<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 24 Jun 2026 20:18:38 +0530</lastBuildDate>
        <atom:link href="https://kannada.asianetnews.com/rss/mandya" rel="self" type="application/rss+xml"/>
        <item>
            <title><![CDATA[ಹೆಚ್ಚಿನ ಮಕ್ಕಳು ಬರುವ ಸರ್ಕಾರಿ ಶಾಲೆಗೆ ಬಸ್‌ ವ್ಯವಸ್ಥೆ: ಕೇಂದ್ರ ಸಚಿವ ಎಚ್‌ಡಿಕೆ ಭರವಸೆ]]></title>
            <link>https://kannada.asianetnews.com/karnataka-districts/hd-kumaraswamy-promises-bus-facility-for-government-schools-gvd/articleshow-03bx4g8</link>
            <guid isPermaLink="true">https://kannada.asianetnews.com/karnataka-districts/hd-kumaraswamy-promises-bus-facility-for-government-schools-gvd/articleshow-03bx4g8</guid>
            <pubDate>Tue, 09 Jun 2026 22:57:29 +0530</pubDate>
            <description><![CDATA[&lt;p&gt;ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸಕ್ಕೆ ಬರುವ ಸರ್ಕಾರಿ ಶಾಲೆಗಳಿಗೆ ಬಸ್ಸಿನ ವ್ಯವಸ್ಥೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ತಾಲೂಕಿನ ಕೀಲಾರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kndcqgkv5vhpfjpbtyptw1w7,imgname----------------------60--1775344796283.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.09): &lt;/strong&gt;ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸಕ್ಕೆ ಬರುವ ಸರ್ಕಾರಿ ಶಾಲೆಗಳಿಗೆ ಬಸ್ಸಿನ ವ್ಯವಸ್ಥೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ತಾಲೂಕಿನ ಕೀಲಾರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಮೇಘಾ ಟ್ರಾವೆಲ್ಸ್&zwnj;ನ ತಿಮ್ಮೇಗೌಡರು ಕೊಡುಗೆಯಾಗಿ ನೀಡಿರುವ ಬಸ್ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.&lt;/p&gt;&lt;p&gt;ದಿವಂಗತ ಕೆ.ವಿ.ಶಂಕರಗೌಡರು ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅದರಲ್ಲೂ ಜನರ ಪ್ರೀತಿ ವಿಶ್ವಾಸದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ಕೊಡಲು ಮಂಡ್ಯ ಜಿಲ್ಲೆಗೆ ಅವರ ಕೊಡುಗೆ ಅಪಾರವಾಗಿದೆ. ಜೊತೆಗೆ ಈ ದೇಶದ ಬೆನ್ನೆಲುಬು ರೈತನ ಬದುಕಿನ ಬಗ್ಗೆಯೂ ಚಿಂತನೆ ಮಾಡಿದ್ದರು ಎಂದರು. ಕೆ.ವಿ.ಶಂಕರಗೌಡರು ಬುನಾದಿ ಹಾಕಿರುವ ಕೀಲಾರ ಸರ್ಕಾರಿ ಶಾಲೆಯನ್ನು ಹಲವಾರು ದಾನಿಗಳ ಸಹಕಾರದಿಂದ ಶಾಲೆಯ ಅಭಿವೃದ್ಧಿಯನ್ನು ಮುಂದುವರಿಸಿಕೊಂಡು ಹೋಗುವಂತೆ ಸಲಹೆ ನೀಡಿದರು.&lt;/p&gt;&lt;p&gt;ಜನ್ಮ ಕೊಟ್ಟ ತಂದೆ-ತಾಯಿಯರು, ಕುಟುಂಬದಲ್ಲಿರುವ ಅಕ್ಕತಂಗಿಯರು, ಅಣ್ಣ-ತಮ್ಮಂದಿರಲ್ಲಿ ಸಹೋದರ ಸಹೋದರಿ ಮನೋಭಾವ ಕ್ಷುಲ್ಲಕ ಕಾರಣಕ್ಕೆ ನಶಿಸಿ ಹೋಗುತ್ತಿವೆ. ಹಿಂದೆ ಕುಟುಂಬದಲ್ಲಿ 20 ಜನ ಒಟ್ಟೊಟ್ಟಿಗೆ ಕುಳಿತು ಊಟ ಮಾಡುತ್ತಿದ್ದ ದಿನಗಳು ಈಗ ಕಾಣಲಾಗುವುದಿಲ್ಲ. ರಸ್ತೆ, ವಿದ್ಯುತ್&zwnj;ನಂತಹ ಸೌಲಭ್ಯಗಳು ಹಳ್ಳಿಗಳಲ್ಲಿ ಇಲ್ಲದಿದ್ದರೂ ಕುಟುಂಬದಲ್ಲಿ ಅನ್ಯೋನ್ಯತೆ, ನೆಮ್ಮದಿ ಇತ್ತು. ಈಗ ಅವೆಲ್ಲವೂ ಮರೆಯಾಗಿವೆ ಎಂದು ವಿಷಾದಿಸಿದರು.&lt;/p&gt;&lt;h2&gt;&lt;strong&gt;ಗೌರವ ಬರುವ ರೀತಿ ನಡೆದುಕೊಳ್ಳಿ&lt;/strong&gt;&lt;/h2&gt;&lt;p&gt;ವಿದ್ಯಾರ್ಥಿಗಳು ಕಡಿಮೆ ಮಾರ್ಕ್ಸ್ ಬಂದರೆ ದೃತಿಗೆಡಬೇಡಿ. ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ನಮ್ಮಲ್ಲಿ ಹಲವಾರು ಪ್ರತಿಭಾ ಶಕ್ತಿಗಳಿವೆ. ಅವುಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಮಾರ್ಕ್ಸ್ ಕಡಿಮೆ ಬಂದಿರುವವರೇ ದೇಶಕ್ಕೆ ದೊಡ್ಡ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಅವರಿಗೆ ಗೌರವ ಬರುವ ರೀತಿ ನಡೆದುಕೊಳ್ಳಿ ಎಂದರು. ಭಾರತ ವಿಶ್ವದಲ್ಲಿ ಬೆಳವಣಿಗೆ ಕಾಣುತ್ತಿದೆ ಎಂದುಕೊಂಡಿದ್ದೇವೆ. ಆದರೆ ನಿಜವಾದ ಭಾರತವನ್ನು ಹಳ್ಳಿಗಳಲ್ಲಿ ಬಂದು ನೋಡಿದಾಗ ತಿಳಿಯುತ್ತದೆ ಎಂದರು.&lt;/p&gt;&lt;p&gt;ಚುನಾವಣೆಗೆ ಇನ್ನು ಎರಡೇ ವರ್ಷ ಬಾಕಿ ಇದೆ. ಜನಗಳ ಮೇಲೆ ನನಗೆ ನಂಬಿಕೆ ಇದೆ. ರಾಜ್ಯದಲ್ಲಿ ಆರೋಗ್ಯ, ಶಿಕ್ಷಣ, ರೈತರ ಬದುಕು ಎಷ್ಟು ಕಷ್ಟದಲ್ಲಿದೆ ಎನ್ನುವುದು ನನಗೆ ಗೊತ್ತು. ನಾನು ಬದುಕಿರುವವರೆಗೂ ರಾಜಕಾರಣದಲ್ಲಿ ನಿಮ್ಮ ಕಷ್ಟ ಸುಖದಲ್ಲಿರುತ್ತೇನೆ. ನೀವುಗಳು ರಾಜಕಾರಣವನ್ನು ಚುನಾವಣೆ ಸಮಯದಲ್ಲಿ ಮಾಡಿ. ಬೇರೆ ಸಮಯದಲ್ಲಿ ಅಣ್ಣ-ತಮ್ಮಂದಿರ ತರ ಒಟ್ಟಾಗಿ ಇರಿ. ಪಕ್ಷಬೇಧ ಮರೆತು ಅಭಿವೃದ್ಧಿಗೆ ಕೈಜೋಡಿಸಿ ಎಂದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-promises-bus-facility-for-government-schools-gvd/articleshow-03bx4g8"/>
        </item>
        <item>
            <title><![CDATA[ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ; ಮಂಡ್ಯ ಆಟೋ ಚಾಲಕರಿಂದ ಆರ್‌ಟಿಒ ಕಚೇರಿಗೆ ಮುತ್ತಿಗೆ!]]></title>
            <link>https://kannada.asianetnews.com/gallery/karnataka-districts/mandya-auto-drivers-protest-against-rapido-bike-taxi-rto-office-siege-1cgof1e</link>
            <guid isPermaLink="true">https://kannada.asianetnews.com/gallery/karnataka-districts/mandya-auto-drivers-protest-against-rapido-bike-taxi-rto-office-siege-1cgof1e</guid>
            <pubDate>Mon, 22 Jun 2026 16:23:18 +0530</pubDate>
            <description><![CDATA[&lt;p&gt;ಸಕ್ಕರೆ ನಾಡು ಮಂಡ್ಯದಲ್ಲಿ ರ&zwj;್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಆಟೋ ಮತ್ತು ಟ್ಯಾಕ್ಸಿ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಜೀವನಾಧಾರಕ್ಕೆ ಹೊಡೆತ ಬಿದ್ದಿದೆ ಎಂದು ಆರೋಪಿಸಿ, ರ&zwj;್ಯಾಪಿಡೋ ಅನುಮತಿ ರದ್ದುಗೊಳಿಸುವಂತೆ ಆರ್&zwnj;ಟಿಒ ಕಚೇರಿಗೆ ಮುತ್ತಿಗೆ ಹಾಕಿ ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvqf1k2rjazw75e59ve8wpck,imgname-mandya-rapido-protest-1782125218904.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಕ್ಕರೆ ನಾಡು ಮಂಡ್ಯದಲ್ಲಿ ರ&zwj;್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಆಟೋ ಮತ್ತು ಟ್ಯಾಕ್ಸಿ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಜೀವನಾಧಾರಕ್ಕೆ ಹೊಡೆತ ಬಿದ್ದಿದೆ ಎಂದು ಆರೋಪಿಸಿ, ರ&zwj;್ಯಾಪಿಡೋ ಅನುಮತಿ ರದ್ದುಗೊಳಿಸುವಂತೆ ಆರ್&zwnj;ಟಿಒ ಕಚೇರಿಗೆ ಮುತ್ತಿಗೆ ಹಾಕಿ ಆಗ್ರಹಿಸಿದ್ದಾರೆ.&lt;/p&gt;&lt;img&gt;&lt;p&gt;ಸಕ್ಕರೆ ನಾಡು ಮಂಡ್ಯದಲ್ಲಿ ರ&zwj;್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಆಟೋ ಮತ್ತು ಟ್ಯಾಕ್ಸಿ ಚಾಲಕರು ರೊಚ್ಚಿಗೆದ್ದಿದ್ದಾರೆ. ರ&zwj;್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ನೀಡಿರುವ ಅನುಮತಿಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿ, ಮಂಡ್ಯದ ಆಟೋ ಮತ್ತು ಟ್ಯಾಕ್ಸಿ ಚಾಲಕರ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.&lt;/p&gt;&lt;img&gt;&lt;p&gt;&lt;strong&gt;ಮಹಾವೀರ ವೃತ್ತದಿಂದ ಆರ್&zwnj;ಟಿಒ ಕಚೇರಿವರೆಗೆ ಮೆರವಣಿಗೆ:&lt;/strong&gt;&lt;/p&gt;&lt;p&gt;ನಗರದ ಪ್ರಮುಖ ಕೇಂದ್ರವಾದ ಮಹಾವೀರ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ನೂರಾರು ಚಾಲಕರು, ಮೆರವಣಿಗೆಯ ಮೂಲಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿಗೆ ತೆರಳಿದರು. ಮೆರವಣಿಗೆಯುದ್ದಕ್ಕೂ ಸರ್ಕಾರದ ಮತ್ತು ರ&zwj;್ಯಾಪಿಡೋ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದ ಚಾಲಕರು, ಆರ್&zwnj;ಟಿಒ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;ಜೀವನಾಧಾರಕ್ಕೆ ಹೊಡೆತ: ಚಾಲಕರ ಅಳಲು:&lt;/p&gt;&lt;p&gt;ಈಗಾಗಲೇ ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಿಂದಾಗಿ ನಮ್ಮ ಬದುಕು ದುಸ್ತರವಾಗಿದೆ. ಇದರ ನಡುವೆ ರ&zwj;್ಯಾಪಿಡೋ ಬೈಕ್ ಮತ್ತು ಓಲಾ ಆಟೋಗಳಿಗೆ ಮುಕ್ತವಾಗಿ ಅವಕಾಶ ನೀಡಿರುವುದರಿಂದ ಪ್ರಾಮಾಣಿಕವಾಗಿ ಆಟೋ ಓಡಿಸುವವರು ಬೀದಿಗೆ ಬೀಳುವಂತಾಗಿದೆ. ಬ್ಯಾಂಕ್&zwnj;ಗಳಲ್ಲಿ ಮಾಡಿರುವ ಆಟೋ ಲೋನ್ (EMI) ಕಟ್ಟಲು ಸಹ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ,&quot; ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡರು.&lt;/p&gt;&lt;img&gt;&lt;p&gt;&lt;strong&gt;ಅಧಿಕಾರಿಗಳಿಗೆ ಎಚ್ಚರಿಕೆ:&lt;/strong&gt;&lt;/p&gt;&lt;p&gt;ಆರ್&zwnj;ಟಿಒ ಕಚೇರಿ ಆವರಣದಲ್ಲಿ ಜಮಾಯಿಸಿದ ಚಾಲಕರು, ಸ್ಥಳಕ್ಕೆ ಬಂದ ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೈಕ್ ಟ್ಯಾಕ್ಸಿಗಳಿಂದಾಗಿ ಸಾರಿಗೆ ನಿಯಮಗಳು ಉಲ್ಲಂಘನೆಯಾಗುತ್ತಿವೆ ಮತ್ತು ಆಟೋ ಚಾಲಕರ ಅನ್ನ ಕಿತ್ತುಕೊಳ್ಳಲಾಗುತ್ತಿದೆ ಎಂದು ದೂರಿದರು. ಕೂಡಲೇ ಈ ಸೇವೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.&lt;/p&gt;&lt;img&gt;&lt;p&gt;&lt;strong&gt;ಭರವಸೆ ಮತ್ತು ಮುಂದಿನ ಹೋರಾಟ:&lt;/strong&gt;&lt;/p&gt;&lt;p&gt;ಮನವಿ ಸ್ವೀಕರಿಸಿದ ಆರ್&zwnj;ಟಿಒ ಅಧಿಕಾರಿಗಳು, ಕಾನೂನು ಚೌಕಟ್ಟಿನಲ್ಲಿ ಸಮಸ್ಯೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ, ಚಾಲಕರು &quot;ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಇಡೀ ಜಿಲ್ಲಾದ್ಯಂತ ಬೃಹತ್ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು&quot; ಎಂದು ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/mandya-auto-drivers-protest-against-rapido-bike-taxi-rto-office-siege-1cgof1e"/>
        </item>
        <item>
            <title><![CDATA[ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿ ವೇತನಕ್ಕೆ ಮಂಡ್ಯದ ಮೂವರು ವಿದ್ಯಾರ್ಥಿಗಳು ಆಯ್ಕೆ]]></title>
            <link>https://kannada.asianetnews.com/karnataka-districts/three-students-from-mandya-selected-for-scholarship-offered-by-the-central-government-mrq/articleshow-7lkd86c</link>
            <guid isPermaLink="true">https://kannada.asianetnews.com/karnataka-districts/three-students-from-mandya-selected-for-scholarship-offered-by-the-central-government-mrq/articleshow-7lkd86c</guid>
            <pubDate>Sun, 14 Jun 2026 08:25:27 +0530</pubDate>
            <description><![CDATA[ಮಂಡ್ಯದ ವಿ.ಸಿ.ಫಾರಂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಕೇಂದ್ರ ಸರ್ಕಾರದ ರಾಷ್ಟ್ರೀಯ ಮೀನ್ಸ್&zwnj; ಕಮ್&zwnj; ಮೆರಿಟ್&zwnj; ಸ್ಕಾಲರ್&zwnj;ಷಿಪ್ (ಎನ್&zwnj;ಎಂಎಂಎಸ್&zwnj;) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 2025-26ನೇ ಸಾಲಿನ ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗುವ ಮೂಲಕ ಈ ವಿದ್ಯಾರ್ಥಿನಿಯರು ಶಾಲೆಗೆ ಕೀರ್ತಿ ತಂದಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv20kq6tv8xdccfyc49gz6ty,imgname-mandya-student-1781405441242.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ: &lt;/strong&gt;ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿ ವೇತನಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಮೀನ್ಸ್&zwnj; ಕಮ್&zwnj; ಮೆರಿಟ್&zwnj; ಸ್ಕಾಲರ್&zwnj;ಷಿಪ್ (ಎನ್&zwnj;ಎಂಎಂಎಸ್&zwnj;) ಪರೀಕ್ಷೆ ಯಲ್ಲಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ( ಪ್ರೌಢಶಾಲಾ ವಿಭಾಗ) ವಿ.ಸಿ.ಫಾರಂ, ಮಂಡ್ಯ, ಉತ್ತರ ವಲಯದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.&lt;/p&gt;&lt;h2&gt;&lt;strong&gt;ಪಡೆದ ಅಂಕಗಳು&lt;/strong&gt;&lt;/h2&gt;&lt;p&gt;2025-26ನೇ ಸಾಲಿನ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳ ಆಯ್ಕೆ ಮೂಲಕ ಶಾಲೆ ಗಮನ ಸೆಳೆದಿದೆ. ವಿದ್ಯಾರ್ಥಿನಿಯರಾದ ಪಿ.ಎಲ್&zwnj;.ಶೀಲಾ-96 , ಬಿ.ಅನುಷಾ -94 ಹಾಗೂ ತನುಶ್ರೀ -76 ಅಂಕಗಳನ್ನು ಪಡೆದು 2025-26ರ ಎನ್&zwnj;ಎಂಎಂಎಸ್&zwnj; ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ&lt;/strong&gt;&lt;strong&gt;: ಮಂಡ್ಯದಲ್ಲಿ ಜಮೀನು ಪೋಡಿ ಮಾಡಿಕೊಡಲು ಲಂಚ ವಸೂಲಿ; ರೆಡ್&zwnj;ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆರ್&zwnj;ಐ ಮಧುಸೂದನ್!&lt;/strong&gt;&lt;/p&gt;&lt;h3&gt;&lt;strong&gt;ಶಿಕ್ಷಕರಿಂದ ಮಕ್ಕಳಿಗೆ ಅಭಿನಂದನೆ&lt;/strong&gt;&lt;/h3&gt;&lt;p&gt;ಪ್ರೌಢಶಾಲೆ ಮಕ್ಕಳ ಪಾಲಿಗೆ ಎನ್&zwnj;ಎಂಎಂಎಸ್&zwnj; ಪರೀಕ್ಷೆಯು ಯುಪಿಎಸ್&zwnj;ಸಿ ನಡೆಸುವ ಪರೀಕ್ಷೆ ಇದ್ದಂತೆಯೇ. ಇದರಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿ ಶಿಷ್ಯವೇತನ ಪಡೆಯುತ್ತಿರುವುದು ಹೆಮ್ಮೆಯ ಸಂಗತಿ. ಇದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುತ್ತದೆ. ಶಿಕ್ಷಕರ ಮಾರ್ಗದರ್ಶನ ಪ್ರಯತ್ನದಿಂದ ಸಾಧನೆ ಸಾಕಾರವಾಗಿರುವುದಕ್ಕೆ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಹಿರಿಯ ಸಹ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಮುಖ್ಯಶಿಕ್ಷಕ ಪ್ರಸನ್ನ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಡ್ಯದಲ್ಲಿ ಶುಂಠಿ ಬೆಳೆಯಲು ಹೊರರಾಜ್ಯದವರಿಗೆ ಭೂಮಿ ಗುತ್ತಿಗೆ; ಉದ್ಯಮಿಗಳಿಂದ ಹಣದ ಆಮಿಷ&lt;/strong&gt;&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/three-students-from-mandya-selected-for-scholarship-offered-by-the-central-government-mrq/articleshow-7lkd86c"/>
        </item>
        <item>
            <title><![CDATA[Mandya Tourism: ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಐವರ ಜಲಸಮಾಧಿ; ಫೋಟೋ ಕ್ರೇಜ್‌ಗೆ ಒಂದೇ ಕುಟುಂಬದವರ ಸಾವು!]]></title>
            <link>https://kannada.asianetnews.com/karnataka-districts/mandya-tourist-spot-muthathi-cauvery-river-drowning-five-of-family-dead/articleshow-7py3q8l</link>
            <guid isPermaLink="true">https://kannada.asianetnews.com/karnataka-districts/mandya-tourist-spot-muthathi-cauvery-river-drowning-five-of-family-dead/articleshow-7py3q8l</guid>
            <pubDate>Wed, 24 Jun 2026 20:18:32 +0530</pubDate>
            <description><![CDATA[&lt;p&gt;ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ನಡೆದ ಭೀಕರ ದುರಂತದಲ್ಲಿ, ಚನ್ನಪಟ್ಟಣ ಮೂಲದ ಒಂದೇ ಕುಟುಂಬದ ಐವರು ಸದಸ್ಯರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದೇವರ ದರ್ಶನದ ನಂತರ ನದಿಯ ಬಳಿ ಫೋಟೋ ತೆಗೆಯಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvx1n371xv88cknjm0nzp62k,imgname-mandya-muthathi-kaveri-river-tragedy-1782312504545.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.24): ಜಿ&lt;/strong&gt;ಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪುಣ್ಯಕ್ಷೇತ್ರ ಮುತ್ತತ್ತಿಯಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಕಾವೇರಿ ನದಿಯಲ್ಲಿ ಫೋಟೋ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ಐವರು ಸದಸ್ಯರು ನದಿ ಪಾಲಾಗಿದ್ದಾರೆ. ಈ ಮನಕಲಕುವ ಘಟನೆಯು ಇಡೀ ಜಿಲ್ಲೆಯನ್ನು ಕಣ್ಣೀರಿಡುವಂತೆ ಮಾಡಿದೆ.&lt;/p&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಕುಟುಂಬ ಮುತ್ತತ್ತಿಯ ಪ್ರಸಿದ್ಧ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿತ್ತು. ದೇವರ ದರ್ಶನ ಮುಗಿಸಿದ ಕುಟುಂಬದ ಸದಸ್ಯರು, ಸಂಜೆ ಸುಮಾರು 4.45 ರ ಸುಮಾರಿಗೆ ಮುತ್ತತ್ತಿಯ ಪಕ್ಕದಲ್ಲಿ ಹರಿಯುವ ಕಾವೇರಿ ನದಿ ತೀರಕ್ಕೆ ತೆರಳಿದ್ದಾರೆ. ನದಿಯ ಹರಿವಿನ ಮಧ್ಯೆ ನಿಂತು ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಮೃತರ ವಿವರ:&lt;/strong&gt;&lt;/h2&gt;&lt;p&gt;ಈ ಜಲಸಮಾಧಿಯಲ್ಲಿ ಮೃತಪಟ್ಟವರೆಲ್ಲರೂ ಚನ್ನಪಟ್ಟಣದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ. ಮೃತರನ್ನು ವಿಜಯಮ್ಮ (50), ಶ್ವೇತಾ (38), ಪ್ರಿಯಾಂಕ (28), ಚೈತ್ರ (20) ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಫೋಟೋ ತೆಗೆದುಕೊಳ್ಳುವ ಆತುರದಲ್ಲಿ ಅಥವಾ ನದಿಯ ಆಳ ತಿಳಿಯದೆ ಒಬ್ಬರು ನೀರಿಗೆ ಜಾರಿದ್ದು, ಅವರನ್ನು ಉಳಿಸಲು ಹೋದ ಉಳಿದವರು ಕೂಡ ನೀರಿನ ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.&lt;/p&gt;&lt;h2&gt;&lt;strong&gt;ಕಾರ್ಯಾಚರಣೆ ಮತ್ತು ಪೊಲೀಸ್ ಭೇಟಿ:&lt;/strong&gt;&lt;/h2&gt;&lt;p&gt;ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪ್ರವಾಸಿಗರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಲಗೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸಿ ಐವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಸ್ತುತ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;p&gt;ಮುತ್ತತ್ತಿಯ ಕಾವೇರಿ ನದಿ ಸ್ಥಳದಲ್ಲಿ ಈ ಹಿಂದೆಯೂ ಇಂತಹ ಅನೇಕ ಅಪಾಯಕಾರಿ ಘಟನೆಗಳು ನಡೆದಿವೆ. &amp;nbsp;ಆದರೂ ಪ್ರವಾಸಿಗರು ಎಚ್ಚರಿಕೆ ಫಲಕಗಳನ್ನು ನಿರ್ಲಕ್ಷಿಸಿ ನೀರಿಗಿಳಿಯುವುದು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ. ದೇವರಿಗೆ ಬಂದ ಸಂಭ್ರಮದಲ್ಲಿದ್ದ ಕುಟುಂಬವೊಂದು ಈಗ ಮಸಣ ಸೇರಿರುವುದು ಚನ್ನಪಟ್ಟಣದಲ್ಲಿ ಶೋಕದ ಛಾಯೆ ಮೂಡಿಸಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-tourist-spot-muthathi-cauvery-river-drowning-five-of-family-dead/articleshow-7py3q8l"/>
        </item>
        <item>
            <title><![CDATA[ಮಳೆ ಬರದಿದ್ದರೆ ಬೆಂಗಳೂರಿಗೆ ತೀವ್ರ ಜಲ ಕಂಟಕ: ಕಾವೇರಿ ನೀರಿಗಾಗಿ ಜಲಮಂಡಳಿ ಭವಿಷ್ಯದ ಹೆಜ್ಜೆ!]]></title>
            <link>https://kannada.asianetnews.com/karnataka-districts/bengaluru-water-crisis-bwssb-seeks-9-56-tmc-cauvery-water-gdp/articleshow-bm5uztl</link>
            <guid isPermaLink="true">https://kannada.asianetnews.com/karnataka-districts/bengaluru-water-crisis-bwssb-seeks-9-56-tmc-cauvery-water-gdp/articleshow-bm5uztl</guid>
            <pubDate>Mon, 22 Jun 2026 12:09:35 +0530</pubDate>
            <description><![CDATA[ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ದುರ್ಬಲ ಮುಂಗಾರಿನಿಂದಾಗಿ ಜಲಸಂಕಷ್ಟದ ಆತಂಕ ಎದುರಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಭವಿಷ್ಯದ ಬರವನ್ನು ತಡೆಯಲು ಜಲಮಂಡಳಿಯು ಕಾವೇರಿ ಪ್ರಾಧಿಕಾರಕ್ಕೆ 9.56 ಟಿ.ಎಂ.ಸಿ ನೀರನ್ನು ಕಾಯ್ದಿರಿಸಲು ಮನವಿ ಮಾಡಿದೆ. ಮಳೆ ಬಾರದಿದ್ದರೆ ಸೆಪ್ಟೆಂಬರ್&zwnj;ನಿಂದ ನೀರಿನ ಅಭಾವ ತೀವ್ರಗೊಳ್ಳುವ ಸಾಧ್ಯತೆಯಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01hrzr6vkkcd41pff8ebxvf5zc,imgname-dvdfv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು&lt;/strong&gt;: ದೇಶದ ಹೆಮ್ಮೆಯ ತಂತ್ರಜ್ಞಾನ ನಗರಿ, ಸಿಲಿಕಾನ್ ಸಿಟಿ ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಆದರೆ, ಈ ಬೆಳವಣಿಗೆಯ ಜೊತೆ ಜೊತೆಗೇ ನಗರದ ಜಲಮೂಲಗಳ ಮೇಲಿನ ಒತ್ತಡವೂ ಹೆಚ್ಚಾಗುತ್ತಿದೆ. ಪ್ರಸ್ತುತ ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ರಾಜಧಾನಿಗೆ ಭೀಕರ ಜಲ ಸಂಕಷ್ಟ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಜಲಮಂಡಳಿ ಅಧಿಕಾರಿಗಳ ನಿದ್ದೆಗೆಡಿಸಿದೆ.&lt;/p&gt;&lt;h2&gt;ಹೆಮ್ಮಾರಿಯಂತೆ ಬೆಳೆದ ಜನಸಂಖ್ಯೆ , ಹೆಚ್ಚಿದ ನೀರಿನ ಬೇಡಿಕೆ&lt;/h2&gt;&lt;p&gt;ಪ್ರಸ್ತುತ ಬೆಂಗಳೂರು ಮಹಾನಗರದ ಜನಸಂಖ್ಯೆ ಬರೋಬ್ಬರಿ 1.50 ಕೋಟಿಯನ್ನು ದಾಟಿದೆ. ನಗರದಲ್ಲಿ ದಿನೇ ದಿನೇ ವಲಸೆ ಬರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ನೀರಿನ ಬೇಡಿಕೆಯೂ ಗಗನಕ್ಕೇರಿದೆ. ಸದ್ಯ ಬೆಂಗಳೂರು ಜಲಮಂಡಳಿ (BWSSB) ವ್ಯಾಪ್ತಿಯಲ್ಲಿ 11.50 ಲಕ್ಷಕ್ಕೂ ಹೆಚ್ಚು ಅಧಿಕೃತ ನೀರಿನ ಸಂಪರ್ಕಗಳಿವೆ. ಈ ಬೃಹತ್ ಜನಸಂಖ್ಯೆಯ ದಾಹವನ್ನು ತಣಿಸಲು ಜಲಮಂಡಳಿಯು ಪ್ರತಿದಿನ 2,225 ಎಂ.ಎಲ್.ಡಿ (ಮಿಲಿಯನ್ ಲೀಟರ್) ನೀರನ್ನು ಪೂರೈಸುತ್ತಿದೆ. ವಿಶೇಷವೆಂದರೆ, ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಕಾವೇರಿ 5ನೇ ಹಂತದ ಯೋಜನೆಯಿಂದ ಸಿಗುತ್ತಿರುವ 775 ಎಂ.ಎ.ಲ್.ಡಿ ನೀರು ಸಹ ಇದರಲ್ಲಿ ಸೇರಿದೆ. ಇಷ್ಟೆಲ್ಲಾ ನೀರು ಸರಬರಾಜು ಆಗುತ್ತಿದ್ದರೂ, ನಗರದ ಹಲವು ಭಾಗಗಳಲ್ಲಿ ಇಂದಿಗೂ ನೀರಿನ ಅಭಾವ ನಿಂತಿಲ್ಲ.&lt;/p&gt;&lt;h2&gt;ಕಾವೇರಿ ಪ್ರಾಧಿಕಾರಕ್ಕೆ ಜಲಮಂಡಳಿ ತುರ್ತು ಮನವಿ&lt;/h2&gt;&lt;p&gt;ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಭೀಕರ ಬರಗಾಲವನ್ನು ತಡೆಗಟ್ಟಲು ಜಲಮಂಡಳಿ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದೆ. ಕೇವಲ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾವೇರಿ ಕೊಳ್ಳದ ಜಲಾಶಯಗಳಿಂದ 9.56 ಟಿ.ಎಂ.ಸಿ (TMC) ನೀರನ್ನು ಕಾಯ್ದಿರಿಸುವಂತೆ (Reserve) ಕಾವೇರಿ ನೀರು ನಿಯಂತ್ರಣ ಸಮಿತಿಗೆ ಜಲಮಂಡಳಿ ಅಧಿಕೃತವಾಗಿ ಮನವಿ ಸಲ್ಲಿಸಿದೆ. ಬೆಂಗಳೂರಿನ ಜನರ ಬಾಯಾರಿಕೆ ನೀಗಿಸಲು ಈ ಪ್ರಮಾಣದ ನೀರನ್ನು ಮುಂಚಿತವಾಗಿಯೇ ಕಾಯ್ದಿರಿಸುವುದು ಅತ್ಯಂತ ಅನಿವಾರ್ಯವಾಗಿದೆ ಎಂದು ಮಂಡಳಿ ಆತಂಕ ವ್ಯಕ್ತಪಡಿಸಿದೆ.&lt;/p&gt;&lt;ul&gt; &lt;li&gt;ಪ್ರಮುಖ ಅಂಕಿ-ಅಂಶಗಳು ಒಂದು ನೋಟದಲ್ಲಿ:&lt;/li&gt; &lt;li&gt;ಬೆಂಗಳೂರಿನ ಜನಸಂಖ್ಯೆ: 1.50 ಕೋಟಿ&lt;/li&gt; &lt;li&gt;ಒಟ್ಟು ನೀರಿನ ಸಂಪರ್ಕಗಳು: 11.50 ಲಕ್ಷಕ್ಕೂ ಹೆಚ್ಚು&lt;/li&gt; &lt;li&gt;ದಿನಿತ್ಯದ ನೀರು ಪೂರೈಕೆ: 2,225 ಎಂ.ಎಲ್.ಡಿ (ಕಾವೇರಿ 5ನೇ ಹಂತದ 775 ಎಂ.ಎಲ್.ಡಿ ಸೇರಿ)&lt;/li&gt; &lt;li&gt;ಕಾಯ್ದಿರಿಸಲು ಕೋರಿರುವ ನೀರು: 9.56 ಟಿ.ಎಂ.ಸಿ&lt;/li&gt;&lt;/ul&gt;&lt;h2&gt;ಜಲಾಶಯಗಳಲ್ಲಿ ಕುಸಿದ ನೀರಿನ ಮಟ್ಟ: ಅಧಿಕಾರಿಗಳಲ್ಲಿ ಹೆಚ್ಚಿದ ಆತಂಕ&lt;/h2&gt;&lt;p&gt;ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆ ಮುಂಗಾರು ಮಳೆ ಚುರುಕಾಗಬೇಕಿತ್ತು. ಆದರೆ ಈ ಬಾರಿ ಮುಂಗಾರು ಆರಂಭದಲ್ಲೇ ತೀವ್ರ ಕ್ಷೀಣಿಸಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ, ಕೆ.ಆರ್.ಎಸ್ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿನ ನೀರಿನ ಸಂಗ್ರಹವು ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ ಕಡಿಮೆಯಾಗಿದೆ. ಇದು ಜಲಮಂಡಳಿ ಹಾಗೂ ಸರ್ಕಾರದ ಅಧಿಕಾರಿಗಳಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ.&lt;/p&gt;&lt;h2&gt;ಸೆಪ್ಟೆಂಬರ್&zwnj;ನಿಂದ ನೀರಿನ ಅಭಾವ ಗ್ಯಾರಂಟಿ?&lt;/h2&gt;&lt;p&gt;ಹವಾಮಾನ ಇಲಾಖೆಯ ಮುನ್ಸೂಚನೆಗಳು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದರೆ ಮುಂಬರುವ ತಿಂಗಳುಗಳು ಅತ್ಯಂತ ನಿರ್ಣಾಯಕವಾಗಿವೆ. ಒಂದು ವೇಳೆ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದರೆ, ಬರುವ ಸೆಪ್ಟೆಂಬರ್ ತಿಂಗಳಿನಿಂದಲೇ ಬೆಂಗಳೂರಿನಲ್ಲಿ ನೀರಿನ ಅಭಾವ ಸೃಷ್ಟಿಯಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಕೆರೆ-ಕಟ್ಟೆಗಳು ಒಣಗುತ್ತಿರುವುದು ಮತ್ತು ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.&lt;/p&gt;&lt;p&gt;ಒಟ್ಟಾರೆಯಾಗಿ, ವರುಣ ದೇವನ ಕೃಪೆ ಬಾರದಿದ್ದರೆ ಸಿಲಿಕಾನ್ ಸಿಟಿ ಬೆಂಗಳೂರು ಮತ್ತೊಮ್ಮೆ ಜಲಕ್ಷಾಮದ ಸುಳಿಗೆ ಸಿಲುಕುವುದು ಖಂಡಿತ. ನಾಗರಿಕರು ಈಗಿನಿಂದಲೇ ನೀರನ್ನು ಅತ್ಯಂತ ಜಾಗರೂಕತೆಯಿಂದ ಹಾಗೂ ಮಿತವಾಗಿ ಬಳಸಬೇಕಾದ ಅವಶ್ಯಕತೆ ಇದೆ.&lt;/p&gt;]]></content:encoded>
            <category>mandya</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-water-crisis-bwssb-seeks-9-56-tmc-cauvery-water-gdp/articleshow-bm5uztl"/>
        </item>
        <item>
            <title><![CDATA[Bidadi Project: ಅಂಡಮಾನ್‌ ಪರಿಸರ ಉಳಿಸಿ ಎಂದಿದ್ದ ರಾಹುಲ್ ಗಾಂಧಿಗೆ ಪತ್ರ ಬರೆಯುವೆ: ಎಚ್‌ಡಿಕೆ]]></title>
            <link>https://kannada.asianetnews.com/karnataka-districts/hd-kumaraswamy-letter-to-rahul-gandhi-over-bidadi-land-acquisition-gvd/articleshow-f65ahmr</link>
            <guid isPermaLink="true">https://kannada.asianetnews.com/karnataka-districts/hd-kumaraswamy-letter-to-rahul-gandhi-over-bidadi-land-acquisition-gvd/articleshow-f65ahmr</guid>
            <pubDate>Mon, 15 Jun 2026 00:27:55 +0530</pubDate>
            <description><![CDATA[&lt;p&gt;Bidadi Project: ಇತ್ತೀಚೆಗೆ ಅಂಡಮಾನ್&zwnj;ಗೆ ಹೋಗಿ ವೀಡಿಯೋ ಮಾಡಿದ್ದ ರಾಹುಲ್&zwnj;ಗಾಂಧಿ ಇಲ್ಲಿನ ಪರಿಸರ ಚೆನ್ನಾಗಿದೆ, ಹಸಿರು ಉಳಿಸಿ. ಗ್ರೀನ್ ಅವರ್ ಗ್ರೀಡ್ ಎಂದೆಲ್ಲಾ ಹೇಳಿದ್ದರು ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k6cq39xgwrr1e6n590mphf67,imgname-hd-kumaraswamy-1759215986608.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.15): &lt;/strong&gt;ಇತ್ತೀಚೆಗೆ ಅಂಡಮಾನ್&zwnj;ಗೆ ಹೋಗಿ ವೀಡಿಯೋ ಮಾಡಿದ್ದ ರಾಹುಲ್&zwnj;ಗಾಂಧಿ ಇಲ್ಲಿನ ಪರಿಸರ ಚೆನ್ನಾಗಿದೆ, ಹಸಿರು ಉಳಿಸಿ. ಗ್ರೀನ್ ಅವರ್ ಗ್ರೀಡ್ ಎಂದೆಲ್ಲಾ ಹೇಳಿದ್ದರು. ಹಾಗಾಗಿ ನಾನು ಕನ್ನಡಿಗರ ಪರವಾಗಿ ಬಿಡದಿ ಪರಿಸರ ಉಳಿಸುವಂತೆ ರಾಹುಲ್ ಗಾಂಧಿಗೆ ಪತ್ರ ಬರೆಯುತ್ತೇನೆ ಎಂದು ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಹೇಳಿದರು.&lt;/p&gt;&lt;p&gt;ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ, ನಿಮ್ಮದೇ ಸಿಎಂ ಇದ್ದಾರೆ. ದಯಮಾಡಿ ಕರ್ನಾಟಕದ ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಅಂಡಮಾನ್&zwnj;ನಲ್ಲಿ ಪರಿಸರ ಸಂರಕ್ಷಣೆ ಮಾಡುವವರು ಕರ್ನಾಟಕದ ಪರಿಸರ ಯಾಕೆ ಹಾಳು ಮಾಡ್ತಿದ್ದೀರಿ?. ನಿಮ್ಮ ಸಿಎಂ ಕನಕಪುರದಲ್ಲಿ ರೈತರಿಗೆ ಭೂಮಿ ಕೊಡಬೇಡಿ ಅಂತಾರೆ. ಬಿಡದಿಯಲ್ಲಿ ರೈತರ ಭೂಮಿ ಕಿತ್ತುಕೊಳ್ಳುತ್ತಿದ್ದಾರೆ, ಯಾಕೆ ಈ ಮಲತಾಯಿ ಧೋರಣೆ.? ಈ ಎಲ್ಲಾ ವಿಚಾರಗಳನ್ನೂ ಪತ್ರ ಬರೆದು ರಾಹುಲ್ ಗಾಂಧಿಗೆ ಮನವರಿಕೆ ಮಾಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು.&lt;/p&gt;&lt;p&gt;ಇದು ದಪ್ಪ ಚರ್ಮದ ಸರ್ಕಾರ. ಆದರೆ, ಅವರ ಉದ್ಧಟತನ ಮಣಿಸೋದಕ್ಕೆ ನಾವು ತಯಾರಾಗಿದ್ದೇವೆ. ರೈತರನ್ನ ಹೆದರಿಸಲು ಒಂದಷ್ಟು ಜನ ಏಜೆಂಟರನ್ನು ತಯಾರು ಮಾಡಿದ್ದಾರೆ. ಜನರನ್ನ ಭಯಪಡಿಸಲು ವ್ಯವಸ್ಥಿತ ಸಂಚು ಮಾಡಲಾಗುತ್ತಿದೆ. ಅದಕ್ಕಾಗಿ ದೊಡ್ಡ ಗ್ಯಾಂಗ್ ನಿರ್ಮಾಣ ಮಾಡಿಕೊಂಡಿದ್ದಾರೆ. ರೈತರು ಯಾವುದೇ ಕಾರಣಕ್ಕೂ ಭಯಪಡಬೇಡಿ. ಕಾನೂನಿನ ಅಡಿಯಲ್ಲಿ ಎಲ್ಲಾ ರೀತಿಯ ಹೋರಾಟ ಮಾಡಿ ಯೋಜನೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತೇವೆ ಎಂದು ಧೈರ್ಯ ಹೇಳಿದರು.&lt;/p&gt;&lt;h2&gt;&lt;strong&gt;ಸಂಪೂರ್ಣ ಬೆಂಬಲ&lt;/strong&gt;&lt;/h2&gt;&lt;p&gt;ಯೋಜನೆ ಬಗ್ಗೆ ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ಇದೆ&zwnj;. ಜೂ. 21ರಂದು ಯೋಜನೆ ವ್ಯಾಪ್ತಿಯ ಹಳ್ಳಿಯಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. 26 ಗ್ರಾಮಗಳಲ್ಲಿ ಪಾದಯಾತ್ರೆ ಮಾಡಲು ನಿರ್ಧರಿಸಿ ದ್ದೇವೆ. ಬಳಿಕ ವಿಧಾನಸೌಧ ಮುತ್ತಿಗೆ ಹಾಕಲು ಸಹ ಸಿದ್ಧರಿದ್ದೇವೆ ಎಂದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-letter-to-rahul-gandhi-over-bidadi-land-acquisition-gvd/articleshow-f65ahmr"/>
        </item>
        <item>
            <title><![CDATA[ಮಂಡ್ಯದಲ್ಲಿ ಶುಂಠಿ ಬೆಳೆಯಲು ಹೊರರಾಜ್ಯದವರಿಗೆ ಭೂಮಿ ಗುತ್ತಿಗೆ; ಉದ್ಯಮಿಗಳಿಂದ ಹಣದ ಆಮಿಷ]]></title>
            <link>https://kannada.asianetnews.com/karnataka-districts/land-leased-to-out-of-state-residents-to-grow-ginger-in-malavalli-mandya-lured-with-money-by-businessmen-mrq/articleshow-g3rp8wx</link>
            <guid isPermaLink="true">https://kannada.asianetnews.com/karnataka-districts/land-leased-to-out-of-state-residents-to-grow-ginger-in-malavalli-mandya-lured-with-money-by-businessmen-mrq/articleshow-g3rp8wx</guid>
            <pubDate>Sun, 07 Jun 2026 05:49:34 +0530</pubDate>
            <description><![CDATA[&lt;p&gt;ಹೊರ ರಾಜ್ಯದ ಉದ್ಯಮಿಗಳು ಹಣದ ಆಮಿಷವೊಡ್ಡಿ ರೈತರಿಂದ ಭೂಮಿಯನ್ನು ಗುತ್ತಿಗೆ ಪಡೆದು ಶುಂಠಿ ಬೆಳೆಯುತ್ತಿದ್ದಾರೆ. ಈ ವಾಣಿಜ್ಯ ಬೆಳೆಯು ಮಣ್ಣಿನ ಫಲವತ್ತತೆಯನ್ನು ತೀವ್ರವಾಗಿ ಕಡಿಮೆ ಮಾಡುವುದಲ್ಲದೆ, ಅತಿಯಾದ ಕೀಟನಾಶಕ ಬಳಕೆಯಿಂದ ದೀರ್ಘಕಾಲಿಕ ಹಾನಿಯನ್ನುಂಟುಮಾಡುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktfpvpfwda5e7swdhdxjnags,imgname-malavalli-farmers--1--1780791237116.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ:&amp;nbsp;&lt;/strong&gt; ಬಡತನವನ್ನೇ ಬಂಡವಾಳ ಮಾಡಿಕೊಂಡಿರುವ ಹೊರ ರಾಜ್ಯದ ಉದ್ಯಮಿಗಳು ರೈತರಿಗೆ ಹಣದಾಸೆ ತೋರಿಸಿ ಭೂಮಿಯ ಫಲವತ್ತತೆಯನ್ನು ನುಂಗುವ ಶುಂಠಿ ಬೆಳೆಯನ್ನು ತಾಲೂಕಿನಾದ್ಯಂತ ಬೆಳೆಯಲು ಮುಂದಾಗಿದ್ದಾರೆ. ಇದರ ಅರಿವಿಲ್ಲದ ರೈತರು ಶುಂಠಿ ಬೆಳೆ ಬೆಳೆಯುವುದಕ್ಕೆ ಭೂಮಿಯನ್ನು ಗುತ್ತಿಗೆ ಕೊಡಲಾರಂಭಿಸಿದ್ದಾರೆ.&lt;/p&gt;&lt;p&gt;ಬಿ.ಜಿ.ಪುರ ಹೋಬಳಿ ಮಳೆಯಾಶ್ರಿತ ಪ್ರದೇಶವಾಗಿರುವುದರ ಜೊತೆಗೆ ಫಲವತ್ತತೆಯ ಕೆಂಪು ಮಣ್ಣಿನಿಂದ ಕೂಡಿದೆ. ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಈ ಪ್ರದೇಶದಲ್ಲಿ ಉತ್ತಮ ವಾತಾವರಣವಿದೆ. ಕೊಳವೆ ಬಾವಿ ನೀರಿನಿಂದ ಹಲವಾರು ರೈತರು ಟೊಮೆಟೋ, ಬೀನ್ಸ್, ಬದನೆಕಾಯಿ ಸೇರಿ ಹಲವು ಮಾದರಿಯ ಬೆಳೆಗಳನ್ನು ಬೆಳೆದು ಜೀವನ ಕಟ್ಟಿಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ರೈತರಿಂದ ಭೂಮಿ ಪಡೆದುಕೊಳ್ಳುತ್ತಿರುವ ಉದ್ಯಮಿಗಳು&lt;/strong&gt;&lt;/h2&gt;&lt;p&gt;ಸದ್ಯ ನೀರು, ಹಣದ ಅಭಾವ ಹಾಗೂ ಬೆಳೆ ಬೆಳೆಯಲು ಸಾಧ್ಯವಾಗದ ರೈತರ ಅಸಹಾಯಕತೆಯನ್ನು ಮನಗಂಡಿರುವ ತಮಿಳುನಾಡು ಹಾಗೂ ಕೇರಳ ಭಾಗದ ಉದ್ಯಮಿಗಳು ಪೂರಿಗಾಲಿ ಹೋಬಳಿಯ ರೈತರ ಮನವೊಲಿಸಿ ಶುಂಠಿ ಬೆಳೆಯುವುದಕ್ಕೆ ಭೂಮಿಯನ್ನು ಪಡೆದುಕೊಳ್ಳುತ್ತಿದ್ದಾರೆ.&lt;/p&gt;&lt;p&gt;ರೈತರ ಜಮೀನಿನಲ್ಲಿ ಅವರೇ ಕೊಳವೆಬಾವಿ ನಿರ್ಮಿಸಿ ಎಕರೆಗೆ ಇಂತಿಷ್ಟು ಹಣ ನೀಡುವ ಆಮಿಷಕ್ಕೆ ಒಳಪಡಿಸಿ ಶುಂಠಿ ಬೆಳೆಯಲು ಭೂಮಿ ನೀಡುವಂತೆ ಮಾಡುತ್ತಿದ್ದಾರೆ. ಇದಕ್ಕೆ ಒಪ್ಪಿ ರೈತರು ತಮ್ಮ ಜಮೀನಿನಲ್ಲಿ ಶುಂಠಿ ಬೆಳೆಯಲು ಭೂಮಿ ಬಿಟ್ಟುಕೊಡುತ್ತಿದ್ದಾರೆ. ಈಗಾಗಲೇ ಹೋಬಳಿಯ ಸುಮಾರು 150 ಎಕರೆ ಜಮೀನಿನಲ್ಲಿ ಶುಂಠಿ ಬೆಳೆಯಲಾಗಿದೆ ಎಂದು ಅಂದಾಜಿಸಲಾಗಿದೆ.&lt;/p&gt;&lt;p&gt;ಬಿ.ಜಿ.ಪುರ ವ್ಯಾಪ್ತಿಯಲ್ಲಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರ ಕನಸಿನ ಕೂಸು ಪೂರಿಗಾಲಿ ಹನಿ ನೀರಾವರಿ ಯೋಜನೆ ಅಂತಿಮ ಹಂತದಲ್ಲಿದೆ. ಆದರೆ, ರೈತರು ಫಲವತ್ತಾದ ಭೂಮಿಯನ್ನು ಹಣದಾಸೆಗೆ ಮಾರುತ್ತಿರುವುದು ಒಂದು ಕಡೆಯಾದರೆ ಮತ್ತೊಂದಡೆ ಶುಂಠಿ ಬೆಳೆಯಲು ಜಮೀನನ್ನು ಗುತ್ತಿಗೆ ನೀಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.&lt;/p&gt;&lt;p&gt;ಶುಂಠಿ ಬೆಳೆ ಬೆಳೆಯಲು ರೈತರು ಭೂಮಿ ಬಿಟ್ಟುಕೊಟ್ಟರಷ್ಟೇ ಸಾಕು. ಹೊರ ರಾಜ್ಯಗಳಿಂದ ಕೂಲಿಯಾಳುಗಳನ್ನು ಕರೆತಂದು ಇಲ್ಲಿ ಅವರೇ ಕೆಲಸ ಮಾಡಿಸಿಕೊಳ್ಳುತ್ತಾರೆ. ಸ್ಥಳೀಯ ರೈತರಿಗೆ ಶುಂಠಿ ಬೆಳೆ ಬೆಳೆಯುವ ಜ್ಞಾನವಿಲ್ಲ. ಬೆಳೆಗಳಿಗೆ ಬರುವ ರೋಗದ ಬಗ್ಗೆ ಎಚ್ಚರ ವಹಿಸುವುದಿಲ್ಲ. ಕೀಟನಾಶಕಗಳನ್ನು ಸಿಂಪರಣೆ ಮಾಡುವ ಅರಿವಿರುವುದಿಲ್ಲವೆಂಬ ಕಾರಣಕ್ಕೆ ಹೊರ ರಾಜ್ಯದಿಂದಲೇ ಕೂಲಿಯಾಳುಗಳನ್ನು ಇಲ್ಲಿಗೆ ಕರೆತಂದು ಕೆಲಸ ಮಾಡಿಸುವುದಕ್ಕೆ ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ಶುಂಠಿಯು ಒಂದು ಅತಿ ಹೆಚ್ಚು ಪೋಷಕಾಂಶ ಬೇಡುವ ಬೆಳೆಯಾಗಿದ್ದು, ಮಣ್ಣಿನಲ್ಲಿರುವ ಸಾರಜನಕ, ರಂಜಕ ಮತ್ತು ಪೊಟ್ಯಾಷಿಯಂನ್ನು ದೊಡ್ಡ ಪ್ರಮಾಣದಲ್ಲಿ ಹೀರಿಕೊಳ್ಳುವುದರಿಂದ ಮಣ್ಣಿನ ಫಲವತ್ತತೆಯನ್ನು ಕಡಿಮೆಗೊಳಿಸುತ್ತದೆ. ಜೊತೆಗೆ ಶುಂಠಿಗೆ ಬರುವ ಗೆಡ್ಡೆ ಕೊಳೆ, ಸೊರಗು, ಕೀಟಬಾಧೆ, ಗಡ್ಡೆ ತಿನ್ನುವಹುಳ ಸೇರಿದಂತೆ ಇತರೆ ರೋಗಗಳನ್ನು ನಿಯಂತ್ರಿಸಲು ಪೀಡೆ ನಾಶಕಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಬ್ಯಾಕ್ಟೀರಿಯಾಗಳು ಮಣ್ಣಿನಲ್ಲಿ ದೀರ್ಘಕಾಲ ಉಳಿಯುತ್ತವೆ. ಇದರಿಂದ ಯಾವುದೇ ಬೆಳೆ ಬೆಳೆಯಬೇಕಾದರೂ ಹಲವು ವರ್ಷಗಳ ಕಾಲ ಕಾಯಬೇಕಾಗುತ್ತದೆ.&lt;/p&gt;&lt;p&gt;ಪೀಡೆನಾಶಕಗಳ ಅಂಶ ನೀರಿನೊಂದಿಗೆ ಸೇರಿ ನೀರು ಮಲೀನವಾಗಲಿದೆ. ಇದನ್ನು ಕುಡಿಯುವ ಜಲಚರ, ಪ್ರಾಣಿ, ಪಕ್ಷಿಗಳ ಜೀವಕ್ಕೆ ಕುತ್ತು ಬರುವುದಲ್ಲಿ ಯಾವುದೇ ಸಂಶಯವಿಲ್ಲ.&lt;/p&gt;&lt;p&gt;&lt;strong&gt;ಪರಿಹಾರ:&lt;/strong&gt;&lt;/p&gt;&lt;p&gt;ಶುಂಠಿ ಬೆಳೆದ ನಂತರ ಅದೇ ಜಾಗದಲ್ಲಿ ಸತತವಾಗಿ ಅದೇ ಬೆಳೆಯನ್ನು ಬೆಳೆಯಬಾರದು. ಕನಿಷ್ಠ ೨-೩ ವರ್ಷಗಳ ಕಾಲ ದ್ವಿದಳ ಧಾನ್ಯಗಳು (ಅಲಸಂಧೆ, ಹೆಸರು) ಅಥವಾ ರಾಗಿ, ಜೋಳದಂತಹ ಬೆಳೆಗಳನ್ನು ಬೆಳೆಯುವುದರಿಂದ ಮಣ್ಣಿನ ಸಾರ ಮರಳಿ ಬರುತ್ತದೆ. ಶುಂಠಿ ಕೊಯ್ಲಿನ ನಂತರ ಮಣ್ಣಿಗೆ ಸೆಣಬು ಅಥವಾ ಡಯಾಂಚದಂತಹ ಹಸಿರು ಗೊಬ್ಬರಗಳನ್ನು ಸೇರಿಸಿ ಉಳುಮೆ ಮಾಡುವುದರ ಜೊತೆಗೆ ಕೊಟ್ಟಿಗೆ ಗೊಬ್ಬರ ಅಥವಾ ಎರೆಹುಳು ಗೊಬ್ಬರವನ್ನು ಸೇರಿಸುವುದರಿಂದ ಮಣ್ಣಿನ ಜೀವಂತಿಕೆ ಉಳಿಯಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಮಳವಳ್ಳಿ ತಾಲೂಕಿನಲ್ಲಿ ಶುಂಠಿ ಬೆಳೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬಂದ ಉದ್ಯಮಿಗಳು ಭೂಮಿಯನ್ನು ಗುತ್ತಿಗೆ ಪಡೆದು ಶುಂಠಿ ಬೆಳೆಯನ್ನು ಬೆಳೆಯುತ್ತಿದ್ದಾರೆ. ಶುಂಠಿ ವಾಣಿಜ್ಯ ಬೆಳೆಯಾದರೂ ಕೂಡ ಶುಂಠಿ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕಳೆದುಕೊಳ್ಳಬೇಕಾಗುತ್ತದೆ. ರೈತರು ಶುಂಠಿ ಬೆಳೆಯಲು ಭೂಮಿಯನ್ನು ನೀಡದೆ ಪೂರಿಗಾಲಿ ಹನಿನೀರಾವರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು.&lt;/p&gt;&lt;p&gt;- ರವಿಂದ್ರಕುಮಾರ್, ಬಾಚನಹಳ್ಳಿ&lt;/p&gt;&lt;p&gt;ಹಲವಾರು ವರ್ಷಗಳಿಂದ ನೀರು ಹಾಗೂ ಹಣದ ಸಮಸ್ಯೆಯಿಂದ ನಮಗೆ ಸೇರಿದ ಭೂಮಿಯನ್ನು ವ್ಯವಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಶುಂಠಿ ಬೆಳೆಯಲು ಕೊಟ್ಟರೆ ವರ್ಷಕ್ಕೆ ಇಂತಿಷ್ಟು ಹಣ ನೀಡುವುದರ ಜೊತೆಗೆ ಬೋರ್&zwnj;ವೆಲ್&zwnj;ನ್ನೂ ನಮಗೇ ಬಿಟ್ಟುಹೋಗುತ್ತಾರೆ. ಮಣ್ಣಿನ ಫಲವತ್ತತೆ ಬಗ್ಗೆ ನಮಗೆ ಸರಿಯಾದ ಮಾಹಿತಿ ಇಲ್ಲ. ಆದರೆ ನಮಗೆ ಹಣ ಬೇಕಿರುವುದರಿಂದ ಭೂಮಿಯನ್ನು ನೀಡುತ್ತಿದ್ದೇವೆ.&lt;/p&gt;&lt;p&gt;- ಗುರುಸ್ವಾಮಿ ರೈತ&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/land-leased-to-out-of-state-residents-to-grow-ginger-in-malavalli-mandya-lured-with-money-by-businessmen-mrq/articleshow-g3rp8wx"/>
        </item>
        <item>
            <title><![CDATA[ಮಂಡ್ಯ: ವೃದ್ಧೆಗೆ ಬೆದರಿಸಿ ಕಿವಿ ಓಲೆ ಕಿತ್ತು ಪರಾರಿಯಾಗಲು ಯತ್ನ, ಗ್ರಾಮಸ್ಥರಿಗೆ ವಿಷಯ ತಿಳಿದು ಮುಂದಾಗಿದ್ದೇ ಬೇರೆ!]]></title>
            <link>https://kannada.asianetnews.com/crime/mandya-police-arrested-thieves-in-halagur-earring-theft-case-rav/articleshow-g6op8q0</link>
            <guid isPermaLink="true">https://kannada.asianetnews.com/crime/mandya-police-arrested-thieves-in-halagur-earring-theft-case-rav/articleshow-g6op8q0</guid>
            <pubDate>Thu, 18 Jun 2026 12:32:20 +0530</pubDate>
            <description><![CDATA[&lt;p&gt;ಸಾಗ್ಯ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಚಾಕು ತೋರಿಸಿ ಕಿವಿ ಓಲೆ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಸಾಗ್ಯ ಮತ್ತು ಅಂಕನಹಳ್ಳಿ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕದ್ದ ಓಲೆಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಕ್ಕೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvcrbw4dcce1ntqn2jwpn6tx,imgname---------------------1781765894285.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಲಗೂರು (ಜೂ.18): &lt;/strong&gt;ಚಾಕು ತೋರಿಸಿ ವೃದ್ಧೆಯನ್ನ ಬೆದರಿಸಿ ಕಿವಿ ಓಲೆ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಾಗ್ಯ- ಅಂಕನಹಳ್ಳಿ ಗ್ರಾಮಗಳ ಬಳಿ ನಡೆದಿದೆ.&lt;/p&gt;&lt;p&gt;ಸಮೀಪದ ಸಾಗ್ಯ ಗ್ರಾಮದ ಕೃಷ್ಣಪ್ಪರ ಪತ್ನಿ ಶಾಂತಮ್ಮರನ್ನು ಇಬ್ಬರು ಕಳ್ಳರು ಚಾಕು ತೋರಿಸಿ ಹೆದರಿಸಿ ಅವರ ಎರಡು ಕಿವಿಗಳಲ್ಲಿದ್ದ ಮೂರು ಗ್ರಾಂ ಚಿನ್ನದ ಓಲೆಗಳನ್ನು ಕಿತ್ತು ಪರಾರಿಯಾಗುತ್ತಿದ್ದ ಮಂಡ್ಯ ತಾಲೂಕು ಕೆರಗೋಡು ಸಮೀಪದ ಶಿವಾರ ಗ್ರಾಮದ ಹೊಂಬಾಳಯ್ಯ ಮತ್ತು ಅಪ್ರಾಪ್ತ ಬಾಲಕ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ.&lt;/p&gt;&lt;p&gt;ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಶಾಂತಮ್ಮ ಎಂದಿನಂತೆ ಸಾಗ್ಯ ಗ್ರಾಮದ ಕೆಂಪೇಗೌಡರ ಜಮೀನಿನಲ್ಲಿ ಕೂಲಿ ಕೆಲಸ ಮಾಡಿ ನಂತರ ತಿಂಡಿ ತಿನ್ನುತ್ತಿದ್ದ ವೇಳೆ ಅಲ್ಲಿಗೆ ಬಂದ ಕಳ್ಳರು ಶಾಂತಮ್ಮನಿಗೆ ಚಾಕು ತೋರಿಸಿ ಬೆದರಿಸಿ ಅವರ ಎರಡು ಕಿವಿಗಳಲ್ಲಿದ್ದ ಓಲೆಗಳನ್ನು ಕಿತ್ತುಕೊಂಡಿದ್ದಾರೆ.&lt;/p&gt;&lt;p&gt;ನಂತರ ಕಳ್ಳರು ಪರಾರಿಯಾಗುತ್ತಿದ್ದಾಗ ಶಾಂತಮ್ಮ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದ ಜಮೀನಿನವರು ವೃದ್ಧೆ ಶಬ್ಧ ಕೇಳಿ ತಕ್ಷಣ ಅಂಕನಹಳ್ಳಿ ಗ್ರಾಮಸ್ಥರಿಗೆ ದೂರವಾಣಿ ಮುಖಾಂತರ ವಿಷಯ ತಿಳಿಸಿದ್ದಾರೆ. ನಂತರ ಅಂಕನಹಳ್ಳಿ ಮತ್ತು ಸಾಗ್ಯ ಗ್ರಾಮಸ್ಥರು ಸೇರಿ ಕಳ್ಳರನ್ನು ಹಿಡಿದು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.&lt;/p&gt;&lt;p&gt;ಸ್ಥಳಕ್ಕೆ ಬಂದ ಸಬ್ ಇನ್ಸ್&zwnj;ಪೆಕ್ಟರ್&zwnj; ಲೋಕೇಶ್ ಆರೋಪಿಗಳನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ಓಲೆಗಳು, ಕಳ್ಳರ ಬಳಿ ಇದ್ದ ಚಾಕು, ಸ್ಕೂಟರ್&zwnj;ಗಳನ್ನು ವಶಪಡಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.&lt;/p&gt;&lt;p&gt;ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್&zwnj;ಪಿ ಯಶ್ವಂತ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಓಲೆ ಕಿತ್ತುಕೊಂಡಾಗ ಕಿವಿಯಿಂದ ರಕ್ತ ಬರುತ್ತಿದ್ದ ಶಾಂತಮ್ಮನನ್ನು ತಕ್ಷಣ ಮಳವಳ್ಳಿ ಆಸ್ಪತ್ರೆಗೆ ಕಳಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/crime/mandya-police-arrested-thieves-in-halagur-earring-theft-case-rav/articleshow-g6op8q0"/>
        </item>
        <item>
            <title><![CDATA[ಮಂಡ್ಯ ಜಿ.ಪಂ ಸಿಇಓ ಕೆ.ಆರ್. ನಂದಿನಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು!]]></title>
            <link>https://kannada.asianetnews.com/karnataka-districts/mandya-zilla-panchayat-ceo-kr-nandini-ias-car-accident-escape-news/articleshow-g7zhfw3</link>
            <guid isPermaLink="true">https://kannada.asianetnews.com/karnataka-districts/mandya-zilla-panchayat-ceo-kr-nandini-ias-car-accident-escape-news/articleshow-g7zhfw3</guid>
            <pubDate>Fri, 19 Jun 2026 17:11:32 +0530</pubDate>
            <description><![CDATA[ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ಕೆ.ಆರ್. ನಂದಿನಿ ಅವರು ತಮ್ಮ ಸರ್ಕಾರಿ ನಿವಾಸದ ಮುಂದೆ ನಡೆದ ಭೀಕರ ಕಾರು ಅಪಘಾತದಲ್ಲಿ ಅದೃಷ್ಟವಶಾತ್ ಪಾರಾಗಿದ್ದಾರೆ. ಅಪಘಾತದಲ್ಲಿ ಅವರ ಕಾರು ಜಖಂಗೊಂಡರೂ, ಅವರು ಸುರಕ್ಷಿತವಾಗಿ ಪಾರಾಗಿ, ನಂತರ ತಮ್ಮ ಕರ್ತವ್ಯಕ್ಕೆ ಹಾಜರಾದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kvftxyhtgrrc2nby0x30z6wq,imgname-mandya-zp-ceo-kr-nandini-car-accident-1781869247031.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.19): ಮಂ&lt;/strong&gt;ಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಕೆ.ಆರ್. ನಂದಿನಿ ಅವರು ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ಕಾರು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸಿಇಓ ಅವರ ಸರ್ಕಾರಿ ನಿವಾಸದ ಮುಂಭಾಗದಲ್ಲೇ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.&lt;/p&gt;&lt;h2&gt;ಘಟನೆಯ ವಿವರ:&lt;/h2&gt;&lt;p&gt;ಮಂಡ್ಯ ನಗರದಲ್ಲಿರುವ ತಮ್ಮ ಸರ್ಕಾರಿ ನಿವಾಸಕ್ಕೆ ಊಟಕ್ಕೆ ಬಂದಿದ್ದ ಸಿಇಓ ಕೆ.ಆರ್. ನಂದಿನಿ ಅವರು, ಮಧ್ಯಾಹ್ನ ಊಟ ಮುಗಿಸಿ ಪುನಃ ಕಚೇರಿಗೆ ತೆರಳಲು ಸಜ್ಜಾಗಿದ್ದರು. ಅವರು ತಮ್ಮ ಸರ್ಕಾರಿ ಕಾರಿನಲ್ಲಿ ನಿವಾಸದ ಆವರಣದಿಂದ ಹೊರಬಂದು ಕಚೇರಿಯತ್ತ ಮುಖ ಮಾಡಿದ ಸಂದರ್ಭದಲ್ಲಿ, ವೇಗವಾಗಿ ಬಂದ ಮತ್ತೊಂದು ಕಾರು ಸಿಇಓ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.&lt;/p&gt;&lt;h2&gt;&lt;strong&gt;ಜಖಂಗೊಂಡ ಕಾರು:&lt;/strong&gt;&lt;/h2&gt;&lt;p&gt;ಅಪಘಾತದ ರಭಸ ಎಷ್ಟಿತ್ತೆಂದರೆ, ಡಿಕ್ಕಿಯಾದ ತಕ್ಷಣವೇ ಸಿಇಓ ಅವರ ಸರ್ಕಾರಿ ಕಾರಿನ ಮುಂಭಾಗದ ಟೈರ್ ಸ್ಫೋಟಗೊಂಡಿದೆ. ಕಾರಿನ ಮುಂಭಾಗವು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಂದಿನಿ ಅವರಿಗೆ ಸಣ್ಣಪುಟ್ಟ ಅಘಾತವಾಗಿದೆ. ಆದರೆ, ಕಾರಿನ ಏರ್&zwnj;ಬ್ಯಾಗ್ ಅಥವಾ ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಅವರು ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣವೇ ನೆರವಿಗೆ ಧಾವಿಸಿದರು.&lt;/p&gt;&lt;h2&gt;&lt;strong&gt;ಕರ್ತವ್ಯದತ್ತ ನಂದಿನಿ:&lt;/strong&gt;&lt;/h2&gt;&lt;p&gt;ಭೀಕರ ಅಪಘಾತದಿಂದ ಸ್ವಲ್ಪ ಕಾಲ ಆಘಾತಕ್ಕೊಳಗಾದ ಸಿಇಓ ಕೆ.ಆರ್. ನಂದಿನಿ ಅವರು, ನಂತರ ಸುಧಾರಿಸಿಕೊಂಡು ಮತ್ತೊಂದು ಕಾರಿನ ವ್ಯವಸ್ಥೆ ಮಾಡಿಕೊಂಡು ಕಚೇರಿ ಕೆಲಸಕ್ಕೆ ತೆರಳಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿಇಓ ಕಾರಿಗೆ ಡಿಕ್ಕಿ ಹೊಡೆದ ಕಾರಿನ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-zilla-panchayat-ceo-kr-nandini-ias-car-accident-escape-news/articleshow-g7zhfw3"/>
        </item>
        <item>
            <title><![CDATA[ಕರ್ನಾಟಕದಲ್ಲಿ ಮಳೆಯಿಲ್ಲದಿದ್ರೂ ಕಾವೇರಿ ನೀರಿಗಾಗಿ ಕ್ಯಾತೆ; ಸಿಎಂ ಬದಲಾದ್ರೂ ಹಳೆ ಚಾಳಿ ಬಿಡದ ತಮಿಳುನಾಡು!]]></title>
            <link>https://kannada.asianetnews.com/gallery/state/cauvery-water-dispute-tamil-nadu-demands-31-tmc-july-quota-from-karnataka-gi7sf8b</link>
            <guid isPermaLink="true">https://kannada.asianetnews.com/gallery/state/cauvery-water-dispute-tamil-nadu-demands-31-tmc-july-quota-from-karnataka-gi7sf8b</guid>
            <pubDate>Tue, 23 Jun 2026 18:45:08 +0530</pubDate>
            <description><![CDATA[&lt;p&gt;ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ, ಜೂನ್ ತಿಂಗಳ ನೀರಿನ ಕೊರತೆ ಭರಿಸಲು ಮತ್ತು ಜುಲೈ ತಿಂಗಳ ಕೋಟಾ ಬಿಡುಗಡೆ ಮಾಡಲು ತಮಿಳುನಾಡು ಕರ್ನಾಟಕದ ಮೇಲೆ ತೀವ್ರ ಒತ್ತಡ ಹೇರಿದೆ. ಮಳೆ ಕೊರತೆ ಮತ್ತು ಜಲಾಶಯಗಳಲ್ಲಿ ಕಡಿಮೆ ನೀರಿನ ಮಟ್ಟದಿಂದಾಗಿ ಕರ್ನಾಟಕ ಸಂಕಷ್ಟಕ್ಕೆ ಸಿಲುಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvt9hrmwq1bzcvejd0yp3455,imgname-cauvery-water-dispute-1782220120731.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ, ಜೂನ್ ತಿಂಗಳ ನೀರಿನ ಕೊರತೆ ಭರಿಸಲು ಮತ್ತು ಜುಲೈ ತಿಂಗಳ ಕೋಟಾ ಬಿಡುಗಡೆ ಮಾಡಲು ತಮಿಳುನಾಡು ಕರ್ನಾಟಕದ ಮೇಲೆ ತೀವ್ರ ಒತ್ತಡ ಹೇರಿದೆ. ಮಳೆ ಕೊರತೆ ಮತ್ತು ಜಲಾಶಯಗಳಲ್ಲಿ ಕಡಿಮೆ ನೀರಿನ ಮಟ್ಟದಿಂದಾಗಿ ಕರ್ನಾಟಕ ಸಂಕಷ್ಟಕ್ಕೆ ಸಿಲುಕಿದೆ.&lt;/p&gt;&lt;img&gt;&lt;p&gt;&lt;strong&gt;ನವದೆಹಲಿ (ಜೂ.23): ಕಾ&lt;/strong&gt;ವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ನೆರೆರಾಜ್ಯ ತಮಿಳುನಾಡು ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಇತ್ತೀಚಿನ ಸಭೆಯಲ್ಲಿ ಪಾಲ್ಗೊಂಡಿದ್ದ ತಮಿಳುನಾಡು ಅಧಿಕಾರಿಗಳು, ಕರ್ನಾಟಕದಿಂದ ತಮಗೆ ಬರಬೇಕಾದ ನೀರಿನ ಕೋಟಾವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ತೀವ್ರ ಒತ್ತಡ ಹೇರಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಜೂನ್ ತಿಂಗಳ ನೀರಿನಲ್ಲಿ ಭಾರಿ ಕೊರತೆ:&lt;/strong&gt;&lt;/p&gt;&lt;p&gt;ಸಭೆಯಲ್ಲಿ ತನ್ನ ವಾದ ಮಂಡಿಸಿದ ತಮಿಳುನಾಡು ಸರ್ಕಾರ, 'ಜೂನ್ ತಿಂಗಳಿನಲ್ಲಿ ನಿಗದಿತ ವೇಳಾಪಟ್ಟಿಯಂತೆ ಕರ್ನಾಟಕವು 9.19 ಟಿಎಂಸಿ ನೀರನ್ನು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 2.6 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಅಂದರೆ ಸರಿಸುಮಾರು 6.5 ಟಿಎಂಸಿ ನೀರಿನ ಕೊರತೆಯಾಗಿದೆ' ಎಂದು ದೂರು ನೀಡಿದೆ. ಈ ಕೊರತೆಯನ್ನು ತಕ್ಷಣವೇ ಭರಿಸಬೇಕು ಎಂದು ಪ್ರಾಧಿಕಾರದ ಮುಂದೆ ಪಟ್ಟು ಹಿಡಿದಿದೆ.&lt;/p&gt;&lt;img&gt;&lt;p&gt;&lt;strong&gt;ಕರ್ನಾಟಕದ ವಾದ ತಳ್ಳಿಹಾಕಿದ ತಮಿಳುನಾಡು:&lt;/strong&gt;&lt;/p&gt;&lt;p&gt;ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ ಎಂಬ ಕರ್ನಾಟಕದ ವಾದವನ್ನು ತಮಿಳುನಾಡು ಸಾರಾಸಗಟಾಗಿ ತಳ್ಳಿಹಾಕಿದೆ. 'ಫೆಬ್ರವರಿಯಿಂದ ಮೇ ತಿಂಗಳವರೆಗೆ ಕರ್ನಾಟಕವು ತನ್ನ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಳಸಿಕೊಂಡಿದೆ. ಇದರಿಂದಾಗಿಯೇ ಈಗ ನೀರಿನ ಮಟ್ಟ ಕುಸಿದಿದೆ. ನಿಮ್ಮ ತಪ್ಪುಗಳಿಗೆ ನಾವು ಬೆಲೆ ತೆರಲು ಸಾಧ್ಯವಿಲ್ಲ' ಎಂದು ತಮಿಳುನಾಡು ಅಧಿಕಾರಿಗಳು ಆರೋಪಿಸಿದ್ದಾರೆ. ಜೂನ್ ತಿಂಗಳ ಬಾಕಿ ಉಳಿದಿರುವ ನೀರಿನ ಜೊತೆಗೆ, ಜುಲೈ ತಿಂಗಳ ಕೋಟಾ ಆದ 31.24 ಟಿಎಂಸಿ ನೀರನ್ನು ಹರಿಸಲು ಕರ್ನಾಟಕಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಪ್ರಾಧಿಕಾರವನ್ನು ಒತ್ತಾಯಿಸಿದೆ.&lt;/p&gt;&lt;img&gt;&lt;p&gt;&lt;strong&gt;ಸಂಕಷ್ಟದಲ್ಲಿ ಕರ್ನಾಟಕ:&lt;/strong&gt;&lt;/p&gt;&lt;p&gt;ಇನ್ನೊಂದೆಡೆ, ರಾಜ್ಯದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಮಳೆಯ ಕೊರತೆಯಿಂದಾಗಿ ನೀರಿನ ಸಂಗ್ರಹದ ಮಟ್ಟ ಆಶಾದಾಯಕವಾಗಿಲ್ಲ. ಕುಡಿಯುವ ನೀರಿಗೇ ಆದ್ಯತೆ ನೀಡಬೇಕಾದ ಅನಿವಾರ್ಯತೆಯಲ್ಲಿ ಕರ್ನಾಟಕ ಸರ್ಕಾರವಿದೆ. ಹೀಗಿರುವಾಗ ತಮಿಳುನಾಡು ಒಟ್ಟು 31 ಟಿಎಂಸಿಗೂ ಅಧಿಕ ನೀರಿಗಾಗಿ ಪಟ್ಟು ಹಿಡಿದಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪ್ರಾಧಿಕಾರವು ಮಳೆಯ ಪ್ರಮಾಣ ಮತ್ತು ಜಲಾಶಯಗಳ ಸ್ಥಿತಿಗತಿಯನ್ನು ಅವಲಂಬಿಸಿ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದು ಈಗ ಕುತೂಹಲ ಕೆರಳಿಸಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/cauvery-water-dispute-tamil-nadu-demands-31-tmc-july-quota-from-karnataka-gi7sf8b"/>
        </item>
        <item>
            <title><![CDATA[ಮಂಡ್ಯ: ಉಳುಮೆ ಮಾಡುವಾಗ ನೇಗಿಲಿಗೆ ಸಿಕ್ಕ ಕಲ್ಲು, ಬಯಲಾಯ್ತು 500 ವರ್ಷದ ಹಿಂದಿನ ಸತ್ಯ! ಕನ್ನಡ ಶಾಸನದಲ್ಲಿ ಏನಿತ್ತು?]]></title>
            <link>https://kannada.asianetnews.com/karnataka-districts/15th-century-land-donation-kannada-inscription-found-in-nagamangala-mandya-gdp/articleshow-gmp0usg</link>
            <guid isPermaLink="true">https://kannada.asianetnews.com/karnataka-districts/15th-century-land-donation-kannada-inscription-found-in-nagamangala-mandya-gdp/articleshow-gmp0usg</guid>
            <pubDate>Fri, 12 Jun 2026 14:38:25 +0530</pubDate>
            <description><![CDATA[ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದಡಗ ಗ್ರಾಮದಲ್ಲಿ ರೈತರೊಬ್ಬರಿಗೆ ಜಮೀನು ಉಳುಮೆ ಮಾಡುವಾಗ 15-16ನೇ ಶತಮಾನಕ್ಕೆ ಸೇರಿದ ಕನ್ನಡ ಶಾಸನವೊಂದು ದೊರೆತಿದೆ. ಸಂಶೋಧಕ ಮಹಮ್ಮದ್&zwnj; ಕಲೀಂಉಲ್ಲ ಅವರು ಇದನ್ನು ಗುರುತಿಸಿದ್ದು, ಗೋಪಾಲದೇವ ಎಂಬ ವ್ಯಕ್ತಿಯು ಬಸವ ಭಕ್ತರಿಗೆ ಭೂಮಿಯನ್ನು ದಾನವಾಗಿ ನೀಡಿದ ವಿಷಯವನ್ನು ಈ ಶಾಸನವು ಒಳಗೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktxhbtaakbwa31r0tg3r9jar,imgname-kannada-inscription-found-in-mandya-1781255235914.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ:&lt;/strong&gt; ನಾಗಮಂಗಲ ತಾಲೂಕಿನ ದಡಗ ಗ್ರಾಮದ ಶ್ರೀವೀರಭದ್ರೇಶ್ವರ ಹಾಗೂ ಕೊಲ್ಲಾಪುರದಮ್ಮ ದೇವಾಲಯದ ಬಳಿ 15- 16ನೇ ಶತಮಾನದ ಕನ್ನಡ ಶಾಸನವನ್ನು ಸಾಹಿತಿ ಹಾಗೂ ಸಂಶೋಧಕ ಮಹಮ್ಮದ್&zwnj; ಕಲೀಂಉಲ್ಲ ಅವರು ಪತ್ತೆ ಹಚ್ಚಿದ್ದಾರೆ. ಗ್ರಾಮದ ರೈತ ಶಂಕರಪ್ಪ ಅವರು ತಮ್ಮ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ನೇಗಿಲಿಗೆ ಸಿಕ್ಕ ಸೂರ್ಯ, ಚಂದ್ರ, ಶಿವಲಿಂಗ ಹಾಗೂ ನಂದಿಯ ಕೆತ್ತನೆಗಳಿಂದ ಕೂಡಿದ ಕಲ್ಲನ್ನು ತಂದು ಗ್ರಾಮದ ದೇವಾಲಯದ ನಂದಿ ಕಂಬದ ಪಕ್ಕದಲ್ಲಿ ಇರಿಸಿದ್ದರು.&lt;/p&gt;&lt;h2&gt;ಕನ್ನಡ ಶಾಸನವೆಂದು ಖಚಿತ&lt;/h2&gt;&lt;p&gt;ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ಕೊಟ್ಟ ಸಾಹಿತಿ ಹಾಗೂ ಸಂಶೋಧಕ ಮಹಮ್ಮದ್&zwnj; ಕಲೀಂ ಉಲ್ಲ ಅವರು 23 ಸಾಲಿನ ಈ ಕಲ್ಲಿನ ಮೇಲ್ಭಾಗದಲ್ಲಿ ಸೂರ್ಯ, ಚಂದ್ರ, ಶಿವಲಿಂಗ ಹಾಗೂ ನಂದಿಯ ಕೆತ್ತನೆಗಳಿರುವುದನ್ನು ಕಂಡು 15, 16ನೇ ಶತಮಾನದ ಕನ್ನಡ ಶಾಸನವೆಂದು ಖಚಿತಪಡಿಸಿ ಆ ಶಾಸನದ ಸಾರಾಂಶ ಗ್ರಹಿಸಿ, ಹೆಚ್ಚಿನ ಓದಿಗಾಗಿ ವಿದ್ವಾಂಸರಾದ ಎಂ.ಎನ್. ಪ್ರಭಾಕರ್ ಮತ್ತು ಡಾ. ನಾಗರಾಜರಾವ್ ಅವರನ್ನು ಸಂಪರ್ಕಿಸಿದರು.&lt;/p&gt;&lt;h2&gt;ದಾನ ನೀಡಿದ ಭೂಮಿ ಬಗ್ಗೆ ಉಲ್ಲೇಖ&lt;/h2&gt;&lt;p&gt;ಶಾಸನವನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ಇದು ಭೂದಾನದ ಶಾಸನವೆಂದು ಅಭಿಪ್ರಾಯಪಟ್ಟಿದ್ದಾರೆ. ವಿರೋಧಿ ಸಂವಂತ್ಸರದ ಜೇಷ್ಠ ಶು.1 ಸೋಮವಾರದ ಈ ಶಾಸನದಲ್ಲಿ ಗೋಪಾಲದೇವ ಎಂಬ ವ್ಯಕ್ತಿ ತನ್ನ ಪ್ರೀತಿಯ ಪಾಲಕರಾದ ಬಸವ ಭಕ್ತರಿಗೆ ಸೋಮಗಹಳ್ಳಿಯ ಕೆರೆಯ ಸುತ್ತಮುತ್ತಲ ಪ್ರದೇಶದ ಉತ್ತರ ದಿಕ್ಕಿನ ಮೂಲೆಯಲ್ಲಿರುವ ಜಮೀನನ್ನು ಧಾರೆಯರೆದು ದಾನ ನೀಡಿದ ವಿಷಯವಿದೆ.&lt;/p&gt;&lt;p&gt;ಅಂತೆಯೇ ಈ ಭೂಮಿಯನ್ನು ಬಸವ ಭಕ್ತರ ಮಕ್ಕಳು ಮತ್ತು ವಂಶಸ್ಥರು ಅನುಭವಿಸಬೇಕು ಎಂದು ಹೇಳಲಾಗಿದೆ. ದಾನ ನೀಡಿದ ಭೂಮಿಯ ಗಡಿಗಳನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. 13 ಮಂದಿ ಭಕ್ತರ ಹೆಸರುಗಳನ್ನೂ ಸಹ ಶಾಸನದಲ್ಲಿ ಉಲ್ಲೇಖಿಸಲಾಗಿದೆ. ಮತ್ತು ಈ ಸಂದರ್ಭದ ಸಾಕ್ಷಿಗಳ ಹೆಸರನ್ನೂ ಸಹ ಶಾಸನದಲ್ಲಿ ಉಲ್ಲೇಖಿಸಲಾಗಿದೆ. ಶಾಸನದ ಶೋಧನೆಯಲ್ಲಿ ಗ್ರಾಮದ ರೈತ ಶಂಕರಪ್ಪ, ಡಿ.ಎ.ಮದನ್&zwnj;ಕುಮಾರ್, ಗೋಪಾಲಪ್ಪ ಸೇರಿ ಹಲವರು ಸಹಕರಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/15th-century-land-donation-kannada-inscription-found-in-nagamangala-mandya-gdp/articleshow-gmp0usg"/>
        </item>
        <item>
            <title><![CDATA[ಮುನಿಸು ಮರೆತು ಒಂದಾದ ಮೈತ್ರಿ ಪಕ್ಷದ ನಾಯಕರು; ಅಕ್ಕಪಕ್ಕ‌ ಕುಳಿತು ಖುಷಿಯಿಂದಲೇ ಮಾತುಕತೆ]]></title>
            <link>https://kannada.asianetnews.com/karnataka-districts/bjp-leader-kc-narayana-gowda-has-now-appeared-on-the-same-stage-with-union-minister-hd-kumaraswamy-mrq/articleshow-hesi42c</link>
            <guid isPermaLink="true">https://kannada.asianetnews.com/karnataka-districts/bjp-leader-kc-narayana-gowda-has-now-appeared-on-the-same-stage-with-union-minister-hd-kumaraswamy-mrq/articleshow-hesi42c</guid>
            <pubDate>Mon, 15 Jun 2026 06:28:27 +0530</pubDate>
            <description><![CDATA[ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್&zwnj; ಜೊತೆ ಮೈತ್ರಿ ಬೇಡ ಎಂದಿದ್ದ ಬಿಜೆಪಿ ನಾಯಕ ಕೆ.ಸಿ.ನಾರಾಯಣಗೌಡ, ಇದೀಗ ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಜೊತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಆಡಳಿತ ಸ್ಮರಣೆ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಅಕ್ಕಪಕ್ಕ ಕುಳಿತು ಖುಷಿಯಿಂದ ಮಾತನಾಡಿದ್ದು, ಮೈತ್ರಿ ಪಕ್ಷಗಳ ನಡುವಿನ ಮುನಿಸು ಶಮನವಾದಂತೆ ಕಂಡುಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv4ceyg0zeepxqwzbktj4w71,imgname-hd-kumaraswamy-1781484976640.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ: &lt;/strong&gt;ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್&zwnj; ಜೊತೆ ಮೈತ್ರಿ ಬೇಡವೇ ಬೇಡ ಎಂದಿದ್ದ ನಾಯಕರು ಒಂದೇ ವೇದಿಕೆಯಲ್ಲಿ ಪರಸ್ಪರ ಅಕ್ಕ-ಪಕ್ಕ ಕುಳಿತು ಖುಷಿಯಿಂದಲೇ ಮಾತುಕತೆಯಲ್ಲಿ ತೊಡಗಿದ್ದು ವಿಶೇಷವೆನಿಸಿತ್ತು.&lt;/p&gt;&lt;p&gt;ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್&zwnj; ಕಲಾಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ 12 ವರ್ಷ ಸುಧೀರ್ಘ ಆಡಳಿತ ಸ್ಮರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಕೆ.ಸಿ.ನಾರಾಯಣಗೌಡ ಪರಸ್ಪರ ಅಕ್ಕ-ಪಕ್ಕ ಕುಳಿತು ಮಾತುಕತೆಯಲ್ಲಿ ತೊಡಗಿದ್ದುದು ಕುತೂಹಲ ಕೆರಳಿಸಿತ್ತು.&lt;/p&gt;&lt;h2&gt;&lt;strong&gt;ಸ್ಥಳೀಯ ಸಂಸ್ಥೆ ಚುನಾವಣೆಯ ಮೈತ್ರಿ&lt;/strong&gt;&lt;/h2&gt;&lt;p&gt;ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್&zwnj;-ಬಿಜೆಪಿಯವರ ವಿರುದ್ಧ ವಾಗ್ವಾದ ನಡೆದ ಪರಿಣಾಮ ಜೆಡಿಎಸ್&zwnj; ಜೊತೆ ಮೈತ್ರಿಯೇ ಬೇಡ ಎಂದು ಕೆ.ಸಿ.ನಾರಾಯಣಗೌಡರು ಹೇಳಿಕೆ ನೀಡಿದ್ದರು. ಜೆಡಿಎಸ್ ವಿರುದ್ಧ ರಾಜ್ಯ ಬಿಜೆಪಿ ನಾಯಕರಿಗೂ ದೂರು ನೀಡಿದ್ದರು. ಬಿಜೆಪಿ ಮುಖಂಡರ ವಿರುದ್ಧವೂ ಜೆಡಿಎಸ್ ಮುಖಂಡರು ನೇರ ವಾಗ್ದಾಳಿ ನಡೆಸಿದ್ದರು.&lt;/p&gt;&lt;p&gt;ಇದೀಗ ಮುನಿಸು ಮರೆತು ನಾಯಕರು ಒಂದೇ ವೇದಿಕೆಯಲ್ಲಿ ಭಾಗಿಯಾಗಿದ್ದರು. ಕುಮಾರಸ್ವಾಮಿ- ನಾರಾಯಣಗೌಡ ಅಕ್ಕಪಕ್ಕ&zwnj; ಕುಳಿತು ಖುಷಿಯಿಂದಲೇ ಮಾತುಕತೆಯಲ್ಲಿ ತೊಡಗಿದ್ದರು. ಬಿಜೆಪಿಯ ಜಿಲ್ಲಾ ಮುಖಂಡರು ಹಾಗೂ ಜೆಡಿಎಸ್ ಜಿಲ್ಲಾ ಮುಖಂಡರು ಭಾಗಿಯಾಗಿದ್ದರು.&lt;/p&gt;&lt;p&gt;&amp;nbsp;&lt;/p&gt;&lt;p&gt;MandyaParticipated in a massive public gathering in Mandya to celebrate the historic milestone of Hon'ble Prime Minister Shri @narendramodi avaru completing 12 consecutive years as India's elected Prime Minister.It was heartening to witness the enthusiastic participation of&hellip; pic.twitter.com/5SKRNhc34w&lt;/p&gt;&lt;p&gt;&mdash; ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 14, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bjp-leader-kc-narayana-gowda-has-now-appeared-on-the-same-stage-with-union-minister-hd-kumaraswamy-mrq/articleshow-hesi42c"/>
        </item>
        <item>
            <title><![CDATA[Mandya: ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!]]></title>
            <link>https://kannada.asianetnews.com/gallery/karnataka-districts/mandya-murder-man-killed-by-friend-over-alleged-messages-to-his-wife-in-malavalli-village-rav-mfr1q2r</link>
            <guid isPermaLink="true">https://kannada.asianetnews.com/gallery/karnataka-districts/mandya-murder-man-killed-by-friend-over-alleged-messages-to-his-wife-in-malavalli-village-rav-mfr1q2r</guid>
            <pubDate>Wed, 17 Jun 2026 12:57:34 +0530</pubDate>
            <description><![CDATA[&lt;p&gt;Mandya ಪತ್ನಿಗೆ ಮೆಸೇಜ್ ಮಾಡುತ್ತಿದ್ದನೆಂದು ಸಂಶಯಗೊಂಡು ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kva71ycj3wp6c6d6t0yc91n1,imgname-----------------------2026-06-17t124642.830-1781680634258.jpg" type="image/jpeg" height="390" width="690"/>
            <content:encoded><![CDATA[&lt;p&gt;Mandya ಪತ್ನಿಗೆ ಮೆಸೇಜ್ ಮಾಡುತ್ತಿದ್ದನೆಂದು ಸಂಶಯಗೊಂಡು ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಹೆಂಡತಿಗೆ ಮೆಸೇಜ್ ಮಾಡುತ್ತಿದ್ದನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.&lt;/p&gt;&lt;p&gt;&lt;strong&gt;ಪತ್ನಿ ನಂಬರ್&zwnj;ಗೆ ಮೆಸೇಜ್ ಕಳಿಸುತ್ತಿದ್ದ ಮಹೇಶ್&lt;/strong&gt;&lt;/p&gt;&lt;p&gt;ಮೃತ ಮಹೇಶ್ ತನ್ನ ಸ್ನೇಹಿತ ಅನ್ನದಾನಿಯ ಪತ್ನಿ ಬಳಸುತ್ತಿದ್ದ ಮೊಬೈಲ್&zwnj; ನಂಬರ್&zwnj;ಗೆ ಮೆಸೇಜ್ ಕಳಿಸುತ್ತಿದ್ದಾನೆ ಎನ್ನುವ ವಿಷಯ ಗೊತ್ತಾಗಿದೆ. ಇದರಿಂದ ಕುದ್ದು ಹೋದ ಆರೋಪಿ ಅನ್ನದಾನಿ, ಇವನನ್ನು ಹೀಗೆ ಬಿಟ್ಟರೆ ಮನೆವರೆಗೂ ಬರ್ತಾನೆ ಎಂದುಕೊಂಡವನು ಮುಗಿಸಲು ಸ್ಕೆಚ್ ಹಾಕಿದ್ದಾನೆ. ಅದರಂತೆ ಸೋಮವಾರ ರಾತ್ರಿ ಮನೆಯಲ್ಲಿದ್ದ ಮಹೇಶ್&zwnj;ನಿಗೆ ಕರೆ ಮಾಡಿರುವ ಅನ್ನದಾನಿ ಮತ್ತು ಅವನ ಸಹಚರರು ಹೊರಗೆ ಬರುವಂತೆ ಪುಸಲಾಯಿಸಿ ಕರೆಸಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಬಳಿಕ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿವರೆಗೆ ಮಹೇಶ್&zwnj;ನಿಗೆ ಮುಂದೆ ನಡೆಯಲಿದೆ ಅನ್ನೋದರ ಅರಿವೇ ಇಲ್ಲದೇ ಅವರೊಂದಿಗೆ ಖುಷಿಯಾಗಿ ಹೋಗಿದ್ದಾನೆ. ಯಾವಾಗ ನಿರ್ಜನ ಪ್ರದೇಶಕ್ಕೆ ಬಂದರೋ ಆಗ ಮಹೇಶ್ ಮೇಲೆ ಚಾಕುವಿನಿಂದ ಇರಿದ್ದಾರೆ. ಅಷ್ಟೇ ಅಲ್ಲದೆ ಮೈಮೇಲೆ ದೊಣ್ಣೆಗಳಿಂದ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನೊಂದು ವಿಚಿತ್ರ ಎಂದರೆ ಹತ್ಯೆಯ ಬಳಿಕ ಅದೇ ಆರೋಪಿಗಳು ಮಹೇಶ್&zwnj;ನನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲು ಯತ್ನಿಸಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಆತ ಅದಾಗಲೇ ಮೃತಪಟ್ಟಿರುವುದು ಗೊತ್ತಾಗಿದೆ.&lt;/p&gt;&lt;p&gt;ಘಟನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕಿರುಗಾವಲು ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ಹತ್ಯೆಯ ಹಿಂದಿನ ಕಾರಣಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/mandya-murder-man-killed-by-friend-over-alleged-messages-to-his-wife-in-malavalli-village-rav-mfr1q2r"/>
        </item>
        <item>
            <title><![CDATA[ಮಂಡ್ಯದಲ್ಲಿ ಜಮೀನು ಪೋಡಿ ಮಾಡಿಕೊಡಲು ಲಂಚ ವಸೂಲಿ; ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆರ್‌ಐ ಮಧುಸೂದನ್!]]></title>
            <link>https://kannada.asianetnews.com/gallery/karnataka-districts/mandya-lokayukta-trap-halaguru-revenue-inspector-madhusudan-bribe-arrest-mmea0z8</link>
            <guid isPermaLink="true">https://kannada.asianetnews.com/gallery/karnataka-districts/mandya-lokayukta-trap-halaguru-revenue-inspector-madhusudan-bribe-arrest-mmea0z8</guid>
            <pubDate>Fri, 12 Jun 2026 22:40:23 +0530</pubDate>
            <description><![CDATA[&lt;p&gt;ಮಂಡ್ಯ ಜಿಲ್ಲೆಯಲ್ಲಿ, ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಹಲಗೂರು ಕಂದಾಯ ನಿರೀಕ್ಷಕ ಮಧುಸೂದನ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ₹2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ, ₹10,000 ಮುಂಗಡ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktycmt0znchg943esqgfzp03,imgname-mandya-lokayukta-raid--3--1781283842077.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಂಡ್ಯ ಜಿಲ್ಲೆಯಲ್ಲಿ, ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಹಲಗೂರು ಕಂದಾಯ ನಿರೀಕ್ಷಕ ಮಧುಸೂದನ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ₹2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ, ₹10,000 ಮುಂಗಡ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.&lt;/p&gt;&lt;img&gt;&lt;p&gt;ಮಂಡ್ಯ ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಶಿಕಾರಿಯನ್ನು ಮುಂದುವರಿಸಿದ್ದಾರೆ. ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಳವಳ್ಳಿ ತಾಲೂಕಿನ ಹಲಗೂರು ಕಂದಾಯ ನಿರೀಕ್ಷಕ (RI) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಇಂದು ನಡೆದಿದೆ.&lt;/p&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಕಂದಾಯ ನಿರೀಕ್ಷಕರಾಗಿ (Revenue Inspector) ಕಾರ್ಯನಿರ್ವಹಿಸುತ್ತಿದ್ದ ಮಧುಸೂದನ್ ಲೋಕಾಯುಕ್ತ ಜಾಲಕ್ಕೆ ಬಿದ್ದ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಹಲಗೂರು ವ್ಯಾಪ್ತಿಯ ರೈತರಾದ ನಂಜುಂಡಸ್ವಾಮಿ ಎಂಬುವವರು ತಮ್ಮ ಜಮೀನಿನ ದುರಸ್ತಿ ಹಾಗೂ ಪೋಡಿ ಕಾರ್ಯಕ್ಕಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸವನ್ನು ಮಾಡಿಕೊಡಲು ಆರ್&zwnj;ಐ ಮಧುಸೂದನ್ ಅವರು ರೈತನಿಗೆ ಅಲೆದಾಡಿಸುತ್ತಿದ್ದರು ಎನ್ನಲಾಗಿದೆ.&lt;/p&gt;&lt;img&gt;&lt;p&gt;ನಂಜುಂಡಸ್ವಾಮಿ ಅವರ ಪೋಡಿ ಕಾರ್ಯವನ್ನು ಪೂರೈಸಿಕೊಡಲು ಆರ್&zwnj;ಐ ಮಧುಸೂದನ್ ಬರೋಬ್ಬರಿ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. &lsquo;ಹಣ ನೀಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ&rsquo; ಎಂದು ರೈತನಿಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬಡ ರೈತ ಅಷ್ಟು ದೊಡ್ಡ ಮೊತ್ತವನ್ನು ನೀಡಲು ಅಸಹಾಯಕತೆ ವ್ಯಕ್ತಪಡಿಸಿದಾಗ, ಕನಿಷ್ಠ ಪಕ್ಷ ಮುಂಗಡವಾಗಿಯಾದರೂ ಹಣ ನೀಡುವಂತೆ ಪೀಡಿಸಿದ್ದರು.&lt;/p&gt;&lt;img&gt;&lt;p&gt;ಭ್ರಷ್ಟ ಅಧಿಕಾರಿಯ ಕಿರುಕುಳದಿಂದ ಬೇಸತ್ತ ರೈತ ನಂಜುಂಡಸ್ವಾಮಿ ಅವರು ಮಂಡ್ಯ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನದಂತೆ, ಇಂದು ರೈತ ನಂಜುಂಡಸ್ವಾಮಿ ಅವರು ಮುಂಗಡ ಹಣವಾಗಿ 10 ಸಾವಿರ ರೂಪಾಯಿಗಳನ್ನು ಆರ್&zwnj;ಐ ಮಧುಸೂದನ್ ಅವರಿಗೆ ನೀಡುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣದ ಸಮೇತ ಮಧುಸೂದನ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.&lt;/p&gt;&lt;img&gt;&lt;p&gt;ಪಡೆದ ಹಣದ ಸಮೇತ ಸಿಕ್ಕಿಬಿದ್ದ ಮಧುಸೂದನ್ ಅವರನ್ನು ಮಂಡ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕಚೇರಿಯ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಈ ಹಿಂದೆ ಇವರು ಎಷ್ಟು ಜನರಿಗೆ ಇಂತಹ ಕಿರುಕುಳ ನೀಡಿದ್ದಾರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ದಾಳಿಯಲ್ಲಿ ಲೋಕಾಯುಕ್ತ ಡಿವೈಎಸ್&zwnj;ಪಿ ಹಾಗೂ ಇನ್ಸ್&zwnj;ಪೆಕ್ಟರ್ ನೇತೃತ್ವದ ತಂಡ ಭಾಗವಹಿಸಿತ್ತು.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/mandya-lokayukta-trap-halaguru-revenue-inspector-madhusudan-bribe-arrest-mmea0z8"/>
        </item>
        <item>
            <title><![CDATA[ಮಂಡ್ಯದಲ್ಲಿ ಬಟ್ಟೆ ವ್ಯಾಪಾರ ನಷ್ಟ: ಸಾಲಕ್ಕೆ ಹೆದರಿ ಅಪ್ಪ-ಅಮ್ಮ, ನವವಿವಾಹಿತ ಮಗ ಮೂವರೂ ಸಾವು!]]></title>
            <link>https://kannada.asianetnews.com/karnataka-districts/mandya-cloth-merchant-family-tragedy-3-dead-businessman-blames-govt-shakti-scheme-and-debt-sat/articleshow-rkyhmac</link>
            <guid isPermaLink="true">https://kannada.asianetnews.com/karnataka-districts/mandya-cloth-merchant-family-tragedy-3-dead-businessman-blames-govt-shakti-scheme-and-debt-sat/articleshow-rkyhmac</guid>
            <pubDate>Tue, 09 Jun 2026 14:42:22 +0530</pubDate>
            <description><![CDATA[&lt;p&gt;ಸಾಲದ ಒತ್ತಡ ಮತ್ತು ವ್ಯಾಪಾರದಲ್ಲಿನ ನಷ್ಟದಿಂದಾಗಿ ಮಂಡ್ಯದ ಬಟ್ಟೆ ವ್ಯಾಪಾರಿಯೊಬ್ಬರು ತಮ್ಮ ಪತ್ನಿ ಹಾಗೂ ಮಗನನ್ನು ಕೊಂದುತಾವೂ ಸಾವಿಗೆ ಶರಣಾಗಿದ್ದಾರೆ. ಸರ್ಕಾರದ 'ಶಕ್ತಿ ಯೋಜನೆ'ಯಿಂದ ವ್ಯಾಪಾರ ಕುಸಿತ, ಫೈನಾನ್ಸ್&zwnj;ನವರ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಮೃತರ ಡೆತ್&zwnj;ನೋಟ್&zwnj;ನಲ್ಲಿ ಉಲ್ಲೇಖಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktntcm2gr4ydb85sdbmb9gzf,imgname-mandya-cloth-merchant-family-death-1780996264016.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.09): ಸ&lt;/strong&gt;ಕ್ಕರೆ ನಾಡು ಮಂಡ್ಯದಲ್ಲಿ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸುವಂತಹ ಅತ್ಯಂತ ದಾರುಣ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಲದ ಒತ್ತಡ ಹಾಗೂ ವ್ಯಾಪಾರದಲ್ಲಿ ಉಂಟಾದ ತೀವ್ರ ನಷ್ಟದಿಂದ ಬೇಸತ್ತ ಬಟ್ಟೆ ವ್ಯಾಪಾರಿಯೊಬ್ಬರು, ತಮ್ಮ ಪತ್ನಿ ಮತ್ತು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾವೂ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.&lt;/p&gt;&lt;p&gt;ಮಂಡ್ಯದ ನೆಹರು ನಗರದಲ್ಲಿ ಈ ದುರಂತ ಸಂಭವಿಸಿದ್ದು, ಪ್ರಭಾಕರ್ (65), ಅವರ ಪತ್ನಿ ಜ್ಯೋತಿ (55) ಹಾಗೂ ಮಗ ಸಂತೋಷ್ (30) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.&lt;/p&gt;&lt;h2&gt;&lt;strong&gt;ಮಧ್ಯರಾತ್ರಿ ನಡೆದ ಕ್ರೂರ ಕೃತ್ಯ:&lt;/strong&gt;&lt;/h2&gt;&lt;p&gt;ಪೊಲೀಸ್ ಮೂಲಗಳು ಮತ್ತು ಸ್ಥಳದಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ನಿನ್ನೆ ಮಧ್ಯರಾತ್ರಿ ಸುಮಾರು 3:30ರ ಸುಮಾರಿಗೆ ಈ ಭೀಕರ ಘಟನೆ ನಡೆದಿದೆ. ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಭಾಕರ್, ಮೊದಲು ಪತ್ನಿ ಜ್ಯೋತಿಯನ್ನು ಪಂಚೆ ಅಥವಾ ವೇಲ್&zwnj;ನಿಂದ ಉಸಿರುಗಟ್ಟಿಸಿ ಕೊಂದಿದ್ದಾರೆ. ಈ ವೇಳೆ ತಾಯಿಯ ರಕ್ಷಣೆಗೆ ಬಂದ ಅಥವಾ ತಡೆಯಲು ಯತ್ನಿಸಿದ ಮಗ ಸಂತೋಷ್&zwnj;ನನ್ನೂ ಸಹ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಪತ್ನಿ ಮತ್ತು ಮಗ ಇಬ್ಬರೂ ಪ್ರಾಣಬಿಟ್ಟ ಬಳಿಕ, ಪ್ರಭಾಕರ್ ಅವರು ನೆಹರು ನಗರದಲ್ಲಿದ್ದ ತಮ್ಮ ಸ್ವಂತ ಬಟ್ಟೆ ಅಂಗಡಿಗೆ ತೆರಳಿ ಅಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.&lt;/p&gt;&lt;h2&gt;&lt;strong&gt;ಕೊಲೆಯಾದರೂ ಸೊಸೆಗೆ ತಿಳಿಯಲಿಲ್ಲ&lt;/strong&gt;&lt;/h2&gt;&lt;p&gt;ಈ ಇಡೀ ಘಟನೆಯ ಅತ್ಯಂತ ಕರುಣಾಜನಕ ಸಂಗತಿಯೆಂದರೆ, ಮಗ ಸಂತೋಷ್&zwnj;ಗೆ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಘಟನೆ ನಡೆದಾಗ ಬೆಳಗಿನ ಜಾವ 3:30 ಆಗಿದ್ದರಿಂದ ನವವಿವಾಹಿತ ಸೊಸೆ ಗಾಢ ನಿದ್ರೆಯಲ್ಲಿದ್ದರು. ಮನೆಯ ಮತ್ತೊಂದು ಕೋಣೆಯಲ್ಲಿ ಮಾವನೇ ಗಂಡ ಹಾಗೂ ಅತ್ತೆಯನ್ನು ಕೊಲೆ ಮಾಡುತ್ತಿದ್ದರೂ ಆಕೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಮುಂಜಾನೆ ಎದ್ದು ತಿಂಡಿ ಸಿದ್ಧಪಡಿಸಿ, ಅತ್ತೆಯನ್ನು ಎಬ್ಬಿಸಲು ಕೋಣೆಗೆ ಹೋದಾಗ ಜ್ಯೋತಿ ಮತ್ತು ಸಂತೋಷ್ ಶವವಾಗಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಈ ವಿಷಯ ಹೊರಬಿದ್ದಿದ್ದು, ಯುವತಿಯ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;h2&gt;&lt;strong&gt;ಸರ್ಕಾರದ 'ಶಕ್ತಿ ಯೋಜನೆ' ಕಾರಣವೆಂದ ಡೆತ್&zwnj;ನೋಟ್!&lt;/strong&gt;&lt;/h2&gt;&lt;p&gt;ಘಟನಾ ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆಯ ಪೊಲೀಸರು ಹಾಗೂ ಮಂಡ್ಯ ಎಸ್ಪಿ ಶೋಭರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರಭಾಕರ್ ಬರೆದಿದ್ದಾರೆ ಎನ್ನಲಾದ ಆಘಾತಕಾರಿ 'ಡೆತ್&zwnj;ನೋಟ್' ಒಂದು ಪತ್ತೆಯಾಗಿದೆ. ಈ ಡೆತ್&zwnj;ನೋಟ್&zwnj;ನಲ್ಲಿ ಪ್ರಭಾಕರ್ ತಮ್ಮ ಸಾವಿಗೆ ಮತ್ತು ಕುಟುಂಬದ ಅಂತ್ಯಕ್ಕೆ ಆರ್ಥಿಕ ಸಂಕಷ್ಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ.&lt;/p&gt;&lt;h2&gt;&lt;strong&gt;ಡೆತ್&zwnj;ನೋಟ್&zwnj;ನ ಪ್ರಮುಖಾಂಶಗಳು:&lt;/strong&gt;&lt;/h2&gt;&lt;ul&gt; &lt;li&gt;ಸರ್ಕಾರ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣದ 'ಶಕ್ತಿ ಯೋಜನೆ'ಯಿಂದಾಗಿ ಜನರು ಬೇರೆ ನಗರಗಳಿಗೆ ತೆರಳುತ್ತಿರುವುದರಿಂದ ಸ್ಥಳೀಯ ಬಟ್ಟೆ ವ್ಯಾಪಾರ ಸಂಪೂರ್ಣ ಕುಸಿದಿದೆ.&lt;/li&gt; &lt;li&gt;ವ್ಯಾಪಾರ ಇಲ್ಲದ ಕಾರಣ ಖಾಸಗಿ ಫೈನಾನ್ಸ್&zwnj;ಗಳಲ್ಲಿ ಮಾಡಿದ್ದ ಸಾಲಕ್ಕೆ ಸರಿಯಾಗಿ ಬಡ್ಡಿ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ.&lt;/li&gt; &lt;li&gt;ಸಾಲ ಮರುಪಾವತಿ ಮಾಡದಿದ್ದರೆ ಖಾಸಗಿ ಫೈನಾನ್ಸ್ ಕಂಪನಿಗಳ ಏಜೆಂಟರು ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುವ ಭಯವಿತ್ತು. ಮಾನ, ಮರ್ಯಾದೆಗೆ ಹೆದರಿ ಈ ನಿರ್ಧಾರ ಕೈಗೊಂಡಿರುವುದಾಗಿ ಬರೆಯಲಾಗಿದೆ.&lt;/li&gt;&lt;/ul&gt;&lt;h2&gt;&lt;strong&gt;ಪೊಲೀಸ್ ತನಿಖೆ ಚುರುಕು:&lt;/strong&gt;&lt;/h2&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಂಡ್ಯ ಎಸ್ಪಿ ಶೋಭರಾಣಿ ಅವರು, 'ಸ್ಥಳದಲ್ಲಿ ಡೆತ್&zwnj;ನೋಟ್ ಪತ್ತೆಯಾಗಿರುವುದು ನಿಜ. ಅದರಲ್ಲಿ ಸಾಲದ ಕಿರುಕುಳ ಮತ್ತು ವ್ಯಾಪಾರ ನಷ್ಟದ ಬಗ್ಗೆ ಬರೆಯಲಾಗಿದೆ. ಸದ್ಯಕ್ಕೆ ಮೂರೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಾಸಗಿ ಫೈನಾನ್ಸ್&zwnj;ಗಳ ಕಿರುಕುಳದ ಬಗ್ಗೆಯೂ ತನಿಖೆ ನಡೆಸಲಾಗುವುದು' ಎಂದು ತಿಳಿಸಿದ್ದಾರೆ. ಒಂದೆಡೆ ಮಗನ ಮದುವೆಯ ಸಡಗರ ಮುಗಿಯುವ ಮುನ್ನವೇ ಇಡೀ ಕುಟುಂಬ ಹೀಗೆ ದುರಂತ ಅಂತ್ಯ ಕಂಡಿರುವುದು ಮಂಡ್ಯ ಜನತೆಯನ್ನು ಕಣ್ಣೀರಲ್ಲಿ ಮುಳುಗಿಸಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-cloth-merchant-family-tragedy-3-dead-businessman-blames-govt-shakti-scheme-and-debt-sat/articleshow-rkyhmac"/>
        </item>
        <item>
            <title><![CDATA[ಮಂಡ್ಯ: ಮಳವಳ್ಳಿ ಶಾಲೆ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಶಂಕೆ, 67 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!]]></title>
            <link>https://kannada.asianetnews.com/karnataka-districts/mandya-malavalli-school-mid-day-meal-scare-students-hospitalized-after-suspected-lizard-tail-found-in-food-gdp/articleshow-rvmb0q6</link>
            <guid isPermaLink="true">https://kannada.asianetnews.com/karnataka-districts/mandya-malavalli-school-mid-day-meal-scare-students-hospitalized-after-suspected-lizard-tail-found-in-food-gdp/articleshow-rvmb0q6</guid>
            <pubDate>Thu, 18 Jun 2026 19:41:31 +0530</pubDate>
            <description><![CDATA[ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಶಂಕೆಯಿಂದ ಆತಂಕ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಊಟ ಸೇವಿಸಿದ್ದ 67 ವಿದ್ಯಾರ್ಥಿಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಪ್ರಕಾರ ಎಲ್ಲಾ ಮಕ್ಕಳ ಆರೋಗ್ಯ ಸ್ಥಿರವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvdgvrs3aj8cdb7r08mw8c7j,imgname-mandya-mid-day-meal-1781791580960.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ&lt;/strong&gt;: ಜಿಲ್ಲೆಯ ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ಶಾಲೆಯಲ್ಲಿ ಇಂದು ಮಧ್ಯಾಹ್ನ ವಿತರಿಸಲಾದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಊಟ ಸೇವಿಸಿದ್ದ ಒಟ್ಟು 67 ವಿದ್ಯಾರ್ಥಿಗಳನ್ನು ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.&lt;/p&gt;&lt;h2&gt;ತಟ್ಟೆಯಲ್ಲಿ ಪತ್ತೆಯಾದ ಹಲ್ಲಿಯ ಬಾಲದಂತಹ ವಸ್ತು!&lt;/h2&gt;&lt;p&gt;ಇಂದು ಮಧ್ಯಾಹ್ನದ ಬಿಡುವಿನ ವೇಳೆಯಲ್ಲಿ ಎಂದಿನಂತೆ ಶಾಲೆಯ ಮಕ್ಕಳಿಗೆ ಬಿಸಿಯೂಟವನ್ನು ಬಡಿಸಲಾಗಿತ್ತು. ಈ ವೇಳೆ ಊಟ ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯ ತಟ್ಟೆಯಲ್ಲಿ ಹಲ್ಲಿಯ ಬಾಲವನ್ನು ಹೋಲುವ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದೆ. ಇದನ್ನು ಕಂಡು ಆತಂಕಗೊಂಡ ವಿದ್ಯಾರ್ಥಿ ತಕ್ಷಣವೇ ಶಿಕ್ಷಕರ ಗಮನಕ್ಕೆ ತಂದಿದ್ದಾನೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಇಡೀ ಶಾಲೆಯ ವಿದ್ಯಾರ್ಥಿಗಳು ತೀವ್ರ ಭಯ ಮತ್ತು ಕಳವಳಕ್ಕೆ ಒಳಗಾಗಿದ್ದಾರೆ.&lt;/p&gt;&lt;h2&gt;ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದೌಡಾಯಿಸಿದ ಶಿಕ್ಷಕರು&lt;/h2&gt;&lt;p&gt;ವಿಷಯ ತಿಳಿಯುತ್ತಿದ್ದಂತೆ ಸಮಯ ಪ್ರಜ್ಞೆ ಮೆರೆದ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಅಷ್ಟರೊಳಗಾಗಲೇ ಬಿಸಿಯೂಟ ಸೇವಿಸಿದ್ದ ಶಾಲೆಯ ಎಲ್ಲಾ 67 ಮಕ್ಕಳನ್ನು ತಕ್ಷಣವೇ ವಾಹನಗಳ ವ್ಯವಸ್ಥೆ ಮಾಡಿ ಮಳವಳ್ಳಿ ತಾಲೂಕು ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಶುಶ್ರೂಷಕರ ತಂಡವು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಎಲ್ಲಾ ಮಕ್ಕಳನ್ನು ಪ್ರತ್ಯೇಕ ವಾರ್ಡ್&zwnj;ಗಳಲ್ಲಿ ದಾಖಲಿಸಿಕೊಂಡು ತಪಾಸಣಾ ಕಾರ್ಯವನ್ನು ಆರಂಭಿಸಿದ್ದಾರೆ.&lt;/p&gt;&lt;h2&gt;ಮಕ್ಕಳ ಆರೋಗ್ಯ ಸ್ಥಿರ: ಅಡುಗೆ ತಯಾರಕರೂ ಸುರಕ್ಷಿತ&lt;/h2&gt;&lt;p&gt;ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಾವುದೇ ಮಗುವಿನ ಆರೋಗ್ಯದಲ್ಲೂ ಏರುಪೇರಾಗಿಲ್ಲ ಮತ್ತು ಯಾರಲ್ಲೂ ವಿಷಾಹಾರ ಸೇವನೆಯ (Food Poisoning) ಲಕ್ಷಣಗಳು ಕಂಡುಬಂದಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಿಶೇಷವೆಂದರೆ, ನಿಯಮದ ಪ್ರಕಾರ ಮಕ್ಕಳಿಗೆ ಊಟ ಬಡಿಸುವ ಮುನ್ನ ಶಾಲೆಯ ಅಡುಗೆ ತಯಾರಕರು ಆಹಾರವನ್ನು ಸೇವಿಸಿ ಪರೀಕ್ಷಿಸಿದ್ದರು. ಅವರಿಗೂ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಎದುರಾಗಿಲ್ಲ. ಸದ್ಯಕ್ಕೆ ಮಕ್ಕಳಿಗೆ ಯಾವುದೇ ಅಸ್ವಸ್ಥತೆಯ ಲಕ್ಷಣಗಳು ಇಲ್ಲದಿದ್ದರೂ, ಪೋಷಕರು ಮತ್ತು ಶಿಕ್ಷಕರ ಆತಂಕ ನಿವಾರಿಸುವ ಸಲುವಾಗಿ ಹಾಗೂ ಮುಂಜಾಗ್ರತಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಲ್ಲೇ ಉಳಿಸಿಕೊಂಡು ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ.&lt;/p&gt;&lt;p&gt;ಘಟನೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಪೋಷಕರು ಆಸ್ಪತ್ರೆಯ ಬಳಿ ಜಮಾಯಿಸಿದ್ದು, ಮಕ್ಕಳ ಆರೋಗ್ಯ ಸ್ಥಿರವಾಗಿರುವ ಕಾರಣ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಶಾಲಾ ಬಿಸಿಯೂಟದ ನೈರ್ಮಲ್ಯದ ಕುರಿತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mandya-malavalli-school-mid-day-meal-scare-students-hospitalized-after-suspected-lizard-tail-found-in-food-gdp/articleshow-rvmb0q6"/>
        </item>
        <item>
            <title><![CDATA[ಮೇಲುಕೋಟೆ ದೇಗುಲದಲ್ಲಿ ಕಳ್ಳತನ: ಯೋಗನರಸಿಂಹಸ್ವಾಮಿ ಬೆಟ್ಟದ ಅರ್ಚಕ ಸೇರಿ 6 ಮಂದಿ ಅಮಾನತ್ತು]]></title>
            <link>https://kannada.asianetnews.com/state/melukote-temple-theft-case-fir-filed-against-6-accused-including-priest-rav/articleshow-untd7df</link>
            <guid isPermaLink="true">https://kannada.asianetnews.com/state/melukote-temple-theft-case-fir-filed-against-6-accused-including-priest-rav/articleshow-untd7df</guid>
            <pubDate>Fri, 19 Jun 2026 08:01:24 +0530</pubDate>
            <description><![CDATA[&lt;p&gt;ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟದ ದೇಗುಲದಲ್ಲಿ ಕಳ್ಳತನ ಆರೋಪದ ಮೇಲೆ ಅರ್ಚಕ ಎಸ್. ನಾರಾಯಣಭಟ್ಟ ಸೇರಿದಂತೆ ಆರು ಮಂದಿ ವಿರುದ್ಧ ಎಫ್&zwnj;ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲರನ್ನೂ ಅಮಾನತುಗೊಳಿಸಿ ಆದೇಶ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvev9tv4s5tnpp7vdmvgkc76,imgname----------------------8--1781836082020.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೇಲುಕೋಟೆ (ಜೂ.19):&lt;/strong&gt; ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಯೋಗನರಸಿಂಹಸ್ವಾಮಿ ಬೆಟ್ಟ(Yoganarasimhaswamy hill)ದ ಅರ್ಚಕ ಎಸ್.ನಾರಾಯಣಭಟ್ಟ(S Narayana bhat) ಸೇರಿ 6 ಮಂದಿ ವಿರುದ್ಧ ಎಫ್&zwnj;ಐಆರ್(FIR) ದಾಖಲಾಗಿದ್ದ ಹಿನ್ನೆಲೆಯಲ್ಲಿ 6 ಮಂದಿಯನ್ನೂ ಜಿಲ್ಲಾಧಿಕಾರಿಗಳು ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.&lt;/p&gt;&lt;h3&gt;ಬದಲಿ ಅರ್ಚಕ ನೇಮಕ&lt;/h3&gt;&lt;p&gt;ಈ ಹಿನ್ನೆಲೆಯಲ್ಲಿ ಅರ್ಚಕರಾಗಿ ರಾಮಾನುಜರ ಸನ್ನಿಧಿಯ ಅರ್ಚಕ ವಿದ್ವಾನ್ ಬಿ.ವಿ. ಆನಂದಾಳ್ವಾರ್ ಜವಾಬ್ದಾರಿ ವಹಿಸಿಕೊಂಡು ಗುರುವಾರ ರಾತ್ರಿಯೇ ದೇಗುಲದಲ್ಲಿ ಪೂಜೆ ಆರಂಭಿಸಿದರು. ಇವರೊಟ್ಟಿಗೆ ಬದಲಿಯಾಗಿ ನಿಯೋಜಿಸಿದ ಇತರ ನೌಕರರೂ ಕರ್ತವ್ಯಕ್ಕೆ ಹಾಜರಾಗಿದ್ದಾರೆ.&lt;/p&gt;&lt;p&gt;ದೇವಸ್ಥಾನದ ಅರ್ಚಕರಾಗಿದ್ದ ನಾರಾಯಣ ಭಟ್ಟ ಸೇರಿದಂತೆ 6 ಮಂದಿ ವಿರುದ್ಧ ಚೆಲುವನಾರಾಯಣಸ್ವಾಮಿ ದೇಗುಲ(Cheluvanarayanaswamy temple)ದ ಇಒ ಶೀಲಾ ನೀಡಿದ ದೂರಿನನ್ವಯ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಆರೋಪದ ಸಂಬಂಧ ಎಫ್&zwnj;ಐಆರ್ ದಾಖಲಾಗಿತ್ತು.&lt;/p&gt;&lt;p&gt;ದೇವಾಲಯದ ವ್ಯವಸ್ಥಾಪನಾ ಸಮಿತಿ ಜೂನ್ 16ರಂದು ತುರ್ತು ಸಭೆ ಸೇರಿ ಅರ್ಚಕ ನಾರಾಯಣಭಟ್ಟ ಪಾರುತ್ತೇಗಾರ್ ಶ್ರೀಧರ, ಅರ್ಚಕ ನಾರಾಯಣಭಟ್ಟ, ಪರಿಚಾರಕ ತಿರುವೇಂಗಡಾಚಾರ್, ಕಾವಲುಗಾರ ಎಂ.ಬಿ ಗಂಗಾಧರ, ಬಸವರಾಜು, ಮಣೇಗಾರ್ ಕಸ್ತೂರಿ ಶ್ರೀನಿವಾಸನ್ ರನ್ನು ಧಾರ್ಮಿಕದತ್ತಿ ಕಾಯ್ದೆ ನಿಯಮಾವಳಿಗಳಂತೆ ಅಮಾನತ್ತುಗೊಳಿಸಿ ತೆರವಾದ ಹುದ್ದೆಗಳಿಗೆ ಬೇರೆ ವ್ಯವಸ್ಥೆಮಾಡಿ ಇಲಾಖೆ ತನಿಖೆ ನಡೆಸಬಹುದೆಂದು ಶಿಪಾರಸ್ಸು ಮಾಡಿತ್ತು.&lt;/p&gt;&lt;p&gt;ಒಂದೇ ದಿನದಲ್ಲಿ ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿ ಕುಮಾರ್ ಅಮಾನತ್ತು ಆದೇಶ ಮಾಡಿದ್ದಾರೆ. ಹೀಗಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಸಮಕ್ಷಮದಲ್ಲಿ ಯೋಗಾನರಸಿಂಹಸ್ವಾಮಿ ಬೆಟ್ಟದ ಸುಗಮ ಆಡಳಿತ ನಿರ್ವಹಣೆಗಾಗಿ ಪಾರುಪತ್ತೇಗಾರ್ ಶ್ರೀಧರ ಬದಲಿಗೆ ಸ್ಥಾನೀಕ ಶ್ರೀರಾಮನ್, ಪರಿಚಾರಕರ ಬದಲಿಗೆ ಸ್ಥಾನೀಕಂ ಸಂಪತ್ ಕುಮಾರನ್, ಮಣೆಗಾರ ಹುದ್ದೆಗೆ ನರಸಿಂಹನ್ ಕಾಮಲುಗಾರ ಎಂ.ಬಿ.ಗಂಗಾಧರ ಮತ್ತು ಬಸವರಾಜು ಬದಲಿಗೆ ನಾರಾಯಣ ಮತ್ತು ಕಿಶೋರನ್ನು ನೇಮಿಸಿ ಗುರುವಾರ ಸಂಜೆಯೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.&lt;/p&gt;&lt;p&gt;ಮೇಲುಕೋಟೆ ಇನ್ಸ್ ಪೆಕ್ಟರ್ ಪೊಲೀಸ್ ಭದ್ರತೆ ನೀಡಿದ್ದರು.&lt;/p&gt;&lt;h3&gt;ಪೊಲೀಸರಿಂದ ವಿಚಾರಣೆ ಆರಂಭ:&lt;/h3&gt;&lt;p&gt;ದೇವಾಲಯದ ಹುಂಡಿಯಲ್ಲಿ ಭಕ್ತರು ಹಾಕಿದ ಚಿನ್ನ, ಬೆಳ್ಳಿ ಸೇರಿದಂತೆ ನಗದು ಕಳ್ಳತನ, ಗರ್ಭಗೃಹ ಹಾಗೂ ಇತರ ಕಡೆಗಳಲ್ಲಿ ರಹಸ್ಯ ಕ್ಯಾಮೆರಾ ನಾಶ, ಡಿವಿಆರ್ ಸುಟ್ಟುಹಾಕಿದ್ದ ಆರೋಪದ ಕುರಿತು ದೇಗುಲದ ಇಒ ಶೀಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.&lt;/p&gt;&lt;p&gt;ಭಕ್ತರು ನೀಡಿರುವ ಒಡವೆ ವಸ್ತ್ರಗಳನ್ನು ದಾಖಲೆಗೆ ತೋರಿಸದೆ ಕದ್ದಿರುವ ಶಂಕೆಯೂ ಇದ್ದು ಪೊಲೀಸು ವಿಚಾರಣೆಯನ್ನು ಸಹ ಆರಂಭಿಸಿದ್ದಾದೆ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/melukote-temple-theft-case-fir-filed-against-6-accused-including-priest-rav/articleshow-untd7df"/>
        </item>
        <item>
            <title><![CDATA[ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಯತ್ನ: ಎಚ್‌ಡಿಕೆ ಆರೋಪ]]></title>
            <link>https://kannada.asianetnews.com/karnataka-districts/hd-kumaraswamy-attack-on-congress-over-alliance-politics-gvd/articleshow-viz1grx</link>
            <guid isPermaLink="true">https://kannada.asianetnews.com/karnataka-districts/hd-kumaraswamy-attack-on-congress-over-alliance-politics-gvd/articleshow-viz1grx</guid>
            <pubDate>Wed, 10 Jun 2026 21:21:27 +0530</pubDate>
            <description><![CDATA[&lt;p&gt;ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ರಾಜ್ಯಸಭೆ ಟಿಕೆಟ್&zwnj;ಗೆ ದೇವೇಗೌಡರು ಅರ್ಜಿಯನ್ನೇ ಹಾಕಿರಲಿಲ್ಲ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kb384tqyt6sdh4e1t4hr3erm,imgname-hd-kumaraswamy-1764267027198.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.10):&lt;/strong&gt; ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ರಾಜ್ಯಸಭೆ ಟಿಕೆಟ್&zwnj;ಗೆ ದೇವೇಗೌಡರು ಅರ್ಜಿಯನ್ನೇ ಹಾಕಿರಲಿಲ್ಲ. ಇದುವರೆಗೆ ದೇವೇಗೌಡರ ಬಗ್ಗೆ ಇಲ್ಲದ ಅನುಕಂಪ ಕಾಂಗ್ರೆಸ್&zwnj;ಗೆ ಈಗ ಬಂದಿದೆಯೇ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.&lt;/p&gt;&lt;p&gt;ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ತಗ್ಗಹಳ್ಳಿಯಲ್ಲಿ ರಾಜ್ಯಸಭೆ ಪ್ರವೇಶಕ್ಕೆ ದೇವೇಗೌಡರಿಗೆ ಬಿಜೆಪಿ ಟಿಕೆಟ್ ಸಿಗದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಟಿಕೆಟ್ ಕೊಡುವಂತೆ ದೇವೇಗೌಡರು ಯಾರ ಬಳಿಯೂ ಅರ್ಜಿ ಹಾಕಿರಲಿಲ್ಲ. ಬಿಜೆಪಿ ಪಕ್ಷದಲ್ಲೇ 60 ಜನ ಶಾಸಕರಿರುವಾಗ ನಾವು ಕೇಳುವುದು ಎಷ್ಟರಮಟ್ಟಿಗೆ ಸರಿ. 70 ವರ್ಷದ ಗೌಡರ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ಹೇಗೆ ನಡೆಸಿಕೊಂಡಿದೆ ಎನ್ನುವುದು ಗೊತ್ತಿದೆ. ಈಗ ದೇವೇಗೌಡರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಮೈತ್ರಿಪಕ್ಷದ ಬಗ್ಗೆ ಅವರಿಗೆ ಆತಂಕವಿದೆ. ಅದಕ್ಕಾಗಿ ಮೈತ್ರಿಯಲ್ಲಿ ಬಿರುಕು ಮೂಡುವಂತೆ ಮಾಡಲು ಒಕ್ಕಲಿಗರಿಗೆ ಅನ್ಯಾಯ ಎಂದು ಬೊಗಳೆ ಬಿಡುತ್ತಿದ್ದಾರೆ ಎಂದು ದೂಷಿಸಿದರು.&lt;/p&gt;&lt;p&gt;ಈ ಹಿಂದೆಯೂ ದೇವೇಗೌಡರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಿರಲಿಲ್ಲ. ದೇವೇಗೌಡರ ವಿರುದ್ಧ ಮತ್ತೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಹಾಗಾಗಿ ಅವರನ್ನು ಅನಿವಾರ್ಯವಾಗಿ ಬೆಂಬಲಿಸಬೇಕಾಯಿತು. ದೇವೇಗೌಡರದ್ದು ಹೋರಾಟದ ಬದುಕು. ಅಧಿಕಾರ ಕೇಳಿಕೊಂಡು ಇನ್ನೊಬ್ಬರ ಮನೆ ಬಾಗಿಲಿಗೆ ಎಂದೂ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದರು ಎಂದರು.&lt;/p&gt;&lt;p&gt;ರಾಜ್ಯದಲ್ಲಿ ಒಕ್ಕಲಿಗ ಮುಖ್ಯಮಂತ್ರಿ ಇರಬೇಕಾದರೆ ರಾಜ್ಯಸಭೆ ತೆಗೆದುಕೊಂಡು ಏನು ಮಾಡುತ್ತೀರಾ. ಏನು ಮಾಡುವರೆಂದು ಎರಡು ತಿಂಗಳು ಕಾದು ನೋಡೋಣ ಎಂದ ಕುಮಾರಸ್ವಾಮಿ, ನಾನು ಸಲಹೆ ನೀಡುವಷ್ಟು ದೊಡ್ಡವನಲ್ಲ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಏನು ಹರಿದಿದ್ದಾರೆ ಎಂದು ಅವರೇ (ಡಿ.ಕೆ.ಶಿವಕುಮಾರ್) ಹೇಳಿದ್ದಾರೆ. ಎಲ್ಲದಕ್ಕೂ ಸಾಕ್ಷಿ ಗುಡ್ಡೆ ಕೇಳುತ್ತಾರೆ. ಹಾಗಾಗಿ ನಾನೇನು ಹರಿದಿಲ್ಲ, ನಮ್ಮ ಬಳಿ ಏನು ಸಲಹೆ ಕೇಳುತ್ತಾರೆ ಎಂದು ವ್ಯಂಗ್ಯವಾಡಿದರಲ್ಲದೇ, &lsquo;ಅತಿ ವಿನಯಂ ಧೂರ್ತ ಲಕ್ಷಣಂ&rsquo; ಎಂದು ಮೂದಲಿಸಿದರು.&lt;/p&gt;&lt;h2&gt;&lt;strong&gt;ಗೇಮ್ ಪ್ಲಾನ್ ಇಲ್ಲ&lt;/strong&gt;&lt;/h2&gt;&lt;p&gt;ಮುಂದಿನ 2028ರ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗುವುದಕ್ಕಿಂತ ಹೆಚ್ಚಾಗಿ ರಾಜ್ಯದ ಜನರನ್ನು ಉಳಿಸಬೇಕಿದೆ. ಆ ಶಕ್ತಿ ಮೈತ್ರಿ ಪಕ್ಷಗಳಿಗೆ ತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ವಿಧಾನ ಪರಿಷತ್&zwnj;ಗೆ ಜೆಡಿಎಸ್&zwnj;ನಿಂದ ಅಭ್ಯರ್ಥಿ ಹಾಕಿರುವ ವಿಚಾರದ ಬಗ್ಗೆ ಕೇಳಿದಾಗ, ನಮಗೂ ಎರಡು ಮತ ಬೇಕು, ಕಾಂಗ್ರೆಸ್&zwnj;ನವರಿಗೂ ಎರಡು ಮತ ಬೇಕು. ಇದರಲ್ಲಿ ಯಾವುದೇ ಗೇಮ್ ಪ್ಲಾನ್ ಇಲ್ಲ. ನಾವು ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಯತ್ನಾಳ್ ಅವರನ್ನು ಕೇಳುತ್ತೇವೆ. ಅವರಿಗೆ ಹಣ ಬಲ ಇದೆ, ನೋಡೋಣ ಏನಾಗುತ್ತೆ ಎಂದರು.&lt;/p&gt;&lt;p&gt;ಗ್ಯಾಸ್, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ಕೇಳಿದಾಗ, ಜನರ ಮೇಲೆ ಬೇಕೂಂತ ಕೇಂದ್ರ ಹೊರೆ ಹಾಕಿಲ್ಲ. ಕೊಲ್ಲಿ ಯುದ್ಧದ ಪರಿಣಾಮ ಏರಿಕೆಯಾಗಿದೆ. ಇದು ಕೇವಲ ಭಾರತದಲ್ಲಿ ಮಾತ್ರ ಆಗಿರುವುದಲ್ಲ. ವಿಶ್ವದ ಎಲ್ಲಾ ದೇಶಗಳಿಗೂ ಈ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್&zwnj;ನವರು ಎಲ್ಲದಕ್ಕೂ ಬೆಲೆ ಏರಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ ಏನು ಮಾಡುತ್ತಿದ್ದರು ಎಂದು ಖಾರವಾಗಿ ಪ್ರಶ್ನಿಸಿದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-attack-on-congress-over-alliance-politics-gvd/articleshow-viz1grx"/>
        </item>
        <item>
            <title><![CDATA[Mandya: ಲಕ್ಷ್ಮೀಸಾಗರದಲ್ಲಿ ಕಣ್ಣೀರಿನ ಕಥೆ: ಚೆಂಡಿನೊಂದಿಗೆ ಆಟವಾಡುತ್ತಿದ್ದ ಮಗು ನೀರಿನ ಸಂಪಿಗೆ ಬಿದ್ದು ಸಾವು]]></title>
            <link>https://kannada.asianetnews.com/crime/pandavapura-2-year-old-boy-dies-after-falling-into-water-sump-gvd/articleshow-w6eige6</link>
            <guid isPermaLink="true">https://kannada.asianetnews.com/crime/pandavapura-2-year-old-boy-dies-after-falling-into-water-sump-gvd/articleshow-w6eige6</guid>
            <pubDate>Sun, 14 Jun 2026 19:48:05 +0530</pubDate>
            <description><![CDATA[&lt;p&gt;Mandya: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಆಕಸ್ಮಿಕವಾಗಿ ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಷ್ಮೀಸಾಗರದಲ್ಲಿ ನಡೆದಿದೆ. ವಿನೀಶ್ (ವಿನು) (2) ಮೃತ ಬಾಲಕ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn6nnmaht3ar51achbefv9ra,imgname-bengaluru-mother-suicide-child-death-accident-mental-health-family-tragedy-0-1775119290705.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಪಾಂಡವಪುರ (ಜೂ.14): &lt;/strong&gt;ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಆಕಸ್ಮಿಕವಾಗಿ ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಷ್ಮೀಸಾಗರದಲ್ಲಿ ನಡೆದಿದೆ. ಗ್ರಾಮದ ಸುಷ್ಮಾ ಮತ್ತು ಹರೀಶ್ ದಂಪತಿ ಪುತ್ರ ವಿನೀಶ್ (ವಿನು) (2) ಮೃತ ಬಾಲಕ.&lt;/p&gt;&lt;p&gt;ಮೃತ ಮಗುವಿನ ಪಾಲಕರು ಗ್ರಾಮದಲ್ಲಿ ಚಿಲ್ಲರೆ (ದಿನಸಿ) ಅಂಗಡಿ ನಡೆಸುತ್ತಿದ್ದರು. ಘಟನೆಗೂ ಮುನ್ನ ಮಗುವಿನ ತಂದೆ ಹರೀಶ್ ಕೆಲಸ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದಾರೆ. ತಾಯಿ ಮನೆಗೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮಗು ಮನೆಯಲ್ಲಿ ಚೆಂಡಿನೊಂದಿಗೆ ಆಟವಾಡುತ್ತಿದ್ದಾಗ ಚೆಂಡು ಆಕಸ್ಮಿಕವಾಗಿ ಸಂಪಿಗೆ ಉರುಳಿದೆ.&lt;/p&gt;&lt;p&gt;ಚೆಂಡನ್ನು ಹಿಂಬಾಲಿಸುತ್ತಾ ಹೋದ ಮಗು ಆಕಸ್ಮಿಕವಾಗಿ ಸಂಪಿಗೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮಗುವಿನ ಅಜ್ಜಿ ಮತ್ತು ತಾಯಿ ಮಗುವನ್ನು ತಂದೆ ಹೊರಗೆ ಕರೆದುಕೊಂಡು ಹೋಗಿರಬೇಕು ಎಂದು ಭಾವಿಸಿ ಸುಮ್ಮನಾಗಿದ್ದಾರೆ. ಹರೀಶ್&zwnj; ಮನೆಗೆ ಹಿಂದಿರುಗಿದಾಗ ಮಗು ಕಾಣದಿರುವುದಕ್ಕೆ ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ.&lt;/p&gt;&lt;h2&gt;&lt;strong&gt;ಸಂಬಂಧಿಕರ ಆಕ್ರಂದನ&lt;/strong&gt;&lt;/h2&gt;&lt;p&gt;ಈ ವೇಳೆ ಮಗು ಸಂಪಿನಲ್ಲಿ ಕಂಡು ಬಂದಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಮಗು ಸಾವನ್ನಪ್ಪಿರುವುದನ್ನು ವೈದ್ಯರು ಧೃಡ ಪಡಿಸಿದ್ದಾರೆ. ಗ್ರಾಮದ ಹೊರವಲಯದ ಸ್ಮಶಾನದಲ್ಲಿ ಶವ ಸಂಸ್ಕಾರ ನಡೆಸಲಾಯಿತು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಎರಡು ವರ್ಷದ ಮಗು ಸಂಪಿಗೆ ಬಿದ್ದು ಸಾವನ್ನಪ್ಪಿದ ಸುದ್ದಿ ಹರಡುತ್ತಿದ್ದಂತೆ ಗ್ರಾಮದ ಜನರು ಮನೆ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ವಿಧಿಯ ಆಟಕ್ಕೆ ಶಪಿಸಿದರು. ಗ್ರಾಮಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/pandavapura-2-year-old-boy-dies-after-falling-into-water-sump-gvd/articleshow-w6eige6"/>
        </item>
        <item>
            <title><![CDATA[Mandya Police: ಮಂಡ್ಯದಲ್ಲಿ ಕೊಲೆ ಆರೋಪಿ ಸೀಜರ್ ಸಿದ್ದನ ಕಾಲಿಗೆ ಗುಂಡೇಟು ಹೊಡೆದ ಪೊಲೀಸರು!]]></title>
            <link>https://kannada.asianetnews.com/karnataka-districts/mandya-malavalli-police-firing-at-murder-accused-seizure-siddu/articleshow-xhuc7z4</link>
            <guid isPermaLink="true">https://kannada.asianetnews.com/karnataka-districts/mandya-malavalli-police-firing-at-murder-accused-seizure-siddu/articleshow-xhuc7z4</guid>
            <pubDate>Thu, 18 Jun 2026 19:48:34 +0530</pubDate>
            <description><![CDATA[&lt;p&gt;ಮಳವಳ್ಳಿಯ ಮಹೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಿದ್ದರಾಜು ಅಲಿಯಾಸ್ 'ಸೀಜರ್ ಸಿದ್ದು' ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರು ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvdhgpdc9p3exaea93hwkmpz,imgname-mandya-malavalli-police-firing-1781792266667.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.18): ಮಂ&lt;/strong&gt;ಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಭೀಮನಹಳ್ಳಿಯ ಮಹೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಿದ್ದರಾಜು ಅಲಿಯಾಸ್ 'ಸೀಜರ್ ಸಿದ್ದು' ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಸ್ಥಳ ಮಹಜರು ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಕಳೆದ ಕೆಲವು ದಿನಗಳ ಹಿಂದೆ ಮಳವಳ್ಳಿಯ ಭೀಮನಹಳ್ಳಿಯಲ್ಲಿ ಮೆಸೇಜ್ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಾಹನಗಳ ಸೀಜಿಂಗ್ ಕೆಲಸ ಮಾಡುತ್ತಿದ್ದ ಸಿದ್ದರಾಜು ಪ್ರಮುಖ ಆರೋಪಿಯಾಗಿದ್ದನು. ಇಂದು ಬೆಳಿಗ್ಗೆ ಮಳವಳ್ಳಿ ತಾಲ್ಲೂಕಿನ ಹುಲ್ಲೇಗಾಲ ಗ್ರಾಮದ ಬಳಿ ಪೊಲೀಸರು ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆತಂದಿದ್ದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಆರೋಪಿ ಸಿದ್ದರಾಜು ಪೊಲೀಸ್ ಸಿಬ್ಬಂದಿಯ ಮೇಲೆ ಹಠಾತ್ ಹಲ್ಲೆ ನಡೆಸಿ ಅಲ್ಲಿಂದ ಎಸ್ಕೇಪ್ ಆಗಲು ಸಿದ್ಧತೆ ನಡೆಸಿದ್ದನು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆರೋಪಿಯನ್ನು ಹಿಡಿಯಲು ಕಿರುಗಾವಲು ಸಿಪಿಐ ಶ್ರೀಧರ್ ಸಮ್ಮುಖದಲ್ಲಿ ಪಿಎಸ್ಐ ರವಿಕುಮಾರ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಸಿದ್ದರಾಜುನನ್ನು ತಕ್ಷಣವೇ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ಎಸ್ಪಿ ಭೇಟಿ:&lt;/strong&gt;&lt;/h2&gt;&lt;p&gt;ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ವಿ.ಜೆ. ಶೋಭಾರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, 'ಆರೋಪಿ ಸ್ಥಳ ಮಹಜರು ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಅನಿವಾರ್ಯವಾಗಿ ಗುಂಡು ಹಾರಿಸಿ ಬಂಧಿಸಲಾಗಿದೆ. ಗಾಯಗೊಂಡ ಸಿಬ್ಬಂದಿಗೂ ಚಿಕಿತ್ಸೆ ಕೊಡಿಸಲಾಗುತ್ತಿದೆ' ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಮಹೇಶ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಫೈರಿಂಗ್ ಘಟನೆಯಿಂದ ಮಳವಳ್ಳಿ ಭಾಗದಲ್ಲಿ ಸಂಚಲನ ಮೂಡಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-malavalli-police-firing-at-murder-accused-seizure-siddu/articleshow-xhuc7z4"/>
        </item>
    </channel>
</rss>
