<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 03 Apr 2026 06:38:46 +0530</lastBuildDate>
        <atom:link href="https://kannada.asianetnews.com/rss/mandya" rel="self" type="application/rss+xml"/>
        <item>
            <title><![CDATA[ಮಂಡ್ಯ ಪೊಲೀಸ್ ಠಾಣೆ, ಗ್ಯಾಸ್ ವಿತರಣಾ ಕೇಂದ್ರವಾದ ಕಥೆ; ಸಿಲಿಂಡರ್‌ ಲಾರಿಗೆ ಮುಗಿಬಿದ್ದ ಜನ, ಮುಂದೇನಾಯ್ತು?]]></title>
            <link>https://kannada.asianetnews.com/gallery/karnataka-districts/mandya-kr-pet-gas-cylinder-chaos-police-station-convert-to-temporary-lpg-distribution-agency-office-sat-124fy60</link>
            <guid isPermaLink="true">https://kannada.asianetnews.com/gallery/karnataka-districts/mandya-kr-pet-gas-cylinder-chaos-police-station-convert-to-temporary-lpg-distribution-agency-office-sat-124fy60</guid>
            <pubDate>Sun, 22 Mar 2026 19:23:48 +0530</pubDate>
            <description><![CDATA[&lt;p&gt;ಕೆ.ಆರ್.ಪೇಟೆಯಲ್ಲಿ ಅಡುಗೆ ಅನಿಲ ಸಿಗುವುದಿಲ್ಲ ಎಂಬ ವದಂತಿಯಿಂದಾಗಿ ಸಿಲಿಂಡರ್&zwnj;ಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ, ಗ್ಯಾಸ್ ಲಾರಿಯನ್ನು ಪೊಲೀಸ್ ಠಾಣೆಗೆ ಸ್ಥಳಾಂತರಿಸಿ ಅಲ್ಲಿಯೇ ಸಿಲಿಂಡರ್&zwnj;ಗಳನ್ನು ವಿತರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmawah5mvbkzzc2t5rnjq4pj,imgname-mandya-lpg-gas-trouble--4--1774186742964.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೆ.ಆರ್.ಪೇಟೆಯಲ್ಲಿ ಅಡುಗೆ ಅನಿಲ ಸಿಗುವುದಿಲ್ಲ ಎಂಬ ವದಂತಿಯಿಂದಾಗಿ ಸಿಲಿಂಡರ್&zwnj;ಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ, ಗ್ಯಾಸ್ ಲಾರಿಯನ್ನು ಪೊಲೀಸ್ ಠಾಣೆಗೆ ಸ್ಥಳಾಂತರಿಸಿ ಅಲ್ಲಿಯೇ ಸಿಲಿಂಡರ್&zwnj;ಗಳನ್ನು ವಿತರಿಸಿದರು.&lt;/p&gt;&lt;img&gt;&lt;p&gt;ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಅಡುಗೆ ಅನಿಲ ಸಿಲಿಂಡರ್&zwnj;ಗಾಗಿ ಗ್ರಾಹಕರು ಏಕಾಏಕಿ ಮುಗಿಬಿದ್ದ ಪರಿಣಾಮ ಭಾರೀ ಗೊಂದಲ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ. ಗ್ಯಾಸ್ ಸಿಗುವುದಿಲ್ಲ ಎಂಬ ವದಂತಿ ಅಥವಾ ಆತಂಕಕ್ಕೆ ಒಳಗಾದ ನೂರಾರು ಜನರು ಏಜೆನ್ಸಿಯ ಮುಂದೆ ಜಮಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೊನೆಗೆ ಗ್ಯಾಸ್ ವಿತರಣಾ ಲಾರಿಯನ್ನೇ ಪೊಲೀಸ್ ಠಾಣೆಗೆ ಸ್ಥಳಾಂತರಿಸಿ ಅಲ್ಲಿ ಸಿಲಿಂಡರ್ ಹಂಚಿಕೆ ಮಾಡಲಾದ ಅಪರೂಪದ ಪ್ರಸಂಗ ಜರುಗಿತು.&lt;/p&gt;&lt;img&gt;&lt;p&gt;ಕೆ.ಆರ್.ಪೇಟೆ ಪಟ್ಟಣದ ಮಂಜುನಾಥ್ ಗ್ಯಾಸ್ ಏಜೆನ್ಸಿಯಲ್ಲಿ ಎಂದಿನಂತೆ ಇಂದು ಸಿಲಿಂಡರ್ ವಿತರಣಾ ಕಾರ್ಯ ನಡೆಯುತ್ತಿತ್ತು. ಆದರೆ, ಭಾನುವಾರ ರಜೆ ದಿನವಾದ ಕಾರಣ ಮತ್ತು ಮುಂದಿನ ದಿನಗಳಲ್ಲಿ ಗ್ಯಾಸ್ ಸಿಗುವುದಿಲ್ಲ ಎಂಬ ಸಣ್ಣದೊಂದು ಆತಂಕ ಸಾರ್ವಜನಿಕರಲ್ಲಿ ಮನೆಮಾಡಿತ್ತು. ಇದೇ ಕಾರಣಕ್ಕೆ ಬೆಳಗ್ಗೆಯಿಂದಲೇ ನೂರಾರು ಮಂದಿ ಏಜೆನ್ಸಿಯ ಮುಂದೆ ಜಮಾಯಿಸಿದ್ದರು. ಅಡುಗೆ ಅನಿಲ ತುಂಬಿದ ಲಾರಿ ಕಚೇರಿಯ ಮುಂದೆ ಬರುತ್ತಿದ್ದಂತೆಯೇ ಜನರು ಲಾರಿಯನ್ನು ಸುತ್ತುವರೆದರು.&lt;/p&gt;&lt;img&gt;&lt;p&gt;ಲಾರಿಯಿಂದ ಸಿಲಿಂಡರ್ ಕೆಳಗಿಳಿಸಲು ಬಿಡದಂತೆ ಜನ ಮುಗಿಬಿದ್ದರು. 'ನನಗೆ ಮೊದಲು ಬೇಕು, ನನಗೆ ಮೊದಲು ಬೇಕು' ಎಂಬ ಹಠಕ್ಕೆ ಬಿದ್ದ ಗ್ರಾಹಕರು ಪರಸ್ಪರ ನೂಕಾಟ ತಳ್ಳಾಟದಲ್ಲಿ ತೊಡಗಿದರು. ಏಜೆನ್ಸಿ ಸಿಬ್ಬಂದಿ ಎಷ್ಟೇ ಮನವಿ ಮಾಡಿದರೂ ಜನರು ಸಾಲಿನಲ್ಲಿ ನಿಲ್ಲಲು ತಯಾರಿರಲಿಲ್ಲ. ಈ ಹಂತದಲ್ಲಿ ಏಜೆನ್ಸಿ ಸಿಬ್ಬಂದಿ ಮತ್ತು ಗ್ರಾಹಕರ ನಡುವೆ ತೀವ್ರ ಮಾತಿನ ಚಕಮಕಿ ಕೂಡ ನಡೆಯಿತು. ಜನಸಂದಣಿ ಮಿತಿ ಮೀರಿದ್ದರಿಂದ ಸಿಲಿಂಡರ್ ವಿತರಣೆ ಮಾಡುವುದು ಏಜೆನ್ಸಿಯವರಿಗೆ ಅಸಾಧ್ಯವಾಯಿತು.&lt;/p&gt;&lt;img&gt;&lt;p&gt;ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಕೆ.ಆರ್.ಪೇಟೆ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಜನರು ಶಾಂತರಾಗದ ಕಾರಣ, ಪೊಲೀಸರು ಒಂದು ಉಪಾಯ ಮಾಡಿದರು. ತುಂಬಿದ್ದ ಗ್ಯಾಸ್ ಸಿಲಿಂಡರ್ ಲಾರಿಯನ್ನು ನೇರವಾಗಿ ಪೊಲೀಸ್ ಠಾಣೆಯ ಆವರಣಕ್ಕೆ ಸ್ಥಳಾಂತರಿಸುವಂತೆ ಸೂಚಿಸಿದರು.&lt;/p&gt;&lt;img&gt;&lt;p&gt;ಲಾರಿಯು ಪೊಲೀಸ್ ಠಾಣೆಗೆ ತಲುಪಿದ ನಂತರ, ಪೊಲೀಸರ ಕಣ್ಗಾವಲಿನಲ್ಲಿ ಕಟ್ಟುನಿಟ್ಟಾದ ಕ್ಯೂ (ಸಾಲಿನಲ್ಲಿ) ನಿಲ್ಲುವಂತೆ ಜನರಿಗೆ ತಿಳಿಸಲಾಯಿತು. ಪೊಲೀಸರ ಸಮ್ಮುಖದಲ್ಲಿ ಯಾವುದೇ ಗಲಾಟೆ ಇಲ್ಲದೆ ಶಿಸ್ತುಬದ್ಧವಾಗಿ ಜನರಿಗೆ ಸಿಲಿಂಡರ್ ವಿತರಿಸಲಾಯಿತು. ಗ್ಯಾಸ್ ಪಡೆದ ಜನರು ನಿಟ್ಟುಸಿರು ಬಿಟ್ಟು ಮನೆಗೆ ತೆರಳಿದರು.&lt;/p&gt;&lt;p&gt;ಒಟ್ಟಾರೆಯಾಗಿ, ಕೆ.ಆರ್.ಪೇಟೆಯಲ್ಲಿ ಅಡುಗೆ ಅನಿಲಕ್ಕಾಗಿ ನಡೆದ ಈ ಹೈಡ್ರಾಮಾವು ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಅನಗತ್ಯವಾಗಿ ಆತಂಕಕ್ಕೆ ಒಳಗಾಗಿ ಇಂತಹ ಪರಿಸ್ಥಿತಿ ನಿರ್ಮಿಸಿಕೊಳ್ಳಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.&lt;/p&gt;&lt;img&gt;&lt;p&gt;ಮದ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಎಲ್&zwnj;ಪಿಜಿ ಗ್ಯಾಸ್ ಪೂರೈಕೆ ಕೊರತೆಯಾಗಿದೆ ಎಂಬುದನ್ನು ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಕೊರತೆಯಿಲ್ಲ ಎಂದು ಸರ್ಕಾರ ಹೇಳಿದರೂ ಕೇಳದ ಜನರು ಸಿಲಿಂಡರ್ ಏಜೆನ್ಸಿ ಕಚೇರಿಗೆ ಮುಗಿಬಿದ್ದಿದ್ದಾರೆ. ಒಂದು ಏಜೆನ್ಸಿ ವ್ಯಾಪ್ತಿಯಲ್ಲಿ ದಿನಕ್ಕೆ 500 ಆಗುತ್ತಿದ್ದ ಬುಕಿಂಗ್ ಸಂಖ್ಯೆ ಇದೀಗ 3000 ಸಾವಿರ ದಾಟಿವೆ. ಹೀಗಾಗಿ, ಗ್ಯಾಸ್ ಸಿಲಿಂಡರ್ ಪೂರೈಕೆ ಸಮಸ್ಯೆ ಕೃತಕವಾಗಿ ಸೃಷ್ಟಿಯಾಗಿದೆಯೇ ಹೊರತು ಸಂಗ್ರಹ ಮತ್ತು ಯಥಾಸ್ಥಿತಿ ಪೂರೈಕೆ ಮಾತ್ರ ನಿಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಗೃಹಬಳಕೆ ಸಿಲಿಂಡರ್&zwnj;ಗೆ ಯಾವುದೇ ಕೊರತೆಯಿಲ್ಲ ಎಂದು ಸರ್ಕಾರ ತಿಳಿಸಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/mandya-kr-pet-gas-cylinder-chaos-police-station-convert-to-temporary-lpg-distribution-agency-office-sat-124fy60"/>
        </item>
        <item>
            <title><![CDATA[ಮಂಡ್ಯ ಜಿಲ್ಲೆಗೆ ಕೈಗಾರಿಕೆಯಲ್ಲಿ ಶಾಶ್ವತ ಕೊಡುಗೆ ನೀಡುವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ]]></title>
            <link>https://kannada.asianetnews.com/politics/hd-kumaraswamy-mandya-arai-vehicle-testing-centre-announcement-gvd/articleshow-1dkm0f8</link>
            <guid isPermaLink="true">https://kannada.asianetnews.com/politics/hd-kumaraswamy-mandya-arai-vehicle-testing-centre-announcement-gvd/articleshow-1dkm0f8</guid>
            <pubDate>Sun, 15 Mar 2026 23:45:54 +0530</pubDate>
            <description><![CDATA[&lt;p&gt;ಆಟೋಮೋಟೀವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ವಾಹನಗಳ ಪರೀಕ್ಷೆ, ಪ್ರಮಾಣೀಕರಣ ಮತ್ತು ತಾಂತ್ರಿಕ ಸಂಶೋಧನೆಗಳನ್ನು ಇಲ್ಲಿಯೇ ನಡೆಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kftcw7seftzmyjhvzb0w8bcv,imgname-hd-kumaraswamy--1--1769338707758.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.15):&lt;/strong&gt; ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆಟೋಮೋಟೀವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ವಾಹನಗಳ ಪರೀಕ್ಷೆ, ಪ್ರಮಾಣೀಕರಣ ಮತ್ತು ತಾಂತ್ರಿಕ ಸಂಶೋಧನೆಗಳನ್ನು ಇಲ್ಲಿಯೇ ನಡೆಸಲಾಗುವುದು ಎಂದು ಕೇಂದ್ರ ಭಾರೀ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.&lt;/p&gt;&lt;p&gt;ತಾಲೂಕಿನ ವಿ.ಸಿ.ಫಾರಂನಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಾಣವಾಗಲಿರುವ ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕದಲ್ಲಿ ವಾಹನಗಳ ಪರೀಕ್ಷಾ ಕೇಂದ್ರದ ಕೊರತೆ ಇತ್ತು. ಇಲ್ಲಿ ಉತ್ಪಾದನೆಯಾದ ವಾಹನಗಳನ್ನು ಪರೀಕ್ಷೆಗಾಗಿ ಪೂನಾ ಅಥವಾ ಚೆನ್ನೈಗೆ ತೆಗೆದುಕೊಂಡು ಹೋಗಬೇಕಿತ್ತು. ಆ ಕೊರತೆ ನೀಗಿಸಲು ಎಆರ್&zwnj;ಎಐನಿಂದ ಪರೀಕ್ಷಾ ಕೇಂದ್ರವನ್ನು ಆರಂಭಿಸಲು ರಾಜ್ಯ ಸರ್ಕಾರಕ್ಕೆ ಜಾಗ ನೀಡುವಂತೆ ಪತ್ರ ಬರೆದಿದ್ದುದಾಗಿ ಹೇಳಿದರು.&lt;/p&gt;&lt;p&gt;ಕೈಗಾರಿಕೆ ಸ್ಥಾಪನೆಗೆ 100 ಎಕರೆ ಜಾಗ ನೀಡುವುದಾಗಿ ರಾಜ್ಯ ಸರ್ಕಾರ ಬಜೆಟ್ ಪುಸ್ತಕದಲ್ಲಿ ಘೋಷಣೆ ಮಾಡಿದ್ದಾರೆ. ಜಾಗ ಯಾವಾಗ ನೀಡುತ್ತಾರೆ ಎಂಬುದನ್ನು ನೋಡಬೇಕಿದೆ. ಅವರು ಜಾಗ ನೀಡಿದ ಬಳಿಕ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾನು ಕೈಗಾರಿಕೆಗಳನ್ನು ಸ್ಥಾಪಿಸುವ ವಿಷಯದಲ್ಲಿ ಜಿಲ್ಲೆಯ ಜನರ ನಿರೀಕ್ಷೆಯನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸುವುದಿಲ್ಲ. ಜಿಲ್ಲೆಯ ವಿದ್ಯಾವಂತ ಯುವಜನರಿಗೆ ಉದ್ಯೋಗವಕಾಶ ಸೃಷ್ಟಿಸುವುದಲ್ಲದೆ, ಅಕ್ಕ-ಪಕ್ಕದ ಜಿಲ್ಲೆಗಳ ಯುವಕರಿಗೂ ಉದ್ಯೋಗ ಸಿಗುವಂತೆ ಮಾಡುವುದಾಗಿ ಭರವಸೆ ನೀಡಿದರು.&lt;/p&gt;&lt;p&gt;ಇದರ ಜೊತೆಗೆ 200-300 ಕೋಟಿ ರು. ವೆಚ್ಚದಲ್ಲಿ ಸ್ಟಾರ್ಟಪ್ ಕಂಪನಿಗಳು ಆರಂಭಿಸುತ್ತೇನೆ. ಅಲ್ಲಿಯೂ ಸ್ಥಳೀಯವಾಗಿ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ದೇವೇಗೌಡರ ಬಗ್ಗೆ ಅಭಿಮಾನವಿಟ್ಟು ನನ್ನನ್ನು ಬಹುಮತದ ಅಂತರದಿಂದ ಗೆಲ್ಲಿಸಿದ್ದೀರಿ.. ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.&lt;/p&gt;&lt;p&gt;ಸಮಾರಂಭದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಡಾ. ಕೆ.ಅನ್ನದಾನಿ, ಜಿ.ಬಿ.ಶಿವಕುಮಾರ್, ಕೆ.ಸುರೇಶ್&zwnj;ಗೌಡ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಂಡ್ಯ ವಿಧಾನಸಭಾ ಕ್ಷೇತ್ರದ ಮುಖಂಡ ಬಿ.ಎಸ್.ರಾಮಚಂದ್ರು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಮತ್ತಿತರರು ಭಾಗವಹಿಸಿದ್ದರು.&lt;/p&gt;&lt;p&gt;ಸಿಎಸ್&zwnj;ಆರ್ ಫಂಡ್ ನೀಡಿದ ಟಿವಿಎಸ್ ಕಂಪನಿಯ ಸಿಎಫ್&zwnj;ಒ ಸೇತುರಾಂ, ಉಪಾಧ್ಯಕ್ಷ ಪ್ರಸಾದ್ ಕೃಷ್ಣನ್, ಇನ್&zwnj;ಫೋಸಿಸ್&zwnj;ನ ಹಿರಿಯ ಉಪಾಧ್ಯಕ್ಷ ಸತೀಶ್ ಬಿ.ನಂಜಪ್ಪ, ಎಚ್&zwnj;ಎಂಟಿ ಅಧ್ಯಕ್ಷ ರಾಜೇಶ್ ಕೊಹ್ಲಿ, ಹಿಂದೂಜಾ ಹಾಸ್ಪೆಟಲ್&zwnj;ನ ಡಾ.ಸಂಜಯ್&zwnj;ಕುಮಾರ್ ಬಜಾಜ್, ಪ್ರದೀಪ್, ಸೈಲ್ ಕಂಪನಿಯ ರಾಜೀವ್ ಪಾಂಡೆ, ಸಿವೈಕೆ ಪಾಂಡೆ ಅವರನ್ನು ಅಭಿನಂದಿಸಲಾಯಿತು.&lt;/p&gt;&lt;h2&gt;&lt;strong&gt;ವಿಕಲಚೇತನರಿಗೆ ಎಲೆಕ್ಟ್ರಿಕ್ ವಾಹನಗಳ ವಿತರಣೆ&lt;/strong&gt;&lt;/h2&gt;&lt;p&gt;ವೇದಿಕೆಯ ಸಭೆಯ ನಂತರ 388 ಮಂದಿ ವಿಕಲಚೇತನರಿಗೆ ಟಿಸಿಎಸ್ ಕಂಪನಿ ಮತ್ತು ಭಾರತೀಯ ಉಕ್ಕು ಪ್ರಾಧಿಕಾರ ತಮ್ಮ ಸಿಎಸ್ ಆರ್ ನಿಧಿಯಲ್ಲಿ ನೀಡಿರುವ ಎಲೆಕ್ಟ್ರಿಕ್ ವಾಹನ ವಿತರಣೆ ಮಾಡಲಾಯಿತು. ತದನಂತರ ಇನ್ಫೋಸಿಸ್ ಕಂಪನಿ ನೀಡಿರುವ 500 ಕಂಪ್ಯೂಟರ್&zwnj;ಗಳು, 100 ಲ್ಯಾಪ್&zwnj;ಟಾಪ್&zwnj;ಗಳನ್ನು ಸರ್ಕಾರಿ ಶಾಲೆಗಳಿಗೆ ಹಸ್ತಾಂತರ ಮಾಡಲಾಯಿತು. ಹಿಂದುಜಾ ಕಂಪನಿ ನೀಡಿದ ಅತ್ಯಾಧುನಿಕ ಆಂಬ್ಯುಲೆನ್ಸ್&zwnj;ನ್ನು ಮಂಡ್ಯದ ಮಿಮ್ಸ್ ಸಂಸ್ಥೆಗೆ ನೀಡಲಾಯಿತು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/hd-kumaraswamy-mandya-arai-vehicle-testing-centre-announcement-gvd/articleshow-1dkm0f8"/>
        </item>
        <item>
            <title><![CDATA[Bhanu Mushtaq: ಚಪ್ಪಲಿ ಧರಿಸಿ ಅಂಬೇಡ್ಕರ್‌ಗೆ ಭಾನು ನಮನ: ವಿವಾದ | 'ಚಪ್ಪಲಿ ನಮ್ಮನೆ ದೇವರು ಅದಕ್ಕೆ ತೆಗೀಲಿಲ್ಲ' ಎಂದ ಸಾಹಿತಿ!]]></title>
            <link>https://kannada.asianetnews.com/state/bhanu-mushtaq-sparks-row-salutes-ambedkar-while-wearing-chappals-writer-defends-move-rav/articleshow-4mkfttz</link>
            <guid isPermaLink="true">https://kannada.asianetnews.com/state/bhanu-mushtaq-sparks-row-salutes-ambedkar-while-wearing-chappals-writer-defends-move-rav/articleshow-4mkfttz</guid>
            <pubDate>Sun, 15 Mar 2026 05:42:13 +0530</pubDate>
            <description><![CDATA[&lt;p&gt;Bhanu Mushtaq Sparks Row ಮಂಡ್ಯದಲ್ಲಿ ಸಾಹಿತಿ ಭಾನು ಮುಷ್ತಾಕ್&zwnj; ಚಪ್ಪಲಿ ಧರಿಸಿ ಅಂಬೇಡ್ಕರ್&zwnj;ಗೆ ನಮಿಸಿದ್ದು ಏಕೆ? 'ಚಪ್ಪಲಿ ನಮ್ಮ ಮನೆ ದೇವರು' ಎಂದ ಅವರ ಸಮರ್ಥನೆ ಏನು? ಪೂರ್ಣ ವಿವರ ತಿಳಿಯಲು ಮುಂದೆ ಓದಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkqd09hdn8v8z0522gj8cncn,imgname-1-1773533144621.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.15): &lt;/strong&gt;ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್&zwnj;.ಅಂಬೇಡ್ಕರ್&zwnj; ಭಾವಚಿತ್ರಕ್ಕೆ ಸಾಹಿತಿ ಭಾನು ಮುಷ್ತಾಕ್&zwnj; ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ.&lt;/p&gt;&lt;p&gt;ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್&zwnj; ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್&zwnj; ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು. ಅದಕ್ಕೆ ಭಾನು ಮುಷ್ತಾಕ್&zwnj; ಒಪ್ಪಲಿಲ್ಲ.&lt;/p&gt;&lt;p&gt;ಪುಷ್ಪ ನಮನಕ್ಕೆ ಚಪ್ಪಲಿ ಬಿಟ್ಟು ಬರಬೇಕೆಂದರೆ ನಾನು ಪುಷ್ಪ ನಮನವನ್ನೇ ಸಲ್ಲಿಸುವುದಿಲ್ಲ ಎಂದು ನೇರವಾಗಿ ಹೇಳಿದರು. ಕೊನೆಗೆ ಚಪ್ಪಲಿ ಧರಿಸಿಕೊಂಡು ಬಂದು ಅಂಬೇಡ್ಕರ್&zwnj; ಭಾವಚಿತ್ರಕ್ಕೆ ನಮನ ಸಲ್ಲಿಸಿದರು.&lt;/p&gt;&lt;p&gt;ನಂತರ ತಮ್ಮ ಭಾಷಣದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಚಪ್ಪಲಿ ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವವಿದೆ ಎಂದು ಸಮರ್ಥನೆ ನೀಡಿದರು.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bhanu-mushtaq-sparks-row-salutes-ambedkar-while-wearing-chappals-writer-defends-move-rav/articleshow-4mkfttz"/>
        </item>
        <item>
            <title><![CDATA[ಮಂಡ್ಯ ಕುರುಬರ ಸಂಘದ ಅಧ್ಯಕ್ಷನಿಗೆ ಮಸಿ ಬಳಿದಿದ್ಯಾಕೆ? ಏನಿದು ವಿವಾದ?]]></title>
            <link>https://kannada.asianetnews.com/karnataka-districts/black-ink-attack-on-mandya-kurubara-sangha-president-what-triggered-the-protest/articleshow-4xgv2og</link>
            <guid isPermaLink="true">https://kannada.asianetnews.com/karnataka-districts/black-ink-attack-on-mandya-kurubara-sangha-president-what-triggered-the-protest/articleshow-4xgv2og</guid>
            <pubDate>Fri, 27 Mar 2026 10:59:08 +0530</pubDate>
            <description><![CDATA[ಅವಧಿ ಮುಗಿದರೂ ರಾಜೀನಾಮೆ ನೀಡದ ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಸುರೇಶ್ ಅವರಿಗೆ ಸದಸ್ಯರು ಘೇರಾವ್ ಹಾಕಿ ಪ್ರತಿಭಟಿಸಿದರು. ಈ ವೇಳೆ ಮಾತಿಗೆ ಜಗ್ಗದ ಅಧ್ಯಕ್ಷರ ಮೈಮೇಲೆ ಕಪ್ಪು ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kmpw2r27d33qm4kbd2kzsvag,imgname----------------------58--1774589141063.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.27): &lt;/strong&gt;ಅವಧಿ ಮುಗಿದ ಬಳಿಕವೂ ರಾಜೀನಾಮೆ ನೀಡದೆ ಮೊಂಡುತನ ಪ್ರದರ್ಶಿಸುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಕುರುಬರ ಸಂಘದ ಸದಸ್ಯರು ಅಧ್ಯಕ್ಷ ಎಂ.ಸುರೇಶ್ ಅವರಿಗೆ ಘೇರಾವ್ ಹಾಕಿ ಮೈಮೇಲೆ ಕಪ್ಪು ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಗರದ ಕುರುಬರ ಸಂಘದ ಆವರಣದಲ್ಲಿ ನಡೆಯಿತು.&lt;/p&gt;&lt;p&gt;ಅಧ್ಯಕ್ಷರ ಅವಧಿ ಮುಗಿದು ಇಪ್ಪತ್ತು ದಿನಗಳಾದರೂ ರಾಜೀನಾಮೆ ನೀಡದೆ ಉದ್ಧಟತನ ಪ್ರದರ್ಶಿಸುತ್ತಿರುವುದು ಸರಿಯಲ್ಲ. ಸಂಘದ ಬೈಲಾ ಪ್ರಕಾರ ಸಂಘಕ್ಕೆ ಚುನಾವಣೆ ನಡೆಸಬೇಕು. ಏಕಪಕ್ಷೀಯವಾಗಿ ಅಧ್ಯಕ್ಷರು ಅಧಿಕಾರದಲ್ಲಿ ಮುಂದುವರೆಯುತ್ತಾ ಭಂಡತನ ತೋರುತ್ತಿದ್ದಾರೆ. ಸಂಘದ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಕೂಡಲೇ ರಾಜೀನಾಮೆ ನೀಡುವಂತೆ ಬಿಗಿಪಟ್ಟು ಹಿಡಿದರು.&lt;/p&gt;&lt;p&gt;ಪೊಲೀಸರು ಸ್ಥಳಕ್ಕೆ ಆಗಮಿಸಿ ಅಧ್ಯಕ್ಷರು ಸೇರಿದಂತೆ ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೂ ಬಿಡದೆ ಸದಸ್ಯರು ಅಧ್ಯಕ್ಷ ಸುರೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು. ಪೊಲೀಸರ ರಕ್ಷಣೆಯಲ್ಲಿ ಸಂಘದ ಆವರಣದಿಂದ ಕಾರಿನಲ್ಲಿ ತೆರಳಲು ಯತ್ನಿಸಿದಾಗ ಸದಸ್ಯರು ಮತ್ತೆ ಘೇರಾವ್ ಹಾಕಿ ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಸದಸ್ಯರನ್ನು ಸಮಾಧಾನಪಡಿಸಿ ಅಧ್ಯಕ್ಷರು ತೆರಳುವುದಕ್ಕೆ ಅನುವು ಮಾಡಿಕೊಟ್ಟರು.&lt;/p&gt;&lt;h2&gt;ನಡೆದಿದ್ದೇನು?&lt;/h2&gt;&lt;p&gt;ಜಿಲ್ಲಾ ಕುರುಬರ ಸಂಘದಲ್ಲಿ ಗುರುವಾರ ಅಧ್ಯಕ್ಷ ಎಂ.ಸುರೇಶ್ ಆಡಳಿತ ಮಂಡಳಿ ಸಭೆ ಕರೆದಿದ್ದರು. ಬೆಳಗ್ಗೆ ೧೧ ಗಂಟೆ ವೇಳೆಗೆ ಸದಸ್ಯರು ಸಂಘದ ಆವರಣದಲ್ಲಿ ಬಂದು ಸೇರಿದ್ದರು. ಅಧ್ಯಕ್ಷರು ಕಾರಿನಲ್ಲಿ ಸಂಘದ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆಯೇ ಸದಸ್ಯರು ಅವರನ್ನು ಸುತ್ತುವರಿದರು. ಅವಧಿ ಮುಗಿದರೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಿರುವುದಕ್ಕೆ ಆಕ್ರೋಶ, ಅಸಹನೆ ವ್ಯಕ್ತಪಡಿಸಿದರು. ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.&lt;/p&gt;&lt;p&gt;ಜಿಲ್ಲಾಧ್ಯಕ್ಷರ ಅಧಿಕಾರವಧಿ ಮಾ.೬ರಂದೇ ಮುಕ್ತಾಯವಾಗಿದೆ. ಆದರೂ ಇದುವರೆಗೆ ರಾಜೀನಾಮೆ ನೀಡಿಲ್ಲ. ಚುನಾವಣೆಗೆ ಸಂಬಂಧಿಸಿದ ಚಟುವಟಿಕೆಗಳನ್ನೂ ಆರಂಭಿಸಿಲ್ಲ. ಹಿಂದಿನ ಆಡಳಿತ ಮಂಡಳಿಯವರನ್ನೇ ಜೊತೆಯಲ್ಲಿಟ್ಟುಕೊಂಡು ಸರ್ವಾಧಿಕಾರಿಯಂತೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಕುರುಬರ ಸಂಘದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿನಿಲಯದ ಕಾಮಗಾರಿಯಲ್ಲಿ ಹಣ ಲಪಟಾಯಿಸಬೇಕೆನ್ನುವುದೇ ಇವರ ಹುನ್ನಾರವಾಗಿದೆ. ಅದಕ್ಕಾಗಿ ಮತ್ತೊಂದು ಅವಧಿಗೆ ಈಗಿನ ಆಡಳಿತ ಮಂಡಳಿಯನ್ನು ಮುಂದುವರೆಸಲು ಕುತಂತ್ರ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು.&lt;/p&gt;&lt;h3&gt;ಡಿ.೨೮ರ ಸಭೆಯ ಬಗ್ಗೆ ಸುಳ್ಳು ಮಾಹಿತಿ:&lt;/h3&gt;&lt;p&gt;ಹಿಂದಿನ ಆಡಳಿತ ಮಂಡಳಿಯನ್ನು ಮುಂದುವರೆಸದೆ, ಚುನಾವಣೆ ನಡೆಸುವಂತೆ ಡಿ.೨೮ರಂದು ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲೂ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಅಂದಿನ ಸಭೆಯೂ ಸಹ ರದ್ದಾಗಿತ್ತು ಆದರೂ ಸಹ, ಅಧ್ಯಕ್ಷ ಎಂ.ಸುರೇಶ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸಭೆಯಲ್ಲಿ ನಿರ್ಣಯವಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಆಡಳಿತ ಮಂಡಳಿಯನ್ನು ಮುಂದುವರೆಸಿದ್ದಾರೆ ಎಂದು ಕಿಡಿಕಾರಿದರು.&lt;/p&gt;&lt;p&gt;ಅಧ್ಯಕ್ಷ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ದಡದಪುರ ಶಿವಣ್ಣ ಅವರ ಬಲದಿಂದ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ ಸದಸ್ಯರು, ಸಂಘದ ಬೈಲಾ ಪ್ರಕಾರ ಅಧಿಕಾರವಧಿ ಮುಗಿದ ಐದು ವರ್ಷಕ್ಕೆ ಅಧ್ಯಕ್ಷರು ರಾಜೀನಾಮೆ ನೀಡಬೇಕು. ಬಳಿಕ ಅವರೇ ಚುನಾವಣೆಗೆ ಮತ್ತೆ ಸ್ಪರ್ಧಿಸಿ ಗೆದ್ದು ಬರಲಿ. ಮತ್ತೆ ಅಧ್ಯಕ್ಷರಾಗಿ ಅಧಿಕಾರ ನಡೆಸಲಿ. ಆದರೆ ಹಿಂಭಾಗಿಲಿನಿಂದ ಅಧಿಕಾರ ಹಿಡಿಯುವ ಆಟ ಬೇಡ ಎಂದು ಹರಿಹಾಯ್ದರು.&lt;/p&gt;&lt;h3&gt;ಕಪ್ಪು ಮಸಿ ಎರಚಿದ ಸದಸ್ಯರು:&lt;/h3&gt;&lt;p&gt;ಸದಸ್ಯರ ಪ್ರತಿಭಟನೆ, ಆಕ್ರೋಶದ ಮಾತುಗಳಿಗೆ ಮನ್ನಣೆಯನ್ನು ನೀಡದೆ ಉಡಾಫೆಯಾಗಿ ಉತ್ತರ ನೀಡುತ್ತಾ ಅಧ್ಯಕ್ಷ ಎಂ.ಸುರೇಶ್ ಮುನ್ನಡೆಯುತ್ತಿದ್ದಾಗ ರೊಚ್ಚಿಗೆದ್ದ ಕೆಲ ಸದಸ್ಯರು ಮೈಮೇಲೆ ಕಪ್ಪು ಮಸಿ ಎರಚಿದರು. ಹಿಂದೆ, ಮುಂದೆಯೆಲ್ಲಾ ಕಪ್ಪು ಮಸಿ ಎರಚಿ ಆಕ್ರೋಶ ಹೊರಹಾಕಿದರು. ಈ ಸಮಯದಲ್ಲಿ ಅಧ್ಯಕ್ಷರ ಕಡೆಯವರು ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದರು.&lt;/p&gt;&lt;p&gt;ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದರು, ಪೊಲೀಸರ ಎದುರೇ ಅಧ್ಯಕ್ಷನಿಗೆ ಸದಸ್ಯರು ತರಾಟೆ ತೆಗೆದುಕೊಂಡರು. ಬಳಿಕ ಪೊಲೀಸರ ರಕ್ಷಣೆಯಲ್ಲಿ ಅಧ್ಯಕ್ಷ ಸುರೇಶ್ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದಾಗ ಸದಸ್ಯರು ಕಾರಿನ ಮುಂದೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಲು ಮುಂದಾದರು. ಬಳಿಕ ಪೊಲೀಸರು ಸದಸ್ಯರನ್ನು ಸಮಾಧಾನಪಡಿಸಿ ಅಧ್ಯಕ್ಷ ಸುರೇಶ್ ಅವರನ್ನು ಕಳುಹಿಸಿಕೊಟ್ಟರು.&lt;/p&gt;&lt;p&gt;ಪ್ರತಿಭಟನೆಯಲ್ಲಿ ಚಂದಹಳ್ಳಿ ಶ್ರೀಧರ್, ಸ್ವಾಮಿ, ಶ್ರೀರಂಗಪಟ್ಟಣ ಮಂಜು, ಮದ್ದೂರು ಬೀರೇಶ್, ಅಣಸಾಲೆ ಶಿವಣ್ಣ, ಶಿವರಾಮು, ಗೋಪಾಲ್, ರಮೇಶ್ ಸೇರಿದಂತೆ ಸೇರಿದಂತೆ ಹಲವರು ಹಾಜರಿದ್ದರು.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/black-ink-attack-on-mandya-kurubara-sangha-president-what-triggered-the-protest/articleshow-4xgv2og"/>
        </item>
        <item>
            <title><![CDATA['ಚುಂಚುಶ್ರೀ ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ...' ವಿವಾದ ಸೃಷ್ಟಿಸಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಹೆಚ್‌ಡಿಕೆ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/hdk-expresses-disappointment-over-mla-ramesh-bandisiddegowda-s-statement-abouut-chunchushree-rav/articleshow-5grd9si</link>
            <guid isPermaLink="true">https://kannada.asianetnews.com/karnataka-districts/hdk-expresses-disappointment-over-mla-ramesh-bandisiddegowda-s-statement-abouut-chunchushree-rav/articleshow-5grd9si</guid>
            <pubDate>Sun, 15 Mar 2026 11:00:14 +0530</pubDate>
            <description><![CDATA[&lt;p&gt;ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಶಾಸಕ ರಮೇಶ್&zwnj; ಬಂಡಿಸಿದ್ದೇಗೌಡ ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ 'ಸ್ವಾಮೀಜಿ ದಾರಿ ತಪ್ಪುತ್ತಿದ್ದಾರೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಹೆಚ್&zwnj; ಡಿ ಕುಮಾರಸ್ವಾಮಿ ಬೇಸರ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkqz9cpdyzzbmapa7z1ep26a,imgname-1-1773552317133.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶ್ರೀರಂಗಪಟ್ಟಣ (ಮಾ.15): &lt;/strong&gt;&lsquo;ಇತ್ತೀಚಿನ ದಿನಗಳಲ್ಲಿ ಆದಿಚುಂಚನಗಿರಿ ಮಠದ ಸ್ವಾಮೀಜಿ ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ&rsquo; ಎಂದು ಶಾಸಕ ರಮೇಶ್&zwnj; ಬಂಡಿಸಿದ್ದೇಗೌಡ ಅವರು ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲಿಯೇ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.&amp;nbsp;&lt;/p&gt;&lt;p&gt;ಪಟ್ಟಣದಲ್ಲಿ ಶನಿವಾರ ನಡೆದ ನೂತನ ಶ್ರೀ ಆದಿಚುಂಚನಗಿರಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಗಣಪತಿ ದೇವಾಲಯದ ಕಟ್ಟಡ ಲೋಕಾರ್ಪಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಂಡಿಸಿದ್ದೇಗೌಡ, ನಮ್ಮ ಸ್ವಾಮೀಜಿ ಇತ್ತೀಚೆಗೆ ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿ ಅವರು ಎಲ್ಲರನ್ನೂ ಒಗ್ಗೂಡಿಸಿ ಜೊತೆಗೆ ಕರೆದುಕೊಂಡು ಹೋಗುವಂತೆ ಒಳ್ಳೆಯ ದಾರಿ ಹಾಕಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟ ಹಾದಿ ತಪ್ಪಬಾರದು ಎಂಬ ಉದ್ದೇಶದಿಂದ ಹೀಗೆ ಹೇಳುತ್ತಿದ್ದೇನೆ. ಚುಂಚನಗಿರಿ ಮಠ ಪ್ರಪಂಚದಾದ್ಯಂತ ಹೆಸರು ಮಾಡಿದ್ದು, ಇತ್ತೀಚಿನ ದಿನದ ತಮ್ಮ ಹೆಜ್ಜೆ ಹಾಗೂ ನಡೆಗಳನ್ನು ಗಮನಿಸಿ ಬಹಳ ಬೇಸರದಿಂದ ಹೇಳುತ್ತಿದ್ದೇನೆ. ದೇಶದ ಎಲ್ಲಾ ವರ್ಗದವರಿಗೂ ಸಹಾಯ ಮಾಡಿರುವ ಕೀರ್ತಿ ನಿಮಗೆ ಸಲ್ಲಬೇಕು ಎಂದು ಸ್ವಾಮೀಜಿಗೆ ಹೇಳಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದು, ನಮ್ಮ ಸ್ವಾಮೀಜಿ ಅವರು ತಪ್ಪು ಮಾಡಿದ್ದಾರೆ ಎಂದು ಯಾರೂ ಸಹ ಸಾರ್ವಜನಿಕವಾಗಿ ಬೆರಳು ತೋರಿಸುಂತಾಗಬಾರದು. ಬಂಡಿಸಿದ್ದೇಗೌಡರು ಸ್ವಾಮೀಜಿ ಬಗ್ಗೆ ಹಾದಿ ತಪ್ಪಿ ಹೋಗಿತ್ತೀದ್ದೀರಿ ಎಂದರೆ ಅರ್ಥವೇನು? ಎಂದು ಅಸಮಾಧಾನ ಹೊರಹಾಕಿದರು.&lt;/p&gt;&lt;p&gt;ಈ ಹಿಂದೆ ಸ್ವಾಮೀಜಿ ಅವರು, ನಮ್ಮ ಸಮಾಜದವರು ಸಿಎಂ ಆಗಬೇಕು ಎಂದಾಗ ನಾನು ಸಹ &lsquo;ನಿಮ್ಮ ವ್ಯಕ್ತಿತ್ವ ಬಹಳ ಎತ್ತರಕ್ಕೆ ಬೆಳೆದಿದ್ದು, ರಾಜಕೀಯ ಹೇಳಿಕೆ ನೀಡಬಾರದು ಎಂದಿದ್ದೆ. ಆಗ ದೇವೇಗೌಡರು ನನಗೆ ಬುದ್ಧಿ ಹೇಳಿ ಸ್ವಾಮೀಜಿ ಅವರ ಬಳಿ ಕ್ಷಮೆ ಕೋರುವಂತೆ ಹೇಳಿದ್ದರು. ಸಾರ್ವಜನಿಕವಾಗಿ ನಾನು ಕ್ಷಮೆ ಕೋರಿದ್ದೇನೆ ಎಂದು ಸ್ಮರಿಸಿದರು.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hdk-expresses-disappointment-over-mla-ramesh-bandisiddegowda-s-statement-abouut-chunchushree-rav/articleshow-5grd9si"/>
        </item>
        <item>
            <title><![CDATA[ಎಐ ‘ಕಪ್ಪು ಚಿರತೆ’ ಕಂಡುಬೆಚ್ಚಿಬಿದ್ದ ಮಳವಳ್ಳಿ ಜನ! ಸೆರೆಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆಗೆ ಕಂಡಿದ್ದೇ ಬೇರೆ!]]></title>
            <link>https://kannada.asianetnews.com/karnataka-districts/ai-generated-black-panther-image-triggers-panic-among-malavalli-residents-mandya/articleshow-6w3byz3</link>
            <guid isPermaLink="true">https://kannada.asianetnews.com/karnataka-districts/ai-generated-black-panther-image-triggers-panic-among-malavalli-residents-mandya/articleshow-6w3byz3</guid>
            <pubDate>Thu, 26 Mar 2026 05:53:37 +0530</pubDate>
            <description><![CDATA[&lt;p&gt;ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಪ್ಪು ಚಿರತೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಫೋಟೋದಿಂದ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಆತಂಕಗೊಂಡಿದ್ದರು. ತೀವ್ರ ಕಾರ್ಯಾಚರಣೆಯ ನಂತರ, ತಿಳಿದುಬಂದಿದ್ದು ಏನೆಂದರೆ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmkqy755cc25mxax322wr1s9,imgname----------------------29--1774484135077.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಂಡ್ಯ (ಮಾ.26): ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಿದ ಚಿರತೆಯನ್ನು ಕಂಡು ಮಂಡ್ಯ ಜಿಲ್ಲೆ ಮಳವಳ್ಳಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇಡೀ ದಿನ ಕಂಗಾಲಾಗಿರುವ ಪ್ರಸಂಗ ಬುಧವಾರ ನಡೆದಿದೆ.&lt;/p&gt;&lt;p&gt;ಹೌದು, &lsquo;ಮಳವಳ್ಳಿಯಲ್ಲಿ ಕಪ್ಪು ಚಿರತೆ ಪ್ರತ್ಯಕ್ಷ&rsquo; ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಒಂದು ಫೋಟೋ ಹರಿಬಿಡಲಾಗಿತ್ತು. ಇದನ್ನು ನಂಬಿದ ಜನರು ಬೆಚ್ಚಿಬಿದ್ದು ಕೂಡಲೇ ಅದನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದರು. ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಮೈಸೂರಿನಿಂದ ಚಿರತೆ ಕಾರ್ಯಪಡೆ ಕರೆಸಿ ಪರಿಶೀಲಿಸಿ, ಚಿರತೆ ಸೆರೆಗೆ ಬೋನ್ ಇಡಲಾಗಿತ್ತು.&amp;nbsp;&lt;/p&gt;&lt;p&gt;ಆ ಬಳಿಕ ಡ್ರೋನ್ ಬಳಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ತಪಾಸಣೆ ನಡೆಸಲಾಗಿದ್ದು, ಎಲ್ಲಿಯೂ ಕಪ್ಪು ಚಿರತೆ ಕಂಡುಬರಲಿಲ್ಲ. ಈ ವೇಳೆ ಫೋಟೋವನ್ನು ಸರಿಯಾಗಿ ಪರಿಶೀಲಿಸಿದಾಗ ಅದು ಕೆಲ ಕಿಡಿಗೇಡಿಗಳು ಎಐ ಬಳಸಿ ಸೃಷ್ಟಿಸಿದ ಚಿತ್ರ ಎಂಬುದು ಖಚಿತವಾಗಿದೆ. ಆ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಜನರು ನಿಟ್ಟುಸಿರು ಬಿಟ್ಟಿದ್ದಾರೆ.&lt;/p&gt;&lt;p&gt;ಕಪ್ಪು ಚಿರತೆ ಈ ಭಾಗದಲ್ಲಿ ಕಂಡುಬರುವುದಿಲ್ಲ ಎಂದು ಕೆಲ ಅರಣ್ಯ ಅಧಿಕಾರಿಗಳು ಹೇಳಿದರು ಸಹ ಜನರು ನಂಬಿರಲಿಲ್ಲ. ಜನರ ಆಕ್ರೋಶಕ್ಕೆ ಮಣಿದು ಇಲ್ಲದ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ ಎನ್ನುವುದೇ ವಿಪರ್ಯಾಸ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ai-generated-black-panther-image-triggers-panic-among-malavalli-residents-mandya/articleshow-6w3byz3"/>
        </item>
        <item>
            <title><![CDATA[ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಕುಸಿತ: ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ ಇದೆಯೇ?]]></title>
            <link>https://kannada.asianetnews.com/gallery/state/mandya-krs-dam-water-level-update-march-2026-water-level-decreases-to-110-feet-sat-cu4xl94</link>
            <guid isPermaLink="true">https://kannada.asianetnews.com/gallery/state/mandya-krs-dam-water-level-update-march-2026-water-level-decreases-to-110-feet-sat-cu4xl94</guid>
            <pubDate>Mon, 16 Mar 2026 12:10:07 +0530</pubDate>
            <description><![CDATA[&lt;p&gt;ಕೆಆರ್&zwnj;ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಕುಸಿತದ ನಡುವೆಯೂ, ಜೂನ್-ಜುಲೈ ತಿಂಗಳವರೆಗೆ ಬೆಂಗಳೂರು, ಮೈಸೂರು, ಮಂಡ್ಯಕ್ಕೆ ಕುಡಿಯುವ ನೀರಿಗೆ ಯಾವುದೇ ಆತಂಕವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kktnseng8jgg02533483p3zd,imgname-krs-dam-1773643020976.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೆಆರ್&zwnj;ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಕುಸಿತದ ನಡುವೆಯೂ, ಜೂನ್-ಜುಲೈ ತಿಂಗಳವರೆಗೆ ಬೆಂಗಳೂರು, ಮೈಸೂರು, ಮಂಡ್ಯಕ್ಕೆ ಕುಡಿಯುವ ನೀರಿಗೆ ಯಾವುದೇ ಆತಂಕವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ಮಂಡ್ಯ (ಮಾ.16): ಕನ್ನಡ ನಾಡಿನ ಜೀವನದಿ ಕಾವೇರಿ ನದಿಯ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ತಲುಪಿದೆ. ಈ ಬೆಳವಣಿಗೆಯ ನಡುವೆಯೂ ಒಂದು ಸಮಾಧಾನಕರ ವಿಷಯವೆಂದರೆ, ಮುಂಬರುವ ಜೂನ್ ಮತ್ತು ಜುಲೈ ತಿಂಗಳವರೆಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ಆತಂಕ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ಮತ್ತು ತಜ್ಞರು ಭರವಸೆ ನೀಡಿದ್ದಾರೆ. ಆದರೆ, ಜೂನ್&zwnj; ವೇಳೆಗೆ ಮಳೆಯಾಗದಿದ್ದರೆ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಎ ನೀರು ಬಿಡುವುದಕ್ಕೆ ಸಮಸ್ಯೆಯಾಗಲಿದೆ.&lt;/p&gt;&lt;img&gt;&lt;p&gt;ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕನ್ನಂಬಾಡಿ ಬಳಿ ಇರುವ ಕೆಆರ್&zwnj;ಎಸ್ ಜಲಾಶಯದ ಗರಿಷ್ಠ ನೀರಿನ ಸಾಮರ್ಥ್ಯ 124.80 ಅಡಿಗಳು. ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿತ್ತು. ಆದರೆ, ಬೇಸಿಗೆಯ ಆರಂಭ ಹಾಗೂ ಕೃಷಿ ಚಟುವಟಿಕೆಗಳಿಗೆ ನೀರು ಹರಿಸುತ್ತಿರುವ ಕಾರಣ ನೀರಿನ ಮಟ್ಟದಲ್ಲಿ ಕುಸಿತ ಕಂಡುಬಂದಿದೆ. ಪ್ರಸ್ತುತ ಜಲಾಶಯದಲ್ಲಿ 32.167 ಟಿಎಂಸಿ (TMC) ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ನೀರಿನ ಮಟ್ಟ ಸುಮಾರು 110.94 ಅಡಿಗಳಷ್ಟಿತ್ತು ಎಂಬುದು ಗಮನಾರ್ಹ.&lt;/p&gt;&lt;img&gt;&lt;p&gt;ನೀರಿನ ಮಟ್ಟ 110 ಅಡಿಗೆ ಇಳಿದ ತಕ್ಷಣವೇ ಜನರಲ್ಲಿ ಆತಂಕ ಮೂಡುವುದು ಸಹಜ. ಅದರಲ್ಲೂ ಕೆಆರ್&zwnj;ಎಸ್ ಜಲಾಶಯದ ನೀರನ್ನೇ ನಂಬಿಕೊಂಡಿರುವ ಮೈಸೂರು, ಬೆಂಗಳೂರು ಹಾಗೂ ಮಂಡ್ಯ ಭಾಗದ ಜನರಿಗೆ ಕುಡಿಯುವ ನೀರಿನ ಲಭ್ಯತೆಯ ಬಗ್ಗೆ ಆತಂಕವಿತ್ತು. ಆದರೆ, ಪ್ರಸ್ತುತ ಇರುವ 32 ಟಿಎಂಸಿಗೂ ಅಧಿಕ ನೀರು ಜೂನ್ ಅಥವಾ ಜುಲೈನಲ್ಲಿ ಮುಂಗಾರು ಮಳೆ ಆರಂಭವಾಗುವವರೆಗೆ ಸಾಲುತ್ತದೆ. ಆದ್ದರಿಂದ ನಗರವಾಸಿಗಳು ಹಾಗೂ ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಬಗ್ಗೆ ಸದ್ಯಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ.&lt;/p&gt;&lt;img&gt;&lt;p&gt;ಕೇವಲ ಕುಡಿಯುವ ನೀರು ಮಾತ್ರವಲ್ಲದೆ, ಕೃಷಿ ಚಟುವಟಿಕೆಗಳಿಗೂ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹಾಗೂ ಬೆಳೆಗಳನ್ನು ರಕ್ಷಿಸುವ ಸಲುವಾಗಿ ನಾಲೆಗಳಿಗೆ 'ಕಟ್ಟು ಪದ್ಧತಿ'ಯಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಅಂದರೆ, ನಿಗದಿತ ದಿನಗಳ ಅಂತರದಲ್ಲಿ ಸರದಿಯಂತೆ ನಾಲೆಗಳಿಗೆ ನೀರು ಹರಿಸುವ ಮೂಲಕ ಲಭ್ಯವಿರುವ ನೀರನ್ನು ಮಿತವಾಗಿ ಮತ್ತು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕೆರೆಗಳನ್ನು ತುಂಬಿಸಲು ಹಾಗೂ ನಿಂತ ಬೆಳೆಗಳಿಗೆ ನೀರು ಒದಗಿಸಲು ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ನೀರಿನ ಲಭ್ಯತೆ ಸದ್ಯಕ್ಕೆ ಸಾಕಷ್ಟಿದ್ದರೂ, ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ನೀರನ್ನು ಪೋಲು ಮಾಡದಂತೆ ಎಚ್ಚರಿಕೆ ವಹಿಸಬೇಕು. ಮುಂಗಾರು ಮಳೆ ವಿಳಂಬವಾದಲ್ಲಿ ಪರಿಸ್ಥಿತಿ ಬದಲಾಗಬಹುದು. ಆದ್ದರಿಂದ ಲಭ್ಯವಿರುವ ನೀರನ್ನು ಅತ್ಯಂತ ಜಾಗರೂಕತೆಯಿಂದ ಬಳಸುವುದೇ ಇಂದಿನ ಅಗತ್ಯವಾಗಿದೆ. ಒಟ್ಟಾರೆಯಾಗಿ, ಕೆಆರ್&zwnj;ಎಸ್ ಅಣೆಕಟ್ಟು ಈ ವರ್ಷದ ಬೇಸಿಗೆಯನ್ನು ನಿಭಾಯಿಸುವಷ್ಟು ಸಾಮರ್ಥ್ಯವನ್ನು ಹೊಂದಿದೆ ಎಂಬುದು ಆಶಾದಾಯಕ ಸಂಗತಿಯಾಗಿದೆ.&lt;/p&gt;]]></content:encoded>
            <category>mandya</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/mandya-krs-dam-water-level-update-march-2026-water-level-decreases-to-110-feet-sat-cu4xl94"/>
        </item>
        <item>
            <title><![CDATA[ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದೆ: ಎಚ್.ಡಿ.ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/mandya-railway-cooperative-bank-information-centre-hd-kumaraswamy-gvd/articleshow-eacbd1p</link>
            <guid isPermaLink="true">https://kannada.asianetnews.com/karnataka-districts/mandya-railway-cooperative-bank-information-centre-hd-kumaraswamy-gvd/articleshow-eacbd1p</guid>
            <pubDate>Mon, 16 Mar 2026 21:00:23 +0530</pubDate>
            <description><![CDATA[&lt;p&gt;ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದ್ದು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕದ ಅತ್ಯುತ್ತಮ ಸಹಕಾರ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j503y45w7dyrxzjg1zmey81f,imgname-1.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.16): &lt;/strong&gt;ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದ್ದು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕದ ಅತ್ಯುತ್ತಮ ಸಹಕಾರ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದರು. ಅಶೋಕನಗರದಲ್ಲಿ ನೂತನವಾಗಿ ಸ್ಥಾಪಿಸಲಾದ ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್&zwnj;ನ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸಹಕಾರ ಕ್ಷೇತ್ರವು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.&lt;/p&gt;&lt;p&gt;ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರಿಗೆ ಉತ್ತಮ ಬ್ಯಾಂಕಿಂಗ್ ಸೇವೆಗಳನ್ನು ತಲುಪಿಸುವುದು ಇಂದಿನ ದಿನಗಳಲ್ಲಿ ಅವಶ್ಯಕತೆ ಎಂದರು. ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಬಿ.ಮಂಜೇಗೌಡರ ನೇತೃತ್ವದಲ್ಲಿ ಆಡಳಿತ ಮಂಡಳಿಯ ನಿರ್ದೇಶನದಲ್ಲಿ ಬ್ಯಾಂಕ್ ಅನ್ನು ಅತ್ಯುತ್ತಮವನ್ನು ನಿರ್ವಹಿಸುತ್ತಿದ್ದಾರೆ, ಬ್ಯಾಂಕಿನಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವು 8.75 % ನೀಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್&zwnj;ಗಳಿಗಿಂತ ಹೆಚ್ಚಾಗಿ ಬಡ್ಡಿದರವನ್ನು ನೀಡುತ್ತಿದೆ ಎಂದರು.&lt;/p&gt;&lt;p&gt;ಜನಸಾಮಾನ್ಯರಿಗೆ, ಸದಸ್ಯರಿಗೆ, ರೈಲ್ವೆ ನೌಕರರಿಗೆ ಮತ್ತು ಗ್ರಾಹಕರಿಗೆ ಆರ್ಥಿಕ ನೆರವು ಮತ್ತು ವಿಶ್ವಾಸಾರ್ಹ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವಲ್ಲಿ ಸಹಕಾರ ಬ್ಯಾಂಕುಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ದಿ ರೈಲ್ವೆ ಕೋ ಅಪರೇಟಿವ್ ಬ್ಯಾಂಕ್ ನಿಯಮಿತ ಹಲವು ವರ್ಷಗಳಿಂದ ತನ್ನ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದು ಶ್ಲಾಘಿಸಿದರು.&lt;/p&gt;&lt;h2&gt;&lt;strong&gt;ಬಹಳ ಉಪಯುಕ್ತ&lt;/strong&gt;&lt;/h2&gt;&lt;p&gt;ಈಗ ಮಂಡ್ಯದಲ್ಲಿ ಮಾಹಿತಿ ಕೇಂದ್ರ ಆರಂಭಿಸಿರುವುದು ಜನತೆಗೆ ಹೆಚ್ಚಿನ ಅನುಕೂಲವಾಗಿದೆ. ಬ್ಯಾಂಕಿಂಗ್ ಸೇವೆಗಳನ್ನು ಸುಲಭವಾಗಿ ಪಡೆಯಲು ಇಂತಹ ಶಾಖಾ ಕೇಂದ್ರಗಳು ಬಹಳ ಉಪಯುಕ್ತವಾಗಿವೆ. ಬ್ಯಾಂಕ್ ಈಗಾಗಲೇ 700ಕೋಟಿ ಠೇವಣಿ ಹೊಂದಿದೆ. ಬ್ಯಾಂಕಿನಲ್ಲಿ ಗೃಹಸಾಲವನ್ನು ಸಹ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.&lt;/p&gt;&lt;p&gt;ಕೇಂದ್ರ ಸರ್ಕಾರವು ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಹಲವು ಮಹತ್ವದ ಯೋಜನೆ ಜಾರಿಗೆ ತಂದಿದೆ. ಸಹಕಾರ ಬ್ಯಾಂಕ್&zwnj;ಗಳೂ ಸಹ ಈ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಈ ನಿಟ್ಟಿನಲ್ಲಿ ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಬ್ಯಾಂಕ್&zwnj;ನ ಉಪಾಧ್ಯಕ್ಷ ಡಾ.ಎಸ್.ಆನಂದ, ನಿರ್ದೇಶಕರಾದ ಹನುಮಂತ, ಎಂ.ಬಿ.ಯೋಗಾನಂದ, ಎಸ್.ಮುತ್ತುಕುಮಾರ್, ಆರ್.ಚಂದ್ರಶೇಖರ, ಎಂ.ಯತಿರಾಜು, ಸಿ.ರಾಮನಾದನ್, ಸಿ.ಎಚ್.ಮಂಜುನಾಥ, ಸಿ. ಶಿವಶಂಕರ್, ಎಸ್.ಉತ್ತೇಜ್, ಎಸ್.ಶ್ವೇತಾ, ಸಿ.ನಿರ್ಮಲ, ಪಿ.ಚಂದ್ರಶೇಖರ್, ಎನ್.ಎಸ್.ನಂದಕುಮಾರ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ನಾರಾಯಣ, ಜನರಲ್ ಮ್ಯಾನೇಜರ್ ಎಂ.ಸಿ.ಲಕ್ಮೀಪ್ರಸಾದ್, ಎಚ್.ಸಿ. ಸತ್ಯನಾರಾಯಣ, ಸದಸ್ಯರು, ಠೇವಣಿದಾರರು ಹಾಗೂ ಬ್ಯಾಂಕ್&zwnj;ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mandya-railway-cooperative-bank-information-centre-hd-kumaraswamy-gvd/articleshow-eacbd1p"/>
        </item>
        <item>
            <title><![CDATA[ರೈತರಿಗೆ ಬೇಸಿಗೆಯಲ್ಲೂ 7 ಗಂಟೆ 3 ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್]]></title>
            <link>https://kannada.asianetnews.com/karnataka-districts/karnataka-farmers-7-hours-power-supply-summer-kj-george-gvd/articleshow-g2gw1cx</link>
            <guid isPermaLink="true">https://kannada.asianetnews.com/karnataka-districts/karnataka-farmers-7-hours-power-supply-summer-kj-george-gvd/articleshow-g2gw1cx</guid>
            <pubDate>Sun, 22 Mar 2026 17:37:52 +0530</pubDate>
            <description><![CDATA[&lt;p&gt;ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ದಿನವಹಿ ಏಳು ಗಂಟೆಗಳ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಇದನ್ನು ಬೇಸಿಗೆ ಅವಧಿಯಲ್ಲೂ ಮುಂದುವರಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k1k46z7y6geadrpzkrbqdhmp,imgname-whatsapp-image-2025-08-01-at-9.00.40-pm-1754062355709.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.22):&lt;/strong&gt; ರಾಜ್ಯದಲ್ಲಿ ಪ್ರಸ್ತುತ ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ದಿನವಹಿ ಏಳು ಗಂಟೆಗಳ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಇದನ್ನು ಬೇಸಿಗೆ ಅವಧಿಯಲ್ಲೂ ಮುಂದುವರಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.&lt;/p&gt;&lt;p&gt;ಬೇಸಿಗೆ ಅವಧಿಯಲ್ಲಿ ವಿದ್ಯುತ್ ಬಳಕೆ ಪ್ರಮಾಣವು ಗಣನೀಯವಾಗಿ ಏರಿಕೆ ಆಗುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ 7 ಗಂಟೆಗಳ ವಿದ್ಯುತ್ ಪೂರೈಸುವ ಕುರಿತು ಶಾಸಕ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಈ ಮಾಹಿತಿ ನೀಡಿದ್ದಾರೆ.&lt;/p&gt;&lt;p&gt;ತಾಂತ್ರಿಕ ಸಾಧ್ಯತೆಯಿರುವ ಉಪ ಕೇಂದ್ರಗಳಿಂದ ಹೊರಹೊಮ್ಮುತ್ತಿರುವ ಕೃಷಿ ವಿದ್ಯುತ್ ಮಾರ್ಗಗಳಲ್ಲಿರುವ ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ 07 ಗಂಟೆಗಳಂತೆ ಹಾಗೂ ತಾಂತ್ರಿಕ ಕಾರ್ಯಸಾಧ್ಯವಿಲ್ಲದ ಕೃಷಿ ವಿದ್ಯುತ್ ಮಾರ್ಗಗಳಲ್ಲಿರುವ ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ಬ್ಯಾಚ್ ಗಳಲ್ಲಿ ಒಟ್ಟು 07 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.&lt;/p&gt;&lt;p&gt;ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಸುಮಾರು 35.96 ಲಕ್ಷ ಕೃಷಿ ನೀರಾವರಿ ಪಂಪ್ ಸೆಟ್ ಗಳಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಒಟ್ಟು ವಿದ್ಯುತ್ 97,334 ಮಿಲಿಯನ್ ಯುನಿಟ್ (ಅಂದಾಜು) ಗಳಲ್ಲಿ ಐ.ಸಿ.ಸೆಟ್ಟು ಸ್ಥಾವರಗಳಿಗೆ 25,760 ಮಿಲಿಯನ್ ಯುನಿಟ್ (ಅಂದಾಜು) (ಶೇ 26.47) ಬಳಕೆಯಾಗುತ್ತಿದೆ ಎಂದಿದ್ದಾರೆ.&lt;/p&gt;&lt;p&gt;&lt;strong&gt;ಶೇ 5ರಷ್ಟು ಹೆಚ್ಚಳ ಸಾಧ್ಯತೆ:&lt;/strong&gt; ರಾಜ್ಯದಲ್ಲಿ ಪ್ರಸಕ್ತ ವರ್ಷದ ಮಾರ್ಚ್ ನಿಂದ ಮೇ ತಿಂಗಳಾಂತ್ಯದವರೆಗೆ ಅಂದಾಜಿಸಲಾದ ಬೇಡಿಕೆ ಪ್ರಮಾಣವು 27,631 ಮಿ.ಯುನಿಟ್ ಇದ್ದು ಈ ಅವಧಿಯಲ್ಲಿ ಅಂದಾಜಿಸಲಾದ ದೈನಂದಿನದ ವಿದ್ಯುತ್ ಬೇಡಿಕೆ ಪ್ರಮಾಣ 300.34 ಮಿ.ಯುನಿಟ್ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬೇಡಿಕೆ ಪ್ರಮಾಣ ಒಟ್ಟು 26,468 ಮಿ.ಯುನಿಟ್ ಇದ್ದು ಈ ಅವಧಿಯಲ್ಲಿ ದೈನಂದಿನದ ವಿದ್ಯುತ್ ಬೇಡಿಕೆ ಪ್ರಮಾಣ 287.70 ಮಿ.ಯುನಿಟ್ ಇತ್ತು.&lt;/p&gt;&lt;p&gt;ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬೇಡಿಕೆಯಲ್ಲಿ ಶೇ.4ರಿಂದ ಶೇ.5ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ. ಕಳೆದ ವರ್ಷ ಮಾರ್ಚ್ ನಿಂದ ಮೇ ವರೆಗಿನ ಅವಧಿಯಲ್ಲಿ ರಾಜ್ಯವು ಮಾರ್ಚ್ 07ರಂದು 18,395 ಮೆಗಾವ್ಯಾಟ್ ಗರಿಷ್ಠ ಬೇಡಿಕೆಯನ್ನು ಪೂರೈಸಿತ್ತು. ಈ ವರ್ಷವು ಗರಿಷ್ಠ ಬೇಡಿಕೆ ಸುಮಾರು 19,000 ಮೆಗಾವ್ಯಾಟ್ ಗೆ ತಲುಪುವ ನಿರೀಕ್ಷೆ ಇದೆ ಎಂದು ವಿವರಿಸಿದ್ದಾರೆ.&lt;/p&gt;&lt;h2&gt;&lt;strong&gt;ಉತ್ಪಾದನೆ ಶಕ್ತಿ ಕಡಿಮೆಯಾದಲ್ಲಿ ಖರೀದಿ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ರಾಜ್ಯದ ಉತ್ಪಾದನಾ ಘಟಕಗಳಿಂದ ಉತ್ಪಾದನೆಯಾಗುವ ನಿಗದಿತ ಶಕ್ತಿಯು ಕಡಿಮೆಯಾದಲ್ಲಿ ಬ್ಯಾಂಕಿಂಗ್ ಸಿಸ್ಟಂ ನಲ್ಲಿ ಅಥವಾ ಮುಕ್ತ ಮಾರುಕಟ್ಟೆಯಲ್ಲಿ ವಿದ್ಯುತ್ ಅನ್ನು ಪಡೆದು ಬೇಡಿಕೆ ಪೂರೈಸಲಾಗುವುದು ಎಂದು ಭರವಸೆ ನೀಡಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-farmers-7-hours-power-supply-summer-kj-george-gvd/articleshow-g2gw1cx"/>
        </item>
        <item>
            <title><![CDATA[ಸ್ನೇಹಿತರ ಜೊತೆ ಪ್ರವಾಸ ದುರಂತ, ಕಾವೇರಿ ನದಿಯಲ್ಲಿ ಈಜಲು ಹೋದ ಬೆಂಗಳೂರು ಇನ್ಫೋಸಿಸ್ ಉದ್ಯೋಗಿ ಜಲಸಮಾಧಿ]]></title>
            <link>https://kannada.asianetnews.com/karnataka-districts/mandya-tragedy-infosys-employee-drowns-in-cauvery-river-at-edmuri-tourist-spot-gdp/articleshow-gsw15ui</link>
            <guid isPermaLink="true">https://kannada.asianetnews.com/karnataka-districts/mandya-tragedy-infosys-employee-drowns-in-cauvery-river-at-edmuri-tourist-spot-gdp/articleshow-gsw15ui</guid>
            <pubDate>Thu, 02 Apr 2026 08:59:56 +0530</pubDate>
            <description><![CDATA[ಬೆಂಗಳೂರಿನ ಇನ್ಫೋಸಿಸ್ ಉದ್ಯೋಗಿ ವಿಘ್ನೇಶ್ (25) ಎಂಬುವವರು ಶ್ರೀರಂಗಪಟ್ಟಣದ ಎಡಮುರಿ ಪ್ರವಾಸಿ ತಾಣದಲ್ಲಿ ಕಾವೇರಿ ನದಿಗೆ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅವರು, ನೀರಿನ ಹರಿವಿನ ಅಂದಾಜು ಸಿಗದೆ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದು, ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn63p9xvs4ntgarjpvk9z17e,imgname-mandya-tragedy-1775100438459.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಂಡ್ಯ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಇನ್ಫೋಸಿಸ್&zwnj; ಉದ್ಯೋಗೊಯೊಬ್ಬ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿತಾಣವಾದ ಎಡಮುರಿ ಕಾವೇರಿ ನದಿಯಲ್ಲಿ ಈ ದುರಂತ ಸಂಭವಿಸಿದೆ.&lt;/p&gt;&lt;h2&gt;ಇನ್ಫೋಸಿಸ್&zwnj; ಉದ್ಯೋಗಿ&lt;/h2&gt;&lt;p&gt;ಮೃತ ಯುವಕನನ್ನು ಬೆಂಗಳೂರು ನಗರದ ರಾಮಮೂರ್ತಿನಗರ ನಿವಾಸಿ ವಿಘ್ನೇಶ್ (25) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್&zwnj;ನಲ್ಲಿ ಉದ್ಯೋಗಿಯಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದರು. ಒಟ್ಟು ನಾಲ್ವರು ಸ್ನೇಹಿತರೊಂದಿಗೆ ಬಲಮುರಿ&ndash;ಎಡಮುರಿ ಪ್ರದೇಶಕ್ಕೆ ಭೇಟಿ ನೀಡಿದ್ದ ವಿಘ್ನೇಶ್, ಪ್ರಕೃತಿಯ ಸೌಂದರ್ಯವನ್ನು ಸವಿಯುವ ವೇಳೆ ಕಾವೇರಿ ನದಿಗೆ ಈಜಲು ಇಳಿದಿದ್ದನು.&lt;/p&gt;&lt;h2&gt;ಗೆಳೆಯರ ಎದುರೇ ಜಲಸಮಾಧಿಯಾದ ವಿಘ್ನೇಶ್&lt;/h2&gt;&lt;p&gt;ಈ ವೇಳೆ ಅಚಾನಕ್ ನೀರಿನ ಹರಿವು ಹೆಚ್ಚಾದುದರಿಂದ ಅಥವಾ ಆಳದ ಬಗ್ಗೆ ಅಂದಾಜು ತಪ್ಪಿದ ಪರಿಣಾಮ ವಿಘ್ನೇಶ್ ನೀರಿನಲ್ಲಿ ಮುಳುಗಿ ಜಲಸಮಾಧಿಯಾದ. ಸ್ನೇಹಿತರು ತಕ್ಷಣವೇ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯ್ತು.&lt;/p&gt;&lt;p&gt;ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿ, ಕೆಲ ಸಮಯದ ಬಳಿಕ ವಿಘ್ನೇಶ್ ಅವರ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಯ್ತು. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಪ್ರವಾಸಿತಾಣಗಳಲ್ಲಿ ಈಜುವ ವೇಳೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂಬುದಕ್ಕೆ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಕರೆಗಂಟೆಯಾಗಿದೆ.&lt;/p&gt;]]></content:encoded>
            <category>mandya</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mandya-tragedy-infosys-employee-drowns-in-cauvery-river-at-edmuri-tourist-spot-gdp/articleshow-gsw15ui"/>
        </item>
        <item>
            <title><![CDATA[ಸಂತ್ರಸ್ತೆ ಜತೆ ಮದುವೆಯಾಗಲು ಆರೋಪಿಗೆ 23 ದಿನ ಜಾಮೀನು!]]></title>
            <link>https://kannada.asianetnews.com/state/karnataka-high-court-grants-bail-to-accused-to-marry-victim-bangalore-news-san/articleshow-kk97gtg</link>
            <guid isPermaLink="true">https://kannada.asianetnews.com/state/karnataka-high-court-grants-bail-to-accused-to-marry-victim-bangalore-news-san/articleshow-kk97gtg</guid>
            <pubDate>Fri, 03 Apr 2026 06:38:38 +0530</pubDate>
            <description><![CDATA[&lt;p&gt;ವಿವಾಹವಾಗುವುದಾಗಿ ಯುವತಿಗೆ ಮೋಸ ಮಾಡಿದ್ದ ವ್ಯಕ್ತಿಗೆ ಅದೇ ಹುಡುಗಿಯ ಜೊತೆ ಮದುವೆಯಾಗಲು ಕರ್ನಾಟಕ ಹೈಕೋರ್ಟ್&zwnj; 23 ದಿನ ಜಾಮೀನು ನೀಡಿದೆ. ಕೇಸ್&zwnj; ದಾಖಲು ಬಳಿಕ ಇಬ್ಬರ ಮಧ್ಯೆ ರಾಜಿ ಸಂಧಾನ ನಡೆದಿತ್ತು.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k5xvrhbtf3jycpmrdj3gwwck,imgname-karnataka-high-court-1758717560186.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕನ್ನಡಪ್ರಭ ವಾರ್ತೆ ಬೆಂಗಳೂರು (ಏ.3): &lt;/strong&gt;ವಿವಾಹವಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ ಬಳಿಕ ವಂಚಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂಬ ಷರತ್ತಿನೊಂದಿಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್&zwnj; ಆದೇಶಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಂಡ್ಯ ಜಿಲ್ಲೆಯ ಹುಲ್ಲಗಾಲದ ಮಹದೇವ ಅಲಿಯಾಸ್&zwnj; ಮಾದೇವ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಸಂತ್ರಸ್ತೆಯನ್ನು ಮದುವೆಯಾಗಲು ಅರ್ಜಿದಾರನಿಗೆ ಏ.2 ರಿಂದ ಏ.24ರವರೆಗೆ ಜಾಮೀನು ನೀಡಿ ಆದೇಶಿಸಿದೆ.&lt;/p&gt;&lt;p&gt;ಅರ್ಜಿ ವಿಚಾರಣೆ ವೇಳೆ ಅರ್ಜಿದಾರನ ಪರ ವಕೀಲರು, ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಆರೋಪ ಸಂಬಂಧ ಅರ್ಜಿದಾರನ ವಿರುದ್ಧ ತಲಘಟ್ಟಪುರ ಪೊಲೀಸ್&zwnj; ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಸದ್ಯ ಅರ್ಜಿದಾರರು ಮತ್ತು ದೂರುದಾರರು ಮಾತುಕತೆ ನಡೆಸಿ ರಾಜಿ ಮಾಡಿಕೊಂಡಿದ್ದು, ವಿವಾಹಕ್ಕೆ ಇಬ್ಬರೂ ಒಪ್ಪಿದ್ದಾರೆ. ಆದರೆ, ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಮದುವೆಯಾಗಲು ಅಡ್ಡಿಯಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು.&lt;/p&gt;&lt;h2&gt;&lt;strong&gt;ಷರತ್ತು ವಿಧಿಸಿದ ಹೈಕೋರ್ಟ್&zwnj;&lt;/strong&gt;&lt;/h2&gt;&lt;p&gt;ಈ ಮನವಿ ಪರಿಗಣಿಸಿದ ನ್ಯಾಯಮೂರ್ತಿಗಳು, ವಿಚಿತ್ರ ಸನ್ನಿವೇಶದಲ್ಲಿ ಅರ್ಜಿದಾರನಿಗೆ ಜಾಮೀನು ನೀಡುವುದು ಸೂಕ್ತವೆನಿಸಿದೆ. ಆರೋಪಿಯು ಸಂತ್ರಸ್ತೆಯನ್ನು ವಿವಾಹವಾದ ಬಳಿಕ ಮದುವೆ ನೋಂದಾಯಿಸಿದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಅರ್ಜಿದಾರನಿಗೆ ನಿರ್ದೇಶಿಸಿದ್ದು, ವಿಚಾರಣೆಯನ್ನು ಏ.24ಕ್ಕೆ ಮುಂದೂಡಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-high-court-grants-bail-to-accused-to-marry-victim-bangalore-news-san/articleshow-kk97gtg"/>
        </item>
        <item>
            <title><![CDATA[ರಸ್ತೆಗಳು ಅಭಿವೃದ್ಧಿಯಾದರೆ ಹಳ್ಳಿಗಳ ಮೂಲ ಸಮಸ್ಯೆ ಬಗೆಹರಿದಂತೆ: ಸಚಿವ ಚಲುವರಾಯಸ್ವಾಮಿ]]></title>
            <link>https://kannada.asianetnews.com/karnataka-districts/nagamangala-yagatahalli-road-development-chaluvarayaswamy-gvd/articleshow-mmryhrf</link>
            <guid isPermaLink="true">https://kannada.asianetnews.com/karnataka-districts/nagamangala-yagatahalli-road-development-chaluvarayaswamy-gvd/articleshow-mmryhrf</guid>
            <pubDate>Mon, 16 Mar 2026 19:31:46 +0530</pubDate>
            <description><![CDATA[&lt;p&gt;ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಯಾದರೆ ಹಳ್ಳಿಗಳಲ್ಲಿ ಮೂಲ ಸಮಸ್ಯೆಗಳಿಗೆ ಬಹುತೇಕ ಪರಿಹಾರ ಸಿಕ್ಕಂತಾಗುತ್ತದೆ. ಹೀಗಾಗಿ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwme81vf0haf7r987hrkefck,imgname-vdv-1748737722223.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನಾಗಮಂಗಲ (ಮಾ.16): &lt;/strong&gt;ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಯಾದರೆ ಹಳ್ಳಿಗಳಲ್ಲಿ ಮೂಲ ಸಮಸ್ಯೆಗಳಿಗೆ ಬಹುತೇಕ ಪರಿಹಾರ ಸಿಕ್ಕಂತಾಗುತ್ತದೆ. ಹೀಗಾಗಿ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.&lt;/p&gt;&lt;p&gt;ತಾಲೂಕಿನ ಯಗಟಹಳ್ಳಿ ಪರಿಮಿತಿಯಲ್ಲಿ 25 ಲಕ್ಷ ರು.ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಹಳ್ಳಿಗಳ ಮೂಲ ಸಮಸ್ಯೆಗಳಿಗಷ್ಟೇ ನಮ್ಮಲ್ಲಿ ಮನವಿ ಮಾಡುತ್ತಾರೆ. ನಾವು ಪಟ್ಟಣ ಅಥವಾ ರಾಜ್ಯದಲ್ಲಿ ಎಷ್ಟೇ ದೊಡ್ಡ ಯೋಜನೆ ರೂಪಿಸಿದರೂ ಅದು ಲೆಕ್ಕಕ್ಕೆ ಬರುವುದಿಲ್ಲ. ನಮ್ಮ ಗ್ರಾಮದಲ್ಲಿ ಕೆಲಸ ಆಗಿಲ್ಲ ಎನ್ನುವುದಷ್ಟೇ ಅವರ ಮುಖ್ಯ ಬೇಡಿಕೆಯಾಗಿರುತ್ತದೆ ಎಂದರು.&lt;/p&gt;&lt;p&gt;ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಈಗಾಗಲೇ ಉತ್ತಮ ಗುಣಮಟ್ಟದ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಇನ್ನುಳಿದ ಉಳಿದ ಎಲ್ಲಾ ಗ್ರಾಮಗಳ ರಸ್ತೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು. ತಾಲೂಕಿನ ಕಾರಗೆರೆ ಗ್ರಾಮದಲ್ಲಿ 16 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೂ ವಿಶೇಷ ಆದ್ಯತೆ ನೀಡುತ್ತಿದೆ.&lt;/p&gt;&lt;h2&gt;&lt;strong&gt;ಬೇಡಿಕೆಯಿದ್ದಷ್ಟು ಅನುದಾನ&lt;/strong&gt;&lt;/h2&gt;&lt;p&gt;ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ಅಭಿವೃದ್ದಿಗೆ ಎಲ್ಲಾ ರೀತಿಯಲ್ಲಿಯೂ ಸಹಕರಿಸುತ್ತಿದೆ. ಇಲಾಖೆಯ ಬೇಡಿಕೆಯಿದ್ದಷ್ಟು ಅನುದಾನ ನೀಡಲಾಗುತ್ತಿದೆ ಎಂದರು. ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ವಾರಕ್ಕೊಮ್ಮೆ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.&lt;/p&gt;&lt;p&gt;ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸುವ ಜೊತೆಗೆ ಫಲಿತಾಂಂಶದಲ್ಲಿ ಜಿಲ್ಲೆಗೆ ನಾಗಮಂಗಲ ತಾಲೂಕು ಪ್ರಥಮ ಸ್ಥಾನದಲ್ಲಿರುವಂತೆ ಕ್ರಮವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಈ ವೇಳೆ ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಸಿಡಿಪಿಒ ಕೃಷ್ಣಮೂರ್ತಿ, ಮುಖಂಡರಾದ ಲೋಕೇಶ್, ರಾಮಿ, ರಾಜೇಗೌಡ, ಗಿರೀಶ್ ಸೇರಿದಂತೆ ಹಲವರು ಇದ್ದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nagamangala-yagatahalli-road-development-chaluvarayaswamy-gvd/articleshow-mmryhrf"/>
        </item>
        <item>
            <title><![CDATA[ಪ್ರದೀಪ್ ಈಶ್ವರ್‌ನ ನಿಮ್ಹಾನ್ಸ್ ಗೆ ಸೇರಿಸಿ: ಡಿಸಿ ಮೂಲಕ ಚುನಾವಣಾ ಆಯೋಗಕ್ಕೆ ಮಂಡ್ಯ ಬಿಜೆಪಿ ಮನವಿ]]></title>
            <link>https://kannada.asianetnews.com/politics/karnataka-by-election-2026-admit-pradeep-eshwar-to-nimhans-mandya-bjp-slams-congress-mla/articleshow-q43yls3</link>
            <guid isPermaLink="true">https://kannada.asianetnews.com/politics/karnataka-by-election-2026-admit-pradeep-eshwar-to-nimhans-mandya-bjp-slams-congress-mla/articleshow-q43yls3</guid>
            <pubDate>Wed, 25 Mar 2026 15:00:45 +0530</pubDate>
            <description><![CDATA[&lt;p&gt;ದಾವಣಗೆರೆಯಲ್ಲಿ ಬಿಜೆಪಿ ವಿರುದ್ಧ ಲಘು ಹೇಳಿಕೆ ನೀಡಿದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರದೀಪ್ ಈಶ್ವರ್ ಅವರನ್ನು ನಿಮ್ಹಾನ್ಸ್&zwnj;ಗೆ ಸೇರಿಸಿ, ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ದೂರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmj4vgrrje31b862xt8yj6b7,imgname----------------------28--1774430569240.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.25):&lt;/strong&gt; ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ಲಘು ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ.&lt;/p&gt;&lt;h2&gt;ಅಸಂವಿಧಾನಿಕ ಪದ ಬಳಕೆ ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ಕಿಡಿ&lt;/h2&gt;&lt;p&gt;ದಾವಣಗೆರೆಯ ಬಹಿರಂಗ ಸಭೆಯಲ್ಲಿ ಪ್ರಚಾರ ನಡೆಸುವಾಗ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ವಿರುದ್ಧ ಅತ್ಯಂತ ಲಘುವಾಗಿ ಮತ್ತು ಅಸಂವಿಧಾನಿಕ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಶಾಸಕರ ಈ ನಡವಳಿಕೆಯಿಂದ ಕೆಂಡಾಮಂಡಲವಾಗಿರುವ ಕಾರ್ಯಕರ್ತರು, ಕೂಡಲೇ ಅವರ ಮೇಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.&lt;/p&gt;&lt;h3&gt;'ನಿಮ್ಹಾನ್ಸ್&zwnj;ಗೆ ಸೇರಿಸಿ, ಸರ್ಟಿಫಿಕೇಟ್ ತರೋವರೆಗೆ ಶಾಸಕ ಸ್ಥಾನದಿಂದ ಅಮಾನತು ಮಾಡಿ'&lt;/h3&gt;&lt;p&gt;ಶಾಸಕ ಪ್ರದೀಪ್ ಈಶ್ವರ್ ಮಾನಸಿಕ ಆರೋಗ್ಯ ಸರಿಯಿಲ್ಲವೆಂದು ಅವರ ವರ್ತನೆಗಳಿಂದ ಗೊತ್ತಾಗುತ್ತಿದೆ ಎಂದು ಟೀಕಿಸಿರುವ ಬಿಜೆಪಿ ಮುಖಂಡರು, ಅವರನ್ನು ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ, ವೈದ್ಯಕೀಯ ಪ್ರಮಾಣಪತ್ರ ತರುವವರೆಗೆ ಅವರನ್ನು ಶಾಸಕ ಸ್ಥಾನದಿಂದ ಅಮಾನತು ಮಾಡಬೇಕು ಮತ್ತು ದಾವಣಗೆರೆ ಜಿಲ್ಲೆಯಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.&lt;/p&gt;&lt;h3&gt;ಸಿಎಂ ಸಿದ್ದರಾಮಯ್ಯ ಪ್ರದೀಪ್ ಈಶ್ವರ್&zwnj;ಗೆ ಬಹುವಚನದ ಪಾಠ ಮಾಡಲಿ&lt;/h3&gt;&lt;p&gt;ಶಾಸಕರ ಭಾಷಾ ಪ್ರಯೋಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೌಜನ್ಯ ಮತ್ತು ಬಹುವಚನ ಬಳಸುವ ಬಗ್ಗೆ ಪಾಠ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಜನಪ್ರತಿನಿಧಿಯಾಗಿ ಸಮಾಜದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಾಂಗ್ರೆಸ್ ನಾಯಕರು ಕಲಿಸಿಕೊಡಲಿ ಎಂದು ಒತ್ತಾಯಿಸಿದ್ದಾರೆ.&lt;/p&gt;&lt;p&gt;&lt;strong&gt;ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ&lt;/strong&gt;&lt;/p&gt;&lt;p&gt;ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ನಾಗಾನಂದ್, ದೇವರಾಜು, ಯೋಗೇಶ್, ವರದರಾಜು ಸೇರಿದಂತೆ ಹಲವು ಕಾರ್ಯಕರ್ತರು ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಮನವಿ ಪತ್ರ ಸಲ್ಲಿಸಿದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಇಂತಹ ಹೇಳಿಕೆಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಎಚ್ಚರಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/karnataka-by-election-2026-admit-pradeep-eshwar-to-nimhans-mandya-bjp-slams-congress-mla/articleshow-q43yls3"/>
        </item>
        <item>
            <title><![CDATA[ಮಂಡ್ಯ ಕುರುಬರ ಸಂಘದಲ್ಲಿ ಹೈಡ್ರಾಮಾ: ಕುರುಬರ ಸಂಘದ ಜಿಲ್ಲಾಧ್ಯಕ್ಷ, ಸಿಎಂ ಸಿದ್ದು ಆಪ್ತನಿಗೆ ಮಸಿ ಎರಚಿ ಆಕ್ರೋಶ]]></title>
            <link>https://kannada.asianetnews.com/gallery/state/members-smeared-ink-on-mandya-district-president-of-shepherd-association-q55p9i9</link>
            <guid isPermaLink="true">https://kannada.asianetnews.com/gallery/state/members-smeared-ink-on-mandya-district-president-of-shepherd-association-q55p9i9</guid>
            <pubDate>Thu, 26 Mar 2026 14:37:56 +0530</pubDate>
            <description><![CDATA[&lt;p&gt;ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಕಿತ್ತಾಟದಲ್ಲಿ, ಅಧಿಕಾರಾವಧಿ ಮುಗಿದರೂ ಮುಂದುವರೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಹಾಲಿ ಅಧ್ಯಕ್ಷ ಸುರೇಶ್&zwnj;ಗೆ ಸದಸ್ಯರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmmng7y3kk7zeg61dx2p8x7v,imgname-mandya-kurubara-sangha-fight--4--1774515134403.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಕಿತ್ತಾಟದಲ್ಲಿ, ಅಧಿಕಾರಾವಧಿ ಮುಗಿದರೂ ಮುಂದುವರೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಹಾಲಿ ಅಧ್ಯಕ್ಷ ಸುರೇಶ್&zwnj;ಗೆ ಸದಸ್ಯರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಮಂಡ್ಯ: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ನಡಿತಿದ್ರೆ ಇಂದು ಮಂಡ್ಯದಲ್ಲಿ ಕುರುಬರ ಸಂಘದ ಜಿಲ್ಲಾಧ್ಯಕ್ಷಗಾದಿಗಾಗಿ ಕಿತ್ತಾಟ ನಡೆದಿದ್ದು, ಮಂಡ್ಯದ ಕುರುಬರ ಸಂಘದ ಆವರಣದಲ್ಲಿ ಹೈಡ್ರಾಮಾ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;&lt;strong&gt;ಬೋಟ್&zwnj;ಗೆ ಏರುವ ವೇಳೆ ಪದ್ಮಾ ನದಿಗುರುಳಿದ ಬಸ್ : 25 ಜನರ ದಾರುಣ ಸಾವು&lt;/strong&gt;&lt;/p&gt;&lt;img&gt;&lt;p&gt;ಕುರುಬರ ಸಂಘದ ಜಿಲ್ಲಾಧ್ಯಕ್ಷನಿಗೆ ಸದಸ್ಯರು ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಅವಧಿ ಮುಗಿದಿದೆ, ಜಿಲ್ಲಾಧ್ಯಕ್ಷ ಸ್ಥಾನ ಬಿಟ್ಟು ಹೋಗಿ ಎಂದು ಮಂಡ್ಯ ಕುರುಬರ ಸಂಘದ ಹಾಲಿ ಜಿಲ್ಲಾಧ್ಯಕ್ಷರಾಗಿರುವ ಸುರೇಶ್&zwnj;ಗೆ ಮಸಿ ಎರಚಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನನ್ನ ಯಾಕೆ ಬಿಟ್ಟೋದೆ: ಮಲತಾಯಿಯ ಕಿರುಕುಳದ ಬಳಿಕ ತಾಯಿ ಸಮಾಧಿ ಬಳಿ ಗೋಳಾಡಿದ ಪುಟ್ಟ ಬಾಲಕಿ&lt;/strong&gt;&lt;/p&gt;&lt;img&gt;&lt;p&gt;ಕುರುಬರ ಸಂಘದ ಹಾಲಿ ಜಿಲ್ಲಾಧ್ಯಕ್ಷರಾಗಿರುವ ಸುರೇಶ್&zwnj; ಕಳೆದ ಅವಧಿಯಲ್ಲಿ ಜಿಲ್ಲಾಧ್ಯಕ್ಷನಾಗಿ ಆಯ್ಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದಾರೆ. ಮಾರ್ಚ್ 6 ರಂದು ಸುರೇಶ್ ಅಧಿಕಾರದ ಅವಧಿ ಮುಕ್ತಾಯವಾಗಿದ್ದು, ಆದರೂ ಚುನಾವಣೆ&zwnj; ನಡೆಸದೇ ಮತ್ತೊಂದು ಅವಧಿಗೆ ಜಿಲ್ಲಾಧ್ಯಕ್ಷರಾಗಿ ಮುಂದುವರೆಯಲು ಸುರೇಶ್ ಹಿಂಭಾಗಲಿನಿಂದ ಪ್ರಯತ್ನಿಸುತ್ತಿದ್ದಾರೆ ಎಂದು ಕುರುಬರ ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಹಿಳೆಯ ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಅಮ್ಮನ ಸ್ಕೂಟಿ ಮಾರಲು ಹೋಗಿ ಸಿಕ್ಕಿಬಿದ್ದ ಮಗಳು&lt;/strong&gt;&lt;/p&gt;&lt;img&gt;&lt;p&gt;ಇಂದು ಸಂಘದ ಕಚೇರಿಗೆ ಬಂದ ವೇಳೆ ಸದಸ್ಯರು ಕೆಲ ಪಧಾಧಿಕಾರಿಗಳಿಗೆ ಘೇರಾವ್ ಹಾಕಿದ್ದು, ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ವಾಗ್ವಾದದ ವೇಳೆ ಜಿಲ್ಲಾಧ್ಯಕ್ಷ ಸುರೇಶ್&zwnj;ಗೆ ಕೆಲವರು ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&amp;nbsp;&lt;/strong&gt;&lt;strong&gt; 10ನೇ ಕ್ಲಾಸ್ ಕೂಡ ಓದಿಲ್ಲ, ಆದ್ರೂ ದಂತವೈದ್ಯ: 20 ವರ್ಷಗಳಿಂದ ಕ್ಲಿನಿಕ್ ನಡೆಸುತ್ತಿದ್ದ ನಕಲಿ ಡೆಂಟಿಸ್ಟ್ ಅರೆಸ್ಟ್&lt;/strong&gt;&lt;/p&gt;&lt;img&gt;&lt;p&gt;ಅಧಿಕಾರ ಬಿಟ್ಟು ಹೋಗಿ ಕುರುಬರ ಸಂಘದ ಜಿಲ್ಲಾಧ್ಯಕ್ಷನ ಗಾದಿಗೆ ಚುನಾವಣೆ ನಡೆಸುವಂತೆ ಸದಸ್ಯರು ಆಗ್ರಹಿಸಿದ್ದಾರೆ. ಚುನಾವಣೆ ನಡೆಸಿ ಗೆದ್ದು ಬಳಿಕ ಜಿಲ್ಲಾಧ್ಯಕ್ಷನಾಗು, ಅಲ್ಲಿವರೆಗೂ ಸಂಘಕ್ಕೆ ಬರಬೇಡಾ ಎಂದು ಕೆಲವರು ಘೇರಾವ್ ಹಾಕಿದ್ದಾರೆ. ಇದೇ ಸಮಯದಲ್ಲಿ ಕಚೇರಿ ಒಳಹೋಗಲು ಯತ್ನಿಸಿದ ಸುರೇಶ್ ಅವರನ್ನು ಕೆಲ ಸದಸ್ಯರು ಎಳೆದು ಹೊರ ತಳ್ಳಿದ್ದಾರೆ. ಬಳಿಕ ಪೊಲೀಸರ ರಕ್ಷಣೆಯಲ್ಲಿ ಕುರುಬರ ಸಂಘದ ಅಧ್ಯಕ್ಷ ಸುರೇಶ್ ತೆರಳಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;2 ವಾರ ಡೈಪರ್ ಚೇಂಜ್ ಮಾಡದೇ 4 ತಿಂಗಳ ಮಗು ಸಾವಿಗೆ ಕಾರಣರಾದ ಪಾಪಿ ಪೋಷಕರು&lt;/strong&gt;&lt;/p&gt;]]></content:encoded>
            <category>mandya</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/members-smeared-ink-on-mandya-district-president-of-shepherd-association-q55p9i9"/>
        </item>
        <item>
            <title><![CDATA[ಅಪ್ಪ, ಅಮ್ಮ ಇಲ್ಲದವರು ಮಾತ್ರ ಜಾತ್ಯತೀತರು,  ಹಿಂದೂಗಳು ಸಿಂಹದ ಮರಿಗಳು: ಅನಂತಕುಮಾರ]]></title>
            <link>https://kannada.asianetnews.com/karnataka-districts/bjp-former-mp-anantkumar-hegde-s-controversial-statement-that-secularists-are-those-who-have-no-parents-mrq/articleshow-r3kntwg</link>
            <guid isPermaLink="true">https://kannada.asianetnews.com/karnataka-districts/bjp-former-mp-anantkumar-hegde-s-controversial-statement-that-secularists-are-those-who-have-no-parents-mrq/articleshow-r3kntwg</guid>
            <pubDate>Tue, 24 Mar 2026 06:35:13 +0530</pubDate>
            <description><![CDATA[ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ, ಜಾತ್ಯತೀತರೆಂದರೆ ಅಪ್ಪ-ಅಮ್ಮ ಇಲ್ಲದವರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂಗಳು ಸಿಂಹದ ಮರಿಗಳಿದ್ದಂತೆ ಮತ್ತು ಮೈಸೂರಿನಲ್ಲಿ ಟಿಪ್ಪುವಿನ ಸಮಾಧಿ ಮಾಡಲಾಯಿತು ಎಂದು ಅವರು ಪ್ರತಿಪಾದಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kmens1m8518868zgww7b2txj,imgname-anantkumar-hegde-1774314096264.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ/ಮದ್ದೂರು:&lt;/strong&gt; ಹಿಂದೂ ಎನ್ನುವುದು ಒಂದು ಸಮುದಾಯ, ಜಾತಿಯ ಹೆಸರಲ್ಲ. ಯಾರು ಕೆಟ್ಟದ್ದನ್ನು, ದುಷ್ಟತೆಯನ್ನು ವಿರೋಧಿಸುವರೋ ಅವರೆಲ್ಲರೂ ಹಿಂದೂಗಳು ಎಂಬುದಾಗಿ ಸಂಸ್ಕೃತದಲ್ಲಿ ಹೇಳಲಾಗಿದೆ. ನನ್ನ ಪ್ರಕಾರ ಅಪ್ಪ- ಅಮ್ಮ ಇಲ್ಲದವರು ಮಾತ್ರ ಜಾತ್ಯತೀತರು ಎಂದು ಮಾಜಿ ಸಂಸದ ಅನಂತಕುಮಾರ ಹೆಗಡೆ ಕಿಡಿಕಾರಿದ್ದಾರೆ.&lt;/p&gt;&lt;h2&gt;&lt;strong&gt;ಅಪ್ಪ- ಅಮ್ಮ ಇಲ್ಲದಿದ್ದರೆ ಜಾತ್ಯತೀತರೆಂದು ಹೇಳಿಕೊಳ್ಳಿ&lt;/strong&gt;&lt;/h2&gt;&lt;p&gt;ಪಟ್ಟಣದಲ್ಲಿ ಸೋಮವಾರ ಹಿಂದೂಪರ ಸಂಘಟನೆಗಳಿಂದ ಆಯೋಜಿಸಿದ್ದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿ, ಕೆಲವರಿಗೆ ಹಿಂದೂ ಎಂದರೆ ಕಿವಿಗೆ ಕಾದ ಸೀಸ ಹೊಯ್ದಂಗೆ ಆಗುತ್ತದೆ. ಅವರೆಲ್ಲರೂ ಜಾತ್ಯತೀತರು ಎನ್ನುತ್ತಾರೆ. ನನ್ನ ಪ್ರಕಾರ ಅಪ್ಪ-ಅಮ್ಮ ಇಲ್ಲದವರು ಮಾತ್ರ ಜಾತ್ಯತೀತರು. ಜಾತ್ಯತೀತರು ಎಂದೇಳಿಕೊಳ್ಳುವ ದುರ್ಬುದ್ಧಿ ಜೀವಿಗಳೇ ಮೊದಲು ನಿಮ್ಮ ಎದೆ ಮುಟ್ಟಿ ನೋಡಿಕೊಳ್ಳಿ. ನಿಮಗೂ ಅಪ್ಪ- ಅಮ್ಮ ಇದ್ದಾರಲ್ಲವೇ. ನಿಮಗೆ ಅಪ್ಪ- ಅಮ್ಮ ಇಲ್ಲದಿದ್ದರೆ ಜಾತ್ಯತೀತರೆಂದು ಹೇಳಿಕೊಳ್ಳಿ. ಆದರೆ, ನಾನಂತೂ ಜಾತ್ಯತೀತ ಅಲ್ಲ ಎಂದು ನೇರವಾಗಿ ನುಡಿದರು.&lt;/p&gt;&lt;h3&gt;&lt;strong&gt;ಹಿಂದೂಗಳು ಸಿಂಹದ ಮರಿಗಳು&lt;/strong&gt;&lt;/h3&gt;&lt;p&gt;ರಕ್ತದ ಗುಂಪೇ ಗೊತ್ತಿಲ್ಲದ ಸಮುದಾಯ ನಮ್ಮನ್ನು ಆಳಲು ಆರಂಭಿಸಿದೆ. ಅವರು ರಕ್ತದ ಗುಂಪೇ ಗೊತ್ತಿಲ್ಲದ ನಪುಂಸಕರು. ಅದಕ್ಕೆ ಇತಿಹಾಸವನ್ನು ಓದಬೇಕು. ಹಿಂದೂಗಳೆಂದರೆ ಕುರಿಮಂದೆಯೊಂದಿಗೆ ಬದುಕುತ್ತಿರುವ ಕುರಿಗಳಲ್ಲ. ಹಿಂದೂಗಳು ಸಿಂಹದ ಮರಿಗಳು. ನಮ್ಮದು ಗುಲಾಮಿ ಬದುಕಾಗಿರಲಿಲ್ಲ. ಗೆಲುವಿನ ಬದುಕಾಗಿತ್ತು ಎಂದು ಗಟ್ಟಿ ದನಿಯಲ್ಲಿ ಹೇಳಿದರು.&lt;/p&gt;&lt;p&gt;ಎಲ್ಲೆಲ್ಲಿ ಮುಸಲ್ಮಾನ ಹೆಜ್ಜೆ ಇಟ್ಟಿದ್ದಾರೋ ಅಲ್ಲೆಲ್ಲ ನವಾಬಗಿರಿ ಮಾಡಿದ್ದಾರೆ. ಆದರೆ, ಮೈಸೂರಿನಲ್ಲಿ ಮಾಡಲು ಬಿಟ್ಟಿಲ್ಲ. ಅದಕ್ಕೆ ಕಾರಣ ಇಲ್ಲಿನ ವೀರಮಣ್ಣು. ಇಲ್ಲಿ ಟಿಪ್ಪುವಿನ ಜೊತೆ ಅವನ ಸಮಾಧಿಯನ್ನೂ ಮಾಡಿ ಮುಗಿಸಿದರು. ಅದರ ಹೆಮ್ಮೆ ಮೈಸೂರಿನ ವೀರ ಮಕ್ಕಳಿಗೆ ಸಲ್ಲಬೇಕು ಎಂದು ಹೇಳಿದರು.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bjp-former-mp-anantkumar-hegde-s-controversial-statement-that-secularists-are-those-who-have-no-parents-mrq/articleshow-r3kntwg"/>
        </item>
        <item>
            <title><![CDATA[ನಮ್ಮ ಮತ ಮಾರಾಟಕ್ಕಿಲ್ಲ: ಮನೆ ಮುಂದೆ ನಾಮಫಲಕ ಅಳವಡಿಸಿದ ಪಾಲಹಳ್ಳಿಯ ರುದ್ರಮ್ಮ ಅಜ್ಜಿ]]></title>
            <link>https://kannada.asianetnews.com/karnataka-districts/our-vote-is-not-for-sale-rudramma-ajji-of-palahalli-installs-nameplate-in-front-of-house-srirangapatna-mandya-mrq/articleshow-s283bmk</link>
            <guid isPermaLink="true">https://kannada.asianetnews.com/karnataka-districts/our-vote-is-not-for-sale-rudramma-ajji-of-palahalli-installs-nameplate-in-front-of-house-srirangapatna-mandya-mrq/articleshow-s283bmk</guid>
            <pubDate>Sun, 29 Mar 2026 09:02:07 +0530</pubDate>
            <description><![CDATA[&lt;p&gt;ಪಾಲಹಳ್ಳಿಯ 80 ವರ್ಷದ ವೃದ್ಧೆ ರುದ್ರಮ್ಮ, ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿನ ಆಮಿಷಗಳಿಗೆ ಬೇಸತ್ತು 'ನಮ್ಮ ಓಟು ಮಾರಾಟಕ್ಕಿಲ್ಲ, ಖರೀದಿಗೆ ಬಂದವರಿಗೆ ಓಟಿಲ್ಲ' ಎಂಬ ನಾಮಫಲಕವನ್ನು ತಮ್ಮ ಮನೆ ಮುಂದೆ ಹಾಕಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmvt1nvbx1mevqv5td80nk75,imgname-mandya--1774754781035.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶ್ರೀರಂಗಪಟ್ಟಣ: &lt;/strong&gt;ನಮ್ಮ ಓಟು ಮಾರಾಟಕ್ಕಿಲ್ಲ. ಖರೀದಿಗೆ ಬಂದವರಿಗೆ ಓಟಿಲ್ಲ ಎಂದು ತಾಲೂಕಿನ ಪಾಲಹಳ್ಳಿಯ 80 ವರ್ಷದ ವೃದ್ಧೆ ತಮ್ಮ ಮನೆ ಮುಂದೆ ನಾಮಫಲಕ ಹಾಕಿ ಗಮನ ಸೆಳೆದಿದ್ದಾರೆ.&amp;nbsp;&lt;/p&gt;&lt;p&gt;ಗ್ರಾಮದ ರುದ್ರಮ್ಮ ನಾಗರಾಜು (80) ಮಾ.29 ರಂದು ನಡೆಯಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಗೆ ಮತದಾರರನ್ನು ಸೆಳೆಯುತ್ತಿರುವ ಆಮಿಷಗಳಿಂದ ಬೇಸರಗೊಂಡು ಈ ರೀತಿ ತಮ್ಮ ಮನೆ ಮುಂದೆ ನಾಮಫಲಕ ಹಾಕಿದ್ದಾರೆ.&amp;nbsp;&lt;/p&gt;&lt;h2&gt;&lt;strong&gt;ರುದ್ರಮ್ಮಾ ಅಜ್ಜಿ ಹೇಳಿದ್ದೇನು?&lt;/strong&gt;&lt;/h2&gt;&lt;p&gt;ರುದ್ರಮ್ಮರ ಪುತ್ರ ಪ್ರಸನ್ನ ಈ ಸಂಬಂಧ ಪ್ರತಿಕ್ರಿಯಿಸಿ, ನಮ್ಮ ಮನೆಯಲ್ಲಿ ನನ್ನ ತಾಯಿ ರುದ್ರಮ್ಮ ಹಾಗೂ ನನ್ನದು ಸೇರಿ ಎರಡು ಮತಗಳಿವೆ. ಚುನಾವಣೆಗೆ ಸ್ಪರ್ಧಿಸಿರುವವರು ಮತದಾರರಿಗೆ ಹಣ ಸೇರಿದಂತೆ ಇನ್ನಿಲ್ಲದ ಆಮಿಷಗಳನ್ನು ತೋರುತ್ತಿದ್ದಾರೆ. ಸ್ಥಳೀಯ ಸಂಘ, ಸಂಸ್ಥೆಗಳ ಚುನಾವಣೆಗೂ ಆಮಿಷ ಹಾಗೂ ಹಣ ಹಂಚಿಕೆ ಮಾಡಿದರೆ ಸಹಕಾರ ಸಂಘಗಳು ಉಳಿಯಲು ಸಾಧ್ಯವಿಲ್ಲ. ಹಾಗಾಗಿ ಈ ವ್ಯವಸ್ಥೆಯಿಂದ ಬೇಸರಗೊಂಡು ನಮ್ಮ ಓಟು ಮಾರಾಟಕ್ಕಿಲ್ಲ, ಖರೀದಿಗೆ ಬಂದವರಿಗೆ ನಮ್ಮ ಓಟಿಲ್ಲ ಎಂಬ ನಾಮಫಲಕ ಹಾಕಿರುವುದಾಗಿ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗೆಜ್ಜಲಗೆರೆ ಗ್ರಾಪಂ ನಗರಸಭೆಯಿಂದ ಹೊರಗಿಡುವುದು ಕಷ್ಟದ ಕೆಲಸ: ಸಚಿವ ಚಲುವರಾಯಸ್ವಾಮಿ&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಡ್ಯ ಕುರುಬರ ಸಂಘದ ಅಧ್ಯಕ್ಷನಿಗೆ ಮಸಿ ಬಳಿದಿದ್ಯಾಕೆ? ಏನಿದು ವಿವಾದ?&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;Davanagere Bypolls: ಸವಾಲು ಸ್ವೀಕರಿಸಿ ದಾವಣಗೆರೆಗೆ ಬಂದ ಪ್ರದೀಪ್ ಈಶ್ವರ್; ಬಿಜೆಪಿ ವಿರುದ್ಧ ವಾಗ್ದಾಳಿ#davanagere #karnatakabypolls #pradeepeshwar #congressvsbjp #kannadanewshttps://t.co/BX6cKi3TCg&lt;/p&gt;&lt;p&gt;&mdash; Asianet Suvarna News (@AsianetNewsSN) March 29, 2026&lt;/p&gt;&lt;p&gt;&amp;nbsp;&lt;/p&gt;&lt;p&gt;--------&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/our-vote-is-not-for-sale-rudramma-ajji-of-palahalli-installs-nameplate-in-front-of-house-srirangapatna-mandya-mrq/articleshow-s283bmk"/>
        </item>
        <item>
            <title><![CDATA[Mandya: ಹೋಟೆಲ್‌ ಟಾಯ್ಲೆಟ್‌ನಲ್ಲಿ ಮೊಬೈಲಿಟ್ಟು ವಿಡಿಯೋ ರೆಕಾರ್ಡಿಂಗ್: ಸಪ್ಲೈಯರ್ ಬಂಧನ]]></title>
            <link>https://kannada.asianetnews.com/gallery/karnataka-districts/supplier-arrested-for-recording-video-with-mobile-phone-in-hotel-toilet-srirangapatna-mandya-mrq-ukaysua</link>
            <guid isPermaLink="true">https://kannada.asianetnews.com/gallery/karnataka-districts/supplier-arrested-for-recording-video-with-mobile-phone-in-hotel-toilet-srirangapatna-mandya-mrq-ukaysua</guid>
            <pubDate>Sun, 15 Mar 2026 07:36:12 +0530</pubDate>
            <description><![CDATA[&lt;p&gt;ಶ್ರೀರಂಗಪಟ್ಟಣದ ಶರವಣ ಹೋಟೆಲ್&zwnj;ನಲ್ಲಿ ಸಪ್ಲೈಯರ್ ಹರೀಶ್, ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದ. ಹೋಟೆಲ್&zwnj;ಗೆ ಬಂದ ಮಹಿಳೆಯೊಬ್ಬರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkqkj5n57er1823ww2gqybrf,imgname-video-recording--1--1773540021925.jpg" type="image/jpeg" height="390" width="690"/>
            <content:encoded><![CDATA[&lt;p&gt;ಶ್ರೀರಂಗಪಟ್ಟಣದ ಶರವಣ ಹೋಟೆಲ್&zwnj;ನಲ್ಲಿ ಸಪ್ಲೈಯರ್ ಹರೀಶ್, ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದ. ಹೋಟೆಲ್&zwnj;ಗೆ ಬಂದ ಮಹಿಳೆಯೊಬ್ಬರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.&lt;/p&gt;&lt;img&gt;&lt;p&gt;ಖಾಸಗಿ ಹೋಟೆಲ್&zwnj;ನ ಸಪ್ಲೈಯರ್ ಶೌಚಾಯಲದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿರುವ ಪ್ರಕರಣ ಸಂಬಂಧ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ರಾಜಾಸ್ಥಾನ ಮೂಲದ ಹರೀಶ್ ಪಟ್ಟಣದ ಗಂಜಾಂ ರಸ್ತೆಯ ಹೈವೆ ಸೇತುವೆ ಬಳಿ ಇರುವ ಶರವಣ ಹೋಟೆಲ್&zwnj;ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ. ಈತ ಪುರುಷರು ಮತ್ತು ಮಹಿಳಾ ಶೌಚಾಲಯದ ನಡುವೆ ಇರುವ ಗೋಡೆ ಮೇಲೆ ಮೊಬೈಲ್&zwnj; ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ.&lt;/p&gt;&lt;img&gt;&lt;p&gt;ಹೋಟೆಲ್&zwnj;ಗೆ ಬಂದ ಮಹಿಳೆಯರು ಶೌಚಾಲಯದ ಒಳಗೆ ಹೋದ ವೇಳೆ ಅವರ ಖಾಸಗಿ ಭಾಗಗಳನ್ನು ಚಿತ್ರೀಕರಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಪರಿಶೀಲಿಸಿ ಹೋಟೆಲ್ ಮಾಲೀಕನಿಗೆ ದೂರಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;The UP Story: ಅಪ್ರಾಪ್ತ ತಂಗಿಯರು ಕರೆತಂದ ಹಿಂದೂ ಸ್ನೇಹಿತೆಯ ರೇ* ಮಾಡಿ, ಈತ ಏನು ಹೇಳ್ತಿದ್ದಾನೆ ಕೇಳಿ&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರಿನ ರಸ್ತೆಬದಿ ಕೇಳಿದ ಆ ಕಂದನ ಕೂಗು! ಆಗಷ್ಟೇ ಹುಟ್ಟಿದ ಹೆಣ್ಣುಮಗುವನ್ನು ರೋಡಲ್ಲಿ ಬಿಟ್ಟು ಹೋದ ಪೋಷಕರು!&lt;/strong&gt;&lt;/p&gt;&lt;img&gt;&lt;p&gt;ನಂತರ ಮಾಹಿತಿ ತಿಳಿದ ಪೊಲೀಸರು ಹೋಟೆಲ್&zwnj;ಗೆ ಆಗಮಿಸಿ ಶೌಚಾಲಯದ ಬಳಿ ಮೊಬೈಲ್ ಇಟ್ಟ ವ್ಯಕ್ತಿಯನ್ನು ವಿಚಾರಿಸಿದಾಗ ನಿತ್ಯ ಇಂತಹ ಕೆಲಸ ಮಾಡಿರುವುದು ಬಹಿರಂಗವಾಗಿದೆ. ನಂತರ ಪೋಲಿಸರು ಆರೋಪಿ ಸಪ್ಲೈಯರ್ ಹರೀಶ್ ಹಾಗೂ ಆತನ ಮೊಬೈಲ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/supplier-arrested-for-recording-video-with-mobile-phone-in-hotel-toilet-srirangapatna-mandya-mrq-ukaysua"/>
        </item>
        <item>
            <title><![CDATA[ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆ: ಚಲುವರಾಯಸ್ವಾಮಿ]]></title>
            <link>https://kannada.asianetnews.com/karnataka-districts/nagamangala-primary-health-center-construction-chaluvarayaswamy-gvd/articleshow-urhvtti</link>
            <guid isPermaLink="true">https://kannada.asianetnews.com/karnataka-districts/nagamangala-primary-health-center-construction-chaluvarayaswamy-gvd/articleshow-urhvtti</guid>
            <pubDate>Tue, 17 Mar 2026 20:36:08 +0530</pubDate>
            <description><![CDATA[&lt;p&gt;ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hmr0507ad5kpxzz5hr51yy3p,imgname-Chsd-1705907486953.JPG" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನಾಗಮಂಗಲ (ಮಾ.17):&lt;/strong&gt; ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದೊರಕುವ ಸೇವೆಗಳನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಕದಬಹಳ್ಳಿಯಲ್ಲಿ 2.54 ಕೋಟಿ ರು. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದರು.&lt;/p&gt;&lt;p&gt;ನಾನು ಶಾಸಕ, ಸಚಿವನಾಗಿದ್ದ ಅವಧಿಯಲ್ಲಿ ತಾಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಜೊತೆಗೆ ತಾಲೂಕಿನ ಹಲವು ಗ್ರಾಮಗಳಿಗೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ ಎಂದರು. ಕದಬಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಹೊರ ಮತ್ತು ಒಳರೋಗಿಗಳ ಕೊಠಡಿ, ಎಕ್ಸರೇ, ಪ್ರಯೋಗಾಲಯ, ವೈದ್ಯರ ಕೊಠಡಿ, ಶೌಚಾಲಯ ಸೇರಿದಂತೆ ಸುಸಜ್ಜಿತವಾದ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. ಇದರಿಂದಾಗಿ ತಾಲೂಕಿನ ಗಡಿ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.&lt;/p&gt;&lt;h2&gt;&lt;strong&gt;ಅನುದಾನ ಬಿಡುಗಡೆ&lt;/strong&gt;&lt;/h2&gt;&lt;p&gt;ಅಧಿಕಾರ ಯಾರಿಗೂ ಶಾಶ್ವತವಲ್ಲ. ಶಾಸಕನಾಗಿರಲ, ಸಚಿವನಾಗಿರಲಿ ಸಿಕ್ಕ ಅವಕಾಶದಲ್ಲಿ ಶಾಶ್ವತವಾಗಿ ಉಳಿಯುವಂತಹ ಅಭಿವೃದ್ಧಿ ಕೆಲಸ ಮಾಡಿ ಜನರ ಋಣ ತೀರಿಸಬೇಕೆಂಬುದು ನನ್ನ ಮುಖ್ಯ ಉದ್ದೇಶ. ಅದಕ್ಕಾಗಿ ತಾಲೂಕಿನ ಜನರ ನಿರೀಕ್ಷೆಗೂ ಮೀರಿ ಜನ ಜಾನುವಾರುಗಳ ಆರೋಗ್ಯ ಕೇಂದ್ರಗಳು, ಶಾಲಾ ಕಾಲೇಜು, ಅಂಗನವಾಡಿ ಕೇಂದ್ರ, ವಿವಿಧ ವಸತಿ ಶಾಲೆಗಳು, ಹಾಸ್ಟೆಲ್&zwnj;ಗಳು, ವಿದ್ಯುತ್ ವಿತರಣಾ ಕೇಂದ್ರಗಳು, ಕೆರೆ ತುಂಬಿಸುವ ಯೋಜನೆ ತಂದಿದ್ದೇನೆ. ಅಲ್ಲದೇ, ರಸ್ತೆ, ಚರಂಡಿ, ಸೇತುವೆ ನಿರ್ಮಾಣಕ್ಕೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಜನರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು.&lt;/p&gt;&lt;p&gt;ಇದಕ್ಕೂ ಮುನ್ನ ತಾಲೂಕಿನ ಕಳ್ಳಿಗುಂದಿ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವರು, ಸುಖಧರೆ ಗ್ರಾಮದಲ್ಲಿ ಮಾದರಿ ಗ್ರಾಮ ಯೋಜನೆಗೆ ಚಾಲನೆ ನೀಡಿ, ತಟ್ಟೇಕೆರೆ ಗ್ರಾಮದಲ್ಲಿ ಪಶು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದರು. ಚಟ್ಟೇನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಟಿಎಪಿಸಿಎಂಎಸ್ ನಿರ್ದೇಶಕ ಎನ್.ಟಿ.ಕೃಷ್ಣಮೂರ್ತಿ, ಸುಕೃತ ಬಿಲ್ಡರ್&zwj;ಸ್&zwnj;ನ ಶಿವಶಂಕರ್, ಮುಖಂಡರಾದ ಮಂಜೇಶ್, ದೊರೆಸ್ವಾಮಿ ಸೇರಿದಂತೆ ಹಲವರು ಇದ್ದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nagamangala-primary-health-center-construction-chaluvarayaswamy-gvd/articleshow-urhvtti"/>
        </item>
        <item>
            <title><![CDATA['ನನ್ನ ಫೋಟೋ ಇರುವ ಫ್ಲೆಕ್ಸ್ ಹಾಕಬೇಡಿ' ; ಅಭಿಮಾನಿಗಳಿಗೆ ಮಂಡ್ಯ ಎಸ್‌ಪಿ ಡಾ. ಶೋಭಾರಾಣಿ ಮನವಿ]]></title>
            <link>https://kannada.asianetnews.com/karnataka-districts/dont-put-up-flex-banners-with-my-photo-mandya-sp-dr-shobharani-appeals-to-fans/articleshow-w923ezt</link>
            <guid isPermaLink="true">https://kannada.asianetnews.com/karnataka-districts/dont-put-up-flex-banners-with-my-photo-mandya-sp-dr-shobharani-appeals-to-fans/articleshow-w923ezt</guid>
            <pubDate>Sun, 22 Mar 2026 12:44:26 +0530</pubDate>
            <description><![CDATA[&lt;p&gt;ಯುಗಾದಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯಾದ್ಯಂತ ತಮ್ಮ ಭಾವಚಿತ್ರವಿರುವ ಫ್ಲೆಕ್ಸ್&zwnj;ಗಳನ್ನು ಅಳವಡಿಸಿದ್ದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಅವರು ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಫ್ಲೆಕ್ಸ್ ಹಾಕುವುದು ಸರಿಯಲ್ಲ ಎಂದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kma5x53dvvx0hh4886022g7b,imgname----------------------21--1774163235949.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮಾ.22): &lt;/strong&gt;ಯುಗಾದಿ, ರಂಜಾನ್ ಹಬ್ಬಗಳ ಹಿನ್ನೆಲೆ ಅಭಿಮಾನಿಗಳಿಂದ ಜಿಲ್ಲೆಯ ವಿವಿಧೆಡೆ ತಮ್ಮ ಭಾವಚಿತ್ರವಿರುವ ಫ್ಲೆಕ್ಸ್ ಮತ್ತು ಬ್ಯಾನರ್&zwnj;ಗಳು ರಾರಾಜಿಸುತ್ತಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಶೋಭಾರಾಣಿ ಅವರು ತಮ್ಮ ಭಾವಚಿತ್ರವಿರುವ ಫ್ಲೆಕ್ಸ್ ಹಾಕದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.&lt;/p&gt;&lt;h2&gt;ಮಾಧ್ಯಮಗಳ ವರದಿಗೆ ಎಸ್&zwnj;ಪಿ ಸ್ಪಂದನೆ&lt;/h2&gt;&lt;p&gt;ಇತ್ತೀಚೆಗೆ ಹಬ್ಬಗಳ ಹಿನ್ನೆಲೆಯಲ್ಲಿ ಎಸ್&zwnj;ಪಿ ಶೋಭಾರಾಣಿ ಅವರ ಫೋಟೋ ಬಳಸಿ ಶುಭಾಶಯ ಕೋರುವ ಫ್ಲೆಕ್ಸ್&zwnj;ಗಳನ್ನು ಅಳವಡಿಸಲಾಗಿತ್ತು. ಈ ಕುರಿತು ನಿನ್ನೆಯಷ್ಟೇ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿ ಸಾರ್ವಜನಿಕರ ಚರ್ಚೆಗೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್&zwnj;ಪಿ ಅವರು ತಕ್ಷಣವೇ ಪ್ರತಿಕ್ರಿಯಿಸಿದ್ದಾರೆ.&lt;/p&gt;&lt;h3&gt;ಪ್ಲೆಕ್ಸ್ ಹಾಕೋದು ಸರಿಯಲ್ಲ ಎಂದ ಎಸ್&zwnj;ಪಿ&lt;/h3&gt;&lt;p&gt;ನನ್ನ ಭಾವಚಿತ್ರವಿರುವ ಫ್ಲೆಕ್ಸ್&zwnj;ಗಳನ್ನು ಅಳವಡಿಸಿರುವುದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಅಳವಡಿಸುವುದು ಸರಿಯಲ್ಲ. ದಯವಿಟ್ಟು ನನ್ನ ಭಾವಚಿತ್ರವನ್ನು ಯಾವುದೇ ಪ್ಲೆಕ್ಸ್, ಬ್ಯಾನರ್ ಅಥವಾ ಪ್ರಚಾರ ಕಾರ್ಯಗಳಲ್ಲಿ ಬಳಸಬೇಡಿ' ಎಂದು ಡಾ. ಶೋಭಾರಾಣಿ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.&lt;/p&gt;&lt;h3&gt;ಕಾನೂನು ಗೌರವಕ್ಕೆ ಆದ್ಯತೆ ನೀಡಿ&lt;/h3&gt;&lt;p&gt;ತಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಕೋರಿರುವ ಎಸ್&zwnj;ಪಿ ಅವರು, ಕಾನೂನು ಪಾಲನೆ ಮಾಡುವುದು ಮತ್ತು ವೈಯಕ್ತಿಕ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದ್ದರಿಂದ ಇನ್ಮುಂದೆ ಫೋಟೋ ಬಳಸಿಕೊಂಡು ಇಂತಹ ಯಾವುದೇ ಪ್ರಚಾರ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.&lt;/p&gt;]]></content:encoded>
            <category>mandya</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/dont-put-up-flex-banners-with-my-photo-mandya-sp-dr-shobharani-appeals-to-fans/articleshow-w923ezt"/>
        </item>
        <item>
            <title><![CDATA[ಅನುದಾನದ ಲೆಕ್ಕವನ್ನು ಜಿಲ್ಲೆಯ ಜನರು ಕೇಳಬೇಕೆ ಹೊರತು ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ]]></title>
            <link>https://kannada.asianetnews.com/politics/minister-chaluvarayaswamy-counter-to-hd-kumaraswamy-maddur-event-gvd/articleshow-yr82fsb</link>
            <guid isPermaLink="true">https://kannada.asianetnews.com/politics/minister-chaluvarayaswamy-counter-to-hd-kumaraswamy-maddur-event-gvd/articleshow-yr82fsb</guid>
            <pubDate>Sat, 14 Mar 2026 21:32:22 +0530</pubDate>
            <description><![CDATA[&lt;p&gt;ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನರು ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j4f1hstjte0m1rxfam3ncyxk,imgname-vdv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮದ್ದೂರು (ಮಾ.14): &lt;/strong&gt;ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನರು ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ತಾಲೂಕಿನ ಸೋಮನಹಳ್ಳಿ ಬಳಿ 220 ಕೆ.ವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.&lt;/p&gt;&lt;p&gt;ಅದರ ಅಂಕಿ-ಅಂಶಗಳನ್ನು ಇಲಾಖಾವಾರು ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಲೆಕ್ಕ ಕೇಳಿದ್ದಾರೆ. ಆದರ ಲೆಕ್ಕವನ್ನು ಜಿಲ್ಲೆಯ ಜನರು ಕೇಳಬೇಕೆ ಹೊರತು ಅವರಲ್ಲ. ಅವರೇನು ಜಿಲ್ಲೆಯ ಮತದಾರರಲ್ಲ. ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಜಿಲ್ಲೆಯ ಜನರು ಅವರಿಗೆ ಆಶೀರ್ವಾದ ಮಾಡಿದ್ದಾರೆ. ಜನರ ನಿರೀಕ್ಷೆ ಹುಸಿಯಾಗದಂತೆ ಕೇಂದ್ರ ಸಚಿವರು ಕೆಲಸ ಮಾಡಲಿ. ಲೆಕ್ಕ ಕೊಡುವ ಸಮಯ ಬರುತ್ತದೆ. ಆಗ ಅಂಕಿ-ಅಂಶಗಳ ಪ್ರಕಾರ ನೀಡಲಾಗುವುದು ಎಂದು ಕುಟುಕಿದರು.&lt;/p&gt;&lt;p&gt;ಕಳೆದ ಮೂರು ವರ್ಷಗಳಲ್ಲಿ ಇಡೀ ರಾಜ್ಯದಲ್ಲಿಯೇ ಮೈಸೂರು ಜಿಲ್ಲೆ ಹೊರತು ಪಡಿಸಿದರೆ ಮಂಡ್ಯ ಜಿಲ್ಲೆಗೆ ಹೆಚ್ಚು ಅನುದಾನ ನೀಡಲಾಗಿದೆ. ಸ್ವಾತಂತ್ರ್ಯನಂತರ ತೂಬಿನಕೆರೆ ಬಳಿ ಮಾತ್ರ 220 ಕೆವಿ ಸಬ್ ಸ್ಟೇಷನ್ ಮಾತ್ರ ಇತ್ತು. ನಂತರ ಕೆ.ಆರ್.ಪೇಟೆ, ಶೀರಂಗಪಟ್ಟಣ, ನಾಗಮಂಗಲದಲ್ಲಿತ್ತು. ಮದ್ದೂರಿಗೂ 220 ಕೆವಿ ಸಬ್ ಸ್ಟೇಷನ್ ನಿರ್ಮಾಣ ಮಾಡಬೇಕೆಂದು 25 ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆದರೆ, ಶಾಸಕ ಉದಯ್ ಅವರ 3 ವರ್ಷಗಳ ನಿರಂತರ ಪ್ರಯತ್ನದಿಂದಾಗಿ ಇಂದು ಚಾಲನೆ ನೀಡಲಾಗುತ್ತಿದೆ ಎಂದರು.&lt;/p&gt;&lt;p&gt;ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿಸಿ ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ. ಮೈಷುಗರ್ ಕಾರ್ಖಾನೆಗೆ 65 ಕೋಟಿ ರು. ವೆಚ್ಚದಲ್ಲಿ ಬಾಯ್ಲಿಂಗ್ ಹೌಸ್ ನಿರ್ಮಾಣಕ್ಕೆ ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಲಿದೆ. ಬಳಿಕ ಡಿಸ್ಟಿಲರಿ ವಿಭಾಗ ನಿರ್ಮಾಣ ಮಾಡಿದರೆ ಮೈಷುಗರ್ ಕಾರ್ಖಾನೆ ಯಾವುದೇ ಲೋಪದೋಷಗಳಿಲ್ಲದೆ ಕಾರ್ಯಾರಂಭ ಮಾಡಲಿದೆ ಎಂದರು.&lt;/p&gt;&lt;p&gt;ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ವರ್ಷದ ಯುಗಾದಿ ಹಬ್ಬದ ವೇಳೆಗೆ 220 ಕೆವಿ ಸಬ್ ಸ್ಟೇಷನ್ ಕಾಮಗಾರಿ ಉದ್ಘಾಟನೆಗೊಂಡು ರೈತರಿಗೆ ಹಾಗೂ ತಾಲೂಕಿನ ಜನತೆಗೆ ಅನುಕೂಲ ಕಲ್ಪಿಸಬೇಕು. ಈ ಸಂಬಂಧ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.&lt;/p&gt;&lt;p&gt;ಕ್ಷೇತ್ರದಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆಗಳ ಬಗ್ಗೆ ದಿನನಿತ್ಯ ಸಾಕಷ್ಟು ದೂರುಗಳನ್ನು ನೀಡುತ್ತಿದ್ದರು. ಹೀಗಾಗಿ ಸರ್ಕಾರದಿಂದ 800 ಕೋಟಿ ರು.ಗೂ ಹೆಚ್ಚಿನ ಅನುದಾನದಲ್ಲಿ ಕೆರೆಗಳು ಮತ್ತು ನಾಲೆಗಳ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಹಲವು ವರ್ಷಗಳಿಂದ ತಲೆದೋರುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಸರ್ಕಾರದ ಹಂತದಲ್ಲಿ ಸಾಕಷ್ಟು ಹೋರಾಟ ಮಾಡಿ 188 ಕೋಟಿ ರು. ವೆಚ್ಚದಲ್ಲಿ 220 ಕೆವಿ ಸಬ್ ಸ್ಟೇಷನ್ ನಿರ್ಮಾಣ ಮಾಡಲಾಗುತ್ತಿದ್ದು ಮುಂದಿನ ಒಂದು ವರ್ಷದೊಳಗೆ ಕಾಮಗಾರಿ ಮುಕ್ತಾಯವಾಗಿ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದರು.&lt;/p&gt;&lt;p&gt;ಕ್ಷೇತ್ರದಲ್ಲಿ 1800 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವುದನ್ನು ಸಹಿಸದೆ ವಿರೋಧಿಗಳು ನನ್ನ ವಿರುದ್ಧ ಅನಗತ್ಯ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕ್ಷೇತ್ರದ ಮತದಾರರು ಕಿವಿಗೊಡಬಾರದು. ನನಗೆ ರಾಜಕೀಯ, ಅಧಿಕಾರ ಮುಖ್ಯವಲ್ಲ ಕ್ಷೇತ್ರದ ಅಭಿವೃದ್ಧಿ ಜನರ ಹಿತ ಮುಖ್ಯವಾಗಿದೆ ಎಂದು ವಿರೋಧಿಗಳ ವಿರುದ್ಧ ಟೀಕಾಪ್ರಹಾರ ನಡೆಸಿದರು.&lt;/p&gt;&lt;p&gt;ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, 220 ಕೆವಿ ಸಬ್&zwnj;ಸ್ಟೇಷನ್ ಯೋಜನೆಯನ್ನು ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ 188 ಕೋಟಿ ರು.ಅನುದಾನ ತಂದಿರುವುದು ಪ್ರಶಂಸನೀಯ.ಈ ಕಾಮಗಾರಿ ಪೂರ್ಣಗೊಂಡರೆ ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲ, ಮಳವಳ್ಳಿ ತಾಲೂಕುಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ರೈತರು ಹಾಗೂ ಜನತೆಯ ಪರವಾಗಿ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.&lt;/p&gt;&lt;h2&gt;&lt;strong&gt;ಅತ್ಯಂತ ಕ್ರಿಯಾಶೀಲ&lt;/strong&gt;&lt;/h2&gt;&lt;p&gt;ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಹೊಸದಾಗಿ ಆಯ್ಕೆಯಾಗಿರುವ 38 ಶಾಸಕರಲ್ಲಿ ಕೆ.ಎಂ.ಉದಯ್ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುವ ಮೂಲಕ ತಾಲೂಕಿಗೆ ಅತೀ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಶಾಶ್ವತ ಅಭಿವೃದ್ಧಿ ಕಾಮಗಾರಿ ಮಾಡುವ ಮೂಲಕ ಜನ ಮನ್ನಣೆಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಗ್ರಾಪಂ ಮಾಜಿ ಅಧ್ಯಕ್ಷ ಸಿ.ಟಿ.ಶಂಕರ್, ಗುತ್ತಿಗೆದಾರ ಶಿವಶಂಕರ್, ತೈಲೂರು ರಘು, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್&zwnj;ಕುಮಾರ್, ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಮಮತಾ, ಎಸ್.ಇ.ವೆಂಕಟೇಶ್, ಇಇ ಕಿಶೋರ್, ಇಇ ಶಿವಕುಮಾರ್, ಇಇ ಕಿರಣ್ ಇತರರಿದ್ದರು.&lt;/p&gt;]]></content:encoded>
            <category>mandya</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/minister-chaluvarayaswamy-counter-to-hd-kumaraswamy-maddur-event-gvd/articleshow-yr82fsb"/>
        </item>
    </channel>
</rss>
