<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 05 Apr 2026 04:50:43 +0530</lastBuildDate>
        <atom:link href="https://kannada.asianetnews.com/rss/koppal" rel="self" type="application/rss+xml"/>
        <item>
            <title><![CDATA[Koppal shocking incident: ಜಾನುವಾರು ಕೊಟ್ಟಿಗೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಮೂಕಪ್ರಾಣಿಗಳು ಜೀವಂತ ಸುಟ್ಟು ಕರಕಲು, ಹನುಮಪ್ಪ ಕಣ್ಣೀರು]]></title>
            <link>https://kannada.asianetnews.com/karnataka-districts/heartless-act-in-karnataka-arson-attack-on-cattle-shed-kills-2-oxen-2-cows-goat-and-dog-at-koppal/articleshow-01q68xl</link>
            <guid isPermaLink="true">https://kannada.asianetnews.com/karnataka-districts/heartless-act-in-karnataka-arson-attack-on-cattle-shed-kills-2-oxen-2-cows-goat-and-dog-at-koppal/articleshow-01q68xl</guid>
            <pubDate>Fri, 20 Mar 2026 11:26:21 +0530</pubDate>
            <description><![CDATA[ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ, ಹಳೆ ವೈಷಮ್ಯದಿಂದ ದುಷ್ಕರ್ಮಿಗಳು ರೈತ ಹನುಮಪ್ಪ ಪಿನ್ನಿ ಎಂಬುವವರ ದನದ ಕೊಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಈ ಘೋರ ಕೃತ್ಯದಲ್ಲಿ ಎರಡು ಎತ್ತು, ಎರಡು ಆಕಳು, ಒಂದು ಆಡು ಹಾಗೂ ಒಂದು ನಾಯಿ ಸೇರಿದಂತೆ ಆರು ಮೂಕ ಪ್ರಾಣಿಗಳು ಜೀವಂತ ದಹನವಾಗಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01km4wgsegzf08m05h9nrm8faj,imgname-1-1773985621456.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ (ಮಾ.20)&lt;/strong&gt;: ಮನುಷ್ಯನ ದ್ವೇಷಕ್ಕೆ ಮೂಕ ಪ್ರಾಣಿಗಳು ಬಲಿಯಾಗಿರುವ ಆಘಾತಕಾರಿ ಘಟನೆಯೊಂದು ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ಹಳೆ ವೈಷಮ್ಯವೋ ಕಿಡಿಗೇಡಿಗಳ ಕೃತ್ಯವೋ ಗೊತ್ತಿಲ್ಲ, ದುಷ್ಕರ್ಮಿಗಳು ದನದ ಕೊಟ್ಟಿಗೆಗೆ ಬೆಂಕಿ ಹಚ್ಚಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಜೀವಂತವಾಗಿ ನರಳಿ ನರಳಿ ಸಾವನ್ನಪ್ಪಿವೆ. ಹನುಮಪ್ಪ ಪಿನ್ನಿ ಎಂಬುವವರಿಗೆ ಸೇರಿದ ಈ ಕೊಟ್ಟಿಗೆ ಈಗ ಸ್ಮಶಾನ ಸದೃಶವಾಗಿದೆ. ಕೊಟ್ಟಿಗೆಯಲ್ಲಿದ್ದ ಜಾನುವಾರು ಸುಟ್ಟು ಕರಕಲಾಗಿವೆ.&lt;/p&gt;&lt;h2&gt;ಸುಟ್ಟು ಕರಕಲಾದ ಜಾನುವಾರು ಕಂಡು ಹನುಮಪ್ಪ ಕಣ್ಣೀರು!&lt;/h2&gt;&lt;p&gt;ಇರಕಲ್ ಗಡ ಗ್ರಾಮದ ರೈತ ಹನುಮಪ್ಪ ಪಿನ್ನಿ ಎಂಬ ರೈತ ಎಂದಿನಂತೆ ನಿನ್ನೆ ಸಂಜೆ ತಮ್ಮ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿ, ಸುರಕ್ಷತೆಯ ದೃಷ್ಟಿಯಿಂದ ಬೀಗ ಹಾಕಿಕೊಂಡು ಮನೆಗೆ ತೆರಳಿದ್ದರು. ಆದರೆ, ರಾತ್ರಿಯ ಕತ್ತಲಲ್ಲಿ ಬಂದ ದುಷ್ಕರ್ಮಿಗಳು ಕೊಟ್ಟಿಗೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕೊಟ್ಟಿಗೆಗೆ ಬೀಗ ಹಾಕಿದ್ದರಿಂದಾಗಿ ಒಳಗಿದ್ದ ಪ್ರಾಣಿಗಳಿಗೆ ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ನರಳಿ ನರಳಿ ಜೀವಬಿಟ್ಟಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಗದಗ: ರಥೋತ್ಸವದ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ದಾರಿ ಬಿಡುವಂತೆ ಹೇಳಿದ್ದಕ್ಕೆ ಹಲ್ಲೆ? ಸಲೀಂ ಗ್ಯಾಂಗ್ ಅರೆಸ್ಟ್!&lt;/p&gt;&lt;p&gt;ಬೆಳಗ್ಗೆ ಎಂದಿನಂತೆ ಕೊಟ್ಟಿಗೆಗೆ ಹೋಗಿದ್ದ ರೈತ ಹನುಮಪ್ಪ ಅಲ್ಲಿನ ಭೀಕರ ದೃಶ್ಯ ಕಂಡು ಕುಸಿದುಬಿದ್ದು ಏನೂ ತೋಚದಂತಾಗಿ, ಅಸಹಾಯಕನಾಗಿ ಕಣ್ಣೀರು ಹಾಕಿದ್ದಾನೆ. ತನಗಾದ ನಷ್ಟಕ್ಕಿಂತ ಹೆಚ್ಚಾಗಿ ಸಾಕಿ ಬೆಳೆಸಿದ ಜಾನುವಾರುಗಳು ಕಣ್ಮುಂದೆ ಸುಟ್ಟು ಕರಕಲಾಗಿರುವುದು ಕಂಡು ಕಣ್ಣೀರು ಹಾಕುತ್ತಿದ್ದಾರೆ.&lt;/p&gt;&lt;h3&gt;ಎತ್ತು, ಆಕಳು ಸೇರಿದಂತೆ ಆರು ಜೀವಗಳು ಬಲಿ&lt;/h3&gt;&lt;p&gt;ಕೃಷಿ ಕೆಲಸಕ್ಕೆ ಆಸರೆಯಾಗಿದ್ದ 2 ಎತ್ತುಗಳು, ಹಾಲು ಕೊಡುತ್ತಿದ್ದ 2 ಆಕಳುಗಳು ಸೇರಿದಂತೆ ಒಂದು ಆಡು ಹಾಗೂ ಮನೆಯನ್ನು ಕಾಯುತ್ತಿದ್ದ ನಾಯಿ ಕೂಡ ಬೆಂಕಿಗೆ ಆಹುತಿಯಾಗಿವೆ. ದುಷ್ಕರ್ಮಿಗಳ ಈ ಕ್ರೂರ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, 'ಪ್ರಾಣಿಗಳಿಗೇನು ಗೊತ್ತು ಮನುಷ್ಯರ ದ್ವೇಷ?' ಅವುಗಳನ್ನ ಸುಟ್ಟು ಈ ದುಷ್ಕರ್ಮಿಗಳಿಗೆ ಪಾಪ ತಟ್ಟದೇ ಇರದು ಎಂದು ಕಿಡಿಕಾರುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಜಾನುವಾರುಗಳನ್ನು ಕಳೆದುಕೊಂಡ ರೈತ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Photos: ಚಾಲಕನ ನಿರ್ಲಕ್ಷ್ಯ, ತನ್ನಿಂತಾನೆ ಚಲಿಸಿ ಡಿಪೋದ ಕಟ್ಟಡಕ್ಕೆ ನುಗ್ಗಿದ BMTC ಬಸ್!&lt;/p&gt;&lt;p&gt;&lt;strong&gt;ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನ ಬಂಧಿಸಿ, ರೈತನಿಗೆ ನ್ಯಾಯ ಕೊಡಿಸಿ&lt;/strong&gt;&lt;/p&gt;&lt;p&gt;ಕೊಪ್ಪಳ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೆಂಕಿ ಹಚ್ಚಿದ ಆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಿ ರೈತನಿಗೆ ನ್ಯಾಯ ಕೊಡಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.&lt;/p&gt;]]></content:encoded>
            <category>koppal</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/heartless-act-in-karnataka-arson-attack-on-cattle-shed-kills-2-oxen-2-cows-goat-and-dog-at-koppal/articleshow-01q68xl"/>
        </item>
        <item>
            <title><![CDATA[ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭ: ಸಚಿವ ಶಿವರಾಜ ತಂಗಡಗಿ]]></title>
            <link>https://kannada.asianetnews.com/politics/shivaraj-tangadagi-bjp-corona-congress-development-statement-gvd/articleshow-1r1m4s0</link>
            <guid isPermaLink="true">https://kannada.asianetnews.com/politics/shivaraj-tangadagi-bjp-corona-congress-development-statement-gvd/articleshow-1r1m4s0</guid>
            <pubDate>Mon, 23 Mar 2026 21:30:22 +0530</pubDate>
            <description><![CDATA[&lt;p&gt;ಬಿಜೆಪಿ ಅಧಿಕಾರಕ್ಕೆ ಬಂದರೆ ಕೊರೋನಾ ಬರುತ್ತದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kem1q2ybv4tansqsa0ry8evp,imgname-shivaraj-tangadagi-1768051936203.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರಟಗಿ (ಮಾ.23): &lt;/strong&gt;ಬಿಜೆಪಿ ಅಧಿಕಾರಕ್ಕೆ ಬಂದರೆ ಕೊರೋನಾ ಬರುತ್ತದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಅನುದಾನ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಣ ನೀಡಿರಲಿಲ್ಲ.&lt;/p&gt;&lt;p&gt;ಪ್ರಧಾನಮಂತ್ರಿ ಮೋದಿಯಿಂದ ಹಿಡಿದು ಮಂಡಲ ಅಧ್ಯಕ್ಷರವರೆಗೂ ಬರಿ ಸುಳ್ಳು ಹೇಳುತ್ತಾ ಜನರನ್ನು ಯಾಮಾರಿಸುತ್ತಿರುತ್ತಾರೆ. ಸುಖಾಸುಮ್ಮನೆ ಯಾವ ಕಾಮಗಾರಿ ನಡೆದಿಲ್ಲ ಎಂದು ಕುಂಟು ನೆಪ ಹೇಳಿ ಬಿಜೆಪಿ ಆರೋಪ ಮಾಡುತ್ತಿದೆ ಎಂದರು. ನಮ್ಮ ಸರ್ಕಾರ ಹಣ ಬಿಡುಗಡೆ ಮಾಡಿ ಅಂಜನಾದ್ರಿಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೊರೋನಾ ಬಂದಂತೆ.&lt;/p&gt;&lt;p&gt;ಅದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭವಾದಂತೆ ಎಂದರು. ಯುದ್ಧ ನಡೆಯುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಸಂಸತ್&zwnj;ನಲ್ಲಿ ಮೋದಿ ಸರ್ಕಾರ ಯುದ್ಧ ನಡೆದರೂ ನಮ್ಮಲ್ಲಿ 6 ತಿಂಗಳಿಗೆ ಆಗುವಷ್ಟು ಪೆಟ್ರೋಲ್, ಡೀಸೆಲ್&zwnj;, ಎಲ್&zwnj;ಪಿಜಿ ದಾಸ್ತಾನು ಇದೆ ಎಂದು ಹೇಳಿಕೆ ಕೊಟ್ಟಿದೆ. ಆದರೆ, ದೇಶದಲ್ಲಿ ಈ ಮೂರು ವಸ್ತುಗಳ ಕೊರತೆ ಹೆಚ್ಚಾಗಿದೆ.&lt;/p&gt;&lt;h2&gt;&lt;strong&gt;ಜನರ ದಾರಿ ತಪ್ಪಿಸುವ ಕೆಲಸ&lt;/strong&gt;&lt;/h2&gt;&lt;p&gt;ಪೆಟ್ರೋಲ್, ಡೀಸೆಲ್&zwnj; ಬೆಲೆ ಹೆಚ್ಚಳವಾಗಿದೆ. ಸುಳ್ಳು ಹೇಳುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದು ಯಾಕೆ ಎಂದು ಸಚಿವ ತಂಗಡಗಿ ಪ್ರಶ್ನಿಸಿದರು. ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್&zwnj; ಅಭ್ಯರ್ಥಿಗಳೆ ಗೆಲುವು ಸಾಧಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>koppal</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/shivaraj-tangadagi-bjp-corona-congress-development-statement-gvd/articleshow-1r1m4s0"/>
        </item>
        <item>
            <title><![CDATA[ಮೆಲ್ಲಗೆ ಬರ್ತಾನೆ, ಕಾಂಪೌಂಡ್ ಹಾರ್ತಾನೆ; ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!]]></title>
            <link>https://kannada.asianetnews.com/gallery/karnataka-districts/pervert-in-gangavathi-koppal-district-theft-of-women-s-innerwear-at-night-mrq-43kwzf3</link>
            <guid isPermaLink="true">https://kannada.asianetnews.com/gallery/karnataka-districts/pervert-in-gangavathi-koppal-district-theft-of-women-s-innerwear-at-night-mrq-43kwzf3</guid>
            <pubDate>Mon, 30 Mar 2026 08:23:56 +0530</pubDate>
            <description><![CDATA[ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ವಿಕೃತಕಾಮಿಯೊಬ್ಬ ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದಾನೆ. ಈತನ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವೈರಲ್ ಆಗಿ ಸ್ಥಳೀಯ ಮಹಿಳೆಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmya7kcrr0gkhdtv6z1eby0h,imgname-gangavati--3--1774838861208.jpg" type="image/jpeg" height="390" width="690"/>
            <content:encoded><![CDATA[ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ವಿಕೃತಕಾಮಿಯೊಬ್ಬ ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದಾನೆ. ಈತನ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವೈರಲ್ ಆಗಿ ಸ್ಥಳೀಯ ಮಹಿಳೆಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.&lt;img&gt;&lt;p&gt;ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ವಿಕೃತಕಾಮಿ ಸುತ್ತಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಗಂಗಾವತಿಯ ಸಿಬಿಎಸ್ ಬಡಾವಣೆಯಲ್ಲಿ ಮಹಿಳೆಯರ ಒಳಉಡುಪುಗಳನ್ನು ಕಳ್ಳತನವಾಗುತ್ತಿವೆ.&lt;/p&gt;&lt;img&gt;&lt;p&gt;ಸಾಮಾನ್ಯವಾಗಿ ತೊಳೆದ ಬಟ್ಟೆಗಳನ್ನು ಒಣಗಲು ಮನೆಯ ಮೇಲ್ಛಾವಣಿ ಅಥವಾ ಮುಂಭಾಗದಲ್ಲಿ ಹಾಕುತ್ತಾರೆ. ಈ ಬಟ್ಟೆಗಳಲ್ಲಿ ಮಹಿಳೆಯರ ಒಳಉಡುಪುಗಳು ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಮನೆಗಳಲ್ಲಿ ಒಂಟಿಯಾಗಿರುವ ಮಹಿಳೆಯರು ವೈರಲ್ ವಿಡಿಯೋ ನೋಡಿ ಆತಂಕಗೊಂಡಿದ್ದಾರೆ.&lt;/p&gt;&lt;img&gt;&lt;p&gt;ಮನೆಯೊಂದರ ಮುಂಭಾಗದಲ್ಲಿ ಅಳವಡಿಸಲಾಗಿರುವ ಕಳ್ಳನ ಚಲನವಲನ ಸಂಪೂರ್ಣವಾಗಿ ಸೆರೆಯಾಗಿದೆ. ರಾತ್ರಿ 12 ರಿಂದ 1 ಗಂಟೆ ಆಸುಪಾಸಿಗೆ ಎಂಟ್ರಿ ಕೊಡುವ ವಿಕೃತ ವ್ಯಕ್ತಿ ಸದ್ದಿಲ್ಲದೇ ಕಾಂಪೌಂಡ್ ಜಿಗಿದಿದ್ದಾನೆ. ನಂತರ ಒಳಗೆ ಹೋಗಿ ಒಳಉಡುಪು ಕದ್ದು ಎಸ್ಕೇಪ್ ಆಗಿದ್ದಾನೆ.&lt;/p&gt;&lt;img&gt;&lt;p&gt;ಸದ್ಯ ಈ ವಿಡಿಯೋ ಸ್ಥಳೀಯಮಟ್ಟದಲ್ಲಿ ವೈರಲ್ ಆಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಿಕೃತಕಾಮಿ ಮುಖಚಹರೆ ಸರಿಯಾಗಿ ಕಾಣಿಸಿಲ್ಲ. ಹಾಗಾಗಿ ಯಾರು ಈ ವ್ಯಕ್ತಿ? ಸ್ಥಳೀಯ ನಿವಾಸಿಯಾ ಅಥವಾ ಬೇರೆ ಪ್ರದೇಶದವನಾ ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಡ್&zwnj;ರೂಮ್&zwnj;ಗೆ ನುಗ್ಗಿ ಮಹಿಳೆಯರ ಒಳಉಡುಪು ಧರಿಸಿ ಕುಣಿದಾಡಿದ ಸೈನಿಕರು: ವಿಡಿಯೋ ವೈರಲ್&lt;/strong&gt;&lt;/p&gt;&lt;img&gt;&lt;p&gt;ಈ ಹಿಂದೆ ಬೆಂಗಳೂರಿನ ರಾಜಗೋಪಾಲನಗರ ಮತ್ತು ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹವುದೇ ಪ್ರಕರಣಗಳು ಬೆಳಕಿಗೆ ಬಂದಿದ್ದವು. ವಿಕೃತಕಾಮಿಗಳು ಲೇಡಿಸ್ ಪಿಜಿಗಳಿಗೆ ನುಗ್ಗಿ ಒಳಉಡುಪುಗಳನ್ನು ಕದಿಯುತ್ತಿದ್ದರು. ಅಪರಿಚಿತ ವ್ಯಕ್ತಿಯೋರ್ವ ಟೆರೇಸ್ ಮೇಲೆ ಒಣ ಹಾಕಿದ್ದ ಮಹಿಳೆಯರ ಒಳ ಉಡುಪು ಕದ್ದು ಅಲ್ಲೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ರೀಲ್ಸ್&zwnj; ಹುಚ್ಚಿಗೆ ಮಹಿಳೆಯರ ಒಳ ಉಡುಪು ಧರಿಸಿ ರಸ್ತೆಗೆ ಬಂದ! ಆಗಬಾರದ್ದು ಆಗೋಯ್ತು... ವಿಡಿಯೋ ವೈರಲ್&zwnj;&lt;/strong&gt;&lt;/p&gt;]]></content:encoded>
            <category>koppal</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/pervert-in-gangavathi-koppal-district-theft-of-women-s-innerwear-at-night-mrq-43kwzf3"/>
        </item>
        <item>
            <title><![CDATA[ಕೇಂದ್ರದ ಮೇಲೆ ದೂರುವ ಬದಲು 6ನೇ ಗ್ಯಾರಂಟಿಯಾಗಿ ಚಾಲಕರಿಗೆ ಪರಿಹಾರ ಕೊಡಲಿ: ಹೆಚ್‌ಡಿ ಕುಮಾರಸ್ವಾಮಿ]]></title>
            <link>https://kannada.asianetnews.com/politics/hd-kumaraswamy-hits-back-at-congress-help-our-auto-drivers-instead-of-blaming-pm-modi-rav/articleshow-4ghvwvs</link>
            <guid isPermaLink="true">https://kannada.asianetnews.com/politics/hd-kumaraswamy-hits-back-at-congress-help-our-auto-drivers-instead-of-blaming-pm-modi-rav/articleshow-4ghvwvs</guid>
            <pubDate>Sun, 05 Apr 2026 04:50:37 +0530</pubDate>
            <description><![CDATA[&lt;p&gt;ಎಲ್&zwnj;ಪಿಜಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಮಾಸಿಕ ₹15 ಸಾವಿರ ಪರಿಹಾರ ನೀಡಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹಿಸಿದರು.. ಯುದ್ಧದ ಪರಿಸ್ಥಿತಿ ರಾಜಕೀಯಕ್ಕೆ ಬಳಸಿಕೊಂಡು ಕೇಂದ್ರದ ಮೇಲೆ ದೂರುವುದನ್ನು ಬಿಡಲಿ ಎಂದು ತಿವಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kndcqgkv5vhpfjpbtyptw1w7,imgname----------------------60--1775344796283.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಕೊಪ್ಪಳ (ಏ.5): &lt;/strong&gt;ಎಲ್&zwnj;ಪಿಜಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.&lt;/p&gt;&lt;h2&gt;ಕೇಂದ್ರದ ವಿರುದ್ಧ ದೂರುವ ಬದಲು ಆಟೋ ಡ್ರೈವರ್&zwnj;ಗಳ ನೆರವಿಗೆ ಬರಲಿ&lt;/h2&gt;&lt;p&gt;ಸಿಂಧನೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದಿಂದಾಗಿ ಎದುರಾಗಿರುವ ಸಂಕಷ್ಟದಲ್ಲಿ ಕೇಂದ್ರವನ್ನು ದೂರುವ ಬದಲು ಆಟೋದವರ ನೆರವಿಗೆ ಬರುವಂತೆ ಕಾಂಗ್ರೆಸ್&zwnj; ಸರ್ಕಾರಕ್ಕೆ ಆಗ್ರಹಿಸಿದರು.&amp;nbsp;&lt;/p&gt;&lt;p&gt;ಜಗತ್ತಿನಲ್ಲಿ ಯುದ್ಧ ನಡೆಯುತ್ತಿದ್ದರೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿರುವ ಎನ್&zwnj;ಡಿಎ ಸರ್ಕಾರದಿಂದ ಸಮಸ್ಯೆಯಾಗುತ್ತಿಲ್ಲ. ಈ ನಡುವೆಯೂ ಆಟೋದವರು ಗ್ಯಾಸ್ ಸಮಸ್ಯೆ ಎದುರಿಸುತ್ತಿರುವಾಗ ಟ್ಯಾಕ್ಸ್ ಹಾಕುವ ಮೂಲಕ ರಾಜ್ಯ ಸರ್ಕಾರ ಮತ್ತಷ್ಟು ಸಮಸ್ಯೆಗೆ ಸಿಲುಕಿಸಿದೆ. ಆದ್ದರಿಂದ ಆಟೋದವರು ಕೇಳುತ್ತಿರುವಂತೆ, ಅವರಿಗೆ ಮಾಸಿಕ ₹15 ಸಾವಿರ 6ನೇ ಗ್ಯಾರಂಟಿಯಾಗಿ ರಾಜ್ಯ ಸರ್ಕಾರ ನೀಡುವಂತೆ ತಿಳಿಸಿದರು.&lt;/p&gt;&lt;p&gt;ಯುದ್ಧದ ಸ್ಥಿತಿಯಿಂದ ಸಮಸ್ಯೆ ಎದುರಾಗಿದ್ದನ್ನೇ ರಾಜ್ಯ ಕಾಂಗ್ರೆಸ್ ನಾಯಕರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೇಂದ್ರದ ಮೇಲೆ ದೂರಿ, ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.&lt;/p&gt;]]></content:encoded>
            <category>koppal</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/hd-kumaraswamy-hits-back-at-congress-help-our-auto-drivers-instead-of-blaming-pm-modi-rav/articleshow-4ghvwvs"/>
        </item>
        <item>
            <title><![CDATA[ಕೊಪ್ಪಳ: ಅಧಿಕಾರಿಗಳ ಕಾರ್ಯಾಚರಣೆ, ಎರಡು ದಿನಗಳಲ್ಲಿ ತಪ್ಪಿದ ಐದು ಬಾಲ್ಯವಿವಾಹ!]]></title>
            <link>https://kannada.asianetnews.com/karnataka-districts/koppal-officials-prevent-five-child-marriages-in-two-days-rav/articleshow-687mh6g</link>
            <guid isPermaLink="true">https://kannada.asianetnews.com/karnataka-districts/koppal-officials-prevent-five-child-marriages-in-two-days-rav/articleshow-687mh6g</guid>
            <pubDate>Sat, 28 Mar 2026 07:32:44 +0530</pubDate>
            <description><![CDATA[ಕೊಪ್ಪಳ ಜಿಲ್ಲೆಯಲ್ಲಿ, ಮಕ್ಕಳ ಸಹಾಯವಾಣಿ 1098ಕ್ಕೆ ಬಂದ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಮೂಲಕ ಯಲಬುರ್ಗಾ ಮತ್ತು ಕಾರಟಗಿ ತಾಲೂಕುಗಳಲ್ಲಿ ನಡೆಯಲಿದ್ದ ಐದು ಬಾಲ್ಯ ವಿವಾಹಗಳನ್ನು ಕೇವಲ ಎರಡು ದಿನಗಳ ಅಂತರದಲ್ಲಿ ಯಶಸ್ವಿಯಾಗಿ ತಡೆಯಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01j767q33p5vm3qq9vhddsxn0j,imgname-Child-marriage-3-1725712534646.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಕೊಪ್ಪಳ (ಮಾ.28): &lt;/strong&gt;ಕೇವಲ ಎರಡು ದಿನಗಳ ಅಂತರದಲ್ಲಿ ಐದು ಬಾಲ್ಯ ವಿವಾಹವಾಗಬಹುದಾಗಿದ್ದನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ಮಾಡಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.&lt;/p&gt;&lt;p&gt;ಸಹಾಯವಾಣಿ ಸಂಖ್ಯೆ ೧೦೯೮ ಕ್ಕೆ ಕರೆ ಮಾಡಿ, ಬಾಲಕೀಯರನ್ನು ಮದುವೆ ಮಾಡಲು ನಡೆಸಿದ ಸಿದ್ಧತೆಯ ಕುರಿತು ಮಾಹಿತಿ ನೀಡಿದ್ದನ್ನು ಆಧರಿಸಿ ಮಕ್ಕಳ ರಕ್ಷಣಾ ಘಟಕ ಕಾರ್ಯಾಚರಣೆ ನಡೆಸಿ ಐದು ಬಾಲ್ಯವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.&lt;/p&gt;&lt;p&gt;ಯಲಬುರ್ಗಾ ತಾಲೂಕಿನ ಬೇವೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರಿಗೆ, ಯಲಬುರ್ಗಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಬ್ಬ ಬಾಲಕಿಗೆ, ಕಾರಟಗಿ ತಾಲೂಕಿನ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ವಿವಾಹ ಸಿದ್ಧತೆ ನಡೆಯುತ್ತಿದೆ, ರಕ್ಷಣೆ ಮಾಡಿ ಎಂಬ ಮಾಹಿತಿ ಆಧರಿಸಿ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಅಕ್ಕಪಡೆ ಮತ್ತು ಪೊಲೀಸ್ ಸಿಬ್ಬಂದಿ, ವಲಯ ಮೇಲ್ವಿಚಾರಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯ, ಪುರಸಭೆಯ ಸಿಬ್ಬಂದಿಗಳ ಸಹಯೋಗದೊಂದಿಗೆ ಐದು ಜನರನ್ನು ರಕ್ಷಿಸಿ ಮಕ್ಕಳ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ.&lt;/p&gt;&lt;p&gt;ರಕ್ಷಣಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಸವರಾಜ ಗುಳೇದ್, ಅಮರಮ್ಮ ಹಿರೇಮಠ, ಬಸಮ್ಮ ಎಸ್, ಮೇಲ್ವಿಚಾರಕಿ ಶ್ರೀದೇವಿ, ಸವಿತಾ, ಅಕ್ಕಪಡೆಯ ಸಾವಿತ್ರಿ ಪಿ.ಸಿ.ಯಲಮ್ಮ, ಭಾಗ್ಯ, ವಾಹನ ಚಾಲಕರು ಶರಣಪ್ಪ ಭಾಗವಹಿಸಿದ್ದರು.&lt;/p&gt;&lt;p&gt;ಕೋಟ್&lt;/p&gt;&lt;p&gt;ಜಿಲ್ಲೆಯಲ್ಲಿ ನಡೆಯಬಹುದಾಗಿದ್ದ ಐದು ಬಾಲ್ಯವಿವಾಹಗಳನ್ನು ಖಚಿತ ಮಾಹಿತಿ ಆಧಾರದ ಮೇಲೆ ನಮ್ಮ ಸಿಬ್ಬಂದಿ ಕಾರ್ಯಚರಣೆ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ.&lt;/p&gt;&lt;p&gt;ಸಿಂಧು ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕೊಪ್ಪಳ&lt;/p&gt;]]></content:encoded>
            <category>koppal</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/koppal-officials-prevent-five-child-marriages-in-two-days-rav/articleshow-687mh6g"/>
        </item>
        <item>
            <title><![CDATA[ನಿಧಿ ಆಸೆಗಾಗಿ ಚಾಲುಕ್ಯರ ಕಾಲದ ದೇಗುಲ ಧ್ವಂಸ; ಗಂಗಾವತಿಯಲ್ಲಿ ಕೃಷ್ಣದೇವರಾಯನ ಕಾಲದ ಶಾಸನ ಪತ್ತೆ]]></title>
            <link>https://kannada.asianetnews.com/karnataka-districts/chalukya-temple-destroyed-in-search-of-treasure-kalaburgi-inscription-from-krishnadevaraya-s-era-found-in-gangavati-mrq/articleshow-9i9vzz9</link>
            <guid isPermaLink="true">https://kannada.asianetnews.com/karnataka-districts/chalukya-temple-destroyed-in-search-of-treasure-kalaburgi-inscription-from-krishnadevaraya-s-era-found-in-gangavati-mrq/articleshow-9i9vzz9</guid>
            <pubDate>Sat, 28 Mar 2026 08:22:57 +0530</pubDate>
            <description><![CDATA[ಕಲಬುರಗಿಯಲ್ಲಿ ನಿಧಿಯ ಆಸೆಗಾಗಿ ದುಷ್ಕರ್ಮಿಗಳು ಚಾಲುಕ್ಯರ ಕಾಲದ ಪುರಾತನ ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ಮತ್ತೊಂದೆಡೆ, ಗಂಗಾವತಿಯಲ್ಲಿ ಚಾರಣಿಗರ ತಂಡವು ವಿಜಯನಗರ ಸಾಮ್ರಾಟ ಕೃಷ್ಣದೇವರಾಯನ ಕಾಲದ, ಭೂದಾನದ ಮಾಹಿತಿ ನೀಡುವ ಅಪರೂಪದ ಶಿಲಾಶಾಸನವನ್ನು ಪತ್ತೆ ಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kms5dn6yb7pe2n0a50bkpedy,imgname-temple-1774666044638.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ:&lt;/strong&gt; ನಿಧಿಯ ಆಸೆಗಾಗಿ ದುಷ್ಕರ್ಮಿಗಳು ಚಾಲುಕ್ಯರ ಕಾಲದ ಪುರಾತನ ದೇಗುಲವನ್ನು ಧ್ವಂಸ ಮಾಡಿ ಗರ್ಭಗುಡಿಯಲ್ಲಿದ್ದ ಶಿವಲಿಂಗ, ಬಸವಣ್ಣ (ನಂದಿ), ಹನುಮಾನ್ ಮೂರ್ತಿಗಳನ್ನು ಭಗ್ನಗೊಳಿಸಿರುವ ದುರ್ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಬುಧವಾರ ನಡೆದಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.&lt;/p&gt;&lt;h2&gt;&lt;strong&gt;ಈ ಹಿಂದೆಯೂ ನಡೆದಿತ್ತು ನಿಧಿಶೋಧ ಕಾರ್ಯ&lt;/strong&gt;&lt;/h2&gt;&lt;p&gt;ಬಡದಾಳ ಗ್ರಾಮದಲ್ಲಿರುವ &lsquo;ಬನದ ಬಸವಣ್ಣ&rsquo; ದೇವಸ್ಥಾನಕ್ಕೆ ಮಾ.25ರಂದು ರಾತ್ರಿ ನುಗ್ಗಿದ ದುಷ್ಕರ್ಮಿಗಳು, ಅಲ್ಲಿ ಪೂಜೆ ಮಾಡುತ್ತಿದ್ದ ಶಿವಲಿಂಗ, ನಂದಿ ಹಾಗೂ ಹನುಮಾನ್ ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಅಲ್ಲದೇ 4 ಅಡಿ ನೆಲವನ್ನು ಅಗೆದು ನಿಧಿ ಹುಡುಕಾಟ ನಡೆಸಿದ್ದಾರೆ. ಈ ದೇಗುಲ ಚಾಲುಕ್ಯರ ಕಾಲದ್ದಾಗಿದ್ದು, ಹಿರಿಯರು ಇಲ್ಲಿ ಸಾಕಷ್ಟು ನಿಧಿ ಇದೆ ಎಂದು ಹೇಳುತ್ತಿದ್ದರು. ಅದನ್ನೇ ನೆಪ ಮಾಡಿಕೊಂಡು ಕಳ್ಳರು ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ಈ ಹಿಂದೊಮ್ಮೆ ದೇವಸ್ಥಾನದ ಮುಂಭಾಗದ ಕಟ್ಟೆಯನ್ನು ಅಗೆದು ನಿಧಿ ಶೋಧ ಮಾಡಲಾಗಿತ್ತು. ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದವರನ್ನು ಪತ್ತೆಹಚ್ಚಿ ಬಂಧಿಸುವ ಮೂಲಕ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.&lt;/p&gt;&lt;h3&gt;&lt;strong&gt;ಕೃಷ್ಣದೇವರಾಯನ ಕಾಲದ ಶಾಸನ ಪತ್ತೆ&lt;/strong&gt;&lt;/h3&gt;&lt;p&gt;ಗಂಗಾವತಿ: ನಗರದ ವಿರುಪಾಪುರ ವ್ಯಾಪ್ತಿಯಲ್ಲಿ ವಿಜಯನಗರ ಸಾಮ್ರಾಟ ಕೃಷ್ಣದೇವರಾಯನ ಕಾಲದ ಶಿಲಾಶಾಸನವನ್ನು ಗಂಗಾವತಿ ಚಾರಣ ಬಳಗ ಪತ್ತೆ ಮಾಡಿದೆ ಎಂದು ಚಾರಣ ಬಳಗದ ಸಂಚಾಲಕ ದಂತವೈದ್ಯ ಡಾ. ಶಿವಕುಮಾರ್ ಮಾಲಿಪಾಟೀಲ್ ತಿಳಿಸಿದ್ದಾರೆ.&lt;/p&gt;&lt;p&gt;ನಗರದ ವಿರುಪಾಪುರ ವ್ಯಾಪ್ತಿಯ ಹಿರೇಜಂತಕಲ್ ವೀರಣ್ಣ ದೇವರ ಗುಡ್ಡದ ಹಿಂಬದಿಯ ಬಂಡೆಯೊಂದರಲ್ಲಿ ಈ ಶಾಸನ ಕಂಡು ಬಂದಿದೆ. ಶಾಸನವನ್ನು ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಪರಿಶೀಲಿಸಿದ್ದು, ಶಾಸನವು 13 ಸಾಲುಗಳಲ್ಲಿ ಕನ್ನಡ ಭಾಷೆ ಮತ್ತು ಲಿಪಿಯಲ್ಲಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ, ಚಂದ್ರ ಹಾಗೂ ಮಧ್ಯದಲ್ಲಿ ಶಿವಲಿಂಗದ ಚಿತ್ರಗಳಿವೆ. ನಮಸ್ತುಂಗ ಶಿರಶ್ಚುಂಬಿ ಎಂಬ ಶಿವನ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುವ ಶಾಸನವು ಶಾಲಿವಾಹನ 1448ನೇ ಸಂವತ್ಸರದ ಮಾಘ ಶುದ್ಧ 7ರ ಕಾಲ ಉಲ್ಲೇಖಿಸುತ್ತದೆ. ಅದು ಪ್ರಸ್ತುತ ಸಾಮಾನ್ಯ ಶಕೆ 1527 ಕ್ಕೆ ಸರಿಯಾಗುತ್ತದೆ. ಅಂದರೆ 16ನೇ ಶತಮಾನದ ಶಾಸನವಿದು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿ ಹಳೇ ಹಂಡೆಯಲ್ಲಿ ಗೋಲ್ಡನ್ ಕವರ್ ಚಾಕ್ಲೆಟ್ ಹಾಕಿ 22 ಲಕ್ಷ ದೋಚಿದ್ದ ಮೌಲ್ವಿ ಅರೆಸ್ಟ್&lt;/strong&gt;&lt;/p&gt;&lt;h3&gt;&lt;strong&gt;ಭೂಮಿ ದಾನದ ಮಾಹಿತಿ ನೀಡುತ್ತಿರೋ ಶಾಸನ&lt;/strong&gt;&lt;/h3&gt;&lt;p&gt;ಶಾಸನದಲ್ಲಿ ಶ್ರೀ ಮನ್ಮಾಹಾರಾಜಾಧಿರಾಜ ಪರಮೇಶ್ವರ ವೀರಪ್ರತಾಪ ಕೃಷ್ಣರಾಯರ ಆಳ್ವಿಕೆ ಕಾಲದಲ್ಲಿ ಆನೆಗುಂದಿ ಮಾಗಣೆಯನ್ನು ಯಾವುದೋ ವ್ಯಕ್ತಿಯ (ಅಕ್ಷರ ಸವೆದಿವೆ) ಮಗ ಪಾಲಿಸುತ್ತಿರುವಾಗ ಭದ್ರಯ್ಯನ ಮಗ ಗಂಧದ ಸೂರಯ್ಯನು ವಿರುಪಾಪುರ ಸೀಮೆಯ ಮಲ್ಲಿಕಾರ್ಜುನ ದೇವರಿಗೆ ಹಾಗೂ ಕೆಲವು ಬ್ರಾಹ್ಮಣರಿಗೆ ಭೂಮಿ ದಾನ ನೀಡಿದ ಬಗ್ಗೆ ತಿಳಿಸುತ್ತದೆ. ಶಾಸನದ ಕೆಳಸಾಲುಗಳು ಸವೆದಿರುವುದರಿಂದ ಹೆಚ್ಚಿನ ವಿಷಯ ಸ್ಪಷ್ಟವಾಗುತ್ತಿಲ್ಲ.&lt;/p&gt;&lt;p&gt;ಗಂಗಾವತಿ ನಗರದಲ್ಲಿ ಈಗಾಗಲೇ ವಿಜಯನಗರದ ಪ್ರೌಢದೇವರಾಯ ಮತ್ತು ಸದಾಶಿವದೇವರಾಯನ ಶಾಸನಗಳು ಮಾತ್ರ ದೊರೆತಿದ್ದವು. ಈಗ ಕೃಷ್ಣದೇವರಾಯನ ಕಾಲದ ಶಾಸನ ದೊರೆತಿರುವುದು ಮಹತ್ವದ ಸಂಗತಿಯಾಗಿದೆ. ಹಾಗಾಗಿ ಶಾಸನದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ನಡೆಸಲಾಗುವುದೆಂದು ಮತ್ತು ಶಾಸನ ಶೋಧನೆಯಲ್ಲಿ ಚಾರಣ ಬಳಗದ ಕೇಶವ ನಾಯ್ಕ್,ಪ್ರಹ್ಲಾದ್ ಕುಲಕರ್ಣಿ, ಮಂಜುನಾಥ್ ಗುಡ್ಲಾನೂರ, ಚಿದಾನಂದ ಕೀರ್ತಿ ಮತ್ತು ವಿನಯ್ ಕುಮಾರ್ ಅಂಗಡಿ ನೆರವಾಗಿದ್ದಾರೆಂದು ಡಾ.ಕೋಲ್ಕಾರ್ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನಿಧಿ ಆಸೆ ತೋರಿಸಿ ಯಮಾರಿಸುವ ಹೂವಿನ ಹಡಗಲಿಯ ಗ್ಯಾಂಗ್ - ಪೋನ್ ಮಾಡಿ ಬಂಗಾರ ತಗೊಳ್ಳಿ ಅಂತಾರೆ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;India Latest News Live: 4 ಲೀಟರ್ ಪೆಟ್ರೋಲ್ ಕೂಡಿಟ್ಟ ಲಸಂತ ಕುಮಾರ ಬಾಲಸೂರ್ಯಗೆ 21 ದಿನ ಜೈಲು#Petrol https://t.co/UGqgnYJZIP&lt;/p&gt;&lt;p&gt;&mdash; Asianet Suvarna News (@AsianetNewsSN) March 28, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>koppal</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chalukya-temple-destroyed-in-search-of-treasure-kalaburgi-inscription-from-krishnadevaraya-s-era-found-in-gangavati-mrq/articleshow-9i9vzz9"/>
        </item>
        <item>
            <title><![CDATA[ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ]]></title>
            <link>https://kannada.asianetnews.com/gallery/koppal/lokayukta-trap-in-koppal-two-police-constables-arrested-for-demanding-bribe-9uphfrq</link>
            <guid isPermaLink="true">https://kannada.asianetnews.com/gallery/koppal/lokayukta-trap-in-koppal-two-police-constables-arrested-for-demanding-bribe-9uphfrq</guid>
            <pubDate>Sat, 04 Apr 2026 21:03:53 +0530</pubDate>
            <description><![CDATA[&lt;p&gt;ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ, ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡಿಸಲು ಹಣಕ್ಕೆ ಬೇಡಿಕೆ ಇಡುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knchskkeqckw7ctfss8anhya,imgname-loka-raid-1775316553325.png" type="image/jpeg" height="390" width="690"/>
            <content:encoded><![CDATA[&lt;p&gt;ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ, ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡಿಸಲು ಹಣಕ್ಕೆ ಬೇಡಿಕೆ ಇಡುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಕೊಪ್ಪಳದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅಟ್ರಾಸಿಟಿ ಪ್ರಕರಣ ಒಂದರಲ್ಲಿ ಆರೋಪಿಗಳಿಗೆ ಜಾಮೀನು ಕೊಡಿಸಲು ಇಬ್ಬರು ಪೊಲೀಸ್ ಪೇದೆಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.&lt;/p&gt;&lt;img&gt;&lt;p&gt;ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಇಬ್ಬರು ಪೇದೆಗಳಾದ ಮಾರುತಿ ಬ್ಯಾಳಿ ಹಾಗೂ ಚಂದಾಲಿಂಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಾಹಿತಿ ಪಡೆದ ಕೊಪ್ಪಳ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರು ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ.&lt;/p&gt;&lt;img&gt;&lt;p&gt;ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು &zwnj;ಕೊಡೋದಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಲ ಈ ಕುರಿತು ಮೆಹಬೂಬ್ ಪಾಶಾ ಬಳಿಯಿಂದ 15 ಸಾವಿರ ರೂಪಾಯಿ ಹಣ ಪಡೆದಿದ್ದರು. ಫೋನ್ ಪೇ ಮೂಲಕ ಪೇದೆಗಳು 15 ರೂಪಾಯಿ ಹಣ ಪಡೆದುಕೊಂಡಿದ್ದರು.&lt;/p&gt;&lt;img&gt;&lt;p&gt;15 ಸಾವಿರ ರೂಪಾಯಿ ಹಣ ಪಡೆದ ಬಳಿಕ ಬಾಕಿ ಮೊತ್ತ ಮೂರು ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ.&lt;/p&gt;&lt;h2&gt;ಮೂರು ಸಾವಿರ ಪಡೆಯುವಾಗ ಬಲೆಗೆ&lt;/h2&gt;]]></content:encoded>
            <category>koppal</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/koppal/lokayukta-trap-in-koppal-two-police-constables-arrested-for-demanding-bribe-9uphfrq"/>
        </item>
        <item>
            <title><![CDATA[ಕೊಪ್ಪಳದಲ್ಲಿ ಸಿಡಿಲು ಬಡಿದು ಬಾಲಕ ಸಾವು, ರಾಜ್ಯದಲ್ಲಿ ಮಳೆಗೆ ಮೊದಲ ಬಲಿ]]></title>
            <link>https://kannada.asianetnews.com/karnataka-districts/koppal-tragedy-young-boy-killed-in-lightning-strike-as-pre-monsoon-rains-lash-karnataka/articleshow-aui4c9y</link>
            <guid isPermaLink="true">https://kannada.asianetnews.com/karnataka-districts/koppal-tragedy-young-boy-killed-in-lightning-strike-as-pre-monsoon-rains-lash-karnataka/articleshow-aui4c9y</guid>
            <pubDate>Mon, 16 Mar 2026 21:25:31 +0530</pubDate>
            <description><![CDATA[&lt;p&gt;ಕೊಪ್ಪಳದಲ್ಲಿ ಸಿಡಿಲು ಬಡಿದು ಬಾಲಕ ಸಾವು, ರಾಜ್ಯದಲ್ಲಿ ಮಳೆಗೆ ಮೊದಲ ಬಲಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕ ಮಂಜುನಾಥ್ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಹಲೆವೆಡೆ ಆಲಿಕಲ್ಲು ಮಳೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkvnqcnh1qwa7ezmdcb5jtbg,imgname-koppal-1773676507766.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ (ಮಾ.16)&lt;/strong&gt; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಾಸನ, ರಾಯಚೂರು, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆ ರೈತರ ಆತಂಕ ಹೆಚ್ಚಿಸಿದೆ. ಇದರ ನಡುವೆ ದುರಂತ ಒಂದು ನಡೆದಿದೆ. ಕೊಪ್ಪಳದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ 15 ವರ್ಷದ ಬಾಲಕ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಎನ್ ಜರಕುಂಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕಂದಾಯ,ಪೊಲೀಸ್ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;p&gt;15 ವರ್ಷದ ಬಾಲಕ ಮಂಜುನಾಥ್ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಂತೆ ಮಳೆ ಮೋಡ ಆವರಿಸಿಕೊಂಡಿದೆ. ಮಳೆ ಬರುವ ಮುನ್ನ ಉಳಿದಿರುವ ಕೆಲಸ ಮುಗಿಸಲು ಬಾಲಕ ಮಂಜುನಾಥ್ ಸೇರಿದಂತೆ ರೈತರು ಚುರುಕಿನ ಕೆಲಸ ಆರಂಭಿಸಿದ್ದಾರೆ. ಇದರ ನಡುವೆ ಸಿಡಿಲು ಬಿಡಿದು ಮಂಜುನಾಥ್ ಮೃತಪಟ್ಟಿದ್ದಾನೆ. ತಕ್ಷಣವೇ ಬಾಲಕನ ಆಸ್ಪತ್ರೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.&lt;/p&gt;&lt;h2&gt;ಒಂದು ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಸಹಿತ ಮಳೆ&lt;/h2&gt;&lt;p&gt;ಹಾಸನದಲ್ಲಿ ಭಾರಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮನೆ ಮೇಲೆ ರಸ್ತೆ ಬದಿ ಜಮೀನುಗಳಲ್ಲಿ ಆಲಿಕಲ್ಲು ತುಂಬಿ ಹೋಗಿದೆ. ಹಾಸನದ ಹಲವು ಬಡಾವಣೆಗಳಲ್ಲಿ ಆಲಿಕಲ್ಲು ಮಳೆ ಬಿದ್ದಿದೆ. ರಾಶಿ ರಾಶಿ ಆಲಿಕಲ್ಲು ನೋಡಿದ ಮಕ್ಕಳು ಖುಷಿಪಟ್ಟಿದ್ದಾರೆ.&lt;/p&gt;&lt;h2&gt;ರಾಯಚೂರಿನಲ್ಲಿ ಆಲಿಕಲ್ಲು ಮಳೆ&lt;/h2&gt;&lt;p&gt;ರಾಯಚೂರಿನಲ್ಲೂ ಆಲಿಕಲ್ಲು ಮಳೆಯಾಗಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾ. ಮಲ್ಲದಗುಡ್ಡು ಗ್ರಾಮದಲ್ಲಿ ಆಲಿಕಲ್ಲು ಮಳೆಯಾಗಿದೆ. ಸತತ 1 ಗಂಟೆಯಿಂದ ನಿರಂತರವಾಗಿ ಆಲಿ ಕಲ್ಲು ಮಳೆಯಾಗಿದೆ. ಆಲಿಕಲ್ಲು ಮಳೆಯಿಂದ ಮಾವು ಸೇರಿದಂತೆ ಇತರ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.&lt;/p&gt;&lt;p&gt;ಮೈಸೂರು ಜಿಲ್ಲೆಯಲ್ಲೂ ಭಾರಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ ಬಳಸಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಸುತ್ತಮುತ್ತ ಸುರಿದ ಮಳೆಯಾಗಿದೆ. ಇನ್ನು ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>koppal</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/koppal-tragedy-young-boy-killed-in-lightning-strike-as-pre-monsoon-rains-lash-karnataka/articleshow-aui4c9y"/>
        </item>
        <item>
            <title><![CDATA[ಒಡೆದ ತುಂಗಭದ್ರಾ ಎಡದಂಡೆ ಕಾಲುವೆ:  ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು]]></title>
            <link>https://kannada.asianetnews.com/gallery/state/tungabhadra-canal-bursts-near-basapura-village-of-koppal-taluk-b0r0557</link>
            <guid isPermaLink="true">https://kannada.asianetnews.com/gallery/state/tungabhadra-canal-bursts-near-basapura-village-of-koppal-taluk-b0r0557</guid>
            <pubDate>Wed, 18 Mar 2026 09:04:54 +0530</pubDate>
            <description><![CDATA[ಕೊಪ್ಪಳ ತಾಲೂಕಿನ ಬಸಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಕುಡಿಯುವ ನೀರಿಗಾಗಿ ಬಿಟ್ಟ ನೀರು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkzfs7ka5rmvq1f303m1p4md,imgname-6-1773804494442.jpg" type="image/jpeg" height="390" width="690"/>
            <content:encoded><![CDATA[ಕೊಪ್ಪಳ ತಾಲೂಕಿನ ಬಸಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಕುಡಿಯುವ ನೀರಿಗಾಗಿ ಬಿಟ್ಟ ನೀರು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.&lt;img&gt;&lt;p&gt;ಕೊಪ್ಪಳ: ಬಿರು ಬೇಸಿಗೆಯಲ್ಲೇ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣ ನೀರು ಪೋಲಾಗುತ್ತಿದೆ. ನೀರು ರೈತರ ಜಮೀನಿಗೂ ನುಗ್ಗಿದೆ. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಈ ಅವಘಡ ಸಂಭವಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೌಟುಂಬಿಕ ಕಲಹ ಎರಡು ಮಕ್ಕಳಾದ ಬಳಿಕ ಸನ್ಯಾಸಿಯಾದ ಪತಿಗೆ ಬೀದಿಯಲ್ಲೇ ಥಳಿಸಿದ ಮಹಿಳೆ: ವೀಡಿಯೋ&lt;/strong&gt;&lt;/p&gt;&lt;img&gt;&lt;p&gt;ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ಅಧಿಕಾರಿಗಳು ನೀರು ಬಿಟ್ಟಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಳಗಾವಿ: ಮಳೆ ನಿಲ್ಲಲು ಕಾಯುತ್ತಿದ್ದವರಿಗೆ ಕಾದಿದ್ದ ಜವರಾಯ: ಮನೆ ಗೋಡೆ ಕುಸಿದು ಪತ್ನಿ ಸಾವು, ಪತಿ ಜಸ್ಟ್ ಮಿಸ್&lt;/strong&gt;&lt;/p&gt;&lt;img&gt;&lt;p&gt;ಆದರೆ ಈಗ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದು ನೀರು ಪೋಲಾಗುತ್ತಿದೆ. ಕಾಲುವೆ ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಚಿಕ್ಕಮಗಳೂರು : 50 ಅಡಿ ಆಳದ ಕಂದಕಕ್ಕೆ ಬಿದ್ದ &zwnj;ಕಾರು: ಅನುಮಾನ ಹುಟ್ಟಿಸಿದ ಅಪಘಾತ ಪ್ರಕರಣ&lt;/strong&gt;&lt;/p&gt;&lt;img&gt;&lt;p&gt;ಅಧಿಕಾರಿಗಳ ನಿರ್ಲಕ್ಷದಿಂದ ಕಾಲುವೆ ಒಡೆದಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ. ಘಟನೆಯಿಂದಾಗಿ ಕಾಲುವೆ ಪಕ್ಕದ ಜಮೀನಿನಲ್ಲಿ ಬೆಳೆದ ಬೆಳೆಗಳಿಗೆ ಹಾನಿಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ರೈತರ ಕೈಗೆ ಸಿಕ್ಕ ಪಂಪ್&zwnj;ಸೆಟ್ ಕೇಬಲ್ ಕಳ್ಳರು: ಕದ್ದ ಕೇಬಲ್&zwnj;ನಿಂದ ಮರಕ್ಕೆ ಕಟ್ಟಿ ಥಳಿಸಿದ ರೈತರು&lt;/strong&gt;&lt;/p&gt;]]></content:encoded>
            <category>koppal</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/tungabhadra-canal-bursts-near-basapura-village-of-koppal-taluk-b0r0557"/>
        </item>
        <item>
            <title><![CDATA[ಕನ್ನಡ ಗೊತ್ತಿಲ್ಲದ ಜನರೊಂದಿಗೆ ಸೂಪರ್ ಟೆಕ್ನಿಕ್ ಬಳಸಿ ವ್ಯಾಪಾರ: ಅಜ್ಜಿ ಜಾಣ್ಮೆಗೆ 20 ಲಕ್ಷ ವ್ಯೂವ್]]></title>
            <link>https://kannada.asianetnews.com/gallery/karnataka-districts/koppal-ajji-video-viral-doing-vegetable-business-with-people-who-don-t-know-kannada-using-super-technique-mrq-cpmxzro</link>
            <guid isPermaLink="true">https://kannada.asianetnews.com/gallery/karnataka-districts/koppal-ajji-video-viral-doing-vegetable-business-with-people-who-don-t-know-kannada-using-super-technique-mrq-cpmxzro</guid>
            <pubDate>Wed, 01 Apr 2026 13:19:28 +0530</pubDate>
            <description><![CDATA[&lt;p&gt;ಕನ್ನಡ ಮಾತ್ರ ಬಲ್ಲ ತರಕಾರಿ ವ್ಯಾಪಾರಿ ಅಜ್ಜಿಯೊಬ್ಬರು, ಭಾಷೆ ಬಾರದ ಗ್ರಾಹಕರೊಂದಿಗೆ ವ್ಯಾಪಾರ ಮಾಡುವ ವಿಡಿಯೋ ವೈರಲ್ ಆಗಿದೆ. &amp;nbsp;ಅಜ್ಜಿಯ ಈ ಜಾಣ್ಮೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn3zge25pdcksbjqdpm9t1h2,imgname-koppal-ajji--4--1775028942917.jpg" type="image/jpeg" height="390" width="690"/>
            <content:encoded><![CDATA[&lt;p&gt;ಕನ್ನಡ ಮಾತ್ರ ಬಲ್ಲ ತರಕಾರಿ ವ್ಯಾಪಾರಿ ಅಜ್ಜಿಯೊಬ್ಬರು, ಭಾಷೆ ಬಾರದ ಗ್ರಾಹಕರೊಂದಿಗೆ ವ್ಯಾಪಾರ ಮಾಡುವ ವಿಡಿಯೋ ವೈರಲ್ ಆಗಿದೆ. &amp;nbsp;ಅಜ್ಜಿಯ ಈ ಜಾಣ್ಮೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಸಾಮಾಜಿಕ ಜಾಲತಾಣದಲ್ಲೊಂದು ವಿಡಿಯೋ ವೈರಲ್ ಆಗುತ್ತಿದೆ. ತರಕಾರಿ ವ್ಯಾಪಾರ ಮಾಡುತ್ತಿರುವ ಅಜ್ಜಿಗೆ ಕನ್ನಡ ಮಾತ್ರ ಬರುತ್ತದೆ. ತಮಗೆ ಹಿಂದಿ ಭಾಷೆ ತಿಳಿಯದಿದ್ದರೂ ಕನ್ನಡ ಗೊತ್ತಿಲ್ಲದ ಜನರೊಂದಿಗೆ ಸುಲಭವಾಗಿ ವ್ಯಾಪಾರ ಮಾಡುತ್ತಾರೆ. ವ್ಯಾಪಾರದ ವೇಳೆ ಅಜ್ಜಿ ಬಳಸಿದ ಟೆಕ್ನಿಕ್&zwnj;ಗೆ ನೆಟ್ಟಿಗರು ಫಿದಾ ಆಗಿದ್ದು, ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂದು ಕಮೆಂಟ್ ಮಾಡುತ್ತಿದ್ದಾರೆ.&lt;/p&gt;&lt;img&gt;&lt;p&gt;ಅಜ್ಜಿ ವ್ಯಾಪಾರ ಮಾಡುತ್ತಿರುವ ವಿಡಿಯೋವನ್ನು ಮಂಜು ಮಡಿವಾಳರ್ ಎಂಬವರು (manju_madivalar1) ತಮ್ಮ ಇನ್&zwnj;ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದು, ವೈರಲ್ ಆಗುತ್ತಿದೆ. ಈವರೆಗೂ ಈ ವಿಡಿಯೋಗೆ 21 ಲಕ್ಷಕ್ಕೂ ಅಧಿಕ ವ್ಯೂವ್ ಬಂದಿದೆ. ಅಜ್ಜಿಗೆ ಹಿಂದಿ ಬಾಷೆ ಬರಲ್ಲ. ಆದ್ರೂ ಕೂಡ ಅಜ್ಜಿ ತನ್ನ ತೆಲೆ ಉಪಯೋಗಿಸಿ ವ್ಯಾಪಾರ ಮಾಡ್ತಿದ್ದಾರೆ. ಇದನ್ನು ನೋಡಿ ತುಂಬಾನೇ ಖುಷಿ ಆಯ್ತು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ವಿಡಿಯೋದಲ್ಲಿ ಓರ್ವ ವ್ಯಕ್ತಿ, ನಿನಗೆ ಹಿಂದಿ ಬರಲ್ಲ. ಆದರೂ ಅವರಿಗೆ ತರಕಾರಿ ಬೆಲೆ ಹೇಗೆ ಹೇಳಿದೆ ಎಂದು ಕೇಳುತ್ತಾರೆ. ಇದಕ್ಕೆ ಅಜ್ಜಿ ಕೈಯಲ್ಲಿ 500 ಗ್ರಾಂ ತೂಕದ ಕಲ್ಲು ಮತ್ತು 20 ರೂಪಾಯಿ ನೋಟ್ ಹಿಡಿದು ತೋರಿಸುತ್ತಾರೆ. ಅಂದ್ರೆ ಅರ್ಧ ಕೆಜಿ ಬೆಂಡೆಕಾಯಿಗೆ 20 ರೂಪಾಯಿ ಎಂದರ್ಥ. ಈ ರೀತಿಯಾಗಿ ಸನ್ನೆ ಮೂಲಕ ಅಜ್ಜಿ ಸುಲಭವಾಗಿ ಕನ್ನಡ ಗೊತ್ತಿಲ್ಲದವರೊಂದಿಗೆ ವ್ಯಾಪಾರ ಮಾಡುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.&lt;/p&gt;&lt;img&gt;&lt;p&gt;ಈ ವಿಡಿಯೋ ಶೇರ್ ಮಾಡಿಕೊಂಡಿರುವ ಮಂಜು ತಾವು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ವಜ್ರಬಂಡಿಯ ನಿವಾಸಿ ಎಂದು ಹೇಳಿದ್ದಾರೆ. ಅಜ್ಜಿಯೂ ಇದೇ ಗ್ರಾಮ ಅಥವಾ ಸುತ್ತಮುತ್ತಲಿನ ಹಳ್ಳಿಯ ನಿವಾಸಿ ಎಂದು ಗೊತ್ತಾಗುತ್ತದೆ. ಕೆಲವರು ಈ ಅಜ್ಜಿ ನಮ್ಮ ಇರಕಲಗಢ ಸಂತೆಗೂ ಬರುತ್ತಾರೆ. ತೂಕಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಹಾಕುತ್ತಾರೆ. ಸದಾ ನಗುತ್ತಲೇ ಎಲ್ಲರೊಂದಿಗೆ ವ್ಯಾಪಾರ ಮಾಡುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಕೊಟ್ಟೂರಿನ 'ಮಗ್ಗಿ ಅಜ್ಜಯ್ಯ'ನ ಗಣಿತದ ಚಮತ್ಕಾರ! ಇವರ ಟ್ಯಾಲೆಂಟ್&zwnj; ಮುಂದೆ ಕಂಪ್ಯೂಟರ್&zwnj; ಸ್ಲೋ&lt;/strong&gt;&lt;/p&gt;&lt;img&gt;&lt;p&gt;ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಇವರು ನಮ್ಮ ಅಜ್ಜಿ. ಸುತ್ತಮುತ್ತಲಿನ ಹಳ್ಳಿಗಳಿಗೆ ತೆರಳಿ ತರಕಾರಿ ವ್ಯಾಪಾರ ಮಾಡುತ್ತಾರೆ. ದುಡಿದು ತಿನ್ನುವ ಛಲ ಹೊಂದಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಅಜ್ಜಿ ನಿಮ್ಮೂರಿನ ಸಂತೆಗೂ ಬರ್ತಾರಾ? ಅಜ್ಜಿಯ ಪರಿಚಯ ನಿಮಗೆ ಇದೆಯಾ? ಹಾಗಿದ್ರೆ ಅಜ್ಜಿಯ ಹೆಸರು ಏನೆಂದು ಕಮೆಂಟ್ ಮಾಡಿ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೊಟ್ಟೂರಿನ 'ಕಂಪ್ಯೂಟರ್' ಮ್ಯಾನ್&zwnj; ಲೆಕ್ಕದ ಮಾಯಾಜಾಲ; ಗುಟ್ಟು ರಟ್ಟು ಮಾಡಿದ ಮಗ್ಗಿ ಅಜ್ಜಯ್ಯ&lt;/strong&gt;&lt;/p&gt;&amp;nbsp;&amp;nbsp;&amp;nbsp;&amp;nbsp;View this post on Instagram&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&lt;p&gt;A post shared by Mbbs Mb (@manju_madivalar1)&lt;/p&gt;&lt;p&gt;&lt;/p&gt;]]></content:encoded>
            <category>koppal</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/koppal-ajji-video-viral-doing-vegetable-business-with-people-who-don-t-know-kannada-using-super-technique-mrq-cpmxzro"/>
        </item>
        <item>
            <title><![CDATA[ಉದ್ಘಾಟನೆಯಾಗದ ಲಿಫ್ಟ್ : ಫ್ಲಾಟ್ ಫಾರ್ಮಿಂದ ಹೊರಗೆ ಬರಲು ಪಡಬಾರದ ಕಷ್ಟಪಟ್ಟ ಕಾಲಿಲ್ಲದ ಯುವಕ]]></title>
            <link>https://kannada.asianetnews.com/state/koppal-railway-station-lift-not-inaugurated-disabled-person-struggles-to-come-out/articleshow-d9q4npm</link>
            <guid isPermaLink="true">https://kannada.asianetnews.com/state/koppal-railway-station-lift-not-inaugurated-disabled-person-struggles-to-come-out/articleshow-d9q4npm</guid>
            <pubDate>Fri, 27 Mar 2026 08:48:14 +0530</pubDate>
            <description><![CDATA[&lt;p&gt;&lt;strong&gt;disabled person struggles at station: &lt;/strong&gt;ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಎಸ್ಕಲೇಟರ್ ಮತ್ತು ಲಿಫ್ಟ್ ಉದ್ಘಾಟನೆಯಾಗದ ಕಾರಣ, ಚಿಕಿತ್ಸೆಗಾಗಿ ಬಂದ ವಿಶೇಷಚೇತನ ವ್ಯಕ್ತಿಯೊಬ್ಬರು ಮೆಟ್ಟಿಲುಗಳ ಮೇಲೆ ತೆವಳುತ್ತಾ ಸಾಗಬೇಕಾದ ದಯನೀಯ ಸ್ಥಿತಿ ನಿರ್ಮಾಣವಾಗಿತ್ತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmpkhf5sqfv9jcc069sxmnsk,imgname-disabled-person-at-the-koppal-railway-station-is-crawling-up-the-stairs-1774580186297.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ನಿರ್ಮಾಣವಾಗಿದ್ದರು ಉದ್ಘಾಟನೆಯಾಗದ ಎಸ್ಕಲೇಟರ್:&lt;/strong&gt;&lt;/h2&gt;&lt;p&gt;ಕೊಪ್ಪಳ: ಎಸ್ಕಲೇಟರ್ ನಿರ್ಮಾಣವಾಗಿದ್ದರು ಉದ್ಘಾಟನೆಯಾಗದೇ ಇರುವುದರಿಂದ ರೈಲ್ವೆ ನಿಲ್ದಾಣದಿಂದ ಹೊರ ಬರುವುದಕ್ಕೆ ಕಾಲು ಇಲ್ಲದ ವಿಶೇಷಚೇತನ ವ್ಯಕ್ತಿಯೊಬ್ಬರು ಪಡಬಾರದ ಕಷ್ಟಪಟ್ಟಂತಹ ಘಟನೆ ನಡೆದಿದೆ. ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ವಿಶೇಷಚೇತನ ವ್ಯಕ್ತಿಯೊಬ್ಬರು ಲಿಫ್ಟ್ ಇದ್ದರೂ ಉದ್ಘಾಟನೆಯಾಗದ ಕಾರಣ ಮೆಟ್ಟಿಲಿನಲ್ಲಿ ಬಹಳ ಕಷ್ಟದಿಂದಲೇ ತೆವಳುತ್ತಾ ಸಾಗಿದ್ದಾರೆ.&lt;/p&gt;&lt;h3&gt;&lt;strong&gt;ರೈಲ್ವೆ ನಿಲ್ದಾಣದಿಂದ ಹೊರ ಬರುವುದಕ್ಕೆ ಭಾರಿ ಕಷ್ಟಪಟ್ಟ ವಿಶೇಷಚೇತನ ವ್ಯಕ್ತಿ:&lt;/strong&gt;&lt;/h3&gt;&lt;p&gt;ರೈಲ್ವೆ ಫ್ಲಾಟ್ ಫಾರ್ಮ್ ನಿಂದ ಹೊರಗಡೆ ಬರುವುದಕ್ಕೆ ವಿಶೇಷಚೇತನ ವ್ಯಕ್ತಿ ಭಾರಿ ಕಷ್ಟಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮತ್ತೂರು ಗ್ರಾಮದ ಚಂದ್ರಶೇಖರ್ ಎಂಬುವವರು ಚಿಕಿತ್ಸೆಗೆಂದು ಕೊಪ್ಪಳದಿಂದ ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ಎರಡನೇ ಫ್ಲಾಟ್&zwnj;ಫಾರ್ಮ್&zwnj;ಗೆ ಬಂದು ರೈಲು ನಿಂತಿದ್ದು, ಎರಡನೇ ಫ್ಲಾಟ್ ಫಾರ್ಮ್ ನಿಂದ ಹೊರಗಡೆ ಬರಲು ಚಂದ್ರಶೇಖರ್ ಕಷ್ಟಪಟ್ಟಿದ್ದಾರೆ. ಎಸ್ಕಲೇಟರ್, ಲಿಫ್ಟ್ ಇರದ ಕಾರಣ ತೆವಳುತ್ತಾ ಮೆಟ್ಟಿಲುಗಳಿಂದ ಇಳಿದು ಬಂದಿದ್ದಾರೆ. ಆದರೂ ಚಂದ್ರಶೇಖರ ಸಹಾಯಕ್ಕೆ ರೈಲ್ವೇ ನಿಲ್ದಾಣದ ಸಿಬ್ಬಂದಿ ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಕೊಲೆ : ಮಾರಕಾಸ್ತ್ರಗಳಿಂದ ಕಡಿದು ಟಾಬ್ಲೆಟ್ ಆರಿಫ್ ಹತ್ಯೆ&lt;/strong&gt;&lt;/p&gt;&lt;p&gt;ಮೆಟ್ಟಿಲುಗಳಲ್ಲಿ ತೆವಳುತ್ತಾ ಇಳಿದು ಬಂದ ಚಂದ್ರಶೇಖರ್ ಅವರು ಬಳಿಕ ವಾಕರ್ ಸಹಾಯದಿಂದ ರೈಲ್ವೇ ನಿಲ್ದಾಣದಿಂದ ಹೊರಗಡೆ ಬಂದಿದ್ದಾರೆ. ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಎಸ್ಕಲೇಟರ್,ಲಿಫ್ಟ್ ನಿರ್ಮಾಣ ಮಾಡಲಾಗಿದೆ. ಆದರೆ ನಾಲ್ಕೈದು ತಿಂಗಳು ಕಳೆದರೂ ಇನ್ನೂ ಲಿಫ್ಟ್ ಉದ್ಘಾಟನೆ ಆಗಿಲ್ಲ, ಶೀಘ್ರವೇ ಎಸ್ಕಲೇಟರ್, ಲಿಫ್ಟ್ ಉದ್ಘಾಟಿಸುವಂತೆ ಚಂದ್ರಶೇಖರ ಒತ್ತಾಯಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮರುಭೂಮಿಯ ನಡುವೆ 1.7 ಮೈಲಿ ಉದ್ದದ ಬೃಹತ್ ಕೃತಕ ಸರೋವರ ನಿರ್ಮಿಸಲು ಮುಂದಾದ ಸೌದಿ ಅರೇಬಿಯಾ&lt;/strong&gt;&lt;/p&gt;]]></content:encoded>
            <category>koppal</category>
            <dc:creator>Anusha Kb</dc:creator>
            <atom:link href="https://kannada.asianetnews.com/state/koppal-railway-station-lift-not-inaugurated-disabled-person-struggles-to-come-out/articleshow-d9q4npm"/>
        </item>
        <item>
            <title><![CDATA[ಕೊಪ್ಪಳ ಅಕ್ಷರ ದಾಸೋಹಕ್ಕೂ ತಟ್ಟಿದ ಸಿಲಿಂಡರ್ ಸಮಸ್ಯೆ, ಏಜೆನ್ಸಿ ಬಳಿ ದೌಡಾಯಿಸಿದ ಅಧಿಕಾರಿಗಳು, ಬರಿಗೈಲಿ ವಾಪಸ್!]]></title>
            <link>https://kannada.asianetnews.com/karnataka-districts/koppal-gavisiddeshwara-math-face-gas-cylinder-shortage-for-mid-day-meals-rav/articleshow-fctc1t4</link>
            <guid isPermaLink="true">https://kannada.asianetnews.com/karnataka-districts/koppal-gavisiddeshwara-math-face-gas-cylinder-shortage-for-mid-day-meals-rav/articleshow-fctc1t4</guid>
            <pubDate>Tue, 17 Mar 2026 12:43:09 +0530</pubDate>
            <description><![CDATA[&lt;p&gt;ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಕೊಪ್ಪಳದಲ್ಲಿ ಎಲ್&zwnj;ಪಿಜಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಅಕ್ಷರ ದಾಸೋಹ ಕೇಂದ್ರಕ್ಕೆ ಗ್ಯಾಸ್ ಸಮಸ್ಯೆ ತಟ್ಟಿದೆ. ಸಾವಿರಾರು ಮಕ್ಕಳಿಗೆ ಬಿಸಿಯೂಟ ತಯಾರಿಸಲು ಅಧಿಕಾರಿಗಳು ಗ್ಯಾಸ್ ಏಜೆನ್ಸಿ ಮುಂದೆ ಬೇಡಿದ್ರೂ, ಸ್ಟಾಕ್ ಇಲ್ಲದ ಕಾರಣ ಸಿಲಿಂಡರ್ ಸಿಕ್ಕಿಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkx9r22tddhdc86rx5s16pdb,imgname-1-1773731055705.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ (ಮಾ.17) &lt;/strong&gt;ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ನೇರವಾಗಿ ರಾಜ್ಯದ ಜನರ ಅಡುಗೆ ಮನೆಯ ಮೇಲೆ ಪರಿಣಾಮ ಬೀರಿದೆ. ಅಡುಗೆ ಅನಿಲ (LPG) ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಸಾಮಾನ್ಯ ಜನರು ಹಾಗೂ ಹೋಟೆಲ್&zwnj;ಗಳು ಸಂಕಷ್ಟಕ್ಕೆ ಸಿಲುಕಿದ್ದು, ಈಗ ಕೊಪ್ಪಳದ ಅಕ್ಷರ ದಾಸೋಹಕ್ಕೂ ಗ್ಯಾಸ್ ಸಮಸ್ಯೆ ತಟ್ಟಿದೆ.&lt;/p&gt;&lt;p&gt;ಸಾವಿರಾರು ಮಕ್ಕಳಿಗೆ ನಿತ್ಯ ಅನ್ನದಾಸೋಹ ನಡೆಸುವ ಅಕ್ಷರ ದಾಸೋಹ ಕೇಂದ್ರಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಸಿಲಿಂಡರ್ ಕೊರತೆ ಎದುರಾಗಿದೆ. ಕಮರ್ಷಿಯಲ್ ಸಿಲಿಂಡರ್&zwnj;ಗಳ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ಯಾಸ್ ಇಲ್ಲದೆ ಬಿಸಿಯೂಟ ನಿಂತುಹೋಗುವ ಭೀತಿ ಎದುರಾಗಿದೆ.&lt;/p&gt;&lt;h3&gt;ಏಜೆನ್ಸಿ ಮುಂದೆ ನಿಂತ ಅಧಿಕಾರಿಗಳು&lt;/h3&gt;&lt;p&gt;ಸಿಲಿಂಡರ್ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿ ಇಂದು ನೇರವಾಗಿ ಗ್ಯಾಸ್ ಏಜೆನ್ಸಿಗೆ ಬಂದಿದ್ದಾರೆ. ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಹೇಗಾದರೂ ಮಾಡಿ ದಾಸೋಹಕ್ಕೆ ಸಿಲಿಂಡರ್ ಒದಗಿಸುವಂತೆ ಮನವಿ ಮಾಡಿದರು.&lt;/p&gt;&lt;h3&gt;ಬರಿಗೈಲಿ ವಾಪಸ್ ಕಳಿಸಿದ ಏಜೆನ್ಸಿ ಮಾಲೀಕ!&lt;/h3&gt;&lt;p&gt;ಅಧಿಕಾರಿಗಳು ಏಜೆನ್ಸಿ ಮುಂದೆ ಗ್ಯಾಸ್&zwnj;ಗೆ ಬೇಡಿದರೂ ಕೂಡ ತಕ್ಷಣಕ್ಕೆ ಸಿಲಿಂಡರ್ ನೀಡಲು ಮಾಲೀಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 'ಸದ್ಯಕ್ಕೆ ಸ್ಟಾಕ್ ಇಲ್ಲ, ಸಂಜೆ ನಾಲ್ಕು ಗಂಟೆಗೆ ಬನ್ನಿ ನೋಡೋಣ' ಎಂದು ಹೇಳಿ ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ. ಇದರಿಂದಾಗಿ ದಾಸೋಹದ ಸಿಬ್ಬಂದಿ ವಾಪಸ್ ಹೋಗಿದ್ದರಿಂದ ಸಿಲಿಂಡರ್ ಇಲ್ಲದೆ ಇಂದಿನ ಅಡುಗೆ ನಿರ್ವಹಣೆ ಹೇಗೆ ಎಂಬ ಪ್ರಶ್ನೆ ಎದುರಾಗಿದೆ.&lt;/p&gt;&lt;p&gt;&lt;strong&gt;ಸಾಮಾನ್ಯ ಜನರಿಗೂ ತಪ್ಪದ ಪರದಾಟ&lt;/strong&gt;&lt;/p&gt;&lt;p&gt;ಅಕ್ಷರ ದಾಸೋಹ ಮಾತ್ರವಲ್ಲದೆ, ಜಿಲ್ಲೆಯಾದ್ಯಂತ ಎಲ್&zwnj;ಪಿಜಿ ಸಿಗದೆ ಹೋಟೆಲ್ ಮಾಲೀಕರು ಮತ್ತು ಸಾಮಾನ್ಯ ಜನರು ಪರದಾಡುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಸಂಘರ್ಷವು ಅಡುಗೆ ಅನಿಲದ ಸಪ್ಲೈ ಚೈನ್ ಕಡಿದುಹಾಕಿದ್ದು ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.&lt;/p&gt;]]></content:encoded>
            <category>koppal</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/koppal-gavisiddeshwara-math-face-gas-cylinder-shortage-for-mid-day-meals-rav/articleshow-fctc1t4"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>koppal</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ಏನ್ ಮಾಡಕತ್ತೀ ಮೇಂಬರವ್ವಾ ಅಂತಾ ಮಂದಿ ಮನೀಗೆ ಬರ್ತಾರಿ:  ಪಂಚಾಯಿತಿ ಸಭೆಯಲ್ಲಿ ಆಕ್ರೋಶ]]></title>
            <link>https://kannada.asianetnews.com/karnataka-districts/town-panchayat-meeting-held-at-kuknoor-outrage-over-city-s-sewage-and-water-problems-mrq/articleshow-m747x5l</link>
            <guid isPermaLink="true">https://kannada.asianetnews.com/karnataka-districts/town-panchayat-meeting-held-at-kuknoor-outrage-over-city-s-sewage-and-water-problems-mrq/articleshow-m747x5l</guid>
            <pubDate>Wed, 18 Mar 2026 08:55:56 +0530</pubDate>
            <description><![CDATA[&lt;p&gt;ಕುಕನೂರಿನಲ್ಲಿ ನಡೆದ ಪಟ್ಟಣ ಪಂಚಾಯಿತಿ ಸಭೆಯಲ್ಲಿ, ಸಂಜಯ ನಗರದ ಚರಂಡಿ ಮತ್ತು ನೀರಿನ ಸಮಸ್ಯೆಗೆ ಸದಸ್ಯೆ ಲಕ್ಷ್ಮೀ ಸಬರದ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkzfepzrqaz1xdzgcbq29f30,imgname-kuknoor-pattan-panchayat-1773804149752.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ:&lt;/strong&gt; ನಮ್ಮ ಸಂಜಯ ನಗರದಾಗ ಗಟಾರ್ ತುಂಬಿದಾವು, ಸರಿಯಾಗಿ ನೀರು ಬಿಡುತ್ತಿಲ್ಲ. ಗಟಾರ ತುಂಬಿದ ಕೂಡ್ಲೆ ಮಂದಿ ಮನೀಗೆ ಬಂದು ಏನ್ ಮಾಡಕತ್ತೀ ಮೆಂಬರವ್ವ ಅಂತಾ ಬಂದು ಕೂಡ ತಾರಾ, ನಾವು ಮನೆಯಲ್ಲಿ ಇರಬೇಕಾ, ಬೇಡ್ವಾ ಎಂದು 13ನೇ ವಾರ್ಡ್&zwnj;ನ ಸಂಜನಗರದ ಪಪಂ ಸದಸ್ಯೆ ಲಕ್ಷ್ಮೀ ಸಬರದ ಮುಖ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಪ್ರಸಂಗ ನಡೆಯಿತು.&lt;/p&gt;&lt;p&gt;ಸ್ಥಳೀಯ ಪ್ರವಾಸಿ ಮಂದಿರಲ್ಲಿ ಪಪಂದಿಂದ ಮಂಗಳವಾರ ಜರುಗಿದ ಪಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇಷ್ಟು ದಿನಗಳಾಯಿತು ಕುಡಿವ ನೀರು, ಚರಂಡಿ ಸ್ವಚ್ಛತೆ ಬಿಟ್ಟು ನಾವು ಏನು ಕೇಳೊದಿಲ್ಲ. ಚರಂಡಿ ತುಂಬಿದರೆ ನಿವಾಸಿಗಳು ಮೆಂಬರ್ ಏನು ಮಾಡಕತಿಯವ್ವ ಗಟಾರು ತುಂಬಿದಾವು ಅಂತಾರಾ. ಅದನ್ನಾ ನಾವು ಬಳಿಬೇಕಾ, ನೀವು ಅಧಿಕಾರಿಗಳು ಮತ್ತು ಪೌರಕಾರ್ಮಿಕರು ಏನು ಮಾಡುತ್ತೀರಿ.ಲೆಬರ್ ಕಡಿಮೆ ಇದ್ದರೆ ಮತ್ತಷ್ಟು ಜನರವನ್ನು ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಬರಿ ಸುಳ್ಳು ಹೇಳಿದರ ಹೇಂಗ, ಜನರಿಗೆ ನಾವು ಏನ್ ಉತ್ತರ ಕೊಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಮೂಲ ಸೌಕರ್ಯಕ್ಕೆ ಆದ್ಯತೆ ನೀಡುವಂತೆ ಒತ್ತಾಯ&lt;/strong&gt;&lt;/h2&gt;&lt;p&gt;ಪಪಂ ಸದಸ್ಯ ಸಿರಾಜ್ ಕರಮುಡಿ ಮಾತನಾಡಿ, ಜನರಿಗೆ ಕುಡಿವ ನೀರು, ಬೆಳಕು ಮತ್ತು ಸ್ವಚ್ಛತೆ ನೀಡಿದರೆ ಮತ್ತೆ ಜನರು ಏನು ಕೇಳುವದಿಲ್ಲ. ಮೊದಲು ಮೂಲ ಸೌಕರ್ಯಕ್ಕೆ ಆದ್ಯತೆ ನೀಡಬೇಕು. ತೆರಿಗೆ ಹೆಚ್ಚಿಗೆ ಮಾಡಬಾರದು ಎಂದರು.&lt;/p&gt;&lt;p&gt;ಅಮೃತ 2.0 ಕುಡಿವ ನೀರಿನ ಎಇಇ ಸುಕುಮುನಿ ನಾಯಕ ಮಾತನಾಡಿ, ಅಮೃತ 2.0 ಕುಡಿವ ನೀರಿನ ಯೋಜನೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಮೂರು ಟ್ಯಾಂಕರ ನಿರ್ಮಿಸಲಾಗುತ್ತಿದೆ. ತುಂಗಭದ್ರಾ ಜಲಾಯಶದಿಂದ ಭಾನಾಪೂರ, ಕೌಶಲ್ಯ ಕೇಂದ್ರ, ಇಂಜಿನಿಯರಿಂಗ್ ಕಾಲೇಜ್, ತಳಬಾಳ ಕಾಲೇಜ, ಕುಕನೂರು ಮತ್ತು ಯಲಬುರ್ಗಾ ಟೌನ್&zwnj;ಗೆ ಕುಡಿವ ನೀರಿನ ಪೈಪ್&zwnj;ಲೈನ್ ಕಾಮಗಾರಿ ನಡೆಯುತ್ತಿದ್ದು, ಒಬ್ಬ ವ್ಯಕ್ತಿಗೆ 135 ಲೀಟರ್ ಕುಡಿವ ನೀರು ನೀಡುವ ಯೋಜನೆಯಾಗಿದೆ. 15 ತಿಂಗಳಿಂದ ಕೆಲಸ ಪ್ರಗತಿಯಲ್ಲಿದ್ದು ಜೂನ್ ಜುಲೈಗೆ ಕಾಮಗಾರಿ ಮುಗಿಸುತ್ತೇವೆ ಎಂದರು.&lt;/p&gt;&lt;h3&gt;&lt;strong&gt;ಶೇ..3 ರಷ್ಟು ತೆರಿಗೆ ಹೆಚ್ಚಳ&lt;/strong&gt;&lt;/h3&gt;&lt;p&gt;ಪಪಂ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಪಟ್ಟಣದಲ್ಲಿ ಕುಡಿವ ನೀರು, ಚರಂಡಿ ಸ್ವಚ್ಛತೆಯನ್ನು ಪೌರಕಾರ್ಮಿಕರೊಂದಿಗೆ ಸಭೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವದು. ಕೇಂದ್ರ ಸರ್ಕಾರ ಪ್ರಮುಖ ವೃತ್ತಗಳಲ್ಲಿ ಮೂರ್ತಿ ನಿರ್ಮಿಸಬಾರದು ಎಂದು ತೀರ್ಪು ನೀಡಿದೆ. ಪಟ್ಟಣದಲ್ಲಿ ಪಾದಚಾರಿಗಳ ರಸ್ತೆ ತೆರವುಗೊಳಿಸಲು ಕೇಲವು ದಿನ ಬೀದಿ ಬದಿ ವ್ಯಾಪಾರಸ್ಥರು ಸಮಯ ಕೇಳಿದ್ದರು. ಸೋಮವಾರದ ಒಳಗಾಗಿ ಚರಂಡಿ ಮೇಲೆ ಇರುವಂತಹ ಅಂಗಡಿ ತೆರವುಗೊಳಿಸಲಾಗುವದು. ಸರ್ಕಾರವು ತೆರಿಗೆ ಹೆಚ್ಚು ಮಾಡಲು ನಿರ್ದೇಶನ ನೀಡಿದೆ. ಶೇ..3 ರಷ್ಟು ತೆರಿಗೆ ಹೆಚ್ಚು ಮಾಡಲಾಗುವದು ಎಂದರು.&lt;/p&gt;&lt;p&gt;ಪ.ಪಂ ಅಧ್ಯಕ್ಷೆ ಲೀಲಾವತಿ ಮುಧೋಳ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಂಜುಳಾ ಕಲ್ಮನಿ, ಸದಸ್ಯರಾದ ಸಿರಾಜ್ ಕರಮುಡಿ, ಗುದ್ನೇಪ್ಪ ನೋಟಗಾರ, ರಾಧಾ ದೊಡ್ಡಮನಿ, ಲಲಿತಮ್ಮ ಯಡಿಯಾಪೂರ, ಪ್ರಶಾಂತ ಆರುಬೆಳಿನ, ಮಂಜುನಾಥ ಕೋಳೂರು, ನೂರುದ್ದೀನ್&zwnj;ಸಾಬ ಗುಡಿಹಿಂದಲ್, ನಾಮನಿರ್ದೇಶಿತ ಸದಸ್ಯರಾದ ರಫೀ ಹಿರೇಹಾಳ, ಶರಣಯ್ಯ, ಈರಣ್ಣ ಯಲಬುರ್ಗಿ ಎಇ ವಿರೇಶ ಬೇಲಿ, ಕೆಇಬಿ ಸೆಕ್ಷನ್ ಅಧಿಕಾರಿ ವಿರೇಶ ಹಾಗೂ ಸಿಬ್ಬಂಧಿಗಳು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೌಟುಂಬಿಕ ಕಲಹದ ಬಳಿಕ ಸನ್ಯಾಸಿಯಾದ ಪತಿಗೆ ಬೀದಿಯಲ್ಲೇ ಥಳಿಸಿದ ಮಹಿಳೆ: ವೀಡಿಯೋ&lt;/strong&gt;&lt;/p&gt;&lt;h3&gt;&lt;strong&gt;ಬಿಜೆಪಿ ಬೆಂಬಲಿತ ಸದಸ್ಯರಿಂದ ಸಭೆ ಬಹಿಷ್ಕಾರ&lt;/strong&gt;&lt;/h3&gt;&lt;p&gt;ಪಟ್ಟಣ ಪಂಚಾಯತಿ ಬಿಜೆಪಿ ಬೆಂಬಲಿತ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪಪಂ ಮುಖ್ಯಾಧಿಕಾರಿ ನಾಗೇಶ ಅವರಿಗೆ ಪತ್ರವನ್ನು ಬರೆದರು. ನಾವು ಸಭೆಯಲ್ಲಿ ಕೇಳಿದ ಮಾಹಿತಿ ಮತ್ತು ಕೆಲಸ ಸರಿಯಾಗಿ ಮಾಡುತ್ತಿಲ್ಲ ಎಂದು ಪತ್ರ ಬರೆದ್ದಾರೆ. ಸಭೆಗೆ ಬಿಜೆಪಿ ಬೆಂಬಲಿತ ಸದಸ್ಯರು ಗೈರಾಗಿದ್ದರು. ಸದಸ್ಯೆ ಲಕ್ಷ್ಮೀ ಸಹ ಆಕ್ರೋಶ ವ್ಯಕ್ತಪಡಿಸಿ ಹೊರ ನಡೆದರು. ನಂತರ, ಮುಖ್ಯಾಧಿಕಾರಿಗಳ ಸಮ್ಮುಖದಲ್ಲಿ ನಾನಾ ವಿಷಯ ಚರ್ಚಿಸಲಾಯಿತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮೈಸೂರು ದಳಪತಿಗಳ ಅಂಗಳದಲ್ಲಿ ಸಂಚಲನ; ಹೊಸ ದಾಳ ಉರುಳಿಸಿದ JDS ಶಾಸಕ ಜಿಟಿ ದೇವೇಗೌಡ&lt;/strong&gt;&lt;/p&gt;]]></content:encoded>
            <category>koppal</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/town-panchayat-meeting-held-at-kuknoor-outrage-over-city-s-sewage-and-water-problems-mrq/articleshow-m747x5l"/>
        </item>
        <item>
            <title><![CDATA[ದೇವಸ್ಥಾನದ ನಿಧಿ ದೋಚಿದವನಿಗೆ ಪಾಪಪ್ರಜ್ಞೆ: ಪೊಲೀಸ್ ಠಾಣೆಗೆ ಬಂದು ಶರಣಾದ ಇಳಕಲ್‌ ವ್ಯಕ್ತಿ]]></title>
            <link>https://kannada.asianetnews.com/karnataka-districts/the-man-who-robbed-the-temple-treasure-feels-guilty-he-surrenders-at-ilakal-police-station-mrq/articleshow-o8wbmti</link>
            <guid isPermaLink="true">https://kannada.asianetnews.com/karnataka-districts/the-man-who-robbed-the-temple-treasure-feels-guilty-he-surrenders-at-ilakal-police-station-mrq/articleshow-o8wbmti</guid>
            <pubDate>Mon, 23 Mar 2026 07:18:20 +0530</pubDate>
            <description><![CDATA[&lt;p&gt;ಸೋಮಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ವರ್ಷಗಳ ಹಿಂದೆ ನಿಧಿ ದೋಚಿದ್ದ ವ್ಯಕ್ತಿಯೊಬ್ಬ, ಪಾಪಪ್ರಜ್ಞೆ ಮತ್ತು ದೇವರ ಶಾಪದ ಭಯದಿಂದ ಪೊಲೀಸರಿಗೆ ಶರಣಾಗಿದ್ದಾನೆ. ನಿಧಿ ಸಿಕ್ಕ ನಂತರ ಕುಟುಂಬದಲ್ಲಿ ಅಶಾಂತಿ, ಆರೋಗ್ಯ ಸಮಸ್ಯೆಗಳು ಎದುರಾಗಿದ್ದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmc5tx62gzgbcvfpakbd38e7,imgname-treasure-1774230271170.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ : &lt;/strong&gt;ಸೋಮಶಂಕರಲಿಂಗೇಶ್ವರ ದೇವಸ್ಥಾನದ ನಿಧಿ ದೋಚಿದ ವ್ಯಕ್ತಿ ಪಾಪಪ್ರಜ್ಞೆಯಿಂದ ಭಾನುವಾರ ಪೊಲೀಸರಿಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾವಿನ ಇಟಗಿ ಗ್ರಾಮದಲ್ಲಿ ನಡೆದಿದೆ.&lt;/p&gt;&lt;p&gt;ಇಳಕಲ್ಲ ನಗರ ನಿವಾಸಿ ಮೌಲಾಸಾಬ್&zwnj; ಖಾಸಿಮ್&zwnj;ಸಾಬ್&zwnj; ಮುಜಾವರ (45) ಶರಣಾದವ. ಆರೋಪಿ ಪಂಕ್ಚರ್&zwnj; ಅಂಗಡಿ ಇಟ್ಟಕೊಂಡು ಜೀವನ ನಡೆಸುತ್ತಿದ್ದಾನೆ. 2 ವರ್ಷಗಳ ಹಿಂದೆ ನಾನು ಸೇರಿದಂತೆ 4 ಜನ ದೇವಸ್ಥಾನದ ನಿಧಿ ತೆಗೆದಿದ್ದು, 100 ಬಂಗಾರದ ನಾಣ್ಯ ಹಾಗೂ ಒಂದು ಬೆಳ್ಳಿ ಕಡಗ ಸಿಕ್ಕಿದೆ.&amp;nbsp;&lt;/p&gt;&lt;h2&gt;&lt;strong&gt;ನಿಧಿ ಸಿಕ್ಕ ನಂತ್ರ ಜೀವನದಲ್ಲಿ ಅನೇಕ ಸಮಸ್ಯೆಗಳು ಆರಂಭ&lt;/strong&gt;&lt;/h2&gt;&lt;p&gt;ನಿಧಿ ಸಿಕ್ಕ ನಂತರ ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳಾಗಿದ್ದು, ಕುಟುಂಬದಲ್ಲಿ ಅಶಾಂತಿ, ವೈಯಕ್ತಿಕ ಕಷ್ಟ, ಆರೋಗ್ಯ ಸಮಸ್ಯೆ ತಲೆದೋರಿದೆ. ಈ ಘಟನೆಯ ನಂತರ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದೇನೆ. ಇದು ದೇವರ ಶಾಪ ಎಂಬ ಭಯ ಕಾಡುತ್ತಿದೆ ಎಂದು ಶರಣಾದ ವ್ಯಕ್ತಿ ಹೇಳಿಕೊಂಡಿದ್ದಾನೆ. ಈ ನಡುವೆ ಆತನಿಗೆ ಜೊತೆಗಾರರು ಪಾಲು ನೀಡಿಲ್ಲ ಎಂದು ಹೇಳಿದ್ದಾನೆ.&lt;/p&gt;&lt;h3&gt;&lt;strong&gt;ತಪ್ಪೊಪ್ಪಿಕೊಂಡಿರುವ ಮೌಲಾಸಾಬ್&zwnj; ಖಾಸಿಮ್&zwnj;ಸಾಬ್&zwnj; ಮುಜಾವರ&lt;/strong&gt;&lt;/h3&gt;&lt;p&gt;ಸಿಕ್ಕ ಸಿಧಿ ದೇಗುಲಕ್ಕೆ ಕೊಡೋಣ ಎಂದು ನನ್ನ ಜತೆಗಾರರನ್ನು ಮನವೊಲಿಸಲು ಪ್ರಯತ್ನಿಸಿದ್ದರೂ ಅವರು ಒಪ್ಪುತ್ತಿಲ್ಲ. ನನ್ನ ನಿಧಿ ಪಾಲನ್ನು ಅವರು ನನಗೆ ಕೊಟ್ಟಿಲ್ಲ. ಕೇಳಿದರೆ ಬೆದರಿಕೆ ಹಾಕಿ, ಹೊಡೆಯಲು ಬರುತ್ತಾರೆ ಎಂದು ದೇಗುಲದ ಕಮಿಟಿ ಹಾಗೂ ಪಿಎಸ್&zwnj;ಐ ಮುಂದೆ ಸ್ವ ಇಚ್ಛೆಯಿಂದ ಒಪ್ಪಿಕೊಂಡಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಗನಕ್ಕೇರಿದ ಬೆಲೆ: KGFನಲ್ಲಿರೋ ಚಿನ್ನ ಮಿಶ್ರಿತ ಮಣ್ಣನ್ನು ಮೂಟೆಗಳಲ್ಲಿ ತುಂಬಿಕೊಂಡು ಹೋದ ಮಹಿಳೆಯರು&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಇಡೀ ದೇಶದ ಗಮನ ಸೆಳೆದಿದ್ದ ಲಕ್ಕುಂಡಿಯ 47 ದಿನಗಳ ಉತ್ಖನನಕ್ಕೆ ತೆರೆ; ಇಷ್ಟು ದಿನ ಸಿಕ್ಕಿದ್ದೇನು?&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಲಕ್ಕುಂಡಿ ಹಳೇ ಹಂಡೆಯಲ್ಲಿ ಗೋಲ್ಡನ್ ಕವರ್ ಚಾಕ್ಲೆಟ್ ಹಾಕಿ 22 ಲಕ್ಷ ದೋಚಿದ್ದ ಮೌಲ್ವಿ ಅರೆಸ್ಟ್Read more: https://t.co/TxtW5mp15C#Lakundi #GoldTheft #22LakhsLoot #CrimeNews pic.twitter.com/blLpLbFYwi&lt;/p&gt;&lt;p&gt;&mdash; Asianet Suvarna News (@AsianetNewsSN) February 22, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>koppal</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/the-man-who-robbed-the-temple-treasure-feels-guilty-he-surrenders-at-ilakal-police-station-mrq/articleshow-o8wbmti"/>
        </item>
        <item>
            <title><![CDATA[ಸಿಲಿಂಡರ್ ಅಭಾವಕ್ಕೆ ಪ್ರಧಾನಿ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು  ಆರೋಪ]]></title>
            <link>https://kannada.asianetnews.com/politics/minister-ns-boseraju-slams-modi-trump-ties-over-lpg-shortage-gvd/articleshow-p6qcxh6</link>
            <guid isPermaLink="true">https://kannada.asianetnews.com/politics/minister-ns-boseraju-slams-modi-trump-ties-over-lpg-shortage-gvd/articleshow-p6qcxh6</guid>
            <pubDate>Fri, 20 Mar 2026 17:26:09 +0530</pubDate>
            <description><![CDATA[&lt;p&gt;ದೇಶದಲ್ಲಿ ಸಿಲಿಂಡರ್ ಅಭಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಆತ್ಮೀಯ ಸ್ನೇಹವೇ ಇಂದಿನ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವ ಎನ್ ಎಸ್ ಬೋಸರಾಜು ಅವರು ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jyver4yw59d4kzsbd1et7s9e,imgname-vdvb-1751120614364.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ (ಮಾ.20): &lt;/strong&gt;ದೇಶದಲ್ಲಿ ಸಿಲಿಂಡರ್ ಅಭಾವಕ್ಕೆ ಟ್ರಂಪ್ ಮೋದಿ ಸ್ನೇಹವೇ ಕಾರಣ ಎಂದು ಸಚಿವ ಎನ್ ಎಸ್ ಬೋಸರಾಜು ಅವರು ಹೇಳಿದರು. ತಾಲೂಕಿನ ಮುನಿರಾಬಾದ್&zwnj;ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ದೇಶದಲ್ಲಿ ಉಂಟಾಗಿರುವ ಎಲ್&zwnj;ಪಿಜಿ ಸಿಲಿಂಡರ್ ಅಭಾವದ ಬಗ್ಗೆ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ತೀವ್ರವಾಗಿ ಟೀಕಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಆತ್ಮೀಯ ಸ್ನೇಹವೇ ಇಂದಿನ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ.&lt;/p&gt;&lt;p&gt;ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಎಲ್&zwnj;ಪಿಜಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದರು. ನಾವು ಏನಾದರೂ ಮೋದಿ ವಿರುದ್ದ ಮಾತನಾಡಿದರೆ, ಮೋದಿ ವಿರುದ್ಧ ಮಾತನಾಡುತ್ತಿದ್ದೀರಿ ಎಂದು ಹೇಳುತ್ತಾರೆ. ಮೋದಿಯವರು ಟ್ರಂಪ್ ಜೊತೆ ಅತಿಯಾಗಿ ಹತ್ತಿರವಾಗಿರುವುದರಿಂದ, ಅಮೇರಿಕಾ ನಮ್ಮ ಮೇಲೆ ಪ್ರಭಾವ ಬೀರುತ್ತಿದೆ.&lt;/p&gt;&lt;p&gt;ಟ್ರಂಪ್ ಜೊತೆಗಿನ ಈ ಸ್ನೇಹದಿಂದಲೇ ಭಾರತಕ್ಕೆ ಇಂತಹ ಸಂಕಷ್ಟ ಎದುರಾಗಿದೆ ಎಂದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಮೇರಿಕಾ, ರಷ್ಯಾ ಸೇರಿದಂತೆ ಹಲವಾರು ದೇಶಗಳ ಜೊತೆ ಉತ್ತಮ ಸಂಬಂಧ ಇತ್ತು. ಚೀನಾ ಮತ್ತು ಪಾಕಿಸ್ತಾನ ಹೊರತುಪಡಿಸಿ, ಬೇರೆ ರಾಷ್ಟ್ರಗಳ ಜೊತೆ ಸಹಕಾರ ಉತ್ತಮವಾಗಿತ್ತು. ಆದರೆ ಈಗಿನ ವಿದೇಶಾಂಗ ನೀತಿಯಿಂದ ದೇಶದ ಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದರು.&lt;/p&gt;&lt;p&gt;ಮೋದಿ ಅವರು ಟ್ರಂಪ್ ಅವರನ್ನು ಬೆಂಬಲಿಸುವ ರೀತಿಯಲ್ಲಿ ನಡೆದುಕೊಂಡಿದ್ದು, ಅವರ ಚುನಾವಣೆಯಲ್ಲಿಯೂ ಭಾಗವಹಿಸಿದ್ದರು. ಮೊದಲಿನಂತೆ ಸಮತೋಲನದ ವಿದೇಶಾಂಗ ನೀತಿ ಇದ್ದಿದ್ದರೆ, ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಈಗ ರಿಪೇರಿ ಕಾರ್ಯ ನಡೆದಿದೆ&lt;/strong&gt;&lt;/h2&gt;&lt;p&gt;ಬಸಾಪುರ ಬಳಿ ತುಂಗಭದ್ರಾ ಎಡದಂಡೆ ನಾಲೆ ಒಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈ ಕುರಿತು ಪರಿಶೀಲಿಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತುಂಗಭದ್ರಾ ಕಾಲುವೆ ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಸರಾಜ್ ಹೇಳಿದರು. ಕುಡಿವ ನೀರಿಗಾಗಿ ಬಿಟ್ಟ ನೀರು, ಈಗ ರಿಪೇರಿ ಕಾರ್ಯ ನಡೆದಿದೆ. ತಜ್ಞರು ಹಳೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಾಳೆಗೆ ಕಾಲುವೆಯಿಂದ ನೀರು ಬಿಡಲು ಸಿದ್ದತೆ ಮಾಡಲಾಗಿದೆ. ಕಾಲುವೆಯ ಒಡೆದ ಸ್ಥಳದಲ್ಲಿ ಮರಳು ಬ್ಯಾಗ್ ಹಾಕಿ 1000-1500 ಕ್ಯೂಸೆಕ್ ಬಿಡಲು ಸಿದ್ದತೆ ನಡೆಸಲಾಗಿದೆ.&lt;/p&gt;&lt;p&gt;ಇನ್ನೊಂದು ವಾರದಲ್ಲಿ ಕಾಲುವೆ ರಿಪೇರಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕಾಲುವೆ ಅಧುನಿಕರಣಕ್ಕೆ 450 ಕೋಟಿ ರೂಪಾಯಿ ಯೋಜನೆ ಇದೆ. ಈಗ 250 ಕೋಟಿ ರೂಪಾಯಿ ಯೋಜನೆಗೆ ಟೆಂಡರ್ ಕರೆಯಲಾಗುತ್ತಿದೆ. ಕಾಲುವೆ ಅಧುನಿಕರಣಕ್ಕಾಗಿ ಈ ಭಾಗದ ಜನಪ್ರತಿನಿಧಿಗಳು ಸಿಎಂ ಭೇಟಿಯಾಗಲಿವೆ. ಕಾಲುವೆ ಒಡೆದು ಹಾಳಾಗಿರುವ ಕೃಷಿ ಭೂಮಿಗೆ ಪರಿಹಾರ ನೀಡಲು ಸಮಿಕ್ಷೆ ನಡೆಸಲಾಗುತ್ತಿದ್ದು, ನಿಯಮದಲ್ಲಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.&lt;/p&gt;]]></content:encoded>
            <category>koppal</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/minister-ns-boseraju-slams-modi-trump-ties-over-lpg-shortage-gvd/articleshow-p6qcxh6"/>
        </item>
        <item>
            <title><![CDATA[ಶಾಸಕ ಬಸವರಾಜ ರಾಯರೆಡ್ಡಿ ಹಿಡಿದ ಕೆಲಸ ಬಿಡದ ಛಲಗಾರ: ಸಿಎಂ ಸಿದ್ದರಾಮಯ್ಯ]]></title>
            <link>https://kannada.asianetnews.com/karnataka-districts/siddaramaiah-praises-basavaraj-rayareddy-yelburga-development-gvd/articleshow-pq201ey</link>
            <guid isPermaLink="true">https://kannada.asianetnews.com/karnataka-districts/siddaramaiah-praises-basavaraj-rayareddy-yelburga-development-gvd/articleshow-pq201ey</guid>
            <pubDate>Tue, 17 Mar 2026 20:45:57 +0530</pubDate>
            <description><![CDATA[&lt;p&gt;ನನ್ನ ಕ್ಷೇತ್ರದಲ್ಲೂ ನಿಮ್ಮ ರಾಯರೆಡ್ಡಿಯಷ್ಟು ನಾನ್ ಕೆಲಸ ಮಾಡಿಲ್ಲ, ಅಷ್ಟು ಅಭಿವೃದ್ಧಿ ಕೆಲಸಗಾರ ನಿಮ್ಮ ಶಾಸಕ ಬಸವರಾಜ ರಾಯರೆಡ್ಡಿ. ಹಿಡಿದ ಕೆಲಸ ಬಿಡದ ಛಲಗಾರ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9m58x709yene3b55nzrqxym,imgname-siddaramaiah-1762686956768.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಲಬುರ್ಗಾ (ಮಾ.17): &lt;/strong&gt;ನನ್ನ ಕ್ಷೇತ್ರದಲ್ಲೂ ನಿಮ್ಮ ರಾಯರೆಡ್ಡಿಯಷ್ಟು ನಾನ್ ಕೆಲಸ ಮಾಡಿಲ್ಲ, ಅಷ್ಟು ಅಭಿವೃದ್ಧಿ ಕೆಲಸಗಾರ ನಿಮ್ಮ ಶಾಸಕ ಬಸವರಾಜ ರಾಯರೆಡ್ಡಿ. ಹಿಡಿದ ಕೆಲಸ ಬಿಡದ ಛಲಗಾರ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್&zwnj;ನಲ್ಲಿ ಯಲಬುರ್ಗಾ ಕ್ಷೇತ್ರಕ್ಕೆ ವಿಶೇಷ ಅನುದಾನ ಘೋಷಣೆಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಯಲಬುರ್ಗಾ ಕ್ಷೇತ್ರದ ಮಹಿಳಾ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು ಹಾಗೂ ಜನತೆ ಪರವಾಗಿ ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಜರುಗಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.&lt;/p&gt;&lt;p&gt;ಶಾಸಕ ರಾಯರೆಡ್ಡಿ ಕೆಲಸಗಾರ ಕಣಪ್ಪ. ಅಂತಹ ವ್ಯಕ್ತಿಯನ್ನು ಸದಾ ಬೆಂಬಲಿಸಬೇಕು. ನನ್ನ ಕ್ಷೇತ್ರದಲ್ಲೂ ಆತನಷ್ಟು ನಾನ್ ಕೆಲಸ ಮಾಡಿಲ್ಲ. ಅಭಿವೃದ್ಧಿಗೆ ಸದಾ ಮುಂದಿರ್ತಾನೆ. ರಾಜ್ಯ ಬಜೆಟಿನಲ್ಲೂ ಆತನ ಕೊಡುಗೆ ಬಹಳ ಇದೆ ಎಂದಿದ್ದಾರೆ. ರಾಯರೆಡ್ಡಿ ಯಲಬುರ್ಗಾ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರಾಗಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಉತ್ತಮ ಸಲಹೆ ನೀಡಿದ್ದು, ಜನಸ್ನೇಹಿ ಬಜೆಟ್ ಆಗಿದೆ. ಇದಕ್ಕೆ ಅವರ ಶ್ರಮ ಅಪಾರವಾಗಿದೆ. ಅನುಭವ, ಬುದ್ಧಿವಂತಿಕೆಯಿಂದ ಯಲಬುರ್ಗಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕ್ಷೇತ್ರದ ಜನತೆ ನನಗೆ ಸನ್ಮಾನಿಸಿದ್ದು ಧನ್ಯವಾದ ತಿಳಿಸುತ್ತೇನೆ. ಅವರನ್ನು ಯಲಬುರ್ಗಾ ಕ್ಷೇತ್ರ ಜನರು ನಿರಂತರ ಆಶೀರ್ವದಿಸಬೇಕು ಎಂದರು&zwnj;&lt;/p&gt;&lt;p&gt;ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡಿ, ಕ್ಷೇತ್ರದ 2 ಸಾವಿರ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಬೇವೂರಿಗೆ ನೂತನ ಪ್ರಥಮ ದರ್ಜೆ ಕಾಲೇಜು, ಜಿಸಿಟಿಸಿಗೆ ₹20 ಕೋಟಿ ಅನುದಾನ, ಎರೆ ಭಾಗದ 23 ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಸುಮಾರ ₹125 ಕೋಟಿ ಅನುದಾನ, ಶಿರೂರು ಪಿಯು ಕಾಲೇಜು, ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ, ಸೇರಿದಂತೆ ಕಳೆದ ಎರಡೂವರೆ ವರ್ಷದಲ್ಲಿ ಯಲಬುರ್ಗಾ- ಕುಕನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಕ್ಷೇತ್ರಕ್ಕೆ ನೀಡಿ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದರು.&lt;/p&gt;&lt;h2&gt;&lt;strong&gt;ಮಹಿಳೆಯರು, ವಿದ್ಯಾರ್ಥಿಗಳಿಂದ ಸನ್ಮಾನ&lt;/strong&gt;&lt;/h2&gt;&lt;p&gt;ಸಿಎಂ ಸಿದ್ದರಾಮಯ್ಯ ಅವರನ್ನು ಯಲಬುರ್ಗಾದ ಬಿಎಸ್ಸಿ ನರ್ಸಿಂಗ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಿಜಿ ಸೆಂಟರ್ ವಿದ್ಯಾರ್ಥಿಗಳು, ವಿವಿಧ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸನ್ಮಾನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಹನುಮಂತಗೌಡ ಚೆಂಡೂರು, ಯಂಕಣ್ಣ ಯರಾಶಿ, ಶರಣಪ್ಪ ಗಾಂಜಿ, ಹಂಪಯ್ಯಸ್ವಾಮಿ ಹಿರೇಮಠ, ಮಂಜುನಾಥ ಕಡೇಮನಿ, ಡಾ. ಶಿವನಗೌಡ ದಾನರೆಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ಸಂಗಮೇಶ ಗುತ್ತಿ, ಮಂಜುನಾಥ ಕಡೆಮನಿ, ರಾಘವೇಂದ್ರ ಕಾತರಕಿ, ಸಂತೋಷ ಬಿನ್ನಾಳ, ಹೊನ್ನಪ್ಪ ಮರಡಿ, ಮಹೇಂದ್ರ ಗದಗಿನ ಹಾಗೂ ಅವಳಿ ತಾಲೂಕಿನ ಜನರು ಇದ್ದರು&zwnj;.&lt;/p&gt;]]></content:encoded>
            <category>koppal</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/siddaramaiah-praises-basavaraj-rayareddy-yelburga-development-gvd/articleshow-pq201ey"/>
        </item>
        <item>
            <title><![CDATA[ಕೊಪ್ಪಳ ಪಿಎಸ್‌ಐ ಸುನೀಲ್ ಅಮಾನತು; ಅಕ್ರಮಗಳಿಗೆ ಕಡಿವಾಣ ಹಾಕದ ಹಿನ್ನೆಲೆ ಎಸ್ಪಿ ರಾಮ್ ಅರಸಿದ್ದಿ ಖಡಕ್ ಆದೇಶ!]]></title>
            <link>https://kannada.asianetnews.com/state/koppal-munirabad-psi-sunil-suspended-sp-ram-arasiddi-illegal-activities-sat/articleshow-q3lzsgk</link>
            <guid isPermaLink="true">https://kannada.asianetnews.com/state/koppal-munirabad-psi-sunil-suspended-sp-ram-arasiddi-illegal-activities-sat/articleshow-q3lzsgk</guid>
            <pubDate>Wed, 01 Apr 2026 16:40:37 +0530</pubDate>
            <description><![CDATA[&lt;p&gt;ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್&zwnj;ಐ ಸುನೀಲ್ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗುದೆ. ಅಕ್ರಮ ವಿದೇಶಿ ಪಾರ್ಟಿಗಳು, ಕಲ್ಲು ಗಣಿಗಾರಿಕೆ, ಮತ್ತು ಅನ್ನ ಭಾಗ್ಯ ಅಕ್ಕಿ ದಂಧೆಯಂತಹ ಸರಣಿ ಅಕ್ರಮಗಳನ್ನು ತಡೆಯಲು ವಿಫಲರಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn4bp3w7w5vqe144emrzg2n8,imgname-koppal-psi-sunil-susopended-1775041712007.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ (ಏ.01): ಕ&lt;/strong&gt;ರ್ತವ್ಯ ಲೋಪ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್&zwnj;ಐ (PSI) ಸುನೀಲ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಾಮ್ ಅರಸಿದ್ದಿ ಅವರು ಈ ಖಡಕ್ ಆದೇಶವನ್ನು ಹೊರಡಿಸಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಣಿ ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಅಮಾನತ್ತಿಗೆ ಕಾರಣಗಳೇನು?:&lt;/strong&gt;&lt;/h2&gt;&lt;p&gt;ಕಳೆದ ಎರಡು ವರ್ಷಗಳಿಂದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪಿಎಸ್&zwnj;ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರ ವಿರುದ್ಧ ಇತ್ತೀಚಿನ ದಿನಗಳಲ್ಲಿ ದೂರುಗಳು ಕೇಳಿಬರುತ್ತಿದ್ದವು. ಕಚೇರಿಯ ಆಡಳಿತಾತ್ಮಕ ವಿಚಾರಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಶಿಸ್ತು ಕ್ರಮ ಜರುಗಿಸಲಾಗಿದೆ.&lt;/p&gt;&lt;h3&gt;&lt;strong&gt;ಸರಣಿ ಅಕ್ರಮಗಳ ಸುಳಿವು:&lt;/strong&gt;&lt;/h3&gt;&lt;p&gt;ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವಾರು ಅಕ್ರಮ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇದು ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿತ್ತು.&lt;/p&gt;&lt;p&gt;&lt;strong&gt;ಪ್ರಮುಖವಾಗಿ:&lt;/strong&gt;&lt;/p&gt;&lt;p&gt;&lt;strong&gt;ವಿದೇಶಿಗರ ಪಾರ್ಟಿ: &lt;/strong&gt;ಅನುಮತಿ ಇಲ್ಲದೆ ವಿದೇಶಿ ಪ್ರಜೆಗಳು ಭಾಗವಹಿಸಿದ್ದ ಪಾರ್ಟಿಗಳು ನಡೆದಿದ್ದು ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು.&lt;/p&gt;&lt;p&gt;&lt;strong&gt;ಅಕ್ರಮ ಕಲ್ಲು ಗಣಿಗಾರಿಕೆ:&lt;/strong&gt; ಮುನಿರಾಬಾದ್ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಪೊಲೀಸರು ಮೌನಕ್ಕೆ ಶರಣಾಗಿದ್ದರು ಎಂಬ ಆರೋಪವಿತ್ತು.&lt;/p&gt;&lt;p&gt;&lt;strong&gt;ಅನ್ನ ಭಾಗ್ಯ ಅಕ್ಕಿ ದಂಧೆ: &lt;/strong&gt;ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲವೊಂದು ಇಲ್ಲಿ ಸಕ್ರಿಯವಾಗಿತ್ತು.&lt;/p&gt;&lt;p&gt;ಈ ಎಲ್ಲಾ ಪ್ರಕರಣಗಳು ಒಂದಾದ ಮೇಲೊಂದರಂತೆ ಬೆಳಕಿಗೆ ಬಂದಾಗ, ಸ್ಥಳೀಯ ಪೊಲೀಸರ ಶಾಮೀಲಾತಿ ಅಥವಾ ನಿರ್ಲಕ್ಷ್ಯದ ಬಗ್ಗೆ ಮೇಲಧಿಕಾರಿಗಳಿಗೆ ಶಂಕೆ ವ್ಯಕ್ತವಾಗಿತ್ತು.&lt;/p&gt;&lt;h2&gt;&lt;strong&gt;ಎಸ್ಪಿ ಖಡಕ್ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಆಡಳಿತಾತ್ಮಕ ವಿಚಾರದಲ್ಲಿ ವಿಫಲರಾದ ಸುನೀಲ್ ಅವರಿಗೆ ಈ ಹಿಂದೆಯೇ ಎಚ್ಚರಿಕೆಗಳನ್ನು ನೀಡಲಾಗಿತ್ತು ಎನ್ನಲಾಗಿದೆ. ಆದರೂ ಕೆಲಸದಲ್ಲಿ ಸುಧಾರಣೆ ಕಂಡುಬರದ ಹಿನ್ನೆಲೆಯಲ್ಲಿ, ಎಸ್ಪಿ ರಾಮ್ ಅರಸಿದ್ದಿ ಅವರು ಅಮಾನತ್ತಿನ ಅಸ್ತ್ರ ಪ್ರಯೋಗಿಸಿದ್ದಾರೆ. ಈ ಆದೇಶವು ಜಿಲ್ಲೆಯ ಇತರೆ ಪೊಲೀಸ್ ಅಧಿಕಾರಿಗಳಿಗೂ ಒಂದು ಎಚ್ಚರಿಕೆಯ ಸಂದೇಶವಾಗಿದೆ. ಠಾಣಾ ವ್ಯಾಪ್ತಿಯಲ್ಲಿ ಅಕ್ರಮಗಳಿಗೆ ಅವಕಾಶ ನೀಡುವ ಅಥವಾ ಕರ್ತವ್ಯದಲ್ಲಿ ಬೇಜವಾಬ್ದಾರಿತನ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸೂಚನೆಯನ್ನು ಈ ಮೂಲಕ ನೀಡಲಾಗಿದೆ. ಪ್ರಸ್ತುತ ಪಿಎಸ್&zwnj;ಐ ಸುನೀಲ್ ಅವರನ್ನು ಅಮಾನತ್ತುಗೊಳಿಸಲಾಗಿದ್ದು, ಇಲಾಖಾ ತನಿಖೆ ಮುಂದುವರಿಯಲಿದೆ.&lt;/p&gt;]]></content:encoded>
            <category>koppal</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/koppal-munirabad-psi-sunil-suspended-sp-ram-arasiddi-illegal-activities-sat/articleshow-q3lzsgk"/>
        </item>
        <item>
            <title><![CDATA[ಟೋಲ್ ದರ ಹೆಚ್ಚಳ ಟೋಲ್‌ಗಳಲ್ಲಿ ನಗದು ಸ್ವೀಕಾರ ಇಲ್ಲ: ಯುಪಿಐ ಮೂಲಕವೇ ಪೇಮೆಂಟ್]]></title>
            <link>https://kannada.asianetnews.com/state/toll-rate-hike-no-cash-accepted-at-tolls-payment-through-upi-only/articleshow-qa0ylg2</link>
            <guid isPermaLink="true">https://kannada.asianetnews.com/state/toll-rate-hike-no-cash-accepted-at-tolls-payment-through-upi-only/articleshow-qa0ylg2</guid>
            <pubDate>Wed, 01 Apr 2026 13:32:50 +0530</pubDate>
            <description><![CDATA[ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಟೋಲ್ ದರವನ್ನು ಹೆಚ್ಚಿಸಿದ್ದು, ಉಡುಪಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ದರ ಏರಿಕೆಯಾಗಿದೆ. ಕಾರು, ಬಸ್, ಟ್ರಕ್&zwnj;ಗಳ ಶುಲ್ಕದಲ್ಲಿ 5 ರಿಂದ 30 ರೂ.ವರೆಗೆ ಹೆಚ್ಚಳವಾಗಿದ್ದು, ಇನ್ನು ಮುಂದೆ ಯುಪಿಐ ಮೂಲಕವೇ ಪಾವತಿ ಕಡ್ಡಾಯವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jdxt873ffbaazemrre3m3q55,imgname-fotojet---2024-11-30t112357.520.jpg" type="image/jpeg" height="390" width="690"/>
            <content:encoded><![CDATA[&lt;h3&gt;&lt;strong&gt;ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ&lt;/strong&gt;&lt;/h3&gt;&lt;p&gt;ಉಡುಪಿ/ ಕೊಪ್ಪಳ: ದೇಶದೆಲ್ಲೆಡೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಟೋಲ್ ದರ ಹೆಚ್ಚಳ ಮಾಡಿದ್ದು, ಇದರ ಬಿಸಿ ಜನ ಸಾಮಾನ್ಯರಿಗೂ ತಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮೂರು ಟೋಲ್&zwnj;ಗಳಿವೆ. ಜಿಲ್ಲೆಯ ಗಡಿ ಭಾಗಗಳಾದ ಹೆಜಮಾಡಿ, ಶಿರೂರು ಹಾಗೂ ಸಾಸ್ತಾನ ಈ ಮೂರು ಟೋಲ್&zwnj;ಗಳಲ್ಲೂ ಮಧ್ಯರಾತ್ರಿ 12 ಗಂಟೆಯಿಂದಲೇ ಟೋಲ್ ದರ ಏರಿಕೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೊಸ ಸೂಚನೆಯಂತೆ ಟೋಲ್&zwnj;ದರದಲ್ಲಿ 5 ರಿಂದ 10 ರೂಪಾಯಿವರೆಗೆ ಏರಿಕೆ ಆಗಿದೆ. ಹೀಗಾಗಿ 60 ರೂಪಾಯಿ ಇದ್ದ ಕಾರ್ ಜೀಪ್ ವ್ಯಾನ್&zwnj;ಗಳ ಟೋಲ್ ದರ 65ಕ್ಕೆ ಏರಿಕೆ ಆಗಿದೆ. ಹಾಗೆಯೇ ಬಸ್ ಹಾಗೂ ಟ್ರಕ್&zwnj;ಗಳ ಟೋಲ್ ದರ 210 ರಿಂದ 215 ಕ್ಕೆ ಏರಿಕೆಯಾಗಿದೆ. ಮೂರರಿಂದ ಆರು ಎಕ್ಸೆಲ್ ವಾಹನಗಳ ದರ 325 ರಿಂದ 335 ರೂಪಾಯಿಗೆ ಏರಿಕೆ.&lt;/p&gt;&lt;h2&gt;&lt;strong&gt;ನಗದು ಸ್ವೀಕಾರ ಇಲ್ಲ ಯುಪಿಐ ಮೂಲಕವೇ ಪಾವತಿ&lt;/strong&gt;&lt;/h2&gt;&lt;p&gt;ಟೋಲ್&zwnj;ಗಳಲ್ಲಿ ಇನ್ನು ಮುಂದೆ ನಗದು ಸ್ವೀಕರಿಸುವುದಕ್ಕೆ ಅವಕಾಶ ಇರುವುದಿಲ್ಲ, ಯುಪಿಐ ಮೂಲಕವೇ ಪೇಮೆಂಟ್ ಮಾಡಬೇಕಾಗುತ್ತದೆ. ಉಡುಪಿ ಪ್ರವಾಸಿ ತಾಣವಾಗಿರುವುದರಿಂದ ಇಲ್ಲಿ ಅತೀಹೆಚ್ಚು ವಾಹನಗಳು ಓಡಾಟ ನಡೆಸುತ್ತವೆ. ಇಲ್ಲಿಂದ ಮಂಗಳೂರು ಬಂದರಿಗೆ ಅತೀ ಹೆಚ್ಚು ವಾಹನಗಳು ಓಡಾಡುತ್ತವೆ. ಗ್ಯಾಸ್ ತುಂಬಿ ಟ್ಯಾಂಕರ್&zwnj;ಗಳ ಓಡಾಟ ಹೆಚ್ಚಾಗಿದ್ದು, ಈಗ ಟೋಲ್ ದರ ಏರಿಕೆಯಿಂದಾಗಿ ಎಲ್ಲರಿಗೂ ದರ ಏರಿಕೆಯ ಬಿಸಿ ತಟ್ಟಿದೆ.&lt;/p&gt;&lt;p&gt;ಹಾಗೆಯೇ ಕೊಪ್ಪಳದಲ್ಲೂ ಜಿಲ್ಲೆಯ ಮೂರು ಟೋಲ್&zwnj;ಗಳಲ್ಲಿ ದರ ಏರಿಕೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 50 ಹಾಗೂ 67 ರಲ್ಲಿ ಟೋಲ್ ದರ ಕನಿಷ್ಠ 5 ರಿಂದ ಗರಿಷ್ಠ 30ಕ್ಕೆ ಏರಿಕೆಯಾಗಿದೆ. ಕಾರುಗಳಿಗೆ ಇಲ್ಲಿ ಈ ಮೊದಲು ಸಿಂಗಲ್ ಟ್ರಿಪ್ ಗೆ 50 ಇತ್ತು ಈಗ 55 ಆಗಿದೆ. ರಿಟರ್ನ್ ಟ್ರಿಪ್ 75ರಿಂದ ನಿಂದ 80ಕ್ಕೆ ಏರಿಕೆಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಕಾಮಕ್ಯ ದೇಗುಲದ ಪುರೋಹಿತರ ಮಾತು ನಿಜವಾಯ್ತು: ಕೊಲೆ ನಡೆದು ಸರಿಯಾಗಿ 9 ತಿಂಗಳ ನಂತರ ರಾಜ ರಘುವಂಶಿ ಮನೆಗೆ ಹೊಸ ಸದಸ್ಯನ ಆಗಮನ&lt;/strong&gt;&lt;/p&gt;&lt;p&gt;ಮಿನಿ ಬಸ್&zwnj;ನ ಟೋಲ್ ದರ 10 ರೂ ಏರಿಕೆಯಾಗಿದೆ. ಬಸ್ ಹಾಗೂ ಲಾರಿಗಳ ಟೋಲ್ ದರ 5ರಿಂದ 15ರೂಗೆ ಏರಿಕೆಯಾಗಿದೆ. 3 ಎಕ್ಸ್ ಎಲ್ ನಿಂದ 6 ಎಕ್ಸ್ ಎಲ್ ನ ವಾಹನಗಳ ಟೋಲ್ ದರ 15 ರಿಂದ 20 ಕ್ಕೆ ಏರಿಕೆ ಆಗಿದೆ.7 ಎಕ್ಸ್ ಎಲ್ ಮೇಲ್ಪಟ್ಟ ವಾಹನಗಳ ಟೋಲ್ ದರ 20 ರಿಂದ 25ಕ್ಕೆ ಏರಿಕೆಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ: ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ&lt;/strong&gt;&lt;/p&gt;]]></content:encoded>
            <category>koppal</category>
            <dc:creator>Anusha Kb</dc:creator>
            <atom:link href="https://kannada.asianetnews.com/state/toll-rate-hike-no-cash-accepted-at-tolls-payment-through-upi-only/articleshow-qa0ylg2"/>
        </item>
        <item>
            <title><![CDATA[ಕೊಪ್ಪಳ: ಅನೈತಿಕ  ಸಂಬಂಧಕ್ಕೆ ವ್ಯಕ್ತಿ ಕೊಂದು 21 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ]]></title>
            <link>https://kannada.asianetnews.com/karnataka-districts/koppal-murder-case-life-imprisonment-after-21-years-gangavathi-court-delivers-verdict-gdp/articleshow-vlde9pu</link>
            <guid isPermaLink="true">https://kannada.asianetnews.com/karnataka-districts/koppal-murder-case-life-imprisonment-after-21-years-gangavathi-court-delivers-verdict-gdp/articleshow-vlde9pu</guid>
            <pubDate>Thu, 02 Apr 2026 08:32:56 +0530</pubDate>
            <description><![CDATA[ಕೊಪ್ಪಳ ಜಿಲ್ಲೆಯಲ್ಲಿ 21 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ, ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆಯ ಮೇಲೆ ವ್ಯಕ್ತಿಯನ್ನು ಕೊಲೆ ಮಾಡಿದ್ದ ಆರೋಪಿ ಪರಶುರಾಮ್&zwnj;ಗೆ ಗಂಗಾವತಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆಯ ನಂತರ 21 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kn627sj3ht4f58bp6w4fr6eh,imgname-koppal-murder-case-1775098914371.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೊಪ್ಪಳ ಜಿಲ್ಲೆಯಲ್ಲಿ 21 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಹೆಚ್ಚುವರಿ ಸತ್ರ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣವು ದೀರ್ಘಕಾಲದ ಬಳಿಕ ನ್ಯಾಯ ಕಂಡಿರುವುದರಿಂದ ವಿಶೇಷ ಗಮನ ಸೆಳೆದಿದೆ.&lt;/p&gt;&lt;p&gt;ಈ ಪ್ರಕರಣದಲ್ಲಿ ಕನಕಗಿರಿ ತಾಲೂಕಿನ ಬೈಲಕಂಪುರ ಗ್ರಾಮದ ಪರಶುರಾಮ್ ಅಲಿಯಾಸ್ ರಾಮಣ್ಣ ಎಂಬಾತನು ಆರೋಪಿಯಾಗಿದ್ದಾನೆ. ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ, ದುರಗಪ್ಪ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ್ದ ಆರೋಪ ಈತನ ಮೇಲೆ ಇತ್ತು. 2004ರ ಜನವರಿ 15ರಂದು ನಡೆದ ಈ ಘಟನೆ ಜಿಲ್ಲೆಯಲ್ಲೇ ಸಂಚಲನ ಮೂಡಿಸಿತ್ತು.&lt;/p&gt;&lt;h2&gt;ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದ&lt;/h2&gt;&lt;p&gt;ಘಟನೆಯ ದಿನ, ತನ್ನ ಪತ್ನಿ ಮತ್ತು ದುರಗಪ್ಪನ ನಡುವೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದಿಂದ ಕೋಪಗೊಂಡ ಪರಶುರಾಮ್, ಅವರನ್ನು ಮನೆಯಲ್ಲೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದನು. ಆಕ್ರೋಶದಿಂದ ಮನೆದಲ್ಲಿದ್ದ ಚಾಕುವಿನಿಂದ ದುರಗಪ್ಪನ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದನು. ತೀವ್ರವಾಗಿ ಗಾಯಗೊಂಡ ದುರಗಪ್ಪನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದ.&lt;/p&gt;&lt;p&gt;ಈ ಸಂಬಂಧ ಪರಶುರಾಮ್ ಪತ್ನಿಯೇ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆ ಪರಶುರಾಮ್ ತಲೆಮರೆಸಿಕೊಂಡು ಓಡಿಹೋಗಿದ್ದನು. ಬಳಿಕ ತನ್ನ ಹೆಸರು ಮತ್ತು ವೇಷ ಬದಲಿಸಿಕೊಂಡು ಬೆಂಗಳೂರಿನಲ್ಲಿ ಸುಮಾರು 21 ವರ್ಷಗಳ ಕಾಲ ಮರೆಯಾಗಿದ್ದನು.&lt;/p&gt;&lt;h2&gt;21 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಆರೋಪಿ&lt;/h2&gt;&lt;p&gt;ದೀರ್ಘಕಾಲದ ತನಿಖೆಯ ಬಳಿಕ, 2025ರಲ್ಲಿ ಪೊಲೀಸರು ಪರಶುರಾಮ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧನದ ನಂತರ ಪ್ರಕರಣದ ವಿಚಾರಣೆ ವೇಗ ಪಡೆದುಕೊಂಡು, ಗಂಗಾವತಿ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.&lt;/p&gt;&lt;p&gt;ಪ್ರಕರಣದ ಎಲ್ಲಾ ಸಾಕ್ಷ್ಯಾಧಾರಗಳು ಮತ್ತು ವಾದಗಳನ್ನು ಪರಿಗಣಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ಅವರು, ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಪರಶುರಾಮ್&zwnj;ಗೆ ಜೀವಾವಧಿ ಶಿಕ್ಷೆ ವಿಧಿಸಿದರು. ಈ ತೀರ್ಪಿನಿಂದ 21 ವರ್ಷಗಳ ಹಳೆಯ ಪ್ರಕರಣಕ್ಕೆ ನ್ಯಾಯ ದೊರೆತಂತಾಗಿದೆ. ಈ ಘಟನೆ, ಅಪರಾಧ ಎಷ್ಟು ವರ್ಷಗಳ ಬಳಿಕವಾದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.&lt;/p&gt;]]></content:encoded>
            <category>koppal</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/koppal-murder-case-life-imprisonment-after-21-years-gangavathi-court-delivers-verdict-gdp/articleshow-vlde9pu"/>
        </item>
    </channel>
</rss>
