<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 23 Jun 2026 19:22:10 +0530</lastBuildDate>
        <atom:link href="https://kannada.asianetnews.com/rss/kodagu" rel="self" type="application/rss+xml"/>
        <item>
            <title><![CDATA[Kodagu: ಸಚಿವ ಸಂಪುಟ ವಿಸ್ತರಣೆ ಯಾವಾಗ?: ಶಾಸಕ ಎ.ಎಸ್.ಪೊನ್ನಣ್ಣ ಕೊಟ್ರು ಮಹತ್ವದ ಸುಳಿವು!]]></title>
            <link>https://kannada.asianetnews.com/karnataka-districts/as-ponnanna-on-karnataka-cabinet-expansion-kodagu-minister-post-gvd/articleshow-0xq4ca9</link>
            <guid isPermaLink="true">https://kannada.asianetnews.com/karnataka-districts/as-ponnanna-on-karnataka-cabinet-expansion-kodagu-minister-post-gvd/articleshow-0xq4ca9</guid>
            <pubDate>Mon, 15 Jun 2026 21:48:38 +0530</pubDate>
            <description><![CDATA[&lt;p&gt;Karnataka Cabinet Expansion: ಜೂ.18ಕ್ಕೆ ಪರಿಷತ್ ಚುನಾವಣೆ ಇದ್ದು ಅದರ ಬಳಿಕ ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krrpf5z2xgcdwegn66j84msg,imgname-vjv-1778945333218.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.15):&lt;/strong&gt; ಜೂ.18ಕ್ಕೆ ಪರಿಷತ್ ಚುನಾವಣೆ ಇದ್ದು ಅದರ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ವಿ ಬಾಡಗದಲ್ಲಿ 40 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕ್ರೀಡಾ ತರಬೇತಿ ಕೇಂದ್ರದ ಕಾಮಗಾರಿ ವೀಕ್ಷಣೆ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಹೈಕಮಾಂಡ್, ಸಿಎಂ, ಮಾಜಿ ಸಿಎಂ ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರು ಸೇರಿ ಸಚಿವ ಸಂಪುಟ ವಿಸ್ತರಣೆ ವೇಳೆ ಯಾರಿಗೆಲ್ಲಾ ಸಚಿವ ಸ್ಥಾನ ಕೊಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ.&lt;/p&gt;&lt;p&gt;ಅವರ ಸಭೆ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಕಡಿಮೆ ಅವಧಿ ಇರುವುದರಿಂದ ತಕ್ಷಣದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದಿದ್ದಾರೆ. ಇನ್ನು ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಗೆ ಪ್ರಾತಿನಿಧ್ಯ ಕೊಡುವಂತೆ ಹಿಂದಿನಿಂದಲೂ ಕೂಗಿದೆ. ಅದಕ್ಕೆ ನಾನೂ ಧ್ವನಿಗೂಡಿಸುತ್ತೇನೆ ಎಂದರು.&lt;/p&gt;&lt;p&gt;&lt;strong&gt;ರೈತರ ಹಾದಿ ತಪ್ಪಿಸಲಾಗುತ್ತಿದೆ&lt;/strong&gt;&lt;/p&gt;&lt;p&gt;ಕೆಲವೊಮ್ಮೆ ರೈತರ ದಾರಿ ತಪ್ಪಿಸುವ ಕೆಲಸ ಆಗುತ್ತದೆ. ಅದೇ ರೀತಿ ಬಿಡದಿಯಲ್ಲೂ ರೈತರ ಹಾದಿ ತಪ್ಪಿಸವ ಕೆಲಸ ಆಗುತ್ತಿದೆ. ರಾಜಕೀಯವಾಗಿ ರೈತರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಿಡದಿ ಟೌನ್ ಶಿಪ್ ವಿಷಯದಲ್ಲಿ ವಿಜಯೇಂದ್ರ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು ಬಿಡದಿ ಟೌನ್ ಶಿಪ್ ಪ್ಲಾನ್ ಈಗಿನದೇನು ಅಲ್ಲ.&lt;/p&gt;&lt;p&gt;ಡಿ ಕೆ ಶಿವಕುಮಾರ್ ಸಿಎಂ ಆಗುವ ಮೊದಲಿನಿಂದಲೂ ಬಿಡದಿ ಟೌನ್ ಶಿಪ್ ಪ್ಲಾನ್ ಇತ್ತು. ಅದನ್ನು ಸಿಎಂ ಡಿ.ಕೆ ಶಿವಕುಮಾರ್ ಅವರು ಮುತುವರ್ಜಿಯಿಂದ ಮಾಡಲು ಮುಂದಾಗಿದ್ದಾರೆ ಅಷ್ಟೆ. ಅಲ್ಲಿನ ಭೂಮಿ ಯಾವ ರೀತಿ ಇದೆ ಅಂತ ನಾನು ನೋಡಿಲ್ಲ. ರೈತರ ಅಭಿಪ್ರಾಯವನ್ನು ಕೇಳಿಲ್ಲ. ಆದರೆ ಡಿಕೆಶಿ ಅವರು ಬಿಡದಿ ಟೌನ್ ಶಿಪ್ ವಿಷಯದಲ್ಲಿ ತುಂಬಾ ಮುಂದಾಲೋಚನೆ ಇರುವ ನಾಯಕರು ಅವರು. ಅಲ್ಲಿನ ಶಾಸಕರು ಬಹಳ ಒತ್ತು ಕೊಟ್ಟು ಈ ಯೋಜನೆ ಆಗಬೇಕು ಎನ್ನುತ್ತಿದ್ದಾರೆ. ಅವರು ಜನಪ್ರತಿನಿಧಿಯಾಗಿ ಜನಾಭಿಪ್ರಾಯವನ್ನೇ ಬೆಂಬಲಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಪೊನ್ನಣ್ಣ ಬಿಡದಿ ಟೌನ್ ಶಿಪ್ ಪರವಾಗಿ ಬ್ಯಾಟ್ ಬೀಸಿದ್ದಾರೆ.&lt;/p&gt;&lt;h2&gt;&lt;strong&gt;ಎಲ್ಲಾ ರಾಜಕಾಣಿಗಳು ಆಸ್ತಿ ಬಹಿರಂಗಪಡಿಸಲಿ&lt;/strong&gt;&lt;/h2&gt;&lt;p&gt;ದೇಶದಲ್ಲಿ ಎಲ್ಲಾ ರಾಜಕಾರಣಿಗಳು ಆಸ್ತಿ ಎಷ್ಟು ಇದೆ ಎಂದು ಬಹಿರಂಗ ಮಾಡಲಿ. ಮೊದಲು ಎಷ್ಟು ಇತ್ತು, ನಂತರ ಎಷ್ಟು ಆಗಿದೆ ಎಂಬುದು ಗೊತ್ತಾಗಲ್ಲಿದೆ. ಆರಂಭದಲ್ಲಿ ಎಷ್ಟಿತ್ತು ಈಗ ಎಷ್ಟಾಗಿದೆ ಎನ್ನುವುದು ಗೊತ್ತಾಗುತ್ತದೆ. ಹೇಗೆ ಇಷ್ಟು ಆಸ್ತಿ ಆಯ್ತು, ಎಲ್ಲಿಂದ ಬಂತು ಅಂತ ಗೊತ್ತಾಗುತ್ತದೆ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. 1999 ರಲ್ಲಿ ಡಿ.ಕೆ.ಶಿ ಅವರ ಬಳಿ ಕೇವಲ 3 ಎಕರೆ ಮಾತ್ರವೇ ಆರ್ಟಿಸಿ ಭೂಮಿ ಇದ್ದಿದ್ದು ಈಗ ಹೇಗೆ 1800 ಕೋಟಿ ಆಯ್ತು.&lt;/p&gt;&lt;p&gt;ಡಿಕೆಶಿ ಆಸ್ತಿ ಬಗ್ಗೆ ದಾಖಲೆ ನೀಡಲಿ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ವಿರಾಜಪೇಟೆ ಸಮೀಪದ ವಿ. ಬಾಡಗದಲ್ಲಿ ಮಾತನಾಡಿದ ಅವರು ಡಿಕೆಶಿ ಅವರು ನಾನು ಉದ್ಯಮಿ ಅಂತ ಒಪ್ಪಿಕೊಂಡಿದ್ದಾರೆ. ಸಾಕಷ್ಟು ಉದ್ಯಮಗಳನ್ನು ನಡೆಸುತ್ತಿದ್ದಾರೆ, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ ಅಂತ ಒಪ್ಪಿಕೊಂಡಿದ್ದಾರೆ. ಪರಿಣಾಮ ಆಸ್ತಿ ಹೆಚ್ಚಾಗಿರುತ್ತದೆ ಅಲ್ಲವೆ ಎಂದು ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಪ್ರಶ್ನಿಸಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/as-ponnanna-on-karnataka-cabinet-expansion-kodagu-minister-post-gvd/articleshow-0xq4ca9"/>
        </item>
        <item>
            <title><![CDATA[ಕೊಡಗು, ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ; ಯಾರೆಲ್ಲಾ ಬರಬಹುದು? ಇಲ್ಲಿದೆ ಮಾಹಿತಿ]]></title>
            <link>https://kannada.asianetnews.com/karnataka-districts/gathering-of-brides-grooms-from-kodagu-dakshina-kannada-gowda-communities-will-be-organized-in-madikeri-on-june-13-mrq/articleshow-21vp214</link>
            <guid isPermaLink="true">https://kannada.asianetnews.com/karnataka-districts/gathering-of-brides-grooms-from-kodagu-dakshina-kannada-gowda-communities-will-be-organized-in-madikeri-on-june-13-mrq/articleshow-21vp214</guid>
            <pubDate>Tue, 09 Jun 2026 07:35:23 +0530</pubDate>
            <description><![CDATA[&lt;p&gt;ಕೊಡಗು ಗೌಡ ನಿವೃತ್ತ ನೌಕರರ ಸಂಘವು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯಕ್ಕಾಗಿ ವಧು-ವರರ ಸಮಾವೇಶವನ್ನು ಆಯೋಜಿಸಿದೆ. ರೈತಾಪಿ ಯುವಕರು ಸೇರಿದಂತೆ ಮರುವಿವಾಹ ಬಯಸುವವರು, ವಿಚ್ಛೇದಿತರು ಕೂಡ ಈ ಸಮಾವೇಶದಲ್ಲಿ ಭಾಗವಹಿಸಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktn1zmh6k55mb335bgtvvrjz,imgname-karnataka-gathering-of-brides-grooms-1780970672678.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ: &lt;/strong&gt;ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶವನ್ನು ಜೂ.13 ರಂದು ಕೊಡಗು ಗೌಡ ಸಮಾಜ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಚೊಕ್ಕಾಡಿ.ಎಸ್.ಅಪ್ಪಯ್ಯ ತಿಳಿಸಿದರು.&lt;/p&gt;&lt;h2&gt;&lt;strong&gt;ದಾಖಲೆಗಳು ಕಡ್ಡಾಯ, ಯಾರೆಲ್ಲಾ ಬರಬಹುದು?&lt;/strong&gt;&lt;/h2&gt;&lt;p&gt;ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ನೋಂದಣಿ ಆರಂಭವಾಗಲಿದ್ದು, ವಧುವಿಗೆ 18 ವರ್ಷ, ವರನಿಗೆ 21 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಆಸಕ್ತ ವಧು-ವರರು ಫೋಟೋ, ಜಾತಕ, ಆಧಾರ್ ಕಾರ್ಡ್, ವಿದ್ಯಾರ್ಹತೆ, ಉದ್ಯೋಗದ ವಿವರಗಳನ್ನು ತರಬೇಕು. ವಿಶೇಷ ಚೇತನರು, ವಿಧುರರು, ವಿಧವೆಯರು, ಮರುವಿವಾಹ ಬಯಸುವವರು, ವಿಚ್ಛೇದಿತರು ಹಾಗೂ ವಿದೇಶ/ಹೊರ ರಾಜ್ಯದಲ್ಲಿರುವವರೂ ಭಾಗವಹಿಸಬಹುದು ಎಂದು ಮಾಹಿತಿ ನೀಡಿದರು.&lt;/p&gt;&lt;h3&gt;&lt;strong&gt;ಸಂಪರ್ಕಿಸಬೇಕಾದ ಮಾಹಿತಿ&lt;/strong&gt;&lt;/h3&gt;&lt;p&gt;ಜಿಲ್ಲೆಯಲ್ಲಿ ರೈತಾಪಿ ವರ್ಗದ ಯುವಕರಿಗೆ ಯುವತಿಯರು ಇಂದು ಸಿಗುತ್ತಿಲ್ಲ. ಯುವತಿಯರು ನಗರ ಪ್ರದೇಶದತ್ತ ಆಕರ್ಷಿತರಾಗಿ ಅತ್ತ ಮುಖ ಮಾಡುತ್ತಿದ್ದಾರೆ. ಪರಿಣಾಮ ರೈತಾಪಿ ಯುವಕರಿಗೆ ಯುವತಿಯರು ಸಿಗುತ್ತಿಲ್ಲ. ಆದ್ದರಿಂದ ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶವನ್ನು ಆಯೋಜಿಸಲಾಗಿದೆ. ಆನ್&zwnj;ಲೈನ್ ನೋಂದಣಿಗೆ appaiahchokkadira1@gmail.com ಅಥವಾ ಹೆಚ್ಚಿನ ಮಾಹಿತಿಗೆ 9448884673 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಗಳ ಗಂಡನೇ ಅತ್ತೆಯ ಪತಿ, 4 ವರ್ಷಗಳ ಗುಪ್ತ ಪ್ರೀತಿಗೆ ಕೋರ್ಟ್&zwnj;ನಲ್ಲಿ ಬಿತ್ತು ಮದುವೆ ಮುದ್ರೆ&lt;/strong&gt;&lt;/p&gt;&lt;p&gt;ಕೊಡಗು ಗೌಡ ನಿವೃತ್ತ ನೌಕರರ ಸಂಘದ ಖಜಾಂಚಿ ಕುಯ್ಯಮುಡಿ ಅಶ್ವಿನಿ ಕುಮಾರ್ ಮಾತನಾಡಿ, ಇಂದು ಸಂಬಂಧಗಳು ವೇಗವಾಗಿ ಹಾಳಾಗುತ್ತಿದೆ. ಇಂದು ಮದುವೆ ಆಗುತ್ತಾರೆ. ನಾಳೆ ವಿಚ್ಛೇದನಕ್ಕೆ ಸಲ್ಲಿಸುವ ಪ್ರಕರಣಗಳು ಕಾಣುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸೆಟ್ಟೆಜ್ಜನ ಗಣಪತಿ, ಕಾರ್ಯದರ್ಶಿ ಕುಂಜಿಲನ ರತ್ನಕುಮಾರಿ, ಕಟ್ರತನ ಲಲಿತ ಅಯ್ಯಣ್ಣ, ಪ್ರಮುಖರಾದ ಸೂರ್ತಲೆ ರಾಮಚಾರಿ ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಇನ್ಮುಂದೆ ಮದುವೆ ದಿಬ್ಬಣಗಳ ಫೋಟೋ, ವಿಡಿಯೋ ಚಿತ್ರೀಕರಣ ಮಾಡಲ್ಲ: ಫೋಟೋಗ್ರಾಫರ್ಸ್ ನಿರ್ಧಾರ&lt;/strong&gt;&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gathering-of-brides-grooms-from-kodagu-dakshina-kannada-gowda-communities-will-be-organized-in-madikeri-on-june-13-mrq/articleshow-21vp214"/>
        </item>
        <item>
            <title><![CDATA[ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಜನರೇ ಎಚ್ಚರ; ಹವಾಮಾನ ಇಲಾಖೆ 'ಡೇಂಜರ್' ಅಲರ್ಟ್!]]></title>
            <link>https://kannada.asianetnews.com/gallery/state/karnataka-weather-report-60-kmph-wind-and-heavy-rain-alert-for-interior-5-districts-sat-2sd2i21</link>
            <guid isPermaLink="true">https://kannada.asianetnews.com/gallery/state/karnataka-weather-report-60-kmph-wind-and-heavy-rain-alert-for-interior-5-districts-sat-2sd2i21</guid>
            <pubDate>Tue, 19 May 2026 15:41:05 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಮೇ 26ರ ಸುಮಾರಿಗೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krztsbbp092nn12as0can513,imgname-screenshot-2026-05-17-202159-1779184741749.png" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಮೇ 26ರ ಸುಮಾರಿಗೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು: ರಾ&lt;/strong&gt;ಜ್ಯದಲ್ಲಿ ಮುಂಗಾರು ಪೂರ್ವ ಮಳೆ (Pre-monsoon Rain) ಬಿರುಸುಗೊಂಡಿದ್ದು, ಜನತೆಗೆ ತಂಪಾದ ಅನುಭವದ ಜೊತೆಗೆ ಆತಂಕವೂ ಎದುರಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ನೈರುತ್ಯ ಮುಂಗಾರು (Southwest Monsoon) ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ. ಗುಡುಗು ಸಿಂಚನದ ಜೊತೆಗೆ ಈ ಬಲವಾದ ಗಾಳಿಯು ಮರಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿ ಮಾಡುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rainfall) ಮುನ್ಸೂಚನೆಯಿದೆ. ವಿಶೇಷವಾಗಿ &lt;strong&gt;ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು&lt;/strong&gt; ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸಲಿದೆ.&amp;nbsp;&lt;/p&gt;&lt;p&gt;ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಉತ್ತರ ಒಳನಾಡಿನ ಜಿಲ್ಲೆಗಳಾದ &lt;strong&gt;ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ&lt;/strong&gt; ಜಿಲ್ಲೆಗಳಲ್ಲಿ ಇಂದು ಚದುರಿದಂತೆ ಮಳೆಯಾಗಲಿದ್ದು, ಇಲ್ಲಿಯೂ ಕೂಡ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ತಿಳಿಸಿದೆ.&lt;/p&gt;&lt;img&gt;&lt;p&gt;ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಮೀನುಗಾರರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ತಿಳಿಸಲಾಗಿದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33&deg;C ಹಾಗೂ ಕನಿಷ್ಠ ತಾಪಮಾನ 21&deg;C ದಾಖಲಾಗುವ ಸಂಭವವಿದೆ.&lt;/p&gt;&lt;img&gt;&lt;p&gt;ಸದ್ಯ ಮುಂಗಾರು ಮಾರುತಗಳು ಆಗ್ನೇಯ ಅರಬ್ಬೀ ಸಮುದ್ರ, ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಆವರಿಸಿವೆ. ಮುಂದಿನ 3-4 ದಿನಗಳಲ್ಲಿ ಇವು ಕೇರಳದ ಕಡೆಗೆ ಮುನ್ನಡೆಯಲು ಪೂರಕವಾದ ವಾತಾವರಣವಿದೆ. ಉತ್ತರ ಪ್ರದೇಶದಿಂದ ಕೇರಳದವರೆಗೆ ಹರಡಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-weather-report-60-kmph-wind-and-heavy-rain-alert-for-interior-5-districts-sat-2sd2i21"/>
        </item>
        <item>
            <title><![CDATA[ಕೊಡಗು ನ್ಯಾಯಾಲಯಕ್ಕೆ ಸಹನಾಳ ಈ ಮೇಲ್ ಬಾಂಬ್ ಬೆದರಿಕೆ: ಐಸಿಸ್ ದಾಳಿ ಎಚ್ಚರಿಕೆ, ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ!]]></title>
            <link>https://kannada.asianetnews.com/karnataka-districts/karnataka-news-kodagu-court-receives-cyanide-bomb-and-isis-threat-via-email-gdp/articleshow-79svkr0</link>
            <guid isPermaLink="true">https://kannada.asianetnews.com/karnataka-districts/karnataka-news-kodagu-court-receives-cyanide-bomb-and-isis-threat-via-email-gdp/articleshow-79svkr0</guid>
            <pubDate>Tue, 23 Jun 2026 10:54:38 +0530</pubDate>
            <description><![CDATA[ಮಡಿಕೇರಿ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ 'ಸಹನಾ' ಎಂಬ ಹೆಸರಿನಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಐಸಿಸ್ ಉಗ್ರರು ಸೈನೈಡ್ ಬಾಂಬ್ ಬಳಸಿ ದಾಳಿ ನಡೆಸುವುದಾಗಿ ಎಚ್ಚರಿಸಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಸಿಬ್ಬಂದಿಯನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvseqec91c1b5nx9eve9dyre,imgname-kodagu-court-1782191995273.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ: &lt;/strong&gt;ಕೊಡಗು ಜಿಲ್ಲಾ ಪ್ರಧಾನ ನ್ಯಾಯಾಲಯ ಸಂಕೀರ್ಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಸೈನೈಡ್ ಬಾಂಬ್ ಬಳಸಿ ನ್ಯಾಯಾಲಯವನ್ನು ಸ್ಫೋಟಿಸಲಾಗುವುದು ಹಾಗೂ ಐಸಿಸ್ (ISIS) ಉಗ್ರ ಸಂಘಟನೆಯ ಆತ್ಮ*ಹತ್ಯಾ ಬಾಂಬರ್&zwnj;ಗಳು ದಾಳಿ ನಡೆಸಲಿದ್ದಾರೆ ಎಂದು ಇ-ಮೇಲ್&zwnj;ನಲ್ಲಿ ಎಂದು ಬೆದರಿಕೆ ಹಾಕಲಾಗಿದೆ.&lt;/p&gt;&lt;h2&gt;ಬೆಳ್ಳಂಬೆಳಗ್ಗೆ ಬಂದ ಆಘಾತಕಾರಿ ಇ-ಮೇಲ್&lt;/h2&gt;&lt;p&gt;ಇಂದು ಮುಂಜಾನೆ ಸುಮಾರು 6 ಗಂಟೆಯ ವೇಳೆಗೆ ಕೊಡಗು ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಸಂದೇಶವೊಂದು ಬಂದಿದೆ. 'ಸಹನಾ' ಎಂಬ ಹೆಸರಿನ ಐಡಿಯಿಂದ ಈ ಇ-ಮೇಲ್ ರವಾನೆಯಾಗಿದೆ. ಬೆಳಿಗ್ಗೆ ಕಚೇರಿಗೆ ಬಂದ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಈ ಆಘಾತಕಾರಿ ಬಾಂಬ್ ಬೆದರಿಕೆ ವಿಷಯ ಬೆಳಕಿಗೆ ಬಂದಿದ್ದು, ತಕ್ಷಣವೇ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.&lt;/p&gt;&lt;h2&gt;ಇ-ಮೇಲ್&zwnj;ನಲ್ಲಿ ಏನಿದೆ?&lt;/h2&gt;&lt;p&gt;ಬಂದಿರುವ ಇ-ಮೇಲ್ ಅತ್ಯಂತ ಸಂವೇದನಾಶೀಲ ಮತ್ತು ಆಕ್ರೋಶದ ಭಾಷೆಯಿಂದ ಕೂಡಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;&lt;strong&gt;ಸೈನೈಡ್ ಬಾಂಬ್ ಸ್ಫೋಟ: &lt;/strong&gt;ಇಂದು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಭೀಕರ 'ಸೈನೈಡ್ ಬಾಂಬ್' ಬಳಸಿ ನ್ಯಾಯಾಲಯವನ್ನು ಉಡಾಯಿಸುವುದಾಗಿ ಬೆದರಿಸಲಾಗಿದೆ.&lt;/p&gt;&lt;p&gt;&lt;strong&gt;ಐಸಿಸ್ ಸುಸೈಡ್ ಬಾಂಬರ್ಸ್: &lt;/strong&gt;ಸ್ಫೋಟದ ಜೊತೆಗೆ ಇಸ್ಲಾಮಿಕ್ ಸ್ಟೇಟ್ (ISIS) ಸಂಘಟನೆಯ ಆತ್ಮ*ಹತ್ಯಾ ಬಾಂಬರ್&zwnj;ಗಳು ದಾಳಿ ನಡೆಸಲು ಬರಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ.&lt;/p&gt;&lt;p&gt;&lt;strong&gt;ಪ್ರವಾದಿ ನಿಂದನೆ ಮತ್ತು ಪೊಲೀಸ್ ದೌರ್ಜನ್ಯ:&lt;/strong&gt; ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಹಾಗೂ ಮುಸ್ಲಿಮರ ಮೇಲೆ ಪೊಲೀಸರ ದೌರ್ಜನ್ಯ ನಡೆಯುತ್ತಿದೆ ಎಂದು ಮೇಲ್&zwnj;ನಲ್ಲಿ ಆರೋಪಿಸಲಾಗಿದೆ.&lt;/p&gt;&lt;p&gt;&lt;strong&gt;ರಾಜಕಾರಣಿ ಉದಯನಿಧಿ ಹೆಸರು ಪ್ರಸ್ತಾಪ: &lt;/strong&gt;ತಮಿಳುನಾಡಿನ ಪ್ರಭಾವಿ ರಾಜಕಾರಣಿ ಉದಯನಿಧಿ ಸ್ಟಾಲಿನ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ವಿಷಯಗಳನ್ನು ಕೂಡ ಈ ಇ-ಮೇಲ್&zwnj;ನಲ್ಲಿ ಉಲ್ಲೇಖಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;h2&gt;ಸ್ಥಳಕ್ಕೆ ಧಾವಿಸಿದ ಬಾಂಬ್ ಪತ್ತೆ ದಳ; ಆತಂಕದಲ್ಲಿ ಸಿಬ್ಬಂದಿ&lt;/h2&gt;&lt;p&gt;ಬಾಂಬ್ ಬೆದರಿಕೆ ಸುದ್ದಿ ತಿಳಿಯುತ್ತಿದ್ದಂತೆ ಅಲರ್ಟ್ ಆದ ಕೊಡಗು ಜಿಲ್ಲಾ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ಹಾಗೂ ಶ್ವಾನ ದಳ (Dog Squad) ಧಾವಿಸಿದ್ದು, ತಪಾಸಣೆ ತೀವ್ರಗೊಳಿಸಿವೆ. ನ್ಯಾಯಾಲಯದ ಕೊಠಡಿಗಳು, ದಾಖಲೆಗಳ ಕೊಠಡಿ, ಕಚೇರಿ ಆವರಣ ಹಾಗೂ ವಾಹನ ನಿಲ್ದಾಣ ಸೇರಿದಂತೆ ಸಂಕೀರ್ಣದ ಮೂಲೆ ಮೂಲೆಗಳಲ್ಲೂ ಕಟ್ಟುನಿಟ್ಟಿನ ಶೋಧ ಕಾರ್ಯ ನಡೆಸಲಾಗುತ್ತಿದೆ.&lt;/p&gt;&lt;p&gt;ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಒಳಗಿದ್ದ ನ್ಯಾಯಾಧೀಶರು, ವಕೀಲರು ಹಾಗೂ ಸಮಸ್ತ ನ್ಯಾಯಾಲಯದ ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಸದ್ಯ ನ್ಯಾಯಾಧೀಶರು ಮತ್ತು ಸಿಬ್ಬಂದಿ ನ್ಯಾಯಾಲಯದ ಆವರಣದ ಹೊರಗಡೆ ಆತಂಕದಿಂದ ಕಾಯುತ್ತ ನಿಂತಿದ್ದು, ಇಡೀ ಕೋರ್ಟ್ ಸಂಕೀರ್ಣವನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಮೇಲ್ ಕಳುಹಿಸಿದ 'ಸಹನಾ' ಯಾರು? ಇದರ ಹಿಂದೆ ಇರುವ ದುಷ್ಕರ್ಮಿಗಳ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.&lt;/p&gt;&lt;h2&gt;ಸುದ್ದಿ ಅಪ್ಡೇಟ್&zwnj;&lt;/h2&gt;&lt;p&gt;ಇದೀಗ ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಹುಸಿ ಎಂದು ತಿಳಿದುಬಂದಿದೆ. ಬಾಂಬ್ ಪತ್ತೆ ದಳ ಹುಸಿ ಬಾಂಬ್ ಕರೆ ಎಂಬುದನ್ನು ಬಹಿರಂಗಗೊಳಿಸಿದೆ. ನ್ಯಾಯಾಲಯ ಸಂಕೀರ್ಣದ ಎಲ್ಲೆಡೆ ಶೋಧಿಸಿ ಹುಸಿ ಬಾಂಬ್ ಕರೆ ಎಂದು ಘೋಷಣೆ ಮಾಡಿದೆ. ಆ ಬಳಿಕ ನಿಟ್ಟುಸಿರು ಬಿಟ್ಟ ನ್ಯಾಯಾಧೀಶರು ಮತ್ತು ಸಿಬ್ಬಂದಿ ಮತ್ತು ವಕೀಲರು ಸದ್ಯ ನ್ಯಾಯಾಲಯದ ಕಾರ್ಯಕಲಾಪಕ್ಕೆ ತೆರಳಿದರು.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-news-kodagu-court-receives-cyanide-bomb-and-isis-threat-via-email-gdp/articleshow-79svkr0"/>
        </item>
        <item>
            <title><![CDATA[ಕೊಟ್ಟಿಯೂರಿಗೆ ಹೊರಟಿದ್ದ ಕರ್ನಾಟಕ ಪ್ರವಾಸಿಗರಿದ್ದ ಟೆಂಪೊ ಕಣ್ಣೂರು ಬಳಿ ಅಪಘಾತ, 20 ಜನರಿಗೆ ಗಾಯ]]></title>
            <link>https://kannada.asianetnews.com/state/karnataka-tourists-injured-as-tempo-traveler-flips-near-kannur-while-traveling-to-kottiyoor-gdp/articleshow-8hwy5hy</link>
            <guid isPermaLink="true">https://kannada.asianetnews.com/state/karnataka-tourists-injured-as-tempo-traveler-flips-near-kannur-while-traveling-to-kottiyoor-gdp/articleshow-8hwy5hy</guid>
            <pubDate>Thu, 11 Jun 2026 12:06:56 +0530</pubDate>
            <description><![CDATA[ಕೇರಳದ ಕೊಟ್ಟಿಯೂರಿಗೆ ತೆರಳುತ್ತಿದ್ದ ಕರ್ನಾಟಕದ ಪ್ರವಾಸಿಗರಿದ್ದ ಟೆಂಪೊ ಟ್ರಾವೆಲರ್ ಕಣ್ಣೂರು ಬಳಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ವಯನಾಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kttp94w73gyhrw4ah79n8bjt,imgname-kottiyoor-1781159728006.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಣ್ಣೂರು: &lt;/strong&gt;ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿಗರ ಟೆಂಪೊ ಟ್ರಾವೆಲರ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುರುವಾರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ವಾಹನದಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು ನೆರೆಯ ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್&zwnj;ಗೆ ಮಾಹಿತಿ ನೀಡಿದರು.&lt;/p&gt;&lt;h2&gt;ಆಂಬಾಯತ್ತೋಡ್ ಬಳಿ ಸಂಭವಿಸಿದ ದುರಂತ&lt;/h2&gt;&lt;p&gt;ಕಣ್ಣೂರು ಜಿಲ್ಲೆಯ ಗಡಿ ಭಾಗದ ಸಮೀಪವಿರುವ ಆಂಬಾಯತ್ತೋಡ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ವಾಹನವು ಜಖಂಗೊಂಡಿದ್ದು ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹಾಗೂ ಹಾದಿಹೋಕರು ತಕ್ಷಣವೇ ಧಾವಿಸಿ ಬಂದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು.&lt;/p&gt;&lt;h2&gt;ಗಾಯಾಳುಗಳು ಆಸ್ಪತ್ರೆಗೆ ದಾಖಲು&lt;/h2&gt;&lt;p&gt;ಅಪಘಾತದಲ್ಲಿ ಗಾಯಗೊಂಡ ಎಲ್ಲ 20 ಮಂದಿಯನ್ನು ತಕ್ಷಣವೇ ರಕ್ಷಿಸಿ, ಚಿಕಿತ್ಸೆಗಾಗಿ ನೆರೆಯ ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ಟೆಂಪೋ ಕರ್ನಾಟಕದಿಂದ ಕೊಟ್ಟಿಯೂರು ಕಡೆ ಪ್ರಯಾಣ ಮಾಡುತ್ತಿತ್ತು. ಹೀಗಾಗಿ ಗಾಯಗೊಂಡವರು ಕರ್ನಾಟಕದ ಯಾವ ಜಿಲ್ಲೆಯವರು ಎಂಬ ಮಾಹಿತಿ ಲಭ್ಯವಾಗಿಲ್ಲ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-tourists-injured-as-tempo-traveler-flips-near-kannur-while-traveling-to-kottiyoor-gdp/articleshow-8hwy5hy"/>
        </item>
        <item>
            <title><![CDATA[Kodagu: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಟ ಇರಲ್ಲ: ಸಿದ್ದರಾಮಯ್ಯ ವಿರುದ್ಧ ಯದುವೀರ್ ವಾಗ್ದಾಳಿ]]></title>
            <link>https://kannada.asianetnews.com/karnataka-districts/mp-yaduveer-wadiyar-slams-congress-over-siddaramaiah-remarks-gvd/articleshow-9ubagz9</link>
            <guid isPermaLink="true">https://kannada.asianetnews.com/karnataka-districts/mp-yaduveer-wadiyar-slams-congress-over-siddaramaiah-remarks-gvd/articleshow-9ubagz9</guid>
            <pubDate>Mon, 22 Jun 2026 19:22:09 +0530</pubDate>
            <description><![CDATA[&lt;p&gt;Yaduveer Wadiyar: ಕಾಂಗ್ರೆಸ್ ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 28 ರಲ್ಲಿ ಚುನಾವಣೆಯಲ್ಲಿ ಅದು ಕೂಡ ಇಲ್ಲದಂತೆ ಆಗುವ ಆತಂಕ ಅವರಿಗೆ ಇದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvqsm9mg9t0f2hzbk4nrsmaq,imgname-j-1782136317584.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.22): &lt;/strong&gt;ಕಾಂಗ್ರೆಸ್ ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 28 ರಲ್ಲಿ ಚುನಾವಣೆಯಲ್ಲಿ ಅದು ಕೂಡ ಇಲ್ಲದಂತೆ ಆಗುವ ಆತಂಕ ಅವರಿಗೆ ಇದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ. ಆದ್ದರಿಂದಲೇ ಅವರು ಹೀಗೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿಂದೂ ರಾಷ್ಟ್ರ ಮಾಡುವ ಉದ್ದೇಶ ಹೊಂದಿದೆ.&lt;/p&gt;&lt;p&gt;ಹಿಂದೂ ರಾಷ್ಟ್ರ ಮಾಡುವುದಕ್ಕೆ ಕೈಕಾರ್ಯಕರ್ತರು ಬಿಡಬಾರದು ಎಂದು ಸಿದ್ದರಾಮಯ್ಯ ಹೇಳಿರುವ ವಿಚಾರ ಮಡಿಕೇರಿಯಲ್ಲಿ ಮಾತನಾಡಿದ ಯದುವೀರ್ ಇದು ಅನಿರೀಕ್ಷಿತ ಹೇಳಿಕೆ ಏನು ಅಲ್ಲ, ಹಿಂದಿನಿಂದಲೂ ಅವರ ಮನೋಭಾವವೇ ಹಾಗೆ ಇದೆ. ಕಾಂಗ್ರೆಸ್ ನ ನಡವಳಿಕೆಯೇ ಯಾವಾಗಲೂ ಅಪಪ್ರಚಾರ ಮಾಡುವುದು ಎನ್ನುವುದು ನಮಗೂ ಗೊತ್ತಿದೆ. ಆದರೆ ಭಾರತೀಯ ಜನತಾ ಪಕ್ಷ ಸುರಕ್ಷಿತ, ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೆಲಸ ಮಾಡುತ್ತಿದೆ.&lt;/p&gt;&lt;p&gt;ಪ್ರಧಾನಿ ಮೋದಿಯವರನ್ನು ದೇಶದ ಜನ ಒಪ್ಪಿದ್ದಾರೆ. ಹೀಗಾಗಿಯೇ ಮೂರು ಬಾರಿ ಪ್ರಧಾನಿಯಾಗಿ ಆಯ್ಕೆ ಆಗಿದ್ದಾರೆ. ನಮ್ಮ ಪಕ್ಷ ಎಲ್ಲಾ ಜನಾಂಗಗಳನ್ನು ಒಳಗೊಂಡು ಕೆಲಸ ಮಾಡುತ್ತಿದೆ. ಇಂದು ಹೆದ್ದಾರಿ, ರೈಲ್ವೇ ಹಾಗೂ ವಿಮಾನಯಾನ ಅಭಿವೃದ್ಧಿ ಆಗಿದೆ. ಇದನ್ನೆಲ್ಲ ಕೇವಲ ಹಿಂದುಗಳು ಮಾತ್ರವೇ ಬಳಕೆ ಮಾಡುತ್ತಾರೆಯೇ.? ಇವುಗಳಲ್ಲಿ ಹಿಂದೂಗಳು ಮಾತ್ರ ಓಡಾಡುತ್ತಾರೆಯೇ ಎಂದು ಪ್ರಶ್ನಿಸಿದ ಯದುವೀರ್ ಇವುಗಳಲ್ಲಿ ಎಲ್ಲಾ ಧರ್ಮಗಳ ಜನರು ಓಡಾಡುತ್ತಾರೆ. ಆದರೆ ಕಾಂಗ್ರೆಸ್ ಮಾತ್ರ ಕೇವಲ ಅಪಪ್ರಚಾರ ಮಾಡುತ್ತದೆ ಅಷ್ಟೇ ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಸರ್ಕಾರ ನಿಮ್ಮದೇ ನಿರ್ಧಾರ ಕೈಗೊಳ್ಳಿ&lt;/strong&gt;&lt;/h2&gt;&lt;p&gt;ಬಿಡದಿ ಟೌನ್ ಶಿಪ್ ನಿರ್ಮಾಣ ಕೆಲಸ ಯಾರ ಸಮಯದಲ್ಲಿ ಆಯ್ತು ಎನ್ನುವುದು ಮುಖ್ಯವಲ್ಲ. ನಿಮ್ಮ ಸರ್ಕಾರವಿದೆ, ನೀವೆ ನಿರ್ಧಾರ ಮಾಡಿ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ. ಬಿಡದಿ ಟೌನ್ ಶಿಪ್ ಆರಂಭವಾಗಿದ್ದೇ ಎಚ್ ಡಿಕೆ ಕಾಲದಲ್ಲಿ ಎಂದು ಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ ಅವರು ಜನರ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಾಗೆ ನೀವು ನಿರ್ಧಾರ ಮಾಡಿ.&lt;/p&gt;&lt;p&gt;ಹಿಂದೆ ಇದ್ದವರು, ಮುಂದೆ ಬರುವವರ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ. ಸರ್ಕಾರ, ಆಡಳಿತ ಅವರದ್ದೇ ಇದೆ. ಇಂದು ಜನರ ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ, ಆ ಅಭಿಪ್ರಾಯದಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ. ಯಾರು ಹಿಂದೆ ಏನು ಮಾಡಿದರು ಮುಂದೆ ಏನ್ ಮಾಡ್ತಾರೆ ಎನ್ನುವ ಚರ್ಚೆ ಅವಶ್ಯಕತೆ ಇಲ್ಲ. ಆಡಳಿತ ಅವರ ಕೈಯಲ್ಲಿ ಇದೆ ಅವರು ನಿರ್ಧಾರ ತೆಗೆದುಕೊಳ್ಳಲಿ ಎಂದು ಮಡಿಕೇರಿಯಲ್ಲಿ ಸಿಎಂ ಡಿಕೆಶಿಗೆ ಸಂಸದಯ ಯದುವೀರ್ ಒಡೆಯರ್ ತಿರುಗೇಟು ನೀಡಿದರು.&lt;/p&gt;&lt;p&gt;ಇನ್ನು ಪರಿಷತ್ ಚುನಾವಣೆ ವೇಳೆಯಲ್ಲಿ ಅಡ್ಡ ಮತದಾನ ಮಾಡಿರುವವರಿಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಯದುವೀರ್ ಪಕ್ಷ ಶಿಸ್ತುಕ್ರಮ ಕೈಗೊಳ್ಳುತ್ತದೆ. ಅದರ ವರದಿಗಾಗಿ ಈಗಾಗಲೇ ಸತ್ಯ ಶೋಧನೆ ಸಮಿತಿಯನ್ನು ರಚಿಸಲಾಗಿದೆ. ಸಿ ಟಿ ರವಿ ಅವರ ನೇತೃತ್ವದಲ್ಲಿ ಸಮಿತಿ ತನಿಖೆ ಮಾಡುತ್ತಿದೆ ಎಂದರು. ಅಡ್ಡಮತದಾನ ನಡೆದಿರುವುದು ಇದೇನು ಮೊದಲಲ್ಲ. ಬೇರೆ ಪಕ್ಷಗಳಲ್ಲೂ ಅಡ್ಡಮತದಾನ ನಡೆದಿವೆ.&lt;/p&gt;&lt;p&gt;ಈಗ ನಮ್ಮ ಪಕ್ಷದಲ್ಲೂ ಅಡ್ಡ ಮತದಾನ ನಡೆದಿದೆ. ನಾವು ಕ್ರಮ ತೆಗೆದುಕೊಳ್ಳಬೇಕಾಗಿದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಆಣೆ ಪ್ರಮಾಣಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ಅದು ಪಕ್ಷದ ಆಂತರಿಕ ವಿಚಾರವಾಗಿದ್ದು, ಏನು ಮಾಡಬೇಕು ಮಾಡಬಾರದು ಅಂತ ಪಕ್ಷ ನಿರ್ಧಾರ ಮಾಡುತ್ತದೆ. ಅದನ್ನೆಲ್ಲ ಚರ್ಚೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಯದುವೀರ್ ಒಡೆಯರ್ ಹೇಳಿದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-yaduveer-wadiyar-slams-congress-over-siddaramaiah-remarks-gvd/articleshow-9ubagz9"/>
        </item>
        <item>
            <title><![CDATA[Kodagu Kidnap Case: ಶಾಲೆ ಮುಂದೆ 5 ವರ್ಷದ ಮಗುವನ್ನು ಕರೆದೊಯ್ದ ತಂದೆ? ತಾಯಿಯ ಕಣ್ಣೀರು!]]></title>
            <link>https://kannada.asianetnews.com/crime/kodagu-father-accused-of-kidnapping-5-year-old-son-murnad-case-gvd/articleshow-e3x32nz</link>
            <guid isPermaLink="true">https://kannada.asianetnews.com/crime/kodagu-father-accused-of-kidnapping-5-year-old-son-murnad-case-gvd/articleshow-e3x32nz</guid>
            <pubDate>Fri, 12 Jun 2026 22:48:41 +0530</pubDate>
            <description><![CDATA[&lt;p&gt;Kodagu ಜಿಲ್ಲೆಯ ಮೂರ್ನಾಡಿನಲ್ಲಿ 5 ವರ್ಷದ ಮಗುವನ್ನು ತಂದೆಯೇ ಅಪಹರಿಸಿರುವ ಆರೋಪ ಕೇಳಿಬಂದಿದೆ. ಗಂಡನ ವಿರುದ್ಧ ದೂರು ನೀಡಿರುವ ತಾಯಿ, ಮಗುವನ್ನು ಹುಡುಕಿಕೊಡುವಂತೆ ಪೊಲೀಸ್ ಇಲಾಖೆ ಹಾಗೂ ಎಸ್ಪಿ ಅವರನ್ನು ಮನವಿ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktyckyrcnfkzxhpmrsejq7p6,imgname-cjc-1781283814156.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.12): &lt;/strong&gt;ತಂದೆಯಿಂದಲೇ ಚಿಕ್ಕ ಮಗುವಿನ ಕಿಡ್ನಾಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಡಗು ಜಿಲ್ಲೆಯ ಮೂರ್ನಾಡಿನಲ್ಲಿ ಜೂನ್ 10 ರಂದು ಈ ಘಟನೆ ನಡೆದಿದೆ. ಜಗಳವಾಡಿಕೊಂಡು ಗಂಡನ ಮನೆ ಬಿಟ್ಟು ತಾಯಿ ಮನೆಯಲ್ಲಿದ್ದ ಭವ್ಯ ಎಂಬುವರ ಐದು ವರ್ಷದ ಮಗುವನ್ನು ಆಕೆಯ ಗಂಡ ತಿಮ್ಮಯ್ಯ ಎಂಬುವರೇ ಮಗುವನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಆರು ವರ್ಷಗಳ ಹಿಂದೆ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ತಿಮ್ಮಯ್ಯ ಎಂಬುವರೊಂದಿಗೆ ಮಡಿಕೇರಿ ತಾಲ್ಲೂಕಿನ ಕಾಂತೂರಿನ ಭವ್ಯ ಅವರ ವಿವಾಹವಾಗಿತ್ತು.&lt;/p&gt;&lt;p&gt;ಇವರ ಸಂಸಾರದ ಪ್ರೀತಿಯ ಫಲವಾಗಿ ಒಂದೇ ವರ್ಷದಲ್ಲಿ ಗಂಡು ಮಗು ಜನಿಸಿತ್ತು. ಆದ ಬಳಿಕ ಕ್ರಮೇಣ ಇವರ ಸಂಸಾರದಲ್ಲಿ ಕಿರಿಕ್ ಶುರುವಾಗಿತ್ತು. ಯಾವಾಗಲೂ ಮದ್ಯಪಾನನಾಗಿ ಮನೆಯಲ್ಲಿ ಇರುತ್ತಿದ್ದ ಆತನಿಗೆ ನಾನು ದುಡಿದು ಬಂದ ಸಂಬಳವನ್ನೆಲ್ಲಾ ಆತನಿಗೆ ಕೊಡಬೇಕಾಗಿತ್ತು. ಮಗುವಿನ ಶಿಕ್ಷಣ, ಮತ್ತೊಂದು ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಜೊತೆಗೆ ಯಾವಾಗಲೂ ನನ್ನ ಮೇಲೆ ಹಲ್ಲೆ ಮಾಡುತ್ತಿದ್ದ, ಮಗುವಿಗೂ ಜೀವ ಬೆದರಿಕೆ ಹಾಕುತ್ತಿದ್ದ. ಎಲ್ಲದರಿಂದ ಬೇಸತ್ತು ಕೊನೆಗೆ ನಾನು ಕಳೆದ ಆರು ತಿಂಗಳ ಹಿಂದೆ ಗಂಡನ ಮನೆ ಬಿಟ್ಟು ತವರು ಮನೆಯಿದ್ದ ಕಾಂತೂರು ಸೇರಿದ್ದೆ.&lt;/p&gt;&lt;p&gt;ಜೊತೆಗೆ ಆತನ ಕಿರುಕುಳ ತಾಳಲಾರದೆ ವಿಚ್ಛೇದನಕ್ಕೂ ನ್ಯಾಯಾಲಯದ ಮೆಟ್ಟಿಲೇರಿದ್ದೆ. ಆದಾದ ಬಳಿಕ ಆತನ ಕಿರುಕುಳ ಮತ್ತಷ್ಟು ಜಾಸ್ತಿಯಾಯಿತು. ತಮ್ಮ ತವರು ಮನೆಗೂ ಬಂದು ಗಲಾಟೆ ಮಾಡಿದ್ದ. ಕೊಲೆ ಮಾಡುವುದಾಗಿ ಮಚ್ಚು ಹಿಡಿದು ಕೂಗಾಡಿದ್ದ. ಅದೆಲ್ಲದರ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಇವೆ. ಇದೀಗ ಮೊನ್ನೆ ಇದ್ದಕ್ಕಿದ್ದಂತೆ ಕಾಂತೂರಿಗೆ ಬಂದು ಶಾಲೆಗೆ ಕಳುಹಿಸಲೆಂದು ನಿಂತಿದ್ದಾಗ ನನ್ನ ಮಗನನ್ನು ಗಂಡನೇ ಏಕಾಏಕಿ ಕರೆದುಕೊಂಡು ಹೋಗಿದ್ದಾನೆ. ಎರಡು ದಿನಗಳಿಂದ ನನ್ನ ಮಗು ಎಲ್ಲಿದ್ದಾನೆ, ಹೇಗಿದ್ದಾನೆ ಎಂದು ಗೊತ್ತಿಲ್ಲ ಎಂದು ಭವ್ಯ ಕಣ್ಣೀರಿಟ್ಟಿದ್ದಾರೆ.&lt;/p&gt;&lt;p&gt;ಜೂನ್ 10 ರಂದು ಮಗುವನ್ನು ತಿಮ್ಮಯ್ಯ ಕರೆದೊಯ್ಯುತ್ತಿದ್ದಂತೆ ಭವ್ಯ ಮೂರ್ನಾಡು ಹೊರ ಠಾಣೆಗೆ ದೂರು ನೀಡಿದ್ದಾರೆ. ಮೊದಲು ಮಗನ ಹುಡುಕಿಕೊಡಿ ಎಂದು ಅಂಗಲಾಚುತ್ತಿರುವ ಭವ್ಯ ಗಂಡ ಮದ್ಯಪಾನ ಮಾಡುತ್ತಾನೆ, ಗಾಂಜಾ ಸೇವನೆ ಮಾಡುತ್ತಾನೆ. ಯಾವಾಗಲೂ ನನ್ನನ್ನೂ, ನನ್ನ ಮಗನನ್ನೂ ಸಾಯಿಸುವುದಾಗಿ ಬೆದರಿಕೆ ಹಾಕುತ್ತಿದ್ದ. ಎಲ್ಲರನ್ನೂ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ನನ್ನ ಮಗ ಹೇಗಿದ್ದಾನೋ ಎನ್ನುವ ಭಯವಿದೆ. ಇವನೇನೋ ಮದ್ಯಸೇವನೆ, ಗಾಂಜಾ ಸೇವನೆ ಮಾಡಿ ಎಲ್ಲೋ ಬಿದ್ದುಕೊಳ್ಳುತ್ತಾನೆ. ಆದರೆ ನನ್ನ ಮಗನ ಗತಿ ಏನು ಎಂದು ಮಗುವಿನ ತಾಯಿ ಭವ್ಯ ಕಣ್ಣೀರಿಟ್ಟಿದ್ದಾರೆ.&lt;/p&gt;&lt;h2&gt;&lt;strong&gt;ಹಲವು ಬಾರಿ ಗಲಾಟೆ&lt;/strong&gt;&lt;/h2&gt;&lt;p&gt;ಬೇಗ ಮಗನ ಹುಡುಕಿ ಕೊಡುವಂತೆ ಭವ್ಯ ಎಸ್ಪಿಯನ್ನು ಭೇಟಿಯಾಗಿ ಅಳಲು ತೋಡಿಕೊಂಡಿದ್ದಾರೆ. ತಿಮ್ಮಯ್ಯ ಯಾವಾಗಲೂ ಮದ್ಯಸೇವನೆ ಮಾಡಿ ಗಲಾಟೆ ಮಾಡುತ್ತಿದ್ದ, ಎಲ್ಲಿಯೂ ದುಡಿಯಲು ಹೋಗದೆ ಮದ್ಯಕ್ಕೆ ಹಣ ಕೊಡುವಂತೆ ಪೀಡಿಸುತ್ತಿದ್ದ. ಹೀಗಾಗಿ ಗಂಡನ ಮನೆಬಿಟ್ಟು ತಾಯಿ ಮನೆಯಲ್ಲಿದ್ದೆ. ಅಲ್ಲಿಗೂ ಬಂದು ಹಲವು ಬಾರಿ ಗಲಾಟೆ ಮಾಡಿದ್ದ. ಮಚ್ಚು ಹಿಡಿದು ಕೊಲೆ ಮಾಡುವುದಾಗಿ ಓಡಾಡಿದ್ದ. ಅದೆಲ್ಲವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾವು ಮನೆಯೊಳಗೆ ಇದ್ದಿದ್ದರಿಂದ ನಮ್ಮ ತಾಯಿ ಮನೆಯ ಕಿಟಕಿಗಳನ್ನೆಲ್ಲಾ ಹೊಡೆದು ಹಾಕಿದ್ದ. ಇದೆಲ್ಲವನ್ನು ಕಂಡು ರೋಸಿ ಡೈವರ್ಸ್ ಗೆ ಅರ್ಜಿ ಸಲ್ಲಿಸಿದ್ದೆ. ಆದರೆ ಈಗ ನನ್ನ ಮಗುವನ್ನೇ ಕದ್ದೊಯ್ದಿದ್ದಾನೆ. ಆದಷ್ಟು ಬೇಗ ಮಗನ ಹುಡುಕಿಕೊಡಿ ಎಂದು ಭವ್ಯ ಅಂಗಲಾಚುತ್ತಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/kodagu-father-accused-of-kidnapping-5-year-old-son-murnad-case-gvd/articleshow-e3x32nz"/>
        </item>
        <item>
            <title><![CDATA[Bidadi Township: ವಿಧಾನಸೌಧಕ್ಕೆ ಬನ್ನಿ, ದಾಖಲೆ ತೋರಿಸುತ್ತೇವೆ: ಎಚ್‌ಡಿಕೆಗೆ ಎಂ.ಲಕ್ಷ್ಮಣ್ ಸವಾಲ್]]></title>
            <link>https://kannada.asianetnews.com/karnataka-districts/bidadi-township-row-m-lakshman-slams-hd-kumaraswamy-hit-and-run-politics-gvd/articleshow-g7k7qxo</link>
            <guid isPermaLink="true">https://kannada.asianetnews.com/karnataka-districts/bidadi-township-row-m-lakshman-slams-hd-kumaraswamy-hit-and-run-politics-gvd/articleshow-g7k7qxo</guid>
            <pubDate>Tue, 23 Jun 2026 18:56:13 +0530</pubDate>
            <description><![CDATA[&lt;p&gt;Bidadi Township ಯೋಜನೆ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2006ರಲ್ಲಿ ಯೋಜನೆ ಆರಂಭಿಸಿದ್ದು ನೀವೇ ಎಂದು ಪ್ರಶ್ನಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvtahf70typwrqxdp6sj0b2d,imgname-ch-1782221159648.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.23):&lt;/strong&gt; ಬಿಡದಿ ಟೌನ್ ಶಿಪ್ ಅನ್ನು 2006 ರಲ್ಲಿ ಮೊದಲು ಆರಂಭಿಸಿದ್ದೇ ಇದೇ ಕುಮಾರಸ್ವಾಮಿ ಅವರು. ಇದನ್ನು ಕುರಿತು ಚರ್ಚಿಸಲು ಇದೇ 26 ಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧಕ್ಕೆ ಬನ್ನಿ ಎಂದು ಆಹ್ವಾನಿಸಿದ್ದರು. ಆದರೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರ್ ಸ್ವಾಮಿ ಅವರು 26 ಕ್ಕೆ ಯಾವುದೋ ಬೇರೆ ಕೆಲಸದ ನಿಮಿತ್ತ ಬ್ಯುಸಿಯಾಗಿದ್ದೇನೆ. ಆದ್ದರಿಂದ 27 ಕ್ಕೆ ಬಿಡದಿ ಸಮೀಪದ ಒಂದು ಹಳ್ಳಿಗೆ ಬನ್ನಿ ಎಂದಿದ್ದಾರೆ. ಇದರ ಅರ್ಥ ಹಿಟ್ ಅಂಡ್ ರನ್ ಕೆಲಸ ಎಂಬುದು ಸ್ಪಷ್ಟ.&lt;/p&gt;&lt;p&gt;ಕುಮಾರಸ್ವಾಮಿ ಅವರು ದೇಶದಲ್ಲಿ ಅತ್ಯಂತ ಪ್ರಸಿದ್ಧ ಹಿಟ್ ಅಂಡ್ ರನ್ ವ್ಯಕ್ತಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೆಚ್ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. 2006 ರಲ್ಲಿ ನೀವು ಸಿಎಂ ಆಗಿದ್ದಾಗ 12 ಸಾವಿರ ಎಕರೆಯನ್ನು ನೋಟಿಫೈ ಮಾಡಿದ್ರಿ. ಬಳಿಕ ಅದನ್ನು ರೆಡ್ ಝೋನ್ ಎಂದು ಮಾಡಿ ಅದನ್ನು ಮಾರಲೂ ಸಾಧ್ಯವಾಗದಂತಹ ಪರಿಸ್ಥಿತಿಗೆ ತಂದು ನಿಲ್ಲಿಸಿದ ಕೀರ್ತಿ ನಿಮ್ಮದೇ. 2018 ರಲ್ಲಿ ನೀವು ಮತ್ತೆ ಸಿಎಂ ಆದಾಗಲಾದರೂ ರೈತರ ಭೂಮಿಯನ್ನು ತೆಗೆದುಕೊಳ್ಳಬಾರದು ಎನ್ನುವ ಮನೋಭಾವವಿದ್ದರೆ, ಆ ಭೂಮಿಯನ್ನು ಡಿನೋಟಿಫೈ ಮಾಡಬಹುದಿತ್ತಲ್ಲಾ.&lt;/p&gt;&lt;p&gt;ಯಾಕೆ ನೀವು ಮಾಡದೆ ಈಗ ಹೋರಾಟ ಎಂದು ರೈತರ ದಿಕ್ಕು ತಪ್ಪಿಸುತಿದ್ದೀರಾ ಎಂದು ಅಸಮಾಧಾನ ಹೊರಹಾಕಿದ್ದಾರೆ. ಬಿಡದಿ ಟೌನ್ ಶಿಪ್ ತರುವುದಕ್ಕೆ ಕಾರಣವಾಗಿದ್ದೇ ಕುಮಾರಸ್ವಾಮಿ ಅವರು ಮತ್ತು ಬಿಜೆಪಿ ಸರ್ಕಾರ. ಯಡಿಯೂರಪ್ಪನವರು, ಜಗದೀಶ್ ಶೆಟ್ಟರ್ ಮತ್ತು ಸದಾನಂದಗೌಡ್ರು ಇದ್ದಾಗ 912 ಎಕರೆ ವಶಕ್ಕೆ ಪಡೆದು ಈಗಾಗಲೇ ಹಂಚಲಾಗಿದೆ. ಆಗ ಅದು ಫಲವತ್ತಾದ ಭೂಮಿ ಅದನ್ನು ಕಿತ್ತುಕೊಳ್ಳಬಾರದು ಎನ್ನುವುದು ಗೊತ್ತಾಗಲಿಲ್ಲವೆ. ಈಗೇಕೆ ಈ ಕಳ್ಳಾಟವನ್ನು ಆಡುತ್ತಿದ್ದೀರಾ. ಡಿ.ಕೆ. ಶಿವಕುಮಾರ್ ಒಬ್ಬ ಒಕ್ಕಲಿಗ ಸಮುದಾಯದವರು ಸಿಎಂ ಆಗಿದ್ದಾರೆ ಎಂಬುದರಿಂದ ನೀವು ಈ ರೀತಿ ಮಾಡುತ್ತಿದ್ದೀರಿ.&lt;/p&gt;&lt;h2&gt;&lt;strong&gt;ನೋಟಿಫೈ ಮಾಡಿದ್ದೀರಾ&lt;/strong&gt;&lt;/h2&gt;&lt;p&gt;ಇದು ಈ ರಾಜ್ಯದ ದುರಂತ. ಇಲ್ಲವೆ ಒಕ್ಕಲಿಗ ಸಮುದಾಯ ದುರಂತ ಇರಬಹುದು ಎಂದಿದ್ದಾರೆ. ಒಟ್ಟು 7483 ಎಕರೆ ನೋಟಿಫೈ ಮಾಡಿದ್ದೀರಾ. ಅದರಲ್ಲಿ 6434 ರೈತರು ಇದ್ದಾರೆ. ಅವರಲ್ಲಿ ಬಿಎಂಆರ್ಡಿಎಲ್ ನವರು ನೋಟಿಸ್ ಕೊಟ್ಟಾಗ ನಾವು ಯಾವ ಕಾರಣಕ್ಕೂ ಭೂಮಿಯನ್ನು ಕೊಡಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟ ರೈತರ ಸಂಖ್ಯೆ 1347 ಅಷ್ಟೆ. 265 ರೈತರು ಈ ಬೆಲೆಗೆ ಕೊಡಲು ನಮಗೆ ಒಪ್ಪಿಗೆ ಇಲ್ಲ ಎಂದಿದ್ರು. 663 ಜನರು ರೈತರು ಮಾತ್ರ ಭೂಮಿ ಕೊಡುವುದೇ ಇಲ್ಲ ಎಂದಿದ್ದಾರೆ. ಈ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ನೀವು ವಿಧಾನಸೌಧಕ್ಕೆ ಬಂದ್ರೆ ಆ ಎಲ್ಲಾ ದಾಖಲೆಗಳನ್ನು ನಿಮಗೆ ಕೊಡುತ್ತೇವೆ.&lt;/p&gt;&lt;p&gt;ನೀವು ನಾಲ್ಕೈದು ಸುಪ್ರೀಂಕೋರ್ಟ್ ಲಾಯರ್ ಮೂಲಕವೇ ಬನ್ನಿ ಚರ್ಚಿಸಿ. ಆಮೇಲೆ ನೀವು ಕರೆದಲ್ಲಿಗೆ ನಾವು ಬರುತ್ತೇವೆ. ಸರ್ಕಾರ ಬರುತ್ತದೆ ಎಂದು ಎಂ. ಲಕ್ಷ್ಮಣ್ ಹೆಚ್.ಡಿ ಕೆಗೆ ಆಗ್ರಹಿಸಿದ್ದಾರೆ. ಬಿಎಂಆರ್ಡಿಎಲ್ ಅವರು ಈ ಭೂಮಿಯನ್ನು ತೆಗೆದುಕೊಂಡು ಕೈಗಾರಿಕೆಯವರಿಗೆ ಭೂಮಿ ಹಂಚಿದ್ದಾರೆ. ಜೊತೆಗೆ ಅಲ್ಲಿಯೇ ವಸತಿ ಯೋಜನೆಯನ್ನು ಮಾಡಲಿದ್ದಾರೆ. ಇಲ್ಲಿ ಯಾವುದೇ ರೀತಿಯಿಂದಲೂ ರಿಯಲ್ ಎಸ್ಟೇಟಿಗೆ ಅವಕಾಶವೇ ಇಲ್ಲ. ಹೀಗಿರುವಾಗ ಸುಳ್ಳು ಆರೋಪ ಮಾಡುವುದಕ್ಕೂ ಒಂದು ಅರ್ಥ ಇರಬೇಕಲ್ಲವೇ ಎಂದಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bidadi-township-row-m-lakshman-slams-hd-kumaraswamy-hit-and-run-politics-gvd/articleshow-g7k7qxo"/>
        </item>
        <item>
            <title><![CDATA[ಕೊಡಗಿನ ಮೂಲಕ ರೈಲು ಮಾರ್ಗಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/kodagu-railway-line-no-proposal-yaduveer-wadiyar-clarification-gvd/articleshow-i7p41vq</link>
            <guid isPermaLink="true">https://kannada.asianetnews.com/karnataka-districts/kodagu-railway-line-no-proposal-yaduveer-wadiyar-clarification-gvd/articleshow-i7p41vq</guid>
            <pubDate>Wed, 03 Jun 2026 19:27:42 +0530</pubDate>
            <description><![CDATA[&lt;p&gt;ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k76j11b6r1z80hs86pew72wy,imgname-mp-yaduveer-wadiyar-1760083084646.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಜೂ.03): &lt;/strong&gt;ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಯಿತು.&lt;/p&gt;&lt;p&gt;ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿವೆ ಎಂದು ಯದುವೀರ್ ತಿಳಿಸಿದ್ದಾರೆ. ಆದರೆ, ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ. ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಭವಿಷ್ಯದ ಮೂಲ ಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು ಎಲ್ಲ ಹಿತಾಸಕ್ತಿ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.&lt;/p&gt;&lt;h2&gt;&lt;strong&gt;ಪಕ್ಷ ಸಂಘಟಿಸಲು ನಿರಂತರ ಶ್ರಮ&lt;/strong&gt;&lt;/h2&gt;&lt;p&gt;ದೇಶ ಮತ್ತು ರಾಜ್ಯದ ಅಭಿವೃದ್ಧಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಮೈಸೂರು ಪ್ರಾಂತ್ಯದ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷ ಸಂಘಟಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತದಿಂದಾಗಿ ಮೂರನೇ ಅವಧಿಯಲ್ಲಿ ಕೇಂದ್ರ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಕೇಂದ್ರದಲ್ಲಿ ಅಲ್ಲದೇ, ಮುಂದಿನ ದಿನಗಳಲ್ಲೂ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷಸಂಘಟನೆ ಮಾಡಬೇಕೆಂದು ಕರೆ ನೀಡಿದರು.&lt;/p&gt;&lt;p&gt;ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದ್ದರೂ ಕೂಡ ಮೈಸೂರು ಪ್ರಾಂತ್ಯದಲ್ಲಿ ನಿರೀಕ್ಷೆಗೆ ತಕ್ಕಂತೆ ಎಂಎಲ್ಎ, ಎಂ.ಪಿ ಸ್ಥಾನಗಳನ್ನು ಪಡೆಯುವಲ್ಲಿ ವಿಫಲರಾಗಿದ್ದೇವೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡುಗು, ಮಡಿಕೇರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮುಂದಾಗುತ್ತಿದ್ದೇವೆ. ಪಕ್ಷ ಬಲಪಡಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.&lt;/p&gt;&lt;p&gt;ಎನ್&zwnj;ಡಿಎ ಮೈತ್ರಿ ಕೂಟ ಇರುವುದರಿಂದ ವರಿಷ್ಠರ ತೀರ್ಮಾಣಕ್ಕೆ ಪ್ರತಿಯೊಬ್ಬರು ಬದ್ಧರಾಗಬೇಕೆ ಹೊರತು ಕಾರ್ಯಕರ್ತರು ಹಾಗೂ ಮುಖಂಡರು ಗೊಂದಲಕ್ಕೆ ಒಳಗಾಗದೇ ಪಕ್ಷವನ್ನು ಗಟ್ಟಿಗೊಳಿಸಲು ಶ್ರಮಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಿ ಅಕ್ರಮ ಮತಗಳನ್ನು ತಡೆಯುವ ಮೂಲಕ ಬಲಿಷ್ಠ ರಾಷ್ಟ್ರಕ್ಕೆ ಕೈಜೋಡಿಸಬೇಕೆಂದು ಎಂದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-railway-line-no-proposal-yaduveer-wadiyar-clarification-gvd/articleshow-i7p41vq"/>
        </item>
        <item>
            <title><![CDATA[Kodagu: 9 ವರ್ಷಗಳ ಬಳಿಕ ಸಿಕ್ಕ ಸ್ವಂತ ಸೂರು: 43 ಆದಿವಾಸಿ ಕುಟುಂಬಗಳ ಕಣ್ಣಲ್ಲಿ ಸಂತಸದ ಕಣ್ಣೀರು!]]></title>
            <link>https://kannada.asianetnews.com/karnataka-districts/kodagu-tribal-families-get-new-homes-after-9-years-struggle-gvd/articleshow-k55rhg4</link>
            <guid isPermaLink="true">https://kannada.asianetnews.com/karnataka-districts/kodagu-tribal-families-get-new-homes-after-9-years-struggle-gvd/articleshow-k55rhg4</guid>
            <pubDate>Fri, 05 Jun 2026 20:25:42 +0530</pubDate>
            <description><![CDATA[&lt;p&gt;ಅವರೆಲ್ಲ ಸ್ವಂತ ಸೂರಿಲ್ಲದೆ ಲೈನ್ ಮನೆಗಳಲ್ಲಿ ಬದುಕು ದೂಡುತ್ತಿದ್ದವರು. 9 ವರ್ಷಗಳ ಹಿಂದೆ ಬಂದು ಇಂಚಿಂಚು ಜಾಗಕ್ಕೆ ಹೋರಾಟ ನಡೆಸಿದ್ದರು. ಸ್ವಂತ ಸೂರಿನ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktc4g2pfee7yv4qcsdqy927q,imgname-vjgv-1780671318735.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.05): &lt;/strong&gt;ಅವರೆಲ್ಲ ಸ್ವಂತ ಸೂರಿಲ್ಲದೆ ಲೈನ್ ಮನೆಗಳಲ್ಲಿ ಬದುಕು ದೂಡುತ್ತಿದ್ದವರು. 9 ವರ್ಷಗಳ ಹಿಂದೆ ಬಂದು ಇಂಚಿಂಚು ಜಾಗಕ್ಕೆ ಹೋರಾಟ ನಡೆಸಿದ್ದರು. ಸ್ವಂತ ಸೂರಿನ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು ಸ್ವಂತ ಸೂರಿನ ಕನಸು ನನಸಾಗಿದೆ. ಕೊನೆಗೂ ಸುಂದರ ಗೂಡು ಸೇರಿದ್ದಾರೆ. ಹಾಗಾದ್ರೆ ಹೀಗೊಂದು ಮನೆ ಹಸ್ತಾಂತರ ಕಾರ್ಯಕ್ರಮ ನಡೆದ್ದದ್ದಾದ್ರು ಎಲ್ಲಿ, ಹೇಗಿದೆ ಸರ್ಕಾರದ ಆ ಮನೆಗಳು ಅಂತ್ತೀರಾ ಇಲ್ಲಿದೆ ನೋಡಿ.&lt;/p&gt;&lt;p&gt;ಹೌದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಬಾರಿಕಾಡು ಪೈಸಾರಿಯಲ್ಲಿ ನೂರಕ್ಕು ಹೆಚ್ಚು ಕುಟುಂಬಗಳು ಶಾಶ್ವತ ಸೂರಿಲ್ಲದೆ ಹರಕಲು ಮುರುಕಲು ಪ್ಲಾಸ್ಟಿಕ್ ಹೊದಿಕೆಯಲ್ಲಿ ಜೀವನ ದೂಡುತ್ತಿದ್ದರು. ಸ್ವಂತ ಸೂರಿಗಾಗಿ ಆಗ್ರಹಿಸಿ ಅಧಿಕಾರಿಗಳು ರಾಜಕೀಯ ನಾಯಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ರು. ತಾಲ್ಲೂಕು ಕಚೇರಿ, ಜಿಲ್ಲಾಡಳಿತ ಕಚೇರಿಗಳ ಮುಂದೆ ಹಗಲು ರಾತ್ರಿ ಪ್ರತಿಭಟನೆ ನಡೆಸಿದ ಫಲವಾಗಿ ಇದೀಗ ಕಾಲ ಕೂಡಿ ಬಂದಿದೆ.&lt;/p&gt;&lt;p&gt;ಸ್ವಂತ ಸೂರಿಗಾಗಿ ಆಗ್ರಹಿಸಿದವರಿಗೆ ಕೊನೆಗೂ ಸೂರು ಸಿಕ್ಕಂತ್ತಾಗಿದೆ. ಕಳೆದ ಹಲವು ವರ್ಷಗಳಿಂದ ಸ್ವಂತ ಸೂರಿಗಾಗಿ ನಡೆದ ಹೋರಾಟದ ಫಲವಾಗಿ ಇದೀಗ ಸ್ವಂತ ಸೂರು ಸಿಕ್ಕಿದ್ದು ಆದಿವಾಸಿ ಕುಟುಂಬಗಳ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡುವಂತೆ. ಇಷ್ಟು ದಿನಗಳ ಕಾಲ ನಮಗೆ ಸರಿಯಾದ ಸೂರಿಲ್ಲದೆ ಪ್ಲಾಸ್ಟಿಕ್ ಹೊದಿಕೆಯಲ್ಲಿ ಜೀವನ ದೂಡುತ್ತಿದ್ದೇವೆ. ಮಳೆ ಬಂದ್ರೆ ಸಾಕು ಮಳೆಯ ನೀರೆಲ್ಲ ಮನೆಯ ಒಳನುಗ್ಗಿ ನಿದ್ದೆ ಇಲ್ಲದೆ ಕಳೆದ ರಾತ್ರಿಗಳು ಅದೆಷ್ಟೋ.&lt;/p&gt;&lt;h2&gt;&lt;strong&gt;ಮನೆ ಮನೆಯಲ್ಲೂ ಸಂತಸ&lt;/strong&gt;&lt;/h2&gt;&lt;p&gt;ಇದೀಗ ಕೊನೆಗೂ ಪ್ಲಾಸ್ಟಿಕ್ ಹೊದಿಕೆಯಿಂದ ಬೆಚ್ಚನೆಯ ಮನೆಗಳತ್ತ ಆದಿವಾಸಿಗಳು ಹೆಜ್ಜೆ ಹಾಕಿದ್ದು ಸ್ವಂತ ಸೂರಿನ ಕನಸು ಕಂಡವರಿಗೆ ಕೊನೆಗೂ ಸ್ವಂತ ಸೂರು ದೊರೆತ್ತಿರುವುದು ಎಲ್ಲಿಲ್ಲದ ಖುಷಿ ಮನೆ ಮಾಡಿದೆ. ಮನೆ ಉದ್ಘಾಟನೆಗೆ ಆಗಮಿಸಿದ ಶಾಸಕ ಪೊನ್ನಣ್ಣರನ್ನು ಫಲಾನುಭವಿಗಳು ಸಾಂಪ್ರದಾಯಿಕ ಓಲಗದೊಂದಿಗೆ ಭವ್ಯ ಸ್ವಾಗತ ಕೋರಿದ್ರು. ಶಾಸಕ ಪೊನ್ನಣ್ಣ ಫಲವಾಗಿ ಸೂರಿಲ್ಲದವರಿಗೆ ಸ್ವಂತ ಸೂರಿನ ಭಾಗ್ಯ ಸಿಕ್ಕಿದ್ದು, ಕೊನೆಗೂ ಮನೆಗಾಗಿ ಹೋರಾಟ ನಡೆಸಿದವರ ಮನೆ ಮನೆಯಲ್ಲೂ ಸಂತಸ ಮನೆ ಮಾಡಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಶುಕ್ರವಾರ ಫಲಾನುಭವಿಗಳಿಗೆ ನೂತನ ಮನೆಗಳ ಹಸ್ತಾಂತರ ಮಾಡಿದ್ರು.&lt;/p&gt;&lt;p&gt;ಐಟಿಡಿಪಿ ಇಲಾಖೆ ನಿಧಿ ಹಾಗೂ ವಿವಿಧ ಬ್ಯಾಂಕುಗಳ ಸಿಎಸ್ಆರ್ ಅನುದಾನದ ಮೂಲಕ ಒಟ್ಟು ಆರು ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಒನ್ ಬಿ.ಹೆಚ್ ಕೆ ಮನೆಯನ್ನ ನಿರ್ಮಿಸಿದ್ದು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ. ಅದರಲ್ಲಿ ಮೊದಲ ಹಂತದಲ್ಲಿ 43 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಿದ್ದು ಉಳಿದ ಮನೆಗಳನ್ನು ಮುಂದಿನ ದಿನದಲ್ಲಿ ಕಾಮಗಾರಿ ಮುಗಿಸಿ ಹಸ್ತಾಂತರಿಸಲಾಗುವುದೆಂದು ಶಾಸಕ ಪೊನ್ನಣ್ಣ ತಿಳಿಸಿದ್ರು. ಒಟ್ಟಿನಲ್ಲಿ ಹಲವು ಸಮಯದಿಂದ ಸ್ವಂತ ಸೂರಿಗಾಗಿ ಜಾತಕ ಪಕ್ಷಿಯಂತೆ ಕಾದಿದ್ದವರಿಗೆ ಕೊನೆಗೂ ಸ್ವಂತ ಸೂರಿನ ಭಾಗ್ಯ ಸಿಕ್ಕಿದ್ದು ಎಲ್ಲರ ಮನೆ ಮನದಲ್ಲೂ ಸಂತಸ ಮಾಡಿರೋದಂತ್ತು ಸತ್ಯ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-tribal-families-get-new-homes-after-9-years-struggle-gvd/articleshow-k55rhg4"/>
        </item>
        <item>
            <title><![CDATA[ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂದೆ ನಿಜಕ್ಕೂ ಏನಾಗಿದೆ? ಶಾಸಕ ಪೊನ್ನಣ್ಣ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/as-ponnanna-reacts-to-ramalinga-reddy-resignation-row-gvd/articleshow-lq7dep2</link>
            <guid isPermaLink="true">https://kannada.asianetnews.com/karnataka-districts/as-ponnanna-reacts-to-ramalinga-reddy-resignation-row-gvd/articleshow-lq7dep2</guid>
            <pubDate>Fri, 05 Jun 2026 20:54:08 +0530</pubDate>
            <description><![CDATA[&lt;p&gt;ಸರ್ಕಾರ ಬದಲಾವಣೆ ಆದಾಗ ಸಹಜವಾಗಿ ಇವೆಲ್ಲಾ ನಡೆಯುತ್ತವೆ, ಅಂತಹ ಸಂದರ್ಭದಲ್ಲಿ ಮನಸ್ತಾಪಗಳು ಇದ್ದೇ ಇರುತ್ತವೆ ಎಂದು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktc5h7gz00n2b1j5rhng42ye,imgname-xxg-1780672405023.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.05):&lt;/strong&gt; ಸರ್ಕಾರ ಬದಲಾವಣೆ ಆದಾಗ ಸಹಜವಾಗಿ ಇವೆಲ್ಲಾ ನಡೆಯುತ್ತವೆ, ಅಂತಹ ಸಂದರ್ಭದಲ್ಲಿ ಮನಸ್ತಾಪಗಳು ಇದ್ದೇ ಇರುತ್ತವೆ ಎಂದು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರಿನಲ್ಲಿ 43 ಆದಿವಾಸಿ ಕುಟುಂಬಗಳಿಗೆ ನಿರ್ಮಿಸಿಕೊಟ್ಟಿರುವ ಮನೆಗಳ ಹಸ್ತಾಂತರಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯ ನಾಯಕರು, ದೊಡ್ಡ ನಾಯಕರು.&lt;/p&gt;&lt;p&gt;ಹೀಗಾಗಿ ಅವರು ಇದೆಲ್ಲಾವನ್ನು ಗಮನಿಸಿ ಸರ್ಕಾರದಲ್ಲಿ ಭಾಗಿಯಾಗುವ ನಂಬಿಕೆ ಇದೆ. ಪಕ್ಷ ಮತ್ತು ನಮ್ಮ ನಾಯಕರು ಅವರ ಮನವೊಲಿಸುವ ವಿಶ್ವಾಸವಿದೆ. ಸಚಿವ ಸ್ಥಾನಗಳನ್ನು ಸಿಎಂ, ಮಾಜಿ ಸಿಎಂ ಮತ್ತು ಹೈಕಮಾಂಡ್ ನಿರ್ಧರಿಸಿರುತ್ತದೆ. ಪಕ್ಷದ ಹಿರಿಯ ನಾಯಕರು ಕೂಡ ರಾಮಲಿಂಗಾರೆಡ್ಡಿ ಅವರ ಮನಸ್ಸಿಗೆ ನೋವಾಗದಂತೆ ಖಾತೆ ಹಂಚುವ ವಿಶ್ವಾಸವಿದೆ. ಪಕ್ಷದ ನಾಯಕರು ಮತ್ತು ಡಿಕೆಶಿ ಅವರು ಅವರ ಮನವೊಲಿಸುವ ವಿಶ್ವಾಸವಿದೆ. ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ಪಕ್ಷದ ನಾಯಕರ ನಿರ್ಧಾರಗಳು ಇರುತ್ತವೆ ಎಂದು ಶಾಸಕ ಪೊನ್ನಣ್ಣ ಹೇಳಿದ್ದಾರೆ.&lt;/p&gt;&lt;p&gt;ನಾನು ಕೇಳಿದ್ದು ಖಾತೆ ಕೊಡುವುದಾಗಿ ಹೇಳಿದ್ದರು ಎಂಬ ರಾಮಲಿಂಗಾರೆಡ್ಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು ಅದಕ್ಕೆಲ್ಲಾ ನಾವು ಸಾಕ್ಷಿ ಅಲ್ಲ ಎಂದ ಅವರು ಸರ್ಕಾರ ಮುಂದಕ್ಕೆ ಸುಗಮವಾಗಿ ನಡೆಯಲಿದೆ, ಹಿಂದಿನಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಿಎಂ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಸಚಿವ ಸ್ಥಾನ ತಪ್ಪಿಸುವುದಕ್ಕಾಗಿಯೇ ಜಮೀರ್ ಅವರದು ಎನ್ನಲಾದ ಆಡಿಯೋ ವೈರಲ್ ಮಾಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿರುವುದಕ್ಕೆ ಅವರು ಮಾಡದಿರುವ ತಪ್ಪಿಗೆ ಅವರಿಗೆ ಶಿಕ್ಷೆ ಕೊಡುವುದು ಸರಿಯಲ್ಲ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ತನಿಖೆ ಆಗಲಿ&lt;/strong&gt;&lt;/h2&gt;&lt;p&gt;ಜಮೀರ್ ಅವರು ನಾನು ಮಾತನಾಡಿಯೇ ಇಲ್ಲ ಎನ್ನುತ್ತಾರೆ. ಇದು ಎಐ ಆಡಿಯೋ ಅಂತ ಅವರು ಹೇಳುತ್ತಿದ್ದಾರೆ, ಮತ್ತೆ ಅದರ ವಿರುದ್ಧ ದೂರನ್ನೂ ನೀಡಿದ್ದಾರೆ. ಇಂದು ಎಐ ಇರುವುದರಿಂದ ಏನು ಬೇಕಾದರೂ ಮಾಡಿರುವ ಸಾಧ್ಯತೆ ಇದೆ. ಯಾರ ಧ್ವನಿ, ಚಿತ್ರವನ್ನು ಬೇಕಾದರೂ ಸೃಷ್ಟಿ ಮಾಡಬಹುದು. ಇಂತಹ ವಿಚಾರದಲ್ಲಿ ಪ್ರತಿಕ್ರಿಯಿಸುವುದಕ್ಕಿಂತ ಪರಿಶೀಲನೆ ಮಾಡಬೇಕಾಗುತ್ತದೆ. ಹೀಗಾಗಿ ತನಿಖೆ ಆಗಲಿ ಎಂದು ಶಾಸಕ ಎ. ಎಸ್ ಪೊನ್ನಣ್ಣ ಆಗ್ರಹಿಸಿದರು. ಇನ್ನು ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಕೊಡುವುದು ಅಥವಾ ಬಿಡುವುದು ಅದೆಲ್ಲವನ್ನೂ ಮಾನ್ಯ ಸಿದ್ದರಾಮಯ್ಯನವರು, ಸಿಎಂ ಡಿ.ಕೆ ಶಿವಕುಮಾರ್ ಮತ್ತು ಹೈಕಮಾಂಡ್ ನವರು ತೀರ್ಮಾನ ಮಾಡುತ್ತಾರೆ.&lt;/p&gt;&lt;p&gt;ಯಾವುದು ಸೂಕ್ತ, ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಜೀವನ ನಡೆಯುವುದೇ ಭರವಸೆಯ ಮೇಲೆ, ಹೀಗಾಗಿ ಸಚಿವ ಸ್ಥಾನ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ. ಹಿರಿಯ ಶಾಸಕರು ಪಕ್ಷದ ಆಧಾರದ ಸ್ಥಂಭಗಳು, ಮತ್ತು ಯಾವ ಭಾಗಕ್ಕೆ ಪ್ರಾತಿನಿಧ್ಯ ಕೊಡಬೇಕು ಎಂಬುವುದು ಇರುತ್ತದೆ. ಅದನ್ನೆಲ್ಲ ಗಮನಿಸಿ ಮೊದಲ ಪಟ್ಟಿಯಲ್ಲಿ ಸಚಿವಸ್ಥಾನ ನೀಡಿರುತ್ತಾರೆ ಎಂದಿದ್ದಾರೆ. ಕೊಡಗು ಜಿಲ್ಲೆಗೆ ಜಿಲ್ಲೆಗೆ ಸಚಿವಸ್ಥಾನ ಕೊಡಬೇಕು, ಇಲ್ಲಿಯವರೇ ಉಸ್ತುವಾರಿ ಆಗಿರಬೇಕು ಎನ್ನುವ ಕೂಗು ಇದೆ.&lt;/p&gt;&lt;p&gt;ಅದು ಪಕ್ಷದ ನಾಯಕರ ಗಮನದಲ್ಲಿ ಇದೆ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಆದರೆ ಯಾರು ಸೂಕ್ತ ವ್ಯಕ್ತಿ, ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಾವು ಸ್ವಲ್ಪ ದಿನ ಕಾಯೋಣ ಎಂದು ಶಾಸಕ ಪೊನ್ನಣ್ಣ ಹೇಳಿದ್ದಾರೆ. ಈ ಸರ್ಕಾರ ಶಾಶ್ವತವಲ್ಲ ಎಂದು ವಿಪಕ್ಷಗಳು ಇದನ್ನೇ ಹೇಳುವುದು. ವಿರೋಧ ಪಕ್ಷದವರು ಇದನ್ನೇ ಹೇಳ್ತಾರೆ, ನಾವು ವಿರೋಧ ಪಕ್ಷದಲ್ಲಿ ಇದ್ದರು ಇದನ್ನೇ ಹೇಳುತ್ತಿದ್ದೆವು. ಸರ್ಕಾರ ನಡೆಸುತ್ತಿರುವವರಿಗೆ ಇದನ್ನು ನಿಭಾಯಿಸುವ ಸಾಮರ್ಥ್ಯ ಇದೆ. ಇದನ್ನು ಮುಂದಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ ಸಮರ್ಥವಾಗಿ ನಿಭಾಯಿಸಲಿದ್ದಾರೆ. ಉತ್ತಮ ಆಡಳಿತವನ್ನು ಮಾನ್ಯ ಶಿವಕುಮಾರ್ ಅವರು ಕೊಡಲಿದ್ದಾರೆ ಎಂದು ಕೊಡಗಿನ ಕೆದಮುಳ್ಳೂರಿನಲ್ಲಿ ಶಾಸಕ ಪೊನ್ನಣ್ಣ ಹೇಳಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/as-ponnanna-reacts-to-ramalinga-reddy-resignation-row-gvd/articleshow-lq7dep2"/>
        </item>
        <item>
            <title><![CDATA[ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ]]></title>
            <link>https://kannada.asianetnews.com/karnataka-districts/heavy-vehicle-traffic-banned-in-kodagu-from-june-10-to-july-9-rain-warning-issued-mrq/articleshow-mb6rhpd</link>
            <guid isPermaLink="true">https://kannada.asianetnews.com/karnataka-districts/heavy-vehicle-traffic-banned-in-kodagu-from-june-10-to-july-9-rain-warning-issued-mrq/articleshow-mb6rhpd</guid>
            <pubDate>Sun, 07 Jun 2026 05:59:06 +0530</pubDate>
            <description><![CDATA[ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ, ಜೂನ್ 10 ರಿಂದ ಜುಲೈ 9 ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ರಸ್ತೆ ಹಾನಿ ತಡೆಯುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jp5b20pe7h90h181xab7xkna,imgname-kodagu-earthquake.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ: &lt;/strong&gt;ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಣೆ ಮತ್ತು ಇತರೆ ಸರಕು ಸಾಗಾಣಿಕೆ ನಿರ್ಬಂಧಿಸಲಾಗಿದೆ.&lt;/p&gt;&lt;p&gt;ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆ ಪರಿಸ್ಥಿತಿ ಹದಗೆಡುತ್ತದೆ ಅಲ್ಲದೆ ಅಧಿಕ ಭಾರ ತುಂಬಿದ ಭಾರಿ ಸರಕು ಸಾಗಾಟದ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿ ಮಣ್ಣು ಕುಸಿತದಿಂದಾಗಿ ರಸ್ತೆ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ.&lt;/p&gt;&lt;p&gt;ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಜೂ.10ರಿಂದ ಜು. 9ರವರೆಗೆ ವಾಹನ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ.&lt;/p&gt;&lt;h2&gt;&lt;strong&gt;ನಿರ್ಬಂದಿತ ವಾಹನಗಳು&lt;/strong&gt;&lt;/h2&gt;&lt;p&gt;ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಟ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಟ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರಿ ವಾಹನಗಳಾದ ಬುಲ್ಲೆಟ್ ಟ್ಯಾಂಕರ್&zwnj;, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ರ&zwj;್ಟಿಕ್ಯೂಲೇಟೆಡ್ ವಾಹನಗಳು.&lt;/p&gt;&lt;h3&gt;&lt;strong&gt;ನಿರ್ಬಂಧದಿಂದ ಹೊರತಾದ ವಾಹನಗಳು&lt;/strong&gt;&lt;/h3&gt;&lt;p&gt;ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲಾಗುವ ವಾಹನಗಳು, ಶಾಲೆ, ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್&zwnj;ಗಳು ಸೇರಿದಂತೆ).&lt;/p&gt;&lt;p&gt;ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 116ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕ ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅನುಮತಿಸಿದೆ.&lt;/p&gt;&lt;p&gt;&lt;strong&gt;ಚೆಕ್&zwnj; ಪೋಸ್ಟ್ ರಚಿಸಿ ನಿಗಾ&lt;/strong&gt;&lt;/p&gt;&lt;p&gt;ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿ ಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್&zwnj;ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿ ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ. ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/heavy-vehicle-traffic-banned-in-kodagu-from-june-10-to-july-9-rain-warning-issued-mrq/articleshow-mb6rhpd"/>
        </item>
        <item>
            <title><![CDATA[ಕೊಡಗಿನಲ್ಲಿ ಭೀಕರ ದುರಂತ: ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು]]></title>
            <link>https://kannada.asianetnews.com/karnataka-districts/kodagu-ips-raw-ig-sunil-achaiah-wife-sandhya-killed-in-elephant-attack-san/articleshow-nbb35ud</link>
            <guid isPermaLink="true">https://kannada.asianetnews.com/karnataka-districts/kodagu-ips-raw-ig-sunil-achaiah-wife-sandhya-killed-in-elephant-attack-san/articleshow-nbb35ud</guid>
            <pubDate>Fri, 05 Jun 2026 16:29:16 +0530</pubDate>
            <description><![CDATA[ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ತೋಟವೊಂದರಲ್ಲಿ ನಡೆದ ಕಾಡಾನೆ ದಾಳಿಯಲ್ಲಿ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ತೋಟಕ್ಕೆ ಭೇಟಿ ನೀಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktbprmqvpeqpvasg0cs6dsw5,imgname-kodagu-women-death-1780656919291.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಜೂ.5):&lt;/strong&gt; ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರ RAW ಐಜಿ ಆಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ (51) ಅವರು ಬಲಿಯಾಗಿದ್ದಾರೆ.&lt;/p&gt;&lt;p&gt;ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಸಂಧ್ಯಾ ಅಚ್ಚಯ್ಯ ಅವರು ಸಂಬಂಧಿಕರ ಮನೆಯಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅವರು ಇತರ ನಾಲ್ವರೊಂದಿಗೆ ಸೇರಿ ಒಟ್ಟು ಐದು ಜನರ ಗುಂಪಿನಲ್ಲಿ ಸ್ಥಳೀಯ ತೋಟವೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ತೋಟದಲ್ಲಿದ್ದ ಒಂಟಿ ಆನೆಯೊಂದು ಏಕಾಏಕಿ ಇವರ ಗುಂಪಿನತ್ತ ನುಗ್ಗಿ ಭೀಕರವಾಗಿ ದಾಳಿ ನಡೆಸಿದೆ.&lt;/p&gt;&lt;p&gt;ಆನೆ ತಾವಿದ್ದ ಜಾಗಕ್ಕೆ ನುಗ್ಗುತ್ತಿದ್ದಂತೆ ಆತಂಕಗೊಂಡ ಉಳಿದ ನಾಲ್ವರು ನಿವಾಸಿಗಳು ಅಲ್ಲಿಂದ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಸಂಧ್ಯಾ ಅಚ್ಚಯ್ಯ ಅವರು ಆನೆಗೆ ಸಿಲುಕಿಕೊಂಡಿದ್ದಾರೆ. ಆನೆಯ ಭೀಕರ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ದಾಳಿಯ ಬೆನ್ನಲ್ಲೇ ತೀವ್ರವಾಗಿ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡಾನೆಗಳ ಹಾವಳಿಗೆ ಹಿರಿಯ ಅಧಿಕಾರಿಯ ಪತ್ನಿಯೇ ಬಲಿಯಾಗಿರುವುದು ಸ್ಥಳೀಯವಾಗಿ ಭಾರಿ ಆತಂಕ ಮೂಡಿಸಿದೆ.&lt;/p&gt;&lt;h2&gt;&lt;strong&gt;ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ&lt;/strong&gt;&lt;/h2&gt;&lt;p&gt;ಕೊಡಗಿನಲ್ಲಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು ಕಂಡ ಬೆನ್ನಲ್ಲಿಯೇ, ಗೋಣಿಕೊಪ್ಪದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಮೃತ ಸಂಧ್ಯಾ ಕುಂಟುಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಕಾಡಾನೆ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.&lt;/p&gt;&lt;h2&gt;&lt;strong&gt;ಕೊಡಗು ಮೂಲದ ಎಎಸ್&zwnj; ಅಚ್ಚಯ್ಯ&lt;/strong&gt;&lt;/h2&gt;&lt;p&gt;ದಕ್ಷಿಣ ಕೊಡಗಿನ ಪರಕಟಕೇರಿ ಗ್ರಾಮದವರಾದ ಸುನಿಲ್ ಅಚ್ಚಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸರಕಾರದ RAW ಐಜಿಯಾಗಿ ಕೆಲಸ ಮಾಡುತ್ತಿದ್ದಾರೆ. ಸುನಿಲ್ ಅವರು ಅಚ್ಚಯ್ಯ ಅವರ ಪುತ್ರರಾಗಿದ್ದು ತಾಯಿ ಬೆಲ್ಲ(ತಾಮನೆ ಅಮ್ಮಣಕುಟ್ಟಂಡ),ಪತ್ನಿ ಸಂಧ್ಯಾ(ತಾಮನೆ ಮಂಡೇಪಂಡ),ಇಬ್ಬರು ಮಕ್ಕಳೊಂದಿಗೆ ದೆಹಲಿಯಲ್ಲಿ ನೆಲೆಸಿದ್ದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kodagu</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/kodagu-ips-raw-ig-sunil-achaiah-wife-sandhya-killed-in-elephant-attack-san/articleshow-nbb35ud"/>
        </item>
        <item>
            <title><![CDATA[ಬೆಂಗಳೂರಿನಿಂದ ಧರ್ಮಸ್ಥಳ-ಕುಕ್ಕೆಗೆ ಹೊಸ ಸ್ಲೀಪರ್ ಬಸ್‌ ಆರಂಭ, ಹಗಲು ಮತ್ತು ರಾತ್ರಿ ಸಮಯದ ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/ksrtc-launches-new-non-ac-sleeper-bus-connecting-bengaluru-mysuru-and-coorg-to-dharmasthala-and-kukke-subrahmanya-gdp/articleshow-srxge4r</link>
            <guid isPermaLink="true">https://kannada.asianetnews.com/karnataka-districts/ksrtc-launches-new-non-ac-sleeper-bus-connecting-bengaluru-mysuru-and-coorg-to-dharmasthala-and-kukke-subrahmanya-gdp/articleshow-srxge4r</guid>
            <pubDate>Thu, 28 May 2026 15:49:49 +0530</pubDate>
            <description><![CDATA[ಕೆಎಸ್ಆರ್ಟಿಸಿ, ಬೆಂಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಈ ಬಸ್ ಕೊಡಗು ಜಿಲ್ಲೆಯ ಸೋಮವಾರಪೇಟೆ, ಶನಿವಾರಸಂತೆ ಮತ್ತು ಬಿಸ್ಲೆ ಘಾಟ್ ಮಾರ್ಗವಾಗಿ ಸಂಚರಿಸಲಿದ್ದು, ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksq1c08b9cf5s22x3dg3p82e,imgname-ksrtc--1--1779963396363.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮತ್ತು ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ, ಕೊಡಗು ಮತ್ತು ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸಲಿರುವ ನೂತನ &quot;ನಾನ್ ಎಸಿ ಸ್ಲೀಪರ್&quot; (Non-AC Sleeper) ಬಸ್ ಸೇವೆಗೆ ಇಂದಿನಿಂದಲೇ ಅಧಿಕೃತವಾಗಿ ಚಾಲನೆ ನೀಡಲಾಗಿದೆ.&lt;/p&gt;&lt;p&gt;ಕೊಡಗು ಜಿಲ್ಲೆಯ ಸೋಮವಾರಪೇಟೆ, ಶನಿವಾರಸಂತೆ ಹಾಗೂ ಸುಂದರ ಪ್ರಕೃತಿ ಸೌಂದರ್ಯದ ಬಿಸ್ಲೆ ಘಾಟ್ ಮಾರ್ಗವಾಗಿ ಈ ಹೊಸ ಸ್ಲೀಪರ್ ಬಸ್ ಸಂಚರಿಸಲಿದ್ದು, ಪ್ರವಾಸಿಗರಿಗೆ ಮತ್ತು ನಿತ್ಯ ಪ್ರಯಾಣಿಕರಿಗೆ ಇದು ವರದಾನವಾಗಲಿದೆ.&lt;/p&gt;&lt;h2&gt;ನೂತನ ಸ್ಲೀಪರ್ ಬಸ್ ಸಂಚಾರದ ಸಂಪೂರ್ಣ ಮಾರ್ಗ ಮತ್ತು ವೇಳಾಪಟ್ಟಿ:&lt;/h2&gt;&lt;p&gt;ಪುತ್ತೂರು ವಿಭಾಗದ ಕ.ರಾ.ರ.ಸಾ. ಸಂಸ್ಥೆಯು ಈ ನೂತನ ಸೇವೆಯನ್ನು ವಿನ್ಯಾಸಗೊಳಿಸಿದ್ದು, ಬಸ್ಸುಗಳ ಸಂಚಾರದ ನಿಖರ ಸಮಯ ಹೀಗಿದೆ:&lt;/p&gt;&lt;h3&gt;ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣ (ಬೆಳಗ್ಗಿನ ವೇಳಾಪಟ್ಟಿ):&lt;/h3&gt;&lt;p&gt;ಈ ನೂತನ ಸ್ಲೀಪರ್ ಬಸ್ ಪ್ರತಿದಿನ ಬೆಳಗ್ಗೆ 6:30 ಗಂಟೆಗೆ ಧರ್ಮಸ್ಥಳದಿಂದ ಹೊರಡಲಿದೆ. ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತಲುಪಿ, ಬೆಳಗ್ಗೆ 8:00 ಗಂಟೆಗೆ ಸುಬ್ರಹ್ಮಣ್ಯದಿಂದ ಪ್ರಯಾಣ ಮುಂದುವರಿಸಲಿದೆ. ತದನಂತರ ಬಿಸ್ಲೆಯಿಂದ ಬೆಳಗ್ಗೆ 8:50ಕ್ಕೆ, ಶನಿವಾರಸಂತೆಯಿಂದ ಬೆಳಗ್ಗೆ 9:35ಕ್ಕೆ ಹಾಗೂ ಸೋಮವಾರಪೇಟೆಯಿಂದ ಬೆಳಗ್ಗೆ 10:30 ಗಂಟೆಗೆ ಹೊರಡಲಿದೆ. ಅಲ್ಲಿಂದ ಕುಶಾಲನಗರ ಮತ್ತು ಮೈಸೂರು ಮಾರ್ಗವಾಗಿ ರಾಜಧಾನಿ ಬೆಂಗಳೂರನ್ನು ತಲುಪಲಿದೆ.&lt;/p&gt;&lt;h3&gt;ಬೆಂಗಳೂರಿನಿಂದ ಧರ್ಮಸ್ಥಳದತ್ತ ಪ್ರಯಾಣ (ರಾತ್ರಿಯ ವೇಳಾಪಟ್ಟಿ):&lt;/h3&gt;&lt;p&gt;ಮತ್ತೊಂದೆಡೆ, ಇದೇ ನಾನ್ ಎಸಿ ಸ್ಲೀಪರ್ ಬಸ್ ಪ್ರತಿದಿನ ರಾತ್ರಿ 9:45 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಹೊರಡಲಿದೆ. ರಾತ್ರಿ ಪೂರ್ತಿ ಸಂಚರಿಸಲಿರುವ ಈ ಬಸ್ ಮೈಸೂರು, ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ, ಕೂಡುರಸ್ತೆ, ಬಿಸ್ಲೆ ಘಾಟ್ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಾರ್ಗವಾಗಿ ಮರುದಿನ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ತಲುಪಲಿದೆ.&lt;/p&gt;&lt;h2&gt;ಆನ್&zwnj;ಲೈನ್ ಬುಕ್ಕಿಂಗ್ ಲಭ್ಯ: ಪ್ರಯಾಣಿಕರಿಗೆ ಅಧಿಕಾರಿಗಳ ಮನವಿ&lt;/h2&gt;&lt;p&gt;ಕೊಡಗು ಮತ್ತು ಕರಾವಳಿಯ ಧಾರ್ಮಿಕ ಕ್ಷೇತ್ರಗಳ ನಡುವೆ ನೇರ ಸ್ಲೀಪರ್ ಬಸ್ ಸೌಕರ್ಯ ಇರಲಿಲ್ಲ. ಸದ್ಯ ಈ ಹೊಸ ಸೇವೆಯಿಂದಾಗಿ ಸುಖಕರ ಪ್ರಯಾಣಕ್ಕೆ ಹಂಬಲಿಸುವ ಸಾರ್ವಜನಿಕರಿಗೆ ದೊಡ್ಡ ಅನುಕೂಲ ಸಿಕ್ಕಂತಾಗಿದೆ.&lt;/p&gt;&lt;p&gt;ಈ ನೂತನ ಸ್ಲೀಪರ್ ಸಾರಿಗೆಯ ಸದುಪಯೋಗವನ್ನು ಸಾರ್ವಜನಿಕರು ಹಾಗೂ ಯಾತ್ರಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶ್ರೀಹರಿಬಾಬು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.&lt;/p&gt;&lt;h2&gt;ಟಿಕೆಟ್ ಕಾಯ್ದಿರಿಸುವಿಕೆ ಹೇಗೆ?&lt;/h2&gt;&lt;p&gt;ಈ ಬಸ್ಸಿನಲ್ಲಿ ಪ್ರಯಾಣಿಸಲು ಇಚ್ಛಿಸುವ ಸಾರ್ವಜನಿಕರು ತಮ್ಮ ಹತ್ತಿರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕೌಂಟರ್&zwnj;ಗಳಿಗೆ ಭೇಟಿ ನೀಡಿ ಮುಂಗಡ ಟಿಕೆಟ್ ಪಡೆಯಬಹುದು. ಅಥವಾ ಸಂಸ್ಥೆಯ ಅಧಿಕೃತ ಜಾಲತಾಣವಾದ www.ksrtc.in ಗೆ ಭೇಟಿ ನೀಡುವ ಮೂಲಕ ಆನ್&zwnj;ಲೈನ್&zwnj;ನಲ್ಲಿಯೂ ಸೀಟುಗಳನ್ನು ಸುಲಭವಾಗಿ ಬುಕ್ ಮಾಡಿಕೊಳ್ಳಬಹುದಾಗಿದೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/ksrtc-launches-new-non-ac-sleeper-bus-connecting-bengaluru-mysuru-and-coorg-to-dharmasthala-and-kukke-subrahmanya-gdp/articleshow-srxge4r"/>
        </item>
        <item>
            <title><![CDATA[Illegal Occupation: ಮಡಿಕೇರಿಯ ಈ ಸರ್ಕಾರಿ ಕಟ್ಟಡದಲ್ಲಿ ರಾತ್ರಿ ಏನಾಗುತ್ತಿದೆ ಗೊತ್ತಾ?]]></title>
            <link>https://kannada.asianetnews.com/karnataka-districts/madikeri-gandhi-maidan-open-stage-illegal-rental-controversy-gvd/articleshow-uvqvfmf</link>
            <guid isPermaLink="true">https://kannada.asianetnews.com/karnataka-districts/madikeri-gandhi-maidan-open-stage-illegal-rental-controversy-gvd/articleshow-uvqvfmf</guid>
            <pubDate>Sat, 20 Jun 2026 19:36:24 +0530</pubDate>
            <description><![CDATA[&lt;p&gt;Kodagu News: ರಂಗ ಮಂದಿರದ ಪಕ್ಕದಲ್ಲಿಯೇ ಶೌಚಾಲಯವಿದ್ದು ಅದೇ ಕಟ್ಟಡದಲ್ಲಿ ಸಣ್ಣದೊಂದು ಕೋಣೆಯೂ ಇದೆ. ಇವೆಲ್ಲವುಗಳಲ್ಲಿ ನಾಲ್ಕೈದು ಜನರು ಅನಧಿಕೃತವಾಗಿ ತಂಗಿರುವುದು ಬೆಳಕಿಗೆ ಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvjnmszm2eve93nq29wsdjdp,imgname-xg-1781964367860.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.20): &lt;/strong&gt;ನಗರಸಭೆಯ ಯಾವುದೇ ಆಸ್ತಿಗಳಿಂದ ಬರುವ ಆದಾಯ ನಗರಸಭೆಗೆ ಸೇರಬೇಕು ಅಲ್ವಾ. ಆದರೆ ಇಲ್ಲಿ ಕೆಲವು ಆಟೋ ಚಾಲಕರು ಮತ್ತು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದ ವ್ಯಕ್ತಿಗಳು ಬಯಲು ರಂಗ ಮಂದಿರವನ್ನು ಅನಧಿಕೃತವಾಗಿ ಯಾರಿಗೋ ಬಾಡಿಗೆಗೆ ನೀಡಿ ರಂಗಮಂದಿರವನ್ನು ದುರುಪಯೋಗ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೌದು ಮಡಿಕೇರಿ ನಗರಸಭೆಯ ಸಮೀಪದಲ್ಲೇ ಗಾಂಧಿ ಮೈದಾನವಿದೆ. ಅದರ ಕೊನೆಯಲ್ಲಿ ಒಂದು ರಂಗಮಂದಿರವೂ ಇದೆ. ರಂಗಮಂದಿರದ ಕೆಳಭಾಗದಲ್ಲಿ ಒಂದು, ರಂಗಮಂದಿರದ ಒಂದು ಭಾಗದಲ್ಲಿ ಒಂದು ಕೊಠಡಿ ಇವೆ.&lt;/p&gt;&lt;p&gt;ಜೊತೆಗೆ ರಂಗ ಮಂದಿರದ ಪಕ್ಕದಲ್ಲಿಯೇ ಶೌಚಾಲಯವಿದ್ದು ಅದೇ ಕಟ್ಟಡದಲ್ಲಿ ಸಣ್ಣದೊಂದು ಕೋಣೆಯೂ ಇದೆ. ಇವೆಲ್ಲವುಗಳಲ್ಲಿ ನಾಲ್ಕೈದು ಜನರು ಅನಧಿಕೃತವಾಗಿ ತಂಗಿರುವುದು ಬೆಳಕಿಗೆ ಬಂದಿದೆ. ಹೌದು ರಂಗಮಂದಿರ ಮತ್ತು ಅದರ ಪಕ್ಕದಲ್ಲಿರುವ ಶೌಚಾಲಯದ ಸ್ವಚ್ಛತೆಯನ್ನು ಮಾಡಬೇಕು. ಅದಕ್ಕಾಗಿ ನಗರಸಭೆಯ ಡಿ ಗ್ರೂಪ್ ನೌಕರರೊಬ್ಬರಿಗೆ ಜವಾಬ್ದಾರಿ ನೀಡಲಾಗಿದೆ. ಆದರೆ ಆ ವ್ಯಕ್ತಿ ಹಾವೇರಿ ಜಿಲ್ಲೆಯಿಂದ ಬಂದಿರುವ ಅಡವಿಸ್ವಾಮಿ ಎಂಬ ವ್ಯಕ್ತಿಯನ್ನು ತನ್ನ ಸ್ವಂತ ವೆಚ್ಚದಲ್ಲಿ ರಂಗಮಂದಿರದ ಸ್ವಚ್ಛತೆಗೆ ಇರಿಸಿಕೊಂಡಿದ್ದಾನೆ. ಈ ಅಡವಿಸ್ವಾಮಿ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಿಂದ ಬಂದಿರುವ ರೂಪೇಶ್ ಎಂಬಾತನನ್ನು ಇರಿಸಿಕೊಂಡಿದ್ದಾನೆ.&lt;/p&gt;&lt;p&gt;ಮಡಿಕೇರಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುವ ಈ ರೂಪೇಶ್ ಡಾರ್ಜಿಲಿಂಗ್ ನಿಂದಲೇ ಬಂದಿರುವ ಸುನಿಲ್ ಮತ್ತು ಮಾಮು ಎಂಬಿಬ್ಬರನ್ನು ರಂಗಮಂದಿರದ ಕೆಳಭಾಗದಲ್ಲಿ ಇರುವ ಕೊಠಡಿಯಲ್ಲಿ ಇರಿಸಿಕೊಂಡಿದ್ದಾನೆ. ಇವರಿಬ್ಬರಿಂದಲೂ ರೂಪೇಶ್ ಬಾಡಿಗೆ ಪಡೆಯುತ್ತಿದ್ದಾನೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಒಟ್ಟು ನಾಲ್ವರು ಬಯಲು ರಂಗಮಂದಿರದಲ್ಲಿ ಅನಧಿಕೃತವಾಗಿ ವಾಸಿಸುತ್ತಿದ್ದಾರೆ. ಒಂದೆಡೆ ರೂಪೇಶ್ ಇಬ್ಬರನ್ನು ಒಂದು ಕೊಠಡಿಯಲ್ಲಿ ಇರಿಸಿ ಬಾಡಿಗೆ ಪಡೆಯುತ್ತಿದ್ದರೆ ಮತ್ತೊಂದೆಡೆ ಓಪನ್ ಸ್ಟೇಜ್ ಅನ್ನೇ ಹೊರ ಜಿಲ್ಲೆಯಿಂದ ಬರುವ ಬಡ ಪ್ರವಾಸಿಗರಿಗೆ ರಾತ್ರಿ ತಂಗುವುದಕ್ಕೆ ಬಾಡಿಗೆ ನೀಡುತ್ತಿರುವುದು ಗೊತ್ತಾಗಿದೆ.&lt;/p&gt;&lt;p&gt;ಮಡಿಕೇರಿಗೆ ಪ್ರವಾಸಕ್ಕೆ ಬಂದವರು ರಾತ್ರಿ ತಂಗಲು ಕೊಠಡಿಗಳು ಸಿಗದೆ ಪರದಾಡುತ್ತಿರುವವರನ್ನು ಕರೆದುಕೊಂಡು ಬರುವ ಕೆಲವು ಆಟೋ ಚಾಲಕರು ಈ ಸ್ಟೇಜಿನಲ್ಲಿ ಉಳಿದುಕೊಳ್ಳಿ ಎಂದು ಹೇಳಿ ಅದನ್ನು ತೋರಿಸಿ ಪ್ರವಾಸಿಗರಿಂದ 600 ರಿಂದ 800 ರೂಪಾಯಿ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸದಂತೆ ಅಲ್ಲಿಯೇ ವಾಸಿಸುತ್ತಿರುವ ರೂಪೇಶನಿಗೆ ಅದರಲ್ಲಿ ಒಂದಷ್ಟು ಹಣವನ್ನು ನೀಡಿ ಸಮಾಧಾನ ಪಡಿಸುತ್ತಿರುವ ವಿಷಯವೂ ಗೊತ್ತಾಗಿದೆ. ನಿನ್ನೆ ರಾತ್ರಿಯೂ ಆಂಧ್ರದಿಂದ ಬಂದಿದ್ದ ಮುಸ್ಲಿಂ ಕುಟುಂಬವೊಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಇರುವ ರಂಗಮಂದಿರಲ್ಲಿ ತಂಗಿದೆ.&lt;/p&gt;&lt;h2&gt;&lt;strong&gt;ನೀವ್ಯಾರು ಪ್ರಶ್ನಿಸುವುದಕ್ಕೆ?&lt;/strong&gt;&lt;/h2&gt;&lt;p&gt;ಬೆಳಿಗ್ಗೆ ಎದ್ದು ಅಲ್ಲಿಯೇ ತಿಂಡಿಯನ್ನು ಸಿದ್ಧಗೊಳಿಸಿದೆ. ತಿಂಡಿ ಸಿದ್ಧಗೊಳಿಸುತ್ತಿರುವುದನ್ನು ಗಮನಿಸಿದ ಕೊಡಗು ಅಭಿವೃದ್ಧ ಸಮಿತಿ ಮುಖಂಡರು ಇಲ್ಲೇಕೆ ಮಲಗಿದ್ದೀರಿ ಮತ್ತು ಅಡುಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. 600 ರೂಪಾಯಿ ಬಾಡಿಗೆ ನೀಡಿ ಉಳಿದುಕೊಂಡಿದ್ದೇವೆ. ನೀವ್ಯಾರು ಪ್ರಶ್ನಿಸುವುದಕ್ಕೆ ಎಂದಿದ್ದಾರೆ. ಕೂಡಲೇ ರೂಪೇಶನನ್ನು ಪ್ರಶ್ನಿಸಿದಾಗ ಬಯಲು ರಂಗಮಂದಿರವನ್ನು ಆಗಿಂದಾಗ್ಗೆ ಯಾರಿಗೂ ತಿಳಿಯದಂತೆ ಬಡ ಪ್ರವಾಸಿಗರಿಗೆ ತಂಗಲು ಬಾಡಿಗೆಗೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಿಡುಕುಗೊಂಡ ಕೊಡಗು ಅಭಿವೃದ್ಧಿ ಸಮಿತಿ ಮುಖಂಡರು ಕೊಡಗಿನಲ್ಲಿ ಇತ್ತೀಚೆಗೆ ನಡೆದ ಕೆಲವು ಘಟನೆಗಳು ಪ್ರವಾಸಿಗರಿಗೆ ಕೊಡಗಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿವೆ.&lt;/p&gt;&lt;p&gt;ಕೊಡಗಿಗೆ ಹೋಗಬೇಕೋ ಬೇಡವೋ ಎಂದು ಅನುಮಾನ ಮೂಡಿಸಿವೆ. ಹೀಗಿರುವಾಗ ಇಂತಹ ತೆರದ ರಂಗಮಂದಿರಲ್ಲಿ ಪ್ರವಾಸಿಗರನ್ನು ಅಕ್ರಮವಾಗಿ ಉಳಿಸುತ್ತಿರುವುದು ನಗರಸಭೆ ಗಮನಕ್ಕೆ ಬಂದಿಲ್ಲವೇ. ಅಥವಾ ಗಮನಕ್ಕೆ ಬಂದಿದ್ದರೂ ಸುಮ್ಮನಿದೆಯೇ.? ರಂಗಮಂದಿರದ ಕೊಠಡಿಗಳಲ್ಲಿ ನಾಲ್ವರು ಅನಧಿಕೃತವಾಗಿ ತಂಗಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಕೂಡಲೇ ಇದೆಲ್ಲದರ ವಿರುದ್ಧ ಅಧಿಕಾರಿಗಳು ಗಮನಹರಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ತಮ್ಮೆದುರಿಗೆ ನಡೆಯುತ್ತಿರುವ ಈ ಅನಧಿಕೃತ ಚಟುವಟಿಕೆಗಳು ನಗರಸಭೆಗೆ ಕಾಣಿಸದೆ ಮೌನವಹಿಸಿರುವುದು ಮಾತ್ರ ಅನುಮಾನ ಮೂಡಿಸಿದೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/madikeri-gandhi-maidan-open-stage-illegal-rental-controversy-gvd/articleshow-uvqvfmf"/>
        </item>
        <item>
            <title><![CDATA[ರಾಮಲಿಂಗಾರೆಡ್ಡಿ ರಾಜೀನಾಮೆ ಸಮಸ್ಯೆ ಬಗೆಹರಿದಿದೆ: ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/ramalinga-reddy-resignation-issue-resolved-as-ponnanna-reaction-gvd/articleshow-w22xmyg</link>
            <guid isPermaLink="true">https://kannada.asianetnews.com/karnataka-districts/ramalinga-reddy-resignation-issue-resolved-as-ponnanna-reaction-gvd/articleshow-w22xmyg</guid>
            <pubDate>Sat, 06 Jun 2026 22:28:46 +0530</pubDate>
            <description><![CDATA[&lt;p&gt;ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಸಮಸ್ಯೆ ಬಗೆಹರಿದಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರದ ಪ್ರಾರಂಭದಲ್ಲಿ ಇದೆಲ್ಲಾ ಇರುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km87hcdq7gdv5w5ebzw3n891,imgname-jj-1774097838519.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಡಿಕೇರಿ (ಜೂ.06):&lt;/strong&gt; ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಸಮಸ್ಯೆ ಬಗೆಹರಿದಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರದ ಪ್ರಾರಂಭದಲ್ಲಿ ಇದೆಲ್ಲಾ ಇರುತ್ತದೆ. ರಾಮಲಿಂಗಾರೆಡ್ಡಿ ಹಿರಿಯ ಶಾಸಕರು. ಅವರಿಗೆ ನೋವಾಗುವುದಕ್ಕೆ ಕಾರಣವಿದೆ ಎಂಬುದನ್ನು ಸಿಎಂ ಕೂಡ ಹೇಳಿದ್ದಾರೆ. ಅದೆಲ್ಲವನ್ನೂ ಮೀರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಗಮವಾಗಿ ಕೆಲಸ ಮಾಡುತ್ತದೆ ಎಂದರು.&lt;/p&gt;&lt;p&gt;ನಾವು ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುವುದೊಂದೇ ನಮ್ಮ ಗುರಿಯಾಗಿರಬೇಕು. ಜನರು ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿರುವುದು ಕೆಲಸ ಮಾಡಲು. ಯಾರಿಗೆ ಯಾವ ಖಾತೆ ಸಿಗಬೇಕು ಎನ್ನುವುದು ಪಕ್ಷದ ಆಂತರಿಕ ವಿಚಾರ. ಅದನ್ನು ಸಿಎಂ, ಮಾಜಿ ಸಿಎಂ ಮತ್ತು ಹೈಕಮಾಂಡ್ ನಿರ್ಧರಿಸುತ್ತದೆ. ನಾವು ಅದರ ಬಗ್ಗೆ ಅಷ್ಟು ಗಮನ ಹರಿಸಬೇಕಾಗಿಲ್ಲ ಎಂದರು.&lt;/p&gt;&lt;p&gt;ರಾಮಲಿಂಗಾರೆಡ್ಡಿ ರಾಜೀನಾಮೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂಬ ಶಾಸಕ ಎಚ್ ಕೆ ಪಾಟೀಲ್&zwnj; ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಾಟೀಲರು ಹೇಳಿರುವುದು ಸರಿ ಇದೆ. ಈ ಸಮಸ್ಯೆಯನ್ನು ಸಿಎಂ, ಮಾಜಿ ಸಿಎಂ ಮತ್ತು ವರಿಷ್ಠರು ಬಗೆಹರಿಸುತ್ತಾರೆ ಎಂದರು.&lt;/p&gt;&lt;h2&gt;&lt;strong&gt;ಯಾವ ಪರಿಸ್ಥಿತಿ ಇದೆ&lt;/strong&gt;&lt;/h2&gt;&lt;p&gt;ಕಾಂಗ್ರೆಸ್ ಸರ್ಕಾರ ಜನಸ್ನೇಹಿಯಾಗಿ ಕೆಲಸ ಮಾಡುತ್ತಿಲ್ಲ. ವಿಧಾನಸಭೆ ವಿಸರ್ಜಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಪೊನ್ನಣ್ಣ, ಇವರ ಸರ್ಕಾರ ಇದ್ದಾಗ ಎಷ್ಟು ಬಾರಿ ವಿಸರ್ಜಿಸಬೇಕಾಗಿತ್ತು. ಇವತ್ತು ದೇಶದಲ್ಲಿ ಯಾವ ಪರಿಸ್ಥಿತಿ ಇದೆ. ಕೇಂದ್ರದಲ್ಲಿ ಪಾರ್ಲಿಮೆಂಟ್ ವಿಸರ್ಜಿಸಲಿ. ನಾವು ಇಲ್ಲಿ ವಿಧಾನಸಭೆ ವಿಸರ್ಜಿಸುತ್ತೇವೆ. ಎಲ್ಲರೂ ಪುನಃ ಚುನಾವಣೆಗೆ ಹೋಗೋಣ ಎಂದರು.&lt;/p&gt;&lt;p&gt;ಜನಪ್ರತಿನಿಧಿಗಳು ಐದು ವರ್ಷಗಳಿಗೆ ಆಯ್ಕೆಯಾಗಿರುತ್ತಾರೆ. ಕೆಲ ಗೊಂದಲಗಳು ಇರುತ್ತವೆ. ಇದು ಪ್ರಜಾಪ್ರಭುತ್ವ ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಅವರ ಪಕ್ಷದಲ್ಲಿ ನಾಲ್ಕು ಗುಂಪು ಅದನ್ನು ಸರಿಪಡಿಸುವ ಕಡೆ ಗಮನಹರಿಸಲಿ. ವಿರೋಧ ಪಕ್ಷ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿ. ಅದನ್ನು ನಾವು ಸ್ವಾಗತ ಮಾಡುತ್ತೇವೆ. ಆಡಳಿತ ಪಕ್ಷ ಮಾಡುವ ತಪ್ಪುಗಳನ್ನು ಗುರುತಿಸಿ ಟೀಕೆ ಮಾಡುವುದು ಸ್ವಾಗತಾರ್ಹ. ಆದರೆ ಅದನ್ನೇ ಇಟ್ಟುಕೊಂಡು ಸರ್ಕಾರದಲ್ಲಿ ಗೊಂದಲ ಮಾಡುವುದು ಸರಿಯಲ್ಲ. ದಾರಿ ತಪ್ಪಿದರೆ ತಿದ್ದುವಂತಹ ಕೆಲಸ ಮಾಡಲಿ ಎಂದು ಪೊನ್ನಣ್ಣ ವಿಜಯೇಂದ್ರಗೆ ತಿರುಗೇಟು ನೀಡಿದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ramalinga-reddy-resignation-issue-resolved-as-ponnanna-reaction-gvd/articleshow-w22xmyg"/>
        </item>
        <item>
            <title><![CDATA[Cross Voting: ಧರ್ಮಸ್ಥಳ ಆಣೆ ಬೇಡ, ಬ್ರೇನ್ ಮ್ಯಾಪಿಂಗ್ ಮಾಡಿಸಿ: ವಿಜಯೇಂದ್ರ-ಅಶೋಕ್ ವಿರುದ್ಧ ಎಂ.ಲಕ್ಷ್ಮಣ್ ಕಿಡಿ]]></title>
            <link>https://kannada.asianetnews.com/karnataka-districts/m-lakshman-alleges-vijayendra-r-ashok-behind-cross-voting-gvd/articleshow-x8kxtsp</link>
            <guid isPermaLink="true">https://kannada.asianetnews.com/karnataka-districts/m-lakshman-alleges-vijayendra-r-ashok-behind-cross-voting-gvd/articleshow-x8kxtsp</guid>
            <pubDate>Tue, 23 Jun 2026 19:22:05 +0530</pubDate>
            <description><![CDATA[&lt;p&gt;Cross Voting: ಪರಿಷತ್ ಚುನಾವಣೆಯ ಕ್ರಾಸ್ ವೋಟಿಂಗ್ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನೇರ ಹೊಣೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvtbkc71b0xnaefz1jhzxzbv,imgname-xcghx-1782222270689.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್. ಹಳ್ಳಿ, ಏಷ್ಯಾನೆಟ್ ಸುವರ್ಣನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.23):&lt;/strong&gt; ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವುದಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ನೇರ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಅಡ್ಡ ಮತದಾನ ನಡೆಯುವ ಬಗ್ಗೆ ಅವರಿಬ್ಬರಿಗೆ ಎಲ್ಲವೂ ಗೊತ್ತಿತ್ತು. ಒಂದಷ್ಟು ಎಂಎಲ್ಎಗಳು ಹೊಟೇಲ್ ಒಂದರಲ್ಲಿ ಕುಳಿತು ಸಭೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸದಾನಂದಗೌಡ್ರಿಗೆ ಗೊತ್ತಾಗಿದೆ. ಗೊತ್ತಾಗಿಯೇ ವಿಜಯೇಂದ್ರ ಮತ್ತು ಆರ್ ಅಶೋಕ್ ಅವರಿಗೆ ಹೇಳಲು ಕರೆ ಮಾಡಿದ್ದಾರೆ.&lt;/p&gt;&lt;p&gt;ಆದರೆ ಅವರಿಬ್ಬರು ಕರೆ ಸ್ವೀಕರಿಸಿಲಿಲ್ಲ ಅಂತ ಸದಾನಂದಗೌಡರೇ ಹೇಳಿದ್ದಾರೆ. ಅಂದರೆ ಇದರ ಅರ್ಥ ಕ್ರಾಸ್ ಓಟಿಂಗ್ ವಿಷಯ ಇವರಿಗೆ ಗೊತ್ತಿತ್ತು. ಆದರೆ ಈಗ ವಿಜಯೇಂದ್ರ, ಸಿ ಟಿ ರವಿ ಮತ್ತು ಆರ್ ಅಶೋಕ್ ಇಬ್ಬರು ಬಂಬ್ಡಿ ಬಡಿದುಕೊಳ್ಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸುವುದಾಗಿ ಮುಂದಾಗಿದ್ದರೆ. ಧರ್ಮಸ್ಥಳಕ್ಕೆ ಹೋಗಿ ಆಣೆ ಪ್ರಮಾಣ ಮಾಡುವುದು ಬೇಡ. ಅದರ ಬದಲು ವಿಜಯೇಂದ್ರ ಮತ್ತು ಆರ್ ಅಶೋಕ್ ಇಬ್ಬರ ಬ್ರೈನ್ ಮ್ಯಾಪಿಂಗ್ ಮಾಡಲಿ. ಅವರಿಬ್ಬರ ಬ್ರೈನ್ ಮ್ಯಾಪಿಂಗ್ ಮಾಡಿದರೆ ಎಲ್ಲಾ ಸತ್ಯವೂ ಗೊತ್ತಾಗುತ್ತದೆ. ಇವರಿಬ್ಬರೇ ಹೇಳಿಕೊಟ್ಟು ಅಡ್ಡಮತದಾನ ಮಾಡಿಸಿದ್ದಾರೆ.&lt;/p&gt;&lt;p&gt;ವಿಜಯೇಂದ್ರ ಆರ್ ಅಶೋಕ್ ಇವರಿಬ್ಬರಿಗೂ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ. ಏನಾದರೂ ಮಾಡಿ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆರ್. ಅಶೋಕ್ ಅವರಿಗಿದೆ. ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕೆಳಗಿಳಿಸಬೇಕು ಎಂದು ವಿಜಯೇಂದ್ರ ಅವರಿಗೆ ಇದೆ. ಇಬ್ಬರ ಗಲಾಟೆಯಿಂದ ಈ ವ್ಯವಸ್ಥೆ ಆಗಿದೆ. ಈಗ ಇಬ್ಬರು ನಾಟಕ ಮಾಡುತ್ತಿದ್ದಾರೆ. ನಾವು ಯಾವ ಆಪರೇಷನ್ ಮಾಡಿಲ್ಲ, ಯಾರಿಗೂ ಯಾವ ಹಣದ ಆಮಿಷವನ್ನೂ ಒಡ್ಡಿಲ್ಲ. ನಮಗೆ 138 ಶಾಸಕರ ಜೊತೆಗೆ 3 ಶಾಸಕರು ಸೇರಿ ಒಟ್ಟು 142 ಶಾಸಕರು ಇದ್ದಾರೆ.&lt;/p&gt;&lt;p&gt;ನಾವು ಆರಾಮಾಗಿ ನಾಲ್ಕು ಸ್ಥಾನ ಗೆಲ್ಲುತ್ತಿದ್ದೆವು. ಹೀಗಾಗಿ ನಾವು ಯಾರಿಗೂ ಹಣ ಕೊಟ್ಟಿಲ್ಲ, ಕೊಡುವ ಅಗತ್ಯವೂ ಇರಲಿಲ್ಲ. ಆದರೆ ಡಿ ಕೆ ಶಿವಕುಮಾರ್ ಅವರನ್ನು ಇಷ್ಟಪಟ್ಟು ಒಪ್ಪಿಕೊಂಡು 13 ಶಾಸಕರು ನಮಗೆ ಓಟ್ ಹಾಕಿದ್ದಾರೆ. ನಿಮ್ಮ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ನಿಮಗೆ ಆಗಲ್ಲ. ನಿಮಗೆ ನಾಚಿಕೆ ಮಾನ ಮರ್ಯಾದೆ ಇದ್ದರೆ ಆರ್ ಅಶೋಕ್, ವಿಜಯೇಂದ್ರ ಇಬ್ಬರು ರಾಜೀನಾಮೆ ಕೊಡಿ. ನಿಮಗೆ ಪಕ್ಷದ ಮೇಲೆ ಹಿಡಿತವಿಲ್ಲ ಎಂದು ವಿಜಯೇಂದ್ರ, ಆರ್ ಅಶೋಕ್ ವಿರುದ್ಧ ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಕ್ರಾಸ್ ಓಟಿಂಗ್, ಆಪರೇಷನ್ ಕಮಲ ಇವೆಲ್ಲದರ ಬೀಜ ಬಿತ್ತಿದ್ದೆ ಬಿಜೆಪಿಯವರು. ಎಂಪಿಗಳನ್ನು ಬಿಡದೆ ಇವರು ಆಪರೇಷನ್ ಮಾಡುತ್ತಿದ್ದಾರೆ ಎಂದು ಮಡಿಕೇರಿಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಕೇಂದ್ರದ ಅನೀತಿಗಳೇ ಕಾರಣ&lt;/strong&gt;&lt;/h2&gt;&lt;p&gt;ಇನ್ನು ನೀಟ್ ಪರೀಕ್ಷೆ ಕುರಿತು ಮಾತನಾಡಿದ ಲಕ್ಷ್ಮಣ್ ಮೂರು ಸ್ಟುಡೆಂಟ್ ಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯಲಾಗದಂತೆ ಮಾಡಿದ್ದು ಯಾರು. ಮೂವರು ವಿದ್ಯಾರ್ಥಿಗಳು ಪರೀಕ್ಷೆಯದೇ ಬರೆಯದೇ ಉಳಿದುಕೊಳ್ಳುವುದಕ್ಕೆ ಕೇಂದ್ರದ ಅನೀತಿಗಳೇ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಮಡಿಕೇರಿಯಲ್ಲಿ ಹರಿಹಾಯ್ದರು. ಪರೀಕ್ಷಾ ಕೇಂದ್ರಕ್ಕೆ 20 ನಿಮಿಷ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಎಂಟ್ರಿ ಕೊಡಲಿಲ್ಲ. ಒಂದುವರೆ ಗಂಟೆ ಮೊದಲೇ ಗೇಟ್ ಮುಚ್ಚಿ ಎಕ್ಸಾಂಗೆ ಎಂಟ್ರಿ ಕೊಡಲಿಲ್ಲ.&lt;/p&gt;&lt;p&gt;ನಿಮ್ಮ ಈ ಮೂರ್ಖತನದ ಪರಮಾವಧಿಯ ಕಂಡೀಷನ್ಸ್ ಗಳು ಹೀಗೆ ಮಾಡಿವೆ ಎಂದರು. 2017 ರಲ್ಲಿ ನೀಟ್ ಪರೀಕ್ಷೆಯನ್ನು ಕೇಂದ್ರ ಜಾರಿಗೆ ತಂದಿತು. ಯಾವ ಉದ್ದೇಶಕ್ಕಾಗಿ ಜಾರಿಗೆ ತಂದಿತು. ಇದುವರೆಗೆ ಒಬ್ಬ ಹಳ್ಳಿಯ ಹುಡುಗ ನೀಟ್ ಪಾಸು ಮಾಡಿಕೊಂಡು ಡಾಕ್ಟರ್ ಓದಲು ಆಗಲಿಲ್ಲ. ಯಾವ ಕಾರಣಕ್ಕೂ ಬಡವರು, ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ನೀಟ್ ಬರೆಯುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಿಸಲಾಗಿದೆ. ಸಿಇಟಿಯಲ್ಲಿ ಜನಿವಾರ ತೆಗೆಸಿದ್ರು ಅಂತ ಇದೇ ತೇಜಸ್ವಿ ಸೂರ್ಯ ಬಾಯಿ ಬಡಿದುಕೊಂಡಿದ್ರು. ನಿನ್ನೆ ನೀಟ್ ಪರೀಕ್ಷೆಯಲ್ಲಿ ಎಲ್ಲಾ ಕಡೆ ಜನಿವಾರಗಳನ್ನು ಕಟ್ ಮಾಡಿ ಬಿಸಾಕಿದ್ದಾರೆ.&lt;/p&gt;&lt;p&gt;ಯಾರಾದರೂ ಒಬ್ಬ ಬಿಜೆಪಿಯವರು ಮಾತಾಡಿದ್ದಾರಾ. ಯಾಕೆ ಇದು ಕೇಂದ್ರದ ಎಕ್ಸಾಂ ಅಂತ ಸುಮ್ಮನಾಗಿದ್ದೀರಾ. ಅದೇ ರಾಜ್ಯದ ಪರೀಕ್ಷೆ ಆಗಿದ್ದರೆ ಉರುಳು ಸೇವೆ ಮಾಡಿರುತ್ತಿದ್ದಿರಿ. ನಿನ್ನೆ ಪರೀಕ್ಷೆಯಲ್ಲಿ ಹೆಣ್ಣು ಮಕ್ಕಳ ಕಿವಿಯಲ್ಲಿ ಓಲೆ, ಕೊರಳಿನಲ್ಲಿ ತಾಳಿ ಹಾಕಲು ಬಿಟ್ಟಿಲ್ಲ. ಹೆಣ್ಣುಮಕ್ಕಳು ರಬ್ಬರ್ ಬ್ಯಾಂಡ್ ಹಾಕಲು ಬಿಟ್ಟಿಲ್ಲ. ಪರೀಕ್ಷೆಯನ್ನು ಮುಂದೂಡಿ ಇಡೀ ದೇಶದಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಕೊಳ್ಳುವಂತೆ ಮಾಡಿದ್ರಿ, ಡೈಪರ್ ಸೂರ್ಯ ಇದುವರೆಗೆ ಒಂದು ಕ್ಷಮೆ ಕೇಳಲಿಲ್ಲ. ಪ್ರಧಾನಿ ಮೋದಿ ಅವರು ಒಂದೇ ಒಂದು ಸಂತಾಪ ಸೂಚಿಸಿ ಪೋಸ್ಟ್ ಮಾಡಲಿಲ್ಲ. ಇಂತಹ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಡಿಕೇರಿಯಲ್ಲಿ ವಾಗ್ದಾಳಿ ನಡೆಸಿದರು.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/m-lakshman-alleges-vijayendra-r-ashok-behind-cross-voting-gvd/articleshow-x8kxtsp"/>
        </item>
        <item>
            <title><![CDATA[ಕಾಣಿಯೂರು-ಸುಳ್ಯ-ಕೊಡಗು ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆ ಇಲ್ಲ! ಯಾಕಿಷ್ಟು ಗೊಂದಲವಾಯ್ತು?]]></title>
            <link>https://kannada.asianetnews.com/gallery/karnataka-districts/kodagu-railway-projects-mp-yaduveer-dismisses-coorg-rail-rumors-while-sullia-pushes-for-alternate-route-gdp-y3kf8bg</link>
            <guid isPermaLink="true">https://kannada.asianetnews.com/gallery/karnataka-districts/kodagu-railway-projects-mp-yaduveer-dismisses-coorg-rail-rumors-while-sullia-pushes-for-alternate-route-gdp-y3kf8bg</guid>
            <pubDate>Wed, 03 Jun 2026 20:37:11 +0530</pubDate>
            <description><![CDATA[&lt;p&gt;ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಮೂಲಕ ಯಾವುದೇ ಹೊಸ ರೈಲು ಮಾರ್ಗದ ಪ್ರಸ್ತಾವನೆ ಸದ್ಯಕ್ಕೆ ರೈಲ್ವೆ ಸಚಿವಾಲಯದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರೊಂದಿಗಿನ ಭೇಟಿಯ ನಂತರ, ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt6ywer077hmfzxbg35x3aqz,imgname-kodagu-railway-line-proposal-mp-yaduveer-wodeyar--3--1780497660672.jpg" type="image/jpeg" height="390" width="690"/>
            <content:encoded><![CDATA[&lt;p&gt;ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಮೂಲಕ ಯಾವುದೇ ಹೊಸ ರೈಲು ಮಾರ್ಗದ ಪ್ರಸ್ತಾವನೆ ಸದ್ಯಕ್ಕೆ ರೈಲ್ವೆ ಸಚಿವಾಲಯದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರೊಂದಿಗಿನ ಭೇಟಿಯ ನಂತರ, ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.&lt;/p&gt;&lt;img&gt;&lt;p&gt;ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ಹೊಸ ರೈಲು ಯೋಜನೆ ಅಥವಾ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಂಪರ್ಕ ವ್ಯವಸ್ಥೆಗಳ ಕುರಿತು ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.&lt;/p&gt;&lt;img&gt;&lt;p&gt;ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆ ಇದೆ ಎಂಬ ವರದಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದವು. ಇದು ಕೊಡಗಿನ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯ ಜನರಲ್ಲಿ ಭಾರಿ ಆತಂಕ ಮೂಡಿಸಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಂಸದ ಯದುವೀರ್ ಒಡೆಯರ್, ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತಂದರು. ಸಚಿವರೊಂದಿಗೆ ನಡೆದ ಸಮಾಲೋಚನೆಯಲ್ಲಿ, ಕೊಡಗಿಗೆ ಸಂಬಂಧಿಸಿದಂತೆ ಇಂತಹ ಯಾವುದೇ ರೈಲು ಯೋಜನೆಯ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಕೊಡಗಿನ ಪ್ರಾಕೃತಿಕ ಸೌಂದರ್ಯ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಯಾವುದೇ ರೀತಿಯ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳುವ ಮುನ್ನ ಸ್ಥಳೀಯರು, ಪರಿಸರವಾದಿಗಳು ಹಾಗೂ ಎಲ್ಲಾ ಹಿತಾಸಕ್ತಿ ಹೊಂದಿರುವ ಪಾಲುದಾರರೊಂದಿಗೆ ಕಡ್ಡಾಯವಾಗಿ ಸಮಾಲೋಚನೆ ನಡೆಸಲಾಗುವುದು. ಜನರ ಅಭಿಪ್ರಾಯವನ್ನು ಪಡೆದೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಸದರು ಭರವಸೆ ನೀಡಿದ್ದಾರೆ. ಈ ಮೂಲಕ ಕೊಡಗಿನ ಮೂಲಕ ರೈಲು ಹಳಿ ನಿರ್ಮಾಣವಾಗಲಿದೆ ಎಂಬ ವದಂತಿ ಹಾಗೂ ಗೊಂದಲಗಳಿಗೆ ಪೂರ್ಣವಿರಾಮ ಬಿದ್ದಂತಾಗಿದೆ.&lt;/p&gt;&lt;img&gt;&lt;p&gt;ಕಾಣಿಯೂರು-ಸುಳ್ಯ-ನಾಪೋಕ್ಲು- ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆ ಬಗ್ಗೆ ಚರ್ಚಿಸಲು ಸಭೆ ನಡೆಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಕಳೆದ ತಿಂಗಳು ಮಂಗಳೂರು ಭೇಟಿ ವೇಳೆ ಮನವಿ ಸಲ್ಲಿಸಿದ್ದ ಬಗ್ಗೆ ಸುದ್ದಿಯಾಗಿತ್ತು. ಸಂಸದ ಬ್ರಿಜೇಶ್ ಚೌಟ ಮುಂದಾಳತ್ವದಲ್ಲಿ ಈ ಮನವಿ ಸಲ್ಲಿಕೆಯಾಗಿತ್ತು. ಅದಾದ ಈ ಯೋಜನೆ ವ್ಯಾಪಕ ಟೀಕೆಗೂ ಕಾರಣವಾಗಿತ್ತು. ಏಕೆಂದರೆ ಲಕ್ಷಾಂತರ ಜನ ತಮ್ಮ ಕೃಷಿ ಭೂಮಿ ಕಳೆದುಕೊಳ್ಳುವ ಭೀತಿ ವ್ಯಕ್ತ ಪಡಿಸಿದ್ದರು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿ ಮೊದಲಿಗೆ ರಸ್ತೆ, ಆಸ್ಪತ್ರೆಗಳ ಅಭಿವೃದ್ಧಿ ಕಡೆಗೆ ಗಮನ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.&lt;/p&gt;&lt;img&gt;&lt;p&gt;ಕಾಣಿಯೂರು-ಸುಳ್ಯ-ನಾಪೋಕ್ಲು- ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆಯನ್ನು ಹಾಗೂ ಕಾಣಿಯೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಮತ್ತು ಏಲಡ್ಕಕ್ಕೆ ಸ್ಥಳಾಂತರಿಸಲು ಮನವಿ ಸಲ್ಲಿಸಲಾಗಿತ್ತು, ಆ ಪ್ರಸ್ತಾವನೆ ಬಗ್ಗೆ ರೈಲ್ವೆ ಇಲಾಖೆ ತಾಂತ್ರಿಕ ತಂಡ ಪೂರಕವಾಗಿ ಸ್ಪಂದಿಸದೇ ಇರುವುದಾಗಿ ತಿಳಿದುಬಂದಿದೆ. ಆದ್ದರಿಂದ ಆ ವಿಚಾರಗಳ ಬಗ್ಗೆ ತಮ್ಮ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಸಂಸದರು, ಕೊಡಗು ಸಂಸದರು ಮತ್ತು ರೈಲ್ವೆ ಇಲಾಖೆಯ ತಾಂತ್ರಿಕ ತಂಡದವರೊಂದಿಗೆ ಸಭೆಯನ್ನು ನಿಗದಿ ಮಾಡಿ ಈ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಶಾಸಕಿ ಮರುಳ್ಯ ಮನವಿ ಮಾಡಿದ್ದರು. ಸಂಸದ ಕ್ಯಾ.ಬ್ರಿಜೇಶ್&zwnj; ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್&zwnj; ಕುಂಪಲ, ಶಾಸಕರಾದ ರಾಜೇಶ್&zwnj; ನಾಯಕ್&zwnj; ಉಳಿಪಾಡಿಗುತ್ತು, ಡಾ.ಭರತ್&zwnj; ಶೆಟ್ಟಿ ಮತ್ತಿತರರು ಮಂಗಳೂರಿನಲ್ಲಿ ಮನವಿ ಕೊಡುವ ವೇಳೆ ಉಪಸ್ಥಿತರಿದ್ದರು.&lt;/p&gt;&lt;img&gt;&lt;p&gt;ರಾಜ್ಯದ ಗ್ರಾಮೀಣ ಭಾಗಗಳಿಗೆ ಉತ್ತಮ ಸಾರಿಗೆ ಸಂಪರ್ಕ ದೃಷ್ಟಿಯಿಂದ ಈ ಭಾಗದ ಜನರ ಬಹುಕಾಲದ ಬೇಡಿಕೆಯಾದ ಕಾಣಿಯೂರು-ಸುಳ್ಯ-ನಾಪೋಕ್ಲು ಮಾರ್ಗವಾಗಿ ಮೈಸೂರಿಗೆ ನೂತನ ರೈಲು ಮಾರ್ಗ ನಿರ್ಮಾಣ ಆಗಬೇಕು. ಈ ನೂತನ ರೈಲ್ವೆ ಮಾರ್ಗವು ಈ ಭಾಗದ ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ. ಸುಳ್ಯ ಮತ್ತು ಕೊಡಗು ಭಾಗದಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಸಾಂಬಾರ ಪದಾರ್ಥಗಳು, ರಬ್ಬರ್, ಅಡಿಕೆ ಪ್ರಮುಖ ಬೆಳೆ ಆಗಿರುವುದರಿಂದ ಆರ್ಥಿಕತೆಗೆ ಉತ್ತೇಜನ ನೀಡಲಿದೆ. ಈಗ ಇರುವ ಕಾಣಿಯೂರು ರೈಲ್ವೆ ಸ್ಟೇಷನ್&zwnj; ಮೂಲಕ ಸುಳ್ಯ- ನಾಪೋಕ್ಲು ಮಾರ್ಗವಾಗಿ ಮೈಸೂರಿಗೆ ನೂತನ ರೈಲು ಮಾರ್ಗ ನಿರ್ಮಾಣದ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಂಸದ ಕ್ಯಾ। ಬ್ರಿಜೇಶ್ ಚೌಟರವರ ನೇತೃತ್ವದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮನವಿ ಮಾಡಿದ್ದರು. ಈ ಪ್ರಸ್ತಾಪಿತ ರೈಲು ಮಾರ್ಗವು ಮಂಗಳೂರು-ಹಾಸನ ರೈಲು ಮಾರ್ಗದಲ್ಲಿರುವ 'ಕಾಣಿಯೂರು' ನಿಲ್ದಾಣದಿಂದ (ಇದು ಹಿಂದೆ ಪ್ರಸ್ತಾಪಿಸಲಾದ ಕಾಣಿಯೂರು-ಕಾಞಂಗಾಡ್ ಮಾರ್ಗದ ಜಂಕ್ಷನ್ ಕೂಡ ಆಗಿತ್ತು) ಪ್ರಾರಂಭಿಸಲು ಮನವಿ ಸಲ್ಲಿಸಲಾಗಿತ್ತು. ಈ ಮಾರ್ಗ ಆದರೆ ಸುಳ್ಯ ಮತ್ತು ನಾಪೋಕ್ಲು ಮೂಲಕ ಹಾದುಹೋಗಿ, ಪ್ರಸ್ತಾಪಿತ ಕುಶಾಲನಗರ -ಮೈಸೂರು ರೈಲು ಮಾರ್ಗವನ್ನು ಕುಶಾಲನಗರದಲ್ಲಿ ಸಂಪರ್ಕಿಸಲಿದೆ. ತನ್ಮೂಲಕ ಮೈಸೂರು ಮತ್ತು ಮುಂದಿನ ಊರುಗಳಿಗೆ ನೇರ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ತಾಲೂಕು ಆಗಿದ್ದರೂ, ಸುಳ್ಯ ತಾಲೂಕಿನಲ್ಲಿ ಪ್ರಸ್ತುತ ಯಾವುದೇ ರೈಲು ಹಳಿ ಅಥವಾ ರೈಲು ನಿಲ್ದಾಣವಿಲ್ಲ. ಆದ್ದರಿಂದ ಈ ಮನವಿಯನ್ನು ಪುರಸ್ಕರಿಸಿ ಈ ಯೋಜನೆ ನೀಡಬೇಕಾಗಿ ಮನವಿಯಲ್ಲಿ ಆಗ್ರಹಿಸಲಾಗಿತ್ತು.&lt;/p&gt;&lt;img&gt;&lt;p&gt;ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಬರುವ ಸುಬ್ರಹ್ಮಣ್ಯ-ಸಕಲೇಶಪುರ ಘಾಟ್ ಮಾರ್ಗ ಈಗಾಗಲೇ ತನ್ನ ಪೂರ್ಣ ಸಾಮರ್ಥ್ಯವನ್ನು ತಲುಪಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾಪವು ಅತ್ಯಂತ ನಿರ್ಣಾಯಕವಾಗಿದೆ. ಕಾರ್ಯಾಚರಣೆಯ ಅಡೆತಡೆಗಳಿಂದಾಗಿ ಈ ವಿಭಾಗದಲ್ಲಿ ಹೊಸ&lt;/p&gt;&lt;p&gt;ರೈಲುಗಳನ್ನು ಪರಿಚಯಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಪ್ರಸ್ತುತ ಪ್ರತಿದಿನ ಸುಮಾರು 12 ಪ್ಯಾಸೆಂಜರ್ ಮತ್ತು 4 ಗೂಡ್ಸ್ ರೈಲುಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಇದು ಗರಿಷ್ಠ ಒತ್ತಡದಲ್ಲಿದೆ. ಪ್ರಸ್ತಾಪಿತ ಕಾಣಿಯೂರು - ಸುಳ್ಯ - ನಾಪೋಕ್ಲು - ಕುಶಾಲನಗರ ಮಾರ್ಗವು ಅಸ್ತಿತ್ವದಲ್ಲಿರುವ ಮಾರ್ಗದ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚುವರಿ ರೈಲು ಓಡಾಟದ ಸಾಮರ್ಥ್ಯವನ್ನು ಸೃಷ್ಟಿಸಲು ಮತ್ತು ಹೊಸ ಪ್ರಯಾಣಿಕ ಹಾಗೂ ಸರಕು ಸೇವೆಗಳನ್ನು ಆರಂಭಿಸಲು ಸಹಕಾರಿಯಾಗಲಿದೆ. ಅಲ್ಲದೆ, ಈ ಹೊಸಮಾರ್ಗವು ಕರಾವಳಿ ಕರ್ನಾಟಕ ಮತ್ತು ಒಳನಾಡು ಪ್ರದೇಶಗಳನ್ನು ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಭಾರತದೊಂದಿಗೆ ಸಂಪರ್ಕಿಸಲು ನೇರ ರೈಲುಗಳನ್ನು ಓಡಿಸಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಕಾಣಿಯೂರು-ಸುಳ್ಯ-ನಾಪೋಕ್ಲು-ಕುಶಾಲನಗರ-ಮೈಸೂರು ರೈಲುಮಾರ್ಗದ ಸರ್ವೇ ನಡೆಸಲು ರೈಲ್ವೇ ಮಂಡಳಿ ಮತ್ತು ಸಂಬಂಧಿತ ವಿಭಾಗಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮತ್ತು ಮುಂಬರುವ ರೈಲ್ವೇ ಮೂಲಸೌಕರ್ಯ ಯೋಜನೆಗಳು ಹಾಗೂ ಬಜೆಟ್ ಅವಕಾಶಗಳಲ್ಲಿ ಈ ನೂತನ ಮಾರ್ಗದ ನಿರ್ಮಾಣದ ಪ್ರಸ್ತಾವನೆಯನ್ನು ಸೇರಿಸಬೇಕೆಂದು ಎಂದು ಮನವಿಯಲ್ಲಿ ತಿಳಿಸಲಾಗಿತ್ತು.&lt;/p&gt;&lt;img&gt;&lt;p&gt;ದ.ಕ.ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಎಡಮಂಗಲ ಪೇಟೆಯಲ್ಲಿ ಬರುವ ಎರಡು ಕಡೆಗಳಲ್ಲಿನ ರೈಲ್ವೆ ಕ್ರಾಸಿಂಗ್&zwnj; ಗೇಟ್&zwnj;ಗಳ ಬದಲಾಗಿ ಓವರ್&zwnj;ಬ್ರಿಡ್ಜ್&zwnj; ನಿರ್ಮಾಣಕ್ಕೆ ತ್ವರಿತ ಕ್ರಮಕೈಗೊಳ್ಳುವಂತೆ ಸಂಸದ ಕ್ಯಾ.ಬ್ರಿಜೇಶ್&zwnj; ಚೌಟ ಮತ್ತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಕಾರ್ಯಕರ್ತ ಎಡಮಂಗಲದ ವಿನಯಚಂದ್ರ ಅವರು ಮನವಿ ಸಲ್ಲಿಸಿದ್ದಾರೆ.&lt;/p&gt;&lt;p&gt;ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಬರುವ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ಪ್ರಮುಖ ರಸ್ತೆಗಳಿಗೆ ಅಡ್ಡವಾಗಿ ಎಲ್&zwnj;ಸಿ 69 ಮತ್ತು ಎಲ್&zwnj;ಸಿ 70 ಎಂಬ ಎರಡು ರೈಲ್ವೆ ಲೆವೆಲ್&zwnj; ಕ್ರಾಸಿಂಗ್&zwnj; ಗೇಟ್&zwnj;ಗಳಿವೆ. ಈ ರಸ್ತೆ ಗ್ರಾಮಸ್ಥರಿಗೆ ಪ್ರಮುಖ ಮಾರ್ಗವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೆ ಇಲಾಖೆ ಈ ಗೇಟ್&zwnj;ಗಳನ್ನು ತೆಗೆದು ಅಡರ್&zwnj;ಪಾಸ್&zwnj; ಅಥವಾ ಓವರ್&zwnj;ಬ್ರಿಡ್ಜ್&zwnj; ನಿರ್ಮಿಸಲು ಈಗಾಗಲೇ ನಕ್ಷೆ ಸಿದ್ದ್ದಪಡಿಸಿದೆ ಎಂಬ ಮಾಹಿತಿ ಇದೆ. ಈ ಯೋಜನೆಯ ಅನುಷ್ಠಾನಕ್ಕೆ ಇನ್ನೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಪರಿಣಾಮ ರೈಲು ಸಂಚಾರದ ವೇಳೆ ಗೇಟ್&zwnj; ಅಳವಡಿಸುವ ಸಂದರ್ಭದಲ್ಲಿ ದಿನನಿತ್ಯ ಗಂಟೆ ಗಟ್ಟಲೆ ಎರಡೂ ಕಡೆಗಳಲ್ಲಿ ವಾಹನ ಸವಾರರು ನಿಲ್ಲುವ ಪರಿಸ್ಥಿತಿ ಎದುರಾಗುತ್ತಿದೆ. ತಾವುಗಳು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದು ಈ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಲು ಅಗತ್ಯ ಒತ್ತಡ ತರಬೇಕೆಂದು ಅವರು ಮನವಿಯಲ್ಲಿ ವಿನಂತಿಸಿದ್ದಾರೆ.&lt;/p&gt;]]></content:encoded>
            <category>kodagu</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/kodagu-railway-projects-mp-yaduveer-dismisses-coorg-rail-rumors-while-sullia-pushes-for-alternate-route-gdp-y3kf8bg"/>
        </item>
        <item>
            <title><![CDATA[ಕೊಡಗು ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಮೈಸೂರಿನ ಪ್ರವಾಸಿ ಮಹಿಳೆ ಸಾವು!]]></title>
            <link>https://kannada.asianetnews.com/karnataka-districts/mysuru-tourist-woman-vinutha-dies-due-to-gas-geyser-leak-in-somwarpet-homestay/articleshow-yagtmxu</link>
            <guid isPermaLink="true">https://kannada.asianetnews.com/karnataka-districts/mysuru-tourist-woman-vinutha-dies-due-to-gas-geyser-leak-in-somwarpet-homestay/articleshow-yagtmxu</guid>
            <pubDate>Sun, 07 Jun 2026 20:04:52 +0530</pubDate>
            <description><![CDATA[ಕೊಡಗು ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಸೋಮವಾರಪೇಟೆಯ ಹೋಂಸ್ಟೇ ಬಾತ್&zwnj;ರೂಮ್&zwnj;ನಲ್ಲಿ ಗ್ಯಾಸ್ ಗೀಸರ್&zwnj;ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ವೆಂಟಿಲೇಷನ್ ಇಲ್ಲದ ಬಾತ್&zwnj;ರೂಮ್&zwnj;ನಲ್ಲಿ ಈ ದುರಂತ ಸಂಭವಿಸಿದ್ದು, ಹೋಂಸ್ಟೇ ಮಾಲೀಕರ ನಿರ್ಲಕ್ಷ್ಯದ ಬಗ್ಗೆ ಶಂಕೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kth7ze0g8htqxdkbvdytbz4e,imgname-kodagu-gas-geyser-death-1780842739728.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಡಗು (ಜೂ.07): ಪ್ರ&lt;/strong&gt;ಕೃತಿ ಸೌಂದರ್ಯವನ್ನು ಸವಿಯಲು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್&zwnj;ರೂಮ್&zwnj;ನಲ್ಲಿ ಗ್ಯಾಸ್ ಗೀಸರ್&zwnj;ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27) ಮೃತಪಟ್ಟ ದುರ್ದೈವಿ ಪ್ರವಾಸಿ ಮಹಿಳೆಯಾಗಿದ್ದಾರೆ. ಇವರು ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿಯಾಗಿದ್ದಾರೆ.&lt;/p&gt;&lt;h2&gt;&lt;strong&gt;ಕಿಟಕಿ ಇಲ್ಲದ ಬಾತ್&zwnj;ರೂಮ್ ತಂದೊಡ್ಡಿದ ಕಂಟಕ:&lt;/strong&gt;&lt;/h2&gt;&lt;p&gt;ಮೃತ ವಿನೂತ ಅವರು ಮೈಸೂರಿನಿಂದ ಕೊಡಗು ಪ್ರವಾಸಕ್ಕೆಂದು ಆಗಮಿಸಿದ್ದು, ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇ ಒಂದರಲ್ಲಿ ತಂಗಿದ್ದರು. ಭಾನುವಾರ (ಜೂನ್ 7) ಸ್ನಾನ ಮಾಡಲು ಬಾತ್&zwnj;ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಬಾತ್&zwnj;ರೂಮ್&zwnj;ನಲ್ಲಿದ್ದ ಗ್ಯಾಸ್ ಗೀಸರ್&zwnj;ನಿಂದ (Gas Geyser) ಹಠಾತ್ ಗ್ಯಾಸ್ ಸೋರಿಕೆಯಾಗಿದೆ (Carbon Monoxide).&amp;nbsp;&lt;/p&gt;&lt;p&gt;ಪ್ರಾಥಮಿಕ ಮಾಹಿತಿಯ ಪ್ರಕಾರ, ಸದರಿ ಹೋಂಸ್ಟೇಯ ಬಾತ್&zwnj;ರೂಮ್&zwnj;ನಲ್ಲಿ ಯಾವುದೇ ಕಿಟಕಿ ಅಥವಾ ವೆಂಟಿಲೇಷನ್ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ಸೋರಿಕೆಯಾದ ವಿಷಾನಿಲ ಹೊರಗೆ ಹೋಗಲಾಗದೆ ಇಡೀ ಬಾತ್&zwnj;ರೂಮ್ ಆವರಿಸಿಕೊಂಡಿದೆ. ಪರಿಣಾಮವಾಗಿ ವಿನೂತ ಅವರು ಉಸಿರುಗಟ್ಟಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಸಾವನ್ನಪ್ಪಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು:&lt;/strong&gt;&lt;/h2&gt;&lt;p&gt;ಯುವತಿ ಸ್ನಾನಕ್ಕೆ ಹೋದವಳು ಬಹಳ ಹೊತ್ತಾದರೂ ಹೊರಗೆ ಬಾರದಿದ್ದಾಗ ಅನುಮಾನಗೊಂಡು ಪರಿಶೀಲಿಸಿದಾಗ ಈ ಭೀಕರ ಘಟನೆ ಬೆಳಕಿಗೆ ಬಂದಿದೆ. ಹೋಂಸ್ಟೇ ಮಾಲೀಕರ ಬೇಜವಾಬ್ದಾರಿತನ ಹಾಗೂ ಸುರಕ್ಷತಾ ಕ್ರಮಗಳ ಕೊರತೆಯೇ ಈ ಸಾವಿಗೆ ನೇರ ಕಾರಣ ಎಂದು ಶಂಕಿಸಲಾಗಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಪ್ರವಾಸಕ್ಕೆ ಬಂದು ಹೆತ್ತ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;]]></content:encoded>
            <category>kodagu</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mysuru-tourist-woman-vinutha-dies-due-to-gas-geyser-leak-in-somwarpet-homestay/articleshow-yagtmxu"/>
        </item>
        <item>
            <title><![CDATA[ಒಂದೇ ವಾರದಲ್ಲಿ ಸುರಿಯಬಹುದು ನಾಲ್ಕು ತಿಂಗಳ ಮಳೆ: ಕೊಡಗಿನಲ್ಲಿ ಹೈ ಅಲರ್ಟ್!]]></title>
            <link>https://kannada.asianetnews.com/karnataka-districts/kodagu-flood-landslide-alert-district-administration-prepares-for-heavy-monsoon-gvd/articleshow-zs816fr</link>
            <guid isPermaLink="true">https://kannada.asianetnews.com/karnataka-districts/kodagu-flood-landslide-alert-district-administration-prepares-for-heavy-monsoon-gvd/articleshow-zs816fr</guid>
            <pubDate>Tue, 02 Jun 2026 22:53:14 +0530</pubDate>
            <description><![CDATA[&lt;p&gt;ಈ ವರ್ಷ ಎಲ್ನಿನೋ ಪರಿಣಾಮದಿಂದಾಗಿ ಮಳೆಯ ಪ್ರಮಾಣ ಶೇ 50 ರಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಹೇಳಿದ್ದಾರೆ. ಆದರೆ ಮೂರ್ನಾಲ್ಕು ತಿಂಗಳ ಕಾಲ ಸುರಿಯುವ ಮಳೆ ಕೇವಲ ಒಂದೇ ವಾರದಲ್ಲಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kscs9xajw4ge8ssfe3kcnx4j,imgname-screenshot-2026-05-23-180203-1779619394898.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ರವಿ.ಎಸ್. ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು&lt;/strong&gt;&lt;/p&gt;&lt;p&gt;&lt;strong&gt;ಕೊಡಗು (ಜೂ.02):&lt;/strong&gt; ಈ ವರ್ಷ ಎಲ್ನಿನೋ ಪರಿಣಾಮದಿಂದಾಗಿ ಮಳೆಯ ಪ್ರಮಾಣ ಶೇ 50 ರಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಹೇಳಿದ್ದಾರೆ. ಆದರೆ ಮೂರ್ನಾಲ್ಕು ತಿಂಗಳ ಕಾಲ ಸುರಿಯುವ ಮಳೆ ಕೇವಲ ಒಂದೇ ವಾರದಲ್ಲಿ ಸುರಿದರೆ ಆಗ ಅನಾಹುತಗಳು ಆಗುವುದು ತಪ್ಪಿದ್ದಲ್ಲ. ಇದೇ ವಿಷಯ ಈಗ ಕೊಡಗು ಜಿಲ್ಲಾಡಳಿತ ಆತಂಕಗೊಳ್ಳುವಂತೆ ಮಾಡಿದ್ದು ಜಿಲ್ಲಾಡಳಿತ ಅಲರ್ಟ್ ಆಗಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಬಂತೆಂದರೆ ಕನಿಷ್ಠ ನಾಲ್ಕೈ ತಿಂಗಳು ನಿರಂತರ ಮಳೆ ಇದ್ದೇ ಇರುತ್ತದೆ. ಈ ನಾಲ್ಕು ತಿಂಗಳು ಕೂಡ ಸಾಧಾರಣ ಮಳೆ ಬರುತ್ತಿದ್ದರೆ ಯಾವುದೇ ಸಮಸ್ಯೆ ಸಂಭವಿಸುವುದಿಲ್ಲ.&lt;/p&gt;&lt;p&gt;ಆದರೆ ಅದೇ ಮಳೆ ಒಂದೇ ವಾರದಲ್ಲಿ ಸುರಿದರೆ ಪ್ರವಾಹ, ಭೂಕುಸಿತ ಆಗುವುದು ಖಚಿತ. 2018 ರಿಂದ 2020 ರವರೆಗೆ ಕೊಡಗು ಜಿಲ್ಲೆಯಲ್ಲಿ ಆಗಿದ್ದು ಕೂಡ ಇದೇ. ಅಂದಿನಿಂದ ಇದುವರೆಗೆ ಪ್ರತೀ ವರ್ಷ ಮಳೆಗಾಲ ಬಂತೆಂದರೆ ಕೊಡಗು ಜಿಲ್ಲೆಯಲ್ಲಿ ಆತಂಕದ ವಾತಾವರಣ ಇದ್ದೇ ಇರುತ್ತದೆ. ಹೀಗಾಗಿಯೇ ಕೊಡಗು ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಈಗಾಗಲೇ ಯಾವೆಲ್ಲಾ ಪ್ರದೇಶಗಳಿಗೆ ಅಪಾಯವಿದೆ ಎನ್ನುವುದನ್ನು ಗುರುತ್ತಿಸಿದೆ. ಅಲ್ಲದೆ ಒಂದು ವೇಳೆ ತೀವ್ರತರವಾಗಿ ಮಳೆ ಸುರಿದಲ್ಲಿ ಯಾವ ಪ್ರದೇಶಗಳಲ್ಲಿ ಪ್ರವಾಹ ಎದುರಾಗಬಹುದು ಎಂದು ಕೂಡ ಗುರುತ್ತಿಸಲಾಗಿದೆ.&lt;/p&gt;&lt;p&gt;ಇಂತಹ ಪ್ರದೇಶಗಳಿಂದ ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಸ್ಥಳಾಂತರ ಮಾಡಲು ನಿರ್ಧರಿಸಿದೆ. ಎಲ್ಲೆಲ್ಲಿ ಭೂಕುಸಿತ ಅಥವಾ ಪ್ರವಾಹವಾಗುವ ಸಾಧ್ಯತೆ ಇದೆಯೋ ಆ ಪ್ರದೇಶಗಳ ಸಮೀಪದಲ್ಲೇ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಳಿತ ಮುಂದಾಗಿದೆ. ಮತ್ತೊಂದೆಡೆ ಪೊಲೀಸ್ ಇಲಾಖೆಯಿಂದ ತಲಾ ಒಂಭತ್ತು ಜನರಿರುವ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಈ ತಂಡಗಳಿಗೆ ಪ್ರವಾಹ ಮತ್ತು ಭೂಕುಸಿತ ಎದುರಾದಲ್ಲಿ ಜನರನ್ನು ರಕ್ಷಣೆ ಮಾಡುವುದು ಹೇಗೆ ಎಂದೆಲ್ಲಾ ತರಬೇತಿಯನ್ನು ನಡೆಸಲಾಗಿದೆ.&lt;/p&gt;&lt;h2&gt;&lt;strong&gt;ಮಳೆಗಾಲವನ್ನು ಎದುರಿಸಲು ಸಿದ್ಧತೆ&lt;/strong&gt;&lt;/h2&gt;&lt;p&gt;ಹಾರಂಗಿ ಹಿನ್ನೀರಿನಲ್ಲಿ ತರಬೇತಿ ನಡೆಸಲಾಗಿದ್ದು, ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮಾಡುವುದು ಹೇಗೆ ಎನ್ನುವ ಅಣುಕು ಕಾರ್ಯಾಚರಣೆಯನ್ನು ಕೂಡ ನಡೆಸಲಾಗಿದೆ. ಒಟ್ಟಿನಲ್ಲಿ ಕೊಡಗು ಜಿಲ್ಲೆಗೆ ಇನ್ನೇನು ಕೆಲವೇ ದಿನಗಳಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿಯ ಮಳೆಗಾಲದಲ್ಲಿ ಮಳೆಯ ತೀವ್ರ ಕೊರತೆ ಇದೆ ಎನ್ನುವುದನ್ನು ಹೇಳಲಾಗಿದ್ದರೂ ಕೆಲವು ದಿನಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದಲ್ಲಿ ಊಹಿಸಲು ಅಸಾಧ್ಯವಾದ ಅನಾಹುತಗಳ ಸಂಭವಿಸಲಿವೆ. ಇವೆಲ್ಲವನ್ನು ಮನಗಂಡಿರುವ ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಸಿದ್ಧತೆ ನಡೆಸಿದೆ.&lt;/p&gt;&lt;p&gt;ತೀವ್ರ ಪ್ರಮಾಣದಲ್ಲಿ ಗಾಳಿ ಮಳೆ ಸುರಿದಲ್ಲಿ ಅಪಾರ ಪ್ರಮಾಣದ ವಿದ್ಯುತ್ ಕಂಬಗಳು ಧರೆಗೆ ಉರುಳಬಹುದು. ಹೀಗಾಗಿ ಜಿಲ್ಲೆ ಕತ್ತಲಿನಲ್ಲಿ ಮುಳುಗಬಾರದು ಎನ್ನುವ ದೃಷ್ಟಿಯಿಂದ ಕೆಇಬಿ ಇಲಾಖೆ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಶೇಕರಣೆ ಮಾಡಿಟ್ಟುಕೊಂಡಿದೆ. ಒಟ್ಟಿನಲ್ಲಿ ಮುಂಗಾರು ಸಮಯದ ನಾಲ್ಕು ತಿಂಗಳು ಸುರಿಯಬೇಕಾದ ಮಳೆ ಹವಾಮಾನ ವೈಪರೀತ್ಯದಿಂದಾಗಿ ಒಂದು ತಿಂಗಳು, ಹದಿನೈದು ದಿನ ಅಥವಾ ನಾಲ್ಕು ದಿನಗಳಲ್ಲಿಯೇ ಸುರಿದು ಬಿಡುವ ಸಾಧ್ಯತೆಯೇ ಹೆಚ್ಚಿದೆ. ಇದು ಅಪಾಯವಾಗಲಿದ್ದು, ಇದರಿಂದಲೇ ಜಿಲ್ಲಾಡಳಿತ ಈ ಬಾರಿ ಮಳೆ ಕೊರತೆ ಎಂಬ ಮಾಹಿತಿ ಇರುವಾಗಲೇ ಸಂಪೂರ್ಣ ಮುನ್ನೆಚ್ಚರಿಕೆ ವಹಿಸಿದೆ.&lt;/p&gt;]]></content:encoded>
            <category>kodagu</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kodagu-flood-landslide-alert-district-administration-prepares-for-heavy-monsoon-gvd/articleshow-zs816fr"/>
        </item>
    </channel>
</rss>
