<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 29 May 2026 19:48:37 +0530</lastBuildDate>
        <atom:link href="https://kannada.asianetnews.com/rss/politics" rel="self" type="application/rss+xml"/>
        <item>
            <title><![CDATA[ಜೆಡಿಎಸ್‌ಗೆ ಸೇರಿದ ಬೆನ್ನಲ್ಲೇ ದೇವೇಗೌಡರ ಕಾಲು ಹಿಡಿದು ಆಶೀರ್ವಾದ ಪಡೆದ ಯುವನಾಯಕಿ ಬಿಗ್‌ಬಾಸ್‌ ಜಾಹ್ನವಿ]]></title>
            <link>https://kannada.asianetnews.com/gallery/tv-talk/bigg-boss-jhanvi-joins-jds-meets-hd-deve-gowda-padmanabhanagar-residence-san-elzk32v</link>
            <guid isPermaLink="true">https://kannada.asianetnews.com/gallery/tv-talk/bigg-boss-jhanvi-joins-jds-meets-hd-deve-gowda-padmanabhanagar-residence-san-elzk32v</guid>
            <pubDate>Fri, 29 May 2026 19:48:31 +0530</pubDate>
            <description><![CDATA[ಬಿಗ್&zwnj;ಬಾಸ್&zwnj; ಖ್ಯಾತಿಯ ನಟಿ ಜಾಹ್ನವಿ, ಎಚ್&zwnj;ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್&zwnj; ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬಳಿಕ, ಮಾಜಿ ಪ್ರಧಾನಿ ಎಚ್&zwnj;ಡಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದು, ಈ ಕ್ಷಣದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kst1bzkcehxgvrazt6par8qv,imgname-jhanvi--5--1780064058988.jpg" type="image/jpeg" height="390" width="690"/>
            <content:encoded><![CDATA[ಬಿಗ್&zwnj;ಬಾಸ್&zwnj; ಖ್ಯಾತಿಯ ನಟಿ ಜಾಹ್ನವಿ, ಎಚ್&zwnj;ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್&zwnj; ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬಳಿಕ, ಮಾಜಿ ಪ್ರಧಾನಿ ಎಚ್&zwnj;ಡಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದು, ಈ ಕ್ಷಣದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.&lt;img&gt;&lt;p&gt;ನಟಿ, ನಿರೂಪಕಿ ಹಾಗೂ ಬಿಗ್&zwnj;ಬಾಸ್&zwnj; ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿದ್ದ ಜಾಹ್ನವಿ ಇತ್ತೀಚೆಗೇ ಕೇಂದ್ರ ಸಚಿವ ಎಚ್&zwnj;ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್&zwnj; ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡಿದ್ದರು. ಬಿಗ್&zwnj;ಬಾಸ್&zwnj; ಬಳಿಕ ಸಮಾಜಸೇವೆಯಲ್ಲೇ ಹೆಚ್ಚಾಗಿ ತೊಡಗಿಕೊಂಡಿದ್ದ ಅವರೀಗ ಜೆಡಿಎಸ್&zwnj; ಮಹಿಳಾ ಘಟಕವನ್ನು ಬಲಪಡಿಸುವ ಉದ್ದೇಶದಲ್ಲಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಪಕ್ಷಕ್ಕೆ ಸೇರಿಕೊಂಡ ಐದು ದಿನಗಳ ಬಳಿಕ ಶುಕ್ರವಾರ ಅವರು ಜೆಡಿಎಸ್&zwnj; ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್&zwnj;ಡಿ ದೇವೇಗೌಡ ಅವರನ್ನು ಪದ್ಮನಾಭ ನಗರದ ನಿವಾಸದಲ್ಲಿ ಭೇಟಿಯಾದರು. ಅವರಿಗೆ ಹೂಗುಚ್ಛ ನೀಡಿದ ಬಳಿಕ ಕಾಲು ಮುಟ್ಟಿ ನಮಸ್ಕಾರ ಪಡೆದಿದ್ದಾರೆ. ಈ ವಿಡಿಯೋವನ್ನು ಅವರು ಸೋಶಿಯಲ್&zwnj; ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಜೆಡಿಎಸ್&zwnj;ಗೆ ಸೇರಿದ ಬೆನ್ನಲ್ಲಿಯೇ ಅವರು ರಾಜಕೀಯ ವಿಚಾರಗಳನ್ನು ಹಂಚಿಕೊಳ್ಳಲು ಜಾಹ್ನವಿ ರಾಜಶೇಖರ್&zwnj; (jhanvirajshekar) ಹೆಸರಿನಲ್ಲಿ ಹೊಸ ಖಾತೆಯನ್ನೂ ತೆರೆದಿದ್ದು, ಇದರಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ತಮ್ಮ ಡಿಪಿಯಲ್ಲಿ ಜೆಡಿಎಸ್&zwnj; ಯುವನಾಯಕಿ ಎಂದು ಅವರು ಬರೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ವಿಡಿಯೋ ಹಂಚಿಕೊಂಡಿರುವ ಜಾಹ್ನವಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೆ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳು , ಮಣ್ಣಿನ ಮಗ , @ಹೆಚ್ ಡಿ ದೇವೇಗೌಡ ಅಪ್ಪಾಜಿಯವರನ್ನು ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು' ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಇದಕ್ಕೆ ಕಾಮೆಂಟ್&zwnj; ಮಾಡಿರುವ ಹಲವರು, ನೀವು ಚುನಾವಣೆಗೆ ನಿಂತು ಶಾಸಕಿಯಾಗಬೇಕು. ನಿಮಗೆ ಆ ಅರ್ಹತೆ ಇದೆ ಎಂದು ಕಾಮೆಂಟ್&zwnj; ಮಾಡಿದ್ದಾರೆ. 'ಯುವಶಕ್ತಿಯ ಜೊತೆಗೆ ಮಹಿಳಾ ಶಕ್ತಿಯೂ ಪಕ್ಷಕ್ಕೆ ಇನ್ನಷ್ಟು ಬಲ ತುಂಬಲಿ.ಜಾತ್ಯಾತೀತ ಜನತಾದಳದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ನಿಮ್ಮ ಪಯಣ ಯಶಸ್ವಿಯಾಗಲಿ' ಎಂದು ಇನ್ನೊಬ್ಬರು ಹರಸಿದ್ದಾರೆ.&lt;/p&gt;]]></content:encoded>
            <category>politics</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/tv-talk/bigg-boss-jhanvi-joins-jds-meets-hd-deve-gowda-padmanabhanagar-residence-san-elzk32v"/>
        </item>
        <item>
            <title><![CDATA[EXCLUSIVE: ದೆಹಲಿ ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿದ ಡಿ.ಕೆ. ಶಿವಕುಮಾರ್! ಹೈಕಮಾಂಡ್‌ಗೆ ನೀಡಲಿರುವ 'ಡಿಕೆಶಿ ಟೀಮ್'ನಲ್ಲಿ ಯಾರಿದ್ದಾರೆ?]]></title>
            <link>https://kannada.asianetnews.com/politics/dk-shivakumar-exclusive-flight-photo-preparing-cabinet-list-for-delhi-meeting-sat/articleshow-7m4bno8</link>
            <guid isPermaLink="true">https://kannada.asianetnews.com/politics/dk-shivakumar-exclusive-flight-photo-preparing-cabinet-list-for-delhi-meeting-sat/articleshow-7m4bno8</guid>
            <pubDate>Fri, 29 May 2026 17:09:35 +0530</pubDate>
            <description><![CDATA[&lt;p&gt;ಡಿ.ಕೆ. ಶಿವಕುಮಾರ್ ಸಚಿವ ಸಂಪುಟ ರಚನೆಗಾಗಿ ಆದ ಆಪ್ತರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದಾರೆ. ವಿಮಾನ ಪ್ರಯಾಣದ ವೇಳೆ ಗೌಪ್ಯವಾಗಿ ಸಿದ್ಧಪಡಿಸಿದ ಈ ಪಟ್ಟಿಯನ್ನು ಹೈಕಮಾಂಡ್ ಮುಂದಿಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಯಾರ ಬೆಂಬಲಿಗರಿಗೆ ಸಚಿವ ಸ್ಥಾನ ಸಿಗಲಿದೆ ನೋಡಬೇಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kssre9c4x9175vgz8st93jx7,imgname-dk-shivakumar-1780054697348.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ದೆಹಲಿ (ಮೇ 29): ಕ&lt;/strong&gt;ರ್ನಾಟಕ ರಾಜಕೀಯದ ಕುತೂಹಲ ಈಗ ರಾಷ್ಟ್ರ ರಾಜಧಾನಿ ದೆಹಲಿಯತ್ತ ನೆಟ್ಟಿದೆ. ರಾಜ್ಯ ಸಚಿವ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟಕ್ಕೆ ತಲುಪಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ತಮ್ಮದೇ ಆದ ವಿಶೇಷ ಪಟ್ಟಿಯೊಂದಿಗೆ ದೆಹಲಿಗೆ ಹಾರಿದ್ದಾರೆ. ಆದರೆ, ಈ ಪಯಣದ ನಡುವೆ ಒಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ.&lt;/p&gt;&lt;h3&gt;&lt;strong&gt;ವಿಮಾನದಲ್ಲೇ ಸಿದ್ಧವಾಯ್ತು ಸಚಿವರ ಲಿಸ್ಟ್!&lt;/strong&gt;&lt;/h3&gt;&lt;p&gt;ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳುವ ವಿಮಾನದಲ್ಲಿ ಕುಳಿತೇ ತಮ್ಮ ಆಪ್ತ ಸಚಿವರ ಪಟ್ಟಿಯನ್ನು ಸಿದ್ಧಪಡಿಸುತ್ತಿರುವ ಎಕ್ಸ್&zwnj;ಕ್ಲೂಸಿವ್ ಮಾಹಿತಿ ಲಭ್ಯವಾಗಿವೆ. ಆದರೆ, ಡಿಕೆಶಿ ಅವರು ವಿಮಾನದ ಪ್ರಯಾಣದ ಸಮಯವನ್ನೂ ವ್ಯರ್ಥ ಮಾಡದೆ, ಅತ್ಯಂತ ಗೌಪ್ಯವಾಗಿ ಸಚಿವರಾಗುವವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈ ಪೋಟೋ ಈಗ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.&lt;/p&gt;&lt;h2&gt;&lt;strong&gt;ತಮ್ಮವರೇ ಇರಲಿ ಎಂಬ ಪಟ್ಟು:&lt;/strong&gt;&lt;/h2&gt;&lt;p&gt;ಮುಂದಿನ ಸರ್ಕಾರದಲ್ಲಿ ತಮ್ಮ ಪ್ರಭಾವ ಮತ್ತು ಹಿಡಿತ ಸಾಧಿಸಲು ಡಿ.ಕೆ. ಶಿವಕುಮಾರ್ ಅವರು ತಮ್ಮ ಪರಮಾಪ್ತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಯಾಬಿನೆಟ್&zwnj;ನಲ್ಲಿ ಯಾರ್ಯಾರು ಇರಬೇಕು, ಯಾರಿಗೆ ಯಾವ ಖಾತೆ ನೀಡಿದರೆ ಸೂಕ್ತ ಎಂಬ ಬಗ್ಗೆ ಡಿಕೆಶಿ ಈಗಾಗಲೇ ಒಂದು ಸ್ಪಷ್ಟ ನೀಲನಕ್ಷೆ ಸಿದ್ಧಪಡಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹಳೆ ಮೈಸೂರು ಭಾಗದ ನಾಯಕರು ಹಾಗೂ ಕನಕಪುರ ಬಂಡೆಯ ನೆರಳಲ್ಲಿ ಬೆಳೆದ ನಿಷ್ಠಾವಂತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ ಎಂಬ ಮಾಹಿತಿಯಿದೆ.&lt;/p&gt;&lt;h3&gt;&lt;strong&gt;ಹೈಕಮಾಂಡ್ ಅಂಗಳದಲ್ಲಿ ಚೆಂಡು:&lt;/strong&gt;&lt;/h3&gt;&lt;p&gt;ದೆಹಲಿಗೆ ತಲುಪಿರುವ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದಾರೆ. ತಾವು ಸಿದ್ಧಪಡಿಸಿರುವ ಈ 'ಸ್ಪೆಷಲ್ ಲಿಸ್ಟ್' ಅನ್ನು ಹೈಕಮಾಂಡ್ ಮುಂದಿಟ್ಟು ಚರ್ಚಿಸಿದ್ದಾರೆ. ಒಂದು ವೇಳೆ ಹೈಕಮಾಂಡ್ ಈ ಪಟ್ಟಿಗೆ ಹಸಿರು ನಿಶಾನೆ (Green Signal) ನೀಡಿದರೆ, ಮುಖ್ಯಮಂತ್ರಿಯವರ ಜೊತೆಜೊತೆಗೇ ಸಚಿವರೂ ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ವರ್ಸಸ್ ಡಿ.ಕೆ. ಶಿವಕುಮಾರ್?&lt;/strong&gt;&lt;/h2&gt;&lt;p&gt;ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮದೇ ಆದ ಸಂಭಾವ್ಯ ಸಚಿವರ ಪಟ್ಟಿಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸುವಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಈಗಿನ ಮಿಲಿಯನ್ ಡಾಲರ್ ಪ್ರಶ್ನೆ. ದೆಹಲಿಯಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಸಭೆಯ ನಂತರವಷ್ಟೇ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಸ್ಪಷ್ಟವಾಗಲಿದೆ.&lt;/p&gt;&lt;p&gt;ಒಟ್ಟಾರೆಯಾಗಿ, ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿರುವ ಡಿ.ಕೆ. ಶಿವಕುಮಾರ್ ಅವರ ನಡೆ, ಅವರು ಅಧಿಕಾರ ಹಂಚಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ.&lt;/p&gt;]]></content:encoded>
            <category>politics</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/dk-shivakumar-exclusive-flight-photo-preparing-cabinet-list-for-delhi-meeting-sat/articleshow-7m4bno8"/>
        </item>
        <item>
            <title><![CDATA[ಡಿಕೆಶಿ ಮೌನಕ್ಕೆ ಕೊನೆಗೂ ಸಿಕ್ಕಿತು ಉತ್ತರ: 'ತೋಡಿದ ಬಾವಿಗೆ ಜಲವೇ ಸಾಕ್ಷಿ' ಎಂದದ್ಯಾಕೆ ನೊಣವೆಕೆರೆ ಅಜ್ಜಯ್ಯ]]></title>
            <link>https://kannada.asianetnews.com/gallery/politics/nonavakere-ajjayya-told-dk-shivakumar-not-to-talk-until-taking-oath-as-cm-suc-4slkgdn</link>
            <guid isPermaLink="true">https://kannada.asianetnews.com/gallery/politics/nonavakere-ajjayya-told-dk-shivakumar-not-to-talk-until-taking-oath-as-cm-suc-4slkgdn</guid>
            <pubDate>Fri, 29 May 2026 13:33:48 +0530</pubDate>
            <description><![CDATA[ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎನ್ನುವುದು ಬಹುತೇಕ ಖಚಿತವಾಗಿದ್ದರೂ, ಅವರು ಮೌನಕ್ಕೆ ಶರಣಾಗಿದ್ದಾರೆ. ಅವರ ಈ ಮೌನದ ಹಿಂದೆ, ಅವರು ನಂಬುವ ನೊಣವಿನಕೆರೆ ಅಜ್ಜಯ್ಯನವರ ಸಲಹೆಯಿದ್ದು, ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾತನಾಡದಂತೆ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kssc44f29mtvamqk4rca6cx9,imgname-nonavakere-ajjayya-01-1780041781730.jpg" type="image/jpeg" height="390" width="690"/>
            <content:encoded><![CDATA[ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎನ್ನುವುದು ಬಹುತೇಕ ಖಚಿತವಾಗಿದ್ದರೂ, ಅವರು ಮೌನಕ್ಕೆ ಶರಣಾಗಿದ್ದಾರೆ. ಅವರ ಈ ಮೌನದ ಹಿಂದೆ, ಅವರು ನಂಬುವ ನೊಣವಿನಕೆರೆ ಅಜ್ಜಯ್ಯನವರ ಸಲಹೆಯಿದ್ದು, ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾತನಾಡದಂತೆ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.&lt;img&gt;&lt;p&gt;ಕಳೆದೊಂದು ವರ್ಷಗಳಿಂದ ಮುಖ್ಯಮಂತ್ರಿ ಖುರ್ಚಿಗಾಗಿ ನಡೆಯುತ್ತಿದ್ದ ಜಟಾಪಟಿ ಒಂದು ಹಂತದವರೆಗೆ ಬಂದು ನಿಂತಿದೆ. ನಿನ್ನೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿಯಾಗಿದೆ. ಇದೀಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಇನ್ನು ಕುತೂಹಲ, ಊಹಾಪೋಹಗಳು ಇದ್ದರೂ ಡಿ.ಕೆ.ಶಿವಕುಮಾರ್​ ಅವರೇ ಎನ್ನುವುದು ಪಕ್ಕಾ ಆಗಿದೆ. ಇದರ ಹೊರತಾಗಿಯೂ ಡಿಕೆಶಿ ಅವರು ಯಾರ ಪ್ರಶ್ನೆಗೂ ಉತ್ತರಿಸದೇ, ಮೌನಕ್ಕೆ ಜಾರಿದ್ದು ಆಶ್ಚರ್ಯಕ್ಕೆ ಕಾರಣವಾಗಿತ್ತು. ಅದಕ್ಕೆ ಇದೀಗ ಉತ್ತರ ಸಿಕ್ಕಿದೆ.&lt;/p&gt;&lt;img&gt;&lt;p&gt;ಅಷ್ಟಕ್ಕೂ ಡಿಕೆಶಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಮೌನದಿಂದ ಇರುವಂತೆ ಅವರು ಹಲವು ವರ್ಷಗಳಿಂದ ನಂಬಿರುವ ನೊಣವಿನಕೆರೆ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು (ನೊಣವೆಕೆರೆ ಅಜ್ಜಯ್ಯ -Nonavinakere Ajjayya) ಅವರೇ ಹೇಳಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೇ ಅಜ್ಜಯ್ಯ ಅವರು ಡಿಕೆಶಿ ಮುಖ್ಯಮಂತ್ರಿಯಾಗುವ ಸೂಚನೆ ಕೊಟ್ಟಿದ್ದರು. ಇದೀಗ ಅವರು ಮೌನವೇ ಲೇಸು ಎಂದು ಹೇಳಿದ್ದಾರೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;ನೊಣವಿನಕೆರೆ ಮಠದ ಆಶೀರ್ವಾದ ಡಿಕೆ ಶಿವಕುಮಾರ್ ಅವರ ಮೇಲಿದೆ, ಅವರು ಮಠದ ಭಕ್ತರಾಗಿದ್ದಾರೆ. ಡಿಕೆ ಶಿವಕುಮಾರ್ ಅವರು, ಮುಖ್ಯಮಂತ್ರಿ ಆಗೇ ಆಗುತ್ತಾರೆ. ಅವರು, ಉತ್ತಮ ಸಂಘಟನಾಕಾರರು ಎಂದು ಶ್ರೀಗಳು, ಕಳೆದ ವಾರ ಹೇಳಿದ್ದರು. ಚುನಾವಣೆಯ ವೇಳೆ, ನಾಮಪತ್ರ ಸಲ್ಲಿಸುವಾಗ, ಬಿ- ಫಾರಂ ವಿತರಿಸುವಾಗ, ಈ ಎಲ್ಲಾ ಕೆಲಸವನ್ನು ಆರಂಭಿಸುವ ಮುನ್ನಾ ಅಜ್ಜಯ್ಯನ ಆಶೀರ್ವಾದವನ್ನು ಪಡೆದೇ ಮುಂದಕ್ಕೆ ಹೋಗುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.&lt;/p&gt;&lt;img&gt;&lt;p&gt;ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ ಎಂದು ಡಿ. ಕೆ ಶಿವಕುಮಾರ್&zwnj;ಗೆ (DK Shivakumar) ಅವರು ನೊಣವಿನಕೆರೆ ಅಜ್ಜಯ್ಯ ಸಲಹೆ ಕೊಟ್ಟಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಯಾವುದೇ ಮಾತನಾಡದಂತೆ ಅಜ್ಜಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಮಾತನಾಡಿದರೆ ಕೆಲಸ ಕೆಡಲಿದೆ ಎಂದಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.&lt;/p&gt;&lt;img&gt;&lt;p&gt;ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ನೊಣವಿನಕೆರೆ ಅಜ್ಜಯ್ಯ, ಅವರಿಗೆ ಶ್ರೀಮಠದ ಆಶೀರ್ವಾದ ಇದೆ. ಮುಂದೆ ಅವರು ರಾಜನಾಗಿ ಒಳಿತು ಮಾಡಲಿದ್ದಾರೆ ಎನ್ನುವ ನಂಬಿಕೆ ಇದೆ. ಅವರು ಯಾವಾಗ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನುವುದು ಅವರ ರಾಜಕೀಯದ ಮಾತುಕತೆಗೆ ಬಿಟ್ಟಿರುವ ವಿಷಯ. ನಾನು ಹೇಳುವಷ್ಟು ಹೇಳಿದ್ದೇನೆ. ಧರ್ಮದ ಧ್ವಜ ಕೊಟ್ಟಿದ್ದೇವೆ. ಮುಂದಿನ ದಿನ ಒಳಿತಾಗಲಿ, ಕಾದು ನೋಡೋಣ ಎಂದು ಅಜ್ಜಯ್ಯ ಹೇಳಿದ್ದಾರೆ.&lt;/p&gt;&lt;img&gt;&lt;p&gt;ಉತ್ತಮ ರಾಜ ಪ್ರತ್ಯಕ್ಷ ದೇವತಾ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವ ಮಾತನ್ನು ಅವರು ಪಾಲಿಸಲಿ ಎನ್ನುವುದು ನಮ್ಮ ಹಾರೈಕೆ. &quot;ಮಾಡಿದ ಪಾಪಕ್ಕೆ ಮನವೇ ಸಾಕ್ಷಿ, ತೋಡಿದ ಬಾವಿಗೆ ಜಲವೇ ಸಾಕ್ಷಿ ಎಂಬಂತೆ ಮುಂದೆ ಏನಾಗುತ್ತದೆಯೋ ನೋಡೋಣ ಎಂದು ಅಜ್ಜಯ್ಯ ಹೇಳಿದ್ದಾರೆ. (ಈ ಗಾದೆ ಮಾತಿನ ಅರ್ಥ, ಮನುಷ್ಯ ತಾನು ಮಾಡಿದ ತಪ್ಪು ಅಥವಾ ಪಾಪದ ಕೆಲಸಗಳಿಗೆ ಬೇರೆ ಯಾರೂ ಸಾಕ್ಷಿ ಬೇಕಾಗಿಲ್ಲ; ಅವನ ಒಳಮನಸ್ಸಿಗೇ ತಾನು ಮಾಡಿದ್ದು ಸರಿ ಅಥವಾ ತಪ್ಪು ಎಂಬುದು ಚೆನ್ನಾಗಿ ತಿಳಿದಿರುತ್ತದೆ ಎನ್ನುವುದು)&lt;/p&gt;]]></content:encoded>
            <category>politics</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/politics/nonavakere-ajjayya-told-dk-shivakumar-not-to-talk-until-taking-oath-as-cm-suc-4slkgdn"/>
        </item>
        <item>
            <title><![CDATA[Davanagere: ಪ್ರಧಾನಿ ಮೋದಿಯಿಂದ ದೇಶಕ್ಕೆ ದೊಡ್ಡ ಗಂಡಾಂತರ, ಒಳಿತು ಮಾಡುವುದಿದ್ದರೆ ತಕ್ಷಣ ರಾಜೀನಾಮೆ ಕೊಡಲಿ: ಕಾಂಗ್ರೆಸ್ ಮುಖಂಡ]]></title>
            <link>https://kannada.asianetnews.com/politics/pm-modi-failed-in-every-sector-should-resign-immediately-kpcc-d-basavaraj-demands-rav/articleshow-5dhpkwe</link>
            <guid isPermaLink="true">https://kannada.asianetnews.com/politics/pm-modi-failed-in-every-sector-should-resign-immediately-kpcc-d-basavaraj-demands-rav/articleshow-5dhpkwe</guid>
            <pubDate>Fri, 29 May 2026 13:38:11 +0530</pubDate>
            <description><![CDATA[&lt;p&gt;ಬೆಲೆ ಏರಿಕೆ, ವಿದೇಶಾಂಗ ನೀತಿ, ಆರ್ಥಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ತಕ್ಷಣವೇ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಮೋದಿ ಅಧಿಕಾರದಲ್ಲಿ ಮುಂದುವರಿದರೆ ದೇಶಕ್ಕೆ ದೊಡ್ಡ ಗಂಡಾಂತರವಿದೆ ಎಂದು ಎಚ್ಚರಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kssc13s4zeypz21w3fw8djpz,imgname-----------------------2026-05-29t133051.907-1780041682723.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ.29): &lt;/strong&gt;ಬೆಲೆ ಏರಿಕೆ, ವಿದೇಶ ವ್ಯವಹಾರ, ಆರ್ಥಿಕ ಕ್ಷೇತ್ರ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲೂ ಸಂಪೂರ್ಣ ವಿಫಲವಾದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಒಳಿತು ಮಾಡುವುದಿದ್ದರೆ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದ ಜನರ ಹಿತದೃಷ್ಟಿಯಿಂದ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮೋದಿಯವರು ಇದೇ ರೀತಿ ಅಧಿಕಾರದಲ್ಲಿ ಮುಂದುವರಿದರೆ ದೇಶಕ್ಕೆ ದೊಡ್ಡ ಗಂಡಾಂತರ ತಪ್ಪಿದ್ದಲ್ಲ ಎಂದರು.&lt;/p&gt;&lt;p&gt;ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ತಿಂಗಳಾದರೂ ತೈಲ, ಅನಿಲ ಬೆಲೆ ಹೆಚ್ಚಳದ ಬಗ್ಗೆ ನರೇಂದ್ರ ಮೋದಿಯವರಿಗೆ ಗೊತ್ತಿರಲಿಲ್ಲ. ಆದರೆ, ಪಂಚ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆಯೂ ಅದೆಲ್ಲಾ ನೆನಪಿಗೆ ಬರಲಿಲ್ಲ. ಐದೂ ರಾಜ್ಯಗಳ ಚುನಾವಣೆ ಮುಗಿದು, ಫಲಿತಾಂಶ ಬರುತ್ತಿದ್ದಂತೆ ಜ್ಞಾನೋದಯವಾಗಿ, ಪೆಟ್ರೋಲ್&zwnj;-ಡೀಸೆಲ್&zwnj; ಬಳಕೆ ಕಡಿಮೆ ಮಾಡಿ ಎಂಬ ಹೇಳಿಕೆ ಜೊತೆಗೆ ಅದರ ದರ ಹೆಚ್ಚಿಸಿದ್ದಾರೆ ಎಂದು ಅವರು ಟೀಕಿಸಿದರು.&lt;/p&gt;&lt;p&gt;ಮಿತವ್ಯಯದ ಬಗ್ಗೆ ದೇಶ ವಾಸಿಗಳಿಗೆ ಉಪದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಐದು ದೇಶಗಳ ವಿದೇಶ ಪ್ರವಾಸ ಕೈಗೊಂಡಿದ್ದು, ಇದಕ್ಕೆ ನೂರಾರು ಕೋಟಿ ರು. ಖರ್ಚು ಮಾಡುತ್ತಿದ್ದಾರೆ. ವಿದೇಶ ಪ್ರವಾಸ ಕೈಗೊಳ್ಳುವುದು ಅದಾನಿ ವ್ಯವಹಾರ ಸ್ಥಾಪನೆಗೆ ಹೊರತು, ದೇಶದ ಹಿತದೃಷ್ಟಿಯಿಂದ ಅಲ್ಲ. ಅದಾನಿ ಅಮೇರಿಕಾದ ಜೊತೆಗೆ ವ್ಯವಹಾರ ಸಂಬಂಧ ಹೊಂದಿರುವ ಕಾರಣಕ್ಕೆ ಮೋದಿ ಈಗ ಅಮೇರಿಕಾ ಹೇಳಿದಂತೆ ಕೇಳುತ್ತಿದ್ದಾರೆ ಎಂದು ದೂರಿದರು.&lt;/p&gt;&lt;p&gt;ಮೋದಿ ಸರ್ಕಾರದ ವಿದೇಶಾಂಗ ನೀತಿಗಳ ಪರಿಣಾಮವಾಗಿ ದೇಶ ಇಂದು ಸಂಕಷ್ಟಗಳನ್ನು ಅನುಭವಿಸುತ್ತಿದೆ. ನೆರೆಯ ದೇಶಗಳ ಜೊತೆಗೆ ಉತ್ತಮ ಸಂಬಂಧವನ್ನೇ ಹೊಂದಿಲ್ಲ. ನೀಟ್&zwnj; ಪ್ರಶ್ನೆಪತ್ರಿಕೆ ಸೋರಿಕೆಯಿಂದ ಜಗತ್ತಿನ ಮುಂದೆ ಭಾರತ ತಲೆ ತಗ್ಗಿಸುವಂತಾಗಿದೆ. ನರೇಂದ್ರ ಮೋದಿಯೆಂದರೆ ದುಬಾರಿ ಎನ್ನುವಂತೆ ತೈಲ, ಅನಿಲ ಬೆಲೆ ದಿನದಿನಕ್ಕೂ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ಒಂದಲ್ಲ ಒಂದು ರೀತಿ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ ಎಂದು ಆರೋಪಿಸಿದರು.&lt;/p&gt;&lt;p&gt;ಕಾಂಗ್ರೆಸ್ ಪಕ್ಷದ ಮುಖಂಡರಾದ ಇಂಟೆಕ್ ಅಧ್ಯಕ್ಷ ಕೆ.ಎಂ.ಮಂಜುನಾಥ, ಬಿ.ಎಚ್.ಉದಯಕುಮಾರ, ಡಿ.ಶಿವಕುಮಾರ, ಡಿ.ಕೇಶವ ನಾಯ್ಕ, ಬಿ.ಎಸ್.ಸುರೇಶ ಇತರರು ಇದ್ದರು.&lt;/p&gt;&lt;p&gt;ಅಚ್ಚೇ ದಿನ್&zwnj; ಅಂತಲೇ ಹೇಳಿಕೊಂಡೇ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಇರುವವರೆಗೂ ದೇಶಕ್ಕೆ ಅಚ್ಚೇ ದಿನ್ ಬರಲಿಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಜನರ ಒಳ್ಳೆಯದು ಮಾಡಬೇಕೆಂಬ ಕನಿಷ್ಠ ಕಾಳಜಿಯೇನಾದರೂ ನರೇಂದ್ರ ಮೋದಿ ಅವರಿಗೆ ಇದ್ದರೆ ತಕ್ಷಣವೇ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪಕಾರ ಮಾಡಲಿ.&lt;/p&gt;&lt;p&gt;- ಡಿ.ಬಸವರಾಜ, ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/pm-modi-failed-in-every-sector-should-resign-immediately-kpcc-d-basavaraj-demands-rav/articleshow-5dhpkwe"/>
        </item>
        <item>
            <title><![CDATA[₹75 ಲಕ್ಷ ವೆಚ್ಚದಲ್ಲಿ ಈದ್ಗಾ ಮೈದಾನ, ₹4 ಕೋಟಿ ವೆಚ್ಚದಲ್ಲಿ ಏರ್‌ ಕಂಡಿಷನ್ಡ್ ಶಾದಿಮಹಲ್.. ಸರ್ವೇ ಜನಃ ಸುಖಿನೋ ಭವಂತು ಎಂದ ಬಿಜೆಪಿ ಶಾಸಕ]]></title>
            <link>https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb</link>
            <guid isPermaLink="true">https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb</guid>
            <pubDate>Fri, 29 May 2026 13:05:06 +0530</pubDate>
            <description><![CDATA[ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು 75 ಲಕ್ಷ ರು. ವೆಚ್ಚದ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ʻಸರ್ವೇ ಜನಃ ಸುಖಿನೋ ಭವಂತುʼ ಧ್ಯೇಯದಡಿ ತಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವುದಾಗಿ ತಿಳಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kssa93cyy29d46k3zw87pha1,imgname-----------------------2026-05-29t125046.468-1780039847325.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳಲ್ಕೆರೆ (ಮೇ.29):&lt;/strong&gt; ಕ್ಷೇತ್ರದಲ್ಲಿ ವಿಭಿನ್ನ ಮನೋಧರ್ಮದ ಜನರು ಇರುವುದು ಸಹಜ. ನನಗೆ ಆಗದವರು ಇದ್ದಾರೆ, ವಿಶ್ವಾಸಿಕರೂ ಇದ್ದಾರೆ. ಆದರೆ ನಾನು ಯಾರನ್ನೂ ಕಡೆಗಣಿಸದೆ ʻಸರ್ವೇ ಜನಃ ಸುಖಿನೋ ಭವಂತುʼ ಎಂಬ ಧ್ಯೇಯವನ್ನಿಟ್ಟುಕೊಂಡು ಕೇತ್ರದ ಜನರ ಸೇವೆ ಮಾಡುತ್ತಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.&lt;/p&gt;&lt;p&gt;75 ಲಕ್ಷ ರು. ವೆಚ್ಚದಲ್ಲಿ ಪಟ್ಟಣದ ಹೊರ ವಲಯದಲ್ಲಿರುವ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.&lt;/p&gt;&lt;h2&gt;ಏರ್&zwnj; ಕಂಡಿಷನ್&zwnj;ವುಳ್ಳ ಶಾದಿ ಮಹಲ್ ನಿರ್ಮಾಣ&lt;/h2&gt;&lt;p&gt;ರಾಜ್ಯ ಸರ್ಕಾರದ ಅನುದಾನದಲ್ಲಿ ಶಾದಿ ಮಹಲ್&zwnj;ಗೆ ಹಣ ನೀಡಲು ಅವಕಾಶವಿಲ್ಲ. ಆದರೂ 4 ಕೋಟಿ ರು. ವೆಚ್ಚದಲ್ಲಿ ಏರ್ ಕಂಡೀಷನ್&zwnj;ವುಳ್ಳ ಶಾದಿ ಮಹಲ್ ಕಟ್ಟಿಸಲಾಗುತ್ತಿದೆ. ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮನವೊಲಿಸಿ ಶಾದಿ ಮಹಲ್&zwnj; ನಿರ್ಮಾಣಕ್ಕೆ ಅನುದಾನ ತಂದಿದ್ದೆ ಎಂದರು.&lt;/p&gt;&lt;p&gt;ಎಲ್ಲಿ ಯಾರಿಗೆ ನ್ಯಾಯ ಕೊಡಬೇಕು, ಅಲ್ಲಾನಿಗೆ ಗೊತ್ತಿದೆ!&lt;/p&gt;&lt;p&gt;ಹುಟ್ಟು-ಸಾವಿನ ನಡುವೆ ಇರುವ ಜೀವನ ಅತ್ಯಂತ ಪವಿತ್ರವಾದುದು. ಮನುಷ್ಯತ್ವವಿರುವ ಎಲ್ಲರೂ ಅವಕಾಶ ಸಿಕ್ಕಾಗ ಹತ್ತಾರು ಜನ ಮೆಚ್ಚುವ ರೀತಿ ಕೆಲಸ ಮಾಡಬೇಕು. ಅದೆ ನಿಜವಾದ ಮಾನವ ಧರ್ಮ. 32 ವರ್ಷಗಳ ಹಿಂದೆ ಭರಮಸಾಗರದಿಂದ ಪ್ರಥಮ ಬಾರಿ ಸ್ಪರ್ಧಿಸಿ ಈಗ ಐದು ಬಾರಿ ಶಾಸಕನಾಗಿದ್ದೇನೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಿದ್ದೇನೆ. ಎಲ್ಲಿ ಯಾರಿಗೆ ನ್ಯಾಯ ಕೊಡಬೇಕೆಂಬುದು ಅಲ್ಲಾನಿಗೆ ಗೊತ್ತಿದೆ. ನನಗೆ ಜಾತಿ ಗೊತ್ತಿಲ್ಲ. ಎಲ್ಲರನ್ನು ಕುಟುಂಬದವರಂತೆ ಕಾಣುತ್ತಿದ್ದೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿಯೂ ಗದ್ದಲ ಗಲಾಟೆಗೆ ಅವಕಾಶ ಕೊಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಹಗಲು ರಾತ್ರಿ ಪ್ರಾಮಾಣ ಕವಾಗಿ ಶ್ರಮಿಸುತ್ತಿದ್ದೇನೆಂದು ತಿಳಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರಾದ ಆರ್.ಎ.ಅಶೋಕ್, ಪಿ.ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ಮುಸ್ಲಿಂ ಮುಖಂಡರಾದ ಮುತ್ತುಲಿ ಸಾಬ್, ಅಲಿಂಸಾಬ್, ಸೈಯದ್&zwnj;ಸಾಬ್, ಭಕ್ಷಿಸಾಬ್, ಜಾಕಿರ್ ಇನ್ನಿತರರು ಹಾಜರಿದ್ದರು&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb"/>
        </item>
        <item>
            <title><![CDATA['ಇದು ಬೊಂಬೆಯಾಟವಯ್ಯ..' ನಿಜವಾಯ್ತು ಬೊಂಬೆ ಭವಿಷ್ಯ! ಸಿಎಂ ಕುರ್ಚಿ ಬದಲಾವಣೆಗೆ ಮುಂಚೆಯೇ ನುಡಿ!]]></title>
            <link>https://kannada.asianetnews.com/gallery/state/clay-doll-s-prediction-comes-true-karnataka-cm-change-buzz-linked-to-dharwad-village-ritual-rav-5t6c3nq</link>
            <guid isPermaLink="true">https://kannada.asianetnews.com/gallery/state/clay-doll-s-prediction-comes-true-karnataka-cm-change-buzz-linked-to-dharwad-village-ritual-rav-5t6c3nq</guid>
            <pubDate>Fri, 29 May 2026 12:18:45 +0530</pubDate>
            <description><![CDATA[&lt;p&gt;ಧಾರವಾಡದ ಹನುಮನಕೊಪ್ಪ ಗ್ರಾಮದಲ್ಲಿ ಯುಗಾದಿ ದಿನ ಮಣ್ಣಿನ ಬೊಂಬೆ ನೀಡಿದ್ದ ಭವಿಷ್ಯ ಈಗ ನಿಜವಾಗ್ತಿದೆಯಾ? ಸಿಎಂ ಬದಲಾವಣೆ ಚರ್ಚೆ ನಡುವೆ ವೈರಲ್ ಆದ ಭಯಾನಕ ಸಂಪ್ರದಾಯದ ರೋಚಕ ಕಥೆ!&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kss6yrr0x7m0zjcksa1w9c7b,imgname-----------------------2026-05-29t120144.837-1780036363008.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡದ ಹನುಮನಕೊಪ್ಪ ಗ್ರಾಮದಲ್ಲಿ ಯುಗಾದಿ ದಿನ ಮಣ್ಣಿನ ಬೊಂಬೆ ನೀಡಿದ್ದ ಭವಿಷ್ಯ ಈಗ ನಿಜವಾಗ್ತಿದೆಯಾ? ಸಿಎಂ ಬದಲಾವಣೆ ಚರ್ಚೆ ನಡುವೆ ವೈರಲ್ ಆದ ಭಯಾನಕ ಸಂಪ್ರದಾಯದ ರೋಚಕ ಕಥೆ!&lt;/p&gt;&lt;img&gt;&lt;p&gt;ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿ ಸಮೀಪದ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಅಮವಾಸ್ಯೆ ದಿನ ನಡೆಯುವ ವಿಚಿತ್ರ ಆಚರಣೆ ಇದೀಗ ಮತ್ತೆ ರಾಜ್ಯದ ಗಮನ ಸೆಳೆದಿದೆ. ಹಳ್ಳದ ಮಣ್ಣಿನಿಂದ ನಾಲ್ಕು ದಿಕ್ಕುಗಳಿಗೆ ನಾಲ್ಕು ಬೊಂಬೆಗಳನ್ನು ನಿರ್ಮಿಸಿ, ಮರುದಿನ ಬೆಳಿಗ್ಗೆ ಗ್ರಾಮಸ್ಥರು ಅವುಗಳ ಸ್ಥಿತಿಯನ್ನು ಪರಿಶೀಲಿಸುವ ಪದ್ಧತಿ ವರ್ಷಗಳಿಂದ ನಡೆದುಕೊಂಡು ಬಂದಿದೆ.ಸ&lt;/p&gt;&lt;img&gt;&lt;p&gt;ಯಾವ ದಿಕ್ಕಿನ ಬೊಂಬೆಗೆ ಪೆಟ್ಟು ಬೀಳುತ್ತದೆಯೋ, ಆ ದಿಕ್ಕಿನ ನಾಯಕನಿಗೆ ದೊಡ್ಡ ಸಂಕಷ್ಟ ಅಥವಾ ರಾಜಕೀಯ ಬದಲಾವಣೆ ಕಾದಿದೆ ಎಂಬ ನಂಬಿಕೆ ಗ್ರಾಮಸ್ಥರದ್ದು. ಈ ಬಾರಿ ಕರ್ನಾಟಕ ದಿಕ್ಕಿನ ಬೊಂಬೆಗೆ ಪೆಟ್ಟಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಸೂಚನೆ ಎಂದು ಜನರು ಚರ್ಚೆ ಆರಂಭಿಸಿದ್ದರು.&lt;/p&gt;&lt;img&gt;&lt;p&gt;ಬೊಂಬೆಗೆ ಪೆಟ್ಟಾದ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಗರಿಗೆದರಿದ್ದು, ಹನುಮನಕೊಪ್ಪದ ಬೊಂಬೆ ಭವಿಷ್ಯ ಮತ್ತೆ ವೈರಲ್ ಆಗಿದೆ. 'ಈ ಬಾರಿ ದೊಡ್ಡ ನಾಯಕನ ಸ್ಥಾನ ಕದಿಯಲಿದೆ' ಎಂದು ಗ್ರಾಮಸ್ಥರು ಹೇಳಿದ್ದ ಮಾತು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಕುರಿತ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ಬೆನ್ನಲ್ಲೇ, 'ಬೊಂಬೆ ಹೇಳಿದ್ದು ನಿಜವಾಯ್ತಾ?' ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.&lt;/p&gt;&lt;img&gt;&lt;p&gt;ಗ್ರಾಮಸ್ಥರ ಪ್ರಕಾರ, ಈ ಆಚರಣೆಯ ಹಿಂದೆ ಹಲವು ದಶಕಗಳ ವಿಚಿತ್ರ ಘಟನೆಗಳ ಸರಮಾಲೆಯಿದೆ. ಹಿಂದೆ ಉತ್ತರ ದಿಕ್ಕಿನ ಬೊಂಬೆಗೆ ಪೆಟ್ಟಾಗಿದ್ದ ವರ್ಷದಲ್ಲೇ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ನಡೆದಿತ್ತು ಎನ್ನಲಾಗುತ್ತದೆ.&lt;/p&gt;&lt;img&gt;&lt;p&gt;ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರ ಬದಲಾವಣೆಗೂ ಮುನ್ನ ಬೊಂಬೆ ಮುನ್ಸೂಚನೆ ನೀಡಿತ್ತು ಎಂಬ ನಂಬಿಕೆ ಸ್ಥಳೀಯರಲ್ಲಿ ಗಟ್ಟಿಯಾಗಿದೆ. ಹೀಗಾಗಿ ಈ ಆಚರಣೆಯನ್ನು ಕೇವಲ ಮೂಢನಂಬಿಕೆ ಎಂದು ತಳ್ಳಿ ಹಾಕದ ಜನರು, ಪ್ರತಿವರ್ಷವೂ ಭಕ್ತಿಭಾವದಿಂದ &ldquo;ಫಲ ಹಾಕುವ&rdquo; ಸಂಪ್ರದಾಯ ಮುಂದುವರಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಈ ವರ್ಷದ ಬೊಂಬೆ ಭವಿಷ್ಯ ಈಗ ರಾಜ್ಯ ರಾಜಕೀಯದ ಹೈವೋಲ್ಟೇಜ್ ಚರ್ಚೆಯಾಗಿದೆ. ಕರ್ನಾಟಕ ನಾಯಕನ ಬೊಂಬೆಗೆ ಪೆಟ್ಟು ಎಂಬ ವಿಚಾರ ಹೊರಬಿದ್ದ ಬಳಿಕ, ಮುಖ್ಯಮಂತ್ರಿ ಕುರ್ಚಿ ಕಾದಾಟಕ್ಕೂ ಇದು ಸಂಬಂಧವಿದೆಯೇ ಎಂಬ ಕುತೂಹಲ ಹೆಚ್ಚಿದೆ. ಹನುಮನಕೊಪ್ಪದ ಮಣ್ಣಿನ ಬೊಂಬೆಗಳು ಹೇಳುವ ಭವಿಷ್ಯ ಕೇವಲ ಯಾದೃಚ್ಛಿಕವೇ? ಅಥವಾ ನಿಜವಾಗಿಯೂ ರಾಜಕೀಯ ಭೂಕಂಪದ ಮುನ್ಸೂಚನೆಯೇ? ಎಂಬ ಪ್ರಶ್ನೆ ಈಗ ಜನರನ್ನು ಕಾಡತೊಡಗಿದೆ.&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/state/clay-doll-s-prediction-comes-true-karnataka-cm-change-buzz-linked-to-dharwad-village-ritual-rav-5t6c3nq"/>
        </item>
        <item>
            <title><![CDATA[ಸಿಎಂ ಖುರ್ಚಿ ಗುದ್ದಾಟದಲ್ಲಿ 5 ಲಕ್ಷ ಮಕ್ಕಳು ಅತಂತ್ರ: ಪಾಲಿಸದ ಹೈಕೋರ್ಟ್​ ಆದೇಶ- ಪಾಲಕರ ಕಣ್ಣೀರು]]></title>
            <link>https://kannada.asianetnews.com/gallery/karnataka-districts/high-court-order-about-fixing-school-children-age-not-yet-implemented-suc-c5khgse</link>
            <guid isPermaLink="true">https://kannada.asianetnews.com/gallery/karnataka-districts/high-court-order-about-fixing-school-children-age-not-yet-implemented-suc-c5khgse</guid>
            <pubDate>Thu, 28 May 2026 18:19:25 +0530</pubDate>
            <description><![CDATA[&lt;p&gt;1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಕುರಿತು ಹೈಕೋರ್ಟ್​ ನಿರ್ದೇಶನ ನೀಡಿ ವಾರ ಕಳೆದರೂ ಸರ್ಕಾರ ಆದೇಶ ಹೊರಡಿಸಿಲ್ಲ. ಇದರಿಂದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಮುಗಿಸಿರುವ 5 ಲಕ್ಷಕ್ಕೂ ಅಧಿಕ ಮಕ್ಕಳ ಭವಿಷ್ಯ ಅತಂತ್ರವಾಗಿದೆ. ಈ ಆದೇಶದಿಂದ ಮಕ್ಕಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗುವ ಭೀತಿ ಎದುರಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksq9z1hja0t6033yynyyz4dr,imgname-school-admission-1779972408882.jpg" type="image/jpeg" height="390" width="690"/>
            <content:encoded><![CDATA[&lt;p&gt;1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಕುರಿತು ಹೈಕೋರ್ಟ್​ ನಿರ್ದೇಶನ ನೀಡಿ ವಾರ ಕಳೆದರೂ ಸರ್ಕಾರ ಆದೇಶ ಹೊರಡಿಸಿಲ್ಲ. ಇದರಿಂದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಮುಗಿಸಿರುವ 5 ಲಕ್ಷಕ್ಕೂ ಅಧಿಕ ಮಕ್ಕಳ ಭವಿಷ್ಯ ಅತಂತ್ರವಾಗಿದೆ. ಈ ಆದೇಶದಿಂದ ಮಕ್ಕಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗುವ ಭೀತಿ ಎದುರಾಗಿದೆ.&lt;/p&gt;&lt;img&gt;&lt;p&gt;ಇತ್ತ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯದ ರಾಜಕೀಯ ವಲಯದಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಆಗಿದೆ. ಇನ್ನು ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಹೈಕಮಾಂಡ್​ ಆದೇಶ ಹೊರಡಿಸಬೇಕು ಎಂದು ಹೇಳಲಾಗುತ್ತಿದೆ.&lt;/p&gt;&lt;img&gt;&lt;p&gt;ಆದರೆ ಇವೆಲ್ಲವುಗಳ ನಡುವೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ ಐದು ಲಕ್ಷಕ್ಕೂ ಅಧಿಕ ಮಕ್ಕಳ ಪಾಲಕರು. ಇದಕ್ಕೆ ಕಾರಣ, ಹೈಕೋರ್ಟ್​ ಆದೇಶವನ್ನು ಸರ್ಕಾರ ಇನ್ನೂ ಪಾಲನೆ ಮಾಡಿಲ್ಲ. ಅದು 1ನೇ ಕ್ಲಾಸ್​ಗೆ ಪ್ರವೇಶ ಪಡೆಯುವಾಗ ಇರುವ ವಯೋಮಿತಿಗೆ ಸಂಬಂಧಿಸಿದ ಆದೇಶ.ಆದರೆ ಇವೆಲ್ಲವುಗಳ ನಡುವೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ ಐದು ಲಕ್ಷಕ್ಕೂ ಅಧಿಕ ಮಕ್ಕಳ ಪಾಲಕರು. ಇದಕ್ಕೆ ಕಾರಣ, ಹೈಕೋರ್ಟ್​ ಆದೇಶವನ್ನು ಸರ್ಕಾರ ಇನ್ನೂ ಪಾಲನೆ ಮಾಡಿಲ್ಲ. ಅದು 1ನೇ ಕ್ಲಾಸ್​ಗೆ ಪ್ರವೇಶ ಪಡೆಯುವಾಗ ಇರುವ ವಯೋಮಿತಿಗೆ ಸಂಬಂಧಿಸಿದ ಆದೇಶ.&lt;/p&gt;&lt;img&gt;&lt;p&gt;ಶಿಕ್ಷಣ ಇಲಾಖೆಯು ಮಾರ್ಚ್ 28 ರಂದು ಹೊರಡಿಸಿದ್ದ ಆದೇಶದ ಪ್ರಕಾರ, 1ನೇ ತರಗತಿ ದಾಖಲಾತಿಗೆ ಕನಿಷ್ಠ ವಯಸ್ಸನ್ನು ಕಡ್ಡಾಯಗೊಳಿಸಲಾಗಿತ್ತು. ಬಳಿಕ ಅದನ್ನು 5 ವರ್ಷ 10 ತಿಂಗಳಿಗೆ ಬದಲಾಯಿಸಲಾಯಿತು. ಆದರೆ, ಈ ಆದೇಶದಿಂದಾಗಿ 2025-26ನೇ ಸಾಲಿನಲ್ಲಿ ಈಗಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು (LKG/UKG) ಯಶಸ್ವಿಯಾಗಿ ಪೂರೈಸಿರುವ ಸುಮಾರು 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ದೊಡ್ಡ ಸಮಸ್ಯೆಯಾಗಿದೆ.&lt;/p&gt;&lt;img&gt;&lt;p&gt;ಇದನ್ನು ಪ್ರಶ್ನಿಸಿ ಹಲವಾರು ಪಾಲಕರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಐದು ಲಕ್ಷಕ್ಕೂ ಅಧಿಕ ಮಕ್ಕಳು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ ಮುಂದಿನ ತರಗತಿಗೆ ಹೋಗಲು ಸಿದ್ಧರಾಗಿದ್ದಾರೆ. ಪ್ರಸ್ತುತ 5 ವರ್ಷ 5 ತಿಂಗಳು ಪೂರೈಸಿರುವ ಮಕ್ಕಳಿಗೂ ಒಂದನೇ ತರಗತಿ ದಾಖಲಾತಿಗೆ ಅವಕಾಶ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ಮಕ್ಕಳ ಒಂದು ಅಮೂಲ್ಯ ವರ್ಷ ವ್ಯರ್ಥವಾಗುತ್ತದೆ ಎಂದು ಅವರ ಕೋರ್ಟ್​ಗೆ ಮನವಿ ಮಾಡಿಕೊಂಡಿದ್ದರು.&lt;/p&gt;&lt;img&gt;&lt;p&gt;ಇದರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್​, ವಯೋಮಿತಿ ಸಡಿಲಿಕೆ (Age Relaxation) ಮಾಡುವ ವಿಚಾರವನ್ನು ಕೇವಲ ಒಂದು ವಾರದೊಳಗೆ ಮರುಪರಿಶೀಲಿಸಿ, ಸೂಕ್ತ ಆದೇಶ ಹೊರಡಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ನಿರ್ದೇಶಿಸಿತ್ತು. ಒಂದು ವಾರ ಕಳೆದರೂ ಸರ್ಕಾರದಿಂದ ಯಾವುದೇ ಆದೇಶ ಹೊರಡದೇ ಇರುವುದು ಪಾಲಕರಿಗೆ ಆತಂಕ ತಂದಿದೆ.&lt;/p&gt;&lt;img&gt;&lt;p&gt;ಜಾಲತಾಣಗಳಲ್ಲಿ ಪಾಲಕರು ನೋವು ಹೊರಹಾಕುತ್ತಿದ್ದಾರೆ. ಇನ್ನು ಎರಡೇ ದಿನ ಬಾಕಿ ಇದೆ. ದಯವಿಟ್ಟು ಈ ಬಗ್ಗೆ ಗಮನ ಹರಿಸಿ. ನಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿ ಇದೆ ಎಂದು ನೋವಿನಿಂದ ಹೇಳುತ್ತಿದ್ದಾರೆ..&lt;/p&gt;]]></content:encoded>
            <category>politics</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/karnataka-districts/high-court-order-about-fixing-school-children-age-not-yet-implemented-suc-c5khgse"/>
        </item>
        <item>
            <title><![CDATA[MP Kakoli Ghosh Dastidar: TMC ಸೋಲಿನ ಬೆನ್ನಲ್ಲೇ ಭಾರೀ ಸ್ಫೋಟ; ತಮ್ಮದೇ ಪಕ್ಷದ ಸಂಸದನಿಂದ ನಿಂದನೆ ಎಂಪಿ ಕಕೋಲಿ ಘೋಷ್ ದೂರು]]></title>
            <link>https://kannada.asianetnews.com/india-news/tmc-mp-kakoli-ghosh-dastidar-accuses-colleague-kalyan-banerjee-of-abuse-in-ls-complaint-rav/articleshow-ssafydr</link>
            <guid isPermaLink="true">https://kannada.asianetnews.com/india-news/tmc-mp-kakoli-ghosh-dastidar-accuses-colleague-kalyan-banerjee-of-abuse-in-ls-complaint-rav/articleshow-ssafydr</guid>
            <pubDate>Fri, 29 May 2026 10:51:18 +0530</pubDate>
            <description><![CDATA[&lt;p&gt;ತಮ್ಮದೇ ಪಕ್ಷದ ಸಂಸದ ಕಲ್ಯಾಣ್&zwnj; ಬ್ಯಾನರ್ಜಿ ತಮ್ಮನ್ನು ನಿಂದಿಸಿದ್ದಾರೆ &amp;nbsp;ಸ್ತ್ರೀದ್ವೇಷದ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದೆ ಕಾಕೋಲಿ ಘೋಷ್&zwnj; ಲೋಕಸಭಾಧ್ಯಕ್ಷ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ. ಚುನಾವಣಾ ಸೋಲಿನಿಂದ TMC ಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kss2jhsfycbg58q6msv9a5fn,imgname-----------------------2026-05-29t101759.426-1780031768367.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೋಲ್ಕತಾ (ಮೇ.29&lt;/strong&gt;) ತಮ್ಮದೇ ಪಕ್ಷದ ಸಂಸದ ಕಲ್ಯಾಣ್&zwnj; ಬ್ಯಾನರ್ಜಿ ತಮ್ಮನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದೆ ಕಾಕೋಲಿ ಘೋಷ್&zwnj; ಗುರುವಾರ ಲೋಕಸಭಾಧ್ಯಕ್ಷ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.&lt;/p&gt;&lt;h2&gt;ಕಾಕೋಲಿ ಘೋಷ್ ಪತ್ರದಲ್ಲೇನಿದೆ?&lt;/h2&gt;&lt;p&gt;ಕಲ್ಯಾಣ್&zwnj; ಸಂಸದೆಯರ ವಿರುದ್ಧ ಸ್ತ್ರೀದ್ವೇಷದ ವರ್ತನೆ ಹೊಂದಿದ್ದಾರೆ. ಇವರ ವಿರುದ್ಧ ಔಪಚಾರಿಕ ದೂರು ನೀಡಲು ಸ್ಪೀಕರ್&zwnj; ಅನುಮತಿಸಬೇಕು. ಅಂತಹ ನಡವಳಿಕೆಯನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ. ಇದೇ ರೀತಿಯ ನಡವಳಿಕೆಯನ್ನು ಇತರ ಹಲವಾರು ಮಹಿಳಾ ಸಂಸದರ ಮೇಲೂ ನಡೆಸಲಾಗಿದೆ. ಎಂದು ಅವರು ಹೇಳಿಕೊಂಡಿದ್ದಾರೆ. ಕಲ್ಯಾಣ್&zwnj; ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಕೋಲಿ ಪತ್ರದಲ್ಲಿ ಕೋರಿದ್ದಾರೆ.&lt;/p&gt;&lt;h3&gt;ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಟಿಎಂಸಿ ಆಂತರಿಕ ಭಿನ್ನಾಭಿಪ್ರಾಯ&lt;/h3&gt;&lt;p&gt;ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಹೀನಾಯ ಸೋಲಿನ ನಂತರ ಪಕ್ಷದಲ್ಲಿ ಕಾಣುತ್ತಿರುವ ದೋಷದ ಗೆರೆಗಳ ಜತೆಗೆ ಹೆಚ್ಚುತ್ತಿರುವ ಭಿನ್ನಾಭಿಪ್ರಾಯ ಮತ್ತು ಆಂತರಿಕ ಅಸಮಾಧಾನದ ಬಹಿರಂಗಗೊಳ್ಳುವಿಕೆ ನಡುವೆ ಸಂಸದೆ ದೂರು ಬಂದಿದೆ.&lt;/p&gt;&lt;p&gt;ಹಿರಿಯ ನಾಯಕರಿಂದ ಬಹಿರಂಗ ಅಸಮಾಧಾನ, ಟೀಕೆಗಳು ಹೆಚ್ಚು ಕೇಳಿಬರುತ್ತಿವೆ. ಇದರ ಜೊತೆಗೆ ಅಧಿಕಾರ ಕಳೆದುಕೊಂಡಿರುವುದರಿಂದ ಅಸಮಾಧಾನವನ್ನು ಇನ್ನಷ್ಟು ಹೆಚ್ಚಿಸಿವೆ. ಚುನಾವಣಾ ಹಿನ್ನಡೆಯ ನಂತರ ದಸ್ತಿದಾರ್ ಅವರನ್ನು ಬದಲಿಸಿ ಬ್ಯಾನರ್ಜಿ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ, ಇದು ಈ ಉದ್ವಿಗ್ನ ವಾತಾವರಣದಲ್ಲಿನ ಪ್ರಮುಖ ಬದಲಾವಣೆಗಳಲ್ಲಿ ಒಂದಾಗಿದೆ&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/india-news/tmc-mp-kakoli-ghosh-dastidar-accuses-colleague-kalyan-banerjee-of-abuse-in-ls-complaint-rav/articleshow-ssafydr"/>
        </item>
        <item>
            <title><![CDATA[Siddaramaiah: ಸರ್ವ ಸಮುದಾಯದ ನಾಯಕ ಸಿದ್ದರಾಮಯ್ಯ - ಸಚಿವ ಈಶ್ವರ್ ಖಂಡ್ರೆ]]></title>
            <link>https://kannada.asianetnews.com/politics/siddaramaiah-the-leader-of-all-communities-says-minister-ishwar-khandre-rav/articleshow-dcrzp1t</link>
            <guid isPermaLink="true">https://kannada.asianetnews.com/politics/siddaramaiah-the-leader-of-all-communities-says-minister-ishwar-khandre-rav/articleshow-dcrzp1t</guid>
            <pubDate>Fri, 29 May 2026 09:47:13 +0530</pubDate>
            <description><![CDATA[ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಸಚಿವ ಈಶ್ವರ ಖಂಡ್ರೆ ಶ್ಲಾಘಿಸಿದ್ದಾರೆ. ಅನ್ನಭಾಗ್ಯ, ಪಂಚ ಗ್ಯಾರಂಟಿಗಳಂತಹ ಯೋಜನೆಗಳು, ಬಸವತತ್ವಕ್ಕೆ ನೀಡಿದ ಕೊಡುಗೆ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅವರ ಬದ್ಧತೆಯನ್ನು ಈ ಲೇಖನ ವಿವರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksrymmenae4z713rzc3bng39,imgname-----------------------2026-05-29t093651.596-1780027642325.jpg" type="image/jpeg" height="390" width="690"/>
            <content:encoded><![CDATA[&lt;p&gt;- &lt;strong&gt;ಈಶ್ವರ ಬಿ.ಖಂಡ್ರೆ, ಸಚಿವರು.&lt;/strong&gt;&lt;/p&gt;&lt;p&gt;ಬುದ್ಧ-ಬಸವ-ಅಂಬೇಡ್ಕರ್ ವಾದಿ ಸಿದ್ದರಾಮಯ್ಯನವರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಮೇರು ನಾಯಕರು. 2013ರಲ್ಲಿ ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದೂ ಬಸವ ಜಯಂತಿ ದಿನದಂದೇ. ರೈತರ ಸಾಲಮನ್ನಾ, ಅನ್ನಭಾಗ್ಯ, ಕ್ಷೀರಭಾಗ್ಯ... ಮೊದಲಾದ ಹಲವು ಯಶಸ್ವಿ ಯೋಜನೆಗಳ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸರ್ವಜನ ಹಿತಕ್ಕಾಗಿ ಶ್ರಮಿಸಿದ ಸಿದ್ದರಾಮಯ್ಯ ಅವರು, ನಮಗೆ ಮಾರ್ಗದರ್ಶಕರಾಗಿ ನೀಡಿದ ಸಲಹೆಗಳು ಅಮೂಲ್ಯ.&lt;/p&gt;&lt;h2&gt;17 ಬಜೆಟ್&zwnj;ಗಳನ್ನು ಮಂಡಿಸಿದ ಅಪರೂಪದ ನಾಯಕ&lt;/h2&gt;&lt;p&gt;ರಾಜ್ಯದ ಇತಿಹಾಸದಲ್ಲೇ ದಾಖಲೆಯ 17 ಬಜೆಟ್&zwnj;ಗಳನ್ನು ಮಂಡಿಸಿದ ಅಪರೂಪದ ಸಾಧನೆಯೊಂದಿಗೆ 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅತಿ ದೀರ್ಘಕಾಲ ಆಡಳಿತ ನಡೆಸಿದ ಕರುನಾಡ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯ ಜೊತೆಗೆ, ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಸೋಲನ್ನು ಅನುಭವಿಸಿದ ಬಳಿಕ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಕೀರ್ತಿಗೂ ಭಾಜನರಾದವರು.&lt;/p&gt;&lt;h3&gt;ಪಂಚ ಗ್ಯಾರಂಟಿಗಳನ್ನ ಯಶಸ್ವಿಯಾಗಿ ಜಾರಿ ಮಾಡಿದ ಕೀರ್ತಿ&lt;/h3&gt;&lt;p&gt;ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ಹಿಂದುಳಿದವರು, ನಿರ್ಗತಿಕರು, ಅಲ್ಪಸಂಖ್ಯಾತರು ಹಾಗೂ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಮತ್ತು ಪಕ್ಷ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ಬಡತನ ನಿರ್ಮೂಲನೆಯ ಜೊತೆಗೆ ರಾಜ್ಯವನ್ನು ಪ್ರಗತಿಯ ಪಥದಲ್ಲಿ ತೆಗೆದುಕೊಂಡು ಹೋದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.&lt;/p&gt;&lt;p&gt;ವಿಶ್ವಗುರು ಬಸವಣ್ಣ ಅವರನ್ನು ಕರುನಾಡ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವಂತೆ ನಾವು ನಿಯೋಗ ತೆರಳಿ ಮನವಿ ಮಾಡಿದಾಗ, ಕೂಡಲೇ ಅದಕ್ಕೆ ಸಮ್ಮತಿಸಿ ಅಧಿಕೃತ ಘೋಷಣೆ ಮಾಡಿದ ಸಿದ್ದರಾಮಯ್ಯ ಅವರು, ಬಸವಾದಿ ಶರಣರ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ಅತ್ಯಾಧುನಿಕ ಅನುಭವ ಮಂಟಪ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ 280 ಕೋಟಿ ರೂ.ಬಿಡುಗಡೆ ಮಾಡುವ ಮೂಲಕ ತಮ್ಮ ಬಸವಭಕ್ತಿ ಮೆರೆದಿದ್ದಾರೆ. ಜೊತೆಗೆ, ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5,000 ಕೋಟಿ ರೂ.ಬಜೆಟ್ ಅನುದಾನ ನೀಡಿದ ಸಿದ್ದರಾಮಯ್ಯನವರಿಗೆ ಇಡೀ ಕಲ್ಯಾಣ ಕರ್ನಾಟಕ ಋಣಿಯಾಗಿದೆ.&lt;/p&gt;&lt;p&gt;2013ಕ್ಕೆ ಮುನ್ನ ಪ್ರಬಲ ವಿರೋಧ ಪಕ್ಷದ ನಾಯಕರಾಗಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ ಅವರ ದಿಟ್ಟತನ ಎಲ್ಲರಿಗೂ ಸ್ಫೂರ್ತಿಯಾಗಿತ್ತು. ವಿಧಾನಸಭೆಯಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿದವರು ಬಹಳ ಕಡಿಮೆ. ಅವರು ಮಾಹಿತಿಯ ಗಣಿಯಾಗಿದ್ದರು. ಅವರ ನೆನಪಿನ ಶಕ್ತಿ ಅಗಾಧ. ಇದು ಪ್ರತಿಪಕ್ಷದವರನ್ನೇ ಪೇಚಿಗೆ ಸಿಲುಕಿಸುತ್ತಿತ್ತು.&lt;/p&gt;&lt;p&gt;ಸುದೀರ್ಘ ಸಮಯ ಮುಖ್ಯಮಂತ್ರಿ ಹುದ್ದೆಯಲ್ಲಿ ಪ್ರಾಮಾಣಿಕವಾಗಿ, ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಕರುನಾಡ ಜನರ ಮನ ಗೆದ್ದ ಜನಪ್ರಿಯ ನಾಯಕ, ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವೆ, ಸಾಮಾಜಿಕ ನ್ಯಾಯಕ್ಕಾಗಿ ಅವರು ನಡೆಸಿದ ಹೋರಾಟ ಹಾಗೂ ಜನಪರ ಆಡಳಿತ ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಲಿದೆ. ಸಿದ್ದರಾಮಯ್ಯ ಅವರ ಅಮೂಲ್ಯ ಸೇವೆಯನ್ನು ಕರುನಾಡು ಸದಾ ಸ್ಮರಿಸುತ್ತದೆ.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/siddaramaiah-the-leader-of-all-communities-says-minister-ishwar-khandre-rav/articleshow-dcrzp1t"/>
        </item>
        <item>
            <title><![CDATA[ರಾಮನಗರಕ್ಕೆ 5ನೇ ಬಾರಿಮುಖ್ಯಮಂತ್ರಿ ಹುದ್ದೆ ಭಾಗ್ಯ? ಮೊದಲ ಐವರು ಯಾರು?]]></title>
            <link>https://kannada.asianetnews.com/politics/will-ramanagara-district-get-its-5th-cm-rav/articleshow-1mhsmd7</link>
            <guid isPermaLink="true">https://kannada.asianetnews.com/politics/will-ramanagara-district-get-its-5th-cm-rav/articleshow-1mhsmd7</guid>
            <pubDate>Fri, 29 May 2026 08:43:31 +0530</pubDate>
            <description><![CDATA[ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದ್ದು, ಇದು ಬೆಂಗಳೂರು ದಕ್ಷಿಣ ಜಿಲ್ಲೆಗೆ ಐದನೇ ಸಿಎಂ ಕೊಡುಗೆಯಾಗಲಿದೆ. ಈ ಹಿಂದೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಜಿಲ್ಲೆಯಿಂದ ಸಿಎಂ ಆಗಿದ್ದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ksps9v1xpj32wfc58z61rk3e,imgname-siddaramaiah-and-dk-shivakumar--2--1779954936893.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.29): &lt;/strong&gt;ಕರುನಾಡಿಗೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಡುಗೆಯಾಗಿ ನೀಡಿರುವ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(KPCC President DK Shivakumar) ಮೂಲಕ ಐದನೇ ಬಾರಿಗೆ ಸಿಎಂ(5th Chief Ministers from Ramanagara) ಗಾದಿ ಒಲಿಯುತ್ತಿದೆಯೇ ಎಂಬ ಕುತೂಹಲ ಮೂಡಿದೆ.&lt;/p&gt;&lt;p&gt;ಸರಾಜ್ಯದಲ್ಲಿ ಹಲವು ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ಇತಿಶ್ರೀ ಹಾಡಲಾಗಿದೆ. ಸಿದ್ದರಾಮಯ್ಯ(Siddaramaiah)ನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ(resignation) ಸಲ್ಲಿಸಿದ್ದು, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬ ಸಂದೇಶ ನೀಡಿದ್ದಾರೆ.&lt;/p&gt;&lt;p&gt;8ನೇ ಬಾರಿ ವಿಧಾನಸಭೆ ಪ್ರವೇಶಿಸಿರುವ ಡಿ.ಕೆ.ಶಿವಕುಮಾರ್ ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದಲ್ಲಿ ಡೈನಾಮಿಕ್ ಲೀಡರ್ ಎಂದೇ ಬಿಂಬಿತಗೊಂಡವರು. ಈಗ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಿಂದ ಮುಖ್ಯಮಂತ್ರಿ ಗಾದಿ ಅಲಂಕರಿಸಿದ ಕಾಂಗ್ರೆಸ್&zwnj;ನ ಎರಡನೇ ನಾಯಕ ಎಂಬ ಪ್ರಶಂಸೆಗೆ ಪಾತ್ರರಾಗಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.&lt;/p&gt;&lt;p&gt;ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಮೂಲತಃ ರಾಮನಗರದವರು. 1952 ಮತ್ತು 1957ರ ಚುನಾವಣೆಗಳಲ್ಲಿ ರಾಮನಗರ ಕ್ಷೇತ್ರದಿಂದ ಕೆಂಗಲ್ ಆಯ್ಕೆಯಾಗಿದ್ದರು. 1952ರಲ್ಲಿ ಸಿಎಂ ಪಟ್ಟ ಅವರಿಗೆ ಒಲಿದು ಬಂದಿತ್ತು. 1983ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಜನತಾಪಕ್ಷದ ಸರ್ಕಾರದಲ್ಲಿ ರಾಮಕೃಷ್ಣ ಹೆಗಡೆಗೆ ಮುಖ್ಯಮಂತ್ರಿ ಹುದ್ದೆ ಒಲಿದಿತ್ತು. ಈಗ ಡಿಕೆಶಿಗೆ ಅವಕಾಶ ಸಿಕ್ಕರೆ ಕನಕಪುರ ಕ್ಷೇತ್ರಕ್ಕೆ 2ನೇ ಬಾರಿ ಸಿಎಂ ಹುದ್ದೆ ಲಭಿಸಿದಂತಾಗುತ್ತದೆ.&lt;/p&gt;&lt;h2&gt;ಗೌಡರ ಕುಟುಂಬಕ್ಕೆ 3 ಬಾರಿ ಅವಕಾಶ:&lt;/h2&gt;&lt;p&gt;1994ರಲ್ಲಿ ರಾಮನಗರದಿಂದಲೇ ಗೆದ್ದ ದೇವೇಗೌಡರು ಮುಖ್ಯಮಂತ್ರಿ ಹುದ್ದೆಗೇರಿ 17 ತಿಂಗಳು ಆಡಳಿತ ನಡೆಸಿದರು. ಇನ್ನು, 2004ರಲ್ಲಿ ರಾಮನಗರ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಪ್ರವೇಶಿಸಿದ ಕುಮಾರಸ್ವಾಮಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರದಲ್ಲಿ 20 ತಿಂಗಳು ಮುಖ್ಯಮಂತ್ರಿಯಾದರು.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/will-ramanagara-district-get-its-5th-cm-rav/articleshow-1mhsmd7"/>
        </item>
        <item>
            <title><![CDATA[ಕರ್ನಾಟಕ ಕಾಂಗ್ರೆಸ್‌ ಗೆಲುವಿನ ತಂತ್ರ ಹೆಣೆದ ಸುನಿಲ್‌ಗೆ ತೆಲಂಗಾಣದ ಗಾಳ! ಯಾರು  Sunil Kanugolu?]]></title>
            <link>https://kannada.asianetnews.com/india-news/revanth-reddy-appoints-sunil-kanugolu-to-stop-telangana-congress-rav/articleshow-aoo42he</link>
            <guid isPermaLink="true">https://kannada.asianetnews.com/india-news/revanth-reddy-appoints-sunil-kanugolu-to-stop-telangana-congress-rav/articleshow-aoo42he</guid>
            <pubDate>Fri, 29 May 2026 06:47:43 +0530</pubDate>
            <description><![CDATA[&lt;p&gt;ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು, ಪಕ್ಷದಲ್ಲಿನ ಗುಂಪುಗಾರಿಕೆ ಮತ್ತು ಒಗ್ಗಟ್ಟಿನ ಕೊರತೆಯನ್ನು ಸರಿಪಡಿಸಲು ಚುನಾವಣಾ ತಂತ್ರಜ್ಞ ಸುನೀಲ್ ಕನುಗೋಲು ಅವರನ್ನು ತಮ್ಮ ಸಾರ್ವಜನಿಕ ವ್ಯವಹಾರಗಳ ಸಲಹೆಗಾರರಾಗಿ ನೇಮಿಸಿಕೊಳ್ಳಲು ಯೋಜಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrmfg4ky1jhbv499j7svtnk,imgname-----------------------2026-05-29t063728.860-1780016988307.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೈದರಾಬಾದ್&zwnj;&lt;/strong&gt;: 2023ರ ಕರ್ನಾಟಕ ಮತ್ತು ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್&zwnj; ಪಕ್ಷ(Congress party)ವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚುನಾವಣಾ ತಂತ್ರಜ್ಞ ಸುನೀಲ್ ಕನುಗೋಲು(Election strategist Sunil Kanugolu) ಅವರನ್ನು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್&zwnj; ರೆಡ್ಡಿ(Telangana CM Revanth reddy) ತಮ್ಮ ಸಾರ್ವಜನಿಕ ವ್ಯವಹಾರಗಳ ಸಲಹೆಗಾರರಾಗಿ ನೇಮಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;ಗುಂಪುಗಾರಿಕೆ ಮತ್ತು ಒಗ್ಗಟ್ಟಿನ ಕೊರತೆ ಎದುರಾಗಿದೆ&lt;/h2&gt;&lt;p&gt;ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಅರ್ಧ ಅವಧಿ ತುಂಬುತ್ತಿರುವಾಗ ಪಕ್ಷದಲ್ಲಿ ಗುಂಪುಗಾರಿಕೆ ಮತ್ತು ಒಗ್ಗಟ್ಟಿನ ಕೊರತೆ ಎದುರಾಗಿದೆ. ಇದನ್ನು ಸರಿಪಡಿಸಲು ರೇವಂತ್, ಕನುಗೋಲು ಅವರನ್ನು ಸಾರ್ವಜನಿಕ ವ್ಯವಹಾರಗಳ ಸಲಹೆಗಾರ ಅಥವಾ ಇನ್ನೊಂದು ಪ್ರಮುಖ ಹುದ್ದೆಗೆ ನೇಮಿಸುವ ಯೋಜನೆಯಲ್ಲಿದ್ದಾರೆ. ನೇಮಕಾತಿ ಜೂನ್ ಮೊದಲ ವಾರ ಅಥವಾ ಕರ್ನಾಟಕ ರಾಜ್ಯಸಭಾ ಚುನಾವಣೆ ನಂತರ ಆಗುವ ಸಾಧ್ಯತೆ ಇದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Congress Anti-OBC: ಕಾಂಗ್ರೆಸ್ ಒಬಿಸಿ ವಿರೋಧಿಗಳು: ಹಿಂದುಳಿದವರ ಬಗ್ಗೆ ರಾಹುಲ್ ರಾಹುಲ್ ಗಾಂಧಿ ಕಳಕಳಿ ಕೇವಲ ನಾಟಕ: ಬಿಜೆಪಿ&lt;/p&gt;&lt;h3&gt;ತಂತ್ರಗರಿಕೆಯಲ್ಲಿ ಭಾರೀ ಜನಪ್ರಿಯರಾಗಿರುವ ಕನುಗೋಲು&lt;/h3&gt;&lt;p&gt;ರಾಜಕೀಯ ತಂತ್ರಗಾರಿಕೆಯಲ್ಲಿ ಭಾರೀ ಜನಪ್ರಿಯರಾಗಿರುವ ಕನುಗೋಲು ಕರ್ನಾಟಕ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/india-news/revanth-reddy-appoints-sunil-kanugolu-to-stop-telangana-congress-rav/articleshow-aoo42he"/>
        </item>
        <item>
            <title><![CDATA[ಸಿದ್ದರಾಮಯ್ಯ, ಡಿಕೆ ಶಿವಕುಮಾರ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ; ಮುಂದಿನ ಸಿಎಂ ಯಾರು? ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ?]]></title>
            <link>https://kannada.asianetnews.com/politics/siddaramaiah-dk-shivakumar-travel-separately-to-delhi-to-form-new-government-rav/articleshow-9idu37v</link>
            <guid isPermaLink="true">https://kannada.asianetnews.com/politics/siddaramaiah-dk-shivakumar-travel-separately-to-delhi-to-form-new-government-rav/articleshow-9idu37v</guid>
            <pubDate>Fri, 29 May 2026 05:43:38 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯನವರ ರಾಜೀನಾಮೆಯ ಬಳಿಕ, ಮುಂದಿನ ಮುಖ್ಯಮಂತ್ರಿ ಮತ್ತು ಸಂಪುಟ ರಚನೆಯ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಜೊತೆಗಿನ ಸಭೆಯ ನಂತರ ಹೊಸ ಸರ್ಕಾರದ ಪ್ರಮಾಣ ವಚನದ ದಿನಾಂಕ ನಿರ್ಧಾರವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksps9v1xgvarn0jh6tkrt3pc,imgname-siddaramaiah-and-dk-shivakumar--1--1779954936893.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.29): &lt;/strong&gt;ಸಿದ್ದರಾಮಯ್ಯ(Siddaramaiah) ಅವರ ರಾಜೀನಾಮೆಯ ನಂತರ ರಾಜ್ಯ ಕಾಂಗ್ರೆಸ್&zwnj; ಸರ್ಕಾರ(Karnataka congress government) ಎರಡನೇ ಹಂತಕ್ಕೆ ಮಗ್ಗಲು ಬದಲಿಸಿದ್ದು, ಮುಂದಿನ ಸರ್ಕಾರದ ರೂಪರೇಷೆ ಹಾಗೂ ಸಂಪುಟ ಸರ್ಕಸ್&zwnj; ಆರಂಭಿಸುವ ಸಲುವಾಗಿ ಹೈಕಮಾಂಡ್&zwnj;(Congress High command) ಜತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಯಂತ್ರಿ ಡಿ.ಕೆ. ಶಿವಕುಮಾರ್&zwnj;(DK Shivakumar) ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.&lt;/p&gt;&lt;p&gt;ದೆಹಲಿಯಲ್ಲಿ ಉಭಯ ನಾಯಕರು ವರಿಷ್ಠರನ್ನು ಭೇಟಿ ಮಾಡಲಿದ್ದು, ಈ ಭೇಟಿಯ ವೇಳೆಯೇ ಶಾಸಕಾಂಗ ಪಕ್ಷದ ಸಭೆ ಯಾವಾಗ? ಹೊಸ ಮುಖ್ಯಮಂತ್ರಿ ಪ್ರಮಾಣ ವಚನದ ದಿನ ಯಾವುದು? ಪ್ರಮಾಣ ವಚನದ ವೇಳೆಯೇ ಹೊಸ ಸಿಎಂ ಸೇರಿ ಒಟ್ಟು 9 ಮಂದಿ ಸಂಪುಟ ಸೇರ್ಪಡೆಯಾಗಲಿದ್ದಾರೆಯೇ ಅಥವಾ ಒಂದೇ ಬಾರಿಗೆ ಪರಿಪೂರ್ಣ ಸಂಪುಟ ರಚನೆಯಾಗಲಿದೆಯೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ಸ್ಪಷ್ಟತೆ ಮೂಡಲಿದೆ.&lt;/p&gt;&lt;h2&gt;ಮುಂದಿನ ಸಿಎಂ ಯಾರು?&amp;nbsp;&lt;/h2&gt;&lt;p&gt;ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಇನ್ನೂ ಅಂಗೀಕರಿಸಬೇಕಿದೆ. ಗುರುವಾರ ತಡರಾತ್ರಿಯೇ ರಾಜ್ಯಪಾಲ ಥಾವರಚಂದ್&zwnj; ಗೆಹ್ಲೋಟ್ ಇಂದೋರ್ ಪ್ರವಾಸದಿಂದ ನಗರಕ್ಕೆ ಹಿಂತಿರುಗಿದ್ದಾರೆ.&lt;/p&gt;&lt;p&gt;ಬಹುತೇಕ ಶುಕ್ರವಾರ ಅವರು ರಾಜೀನಾಮೆ ಅಂಗೀಕರಿಸುವ ಪ್ರಕ್ರಿಯೆ ಆರಂಭಿಸಲಿದ್ದಾರೆ. ಈ ಅಂಗೀಕಾರದ ವೇಳೆ ಅವರು ಮುಖ್ಯಮಂತ್ರಿಯವರನ್ನು ಕರೆಸಿಕೊಂಡು ಮಾತನಾಡ ಬಯಸಿದರೆ ಸಿದ್ದರಾಮಯ್ಯ ಅವರು ದೆಹಲಿಯಿಂದ ಆಗಮಿಸುವವರೆಗೂ ಈ ಪ್ರಕ್ರಿಯೆ ವಿಳಂಬವಾಗಬಹುದು. ಲಭ್ಯ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಶುಕ್ರವಾರವೇ ನಗರಕ್ಕೆ ಹಿಂತಿರುಗಲಿದ್ದು, ಅನಂತರ ರಾಜ್ಯಪಾಲರು ಬಯಸಿದರೆ ಮತ್ತೊಮ್ಮೆ ಅವರನ್ನು ಭೇಟಿಯಾಗಲಿದ್ದಾರೆ.&lt;/p&gt;&lt;p&gt;ಇದಾದ ನಂತರ ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಲಿದ್ದು, ಅನಂತರ ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರ ಬೀಳಬೇಕಿದೆ. ಬಹುತೇಕ ಈ ಪ್ರಕ್ರಿಯೆ ಶುಕ್ರವಾರ ಸಂಜೆ ಅಥವಾ ಶನಿವಾರದ ನಡೆಯಬಹುದು. ಹೀಗಾದಲ್ಲಿ ಶನಿವಾರ ರಾತ್ರಿ ಅಥವಾ ಭಾನುವಾರದಂದು ಕಾಂಗ್ರೆಸ್&zwnj; ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.&lt;/p&gt;&lt;p&gt;ಹೀಗಾಗಿ ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ಯಾವ ರೀತಿ ನಡೆಯುವುದು ಎಂಬುದರ ಆಧಾರದ ಮೇಲೆ ಹಾಗೂ ದೆಹಲಿಯಲ್ಲಿ ಹೈಕಮಾಂಡ್&zwnj;ನೊಂದಿಗೆ ಉಭಯ ನಾಯಕರ ಚರ್ಚೆಯ ನಂತರ ಹೊಸ ಮುಖ್ಯಮಂತ್ರಿಯವರ ಹಾಗೂ ಅವರ ಹೊಸ ಸಂಪುಟದ ಪ್ರಮಾಣ ವಚನದ ದಿನ ನಿರ್ಧಾರವಾಗಲಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಕಾಂಗ್ರೆಸ್&zwnj; ಶಾಸಕಾಂಗ ಪಕ್ಷ ಶನಿವಾರ ನಡೆದು, ಹೈಕಮಾಂಡ್&zwnj;ನ ಒಪ್ಪಿಗೆಯೂ ದೊರೆತರೇ ಭಾನುವಾರವೇ ಪ್ರಮಾಣ ವಚನ ಸಾಧ್ಯತೆಯಿದೆ. ಇದಾಗದೇ ಹೋದರೆ ಸೋಮವಾರ ಅಥವಾ ಬುಧವಾರ ಸಂಪುಟ ಪ್ರಮಾಣ ವಚನ ನಡೆಯಬಹುದು. ಹೊಸ ಮುಖ್ಯಮಂತ್ರಿ ಹಾಗೂ ಎಂಟು ಜನ ಸಂಪುಟ ಸೇರುವುದಿದ್ದರೇ ಈ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಬಹುದು.&lt;/p&gt;&lt;p&gt;ಒಂದು ವೇಳೆ ಪರಿಪೂರ್ಣ ಸಂಪುಟ ಪ್ರಮಾಣ ವಚನ ಅಂದರೆ ಎಲ್ಲ 34 ಮಂದಿಯ ಸಂಪುಟ ಪ್ರಮಾಣ ವಚನ ನಡೆಸುವ ತೀರ್ಮಾನವಾದರೆ ಆಗ ಶುಕ್ರವಾರಕ್ಕೆ ಈ ಪ್ರಕ್ರಿಯೆ ಮುಂದೂಡಿಕೆ ಕಾಣಬಹುದು ಎನ್ನಲಾಗುತ್ತಿದೆ.&lt;/p&gt;&lt;p&gt;--&lt;/p&gt;&lt;h3&gt;ಹೊಸ ಸಂಪುಟದಲ್ಲಿ ಸಿದ್ದು ಆಪ್ತರು?&lt;/h3&gt;&lt;p&gt;ತಮಗೆ ಎರಡು ಅವಧಿಗೆ ಮುಖ್ಯಮಂತ್ರಿಯಾಗಲು ಬೆನ್ನ ಹಿಂದೆ ಗಟ್ಟಿಯಾಗಿ ನಿಂತ ಕಾಂಗ್ರೆಸ್&zwnj; ವರಿಷ್ಠ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುವ ನೆಪ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಹೆಸರನ್ನು ಹೊಸ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಕಾಂಗ್ರೆಸ್&zwnj; ಹೈಕಮಾಂಡ್&zwnj;ಗೆ ಶಿಫಾರಸು ಮಾಡುವ ಸಾಧ್ಯತೆಯಿದೆ.&lt;/p&gt;&lt;p&gt;ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಆಪ್ತ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಪುತ್ರ ಮತ್ತು ಪರಿಷತ್&zwnj; ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಗುರುವಾರ ದೆಹಲಿಗೆ ತೆರಳಿರುವ ಅವರು ಶುಕ್ರವಾರ ರಾಹುಲ್&zwnj; ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.&lt;/p&gt;&lt;p&gt;ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಶುಕ್ರವಾರ ಉಪಹಾರಕ್ಕೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಹೈಕಮಾಂಡ್&zwnj; ಅಣತಿಯಂತೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ವಚನ ನೀಡಿದಂತೆ ನಡೆದುಕೊಂಡಿರುವುದನ್ನು ತಿಳಿಸಲಿದ್ದಾರೆ. ಅಲ್ಲದೆ, ತಮಗೆ ಎರಡು ಅವಧಿಗೆ ಮುಖ್ಯಮಂತ್ರಿಯಾಗಲು ಬೆನ್ನ ಹಿಂದೆ ನಿಂತ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸಲಿದ್ದಾರೆ.&lt;/p&gt;&lt;p&gt;ಜತೆಗೆ, ತಮ್ಮ ಕೆಲ ಆಪ್ತ ಸಚಿವರಿಗೆ ಮುಂದಿನ ಸಚಿವ ಸಂಪುಟದಲ್ಲೂ ಅವಕಾಶ ನೀಡುವಂತೆ ರಾಹುಲ್ ಅವರಿಗೆ ಮನವಿ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.&lt;/p&gt;&lt;h3&gt;ಸಿದ್ದು, ಡಿಕೆಶಿ ನೀಡುವ ಸಚಿವರ ಪಟ್ಟಿ ಆಧರಿಸಿ ವರಿಷ್ಠರ ನಿರ್ಧಾರ?&lt;/h3&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದು ಶುಕ್ರವಾರ ಹೈಕಮಾಂಡ್&zwnj;ನ ಹಿರಿಯ ನಾಯಕರನ್ನು ಭೇಟಿ ಮಾಡಿ ಪ್ರಮಾಣ ವಚನ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;ಡಿ.ಕೆ. ಶಿವಕುಮಾರ್&zwnj; ಅವರು ತಮ್ಮ ಸಂಪುಟಕ್ಕೆ ತಾವು ಸೇರ್ಪಡೆ ಮಾಡಿಕೊಳ್ಳಬಯಸುವ ಸದಸ್ಯರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದು, ಇದಕ್ಕೆ ಹೈಕಮಾಂಡ್&zwnj;ನ ಅವಗಾಹನೆಗೆ ನೀಡಲಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಸಂಪುಟದಲ್ಲಿ ತಮ್ಮ ಆಪ್ತರ ಸೇರ್ಪಡೆಗೂ ಕೆಲ ಹೆಸರನ್ನು ಸೂಚಿಸಲಿದ್ದಾರೆ. ಅದೇ ರೀತಿ ಶಿವಕುಮಾರ್ ಅವರು ತಮ್ಮ ಪಟ್ಟಿಯನ್ನು ಹೈಕಮಾಂಡ್&zwnj;ಗೆ ನೀಡಲಿದ್ದಾರೆ. ಈ ಎರಡೂ ಪಟ್ಟಿಯನ್ನು ಪರಿಶೀಲಿಸಿ ಹೈಕಮಾಂಡ್ ಸಂಪುಟ ವಿಚಾರದಲ್ಲಿ ತನ್ನ ಅಂತಿಮ ತೀರ್ಮಾನ ನೀಡಲಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/siddaramaiah-dk-shivakumar-travel-separately-to-delhi-to-form-new-government-rav/articleshow-9idu37v"/>
        </item>
        <item>
            <title><![CDATA[Congress Anti-OBC: ಕಾಂಗ್ರೆಸ್ ಒಬಿಸಿ ವಿರೋಧಿಗಳು: ಹಿಂದುಳಿದವರ ಬಗ್ಗೆ ರಾಹುಲ್ ರಾಹುಲ್ ಗಾಂಧಿ ಕಳಕಳಿ ಕೇವಲ ನಾಟಕ: ಬಿಜೆಪಿ]]></title>
            <link>https://kannada.asianetnews.com/india-news/congress-anti-obc-rahul-gandhi-s-concern-for-backward-classes-is-just-drama-bjp-rav/articleshow-m7ycfgc</link>
            <guid isPermaLink="true">https://kannada.asianetnews.com/india-news/congress-anti-obc-rahul-gandhi-s-concern-for-backward-classes-is-just-drama-bjp-rav/articleshow-m7ycfgc</guid>
            <pubDate>Fri, 29 May 2026 05:16:02 +0530</pubDate>
            <description><![CDATA[&lt;p&gt;ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಒಬಿಸಿ ಹಕ್ಕುಗಳ ಬಗೆಗಿನ ನಿಲುವು ಕಪಟತನದಿಂದ ಕೂಡಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವ ಮೂಲಕ, ಕಾಂಗ್ರೆಸ್ ತನ್ನ ಒಬಿಸಿ ವಿರೋಧಿ ನೀತಿ ತೋರಿಸಿದೆ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrf8sfanaggd3920e8ytgmb,imgname-----------------------2026-05-29t050759.351-1780011525610.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಹಿಮಾಚಲ, ಕೇರಳದಂತೆ ಈಗ ಕರ್ನಾಟಕದಲ್ಲಿ&lt;/li&gt; &lt;li&gt;ಒಬಿಸಿ ನಾಯಕರ ವಿಭಜಿಸಲು ಯತ್ನ: ಶೆಹಜಾದ್&zwnj;&lt;/li&gt;&lt;/ul&gt;&lt;p&gt;&lt;strong&gt;ನವದೆಹಲಿ (ಮೇ.29):&lt;/strong&gt; ಒಬಿಸಿ (Other Backward Classes) ಸಮುದಾಯದ ಹಕ್ಕುಗಳ ಬಗ್ಗೆ ಸದಾ ಮಾತನಾಡುವ ಕಾಂಗ್ರೆಸ್&zwnj; ನಾಯಕ ರಾಹುಲ್&zwnj; ಗಾಂಧಿ(Rahul Gandhi) ಕಪಟತನ, ಕರ್ನಾಟಕ ಕಾಂಗ್ರೆಸ್&zwnj;(Karnataka Congress) ವಿಷಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ(BJP) ಕಿಡಿಕಾರಿದೆ.&lt;/p&gt;&lt;p&gt;ಕರ್ನಾಟಕ ಕಂಗ್ರೆಸ್&zwnj; ಕ್ಷಿಪ್ರ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್&zwnj; ಪೂನಾವಾಲ(BJP National Spokesperson Shehzad Poonawalla), &lsquo;ರಾಹುಲ್&zwnj; ಗಾಂಧಿಯವರು ಹಕ್ಕುಗಳು ಜನಸಂಖ್ಯೆಗೆ ಅನುಗುಣವಾಗಿ ಇರಬೇಕು ಎನ್ನುತ್ತಾರೆ. ಜಾತಿ ಸಮಸ್ಯೆಗಳ ಬಗ್ಗೆ ಪದೇ ಪದೇ ಮಾತನಾಡುತ್ತಾರೆ. ತತ್ವಕ್ಕೂ ನಡೆಗೂ ಸಂಬಂಧವಿಲ್ಲ. ಅವರು ಕಪಟಿ. ಹೇಳುವುದು ಒಂದು ಮಾಡುವುದು ಇನ್ನೊಂದು. ಈಗ ಸಿದ್ದರಾಮಯ್ಯರನ್ನು ಬದಲಿಸಿ ಡಿ.ಕೆ.ಶಿವಕುಮಾರ್&zwnj;ಗೆ ಅಧಿಕಾರ ಕೊಟ್ಟಿದ್ದಾರೆ&rsquo; ಎಂದರು.&lt;/p&gt;&lt;p&gt;ಜತೆಗೆ, ಕಾಂಗ್ರೆಸ್&zwnj; ಒಬಿಸಿ ನಾಯಕರಿಗೆ ಪ್ರಾಶಸ್ತ್ಯ ನೀಡುತ್ತಿಲ್ಲ ಎಂದ ಅವರು, &lsquo;ಒಬಿಸಿ ಸಮುದಾಯದವರಾಗಿದ್ದು ಅಹಿಂದ ನಾಯಕ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ತೆಗೆದು ಹಾಕಲಾಗಿದೆ. ಈ ಮೂಲಕ ಕಾಂಗ್ರೆಸ್ ಆಡಳಿತದ ಯಾವುದೇ ರಾಜ್ಯಗಳಲ್ಲಿ ಒಬಿಸಿ ಮುಖ್ಯಮಂತ್ರಿಗಳಿಲ್ಲ. ಕೇರಳದಲ್ಲಿ ಸತೀಶನ್&zwnj;, ಹಿಮಾಚಲ ಪ್ರದೇಶದಲ್ಲಿ ಸುಖು, ತೆಲಂಗಾಣದಲ್ಲಿ ರೇವಂತ್&zwnj; ರೆಡ್ಡಿಗೆ ಮಾಡಿದಂತೆ ಈಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಗೂ ಅದೇ ಕಥೆ . ಹಾಗಾದರೆ ಪಕ್ಷದಲ್ಲಿ ಹಿಂದುಳಿದ ಪ್ರಾತಿನಿಧ್ಯ ಎಲ್ಲಿದೆ? ಅವರು ಒಬಿಸಿ ನಾಯಕರನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಹೊರತೂ ಕೊಟ್ಟ ಮಾತಿನಂತೆ ಎಂದಿಗೂ ನಡೆದುಕೊಳ್ಳುವುದಿಲ್ಲ&rsquo; ಎಂದು ಟೀಕಿಸಿದರು.&lt;/p&gt;&lt;h2&gt;ಕಾಂಗ್ರೆಸ್ ಒಬಿಸಿ ವಿರೋಧಿಗಳು: ಶೆಹಜಾದ್&zwnj;&lt;/h2&gt;&lt;p&gt;&lsquo;ಕಾಂಗ್ರೆಸ್&zwnj; ಅಂಬೇಡ್ಕರ್ ಅವರ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ. 370 ನೇ ವಿಧಿ, ಮುಸ್ಲಿಂ ಮೀಸಲಾತಿ ಪ್ರತಿಪಾದಿಸುತ್ತಿದ್ದಾರೆ. ಆದರೆ ಅವರು ವಾಸ್ತವವಾಗಿ ಒಬಿಸಿ ವಿರೋಧಿ ಮತ್ತು ಹಿಂದುಳಿದ ವರ್ಗಗಳ ವಿರೋಧಿಗಳು.&lt;/p&gt;&lt;p&gt;ಆರ್&zwnj;ಜಿಎಫ್ ಟ್ರಸ್ಟ್ ಅಥವಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯೊಳಗೆ ಒಬಿಸಿಗಳಿಗೆ ಸ್ಥಾನವಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಮೂರನೇ ಅವಧಿಗೆ ಒಬಿಸಿ ನಾಯಕನನ್ನು ಪ್ರಧಾನಿಯನ್ನಾಗಿ ಮಾಡಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸುತ್ತದೆ&rsquo; ಎಂದು ಅವರು ಹೇಳಿದರು.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/india-news/congress-anti-obc-rahul-gandhi-s-concern-for-backward-classes-is-just-drama-bjp-rav/articleshow-m7ycfgc"/>
        </item>
        <item>
            <title><![CDATA[Siddaramaiah resignation: 'ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ರು': ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!]]></title>
            <link>https://kannada.asianetnews.com/politics/not-just-me-my-family-too-became-victims-of-political-vendetta-siddaramaiah-opens-up-after-resignation-rav/articleshow-3e9luks</link>
            <guid isPermaLink="true">https://kannada.asianetnews.com/politics/not-just-me-my-family-too-became-victims-of-political-vendetta-siddaramaiah-opens-up-after-resignation-rav/articleshow-3e9luks</guid>
            <pubDate>Fri, 29 May 2026 04:43:47 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತ್ತು ತಮ್ಮ ಕುಟುಂಬದ ಮೇಲೆ ನಡೆದ ರಾಜಕೀಯ ದ್ವೇಷದ ಬಗ್ಗೆ ನೋವು ತೋಡಿಕೊಂಡಿದ್ದಾರೆ. ರಾಜಕೀಯದಿಂದ ದೂರವಿದ್ದ ತಮ್ಮ ಪತ್ನಿಯ ಮೇಲೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದರಿಂದ, ಒಂದು ಹಂತದಲ್ಲಿ ರಾಜಕೀಯ ಸನ್ಯಾಸದ ಬಗ್ಗೆ ಯೋಚಿಸಿದ್ದಾಗಿ ಅವರು ಹೇಳಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksrdhhcd44rcnhcvth69ve14,imgname-----------------------2026-05-29t043748.145-1780009715085.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.29)&lt;/strong&gt;: &lsquo;ನಾನು ಮಾತ್ರವಲ್ಲ ನನ್ನ ಕುಟುಂಬವೂ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ರಾಜಕಾರಣದಿಂದ ಬಹುದೂರ ಇದ್ದ ನನ್ನ ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ&rsquo; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋವು ತೋಡಿಕೊಂಡಿದ್ದಾರೆ.&lt;/p&gt;&lt;h2&gt;ರಾಜಕೀಯ ಸನ್ಯಾಸ ಸ್ವೀಕರಿಸಬೇಕು ಎನಿಸಿತ್ತು!&lt;/h2&gt;&lt;p&gt;ಅಲ್ಲದೆ, ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡಬೇಕು ಎನ್ನುವಷ್ಟು ಮನಸ್ಸು ನೊಂದಿತ್ತು ಎಂದಿದ್ದಾರೆ.&lt;/p&gt;&lt;p&gt;ಮುಖ್ಯಮಂತ್ರಿ ಅವರ ಕಚೇರಿಯಿಂದ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರ ವಿದಾಯ ಭಾಷಣ ಕುರಿತ ಪತ್ರಿಕಾ ಹೇಳಿಕೆಯಲ್ಲಿ, &lsquo;ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ನನ್ನ ರಾಜಕೀಯ ವಿರೋಧಿಗಳು ರಾಜಕಾರಣದಿಂದ ಬಹುದೂರ ಇದ್ದು ಕುಟುಂಬದ ಪಾಲನೆ ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು&rsquo; ಎಂದು ತಿಳಿಸಲಾಗಿದೆ.&lt;/p&gt;&lt;h3&gt;ಶತ್ರುಗಳ ದಾಳಿಗೆ ಪಲಾಯನವಾದಿಯಾಗಬೇಡ&lt;/h3&gt;&lt;p&gt;ಒಂದು ಹಂತದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಎನಿಸಿತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ. ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ, ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/not-just-me-my-family-too-became-victims-of-political-vendetta-siddaramaiah-opens-up-after-resignation-rav/articleshow-3e9luks"/>
        </item>
        <item>
            <title><![CDATA[BC Patil on Siddaramaiah: ಸಿದ್ದರಾಮಯ್ಯ ರಾಜೀನಾಮೆ ನನಗೆ ನೋವು ಕೊಡ್ತಿದೆ..; ಬಿಸಿ ಪಾಟೀಲ್ ಭಾವುಕ!]]></title>
            <link>https://kannada.asianetnews.com/politics/siddaramaiah-s-resignation-as-cm-hurts-me-says-bc-patil-rav/articleshow-g5a1itx</link>
            <guid isPermaLink="true">https://kannada.asianetnews.com/politics/siddaramaiah-s-resignation-as-cm-hurts-me-says-bc-patil-rav/articleshow-g5a1itx</guid>
            <pubDate>Fri, 29 May 2026 04:14:22 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ವಿದಾಯ ತನಗೆ ನೋವು ನೀಡಿದೆ ಎಂದು ಬಿಜೆಪಿ ನಾಯಕ ಬಿ.ಸಿ.ಪಾಟೀಲ್&zwnj; ಹೇಳಿದ್ದಾರೆ. ತಮ್ಮ ಹಿಂದಿನ ಒಡನಾಟ, ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, , ನೇರ ನುಡಿಯ ಹೃದಯವಂತ ರಾಜಕಾರಣಿ ಎಂದು ಬಣ್ಣಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrbtp5enkxyrgw3k8pk8ca3,imgname-----------------------2026-05-29t040402.279-1780007917742.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಮೇ.29): &lt;/strong&gt;ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪಟ್ಟಕ್ಕೆ ರಾಜೀನಾಮೆ ಮತ್ತು ವಿದಾಯ ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವು ಕೊಡುತ್ತಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಸಿ.ಪಾಟೀಲ್&zwnj; ಹೇಳಿದ್ದಾರೆ.&amp;nbsp;&lt;/p&gt;&lt;p&gt;ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು. ಆದರೆ, ಅವರೊಂದಿಗೆ ಒಡನಾಟ ಮರೆಯುವಂತದ್ದಲ್ಲ. ನಾನು ಅವರನ್ನು ಪೊಲೀಸ್ ಅಧಿಕಾರಿಯಾಗಿ ನೋಡಿದ್ದೇನೆ. 2004ರಿಂದ ಅವರೊಂದಿಗೆ ಶಾಸಕನಾಗಿದ್ದೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದಾಗ ನಾನು ವಿರೋಧಿಸಿದ್ದೂ ಇದೆ. ಆದರೆ ನಾನು 2008ರಲ್ಲಿ ಕಾಂಗ್ರೆಸಿಗೆ ಬಂದ ಮೇಲೆ ಅದಾವುದನ್ನೂ ಅವರು ಮನಸ್ಸಿನಲ್ಲಿ ಇರಿಕೊಳ್ಳದೆ ನನ್ನ ಎಲ್ಲ ಚುನಾವಣೆಗಳಿಗೂ ಸಹಾಯ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಸ್ಮರಿಸಿದ್ದಾರೆ.&lt;/p&gt;&lt;h2&gt;ನನ್ನನ್ನು &lsquo;ಬಿಸಿ&rsquo; ಎಂದೇ ಕರೆಯುತ್ತಿದ್ದ ಸಿದ್ದರಾಮಯ್ಯನವರು&lt;/h2&gt;&lt;p&gt;ಮುಂದುವರೆದು, ನನ್ನನ್ನು ಅತ್ಯಂತ ಹತ್ತಿರದಿಂದ &lsquo;ಬಿ.ಸಿ&rsquo; ಎಂದೇ ಕರೆಯುತ್ತಿದ್ದರು. 2013ರಲ್ಲಿ ನಾನು ಸೋತಾಗ ನನ್ನ ಕ್ಷೇತ್ರಕ್ಕೆ 4 ನೀರಾವರಿ ಯೋಜನೆಗಳನ್ನು ನೀಡಿದ್ದಾರೆ. ನಾನು ಎಂದಿಗೂ ಅದನ್ನು ಮರೆತಿಲ್ಲ. ನನ್ನ ಕ್ಷೇತ್ರದ ಜನ ಕೂಡ ಎಂದೂ ಅದನ್ನು ಮರೆಯುವುದಿಲ್ಲ. ಸಿದ್ದರಾಮಯ್ಯ ಅವರ ಗತ್ತು ಮತ್ತು ಗಾಂಭೀರ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತಂದು ಕೊಟ್ಟಿತ್ತು. ಅಧಿಕಾರ ಶಾಶ್ವತವಲ್ಲ. ಅವರು ಅಧಿಕಾರ ಬಿಟ್ಟು ಇಳಿದಾಗ ನನಗೆ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.&lt;/p&gt;&lt;h3&gt;ಪ್ರೀತಿ ಹಂಚಿಕೊಳ್ಳುತ್ತಿದ್ದರು:&lt;/h3&gt;&lt;p&gt;ನನಗೆ ಅವರ ಬಗ್ಗೆ ಇದ್ದಂತಹ ಗೌರವ ಮತ್ತು ಪ್ರೀತಿ, ನನ್ನ ಮನೆಗೆ ಎಷ್ಟು ಬಾರಿ ಬಂದಿದ್ದಾರೋ ಗೊತ್ತಿಲ್ಲ. ಕರೆದಾಗಲೆಲ್ಲ ಬಂದು ಪ್ರೀತಿ ಹಂಚಿಕೊಳ್ಳುತ್ತಾ ಇದ್ದರು. ಅವರು ಮುಖ್ಯಮಂತ್ರಿಯಾದ ಮೇಲೆ 2023ರ ನಂತರ ಹೋಗಿ ಭೇಟಿಯಾಗಲಿಲ್ಲ. ಒಂದು ಬಾರಿ ದೆಹಲಿಯಲ್ಲಿ ಭೇಟಿಯಾದಾಗ ಅತ್ಯಂತ ಪ್ರೀತಿ ವಿಶ್ವಾಸದಿಂದ ಮಾತನಾಡಿ ನನಗೆ ಬೆನ್ನು ತಟ್ಟಿದರು ಎಂದು ತಮ್ಮ ಒಡನಾಟವನ್ನು ಹಂಚಿಕೊಂಡಿದ್ದಾರೆ.&lt;/p&gt;&lt;p&gt;ಸಿದ್ದರಾಮಯ್ಯ ಒಬ್ಬ ಇತಿಹಾಸಕಾರ, ಅರ್ಥಶಾಸ್ತ್ರಜ್ಞ, ಚಾಣಾಕ್ಷ, ಹೃದಯವಂತ, ನೇರ ನಿಷ್ಠುರ ನುಡಿಗೆ ಹೆಸರಾದವರು. ಇಂದು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಭಗವಂತ ಅವರಿಗೆ ಆಯುರಾರೋಗ್ಯ ಭಾಗ್ಯವನ್ನು ಕೊಡಲಿ. ಅವರು ಆರೋಗ್ಯದ ಬಗ್ಗೆ ಹೆಚ್ಚು ಗಮನವನ್ನು ನೀಡಲಿ. ಯುವಕರಿಗೆ ಮಾರ್ಗದರ್ಶನ ಮಾಡಲಿ ಎಂದು ಬಿ.ಸಿ.ಪಾಟೀಲ್&zwnj; ಆಶಿಸಿದ್ದಾರೆ.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/siddaramaiah-s-resignation-as-cm-hurts-me-says-bc-patil-rav/articleshow-g5a1itx"/>
        </item>
        <item>
            <title><![CDATA['ಹೆಜ್ಜೆ ಹೆಜ್ಜೆಗೂ ನಾನು...' ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಬೆನ್ನಲ್ಲೇ ಭಾವುಕ ಫೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ..!]]></title>
            <link>https://kannada.asianetnews.com/state/siddaramaiah-steps-down-as-karnataka-chief-minister-shares-emotional-farewell-message-kvn/articleshow-uo5s2z1</link>
            <guid isPermaLink="true">https://kannada.asianetnews.com/state/siddaramaiah-steps-down-as-karnataka-chief-minister-shares-emotional-farewell-message-kvn/articleshow-uo5s2z1</guid>
            <pubDate>Thu, 28 May 2026 21:07:45 +0530</pubDate>
            <description><![CDATA[ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ, ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ಭಾವನಾತ್ಮಕ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ಏಳಿಗೆಗೆ ಕಾರಣರಾದ ಜನತೆ, ಪಕ್ಷ ಹಾಗೂ ಗುರುಗಳನ್ನು ಸ್ಮರಿಸಿರುವ ಅವರು, ತಾವು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksppfssv57gdj4qrdj3q7bq7,imgname-mixcollage-28-may-2026-12-34-pm-5253-1779951986491.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಕಂಡ ಅತ್ಯಂತ ದಿಟ್ಟ, ಜನಪರ ಹಾಗೂ ದೀರ್ಘಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆ ಪಾತ್ರರಾಗಿರುವ ಸಿದ್ದರಾಮಯ್ಯ ಅವರ ವರ್ಣರಂಜಿತ ಮುಖ್ಯಮಂತ್ರಿ ಜೀವನಕ್ಕೆ ತೆರೆ ಬಿದ್ದಿದೆ. ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಸಕ್ರಿಯ ರಾಜ್ಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಫೇಸ್&zwnj;ಬುಕ್&zwnj;ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರ ಕಂಪ್ಲೀಟ್ ವಿವರ ಈ ಕೆಳಗಿನಂತಿದೆ.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್&lt;/strong&gt;&lt;/h2&gt;&lt;p&gt;ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ.&lt;/p&gt;&lt;p&gt;* ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ.&lt;/p&gt;&lt;p&gt;* ಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು &lsquo;&rsquo;ಅಭಿಮಾನಿ ದೇವರು&rsquo;&rsquo; ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು &lsquo;&rsquo;ಮತದಾರ ದೇವರು&quot;. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ.&lt;/p&gt;&lt;p&gt;* ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.&lt;/p&gt;&lt;p&gt;* ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.&lt;/p&gt;&lt;p&gt;* ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.&lt;/p&gt;&lt;p&gt;* ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್&zwnj; ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.&lt;/p&gt;&lt;p&gt;* ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.&lt;/p&gt;&lt;p&gt;* ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ಮರಳಿನ ಮೇಲಿನ ಅಕ್ಷರಾಭ್ಯಾಸದ ಮೂಲಕ ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್&hellip;&lt;/p&gt;&lt;p&gt;* ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ ಅವರು.&lt;/p&gt;&lt;p&gt;* ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು.&lt;/p&gt;&lt;p&gt;* ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.&lt;/p&gt;&lt;p&gt;* ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸು ವ್ಯರ್ಥಪ್ರಯತ್ನವನನ್ನು ನಾನು ಮಾಡುವುದಿಲ್ಲ., ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.&lt;/p&gt;&lt;p&gt;* ಜಾತಿ,ದುಡ್ಡು ಮತ್ತು ತೋಳ್ಭಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.&lt;/p&gt;&lt;p&gt;* ರಾಜಕೀಯ ಪಯಣದ ನನ್ನಹಾದಿಯಲ್ಲಿ ಹೆಜ್ಜೆಹೆಜ್ಜೆಗೂ ನಾನು ಪಟ್ಟಭದ್ರರ ದ್ವೇಷ ಅಸೂಯೆಗೆ ಈಡಾಗಿ&zwj;ದ್ದೇನೆ. ಹೊರಗಿನವರ ಮತ್ತು ಒಳಗಿನವರ ಮೋಸ-ವಂಚನೆ-ಪಿತೂರಿಗೆ ಒಳಗಾಗಿದ್ದೇನೆ. ಇದರಿಂದಾಗಿ ಹಲವಾರು ಬಾರಿ ಬಿದ್ದಿದ್ದೇನೆ, ಬಿದ್ದಲ್ಲಿಂದಲೇ ಎದ್ದಿದ್ದೇನೆ.&lt;/p&gt;&lt;p&gt;* ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡುವ ಎನ್ನುವಷ್ಟು ಮನಸ್ಸು ನೊಂದಿತ್ತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ, ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ದ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.&lt;/p&gt;&lt;p&gt;* ನನ್ನ ನೋವು, ದು:ಖ-ದುಮ್ಮಾನಗಳನ್ನು ಈ ಸಂದರ್ಭದಲ್ಲಿ ಪಟ್ಟಿಮಾಡಿ ನನ್ನ ಮನಸ್ಸನ್ನು ಕಹಿಮಾಡಿಕೊಳ್ಳುವುದಿಲ್ಲ.ಆದರೆ ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.&lt;/p&gt;&lt;p&gt;* ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.&lt;/p&gt;&lt;p&gt;* ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.&lt;/p&gt;&lt;p&gt;* ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.&lt;/p&gt;&lt;p&gt;* ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.&lt;/p&gt;&lt;p&gt;* ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್&zwnj;ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್&zwnj;ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.&lt;/p&gt;&lt;p&gt;- ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.&lt;/p&gt;&lt;p&gt;* ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.&lt;/p&gt;&lt;p&gt;* ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.&lt;/p&gt;&lt;p&gt;* ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.&lt;/p&gt;&lt;p&gt;ಮತ್ತೊಮ್ಮೆ ಎಲ್ಲರಿಗೂ ನನ್ನ ಧನ್ಯವಾದಗಳು&lt;/p&gt;]]></content:encoded>
            <category>politics</category>
            <dc:creator>Naveen Kodase</dc:creator>
            <atom:link href="https://kannada.asianetnews.com/state/siddaramaiah-steps-down-as-karnataka-chief-minister-shares-emotional-farewell-message-kvn/articleshow-uo5s2z1"/>
        </item>
        <item>
            <title><![CDATA[ಇದ್ದರೆಷ್ಟು, ಹೋದರೆಷ್ಟು? ಹಲ್​ಚಲ್ ಸೃಷ್ಟಿಸಿದ ಎಂ.ಬಿ.ಪಾಟೀಲ್ ​ ಟ್ವೀಟ್, ಯಾರಿಗೆ ಟಾಂಟ್​ ಕೊಟ್ರು ಸಚಿವರು?]]></title>
            <link>https://kannada.asianetnews.com/gallery/politics/minister-mb-patils-tweet-gone-viral-after-karnataka-political-issue-suc-mgh2rgh</link>
            <guid isPermaLink="true">https://kannada.asianetnews.com/gallery/politics/minister-mb-patils-tweet-gone-viral-after-karnataka-political-issue-suc-mgh2rgh</guid>
            <pubDate>Thu, 28 May 2026 17:08:58 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜಕೀಯ ಬೆಳವಣಿಗೆಯ ನಡುವೆಯೇ, ಸಚಿವ ಎಂ.ಬಿ. ಪಾಟೀಲ್ ಅವರು ಬಸವಣ್ಣನ ವಚನವನ್ನು ಟ್ವೀಟ್ ಮಾಡಿ, ರಾಜಕೀಯ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksq5ye2er7y3b3p0vcec43ct,imgname-mb-patil-tweet-1779968194638.jpg" type="image/jpeg" height="390" width="690"/>
            <content:encoded><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜಕೀಯ ಬೆಳವಣಿಗೆಯ ನಡುವೆಯೇ, ಸಚಿವ ಎಂ.ಬಿ. ಪಾಟೀಲ್ ಅವರು ಬಸವಣ್ಣನ ವಚನವನ್ನು ಟ್ವೀಟ್ ಮಾಡಿ, ರಾಜಕೀಯ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.&lt;img&gt;&lt;p&gt;ಕೊನೆಗೂ ರಾಜ್ಯ ರಾಜಕೀಯದಲ್ಲಿ ಕೆಲವು ತಿಂಗಳುಗಳಿಂದ ಉಂಟಾಗಿದ್ದ ಪ್ರಹಸನಕ್ಕೆ ತೆರೆ ಬಿದ್ದಿದೆ. ಸಿಎಂ ಖುರ್ಚಿ ಬಿಡುವುದಿಲ್ಲ, ಐದು ವರ್ಷ ಪೂರ್ಣ ಮಾಡುತ್ತೇನೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ ರಾಜೀನಾಮೆ ನೀಡಿದ್ದು ಮಾಜಿ ಸಿಎಂ ಆಗಿದ್ದಾರೆ. ಇದಕ್ಕೂ ಮುನ್ನ, ಡಿ.ಕೆ.ಶಿವಕುಮಾರ್​ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ನಿಮ್ಮ ಮಾರ್ಗದಲ್ಲಿ ನಡೆಯುತ್ತೇನೆ ಎಂದಿದ್ದಾರೆ.&lt;/p&gt;&lt;img&gt;&lt;p&gt;ಈ ಎಲ್ಲಾ ಪ್ರಕ್ರಿಯೆಯ ನಡುವೆಯೇ ಸಚಿವ ಎಂ.ಬಿ.ಪಾಟೀಲ್​ ಅವರು ಮಾಡಿದ್ದ ಕುತೂಹಲದ ಟ್ವೀಟ್​ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಇದನ್ನು ಏಕೆ ಹೇಳಿದ್ದಾರೆ, ಇದರ ಅರ್ಥವೇನು? ಡಿಕೆಶಿ ಮುಖ್ಯಮಂತ್ರಿ ಆಗುವುದು ಅವರಿಗೆ ಇಷ್ಟವಿಲ್ಲವೆ, ಅಥವಾ ಸಿದ್ದರಾಮಯ್ಯ ಅವರ ರಾಜೀನಾಮೆ ಇಷ್ಟವಿಲ್ಲವೇ ಇತ್ಯಾದಿಯಾದ ಪ್ರಶ್ನೆಗಳು ಮೂಡಿವೆ.&lt;/p&gt;&lt;img&gt;&lt;p&gt;ಅಷ್ಟಕ್ಕೂ, ಎಂ.ಬಿ.ಪಾಟೀಲ್​ ಅವರು ಟ್ವೀಟ್​ನಲ್ಲಿ ಬಸವಣ್ಣದ ವಚನವನ್ನು ಬರೆದಿದ್ದಾರೆ. ಅವರು ಬರೆದದ್ದು ಏನೆಂದರೆ, ಗಂಡನ ಮೇಲೆ ಸ್ನೇಹವಿಲ್ಲದ ಹೆಂಡತಿ, ಲಿಂಗದ ಮೇಲೆ ನಿಷ್ಠೆಯಿಲ್ಲದ ಭಕ್ತ, ಇದ್ದಡೇನೊ ಶಿವ ಶಿವಾ, ಹೋದಡೇನೊ ಕೂಡಲಸಂಗಮದೇವಯ್ಯಾ,ಊಡದ ಆವಿಂಗೆ ಉಣ್ಣದ ಕರುವ ಬಿಟ್ಟಂತೆ ಎಂದಿದ್ದಾರೆ.&lt;/p&gt;&lt;img&gt;&lt;p&gt;ಅಷ್ಟಕ್ಕೂ ವಚನದ ಅರ್ಥ, ಗಂಡನ ಮೇಲೆ ಪ್ರೀತಿ ಇಲ್ಲದ ಹೆಂಡತಿ ಮತ್ತು ಇಷ್ಟಲಿಂಗದ ಮೇಲೆ ಭಕ್ತಿ/ನಿಷ್ಠೆ ಇಲ್ಲದ ಭಕ್ತ ಇವರಿದ್ದರೆಷ್ಟು, ಹೋದರೆಷ್ಟು? ಅವರಿಂದ ಯಾವುದೇ ಪ್ರಯೋಜನವಿಲ್ಲ. ಹಾಲೂಡಿಸದ ಹಸುವಿನ ಬಳಿ ಹಾಲನ್ನು ಉಣ್ಣದ ಕರುವನ್ನು ಬಿಟ್ಟರೆ ಹೇಗೋ, ಇವರ ಸ್ಥಿತಿಯೂ ಹಾಗೆಯೇ ನಿರರ್ಥಕವಾಗಿರುತ್ತದೆ ಎನ್ನುವುದು.&lt;/p&gt;&lt;img&gt;&lt;p&gt;ಹಾಗಿದ್ದರೆ ಎಂ.ಬಿ.ಪಾಟೀಲ್​ ಅವರು ಈ ಮಾತನ್ನು ಹೇಳಲು ಕಾರಣವೇನು ಎನ್ನುವ ಬಗ್ಗೆ ಇದೀಗ ಚರ್ಚೆ ಆಗುತ್ತಿದೆ. ಡಿ.ಕೆ.ಶಿವಕುಮಾರ್​ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ ಆಸುಪಾಸಿನ ಸಮಯದಲ್ಲಿ ಈ ಟ್ವೀಟ್​ ಮಾಡಿದ್ದರು ಅವರು. ಹಾಗಿದ್ದರೆ, ಏನಿದರ ಅರ್ಥ ಎನ್ನುವ ಬಗ್ಗೆ ಬಗೆಬಗೆ ವಿಶ್ಲೇಷಣೆ ಮಾಡಲಾಗುತ್ತಿದೆ.&lt;/p&gt;&lt;img&gt;&lt;p&gt;ನಿನ್ನೆಯಷ್ಟೇ ಎಂ.ಬಿ.ಪಾಟೀಲ್​ ಅವರು ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಆ ಬಗ್ಗೆ ಚರ್ಚೆ ಆಗಲೇ ಇಲ್ಲ ಎಂದು ಪದೇ ಪದೇ ಪ್ರಶ್ನೆ ಕೇಳುತ್ತಿದ್ದ ಪತ್ರಕರ್ತರ ಮೇಲೆ ಗರಂ ಆಗಿದ್ದರು. ರಾಜ್ಯಸಭೆ, ಎಂಎಲ್​ಸಿ ಚುನಾವಣೆ ಬಗ್ಗೆ ಮಾತ್ರ ಚರ್ಚೆ ನಡೆದಿದೆ, ಸಿಎಂ ಬಗ್ಗೆ ಚರ್ಚೆನೇ ಆಗಿಲ್ಲ ಎಂದಿದ್ದರು.&lt;/p&gt;]]></content:encoded>
            <category>politics</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/politics/minister-mb-patils-tweet-gone-viral-after-karnataka-political-issue-suc-mgh2rgh"/>
        </item>
        <item>
            <title><![CDATA['ಮುಂದಿನ 8 ವರ್ಷ ಡಿಕೆಶಿಯನ್ನ ಅಲ್ಲಾಡಿಸಲು ಆಗಲ್ಲ.' ಸಿದ್ದು ರಾಜಯೋಗ ಮುಗಿದಿದೆ: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ]]></title>
            <link>https://kannada.asianetnews.com/astrology/dwarakanath-guruji-astrology-prediction-dk-shivakumar-next-cm-karnataka-san/articleshow-pwmwfz4</link>
            <guid isPermaLink="true">https://kannada.asianetnews.com/astrology/dwarakanath-guruji-astrology-prediction-dk-shivakumar-next-cm-karnataka-san/articleshow-pwmwfz4</guid>
            <pubDate>Thu, 28 May 2026 15:58:25 +0530</pubDate>
            <description><![CDATA[&lt;p&gt;ಡಿಕೆ ಶಿವಕುಮಾರ್ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ, ಡಿಕೆಶಿ ಸೋಮವಾರದೊಳಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದು, 8 ವರ್ಷಗಳ ಕಾಲ ಅವರ ಅಧಿಕಾರ ಅಬಾಧಿತವಾಗಿರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksq1vdhdbghfy0fa16f1by6m,imgname-rajguru-dwarakanath-on-dk-shivakumar-1779963901485.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28):&lt;/strong&gt; ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಡಿಕೆಶಿ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ತೆರೆ ಎಳೆದಿದ್ದಾರೆ. 'ಡಿಕೆ ಶಿವಕುಮಾರ್ ಸೋಮವಾರದ ಒಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ&quot; ಎಂದು ಭವಿಷ್ಯ ನುಡಿದಿದ್ದಾರೆ.&lt;/p&gt;&lt;p&gt;&lsquo;ಏಷ್ಯಾನೆಟ್ ಸುವರ್ಣ ನ್ಯೂಸ್&rsquo;ಗೆ ಮಾತನಾಡಿರುವ ದ್ವಾರಕನಾಥ್ ಗುರೂಜಿ, ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. 'ಅವನು (ಡಿಕೆಶಿ) ನನಗೆ ಕಳೆದ 35 ವರ್ಷಗಳಿಂದ ಪರಿಚಯ. ಹಿಂದೆ ಮಾಜಿ ಸಿಎಂ ಬಂಗಾರಪ್ಪ ಅವರ ಸಂಪುಟದಲ್ಲಿ ಅತ್ಯಂತ ಸಣ್ಣ ವಯಸ್ಸಿಗೆ ಜೈಲು ಮಂತ್ರಿಯಾಗಿದ್ದಾಗಲೇ, 'ನೀನು ಮುಂದೊಂದು ದಿನ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗ್ತೀಯಾ' ಎಂದು ಭವಿಷ್ಯ ಹೇಳಿದ್ದೆ. ಅವನು ಸದಾ ನನ್ನ ಸಂಪರ್ಕದಲ್ಲೇ ಇದ್ದಾನೆ. ಅವನು ನಮ್ಮ ಮನೆಯ ಮಗನಿದ್ದಂತೆ' ಎಂದರು.&lt;/p&gt;&lt;h2&gt;&lt;strong&gt;ಶೃಂಗೇರಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಬಂತು ಡಿಕೆಶಿ ಫೋನ್ ಕಾಲ್!&lt;/strong&gt;&lt;/h2&gt;&lt;p&gt;ಡಿಕೆಶಿಗೆ ಸಿಎಂ ಪಟ್ಟ ಸಿಗುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಶೃಂಗೇರಿಗೆ ತೆರಳಿದ್ದ ರಹಸ್ಯವನ್ನು ಗುರೂಜಿ ಬಿಚ್ಚಿಟ್ಟಿದ್ದಾರೆ.'ಅವನಿಗೆ ಸಿಎಂ ಆಗೋದು ನ್ಯಾಯವಾಗಿ ಇನ್ನೂ ಬೇಗ, ಅಂದರೆ ಹೊಸ ವರ್ಷದ ಒಳಗೇ ಆಗಬೇಕಿತ್ತು. ಆದರೆ ನಿಧಾನವಾಗುತ್ತಿತ್ತು. ಅದಕ್ಕಾಗಿಯೇ ನಾನು ಅವನ ಪರವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಹೋಗಿದ್ದೆ. ನಿಧಾನವಾದ ಕಾರಣ ಆ ದೇವರಿಗೇ ಗೊತ್ತು. ಆದರೆ, ನಾನು ಶೃಂಗೇರಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಖುದ್ದು ಡಿ.ಕೆ. ಶಿವಕುಮಾರ್ ನನಗೆ ಫೋನ್ ಕಾಲ್ ಮಾಡಿ 'ಗುರೂಜಿ, ಕೆಲಸ ಆಗಿದೆ' ಎಂದು ಸಿಹಿ ಸುದ್ದಿ ನೀಡಿದ. ನಾನು ಈಗ ಬೆಂಗಳೂರಿಗೆ ಹೋಗಿ ಆತನ ಜೊತೆ ಕುಳಿತು ಮಾತನಾಡುತ್ತೇನೆ. ಸೋಮವಾರದ ಒಳಗೆ ಆತ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾನೆ' ಎಂದರು.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ರಾಜಯೋಗ ಅಂತ್ಯ; ಡಿಕೆಶಿಗೆ ಆರಂಭವಾಯ್ತು ಗುರು ಬಲ!&lt;/strong&gt;&lt;/h2&gt;&lt;p&gt;ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರ ಜಾತಕದ ಗ್ರಹಗತಿಗಳ ಬಗ್ಗೆ ಜ್ಯೋತಿಷ್ಯ ವಿಶ್ಲೇಷಣೆ ನಡೆಸಿದ ಗುರೂಜಿ, 'ಸಿದ್ದರಾಮಯ್ಯ ಅವರದ್ದು ವೃಶ್ಚಿಕ ರಾಶಿ. ಸದ್ಯ ಅವರಿಗೆ ಗುರು ಬಲ ಮತ್ತು ಶನಿ ಬಲ ಎರಡೂ ಇಲ್ಲ. ಈ ಕಾಲ ಯಾರನ್ನೂ ಕೇಳಿ ಬರಲ್ಲ, ಆರಂಭವಾಗಿದ್ದು ಎಂದಿಗೂ ಅಂತ್ಯವಾಗಲೇಬೇಕು. ಸಿದ್ದರಾಮಯ್ಯ ಅವರ ಸಿಎಂ ಆಗುವ 'ರಾಜಯೋಗ' ಈಗ ಮುಗಿದಿದೆ. ಆದರೆ, ಈ ರಾಜ್ಯಕ್ಕೆ ಅವರ ಮಾರ್ಗದರ್ಶನ ಮತ್ತು ಸೇವೆಯ ಅಗತ್ಯ ಖಂಡಿತಾ ಇದೆ' ಎಂದಿದ್ದಾರೆ.&lt;/p&gt;&lt;p&gt;ಈಗ ಡಿಕೆಶಿಗೆ ಅತ್ಯಂತ ಸುವರ್ಣ ಸಮಯ ಆರಂಭವಾಗಿದೆ. ಗೋಚಾರ ಫಲದ ಪ್ರಕಾರ ಗುರು ಈಗ ಮಿಥುನ ರಾಶಿಯಲ್ಲಿದ್ದಾನೆ. ಇದು ಡಿಕೆಶಿಗೆ ಭಾರಿ ರಾಜಯೋಗ ತರಲಿದೆ. ನನ್ನ ಲೆಕ್ಕಾಚಾರದ ಪ್ರಕಾರ ಮುಂದಿನ ಎಂಟು ವರ್ಷ ಈ ರಾಜ್ಯದಲ್ಲಿ ಅವನನ್ನು ಅಲ್ಲಾಡಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಶಿವಕುಮಾರ್ ಅನ್ನೋದೇ ಒಂದು ಬ್ರ್ಯಾಂಡ್&zwnj;&lt;/strong&gt;&lt;/h2&gt;&lt;p&gt;ಮುಂದಿನ ಆಡಳಿತದ ಬಗ್ಗೆ ಮಾತನಾಡಿದ ಗುರೂಜಿ, &quot;ಡಿಕೆಶಿ ಕೇವಲ ಮುಖ್ಯಮಂತ್ರಿ ಮಾತ್ರವಲ್ಲ, ಪಕ್ಷವನ್ನು ಕೂಡ ಮುನ್ನಡೆಸಬೇಕಿದೆ. ಅದನ್ನು ನಿಭಾಯಿಸುವ ಶಕ್ತಿಯನ್ನು ದೇವರು ಕೊಡಲಿ. ಆತ ತುಂಬಾ ಬುದ್ಧಿವಂತ ಮತ್ತು ಜಾಣ. ಕೆಲವೊಮ್ಮೆ ಉದ್ವೇಗ (Aggressive) ಇರುತ್ತದೆಯಾದರೂ ಆತನಿಗೆ ಸಹನೆ ಇದೆ, ಎಲ್ಲವನ್ನೂ ಸಂಭಾಳಿಸುತ್ತಾನೆ. ಹೆಗಲ ಮೇಲೆ ಕೈ ಹಾಕಿ ಯಾರನ್ನು ಬೇಕಾದರೂ ಮಾತನಾಡಿಸುವ ಗುಣ ಆತನಲ್ಲಿದೆ. ಆತ ಇವರ ಕಡೆಯವರು ಅವರ ಕಡೆಯವರು ಅಂತ ಯಾರನ್ನೂ ಬ್ರಾಂಡ್ ಮಾಡಲ್ಲ. ಯಾಕಂದ್ರೆ ಶಿವಕುಮಾರ್ ಅನ್ನೋದೇ ಒಂದು ಬ್ರಾಂಡ್!&quot; ಎಂದು ಬಣ್ಣಿಸಿದರು.&lt;/p&gt;&lt;p&gt;ಡಿಕೆಶಿ ಮುಖ್ಯಮಂತ್ರಿಯಾದ ಮೇಲೆ ಬೆಂಗಳೂರಿನ ಮೂಲಸೌಕರ್ಯ, ಕುಡಿಯುವ ನೀರು ಮತ್ತು ಟ್ರಾಫಿಕ್ ಸಮಸ್ಯೆಯನ್ನು ಆದ್ಯತೆಯ ಮೇರೆಗೆ ಸರಿಪಡಿಸಬೇಕು. ಇಡೀ ರಾಜ್ಯದ ದೊಡ್ಡ ಚಿತ್ರಣ ಆತನ ಕಣ್ಣಮುಂದಿದೆ. ಸಿದ್ದರಾಮಯ್ಯ ಅವರ ಸಹಪಾಠಿಗಳನ್ನು (ಆಪ್ತರನ್ನು) ಕೂಡ ಜೊತೆಯಲ್ಲೇ ಕರೆದುಕೊಂಡು ಹೋಗಿ ಒಂದು ಅತ್ಯುತ್ತಮ ಸರ್ಕಾರವನ್ನು ಆತ ನೀಡಲಿದ್ದಾನೆ. ಆತನ ಕಾಲದಲ್ಲಿ ಕನ್ನಡ ನಾಡು ಮತ್ತಷ್ಟು ಅಭಿವೃದ್ಧಿಯಾಗಲಿದ್ದು, ನನ್ನ ಪ್ರಾರ್ಥನೆ ಸದಾ ಆತನ ಪರವಾಗಿರುತ್ತದೆ&quot; ಎಂದು ಆಶೀರ್ವದಿಸಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>politics</category>
            <dc:creator>Santosh Naik</dc:creator>
            <atom:link href="https://kannada.asianetnews.com/astrology/dwarakanath-guruji-astrology-prediction-dk-shivakumar-next-cm-karnataka-san/articleshow-pwmwfz4"/>
        </item>
        <item>
            <title><![CDATA[ಖಾಸಗಿ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ನೀಡಿದ ಸಿದ್ದರಾಮಯ್ಯ]]></title>
            <link>https://kannada.asianetnews.com/politics/siddaramaiah-resigns-as-karnataka-cm-after-visiting-raj-bhavan-governor-special-secretary-prabhushankar-gdp/articleshow-4qe61dk</link>
            <guid isPermaLink="true">https://kannada.asianetnews.com/politics/siddaramaiah-resigns-as-karnataka-cm-after-visiting-raj-bhavan-governor-special-secretary-prabhushankar-gdp/articleshow-4qe61dk</guid>
            <pubDate>Thu, 28 May 2026 15:18:41 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದ ಅವರು, ರಾಜಭವನದಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರ ತೀವ್ರ ಆಕ್ರೋಶ ಹಾಗೂ ಭಾವನಾತ್ಮಕ ಪ್ರತಿಭಟನೆಯನ್ನು ಎದುರಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kspzrqp32c35mt1wxgfy8t1k,imgname-siddaramaiah--2--1779961716416.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತೀವ್ರ ರಾಜಕೀಯ ಜಿದ್ದಾಜಿದ್ದಿ ಹಾಗೂ ಹೈಕಮಾಂಡ್ ನಿರ್ದೇಶನದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ (ಲೋಕಭವನ) ಆಗಮಿಸಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆಯಾಗಿದ್ದು, ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕಾರ ಮಾಡಿದ್ದಾರೆ.&lt;/p&gt;&lt;p&gt;ವಿಶೇಷವೆಂದರೆ, ಹೈವೋಲ್ಟೇಜ್ ಉಪಾಹಾರ ಕೂಟದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿ ಎನ್ನಲಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದೇ ಕಪ್ಪು ಬಣ್ಣದ ರೇಂಜ್ ರೋವರ್ (Range Rover) ಕಾರಿನಲ್ಲಿ ರಾಜಭವನಕ್ಕೆ ಒಟ್ಟಿಗೆ ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು. ಅವರ ಜೊತೆಗೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಸಿ. ಸುಧಾಕರ್ ಹಾಗೂ ಹಲವಾರು ಕಾಂಗ್ರೆಸ್ ಶಾಸಕರು ಸಹ ರಾಜಭವನಕ್ಕೆ ದೌಡಾಯಿಸಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಅವರೂ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.&lt;/p&gt;&lt;h2&gt;ರಾಜ್ಯಪಾಲರ ಅನುಪಸ್ಥಿತಿ: ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ&lt;/h2&gt;&lt;p&gt;ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವೈಯಕ್ತಿಕ ಕಾರಣಗಳಿಗಾಗಿ ತುರ್ತಾಗಿ ಇಂದೋರ್&zwnj;ಗೆ ಪ್ರಯಾಣ ಬೆಳೆಸಿರುವ ಕಾರಣ, ಅವರು ಇಂದು ರಾಜಭವನದಲ್ಲಿ ಲಭ್ಯವಿರಲಿಲ್ಲ. ಹೀಗಾಗಿ, ರಾಜ್ಯಪಾಲರ ಮುನ್ಸೂಚನೆ ಹಾಗೂ ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭಾವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.&lt;/p&gt;&lt;p&gt;ಸದ್ಯಕ್ಕೆ ಕಾರ್ಯದರ್ಶಿ ಪ್ರಭುಶಂಕರ್ ಅವರು ಮುಖ್ಯಮಂತ್ರಿಗಳ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ. ಆದರೆ, ಇಂದೋರ್&zwnj;ನಿಂದ ರಾಜ್ಯಪಾಲರು ಬೆಂಗಳೂರಿಗೆ ಮರಳಿದ ಬಳಿಕವಷ್ಟೇ ಈ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಲಾಗುವುದು ಎಂದು ರಾಜಭವನದ ಮೂಲಗಳು ಸ್ಪಷ್ಟಪಡಿಸಿವೆ.&lt;/p&gt;&lt;h2&gt;ಇಂದು ಸಂಜೆಯೇ ರಾಜ್ಯಪಾಲರು ವಾಪಸ್&lt;/h2&gt;&lt;p&gt;ಇನ್ನೊಂದೆಡೆ ಇಂದು ಸಂಜೆ 6:30 ಕ್ಕೆ ರಾಜ್ಯಪಾಲರು ಬೆಂಗಳೂರಿಗೆ ಬಂದಿಳಿಯಲಿಯಲಿದ್ದಾರೆ. ನಿನ್ನೆ ರಾತ್ರಿ &amp;nbsp;ವೈಯಕ್ತಿಕ ಕಾರ್ಯದ ನಿಮಿತ್ತ ಮುಂಬೈ ಮೂಲಕ ಇಂಧೋರ್ ಗೆ ಹೋಗಿದ್ದರು. ನಾಳೆ ಉಪರಾಷ್ಟ್ರಪತಿ ಕಾರ್ಯಕ್ರಮದ ಹಿನ್ನೆಲೆ ಇಂದೇ ರಾಜ್ಯಪಾಲರು ವಾಪಸ್. ನಾಳೆ ಬೆಳಗ್ಗೆಯಿಂದಲೇ ಉಪರಾಷ್ಟ್ರಪತಿಗಳ ಜೊತೆ ಬ್ಯುಸಿ ಆಗಲಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್.&lt;/p&gt;&lt;h2&gt;ಸಿಎಂ ಕಾರಿಗೆ ಮುತ್ತಿಗೆ, ಅಡ್ಡ ಬಿದ್ದ ಕಾರ್ಯಕರ್ತರು: ಹತೋಟಿ ಮೀರಿದ ಪರಿಸ್ಥಿತಿ!&lt;/h2&gt;&lt;p&gt;ರಾಜೀನಾಮೆ ಸಲ್ಲಿಕೆಯ ಪ್ರಕ್ರಿಯೆಯನ್ನು ಮುಗಿಸಿ ಸಿದ್ದರಾಮಯ್ಯ ಅವರು ರಾಜಭವನದಿಂದ ಹೊರಬರುತ್ತಿದ್ದಂತೆ ಅಲ್ಲಿ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಆಕ್ರೋಶ ಕಟ್ಟೆ ಒಡೆಯಿತು. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಘೋಷಣೆ ಕೂಗಿದ ಅಭಿಮಾನಿಗಳು, ಅವರು ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿಗೆ ಮುತ್ತಿಗೆ ಹಾಕಿದರು.&lt;/p&gt;&lt;p&gt;ಸಿಎಂ ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಈ ನಡುವೆ ತೀವ್ರ ಭಾವುಕರಾದ ಸಿದ್ದರಾಮಯ್ಯ ಅವರ ಆಪ್ತ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿಗಳ ಕಾರಿನ ಮುಂದೆಯೇ ಅಡ್ಡ ಬಿದ್ದು ರಾಜೀನಾಮೆ ನಿರ್ಧಾರವನ್ನು ಹಿಂಪಡೆಯುವಂತೆ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿ, ಮುಖ್ಯಮಂತ್ರಿಗಳ ಕಾರು ಮುಂದೆ ಸಾಗಲು ದಾರಿ ಮಾಡಿಕೊಟ್ಟರು.&lt;/p&gt;]]></content:encoded>
            <category>politics</category>
            <dc:creator>Gowthami K</dc:creator>
            <atom:link href="https://kannada.asianetnews.com/politics/siddaramaiah-resigns-as-karnataka-cm-after-visiting-raj-bhavan-governor-special-secretary-prabhushankar-gdp/articleshow-4qe61dk"/>
        </item>
        <item>
            <title><![CDATA[ಅಂದು ರಾಯರಿಗೆ ಮಾಡಿದ್ದ ಅಪಮಾನವೇ ಸಿದ್ದರಾಮಯ್ಯಗೆ ಮುಳುವಾಯ್ತಾ? ಜಗ್ಗೇಶ್​ ಭವಿಷ್ಯ ನಿಜವಾಯ್ತಾ]]></title>
            <link>https://kannada.asianetnews.com/gallery/politics/siddharamaiah-refused-to-take-raghavendra-swamy-photo-and-jaggesh-was-upset-about-this-suc-s6gx90u</link>
            <guid isPermaLink="true">https://kannada.asianetnews.com/gallery/politics/siddharamaiah-refused-to-take-raghavendra-swamy-photo-and-jaggesh-was-upset-about-this-suc-s6gx90u</guid>
            <pubDate>Thu, 28 May 2026 13:57:02 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಲ್ಲಿಸಲಿದ್ದು, ಈ ಬೆಳವಣಿಗೆಯನ್ನು ಅವರು ಈ ಹಿಂದೆ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ತಿರಸ್ಕರಿಸಿದ ಘಟನೆಗೆ ಹೋಲಿಸಲಾಗುತ್ತಿದೆ. ರಾಯರನ್ನು ಅವಮಾನಿಸಿದವರಿಗೆ ಅಧಿಕಾರ ಯೋಗ ಕೊನೆಯಾಗುತ್ತದೆ ಎಂದು ನಟ ಜಗ್ಗೇಶ್ ಅಂದು ನುಡಿದಿದ್ದ ಭವಿಷ್ಯ ವೈರಲ್ ಆಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksptsr2h6h6h9wbz56azpryx,imgname-jaggesh-and-siddharamaiah-1779956506705.jpg" type="image/jpeg" height="390" width="690"/>
            <content:encoded><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಲ್ಲಿಸಲಿದ್ದು, ಈ ಬೆಳವಣಿಗೆಯನ್ನು ಅವರು ಈ ಹಿಂದೆ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ತಿರಸ್ಕರಿಸಿದ ಘಟನೆಗೆ ಹೋಲಿಸಲಾಗುತ್ತಿದೆ. ರಾಯರನ್ನು ಅವಮಾನಿಸಿದವರಿಗೆ ಅಧಿಕಾರ ಯೋಗ ಕೊನೆಯಾಗುತ್ತದೆ ಎಂದು ನಟ ಜಗ್ಗೇಶ್ ಅಂದು ನುಡಿದಿದ್ದ ಭವಿಷ್ಯ ವೈರಲ್ ಆಗಿದೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರಿಗೆ ಇರುವುದು ಇನ್ನು ಕೆಲವೇ ಗಂಟೆಗಳು. ಆ ಬಳಿಕ ಅವರು ಮಾಜಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಇಂದು ಅರ್ಥಾತ್​ ಮೇ 28ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಅವರು ರಾಜೀನಾಮೆ ಸಲ್ಲಿಸುವುದು ನಿಚ್ಚಳವಾಗಿದೆ. ಕೊನೆಯವರೆಗೂ ಇದು ಸಸ್ಪೆನ್ಸ್​ ಚಿತ್ರದ ರೀತಿಯಲ್ಲಿಯೇ ಮುಂದುವರೆಯುತ್ತಿದೆ.&lt;/p&gt;&lt;img&gt;&lt;p&gt;ಇದರ ನಡುವೆಯೇ, ಇದೇ ವರ್ಷ ಜನವರಿಯಲ್ಲಿ ನಡೆದ ಘಟನೆಯೊಂದು ಇದೀಗ ಮತ್ತೆ ವೈರಲ್​ ಆಗುತ್ತಿದೆ. ಆ ಘಟನೆಯೇ ಗುರುವಾರದ ಶಾಪವಾಗಿ ಸಿದ್ದರಾಮಯ್ಯ ಅವರು ಅಧಿಕಾರ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎನ್ನ್ಉವ ಮಾತುಗಳು ಜಾಲತಾಣಗಳಲ್ಲಿ ಕೇಳಿಬರುತ್ತಿವೆ.&lt;/p&gt;&lt;img&gt;&lt;p&gt;ಅಷ್ಟಕ್ಕೂ ಅಂದು ಸಿದ್ದರಾಮಯ್ಯನವರು ಸಿಎಂ ನಿವಾಸದಿಂದ ಹೊರಗೆ ಬರುತ್ತಿದ್ದಂತೆ ಕಾರಿನಲ್ಲಿ ಕುಳಿತುಕೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ್ದರು. ಈ ಮಧ್ಯೆ ವ್ಯಕ್ತಿಯೊಬ್ಬರು ರಾಘವೇಂದ್ರ ಸ್ವಾಮಿಗಳ ಫೋಟೋ ನೀಡುತ್ತಾರೆ. ಆದ್ರೆ ಮುಖ್ಯಮಂತ್ರಿಗಳು ಕೋಪದಿಂದಲೇ ರಾಘವೇಂದ್ರ ಸ್ವಾಮಿಗಳ ಫೋಟೋ ಪಡೆದುಕೊಳ್ಳದೇ ಹಿಂದಿರುಗಿಸಿದ್ದರು.&lt;/p&gt;&lt;img&gt;&lt;p&gt;ಇದೇ ವೇಳೆ ಮತ್ತೋರ್ವ ವ್ಯಕ್ತಿ ನೀಡುವ ಚಾಣಕ್ಯ ನೀತಿ ಹೆಸರಿನ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿಗಳು ತೆರಳಿದ್ದರು. ಇದಕ್ಕೆ ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ನಟ, ಸಂಸದ, ರಾಯರ ಭಕ್ತ ಜಗ್ಗೇಶ್​ ಅವರು, ರಾಯರನ್ನು ಅಪಮಾನ ಮಾಡಿದ ಯಾರು ಉದ್ಧಾರವಾದ ಇತಿಹಾಸವಿಲ್ಲ ಎಂದಿದ್ದರು.&lt;/p&gt;&lt;img&gt;&lt;p&gt;ರಾಯರ ಸಣ್ಣ ಕೃಪೆ ನಮ್ಮ ಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪ ತಪ ವೈರಾಗ್ಯ ಉಪವಾಸದಿಂದ ಸೇವೆ ಮಾಡುತ್ತಾರೆ. ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡಿದ್ದು, ರಾಯರಿದ್ದಾರೆ, ಎದ್ದು ಬರುತ್ತಾರೆ, ಯೋಗ ಕೊನೆಯಾಗುವ ದಿನಗಳು ಸಮೀಪಿಸಿವೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.&lt;/p&gt;&lt;img&gt;&lt;p&gt;ಭಕ್ತಿಯಿಂದ ರಾಯರ ಭಕ್ತರು ರಾಯರ ವಿಗ್ರಹ ಅಥವ ಮೃತ್ತಿಗೆ ಯಾರಿಗಾದರು ನೀಡಿದಾಗ ಭಕ್ತಿಯಿಂದ ಪಡೆಯಬೇಕು. ಒಂದು ವೇಳೆ ಅದನ್ನು ತಿರಸ್ಕರಿಸಿದರೆ ಅಂತಹ ವ್ಯಕ್ತಿಗೆ ಯೋಗ ಕೊನೆ ಆಗುವ ದಿನಗಳು ಸಮೀಪಿಸಿದೆ ಎಂದರ್ಥ ಎಂದು ಎಕ್ಸ್ ಖಾತೆ ಮೂಲಕ ಜಗ್ಗೇಶ್ ವಿಡಿಯೋ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದೀಗ ನಿಜವಾಗಿದೆ, ರಾಯರ ದಿನವಾಗಿರುವ ಗುರುವಾರವೇ ಮನಸ್ಸಿಲ್ಲದ ಮನಸ್ಸಿನಿಂದ ರಾಜೀನಾಮೆ ಮಾಡಬೇಕಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ!&lt;/p&gt;&lt;p&gt;ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ!ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ,ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯೆಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು&amp;nbsp;ರಾಯರಿದ್ದಾರೆ ಎದ್ದುಬರುತ್ತಾರೆಕಾಯಬೇಕು..!!ಜೈಹಿಂದ್ pic.twitter.com/WXdSsaZVvK&lt;/p&gt;&lt;p&gt;&mdash; ನವರಸನಾಯಕ ಜಗ್ಗೇಶ್ (@Jaggesh2) January 20, 2026&lt;/p&gt;]]></content:encoded>
            <category>politics</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/politics/siddharamaiah-refused-to-take-raghavendra-swamy-photo-and-jaggesh-was-upset-about-this-suc-s6gx90u"/>
        </item>
        <item>
            <title><![CDATA[Siddaramaiah: ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಕಾಂಗ್ರೆಸ್ ತಕ್ಕ ಪಾಠ ಕಲಿಸುತ್ತೇವೆ; ಅಹಿಂದ ಮುಖಂಡರ ಎಚ್ಚರಿಕೆ!]]></title>
            <link>https://kannada.asianetnews.com/politics/siddaramaiah-resigns-as-cm-we-will-teach-congress-a-lesson-ahinda-leaders-warn/articleshow-gzf9mgn</link>
            <guid isPermaLink="true">https://kannada.asianetnews.com/politics/siddaramaiah-resigns-as-cm-we-will-teach-congress-a-lesson-ahinda-leaders-warn/articleshow-gzf9mgn</guid>
            <pubDate>Thu, 28 May 2026 14:06:42 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಚರ್ಚೆಗಳ ಹಿನ್ನೆಲೆಯಲ್ಲಿ, ಅಹಿಂದ ಒಕ್ಕೂಟವು ಕಾಂಗ್ರೆಸ್ ಹೈಕಮಾಂಡ್&zwnj;ಗೆ ತೀವ್ರ ಎಚ್ಚರಿಕೆ ನೀಡಿದೆ. ಸಿದ್ದರಾಮಯ್ಯರನ್ನು ಇನ್ನೂ ಎರಡು ವರ್ಷ ಮುಂದುವರಿಸಬೇಕು, ಇಲ್ಲದಿದ್ದರೆ ಹಿಂದೆ ಹಿಂದಿನ ಘಟನೆ ಪಕ್ಷಕ್ಕೆ ಮರುಕಳಿಸಲಿದೆ ಎಂದು ಎಚ್ಚರಿಕೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspv898ava6kryawez5ppyfs,imgname-----------------------2026-05-28t135551.084-1779956983050.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.28) &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಅಹಿಂದ ಒಕ್ಕೂಟ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.&lt;/p&gt;&lt;h2&gt;ಕಾಂಗ್ರೆಸ್ ಹೈಕಮಾಂಡ್&zwnj;ಗೆ ಅಹಿಂದ ಒಕ್ಕೂಟ ಎಚ್ಚರಿಕೆ&lt;/h2&gt;&lt;p&gt;ಸಿದ್ದರಾಮಯ್ಯ ರಾಜೀನಾಮೆ ಕುರಿತಂತೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅಹಿಂದ ಮುಖಂಡ ಪುಟ್ಟೇಗೌಡ, 'ರಾತ್ರೋರಾತ್ರಿ ಸಿಎಂ ಬದಲಾವಣೆ ಮಾಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬುದು ಕಾಂಗ್ರೆಸ್&zwnj;ಗೆ ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್ ಭವಿಷ್ಯ ಸುರಕ್ಷಿತವಾಗಿರಬೇಕಾದರೆ ಸಿದ್ದರಾಮಯ್ಯರಿಗೆ ಇನ್ನೂ ಎರಡು ವರ್ಷ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.&lt;/p&gt;&lt;h3&gt;ಸಿದ್ದರಾಮಯ್ಯರನ್ನ ಇನ್ನೂ ಎರಡು ವರ್ಷ ಗೌರವದಿಂದ ನಡೆಸಿಕೊಳ್ಳಿ&lt;/h3&gt;&lt;p&gt;ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೌರವಯುತವಾಗಿ ಇನ್ನೂ ಎರಡು ವರ್ಷ ಅಧಿಕಾರ ನೀಡಬೇಕು ಎಂದು ಪುಟ್ಟೇಗೌಡ ಹೇಳಿದರು. ಒಂದು ವೇಳೆ ಈಗಲೇ ನಾಯಕತ್ವ ಬದಲಾವಣೆ ಮಾಡಿದರೆ, ಅದರ ಪರಿಣಾಮವನ್ನು ಕಾಂಗ್ರೆಸ್ ಭವಿಷ್ಯದಲ್ಲಿ ಎದುರಿಸಬೇಕಾಗುತ್ತದೆ. ಈಗ ಕಾಂಗ್ರೆಸ್ ಇಟ್ಟಿರೋ ಹೆಜ್ಜೆ ತಕ್ಕ ಪಾಠ ಕಲಿಯುತ್ತೆ ಎಂದು ಎಚ್ಚರಿಸಿದರು.&lt;/p&gt;&lt;p&gt;&lt;strong&gt;ಹಳೆಯ ಇತಿಹಾಸ ನೆನಪಿಸಿದ ಅಹಿಂದ ನಾಯಕರು&lt;/strong&gt;&lt;/p&gt;&lt;p&gt;ಕಾಂಗ್ರೆಸ್&zwnj;ನ ಹಿಂದಿನ ರಾಜಕೀಯ ಘಟನೆಗಳನ್ನು ಉಲ್ಲೇಖಿಸಿದ ಪುಟ್ಟೇಗೌಡ, ಈ ಹಿಂದೆ ಬಂಗಾರಪ್ಪ, ದೇವರಾಜ್ ಅರಸು, ವೀರಪ್ಪಮೊಯ್ಲಿಯನ್ನು ರಾತ್ರೋರಾತ್ರಿ ತೆಗೆದಿದ್ರು. ಆಗ ಕಾಂಗ್ರೆಸ್ ಏನಾಗಿದೆ ಅನ್ನೋದು ಅದರ ಕಣ್ಮುಂದೆಯೇ ಅದರ ಇತಿಹಾಸ ಇದೆ. ಆ ತಪ್ಪು ಮತ್ತೆ ಮರುಕಳಿಸಬಾರದು ಎಂದು ಅಹಿಂದ ಮತ್ತು ಹಿಂದುಳಿದ ವರ್ಗಗಳು ಎಚ್ಚರಿಸುತ್ತಿವೆ ಎಂದರು.&lt;/p&gt;&lt;p&gt;&lt;strong&gt;ಕಾಂಗ್ರೆಸ್&zwnj;ಗೆ ಪರೋಕ್ಷ ಎಚ್ಚರಿಕೆ&lt;/strong&gt;&lt;/p&gt;&lt;p&gt;ನಾವು ಕಾಂಗ್ರೆಸ್&zwnj;ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಇಂತಹ ನಿರ್ಧಾರಗಳ ನಂತರ ಪಕ್ಷದ ಪರಿಸ್ಥಿತಿ ಏನಾಗುತ್ತದೆ ಎಂಬುದು ಪಕ್ಷಕ್ಕೆ ಚೆನ್ನಾಗಿ ಗೊತ್ತಿದೆ. ಸಿದ್ದರಾಮಯ್ಯರನ್ನು ಗೌರವಯುತವಾಗಿ ಮುಂದುವರಿಸಬೇಕು ಎಂಬ ಒತ್ತಾಯದ ಜೊತೆಗೆ, ಅಹಿಂದ ಸಮುದಾಯದ ಭಾವನೆಗಳನ್ನು ಕಡೆಗಣಿಸಬಾರದು ಎಂದು ಕಾಂಗ್ರೆಸ್ ನಾಯಕತ್ವಕ್ಕೆ ಪರೋಕ್ಷ ಸಂದೇಶ ನೀಡಿದರು.&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/siddaramaiah-resigns-as-cm-we-will-teach-congress-a-lesson-ahinda-leaders-warn/articleshow-gzf9mgn"/>
        </item>
        <item>
            <title><![CDATA[ಮುಂದಿನ ಸಿಎಂ ಡಿಕೆಶಿಗೆ ಎಲ್ಲರೂ ಸಹಕರಿಸಿ! ವಿದಾಯದ ಕೂಟದಲ್ಲಿ ಸಿದ್ದರಾಮಯ್ಯ ಭಾವುಕ, ಬಹಿರಂಗವಾಯ್ತು 'ರಹಸ್ಯ ಒಪ್ಪಂದ'!]]></title>
            <link>https://kannada.asianetnews.com/gallery/politics/karnataka-politics-siddaramaiah-officially-endorses-dk-shivakumar-as-next-cm-prepares-to-hand-over-resignation-gdp-vlyz6kv</link>
            <guid isPermaLink="true">https://kannada.asianetnews.com/gallery/politics/karnataka-politics-siddaramaiah-officially-endorses-dk-shivakumar-as-next-cm-prepares-to-hand-over-resignation-gdp-vlyz6kv</guid>
            <pubDate>Thu, 28 May 2026 13:43:31 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ &amp;nbsp;ಉಪಾಹಾರ ಕೂಟದಲ್ಲಿ ತಮ್ಮ ರಾಜೀನಾಮೆಯನ್ನು ಘೋಷಿಸಿ, ಡಿ.ಕೆ. ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದರು. ಈ ಭಾವುಕ ಸಭೆಯಲ್ಲಿ, ತಮ್ಮ ಅಧಿಕಾರಾವಧಿಯ ಕೆಲಸಗಳನ್ನು ಸ್ಮರಿಸಿ, ಪಕ್ಷದ ಸಿದ್ಧಾಂತವನ್ನು ಪಾಲಿಸುವಂತೆ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksps9v1xgvarn0jh6tkrt3pc,imgname-siddaramaiah-and-dk-shivakumar--1--1779954936893.jpg" type="image/jpeg" height="390" width="690"/>
            <content:encoded><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ &amp;nbsp;ಉಪಾಹಾರ ಕೂಟದಲ್ಲಿ ತಮ್ಮ ರಾಜೀನಾಮೆಯನ್ನು ಘೋಷಿಸಿ, ಡಿ.ಕೆ. ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದರು. ಈ ಭಾವುಕ ಸಭೆಯಲ್ಲಿ, ತಮ್ಮ ಅಧಿಕಾರಾವಧಿಯ ಕೆಲಸಗಳನ್ನು ಸ್ಮರಿಸಿ, ಪಕ್ಷದ ಸಿದ್ಧಾಂತವನ್ನು ಪಾಲಿಸುವಂತೆ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದರು.&lt;/p&gt;&lt;img&gt;&lt;p&gt;ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿಗಳ ನಿವಾಸದ ಹೈವೋಲ್ಟೇಜ್ ಉಪಾಹಾರ ಕೂಟದಲ್ಲಿ (Breakfast Meeting) ಅತ್ಯಂತ ಮಹತ್ವದ ಹಾಗೂ ಭಾವುಕ ವಿದ್ಯಮಾನಗಳು ನಡೆದಿವೆ. &quot;ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದಕ್ಕೆ ನನ್ನ ಸಂಪೂರ್ಣ ಒಪ್ಪಿಗೆಯಿದೆ&quot; ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಭೆಯಲ್ಲಿ ಘೋಷಿಸುವ ಮೂಲಕ ರಾಜ್ಯ ರಾಜಕೀಯದ ಮುಂದಿನ ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಡಿಕೆಶಿ ಅವರನ್ನು ನೂತನ ಮುಖ್ಯಮಂತ್ರಿ ಎನ್ನುತ್ತಿದ್ದಂತೆಯೇ ಶಿವಕುಮಾರ್ ಅವರು ಕೂಡ ತೀವ್ರ ಭಾವುಕರಾದರು.&lt;/p&gt;&lt;img&gt;&lt;p&gt;ಉಪಾಹಾರ ಕೂಟ ಆರಂಭವಾಗುತ್ತಿದ್ದಂತೆ ಮಂತ್ರಿಗಳು ಹಾಗೂ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅತ್ಯಂತ ಭಾವುಕರಾದರು. &quot;ನನ್ನ ಅಧಿಕಾರಾವಧಿಯಲ್ಲಿ ನಾನು ಜನರಿಗಾಗಿ ಅತ್ಯಂತ ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ನೀವೆಲ್ಲರೂ ಅದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಬೇಕು. ಪಕ್ಷದ ಸೈದ್ಧಾಂತಿಕ ಬದ್ಧತೆಯನ್ನು ಸದಾ ಪ್ರದರ್ಶಿಸಿ&quot; ಎಂದು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದರು. ಹೊಸದಾಗಿ ನಡೆಯಲಿರುವ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಎಲ್ಲವನ್ನೂ ವಿಸ್ತೃತವಾಗಿ ಚರ್ಚಿಸಿ, ನೂತನ ಸಿಎಂ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲರೂ ಮುಕ್ತವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಭೆಯ ಬಳಿಕ ಉಭಯ ನಾಯಕರು ಅತ್ಯಂತ ಪರಸ್ಪರ ವಿಶ್ವಾಸದಿಂದ ಹಸ್ತಲಾಘವ &amp;nbsp;ಮಾಡಿ ಔಪಚಾರಿಕ ಮಾತುಕತೆ ನಡೆಸಿದರು.&lt;/p&gt;&lt;img&gt;&lt;p&gt;ಬೆಳಗ್ಗೆ 11:30ರ ಸುಮಾರಿಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರು ಈ ಮೊದಲು ರಾಜಭವನಕ್ಕೆ ಸಮಯ ಕೇಳಿದ್ದರು. ಆದರೆ ಬಕ್ರೀದ್ ಹಬ್ಬದ ರಜೆಯ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಸದ್ಯಕ್ಕೆ ರಾಜ್ಯಪಾಲರಾಗಲಿ ಅಥವಾ ಅವರ ಕಾರ್ಯದರ್ಶಿಯಾಗಲಿ ಲಭ್ಯವಿರಲಿಲ್ಲ. ಹೀಗಾಗಿ ಪ್ರಕ್ರಿಯೆ ಕೊಂಚ ವಿಳಂಬವಾಗಿತ್ತು. ಆದಾಗ್ಯೂ, ಹಬ್ಬದ ರಜೆಯ ನಡುವೆಯೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜಭವನಕ್ಕೆ ಆಗಮಿಸಿದ್ದು, ಸಿಎಂ ರಾಜೀನಾಮೆ ಪತ್ರ ಸ್ವೀಕರಿಸಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;img&gt;&lt;p&gt;ನನಗೆ ಹೈಕಮಾಂಡ್ ರಾಜೀನಾಮೆ ಕೊಡಲು ಹೇಳಿದ್ದಾರೆ. ನಾನು ಇವತ್ತು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ಕೊಡಬೇಕು ಅಂದುಕೊಂಡಿದ್ದೆ. ಆದ್ರೆ ರಾಜ್ಯಪಾಲರು ಲೋಕಭವನದಲ್ಲಿ ಇಲ್ಲ. ಆದ್ರು ನಾನು ಲೋಕಭವನಕ್ಕೆ ಹೋಗಿ ರಾಜೀನಾಮೆ ಕೊಟ್ಟು ಬರುತ್ತೇನೆ. ಹೈಕಮಾಂಡ್ ಡಿಕೆಶಿವಕುಮಾರ್ ಸಿಎಂ ಆಗಬೇಕು ಎಂದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲು ನನ್ನ ಒಪ್ಪಿಗೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ .&lt;/p&gt;&lt;img&gt;&lt;p&gt;ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಒಪ್ಪಂದ ಆಗಿತ್ತು. ಆದ್ರೆ ನಾನು ಎಲ್ಲೂ ಕೂಡ ಬಹಿರಂಗವಾಗಿ ಒಪ್ಪಂದದ ಬಗ್ಗೆ ಮಾತನಾಡಿಲ್ಲ. ಸಿಎಂ ಸ್ಥಾನ ಚೇಂಜ್ ಆಗುತ್ತೆ ಅಂತಾನೂ ಹೇಳಿಲ್ಲ. ದೆಹಲಿಗೆ ಹೋಗಿ ಹೈಕಮಾಂಡ್ ಅವರ ಬಳಿ ಕೇಳುತ್ತಿದ್ದೆ ಅಷ್ಟೇ. ಮುಂದೆ ನಿಮ್ಮ(ಸಿದ್ದರಾಮಯ್ಯ) ಸಹಕಾರ ಕೂಡ ಬೇಕು. ನಿಮ್ಮ ಸಹಕಾರದಿಂದಲೇ ಇನ್ನು ಎರಡು ವರ್ಷ ಸರ್ಕಾರ ನಡೆಸೋಣ. 2028 ಕ್ಕೂ ಕಾಂಗ್ರೆಸ್ ಸರ್ಕಾರ ಬರುವಂತೆ ಮಾಡೋಣ ಎಂದು ಮಾತನಾಡಿದ್ದಾರೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;ರಾಜಭವನದ ಸುತ್ತಮುತ್ತ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 02:30ಕ್ಕೆ ಅಧಿಕೃತವಾಗಿ ಲೋಕ ಭವನಕ್ಕೆ (ರಾಜಭವನ) ಭೇಟಿ ನೀಡಿ ರಾಜೀನಾಮೆ ಪತ್ರ ಹಸ್ತಾಂತರಿಸಲಿದ್ದಾರೆ. ಒಂದು ವೇಳೆ ಸರ್ಕಾರದಿಂದ ಅಧಿಕೃತವಾಗಿ ಸಮಯ ಕೋರಿದರೆ, ಇಂದೋರ್ ಪ್ರವಾಸದಲ್ಲಿರುವ ರಾಜ್ಯಪಾಲರು ಮಧ್ಯಾಹ್ನ 3 ಗಂಟೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆಯೂ ಇದೆ. ಒಂದು ವೇಳೆ ರಾಜ್ಯಪಾಲರು ಬರದಿದ್ದರೆ ಅವರ ಸೆಕ್ರೆಟರಿಗೆ ಪತ್ರ ನೀಡಲಾಗುತ್ತದೆ.&lt;/p&gt;&lt;img&gt;&lt;p&gt;ರಾಜೀನಾಮೆ ಸಲ್ಲಿಕೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ತಮ್ಮ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮಹತ್ವದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರಲ್ಲಿ ತಮ್ಮ ರಾಜೀನಾಮೆ ಹಾಗೂ ಮುಂದಿನ ನಿರ್ಧಾರಗಳ ಕುರಿತು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.&lt;/p&gt;&lt;img&gt;&lt;p&gt;ಇದಾದ ನಂತರ, ಇಂದು ಸಂಜೆ 4 ಗಂಟೆ &amp;nbsp;ನಂತರ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ದೆಹಲಿಗೆ ವಿಶೇಷ ವಿಮಾನದ ಮೂಲಕ ಹೊರಡಲಿದ್ದಾರೆ. ತಮಗೆ ಎರಡು ಬಾರಿ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ವೈಯಕ್ತಿಕವಾಗಿ ಧನ್ಯವಾದ ಅರ್ಪಿಸುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ. ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಇಂದೇ ರಾತ್ರಿ ಗಂಟೆಯ ಸುಮಾರಿಗೆ ಅವರು ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಡಿಕೆ ಶಿವಕುಮಾರ್ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.&lt;/p&gt;]]></content:encoded>
            <category>politics</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/karnataka-politics-siddaramaiah-officially-endorses-dk-shivakumar-as-next-cm-prepares-to-hand-over-resignation-gdp-vlyz6kv"/>
        </item>
        <item>
            <title><![CDATA[CM Siddaramaiah Resignation: ಸಿದ್ದರಾಮಯ್ಯರನ್ನ ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಯಿಲ್ಲ:  ಪ್ರಲ್ಹಾದ್ ಜೋಶಿ ಸ್ಫೋಟಕ ಹೇಳಿಕೆ!]]></title>
            <link>https://kannada.asianetnews.com/politics/union-minister-pralhad-joshi-reacts-to-siddaramaiah-s-resignation-as-cm-rav/articleshow-aicgb1c</link>
            <guid isPermaLink="true">https://kannada.asianetnews.com/politics/union-minister-pralhad-joshi-reacts-to-siddaramaiah-s-resignation-as-cm-rav/articleshow-aicgb1c</guid>
            <pubDate>Thu, 28 May 2026 13:18:51 +0530</pubDate>
            <description><![CDATA[ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರನ್ನು ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಹೇಳಿದ್ದಾರೆ. ಹಿಂದೆ ರಾಜೀವ್ ಗಾಂಧಿ ಅವರು ವೀರೇಂದ್ರ ಪಾಟೀಲ್ ಅವರಿಗೆ ಮಾಡಿದ ಅವಮಾನವನ್ನೇ, ಇಂದು ರಾಹುಲ್ ಗಾಂಧಿ ಸಿದ್ದರಾಮಯ್ಯನವರಿಗೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksprbfn9yb9rrbghyhthwf1w,imgname-----------------------2026-05-28t130704.096-1779953942185.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು (ಮೇ.28):&lt;/strong&gt; ಕರ್ನಾಟಕದ ಜನಪ್ರಿಯ ನಾಯಕರಾದಂತ ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಕೇಂದ್ರ ಬಿಜೆಪಿ ಸಚಿವ ಪ್ರಹ್ಲಾದ್ ಜೋಶಿ ನುಡಿದರು.&lt;/p&gt;&lt;h2&gt;ಕಾಂಗ್ರೆಸ್ ಸಿದ್ದರಾಮಯ್ಯರನ್ನ ನಡೆಸಿಕೊಂಡ ರೀತಿ ಸರಿಯಿಲ್ಲ&lt;/h2&gt;&lt;p&gt;ಇಂದು ಸಿದ್ದರಾಮಯ್ಯ ರಾಜೀನಾಮೆ ಕೊಡುವ ನಿರ್ಧಾರ ಕುರಿತ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯರಷ್ಟು ರಾಜಕೀಯ ಅನುಭವವಿಲ್ಲದ, ವಯಸಲ್ಲೂ ಹಿರಿಯರಲ್ಲದ ರಾಹುಲ್ ಗಾಂಧಿ ಸಿದ್ದರಾಮಯ್ಯನವರನ್ನ ಆ ರೀತಿ ನಡೆಸಿಕೊಳ್ಳಬಾರದಿತ್ತು ಎಂದರು. ಇದೇ ವೇಳೆ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲಗಳಿಂದ ಕರ್ನಾಟಕದಲ್ಲಿ ಸಂಪೂರ್ಣ ಪರಿಸ್ಥಿತಿ ಹದಗೆಟ್ಟಿದೆ. ಅಸ್ಥಿರತೆ, ಅರಾಜಕತೆ, ಅವಿಶ್ವಾಸ ನಿರ್ಮಾಣವಾಗಿದೆ. ನಿನ್ನೆ ಮೊನ್ನೆ ಇದರ ಪರಕಾಷ್ಠೆ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h3&gt;ದಿನ ಬೆಳಗಾದರೆ ಕಾಂಗ್ರೆಸ್ ಓಬಿಸಿ ಮಂತ್ರ&lt;/h3&gt;&lt;p&gt;ಕಾಂಗ್ರೆಸ್ ದಿನ ಬೆಳಗಾದ್ರೆ ಓಬಿಸಿ ಮಂತ್ರ ಜಪಿಸುತ್ತಾರೆ. ಆದರೆ ಕರ್ನಾಟಕ ಒಬ್ಬ ಹಿಂದುಳಿದ ವರ್ಗದ ಮುಖ್ಯಮಂತ್ರಿಯನ್ನ ಯಾವ ರೀತಿ ನಡೆಸಿಕೊಂಡ್ರು? ಹಿಂದೆ ವೀರೇಂದ್ರ ಪಾಟೀಲ್ ಅವರನ್ನ ರಾಜೀವ್ ಗಾಂಧಿ ಯಾವ ರೀತಿ ಅಪಮಾನ ಮಾಡಿದ್ರೋ, ಅದೇ ರೀತಿ ಇಂದು ರಾಜೀವ್ ಮಗ ರಾಹುಲ್ ಗಾಂಧಿ ಸಿದ್ದರಾಮಯ್ಯರನ್ನ ನಡೆಸಿಕೊಂಡಿದ್ದಾರೆ. ಇದು ಅಪ್ಪನಿಂದ ರಾಹುಲ್ ಗೆ ಬಂದಿರುವ ಬಳುವಳಿ ಎಂದರು.&lt;/p&gt;&lt;h3&gt;ಸಿದ್ದರಾಮಯ್ಯ ಯಡಿಯೂರಪ್ಪ ಕರ್ನಾಟಕ ಮಾಸ್ ಲೀಡರ್ಸ್&lt;/h3&gt;&lt;p&gt;ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಕರ್ನಾಟಕದ ಮಾಸ್ ಲೀಡರ್&zwnj;ಗಳು. ಇಡೀ ದೇಶದಲ್ಲಿ ಕೇವಲ ನಾಲ್ಕು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಮೂರು ಕಡೆ ಮೇಲ್ಜಾತಿಯವರು ಮುಖ್ಯಮಂತ್ರಿಳನ್ನಾಗಿ ಮಾಡಿದ್ರು ಕಾಂಗ್ರೆಸ್ ಒಬಿಸಿ ಬಗ್ಗೆ ಮಾತನಾಡ್ತಾರೆ. ಆದರೆ ರಾಜ್ಯದ ಒಬ್ಬ ಒಬಿಸಿ ಮುಖ್ಯಮಂತ್ರಿಗೆ ತೊಂದರೆ ಕೊಟ್ಟಿದ್ದಾರೆ. ಹಾಗೆಂದು ಸಿದ್ದರಾಮಯ್ಯ ಅವರೇನೂ ಭಾರೀ ಪ್ರಾಮಾಣಿಕರೆಂದೇನೂ ಹೇಳುತ್ತಿಲ್ಲ. ಆದರೆ ರಾಹುಲ್ ಗಾಂಧಿ ಸಿದ್ದರಾಮಯ್ಯರನ್ನ ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಪುನರುಚ್ಚರಿಸಿದರು.&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/union-minister-pralhad-joshi-reacts-to-siddaramaiah-s-resignation-as-cm-rav/articleshow-aicgb1c"/>
        </item>
        <item>
            <title><![CDATA[ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷಕ್ಕೆ ಅಪಾಯ, ಡಿಕೆಶಿಗೆ ಅವಕಾಶ ಕೊಡದಿದ್ರೂ ತಪ್ಪಿದ್ದಲ್ಲ ತೊಂದ್ರೆ, ಕಾಂಗ್ರೆಸ್‌ನ ಮುಂದಿನ ನಡೆ ಏನು?]]></title>
            <link>https://kannada.asianetnews.com/india-news/leadership-change-buzz-karnataka-congress-amid-high-command-s-new-political-strategy/articleshow-uluf1sm</link>
            <guid isPermaLink="true">https://kannada.asianetnews.com/india-news/leadership-change-buzz-karnataka-congress-amid-high-command-s-new-political-strategy/articleshow-uluf1sm</guid>
            <pubDate>Thu, 28 May 2026 12:30:51 +0530</pubDate>
            <description><![CDATA[&lt;p&gt;ತಮಿಳುನಾಡು ಮತ್ತು ಕೇರಳದಲ್ಲಿ ಹೊಸ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಂದುವರಿಸಬೇಕೇ ಅಥವಾ ಡಿಕೆ ಶಿವಕುಮಾರ್&zwnj;ಗೆ ಅವಕಾಶ ನೀಡಬೇಕೇ ಎಂಬ ಜಿಜ್ಞಾಸೆ ಪಕ್ಷದೊಳಗೆ ತೀವ್ರ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspnwfk02efyvrrfrk3mfq60,imgname-----------------------2026-05-28t122527.455-1779951353440.jpg" type="image/jpeg" height="390" width="690"/>
            <content:encoded><![CDATA[&lt;p&gt;ತಮಿಳುನಾಡು ಚುನಾವಣೆಯ ಬಳಿಕ ಕಾಂಗ್ರೆಸ್ ತೆಗೆದುಕೊಂಡ ನಿರ್ಧಾರ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹಲವು ವರ್ಷಗಳ ಮೈತ್ರಿ ಹೊಂದಿದ್ದ ಡಿಎಂಕೆ(Dravida Munnetra Kazhagam) ಜೊತೆಗಿನ ಸಂಬಂಧವನ್ನು ಕಡಿದು, ಹೊಸದಾಗಿ ಹೊಸದಾಗಿ ಗೆದ್ದು ಅಧಿಕಾರಕ್ಕೇರಿದ ವಿಜಯ್ ಟಿವಿಕೆ (Tamilaga Vettri Kazhagam) ಜೊತೆ ಕೈಜೋಡಿಸಿದ್ದು ಶಾಕ್ ಕೊಟ್ಟಿದ್ದಷ್ಟೇ ಅಲ್ಲ, ಕಾಂಗ್ರೆಸ್&zwnj;ನ ಹಳೆಯ ರಾಜಕೀಯ ಶೈಲಿ, ತತ್ವಗಳಿಗೆ ವಿರುದ್ಧವಾಗಿತ್ತು. ಸಾಮಾನ್ಯವಾಗಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾಂಗ್ರೆಸ್, ಈ ಬಾರಿ ಹಠಾತ್&zwnj; ನಿರ್ಧಾರ ತೆಗೆದುಕೊಂಡಿರುವುದು 'ಪಕ್ಷದಲ್ಲಿ ಹೊಸ ರಾಜಕೀಯ ಚಿಂತನೆ ಶುರುವಾಯಿತೇ?' ಎಂಬ ಪ್ರಶ್ನೆ ಹುಟ್ಟಿಸಿದೆ.&lt;/p&gt;&lt;h2&gt;ಕೇರಳದಲ್ಲಿ ಕಾರ್ಯಕರ್ತರ ಮಾತಿಗೆ ಮಣಿದ ಹೈಕಮಾಂಡ್!&lt;/h2&gt;&lt;p&gt;ಇದೇ ಸಮಯದಲ್ಲಿ ಕೇರಳದಲ್ಲೂ ಕಾಂಗ್ರೆಸ್ ಹಳೆಯ ಚಿಂತನೆಗಳಿಂದ ಹೊರಬಂದಿತು. ಸಾಮಾನ್ಯವಾಗಿ ಹೈಕಮಾಂಡ್ ಹೇಳಿದವರೇ ಮುಖ್ಯಮಂತ್ರಿ ಆಗುವ ಸಂಪ್ರದಾಯ ಇದ್ದರೂ, ಈ ಬಾರಿ ಸ್ಥಳೀಯ ಕಾರ್ಯಕರ್ತರು ಮತ್ತು ಶಾಸಕರ ಅಭಿಪ್ರಾಯಕ್ಕೆ ಹೆಚ್ಚು ಮಹತ್ವ ನೀಡಲಾಯಿತು. ಹೀಗಾಗಿ ವಿಡಿ ಸತೀಶನ್ (VD Satheesan) ಅವರಿಗೆ ಅವಕಾಶ ಸಿಕ್ಕಿತು. ಇದು ಕಾಂಗ್ರೆಸ್&zwnj;ನಲ್ಲಿ 'ದೆಹಲಿ ಹೈಕಮಾಂಡ್ ಹೇಳಿದ್ದು ಅಂತಿಮ' ಎನ್ನುವ ಸಂಸ್ಕೃತಿಗೆ ಸಣ್ಣ ಮಟ್ಟಿನ ಸವಾಲು ಎಂದು ರಾಜಕೀಯ ವಿಶ್ಲೇಷಕರು ನೋಡುತ್ತಿದ್ದಾರೆ.&lt;/p&gt;&lt;h3&gt;ಕರ್ನಾಟಕದಲ್ಲಿ ಈಗ ದೊಡ್ಡ ಪ್ರಶ್ನೆ ಸಿದ್ದರಾಮಯ್ಯ? ಡಿಕೆ ಶಿವಕುಮಾರ್?&lt;/h3&gt;&lt;p&gt;ಇನ್ನು ಕಾಂಗ್ರೆಸ್&zwnj; ಪಕ್ಷದ ಈ ರಾಜಕೀಯ ಬದಲಾವಣೆಯ ಅಲೆ ಈಗ ಕರ್ನಾಟಕಕ್ಕೂ ತಲುಪುವ ಸಾಧ್ಯತೆ ಬಗ್ಗೆ ಚರ್ಚೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮೂರು ವರ್ಷದ ಆಡಳಿತ ಪೂರ್ಣಗೊಳಿಸುತ್ತಿರುವ ಹಿನ್ನೆಲೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ (DK Shivakumar ಬೆಂಬಲಿಗರು ನಾಯಕತ್ವ ಬದಲಾವಣೆಗಾಗಿ ಒತ್ತಡ ಹೆಚ್ಚಿಸಿದ್ದಾರೆ. ಕಾಂಗ್ರೆಸ್ ಎದುರಿಸುತ್ತಿರುವ ದೊಡ್ಡ ಪ್ರಶ್ನೆ ಎಂದರೆ ಜನಮೆಚ್ಚಿನ ನಾಯಕ ಸಿದ್ದರಾಮಯ್ಯರನ್ನು ಮುಂದುವರಿಸಬೇಕಾ? ಅಥವಾ ಪಕ್ಷ ಸಂಘಟನೆಗೆ ಬಲ ತುಂಬಿರುವ, ಯಾವುದೇ ಸಮಸ್ಯೆಗಳು ಬಗೆಹರಿಸುವ ಟ್ರಬಲ್ ಶೂಟರ್ ಡಿಕೆಶಿಗೆ ಅವಕಾಶ ಕೊಡಬೇಕಾ?&lt;/p&gt;&lt;p&gt;&lt;strong&gt;ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಕಾಂಗ್ರೆಸ್&zwnj;ಗೆ ಅಪಾಯವೇ?&lt;/strong&gt;&lt;/p&gt;&lt;p&gt;ಸಿದ್ದರಾಮಯ್ಯ ಕಾಂಗ್ರೆಸ್&zwnj;ನ ಅತ್ಯಂತ ದೊಡ್ಡ ಜನ ಬೆಂಬಲ ಹೊಂದಿರುವ ನಾಯಕರಲ್ಲಿ ಒಬ್ಬರು. ವಿಶೇಷವಾಗಿ ಕಾಂಗ್ರೆಸ್ ಅಹಿಂದ ವರ್ಗ, ಕುರುಬ ಸಮುದಾಯ ಮತ್ತು ಮುಸ್ಲಿಂ ಮತ ಗಳಿಸುವಲ್ಲಿ ಅವರ ಪ್ರಭಾವ ಹೆಚ್ಚು. ಒಂದು ವೇಳೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿದರೆ, ಕಾಂಗ್ರೆಸ್ ತನ್ನ ಪ್ರಮುಖ ಮತಬ್ಯಾಂಕ್&zwnj;ಗೆ ತಪ್ಪು ಸಂದೇಶ ಹೋಗುವ ಆತಂಕವೂ ಇದೆ. 2028ರ ಚುನಾವಣೆಗೆ ಹೋಗುವಾಗ ಆಡಳಿತ ವಿರೋಧಿ ಅಲೆ ಎದುರಿಸಲು ಕಾಂಗ್ರೆಸ್&zwnj;ಗೆ ಸಿದ್ದರಾಮಯ್ಯ ಅಗತ್ಯ ಎಂಬ ಅಭಿಪ್ರಾಯ ಪಕ್ಷದೊಳಗೇ ಕೇಳಿಬರುತ್ತಿದೆ.&lt;/p&gt;&lt;p&gt;&lt;strong&gt;ಡಿಕೆಶಿಗೆ ಅವಕಾಶ ಕೊಡದಿದ್ದರೂ ಅಪಾಯ ತಪ್ಪಲ್ಲ!&lt;/strong&gt;&lt;/p&gt;&lt;p&gt;ಇನ್ನೊಂದೆಡೆ, ಡಿಕೆ ಶಿವಕುಮಾರ್ (DK Shivakumar) ಅವರಿಗೆ ಅವಕಾಶ ಸಿಗದಿದ್ದರೆ, ಪಕ್ಷದೊಳಗಿನ ಅಸಮಾಧಾನ ಹೆಚ್ಚುವ ಸಾಧ್ಯತೆ ಇದೆ. ಸಂಘಟನೆ ಬಲಪಡಿಸುವಲ್ಲಿ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಡಿಕೆಶಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಅವರನ್ನು ಮತ್ತೆ ನಿರೀಕ್ಷೆಯಲ್ಲಿ ಇಟ್ಟರೆ, ಅದು ಕಾಂಗ್ರೆಸ್ ಭವಿಷ್ಯಕ್ಕೂ ಹೊಡೆತ ಬೀಳಬಹುದು ಎಂಬ ಚರ್ಚೆ ಇದೆ.&lt;/p&gt;&lt;p&gt;&lt;strong&gt;ಕಾಂಗ್ರೆಸ್ ಮುಂದಿನ ನಿರ್ಧಾರವೇನು?&lt;/strong&gt;&lt;/p&gt;&lt;p&gt;ಇತ್ತೀಚಿನ ರಾಜಕೀಯ ನಿರ್ಧಾರಗಳನ್ನು ಗಮನಿಸಿದರೆ, ಕಾಂಗ್ರೆಸ್ ಈಗ ಸಂಪ್ರದಾಯಬದ್ಧ ರಾಜಕೀಯದಿಂದ ನಿಧಾನವಾಗಿ ಹೊರಬರುತ್ತಿದೆ ಎಂಬ ಸಂದೇಶ ಸಿಗುತ್ತಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಕಂಡ ಆಮೂಲಾಗ್ರ ಬದಲಾವಣೆಗಳ ಬಳಿಕ, ಕರ್ನಾಟಕದಲ್ಲೂ ಅಚ್ಚರಿಯ ನಿರ್ಧಾರ ಹೊರಬರುವ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ. ನಾಯಕತ್ವ ಬದಲಾವಣೆ ಆಗುತ್ತದೆಯೇ? ಅಥವಾ ಸಿದ್ದರಾಮಯ್ಯ-ಡಿಕೆ ಶಿವಕುಮಾರ ಬದಲು ಮೂರನೆಯವರಿಗೆ ಲಾಭವಾಗುತ್ತದೆಯೇ? ಎಂಬುದೀಗ ರಾಜ್ಯ ರಾಜಕೀಯದ ದೊಡ್ಡ ಕುತೂಹಲವಾಗಿದೆ.&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/india-news/leadership-change-buzz-karnataka-congress-amid-high-command-s-new-political-strategy/articleshow-uluf1sm"/>
        </item>
        <item>
            <title><![CDATA[UT Khader: ಸಿಎಂ ಬದಲಾವಣೆ ಗದ್ದಲದ ನಡುವೆ ಮತ್ತೊಂದು ಟ್ವಿಸ್ಟ್; ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್? ಹೇಳಿದ್ದೇನು?]]></title>
            <link>https://kannada.asianetnews.com/politics/ut-khader-reacts-to-deputy-cm-buzz-amid-karnataka-cabinet-reshuffle-speculation-rav/articleshow-0y5zmml</link>
            <guid isPermaLink="true">https://kannada.asianetnews.com/politics/ut-khader-reacts-to-deputy-cm-buzz-amid-karnataka-cabinet-reshuffle-speculation-rav/articleshow-0y5zmml</guid>
            <pubDate>Thu, 28 May 2026 11:35:13 +0530</pubDate>
            <description><![CDATA[&lt;p&gt;ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆಯ ಚರ್ಚೆಗಳು ಬಿರುಸುಗೊಂಡಿದ್ದು, ಡಿಸಿಎಂ ಹುದ್ದೆಗೆ ಸ್ಪೀಕರ್ ಯು.ಟಿ. ಖಾದರ್ ಹೆಸರು ಕೇಳಿಬರುತ್ತಿದೆ. ಈ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಖಾದರ್, 'ಮುಂದೇನಾಗುತ್ತೋ ಗೊತ್ತಿಲ್ಲ, ಸಮಯವೇ ನಿರ್ಧರಿಸುತ್ತದೆ' ಎಂದು ನಿಗೂಢವಾಗಿ ಉತ್ತರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krj45es1ztyfwmnykns19x7w,imgname-----------------------2026-05-14t074221.241-1778724813601.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು (ಮೇ.28): &lt;/strong&gt;ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಗದ್ದಲದ ನಡುವೆಯೇ ಹೊಸ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ, ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ.&lt;/p&gt;&lt;p&gt;ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಹೊಸ ಮುಖ್ಯಮಂತ್ರಿಯ ಸಂಪುಟ ಪುನಾರಚನೆಯಲ್ಲಿ ಯಾರಾರಿಗೆ ಸಚಿವ ಸ್ಥಾನ ಸಿಗಲಿದೆ, ಯಾರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಲೆಕ್ಕಾಚಾರ, ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿ ನಡೆಯತ್ತಿವೆ. ಮೂಲಗಳ ಪ್ರಕಾರ ಪ್ರಿಯಾಂಕ್ ಖರ್ಗೆ(Priyank Kharge) ಹಾಗೂ ಯತೀಂದರ ಸಿದ್ದರಾಮಯ್( Yathindra Siddaramaiah) ಅವರ ಹೆಸರುಗಳ ಜೊತೆ ಇದೀಗ ಹಾಲಿ ಸ್ಪೀಕರ್ ಯುಟಿ ಖಾದರ್ ( UT Khader) ಹೆಸರು ಕೂಡ ಡಿಸಿಎಂ ಹುದ್ದೆಗೆ ಕೇಳಿಬರುತ್ತಿದೆ.&lt;/p&gt;&lt;h2&gt;ಏನಾಗುತ್ತೋ ನನಗೂ ಗೊತ್ತಿಲ್ಲ ಎಂದ ಸ್ಪೀಕರ್&lt;/h2&gt;&lt;p&gt;ಈ ವಿಚಾರವಾಗಿ ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಅವರು, 'ಈಗ ನಾನು ಸ್ಪೀಕರ್ ಆಗಿದ್ದೇನೆ. ಮುಂದೆ ಏನಾಗುತ್ತದೆ ಎಂಬುದು ನನಗೂ ಗೊತ್ತಿಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ' ಎಂದು ಪ್ರತಿಕ್ರಿಯಿಸಿದರು. ರಾಜಕೀಯ ಬೆಳವಣಿಗೆಗಳ ಬಗ್ಗೆ ಹೆಚ್ಚು ಮಾತನಾಡಲು ನಿರಾಕರಿಸಿದ ಅವರು, 'ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸಮಯ ಬಂದಾಗ ಎಲ್ಲವೂ ಗೊತ್ತಾಗುತ್ತದೆ' ಎಂದರು.&lt;/p&gt;&lt;h3&gt;'ಡಿಸಿಎಂ ಪೋಸ್ಟ್&zwnj; ಹಾಕಬೇಡಿ&rsquo; ಎಂದ ಸ್ಪೀಕರ್&lt;/h3&gt;&lt;p&gt;ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ ಆಗ ಮಾತ್ರ ಸುಸೂತ್ರವಾಗಿ ಸದನ ನಡೆಸುತ್ತೇವೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ. ಹೀಗಾಗಿ ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರೂ ಸೋಷಿಯಲ್ ಮೀಡಿಯಾ ಪೋಸ್ಟ್&zwnj; ಹಾಕಬೇಡಿ. ಯಾರು ಸಿಎಂ ಆಗಬೇಕು, ಯಾರು ಮಂತ್ರಿಗಳಾಗದೇಕು ಎಲ್ಲವೂ ಪಕ್ಷದ ನಿರ್ಧಾರಕ್ಕೆ ಬಿಟ್ಟಿದ್ದು. ಎಲ್ಲ ವಿಚಾರಗಳನ್ನ ನಾನು ನಿಮ್ಮ ಮುಂದೆ ಹೇಳಿದ್ರೆ ಗುಟ್ಟು ಉಳಿಯುತ್ತದ ಎಂದು ಲಘುವಾಗಿ ನಕ್ಕರು.&lt;/p&gt;&lt;p&gt;ಎಲ್ಲಾ ವಿಚಾರಗಳು ಪಕ್ಷಕ್ಕೂ ಪಕ್ಷದ ಮುಖಂಡರಿಗೆ ಬಿಟ್ಟಿದ್ದು, ಏನು ಬರ್ತದೆ ಅಂತ ನೋಡುವ. ಇವತ್ತು ಸಂತೋಷದಿಂದ ಹಬ್ಬ ಆಚರಿಸುವ. ನಿಮಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರಲಿದೆ. ನಾನು ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಸಂತೋಷದಿಂದ ಹಬ್ಬ ಆಚರಿಸೋದು ನನ್ನ ಕರ್ತವ್ಯ ಎಂದರು&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/ut-khader-reacts-to-deputy-cm-buzz-amid-karnataka-cabinet-reshuffle-speculation-rav/articleshow-0y5zmml"/>
        </item>
        <item>
            <title><![CDATA[ರಾಜ್ಯ ರಾಜಕೀಯದಲ್ಲಿ ಕೊನೆ ಹಂತದ ಸಸ್ಪೆನ್ಸ್​:  ಡಿಕೆಶಿ ಮುಖದಲ್ಲಿ ನಿನ್ನೆಯಿದ್ದ ನಗು ಇಂದಿಲ್ಲ- ಸಿಎಂ ಖುರ್ಚಿ ಅವರಿಗಾ, ಇವರಿಗಾ]]></title>
            <link>https://kannada.asianetnews.com/gallery/politics/karnataka-cm-politics-who-will-be-the-next-cm-as-dkshi-is-not-happy-right-now-suc-g7smgt1</link>
            <guid isPermaLink="true">https://kannada.asianetnews.com/gallery/politics/karnataka-cm-politics-who-will-be-the-next-cm-as-dkshi-is-not-happy-right-now-suc-g7smgt1</guid>
            <pubDate>Thu, 28 May 2026 11:09:08 +0530</pubDate>
            <description><![CDATA[&lt;p&gt;ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿರೀಕ್ಷಿಸಲಾಗಿದ್ದು, ಪ್ರಬಲ ಆಕಾಂಕ್ಷಿ ಡಿ.ಕೆ. ಶಿವಕುಮಾರ್ ಅವರ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರ ನಡುವೆ ಪರಮೇಶ್ವರ್ ಕೂಡ ಸಿಎಂ ಆಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksphcy5h2qtc6dg98hwj0y76,imgname-dk-shivakumar-1779946649777.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿರೀಕ್ಷಿಸಲಾಗಿದ್ದು, ಪ್ರಬಲ ಆಕಾಂಕ್ಷಿ ಡಿ.ಕೆ. ಶಿವಕುಮಾರ್ ಅವರ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರ ನಡುವೆ ಪರಮೇಶ್ವರ್ ಕೂಡ ಸಿಎಂ ಆಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಕರ್ನಾಟಕದ ರಾಜಕೀಯದಲ್ಲಿ ಸದ್ಯ ಎಲ್ಲವೂ ನಿಗೂಢವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ, ಪತ್ನಿಯ ಅನಾರೋಗ್ಯದ ನಿಮಿತ್ತ ರಾಜ್ಯಪಾಲರು ಮುಂಬೈಗೆ ಹೋಗಿದ್ದಾರೆ. ಇದರಿಂದ ಸಿದ್ದರಾಮಯ್ಯನವರು ಲೋಕಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.&lt;/p&gt;&lt;img&gt;&lt;p&gt;ಅದೇ ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್​ ಅವರು ಇಂದು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆನೀಡುತ್ತಾರೆ ಎನ್ನಲಾಗುತ್ತಿದೆ. ಮುಂದಿನ ಮುಖ್ಯಮಂತ್ರಿ ಇವರೇ ಎನ್ನುವ ಕಾರಣದಿಂದ ಸಹಜವಾಗಿ ಆ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕಿದೆ.&lt;/p&gt;&lt;img&gt;&lt;p&gt;ಇದರ ನಡುವೆಯೇ, ನಿನ್ನೆ ದೆಹಲಿಯಿಂದ ಬಂದಿಳಿದಿದ್ದ ಡಿಕೆಶಿ ಅವರು ಸಹಜವಾಗಿ ಮುಖದಲ್ಲಿ ನಗುವನ್ನು ಹೊತ್ತು ತರಬೇಕಿತ್ತು. ಎಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಇದಾಗಿದೆ. ಮುಖ್ಯಮಂತ್ರಿಯ ಖುರ್ಚಿ ಏರುವ ಆ ಮುಖ ಹೇಗಿರಬೇಕೋ ಹಾಗೆ ಇಲ್ಲ. ಮುಖದಲ್ಲಿ ನಗುವಿಲ್ಲ, ಮಾತಿಲ್ಲ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸದೇ ಡಿಕೆಶಿ ಹೋಗಿದ್ದು ಹಲವಾರು ಅನುಮಾನಕ್ಕೆ ಕಾರಣವಾಗುತ್ತಿದೆ.&lt;/p&gt;&lt;img&gt;&lt;p&gt;ಇದರ ನಡುವೆಯೇ ಪರಮೇಶ್ವರ ಅವರು, ತಾವು ಸಿಎಂ ಆಗುವ ಹಂಬಲ ವ್ಯಕ್ತಪಡಿಸಿದ್ದು, ಇದಕ್ಕಾಗಿ ಭಾರಿ ಪೂಜೆ, ಹೋಮ ಹವನವನ್ನು ನಿನ್ನೆ ಮಾಡಿಸಿರುವುದಾಗಿ ವರದಿಯಾಗಿದೆ.&lt;/p&gt;&lt;img&gt;&lt;p&gt;ಈ ಮಧ್ಯೆಯೇ, ಸಿದ್ದರಾಮಯ್ಯನವರು ರಾಜೀನಾಮೆ ನೀಡಬಾರದು ಎಂದು ವಿಧಾನಸೌಧದ ಸಿಬ್ಬಂದಿ ಸೇರಿದಂತೆ ಹಲವರು ಕಣ್ಣೀರು ಹಾಕಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗುತ್ತಿದ್ದಾರೆ ಎಂದು ಅವರ ಬೆಂಬಲಿಗರು ಹರ್ಷದಿಂದ ಕುಣಿದಾಡುತ್ತಿದ್ದಾರೆ. ಇದರ ನಡುವೆಯೇ ರಾಜ್ಯ ರಾಜಕೀಯದಲ್ಲಿ ಭಾರಿ ಸಸ್ಪೆನ್ಸ್​ ಕ್ರಿಯೇಟ್​ ಆಗಿದೆ.&lt;/p&gt;]]></content:encoded>
            <category>politics</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/politics/karnataka-cm-politics-who-will-be-the-next-cm-as-dkshi-is-not-happy-right-now-suc-g7smgt1"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಮನಸಾರೆ ತಬ್ಬಿಕೊಂಡು ಕಣ್ಣೀರಿಟ್ಟ ಡಿಕೆ ಶಿವಕುಮಾರ್]]></title>
            <link>https://kannada.asianetnews.com/gallery/politics/karnataka-political-updates-dk-shivakumar-touches-siddaramaiah-feet-emotional-breaks-down-hugging-breakfast-meeting-gdp-ccoo9p9</link>
            <guid isPermaLink="true">https://kannada.asianetnews.com/gallery/politics/karnataka-political-updates-dk-shivakumar-touches-siddaramaiah-feet-emotional-breaks-down-hugging-breakfast-meeting-gdp-ccoo9p9</guid>
            <pubDate>Thu, 28 May 2026 11:02:57 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಕಾಲಿಗೆ ನಮಸ್ಕರಿಸಿ, ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು. ನಾಯಕತ್ವ ಬದಲಾವಣೆಯ ತೀವ್ರ ಕುತೂಹಲದ ನಡುವೆ, ಸಚಿವರು ಮತ್ತು ಶಾಸಕರು ಹೈಕಮಾಂಡ್ ನಿರ್ಧಾರಕ್ಕಾಗಿ ಕಾಯುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspfwb96app5rytehwxpa2ax,imgname-dks--1--1779945057574.jpg" type="image/jpeg" height="390" width="690"/>
            <content:encoded><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಕಾಲಿಗೆ ನಮಸ್ಕರಿಸಿ, ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು. ನಾಯಕತ್ವ ಬದಲಾವಣೆಯ ತೀವ್ರ ಕುತೂಹಲದ ನಡುವೆ, ಸಚಿವರು ಮತ್ತು ಶಾಸಕರು ಹೈಕಮಾಂಡ್ ನಿರ್ಧಾರಕ್ಕಾಗಿ ಕಾಯುತ್ತಿದೆ.&lt;/p&gt;&lt;img&gt;&lt;p&gt;ಬೆಂಗಳೂರು: ಕರ್ನಾಟಕ ರಾಜಕೀಯದ ಇತಿಹಾಸದಲ್ಲೇ ಅತ್ಯಂತ ಅಭೂತಪೂರ್ವ ಮತ್ತು ನಾಟಕೀಯ ವಿದ್ಯಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ಜರುಗುತ್ತಿವೆ. ಮುಖ್ಯಮಂತ್ರಿಗಳು ಕರೆದಿದ್ದ ವಿದಾಯದ ಉಪಾಹಾರ ಕೂಟದಲ್ಲಿ (Breakfast Meeting) ಭಾಗವಹಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಸಂಪುಟದ ಸಚಿವರು ಆಪ್ತರು ಬಂದಿದ್ದರು.ಝಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಸಚಿವ ಮಂಕಾಳ್ ವೈದ್ಯ ಅವರೊಂದಿಗೆ ಒಂದೇ ಕಾರಿನಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಡಿಕೆಶಿ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದು, ಅವರನ್ನು ತಬ್ಬಿಕೊಂಡು ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದಾರೆ.&lt;/p&gt;&lt;p&gt;&lt;strong&gt;ಉಪಹಾರ ಕೂಟದಲ್ಲಿ ರಾಜೀನಾಮೆ ನಿರ್ಧಾರ ಘೋಷಿಸಿದ&zwnj; ಸಿಎಂ ಸಿದ್ದರಾಮಯ್ಯ. ಡಿಕೆ ಶಿವಕುಮಾರ್&zwnj;ಗೆ ಕಂಗ್ರಾಚುಲೇಷನ್ಸ್ ಎಂದಾಗ ಡಿಕೆಶಿ ಕಾಲಿಗೆ ಎರಗಿದರು ಈ ವೇಳೆ ಸಿದ್ದರಾಮಯ್ಯ ಅಭಿನಂದನೆ ಹೇಳಿದರು.&lt;/strong&gt; ಏನು ರಾಜ್ಯಪಾಲರು ಇಲ್ವಂತಲ್ಲ, ಹೋಗ್ತೀನಿ ನೋಡೋಣ ಎಂದು ಈ ವೇಳೆ ಸಿದ್ದರಾಮಯ್ಯ ಹೇಳಿದರು. ಇನ್ನು ಉಪಹಾರ ಕೂಟಕ್ಕೂ ಮುನ್ನ 10 ನಿಮಿಷಗಳ ಕಾಲ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಪ್ರತ್ಯೇಕ ಮಾತುಕತೆ ನಡೆಸಿದರು.&lt;/p&gt;&lt;img&gt;&lt;p&gt;ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅಲ್ಲಿ ಜಮಾಯಿಸಿದ್ದ ಸಿದ್ದರಾಮಯ್ಯ ಅವರ ನೂರಾರು ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಕಾರಿಗೆ ಅಡ್ಡ ಬಂದು ಮುತ್ತಿಗೆ ಹಾಕಿದರು. ಐದು ವರ್ಷ ಸಿದ್ದರಾಮಯ್ಯ ಅವರಿಗೆ ಜೈ ಎಂದು ಘೋಷಣೆ ಕೂಗಿದ ಅಭಿಮಾನಿಗಳು, ಸಿದ್ದರಾಮಯ್ಯ ಪರವಾಗಿ ಭಾರಿ ಜೈಕಾರ ಹಾಕಿದರು.&lt;/p&gt;&lt;p&gt;ಈ ನಡುವೆ ಮುಖ್ಯಮಂತ್ರಿಗಳ ನಿವಾಸದ ಹೊರಗೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. &quot;ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟರೆ ನಾವು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್&zwnj;ಗೆ ವೋಟ್ ಹಾಕಲ್ಲ. ನಾವು ಡಿಕೆಶಿ ವಿರೋಧಿಗಳಲ್ಲ, ಅವರೂ ಸಿಎಂ ಆಗಲಿ ಎಂಬ ಆಸೆ ನಮಗಿದೆ. ಆದರೆ 2028ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಅವರು ಸಿಎಂ ಆಗಲಿ. ಈ ರೀತಿ ಸಿದ್ದರಾಮಯ್ಯ ಅವರಿಂದ ಸಿಎಂ ಸ್ಥಾನ ಕಿತ್ತುಕೊಳ್ಳುವುದು ತಪ್ಪು. ಇದರಿಂದ ಅಹಿಂದ ಮತಗಳು ಕಾಂಗ್ರೆಸ್&zwnj;ನಿಂದ ದೂರವಾಗುತ್ತವೆ&quot; ಎಂದು ಭಾವುಕರಾಗಿ ನುಡಿದರು.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆಯ ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಜಾಗರೂಕ ನಡೆ ಇಟ್ಟಿದ್ದಾರೆ. ತಮ್ಮನ್ನು ಭೇಟಿಯಾಗುತ್ತಿರುವ ಶಾಸಕರು, ಮಂತ್ರಿಗಳು ಹಾಗೂ ಬೆಂಬಲಿಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಅವರು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡುವವರೆಗೂ ಈ ರಾಜಕೀಯ ಆಟ ಮುಗಿದಿಲ್ಲ. ಆದ್ದರಿಂದ ಯಾರೂ ಸಹ ಮಾಧ್ಯಮಗಳ ಮುಂದೆ ದುಡುಕಿನ ಅಥವಾ ಅತಿರೇಕದ ಹೇಳಿಕೆಗಳನ್ನು ನೀಡಬಾರದು ಎಂದು ಎಚ್ಚರಿಸಿದ್ದಾರೆ.&lt;/p&gt;&lt;p&gt;ಹೈಕಮಾಂಡ್ ನಡೆ ಮತ್ತು ನಾಯಕತ್ವ ಬದಲಾವಣೆ ಬಗ್ಗೆ ತಮಗೇನೂ ತಿಳಿಯದಂತೆ ವರ್ತಿಸುತ್ತಿರುವ ಡಿ.ಕೆ. ಶಿವಕುಮಾರ್, ಹೈಕಮಾಂಡ್ ನನ್ನ ಜೊತೆಗೆ ನೇರವಾಗಿ ಏನನ್ನೂ ಮಾತನಾಡಿಲ್ಲ. ಏನೇ ಚರ್ಚೆಗಳಿದ್ದರೂ ಸಿದ್ದರಾಮಯ್ಯ ಅವರ ಜೊತೆಯಲ್ಲೇ ನಡೆಸಿದೆ. ಹಾಗಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಷಯ ಸೇರಿದಂತೆ ಮುಂದಿನ ಯಾವುದೇ ಪ್ರಕ್ರಿಯೆಗಳು ಸದ್ಯಕ್ಕೆ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಜಾಣ್ಮೆಯ ಮೌನ ವಹಿಸಿದ್ದಾರೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿಗಳು ರಾಜೀನಾಮೆ ಸಲ್ಲಿಸುವ ಮುನ್ನ ತಮಗೆ ಸಹಕಾರ ನೀಡಿದ ಎಲ್ಲಾ ಸಚಿವರಿಗೆ ಧನ್ಯವಾದ ಅರ್ಪಿಸಲು ಈ ಉಪಾಹಾರ ಕೂಟವನ್ನು ಕರೆದಿದ್ದಾರೆ. ಸಿದ್ದರಾಮಯ್ಯ ಅವರು ದೆಹಲಿ ರಾಜಕಾರಣಕ್ಕೆ ಹೋಗುವ ಅಥವಾ ಅವರಿಗೆ ರಾಜ್ಯಸಭೆ ಸ್ಥಾನ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕಿದೆ, ಆ ಬಗ್ಗೆ ನನಗೇನೂ ತಿಳಿದಿಲ್ಲ. ನಾಯಕತ್ವ ಬದಲಾವಣೆಯಿಂದ ಒಬಿಸಿ ಸಮುದಾಯಗಳು ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದರು.&lt;/p&gt;&lt;img&gt;&lt;p&gt;ಸದ್ಯಕ್ಕೆ ನಮಗೂ ಏನೂ ಗೊತ್ತಿಲ್ಲ. ಹೈಕಮಾಂಡ್&zwnj;ನಿಂದ ಮುಖ್ಯಮಂತ್ರಿಗಳಿಗೆ ಏನು ಸಂದೇಶ ಬಂದಿದೆ ಎಂಬುದನ್ನು ಅವರೇ ಈ ಬ್ರೇಕ್ ಫಾಸ್ಟ್ ಮೀಟಿಂಗ್&zwnj;ನಲ್ಲಿ ನಮಗೆ ತಿಳಿಸಲಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಎಲ್ಲವೂ ನಿಖರವಾಗಿ ತಿಳಿಯಲಿದೆ. ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ನಿರ್ಧಾರ ಪ್ರಕಟಿಸಿದ ಬಳಿಕವಷ್ಟೇ ನಾವು ನಮ್ಮ ಅಭಿಪ್ರಾಯ ಹೇಳುತ್ತೇವೆ&quot; ಎಂದರು.&lt;/p&gt;&lt;img&gt;&lt;p&gt;ನಿನ್ನೆ ರಾತ್ರಿಯೇ ನಾವು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೆವು. ಆದರೆ ಅವರು ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬುದು ಇನ್ನೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದಾಗಿದೆ. ಮುಂದಿನ ನಡೆಗಳೇನು ಎಂಬುದು ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನಿರ್ಧಾರವಾಗಲಿದೆ. ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು. ಈ ನಡುವೆ ಶಾಸಕರ ಭವನದಲ್ಲಿದ್ದ ಬಹುತೇಕ ಕೈ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡದೆ ಸಂಪೂರ್ಣ ಸೌಮ್ಯ ನಿಯಮ (Silent Mode) ಪಾಲಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಡಿ.ಕೆ. ಶಿವಕುಮಾರ್ (ಉಪಮುಖ್ಯಮಂತ್ರಿ), ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಸಂತೋಷ್ ಲಾಡ್. ಎಂ.ಸಿ. ಸುಧಾಕರ್, ಎಸ್.ಎಸ್. ಮಲ್ಲಿಕಾರ್ಜುನ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಎನ್. ಚಲುವರಾಯಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಮಧು ಬಂಗಾರಪ್ಪ, ಡಾ. ಎಚ್.ಸಿ. ಮಹದೇವಪ್ಪ, ಮಂಕಾಳ್ ವೈದ್ಯ, ಆರ್.ಬಿ. ತಿಮ್ಮಾಪುರ್, ಡಾ. ಶರಣಪ್ರಕಾಶ್ ಪಾಟೀಲ್, ಎನ್.ಎಸ್. ಬೋಸರಾಜು, ಕೆ.ಎಚ್. ಮುನಿಯಪ್ಪ, ಈಶ್ವರ್ ಖಂಡ್ರೆ.&lt;/p&gt;&lt;p&gt;ಉಪಾಹಾರ ಕೂಟ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದು, ಇಡೀ ರಾಜ್ಯದ ಕಣ್ಣು ಈಗ ಮುಖ್ಯಮಂತ್ರಿಗಳ ನಿವಾಸದ ಮೇಲಿದೆ&lt;/p&gt;]]></content:encoded>
            <category>politics</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/karnataka-political-updates-dk-shivakumar-touches-siddaramaiah-feet-emotional-breaks-down-hugging-breakfast-meeting-gdp-ccoo9p9"/>
        </item>
        <item>
            <title><![CDATA[ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?]]></title>
            <link>https://kannada.asianetnews.com/gallery/politics/karnataka-governor-thawar-chand-gehlot-indore-visit-cm-siddaramaiah-resignation-acceptance-rules-in-raj-bhavan-gdp-mwomdin</link>
            <guid isPermaLink="true">https://kannada.asianetnews.com/gallery/politics/karnataka-governor-thawar-chand-gehlot-indore-visit-cm-siddaramaiah-resignation-acceptance-rules-in-raj-bhavan-gdp-mwomdin</guid>
            <pubDate>Thu, 28 May 2026 10:18:55 +0530</pubDate>
            <description><![CDATA[&lt;p&gt;ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನಿರೀಕ್ಷಿತ ಪ್ರಯಾಣದಿಂದಾಗಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ, &amp;nbsp; ರಾಜೀನಾಮೆ ಪತ್ರ ಸಲ್ಲಿಸಲು &amp;nbsp;ಇರುವ ನಿಯಮಗಳೇನು?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspde18ejn7d2bhmf0wqe6q7,imgname-kempegowda-international-airport--1--1779942491406.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನಿರೀಕ್ಷಿತ ಪ್ರಯಾಣದಿಂದಾಗಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ, &amp;nbsp; ರಾಜೀನಾಮೆ ಪತ್ರ ಸಲ್ಲಿಸಲು &amp;nbsp;ಇರುವ ನಿಯಮಗಳೇನು?&lt;/p&gt;&lt;img&gt;&lt;p&gt;ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಭಾರಿ ರೋಚಕ ತಿರುವುಗಳು ಸಿಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಹೊಸದೊಂದು ಗೊಂದಲಕ್ಕೆ ಸಿಲುಕಿದೆ. ಹೈಕಮಾಂಡ್ ಸೂಚನೆಯಂತೆ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡಲು ಸರ್ವಸನ್ನದ್ಧರಾಗಿದ್ದ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮಧ್ಯಪ್ರದೇಶದ ಇಂದೋರ್&zwnj;ಗೆ ಪ್ರಯಾಣ ಬೆಳೆಸಿರುವುದು ರಾಜೀನಾಮೆ ಬಗ್ಗೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.&lt;/p&gt;&lt;img&gt;&lt;p&gt;ಮೂಲಗಳ ಪ್ರಕಾರ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪತ್ನಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಅವರು ತುರ್ತಾಗಿ ಇಂದೋರ್&zwnj;ಗೆ ತೆರಳಿದ್ದಾರೆ. ಬುಧವಾರ ರಾತ್ರಿ 11:45 ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ರಾಜ್ಯಪಾಲರು, ರಾತ್ರಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಮುಂಜಾನೆ 7 ಗಂಟೆಯ ವಿಮಾನದ ಮೂಲಕ ಮುಂಬೈನಿಂದ ಇಂದೋರ್&zwnj;ಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯಪಾಲರು ಬೆಂಗಳೂರಿಗೆ ಮರಳಿ ಬರುವ ಅಧಿಕೃತ ವೇಳಾಪಟ್ಟಿ ಇನ್ನೂ ಖಚಿತವಾಗಿಲ್ಲ. ಆದರೆ, ನಾಳೆ ಅಂದರೆ ಶುಕ್ರವಾರ ಕರ್ನಾಟಕಕ್ಕೆ ಉಪರಾಷ್ಟ್ರಪತಿಗಳು ಭೇಟಿ ನೀಡಲಿರುವ ಕಾರ್ಯಕ್ರಮ ಇರುವುದರಿಂದ, ರಾಜ್ಯಪಾಲರು ಇಂದು ಸಂಜೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆಯೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದರು. ಇದಕ್ಕೆ ಸ್ಪಂದಿಸಿದ್ದ ರಾಜಭವನ, ಬೆಳಗ್ಗೆ 11:30 ಅಥವಾ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶ ನೀಡಿತ್ತು. ಆದರೆ ಈಗ ರಾಜ್ಯಪಾಲರೇ ನಗರದಲ್ಲಿ ಇಲ್ಲದಿರುವುದರಿಂದ ಸಿದ್ದರಾಮಯ್ಯ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಮೂಡಿದೆ.&lt;/p&gt;&lt;p&gt;ರಾಜಭವನದ ಅಧಿಕೃತ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ (ಸೆಕ್ರೆಟರಿ) ಪ್ರಭುಶಂಕರ್ ಅವರಿಗೆ ಸಲ್ಲಿಕೆ ಮಾಡಲು ಕಾನೂನಾತ್ಮಕವಾಗಿ ಅವಕಾಶವಿದೆ. ಸಿದ್ದರಾಮಯ್ಯ ಅವರು ಮಧ್ಯಾಹ್ನದ ಬಳಿಕ ರಾಜಭವನಕ್ಕೆ ತೆರಳಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದರೂ, ಅದರ ಅಂತಿಮ ನಿರ್ಧಾರವನ್ನು ರಾಜ್ಯಪಾಲರೇ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯಪಾಲರು ಬೆಂಗಳೂರಿಗೆ ವಾಪಸ್ ಬಂದ ನಂತರ, ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಖುದ್ದಾಗಿ ಕರೆಸಿ, ರಾಜೀನಾಮೆಯನ್ನು ಖಚಿತಪಡಿಸಿಕೊಂಡ ಬಳಿಕವಷ್ಟೇ ಅದನ್ನು ಅಧಿಕೃತವಾಗಿ ಅಂಗೀಕರಿಸಲಿದ್ದಾರೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಾಜಭವನದತ್ತ ಧಾವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರಾಜಭವನದ ಸುತ್ತಮುತ್ತ ಬ್ಯಾರಿಕೇಡ್&zwnj;ಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್&zwnj;ನಲ್ಲಿ ತಂಗಿರುವ ಅವರು, ಹೈಕಮಾಂಡ್&zwnj;ನ ರಾಯಭಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಅಧಿಕೃತಗೊಳ್ಳುತ್ತಿದ್ದಂತೆ, ಸುರ್ಜೇವಾಲಾ ಅವರನ್ನು ಭೇಟಿಯಾಗಲು ಕಾಂಗ್ರೆಸ್&zwnj;ನ ಹಿರಿಯ ಮುಖಂಡರು ಹಾಗೂ ಸಚಿವರು ಹೋಟೆಲ್&zwnj;ಗೆ ದೌಡಾಯಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು? ಶಾಸಕಾಂಗ ಪಕ್ಷದ (CLP) ಸಭೆಯನ್ನು ಯಾವಾಗ ಕರೆಯಬೇಕು? ಎಂಬಿತ್ಯಾದಿ ಹೈವೋಲ್ಟೇಜ್ ಚರ್ಚೆಗಳು ಇಂದು ಸಂಜೆಯೊಳಗೆ ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆಯಿದೆ.&lt;/p&gt;]]></content:encoded>
            <category>politics</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/karnataka-governor-thawar-chand-gehlot-indore-visit-cm-siddaramaiah-resignation-acceptance-rules-in-raj-bhavan-gdp-mwomdin"/>
        </item>
        <item>
            <title><![CDATA[Siddaramaiah: ಸಿದ್ದರಾಮಯ್ಯ ಇಂದೇ ರಾಜೀನಾಮೆ? ರಾಜ್ಯ ರಾಜಕೀಯದಲ್ಲಿ ಬಿರುಗಾಳಿ, ಮುಂದಿನ ಸಿಎಂ ಪರಮೇಶ್ವರ್?]]></title>
            <link>https://kannada.asianetnews.com/politics/karnataka-cm-post-tussle-will-siddaramaiah-resign-today-g-parameshwara-next-cm-rav/articleshow-9wux5p4</link>
            <guid isPermaLink="true">https://kannada.asianetnews.com/politics/karnataka-cm-post-tussle-will-siddaramaiah-resign-today-g-parameshwara-next-cm-rav/articleshow-9wux5p4</guid>
            <pubDate>Thu, 28 May 2026 09:32:53 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಸಾಧ್ಯತೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ, ದಲಿತ ಸಿಎಂ ಕೂಗು ಕೇಳಿಬರುತ್ತಿದ್ದು, ಜಿ. ಪರಮೇಶ್ವರ್ ಅವರ ಹೆಸರು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kspbrdyt6qnwp348kbcag23j,imgname-----------------------2026-05-28t092826.577-1779940734938.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28):&lt;/strong&gt; ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಲೋಕಭವನದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ರಾಜೀನಾಮೆ ನೀಡುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಬಲಿಗರು, ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಲೋಕಭವನದ ಸುತ್ತ ಬ್ಯಾರಿಕೇಡ್&zwnj;ಗಳನ್ನು ಅಳವಡಿಸಿದ್ದು, ಮಧ್ಯಾಹ್ನದ ಬಳಿಕ ಸಿಎಂ ರಾಜೀನಾಮೆ ಸಲ್ಲಿಸಬಹುದು ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.&lt;/p&gt;&lt;h2&gt;ರಾಜೀನಾಮೆ ಪ್ರಕ್ರಿಯೆ ಹೇಗೆ ನಡೆಯಲಿದೆ?&lt;/h2&gt;&lt;p&gt;ಮೂಲಗಳ ಪ್ರಕಾರ, ರಾಜ್ಯಪಾಲರು ಬೇರೆಡೆ ಪ್ರಯಾಣದಲ್ಲಿರುವುದರಿಂದ ಸಿಎಂ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಆದರೆ ಅಂತಿಮವಾಗಿ ರಾಜ್ಯಪಾಲರೇ ರಾಜೀನಾಮೆ ಖಚಿತಪಡಿಸಿಕೊಳ್ಳಬೇಕಾಗುತ್ತದೆ. ರಾಜಭವನದಿಂದಲೂ ಇದೇ ನಿಯಮ ಅನ್ವಯವಾಗುತ್ತದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಉಪರಾಷ್ಟ್ರಪತಿಗಳ ಕರ್ನಾಟಕಕ್ಕೆ ಆಗಮಿಸುತ್ತಿರುವುದರಿಂದ ರಾಜ್ಯಪಾಲರು ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದು, ಬಳಿಕ ರಾಜಕೀಯ ಪ್ರಕ್ರಿಯೆ ವೇಗ ಪಡೆಯುವ ಸಾಧ್ಯತೆ ಇದೆ.&lt;/p&gt;&lt;h3&gt;ಸಿಎಂ ಸ್ಥಾನಕ್ಕೆ ಪರಮೇಶ್ವರ್ ಹೆಸರು ಮುನ್ನೆಲೆಗೆ!&lt;/h3&gt;&lt;p&gt;ಸಿಎಂ ಬದಲಾವಣೆ ಚರ್ಚೆಗಳ ನಡುವೆಯೇ ಜಿ ಪರಮೇಶ್ವರ (G.Parameshwara) ಅವರ ಹೆಸರು ಕಾಂಗ್ರೆಸ್ ವಲಯದಲ್ಲಿ ಮುನ್ನೆಲೆಗೆ ಬಂದಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಆದರೆ ಸಿದ್ದರಾಮಯ್ಯ ಅವರ ಒಂದು ಬಣ ದಲಿತ ಸಿಎಂ ದಾಳ ಉರುಳಿಸಿದರೆ ಜಿ ಪರಮೇಶ್ವರ್ ಅವರೇ ಸಿಎಂ ಮಾಡುವಂತೆ ಪಟ್ಟು ಹಿಡಿಯುವ ಸಾಧ್ಯತೆಯೂ ಇದೆ. ಈ ಹಿನ್ನೆಲೆ ಇಂದು ಸಿಎಲ್&zwnj;ಪಿ ಸಭೆ ನಡೆಯಲಿದ್ದು, ಪರಮೇಶ್ವರ್ ಹೆಸರನ್ನು ಪ್ರಸ್ತಾಪಿಸಲು ಕೆಲ ಶಾಸಕರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ದಲಿತ ನಾಯಕನಿಗೆ ಅವಕಾಶ ನೀಡಬೇಕು ಎಂಬ ಒತ್ತಾಯವೂ ಪಕ್ಷದೊಳಗೆ ಕೇಳಿಬರುತ್ತಿದೆ. ಸಿದ್ದರಾಮಯ್ಯ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಲಕ್ಷಣ ಕಾಣದ ಹಿನ್ನೆಲೆ, ಪರ್ಯಾಯ ನಾಯಕತ್ವದ ಚರ್ಚೆ ತೀವ್ರಗೊಂಡಿದೆ.&lt;/p&gt;&lt;p&gt;&lt;strong&gt;ಪರಮೇಶ್ವರ್ ನಿವಾಸಕ್ಕೆ ಶಾಸಕ ರಂಗನಾಥ್ ಭೇಟಿ!&lt;/strong&gt;&lt;/p&gt;&lt;p&gt;ಈ ಎಲ್ಲ ರಾಜಕೀಯ ಬೆಳವಣಿಗೆಗಳ ನಡುವೆ ಕುಣಿಗಲ್ ಶಾಸಕ ಡಾ ಹೆಚ್&zwnj;ಡಿ ರಂಗನಾಥ(Dr HD Ranganath) ಅವರು ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಸ್ವತಃ ಕಾರು ಚಾಲನೆ ಮಾಡಿಕೊಂಡು ಬಂದ ರಂಗನಾಥ್ ಸುಮಾರು 15 ನಿಮಿಷಗಳ ಕಾಲ ಪರಮೇಶ್ವರ್ ಜೊತೆ ಮಾತುಕತೆ ನಡೆಸಿದರು. ಆದರೆ ಭೇಟಿಯ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೇ &lsquo;ನೋ ಕಾಮೆಂಟ್&rsquo; ಎಂದಷ್ಟೇ ಹೇಳಿ ತೆರಳಿದರು. ನಾಯಕರ ಮೌನ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಅನುಮಾನಗಳಿಗೆ ಕಾರಣವಾಗಿದೆ.&lt;/p&gt;]]></content:encoded>
            <category>politics</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/karnataka-cm-post-tussle-will-siddaramaiah-resign-today-g-parameshwara-next-cm-rav/articleshow-9wux5p4"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರವಾಸಕ್ಕೆ ಸಿದ್ಧತೆ, ನಿವಾಸಕ್ಕೆ ಸಚಿವರ ದಂಡು]]></title>
            <link>https://kannada.asianetnews.com/politics/karnataka-political-twist-siddaramaiah-plans-sudden-delhi-visit-to-meet-rahul-gandhi-before-crucial-clp-meet-gdp/articleshow-7kgpvua</link>
            <guid isPermaLink="true">https://kannada.asianetnews.com/politics/karnataka-political-twist-siddaramaiah-plans-sudden-delhi-visit-to-meet-rahul-gandhi-before-crucial-clp-meet-gdp/articleshow-7kgpvua</guid>
            <pubDate>Thu, 28 May 2026 09:26:13 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಹಸನದ ನಡುವೆ, ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದಿಢೀರ್ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಸಿಎಲ್&zwnj;ಪಿ ಸಭೆಗೂ ಮುನ್ನವೇ ನಡೆಯಬಹುದಾದ ಈ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಸಚಿವರು ಸಿಎಂ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಹಸನದ ಬೆನ್ನಲ್ಲೇ, ಅವರು ಮತ್ತೊಮ್ಮೆ ದೇಶದ ರಾಜಧಾನಿ ಹೊಸದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ದಿಢೀರ್ ದೆಹಲಿ ವಿಮಾನ ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ರಾಜ್ಯ ರಾಜಕೀಯದ ಮುಂದಿನ ನಡೆಗಳ ಕುರಿತು ತೀವ್ರ ಕುತೂಹಲ ಮೂಡಿಸಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ, ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವುದು ಈ ಪ್ರವಾಸದ ಮುಖ್ಯ ಉದ್ದೇಶ ಎನ್ನಲಾಗಿದೆ. ತಮಗೆ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಜನಸೇವೆ ಮಾಡಲು ಹೈಕಮಾಂಡ್ ಮುಕ್ತ ಅವಕಾಶ ನೀಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲು ಅವರು ಈ ಭೇಟಿಯನ್ನು ಬಳಸಿಕೊಳ್ಳಲಿದ್ದಾರೆ.&lt;/p&gt;&lt;h2&gt;ಸಿಎಲ್&zwnj;ಪಿ ಸಭೆಗೂ ಮುನ್ನವೇ ದೆಹಲಿ ಪ್ರವಾಸ? ಮೂಡಿದ ಹೊಸ ಟ್ವಿಸ್ಟ್!&lt;/h2&gt;&lt;p&gt;ಪ್ರಸ್ತುತ ಕಾಂಗ್ರೆಸ್ ವಲಯದಲ್ಲಿ ಶಾಸಕಾಂಗ ಪಕ್ಷದ (CLP) ಸಭೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಅಧಿಕೃತವಾಗಿ ನಿಗದಿಯಾಗಿಲ್ಲ. ಹೈಕಮಾಂಡ್ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ದೇಶನವನ್ನು ನೀಡಿಲ್ಲ. ಈ ನಡುವೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ನಡೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.&lt;/p&gt;&lt;h2&gt;ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಚರ್ಚೆ&lt;/h2&gt;&lt;p&gt;ಸಿದ್ದರಾಮಯ್ಯ ಅವರು ಸಿಎಲ್&zwnj;ಪಿ ಸಭೆಯ ಬಳಿಕ ದೆಹಲಿಗೆ ಹೋಗುತ್ತಾರಾ? ಅಥವಾ ಸಭೆಗೂ ಮುನ್ನವೇ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಾರಾ? ಎಂಬ ಕುತೂಹಲ ಮೂಡಿದೆ. ಒಂದು ವೇಳೆ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಸಿದ್ದರಾಮಯ್ಯ ದೆಹಲಿ ತಲುಪಿದರೆ, ರಾಜ್ಯ ರಾಜಕೀಯ ಮತ್ತೊಂದು ಪ್ರಮುಖ ಟ್ವಿಸ್ಟ್ ಪಡೆಯುವ ಸಾಧ್ಯತೆಯಿದೆ. ಹೈಕಮಾಂಡ್ ಮಟ್ಟದಲ್ಲಿ ತಮಗೆ ಆಪ್ತರಾಗಿರುವ ನಾಯಕರನ್ನು ಹುದ್ದೆಗೆ ತರಲು ಅಥವಾ ಮುಂದಿನ ರಾಜಕೀಯ ತಂತ್ರಗಾರಿಕೆಗೆ ಹೊಸ ದಾಳ ಉರುಳಿಸಲು ಸಿದ್ದರಾಮಯ್ಯ ಅವರಿಗೆ ಇದು ಸೂಕ್ತ ವೇದಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.&lt;/p&gt;&lt;h2&gt;ಸಿಎಂ ನಿವಾಸಕ್ಕೆ ಸಚಿವರ ದಂಡು&lt;/h2&gt;&lt;p&gt;ದೆಹಲಿ ಪ್ರವಾಸದ ವದಂತಿಗಳ ಬೆನ್ನಲ್ಲೇ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಸಚಿವರು ಹಾಗೂ ಪ್ರಮುಖ ನಾಯಕರ ದಂಡೇ ಆಗಮಿಸುತ್ತಿದೆ.&lt;/p&gt;&lt;p&gt;ಇಂದು ಬೆಳಿಗ್ಗೆಯಿಂದಲೇ ವಿಶೇಷವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ , ಸಚಿವರಾದ ಎಂ.ಸಿ. ಸುಧಾಕರ್, ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್ ಮತ್ತು ಬೈರತಿ ಸುರೇಶ್ ಅವರು ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ಮತ್ತು ಎನ್.ಎಸ್. ಬೋಸರಾಜು ಅವರೂ ಸಹ ಸಿಎಂ ನಿವಾಸಕ್ಕೆ ಆಗಮಿಸಿ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದಾರೆ.&lt;/p&gt;&lt;p&gt;ಒಟ್ಟಾರೆಯಾಗಿ, ಸಿಎಲ್&zwnj;ಪಿ ಸಭೆಯ ಗೊಂದಲ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಇಡೀ ರಾಜ್ಯದ ಗಮನವನ್ನು ಸೆಳೆದಿದ್ದು, ಇಂದು ಸಂಜೆಯ ವೇಳೆಗೆ ಮುಂದಿನ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆಯಿದೆ.&lt;/p&gt;]]></content:encoded>
            <category>politics</category>
            <dc:creator>Gowthami K</dc:creator>
            <atom:link href="https://kannada.asianetnews.com/politics/karnataka-political-twist-siddaramaiah-plans-sudden-delhi-visit-to-meet-rahul-gandhi-before-crucial-clp-meet-gdp/articleshow-7kgpvua"/>
        </item>
        <item>
            <title><![CDATA[Karnataka CM change Buzz: ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದು ದಾಖಲೆ ಅಲ್ಲ - ಬಿ.ವೈ.ವಿಜಯೇಂದ್ರ ವಾಗ್ದಾಳಿ]]></title>
            <link>https://kannada.asianetnews.com/state/karnataka-politics-live-27-may-2026-cm-siddaramaiah-change-buzz-dk-shivakumar-congress-high-command-mrq/liveblog-updates-2aw7pkr</link>
            <guid isPermaLink="true">https://kannada.asianetnews.com/state/karnataka-politics-live-27-may-2026-cm-siddaramaiah-change-buzz-dk-shivakumar-congress-high-command-mrq/liveblog-updates-2aw7pkr</guid>
            <pubDate>Wed, 27 May 2026 21:45:03 +0530</pubDate>
            <description><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯ ರಾಜಕಾರಣದ ಬದಲಾವಣೆಗಳ ಕುರಿತು ಮಂಗಳವಾರದ ದೆಹಲಿ ಸಭೆಯಲ್ಲಿ ಮಹತ್ವದ ಚರ್ಚೆಯಾಗಿರುವ ಬೆನ್ನಲ್ಲೇ ಬುಧವಾರ ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ. ರಾಜ್ಯ ರಾಜಕೀಯ ವಲಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಪುಟ ಸಹೋದ್ಯೋಗಿಗಳನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ.&lt;/p&gt;&lt;p&gt;ಸಂಪುಟದ ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರಕ್ಕೆ ಕರೆದಿದ್ದು, ಬಳಿಕ ಯಾವ ಬೆಳವಣಿಗೆಗಳು ನಡೆಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.&lt;/p&gt;&lt;p&gt;ದೆಹಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಪರೋಕ್ಷ ಸಂದೇಶ ರವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪಹಾರ ಕೂಟ ಕರೆದಿರುವುದು ಮಹತ್ವ ಪಡೆದುಕೊಂಡಿದ್ದು, ಬಳಿಕ ರಾಜಕೀಯವಾಗಿ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wp2b5v03z6v8krfh3yrqaf,imgname-gnghmn-1757604293819.png" type="image/jpeg" height="390" width="690"/>
            <category>politics</category>
            <dc:creator>Asianet News</dc:creator>
            <atom:link href="https://kannada.asianetnews.com/state/karnataka-politics-live-27-may-2026-cm-siddaramaiah-change-buzz-dk-shivakumar-congress-high-command-mrq/liveblog-updates-2aw7pkr"/>
        </item>
        <item>
            <title><![CDATA[G Parameshwar: ಸಂಜೆವರೆಗೆ ಮನೆಯಿಂದ ಹೊರಬರದ ಪರಮೇಶ್ವರ್, ವಿಶೇಷ ಹೋಮ, ಪೂಜೆ ಬಳಿಕ ಸಿಎಂ ಭೇಟಿ!]]></title>
            <link>https://kannada.asianetnews.com/politics/karnataka-cm-change-tussle-special-puja-at-home-minister-parameshwara-s-house-rav/articleshow-6d367qe</link>
            <guid isPermaLink="true">https://kannada.asianetnews.com/politics/karnataka-cm-change-tussle-special-puja-at-home-minister-parameshwara-s-house-rav/articleshow-6d367qe</guid>
            <pubDate>Thu, 28 May 2026 04:26:45 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಯ ಚರ್ಚೆ ಸೇರಿದಂತೆ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದರೂ ಗೃಹ ಸಚಿವ ಡಾ.ಜಿ.ಪರಮೇಶ್ವರ್&zwnj;(Dr G Parameshwar) ಬುಧವಾರ ಸಂಜೆವರೆಗೆ ಮನೆಯಿಂದ ಹೊರಗೆ ಬರದೆ ಕುತೂಹಲ ಮೂಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kngrvkeqwbnbhtc5nmyzawas,imgname-cm-siddaramaiah-parameshwar-dk-shivakumar-1775458176469.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.28) &lt;/strong&gt;ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಯ ಚರ್ಚೆ ಸೇರಿದಂತೆ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದರೂ ಗೃಹ ಸಚಿವ ಡಾ.ಜಿ.ಪರಮೇಶ್ವರ್&zwnj;(Dr G Parameshwar) ಬುಧವಾರ ಸಂಜೆವರೆಗೆ ಮನೆಯಿಂದ ಹೊರಗೆ ಬರದೆ ಕುತೂಹಲ ಮೂಡಿಸಿದರು.&lt;/p&gt;&lt;h2&gt;ಸಂಜೆವರೆಗೆ ಮನೆಯಿಂದ ಹೊರಬರದೆ ಮನೆಯಲ್ಲಿದ್ದ ಗೃಹಸಚಿವ&lt;/h2&gt;&lt;p&gt;ನಾಯಕತ್ವ ಬದಲಾವಣೆ ಕುರಿತಂತೆ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದೆ. ಬಹುತೇಕ ಎಲ್ಲ ಶಾಸಕರು, ಸಚಿವರು ದಿನವಿಡೀ ಚಟುವಟಿಕೆಯಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ನಿವಾಸ, ರಾಜ್ಯ ಕಾಂಗ್ರೆಸ್&zwnj; ಉಸ್ತುವಾರಿ ರಣದೀಪ್&zwnj; ಸುರ್ಜೇವಾಲಾ(Randeep surjewala) ಭೇಟಿಯಲ್ಲಿ ತೊಡಗಿದ್ದರು. ಆದರೆ, ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಡಾ.ಪರಮೇಶ್ವರ್&zwnj; ಮಾತ್ರ ಸಂಜೆವರೆಗೆ ಮನೆಯಲ್ಲಿಯೇ ಇದ್ದರು.&lt;/p&gt;&lt;h3&gt;ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲಿ ಹೋಮ, ವಿಶೇಷ ಪೂಜೆ&lt;/h3&gt;&lt;p&gt;ಬುಧವಾರ ಬೆಳಗ್ಗೆ ತಮ್ಮ ಮನೆಯಲ್ಲಿ ಏರ್ಪಡಿಸಿದ್ದ ಹೋಮ, ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಡಾ.ಪರಮೇಶ್ವರ್&zwnj;, ಮಧ್ಯಾಹ್ನದ ನಂತರ ಮನೆಯಲ್ಲಿ ರಿಲ್ಯಾಕ್ಸಾಗಿದ್ದರು. ಸಂಜೆ 6 ಗಂಟೆ ವೇಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕಾಗಮಿಸಿ ಅವರೊಂದಿಗೆ ಚರ್ಚೆ ನಡೆಸಿದರು. ನಂತರ ಸಿದ್ದರಾಮಯ್ಯ ನಿವಾಸಕ್ಕಾಗಮಿಸಿದ ಸುರ್ಜೇವಾಲಾ ಅವರೊಂದಿಗೂ ಪ್ರತ್ಯೇಕ ಮಾತುಕತೆ ನಡೆಸಿದರು.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-cm-change-tussle-special-puja-at-home-minister-parameshwara-s-house-rav/articleshow-6d367qe"/>
        </item>
        <item>
            <title><![CDATA[ಸಿಎಂ ರಾಜೀನಾಮೆ ತಡೆಯಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದ ಆಪ್ತರು! ಸಿದ್ದರಾಮಯ್ಯ ಹೇಳಿದ ಆ ಮಾತಿಗೆ ಹಿಂದೆ ಸರಿದಿದ್ದೇಕೆ?]]></title>
            <link>https://kannada.asianetnews.com/politics/karnataka-cm-change-tussle-will-siddaramaiah-resign-today-rav/articleshow-a8zd4ge</link>
            <guid isPermaLink="true">https://kannada.asianetnews.com/politics/karnataka-cm-change-tussle-will-siddaramaiah-resign-today-rav/articleshow-a8zd4ge</guid>
            <pubDate>Thu, 28 May 2026 05:38:11 +0530</pubDate>
            <description><![CDATA[&lt;p&gt;Will Siddaramaiah resign today ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಆದೇಶದಂತೆ ರಾಜೀನಾಮೆ ನೀಡುವ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ತಮ್ಮ ರಾಜೀನಾಮೆಯನ್ನು ತಡೆಯಲು ಆಪ್ತ ಸಚಿವರು ಮತ್ತು ಶಾಸಕರು ನಡೆಸಿದ ಸಹಿ ಸಂಗ್ರಹದಂತಹ ಪ್ರಯತ್ನಗಳನ್ನು ಅವರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksjd5pspzg4m9d5c3tp78csb,imgname-untitled-design---2026-05-26t203502.927-1779808000822.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಸಹಿ ಸಂಗ್ರಹ ಮಾಡದಂತೆ ಸಿಎಂ ತಾಕೀತು।&amp;nbsp;&lt;/li&gt; &lt;li&gt;ರಾಜೀನಾಮೆ ಬಳಿಕ ಹೈಕಮಾಂಡ್&zwnj; ಬಳಿ ಹೋಗಿ: ಸಿದ್ದು&lt;/li&gt;&lt;/ul&gt;&lt;p&gt;&lt;strong&gt;&amp;nbsp;ಬೆಂಗಳೂರು (ಮೇ.28): &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡದಂತೆ ತಡೆಯಲು ಆಪ್ತ ನಾಯಕರು ತೀವ್ರ ಒತ್ತಡ ಹಾಕಿದ್ದು, ಅಗತ್ಯವಾದರೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಶಾಸಕರ ಸಹಿ ಸಂಗ್ರಹ ನಡೆಸೋಣ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಪಟ್ಟುಹಿಡಿದಿದ್ದರು ಎಂದು ತಿಳಿದುಬಂದಿದೆ.&lt;/p&gt;&lt;p&gt;ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಜತೆಗೆ ಯಾವುದೇ ಕಾರಣಕ್ಕೂ ಸಹಿ ಸಂಗ್ರಹದಂತಹ ಪ್ರಯತ್ನ ಮಾಡಬೇಡಿ ಎಂದು ತಮ್ಮ ಬೆಂಬಲಿಗರಿಗೆ ತಾಕೀತು ಮಾಡಿದರು ಎಂದು ಮೂಲಗಳು ಹೇಳಿವೆ.&lt;/p&gt;&lt;p&gt;ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಹಿರಿಯ ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಜಮೀರ್&zwnj; ಅಹ್ಮದ್&zwnj; ಖಾನ್&zwnj;, ಎಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್&zwnj; ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಭೇಟಿ ಮಾಡಿದ್ದರು. ಈ ವೇಳೆ ಕೆಲ ಸಚಿವರು ಹಾಗೂ ಶಾಸಕರು, ಹೈಕಮಾಂಡ್ ನಾಯಕರು ನಿಮಗೆ ರಾಜೀನಾಮೆ ನೀಡಲು ಹೇಳಿರಬಹುದು. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆಯೂ ಸೇರಿ ಯಾವುದರ ಬಗ್ಗೆಯೂ ಸ್ಪಷ್ಟತೆ ನೀಡಿಲ್ಲ. ಹೀಗಾಗಿ ಆತುರದ ನಿರ್ಧಾರ ಮಾಡಬೇಡಿ ಎಂದು ಒತ್ತಡ ಹೇರಲು ಯತ್ನಿಸಿದರು.&lt;/p&gt;&lt;p&gt;\Bರಾಹುಲ್ ಗಾಂಧಿ ಹೇಳಿದ್ದು, ರಾಜೀನಾಮೆ ನೀಡುವೆ:\B&lt;/p&gt;&lt;p&gt;ಅಲ್ಲದೆ, ರಾಜೀನಾಮೆಗೆ ಸೂಚನೆ ನೀಡಿರುವ ಹೈಕಮಾಂಡ್&zwnj; ನಿರ್ಣಯದ ವಿರುದ್ಧ ಸಹಿ ಸಂಗ್ರಹ ಮಾಡುವುದಾಗಿಯೂ ಪಟ್ಟು ಹಿಡಿದರು. ಆದರೆ, ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಸಿದ್ದರಾಮಯ್ಯ ಇಂತಹ ಅಚಾತುರ್ಯಕ್ಕೆ ಕೈ ಹಾಕಬೇಡಿ. ರಾಹುಲ್&zwnj; ಗಾಂಧಿ ಅವರು ನನಗೆ ನೇರವಾಗಿ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ನೀಡುತ್ತೇನೆ ನನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ನೀವು ವರಿಷ್ಠರ ಬಳಿಗೆ ಹೋಗುವುದಾದರೆ ನಾನು ರಾಜೀನಾಮೆ ನೀಡಿದ ಬಳಿಕ ಹೋಗಿ ನಿಮ್ಮ ಅಭಿಪ್ರಾಯ ಹೇಳಿ. ಆದರೆ, ನಾನಂತೂ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದಷ್ಟೇ ಹೇಳಿದರು ಎಂದು ತಿಳಿದುಬಂದಿದೆ.&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-cm-change-tussle-will-siddaramaiah-resign-today-rav/articleshow-a8zd4ge"/>
        </item>
        <item>
            <title><![CDATA[Karnataka Political Update Live: ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನುಮಾನ]]></title>
            <link>https://kannada.asianetnews.com/state/karnataka-politics-live-28-may-2026-cm-siddaramaiah-resignation-updates-dk-shivakumar-congress-high-command-gdp/liveblog-updates-datmism</link>
            <guid isPermaLink="true">https://kannada.asianetnews.com/state/karnataka-politics-live-28-may-2026-cm-siddaramaiah-resignation-updates-dk-shivakumar-congress-high-command-gdp/liveblog-updates-datmism</guid>
            <pubDate>Thu, 28 May 2026 07:40:36 +0530</pubDate>
            <description><![CDATA[&lt;p&gt;ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡಲು ಸಜ್ಜಾಗಿರುವ ಸಂದರ್ಭದಲ್ಲೇ ರಾಜ್ಯಪಾಲ ಥಾವರ್&zwnj;ಚಂದ್&zwnj; ಗೆಹಲೋತ್&zwnj; ಅವರು ಬುಧವಾರ ರಾತ್ರಿ ದಿಢೀರ್&zwnj; ತಮ್ಮ ತವರು ರಾಜ್ಯ ಮಧ್ಯಪ್ರದೇಶದ ಇಂದೋರ್&zwnj;ಗೆ ತೆರಳಿದ್ದಾರೆ. ಅಲ್ಲಿಂದ ಈಗ ಮುಂಬೈಗೆ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ತಮ್ಮ ತವರಿಗೆ ತೆರಳಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ಬರುವವರೆಗೆ ಕಾಯುತ್ತಾರೋ ಅಥವಾ ಲೋಕಭವನಕ್ಕೆ ತೆರಳಿ ರಾಜೀನಾಮೆ ಕೊಟ್ಟು ಬರುತ್ತಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.&amp;nbsp;&lt;/p&gt;&lt;p&gt;ಇದರ ಜೊತೆಗೆ ವರದಿ ಪ್ರಕಾರ ದಿಢೀರ್ ರಾಜ್ಯಪಾಲರ ಇಂದೋರ್ ಪ್ರವಾಸದಿಂದ ಅವರು ವಾಪಸ್ ಬರುವ ಬಗ್ಗೆ ಇನ್ನೂ ವೇಳಾಪಟ್ಟಿ ಖಚಿತವಾಗಿಲ್ಲ. ರಾಜ್ಯಪಾಲರು ಬಂದರೆ ಮಾತ್ರವೇ ಇಂದು ರಾಜಿನಾಮೆ. ಇಲ್ಲದೆ ಇದ್ದರೆ ರಾಜಿನಾಮೆ ಕೊಡುವ ಸಮಯ ಮುಂದಕ್ಕೆ ಹೋಗಲಿದೆ. ಲೋಕಭವನಕ್ಕೆ ರಾಜೀನಾಮೆ ಪತ್ರ ನೀಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ರಾಜ್ಯಪಾಲರನ್ನು ಭೇಟಿಯಾಗೇ ರಾಜೀನಾಮೆ ಸಲ್ಲಿಸಬೇಕು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksmav3m3s3cmmf35bgm4gy79,imgname-karnataka-leadership-change-cm-shift-siddaramaiah-shivakumar-congress-oath-ceremony-saturday-politics-news-1779872665219.jpg" type="image/jpeg" height="390" width="690"/>
            <category>politics</category>
            <dc:creator>Asianet News</dc:creator>
            <atom:link href="https://kannada.asianetnews.com/state/karnataka-politics-live-28-may-2026-cm-siddaramaiah-resignation-updates-dk-shivakumar-congress-high-command-gdp/liveblog-updates-datmism"/>
        </item>
        <item>
            <title><![CDATA[Karnataka Power Tussle: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ನನ್ನೆರಡು  ಕಣ್ಣುಗಳಿದ್ದಂತೆ: ಚಲುವರಾಯಸ್ವಾಮಿ]]></title>
            <link>https://kannada.asianetnews.com/politics/karnataka-power-tussle-siddaramaiah-dks-like-my-two-eyes-says-minister-chaluvarayaswamy-rav/articleshow-dbr9dfp</link>
            <guid isPermaLink="true">https://kannada.asianetnews.com/politics/karnataka-power-tussle-siddaramaiah-dks-like-my-two-eyes-says-minister-chaluvarayaswamy-rav/articleshow-dbr9dfp</guid>
            <pubDate>Thu, 28 May 2026 09:00:39 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಥವಾ ನಾಯಕತ್ವ ಬದಲಾವಣೆಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ತನಗೆ ಎರಡು ಕಣ್ಣುಗಳಿದ್ದಂತೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಮಾಡುತ್ತೆ ಎಂದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwme81vf0haf7r987hrkefck,imgname-vdv-1748737722223.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಮೇ.28)&lt;/strong&gt;: ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ(Siddaramaiah) ಅವರು ರಾಜೀನಾಮೆ ನೀಡುವ ವಿಚಾರವಾಗಲೀ, ನಾಯಕತ್ವ ಬದಲಾವಣೆ ವಿಚಾರವಾಗಲೀ ನನಗೆ ಗೊತ್ತಿಲ್ಲ. ಆದರೆ, ನನಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಎರಡು ಕಣ್ಣಿದ್ದಂತೆ ಎಂದು ಕೃಷಿ ಸಚಿವ ಎನ್&zwnj;.ಚಲುವರಾಯಸ್ವಾಮಿ ಹೇಳಿದ್ದಾರೆ.&amp;nbsp;&lt;/p&gt;&lt;h2&gt;ಇಬ್ಬರು ನಾಯಕರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ:&lt;/h2&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ರಾಜ್ಯ ನಾಯಕರೇ. 136 ಜನ ಶಾಸಕರು ಗೆದ್ದಿದ್ದು, ಅದರಲ್ಲಿ ಇವರಿಬ್ಬರ ಕೊಡುಗೆ ಅಪಾರವಾದದು. ಹಾಗಾಗಿ ಇಬ್ಬರೂ ನಾಯಕರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದರು. ಗುರುವಾರ ಸಿಎಂ ಉಪಾಹಾರ ಸಭೆ ಕರೆದಿದ್ದಾರೆ. ಅಲ್ಲಿ ದೆಹಲಿಯ ವಿಷಯ ಚರ್ಚೆಗೆ ಬರಬಹುದು. ಎಐಸಿಸಿ ನಾಯಕರು ದೆಹಲಿಯಿಂದ ಬರುತ್ತಿದ್ದು, ಅವರು ಬಂದ ಮೇಲೆ ವಿಚಾರ ಗೊತ್ತಾಗಲಿದೆ ಎಂದರು.&lt;/p&gt;&lt;p&gt;.ಸಿದ್ದರಾಮಯ್ಯ ಅವರ ರಾಜೀನಾಮೆ, ನಾಯಕತ್ವ ಬದಲಾವಣೆ ಚರ್ಚೆಯಾಗಿರುವ ಬಗ್ಗೆ ನನಗಂತೂ ಮಾಹಿತಿ ಇಲ್ಲ.&lt;/p&gt;&lt;p&gt;ನನಗೆ ಗೊತ್ತಿರುವಂತೆ ರಾಜ್ಯಸಭೆ ಮತ್ತು ವಿಧಾನಪರಿಷತ್&zwnj; ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಲು ಹೈಕಮಾಂಡ್&zwnj; ನಾಯಕರ ಬಳಿ ಹೋಗಿದ್ದರು&lt;/p&gt;]]></content:encoded>
            <category>politics</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-power-tussle-siddaramaiah-dks-like-my-two-eyes-says-minister-chaluvarayaswamy-rav/articleshow-dbr9dfp"/>
        </item>
    </channel>
</rss>
