<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 14 Jul 2026 20:51:40 +0530</lastBuildDate>
        <atom:link href="https://kannada.asianetnews.com/rss/kodagu" rel="self" type="application/rss+xml"/>
        <item>
            <title><![CDATA[ಕೊಡಗಿನ ಕನ್ನಂಬಾಡಿಯಲ್ಲಿ 2 ದಿನಗಳ ಕಾಲ ಕೆರೆಯಲ್ಲಿ ಸಿಲುಕಿದ್ದ ಕಾಡಾನೆ: ಕೊನೆಗೆ ಏನಾಯಿತು?]]></title>
            <link>https://kannada.asianetnews.com/karnataka-districts/karnataka-forest-news-kodagu-wild-elephant-rescue-operation-gvd/articleshow-09szia4</link>
            <guid isPermaLink="true">https://kannada.asianetnews.com/karnataka-districts/karnataka-forest-news-kodagu-wild-elephant-rescue-operation-gvd/articleshow-09szia4</guid>
            <pubDate>Wed, 08 Jul 2026 20:07:38 +0530</pubDate>
            <description><![CDATA[&lt;p&gt;ಗಜರಾಜ ಅಚಾನಕ್ಕಾಗಿ ಕಾಡಿನಿಂದ ನಾಡಿನ ಕಡೆಗೆ ಬಂದಿದ್ದ. ರಾತ್ರಿ ಬಂದವನು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದ. ಹೀಗೆ ಬಿದ್ದು ಬರೋಬ್ಬರಿ ಎರಡು ದಿನಗಳ ಕಾಲ ನೀರಿನಲ್ಲಿ ಜೀವನ್ಮರಣದ ಮಧ್ಯೆ ಹೋರಾಡಿದ ಕರುಣಾಜನಕ ಕಥೆ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx12g13yghp429expwfq6myk,imgname-chc-1783521346686.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜು.08): &lt;/strong&gt;ಸ್ವಚ್ಛಂದವಾಗಿ ಕಾಡಿನಲ್ಲಿ ಓಡಾಡಿಕೊಂಡಿದ್ದ ಗಜರಾಜ ಅಚಾನಕ್ಕಾಗಿ ಕಾಡಿನಿಂದ ನಾಡಿನ ಕಡೆಗೆ ಬಂದಿದ್ದ. ರಾತ್ರಿ ಬಂದವನು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದ. ಹೀಗೆ ಬಿದ್ದು ಬರೋಬ್ಬರಿ ಎರಡು ದಿನಗಳ ಕಾಲ ನೀರಿನಲ್ಲಿ ಜೀವನ್ಮರಣದ ಮಧ್ಯೆ ಹೋರಾಡಿದ ಕರುಣಾಜನಕ ಕಥೆ ಇಲ್ಲಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವನ ಸಂಘರ್ಷ ಮಿತಿ ಮೀರಿದೆ. ಆದರೆ ಯಾವುದೇ ವನ್ಯ ಜೀವಿಗಳು ತೊಂದರೆಗೆ ಸಿಲುಕಿದಾಗ ಅವುಗಳು ಕಂಡು ಕೊಡಗಿನ ಜನರು ಮಮ್ಮಲ ಮರುತ್ತಾರೆ ಎನ್ನುವುದಕ್ಕೆ ಇದೊಂದು ಘಟನೆ ಸಾಕ್ಷಿಯಾಯಿತು.&lt;/p&gt;&lt;p&gt;ಹೌದು ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದಲ್ಲಿರುವ ಕನ್ನಂಬಾಡಿ ಎಂಬ ಗ್ರಾಮದಲ್ಲಿ ಕಾಡಾನೆಯೊಂದು ಗ್ರಾಮದತ್ತ ಬಂದು ಆಕಸ್ಮಿಕವಾಗಿ ಕೆರೆಗೆ ಬಿದ್ದಿತ್ತು. ಹೀಗೆ ಕೆರೆಗೆ ಬಿದ್ದ ಕಾಡಾನೆಗೆ ಮೇಲೆ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ಜೀವನ್ಮರಣದ ಮಧ್ಯೆ ಪರದಾಡುವಂತೆ ಆಗಿತ್ತು. ಕೆರೆಯಲ್ಲಿ ಸಂಪೂರ್ಣ ಕೆಸರು ತುಂಬಿದ್ದರಿಂದ ಅದರಿಂದ ಮೇಲೆ ಬರಲಾರದಂತೆ ಕಾಡಾನೆ ಒದ್ದಾಡಿತ್ತು. ಇದರಿಂದ ನಿನ್ನೆ ಬೆಳಿಗ್ಗೆ ಕಾಡಾನೆ ಕೆರೆಯಲ್ಲಿ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ಆರಂಭದಲ್ಲಿ ಕೆರೆಯಲ್ಲಿ ಈಜಾಡುತ್ತಿರಬಹುದು. ತಾನೆ ಮೇಲೆ ಬಂದು ಹೋಗಬಹುದು ಎಂದು ಎಣಿಸಿ ಜನರು ಸುಮ್ಮನಿದ್ದರು.&lt;/p&gt;&lt;p&gt;ಆದರೆ ನಿನ್ನೆ ಮಧ್ಯಾಹ್ನವಾದರೂ ಕಾಡಾನೆ ಮೇಲೆ ಬಾರದಿದ್ದಾಗ ಅದು ಅಪಾಯಕ್ಕೆ ಸಿಲುಕಿದೆ ಎಂದರಿತು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ವಿಪರ್ಯಾಸವೆಂದರೆ ನಿನ್ನೆಯೇ ಮಾಹಿತಿ ನೀಡಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇಂದು ಮಧ್ಯಾಹ್ನವಾದರೂ ಅದನ್ನು ರಕ್ಷಿಸುವುದಕ್ಕೆ ಮುಂದಾಗಲಿಲ್ಲ. ಯಾವುದೇ ಅಧಿಕಾರಿ ಕನಿಷ್ಠ ಅತ್ತ ತಿರುಗಿ ನೋಡಲಿಲ್ಲ. ಇತ್ತ ಆನೆ ಸಮಯವಾದಂತೆಲ್ಲಾ ನಿತ್ರಾಣಗೊಳ್ಳುತ್ತಾ ಹೋಗಿತ್ತು. ಇಷ್ಟೊಂದು ಹೇಳಿದರೂ ಯಾರೂ ಕಾಡಾನೆಯನ್ನು ರಕ್ಷಿಸುವುದಕ್ಕೆ ಬಾರಲಿಲ್ಲವಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.&lt;/p&gt;&lt;p&gt;ಇಂತಹ ಪ್ರಕರಣ ನಡೆಯುತ್ತಲೇ ಇರುತ್ತವೆ. ಕಾಡಿನಲ್ಲಿ ಅವುಗಳಿಗೆ ಸರಿಯಾದ ಆಹಾರ ನೀರು ಸಿಗದಿದ್ದಾಗ ನಾಡಿನತ್ತ ಬರುತ್ತವೆ. ಬಂದು ಹೀಗೆ ಸಮಸ್ಯೆಯಲ್ಲಿ ಸಿಲುಕುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಂತಹ ಹತ್ತು ಪ್ರಕರಣಗಳು ನಡೆದಾಗ ಅರಣ್ಯ ಇಲಾಖೆ ಗಮನಕ್ಕೆ ತಂದರೆ ಅವುಗಳಲ್ಲಿ ನಾಲ್ಕೈದು ಪ್ರಕರಣಗಳನ್ನ ಮಾತ್ರ ಪರಿಶೀಲಿಸುತ್ತಾರೆ. ಉಳಿದಂತೆ ಸುಮ್ಮನಾಗುತ್ತಾರೆ ಎಂದು ಪರಿಸರವಾದಿಗಳು, ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ&lt;/strong&gt;&lt;/h2&gt;&lt;p&gt;ಹೀಗೆ ಎರಡು ದಿನಗಳ ಕಾಲ ನೀರಿನಲ್ಲಿಯೇ ಪರದಾಡಿದ ಕಾಡಾನೆ ಕನಿಷ್ಠ ಸೊಂಡಿಲನ್ನು ಮೇಲೆತ್ತಲಾಗದೆ ಪರದಾಡುತಿತ್ತು. ಎಲ್ಲರೂ ಈ ಕಾಡಾನೇ ಬದುಕುವುದಿಲ್ಲ ಎನ್ನುವ ಆತಂಕದಲ್ಲಿಯೇ ಮರುಗುತ್ತಿದ್ದರು. ಅರಣ್ಯ ಬದಿಗಳಲ್ಲಿ ತೋಟ ಹೊಂದಿರುವ ರೈತರು ತಮ್ಮ ತೋಟಗಳಲ್ಲಿ ಕಾಫಿಗಿಡ ನೆಟ್ಟರೆ ಬಂದು ಗಲಾಟೆ ಮಾಡುತ್ತಾರೆ. ಗಿಡಗಳನ್ನು ಕಿತ್ತೆಸೆದು ಪ್ರಕರಣ ದಾಖಲಿಸುತ್ತಾರೆ. ಆದರೆ ಕಾಡಾನೆಯೊಂದು ಕೆರೆಗೆ ಬಿದ್ದು ಎರಡು ದಿನಗಳಾದರೂ ಅದನ್ನು ರಕ್ಷಿಸಲು ಮುಂದಾಗಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಆದರೆ ಇಂದು ಮಧ್ಯಾಹ್ನದವರೆಗೆ ಕೆರೆಯಲ್ಲಿ ಇದ್ದ ಕಾಡಾನೆ ತಾನಾಗಿಯೇ ಕೆರೆ ಬಿಟ್ಟು ಮೇಲೆ ಬಂದಿದೆ. ಈ ಕುರಿತು ದೂರುವಾಣಿ ಮೂಲಕ ಪ್ರತಿಕ್ರಿಯಿಸಿರುವ ಅರಣ್ಯ ಅಧಿಕಾರಿಗಳು ಆನೆಗಳು ಆರೋಗ್ಯದಲ್ಲಿ ಸಮಸ್ಯೆಯಾಗಿ ನಿತ್ರಾಣಗೊಂಡಾಗ ತಮ್ಮ ದೇಹದ ಭಾರವನ್ನು ತಾಳಲಾರದೆ ಕೆರೆಗೆ ಇಳಿದು ರೆಸ್ಟ್ ಮಾಡುತ್ತವೆ. ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದ್ದಂತೆ ಅವುಗಳೇ ಮೇಲೆ ಹೋಗುತ್ತವೆ ಎಂದಿದ್ದಾರೆ. ಕಾಡಾನೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೇಲೆ ಬರಲು ಹೋರಾಡಿ ಆಗಲಾರದೆ ಒದ್ದಾಡಿತೋ, ಇಲ್ಲ ಆರೋಗ್ಯದಲ್ಲಿ ಸಮಸ್ಯೆ ಆಗಿ ಕೆರೆಗೆ ಇಳಿದು ಸುಧಾರಿಸಿಕೊಂಡಿತೋ ಏನೋ. ಏನೆ ಆಗಲಿ ಆನೆ ಮಾತ್ರ ಕೆರೆಯಿಂದ ಮೇಲೆ ಬಂದು ಸುಖಾಂತ್ಯ ಕಂಡಿದ್ದು ಮಾತ್ರ ಎಲ್ಲರಿಗೂ ಸಂತಸ ತಂದಿದೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-forest-news-kodagu-wild-elephant-rescue-operation-gvd/articleshow-09szia4"/>
        </item>
        <item>
            <title><![CDATA[ಕುಶಾಲನಗರ: ಕಾವೇರಿ ನದಿ ಹರಿವು ಪ್ರಮಾಣ ಏರಿಕೆ; 205.69 ಮಿಲಿ ಮೀಟರ್ ಪ್ರಮಾಣದ ಮಳೆ]]></title>
            <link>https://kannada.asianetnews.com/karnataka-districts/kodagu-kushalnagar-the-flow-of-the-cauvery-river-has-increased-it-has-been-raining-for-3-days-mrq/articleshow-1iyhtvm</link>
            <guid isPermaLink="true">https://kannada.asianetnews.com/karnataka-districts/kodagu-kushalnagar-the-flow-of-the-cauvery-river-has-increased-it-has-been-raining-for-3-days-mrq/articleshow-1iyhtvm</guid>
            <pubDate>Sat, 04 Jul 2026 06:52:06 +0530</pubDate>
            <description><![CDATA[ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಉಂಟಾಗಿದ್ದ ಆತಂಕದ ಪರಿಸ್ಥಿತಿಯನ್ನು ಸ್ಮರಿಸಲಾಗಿದ್ದು, ಹಾರಂಗಿ ಜಲಾಶಯದ ಒಳಹರಿವು ಮತ್ತು ನೀರಿನ ಸಂಗ್ರಹದ ಬಗ್ಗೆಯೂ ವರದಿಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwnb7tbrn2sw9agjd0jt2yfn,imgname-kushala-nagara-cauvery-1783127861624.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಶಾಲನಗರ:&lt;/strong&gt; ಕಳೆದ 3 ದಿನಗಳಿಂದ ಮಳೆ ಸುರಿಯತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.&lt;/p&gt;&lt;p&gt;ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ಸೇತುವೆಯ ಕೆಳ ಭಾಗದಲ್ಲಿ ಶುಕ್ರವಾರ ಸಂಜೆ ವೇಳೆಗೆ ಸುಮಾರು ಐದು ಅಡಿಗಳಷ್ಟು ಏರಿಕೆ ಗೋಚರಿಸಿದೆ. ಭಾಗಮಂಡಲ ತಲ ಕಾವೇರಿ ವ್ಯಾಪ್ತಿಯಲ್ಲಿ ಗುರುವಾರ 33.2 ಮಿಲಿ ಮೀಟರ್ ಪ್ರಮಾಣದ ಮಳೆಯಾಗಿದೆ.&lt;/p&gt;&lt;h2&gt;&lt;strong&gt;205.69 ಮಿಲಿ ಮೀಟರ್ ಪ್ರಮಾಣದ ಮಳೆ&lt;/strong&gt;&lt;/h2&gt;&lt;p&gt;ಕಳೆದ ಬಾರಿ ಇದೇ ಅವಧಿಯಲ್ಲಿ ಕುಶಾಲನಗರ ಕಾವೇರಿ ಸೇತುವೆ ಕೆಳ ಭಾಗ 23 ಅಡಿಗಳಷ್ಟು ಎತ್ತರದಲ್ಲಿ ನೀರು ಹರಿಯುವುದರೊಂದಿಗೆ ನದಿ ತಟದ ವ್ಯಾಪ್ತಿಯ ನಾಗರಿಕರು ಆತಂಕಕ್ಕೊಳಗಾಗಿದ್ದ ಪರಿಸ್ಥಿತಿ ಎದುರಾಗಿರುವುದನ್ನು ಸ್ಮರಿಸಬಹುದು.&lt;/p&gt;&lt;p&gt;ಕುಶಾಲನಗರ ತಾಲೂಕಿನ ವ್ಯಾಪ್ತಿಯಲ್ಲಿ ಸರಾಸರಿ ಈ ಸಾಲಿನಲ್ಲಿ ಇದುವರೆಗೆ ಒಟ್ಟು 205.69 ಮಿಲಿ ಮೀಟರ್ ಪ್ರಮಾಣದ ಮಳೆ ಸುರಿದಿದೆ.&lt;/p&gt;&lt;p&gt;&lt;strong&gt;1113 ಕ್ಯೂಸೆಕ್ಸ್ ಪ್ರಮಾಣದ ನೀರಿನ ಒಳ ಹರಿವು&lt;/strong&gt;&lt;/p&gt;&lt;p&gt;ಕಳೆದ ವರ್ಷ ಇದೇ ಅವಧಿಯಲ್ಲಿ 796.54 ಮಿಲಿ ಮೀಟರ್ ಪ್ರಮಾಣದ ಮಳೆ ಆಗಿತ್ತು. ಹಾರಂಗಿ ಜಲಾಶಯದಲ್ಲಿ ಶುಕ್ರವಾರ ಸಂಜೆ ವೇಳೆಗೆ ಜಲಾಶಯಕ್ಕೆ 1113 ಕ್ಯೂಸೆಕ್ಸ್ ಪ್ರಮಾಣದ ನೀರಿನ ಒಳ ಹರಿವು ಬರುತ್ತಿದ್ದು ಜಲಾಶಯದಲ್ಲಿ ಪ್ರಸಕ್ತ 3.3 ಟಿಎಂಸಿ ಪ್ರಮಾಣದ ನೀರಿನ ಸಂಗ್ರಹ ಇದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2859 ಅಡಿಗಳಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2853 ಅಡಿಗಳಷ್ಟು ನೀರಿನ ಸಂಗ್ರಹ ಪ್ರಮಾಣ ಕಂಡುಬಂದಿತ್ತು. ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿತ್ತು.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kodagu-kushalnagar-the-flow-of-the-cauvery-river-has-increased-it-has-been-raining-for-3-days-mrq/articleshow-1iyhtvm"/>
        </item>
        <item>
            <title><![CDATA[Kodagu: ಮಗು, ವಿವಾಹಿತೆ ಮತಾಂತರ ಆರೋಪ: ಕುಶಾಲನಗರ ಬಂದ್, ಸಾವಿರಾರು ಕಾರ್ಯಕರ್ತರ ಪ್ರತಿಭಟನೆ]]></title>
            <link>https://kannada.asianetnews.com/karnataka-districts/kodagu-protest-after-alleged-religious-conversion-of-married-woman-gvd/articleshow-20yegt0</link>
            <guid isPermaLink="true">https://kannada.asianetnews.com/karnataka-districts/kodagu-protest-after-alleged-religious-conversion-of-married-woman-gvd/articleshow-20yegt0</guid>
            <pubDate>Tue, 30 Jun 2026 17:55:13 +0530</pubDate>
            <description><![CDATA[&lt;p&gt;Kodagu: ಟೂರಿಸಂ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ರಾಜೀವ್ ಎಂಬುವರ ಪತ್ನಿಯನ್ನು ಇಲ್ಲಿಯೇ ವ್ಯಾಪಾರ ಮಾಡುತ್ತಿದ್ದ ಕೇರಳಂ ಮೂಲದ ಸಲೀಂ ಎಂಬಾತ ಮೇ ತಿಂಗಳ ಆರಂಭದಲ್ಲಿಯೇ ಕರೆದೊಯ್ದು ವಿವಾಹವಾಗಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwc7sdfbbkt8y5jda4tq5c4v,imgname-nch-1782822254059.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.30): &lt;/strong&gt;ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮದ ಮುಂಭಾಗದಲ್ಲಿ ಟೂರಿಸಂ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯನ್ನು ಅನ್ಯ ಧರ್ಮದ ವ್ಯಕ್ತಿಯೊಬ್ಬ ಪ್ರೀತಿಯ ನಾಟಕವಾಡಿ ಕೇರಳಂಗೆ ಕರೆದೊಯ್ದು ಮತಾಂತರ ಮಾಡಿದ್ದಾನೆ ಎಂದು ಆರೋಪಿಸಿ ಕುಶಾಲನಗರದ ಹಿಂದೂ ಸುರಕ್ಷಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಮತಾಂತರವನ್ನು ವಿರೋಧಿಸಿ ಕುಶಾಲನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.&lt;/p&gt;&lt;p&gt;ಟೂರಿಸಂ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ರಾಜೀವ್ ಎಂಬುವರ ಪತ್ನಿಯನ್ನು ಇಲ್ಲಿಯೇ ವ್ಯಾಪಾರ ಮಾಡುತ್ತಿದ್ದ ಕೇರಳಂ ಮೂಲದ ಸಲೀಂ ಎಂಬಾತ ಮೇ ತಿಂಗಳ ಆರಂಭದಲ್ಲಿಯೇ ಕರೆದೊಯ್ದು ವಿವಾಹವಾಗಿದ್ದಾನೆ. ಮಣಪ್ಪುರಂ ಜಿಲ್ಲೆಯ ಮಂಜೇರಿ ಎಂಬ ಗ್ರಾಮದಲ್ಲಿ ಆಕೆಯನ್ನು ಹಾಗೂ ಆಕೆಯ ಒಂಭತ್ತು ವರ್ಷದ ಬಾಲಕನನ್ನು ಮತಾಂತರ ಮಾಡಿಸಿದ್ದಾನೆ ಎಂದು ಆರೋಪಿಸಿ ಹಿಂದೂ ಸುರಕ್ಷಾ ಸಮಿತಿ ನೇತೃತ್ವದಲ್ಲಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಮೂರು ಕಿಲೋ ಮೀಟರ್ ಕಾಲ್ನಡಿಗೆ ಜಾಥಾ ಮಾಡಿದರು. ಮಹಿಳೆ ಕೆಲಸ ಮಾಡುತ್ತಿದ್ದ ಟೂರಿಸಂ ಕೇಂದ್ರದಿಂದ ಆರಂಭಿಸಿ ಕುಶಾಲನಗರದ ಕಾರು ನಿಲ್ದಾಣದವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.&lt;/p&gt;&lt;p&gt;ಈ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಗೂ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ರಾಜೀವ್ ದೂರು ನೀಡಿದ್ದರು. ಸದ್ಯ ವಿವಾಹಿತ ಮಹಿಳೆ, ಸಲೀಂ ಹಾಗೂ ಆತನ ಸ್ನೇಹಿತ ಜಲೀಲ್ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಂದು ನಡೆದ ಜಾಥಾದಲ್ಲಿ ಮಡಿಕೇರಿ ಮಾಜಿ ಶಾಸಕ ಅಪ್ಪಚ್ಚು ರಂಜನ್, ವಿರಾಜಪೇಟೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ ವಿವಿಧ ಪ್ರಮುಖ ಮುಖಂಡರು ಭಾಗವಹಿಸಿದ್ದರು.&lt;/p&gt;&lt;p&gt;ಈ ಸಂದರ್ಭ ಮಾತನಾಡಿದ ಹಿಂದೂ ಸುರಕ್ಷಾ ಸಮಿತಿ ಸರ ಸಂಚಾಲಕ ಅಮೃತ್ ರಾಜ್, ಆಕೆಯ ಆರ್ಥಿಕ ದುರ್ಬಲತೆಯನ್ನು ಬಳಕೆ ಮಾಡಿಕೊಂಡ ಸಲೀಂ ಎಂಬಾತ ಆಕೆಗೆ ಹಣದ ಆಮಿಷವೊಡ್ಡಿ ಮತಾಂತರ ಮಾಡಿಸಿದ್ದಾನೆ. ಆಕೆಯ ಒಂಭತ್ತು ವರ್ಷದ ಬಾಲಕನಿಗೆ ಸುನ್ನತ್ ಮಾಡಿಸಿದ್ದಾನೆ. ಎನ್ಟಿಸಿ ಕಂಪೆನಿಯ ಟೂರಿಸಂ ಕೇಂದ್ರದಲ್ಲಿ ಧರ್ಮ ವಿರೋಧಿ ಮತ್ತು ದೇಶದ್ರೋಹಿ ಕೆಲಸಗಳು ನಡೆಯುತ್ತಿದ್ದು ಅದನ್ನು ತನಿಖೆ ಮಾಡುವಂತೆ ಆಗ್ರಹಿಸಿದ್ದಾರೆ.&lt;/p&gt;&lt;p&gt;ಜಾಥಾದ ಬಳಿಕ ಕಾರು ನಿಲ್ದಾಣದಲ್ಲಿ ಜಾಗೃತಿ ಸಮಾವೇಶ ಕೂಡ ನಡೆಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆ ದಕ್ಷಿಣ ಕರ್ನಾಟಕ ಪ್ರಾಂತ ಸರ ಸಂಚಾಲಕ ಸತೀಶ್ ದಾವಣಗೆರೆ ಇಡೀ ದೇಶದಲ್ಲಿಯೇ ಲವ್ ಜಿಹಾದ್ ನಡೆಯುತ್ತಿದೆ. ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು. ಇಲ್ಲದಿದ್ದರೆ ಹಿಂದೂ ಧರ್ಮಕ್ಕೆ ಅಪಾಯ ಎದುರಾಗಲಿದೆ ಎಂದರು. ಎನ್ಟಿಸಿ ಹೆಸರಿನ ವ್ಯಾಪಾರ ಕೇಂದ್ರದ ಮಾಲೀಕ ಹಿಂದೂ ಧರ್ಮದ ಹೆಣ್ಣುಮಕ್ಕಳು, ಮಹಿಳೆಯರನ್ನು ಹೆಚ್ಚಿನ ವೇತನ ಹಾಗೂ ಕಮಿಷನ್ ನೀಡುವ ಆಮಿಷವೊಡ್ಡಿ ಕೆಲಸಕ್ಕೆ ಸೇರಿಸಿಕೊಂಡು ಮತಾಂತರಕ್ಕೆ ಸಹಕಾರಿಯಾಗುತ್ತಿದ್ದಾನೆ.&lt;/p&gt;&lt;h2&gt;&lt;strong&gt;ಅರಿವು ಮೂಡಿಸುವ ಕೆಲಸ&lt;/strong&gt;&lt;/h2&gt;&lt;p&gt;ಆ ಟೂರಿಸಂ ಸೆಂಟರ್ನಲ್ಲಿ ಇರುವ 70 ಮಳಿಗೆಗಳಲ್ಲಿ ಎಲ್ಲವನ್ನೂ ಕೇವಲ ಒಂದೇ ಧರ್ಮದ ಜನರಿಗೆ ಬಾಡಿಗೆ ನೀಡಿದ್ದಾನೆ. ಹೀಗಾಗಿ ಹಿಂದೂ ಧರ್ಮದ ಜನರು ಅಲ್ಲಿ ಎನ್ನನ್ನೂ ಕೊಳ್ಳದಂತೆ ಎಚ್ಚರಿಸುವ ಕೆಲಸ ಮಾಡಬೇಕು. ಟೂರಿಸಂ ಕೇಂದ್ರವಾಗಿರುವ ಅಲ್ಲಿಗೆ ಬರುವ ಪ್ರವಾಸಿಗರಿಗೂ ಅಲ್ಲಿ ಲವ್ ಜಿಹಾದ್ ನಡೆಯುತ್ತಿದೆ ಎನ್ನುವುದನ್ನು ತಿಳಿಸಿ ಅವರಿಗೂ ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು.&lt;/p&gt;&lt;p&gt;ಎಲ್ಲಕ್ಕಿಂತ ಮುಖ್ಯವಾಗಿ ಅವರು ನಮ್ಮ ಒಂದು ಹೆಣ್ಣು ಮಗಳನ್ನು ಕರೆದೊಯ್ದು ಮದುವೆಯಾದರೆ, ಅವರ 10 ಹೆಣ್ಣುಮಕ್ಕಳನ್ನು ಮದುವೆಯಾಗಿ ಕರೆದುಕೊಂಡು ಬರುವಂತೆ ನೆರೆದಿದ್ದ ಹಿಂದೂ ಕಾರ್ಯಕರ್ತರಿಗೆ ವಿವಾದಾತ್ಮಕವಾಗಿ ಹೇಳಿದರು. ಒಟ್ಟಿನಲ್ಲಿ ವಿವಾಹಿತ ಹಿಂದೂ ಮಹಿಳೆಯನ್ನು ಅನ್ಯಧರ್ಮದ ವ್ಯಕ್ತಿಯೊಬ್ಬ ವಿವಾಹವಾಗಿ ಬಳಿಕ ಆಕೆಯನ್ನು ಮತ್ತು ಆಕೆಯ ಪುತ್ರನನ್ನು ಮತಾಂತರ ಮಾಡಿರುವುದಕ್ಕೆ ಕೊಡಗಿನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-protest-after-alleged-religious-conversion-of-married-woman-gvd/articleshow-20yegt0"/>
        </item>
        <item>
            <title><![CDATA[ಮಲ್ಲಳ್ಳಿ ಜಲಪಾತದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಆಂಧ್ರದ ವಿದ್ಯಾರ್ಥಿಗಳು: ಕೊನೆಗೂ ನಡೆದ ರೋಚಕ ರಕ್ಷಣೆ]]></title>
            <link>https://kannada.asianetnews.com/gallery/karnataka-districts/2-andhra-students-rescued-at-mallalli-falls-at-kodagu-gvd-76re0bw</link>
            <guid isPermaLink="true">https://kannada.asianetnews.com/gallery/karnataka-districts/2-andhra-students-rescued-at-mallalli-falls-at-kodagu-gvd-76re0bw</guid>
            <pubDate>Mon, 06 Jul 2026 21:50:54 +0530</pubDate>
            <description><![CDATA[&lt;p&gt;ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಂಡಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kww37pe257mfjwrbzmvx91x0,imgname-ko--2--1783354350018.jpeg" type="image/jpeg" height="390" width="690"/>
            <content:encoded><![CDATA[&lt;p&gt;ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಂಡಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಕೊಡಗು (ಜು.06): &lt;/strong&gt;ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಂಡಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಜಲಪಾತದ ಬಂಡೆ ಹಿಡಿದು ಜೀವ ಉಳಿಸಿಕೊಳ್ಳಲು ಹೋರಾಡಿದ ವಿದ್ಯಾರ್ಥಿಗಳು ಕೊನೆಗೂ ಸುರಕ್ಷಿತವಾಗಿ ಹೊರಬಂದಿದ್ದಾರೆ.&lt;/p&gt;&lt;img&gt;&lt;p&gt;ರಕ್ಷಿಸಲ್ಪಟ್ಟವರನ್ನು ಆಂಧ್ರಪ್ರದೇಶ ಮೂಲದ ಗಣೇಶ್ ನಾಯಕ್ (21) ಹಾಗೂ ಸಂತೋಷ್ ಕುಮಾರ್ (23) ಎಂದು ಗುರುತಿಸಲಾಗಿದೆ. ಪ್ರವಾಸಕ್ಕಾಗಿ ಸ್ನೇಹಿತರೊಂದಿಗೆ ಕೊಡಗಿಗೆ ಬಂದಿದ್ದ ಇಬ್ಬರೂ, ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ ಎಂದು ಭಾವಿಸಿ, ಎಚ್ಚರಿಕೆಗಾಗಿ ಅಳವಡಿಸಿದ್ದ ರಕ್ಷಣಾ ಬೇಲಿಯನ್ನು ದಾಟಿ ನೀರಿನೊಳಗೆ ಇಳಿದಿದ್ದರು.&lt;/p&gt;&lt;img&gt;&lt;p&gt;ಆದರೆ ಇದೇ ವೇಳೆ ಜಲಪಾತದ ಮೇಲ್ಭಾಗದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಏಕಾಏಕಿ ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಡಲಾಗಿತ್ತು. ಕ್ಷಣಾರ್ಧದಲ್ಲೇ ನೀರಿನ ಹರಿವು ಹೆಚ್ಚಾಗಿ, ಇಬ್ಬರು ವಿದ್ಯಾರ್ಥಿಗಳು ಪ್ರಬಲ ಸೆಳೆತದ ನಡುವೆ ಸಿಲುಕಿಕೊಂಡರು. ತಪ್ಪಿಸಿಕೊಳ್ಳಲು ಸಾಧ್ಯವಾಗದೆ, ಜೀವ ಉಳಿಸಿಕೊಳ್ಳುವ ಏಕೈಕ ಪ್ರಯತ್ನವಾಗಿ ಜಲಪಾತದ ಮಧ್ಯದಲ್ಲಿದ್ದ ಬಂಡೆಯನ್ನು ಹಿಡಿದು ಸುಮಾರು ಒಂದು ಗಂಟೆ ಕಾಲ ಸಹಾಯಕ್ಕಾಗಿ ಕಾಯಬೇಕಾಯಿತು.&lt;/p&gt;&lt;img&gt;&lt;p&gt;ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಗ್ಗ ಸೇರಿದಂತೆ ವಿಶೇಷ ರಕ್ಷಣಾ ಉಪಕರಣಗಳ ನೆರವಿನಿಂದ ಕಾರ್ಯಾಚರಣೆ ನಡೆಸಿ, ಅಪಾಯದಲ್ಲಿದ್ದ ಇಬ್ಬರನ್ನೂ ಸುರಕ್ಷಿತವಾಗಿ ಹೊರತಂದರು. ಸ್ಥಳದಲ್ಲಿದ್ದ ಪ್ರವಾಸಿಗರು ಹಾಗೂ ಸ್ಥಳೀಯರು ಕಾರ್ಯಾಚರಣೆಯನ್ನು ವೀಕ್ಷಿಸಿದರು.&lt;/p&gt;&lt;img&gt;&lt;p&gt;ರಕ್ಷಣೆ ಬಳಿಕ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವುದು ಎಷ್ಟು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆಯಾಗಿದೆ. ಅಧಿಕಾರಿಗಳು ಎಚ್ಚರಿಕೆ ಫಲಕಗಳು ಹಾಗೂ ರಕ್ಷಣಾ ಬೇಲಿಗಳನ್ನು ನಿರ್ಲಕ್ಷಿಸದೆ, ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/gallery/karnataka-districts/2-andhra-students-rescued-at-mallalli-falls-at-kodagu-gvd-76re0bw"/>
        </item>
        <item>
            <title><![CDATA[ಕೊಡಗು ನ್ಯಾಯಾಲಯಕ್ಕೆ ಸಹನಾಳ ಈ ಮೇಲ್ ಬಾಂಬ್ ಬೆದರಿಕೆ: ಐಸಿಸ್ ದಾಳಿ ಎಚ್ಚರಿಕೆ, ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ!]]></title>
            <link>https://kannada.asianetnews.com/karnataka-districts/karnataka-news-kodagu-court-receives-cyanide-bomb-and-isis-threat-via-email-gdp/articleshow-79svkr0</link>
            <guid isPermaLink="true">https://kannada.asianetnews.com/karnataka-districts/karnataka-news-kodagu-court-receives-cyanide-bomb-and-isis-threat-via-email-gdp/articleshow-79svkr0</guid>
            <pubDate>Tue, 23 Jun 2026 10:54:38 +0530</pubDate>
            <description><![CDATA[ಮಡಿಕೇರಿ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ 'ಸಹನಾ' ಎಂಬ ಹೆಸರಿನಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಐಸಿಸ್ ಉಗ್ರರು ಸೈನೈಡ್ ಬಾಂಬ್ ಬಳಸಿ ದಾಳಿ ನಡೆಸುವುದಾಗಿ ಎಚ್ಚರಿಸಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಸಿಬ್ಬಂದಿಯನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvseqec91c1b5nx9eve9dyre,imgname-kodagu-court-1782191995273.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ: &lt;/strong&gt;ಕೊಡಗು ಜಿಲ್ಲಾ ಪ್ರಧಾನ ನ್ಯಾಯಾಲಯ ಸಂಕೀರ್ಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಸೈನೈಡ್ ಬಾಂಬ್ ಬಳಸಿ ನ್ಯಾಯಾಲಯವನ್ನು ಸ್ಫೋಟಿಸಲಾಗುವುದು ಹಾಗೂ ಐಸಿಸ್ (ISIS) ಉಗ್ರ ಸಂಘಟನೆಯ ಆತ್ಮ*ಹತ್ಯಾ ಬಾಂಬರ್&zwnj;ಗಳು ದಾಳಿ ನಡೆಸಲಿದ್ದಾರೆ ಎಂದು ಇ-ಮೇಲ್&zwnj;ನಲ್ಲಿ ಎಂದು ಬೆದರಿಕೆ ಹಾಕಲಾಗಿದೆ.&lt;/p&gt;&lt;h2&gt;ಬೆಳ್ಳಂಬೆಳಗ್ಗೆ ಬಂದ ಆಘಾತಕಾರಿ ಇ-ಮೇಲ್&lt;/h2&gt;&lt;p&gt;ಇಂದು ಮುಂಜಾನೆ ಸುಮಾರು 6 ಗಂಟೆಯ ವೇಳೆಗೆ ಕೊಡಗು ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಸಂದೇಶವೊಂದು ಬಂದಿದೆ. 'ಸಹನಾ' ಎಂಬ ಹೆಸರಿನ ಐಡಿಯಿಂದ ಈ ಇ-ಮೇಲ್ ರವಾನೆಯಾಗಿದೆ. ಬೆಳಿಗ್ಗೆ ಕಚೇರಿಗೆ ಬಂದ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಈ ಆಘಾತಕಾರಿ ಬಾಂಬ್ ಬೆದರಿಕೆ ವಿಷಯ ಬೆಳಕಿಗೆ ಬಂದಿದ್ದು, ತಕ್ಷಣವೇ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.&lt;/p&gt;&lt;h2&gt;ಇ-ಮೇಲ್&zwnj;ನಲ್ಲಿ ಏನಿದೆ?&lt;/h2&gt;&lt;p&gt;ಬಂದಿರುವ ಇ-ಮೇಲ್ ಅತ್ಯಂತ ಸಂವೇದನಾಶೀಲ ಮತ್ತು ಆಕ್ರೋಶದ ಭಾಷೆಯಿಂದ ಕೂಡಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;&lt;strong&gt;ಸೈನೈಡ್ ಬಾಂಬ್ ಸ್ಫೋಟ: &lt;/strong&gt;ಇಂದು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಭೀಕರ 'ಸೈನೈಡ್ ಬಾಂಬ್' ಬಳಸಿ ನ್ಯಾಯಾಲಯವನ್ನು ಉಡಾಯಿಸುವುದಾಗಿ ಬೆದರಿಸಲಾಗಿದೆ.&lt;/p&gt;&lt;p&gt;&lt;strong&gt;ಐಸಿಸ್ ಸುಸೈಡ್ ಬಾಂಬರ್ಸ್: &lt;/strong&gt;ಸ್ಫೋಟದ ಜೊತೆಗೆ ಇಸ್ಲಾಮಿಕ್ ಸ್ಟೇಟ್ (ISIS) ಸಂಘಟನೆಯ ಆತ್ಮ*ಹತ್ಯಾ ಬಾಂಬರ್&zwnj;ಗಳು ದಾಳಿ ನಡೆಸಲು ಬರಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ.&lt;/p&gt;&lt;p&gt;&lt;strong&gt;ಪ್ರವಾದಿ ನಿಂದನೆ ಮತ್ತು ಪೊಲೀಸ್ ದೌರ್ಜನ್ಯ:&lt;/strong&gt; ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಹಾಗೂ ಮುಸ್ಲಿಮರ ಮೇಲೆ ಪೊಲೀಸರ ದೌರ್ಜನ್ಯ ನಡೆಯುತ್ತಿದೆ ಎಂದು ಮೇಲ್&zwnj;ನಲ್ಲಿ ಆರೋಪಿಸಲಾಗಿದೆ.&lt;/p&gt;&lt;p&gt;&lt;strong&gt;ರಾಜಕಾರಣಿ ಉದಯನಿಧಿ ಹೆಸರು ಪ್ರಸ್ತಾಪ: &lt;/strong&gt;ತಮಿಳುನಾಡಿನ ಪ್ರಭಾವಿ ರಾಜಕಾರಣಿ ಉದಯನಿಧಿ ಸ್ಟಾಲಿನ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ವಿಷಯಗಳನ್ನು ಕೂಡ ಈ ಇ-ಮೇಲ್&zwnj;ನಲ್ಲಿ ಉಲ್ಲೇಖಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;h2&gt;ಸ್ಥಳಕ್ಕೆ ಧಾವಿಸಿದ ಬಾಂಬ್ ಪತ್ತೆ ದಳ; ಆತಂಕದಲ್ಲಿ ಸಿಬ್ಬಂದಿ&lt;/h2&gt;&lt;p&gt;ಬಾಂಬ್ ಬೆದರಿಕೆ ಸುದ್ದಿ ತಿಳಿಯುತ್ತಿದ್ದಂತೆ ಅಲರ್ಟ್ ಆದ ಕೊಡಗು ಜಿಲ್ಲಾ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ಹಾಗೂ ಶ್ವಾನ ದಳ (Dog Squad) ಧಾವಿಸಿದ್ದು, ತಪಾಸಣೆ ತೀವ್ರಗೊಳಿಸಿವೆ. ನ್ಯಾಯಾಲಯದ ಕೊಠಡಿಗಳು, ದಾಖಲೆಗಳ ಕೊಠಡಿ, ಕಚೇರಿ ಆವರಣ ಹಾಗೂ ವಾಹನ ನಿಲ್ದಾಣ ಸೇರಿದಂತೆ ಸಂಕೀರ್ಣದ ಮೂಲೆ ಮೂಲೆಗಳಲ್ಲೂ ಕಟ್ಟುನಿಟ್ಟಿನ ಶೋಧ ಕಾರ್ಯ ನಡೆಸಲಾಗುತ್ತಿದೆ.&lt;/p&gt;&lt;p&gt;ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಒಳಗಿದ್ದ ನ್ಯಾಯಾಧೀಶರು, ವಕೀಲರು ಹಾಗೂ ಸಮಸ್ತ ನ್ಯಾಯಾಲಯದ ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಸದ್ಯ ನ್ಯಾಯಾಧೀಶರು ಮತ್ತು ಸಿಬ್ಬಂದಿ ನ್ಯಾಯಾಲಯದ ಆವರಣದ ಹೊರಗಡೆ ಆತಂಕದಿಂದ ಕಾಯುತ್ತ ನಿಂತಿದ್ದು, ಇಡೀ ಕೋರ್ಟ್ ಸಂಕೀರ್ಣವನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಮೇಲ್ ಕಳುಹಿಸಿದ 'ಸಹನಾ' ಯಾರು? ಇದರ ಹಿಂದೆ ಇರುವ ದುಷ್ಕರ್ಮಿಗಳ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.&lt;/p&gt;&lt;h2&gt;ಸುದ್ದಿ ಅಪ್ಡೇಟ್&zwnj;&lt;/h2&gt;&lt;p&gt;ಇದೀಗ ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಹುಸಿ ಎಂದು ತಿಳಿದುಬಂದಿದೆ. ಬಾಂಬ್ ಪತ್ತೆ ದಳ ಹುಸಿ ಬಾಂಬ್ ಕರೆ ಎಂಬುದನ್ನು ಬಹಿರಂಗಗೊಳಿಸಿದೆ. ನ್ಯಾಯಾಲಯ ಸಂಕೀರ್ಣದ ಎಲ್ಲೆಡೆ ಶೋಧಿಸಿ ಹುಸಿ ಬಾಂಬ್ ಕರೆ ಎಂದು ಘೋಷಣೆ ಮಾಡಿದೆ. ಆ ಬಳಿಕ ನಿಟ್ಟುಸಿರು ಬಿಟ್ಟ ನ್ಯಾಯಾಧೀಶರು ಮತ್ತು ಸಿಬ್ಬಂದಿ ಮತ್ತು ವಕೀಲರು ಸದ್ಯ ನ್ಯಾಯಾಲಯದ ಕಾರ್ಯಕಲಾಪಕ್ಕೆ ತೆರಳಿದರು.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-news-kodagu-court-receives-cyanide-bomb-and-isis-threat-via-email-gdp/articleshow-79svkr0"/>
        </item>
        <item>
            <title><![CDATA[ಕೊಡಗು ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್: ಮಡಿಕೇರಿಯ ಪ್ರಸಿದ್ಧ 'ರಾಜಾಸೀಟು' 4 ದಿನ ಬಂದ್! ಕಾರಣ ಇಲ್ಲಿದೆ..]]></title>
            <link>https://kannada.asianetnews.com/kodagu/karnataka-tourist-spot-madikeri-raja-seat-closed-for-tourists-4-days-kodagu-dc-order/articleshow-873o9z0</link>
            <guid isPermaLink="true">https://kannada.asianetnews.com/kodagu/karnataka-tourist-spot-madikeri-raja-seat-closed-for-tourists-4-days-kodagu-dc-order/articleshow-873o9z0</guid>
            <pubDate>Wed, 08 Jul 2026 18:56:32 +0530</pubDate>
            <description><![CDATA[&lt;p&gt;ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಮಡಿಕೇರಿಯ 'ರಾಜಾಸೀಟು' ಸ್ಥಳಕ್ಕೆ 4 ದಿನಗಳ ಕಾಲ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮಳೆಗಾಲದಲ್ಲಿ ಮಡಿಕೇರಿಗೆ ಭೇಟಿ ನೀಡುವ ಎಲ್ಲ ಪ್ರವಾಸಿಗರಿಗೆ ಇದರಿಂದ ಭಾರೀ ಬೇಸರವಾಗಿದ್ದರೂ, ಸುರಕ್ಷತೆ ಕಾರಣದಿಂದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx0yetkbcejtv9qfzkgh97ty,imgname-madikeri-raja-seat-4-days-close-1783517112938.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಜು.08): ಕ&lt;/strong&gt;ರ್ನಾಟಕದ ಸ್ವಿಡ್ಜರ್&zwnj;ಲ್ಯಾಂಡ್ ಎಂದೇ ಖ್ಯಾತವಾಗಿರುವ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಡಿಕೇರಿ ನಗರದ ಕೆಎಸ್&zwnj;ಆರ್&zwnj;ಟಿಸಿ ಬಸ್ ನಿಲ್ದಾಣದ ಬಳಿ ಹೆದ್ದಾರಿ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ 'ರಾಜಾಸೀಟು' (Raja Seat) ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.&lt;/p&gt;&lt;h2&gt;&lt;strong&gt;ಜುಲೈ 9 ರಿಂದ 12 ರವರೆಗೆ ಬಂದ್&lt;/strong&gt;&lt;/h2&gt;&lt;p&gt;ಮಡಿಕೇರಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಜುಲೈ 9 ರಿಂದ ಜುಲೈ 12 ರವರೆಗೆ ರಾಜಾಸೀಟಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜುಲೈ 7 ರಂದು ಕೆಎಸ್&zwnj;ಆರ್&zwnj;ಟಿಸಿ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಕುಸಿತ ಉಂಟಾಗಿತ್ತು. ಈ ರಸ್ತೆಯ ದುರಸ್ತಿ ಕಾರ್ಯ ಮತ್ತು ಸುಗಮ ಸಂಚಾರಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ರಾಜಾಸೀಟು ಬಂದ್ ಮಾಡಲು ಕಾರಣವೇನು?&lt;/strong&gt;&lt;/h2&gt;&lt;p&gt;ಬಸ್ ನಿಲ್ದಾಣದ ಬಳಿ ರಸ್ತೆ ಕುಸಿದಿರುವುದರಿಂದ ಕೆಎಸ್&zwnj;ಆರ್&zwnj;ಟಿಸಿ ಮತ್ತು ಖಾಸಗಿ ಬಸ್&zwnj;ಗಳು ಸೇರಿದಂತೆ ಎಲ್ಲಾ ವಾಹನಗಳು ಈಗ ರಾಜಾಸೀಟು ರಸ್ತೆಯ ಮೂಲಕವೇ ಸಂಚರಿಸಬೇಕಾಗಿದೆ. ರಾಜಾಸೀಟು ಪ್ರದೇಶದಲ್ಲಿ ರಸ್ತೆ ಕಿರಿದಾಗಿದ್ದು, ಪ್ರವಾಸಿಗರ ವಾಹನಗಳು ಅಲ್ಲಿ ನಿಲ್ಲುವುದರಿಂದ ಭಾರಿ ಸಂಚಾರ ದಟ್ಟಣೆ (Traffic Jam) ಉಂಟಾಗುತ್ತಿದೆ. ಅಲ್ಲದೆ ಈ ಭಾಗದಲ್ಲಿ ಶಾಲೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಪ್ರವಾಸಿಗರಿಗೆ ಸೂಚನೆ:&lt;/strong&gt;&lt;/h2&gt;&lt;p&gt;ಈಗಾಗಲೇ ಕೊಡಗು ಪ್ರವಾಸ ಹಮ್ಮಿಕೊಂಡಿರುವ ಪ್ರವಾಸಿಗರು ಜುಲೈ 12ರ ವರೆಗೆ ರಾಜಾಸೀಟಿಗೆ ಭೇಟಿ ನೀಡಲು ಸಾಧ್ಯವಿಲ್ಲ. ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವುದರಿಂದ ಈ ನಿರ್ಬಂಧ ಹೇರಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ದಿನಗಳಲ್ಲಿ ಪ್ರವೇಶದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/kodagu/karnataka-tourist-spot-madikeri-raja-seat-closed-for-tourists-4-days-kodagu-dc-order/articleshow-873o9z0"/>
        </item>
        <item>
            <title><![CDATA[ಒಂದೇ ವೇದಿಕೆಯಲ್ಲಿ ಹಳೆ ವಿದ್ಯಾರ್ಥಿಗಳು, ಶಿಕ್ಷಕರು: ಸೈನಿಕ ಶಾಲೆ ಕೊಡಗಿನಲ್ಲಿ ಸಂಭ್ರಮದ ವಾತಾವರಣ]]></title>
            <link>https://kannada.asianetnews.com/karnataka-districts/sainik-school-kodagu-kodaac-2026-alumni-meet-awards-ceremony-gvd/articleshow-9sm41kx</link>
            <guid isPermaLink="true">https://kannada.asianetnews.com/karnataka-districts/sainik-school-kodagu-kodaac-2026-alumni-meet-awards-ceremony-gvd/articleshow-9sm41kx</guid>
            <pubDate>Mon, 13 Jul 2026 22:42:39 +0530</pubDate>
            <description><![CDATA[&lt;p&gt;Sainik School Karnataka: ಕೂಡಿಗೆಯಲ್ಲಿ &amp;nbsp;ಇರುವ ಸೈನಿಕ ಶಾಲೆ ಕೊಡಗು ತನ್ನ 7ನೇ ಹಳೆ ವಿದ್ಯಾರ್ಥಿಗಳ ಸಮಾವೇಶವಾದ 'ಕೋಡಾಕ್' (KODAAC) ಕಾರ್ಯಕ್ರಮ ಅರ್ಥಪೂರ್ಣವಾಗಿ &amp;nbsp;ನೆರೆವೇರಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxe5t97jsvb4cz35e246grf7,imgname-vj-1783961036018.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜು.13):&lt;/strong&gt; ಕೂಡಿಗೆಯಲ್ಲಿ ಇರುವ ಸೈನಿಕ ಶಾಲೆ ಕೊಡಗು ತನ್ನ 7ನೇ ಹಳೆ ವಿದ್ಯಾರ್ಥಿಗಳ ಸಮಾವೇಶವಾದ 'ಕೋಡಾಕ್' (KODAAC) ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರೆವೇರಿತು. ಶಾಲೆಯ ಮಾಜಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಸ್ತುತ ಶಾಲಾ ಸಿಬ್ಬಂದಿ ವರ್ಗದವರು ಸೌಹಾರ್ದತೆ, ಸಂಪ್ರದಾಯ ಮತ್ತು ಸಾಧನೆಗಳನ್ನು ಹಂಚಿಕೊಳ್ಳಲು ಒಂದೆಡೆ ಸೇರಿದ್ದರು. ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಬ್ಯಾಚ್&zwnj;ಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.&lt;/p&gt;&lt;p&gt;ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್, ಶ್ರೀಮತಿ ದಿವ್ಯಾ ಸಿಂಗ್ ಮತ್ತು ಕೋಡಾಕ್ ಅಸೋಸಿಯೇಷನ್( ಹಳೇ ವಿದ್ಯಾರ್ಥಿಗಳ ಸಂಘದ) ಅಧ್ಯಕ್ಷರಾದ ಶ್ರೀ ಶಫೀವುಲ್ಲಾ ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವು ಹಳೆ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕೆಡೆಟ್ ನಿಶಾಂತ್ ನಾರಾಯಣ್ ಸ್ವಾಗತ ಕೋರಿದರು ಮತ್ತು 11ನೇ ತರಗತಿಯ ಕೆಡೆಟ್ ಗಿತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಶ್ರೀ ಶಫೀವುಲ್ಲಾ ಅವರು, ಸಂಸ್ಥೆಯೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಮತ್ತು ಶಾಲೆಯ ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಂಘ ಕೈಗೊಂಡಿರುವ ವಿವಿಧ ಕಾರ್ಯಗಳ ಕುರಿತು ವಿವರಿಸಿದರು.&lt;/p&gt;&lt;p&gt;ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೆಡೆಟ್&zwnj;ಗಳು ಸುಮಧುರ ಗೀತಗಾಯನ, ರಾಮಾಯಣದ ಪ್ರಸಂಗಗಳನ್ನು ಬಿಂಬಿಸುವ ಆಕರ್ಷಕ ನೃತ್ಯ ಮತ್ತು ಚಂಡೆ ಮೇಳವನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವೂ ನಡೆಯಿತು. ಕರ್ನಲ್ ಅಮರ್ ಜೀತ್ ಸಿಂಗ್ ಅವರು 2025-26ನೇ ಸಾಲಿನ ಅಕಾಡೆಮಿಕ್ ಸಾಧನಾ ಟ್ರೋಫಿ, ಯುಪಿಎಸ್&zwnj;ಸಿ ಪರೀಕ್ಷೆಯ ಸಾಧನಾ ಟ್ರೋಫಿ ಮತ್ತು ಒಟ್ಟಾರೆ ಶ್ರೇಷ್ಠತೆಗಾಗಿ ಕಠಾರಿ ಹೌಸ್&zwnj;ಗೆ ಕಾಕ್ ಹೌಸ್ ಟ್ರೋಫಿಯನ್ನು ಪ್ರದಾನ ಮಾಡಿದರು. ಕೃತಜ್ಞತೆಯ ಸಂಕೇತವಾಗಿ ಶ್ರೀ ಶಫೀವುಲ್ಲಾ ಅವರು ಪ್ರಾಂಶುಪಾಲರಿಗೆ ಸ್ಮರಣಿಕೆಯನ್ನು ನೀಡಿದರು.&lt;/p&gt;&lt;p&gt;ಅಲ್ಲದೆ, ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀ ದಕ್ಷಿಣಾಮೂರ್ತಿ ಮತ್ತು ಆಗಸ್ಟ್&zwnj;ನಲ್ಲಿ ನಿವೃತ್ತರಾಗಲಿರುವ ಸಾಮಾನ್ಯ ನೌಕರ ಶ್ರೀ ಮಲ್ಲಿಕಾರ್ಜುನ್ ಅವರ ಸೇವೆಯನ್ನು ಗುರುತಿಸಿ ಹಳೆ ವಿದ್ಯಾರ್ಥಿಗಳ ಸಂಘವು ಸನ್ಮಾನಿಸಿತು. ಪ್ರಾಂಶುಪಾಲರು ಕೋಡಾಕ್&zwnj;ನ ಪದಾಧಿಕಾರಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ತಮ್ಮ ಭಾಷಣದಲ್ಲಿ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಹಳೆ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಸಂಸ್ಥೆಯೊಂದಿಗಿನ ಅವರ ನಿರಂತರ ಸಂಬಂಧವನ್ನು ಶ್ಲಾಘಿಸಿದರು.&lt;/p&gt;&lt;h2&gt;&lt;strong&gt;ಮರುನಾಮಕರಣ ಮಾಡುವ ಪ್ರಸ್ತಾವನೆ&lt;/strong&gt;&lt;/h2&gt;&lt;p&gt;ಮಹಿಳಾ ಹಳೆ ವಿದ್ಯಾರ್ಥಿಗಳ ಹೆಚ್ಚುತ್ತಿರುವ ಭಾಗವಹಿಸುವಿಕೆಯನ್ನು ಪ್ರತಿಬಿಂಬಿಸಲು ಸಂಘದ ಹೆಸರನ್ನು 'ಓಲ್ಡ್ ಬಾಯ್ಸ್ ಅಂಡ್ ಗರ್ಲ್ಸ್ ಅಸೋಸಿಯೇಷನ್' (OBGA) ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಅವರು ಮಂಡಿಸಿದರು. ಸೈನಿಕ ಶಾಲೆ ಕೊಡಗು ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸೈನಿಕ ಶಾಲೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ ಅವರು, ಶಾಲೆಯು ಚಾರಿತ್ರ್ಯ ನಿರ್ಮಾಣ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಒತ್ತಿ ಹೇಳಿದರು. ಭಾರತೀಯ ನೌಕಾಪಡೆಯ ಸ್ಕ್ವಾಡ್ರನ್ ಲೀಡರ್ ದೀಪಕ್ ನಾಯಕ್ ಅವರು ಸೆಪ್ಟೆಂಬರ್&zwnj;ನಲ್ಲಿ ಆಡಳಿತಾಧಿಕಾರಿಯಾಗಿ ಸೇರಲಿದ್ದಾರೆ ಎಂಬ ವಿಷಯವನ್ನು ಹಂಚಿಕೊಂಡರು.&lt;/p&gt;&lt;p&gt;ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಶ್ರೀ ಸುನೀಲ್ ಕರಳೆ, ಶಾಲೆಗೆ ಶ್ರೀ ದಕ್ಷಿಣಾಮೂರ್ತಿ ಮತ್ತು ಶ್ರೀ ಮಲ್ಲಿಕಾರ್ಜುನ್ ನೀಡಿದ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸಿದರು. ಆಚರಣೆಯು ಹಳೆ ವಿದ್ಯಾರ್ಥಿಗಳು ಮತ್ತು ಶಾಲಾ ತಂಡಗಳ ನಡುವೆ ನಡೆದ ಸೌಹಾರ್ದ ಫುಟ್&zwnj;ಬಾಲ್ ಮತ್ತು ಹಾಕಿ ಪಂದ್ಯಗಳೊಂದಿಗೆ ಮುಕ್ತಾಯಗೊಂಡಿತು. ಕೆಡೆಟ್ ಚಿನ್ಮಯ ಧನ್ಯವಾದ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕ ಶ್ರೀ ಎನ್. ವಿಬಿನ್ ಕುಮಾರ್, ಬೋಧಕ ಮತ್ತು ಆಡಳಿತ ಸಿಬ್ಬಂದಿ, ಎನ್&zwnj;ಸಿಸಿ ಪಿಐ ಸಿಬ್ಬಂದಿ ಮತ್ತು ಕೆಡೆಟ್&zwnj;ಗಳು ಭಾಗವಹಿಸಿದ್ದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/sainik-school-kodagu-kodaac-2026-alumni-meet-awards-ceremony-gvd/articleshow-9sm41kx"/>
        </item>
        <item>
            <title><![CDATA[Kodagu: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಟ ಇರಲ್ಲ: ಸಿದ್ದರಾಮಯ್ಯ ವಿರುದ್ಧ ಯದುವೀರ್ ವಾಗ್ದಾಳಿ]]></title>
            <link>https://kannada.asianetnews.com/karnataka-districts/mp-yaduveer-wadiyar-slams-congress-over-siddaramaiah-remarks-gvd/articleshow-9ubagz9</link>
            <guid isPermaLink="true">https://kannada.asianetnews.com/karnataka-districts/mp-yaduveer-wadiyar-slams-congress-over-siddaramaiah-remarks-gvd/articleshow-9ubagz9</guid>
            <pubDate>Mon, 22 Jun 2026 19:22:09 +0530</pubDate>
            <description><![CDATA[&lt;p&gt;Yaduveer Wadiyar: ಕಾಂಗ್ರೆಸ್ ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 28 ರಲ್ಲಿ ಚುನಾವಣೆಯಲ್ಲಿ ಅದು ಕೂಡ ಇಲ್ಲದಂತೆ ಆಗುವ ಆತಂಕ ಅವರಿಗೆ ಇದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvqsm9mg9t0f2hzbk4nrsmaq,imgname-j-1782136317584.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.22): &lt;/strong&gt;ಕಾಂಗ್ರೆಸ್ ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 28 ರಲ್ಲಿ ಚುನಾವಣೆಯಲ್ಲಿ ಅದು ಕೂಡ ಇಲ್ಲದಂತೆ ಆಗುವ ಆತಂಕ ಅವರಿಗೆ ಇದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ. ಆದ್ದರಿಂದಲೇ ಅವರು ಹೀಗೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿಂದೂ ರಾಷ್ಟ್ರ ಮಾಡುವ ಉದ್ದೇಶ ಹೊಂದಿದೆ.&lt;/p&gt;&lt;p&gt;ಹಿಂದೂ ರಾಷ್ಟ್ರ ಮಾಡುವುದಕ್ಕೆ ಕೈಕಾರ್ಯಕರ್ತರು ಬಿಡಬಾರದು ಎಂದು ಸಿದ್ದರಾಮಯ್ಯ ಹೇಳಿರುವ ವಿಚಾರ ಮಡಿಕೇರಿಯಲ್ಲಿ ಮಾತನಾಡಿದ ಯದುವೀರ್ ಇದು ಅನಿರೀಕ್ಷಿತ ಹೇಳಿಕೆ ಏನು ಅಲ್ಲ, ಹಿಂದಿನಿಂದಲೂ ಅವರ ಮನೋಭಾವವೇ ಹಾಗೆ ಇದೆ. ಕಾಂಗ್ರೆಸ್ ನ ನಡವಳಿಕೆಯೇ ಯಾವಾಗಲೂ ಅಪಪ್ರಚಾರ ಮಾಡುವುದು ಎನ್ನುವುದು ನಮಗೂ ಗೊತ್ತಿದೆ. ಆದರೆ ಭಾರತೀಯ ಜನತಾ ಪಕ್ಷ ಸುರಕ್ಷಿತ, ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೆಲಸ ಮಾಡುತ್ತಿದೆ.&lt;/p&gt;&lt;p&gt;ಪ್ರಧಾನಿ ಮೋದಿಯವರನ್ನು ದೇಶದ ಜನ ಒಪ್ಪಿದ್ದಾರೆ. ಹೀಗಾಗಿಯೇ ಮೂರು ಬಾರಿ ಪ್ರಧಾನಿಯಾಗಿ ಆಯ್ಕೆ ಆಗಿದ್ದಾರೆ. ನಮ್ಮ ಪಕ್ಷ ಎಲ್ಲಾ ಜನಾಂಗಗಳನ್ನು ಒಳಗೊಂಡು ಕೆಲಸ ಮಾಡುತ್ತಿದೆ. ಇಂದು ಹೆದ್ದಾರಿ, ರೈಲ್ವೇ ಹಾಗೂ ವಿಮಾನಯಾನ ಅಭಿವೃದ್ಧಿ ಆಗಿದೆ. ಇದನ್ನೆಲ್ಲ ಕೇವಲ ಹಿಂದುಗಳು ಮಾತ್ರವೇ ಬಳಕೆ ಮಾಡುತ್ತಾರೆಯೇ.? ಇವುಗಳಲ್ಲಿ ಹಿಂದೂಗಳು ಮಾತ್ರ ಓಡಾಡುತ್ತಾರೆಯೇ ಎಂದು ಪ್ರಶ್ನಿಸಿದ ಯದುವೀರ್ ಇವುಗಳಲ್ಲಿ ಎಲ್ಲಾ ಧರ್ಮಗಳ ಜನರು ಓಡಾಡುತ್ತಾರೆ. ಆದರೆ ಕಾಂಗ್ರೆಸ್ ಮಾತ್ರ ಕೇವಲ ಅಪಪ್ರಚಾರ ಮಾಡುತ್ತದೆ ಅಷ್ಟೇ ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಸರ್ಕಾರ ನಿಮ್ಮದೇ ನಿರ್ಧಾರ ಕೈಗೊಳ್ಳಿ&lt;/strong&gt;&lt;/h2&gt;&lt;p&gt;ಬಿಡದಿ ಟೌನ್ ಶಿಪ್ ನಿರ್ಮಾಣ ಕೆಲಸ ಯಾರ ಸಮಯದಲ್ಲಿ ಆಯ್ತು ಎನ್ನುವುದು ಮುಖ್ಯವಲ್ಲ. ನಿಮ್ಮ ಸರ್ಕಾರವಿದೆ, ನೀವೆ ನಿರ್ಧಾರ ಮಾಡಿ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ. ಬಿಡದಿ ಟೌನ್ ಶಿಪ್ ಆರಂಭವಾಗಿದ್ದೇ ಎಚ್ ಡಿಕೆ ಕಾಲದಲ್ಲಿ ಎಂದು ಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ ಅವರು ಜನರ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಾಗೆ ನೀವು ನಿರ್ಧಾರ ಮಾಡಿ.&lt;/p&gt;&lt;p&gt;ಹಿಂದೆ ಇದ್ದವರು, ಮುಂದೆ ಬರುವವರ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ. ಸರ್ಕಾರ, ಆಡಳಿತ ಅವರದ್ದೇ ಇದೆ. ಇಂದು ಜನರ ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ, ಆ ಅಭಿಪ್ರಾಯದಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ. ಯಾರು ಹಿಂದೆ ಏನು ಮಾಡಿದರು ಮುಂದೆ ಏನ್ ಮಾಡ್ತಾರೆ ಎನ್ನುವ ಚರ್ಚೆ ಅವಶ್ಯಕತೆ ಇಲ್ಲ. ಆಡಳಿತ ಅವರ ಕೈಯಲ್ಲಿ ಇದೆ ಅವರು ನಿರ್ಧಾರ ತೆಗೆದುಕೊಳ್ಳಲಿ ಎಂದು ಮಡಿಕೇರಿಯಲ್ಲಿ ಸಿಎಂ ಡಿಕೆಶಿಗೆ ಸಂಸದಯ ಯದುವೀರ್ ಒಡೆಯರ್ ತಿರುಗೇಟು ನೀಡಿದರು.&lt;/p&gt;&lt;p&gt;ಇನ್ನು ಪರಿಷತ್ ಚುನಾವಣೆ ವೇಳೆಯಲ್ಲಿ ಅಡ್ಡ ಮತದಾನ ಮಾಡಿರುವವರಿಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಯದುವೀರ್ ಪಕ್ಷ ಶಿಸ್ತುಕ್ರಮ ಕೈಗೊಳ್ಳುತ್ತದೆ. ಅದರ ವರದಿಗಾಗಿ ಈಗಾಗಲೇ ಸತ್ಯ ಶೋಧನೆ ಸಮಿತಿಯನ್ನು ರಚಿಸಲಾಗಿದೆ. ಸಿ ಟಿ ರವಿ ಅವರ ನೇತೃತ್ವದಲ್ಲಿ ಸಮಿತಿ ತನಿಖೆ ಮಾಡುತ್ತಿದೆ ಎಂದರು. ಅಡ್ಡಮತದಾನ ನಡೆದಿರುವುದು ಇದೇನು ಮೊದಲಲ್ಲ. ಬೇರೆ ಪಕ್ಷಗಳಲ್ಲೂ ಅಡ್ಡಮತದಾನ ನಡೆದಿವೆ.&lt;/p&gt;&lt;p&gt;ಈಗ ನಮ್ಮ ಪಕ್ಷದಲ್ಲೂ ಅಡ್ಡ ಮತದಾನ ನಡೆದಿದೆ. ನಾವು ಕ್ರಮ ತೆಗೆದುಕೊಳ್ಳಬೇಕಾಗಿದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಆಣೆ ಪ್ರಮಾಣಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ಅದು ಪಕ್ಷದ ಆಂತರಿಕ ವಿಚಾರವಾಗಿದ್ದು, ಏನು ಮಾಡಬೇಕು ಮಾಡಬಾರದು ಅಂತ ಪಕ್ಷ ನಿರ್ಧಾರ ಮಾಡುತ್ತದೆ. ಅದನ್ನೆಲ್ಲ ಚರ್ಚೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಯದುವೀರ್ ಒಡೆಯರ್ ಹೇಳಿದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-yaduveer-wadiyar-slams-congress-over-siddaramaiah-remarks-gvd/articleshow-9ubagz9"/>
        </item>
        <item>
            <title><![CDATA[ಮೂಲ ಕಾವೇರಿ ಒಡಲಲ್ಲೇ ಬರದ ಛಾಯೆ! ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಸಂಕಷ್ಟ]]></title>
            <link>https://kannada.asianetnews.com/karnataka-districts/rainfall-has-decreased-sharply-in-the-kushalnagar-area-cauvery-river-has-decreased-significantly-mrq/articleshow-a56tlfa</link>
            <guid isPermaLink="true">https://kannada.asianetnews.com/karnataka-districts/rainfall-has-decreased-sharply-in-the-kushalnagar-area-cauvery-river-has-decreased-significantly-mrq/articleshow-a56tlfa</guid>
            <pubDate>Mon, 29 Jun 2026 09:09:16 +0530</pubDate>
            <description><![CDATA[ಈ ವರ್ಷ ಕುಶಾಲನಗರ ಭಾಗದಲ್ಲಿ ಮಳೆ ತೀವ್ರವಾಗಿ ಕುಸಿದಿದ್ದು, ಹಾರಂಗಿ ಜಲಾಶಯ ಮತ್ತು ಕಾವೇರಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ನೀರಿನ ಹರಿವು ಅತ್ಯಂತ ಕಡಿಮೆಯಾಗಿದ್ದು, ಕೃಷಿ, ಕುಡಿಯುವ ನೀರು ಮತ್ತು ಅಂತರರಾಜ್ಯ ಜಲ ವಿವಾದದ ಆತಂಕವನ್ನು ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw8q501k9xdet0d7evzsq6h0,imgname-kushala-nagar-cauvery-1782704144435.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು&lt;/strong&gt;: ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಈ ಸಾಲಿನಲ್ಲಿ ಮಳೆ ಪ್ರಮಾಣ ಭಾರಿ ಕುಸಿತ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿ ತುಂಬಿ ಹರಿದು ಅಪಾಯದ ಮಟ್ಟ ಮೀರಿ ನದಿ ತಟದ ಜನತೆಯಲ್ಲಿ ಪ್ರವಾಹದ ಆತಂಕ ಮೂಡಿಸಿತ್ತು.&lt;/p&gt;&lt;p&gt;ಹಾರಂಗಿ ಜಲಾಶಯ ತುಂಬಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿತ್ತು. ಕಳೆದ ವರ್ಷ ಇದೇ ದಿನ ನದಿಗೆ 5000 ಕ್ಯೂಸೆಕ್ಸ್ ಪ್ರಮಾಣದ ನೀರು ಹರಿಸಲಾಗಿತ್ತು. ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಮೂಲಕ ಇದೇ ಪ್ರಮಾಣದ ನೀರಿನ ಒಳಹರಿವು ಕೂಡ ಕಂಡುಬಂದಿತ್ತು. ಇದೀಗ ಮೂಲ ಕಾವೇರಿ ಒಡಲಲ್ಲಿ ಬರದ ಛಾಯೆ ಎದುರಾಗುತ್ತಿದೆ.&lt;/p&gt;&lt;h2&gt;&lt;strong&gt;ಹಾರಂಗಿ ಜಲಾಶಯ&lt;/strong&gt;&lt;/h2&gt;&lt;p&gt;ಅಂಕಿ ಅಂಶಗಳ ಪ್ರಕಾರ ಗುರುವಾರ ಸಂಜೆ ವೇಳೆಗೆ ಹಾರಂಗಿ ಜಲಾಶಯಕ್ಕೆ ಕೇವಲ 380 ಕ್ಯೂಸೆಕ್ಸ್ ಪ್ರಮಾಣದ ನೀರಿನ ಒಳಹರಿವು ಗೋಚರಿಸಿದೆ. ಹಾರಂಗಿ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ 24 ಅಡಿಗಳಷ್ಟು ನೀರಿನ ಮಟ್ಟ ಇಳಿಕೆ ಕಾಣಬಹುದು. 2859 ಅಡಿಗಳಷ್ಟು ಗರಿಷ್ಠ ನೀರಿನ ಮಟ್ಟ ಹೊಂದಿರುವ ಅಣೆಕಟ್ಟಿನಲ್ಲಿ ಈ ಬಾರಿ 2825.97 ಅಡಿಗಳಷ್ಟು ನೀರಿನ ಮಟ್ಟ ಕಂಡುಬಂದಿದೆ.&lt;/p&gt;&lt;p&gt;ಕುಶಾಲನಗರ ಪ್ರವಾಸಿ ಮಂದಿರದ ಮಳೆ ಮಾಪನದ ದಾಖಲೆಯಂತೆ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಕಳೆದ ಮಳೆಗಾಲ ಅವಧಿಯಲ್ಲಿ 720.6 ಮಿಮಿ ಪ್ರಮಾಣದ ಮಳೆ ಸುರಿದರೆ ಈ ಬಾರಿ ಕೇವಲ 204.2 ಮಿಳಿ ಪ್ರಮಾಣದ ಮಳೆ ಸುರಿದಿದೆ.&lt;/p&gt;&lt;p&gt;ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ಕಳೆದ ವರ್ಷ ಕಾವೇರಿ ಸೇತುವೆಯ ಕೆಳ ಭಾಗದಲ್ಲಿ 7 ಮೀಟರ್ ಎತ್ತರಕ್ಕೆ ಅಪಾಯದ ಮಟ್ಟ ಮೀರಿ ನೀರಿನ ಹರಿವು ನಿರಂತರವಾಗಿ ಕಂಡುಬಂದಿತ್ತು. ಅದೇ ಈ ಬಾರಿ ಕಾವೇರಿ ನದಿಯಲ್ಲಿ ಇನ್ನೂ ಕನಿಷ್ಠ ಒಂದು ಅಡಿಯಷ್ಟು ನೀರಿನ ಹರಿವಿನ ಪ್ರಮಾಣ ಏರಿಕೆ ಆಗದಿರುವ ದೃಶ್ಯ ಭವಿಷ್ಯದ ದಿನಗಳ ಆತಂಕಕ್ಕೆ ಎಡೆ ಮಾಡಿದೆ.&lt;/p&gt;&lt;h3&gt;&lt;strong&gt;ಕೃಷಿ ಚಟುವಟಿಕೆಗಳಿಗೆ ಸಂಕಷ್ಟ&lt;/strong&gt;&lt;/h3&gt;&lt;p&gt;ಕಾವೇರಿ ನದಿ ಪ್ರದೇಶದ ಜನರಿಗೆ ಕೃಷಿ ಚಟುವಟಿಕೆಗಳಿಗೆ ಕೂಡ ಈ ಬಾರಿ ಸಂಕಷ್ಟ ಎದುರಾಗಿದೆ. ಕೃಷಿ ಭೂಮಿಗಳಿಗೆ ಸ್ಪ್ರಿಂಕ್ಲರ್ ಬಳಸಿ ನೀರು ಹಾಯಿಸುತ್ತಿರುವ ದೃಶ್ಯ ಕಾಣಬಹುದು. ಬೆಂಗಳೂರು ಸೇರಿದಂತೆ ಪ್ರಮುಖ ಪಟ್ಟಣಗಳಿಗೆ ಕಾವೇರಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾದ್ಯತೆ ಅಧಿಕವಾಗಿದೆ. ಎಲ್ಲಕ್ಕಿಂತಲೂ ಮಿಗಿಲಾಗಿ ರಾಜ್ಯಗಳ ನಡುವೆ ನೀರಿನ ಪಾಲಿನ ಕೂಗು ಮತ್ತೆ ಪ್ರತಿಧ್ವನಿಸುವ ಸಾಧ್ಯತೆ ಅಧಿಕವಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rainfall-has-decreased-sharply-in-the-kushalnagar-area-cauvery-river-has-decreased-significantly-mrq/articleshow-a56tlfa"/>
        </item>
        <item>
            <title><![CDATA[Bidadi Township: ವಿಧಾನಸೌಧಕ್ಕೆ ಬನ್ನಿ, ದಾಖಲೆ ತೋರಿಸುತ್ತೇವೆ: ಎಚ್‌ಡಿಕೆಗೆ ಎಂ.ಲಕ್ಷ್ಮಣ್ ಸವಾಲ್]]></title>
            <link>https://kannada.asianetnews.com/karnataka-districts/bidadi-township-row-m-lakshman-slams-hd-kumaraswamy-hit-and-run-politics-gvd/articleshow-g7k7qxo</link>
            <guid isPermaLink="true">https://kannada.asianetnews.com/karnataka-districts/bidadi-township-row-m-lakshman-slams-hd-kumaraswamy-hit-and-run-politics-gvd/articleshow-g7k7qxo</guid>
            <pubDate>Tue, 23 Jun 2026 18:56:13 +0530</pubDate>
            <description><![CDATA[&lt;p&gt;Bidadi Township ಯೋಜನೆ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2006ರಲ್ಲಿ ಯೋಜನೆ ಆರಂಭಿಸಿದ್ದು ನೀವೇ ಎಂದು ಪ್ರಶ್ನಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvtahf70typwrqxdp6sj0b2d,imgname-ch-1782221159648.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.23):&lt;/strong&gt; ಬಿಡದಿ ಟೌನ್ ಶಿಪ್ ಅನ್ನು 2006 ರಲ್ಲಿ ಮೊದಲು ಆರಂಭಿಸಿದ್ದೇ ಇದೇ ಕುಮಾರಸ್ವಾಮಿ ಅವರು. ಇದನ್ನು ಕುರಿತು ಚರ್ಚಿಸಲು ಇದೇ 26 ಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧಕ್ಕೆ ಬನ್ನಿ ಎಂದು ಆಹ್ವಾನಿಸಿದ್ದರು. ಆದರೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರ್ ಸ್ವಾಮಿ ಅವರು 26 ಕ್ಕೆ ಯಾವುದೋ ಬೇರೆ ಕೆಲಸದ ನಿಮಿತ್ತ ಬ್ಯುಸಿಯಾಗಿದ್ದೇನೆ. ಆದ್ದರಿಂದ 27 ಕ್ಕೆ ಬಿಡದಿ ಸಮೀಪದ ಒಂದು ಹಳ್ಳಿಗೆ ಬನ್ನಿ ಎಂದಿದ್ದಾರೆ. ಇದರ ಅರ್ಥ ಹಿಟ್ ಅಂಡ್ ರನ್ ಕೆಲಸ ಎಂಬುದು ಸ್ಪಷ್ಟ.&lt;/p&gt;&lt;p&gt;ಕುಮಾರಸ್ವಾಮಿ ಅವರು ದೇಶದಲ್ಲಿ ಅತ್ಯಂತ ಪ್ರಸಿದ್ಧ ಹಿಟ್ ಅಂಡ್ ರನ್ ವ್ಯಕ್ತಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೆಚ್ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. 2006 ರಲ್ಲಿ ನೀವು ಸಿಎಂ ಆಗಿದ್ದಾಗ 12 ಸಾವಿರ ಎಕರೆಯನ್ನು ನೋಟಿಫೈ ಮಾಡಿದ್ರಿ. ಬಳಿಕ ಅದನ್ನು ರೆಡ್ ಝೋನ್ ಎಂದು ಮಾಡಿ ಅದನ್ನು ಮಾರಲೂ ಸಾಧ್ಯವಾಗದಂತಹ ಪರಿಸ್ಥಿತಿಗೆ ತಂದು ನಿಲ್ಲಿಸಿದ ಕೀರ್ತಿ ನಿಮ್ಮದೇ. 2018 ರಲ್ಲಿ ನೀವು ಮತ್ತೆ ಸಿಎಂ ಆದಾಗಲಾದರೂ ರೈತರ ಭೂಮಿಯನ್ನು ತೆಗೆದುಕೊಳ್ಳಬಾರದು ಎನ್ನುವ ಮನೋಭಾವವಿದ್ದರೆ, ಆ ಭೂಮಿಯನ್ನು ಡಿನೋಟಿಫೈ ಮಾಡಬಹುದಿತ್ತಲ್ಲಾ.&lt;/p&gt;&lt;p&gt;ಯಾಕೆ ನೀವು ಮಾಡದೆ ಈಗ ಹೋರಾಟ ಎಂದು ರೈತರ ದಿಕ್ಕು ತಪ್ಪಿಸುತಿದ್ದೀರಾ ಎಂದು ಅಸಮಾಧಾನ ಹೊರಹಾಕಿದ್ದಾರೆ. ಬಿಡದಿ ಟೌನ್ ಶಿಪ್ ತರುವುದಕ್ಕೆ ಕಾರಣವಾಗಿದ್ದೇ ಕುಮಾರಸ್ವಾಮಿ ಅವರು ಮತ್ತು ಬಿಜೆಪಿ ಸರ್ಕಾರ. ಯಡಿಯೂರಪ್ಪನವರು, ಜಗದೀಶ್ ಶೆಟ್ಟರ್ ಮತ್ತು ಸದಾನಂದಗೌಡ್ರು ಇದ್ದಾಗ 912 ಎಕರೆ ವಶಕ್ಕೆ ಪಡೆದು ಈಗಾಗಲೇ ಹಂಚಲಾಗಿದೆ. ಆಗ ಅದು ಫಲವತ್ತಾದ ಭೂಮಿ ಅದನ್ನು ಕಿತ್ತುಕೊಳ್ಳಬಾರದು ಎನ್ನುವುದು ಗೊತ್ತಾಗಲಿಲ್ಲವೆ. ಈಗೇಕೆ ಈ ಕಳ್ಳಾಟವನ್ನು ಆಡುತ್ತಿದ್ದೀರಾ. ಡಿ.ಕೆ. ಶಿವಕುಮಾರ್ ಒಬ್ಬ ಒಕ್ಕಲಿಗ ಸಮುದಾಯದವರು ಸಿಎಂ ಆಗಿದ್ದಾರೆ ಎಂಬುದರಿಂದ ನೀವು ಈ ರೀತಿ ಮಾಡುತ್ತಿದ್ದೀರಿ.&lt;/p&gt;&lt;h2&gt;&lt;strong&gt;ನೋಟಿಫೈ ಮಾಡಿದ್ದೀರಾ&lt;/strong&gt;&lt;/h2&gt;&lt;p&gt;ಇದು ಈ ರಾಜ್ಯದ ದುರಂತ. ಇಲ್ಲವೆ ಒಕ್ಕಲಿಗ ಸಮುದಾಯ ದುರಂತ ಇರಬಹುದು ಎಂದಿದ್ದಾರೆ. ಒಟ್ಟು 7483 ಎಕರೆ ನೋಟಿಫೈ ಮಾಡಿದ್ದೀರಾ. ಅದರಲ್ಲಿ 6434 ರೈತರು ಇದ್ದಾರೆ. ಅವರಲ್ಲಿ ಬಿಎಂಆರ್ಡಿಎಲ್ ನವರು ನೋಟಿಸ್ ಕೊಟ್ಟಾಗ ನಾವು ಯಾವ ಕಾರಣಕ್ಕೂ ಭೂಮಿಯನ್ನು ಕೊಡಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟ ರೈತರ ಸಂಖ್ಯೆ 1347 ಅಷ್ಟೆ. 265 ರೈತರು ಈ ಬೆಲೆಗೆ ಕೊಡಲು ನಮಗೆ ಒಪ್ಪಿಗೆ ಇಲ್ಲ ಎಂದಿದ್ರು. 663 ಜನರು ರೈತರು ಮಾತ್ರ ಭೂಮಿ ಕೊಡುವುದೇ ಇಲ್ಲ ಎಂದಿದ್ದಾರೆ. ಈ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ನೀವು ವಿಧಾನಸೌಧಕ್ಕೆ ಬಂದ್ರೆ ಆ ಎಲ್ಲಾ ದಾಖಲೆಗಳನ್ನು ನಿಮಗೆ ಕೊಡುತ್ತೇವೆ.&lt;/p&gt;&lt;p&gt;ನೀವು ನಾಲ್ಕೈದು ಸುಪ್ರೀಂಕೋರ್ಟ್ ಲಾಯರ್ ಮೂಲಕವೇ ಬನ್ನಿ ಚರ್ಚಿಸಿ. ಆಮೇಲೆ ನೀವು ಕರೆದಲ್ಲಿಗೆ ನಾವು ಬರುತ್ತೇವೆ. ಸರ್ಕಾರ ಬರುತ್ತದೆ ಎಂದು ಎಂ. ಲಕ್ಷ್ಮಣ್ ಹೆಚ್.ಡಿ ಕೆಗೆ ಆಗ್ರಹಿಸಿದ್ದಾರೆ. ಬಿಎಂಆರ್ಡಿಎಲ್ ಅವರು ಈ ಭೂಮಿಯನ್ನು ತೆಗೆದುಕೊಂಡು ಕೈಗಾರಿಕೆಯವರಿಗೆ ಭೂಮಿ ಹಂಚಿದ್ದಾರೆ. ಜೊತೆಗೆ ಅಲ್ಲಿಯೇ ವಸತಿ ಯೋಜನೆಯನ್ನು ಮಾಡಲಿದ್ದಾರೆ. ಇಲ್ಲಿ ಯಾವುದೇ ರೀತಿಯಿಂದಲೂ ರಿಯಲ್ ಎಸ್ಟೇಟಿಗೆ ಅವಕಾಶವೇ ಇಲ್ಲ. ಹೀಗಿರುವಾಗ ಸುಳ್ಳು ಆರೋಪ ಮಾಡುವುದಕ್ಕೂ ಒಂದು ಅರ್ಥ ಇರಬೇಕಲ್ಲವೇ ಎಂದಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bidadi-township-row-m-lakshman-slams-hd-kumaraswamy-hit-and-run-politics-gvd/articleshow-g7k7qxo"/>
        </item>
        <item>
            <title><![CDATA[ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ, ಮುಂದಿನ 3 ದಿನಗಳು ನಿರ್ಣಾಯಕ!]]></title>
            <link>https://kannada.asianetnews.com/state/karnataka-rain-alert-imd-warns-of-heavy-rainfall-and-landslides-gdp/articleshow-onlh4xe</link>
            <guid isPermaLink="true">https://kannada.asianetnews.com/state/karnataka-rain-alert-imd-warns-of-heavy-rainfall-and-landslides-gdp/articleshow-onlh4xe</guid>
            <pubDate>Wed, 08 Jul 2026 09:16:51 +0530</pubDate>
            <description><![CDATA[ರಾಜ್ಯ ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಬಗ್ಗೆ ತೀವ್ರ ಎಚ್ಚರಿಕೆ ನೀಡಿದೆ. ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ, ಭೂಕುಸಿತದ ಆತಂಕವಿದ್ದು, ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwse2bepv93dvfq097p3dr1g,imgname-rain-alert--5--1783265045974.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ವರುಣನ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಅತ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ತೀವ್ರ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ವಿಪರೀತವಾಗಿರಲಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ 24 ರಿಂದ 48 ಗಂಟೆಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ದಟ್ಟ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.&lt;/p&gt;&lt;h2&gt;ಕರಾವಳಿ-ಮಲೆನಾಡಿಗೆ 60 ಕಿ.ಮೀ ವೇಗದ ಬಿರುಗಾಳಿ ತಲ್ಲಣ!&lt;/h2&gt;&lt;p&gt;ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿರುವ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ. ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಈಗಾಗಲೇ ಎಚ್ಚರಿಕೆ ರವಾನಿಸಲಾಗಿದೆ. ಮತ್ತೊಂದೆಡೆ ಮಲೆನಾಡು ಮತ್ತು ಘಟ್ಟ ಪ್ರದೇಶಗಳಾದ ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.&lt;/p&gt;&lt;ul&gt; &lt;li&gt;ಜುಲೈ 8 : ಕರಾವಳಿ ಕರ್ನಾಟಕದಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದ್ದು, ಭಾರೀ ಮಳೆಯಾಗಲಿದೆ. ಇದರೊಂದಿಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮುಂಜಾನೆಯಿಂದಲೇ ವರುಣನ ಅಬ್ಬರ ಜೋರಾಗಿರಲಿದೆ.&lt;/li&gt; &lt;li&gt;ಜುಲೈ 9: ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.&lt;/li&gt; &lt;li&gt;ಜುಲೈ 10: ಕರಾವಳಿ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಯಾವುದೇ ಬಿಡುಗಿಲ್ಲದೆ ನಿರಂತರವಾಗಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.&lt;/li&gt;&lt;/ul&gt;&lt;h2&gt;ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆ&lt;/h2&gt;&lt;p&gt;ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣದಿಂದ ಮಧ್ಯಮ ಗಾತ್ರದ ಮಳೆಯಾಗಲಿದೆ. ಆದರೆ, ಈ ಭಾಗಗಳಲ್ಲೂ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ವಾಹನ ನಿಲ್ಲಿಸದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.&lt;/p&gt;&lt;h2&gt;ಭೂಕುಸಿತದ (Landslide) ಭೀತಿ, ಘಟ್ಟ ಪ್ರದೇಶಗಳಲ್ಲಿ ಸಂಚರಿಸುವ ಮುನ್ನ ಗಮನಿಸಿ&lt;/h2&gt;&lt;p&gt;ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ (Landslide) ಸಂಭವಿಸುವ ತೀವ್ರ ಆತಂಕವಿದೆ. ಹೀಗಾಗಿ, ಸಾರ್ವಜನಿಕರು ತುರ್ತು ಕೆಲಸಗಳಿಲ್ಲದೆ ಘಟ್ಟ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಆರು ದಿನಗಳ ಕಾಲ ಮುಂದೂಡುವುದು ಒಳಿತು. ಸಾರ್ವಜನಿಕರ ಸುರಕ್ಷತೆಗಾಗಿ ಈ ಕೆಳಗಿನ ಪ್ರಮುಖ ಸೂಚನೆಗಳನ್ನು ಅಧಿಕಾರಿಗಳು ಹೊರಡಿಸಿದ್ದಾರೆ.&lt;/p&gt;&lt;p&gt;ನದಿಗಳು ಮತ್ತು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳಲು ಅಥವಾ ವೀಕ್ಷಿಸಲು ನದಿ ತೀರಕ್ಕೆ ಹೋಗಬಾರದು.&lt;/p&gt;&lt;p&gt;ಮಳೆ ನೀರು ನುಗ್ಗುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳ ನಿವಾಸಿಗಳನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ.&lt;/p&gt;&lt;p&gt;ಬಿರುಗಾಳಿ ಹಾಗೂ ಸಿಡಿಲು ಸಹಿತ ಮಳೆಯಾಗುತ್ತಿರುವುದರಿಂದ ರೈತರು ತಮ್ಮ ಜಾನುವಾರುಗಳನ್ನು ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ಕಟ್ಟಬಾರದು.&lt;/p&gt;&lt;p&gt;ರಾಜ್ಯಾದ್ಯಂತ ಎನ್&zwnj;ಡಿಆರ್&zwnj;ಎಫ್ (NDRF) ಹಾಗೂ ಎಸ್&zwnj;ಡಿಆರ್&zwnj;ಎಫ್ (SDRF) ಸಿಬ್ಬಂದಿಗಳು ತರ್ತು ಸಂದರ್ಭಕ್ಕೆ , ಯಾವುದೇ ತುರ್ತು ಪರಿಸ್ಥಿತಿಗೆ ಜಿಲ್ಲಾಡಳಿತಗಳು ಕಂಟ್ರೋಲ್ ರೂಮ್&zwnj;ಗಳನ್ನು ತೆರೆದಿವೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-rain-alert-imd-warns-of-heavy-rainfall-and-landslides-gdp/articleshow-onlh4xe"/>
        </item>
        <item>
            <title><![CDATA[ಬೈರಕುಪ್ಪ ಸೇತುವೆ: ಕರ್ನಾಟಕ-ಕೇರಳ ಸಂಪರ್ಕ, ದಶಕದ ಕನಸಿಗೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಮರುಜೀವ!]]></title>
            <link>https://kannada.asianetnews.com/state/kerala-karnataka-bairakuppa-bridge-project-being-expedited-says-wayanad-mp-priyanka-gandhi-gdp/articleshow-opnm514</link>
            <guid isPermaLink="true">https://kannada.asianetnews.com/state/kerala-karnataka-bairakuppa-bridge-project-being-expedited-says-wayanad-mp-priyanka-gandhi-gdp/articleshow-opnm514</guid>
            <pubDate>Sun, 28 Jun 2026 08:53:10 +0530</pubDate>
            <description><![CDATA[ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಬೈರಕುಪ್ಪ ಸೇತುವೆ ಯೋಜನೆಯನ್ನು ತ್ವರಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಂಡೀಪುರ ಅರಣ್ಯ ಮಾರ್ಗವನ್ನು ತಪ್ಪಿಸಿ, ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಈ ಯೋಜನೆಯು 30 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು.]]></description>
            <media:content url="https://static.asianetnews.com/images/w-1280,h-720,format-jpg,imgid-01kpg621nszvxh7r13gd19xmcn,imgname-untitled-design---2026-04-18t170551.184-1776512206521.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಯನಾಡ್&zwnj;&lt;/strong&gt;: ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸಲಿರುವ ಬೈರಕುಪ್ಪ ಯೋಜನೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಎರಡೂ ರಾಜ್ಯಗಳ ಸರ್ಕಾರಗಳು ಸಮನ್ವಯದೊಂದಿಗೆ ಕೆಲಸ ಮಾಡುತ್ತಿವೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.&lt;/p&gt;&lt;p&gt;ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, &lsquo;ಈ ಯೋಜನೆಗೆ ಅರಣ್ಯ ಪ್ರದೇಶದ ಬದಲು ಕಂದಾಯ ಭೂಮಿಯನ್ನು ಬಳಸಲು ನಿರ್ಧರಿಸಲಾಗಿದೆ. ಇದರಿಂದ ಸೇತುವೆಗೆ ಅನುಮೋದನೆ ಸಿಗುವುದು ಸುಲಭವಾಗಬಹುದು. ಈ ಬಗ್ಗೆ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಆ ಸ್ಥಳಕ್ಕೂ ಭೇಟಿ ನೀಡಿದ್ದೇನೆ. ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯನ್ನು ಬಳಸಿಕೊಂಡು ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು&rsquo; ಎಂದು ಹೇಳಿದರು.&lt;/p&gt;&lt;h2&gt;ಯೋಜನೆ ಹಿನ್ನೆಲೆ?:&lt;/h2&gt;&lt;p&gt;ಕರ್ನಾಟಕದ ಕೊಡಗು ಜಿಲ್ಲೆಯ ಬೈರಕುಪ್ಪದಿಂದ ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ಕಟ್ಟಿದರೆ ಅದು ಕೇರಳದ ಪೆರಿಕಲ್ಲೂರನ್ನು ಸಂಪರ್ಕಿಸುತ್ತದೆ. ಇದರಿಂದಾಗಿ ಬಂಡೀಪುರ ಅರಣ್ಯ ಮಾರ್ಗವನ್ನು ಬಳಸದೆಯೇ ವಾಹನಗಳು ಸುಲಭವಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ಮಾಡಬಹುದು. ಜೊತೆಗೆ ಸಮಯ ಮತ್ತು ಸಂಚಾರದ ಅವಧಿಯೂ ಕಡಿತವಾಗುತ್ತದೆ. 30 ವರ್ಷಗಳ ಹಿಂದೆಯೇ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತಾದರೂ ಯೋಜನೆ ನೆಲ ಬಿಟ್ಟು ಮೇಲೆ ಎದ್ದಿಲ್ಲ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/state/kerala-karnataka-bairakuppa-bridge-project-being-expedited-says-wayanad-mp-priyanka-gandhi-gdp/articleshow-opnm514"/>
        </item>
        <item>
            <title><![CDATA[ಮಲೆನಾಡಿನಲ್ಲೇ ಮಳೆ ಕೊರತೆ: ಕೊಡಗಿನ ರೈತರ ಆತಂಕ ಹೆಚ್ಚಿಸಿದ ಹವಾಮಾನ ವರದಿ]]></title>
            <link>https://kannada.asianetnews.com/karnataka-districts/kodagu-rainfall-deficit-farmers-sowing-crisis-july-weather-gvd/articleshow-q316rlh</link>
            <guid isPermaLink="true">https://kannada.asianetnews.com/karnataka-districts/kodagu-rainfall-deficit-farmers-sowing-crisis-july-weather-gvd/articleshow-q316rlh</guid>
            <pubDate>Tue, 14 Jul 2026 20:51:34 +0530</pubDate>
            <description><![CDATA[&lt;p&gt;ಮಲೆನಾಡು ಜಿಲ್ಲೆಯಾಗಿರುವ ಕೊಡಗಿನಲ್ಲಿ ಎತ್ತೇಚ್ಚ ಮಳೆ ಸುರಿಯುವುದು ಗೊತ್ತೇ ಇದೆ. ವಾರ್ಷಿಕ 2700 ಮಿಲಿ ಮೀಟರ್ ಮಳೆಯಾಗುವ ಕೊಡಗಿನಲ್ಲಿ ಈ ಬಾರಿ ಇದುವರೆಗೆ ಕೇವಲ 700 ಮಿಲಿ ಮೀಟರ್ ಮಾತ್ರವೇ ಮಳೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxgk12g37zz3n9570m0nznyy,imgname-vjv-1784041998851.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜು.14): &lt;/strong&gt;ಮಲೆನಾಡು ಜಿಲ್ಲೆಯಾಗಿರುವ ಕೊಡಗಿನಲ್ಲಿ ಎತ್ತೇಚ್ಚ ಮಳೆ ಸುರಿಯುವುದು ಗೊತ್ತೇ ಇದೆ. ವಾರ್ಷಿಕ 2700 ಮಿಲಿ ಮೀಟರ್ ಮಳೆಯಾಗುವ ಕೊಡಗಿನಲ್ಲಿ ಈ ಬಾರಿ ಇದುವರೆಗೆ ಕೇವಲ 700 ಮಿಲಿ ಮೀಟರ್ ಮಾತ್ರವೇ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1678.99 ಮಿಲಿ ಮೀಟರ್ ಮಳೆಯಾಗಿತ್ತು. ಈಗ ಕೊರತೆ ಆಗಿರುವ ಮಳೆ ಅಷ್ಟೇ ಅಲ್ಲ ಮುಂದಿನ ಇಪ್ಪತ್ತು ದಿನಗಳ ಕಾಲ ಮಳೆಯ ತೀವ್ರ ಕೊರತೆ ಎದುರಾಗಲಿದೆ ಎಂದು ಕೆಎಸ್ಎಂಡಿಸಿ ಇಲಾಖೆ ಮಾಹಿತಿ ನೀಡಿರುವುದಾಗಿ ಕೊಡಗು ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.&lt;/p&gt;&lt;p&gt;ಇದು ಕೊಡಗಿನ ಬೆಳೆಗಾರರು, ರೈತರು ಕಂಗಾಲಾಗುವಂತೆ ಮಾಡಿದೆ.&amp;nbsp; ಸಾಮಾನ್ಯವಾಗಿ ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳ ಆರಂಭದಿಂದಲೇ ಮಳೆ ಶುರುವಾಗುತಿತ್ತು. ಆದರೆ ಈ ಬಾರಿ ಎಲ್ ನಿನೋ ಪರಿಣಾಮದಿಂದಾಗಿ ಜುಲೈ ತಿಂಗಳಲ್ಲಿ ಮಳೆ ಶುರುವಾಗಿತ್ತು. ತಡವಾಗಿಯಾದರೂ ಹೇಗೋ ಮಳೆ ಶುರುವಾಯಿತಲ್ಲ ಎಂದು ಕೊಡಗಿನ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೀಗ ಜುಲೈ ತಿಂಗಳ ಆರಂಭದ ಒಂದು ವಾರವಷ್ಟೇ ಸುರಿದ ಮಳೆ ಎರಡನೇ ವಾರ ಎನ್ನುವಷ್ಟರಲ್ಲಿ ಸಂಪೂರ್ಣ ಕೈಕೊಟ್ಟಿದೆ.&lt;/p&gt;&lt;p&gt;ಇದರಿಂದ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಸಂಪೂರ್ಣ ಹಿಂದೆ ಉಳಿದಿದೆ. ಜುಲೈ ತಿಂಗಳಲ್ಲಿ ಸಾಮಾನ್ಯವಾಗಿ 860 ಮಿಲಿ ಮೀಟರ್ ವರೆಗೆ ಮಳೆ ಸುರಿಯುತ್ತದೆ. ಆದರೆ ಈ ಬಾರಿ ಕೇವಲ 379 ಮಿಲಿ ಮೀಟರ್ ಮಳೆ ಸುರಿದಿದೆ. ಹೀಗಾಗಿ ಬಿತ್ತನೆ ಕಾರ್ಯವೂ ಬಹುತೇಕ ಆಗಿಲ್ಲ. ಕೊಡಗು ಜಿಲ್ಲೆಯಲ್ಲಿ ಮಳೆಯಾಶ್ರಯಿಸಿ 19 ಸಾವಿರದ 375 ಹೆಕ್ಟೇರ್ ನಷ್ಟು ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತದೆ. ಆದರೆ ಈ ಬಾರಿ ಕೇವಲ 1475 ಹೆಕ್ಟೇರ್ ಪ್ರದೇಶದಲ್ಲಿ ಅಷ್ಟೇ ಬಿತ್ತನೆ ಮಾಡಲಾಗಿದೆ.&lt;/p&gt;&lt;h2&gt;&lt;strong&gt;ಮಳೆ ಆಗುವ ಸಾಧ್ಯತೆ ತೀರಾ ಕಡಿಮೆ&lt;/strong&gt;&lt;/h2&gt;&lt;p&gt;ಜುಲೈ ತಿಂಗಳ ಮೊದಲ ವಾರದಲ್ಲಿ ಸುರಿದ ಮಳೆಯನ್ನು ನಂಬಿ 103 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲಾಗಿದೆ. ವಿಪರ್ಯಾಸವೆಂದರೆ ಮುಂದಿನ 20 ರಿಂದ 25 ದಿನಗಳ ಅವಧಿಯಲ್ಲಿ ಮಳೆ ಆಗುವ ಸಾಧ್ಯತೆ ತೀರಾ ಕಡಿಮೆ ಇದೆ. ಇದು ಈಗಾಗಲೇ ಬಿತ್ತನೆ ಆಗಿರುವ ಬೆಳೆಗಳೂ ಕೂಡ ಹಾಳಾಗುವ ಸಾಧ್ಯತೆಗಳಿವೆ. ಇದರಿಂದ ಜನರು ಆತಂಕಗೊಳ್ಳುವಂತೆ ಆಗಿದೆ. ಒಟ್ಟಿನಲ್ಲಿ ಮಲೆನಾಡು ಜಿಲ್ಲೆಯಾಗಿರುವ ಕೊಡಗಿನಲ್ಲೂ ಇಷ್ಟೊಂದು ಮಳೆಯ ಕೊರತೆ ಎದುರಾಗಿವುದುದು ಆತಂಕಕ್ಕೆ ಕಾರಣವಾಗಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.&lt;/p&gt;&lt;p&gt;ಇನ್ನು ಜುಲೈ ತಿಂಗಳ ಮಧ್ಯ ಸಮಯವಾದರೂ ಇನ್ನೂ ಬಿತ್ತನೆ ಮಾಡುವುದಕ್ಕೆ ಆಗಿಲ್ಲ. ಇನ್ನು ಕೆಲವೇ ದಿನಗಳು ಮಳೆ ಬಾರದಿದ್ದರೆ ಕೊಡಗಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜುಲೈ ತಿಂಗಳಾದರೂ ಬಿತ್ತನೆ ಮಾಡದೇ ಇರುವ ವರ್ಷ ಇದಾಗಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಜುಲೈ ತಿಂಗಳಲ್ಲಿ ಮಳೆ ಚಳಿ ತಡೆಯಲಾರದೆ ಸ್ವೆಟರ್ ಮತ್ತಿತರೆ ವಸ್ತುಗಳ ಮೊರೆ ಹೋಗುತ್ತಿದ್ದ ಕೊಡಗಿನಲ್ಲಿ ಬಿಸಿಲ ಬೇಗೆಯಿಂದ ಬೆವರಿ ಬಸವಳಿಯುವಂತೆ ಆಗಿದೆ.&amp;nbsp; ಈಗಲೇ ಪರಿಸ್ಥಿತಿ ಈ ರೀತಿ ಆದೆ ಮುಂದಿನ ದಿನಗಳನ್ನು ನೆನಪಿಸಿಕೊಂಡರೆ ಭಯವಾಗುತ್ತದೆ ಎನ್ನುತ್ತಿದ್ದಾರೆ ಕೊಡಗಿನ ಜನರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-rainfall-deficit-farmers-sowing-crisis-july-weather-gvd/articleshow-q316rlh"/>
        </item>
        <item>
            <title><![CDATA[SIR ನಡೆಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಲ್ಲ: ಎಚ್‌ಡಿಕೆಗೆ ಸಚಿವ ಯು.ಟಿ. ಖಾದರ್ ತಿರುಗೇಟು]]></title>
            <link>https://kannada.asianetnews.com/karnataka-districts/minister-ut-khader-reply-hd-kumaraswamy-sir-election-commission-gvd/articleshow-q7indbr</link>
            <guid isPermaLink="true">https://kannada.asianetnews.com/karnataka-districts/minister-ut-khader-reply-hd-kumaraswamy-sir-election-commission-gvd/articleshow-q7indbr</guid>
            <pubDate>Sun, 05 Jul 2026 23:13:48 +0530</pubDate>
            <description><![CDATA[&lt;p&gt;SIR ಪ್ರಕ್ರಿಯೆಯಲ್ಲಿ ರಾಜ್ಯದಲ್ಲಿ ಅಕ್ರಮ ನಡೆಯುತ್ತಿವೆ. ಹೀಗಾಗಿ ಈಗ ಆಗಿರುವ ಪ್ರಕ್ರಿಯೆಯನ್ನು ರದ್ದು ಮಾಡಿ, ಹೊರರಾಜ್ಯದ ದಕ್ಷ ಅಧಿಕಾರಿಗೆ ಉಸ್ತುವಾರಿ ನೀಡಲಿ ಎಂದು ಸಚಿವ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwsk9p7tztnggfrcy1b20wzd,imgname-nlln-1783270529274.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜು.05): &lt;/strong&gt;ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದಲ್ಲಿ ಅಕ್ರಮ ನಡೆಯುತ್ತಿವೆ. ಹೀಗಾಗಿ ಈಗ ಆಗಿರುವ ಪ್ರಕ್ರಿಯೆಯನ್ನು ರದ್ದು ಮಾಡಿ, ಹೊರರಾಜ್ಯದ ದಕ್ಷ ಅಧಿಕಾರಿಗೆ ಉಸ್ತುವಾರಿ ನೀಡಲಿ ಎಂದಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ. ಎಸ್ಐಆರ್ ನಡೆಸುತ್ತಿರುವುದು ರಾಜ್ಯ ಸರ್ಕಾರವಲ್ಲ, ಚುನಾವಣಾ ಆಯೋಗ. ಕುಮಾರಸ್ವಾಮಿ ಅವರು ಬೇಕಾದರೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಿ. ಇಲ್ಲವೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೋಗಿ ದೂರು ಕೊಡಲಿ ಎಂದು ಯು.ಟಿ. ಖಾದರ್ ಅವರು ಎಚ್.ಡಿ.ಕೆ ಅವರಿಗೆ ತಿರುಗೇಟು ನೀಡಿದ್ದಾರೆ.&lt;/p&gt;&lt;p&gt;ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಕೊಡಗಿಗೆ ಆಗಮಿಸಿದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. SIR ನಡೆಸುವುದು ರಾಜ್ಯ ಸರಕಾರದ ಜವಾಬ್ದಾರಿ ಅಲ್ಲ, ಅದು ಚುನಾವಣಾ ಆಯೋಗದ ಕೆಲಸ. ನಾವು ಜನರಿಗೆ ಕೇವಲ ಜನಜಾಗೃತಿ ಮಾಡುತ್ತಿದ್ದೇವೆ. ಸರಕಾರ ತನ್ನ ಜವಾಬ್ದಾರಿಯನ್ನು ಸಮಪರ್ಕವಾಗಿ ನಡೆಸುತ್ತಿದೆ ಎಂದು ಮಡಿಕೇರಿಯಲ್ಲಿ ಹೇಳಿದ್ದಾರೆ. ಇನ್ನು ಪೇಮೆಂಟ್ ಗಾಗಿ ಸಚಿವ ಸಂಪುಟ ಇನ್ನೂ ವಿಸ್ತರಣೆಯಾಗಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿರುವುದಕ್ಕೆ ಸಚಿವ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ.&lt;/p&gt;&lt;p&gt;ಸಚಿವ ಸಂಪುಟ ವಿಸ್ತರಣೆ ಸಿಎಂ, ಹೈಕಮಾಂಡ್ ತೀರ್ಮಾನ. ಅಲ್ಲಿಯವರಗೆ ನಾವು ಡಬ್ಬಲ್ ಕೆಲಸ ಮಾಡುತ್ತೇವೆ. ಜನರಿಗೆ ತೊಂದರೆ ಆಗದ ರೀತಿ ನೋಡಿಕೊಳ್ಳುತ್ತೇವೆ. ಆದರೆ ವಿಪಕ್ಷ ನಾಯಕರು ನಮ್ಮನ್ನು ಶ್ಲಾಘನೆ ಮಾಡಲು ಸಾಧ್ಯವಿಲ್ಲ. ಟೀಕೆ ಮಾಡುವುದೇ ಅವರಿಗೆ ಆಕ್ಸಿಜನ್ ಅಲ್ಲವೇ. ಟೀಕೆ ಮಾಡದಿದ್ದರೆ ವಿಪಕ್ಷ ಬದುಕಲು ಸಾಧ್ಯವಿಲ್ಲ. ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಂದು ತಿಂಗಳು ಯಾವುದೇ ಸಚಿವರೇ ಇರಲಿಲ್ಲ. ಆದೂ ಕೂಡ ಆಗ ಅತೀ ವೃಷ್ಟಿಯಾಗಿ ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಆಗಿತ್ತು.&lt;/p&gt;&lt;p&gt;ಸಚಿವ ಸಂಪುಟ ವಿಸ್ತರಣೆ ಆಗಬೇಕಾದರೆ ಸಾಕಷ್ಟು ಸಾಮಾಜಿಕ ವಿಚಾರಗಳಿರುತ್ತವೆ. ಅದನ್ನು ನೋಡಿ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ. ಜನರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಕೊಡಗು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆಯನ್ನು ಉಸ್ತುವಾರಿ ಸಚಿವ ಯು.ಟಿ. ಖಾದರ್ ರಜಾ ದಿನವಾಗಿರುವ ಭಾನುವಾರ ರಾತ್ರಿಯೂ ನಡೆಸಿದರು. ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗಹಿಸಿದ ಅವರು ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ.&lt;/p&gt;&lt;h2&gt;&lt;strong&gt;ಕಟ್ಟು ನಿಟ್ಟಿನ ಸೂಚನೆ&lt;/strong&gt;&lt;/h2&gt;&lt;p&gt;ಜಿಲ್ಲೆಯ ಕೆಲವೆಡೆ ವಿಪರೀತ ಸುರಿಯುತ್ತಿದೆ. ಇನ್ನು ಕೆಲವು ಭಾಗದಲ್ಲಿ ಮಳೆಯೇ ಇಲ್ಲದ ಸ್ಥಿತಿ ಇದೆ. ಹೀಗಿರುವ ಅತಿವೃಷ್ಟಿಯಾಗಲಿ, ಅನಾವೃಷ್ಟಿಯಾಗಲಿ ಅಧಿಕಾರಿಗಳು ಎರಡನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಅವಧಿಗೆ ಎಷ್ಟು ಮಳೆಯಾಗಬೇಕಾಗಿತ್ತು, ಎಷ್ಟು ಆಗಿದೆ. ಎಷ್ಟು ಮಳೆ ಕೊರತೆಯಾಗಿದೆ, ಬಿತ್ತನೆ ಎಷ್ಟು ಆಗಿದೆ ಎಂಬ ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೆ ಶೇಕರಣೆ ಇರುವ ಯೂರಿಯಾ, ಗೊಬ್ಬರ ಮುಂತಾದವುಗಳ ಬಗ್ಗೆಯೂ ಮಾಹಿತಿ ಪಡೆದಕೊಂಡರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-ut-khader-reply-hd-kumaraswamy-sir-election-commission-gvd/articleshow-q7indbr"/>
        </item>
        <item>
            <title><![CDATA[ಕೊಡಗು ಶಾಲೆಗಳಿಗೆ ನಾಳೆ ರಜೆ, ಭಾರಿ ಮಳೆಯಿಂದ ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ]]></title>
            <link>https://kannada.asianetnews.com/karnataka-districts/kodagu-schools-declare-holiday-tomorrow-july-8th-amid-heavy-rain-orange-alert/articleshow-qrzt4ua</link>
            <guid isPermaLink="true">https://kannada.asianetnews.com/karnataka-districts/kodagu-schools-declare-holiday-tomorrow-july-8th-amid-heavy-rain-orange-alert/articleshow-qrzt4ua</guid>
            <pubDate>Tue, 07 Jul 2026 19:20:14 +0530</pubDate>
            <description><![CDATA[&lt;p&gt;ಕೊಡಗು ಶಾಲೆಗಳಿಗೆ ನಾಳೆ (ಜು.08) ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktgqqedqgydnprvbnmr8vpkv,imgname-karnataka-rain-red-alert--3--1780825700791.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಜು.07)&lt;/strong&gt; ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಲಾಶಗಳು ಭರ್ತಿಯಾಗುತ್ತಿದೆ. ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇತ್ತ ಪ್ರವಾಹ ಪರಿಸ್ಥಿತಿ, ಭೂಕುಸಿತ ಸೇರಿದಂತೆ ಕೆಲ ಅವಘಢಗಳು ಸಂಭವಿಸಿದೆ. ಕೊಡಗಿನಲ್ಲಿ ಕೆಳೆದೆರಡು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜುಲೈ 9ರ ಬೆಳಗ್ಗೆ 8.30ರ ವರೆಗೆ ಆರೇಂಜ್ ಅಲರ್ಟ್ ಘೋಷಿಸಿದೆ. ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಪ್ರಾಥಮಿಕ, ಪ್ರೌಡಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.&lt;/p&gt;&lt;h2&gt;ಒಂದು ದಿನದ ರಜೆ ಘೋಷಿಸಿದ ಡಿಡಿಪಿಐ&lt;/h2&gt;&lt;p&gt;ಕೊಡಗಿನಲ್ಲಿ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿದೆ. ಕಾವೇರಿ ನದಿ ತುಂಬಿ ಹರಿಯುತ್ತಿದೆ. ಮಳೆ ಕೊರತೆಯಲ್ಲಿದ್ದ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ನೀಡುತ್ತಿದ್ದಂತೆ ಡಿಡಿಪಿಐ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿದೆ. ನಾಳೆ (ಜು.08) ರಜೆ ಘೋಷಿಸಿದ್ದಾರೆ.&lt;/p&gt;&lt;h2&gt;ಕೊಡಗಿನಲ್ಲಿ ಜುಲೈ 8&lt;/h2&gt;&lt;p&gt;ಗುರುವಾರ (ಜುಲೈ 9) ಬೆಳಿಗ್ಗೆ 8.30 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಇನ್ನೆರೆಡು ದಿನ ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ. ಇದೇ ವೇಳೆ ತೀವ್ರ ಮುನ್ನಚ್ಚೆರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ನದಿ ಪಾತ್ರದ ಜನರು, ಗುಡ್ಡ, ಬೆಟ್ಟದ ತಪ್ಪಲಿನಲ್ಲಿರುವ ಜನರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.&lt;/p&gt;&lt;h2&gt;ನದಿ, ಜಲಪಾತ, ಜಲಾಶಯಗಳತ್ತ ತೆರಳದಂತೆ ಸೂಚನೆ&lt;/h2&gt;&lt;p&gt;ಕೊಡಗಿನಲ್ಲಿ ಭಾರಿ ಮಳೆಯಾಗುತಿರುವ ಕಾರಣ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ನದಿಗಳು ತುಂಬಿದೆ. ಹೀಗಾಗಿ ನದಿ ಬಳಿ, ಜಲಾಪಾತ ವೀಕ್ಷಣೆ, ಜಲಾಶಗಳತ್ತ ತೆರಳದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಮಲ್ಲಳ್ಳಿ ಜಲಪಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಿಲುಕಿದ್ದರು. ಬಳಿಕ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kodagu</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/kodagu-schools-declare-holiday-tomorrow-july-8th-amid-heavy-rain-orange-alert/articleshow-qrzt4ua"/>
        </item>
        <item>
            <title><![CDATA[Abhimanyu : ಮರದ ದಿಮ್ಮಿ ಸಾಗಿಸುವಾಗ ದಸರಾ ಆನೆ ಅಭಿಮನ್ಯು ದಂತ ಭಗ್ನ!]]></title>
            <link>https://kannada.asianetnews.com/karnataka-districts/dasara-elephant-abhimanyu-damage-a-tusk-while-transporting-a-log-rav/articleshow-rrq69e6</link>
            <guid isPermaLink="true">https://kannada.asianetnews.com/karnataka-districts/dasara-elephant-abhimanyu-damage-a-tusk-while-transporting-a-log-rav/articleshow-rrq69e6</guid>
            <pubDate>Sun, 05 Jul 2026 08:24:42 +0530</pubDate>
            <description><![CDATA[&lt;p&gt;ಮೈಸೂರು ದಸರಾದ ಅಂಬಾರಿ ಆನೆ ಅಭಿಮನ್ಯುವಿನ ದಂತ ಭಗ್ನವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು ಆನೆ ಇತ್ತೀಚೆಗೆ ಮರದ ದಿಮ್ಮಿ ಸಾಗಿಸುವ ವೇಳೆ ಎಡ ಭಾಗದ ದಂತದ ತುದಿ ಭಾಗ ಮುರಿದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwr31tnq9q4z2hedcnfnsftg,imgname-----------------------2026-07-05t082204.612-1783219940022.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಜು.5):&lt;/strong&gt; ಕೊಡಗಿನ ಕುವರ ಎಂದೇ ಕರೆಯಿಸಿಕೊಳ್ಳುವ ಮೈಸೂರು ದಸರಾದ ಅಂಬಾರಿ ಹೊತ್ತುಕೊಳ್ಳುವ ಆನೆ ಅಭಿಮನ್ಯುವಿನ ದಂತ ಭಗ್ನವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು ಆನೆ ಇತ್ತೀಚೆಗೆ ಮರದ ದಿಮ್ಮಿ ಸಾಗಿಸುವ ವೇಳೆ ಎಡ ಭಾಗದ ದಂತದ ತುದಿ ಭಾಗ ಮುರಿದಿದೆ.&lt;/p&gt;&lt;h2&gt;ಅಭಿಮನ್ಯುವಿನ ದಂತ ಭಗ್ನಗೊಂಡಿದ್ದು ಹೇಗೆ?&lt;/h2&gt;&lt;p&gt;ಮರದ ದಿಮ್ಮಿ ಅಥವಾ ಕಠಿಣವಾದ ವಸ್ತುವಿಗೆ ಬಡಿದು ದಂತಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಪಶು ವೈದ್ಯರು ಆನೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಅಭಿಮನ್ಯು ಆರೋಗ್ಯವಾಗಿದ್ದು, ಯಾವುದೇ ಆತಂಕ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮತ್ತೆ ದಂತ ಬೆಳವಣಿಗೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ಸದ್ಯ ಆನೆ ಇದೀಗ ಮೈಸೂರಿನ ಸರಗೂರಿನಲ್ಲಿ ಹುಲಿ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿದೆ.&lt;/p&gt;&lt;p&gt;ಅರ್ಜುನ ಬಳಿಕ ನಾಡದೇವತೆ ಚಾಮುಂಡೇಶ್ವರಿಯನ್ನ ವಿಶ್ವದರ್ಶನ ಮಾಡಿಸುವ ಜವಾಬ್ದಾರಿ ಅಭಿಮನ್ಯು ಹೊತ್ತಿದ್ದಾನೆ.&lt;/p&gt;&lt;p&gt;ಅಭಿಮನ್ಯು 1970ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. ನಂತರ ಮತ್ತಿಕೋಡು ಶಿಬಿರದಲ್ಲಿ ಪಳಗಿಸಲಾಯ್ತು. ಸದ್ಯ ಈಗ 60 ವರ್ಷದ ಹಿರಿಯ. ವಯಸ್ಸಾಗಿರುವುದರಿಂದ ಸಹಜವಾಗಿ ದಂತ ದುರ್ಬಲಗೊಂಡಿರುತ್ತವೆ. ಹೀಗಾಗಿ ದಂತ ಭಗ್ನವಾಗಿದೆ ಎನ್ನಲಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/dasara-elephant-abhimanyu-damage-a-tusk-while-transporting-a-log-rav/articleshow-rrq69e6"/>
        </item>
        <item>
            <title><![CDATA[ಕೊಡಗಿನಲ್ಲಿ ಅವ್ಯವಸ್ಥೆ ಕಂಡು ಗರಂ ಆದ ಉಪ ಲೋಕಾಯುಕ್ತ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ]]></title>
            <link>https://kannada.asianetnews.com/karnataka-districts/deputy-lokayukta-kn-phaneendra-warns-kodagu-officials-gvd/articleshow-su4fafi</link>
            <guid isPermaLink="true">https://kannada.asianetnews.com/karnataka-districts/deputy-lokayukta-kn-phaneendra-warns-kodagu-officials-gvd/articleshow-su4fafi</guid>
            <pubDate>Fri, 03 Jul 2026 19:05:51 +0530</pubDate>
            <description><![CDATA[&lt;p&gt;ನಿಮಗೆ ಶಿಕ್ಷೆ ಕೊಡುವಂತೆ ಸರ್ಕಾರಕ್ಕೆ ಬರೆಯುತ್ತೇನೆಂದು ಗರಂ ಆದರು. ಮಡಿಕೇರಿ ನಗರಸಭೆ ಆಯುಕ್ತ ರಮೇಶ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಕೆ ಎನ್ ಫಣೀಂದ್ರ ತರಾಟೆಗೆ ತೆಗೆದುಕೊಂಡರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwm2ynmwbg17smk91xzck659,imgname-hffhc-1783085618844.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜು.03): &lt;/strong&gt;ಕೊಡಗಿನ ವಿವಿಧೆಡೆಗೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಕೊಡಗಿನ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಮಡಿಕೇರಿಯ ವೃದ್ಧಾಶ್ರಮ, ವಿದ್ಯಾರ್ಥಿನಿಯರ ಹಾಸ್ಟೆಲ್, ಮಡಿಕೇರಿ ನಗರಸಭೆ ಕಸ ನಿರ್ವಹಣೆ ಮಾಡುತ್ತಿರುವ ಸ್ಥಳ ಹಾಗೂ ಬಸ್ಸು ನಿಲ್ದಾಣಗಳಿಗೆ ಭೇಟಿ ನೀಡಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸ್ಟೆಲ್ ಹಾಗೂ ವೃದ್ಧಾಶ್ರಮ ಅವ್ಯವಸ್ಥೆಗಳ ಕಂಡ ಕೆ.ಎನ್. ಫಣೀಂದ್ರ ಅವರು ಗರಂ ಆದರು.&lt;/p&gt;&lt;p&gt;ಹಾಸ್ಟೆಲ್ ಹಾಗೂ ವೃದ್ಧಾಶ್ರಮಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿಕೊಂಡರು. ಮಡಿಕೇರಿ ನಗರಸಭೆ ಕಸ ವಿಲೇವಾರಿಗೂ ಅವ್ಯವಸ್ಥೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು ಅಧಿಕಾರಿಗಳು ಏನೂ ಪ್ರಯೋಜನ ಇಲ್ಲವೆಂದರು. ಅವೈಜ್ಞಾನಿಕ ಕಸ ವಿಲೇವಾರಿ ಕಂಡು ಅಧಿಕಾರಿಗಳ ತರಾಟೆಗೆ ತೆಗೆದುಕೊಂಡರು. ಎರಡೆರಡು ವರ್ಷಗಳಿಂದ ಇಲ್ಲಿದ್ದೀರಾ ಆದರೆ ಎರಡು ವರ್ಷಗಳಲ್ಲಿ ಕನಿಷ್ಠ ಕೆಲವನ್ನು ಮಾಡಿಲ್ಲವೆಂದರು. ನೀವೇನೋ ಇಲ್ಲಿಂದ ಬೇರೆಡೆಗೆ ಹೋಗುತ್ತೀರಾ, ಆದರೆ ಇಲ್ಲಿ ಬದುಕುವ ಜನರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.&lt;/p&gt;&lt;p&gt;ನಿಮಗೆ ಶಿಕ್ಷೆ ಕೊಡುವಂತೆ ಸರ್ಕಾರಕ್ಕೆ ಬರೆಯುತ್ತೇನೆಂದು ಗರಂ ಆದರು. ಮಡಿಕೇರಿ ನಗರಸಭೆ ಆಯುಕ್ತ ರಮೇಶ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಎರಡು ತಿಂಗಳಲ್ಲಿ ಕಸ ವಿಲೇವಾರಿ ಸಮಸ್ಯೆಯನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಮೂರ್ತಿ ಫಣೀಂದ್ರ ಎಚ್ಚರಿಸಿದರು. ಯಾವ ಜಿಲ್ಲೆಯಲ್ಲೂ ಈ ರೀತಿಯ ಅವೈಜ್ಞಾನಿಕ ಕಸವಿಲೇವಾರಿಯನ್ನು ಕಂಡಿಲ್ಲ ಎಂದರು. ಕಸ ವಿಲೇವಾರಿ ಘಟಕದ ಗೇಟ್ ಬಳಿಗೆ ಇಳಿಯುತ್ತಿದ್ದಂತೆ ರಸ್ತೆಯನ್ನೇ ಸರಿಯಾಗಿ ಇಟ್ಟುಕೊಂಡಿಲ್ಲ, ಇನ್ನು ಕಸವನ್ನು ಹೇಗೆ ವಿಲೇವಾರಿ ಮಾಡುತ್ತಿದ್ದೀರ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.&lt;/p&gt;&lt;p&gt;ಕನಿಷ್ಟ ಓಡಾಡಲು ರಸ್ತೆ ಸುಗಮವಾಗಿರಬೇಕು. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಸವನ್ನು ವಿಲೇವಾರಿ ಮಾಡುವುದು ಹೀಗೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಸ ವಿಲೇವಾರಿ ಘಟಕ ಕೇಂದ್ರ ನಿರ್ವಹಣೆ ತುಂಬಾ ಕಳಪೆಯಿಂದ ಕೂಡಿದ್ದು, ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡುತ್ತಿಲ್ಲ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಿಟ್ಟಾದರು. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ ಕಸ ವಿಲೇವಾರಿ ಮಾಡಬೇಕು. ಆ ಕೆಲಸ ಇಲ್ಲಿ ಆಗುತ್ತಿಲ್ಲ.&lt;/p&gt;&lt;p&gt;ಕಸದಿಂದ ಸೋರುವ ನೀರು ಎಲ್ಲಿಗೆ ಹೋಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದೆಯೇ ಎಂದು ಪ್ರಶ್ನಿಸಿದರು. ಈ ಪ್ರದೇಶದಲ್ಲಿ ಹೆಚ್ಚಿನ ಮಳೆಯಿಂದಾಗಿ ಕಸದ ನೀರು ಬೋರ್ವೆಲ್, ತೊರೆಗಳ ಮೂಲಕ ಅಂತರ್ ಜಲವೇ ಮಲೀನವಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಮುನ್ನೆಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು. ಪರಿಸರ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಎಂಜಿನಿಯರ್ಗಳು ಗಮನಹರಿಸಬೇಕು. ಇಲ್ಲದಿದ್ದರೆ ಎಲ್ಲರ ಮೇಲೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಎಚ್ಚರಿಸಿದರು.&lt;/p&gt;&lt;p&gt;ವೈದ್ಯಕೀಯ, ಪಶು ವೈದ್ಯಕೀಯ, ಕುಡಿಯುವ ನೀರು ಪೂರೈಕೆ ವಿಭಾಗ, ನಗರಸಭೆ ಹಾಗೂ ಪರಿಸರ ಇಲಾಖೆ ಹೀಗೆ ಎಲ್ಲಾ ವಿಭಾಗದ ಎಂಜಿನಿಯರ್ಗಳು ಈ ಬಗ್ಗೆ ಗಮನಹರಿಸಬೇಕು ಎಂದು ಕೆ.ಎನ್.ಫಣೀಂದ್ರ ಅವರು ನಿರ್ದೇಶನ ನೀಡಿದರು. ಕೆರೆಕಟ್ಟೆ, ಕಾಲುವೆ, ತೊರೆಗಳ ಮೂಲಕ ಕಸದ ನೀರು ಹೋಗದಂತೆ ಎಚ್ಚರವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ನಿರ್ದೇಶನ ನೀಡಿದರು. ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಸಮಾರೋಪಾದಿಯಲ್ಲಿ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಇಲ್ಲಿರುವ ಆರು ಎಕರೆ ಜಾಗ ಸಾಲುವುದಿಲ್ಲ. ಆದ್ದರಿಂದ ಬೇರೆ ಕಡೆಯು ಕಸ ವಿಲೇವಾರಿಗೆ ಜಾಗ ಕಾಯ್ದಿರಿಸಬೇಕು ಎಂದು ಸಲಹೆ ಮಾಡಿದರು.&lt;/p&gt;&lt;h2&gt;&lt;strong&gt;ಸ್ವಯಂ ಪ್ರೇರಿತ ದೂರು ದಾಖಲು&lt;/strong&gt;&lt;/h2&gt;&lt;p&gt;ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆಗಳ ಮಾಹಿತಿ ಪಡೆಯಬೇಕು. ಶುಚಿತ್ವ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕಸ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸುವಲ್ಲಿ ಮುಂದಾಗಬೇಕು ಎಂದರು. ಕಸವಿಲೇವಾರಿಯನ್ನು ಸಮಪರ್ಕವಾಗಿ ನಿರ್ವಹಿಸದಿರುವ ಹಿನ್ನೆಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು. ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗಬೇಕು ಎಂದು ಸಲಹೆ ಮಾಡಿದರು. ಬಳಿಕ ನಗರದ ಮಾರುಕಟ್ಟೆ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆಯೇ ಎಂದು ಮಾಹಿತಿ ಪಡೆದರು.&lt;/p&gt;&lt;p&gt;ಹೆಚ್ಚಿನ ಮಳೆಯಿಂದ ಮಳೆ ನೀರು ಎರಚುವುದು ಹಾಗೂ ಬೆಳಕು ವ್ಯವಸ್ಥೆ ಇಲ್ಲದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಚರಂಡಿ ಸರಿಪಡಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲ್ಲೆಂದರಲ್ಲಿ ಕಸ ಕಡ್ಡಿ ಹಾಕುವುದನ್ನು ತಡೆಯಬೇಕು. ಈ ಸಂಬಂಧ ಜಾಗೃತಿ ಫಲಕ ಅಳವಡಿಸಬೇಕು ಎಂದು ಫಣೀಂದ್ರ ಅವರು ಹೇಳಿದರು. ವ್ಯಾಪಾರಸ್ಥರು ಸಹ ಎಲ್ಲೆಂದರಲ್ಲಿ ಕಸ ಬಿಸಾಡಿದಲ್ಲಿ ದಂಡ ವಿಧಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದರು. ಈ ವೇಳೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/deputy-lokayukta-kn-phaneendra-warns-kodagu-officials-gvd/articleshow-su4fafi"/>
        </item>
        <item>
            <title><![CDATA[ಕೊಡಗಿನಲ್ಲಿ ಮಳೆಯಾಗುತ್ತಿದ್ದಂತೆ ತಮಿಳುನಾಡಿಗೆ ಹೊರಟ ಕಾವೇರಿ; ಮಂಡ್ಯದಲ್ಲಿ ನದಿಗಿಳಿದು ರೈತರ ಪ್ರತಿಭಟನೆ!]]></title>
            <link>https://kannada.asianetnews.com/karnataka-districts/mandya-farmers-protest-by-entering-cauvery-river-against-water-release-to-tamil-nadu/articleshow-tpv9378</link>
            <guid isPermaLink="true">https://kannada.asianetnews.com/karnataka-districts/mandya-farmers-protest-by-entering-cauvery-river-against-water-release-to-tamil-nadu/articleshow-tpv9378</guid>
            <pubDate>Tue, 07 Jul 2026 20:01:03 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಬರಗಾಲದ ನಡುವೆಯೂ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರನ್ನು ರಹಸ್ಯವಾಗಿ ಹರಿಸುತ್ತಿದೆ ಎಂದು ಆರೋಪಿಸಿ, ಮಂಡ್ಯದ ರೈತರು ಶ್ರೀರಂಗಪಟ್ಟಣದಲ್ಲಿ ನದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwyfmchxjdyw6jc67r64c7db,imgname-screenshot-2026-07-07-194927-1783434457660.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜು.07): ರಾ&lt;/strong&gt;ಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದರೂ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗುಟ್ಟಾಗಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿದೆ ಎಂದು ಆರೋಪಿಸಿ ಮಂಡ್ಯದ ರೈತರು ಆಕ್ರೋಶ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಪವಿತ್ರ ಸ್ನಾನಘಟ್ಟದ ಬಳಿ ರೈತ ಸಂಘದ ಕಾರ್ಯಕರ್ತರು ನದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.&lt;/p&gt;&lt;h2&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h2&gt;&lt;p&gt;ಕಳೆದ ನಾಲ್ಕೈದು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶವಾದ ಕೊಡಗು ಮತ್ತಿತರ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೆಆರ್&zwnj;ಎಸ್ ಜಲಾಶಯಕ್ಕೆ ಈ ವರ್ಷದ ಮಳೆಗಾಲದಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರಿನ ಒಳಹರಿವು ಬಂದಿದೆ. ಇದೀಗ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವು 5 ಸಾವಿರ ಕ್ಯೂಸೆಕ್ ದಾಟುತ್ತಿದ್ದಂತೆಯೇ, ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಸುದ್ದಿ ಜಿಲ್ಲೆಯಾದ್ಯಂತ ಹಬ್ಬಿದೆ. ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಈ ಬಾರಿ ಸರಿಯಾಗಿ ಮಳೆಯಾಗದೆ ಬೆಳೆಗಳು ಒಣಗುತ್ತಿವೆ. ಅದರಲ್ಲೂ ವಿಶೇಷವಾಗಿ ಮಂಡ್ಯದ ಜೀವನಾಡಿ ಎನಿಸಿರುವ ಕಬ್ಬು ನೀರಿಲ್ಲದೆ ಬಾಡಿ ಹೋಗುತ್ತಿದೆ. ಸ್ಥಳೀಯ ರೈತರ ನಾಲೆಗಳಿಗೆ ನೀರು ಬಿಡದ ಸರ್ಕಾರ, ನೆರೆ ರಾಜ್ಯಕ್ಕೆ ನೀರು ಹರಿಸುತ್ತಿರುವುದು ರೈತರ ಕೆಂಗಣ್ಣಿಗೆ ಗುರಿಯಾಗಿದೆ.&lt;/p&gt;&lt;h2&gt;&lt;strong&gt;ನದಿಗಿಳಿದು ಪ್ರತಿಭಟನೆ:&lt;/strong&gt;&lt;/h2&gt;&lt;p&gt;ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಸ್ನಾನಘಟ್ಟದ ಬಳಿ ಜಮಾಯಿಸಿದ ರೈತ ಸಂಘದ ನೂರಾರು ಕಾರ್ಯಕರ್ತರು, ಕಾವೇರಿ ನದಿಯ ನೀರಿನಲ್ಲಿ ನಿಂತು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. 'ನಮ್ಮ ಹೊಲಗಳಿಗೆ ನೀರಿಲ್ಲ, ಕುಡಿಯಲು ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಆದರೆ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ನಮ್ಮ ರೈತರ ಹಿತಕ್ಕಿಂತ ತಮಿಳುನಾಡಿನ ಹಿತವೇ ಮುಖ್ಯವಾಯಿತೇ?' ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.&lt;/p&gt;&lt;h2&gt;&lt;strong&gt;ಸರ್ಕಾರಕ್ಕೆ ರೈತರ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ರೈತರ ಹಿತಾಸಕ್ತಿ ಮುಖ್ಯವಲ್ಲ ಎಂದು ಕಿಡಿಕಾರಿದ ರೈತರು, ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ, ಸ್ಥಳೀಯ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ತಮಿಳುನಾಡಿಗೆ ನೀರು ಹರಿಸುವುದನ್ನು ಮುಂದುವರೆಸಿದರೆ ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-farmers-protest-by-entering-cauvery-river-against-water-release-to-tamil-nadu/articleshow-tpv9378"/>
        </item>
        <item>
            <title><![CDATA[Kodagu ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ: ಪೊಲೀಸರು ಹೈ ಅಲರ್ಟ್]]></title>
            <link>https://kannada.asianetnews.com/karnataka-districts/kodagu-court-kendriya-vidyalaya-bomb-threat-hoax-gvd/articleshow-uklzfx9</link>
            <guid isPermaLink="true">https://kannada.asianetnews.com/karnataka-districts/kodagu-court-kendriya-vidyalaya-bomb-threat-hoax-gvd/articleshow-uklzfx9</guid>
            <pubDate>Sat, 27 Jun 2026 23:41:55 +0530</pubDate>
            <description><![CDATA[&lt;p&gt;Kodagu News: ನಾಲ್ಕು ದಿನಗಳ ಅಂತರದಲ್ಲಿ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದ್ದರೆ, ಮೂರು ತಿಂಗಳ ಅವಧಿಯಲ್ಲಿ ಮೂರು ಬಾರಿ ಬಾಂಬ್ ಬೆದರಿಕೆ ಮೇಲ್ ಸಂದೇಶ್ ಬಂದಿರುವುದು ಆತಂಕಗೊಳ್ಳುವಂತೆ ಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw51yv5gz5tee25q5fe350fv,imgname-vxgv-1782581259440.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.27): &lt;/strong&gt;ಕೊಡಗು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರು ಬಾರಿ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಬರುವ ಮೂಲಕ ಎಲ್ಲರೂ ಆತಂಕಗೊಳ್ಳುವಂತೆ ಮಾಡಿದೆ. ಆದರೆ ಈ ಬಾರಿ ನ್ಯಾಯಾಲಯದ ಜೊತೆಗೆ ಕೊಡಗು ಕೇಂದ್ರೀಯ ವಿದ್ಯಾಲಯಕ್ಕೂ ಬಾಂಬ್ ಬೆದರಿಕೆ ಬರುವ ಮೂಲಕ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿತು.&lt;/p&gt;&lt;p&gt;ಹೌದು ಮಡಿಕೇರಿಯಲ್ಲಿ ಇರುವ ಕೊಡಗು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಕ್ಕೆ ಶನಿವಾರವೂ ಬಾಂಬ್ ಬೆದರಿಕೆ ಬಂದಿರುವುದು ನ್ಯಾಯಾಧೀಶರು, ನ್ಯಾಯಾಂಗ ಇಲಾಖೆ ಸಿಬ್ಬಂದಿ, ವಕೀಲರು ಹಾಗೂ ಕಕ್ಷೀದಾರರನ್ನು ಒಂದು ಕ್ಷಣ ಭಯಭೀತಗೊಳ್ಳುವಂತೆ ಮಾಡಿತು. ನಾಲ್ಕು ದಿನಗಳ ಅಂತರದಲ್ಲಿ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದ್ದರೆ, ಮೂರು ತಿಂಗಳ ಅವಧಿಯಲ್ಲಿ ಮೂರು ಬಾರಿ ಬಾಂಬ್ ಬೆದರಿಕೆ ಮೇಲ್ ಸಂದೇಶ್ ಬಂದಿರುವುದು ಆತಂಕಗೊಳ್ಳುವಂತೆ ಮಾಡಿದೆ.&lt;/p&gt;&lt;p&gt;ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಮತ್ತು ಸಮೀಪದಲ್ಲೇ ಇರುವ ಕೇಂದ್ರೀಯ ವಿದ್ಯಾಲಯದಲ್ಲಿ ಬಾಂಬ್ ಸ್ಫೋಟಿಸುವುದಾಗಿ ನ್ಯಾಯಾಲಯ ಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿದ್ದರು. ಬೆಳಿಗ್ಗೆ ನ್ಯಾಯಾಲಯಕ್ಕೆ ಬಂದ ನ್ಯಾಯಾಧೀಶರು ಮೇಲ್ ಪರಿಶೀಲಿಸಿದಾಗ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ನ್ಯಾಯಾಧೀಶರು ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ಪೊಲೀಸರು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದೊಂದಿಗೆ ಕೇಂದ್ರೀಯ ವಿದ್ಯಾಲಯ ಶಾಲೆಗೆ ದೌಡಾಯಿಸಿದ್ದಾರೆ.&lt;/p&gt;&lt;p&gt;ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಕೂಡಲೇ ಶಾಲಾ ಕಟ್ಟಡದಿಂದ ಹೊರಗೆ ಕಳುಹಿಸಿದ್ದಾರೆ. ಮಾಹಿತಿ ತಿಳಿದು ಪೋಷಕರು ಕೂಡ ಶಾಲೆಯ ಬಳಿಗೆ ಬಂದು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ. ನಂತರ ಶಾಲೆಯ ಪ್ರತೀ ಕೊಠಡಿಯಲ್ಲೂ ಇಂಚಿಂಚೂ ಜಾಲಾಡಿದ್ದಾರೆ. ಯಾವುದೇ ಸ್ಫೋಟಕ ದೊರೆತ್ತಿಲ್ಲ. ಮತ್ತೊಂದೆಡೆ ನ್ಯಾಯಾಲಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ವಕೀಲರು ಮತ್ತು ಕಕ್ಷೀದಾರರೆಲ್ಲರೂ ಭಯಭೀರಾಗಿ ನ್ಯಾಯಲಯ ಸಂಕೀರ್ಣದಿಂದ ಹೊರಗೆ ನಿಲ್ಲಬೇಕಾಯಿತು.&lt;/p&gt;&lt;h2&gt;&lt;strong&gt;ಹುಸಿ ಬಾಂಬ್ ಬೆದರಿಕೆ&lt;/strong&gt;&lt;/h2&gt;&lt;p&gt;ಸ್ಥಳಕ್ಕೆ ಬಂದ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಇಡೀ ನ್ಯಾಯಾಲಯ ಸಂಕೀರ್ಣದ ಎಲ್ಲೆಡೆ ಶೋಧ ನಡೆಸಿತು. ಅಲ್ಲದೆ ನ್ಯಾಯಾಲಯದ ಆವರಣದಲ್ಲಿ ಇರುವ ಹೊಟೇಲ್ ಸೇರಿದಂತೆ ಎಲ್ಲೆಡೆ ಬಾಂಬ್ ಪತ್ತೆ ಸಾಧನಗಳಿಂದ ಶೋಧ ನಡೆಸಲಾಯಿತು. ಬಳಿಕ ಅಂತಹ ಯಾವುದೇ ಸಂಗತಿ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ನ್ಯಾಯಾಧೀಶರು, ಅಧಿಕಾರಿಗಳಿಗೆ ಮನವರಿಕೆ ಮಾಡಿ ಧೈರ್ಯ ತುಂಬಿದರು.&lt;/p&gt;&lt;p&gt;ನಂತರ ಎಂದಿನಂತೆ ನ್ಯಾಯಾಲಯದ ಕಾರ್ಯ ಕಲಾಪಗಳು ಆರಂಭವಾದವು. ಆದರೆ ಮೂರು ತಿಂಗಳಲ್ಲಿ ಮೂರು ಬಾರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮತ್ತು ಒಮ್ಮೆ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಎಲ್ಲರೂ ಆತಂಕಗೊಳ್ಳುವಂತೆ ಮಾಡಿದೆ. ಹೀಗೆ ಪದೇ ಪದೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿ ಗೇಲಿ ಮಾಡಲಾಗುತ್ತಿದೆಯೇ ಅಥವಾ ಇಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣ ಮಾಡಿ ಬೇರೆ ಬಾಂಬ್ ಸ್ಫೋಟಿಸುವ ಹುನ್ನಾರ ಇರಬಹುದೇ ಎನ್ನುವ ಆತಂಕವನ್ನು ವಕೀಲ ಸಂಘದ ಕಾರ್ಯದರ್ಶಿ ಪವನ್ ಪೆಮ್ಮಯ್ಯ ವ್ಯಕ್ತಪಡಿಸಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-court-kendriya-vidyalaya-bomb-threat-hoax-gvd/articleshow-uklzfx9"/>
        </item>
        <item>
            <title><![CDATA[Cross Voting: ಧರ್ಮಸ್ಥಳ ಆಣೆ ಬೇಡ, ಬ್ರೇನ್ ಮ್ಯಾಪಿಂಗ್ ಮಾಡಿಸಿ: ವಿಜಯೇಂದ್ರ-ಅಶೋಕ್ ವಿರುದ್ಧ ಎಂ.ಲಕ್ಷ್ಮಣ್ ಕಿಡಿ]]></title>
            <link>https://kannada.asianetnews.com/karnataka-districts/m-lakshman-alleges-vijayendra-r-ashok-behind-cross-voting-gvd/articleshow-x8kxtsp</link>
            <guid isPermaLink="true">https://kannada.asianetnews.com/karnataka-districts/m-lakshman-alleges-vijayendra-r-ashok-behind-cross-voting-gvd/articleshow-x8kxtsp</guid>
            <pubDate>Tue, 23 Jun 2026 19:22:05 +0530</pubDate>
            <description><![CDATA[&lt;p&gt;Cross Voting: ಪರಿಷತ್ ಚುನಾವಣೆಯ ಕ್ರಾಸ್ ವೋಟಿಂಗ್ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನೇರ ಹೊಣೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvtbkc71b0xnaefz1jhzxzbv,imgname-xcghx-1782222270689.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್. ಹಳ್ಳಿ, ಏಷ್ಯಾನೆಟ್ ಸುವರ್ಣನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.23):&lt;/strong&gt; ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವುದಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ನೇರ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಅಡ್ಡ ಮತದಾನ ನಡೆಯುವ ಬಗ್ಗೆ ಅವರಿಬ್ಬರಿಗೆ ಎಲ್ಲವೂ ಗೊತ್ತಿತ್ತು. ಒಂದಷ್ಟು ಎಂಎಲ್ಎಗಳು ಹೊಟೇಲ್ ಒಂದರಲ್ಲಿ ಕುಳಿತು ಸಭೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸದಾನಂದಗೌಡ್ರಿಗೆ ಗೊತ್ತಾಗಿದೆ. ಗೊತ್ತಾಗಿಯೇ ವಿಜಯೇಂದ್ರ ಮತ್ತು ಆರ್ ಅಶೋಕ್ ಅವರಿಗೆ ಹೇಳಲು ಕರೆ ಮಾಡಿದ್ದಾರೆ.&lt;/p&gt;&lt;p&gt;ಆದರೆ ಅವರಿಬ್ಬರು ಕರೆ ಸ್ವೀಕರಿಸಿಲಿಲ್ಲ ಅಂತ ಸದಾನಂದಗೌಡರೇ ಹೇಳಿದ್ದಾರೆ. ಅಂದರೆ ಇದರ ಅರ್ಥ ಕ್ರಾಸ್ ಓಟಿಂಗ್ ವಿಷಯ ಇವರಿಗೆ ಗೊತ್ತಿತ್ತು. ಆದರೆ ಈಗ ವಿಜಯೇಂದ್ರ, ಸಿ ಟಿ ರವಿ ಮತ್ತು ಆರ್ ಅಶೋಕ್ ಇಬ್ಬರು ಬಂಬ್ಡಿ ಬಡಿದುಕೊಳ್ಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸುವುದಾಗಿ ಮುಂದಾಗಿದ್ದರೆ. ಧರ್ಮಸ್ಥಳಕ್ಕೆ ಹೋಗಿ ಆಣೆ ಪ್ರಮಾಣ ಮಾಡುವುದು ಬೇಡ. ಅದರ ಬದಲು ವಿಜಯೇಂದ್ರ ಮತ್ತು ಆರ್ ಅಶೋಕ್ ಇಬ್ಬರ ಬ್ರೈನ್ ಮ್ಯಾಪಿಂಗ್ ಮಾಡಲಿ. ಅವರಿಬ್ಬರ ಬ್ರೈನ್ ಮ್ಯಾಪಿಂಗ್ ಮಾಡಿದರೆ ಎಲ್ಲಾ ಸತ್ಯವೂ ಗೊತ್ತಾಗುತ್ತದೆ. ಇವರಿಬ್ಬರೇ ಹೇಳಿಕೊಟ್ಟು ಅಡ್ಡಮತದಾನ ಮಾಡಿಸಿದ್ದಾರೆ.&lt;/p&gt;&lt;p&gt;ವಿಜಯೇಂದ್ರ ಆರ್ ಅಶೋಕ್ ಇವರಿಬ್ಬರಿಗೂ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ. ಏನಾದರೂ ಮಾಡಿ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆರ್. ಅಶೋಕ್ ಅವರಿಗಿದೆ. ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕೆಳಗಿಳಿಸಬೇಕು ಎಂದು ವಿಜಯೇಂದ್ರ ಅವರಿಗೆ ಇದೆ. ಇಬ್ಬರ ಗಲಾಟೆಯಿಂದ ಈ ವ್ಯವಸ್ಥೆ ಆಗಿದೆ. ಈಗ ಇಬ್ಬರು ನಾಟಕ ಮಾಡುತ್ತಿದ್ದಾರೆ. ನಾವು ಯಾವ ಆಪರೇಷನ್ ಮಾಡಿಲ್ಲ, ಯಾರಿಗೂ ಯಾವ ಹಣದ ಆಮಿಷವನ್ನೂ ಒಡ್ಡಿಲ್ಲ. ನಮಗೆ 138 ಶಾಸಕರ ಜೊತೆಗೆ 3 ಶಾಸಕರು ಸೇರಿ ಒಟ್ಟು 142 ಶಾಸಕರು ಇದ್ದಾರೆ.&lt;/p&gt;&lt;p&gt;ನಾವು ಆರಾಮಾಗಿ ನಾಲ್ಕು ಸ್ಥಾನ ಗೆಲ್ಲುತ್ತಿದ್ದೆವು. ಹೀಗಾಗಿ ನಾವು ಯಾರಿಗೂ ಹಣ ಕೊಟ್ಟಿಲ್ಲ, ಕೊಡುವ ಅಗತ್ಯವೂ ಇರಲಿಲ್ಲ. ಆದರೆ ಡಿ ಕೆ ಶಿವಕುಮಾರ್ ಅವರನ್ನು ಇಷ್ಟಪಟ್ಟು ಒಪ್ಪಿಕೊಂಡು 13 ಶಾಸಕರು ನಮಗೆ ಓಟ್ ಹಾಕಿದ್ದಾರೆ. ನಿಮ್ಮ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ನಿಮಗೆ ಆಗಲ್ಲ. ನಿಮಗೆ ನಾಚಿಕೆ ಮಾನ ಮರ್ಯಾದೆ ಇದ್ದರೆ ಆರ್ ಅಶೋಕ್, ವಿಜಯೇಂದ್ರ ಇಬ್ಬರು ರಾಜೀನಾಮೆ ಕೊಡಿ. ನಿಮಗೆ ಪಕ್ಷದ ಮೇಲೆ ಹಿಡಿತವಿಲ್ಲ ಎಂದು ವಿಜಯೇಂದ್ರ, ಆರ್ ಅಶೋಕ್ ವಿರುದ್ಧ ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಕ್ರಾಸ್ ಓಟಿಂಗ್, ಆಪರೇಷನ್ ಕಮಲ ಇವೆಲ್ಲದರ ಬೀಜ ಬಿತ್ತಿದ್ದೆ ಬಿಜೆಪಿಯವರು. ಎಂಪಿಗಳನ್ನು ಬಿಡದೆ ಇವರು ಆಪರೇಷನ್ ಮಾಡುತ್ತಿದ್ದಾರೆ ಎಂದು ಮಡಿಕೇರಿಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಕೇಂದ್ರದ ಅನೀತಿಗಳೇ ಕಾರಣ&lt;/strong&gt;&lt;/h2&gt;&lt;p&gt;ಇನ್ನು ನೀಟ್ ಪರೀಕ್ಷೆ ಕುರಿತು ಮಾತನಾಡಿದ ಲಕ್ಷ್ಮಣ್ ಮೂರು ಸ್ಟುಡೆಂಟ್ ಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯಲಾಗದಂತೆ ಮಾಡಿದ್ದು ಯಾರು. ಮೂವರು ವಿದ್ಯಾರ್ಥಿಗಳು ಪರೀಕ್ಷೆಯದೇ ಬರೆಯದೇ ಉಳಿದುಕೊಳ್ಳುವುದಕ್ಕೆ ಕೇಂದ್ರದ ಅನೀತಿಗಳೇ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಮಡಿಕೇರಿಯಲ್ಲಿ ಹರಿಹಾಯ್ದರು. ಪರೀಕ್ಷಾ ಕೇಂದ್ರಕ್ಕೆ 20 ನಿಮಿಷ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಎಂಟ್ರಿ ಕೊಡಲಿಲ್ಲ. ಒಂದುವರೆ ಗಂಟೆ ಮೊದಲೇ ಗೇಟ್ ಮುಚ್ಚಿ ಎಕ್ಸಾಂಗೆ ಎಂಟ್ರಿ ಕೊಡಲಿಲ್ಲ.&lt;/p&gt;&lt;p&gt;ನಿಮ್ಮ ಈ ಮೂರ್ಖತನದ ಪರಮಾವಧಿಯ ಕಂಡೀಷನ್ಸ್ ಗಳು ಹೀಗೆ ಮಾಡಿವೆ ಎಂದರು. 2017 ರಲ್ಲಿ ನೀಟ್ ಪರೀಕ್ಷೆಯನ್ನು ಕೇಂದ್ರ ಜಾರಿಗೆ ತಂದಿತು. ಯಾವ ಉದ್ದೇಶಕ್ಕಾಗಿ ಜಾರಿಗೆ ತಂದಿತು. ಇದುವರೆಗೆ ಒಬ್ಬ ಹಳ್ಳಿಯ ಹುಡುಗ ನೀಟ್ ಪಾಸು ಮಾಡಿಕೊಂಡು ಡಾಕ್ಟರ್ ಓದಲು ಆಗಲಿಲ್ಲ. ಯಾವ ಕಾರಣಕ್ಕೂ ಬಡವರು, ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ನೀಟ್ ಬರೆಯುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಿಸಲಾಗಿದೆ. ಸಿಇಟಿಯಲ್ಲಿ ಜನಿವಾರ ತೆಗೆಸಿದ್ರು ಅಂತ ಇದೇ ತೇಜಸ್ವಿ ಸೂರ್ಯ ಬಾಯಿ ಬಡಿದುಕೊಂಡಿದ್ರು. ನಿನ್ನೆ ನೀಟ್ ಪರೀಕ್ಷೆಯಲ್ಲಿ ಎಲ್ಲಾ ಕಡೆ ಜನಿವಾರಗಳನ್ನು ಕಟ್ ಮಾಡಿ ಬಿಸಾಕಿದ್ದಾರೆ.&lt;/p&gt;&lt;p&gt;ಯಾರಾದರೂ ಒಬ್ಬ ಬಿಜೆಪಿಯವರು ಮಾತಾಡಿದ್ದಾರಾ. ಯಾಕೆ ಇದು ಕೇಂದ್ರದ ಎಕ್ಸಾಂ ಅಂತ ಸುಮ್ಮನಾಗಿದ್ದೀರಾ. ಅದೇ ರಾಜ್ಯದ ಪರೀಕ್ಷೆ ಆಗಿದ್ದರೆ ಉರುಳು ಸೇವೆ ಮಾಡಿರುತ್ತಿದ್ದಿರಿ. ನಿನ್ನೆ ಪರೀಕ್ಷೆಯಲ್ಲಿ ಹೆಣ್ಣು ಮಕ್ಕಳ ಕಿವಿಯಲ್ಲಿ ಓಲೆ, ಕೊರಳಿನಲ್ಲಿ ತಾಳಿ ಹಾಕಲು ಬಿಟ್ಟಿಲ್ಲ. ಹೆಣ್ಣುಮಕ್ಕಳು ರಬ್ಬರ್ ಬ್ಯಾಂಡ್ ಹಾಕಲು ಬಿಟ್ಟಿಲ್ಲ. ಪರೀಕ್ಷೆಯನ್ನು ಮುಂದೂಡಿ ಇಡೀ ದೇಶದಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಕೊಳ್ಳುವಂತೆ ಮಾಡಿದ್ರಿ, ಡೈಪರ್ ಸೂರ್ಯ ಇದುವರೆಗೆ ಒಂದು ಕ್ಷಮೆ ಕೇಳಲಿಲ್ಲ. ಪ್ರಧಾನಿ ಮೋದಿ ಅವರು ಒಂದೇ ಒಂದು ಸಂತಾಪ ಸೂಚಿಸಿ ಪೋಸ್ಟ್ ಮಾಡಲಿಲ್ಲ. ಇಂತಹ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಡಿಕೇರಿಯಲ್ಲಿ ವಾಗ್ದಾಳಿ ನಡೆಸಿದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/m-lakshman-alleges-vijayendra-r-ashok-behind-cross-voting-gvd/articleshow-x8kxtsp"/>
        </item>
    </channel>
</rss>
