<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 17 May 2026 10:00:37 +0530</lastBuildDate>
        <atom:link href="https://kannada.asianetnews.com/rss/mysore" rel="self" type="application/rss+xml"/>
        <item>
            <title><![CDATA[H Vishwanath ಚುನಾವಣಾ ರಾಜಕಾರಣಕ್ಕೆ ಎಚ್‌.ವಿಶ್ವನಾಥ್ ಗುಡ್‌ ಬೈ!]]></title>
            <link>https://kannada.asianetnews.com/politics/h-vishwanath-retires-from-electoral-politics-rules-out-future-contests-for-himself-and-his-sons/articleshow-23s93kt</link>
            <guid isPermaLink="true">https://kannada.asianetnews.com/politics/h-vishwanath-retires-from-electoral-politics-rules-out-future-contests-for-himself-and-his-sons/articleshow-23s93kt</guid>
            <pubDate>Fri, 08 May 2026 06:53:16 +0530</pubDate>
            <description><![CDATA[&lt;p&gt;ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್&zwnj; ಅವರು ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕನಿಷ್ಠ ₹50 ಕೋಟಿ ಬೇಕಾಗಿದ್ದು, ಅಷ್ಟು ಹಣ ತಮ್ಮ ಬಳಿ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kky3957ykh6500xwyaht3dsk,imgname-h-vishwanath-1773757830398.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು: &lt;/strong&gt;&lsquo;ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ&rsquo; ಎಂದು ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್&zwnj; ಘೋಷಿಸಿದ್ದಾರೆ.&amp;nbsp;&lt;/p&gt;&lt;h2&gt;ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು&lt;/h2&gt;&lt;p&gt;ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಈ ಹಿಂದೆ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಜನರೇ ಖರ್ಚಿಗೆ ಹಣ ನೀಡಿ ಆಶೀರ್ವದಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು. ರಿಯಲ್&zwnj; ಎಸ್ಟೇಟ್&zwnj; ವ್ಯವಹಾರದಲ್ಲಿ ತೊಡಗಿದವರು ತಮ್ಮ ಜಮೀನು, ಮನೆ ಮಾರಿ ಸ್ಪರ್ಧಿಸಬಹುದು. ಆದರೆ, ನಮ್ಮಿಂದ ಅದು ಸಾಧ್ಯವಿಲ್ಲ ಎಂದರು.&lt;/p&gt;&lt;h3&gt;ನನ್ನ ಬಳಿ ಒಂದು ಮನೆ, ಒಂದು ನಿವೇಶನ ಮಾತ್ರ ಇದೆ&lt;/h3&gt;&lt;p&gt;ನನ್ನ ಬಳಿ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಹೀಗಿರುವಾಗ ಸ್ಪರ್ಧೆ ಹೇಗೆ ಸಾಧ್ಯ?. ಅಲ್ಲದೇ, ನನ್ನ ಮಕ್ಕಳು ಕೂಡ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ತಮ್ಮ ಶಕ್ತ್ಯಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದರು.&lt;/p&gt;&lt;p&gt;- ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನಲ್ಲಿಲ್ಲ: ಎಂಎಲ್&zwnj;ಸಿ&lt;/p&gt;]]></content:encoded>
            <category>mysore</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/h-vishwanath-retires-from-electoral-politics-rules-out-future-contests-for-himself-and-his-sons/articleshow-23s93kt"/>
        </item>
        <item>
            <title><![CDATA[ಮೈಸೂರು ಚೆಲುವಾಂಬ ಆಸ್ಪತ್ರೆ 'ಐಸಿಯು'ನಲ್ಲಿಟ್ಟ ಮಗು ಇರುವೆಗಳು ಕಚ್ಚಿ ಸಾವು? ವೈದ್ಯರಿಂದ ಬಂತು ಭಿನ್ನ ಸ್ಪಷ್ಟನೆ!]]></title>
            <link>https://kannada.asianetnews.com/karnataka-districts/mysuru-cheluvamba-hospital-newborn-death-ant-bite-allegations-vs-doctor-clarification-sat/articleshow-33kpx66</link>
            <guid isPermaLink="true">https://kannada.asianetnews.com/karnataka-districts/mysuru-cheluvamba-hospital-newborn-death-ant-bite-allegations-vs-doctor-clarification-sat/articleshow-33kpx66</guid>
            <pubDate>Thu, 23 Apr 2026 19:27:56 +0530</pubDate>
            <description><![CDATA[&lt;p&gt;ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ಮೃತಪಟ್ಟಿದ್ದು, ಐಸಿಯುನಲ್ಲಿದ್ದ ಇರುವೆಗಳು ಕಚ್ಚಿದ್ದರಿಂದಲೇ ಸಾವು ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ, ಮಗು ಅವಧಿ ಪೂರ್ವ ಜನಿಸಿದ್ದರಿಂದ ಹಾಗೂ ಚಿಕಿತ್ಸೆಯ ಕಾರಣಗಳಿಂದ ಮೃತಪಟ್ಟಿದೆ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpx9z7eq6g77gfk2qp8fyy31,imgname-mysuru-cheluvamba-hospital-baby-death-1776952516055.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಏ.23): ಸಾಂ&lt;/strong&gt;ಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಚೆಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ಸಾವನ್ನಪ್ಪಿದ್ದು, ಈ ಘಟನೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಐಸಿಯು (ICU) ನಲ್ಲಿದ್ದ ಮಗುವಿಗೆ ಇರುವೆಗಳು ಕಚ್ಚಿದ್ದರಿಂದಲೇ ಸಾವು ಸಂಭವಿಸಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಆಸ್ಪತ್ರೆ ಮಂಡಳಿಯು ಈ ಆರೋಪವನ್ನು ತಳ್ಳಿಹಾಕಿದ್ದು, ಸಾವಿಗೆ ವೈದ್ಯಕೀಯ ಕಾರಣಗಳನ್ನು ನೀಡಿದೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಕಳೆದ ಏಪ್ರಿಲ್ 15 ರಂದು ಜನಿಸಿದ್ದ ಗಂಡು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆಲುವಾಂಬ ಆಸ್ಪತ್ರೆಯ ಐಸಿಯು ವಿಭಾಗಕ್ಕೆ ದಾಖಲಿಸಲಾಗಿತ್ತು. ಮಗು ಏಳು ತಿಂಗಳಿಗೇ (ಅವಧಿ ಪೂರ್ವ) ಜನಿಸಿದ್ದರಿಂದ ಅದರ ತೂಕ ಕೇವಲ 1 ಕೆಜಿ 40 ಗ್ರಾಂ ಇತ್ತು. ತೀವ್ರ ನಿಗಾ ಘಟಕದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.&lt;/p&gt;&lt;h2&gt;&lt;strong&gt;ಪೋಷಕರ ಆಕ್ರೋಶ ಮತ್ತು ಆರೋಪ:&lt;/strong&gt;&lt;/h2&gt;&lt;p&gt;ಮಗು ಸಾವನ್ನಪ್ಪುತ್ತಿದ್ದಂತೆಯೇ ಪೋಷಕರು ಆಸ್ಪತ್ರೆಯ ಆವರಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಐಸಿಯು ನಲ್ಲಿ ಇರುವೆಗಳ ಕಾಟ ವಿಪರೀತವಾಗಿತ್ತು. ಮಗುವಿನ ದೇಹದ ಮೇಲೆ ಇರುವೆಗಳು ಓಡಾಡುತ್ತಿವೆ ಎಂದು ನಾವು ಸಿಬ್ಬಂದಿಗೆ ಮೊದಲೇ ತಿಳಿಸಿದ್ದೆವು. ಆದರೆ ಅವರು 'ಸಿಹಿ ಇರುವುದರಿಂದ ಒಂದೆರಡು ಇರುವೆಗಳು ಬಂದಿರಬಹುದು' ಎಂದು ಹಾರಿಕೆ ಉತ್ತರ ನೀಡಿದರು. ಈಗ ಮಗುವಿನ ಮುಖ ಮತ್ತು ಎದೆಯ ಮೇಲೆ ಗಾಯದ ಗುರುತುಗಳಿವೆ, ಇರುವೆ ಕಚ್ಚಿದ್ದರಿಂದಲೇ ನಮ್ಮ ಮಗು ಸತ್ತಿದೆ' ಎಂದು ಪೋಷಕರು ಕಣ್ಣೀರು ಹಾಕುತ್ತಾ ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದ್ದಾರೆ.&lt;/p&gt;&lt;h3&gt;&lt;strong&gt;ಆಸ್ಪತ್ರೆ ಅಧಿಕಾರಿಗಳ ಸ್ಪಷ್ಟನೆ:&lt;/strong&gt;&lt;/h3&gt;&lt;p&gt;ಪೋಷಕರ ಆರೋಪಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್ ಮತ್ತು ಮಕ್ಕಳ ವೈದ್ಯ ಡಾ. ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ. ಮಗುವಿನ ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ವೈದ್ಯರು ನೀಡಿರುವ ಪ್ರಮುಖ ಅಂಶಗಳು ಹೀಗಿವೆ:&lt;/strong&gt;&lt;/h2&gt;&lt;p&gt;&lt;strong&gt;ಅವಧಿ ಪೂರ್ವ ಜನನ: &lt;/strong&gt;ಮಗು ಕೇವಲ 7 ತಿಂಗಳಿಗೆ ಜನಿಸಿದ್ದು, ತೂಕ ಬಹಳ ಕಡಿಮೆ ಇತ್ತು. ಇಂತಹ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ ಮತ್ತು ಬದುಕುಳಿಯುವ ಸಾಧ್ಯತೆ ಕಡಿಮೆ ಇರುತ್ತದೆ.&lt;/p&gt;&lt;p&gt;&lt;strong&gt;ಗಾಯದ ಗುರುತುಗಳ ರಹಸ್ಯ: &lt;/strong&gt;ಮಗುವಿನ ಮುಖಕ್ಕೆ ಆಕ್ಸಿಜನ್ ಮಾಸ್ಕ್ ಅಳವಡಿಸಲಾಗಿತ್ತು. ಅದರ ಒತ್ತಡದಿಂದಾಗಿ ಮುಖದ ಮೇಲೆ ಕೆಲವು ಗುರುತುಗಳಾಗಿವೆ. ಅಲ್ಲದೆ, ಮಗುವಿನ ಹೃದಯ ಬಡಿತ ಕಡಿಮೆಯಾದಾಗ ಪುನಶ್ಚೇತನಗೊಳಿಸಲು (CPR) ಎದೆಯನ್ನು ಒತ್ತಲಾಗಿತ್ತು. ಆ ಗುರುತುಗಳು ಎದೆಯ ಮೇಲಿವೆ. ಇವು ಇರುವೆ ಕಚ್ಚಿದ ಗುರುತುಗಳಲ್ಲ.&lt;/p&gt;&lt;p&gt;&lt;strong&gt;ಇರುವೆ ಇರುವುದು ಸತ್ಯವೇ?:&lt;/strong&gt; ಗ್ಲೂಕೋಸ್ ಬಾಟಲಿಯ ಬಳಿ ಒಂದೇ ಒಂದು ಇರುವೆ ಇತ್ತು. ಅದನ್ನು ನೋಡಿದ ಪೋಷಕರು ಇಡೀ ಘಟನೆಗೆ ಇರುವೆಗಳೇ ಕಾರಣ ಎನ್ನುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು.&lt;/p&gt;&lt;h2&gt;&lt;strong&gt;ಪ್ರಸ್ತುತ ಸ್ಥಿತಿ:&lt;/strong&gt;&lt;/h2&gt;&lt;p&gt;ಸದ್ಯ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೋಷಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಆಸ್ಪತ್ರೆ ಮಂಡಳಿಯು ಪೋಷಕರ ದುಃಖವನ್ನು ಅರ್ಥ ಮಾಡಿಕೊಳ್ಳುತ್ತೇವೆ, ಆದರೆ ವೈದ್ಯಕೀಯವಾಗಿ ಇರುವೆ ಕಚ್ಚಿ ಸಾವು ಸಂಭವಿಸುವುದು ಅಸಾಧ್ಯ ಎಂದು ಹೇಳಿದೆ. ಈ ಪ್ರಕರಣವು ಈಗ ತನಿಖೆಯ ಹಂತದಲ್ಲಿದ್ದು, ಮೇಲಾಧಿಕಾರಿಗಳ ವರದಿಗಾಗಿ ಕಾಯಲಾಗುತ್ತಿದೆ.&lt;/p&gt;]]></content:encoded>
            <category>mysore</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mysuru-cheluvamba-hospital-newborn-death-ant-bite-allegations-vs-doctor-clarification-sat/articleshow-33kpx66"/>
        </item>
        <item>
            <title><![CDATA['ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಸ್ವಲ್ಪ ಜಾಸ್ತಿಯೇ ಆಸೆ ಇದೆ; ಸಿಎಂ ಬದಲಾವಣೆ ಕುರಿತು ರಾಜಣ್ಣ ಹೇಳಿಕೆ ರಾಜಕೀಯ ಸಂಚಲನ]]></title>
            <link>https://kannada.asianetnews.com/politics/kn-rajanna-meets-cm-siddaramaiah-in-mysuru-breaks-silence-on-leadership-change-speculation-rav/articleshow-445v2wy</link>
            <guid isPermaLink="true">https://kannada.asianetnews.com/politics/kn-rajanna-meets-cm-siddaramaiah-in-mysuru-breaks-silence-on-leadership-change-speculation-rav/articleshow-445v2wy</guid>
            <pubDate>Thu, 07 May 2026 11:53:41 +0530</pubDate>
            <description><![CDATA[&lt;p&gt;ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಗೊಂದಲ ಮುಂದುವರೆದರೆ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9yn2ayhv8s8hp1vjz096j7x,imgname-----------------------2025-11-13t183215.867-1763039062993.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ.7): &lt;/strong&gt;ಮೈಸೂರಿನ ಟಿ.ಕೆ. ಲೇಔಟ್&zwnj;ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಇಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಸಿಎಂ ಜೊತೆ ಸುದೀರ್ಘ ಮಾತುಕತೆ ನಡೆಸಿದ ರಾಜಣ್ಣ, ನಂತರ ಮಾಧ್ಯಮಗಳ ಮುಂದೆ ಹೈಕಮಾಂಡ್&zwnj;ಗೆ ನೇರ ಸಂದೇಶ ರವಾನಿಸಿದ್ದಾರೆ.&lt;/p&gt;&lt;h2&gt;ಸಿಎಂ ಬದಲಾಗ್ತಾರೆ ಅಂತಾ ಹೇಳೋಲ್ಲ, ಬದಲಾಗೋಲ್ಲ ಅಂತಾನೂ ಹೇಳೋಲ್ಲ&lt;/h2&gt;&lt;p&gt;ಸಿಎಂ ಭೇಟಿಯ ಬಳಿಕ ಮಾತನಾಡಿದ ರಾಜಣ್ಣ, 'ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ, ಇರುತ್ತಾರೆ ಎಂದು ಕೂಡ ನಾನು ಹೇಳುವುದಿಲ್ಲ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಅತಿ ಬೇಗ ಮತ್ತು ಜಾಗರೂಕವಾಗಿ ಒಂದು ಗಟ್ಟಿ ನಿರ್ಧಾರ ಕೈಗೊಳ್ಳಲಿ' ಎಂದು ಒತ್ತಾಯಿಸಿದರು.&lt;/p&gt;&lt;h3&gt;ಗೊಂದಲ ಬೇಡ, ಗ್ರೀನ್ ಸಿಗ್ನಲ್ ಕೊಡಿ!&lt;/h3&gt;&lt;p&gt;ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ತಡವಾದಷ್ಟು ಅದು ಪಕ್ಷಕ್ಕೆ ಮತ್ತು ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರರು, ಅಧಿಕಾರ ಮುಂದುವರೆಸಿ ಎಂಬ 'ಗ್ರೀನ್ ಸಿಗ್ನಲ್' ಆದರೂ ಕೊಡಲಿ ಅಥವಾ ಬದಲಾವಣೆ ಮಾಡುತ್ತೇವೆ ಎಂಬ ನಿರ್ಧಾರವನ್ನಾದರೂ ಪ್ರಕಟಿಸಲಿ. ಈ ಎರಡು ಬಿಟ್ಟು ಬರಿ ಗೊಂದಲವೇ ಮುಂದುವರಿದರೆ ಅದು ಎಲ್ಲಾ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ,' ಎಂದು ರಾಜಣ್ಣ ಎಚ್ಚರಿಸಿದರು.&lt;/p&gt;&lt;h3&gt;ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ ಇದೆ&lt;/h3&gt;&lt;p&gt;ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಆಸೆಯ ಬಗ್ಗೆಯೂ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಆಸೆ ಇರುವುದು ಸಹಜ&zwnj;. ಅವರು ನಮ್ಮ ಪಕ್ಷದ ಅಧ್ಯಕ್ಷರು, ಹೀಗಾಗಿ ಅವರಿಗೆ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ ಇದೆ. ಅದು ತಪ್ಪು ಕೂಡ ಅಲ್ಲ' ಎಂದು ಹೇಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.&lt;/p&gt;]]></content:encoded>
            <category>mysore</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/kn-rajanna-meets-cm-siddaramaiah-in-mysuru-breaks-silence-on-leadership-change-speculation-rav/articleshow-445v2wy"/>
        </item>
        <item>
            <title><![CDATA[ವಿಜಯಪುರಕ್ಕೆ ಬಂತು 'ಮೈಸೂರು ಸ್ಯಾಂಡಲ್' ಘಮ: ₹227 ಕೋಟಿ ವೆಚ್ಚದ ಕೆಎಸ್‌ಡಿಎಲ್ ಘಟಕಕ್ಕೆ ಸಂಪುಟ ಗ್ರೀನ್ ಸಿಗ್ನಲ್!]]></title>
            <link>https://kannada.asianetnews.com/state/ksdl-new-plant-vijayapura-cabinet-approval-227-crore-investment-mb-patil-sat/articleshow-4mmltqi</link>
            <guid isPermaLink="true">https://kannada.asianetnews.com/state/ksdl-new-plant-vijayapura-cabinet-approval-227-crore-investment-mb-patil-sat/articleshow-4mmltqi</guid>
            <pubDate>Thu, 30 Apr 2026 22:07:06 +0530</pubDate>
            <description><![CDATA[ವಿಜಯಪುರದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ನೂತನ ಉತ್ಪಾದನಾ ಘಟಕ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. 227.91 ಕೋಟಿ ರೂ. ವೆಚ್ಚದ ಈ ಯೋಜನೆಯು ಉತ್ತರ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಲಿದ್ದು, ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqfm0d0qrzjqrxw3k8jtjga1,imgname-mysore-sandal-soap-1777567020054.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ವಿಜಯಪುರ (ಏ.30): ಉ&lt;/strong&gt;ತ್ತರ ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ವಿಜಯಪುರ ಜಿಲ್ಲೆ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. ರಾಜ್ಯದ ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ನೂತನ ಉತ್ಪಾದನಾ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಗುರುವಾರ ಮಹತ್ವದ ಅನುಮೋದನೆ ನೀಡಿದೆ. ಬರೋಬ್ಬರಿ 227.91 ಕೋಟಿ ರೂಪಾಯಿ ವೆಚ್ಚದ ಈ ಬೃಹತ್ ಯೋಜನೆಗೆ ಅಸ್ತು ಎನ್ನುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಹೊಸ ವೇಗ ನೀಡಲಾಗಿದೆ.&lt;/p&gt;&lt;h3&gt;&lt;strong&gt;ವಿಜಯಪುರದಲ್ಲಿ ಕೆಎಸ್ಡಿಎಲ್ ಸ್ಥಾಪನೆ ಯಾಕೆ?&lt;/strong&gt;&lt;/h3&gt;&lt;p&gt;ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ವಿಶೇಷ ಆಸಕ್ತಿಯ ಫಲವಾಗಿ ಈ ಯೋಜನೆ ಜಿಲ್ಲೆಗೆ ಲಭಿಸಿದೆ. ವಿಶ್ವಪ್ರಸಿದ್ಧ 'ಮೈಸೂರು ಸ್ಯಾಂಡಲ್ ಸೋಪ್' ಸೇರಿದಂತೆ ಕೆಎಸ್ಡಿಎಲ್&zwnj;ನ 94ಕ್ಕೂ ಹೆಚ್ಚು ಉತ್ಪನ್ನಗಳಿಗೆ ಉತ್ತರ ಕರ್ನಾಟಕ ಮಾತ್ರವಲ್ಲದೆ ನೆರೆಯ ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಅಗಾಧವಾದ ಬೇಡಿಕೆಯಿದೆ. ಈ ಬೇಡಿಕೆಯನ್ನು ಪೂರೈಸಲು ಮತ್ತು ಸಾರಿಗೆ ವೆಚ್ಚವನ್ನು ತಗ್ಗಿಸಲು ವಿಜಯಪುರವು ಭೌಗೋಳಿಕವಾಗಿ ಸೂಕ್ತ ತಾಣವಾಗಿದೆ. ವಿಜಯಪುರದ ಇಟ್ಟಂಗಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 50 ಎಕರೆ ಜಾಗದಲ್ಲಿ ಈ ನೂತನ ಘಟಕ ತಲೆ ಎತ್ತಲಿದೆ.&lt;/p&gt;&lt;h2&gt;&lt;strong&gt;227.91 ಕೋಟಿ ರೂ.ಗಳ ಹೂಡಿಕೆ ವಿವರ:&lt;/strong&gt;&lt;/h2&gt;&lt;p&gt;ಈ ಬೃಹತ್ ಮೊತ್ತದ ಹೂಡಿಕೆಯನ್ನು ವಿವಿಧ ಹಂತಗಳಲ್ಲಿ ವಿನಿಯೋಗಿಸಲಾಗುವುದು:&lt;/p&gt;&lt;ul&gt; &lt;li&gt;ಭೂಮಿ ಖರೀದಿ: 30 ಕೋಟಿ ರೂ. (ಎಕರೆಗೆ 59.30 ಲಕ್ಷ ರೂ.ನಂತೆ).&lt;/li&gt; &lt;li&gt;ಉತ್ಪಾದನಾ ಸ್ಥಾವರ ನಿರ್ಮಾಣ: 77.88 ಕೋಟಿ ರೂ.&lt;/li&gt; &lt;li&gt;ಯಂತ್ರೋಪಕರಣಗಳ ಖರೀದಿ: 70.80 ಕೋಟಿ ರೂ.&lt;/li&gt; &lt;li&gt;ಮೂಲಸೌಕರ್ಯ ವ್ಯವಸ್ಥೆ: 24 ಕೋಟಿ ರೂ.&lt;/li&gt; &lt;li&gt;ಇತರೆ ವೆಚ್ಚಗಳು: ಟೆಂಡರ್ ಪ್ರೀಮಿಯಂ ಮತ್ತು ಸಾದಿಲ್ವಾರು ವೆಚ್ಚಗಳಿಗೆ ಸುಮಾರು 25 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.&lt;/li&gt;&lt;/ul&gt;&lt;h3&gt;&lt;strong&gt;ದಾಖಲೆಯ ಲಾಭದಲ್ಲಿ ಕೆಎಸ್ಡಿಎಲ್:&lt;/strong&gt;&lt;/h3&gt;&lt;p&gt;ಸುಮಾರು 110 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕೆಎಸ್ಡಿಎಲ್ ಸಂಸ್ಥೆಯು ಇದೇ ಮೊದಲ ಬಾರಿಗೆ ದಾಖಲೆಯ ಪ್ರಗತಿ ಸಾಧಿಸಿದೆ. 2025-26ನೇ ಹಣಕಾಸು ವರ್ಷದಲ್ಲಿ ಸಂಸ್ಥೆಯು 2,016 ಕೋಟಿ ರೂಪಾಯಿಗಳ ಸಾರ್ವಕಾಲಿಕ ದಾಖಲೆಯ ವಹಿವಾಟು ನಡೆಸಿದ್ದು, 507 ಕೋಟಿ ರೂಪಾಯಿ ನಿವ್ವಳ ಲಾಭ ದಾಖಲಿಸಿದೆ. ಒಟ್ಟು 47,494 ಟನ್ ಉತ್ಪನ್ನಗಳನ್ನು ಉತ್ಪಾದಿಸುವ ಮೂಲಕ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ತನ್ನ ಬ್ರ್ಯಾಂಡ್ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ. ವಿಜಯಪುರದಲ್ಲಿ ಹೊಸ ಘಟಕ ಆರಂಭವಾಗುವುದರಿಂದ ಈ ಉತ್ಪಾದನಾ ಸಾಮರ್ಥ್ಯ ಮತ್ತಷ್ಟು ಹೆಚ್ಚಲಿದೆ.&lt;/p&gt;&lt;h3&gt;&lt;strong&gt;ಸ್ಥಳೀಯರಿಗೆ ಉದ್ಯೋಗದ ಆಸರೆ:&lt;/strong&gt;&lt;/h3&gt;&lt;p&gt;ಈ ಕಾರ್ಖಾನೆಯ ಸ್ಥಾಪನೆಯಿಂದ ವಿಜಯಪುರ ಜಿಲ್ಲೆ ಮತ್ತು ಸುತ್ತಮುತ್ತಲ ಭಾಗದ ನೂರಾರು ಯುವಕರಿಗೆ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳು ಲಭಿಸಲಿವೆ. ಜಿಲ್ಲೆಯಲ್ಲಿ ಕೈಗಾರಿಕಾ ವಾತಾವರಣ ನಿರ್ಮಾಣವಾಗುವುದರಿಂದ ಪೂರಕ ಸಣ್ಣ ಕೈಗಾರಿಕೆಗಳಿಗೂ ಉತ್ತೇಜನ ಸಿಗಲಿದೆ.&lt;/p&gt;&lt;p&gt;ಸಚಿವ ಎಂ.ಬಿ. ಪಾಟೀಲ ಅವರು ಈ ಯೋಜನೆಗೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೆಎಸ್ಡಿಎಲ್ ಉತ್ಪನ್ನಗಳ ಬ್ರ್ಯಾಂಡಿಂಗ್, ಇ-ಕಾಮರ್ಸ್ ಮತ್ತು ರಫ್ತು ವಹಿವಾಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನೂತನ ಘಟಕವು ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಪ್ರಾಯವಾಗಲಿದೆ.&lt;/p&gt;]]></content:encoded>
            <category>mysore</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/ksdl-new-plant-vijayapura-cabinet-approval-227-crore-investment-mb-patil-sat/articleshow-4mmltqi"/>
        </item>
        <item>
            <title><![CDATA[ಗೃಹಲಕ್ಷ್ಮಿ ಹಣದಿಂದ ಓದಿ ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬಾಲಕಿಗೆ ಡಿಕೆಶಿ ಮೆಚ್ಚುಗೆ]]></title>
            <link>https://kannada.asianetnews.com/karnataka-districts/dk-shivakumar-appreciates-sslc-girl-who-studied-with-griha-lakshmi-scheme-money-secured-2nd-place-in-the-state-mrq/articleshow-9aayvci</link>
            <guid isPermaLink="true">https://kannada.asianetnews.com/karnataka-districts/dk-shivakumar-appreciates-sslc-girl-who-studied-with-griha-lakshmi-scheme-money-secured-2nd-place-in-the-state-mrq/articleshow-9aayvci</guid>
            <pubDate>Mon, 27 Apr 2026 05:44:31 +0530</pubDate>
            <description><![CDATA[&lt;p&gt;ಮಾಧುರಿ ಆರ್., 'ಗೃಹಲಕ್ಷ್ಮಿ ಯೋಜನೆ'ಯ ಹಣದಿಂದ ಟ್ಯೂಷನ್ ಪಡೆದು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಸಾಧನೆಯನ್ನು ಶ್ಲಾಘಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತರುತ್ತಿವೆ ಎಂದು ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq64gw4yzwwk8f3bxf1wmet9,imgname-dk-shivakumar-1777248792734.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; &lsquo;ಗೃಹಲಕ್ಷ್ಮಿ ಯೋಜನೆ&rsquo;ಯ ಹಣದಿಂದ ಓದಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಮೈಸೂರಿನ ಮಾಧುರಿ ಆರ್&zwnj;. ಎಂಬ ವಿದ್ಯಾರ್ಥಿನಿ ಸಾಧನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ಶ್ಲಾಘನೆ ವ್ಯಕ್ತಪಡಿಸಿರುವ ಅವರು, ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಮಹತ್ತರವಾದ ಬದಲಾವಣೆ ತರುತ್ತಿವೆ ಎಂಬುದಕ್ಕೆ ಇದೊಂದು ನಿದರ್ಶನ. ಬಡವರ ಮನೆಯ ಮಗು ಇಂದು ರಾಜ್ಯ ರ್&zwj;ಯಾಂಕ್&zwnj; ಪಡೆಯಲು ಗ್ಯಾರಂಟಿ ಹಣವೇ ಆಧಾರವಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ನಮ್ಮ ಸರ್ಕಾರ ನಮ್ಮ ಹೆಮ್ಮೆ, ನಮ್ಮ ಗ್ಯಾರಂಟಿ ನಮ್ಮ ಹೆಮ್ಮೆ ಎಂಬುದು ಈ ಮೂಲಕ ಸಾಬೀತಾಗಿದೆ. ಇನ್ನಾದರೂ ವಿರೋಧ ಪಕ್ಷದವರು ಇನ್ನಾದರೂ ಸುಳ್ಳು ನುಡಿಯುವುದನ್ನು ಮತ್ತು ಜನರ ದಾರಿತಪ್ಪಿಸುವುದನ್ನು ನಿಲ್ಲಿಸಲಿ ಎಂದು ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಶಿಕ್ಷಣ ರಂಗದಲ್ಲೂ ಗ್ಯಾರಂಟಿ ಯೋಜನೆಗಳು ಕ್ರಾಂತಿ&lt;/strong&gt;&lt;/h2&gt;&lt;p&gt;ಗ್ಯಾರಂಟಿ ಯೋಜನೆಗಳು ಓದಿಗೆ ನೆರವು, ಭವಿಷ್ಯಕ್ಕೆ ಭರವಸೆ ಮೂಡಿಸುತ್ತಿವೆ. ಗ್ಯಾರಂಟಿಗಳು ಜನರ ಜೀವನದ ದಿಕ್ಕನ್ನೇ ಬದಲಿಸುತ್ತಿವೆ. ಯಾರೋ ದೇವರಿಗೆ ಕಿರೀಟ ಮಾಡಿಸಿದರೆ, ಇನ್ಯಾರೋ ಜೀವನೋಪಾಯಕ್ಕಾಗಿ ಬಳೆ ಅಂಗಡಿ ಅಥವಾ ಗೂಡು ಅಂಗಡಿ ಇಟ್ಟುಕೊಂಡು ಸ್ವಾವಲಂಬಿಗಳಾಗುತ್ತಿದ್ದಾರೆ. ಈಗ ಶಿಕ್ಷಣ ರಂಗದಲ್ಲೂ ಗ್ಯಾರಂಟಿ ಯೋಜನೆಗಳು ಕ್ರಾಂತಿ ಮಾಡುತ್ತಿವೆ ಎಂದು ತಿಳಿಸಿದ್ದಾರೆ.&lt;/p&gt;&lt;h3&gt;&lt;strong&gt;ವಿದ್ಯಾರ್ಥಿನಿಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದು ಹೇಗೆ?&lt;/strong&gt;&lt;/h3&gt;&lt;p&gt;ಮೈಸೂರು ತಾಲೂಕಿನ ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಾಧುರಿ 625ಕ್ಕೆ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಟಾಪರ್ ಆಗಿದ್ದಾರೆ. ಖಾಸಗಿ ಕೆಲಸದಲ್ಲಿದ್ದ ಮಾಧುರಿ ತಾಯಿ ಸರಿತಾ ಅವರು ಅನಾರೋಗ್ಯದಿಂದ ಕೆಲಸ ಬಿಡಬೇಕಾಯಿತು. ಆಗ ತಾಯಿಗೆ ಪ್ರತಿ ತಿಂಗಳು ಬರುತ್ತಿದ್ದ 2 ಸಾವಿರ ರು. ಮಾಧುರಿಗೆ ಟ್ಯೂಷನ್ ಫೀಸ್ ಕಟ್ಟಿದ್ದರು.&lt;/p&gt;]]></content:encoded>
            <category>mysore</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/dk-shivakumar-appreciates-sslc-girl-who-studied-with-griha-lakshmi-scheme-money-secured-2nd-place-in-the-state-mrq/articleshow-9aayvci"/>
        </item>
        <item>
            <title><![CDATA[ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುತ್ತಿರುವ ರಾಜ್ಯ ಸರ್ಕಾರ: ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪ]]></title>
            <link>https://kannada.asianetnews.com/karnataka-districts/sa-ra-mahesh-alleges-government-protecting-corrupt-officers-gvd/articleshow-9q3x85t</link>
            <guid isPermaLink="true">https://kannada.asianetnews.com/karnataka-districts/sa-ra-mahesh-alleges-government-protecting-corrupt-officers-gvd/articleshow-9q3x85t</guid>
            <pubDate>Tue, 12 May 2026 00:26:16 +0530</pubDate>
            <description><![CDATA[&lt;p&gt;ಭ್ರಷ್ಟಾಚಾರ, ದರೋಡೆ ಮತ್ತು ಅವ್ಯವಹಾರ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ರಾಜ್ಯ ಸರ್ಕಾರವು ಕ್ಲೀನ್ ಚಿಟ್ ನೀಡುವ ಮೂಲಕ ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುತ್ತಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hxbgx509f2j2c6q530bf7ej6,imgname-vfvfv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ.12): &lt;/strong&gt;ಭ್ರಷ್ಟಾಚಾರ, ದರೋಡೆ ಮತ್ತು ಅವ್ಯವಹಾರ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ರಾಜ್ಯ ಸರ್ಕಾರವು ಕ್ಲೀನ್ ಚಿಟ್ ನೀಡುವ ಮೂಲಕ ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುತ್ತಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪಿಸಿದರು. ವ್ಯಭಿಚಾರ, ದರೋಡೆ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾದವರಿಗೆ ಸರ್ಕಾರವೇ ಕ್ಲೀನ್ ಚಿಟ್ ನೀಡುತ್ತಾ ಹೋದರೆ, ಶಿಕ್ಷೆ ಕೊಡುವುದಾದರೂ ಯಾರಿಗೆ? ಸಾಮಾನ್ಯ ಜನರಿಗೆ ನ್ಯಾಯ ಸಿಗುವುದು ಎಲ್ಲಿ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.&lt;/p&gt;&lt;p&gt;ಹಿಂದೆ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಇಲವಾಲ ಜಂಕ್ಷನ್ ದರೋಡೆ ಪ್ರಕರಣದಲ್ಲೂ ಕ್ಲೀನ್&zwnj; ಚಿಟ್ ನೀಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಮೇಲೆ ಗುರುತರ ಆರೋಪಗಳು ಕೇಳಿ ಬಂದಿವೆ. ಆದರೂ ಅವರ ಮೇಲಿನ ಅಮಾನತು ರದ್ದುಪಡಿಸಿ ಮತ್ತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪೊಲೀಸ್ ಅಧಿಕಾರಿಯೊಬ್ಬರ ವಾಹನವನ್ನು ಅವರ ಪುತ್ರಿ ಬಳಸಿದ್ದಾರೆ. ಸಾಕ್ಷ್ಯವಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅವರು ಕಿಡಿಕಾರಿದರು.&lt;/p&gt;&lt;p&gt;ಮೈಸೂರು ಜಿಲ್ಲಾಧಿಕಾರಿ ಆಗಿದ್ದ ರೋಹಿಣಿ ಸಿಂಧೂರಿ ಬಟ್ಟೆ ಬ್ಯಾಗ್ ಖರೀದಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ಕೊರತೆಯಿಂದ ಜನರು ಸಾವನ್ನಪ್ಪಲು ರೋಹಿಣಿ ಸಿಂಧೂರಿ ಪ್ರಮುಖ ಕಾರಣ. ಹೆರಿಟೇಜ್ ಕಟ್ಟಡದ ಪೀಠೋಪಕರಣ ಕಳ್ಳತನ ಮತ್ತು ಅಧಿಕಾರ ದುರುಪಯೋಗದ ಬಗ್ಗೆ ಹೈಕೋರ್ಟ್ ಆದೇಶ ನೀಡಿದ್ದರೂ, ಅಧಿಕಾರಿಗಳು ಸರ್ಕಾರದ ಅನುಮತಿ ಇಲ್ಲದೆ ಸುಪ್ರೀಂಕೋರ್ಟ್&zwnj; ನಿಂದ ತಡೆಯಾಜ್ಞೆ ತಂದಿರುವುದರ ಹಿಂದೆ ಯಾರ ಕೈವಾಡವಿದೆ? ನೀವು ಅನುಮತಿ ನೀಡದೆ ಕೋರ್ಟ್ ಮೆಟ್ಟಿಲೇರಿದ್ದಾರೆಯೇ? ನಿಯಂತ್ರಣ ನಿಮ್ಮ ಕೈಯ್ಯಲ್ಲಿ ಇಲ್ಲವೇ ಮುಖ್ಯಮಂತ್ರಿಗಳೇ ಎಂದು ಅವರು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ನ್ಯಾಯ ಸಿಕ್ಕಿದಿಯಾ?&lt;/strong&gt;&lt;/h2&gt;&lt;p&gt;ಬೌರಿಂಗ್ ಆಸ್ಪತ್ರೆ ಸಾವಿನ ಬಗ್ಗೆ ತನಿಖೆ ನಡೆಸುವ ಮುಖ್ಯಮಂತ್ರಿಗಳೇ, ಅಂದು ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 32 ಜನ ಸತ್ತಾಗ ವಿರೋಧ ಪಕ್ಷದ ನಾಯಕರಾಗಿ ವೀರಾವೇಶದಿಂದ ಹೋಗಿದ್ದೀರಲ್ಲಾ ಆ ತನಿಖಾ ವರದಿ ಏನಾಯಿತು? ಮೃತರ ಕುಟುಂಬಕ್ಕೆ ನ್ಯಾಯ ಸಿಕ್ಕಿದಿಯಾ? ದಕ್ಷ ಅಧಿಕಾರಿಗಳಿದ್ದ ಈ ರಾಜ್ಯದಲ್ಲಿ ಈಗಿನ ಮುಖ್ಯ ಕಾರ್ಯದರ್ಶಿಗಳು ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ರಾಜ್ಯದ ಜನರ ತೆರಿಗೆ ಹಣ ಲೂಟಿಯಾಗುವುದು ಖಚಿತ ಎಂದು ಅವರು ದೂರಿದರು.&lt;/p&gt;]]></content:encoded>
            <category>mysore</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/sa-ra-mahesh-alleges-government-protecting-corrupt-officers-gvd/articleshow-9q3x85t"/>
        </item>
        <item>
            <title><![CDATA[ಮಂಡ್ಯದಲ್ಲಿ ರಾಜ-ರಾಣಿ ಎಕ್ಸ್‌ಪ್ರೆಸ್ ರೈಲಿನ ಸೀಟಿಗಾಗಿ ಚಾಕು ಇರಿತ; ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಜನ!]]></title>
            <link>https://kannada.asianetnews.com/karnataka-districts/bengaluru-mysore-raja-rani-express-train-stabbing-seat-dispute-mandya-hospital-admit-sat/articleshow-g932png</link>
            <guid isPermaLink="true">https://kannada.asianetnews.com/karnataka-districts/bengaluru-mysore-raja-rani-express-train-stabbing-seat-dispute-mandya-hospital-admit-sat/articleshow-g932png</guid>
            <pubDate>Wed, 06 May 2026 19:38:18 +0530</pubDate>
            <description><![CDATA[ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜ-ರಾಣಿ ಎಕ್ಸ್&zwnj;ಪ್ರೆಸ್ ರೈಲಿನಲ್ಲಿ ಸೀಟಿನ ವಿಚಾರವಾಗಿ ನಡೆದ ಜಗಳವು ಚಾಕು ಇರಿತದಲ್ಲಿ ಅಂತ್ಯಗೊಂಡಿದೆ. ಜಗಳ ಬಿಡಿಸಲು ಹೋದ ಪ್ರಯಾಣಿಕನಿಗೆ ಆರೋಪಿಗಳು ಚಾಕುವಿನಿಂದ ಇರಿದಿದ್ದು, ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqysshjnrf7y9jpv2x2xyknk,imgname-mandya-raja-rani-express-train-1778076403285.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮೇ 06): ಮೈ&lt;/strong&gt;ಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಓಡಾಡುವ ಪ್ರಯಾಣಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಕೇವಲ ಒಂದು ಸೀಟಿಗಾಗಿ ಶುರುವಾದ ಸಣ್ಣ ಗಲಾಟೆ, ಕೊನೆಗೆ ಚಾಕು ಇರಿತದಂತಹ ಭೀಕರ ಘಟನೆ ಮೂಲಕ ಅಂತ್ಯಗೊಂಡಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ 'ರಾಜ-ರಾಣಿ' ಎಕ್ಸ್&zwnj;ಪ್ರೆಸ್&zwnj; ರೈಲಿನಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಾದ ಸುಭಾನ್ ಖುರೇಷಿ, ಶೋಯಬ್ ಮತ್ತು ವಾಸಿಮ್ ಎಂಬುವವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ರೈಲು ಮದ್ದೂರು ಸಮೀಪಿಸುತ್ತಿದ್ದಂತೆ ಸೀಟಿನ ವಿಚಾರವಾಗಿ ಆರೋಪಿಗಳು ಮತ್ತು ಇತರ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಜಗಳ ತಾರಕಕ್ಕೇರಿ ರೈಲಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.&lt;/p&gt;&lt;h2&gt;&lt;strong&gt;ಜಗಳ ಬಿಡಿಸಲು ಹೋಗಿ ಚಾಕು ಇರಿತಕ್ಕೊಳಗಾದ ಶಿವಕುಮಾರ್:&lt;/strong&gt;&lt;/h2&gt;&lt;p&gt;ಈ ವೇಳೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರು ಮೂಲದ ಶಿವಕುಮಾರ್ ಎಂಬುವವರು, 'ಇಲ್ಲಿ ಕುಟುಂಬದವರು ಕುಳಿತಿದ್ದಾರೆ, ಗಲಾಟೆ ಮಾಡಬೇಡಿ' ಎಂದು ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದಾರೆ. ಆದರೆ, ಶಿವಕುಮಾರ್ ಮಾತಿನಿಂದ ಕೆರಳಿದ ಆರೋಪಿಗಳು ಅವರ ಮೇಲೆ ಏಕಾಏಕಿ ಮುಗಿಬಿದ್ದಿದ್ದಾರೆ. ಮೊದಲು ಸುಭಾನ್ ಖುರೇಷಿ ಎಂಬಾತ ತನ್ನ ಬಳಿಯಿದ್ದ ಚಾಕುವಿನಿಂದ ಶಿವಕುಮಾರ್&zwnj;ಗೆ ಇರಿದಿದ್ದಾನೆ. ಬಳಿಕ ಮತ್ತೊಬ್ಬ ಆರೋಪಿ ಶೋಯಬ್ ಕೂಡ ಅದೇ ಚಾಕುವಿನಿಂದ ಶಿವಕುಮಾರ್&zwnj;ಗೆ ಎರಡನೇ ಬಾರಿ ಇರಿದು ಗಾಯಗೊಳಿಸಿದ್ದಾನೆ.&lt;/p&gt;&lt;h2&gt;&lt;strong&gt;ಗೇಟ್ ಕೀಪರ್ ಮೇಲೂ ದಾಳಿ:&lt;/strong&gt;&lt;/h2&gt;&lt;p&gt;ಪ್ರಾಣಭಯದಿಂದ ತತ್ತರಿಸಿದ ಶಿವಕುಮಾರ್, ಕೂಡಲೇ ರೈಲಿನಲ್ಲಿನ ತುರ್ತು ಸರಪಳಿ (Chain) ಎಳೆದು ರೈಲನ್ನು ಮದ್ದೂರು ನಿಲ್ದಾಣದ ಸಮೀಪ ನಿಲ್ಲಿಸಿದ್ದಾರೆ. ರೈಲು ನಿಲ್ಲುತ್ತಿದ್ದಂತೆ ಆರೋಪಿಗಳು ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿದ್ದ ರೈಲ್ವೆ ಗೇಟ್ ಕೀಪರ್ ಕುಮಾರ್ ಆರೋಪಿಗಳನ್ನು ಹಿಡಿಯಲು ಮುಂದಾಗಿದ್ದಾರೆ. ಆದರೆ ಆರೋಪಿಗಳು ಕುಮಾರ್ ಅವರ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರಿಂದ 'ಧರ್ಮದೇಟು':&lt;/strong&gt;&lt;/h3&gt;&lt;p&gt;ಆರೋಪಿಗಳ ಈ ಪುಂಡಾಟಿಕೆಯನ್ನು ಕಂಡು ಕೆರಳಿದ ಸ್ಥಳೀಯರು ಮತ್ತು ರೈಲಿನಲ್ಲಿದ್ದ ಪ್ರಯಾಣಿಕರು ಕೂಡಲೇ ಅವರನ್ನು ಸುತ್ತುವರಿದರು. ಪರಾರಿಯಾಗಲು ಯತ್ನಿಸುತ್ತಿದ್ದ ಸುಭಾನ್ ಖುರೇಷಿ, ಶೋಯಬ್ ಮತ್ತು ವಾಸಿಮ್ ಅವರನ್ನು ಹಿಡಿದ ಸಾರ್ವಜನಿಕರು ಮನಬಂದಂತೆ 'ಧರ್ಮದೇಟು' ನೀಡಿ ಸರಿಯಾದ ಪಾಠ ಕಲಿಸಿದ್ದಾರೆ. ನಂತರ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.&lt;/p&gt;&lt;h3&gt;&lt;strong&gt;ಚಿಕಿತ್ಸೆ ಮತ್ತು ಮುಂದಿನ ಕ್ರಮ:&lt;/strong&gt;&lt;/h3&gt;&lt;p&gt;ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿರುವ ಶಿವಕುಮಾರ್ ಮತ್ತು ಗೇಟ್ ಕೀಪರ್ ಕುಮಾರ್ ಅವರನ್ನು ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ರೈಲ್ವೆ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಈ ಘಟನೆ ಮತ್ತೊಮ್ಮೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ.&lt;/p&gt;]]></content:encoded>
            <category>mysore</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bengaluru-mysore-raja-rani-express-train-stabbing-seat-dispute-mandya-hospital-admit-sat/articleshow-g932png"/>
        </item>
        <item>
            <title><![CDATA[ಶಾಲೆಗೆ ಕೇಸರಿ ಶಾಲು ಧರಿಸುವಂತಿಲ್ಲ, ಹಿಜಾಬ್-ಜನಿವಾರಕ್ಕೆ ಅಭ್ಯಂತರವಿಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ!]]></title>
            <link>https://kannada.asianetnews.com/state/no-saffron-shawls-in-schools-traditional-practices-allowed-cm-siddaramaiah-in-mysuru-sat/articleshow-gfh1cxg</link>
            <guid isPermaLink="true">https://kannada.asianetnews.com/state/no-saffron-shawls-in-schools-traditional-practices-allowed-cm-siddaramaiah-in-mysuru-sat/articleshow-gfh1cxg</guid>
            <pubDate>Thu, 14 May 2026 13:37:36 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಲಾ ವಸ್ತ್ರಸಂಹಿತೆ ಕುರಿತು ಸ್ಪಷ್ಟನೆ ನೀಡಿದ್ದು, ಸಾಂಪ್ರದಾಯಿಕ ಉಡುಗೆಗಳಾದ ಹಿಜಾಬ್, ಜನಿವಾರಕ್ಕೆ ಅವಕಾಶವಿದೆ ಆದರೆ ಹೊಸದಾಗಿ ಕೇಸರಿ ಶಾಲು ಧರಿಸಲು ಅನುಮತಿ ಇಲ್ಲ ಎಂದಿದ್ದಾರೆ. ಇದೇ ವೇಳೆ, ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವನ್ನು ದೂಷಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krjrcyq8jgynt1w8917jae12,imgname-siddaramaiah-1778746030824.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ 14): ರಾ&lt;/strong&gt;ಜ್ಯದ ಶಿಕ್ಷಣ ಇಲಾಖೆ ಆದೇಶದ ಅನುಸಾರ ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ, ಆದರೆ ಸಾಂಪ್ರದಾಯಿಕವಾಗಿ ಧರಿಸುವ ಜನಿವಾರ, ಶಿವದಾರ ಅಥವಾ ಹಿಜಾಬ್&zwnj;ಗೆ ಯಾವುದೇ ತಡೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.&lt;/p&gt;&lt;p&gt;ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ರಾಜ್ಯದ ಶಾಲೆಗಳಲ್ಲಿ ವಸ್ತ್ರಸಂಹಿತೆ ಮತ್ತು ಧಾರ್ಮಿಕ ಆಚರಣೆಗಳ ಕುರಿತು ನಡೆಯುತ್ತಿರುವ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಪ್ರತಿಕ್ರಿಯಿಸಿದ ಸಿಎಂ, 'ಯಾವ ಯಾವ ನಂಬಿಕೆ ಮತ್ತು ಆಚರಣೆಗಳು ಮೊದಲಿನಿಂದಲೂ ಚಾಲ್ತಿಯಲ್ಲಿವೆಯೋ ಅವುಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಜನಿವಾರ, ರುದ್ರಾಕ್ಷಿ, ಶಿವದಾರ, ಹಿಜಾಬ್ ಅಥವಾ ಟರ್ಬನ್ (ಪೇಟ) ಧರಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಹೊಸದಾಗಿ ಕೇಸರಿ ಶಾಲು ಹಾಕಿಕೊಂಡು ಬರುವುದಾಗಲಿ ಅಥವಾ ಹೊಸ ರೂಪದ ಬಣ್ಣದ ಪೇಟಗಳನ್ನು ಧರಿಸುವುದಕ್ಕಾಗಲಿ ಅವಕಾಶ ನೀಡುವುದಿಲ್ಲ' ಎಂದರು. ಶಾಲೆಗಳಲ್ಲಿ ಶೈಕ್ಷಣಿಕ ವಾತಾವರಣ ಕೆಡದಂತೆ ಹಳೆಯ ಸಂಪ್ರದಾಯಗಳನ್ನು ಗೌರವಿಸಲಾಗುವುದು ಎಂದು ಅವರು ಆಶ್ವಾಸನೆ ನೀಡಿದರು.&lt;/p&gt;&lt;h2&gt;&lt;strong&gt;ನೀಟ್ ಪರೀಕ್ಷೆ ಕೇಂದ್ರದ ವೈಫಲ್ಯ:&lt;/strong&gt;&lt;/h2&gt;&lt;p&gt;ದೇಶಾದ್ಯಂತ ಸಂಚಲನ ಮೂಡಿಸಿರುವ 'ನೀಟ್' (NEET) ಪರೀಕ್ಷೆ ಅಕ್ರಮ ಮತ್ತು ರದ್ದು ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 'ನಾವು ರಾಜ್ಯದಲ್ಲಿ ಸಿಇಟಿ (CET) ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಿದ್ದೇವೆ. ಆದರೆ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಡೆಸದೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದೆ. ಇದು ವಿದ್ಯಾರ್ಥಿಗಳಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ. ಮಾಧ್ಯಮಗಳು ಈ ಬಗ್ಗೆ ಕೇಂದ್ರ ಸರ್ಕಾರವನ್ನು ಮೊದಲು ಟೀಕಿಸಬೇಕು' ಎಂದು ಅವರು ಕಿಡಿಕಾರಿದರು.&lt;/p&gt;&lt;h3&gt;&lt;strong&gt;ಮೋದಿ ಬೆಂಗಾವಲು ವಾಹನ ಕಡಿತ:&lt;/strong&gt;&lt;/h3&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ವಾಹನಗಳ ಸಂಖ್ಯೆ ಕಡಿತಗೊಳಿಸಿರುವ ಕೇಂದ್ರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದು ಕೇವಲ ತಾತ್ಕಾಲಿಕ ಪರಿಹಾರವಷ್ಟೇ. ಈ ಕ್ರಮವನ್ನು ಬೇರೆ ರಾಜ್ಯಗಳು ಹೇಗೆ ಪಾಲಿಸುತ್ತಿವೆ ಎಂಬುದನ್ನು ನಾನು ಗಮನಿಸುತ್ತೇನೆ. ನಂತರ ನಮ್ಮ ರಾಜ್ಯದಲ್ಲಿ ಈ ಬಗ್ಗೆ ತೀರ್ಮಾನ ಮಾಡುತ್ತೇನೆ. ಆದರೆ, ಇದು ಶಾಶ್ವತ ಪರಿಹಾರವಲ್ಲ. ಕೇಂದ್ರ ಸರ್ಕಾರವು ಮೂಲಭೂತ ಸಮಸ್ಯೆಗಳ ಬಗ್ಗೆ ಇತರ ದೇಶಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಆಸಕ್ತಿ ತೋರಿಸಲಿ' ಎಂದು ಸಲಹೆ ನೀಡಿದರು.&lt;/p&gt;&lt;h2&gt;&lt;strong&gt;ದೆಹಲಿ ಭೇಟಿ ಮತ್ತು ಸಂಪುಟ ಪುನಾರಚನೆ:&lt;/strong&gt;&lt;/h2&gt;&lt;p&gt;ಇನ್ನು ರಾಜ್ಯ ರಾಜಕಾರಣದ ಕುರಿತು ಮಾತನಾಡಿದ ಸಿಎಂ, 'ನನ್ನನ್ನು ಹೈಕಮಾಂಡ್ ಇನ್ನೂ ದೆಹಲಿಗೆ ಕರೆದಿಲ್ಲ. ಅವರು ಕರೆದಾಗ ಮಾತ್ರ ನಾನು ಹೋಗುತ್ತೇನೆ. 15ನೇ ತಾರೀಖು ಹೋಗುತ್ತೇನೆ ಎಂದು ದಿನಾಂಕ ನಿಗದಿ ಮಾಡಿದವರು ಯಾರು? ಸಂಪುಟ ಪುನಾರಚನೆಯ ವಿಚಾರ ಚರ್ಚೆಯಲ್ಲಿದೆ, ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಸ್ಪಷ್ಟಪಡಿಸಿದರು.&lt;/p&gt;]]></content:encoded>
            <category>mysore</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/no-saffron-shawls-in-schools-traditional-practices-allowed-cm-siddaramaiah-in-mysuru-sat/articleshow-gfh1cxg"/>
        </item>
        <item>
            <title><![CDATA[ನಾನೇ ಸಿಎಂ ಎಂದುಕೊಂಡೇ 3 ವರ್ಷ ಕಾಲಹರಣ ಮಾಡಿದರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/hd-kumaraswamy-slams-karnataka-government-development-debt-gvd/articleshow-h6pza3g</link>
            <guid isPermaLink="true">https://kannada.asianetnews.com/karnataka-districts/hd-kumaraswamy-slams-karnataka-government-development-debt-gvd/articleshow-h6pza3g</guid>
            <pubDate>Sat, 25 Apr 2026 18:08:28 +0530</pubDate>
            <description><![CDATA[&lt;p&gt;ಈಗಿನ ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸದೇ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡದೇ ನಾನೇ ಸಿಎಂ ಎಂದುಕೊಂಡೇ ಮೂರು ವರ್ಷಗಳು ಕಾಲಹರಣ ಮಾಡಿದರು ಎಂದು ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-ani20250604213323,imgname-image-b24b5e1c-b034-435b-adba-6fac14b3e366.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭೇರ್ಯ (ಏ.25): &lt;/strong&gt;ಈಗಿನ ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸದೇ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡದೇ ನಾನೇ ಸಿಎಂ ಎಂದುಕೊಂಡೇ ಮೂರು ವರ್ಷಗಳು ಕಾಲಹರಣ ಮಾಡಿದರು ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಕೆ.ಆರ್. ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಕುರ್ಜು ಉದ್ಘಾಟನೆ ನೆರವೇರಿಸಿದ ಬಳಿಕ ಬಸವೇಶ್ವರ ಸ್ವಾಮಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.&lt;/p&gt;&lt;p&gt;ದಿನ ಬೆಳಗಾದರೇ ನುಡಿದಂತೆ ನಡೆದಿದ್ದೇವೆ ಎಂದು ಬೊಬ್ಬೆ ಹೊಡೆಯುವ ಇವರು ಪಂಚ ಗ್ಯಾರಂಟಿ ಕೊಟ್ಟಿದ್ದೇವೆ, ಮಹಿಳೆಯರಿಗೆ ಎರಡು ಸಾವಿರ, ಬಸ್ ಫ್ರೀ ಎಂದು ಒಂದೂವರೆ ಲಕ್ಷ ಕೋಟಿ ಹಣ ಒದಗಿಸಲು ಏಳೂವರೆ ಲಕ್ಷ ಕೋಟಿ ಸಾಲ ಮಾಡಿ ರಾಜ್ಯದ ಜನತೆಯ ಮೇಲೆ ತಲಾ ಒಂದು ಲಕ್ಷ ಸಾಲದ ಹೊರೆ ಹೊರಸಿದ್ದಾರೆ ಎಂದು ಗುಡುಗಿದರು.&lt;/p&gt;&lt;p&gt;&lt;strong&gt;ಗ್ರಾಮ ಸ್ವರಾಜ್ ನನಸು ಮಾಡಲು ಸಾಧ್ಯವಾಗಿಲ್ಲ:&lt;/strong&gt; ಗಾಂಧಿಜೀ ಅವರು ಕಂಡ ಗ್ರಾಮ ಸ್ವರಾಜ್ ಕನಸು ನನಸು ಮಾಡಲು ಸಾಧ್ಯವಾಗಿಲ್ಲ, ಸ್ವಾತಂತ್ರ್ಯ ಬಂದು 78 ವರ್ಷ ಕಳೆದಿದೆ ಇನ್ನೂ ಬಡವರು, ಕೂಲಿ ಕಾರ್ಮಿಕರಿಗೆ ಸರಿಯಾದ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ, ಅವರು ಜನ ಸಾಮಾನ್ಯರ ದಿನ ಬಳಕೆ ವಸ್ತುಗಳ ಮೇಲೆ ವಿಪರೀತ ತೆರಿಗೆ ಏರಿಸಿದ ರಾಜ್ಯ ಸರ್ಕಾರ, ಅಬಕಾರಿ ಸುಂಕ ಸೇರಿದಂತೆ ಪ್ರತಿ ಯೂನಿಟ್ ಗೆ 50 ಪೈಸೆ ಏರಿಸಿದ್ದು, ಇವರ ಸಾಧನೆ ಎಂದು ಸರ್ಕಾರದ ವಿರುದ್ದ ಗುಡುಗಿದರು.&lt;/p&gt;&lt;p&gt;ನಾನು ಸಿಎಂ ಆಗಿದ್ದ ವೇಳೆ ನೀವು ಕಟ್ಟುವ ತೆರಿಗೆ ಹಣದಿಂದ ರೈತರ ಸಾಲ ಮನ್ನಾ ಮಾಡಿದ್ದು ಎಂದರಲ್ಲದೆ, ಕೆ.ಆರ್. ನಗರ ಕ್ಷೇತ್ರದ ಮಂಡಿಗನಹಳ್ಳಿ ಭಾಗದ ಕೆರೆ ಕಟ್ಟೆಗಳನ್ನು ತುಂಬಿಸಲು 25 ಕೋಟಿ ಅನುದಾನ ಹಣವನ್ನು ನೀಡಿದ್ದೆ ಆದರೆ, ಈಗಿನ ಶಾಸಕರು ಮೂರು ವರ್ಷಗಳ ಕಳೆದರೂ ಕೆರೆಕಟ್ಟೆಗಳನ್ನು ತುಂಬಿಸದೇ ದುರುಪಯೋಗ ಪಡಿಸಿಕೊಂಡಿದ್ದಾರೆ ಗೊತ್ತಾಗುತ್ತಿಲ್ಲ ಎಂದು ಆರೋಪಿಸಿದರು.&lt;/p&gt;&lt;h2&gt;&lt;strong&gt;ಸಾಲ ಮಾಡಿ ರಾಜ್ಯದ ಆಸ್ತಿ ಆಡವಿಟ್ಟಿಲ್ಲ&lt;/strong&gt;&lt;/h2&gt;&lt;p&gt;ಮಾತ್ತೇತ್ತಿದ್ದರೆ ಕೇಂದ್ರ ಸರ್ಕಾರ ಸಾಲ ಮಾಡಿಲ್ವ ಎನ್ನುವ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರ ಸಾಲ ಮಾಡಿರುವುದು ರೇಲ್ವೆ, ವಿಮಾನ ನಿಲ್ದಾಣ ಇಂತಹ ಯೋಜನೆಗಳನ್ನು ಮಾಡಿ ದೇಶದ ಆಸ್ತಿಯನ್ನು ವೃದ್ದಿ ಮಾಡಲು, ಆದರೆ ನಿಮ್ಮತರ ಅನಗತ್ಯವಾಗಿ ಸಾಲ ಮಾಡಿ ರಾಜ್ಯದ ಆಸ್ತಿ ಆಡವಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತೀರುಗೇಟು ನೀಡಿದರು. ಆನ್ ಲೈನ್ ಗೇಮ್, ಬೆಡ್ಡಿಂಗ್ ನಿಂದ ಸಾಲ ಮಾಡಿ ಕೊಂಡು ಯುವಕರು ಮನೆ ಜಮೀನು ಕಳೆದು ಕೊಂಡು ಬೀದಿ ಬಂದಿದ್ದಾರೆ.&lt;/p&gt;&lt;p&gt;ಇನ್ನೂ ಕೆಲವರು ಸಾಲ ತೀರಿಸಲು ಸಾದ್ಯವಾಗದೇ ಆತ್ಮ*ಹತ್ಯೆ ಮಾಡಿ ಕೊಳುತ್ತಿದ್ದಾರೆ. ಇದರ ಚರ್ಚೆ ಮಾಡದ ಇವರು ಪ್ರತಿ ನಿತ್ಯಾ ನಾನು ಸಿಎಂ, ನಾನು ಸಿಎಂ, ಕೊನೆಗೆ ನಮ್ಮಪ್ಪ ಐದು ವರ್ಷ ಸಿಎಂ ಇದೇ ಆಯಿತು, ಇನ್ನೆಲ್ಲಿ ರಾಜ್ಯ ಅಭಿವೃದ್ಧಿ ಮಾಡಲು ಸಾಧ್ಯ ಹಾಗಾಗಿ ಮುಂದೆ ಒಳ್ಳೆಯ ಸರ್ಕಾರ ತರಲು ನನ್ನೊಂದಿಗೆ ಜನರು ಕೈ ಜೊಡಿಸ ಬೇಕು ಎಂದರು. ಮಾಜಿ ಸಚಿವ ಸಾ.ರಾ. ಮಹೇಶ್ ಮಾತನಾಡಿ, ಹೊಸ ಅಗ್ರಹಾರ ಗ್ರಾಮದ ಎಲ್ಲ ಸಮುದಾಯದ ಸೇರಿ ದೇವಸ್ಥಾನದ ಕುರ್ಜು ನಿರ್ಮಾಣ ಮಾಡಿ ಇಂದು ಲೋಕಾರ್ಪಣೆ ಮಾಡಿದ್ದೀರಿ, ಇದು ಧಾರ್ಮಿಕ ಕಾರ್ಯಕ್ರಮ, ನಾನು ರಾಜಕೀಯ ಮಾತನಾಡಲ್ಲ ಎಂದರು.&lt;/p&gt;]]></content:encoded>
            <category>mysore</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-slams-karnataka-government-development-debt-gvd/articleshow-h6pza3g"/>
        </item>
        <item>
            <title><![CDATA[ಶೌಚಾಲಯಕ್ಕೆ ಬೀಗ ಹಾಕಿ, ಮೂತ್ರ ವಿಸರ್ಜನೆ ತಡೆಯಲು ಕಾಂಪೌಂಡ್‌ಗೆ ಕನ್ನಡಿ ಹಾಕಿದ್ರು!]]></title>
            <link>https://kannada.asianetnews.com/karnataka-districts/mysuru-they-locked-the-toilet-and-put-a-mirror-in-the-compound-to-prevent-urination-mrq/articleshow-ks2bpex</link>
            <guid isPermaLink="true">https://kannada.asianetnews.com/karnataka-districts/mysuru-they-locked-the-toilet-and-put-a-mirror-in-the-compound-to-prevent-urination-mrq/articleshow-ks2bpex</guid>
            <pubDate>Tue, 12 May 2026 10:31:15 +0530</pubDate>
            <description><![CDATA[ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಸ್ಥಾನ ಪಡೆಯಲು, ಮೈಸೂರು ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ಕನ್ನಡಿಗಳನ್ನು ಅಳವಡಿಸಿದೆ. ಆದರೆ, ಅಸ್ತಿತ್ವದಲ್ಲಿರುವ ಶೌಚಾಲಯಗಳಿಗೆ ಬೀಗ ಹಾಕಿ, ಈ ರೀತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krd8wfg68gnff9g8hjdx9bxm,imgname-mysuru-1778561990150.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು:&lt;/strong&gt; ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಪಟ್ಟಕ್ಕೇರಲು ಹವಣಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುವುದನ್ನು ತಡೆಗಟ್ಟಲು ನಗರದ ಗ್ರಾಮಾಂತರ ಬಸ್ ನಿಲ್ದಾಣದ ಎದುರಿನ ಮೋರಿ ಹಾಗೂ ಸರ್ಕಾರಿ ಅತಿಥಿಗೃಹದ ಕಾಂಪೌಂಡ್&zwnj;ಗೆ ಹೊಂದಿಕೊಂಡಂತೆ ಪ್ರಾಯೋಗಿಕವಾಗಿ ಕನ್ನಡಿಯನ್ನು ಅಳವಡಿಸಿದ್ದು, ಇದಕ್ಕಾಗಿ ಲಕ್ಷಾಂತರ ರುಪಾಯಿ ವೆಚ್ಚವಾಗಿದೆಯಂತೆ!&lt;/p&gt;&lt;p&gt;ಇದರಿಂದಾಗಿ ಸಾರ್ವಜನಿಕರು ಮೂತ್ರ ವಿಸರ್ಜನೆಗೆ ನಿಂತರೆ ಮೂತ್ರ ವಿಸರ್ಜಿಸುವುದನ್ನು ತಾವೇ ನೋಡುವಂತಾಗುತ್ತದೆ. ಜೊತೆಗೆ, ರಸ್ತೆಯಲ್ಲಿ ಓಡಾಡುವ ಜನರಿಗೂ ಕಾಣುತ್ತದೆ. ಇದರಿಂದ ಅನೈರ್ಮಲ್ಯ ತಪ್ಪಿಸಬಹುದು ಎಂಬುದು ನಗರ ಪಾಲಿಕೆಯವರ ಯೋಚನೆ.&lt;/p&gt;&lt;h2&gt;&lt;strong&gt;ಕನ್ನಡಿಯ ಕೆಳಗೆ ಎಲ್&zwnj;ಇಡಿ ಲೈಟ್ ಅಳವಡಿಕೆ&lt;/strong&gt;&lt;/h2&gt;&lt;p&gt;ಈ ಕನ್ನಡಿಯ ಕೆಳಗೆ ಎಲ್&zwnj;ಇಡಿ ಲೈಟುಗಳನ್ನು ಅಳವಡಿಸಿರುವುದರಿಂದ ರಾತ್ರಿ ವೇಳೆಯೂ ಮೂತ್ರ ವಿಸರ್ಜನೆ ಮಾಡುವುದನ್ನು ತಪ್ಪಿಸಬಹುದಂತೆ!. ಈ ಕಾರ್ಯ ಯಶಸ್ವಿಯಾದರೆ ನಗರದ ಇತರ ಕಡೆಗೂ ವಿಸ್ತರಿಸುವ ಯೋಚನೆಯಿದೆಯಂತೆ!&lt;/p&gt;&lt;p&gt;ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸುವವರಿಗೆ ಕನ್ನಡಿ ಹಿಡಿದರೆ ಆ ಜಾಗದಲ್ಲಿ ಮೂತ್ರ ವಿಸರ್ಜಿಸುವುದನ್ನು ಮಾತ್ರ ತಡೆಯಬಹುದೇ ಹೊರತು ಮೂತ್ರ ವಿಸರ್ಜಿಸುವ ಕ್ರಿಯೆಯನ್ನೇ ಬಂದ್ ಮಾಡಲಾಗದು. ಇದು ಪ್ರಕೃತಿ ನಿಯಮಕ್ಕೆ ವಿರುದ್ಧ.&lt;/p&gt;&lt;p&gt;ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕ ಶೌಚಾಲಯಗಳಿಗಿಂತ ಮದ್ಯದಂಗಡಿಗಳ ಸಂಖ್ಯೆ ಹೆಚ್ಚಾಗಿದೆ. ಆಟೋ ಚಾಲಕರು, ಲಾರಿ ಚಾಲಕರು, ಟ್ಯಾಕ್ಸಿ ಚಾಲಕರು ಶೌಚಾಲಯಗಳನ್ನು ಹುಡುಕುತ್ತಾ ಅಲೆಯುವ ದೃಶ್ಯ ಮೈಸೂರಿನಲ್ಲಿ ಸರ್ವೇ ಸಾಮಾನ್ಯ.&lt;/p&gt;&lt;p&gt;ಪಾಲಿಕೆ ನಿರ್ಮಿಸಿರುವ ಬಹುತೇಕ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಶೌಚಾಲಯಗಳಿಗೆ ಬೀಗ ಹಾಕಿರುವ ಪಾಲಿಕೆ, ಸಾರ್ವಜನಿಕರು ಮೂತ್ರ ವಿಸರ್ಜಿಸುವುದನ್ನು ತಡೆಯಲು ಗೋಡೆಗಳಿಗೆ ಕನ್ನಡಿ ಅಳವಡಿಸಿರುವುದು ಮೂರ್ಖತನದ ಪರಮಾವಧಿ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.&lt;/p&gt;&lt;p&gt;ಮೈಸೂರು ಮಹಾನಗರಪಾಲಿಕೆಯ ಆಯುಕ್ತರು ಹಾಗೂ ಅಧಿಕಾರಿಗಳ ಕೊಠಡಿಗೆ ಹೊಂದಿಕೊಂಡಂತೆ ಹವಾ ನಿಯಂತ್ರಿತ ಶೌಚಾಲಯಗಳಿರುತ್ತವೆ. ಈ ಶೌಚಾಲಯಗಳಿಗೆ ಬೀಗ ಜಡಿದು, ಆ ಜಾಗದಲ್ಲಿ ಕನ್ನಡಿ ಅಳವಡಿಸಿದರೆ ಪಾಲಿಕೆಯ ಅಧಿಕಾರಿಗಳ ಕತೆ ಏನಾಗಬಹುದು?. ಸಾರ್ವಜನಿಕ ಸ್ಥಳಗಳಲ್ಲಿ ಲಕ್ಷಾಂತರ ರುಪಾಯಿ ವೆಚ್ಚದಲ್ಲಿ ಕನ್ನಡಿ ಅಳವಡಿಸುವ ಬದಲಾಗಿ ಅದೇ ಮೊತ್ತದಲ್ಲಿ ಅದೇ ಜಾಗದಲ್ಲಿ ಒಂದು ಶೌಚಾಲಯ ತೆರೆದರಾಗದೇ? ಎಂಬುದು ಸಾರ್ವಜನಿಕರ ಆಕ್ರೋಶ.&lt;/p&gt;&lt;h3&gt;&lt;strong&gt;ಇಲ್ಲಿ ರಸ್ತೆಯೇ ಶೌಚಾಲಯ&lt;/strong&gt;--&lt;/h3&gt;&lt;p&gt;ಮೈಸೂರಿನ ಅಶೋಕಪುರಂ ಬಡಾವಣೆಯ ಡಾ। ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡಿಗೆ ಹೊಂದಿಕೊಂಡಂತೆ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಲಾಗಿದೆ.&lt;/p&gt;&lt;p&gt;ಈ ಶೌಚಾಲಯದ ದುಃಸ್ಥಿತಿ ಹೇಗಿದೆಯೆಂದರೆ ಇದರ ಒಳಗೆ ಪ್ರವೇಶಿಸಿದವರು ಜೀವನದ ಮೇಲೆ ಜಿಗುಪ್ಸೆ ಹೊಂದುವ ಸಾಧ್ಯತೆ ಇದೆ. ಅಷ್ಟೇ ಅಲ್ಲ, ಈ ಶೌಚಾಲಯದ ಎದುರು ಸಂಚರಿಸಿದವರು ಮತ್ತೆಂದೂ ಈ ಭಾಗದ ಕಡೆ ತಲೆ ಹಾಕಿಯೂ ಮಲಗರಾರರು!. ಈ ಶೌಚಾಲಯದ ಒಳಗೆ ಪ್ರವೇಶಿಸಲು ಸಾಧ್ಯವಾಗದೇ ಇರುವುದರಿಂದ ಈ ರಸ್ತೆಯೇ ಶೌಚಾಲಯವಾಗಿ ಮಾರ್ಪಟ್ಟಿದೆ.&lt;/p&gt;&lt;p&gt;ಈ ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿಗಳಿಗೆ ನಿತ್ಯ ಮುಜುಗರ ತಪ್ಪಿದ್ದಲ್ಲ. ಇನ್ನು, ಈ ಸರ್ಕಾರಿ ಶಾಲೆಯ ಮಕ್ಕಳ ಸ್ಥಿತಿ ಹೇಗಿದ್ದೀತು?. ಇಲ್ಲಿ ಮೂತ್ರ ವಿಸರ್ಜಿಸುವವರಿಗೆ ಕನ್ನಡಿ ಹಿಡಿಯಬೇಕಿಲ್ಲ, ಶಾಲೆಯ ಕಿಟಕಿ ತೆರೆದರೆ ಸಾಕು.&lt;/p&gt;&lt;p&gt;ನಮ್ಮ ಮೈಸೂರು ಮಹಾನಗರ ಪಾಲಿಕೆ ಸಾರ್ವಜನಿಕ ಶೌಚಾಲಯ ಮತ್ತು ಸರ್ಕಾರಿ ಶಾಲೆಗಳಿಗೆ ನೀಡುವ ಅಗೌರವಕ್ಕೆ ಇದೇ ಸಾಕ್ಷಿ!&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮೈಸೂರು ಕನ್ನಡಿ ಗೋಡೆ: ಮೂತ್ರ ವಿಸರ್ಜನೆ ತಡೆ ಯೋಜನೆ ವಿಫಲ! ಕ್ಯಾರೇ ಅನ್ನದೆ ಕನ್ನಡಿ ಮುಂದೆ ನಿಂತೇ ಮೂತ್ರ ಮಾಡಿದ!&lt;/strong&gt;&lt;/p&gt;&lt;h3&gt;&lt;strong&gt;ಸಾರ್ವಜನಿಕ ಶೌಚಾಲಯಕ್ಕೆ ಭೇಟಿ&lt;/strong&gt;&lt;/h3&gt;&lt;p&gt;ನಂ.1 ಸ್ವಚ್ಛ ನಗರಿ ಎಂಬ ಬಿರುದು ಪಡೆಯಲು ಹಾತೊರೆಯುವ ನಮ್ಮ ನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಸಾರ್ವಜನಿಕ ಶೌಚಾಲಯಕ್ಕೆ ಭೇಟಿ ನೀಡಿದರೆ ನಂಬರ್ 2 ಮಾಡಿಕೊಳ್ಳುವುದಂತೂ ಖಚಿತ!. ಈ ವಿಚಾರವನ್ನು ಪಾಲಿಕೆಯ ಗಮನಕ್ಕೆ ತಂದೊಡನೆ ಇದನ್ನು ಸ್ವಚ್ಛಗೊಳಿಸುವ ಬದಲಾಗಿ ಶೌಚಾಲಯಕ್ಕೇ ಬೀಗ ಜಡಿಯಲಾಗಿದೆ. ಇದರಿಂದ ಆ ಭಾಗದಲ್ಲಿ ಬಯಲೇ ಶೌಚಾಲಯವಾಗಿದೆ. ಈ ಶೌಚಾಲಯ ಪಾಲಿಕೆಯ ಬೇಜವಾಬ್ದಾರಿಗೆ ಹಿಡಿದ ಕೈಗನ್ನಡಿ.&lt;/p&gt;&lt;p&gt;- ಪಿ.ಜೆ.ರಾಘವೇಂದ್ರ ನ್ಯಾಯವಾದಿ, ಮೈಸೂರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Mysuru: ರಸ್ತೆಬದಿಯಲ್ಲಿ ಮೂತ್ರವಿಸರ್ಜನೆ ತಡೆಗೆ ಕಾಂಪೌಂಡ್&zwnj;ಗೆ ಕನ್ನಡಿಗಳ ಅಳವಡಿಕೆ&lt;/strong&gt;&lt;/p&gt;]]></content:encoded>
            <category>mysore</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mysuru-they-locked-the-toilet-and-put-a-mirror-in-the-compound-to-prevent-urination-mrq/articleshow-ks2bpex"/>
        </item>
        <item>
            <title><![CDATA[ಮೈಸೂರು ಕನ್ನಡಿ ಗೋಡೆ: ಮೂತ್ರ ವಿಸರ್ಜನೆ ತಡೆ ಯೋಜನೆ ವಿಫಲ! ಕ್ಯಾರೇ ಅನ್ನದೆ ಕನ್ನಡಿ ಮುಂದೆ ನಿಂತೇ ಮೂತ್ರ ಮಾಡಿದ!]]></title>
            <link>https://kannada.asianetnews.com/karnataka-districts/mysuru-installs-mirror-walls-to-stop-public-urination-incident-sparks-debate-on-civic-sense-gdp/articleshow-lilsap8</link>
            <guid isPermaLink="true">https://kannada.asianetnews.com/karnataka-districts/mysuru-installs-mirror-walls-to-stop-public-urination-incident-sparks-debate-on-civic-sense-gdp/articleshow-lilsap8</guid>
            <pubDate>Sun, 10 May 2026 11:19:30 +0530</pubDate>
            <description><![CDATA[ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಸ್ಥಾನಕ್ಕೇರಲು ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ಕನ್ನಡಿ ಗೋಡೆಗಳನ್ನು ಅಳವಡಿಸಿತ್ತು. ಆದರೆ, ಸಬರ್ಬ್ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಈ ಕನ್ನಡಿಯ ಎದುರೇ ಮೂತ್ರ ವಿಸರ್ಜಿಸುವ ಮೂಲಕ ಈ ಯೋಜನೆಗೆ ಹಿನ್ನಡೆ ಉಂಟುಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr86rhqx75qwewgz46wv0dxq,imgname-mysuru-installs-mirror-1778391992061.jpg" type="image/jpeg" height="390" width="690"/>
            <content:encoded><![CDATA[&lt;p&gt;ಮೈಸೂರು: ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಪಟ್ಟಕ್ಕೇರಲು ಹವಣಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆಯು ನಗರದಲ್ಲಿ ಸ್ವಚ್ಛತೆ ಕಾಪಾಡುವ ಸಲುವಾಗಿ ವಿಶೇಷ ಯೋಜನೆಯೊಂದನ್ನು ಕೈಗೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ, ಕಸ ಸುರಿಯುವುದನ್ನು ತಡೆಗಟ್ಟಲು ನಗರ ಪ್ರಮುಖ ರಸ್ತೆಯೊಂದರ ಪಾದಚಾರಿ ಮಾರ್ಗಕ್ಕೆ ಅಂಟಿಕೊಂಡಿರುವ ಕಾಂಪೌಂಡ್&zwnj;ಗೆ ಕನ್ನಡಿ ಅಳವಡಿಸಿ ಗಮನ ಸೆಳೆಯುತ್ತಿದೆ.&lt;/p&gt;&lt;h2&gt;ಕನ್ನಡಿ ಎದುರು ನಿಂತೇ ಮೂತ್ರ ವಿಸರ್ಜಿಸಿದ ವ್ಯಕ್ತಿ&lt;/h2&gt;&lt;p&gt;ಆದರೆ ಇದೆರೆಲ್ಲದರ ಮಧ್ಯೆ ಮೈಸೂರಿನ ಸಬರ್ಬ್ ಬಸ್ ನಿಲ್ದಾಣದ ಎದುರು ಅಳವಡಿಸಿರುವ ಮಿರರ್ ಕಾಂಪೌಂಡ್ ಗೆ ವ್ಯಕ್ತಿಯೋರ್ವ ಮೂತ್ರ ವಿಸರ್ಜಿಸಿದ್ದಾನೆ. ಮೂತ್ರ ವಿಸರ್ಜನೆ ತಪ್ಪಿಸಲು ಹಾಕಿದ್ದ ಮಿರರ್ ಅನ್ನು ಲೆಕ್ಕಿಸದೆ ಎದುರೇ ನಿಂತೇ ಮೂತ್ರ ವಿಸರ್ಜಿಸಿದ್ದಾನೆ. ಇದನ್ನು ಗಮನಿಸಿದ ಸಾರ್ವಜನಿಕರಿಂದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಳ್ಳಲಾಯ್ತು. ಒಟ್ಟು 9.5 ಲಕ್ಷ ವೆಚ್ಚದಲ್ಲಿ ಮಿರರ್ ಅಳವಡಿಸಲಾಗಿದೆ. ಕೇವಲ ಒಂದು ವಾರ ಕಳೆಯುವ ಮುನ್ನವೇ ಹಳೆ ಚಾಳಿ ಮುಂದುವರಿಸಿದ ಸಾರ್ವಜನಿಕ. ಎಲ್ಲೆಡೆ ಪ್ರಶಂಸೆಗೆ ಒಳಗಾಗಿದ್ದ ಪಾಲಿಕೆಗೆ ಮತ್ತೆ ತಲೆ ನೋವು ತಂದಿಟ್ಟಿದ್ದಾನೆ. ನೆಟ್ಟಿಗರು ಸಿವಿಕ್ ಸೆನ್ಸ್ ಇಲ್ಲ ಎಂದು ಛೀಮಾರಿ ಹಾಕುತ್ತಿದ್ದಾರೆ.&lt;/p&gt;&lt;h2&gt;ಕನ್ನಡಿ ಅಳವಡಿಸಲು ಕಾರಣವೇನು?&lt;/h2&gt;&lt;p&gt;ಇಲ್ಲಿ ಸಾಮಾನ್ಯವಾಗಿ ಬಸ್&zwnj; ನಿಲ್ದಾಣಕ್ಕೆ ಬರುವ ಪ್ರಯಾಣಿಕರು, ಸಾರ್ವಜನಿಕರು, ದಾರಿಹೋಕರು ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯವಾಗಿತ್ತು. ಇದನ್ನು ತಪ್ಪಿಸಲು ಈಗ ಕನ್ನಡಿ ಅಳವಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಮೂತ್ರ ವಿಸರ್ಜನೆಗೆ ನಿಂತರೇ ಮೂತ್ರ ವಿಸರ್ಜಿಸುವುದನ್ನು ತಾವೇ ನೋಡುವಂತಾಗುತ್ತದೆ. ಜೊತೆಗೆ ರಸ್ತೆಯಲ್ಲಿ ಓಡಾಡುವ ಜನರಿಗೂ ಕಾಣುತ್ತದೆ. ಇದರಿಂದ ಅನೈರ್ಮಲ್ಯ ತಪ್ಪಿಸಬಹುದು ಎಂಬುದು ನಗರ ಪಾಲಿಕೆ ಯೋಜನೆ ಮತ್ತು ಯೋಚನೆ.&lt;/p&gt;&lt;p&gt;ಅಲ್ಲದೆ ರಾತ್ರಿ ವೇಳೆ ಈ ಕನ್ನಡಿಯ ಕೆಳಗೆ ಎಲ್&zwnj;ಇಡಿ ಬಲ್ಪ್&zwnj; ಅಳವಡಿಸಿರುವುದರಿಂದ ರಾತ್ರಿ ವೇಳೆಯೂ ಮೂತ್ರ ವಿಸರ್ಜನೆ ಮಾಡುವುದು ತಪ್ಪಿಸಬಹುದು. ಈ ಕಾರ್ಯ ಯಶಸ್ವಿಯಾದರೆ ನಗರದ ಇತರ ಕಡೆಗೂ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಈ ಸಲಹೆಯನ್ನು ಯಾರು ಕೊಟ್ಟರೋ ಏನೋ ಆದರೆ ಉತ್ತಮವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಕನ್ನಡಿ ಅಳವಡಿಸಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್&zwnj; ಆಗಿದೆ.&lt;/p&gt;]]></content:encoded>
            <category>mysore</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mysuru-installs-mirror-walls-to-stop-public-urination-incident-sparks-debate-on-civic-sense-gdp/articleshow-lilsap8"/>
        </item>
        <item>
            <title><![CDATA[ಮೈಸೂರಲ್ಲಿ ಬಿಸಿಲಿನ ತಾಪಕ್ಕೆ ಶ್ವಾನ ಬಲಿ: ಶ್ವಾನ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಗೋಲ್ಡನ್ ರಿಟ್ರೈವರ್ 'ರೋನಿ' ಸಾವು!]]></title>
            <link>https://kannada.asianetnews.com/karnataka-districts/mysuru-tragedy-7-year-old-golden-retriever-ronnie-dies-of-heatstroke-after-dog-show-sat/articleshow-lzr7ehh</link>
            <guid isPermaLink="true">https://kannada.asianetnews.com/karnataka-districts/mysuru-tragedy-7-year-old-golden-retriever-ronnie-dies-of-heatstroke-after-dog-show-sat/articleshow-lzr7ehh</guid>
            <pubDate>Sun, 26 Apr 2026 20:51:49 +0530</pubDate>
            <description><![CDATA[&lt;p&gt;ಮೈಸೂರಿನಲ್ಲಿ ನಡೆದ ಶ್ವಾನ ಪ್ರದರ್ಶನವೊಂದರಲ್ಲಿ ಭಾಗವಹಿಸಿದ್ದ 'ರೋನಿ' ಎಂಬ ಗೋಲ್ಡನ್ ರಿಟ್ರೈವರ್ ಶ್ವಾನವು ತೀವ್ರ ಬಿಸಿಲಿನಿಂದ ಉಂಟಾದ ಹೀಟ್ ಸ್ಟ್ರೋಕ್&zwnj;ನಿಂದಾಗಿ ಸಾವನ್ನಪ್ಪಿದೆ. ಬಿಸಿಲಿನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ತಿಳಿಸುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq562qtfjvvfy2p7ydbxtj8n,imgname-mysuru-dog-death-1777216872271.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಏ.26): ಸಾಂ&lt;/strong&gt;ಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ಬಿಸಿಲಿನ ಬೇಗೆ ಮಿತಿಮೀರಿದೆ. ಸುಡುವ ಬಿಸಿಲಿನಿಂದಾಗಿ ಜನಸಾಮಾನ್ಯರು ಕಂಗೆಟ್ಟಿದ್ದರೆ, ಇತ್ತ ಪ್ರಾಣಿಗಳೂ ಸಹ 'ಹೀಟ್ ಸ್ಟ್ರೋಕ್' (Heat Stroke) ಅಥವಾ ಬಿಸಿಲಿನ ಆಘಾತಕ್ಕೆ ಬಲಿಯಾಗುತ್ತಿವೆ. ಮೈಸೂರಿನ ವಿಜಯನಗರದ ನಿವಾಸಿ ತೇಜಸ್ ಎಂಬುವವರಿಗೆ ಸೇರಿದ 7 ವರ್ಷದ 'ರೋನಿ' ಹೆಸರಿನ ಗೋಲ್ಡನ್ ರಿಟ್ರೈವರ್ ತಳಿಯ ಶ್ವಾನವೊಂದು ಹೀಟ್ ಸ್ಟ್ರೋಕ್&zwnj;ನಿಂದ ಮೃತಪಟ್ಟಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ವಿಜಯನಗರ ನಿವಾಸಿ ತೇಜಸ್ ಅವರು ತಮ್ಮ ಪ್ರೀತಿಯ ಶ್ವಾನ ರೋನಿಯನ್ನು ಮೈಸೂರಿನ ಖಾಸಗಿ ಕಾಲೇಜೊಂದರಲ್ಲಿ ಶನಿವಾರ ಆಯೋಜಿಸಿದ್ದ ಶ್ವಾನ ಸ್ಪರ್ಧೆಗೆ ಕರೆದುಕೊಂಡು ಹೋಗಿದ್ದರು. ಅತ್ಯಂತ ಲವಲವಿಕೆಯಿಂದಿದ್ದ ರೋನಿ, ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿತ್ತು. ಆದರೆ, ಶ್ವಾನ ಪ್ರದರ್ಶನ ಮುಗಿದ ಸ್ವಲ್ಪ ಸಮಯದ ಬಳಿಕ ರೋನಿ ಹಠಾತ್ ಅಸ್ವಸ್ಥಗೊಂಡಿದೆ.&lt;/p&gt;&lt;h2&gt;&lt;strong&gt;ಬಿಸಿಲಿನ ಆಘಾತಕ್ಕೆ ಕುಸಿದ ರೋನಿ:&lt;/strong&gt;&lt;/h2&gt;&lt;p&gt;ಬಿಸಿಲಿನ ತೀವ್ರತೆ ಹೆಚ್ಚಿದ್ದ ಕಾರಣ ರೋನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಮಾಲೀಕರು ಪೆಟ್ ಆ್ಯಂಬುಲೆನ್ಸ್ (Pet Ambulance) ಮೂಲಕ ಮೈಸೂರಿನ 'ಶ್ರೀ ಪೆಟ್ ಆಸ್ಪತ್ರೆ'ಗೆ ದಾಖಲಿಸಿದ್ದಾರೆ. ವೈದ್ಯರು ತಕ್ಷಣವೇ ಚಿಕಿತ್ಸೆ ಆರಂಭಿಸಿದರೂ, ರೋನಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ. ತಜ್ಞ ವೈದ್ಯರ ಪ್ರಕಾರ, ಅತಿಯಾದ ಬಿಸಿಲಿನಿಂದ ಉಂಟಾದ 'ಹೀಟ್ ಸ್ಟ್ರೋಕ್' ಶ್ವಾನದ ಸಾವಿಗೆ ಪ್ರಮುಖ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಪ್ರಾಣಿಗಳ ಮೇಲೂ ಬಿಸಿಲಿನ ಪ್ರಭಾವ:&lt;/strong&gt;&lt;/h2&gt;&lt;p&gt;ಸಾಮಾನ್ಯವಾಗಿ ಗೋಲ್ಡನ್ ರಿಟ್ರೈವರ್&zwnj;ನಂತಹ ದಟ್ಟವಾದ ತುಪ್ಪಳ ಹೊಂದಿರುವ ಶ್ವಾನಗಳಿಗೆ ಹೆಚ್ಚಿನ ತಂಪು ವಾತಾವರಣದ ಅವಶ್ಯಕತೆ ಇರುತ್ತದೆ. ಮೈಸೂರಿನಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿದೆ. ಶ್ವಾನ ಸ್ಪರ್ಧೆಯಂತಹ ಕಿಕ್ಕಿರಿದು ತುಂಬಿದ ಮತ್ತು ಬಿಸಿಲು ಹೆಚ್ಚಿರುವ ಜಾಗದಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋದಾಗ ಅವುಗಳಿಗೆ ನಿರ್ಜಲೀಕರಣ (Dehydration) ಮತ್ತು ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ.&lt;/p&gt;&lt;h3&gt;&lt;strong&gt;ಶ್ವಾನ ಪ್ರಿಯರ ಆಕ್ರೋಶ ಮತ್ತು ಬೇಸರ:&lt;/strong&gt;&lt;/h3&gt;&lt;p&gt;ತನ್ನ ಪ್ರೀತಿಯ ರೋನಿಯನ್ನು ಕಳೆದುಕೊಂಡ ಮಾಲೀಕ ತೇಜಸ್ ಅವರ ದುಃಖ ಮುಗಿಲುಮುಟ್ಟಿದೆ. ಇತ್ತ ಶ್ವಾನ ಪ್ರಿಯರು ಇಂತಹ ಸುಡುವ ಬಿಸಿಲಿನಲ್ಲಿ ಶ್ವಾನ ಸ್ಪರ್ಧೆಗಳನ್ನು ಆಯೋಜಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಸಿಗೆಯ ಸಮಯದಲ್ಲಿ ಪ್ರಾಣಿಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಜ್ಞರು ಕಿವಿಮಾತು ಹೇಳಿದ್ದಾರೆ.&lt;/p&gt;&lt;h3&gt;&lt;strong&gt;ಸಾಕುಪ್ರಾಣಿಗಳ ಮಾಲೀಕರಿಗೆ ಸಲಹೆಗಳು:&lt;/strong&gt;&lt;/h3&gt;&lt;p&gt;ಮಧ್ಯಾಹ್ನದ ಸಮಯದಲ್ಲಿ ಸಾಕುಪ್ರಾಣಿಗಳನ್ನು ಹೊರಗೆ ಕರೆದೊಯ್ಯಬೇಡಿ.&lt;/p&gt;&lt;p&gt;ಪ್ರಾಣಿಗಳಿಗೆ ಸದಾ ಶುದ್ಧ ಮತ್ತು ತಂಪಾದ ಕುಡಿಯುವ ನೀರನ್ನು ಒದಗಿಸಿ.&lt;/p&gt;&lt;p&gt;ಶ್ವಾನಗಳನ್ನು ತಂಪಾದ ಮತ್ತು ಗಾಳಿಯಾಡುವ ಜಾಗದಲ್ಲಿ ಇರಿಸಿ.&lt;/p&gt;&lt;p&gt;ಅತಿಯಾದ ಏದುಸಿರು ಬಿಡುವುದು ಅಥವಾ ಅಸ್ವಸ್ಥತೆಯ ಲಕ್ಷಣ ಕಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.&lt;/p&gt;]]></content:encoded>
            <category>mysore</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mysuru-tragedy-7-year-old-golden-retriever-ronnie-dies-of-heatstroke-after-dog-show-sat/articleshow-lzr7ehh"/>
        </item>
        <item>
            <title><![CDATA[ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಗ್ರೀವಾಜ್ಞೆ ತರಬೇಕು: ಎಂ.ಲಕ್ಷ್ಮಣ್ ಆಗ್ರಹ]]></title>
            <link>https://kannada.asianetnews.com/karnataka-districts/m-lakshman-opposes-voter-list-revision-karnataka-bjp-election-gvd/articleshow-muy7s9x</link>
            <guid isPermaLink="true">https://kannada.asianetnews.com/karnataka-districts/m-lakshman-opposes-voter-list-revision-karnataka-bjp-election-gvd/articleshow-muy7s9x</guid>
            <pubDate>Thu, 14 May 2026 00:26:26 +0530</pubDate>
            <description><![CDATA[&lt;p&gt;ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಎಸ್&zwnj;ಐಆರ್&zwnj; ವಿರುದ್ಧ ಸುಗ್ರೀವಾಜ್ಞೆ ತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hrf96fe14t781dabehk9yfsa,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ.14): &lt;/strong&gt;ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಎಸ್&zwnj;ಐಆರ್&zwnj; ವಿರುದ್ಧ ಸುಗ್ರೀವಾಜ್ಞೆ ತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು. 2028ರ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಕೈ ಹಾಕಿದೆ.&lt;/p&gt;&lt;p&gt;ಮತದಾರರ ಆಶೀರ್ವಾದದಿಂದ ಚುನಾವಣೆಯಲ್ಲಿ ಗೆಲ್ಲಲಾಗದ ಬಿಜೆಪಿ ನಾಯಕರು ಮತದಾರರನ್ನು ಕದಿಯುವ ಕೆಲಸ ಮಾಡುತ್ತಿದ್ದಾರೆ. ಹರಿಯಾಣದಲ್ಲಿ 65 ಲಕ್ಷ, ಬಿಹಾರದಲ್ಲಿ 85 ಲಕ್ಷ ಮತದಾರರನ್ನು ಕೈಬಿಟ್ಟು ಅಧಿಕಾರಕ್ಕೆ ಬಂದು ಈಗ ಪಶ್ಚಿಮ ಬಂಗಾಳದಲ್ಲಿ 92 ಲಕ್ಷ ಮತದಾರರನ್ನು ಕೈಬಿಟ್ಟು ಅಧಿಕಾರಕ್ಕೆ ಬಂದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ದೂರಿದರು.&lt;/p&gt;&lt;p&gt;ಈಗ ಕರ್ನಾಟಕದಲ್ಲಿ 2028ಕ್ಕೆ ನಡೆಯಲಿರುವ ಚುನಾವಣೆ ಮುಂದಿಟ್ಟುಕೊಂಡು ಮತದಾರರನ್ನು ಕದಿಯುವ ಕೆಲಸಕ್ಕೆ ಇಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಮಾತನ್ನು ನೋಡಿದರೆ ಮತದಾರರನ್ನು ಕೈ ಬಿಡುವ ಷಡ್ಯಂತ್ರ ನಡೆಯುತ್ತಿದೆ. ಕರ್ನಾಟಕದಲ್ಲಿ 5.5 ಕೋಟಿ ಮತದಾರರಲ್ಲಿ ಶೇ. 15 ರಷ್ಟು ಮತದಾರರನ್ನು ಬಿಡುತ್ತಿದ್ದು, ಅಂದಾಜು 83 ಲಕ್ಷ ಮತದಾರರನ್ನು ಕೈ ಬಿಡುವ ಕೆಲಸವಾಗಿದೆ ಎಂದರು.&lt;/p&gt;&lt;p&gt;ಚುನಾವಣಾ ಆಯೋಗ ಈ ಮತದಾರರನ್ನು ಡಿಲೀಟ್ ಮಾಡದೆ ಇದ್ದರೂ ಆಕ್ಷೇಪಣೆ ಕೇಳಿದ್ದೇವೆ ಎನ್ನುತ್ತಿದೆ. ಆದರೆ, ಆಯೋಗ ಇದನ್ನು ಕೈಬಿಡಲಿದೆ. ಜಿಲ್ಲೆಯ 11 ಕ್ಷೇತ್ರಗಳ ಪೈಕಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 71 ಸಾವಿರ, ನರಸಿಂಹರಾಜ ಕ್ಷೇತ್ರದಲ್ಲಿ 60 ಸಾವಿರ ಮತದಾರರನ್ನು ಕೈಬಿಡಲಾಗುತ್ತಿದೆ. ಮುಸ್ಲಿಂ ಮತದಾರರು 45 ಸಾವಿರ ಸೇರಿದ್ದಾರೆ. ಮತದಾರರ ಪಟ್ಟಿಯಿಂದ ತೆಗೆದು ಚುನಾವಣೆಯಲ್ಲಿ ಲಾಭ ಮಾಡುವುದಕ್ಕೆ ಹೊರಟಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದರು.&lt;/p&gt;&lt;p&gt;ದೇಶದಲ್ಲಿ ತುರ್ತು ಆರ್ಥಿಕ ಪರಿಸ್ಥಿತಿ ನಿರ್ಮಾಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಒಂದು ವರ್ಷದ ಮಟ್ಟಿಗೆ ಚಿನ್ನ ಖರೀದಿಸದಂತೆ ಹೇಳಿದ್ದಾರೆ. ವಾಹನ ಬಿಟ್ಟು ಬಸ್, ರೈಲುಗಳಲ್ಲಿ ಓಡಾಡುವಂತೆ ಹೇಳಿರುವುದಕ್ಕೆ ಅಂಧಭಕ್ತರು ಸ್ವಾಗತಿಸಿದ್ದಾರೆ. ಅರ್ಥ ವ್ಯವಸ್ಥೆ ಹಾಳು ಮಾಡಿರುವುದನ್ನು ನೋಡಿದರೆ ಮುಂದೆ ದೊಡ್ಡ ಕಂಟಕವಾಗಲಿದೆ ಎಂದರು.&lt;/p&gt;&lt;p&gt;ಇದನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ವಾಗತಿಸಿದ್ದಾರೆ. ಚಿನ್ನ ಖರೀದಿಸಬೇಡಿ ಎಂದ ಮೇಲೆ ಟಿ.ಎ. ಶರವಣರಿಗೆ ಮುಖವೇ ಇಲ್ಲದಂತಾಗಿದೆ. ಟಿ.ಎ. ಶರವಣ ಅವರೇ ಎಲ್ಲಿ ಹೋಗಿದ್ದೀರಾ? ನಿಮ್ಮ ಮೋದಿ ಬಗ್ಗೆ ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಸರ್ಕಾರವೇ ಅನುದಾನ ನೀಡಿದೆ&lt;/strong&gt;&lt;/h2&gt;&lt;p&gt;ಮೈಸೂರು ಅಭಿವೃದ್ದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ಸರ್ಕಾರದಿಂದ ಹತ್ತು ರೂಪಾಯಿ ತಂದಿಲ್ಲ. ವಿಮಾನ ನಿಲ್ದಾಣದ ರನ್&zwnj; ವೇ ವಿಸ್ತರಣೆಗೆ ರಾಜ್ಯ ಸರ್ಕಾರವೇ ಅನುದಾನ ನೀಡಿದೆ. ಎನ್&zwnj;ಎಚ್&zwnj;ಐಎ ನಿಂದ ಬೈಪಾಸ್ ರಸ್ತೆಗೆ ಅನುಮೋದನೆ ಕೊಡಿಸಿಲ್ಲ. ಪ್ರಸಾದ್ ಯೋಜನೆ, ಯೂನಿಟಿ ಮಾಲ್ ಯೋಜನೆಗೆ ತಡೆಯಾಜ್ಞೆ ತರಲಾಗಿದೆ. ಮೊದಲು ಕೇಂದ್ರದಿಂದ ನೀವು ಏನು ತಂದಿದ್ದೀರಾ ಎಂದು ಹೇಳಿ ಎಂದು ಪ್ರಶ್ನಿಸಿದರು?&lt;/p&gt;&lt;p&gt;ಬಿಜೆಪಿಯ ಬಹುತೇಕ ನಾಯಕರು ಜೋಕರ್&zwnj; ಗಳಾಗಿದ್ದಾರೆ. ಆರ್. ಅಶೋಕ್ ನಂಬರ್ ಒನ್ ಜೋಕರ್, ಛಲವಾದಿ ನಾರಾಯಣಸ್ವಾಮಿ ನಂಬರ್ ಟು ಜೋಕರ್. ಈಗ ಮೊದಲನೇ ಸ್ಥಾನಕ್ಕೆ ಬರಲು ಕೇಂದ್ರ ಸಚಿವ ವಿ. ಸೋಮಣ್ಣ ಪೈಪೋಟಿ ನೀಡುತ್ತಿದ್ದಾರೆ. ಆರ್. ಅಶೋಕ್ ಅವರಂತಹ ಮೂರ್ಖ ಬೇರೆ ಯಾರಿಲ್ಲ ಎಂದು ಅವರು ಟೀಕಿಸಿದರು.&lt;/p&gt;]]></content:encoded>
            <category>mysore</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/m-lakshman-opposes-voter-list-revision-karnataka-bjp-election-gvd/articleshow-muy7s9x"/>
        </item>
        <item>
            <title><![CDATA[ನಾರಿಶಕ್ತಿ ಅವಮಾನಿಸಿದವರ ಪಾಪದ ಕೊಡ ತುಂಬಿದೆ: ಕೇಂದ್ರ ಸಚಿವ ವಿ.ಸೋಮಣ್ಣ]]></title>
            <link>https://kannada.asianetnews.com/karnataka-districts/v-somanna-slams-congress-womens-reservation-bill-karnataka-gvd/articleshow-ni7gscz</link>
            <guid isPermaLink="true">https://kannada.asianetnews.com/karnataka-districts/v-somanna-slams-congress-womens-reservation-bill-karnataka-gvd/articleshow-ni7gscz</guid>
            <pubDate>Thu, 23 Apr 2026 23:51:18 +0530</pubDate>
            <description><![CDATA[&lt;p&gt;ನಾರಿ ಶಕ್ತಿಯನ್ನು ಅವಮಾನಿಸಿದವರ ಪಾಪದ ಕೊಡ ತುಂಬುತ್ತಾ ಬಂದಿದೆ. ಮಹಿಳೆಯರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕಾಂಗ್ರೆಸ್&zwnj; ವಿರುದ್ಧ ಕಿಡಿಕಾರಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j5gb3zf73mwatd96b1h76c0c,imgname-1.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಏ.23): &lt;/strong&gt;ನಾರಿ ಶಕ್ತಿಯನ್ನು ಅವಮಾನಿಸಿದವರ ಪಾಪದ ಕೊಡ ತುಂಬುತ್ತಾ ಬಂದಿದೆ. ಮಹಿಳೆಯರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕಾಂಗ್ರೆಸ್&zwnj; ವಿರುದ್ಧ ಕಿಡಿಕಾರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತ 2047 ಗುರಿಯೊಂದಿಗೆ ಭಾರತವನ್ನು ವಿಶ್ವದ ಭೂಪಟದಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವ ಸಂಕಲ್ಪದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಮಹಿಳಾ ಮೀಸಲಾತಿ ಕಾಯ್ದೆ ಒಂದು ಐತಿಹಾಸಿಕ ತೀರ್ಮಾನ. ಆದರೆ ಕಾಂಗ್ರೆಸ್&zwnj;, ಡಿಎಂಕೆ ಸೇರಿದಂತೆ ಇತರೆ ಪಕ್ಷಗಳು ನಡೆದುಕೊಂಡ ರೀತಿ ಸರಿಯಲ್ಲ ಎಂದರು.&lt;/p&gt;&lt;p&gt;ಈ ಪವಿತ್ರ ಕಾರ್ಯಕ್ಕೆ ವಿರೋಧ ಪಕ್ಷಗಳು ಅಡ್ಡಿಪಡಿಸುತ್ತಿರುವುದು ಮಹಿಳಾ ಕುಲಕ್ಕೆ ಮಾಡುತ್ತಿರುವ ದ್ರೋಹ, ಪಾಪದ ಕೃತ್ಯ. ಮಹಿಳಾ ಮೀಸಲಾತಿ ಬಿಲ್ ಸೋಲಿಸಲು ವಿರೋಧ ಪಕ್ಷಗಳು ನಡೆಸಿರುವ ಕುತಂತ್ರ ಇದು. ಮಹಿಳೆಯರು ಮುಖ್ಯವಾಹಿನಿಗೆ ಬರಬಾರದು ಎನ್ನುವ ಕೆಟ್ಟ ಚಾಳಿಯನ್ನು ಹೊಂದಿರುವ ಕಾಂಗ್ರೆಸ್, ಸಮಾಜವಾದಿ ಪಕ್ಷ, ಟಿಎಂಸಿ ಹಾಗೂ ಡಿಎಂಕೆ ಪಕ್ಷಗಳು ಒಟ್ಟಾಗಿ ಈ ಐತಿಹಾಸಿಕ ನಡೆಯನ್ನು ವಿರೋಧಿಸಿವೆ. ಇದು ದೇಶದ ಸಾಮಾನ್ಯ ಮಹಿಳೆಯರಿಗೆ ಮಾಡುತ್ತಿರುವ ಅಪಚಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಧರ್ಮಾಧಾರಿತ ಮೀಸಲಾತಿ ಎಂಬ ಷಡ್ಯಂತ್ರ&lt;/strong&gt;&lt;/h2&gt;&lt;p&gt;ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಸ್ಪಷ್ಟವಾಗಿ ವಿರೋಧಿಸಿದ್ದರು. ಆದರೆ, ಇಂದಿನ ವಿರೋಧ ಪಕ್ಷಗಳು ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬೇಕು ಎಂಬ ಹೊಸ ವರಸೆ ತೆಗೆಯುವ ಮೂಲಕ ಸಮಾಜದಲ್ಲಿ ಸಂಘರ್ಷ ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಅವರು ಆರೋಪಿಸಿದರು. ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಗೌರವಿಸುವ ಎನ್&zwnj;.ಡಿ.ಎ ಸರ್ಕಾರ ಅಂಬೇಡ್ಕರ್ ಅವರ ಆಶಯದಂತೆ ನಡೆಯುತ್ತಿದೆ.&lt;/p&gt;&lt;p&gt;ಈ ಹೊಸ ಮೀಸಲಾತಿಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗುವುದಿಲ್ಲ. ಕ್ಷೇತ್ರ ಪುನರ್ವಿಂಗಡಣೆಯ ಕುರಿತು ಹಬ್ಬಿಸುತ್ತಿರುವುದು ಸುಳ್ಳು ಸುದ್ದಿ. 1976 ರಲ್ಲಿ 54 ಕೋಟಿ ಇದ್ದ ಜನಸಂಖ್ಯೆ ಇಂದು 140 ಕೋಟಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್&zwnj; ವಿಂಗಡಣೆ ಅನಿವಾರ್ಯ ಎಂದರು. ಮೀಸಲಾತಿ ಜಾರಿಯಾದಲ್ಲಿ ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ 28 ರಿಂದ 42 ಕ್ಕೆ ಏರಿಕೆ ಆಗುವ ನಿರೀಕ್ಷೆ ಇದೆ. ದಕ್ಷಿಣ ರಾಜ್ಯಗಳಲ್ಲಿ ಒಟ್ಟು ಸ್ಥಾನಗಳ ಸಂಖ್ಯೆ 169ಕ್ಕೂ ಹೆಚ್ಚು ಏರಿಕೆಯಾಗಲಿದ್ದು, ಇದು ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಪೂರಕವಾಗಲಿದೆ ಎಂದು ಅವರು ವಿವರಿಸಿದರು.&lt;/p&gt;&lt;p&gt;ಮೋದಿ ಸರ್ಕಾರದ 11 ವರ್ಷಗಳ ಮಹಿಳಾ ಪರ ಸಾಧನೆ ಅನನ್ಯ. ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಕೇವಲ ಕಾಲಹರಣ ಮಾಡುತ್ತಾ ಬಂದಿದ್ದರೆ, ಮೋದಿ ಸರ್ಕಾರ ಕಳೆದ ಒಂದು ದಶಕದಲ್ಲಿ ಮಹಿಳೆಯರಿಗಾಗಿ ಕ್ರಾಂತಿಕಾರಿ ಯೋಜನೆ ಜಾರಿಗೆ ತಂದಿದೆ. 12 ಕೋಟಿ ಶೌಚಾಲಯಗಳನ್ನು ನಿರ್ಮಿಸಿದೆ. ಉಜ್ವಲ ಯೋಜನೆ ಮತ್ತು ಮಾತೃ ವಂದನಾ ಯೋಜನೆ, ಮುದ್ರಾ ಸಾಲ ಮತ್ತು ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೊಳಿಸಿದೆ. 5 ಕೋಟಿ ಮುಸ್ಲಿಂ ಮಹಿಳೆಯರಿಗೆ ಮುಕ್ತಿ ನೀಡಿದ ತ್ರಿವಳಿ ತಲಾಕ್ ನಿಷೇಧ ಮಾಡಿದ್ದು ಬಿಜೆಪಿ ಸರ್ಕಾರ ಎಂದರು.&lt;/p&gt;&lt;p&gt;ನಾರಿ ಶಕ್ತಿಯನ್ನು ಅವಮಾನಿಸಿದವರಿಗೆ ಉಳಿಗಾಲ ಇಲ್ಲ ಎಂಬುದಕ್ಕೆ ಇತಿಹಾಸವೇ ಸಾಕ್ಷಿ. ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ ಮತ್ತು ಮೈಸೂರಿನ ಮಹಾರಾಣಿ ವಾಣಿ ವಿಲಾಸ ಕೆಂಪನಂಜಮ್ಮಣ್ಣಿ ಅವರಂತಹ ಮಹಾನ್ ಮಹಿಳೆಯರು ನಮಗೆ ಪ್ರೇರಣೆ. ಅಂತಹ ಪರಂಪರೆಯನ್ನು ಗೌರವಿಸುವುದು ನಮ್ಮ ಆದ್ಯತೆ ಎಂದು ತಿಳಿಸಿದರು. ಮಹಿಳಾ ಸಬಲೀಕರಣದ ಮೂಲಕ ಸಶಕ್ತ ಭಾರತ ನಿರ್ಮಾಣಕ್ಕೆ ಭಾರತೀಯ ಜನತಾ ಪಕ್ಷ ಮತ್ತು ಎನ್&zwnj;.ಡಿ.ಎ ಮೈತ್ರಿಕೂಟ ಬದ್ಧವಾಗಿದ್ದು, ವಿರೋಧ ಪಕ್ಷಗಳ ನಾಟಕಕ್ಕೆ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಪಾಪದ ಹೊರೆಯನ್ನು ವಿಪಕ್ಷಗಳು ಹೊರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.&lt;/p&gt;&lt;p&gt;ನಾರಿ ಶಕ್ತಿಯನ್ನು ಕೆಣಕಿದವರಿಗೆ ಉಳಿಗಾಲವಿಲ್ಲ ಎಂಬುದಕ್ಕೆ ಇತಿಹಾಸದ ಪುಟಗಳು ಸಾಕ್ಷಿಯಾಗಿವೆ. ಮಹಾಭಾರತದಲ್ಲಿ ದ್ರೌಪದಿಯನ್ನು ಕೆಣಕಿದ ಕೌರವರ ಸ್ಥಿತಿ ಏನಾಯಿತು? ಸೀತೆಯನ್ನು ಅಪಹರಿಸಿದ ರಾವಣನ ಸ್ಥಿತಿ ಏನಾಯಿತು? ಪೆಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಕೊಲೆಗೈದ ಉಗ್ರರ ಸ್ಥಿತಿ ಏನಾಯಿತು? ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಮಹಿಳಾ ಮೀಸಲಾತಿ ಬಿಲ್ ವಿರೋಧಿಸಿದ ಕಾಂಗ್ರೆಸ್ ಪಕ್ಷದ ಪಾಪದ&zwnj; ಕೊಡ ತುಂಬಿದೆ. ಮುಂಬರುವ ದಿನಗಳಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗುವ ವಿಶ್ವಾಸವಿದೆ ಎಂದರು.&lt;/p&gt;]]></content:encoded>
            <category>mysore</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/v-somanna-slams-congress-womens-reservation-bill-karnataka-gvd/articleshow-ni7gscz"/>
        </item>
        <item>
            <title><![CDATA[ಮುಂಚಿತವಾಗಿ  ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದೇಕೆ GT ದೇವೇಗೌಡ: ಸಾ.ರಾ.ಮಹೇಶ್ ಕಿಡಿ]]></title>
            <link>https://kannada.asianetnews.com/gallery/karnataka-districts/former-minister-jds-leader-sa-ra-mahesh-launched-a-scathing-attack-on-gt-deve-gowda-in-mysuru-mrq-oiqf3vk</link>
            <guid isPermaLink="true">https://kannada.asianetnews.com/gallery/karnataka-districts/former-minister-jds-leader-sa-ra-mahesh-launched-a-scathing-attack-on-gt-deve-gowda-in-mysuru-mrq-oiqf3vk</guid>
            <pubDate>Sat, 16 May 2026 13:02:09 +0530</pubDate>
            <description><![CDATA[ಮಾಜಿ ಸಚಿವ ಸಾ.ರಾ ಮಹೇಶ್ ಅವರು ಮೈಸೂರಿನಲ್ಲಿ ಜಿ.ಟಿ.ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ತಂತ್ರಗಳು ನಮಗೆ ಅರ್ಥವಾಗುತ್ತವೆ ಎಂದಿದ್ದಾರೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳುವ ಮೂಲಕ, ಜಿ.ಟಿ.ಡಿ ಅವರಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krqtpjx6ky7jf5emezg7cnwc,imgname-sa-ra-mahesh--gt-devegowda-1778916215718.jpg" type="image/jpeg" height="390" width="690"/>
            <content:encoded><![CDATA[ಮಾಜಿ ಸಚಿವ ಸಾ.ರಾ ಮಹೇಶ್ ಅವರು ಮೈಸೂರಿನಲ್ಲಿ ಜಿ.ಟಿ.ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ತಂತ್ರಗಳು ನಮಗೆ ಅರ್ಥವಾಗುತ್ತವೆ ಎಂದಿದ್ದಾರೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳುವ ಮೂಲಕ, ಜಿ.ಟಿ.ಡಿ ಅವರಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.&lt;img&gt;&lt;p&gt;ಮೈಸೂರು: ಮಾಜಿ ಸಚಿವ ಜಿ.ಟಿ.ದೇವೇಗೌಡರ ತಂತ್ರಗಳೆಲ್ಲಾ ನಮಗೆ ಅರ್ಥವಾಗುತ್ತವೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿಕೆ ನೀಡಿದ್ದಾರೆ. ಪಕ್ಷಕ್ಕಿಂತ ನಮಗೆ ದೊಡ್ಡವರು ಯಾರು ಇಲ್ಲ ಎಂದು ಪರೋಕ್ಷವಾಗಿ ಜಿ.ಟಿ.ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.&lt;/p&gt;&lt;img&gt;&lt;p&gt;ಜೆಡಿಎಸ್ ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ಹಚ್&zwnj;ಡಿ.ದೇವೇಗೌಡರು, ರಾಜ್ಯ ನಾಯಕರು ಹೆಚ್.ಡಿ.ಕುಮಾರಸ್ವಾಮಿ, ಮೈಸೂರು ನಾಯಕರು ಜಿಟಿ.ದೇವೇಗೌಡ ಇದ್ದರು. ಈಗ ರಾಷ್ಟ್ರೀಯ ನಾಯಕರು ಹೆಚ್.ಡಿ.ದೇವೇಗೌಡ, ರಾಜ್ಯ ನಾಯಕರು ಹೆಚ್&zwnj;ಡಿ.ಕುಮಾರಸ್ವಾಮಿ ಅಷ್ಟೇ ಎಂದು ಸಾ.ರಾ.ಮಹೇಶ್ ಟಾಂಗ್ ಕೊಟ್ಟರು.&lt;/p&gt;&lt;img&gt;&lt;p&gt;ಜಿ.ಟಿ ದೇವೇಗೌಡರಿಂದ ನಮ್ಮ ಪಕ್ಷಕ್ಕೆ ಬಹಳ ದೊಡ್ಡ ನಷ್ಟವಾಗಿದೆ ಎಂದ ಸಾ.ರಾ.ಮಹೇಶ್, ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಜಿ.ಟಿ.ದೇವೇಗೌಡ ಅವರ ತೀರ್ಮಾನಗಳಿಂದ ಕಾರ್ಯಕರ್ತರಿಗೆ ಅಘಾತವಾಗಿದೆ. ಪಕ್ಷಕ್ಕಿಂತ ನಮಗೆ ದೊಡ್ಡವರು ಯಾರು ಇಲ್ಲ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಕ್ಕಳು ಕೇಸರಿ ಶಾಲು ಹಾಕಬೇಕು ಎನ್ನುವ ಬಿಜೆಪಿಗರು ತಮ್ಮ ಮಕ್ಕಳಿಗೇಕೆ ಹಾಕ್ಸಲ್ಲ? ಮಧು ಬಂಗಾರಪ್ಪ ಕಿಡಿ&lt;/strong&gt;&lt;/p&gt;&lt;img&gt;&lt;p&gt;ಪಕ್ಷಕ್ಕೆ ನಿಷ್ಟಾವಂತ ಕಾರ್ಯಕರ್ತರ ಅನುವಾರ್ಯತೆ ಇದೆ ಹೊರತು ಇಂತಹ ನಾಯಕರ ಅನುವಾರ್ಯತೆ ಇಲ್ಲ. ಪಕ್ಷ ಜಿ.ಟಿ ದೇವೇಗೌಡರಿಗೆ ಎಲ್ಲಾ ಅಧಿಕಾರ ಕೊಟ್ಟಿತ್ತು. ಆದರೆ ಅವರು ಪಕ್ಷಕ್ಕೆ ಮೋಸ ಮಾಡಿದರು. ಈ ಕಾರಣ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ ಎಂದು ಸಾ.ರಾ.ಮಹೇಶ್ ಹೇಳಿದರು.&lt;/p&gt;&lt;p&gt;ನಾಳೆ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶ ಇದೆ. ಈ ಕಾರಣ ದೊಡ್ಡ ದೇವೇಗೌಡರಿಗೆ ಹೋಗಿ ಹುಟ್ಟಿದ ಹಬ್ಬಕ್ಮಿಂತ ಮುಂಚೆಯೇ ಶುಭಾಶಯ ತಿಳಿಸಿದ್ದಾರೆ. ಈ ಎಲ್ಲಾ ತಂತ್ರಗಳು ನಮಗೆ ಅರ್ಥವಾಗುತ್ತದೆ ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;NEET Scam: ಬಿಜೆಪಿಗರು ನೀಟ್&zwnj; ವಿದ್ಯಾರ್ಥಿಗಳ ಕಾಲಿಗೆ ಬಿದ್ದು ಕ್ಷಮೆ ಕೇಳಲಿ: ಮಧು ಬಂಗಾರಪ್ಪ&lt;/strong&gt;&lt;/p&gt;]]></content:encoded>
            <category>mysore</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/former-minister-jds-leader-sa-ra-mahesh-launched-a-scathing-attack-on-gt-deve-gowda-in-mysuru-mrq-oiqf3vk"/>
        </item>
        <item>
            <title><![CDATA[ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ]]></title>
            <link>https://kannada.asianetnews.com/state/pratap-simha-slams-siddaramaiah-and-dk-shivakumar-with-sharp-remark-over-hijab/articleshow-sr2k714</link>
            <guid isPermaLink="true">https://kannada.asianetnews.com/state/pratap-simha-slams-siddaramaiah-and-dk-shivakumar-with-sharp-remark-over-hijab/articleshow-sr2k714</guid>
            <pubDate>Fri, 15 May 2026 19:29:11 +0530</pubDate>
            <description><![CDATA[&lt;p&gt;ಮುಸಲ್ಮಾನ ಹೆಣ್ಣುಮಕ್ಕಳಿಗೆ ಬುರ್ಖಾ ಬೇಕೋ, ಬೇಡವೋ ಗೊತ್ತಿಲ್ಲ. ಆದರೆ ಮೂರು ವರ್ಷದಲ್ಲಿ ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್&zwnj;ಗೆ ಮುಖ ಮುಚ್ಚಲು ಬುರ್ಖಾ ಬೇಕು ಎಂದು ಪ್ರತಾಪ್ ಸಿಂಹ್ ಕಿಡಿ ಕಾರಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krnyrx037wm0q9c0nhhbp1rm,imgname-bjp-mp-pratap-simha-fires-verbal-1778853377025.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ.15) &lt;/strong&gt;ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ ಹೊಸ ಆದೇಶವೊಂದು ಭಾರಿ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಶಾಲೆಗಳಲ್ಲಿ ಹಿಜಾಬ್ ನಿಷೇಧ ಆದೇಶ ರದ್ದು ಮಾಡಿ ಇದೀಗ ಸಿದ್ದರಾಮಯ್ಯ ಸರ್ಕಾರ ಹಿಬಾಜ್&zwnj;ಗೆ ಅವಕಾಶ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಮರು ಯಾರು ಹಿಬಾಜ್&zwnj;ಗ ಅವಕಾಶ ಕೇಳಿಲ್ಲ. ಆದರೆ ಹಿಂದೂಗಳ ಉರಿಸಲು ಕಾಂಗ್ರೆಸ್ ಈ ರೀತಿ ಮಾಡಿದೆ ಎಂದಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕರ್ನಾಟಕದಲ್ಲಿ ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್&zwnj; ಮುಖ ಮುಚ್ಚಲು ಬುರ್ಖಾ ಬೇಕಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.&lt;/p&gt;&lt;h2&gt;ಸಿಎಂ, ಡಿಸಿಎಂಗೆ ಬುರ್ಖಾ ಬೇಕು&lt;/h2&gt;&lt;p&gt;ಮುಸಲ್ಮಾನ ಹೆಣ್ಣುಮಕ್ಕಳಿಗೆ ಬುರ್ಖಾ ಬೇಕೋ ಬೇಡವೋ ಗೊತ್ತಿಲ್ಲ. ಆದರೆ ಕಳೆದ ಮೂರು ವರ್ಷಗಳಲ್ಲಿ ಕರ್ನಾಕದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವುಕುಮಾರ್ ಅವರಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕಿದೆ ಎಂದು ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಮುಸಲ್ಮಾನ ಹೆಣ್ಣುಮಕ್ಕಳಿಗೆ ಬುರ್ಕಾ ಬೇಕೋ ಬೇಡವೋ ಗೊತ್ತಿಲ್ಲ, ಆದರೆ 3 ವರ್ಷಗಳಲ್ಲಿ ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯನವರಿಗೆ, ಶಿವಕುಮಾರ್ ರಿಗೆ ಖಂಡಿತ ಮುಖ ಮುಚ್ಚಿಕೊಳ್ಳಲು ಬುರ್ಕಾ ಬೇಕು! pic.twitter.com/jgRjY6jIxe&lt;/p&gt;&lt;p&gt;&mdash; Prathap Simha (@mepratap) May 15, 2026&lt;/p&gt;&lt;p&gt;&amp;nbsp;&lt;/p&gt;&lt;p&gt;ಕಾಂಗ್ರೆಸ್ ಸರ್ಕಾರ ಸಮವಸ್ತ್ರ ಸಂಹಿತೆ ಬದಿಗಿಟ್ಟು ಹಿಜಾಬ್ ಗೆ ಅವಕಾಶ ಕೊಟ್ಟಿದ್ದಾರೆ. ಮುಸ್ಲಿಮರ ಪ್ರೀತಿ ಗಳಿಸುವುದಕ್ಕಿಂತ ಹಿಂದೂಗಳ&zwnj; ಉರಿಸುವುದೆ ಕಾಂಗ್ರೆಸ್ ನ ಅಜೆಂಡಾ ಆಗಿದೆ. ಮೂರು ಕಾಸಿನ ಕೆಲಸ ಮಾಡದ ಸಿಎಂ, ಡಿಸಿಎಂ ಹಾಗೂ ಸಚಿವರಿಗೆ ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ. ಹೀಗಾಗಿ ಇವರಿಗೆಲ್ಲ ಬುರ್ಕಾ ಬೇಕೆ ಬೇಕಿದೆ ಎಂದು ಪ್ರತಾಪ್ ಸಿಂಹ್ ಹೇಳಿದ್ದಾರೆ.&lt;/p&gt;&lt;p&gt;ಸಿದ್ದರಾಮಯ್ಯ ಮಾಡುತ್ತಿರುವುದು ತಾಲಿಬಾನ್ ಸರಕಾರ. ಸಿದ್ದರಾಮಯ್ಯ ಕರ್ನಾಟಕದ ಖಮೇನಿ ಆಗೋಕೆ ಪ್ರಯತ್ನ ಪಡುತ್ತಿದ್ದಾರೆ. ಹಿಂದೂಗಳು ಜಾತಿ ಜಾತಿ ಅಂತಾ ಹೊಡೆದಾಡುವುದು ಬಿಡಿ.ಜಾತಿ ಜಾತಿ ಅಂತಾ ಸಾಯುವುದು ಬಿಡಿ. ಹಿಂದೂಗಳಾಗಿ ಒಗ್ಗೂಡುವ ಕಾಲ ಬಂದಿದೆ.ಸನಾತನ ಧರ್ಮ ನಾಶವನ್ನು ಮಾಡಲು ಸಿದ್ದರಾಮಯ್ಯ ರಂಥವರು ಯತ್ನಿಸಿದ್ದಾರೆ ಎಂದಿದ್ದಾರೆ.&lt;/p&gt;&lt;h2&gt;ಇವರು ಯಾವ ದೊಣ್ಣೆ ನಾಯಕ&lt;/h2&gt;&lt;p&gt;ಜನಿವಾರ,ಶಿವಧಾರ ಒಟ್ಟೆ ಒಳಗೆ ಹಾಕುತ್ತೇವೆ. ಅದನ್ನು ಪ್ರದರ್ಶನ ಮಾಡಲ್ಲ. ಜನಿವಾರ, ಶಿವಧಾರಕ್ಕೆ ಅನುಮತಿ ಕೊಡುವುದಕ್ಕೆ ನೀವು ಯಾವ ದೊಣ್ಣೆ ನಾಯಕ. ಎರಡು ವರ್ಷ ಕಳೆಯಲಿ ಪೀಡೆ ತೊಲಗಿತು ಎಂದು ಕಾಂಗ್ರೆಸ್ ಗೆ ಜನರು ತರ್ಪಣ ಬಿಡುತ್ತಾರೆ.ಶಾಲೆಗಳಿಗೆ ಬುರ್ಕಾವೂ ಬೇಡ ಕೇಸರಿ ಶಾಲು ಬೇಡ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>mysore</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/pratap-simha-slams-siddaramaiah-and-dk-shivakumar-with-sharp-remark-over-hijab/articleshow-sr2k714"/>
        </item>
        <item>
            <title><![CDATA[Mysuru: ರಸ್ತೆಬದಿಯಲ್ಲಿ ಮೂತ್ರವಿಸರ್ಜನೆ ತಡೆಗೆ ಕಾಂಪೌಂಡ್‌ಗೆ ಕನ್ನಡಿಗಳ ಅಳವಡಿಕೆ]]></title>
            <link>https://kannada.asianetnews.com/karnataka-districts/mysuru-installation-of-mirrors-in-the-compound-to-prevent-urination-on-the-roadside-mrq/articleshow-teb0s07</link>
            <guid isPermaLink="true">https://kannada.asianetnews.com/karnataka-districts/mysuru-installation-of-mirrors-in-the-compound-to-prevent-urination-on-the-roadside-mrq/articleshow-teb0s07</guid>
            <pubDate>Wed, 06 May 2026 05:39:50 +0530</pubDate>
            <description><![CDATA[&lt;p&gt;ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಸ್ಥಾನದ ಗುರಿಯೊಂದಿಗೆ, ಮೈಸೂರು ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ವಿಶಿಷ್ಟ ಯೋಜನೆ ಕೈಗೊಂಡಿದೆ. ನಗರದ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪ್ರಾಯೋಗಿಕವಾಗಿ ಕನ್ನಡಿಗಳನ್ನು ಅಳವಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqx9v77vmh5aca26kv5wahjy,imgname-laxman-savadi--1--1778026126587.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು:&lt;/strong&gt; ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಪಟ್ಟಕ್ಕೇರಲು ಹವಣಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆಯು ನಗರದಲ್ಲಿ ಸ್ವಚ್ಛತೆ ಕಾಪಾಡುವ ಸಲುವಾಗಿ ವಿಶೇಷ ಯೋಜನೆಯೊಂದನ್ನು ಕೈಗೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ, ಕಸ ಸುರಿಯುವುದನ್ನು ತಡೆಗಟ್ಟಲು ನಗರ ಪ್ರಮುಖ ರಸ್ತೆಯೊಂದರ ಪಾದಚಾರಿ ಮಾರ್ಗಕ್ಕೆ ಅಂಟಿಕೊಂಡಿರುವ ಕಾಂಪೌಂಡ್&zwnj;ಗೆ ಕನ್ನಡಿ ಅಳವಡಿಸಿ ಗಮನ ಸೆಳೆಯುತ್ತಿದೆ.&lt;/p&gt;&lt;h2&gt;&lt;strong&gt;ಪ್ರಾಯೋಗಿಕವಾಗಿ ಕನ್ನಡಿ ಅಳವಡಿಕೆ&lt;/strong&gt;&lt;/h2&gt;&lt;p&gt;ವಿಶಿಷ್ಟ ಯೋಜನೆಯ ಭಾಗವಾಗಿ ನಗರದ ಗ್ರಾಮಾಂತರ ಬಸ್&zwnj; ನಿಲ್ದಾಣದ ಎದುರಿನ ಮೋರಿಗೆ ಹೊಂದಿಕೊಂಡಂತೆ ಹಾಗೂ ಸರ್ಕಾರಿ ಅತಿಥಿಗೃಹದ ಕಾಂಪೌಂಡ್&zwnj;ಗೆ ಹೊಂದಿಕೊಂಡಂತೆ ಪ್ರಾಯೋಗಿಕವಾಗಿ ಕನ್ನಡಿ ಅಳವಡಿಸಿದೆ.&lt;/p&gt;&lt;p&gt;ಇಲ್ಲಿ ಸಾಮಾನ್ಯವಾಗಿ ಬಸ್&zwnj; ನಿಲ್ದಾಣಕ್ಕೆ ಬರುವ ಪ್ರಯಾಣಿಕರು, ಸಾರ್ವಜನಿಕರು, ದಾರಿಹೋಕರು ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯವಾಗಿತ್ತು. ಇದನ್ನು ತಪ್ಪಿಸಲು ಈಗ ಕನ್ನಡಿ ಅಳವಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಮೂತ್ರ ವಿಸರ್ಜನೆಗೆ ನಿಂತರೇ ಮೂತ್ರ ವಿಸರ್ಜಿಸುವುದನ್ನು ತಾವೇ ನೋಡುವಂತಾಗುತ್ತದೆ. ಜೊತೆಗೆ ರಸ್ತೆಯಲ್ಲಿ ಓಡಾಡುವ ಜನರಿಗೂ ಕಾಣುತ್ತದೆ. ಇದರಿಂದ ಅನೈರ್ಮಲ್ಯ ತಪ್ಪಿಸಬಹುದು ಎಂಬುದು ನಗರ ಪಾಲಿಕೆ ಯೋಜನೆ ಮತ್ತು ಯೋಚನೆ.&lt;/p&gt;&lt;p&gt;ಕನ್ನಡಿ ಅಳವಡಿಸಿರುವ ವಿಡಿಯೋ ವೈರಲ್&amp;nbsp;&lt;/p&gt;&lt;p&gt;ಅಲ್ಲದೆ ರಾತ್ರಿ ವೇಳೆ ಈ ಕನ್ನಡಿಯ ಕೆಳಗೆ ಎಲ್&zwnj;ಇಡಿ ಬಲ್ಪ್&zwnj; ಅಳವಡಿಸಿರುವುದರಿಂದ ರಾತ್ರಿ ವೇಳೆಯೂ ಮೂತ್ರ ವಿಸರ್ಜನೆ ಮಾಡುವುದು ತಪ್ಪಿಸಬಹುದು. ಈ ಕಾರ್ಯ ಯಶಸ್ವಿಯಾದರೆ ನಗರದ ಇತರ ಕಡೆಗೂ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಈ ಸಲಹೆಯನ್ನು ಯಾರು ಕೊಟ್ಟರೋ ಏನೋ ಆದರೆ ಉತ್ತಮವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಕನ್ನಡಿ ಅಳವಡಿಸಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್&zwnj; ಆಗಿದೆ.&lt;/p&gt;]]></content:encoded>
            <category>mysore</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mysuru-installation-of-mirrors-in-the-compound-to-prevent-urination-on-the-roadside-mrq/articleshow-teb0s07"/>
        </item>
        <item>
            <title><![CDATA[ರಾಜಕೀಯದಲ್ಲಿ ಸಕ್ರಿಯ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ: ಎಂಎಲ್‌ಸಿ ಎಚ್‌.ವಿಶ್ವನಾಥ್]]></title>
            <link>https://kannada.asianetnews.com/karnataka-districts/mlc-h-vishwanath-on-karnataka-politics-and-elections-gvd/articleshow-xta8yss</link>
            <guid isPermaLink="true">https://kannada.asianetnews.com/karnataka-districts/mlc-h-vishwanath-on-karnataka-politics-and-elections-gvd/articleshow-xta8yss</guid>
            <pubDate>Thu, 07 May 2026 23:26:59 +0530</pubDate>
            <description><![CDATA[&lt;p&gt;ಈಗ ಪರಿಸ್ಥಿತಿ ಬದಲಾಗಿದೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್ ಘೋಷಿಸಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kky3957ykh6500xwyaht3dsk,imgname-h-vishwanath-1773757830398.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಮೇ.07):&lt;/strong&gt; ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್&zwnj; ಸದಸ್ಯ ಎಚ್&zwnj;.ವಿಶ್ವನಾಥ್&zwnj; ಘೋಷಿಸಿದರು. ನಾನು ಈ ಹಿಂದೆ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಜನರೇ ಖರ್ಚಿಗೆ ಹಣ ನೀಡಿ ಆಶೀರ್ವದಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ 50 ಕೋಟಿ ರು. ಬೇಕು. ರಿಯಲ್&zwnj; ಎಸ್ಟೇಟ್&zwnj; ವ್ಯವಹಾರದಲ್ಲಿ ತೊಡಗಿದವರು ತಮ್ಮ ಜಮೀನು, ಮನೆ ಮಾರಿ ಸ್ಪರ್ಧಿಸಬಹುದು. ಆದರೆ, ನಮ್ಮಿಂದ ಅದು ಸಾಧ್ಯವಿಲ್ಲ ಎಂದರು. ನನ್ನ ಬಳಿ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಹೀಗಿರುವಾಗ ಸ್ಪರ್ಧೆ ಹೇಗೆ ಸಾಧ್ಯ?.&lt;/p&gt;&lt;p&gt;ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸುವುದು ಸಾಮಾನ್ಯ ವ್ಯಕ್ತಿಗೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ಮುಂದಿನ ಯಾವುದೇ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ. ಸಧ್ಯದ ಪರಿಸ್ಥಿತಿ ಗಮನಿಸಿದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಅಪಾರ ಹಣದ ಅವಶ್ಯಕತೆ ಇದೆ. ಅಷ್ಟು ದೊಡ್ಡ ಮೊತ್ತ ಖರ್ಚು ಮಾಡುವ ಶಕ್ತಿ ನನ್ನಲ್ಲಿಲ್ಲ. ಅಲ್ಲದೇ, ನನ್ನ ಮಕ್ಕಳು ಕೂಡ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ತಮ್ಮ ಶಕ್ತಿ ಅನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದರು.&lt;/p&gt;&lt;p&gt;ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಕ್ರಮಕ್ಕೆ ಸರಿಯಲ್ಲ. ಹಿರಿಯ ಅಧಿಕಾರಿ ರಾಮಚಂದ್ರರಾವ್ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರನ್ನು ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಕರ್ತವ್ಯಕ್ಕೆ ಮರು ನಿಯೋಜಿಸಿರುವುದು ಸರಿಯಲ್ಲ. ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದ್ದು, ಗೃಹ ಇಲಾಖೆಯನ್ನು ಪರಮೇಶ್ವರ್ ನಡೆಸುತ್ತಿದ್ದಾರೋ ಅಥವಾ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನಡೆಸುತ್ತಿದ್ದಾರಾ? ಎಂಬ ಅನುಮಾನವಿದೆ. ರಾಮಚಂದ್ರ ರಾವ್ ಅವರ ಅಮಾನತು ಆದೇಶ ಹಿಂಪಡೆಯಲು ದೊಡ್ಡಮಟ್ಟದ ಕಿಕ್ ಬ್ಯಾಕ್ ಪಡೆದಿರುವ ಸಾಧ್ಯತೆ ಇದೆ ಎಂದು ದೂರಿದರು.&lt;/p&gt;&lt;p&gt;ಈ ಹಿಂದೆ ಕೇರಳ ಬಸ್&zwnj;ನಲ್ಲಿ ಸಿಕ್ಕಿದ್ದ 2 ಕೋಟಿ ಹಣವನ್ನು ಕೊಂಡೊಯ್ದು ಇನ್&zwnj; ಸ್ಪೆಕ್ಟರ್&zwnj; ವಿರುದ್ಧ ಪ್ರಕರಣ ದಾಖಲಿಸಿದ್ದ ರಾಮಚಂದ್ರರಾವ್. ಅವರ ಸಾಕು ಮಗಳು ರನ್ಯಾರಾವ್ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಪರಿಣಾಮ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ, ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೂಡ ಕೇಳಿಬಂದಿತ್ತು. ನ್ಯಾಯ ಕೇಳಲು ಬಂದಿದ್ದ ಮಹಿಳೆಯ ಮೇಲೆ ರಾಮಚಂದ್ರ ರಾವ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ವಿಡಿಯೋ ನನ್ನದಲ್ಲ ಎಂದು ವಾದಿಸಿದ್ದರು. ಆ ನಂತರ ವಿಧಿವಿಜ್ಞಾನ ಪ್ರಯೋಗಾಲಯ ನೀಡಿದ ವರದಿಯಲ್ಲಿ ಆ ವಿಡಿಯೋ ರಾಮಚಂದ್ರರಾವ್ ಅವರದ್ದೇ ಎಂಬುದು ಸಾಬೀತಾದ ಕಾರಣ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿರುವುದು ಸರಿಯಲ್ಲ. ಈ ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ ಅವರು, ರಾಜ್ಯದಲ್ಲಿ ಯಾವ ಸೀಮೆಯ ಅಧಿಕಾರ ನಡೆಯುತ್ತಿದೆ ಎಂದು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಪೋಕ್ಸೋ ಪ್ರಕರಣ ಎದುರಿಸಿದವರ ಅಭಿಮಾನೋತ್ಸವ&lt;/strong&gt;&lt;/h2&gt;&lt;p&gt;ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಬಿಎಸ್&zwnj;ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿರುವ ಎಚ್&zwnj;.ವಿಶ್ವನಾಥ್, ಪೋಕ್ಸೋ ಪ್ರಕರಣಕ್ಕೆ ಯಡಿಯೂರಪ್ಪ ಗುರಿಯಾಗಿದ್ದು, ಇದು ಗಂಭೀರ ಪ್ರಕರಣ. ಆದರೂ ಇದೀಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್&zwnj; ಶಾ ಆಗಮಿಸುತ್ತಿರುವುದು ಹಾಸ್ಯಾಸ್ಪದ ಎಂದರು. ಒಟ್ಟಾರೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮೇಲಿನ ಅಮಾನತು ಆದೇಶ ಹಿಂದಕ್ಕೆ ಹಾಗೂ ಪೋಕ್ಸೊ ಕೇಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ಅವರ ಅಭಿಮಾನೋತ್ಸವ ರಾಜ್ಯಕ್ಕೆ ಎರಡು ಕಪ್ಪುಚುಕ್ಕೆ ಪ್ರಕರಣಗಳು ಎಂದರು.&lt;/p&gt;]]></content:encoded>
            <category>mysore</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mlc-h-vishwanath-on-karnataka-politics-and-elections-gvd/articleshow-xta8yss"/>
        </item>
        <item>
            <title><![CDATA[ಮೈಸೂರು ಬೆಳಗಾವಿ ಎಕ್ಸ್‌ಪ್ರೆಸ್‌ ರೈಲು ಹರಿಹರ ನಿಲ್ದಾಣದಲ್ಲಿ ದುರಂತ, ಯಶಸ್ವಿ ಅಣಕು ಪ್ರದರ್ಶನ]]></title>
            <link>https://kannada.asianetnews.com/karnataka-districts/mysuru-belagavi-express-railway-disaster-mock-drill-conducted-davanagere-harihar-station-emergency-response-gdp/articleshow-yq0pn93</link>
            <guid isPermaLink="true">https://kannada.asianetnews.com/karnataka-districts/mysuru-belagavi-express-railway-disaster-mock-drill-conducted-davanagere-harihar-station-emergency-response-gdp/articleshow-yq0pn93</guid>
            <pubDate>Fri, 15 May 2026 15:24:01 +0530</pubDate>
            <description><![CDATA[ಹರಿಹರ ಸಮೀಪ, ಮೈಸೂರು-ಬೆಳಗಾವಿ ಎಕ್ಸ್&zwnj;ಪ್ರೆಸ್&zwnj; ರೈಲು ಹಳಿತಪ್ಪಿದ ಭೀಕರ ಅಪಘಾತದ ಸನ್ನಿವೇಶವನ್ನು ಆಧರಿಸಿ ವಾರ್ಷಿಕ ವಿಪತ್ತು ನಿರ್ವಹಣಾ ಅಣಕು ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಎನ್&zwnj;ಡಿಆರ್&zwnj;ಎಫ್, ಎಸ್&zwnj;ಡಿಆರ್&zwnj;ಎಫ್ ಸೇರಿದಂತೆ ವಿವಿಧ ಇಲಾಖೆಗಳು ಸಂಯೋಜಿತ ಕಾರ್ಯಾಚರಣೆ ನಡೆಸಿ, ಒಂದು ಗಂಟೆಯೊಳಗೆ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದವು.]]></description>
            <media:content url="https://static.asianetnews.com/images/w-1280,h-720,format-jpg,imgid-01krngn59zc93e76anagay5qv0,imgname-railway-disaster-mock-drill-1778838574399.jpg" type="image/jpeg" height="390" width="690"/>
            <content:encoded><![CDATA[&lt;p&gt;ಹರಿಹರ: ಮೈಸೂರು&ndash;ಬೆಳಗಾವಿ ನಡುವೆ ಸಂಚರಿಸುತ್ತಿದ್ದ ಮೈಸೂರು&ndash;ಬೆಳಗಾವಿ ಬೇಸಿಗೆ ವಿಶೇಷ ಸೂಪರ್ ಎಕ್ಸ್&zwnj;ಪ್ರೆಸ್&zwnj; (ರೈಲು ಸಂಖ್ಯೆ 06285) ಹಳಿತಪ್ಪಿದ ಪರಿಣಾಮ ಸಂಭವಿಸುವ ಭೀಕರ ಅಪಘಾತದ ಪರಿಸ್ಥಿತಿಯನ್ನು ಆಧರಿಸಿ, ಹರಿಹರ ಸಮೀಪ ವಾರ್ಷಿಕ ವಿಪತ್ತು ನಿರ್ವಹಣೆಯ ಪೂರ್ಣ ಪ್ರಮಾಣದ ಅಣಕು ಅಭ್ಯಾಸ (ಮಾಕ್&zwnj; ಡ್ರಿಲ್&zwnj;) ಯಶಸ್ವಿಯಾಗಿ ನಡೆಸಲಾಯಿತು.&lt;/p&gt;&lt;h2&gt;ಅಪಘಾತದ ತೀವ್ರತೆ ನೈಜ ಪರಿಸ್ಥಿತಿಗೆ ಸಮಾನ&lt;/h2&gt;&lt;p&gt;ಈ ಅಣಕು ಪ್ರದರ್ಶನದಲ್ಲಿ ಅಪಘಾತದ ತೀವ್ರತೆಯನ್ನು ನೈಜ ಪರಿಸ್ಥಿತಿಗೆ ಸಮಾನವಾಗಿ ಚಿತ್ರಿಸಲಾಯಿತು. ಅಪಘಾತದ ರಭಸಕ್ಕೆ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇನ್ನೊಂದು ಬೋಗಿ ಅದರ ಮೇಲೇರಿದ ಸ್ಥಿತಿಯಲ್ಲಿ ಇದ್ದರೆ, ಮತ್ತೊಂದು ಬೋಗಿ ಗಂಭೀರವಾಗಿ ಜಖಂಗೊಂಡಂತೆ ರೂಪಿಸಲಾಗಿದೆ. ಈ ಸಂದರ್ಭದಲ್ಲಿ ರೈಲ್ವೆ ಸಿಬ್ಬಂದಿ ತಕ್ಷಣ ಸಮೀಪದ ನಿಲ್ದಾಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.&lt;/p&gt;&lt;p&gt;ಮಾಹಿತಿ ತಲುಪುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (ಎನ್&zwnj;ಡಿಆರ್&zwnj;ಎಫ್), ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (ಎಸ್&zwnj;ಡಿಆರ್&zwnj;ಎಫ್), ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತಂಡಗಳು ಕ್ಷಿಪ್ರವಾಗಿ ಸ್ಥಳಕ್ಕೆ ಆಗಮಿಸಿದವು. ಸಂಯೋಜಿತ ಕಾರ್ಯಾಚರಣೆಯ ಮೂಲಕ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಅವರಿಗೆ ಧೈರ್ಯ ತುಂಬಿ, ಪ್ರಥಮ ಚಿಕಿತ್ಸೆ ನೀಡಿ, ಅಗತ್ಯವಿದ್ದವರನ್ನು ಆಂಬ್ಯುಲೆನ್ಸ್&zwnj;ಗಳ ಮೂಲಕ ಸಮೀಪದ ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಕೇವಲ ಒಂದು ಗಂಟೆಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.&lt;/p&gt;&lt;h2&gt;ಜೀವದ ಹಂಗನ್ನು ಲೆಕ್ಕಿಸದೆ ಪ್ರಯಾಣಿಕರ ರಕ್ಷಣೆ&lt;/h2&gt;&lt;p&gt;ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಗುರುವಾರ ಹರಿಹರ ರೈಲು ನಿಲ್ದಾಣದಲ್ಲಿ ಈ ವಾರ್ಷಿಕ ಅಭ್ಯಾಸ ಆಯೋಜಿಸಲಾಗಿತ್ತು. ಬೆಂಕಿಗಾಹುತಿಯಾದ ಬೋಗಿಗಳೊಳಗೆ ಆಕ್ಸಿಜನ್&zwnj; ಉಪಕರಣಗಳೊಂದಿಗೆ ಪ್ರವೇಶಿಸಿದ ಸಿಬ್ಬಂದಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ಪ್ರಯಾಣಿಕರ ರಕ್ಷಣೆಯಲ್ಲಿ ತೊಡಗಿರುವ ದೃಶ್ಯ ಗಮನಾರ್ಹವಾಗಿತ್ತು. ಪ್ರಯಾಣಿಕರ ಜೀವ ರಕ್ಷಣೆ ಮಾತ್ರವಲ್ಲದೆ, ಅವರ ಬೆಲೆಬಾಳುವ ವಸ್ತುಗಳು ಹಾಗೂ ಸರಂಜಾಮುಗಳನ್ನು ಕೂಡ ಸುರಕ್ಷಿತವಾಗಿ ಹೊರತೆಗೆದು, ಅವುಗಳನ್ನು ಯಾವ ಬೋಗಿಗೆ ಸೇರಿವೆ ಎಂಬುದನ್ನು ಲಿಖಿತವಾಗಿ ದಾಖಲಿಸುವ ಕ್ರಮವೂ ಕೈಗೊಳ್ಳಲಾಯಿತು.&lt;/p&gt;&lt;p&gt;ಇದೇ ವೇಳೆ, ಮೈಸೂರು ವಿಭಾಗದ ಮಿನಿ ರೈಲು ಘಟಕದಿಂದ ಹೆಚ್ಚುವರಿ ಸ್ಟ್ರೆಚರ್&zwnj;ಗಳು, ತುರ್ತು ಚಿಕಿತ್ಸಾ ಸಾಮಗ್ರಿಗಳು ಹಾಗೂ ಲೋಹ ಕತ್ತರಿಸುವ ಯಂತ್ರೋಪಕರಣಗಳನ್ನು ಒದಗಿಸುವ ಮೂಲಕ ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು ತಾವು ಸಿದ್ಧರಾಗಿದ್ದೇವೆ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಲಾಯಿತು.&lt;/p&gt;&lt;p&gt;ಈ ಸಮಗ್ರ ಅಣಕು ಅಭ್ಯಾಸದ ವೇಳೆ ಸಂವಹನ ವ್ಯವಸ್ಥೆಯ ಪರಿಣಾಮಕಾರಿತ್ವ, ವಿವಿಧ ಇಲಾಖೆಗಳ ನಡುವಿನ ಸಮನ್ವಯ, ರಕ್ಷಣಾ ಕಾರ್ಯಾಚರಣೆಯ ವೇಗ, ವೈದ್ಯಕೀಯ ಸೇವೆಗಳ ಸ್ಪಂದನೆ, ಜನಸಂದಣಿ ನಿಯಂತ್ರಣ ಹಾಗೂ ಪುನಃಸ್ಥಾಪನಾ ಸಿದ್ಧತೆಗಳನ್ನೂ ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಅಭ್ಯಾಸದ ಅಂತ್ಯದಲ್ಲಿ ಸಂಬಂಧಿತ ಅಧಿಕಾರಿಗಳಿಂದ ವಿಮರ್ಶಾ ಸಭೆ ನಡೆಸಿ, ಕಾರ್ಯಾಚರಣೆಯ ವಿವಿಧ ಅಂಶಗಳ ಕುರಿತು ವಿಶ್ಲೇಷಣೆ ಮಾಡಲಾಯಿತು.&lt;/p&gt;&lt;p&gt;ಇಂತಹ ಅಣಕು ಅಭ್ಯಾಸಗಳನ್ನು ರೈಲ್ವೆ ಸಚಿವಾಲಯದ ಮಾರ್ಗಸೂಚಿಗಳಂತೆ ನಿಯಮಿತವಾಗಿ ನಡೆಸಲಾಗುತ್ತಿದ್ದು, ವಿಪತ್ತು ಸಿದ್ಧತೆಯನ್ನು ಬಲಪಡಿಸುವುದರ ಜೊತೆಗೆ ತುರ್ತು ಸಂದರ್ಭಗಳಲ್ಲಿ ವೇಗವಾದ ಮತ್ತು ಸಮನ್ವಯಿತ ಪ್ರತಿಕ್ರಿಯೆಯನ್ನು ಖಚಿತಪಡಿಸುತ್ತದೆ.&lt;/p&gt;&lt;p&gt;ಪೃಥ್ವಿ ಎಸ್ ಹುಲ್ಲತ್ತಿ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ.&lt;/p&gt;&lt;p&gt;ಅಣಕು ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಸಮಗ್ರವಾಗಿ ಮೇಲ್ವಿಚಾರಣೆ ಮಾಡಿದರು. ಮೈಸೂರು ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕ ಮುದಿತ್ ಮಿಟ್ಟಲ್, ನೈರುತ್ಯ ರೈಲ್ವೆಯ ಮುಖ್ಯ ಸುರಕ್ಷತಾ ಅಧಿಕಾರಿ ರಾಮಕೃಷ್ಣ, ಹಾಗೂ ಮುಖ್ಯ ಯಾಂತ್ರಿಕ ಎಂಜಿನಿಯರ್ ಬಾಲಸುಂದರ್ ಪಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು, ನಾಗರಿಕ ಆಡಳಿತದ ಪ್ರತಿನಿಧಿಗಳು ಹಾಜರಿದ್ದರು&lt;/p&gt;]]></content:encoded>
            <category>mysore</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mysuru-belagavi-express-railway-disaster-mock-drill-conducted-davanagere-harihar-station-emergency-response-gdp/articleshow-yq0pn93"/>
        </item>
        <item>
            <title><![CDATA[ಜಿ.ಟಿ.ದೇವೇಗೌಡ ಭದ್ರಕೋಟೆಯಲ್ಲಿ ದಳಪತಿಗಳ ರಣಕಹಳೆ; ತಂದೆ ವಿರುದ್ಧ ಹೋಗ್ತಾರಾ ಜಿಡಿ ಹರೀಶ್‌ಗೌಡ?]]></title>
            <link>https://kannada.asianetnews.com/gallery/karnataka-districts/jds-holds-a-huge-rally-in-gt-deve-gowda-s-chamundeshwari-assembly-constituency-mysuru-mrq-z5t4ma6</link>
            <guid isPermaLink="true">https://kannada.asianetnews.com/gallery/karnataka-districts/jds-holds-a-huge-rally-in-gt-deve-gowda-s-chamundeshwari-assembly-constituency-mysuru-mrq-z5t4ma6</guid>
            <pubDate>Sun, 17 May 2026 10:00:33 +0530</pubDate>
            <description><![CDATA[&lt;p&gt;ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್&zwnj;ನಿಂದ ಅಂತರ ಕಾಯ್ದುಕೊಂಡಿರುವ ಬೆನ್ನಲ್ಲೇ, ಅವರ ಪುತ್ರ ಜಿ.ಡಿ.ಹರೀಶ್&zwnj;ಗೌಡರ ನೇತೃತ್ವದಲ್ಲಿ ಪಕ್ಷವು ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krt2t0mnw2rtwzk6stn2z3wv,imgname-gt-dveegowda-gd-harishgowda-1778991825557.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್&zwnj;ನಿಂದ ಅಂತರ ಕಾಯ್ದುಕೊಂಡಿರುವ ಬೆನ್ನಲ್ಲೇ, ಅವರ ಪುತ್ರ ಜಿ.ಡಿ.ಹರೀಶ್&zwnj;ಗೌಡರ ನೇತೃತ್ವದಲ್ಲಿ ಪಕ್ಷವು ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.&lt;/p&gt;&lt;img&gt;&lt;p&gt;ಮಾಜಿ ಸಚಿವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜಿ.ಟಿ.ದೇವೇಗೌಡರು ಜೆಡಿಎಸ್&zwnj; ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಜಿ.ಟಿ.ದೇವೇಗೌಡರ ಕ್ಷೇತದಲ್ಲಿಯೇ ಜೆಡಿಎಸ್ ಕಾರ್ಯಕ್ರಮ ಆಯೋಜನೆ ಮಾಡಿದೆ. ಈ ಕಾರ್ಯಕ್ರಮದ ಮುಂದಾಳತ್ವವನ್ನು ಜಿ.ಟಿ.ದೇವೇಗೌಡರ ಅವರ ಪುತ್ರ ಜಿ.ಡಿ.ಹರೀಶ್&zwnj;ಗೌಡ ತೆಗೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಜಿಡಿ.ಹರೀಶ್&zwnj;ಗೌಡ ಮುಂದಾಳತ್ವದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಬೋಗಾದಿಯ ಭೋಗ ನಂದೀಶ್ವರ ದೇವಸ್ಥಾನದ ಬಳಿ ಜೆಡಿಎಸ್ ಪಕ್ಷದ ಕಾರ್ಯಕ್ರಮ ನಡೆಯಲಿದೆ. ಜಿ.ಟಿ.ದೇವೇಗೌಡರನ್ನು ಪಕ್ಕಕ್ಕೆ ಸರಿಸಿ ಈ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಬಣದ ನಾಯಕರು ಸೇರಿದಂತೆ ದಳಪತಿಗಳು ಭಾಗಿಯಾಗಲಿದ್ದಾರೆ.&lt;/p&gt;&lt;img&gt;&lt;p&gt;ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್&zwnj;ಡಿ ಕುಮಾರಸ್ವಾಮಿ, ಇಡೀ ರಾಜ್ಯ ಸುತ್ತಿ ಬಂದಿರುವ ಜನತಾದಳ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿರಲಿದೆ. ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸದ ಸಮಾರೋಪವನ್ನು ಜಿ.ಟಿ.ದೇವೇಗೌಡರ ನೆಲದಲ್ಲಿಯೇ ಆಯೋಜಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.&lt;/p&gt;&lt;img&gt;&lt;p&gt;ಈ ಸಮಾವೇಶದಲ್ಲಿ ಸುಮಾರು 30 ಸಾವಿರ ಜನರು ಸೇರುವ ಸಾಧ್ಯತೆಗಳಿವೆ. ಈ ಮೂಲಕ ಪಕ್ಷದಿಂದ ದೂರವಾಗಿರುವ ಜಿ.ಟಿ.ಡಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಇತ್ತ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರೂ, ಜಿಟಿಡಿ ಕೆಲ ದಿನಗಳ ಹಿಂದೆಯಷ್ಟೇ ಹೆಚ್&zwnj;ಡಿ ದೇವೇಗೌಡರನ್ನು ಭೇಟಿ ಮಾಡಿದ್ದರು. ಜಿ.ಟಿ.ದೇವೇಗೌಡರ ಈ ನಡೆಯನ್ನು ಮಾಜಿ ಸಚಿವ ಸಾ.ರಾ.ಮಹೇಶ್ ಟೀಕಿಸಿದ್ದರು.&lt;/p&gt;&lt;img&gt;&lt;p&gt;ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ, ಸುತ್ತಮುತ್ತಲ ಕ್ಷೇತ್ರದಿಂದ ಜನರು ಬರುತ್ತಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. 35 ರಿಂದ 40 ಸಾವಿರ ಜನರು ಸೇರುವ ಸಾಧ್ಯತೆಯಿದೆ ಎಂದು ತಿಳಿಸಿದರು.&lt;/p&gt;&lt;img&gt;&lt;p&gt;ಶಾಸಕ ಜಿ.ಟಿ.ದೇವೇಗೌಡರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಜೆಡಿಎಸ್ ಪಕ್ಷದಲ್ಲೇ ಉಳಿಯುವುದಾದರೆ ನಮ್ಮ ಅಭ್ಯಂತರವೇನೂ ಇಲ್ಲ. . ಜಿ.ಟಿ.ದೇವೇಗೌಡರಿಂದ ಪಕ್ಷಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನಗಳಿಂದ ಕಾರ್ಯಕರ್ತರಿಗೆ ಆಘಾತವಾಗಿದೆ. ಈ ಕಾರಣದಿಂದ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ ಎಂದು ಸಾ.ರಾ.ಮಹೇಶ್ ಹೇಳಿದ್ದರು.&lt;/p&gt;]]></content:encoded>
            <category>mysore</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/jds-holds-a-huge-rally-in-gt-deve-gowda-s-chamundeshwari-assembly-constituency-mysuru-mrq-z5t4ma6"/>
        </item>
    </channel>
</rss>
