸ್ರೇಲ್ ಎಷ್ಟೇ ಶಕ್ತಿಶಾಲಿ ರಾಷ್ಟ್ರವಾದರೂ ಅಂತರರಾಷ್ಟ್ರೀಯವಾಗಿ ಭಾರತಕ್ಕಾಗಲಿ ಇತರೆ ರಾಷ್ಟ್ರಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.&lt;/p&gt;&lt;p&gt;ನಮಗೆ ಸ್ವಾತಂತ್ರ್ಯ ಬಂದಾಗಿನಿಂದಲೂ ಅವತ್ತಿನ ಸೋವಿಯತ್ ಒಕ್ಕೂಟ ಇಂದಿನ ರಷ್ಯಾ ನಮ್ಮ ಸ್ನೇಹ ರಾಷ್ಟ್ರ. ನೆಹರು ಕಾಲದಿಂದಲೂ ಐತಿಹಾಸಿಕ ಸ್ನೇಹ ರಾಷ್ಟ್ರ. ಆದರೆ ಪ್ರಧಾನಿಯವರು ಇಂದು ಅದನ್ನು ಕೆಡಿಸಿದ್ದಾರೆ ಎಂದು ಕೇಂದ್ರದ ವಿರುದ್ಧ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಹರಿಹಾಯ್ದರು. ಕೇಂದ್ರದ ವಿರುದ್ಧ ಕಿಡಿಯಾದ ಅವರು ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದಾಗ ನಾವು, ನೀವು ಸ್ನೇಹ ದೇಶ. ಯುದ್ಧಕ್ಕೆ ಅವಕಾಶ ಬೇಡ ನಿಲ್ಸಿ ಎಂದು ಎದ್ದು ನಿಂತು ಹೇಳಬಹುದಿತ್ತು.&lt;/p&gt;&lt;p&gt;ಅವತ್ತು ವಾರ್ ಮಾಡಿ ಅಂತ ರಷ್ಯಾಗೆ ದುಡ್ಡು ಕೊಟ್ಟರು. ಈಗ ರಷ್ಯಾದಿಂದ ಆಯಿಲ್ ತಗೋಬೇಡಿ ಅಂತ ಅಮೆರಿಕ ಹೇಳಿದ್ರೆ ಆಯ್ತು ಅಂತಾರೆ. ಮುವತ್ತು ದಿನ ಮಾತ್ರ ತಗೊಳ್ಳಿ ಅಂದರೆ ಅದಕ್ಕೂ ಆಯ್ತು ಅಂತಾರೆ. ನಮ್ಮ ಸುತ್ತ ಇರುವ ಯಾವುದೇ ದೇಶದೊಂದಿಗೆ ನಾವು ವ್ಯವಹಾರ ಮಾಡಲು ಸಾಧ್ಯವಿಲ್ಲ. ಯಾರು ಇವತ್ತು ನಮ್ಮ ಸ್ನೇಹ ರಾಷ್ಟ್ರವಾಗಿಲ್ಲ, ಇವತ್ತು ಡಾಲರ್ ಎದುರು ರೂಪಾಯಿ ಪರಿಸ್ಥಿತಿ ಏನಾಗಿದೆ. ಅಂದು ಡಾಲರ್ ಬೆಲೆ 60 ರೂಪಾಯಿ ಆದಾಗ ಹೆಂಗಾಯಿತು ಎಂದು ಪ್ರಶ್ನಿಸಿದರು,&lt;/p&gt;&lt;h2&gt;&lt;strong&gt;ತಲೆಮೇಲೆ ಹೊತ್ತು ಹೋರಾಟ&lt;/strong&gt;&lt;/h2&gt;&lt;p&gt;ಇಂದು 92 ರೂಪಾಯಿ ಆಗಿ ಹೋಗಿದೆ. ಇವತ್ತು ಬಡ ಮತ್ತು ಮಧ್ಯಮ ವರ್ಗದವರು ಮದುವೆ ಮಾಡಲು ಸಾಧ್ಯವಿಲ್ಲ. ಚಿನ್ನದ ಬೆಲೆ ಅಷ್ಟು ಹೆಚ್ಚಾಗಿ ಹೋಗಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಗ್ರಾಂಗೆ 500 ರೂಪಾಯಿ ಇತ್ತು. ಇವತ್ತು ಎಷ್ಟು ಆಗಿದೆ ಎಂದು ವಿರಾಜಪೇಟೆ ಶಾಸಕ ಎ. ಎಸ್ ಪೊನ್ನಣ್ಣ ಪ್ರಶ್ನಿಸಿದರು. ಯುದ್ಧಕ್ಕಿಂತ ಮೊದಲು ಗ್ಯಾಸ್ ಬೆಲೆ ಎಷ್ಟಿತ್ತು. ಅಂದು ಗ್ಯಾಸ್ ಸಿಲಿಂಡರ್ 400 ರೂಪಾಯಿ ಆದಾಗ ಸಿಲಿಂಡರ್ ತಲೆಮೇಲೆ ಹೊತ್ತು ಹೋರಾಟ ಮಾಡಿದ್ರು.&lt;/p&gt;&lt;p&gt;ಇವತ್ತು ಸಿಲಿಂಡರ್ ಬೆಲೆಯನ್ನು ಹೊರಲಾರದಷ್ಟು ಅದರ ಬೆಲೆ ಭಾರವಾಗಿದೆ ಎಂದರು. ಪ್ರೀಮಿಯಂ ಪೆಟ್ರೋಲ್ ದರ ಹೆಚ್ಚಳಕ್ಕೂ ಕಿಡಿಯಾದ ಶಾಸಕ ಪೊನ್ನಣ್ಣ, ಲೀಟರ್ ಗೆ 2 ರೂಪಾಯಿ ಹೆಚ್ಚಳ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾನ್ಯ ಪೆಟ್ರೋಲ್ ದರವನ್ನು ಹೆಚ್ಚಳ ಮಾಡುತ್ತಾರೆ. ಇದರ ಬಗ್ಗೆ ಯಾರಾದರೂ ಚಕಾರ ಎತ್ತುತ್ತಿದ್ದಾರಾ, ನಾವೇನಾದರೂ ಮಾತನಾಡಿದರೆ ಯುದ್ಧದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎನ್ನುತ್ತಾರೆ.&lt;/p&gt;&lt;p&gt;ಇವರು ದೇಶ ವಿರೋಧಿಗಳು ಎನ್ನುತ್ತಾರೆ. ನಾವು ರಾಷ್ಟ್ರವಾದಿಗಳು, ದೇಶಕ್ಕೆ ಸ್ವಾತಂತ್ರ ತಂದವರು ನಾವು. ನಮಗೆ ಇವತ್ತು ದೇಶ ವಿರೋಧಿಗಳು ಎಂಬ ಪಟ್ಟಕಟ್ಟಿ ಕೂರಿಸಿದ್ದಾರೆ. ಸ್ವಾತಂತ್ರ ಹೋರಾಟದಲ್ಲಿ ನಾವು ಸರಂಡರ್ ಆಗುತ್ತೇವೆ ಅಂತ ಪತ್ರ ಬರೆದಿದ್ದರು. ಹಾಗಂತ ಪತ್ರ ಬರೆದವರು ಹೀಗ ಸ್ವಾತಂತ್ರ ಹೋರಾಟಗಾರರಾಗಿದ್ದಾರೆ. ನಾವು ರಷ್ಯಾ, ಇರಾನ್ ಜೊತೆ ರಿಲೇಷನ್ ಶಿಪ್ ಬೆಳೆಸಬೇಕಾಗಿತ್ತು. ಅಮೆರಿಕದ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ಬೇಕಾಗಿತ್ತು, ಇದು ಇಂಡಿಯಾ ಎಂದ ಸಿಎಂ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/as-ponanna-slams-centre-israel-visit-russia-iran-relations-india-gvd/articleshow-czouc0y"/>
        </item>
        <item>
            <title><![CDATA[ಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಿಂದ ಮಹಿಳೆ ನಿಗೂಢ ನಾಪತ್ತೆ!  2 ದಿನದಿಂದ ಶರಣ್ಯಗಾಗಿ ಹುಡುಕಾಟ]]></title>
            <link>https://kannada.asianetnews.com/karnataka-districts/kodagu-trekking-incident-kerala-woman-missing-on-tadiandamol-hills-search-intensified-gdp/articleshow-ers459b</link>
            <guid isPermaLink="true">https://kannada.asianetnews.com/karnataka-districts/kodagu-trekking-incident-kerala-woman-missing-on-tadiandamol-hills-search-intensified-gdp/articleshow-ers459b</guid>
            <pubDate>Fri, 03 Apr 2026 13:20:30 +0530</pubDate>
            <description><![CDATA[ಕೊಡಗು ಜಿಲ್ಲೆಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ ಎಂಬ ಮಹಿಳೆ ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೂ, ಅವರ ಯಾವುದೇ ಸುಳಿವು ಲಭ್ಯವಾಗಿಲ್ಲ.]]></description>
            <media:content url="https://static.asianetnews.com/images/w-1280,h-720,format-jpg,imgid-01kn93w0w6hz9czyf1ndd5xkb9,imgname-tadiandamol-1775201289094.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ: &lt;/strong&gt;ಕೊಡಗು ಜಿಲ್ಲೆಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಮಹಿಳೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಶರಣ್ಯ (36) ಎಂದು ಗುರುತಿಸಲಾಗಿದ್ದು, ಕಳೆದ ಎರಡು ದಿನಗಳಿಂದ ಅವರ ಸುಳಿವು ಸಿಕ್ಕಿಲ್ಲ. ಶರಣ್ಯ ಅವರು ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ ಪ್ರದೇಶದಲ್ಲಿರುವ ಹೋಂಸ್ಟೇಯಲ್ಲಿ ತಂಗಿದ್ದು, ಪ್ರವಾಸದ ಭಾಗವಾಗಿ ಗುರುವಾರ (ಏಪ್ರಿಲ್ 2) ಚಾರಣಕ್ಕೆ ತೆರಳಿದ್ದರು. ಆರಂಭದಲ್ಲಿ ಇತರರೊಂದಿಗೆ ಚಾರಣಕ್ಕೆ ಹೊರಟಿದ್ದರೂ, ನಂತರ ಯಾವ ಹಂತದಲ್ಲಿ ಅವರು ತಂಡದಿಂದ ಬೇರ್ಪಟ್ಟರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.&lt;/p&gt;&lt;h2&gt;ಎರಡು ದಿನಗಳಿಂದ ಸುಳಿವು ಇಲ್ಲ&lt;/h2&gt;&lt;p&gt;ಚಾರಣಕ್ಕೆ ತೆರಳಿದ ಬಳಿಕ ಶರಣ್ಯ ಅವರ ಸಂಪರ್ಕ ಕಡಿತಗೊಂಡಿದ್ದು, ಎರಡು ದಿನಗಳಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದರಿಂದ ಕುಟುಂಬದವರು ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ತಡಿಯಂಡಮೋಳ್ ಬೆಟ್ಟದ ಅರಣ್ಯ ಪ್ರದೇಶಗಳಲ್ಲಿ ತಂಡಗಳು ವ್ಯಾಪಕವಾಗಿ ಹುಡುಕಾಟ ನಡೆಸುತ್ತಿವೆ.&lt;/p&gt;&lt;p&gt;ನಿನ್ನೆ ತಡರಾತ್ರಿವರೆಗೂ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಶರಣ್ಯ ಅವರಿಗಾಗಿ ಹುಡುಕಾಟ ಮುಂದುವರಿಸಿದ್ದರೂ ಯಾವುದೇ ಸುಳಿವು ಸಿಕ್ಕಿಲ್ಲ. ಇಂದೂ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.&lt;/p&gt;&lt;h2&gt;ಆತಂಕದಲ್ಲಿರುವ ಕುಟುಂಬಸ್ಥರು&lt;/h2&gt;&lt;p&gt;ಪ್ರವಾಸಕ್ಕಾಗಿ ಕೊಡಗಿಗೆ ಬಂದಿದ್ದ ಶರಣ್ಯ ಅವರ ನಾಪತ್ತೆ ಪ್ರಕರಣ ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಶೀಘ್ರದಲ್ಲೇ ಮಹಿಳೆಯನ್ನು ಪತ್ತೆಹಚ್ಚಲು ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರಸ್ತುತ ಪೊಲೀಸರು ಮತ್ತು ಅರಣ್ಯ ಇಲಾಖೆ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಮುಂದಿನ ಪ್ರತೀ ಕ್ಷಣವೂ ಅತ್ಯಂತ ಮಹತ್ವದ್ದಾಗಿವೆ.&lt;/p&gt;&lt;h2&gt;ಬೆಟ್ಟದ ಬಗ್ಗೆ ಎಷ್ಟು ಗೊತ್ತು?&lt;/h2&gt;&lt;p&gt;ತಡಿಯಂಡಮೋಳ್ ಬೆಟ್ಟವು ಕೊಡಗು ಜಿಲ್ಲೆಯಲ್ಲಿರುವ ಅತ್ಯಂತ ಎತ್ತರವಾದ ಬೆಟ್ಟ. ಇದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುತ್ತದೆ. ಇದು ಸಮುದ್ರ ಮಟ್ಟದಿಂದ 1,748 ಮೀಟರ್ ಎತ್ತರದಲ್ಲಿದೆ. ತಡಿಯಂಡಮೋಳ್ ಬೆಟ್ಟವನ್ನು1994ರಿಂದಲೂ ಏರುತ್ತಿದ್ದಾರೆ. ಇದು ವಿರಾಜಪೇಟೆಯಿಂದ ಸುಮಾರು 30 ಕಿ.ಮೀ ದೂರದಲ್ಲಿದೆ. ಬೆಟ್ಟದ ಮೇಲೆ ಹುಲ್ಲುಗಾವಲು ಇದ್ದು, ಬೆಟ್ಟದ ಸುತ್ತ ಶೋಲ ಅರಣ್ಯವಿದೆ. ಬೆಟ್ಟದ ಕೆಳಭಾಗದಲ್ಲಿ ನಾಲ್ಕು ನಾಡು ಅರಮನೆ ಇದೆ. ಈ ಅರಮನೆಗೆ ಕೆಲವು ಶತಮಾನಗಳ ಇತಿಹಾಸವಿದೆ. ಸ್ಥಳೀಯ ಭಾಷೆಯಲ್ಲಿ ತಡಿಯಂಡಮೋಳ್ ಎಂದರೆ ಎತ್ತರವಾದ ಬೆಟ್ಟ ಎಂದು ಅರ್ಥ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/kodagu-trekking-incident-kerala-woman-missing-on-tadiandamol-hills-search-intensified-gdp/articleshow-ers459b"/>
        </item>
        <item>
            <title><![CDATA[ಮಡಿಕೇರಿ ಕಾಫಿ ತೋಟದ ಕಂದಕಕ್ಕೆ ಕಾರಿನ ಸಮೇತ ಬಿದ್ದ ಕುಂದಾಪುರದ ಸಿರಾಜ್; ದಾರಿಹೋಕರಿಂದ ಚಾಲಕನ ರಕ್ಷಣೆ!]]></title>
            <link>https://kannada.asianetnews.com/karnataka-districts/kodagu-madikeri-accident-car-plunges-into-gorge-neerukolli-siraj-injured-sat/articleshow-g0wg7ul</link>
            <guid isPermaLink="true">https://kannada.asianetnews.com/karnataka-districts/kodagu-madikeri-accident-car-plunges-into-gorge-neerukolli-siraj-injured-sat/articleshow-g0wg7ul</guid>
            <pubDate>Mon, 30 Mar 2026 16:19:53 +0530</pubDate>
            <description><![CDATA[&lt;p&gt;ಮಡಿಕೇರಿ ಸಮೀಪದ ನೀರುಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿ ಬದಿಯ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಘಟನೆಯಲ್ಲಿ ಕುಂದಾಪುರ ಮೂಲದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ಸಕಾಲದಲ್ಲಿ ರಕ್ಷಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmz5s676t81tb96hqvpzs8jr,imgname-madikeri-car-accident-1774867749091.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಮಾ.30): ಕೊ&lt;/strong&gt;ಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನೀರುಕೊಲ್ಲಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಕುಂದಾಪುರ ಮೂಲದ ಸಿರಾಜ್ ಎಂಬುವವರು ತಮ್ಮ ಕಾರಿನಲ್ಲಿ ಕುಂದಾಪುರದಿಂದ ಮಡಿಕೇರಿಗೆ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 275 ರ ಮಡಿಕೇರಿ ಮತ್ತು ಸಂಪಾಜೆ ನಡುವಿನ ನೀರುಕೊಲ್ಲಿ ಎಂಬ ಪ್ರದೇಶ ತಲುಪಿದಾಗ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಗೋಡೆಯನ್ನು ದಾಟಿ ನೇರವಾಗಿ ಕಂದಕಕ್ಕೆ ಉರುಳಿದೆ. ಕಡಿದಾದ ತಿರುವುಗಳು ಮತ್ತು ಹಳ್ಳತಿಟ್ಟುಗಳಿಂದ ಕೂಡಿದ ಈ ಪ್ರದೇಶದಲ್ಲಿ ಕಾರು ಉರುಳಿ ಬಿದ್ದ ರಭಸಕ್ಕೆ ವಾಹನ ಜಖಂಗೊಂಡಿದೆ.&lt;/p&gt;&lt;h2&gt;&lt;strong&gt;ಸ್ಥಳೀಯರಿಂದ ಕ್ಷಿಪ್ರ ಕಾರ್ಯಾಚರಣೆ:&lt;/strong&gt;&lt;/h2&gt;&lt;p&gt;ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಮತ್ತು ಇತರ ವಾಹನ ಸವಾರರು, ಪ್ರಾಣದ ಹಂಗು ತೊರೆದು ಕಂದಕಕ್ಕೆ ಇಳಿದು ಚಾಲಕ ಸಿರಾಜ್ ಅವರನ್ನು ರಕ್ಷಿಸಿದ್ದಾರೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಸಿರಾಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಕಾಲದಲ್ಲಿ ಸ್ಥಳೀಯರು ಸ್ಪಂದಿಸಿದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.&lt;/p&gt;&lt;h2&gt;&lt;strong&gt;ಅಪಘಾತಕ್ಕೆ ಕಾರಣವೇನು?&lt;/strong&gt;&lt;/h2&gt;&lt;p&gt;ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಯು ಕಡಿದಾದ ತಿರುವುಗಳನ್ನು ಹೊಂದಿದ್ದು, ಚಾಲಕರು ಅತಿ ವೇಗವಾಗಿ ಚಲಿಸುವುದು ಅಥವಾ ದಣಿವು ಹಾಗೂ ನಿದ್ರೆಯ ಮಂಪರಿನಿಂದ ನಿಯಂತ್ರಣ ಕಳೆದುಕೊಳ್ಳುವುದು ಇಂತಹ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ನೀರುಕೊಲ್ಲಿ ಭಾಗದಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ಸಂಭವಿಸಿದ್ದು, ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸುವ ಅಗತ್ಯವಿದೆ.&lt;/p&gt;&lt;h2&gt;&lt;strong&gt;ಪೊಲೀಸ್ ಭೇಟಿ:&lt;/strong&gt;&lt;/h2&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಜೆಸಿಬಿ ಸಹಾಯದಿಂದ ಕಂದಕಕ್ಕೆ ಬಿದ್ದ ಕಾರನ್ನು ಮೇಲೆತ್ತುವ ಪ್ರಕ್ರಿಯೆ ನಡೆಯುತ್ತಿದೆ. ಕೊಡಗಿನ ಘಟ್ಟ ಪ್ರದೇಶಗಳಲ್ಲಿ ಸಂಚರಿಸುವ ಚಾಲಕರು ರಸ್ತೆಯ ತಿರುವುಗಳ ಬಗ್ಗೆ ಎಚ್ಚರದಿಂದ ಇರಬೇಕು ಮತ್ತು ವೇಗದ ಮಿತಿಯನ್ನು ಕಾಯ್ದುಕೊಳ್ಳಬೇಕು ಎಂದು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/kodagu-madikeri-accident-car-plunges-into-gorge-neerukolli-siraj-injured-sat/articleshow-g0wg7ul"/>
        </item>
        <item>
            <title><![CDATA[ಕಿಕ್ಕೇರಿ ಜಾತ್ರೆಯ ವಿಚಿತ್ರ ಆಚರಣೆ:  ಸೊಂಟಕ್ಕೆ ಮರದ ಗುಪ್ತಾಂಗ ಕಟ್ಕೊಂಡು ಕುಣಿತ, ಹಾಡು]]></title>
            <link>https://kannada.asianetnews.com/karnataka-districts/madikeri-s-kikkeramman-s-jatye-held-in-kikkeri-town-celebrated-in-a-special-way-mrq/articleshow-gw4ktbn</link>
            <guid isPermaLink="true">https://kannada.asianetnews.com/karnataka-districts/madikeri-s-kikkeramman-s-jatye-held-in-kikkeri-town-celebrated-in-a-special-way-mrq/articleshow-gw4ktbn</guid>
            <pubDate>Sat, 28 Mar 2026 08:38:18 +0530</pubDate>
            <description><![CDATA[&lt;p&gt;ಕಿಕ್ಕೇರಿ ಪಟ್ಟಣದಲ್ಲಿ ನಡೆದ ಕಿಕ್ಕೇರಮ್ಮನ ಜಾತ್ರೆಯ ಅಂಗವಾಗಿ ವಸಕೊಂತನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಈ ಹಬ್ಬದಲ್ಲಿ ದೇವರಗುಡ್ಡಪ್ಪನು ಸೊಂಟಕ್ಕೆ ಮರದ ಗುಪ್ತಾಂಗವನ್ನು ಕಟ್ಟಿಕೊಂಡು ಕುಣಿಯುವುದು ಮತ್ತು ಹಿರಿಯರು ದೇವಿಯನ್ನು ಅಶ್ಲೀಲವಾಗಿ ಮೂದಲಿಸಿ ಹಾಡುವುದು ಪ್ರಮುಖ ಆಚರಣೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kms6e9m1qatp5a39epbf4y1z,imgname-kikkeri-1774667114113.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ: &lt;/strong&gt;ಕಿಕ್ಕೇರಿ ಪಟ್ಟಣದಲ್ಲಿ ಜರುಗಿದ ಕಿಕ್ಕೇರಮ್ಮನವರ ಜಾತ್ರೆಯ ವಿಶೇಷತೆಯಲ್ಲಿ ಒಂದಾದ ವಸಕೊಂತನ ಹಬ್ಬ, ವಸಂತನ, ಬೈಗುಳ ಹಬ್ಬ ವೀಕ್ಷಣೆಗೆ ವಿವಿಧೆಡೆಯಿಂದ ಜನತೆ ಅಧಿಕವಾಗಿ ಪಾಲ್ಗೊಂಡಿದ್ದರು.&lt;/p&gt;&lt;p&gt;ಮಡಿಕೇರಿಯ ಬುಂಡೆ ಹಬ್ಬದ ಸಾಮೀಪ್ಯತೆ ಹಬ್ಬವಾದ ಈ ವಸಕೊಂತನಕುಣಿತ ವೀಕ್ಷಣೆ ಮಾಡಿ ನಮಿಸಿದರೆ ಸಂತಾನ ಪ್ರಾಪ್ತಿ ಲಭಿಸಲಿದೆ ಎಂಬ ನಂಬುಗೆಯಿಂದ ಜನಸಾಗರ ಹೆಚ್ಚಾಗಿತ್ತು.&lt;/p&gt;&lt;p&gt;ಕಿಕ್ಕೇರಿ-ಲಕ್ಷ್ಮೀಪುರಗ್ರಾಮ ಹೃದಯ ಭಾಗದ ಕಿಕ್ಕೇರಮ್ಮನ ಗುಡಿಯಲ್ಲಿ ದೇವಿಗೆ ವಿಶೇಷ ಆರತಿ ಎತ್ತಿ, ದೇವರಗುಡಿಯಲ್ಲಿ ಭದ್ರ ಲಕೋಟೆಯಲ್ಲಿ ಜೋಪಾನವಾಗಿಟ್ಟಿದ್ದ ಕೊಂತಪ್ಪ ದೇವರ ಹೊರತೆಗೆದು ಪೂಜಿಸಲಾಯಿತು.&lt;/p&gt;&lt;h2&gt;&lt;strong&gt;ಕೆಂಪು, ಹಳದಿ ನಾಮ ಹಾಕಿ ಸೊಂಟಕ್ಕೆ ಮರದ ಗುಪ್ತಾಂಗ ಕಟ್ಟೋದು&lt;/strong&gt;&lt;/h2&gt;&lt;p&gt;ನಂತರ ದೇವರ ಒಕ್ಕಲಿನ ರಂಗೇನಹಳ್ಳಿಯ ದೇವರಗುಡ್ಡಪ್ಪನಿಗೆ ರೇಷ್ಮೆರು ಮಾಲು ಪೇಟ, ಹಣೆಗೆದೊಡ್ಡ ಕೆಂಪು, ಹಳದಿ ನಾಮ ಹಾಕಿ ಸೊಂಟಕ್ಕೆ ಮರದ ಗುಪ್ತಾಂಗವನ್ನು ಕಟ್ಟಲಾಯಿತು. ಮೇಲು ಹೊದಿಕೆಯಾಗಿ ಹಸಿರು ಜರತಾರಿ ಶಾಲು ಹೊದಿಸಲಾಯಿತು. ಸಹ ಗುಡ್ಡಪ್ಪ, ಮೇಳಧಾರಿಗಳು ಗುಡ್ಡಪ್ಪನಿಗೆ ಸಾಥ್ ನೀಡಿದರು.&lt;/p&gt;&lt;p&gt;ಮೇಳಧಾರಿ ಗುಡ್ಡಪ್ಪರು ಪ್ರಾಸಬದ್ಧವಾಗಿ ಚಕ್ರವಾದ್ಯದ ನಾದದೊಂದಿಗೆದೇವಿ ಹಾಡು ಹೇಳುವಾಗ ಗುಡ್ಡಪ್ಪನು ಮರೆ ಮಾಚಿದ್ದ ಮರದ ಗುಪ್ತಾಂಗವನ್ನು ತೋರಿಸುತ್ತ ಉಯ್&zwnj; ಎಂದು ಕುಣಿಯಲು ಆರಂಭಿಸಿದನು. ಊರಿನ ಹೊಸಬೀದಿ, ರಥಬೀದಿ, ಕೋಟೆಗಣಪತಿ ಬೀದಿ, ಕೆ.ಎಸ್. ನರಸಿಂಹಸ್ವಾಮಿ ಬೀದಿ, ಜನಾರ್ಧನ ಬೀದಿಗಳಲ್ಲಿ ಸಾಗಿದಾಗ ಭಕ್ತರು ದೇವಿಗೆ ಹಣ್ಣು ಕಾಯಿ ಅರ್ಪಿಸಿ ಕೊಂತಪ್ಪದೇವರಿಗೆ ಭಕ್ತಿಯಿಂದ ನಮಿಸಿದರು.&lt;/p&gt;&lt;h3&gt;&lt;strong&gt;ಅಶ್ಲೀಲಕರವಾಗಿ ದೇವರನ್ನು ಮೂದಲಿಸಿ, ರಮಿಸುವಂತೆ ಪ್ರಾಸಕಟ್ಟಿ ಹಾಡು&lt;/strong&gt;&lt;/h3&gt;&lt;p&gt;ಲಕ್ಷ್ಮೀದೇವಿ (ಕಿಕ್ಕೇರಮ್ಮ)ಯನ್ನು ರಮಿಸಲು ಹಬ್ಬದ ವಾಡಿಕೆಯಂತೆ ಗ್ರಾಮದ ಹಿರಿಯಕೆ.ಎನ್. ನಾಗೇಗೌಡರೊಂದಿಗೆ ಸಂಗಡಿಗರು ಅಶ್ಲೀಲಕರವಾಗಿ ದೇವರನ್ನು ಮೂದಲಿಸಿ, ರಮಿಸುವಂತೆ ಪ್ರಾಸಕಟ್ಟಿ ಹಾಡಿದರು. ಈ ವಿನೋದದ ಹಾಡು ಕೇಳಿ ಮಹಿಳೆಯರು ಮುಸಿ ಮುಸಿ ನಕ್ಕರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೇಂದ್ರದ ಪೆಟ್ರೋಲ್, ಡೀಸೆಲ್ ಸುಂಕ ಕಡಿತ ಚುನಾವಣಾ ಗಿಮಿಕ್, ಇದರಿಂದ ಜನರಿಗಲ್ಲ, ತೈಲ ಕಂಪನಿಗಳಿಗೆ ಲಾಭ: ಕಾಂಗ್ರೆಸ್&lt;/strong&gt;&lt;/p&gt;&lt;p&gt;ಜನಾರ್ಧನ ಬೀದಿಯಲ್ಲಿರುವ ಲಕ್ಷ್ಮೀದೇವಿ ಗುಡಿ ಬಳಿ ಸಾಗಿದಾದ ಜ್ಯೋತಿಪಣ ಸಮಾಜದವರು ಆರತಿ ಎತ್ತಿದೇವಿಗೆ ನಮಸಿ ಪ್ರಸಾದ ವಿತರಿಸಿದರು. ಅಮಾನಿಕೆರೆಯ ಗಂಗೆ ಕಡಕ್ಕೆ ತೆರಳಿ ಸೊಳ್ಳೇಪುರ ಗ್ರಾಮಸ್ಥರಿಂದ ಪೂಜೆ ಸ್ವೀಕರಿಸಲಾಯಿತು. ಅಂತಿಮವಾಗಿ ಬೆಳಗ್ಗಿನಿಂದ ಉಪವಾಸ ವ್ರತಾಚರಣೆಯಲ್ಲಿದ್ದ ಲಕ್ಷ್ಮೀಪುರಗ್ರಾಮಕ್ಕೆದೇವಿ ಮೆರವಣಿಗೆ ಸಾಗಿ ಪ್ರತಿ ಮನೆಗಳಲ್ಲಿನ ಪೂಜೆಯನ್ನು ದೇವಿಗೆ ಅರ್ಪಿಸಲಾಯಿತು.&lt;/p&gt;&lt;p&gt;ಲಕ್ಕಮ್ಮನ ಒಕ್ಕಲಿನ ಬೂನಾಸಿ, ಕೆಂಚಮ್ಮ, ದೊಡ್ಡಹಟ್ಟಿ, ಮಾರಮ್ಮನ ವಠಾರದ ಮುಖಂಡರು, ಮತ್ತಿತರರು ಹಾಜರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ಪತ್ತೆ! ಲೋಕಾಯುಕ್ತ ತನಿಖೆಯಿಂದ ಆಘಾತಕಾರಿ ವಿಷ್ಯ ಬಯಲು!&lt;/strong&gt;&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/madikeri-s-kikkeramman-s-jatye-held-in-kikkeri-town-celebrated-in-a-special-way-mrq/articleshow-gw4ktbn"/>
        </item>
        <item>
            <title><![CDATA[ಕೊಡಗು ಬೇಸಿಗೆ ಮಳೆ: ಸಿಡಿಲು ಬಡಿದು ಹೊತ್ತಿ ಉರಿದ ವಿದ್ಯುತ್ ಟ್ರಾನ್ಸ್ಫಾರ್ಮರ್]]></title>
            <link>https://kannada.asianetnews.com/karnataka-districts/kodagu-summer-rain-power-transformer-catches-fire-after-lightning-strike-rav/articleshow-h07h50c</link>
            <guid isPermaLink="true">https://kannada.asianetnews.com/karnataka-districts/kodagu-summer-rain-power-transformer-catches-fire-after-lightning-strike-rav/articleshow-h07h50c</guid>
            <pubDate>Tue, 17 Mar 2026 10:00:24 +0530</pubDate>
            <description><![CDATA[&lt;p&gt;Kodagu summer rain report ಕೊಡಗಿನಲ್ಲಿ ಸುರಿದ ಭಾರಿ ಮಳೆಯು ಬಿಸಿಲಿನಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ಆದರೆ, ಪೊನ್ನಂಪೇಟೆ ತಾಲೂಕಿನಲ್ಲಿ ಸಿಡಿಲು ಬಡಿದು ವಿದ್ಯುತ್ ಟ್ರಾನ್ಸ್&zwnj;ಫರ್ ಹೊತ್ತಿ ಉರಿದಿದ್ದು, ಆತಂಕ ಸೃಷ್ಟಿಸಿದೆ. ಈ ಮಳೆಯು ಕಾಫಿ ಮತ್ತು ಕರಿಮೆಣಸು ಬೆಳೆಗಾರರಿಗೆ ವರದಾನವಾಗುವ ನಿರೀಕ್ಷೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkx0vsmtv5ncvgkr8wahzzgc,imgname-1-1773721740954.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಮಾ.17):&lt;/strong&gt; ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿದ್ದ ಜಿಲ್ಲೆಯ ಜನತೆಗೆ ನಿನ್ನೆ ಸಂಜೆ ಸುರಿದ ಮಳೆ ತಂಪೆರಿದೆ. ಇನ್ನೊಂದೆಡೆ ಗುಡುಗು ಸಿಡಿಲಿನರ್ಭಟಕ್ಕೆ ಸಾವು ನೋವು ಹಾನಿ ಸಂಭವಿಸಿದೆ.&lt;/p&gt;&lt;p&gt;ನಿನ್ನೆ ರಾತ್ರಿ ಸುರಿದ ಗುಡುಗು ಮಿಂಚಿನ ಮಳೆಗೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಮುಗಟಗೇರಿಯ ಅಂಬಲ ಬಳಿ ಸಿಡಿಲು ಬಡಿದು ವಿದ್ಯುತ್ ಟ್ರಾನ್ಸ್&zwnj;ಫರ್ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದ್ದರಿಂದ ಅನಾಹುತ ತಪ್ಪಿದಂತಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಮುಂದೆ ಅನಾಹುತವಾಗದಂತೆ ಎಚ್ಚರಿಕೆವಹಿಸಿದರು.&lt;/p&gt;&lt;h2&gt;ಹಲವೆಡೆ ಆಲಿಕಲ್ಲು ಮಳೆ&lt;/h2&gt;&lt;p&gt;ಸಂಜೆ ವೇಳೆಗೆ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿತ್ತು. ಆದರೂ ಜನ ಖುಷಿಯಿಂದಲೆ ಮಳೆಯೊಂದಿಗೆ ಹೆಜ್ಜೆ ಹಾಕಿ ಮನೆ ಸೇರಿದ್ದಾರೆ.&lt;/p&gt;&lt;p&gt;ಜಿಲ್ಲೆಯ ಶಿರಂಗಾಲ, ಹೆಬ್ಬಾಲೆ, ಬೇತ್ರಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಹೊಲ ಮತ್ತು ಗದ್ದೆಗಳಿಗೆ ನೀರು ನುಗ್ಗುವಂತೆ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಇಳೆಗೆ ಚೈತನ್ಯ ನೀಡಿದೆ.&lt;/p&gt;&lt;p&gt;ಕಾಫಿ ಮತ್ತು ಕರಿಮೆಣಸು ಬೆಳೆಗಾರರಿಗೆ ಈ ಮಳೆ ವರದಾನವಾಗಿ ಪರಿಣಮಿಸುವ ಸಾಧ್ಯತೆಯಿದೆ.&lt;/p&gt;&lt;p&gt;ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೂಡ ಮುನ್ಸೂಚನೆ ನೀಡಿದೆ.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kodagu-summer-rain-power-transformer-catches-fire-after-lightning-strike-rav/articleshow-h07h50c"/>
        </item>
        <item>
            <title><![CDATA[ಮಡಿಕೇರಿಯ ಭಾಗಮಂಡಲದಲ್ಲಿ ಲೀವಿಂಗ್ ಟುಗೆದರ್ ಜೋಡಿಯ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ]]></title>
            <link>https://kannada.asianetnews.com/state/double-murder-in-bhagamandala-madikeri-live-in-relationships-couple-killed/articleshow-h9d76r4</link>
            <guid isPermaLink="true">https://kannada.asianetnews.com/state/double-murder-in-bhagamandala-madikeri-live-in-relationships-couple-killed/articleshow-h9d76r4</guid>
            <pubDate>Thu, 12 Mar 2026 10:11:01 +0530</pubDate>
            <description><![CDATA[&lt;p&gt;&lt;strong&gt;Live-in couple killed in Madikeri: &lt;/strong&gt;ಕುಡಿದ ಮತ್ತಿನಲ್ಲಿ ಸೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು 70 ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkg59vvy6wp6wx1dxzm77jmd,imgname-live-in-together-couple-killed-in-kodagu-1773290188669.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಭಾಗಮಂಡಲದಲ್ಲಿ ಜೋಡಿ ಕೊಲೆ&lt;/strong&gt;&lt;/h2&gt;&lt;p&gt;ಕೊಡಗು: ಕುಡಿದ ಮತ್ತಿನಲ್ಲಿ ಸೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು 70 ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ. ಇಲ್ಲಿನ ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕೊಲೆಯಾದ ಜೋಡಿಯನ್ನು 55 ವರ್ಷದ ಕುಂಞರಾಮ ಹಾಗೂ 45 ವರ್ಷದ ಯಶೋಧ ಎಂದು ಗುರುತಿಸಲಾಗಿದೆ.&lt;/p&gt;&lt;p&gt;ಕುಡಿದ ಮತ್ತಿನಲ್ಲಿ ಯಶೋಧ ಅವರ ಸೋದರ 70 ವರ್ಷದ ಚಂದು ಎಂಬುವವರು ತನ್ನ ಸಹೋದರಿ ಆಕೆಯ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಪರಸ್ಪರ ಒಪ್ಪಿಗೆ ಮೇರೆಗೆ ಕುಂಞರಾಮ ಮತ್ತು ಯಶೋಧ ಸಹಜೀವನ ನಡೆಸುತ್ತಿದ್ದರು. ಇದೇ ವಿಷಯಕ್ಕೆ ಯಶೋಧ ಸಹೋದರ ಆಗಾಗ ಗಲಾಟೆ ಮಾಡುತ್ತಿದ್ದ. ನಿನ್ನೆ ಸಂಜೆಯೂ ಅದೇ ರೀತಿ ಕುಡಿದು ಮೂವರು ಗಲಾಟೆ ಮಾಡಿದ್ದಾರೆ. ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಕುಡಿದು ಬಂದು ಗಲಾಟೆ ಮಾಡಿದ ಚಂದು ಬಳಿಕ ಇಬ್ಬರನ್ನು ಮಾರಕಾಯುಧದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; Prison break:ಜೈಲಿನಿಂದ ತಪ್ಪಿಸಿಕೊಳ್ಳಲು ನಿರಂತರ 5 ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದು ಎಲ್ಲಿಗೆ?&lt;/strong&gt;&lt;/p&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಭಾಗಮಂಡಲ ಪೊಲೀಸರು ಆರೋಪಿ ಚಂದುವನ್ನು ಬಂಧಿಸಿದ್ದಾರೆ. ಮೃತರ ಶವಗಳನ್ನು ಕೊಡಗು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದಯವಿಟ್ಟು ನನ್ನ ಬೆಳೆ ಖರೀದಿಸಿ... ನನ್ನ ಮಗಳ ಮದುವೆ ನಾಳೆ: ಮಾರುಕಟ್ಟೆಯಲ್ಲಿ ಅಳಲು ಶುರು ಮಾಡಿದ ರೈತ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;&lt;img&gt;&lt;/p&gt;&lt;p&gt;ಕೊಲೆಯಾದ ಕುಂಞರಾಮಮ, ಯಶೋಧ ಹಾಗೂ ಕೊಲೆ ಮಾಡಿದ ಚಂದು&lt;/p&gt;]]></content:encoded>
            <category>kodagu</category>
            <dc:creator>Anusha Kb</dc:creator>
            <atom:link href="https://kannada.asianetnews.com/state/double-murder-in-bhagamandala-madikeri-live-in-relationships-couple-killed/articleshow-h9d76r4"/>
        </item>
        <item>
            <title><![CDATA[ಇಂದು ಮಧ್ಯಾಹ್ನ ಸ್ಫೋಟಿಸುವುದಾಗಿ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಆಘಾತಕಾರಿ ಇ-ಮೇಲ್‌]]></title>
            <link>https://kannada.asianetnews.com/state/multiple-bomb-threat-emails-to-dharwad-davanagere-and-kodagu-courts-in-karnataka-trigger-high-alert/articleshow-i1u9fqy</link>
            <guid isPermaLink="true">https://kannada.asianetnews.com/state/multiple-bomb-threat-emails-to-dharwad-davanagere-and-kodagu-courts-in-karnataka-trigger-high-alert/articleshow-i1u9fqy</guid>
            <pubDate>Mon, 16 Feb 2026 12:25:10 +0530</pubDate>
            <description><![CDATA[&lt;p&gt;ಧಾರವಾಡ, ದಾವಣಗೆರೆ, ಮತ್ತು ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಆತಂಕ ಸೃಷ್ಟಿಯಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು, ನ್ಯಾಯಾಲಯದ ಆವರಣಗಳನ್ನು ಖಾಲಿ ಮಾಡಿಸಿ ತೀವ್ರ ಶೋಧ ಕಾರ್ಯ ನಡೆಸಿವೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jpmz2ftpbp9nbm510v63m9z8,imgname-bomb-threat.png" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದಲ್ಲಿ ಒಂದೇ ದಿನ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬಂದಿರುವ ಬೆದರಿಕೆಗಳು ಭಾರೀ ಆತಂಕಕ್ಕೆ ಕಾರಣವಾಗಿವೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಅನಾಮಧೇಯ ವ್ಯಕ್ತಿಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ತಕ್ಷಣವೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಎಚ್ಚರಿಕೆ ಕ್ರಮ ಕೈಗೊಂಡಿವೆ. &amp;nbsp;ಈ ಹಿಂದೆ ಕೂಡ ರಾಜ್ಯದ ವಿವಿಧ ನ್ಯಾಯಾಲಯಗಳಿಗೆ ಹುಸಿ ಬೆದಿಕೆ ಕರೆ ಬಂದಿತ್ತು.&lt;/p&gt;&lt;h2&gt;ಧಾರವಾಡ ಹೈಕೋರ್ಟ್&zwnj;ಗೆ ಬಾಂಬ್ ಬೆದರಿಕೆ&lt;/h2&gt;&lt;p&gt;ಧಾರವಾಡದಲ್ಲಿರುವ ಹೈಕೋರ್ಟ್&zwnj;ಗೆ ಬಾಂಬ್ ಇಡಲಾಗಿದೆ ಎಂಬ ಇ-ಮೇಲ್ ಸಂದೇಶ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾದರು. ಮುನ್ನೆಚ್ಚರಿಕೆ ಕ್ರಮವಾಗಿ ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸಂಪೂರ್ಣವಾಗಿ ಕೋರ್ಟ್ ಆವರಣದಿಂದ ಹೊರಗೆ ಕಳುಹಿಸಲಾಯಿತು. ಇ-ಮೇಲ್&zwnj;ನಲ್ಲಿ ಮಧ್ಯಾಹ್ನ 1:15ಕ್ಕೆ ಸ್ಫೋಟ ಸಂಭವಿಸುವುದಾಗಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗರಗ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತೆ ಒದಗಿಸಿದರು. ಕಳೆದ ತಿಂಗಳಷ್ಟೇ ಇದೇ ರೀತಿಯ ಬಾಂಬ್ ಬೆದರಿಕೆ ಸಂದೇಶ ಬಂದಿದ್ದುದರಿಂದ ಆತಂಕ ಮತ್ತಷ್ಟು ಹೆಚ್ಚಾಯಿತು.&lt;/p&gt;&lt;p&gt;ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೋರ್ಟ್ ಕಟ್ಟಡದ ಒಳಗೆ ತೀವ್ರ ಶೋಧ ಕಾರ್ಯ ನಡೆಸಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಸ್&zwnj;ಪಿ, &ldquo;ನಾವು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕಳಿಸಲಾಗಿದೆ. ಇ-ಮೇಲ್&zwnj;ನಲ್ಲಿ ಬೇರೆ ರಾಜ್ಯಗಳ ಉಲ್ಲೇಖಗಳೂ ಇದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ&rdquo; ಎಂದು ತಿಳಿಸಿದರು.&lt;/p&gt;&lt;h2&gt;ದಾವಣಗೆರೆ ಜಿಲ್ಲಾ ಕೋರ್ಟ್ಗೂ ಬೆದರಿಕೆ&lt;/h2&gt;&lt;p&gt;ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಜಿಲ್ಲಾ ನ್ಯಾಯಾಧೀಶರ ಅಧಿಕೃತ ಇ-ಮೇಲ್&zwnj;ಗೆ ಈ ಸಂದೇಶ ಬಂದಿದ್ದು, ಮಧ್ಯಾಹ್ನ 12.30ಕ್ಕೆ ಆರ್&zwnj;ಡಿಎಕ್ಸ್ ಬಾಂಬ್ ಸ್ಫೋಟವಾಗಲಿದೆ ಎಂದು ಉಲ್ಲೇಖಿಸಲಾಗಿತ್ತು.&lt;/p&gt;&lt;p&gt;ಇದರಿಂದಾಗಿ ತಕ್ಷಣವೇ ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಸಂಪೂರ್ಣ ಕಟ್ಟಡವನ್ನು ಪರಿಶೀಲಿಸಲಾಯಿತು. ವಕೀಲರು, ನ್ಯಾಯಾಲಯದ ಸಿಬ್ಬಂದಿ ಮತ್ತು ಕಕ್ಷಿದಾರರನ್ನು ಕೋರ್ಟ್ ಆವರಣದಿಂದ ಹೊರಗೆ ಕಳುಹಿಸಿ ಭದ್ರತೆ ಒದಗಿಸಲಾಯಿತು.&lt;/p&gt;&lt;h2&gt;ಕೊಡಗು ಜಿಲ್ಲಾ ನ್ಯಾಯಾಲಯಗೆ ಇ-ಮೇಲ್ ಮೂಲಕ ಬೆದರಿಕೆ&lt;/h2&gt;&lt;p&gt;ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಇರುವ ಜಿಲ್ಲಾ ನ್ಯಾಯಾಲಯಕ್ಕೂ ಬೆಳಿಗ್ಗೆಯೇ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ. ನ್ಯಾಯಾಲಯದ ಅಧಿಕಾರಿಗಳು ಕಚೇರಿಗೆ ಬಂದಾಗ ಈ ಸಂದೇಶ ಗಮನಕ್ಕೆ ಬಂದಿದ್ದು, ತಕ್ಷಣವೇ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ನ್ಯಾಯಾಲಯದ ಸಂಕೀರ್ಣದಲ್ಲಿದ್ದ ಎಲ್ಲರೂ ಗೇಟಿನ ಹೊರಭಾಗಕ್ಕೆ ತೆರಳಿದ್ದು, ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿ, ವಕೀಲರು ಹಾಗೂ ಕಕ್ಷಿದಾರರು ಆತಂಕದಿಂದ ಹೊರಗಡೆ ಕಾಯುವಂತಾಯಿತು.&lt;/p&gt;&lt;p&gt;ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಡಾಗ್ ಸ್ಕ್ವಾಡ್ ಕೋರ್ಟ್&zwnj;ನ ವಿವಿಧ ವಿಭಾಗಗಳು, ಕ್ಯಾಂಟೀನ್, ಬಾರ್ ಅಸೋಸಿಯೇಷನ್ ಕಟ್ಟಡ ಸೇರಿದಂತೆ ಸಂಪೂರ್ಣ ಸಂಕೀರ್ಣವನ್ನು ಶೋಧಿಸಿದರು. ಸದ್ಯಕ್ಕೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲದಿದ್ದರೂ, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.&lt;/p&gt;&lt;h2&gt;ತನಿಖೆ ತೀವ್ರ&lt;/h2&gt;&lt;p&gt;ಮೂರು ಜಿಲ್ಲೆಗಳಲ್ಲಿಯೂ ಬಂದಿರುವ ಬಾಂಬ್ ಬೆದರಿಕೆ ಸಂದೇಶಗಳ ಹಿನ್ನಲೆಯಲ್ಲಿ ಒಂದೇ ಮೂಲದಿಂದ ಇ-ಮೇಲ್&zwnj;ಗಳು ಕಳುಹಿಸಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸೈಬರ್ ಕ್ರೈಂ ವಿಭಾಗದ ಸಹಾಯದಿಂದ ಇ-ಮೇಲ್ ಮೂಲ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪೊಲೀಸರು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/state/multiple-bomb-threat-emails-to-dharwad-davanagere-and-kodagu-courts-in-karnataka-trigger-high-alert/articleshow-i1u9fqy"/>
        </item>
        <item>
            <title><![CDATA[ಕೊಡಗಿನಲ್ಲಿ ಆನೆ-ಮಾನವ ಸಂಘರ್ಷಕ್ಕೆ ಕಟ್ಟುನಿಟ್ಟಿನ ಕ್ರಮ: ಸಚಿವ ಈಶ್ವರ್ ಖಂಡ್ರೆ ಸೂಚನೆ]]></title>
            <link>https://kannada.asianetnews.com/karnataka-districts/kodagu-elephant-human-conflict-control-eshwar-khandre-order-gvd/articleshow-movggab</link>
            <guid isPermaLink="true">https://kannada.asianetnews.com/karnataka-districts/kodagu-elephant-human-conflict-control-eshwar-khandre-order-gvd/articleshow-movggab</guid>
            <pubDate>Thu, 19 Mar 2026 20:46:48 +0530</pubDate>
            <description><![CDATA[&lt;p&gt;ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ತೋಡಲಾಗಿರುವ ಆನೆ ಕಂದಕ ಮತ್ತು ಅಳವಡಿಸಿರುವ ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9es3asmbdr2q8bxc24xnxzw,imgname-eshwar-khandre-1762506418996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಮಾ.19): &lt;/strong&gt;ಕೊಡಗು ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ತೋಡಲಾಗಿರುವ ಆನೆ ಕಂದಕ ಮತ್ತು ಅಳವಡಿಸಿರುವ ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂತರ್ ಗೌಡ ಮತ್ತು ದರ್ಶನ್ ಧ್ರುವನಾರಾಯಣ್ ಅವರೊಂದಿಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.&lt;/p&gt;&lt;p&gt;ಕೊಡಗಿನಲ್ಲಿ ವನ್ಯಜೀವಿಗಳಿಂದ ಅಮೂಲ್ಯ ಜೀವ ಹಾನಿ ಆಗುತ್ತಿರುವುದು ಆತಂಕದ ವಿಷಯವಾಗಿದ್ದು, ಹಾಲಿ ಇರುವ 422 ಕಿ.ಮೀ. ಆನೆ ಕಂದಕ ಮತ್ತು 544 ಕಿ.ಮೀ. ತೂಗು ಸೌರಬೇಲಿಯ ಸಮರ್ಪಕ ದುರಸ್ತಿ ಕಾರ್ಯವನ್ನು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷದಲ್ಲಿ ಸಂಭವಿಸುವ ಸಾವುಗಳ ಪೈಕಿ ಶೇ.38ರಷ್ಟು ಕೊಡಗು ಜಿಲ್ಲೆಯಲ್ಲಿ ಆಗುತ್ತಿದ್ದು, ಇದನ್ನು ನಿಯಂತ್ರಿಸಲು ಗಸ್ತು ಹೆಚ್ಚಳ ಮಾಡಬೇಕು. ಆನೆ ಕಾರ್ಯಪಡೆ, ತ್ವರಿತ ಸ್ಪಂದನಾ ಪಡೆ ಸೇರಿದಂತೆ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣ ಘಟಕಗಳನ್ನು ಬಲಪಡಿಸುವಂತೆ ಸೂಚಿಸಿದರು.&lt;/p&gt;&lt;p&gt;&lt;strong&gt;4 ವಾಹನ ಖರೀದಿಗೆ ಸಮ್ಮತಿ: &lt;/strong&gt;ಆನೆ ಸೇರಿದಂತೆ ವನ್ಯಜೀವಿಗಳು ತೋಟಗಳಿಗೆ ಬಂದಾಗ ಅವುಗಳನ್ನು ಕಾಡಿಗೆ ಮರಳಿಸಲು ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಲು ಹಾಲಿ ಇರುವ 6 ವಾಹನಗಳ ಜೊತೆಗೆ ಈಗಾಗಲೇ 4 ವಾಹನ ಖರೀದಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ 4 ವಾಹನ ಖರೀದಿಸಿ, ಸ್ಥಳೀಯ ಉತ್ಸಾಹಿ ಯುವಕರನ್ನು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯಪಡೆಗೆ ಸೇರ್ಪಡೆ ಮಾಡಿಕೊಂಡು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಣೆ ಮಾಡುವಂತೆ ಖಂಡ್ರೆ ಸೂಚಿಸಿದರು. ವನ್ಯಜೀವಿಗಳ ಸಂಚಾರ ಮಾಹಿತಿ ರವಾನಿಸಲು, ಅಕ್ರಮ ಮರ ಕಡಿತಲೆ ಮತ್ತು ವನ್ಯಜೀವಿ ಕಳ್ಳಬೇಟೆ ನಿಗ್ರಹಿಸಲು ಬಲಿಷ್ಠ ನಿಸ್ತುಂತು ಜಾಲ (ವೈರ್ ಲೆಸ್ ನೆಟ್ ವರ್ಕ್) ಕಾರ್ಯಾರಂಭಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಚಿವರು ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.&lt;/p&gt;&lt;p&gt;&lt;strong&gt;ಮಾಹಿತಿ ನೀಡಲು ಆದೇಶ: &lt;/strong&gt;ಕೊಡಗು ಜಿಲ್ಲೆಯಲ್ಲಿನ ಪ್ರತಿ ವಲಯದಲ್ಲಿರುವ ತೋಟಗಳಲ್ಲಿ ಎಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂಬ ಬಗ್ಗೆ ದತ್ತಾಂಶ ಕಲೆ ಹಾಕಿ, ಆಯಾ ವಲಯದಲ್ಲಿ ವನ್ಯಜೀವಿಗಳು ಅದರಲ್ಲೂ ಆನೆಗಳು ಜನ ವಸತಿ, ತೋಟಗಳ ಬಳಿ ಬಂದಾಗ ಆ ಕಾರ್ಮಿಕರಿಗೆ ತಕ್ಷಣವೇ ವಾಟ್ಸ್ ಅಪ್ ಮೂಲಕ ಮತ್ತು ಮೈಕ್ ಅಳವಡಿಸಿದ ವಾಹನಗಳ ಮೂಲಕ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆಯೂ ಸೂಚಿಸಿದರು.&lt;/p&gt;&lt;h2&gt;&lt;strong&gt;ನೀರಿನ ಕೊರತೆ ನೀಗಿಸಲು ಸೂಚನೆ&lt;/strong&gt;&lt;/h2&gt;&lt;p&gt;ಮಾರ್ಚ್ ಕೊನೆಯ ವಾರದಿಂದ ಮೇ ತಿಂಗಳವರೆಗೆ ಬಿರು ಬಿಸಿಲು ಇರುವ ಕಾರಣ ಕಾಡಿನಲ್ಲಿ ವನ್ಯಜೀವಿಗಳಿಗೆ ನೀರಿನ ಮತ್ತು ಮೇವಿನ ಕೊರತೆ ಬಾರದಂತೆ ಕ್ರಮ ವಹಿಸಲು ಮತ್ತು ಕಾಡಿನೊಳಗಿರುವ ಜಲಗುಂಡಿಗಳಲ್ಲಿ ಇರುವ ನೀರಿನ ಪ್ರಮಾಣದ ಬಗ್ಗೆ ಸಾರ್ವಜನಿಕರಿಗೆ ಮತ್ತು ಸ್ಥಳೀಯ ಜನ ಪ್ರತಿನಿಧಿಗಳಿಗೆ ಮಾಹಿತಿ ನೀಡಲು ಈಶ್ವರ ಖಂಡ್ರೆ ತಿಳಿಸಿದರು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್, ಹಿರಿಯ ಅರಣ್ಯಾಧಿಕಾರಿಗಳಾದ ಮನೋಜ್ ರಾಜನ್, ಮನೋಜ್ ಕುಮಾರ್, ಸೋನಾಲ್ ವ್ರಿಸ್ನಿ ಮತ್ತಿತರರು ಪಾಲ್ಗೊಂಡಿದ್ದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-elephant-human-conflict-control-eshwar-khandre-order-gvd/articleshow-movggab"/>
        </item>
        <item>
            <title><![CDATA[ಕಾಡಾನೆ ದಾಳಿಗೆ ಕೊಡಗಿನಲ್ಲಿ ಮಹಿಳೆ ಬಲಿ: ಚಿಕ್ಕಮಗಳೂರಿನಲ್ಲಿ ಹಾಲು ಕೊಡುವ ಹಸು ತುಳಿದು ಸಾಯಿಸಿದ ಆನೆ]]></title>
            <link>https://kannada.asianetnews.com/state/wild-elephant-attack-in-kodagu-and-chikkamagaluru-woman-and-cow-died/articleshow-ry4ylqb</link>
            <guid isPermaLink="true">https://kannada.asianetnews.com/state/wild-elephant-attack-in-kodagu-and-chikkamagaluru-woman-and-cow-died/articleshow-ry4ylqb</guid>
            <pubDate>Mon, 09 Mar 2026 18:21:05 +0530</pubDate>
            <description><![CDATA[ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟರೆ, ಚಿಕ್ಕಮಗಳೂರಿನಲ್ಲಿ ಹಸುವೊಂದು ಬಲಿಯಾಗಿದೆ. ಈ ಮಧ್ಯೆ, ಮತ್ತಿಗೋಡು ಸಾಕಾನೆ ಶಿಬಿರದಲ್ಲಿದ್ದ 'ಝೂ ಅಭಿ' ಎಂಬ ಆನೆಯೂ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kk99twgsv3007s22fg5pfq7v,imgname-elephant-attack-1773060059673.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ:&lt;/strong&gt;&lt;/h2&gt;&lt;p&gt;ಕೊಡಗು: ಜಿಲ್ಲೆಯ ಕುಶಾಲನಗರ ತಾಲೂಕಿನ ವಾಲ್ನೂರು ತ್ಯಾಗತ್ತೂರಿನಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ 53 ವರ್ಷದ ಜಲಜಾಕ್ಷಿ ಎಂದು ಗುರುತಿಸಲಾಗಿದೆ. ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಲಜಾಕ್ಷಿ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆಯಾಗಿದ್ದರು.&lt;/p&gt;&lt;p&gt;ಬಾಳೆಗುಂಡಿ ಹಾಡಿ&zwnj; ನಿವಾಸಿಯಾಗಿದ್ದ ಜಲಜಾಕ್ಷಿ&zwnj; ರಸ್ತೆ ಬದಿ ನಡೆದು ಸಾಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ&zwnj; ಮಾಡಿದ್ದು, ಸ್ಥಳಕ್ಕೆ&zwnj; ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಸಾವಿನ ಹಿನ್ನೆಲೆ ಅರಣ್ಯಾಧಿಕಾರಿಗಳ&zwnj; ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;h3&gt;&lt;strong&gt;ಚಿಕ್ಕಮಗಳೂರಿನಲ್ಲಿ ಹಾಲು ಕೊಡುವ ಹಸು ತುಳಿದು ಸಾಯಿಸಿದ ಆನೆ&lt;/strong&gt;&lt;/h3&gt;&lt;p&gt;ಚಿಕ್ಕಮಗಳೂರು: ಮತ್ತೊಂದೆಡೆ ಚಿಕ್ಕಮಗಳೂರಿನಲ್ಲೂ ಕಾಡಾನೆ ದಾಳಿ ಮುಂದುವರೆದಿದೆ. ಚಿಕ್ಕಮಗಳೂರು ತಾಲೂಕಿನ ಮಾಣಿಮಕ್ಕಿ ಗ್ರಾಮದಲ್ಲಿ ಹಸುವನ್ನು ಕಾಡಾನೆಯೊಂದು ತುಳಿದು ಸಾಯಿಸಿದೆ. ಕಾಡಂಚಿನ ಗ್ರಾಮದಲ್ಲಿ ಮೇಯುವಾಗ ಕಾಡಾನೆ ದಾಳಿ ಮಾಡಿದ್ದು, ಮಾಣಿಮಕ್ಕಿ ಗ್ರಾಮದ ಮಧು ಎಂಬುವರಿಗೆ ಸೇರಿದ ಹಾಲು ಕೊಡುವ ಹಸುವನ್ನು ಕಾಡಾನೆ ತುಳಿದು ಸಾಯಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕನಸಿನ ಮನೆ ಕಟ್ಟುತ್ತಿದ್ದ ದಂಪತಿಯ ದುರಂತ ಸಾವು: ಮನೆಯ ಮೆಟ್ಟಿಲು ಬಿದ್ದು ಅವಘಡ&lt;/strong&gt;&lt;/p&gt;&lt;p&gt;ಜಮೀನಿನ ಜೊತೆ ಹೈನುಗಾರಿಕೆ ಮೂಲಕ ಬದುಕು ಕಟ್ಟಿಕೊಂಡಿದ್ದ ಮಧು ಅವರ ಹಸು ಇದಾಗಿದ್ದು, ಸ್ಥಳಕ್ಕೆ ಪಶುವೈದ್ಯರು ಭೇಟಿ ನೀಡಿ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕಾಡಾನೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಲ್ದೂರು ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;p&gt;&lt;strong&gt;ಕೊಡಗಿನಲ್ಲಿ ಸಾಕಾನೆ 21 ವರ್ಷದ ಝೂ ಅಭಿ ಸಾವು&lt;/strong&gt;&lt;/p&gt;&lt;p&gt;ಮತ್ತೊಂದೆಡೆ ಕೊಡಗಿನಲ್ಲಿ ಮತ್ತಿಗೋಡು ಸಾಕಾನೆ ಶಿಬಿರದಲ್ಲಿದ್ದ 21 ವರ್ಷದ ಆನೆ ಝೂ ಅಭಿ ಸಾವನ್ನಪ್ಪಿದೆ. ಝೂ ಅಭಿ ಆನೆಯನ್ನು ಆನೆ ಸೆರೆ ಕಾರ್ಯಾಚರಣೆಗೆ ಬಳಸುತ್ತಿದ್ದರು. ಭಾನುವಾರ ಸಂಜೆ ಝೂ ಅಭಿ ಸಾವನ್ನಪ್ಪಿದ್ದು, ಈ ಆನೆ ಕಳೆದ ಆರು ತಿಂಗಳಿನಿಂದ ಕಾಲು ನೋವಿನಿಂದ ಬಳಲುತ್ತಿತ್ತು. ಸಾವನ್ನಪ್ಪಿದ ಆನೆಗೆ ಪಶುವೈದ್ಯ ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದ್ದು, ಇಲಾಖಾ ಸಿಬ್ಬಂದಿ ಅಂತ್ಯಕ್ರಿಯೆ ನಡೆಸಿದ್ದಾರೆ. ಸ್ಥಳಕ್ಕೆ ಡಿಎಫ್ ಓ, ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬ್ಯಾಡಗಿ ಮೆಣಸಿನಕಾಯಿ ಮೇಲೆ ಯುದ್ಧದ ಕಾರ್ಮೋಡ: ರಫ್ತು ಬಂದ್, ಆತಂಕದಲ್ಲಿ ಬೆಳೆಗಾರರು&lt;/strong&gt;&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>kodagu</category>
            <dc:creator>Anusha Kb</dc:creator>
            <atom:link href="https://kannada.asianetnews.com/state/wild-elephant-attack-in-kodagu-and-chikkamagaluru-woman-and-cow-died/articleshow-ry4ylqb"/>
        </item>
        <item>
            <title><![CDATA[ಸಿಎಂ, ಸಚಿವಸ್ಥಾನ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತ: ಸಂಸದ ಯದುವೀರ್ ಒಡೆಯರ್]]></title>
            <link>https://kannada.asianetnews.com/karnataka-districts/mysuru-mp-yaduveer-wadiyar-slams-congress-state-development-stalled-by-cm-ministerial-power-tussle/articleshow-umvvd3y</link>
            <guid isPermaLink="true">https://kannada.asianetnews.com/karnataka-districts/mysuru-mp-yaduveer-wadiyar-slams-congress-state-development-stalled-by-cm-ministerial-power-tussle/articleshow-umvvd3y</guid>
            <pubDate>Wed, 25 Feb 2026 21:16:41 +0530</pubDate>
            <description><![CDATA[&lt;p&gt;ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಸರ್ಕಾರದ ಆಂತರಿಕ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಡಗಿನ ಕರ್ತೋಜಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjaqcsavz8v8zye4zgn3k2yq,imgname----------------------16--1772034090331.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಫೆ.25): &lt;/strong&gt;ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಸಚಿವ ಸ್ಥಾನಕ್ಕಾಗಿ ಕಿತ್ತಾಟ ಶುರುವಾಗಿದ್ದು, ನಿಮ್ಮ ಖುರ್ಚಿಯ ಹಗ್ಗ ಜಗ್ಗಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ನಿಮ್ಮ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಹಿಂದೆ ಬಿದ್ದಿದೆ. ಇದು ಆಗಬಾರದು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಕೊಡಗು ಜಿಲ್ಲೆಯ ಕರ್ತೋಜಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಇದನ್ನು ಈ ಜಿಲ್ಲೆಯ ಇಬ್ಬರು ಶಾಸಕರನ್ನೇ ಕೇಳಬೇಕು ಎಂದು ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯಿಸಿದರು.&lt;/p&gt;&lt;p&gt;ಸರ್ಕಾರಿ ಉದ್ಯೋಗಗಳ ಭರ್ತಿ ಮಾಡದ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ವಿಚಾರಕ್ಕೆ ಮಾತನಾಡಿದ ಅವರು ಮೊದಲು ರಾಷ್ಟ್ರದಲ್ಲಿ ಹೆಚ್ಚು ನಿರುದ್ಯೋಗವಿತ್ತು, ಕಳೆದ ಹತ್ತು ವರ್ಷಗಳಲ್ಲಿ ಅದು 3.8 ಕ್ಕೆ ಇಳಿಕೆಯಾಗಿದೆ. ಆದರೆ ಇದರ ಪ್ರಮಾಣ ರಾಜ್ಯದಲ್ಲಿ ಸ್ವಲ್ಪ ಜಾಸ್ತಿಯೇ ಇದೆ. ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಆ ಕಡೆಗೆ ಸರ್ಕಾರ ಗಮನ ಕೊಡಲಿ ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.&lt;/p&gt;&lt;p&gt;ಉದಾಹರಣೆಗೆ ಕೊಡಗಿನ ಆಸ್ಪತ್ರೆಗಳಲ್ಲಿ ತೆಗೆದುಕೊಳ್ಳಿ ಅಲ್ಲಿ ವೈದ್ಯರಿಲ್ಲ, ಜಿಲ್ಲೆಯ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಇದೆಲ್ಲವೂ ಸರ್ಕಾರಿ ಉದ್ಯೋಗಗಳು ಖಾಲಿ ಇವೆ ಎನ್ನುವುದನ್ನು ಸೂಚಿಸುತ್ತವೆ. ಇದನ್ನು ಮನಗಂಡು ನಾನು ಹಲವು ಕೌಶಲಾಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಅದರ ಸದುಪಯೋಗ ವಿದ್ಯಾರ್ಥಿಗಳಿಗೆ ಆಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.&lt;/p&gt;&lt;p&gt;ಇದಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಪದೇ ಪದೇ ಭೂಕುಸಿತವಾಗುತ್ತಿದ್ದ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅವರು ಭೂಮಿ ಪೂಜೆ ನೆರವೇರಿಸಿದರು. ಒಟ್ಟು 18 ಸ್ಥಳಗಳಲ್ಲಿ 94.08 ಕೋಟಿ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಕೊಡಗು ಜಿಲ್ಲೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 275ಬ ರಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ಹಲವೆಡೆ ಭೂಕುಸಿತವಾಗಿತ್ತು. ಮಳೆಗಾಲ ಬಂತೆಂದರೆ ನಿರಾಂತಕ ಪ್ರಯಾಣವುದು ಸಾಧ್ಯತೆವೇ ಇಲ್ಲ ಎನ್ನುವಂತ ಪರಿಸ್ಥಿತಿ ಇತ್ತು.&lt;/p&gt;&lt;p&gt;2018 ರಿಂದ 2021 ರವರೆಗೆ ಕೊಡಗು ಜಿಲ್ಲೆಯಲ್ಲಿ ಪ್ರತೀ ವರ್ಷವೂ ಹೆದ್ದಾರಿ ಬದಿಯಲ್ಲಿ ಭೂಕುಸಿತವಾಗುತಿತ್ತು. ಕಳೆದ ವರ್ಷವೂ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿ ಎಂಬಲ್ಲಿ ಬೆಟ್ಟದ ಮಣ್ಣು ಭಾರೀ ಪ್ರಮಾಣದಲ್ಲಿ ಕುಸಿದು ಬಂದಿತ್ತು. ದ್ವಿಪಥ ರಸ್ತೆ ಒಂದು ಬದಿ ಮಣ್ಣಿನಿಂದ ಸಂಪೂರ್ಣ ಆವೃತವಾಗಿತ್ತು. ಉಳಿದ ಒಂದೇ ಬದಿಯಲ್ಲಿ ವಾಹನಗಳು ಓಡಾಡಬೇಕಾಗಿತ್ತು. ಈ ಕುರಿತು ಸುವರ್ಣ ನ್ಯೂಸ್ 2025 ರ ಡಿಸೆಂಬರ್ 27 ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ಇದೀಗ ಹೆದ್ದಾರಿಯಲ್ಲಿ ಭೂಕುಸಿತವಾಗುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಿಸಲು ಮುಂದಾಗಿದ್ದು ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್.&lt;/p&gt;&lt;p&gt;ಸದ್ಯ ತಡೆಗೋಡೆ ಕಾಮಗಾರಿಗೆ ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದು 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ಕಾಮಗಾರಿ ಪೂರ್ಣಗೊಂಡಲ್ಲಿ ಯಾವುದೆ ಅಡೆತಡೆ ಇಲ್ಲದೆ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಸಂಚರಿಸಲು ಅನುಕೂಲವಾಗಲಿದೆ. ಆದಷ್ಟು ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲಿ ಎಂದ ಸ್ಥಳೀಯ ಮುಖಂಡರು ಆಶಯ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;18 ತಿಂಗಳ ಒಳಗಾಗಿ ಕಾಮಗಾರಿ ಮಾಡಲು ಸೂಚಿಸಿದ್ದೇನೆ. ಕರ್ತೋಜಿಯಲ್ಲಿ ಭೂಮಿಯೇ ಹುಬ್ಬಿ ಬರುತ್ತದೆ. ಅದಕ್ಕೆ ಸರಿಯಾದ ಯೋಜನೆ ರೂಪಿಸಿ ತಡೆಗೋಡೆ ಮಾಡಲಾಗುವುದು. ಹೆದ್ದಾರಿ ಎಂಜಿನಿಯರ್ಸ್ ಈಗಾಗಲೇ ಅದಕ್ಕೆ ಸೂಕ್ತ ಯೋಜನೆ ರೂಪಿಸಲಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>kodagu</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/mysuru-mp-yaduveer-wadiyar-slams-congress-state-development-stalled-by-cm-ministerial-power-tussle/articleshow-umvvd3y"/>
        </item>
        <item>
            <title><![CDATA[ಸೋಮವಾರಪೇಟೆ: ಮನೆಯಲ್ಲಿ ಆಕಸ್ಮಿಕ ಬೆಂಕಿ: 1 ಕಾಲು ಕಳೆದುಕೊಂಡಿದ್ದ ಯೋಧ ಹೊರ ಬಾರಲಾಗದೇ ಸಜೀವ ದಹನ]]></title>
            <link>https://kannada.asianetnews.com/state/kodagu-retired-crpf-soldier-died-in-fire-accident-at-home-in-somwarpet/articleshow-uxp6xbl</link>
            <guid isPermaLink="true">https://kannada.asianetnews.com/state/kodagu-retired-crpf-soldier-died-in-fire-accident-at-home-in-somwarpet/articleshow-uxp6xbl</guid>
            <pubDate>Wed, 04 Mar 2026 08:18:57 +0530</pubDate>
            <description><![CDATA[&lt;p&gt;Former CRPF soldier death: ಕೊಡಗಿನ ಸೋಮವಾರಪೇಟೆಯಲ್ಲಿ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್&zwnj;ಪಿಎಫ್ ಯೋಧರೊಬ್ಬರು ಸಜೀವ ದಹನಗೊಂಡಿದ್ದಾರೆ. ಕಾಲು ಕಳೆದುಕೊಂಡಿದ್ದ 64 ವರ್ಷದ ವೆಂಕಟೇಶ್ ಅವರು, ಬೆಂಕಿ ಹೊತ್ತಿಕೊಂಡಾಗ ಮನೆಯಿಂದ ಹೊರಬರಲಾಗದೆ ದುರಂತ ಅಂತ್ಯ ಕಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjvbkdp3esztbxsj6kpjekrc,imgname-kodagu-fire-accident-1772592150211.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬೆಂಕಿ ಆಕಸ್ಮಿಕದಲ್ಲಿ ಮಾಜಿ ಯೋಧ ಸಾವು&lt;/strong&gt;&lt;/h2&gt;&lt;p&gt;ಬೆಂಗಳೂರು: ಆಕಸ್ಮಿಕವಾಗಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಜಿ CRPFಯೋಧರೊಬ್ಬರು ಸಜೀವ ದಹನಗೊಂಡ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ತೋಳುರುಶೆಟ್ಟಳ್ಳಿಲ್ಲಿ ಘಟನೆ ನಡೆದಿದ್ದು, 64 ವರ್ಷದ ಹೆಚ್.ಎ.ವೆಂಕಟೇಶ್ ಮೃತ ಮಾಜಿ ಯೋಧ.&lt;/p&gt;&lt;p&gt;ಮನೆಯಲ್ಲೇ ತೋಟದ ಕೆಲಸಗಳಿಗೆ ಬಳಸುವ ಯಂತ್ರಗಳಿಗೆಂದು ತಂದಿಟ್ಟಿದ್ದ ಪೆಟ್ರೋಲ್&zwnj;ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ವೆಂಕಟೇಶ್ ಅವರು ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲನ್ನು ಕಳೆದುಕೊಂಡಿದ್ದರಿಂದ ತಕ್ಷಣ ಮನೆಯಿಂದ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಾಣಂತನಕ್ಕೆ ಹೋದ ಹೆಂಡ್ತಿ: ಊಟಕ್ಕೆಂದು ಹೊಟೇಲ್&zwnj;ಗೆ ಹೋದಾಗ ಆಕಸ್ಮಿಕವಾಗಿ ಕಾಲ್ತುಳಿದಿದ್ದಕ್ಕೆ ಯುವಕನ ಕೊಲೆ&lt;/strong&gt;&lt;/p&gt;&lt;p&gt;ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಮನೆಯ ಮೇಲಿನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟರಲ್ಲಾಗಲೇ ವೆಂಕಟೇಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇರ್ವರೂ ಪುತ್ರಿಯರನ್ನು ಅಗಲಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;35 ಸಾವಿರದ ಇವಿ ಬೈಕ್&zwnj;ಗೆ 1.50 ಲಕ್ಷ ಸಾಲ ಮಾಡಿಸಿದ ಶೋ ರೂಮ್: ಗ್ರಾಹಕರ ಆಧಾರ್ ಕಾರ್ಡ್ ಪಾನ್ ಕಾರ್ಡ್ ಪಡೆದು ಅವರಿಗೆ ತಿಳಿಯದೇ ಸಾಲ&lt;/strong&gt;&lt;/p&gt;]]></content:encoded>
            <category>kodagu</category>
            <dc:creator>Anusha Kb</dc:creator>
            <atom:link href="https://kannada.asianetnews.com/state/kodagu-retired-crpf-soldier-died-in-fire-accident-at-home-in-somwarpet/articleshow-uxp6xbl"/>
        </item>
        <item>
            <title><![CDATA[ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗಿನ ಸಿದ್ದು ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು, ಗುತ್ತಿಗೆದಾರರ ಸಂಘದ ಗಂಭೀರ ಆರೋಪ]]></title>
            <link>https://kannada.asianetnews.com/karnataka-districts/karnataka-contractors-association-alleges-massive-corruption-in-siddaramaiah-government/articleshow-v39oouq</link>
            <guid isPermaLink="true">https://kannada.asianetnews.com/karnataka-districts/karnataka-contractors-association-alleges-massive-corruption-in-siddaramaiah-government/articleshow-v39oouq</guid>
            <pubDate>Thu, 12 Feb 2026 18:09:39 +0530</pubDate>
            <description><![CDATA[&lt;p&gt;ಬಿಜೆಪಿ ಸರ್ಕಾರಕ್ಕಿಂತ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್ಚು ಭ್ರಷ್ಟಾಚಾರವಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆರೋಪಿಸಿದ್ದಾರೆ. ರಾಜ್ಯಾದ್ಯಂತ 37 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ಹಣ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಮಾರ್ಚ್ 5 ರಂದು ಬೃಹತ್ ಹೋರಾಟ ಎಂದಿದ್ದಾರೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kh8x1nv0qbk2qqcg8n9fhq2w,imgname-karnataka-contractors-association-1770899167069.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್&lt;/p&gt;&lt;p&gt;&lt;strong&gt;ಕೊಡಗು :&lt;/strong&gt; ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಭಾರೀ ಭ್ರಷ್ಟಾಚಾರವಿದೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರವಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;p&gt;ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ನಮ್ಮ ಸರ್ಕಾರ ಬಂದ್ರೆ ಎನ್ಓಸಿಗೆ ಹಣ ತೆಗೆದುಕೊಳ್ಳಲ್ಲ ಅಂತ ಸಿದ್ದರಾಮಯ್ಯನವರು ಹೇಳಿದ್ರು. ಆದರೆ ಎಲ್ಲಾ ಮಂತ್ರಿಗಳು ತೆಗೆದುಕೊಳ್ಳುತ್ತಿದ್ದಾರೆ. ಕೆಲವು ಮಂತ್ರಿಗಳು ಮಧ್ಯವರ್ತಿಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ವಸತಿ ಮತ್ತು ನಗರಾಭಿವೃದ್ಧಿ ಸಚಿವರು ಮಧ್ಯವರ್ತಿಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಎಂಜಿನಿಯರ್ ಗಳ ಕಚೇರಿಯಲ್ಲಿ ಮಧ್ಯವರ್ತಿಗಳನ್ನು ಇಟ್ಟುಕೊಂಡಿದ್ದಾರೆ. ಇಂತಹ ಸ್ಥಿತಿಯನ್ನು ಇತಿಹಾಸದಲ್ಲಿಯೇ ನಾನು ನೋಡಿಲ್ಲ. ನಮ್ಮ ಹೋರಾಟದ ಫಲವಾಗಿ ಸಿದ್ದರಾಮಯ್ಯನವರು ಸಿಎಂ ಆದರು. ಅವರ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಅವರು ಸಿಎಂ ಆಗಿ ಎರಡುವರೆ ವರ್ಷ ಕಳೆದುಹೋಗಿದೆ. ಆದರೆ ಗುತ್ತಿಗೆದಾರರಿಗೆ ಯಾವುದೇ ಅನುಕೂಲ ಆಗಿಲ್ಲ, ಗುತ್ತಿಗೆದಾರರು ಕಷ್ಟ ಕಾಲದಲ್ಲಿ ಕೆಲಸ ಮಾಡಿರುತ್ತಾರೆ. ಆದರೆ ಇದುವರೆಗೆ ಹಣ ಬಿಡುಗಡೆ ಆಗಿಲ್ಲ.&amp;nbsp;&lt;/p&gt;&lt;h2&gt;ಒಟ್ಟು 37 ಸಾವಿರ ಕೋಟಿ ಬಾಕಿ&lt;/h2&gt;&lt;p&gt;ರಾಜ್ಯದಲ್ಲಿ ಎಲ್ಲಾ ಇಲಾಖೆಗಳಿಂದ ಒಟ್ಟು 37 ಸಾವಿರ ಕೋಟಿ ಬಾಕಿ ಇದೆ. ಕೊಡಗಿನಲ್ಲಿ ಪ್ರವಾಹದ ಸಂದರ್ಭದಲ್ಲಿ ಮಾಡಿದ್ದಂತಹ ಕೆಲಸಗಳ 7 ಕೋಟಿ ರೂಪಾಯಿ ಇನ್ನೂ ಬಾಕಿ ಉಳಿಸಿಕೊಂಡಿದೆ. ಈಗ ಕೆಲಸ ಮಾಡಿರುವ ಕಾಮಗಾರಿಗಳ 180 ಕೋಟಿ ರೂಪಾಯಿ ಬಾಕಿ ಇದೆ. ನಾವು ಹೋಗಿ ಮಾತನಾಡಿಸಲು ಹೋದರೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನೀನು ಬಿಡಯ್ಯ ದುಡ್ಡು ಕೇಳುವುದಕ್ಕೆ ಬರುತೀಯಾ ಅಂತಾರೆ. ಇದುವರೆಗೆ ನಾವು ನಮ್ಮ ಸಮಸ್ಯೆಗಳು ಸೇರಿದಂತೆ ಎಲ್ಲಾ ರೀತಿಯ ಮಾಹಿತಿಯನ್ನು ಒಳಗೊಂಡ 100 ಪುಟಗಳ ವರದಿಯನ್ನು ಸಿಎಸ್ ಗೆ ಕೊಟ್ಟಿದ್ದೇವೆ. ಆದರೆ ಏನು ಪ್ರಯೋಜನ ಆಗಿಲ್ಲ. ನಾಮಕಾವಸ್ಥೆಗೆ ಸಭೆ ಮಾಡುವ ಕೆಲಸ ಮಾಡುತ್ತಾರೆ. ಈ ಸರ್ಕಾರದಿಂದ ನಮಗೆ ಏನು ಪ್ರಯೋಜನ ಆಗುತ್ತಿಲ್ಲ.&amp;nbsp;&lt;/p&gt;&lt;h2&gt;ಮಾರ್ಚ್ 5 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ&lt;/h2&gt;&lt;p&gt;ಮಾರ್ಚ್ 5 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಲಿದ್ದೇವೆ. ಅಂದು ಇಡೀ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ಕೆಲಸಗಳನ್ನು ನಿಲ್ಲಿಸಿ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಎಂಸಿಎಚ್ ಕೆಲಸ ಮಾಡುತ್ತಿರುವವರೆಲ್ಲಾ ಹೊರ ರಾಜ್ಯದವರು. ಇಂತಹವುಗಳ ವಿರುದ್ಧ ನಮ್ಮ ಹೋರಾಟ ನಡೆಯುತ್ತೆ. ಹತ್ತು ವರ್ಷಕ್ಕೆ ರಿನೀವಲ್ ಮಾಡಿ ಅಂತ ಹಲವು ಸಮಯದಿಂದ ಕೇಳುತ್ತಿದ್ದೇವೆ. ಆದರೂ ಅದನ್ನು ಮಾಡುತ್ತಿಲ್ಲ. ಜಿಎಸ್ ಟಿ ಸಾಕಷ್ಟು ವ್ಯತ್ಯಾಸ ಆಗಿದೆ ಅದನ್ನು ಸರಿ ಮಾಡಿಲ್ಲ ಮಡಿಕೇರಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ದೊಡ್ಡ ಭ್ರಷ್ಟಾಚಾರವಿದೆ ಎಂದು ಹೇಳಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-contractors-association-alleges-massive-corruption-in-siddaramaiah-government/articleshow-v39oouq"/>
        </item>
        <item>
            <title><![CDATA[ಕೃಷಿಯಲ್ಲಿ ತೊಡಗಲು ಪೊಲೀಸ್‌  ಕಾನ್‌ಸ್ಟೇಬಲ್‌ ಹುದ್ದೆಗೆ  ರಾಜೀನಾಮೆ!]]></title>
            <link>https://kannada.asianetnews.com/karnataka-districts/police-constable-quits-job-to-take-up-farming/articleshow-w69zgz1</link>
            <guid isPermaLink="true">https://kannada.asianetnews.com/karnataka-districts/police-constable-quits-job-to-take-up-farming/articleshow-w69zgz1</guid>
            <pubDate>Sun, 01 Mar 2026 07:25:39 +0530</pubDate>
            <description><![CDATA[&lt;p&gt;ಕೊಡಗಿನ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್&zwnj;ಸ್ಟೇಬಲ್&zwnj; ಆಗಿ ಕರ್ತವ್ಯದಲ್ಲಿದ್ದ ತೇಜಸ್ವಿ (32) ಅವರು ತಮ್ಮ ಹುಟ್ಟೂರಲ್ಲಿ ಕೃಷಿ ಮಾಡುವ ಆಸಕ್ತಿಯಿಂದ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjkhqavhxhvc14qbqvfhak73,imgname-farmer-1772330134385.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಶಾಲನಗರ :&lt;/strong&gt; ಕೊಡಗಿನ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್&zwnj;ಸ್ಟೇಬಲ್&zwnj; ಆಗಿ ಕರ್ತವ್ಯದಲ್ಲಿದ್ದ ತೇಜಸ್ವಿ (32) ಅವರು ತಮ್ಮ ಹುಟ್ಟೂರಲ್ಲಿ ಕೃಷಿ ಮಾಡುವ ಆಸಕ್ತಿಯಿಂದ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿದ್ದಾರೆ.&lt;/p&gt;&lt;h2&gt;ಅವರಿಗೆ ಸ್ವಂತ ಊರು ಶಿವಮೊಗ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಪಿತ್ರಾರ್ಜಿತ ಜಮೀನು&lt;/h2&gt;&lt;p&gt;ಅವರಿಗೆ ಸ್ವಂತ ಊರು ಶಿವಮೊಗ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಪಿತ್ರಾರ್ಜಿತ ಜಮೀನು ಇದೆ. ಅವರು ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.&lt;/p&gt;&lt;h3&gt;ಆರು ವರ್ಷಗಳಿಂದ ಕೊಡಗಿನಲ್ಲಿ ಕರ್ತವ್ಯ&lt;/h3&gt;&lt;p&gt;ತೇಜಸ್ವಿ ಕಳೆದ ಆರು ವರ್ಷಗಳಿಂದ ಕೊಡಗಿನ ಸುಂಟಿಕೊಪ್ಪ ಮತ್ತು ಕುಶಾಲನಗರ ಠಾಣೆಯಲ್ಲಿ ಸಿವಿಲ್&zwnj; ಕಾನ್&zwnj;ಸ್ಟೇಬಲ್&zwnj; ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.&lt;/p&gt;&lt;p&gt;ಊರಲ್ಲಿ ಸುಮಾರು 10 ಎಕರೆ ಕೃಷಿ ಭೂಮಿ ಹೊಂದಿರುವ ತೇಜಸ್ವಿ, ತಂದೆ- ತಾಯಿ ಮೇಲ್ವಿಚಾರಣೆಯಲ್ಲಿ ಕಾರ್ಮಿಕರನ್ನು ಇರಿಸಿ ಕೃಷಿ ಚಟುವಟಿಕೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತಾವು ಕೃಷಿಯತ್ತ ಒಲವು ತೋರಿದ್ದು, ಫೆ.28 ರಿಂದ ಅನ್ವಯವಾಗುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅವರು ಮನವಿ ಸಲ್ಲಿಸಿದ್ದಾರೆ.&lt;/p&gt;&lt;p&gt;ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು ತೇಜಸ್ವಿ ಅವರ ಮನವಿ ಪರಿಶೀಲಿಸಿ, ರಾಜೀನಾಮೆ ಅಂಗೀಕರಿಸಿ, ಕರ್ತವ್ಯದಿಂದ ಬಿಡುಗಡೆಗೆ ಅನುಮತಿ ನೀಡಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/police-constable-quits-job-to-take-up-farming/articleshow-w69zgz1"/>
        </item>
        <item>
            <title><![CDATA[ಸಂಕೇತ್ ಹತ್ಯೆ ಬೆನ್ನಲ್ಲೇ ಕೊಡಗಿನ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಮಾರಣಾಂತಿಕ ಹಲ್ಲೆ, ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ದಾಳಿ?]]></title>
            <link>https://kannada.asianetnews.com/karnataka-districts/hindu-youth-lethally-attacked-by-muslim-youths-in-kodagu-today/articleshow-whtbe7o</link>
            <guid isPermaLink="true">https://kannada.asianetnews.com/karnataka-districts/hindu-youth-lethally-attacked-by-muslim-youths-in-kodagu-today/articleshow-whtbe7o</guid>
            <pubDate>Fri, 27 Feb 2026 20:04:18 +0530</pubDate>
            <description><![CDATA[&lt;p&gt;ಕೊಡಗಿನ ನಾಪೋಕ್ಲುವಿನಲ್ಲಿ 'ಹಿಂದೂ ಸಂಗಮ'ದ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjfrafqa2p2rancr0z79y1dt,imgname----------------------36--1772202835690.jpg" type="image/jpeg" height="390" width="690"/>
            <content:encoded><![CDATA[&lt;h2&gt;ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ಹಲ್ಲೆ?&lt;/h2&gt;&lt;p&gt;&lt;strong&gt;ಕೊಡಗು (ಫೆ.27): &lt;/strong&gt;ಶಿವಮೊಗ್ಗದಲ್ಲಿ ಅಪ್ರಾಪ್ತ ಹಿಂದೂ ಯುವಕನ ಬರ್ಬರ ಕೊಂದ ಘಟನೆ ಬೆನ್ನಲ್ಲೇ ಇದೀಗ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಾಳೆ ನಡೆಯಲಿರುವ 'ಹಿಂದೂ ಸಂಗಮ' ಕಾರ್ಯಕ್ರಮದ ಕುರಿತು ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಬಲ್ಲಮಾವಟಿಯ ಯುವಕ ಗೌತಮ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.&lt;/p&gt;&lt;p&gt;ಪ್ರಚಾರದ ವಿಚಾರವಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಕೊನೆಗೆ ಮಾರಣಾಂತಿಕವಾಗಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್&zwnj;ನ ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;h3&gt;ಹಲ್ಲೆಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನ ಭಾಗಿ?&lt;/h3&gt;&lt;p&gt;ಈ ಹಲ್ಲೆ ಪ್ರಕರಣದಲ್ಲಿ ನಾಪೋಕ್ಲು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ನಾಪೋಕ್ಲು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಸಾವಿರಾರು ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿ ಧರಣಿ ಕುಳಿತಿದ್ದಾರೆ.&lt;/p&gt;&lt;h3&gt;ಸ್ಥಳಕ್ಕೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಭೇಟಿ&lt;/h3&gt;&lt;p&gt;ಘಟನೆಯ ಗಂಭೀರತೆಯನ್ನು ಅರಿತ ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅವರು ತಕ್ಷಣವೇ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಭೇಟಿ ಮಾಡಿ ಮಾಹಿತಿ ಪಡೆದ ಅವರು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.&lt;/p&gt;&lt;p&gt;&lt;strong&gt;ಪೊಲೀಸ್ ವಶದಲ್ಲಿ ಆರೋಪಿಗಳು: ನ್ಯಾಯಕ್ಕಾಗಿ ಆಗ್ರಹ&lt;/strong&gt;&lt;/p&gt;&lt;p&gt;ಪ್ರಾಥಮಿಕ ಮಾಹಿತಿಯ ಪ್ರಕಾರ, ಪೊಲೀಸರು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಹಲ್ಲೆ ನಡೆಸಿದ ಎಲ್ಲಾ ಆರೋಪಿಗಳನ್ನು ಬಂಧಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಹಿಂದೂ ಮುಖಂಡರು ಪಟ್ಟು ಹಿಡಿದಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>kodagu</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/hindu-youth-lethally-attacked-by-muslim-youths-in-kodagu-today/articleshow-whtbe7o"/>
        </item>
        <item>
            <title><![CDATA[ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ; ಮದುಮಗ ಅಬ್ದುಲ್‌ಗೆ ಕೊರಗಜ್ಜನ ವೇಷ ತೊಡಿಸಿ ಎಳೆದೊಯ್ದು ಅಪಹಾಸ್ಯ]]></title>
            <link>https://kannada.asianetnews.com/gallery/karnataka-districts/tulunadu-daiva-insult-by-muslim-youths-at-kodagu-deovotees-outraged-rav-wp2nwix</link>
            <guid isPermaLink="true">https://kannada.asianetnews.com/gallery/karnataka-districts/tulunadu-daiva-insult-by-muslim-youths-at-kodagu-deovotees-outraged-rav-wp2nwix</guid>
            <pubDate>Tue, 31 Mar 2026 12:19:09 +0530</pubDate>
            <description><![CDATA[&lt;p&gt;ಕೊಡಗಿನ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪವಿತ್ರ ದೈವವನ್ನು ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn1a0zymjy5t4w5b5kpztgy4,imgname----------------------13--1774939307988.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೊಡಗಿನ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪವಿತ್ರ ದೈವವನ್ನು ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಮದುಮಗ ಮತ್ತು ಆತನ ಬೆಂಬಲಿಗರು ದೈವಕ್ಕೆ ಅವಮಾನ ಮಾಡಿದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಎಮ್ಮೆಮಾಡು ಗ್ರಾಮದಲ್ಲಿ ಗ್ರಾಮದ ಯುವಕರು ಎರಡು ದಿನಗಳ ಹಿಂದೆ ಮದುಮಗನೊಬ್ಬನಿಗೆ ದೈವದ ವೇಷ ತೊಡಿಸಿ ಉಳಿದವರು ದೇವರನ್ನು ಹೀಯಾಳಿಸಿ ಮೆರವಣಿಗೆ ನಡೆಸಿರುವ ಫೋಟೋ ವೈರಲ್&zwnj; ಆಗಿದೆ.&lt;/p&gt;&lt;img&gt;&lt;p&gt;ಪೂರ್ವಜರ ನಂಬಿಕೆ ಹಾಗೂ ಸಂಸ್ಕೃತಿ, ಧರ್ಮವನ್ನು ಅಪಹಾಸ್ಯ ಅವಮಾನ ಮಾಡಿದ್ದಾರೆಂದು ಆರೋಪ ಕೇಳಿಬಂದಿದ್ದು, ದೈವ ವೇಷದಲ್ಲಿ ಕೆಟ್ಟದಾಗಿ ವರ್ತಿಸಿ ಅವಮಾನ ಮಾಡಿದ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹಿಂದೂ ಪರ ಸಂಘಟನೆ ಪ್ರಮುಖರು ದೂರು ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ಎಮ್ಮೆಮಾಡು ಗ್ರಾಮದ ಯುವಕರಾದ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಪೈಸಲ್ ,ಶಕೀರ್ ಹಾಗೂ ಬಶೀರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ.&lt;/p&gt;&lt;p&gt;ಶನಿವಾರ ರಾತ್ರಿ ಕೊರಗಜ್ಜ ದೈವದ ರೀತಿ ವೇಷ ಧರಿಸಿ ಎಳೆದೊಯ್ದು ಅವಮಾನ ಮಾಡಿರುವ ಯುವಕರು. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಿಂದೂಗಳು, ಕೊರಗಜ್ಜನ ಭಕ್ತರ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೈವಾರಾಧಕರ ಸಂಘ ಮಡಿಕೇರಿ ಡಿವೈಎಸ್&zwnj;ಪಿಗೂ ದೂರು ಸಲ್ಲಿಸಿದೆ&lt;/p&gt;&lt;img&gt;&lt;p&gt;ನಮ್ಮ ದೈವಗಳಿಗೆ ಪದೇ ಪದೇ ಅಪಮಾನ ಮಾಡಲಾಗುತ್ತಿದೆ. ಅಪಮಾನವಾದಾಗ ನಾವು ದೂರು ಕೊಡುತ್ತೇವೆ ಬಳಿಕ ಕಿಡಿಗೇಡಿಗಳ ಆ ಕ್ಷಣಕ್ಕೆ ಕ್ಷಮೆ ಕೇಳುತ್ತಾರೆ. ನಂತರ ಇದೇ ರೀತಿ ಅಪಮಾನ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಕೊನೆ ಎಂದು. ಇನ್ನೊಮ್ಮೆ ಕೃತ್ಯವೆಸಗದ ಹಾಗೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು. ಮುಂದೆ ಈ ರೀತಿ ಕೃತ್ಯ ನಡೆದರೆ ತೀವ್ರ ಹೋರಾಟ ನಡೆಸಬೇಕಾಗುತ್ತೆ ಎಂದು ಎಚ್ಚರಿಸಿದರು.&lt;/p&gt;]]></content:encoded>
            <category>kodagu</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/tulunadu-daiva-insult-by-muslim-youths-at-kodagu-deovotees-outraged-rav-wp2nwix"/>
        </item>
    </channel>
</rss>
