<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 15 May 2026 09:34:09 +0530</lastBuildDate>
        <atom:link href="https://kannada.asianetnews.com/rss/mandya" rel="self" type="application/rss+xml"/>
        <item>
            <title><![CDATA[ಮಂಡ್ಯ: ನಾಪತ್ತೆಯಾಗಿದ್ದ 20 ಮಕ್ಕಳ ಪೈಕಿ 8 ಮಕ್ಕಳು ಪೋಷಕರ ಮಡಿಲಿಗೆ! ಟ್ರೇಸ್ ಮಾಡಿದ್ದು ಹೇಗೆ ಪೊಲೀಸರು?]]></title>
            <link>https://kannada.asianetnews.com/state/how-mandya-police-traced-missing-childrens-reunited-8-kids-with-their-parents-in-karnataka-rav/articleshow-0dgckl1</link>
            <guid isPermaLink="true">https://kannada.asianetnews.com/state/how-mandya-police-traced-missing-childrens-reunited-8-kids-with-their-parents-in-karnataka-rav/articleshow-0dgckl1</guid>
            <pubDate>Fri, 15 May 2026 09:30:57 +0530</pubDate>
            <description><![CDATA[&lt;p&gt;ಮಂಡ್ಯ ಜಿಲ್ಲೆಯಿಂದ ನಾಪತ್ತೆಯಾಗಿದ್ದ ಒಟ್ಟು 20 ಕ್ಕೂ ಹೆಚ್ಚು ಮಕ್ಕಳ ಪೈಕಿ 6 ಪ್ರಕರಗಳಲ್ಲಿ 8 ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರ ಮಡಿಲಿಗೆ ಒಪ್ಪಿಸಲು ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಕ್ಕಳು ನಾಪತ್ತೆಯಾಗಿದ್ದು ಹೇಗೆ, ಪತ್ತೆ ಹಚ್ಚಿದ್ದು ಹೇಗೆ ವರದಿ ಓದಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krmwhdw79bxntcy0vyz3zzje,imgname-----------------------2026-05-15t092727.483-1778817480583.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮೇ.15):&lt;/strong&gt; ಜಿಲ್ಲೆಯಿಂದ ನಾಪತ್ತೆಯಾಗಿದ್ದ ೨೧ ಮಕ್ಕಳ ಪ್ರಕರಣಗಳ ಪೈಕಿ ೬ ಪ್ರಕರಣಗಳಲ್ಲಿ ೮ ಮಕ್ಕಳನ್ನು ಪತ್ತೆ ಹಚ್ಚಿರುವ ಪೊಲೀಸರು ಪೋಷಕರ ಮಡಿಲಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.&lt;/p&gt;&lt;p&gt;ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ೩, ಪಶ್ಚಿಮ ಪೊಲೀಸ್ ಠಾಣೆ, ಮಳವಳ್ಳಿಯ ಪುರ ಪೊಲೀಸ್ ಠಾಣೆ ಹಾಗೂ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣದಲ್ಲಿ ಒಟ್ಟು ೬ ಪ್ರಕರಣಗಳಲ್ಲಿ ೩ ರಿಂದ ೧೪ ವರ್ಷದವರೆಗೆ ಪೋಷಕರಿಂದ ಬೇರ್ಪಟ್ಟಿದ್ದ ೮ ಅಪ್ರಾಪ್ತ ಮಕ್ಕಳನ್ನು ಪೋಷಕರ ಮಡಿಲಿಗೆ ಸೇರಿಸಲಾಗಿದೆ.&lt;/p&gt;&lt;p&gt;ಮಂಡ್ಯ ಬಾಲಕರ ಬಾಲ ಮಂದಿರದಿಂದ ೫ ಜನ ಬಾಲಕರು ೬ ಸೆಪ್ಟೆಂಬರ್ ೨೦೧೨೧ರಂದು ರಾತ್ರಿ ೮.೪೫ರಲ್ಲಿ ಸ್ನಾನ ಮಾಡಿ ಬಟ್ಟೆ ಒಗೆಯುವುದಾಗಿ ಹೇಳಿ ಹಿಂದಿನ ಬಾಗಿಲಿನ ಬೀಗ ಒಡೆದು ಓಡಿಹೋಗಿದ್ದರು. ಬೀಗ ಒಡೆಯುವ ಸದ್ದು ಕೇಳಿಸದಂತೆ ನೀರನ್ನು ಜೋರಾಗಿ ಬಿಟ್ಟು ಬಟ್ಟೆಗಳನ್ನು ಜೋರಾಗಿ ಶಬ್ಧ ಬರುವಂತೆ ಒಗೆಯುತ್ತಿದ್ದರು. ಇದನ್ನು ಸಿಬ್ಬಂದಿ ನೋಡಲು ಬಂದಾಗ ಬಾಲಕರು ಓಡಿಹೋಗಿದ್ದರು. ಎಲ್ಲಿ ಹುಡುಕಿದರೂ ಪತ್ತೆಯಾಗಿರಲಿಲ್ಲ.&lt;/p&gt;&lt;p&gt;ಕಾಣೆಯಾದ ಐವರು ಬಾಲಕರ ಪೈಕಿ ಓರ್ವ ಬಾಲಕನ ತಾಯಿ ಮೈಸೂರಿನ ಕಲ್ಯಾಣ ಮಂಟಪವೊಂದರಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದು, ಆಕೆಯ ಬಳಿ ಮಗನ ಬಗ್ಗೆ ವಿಚಾರಿಸಿದಾಗ ಮನೆಗೆ ಬಂದು ಹೋಗುತ್ತಿರುವುದಾಗಿ ತಿಳಿಸಿದರು. ಹಾಗಾಗಿ ಪ್ರಕಣದಲ್ಲಿ ಆತ ಪತ್ತೆಯಾಗಿರುವುದಾಗಿ ವರದಿ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.&lt;/p&gt;&lt;p&gt;೨ ಫೆಬ್ರವರಿ ೨೦೨೦ರಂದು ಬೋರ್&zwnj;ವೆಲ್&zwnj;ನಿಂದ ನೀರು ತರುವುದಾಗಿ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಬೋರ್&zwnj;ವೆಲ್ ಬಳಿ ಬಿಂದಿಗೆ ಮಾತ್ರ ಬಿದ್ದಿತ್ತು. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಬಾಲಕಿಯ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ ಆಕೆ ಧಾರವಾಡದಲ್ಲಿರುವ ವಿಷಯ ತಿಳಿದು ಅಲ್ಲಿಗೆ ಹೋಗಿ ಆಕೆಯನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.&lt;/p&gt;&lt;p&gt;೩೦ ಆಗಸ್ಟ್ ೨೦೨೨ರಲ್ಲಿ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಮೊರಾರ್ಜಿ ವಸತಿ ಶಾಲೆಯಿಂದ ಬಾಲಕನೊಬ್ಬ ನಾಪತ್ತೆಯಾಗಿದ್ದನು. ಈ ಕುರಿತು ಬಾಲಕನ ತಂದೆ ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ಈರೇಗೌಡ ದೂರು ನೀಡಿದ್ದರು. ಜುಲೈ ೨೯ರಂದು ಮೊರಾರ್ಜಿ ವಸತಿ ಶಾಲೆಯಿಂದ ಮಗನನ್ನು ಮನೆಗೆ ಕರೆದುಕೊಂಡು ಹೋಗಿದ್ದು ಆಗಸ್ಟ್ ೧೦ರಂದು ಬೆಳಗ್ಗೆ ೧೧.೫೦ರ ಸಮಯಕ್ಕೆ ವಾಪಸ್ ಮೊರಾರ್ಜಿ ಶಾಲೆಗೆ ಬಿಟ್ಟು ಬಂದಿದ್ದೆನು. ಗೌರಿ-ಗಣೇಶ ಹಬ್ಬಕ್ಕೆ ಮಗನನ್ನು ಕರೆದುಕೊಂಡು ಹೋಗಲು ಮೊರಾರ್ಜಿ ವಸತಿ ಶಾಲೆಯ ಬಳಿ ಬಂದು ಮಗನನ್ನು ಕಳುಹಿಸಿಕೊಡುವಂತೆ ಕೇಳಿದಾಗ ನಿಮ್ಮ ಮಗ ವಸತಿ ಶಾಲೆಗೆ ಬಂದಿಲ್ಲವೆಂದು ಅಧಿಕಾರಿಗಳು ತಿಳಿಸಿದರು. ಇದರಿಂದ ಗಾಬರಿಗೊಂಡು ಕೆರಗೋಡು ಪೊಲೀಸರಿಗೆ ದೂರು ನೀಡಿದ್ದರು.&lt;/p&gt;&lt;p&gt;ನಾಪತ್ತೆಯಾದ ಬಾಲಕ ಬೆಂಗಳೂರಿನ ಶೇಷಾದ್ರಿಪುರಂ, ಗಾಂಧಿನಗರದ ಹೋಟೆಲ್&zwnj;ನಲ್ಲಿ ಕೆಲಸ ಮಾಡಿಕೊಂಡಿರುವ ವಿಷಯ ತಿಳಿದು ಅಲ್ಲಿಗೆ ಹೋಗಿ ವಿಚಾರಿಸಿದಾಗ ಬಾಲಕ ಹಾಸನ ಮೂಲದ ಜಯತೀರ್ಥ ಎಂಬುವರ ಜೊತೆ ತಾನು ಅನಾಥ ಎಂದೇಳಿಕೊಂಡು ವಾಸವಾಗಿರುವುದು ಗೊತ್ತಾಯಿತು. ಬಾಲಕನನ್ನು ಕರೆತಂದು ಪೋಷಕರಿಗೆ ಒಪ್ಪಿಸಲಾಗಿದೆ.&lt;/p&gt;&lt;p&gt;ಶ್ರೀರಂಗಪಟ್ಟಣ ತಾಲೂಕು ಬೆಳಗೊಳದ ಎಕೋ ಸ್ಪಂದನ ಬಾಲ ನ್ಯಾಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಪ್ರಿಯಾ ಲೂಯಿಸ್ ಅವರು ನಮ್ಮ ಸಂಸ್ಥೆಗೆ ೧೭ ವರ್ಷದ ಬಾಲಕನನ್ನು ಮಂಡ್ಯದ ಬಾಲಮಂದಿರದಿಂದ ಡಿಪ್ಲೋಮಾ ಇನ್ ಹೋಟೆಲ್ ಮ್ಯಾನೇಜ್&zwnj;ಮೆಂಟ್ ವಿದ್ಯಾಭ್ಯಾಸದ ಸ್ಕಿಲ್ ಟ್ರೈನಿಂಗ್ ಕೊಡಲು ಶಿಫಾರಸು ಮಾಡಿ ಕಳುಹಿಸಿದ್ದರು. ಬಾಲಕ ಮೂರು ದಿನ ಸಂಸ್ಥೆಯಲ್ಲಿದ್ದು ೧೭ ಸೆಪ್ಟೆಂಬರ್ ೨೦೨೩ರಂದು ಆಟವಾಡಲು ಬಿಟ್ಟಿದ್ದ ಸಮಯದಲ್ಲಿ ಬಾಲಕ ನಾಪತ್ತೆಯಾಗಿದ್ದನು. ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಬಾಲಕನ ಅಣ್ಣನಿಗೆ ಕರೆ ಮಾಡಿ ವಿಚಾರಿಸಲಾಗಿ ಆತ ಮನೆಗೂ ಹೋಗಿರಲಿಲ್ಲ. ಕೊನೆಗೆ ೧೭ ವರ್ಷದ ಬಾಲಕನು ಮೈಸೂರು ನಗರದಲ್ಲಿ ಸಣ್ಣಪುಟ್ಟ ಕಳ್ಳತನ ಮಾಡಿಕೊಂಡಿರುವ ವಿಷಯ ತಿಳಿಯಿತು. ಮೈಸೂರು, ನಂಜನಗೂಡು, ಬೆಂಗಳೂರು ಕಡೆಗಳಲ್ಲಿ ಓಡಾಡಿಕೊಂಡಿರುವ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಗೊತ್ತಾಯಿತು. ಕೊನೆಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ವಿಷಯ ತಿಳಿದು ಆತ ಪತ್ತೆಯಾಗಿರುವುದಾಗಿ ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;p&gt;ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಗ್ರಾಮದಲ್ಲಿ ವಾಸವಿದ್ದ ಬಿಹಾರ ಮೂಲದ ಕುಟುಂಬದ ಪೈಕಿ ಮದನ್ ಶಾಹ ಎಂಬುವರ ಪತ್ನಿ ಹಾಗೂ ಮೂರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದರು. ಪತ್ನಿ ಮೊಬೈಲ್&zwnj;ಗೆ ಫೋನ್ ಮಾಡಿದರೆ ಸ್ವಿಚ್&zwnj;ಆಫ್ ಆಗಿತ್ತು. ಕಾಣೆಯಾಗಿರುವ ಹೆಂಡತಿ-ಮೂವರು ಹೆಣ್ಣು ಮಕ್ಕಳನ್ನು ಪತ್ತೆ ಮಾಡಿಕೊಡುವಂತೆ ಮದನ್&zwnj;ಶಹಾ ದೂರು ನೀಡಿದ್ದನು. ಮದನ್&zwnj;ಶಹಾ ಅವರ ಮೊಬೈಲ್&zwnj;ಗೆ ಹೊಸದಾಗಿ ಬರುತ್ತಿದ್ದ ಕರೆಗಳನ್ನು ಪರಿಶೀಲಿಸಿ, ಆತನ ಪತ್ನಿ ಬಳಸುತ್ತಿದ್ದ ಹೊಸ ಮೊಬೈಲ್ ಸಂಖ್ಯೆಯನ್ನು ಪತ್ತೆ ಮಾಡಿ ಬಿಹಾರ ರಾಜ್ಯದ ಮೋತಿಹಾರಿ ಜಿಲ್ಲೆಯ ಭಗವಾನ್&zwnj;ಪುರ ಬಳಿಯ ಖೈರವ ಗ್ರಾಮದಲ್ಲಿರುವುದು ಪತ್ತೆಯಾಯಿತು.&lt;/p&gt;&lt;p&gt;ಮಳವಳ್ಳಿ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ೧೬ ವರ್ಷದ ಬಾಲಕಿ ೩೧ ಜುಲೈ ೨೦೨೪ರಂದು ಕಾಣೆಯಾಗಿದ್ದಳು. ದಿನಬಳಕೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಮಳವಳ್ಳಿಗೆ ಬಂದಿದ್ದವಳು ನಾಪತ್ತೆಯಾಗಿದ್ದಳು. ಎಲ್ಲಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆಕೆ ಬೆಂಗಳೂರಿನ ಜಿ.ಸತೀಶ್ ಎಂಬಾತನೊಂದಿಗೆ ಫೋನ್&zwnj;ನಲ್ಲಿ ಹೆಚ್ಚು ಮಾತನಾಡುತ್ತಿರುವುದರ ಬಗ್ಗೆ ತಾಯಿ ಮಂಜುಳಾ ಪೊಲೀಸರಿಗೆ ತಿಳಿಸಿದ್ದರು.&lt;/p&gt;&lt;p&gt;೧೬ ವರ್ಷದ ಬಾಲಕಿ ಡ್ರೈವರ್ ಲವರ್ ಅಮ್ಮು ಎಂಬ ಇನ್ಸ್&zwnj;ಸ್ಟ್ರಾಗ್ರಾಂ ಐಡಿಯನ್ನು ಉಪಯೋಗಿಸುತ್ತಿದ್ದಾರೆಂದು ಮಾಹಿತಿ ತಿಳಿದು ಈ ಐಡಿಗೆ ಲಿಂಕ್ ಆಗಿರುವ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಪಡೆದು ಬೆಂಗಳೂರಿನ ಲಕ್ಕೊಂಡನಹಳ್ಳಿ ಬಳಿ ಇದ್ದ ಬಾಲಕಿಯನ್ನು ಕರೆತಂದು ತಾಯಿಯ ಮಡಿಲಿಗೆ ಸೇರಿಸಲಾಗಿದೆ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/how-mandya-police-traced-missing-childrens-reunited-8-kids-with-their-parents-in-karnataka-rav/articleshow-0dgckl1"/>
        </item>
        <item>
            <title><![CDATA[Mandya: ಒಂದು ವರ್ಷದಲ್ಲಿ 55 ಅಪ್ರಾಪ್ತ ಗರ್ಭಿಣಿಯರ ಸ್ಕ್ಯಾನಿಂಗ್; ಆಘಾತಕಾರಿ ಸತ್ಯ!]]></title>
            <link>https://kannada.asianetnews.com/karnataka-districts/mandya-55-minor-pregnant-women-scanned-in-one-year-shocking-truth-revealed-mrq/articleshow-0r2wzsu</link>
            <guid isPermaLink="true">https://kannada.asianetnews.com/karnataka-districts/mandya-55-minor-pregnant-women-scanned-in-one-year-shocking-truth-revealed-mrq/articleshow-0r2wzsu</guid>
            <pubDate>Wed, 06 May 2026 10:47:21 +0530</pubDate>
            <description><![CDATA[ಮಂಡ್ಯದ ಡಯಾಗ್ನೋಸ್ಟಿಕ್ ಸೆಂಟರ್ ಮೇಲೆ ಜಾಗೃತ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ಒಂದು ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರಿಗೆ ಗರ್ಭಿಣಿ ಸ್ಕ್ಯಾನಿಂಗ್ ಮಾಡಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಈ ಪ್ರಕರಣಗಳನ್ನು ಫೋಕ್ಸೋ ಕಾಯ್ದೆಯಡಿ ವರದಿ ಮಾಡಲಾಗಿದೆಯೇ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqxvfjn0nyzpz452rweae94q,imgname-pregnant-1778044619424.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ&lt;/strong&gt;: ನಗರದ ಮಂಡ್ಯ ಡಯಾಗ್ನೋಸ್ಟಿಕ್ ಸೆಂಟರ್&zwnj;ನಲ್ಲಿ ಕಳೆದೊಂದು ವರ್ಷದಲ್ಲಿ ೫೫ ಬಾಲ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡಿರುವುದಾಗಿ ಜಾಗೃತ ದಳದ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಕಂಡುಬಂದಿದೆ.&lt;/p&gt;&lt;p&gt;ಉಪ ಲೋಕಾಯುಕ್ತರು ಬೀಸಿದ ಚಾಟಿಯಿಂದ ಕುಂಭಕರ್ಣ ನಿದ್ರೆಯಲ್ಲಿದ್ದ ತಾಲೂಕು ಮಟ್ಟದ ಜಾಗೃತದಳಗಳು ಇದೀಗ ಎಚ್ಚೆತ್ತು ಜಿಲ್ಲೆಯ ಎಲ್ಲಾ ಖಾಸಗಿ ಸ್ಕ್ಯಾನಿಂಗ್&zwnj;ಸೆಂಟರ್&zwnj;ಗಳಿಗೆ ತೆರಳಿ ಪರಿಶೀಲನೆ ನಡೆಸಲಾರಂಭಿಸಿವೆ. ಅದರಂತೆ ಮಂಗಳವಾರ ತಾಲೂಕು ಜಾಗೃತ ದಳ ಮಂಡ್ಯ ತಹಸೀಲ್ದಾರ್ ವಿಶ್ವನಾಥ್ ನೇತೃತ್ವದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.&lt;/p&gt;&lt;h2&gt;&lt;strong&gt;55 ಬಾಲ ಗರ್ಭಿಣಿಯರು&lt;/strong&gt;&lt;/h2&gt;&lt;p&gt;ಮಂಡ್ಯ ಡಯಾಗ್ನೋಸ್ಟಿಕ್ ಸೆಂಟರ್&zwnj;ಗೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಕಳೆದೊಂದು ವರ್ಷದಲ್ಲಿ 16 ಸಾವಿರ ಗರ್ಭಿಣಿಯರ ಸ್ಕ್ಯಾನಿಂಗ್ ಆಗಿದ್ದು, ಅದರಲ್ಲಿ 55 ಬಾಲ ಗರ್ಭಿಣಿಯರಿರುವುದು ಕಂಡುಬಂದಿದೆ. ಈ ಬಾಲಗರ್ಭಿಣಿಯರ ಮಾಹಿತಿಯನ್ನು ಸಂಬಂಧಿಸಿದವರಿಗೆ ನೀಡಿದ್ದಾರೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ. ಒಮ್ಮೆ ಮದುವೆಯಾಗಿ ಸ್ಕ್ಯಾನಿಂಗ್&zwnj;ಗೆ ಬಂದಿದ್ದರೂ ಅದೂ ಫೋಕ್ಸೋಅಡಿ ಬರುವುದರಿಂದ ಅದರ ಬಗ್ಗೆಯೂ ಮಾಹಿತಿ ನೀಡಿರುವರೇ ಎಂದು ದಾಖಲೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ನೋಡಲ್ ಅಧಿಕಾರಿ ಡಾ.ಕೆ.ಸೋಮಶೇಖರ್ ತಿಳಿಸಿದರು.&lt;/p&gt;&lt;h3&gt;&lt;strong&gt;ಸ್ಕ್ಯಾನಿಂಗ್ ದಾಖಲೆಗಳ ನಿರ್ವಹಣೆ&lt;/strong&gt;&lt;/h3&gt;&lt;p&gt;ಸ್ಕ್ಯಾನಿಂಗ್ ಸೆಂಟರ್&zwnj;ನ ರಿಜಿಸ್ಟರ್ ಹಾಗೂ ಸ್ಕ್ಯಾನಿಂಗ್ ಮಾಡಿರುವ ದಾಖಲೆಗಳ ಕುರಿತಂತೆ ಪರಿಶೀಲನೆ ನಡೆಸಿದರು. ಸ್ಕ್ಯಾನಿಂಗ್ ದಾಖಲೆಗಳ ನಿರ್ವಹಣೆಯನ್ನು ಸರಿಯಾದ ಕ್ರಮದಲ್ಲಿಡುವಂತೆ ಡಯಾಗ್ನೋಸ್ಟಿಕ್ ಸೆಂಟರ್ ಸಿಬ್ಬಂದಿಗೆ ಸೂಚಿಸಿದರು. ಬಾಲ ಗರ್ಭಿಣಿಯರು ಸ್ಕ್ಯಾನಿಂಗ್&zwnj;ಗೆ ಬಂದಿರುವುದು ಕಂಡುಬಂದ ಕೂಡಲೇ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಲಿಂಗಪತ್ತೆ ಪ್ರಕರಣ ನಡೆಸುವುದು, ಭ್ರೂಣ ಹತ್ಯೆಯಂತಹ ಕೃತ್ಯಗಳಿಗೆ ಮುಂದಾಗದಂತೆ ಎಚ್ಚರಿಕೆ ನೀಡಿದರು.&lt;/p&gt;&lt;p&gt;ಇದೇ ವೇಳೆ ತಾಲೂಕು ಆರೋಗ್ಯ ಅಧಿಕಾರಿ ಜವರೇಗೌಡ, ಸಿಡಿಪಿಒ ನಾರಾಯಣ್ ಸೇರಿ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು. ಮಂಡ್ಯ ಡಯಾಗ್ನೋಸ್ಟಿಕ್ ಸೆಂಟರ್&zwnj;ನಲ್ಲಿ ತಹಸೀಲ್ದಾರ್ ನೇತೃತ್ವದ ಜಾಗೃತದಳ ಸ್ಕ್ಯಾನಿಂಗ್ ಸೆಂಟರ್&zwnj;ನ ರಿಜಿಸ್ಟರ್ ಹಾಗೂ ಸ್ಕ್ಯಾನಿಂಗ್ ಮಾಡಿರುವ ದಾಖಲೆಗಳ ಕುರಿತಂತೆ ಪರಿಶೀಲನೆ ನಡೆಸಿದರು.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mandya-55-minor-pregnant-women-scanned-in-one-year-shocking-truth-revealed-mrq/articleshow-0r2wzsu"/>
        </item>
        <item>
            <title><![CDATA[ಸಿಎಂ ಕುರ್ಚಿ ಗುದ್ದಾಟದಿಂದ ಕಾಂಗ್ರೆಸ್ ಸರ್ಕಾರ ಪತನ: ನಿಖಿಲ್ ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/nikhil-kumaraswamy-congress-government-collapse-statement-gvd/articleshow-1mmkvo9</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-congress-government-collapse-statement-gvd/articleshow-1mmkvo9</guid>
            <pubDate>Fri, 08 May 2026 21:55:52 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಗುದ್ದಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jdyxfep0fmty5zj9fgq4yphm,imgname--.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮದ್ದೂರು (ಮೇ.08): &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಗುದ್ದಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಪಟ್ಟಣದ ಎಂ.ಎಸ್.ಸಿದ್ದರಾಜು ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಪರಿಮಳ ಬೇಕರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಡಲು ಸಿದ್ದರಾಮಯ್ಯ ಒಂದೆಡೆ ಹೋರಾಟ ಮಾಡುತ್ತಿದ್ದಾರೆ.&lt;/p&gt;&lt;p&gt;ಅದೇ ರೀತಿ ಸಿಎಂ ಕುರ್ಚಿ ಪಡೆಯಲು ಡಿ.ಕೆ. ಶಿವಕುಮಾರ್ ಮತ್ತೊಂದು ರೀತಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಇಬ್ಬರ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಟೀಕಿಸಿದರು. 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಕಾರ್ಯಕರ್ತರ ಅಭಿಪ್ರಾಯವಾಗಿದೆ. ಚುನಾವಣೆ ನಂತರ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ರಾಜ್ಯದ ಮುಂದಿನ ಆಶಾಕಿರಣ ನಿಖಿಲ್: ಸಿ.ಎಸ್.ಪುಟ್ಟರಾಜು&lt;/strong&gt;&lt;/h2&gt;&lt;p&gt;ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸುನಾಮಿಯಂತೆ ಮೇಲೆದ್ದು ಬಂದಂತೆ 2028ರ ಚುನಾವಣೆಯಲ್ಲಿ ದೇವೇಗೌಡರ ವಂಶದ ಕುಡಿ ಮೇಲೆದ್ದು ಬರಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಭವಿಷ್ಯ ನುಡಿದರು. ನಿಖಿಲ್ ಮೇಲೆ ದೈವಶಕ್ತಿ ಇದೆ, ನಿಖಿಲ್ ಅವರು ರಾಜ್ಯದಲ್ಲಿ ಜೆಡಿಎಸ್ ಅಲೆ ಎಬ್ಬಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಶಕ್ತಿ ಅವರಿಗಿದೆ. ಅದಕ್ಕಾಗಿ ಪಾಂಡವರು ಹೋರಾಡಿದ ಮಣ್ಣಿನಿಂದಲೇ ಅದಕ್ಕೆ ಚಾಲನೆಯನ್ನು ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದುಬಂದು ರಾಜ್ಯದ ಆಶಾಕಿರಣವಾಗಲಿದ್ದಾರೆ. ಅವರಿಂದ ಹೊಸದೊಂದು ಅಧ್ಯಾಯ ಶುರುವಾಗಲಿದೆ ಎಂದು ವಿಶ್ವಾಸದಿಂದ ನುಡಿದರು.&lt;/p&gt;&lt;p&gt;ದೇವೇಗೌಡರು 1983ರಲ್ಲಿ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದರು. 1991ರಲ್ಲಿ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ 1994ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಶಾಸಕನಂತೆ ಕೆಲಸ ಮಾಡಿದೆ. 1998ರಲ್ಲಿ ರಾಮನಗರದಲ್ಲಿ ಅಂಬರೀಶ್ ಗೆಲ್ಲಲಾಗದೆ ಸೋತರು, ಅವರನ್ನು ಎಸ್.ಡಿ.ಜಯರಾಂ ಮಂಡ್ಯಕ್ಕೆ ಕರೆತಂದು ಲೋಕಸಭೆಯಿಂದ ಕಣಕ್ಕಿಳಿಸಿ ಗೆಲ್ಲಿಸಿದರು. ಅಂಬರೀಶ್ ಕಾಂಗ್ರೆಸ್ ಪಕ್ಷ ಸೇರಿಕೊಂಡಾಗ ನನ್ನನ್ನೂ ಬಲವಂತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಆಗ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ನೀವೇನಾದರೂ ಕಾಂಗ್ರೆಸ್ ಸೇರಿದರೆ ವಿಷ ಕುಡಿಯುವುದಾಗಿ ಧಮಕಿ ಹಾಕಿದರು. ಆಗ ನಾನು ಜೆಡಿಎಸ್ ಬಿಟ್ಟು ಯಾವುದೇ ಪಕ್ಷವನ್ನು ಸೇರುವುದಿಲ್ಲ ಎಂದು ಖಡಕ್ಕಾಗಿ ಹೇಳಿ ಬಂದಿದ್ದಾಗಿ ತಿಳಿಸಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-congress-government-collapse-statement-gvd/articleshow-1mmkvo9"/>
        </item>
        <item>
            <title><![CDATA[PM  Modi to visit Karnataka: ಆದಿಚುಂಚನಗಿರಿಗೆ ಇಂದು ಮೋದಿ:  ಭೈರವೈಕ್ಯ ಮಂದಿರ ಲೋಕಾರ್ಪಣೆ]]></title>
            <link>https://kannada.asianetnews.com/state/pm-modi-in-adichunchanagiri-today-inauguration-sri-guru-bhyravykya-mandir-special-prayer-kalabhairaveshwar-rav/articleshow-442entb</link>
            <guid isPermaLink="true">https://kannada.asianetnews.com/state/pm-modi-in-adichunchanagiri-today-inauguration-sri-guru-bhyravykya-mandir-special-prayer-kalabhairaveshwar-rav/articleshow-442entb</guid>
            <pubDate>Wed, 15 Apr 2026 04:44:34 +0530</pubDate>
            <description><![CDATA[ಪ್ರಧಾನಿ ನರೇಂದ್ರ ಮೋದಿಯವರು ಆದಿಚುಂಚನಗಿರಿಯಲ್ಲಿ ಡಾ. ಬಾಲಗಂಗಾಧರನಾಥ ಶ್ರೀಗಳ ಶ್ರೀಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ದ್ರಾವಿಡ-ಹೊಯ್ಸಳ ಶೈಲಿಯಲ್ಲಿ ನಿರ್ಮಿಸಲಾದ ಈ ಭವ್ಯ ಮಂದಿರದ ಉದ್ಘಾಟನಾ ಕಾರ್ಯಕ್ರಮ ಮತ್ತು ಅದರ ನಿರ್ಮಾಣದ ವಿಶೇಷತೆಗಳನ್ನು ಈ ಲೇಖನ ವಿವರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp73w54wj4wtmbgvwfp40jws,imgname-----------------------2026-04-15t043505.347-1776207926427.jpg" type="image/jpeg" height="390" width="690"/>
            <content:encoded><![CDATA[&lt;p&gt;- &lt;strong&gt;ನಾಗಮಂಗಲ (ಮಂಡ್ಯ) (ಏ.15) &lt;/strong&gt;ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಗೆ ಸಕಲ ರೀತಿಯಲ್ಲೂ ಶ್ರೀಕ್ಷೇತ್ರ ಸಜ್ಜಾಗಿದೆ. ಬುಧವಾರ ಬೆಳಗ್ಗೆ 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶ್ರೀಕ್ಷೇತ್ರದ ಡಾ। ಬಾಲಗಂಗಾಧರನಾಥ ಶ್ರೀಗಳ ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಆಗಲಿದೆ.&lt;/p&gt;&lt;p&gt;1500 ವರ್ಷಗಳಿಗೂ ಮಿಗಿಲಾದ ಇತಿಹಾಸ ಹೊಂದಿರುವ ನಾಥ ಪರಂಪರೆಯ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಣ್ಯ ಕ್ಷೇತ್ರ ಆಗಿರುವ ಆದಿಚುಂಚನಗಿರಿ ಮಠಕ್ಕೆ ದೇಶದ ಪ್ರಧಾನಿ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ನಮೋ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಶ್ರೀಮಠ ಹಾಗೂ ಜಿಲ್ಲಾಡಳಿತ ಸಜ್ಜಾಗಿ ನಿಂತಿದೆ.&lt;/p&gt;&lt;h2&gt;ಬೆಳಗ್ಗೆ 11ಕ್ಕೆ ಶ್ರೀಕ್ಷೇತ್ರಕ್ಕೆ ಮೋದಿ:&lt;/h2&gt;&lt;p&gt;ಬುಧವಾರ ಬೆಳಗ್ಗೆ 7.15ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ಸೇನಾ ಹೆಲಿಕಾಪ್ಟರ್&zwnj;ನಲ್ಲಿ ಬರಲಿರುವ ಪ್ರಧಾನಿ ಮೋದಿ ಅವರು 10.55ಕ್ಕೆ ಆದಿಚುಂಚನಗಿರಿ ಕ್ಷೇತ್ರದ ತಪೋವನದ ಆವರಣದಲ್ಲಿನ ಹೆಲಿಪ್ಯಾಡ್&zwnj;ಗೆ ಬಂದಿಳಿಯುವರು. ನಂತರ 1.5 ಕಿ.ಮೀ. ದೂರದವರೆಗೆ ವಿಶೇಷ ರಕ್ಷಣಾ ತಂಡದ (ಎಸ್&zwnj;ಪಿಜಿ) ಬಿಗಿ ಭದ್ರತೆಯಲ್ಲಿ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಬಂದು ಶ್ರೀಕ್ಷೇತ್ರದ ಕಾಲಭೈರವೇಶ್ವರಸ್ವಾಮಿ ದೇವಾಲಯದ ಪಕ್ಕದಲ್ಲಿ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರವನ್ನು 11.30ಕ್ಕೆ ಉದ್ಘಾಟಿಸಲಿದ್ದಾರೆ.&lt;/p&gt;&lt;p&gt;ಮಂದಿರ ಉದ್ಘಾಟನೆ ನಂತರ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಪಾದುಕೆಗೆ ನಮಸ್ಕರಿಸಿ ಪುತ್ಥಳಿ ಇರುವ ಭವ್ಯ ಧ್ಯಾನ ಮಂದಿರ ಹಾಗೂ ನೆಲಮಹಡಿಯಲ್ಲಿರುವ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದ ನಂತರ ಕ್ಷೇತ್ರದ ಅಧಿದೇವತೆ ಶ್ರೀಕಾಲಭೈರವೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರಾಧಿದೇವತೆಗಳ ದರ್ಶನಾಶೀರ್ವಾದ ಪಡೆದುಕೊಳ್ಳುವರು. ಬಳಿಕ ಶ್ರೀಕ್ಷೇತ್ರದ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.&lt;/p&gt;&lt;p&gt;ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಮಂಗಳವಾರ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್&zwnj;.ಅಶೋಕ್&zwnj; ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಜೊತೆ ಸಿದ್ಧತೆ ಪರಿಶೀಲನೆ ನಡೆಸಿದರು.&lt;/p&gt;&lt;p&gt;--&lt;/p&gt;&lt;h3&gt;ಮಂದಿರದ ವಿಶೇಷತೆ&lt;/h3&gt;&lt;p&gt;ಡಾ। ಬಾಲಗಂಗಾಧರನಾಥ ಸ್ವಾಮೀಜಿ ಅವರ ಶ್ರೀ ಗುರು ಭೈರವೈಕ್ಯ ಮಂದಿರ ಒಡಿಶಾದ ಸೂರ್ಯದೇಗುಲದ ಮಾದರಿ ನಿರ್ಮಿಸಲಾಗಿದೆ. ಹೊಯ್ಸಳ, ಚೋಳ, ಚಾಲುಕ್ಯ ಹಾಗೂ ಗಂಗ ವಾಸ್ತು ಶಿಲ್ಪದ ಸಮ್ಮಿಶ್ರಣವಾಗಿದೆ. ಶ್ರೀಕ್ಷೇತ್ರದಲ್ಲಿ ಭೈರವೈಕ್ಯ ಶ್ರೀಗಳ ಆತ್ಮಜ್ಯೋತಿ ಸದಾ ಕಾಲ ಬೆಳಗುವಂತೆ ₹80 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದೆ.&lt;/p&gt;&lt;p&gt;2013ರ ಜ.13ರಂದು ಚುಂಚಶ್ರೀಗಳು ಭೌತಿಕ ದೇಹ ತ್ಯಜಿಸಿದ್ದರು. ಅಂತ್ಯ ಸಂಸ್ಕಾರವನ್ನು ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಉತ್ತರ ಭಾಗದಲ್ಲಿ ಅದಾಗಲೇ ನಿರ್ಮಿತವಾಗಿದ್ದ ಮಂಗಳ ಮಂಟಪದಲ್ಲಿ ನೆರವೇರಿಸಲಾಗಿತ್ತು. 2016ರ ಮೇ 9ರಂದು ಶ್ರೀ ಗುರು ಭೈರವೈಕ್ಯ ಮಂದಿರದ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.&lt;/p&gt;&lt;p&gt;ಸುಮಾರು 250ಕ್ಕೂ ಹೆಚ್ಚು ಮಂದಿ ನುರಿತ ಶಿಲ್ಪಿಗಳು 10 ವರ್ಷ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಎರಡು ಅಂತಸ್ತುಳ್ಳ ಗುರುಭೈರವೈಕ್ಯ ಮಂದಿರವನ್ನು ಸಂಪೂರ್ಣವಾಗಿ ಕೆಂಪು ಗ್ರಾನೈಟ್ ಶಿಲೆ, ವಿವಿಧ ಗ್ರಾನೈಟ್ ಶಿಲೆಗಳಿಂದ ನಿರ್ಮಿಸಲಾಗಿದೆ.&lt;/p&gt;&lt;p&gt;ಸ್ಥೂಲ ಶರೀರ, ಸೂಕ್ಷ್ಮ ಶರೀರ ಹಾಗೂ ಕಾರಣ ಶರೀರದ ಮಾದರಿಯಲ್ಲಿ ಮಂದಿರ ನಿರ್ಮಾಣವಾಗಿದೆ. ಗುರುಮಂದಿರವು ಉತ್ತರ ದಕ್ಷಿಣಕ್ಕೆ 175 ಚದರ ಅಡಿ, ಪೂರ್ವ ಪಶ್ಚಿಮಕ್ಕೆ 150 ಚದರ ಅಡಿ ಇದ್ದು 26,250 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದೆ. ಮಂದಿರದ ನೆಲಮಹಡಿಯಲ್ಲಿ ಭೈರವೈಕ್ಯಶ್ರೀಗಳ ಸನ್ನಿಧಿ, ಮಂದಿರದ ಒಳಭಾಗ ಚಿನ್ನ ಮತ್ತು ಬೆಳ್ಳಿಯ ಕವಚದ ಹೊದಿಕೆಯನ್ನು ಹೊಂದಿದೆ. ಶ್ರೀಸನ್ನಿಧಿಯ ಸುತ್ತಲೂ ಪ್ರದಕ್ಷಿಣಾ ಸ್ಥಳವಿದೆ. ನೆಲಮಹಡಿಯ ಮೇಲಿನ ಅಂತಸ್ತು ಡಾ। ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿ ಇರುವ ಭವ್ಯ ಧ್ಯಾನ ಮಂದಿರವಿದೆ. 26 ಕಂಬಗಳಿರುವ ಮಂದಿರ ದ್ರಾವಿಡ ಮತ್ತು ಹೊಯ್ಸಳ ಶೈಲಿಯ ಶಿಲ್ಪಕಲೆ ಹೊಂದಿದೆ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/pm-modi-in-adichunchanagiri-today-inauguration-sri-guru-bhyravykya-mandir-special-prayer-kalabhairaveshwar-rav/articleshow-442entb"/>
        </item>
        <item>
            <title><![CDATA[ಆಕಾಶವನ್ನೇ ಭೂಮಿಗಿಳಿಸಲು ನನ್ನಿಂದ ಸಾಧ್ಯವಿಲ್ಲ: ಸಚಿವ ಚಲುವರಾಯಸ್ವಾಮಿ ಬೇಸರ]]></title>
            <link>https://kannada.asianetnews.com/karnataka-districts/nagamangala-development-works-chaluvarayaswamy-statement-gvd/articleshow-5n0rbr3</link>
            <guid isPermaLink="true">https://kannada.asianetnews.com/karnataka-districts/nagamangala-development-works-chaluvarayaswamy-statement-gvd/articleshow-5n0rbr3</guid>
            <pubDate>Mon, 20 Apr 2026 21:26:59 +0530</pubDate>
            <description><![CDATA[&lt;p&gt;ಇಷ್ಟೊಂದು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರೂ ಸಹ ತೃಪ್ತಿ ಇಲ್ಲವೆಂದರೆ ಆಕಾಶವನ್ನು ಭೂಮಿಗಿಳಿಸಲು ನನ್ನಿಂದ ಸಾಧ್ಯವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwme81vf0haf7r987hrkefck,imgname-vdv-1748737722223.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನಾಗಮಂಗಲ (ಏ.20):&lt;/strong&gt; ಜನರ ನಿರೀಕ್ಷೆಗೂ ಮೀರಿ ತಾಲೂಕಿನಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರೂ ಸಹ ತೃಪ್ತಿ ಇಲ್ಲವೆಂದರೆ ಆಕಾಶವನ್ನು ಭೂಮಿಗಿಳಿಸಲು ನನ್ನಿಂದ ಸಾಧ್ಯವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.&lt;/p&gt;&lt;p&gt;ತಾಲೂಕಿನ ಹೆರಗನಹಳ್ಳಿಯಲ್ಲಿ ನಿರ್ಮಿಸಿರುವ ಕಲ್ಯಾಣಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವರು ಐದು ವರ್ಷ ಕಾಲ ಯಾವುದೇ ಅಭಿವೃದ್ಧಿ ಕೆಲಸ ಮಾಡದಿದ್ದರೂ ಜನ ಕೇಳುವುದಿಲ್ಲ. ನಾನು ಗೆದ್ದಾಗ ಮಾತ್ರ ಅಭಿವೃದ್ಧಿ ಕೆಲಸ ಮಾಡಿ ಎಂದು ಒತ್ತಡ ಹೇರುತ್ತೀರಿ. ಕ್ಷೇತ್ರದ ಜನರು ಚುನಾವಣೆಯಲ್ಲಿ ಎರಡು ಬಾರಿ ನನ್ನನ್ನು ಸೋಲಿಸದಿದ್ದರೆ ತಾಲೂಕು ಇನ್ನೂ ನಾಲ್ಕುಪಟ್ಟು ಅಭಿವೃದ್ಧಿಯಾಗುತ್ತಿತ್ತು ಎಂದರು.&lt;/p&gt;&lt;p&gt;ಗ್ರಾಮದ ಡಾ.ಎಚ್.ಎಲ್.ನಾಗೇಗೌಡರು ಮತ್ತು ಮಾಜಿ ಸಚಿವ ಎಚ್.ಟಿ.ಕೃಷ್ಣಪ್ಪ ಅವರು ಸಾಹಿತ್ಯ ಹಾಗೂ ರಾಜಕೀಯ ಕ್ಷೇತ್ರಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿ ಗೌರವ ಕಾಪಾಡಿಕೊಂಡಿದ್ದಾರೆ. ಅವಕಾಶವಿದ್ದಾಗ ಶಾಶ್ವತವಾಗಿ ಉಳಿಯುವಂತಹ ಅಭಿವೃದ್ಧಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ ನಾನೂ ಕೂಡ ಜನರ ನಿರೀಕ್ಷೆಗೂ ಮೀರಿ ಹಗಲಿರುಳು ಶ್ರಮಿಸುತ್ತಿದ್ದೇನೆ. ಜನರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು.&lt;/p&gt;&lt;h2&gt;&lt;strong&gt;ವಿಶೇಷ ಮಂಜೂರಾತಿ&lt;/strong&gt;&lt;/h2&gt;&lt;p&gt;ಈ ಹಿಂದೆ ಹೆರಗನಹಳ್ಳಿ ಸಮೀಪವಿರುವ ಎನ್&zwnj;ಬಿಸಿ ಕಾಲುವೆಯ ಎಡಭಾಗದ ಅಚ್ಚುಕಟ್ಟಿಗೆ ಮಾತ್ರ ಹೇಮಾವತಿ ನೀರು ಹರಿಸಲು ಕಾನೂನಿನಲ್ಲಿ ಅವಕಾಶವಿತ್ತು. ಈ ಹಿಂದೆ ನಾನು ಸಚಿವನಾಗಿದ್ದ ಅವಧಿಯಲ್ಲಿ ಬಲಭಾಗದ ಅಚ್ಚುಕಟ್ಟಿಗೂ ಅವಕಾಶ ಕಲ್ಪಿಸುವ ಸಲುವಾಗಿ ವಿಶೇಷ ಮಂಜೂರಾತಿ ಕೊಡಿಸಲಾಯಿತು. ನಂತರ ಈ ಭಾಗದ ಕೆರೆಗಳಿಗೂ ನೀರು ತುಂಬಿಸಲು 990 ಲಕ್ಷ ರು. ವೆಚ್ಚದ ಯೋಜನೆಯನ್ನು ಕೈಗೆತ್ತಿಕೊಂಡು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇದರಿಂದಾಗಿ ಹೆರಗನಹಳ್ಳಿ ಸೇರಿದಂತೆ ಈಭಾಗದ ಬಹುತೇಕ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಲಿದೆ ಎಂದರು.&lt;/p&gt;&lt;p&gt;ಕೆ.ಆರ್.ಪೇಟೆ ಮೂಲಕ ತಾಲೂಕಿಗೆ ಹರಿದು ಬರುವ ಹೇಮಾವತಿ ಜಲಾಶಯದ ನೀರಿನಿಂದಾಗಿ ಹೊಣಕೆರೆ, ಕಸಬಾ ಮತ್ತು ದೇವಲಾಪುರ ಹೋಬಳಿಯ ಕೆಲ ಪ್ರದೇಶಕ್ಕೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ. ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಸಲುವಾಗಿ 340 ಕೋಟಿ ರು. ವೆಚ್ಚದ ಯೋಜನೆ ಕೈಗೆತ್ತಿಕೊಂಡು ಕೆಲ ತಿಂಗಳ ಹಿಂದೆ ತಾಲೂಕಿನ ಗಡಿಭಾಗ ಗಿಡುವಿನಹೊಸಹಳ್ಳಿ ಸಮೀಪ ಭೂಮಿಪೂಜೆ ನೆರವೇರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದರು.&lt;/p&gt;&lt;p&gt;ತಾಲೂಕಿನ ಜನರು ಬರಗಾಲದ ನಡುವೆ ಜೀವನ ನಡೆಸಿದರೂ ಕೂಡ ಅತ್ಯಂತ ಸೌಮ್ಯಸ್ವಭಾವದವರು, ಬುದ್ಧವಂತರು ಎನ್ನುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಯಾವ ಕಾರಣಕ್ಕೆ ಬದಲಾವಣೆಯಾಗಿದ್ದಾರೆಂಬುದು ನನಗೆ ಗೊತ್ತಿಲ್ಲ. ಇನ್ನು ಮುಂದಾದರೂ ಪಕ್ಷ, ರಾಷ್ಟ್ರ ರಾಜಕಾರಣ ಹಾಗೂ ತಾಲೂಕಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರಾಮಾಣಿಕವಾಗಿ ಜನಪರ ಕೆಲಸ ಮಾಡುವವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nagamangala-development-works-chaluvarayaswamy-statement-gvd/articleshow-5n0rbr3"/>
        </item>
        <item>
            <title><![CDATA[ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ: ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ]]></title>
            <link>https://kannada.asianetnews.com/karnataka-districts/r-ashok-supports-women-reservation-bill-modi-nda-history-gvd/articleshow-eio9kbg</link>
            <guid isPermaLink="true">https://kannada.asianetnews.com/karnataka-districts/r-ashok-supports-women-reservation-bill-modi-nda-history-gvd/articleshow-eio9kbg</guid>
            <pubDate>Sat, 18 Apr 2026 21:49:03 +0530</pubDate>
            <description><![CDATA[&lt;p&gt;ಪ್ರಧಾನಿ ಮೋದಿ ನೇತೃತ್ವದ ಎನ್&zwnj;ಡಿಎ ಸರ್ಕಾರ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಮಹಿಳೆಯರಿಗೆ ಇದರಿಂದ ರಾಜಕೀಯ ಪ್ರಾತಿನಿಧ್ಯ ಸಿಕ್ಕಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp4xerh5y19pdx33ap2rabfz,imgname-----------------------2026-04-14t080426.123-1776134087205.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಏ.18): &lt;/strong&gt;ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್&zwnj;ಡಿಎ ಸರ್ಕಾರ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಮಹಿಳೆಯರಿಗೆ ಇದರಿಂದ ರಾಜಕೀಯ ಪ್ರಾತಿನಿಧ್ಯ ಸಿಕ್ಕಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಮಹಿಳಾ ಮೀಸಲು ಮಸೂದೆ ಜಾರಿಗೆ ಹಿಂದಿನ ಸರ್ಕಾರಗಳು ಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಯಾವ ರೀತಿಯಲ್ಲಿ ಜಾರಿಗೊಳಿಸಬೇಕೆಂಬ ವಿಚಾರದಲ್ಲಿ ಗೊಂದಲದಲ್ಲಿದ್ದವು. ಆದರೆ, ಎನ್&zwnj;ಡಿಎ ಸರ್ಕಾರ ಮಹಿಳೆಯರನ್ನು ರಾಜಕೀಯವಾಗಿ ಸಬಲೀಕರಣಗೊಳಿಸುವ ದೂರದೃಷ್ಟಿಯನ್ನಿಟ್ಟುಕೊಂಡು ಗೊಂದಲಗಳಿಗೆ ಅವಕಾಶವಾಗದ ರೀತಿಯಲ್ಲಿ ಜಾರಿಗೊಳಿಸಿ ಹೊಸ ಚರಿತ್ರೆಯನ್ನು ಸೃಷ್ಟಿಸಿರುವುದಾಗಿ ಹೇಳಿದರು.&lt;/p&gt;&lt;p&gt;ದೇಶದಲ್ಲಿ ಜನಸಂಖ್ಯೆ ಹೆಚ್ಚಿದೆ. ಎಲ್ಲರಿಗೂ ಸಮಾನತೆ ಸಿಗಬೇಕು. ಮಹಿಳೆಯರಿಗೂ ರಾಜಕೀಯ ಶಕ್ತಿ ತುಂಬಬೇಕೆಂಬ ಕಾರಣದಿಂದ ಮಸೂದಯೆನ್ನು ಜಾರಿಗೊಳಿಸಲಾಗಿದೆ. ಇದಕ್ಕೆ ಮಹಿಳೆಯರೆಲ್ಲರೂ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್&zwnj;ನವರು ಮಾತ್ರ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲದ ಕಿತಾಪತಿ ಮಾಡುತ್ತಿದ್ದಾರೆ. ಧರ್ಮಾಧಾರಿತವಾಗಿಯೂ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಟೀಕಿಸಿದರು.&lt;/p&gt;&lt;p&gt;&lt;strong&gt;ದಕ್ಷಿಣ ರಾಜ್ಯಗಳಿಗೆ ಅನ್ಯಾಯವಿಲ್ಲ: &lt;/strong&gt;ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದ ದಕ್ಷಿಣದ ಯಾವುದೇ ರಾಜ್ಯಗಳಿಗೆ ಅನ್ಯಾಯವಾಗುವುದಿಲ್ಲ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್&zwnj;ಗೆ ಬುದ್ದಿ ಇಲ್ಲ. ಕೇಂದ್ರ ಸರ್ಕಾರ ಬಿಲ್&zwnj;ನಲ್ಲಿ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಹಿಂದೆ ಕಾಂಗ್ರೆಸ್ ಕೂಡ ಇದನ್ನೇ ಮಾಡಿದ್ದು. ತಮಿಳುನಾಡಿನಲ್ಲಿ 39 ಕ್ಷೇತ್ರಗಳಿರುವುದನ್ನು 59ಕ್ಕೆ ಏರಿಸಲಾಗುತ್ತಿದೆ. ಇವರಿಗೇನು ಕಷ್ಟ? ಮೋದಿಯವರು ಮೂರನೇ ಬಾರಿ ಗೆದ್ದಿದ್ದಾರೆ. ನಾಲ್ಕನೇ ಬಾರಿಯೂ ಗೆದ್ದರೆ ನಾವೆಲ್ಲ ಟೆಂಟ್ ಕಟ್ಟಿಕೊಂಡು ಹೋಗಬೇಕಾಗುತ್ತದೆ ಎಂಬ ಭಯ ಅವರಿಗೆ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;&lt;strong&gt;ಸಿಬಿಐನಿಂದ ಸತ್ಯ ಬಹಿರಂಗ: &lt;/strong&gt;ರಾಜಕಾರಣಿಯ ಮಾತು ಕೇಳಿ ಕೊಲೆ ಮಾಡಿದರೆ ಏನಾಗುತ್ತದೆ ಎಂಬುದು ವಿನಯ್ ಕುಲಕರ್ಣಿ ಪ್ರಕರಣ ಉದಾಹರಣೆ. ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್&zwnj;ಗೆ ಶಿಕ್ಷೆಯಾಗಿದೆ. ಯಾರು ಕೊಲೆಯಲ್ಲಿ ಭಾಗಿಯಾಗಿದ್ದರೋ ಅವರೇ ಸತ್ಯ ಹೇಳಿದ್ದಾರೆ. ಕಾಂಗ್ರೆಸ್ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಸಿಬಿಐಗೆ ಕೊಟ್ಟ ಮೇಲೆ ಸತ್ಯ ಬಹಿರಂಗ ಆಗಿದೆ. ರಾಜಕೀಯ ಕೊಲೆಗೆ ತಿಲಾಂಜಲಿ ಹಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಆಯ್ಕೆ ಮಾಡುವ ವಿಚಾರವನ್ನು ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಇದರಲ್ಲಿ ನಮ್ಮ ಹಸ್ತಕ್ಷೇಪ ಏನೂ ಇರುವುದಿಲ್ಲ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ರಾಜ್ಯದಲ್ಲಿ ಸತ್ತಂತಿರುವ ಕಾಂಗ್ರೆಸ್ ಸರ್ಕಾರ&lt;/strong&gt;&lt;/h2&gt;&lt;p&gt;ಕರ್ನಾಟಕ ಸರ್ಕಾರ ಸತ್ತು ಹೋಗಿದೆ. ಶಾಸಕರು ದೆಹಲಿಗೆ ಹೋಗುತ್ತಿದ್ದಾರೆ. ಒಂದೆಡೆ ಡಿ.ಕೆ.ಶಿವಕುಮಾರ್ ಸಿಎಂ ಆಗಲು ಹೊರಟಿದ್ದಾರೆ. ಆದರೆ ಸಿದ್ದರಾಮಯ್ಯ ಸೀಟ್ ಬಿಡುತ್ತಿಲ್ಲ. ಇದೀಗ ಅವರವರ ಮಕ್ಕಳು ಅಪ್ಪಂದಿರೇ ಮುಖ್ಯಮಂತ್ರಿ ಆಗಬೇಕು ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಒಡೆದ ಮನೆಯಾಗಿದೆ. ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಕೂಪಕ್ಕೆ ಕೊಂಡೊಯ್ಯುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮನೆಯಲ್ಲಿ ಒಂದು ಕ್ಯಾಬಿನೆಟ್ ಇದೆ ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;ದಾವಣಗೆರೆ ಉಪ ಚುನಾವಣೆ ಬಳಿಕ ಮುಸ್ಲಿಂ ನಾಯಕರು ಟಾರ್ಗೆಟ್ ಆಗಿದ್ದಾರೆ. ಜಮೀರ್ ಅಹಮದ್ ಟಾರ್ಗೆಟ್ ಆಗುತ್ತಿದ್ದಾರೆ. ಸದ್ಯ ಕಾಂಗ್ರೆಸ್&zwnj;ನಲ್ಲಿ ಗೊಂದಲ ಇರುವುದಂತೂ ಸತ್ಯ. ಯಾರು ಮುಖ್ಯಮಂತ್ರಿ ಅನ್ನೋದು ಜನರ ಪ್ರಶ್ನೆಯೂ ಆಗಿದೆ ಎಂದು ಛೇಡಿಸಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/r-ashok-supports-women-reservation-bill-modi-nda-history-gvd/articleshow-eio9kbg"/>
        </item>
        <item>
            <title><![CDATA[ಮಂಡ್ಯದಲ್ಲಿ ರಾಜ-ರಾಣಿ ಎಕ್ಸ್‌ಪ್ರೆಸ್ ರೈಲಿನ ಸೀಟಿಗಾಗಿ ಚಾಕು ಇರಿತ; ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಜನ!]]></title>
            <link>https://kannada.asianetnews.com/karnataka-districts/bengaluru-mysore-raja-rani-express-train-stabbing-seat-dispute-mandya-hospital-admit-sat/articleshow-g932png</link>
            <guid isPermaLink="true">https://kannada.asianetnews.com/karnataka-districts/bengaluru-mysore-raja-rani-express-train-stabbing-seat-dispute-mandya-hospital-admit-sat/articleshow-g932png</guid>
            <pubDate>Wed, 06 May 2026 19:38:18 +0530</pubDate>
            <description><![CDATA[ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜ-ರಾಣಿ ಎಕ್ಸ್&zwnj;ಪ್ರೆಸ್ ರೈಲಿನಲ್ಲಿ ಸೀಟಿನ ವಿಚಾರವಾಗಿ ನಡೆದ ಜಗಳವು ಚಾಕು ಇರಿತದಲ್ಲಿ ಅಂತ್ಯಗೊಂಡಿದೆ. ಜಗಳ ಬಿಡಿಸಲು ಹೋದ ಪ್ರಯಾಣಿಕನಿಗೆ ಆರೋಪಿಗಳು ಚಾಕುವಿನಿಂದ ಇರಿದಿದ್ದು, ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqysshjnrf7y9jpv2x2xyknk,imgname-mandya-raja-rani-express-train-1778076403285.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮೇ 06): ಮೈ&lt;/strong&gt;ಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಓಡಾಡುವ ಪ್ರಯಾಣಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಕೇವಲ ಒಂದು ಸೀಟಿಗಾಗಿ ಶುರುವಾದ ಸಣ್ಣ ಗಲಾಟೆ, ಕೊನೆಗೆ ಚಾಕು ಇರಿತದಂತಹ ಭೀಕರ ಘಟನೆ ಮೂಲಕ ಅಂತ್ಯಗೊಂಡಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ 'ರಾಜ-ರಾಣಿ' ಎಕ್ಸ್&zwnj;ಪ್ರೆಸ್&zwnj; ರೈಲಿನಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಾದ ಸುಭಾನ್ ಖುರೇಷಿ, ಶೋಯಬ್ ಮತ್ತು ವಾಸಿಮ್ ಎಂಬುವವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ರೈಲು ಮದ್ದೂರು ಸಮೀಪಿಸುತ್ತಿದ್ದಂತೆ ಸೀಟಿನ ವಿಚಾರವಾಗಿ ಆರೋಪಿಗಳು ಮತ್ತು ಇತರ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಜಗಳ ತಾರಕಕ್ಕೇರಿ ರೈಲಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.&lt;/p&gt;&lt;h2&gt;&lt;strong&gt;ಜಗಳ ಬಿಡಿಸಲು ಹೋಗಿ ಚಾಕು ಇರಿತಕ್ಕೊಳಗಾದ ಶಿವಕುಮಾರ್:&lt;/strong&gt;&lt;/h2&gt;&lt;p&gt;ಈ ವೇಳೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರು ಮೂಲದ ಶಿವಕುಮಾರ್ ಎಂಬುವವರು, 'ಇಲ್ಲಿ ಕುಟುಂಬದವರು ಕುಳಿತಿದ್ದಾರೆ, ಗಲಾಟೆ ಮಾಡಬೇಡಿ' ಎಂದು ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದಾರೆ. ಆದರೆ, ಶಿವಕುಮಾರ್ ಮಾತಿನಿಂದ ಕೆರಳಿದ ಆರೋಪಿಗಳು ಅವರ ಮೇಲೆ ಏಕಾಏಕಿ ಮುಗಿಬಿದ್ದಿದ್ದಾರೆ. ಮೊದಲು ಸುಭಾನ್ ಖುರೇಷಿ ಎಂಬಾತ ತನ್ನ ಬಳಿಯಿದ್ದ ಚಾಕುವಿನಿಂದ ಶಿವಕುಮಾರ್&zwnj;ಗೆ ಇರಿದಿದ್ದಾನೆ. ಬಳಿಕ ಮತ್ತೊಬ್ಬ ಆರೋಪಿ ಶೋಯಬ್ ಕೂಡ ಅದೇ ಚಾಕುವಿನಿಂದ ಶಿವಕುಮಾರ್&zwnj;ಗೆ ಎರಡನೇ ಬಾರಿ ಇರಿದು ಗಾಯಗೊಳಿಸಿದ್ದಾನೆ.&lt;/p&gt;&lt;h2&gt;&lt;strong&gt;ಗೇಟ್ ಕೀಪರ್ ಮೇಲೂ ದಾಳಿ:&lt;/strong&gt;&lt;/h2&gt;&lt;p&gt;ಪ್ರಾಣಭಯದಿಂದ ತತ್ತರಿಸಿದ ಶಿವಕುಮಾರ್, ಕೂಡಲೇ ರೈಲಿನಲ್ಲಿನ ತುರ್ತು ಸರಪಳಿ (Chain) ಎಳೆದು ರೈಲನ್ನು ಮದ್ದೂರು ನಿಲ್ದಾಣದ ಸಮೀಪ ನಿಲ್ಲಿಸಿದ್ದಾರೆ. ರೈಲು ನಿಲ್ಲುತ್ತಿದ್ದಂತೆ ಆರೋಪಿಗಳು ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿದ್ದ ರೈಲ್ವೆ ಗೇಟ್ ಕೀಪರ್ ಕುಮಾರ್ ಆರೋಪಿಗಳನ್ನು ಹಿಡಿಯಲು ಮುಂದಾಗಿದ್ದಾರೆ. ಆದರೆ ಆರೋಪಿಗಳು ಕುಮಾರ್ ಅವರ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರಿಂದ 'ಧರ್ಮದೇಟು':&lt;/strong&gt;&lt;/h3&gt;&lt;p&gt;ಆರೋಪಿಗಳ ಈ ಪುಂಡಾಟಿಕೆಯನ್ನು ಕಂಡು ಕೆರಳಿದ ಸ್ಥಳೀಯರು ಮತ್ತು ರೈಲಿನಲ್ಲಿದ್ದ ಪ್ರಯಾಣಿಕರು ಕೂಡಲೇ ಅವರನ್ನು ಸುತ್ತುವರಿದರು. ಪರಾರಿಯಾಗಲು ಯತ್ನಿಸುತ್ತಿದ್ದ ಸುಭಾನ್ ಖುರೇಷಿ, ಶೋಯಬ್ ಮತ್ತು ವಾಸಿಮ್ ಅವರನ್ನು ಹಿಡಿದ ಸಾರ್ವಜನಿಕರು ಮನಬಂದಂತೆ 'ಧರ್ಮದೇಟು' ನೀಡಿ ಸರಿಯಾದ ಪಾಠ ಕಲಿಸಿದ್ದಾರೆ. ನಂತರ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.&lt;/p&gt;&lt;h3&gt;&lt;strong&gt;ಚಿಕಿತ್ಸೆ ಮತ್ತು ಮುಂದಿನ ಕ್ರಮ:&lt;/strong&gt;&lt;/h3&gt;&lt;p&gt;ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿರುವ ಶಿವಕುಮಾರ್ ಮತ್ತು ಗೇಟ್ ಕೀಪರ್ ಕುಮಾರ್ ಅವರನ್ನು ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ರೈಲ್ವೆ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಈ ಘಟನೆ ಮತ್ತೊಮ್ಮೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bengaluru-mysore-raja-rani-express-train-stabbing-seat-dispute-mandya-hospital-admit-sat/articleshow-g932png"/>
        </item>
        <item>
            <title><![CDATA[ಬೆಂಗಳೂರು: ಲಿವಿಂಗ್ ಇನ್‌ ಟುಗೆದರ್‌, ಮೋಜಿನ ಜೀವನ, ಬೀಗ ಹಾಕಿದ ಮನೆಯೇ ಟಾರ್ಗೆಟ್‌ ಮಂಡ್ಯ ರ್‍ಯಾಪಿಡೋ ಚಾಲಕನ ಕಳ್ಳತನ!]]></title>
            <link>https://kannada.asianetnews.com/karnataka-districts/bengaluru-rapido-driver-arrested-for-daytime-burglaries-targeting-locked-homes-gdp/articleshow-ge2l5ph</link>
            <guid isPermaLink="true">https://kannada.asianetnews.com/karnataka-districts/bengaluru-rapido-driver-arrested-for-daytime-burglaries-targeting-locked-homes-gdp/articleshow-ge2l5ph</guid>
            <pubDate>Sat, 18 Apr 2026 16:51:30 +0530</pubDate>
            <description><![CDATA[ಬೆಂಗಳೂರಿನಲ್ಲಿ ಹಗಲು ಹೊತ್ತಿನಲ್ಲಿ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ರ್&zwj;ಯಾಪಿಡೋ ಚಾಲಕ ನಾಗರಾಜ್&zwnj;ನನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತನ್ನ ಪ್ರೇಯಸಿಯೊಂದಿಗಿನ ಮೋಜಿನ ಜೀವನಕ್ಕಾಗಿ ಈ ಕೃತ್ಯ ಎಸಗುತ್ತಿದ್ದು, ಆತನಿಂದ 35 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01g92a9zw2r95j8wpt4ad9pfts,imgname-new-thumbnail-2022-new.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ನಗರದಲ್ಲಿ ಹಗಲು ಹೊತ್ತಿನಲ್ಲೇ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ರ್&zwj;ಯಾಪಿಡೋ ಕ್ಯಾಬ್ ಚಾಲಕನನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಮಮೂರ್ತಿ ನಗರದ ನಿವಾಸಿ ನಾಗರಾಜ್ ಎಂದು ಗುರುತಿಸಲಾಗಿದ್ದು, ಆತನಿಂದ ಸುಮಾರು 240 ಗ್ರಾಂ ಚಿನ್ನಾಭರಣ, 89 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ ಒಂದು ಬೈಕ್ ಸೇರಿದಂತೆ ಒಟ್ಟು 35 ಲಕ್ಷ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.&lt;/p&gt;&lt;p&gt;ಕೆಲ ದಿನಗಳ ಹಿಂದೆ ಜಯನಗರದ ಟಿ ಬ್ಲಾಕ್ ಪ್ರದೇಶದಲ್ಲಿ ನಡೆದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇನ್ಸ್&zwnj;ಪೆಕ್ಟರ್ ವಿಶ್ವನಾಥ್ ನೇತೃತ್ವದ ಪೊಲೀಸ್ ತಂಡ ತಾಂತ್ರಿಕ ಮಾಹಿತಿಯನ್ನು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದೆ.&lt;/p&gt;&lt;h2&gt;ಮಂಡ್ಯ ಮೂಲದವನಿಗೆ ಕ್ರಿಮಿನಲ್ ಹಿನ್ನೆಲೆ&lt;/h2&gt;&lt;p&gt;ಮಂಡ್ಯ ಜಿಲ್ಲೆಯ ಹೊಸಹಳ್ಳಿ ಗ್ರಾಮದ ಮೂಲದ ನಾಗರಾಜ್&zwnj;ಗೆ ಕ್ರಿಮಿನಲ್ ಹಿನ್ನೆಲೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರ್&zwj;ಯಾಪಿಡೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆತ, ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಕಳ್ಳತನದ ದಾರಿಗೆ ತಿರುಗಿದ್ದಾನೆ. ರಾಮಮೂರ್ತಿ ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿವೆ.&lt;/p&gt;&lt;p&gt;ನಾಗರಾಜ್&zwnj; ಹಗಲು ಹೊತ್ತಿನಲ್ಲಿ ಮನೆಗಳ್ಳತನ ಮಾಡುವುದರಲ್ಲಿ ಪರಿಣತನಾಗಿದ್ದನು. ಮನೆಯವರು ಹೊರಗೆ ತೆರಳುವ ವೇಳೆ ಗೇಟ್ ಮತ್ತು ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿಕೊಂಡಿರುವ ಮನೆಗಳನ್ನು ಗುರುತಿಸಿ, ಅವುಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಈ ರೀತಿಯಾಗಿ ಮನೆಗಳಲ್ಲಿ ಯಾರೂ ಇಲ್ಲದ ಸಮಯವನ್ನು ಸದುಪಯೋಗಪಡಿಸಿಕೊಂಡು ಆತನಿಂದ ಹಲವಾರು ಕೃತ್ಯಗಳು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.&lt;/p&gt;&lt;p&gt;ಕಳೆದ ತಿಂಗಳು ಜಯನಗರದ 4ನೇ ಹಂತದಲ್ಲಿ ವಾಸವಾಗಿರುವ ಕುಟುಂಬವೊಂದು ಮನೆ ಬಾಗಿಲಿಗೆ ಚೀಲ ಹಾಕಿ, ಗೇಟ್ ಲಾಕ್ ಮಾಡಿಕೊಂಡು ದಿನಸಿ ಖರೀದಿಗೆ ತೆರಳಿತ್ತು. ಈ ವೇಳೆ ಮನೆಯೊಳಗೆ ನುಗ್ಗಿದ ನಾಗರಾಜ್ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ. ನಂತರ ಮನೆಮಂದಿ ಮರಳಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.&lt;/p&gt;&lt;h2&gt;ಲಿವಿಂಗ್ ಇನ್&zwnj; ಟುಗೆದರ್&zwnj;, ಮೋಜಿನ ಜೀವನಕ್ಕೆ ಕಳ್ಳತನ!&lt;/h2&gt;&lt;p&gt;ಇನ್ನು ವೈಯಕ್ತಿಕ ಜೀವನದಲ್ಲಿ, ನಾಗರಾಜ್ ತನ್ನ ಪ್ರೇಯಸಿಯೊಂದಿಗೆ ಸಹಜೀವನ (ಲಿವಿಂಗ್ ಇನ್&zwnj; ಟುಗೆದರ್&zwnj;) ನಡೆಸುತ್ತಿದ್ದನು. ಕಳ್ಳತನದ ಮೂಲಕ ಗಳಿಸಿದ ಹಣವನ್ನು ವೈಭವಯುತ ಜೀವನಕ್ಕೆ ಹಾಗೂ ಮೋಜು-ಮಸ್ತಿಗೆ ಬಳಸುತ್ತಿದ್ದನೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಒಟ್ಟಾರೆ, ನಗರದಲ್ಲಿ ಹೆಚ್ಚುತ್ತಿರುವ ಮನೆಕಳ್ಳತನ ಪ್ರಕರಣಗಳ ನಡುವೆಯೇ ತಿಲಕನಗರ ಪೊಲೀಸರ ಈ ಕಾರ್ಯಾಚರಣೆ ಪ್ರಮುಖವಾಗಿದ್ದು, ಆರೋಪಿಯನ್ನು ಬಂಧಿಸುವ ಮೂಲಕ ಇನ್ನಷ್ಟು ಕೃತ್ಯಗಳನ್ನು ತಡೆಗಟ್ಟಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-rapido-driver-arrested-for-daytime-burglaries-targeting-locked-homes-gdp/articleshow-ge2l5ph"/>
        </item>
        <item>
            <title><![CDATA[ರೈತರ ಬದುಕು ಹಸನಾಗಿಸಲು ಜಿಲ್ಲೆಗೆ 2500 ಕೋಟಿ ಅನುದಾನ ಬಿಡುಗಡೆ: ಡಿ.ಕೆ.ಶಿವಕುಮಾರ್]]></title>
            <link>https://kannada.asianetnews.com/karnataka-districts/dk-shivakumar-mandya-irrigation-project-2500-crore-gvd/articleshow-hrgq1wr</link>
            <guid isPermaLink="true">https://kannada.asianetnews.com/karnataka-districts/dk-shivakumar-mandya-irrigation-project-2500-crore-gvd/articleshow-hrgq1wr</guid>
            <pubDate>Fri, 08 May 2026 21:27:57 +0530</pubDate>
            <description><![CDATA[&lt;p&gt;ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ ₹2500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನಾಲೆಗಳ ಆಧುನೀಕರಣ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01khfee2pzd9xkawvh1ewnz2n4,imgname-dk-shivakumar-1771118725855.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮದ್ದೂರು (ಮೇ.08): &lt;/strong&gt;ಕೆಆರ್ ಎಸ್ ಜಲಾಶಯದಿಂದ ಕೊನೆ ಭಾಗದ ರೈತರ ಬೇಸಾಯಕ್ಕೆ ಸರಾಗವಾಗಿ ನೀರನ್ನು ಹರಿಸುವ ಮೂಲಕ ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ ₹2500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನಾಲೆಗಳ ಆಧುನೀಕರಣ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಹೋರಾಟ ಮಾಡುವ ಮೂಲಕ ಮದ್ದೂರಿನ ಈ ಪುಣ್ಯಭೂಮಿ ಚರಿತ್ರೆಯ ಪುಟಗಳಲ್ಲಿ ದಾಖಲಾಗಿದೆ.&lt;/p&gt;&lt;p&gt;ಹಲವು ಘಟಾನುಘಟಿ ನಾಯಕರುಗಳಿಗೆ ಜನ್ಮ ನೀಡಿರುವ ಗಂಡು ಮೆಟ್ಟಿದ ನಾಡಿದು. ಈ ಕ್ಷೇತ್ರದಲ್ಲಿ ಹಲವರು ಜನ ನಾಯಕರು ತಮ್ಮದೇ ಆದ ಅಭಿವೃದ್ಧಿ ಕಾರ್ಯಗಳ ಸಾಕ್ಷಿ ಗುಡ್ಡೆಯನ್ನು ಬಿಟ್ಟು ಹೋಗಿದ್ದಾರೆ ಎಂದರು. ಶಾಸಕ ಉದಯ್ ಆಯ್ಕೆಯಾದ ಮೂರೇ ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ₹2 ಸಾವಿರ ಕೋಟಿ ಅನುದಾನವನ್ನು ತಂದು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ ಎಂದು ಶ್ಲಾಘಿಸಿದರು.&lt;/p&gt;&lt;p&gt;ಮದ್ದೂರು ಕ್ಷೇತ್ರಕ್ಕೆ ಮೆಟ್ರೋ, ಏರ್ ಪೋರ್ಟ್ ನಂತಹ ಯೋಜನೆಗಳು ಬೇಡ. ನೀರಾವರಿಗೆ ಹೆಚ್ಚಿನ ಅನುದಾನ ನೀಡಿ ಎಂದು ಶಾಸಕ ಉದಯ್ ಬೇಡಿಕೆ ಇಟ್ಟಿದ್ದರು, ಹೀಗಾಗಿ ತಾಲೂಕಿನ ಕೊನೆಭಾಗಕ್ಕೂ ಸರಾಗವಾಗಿ ನೀರು ಹರಿದು ರೈತರ ಬೇಸಾಯಕ್ಕೆ ನೀರನ್ನು ಹರಿಸುವ ಮೂಲಕ ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ ₹2500 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;₹800 ಕೋಟಿಯನ್ನು ಮದ್ದೂರು ಕ್ಷೇತ್ರಕ್ಕೆ ಬಿಡುಗಡೆ ಮಾಡುವ ಮೂಲಕ ಸೂಳೆಕೆರೆ, ಮದ್ದೂರು ಕೆರೆಗಳ ಒತ್ತುವರಿ ತೆರವು ಮಾಡಿ ಅಭಿವೃದ್ಧಿಗೊಳಿಸಿ ನಾಲೆಗಳ ಆಧುನೀಕರಣ ಮಾಡಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಿದ್ದಾರೆ. ಇನ್ನು ಮೇಕೆದಾಟು ಯೋಜನೆಗೂ ಕೂಡ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಈ ಯೋಜನೆ ಜಾರಿಗೆ ಬಂದ ಬಳಿಕ ಈ ಭಾಗದ ನೀರಾವರಿ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ರೈತರಿಗೆ ಹೆಚ್ಚಿನ ಬೆಂಬಲ&lt;/strong&gt;&lt;/h2&gt;&lt;p&gt;ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಶಾಸಕ ಉದಯ್ ಅವರು ಅಭಿವೃದ್ಧಿ ಜೊತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಬೃಹತ್ ರಾಸುಗಳ ಜಾತ್ರೆ ಆಯೋಜಿಸಿ ಲಕ್ಷಾಂತರ ರುಪಾಯಿ ಬಹುಮಾನ ನೀಡುವ ಮೂಲಕ ರೈತರಿಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ&zwnj; ಎಂದರು.&lt;/p&gt;&lt;p&gt;ರಾಮನಗರ, ತುಮಕೂರು ಜಿಲ್ಲೆಗೆ ಸೀಮಿತವಾಗಿದ್ದ ಉತ್ಸವ ಕಾರ್ಯಕ್ರಮಗಳು ಮಂಡ್ಯ ಜಿಲ್ಲೆಗೂ ಕಾಲಿಟ್ಟಿದ್ದು, ಪ್ರಥಮವಾಗಿ ಮದ್ದೂರು ಉತ್ಸವ ಎಂಬ ಬೃಹತ್ ಕಾರ್ಯಕ್ರಮ ಆಯೋಜಿಸಿ ಮನರಂಜನೆ ಜೊತೆಗೆ ಹಲವು ಪ್ರತಿಭೆಗಳನ್ನು ಗುರುತಿಸುವ ಮೂಲಕ ಅವರನ್ನು ಗೌರವಿಸಿದ್ದಾರೆ ಎಂದರು.&lt;/p&gt;&lt;p&gt;ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಜನರ ನಿರೀಕ್ಷೆಗೂ ಮೀರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ. ಈ ಹಿಂದೆ ಆಡಳಿತ ನಡೆಸಿದ್ದ ಯಾವ ಶಾಸಕರೂ ಮಾಡದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಹೊಸ ಹೊಸ ಚಿಂತನೆಗಳ ಮೂಲಕ ಕ್ಷೇತ್ರಕ್ಕೆ ಹೊಸ ರೂಪವನ್ನು ನೀಡುತ್ತಿದ್ದಾರೆ ಎಂದು ಬಣ್ಣಿಸಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dk-shivakumar-mandya-irrigation-project-2500-crore-gvd/articleshow-hrgq1wr"/>
        </item>
        <item>
            <title><![CDATA[ಸೆಸ್ಕಾಂ ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ; ಜೈಲಿಗೆ ಹೋಗೋದಾಗಿ ಎಚ್ಚರಿಕೆ ರವಾನೆ!]]></title>
            <link>https://kannada.asianetnews.com/karnataka-districts/mandya-melukote-mla-darshan-puttannaiah-warns-cescom-officials-transformer-shifting-sat/articleshow-i6bo431</link>
            <guid isPermaLink="true">https://kannada.asianetnews.com/karnataka-districts/mandya-melukote-mla-darshan-puttannaiah-warns-cescom-officials-transformer-shifting-sat/articleshow-i6bo431</guid>
            <pubDate>Tue, 28 Apr 2026 16:37:32 +0530</pubDate>
            <description><![CDATA[&lt;p&gt;ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು, ಅಂಗನವಾಡಿ ಬಳಿಯ ಅಪಾಯಕಾರಿ ಟ್ರಾನ್ಸ್&zwnj;ಫಾರ್ಮರ್&zwnj; ಸ್ಥಳಾಂತರಿಸದ ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾಹುತವಾದರೆ ನಾವೆಲ್ಲರೂ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq9vwssfae5v7b48gwss27hg,imgname-darshan-puttannaiah-cescom-officials-1777373964079.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಏ.28): ರೈ&lt;/strong&gt;ತರ ಸಮಸ್ಯೆಗಳಿಗೆ ಸ್ಪಂದಿಸದ ಮತ್ತು ಅಪಾಯಕಾರಿ ಸ್ಥಳದಲ್ಲಿರುವ ಟ್ರಾನ್ಸ್&zwnj;ಫಾರ್ಮರ್&zwnj;ಗಳನ್ನು ಸ್ಥಳಾಂತರಿಸಲು ನಿರ್ಲಕ್ಷ್ಯ ವಹಿಸಿದ ಸೆಸ್ಕಾಂ (Chescom) ಅಧಿಕಾರಿಗಳ ವಿರುದ್ಧ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಂಡವಪುರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, 'ಸ್ವಲ್ಪ ಎಡವಟ್ಟಾದರೂ ನಾವೆಲ್ಲಾ ಜೈಲಿಗೆ ಹೋಗಬೇಕಾಗುತ್ತದೆ' ಎಂದು ಅಧಿಕಾರಿಗಳಿಗೆ ನೇರ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;h3&gt;&lt;strong&gt;ಅಂಗನವಾಡಿ ಬಳಿಯ 'ಡೆತ್ ವಾರೆಂಟ್' ಟಿಸಿ!&lt;/strong&gt;&lt;/h3&gt;&lt;p&gt;ನರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಬಳಿಯೇ ಅಪಾಯಕಾರಿ ರೀತಿಯಲ್ಲಿ ಟ್ರಾನ್ಸ್&zwnj;ಫಾರ್ಮರ್ (TC) ಅಳವಡಿಸಲಾಗಿದೆ. ಇದನ್ನು ಸ್ಥಳಾಂತರಿಸುವಂತೆ ಗ್ರಾಮಸ್ಥರು ಮತ್ತು ಅಂಗನವಾಡಿ ಸಿಬ್ಬಂದಿ ಹತ್ತಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕಿವಿಗೊಟ್ಟಿಲ್ಲ. ಈ ಬಗ್ಗೆ ಗರಂ ಆದ ಶಾಸಕರು, 'ಪುಟ್ಟ ಮಕ್ಕಳು ಓಡಾಡುವ ಅಂಗನವಾಡಿ ಬಳಿ ಟಿಸಿ ಇಟ್ಟುಕೊಂಡು ಏನು ಮಾಡ್ತಿದ್ದೀರಾ? ಅಲ್ಲಿ ಅನಾಹುತ ಸಂಭವಿಸಿದರೆ ಅದಕ್ಕೆ ಹೊಣೆ ಯಾರು? ಮೊದಲು ಅದನ್ನು ಸ್ಥಳಾಂತರಿಸಿ. ಅಧಿಕಾರಿಗಳಾದ ನೀವು ಮತ್ತು ನಾವು ಜೈಲಿಗೆ ಹೋಗುವ ಪರಿಸ್ಥಿತಿ ತಂದುಕೊಳ್ಳಬೇಡಿ' ಎಂದು ಪಾಂಡವಪುರ ಸೆಸ್ಕಾಂ ಇಇ (EE) ವಿನುತಾ ಹಾಗೂ ಎಇಇ (AEE) ರವಿಕುಮಾರ್ ಅವರಿಗೆ ವಾರ್ನಿಂಗ್ ನೀಡಿದರು.&lt;/p&gt;&lt;h2&gt;&lt;strong&gt;ರೈತರ ಬೆಳೆ ರಕ್ಷಣೆಗೆ ಆದ್ಯತೆ ನೀಡಿ:&lt;/strong&gt;&lt;/h2&gt;&lt;p&gt;ಬೇಸಿಗೆಯ ನೆಪ ಹೇಳಿ ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಸೆಸ್ಕಾಂ ಸಿಬ್ಬಂದಿಗಳ ವಿರುದ್ಧವೂ ದರ್ಶನ್ ಪುಟ್ಟಣ್ಣಯ್ಯ ಸಿಡಿಮಿಡಿಗೊಂಡರು. &quot;ಬೆಳೆಗಳಿಗೆ ನೀರು ಹರಿಸದಿದ್ದರೆ ರೈತರು ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾಗುತ್ತದೆ. ಟ್ರಾನ್ಸ್&zwnj;ಫಾರ್ಮರ್ ಸುಟ್ಟು ಹೋದರೆ ದಿನಗಟ್ಟಲೆ ಕಾಯಿಸಬೇಡಿ, ತಕ್ಷಣವೇ ಬದಲಾಯಿಸಿ. ಪ್ರತಿ ಸೆಕ್ಷನ್ ಆಫೀಸ್&zwnj;ಗೆ ಅಗತ್ಯವಿರುವಷ್ಟು ಟಿಸಿಗಳನ್ನು ತಲುಪಿಸಿ. ಅದಿಲ್ಲ, ಇದಿಲ್ಲ ಎಂದು ಕಥೆ ಹೇಳುವ ಚಾಳಿ ಬಿಡಿ&quot; ಎಂದು ತಾಕೀತು ಮಾಡಿದರು.&lt;/p&gt;&lt;h3&gt;&lt;strong&gt;ಕಥೆ ಹೇಳಬೇಡಿ, ಕೆಲಸ ಮಾಡಿ:&lt;/strong&gt;&lt;/h3&gt;&lt;p&gt;ಅಧಿಕಾರಿಗಳು ನೀಡುವ ಕುಂಟು ನೆಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, 'ಎಲ್ಲವನ್ನೂ ಕೇವಲ ಲೆಕ್ಕಾಚಾರದ ಮೇಲೆ ನೋಡಲು ಸಾಧ್ಯವಿಲ್ಲ. ರೈತರ ಭಾವನೆ ಮತ್ತು ಬೆಳೆ ಎರಡೂ ಮುಖ್ಯ. ಟಿಸಿ ದುರಸ್ತಿ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದರು. ಈ ಸಭೆಯ ನಂತರ ಸಾರ್ವಜನಿಕ ವಲಯದಲ್ಲಿ ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಪಾಯಕಾರಿ ಸ್ಥಳಗಳಲ್ಲಿರುವ ವಿದ್ಯುತ್ ಉಪಕರಣಗಳ ಸ್ಥಳಾಂತರಕ್ಕೆ ವೇಗ ಸಿಗುವ ನಿರೀಕ್ಷೆಯಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-melukote-mla-darshan-puttannaiah-warns-cescom-officials-transformer-shifting-sat/articleshow-i6bo431"/>
        </item>
        <item>
            <title><![CDATA[Mandya: 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು]]></title>
            <link>https://kannada.asianetnews.com/karnataka-districts/mandya-devotees-fulfill-vow-by-locking-their-mouths-with-18-foo-long-sarapali-srirangapatna-belagola-mrq/articleshow-i8l8d5k</link>
            <guid isPermaLink="true">https://kannada.asianetnews.com/karnataka-districts/mandya-devotees-fulfill-vow-by-locking-their-mouths-with-18-foo-long-sarapali-srirangapatna-belagola-mrq/articleshow-i8l8d5k</guid>
            <pubDate>Wed, 22 Apr 2026 13:04:54 +0530</pubDate>
            <description><![CDATA[ಶ್ರೀರಂಗಪಟ್ಟಣದ ಬೆಳಗೊಳದಲ್ಲಿ ಭಕ್ತರು 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಬನ್ನಾರಮ್ಮ ದೇವಿಗೆ ಹರಕೆ ಸಲ್ಲಿಸಿದರು. ಇದರೊಂದಿಗೆ ಪಟ್ಟಣದಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ ಮತ್ತು ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಶ್ರೀರಂಗಮುಡಿ ಮಹೋತ್ಸವದ ಕುರಿತು ವರದಿ ಇಲ್ಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpt1edrq7rnw86zxx844r528,imgname-screenshot-2026-04-22-125330-1776842913559.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ : &lt;/strong&gt;ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಕೋಟೆ ಮಾಳ ಬೀದಿಯಲ್ಲಿನ ಬನ್ನಾರಮ್ಮ ದೇವಿಗೆ ಹರಿಕೆ ಹೊತ್ತ ಭಕ್ತರು 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದರು.&lt;/p&gt;&lt;p&gt;ಕಳೆದ 27 ವರ್ಷದಿಂದ ವಾಣಿಯಾರ್ ಶ್ರೀಬನ್ನಾರಿ ಮಾರಮ್ಮ ನವರ ಭಕ್ತ ಮಂಡಳಿಯಿಂದ ಶ್ರೀ ಬನ್ನಾರಿ ಮಾರಮ್ಮನ ಕರಗ ಮಹೋತ್ಸವ ನಡೆಸಲಾಗುತ್ತಿದೆ. ವಿವಿಧೆಡೆಯ ಭಕ್ತರು ದೇವಿಯಲ್ಲಿ ಹರಿಕೆ ಮಾಡಿಕೊಂಡು ಬೇವಿನ ಸೊಪ್ಪು ಹಿಡಿದು ಬಾಯಿ ಬೀಗ ಚುಚ್ಚಿಸಿ ಹರಿಕೆ ತೀರಿಸಲು ಬಣ್ಣಾರಿ ಮಾರಿಯಮ್ಮನ ಕರಗ ಮಹೋತ್ಸವದ ಅಂಗವಾಗಿ 18 ಅಡಿ ಉದ್ದದ ಸರಳಿನ ಬಾಯಿಬೀಗ ಹಾಕಿಸಿಕೊಂಡಿದ್ದರು.&lt;/p&gt;&lt;p&gt;ಸೋಮವಾರ ರಾತ್ರಿ ಬಲಮುರಿ ಕಾವೇರಿ ನದಿಯಲ್ಲಿ ದೇವರ ಮಡಿ ಮಾಡಿ ಕರಗ ಮಹೋತ್ಸವ ಮೆರವಣಿಗೆ ನಡೆಸಲಾಯಿತು. ಮಂಗಳವಾರ ಬೆಳಗ್ಗೆ ಗ್ರಾಮದ ಮುಂಭಾಗದ ಆಂಜನೇಯ ಹಾಗೂ ಮಾರಮ್ಮನ ದೇವಾಲಯದಲ್ಲಿ ವಿವಿಧ ಪೂಜೆ ಸಲ್ಲಿಸಿ, ಹರಿಕೆ ಹೊತ್ತ ಭಕ್ತರಿಗೆ ಬಾಯಿ ಬೀಗ ಹಾಕಿಸಿಕೊಂಡರು.&lt;/p&gt;&lt;p&gt;ರಣ ಬಿಸಿಲಿನ್ನು ಲೆಕ್ಕಿಸದ ಭಕ್ತರು 18 ಅಡಿ ಉದ್ದದ ದೊಡ್ಡ ಸರಳಿನ ಬಾಯಿ ಬೀಗ ಹಾಕಿಸಿಕೊಂಡು ಸರತಿ ಸಾಲಿನಲ್ಲಿ ದೇವಿ ಬಣ್ಣಾರಿ ಮಾರಿಯಮ್ಮನ ದೇಗುಲದ ವರೆಗೂ ಟಮಟೆ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಿದರು.&lt;/p&gt;&lt;h2&gt;&lt;strong&gt;ಶ್ರೀಶಂಕರಾಚಾರ್ಯರ ಜಯಂತಿ ಆಚರಣೆ&lt;/strong&gt;&lt;/h2&gt;&lt;p&gt;ಶ್ರೀರಂಗಪಟ್ಟಣ ಪಟ್ಟಣದ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಶ್ರೀಶಂಕರಾಚಾರ್ಯರ ಜಯಂತಿಯನ್ನು ತಹಸೀಲ್ದಾರ್ ಚೇತನ ಯಾದವ್ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಿದರು.&lt;/p&gt;&lt;p&gt;ನಂತರ ಶಾಶ್ವತಿ ಧಾರ್ಮಿಕ ಕ್ರಿಯಾ ಸಮಿತಿ ಅಧ್ಯಕ್ಷ ವೇದ ಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ ಮಾತನಾಡಿ, ಹಿಂದು ಧರ್ಮದ ಅದ್ವೈತ ಸಿದ್ಧಾಂತವನ್ನು ಪ್ರಪಂಚದಲ್ಲಿ ಶಂಕರಾಚಾರ್ಯರು ಪ್ರತಿಪಾದಿಸಿ ಅದರ ಮೌಲ್ಯಗಳನ್ನು ಜಗತ್ತಿಗೆ ಕಾಣುವಂತೆ ಎತ್ತಿ ಹಿಡಿದ ಮಹನೀಯರ ತತ್ವ ಆದರ್ಶಗಳನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು.&lt;/p&gt;&lt;p&gt;ಈ ವೇಳೆ ಶ್ರೀರಂಗಪಟ್ಟಣ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಿ.ಎಚ್ ಕೃಷ್ಣ, ನಿರ್ದೇಶಕರಾದ ನರಸಿಂಹ ಮೂರ್ತಿ, ಗಂಗಾಧರ್ ಶರ್ಮ, ರಮೇಶ್ ಶರ್ಮ ಸೇರಿದಂತೆ ತಾಲೂಕು ಕಚೇರಿಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಕನ್ನಡ ಪರ ಸಂಘಟನೆಗಳ ಮುಖಂಡರು ಹಾಜರಿದ್ದರು.&lt;/p&gt;&lt;h3&gt;&lt;strong&gt;ನಾಳೆ ಶ್ರೀರಂಗಮುಡಿ ಮಹೋತ್ಸವ&lt;/strong&gt;&lt;/h3&gt;&lt;p&gt;ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಏ.23ರಂದು ಶ್ರೀರಂಗಮುಡಿ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ದೇವಾಲಯದ ಶ್ರೀ ರಂಗಮುಡಿ ಕೈಂಕರ್ಯ ಸಭಾ ಮುಖ್ಯಸ್ಥ ಅರ್ಚಕ ವಿಜಯಸಾರತಿ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Dharwad: 16 ವರ್ಷಗಳ ಬಳಿಕ ದೇವಸ್ಥಾನದ ಬಾಗಿಲು ಓಪನ್; ಗುಂಪುಗಳ ಭಿನ್ನಾಭಿಪ್ರಾಯ ಇತ್ಯರ್ಥ&lt;/strong&gt;&lt;/p&gt;&lt;p&gt;ಶ್ರೀರಂಗನಾಥನ ಜಯಂತಿ ಪ್ರಯುಕ್ತ ಪಟ್ಟಣದ ಶ್ರೀರಂಗನಾಥ ದೇವಾಲಯದಲ್ಲಿ ಶ್ರೀ ರಂಗ ಮುಡಿ ಉತ್ಸವವನ್ನು ದೇವಾಲಯದ ಆಡಳಿತ ಮಂಡಳಿ ಯೊಂದಿಗೆ ಶ್ರೀರಂಗನ ಉತ್ಸವಮೂರ್ತಿಗೆ ವಜ್ರಖಚಿತ ಕಿರುಮುಡಿಯ ಧಾರಣೆ ಮಾಡಿ ನಂತರ ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಗುವುದು.&lt;/p&gt;&lt;p&gt;ಶ್ರೀರಂಗಮುಡಿ ಉತ್ಸವ ಮೂರ್ತಿ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಜೊತೆ ಶಾಸಕರು, ದೇಗುಲದ ಇಒ, ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು ಸದಸ್ಯರು ಒಟ್ಟುಗೂಡಿ ಚಾಲನೆ ನೀಡುವರು.&lt;/p&gt;&lt;p&gt;ಶ್ರೀರಂಗನಾಥಸ್ವಾಮಿ ಹಾಗೂ ರಂಗನಾಯಕಿ ಅಮ್ಮನವರ ವಿಗ್ರಹಕ್ಕೆ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ದೇವರಿಗೆ ಮಹಾಭಿಷೇಕವನ್ನು ಅರ್ಚಕರ ನೆರವೇಸುವರು. ಮಧ್ಯಾಹ್ನ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ನಿಯೋಗ, ನಂತರ ಸಂಜೆ ಪಟ್ಟಣದ ಉಪ ಖಜಾನೆಯಿಂದ ವಿತರಿಸಲಾದ ವಜ್ರ ಖಚಿತ ಚಿನ್ನದ ಕಿರೀಟವನ್ನು ರಂಗನಾಥಸ್ವಾಮಿಗೆ ಕಿರೀಟ ಧಾರಣೆ ಮಾಡಿ ಪಲ್ಲಕಿ ಮೇಲಿರಿಸಿ ಪಟ್ಟಣದ ರಾಜಬೀದಿ, ಪೂರ್ಣಯ್ಯ ಬೀದಿ ಮತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಉತ್ಸವಮೂರ್ತಿಯ ಮೆರವಣಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದೂದಿಹಳ್ಳಿ ಗ್ರಾಮದ ಕೆರೆಯ ಹೂಳು ತೆಗೆಯುವಾಗ ಸಿಕ್ತು 3 ಅಡಿ ಎತ್ತರದ ನಂದಿ ಮೂರ್ತಿ&lt;/strong&gt;&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mandya-devotees-fulfill-vow-by-locking-their-mouths-with-18-foo-long-sarapali-srirangapatna-belagola-mrq/articleshow-i8l8d5k"/>
        </item>
        <item>
            <title><![CDATA[ಮಂಡ್ಯ: ಸ್ಟ್ಯಾಲಿನ್ ಗೆ ಬುದ್ದಿ ಇಲ್ಲ ಬುದ್ದಿ ಕಡಿಮೆ, ಆರ್. ಅಶೋಕ್ ಮಾತಿನ ಸಮರ]]></title>
            <link>https://kannada.asianetnews.com/karnataka-districts/karnataka-opposition-leader-r-ashoka-slams-congress-praises-modi-over-women-reservation-bill-gdp/articleshow-ir07b8s</link>
            <guid isPermaLink="true">https://kannada.asianetnews.com/karnataka-districts/karnataka-opposition-leader-r-ashoka-slams-congress-praises-modi-over-women-reservation-bill-gdp/articleshow-ir07b8s</guid>
            <pubDate>Fri, 17 Apr 2026 16:06:48 +0530</pubDate>
            <description><![CDATA[ಮಂಡ್ಯದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಮಹಿಳಾ ಮೀಸಲಾತಿ ಬಿಲ್ ಕುರಿತು ಕೇಂದ್ರವನ್ನು ಶ್ಲಾಘಿಸಿದರು. ಇದೇ ವೇಳೆ, ಕ್ಷೇತ್ರ ಮರುವಿಂಗಡಣೆ, ಹಿಂದಿ ಪರೀಕ್ಷೆ ವಿವಾದ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದು ಅವರು ಟೀಕಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kpdfnjbr95edhpdps6a4dekb,imgname-r-ashoka-1776421620088.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ : &lt;/strong&gt;ಮಂಡ್ಯದಲ್ಲಿ ನಡೆದ ಕಾರ್ಯಕ್ರಮದ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಲವು ರಾಜಕೀಯ ಹಾಗೂ ಸಮಕಾಲೀನ ವಿಚಾರಗಳ ಕುರಿತು ತೀಕ್ಷ್ಣ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಬಿಲ್&zwnj;ನಿಂದ ಹಿಡಿದು ರಾಜ್ಯ ರಾಜಕೀಯದ ಬೆಳವಣಿಗೆಗಳವರೆಗೆ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದರು.&lt;/p&gt;&lt;h2&gt;ಮಹಿಳಾ ಮೀಸಲಾತಿ ಬಿಲ್&zwnj;ಗೆ ಅಭಿನಂದನೆ&lt;/h2&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸಾಗಿರುವುದನ್ನು ಆರ್. ಅಶೋಕ್ ಸ್ವಾಗತಿಸಿದರು. ಬಹಳ ವರ್ಷಗಳಿಂದ ಹಲವರು ಪ್ರಯತ್ನಿಸಿದರೂ ಸಾಧ್ಯವಾಗದ ಕೆಲಸವನ್ನು ಮೋದಿ ಅವರು ಸಾಧಿಸಿದ್ದಾರೆ. ಇದು ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು, ದೇಶದ ಮಹಿಳೆಯರಿಗೆ ಸಮಾನತೆ ಒದಗಿಸುವ ಮಹತ್ವದ ಕ್ರಮ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ಮಹಿಳೆಯರು ಕೂಡ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಹೇಳಿದರು.&lt;/p&gt;&lt;h2&gt;ಕಾಂಗ್ರೆಸ್ ವಿರುದ್ಧ ಟೀಕೆ&lt;/h2&gt;&lt;p&gt;ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಶೋಕ್, ಕಾಂಗ್ರೆಸ್ ಧರ್ಮ ಆಧಾರಿತ ರಾಜಕೀಯ ಮಾಡುತ್ತಿದೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಅನಗತ್ಯ ವಿವಾದ ಸೃಷ್ಟಿಸುತ್ತಿದೆ. ಇದು ಇತಿಹಾಸ ನಿರ್ಮಾಣದ ಕ್ಷಣವಾಗಿದ್ದು, ಅದನ್ನು ರಾಜಕೀಯವಾಗಿ ತಿರುಗಿಸುವುದು ಸರಿಯಲ್ಲ ಎಂದು ಹೇಳಿದರು.&lt;/p&gt;&lt;h2&gt;ಕ್ಷೇತ್ರ ಮರುವಿಂಗಡಣೆ ವಿವಾದ&lt;/h2&gt;&lt;p&gt;ತಮಿಳುನಾಡಿನಲ್ಲಿ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಿಲ್&zwnj;ನಲ್ಲಿ ಜನಸಂಖ್ಯೆ ಆಧಾರದ ಯಾವುದೇ ಅಂಶವಿಲ್ಲ. ಹಿಂದೆಯೇ ಕಾಂಗ್ರೆಸ್ ಈ ರೀತಿಯ ಕ್ರಮಗಳನ್ನು ಕೈಗೊಂಡಿತ್ತು. ಈಗ ತಮಿಳುನಾಡಿನ ಕ್ಷೇತ್ರಗಳು ಹೆಚ್ಚಾಗುತ್ತಿರುವುದರಲ್ಲಿ ಏನು ಸಮಸ್ಯೆ? ಎಂದು ಪ್ರಶ್ನಿಸಿದರು. ತಮಿಳುನಾಡು ಸಿಎಂ ಸ್ಟಾಲಿನ್&zwnj;ಗೆ ಬುದ್ಧಿ ಕಡಿಮೆ ಇದೆ. ಇದೇ ರೀತಿ ಕಾಂಗ್ರೆಸ್&zwnj; ನಾಯಕರು ಕೂಡ ಅನ್ಯಾಯ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಿಂದೆ ಲೋಕಸಭೆ ಕ್ಷೇತ್ರ ಎಷ್ಟಿರಬೇಕೆಂದು ಕಾಂಗ್ರೆಸ್&zwnj; ನಾಯಕರೇ ತೀರ್ಮಾನ ಮಾಡಿದ್ದರು. ಜನಸಂಖ್ಯೆ ಆಧಾರಿತವಾಗಿಯೇ ಕ್ಷೇತ್ರ ಮರುವಿಂಗಡಣೆ ಮಾಡಲಾಗುತ್ತಿತ್ತು. ರಾಜ್ಯದಲ್ಲಿ 28 ಲೋಕಸಭೆ ಕ್ಷೇತ್ರಗಳು 42 ಆಗುತ್ತಿವೆ. ಇಲ್ಲಿ ಕ್ಷೇತ್ರಗಳು ಕಡಿಮೆಯಾಗುವುದಿಲ್ಲ. ಕೇರಳದಲ್ಲಿ 20 ಕ್ಷೇತ್ರಗಳಿಂದ 30 ಕ್ಕೆ, ತಮಿಳುನಾಡಿನಲ್ಲಿ 39 ರಿಂದ 59 ಕ್ಕೆ ಏರಿಕೆಯಾಗಲಿದೆ. ಆದರೂ ವಿರೋಧ ಮಾಡುತ್ತಿದ್ದಾರೆ. ಇದನ್ನು ಜಾರಿ ಮಾಡಿದರೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಿ ಎಲ್ಲರೂ ಟೆಂಟ್&zwnj; ಕಟ್ಟಿಕೊಂಡು ಹೋಗಬೇಕಾಗುತ್ತದೆ ಎಂಬ ಭಯ ವಿರೋಧ ಪಕ್ಷಗಳ ನಾಯಕರಲ್ಲಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಯಾವುದೇ ಅನ್ಯಾಯ ಆಗುತ್ತಿಲ್ಲ. ಯಾವುದೇ ರಾಜ್ಯಗಳಲ್ಲಿ ಸ್ಥಾನಗಳು ಕಡಿಮೆಯಾಗುತ್ತಿಲ್ಲ. ವಿರೋಧ ಪಕ್ಷಗಳ ನಾಯಕರಿಗೆ ಅಭಿವೃದ್ಧಿ ಬೇಕಿಲ್ಲ. ಕಾಂಗ್ರೆಸ್&zwnj;ನ ವಂಶಾಡಳಿತಕ್ಕೆ ಪೂರಕವಾಗಿ ಎಲ್ಲರೂ ಮಾತಾಡುತ್ತಿದ್ದಾರೆ ಎಂದರು.&lt;/p&gt;&lt;h2&gt;ಯೋಗೇಶ್ ಗೌಡ ಹತ್ಯೆ ಪ್ರಕರಣ&lt;/h2&gt;&lt;p&gt;ಯೋಗೇಶ್ ಗೌಡ ಹತ್ಯೆ ಪ್ರಕರಣದ ತೀರ್ಪಿನ ಕುರಿತು ಮಾತನಾಡಿದ ಅವರು, ಈ ಪ್ರಕರಣವು ರಾಜಕೀಯ ಕೊಲೆಗಳಿಗೆ ಒಂದು ಪಾಠವಾಗಿದೆ. ಯಾರಾದರೂ ರಾಜಕಾರಣಿಯ ಮಾತು ಕೇಳಿ ಅಪರಾಧದಲ್ಲಿ ಭಾಗಿಯಾದರೆ ಅದರ ಪರಿಣಾಮ ಏನಾಗುತ್ತದೆ ಎಂಬುದಕ್ಕೆ ಇದು ಉದಾಹರಣೆ. ಕಾಂಗ್ರೆಸ್ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿತ್ತು, ಆದರೆ ಸಿಬಿಐ ತನಿಖೆಯಿಂದ ಸತ್ಯ ಬಹಿರಂಗವಾಗಿದೆ ಎಂದು ಹೇಳಿದರು.&lt;/p&gt;&lt;h2&gt;ದೇವೇಗೌಡರ ರಾಜ್ಯಸಭೆ ವಿಚಾರ&lt;/h2&gt;&lt;p&gt;ಹೆಚ್&zwnj;.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಆಯ್ಕೆ ಮಾಡುವ ವಿಚಾರ ಕುರಿತು ಮಾತನಾಡಿದ ಅವರು, ಇದು ರಾಷ್ಟ್ರೀಯ ಮಟ್ಟದ ನಾಯಕರು ತೀರ್ಮಾನಿಸುವ ವಿಷಯ ಎಂದು ತಿಳಿಸಿದರು.&lt;/p&gt;&lt;h2&gt;ಹಿಂದಿ ಪರೀಕ್ಷೆ, ಗ್ರೇಸ್ ಮಾರ್ಕ್ಸ್ ವಿವಾದ&lt;/h2&gt;&lt;p&gt;ಹಿಂದಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶವನ್ನು ಪಾಲಿಸಬೇಕು. ವಿದ್ಯಾರ್ಥಿಗಳ ವಿಚಾರದಲ್ಲಿ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.&lt;/p&gt;&lt;h2&gt;ಕನ್ನಡಕ್ಕೆ ಆದ್ಯತೆ&lt;/h2&gt;&lt;p&gt;ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಬೇಕು. 365 ದಿನ ಓದಿದ ಮಕ್ಕಳಿಗೆ ಅನ್ಯಾಯವಾಗಬಾರದು ಎಂದು ಹೇಳಿದರು. ಉರ್ದು ಶಾಲೆಗಳಲ್ಲಿ ಕನ್ನಡದ ಸ್ಥಿತಿ ಕುರಿತೂ ಪ್ರಶ್ನೆ ಎತ್ತಿದ ಅವರು, ಈ ವಿಷಯದಲ್ಲಿ ಸಮಗ್ರ ಚರ್ಚೆ ಅಗತ್ಯವಿದೆ ಎಂದರು. ರಾಜ್ಯದ ಮಕ್ಕಳು ಹಿಂದಿ ಓದುವ ಮೊದಲೇ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಪರೀಕ್ಷೆಯ ಸಮಯದಲ್ಲಿ ತುಘಲಕ್&zwnj; ದರ್ಬಾರ್&zwnj; ಮಾಡುವ ಅಗತ್ಯವಿರಲಿಲ್ಲ. ನಾನು ಕೂಡ ಕನ್ನಡದ ಹೋರಾಟಗಾರನಾಗಿದ್ದು, ಗೋಕಾಕ್&zwnj; ಚಳವಳಿಯಲ್ಲಿ ಭಾಗವಹಿಸಿ ಪೊಲೀಸರ ಲಾಠಿ ಏಟಿನಿಂದ ಕಾಲಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದೆ. ಹೊಸೂರಿನಲ್ಲಿ ಹೆಚ್ಚಿನವರು ಕನ್ನಡ ಮಾತಾಡುತ್ತಾರೆ. ಕಾಸರಗೋಡಿನಲ್ಲೂ ಕನ್ನಡಿಗರು ಹೆಚ್ಚಿದ್ದಾರೆ. ಅಲ್ಲಿ ಕನ್ನಡ ಇಲ್ಲವೆಂದರೆ ಸಮಸ್ಯೆಯಾಗುತ್ತದೆ. ಉರ್ದು ಶಾಲೆಗಳಲ್ಲಿ ಮೊದಲಿಗೆ ಉರ್ದು, ಎರಡನೇ ಭಾಷೆಯಾಗಿ ಇಂಗ್ಲಿಷ್&zwnj; ಓದುತ್ತಾರೆ. ಕೊನೆಯ ಭಾಷೆಯಾಗಿ ಕನ್ನಡ ಓದುತ್ತಾರೆ. ತ್ರಿಭಾಷಾ ಸೂತ್ರ ಇಲ್ಲವೆಂದರೆ ಅಲ್ಲಿ ಕನ್ನಡವೂ ಇರುವುದಿಲ್ಲ. ವಿದ್ಯಾರ್ಥಿಗಳ ವಿಚಾರ ಬಂದಾಗ ಸದನ ಸಮಿತಿ ರಚಿಸಿ ಚರ್ಚೆ ಮಾಡಬೇಕಿತ್ತು ಎಂದರು&lt;/p&gt;&lt;h2&gt;ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ&lt;/h2&gt;&lt;p&gt;ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ ಅಶೋಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲದಲ್ಲಿದೆ. ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಒಳಪೈಪೋಟಿ ನಡೆಯುತ್ತಿದೆ. ಶಾಸಕರು ದೆಹಲಿಗೆ ತೆರಳುತ್ತಿರುವುದು ಇದಕ್ಕೆ ಸಾಕ್ಷಿ ಎಂದರು. ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಲಾಗುತ್ತಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದರು. ದಾವಣಗೆರೆಯಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಿರುವುದಕ್ಕೆ ಮುಸ್ಲಿಮ್&zwnj; ಮುಖಂಡರು ಕಾಂಗ್ರೆಸ್&zwnj; ವಿರುದ್ಧ ಮಾತಾಡುತ್ತಿದ್ದಾರೆ. ಸಚಿವ ಜಮೀರ್&zwnj; ಅಹ್ಮದ್&zwnj; ಅವರನ್ನೂ ಟಾರ್ಗೆಟ್&zwnj; ಮಾಡಲಾಗುತ್ತಿದೆ. ಇಡೀ ಪಕ್ಷ ಹಾಗೂ ಸರ್ಕಾರ ಸಂಪೂರ್ಣ ಗೊಂದಲದಲ್ಲಿದೆ. ಇಂದೇ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್&zwnj;ಡಿಎ ಸರ್ಕಾರ ಬರಲಿದೆ. ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಬಿಜೆಪಿ ಗೆಲ್ಲಲಿದೆ. ನರೇಂದ್ರ ಮೋದಿ ಪ್ರಧಾನಿಯಾಗಿದ್ದಕ್ಕೆ ನಮಗೇನೂ ಸಮಸ್ಯೆಯಾಗಿಲ್ಲ, ಬಿಜೆಪಿ ಬೆಂಬಲಿಸುತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ. ಅವರ ಈ ನಡೆಯನ್ನು ಸ್ವಾಗತಿಸುತ್ತೇನೆ ಎಂದರು.&lt;/p&gt;&lt;h2&gt;ಮುಂದಿನ ಚುನಾವಣೆ ಕುರಿತು ಭವಿಷ್ಯ&lt;/h2&gt;&lt;p&gt;ಮುಂದಿನ ಚುನಾವಣೆಯ ಕುರಿತು ಮಾತನಾಡಿದ ಅವರು, 2028ರಲ್ಲ, ಇಂದೇ ಚುನಾವಣೆ ನಡೆದರೂ ನಮ್ಮ ಎನ್&zwnj;ಡಿಎ ಮೈತ್ರಿ ಶೇ.100 ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಒಟ್ಟಾರೆ ಮಂಡ್ಯದಲ್ಲಿ ಆರ್. ಅಶೋಕ್ ನೀಡಿದ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.&lt;/p&gt;]]></content:encoded>
            <category>mandya</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-opposition-leader-r-ashoka-slams-congress-praises-modi-over-women-reservation-bill-gdp/articleshow-ir07b8s"/>
        </item>
        <item>
            <title><![CDATA['ಕರ್ನಾಟಕ ನನಗೆ ಪ್ರೇರಣೆ': ಭೈರವೈಕ್ಯ ಮಂದಿರ ಉದ್ಘಾಟಿಸಿ ‘ವಿಕಸಿತ ಭಾರತ' ನಿರ್ಮಾಣಕ್ಕೆ  ನಮೋ ಪಣ, ಮೋದಿ ಹೇಳಿದ 9 ಸಂಕಲ್ಪಗಳಾವುವು?]]></title>
            <link>https://kannada.asianetnews.com/state/karnataka-is-my-inspiration-pm-modi-inaugurates-bhyravykya-mandira-pledges-for-viksit-bharat-with-9-resolutions-rav/articleshow-knisv9v</link>
            <guid isPermaLink="true">https://kannada.asianetnews.com/state/karnataka-is-my-inspiration-pm-modi-inaugurates-bhyravykya-mandira-pledges-for-viksit-bharat-with-9-resolutions-rav/articleshow-knisv9v</guid>
            <pubDate>Thu, 16 Apr 2026 05:17:37 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಬಾಲಗಂಗಾಧರನಾಥ ಸ್ವಾಮೀಜಿಯವರ &lsquo;ಶ್ರೀ ಗುರು ಭೈರವೈಕ್ಯ&rsquo; ಮಂದಿರವನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ, 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ದೇಶದ ಜನರು ಪಾಲಿಸಬೇಕಾದ ಒಂಬತ್ತು ಪ್ರಮುಖ ಸಂಕಲ್ಪಗಳ ಬಗ್ಗೆ ಅವರು ಕರೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp9r627g6ghvffaya9j0sxgf,imgname-----------------------2026-04-16t050834.646-1776296331504.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ ಮಂಜುನಾಥ&lt;/strong&gt;&lt;/p&gt;&lt;p&gt;&lsquo;ವಿಕಸಿತ ಭಾರತ&rsquo; ಸಾಕಾರಕ್ಕಾಗಿ ದೇಶದ ಜನರು ಒಂಬತ್ತು ಸಂಕಲ್ಪಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಅಲ್ಲದೆ, ಆದಿಚುಂಚನಗಿರಿ ಮಠದ ಪರಂಪರೆಯನ್ನು ಕೊಂಡಾಡಿದ್ದಾರೆ.&lt;/p&gt;&lt;p&gt;ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿಗೆ ಭೇಟಿ ನೀಡಿದ ಮೋದಿ, ಪ್ರಸಿದ್ಧ ನಾಥ ಪಂಥದ ಶೈವ ಮಠವಾದ ಆದಿಚುಂಚನಗಿರಿಯ 71ನೇ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮೀಜಿಯವರ &lsquo;ಶ್ರೀ ಗುರು ಭೈರವೈಕ್ಯ&rsquo; ಮಂದಿರ ಲೋಕಾರ್ಪಣೆಗೊಳಿಸಿ ಮಾತನಾಡಿದರು.&lt;/p&gt;&lt;h2&gt;ಕನ್ನಡಲ್ಲಿ ಮಾತು ಆರಂಭಿಸಿದ ಪ್ರಧಾನಿ&lt;/h2&gt;&lt;p&gt;&lsquo;ಕರ್ನಾಟಕದ ಸಹೋದರ-ಸಹೋದರಿಯರಿಗೆ ನನ್ನ ನಮಸ್ಕಾರಗಳು&rsquo; ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, &lsquo;ವಿಕಸಿತ ಭಾರತ&rsquo; ಹಾಗೂ &lsquo;ವಿಕಸಿತ ಕರ್ನಾಟಕ&rsquo;ದ ಸಾಕಾರಕ್ಕೆ 9 ಸಂಕಲ್ಪಗಳನ್ನು ತೊಡುವಂತೆ ಜನರಿಗೆ ಕರೆ ನೀಡಿದರು. &lsquo;ಜಲ ಸಂರಕ್ಷಣೆ, ತಾಯಿಯ ಹೆಸರಿನಲ್ಲಿ ಸಸಿ ನೆಡುವುದು, ಸ್ವಚ್ಛತೆ, ಸ್ವದೇಶಿ ಮತ್ತು ಆತ್ಮನಿರ್ಭರ, ಪ್ರವಾಸೋದ್ಯಮಕ್ಕೆ ಉತ್ತೇಜನ, ರಾಸಾಯನಿಕ ಮುಕ್ತ ಕೃಷಿ, ಆರೋಗ್ಯ, ಯೋಗ-ಕ್ರೀಡೆ, ಫಿಟ್&zwnj;ನೆಸ್&zwnj; ಹಾಗೂ ಸೇವಾ ಮನೋಭಾವ&rsquo;ಗಳು ಭಾರತವನ್ನು ಸದೃಢ, ಸುಂದರ ರಾಷ್ಟ್ರವನ್ನಾಗಿ ನಿರ್ಮಿಸಲು ಪ್ರೇರಕ ಶಕ್ತಿಯಾಗಿವೆ. ಇವೆಲ್ಲವನ್ನೂ ಪಾಲಿಸಿದರೆ &lsquo;ವಿಕಸಿತ ಭಾರತ&rsquo; ಹಾಗೂ &lsquo;ವಿಕಸಿತ ಕರ್ನಾಟಕ&rsquo; ಸಾಧ್ಯವಾಗಲಿದೆ ಎಂದು ಪ್ರತಿಪಾದಿಸಿದರು.&lt;/p&gt;&lt;h3&gt;ಕರ್ನಾಟಕಕ್ಕೆ ಬಂದಾಗಲೆಲ್ಲಾ ನನಗೆ ಪ್ರೇರಣೆ&lt;/h3&gt;&lt;p&gt;ತಮ್ಮ ಭಾಷಣದಲ್ಲಿ ಆದಿಚುಂಚನಗಿರಿಯ ಸೇವೆಯನ್ನು ಸ್ಮರಿಸಿದ ಮೋದಿ, ಪ್ರತಿ ಬಾರಿ ಕರ್ನಾಟಕಕ್ಕೆ ಬಂದಾಗಲೆಲ್ಲಾ ನನಗೆ ಪ್ರೇರಣೆ ಸಿಗುತ್ತದೆ. ಜಗತ್ತಿನಲ್ಲಿ ಎಲ್ಲೂ ನಮ್ಮ ತರಹದ ದೊಡ್ಡ ಪರಂಪರೆ ಇಲ್ಲ. ಈ ಮಠದಲ್ಲಿ ನಿರಂತರತೆಯ ರೂಪದಲ್ಲಿ ಪರಂಪರೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾವಿರಾರು ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ದೂರದೃಷ್ಟಿಯ ಹೆಜ್ಜೆಯನ್ನು ಇಟ್ಟಿದ್ದಾರೆ. ಭೈರವೈಕ್ಯ ಸ್ವಾಮೀಜಿಗಳು ಕೇವಲ ಮನುಷ್ಯರನ್ನು ಮಾತ್ರ ಉದ್ದಾರ ಮಾಡುತ್ತಿಲ್ಲ. ಜೀವ ಸಂಕುಲದ ರಕ್ಷಣೆ ಮಾಡುತ್ತಿದ್ದಾರೆ. ಇಲ್ಲಿ ಅನ್ನ, ಅಕ್ಷರ, ಆರೋಗ್ಯ, ಆಧ್ಯಾತ್ಮ, ಅರಣ್ಯ, ಆಶ್ರಯ, ಆಕಳು, ಅನುಗ್ರಹ, ಅನುಕಂಪ ಸೇರಿ 9 ಸಿದ್ದಾಂತದ ಮೇಲೆ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ನಾವು 9 ಸಾಮೂಹಿಕ ಸಂಕಲ್ಪ ತೊಡಬೇಕು ಎಂದು ಹೇಳಿದರು.&lt;/p&gt;&lt;p&gt;&lt;strong&gt;ಮೋದಿ ಹೇಳಿದ 9 ಸಂಕಲ್ಪ&lt;/strong&gt;&lt;/p&gt;&lt;p&gt;1. ನೀರು ಸಂರಕ್ಷಿಸಿ, ಉತ್ತಮ ನಿರ್ವಹಣೆ&lt;/p&gt;&lt;p&gt;2. ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡಿ&lt;/p&gt;&lt;p&gt;3. ಸಾರ್ವಜನಿಕ, ಧಾರ್ಮಿಕ ಸ್ಥಳದಲ್ಲಿ ಸ್ವಚ್ಛತೆ&lt;/p&gt;&lt;p&gt;4. ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಿ&lt;/p&gt;&lt;p&gt;5. ದೇಶೀಯ ಪ್ರವಾಸೋದ್ಯಮ ಪ್ರೋತ್ಸಾಹಿಸಿ&lt;/p&gt;&lt;p&gt;6. ರಾಸಾಯನಿಕರಹಿತ ನೈಸರ್ಗಿಕ ಕೃಷಿ ಮಾಡಿ&lt;/p&gt;&lt;p&gt;7. ಸಿರಿಧಾನ್ಯ, ಸ್ವಸ್ಥ ಆಹಾರ, ಕಮ್ಮಿ ಎಣ್ಣೆ ಬಳಸಿ&lt;/p&gt;&lt;p&gt;8. ಯೋಗ ಮತ್ತು ಫಿಟ್ನೆಸ್&zwnj; ಅಳವಡಿಸಿಕೊಳ್ಳಿ.&lt;/p&gt;&lt;p&gt;9. ಸೇವಾ ಮನೋಭಾವ ಬೆಳೆಸಿಕೊಳ್ಳಿ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-is-my-inspiration-pm-modi-inaugurates-bhyravykya-mandira-pledges-for-viksit-bharat-with-9-resolutions-rav/articleshow-knisv9v"/>
        </item>
        <item>
            <title><![CDATA[ಭವಿಷ್ಯದ ಪೀಳಿಗೆಗೆ ಧಾರ್ಮಿಕ ಪ್ರಜ್ಞೆ ಮೂಡಿಸುವ ಕೆಲಸ ಆಗಲಿ: ನಿಖಿಲ್ ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/nikhil-kumaraswamy-ganapati-temple-inauguration-malavalli-gvd/articleshow-kwsakpm</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-ganapati-temple-inauguration-malavalli-gvd/articleshow-kwsakpm</guid>
            <pubDate>Tue, 05 May 2026 19:31:41 +0530</pubDate>
            <description><![CDATA[&lt;p&gt;ದೇಶ ವೈಜ್ಞಾನಿಕವಾಗಿ ಮುಂದುವರೆಯುತ್ತಿದೆ. ಇದರ ಜೊತೆಗೆ ಭವಿಷ್ಯದ ಪೀಳಿಗೆಗೆ ಧಾರ್ಮಿಕ ಪ್ರಜ್ಞೆ ಮೂಡಿಸುವ ಕೆಲಸ ಮಾಡುತ್ತಿರುವುದು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kgenktw7brfx4dbb2bzrsm4v,imgname-nikhil-kumaraswamy--1--1770018958215.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಳವಳ್ಳಿ (ಮೇ.05): &lt;/strong&gt;ದೇಶ ವೈಜ್ಞಾನಿಕವಾಗಿ ಮುಂದುವರೆಯುತ್ತಿದೆ. ಇದರ ಜೊತೆಗೆ ಭವಿಷ್ಯದ ಪೀಳಿಗೆಗೆ ಧಾರ್ಮಿಕ ಪ್ರಜ್ಞೆ ಮೂಡಿಸುವ ಕೆಲಸ ಮಾಡುತ್ತಿರುವುದು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಅಮೃತೇಶ್ವರನಹಳ್ಳಿ ಕಾಲೋನಿಯಲ್ಲಿ ಶ್ರೀಮಹಾಗಣಪತಿ ಸೇವಾ ಸಮಿತಿಯಿಂದ ನಡೆದ ಮಹಾಗಣಪತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನ ಗೋಪುರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.&lt;/p&gt;&lt;p&gt;ಭವಿಷ್ಯದ ದೃಷ್ಟಿಯಿಂದ ಯುವ ಪೀಳಿಗೆಗೆ ಇರಬೇಕಾದ ಧಾರ್ಮಿಕ ಪ್ರಜ್ಞೆ, ಸಂಸ್ಕೃತಿ, ಪರಂಪರೆಯನ್ನು ಪೂರ್ವಜರ ಹಾದಿಯಲ್ಲಿಯೇ ಇಂತಹ ಧಾರ್ಮಿಕ ಕಾರ್ಯಕ್ರಮ ಮುಂದುವರೆಸಿಕೊಂಡು ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ರಾಜ್ಯಸಭೆ ಸದಸ್ಯರಾಗಿದ್ದ ಅವಧಿಯಲ್ಲಿ ತಮ್ಮ ಸಿಕ್ಕ ಅವಕಾಶದಲ್ಲಿ ರಾಜ್ಯದ ನೆಲ, ಜಲ ಭಾಷೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುವ ಮೂಲಕ ಅಭಿಮಾನವನ್ನು ಸಾಬೀತು ಪಡಿಸಿದ್ದಾರೆ ಎಂದರು.&lt;/p&gt;&lt;p&gt;ಅದೇ ರೀತಿ ಜಿಲ್ಲೆಯ ಜನರ ಅರ್ಶೀವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಬಹು ದೊಡ್ಡ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಜನರು ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸದಾ ಚಿರಋಣಿಯಾಗಿರುವುದಾಗಿ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಆಧುನಿಕ ವಿಜ್ಞಾನ ತಂತ್ರಜ್ಞಾನ ಯುಗದಲ್ಲಿಯೂ ಕೂಡ ಗಣಪತಿ ದೇವಸ್ಥಾನ ನಿರ್ಮಿಸಿ ಪೂಜಿಸುತ್ತಿರುವುದು ಆಧ್ಯಾತ್ಮಿಕತೆಗೆ ಕೊಟ್ಟ ಗೌರವವಾಗಿದೆ ಎಂದರು.&lt;/p&gt;&lt;h2&gt;&lt;strong&gt;ಗಣಪತಿಗೆ ಮೊದಲ ಪೂಜೆ&lt;/strong&gt;&lt;/h2&gt;&lt;p&gt;ಸರ್ವ ವ್ಯಾಪ್ತಿಯಲ್ಲಿ ನೆಲೆಸಿ ಸಕಲ ಶಕ್ತಿಯನ್ನು ಹೊಂದಿರುವ ದೇವರನ್ನು ಪೂಜಿಸಿದರೇ ಜೀವನದಲ್ಲಿ ನೆಮ್ಮದಿ ಕಾಣಬಹುದು. ಮನುಷ್ಯನ ಜನ್ಮವನ್ನು ಕೊಡುವ ಜೊತೆಗೆ ಗಾಳಿ ಬೆಳಕನ್ನು ನೀಡಿ ಜೀವಿಸಲು ಅನುವು ಮಾಡಿಕೊಟ್ಟಿರುವ ಭಗವಂತವನ್ನು ಪ್ರತಿಯೊಬ್ಬರು ಪೂಜಿಸಬೇಕಿದೆ ಎಂದರು. ಮೊದಲ ಪೂಜೆ ಗಣಪತಿಗೆ ಸಲ್ಲುತ್ತದೆ. ಗಣಪತಿ ಪೂಜಿಸಿ ಪ್ರಾರ್ಥಿಸಿ ನಾಲ್ಕರು ಬಾರಿ ಮಂತ್ರವನ್ನು ಜಪಿಸಿದರೇ ಶೀಘ್ರ ಸಿದ್ದೀ, ಪ್ರಾಧಾಯಕನ್ನಾಗಿ ಬಹುಬೇಗ ವರ ಕೊಡುತ್ತೇನೆ ಎನ್ನುವು ನಂಬಿಕೆ ಭಕ್ತರಲ್ಲಿದೆ. ದೇವರ ಮಂತ್ರ, ಸಾನಿಧ್ಯವನ್ನು ಎಂದಿಗೂ ಮರೆಯಬಾರದು ದೇವರ ದೈವಶಕ್ತಿ ಎಲ್ಲರ ಮೇಲಿರಲಿ ಎಂದು ಆಶಿಸಿದರು.&lt;/p&gt;&lt;p&gt;ಮತ್ತಿತಾಳೇಶ್ವರ ಸ್ವಾಮಿಯ ಬಸವಪ್ಪ ಅವರ ದಿವ್ಯಸಾನಿಧ್ಯದಲ್ಲಿ ಶಿಖರ ಕಳಸ ಪ್ರತಿಷ್ಠಾಪನೆ, ಕುಂಭಾಭಿಷೇಕ, ನೇತ್ರೋನ್ಮಿಲನ, ನವಗ್ರಹ ಹೋಮ, ವಾಸ್ತು ಹೋಮ, ಪ್ರಧಾನ ಹೋಮ, ಪೂರ್ಣಹುತಿ, ಮಹಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದ ಪೂಜಾ ಕಾರ್ಯಕ್ರಮ ಅಂಚೆದೊಡ್ಡಿಯ ಗುರುಮಠದ ಎಸ್.ನಾಗಭೂಷಣಾರಾದ್ಯ ಅವರ ನೇತೃತ್ವದಲ್ಲಿ ನಡೆಯಿತು&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-ganapati-temple-inauguration-malavalli-gvd/articleshow-kwsakpm"/>
        </item>
        <item>
            <title><![CDATA[2 ಸಾವಿರ ಕೋಟಿ ವೆಚ್ಚದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ: ಸಚಿವ ಚಲುವರಾಯಸ್ವಾಮಿ]]></title>
            <link>https://kannada.asianetnews.com/karnataka-districts/karnataka-farmers-harvester-subsidy-chaluvarayaswamy-news-gvd/articleshow-sn5vx90</link>
            <guid isPermaLink="true">https://kannada.asianetnews.com/karnataka-districts/karnataka-farmers-harvester-subsidy-chaluvarayaswamy-news-gvd/articleshow-sn5vx90</guid>
            <pubDate>Wed, 22 Apr 2026 21:55:56 +0530</pubDate>
            <description><![CDATA[&lt;p&gt;ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರು. ವೆಚ್ಚದ ಯಂತ್ರೋಪಕರಣಗಳನ್ನು ರಿಯಾಯ್ತಿ ದರದಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hmr0507ad5kpxzz5hr51yy3p,imgname-Chsd-1705907486953.JPG" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಏ.22):&lt;/strong&gt; ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರು. ವೆಚ್ಚದ ಯಂತ್ರೋಪಕರಣಗಳನ್ನು ರಿಯಾಯ್ತಿ ದರದಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಹೈಟೆಕ್ ಹಾರ್ವೆಸ್ಟರ್ ಕಟಾವು ಯಂತ್ರೋಪಕರಣ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ಕಾರ್ಮಿಕರ ಕೊರತೆ ಸರಿದೂಗಿಸಿ ಸಾವಿರಾರು ರುಪಾಯಿ ಹಣ ಉಳಿಸಿ ಹಾಗೂ ಇಳುವರಿ ವೃದ್ಧಿಸುವ ಸದುದ್ದೇಶದಿಂದ ಹೈಟೆಕ್ ಯಂತ್ರೋಪಕರಣ ವಿತರಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದರು.&lt;/p&gt;&lt;p&gt;ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು, ಭತ್ತ, ರಾಗಿ, ನವಣೆ ಸೇರಿದಂತೆ ಇತರೆ ಬೆಳೆಗಳ ಕಟಾವಿಗಾಗಿ ಹೈಟೆಕ್ ಹಾರ್ವೆಸ್ಟರ್ ಯಂತ್ರಗಳನ್ನು ಶೇ. 50ರಷ್ಟು ಸಹಾಯಧನದಲ್ಲಿ ವಿತರಿಸಲಾಗುತ್ತಿದ್ದು, ಇಂದು 13 ಹಾರ್ವೆಸ್ಟರ್ ಯಂತ್ರಗಳು ಹಾಗೂ ಮುಂದಿನ ದಿನಗಳಲ್ಲಿ 7 ಯಂತ್ರಗಳನ್ನು ವಿತರಿಸಲು ಕ್ರಮವಹಿಸಲಾಗಿದೆ ಎಂದರು. ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ 400 ಕಟಾವು ಯಂತ್ರೋಪಕರಣ ವಿತರಣೆ ಮಾಡಲಾಗಿದ್ದು, ಇದರಿಂದ ಕಬ್ಬು, ಭತ್ತ, ರಾಗಿ ಸೇರಿದಂತೆ ಇತರೆ ಬೆಳೆಗಳ ಕಟಾವಿಗೆ ಅನುಕೂಲವಾಗಿದ್ದು, ಗುಂಪು ಆಧಾರಿತ ಹಾಗೂ ಎಸ್ಸಿ, ಎಸ್ಟಿ ಜನಾಂಗದವರಿಗೆ ಶೇ.50ರಷ್ಟು, ಸಾಮಾನ್ಯ ವರ್ಗದವರಿಗೆ ಶೇ.40ರಷ್ಟು ಸಬ್ಸಿಡಿ ದೊರೆಯಲಿದೆ ಎಂದರು.&lt;/p&gt;&lt;p&gt;ಜಿಲ್ಲೆಯ ಯುವಜನರಲ್ಲಿ ಕೃಷಿ ಬಗ್ಗೆ ತಾತ್ಸಾರ ಮನೋಭಾವವಿದೆ. ಇದನ್ನು ಬಿಟ್ಟು ಕೃಷಿಯನ್ನು ಲಾಭದಾಯಕ ಮಾಡಿಕೊಳ್ಳಬೇಕು. ಉತ್ತರ ಕರ್ನಾಟಕ ಭಾಗದ ರಾಯಚೂರು, ಬೆಳಗಾವಿ ಹಾಗೂ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಗಳ ರೈತರ ಕೃಷಿ ಪ್ರೀತಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಹಿಂದೆ 12 ಲಕ್ಷ ರೈತರು ಕೃಷಿ ವಿಮೆ ಮಾಡಿಸುತ್ತಿದ್ದರು. ಆದರೆ, ಕೃಷಿಕರಲ್ಲಿ ಬೆಳೆ ವಿಮೆ ಬಗ್ಗೆ ಜಾಗೃತಿ ಮೂಡಿಸಿದ ಪರಿಣಾಮ 28 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದು, ಇದುವರೆಗೆ 6 ಲಕ್ಷ ಕೋಟಿ ರು. ಬೆಳೆ ಪರಿಹಾರ ನೀಡಲಾಗಿದೆ. ಬೆಳೆ ನಾಶಕ್ಕೆ ಎಫ್&zwnj;ಐಡಿ ಮೂಲಕ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದರು.&lt;/p&gt;&lt;h2&gt;&lt;strong&gt;ಹೊಸ ಕೃಷಿ ವಿಶ್ವವಿದ್ಯಾಲಯ ಆರಂಭ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿದ್ದವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೃಷಿ ಪ್ರಧಾನ ಜಿಲ್ಲೆ ಮಂಡ್ಯದಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯ ಆರಂಭಿಸಲಾಗಿದೆ. ಇದರ ಪರಿಣಾಮ ರೈತರಿಗೆ ಹೊಸ ತಳಿಗಳ ಅನ್ವೇಷಣೆ, ತಂತ್ರಜ್ಞಾನ ಆಧಾರಿತ ಕೃಷಿ ಅಳವಡಿಕೆಗೆ ಕ್ರಮ ಸೇರಿದಂತೆ ರೈತರ ಶಾಶ್ವತ ಅಭಿವೃದ್ಧಿಗೆ ಅವಕಾಶ ದೊರೆಯಲಿದ್ದು, ಇದು ನಮ್ಮ ಸರ್ಕಾರದ ಬದ್ಧತೆ ಎಂದರು. ರೈತ ಫಲಾನುಭವಿಗಳಿಗೆ ಹೈಟೆಕ್ ಮಾದರಿಯ 10 ಕಟಾವು ಯಂತ್ರೋಪಕರಣಗಳನ್ನು ಸಚಿವ ಎನ್.ಚಲುವರಾಯಸ್ವಾಮಿ ಅವರು ವಿತರಿಸಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-farmers-harvester-subsidy-chaluvarayaswamy-news-gvd/articleshow-sn5vx90"/>
        </item>
        <item>
            <title><![CDATA[ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ: ವಾಟಾಳ್ ನಾಗರಾಜ್]]></title>
            <link>https://kannada.asianetnews.com/karnataka-districts/vatal-nagaraj-slams-bjp-congress-jds-over-corruption-gvd/articleshow-u6wg4w6</link>
            <guid isPermaLink="true">https://kannada.asianetnews.com/karnataka-districts/vatal-nagaraj-slams-bjp-congress-jds-over-corruption-gvd/articleshow-u6wg4w6</guid>
            <pubDate>Sun, 10 May 2026 19:53:08 +0530</pubDate>
            <description><![CDATA[&lt;p&gt;ಭ್ರಷ್ಟಾಚಾರ, ಲಂಚಾವತಾರ ವಿರೋಧಿಸಿ ವಾಟಾಳ್ ಕನ್ನಡ ಪಕ್ಷದ ವತಿಯಿಂದ ಯುವಜನರು, ರೈತರು, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಹೋರಾಟ ಆರಂಭಿಸಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jhf5hpm5m85njw5af5rs6yck,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮೇ.10): &lt;/strong&gt;ಭ್ರಷ್ಟಾಚಾರ, ಲಂಚಾವತಾರ ವಿರೋಧಿಸಿ ವಾಟಾಳ್ ಕನ್ನಡ ಪಕ್ಷದ ವತಿಯಿಂದ ಯುವಜನರು, ರೈತರು, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಹೋರಾಟ ಆರಂಭಿಸಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಈಡುಗಾಯಿ ಚಳವಳಿ ನಡೆಸಿ, ರಾಜ್ಯ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಅತಿಯಾದ ಭ್ರಷ್ಟಾಚಾರ, ಲಂಚಗುಳಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಈ ಭ್ರಷ್ಟ ವ್ಯವಸ್ಥೆ ವಿರುದ್ಧ ರಾಜ್ಯಾದ್ಯಂತ ವಾಟಾಳ್ ಪಕ್ಷದ ವತಿಯಿಂದ ಪ್ರವಾಸ ಮಾಡಿ ಯುವ ಜನರು, ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳನ್ನು ಸಂಘಟಿಸಿ ಹೊಸ ಚೈತನ್ಯ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಅದ್ಭುತ ಕನ್ನಡ ಶಕ್ತಿ ಉದಯವಾಗಬೇಕು. ಆಗ ಮಾತ್ರ ಭ್ರಷ್ಟಾಚಾರ ತೊಲಗಲು ಸಾಧ್ಯ ಎಂದು ಹೇಳಿದರು.&lt;/p&gt;&lt;p&gt;ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಎಲ್ಲರೂ ಭ್ರಷ್ಟಾಚಾರದಲ್ಲಿ ಪಾಲುದಾರರಾಗಿದ್ದಾರೆ. ಹೊಸ ಕನ್ನಡ ಶಕ್ತಿ ಉದಯವಾಗಿ ಪ್ರಾಮಾಣಿಕರು, ನಂಬಿಕಸ್ಥರು, ಪ್ರೀತಿವಂತರು ಬರಬೇಕು. ಭ್ರಷ್ಟಾಚಾರ ನಿಲ್ಲಿಸಬೇಕು. ಇದಕ್ಕಾಗಿ ತೀವ್ರ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 80ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಸ್ವಾತಂತ್ರ್ಯ ಬಂದಿರುವುದು ಭ್ರಷ್ಟಾಚಾರಕ್ಕಲ್ಲ.&lt;/p&gt;&lt;p&gt;ಮಹಾತ್ಮಾ ಗಾಂಧೀಜಿ ಈ ದೇಶಕ್ಕಾಗಿ ಪ್ರಾಮಾಣಿಕ ಹೋರಾಟ ಮಾಡಿದ್ದರು, ಅವರ ಜೀವನವೇ ದಿವ್ಯ ಸಂದೇಶ, ಆದರೆ, ಇಂದು ವ್ಯವಸ್ಥೆ ಅದಕ್ಕೆ ವಿರುದ್ಧವಾಗಿ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿಧಾನ ಸಭೆ, ಪರಿಷತ್, ಲೋಕಸಭೆ, ಜಿಲ್ಲಾಧಿಕಾರಿ ಕಚೇರಿ, ತಹಸೀಲ್ದಾರ್ ಕಚೇರಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ತಲೆದೋರಿದೆ. ವರ್ಗಾವಣೆ, ಉದ್ಯೋಗ ಎಲ್ಲದರಲ್ಲೂ ಲಂಚಾವತಾರ ಮನೆಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಸಿಎಂ ಆಗಿದ್ದಾಗ ಭಾರೀ ಭ್ರಷ್ಟಾಚಾರ&lt;/strong&gt;&lt;/h2&gt;&lt;p&gt;ಈಗ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಾನು ಶಾಸಕನಾಗಿದ್ದ ಅವಧಿಯಲ್ಲಿ ಕಂಡಿರಲಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ಭಾರೀ ಭ್ರಷ್ಟಾಚಾರ ನಡೆಸಿದ್ದರು, ಶಾಸಕರನ್ನು ಕೋಟ್ಯಾಂತರ ರುಪಾಯಿಗಳಿಗೆ ಖರೀದಿಸಿದ್ದರು, ವಾಮಮಾರ್ಗದಿಂದ ಅಧಿಕಾರ ಹಿಡಿದಿದ್ದರು. ಅಂದಿನಿಂದ ರಾಜ್ಯದಲ್ಲಿ ಭ್ರಷ್ಟಾಚಾರ ಪ್ರಾರಂಭವಾಯಿತು, ಭ್ರಷ್ಟಾಚಾರದಿಂದ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದರು, ಅಂತಹ ವ್ಯಕ್ತಿಯ ಬಗ್ಗೆ ಕೋಟ್ಯಾಂತರ ರುಪಾಯಿ ಖರ್ಚು ಮಾಡಿ ಅಭಿಮಾನೋತ್ಸವ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/vatal-nagaraj-slams-bjp-congress-jds-over-corruption-gvd/articleshow-u6wg4w6"/>
        </item>
        <item>
            <title><![CDATA[ಕನ್ನಡ ಹೋರಾಟಗಾರನೋ? ಕಾಂಗ್ರೆಸ್ ಪಕ್ಷದ ಗುಪ್ತ ವಕ್ತಾರನೋ.? ಮೋದಿ-ಬಿಎಸ್‌ವೈ ವಿರುದ್ಧ ಹೇಳಿಕೆ, ವಾಟಾಳ್‌ಗೆ ಮಂಡ್ಯ ಬಿಜೆಪಿ ಎಚ್ಚರಿಕೆ!]]></title>
            <link>https://kannada.asianetnews.com/state/mandya-bjp-protests-against-vatal-nagaraj-over-derogatory-remarks-against-pm-modi-and-bsy/articleshow-uc7b5rf</link>
            <guid isPermaLink="true">https://kannada.asianetnews.com/state/mandya-bjp-protests-against-vatal-nagaraj-over-derogatory-remarks-against-pm-modi-and-bsy/articleshow-uc7b5rf</guid>
            <pubDate>Wed, 13 May 2026 13:03:17 +0530</pubDate>
            <description><![CDATA[&lt;p&gt;ಪ್ರಧಾನಿ ಮೋದಿ ಮತ್ತು ಬಿ.ಎಸ್. ಯಡಿಯೂರಪ್ಪ ವಿರುದ್ಧ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೀಡಿದ ಹೇಳಿಕೆಯಿಂದಾಗಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ವಾಟಾಳ್ ಅವರನ್ನು ಕಾಂಗ್ರೆಸ್ ಗುಪ್ತ ವಕ್ತಾರ ಎಂದು ಆರೋಪಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krg3yx0tng3m752p9d27q280,imgname-----------------------2026-05-13t130100.603-1778657489946.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮೇ.13): &lt;/strong&gt;ಕನ್ನಡ ಹೋರಾಟಗಾರ ವಾಟಾಳ್(Vatal Nagaraj) ಅವರು ಪ್ರಧಾನಿ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ವಿರುದ್ಧ ನೀಡಿದ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಾಟಾಳ್ ಹೇಳಿಕೆಗೆ ಕೆರಳಿದ ಮಂಡ್ಯ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.&lt;/p&gt;&lt;p&gt;&lt;img&gt;&lt;/p&gt;&lt;h2&gt;ಸಂಜಯ್ ವೃತ್ತದಲ್ಲಿ ಪ್ರತಿಭಟನೆ, ವಾಟಾಳ್ ವಿರುದ್ಧ ಕಿಡಿ&lt;/h2&gt;&lt;p&gt;ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ವಾಟಾಳ್ ನಾಗರಾಜ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 'ವಾಟಾಳ್ ನಾಗರಾಜ್ ಕನ್ನಡ ಹೋರಾಟಗಾರನ ಮುಖವಾಡಲ್ಲಿರುವ ಕಾಂಗ್ರೆಸ್ ಪಕ್ಷದ ಗುಪ್ತ ವಕ್ತಾರ' ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;&lt;img&gt;&lt;/p&gt;&lt;h3&gt;ವಾಟಾಳ್ ಭಾವಚಿತ್ರ ಹರಿದು ಚಪ್ಪಲಿಯಿಂದ ತುಳಿದ ಕಾರ್ಯಕರ್ತರು&lt;/h3&gt;&lt;p&gt;ಪ್ರಧಾನಿ ಮೋದಿ, ಬಿಎಸ್&zwnj;ವೈ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಿತು. ಕಾರ್ಯಕರ್ತರು ವಾಟಾಳ್ ಭಾವಚಿತ್ರ ಹರಿದು ಹಾಕಿದರು. ಕೆಲವರು ಭಾವಚಿತ್ರವನ್ನು ಚಪ್ಪಲಿಯಿಂದ ತುಳಿದು ಆಕ್ರೋಶ ಹೊರಹಾಕಿದರು.&lt;/p&gt;&lt;p&gt;&lt;img&gt;&lt;/p&gt;&lt;p&gt;&lt;strong&gt;ಹೋರಾಟ ಮಾಡಿ.. ರಾಜಕಾರಣ ಬೇಡ..!&lt;/strong&gt;&lt;/p&gt;&lt;p&gt;ವಾಟಾಳರೇ ನೀವು ಕನ್ನಡ ಹೋರಾಟಗಾರರಾಗಿದ್ದರೆ ಕನ್ನಡದ ಪರ ಹೋರಾಟ ಮಾಡಿ. ಆದರೆ ಹೋರಾಟದ ಹೆಸರಲ್ಲಿ ರಾಜಕೀಯ ಮಾಡ ಕಾಂಗ್ರೆಸ್&zwnj;ಪಕ್ಷದ ಗುಪ್ತ ವಕ್ತಾರರಂತೆ ವರ್ತಿಸಬೇಡಿ ಎಂದು ಎಚ್ಚರಿಕೆ ನೀಡಿದರು.&lt;/p&gt;&lt;p&gt;&lt;img&gt;&lt;/p&gt;&lt;p&gt;&lt;strong&gt;ಯಡಿಯೂರಪ್ಪ ಬಗ್ಗೆ ಮಾತಾಡೋ ಮುನ್ನ ಎಚ್ಚರ&lt;/strong&gt;&lt;/p&gt;&lt;p&gt;ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಾಟಾಳ್ ನಾಗರಾಜ್ ಮಂಡ್ಯಕ್ಕೆ ಕಾಲಿಡಬೇಕಾದರೆ ಮೊದಲು ರಾಜ್ಯದ ಜನತೆ ಹಾಗೂ ಯಡಿಯೂರಪ್ಪ ಅವರ ಅಭಿಮಾನಿಗಳ ಕ್ಷಮೆ ಕೇಳಿ ಎಂದು ಆಗ್ರಹಿಸಿದರು.&lt;/p&gt;]]></content:encoded>
            <category>mandya</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/mandya-bjp-protests-against-vatal-nagaraj-over-derogatory-remarks-against-pm-modi-and-bsy/articleshow-uc7b5rf"/>
        </item>
        <item>
            <title><![CDATA[ನಿಷೇಧಾಜ್ಞೆ ಜಾರಿ ಇದ್ದರೂ ಕಾವೇರಿ ನದಿಯಲ್ಲಿ ನಿತ್ಯ ಮಿಂದೇಳುತ್ತಿರುವ ಸಾವಿರಾರು ಪ್ರವಾಸಿಗರು!]]></title>
            <link>https://kannada.asianetnews.com/karnataka-districts/srirangapatna-kaveri-river-tourist-ban-ignored-safety-risk-gvd/articleshow-yvxhwp5</link>
            <guid isPermaLink="true">https://kannada.asianetnews.com/karnataka-districts/srirangapatna-kaveri-river-tourist-ban-ignored-safety-risk-gvd/articleshow-yvxhwp5</guid>
            <pubDate>Sun, 03 May 2026 21:26:54 +0530</pubDate>
            <description><![CDATA[&lt;p&gt;ಕಾವೇರಿ ನದಿ ವ್ಯಾಪ್ತಿಯ ಬಲಮುರಿ- ಎಡಮುರಿ, ಕಾರೇಕುರ ಪ್ರವಾಸಿ ತಾಣಗಳಲ್ಲಿ ತಾಲೂಕು ಆಡಳಿತ ನಿಷೇಧಾಜ್ಞೆ ಜಾರಿ ಮಾಡಿರುವ ನಡುವೆಯೂ ನಿತ್ಯ ಸಾವಿರಾರು ಪ್ರವಾಸಿಗರು ನದಿಯಲ್ಲಿ ಮಿಂದೇಳುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqq7kc2ec57zefc3tffyfmh9,imgname-kk-1777822445646.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶ್ರೀರಂಗಪಟ್ಟಣ (ಮೇ.03): &lt;/strong&gt;ಕಾವೇರಿ ನದಿ ವ್ಯಾಪ್ತಿಯ ಬಲಮುರಿ- ಎಡಮುರಿ, ಕಾರೇಕುರ ಪ್ರವಾಸಿ ತಾಣಗಳಲ್ಲಿ ತಾಲೂಕು ಆಡಳಿತ ನಿಷೇಧಾಜ್ಞೆ ಜಾರಿ ಮಾಡಿರುವ ನಡುವೆಯೂ ನಿತ್ಯ ಸಾವಿರಾರು ಪ್ರವಾಸಿಗರು ನದಿಯಲ್ಲಿ ಮಿಂದೇಳುತ್ತಿದ್ದಾರೆ. ಇದನ್ನು ತಡೆಯುವಲ್ಲಿ ಕೆಆರ್&zwnj;ಎಸ್ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ. ಕಳೆದ 12 ವರ್ಷಗಳಲ್ಲಿ ಕಾವೇರಿ ನದಿಯಲ್ಲಿ ಮುಳುಗಿ 79 ಮಂದಿ ಸಾವನ್ನಪ್ಪಿರುವ ದುರ್ಘಟನೆಗಳು ನಡೆದಿದ್ದರೂ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಳ್ಳದೆ ತಮ್ಮ ಮೋಜು- ಮಸ್ತಿ ಹಾಗೂ ಕ್ಷಣಿಕ ಮನರಂಜನೆಗಾಗಿ ತಮ್ಮ ಜೀವವನ್ನು ಪಣಕ್ಕಿಟ್ಟು, ಅಪಾಯದ ಕಾವೇರಿ ನದಿಯಲ್ಲಿ ನಿತ್ಯ ಸಾವಿರಾರು ಮಂದಿ ಬೆಳಗ್ಗಿನಿಂದ ಸಂಜೆವರೆಗೂ ಕಾಲ ಕಳೆಯುತ್ತಿದ್ದಾರೆ.&lt;/p&gt;&lt;p&gt;ತಾಲೂಕಿನ ಬಲಮುರಿ- ಎಡಮುರಿ ಹಾಗೂ ಕಾರೇಕುರ ಗ್ರಾಮದ ಬಳಿಯ ಕಾವೇರಿ ನದಿಯಲ್ಲಿ ಮುಳುಗಿ ಹಲವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಏ.16ರಂದು ತಾಲೂಕು ದಂಡಾಧಿಕಾರಿ ಚೇತನಾ ಯಾದವ್ ರವರು ಪ್ರವಾಸಿತಾಣಗಳು ಸೇರಿದಂತೆ ಕಾವೇರಿ ನದಿ ಪ್ರದೇಶಗಳಿಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದರು. ಆದರೆ, ನದಿಗಿಳಿಯುವ ಪ್ರವಾಸಿಗರು ಹಾಗೂ ಸಾರ್ವಜನಿಕರು ತಡೆದು ಹಿಂದಿರುಗಿ ಕಳುಹಿಸಬೇಕಾದ ಕೆಆರ್&zwnj;ಎಸ್ ಪೊಲೀಸರು ಮೌನ ವಹಿಸಿದ್ದಾರೆ. ಆದೇಶ ಜಾರಿ ಮಾಡಿದ ಮೂರ್&zwj;ನಾಲ್ಕು ದಿನ ಮಾತ್ರ ಭಾರೀ ಕಟ್ಟೆಚ್ಚರ ವಹಿಸಿದ್ದ ಕೆಆರ್&zwnj;ಎಸ್ ಪೊಲೀಸರು, ಇದೀಗ ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಕುಳಿತಿದ್ದಾರೆ.&lt;/p&gt;&lt;p&gt;ಬಲಮುರಿ ಹಾಗೂ ಎಡಮುರಿ ಕಾವೇರಿ ನದಿ ಬಳಿ ತೆರೆದಿರುವ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು ಹಾಗೂ ಇಲ್ಲಿಗೆ ಬರುವ ವಾಹನಗಳ ಪ್ರವೇಶಾತಿ ಶುಲ್ಕ ಪಡೆಯುತ್ತಿರುವ ಗುತ್ತಿಗೆದಾರರ ಒತ್ತಡಕ್ಕೆ ಮಣಿದು ಪೊಲೀಸರು ಯಾವುದೇ ಕ್ರಮವಹಿಸದೆ ಮೌನ ವಹಿಸಿರುವುದಾಗಿ ಸ್ಥಳೀಯರಿಂದ ಆರೋಪಗಳು ಕೇಳಿ ಬರುತ್ತಿವೆ. ಕಟ್ಟುನಿಟ್ಟಿನ ಆದೇಶವಿದ್ದರೂ ಸಹ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಅಲ್ಲದೆ ಸರ್ಕಾರಿ ರಜೆ ಹಾಗೂ ವಾರದ ಕೊನೆ ದಿನಗಳಂತೂ ಕಾಲಿಡಲು ಸ್ಥಳವಿಲ್ಲದಷ್ಟು ಮಂದಿ ನದಿಗಿಳಿದು ಆಳ, ಸುಳಿ ಹಾಗೂ ನೆಲದಲ್ಲಿರುವ ಬಂಡೆಗಳ ಅರಿವಿಲ್ಲದೆ ನೀರಿನಲ್ಲಿ ಆಟವಾಡುತ್ತಿದ್ದಾರೆ.&lt;/p&gt;&lt;p&gt;ಹಲವರು ಅಪಾಯದ ಅರಿವಿಲ್ಲದೆ ಜಾರು ಬಂಡೆಗಳ ಮೇಲೆ ನಿಂತು ನೀರಿಗೆ ಜಿಗಿಯುತ್ತಿದ್ದಾರೆ. ನೀರಿನ ಅಪಾಯದ ಕುರಿತು ಸ್ಥಳೀಯರು ಮಾಹಿತಿ ನೀಡಿದರೂ ಪ್ರವಾಸಿಗರು ಕ್ಯಾರೆ ಎನ್ನುತ್ತಿಲ್ಲ. ಮತ್ತಷ್ಟು ಸಾವು, ನೋವು ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಇತ್ತ ಗಮನ ಹರಿಸುವಂತೆ ಸ್ಥಳೀಯ ರೈತರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.&lt;/p&gt;&lt;h2&gt;&lt;strong&gt;ಬಾರ್ ಆಗಿ ಬದಲಾದ ತೆಂಗಿನ ತೋಟ&lt;/strong&gt;&lt;/h2&gt;&lt;p&gt;ಎಡಮುರಿ ಬಳಿಯ ಕಾವೇರಿ ನದಿಯಲ್ಲಿ ಮೋಜು- ಮಸ್ತಿಗಾಗಿ ಬರುವ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ತೆಂಗಿನ ತೋಟವನ್ನೇ ಬಾರ್ ಆ್ಯಂಡ್ ರೆಸ್ಟೋರೆಂಟ್ ಆಗಿ ಬದಲಾಯಿಸಿಕೊಂಡು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಎಡಮುರಿ ಜಲಾಶಯದ ಮುಂಭಾಗದಲ್ಲಿ ತೆಂಗಿನ ತೋಟದಲ್ಲಿ ಪ್ಲಾಸ್ಟಿಕ್ ಛೇರ್ ಹಾಗೂ ಟೇಬಲ್&zwnj;ಗಳನ್ನು ಹಾಕಿ, ಪ್ರವಾಸಿಗರು ಕುರ್ಚಿಯಲ್ಲಿ ಕುಳಿತು ಮದ್ಯ ಸಮೇತ ಆಹಾರ ಸೇವನೆ ಮಾಡುತ್ತಿದ್ದಾರೆ. ವಾಹನ ಪಾರ್ಕಿಂಗ್ ಜಾಗವನ್ನು ಪರದೆಯಿಂದ ಮರೆ ಮಾಡಿ, ಅಕ್ರವಾಗಿ ಮದ್ಯ ಸೇವನೆಗೆ ಅವಕಾಶ ಕೊಟ್ಟವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/srirangapatna-kaveri-river-tourist-ban-ignored-safety-risk-gvd/articleshow-yvxhwp5"/>
        </item>
        <item>
            <title><![CDATA[ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರ ಸ್ಕ್ಯಾನಿಂಗ್: ಮೂವರು ವೈದ್ಯರ ಬಂಧನ: 17 ಆರೋಪಿಗಳ ವಿರುದ್ಧ 12 FIR]]></title>
            <link>https://kannada.asianetnews.com/state/scanned-for-gender-detection-3-doctors-arrested-12-firs-against-17-accused/articleshow-za858wm</link>
            <guid isPermaLink="true">https://kannada.asianetnews.com/state/scanned-for-gender-detection-3-doctors-arrested-12-firs-against-17-accused/articleshow-za858wm</guid>
            <pubDate>Wed, 29 Apr 2026 15:17:00 +0530</pubDate>
            <description><![CDATA[&lt;p&gt;ಅಪ್ರಾಪ್ತ ಗರ್ಭಿಣಿಯರಿಗೆ ಭ್ರೂಣ ಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯಲ್ಲಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ., ಒಟ್ಟು 17 ಆರೋಪಿಗಳ ವಿರುದ್ಧ 12 ಎಫ್&zwnj;ಐಆರ್ ದಾಖಲಾಗಿದೆ. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqc9yjh5skzzr8zwtwvceys0,imgname-mandya-doctors-arrest-1777455811109.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಭ್ರೂಣ ಲಿಂಗ ಪತ್ತೆಗೆ ಸ್ಕ್ಯಾನಿಂಗ್ ಮಾಡಿದ ವೈದ್ಯರಿಗೆ ಎಫ್&zwnj;ಐಆರ್&zwnj;&lt;/strong&gt;&lt;/h2&gt;&lt;p&gt;ಮಂಡ್ಯ: ಅಪ್ರಾಪ್ತ ಗರ್ಭಿಣಿಯರಿಗೆ ಭ್ರೂಣ ಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯಲ್ಲಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಕೆಆ&zwnj;ರ್ ಪೇಟೆ ಚೇತನ ಮೆಟರ್ನಿಟಿ ಸೆಂಟರ್&zwnj;ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್, ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್&zwnj;ನ ಡಾ.ಹರೀಶ್ ಬಂಧಿತರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ 17 ಆರೋಪಿಗಳ ವಿರುದ್ಧ ಪ್ರತ್ಯೇಕವಾಗಿ ಒಟ್ಟು 12 ಎಫ್&zwnj;ಐಆರ್ ದಾಖಲಾಗಿವೆ.&lt;/p&gt;&lt;p&gt;ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿ ಭ್ರೂಣ ಪತ್ತೆ ಮಾಡಿದ ಆರೋಪದ ಮೇಲೆ ಎಫ್&zwnj;ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದು ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸರ್ಕಾರಿ ವೈದ್ಯೆ, ಮೂವರು ಖಾಸಗಿ ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ.&lt;/p&gt;&lt;p&gt;ಈ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದರು. ಕೆಆರ್ ಪೇಟೆಯ 2 ಡಯಾಗ್ನೋಸ್ಟಿಕ್ ಸೆಂಟರ್&zwnj;ಗಳಲ್ಲಿ ಭ್ರೂಣಲಿಂಗ ಪತ್ತೆ ನಡೆದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಾವಿ ಡಯಾಗ್ನಾಸ್ಟಿಕ್ ಸೆಂಟರ್&zwnj;ನಲ್ಲಿ 2024ರಲ್ಲಿ 19 ಮತ್ತು 2025ರಲ್ಲಿ 5 ಸೇರಿದಂತೆ ಒಟ್ಟು 24 ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್&zwnj; ಮಾಡಲಾಗಿತ್ತು. ಕುಶಾಲ್ ಡಯಾಗ್ನಾಸ್ಟಿಕ್&zwnj; ಸೆಂಟರ್&zwnj;ನಲ್ಲಿ 7 ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿದ ಆರೋಪ ಕೇಳಿ ಬಂದಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>mandya</category>
            <dc:creator>Anusha Kb</dc:creator>
            <atom:link href="https://kannada.asianetnews.com/state/scanned-for-gender-detection-3-doctors-arrested-12-firs-against-17-accused/articleshow-za858wm"/>
        </item>
        <item>
            <title><![CDATA[ಎಆರ್‌ಎಐ ಪರೀಕ್ಷಾ ಕೇಂದ್ರಕ್ಕೆ 500 ಎಕರೆ ಬೇಕು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/hd-kumaraswamy-arai-testing-centre-mandya-land-requirement-gvd/articleshow-zyvlavf</link>
            <guid isPermaLink="true">https://kannada.asianetnews.com/karnataka-districts/hd-kumaraswamy-arai-testing-centre-mandya-land-requirement-gvd/articleshow-zyvlavf</guid>
            <pubDate>Tue, 14 Apr 2026 20:05:40 +0530</pubDate>
            <description><![CDATA[&lt;p&gt;ಎಆರ್&zwnj;ಎಐ ಪರೀಕ್ಷಾ ಕೇಂದ್ರ ಸ್ಥಾಪನೆಗೆ 500 ರಿಂದ 600 ಎಕರೆ ಭೂಮಿಯ ಅಗತ್ಯವಿದೆ. ಏ.30ರೊಳಗೆ ಜಾಗದ ಕುರಿತಾದ ಸಮಸ್ಯೆ ಬಗೆಹರಿಸಿಕೊಡುವಂತೆ ರಾಜ್ಯ ಕೈಗಾರಿಕಾ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh4e3cpb1nh2cfx2c6c52gr,imgname-hd-kumaraswamy-1772249091477.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಏ.14): &lt;/strong&gt;ಜಿಲ್ಲೆಯಲ್ಲಿ ಎಆರ್&zwnj;ಎಐ ಪರೀಕ್ಷಾ ಕೇಂದ್ರ ಸ್ಥಾಪನೆಗೆ 500 ರಿಂದ 600 ಎಕರೆ ಭೂಮಿಯ ಅಗತ್ಯವಿದೆ. ಏ.30ರೊಳಗೆ ಜಾಗದ ಕುರಿತಾದ ಸಮಸ್ಯೆ ಬಗೆಹರಿಸಿಕೊಡುವಂತೆ ರಾಜ್ಯ ಕೈಗಾರಿಕಾ ಸಚಿವರಿಗೆ ಮನವಿ ಮಾಡಿದ್ದು, ಮೇ ತಿಂಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಭೂಮಿ ಪೂಜೆ ಮಾಡುವ ಉದ್ದೇಶ ಹೊಂದಿರುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.&lt;/p&gt;&lt;p&gt;ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಬೃಹತ್ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ನಡೆದ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದಲ್ಲಿ ಉದ್ಯಮಗಳನ್ನು ಉತ್ತೇಜಿಸಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ವಿಸ್ತೃತ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಕೂಡ ಪಾಲ್ಗೊಂಡಿದ್ದರು. ಇವರ ಜೊತೆ ಮಂಡ್ಯದ ಜನಪ್ರತಿನಿಧಿಗಳು ಹಾಗೂ ಮಾಜಿ ಮಂತ್ರಿಗಳು, ಮಾಜಿ ಶಾಸಕರು ಭಾಗಿಯಾಗಿದ್ದರು.&lt;/p&gt;&lt;h2&gt;&lt;strong&gt;ಎಚ್&zwnj;ಡಿಕೆ ಹೇಳಿದ್ದಿಷ್ಟು&lt;/strong&gt;&lt;/h2&gt;&lt;p&gt;ಈಗಾಗಲೇ ಬೃಹತ್ ಕೈಗಾರಿಕೆ ಇಲಾಖೆಯ ಅಧೀನದಲ್ಲಿ ಬರುವ ಆಟೋ ಮೋಟಿವ್ ರಿಸರ್ಚ್ ಇನ್ಸ್ಟಿಟ್ಯೂಟ್ ಪರೀಕ್ಷಾ ಕೇಂದ್ರವನ್ನು ಮಂಡ್ಯದಲ್ಲಿ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅಂತಹ ಕೇಂದ್ರಗಳು ಇಡೀ ರಾಷ್ಟ್ರದಲ್ಲಿ ನಾಲ್ಕು ಕಡೆ ಮಾತ್ರ ಇವೆ. ಐದನೇ ಕೇಂದ್ರವನ್ನು ಕರ್ನಾಟಕಕ್ಕೆ ತರಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ನಮ್ಮ ಇಲಾಖೆಗೆ ಸಂಬಂಧಿಸಿದ ಎಆರ್&zwnj;ಎಐ ಅಂತಾರಾಷ್ಟ್ರೀಯ ಮಟ್ಟದ ಪರೀಕ್ಷಾ ಕೇಂದ್ರ ಆಗಬೇಕಿದೆ.&lt;/p&gt;&lt;p&gt;ಈ ಕೇಂದ್ರದಿಂದ ಆಟೋ ಮೊಬೈಲ್ ಕ್ಷೇತ್ರಕ್ಕೆ ಅದರಲ್ಲೂ ಮುಖ್ಯವಾಗಿ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಅತಿ ಹೆಚ್ಚಿನ ಉತ್ತೇಜನ ದೊರೆಯಲಿದೆ. ಎಆರ್&zwnj;ಎಐ ಕೇಂದ್ರವು ಸೇರಿದಂತೆ ಅದಕ್ಕೆ ಪೂರಕ ವ್ಯವಸ್ಥೆಗಳನ್ನು ನಿರ್ಮಿಸುವ ಉದ್ದೇಶದಿಂದ ಸುಮಾರು 500-600 ಎಕರೆ ಭೂಮಿ ಬೇಕಿದೆ. ಅದು ನನ್ನ ಲೋಕಸಭಾ ಕ್ಷೇತ್ರ ಮಂಡ್ಯದಲ್ಲೇ ಆಗಬೇಕು ಎಂದು ನಿರ್ಧರಿಸಿದ್ದೇನೆ. ಎಆರ್&zwnj;ಎಐ ಕೇಂದ್ರಕ್ಕೆ ಈಗಾಗಲೇ ಜಿಲ್ಲೆಯಲ್ಲಿ ಎರಡು ಮೂರು ಜಾಗ ನೋಡಿದ್ದೇವೆ.&lt;/p&gt;&lt;p&gt;ಅಲ್ಲಿ ಲಭ್ಯವಿರುವ ಜಾಗ ಬಹಳ ಸೀಮಿತವಾಗಿದೆ. ಆ ಅಂಶದ ಬಗ್ಗೆಯೂ ರಾಜ್ಯದ ಕೈಗಾರಿಕಾ ಸಚಿವರ ಜತೆ ಚರ್ಚಿಸಲಾಯಿತು. ಕೈಗಾರಿಕಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯನ್ನು ಸಮಾನಂತರವಾಗಿ ನಡೆಯಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಏಪ್ರಿಲ್ 30ರೊಳಗೆ ಜಾಗದ ಸಮಸ್ಯೆ ಬಗೆಹರಿಸಿ ಕೊಡುವಂತೆ ಸಚಿವರನ್ನು ಕೋರಿದ್ದೇನೆ. ಏಕೆಂದರೆ ಮೇ ತಿಂಗಳಲ್ಲಿ ಟೆಸ್ಟಿಂಗ್ ಕೇಂದ್ರ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸುವ ಉದ್ದೇಶವನ್ನು ನನ್ನ ಸಚಿವಾಲಯ ಹೊಂದಿದೆ ಎಂದರು.&lt;/p&gt;&lt;p&gt;ನಾನು ಕೂಡ ಭೂಮಿ ಬಗ್ಗೆ ಒಂದು ಸಲಹೆಯನ್ನು ಸಚಿವರಿಗೆ ನೀಡಿದ್ದೇನೆ. ಒಂದೆಡೆ 500 ಎಕರೆ ಸರ್ಕಾರಿ ಭೂಮಿ ಇದೆ. ಭೂಮಿಯಲ್ಲಿ ಯಾರಾದರೂ ರೈತರು ಅನುಭೋಗದಲ್ಲಿ ಇದ್ದರೆ ಅವರಿಗೆ ಸೂಕ್ತ ಪರಿಹಾರ ನೀಡಿ ಭೂಮಿಯನ್ನು ತೆಗೆದುಕೊಳ್ಳಬಹುದು. ಈ ಬಗ್ಗೆ ನಾನು ಕೂಡ ಆ ರೈತರ ಜೊತೆ ಒಮ್ಮೆ ಚರ್ಚಿಸಿದೆ ಅದಕ್ಕೆ ಅವರಿಂದ ಸಕಾರಾತ್ಮಕವಾದ ಪ್ರತಿಕ್ರಿಯೆ ಬಂದಿತ್ತು. ಅದೇ ರೀತಿ ಮುಂಗಡ ಪತ್ರದಲ್ಲಿ 100 ಎಕರೆ ಇರುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು ಎಂದು ಸಚಿವರು ಹೇಳಿದರು.&lt;/p&gt;&lt;p&gt;ಮಂಡ್ಯ ಕೃಷಿ ಆಧಾರಿತ ನೀರಾವರಿ ಜಿಲ್ಲೆ. ಅಲ್ಲಿ ಸರ್ಕಾರಿ ಮತ್ತು ಒಣಭೂಮಿ ಲಭ್ಯತೆ ಅತ್ಯಂತ ಕಡಿಮೆ ಇದೆ. ಆದರೆ, ಉದ್ದೇಶಿತ ಪರೀಕ್ಷಾ ಕೇಂದ್ರಕ್ಕೆ ಸರ್ಕಾರ 100 ಎಕರೆ ನೀಡುವುದಾಗಿ ತಿಳಿಸಿದೆ ಎಂಬುದೇನೋ ಸರಿ. ಆದರೆ, ಇನ್ನು ಹೆಚ್ಚಿನ ಜಾಗ ಕೊಟ್ಟರೆ ಉತ್ತಮ ರೀತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ತರಬಹುದು ಎಂದರು. ಸಭೆಯಲ್ಲಿ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕ ಪಿ.ರವಿಕುಮಾರ್ ಹಾಗೂ ಎಆರ್&zwnj;ಎಐ ಪರೀಕ್ಷಾ ಕೇಂದ್ರ, ಕೆಐಎಡಿಬಿ ಅಧಿಕಾರಿಗಳು ಹಾಜರಿದ್ದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-arai-testing-centre-mandya-land-requirement-gvd/articleshow-zyvlavf"/>
        </item>
    </channel>
</rss>
