<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 06 Jun 2026 17:53:10 +0530</lastBuildDate>
        <atom:link href="https://kannada.asianetnews.com/rss/kolar" rel="self" type="application/rss+xml"/>
        <item>
            <title><![CDATA[Kolar: 8 ಕೋಟಿ ಚಿನ್ನಾಭರಣ ಕಳೆದುಕೊಂಡ ಮಹಿಳೆಯರು; ವಾಟ್ಸಪ್ ಗ್ರೂಪ್‌ ರಚಿಸಿ ವಂಚನೆ]]></title>
            <link>https://kannada.asianetnews.com/gallery/karnataka-districts/kolar-district-malur-city-women-lose-8-crores-of-gold-jewellery-fraud-by-creating-whatsapp-group-mrq-0gl9bh5</link>
            <guid isPermaLink="true">https://kannada.asianetnews.com/gallery/karnataka-districts/kolar-district-malur-city-women-lose-8-crores-of-gold-jewellery-fraud-by-creating-whatsapp-group-mrq-0gl9bh5</guid>
            <pubDate>Mon, 01 Jun 2026 08:50:41 +0530</pubDate>
            <description><![CDATA[&lt;p&gt;ಮಾಲೂರಿನಲ್ಲಿ ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ, ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಸುಮಾರು 8 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಂಗ್ರಹಿಸಿದ್ದಾನೆ. &amp;nbsp;ವಂಚನೆಗೊಳಗಾದ ಮಹಿಳೆಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt0jt6trmper3ezec6dg4amc,imgname-kolar--2--1780283677528.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಾಲೂರಿನಲ್ಲಿ ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ, ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಸುಮಾರು 8 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಂಗ್ರಹಿಸಿದ್ದಾನೆ. &amp;nbsp;ವಂಚನೆಗೊಳಗಾದ ಮಹಿಳೆಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;ಮಾಲೂರು: ಕಡಿಮೆ ದರ ಹಾಗೂ ಕಡಿಮೆ ತೂಕದಲ್ಲಿ ಚಿನ್ನದ ಆಭರಣಗಳನ್ನು ಮಾಡಿಕೊಡುವುದಾಗಿ ಮಹಿಳೆಯರನ್ನು ನಂಬಿಸಿ ಸುಮಾರು 8 ಕೋಟಿ ರು.ಗಳ ಚಿನ್ನಾಭರಣ ಸಮೇತ ಪರಾರಿಯಾಗಿರುವ ಘಟನೆ ಪಟ್ಟಣದ ಮಾರುತಿ ಬಡಾವಣೆ ಯಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ನಗರದ ಮಾರುತಿ ಬಡಾವಣೆಯಲ್ಲಿರುವ ವೆಂಕಟೇಶ್ವರ ಆಸ್ವತ್ರೆ ರಸ್ತೆಯಲ್ಲಿದ್ದ ರಾಮದೇವ್&zwnj; ಜೂಯಲರ್ಸ್&zwnj; ಅಂಗಡಿ ಮಾಲೀಕ ಬುಂಡಾರಾಮ್&zwnj; ಮಾಲೂರಿನ ಮಹಿಳೆಯರನ್ನು ವಂಚಿಸಿದವನಾಗಿದ್ದಾನೆ. ಮೂಲತಃ ರಾಜಸ್ತಾನವನ್ನಾಗಿರುವ ಬುಂಡಾರಾಮ್&zwnj; ಕಳೆದ 15 ವರ್ಷಗಳಿಂದ ಇಲ್ಲಿನ ಸೋಲಂಕಿ ಒಡವೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವರ್ಷವಷ್ಟೇ ಸೋಲಂಕಿಯಿಂದ ಹೊರಬಂದು ಹೊಸ ಅಂಗಡಿ ತರೆದಿದ್ದ.&amp;nbsp;&lt;/p&gt;&lt;img&gt;&lt;p&gt;ಸೋಲಂಕಿ ಬಳಿ ಕೆಲಸ ಮಾಡುತ್ತಿದ್ದ ಪರಿಚಯವಾಗಿದ್ದ ಮಹಿಳೆಯನ್ನು ಸೆಳೆದಿದ್ದ ಬಂಡಾರಾಮ್&zwnj; ತಮ್ಮ ಹಳೇ ಒಡವೆಯನ್ನು ಕಡಿಮೆ ವೇಸ್ಟೇಜ್&zwnj;ನಲ್ಲಿ ಕರಗಿಸಿ ಹೊಸ ಒಡವೆ ಮಾಡಿಕೊಡುವುದಾಗಿ ನಂಬಿಸಿದ್ದ.ಇದಕ್ಕಾಗಿ 180 ಮಹಿಳೆಯರಿದ್ದ ವಾಟ್ಸಪ್&zwnj; ಗ್ರೂಪ್&zwnj; ರಚಿಸಿ ಅದರಲ್ಲಿ ಹೊಸ ಹೊಸ ಡಿಸೈನ್&zwnj;ಗಳನ್ನು ಹಾಕುತ್ತಿದ್ದ. ಅತಿ ಕಡಿಮೆ ತೊಕದಲ್ಲಿ ಸುಂದರ ಆಭರಣಗಳನ್ನು ಕಂಡ ಬಹುತೇಕ ಮಹಿಳೆಯರು ತಮ್ಮಲ್ಲಿದ್ದ ಹಳೆ ಮಾಂಗಲ್ಯ, ತಾಳಿ, ಓಲೆ ಹಾಗೂ ಬ್ರಾಸ್&zwnj; ಲೈಟ್&zwnj;ಗಳನ್ನು ಕೊಟ್ಟಿದ್ದಲ್ಲದೇ ಕ್ರೆಡಿಟ್&zwnj; ಕಾರ್ಡ್&zwnj; ಮೂಲಕ ಹಣ ಪಾವತಿಸಿದ್ದರು.&lt;/p&gt;&lt;img&gt;&lt;p&gt;ಕಳೆದ ವಾರದಿಂದ ಅಂಗಡಿ ತೆಗೆಯದ ಬುಂಡಾರಾಮ್&zwnj; ಮೊಬೈಲ್&zwnj; ಸ್ವೀಚ್&zwnj; ಆಫ್&zwnj; ಮಾಡಿಕೊಂಡು ಪರಾರಿಯಾಗಿದ್ದಾನೆ. ಇದರಿಂದ ವಂಚನೆಗೆ ಒಳಗಾದ ಮಹಿಳೆಯರು ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಒಡವೆ ಹಾಗೂ ಹಣವನ್ನು ವಾಪಸ್ಸು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>kolar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/kolar-district-malur-city-women-lose-8-crores-of-gold-jewellery-fraud-by-creating-whatsapp-group-mrq-0gl9bh5"/>
        </item>
        <item>
            <title><![CDATA[ಗಣತಿಗೆ ತೆರಳಿದ್ದ ಶಿಕ್ಷಕರಿಗೆ ಅಪಘಾತ, ಕೋಲಾರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಸಾವು]]></title>
            <link>https://kannada.asianetnews.com/gallery/karnataka-districts/headmaster-of-kolar-government-school-killed-in-road-accident-during-census-duty-0y462f6</link>
            <guid isPermaLink="true">https://kannada.asianetnews.com/gallery/karnataka-districts/headmaster-of-kolar-government-school-killed-in-road-accident-during-census-duty-0y462f6</guid>
            <pubDate>Thu, 23 Apr 2026 21:53:34 +0530</pubDate>
            <description><![CDATA[&lt;p&gt;ಗಣತಿಗೆ ತೆರಳಿದ್ದ ಶಿಕ್ಷಕರಿಗೆ ಅಪಘಾತ, ಕೋಲಾರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಸಾವು, ಬೈಕ್ ಹಾಗೂ ಕಾರು ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ. ಮತ್ತೊರ್ವ ಶಿಕ್ಷಕ ಗಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpxj5a4edh4cnc0efmnc8g0g,imgname-kolar-accident-1776961104014.png" type="image/jpeg" height="390" width="690"/>
            <content:encoded><![CDATA[&lt;p&gt;ಗಣತಿಗೆ ತೆರಳಿದ್ದ ಶಿಕ್ಷಕರಿಗೆ ಅಪಘಾತ, ಕೋಲಾರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಸಾವು, ಬೈಕ್ ಹಾಗೂ ಕಾರು ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ. ಮತ್ತೊರ್ವ ಶಿಕ್ಷಕ ಗಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಮನೆ ಗಣತಿ ಕಾರ್ಯಗಳು ಆರಂಭಗೊಂಡಿದೆ. ಶಿಕ್ಷಕರು ಉರಿ ಬಿಸಿಲಿನಲ್ಲಿ ಗಣತಿ ಕಾರ್ಯಗಳನ್ನು ನಡೆಸುತ್ತಾ ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಹೀಗೆ ಮನೆ ಗಣತಿಗೆ ತೆರಳುತ್ತಿದ್ದ ಶಿಕ್ಷಕರ ಬೈಕ್ ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ. ಕೋಲಾರದ ಬೆತ್ತನಿ ಗ್ರಾಮದ ಬಳಿ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಶಿಕ್ಷಕರು ಬೈಕ್&zwnj;ನಲ್ಲಿ ತೆರಳುತ್ತಿದ್ದಾಗ, ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೆ ಬೈರಂಡಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಮುನಿರಾಜು&zwnj; ಸಾವು ಕಂಡಿದ್ದಾರೆ.&lt;/p&gt;&lt;img&gt;&lt;p&gt;ಇದೇ ಬೈಕ್&zwnj;&zwnj;ನಲ್ಲಿದ್ದ ಮತ್ತೊಬ್ಬ ಮುಖ್ಯ ಶಿಕ್ಷಕ ಕೆ.ಟಿ.ನಾಗರಾಜ್ ಗೆ ಗಾಯ ಗೊಂಡಿದ್ದಾರೆ. ತಕ್ಷಣವೇ ಗಾಯಾಳು ಶಿಕ್ಷಕನನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಟಿ ನಾಗರಾಜ್&zwnj;ಗೆ ಚಿಕಿತ್ಸೆ ಮುಂದುವರಿದಿದೆ.ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ಮುಖ್ಯ ಶಿಕ್ಷಕರಾದ ಕೆಟಿ ನಾಗರಾಜ್ ಹಾಗೂ ಮುನಿರಾಜ್ ಮನೆ ಗಣತಿ ಕಾರ್ಯದಲ್ಲಿ ತೊಡಗಿದ್ದರು. ದಿನ್ನೆಹೊಸಹಳ್ಳಿಯಲ್ಲಿ ಮನೆ ಗಣತಿ ಕಾರ್ಯ ಮುಗಿಸಿ ವಾಪಸ್ಸಾಗುವ ವೇಳೆ ಅಪಘಾತ ನಡೆದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕೋಲಾರ ಜಿಲ್ಲಾಸ್ಪತ್ರೆಗೆ ಧಾವಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;]]></content:encoded>
            <category>kolar</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/karnataka-districts/headmaster-of-kolar-government-school-killed-in-road-accident-during-census-duty-0y462f6"/>
        </item>
        <item>
            <title><![CDATA[ಕೋಲಾರದ ಕರುಳು ಹಿಂಡುವ ದುರಂತ: ತಾಯಿಯ ಕಠಿಣ ನಿರ್ಧಾರಕ್ಕೆ ಇಬ್ಬರು ಕಂದಮ್ಮಗಳ ಸಾವು!]]></title>
            <link>https://kannada.asianetnews.com/karnataka-districts/kolar-tragedy-mother-jumps-into-pond-with-two-children-in-bangarapete-kids-drown-gdp/articleshow-1zqypdw</link>
            <guid isPermaLink="true">https://kannada.asianetnews.com/karnataka-districts/kolar-tragedy-mother-jumps-into-pond-with-two-children-in-bangarapete-kids-drown-gdp/articleshow-1zqypdw</guid>
            <pubDate>Mon, 02 Mar 2026 18:53:46 +0530</pubDate>
            <description><![CDATA[&lt;p&gt;ಕೋಲಾರದ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ, ಕೌಟುಂಬಿಕ ಕಲಹದಿಂದ ನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕುಂಟೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಸ್ಥಳೀಯರು ತಾಯಿಯನ್ನು ರಕ್ಷಿಸಿದ್ದಾರೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjqbg2gmy2k3qz2svr2byn3n,imgname-kolar-tragedy--1--1772457822739.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ:&lt;/strong&gt; ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಕುಂಟೆಗೆ ಹಾರಿ ಆತ್ಮ*ಹತ್ಯೆಗೆ ಯತ್ನಿಸಿದ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸಿದ್ದಾರೆ.&lt;/p&gt;&lt;h2&gt;ಘಟನೆಯ ವಿವರ&lt;/h2&gt;&lt;p&gt;ಬೂದಿಕೋಟೆ ಗ್ರಾಮದ ನಿವಾಸಿ ಉಷಾ ಎಂಬ ಮಹಿಳೆ, ಗಂಡನ ಕಿರುಕುಳ ಮತ್ತು ಮನೆಯೊಳಗಿನ ನಿರಂತರ ಕಲಹದಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಆಕೆ ತನ್ನ ಇಬ್ಬರು ಮಕ್ಕಳು ನಿತೀಶ್ (6) ಮತ್ತು ಅನೀಶ್ (5) ಅವರನ್ನು ಕರೆದುಕೊಂಡು ಗ್ರಾಮದ ಸಮೀಪದ ಕುಂಟೆಗೆ ಹಾರಿದ್ದಾಳೆ. ನೀರಿಗೆ ಬಿದ್ದ ತಕ್ಷಣ ಮಕ್ಕಳು ಮುಳುಗಿ ಅಸಹಾಯಕ ಸ್ಥಿತಿಗೆ ತಲುಪಿದ್ದು, ಸ್ಥಳೀಯರು ಗಮನಿಸಿ ತಕ್ಷಣ ರಕ್ಷಣೆಗೆ ಮುಂದಾಗಿದ್ದಾರೆ.&lt;/p&gt;&lt;h2&gt;ಮಕ್ಕಳ ಸಾವು, ತಾಯಿ ರಕ್ಷಣೆ&lt;/h2&gt;&lt;p&gt;ಸ್ಥಳೀಯರ ತ್ವರಿತ ಸ್ಪಂದನೆಯಿಂದ ಉಷಾಳನ್ನು ಜೀವಂತವಾಗಿ ಹೊರತೆಗೆದುಕೊಳ್ಳಲಾಯಿತಾದರೂ, ದುರದೃಷ್ಟವಶಾತ್ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಕ್ಕಳ ಮೃತದೇಹಗಳನ್ನು ಕುಂಟೆಯಿಂದ ಹೊರತೆಗೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;h2&gt;ಪೊಲೀಸ್ ಕ್ರಮ&lt;/h2&gt;&lt;p&gt;ಘಟನೆಯ ಮಾಹಿತಿ ಪಡೆದ ಬೂದಿಕೋಟೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತ್ಮ*ಹತ್ಯೆ ಯತ್ನಕ್ಕೆ ಕಾರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಕುಟುಂಬದ ಹಿನ್ನೆಲೆ, ಗಂಡನ ಕಿರುಕುಳ ಆರೋಪಗಳು ಹಾಗೂ ಇತರ ಸಾಂದರ್ಭಿಕ ಅಂಶಗಳನ್ನು ಆಧರಿಸಿ ವಿಚಾರಣೆ ಮುಂದುವರಿದಿದೆ.&lt;/p&gt;]]></content:encoded>
            <category>kolar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/kolar-tragedy-mother-jumps-into-pond-with-two-children-in-bangarapete-kids-drown-gdp/articleshow-1zqypdw"/>
        </item>
        <item>
            <title><![CDATA[ಮನೆಗೆ ಆಸರೆಯಾಗಿದ್ದ ಗಂಡನ ಸಾವಾಗಿ ಒಂದು ತಿಂಗಳು; ಕೂಲಿ ಮಾಡಿ ಸಾಕಲಾಗದೆ ತಾಯಿಯೇ ಎರಡೂ ಕಂದಮ್ಮಗಳನ್ನ ಕೊಂದಳು!]]></title>
            <link>https://kannada.asianetnews.com/karnataka-districts/kolar-crime-mother-kills-two-girl-children-attempts-self-death-nangali-police-sat/articleshow-39sg70o</link>
            <guid isPermaLink="true">https://kannada.asianetnews.com/karnataka-districts/kolar-crime-mother-kills-two-girl-children-attempts-self-death-nangali-police-sat/articleshow-39sg70o</guid>
            <pubDate>Thu, 04 Jun 2026 20:03:04 +0530</pubDate>
            <description><![CDATA[&lt;p&gt;ಪತಿಯ ಮರಣದಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೋಲಾರದ ತಾಯಿಯೊಬ್ಬಳು, ತನ್ನಿಬ್ಬರು ಹೆಣ್ಣುಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ತಾನೂ ಸಾಯಲು ಯತ್ನಿಸಿದ ಆಕೆಯನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt9gjmt74vnf1m3jjxwadpej,imgname-kolar-mother-1780583322439.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ (ಜೂ.04): ಕೋ&lt;/strong&gt;ಲಾರ ಜಿಲ್ಲೆಯಲ್ಲಿ ಹೆತ್ತ ಕರುಳೇ ಬೆಚ್ಚಿಬೀಳುವಂತಹ ಭೀಕರ ಹಾಗೂ ಕರುಣಾಜನಕ ಘಟನೆಯೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬಳು, ತನ್ನಿಬ್ಬರು ಹಸುಗೂಸುಗಳನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಮಕ್ಕಳನ್ನು ಕೊಂದ ಬಳಿಕ ತಾನೂ ಸಾಯಲು ಯತ್ನಿಸಿದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಚಿಂತಲಹಳ್ಳಿ ಜೋಡಿ ಗ್ರಾಮದಲ್ಲಿ ಈ ಘೋರ ದುರಂತ ಜರುಗಿದೆ.&lt;/p&gt;&lt;h3&gt;&lt;strong&gt;ಖಿನ್ನತೆಗೆ ಒಳಗಾಗಿದ್ದ ತಾಯಿ:&lt;/strong&gt;&lt;/h3&gt;&lt;p&gt;ಮೂಲತಃ ಆಂಧ್ರಪ್ರದೇಶದ ವಿನಾಯಕಪುರಂ ಎಸ್&zwnj;ಟಿ ಕಾಲೋನಿಯ (ಸೋಮುಲ ಗ್ರಾಮ) ನಿವಾಸಿಗಳಾದ ಬಾಬು ಹಾಗೂ ಬುಜ್ಜಮ್ಮ (ಬುಜ್ಜಿ- 22) ದಂಪತಿಗಳು ಬಡತನದ ಹಿನ್ನೆಲೆಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಈ ದಂಪತಿ ಮುಳಬಾಗಿಲು ತಾಲೂಕಿನ ಚಿಂತಲಹಳ್ಳಿ ಜೋಡಿ ಗ್ರಾಮದಲ್ಲಿರುವ ಕೃಷ್ಣಗೌಡ ಎಂಬುವರ ಮಾವಿನ ತೋಪಿನಲ್ಲಿ ಕಾವಲುಗಾರರಾಗಿ ಕೆಲಸ ಮಾಡಿಕೊಂಡಿದ್ದರು. ಬದುಕು ಸಾಗುತ್ತಿದ್ದಾಗಲೇ ಕಳೆದ ತಿಂಗಳು ಆಂಧ್ರಪ್ರದೇಶದ ಆವಲಕೊಪ್ಪ ಬಳಿ ನಡೆದ ರಸ್ತೆ ಅಪಘಾತದಲ್ಲಿ ಪತಿ ಬಾಬು ದುರ್ಮರಣಕ್ಕೀಡಾಗಿದ್ದರು. ದಿನ ಬೆಳಗಾದರೆ ಜೊತೆಯಲ್ಲಿದ್ದ ಪತಿ ಕಣ್ಣೆದುರೇ ಇಲ್ಲದಂತಾದುದನ್ನು ಸಹಿಸದ ಬುಜ್ಜಮ್ಮ ತೀವ್ರ ಜೀವನ ಜಿಗುಪ್ಸೆ ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.&lt;/p&gt;&lt;h2&gt;&lt;strong&gt;ಇಬ್ಬರು ಮಕ್ಕಳ ಕರುಣಾಜನಕ ಕೊಲೆ:&lt;/strong&gt;&lt;/h2&gt;&lt;p&gt;ಪತಿಯ ಸಾವಿನ ಕೊರಗಿನಲ್ಲೇ ದಿನ ದೂಡುತ್ತಿದ್ದ ಬುಜ್ಜಮ್ಮ, ಕೊನೆಗೆ ತಾನೂ ಬದುಕಿರಬಾರದು ಎಂದು ನಿರ್ಧರಿಸಿದ್ದಳು. ಆದರೆ ತಾನು ಹೋದರೆ ಮಕ್ಕಳ ಗತಿ ಏನು ಎಂಬ ಆಲೋಚನೆಯಲ್ಲಿ, ಇಬ್ಬರು ಮಕ್ಕಳನ್ನೇ ಕೊಲ್ಲಲು ಮುಂದಾಗಿದ್ದಾಳೆ. ಸರಸ್ವತಿ (4 ವರ್ಷ) ಹಾಗೂ ಕೇವಲ 15 ತಿಂಗಳ ಕಂದಮ್ಮ ಹೇಮಶ್ರೀ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ಬುಜ್ಜಮ್ಮ ಅತ್ಯಂತ ಕ್ರೂರವಾಗಿ ಕತ್ತು ಹಿಸುಕಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.&lt;/p&gt;&lt;h2&gt;&lt;strong&gt;ಸ್ಥಳೀಯರಿಂದ ಮಹಿಳೆಯ ರಕ್ಷಣೆ-ಬಂಧನ:&lt;/strong&gt;&lt;/h2&gt;&lt;p&gt;ಮಕ್ಕಳಿಬ್ಬರನ್ನು ಕೊಲೆ ಮಾಡಿದ ನಂತರ ಬುಜ್ಜಮ್ಮ ತಾನೂ ಕೂಡ ನೇಣಿಗೆ ಶರಣಾಗಲು ಯತ್ನಿಸಿದ್ದಾಳೆ. ಈ ವೇಳೆ ತೋಟದ ಬಳಿ ಬಂದ ಸ್ಥಳೀಯರು ಇದನ್ನು ಗಮನಿಸಿ ತಕ್ಷಣವೇ ಆಕೆಯನ್ನು ತಡೆದು ಹಿಡಿದು ರಕ್ಷಿಸಿದ್ದಾರೆ. ತೋಟದ ಮನೆಯೊಳಗೆ ಹೋಗಿ ನೋಡಿದಾಗ ಇಬ್ಬರು ಮುಗ್ಧ ಮಕ್ಕಳು ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಇದರಿಂದ ದಿಗ್ಭ್ರಮೆಗೊಂಡ ಗ್ರಾಮಸ್ಥರು ತಕ್ಷಣವೇ ನಂಗಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ತಾಯಿ ಬುಜ್ಜಮ್ಮಳನ್ನು ಬಂಧಿಸಿದ್ದಾರೆ.&lt;/p&gt;&lt;p&gt;ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯನ್ನು ಕಳೆದುಕೊಂಡ ಒಂದೇ ತಿಂಗಳಲ್ಲಿ ಇಡೀ ಕುಟುಂಬವೇ ಈ ರೀತಿಯಾಗಿ ಸರ್ವನಾಶವಾಗಿರುವುದು ಇಡೀ ಗ್ರಾಮಸ್ಥರನ್ನು ಕಣ್ಣೀರಲ್ಲಿ ಮುಳುಗಿಸಿದೆ.&lt;/p&gt;&lt;p&gt;ಗಮನಿಸಿ (ಹೆಲ್ಪ್&zwnj;ಲೈನ್): ಮಾನಸಿಕ ಖಿನ್ನತೆ ಅಥವಾ ಜೀವನದಲ್ಲಿ ಜಿಗುಪ್ಸೆ ಉಂಟಾದಲ್ಲಿ ಯಾರೂ ಕೂಡ ಇಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಸಹಾಯ ಹಾಗೂ ಸಮಾಲೋಚನೆಗಾಗಿ 'ಆರೋಗ್ಯ ಸಹಾಯವಾಣಿ 104' ಅಥವಾ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ.&lt;/p&gt;]]></content:encoded>
            <category>kolar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/kolar-crime-mother-kills-two-girl-children-attempts-self-death-nangali-police-sat/articleshow-39sg70o"/>
        </item>
        <item>
            <title><![CDATA[SSLC Results 2026: ಆ್ಯಂಬುಲೆನ್ಸ್‌ನಲ್ಲಿ ಬಂದು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಫಸ್ಟ್‌ಕ್ಲಾಸ್ ಪಾಸ್]]></title>
            <link>https://kannada.asianetnews.com/karnataka-districts/sslc-results-2026-v-kusuma-who-wrote-exam-in-ambulance-passes-first-class-rav/articleshow-5yg89n1</link>
            <guid isPermaLink="true">https://kannada.asianetnews.com/karnataka-districts/sslc-results-2026-v-kusuma-who-wrote-exam-in-ambulance-passes-first-class-rav/articleshow-5yg89n1</guid>
            <pubDate>Fri, 24 Apr 2026 07:53:50 +0530</pubDate>
            <description><![CDATA[ಅಪಘಾತದಿಂದ ಗಾಯಗೊಂಡಿದ್ದರೂ, ಕೋಲಾರದ ವಿದ್ಯಾರ್ಥಿನಿ ಕುಸುಮಾ ಆ್ಯಂಬುಲೆನ್ಸ್&zwnj;ನಲ್ಲಿ ಬಂದು ಸ್ಟ್ರೆಚರ್&zwnj;ನಲ್ಲಿ ಮಲಗಿಯೇ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆದಿದ್ದಳು. ಇದೀಗ ಆಕೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದು, ಚಿಕಿತ್ಸೆ ಪಡೆಯುತ್ತಲೇ ಅನೇಕ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾಳೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpymrxy39nms3ceq0g3bwerx,imgname--------------------------------4--1776997398467.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ (ಏ.24): &lt;/strong&gt;ಆ್ಯಂಬುಲೆನ್ಸ್&zwnj; ಮೂಲಕ ಬಂದು ಸ್ಟ್ರೆಚರ್&zwnj;ನಲ್ಲಿಯೇ ಮಲಗಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆದಿದ್ದ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಿನ್ನನಾಗಹಳ್ಳಿಯ ವಿದ್ಯಾರ್ಥಿನಿ ಕುಸುಮಾ ಫಸ್ಟ್&zwnj;ಕ್ಲಾಸ್&zwnj;ನಲ್ಲಿ ಪಾಸ್ ಆಗಿದ್ದಾಳೆ. ಕುಸುಮಾ ಅಪಘಾತವಾಗಿ ಗಾಯಗೊಂಡಿದ್ದರೂ ಛಲ ಬಿಡದೆ ಶಿಕ್ಷಣ ಇಲಾಖೆ ಹಾಗೂ ತಾಯಿಯ ನೆರವಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆ್ಯಂಬುಲೆನ್ಸ್&zwnj; ಬಂದು ಸ್ಟ್ರೆಚರ್&zwnj;ನಲ್ಲಿ ಮಲಗಿ ಪರೀಕ್ಷೆ ಬರೆದಿದ್ದಳು. ಇದೀಗ ಕನ್ನಡದಲ್ಲಿ-೬೨, ಇಂಗ್ಲೀಷ್&zwnj;ನಲ್ಲಿ-೭೨, ಹಿಂದಿ-೬೩, ಗಣಿತ-೬೭, ವಿಜ್ಞಾನ-೫೪, ಸಮಾಜ-೫೬ ಅಂಕ ಪಡೆದು ಅನಾರೋಗ್ಯ ಕಾರಣದಿಂದ ಪರೀಕ್ಷೆ ತಪ್ಪಿಸುವ ಅದೇಷ್ಟೊ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾಳೆ. ಸದ್ಯ ಕುಸುಮಾ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.&lt;/p&gt;&lt;h2&gt;ಕಳೆದ 1 ವಾರದಿಂದ ಆಸ್ಪತ್ರೆಯಲ್ಲಿ ಸರ್ಜರಿ ಮಾಡಿಸಿಕೊಳ್ಳುತ್ತಿದ್ದಾಳೆ.&lt;/h2&gt;&lt;p&gt;ಕುಸುಮಾ ಪರೀಕ್ಷೆ ಬರೆಯಲು ಕೋಲಾರದ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸೇರಿ ಸಾಕಷ್ಟು ಜನರು ನೆರವಾಗಿದ್ದರು. ಅಲ್ಲದೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಮನೆಗೆ ಭೇಟಿ ನೀಡಿ ನೆರವಾಗಿ ಧೈರ್ಯ ತುಂಬಿದ್ದರು. ಸದ್ಯ ಆಸ್ಪತ್ರೆ ಚಿಕಿತ್ಸೆಗೆ ಸಹಕರಿಸಿರುವ ಸುರೇಶ್ ಕುಮಾರ್, ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸಿದ್ದಾರೆ.&lt;/p&gt;]]></content:encoded>
            <category>kolar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/sslc-results-2026-v-kusuma-who-wrote-exam-in-ambulance-passes-first-class-rav/articleshow-5yg89n1"/>
        </item>
        <item>
            <title><![CDATA[ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ: ಡ್ರಗ್ಸ್ ಕಂಟ್ರೋಲರ್ ಶ್ಯಾಮಲಾ ಲೋಕಾ ಬಲೆಗೆ]]></title>
            <link>https://kannada.asianetnews.com/state/kolar-35000-bribe-to-renew-medical-store-license-drugs-controller-arrested/articleshow-7zz6gb7</link>
            <guid isPermaLink="true">https://kannada.asianetnews.com/state/kolar-35000-bribe-to-renew-medical-store-license-drugs-controller-arrested/articleshow-7zz6gb7</guid>
            <pubDate>Wed, 18 Mar 2026 16:23:33 +0530</pubDate>
            <description><![CDATA[&lt;p&gt;ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾ ಬಲೆಗೆ ಬಿದ್ದಿದ್ದಾರೆ. ಮಾಲೂರು ತಾಲೂಕಿನ ಟೇಕಲ್ ಬಳಿ ಲಂಚ ಸ್ವೀಕಾರ ಮಾಡುತ್ತಿದ್ದ ಮೂವರು ಬಲೆಗೆ ಬಿದ್ದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km08tb9qpj87n39bz2f65ta9,imgname-kolara-lokayukta-raid-1773830745399.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೋಲಾರ : ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾ ಬಲೆಗೆ ಬಿದ್ದಿದ್ದಾರೆ. ಘಟನೆ ಸಂಬಂಧ ಸಹಾಯಕ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ನೌಕರ ಶ್ರೀನಿವಾಸನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಆದರೆ ಅವರನ್ನು ಬೆನ್ನಟ್ಟಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ.&lt;/p&gt;&lt;p&gt;ದಲಿತ ಮುಖಂಡ ಹೂಹಳ್ಳಿ ಪ್ರಕಾಶ್ ಹಾಗೂ ಕೃಷ್ಣಯ್ಯ ಎಂಬುವವರು ಇವರ ವಿರುದ್ಧ ದೂರು ನೀಡಿದ್ದರು. ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ ಆರೋಪಿಗಳು 35,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸ್ವೀಕರಿಸಿದ ಹಣವನ್ನು ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಮಾರ್ಗಮಧ್ಯೆ ಎಸೆದಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಹಣಕ್ಕಾಗಿ ತಡರಾತ್ರಿಯವರೆಗೆ ಹುಡುಕಾಡಿದ್ದಾರೆ. ಆದರೆ ಅವರಿಗೂ ಹಣ ಸಿಕ್ಕಿಲ್ಲ, ಹಣ ಸಿಗದ ಹಿನ್ನೆಲೆ ಹಣ ಸ್ವೀಕರಿಸಿರುವ ವಿಡಿಯೋ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನಿರ್ಧರಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;ನಿಂಗೆ ಮಗಳನ್ನ ಕೊಡಲ್ಲ ಎಂದಿದ್ದಕ್ಕೆ ಯುವತಿ ತಲೆ ಒಡೆದು ಆಕೆಯ ಮನೆಯವರ ಮೇಲೆ ಹಲ್ಲೆ ಮಾಡಿದ ಕಿರಾತಕ&lt;/p&gt;&lt;p&gt;ಮಾಲೂರು ತಾಲೂಕಿನ ಟೇಕಲ್ ಬಳಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು, ಈ ವೇಳೆ ಅಧಿಕಾರಿಗಳನ್ನು ಕಂಡು ಎಡಿಸಿ ಶ್ಯಾಮಲಾ ಹಾಗೂ ಮತ್ತಿಬ್ಬರು ಎಸ್ಕೇಪ್​​ ಆಗಿದ್ದರು. ಇವರ ಕಾರನ್ನು ಬೆನ್ನಟ್ಟಿದ್ದ ಲೋಕಾಯುಕ್ತ ಪೊಲೀಸರು ಮೂವರನ್ನೂ ಅಂತಿಮವಾಗಿ ಬಂಧಿಸಿದ್ದರು. ಆದರೆ ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆಂದು ಪಡೆದಿದ್ದ 35 ಸಾವಿರ ರೂಪಾಯಿ ಲಂಚದ ಹಣವನ್ನು ಮಾರ್ಗ ಮಧ್ಯದಲ್ಲಿಯೇ ಇವರು ಎಸೆದಿದ್ದರು.&lt;/p&gt;&lt;p&gt;ಸದ್ಯ ಸಹಾಯಕ ಔಷಧ ನಿಯಂತ್ರಕಿ ಶ್ಯಾಮಲಾ, ನಿವೃತ್ತ ಡಿಗ್ರೂಪ್ ನೌಕರ ಶ್ರೀನಿವಾಸ್, ಹಾಗೂ ಡ್ರೈವರ್ ಮಹಂತೇಶ್ ಸದ್ಯ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಇವಿ ಕಾರು ಚಾರ್ಜಿಂಗ್ ವೇಳೆ ದುರಂತ: ಬೆಂಕಿ ಮನೆಗೆ ಹಬ್ಬಿ 8 ಜನ ಸಜೀವ ದಹನ&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kolar</category>
            <dc:creator>Anusha Kb</dc:creator>
            <atom:link href="https://kannada.asianetnews.com/state/kolar-35000-bribe-to-renew-medical-store-license-drugs-controller-arrested/articleshow-7zz6gb7"/>
        </item>
        <item>
            <title><![CDATA[ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದಿದ್ದ ಕೆಜಿಎಫ್ ವಿದ್ಯಾರ್ಥಿನಿ 'ಫಸ್ಟ್ ಕ್ಲಾಸ್' ಪಾಸ್]]></title>
            <link>https://kannada.asianetnews.com/gallery/state/kolar-kgf-student-kusuma-sslc-result-success-story-on-stretcher-sat-92rgqk4</link>
            <guid isPermaLink="true">https://kannada.asianetnews.com/gallery/state/kolar-kgf-student-kusuma-sslc-result-success-story-on-stretcher-sat-92rgqk4</guid>
            <pubDate>Thu, 23 Apr 2026 13:26:40 +0530</pubDate>
            <description><![CDATA[ತೀವ್ರ ಅನಾರೋಗ್ಯದ ನಡುವೆಯೂ ಸ್ಟ್ರೆಚರ್ ಮೇಲೆ ಮಲಗಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆದಿದ್ದ ಕೆಜಿಎಫ್ ವಿದ್ಯಾರ್ಥಿನಿ ಕುಸುಮಾ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ದೈಹಿಕ ಯಾತನೆಯನ್ನು ಮೀರಿ ನಿಂತ ಅವರ ಈ ಸಾಧನೆ ರಾಜ್ಯದ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpwn285j5yf5rhbsentn5f1f,imgname-kolar-kusuma-sslc-result-1776930594994.jpg" type="image/jpeg" height="390" width="690"/>
            <content:encoded><![CDATA[ತೀವ್ರ ಅನಾರೋಗ್ಯದ ನಡುವೆಯೂ ಸ್ಟ್ರೆಚರ್ ಮೇಲೆ ಮಲಗಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆದಿದ್ದ ಕೆಜಿಎಫ್ ವಿದ್ಯಾರ್ಥಿನಿ ಕುಸುಮಾ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ದೈಹಿಕ ಯಾತನೆಯನ್ನು ಮೀರಿ ನಿಂತ ಅವರ ಈ ಸಾಧನೆ ರಾಜ್ಯದ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.&lt;img&gt;&lt;p&gt;&lt;strong&gt;ಕೋಲಾರ (ಏ.23): 'ಛ&lt;/strong&gt;ಲವೊಂದಿದ್ದರೆ ಸಾಕು, ಎಂತಹ ಕಷ್ಟಗಳನ್ನೂ ಮೆಟ್ಟಿ ನಿಲ್ಲಬಹುದು' ಎಂಬುದಕ್ಕೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕುಸುಮಾ ಎಂಬ ವಿದ್ಯಾರ್ಥಿನಿ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಇಂದು ಪ್ರಕಟವಾದ ಎಸ್&zwnj;ಎಸ್&zwnj;ಎಲ್&zwnj;ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ, ದೈಹಿಕ ಯಾತನೆಯನ್ನೂ ಮರೆತು ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದಿದ್ದ ಕುಸುಮಾ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.&lt;/p&gt;&lt;img&gt;&lt;p&gt;ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿಯ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಹೊತ್ತಿಗೆ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದರು. ಎದ್ದು ನಿಲ್ಲಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದರೂ, ವರ್ಷಪೂರ್ತಿ ಪಟ್ಟ ಶ್ರಮ ವ್ಯರ್ಥವಾಗಬಾರದು ಎಂಬ ದೃಢ ಸಂಕಲ್ಪದೊಂದಿಗೆ ಆಕೆ ಪರೀಕ್ಷೆ ಬರೆಯಲು ನಿರ್ಧರಿಸಿದ್ದರು.&amp;nbsp;&lt;/p&gt;&lt;p&gt;ಪ್ರತಿದಿನ ಆಂಬುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದ ಆಕೆಯನ್ನು, ಸ್ಟ್ರೆಚರ್ ಮೇಲೆ ಮಲಗಿಸಿಕೊಂಡೇ ಪರೀಕ್ಷಾ ಕೊಠಡಿಗೆ ಕರೆದೊಯ್ಯಲಾಗುತ್ತಿತ್ತು. ಬೆನ್ನು ನೋವು ಮತ್ತು ದೈಹಿಕ ಅಸ್ವಸ್ಥತೆಯ ನಡುವೆಯೂ ಕುಸುಮಾ ಸ್ಟ್ರೆಚರ್ ಮೇಲೆಯೇ ಮಲಗಿ ಪರೀಕ್ಷೆ ಎದುರಿಸಿದ್ದು ಎಲ್ಲರ ಕಣ್ಣಾಲಿಗಳನ್ನು ತೇವಗೊಳಿಸಿತ್ತು.&lt;/p&gt;&lt;img&gt;&lt;p&gt;ಇಂದು ಹೊರಬಿದ್ದ ಫಲಿತಾಂಶದಲ್ಲಿ ಕುಸುಮಾ ಒಟ್ಟು 625 ಅಂಕಗಳಿಗೆ 374 ಅಂಕಗಳನ್ನು ಗಳಿಸಿ 'ಫಸ್ಟ್ ಕ್ಲಾಸ್' (First Class) ನಲ್ಲಿ ಉತ್ತೀರ್ಣರಾಗಿದ್ದಾರೆ. ಆರೋಗ್ಯವಂತ ವಿದ್ಯಾರ್ಥಿಗಳಿಗೇ ಪರೀಕ್ಷೆಯ ಒತ್ತಡ ನಿಭಾಯಿಸುವುದು ಕಷ್ಟವಿರುವಾಗ, ಆಸ್ಪತ್ರೆಯ ಹಾಸಿಗೆಯಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಈ ಸಾಧನೆ ಮಾಡಿರುವುದು ನಿಜಕ್ಕೂ ಅದ್ಭುತ. ಸದ್ಯ ಕುಸುಮಾ ಬೆಂಗಳೂರಿನ ವೈಟ್ ಫೀಲ್ಡ್&zwnj;ನಲ್ಲಿರುವ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದು, ತಾನು ಪಾಸ್ ಆಗಿರುವ ಸುದ್ದಿ ಕೇಳಿ ಮುಖದಲ್ಲಿ ಮಂದಹಾಸ ಮೂಡಿದೆ.&lt;/p&gt;&lt;img&gt;&lt;p&gt;ಕುಸುಮಾಳ ಈ ಅಸಾಧಾರಣ ಹೋರಾಟಕ್ಕೆ ಇಡೀ ಜಿಲ್ಲೆ ಸಾಕ್ಷಿಯಾಗಿತ್ತು. ಆಕೆಗೆ ಬೇಕಾದ ಆಂಬುಲೆನ್ಸ್ ಸೌಲಭ್ಯ ಮತ್ತು ಪರೀಕ್ಷಾ ಕೇಂದ್ರದಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲು ಕೋಲಾರದ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಿದ್ದವು. ವಿಶೇಷವಾಗಿ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಕುಸುಮಾಳ ಪರಿಸ್ಥಿತಿಯನ್ನು ಕಂಡು ಮರುಗಿದ್ದಲ್ಲದೆ, ಆಕೆಗೆ ವೈಯಕ್ತಿಕವಾಗಿ ಧೈರ್ಯ ತುಂಬಿ ಬೆನ್ನೆಲುಬಾಗಿ ನಿಂತಿದ್ದರು. ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳ ತಂಡ ಕುಸುಮಾಳ ಹಿತದೃಷ್ಟಿಯಿಂದ ಪರೀಕ್ಷಾ ನಿಯಮಗಳ ಅಡಿಯಲ್ಲಿ ಸಕಲ ಸೌಕರ್ಯಗಳನ್ನು ಒದಗಿಸಿತ್ತು.&lt;/p&gt;&lt;img&gt;&lt;p&gt;ಕುಸುಮಾಳ ಈ ಗೆಲುವು ಕೇವಲ ವೈಯಕ್ತಿಕ ಸಾಧನೆಯಲ್ಲ; ಇದು ದೃಢ ನಿರ್ಧಾರ ಮತ್ತು ಕಠಿಣ ಪರಿಶ್ರಮಕ್ಕೆ ಸಂದ ಜಯ. ಸಣ್ಣ ಪುಟ್ಟ ಸಮಸ್ಯೆಗಳಿಗೂ ಧೃತಿಗೆಡುವ ಇಂದಿನ ಪೀಳಿಗೆಗೆ ಕುಸುಮಾ ಅವರ ಜೀವನ ಒಂದು ದೊಡ್ಡ ಪಾಠ. ಆಸ್ಪತ್ರೆಯ ಚಿಕಿತ್ಸೆಯ ನಡುವೆಯೂ ಪಠ್ಯಪುಸ್ತಕಗಳನ್ನು ಕೈ ಬಿಡದ ಈಕೆಯ ಸಾಧನೆಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೆಜಿಎಫ್&zwnj;ನ ಈ ಪ್ರತಿಭೆ ಆದಷ್ಟು ಬೇಗ ಗುಣಮುಖಳಾಗಿ ತನ್ನ ಮುಂದಿನ ಶಿಕ್ಷಣವನ್ನು ಮುಂದುವರಿಸಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.&lt;/p&gt;]]></content:encoded>
            <category>kolar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/kolar-kgf-student-kusuma-sslc-result-success-story-on-stretcher-sat-92rgqk4"/>
        </item>
        <item>
            <title><![CDATA[ಸಡಗರ ಸಂಭ್ರಮದಿಂದ ನಡೆದ ಐತಿಹಾಸಿಕ ಬೇತಮಂಗಲದ ಒನಕೆ ಕರಗ]]></title>
            <link>https://kannada.asianetnews.com/karnataka-districts/the-historic-betamangala-festival-onake-karaga-was-celebrated-with-great-enthusiasm-kolar-mrq/articleshow-flhgc0z</link>
            <guid isPermaLink="true">https://kannada.asianetnews.com/karnataka-districts/the-historic-betamangala-festival-onake-karaga-was-celebrated-with-great-enthusiasm-kolar-mrq/articleshow-flhgc0z</guid>
            <pubDate>Wed, 01 Apr 2026 11:38:13 +0530</pubDate>
            <description><![CDATA[&lt;p&gt;ಕೋಲಾರದ ಬೇತಮಂಗಲದಲ್ಲಿ 116ನೇ ವರ್ಷದ ಐತಿಹಾಸಿಕ ಒನಕೆ ಕರಗವು ಸಡಗರದಿಂದ ಜರುಗಿತು. ಇದರೊಂದಿಗೆ, ದಾವಣಗೆರೆಯ ಹೆಮ್ಮನಬೇತೂರಿನಲ್ಲಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ ಮತ್ತು ವೇಮಗಲ್&zwnj;ನಲ್ಲಿ ದೊಡ್ಡ ದ್ಯಾವರ ಜಾತ್ರೆಯು ಭಕ್ತಿಭಾವದಿಂದ ನೆರವೇರಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn3tcjm08d2kk6xvef6t5p28,imgname-onake-karaaga-1775023573632.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ:&lt;/strong&gt; ಬೇತಮಂಗಲದ ಐತಿಹಾಸಿಕ ಪ್ರಸಿದ್ಧ 116ನೇ ವರ್ಷದ ಕರಗ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು, ವಸಂತ್ಯುತ್ಸವದ ಪ್ರಯುಕ್ತ ನಡೆದ &lsquo;ಒನಕೆ ಕರಗ&rsquo; ಪ್ರದರ್ಶನವು ನೋಡುಗರ ಕಣ್ಮನ ಸೆಳೆಯಿತು.&lt;/p&gt;&lt;p&gt;ಕರಗ ಪೂಜಾರಿ ಕೃಷ್ಣಮೂರ್ತಿ ತಲೆಯ ಮೇಲೆ ಒನಕೆ ಕರಗ ಹೊತ್ತು, ತಮಟೆ ಹಾಗೂ ವಾದ್ಯಗೋಷ್ಠಿಗಳ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು. ಅತ್ಯಂತ ಸಮತೋಲನದಿಂದ ಪ್ರದರ್ಶಿಸಿದ ನೃತ್ಯವು ನೆರೆದಿದ್ದ ಸಾವಿರಾರು ಭಕ್ತರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಕರಗ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಪೋತಲರಾಜು ಗಾವು ಸೇವೆ ನೆರವೇರಿತು.&lt;/p&gt;&lt;p&gt;ಧ್ವಜಾರೋಹಣದ ಮೂಲಕ ವಿಧ್ಯುಕ್ತವಾಗಿ ಆರಂಭಗೊಂಡಿದ್ದ ಮಹೋತ್ಸವವು ಹಸಿ ಕರಗ, ದೀಪೋತ್ಸವ ಹಾಗೂ ಹೂವಿನ ಕರಗದಂತಹ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮ ಮೂಲಕ ಸಾಗಿ ಬಂದು ನಡೆದ ವಸಂತೋತ್ಸವದೊಂದಿಗೆ ಕರಗ ಮಹೋತ್ಸವ ಮಕ್ತಾಯಗೊಂಡಿತು.&lt;/p&gt;&lt;h2&gt;&lt;strong&gt;ಏ.2ರಂದು ಶ್ರೀ ಮರುಳಸಿದ್ದೇಶ್ವರ ಸ್ವಾಮಿ ದೊಡ್ಡ ರಥೋತ್ಸವ&lt;/strong&gt;&lt;/h2&gt;&lt;p&gt;ದಾವಣಗೆರೆ: ತಾಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ಏ.2ರಂದು ಸಂಜೆ 6 ಗಂಟೆಗೆ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ದೊಡ್ಡ ರಥೋತ್ಸವ ಅಪಾರ ಭಕ್ತರ ಸಮ್ಮುಖ ನೆರವೇರಲಿದೆ ಎಂದು ಶ್ರೀ ಮರುಳಸಿದ್ದೇಶ್ವರ ಸ್ವಾಮಿ ದೇವಸ್ಥಾನ ಆಡಳಿತ ಮಂಡಳಿ ಧರ್ಮದರ್ಶಿ ಗೌಡರ ಬಸವರಾಜ್ ತಿಳಿಸಿದ್ದಾರೆ.&lt;/p&gt;&lt;p&gt;ಏ.1ರಂದು ಬೆಳಗ್ಗೆ 8 ಗಂಟೆಗೆ ರಥೋತ್ಸವದ ಕಾಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಕಂಕಣಧಾರಣೆ ನೆರವೇರಲಿದೆ. ರಾತ್ರಿ 9 ಗಂಟೆಗೆ ಸ್ವಾಮಿ ಸನ್ನಿಧಿಯಲ್ಲಿ ಸಣ್ಣ ರಥೋತ್ಸವ, ಏ.2ರಂದು ಸಂಜೆ 6 ಗಂಟೆಗೆ ದೊಡ್ಡ ರಥೋತ್ಸವ ನೆರವೇರಲಿದೆ. ಏ.3ರಂದು ಸಂಜೆ 4 ಗಂಟೆಗೆ ಬೆಲ್ಲದ ಬಂಡಿ ಉತ್ಸವ, ಏ.4ರಂದು ಬೆಳಗ್ಗೆ 8 ಗಂಟೆಗೆ ಓಕಳಿ ಕಾಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಭರತ್&lt;/strong&gt;&lt;/p&gt;&lt;h3&gt;&lt;strong&gt;ವೇಮಗಲ್&zwnj;ನಲ್ಲಿ ದೊಡ್ಡ ದ್ಯಾವರ ಜಾತ್ರೆ ಸಂಭ್ರಮ&lt;/strong&gt;&lt;/h3&gt;&lt;p&gt;ಕೋಲಾರ ತಾಲೂಕಿನ ವೇಮಗಲ್&zwnj;ನಲ್ಲಿ ಕುರುಬ ಸಮುದಾಯದ ಆರಾಧ್ಯ ದೈವವಾದ ದೊಡ್ಡ ದ್ಯಾವರ ಜಾತ್ರೆ ಭಕ್ತಿಭಾವದಿಂದ ಹಾಗೂ ವೈಭವದಿಂದ ನೆರವೇರಿತು. ಶ್ರೀ ಬೀರೇಶ್ವರ, ಶ್ರೀ ಸಿದ್ದೇದೇವರು, ಶ್ರೀ ಭತ್ತೇಶ್ವರ, ಶ್ರೀ ಬೆಳ್ಳೂರು ಬೇರೆಶ್ವರ, ಶ್ರೀ ಬಿಡದೀಶ್ವರಸ್ವಾಮಿ ದೇವಾಲಯದಲ್ಲಿ ಮನೆ ದೇವರ ದೊಡ್ಡಜಾತ್ರೆ ಭಾನುವಾರ ಆರಂಭಗೊಂಡಿತ್ತು. ದೊಡ್ಡ ಜಾತ್ರೆಯ ಕೇಂದ್ರಬಿಂದುವಾದ ಬಸವ ಸಮೇತ ಗುರುಗಳನ್ನು ಆಹ್ವಾನಿಸುವ ಕಾರ್ಯ ನಡೆದು ಸಂಜೆ ಗಂಗಾಪೂಜೆ, ನವಗ್ರಹ ಪೂಜೆ ನೆರವೇರಿತು. ಜಾತ್ರೆಯ ಅಂಗವಾಗಿ ಸೋಮವಾರ ಬೆಳಗ್ಗೆ ನಾಗದೇವತೆಗಳಿಗೆ ತನಿ ಎರೆಯುವ ಕಾರ್ಯ, ಮನೆತನದ ಹಿರಿಯರಿಗೆ ಬಟ್ಟೆ ಇಡುವುದು, ವೀರಗಾರರ ಪೂಜೆ, ದೇವರಿಗೆ ರುದ್ರಾಭಿಷೇಕ ನಡೆಯಿತು.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಕಾಲ್ನಡಿಗೆ ಮೂಲಕ ತಿರುಮಲಕ್ಕೆ ಬರುವ ಭಕ್ತಾದಿಗಳಿಗೆ ಸಂತಸದ ಸುದ್ದಿ; ಇನ್ಮುಂದೆ ಇರಲ್ಲ ಜೀವ ಭಯ&lt;/strong&gt;&lt;/p&gt;]]></content:encoded>
            <category>kolar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/the-historic-betamangala-festival-onake-karaga-was-celebrated-with-great-enthusiasm-kolar-mrq/articleshow-flhgc0z"/>
        </item>
        <item>
            <title><![CDATA[ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡಲಿ: ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ]]></title>
            <link>https://kannada.asianetnews.com/politics/basanagouda-patil-yatnal-muslim-reservation-row-karnataka-politics-gvd/articleshow-gkbf4hh</link>
            <guid isPermaLink="true">https://kannada.asianetnews.com/politics/basanagouda-patil-yatnal-muslim-reservation-row-karnataka-politics-gvd/articleshow-gkbf4hh</guid>
            <pubDate>Sat, 28 Mar 2026 22:29:01 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದನ್ನು ದಲಿತರು, ಹಿಂದುಳಿದ ವರ್ಗಕ್ಕೆ ಕೊಡಲಿ. ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kj4nkrdvr7qnva2vvbe0j7w9,imgname-br-patil-yatnal--2--1771830895035.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ (ಮಾ.28): &lt;/strong&gt;ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದನ್ನು ದಲಿತರು, ಹಿಂದುಳಿದ ವರ್ಗಕ್ಕೆ ಕೊಡಲಿ. ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.&lt;/p&gt;&lt;p&gt;ನಗರದಲ್ಲಿ ಶ್ರೀರಾಮಸೇನೆ ಸಂಘಟನೆ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಸ್ಲಿಂ ಮೀಸಲಾತಿ ರದ್ದುಮಾಡಿ ಹಿಂದೂಗಳಿಗೆ ಹಂಚಬೇಕು. ರಂಜಾನ್ ವೇಳೆ ಎಲ್ಲಾದರೂ ಕಲ್ಲು ಹಾಕಿದ್ದಾರಾ. ಗಣೇಶ ಹಬ್ಬದ ವೇಳೆ ಮಾತ್ರ ಕಲ್ಲು ತೂರಾಟ ಯಾಕೆ. ರಾಮನವಮಿ ವೇಳೆ ಯಾಕೆ ಇವರಿಗೆ ಉರಿಯುತ್ತೆ, ಹಿಂದೂಗಳು ಪ್ರತಿಯೊಂದಕ್ಕೂ ಅನುಮತಿ ಪಡೆಯಬೇಕು, ಆದರೆ ಮುಸ್ಮಿಮರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ. ರಾಜ್ಯದಲ್ಲಿ ಮುಂದೆ ಹಿಂದೂಪರ ಸರ್ಕಾರ ಅಧಿಕಾರಕ್ಕೆ ಬರಬೇಕು, ನಾಟಕ ಆಡೋರು ಬೇಡ ಎಂದು ಭವಿಷ್ಯ ಎಂದು ಹೇಳಿದರು.&lt;/p&gt;&lt;p&gt;ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿಯಾದರೆ ಖಂಡಿತ ಅಧಿಕಾರಕ್ಕೆ ಬರ್ತಾರೆ. ಮೇನಲ್ಲಿ ಚಿತ್ರದುರ್ಗದಲ್ಲಿ ಜಾಗೃತ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಪಾಕಿಸ್ತಾನ ಮಾದರಿ ಸರ್ಕಾರವಿದೆ. ಬರೀ ಅಲ್ಪಸಂಖ್ಯತರ ಪರವಾಗಿದೆ. ರಾಜ್ಯ ಬಜೆಟ್&zwnj;ನಲ್ಲಿ ದಲಿತರು, ಕುರುಬರು ಸೇರಿ ಯಾವುದೇ ಸಮಾಜಕ್ಕೂ ಅನುದಾನ ನೀಡಿಲ್ಲ ಎಂದು ಅವರು ಟೀಕಿಸಿದರು. ಡಿ.ಕೆ. ಶಿವಕುಮಾರ್ ಸಿಎಂ ಆಗಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಶಾಸಕರನ್ನು ಆ ಸಂಬಂಧ ಭೇಟಿಯಾಗಿದ್ದಾರೆ. ಆದರೆ ಅದಕ್ಕೆ ನರೇಂದ್ರ ಮೋದಿ ಒಪ್ಪಿಲ್ಲ. ಅದಕ್ಕಾಗಿ ಇನ್ನೂ ಡಿ.ಕೆ. ಸುರೇಶ್&zwnj; ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ನಾಚಿಕೆಗೇಡಿನ ಸಂಗತಿ&lt;/strong&gt;&lt;/h2&gt;&lt;p&gt;ಬಿಜೆಪಿ ನಮ್ಮನ್ನು ಬೆಳೆಸಿದ ಪಕ್ಷ. ನಾನು ಬಿಎಸ್&zwnj;ವೈ ರೀತಿ ಪಕ್ಷಕ್ಕೆ ಮರು ಸೇರ್ಪಡೆ ಆಗೋಲ್ಲ ಎಂದಿದ್ದರು, ನಾನು ಹಾಗೇ ಎಲ್ಲಾ ಹೇಳೊಕಾಗಲ್ಲ. ಉಪ್ಪು ತಿಂದಿದ್ದು ಬಿಜೆಪಿಯಿಂದ. ನಮಗೆಲ್ಲಾ ಐಪಿಎಲ್ ಟಿಕೆಟ್ ಬೇಕು ಎಂದು ಕೇಳುತ್ತಾರೆ ಎಂದರೆ ಎಷ್ಟೊಂದು ನಾಚಿಕೆಗೇಡಿನ ಶಾಸಕರಿದ್ದಾರೆ ನೋಡಿ. ರಾಜ್ಯದಲ್ಲಿ ಆಯಾ ಕ್ಷೇತ್ರದ ಸಮಸ್ಯೆಗಳು, ನೀರಾವರಿ ಯೋಜನೆ, ಕೈಗಾರಿಕೆ ಬಗ್ಗೆ ಚರ್ಚೆಯಾಗಬೇಕು. ಅದು ಬಿಟ್ಟು ಐಪಿಎಲ್&zwnj; ಟಿಕೆಟ್&zwnj; ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದರಿಂದ ಶಾಸಕರ ಘನತೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.&lt;/p&gt;]]></content:encoded>
            <category>kolar</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/basanagouda-patil-yatnal-muslim-reservation-row-karnataka-politics-gvd/articleshow-gkbf4hh"/>
        </item>
        <item>
            <title><![CDATA[ಆಂಧ್ರದ ಕುಪ್ಪಂನಿಂದ ಬೆಂಗಳೂರಿಗೆ ಹೊಸ ಮಾರ್ಗ; ಬಂಗಾರಪೇಟೆ ರೈತರ ಬದುಕಿನಲ್ಲಿ ಬಿರುಗಾಳಿ?]]></title>
            <link>https://kannada.asianetnews.com/karnataka-districts/kolar-highway-connecting-bangarapete-from-kuppam-in-andhra-pradesh-to-bengaluru-via-the-hosur-highway-road-mrq/articleshow-gnxwszx</link>
            <guid isPermaLink="true">https://kannada.asianetnews.com/karnataka-districts/kolar-highway-connecting-bangarapete-from-kuppam-in-andhra-pradesh-to-bengaluru-via-the-hosur-highway-road-mrq/articleshow-gnxwszx</guid>
            <pubDate>Sun, 24 May 2026 15:24:38 +0530</pubDate>
            <description><![CDATA[ಆಂಧ್ರದ ಕುಪ್ಪಂನಿಂದ ಬೆಂಗಳೂರಿಗೆ ಬಂಗಾರಪೇಟೆ ಮೂಲಕ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಿಂದಾಗಿ ಬಂಗಾರಪೇಟೆ ತಾಲೂಕಿನ 17 ಗ್ರಾಮಗಳ ರೈತರು ತಮ್ಮ ಕೃಷಿ ಜಮೀನುಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kscp83cndt07799n9jc66cvj,imgname-nitin-gadkari--1--1779616189845.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೋಲಾರ: ಬಂಗಾರಪೇಟೆ ತಾಲೂಕಿನ ಗಡಿಭಾಗಕ್ಕೆ ಅಂಟಿಕೊಂಡಿರುವ ಆಂಧ್ರದ ಕುಪ್ಪಂನಿಂದ ಬಂಗಾರಪೇಟೆ ಮಾರ್ಗ ಹೊಸೂರು ಹೈವೇ ರಸ್ತೆಯ ಮೂಲಕ ಬೆಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು ಈಗಾಗಲೇ ಅದಕ್ಕೆ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲು ಮುಂದಾಗಿದ್ದು, ರಸ್ತೆಗೆ ಜಮೀನುಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿ ಅನ್ನದಾತರಿದ್ದಾರೆ.&lt;/p&gt;&lt;p&gt;ಈಗಾಗಲೇ ಬೆಂಗಳೂರಿನಿಂದ ಚೆನ್ನೈಗೆ ಎಕ್ಸ್&zwnj;ಪ್ರೆಸ್ ವೇ ರಸ್ತೆ ನಿರ್ಮಾಣವಾಗಿದೆ. ಇದರಿಂದ ಎರಡೂ ನಗರಗಳ ನಡುವೆ ಸಂಚಾರ ಸುಗಮವಾಗಿದೆ ಹಾಗೂ ಸಮಯ ಸಹ ಉಳಿಯಲಿದೆ. ಅದೇ ರೀತಿ ಪಕ್ಕದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರತಿನಿಧಿಸಿರುವ ಕುಪ್ಪಂ ಕ್ಷೇತ್ರದಿಂದ ಬದುಕು ಕಟ್ಟಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ಬಂದು ಹೋಗುವರು ಹಾಗೂ ವ್ಯಾಪಾರ ದೃಷ್ಟಿಯಿಂದಲೂ ನೂರಾರು ವ್ಯಾಪಾರಿಗಳು ಪ್ರಯಾಣಿಸುವರು.&lt;/p&gt;&lt;h2&gt;&lt;strong&gt;ಕೇಂದ್ರದ ಮುಂದೆ ಪ್ರಸ್ತಾವನೆ ಸಲ್ಲಿಕೆ&lt;/strong&gt;&lt;/h2&gt;&lt;p&gt;ಅವರು ರಸ್ತೆ ಮೂಲಕ ಬೆಂಗಳೂರಿಗೆ ಬರಲು ತಮಿಳುನಾಡಿನ ಹೊಸೂರು ಮೂಲಕ ಇಲ್ಲವೇ ಕೆಜಿಎಫ್, ಬಂಗಾರಪೇಟೆ ಮೂಲಕ ಹೋಗಬೇಕು. ಇದು ತುಂಬಾ ದೂರವಾಗಿರುವುದರಿಂದ ತಮ್ಮ ಕ್ಷೇತ್ರದ ಜನರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಹಾಗೂ ವಾಣಿಜ್ಯ ಚಟುವಟಿಕೆ ಹೆಚ್ಚಿಸಲು ಚಂದ್ರಬಾಬು ನಾಯ್ಡು ಈ ಹೊಸ ರಾಷ್ಟ್ರೀಯ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ.&lt;/p&gt;&lt;p&gt;ಅಲ್ಲದೆ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರದದೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಪ್ರಧಾನಿ ಮೋದಿ ನಾಯ್ಡು ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದೆ. ಅದರಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಾಲ್ಕು ಪಥಗಳ ರಸ್ತೆ ನಿರ್ಮಾಣಕ್ಕೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ನೀಲಿ ನಕ್ಷೆ ಸಿದ್ಧಪಡಿಸಲು ಸೂಚಿಸಿದೆ. ಆಂದ್ರದ ಐಟಿ ಬಿಟಿ ಸಚಿವ ಲೋಕೇಶ್&zwnj; ಸಹ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಯೋಜನೆಗಾಗಿ ೩ ಸಾವಿರ ಕೋಟಿಗೆ ಚರ್ಚಿಸಿದಾರೆ. ಅದರಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ಸಭೆಯನ್ನು ಎರಡು ಬಾರಿ ಕರೆಯಲಾಗಿದೆ. ಏಪ್ರಿಲ್ 4ರಂದು ಸಭೆ ಕರೆಯಲಾಗಿತ್ತು, ಆದರೆ ಅಂದಿನ ಸಭೆಗೆ ಕೆಲ ಅಧಿಕಾರಿಗಳು ಗೈರಾಗಿದ್ದರಿಂದ ಮೇ 5ರಂದು ಮತ್ತೆ ಸಭೆ ಕರೆದು ಚರ್ಚಿಸಲಾಗಿದೆ.&lt;/p&gt;&lt;h3&gt;&lt;strong&gt;17 ಗ್ರಾಮದ ರೈತರು&lt;/strong&gt;&lt;/h3&gt;&lt;p&gt;ಕುಪ್ಪಂನಿಂದ ತಾಲೂಕಿನ ಮೂಲಕ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂತಸದ ಸುದ್ದಿ. ಆದರೆ ಈ ರಸ್ತೆ ಅನೇಕ ರೈತರು ತಲ ತಲಾಂತರದಿಂದ ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಅನ್ನದಾತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳಬೇಕಾದಿತು. ಇದು ಅನೇಕ ರೈತರಿಗೆ ಆತಂಕ ಮೂಡಿಸಿದೆ. ಈಗಾಗಲೇ ಕುಪ್ಪಂನಿಂದ ದೋಣಿಮಡಗು ಗ್ರಾಪಂ ಮೂಲಕ ಮಾಲೂರು ತಾಲೂಕು ಮೂಲಕ ಹೊಸೂರು ಹೈ ವೇ ರಸ್ತೆ ಮೂಲಕ ಬೆಂಗಳೂರು ತಲುಪುವಂತೆ ಯೋಜನೆ ರೂಪಿಸಲಾಗಿದೆ. ಈ ರಸ್ತೆಗೆ ಕಾಮಸಮುದ್ರ ಹಾಗೂ ಬೂದಿಕೋಟೆ ಹೋಬಳಿಯ 17 ಗ್ರಾಮಗಳ ರೈತರು ತಮ್ಮ ಜಮೀನುಗಳನ್ನು ರಸ್ತೆಗೆ ಕಳೆದುಕೊಳ್ಳುವಂತಾಗಿದೆ.&lt;/p&gt;&lt;p&gt;ದೋಣಿಮಡಗು ಗ್ರಾಪಂ, ತನಿಮಡಗು, ಬತ್ತಲಾಯೂರು, ಗುಂಡಾರ್ಲಹಳ್ಳಿ, ಬುವನಹಳ್ಳಿ, ಚಿನ್ನಕಾಮನಹಳ್ಳಿ, ತಪಲ್ಲನಹಳ್ಳಿ ಗ್ರಾಪಂ ಕಳವಂಚಿ, ಮಿಟ್ಟಹಳ್ಳಿ, ಬಂದಾರ್ಲಹಳ್ಳಿ, ಕೀರಮಂದೆ, ಬೂದಿಕೋಟೆ ಹೋಬಳಿಯ ಬಲಮಂದೆ ಕದಿರೇನಹಳ್ಳಿ, ಗಂದೋಡಿತಿಮ್ಮನಹಳ್ಳಿ, ನಾಗೇನಹಳ್ಳಿ, ಗುಲ್ಲಹಳ್ಳಿ, ಗೊಡಗುಮಂದೆ, ಬೊಪ್ಪನಹಳ್ಳಿ ಹಾಗೂ ಪಾತರಾಮಗುಳ್ಳಿ ಗ್ರಾಮಗಳ ಮೂಲಕ ನಾಲ್ಕು ಪಥಗಳ ರಸ್ತೆ ನಿರ್ಮಾಣವಾಗಲಿದೆ ಎಂದು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಗುರುತಿಸಿದೆ.&lt;/p&gt;&lt;h3&gt;&lt;strong&gt;ನಾಲ್ಕು ಪಥಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ&lt;/strong&gt;&lt;/h3&gt;&lt;p&gt;ಆದರೆ ತಮ್ಮ ಗ್ರಾಮಗಳ ಮೂಲಕ ಆಂದ್ರದ ಕುಪ್ಪಂನಿಂದ ಬೆಂಗಳೂರಿಗೆ ನಾಲ್ಕು ಪಥಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ ಎಂಬುದು ಸದ್ಯಕ್ಕೆ ರೈತರಿಗೆ ಇನ್ನೂ ತಿಳಿದಿಲ್ಲ. ಈಗಾಲೇ ಚೆನ್ನೈ ಎಕ್ಸ್&zwnj;ಪ್ರೆಸ್ ವೇ ರಸ್ತೆ ನಿರ್ಮಾಣದ ವೇಳೆ ಜಮೀನು ನೀಡಲು ರೈತರು ಹಿಂದೆ ಮುಂದೆ ನೋಡಿದರೂ ಕೊನೆಗೆ ಸರ್ಕಾರ ಬಲವಂತದಿಂದ ಭೂಸ್ವಾಧೀನ ಮಾಡಿಕೊಂಡು ರಸ್ತೆ ನಿರ್ಮಾಣ ಮಾಡಿದೆ. ಈಗಲೂ ಸಹ ರೈತರು ವಿರೋಧವ್ಯಕ್ತಪಡಿಸಿದರೂ ಭೂಸ್ವಾಧೀನ ಮಾಡಿಕೊಂಡು ರಸ್ತೆ ಸಿದ್ಧವಾಗಲಿದೆ. ಆದರೆ ಜಮೀನು ಕಳೆದುಕೊಳ್ಳುವ ರೈತರು ಸೂಕ್ತ ಪರಿಹಾರಕ್ಕಾಗಿ ಹೋರಾಟ ಮಾಡಬೇಕಷ್ಟೇ.&lt;/p&gt;]]></content:encoded>
            <category>kolar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kolar-highway-connecting-bangarapete-from-kuppam-in-andhra-pradesh-to-bengaluru-via-the-hosur-highway-road-mrq/articleshow-gnxwszx"/>
        </item>
        <item>
            <title><![CDATA[ಬಂಗಾರ ಮೈಮೇಲಿದ್ರೆ ಜೀವಕ್ಕೆ ಕುತ್ತು: ಚಿನ್ನಕ್ಕಾಗಿ ವೃದ್ಧೆಯ ಕಿವಿಯನ್ನೆ ಕತ್ತರಿಸಿದ ಕಳ್ಳರ ಗ್ಯಾಂಗ್]]></title>
            <link>https://kannada.asianetnews.com/gallery/state/thieves-cut-off-elderly-woman-ear-for-gold-earrings-in-hoovalli-srinivasapura-gplm4b6</link>
            <guid isPermaLink="true">https://kannada.asianetnews.com/gallery/state/thieves-cut-off-elderly-woman-ear-for-gold-earrings-in-hoovalli-srinivasapura-gplm4b6</guid>
            <pubDate>Fri, 06 Mar 2026 20:30:32 +0530</pubDate>
            <description><![CDATA[&lt;p&gt;ಚಿನ್ನದ ಆಭರಣಕ್ಕಾಗಿ ದುಷ್ಕರ್ಮಿಗಳು ಒಂಟಿ ವೃದ್ಧೆಯ ಮೇಲೆ ಹಲ್ಲೆ ಮಾಡಿ ಆಕೆಯ ಚಿನ್ನದ ಬೆಂಡೋಲೆಗಾಗಿ ಕಿವಿಯನ್ನೇ ಕತ್ತರಿಸಿದಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ನಡೆದಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk1sg4wxpcn673436bbn2m8s,imgname-thieves-cut-off-old-woman-s-ear-for-gold--3--1772808049565.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿನ್ನದ ಆಭರಣಕ್ಕಾಗಿ ದುಷ್ಕರ್ಮಿಗಳು ಒಂಟಿ ವೃದ್ಧೆಯ ಮೇಲೆ ಹಲ್ಲೆ ಮಾಡಿ ಆಕೆಯ ಚಿನ್ನದ ಬೆಂಡೋಲೆಗಾಗಿ ಕಿವಿಯನ್ನೇ ಕತ್ತರಿಸಿದಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ನಡೆದಿದೆ.&amp;nbsp;&lt;/p&gt;&lt;img&gt;&lt;p&gt;ಕೋಲಾರ : ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಇದರಿಂದಾಗಿ ಈಗ ಚಿನ್ನ ಧರಿಸುವವರ ಸುರಕ್ಷತೆಯ ಬಗ್ಗೆ ಆತಂಕ ಮೂಡಿದೆ. ದುಬಾರಿ ಚಿನ್ನವನ್ನು ಮೈ ಮೇಲೆ ಹಾಕಿ ರಸ್ತೆಯಲ್ಲಿ ನಡೆಯಲು ಸಾಧ್ಯವಾಗದಂತಹ ಘಟನೆಗಳು ಅಲ್ಲಲ್ಲಿ ಕೇಳಿ ಬರುತ್ತಿದೆ. ಹಾಗೆಯೇ ಈಗ ಕೋಲಾರದಲ್ಲಿ ದುಷ್ಕರ್ಮಿಗಳು ಚಿನ್ನದ ಕಿವಿಯೋಲೆ ಧರಿಸಿದ್ದ ವೃದ್ಧೆಯ ಕಿವಿಯನ್ನೇ ಕಿತ್ತೊಯ್ದಿದ್ದಾರೆ.&lt;/p&gt;&lt;img&gt;&lt;p&gt;ಕಿವಿಯೋಲೆಗಾಗಿ ವೃದ್ದೆಯ ಕಿವಿಯನ್ನೆ ಕಳ್ಳರ ಗ್ಯಾಂಗ್ ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ಈ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ರತ್ನಮ್ಮ ಎಂಬ 70 ವರ್ಷದ ವೃದ್ಧೆಯ ಮೇಲೆ ದಾಳಿ ಮಾಡಿದ ಕಳ್ಳರ ಗ್ಯಾಂಗ್ ಅವರ ಕಿವಿಯನ್ನೇ ಕತ್ತರಿಸಿ ಕಿವಿಯೋಲೆ ಹಾಗೂ ಅವರ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ.&lt;/p&gt;&lt;img&gt;&lt;p&gt;ರತ್ನಮ್ಮ ಅವರು ಒಂಟಿ ಮನೆಯಲ್ಲಿ ವಾಸವಾಗಿದ್ದರು. ತಡ ರಾತ್ರಿ ಒಂಟಿ ಮನೆ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳು ಅವರ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮನೆಯಲ್ಲೇ ನಿದ್ದೆಗೆ ಜಾರಿದ ಮಗು : ಕಾಣೆಯಾಗಿದ್ದಾನೆ ಅಂತ ಊರೆಲ್ಲಾ ಹುಡುಕಿ ಬೆಸ್ತು ಬಿದ್ದ ಕುಟುಂಬ&lt;/strong&gt;&lt;/p&gt;&lt;img&gt;&lt;p&gt;ಸುಮಾರು 25 ಗ್ರಾಂ ಚಿನ್ನದ ಸರ ಹಾಗೂ ಕಿವಿಯೋಲೆ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದು, ಕಿವಿಯೋಲೆಗಾಗಿ ಈ ಪಾಪಿಗಳು ವೃದ್ಧೆಯ ಕಿವಿಯನ್ನೇ ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ಸ್ಥಳಕ್ಕೆ ಕೋಲಾರ ಎಸ್ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿದ್ದು, ಕಳ್ಳರ ಗ್ಯಾಂಗ್&zwnj; ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಬಹ್ರೇನ್&zwnj;ನಲ್ಲಿ ಕತಾರ್ ನೌಕಾಪಡೆ ಸಿಬ್ಬಂದಿ ನೆಲೆಸಿದ್ದ ಕಟ್ಟಡಗಳ ಮೇಲೆ ಇರಾನ್ ದಾಳಿ&lt;/p&gt;]]></content:encoded>
            <category>kolar</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/thieves-cut-off-elderly-woman-ear-for-gold-earrings-in-hoovalli-srinivasapura-gplm4b6"/>
        </item>
        <item>
            <title><![CDATA[ಕೇ...ಹೂ...! ನಾನು ಎಸ್‌ಎಸ್‌ಎಲ್‌ಸಿ ಪಾಸಾದೆ ಎಂದು ಬಾವಿಯೊಳಗೆ ಡೈ ಹೊಡೆದ; ಆದ್ರೆ ಮೇಲೆ ಬರಲೇ ಇಲ್ಲ!]]></title>
            <link>https://kannada.asianetnews.com/karnataka-districts/kolar-mulbagal-sslc-student-kiran-drowns-in-well-after-results-sat/articleshow-nkyf69x</link>
            <guid isPermaLink="true">https://kannada.asianetnews.com/karnataka-districts/kolar-mulbagal-sslc-student-kiran-drowns-in-well-after-results-sat/articleshow-nkyf69x</guid>
            <pubDate>Thu, 23 Apr 2026 16:37:51 +0530</pubDate>
            <description><![CDATA[ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾದ ಖುಷಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸೊಣ್ಣವಾಡಿ ಗ್ರಾಮದ ಕಿರಣ್ (15) ಮೃತಪಟ್ಟ ದುರ್ದೈವಿಯಾಗಿದ್ದು, ಈ ಘಟನೆಯಿಂದ ಫಲಿತಾಂಶದ ಸಂಭ್ರಮವು ಶೋಕವಾಗಿ ಮಾರ್ಪಟ್ಟಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpx07mwjjprj3gnk289yjp0v,imgname-kolar-sslc-student-1776942306193.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ (ಏ.23): ರಾ&lt;/strong&gt;ಜ್ಯಾದ್ಯಂತ ಎಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶದ ಸಂಭ್ರಮ ಮನೆ ಮಾಡಿದೆ. ಪಾಸಾದ ವಿದ್ಯಾರ್ಥಿಗಳು ಸಿಹಿ ಹಂಚಿ ಸಂಭ್ರಮಿಸುತ್ತಿದ್ದರೆ, ಇತ್ತ ಕೋಲಾರ ಜಿಲ್ಲೆಯಲ್ಲಿ ಮಾತ್ರ ಫಲಿತಾಂಶದ ಖುಷಿ ಕ್ಷಣಾರ್ಧದಲ್ಲಿ ಶೋಕ ಸಾಗರವಾಗಿ ಮಾರ್ಪಟ್ಟಿದೆ. ಪರೀಕ್ಷೆಯಲ್ಲಿ ಉತ್ತೀರ್ಣನಾದ ಸಂತೋಷದಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮುಳಬಾಗಿಲು ತಾಲ್ಲೂಕಿನಲ್ಲಿ ಸಂಭವಿಸಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಸೊಣ್ಣವಾಡಿ ಗ್ರಾಮದ ನಿವಾಸಿ ಕಿರಣ್ (15) ಮೃತಪಟ್ಟ ದುರ್ದೈವಿ. ಇಂದು ಎಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಿರಣ್ ತನ್ನ ಫಲಿತಾಂಶವನ್ನು ವೀಕ್ಷಿಸಿದ್ದನು. ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರಿಂದ ಆತನಿಗೆ ಅಪಾರ ಸಂತೋಷವಾಗಿತ್ತು. ಇದೇ ಖುಷಿಯಲ್ಲಿ ತನ್ನ ಸ್ನೇಹಿತರೊಂದಿಗೆ ಸೇರಿ ಗ್ರಾಮದ ಸಮೀಪವಿರುವ ಬಾವಿಯಲ್ಲಿ ಈಜಲು ತೆರಳಿದ್ದನು.&lt;/p&gt;&lt;h2&gt;&lt;strong&gt;ಸಂಭ್ರಮದ ನಡುವೆ ಸಂಭವಿಸಿದ ದುರಂತ:&lt;/strong&gt;&lt;/h2&gt;&lt;p&gt;ಸ್ನೇಹಿತರೊಂದಿಗೆ ಬಾವಿಗೆ ಇಳಿದ ಕಿರಣ್&zwnj;ಗೆ ಬಾವಿಯ ಆಳದ ಅರಿವಾಗಿಲ್ಲ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಆಳಕ್ಕೆ ಸಿಲುಕಿದ ಕಿರಣ್, ಮೇಲೆ ಬರಲಾರದೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಜೊತೆಯಲ್ಲಿದ್ದ ಸ್ನೇಹಿತರು ಗಾಬರಿಯಿಂದ ಕೂಗಾಡಿದಾಗ ಸ್ಥಳೀಯರು ಓಡಿ ಬಂದಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾವಿಯಲ್ಲಿ ಕಿರಣ್ ಶವಕ್ಕಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಫಲಿತಾಂಶದ ಅಂಕಿ-ಅಂಶ:&lt;/strong&gt;&lt;/h3&gt;&lt;p&gt;ಮೃತ ಕಿರಣ್ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ಉತ್ತಮ ಪ್ರಯತ್ನ ಮಾಡಿದ್ದನು. ಆತ 625 ಒಟ್ಟು ಅಂಕಗಳಿಗೆ 239 ಅಂಕಗಳನ್ನು ಗಳಿಸಿ, ಶೇಕಡಾ 38.24 ರಷ್ಟು ಅಂಕಗಳೊಂದಿಗೆ ಉತ್ತೀರ್ಣನಾಗಿದ್ದನು. ಮನೆಯಲ್ಲಿ ಮಗ ಪಾಸಾದ ಬಗ್ಗೆ ಹೆತ್ತವರು ಖುಷಿ ಪಡುವ ಮೊದಲೇ ಈ ದುರಂತ ಸಂಭವಿಸಿರುವುದು ಇಡೀ ಗ್ರಾಮವನ್ನೇ ಕಣ್ಣೀರಲ್ಲಿ ಮುಳುಗಿಸಿದೆ.&lt;/p&gt;]]></content:encoded>
            <category>kolar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/kolar-mulbagal-sslc-student-kiran-drowns-in-well-after-results-sat/articleshow-nkyf69x"/>
        </item>
        <item>
            <title><![CDATA[Karnataka News Live: ಹಾವೇರಿಯಲ್ಲಿ ಗಾಳಿ ಮಳೆಗೆ ಹಾರಿ ಹೋದ ಗುಡಿಸಲು, ಸಂಕಷ್ಟಕ್ಕೆ ಸಿಲುಕಿದ ಬಾಣಂತಿ, ಮಕ್ಕಳು]]></title>
            <link>https://kannada.asianetnews.com/state/karnataka-news-live-14-may-2026-135-live-bullets-used-for-machine-guns-found-in-dasarammala-bangarpet-kolar-mrq/liveblog-updates-ns2i1hx</link>
            <guid isPermaLink="true">https://kannada.asianetnews.com/state/karnataka-news-live-14-may-2026-135-live-bullets-used-for-machine-guns-found-in-dasarammala-bangarpet-kolar-mrq/liveblog-updates-ns2i1hx</guid>
            <pubDate>Thu, 14 May 2026 23:31:34 +0530</pubDate>
            <description><![CDATA[&lt;p&gt;&lt;strong&gt;ಬಂಗಾರಪೇಟೆ (ಕೋಲಾರ):&lt;/strong&gt; ಮಷಿನ್&zwnj; ಗನ್&zwnj;ಗೆ ಬಳಸುವ7.6 ಎಂಎಂನ 135 ಜೀವಂತ ಬುಲೆಟ್&zwnj;ಗಳು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಗ್ರಾಮದ ಸೇತುವೆಯೊಂದರ ಕೆಳಗೆ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 1969ರಲ್ಲಿ ತಯಾರಿಸಲಾಗಿರುವ ಬುಲೆಟ್&zwnj;ಗಳು ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬುಲೆಟ್&zwnj;ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;p&gt;ತಮಿಳುನಾಡಿನ ಗಡಿಯಲ್ಲಿರುವ ದಾಸರಮಲ್ಲ ಗ್ರಾಮದ ಬಳಿಯ ಸೇತುವೆ ಕೆಳಗೆ ಬಳಸಿರುವ ಬುಲೆಟ್&zwnj; (ಡಮ್ಮಿ) ಹಾಗೂ ಬಸಳದೆ ಇರುವ ಬುಲೆಟ್&zwnj;ಗಳನ್ನು ಅನಾಮಿಕರು ಬಿಸಾಡಿ ಹೋಗಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಮಸಮುದ್ರ ಪೊಲೀಸರು ಬುಲೆಟ್&zwnj;ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krkt55abq7jpyc132e08tff2,imgname-rain-hit-1778781427019.png" type="image/jpeg" height="390" width="690"/>
            <category>kolar</category>
            <dc:creator>Asianet News</dc:creator>
            <atom:link href="https://kannada.asianetnews.com/state/karnataka-news-live-14-may-2026-135-live-bullets-used-for-machine-guns-found-in-dasarammala-bangarpet-kolar-mrq/liveblog-updates-ns2i1hx"/>
        </item>
        <item>
            <title><![CDATA[ಅಯ್ಯೋ ದುರ್ವಿಧಿಯೇ.. ಬೇಸಿಗೆ ರಜೆಗೆ ಬಂದಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು!]]></title>
            <link>https://kannada.asianetnews.com/karnataka-districts/kolar-farm-pond-accident-two-brothers-death-gvd/articleshow-ntugoen</link>
            <guid isPermaLink="true">https://kannada.asianetnews.com/karnataka-districts/kolar-farm-pond-accident-two-brothers-death-gvd/articleshow-ntugoen</guid>
            <pubDate>Mon, 25 May 2026 20:39:56 +0530</pubDate>
            <description><![CDATA[&lt;p&gt;ಬೇಸಿಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksftyge5kx0atp26gah1y239,imgname-jkv-1779721781701.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ (ಮೇ.25): &lt;/strong&gt;ಜಿಲ್ಲೆಯಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಬೇಸಿಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.&lt;/p&gt;&lt;p&gt;ಮೃತರನ್ನು 12 ವರ್ಷದ ದೇವಕಿರಣ್ ಹಾಗೂ 9 ವರ್ಷದ ವಿನುತ್ ಎಂದು ಗುರುತಿಸಲಾಗಿದೆ. ಇಬ್ಬರೂ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆ ಹಿನ್ನೆಲೆ ತಾತನ ಮನೆಗೆ ಬಂದಿದ್ದರು. ಆಟವಾಡುವ ವೇಳೆ ಕೃಷಿ ಹೊಂಡದ ಬಳಿ ಕಾಲು ಜಾರಿ ಬಿದ್ದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾಸ್ತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.&lt;/p&gt;&lt;p&gt;ಗಮನಾರ್ಹ ಸಂಗತಿ ಎಂದರೆ, ಕಳೆದ ಕೇವಲ 15 ದಿನಗಳಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರೂ, ಮತ್ತೊಂದು ಅಮಾಯಕ ಜೀವ ಬಲಿಯಾಗಿರುವುದು ಆತಂಕ ಹೆಚ್ಚಿಸಿದೆ.&lt;/p&gt;&lt;h2&gt;&lt;strong&gt;ದುರಂತದ ಬಳಿಕ ಪ್ರಶ್ನೆ ಒಂದೇ&lt;/strong&gt;&lt;/h2&gt;&lt;p&gt;ಕೃಷಿ ಹೊಂಡಗಳ ಸುರಕ್ಷತೆ ಕುರಿತು ಆದೇಶಗಳು ಕಾಗದಕ್ಕೆ ಮಾತ್ರ ಸೀಮಿತವಾಗಿದೆಯೇ? ಅಮಾಯಕ ಮಕ್ಕಳ ಜೀವ ಹೋಗುವ ಮುನ್ನ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಯಾವಾಗ? ಎಂಬ ಪ್ರಶ್ನೆ ಮೂಡಿದೆ.&lt;/p&gt;]]></content:encoded>
            <category>kolar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/kolar-farm-pond-accident-two-brothers-death-gvd/articleshow-ntugoen"/>
        </item>
        <item>
            <title><![CDATA[ಕೋಲಾರ: ಮಲಗಿದ್ದ ಕುರಿಗಳ ಮೇಲೆ ಚಾಕು-ಮಚ್ಚುಗಳಿಂದ ಇರಿದ ದುಷ್ಕರ್ಮಿಗಳು! 50 ಕುರಿಗಳ ಪೈಕಿ 5 ಸಾವು, 18 ಕುರಿಗಳ ಸ್ಥಿತಿ ಗಂಭೀರ!]]></title>
            <link>https://kannada.asianetnews.com/gallery/karnataka-districts/kolar-horror-18-sheep-attacked-with-knives-and-machetes-5-dead-rav-psy2iic</link>
            <guid isPermaLink="true">https://kannada.asianetnews.com/gallery/karnataka-districts/kolar-horror-18-sheep-attacked-with-knives-and-machetes-5-dead-rav-psy2iic</guid>
            <pubDate>Fri, 05 Jun 2026 10:44:40 +0530</pubDate>
            <description><![CDATA[&lt;p&gt;ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಆಘಾತಕಾರಿ, ಅಮಾನವೀಯ ಘಟನೆ ನಡೆದಿದೆ, ರಾತ್ರಿ ಶೆಡ್&zwnj;ನಲ್ಲಿ ಮಲಗಿದ್ದ 50ಕ್ಕು ಹೆಚ್ಚು ಕುರಿಗಳ ಮೇಲೆ ದುಷ್ಮರ್ಮಿಗಳು ಚಾಕು ಮಚ್ಚು ದಾಳಿಸಿದ್ದಾರೆ. ಐದು ಕುರಿಗಳು ನರಳಾಡಿ ಸತ್ತಿವೆ ಉಳಿದ ಕುರಿಗಳು ಸ್ಥಿತಿ ಗಂಭೀರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktb35r2p4bmqf4kfhhsqzm34,imgname-----------------------2026-06-05t101201.014-1780636377174.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಆಘಾತಕಾರಿ, ಅಮಾನವೀಯ ಘಟನೆ ನಡೆದಿದೆ, ರಾತ್ರಿ ಶೆಡ್&zwnj;ನಲ್ಲಿ ಮಲಗಿದ್ದ 50ಕ್ಕು ಹೆಚ್ಚು ಕುರಿಗಳ ಮೇಲೆ ದುಷ್ಮರ್ಮಿಗಳು ಚಾಕು ಮಚ್ಚು ದಾಳಿಸಿದ್ದಾರೆ. ಐದು ಕುರಿಗಳು ನರಳಾಡಿ ಸತ್ತಿವೆ ಉಳಿದ ಕುರಿಗಳು ಸ್ಥಿತಿ ಗಂಭೀರವಾಗಿದೆ.&lt;/p&gt;&lt;img&gt;&lt;p&gt;ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಆಘಾತಕಾರಿ, ಅಮಾನವೀಯ ಘಟನೆ ನಡೆದಿದೆ. ರಾತ್ರಿ ಶೆಡ್ ನಲ್ಲಿ ಮಲಗಿದ್ದ ಕುರಿಗಳ ಮೇಲೆ ಕಿಡಿಗಳು ಚಾಕು ಚೂರಿಗಳಿಂದ ಭೀಕರವಾಗಿ ದಾಳಿ ನಡೆಸಿ ವಿಕೃತಿ ಮರೆದಿದ್ದಾರೆ. ಘಟನೆ ದೃಶ್ಯಗಳು ನೋಡಿದರೆ ಎಂಥವರಿಗೂ ಎದೆ ನಡುಗುತ್ತದೆ.&lt;/p&gt;&lt;img&gt;&lt;p&gt;ದೊಡ್ಡತಿಮ್ಮರಾಯಪ್ಪ ಎಂಬ ಬಡರೈತನಿಗೆ ಸೇರಿದ್ದ ಕುರಿಗಳು. ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದ ಬಡಪಾಯಿ. ಸುಮಾರು 50 ಕುರಿಗಳ ಸಾಕಿದ್ದ ಅವಳಿಗೆ ಹೆಂಚಿನ ಮನೆಯ ಶೆಡ್ ಕಟ್ಟಿದ್ದ. ರಾತ್ರಿ ಆ ಸೆಡ್ ನಲ್ಲಿ ಮಲಗಿದ್ದ ಕುರಿಗಳ ಮೇಲೆ ಕಿಡಿಗೇಡಿಗಳು ಚಾಕು ಚೂರಿಯಿಂದ ರಾತ್ರಿ ದಾಳಿ ನಡೆಸಿದ್ದಾರೆ. ಕುರಿಗಳ ಮೇಲೆ ಮನಬಂದಂತೆ ಇರಿದ್ದಾರೆ. ದಾಳಿಗೊಳಗಾದ ಪೈಕಿ 18 ಕುರಿಗಳ ಪೈಕಿ 5 ಕುರಿಗಳು ರಾತ್ರಿ ನರಳಾಡಿ ಪ್ರಾಣ ಬಿಟ್ಟಿವೆ. ಇನ್ನು ಕೆಲವು ಕುರಿಗಳಿಗೆ ಕತ್ತು ಸೀಳಿ ಬರ್ಬರವಾಗಿ ಹಲ್ಲೆ ನಡೆಸಿದ್ದು ಸಾವಿನ ಸಂಖ್ಯೆ ಹಚ್ಚುವ ಸಾದ್ಯತೆ ಇದೆ. ಈ ದೃಶ್ಯ ಗ್ರಾಮಸ್ಥರನ್ನೇ ಬೆಚ್ಚಿಬಿಳಿಸಿದೆ.&lt;/p&gt;&lt;img&gt;&lt;p&gt;ದುಷ್ಕರ್ಮಿಗಳು ತಡರಾತ್ರಿ ದಾಳಿ ನಡೆಸಿದ್ದರಿಂದ ಯಾರಿಗೂ ಗೊತ್ತಾಗಿಲ್ಲ. ಹೀಗಾಗಿ ರಾತ್ರಿಯೆಲ್ಲ ಕುರಿಗಳು ತೀವ್ರ ರಕ್ತಸ್ರಾವವಾಗಿ ನರಳಾಡಿವೆ. ಬೆಳಗ್ಗೆ ಎಂದಿನಂತೆ ಮಾಲೀಕ ಕೊಟ್ಟಿಗೆಗೆ ಬಂದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಭೀಕರ ದೃಶ್ಯ ಕಂಡು ಮಾಲೀಕ ಆಘಾತಕ್ಕೊಳಗಾಗಿದ್ದಾರೆ. ಗಾಯಗಳಿಂದ ಬಳಲುತ್ತಿರುವ ಕುರಿಗಳು ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ರೈತನ ಕಣ್ಣುಗಳು ನೀರು ನಿರಂತರವಾಗಿ ಸುರಿಯಿತ್ತಿದೆ.&lt;/p&gt;&lt;img&gt;&lt;p&gt;ಗಂಭೀರವಾಗಿ ಗಾಯಗೊಂಡ 18 ಕುರಿಗಳ ಪೈಕಿ ಈಗಾಗಲೇ 5 ಕುರಿಗಳು ಸಾವನ್ನಪ್ಪಿವೆ. ಉಳಿದ 13 ಕುರಿಗಳ ಸ್ಥಿತಿಯೂ ಗಂಭೀರವಾಗಿದ್ದು, ಇನ್ನಷ್ಟು ಕುರಿಗಳು ಸಾವನ್ನಪ್ಪುವ ಆತಂಕ ವ್ಯಕ್ತವಾಗಿದೆ.&lt;/p&gt;&lt;img&gt;&lt;p&gt;ಘಟನಾ ಸ್ಥಳಕ್ಕೆ ಮಾಸ್ತಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂತಹ ಅಮಾನವೀಯ ಕೃತ್ಯ ಎಸಗಿದ ಕಿಡಿಗೇಡಿಗಳು ಯಾರು ಎಂಬುದರ ಬಗ್ಗೆ ತನಿಖೆ ಆರಂಭವಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.&lt;/p&gt;]]></content:encoded>
            <category>kolar</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/kolar-horror-18-sheep-attacked-with-knives-and-machetes-5-dead-rav-psy2iic"/>
        </item>
        <item>
            <title><![CDATA[ರಾಮಲಿಂಗಾ ರೆಡ್ಡಿ, ಮುನಿಯಪ್ಪ ಅಸಮಾಧಾನ ಪಕ್ಷದಲ್ಲೇ..: ಶಾಸಕಿ ರೂಪಕಲಾ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/mla-roopakala-shashidhar-demand-minister-post-for-kolar-gvd/articleshow-qhhgg9k</link>
            <guid isPermaLink="true">https://kannada.asianetnews.com/karnataka-districts/mla-roopakala-shashidhar-demand-minister-post-for-kolar-gvd/articleshow-qhhgg9k</guid>
            <pubDate>Sat, 06 Jun 2026 17:53:04 +0530</pubDate>
            <description><![CDATA[&lt;p&gt;ಸಚಿವ ಸಂಪುಟ ಪುನಾರಚನೆ, ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕೆಜಿಎಫ್ ಶಾಸಕಿಯಾಗಿರುವ ರೂಪಕಲಾ ಶಶಿಧರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktedy0adrwv7eqsk4yef97md,imgname-cg-1780748321101.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ (ಜೂ.06): &lt;/strong&gt;ಸಚಿವ ಸಂಪುಟ ಪುನಾರಚನೆ, ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕೆಜಿಎಫ್ ಶಾಸಕಿಯಾಗಿರುವ ರೂಪಕಲಾ ಶಶಿಧರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.&lt;/p&gt;&lt;p&gt;ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರು ತಮ್ಮ ಖಾತೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರೂಪಕಲಾ, &quot;ಅವರೆಲ್ಲರೂ ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದಲ್ಲಿ ಕರೆದು ಮಾತನಾಡುವ ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಸಂಸ್ಕೃತಿ ಇದೆ. ಪಕ್ಷದ ವರಿಷ್ಠರು ಅವರೊಂದಿಗೆ ಚರ್ಚೆ ನಡೆಸಲಿದ್ದು, ಸರ್ಕಾರಕ್ಕೂ ತನ್ನದೇ ಆದ ಜವಾಬ್ದಾರಿಗಳಿವೆ. ಎಲ್ಲವೂ ಅವರ ಮಟ್ಟದಲ್ಲೇ ಬಗೆಹರಿಯಲಿದೆ&quot; ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿದ ಅವರು, &quot;ಜಿಲ್ಲೆಯ ಅಭಿವೃದ್ಧಿಗೆ ಸಚಿವ ಸ್ಥಾನ ಅಗತ್ಯವಾಗಿದೆ. ಕೋಲಾರ ಜಿಲ್ಲೆಯಲ್ಲಿ ಸಾಕಷ್ಟು ಹಿರಿಯ ಹಾಗೂ ಅನುಭವಿ ನಾಯಕರು ಇದ್ದಾರೆ. ಸರ್ಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು&quot; ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಪಕ್ಷದ ನಿರ್ಧಾರಗಳಿಗೆ ಬದ್ಧರಾಗಿದ್ದೇವೆ&lt;/strong&gt;&lt;/h2&gt;&lt;p&gt;ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೂಪಕಲಾ, &quot;ಪಕ್ಷ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನೂ ಸಮತೋಲನದಿಂದ ಪರಿಗಣಿಸುವ ಪರಂಪರೆ ಇದೆ. ನಾವು ಪಕ್ಷದ ನಿರ್ಧಾರಗಳಿಗೆ ಬದ್ಧರಾಗಿದ್ದೇವೆ&quot; ಎಂದು ತಿಳಿಸಿದರು.&lt;/p&gt;&lt;p&gt;ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ಸಿಗುವ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, &quot;ಪಕ್ಷ ಈಗಾಗಲೇ ನನಗೆ ಕೆಲವು ಜವಾಬ್ದಾರಿಗಳನ್ನು ನೀಡಿದೆ. ಜೊತೆಗೆ ಕ್ಷೇತ್ರದ ಜನರು ಸೇವೆ ಮಾಡುವ ಅವಕಾಶ ನೀಡಿದ್ದಾರೆ. ನನಗೆ ನೀಡಿರುವ ಜವಾಬ್ದಾರಿಗಳನ್ನು ಸೇವಾ ಮನೋಭಾವದಿಂದ ನಿರ್ವಹಿಸುತ್ತಿದ್ದು, ಅದೇ ನನ್ನ ಮೊದಲ ಆದ್ಯತೆ&quot; ಎಂದು ಹೇಳಿದರು.&lt;/p&gt;]]></content:encoded>
            <category>kolar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mla-roopakala-shashidhar-demand-minister-post-for-kolar-gvd/articleshow-qhhgg9k"/>
        </item>
        <item>
            <title><![CDATA[ಸಚಿವ ಸುಧಾಕರ್‌ ಆರೋಗ್ಯ ಬಗ್ಗೆ ವಾಸ್ತವಾಂಶ ಮುಂದಿಡಲಿ: ಎಚ್ಡಿಕೆ]]></title>
            <link>https://kannada.asianetnews.com/state/hd-kumaraswamy-urges-minister-sudhakar-to-put-forth-facts-regarding-his-health-concerns-rav/articleshow-stkdblx</link>
            <guid isPermaLink="true">https://kannada.asianetnews.com/state/hd-kumaraswamy-urges-minister-sudhakar-to-put-forth-facts-regarding-his-health-concerns-rav/articleshow-stkdblx</guid>
            <pubDate>Tue, 28 Apr 2026 05:54:45 +0530</pubDate>
            <description><![CDATA[&lt;p&gt;ಸಚಿವ ಡಿ.ಸುಧಾಕರ್&zwnj; ಅವರ ಆರೋಗ್ಯ ಕುರಿತು ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಪ್ರಶ್ನಿಸುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh4e3cpb1nh2cfx2c6c52gr,imgname-hd-kumaraswamy-1772249091477.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಾಲೂರು (ಏ.28): &lt;/strong&gt;ಸಚಿವ ಡಿ.ಸುಧಾಕರ್&zwnj; ಅವರ ಆರೋಗ್ಯ ಕುರಿತು ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಪ್ರಶ್ನಿಸುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಕೋಲಾರ ಜಿಲ್ಲೆ ಮಾಲೂರಿಗೆ ಸೋಮವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ, &lsquo;ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸುಧಾಕರ್&zwnj; ಆರೋಗ್ಯ ವಿಷಯ ಮುಚ್ಚಿಟ್ರಾ?&rsquo; ಎಂಬ ತಮ್ಮ ಮಾರ್ಮಿಕ ಹೇಳಿಕೆಗೆ ಸಮಜಾಯಿಷಿ ನೀಡಿದರು. ಸಚಿವರ ಆರೋಗ್ಯ ಕುರಿತು ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಕೇಳುತ್ತಿರಲಿಲ್ಲ ಎಂದರು.&lt;/p&gt;&lt;p&gt;ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಎಚ್ಡಿಕೆ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಜೋರಾಗಿ ನಡೆಯುತ್ತಿದೆ. ಮೇಕೆದಾಟು ಯೋಜನೆ ವಿಷಯದಲ್ಲಿ ಸುಪ್ರೀಂಕೋರ್ಟ್&zwnj; ಕೇಂದ್ರದ ಪರವಾಗಿದೆ ಎಂದು ಬಾಲಿಶವಾಗಿ ಮಾತನಾಡುವ ಕಾಂಗ್ರೆಸ್&zwnj;, ಅದಕ್ಕೆ ಅಡ್ಡಿಯಾಗಿರುವ ಅವರ ಮಿತ್ರ ಪಕ್ಷದ ಪರವಾಗಿ ತಮಿಳುನಾಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದೆ. ಚುನಾವಣಾ ಪ್ರಚಾರದಲ್ಲಿ ಯಾಕೆ ಈ ವಿಷಯವನ್ನು ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.&lt;/p&gt;&lt;p&gt;ನೀರು ಪೂರೈಕೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲೆಗೆ 45 ಕೋಟಿ ರು.ಬಿಡುಗಡೆ ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಈ ಹಣ ಯಾರ ಅಕೌಂಟ್&zwnj;ಗೆ ಹೋಗುತ್ತದೆ ಎಂಬುದು ಗೊತ್ತಾಗುವುದಿಲ್ಲ ಎಂದು ದೂರಿದರು.&lt;/p&gt;&lt;p&gt;ಒಳ ಮೀಸಲಾತಿ ವಿಷಯವನ್ನು ನಾನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಅವರಿಗೆ ತೃಪ್ತಿ ಇದ್ದರೆ ಕಡ್ಡಿಗೀರೋದು ಬೇಡ. ದಲಿತರನ್ನು ಎತ್ತಿ ಕಟ್ಟಿ ಅದರ ಬೇಳೆ ಬೇಯಿಸಿಕೊಳ್ಳಲ್ಲ. ಆದರೆ, ಪ್ರಾಮಾಣಿಕವಾಗಿ ಪ್ರತಿ ಕುಟುಂಬಕ್ಕೂ ಮೀಸಲಾತಿ ಸಿಗಬೇಕು ಎಂದು ಹೇಳಿದರು.&lt;/p&gt;]]></content:encoded>
            <category>kolar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/hd-kumaraswamy-urges-minister-sudhakar-to-put-forth-facts-regarding-his-health-concerns-rav/articleshow-stkdblx"/>
        </item>
        <item>
            <title><![CDATA[ಆಟೋ ಚಾಲಕರಿಗೆ ಉಚಿತ ಗ್ಯಾಸ್‌ ಕೂಪನ್, ಆಹಾರ ಕಿಟ್‌ ವಿತರಣೆ]]></title>
            <link>https://kannada.asianetnews.com/karnataka-districts/kolar-malur-free-gas-coupons-food-kits-distributed-to-auto-drivers-mrq/articleshow-t5fzf7a</link>
            <guid isPermaLink="true">https://kannada.asianetnews.com/karnataka-districts/kolar-malur-free-gas-coupons-food-kits-distributed-to-auto-drivers-mrq/articleshow-t5fzf7a</guid>
            <pubDate>Wed, 15 Apr 2026 08:24:40 +0530</pubDate>
            <description><![CDATA[&lt;p&gt;ಕೋಲಾರದ ಮಾಲೂರಿನಲ್ಲಿ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಅವರು ಅಂಬೇಡ್ಕರ್ ಜಯಂತಿ ಅಂಗವಾಗಿ ಆಟೋ ಚಾಲಕರಿಗೆ ಉಚಿತ ಗ್ಯಾಸ್ ಕೂಪನ್&zwnj;ಗಳು ಮತ್ತು ಆಹಾರ ಕಿಟ್&zwnj;ಗಳನ್ನು ವಿತರಿಸಿದರು. ಗ್ಯಾಸ್ ಅಭಾವದ ಹಿನ್ನೆಲೆಯಲ್ಲಿ ಚಾಲಕರಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp7gw6hajgfgkbhppvj7y16q,imgname-malur-auto-driver-1776221559338.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲಾರ: &lt;/strong&gt;ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದಿಂ ಗ್ಯಾಸ್&zwnj; ಅಭಾವ ಹಿನ್ನೆಲೆ ಆಟೋ ಚಾಲಕರಿಗೆ ಯಾವುದಾದರೂ ಒಂದು ರೀತಿಯಲ್ಲಿ ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಆಹಾರ ಕಿಟ್ ಹಾಗೂ ಗ್ಯಾಸ್ ಕೂಪನ್&zwnj;ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಜೆಡಿಎಸ್ ಪಕ್ಷದ ಮುಖಂಡ ಹೂಡಿ ವಿಜಯ್ ಕುಮಾರ್ ಹೇಳಿದರು.&lt;/p&gt;&lt;h2&gt;&lt;strong&gt;ಚಾಲಕರಿಗೆ ಆಹಾರ ಕಿಟ್ ಹಾಗೂ ಆಟೋಗಳಿಗೆ ಗ್ಯಾಸ್ ಕೂಪನ್&zwnj;&lt;/strong&gt;&lt;/h2&gt;&lt;p&gt;ಮಾಲೂರು ನಗರದ ವೈಟ್ ಗಾರ್ಡನ್ ಬಳಿ ಇರುವ ಅವರ ನಿವಾಸದ ಆವರಣದಲ್ಲಿ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಆಟೋ ಚಾಲಕರಿಗೆ ಆಹಾರ ಕಿಟ್ ಹಾಗೂ ಆಟೋಗಳಿಗೆ ಗ್ಯಾಸ್ ಕೂಪನ್&zwnj;ಗಳನ್ನು ವಿತರಿಸಿ ಮಾತನಾಡಿದ ಅವರು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಆವರು ರಚಿಸಿ ಕೊಟ್ಟ ಸಂವಿಧಾನದಲ್ಲಿನ ಚಿಂತನೆಗಳನ್ನು ಪ್ರತಿಯೊಬ್ಬ ಭಾರತೀಯರು ಅಳವಡಿಸಿಕೊಳ್ಳುವುದರ ಮೂಲಕ ಸಂವಿಧಾನ ಮತ್ತು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು.&lt;/p&gt;&lt;h3&gt;&lt;strong&gt;ಚುನಾವಣೆಗಾಗಿ ಅಥವಾ ಪ್ರಚಾರಕ್ಕಾಗಿ ಅಲ್ಲ&lt;/strong&gt;&lt;/h3&gt;&lt;p&gt;ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಗುತ್ತಿಲ್ಲ. ಇದು ಚುನಾವಣೆಗಾಗಿ ಅಥವಾ ಪ್ರಚಾರಕ್ಕಾಗಿ ಅಲ್ಲ. ಕೋವಿಡ್ ಸಂದರ್ಭದಲ್ಲಿಯೂ ಸಹ ಆಟೋ ಚಾಲಕರಿಗೆ ನೆರವು ನೀಡಲಾಗಿದೆ. ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೆಲವು ರಾಜಕೀಯ ಪಕ್ಷಗಳು ಮತ ಬ್ಯಾಂಕಿಗೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಶೋಷಿತ ಸಮುದಾಯಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು ಸಮರ್ಪಕವಾಗಿ ತಲುಪಿಸುತ್ತಿಲ್ಲ ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸಡಗರ ಸಂಭ್ರಮದಿಂದ ನಡೆದ ಐತಿಹಾಸಿಕ ಬೇತಮಂಗಲದ ಒನಕೆ ಕರಗ&lt;/strong&gt;&lt;/p&gt;&lt;p&gt;ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಕಣಗಲ ವೆಂಕಟಸ್ವಾಮಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕು ಜೆಡಿಎಸ್ ಅಧ್ಯಕ್ಷ ಬಿಕೆ ನಾರಾಯಣಸ್ವಾಮಿ, ಜೆಡಿಎಸ್ ಪಕ್ಷದ ಮುಖಂಡರಾದ ಆರ್ ಪ್ರಭಾಕರ್, ವೆಂಕಟೇಶ್ ಗೌಡ, ಬಡಗಿ ಶ್ರೀನಿವಾಸ್, ಆಂಜಿನಪ್ಪ, ಗೋಪಾಲ್ ಗೌಡ, ಕುಟ್ಟಿ, ಶ್ರೀನಾಥ್, ದೊಡ್ಡ ಕಲ್ಲಳ್ಳಿ ನಾರಾಯಣಸ್ವಾಮಿ, ದಿಬ್ಬಯ್ಯ, ಗುಟ್ಲಪ್ಪ, ಚಲಪತಿ, ಎಸ್ ನಾರಾಯಣಸ್ವಾಮಿ, ಬಿ ಆರ್ ವೆಂಕಟೇಶ್ ಬಾಬು, ದೇವರಾಜ್ ರೆಡ್ಡಿ, ರಾಜಾರಾಮ್, ಮೋಹನ್ ಬಾಬು, ಪಂಡು ಕಿರಣ್, ಇನ್ನಿತರರು ಹಾಜರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗ್ಯಾಸ್&zwnj;ಗಾಗಿ ಸಾಲು ನಿಂತ ಚಾಲಕರಿಗೆ 'ಕಿರಣ್' ಆಸರೆ: ಮೈಸೂರಿನಲ್ಲಿ 5 ಲಕ್ಷ ರೂ. ಹಂಚಿದ ದಾನಿ!&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಆರೋಪಿಯಿಂದ 375 ನೋಟುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ನೃಪತುಂಗ ರಸ್ತೆಯಲ್ಲಿರುವ ಆರ್&zwnj;ಬಿಐ ಶಾಖಾ ಕಚೇರಿಗೆ ತೆರಳಿ ನೋಟು ಬದಲಾವಣೆಗೆ ರಮೇಶ್ ಯತ್ನಿಸಿದ್ದಾನೆ.#RBI #Money #Bengaluru https://t.co/T7CP77Hpkf&lt;/p&gt;&lt;p&gt;&mdash; Asianet Suvarna News (@AsianetNewsSN) April 15, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>kolar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kolar-malur-free-gas-coupons-food-kits-distributed-to-auto-drivers-mrq/articleshow-t5fzf7a"/>
        </item>
        <item>
            <title><![CDATA[ಬೆಟ್ಟದ ನಲ್ಲಿಕಾಯಿ ಗಂಟಲಿನಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು: ಹೃದಯವಿದ್ರಾವಕ ಘಟನೆ]]></title>
            <link>https://kannada.asianetnews.com/gallery/karnataka-districts/two-year-old-child-dies-after-getting-a-gooseberry-stuck-in-his-throat-malur-kolar-mrq-utpl93q</link>
            <guid isPermaLink="true">https://kannada.asianetnews.com/gallery/karnataka-districts/two-year-old-child-dies-after-getting-a-gooseberry-stuck-in-his-throat-malur-kolar-mrq-utpl93q</guid>
            <pubDate>Mon, 18 May 2026 13:30:53 +0530</pubDate>
            <description><![CDATA[ಕೋಲಾರ ಜಿಲ್ಲೆಯ ಮಾಲೂರಿನಲ್ಲಿ, ಆಟವಾಡುತ್ತಿದ್ದ ಎರಡು ವರ್ಷದ ಮಗು ಬೆಟ್ಟದ ನಲ್ಲಿಕಾಯಿಯನ್ನು ನುಂಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krx1bxwmw763qj0ep035vvcd,imgname-baby-1779090978708.jpg" type="image/jpeg" height="390" width="690"/>
            <content:encoded><![CDATA[ಕೋಲಾರ ಜಿಲ್ಲೆಯ ಮಾಲೂರಿನಲ್ಲಿ, ಆಟವಾಡುತ್ತಿದ್ದ ಎರಡು ವರ್ಷದ ಮಗು ಬೆಟ್ಟದ ನಲ್ಲಿಕಾಯಿಯನ್ನು ನುಂಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.&lt;img&gt;&lt;p&gt;ಬೆಟ್ಟದ ನಲ್ಲಿಕಾಯಿ ಗಂಟಲಿನಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಮಾಲೂರು ಪಟ್ಟಣದ ನಿವಾಸಿಗಳಾದ ಮಾಲಾ ಮತ್ತು ರವಿ ದಂಪತಿಯ ಮಗು ಕೊನೆಯುಸಿರೆಳೆದಿದೆ.&lt;/p&gt;&lt;img&gt;&lt;p&gt;ಎರಡು ವರ್ಷದ ವಿಜಯೇಂದ್ರ ಮೃತ ಮಗು. ಮಾಲಾ ಮತ್ತು ರವಿ ದಂಪತಿ ಸೊಪ್ಪು ವ್ಯಾಪಾರ ಮಾಡಿಕೊಂಡು ಮಾಲೂರು ಪಟ್ಟಣದಲ್ಲಿ ವಾಸವಾಗಿದ್ದಾರೆ. ತಾಯಿ ಮಾಲಾ, ಜ್ಯುಸ್ ಮಾಡಲು ಬೆಟ್ಟದ ನಲ್ಲಿಕಾಯಿ ಮನೆಗೆ ತಂದಿದ್ದರು. ಆಟವಾಡುತ್ತಾ ವಿಜಯೇಂದ್ರ ನೆಲ್ಲಿಕಾಯಿಯನ್ನು ನುಂಗಿದ್ದಾನೆ.&lt;/p&gt;&lt;img&gt;&lt;p&gt;ನಲ್ಲಿಕಾಯಿ ಗಂಟಲಲ್ಲಿ ಸಿಲುಕಿದ ಬಳಿಕ ಮಗು ವಿಜಯೇಂದ್ರಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಪೋಷಕರು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆಯೇ ಮಗು ಕೊನೆಯುಸಿರೆಳೆದಿದೆ.&lt;/p&gt;&lt;img&gt;&lt;p&gt;ತಾಲೂಕು ಆಸ್ಪತ್ರೆಯ ವೈದ್ಯರು ಮಗು ವಿಜಯೇಂದ್ರನ ಗಂಟಲಿನಲ್ಲಿ ಸಿಲುಕಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ಹೊರತೆಗೆದಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗುವಿನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;]]></content:encoded>
            <category>kolar</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/two-year-old-child-dies-after-getting-a-gooseberry-stuck-in-his-throat-malur-kolar-mrq-utpl93q"/>
        </item>
        <item>
            <title><![CDATA[ದೆಹಲಿ ಟ್ರಿಪ್‌ನಲ್ಲಿರುವ ರಾಜ್ಯ ಸರ್ಕಾರ ಬರಗಾಲ ನಿರ್ವಹಣೆಯಲ್ಲಿ ವಿಫಲ: ನಿಖಿಲ್‌ ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/nikhil-kumaraswamy-slams-karnataka-government-drought-issue-gvd/articleshow-xaqk9iz</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-slams-karnataka-government-drought-issue-gvd/articleshow-xaqk9iz</guid>
            <pubDate>Tue, 28 Apr 2026 17:51:45 +0530</pubDate>
            <description><![CDATA[&lt;p&gt;ಖುರ್ಚಿಗಾಗಿ ದೆಹಲಿ ಪ್ರವಾಸದ ಬಿಸಿಯಲ್ಲಿರುವ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಸರಿಯಾದ ಬಿಸಿಯನ್ನು ರಾಜ್ಯದ ಜನತೆ ಮುಟ್ಟಿಸಲಿದ್ದಾರೆ ಎಂದು ನಿಖಿಲ್&zwnj; ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j6yf6wq7kbt59bktmaw7f01b,imgname-1.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಾಲೂರು (ಏ.28): &lt;/strong&gt;ರಾಜ್ಯದಲ್ಲಿ ಬರಗಾಲ, ನೀರಿಗಾಗಿ ಹಾಹಾಕಾರ ಹೆಚ್ಚಾಗುತ್ತಿದ್ದರೂ ಖುರ್ಚಿಗಾಗಿ ದೆಹಲಿ ಪ್ರವಾಸದ ಬಿಸಿಯಲ್ಲಿರುವ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಸರಿಯಾದ ಬಿಸಿಯನ್ನು ರಾಜ್ಯದ ಜನತೆ ಮುಟ್ಟಿಸಲಿದ್ದಾರೆ ಎಂದು ಯುವ ಜೆಡಿಎಸ್&zwnj; ರಾಜ್ಯಾಧ್ಯಕ್ಷ ನಿಖಿಲ್&zwnj; ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.&lt;/p&gt;&lt;p&gt;ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಹೈದರಾಬಾದ್&zwnj; ಕರ್ನಾಟಕ ಭಾಗದಲ್ಲಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಅಲ್ಲಿನ ರೈತರಿಗೆ ಯಾವುದೇ ರೀತಿ ಪರಿಹಾರಗಳನ್ನು ಘೋಷಣೆ ಮಾಡಿಲ್ಲ. ಮಾತೆತ್ತಿದರೆ ಗ್ಯಾರಂಟಿ ಎನ್ನುವ ರಾಜ್ಯ ಸರ್ಕಾರವು ರೈತರಿಗೆ ತಪ್ಪದೆ ನೀಡಬೇಕಾಗಿದ್ದ ಗ್ಯಾರಂಟಿಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಈ ನಡೆಯಿಂದ ರೈತರು ಸರ್ಕಾರ ಮೇಲೆ ಸಂಪೂರ್ಣವಾಗಿ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆಪಾದಿಸಿದರು.&lt;/p&gt;&lt;p&gt;ಸುಧಾಕರ್&zwnj; ಅವರು ಹಿರಿಯ ರಾಜಕಾರಣಿಯಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವುದರಿಂದ ಆವರ ಆರೋಗ್ಯ ವಿಚಾರವು ಸಾರ್ವಜನಿಕರ ಚರ್ಚೆಗೆ ಕಾರಣವಾಗುತ್ತಿದೆ. ಕುಮಾರಸ್ವಾಮಿಯವರು ಈ ವಿಚಾರದಲ್ಲಿ ಏನು ಮಾತನಾಡಿದರೂ ಗೊತ್ತಿಲ್ಲ. ಆದರೆ ಅವರಿಗೆ ಯಾವುದೋ ಬಲವಾದ ಮಾಹಿತಿ ಗೊತ್ತಿರಬೇಕು ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಯೋಗ್ಯತೆ ಇರಬೇಕು&lt;/strong&gt;&lt;/h2&gt;&lt;p&gt;ಡಾ.ರಾಜ್&zwnj; ಸಮಾಧಿ ಬಗ್ಗೆ ನಟ ಚೇತನ್&zwnj; ಎತ್ತಿರುವ ಪ್ರಶ್ನೆ ಬಗ್ಗೆ ಮಾತನಾಡಿದ ನಿಖಿಲ್&zwnj; ಕುಮಾರಸ್ವಾಮಿ ಅವರು ನಟ ಚೇತನ್&zwnj; ಪ್ರಚಾರಪ್ರಿಯರು.ಅವರಿಗೆ ರಾಜ್&zwnj; ಕುಮಾರ್&zwnj; ಕೊಡುಗೆ ಬಗ್ಗೆ ಗೊತ್ತಿಲ್ಲ ಎನ್ನಿಸುತ್ತದೆ. ರಾಜಕುಮಾರ್&zwnj; ಸಮಾಧಿ ಜಾಗದ ಬಗ್ಗೆ ಪ್ರಶ್ನಿಸಲು ಚೇತನ್&zwnj; ಯಾರು ಎಂದರು. ರಾಜ್&zwnj;ಕುಮಾರ್&zwnj; ಬಗ್ಗೆ ಮಾತನಾಡಿಲಕ್ಕೂ ಯೋಗ್ಯತೆ ಇರಬೇಕು. ಪ್ರಚಾರ ಪ್ರಿಯರಿಗೆ ಇದು ಅರಿವಾಗಬೇಕು ಎಂದರು.&lt;/p&gt;]]></content:encoded>
            <category>kolar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-slams-karnataka-government-drought-issue-gvd/articleshow-xaqk9iz"/>
        </item>
    </channel>
</rss>
