<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 20:54:14 +0530</lastBuildDate>
        <atom:link href="https://kannada.asianetnews.com/rss/kodagu" rel="self" type="application/rss+xml"/>
        <item>
            <title><![CDATA[ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ!]]></title>
            <link>https://kannada.asianetnews.com/india-news/anand-mahindra-kodagu-coffee-estate-elephant-herd-viral-video-updates-san/articleshow-18dpc6f</link>
            <guid isPermaLink="true">https://kannada.asianetnews.com/india-news/anand-mahindra-kodagu-coffee-estate-elephant-herd-viral-video-updates-san/articleshow-18dpc6f</guid>
            <pubDate>Sat, 16 May 2026 19:31:19 +0530</pubDate>
            <description><![CDATA[&lt;p&gt;ಉದ್ಯಮಿ ಆನಂದ್ ಮಹೀಂದ್ರಾ ಅವರು ಕೊಡಗಿನಲ್ಲಿರುವ ತಮ್ಮ ಕೌಟುಂಬಿಕ ಕಾಫಿ ಎಸ್ಟೇಟ್&zwnj;ಗೆ ಆನೆಗಳ ಹಿಂಡು ಲಗ್ಗೆ ಇಟ್ಟಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ದಶಕಗಳಿಂದ ನಡೆದುಕೊಂಡು ಬಂದಿದ್ದು, ಕಾಡಿನ ಅತಿಕ್ರಮಣದ ಪರಿಣಾಮವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krrhbwgey8bk3ktdk1r74qnq,imgname-anand-mahindra-kodagu-1778939982349.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಮೇ.16):&lt;/strong&gt; ಪ್ರಕೃತಿಯ ಸೌಂದರ್ಯ ಹಾಗೂ ಕಾಫಿ ನಾಡು ಎಂದೇ ಪ್ರಸಿದ್ಧವಾಗಿರುವ ಕೊಡಗು ಜಿಲ್ಲೆಯಲ್ಲಿರುವ ಉದ್ಯಮ ಲೋಕದ ದೈತ್ಯ ಹಾಗೂ ಮಹೀಂದ್ರಾ &amp;amp; ಮಹೀಂದ್ರಾ ಗ್ರೂಪ್&zwnj; ಚೇರ್ಮನ್&zwnj; ಆನಂದ್ ಮಹೀಂದ್ರಾ ಅವರ ಕೌಟುಂಬಿಕ ಕಾಫಿ ಎಸ್ಟೇಟ್&zwnj;ಗೆ ಗಜಪಡೆ ಲಗ್ಗೆ ಇಟ್ಟಿದೆ. ಇಂದು ಮುಂಜಾನೆ ಆನೆಗಳ ಹಿಂಡೊಂದು ಎಸ್ಟೇಟ್&zwnj;ನ ಆವರಣದೊಳಗೆ ರಾಜಗಾಂಭೀರ್ಯದಿಂದ ಉಲ್ಲಾಸವಾಗಿ ಹೆಜ್ಜೆ ಹಾಕುತ್ತಾ ಸಾಗಿರುವ ಅಪರೂಪದ ದೃಶ್ಯದ ವಿಡಿಯೋ ತುಣುಕನ್ನು ಆನಂದ್ ಮಹೀಂದ್ರಾ ಅವರು ತಮ್ಮ ಸೋಶಿಯಲ್&zwnj; ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.&lt;/p&gt;&lt;p&gt;&quot;ಕೊಡಗಿನಲ್ಲಿರುವ ನಮ್ಮ ಕುಟುಂಬದ ಕಾಫಿ ತೋಟದ (ಕಾಫಿ ಎಸ್ಟೇಟ್) ಕುರಿತು ನಾನು ಈ ಹಿಂದೆಯೂ ಪೋಸ್ಟ್ ಮಾಡಿದ್ದೆ. ಈ ಎಸ್ಟೇಟನ್ನು ನನ್ನ ಕಿರಿಯ ತಂಗಿ ನಿರ್ವಹಿಸುತ್ತಿದ್ದಾಳೆ. ನಮ್ಮ ಇಡೀ ಕುಟುಂಬವು ಇದನ್ನು ನಮ್ಮದೇ ಆದ ಒಂದು 'ಪಾರಂಪರಿಕ ಮನೆ' (Ancestral Home) ಎಂದೇ ಭಾವಿಸಿದೆ,&quot; ಎಂದು ಆನಂದ್ ಮಹೀಂದ್ರಾ ನೆನಪಿಸಿಕೊಂಡಿದ್ದಾರೆ.&lt;/p&gt;&lt;p&gt;ತಮ್ಮ ಸಹೋದರಿ ಇಂದು ಮುಂಜಾನೆ ಕಳುಹಿಸಿದ್ದ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿರುವ ಅವರು, &quot;ಇಂದು ಮುಂಜಾನೆ ಆನೆಗಳ ಹಿಂಡೊಂದು ಎಸ್ಟೇಟ್&zwnj;ನ ಒಂದು ಮುಖ್ಯ ಗೇಟ್&zwnj;ನಿಂದ (ಅರೆಬಿಕಾ ಕಾಫಿ ಗಿಡಗಳು ಇರುವ ಭಾಗದಿಂದ) ರಸ್ತೆಯ ಆಚೆಗಿರುವ ಮತ್ತೊಂದು ಗೇಟ್&zwnj;ಗೆ (ರೋಬಸ್ಟಾ ಕಾಫಿ ಗಿಡಗಳು ಇರುವ ಭಾಗಕ್ಕೆ) ಅತ್ಯಂತ ಗಾಂಭೀರ್ಯದಿಂದ ದಾಟಿಕೊಂಡು ಹೋಗುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು,&quot; ಎಂದು ಬರೆದುಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;'ಇದು ಕಾಡಿನ ಅತಿಕ್ರಮಣದಿಂದ ಆದದ್ದಲ್ಲ!'&lt;/strong&gt;&lt;/h2&gt;&lt;p&gt;ಸಾಮಾನ್ಯವಾಗಿ ಕಾಡಿನ ಅತಿಕ್ರಮಣದಿಂದಾಗಿ ವನ್ಯಜೀವಿಗಳು ನಾಡಿಗೆ ಬರುತ್ತವೆ ಎಂಬ ವಾದವನ್ನು ತಳ್ಳಿಹಾಕಿರುವ ಮಹೀಂದ್ರಾ, &quot;ಇದೇನೂ ಕಾಡಿನ ಅತಿಕ್ರಮಣದಿಂದಾಗಿ ಇತ್ತೀಚೆಗೆ ಸೃಷ್ಟಿಯಾಗಿರುವ ಹೊಸ ವಿದ್ಯಮಾನವಲ್ಲ. ಈ ಭವ್ಯ ಅತಿಥಿಗಳು ಕಳೆದ ಹಲವಾರು ದಶಕಗಳಿಂದಲೂ ನಮ್ಮ ಎಸ್ಟೇಟ್&zwnj;ಗೆ ನಿರಂತರವಾಗಿ ಭೇಟಿ ನೀಡುತ್ತಲೇ ಇವೆ. ಸಾಮಾನ್ಯವಾಗಿ ತೋಟದಲ್ಲಿರುವ ಹಲಸಿನ ಮರಗಳ ಹಣ್ಣುಗಳನ್ನು ತಿನ್ನುವ ಸಲುವಾಗಿ ಇವು ಇಲ್ಲಿಗೆ ಲಗ್ಗೆ ಇಡುತ್ತವೆ,&quot; ಎಂದು ಬರೆದುಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಚಹಾಗೆ ಆಮಂತ್ರಣ ಕೊಟ್ಟಂತೆ ಬಂದಿವೆ ಆನೆಗಳು!&lt;/strong&gt;&lt;/h2&gt;&lt;p&gt;ಆನೆಗಳ ಆತ್ಮವಿಶ್ವಾಸದ ನಡಿಗೆಯನ್ನು ಕಂಡು ಆನಂದ್ ಮಹೀಂದ್ರಾ ಅವರು ಹಾಸ್ಯದ ಚಟಾಕಿ ಹಾರಿಸಿದ್ದು, &quot;ಆದರೆ ಈ ಬಾರಿ ಈ ಆನೆಗಳು ಎಸ್ಟೇಟ್&zwnj;ನ ಮುಖ್ಯ ಗೇಟ್&zwnj;ಗಳ ಮೂಲಕ ಎಷ್ಟು ಭರಪೂರ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕುತ್ತಾ ಸಾಗುತ್ತಿವೆ ಎಂದರೆ, ಇವುಗಳಿಗೆ ನಾವೇನಾದರೂ ಅಧಿಕೃತವಾಗಿ ಚಹಾ ಮತ್ತು ತಿಂಡಿಯ ಕೂಟಕ್ಕೆ ಆಮಂತ್ರಣ ನೀಡಿದ್ದೇವೇನೋ ಎನ್ನುವಂತೆ ಭಾಸವಾಗುತ್ತಿದೆ...&quot; ಎಂದು ಬಣ್ಣಿಸಿದ್ದಾರೆ.&lt;/p&gt;&lt;p&gt;ಮುಂದುವರಿದು ಭಾವನಾತ್ಮಕ ಸಾಲುಗಳನ್ನು ಬರೆದಿರುವ ಉದ್ಯಮಿ, &quot;ಈ ಕಾಫಿ ತೋಟವು ಮೊದಲಿನಿಂದಲೂ ತಮಗೇ ಸೇರಿದ್ದು ಹಾಗೂ ನಾವಿಲ್ಲಿ ಕೇವಲ ತಾತ್ಕಾಲಿಕ ಬಾಡಿಗೆದಾರರು ಮಾತ್ರ ಎಂಬ ಸತ್ಯ ಈ ಮೂಕ ಪ್ರಾಣಿಗಳಿಗೆ ಚೆನ್ನಾಗಿ ಗೊತ್ತಿದೆ ಅನಿಸುತ್ತದೆ...&quot; ಎಂದು ಪ್ರಕೃತಿ ಮತ್ತು ವನ್ಯಜೀವಿಗಳ ಮೇಲಿರುವ ತಮ್ಮ ಗೌರವವನ್ನು ವ್ಯಕ್ತಪಡಿಸಿದ್ದಾರೆ. ಪ್ರಕೃತಿ ಮತ್ತು ಮಾನವನ ನಡುವಿನ ಈ ಅಪರೂಪದ ಸಹಬಾಳ್ವೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರ ಮನಗೆದ್ದಿದೆ.&lt;/p&gt;&lt;p&gt;I&rsquo;ve posted before about our family&rsquo;s coffee plantation in Kodagu, which my younger sister manages, and which we&rsquo;ve come to regard as our adopted &lsquo;ancestral home.&rsquo;She just sent me this clip: a herd of elephants marching this morning from one gate of the estate (the Arabica&hellip; pic.twitter.com/1itTLn8qqx&lt;/p&gt;&lt;p&gt;&mdash; anand mahindra (@anandmahindra) May 16, 2026&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kodagu</category>
            <dc:creator>Santosh Naik</dc:creator>
            <atom:link href="https://kannada.asianetnews.com/india-news/anand-mahindra-kodagu-coffee-estate-elephant-herd-viral-video-updates-san/articleshow-18dpc6f"/>
        </item>
        <item>
            <title><![CDATA[ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಜನರೇ ಎಚ್ಚರ; ಹವಾಮಾನ ಇಲಾಖೆ 'ಡೇಂಜರ್' ಅಲರ್ಟ್!]]></title>
            <link>https://kannada.asianetnews.com/gallery/state/karnataka-weather-report-60-kmph-wind-and-heavy-rain-alert-for-interior-5-districts-sat-2sd2i21</link>
            <guid isPermaLink="true">https://kannada.asianetnews.com/gallery/state/karnataka-weather-report-60-kmph-wind-and-heavy-rain-alert-for-interior-5-districts-sat-2sd2i21</guid>
            <pubDate>Tue, 19 May 2026 15:41:05 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಮೇ 26ರ ಸುಮಾರಿಗೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krztsbbp092nn12as0can513,imgname-screenshot-2026-05-17-202159-1779184741749.png" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಮೇ 26ರ ಸುಮಾರಿಗೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು: ರಾ&lt;/strong&gt;ಜ್ಯದಲ್ಲಿ ಮುಂಗಾರು ಪೂರ್ವ ಮಳೆ (Pre-monsoon Rain) ಬಿರುಸುಗೊಂಡಿದ್ದು, ಜನತೆಗೆ ತಂಪಾದ ಅನುಭವದ ಜೊತೆಗೆ ಆತಂಕವೂ ಎದುರಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ನೈರುತ್ಯ ಮುಂಗಾರು (Southwest Monsoon) ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ. ಗುಡುಗು ಸಿಂಚನದ ಜೊತೆಗೆ ಈ ಬಲವಾದ ಗಾಳಿಯು ಮರಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿ ಮಾಡುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rainfall) ಮುನ್ಸೂಚನೆಯಿದೆ. ವಿಶೇಷವಾಗಿ &lt;strong&gt;ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು&lt;/strong&gt; ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸಲಿದೆ.&amp;nbsp;&lt;/p&gt;&lt;p&gt;ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಉತ್ತರ ಒಳನಾಡಿನ ಜಿಲ್ಲೆಗಳಾದ &lt;strong&gt;ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ&lt;/strong&gt; ಜಿಲ್ಲೆಗಳಲ್ಲಿ ಇಂದು ಚದುರಿದಂತೆ ಮಳೆಯಾಗಲಿದ್ದು, ಇಲ್ಲಿಯೂ ಕೂಡ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ತಿಳಿಸಿದೆ.&lt;/p&gt;&lt;img&gt;&lt;p&gt;ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಮೀನುಗಾರರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ತಿಳಿಸಲಾಗಿದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33&deg;C ಹಾಗೂ ಕನಿಷ್ಠ ತಾಪಮಾನ 21&deg;C ದಾಖಲಾಗುವ ಸಂಭವವಿದೆ.&lt;/p&gt;&lt;img&gt;&lt;p&gt;ಸದ್ಯ ಮುಂಗಾರು ಮಾರುತಗಳು ಆಗ್ನೇಯ ಅರಬ್ಬೀ ಸಮುದ್ರ, ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಆವರಿಸಿವೆ. ಮುಂದಿನ 3-4 ದಿನಗಳಲ್ಲಿ ಇವು ಕೇರಳದ ಕಡೆಗೆ ಮುನ್ನಡೆಯಲು ಪೂರಕವಾದ ವಾತಾವರಣವಿದೆ. ಉತ್ತರ ಪ್ರದೇಶದಿಂದ ಕೇರಳದವರೆಗೆ ಹರಡಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-weather-report-60-kmph-wind-and-heavy-rain-alert-for-interior-5-districts-sat-2sd2i21"/>
        </item>
        <item>
            <title><![CDATA[ಕುಶಾಲನಗರದ ಹೊಸಕೋಟೆ ಬಳಿ ಬೈಕ್ ಸವಾರನ ಮೇಲೆ ಕಾಡಾನೆ ದಾಳಿಗೆ ಯತ್ನ, ದೃಶ್ಯ ಸೆರೆ]]></title>
            <link>https://kannada.asianetnews.com/karnataka-districts/wild-elephant-attempts-attack-on-biker-near-kushalnagar-incident-caught-on-camera/articleshow-75fgycr</link>
            <guid isPermaLink="true">https://kannada.asianetnews.com/karnataka-districts/wild-elephant-attempts-attack-on-biker-near-kushalnagar-incident-caught-on-camera/articleshow-75fgycr</guid>
            <pubDate>Mon, 18 May 2026 07:56:41 +0530</pubDate>
            <description><![CDATA[&lt;p&gt;ಹೊಸಕೋಟೆ ಬಳಿ ಆನೆ ಬೈಕ್ ಸವಾರನ ಮೇಲೆ ದಾಳಿಗೆ ಯತ್ನಿಸಿದೆ. ಬೈಕ್ ತಿರುಗಿಸುವಷ್ಟರಲ್ಲೇ ದಾಳಿಗೆ ಮುಂದಾಗಿದೆ. ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krwe47xf4sz1fgbyk9vgs3xj,imgname-elephant-attack-kodagu-1779070803887.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಮೇ.18)&lt;/strong&gt; ಕೊಡಗಿನ ಹಲೆವೆಡೆ ಆನೆ ದಾಳಿ, ತೋಟಕ್ಕೆ ನುಗ್ಗಿ ಅವಾಂತರ ಸೃಷ್ಟಿಸುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿದೆ. ಆನೆಗಳ ಹಿಂಡುಗಳು ರಾತ್ರಿ ವೇಳೆ ಹೆದ್ದಾರಿ ಮೂಲಕವೇ ಸಾಗುತ್ತಿರುವ ಕೆಲ ಘಟನೆಗಳು ನಡೆದಿದೆ. ಇದೀಗ ಕುಶಾಲನಗರದ ಹೊಸಕೋಟೆ ಬಳಿ ಬೈಕ್ ಸವಾರನ ಮೇಲೆ ಆನೆ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ. ಬೈಕ್ ಸವಾರ ತಕ್ಷಣವೇ ಎಚ್ಚೆತ್ತುಕೊಂಡು ಬೈಕ್ ತಿರುಗಿಸಿದ್ದಾನೆ. ಆದರೆ ಸ್ಕಿಡ್ ಆಗಿ ಬಿದ್ದ ಕಾರಣ ಆನೆ ಆತನ ಮೇಲೆ ದಾಳಿಗೆ ಯತ್ನಿಸಿದೆ. ಆದರೆ ಅದೃಷ್ಠವಶಾತ್ ಬೈಕ್ ಸವಾರ ಬೈಕ್ ಅಲ್ಲೆ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡ ಘಟನೆ ದೃಶ್ಯಗಳು ಸೆರೆಯಾಗಿದೆ.&lt;/p&gt;&lt;h2&gt;ಬಿದ್ದ ಬೈಕ್ ಸವಾರನ ಮೇಲೆ ದಾಳಿಗೆ ಯತ್ನ&lt;/h2&gt;&lt;p&gt;ಕುಶಾಲನಗರ ಮಡಿಕೇರಿ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬೈಕ್ ಸವಾರ ಎದುರಿಗೆ ಬರುತ್ತಿದ್ದ ಆನೆ ಕೊನೆ ಕ್ಷಣದಲ್ಲಿ ಗಮನಿಸಿದ್ದಾನೆ. ಅಷ್ಟರೊಳಗೆ ಬೈಕ್ ಆನೆ ಹತ್ತರಕ್ಕೆ ಬಂದಾಗಿದೆ. ಆನೆ ಘೀಳಿಡುತ್ತಾ ಬೈಕ್ ಸವಾರನ ಮೇಲೆ ದಾಳಿಗೆ ಮುಂದಾಗಿದೆ. ಬೈಕ್ ಸವಾರ ಬೈಕ್ ತಿರುಗಿಸಿದ್ದಾನೆ. ಆದರೆ ಗಾಬರಿ ಹಾಗೂ ಭಯದಿಂದ ಬೈಕ್ ಸ್ಕಿಡ್ ಆಗಿದೆ. ರಸ್ತೆಯಲ್ಲಿ ಬಿದ್ದ ಬೈಕ್ ಸವಾರ ಇನ್ನೇನು ಆನೆ ದಾಳಿ ಮಾಡುತ್ತೆ ಅನ್ನೋವಷ್ಟರಲ್ಲೇ ಸ್ಥಳದಿಂದ ಎದ್ದು ಓಡಿದ್ದಾನೆ.&lt;/p&gt;&lt;p&gt;&lt;/p&gt;&lt;h2&gt;ಇತರ ವಾಹನಗಳ ಮೇಲೆ ದಾಳಿಗೆ ಯತ್ನ&lt;/h2&gt;&lt;p&gt;ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪ್ರಾಣ ಉಳಿಸಿಕೊಂಡಿದ್ದಾನೆ. ಬೈಕ್ ಸವಾರ ಹಿಂದಿರುಗಿ ಓಡುತ್ತಿದ್ದಂತೆ ಅದೆ ದಾರಿಯಲ್ಲಿ ಬರುತ್ತಿದ್ದ ಇತರ ಬೈಕ್ ಸವಾರರು ಬೈಕ್ ತಿರುಗಿಸಿದ್ದಾರೆ. ಈ ವೇಳೆ ಮತ್ತಷ್ಟು ವಾಹನಗಳ ಮೇಲೆ ಆನೆ ದಾಳಿಗೆ ಮುಂದಾಗಿದೆ. ಬೈಕ್ ಸವಾರರನ್ನು ಅಟ್ಟಾಡಿಸಿಕೊಂಡು ಓಡಿಸಿದೆ. ಇತ್ತ ಕಾರುಗಳ ಮೇಲೂ ದಾಳಿಗೆ ಮುಂದಾಗಿದೆ. ಹೀಗಾಗಿ ಕಾರುಗಳು ಬಂದ ದಾರಿಯಲ್ಲಿ ರಿವರ್ಸ್ ಮೂಲಕ ಸಾಗಿದೆ.&lt;/p&gt;&lt;h2&gt;ಆನೆ ಹಿಂದೆ ಇದ್ದ ವಾಹನದಲ್ಲಿ ದೃಶ್ಯ ಸೆರೆ&lt;/h2&gt;&lt;p&gt;ಆನೆ ಹೊಸಕೋಟೆ ಬಳಿ ಹೆದ್ದಾರಿ ಮೂಲಕ ನಡೆದುಕೊಂಡು ಸಾಗುತ್ತಿದ್ದರೆ, ಹಿಂದಿನಿಂದ ಬಂದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಆನೆ ದಾಳಿಗೆ ಯತ್ನ ಸೇರಿದಂತೆ ಭೀಕರ ದೃಶ್ಯಗಳು ಸೆರೆಯಾಗಿದೆ. ಈ ದೃಶ್ಯ ಇದೀಗ ಕುಶಾಲನಗರ ಮಡಿಕೇರಿ ಹೆದ್ದಾರಿಯಲ್ಲಿ ಸಾಗುವ ವಾಹನ ಸವಾರರ ಆತಂಕ ಹೆಚ್ಚಿಸಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kodagu</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/wild-elephant-attempts-attack-on-biker-near-kushalnagar-incident-caught-on-camera/articleshow-75fgycr"/>
        </item>
        <item>
            <title><![CDATA[BREAKING: ಕೊಡಗಿನ ದುಬಾರೆ ಶಿಬಿರದಲ್ಲಿ ಸಾಕಾನೆಗಳ ನಡುವೆ ಕಾಳಗ; ಆನೆ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ಬಲಿ!]]></title>
            <link>https://kannada.asianetnews.com/gallery/state/kodagu-dubare-elephant-camp-accident-tourist-death-chennai-woman-jinnu-sat-766obog</link>
            <guid isPermaLink="true">https://kannada.asianetnews.com/gallery/state/kodagu-dubare-elephant-camp-accident-tourist-death-chennai-woman-jinnu-sat-766obog</guid>
            <pubDate>Mon, 18 May 2026 14:52:00 +0530</pubDate>
            <description><![CDATA[ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಸಾಕಾನೆಗಳ ನಡುವೆ ನಡೆದ ಕಾಳಗದಲ್ಲಿ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆನೆಗಳಿಗೆ ಸ್ನಾನ ಮಾಡಿಸುವ ವೇಳೆ 'ಮಾರ್ತಾಂಡ' ಮತ್ತು 'ಕಂಜನ್' ಎಂಬ ಆನೆಗಳ ನಡುವೆ ಘರ್ಷಣೆ ಉಂಟಾಗಿ ಈ ದುರಂತ ಸಂಭವಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krx43wv059v8m8d4807s8bny,imgname-dubare-elephant-camp-tragedy-1779093861216.jpg" type="image/jpeg" height="390" width="690"/>
            <content:encoded><![CDATA[ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಸಾಕಾನೆಗಳ ನಡುವೆ ನಡೆದ ಕಾಳಗದಲ್ಲಿ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆನೆಗಳಿಗೆ ಸ್ನಾನ ಮಾಡಿಸುವ ವೇಳೆ 'ಮಾರ್ತಾಂಡ' ಮತ್ತು 'ಕಂಜನ್' ಎಂಬ ಆನೆಗಳ ನಡುವೆ ಘರ್ಷಣೆ ಉಂಟಾಗಿ ಈ ದುರಂತ ಸಂಭವಿಸಿದೆ.&lt;img&gt;&lt;p&gt;&lt;strong&gt;ಕೊಡಗು (ಮೇ 18): ಪ್ರ&lt;/strong&gt;ಕೃತಿ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರು ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಬಲಿಯಾದ ದಾರುಣ ಘಟನೆ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ ಮೂಲದ ಜಿನ್ನು (33) ಎಂಬ ಮಹಿಳೆ ಆನೆಗಳ ನಡುವಿನ ಜಗಳದ ವೇಳೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ದುಬಾರೆ ಶಿಬಿರದಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ (Elephant Bathing) ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಶಿಬಿರದ ಸಾಕಾನೆಗಳಾದ 'ಮಾರ್ತಾಂಡ' ಮತ್ತು 'ಕಂಜನ್' ಎಂಬ ಎರಡು ಆನೆಗಳನ್ನು ನದಿಗೆ ಕರೆತರಲಾಗಿತ್ತು. ಮಾವುತ ಗೌಸ್ ಅವರು ಮಾರ್ತಾಂಡ ಆನೆಯನ್ನು ಸ್ನಾನ ಮಾಡಿಸಲು ನೀರಿಗೆ ಇಳಿಸುತ್ತಿದ್ದರು. ಈ ವೇಳೆ ಮಾರ್ತಾಂಡ ಆನೆಯನ್ನು ನೀರಿಗೆ ಸ್ವಲ್ಪ ಜೋರಾಗಿ ಇಳಿಸಿದಾಗ (ಬೀಳಿಸಿದಾಗ), ಅದು ಪಕ್ಕದಲ್ಲಿದ್ದ ಕಂಜನ್ ಆನೆಗೆ ತಗುಲಿದೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;ತನ್ನ ದೇಹಕ್ಕೆ ಮಾರ್ತಾಂಡ ಆನೆ ಸ್ಪರ್ಶಿಸುತ್ತಿದ್ದಂತೆಯೇ ಕಂಜನ್ ಆನೆ ವಿಪರೀತ ಆಕ್ರೋಶಗೊಂಡಿದೆ. ತಕ್ಷಣವೇ ಮಾರ್ತಾಂಡನ ಮೇಲೆ ದಾಳಿ ಮಾಡಲು ಮುಂದಾಗಿದೆ. ಈ ಎರಡು ಬೃಹತ್ ಆನೆಗಳ ನಡುವೆ ಇದ್ದಕ್ಕಿದ್ದಂತೆ ಶುರುವಾದ ಈ ಘರ್ಷಣೆಯಿಂದಾಗಿ ಅಲ್ಲಿದ್ದ ಪ್ರವಾಸಿಗರು ದಿಕ್ಕಾಪಾಲಾಗಿ ಓಡತೊಡಗಿದ್ದಾರೆ. ಆದರೆ, ದುರದೃಷ್ಟವಶಾತ್ ಪ್ರವಾಸಿ ಮಹಿಳೆ ಜಿನ್ನು ಅವರು ಆನೆಗಳ ಜಗಳದ ರಭಸಕ್ಕೆ ಸಿಲುಕಿದ್ದಾರೆ. ಆನೆಯ ಕಾಲಡಿ ಸಿಲುಕಿದ ಅಥವಾ ದಾಳಿಗೆ ಒಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;img&gt;&lt;p&gt;ದುರ್ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಮೃತ ಜಿನ್ನು ಅವರ ಮೃತದೇಹವನ್ನು ತಕ್ಷಣವೇ ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರ್ತಾಂಡ ಆನೆಯ ಮಾವುತ ಗೌಸ್ ಹಾಗೂ ಕಂಜನ್ ಆನೆಯ ಮಾವುತ ವಿಜಯ ಅವರು ಆನೆಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರೂ ಅಷ್ಟರಲ್ಲೇ ಅನಾಹುತ ಸಂಭವಿಸಿತ್ತು.&lt;/p&gt;&lt;img&gt;&lt;p&gt;ದುಬಾರೆ ಸಾಕಾನೆ ಶಿಬಿರಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಅದರಲ್ಲೂ ಆನೆಗಳಿಗೆ ಸ್ನಾನ ಮಾಡಿಸುವ ದೃಶ್ಯವನ್ನು ಹತ್ತಿರದಿಂದ ನೋಡಲು ಜನರು ಮುಗಿಬೀಳುತ್ತಾರೆ. ಇಂತಹ ಸಂವೇದನಾಶೀಲ ಸಂದರ್ಭದಲ್ಲಿ ಪ್ರವಾಸಿಗರು ಮತ್ತು ಆನೆಗಳ ನಡುವೆ ಇರಬೇಕಾದ ಸುರಕ್ಷಿತ ಅಂತರದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಂದರ ಪ್ರವಾಸವೊಂದು ಹೀಗೆ ಮಸಣದ ಹಾದಿಯಾಗಿರುವುದು ಮೃತರ ಕುಟುಂಬದವರಲ್ಲಿ ಮತ್ತು ಪ್ರವಾಸಿಗರಲ್ಲಿ ಮೌನ ಆವರಿಸುವಂತೆ ಮಾಡಿದೆ.&lt;/p&gt;&lt;p&gt;Tragic scenes from Dubare Elephant Camp in Kodagu.A clash between Dasara elephants Kanjan and Jai Marthanda triggered panic among tourists at the Cauvery river bathing point, leading to the death of a tourist from Chennai.Serious questions are now being raised over tourist&hellip; pic.twitter.com/lC9wIbE1ay&lt;/p&gt;&lt;p&gt;&mdash; Akshay Gowda (@akshay_gowda_pv) May 18, 2026&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/kodagu-dubare-elephant-camp-accident-tourist-death-chennai-woman-jinnu-sat-766obog"/>
        </item>
        <item>
            <title><![CDATA[ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ನಳಿನ್ ಕುಮಾರ್ ಕಟೀಲ್]]></title>
            <link>https://kannada.asianetnews.com/karnataka-districts/nalin-kumar-kateel-bjp-development-politics-kushalnagar-gvd/articleshow-apf1boy</link>
            <guid isPermaLink="true">https://kannada.asianetnews.com/karnataka-districts/nalin-kumar-kateel-bjp-development-politics-kushalnagar-gvd/articleshow-apf1boy</guid>
            <pubDate>Wed, 13 May 2026 21:57:14 +0530</pubDate>
            <description><![CDATA[&lt;p&gt;ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷಗಳು ಸರ್ಕಾರ ನಡೆಸುವುದು ಮುಖ್ಯವಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hnfjg3664xmp4ksj3knfhs46,imgname-Nalin-Kumar-Katil-1706698476742.JPG" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಶಾಲನಗರ (ಮೇ.13): &lt;/strong&gt;ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷಗಳು ಸರ್ಕಾರ ನಡೆಸುವುದು ಮುಖ್ಯವಲ್ಲ, ಸರ್ಕಾರ ನಡೆಸುವ ಸಂದರ್ಭದಲ್ಲಿ ಪಕ್ಷದ ವಿಚಾರಧಾರೆ ದೇಶದ ಅಭಿವೃದ್ಧಿ ಸಿದ್ದಾಂತಗಳು ಮುಖ್ಯ ಎಂದು ಅವರು ಹೇಳಿದರು. ಇಡೀ ವಿಶ್ವದಲ್ಲಿ ಭಾರತ ದೇಶದ ಛಾಪನ್ನು ಮೂಡಿಸಿರುವ ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದರು.&lt;/p&gt;&lt;p&gt;ವಿಚಾರಧಾರೆ ಸಿದ್ದಾಂತಗಳು ಇಲ್ಲದೆ ದಿಡೀರನೆ ಸರಕಾರವನ್ನು ಸ್ಥಾಪಿಸಿದ್ದ ಆಪ್, ಮತ್ತಿತರ ಪಕ್ಷಗಳ ಇತ್ತೀಚಿನ ಬೆಳವಣಿಗೆಗಳನ್ನು ಕಂಡಾಗ ಇವುಗಳು ಕೇವಲ ಕೆಲವೇ ವರ್ಷಗಳಿಗೆ ಮಾತ್ರ ಸೀಮಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶೂನ್ಯದಿಂದ ಆಕಾಶದತ್ತ ಏರಲು ವಿಚಾರ ಸಿದ್ದಾಂತ ನಿಯಮಗಳಲ್ಲಿ ರಾಜಿ ಸಲ್ಲದು ಎಂದ ನಳಿನ್ ಕುಮಾರ್ ಯಾವುದೇ ಸಂದರ್ಭ ಸರಕಾರಗಳನ್ನು ನಡೆಸುವ ಕಾರ್ಯವೈಖರಿಯಲ್ಲಿ ಬದಲಾವಣೆ ಇರುವುದಿಲ್ಲ ಸುದೀರ್ಘ ಅವಧಿಯಲ್ಲಿ ಅಭ್ಯಾಸ ವರ್ಗ ಪ್ರಶಿಕ್ಷಣ ಶಿಬಿರಗಳ ಮೂಲಕ ಪಕ್ಷದ ಬೆಳವಣಿಗೆ ಸಾಧ್ಯ ಎಂದು ಹೇಳಿದರು. ಯಾವುದೇ ವ್ಯಕ್ತಿಯಿಂದ ಸಾಧನೆ ಅಸಾಧ್ಯ ಎಂದ ನಳಿನ್ ಕುಮಾರ್ ವ್ಯಕ್ತಿಗಿಂತ ಪಕ್ಷ ಶ್ರೇಷ್ಠ ಪಕ್ಷಕ್ಕಿಂತ ದೇಶ ಪ್ರಮುಖವಾಗಿದೆ ಎಂದರು.&lt;/p&gt;&lt;h2&gt;&lt;strong&gt;ದೊಡ್ಡ ಪ್ರಜಾಪ್ರಭುತ್ವ ಪಕ್ಷ&lt;/strong&gt;&lt;/h2&gt;&lt;p&gt;ಪಕ್ಷದ ಕಾರ್ಯಕರ್ತರಲ್ಲಿ ಅಭ್ಯಾಸ ವರ್ಗ ಕಾರ್ಯ ವೈಖರಿ ಜವಾಬ್ದಾರಿ ನೆನಪಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಈ ಮೂಲಕ ತಳಮಟ್ಟದಲ್ಲಿ ಕಾರ್ಯಕರ್ತರ ಜವಾಬ್ದಾರಿಯನ್ನು ತಿಳಿ ಹೇಳುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದರು. ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಪಕ್ಷವಾಗಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ ಸದಸ್ಯರು ಶಾಸಕರುಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಪಡೆದ ಪಕ್ಷವಾಗಿದೆ ಎಂದರು. ಕಳೆದ ಎರಡು ದಿನಗಳ ಅವಧಿಯಲ್ಲಿ ಶಿಬಿರದಲ್ಲಿ ಸುಮಾರು ನೂರಕ್ಕೂ ಅಧಿಕ ಮಂದಿ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದು, ವಿಚಾರಗಳ ಬಗ್ಗೆ ಉಪನ್ಯಾಸಗಳು ನಡೆದವು.&lt;/p&gt;&lt;p&gt;ವಿಧಾನಪರಿಷತ್ ಸದಸ್ಯರಾದ ಸಿಟಿ ರವಿ, ರಾಜ್ಯ ಸಹ ಸಂಯೋಜಕರಾದ ಎನ್ ವಿ ಪಣೀಶ್, ವಿಭಾಗ ಪ್ರಭಾರಿ ಗಳಾದ ಬಿ ಬಿ ಭಾರತೀಶ್, ರಾಜ್ಯ ಉಪಾಧ್ಯಕ್ಷರಾದ ಎನ್ ಮಹೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು ಮಾಜಿ ಸಂಸದ ಪ್ರತಾಪ್ ಸಿಂಹ ಅವರುಗಳು ದೇಶ ಎದುರಿಸುತ್ತಿರುವ ಸವಾಲುಗಳು ಸೇರಿದಂತೆ ವಿವಿಧ ವಿಷಯಗಳನ್ನು ಮಂಡಿಸಿದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nalin-kumar-kateel-bjp-development-politics-kushalnagar-gvd/articleshow-apf1boy"/>
        </item>
        <item>
            <title><![CDATA[ದೇಶದ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ವಿಫಲ: ಬೆಂಗಾವಲು ವಾಹನ ಸೇವೆ ಕೈಬಿಟ್ಟ ಎ.ಎಸ್.ಪೊನ್ನಣ್ಣ]]></title>
            <link>https://kannada.asianetnews.com/karnataka-districts/as-ponnanna-criticizes-central-government-gold-bonds-economy-gvd/articleshow-cuzvy6n</link>
            <guid isPermaLink="true">https://kannada.asianetnews.com/karnataka-districts/as-ponnanna-criticizes-central-government-gold-bonds-economy-gvd/articleshow-cuzvy6n</guid>
            <pubDate>Sat, 16 May 2026 18:30:05 +0530</pubDate>
            <description><![CDATA[&lt;p&gt;ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲಾಗಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಡಿಕೇರಿಯಲ್ಲಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km87hcdq7gdv5w5ebzw3n891,imgname-jj-1774097838519.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಮೇ.16): &lt;/strong&gt;ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲಾಗಿದೆ. ಜನರು ಹೆಚ್ಚೆತ್ತುಕೊಂಡರೆ ಪ್ರಜಾಪ್ರಭುತ್ವದಲ್ಲಿ ಆಗುತ್ತಿರುವ ತಪ್ಪನ್ನು ಸರಿಪಡಿಸಬಹುದು, ಇಲ್ಲದಿದ್ದರೆ ತಪ್ಪು ಸರಿಪಡಿಸಲು ಸಾಧ್ಯವೇ ಇಲ್ಲ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಡಿಕೇರಿಯಲ್ಲಿ ಹೇಳಿದ್ದಾರೆ. ಜಾಣ ಕುರುಡುತನಕ್ಕೆ ಬಲಿಯಾದರೆ ಏನು ಪ್ರಯೋಜನ ಆಗುವುದಿಲ್ಲ ಎಂದು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;p&gt;ದೇಶದಲ್ಲಿ ಗೋಲ್ಡ್ ಬಾಂಡ್ಸ್ ಗಳು ಇವೆ, ಜನರು ಅದರ ಮೇಲೆ ಹೂಡಿಕೆ ಮಾಡಿದ್ದಾರೆ. ಅದನ್ನು ವಾಪಸ್ ಪಡೆಯುವ ಸಮಯ ಹತ್ತಿರ ಬರುತ್ತಿದೆ. ಇದನ್ನು ಸರ್ಕಾರಕ್ಕೆ ವಾಪಸ್ ಕೊಡಲು ಸಾಧ್ಯವಿದೆಯೇ.? ಕೊಡುವುದಾದರೆ ಇಂದಿನ ಚಿನ್ನದ ಬೆಲೆಯ ಆಧಾರದಲ್ಲಿ ವಾಪಸ್ ಕೊಡಬೇಕು. ಕೋಟ್ಯಂತರ ರೂಪಾಯಿ ಮೌಲ್ಯದ ಗೋಲ್ಡ್ ಬಾಂಡ್ಸ್ ಇವೆ. ಆಮದು ಖಡಿತ ಗೊಳಿಸಬೇಕು ಎನ್ನುವುದೇನೋ ಸರಿ. ಆದರೆ ಚಿನ್ನ ಖರೀದಿ ನಿಲ್ಲಿಸಲು ಸಾಧ್ಯವಿದೆಯೇ. ಜನರು ತಮ್ಮ ಮಕ್ಕಳ ಒಂದೊಂದು ಕಾರ್ಯಕ್ರಮಗಳಲ್ಲಿ ಒಂದು ಗ್ರಾಂ, ಎರಡು ಗ್ರಾಂ ಎಂದು ಚಿನ್ನ ಖರೀದಿಸಿ ಉಳಿಸಿಕೊಳ್ಳುತ್ತಾರೆ.&lt;/p&gt;&lt;p&gt;ಆದರೆ ಹೀಗೆ ಖರೀದಿಸಿ ಉಳಿಸುವುದಕ್ಕೆ ಈಗ ಅವಕಾಶವಿಲ್ಲ. ದೇಶದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ವಿಫಲವಾಗಿದೆ. ಇದರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಆದರೆ ಪರಿಸ್ಥಿತಿಯನ್ನು ಸರಿಪಡಿಸುವ ಕ್ರಮಕ್ಕೆ ಮುಂದಾಗದಿದ್ದರೆ ಟೀಕೆ ಮಾಡಲೇಬೇಕಾಗುತ್ತದೆ ಎಂದಿದ್ದಾರೆ. ಆದರೆ ದೇಶದ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರದವರು ಕ್ರಮ ಜರುಗಿಸುತ್ತಿಲ್ಲ. ಪರಿಸ್ಥಿತಿಯನ್ನು ನಿವಾರಿಸುವ ಬದಲು ದಾರಿ ತಪ್ಪಿಸುವ ಮಾತನಾಡುತ್ತಿದ್ದಾರೆ. ಆಡಳಿತದಲ್ಲಿ ಮಾವುದೇ ಪಾರದರ್ಶಕತೆ ಇಲ್ಲ. ಎಲ್ಲವನ್ನು ಮುಚ್ಚಿ ಗೌಪ್ಯವಾಗಿ ಆಡಳಿತ ನಡೆಸಲಾಗುತ್ತಿದೆ.&lt;/p&gt;&lt;p&gt;ಹೀಗಾಗಿ ಜನರು ಪ್ರಶ್ನೆ ಮಾಡಲು ಶುರುಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ. ಇದನ್ನು ಕೇಂದ್ರ ಸರ್ಕಾರ ಸರಿಪಡಿಸಿಕೊಳ್ಳಬೇಕು, ಇಲ್ಲದಿದ್ದರೆ ಜನರು ಕೊಡುವ ಶಿಕ್ಷೆಗೆ ಸಿದ್ಧರಾಗಬೇಕು ಎಂದು ಪೊನ್ನಣ್ಣ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಏಷ್ಯಾ ದೇಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದಾಗಿ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ. ಇದರಿಂದ ದೇಶದಲ್ಲಿ ಇನ್ನಷ್ಟು ಆತಂಕಕಾರಿ ಪರಿಸ್ಥಿತಿ ಎದುರಾಗಲಿದ್ದು, ಅದನ್ನು ಬಗೆಹರಿಸುವ ಕೆಲಸ ದೇಶದ ಪ್ರಧಾನಿ ಮತ್ತು ಆರ್ಥಿಕ ಸಚಿವರ ಮೇಲಿದೆ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;h2&gt;&lt;strong&gt;ಬೆಂಗಾವಲು ವಾಹನ ಸೇವೆ ಕೈಬಿಟ್ಟ ಪೊನ್ನಣ್ಣ&lt;/strong&gt;&lt;/h2&gt;&lt;p&gt;ಬೆಂಗಾವಲು ವಾಹನವನ್ನು ವಾಪಸ್ ತೆಗೆದುಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಹೇಳಿದ್ದೆ, ಹಿಂತೆಗೆದುಕೊಂಡಿದ್ದಾರೆ ಎಂದಿದ್ದಾರೆ. ಹೈವೇ ಪ್ಯಾಟ್ರೋಲಿಂಗ್ ಸೇರಿ ಬೆಂಗಾವಲು ವಾಹನವನ್ನು ಪೊನ್ನಣ್ಣ ಬಿಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು ಎಸ್ಕಾರ್ಟ್ ಹಿಂತೆಗೆದುಕೊಳ್ಳುವಂತೆ ನಿನ್ನೆ ಕೊಡಗು ಎಸ್ ಪಿ ಗೆ ಪತ್ರ ಬರೆದಿದ್ದೆ. ದೇಶದ ಇಂದಿನ ಪರಿಸ್ಥಿತಿ ಮತ್ತು ಮಾಲಿನ್ಯ ನಿಯಂತ್ರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೆ. ಇದೆಲ್ಲವನ್ನೂ ಗಮನಿಸಿ ಬೆಂಗಾವಲು ವಾಹನಗಳಿಗೆ ಕಡಿತಕ್ಕೆ ಹೇಳಿದ್ದೆ, ಹೀಗಾಗಿ ಇಂದಿನಿಂದ ಬೆಂಗಾವಲು ಕಡಿತ ಮಾಡಿದ್ದಾರೆ.&lt;/p&gt;&lt;p&gt;ದೂರದ ಪ್ರಯಾಣಗಳಿಗೆಲ್ಲ ಒಂದು ವಾಹನ ಮಾತ್ರ ಬಳಸುತ್ತಿದ್ದೇನೆ. ಬೆಂಗಾವಲು ವಾಹನ ಹಿಂದಕ್ಕೆ ನೀಡಿರುವುದರಲ್ರಿ ಯಾವುದೇ ರಾಜಕೀಯವಿಲ್ಲ. ದೇಶದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಮ್ಮ ಕೈಲಾದಷ್ಟು ಮಾವು ಕೈಜೋಡಿಸಬೇಕು. ಆದರೆ ಇದಕ್ಕೆಲ್ಲ ಪರಿಹಾರ ಏನು ಎಂದು ಕೇಂದ್ರ ಕಂಡು ಹಿಡಿಯಬೇಕು. ಇಲ್ಲೊಂದು ಪ್ರವಚನ ಮಾಡಿ ಅವರು ಬೇರೊಂದನ್ನು ಮಾಡಬಾರದು ಎಂದು ಮಡಿಕೇರಿಯಲ್ಲಿ ಸಿಎಂ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಹೇಳಿಕೆ ಕೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/as-ponnanna-criticizes-central-government-gold-bonds-economy-gvd/articleshow-cuzvy6n"/>
        </item>
        <item>
            <title><![CDATA[ಬಿರು ಬಿಸಿಲಿನ ಬೇಸಿಗೆಯಲ್ಲೂ ಹಾರಂಗಿಯಿಂದ ನೀರು ಬಿಡುಗಡೆ: ಕೊಡಗಿನ ರೈತರಿಂದ ಆಕ್ರೋಶ]]></title>
            <link>https://kannada.asianetnews.com/karnataka-districts/harangi-dam-water-release-kodagu-farmers-protest-summer-water-crisis-gvd/articleshow-i000ggw</link>
            <guid isPermaLink="true">https://kannada.asianetnews.com/karnataka-districts/harangi-dam-water-release-kodagu-farmers-protest-summer-water-crisis-gvd/articleshow-i000ggw</guid>
            <pubDate>Wed, 13 May 2026 23:21:22 +0530</pubDate>
            <description><![CDATA[&lt;p&gt;ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಹಿಂದೆಂದು ಕಂಡು ಕೇಳರಿಯದಂತಹ ಸ್ಥಿತಿಯಲ್ಲಿ ಸುಡು ಬಿಸಿಲು ಹೊಡೆಯುತ್ತಿದೆ. ಈ ಬಿಸಿಲಿನ ತಾಪಕ್ಕೆ ಹಳ್ಳ ಕೊಳ್ಳಗಳು ಬತ್ತಿ ಹೋಗುತ್ತಿವೆ. ಅಷ್ಟೇ ಏಕೆ ಜಲಾಶಯಗಳ ನೀರು ಕೂಡ ಬಹುತೇಕ ತಳ ಸೇರುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krh65h0s7gb99d9qmksjx5w1,imgname-chcjc-1778693358617.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಮೇ.13): &lt;/strong&gt;ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಹಿಂದೆಂದು ಕಂಡು ಕೇಳರಿಯದಂತಹ ಸ್ಥಿತಿಯಲ್ಲಿ ಸುಡು ಬಿಸಿಲು ಹೊಡೆಯುತ್ತಿದೆ. ಈ ಬಿಸಿಲಿನ ತಾಪಕ್ಕೆ ಹಳ್ಳ ಕೊಳ್ಳಗಳು ಬತ್ತಿ ಹೋಗುತ್ತಿವೆ. ಅಷ್ಟೇ ಏಕೆ ಜಲಾಶಯಗಳ ನೀರು ಕೂಡ ಬಹುತೇಕ ತಳ ಸೇರುತ್ತಿದೆ. ಇಷ್ಟೊಂದು ಬಿರುಬಿಸಿಲಿನ ಬೇಸಿಗೆಯಲ್ಲೂ ಕೊಡಗಿನ ಹಾರಂಗಿ ಜಲಾಶಯದಿಂದ ಅಧಿಕಾರಿಗಳು ನದಿಗೆ ನೀರು ಹರಿಸುತ್ತಿದ್ದಾರೆ. ಅಧಿಕಾರಿಗಳ ಈ ಕ್ರಮಕ್ಕೆ ಜನರು, ರೈತ ಮುಖಂಡರು ಆಕ್ರೋಶಗೊಳ್ಳುತ್ತಿದ್ದಾರೆ.&lt;/p&gt;&lt;p&gt;ಕುಶಾಲನಗರ ತಾಲ್ಲೂಕಿನಲ್ಲಿ ಇರುವ ಹಾರಂಗಿ ಜಲಾಶಯದಿಂದ ಕಳೆದ ನಾಲ್ಕು ದಿನಗಳಿಂದ ನದಿಗೆ ನಿತ್ಯ 500 ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ. ಇದರಿಂದ ಜಲಾಶಯ ಸಂಪೂರ್ಣ ಖಾಲಿಯಾಗುವ ಆತಂಕ ಎದುರಾಗಿದೆ. ಒಟ್ಟು 2859 ಅಡಿ (8.5 ಟಿಎಂಸಿ) ಸಾಮರ್ಥ್ಯದ ಜಲಾಶಯದಿಂದ ಸದ್ಯ ಜಲಾಶಯದಲ್ಲಿ ಕೇವಲ 2.03 ಟಿಎಂಸಿ ನೀರು ಇದೆ. ಅದರಲ್ಲಿ ಬಳಕೆಗೆ ಸಿಗುವುದೇ ಕೇವಲ 1 ಟಿಎಂಸಿ ನೀರು ಮಾತ್ರ. ಇನ್ನುಳಿದ 1 ಟಿಎಂಸಿ ನೀರು ಡೆಡ್ ಸ್ಟೋರೇಜ್. ಅರ್ಥಾತ್ ಈ ಡೆಡ್ ಸ್ಟೋರೇಜ್ ನೀರು ಬಳಕೆಗೆ ಸಿಗುವುದಿಲ್ಲ.&lt;/p&gt;&lt;p&gt;ಹೀಗಿದ್ದರೂ ಜಲಾಶಯದಿಂದ ನಿತ್ಯ 500 ಕ್ಯೂಸೆಕ್ ನೀರನ್ನು ಅಧಿಕಾರಿಗಳು ನದಿಗೆ ಹರಿಸುತ್ತಿದ್ದಾರೆ. ಇದೇ ರೀತಿ ನೀರು ಹರಿಸಿದರೆ ಜಲಾಶಯ ಸಂಪೂರ್ಣ ಖಾಲಿಯಾಗುವ ಆತಂಕ. ಒಂಂದು ವೇಳೆ ಜಲಾಶಯ ಸಂಪೂರ್ಣ ಖಾಲಿಯಾದರೆ ತಾಲ್ಲೂಕು ಕೇಂದ್ರ ಸೋಮವಾರಪೇಟೆ ಜನರಿಗೆ ಕುಡಿಯುವ ನೀರಿಗೂ ಆಹಾಕಾರ ಎದುರಾಗಲಿದೆ. ಸಾಮಾನ್ಯವಾಗಿ ಜೂನ್ ತಿಂಗಳಿನಲ್ಲಿ ಕೊಡಗಿನಲ್ಲಿ ಮಳೆ ಆರಂಭವಾಗುತ್ತದೆ.&lt;/p&gt;&lt;h2&gt;&lt;strong&gt;ಆಹಾಕಾರ ಎದುರಾಗುವ ಆತಂಕ&lt;/strong&gt;&lt;/h2&gt;&lt;p&gt;ಒಂದು ವೇಳೆ ನಿರೀಕ್ಷೆ ಮತ್ತು ವಾಡಿಕೆಯಂತೆ ಜೂನ್ ಆರಂಭದಿಂದಲೇ ಮಳೆ ಬಾರದಿದ್ದಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ಭಾಗದ ಜನರಿಗೆ ಕುಡಿಯುವ ನೀರಿಗೂ ಆಹಾಕಾರ ಎದುರಾಗುವ ಆತಂಕ ಮೂಡಿದೆ. ಮತ್ತೊಂದೆಡೆ ಕುಶಾಲನಗರ ತಾಲ್ಲೂಕು ಭಾಗದ ಹತ್ತಾರು ಹಳ್ಳಿಗಳ ಜನ, ಜಾನುವಾರುಗಳಿಗೂ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸಲಿದೆ. ಹೀಗಾಗಿ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಜನರು, ರೈತ ಮುಖಂಡರು ಆಗ್ರಹಿಸಿದ್ದಾರೆ. ಕೂಡಲೇ ನದಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;p&gt;ಕೊಡಗಿನ ಭೂಮಿ, ಬೆಳೆಗಳನ್ನು ಹಾಳು ಮಾಡಿಕೊಂಡು ಜಲಾಶಯದಲ್ಲಿ ನೀರು ನಿಲ್ಲಿಸುತ್ತೇವೆ. ಆದರೆ ನಮಗೆ ಜಲಾಶಯದ ನೀರು ಉಪಯೋಗವೇ ಆಗುವುದಿಲ್ಲ. ಕನಿಷ್ಠ ಬೇಸಿಗೆ ಸಂದರ್ಭದಲ್ಲಾದರೂ ಜಲಾಶಯದ ನೀರು ನಮಗೆ ಸಿಗಲಿ ಎಂದರೆ ಹೇಗೆ. ಆದರೆ ಅಧಿಕಾರಿಗಳು ಪಿರಿಯಾಪಟ್ಟಣ, ಹುಣುಸೂರು, ಕೆ.ಆರ್ ನಗರ ಭಾಗದ ಜನರಿಗಾಗಿ ನೀರು ಬಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಜನರಿಗಾಗಿ ಇಲ್ಲಿ ನದಿಗೆ ನೀರು ಹರಿಸುತ್ತಿದ್ದಾರೆ. ಇದೇ ನೀರು ನಿಲ್ಲಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/harangi-dam-water-release-kodagu-farmers-protest-summer-water-crisis-gvd/articleshow-i000ggw"/>
        </item>
        <item>
            <title><![CDATA[ಕೊಡಗಿನ ಮೂಲಕ ರೈಲು ಮಾರ್ಗಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/kodagu-railway-line-no-proposal-yaduveer-wadiyar-clarification-gvd/articleshow-i7p41vq</link>
            <guid isPermaLink="true">https://kannada.asianetnews.com/karnataka-districts/kodagu-railway-line-no-proposal-yaduveer-wadiyar-clarification-gvd/articleshow-i7p41vq</guid>
            <pubDate>Wed, 03 Jun 2026 19:27:42 +0530</pubDate>
            <description><![CDATA[&lt;p&gt;ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k76j11b6r1z80hs86pew72wy,imgname-mp-yaduveer-wadiyar-1760083084646.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಜೂ.03): &lt;/strong&gt;ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಯಿತು.&lt;/p&gt;&lt;p&gt;ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿವೆ ಎಂದು ಯದುವೀರ್ ತಿಳಿಸಿದ್ದಾರೆ. ಆದರೆ, ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ. ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಭವಿಷ್ಯದ ಮೂಲ ಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು ಎಲ್ಲ ಹಿತಾಸಕ್ತಿ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.&lt;/p&gt;&lt;h2&gt;&lt;strong&gt;ಪಕ್ಷ ಸಂಘಟಿಸಲು ನಿರಂತರ ಶ್ರಮ&lt;/strong&gt;&lt;/h2&gt;&lt;p&gt;ದೇಶ ಮತ್ತು ರಾಜ್ಯದ ಅಭಿವೃದ್ಧಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಮೈಸೂರು ಪ್ರಾಂತ್ಯದ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷ ಸಂಘಟಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತದಿಂದಾಗಿ ಮೂರನೇ ಅವಧಿಯಲ್ಲಿ ಕೇಂದ್ರ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಕೇಂದ್ರದಲ್ಲಿ ಅಲ್ಲದೇ, ಮುಂದಿನ ದಿನಗಳಲ್ಲೂ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷಸಂಘಟನೆ ಮಾಡಬೇಕೆಂದು ಕರೆ ನೀಡಿದರು.&lt;/p&gt;&lt;p&gt;ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದ್ದರೂ ಕೂಡ ಮೈಸೂರು ಪ್ರಾಂತ್ಯದಲ್ಲಿ ನಿರೀಕ್ಷೆಗೆ ತಕ್ಕಂತೆ ಎಂಎಲ್ಎ, ಎಂ.ಪಿ ಸ್ಥಾನಗಳನ್ನು ಪಡೆಯುವಲ್ಲಿ ವಿಫಲರಾಗಿದ್ದೇವೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡುಗು, ಮಡಿಕೇರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮುಂದಾಗುತ್ತಿದ್ದೇವೆ. ಪಕ್ಷ ಬಲಪಡಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.&lt;/p&gt;&lt;p&gt;ಎನ್&zwnj;ಡಿಎ ಮೈತ್ರಿ ಕೂಟ ಇರುವುದರಿಂದ ವರಿಷ್ಠರ ತೀರ್ಮಾಣಕ್ಕೆ ಪ್ರತಿಯೊಬ್ಬರು ಬದ್ಧರಾಗಬೇಕೆ ಹೊರತು ಕಾರ್ಯಕರ್ತರು ಹಾಗೂ ಮುಖಂಡರು ಗೊಂದಲಕ್ಕೆ ಒಳಗಾಗದೇ ಪಕ್ಷವನ್ನು ಗಟ್ಟಿಗೊಳಿಸಲು ಶ್ರಮಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಿ ಅಕ್ರಮ ಮತಗಳನ್ನು ತಡೆಯುವ ಮೂಲಕ ಬಲಿಷ್ಠ ರಾಷ್ಟ್ರಕ್ಕೆ ಕೈಜೋಡಿಸಬೇಕೆಂದು ಎಂದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-railway-line-no-proposal-yaduveer-wadiyar-clarification-gvd/articleshow-i7p41vq"/>
        </item>
        <item>
            <title><![CDATA[Kodagu: 9 ವರ್ಷಗಳ ಬಳಿಕ ಸಿಕ್ಕ ಸ್ವಂತ ಸೂರು: 43 ಆದಿವಾಸಿ ಕುಟುಂಬಗಳ ಕಣ್ಣಲ್ಲಿ ಸಂತಸದ ಕಣ್ಣೀರು!]]></title>
            <link>https://kannada.asianetnews.com/karnataka-districts/kodagu-tribal-families-get-new-homes-after-9-years-struggle-gvd/articleshow-k55rhg4</link>
            <guid isPermaLink="true">https://kannada.asianetnews.com/karnataka-districts/kodagu-tribal-families-get-new-homes-after-9-years-struggle-gvd/articleshow-k55rhg4</guid>
            <pubDate>Fri, 05 Jun 2026 20:25:42 +0530</pubDate>
            <description><![CDATA[&lt;p&gt;ಅವರೆಲ್ಲ ಸ್ವಂತ ಸೂರಿಲ್ಲದೆ ಲೈನ್ ಮನೆಗಳಲ್ಲಿ ಬದುಕು ದೂಡುತ್ತಿದ್ದವರು. 9 ವರ್ಷಗಳ ಹಿಂದೆ ಬಂದು ಇಂಚಿಂಚು ಜಾಗಕ್ಕೆ ಹೋರಾಟ ನಡೆಸಿದ್ದರು. ಸ್ವಂತ ಸೂರಿನ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktc4g2pfee7yv4qcsdqy927q,imgname-vjgv-1780671318735.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.05): &lt;/strong&gt;ಅವರೆಲ್ಲ ಸ್ವಂತ ಸೂರಿಲ್ಲದೆ ಲೈನ್ ಮನೆಗಳಲ್ಲಿ ಬದುಕು ದೂಡುತ್ತಿದ್ದವರು. 9 ವರ್ಷಗಳ ಹಿಂದೆ ಬಂದು ಇಂಚಿಂಚು ಜಾಗಕ್ಕೆ ಹೋರಾಟ ನಡೆಸಿದ್ದರು. ಸ್ವಂತ ಸೂರಿನ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು ಸ್ವಂತ ಸೂರಿನ ಕನಸು ನನಸಾಗಿದೆ. ಕೊನೆಗೂ ಸುಂದರ ಗೂಡು ಸೇರಿದ್ದಾರೆ. ಹಾಗಾದ್ರೆ ಹೀಗೊಂದು ಮನೆ ಹಸ್ತಾಂತರ ಕಾರ್ಯಕ್ರಮ ನಡೆದ್ದದ್ದಾದ್ರು ಎಲ್ಲಿ, ಹೇಗಿದೆ ಸರ್ಕಾರದ ಆ ಮನೆಗಳು ಅಂತ್ತೀರಾ ಇಲ್ಲಿದೆ ನೋಡಿ.&lt;/p&gt;&lt;p&gt;ಹೌದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಬಾರಿಕಾಡು ಪೈಸಾರಿಯಲ್ಲಿ ನೂರಕ್ಕು ಹೆಚ್ಚು ಕುಟುಂಬಗಳು ಶಾಶ್ವತ ಸೂರಿಲ್ಲದೆ ಹರಕಲು ಮುರುಕಲು ಪ್ಲಾಸ್ಟಿಕ್ ಹೊದಿಕೆಯಲ್ಲಿ ಜೀವನ ದೂಡುತ್ತಿದ್ದರು. ಸ್ವಂತ ಸೂರಿಗಾಗಿ ಆಗ್ರಹಿಸಿ ಅಧಿಕಾರಿಗಳು ರಾಜಕೀಯ ನಾಯಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ರು. ತಾಲ್ಲೂಕು ಕಚೇರಿ, ಜಿಲ್ಲಾಡಳಿತ ಕಚೇರಿಗಳ ಮುಂದೆ ಹಗಲು ರಾತ್ರಿ ಪ್ರತಿಭಟನೆ ನಡೆಸಿದ ಫಲವಾಗಿ ಇದೀಗ ಕಾಲ ಕೂಡಿ ಬಂದಿದೆ.&lt;/p&gt;&lt;p&gt;ಸ್ವಂತ ಸೂರಿಗಾಗಿ ಆಗ್ರಹಿಸಿದವರಿಗೆ ಕೊನೆಗೂ ಸೂರು ಸಿಕ್ಕಂತ್ತಾಗಿದೆ. ಕಳೆದ ಹಲವು ವರ್ಷಗಳಿಂದ ಸ್ವಂತ ಸೂರಿಗಾಗಿ ನಡೆದ ಹೋರಾಟದ ಫಲವಾಗಿ ಇದೀಗ ಸ್ವಂತ ಸೂರು ಸಿಕ್ಕಿದ್ದು ಆದಿವಾಸಿ ಕುಟುಂಬಗಳ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡುವಂತೆ. ಇಷ್ಟು ದಿನಗಳ ಕಾಲ ನಮಗೆ ಸರಿಯಾದ ಸೂರಿಲ್ಲದೆ ಪ್ಲಾಸ್ಟಿಕ್ ಹೊದಿಕೆಯಲ್ಲಿ ಜೀವನ ದೂಡುತ್ತಿದ್ದೇವೆ. ಮಳೆ ಬಂದ್ರೆ ಸಾಕು ಮಳೆಯ ನೀರೆಲ್ಲ ಮನೆಯ ಒಳನುಗ್ಗಿ ನಿದ್ದೆ ಇಲ್ಲದೆ ಕಳೆದ ರಾತ್ರಿಗಳು ಅದೆಷ್ಟೋ.&lt;/p&gt;&lt;h2&gt;&lt;strong&gt;ಮನೆ ಮನೆಯಲ್ಲೂ ಸಂತಸ&lt;/strong&gt;&lt;/h2&gt;&lt;p&gt;ಇದೀಗ ಕೊನೆಗೂ ಪ್ಲಾಸ್ಟಿಕ್ ಹೊದಿಕೆಯಿಂದ ಬೆಚ್ಚನೆಯ ಮನೆಗಳತ್ತ ಆದಿವಾಸಿಗಳು ಹೆಜ್ಜೆ ಹಾಕಿದ್ದು ಸ್ವಂತ ಸೂರಿನ ಕನಸು ಕಂಡವರಿಗೆ ಕೊನೆಗೂ ಸ್ವಂತ ಸೂರು ದೊರೆತ್ತಿರುವುದು ಎಲ್ಲಿಲ್ಲದ ಖುಷಿ ಮನೆ ಮಾಡಿದೆ. ಮನೆ ಉದ್ಘಾಟನೆಗೆ ಆಗಮಿಸಿದ ಶಾಸಕ ಪೊನ್ನಣ್ಣರನ್ನು ಫಲಾನುಭವಿಗಳು ಸಾಂಪ್ರದಾಯಿಕ ಓಲಗದೊಂದಿಗೆ ಭವ್ಯ ಸ್ವಾಗತ ಕೋರಿದ್ರು. ಶಾಸಕ ಪೊನ್ನಣ್ಣ ಫಲವಾಗಿ ಸೂರಿಲ್ಲದವರಿಗೆ ಸ್ವಂತ ಸೂರಿನ ಭಾಗ್ಯ ಸಿಕ್ಕಿದ್ದು, ಕೊನೆಗೂ ಮನೆಗಾಗಿ ಹೋರಾಟ ನಡೆಸಿದವರ ಮನೆ ಮನೆಯಲ್ಲೂ ಸಂತಸ ಮನೆ ಮಾಡಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಶುಕ್ರವಾರ ಫಲಾನುಭವಿಗಳಿಗೆ ನೂತನ ಮನೆಗಳ ಹಸ್ತಾಂತರ ಮಾಡಿದ್ರು.&lt;/p&gt;&lt;p&gt;ಐಟಿಡಿಪಿ ಇಲಾಖೆ ನಿಧಿ ಹಾಗೂ ವಿವಿಧ ಬ್ಯಾಂಕುಗಳ ಸಿಎಸ್ಆರ್ ಅನುದಾನದ ಮೂಲಕ ಒಟ್ಟು ಆರು ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಒನ್ ಬಿ.ಹೆಚ್ ಕೆ ಮನೆಯನ್ನ ನಿರ್ಮಿಸಿದ್ದು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ. ಅದರಲ್ಲಿ ಮೊದಲ ಹಂತದಲ್ಲಿ 43 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಿದ್ದು ಉಳಿದ ಮನೆಗಳನ್ನು ಮುಂದಿನ ದಿನದಲ್ಲಿ ಕಾಮಗಾರಿ ಮುಗಿಸಿ ಹಸ್ತಾಂತರಿಸಲಾಗುವುದೆಂದು ಶಾಸಕ ಪೊನ್ನಣ್ಣ ತಿಳಿಸಿದ್ರು. ಒಟ್ಟಿನಲ್ಲಿ ಹಲವು ಸಮಯದಿಂದ ಸ್ವಂತ ಸೂರಿಗಾಗಿ ಜಾತಕ ಪಕ್ಷಿಯಂತೆ ಕಾದಿದ್ದವರಿಗೆ ಕೊನೆಗೂ ಸ್ವಂತ ಸೂರಿನ ಭಾಗ್ಯ ಸಿಕ್ಕಿದ್ದು ಎಲ್ಲರ ಮನೆ ಮನದಲ್ಲೂ ಸಂತಸ ಮಾಡಿರೋದಂತ್ತು ಸತ್ಯ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-tribal-families-get-new-homes-after-9-years-struggle-gvd/articleshow-k55rhg4"/>
        </item>
        <item>
            <title><![CDATA[ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂದೆ ನಿಜಕ್ಕೂ ಏನಾಗಿದೆ? ಶಾಸಕ ಪೊನ್ನಣ್ಣ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/as-ponnanna-reacts-to-ramalinga-reddy-resignation-row-gvd/articleshow-lq7dep2</link>
            <guid isPermaLink="true">https://kannada.asianetnews.com/karnataka-districts/as-ponnanna-reacts-to-ramalinga-reddy-resignation-row-gvd/articleshow-lq7dep2</guid>
            <pubDate>Fri, 05 Jun 2026 20:54:08 +0530</pubDate>
            <description><![CDATA[&lt;p&gt;ಸರ್ಕಾರ ಬದಲಾವಣೆ ಆದಾಗ ಸಹಜವಾಗಿ ಇವೆಲ್ಲಾ ನಡೆಯುತ್ತವೆ, ಅಂತಹ ಸಂದರ್ಭದಲ್ಲಿ ಮನಸ್ತಾಪಗಳು ಇದ್ದೇ ಇರುತ್ತವೆ ಎಂದು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktc5h7gz00n2b1j5rhng42ye,imgname-xxg-1780672405023.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.05):&lt;/strong&gt; ಸರ್ಕಾರ ಬದಲಾವಣೆ ಆದಾಗ ಸಹಜವಾಗಿ ಇವೆಲ್ಲಾ ನಡೆಯುತ್ತವೆ, ಅಂತಹ ಸಂದರ್ಭದಲ್ಲಿ ಮನಸ್ತಾಪಗಳು ಇದ್ದೇ ಇರುತ್ತವೆ ಎಂದು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರಿನಲ್ಲಿ 43 ಆದಿವಾಸಿ ಕುಟುಂಬಗಳಿಗೆ ನಿರ್ಮಿಸಿಕೊಟ್ಟಿರುವ ಮನೆಗಳ ಹಸ್ತಾಂತರಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯ ನಾಯಕರು, ದೊಡ್ಡ ನಾಯಕರು.&lt;/p&gt;&lt;p&gt;ಹೀಗಾಗಿ ಅವರು ಇದೆಲ್ಲಾವನ್ನು ಗಮನಿಸಿ ಸರ್ಕಾರದಲ್ಲಿ ಭಾಗಿಯಾಗುವ ನಂಬಿಕೆ ಇದೆ. ಪಕ್ಷ ಮತ್ತು ನಮ್ಮ ನಾಯಕರು ಅವರ ಮನವೊಲಿಸುವ ವಿಶ್ವಾಸವಿದೆ. ಸಚಿವ ಸ್ಥಾನಗಳನ್ನು ಸಿಎಂ, ಮಾಜಿ ಸಿಎಂ ಮತ್ತು ಹೈಕಮಾಂಡ್ ನಿರ್ಧರಿಸಿರುತ್ತದೆ. ಪಕ್ಷದ ಹಿರಿಯ ನಾಯಕರು ಕೂಡ ರಾಮಲಿಂಗಾರೆಡ್ಡಿ ಅವರ ಮನಸ್ಸಿಗೆ ನೋವಾಗದಂತೆ ಖಾತೆ ಹಂಚುವ ವಿಶ್ವಾಸವಿದೆ. ಪಕ್ಷದ ನಾಯಕರು ಮತ್ತು ಡಿಕೆಶಿ ಅವರು ಅವರ ಮನವೊಲಿಸುವ ವಿಶ್ವಾಸವಿದೆ. ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ಪಕ್ಷದ ನಾಯಕರ ನಿರ್ಧಾರಗಳು ಇರುತ್ತವೆ ಎಂದು ಶಾಸಕ ಪೊನ್ನಣ್ಣ ಹೇಳಿದ್ದಾರೆ.&lt;/p&gt;&lt;p&gt;ನಾನು ಕೇಳಿದ್ದು ಖಾತೆ ಕೊಡುವುದಾಗಿ ಹೇಳಿದ್ದರು ಎಂಬ ರಾಮಲಿಂಗಾರೆಡ್ಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು ಅದಕ್ಕೆಲ್ಲಾ ನಾವು ಸಾಕ್ಷಿ ಅಲ್ಲ ಎಂದ ಅವರು ಸರ್ಕಾರ ಮುಂದಕ್ಕೆ ಸುಗಮವಾಗಿ ನಡೆಯಲಿದೆ, ಹಿಂದಿನಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಿಎಂ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಸಚಿವ ಸ್ಥಾನ ತಪ್ಪಿಸುವುದಕ್ಕಾಗಿಯೇ ಜಮೀರ್ ಅವರದು ಎನ್ನಲಾದ ಆಡಿಯೋ ವೈರಲ್ ಮಾಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿರುವುದಕ್ಕೆ ಅವರು ಮಾಡದಿರುವ ತಪ್ಪಿಗೆ ಅವರಿಗೆ ಶಿಕ್ಷೆ ಕೊಡುವುದು ಸರಿಯಲ್ಲ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ತನಿಖೆ ಆಗಲಿ&lt;/strong&gt;&lt;/h2&gt;&lt;p&gt;ಜಮೀರ್ ಅವರು ನಾನು ಮಾತನಾಡಿಯೇ ಇಲ್ಲ ಎನ್ನುತ್ತಾರೆ. ಇದು ಎಐ ಆಡಿಯೋ ಅಂತ ಅವರು ಹೇಳುತ್ತಿದ್ದಾರೆ, ಮತ್ತೆ ಅದರ ವಿರುದ್ಧ ದೂರನ್ನೂ ನೀಡಿದ್ದಾರೆ. ಇಂದು ಎಐ ಇರುವುದರಿಂದ ಏನು ಬೇಕಾದರೂ ಮಾಡಿರುವ ಸಾಧ್ಯತೆ ಇದೆ. ಯಾರ ಧ್ವನಿ, ಚಿತ್ರವನ್ನು ಬೇಕಾದರೂ ಸೃಷ್ಟಿ ಮಾಡಬಹುದು. ಇಂತಹ ವಿಚಾರದಲ್ಲಿ ಪ್ರತಿಕ್ರಿಯಿಸುವುದಕ್ಕಿಂತ ಪರಿಶೀಲನೆ ಮಾಡಬೇಕಾಗುತ್ತದೆ. ಹೀಗಾಗಿ ತನಿಖೆ ಆಗಲಿ ಎಂದು ಶಾಸಕ ಎ. ಎಸ್ ಪೊನ್ನಣ್ಣ ಆಗ್ರಹಿಸಿದರು. ಇನ್ನು ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಕೊಡುವುದು ಅಥವಾ ಬಿಡುವುದು ಅದೆಲ್ಲವನ್ನೂ ಮಾನ್ಯ ಸಿದ್ದರಾಮಯ್ಯನವರು, ಸಿಎಂ ಡಿ.ಕೆ ಶಿವಕುಮಾರ್ ಮತ್ತು ಹೈಕಮಾಂಡ್ ನವರು ತೀರ್ಮಾನ ಮಾಡುತ್ತಾರೆ.&lt;/p&gt;&lt;p&gt;ಯಾವುದು ಸೂಕ್ತ, ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಜೀವನ ನಡೆಯುವುದೇ ಭರವಸೆಯ ಮೇಲೆ, ಹೀಗಾಗಿ ಸಚಿವ ಸ್ಥಾನ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ. ಹಿರಿಯ ಶಾಸಕರು ಪಕ್ಷದ ಆಧಾರದ ಸ್ಥಂಭಗಳು, ಮತ್ತು ಯಾವ ಭಾಗಕ್ಕೆ ಪ್ರಾತಿನಿಧ್ಯ ಕೊಡಬೇಕು ಎಂಬುವುದು ಇರುತ್ತದೆ. ಅದನ್ನೆಲ್ಲ ಗಮನಿಸಿ ಮೊದಲ ಪಟ್ಟಿಯಲ್ಲಿ ಸಚಿವಸ್ಥಾನ ನೀಡಿರುತ್ತಾರೆ ಎಂದಿದ್ದಾರೆ. ಕೊಡಗು ಜಿಲ್ಲೆಗೆ ಜಿಲ್ಲೆಗೆ ಸಚಿವಸ್ಥಾನ ಕೊಡಬೇಕು, ಇಲ್ಲಿಯವರೇ ಉಸ್ತುವಾರಿ ಆಗಿರಬೇಕು ಎನ್ನುವ ಕೂಗು ಇದೆ.&lt;/p&gt;&lt;p&gt;ಅದು ಪಕ್ಷದ ನಾಯಕರ ಗಮನದಲ್ಲಿ ಇದೆ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಆದರೆ ಯಾರು ಸೂಕ್ತ ವ್ಯಕ್ತಿ, ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಾವು ಸ್ವಲ್ಪ ದಿನ ಕಾಯೋಣ ಎಂದು ಶಾಸಕ ಪೊನ್ನಣ್ಣ ಹೇಳಿದ್ದಾರೆ. ಈ ಸರ್ಕಾರ ಶಾಶ್ವತವಲ್ಲ ಎಂದು ವಿಪಕ್ಷಗಳು ಇದನ್ನೇ ಹೇಳುವುದು. ವಿರೋಧ ಪಕ್ಷದವರು ಇದನ್ನೇ ಹೇಳ್ತಾರೆ, ನಾವು ವಿರೋಧ ಪಕ್ಷದಲ್ಲಿ ಇದ್ದರು ಇದನ್ನೇ ಹೇಳುತ್ತಿದ್ದೆವು. ಸರ್ಕಾರ ನಡೆಸುತ್ತಿರುವವರಿಗೆ ಇದನ್ನು ನಿಭಾಯಿಸುವ ಸಾಮರ್ಥ್ಯ ಇದೆ. ಇದನ್ನು ಮುಂದಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ ಸಮರ್ಥವಾಗಿ ನಿಭಾಯಿಸಲಿದ್ದಾರೆ. ಉತ್ತಮ ಆಡಳಿತವನ್ನು ಮಾನ್ಯ ಶಿವಕುಮಾರ್ ಅವರು ಕೊಡಲಿದ್ದಾರೆ ಎಂದು ಕೊಡಗಿನ ಕೆದಮುಳ್ಳೂರಿನಲ್ಲಿ ಶಾಸಕ ಪೊನ್ನಣ್ಣ ಹೇಳಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/as-ponnanna-reacts-to-ramalinga-reddy-resignation-row-gvd/articleshow-lq7dep2"/>
        </item>
        <item>
            <title><![CDATA[ಕೊಡಗಿನಲ್ಲಿ ಭೀಕರ ದುರಂತ: ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು]]></title>
            <link>https://kannada.asianetnews.com/karnataka-districts/kodagu-ips-raw-ig-sunil-achaiah-wife-sandhya-killed-in-elephant-attack-san/articleshow-nbb35ud</link>
            <guid isPermaLink="true">https://kannada.asianetnews.com/karnataka-districts/kodagu-ips-raw-ig-sunil-achaiah-wife-sandhya-killed-in-elephant-attack-san/articleshow-nbb35ud</guid>
            <pubDate>Fri, 05 Jun 2026 16:29:16 +0530</pubDate>
            <description><![CDATA[ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ತೋಟವೊಂದರಲ್ಲಿ ನಡೆದ ಕಾಡಾನೆ ದಾಳಿಯಲ್ಲಿ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ತೋಟಕ್ಕೆ ಭೇಟಿ ನೀಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktbprmqvpeqpvasg0cs6dsw5,imgname-kodagu-women-death-1780656919291.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಜೂ.5):&lt;/strong&gt; ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರ RAW ಐಜಿ ಆಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ (51) ಅವರು ಬಲಿಯಾಗಿದ್ದಾರೆ.&lt;/p&gt;&lt;p&gt;ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಸಂಧ್ಯಾ ಅಚ್ಚಯ್ಯ ಅವರು ಸಂಬಂಧಿಕರ ಮನೆಯಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅವರು ಇತರ ನಾಲ್ವರೊಂದಿಗೆ ಸೇರಿ ಒಟ್ಟು ಐದು ಜನರ ಗುಂಪಿನಲ್ಲಿ ಸ್ಥಳೀಯ ತೋಟವೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ತೋಟದಲ್ಲಿದ್ದ ಒಂಟಿ ಆನೆಯೊಂದು ಏಕಾಏಕಿ ಇವರ ಗುಂಪಿನತ್ತ ನುಗ್ಗಿ ಭೀಕರವಾಗಿ ದಾಳಿ ನಡೆಸಿದೆ.&lt;/p&gt;&lt;p&gt;ಆನೆ ತಾವಿದ್ದ ಜಾಗಕ್ಕೆ ನುಗ್ಗುತ್ತಿದ್ದಂತೆ ಆತಂಕಗೊಂಡ ಉಳಿದ ನಾಲ್ವರು ನಿವಾಸಿಗಳು ಅಲ್ಲಿಂದ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಸಂಧ್ಯಾ ಅಚ್ಚಯ್ಯ ಅವರು ಆನೆಗೆ ಸಿಲುಕಿಕೊಂಡಿದ್ದಾರೆ. ಆನೆಯ ಭೀಕರ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ದಾಳಿಯ ಬೆನ್ನಲ್ಲೇ ತೀವ್ರವಾಗಿ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡಾನೆಗಳ ಹಾವಳಿಗೆ ಹಿರಿಯ ಅಧಿಕಾರಿಯ ಪತ್ನಿಯೇ ಬಲಿಯಾಗಿರುವುದು ಸ್ಥಳೀಯವಾಗಿ ಭಾರಿ ಆತಂಕ ಮೂಡಿಸಿದೆ.&lt;/p&gt;&lt;h2&gt;&lt;strong&gt;ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ&lt;/strong&gt;&lt;/h2&gt;&lt;p&gt;ಕೊಡಗಿನಲ್ಲಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು ಕಂಡ ಬೆನ್ನಲ್ಲಿಯೇ, ಗೋಣಿಕೊಪ್ಪದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಮೃತ ಸಂಧ್ಯಾ ಕುಂಟುಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಕಾಡಾನೆ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.&lt;/p&gt;&lt;h2&gt;&lt;strong&gt;ಕೊಡಗು ಮೂಲದ ಎಎಸ್&zwnj; ಅಚ್ಚಯ್ಯ&lt;/strong&gt;&lt;/h2&gt;&lt;p&gt;ದಕ್ಷಿಣ ಕೊಡಗಿನ ಪರಕಟಕೇರಿ ಗ್ರಾಮದವರಾದ ಸುನಿಲ್ ಅಚ್ಚಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸರಕಾರದ RAW ಐಜಿಯಾಗಿ ಕೆಲಸ ಮಾಡುತ್ತಿದ್ದಾರೆ. ಸುನಿಲ್ ಅವರು ಅಚ್ಚಯ್ಯ ಅವರ ಪುತ್ರರಾಗಿದ್ದು ತಾಯಿ ಬೆಲ್ಲ(ತಾಮನೆ ಅಮ್ಮಣಕುಟ್ಟಂಡ),ಪತ್ನಿ ಸಂಧ್ಯಾ(ತಾಮನೆ ಮಂಡೇಪಂಡ),ಇಬ್ಬರು ಮಕ್ಕಳೊಂದಿಗೆ ದೆಹಲಿಯಲ್ಲಿ ನೆಲೆಸಿದ್ದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kodagu</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/kodagu-ips-raw-ig-sunil-achaiah-wife-sandhya-killed-in-elephant-attack-san/articleshow-nbb35ud"/>
        </item>
        <item>
            <title><![CDATA[ದುಬಾರೆ ಆನೆ ಶಿಬಿರದಲ್ಲಿ ಜಳಕ ಜಗಳ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಆನೆ ಸಾವು!]]></title>
            <link>https://kannada.asianetnews.com/state/kodagu-dubare-elephant-camp-wildlife-marthanda-dies-after-fight-kanjan-injuries-sat/articleshow-ptby775</link>
            <guid isPermaLink="true">https://kannada.asianetnews.com/state/kodagu-dubare-elephant-camp-wildlife-marthanda-dies-after-fight-kanjan-injuries-sat/articleshow-ptby775</guid>
            <pubDate>Tue, 19 May 2026 12:19:39 +0530</pubDate>
            <description><![CDATA[&lt;p&gt;ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ 'ಮಾರ್ತಾಂಡ' ಮತ್ತು 'ಕಂಜನ್' ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ, ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 'ಮಾರ್ತಾಂಡ' ಆನೆಯು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krzfqk9cte3b75pamwrdk509,imgname-kodagu-dubare-elephant-death-1779173149995.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಮೇ 19): ಕೊ&lt;/strong&gt;ಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸರಣಿ ದುರಂತಗಳು ಇಡೀ ಜಿಲ್ಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿವೆ. ನಿನ್ನೆ (ಸೋಮವಾರ) ಸಾಕಾನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 'ಮಾರ್ತಾಂಡ' (Marthanda) ಆನೆಯು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ.&lt;/p&gt;&lt;h3&gt;&lt;strong&gt;ಸರಣಿ ದುರಂತಕ್ಕೆ ಸಾಕ್ಷಿಯಾದ ದುಬಾರೆ:&lt;/strong&gt;&lt;/h3&gt;&lt;p&gt;ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ದುಬಾರೆ ಶಿಬಿರದ 'ಮಾರ್ತಾಂಡ' ಮತ್ತು 'ಕಂಜನ್' ಎಂಬ ಎರಡು ಆನೆಗಳ ನಡುವೆ ಅನಿರೀಕ್ಷಿತವಾಗಿ ಕಾದಾಟ ಆರಂಭವಾಗಿತ್ತು. ಈ ಕಾಳಗದ ರಭಸಕ್ಕೆ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜಿನ್ನು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರವಾಸಿ ಮಹಿಳೆಯ ಸಾವಿನ ಬೆನ್ನಲ್ಲೇ ಈಗ ಅರಣ್ಯ ಇಲಾಖೆಯ ಸಾಕಾನೆ ಮಾರ್ತಾಂಡ ಕೂಡ ಸಾವನ್ನಪ್ಪಿರುವುದು ಅರಣ್ಯ ಇಲಾಖೆಗೆ ಮತ್ತು ಪ್ರಾಣಿ ಪ್ರೇಮಿಗಳಿಗೆ ಭರಿಸಲಾಗದ ನಷ್ಟ ಉಂಟುಮಾಡಿದೆ.&lt;/p&gt;&lt;h2&gt;&lt;strong&gt;ಚಿಕಿತ್ಸೆಗೆ ಸ್ಪಂದಿಸದ ಮಾರ್ತಾಂಡ:&lt;/strong&gt;&lt;/h2&gt;&lt;p&gt;ನಿನ್ನೆ ನಡೆದ ಕಾದಾಟದಲ್ಲಿ ಕಂಜನ್ ಆನೆಯು ಮಾರ್ತಾಂಡನ ಮೇಲೆ ರೌದ್ರಾವತಾರ ತಳೆದಿತ್ತು. ಕಂಜನ್ ತನ್ನ ದಂತಗಳಿಂದ ಮಾರ್ತಾಂಡನ ಹೊಟ್ಟೆ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ಆಳವಾಗಿ ಚುಚ್ಚಿತ್ತು. ಇದರಿಂದಾಗಿ ಮಾರ್ತಾಂಡನಿಗೆ ಗಂಭೀರ ಆಂತರಿಕ ಗಾಯಗಳಾಗಿದ್ದವು. ಪಶುವೈದ್ಯರಾದ ಡಾ. ಮುಜೀಬ್ ನೇತೃತ್ವದ ತಂಡ ಇಡೀ ರಾತ್ರಿ ಮಾರ್ತಾಂಡನಿಗೆ ಚಿಕಿತ್ಸೆ ನೀಡಿ ಪ್ರಾಣ ಉಳಿಸಲು ಹರಸಾಹಸ ಪಟ್ಟಿತ್ತು. ಆದರೆ, ಗಾಯಗಳು ಅತ್ಯಂತ ಆಳವಾಗಿದ್ದರಿಂದ ಮತ್ತು ಅತಿಯಾದ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದ ಮಾರ್ತಾಂಡ ಇಂದು ಸಾವನ್ನಪ್ಪಿದ್ದಾನೆ.&lt;/p&gt;&lt;h3&gt;&lt;strong&gt;ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಮಾವುತರು:&lt;/strong&gt;&lt;/h3&gt;&lt;p&gt;ಮಾರ್ತಾಂಡ ಆನೆಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅವನನ್ನು ಸಾಕಿದ್ದ ಮಾವುತ ಮತ್ತು ಇತರ ಸಿಬ್ಬಂದಿ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಸೌಮ್ಯ ಸ್ವಭಾವಕ್ಕೆ ಹೆಸರಾಗಿದ್ದ ಮಾರ್ತಾಂಡ ಅರಣ್ಯ ಇಲಾಖೆಯ ಹಲವು ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದನು. ದುಬಾರೆಯಲ್ಲಿ ಪ್ರವಾಸಿಗರಿಗೆ ಅತ್ಯಂತ ಪ್ರಿಯನಾಗಿದ್ದ ಈ ಆನೆ ಹೀಗೆ ದಾರುಣವಾಗಿ ಅಂತ್ಯ ಕಂಡಿರುವುದು ಶಿಬಿರದಲ್ಲಿ ಮೌನ ಆವರಿಸುವಂತೆ ಮಾಡಿದೆ.&lt;/p&gt;&lt;h3&gt;&lt;strong&gt;ನಿರ್ಲಕ್ಷ್ಯದ ಆರೋಪ ಮತ್ತು ಭದ್ರತಾ ಪ್ರಶ್ನೆ:&lt;/strong&gt;&lt;/h3&gt;&lt;p&gt;ಈ ಘಟನೆಯ ನಂತರ ಅರಣ್ಯ ಇಲಾಖೆಯ ವಿರುದ್ಧ ಹಲವು ಪ್ರಶ್ನೆಗಳು ಏಳುತೊಡಗಿವೆ. ಆನೆಗಳಿಗೆ ಸ್ನಾನ ಮಾಡಿಸುವಾಗ ಮಾವುತರ ನಡುವಿನ ಹೊಂದಾಣಿಕೆಯ ಕೊರತೆ ಇತ್ತೇ? ರೊಚ್ಚಿಗೆದ್ದ ಆನೆಗಳನ್ನು ನಿಯಂತ್ರಿಸಲು ಬೇಕಾದ ಸಿದ್ಧತೆ ಇರಲಿಲ್ಲವೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಸದ್ಯಕ್ಕೆ ದುಬಾರೆ ಶಿಬಿರವನ್ನು ಪ್ರವಾಸಿಗರಿಗೆ ಬಂದ್ ಮಾಡಲಾಗಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.&lt;/p&gt;&lt;p&gt;ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಶಕ್ತಿಶಾಲಿ ಸಾಕಾನೆಯನ್ನು ಬಲಿ ಪಡೆದ ಈ ದುಬಾರೆ ದುರಂತವು, ವನ್ಯಜೀವಿಗಳ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸದಿದ್ದರೆ ಎಂತಹ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ. ಇನ್ನು ದುಬಾರೆ ಆನೆ ಶಿಬಿರಕ್ಕೆ 2 ದಿನಗಳ ಕಾಲ ಪ್ರವಾಸವನ್ನು ನಿಷೇಧಿಸಲಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/kodagu-dubare-elephant-camp-wildlife-marthanda-dies-after-fight-kanjan-injuries-sat/articleshow-ptby775"/>
        </item>
        <item>
            <title><![CDATA[ಬೆಂಗಳೂರಿನಿಂದ ಧರ್ಮಸ್ಥಳ-ಕುಕ್ಕೆಗೆ ಹೊಸ ಸ್ಲೀಪರ್ ಬಸ್‌ ಆರಂಭ, ಹಗಲು ಮತ್ತು ರಾತ್ರಿ ಸಮಯದ ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/ksrtc-launches-new-non-ac-sleeper-bus-connecting-bengaluru-mysuru-and-coorg-to-dharmasthala-and-kukke-subrahmanya-gdp/articleshow-srxge4r</link>
            <guid isPermaLink="true">https://kannada.asianetnews.com/karnataka-districts/ksrtc-launches-new-non-ac-sleeper-bus-connecting-bengaluru-mysuru-and-coorg-to-dharmasthala-and-kukke-subrahmanya-gdp/articleshow-srxge4r</guid>
            <pubDate>Thu, 28 May 2026 15:49:49 +0530</pubDate>
            <description><![CDATA[ಕೆಎಸ್ಆರ್ಟಿಸಿ, ಬೆಂಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಈ ಬಸ್ ಕೊಡಗು ಜಿಲ್ಲೆಯ ಸೋಮವಾರಪೇಟೆ, ಶನಿವಾರಸಂತೆ ಮತ್ತು ಬಿಸ್ಲೆ ಘಾಟ್ ಮಾರ್ಗವಾಗಿ ಸಂಚರಿಸಲಿದ್ದು, ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksq1c08b9cf5s22x3dg3p82e,imgname-ksrtc--1--1779963396363.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮತ್ತು ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ, ಕೊಡಗು ಮತ್ತು ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸಲಿರುವ ನೂತನ &quot;ನಾನ್ ಎಸಿ ಸ್ಲೀಪರ್&quot; (Non-AC Sleeper) ಬಸ್ ಸೇವೆಗೆ ಇಂದಿನಿಂದಲೇ ಅಧಿಕೃತವಾಗಿ ಚಾಲನೆ ನೀಡಲಾಗಿದೆ.&lt;/p&gt;&lt;p&gt;ಕೊಡಗು ಜಿಲ್ಲೆಯ ಸೋಮವಾರಪೇಟೆ, ಶನಿವಾರಸಂತೆ ಹಾಗೂ ಸುಂದರ ಪ್ರಕೃತಿ ಸೌಂದರ್ಯದ ಬಿಸ್ಲೆ ಘಾಟ್ ಮಾರ್ಗವಾಗಿ ಈ ಹೊಸ ಸ್ಲೀಪರ್ ಬಸ್ ಸಂಚರಿಸಲಿದ್ದು, ಪ್ರವಾಸಿಗರಿಗೆ ಮತ್ತು ನಿತ್ಯ ಪ್ರಯಾಣಿಕರಿಗೆ ಇದು ವರದಾನವಾಗಲಿದೆ.&lt;/p&gt;&lt;h2&gt;ನೂತನ ಸ್ಲೀಪರ್ ಬಸ್ ಸಂಚಾರದ ಸಂಪೂರ್ಣ ಮಾರ್ಗ ಮತ್ತು ವೇಳಾಪಟ್ಟಿ:&lt;/h2&gt;&lt;p&gt;ಪುತ್ತೂರು ವಿಭಾಗದ ಕ.ರಾ.ರ.ಸಾ. ಸಂಸ್ಥೆಯು ಈ ನೂತನ ಸೇವೆಯನ್ನು ವಿನ್ಯಾಸಗೊಳಿಸಿದ್ದು, ಬಸ್ಸುಗಳ ಸಂಚಾರದ ನಿಖರ ಸಮಯ ಹೀಗಿದೆ:&lt;/p&gt;&lt;h3&gt;ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣ (ಬೆಳಗ್ಗಿನ ವೇಳಾಪಟ್ಟಿ):&lt;/h3&gt;&lt;p&gt;ಈ ನೂತನ ಸ್ಲೀಪರ್ ಬಸ್ ಪ್ರತಿದಿನ ಬೆಳಗ್ಗೆ 6:30 ಗಂಟೆಗೆ ಧರ್ಮಸ್ಥಳದಿಂದ ಹೊರಡಲಿದೆ. ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತಲುಪಿ, ಬೆಳಗ್ಗೆ 8:00 ಗಂಟೆಗೆ ಸುಬ್ರಹ್ಮಣ್ಯದಿಂದ ಪ್ರಯಾಣ ಮುಂದುವರಿಸಲಿದೆ. ತದನಂತರ ಬಿಸ್ಲೆಯಿಂದ ಬೆಳಗ್ಗೆ 8:50ಕ್ಕೆ, ಶನಿವಾರಸಂತೆಯಿಂದ ಬೆಳಗ್ಗೆ 9:35ಕ್ಕೆ ಹಾಗೂ ಸೋಮವಾರಪೇಟೆಯಿಂದ ಬೆಳಗ್ಗೆ 10:30 ಗಂಟೆಗೆ ಹೊರಡಲಿದೆ. ಅಲ್ಲಿಂದ ಕುಶಾಲನಗರ ಮತ್ತು ಮೈಸೂರು ಮಾರ್ಗವಾಗಿ ರಾಜಧಾನಿ ಬೆಂಗಳೂರನ್ನು ತಲುಪಲಿದೆ.&lt;/p&gt;&lt;h3&gt;ಬೆಂಗಳೂರಿನಿಂದ ಧರ್ಮಸ್ಥಳದತ್ತ ಪ್ರಯಾಣ (ರಾತ್ರಿಯ ವೇಳಾಪಟ್ಟಿ):&lt;/h3&gt;&lt;p&gt;ಮತ್ತೊಂದೆಡೆ, ಇದೇ ನಾನ್ ಎಸಿ ಸ್ಲೀಪರ್ ಬಸ್ ಪ್ರತಿದಿನ ರಾತ್ರಿ 9:45 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಹೊರಡಲಿದೆ. ರಾತ್ರಿ ಪೂರ್ತಿ ಸಂಚರಿಸಲಿರುವ ಈ ಬಸ್ ಮೈಸೂರು, ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ, ಕೂಡುರಸ್ತೆ, ಬಿಸ್ಲೆ ಘಾಟ್ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಾರ್ಗವಾಗಿ ಮರುದಿನ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ತಲುಪಲಿದೆ.&lt;/p&gt;&lt;h2&gt;ಆನ್&zwnj;ಲೈನ್ ಬುಕ್ಕಿಂಗ್ ಲಭ್ಯ: ಪ್ರಯಾಣಿಕರಿಗೆ ಅಧಿಕಾರಿಗಳ ಮನವಿ&lt;/h2&gt;&lt;p&gt;ಕೊಡಗು ಮತ್ತು ಕರಾವಳಿಯ ಧಾರ್ಮಿಕ ಕ್ಷೇತ್ರಗಳ ನಡುವೆ ನೇರ ಸ್ಲೀಪರ್ ಬಸ್ ಸೌಕರ್ಯ ಇರಲಿಲ್ಲ. ಸದ್ಯ ಈ ಹೊಸ ಸೇವೆಯಿಂದಾಗಿ ಸುಖಕರ ಪ್ರಯಾಣಕ್ಕೆ ಹಂಬಲಿಸುವ ಸಾರ್ವಜನಿಕರಿಗೆ ದೊಡ್ಡ ಅನುಕೂಲ ಸಿಕ್ಕಂತಾಗಿದೆ.&lt;/p&gt;&lt;p&gt;ಈ ನೂತನ ಸ್ಲೀಪರ್ ಸಾರಿಗೆಯ ಸದುಪಯೋಗವನ್ನು ಸಾರ್ವಜನಿಕರು ಹಾಗೂ ಯಾತ್ರಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶ್ರೀಹರಿಬಾಬು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.&lt;/p&gt;&lt;h2&gt;ಟಿಕೆಟ್ ಕಾಯ್ದಿರಿಸುವಿಕೆ ಹೇಗೆ?&lt;/h2&gt;&lt;p&gt;ಈ ಬಸ್ಸಿನಲ್ಲಿ ಪ್ರಯಾಣಿಸಲು ಇಚ್ಛಿಸುವ ಸಾರ್ವಜನಿಕರು ತಮ್ಮ ಹತ್ತಿರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕೌಂಟರ್&zwnj;ಗಳಿಗೆ ಭೇಟಿ ನೀಡಿ ಮುಂಗಡ ಟಿಕೆಟ್ ಪಡೆಯಬಹುದು. ಅಥವಾ ಸಂಸ್ಥೆಯ ಅಧಿಕೃತ ಜಾಲತಾಣವಾದ www.ksrtc.in ಗೆ ಭೇಟಿ ನೀಡುವ ಮೂಲಕ ಆನ್&zwnj;ಲೈನ್&zwnj;ನಲ್ಲಿಯೂ ಸೀಟುಗಳನ್ನು ಸುಲಭವಾಗಿ ಬುಕ್ ಮಾಡಿಕೊಳ್ಳಬಹುದಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/ksrtc-launches-new-non-ac-sleeper-bus-connecting-bengaluru-mysuru-and-coorg-to-dharmasthala-and-kukke-subrahmanya-gdp/articleshow-srxge4r"/>
        </item>
        <item>
            <title><![CDATA[ಅಂಬಾನಿ ಅದಾನಿಯಂತ ಉದ್ಯಮಿಗಳ ಸಂಪತ್ತು ಪಡೆದು ಜನರ ನೆರವಿಗೆ ಬರಲಿ: ಶಾಸಕ ಪೊನ್ನಣ್ಣ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/as-ponnanna-rahul-gandhi-petrol-diesel-price-hike-economy-gvd/articleshow-vglbxdc</link>
            <guid isPermaLink="true">https://kannada.asianetnews.com/karnataka-districts/as-ponnanna-rahul-gandhi-petrol-diesel-price-hike-economy-gvd/articleshow-vglbxdc</guid>
            <pubDate>Sat, 16 May 2026 21:04:41 +0530</pubDate>
            <description><![CDATA[&lt;p&gt;ಈ ಪರಿಸ್ಥಿತಿ ದೇಶಕ್ಕೆ ಬರುತ್ತದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ವರ್ಷದ ಹಿಂದೆಯೇ ಹೇಳಿದ್ದರು ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krrpf5z2xgcdwegn66j84msg,imgname-vjv-1778945333218.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಮೇ.16):&lt;/strong&gt; ಈ ಪರಿಸ್ಥಿತಿ ದೇಶಕ್ಕೆ ಬರುತ್ತದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ವರ್ಷದ ಹಿಂದೆಯೇ ಹೇಳಿದ್ದರು ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಇತರ ವಸ್ತುಗಳ ಬೆಲೆ ಹೆಚ್ಚಳ ಆಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ದೇಶಥ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಇದರ ಬಗ್ಗೆ ಸರ್ವಪಕ್ಷಗಳ ಸಭೆ ಕರೆಯಿರಿ, ಪರಿಹಾರ ಕಂಡುಕೊಳ್ಳಿ ಎಂದು ರಾಹುಲ್ ಗಾಂಧಿ ಹೇಳಿದ್ದರು.&lt;/p&gt;&lt;p&gt;ಆರ್ಥಿಕ ಸಚಿವರು, ಅನೇಕ ಆರ್ಥಿಕ ತಜ್ಞರ ಸೇರಿಸಿ ಸಭೆ ನಡೆಸಿ ಅಂತ ಹೇಳಿದ್ದರು. ಆದರೆ ಪ್ರಧಾನಿ ಮೋದಿಯವರು ಯಾವುದನ್ನು ಪರಿಗಣಿಸಲಿಲ್ಲ. ರಾಜಕೀಯಕ್ಕೋಸ್ಕರ ಕೆಲವು ತೀರ್ಮಾನಗಳನ್ನು ತೆಗೆದುಕೊಂಡರು. ಪಂಚರಾಜ್ಯಗಳ ಚುನಾವಣೆ ಬಳಿಕ ಎಲ್ ಪಿ ಜಿ ರೇಟ್ ಜಾಸ್ತಿ ಮಾಡಿದರು. ಈಗ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದರು. ಇಂದು ಕಬ್ಬಿಣ, ಜಲ್ಲಿ, ಟಾರು ಪ್ರತಿಯೊಂದರ ಬೆಲೆ ನಾಲ್ಕರಷ್ಟು ಹೆಚ್ಚಳವಾಗಿದೆ. ಎಲ್ಲವುಗಳ ಬೆಲೆ ಹೆಚ್ಚಳವಾಗಿದೆ. ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ.&lt;/p&gt;&lt;p&gt;ಡಾಲರ್ ಬೆಲೆ 96 ರೂಪಾಯಿ ಆಗಿದ್ದು, ಇದು ದೇಶದ ಪರಿಸ್ಥಿತಿ ಆಗಿದೆ. ಅನೇಕ ತಜ್ಞರು ಇದ್ದಾರೆ ಅವರೆಲ್ಲರ ಸಭೆ ಕರೆಯಿರಿ ಎಂದು ಪೊನ್ನಣ್ಣ ಆಗ್ರಹಿಸಿದ್ದಾರೆ. ಕೆಲವರ ಕರೆಯಲು ನಿಮಗೆ ಇಷ್ಟವಿಲ್ಲದೆ ಇರಬಹುದು. ಆದರೆ ದೇಶದ ಹಿತದೃಷ್ಟಿಯಿಂದ ಸಭೆ ಕರೆಯುವುದು ಅಗತ್ಯ ಎಂದರು. ಮೊನ್ನೆ ಪ್ರಧಾನಿಯವರು ಸೂಚನೆ ನೀಡಿದರು, ಆದರೆ ಸಾರ್ವಜನಿಕರು ಪ್ರಧಾನಿ ಹೇಳದಿದ್ದರೂ ಪಾಲನೆ ಮಾಡುತ್ತಿದ್ದಾರೆ. ಕಾರಲ್ಲಿ ಓಡಾಡಬೇಡಿ ಎಂದಿದ್ದಾರೆ, ಆದರೆ ಎಲ್ಲಾ ರೇಟ್ ಜಾಸ್ತಿ ಆಗಿರುವುದರಿಂದ ಜನರೇ ಬಳಸಲು ಸಾಧ್ಯವಾಗುತ್ತಿಲ್ಲ.&lt;/p&gt;&lt;h2&gt;&lt;strong&gt;ಉದ್ಯಮಿಗಳಿಗೆ ಹೇಳಲಿ&lt;/strong&gt;&lt;/h2&gt;&lt;p&gt;ಡಾಲರ್ ರೇಟ್ 100 ರೂಪಾಯಿಗೆ ಹೋಗುವಂತೆ ಆಗಿದೆ. ಮತ್ತೆ ಜನರು ವಿದೇಶಿ ಪ್ರವಾಸ ಮಾಡಲು ಹೇಗೆ ಸಾಧ್ಯ, ಅವರು ಹೇಳುತ್ತಿರುವುದನ್ನು ಬಡವರು ಮಧ್ಯಮ ವರ್ಗದ ಜನರು ಅನಿವಾರ್ಯವಾಗಿ ಪಾಲನೆ ಮಾಡುತ್ತಿದ್ದಾರೆ. ಪ್ರವಚನ ರೂಪದ ಈ ಸಲಹೆ ಸೂಚನೆಗಳನ್ನು ಅದಾನಿ, ಅಂಬಾನಿಯವರಿಗೆ ಹೇಳಲಿ. ದೊಡ್ಡ ದೊಡ್ಡ ಉದ್ಯಮಿಗಳಿಗೆ ಹೇಳಲಿ. ಯಾರು ದೇಶದ ಸಂಪತ್ತನ್ನು ಪೂರ್ಣವಾಗಿ ವಶದಲ್ಲಿ ಇಟ್ಟುಕೊಂಡಿದ್ದಾರೋ, ಅದನ್ನೆಲ್ಲಾ ವಾಪಸ್ ಪಡೆದು ಜನ ಸಾಮಾನ್ಯರ ನೆರವಿಗೆ ಬರಬೇಕು. ಈ ಕೆಲಸ ಮಾಡಿದರೆ ಮಾತ್ರ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾಗುತ್ತೆ. ಇಲ್ಲದಿದ್ದರೆ ಪ್ರವಚನದಿಂದ ಯಾವುದೂ ಸರಿಯಾಗಲ್ಲ ಎಂದು ಪೊನ್ನಣ್ಣ ಹೇಳಿದ್ದಾರೆ.&lt;/p&gt;&lt;p&gt;ಇದರ ಬಳಿಕ ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆದ ಕುಟುಂಬ 2026 ಕ್ರೀಡಾ ಹಬ್ಬ ಪೊನ್ನಣ್ಣ ಚಾಲನೆ ನೀಡಿದರು. ಮಡಿಕೇರಿಯಲ್ಲಿ ಇರುವ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾ ಕೂಟದ ಕ್ರಿಕೆಟ್ ಪಂದ್ಯಾಟದ ಅಂತಿಮ ಪಂದ್ಯಾಟಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಬೌಲಿಂಗ್ ಮಾಡಿದರು. ಬಳಿಕ ವೇದಿಕೆ ಸಭಾ ಕಾರ್ಯಕ್ರಮ ನಡೆಯಿತು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/as-ponnanna-rahul-gandhi-petrol-diesel-price-hike-economy-gvd/articleshow-vglbxdc"/>
        </item>
        <item>
            <title><![CDATA[ದುಬಾರೆ ಆನೆ ಶಿಬಿರಕ್ಕೆ 2 ದಿನ ಪ್ರವೇಶ ನಿರ್ಬಂಧ; ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡ 'ಮಾರ್ತಾಂಡ' ಆನೆಗೆ ಚಿಕಿತ್ಸೆ!]]></title>
            <link>https://kannada.asianetnews.com/state/kodagu-dubare-elephant-camp-two-days-entry-banned-injured-marthanda-treatment-tourist-death-sat/articleshow-vri74ec</link>
            <guid isPermaLink="true">https://kannada.asianetnews.com/state/kodagu-dubare-elephant-camp-two-days-entry-banned-injured-marthanda-treatment-tourist-death-sat/articleshow-vri74ec</guid>
            <pubDate>Tue, 19 May 2026 08:59:27 +0530</pubDate>
            <description><![CDATA[ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯು ಪ್ರವಾಸಿಗರ ಸುರಕ್ಷತೆಗಾಗಿ ಶಿಬಿರಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krxhq979sxx7an22a88s77hw,imgname-kodagu-dubare-elephant-camp-1779108127976.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಮೇ 19): ಕೊ&lt;/strong&gt;ಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಎರಡು ಸಾಕಾನೆಗಳ ನಡುವಿನ ಭೀಕರ ಕಾದಾಟದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆಯು ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಇಂದು ಮತ್ತು ನಾಳೆ (ಮಂಗಳವಾರ ಮತ್ತು ಬುಧವಾರ) ಪ್ರವಾಸಿಗರಿಗೆ ದುಬಾರೆ ಶಿಬಿರಕ್ಕೆ ಭೇಟಿ ನೀಡಲು ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಪ್ರವೇಶಕ್ಕೆ ಸಂಪೂರ್ಣ ಬ್ರೇಕ್:&lt;/strong&gt;&lt;/h3&gt;&lt;p&gt;ಆನೆಗಳ ನಡುವಿನ ಜಗಳದಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾವೇರಿ ನದಿ ದಾಟಿಸಿ ಪ್ರವಾಸಿಗರನ್ನು ಶಿಬಿರಕ್ಕೆ ಕರೆದೊಯ್ಯುವ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದ್ದು, ನದಿ ತೀರದವರೆಗೂ ಬರದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಗಂಭೀರವಾಗಿ ಗಾಯಗೊಂಡ ಮಾರ್ತಾಂಡ:&lt;/strong&gt;&lt;/h2&gt;&lt;p&gt;ನಿನ್ನೆ ನಡೆದ ಕಾದಾಟದಲ್ಲಿ 'ಮಾರ್ತಾಂಡ' ಆನೆಯು 'ಕಂಜನ್' ಆನೆಯ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದೆ. ಮಾರ್ತಾಂಡನ ಹೊಟ್ಟೆಯ ಭಾಗ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ಆಳವಾದ ಗಾಯಗಳಾಗಿವೆ. ಸದ್ಯ ದುಬಾರೆ ಶಿಬಿರದಲ್ಲೇ ಮಾರ್ತಾಂಡನಿಗೆ ಅರಣ್ಯ ಇಲಾಖೆಯ ಪಶುವೈದ್ಯರಾದ ಡಾ. ಮುಜೀಬ್ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಆನೆಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ತಿಳಿದುಬಂದಿದೆ.&lt;/p&gt;&lt;h3&gt;&lt;strong&gt;ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ:&lt;/strong&gt;&lt;/h3&gt;&lt;p&gt;ಆನೆಗಳ ಕಾಳಗದ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜಿನ್ನು (33) ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಅನಿರೀಕ್ಷಿತ ದುರಂತದಲ್ಲಿ ಪತ್ನಿಯನ್ನು ಕಳೆದುಕೊಂಡ ನೋವಿನ ನಡುವೆಯೂ, ಆಕೆಯ ಪತಿ ಸಮಾಜಕ್ಕೆ ಮಾದರಿಯಾಗುವ ನಿರ್ಧಾರ ಕೈಗೊಂಡಿದ್ದಾರೆ. ಮೃತ ಜಿನ್ನು ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇನ್ನು ಮೃತ ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರವು 20 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಘೋಷಿಸಿದೆ.&lt;/p&gt;&lt;h2&gt;&lt;strong&gt;ಘಟನೆ ನಡೆದಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಸ್ನಾನ ಮಾಡಿಸುವ ಸಂದರ್ಭದಲ್ಲಿ ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ಅನಿರೀಕ್ಷಿತವಾಗಿ ಜಗಳ ಆರಂಭವಾಗಿತ್ತು. ರೊಚ್ಚಿಗೆದ್ದ ಆನೆಗಳು ಓಡಾಡುತ್ತಿದ್ದಾಗ ಅಲ್ಲೇ ಇದ್ದ ಜಿನ್ನು ಅವರು ಆನೆಗಳ ಕಾಲಡಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಈ ಘಟನೆಯಿಂದಾಗಿ ದುಬಾರೆ ಶಿಬಿರದ ಸುರಕ್ಷತೆಯ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಮಾವುತರ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಯುತ್ತಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/kodagu-dubare-elephant-camp-two-days-entry-banned-injured-marthanda-treatment-tourist-death-sat/articleshow-vri74ec"/>
        </item>
        <item>
            <title><![CDATA['ಕೇಸರಿ ಶಾಲು ಧಾರ್ಮಿಕ ಅಲ್ಲ'  ಶಾಲೆಗಳಲ್ಲಿ ಹಿಜಾಬ್‌ಗೆ ಅವಕಾಶ, ಸರ್ಕಾರದ ನಿರ್ಧಾರದ ಬಗ್ಗೆ ಪೊನ್ನಣ್ಣ ಸಮರ್ಥನೆ]]></title>
            <link>https://kannada.asianetnews.com/state/saffron-shawl-not-religious-ponnanna-defends-govt-decision-on-hijab-allowance-in-schools-rav/articleshow-wxefgze</link>
            <guid isPermaLink="true">https://kannada.asianetnews.com/state/saffron-shawl-not-religious-ponnanna-defends-govt-decision-on-hijab-allowance-in-schools-rav/articleshow-wxefgze</guid>
            <pubDate>Sun, 17 May 2026 07:02:54 +0530</pubDate>
            <description><![CDATA[&lt;p&gt;ಶಾಸಕ ಎ.ಎಸ್ ಪೊನ್ನಣ್ಣ ಅವರು, ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್&zwnj; ಧರಿಸಲು ಅವಕಾಶ ನೀಡಿದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ಸಾಂವಿಧಾನಿಕ ಹಕ್ಕಾಗಿದ್ದು, ಕೇಸರಿ ಶಾಲನ್ನು ಧಾರ್ಮಿಕ ಸಂಕೇತವಾಗಿ ಹೋಲಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krsrsz74y0we5wxdgr0wgsyn,imgname-----------------------2026-05-17t065836.208-1778981338340.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನಾಪೋಕ್ಲು (ಮೇ.17)&lt;/strong&gt;: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್&zwnj; ಧರಿಸಲು ಅವಕಾಶ ನೀಡಿದ ವಿಚಾರದ ಬಗ್ಗೆ ಪರ ವಿರೋಧಿಗಳು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಕೇಸರಿ ಶಾಲು ಯಾವುದೇ ಧಾರ್ಮಿಕ ಮೌಲ್ಯಗಳ ಸಂಕೇತವಾಗಿ ಯಾವತ್ತು ಬಳಸಲಿಲ್ಲ ಎಂದು ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹೇಳಿದ್ದಾರೆ.&lt;/p&gt;&lt;p&gt;ನಾಪೋಕ್ಲಿನಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಸಾಂವಿಧಾನಿಕ ಹಕ್ಕನ್ನು ನೀಡಿ ಆದೇಶಿಸಿದೆ. ಕೇಂದ್ರೀಯ ಶಾಲೆಗಳಲ್ಲಿ ಈಗಾಗಲೇ ಇಂತಹ ಕ್ರಮ ಜಾರಿಯಲ್ಲಿದೆ. ರಾಜ್ಯ ಸರ್ಕಾರವು ಪರಂಪರಾನುಗತವಾಗಿ ಹಿಂದಿನಿಂದಲೇ ಆಚರಿಸಿಕೊಂಡು ಬಂದಂತಹ ಆಚರಣೆಯನ್ನು ಮುಂದುವರಿಸಲು ಅವಕಾಶ ಕಲ್ಪಿಸಿದೆ ಎಂದರು. ಆದರೆ ಶಿಕ್ಷಣ ಸಂಸ್ಥೆಗಳಲ್ಲಿ ಹೊಸ ಪರಂಪರೆಗಳನ್ನ ಪ್ರಾರಂಭಿಸಲು ಅವಕಾಶ ಇರಬಾರದು ಎಂಬುದಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಪರೀಕ್ಷೆಯ ಭದ್ರತೆಯನ್ನು ಕಾಪಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಮರ್ಥಿಸಿದರು.&lt;/p&gt;&lt;p&gt;ಮೊನ್ನೆ ಪರೀಕ್ಷೆ ಬರೆಯಲು ಹೋದ ಸಂದರ್ಭದಲ್ಲಿ ಜನಿವಾರದ ವಿಚಾರದಲ್ಲಿ ಗಲಾಟೆ ಆಯ್ತು ಜನಿವಾರ ಹಾಕಿಕೊಂಡು ಹೋಗುವವರನ್ನ ಬಿಡಬೇಕಾ ಬೇಡ್ವಾ? ಜನಿವಾರಕ್ಕೂ ಶಿಕ್ಷಣ ಭದ್ರತೆಗೂ ಯಾವುದೇ ಸಂಬಂಧ ಇಲ್ಲ. ಜನಿವಾರಕ್ಕೂ ಅವಕಾಶ ನೀಡಬೇಕು ಎಂದು ಆದೇಶ ಮಾಡಿದ್ದೇವೆ. ರುದ್ರಾಕ್ಷಿ ಮಾಲೆ ಹಾಕಿಕೊಂಡು ಬಂದವರನ್ನು ತಡೆಯಬಾರದು ಎಂದು ಆದೇಶ ಮಾಡಿದ್ದೇವೆ. ಹೀಗಿರುವಾಗ ಹಿಜಾಬ್ ಮಾತ್ರ ಬಿಡಬೇಕಾ? ಎಂದು ಪ್ರಶ್ನಿಸಿದರು.ಯಾವುದು ಅವರಿಗೆ ಸೂಕ್ತ ಅದನ್ನು ಮಾತ್ರ ತೆಗೆದುಕೊಂಡು ಧರ್ಮಗಳ ಮಧ್ಯೆ ಒಡಕು ತರುವ ಪ್ರಯತ್ನ ನಡೆಸುತ್ತಿದ್ದಾರೆ.&lt;/p&gt;&lt;h2&gt;ಬಿಜೆಪಿಯವರು ಬೆಲೆ ಏರಿಕೆ ಬಗ್ಗೆ ಮಾತನಾಡೋಲ್ಲ:&lt;/h2&gt;&lt;p&gt;ದೇಶದಲ್ಲಿ ಬೆಲೆ ಏರಿಕೆ ಆಗಿದೆ. ಎಷ್ಟು ಆಗಿದೆ? ಇಂದು ತೈಲ ಬೆಲೆ, ಡಾಲರ್ ಬೆಲೆ, ಚಿನ್ನದ ಬೆಲೆ, ಎಲ್&zwnj;ಪಿಜಿ ಬೆಲೆ ಮತ್ತು ಡಾಂಬರ್ ಬೆಲೆ ಮೂರರಷ್ಟಾಗಿದೆ. ಅದಕ್ಕೆ ಮಾತಾನಾಡಿ, ಅಂದ್ರೆ ಇದಕ್ಕೆ ಮಾತ್ರ ಮಾತನಾಡುತ್ತಾರೆ. ಕೇಸರಿ ಶಾಲು ಯಾವುದೇ ಧಾರ್ಮಿಕ ಮೌಲ್ಯಗಳ ಸಂಕೇತವಾಗಿ ಹಿಂದೂಗಳು ಯಾವತ್ತು ಬಳಸಿಲ್ಲ. ಕೆಲವು ಸಂದರ್ಭಗಳಲ್ಲಿ ಮಾತ್ರ ಕೇಸರಿ ಶಾಲುಗಳನ್ನು ಬಳಸುತ್ತಾರೆ. ಕಾರ್ಯಕ್ರಮಗಳಲ್ಲಿ ದೇವಾಲಯ ಮತ್ತು ಇತರ ಧಾರ್ಮಿಕ ಆಚರಣೆಗಳಲ್ಲಿ ಬಳಸುತ್ತಾರೆ. ಆದ್ದರಿಂದ ಕೇಸರಿ ಶಾಲು ಮತ್ತು ಹಿಜಾಬ್ ಹೋಲಿಕೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಸರ್ಕಾರ ಎಲ್ಲ ಧರ್ಮಗಳ ಭಾವನೆಗಳನ್ನು ಗೌರವಿಸಿ ಕಾನೂನುಬದ್ಧವಾಗಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ಸ್ಪಷ್ಟಪಡಿಸಿದರು.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/saffron-shawl-not-religious-ponnanna-defends-govt-decision-on-hijab-allowance-in-schools-rav/articleshow-wxefgze"/>
        </item>
        <item>
            <title><![CDATA[ಕಾಣಿಯೂರು-ಸುಳ್ಯ-ಕೊಡಗು ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆ ಇಲ್ಲ! ಯಾಕಿಷ್ಟು ಗೊಂದಲವಾಯ್ತು?]]></title>
            <link>https://kannada.asianetnews.com/gallery/karnataka-districts/kodagu-railway-projects-mp-yaduveer-dismisses-coorg-rail-rumors-while-sullia-pushes-for-alternate-route-gdp-y3kf8bg</link>
            <guid isPermaLink="true">https://kannada.asianetnews.com/gallery/karnataka-districts/kodagu-railway-projects-mp-yaduveer-dismisses-coorg-rail-rumors-while-sullia-pushes-for-alternate-route-gdp-y3kf8bg</guid>
            <pubDate>Wed, 03 Jun 2026 20:37:11 +0530</pubDate>
            <description><![CDATA[&lt;p&gt;ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಮೂಲಕ ಯಾವುದೇ ಹೊಸ ರೈಲು ಮಾರ್ಗದ ಪ್ರಸ್ತಾವನೆ ಸದ್ಯಕ್ಕೆ ರೈಲ್ವೆ ಸಚಿವಾಲಯದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರೊಂದಿಗಿನ ಭೇಟಿಯ ನಂತರ, ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt6ywer077hmfzxbg35x3aqz,imgname-kodagu-railway-line-proposal-mp-yaduveer-wodeyar--3--1780497660672.jpg" type="image/jpeg" height="390" width="690"/>
            <content:encoded><![CDATA[&lt;p&gt;ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಮೂಲಕ ಯಾವುದೇ ಹೊಸ ರೈಲು ಮಾರ್ಗದ ಪ್ರಸ್ತಾವನೆ ಸದ್ಯಕ್ಕೆ ರೈಲ್ವೆ ಸಚಿವಾಲಯದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರೊಂದಿಗಿನ ಭೇಟಿಯ ನಂತರ, ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.&lt;/p&gt;&lt;img&gt;&lt;p&gt;ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ಹೊಸ ರೈಲು ಯೋಜನೆ ಅಥವಾ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಂಪರ್ಕ ವ್ಯವಸ್ಥೆಗಳ ಕುರಿತು ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.&lt;/p&gt;&lt;img&gt;&lt;p&gt;ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆ ಇದೆ ಎಂಬ ವರದಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದವು. ಇದು ಕೊಡಗಿನ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯ ಜನರಲ್ಲಿ ಭಾರಿ ಆತಂಕ ಮೂಡಿಸಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಂಸದ ಯದುವೀರ್ ಒಡೆಯರ್, ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತಂದರು. ಸಚಿವರೊಂದಿಗೆ ನಡೆದ ಸಮಾಲೋಚನೆಯಲ್ಲಿ, ಕೊಡಗಿಗೆ ಸಂಬಂಧಿಸಿದಂತೆ ಇಂತಹ ಯಾವುದೇ ರೈಲು ಯೋಜನೆಯ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಕೊಡಗಿನ ಪ್ರಾಕೃತಿಕ ಸೌಂದರ್ಯ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಯಾವುದೇ ರೀತಿಯ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳುವ ಮುನ್ನ ಸ್ಥಳೀಯರು, ಪರಿಸರವಾದಿಗಳು ಹಾಗೂ ಎಲ್ಲಾ ಹಿತಾಸಕ್ತಿ ಹೊಂದಿರುವ ಪಾಲುದಾರರೊಂದಿಗೆ ಕಡ್ಡಾಯವಾಗಿ ಸಮಾಲೋಚನೆ ನಡೆಸಲಾಗುವುದು. ಜನರ ಅಭಿಪ್ರಾಯವನ್ನು ಪಡೆದೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಸದರು ಭರವಸೆ ನೀಡಿದ್ದಾರೆ. ಈ ಮೂಲಕ ಕೊಡಗಿನ ಮೂಲಕ ರೈಲು ಹಳಿ ನಿರ್ಮಾಣವಾಗಲಿದೆ ಎಂಬ ವದಂತಿ ಹಾಗೂ ಗೊಂದಲಗಳಿಗೆ ಪೂರ್ಣವಿರಾಮ ಬಿದ್ದಂತಾಗಿದೆ.&lt;/p&gt;&lt;img&gt;&lt;p&gt;ಕಾಣಿಯೂರು-ಸುಳ್ಯ-ನಾಪೋಕ್ಲು- ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆ ಬಗ್ಗೆ ಚರ್ಚಿಸಲು ಸಭೆ ನಡೆಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಕಳೆದ ತಿಂಗಳು ಮಂಗಳೂರು ಭೇಟಿ ವೇಳೆ ಮನವಿ ಸಲ್ಲಿಸಿದ್ದ ಬಗ್ಗೆ ಸುದ್ದಿಯಾಗಿತ್ತು. ಸಂಸದ ಬ್ರಿಜೇಶ್ ಚೌಟ ಮುಂದಾಳತ್ವದಲ್ಲಿ ಈ ಮನವಿ ಸಲ್ಲಿಕೆಯಾಗಿತ್ತು. ಅದಾದ ಈ ಯೋಜನೆ ವ್ಯಾಪಕ ಟೀಕೆಗೂ ಕಾರಣವಾಗಿತ್ತು. ಏಕೆಂದರೆ ಲಕ್ಷಾಂತರ ಜನ ತಮ್ಮ ಕೃಷಿ ಭೂಮಿ ಕಳೆದುಕೊಳ್ಳುವ ಭೀತಿ ವ್ಯಕ್ತ ಪಡಿಸಿದ್ದರು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿ ಮೊದಲಿಗೆ ರಸ್ತೆ, ಆಸ್ಪತ್ರೆಗಳ ಅಭಿವೃದ್ಧಿ ಕಡೆಗೆ ಗಮನ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.&lt;/p&gt;&lt;img&gt;&lt;p&gt;ಕಾಣಿಯೂರು-ಸುಳ್ಯ-ನಾಪೋಕ್ಲು- ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆಯನ್ನು ಹಾಗೂ ಕಾಣಿಯೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಮತ್ತು ಏಲಡ್ಕಕ್ಕೆ ಸ್ಥಳಾಂತರಿಸಲು ಮನವಿ ಸಲ್ಲಿಸಲಾಗಿತ್ತು, ಆ ಪ್ರಸ್ತಾವನೆ ಬಗ್ಗೆ ರೈಲ್ವೆ ಇಲಾಖೆ ತಾಂತ್ರಿಕ ತಂಡ ಪೂರಕವಾಗಿ ಸ್ಪಂದಿಸದೇ ಇರುವುದಾಗಿ ತಿಳಿದುಬಂದಿದೆ. ಆದ್ದರಿಂದ ಆ ವಿಚಾರಗಳ ಬಗ್ಗೆ ತಮ್ಮ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಸಂಸದರು, ಕೊಡಗು ಸಂಸದರು ಮತ್ತು ರೈಲ್ವೆ ಇಲಾಖೆಯ ತಾಂತ್ರಿಕ ತಂಡದವರೊಂದಿಗೆ ಸಭೆಯನ್ನು ನಿಗದಿ ಮಾಡಿ ಈ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಶಾಸಕಿ ಮರುಳ್ಯ ಮನವಿ ಮಾಡಿದ್ದರು. ಸಂಸದ ಕ್ಯಾ.ಬ್ರಿಜೇಶ್&zwnj; ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್&zwnj; ಕುಂಪಲ, ಶಾಸಕರಾದ ರಾಜೇಶ್&zwnj; ನಾಯಕ್&zwnj; ಉಳಿಪಾಡಿಗುತ್ತು, ಡಾ.ಭರತ್&zwnj; ಶೆಟ್ಟಿ ಮತ್ತಿತರರು ಮಂಗಳೂರಿನಲ್ಲಿ ಮನವಿ ಕೊಡುವ ವೇಳೆ ಉಪಸ್ಥಿತರಿದ್ದರು.&lt;/p&gt;&lt;img&gt;&lt;p&gt;ರಾಜ್ಯದ ಗ್ರಾಮೀಣ ಭಾಗಗಳಿಗೆ ಉತ್ತಮ ಸಾರಿಗೆ ಸಂಪರ್ಕ ದೃಷ್ಟಿಯಿಂದ ಈ ಭಾಗದ ಜನರ ಬಹುಕಾಲದ ಬೇಡಿಕೆಯಾದ ಕಾಣಿಯೂರು-ಸುಳ್ಯ-ನಾಪೋಕ್ಲು ಮಾರ್ಗವಾಗಿ ಮೈಸೂರಿಗೆ ನೂತನ ರೈಲು ಮಾರ್ಗ ನಿರ್ಮಾಣ ಆಗಬೇಕು. ಈ ನೂತನ ರೈಲ್ವೆ ಮಾರ್ಗವು ಈ ಭಾಗದ ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ. ಸುಳ್ಯ ಮತ್ತು ಕೊಡಗು ಭಾಗದಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಸಾಂಬಾರ ಪದಾರ್ಥಗಳು, ರಬ್ಬರ್, ಅಡಿಕೆ ಪ್ರಮುಖ ಬೆಳೆ ಆಗಿರುವುದರಿಂದ ಆರ್ಥಿಕತೆಗೆ ಉತ್ತೇಜನ ನೀಡಲಿದೆ. ಈಗ ಇರುವ ಕಾಣಿಯೂರು ರೈಲ್ವೆ ಸ್ಟೇಷನ್&zwnj; ಮೂಲಕ ಸುಳ್ಯ- ನಾಪೋಕ್ಲು ಮಾರ್ಗವಾಗಿ ಮೈಸೂರಿಗೆ ನೂತನ ರೈಲು ಮಾರ್ಗ ನಿರ್ಮಾಣದ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಂಸದ ಕ್ಯಾ। ಬ್ರಿಜೇಶ್ ಚೌಟರವರ ನೇತೃತ್ವದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮನವಿ ಮಾಡಿದ್ದರು. ಈ ಪ್ರಸ್ತಾಪಿತ ರೈಲು ಮಾರ್ಗವು ಮಂಗಳೂರು-ಹಾಸನ ರೈಲು ಮಾರ್ಗದಲ್ಲಿರುವ 'ಕಾಣಿಯೂರು' ನಿಲ್ದಾಣದಿಂದ (ಇದು ಹಿಂದೆ ಪ್ರಸ್ತಾಪಿಸಲಾದ ಕಾಣಿಯೂರು-ಕಾಞಂಗಾಡ್ ಮಾರ್ಗದ ಜಂಕ್ಷನ್ ಕೂಡ ಆಗಿತ್ತು) ಪ್ರಾರಂಭಿಸಲು ಮನವಿ ಸಲ್ಲಿಸಲಾಗಿತ್ತು. ಈ ಮಾರ್ಗ ಆದರೆ ಸುಳ್ಯ ಮತ್ತು ನಾಪೋಕ್ಲು ಮೂಲಕ ಹಾದುಹೋಗಿ, ಪ್ರಸ್ತಾಪಿತ ಕುಶಾಲನಗರ -ಮೈಸೂರು ರೈಲು ಮಾರ್ಗವನ್ನು ಕುಶಾಲನಗರದಲ್ಲಿ ಸಂಪರ್ಕಿಸಲಿದೆ. ತನ್ಮೂಲಕ ಮೈಸೂರು ಮತ್ತು ಮುಂದಿನ ಊರುಗಳಿಗೆ ನೇರ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ತಾಲೂಕು ಆಗಿದ್ದರೂ, ಸುಳ್ಯ ತಾಲೂಕಿನಲ್ಲಿ ಪ್ರಸ್ತುತ ಯಾವುದೇ ರೈಲು ಹಳಿ ಅಥವಾ ರೈಲು ನಿಲ್ದಾಣವಿಲ್ಲ. ಆದ್ದರಿಂದ ಈ ಮನವಿಯನ್ನು ಪುರಸ್ಕರಿಸಿ ಈ ಯೋಜನೆ ನೀಡಬೇಕಾಗಿ ಮನವಿಯಲ್ಲಿ ಆಗ್ರಹಿಸಲಾಗಿತ್ತು.&lt;/p&gt;&lt;img&gt;&lt;p&gt;ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಬರುವ ಸುಬ್ರಹ್ಮಣ್ಯ-ಸಕಲೇಶಪುರ ಘಾಟ್ ಮಾರ್ಗ ಈಗಾಗಲೇ ತನ್ನ ಪೂರ್ಣ ಸಾಮರ್ಥ್ಯವನ್ನು ತಲುಪಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾಪವು ಅತ್ಯಂತ ನಿರ್ಣಾಯಕವಾಗಿದೆ. ಕಾರ್ಯಾಚರಣೆಯ ಅಡೆತಡೆಗಳಿಂದಾಗಿ ಈ ವಿಭಾಗದಲ್ಲಿ ಹೊಸ&lt;/p&gt;&lt;p&gt;ರೈಲುಗಳನ್ನು ಪರಿಚಯಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಪ್ರಸ್ತುತ ಪ್ರತಿದಿನ ಸುಮಾರು 12 ಪ್ಯಾಸೆಂಜರ್ ಮತ್ತು 4 ಗೂಡ್ಸ್ ರೈಲುಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಇದು ಗರಿಷ್ಠ ಒತ್ತಡದಲ್ಲಿದೆ. ಪ್ರಸ್ತಾಪಿತ ಕಾಣಿಯೂರು - ಸುಳ್ಯ - ನಾಪೋಕ್ಲು - ಕುಶಾಲನಗರ ಮಾರ್ಗವು ಅಸ್ತಿತ್ವದಲ್ಲಿರುವ ಮಾರ್ಗದ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚುವರಿ ರೈಲು ಓಡಾಟದ ಸಾಮರ್ಥ್ಯವನ್ನು ಸೃಷ್ಟಿಸಲು ಮತ್ತು ಹೊಸ ಪ್ರಯಾಣಿಕ ಹಾಗೂ ಸರಕು ಸೇವೆಗಳನ್ನು ಆರಂಭಿಸಲು ಸಹಕಾರಿಯಾಗಲಿದೆ. ಅಲ್ಲದೆ, ಈ ಹೊಸಮಾರ್ಗವು ಕರಾವಳಿ ಕರ್ನಾಟಕ ಮತ್ತು ಒಳನಾಡು ಪ್ರದೇಶಗಳನ್ನು ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಭಾರತದೊಂದಿಗೆ ಸಂಪರ್ಕಿಸಲು ನೇರ ರೈಲುಗಳನ್ನು ಓಡಿಸಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಕಾಣಿಯೂರು-ಸುಳ್ಯ-ನಾಪೋಕ್ಲು-ಕುಶಾಲನಗರ-ಮೈಸೂರು ರೈಲುಮಾರ್ಗದ ಸರ್ವೇ ನಡೆಸಲು ರೈಲ್ವೇ ಮಂಡಳಿ ಮತ್ತು ಸಂಬಂಧಿತ ವಿಭಾಗಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮತ್ತು ಮುಂಬರುವ ರೈಲ್ವೇ ಮೂಲಸೌಕರ್ಯ ಯೋಜನೆಗಳು ಹಾಗೂ ಬಜೆಟ್ ಅವಕಾಶಗಳಲ್ಲಿ ಈ ನೂತನ ಮಾರ್ಗದ ನಿರ್ಮಾಣದ ಪ್ರಸ್ತಾವನೆಯನ್ನು ಸೇರಿಸಬೇಕೆಂದು ಎಂದು ಮನವಿಯಲ್ಲಿ ತಿಳಿಸಲಾಗಿತ್ತು.&lt;/p&gt;&lt;img&gt;&lt;p&gt;ದ.ಕ.ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಎಡಮಂಗಲ ಪೇಟೆಯಲ್ಲಿ ಬರುವ ಎರಡು ಕಡೆಗಳಲ್ಲಿನ ರೈಲ್ವೆ ಕ್ರಾಸಿಂಗ್&zwnj; ಗೇಟ್&zwnj;ಗಳ ಬದಲಾಗಿ ಓವರ್&zwnj;ಬ್ರಿಡ್ಜ್&zwnj; ನಿರ್ಮಾಣಕ್ಕೆ ತ್ವರಿತ ಕ್ರಮಕೈಗೊಳ್ಳುವಂತೆ ಸಂಸದ ಕ್ಯಾ.ಬ್ರಿಜೇಶ್&zwnj; ಚೌಟ ಮತ್ತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಕಾರ್ಯಕರ್ತ ಎಡಮಂಗಲದ ವಿನಯಚಂದ್ರ ಅವರು ಮನವಿ ಸಲ್ಲಿಸಿದ್ದಾರೆ.&lt;/p&gt;&lt;p&gt;ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಬರುವ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ಪ್ರಮುಖ ರಸ್ತೆಗಳಿಗೆ ಅಡ್ಡವಾಗಿ ಎಲ್&zwnj;ಸಿ 69 ಮತ್ತು ಎಲ್&zwnj;ಸಿ 70 ಎಂಬ ಎರಡು ರೈಲ್ವೆ ಲೆವೆಲ್&zwnj; ಕ್ರಾಸಿಂಗ್&zwnj; ಗೇಟ್&zwnj;ಗಳಿವೆ. ಈ ರಸ್ತೆ ಗ್ರಾಮಸ್ಥರಿಗೆ ಪ್ರಮುಖ ಮಾರ್ಗವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೆ ಇಲಾಖೆ ಈ ಗೇಟ್&zwnj;ಗಳನ್ನು ತೆಗೆದು ಅಡರ್&zwnj;ಪಾಸ್&zwnj; ಅಥವಾ ಓವರ್&zwnj;ಬ್ರಿಡ್ಜ್&zwnj; ನಿರ್ಮಿಸಲು ಈಗಾಗಲೇ ನಕ್ಷೆ ಸಿದ್ದ್ದಪಡಿಸಿದೆ ಎಂಬ ಮಾಹಿತಿ ಇದೆ. ಈ ಯೋಜನೆಯ ಅನುಷ್ಠಾನಕ್ಕೆ ಇನ್ನೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಪರಿಣಾಮ ರೈಲು ಸಂಚಾರದ ವೇಳೆ ಗೇಟ್&zwnj; ಅಳವಡಿಸುವ ಸಂದರ್ಭದಲ್ಲಿ ದಿನನಿತ್ಯ ಗಂಟೆ ಗಟ್ಟಲೆ ಎರಡೂ ಕಡೆಗಳಲ್ಲಿ ವಾಹನ ಸವಾರರು ನಿಲ್ಲುವ ಪರಿಸ್ಥಿತಿ ಎದುರಾಗುತ್ತಿದೆ. ತಾವುಗಳು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದು ಈ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಲು ಅಗತ್ಯ ಒತ್ತಡ ತರಬೇಕೆಂದು ಅವರು ಮನವಿಯಲ್ಲಿ ವಿನಂತಿಸಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/kodagu-railway-projects-mp-yaduveer-dismisses-coorg-rail-rumors-while-sullia-pushes-for-alternate-route-gdp-y3kf8bg"/>
        </item>
        <item>
            <title><![CDATA[ಕೊಡಗಿನ ತೋರ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’: ಎ.ಎಸ್.ಪೊನ್ನಣ್ಣ ಹೇಳೋದೇನು?]]></title>
            <link>https://kannada.asianetnews.com/karnataka-districts/as-ponnanna-kodagu-gowda-samaja-land-allocation-arebhashe-festival-gvd/articleshow-z5307m9</link>
            <guid isPermaLink="true">https://kannada.asianetnews.com/karnataka-districts/as-ponnanna-kodagu-gowda-samaja-land-allocation-arebhashe-festival-gvd/articleshow-z5307m9</guid>
            <pubDate>Wed, 13 May 2026 22:54:20 +0530</pubDate>
            <description><![CDATA[&lt;p&gt;ಭಾಗಮಂಡಲ ಗೌಡ ಸಮಾಜ ನೂತನ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ನಿಗದಿ ಮಾಡಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krh5gb7gyqh9xvhz92ermk8c,imgname-vjvj-1778692664560.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಮೇ.13):&lt;/strong&gt; ಮದೆನಾಡು ಬಳಿ ಕೊಡಗು ಗೌಡ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ 6 ಎಕರೆ ಭೂಮಿ ಕಾಯ್ದಿರಿಸಿದೆ. ಹಾಗೆಯೇ ಭಾಗಮಂಡಲ ಗೌಡ ಸಮಾಜ ನೂತನ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ನಿಗದಿ ಮಾಡಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಅರೆಭಾಷೆ, ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ತೋರ ಸಮುದಾಯ ಭವನದ ಆವರಣದಲ್ಲಿ ಬುಧವಾರ ನಡೆದ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.&lt;/p&gt;&lt;p&gt;ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ನವೆಂಬರ್ ತಿಂಗಳಲ್ಲಿ ನಡೆದ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದಂತೆ 6 ಎಕರೆ ಭೂಮಿ ನೀಡಿದ್ದಾರೆ. ಹಾಗೆಯೇ ಭಾಗಮಂಡಲ ಗೌಡ ಸಮಾಜ ನೂತನ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ಪ್ರಕಟಿಸಿದ್ದರು. ಅದರಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ನುಡಿದಂತೆ ನಡೆದಿದ್ದು, ಸರ್ಕಾರ ಎಲ್ಲಾ ಸಮಾಜಗಳ ಶ್ರೇಯೋಭಿವೃದ್ಧಿಗೆ ಬದ್ಧವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.&lt;/p&gt;&lt;p&gt;ಗಡಿನಾಡ ಉತ್ಸವಗಳು, ಗ್ರಾಮೋತ್ಸವ ಕಾರ್ಯಕ್ರಮಗಳು ಹಳ್ಳಿಗಳಿಗೂ ತಲುಪಿದಾಗ ಅರೆಭಾಷೆ, ಸಂಸ್ಕೃತಿ, ಸಾಹಿತ್ಯ, ಪರಂಪರೆ ಮತ್ತಷ್ಟು ಗಟ್ಟಿಗೊಳಿಸಲು ಅನುಕೂಲವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಒಂದೆಡೆ ಸೇರಲು ಕಾರ್ಯಕ್ರಮ ಅನುಕೂಲವಾಗಿದೆ ಎಂದು ಎ.ಎಸ್.ಪೊನ್ನಣ್ಣ ನುಡಿದರು. ಯಾವುದೇ ಒಂದು ಭಾಷೆಗೆ ಗಡಿ ಇಲ್ಲ. ಭಾಷೆಯನ್ನು ಮತ್ತಷ್ಟು ವಿಸ್ತರಿಸಿ ಬೆಳೆಸುವಲ್ಲಿ ಶ್ರಮಿಸಬೇಕು. ಆ ನಿಟ್ಟಿನಲ್ಲಿ ಕುಟುಂಬದಿಂದಲೇ ಭಾಷೆ ಬೆಳವಣಿಗೆಗೆ ಪ್ರಯತ್ನಗಳು ನಡೆಯಬೇಕು. ಭಾಷೆ ಉಳಿದರೆ ಜನಾಂಗ ಉಳಿಯುತ್ತದೆ ಎಂಬುದನ್ನು ಮರೆಯಬಾರದು ಎಂದರು.&lt;/p&gt;&lt;p&gt;ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ ಅವರು ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಹಲವು ವಿಭಿನ್ನ ಹಾಗೂ ವಿಶಿಷ್ಟ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವುದು ಅಕಾಡೆಮಿ ಕಾರ್ಯ ಚಟುವಟಿಕೆಗಳನ್ನು ತಿಳಿಸಲು ಸಹಕಾರಿಯಾಗಿದೆ. ಇದರಿಂದ ಸಾಹಿತ್ಯ ಬೆಳವಣಿಗೆಗೆ ಅನುಕೂಲವಾಗಿದೆ ಎಂದು ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಅಕಾಡೆಮಿ ವತಿಯಿಂದ ಸುಳ್ಯ ತಾಲ್ಲೂಕಿನ ಬಂದ್ಯಡ್ಕ, ಮಂಡೆಕೋಲು, ಮಡಿಕೇರಿ ತಾಲ್ಲೂಕಿನ ಚೆಯ್ಯಂಡಾಣಿ, ಸೇರಿದಂತೆ ವಿವಿಧ ಕಡೆಗಳಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.&lt;/p&gt;&lt;p&gt;ಹಾಗೆಯೇ ವಿವಿಧ ಕಡೆಗಳಲ್ಲಿ ಗ್ರಾಮೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಕಾಡೆಮಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಕ್ಕೆ ತಲುಪಿಸಲು ಶ್ರಮಿಸಲಾಗಿದೆ ಎಂದರು. ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಜಾನಪದ ಕಲೆಗಳು ಮತ್ತಿತರ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಲಾಗುತ್ತದೆ. ಅರೆಭಾಷೆ ಸಾಂಸ್ಕೃತಿಕ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಹಾಗೆಯೇ ಸಾಹಿತ್ಯ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಅರೆಭಾಷೆ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸದಾನಂದ ಮಾವಜಿ ಅವರು ವಿವರಿಸಿದರು. ಅರೆಭಾಷೆ ಜಾತಿಯನ್ನು ಮೀರಿ ಬೆಳೆದಿದ್ದು, ರಾಜ್ಯ ಭಾಷೆಯಾಗಿದೆ.&lt;/p&gt;&lt;p&gt;2025 ರಲ್ಲಿ ಗಡಿನಾಡ ಉತ್ಸವ ಆರಂಭಿಸಿ ಹಲವು ಸಾಂಸ್ಕೃತಿಕ ಶಿಬಿರ ಏರ್ಪಡಿಸಲಾಗಿದೆ ಎಂದರು. ಅರೆಭಾಷೆಯನ್ನು ಎಲ್ಲೆಡೆ ಫಸರಿಸುವಲ್ಲಿ ಕತೆ, ಕವನ, ಸಣ್ಣ ಕತೆಗಳು, ಬರಹ, ಪ್ರೋತ್ಸಾಹಿಸುವಲ್ಲಿ ತ್ರೈಮಾಸಿಕ &lsquo;ಹಿಂಗಾರ&rsquo;ವನ್ನು ಪ್ರಕಟಿಸಲಾಗುತ್ತಿದ್ದು, ಈ ಅವಕಾಶವನ್ನು ಅರೆಭಾಷಿಕರು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಕೋರಿದರು. ಕೆದಮುಳ್ಳೂರು ಗ್ರಾಮದ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪೊಕ್ಕುಳಂಡ್ರ ಎಸ್.ದಿನೇಶ್ ಅವರು ಮಾತನಾಡಿ ತೋರ ಗ್ರಾಮದ ಸುತ್ತಮುತ್ತ ಅರೆಭಾಷಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದು, ಅರೆಭಾಷಿಕರ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತಾಗಬೇಕು ಎಂದು ಅವರು ಮನವಿ ಮಾಡಿದರು.&lt;/p&gt;&lt;h2&gt;&lt;strong&gt;ಪದ್ಧತಿಯು ವಿಶಿಷ್ಟ&lt;/strong&gt;&lt;/h2&gt;&lt;p&gt;ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟಿ ವಾಸು ಗಣಪತಿ ಅವರು ಮಾತನಾಡಿ ಅಕಾಡೆಮಿ ಆರಂಭದ ನಂತರ ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಸಹಕಾರ ಆಗಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಬೇಕು ಎಂದು ಸಲಹೆ ಮಾಡಿದರು. ಮಡಿಕೇರಿ ಕೊಡಗು ಗೌಡ ಸಮಾಜದ ನಿರ್ದೇಶಕರಾದ ತೋಟಂಬೈಲು ಕುಮಾರ ಅವರು ಮಾತನಾಡಿ ಅರೆಭಾಷಿಕರಲ್ಲಿ ಮದುವೆ ಪದ್ಧತಿಯು ವಿಶಿಷ್ಟವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಆದರೆ ಮದುವೆ ಪದ್ಧತಿಯನ್ನು ಹಿಂದಿನಂತೆ ನಡೆಸಿಕೊಂಡು ಹೋಗುವಂತಾಗಬೇಕು ಎಂದು ಸಲಹೆ ಮಾಡಿದರು.&lt;/p&gt;&lt;p&gt;ಕೆದಮುಳ್ಳೂರು ಗ್ರಾಮದ ಜಾನಪದ ವಿಭಾಗದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕುಡಿಯರ ಬಿ.ಅಮ್ಮುಣಿ, ಹಿರಿಯರಾದ ಪೊಕ್ಕುಳಂಡ್ರ ಕೆ.ಪಾಪಯ್ಯ, ತೋಟಂಬೈಲು ರಾಜು(ಪೆಮ್ಮಯ್ಯ) ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಬೊಳಿಯಂಡ್ರ ಹರಿಪ್ರಸಾದ್, ಅಕಾಡೆಮಿ ಸದಸ್ಯರಾದ ಪೂಳಕಂಡ ಸಂದೀಪ್ ಎಂ., ತೇಜಕುಮಾರ್ ಕುಡೆಕಲ್ಲು, ಡಾ.ಎನ್.ಎ.ಜ್ಞಾನೇಶ್, ಲತಾ ಪ್ರಸಾದ್ ಕುದ್ಪಾಜೆ, ಕುದುಪಜೆ ಕೆ.ಪ್ರಕಾಶ್ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಇದ್ದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/as-ponnanna-kodagu-gowda-samaja-land-allocation-arebhashe-festival-gvd/articleshow-z5307m9"/>
        </item>
        <item>
            <title><![CDATA[ಒಂದೇ ವಾರದಲ್ಲಿ ಸುರಿಯಬಹುದು ನಾಲ್ಕು ತಿಂಗಳ ಮಳೆ: ಕೊಡಗಿನಲ್ಲಿ ಹೈ ಅಲರ್ಟ್!]]></title>
            <link>https://kannada.asianetnews.com/karnataka-districts/kodagu-flood-landslide-alert-district-administration-prepares-for-heavy-monsoon-gvd/articleshow-zs816fr</link>
            <guid isPermaLink="true">https://kannada.asianetnews.com/karnataka-districts/kodagu-flood-landslide-alert-district-administration-prepares-for-heavy-monsoon-gvd/articleshow-zs816fr</guid>
            <pubDate>Tue, 02 Jun 2026 22:53:14 +0530</pubDate>
            <description><![CDATA[&lt;p&gt;ಈ ವರ್ಷ ಎಲ್ನಿನೋ ಪರಿಣಾಮದಿಂದಾಗಿ ಮಳೆಯ ಪ್ರಮಾಣ ಶೇ 50 ರಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಹೇಳಿದ್ದಾರೆ. ಆದರೆ ಮೂರ್ನಾಲ್ಕು ತಿಂಗಳ ಕಾಲ ಸುರಿಯುವ ಮಳೆ ಕೇವಲ ಒಂದೇ ವಾರದಲ್ಲಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kscs9xajw4ge8ssfe3kcnx4j,imgname-screenshot-2026-05-23-180203-1779619394898.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್. ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.02):&lt;/strong&gt; ಈ ವರ್ಷ ಎಲ್ನಿನೋ ಪರಿಣಾಮದಿಂದಾಗಿ ಮಳೆಯ ಪ್ರಮಾಣ ಶೇ 50 ರಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಹೇಳಿದ್ದಾರೆ. ಆದರೆ ಮೂರ್ನಾಲ್ಕು ತಿಂಗಳ ಕಾಲ ಸುರಿಯುವ ಮಳೆ ಕೇವಲ ಒಂದೇ ವಾರದಲ್ಲಿ ಸುರಿದರೆ ಆಗ ಅನಾಹುತಗಳು ಆಗುವುದು ತಪ್ಪಿದ್ದಲ್ಲ. ಇದೇ ವಿಷಯ ಈಗ ಕೊಡಗು ಜಿಲ್ಲಾಡಳಿತ ಆತಂಕಗೊಳ್ಳುವಂತೆ ಮಾಡಿದ್ದು ಜಿಲ್ಲಾಡಳಿತ ಅಲರ್ಟ್ ಆಗಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಬಂತೆಂದರೆ ಕನಿಷ್ಠ ನಾಲ್ಕೈ ತಿಂಗಳು ನಿರಂತರ ಮಳೆ ಇದ್ದೇ ಇರುತ್ತದೆ. ಈ ನಾಲ್ಕು ತಿಂಗಳು ಕೂಡ ಸಾಧಾರಣ ಮಳೆ ಬರುತ್ತಿದ್ದರೆ ಯಾವುದೇ ಸಮಸ್ಯೆ ಸಂಭವಿಸುವುದಿಲ್ಲ.&lt;/p&gt;&lt;p&gt;ಆದರೆ ಅದೇ ಮಳೆ ಒಂದೇ ವಾರದಲ್ಲಿ ಸುರಿದರೆ ಪ್ರವಾಹ, ಭೂಕುಸಿತ ಆಗುವುದು ಖಚಿತ. 2018 ರಿಂದ 2020 ರವರೆಗೆ ಕೊಡಗು ಜಿಲ್ಲೆಯಲ್ಲಿ ಆಗಿದ್ದು ಕೂಡ ಇದೇ. ಅಂದಿನಿಂದ ಇದುವರೆಗೆ ಪ್ರತೀ ವರ್ಷ ಮಳೆಗಾಲ ಬಂತೆಂದರೆ ಕೊಡಗು ಜಿಲ್ಲೆಯಲ್ಲಿ ಆತಂಕದ ವಾತಾವರಣ ಇದ್ದೇ ಇರುತ್ತದೆ. ಹೀಗಾಗಿಯೇ ಕೊಡಗು ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಈಗಾಗಲೇ ಯಾವೆಲ್ಲಾ ಪ್ರದೇಶಗಳಿಗೆ ಅಪಾಯವಿದೆ ಎನ್ನುವುದನ್ನು ಗುರುತ್ತಿಸಿದೆ. ಅಲ್ಲದೆ ಒಂದು ವೇಳೆ ತೀವ್ರತರವಾಗಿ ಮಳೆ ಸುರಿದಲ್ಲಿ ಯಾವ ಪ್ರದೇಶಗಳಲ್ಲಿ ಪ್ರವಾಹ ಎದುರಾಗಬಹುದು ಎಂದು ಕೂಡ ಗುರುತ್ತಿಸಲಾಗಿದೆ.&lt;/p&gt;&lt;p&gt;ಇಂತಹ ಪ್ರದೇಶಗಳಿಂದ ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಸ್ಥಳಾಂತರ ಮಾಡಲು ನಿರ್ಧರಿಸಿದೆ. ಎಲ್ಲೆಲ್ಲಿ ಭೂಕುಸಿತ ಅಥವಾ ಪ್ರವಾಹವಾಗುವ ಸಾಧ್ಯತೆ ಇದೆಯೋ ಆ ಪ್ರದೇಶಗಳ ಸಮೀಪದಲ್ಲೇ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಳಿತ ಮುಂದಾಗಿದೆ. ಮತ್ತೊಂದೆಡೆ ಪೊಲೀಸ್ ಇಲಾಖೆಯಿಂದ ತಲಾ ಒಂಭತ್ತು ಜನರಿರುವ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಈ ತಂಡಗಳಿಗೆ ಪ್ರವಾಹ ಮತ್ತು ಭೂಕುಸಿತ ಎದುರಾದಲ್ಲಿ ಜನರನ್ನು ರಕ್ಷಣೆ ಮಾಡುವುದು ಹೇಗೆ ಎಂದೆಲ್ಲಾ ತರಬೇತಿಯನ್ನು ನಡೆಸಲಾಗಿದೆ.&lt;/p&gt;&lt;h2&gt;&lt;strong&gt;ಮಳೆಗಾಲವನ್ನು ಎದುರಿಸಲು ಸಿದ್ಧತೆ&lt;/strong&gt;&lt;/h2&gt;&lt;p&gt;ಹಾರಂಗಿ ಹಿನ್ನೀರಿನಲ್ಲಿ ತರಬೇತಿ ನಡೆಸಲಾಗಿದ್ದು, ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮಾಡುವುದು ಹೇಗೆ ಎನ್ನುವ ಅಣುಕು ಕಾರ್ಯಾಚರಣೆಯನ್ನು ಕೂಡ ನಡೆಸಲಾಗಿದೆ. ಒಟ್ಟಿನಲ್ಲಿ ಕೊಡಗು ಜಿಲ್ಲೆಗೆ ಇನ್ನೇನು ಕೆಲವೇ ದಿನಗಳಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿಯ ಮಳೆಗಾಲದಲ್ಲಿ ಮಳೆಯ ತೀವ್ರ ಕೊರತೆ ಇದೆ ಎನ್ನುವುದನ್ನು ಹೇಳಲಾಗಿದ್ದರೂ ಕೆಲವು ದಿನಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದಲ್ಲಿ ಊಹಿಸಲು ಅಸಾಧ್ಯವಾದ ಅನಾಹುತಗಳ ಸಂಭವಿಸಲಿವೆ. ಇವೆಲ್ಲವನ್ನು ಮನಗಂಡಿರುವ ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಸಿದ್ಧತೆ ನಡೆಸಿದೆ.&lt;/p&gt;&lt;p&gt;ತೀವ್ರ ಪ್ರಮಾಣದಲ್ಲಿ ಗಾಳಿ ಮಳೆ ಸುರಿದಲ್ಲಿ ಅಪಾರ ಪ್ರಮಾಣದ ವಿದ್ಯುತ್ ಕಂಬಗಳು ಧರೆಗೆ ಉರುಳಬಹುದು. ಹೀಗಾಗಿ ಜಿಲ್ಲೆ ಕತ್ತಲಿನಲ್ಲಿ ಮುಳುಗಬಾರದು ಎನ್ನುವ ದೃಷ್ಟಿಯಿಂದ ಕೆಇಬಿ ಇಲಾಖೆ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಶೇಕರಣೆ ಮಾಡಿಟ್ಟುಕೊಂಡಿದೆ. ಒಟ್ಟಿನಲ್ಲಿ ಮುಂಗಾರು ಸಮಯದ ನಾಲ್ಕು ತಿಂಗಳು ಸುರಿಯಬೇಕಾದ ಮಳೆ ಹವಾಮಾನ ವೈಪರೀತ್ಯದಿಂದಾಗಿ ಒಂದು ತಿಂಗಳು, ಹದಿನೈದು ದಿನ ಅಥವಾ ನಾಲ್ಕು ದಿನಗಳಲ್ಲಿಯೇ ಸುರಿದು ಬಿಡುವ ಸಾಧ್ಯತೆಯೇ ಹೆಚ್ಚಿದೆ. ಇದು ಅಪಾಯವಾಗಲಿದ್ದು, ಇದರಿಂದಲೇ ಜಿಲ್ಲಾಡಳಿತ ಈ ಬಾರಿ ಮಳೆ ಕೊರತೆ ಎಂಬ ಮಾಹಿತಿ ಇರುವಾಗಲೇ ಸಂಪೂರ್ಣ ಮುನ್ನೆಚ್ಚರಿಕೆ ವಹಿಸಿದೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-flood-landslide-alert-district-administration-prepares-for-heavy-monsoon-gvd/articleshow-zs816fr"/>
        </item>
        <item>
            <title><![CDATA[ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!]]></title>
            <link>https://kannada.asianetnews.com/gallery/karnataka-districts/kodagu-dubare-elephant-camp-tourist-death-incident-eye-donation-20-lakh-compensation-negligence-sat-zv1udqv</link>
            <guid isPermaLink="true">https://kannada.asianetnews.com/gallery/karnataka-districts/kodagu-dubare-elephant-camp-tourist-death-incident-eye-donation-20-lakh-compensation-negligence-sat-zv1udqv</guid>
            <pubDate>Mon, 18 May 2026 18:28:01 +0530</pubDate>
            <description><![CDATA[&lt;p&gt;ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ. ಈ ದುರಂತವು ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಸುರಕ್ಷತಾ ಲೋಪ ಬಯಲಿಗೆಳೆದಿದೆ. ಮೃತರ ಪತಿ, ಪತ್ನಿಯ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krxhq979sxx7an22a88s77hw,imgname-kodagu-dubare-elephant-camp-1779108127976.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ. ಈ ದುರಂತವು ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಸುರಕ್ಷತಾ ಲೋಪ ಬಯಲಿಗೆಳೆದಿದೆ. ಮೃತರ ಪತಿ, ಪತ್ನಿಯ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ.&lt;/p&gt;&lt;img&gt;&lt;p&gt;ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಅವರ ಸಾವು ಈಗ ಅರಣ್ಯ ಇಲಾಖೆಯ ಹತ್ತಾರು ಲೋಪದೋಷಗಳನ್ನು ಎತ್ತಿ ತೋರಿಸುತ್ತಿದೆ. ಈ ನಡುವೆ, ಪತ್ನಿಯನ್ನು ಕಳೆದುಕೊಂಡ ನೋವಿನಲ್ಲೂ ಪತಿ ಜೋಯೆಲ್ ಅವರು ಪತ್ನಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.&lt;/p&gt;&lt;img&gt;&lt;p&gt;ದುರಂತದ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ ಪತಿ ಜೋಯೆಲ್, 'ನನ್ನ ಪತ್ನಿಯನ್ನು ಉಳಿಸಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ಆನೆಯ ತುಳಿತಕ್ಕೆ ಆಕೆಯ ದೇಹ ನಜ್ಜುಗುಜ್ಜಾಗಿದೆ. ಹೀಗಾಗಿ ಎಲ್ಲ ಅಂಗಾಂಗಗಳನ್ನು ದಾನ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಕನಿಷ್ಠ ಆಕೆಯ ಕಣ್ಣುಗಳನ್ನಾದರೂ ದಾನ ಮಾಡುತ್ತೇನೆ. ಆಕೆ ಬೇರೆಯವರ ಕಣ್ಣಿನ ಮೂಲಕ ಈ ಪ್ರಪಂಚವನ್ನು ನೋಡುತ್ತಾ ಬದುಕಿರಲಿ' ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.&lt;/p&gt;&lt;img&gt;&lt;p&gt;ದುಬಾರೆಯಲ್ಲಿ ಪ್ರವಾಸಿಗರಿಗೆ ಕನಿಷ್ಠ ಸುರಕ್ಷತೆಯೂ ಇಲ್ಲ ಎಂದು ಜೋಯೆಲ್ ದೂರಿದ್ದಾರೆ. 'ನನ್ನ ಪತ್ನಿ ಆನೆಗಳ ಕಾಳಗದ ನಡುವೆ ಸಿಲುಕಿ ಕೆಳಗೆ ಬಿದ್ದಾಗ ರಕ್ಷಿಸಲು ಯಾರೂ ಬರಲಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಕೂಡ ಸಿಗಲಿಲ್ಲ. ಇಲಾಖೆಯ ಬೇಜವಾಬ್ದಾರಿಯೇ ನನ್ನ ಪತ್ನಿಯ ಸಾವಿಗೆ ಕಾರಣ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಘಟನೆಯ ಬಗ್ಗೆ ಮಡಿಕೇರಿ ಡಿಎಫ್&zwnj;ಓ (DFO) ಅಭಿಷೇಕ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯವಾಗಿ 'ಮಕ್ನಾ' (ದಂತವಿಲ್ಲದ ಗಂಡಾನೆ) ಆನೆಗಳನ್ನು ನೋಡಿದಾಗ ಕೆಲವು ಆನೆಗಳು ವಿಪರೀತ ರೋಷಗೊಳ್ಳುತ್ತವೆ. ಇಲ್ಲಿಯೂ ಅದೇ ಆಗಿದೆ. ಮಕ್ನಾ ಆನೆಯನ್ನು ಕಂಡಿದ್ದರಿಂದ ಕಂಜನ್ ಆನೆ ಆಕ್ರೋಶಗೊಂಡಿದೆ.&lt;/p&gt;&lt;img&gt;&lt;p&gt;ಮಾವುತರು ಎಷ್ಟೇ ಪ್ರಯತ್ನಿಸಿದರೂ ಕಂಜನ್ ಆನೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಮೃತ ಮಹಿಳೆಯ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಈ ದುರಂತಕ್ಕೆ ಮಾವುತರ ನಿರ್ಲಕ್ಷ್ಯವೇ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಂಜನ್ ಆನೆಯ ಅಧಿಕೃತ ಮಾವುತ ವಿಜಯ ಎಂಬುವವರು ಘಟನೆಯ ವೇಳೆ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಅವರ ಬದಲಿಗೆ ಆನೆಗಳನ್ನು ನಿಭಾಯಿಸಲು ಅನುಭವವಿಲ್ಲದ 'ಹೊರಗುತ್ತಿಗೆ ನೌಕರ' ಆನೆಯನ್ನು ಮುನ್ನಡೆಸುತ್ತಿದ್ದನು ಎಂಬ ಮಾಹಿತಿ ಹೊರಬಿದ್ದಿದೆ.&amp;nbsp;&lt;/p&gt;&lt;p&gt;ಸಾಮಾನ್ಯವಾಗಿ ಆನೆಗಳು ತಮ್ಮ ಮಾವುತ ಮತ್ತು ಕವಾಡಿಗರ ಮಾತನ್ನು ಮಾತ್ರ ಕೇಳುತ್ತವೆ. ಆದರೆ, ಅಪರಿಚಿತ ವ್ಯಕ್ತಿ ಆನೆಯನ್ನು ನಡೆಸುತ್ತಿದ್ದರಿಂದ, ಆನೆ ರೊಚ್ಚಿಗೆದ್ದಾಗ ಅದನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಇತರ ಮಾವುತರು ವಿಶ್ಲೇಷಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ, ಪ್ರವಾಸಿಗರ ಆಕರ್ಷಣೀಯ ತಾಣವಾಗಿದ್ದ ದುಬಾರೆ ಈಗ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಸ್ಮಶಾನವಾಗಿ ಮಾರ್ಪಟ್ಟಿದೆ. 20 ಲಕ್ಷ ಪರಿಹಾರವಷ್ಟೇ ಸಾಲದು, ಈ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/kodagu-dubare-elephant-camp-tourist-death-incident-eye-donation-20-lakh-compensation-negligence-sat-zv1udqv"/>
        </item>
    </channel>
</rss>
