<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 17 May 2026 18:24:02 +0530</lastBuildDate>
        <atom:link href="https://kannada.asianetnews.com/rss/raichur" rel="self" type="application/rss+xml"/>
        <item>
            <title><![CDATA[Yapaladinni minor girl kidnapping: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಅಪಹರಣ, ತಡೆಯಲು ಬಂದವನ ಭೀಕರ ಹ*ತ್ಯೆ!]]></title>
            <link>https://kannada.asianetnews.com/state/yapaladinni-love-and-crime-hindu-man-murdered-for-resisting-minor-kidnapping-by-accused-youths-at-raichur/articleshow-1w5gbgw</link>
            <guid isPermaLink="true">https://kannada.asianetnews.com/state/yapaladinni-love-and-crime-hindu-man-murdered-for-resisting-minor-kidnapping-by-accused-youths-at-raichur/articleshow-1w5gbgw</guid>
            <pubDate>Tue, 05 May 2026 15:46:13 +0530</pubDate>
            <description><![CDATA[&lt;p&gt;ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ, ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕೆ ಈಶಪ್ಪ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqvsyjnjtpw3r1e9t178r0b2,imgname-----------------------2026-05-05t152158.074-1777975904946.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ.5):&lt;/strong&gt; ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದ್ದು ಇಡೀ ಜಿಲ್ಲೆಯೇ ಬೆಚ್ಚಿಬಿದ್ದಿದೆ.&lt;/p&gt;&lt;p&gt;ಯಾಪಲದಿನ್ನಿ ಗ್ರಾಮದ ಈಶಪ್ಪ (30) ಕೊಲೆಯಾದ ದುರ್ದೈವಿ. ಘಟನೆ ನಡೆದ ರಾತ್ರಿ ಈಶಪ್ಪ ತಮ್ಮ ಮನೆಯ ಮಾಳಿಗೆಯ ಮೇಲೆ ಮಲಗಿದ್ದರು. ಈ ವೇಳೆ ಅನ್ಯ ಧರ್ಮದ ಯುವಕ ಅಸ್ಲಂ ಮತ್ತು ಆತನ ಸ್ನೇಹಿತರು ಸೇರಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಈಶಪ್ಪ ಗಮನಿಸಿದ್ದಾರೆ.&lt;/p&gt;&lt;p&gt;ಅನ್ಯಕೋಮಿನ ಯುವಕರು ಕರೆದೊಯ್ಯುತ್ತಿರುವ ಅಪ್ರಾಪ್ತೆ ತನ್ನ ಸ್ನೇಹಿತ ಆಂಜನೇಯನ ತಮ್ಮನ ಮಗಳಾಗಿದ್ದರಿಂದ, ಈಶಪ್ಪ ತಕ್ಷಣ ಮಾಳಿಗೆಯಿಂದ ಕೆಳಗಿಳಿದು ಬಂದು ಯುವಕರನ್ನು ತಡೆದು, 'ಬಾಲಕಿಯನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ?' ಎಂದು ಪ್ರಶ್ನಿಸಿದ್ದರು.&lt;/p&gt;&lt;p&gt;ಈ ವೇಳೆ ತಮ್ಮ ಕೃತ್ಯಕ್ಕೆ ಅಡ್ಡಿಯಾದ ಈಶಪ್ಪನ ಮೇಲೆ ಆಕ್ರೋಶಗೊಂಡ ಅಸ್ಲಂ ಮತ್ತು ಆತನ ಗ್ಯಾಂಗ್, ಹಗ್ಗ ಅಥವಾ ವೈರ್&zwnj;ನಿಂದ ಈಶಪ್ಪನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.&lt;/p&gt;&lt;p&gt;ಸದ್ಯ ಅನ್ಯಕೋಮಿನ ಯುವಕರಿಂದ ಕಿಡ್ನಾಪ್ ಆಗಿರೋ ಬಾಲಕಿಯ ಮನೆಯ ಮುಂದೆಯೇ ಈಶಪ್ಪನ ಮೃತದೇಹವನ್ನಿಟ್ಟು ಕುಟುಂಬಸ್ಥರು, ನ್ಯಾಯಕ್ಕಾಗಿ ಪಟ್ಟು ಹಿಡಿದಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಘಟನಾ ಸ್ಥಳದಲ್ಲೇ ಪ್ರತಿಭಟನೆ ಮುಂದುವರಿಸಿದ್ದಾರೆ.&lt;/p&gt;&lt;p&gt;ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಯಾಪಲದಿನ್ನಿ ಪೊಲೀಸರು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/yapaladinni-love-and-crime-hindu-man-murdered-for-resisting-minor-kidnapping-by-accused-youths-at-raichur/articleshow-1w5gbgw"/>
        </item>
        <item>
            <title><![CDATA[ಇಂದು ಸಿಂಧನೂರು ಪಟ್ಟಣಕ್ಕೆ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!]]></title>
            <link>https://kannada.asianetnews.com/gallery/state/dcm-dk-shivakumars-visit-to-sindhanur-town-today-here-are-the-details-event-rav-3i1muks</link>
            <guid isPermaLink="true">https://kannada.asianetnews.com/gallery/state/dcm-dk-shivakumars-visit-to-sindhanur-town-today-here-are-the-details-event-rav-3i1muks</guid>
            <pubDate>Sun, 03 May 2026 07:30:07 +0530</pubDate>
            <description><![CDATA[&lt;p&gt;ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಡಿಸಿಎಂ ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqnrqvtmb3m77ycy1jc73zvm,imgname-----------------------2026-05-03t072441.768-1777773309780.jpg" type="image/jpeg" height="390" width="690"/>
            <content:encoded><![CDATA[&lt;p&gt;ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಡಿಸಿಎಂ ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬಸನಗೌಡ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಸಮಾರಂಭದಲ್ಲಿ ಡಿಕೆಶಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಈ ಅದ್ಧೂರಿ ಕಾರ್ಯಕ್ರಮ ಆಯೋಜನೆಗೊಂಡಿದೆ.&lt;/p&gt;&lt;img&gt;&lt;p&gt;ಈ ಸಮಾರಂಭದಲ್ಲಿ ಉಚಿತ ಸಾಮೂಹಿಕ ವಿವಾಹ ಹಾಗೂ 5001 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಎಂಎಲ್&zwnj;ಸಿ ಬಸನಗೌಡ ಬಾದರ್ಲಿ ಅವರು ಪರಿಷತ್ ಸದಸ್ಯರಾಗಿ ಕಳೆದ ಒಂದು ವರ್ಷದಲ್ಲಿ ಮಾಡಿದ ಜನಪರ ಸಾಧನೆಗಳ ಕೈಪಿಡಿಯನ್ನು ಗಣ್ಯರು ಅನಾವರಣಗೊಳಿಸಲಿದ್ದಾರೆ.&lt;/p&gt;&lt;img&gt;&lt;p&gt;ಕಾರ್ಯಕ್ರಮದಲ್ಲಿ ಡಿಸಿಎಂ ಜೊತೆಗೆ ಸಚಿವರಾದ ಈಶ್ವರ್ ಖಂಡ್ರೆ, ಆರ್.ವಿ. ತಿಮ್ಮಾಪುರ, ಮಧು ಬಂಗಾರಪ್ಪ ಹಾಗೂ ಎನ್.ಎಸ್&zwnj;. ಬೋಸರಾಜು ಭಾಗವಹಿಸಲಿದ್ದಾರೆ. ಅಲ್ಲದೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಹತ್ತಾರು ಶಾಸಕರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.&lt;/p&gt;&lt;p&gt;ಗಣ್ಯರ ಆಗಮನದ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದೆ. ಸಭೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆಯಾಗಿ 50 ರಿಂದ 60 ಸಾವಿರ ಜನರು ಸೇರುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಬೇಸಿಗೆಯ ತಾಪ ಹೆಚ್ಚಿರುವುದರಿಂದ ಕಾರ್ಯಕ್ರಮಕ್ಕೆ ಬರುವ ಜನರಿಗೆ ಯಾವುದೇ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಏರ್ ಕೂಲರ್, ತಣ್ಣೀರು, ಮಜ್ಜಿಗೆ ಹಾಗೂ ಭರ್ಜರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/state/dcm-dk-shivakumars-visit-to-sindhanur-town-today-here-are-the-details-event-rav-3i1muks"/>
        </item>
        <item>
            <title><![CDATA[ಒಂದು ಕಡೆ ಸಾಲ,  ಪತ್ನಿಯೂ ದೂರ, ಸಿಂಧನೂರು ಜ್ಯುವೆಲರ್ಸ್ ಮಾಲೀಕನ ದುರಂತ ಅಂತ್ಯ, ಡೆತ್‌ನೋಟ್‌ನಲ್ಲಿ ಏನಿತ್ತು?]]></title>
            <link>https://kannada.asianetnews.com/karnataka-districts/raichur-sindhanur-gold-shop-owner-pranesh-varnekar-death-case/articleshow-czkbu77</link>
            <guid isPermaLink="true">https://kannada.asianetnews.com/karnataka-districts/raichur-sindhanur-gold-shop-owner-pranesh-varnekar-death-case/articleshow-czkbu77</guid>
            <pubDate>Tue, 12 May 2026 09:02:01 +0530</pubDate>
            <description><![CDATA[&lt;p&gt;ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ 'ಸಮರ್ಥ್ ಜ್ಯೂವೆಲರ್ಸ್' ಮಾಲೀಕ ಪ್ರಾಣೇಶ್ ವರ್ಣೇಕರ್ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 2.5 ಕೋಟಿಗೂ ಅಧಿಕ ಸಾಲ ಮತ್ತು ಕೌಟುಂಬಿಕ ಕಲಹದಿಂದ ಮನನೊಂದು ಈ ನಿರ್ಧಾರಕ್ಕೆ ಬಂದಿರಬಹುದೆಂದು ಶಂಕಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krd390hevzh668fwftx78xpw,imgname-----------------------2026-05-12t085135.028-1778556109358.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಿಂಧನೂರು (ಮೇ.12):&lt;/strong&gt; ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಆದರ್ಶ ಕಾಲೋನಿಯಲ್ಲಿ ಆಘಾತಕಾರಿ ದೃಶ್ಯ ಸ್ಥಳೀಯರು ಬೆಚ್ಚಿಬೀಳಿಸಿದೆ. ಪಟ್ಟಣದಲ್ಲಿ ಪರಿಚಿತವಾಗಿದ್ದ ಚಿನ್ನದ ಅಂಗಡಿ ಮಾಲೀಕ ಪ್ರಾಣೇಶ್ ವರ್ಣೇಕರ್ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.&lt;/p&gt;&lt;h2&gt;ಬಾಗಿಲು ತೆರೆದೇ ಸೂ ಸೈಡ್ ಅನುಮಾನ ಹುಟ್ಟಿಸಿದೆ!&lt;/h2&gt;&lt;p&gt;ಸಾಮಾನ್ಯವಾಗಿ ಪಟ್ಟಣದಲ್ಲಿ ಮನೆಗಳ ಬಾಗಿಲು ಮುಚ್ಚಿರುತ್ತವೆ. ಅದು ರಾತ್ರಿವೇಳೆ ಬಾಗಿಲು ತೆರೆದು ಯಾರೂ ಮಲಗುವುದಿಲ್ಲ. ಆದರೆ ಪ್ರಾಣೇಶ್ ಮನೆಯ ಬಾಗಿಲು ತೆರೆದಿದ್ದೇ ಸ್ಥಳೀಯರಿಗೆ ಅನುಮಾನಕ್ಕೆ ಕಾರಣವಾಗಿದೆ. ಒಳಗೆ ಹೋಗಿ ನೋಡಿದಾಗ ಫ್ಯಾನ್&zwnj;ಗೆ ನೇ ಣು ಹಾಕಿಕೊಂಡ ಸ್ಥಿತಿಯಲ್ಲಿ ಪ್ರಾಣೇಶ್ ಅವರ ಶವ ಕಂಡುಬಂದಿದ್ದು, ಕುಟುಂಬಸ್ಥರು ಮತ್ತು ನೆರೆಹೊರೆಯವರು ಬೆಚ್ಚಿಬಿದ್ದಿದ್ದಾರೆ.&lt;/p&gt;&lt;h3&gt;ಸಮರ್ಥ್ ಜ್ಯೂವೆಲ್ಲರ್ಸ್ ಚಿನ್ನದ ಅಂಗಡಿ ನಡೆಸುತ್ತಿದ್ದ ಪ್ರಾಣೇಶ್&lt;/h3&gt;&lt;p&gt;38 ವರ್ಷದ ಪ್ರಾಣೇಶ್ ವರ್ಣೇಕರ್ ಸಿಂಧನೂರಿನಲ್ಲಿ &ldquo;ಸಮರ್ಥ್ ಜ್ಯೂವೆಲರ್ಸ್&rdquo; ಎಂಬ ಚಿನ್ನದ ಅಂಗಡಿ ನಡೆಸುತ್ತಿದ್ದರು. ಚಿನ್ನದ ವ್ಯವಹಾರಗಳ ಜೊತೆಗೆ ಲೇವಾದೇವಿಯನ್ನೂ ಮಾಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಖಾಸಗಿ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕರಾಗಿಯೂ ಕೆಲಸ ಮಾಡುತ್ತಿದ್ದರು.&lt;/p&gt;&lt;p&gt;ಆದರೆ ಕಳೆದ ಕೆಲವು ತಿಂಗಳುಗಳಿಂದ ಆರ್ಥಿಕ ಸಂಕಷ್ಟ ಅವರ ಬದುಕನ್ನು ಕಂಗೆಡಿಸಿತ್ತು ಎನ್ನಲಾಗುತ್ತಿದೆ. ಸುಮಾರು 2.5 ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದರೆಂಬ ಮಾಹಿತಿ ಹೊರಬಿದ್ದಿದೆ. ಇದೇ ಸಾಲದ ಒತ್ತಡ ಆತ್ಮ೧ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.&lt;/p&gt;&lt;p&gt;ಇದಕ್ಕಿಂತಲೂ ನೋವುಂಟು ಮಾಡಿದ ಸಂಗತಿ ಎಂದರೆ, ಇತ್ತೀಚೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ದೂರವಾಗಿದ್ದರೆಂಬ ಮಾಹಿತಿ. ಒಂದೆಡೆ ಸಾಲದ ಕಾಟ&hellip; ಮತ್ತೊಂದೆಡೆ ವೈಯಕ್ತಿಕ ಬದುಕಿನ ಸಮಸ್ಯೆಗಳು&hellip; ಇವೆಲ್ಲವೂ ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತೇ ಎಂಬ ಪ್ರಶ್ನೆ ಮೂಡಿದೆ.&lt;/p&gt;&lt;p&gt;ಆತ್ಮ೧ಹತ್ಯೆಗೆ ಮುನ್ನ ಪ್ರಾಣೇಶ್ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಡೆತ್ ನೋಟ್&zwnj;ನಲ್ಲಿ ಏನಿದೆ ಎಂಬುದರ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ.&lt;/p&gt;&lt;p&gt;ಘಟನೆ ತಿಳಿಯುತ್ತಿದ್ದಂತೆ ಸಿಂಧನೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/raichur-sindhanur-gold-shop-owner-pranesh-varnekar-death-case/articleshow-czkbu77"/>
        </item>
        <item>
            <title><![CDATA[ರಾಯಚೂರು: ಅಡುಗೆ ಮಾಡೋಕೆ ಬರಲ್ಲ ಅಂದಿದ್ದೇ ತಪ್ಪಾ? ತವರುಮನೆಯವರನ್ನ ಕರೆಸಿ ಗಂಡನ ಮೇಲೆ ಹಲ್ಲೆ; ಬೀಗರ ದಾಳಿಗೆ ಮಾವ ಗಂಭೀರ ಗಾಯ!]]></title>
            <link>https://kannada.asianetnews.com/gallery/karnataka-districts/raichur-shock-wife-calls-family-to-attack-husband-over-cooking-dispute-ffooz0g</link>
            <guid isPermaLink="true">https://kannada.asianetnews.com/gallery/karnataka-districts/raichur-shock-wife-calls-family-to-attack-husband-over-cooking-dispute-ffooz0g</guid>
            <pubDate>Tue, 05 May 2026 12:08:33 +0530</pubDate>
            <description><![CDATA[&lt;p&gt;ಯಾವುದಕ್ಕೂ ಕೊರತೆ ಇಲ್ಲದ ಅದೊಂದು ಸುಂದರ ಸಂಸಾರ. ಗಂಡ ಬ್ಯಾಂಕ್ ಉದ್ಯೋಗಿ, ಹೆಂಡತಿ ಕೃಷಿ ಇಲಾಖೆಯಲ್ಲಿ ಅಧಿಕಾರಿ. ಇಬ್ಬರೂ ಸುಶಿಕ್ಷಿತರೇ.. ಆದರೆ, ಅಡುಗೆ ಮನೆಯಲ್ಲಿ ಶುರುವಾದ ಒಂದು ಸಣ್ಣ 'ಉಪ್ಪು-ಖಾರ'ದ ಜಗಳ, ಇಂದು ಭಯಂಕರ ಹೊಡೆದಾಡಿಕೊಂಡು ರಕ್ತಪಾತಕ್ಕೆ ಬಂದು ನಿಂತಿದೆ..&amp;nbsp;&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqvcr3b03s0yshg3dwabrhbg,imgname-----------------------2026-05-05t114006.321-1777962061152.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಾವುದಕ್ಕೂ ಕೊರತೆ ಇಲ್ಲದ ಅದೊಂದು ಸುಂದರ ಸಂಸಾರ. ಗಂಡ ಬ್ಯಾಂಕ್ ಉದ್ಯೋಗಿ, ಹೆಂಡತಿ ಕೃಷಿ ಇಲಾಖೆಯಲ್ಲಿ ಅಧಿಕಾರಿ. ಇಬ್ಬರೂ ಸುಶಿಕ್ಷಿತರೇ.. ಆದರೆ, ಅಡುಗೆ ಮನೆಯಲ್ಲಿ ಶುರುವಾದ ಒಂದು ಸಣ್ಣ 'ಉಪ್ಪು-ಖಾರ'ದ ಜಗಳ, ಇಂದು ಭಯಂಕರ ಹೊಡೆದಾಡಿಕೊಂಡು ರಕ್ತಪಾತಕ್ಕೆ ಬಂದು ನಿಂತಿದೆ..&amp;nbsp;&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಯಾವುದಕ್ಕೂ ಕೊರತೆ ಇಲ್ಲದ ಅದೊಂದು ಸುಂದರ ಸಂಸಾರ. ಗಂಡ ಬ್ಯಾಂಕ್ ಉದ್ಯೋಗಿ, ಹೆಂಡತಿ ಕೃಷಿ ಇಲಾಖೆಯಲ್ಲಿ ಅಧಿಕಾರಿ. ಇಬ್ಬರೂ ಸುಶಿಕ್ಷಿತರೇ.. ಆದರೆ, ಅಡುಗೆ ಮನೆಯಲ್ಲಿ ಶುರುವಾದ ಒಂದು ಸಣ್ಣ 'ಉಪ್ಪು-ಖಾರ'ದ ಜಗಳ, ಇಂದು ಭಯಂಕರ ಹೊಡೆದಾಡಿಕೊಂಡು ರಕ್ತಪಾತಕ್ಕೆ ಬಂದು ನಿಂತಿದೆ.. ರಾಯಚೂರಿನ ಹೊಸೂರು ರಸ್ತೆಯಲ್ಲಿ ನಡೆದ ಈ ಘಟನೆ ಈಗ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.&lt;/p&gt;&lt;img&gt;&lt;p&gt;ಬ್ಯಾಂಕ್ ಉದ್ಯೋಗಿ ಶಿವರಾಜ್ ಹಾಗೂ ಕೃಷಿ ಇಲಾಖೆಯ ಶೋಭಾ ದಂಪತಿಗಳ ನಡುವೆ ಕ್ಷಲ್ಲಕ ಕಾರಣಕ್ಕೆ ಆಗಾಗ ಮನಸ್ತಾಪವಾಗುತ್ತಿತ್ತು. 'ನೀನು ಅಡುಗೆ ಸರಿಯಾಗಿ ಮಾಡುವುದಿಲ್ಲ' ಎಂದು ಪತಿ ಶಿವರಾಜ್ ಕಿರಿಕ್ ತೆಗೆದಿದ್ದೇ ಈ ದೊಡ್ಡ ರಂಪಾಟಕ್ಕೆ ಕಾರಣವಾಗಿದೆ.. ಮಾತಿಗೆ ಮಾತು ಬೆಳೆದು, ಇಡೀ ಮನೆ ರಣರಂಗವಾಗಿ ಮಾರ್ಪಟ್ಟಿದೆ.&lt;/p&gt;&lt;p&gt;ಪತಿಯ ಮಾತಿನಿಂದ ಕೆರಳಿದ ಪತ್ನಿ ಶೋಭಾ, ತಕ್ಷಣವೇ ತನ್ನ ತವರು ಮನೆಯವರಿಗೆ ಫೋನ್ ಮಾಡಿದ್ದಾರೆ. ಮಗಳ ಕರೆಯನ್ನು ಕೇಳಿ ಆವೇಶದಿಂದ ಬಂದ ಶೋಭಾ ಮನೆಯವರು, ಶಿವರಾಜ್ ಅವರ ಮನೆಗೆ ನುಗ್ಗಿ ರೇಗಾಡಿದ್ದಾರೆ. ನೋಡನೋಡುತ್ತಿದ್ದಂತೆಯೇ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಮಾರಾಮಾರಿಯೇ ನಡೆದುಹೋಗಿದೆ.&lt;/p&gt;&lt;img&gt;&lt;p&gt;ಬ್ಯಾಂಕ್ ಉದ್ಯೋಗಿ ಶಿವರಾಜ್ ಹಾಗೂ ಕೃಷಿ ಇಲಾಖೆಯ ಶೋಭಾ ದಂಪತಿಗಳ ನಡುವೆ ಕ್ಷಲ್ಲಕ ಕಾರಣಕ್ಕೆ ಆಗಾಗ ಮನಸ್ತಾಪವಾಗುತ್ತಿತ್ತು. 'ನೀನು ಅಡುಗೆ ಸರಿಯಾಗಿ ಮಾಡುವುದಿಲ್ಲ' ಎಂದು ಪತಿ ಶಿವರಾಜ್ ಕಿರಿಕ್ ತೆಗೆದಿದ್ದೇ ಈ ದೊಡ್ಡ ರಂಪಾಟಕ್ಕೆ ಕಾರಣವಾಗಿದೆ.. ಮಾತಿಗೆ ಮಾತು ಬೆಳೆದು, ಇಡೀ ಮನೆ ರಣರಂಗವಾಗಿ ಮಾರ್ಪಟ್ಟಿದೆ.&lt;/p&gt;&lt;p&gt;ಪತಿಯ ಮಾತಿನಿಂದ ಕೆರಳಿದ ಪತ್ನಿ ಶೋಭಾ, ತಕ್ಷಣವೇ ತನ್ನ ತವರು ಮನೆಯವರಿಗೆ ಫೋನ್ ಮಾಡಿದ್ದಾರೆ. ಮಗಳ ಕರೆಯನ್ನು ಕೇಳಿ ಆವೇಶದಿಂದ ಬಂದ ಶೋಭಾ ಮನೆಯವರು, ಶಿವರಾಜ್ ಅವರ ಮನೆಗೆ ನುಗ್ಗಿ ರೇಗಾಡಿದ್ದಾರೆ. ನೋಡನೋಡುತ್ತಿದ್ದಂತೆಯೇ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಮಾರಾಮಾರಿಯೇ ನಡೆದುಹೋಗಿದೆ.&lt;/p&gt;&lt;img&gt;&lt;p&gt;ಬಂದವರು ಸುಮ್ಮನೆ ಇರಲಿಲ್ಲ. ಪತಿ ಶಿವರಾಜ್ ಮಾತ್ರವಲ್ಲದೆ, ಅವರ ವಯಸ್ಸಾದ ತಂದೆ ದೇವಿಂದ್ರಪ್ಪ, ತಾಯಿ ಲಕ್ಷ್ಮಿ ಮತ್ತು ಸಹೋದರ ವೆಂಕಟೇಶ್&zwnj; ಮೇಲೆಯೂ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೀಗರಿಂದಲೇ ಬೀಗರ ಮೇಲೆ ನಡೆದ ಈ ದಾಳಿಯಿಂದ ಇಡೀ ಕುಟುಂಬ ಕಂಗಾಲಾಗಿದೆ.&lt;/p&gt;&lt;p&gt;ಈ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಶಿವರಾಜ್ ತಂದೆ ದೇವಿಂದ್ರಪ್ಪ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಯಚೂರಿನಿಂದ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪತ್ನಿ ಶೋಭಾ ಸೇರಿದಂತೆ ಐವರ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶೋಭಾ, ರಂಜಿತ್ ಕುಮಾರ್, ತಾಯಣ್ಣಗೌಡ, ಅಕ್ಷಯ್ ಕುಮಾರ್ ಹಾಗೂ ಈರಣ್ಣಗೌಡ ಎಂಬುವವರ ಮೇಲೆ ಎಫ್&zwnj;ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.&lt;/p&gt;&lt;p&gt;ಒಂದು ಹೊತ್ತಿನ ಅಡುಗೆಯ ಜಗಳ, ಇಂದು ನ್ಯಾಯಾಲಯ, ಪೊಲೀಸ್ ಮೆಟ್ಟಿಲೇರುವಂತೆ ಮಾಡಿದೆ ಎಂಥಾ ಕರ್ಮ!&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/raichur-shock-wife-calls-family-to-attack-husband-over-cooking-dispute-ffooz0g"/>
        </item>
        <item>
            <title><![CDATA[ನೀರು ಕೇಳ್ತಾರೆ, ಹೂವಿನ ಆಶೀರ್ವಾದ ಮಾಡ್ತಾರೆ;  ಮಾಯವಾಗುತ್ತೆ ನಿಮ್ಮಲ್ಲಿರೋ ಚಿನ್ನ-ಹಣ!]]></title>
            <link>https://kannada.asianetnews.com/gallery/karnataka-districts/raichur-man-dressed-as-a-saint-offered-flowers-to-a-medical-shop-owner-and-stole-cash-and-a-gold-ring-sindhanur-city-mrq-g6z58p9</link>
            <guid isPermaLink="true">https://kannada.asianetnews.com/gallery/karnataka-districts/raichur-man-dressed-as-a-saint-offered-flowers-to-a-medical-shop-owner-and-stole-cash-and-a-gold-ring-sindhanur-city-mrq-g6z58p9</guid>
            <pubDate>Sat, 16 May 2026 09:04:26 +0530</pubDate>
            <description><![CDATA[&lt;p&gt;ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ, ಸಾಧು ವೇಷಧಾರಿಸಾಧು ವೇಷಧಾರಿಯೊಬ್ಬ ಮೆಡಿಕಲ್ ಶಾಪ್ ಮಾಲೀಕನಿಗೆ ಹೂವು ನೀಡಿ ಮಂಪರು ಬರಿಸಿ, ನಗದು ಹಾಗೂ ಚಿನ್ನದ ಉಂಗುರವನ್ನು ದೋಚಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krqd7ey4y4ph0bbjea7g99mc,imgname-raichur-cheating--5--1778902088644.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ, ಸಾಧು ವೇಷಧಾರಿಸಾಧು ವೇಷಧಾರಿಯೊಬ್ಬ ಮೆಡಿಕಲ್ ಶಾಪ್ ಮಾಲೀಕನಿಗೆ ಹೂವು ನೀಡಿ ಮಂಪರು ಬರಿಸಿ, ನಗದು ಹಾಗೂ ಚಿನ್ನದ ಉಂಗುರವನ್ನು ದೋಚಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;ರಾಯಚೂರು: ಮೆಡಿಕಲ್ ಶಾಪ್&zwnj;ನಲ್ಲಿದ್ದ ವ್ಯಕ್ತಿಗೆ ಸಾಧು ವೇಷಧಾರಿಯೋರ್ವ ಮೋಸ ಮಾಡಿ ಚಿನ್ನ ಮತ್ತು ಹಣ ದೋಚಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ. ಶ್ರೀ ಸಾಯಿ ಮೆಡಿಕಲ್ ಶಾಪ್ ಮಾಲೀಕ ವಿಷ್ಣು ದತ್ತ ಎಂಬವರಿಗೆ ವಂಚನೆ ಮಾಡಲಾಗಿದೆ.&lt;/p&gt;&lt;img&gt;&lt;p&gt;ಸಾಧು ವೇಷಧಾರಿಯೋರ್ವ ಮೆಡಿಕಲ್ ಶಾಪ್&zwnj; ಮುಂದೆ ಇರಿಸಲಾಗಿದ್ದ ನೀರು ಕುಡಿಯಲು ಬರುತ್ತಾನೆ. ಇದನ್ನು ನೋಡಿದ ವಿಷ್ಣು ದತ್ತ ಅವರು ಕನಿಕರದಿಂದ ಸಾಧುಗೆ ಕುಡಿಯಲು ಫ್ರಿಡ್ಕ್&zwnj;ನಲ್ಲಿದ್ದ ತಣ್ಣೀರು ಕೊಡುತ್ತಾರೆ. ನೀರು ಕುಡಿದ ಬಳಿಕ ಸಾಧು, ಆಶೀರ್ವಾದ ರೂಪದಲ್ಲಿ ಎರಡು ಹೂಗಳನ್ನು ನೀಡುತ್ತಾರೆ.&lt;/p&gt;&lt;img&gt;&lt;p&gt;ಹೂವಿನ ವಾಸನೆಯಿಂದ ವಿಷ್ಣು ದತ್ತಾ ಮಂಪರು ಬಂದಂತಾಗಿದೆ. ಈ ವೇಳೆ ಸಾಧು ವೇಷಧಾರಿ ಕಳ್ಳ, ಅಂಗಡಿಯಲ್ಲಿದ್ದ 10,500 ರೂಪಾಯಿ ನಗದು, ವಿಷ್ಣು ದತ್ತ್ ಕೈಯಲ್ಲಿದ್ದ 5 ಗ್ರಾಂ ಚಿನ್ನದುಂಗರ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಸಾಧು ಹೋದ ಕೆಲ ನಿಮಿಷಗಳ ಬಳಿಕ ವಿಷ್ಣು ದತ್ತ ಎಚ್ಚರಗೊಂಡಿದ್ದಾರೆ.&lt;/p&gt;&lt;img&gt;&lt;p&gt;ಕೈಯಲ್ಲಿದ್ದ ಗೋಲ್ಡ್ ರಿಂಗ್ ಮತ್ತು ಅಂಗಡಿಯಲ್ಲಿದ್ದ ಹಣ ಇಲ್ಲದಿರೋದನ್ನು ನೋಡಿ ಸಿಂಧನೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೆಡಿಕಲ್ ಶಾಪ್&zwnj; ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಸ್ವ ಕ್ಷೇತ್ರದಲ್ಲೇ ಎಸಿ ಕೋರ್ಟ್ ಕೇಸ್&zwnj; ಬಾಕಿಗೆ ಕೃಷ್ಣ ಬೈರೇಗೌಡ ಗರಂ, ಸಚಿವರಿಗೆ ತಲೆನೋವಾದ ಆ ಅಧಿಕಾರಿ!&lt;/strong&gt;&lt;/p&gt;&lt;img&gt;&lt;p&gt;ಸಾಧು ವೇಷಧಾರಿಯಾಗಿ ಸಿಂಧನೂರು ಪಟ್ಟಣದಲ್ಲಿ ಮೂವರು ಸುತ್ತಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳೀಯವಾಗಿ ಸಾಧುಗಳ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ; ತನಿಖೆಯಲ್ಲಿ ಅಚ್ಚರಿ ವಿಷಯ ಬಹಿರಂಗ!&lt;/strong&gt;&lt;/p&gt;]]></content:encoded>
            <category>raichur</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/raichur-man-dressed-as-a-saint-offered-flowers-to-a-medical-shop-owner-and-stole-cash-and-a-gold-ring-sindhanur-city-mrq-g6z58p9"/>
        </item>
        <item>
            <title><![CDATA[ರಾಯಚೂರಲ್ಲಿ ಭಾರೀ ಅನಾಹುತ: ಎಲ್ಲೋ ಹಚ್ಚಿದ ಬೆಂಕಿಯ ಕಿಡಿಗೆ, 10 ಮೇಕೆ, 20 ಕೋಳಿ ಸಜೀವ ದಹನ, 2 ಲಕ್ಷ ರೂ. ನಗದು ಹಣ ಸುಟ್ಟು ಬೂದಿ!]]></title>
            <link>https://kannada.asianetnews.com/gallery/karnataka-districts/fire-accident-in-raichur-10-goats-20-chickens-burnt-alive-incident-happened-in-burdipada-village-gbaktg1</link>
            <guid isPermaLink="true">https://kannada.asianetnews.com/gallery/karnataka-districts/fire-accident-in-raichur-10-goats-20-chickens-burnt-alive-incident-happened-in-burdipada-village-gbaktg1</guid>
            <pubDate>Sat, 02 May 2026 12:59:14 +0530</pubDate>
            <description><![CDATA[&lt;p&gt;ವಿಧಿಯಾಟವೋ ಅಥವಾ ಅಜಾಗರೂಕತೆಯೋ ಒಟ್ಟಿನಲ್ಲಿ ಗ್ರಹಚಾರ ಕೆಟ್ಟು ಎಲ್ಲೋ ಹೊತ್ತಿಸಿದ ಕಿಡಿ ಇನ್ನೊಬ್ಬರ ಬದುಕನ್ನೇ ಸುಟ್ಟು ಭಸ್ಮ ಮಾಡಿರುವ ಘೋರ ದುರಂತವೊಂದು ರಾಯಚೂರು ತಾಲೂಕಿನ ಬುರ್ದಿಪಾಡ ಗ್ರಾಮದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqks0g63qb32sz717c59ddj5,imgname-----------------------2026-05-02t123358.152-1777706483907.jpg" type="image/jpeg" height="390" width="690"/>
            <content:encoded><![CDATA[&lt;p&gt;ವಿಧಿಯಾಟವೋ ಅಥವಾ ಅಜಾಗರೂಕತೆಯೋ ಒಟ್ಟಿನಲ್ಲಿ ಗ್ರಹಚಾರ ಕೆಟ್ಟು ಎಲ್ಲೋ ಹೊತ್ತಿಸಿದ ಕಿಡಿ ಇನ್ನೊಬ್ಬರ ಬದುಕನ್ನೇ ಸುಟ್ಟು ಭಸ್ಮ ಮಾಡಿರುವ ಘೋರ ದುರಂತವೊಂದು ರಾಯಚೂರು ತಾಲೂಕಿನ ಬುರ್ದಿಪಾಡ ಗ್ರಾಮದಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ಗ್ರಾಮದ ನಿವಾಸಿ ನಾಗಮ್ಮ ಎಂಬುವವರಿಗೆ ಸೇರಿದ ಕುರಿ ಶೆಡ್ ಹಾಗೂ ಮನೆ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ನಾಗಮ್ಮ ಅವರ ಹೊಲದ ಪಕ್ಕದ ಜಮೀನಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದ್ದರು, ಅದೇ ಬೆಂಕಿಯ ಕಿಡಿಗಳು ಗಾಳಿಯ ವೇಗಕ್ಕೆ ಹಾರಿ ಬಂದು ಕುರಿಗಳಿದ್ದ ಶೆಡ್&zwnj;ಗೆ ತಗುಲಿದೆ. ಹೇಳಿಕೇಳಿ ರಾಯಚೂರಲ್ಲಿ ಬೆಂಕಿಯಂತಹ ಬಿಸಿಲು ಹೀಗಿರುವಾಗ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಳ್ಳಲು ಒಂದು ಕಿಡಿ ಸಾಕು ಎಂಬಂತೆ ನೋಡನೋಡುತ್ತಿದ್ದಂತೆ ಇಡೀ ಶೆಡ್&zwnj;ಗೆ ಬೆಂಕಿ ಆವರಿಸಿದೆ. ಅಲ್ಲದೆ ಮನೆಗೂ ಬೆಂಕಿ ತಗುಲಿ ಹೊತ್ತಿ ಉರಿದಿದೆ.&lt;/p&gt;&lt;img&gt;&lt;p&gt;ಈ ದುರ್ಘಟನೆಯಲ್ಲಿ ಅಸಹಾಯಕ ಮೂಕಪ್ರಾಣಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ ಪ್ರಾಣಬಿಟ್ಟಿವೆ. ಶೆಡ್&zwnj;ನಲ್ಲಿದ್ದ 10 ಮೇಕೆಗಳು ಹಾಗೂ 20 ಕೋಳಿಗಳು ಬೆಂಕಿಯ ಕನ್ನಾಲಗೆಗೆ ಸಜೀವವಾಗಿ ದಹನವಾಗಿದ್ದು, ಕಷ್ಟಪಟ್ಟು ಸಾಕಿ ಸಲುಹಿದ್ದ ನಾಗಮ್ಮಳ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;img&gt;&lt;p&gt;ಬರೀ ಪ್ರಾಣಿಗಳಷ್ಟೇ ಅಲ್ಲದೆ, ನಾಗಮ್ಮ ಅವರು ಕಷ್ಟಪಟ್ಟು ಬೆಳೆದು ಮಾರಾಟ ಮಾಡಿದ್ದ 2 ಲಕ್ಷ ರೂಪಾಯಿ ಹತ್ತಿ ಹಣ ಕೂಡ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ. ಪ್ರಾಣಿಗಳು ಹಾಗೂ ಮನೆ ಹಾನಿ ಸೇರಿ ಸುಮಾರು 3 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.&lt;/p&gt;&lt;img&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಮೂಕ ಪ್ರಾಣಿಗಳು ಸಜೀವ ದಹನಗೊಂಡಿವೆ.&amp;nbsp;&lt;/p&gt;&lt;img&gt;&lt;p&gt;&amp;nbsp;ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ, ಹತ್ತಿ ಮಾರಿ ತಂದಿದ್ದ ಹಣ ಹಾಗೂ ಸಾಕಿದ ಪ್ರಾಣಿಗಳನ್ನು ಕಳೆದುಕೊಂಡ ನಾಗಮ್ಮ ಅವರ ಕುಟುಂಬ ಈಗ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/fire-accident-in-raichur-10-goats-20-chickens-burnt-alive-incident-happened-in-burdipada-village-gbaktg1"/>
        </item>
        <item>
            <title><![CDATA[ರಾಯಚೂರು: ಲಿಂಗಸುಗೂರು ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳಿಂದಲೇ ತಡರಾತ್ರಿಯವರೆಗೆ ಗುಂಡು-ತುಂಡು ಪಾರ್ಟಿ, ಭಾರೀ ಆಕ್ರೋಶ]]></title>
            <link>https://kannada.asianetnews.com/karnataka-districts/late-night-party-at-pwd-office-in-raichur-sparks-outrage-gdp/articleshow-gqtme3a</link>
            <guid isPermaLink="true">https://kannada.asianetnews.com/karnataka-districts/late-night-party-at-pwd-office-in-raichur-sparks-outrage-gdp/articleshow-gqtme3a</guid>
            <pubDate>Sun, 10 May 2026 12:48:02 +0530</pubDate>
            <description><![CDATA[ರಾಯಚೂರು ಜಿಲ್ಲೆಯ ಲಿಂಗಸುಗೂರು ಪಿಡಬ್ಲ್ಯುಡಿ ಕಚೇರಿಯಲ್ಲಿ, ಎಇಇ ಹನುಮಪ್ಪ ಅದವಾನಿ ನೇತೃತ್ವದಲ್ಲಿ ತಡರಾತ್ರಿ ಪಾರ್ಟಿ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಾರ್ಟಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr8bwm541vw8pfagmb2318ss,imgname-raichur-pwd-office-party-1778397368484.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು:&lt;/strong&gt; ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (ಪಿಡಬ್ಲ್ಯುಡಿ) ಕಚೇರಿಯಲ್ಲಿ ನಡೆದ ರಾತ್ರಿ ಪಾರ್ಟಿ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಕಚೇರಿಯಲ್ಲೇ ತಡರಾತ್ರಿ ವರೆಗೆ ಪಾರ್ಟಿ ನಡೆಸಿದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;p&gt;ಲಿಂಗಸುಗೂರಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಈ ಪಾರ್ಟಿ ನಡೆದಿದ್ದು, ಎಇಇ ಹನುಮಪ್ಪ ಅದವಾನಿ ನೇತೃತ್ವದಲ್ಲಿ ಈ ಪಾರ್ಟಿ ನಡೆದಿದೆ ಎನ್ನಲಾಗಿದೆ. ಕಚೇರಿಯಲ್ಲೇ ಪರಿಚಯಸ್ಥರು ಹಾಗೂ ಕೆಲವು ಸಿಬ್ಬಂದಿಯನ್ನು ಸೇರಿಸಿಕೊಂಡು ಈ ಪಾರ್ಟಿ ಮಾಡಲಾಗಿದೆಯಂತೆ. ಯಾವ ಉದ್ದೇಶದಿಂದ ಈ ಪಾರ್ಟಿ ನಡೆದಿದೆ ಎಂಬ ಬಗ್ಗೆ ಮಾಹೊತೊ ತಿಳಿದುಬಂದಿಲ್ಲ.&lt;/p&gt;&lt;h2&gt;ನಿಯಮಗಳನ್ನು ಗಾಳಿಗೆ ತೂರಿದ ಅಧಿಕಾರಿಗಳು&lt;/h2&gt;&lt;p&gt;ಸರ್ಕಾರಿ ಕಚೇರಿಗಳಲ್ಲಿ ಕಚೇರಿ ಸಮಯ ಮುಗಿದ ನಂತರ ಇಂತಹ ಚಟುವಟಿಕೆಗಳಿಗೆ ಅವಕಾಶವಿಲ್ಲದಿದ್ದರೂ, ಇಲಾಖೆಯ ನಿಯಮಗಳನ್ನು ಲೆಕ್ಕಿಸದೆ ತಡರಾತ್ರಿ ವರೆಗೆ ಪಾರ್ಟಿ ನಡೆದಿರುವುದು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾರ್ವಜನಿಕ ಸೇವೆಗೆ ಮೀಸಲಾಗಿರುವ ಕಚೇರಿಯನ್ನು ಖಾಸಗಿ ಉದ್ದೇಶಗಳಿಗೆ ಬಳಸಿಕೊಂಡಿರುವುದನ್ನು ಜನರು ತೀವ್ರವಾಗಿ ಖಂಡಿಸಿದ್ದಾರೆ.&lt;/p&gt;&lt;h2&gt;ವೈರಲ್ ವಿಡಿಯೋದಿಂದ ಬಯಲಾದ ಪಾರ್ಟಿ ಕಥೆ&lt;/h2&gt;&lt;p&gt;ಈ ಪಾರ್ಟಿಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಇದು ಬೆಳಕಿಗೆ ಬಂದಿದೆ. ಈ ಘಟನೆ ಹಿನ್ನೆಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸರ್ಕಾರಿ ಕಚೇರಿಗಳ ಗೌರವ ಕಾಪಾಡುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳೇ ಇಂತಹ ನಡೆ ತೋರಿರುವುದು ಆತಂಕಕಾರಿ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಇದು ರಾಯಚೂರು ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆಯ ಪ್ರಶ್ನಿಸುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/late-night-party-at-pwd-office-in-raichur-sparks-outrage-gdp/articleshow-gqtme3a"/>
        </item>
        <item>
            <title><![CDATA[ರಾಯಚೂರು: ಮಹಿಂದ್ರಾ ಥಾರ್ ರಿವರ್ಸ್ ಮಾಡುವಾಗ 5 ವಿದ್ಯಾರ್ಥಿನಿಯರಿಗೆ ಡಿಕ್ಕಿ, ಓರ್ವಬಾಲಕಿ ಸಾವು!]]></title>
            <link>https://kannada.asianetnews.com/karnataka-districts/raichur-sindhanur-accident-mahindra-thar-hits-college-students-one-dead-many-injury/articleshow-icupuw7</link>
            <guid isPermaLink="true">https://kannada.asianetnews.com/karnataka-districts/raichur-sindhanur-accident-mahindra-thar-hits-college-students-one-dead-many-injury/articleshow-icupuw7</guid>
            <pubDate>Fri, 08 May 2026 20:44:06 +0530</pubDate>
            <description><![CDATA[ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ, ಅತಿವೇಗವಾಗಿ ಕಾರನ್ನು ರಿವರ್ಸ್ ತೆಗೆದಾಗ ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr42d13bvn7q0shqx9m929z9,imgname-raichur-mahindra-thar-accident-1778253202537.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ 08): ಜಿ&lt;/strong&gt;ಲ್ಲೆಯ ಸಿಂಧನೂರು ಪಟ್ಟಣದಲ್ಲಿ ಇಂದು ಮಧ್ಯಾಹ್ನ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ರಿವರ್ಸ್ ಮಾಡುವಾಗ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಸಿಂಧನೂರು ಪಟ್ಟಣದ ಚೇತನ ಆಸ್ಪತ್ರೆಯ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಐವರು ವಿದ್ಯಾರ್ಥಿನಿಯರು ಕಾಲೇಜು ಮುಗಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅಲ್ಲಿ ನಿಲ್ಲಿಸಿದ್ದ ಮಹೇಂದ್ರ ಥಾರ್ (Mahindra Thar) ಕಾರನ್ನು ಚಾಲಕ ಏಕಾಏಕಿ ವೇಗವಾಗಿ ರಿವರ್ಸ್ ತೆಗೆದಿದ್ದಾನೆ. ನಿಯಂತ್ರಣ ತಪ್ಪಿದ ಕಾರು ನೇರವಾಗಿ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.&lt;/p&gt;&lt;h2&gt;&lt;strong&gt;ಓರ್ವ ಬಲಿ, ಮೂವರಿಗೆ ಗಾಯ:&lt;/strong&gt;&lt;/h2&gt;&lt;p&gt;ಈ ಭೀಕರ ಅಪಘಾತದಲ್ಲಿ ಜವಳಗೇರಾ ಗ್ರಾಮದ ನಿವಾಸಿ ಭೂಮಿಕಾ (17) ಎಂಬ ವಿದ್ಯಾರ್ಥಿನಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಉಳಿದಂತೆ ಮೇಘನಾ (17), ಮಹೇಶ್ವರಿ (17) ಮತ್ತು ಜಹೀದಾ (17) ಎಂಬ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ವಿದ್ಯಾರ್ಥಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.&lt;/p&gt;&lt;h3&gt;&lt;strong&gt;ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ:&lt;/strong&gt;&lt;/h3&gt;&lt;p&gt;ಅಪಘಾತದ ದೃಶ್ಯವು ಚೇತನ ಆಸ್ಪತ್ರೆಯ ಮುಂಭಾಗದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಎಷ್ಟು ವೇಗವಾಗಿ ರಿವರ್ಸ್ ಬಂದಿದೆ ಎಂದರೆ ವಿದ್ಯಾರ್ಥಿನಿಯರಿಗೆ ತಪ್ಪಿಸಿಕೊಳ್ಳಲು ಸಮಯವೇ ಸಿಕ್ಕಿಲ್ಲ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.&lt;/p&gt;&lt;h3&gt;&lt;strong&gt;ಚಾಲಕ ಮತ್ತು ಕಾರು ಪೊಲೀಸ್ ವಶಕ್ಕೆ:&lt;/strong&gt;&lt;/h3&gt;&lt;p&gt;ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಂಧನೂರು ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಮಹೇಂದ್ರ ಥಾರ್ ಕಾರು ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/raichur-sindhanur-accident-mahindra-thar-hits-college-students-one-dead-many-injury/articleshow-icupuw7"/>
        </item>
        <item>
            <title><![CDATA[ರಾಯಚೂರು:ದಿನಾಲು ಕುಡಿದು ತಾಯಿ ಜತೆಗೆ ಜಗಳವಾಡ್ತಿದ್ದ ಅಣ್ಣನ ಕೊಂದ ತಮ್ಮಆತ್ಮ*ಹತ್ಯೆ ಎಂದು ನಂಬಿಸಲು ಹೆಣ ನೇತು ಹಾಕಿದ!]]></title>
            <link>https://kannada.asianetnews.com/karnataka-districts/karnataka-crime-raichur-murder-case-man-kills-his-brother-stages-drama-arrested-gdp/articleshow-lrk06o0</link>
            <guid isPermaLink="true">https://kannada.asianetnews.com/karnataka-districts/karnataka-crime-raichur-murder-case-man-kills-his-brother-stages-drama-arrested-gdp/articleshow-lrk06o0</guid>
            <pubDate>Sun, 17 May 2026 13:37:52 +0530</pubDate>
            <description><![CDATA[ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ, ನಿತ್ಯ ಕುಡಿದು ತಾಯಿಯೊಂದಿಗೆ ಜಗಳವಾಡುತ್ತಿದ್ದ ಅಣ್ಣನ ವರ್ತನೆಯಿಂದ ಬೇಸತ್ತ ತಮ್ಮ, ಆತನನ್ನು ಕೊಲೆ ಮಾಡಿದ್ದಾನೆ. ಈ ಹತ್ಯೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ನಾಟಕವಾಡಿದ್ದು, ತಂದೆಯ ದೂರಿನ ಮೇರೆಗೆ ನಡೆದ ಪೊಲೀಸ್ ತನಿಖೆಯಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krtf887j0v8q47aq9az4wacf,imgname-raichur-murder-case-1779004874993.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು :&lt;/strong&gt; ಕುಟುಂಬ ಕಲಹದ ಹಿನ್ನೆಲೆ ಅಣ್ಣನನ್ನೇ ಹತ್ಯೆ ಮಾಡಿ ಆತ್ಮ*ಹತ್ಯೆ ಎಂದು ಬಿಂಬಿಸಲು ಹೋಗಿ ತಮ್ಮ ಸಿಕ್ಕಿಬಿದ್ದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಕುಡಿದು ಬಂದು ತಾಯಿ ಜೊತೆಗೆ ಅಣ್ಣ ದಿನಾಲು ಜಗಳವಾಡುತ್ತಿದ್ದ ಇದರಿಂದ ತಮ್ಮ ಅಣ್ಣನ ವರ್ತನೆಗೆ ಬೇಸತ್ತು ಹೋಗಿದ್ದ. ಕೊಲೆ ಮಾಡುವ ದಿನ ಕೂಡ ಅಣ್ಣ ಮನೆಯಲ್ಲಿ ಗಲಾಟೆ ಮಾಡಿದ್ದ ಇದರಿಂದ ಬೇಸತ್ತ ತಮ್ಮ, ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.&lt;/p&gt;&lt;p&gt;ಪಟ್ಟಣದ ಮಹಾಂತ ಮಠದ ಬಳಿಯ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸವರಾಜ್ (32) ಎಂದು ಗುರುತಿಸಲಾಗಿದ್ದು, ಆರೋಪಿ ತಮ್ಮನನ್ನು ಶ್ರೀಧರ್ (27) ಎಂದು ಗುರುತಿಸಲಾಗಿದೆ&lt;/p&gt;&lt;h2&gt;ಕೊಲೆ ಬಳಿಕ ಆತ್ಮ*ಹತ್ಯೆ ನಾಟಕ&lt;/h2&gt;&lt;p&gt;ಅಣ್ಣನನ್ನು ಕೊಲೆ ಮಾಡಿದ ಬಳಿಕ, ಘಟನೆ ಆತ್ಮ*ಹತ್ಯೆಯಂತೆ ತೋರಿಸಲು ಶ್ರೀಧರ್ ಕುತಂತ್ರ ರೂಪಿಸಿದ್ದಾನೆ. ಸೀರೆಯನ್ನು ಬಳಸಿಕೊಂಡು ಫ್ಯಾನ್&zwnj;ಗೆ ಅಣ್ಣನ ಹೆಣವನ್ನು ನೇತು ಹಾಕಿ ಅಣ್ಣನೇ ನೇಣು ಹಾಕಿಕೊಂಡಿದ್ದಾನೆ ಎಂಬಂತೆ ಮನೆಯವರಿಗೆ ನಂಬಿಸಲು ಯತ್ನಿಸಿದ್ದಾನೆ. ಇದರ ಜೊತೆಗೆ, ಬಳಿಕ ಕೋಣೆ ಬಾಗಿಲಿ&zwnj;ನ ಚೀಲಕ ಮುರಿದಂತೆ ಮಾಡಿ. ಅಣ್ಣ ಶವವನ್ನ ಕೆಳಗೆ ಇಳಿಸಿದ ತಮ್ಮ ತದನಂತರ ಅಣ್ಣ ಬಸವರಾಜ್ ಜೀವ ಇರಬಹುದು ಎಂದು ತಾಯಿಗೆ ನಂಬಿಸಿ ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ತಾಲೂಕು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾನೆ&lt;/p&gt;&lt;h2&gt;ತಂದೆಯಿಂದ ದೂರು, ಪೊಲೀಸರ ತನಿಖೆ&lt;/h2&gt;&lt;p&gt;ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದಾಗ, ಬಸವರಾಜ್ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಅನುಮಾನಗಳು ಗಟ್ಟಿಯಾದವು. ಇತ್ತ ಬಸವರಾಜ್ ಸಾವಿನ ಕುರಿತು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ವಾಸುದೇವ್ ದೂರು ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರೊಂದಿಗೆ ಲಿಂಗಸೂಗೂರು ಡಿವೈಎಸ್&zwnj;ಪಿ ದತ್ತಾತ್ರೇಯ ಕಾರ್ನಡ್ ಹಾಗೂ ಪಿಐ ಹೊಸಕೇರಪ್ಪ ಕೂಡ ಹಾಜರಿದ್ದರು.&lt;/p&gt;&lt;h2&gt;ಆರೋಪಿ ವಶಕ್ಕೆ&lt;/h2&gt;&lt;p&gt;ಪೊಲೀಸರ ತೀವ್ರ ವಿಚಾರಣೆಯಲ್ಲಿ ಈ ಘಟನೆ ಹತ್ಯೆ ಎಂಬುದು ಬಹಿರಂಗಗೊಂಡಿದ್ದು, ಆರೋಪಿ ಶ್ರೀಧರ್&zwnj;ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಸಾಮಾನ್ಯ ಕುಟುಂಬ ಕಲಹವೇ ಭೀಕರ ಕೊಲೆಗೆ ಕಾರಣವಾಗಿದ್ದು, ಬಳಿಕ ಅದನ್ನು ಆತ್ಮ*ಹತ್ಯೆಯಂತೆ ತೋರಿಸಲು ನಡೆಸಿದ ನಾಟಕ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. .&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-crime-raichur-murder-case-man-kills-his-brother-stages-drama-arrested-gdp/articleshow-lrk06o0"/>
        </item>
        <item>
            <title><![CDATA[ರಾಜ್ಯದಲ್ಲಿ ಮಳೆ ಅಬ್ಬರ: ರಾಯಚೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು, ವಿಜಯನಗರದಲ್ಲಿ ಪಪ್ಪಾಯಿ ಬೆಳೆ ನಾಶ!]]></title>
            <link>https://kannada.asianetnews.com/karnataka-districts/karnataka-rain-havoc-raichur-lightning-death-vijayanagara-papaya-crop-loss-sat/articleshow-n5vhd0s</link>
            <guid isPermaLink="true">https://kannada.asianetnews.com/karnataka-districts/karnataka-rain-havoc-raichur-lightning-death-vijayanagara-papaya-crop-loss-sat/articleshow-n5vhd0s</guid>
            <pubDate>Sun, 17 May 2026 18:23:55 +0530</pubDate>
            <description><![CDATA[ರಾಜ್ಯದ ಹಲವೆಡೆ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯು ತೀವ್ರ ಹಾನಿಯನ್ನುಂಟುಮಾಡಿದೆ. ರಾಯಚೂರು ಜಿಲ್ಲೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟರೆ, ವಿಜಯನಗರ ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ರೈತ ದಂಪತಿಯ ಮೂರು ಎಕರೆ ಪಪ್ಪಾಯಿ ಬೆಳೆ ಸಂಪೂರ್ಣ ನಾಶವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krtztbercysg2xknpx78hc1t,imgname-karnataka-rain--1--1779022245336.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು/ವಿಜಯನಗರ: ರಾ&lt;/strong&gt;ಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮಳೆ ಅನಾಹುತಗಳಿಗೆ ಓರ್ವ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರೆ, ವಿಜಯನಗರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ರೈತರ ವರ್ಷದ ಶ್ರಮವೆಲ್ಲಾ ಮಣ್ಣು ಪಾಲಾಗಿದೆ.&lt;/p&gt;&lt;h3&gt;&lt;strong&gt;ರಾಯಚೂರು: ಸಿಡಿಲು ಬಡಿತಕ್ಕೆ ಕರಿಯಪ್ಪ ಸಾವು&lt;/strong&gt;&lt;/h3&gt;&lt;p&gt;ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಕೋಮಲಾಪುರ್ ಗ್ರಾಮದಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಗೆನ್ನಾಕಿಹಾಳ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮದ ಜಮೀನಿನಲ್ಲಿ ಟ್ರಾಕ್ಟರ್&zwnj;ಗೆ ಗೊಬ್ಬರ ತುಂಬುವ ಕೆಲಸದಲ್ಲಿ ನಿರತರಾಗಿದ್ದಾಗ ಈ ದುರಂತ ಸಂಭವಿಸಿದೆ. ಕರಿಯಪ್ಪ ಅವರೊಂದಿಗೆ ಕೆಲಸ ಮಾಡುತ್ತಿದ್ದ ಬಸವರಾಜ್ ಎಂಬುವವರಿಗೂ ಸಿಡಿಲು ಬಡಿದಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;h2&gt;&lt;strong&gt;ರೈತ ದಂಪತಿಯ ಬಾಳಲ್ಲಿ ಬಿರುಗಾಳಿ&lt;/strong&gt;&lt;/h2&gt;&lt;p&gt;ಮತ್ತೊಂದೆಡೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಮಳೆ ಹಾನಿ ತೀವ್ರವಾಗಿದೆ. ತಾಲ್ಲೂಕಿನ ಕೆಂಗಲಹಟ್ಟಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಪಪ್ಪಾಯಿ ಬೆಳೆ ಸಂಪೂರ್ಣ ನೆಲಸಮವಾಗಿದೆ. ರೈತ ದಂಪತಿಗಳಾದ ಸೀತಮ್ಮ ಮತ್ತು ಜಿ.ಎಸ್. ದೊಡ್ಡಪ್ಪ ಅವರಿಗೆ ಸೇರಿದ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ 200ಕ್ಕೂ ಹೆಚ್ಚು ಪಪ್ಪಾಯಿ ಗಿಡಗಳು ಧರೆಗುರುಳಿವೆ.&lt;/p&gt;&lt;p&gt;ಈ ರೈತ ದಂಪತಿ ಸುಮಾರು 6 ತಿಂಗಳ ಹಿಂದೆ 3 ಲಕ್ಷ ರೂಪಾಯಿ ಸಾಲ-ಸೋಲ ಮಾಡಿ ಪಪ್ಪಾಯಿ ಬೆಳೆ ಹಾಕಿದ್ದರು. ಇನ್ನೇನು ಮೂರು ತಿಂಗಳಲ್ಲಿ ಬೆಳೆ ಕೈಗೆ ಬರಬೇಕಿತ್ತು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಪ್ರಕೃತಿ ಮುನಿಸು ಭಾರಿ ಆಘಾತ ನೀಡಿದೆ. 'ಬೆಳೆದಿದ್ದ ಗಿಡಗಳು ಮಣ್ಣು ಪಾಲಾಗಿರುವುದನ್ನು ಕಂಡು ನಮಗೆ ದಿಕ್ಕು ತೋಚದಂತಾಗಿದೆ ಎಂದು ದಂಪತಿ ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ:&lt;/strong&gt;&lt;/h3&gt;&lt;p&gt;ಸಿಡಿಲು ಬಡಿತಕ್ಕೆ ಬಲಿಯಾದ ಕರಿಯಪ್ಪ ಅವರ ಕುಟುಂಬಕ್ಕೆ ಹಾಗೂ ಬೆಳೆ ಕಳೆದುಕೊಂಡು ಕಂಗಾಲಾಗಿರುವ ವಿಜಯನಗರದ ರೈತ ದಂಪತಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮುಂಗಾರು ಪೂರ್ವ ಮಳೆ (Pre-monsoon rain) ತೀವ್ರಗೊಳ್ಳುತ್ತಿರುವುದರಿಂದ ರೈತರು ಹೊಲಗದ್ದೆಗಳಲ್ಲಿ ಕೆಲಸ ಮಾಡುವಾಗ ಹವಾಮಾನದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-rain-havoc-raichur-lightning-death-vijayanagara-papaya-crop-loss-sat/articleshow-n5vhd0s"/>
        </item>
        <item>
            <title><![CDATA[DK Shivakumar Raichur visit Today: ಇಂದು ರಾಯಚೂರಿಗೆ ಡಿಸಿಎಂ ಡಿಕೆಶಿ ಸೇರಿ ‘ಕೈ’ ನಾಯಕರ ದಂಡು!]]></title>
            <link>https://kannada.asianetnews.com/karnataka-districts/dcm-dk-shivakumar-and-congress-leaders-team-visit-raichur-today/articleshow-nvgxl4r</link>
            <guid isPermaLink="true">https://kannada.asianetnews.com/karnataka-districts/dcm-dk-shivakumar-and-congress-leaders-team-visit-raichur-today/articleshow-nvgxl4r</guid>
            <pubDate>Sun, 10 May 2026 07:36:21 +0530</pubDate>
            <description><![CDATA[ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಅವರು ಲಿಂಗಸೂಗೂರು ಮಾಜಿ ಶಾಸಕರ ಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಸಚಿವರು ಹಾಗೂ ಶಾಸಕರ ದಂಡೇ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7szp64h320xteywrmedkp4,imgname-----------------------2026-05-10t073248.829-1778378594500.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ.10): &lt;/strong&gt;ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ರಾಯಚೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಇಂದು ಡಿಕೆ ಶಿವಕುಮಾರ ವಿಶೇಷ ಹೆಲಿಕಾಪ್ಟರ್&zwnj;ನಲ್ಲಿ ಆಗಮಿಸಲಿದ್ದಾರೆ.&lt;/p&gt;&lt;p&gt;ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿರುವ ಡಿ.ಕೆ. ಶಿವಕುಮಾರ್ ಅವರು, ಇಂದು ಬೆಳಿಗ್ಗೆ ಸರಿಯಾಗಿ 10:30 ಗಂಟೆಗೆ ಮುದಗಲ್ ಪಟ್ಟಣಕ್ಕೆ ಬಂದಿಳಿಯಲಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ; &lt;/strong&gt;Karnataka News Live: ಚಿಕಿತ್ಸೆ ಫಲಕಾರಿಯಾಗದೇ ನಿಧನ; ಡಿ.ಸುಧಾಕರ್ ಅವರಿಗೆ ಆಗಿದ್ದೇನು? ಇಲ್ಲಿದೆ ಮಾಹಿತಿ&lt;/p&gt;&lt;h2&gt;ಲಿಂಗಸೂಗೂರು ಮಾಜಿ ಶಾಸಕರ ಪುತ್ರಿಯ ಅದ್ದೂರಿ ಮದುವೆ&lt;/h2&gt;&lt;p&gt;ಲಿಂಗಸೂಗೂರು ಕ್ಷೇತ್ರದ ಮಾಜಿ ಶಾಸಕರ ಪುತ್ರಿಯ ಅದ್ಧೂರಿ ವಿವಾಹ ಮಹೋತ್ಸವ ಏರ್ಪಡಿಸಲಾಗಿದೆ. ಈ ಶುಭ ಸಮಾರಂಭದಲ್ಲಿ ಪಾಲ್ಗೊಂಡು ನವಜೋಡಿಗೆ ಶುಭ ಹಾರೈಸಲು ಡಿಸಿಎಂ ಆಗಮಿಸುತ್ತಿದ್ದಾರೆ.&lt;/p&gt;&lt;h3&gt;ಸಚಿವ-ಶಾಸಕರ ದಂಡು&lt;/h3&gt;&lt;p&gt;ಡಿಕೆ ಶಿವಕುಮಾರ್ ಅವರಿಗೆ ಸಚಿವ ಸತೀಶ್ ಜಾರಕಿಹೊಳಿ ಸಾಥ್ ನೀಡುತ್ತಿರುವುದು ವಿಶೇಷ. ಇನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಹತ್ತಾರು ಶಾಸಕರು ಈ ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಮುದಗಲ್&zwnj;ನಲ್ಲಿ ಈಗಿನಿಂದಲೇ ರಾಜಕೀಯ ಗಣ್ಯರ ಹವಾ ಶುರುವಾಗಿದೆ.&lt;/p&gt;&lt;p&gt;&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/dcm-dk-shivakumar-and-congress-leaders-team-visit-raichur-today/articleshow-nvgxl4r"/>
        </item>
        <item>
            <title><![CDATA[ಶನಿಮಹಾತ್ಮ ಜಯಂತಿ ದಿನವೇ ಆಂಜನೇಯ ದೇಗುಲ ಕಳ್ಳತನ, ಹುಂಡಿ ಮುಟ್ಟದೆ ಬೆಳ್ಳಿ ಸಾಮಾಗ್ರಿ ಕಳವು]]></title>
            <link>https://kannada.asianetnews.com/gallery/karnataka-districts/theft-at-anjaneya-temple-on-festival-day-donation-box-left-untouched-raichur-q56cs08</link>
            <guid isPermaLink="true">https://kannada.asianetnews.com/gallery/karnataka-districts/theft-at-anjaneya-temple-on-festival-day-donation-box-left-untouched-raichur-q56cs08</guid>
            <pubDate>Sun, 17 May 2026 10:47:06 +0530</pubDate>
            <description><![CDATA[&lt;p&gt;ರಾಯಚೂರಿನ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ ನಡೆದಿದೆ. ಕಳ್ಳರು ಹುಂಡಿಯನ್ನು ಮುಟ್ಟಿಲ್ಲ. ಆದರೆ ದೇಗುಲದಲ್ಲಿರುವ ಬೆಳ್ಳಿ ಸೇರಿದಂತೆ ಆಭರಣ ಒಂದನ್ನು ಬಿಡದೆ ಕಳ್ಳತನ ಮಾಡಿರುವುದು ಸಿಸಿಟಿಯಲ್ಲಿ ಸೆರೆಯಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krt57f50rcakky64ge128zbs,imgname-raichur-temple-theft-1778994363552.png" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರಿನ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ ನಡೆದಿದೆ. ಕಳ್ಳರು ಹುಂಡಿಯನ್ನು ಮುಟ್ಟಿಲ್ಲ. ಆದರೆ ದೇಗುಲದಲ್ಲಿರುವ ಬೆಳ್ಳಿ ಸೇರಿದಂತೆ ಆಭರಣ ಒಂದನ್ನು ಬಿಡದೆ ಕಳ್ಳತನ ಮಾಡಿರುವುದು ಸಿಸಿಟಿಯಲ್ಲಿ ಸೆರೆಯಾಗಿದೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಶನಿ ಮಹಾತ್ಮ ಜಯಂತಿ ದಿನವೇ ಆಂಜನೇಯ ಸ್ವಾಮಿ ದೇಗುಲ ಕಳ್ಳತನ ನಡೆದ ಘಟನೆ ರಾಯಚೂರಿನ ಸಿಂಧನೂರು ತಾ. ಒಳಬಳ್ಳಾರಿ ರಸ್ತೆಯ ಜೋಳದರಾಶಿ ಬಳಿ ನಡೆದಿದೆ. ಪ್ರಸಿದ್ಧ ಆಂಜನೇಯ ಸ್ವಾಮಿ ದೇಗುಲ ಪ್ರತಿ ದಿನ ಹಲವು ಭಕ್ತರು ಭೇಟಿ ನೀಡಿ ದರ್ಶನ ಪಡೆಯುತ್ತಾರೆ. ಭಕ್ತರು ಕಾಣಿಕೆಯನ್ನೂ ನೀಡುತ್ತಾರೆ. ಇದೇ ದೇಗುಲ ಟಾರ್ಗೆಟ್ ಮಾಡಿ ಕಳ್ಳತನ ಮಾಡಲಾಗಿದೆ.&lt;/p&gt;&lt;img&gt;&lt;p&gt;ಇಬ್ಬರು ಕಳ್ಳರು ಮುಖಕ್ಕೆ ಮಾಸ್ಕ್ ಹಾಗೂ ಬಟ್ಟೆ ಕಟ್ಟಿಕೊಂಡು ಆಂಜನೇಯ ಸ್ವಾಮಿ ದೇಗುಲಕ್ಕೆ ಎಂಟ್ರಿಕೊಟ್ಟಿದ್ದಾರೆ. ದೇವಸ್ಥಾನದ ಬೀಗ ಮುರಿದು ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ ನಡೆಸಿದ್ದಾರೆ. ಈ ಕಳ್ಳತನ ಮಾದರಿ ಇದೀಗ ಹಲವು ಅನುಮಾನಕ್ಕೂ ಕಾರಣಾಗಿದೆ.&lt;/p&gt;&lt;img&gt;&lt;p&gt;ದೇಗುಲ ಪ್ರವೇಶಿಸಿದ ಕಳ್ಳರು ದೇವಸ್ಥಾನದ ಹುಂಡಿಯನ್ನು ಮುಟ್ಟಿಲ್ಲ. ಆದರೆ ಆಂಜನೇಯನಿಗೆ ತೊಡಿಸಿದ ಆಭರಣ ಸೇರಿದಂತೆ ಭದ್ರವಾಗಿಟ್ಟಿದ್ದ ಬೆಳ್ಳಿಯ ಆಭರಣ, ಸಾಮಾಗ್ರಿಗಳನ್ನು ಕಳ್ಳತನ ಮಾಡಿದ್ದಾರೆ. ಇಬ್ಬರು ಖದೀಮರಿಂದ ಬೆಳ್ಳಿ ಉಡದಾರ, ಬೆಳ್ಳಿ ತಟ್ಟೆ, ಪೂಜೆಯ ತಾಮ್ರದ ತಟ್ಟೆ ಕಳವು ಮಾಡಿದ್ದಾರೆ.&lt;/p&gt;&lt;img&gt;&lt;p&gt;ದೇಗುಲದ ಎದುರೇ ಹುಂಡಿ ಇತ್ತು. ಹುಂಡಿಯಲ್ಲಿ ಹಣವೂ ಭರ್ತಿಯಾಗಿತ್ತು. ಆದರೆ ಕಳ್ಳರು ಹುಂಡಿಯನ್ನು ಮುಟ್ಟದೇ ಬರಿ ಬೆಳ್ಳಿ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ. ಇದು ಹಲವು ಅನುಮಾನಕ್ಕೆ ಕಾರಣಾಗಿದೆ. ಕಳ್ಳತನದ ಪ್ರತಿಯೊಂದು ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ.&lt;/p&gt;&lt;img&gt;&lt;p&gt;ಮಾಹಿತಿ ತಿಳಿದು ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಗುಲದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>raichur</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/karnataka-districts/theft-at-anjaneya-temple-on-festival-day-donation-box-left-untouched-raichur-q56cs08"/>
        </item>
        <item>
            <title><![CDATA[ಗಂಟೆಗೆ ₹600 ನೀಡಿದರೆ ಸಿಗುತ್ತಾರೆ ಗೆಳೆಯರು.. ಜಪಾನ್‌ನಂತೆ ಭಾರತದಲ್ಲೂ ಶುರುವಾಯ್ತಾ 'ಫ್ರೆಂಡ್ ಫಾರ್ ರೆಂಟ್' ಸಂಸ್ಕೃತಿ!]]></title>
            <link>https://kannada.asianetnews.com/raichur/combating-loneliness-now-rent-a-friend-in-india-starting-at-600-rs-per-hour/articleshow-qx3yggv</link>
            <guid isPermaLink="true">https://kannada.asianetnews.com/raichur/combating-loneliness-now-rent-a-friend-in-india-starting-at-600-rs-per-hour/articleshow-qx3yggv</guid>
            <pubDate>Fri, 01 May 2026 16:19:24 +0530</pubDate>
            <description><![CDATA[&lt;p&gt;GetCompanion startup: ಇಂದಿನ ವೇಗದ ಬದುಕಿನಲ್ಲಿ, ಅದರಲ್ಲೂ ವಿಶೇಷವಾಗಿ ಮೆಟ್ರೋ ನಗರಗಳಲ್ಲಿ ಜನಸಂದಣಿಯ ನಡುವೆಯೂ ಮನುಷ್ಯ ಒಂಟಿತನವನ್ನು ಅನುಭವಿಸುತ್ತಿದ್ದಾನೆ. ಈ ಭಾವನಾತ್ಮಕ ಕೊರತೆಯನ್ನು ನೀಗಿಸಲು ಈಗ ಭಾರತದಲ್ಲಿ 'ಬಾಡಿಗೆ ಗೆಳೆಯರ' (Rental Friends) ಹೊಸ ಸಂಸ್ಕೃತಿ ಮೊಳಕೆಯೊಡೆಯುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqhjbpcmwcc4hjf0bczfqsae,imgname-thumbnail---2026-05-01t161604.164-1777632401812.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಾ&lt;/strong&gt;ರತದ ಪ್ರಮುಖ ನಗರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಒಂದು ವಿಚಿತ್ರ ಹಾಗೂ ಆತಂಕಕಾರಿ ಪರಿಸ್ಥಿತಿಯು ಎದುರಾಗುತ್ತಿದೆ. ಜನಸಂದಣಿಯಿಂದ ಕಿಕ್ಕಿರಿದ ಮೆಟ್ರೋ ರೈಲುಗಳು, ಕೆಫೆಗಳು ಮತ್ತು ಸ್ಮಾರ್ಟ್&zwnj;ಫೋನ್&zwnj;ಗಳ ಅತಿಯಾದ ಬಳಕೆಯ ನಡುವೆಯೂ ಜನರ ಒಳಮನಸ್ಸಿನಲ್ಲಿ 'ಒಂಟಿತನ' ಎಂಬುದು ಒಂದು ಮೌನ ಸಾಂಕ್ರಾಮಿಕ ರೋಗದಂತೆ ಬೆಳೆಯುತ್ತಿದೆ. 958 ಮಿಲಿಯನ್&zwnj;ಗಿಂತಲೂ ಹೆಚ್ಚು ಇಂಟರ್ನೆಟ್ ಬಳಕೆದಾರರನ್ನು ಹೊಂದಿರುವ ಭಾರತದಲ್ಲಿ ಇಂದು ಜನರು ಡಿಜಿಟಲ್ ಆಗಿ ಹೆಚ್ಚು ಸಂಪರ್ಕದಲ್ಲಿದ್ದರೂ, ಭಾವನಾತ್ಮಕವಾಗಿ ಅಷ್ಟೇ ದೂರವಾಗುತ್ತಿದ್ದಾರೆ.&lt;/p&gt;&lt;p&gt;ದೀರ್ಘ ಕೆಲಸದ ಅವಧಿ, ಹೊಸ ನಗರಗಳಿಗೆ ಉದ್ಯೋಗಕ್ಕಾಗಿ ವಲಸೆ ಹೋಗುವುದು ಮತ್ತು ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚುತ್ತಿರುವುದು ಈ ಆಧುನಿಕ ಒಂಟಿತನಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಸಮಸ್ಯೆಯು ಕೇವಲ ಮಾನಸಿಕ ಅಸ್ವಸ್ಥತೆಗೆ ಸೀಮಿತವಾಗದೆ, ನಿದ್ರಾಹೀನತೆ, ಹೃದ್ರೋಗ ಮತ್ತು ಅಲ್ಝೈಮರ್&zwnj;ನಂತಹ ಗಂಭೀರ ಕಾಯಿಲೆಗಳಿಗೆ ಪ್ರಚೋದನೆ ನೀಡುತ್ತಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.&lt;/p&gt;&lt;h2&gt;&lt;strong&gt;ಬಾಡಿಗೆ ಗೆಳೆಯರು ಸಿಗ್ತಾರೆ&lt;/strong&gt;&lt;/h2&gt;&lt;p&gt;ಭಾರತದಲ್ಲಿ ಹೆಚ್ಚುತ್ತಿರುವ ಒಂಟಿತನದ ಸಮಸ್ಯೆಗೆ ಪರಿಹಾರವಾಗಿ ಈಗ 'GetCompanion' ನಂತಹ ಹೊಸ ಸ್ಟಾರ್ಟ್&zwnj;ಅಪ್&zwnj;ಗಳು ಮಾರುಕಟ್ಟೆಗೆ ಬರುತ್ತಿವೆ. ಇವುಗಳು ಜನರಿಗೆ ನೀವು ಒಬ್ಬಂಟಿಯಾಗಿದ್ದಾಗ ಯಾರ ಜೊತೆಯಾದರೂ ಮಾತನಾಡಬೇಕು ಎನಿಸಿದರೆ ಅಥವಾ ವಾಕಿಂಗ್ ಹೋಗಲು, ವಿಡಿಯೋ ಗೇಮ್ ಆಡಲು ಸಂಗಾತಿಯನ್ನು ಒದಗಿಸುತ್ತವೆ. ನೀವಿಲ್ಲಿ ಗಂಟೆಗೆ 600 ರಿಂದ 2,000 ರೂಪಾಯಿಗಳನ್ನು ನೀಡಿ ಒಬ್ಬ ಗೆಳೆಯನನ್ನು ಬಾಡಿಗೆಗೆ ಪಡೆಯಬಹುದು.&lt;/p&gt;&lt;h3&gt;&lt;strong&gt;ಅನೈತಿಕ ಚಟುವಟಿಕೆಗೆ ಅವಕಾಶವಿಲ್ಲ&lt;/strong&gt;&lt;/h3&gt;&lt;p&gt;ಈ ಪರಿಕಲ್ಪನೆಯು ಜಪಾನ್&zwnj;ನಲ್ಲಿರುವ 'ಬಾಯ್&zwnj;ಫ್ರೆಂಡ್ ರೆಂಟಲ್' ಸೇವೆಯಂತೆ ಕಂಡರೂ, ಭಾರತದಲ್ಲಿ ಇದು ಕೇವಲ ಸ್ನೇಹ ಮತ್ತು ಮಾತುಕತೆಗೆ ಮಾತ್ರ ಸೀಮಿತವಾಗಿದೆ. ಇಲ್ಲಿ ಕಟ್ಟುನಿಟ್ಟಾದ ನಿಯಮಗಳಿದ್ದು, ಯಾವುದೇ ರೀತಿಯ ಡೇಟಿಂಗ್, ಶಾರೀರಿಕ ಸಂಪರ್ಕ ಅಥವಾ ಅನೈತಿಕ ಚಟುವಟಿಕೆಗಳಿಗೆ ಆಸ್ಪದವಿಲ್ಲ ಮತ್ತು ಅಂತಹ ಕೆಲಸಗಳಿಗೆ ಇಲ್ಲಿ ಅವಕಾಶವೂ ಇರುವುದಿಲ್ಲ. ಮೂಲಭೂತವಾಗಿ, ಇದು ಮನುಷ್ಯನ ಸಾಂಗತ್ಯವನ್ನು ಅಧಿಕೃತವಾಗಿ ಮತ್ತು ಸುರಕ್ಷಿತವಾಗಿ ಬಾಡಿಗೆಗೆ ಪಡೆಯುವ ಒಂದು ಆಧುನಿಕ ವ್ಯವಸ್ಥೆಯಾಗಿದೆ.&lt;/p&gt;&lt;h3&gt;&lt;strong&gt;ಹೀಗೆ ನಡೆಯಲಿದೆ ನೇಮಕಾತಿ&lt;/strong&gt;&lt;/h3&gt;&lt;p&gt;ಈ ಸೇವೆಯು ಕೇವಲ ಹರಟೆ ಹೊಡೆಯಲು ಮಾತ್ರವಲ್ಲದೆ, ದೈನಂದಿನ ಅವಶ್ಯಕತೆಗಳಿಗೂ ಆಸರೆಯಾಗುತ್ತಿದೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ತನ್ನ 91 ವರ್ಷದ ತಂದೆಗೆ ಪುಸ್ತಕ ಓದಿ ಹೇಳಲು, ಔಷಧಿ ನೀಡಲು ಮತ್ತು ಆಸ್ಪತ್ರೆಗೆ ಕರೆದೊಯ್ಯಲು ಇಂತಹ ಪಾವತಿ ಆಧಾರಿತ ಸಹಾಯಕರನ್ನು ಬಳಸಿಕೊಳ್ಳುತ್ತಿದ್ದಾರೆ. ದಿನಸಿ ಖರೀದಿಸಲು ಜೊತೆಯಾಗುವುದು ಅಥವಾ ಏರ್&zwnj;ಪೋರ್ಟ್&zwnj;ಗೆ ಹೋಗುವಾಗ ಜೊತೆಗಿರುವುದು ಹೀಗೆ ಸಣ್ಣಪುಟ್ಟ ಕೆಲಸಗಳಿಗೂ ಜನರಿಗೆ ಒಬ್ಬ ನಂಬಿಕಸ್ಥ ಸಂಗಾತಿಯ ಅವಶ್ಯಕತೆ ಇಂದಿನ ವೇಗದ ಬದುಕಿನಲ್ಲಿ ಅನಿವಾರ್ಯವಾಗಿದೆ. ಅಂದಹಾಗೆ ಈ ಸಂಸ್ಥೆಗಳು ಅಭ್ಯರ್ಥಿಗಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವ ಮೊದಲು ಅವರ ಹಿನ್ನೆಲೆ ಪರಿಶೀಲನೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಕಠಿಣ ತರಬೇತಿಯನ್ನು ನೀಡುತ್ತವೆ. ಮಹಿಳಾ ಸಿಬ್ಬಂದಿಗಳ ಸುರಕ್ಷತೆಗಾಗಿ ಅವರ ಜೊತೆ ಪುರುಷ ಸಿಬ್ಬಂದಿಯನ್ನು ಕಳುಹಿಸುವ ಪ್ರೋಟೋಕಾಲ್ ಕೂಡ ಇಲ್ಲಿದೆ.&lt;/p&gt;&lt;h3&gt;&lt;strong&gt;ಬೇಕಿದೆ ಮನುಷ್ಯನ ಸಾಂಗತ್ಯ&lt;/strong&gt;&lt;/h3&gt;&lt;p&gt;ಕೊನೆಯದಾಗಿ ಹೇಳಬೇಕೆಂದರೆ, ಬಾಡಿಗೆ ಗೆಳೆಯರ ಈ ಸಂಸ್ಕೃತಿಯು ನಮ್ಮ ಸಮಾಜದ ಕಟು ವಾಸ್ತವದ ಪ್ರತಿಬಿಂಬವಾಗಿದೆ. ಜನರಿಗೆ ಇಂದು ಸಲಹೆ ಅಥವಾ ತಂತ್ರಜ್ಞಾನಕ್ಕಿಂತ ಹೆಚ್ಚಾಗಿ ತಮ್ಮ ಪಕ್ಕದಲ್ಲಿ ಕುಳಿತು ಮೌನವಾಗಿ ಆಲಿಸುವ ಒಬ್ಬ ಮನುಷ್ಯನ ಸಾಂಗತ್ಯ ಬೇಕಿದೆ. ಡಿಜಿಟಲ್ ಯುಗದಲ್ಲಿ ಮರೆಯಾಗುತ್ತಿರುವ ಮಾನವೀಯ ಸ್ಪರ್ಶ ಮತ್ತು ಪರಸ್ಪರ ಒಡನಾಟವನ್ನು ಇಂತಹ ಸೇವೆಗಳು ಒದಗಿಸಲು ಪ್ರಯತ್ನಿಸುತ್ತಿವೆ. ಮುಂದಿನ ದಿನಗಳಲ್ಲಿ ಇದು ಕೇವಲ ಒಂದು ಸೇವೆಯಾಗಿ ಉಳಿಯದೆ, ನಗರ ಬದುಕಿನ ಒಂದು ಅನಿವಾರ್ಯ ಜೀವನಶೈಲಿಯಾಗಿ ಬದಲಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇಂದಿನ ಜಗತ್ತಿನಲ್ಲಿ ಎಲ್ಲರೂ ಸಂಪರ್ಕದಲ್ಲಿದ್ದರೂ, ಭಾವನಾತ್ಮಕವಾಗಿ ಯಾರಿಗೂ ಒಬ್ಬ ಗೆಳೆಯ ಸಿಗುತ್ತಿಲ್ಲ ಎಂಬ ಕೊರತೆಯನ್ನು ಇವು ಸದ್ಯಕ್ಕೆ ನೀಗಿಸುತ್ತಿವೆ.&lt;/p&gt;]]></content:encoded>
            <category>raichur</category>
            <dc:creator>Ashwini HR</dc:creator>
            <atom:link href="https://kannada.asianetnews.com/raichur/combating-loneliness-now-rent-a-friend-in-india-starting-at-600-rs-per-hour/articleshow-qx3yggv"/>
        </item>
        <item>
            <title><![CDATA[ರಾಯಚೂರು:ತನ್ನ ರಕ್ತವನ್ನೇ ಭಕ್ಷಿಸಿದ ತಂದೆ, ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ, ಸ್ನೇಹಿತನನ್ನೂ ಮಲಗಿಸಿದ ಅಪ್ಪ!]]></title>
            <link>https://kannada.asianetnews.com/karnataka-districts/father-and-his-friend-abused-minor-daughter-in-raichur-lingasugur-village-gdp/articleshow-rg6yqrw</link>
            <guid isPermaLink="true">https://kannada.asianetnews.com/karnataka-districts/father-and-his-friend-abused-minor-daughter-in-raichur-lingasugur-village-gdp/articleshow-rg6yqrw</guid>
            <pubDate>Sat, 16 May 2026 15:18:00 +0530</pubDate>
            <description><![CDATA[ರಾಯಚೂರಿನ ಲಿಂಗಸೂಗೂರು ಪಟ್ಟಣದಲ್ಲಿ, ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೆ, ತನ್ನ ಸ್ನೇಹಿತನೊಂದಿಗೂ ಮಗಳನ್ನು ಮಲಗಿಸಿದ್ದು, ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krr2sd381ypa4jsay7vsvzj5,imgname-raichur-father-case-1778924696680.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು: &lt;/strong&gt;ಜಿಲ್ಲೆಯಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದ್ದು, ತಂದೆಯೊಬ್ಬ ತನ್ನದೇ ರಕ್ತವಾದ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಅಮಾನವೀಯ ಘಟನೆ ಇಲ್ಲಿನ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.&lt;/p&gt;&lt;h2&gt;ಮಗಳ ಮೇಲೆಯೇ ತಂದೆಯು ದೌರ್ಜನ್ಯ&lt;/h2&gt;&lt;p&gt;ಸುಮಾರು ಎರಡು ವರ್ಷಗಳ ಕಾಲ ನಿರಂತರವಾಗಿ ಅಪ್ರಾಪ್ತೆ ಮಗಳ ಮೇಲೆಯೇ ತಂದೆಯು ದೌರ್ಜನ್ಯ ಎಸಗಿದ್ದ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ , ಭಯ ಮತ್ತು ನೋವಿನಿಂದ ಬಾಲಕಿ ಮೌನವಾಗಿಯೇ ಎಲ್ಲವನ್ನು ಸಹಿಸಿಕೊಂಡಿದ್ದಳು. ಅಪ್ಪನ ಬೆದರಿಕೆಯಿಂದ ಬಾಲಕಿ ನೊಂದು ಹೋಗಿದ್ದಳು. ಆರೋಪಿಯು ತನ್ನ ಕೃತ್ಯವನ್ನು ಯಾರಿಗೂ ಹೇಳದಂತೆ ಮಾತ್ರವಲ್ಲ ಹೆತ್ತ ತಾಯಿಗೆ ವಿಷಯ ತಿಳಿಯಬಾರದೆಂದು ಮಗಳಿಗೆ ಧಮ್ಕಿ ಹಾಕುತ್ತಿದ್ದ, ಈ ಎಲ್ಲಾ ವಿಚಾರಗಳು ಈಗ ದೂರಿನಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;h2&gt;ತನ್ನ ಸ್ನೇಹಿತನ ಜೊತೆಗೆ ಬಲವಂತವಾಗಿ ಮಲಗಿಸಿದ ತಂದೆ&lt;/h2&gt;&lt;p&gt;ಇನ್ನೂ ಬೆಚ್ಚಿಬೀಳಿಸುವ ಶಾಕಿಂಗ್ ಸಂಗತಿಯೆಂದರೆ, ಆರೋಪಿಯು ತನ್ನ ಸ್ನೇಹಿತನನ್ನೂ ಈ ಕೃತ್ಯದಲ್ಲಿ ಭಾಗಿಯಾಗಿಸಿದ್ದಾನೆ. ತಾನು ಅತ್ಯಾ*ಚಾರಗೈದಿದ್ದು ಮಾತ್ರವಲ್ಲ ತನ್ನ ಸ್ನೇಹಿತ ಜೊತೆಗೆ ತನ್ನ ಮಕ್ಕಳನ್ನ ಮಲಗಿಸಿದ್ದಾನೆ ಈ ಪಾಪಿತಂದೆ. ಇದರಿಂದ ರೋಸಿ ಹೋದ ಬಾಲಕಿ ಪೊಲೀಸರ ಮೊರೆ ಹೋಗಿದ್ದು, ದೂರು ಆಧರಿಸಿ ಅತ್ಯಾ*ಚಾರಗೈದ ಆರೋಪದಡಿ ಇಬ್ಬರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.&lt;/p&gt;&lt;p&gt;ಈ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅಮರೇಶ್ (40) ಹಾಗೂ ಶೀನು (33) ಎಂದು ಗುರುತಿಸಲಾಗಿದೆ.&lt;/p&gt;&lt;p&gt;ಸದ್ಯ ಇಬ್ಬರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಬಾಲಕಿಯ ಸುರಕ್ಷತೆ ಮತ್ತು ನ್ಯಾಯಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಘಟನೆ ಸಮಾಜದಲ್ಲಿ ಆತಂಕ ಮೂಡಿಸಿದ್ದು, ಮಕ್ಕಳ ರಕ್ಷಣೆ ಹಾಗೂ ಕುಟುಂಬದ ಒಳಗಿನ ಹಿಂಸಾಚಾರ ತಡೆಯುವ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/father-and-his-friend-abused-minor-daughter-in-raichur-lingasugur-village-gdp/articleshow-rg6yqrw"/>
        </item>
        <item>
            <title><![CDATA[ವಾಹನ ಸವಾರರಿಗೆ ಬಿಗ್ ಶಾಕ್: 3 ರೂ. ದರ ಏರಿಕೆಯ ಬಳಿಕ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ₹95 ಒಳಗೆ, ರಾಯಚೂರಿನಲ್ಲಿ ₹107!]]></title>
            <link>https://kannada.asianetnews.com/state/fuel-shock-rs-3-hike-pushes-petrol-below-rs-95-in-delhi-rs-107-in-raichur-karnataka-rav/articleshow-rr5evgl</link>
            <guid isPermaLink="true">https://kannada.asianetnews.com/state/fuel-shock-rs-3-hike-pushes-petrol-below-rs-95-in-delhi-rs-107-in-raichur-karnataka-rav/articleshow-rr5evgl</guid>
            <pubDate>Fri, 15 May 2026 10:14:14 +0530</pubDate>
            <description><![CDATA[ರಾಯಚೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಒಂದೇ ದಿನದಲ್ಲಿ ₹3 ಕ್ಕಿಂತ ಹೆಚ್ಚು ಏರಿಕೆಯಾಗಿದ್ದು, ವಾಹನ ಸವಾರರಲ್ಲಿ ತೀವ್ರ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ದೆಹಲಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಹೆಚ್ಚಿರುವುದಕ್ಕೆ ರಾಜ್ಯ ಸರ್ಕಾರದ ಪಾತ್ರದ ಬಗ್ಗೆ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krmtjy57xaredd0ag8rms29f,imgname-delhi-cng-price-hike-hormuz-blockade-petrol-diesel-fuel-crisis-inflation-impact-india-0-1778815432871.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ.15): &lt;/strong&gt;ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ತೈಲ ಕಂಪನಿಗಳು ಮತ್ತೊಂದು ಬರೆ ಎಳೆದಿವೆ. ರಾಯಚೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ.&lt;/p&gt;&lt;h2&gt;ಒಂದೇ ದಿನದಲ್ಲಿ ₹3ಗೂ ಹೆಚ್ಚು ಏರಿಕೆ!&lt;/h2&gt;&lt;p&gt;ರಾಯಚೂರಿನಲ್ಲಿ ಇಂದಿನ ಪೆಟ್ರೋಲ್ ₹107.36, ನಿನ್ನೆ: ₹104.09 ಇತ್ತು. ಅಂದರೆ ಒಂದೇ ದಿನದಲ್ಲಿ ₹3.27 ಏರಿಕೆ!&lt;/p&gt;&lt;p&gt;ಇನ್ನು ಡೀಸೆಲ್ ಇಂದಿನ ದರ ₹95.29 ಆಗಿದೆ.ನಿನ್ನೆ: ₹92.18 ಇತ್ತು ಇಲ್ಲಿಯೂ ₹3.11 ಏರಿಕೆಯಾಗಿದೆ.&lt;/p&gt;&lt;p&gt;ಬೆಳ್ಳಂಬೆಳಗ್ಗೆ ಪೆಟ್ರೋಲ್ ಬಂಕ್&zwnj;ಗಳಿಗೆ ಬಂದ ವಾಹನ ಸವಾರರು, ರೇಟ್ ಕೇಳಿ ಆಘಾತಕ್ಕೊಳಗಾಗಿದ್ದಾರೆ. ಒಂದೇ ದಿನದಲ್ಲಿ ಇಷ್ಟು ಏರಿಕೆಯಾದರೆ ಹೇಗೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h3&gt;ದೆಹಲಿ Vs ಕರ್ನಾಟಕ: ದರದಲ್ಲಿ ಇಷ್ಟೊಂದು ವ್ಯತ್ಯಾಸವೇಕೆ?&lt;/h3&gt;&lt;p&gt;ದೇಶದ ರಾಜಧಾನಿ ದೆಹಲಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೈಲ ದರ ಗಗನಕ್ಕೇರಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹94.77 ರಷ್ಟಿದ್ದರೆ, ಬೆಂಗಳೂರು, ರಾಯಚೂರಿನಲ್ಲಿ ₹107.36 ತಲುಪಿದೆ. ಅಂದರೆ ದೆಹಲಿಗಿಂತ ರಾಜ್ಯದಲ್ಲಿಯೇ ಪೆಟ್ರೋಲ್ ಡೀಸೆಲ್ ದುಬಾರಿ ಆಯ್ತಲ್ಲ!&lt;/p&gt;&lt;h3&gt;ನಿಜಕ್ಕೂ ಬೆಲೆ ಹೆಚ್ಚಿಸಿದ್ದು ಯಾರು?&lt;/h3&gt;&lt;p&gt;ಕೇಂದ್ರ ಸರ್ಕಾರ ಬೆಲೆ ಏರಿಸುತ್ತಿದೆ ಎಂದು ಪ್ರತಿ ಬಾರಿ ದೂರುವ ರಾಜ್ಯ ಸರ್ಕಾರಕ್ಕೆ ಈಗ ಸಾರ್ವಜನಿಕರು ನೇರ ಪ್ರಶ್ನೆ ಹಾಕುತ್ತಿದ್ದಾರೆ. ಇಂಧನ ಬೆಲೆ 3 ರೂ. ಹೆಚ್ಚಿಸಿದ ಮೇಲೂ ದೆಹಲಿಯಲ್ಲಿ ಪೆಟ್ರೋಲ್ ದರ ₹95ರ ಒಳಗಿರುವಾಗ, ನಮ್ಮಲ್ಲಿ ₹107 ದಾಟುತ್ತಿರುವುದು ಹೇಗೆ? ಕೇಂದ್ರದ ಮೇಲೆ ಗೂಬೆ ಕೂರಿಸುವ ಮುನ್ನ, ರಾಜ್ಯ ಸರ್ಕಾರ ಈ 3 ರೂಪಾಯಿಗಳ ದರ ಹೆಚ್ಚಳಕ್ಕೆ ನೀಡುವ ಸಮರ್ಥನೆ ಏನು? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದೇ ನಿಮ್ಮ ಆಡಳಿತ ವೈಖರಿಯೇ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/fuel-shock-rs-3-hike-pushes-petrol-below-rs-95-in-delhi-rs-107-in-raichur-karnataka-rav/articleshow-rr5evgl"/>
        </item>
        <item>
            <title><![CDATA[Mantralayam cylinder blast: ಮಂತ್ರಾಲಯದ ಕಾರ್ಮಿಕರ ಶೆಡ್‌ನಲ್ಲಿ ಭೀಕರ ಸ್ಫೋಟ,  ತಪ್ಪಿದ ಭಾರೀ ಅನಾಹುತ!]]></title>
            <link>https://kannada.asianetnews.com/karnataka-districts/gas-cylinder-explosion-in-workers-shed-at-mantralaya-raichur-rav/articleshow-tr9qok4</link>
            <guid isPermaLink="true">https://kannada.asianetnews.com/karnataka-districts/gas-cylinder-explosion-in-workers-shed-at-mantralaya-raichur-rav/articleshow-tr9qok4</guid>
            <pubDate>Thu, 14 May 2026 06:11:29 +0530</pubDate>
            <description><![CDATA[&lt;p&gt;ಮಂತ್ರಾಲಯದ ರಾಯರ ಮಠದ ಬಳಿ ಬಿಹಾರ ಮೂಲದ ಕಾರ್ಮಿಕರು ವಾಸವಿದ್ದ ಶೆಡ್&zwnj;ಗಳಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಕಾರ್ಮಿಕರು ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಆದರೆ ಶೆಡ್&zwnj;ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krhym6p8h2ccd5mnmc7b39q0,imgname-----------------------2026-05-14t060415.014-1778719005384.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ.14):&lt;/strong&gt; ಮಂತ್ರಾಲಯದ ರಾಯರ ಮಠದಲ್ಲಿ ನಡೆಯುತ್ತಿರುವ ಕಟ್ಟಡ ಕೆಲಸದಲ್ಲಿ ಟೈಲ್ಸ್&zwnj; ಹಾಕುವುದಕ್ಕಾಗಿ ಬಿಹಾರದಿಂದ ಆಗಮಿಸಿರುವ 25ಕ್ಕೂ ಹೆಚ್ಚು ಕಾರ್ಮಿಕರು ಉಳಿದುಕೊಂಡಿದ್ದ ತಗಡಿನ ಶೆಡ್&zwnj;ಗಳಲ್ಲಿ ಬುಧವಾರ ಮಧ್ಯಾಹ್ನ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಶೆಡ್&zwnj;ಗಳು ಸುಟ್ಟು ಕರಕಲಾಗಿವೆ.&amp;nbsp;&lt;/p&gt;&lt;p&gt;ಈ ವೇಳೆ, ಕಾರ್ಮಿಕರೆಲ್ಲರೂ ಕೆಲಸಕ್ಕೆ ಹೋಗಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಫೋಟದ ಸದ್ದು ಕೇಳಿ ಭಕ್ತರು ಭಯಭೀತರಾಗಿ ಓಡಿಹೋದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.&lt;/p&gt;&lt;p&gt;ರಾಯರ ಮಠದಲ್ಲಿ ನಡೆಯುತ್ತಿರುವ ಕಟ್ಟಡ ಕೆಲಸದಲ್ಲಿ ಟೈಲ್ಸ್&zwnj; ಹಾಕುವುದಕ್ಕಾಗಿ ಬಿಹಾರದಿಂದ 25ಕ್ಕೂ ಹೆಚ್ಚು ಕಾರ್ಮಿಕರು ಆಗಮಿಸಿದ್ದು, ಐದು ತಾತ್ಕಾಲಿಕ ಶೆಡ್&zwnj;ಗಳಲ್ಲಿ ನೆಲೆಸಿದ್ದರು. ಬುಧವಾರ ಎಲ್ಲರೂ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಒಂದು ಶೆಡ್&zwnj;ನಲ್ಲಿನ ಸಿಲಿಂಡರ್&zwnj; ಸ್ಫೋಟಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ. ನಂತರ, ಇತರ ಬೆಂಕಿ ಇತರ ಶೆಡ್&zwnj;ಗಳಿಗೂ ವ್ಯಾಪಿಸಿ, 5 ಕೆಜಿಯ ಮೂರು ಸಿಲಿಂಡರ್&zwnj;ಗಳು ಸ್ಫೋಟಗೊಂಡಿವೆ. ಉಳಿದಿದ್ದ ಎರಡು ಸಿಲಿಂಡರ್&zwnj;ಗಳನ್ನು ಹೊರ ತೆಗೆದು ಹೆಚ್ಚಿನ ಅಪಾಯ ಸಂಭವಿಸದಂತೆ ತಡೆಯಲಾಗಿದೆ.&lt;/p&gt;&lt;p&gt;ಘಟನಾ ಸ್ಥಳಕ್ಕೆ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐದು ಶೆಡ್&zwnj;ಗಳಲ್ಲಿ ವಾಸವಿದ್ದ 25ಕ್ಕೂ ಹೆಚ್ಚು ಕಾರ್ಮಿಕರಿಗೆ ಪಡಿತರ ಸೇರಿ ಇತರ ವಸ್ತುಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದಾರೆ. ಮಂತ್ರಾಲಯ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gas-cylinder-explosion-in-workers-shed-at-mantralaya-raichur-rav/articleshow-tr9qok4"/>
        </item>
        <item>
            <title><![CDATA[ರಾಯಚೂರು ಲೇಡಿ ಕಾನ್ಸ್‌ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಬಂಧನ ಭೀತಿ]]></title>
            <link>https://kannada.asianetnews.com/gallery/state/karnataka-cop-controversy-yadgir-psi-faces-arrest-fear-in-relationship-case-va7nocg</link>
            <guid isPermaLink="true">https://kannada.asianetnews.com/gallery/state/karnataka-cop-controversy-yadgir-psi-faces-arrest-fear-in-relationship-case-va7nocg</guid>
            <pubDate>Fri, 08 May 2026 07:55:34 +0530</pubDate>
            <description><![CDATA[&lt;p&gt;ರಾಯಚೂರು ಲೇಡಿ ಕಾನ್ಸ್&zwnj;ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಈ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಮಹಿಳಾ ಪೇದಿ ದೂರು ನೀಡಿದ್ದು, ಇದೀಗ ಇಡೀ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಪಿಎಸ್ಐ ವಿರುದ್ಧ ಹಲವು ಕೇಸ್ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr2p55ceyqwt0y80skhb4ybs,imgname-raichuru-police-case-1778206807437.png" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರು ಲೇಡಿ ಕಾನ್ಸ್&zwnj;ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಈ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಮಹಿಳಾ ಪೇದಿ ದೂರು ನೀಡಿದ್ದು, ಇದೀಗ ಇಡೀ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಪಿಎಸ್ಐ ವಿರುದ್ಧ ಹಲವು ಕೇಸ್ ದಾಖಲಾಗಿದೆ.&lt;/p&gt;&lt;img&gt;&lt;p&gt;ಯಾದಗಿರಿ ಪಿಎಸ್ಐ ಹಾಗೂ ರಾಯಚೂರು ಲೇಡಿ ಕಾನ್ ಸ್ಟೇಬಲ್ ಲವ್, ಸೆಕ್ಸ್ ದೋಖಾ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರೀತಿ ಹೆಸರಲ್ಲಿ ಮೋಸ ಮಾಡಿ ಇದೀಗ ನಾನವನಲ್ಲ ಎಂದ ಪ್ರಕರಣದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದೆ. ಯಾದಿಗಿರಿ ಪಿಎಸ್ಐ ವಿರೇಶ್ ವಿರುದ್ಧ ರಾಯಚೂರು ಮಹಿಳಾ ಪೇದೆ ಜಯಶ್ರಿ ದೂರು ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ವಿರೇಶ್ ಪ್ರೀತಿ ಹೆಸರಲ್ಲಿ ತನ್ನನ್ನು ಹಲವು ಕಡೆ ಕರೆದುಕೊಂಡು ಹೋಗಿದ್ದ. ಕೊಪ್ಪಳದಲ್ಲಿ ತನ್ನ ಮೇಲೆ ಅತ್ಯಾ**ರ ನಡೆಸಿರುವುದಾಗಿ ಮಹಿಳಾ ಪೇದೆ ಜಯಶ್ರಿ ಆರೋಪಿಸಿದ್ದಾರೆ. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸ್ತಿರೋ ಜಯಶ್ರೀ ಇದೀಗ ಆರೋಪಗಳ ಸುರಿಮಳೆಗೈದಿದ್ದಾರೆ.&lt;/p&gt;&lt;img&gt;&lt;p&gt;ವಿರೇಶ್ ತನ್ನ ಮೇಲೆ ಅತ್ಯಾ**ರ ಎಸಗಿದ್ದಾನೆ. ಪರಿಣಾಮ ಎರಡು ಬಾರಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಜಯಶ್ರಿ ಆರೋಪಿಸಿದ್ದಾರೆ. ಇತ್ತ ವಿರೇಶ್ ಮೇಲೆ ಅಪಹರಣ ಪ್ರಕರಣ ಕೂಡ ದಾಖಲಾಗಿದೆ. ಬಲ*ತ್ಕಾರ, ಅಪಹರಣ ಮತ್ತು ಜಾತಿನಿಂದನೆ SC/ST ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.&lt;/p&gt;&lt;img&gt;&lt;p&gt;ಜಯಶ್ರಿ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಇವರ ಪ್ರೇಮ ಪ್ರಸಂಗದ ಹಲವು ವಿಡಿಯೋಗಳು, ಫೋಟೋಗಳು ವೈರಲ್ ಆಗಿದೆ. ಇದರ ಬೆನ್ನಲ್ಲೇ ಪಿಎಸ್ಐ ವಿರೇಶ್ ರಜೆ ಮೇಲೆ ತೆರಳಿದ್ದಾರೆ. ಇದೀಗ ವಿರೇಶ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣದಿಂದ ವಿರೇಶ್ ರಜೆ ಮೇಲೆ ತೆರಳಿದ್ದಾರೆ.&lt;/p&gt;&lt;img&gt;&lt;p&gt;ಮಹಿಳಾ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಶ್ರಿ ಗಂಭೀರ ಆರೋಪಗಳ ಪ್ರಕರಣ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.&lt;/p&gt;]]></content:encoded>
            <category>raichur</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/karnataka-cop-controversy-yadgir-psi-faces-arrest-fear-in-relationship-case-va7nocg"/>
        </item>
        <item>
            <title><![CDATA[ಸಚಿವ ಡಿ. ಸುಧಾಕರ್ ನಿಧನ; ಡಿಸಿಎಂ ಡಿಕೆ ಶಿವಕುಮಾರ ರಾಯಚೂರು ಪ್ರವಾಸ ದಿಢೀರ್ ರದ್ದು?]]></title>
            <link>https://kannada.asianetnews.com/state/minister-d-sudhakar-passes-away-dcm-dk-shivakumar-s-raichur-visit-abruptly-cancelled/articleshow-wzazyzn</link>
            <guid isPermaLink="true">https://kannada.asianetnews.com/state/minister-d-sudhakar-passes-away-dcm-dk-shivakumar-s-raichur-visit-abruptly-cancelled/articleshow-wzazyzn</guid>
            <pubDate>Sun, 10 May 2026 08:07:00 +0530</pubDate>
            <description><![CDATA[ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಯಚೂರು ಜಿಲ್ಲಾ ಪ್ರವಾಸವು, ಅವರ ಸಂಪುಟ ಸಹೋದ್ಯೋಗಿ ಹಾಗೂ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರದ್ದಾಗಿದೆ. ತಮ್ಮ ಆಪ್ತ ಗೆಳೆಯನ ಅಗಲಿಕೆಗೆ ಡಿಕೆಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7vr56y011dfjq2tdzyr8ka,imgname-----------------------2026-05-10t080350.098-1778380444894.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ.10):&lt;/strong&gt; ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣಕ್ಕೆ ಇಂದು ಆಗಮಿಸಬೇಕಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿ ಬಹುತೇಕ ರದ್ದಾಗಿದೆ. ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಈ ಪ್ರವಾಸವನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;ಕೈ ಕೊಟ್ಟ ಆರೋಗ್ಯ, ಸಚಿವ ಸುಧಾಕರ್ ಇನ್ನಿಲ್ಲ:&lt;/h2&gt;&lt;p&gt;ಹಿರಿಯೂರು ಶಾಸಕರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಸುಧಾಕರ್ ಅವರ ಸಾವು ಕಾಂಗ್ರೆಸ್ ಪಾಳಯದಲ್ಲಿ ಆಘಾತ ಮೂಡಿಸಿದೆ.&lt;/p&gt;&lt;h3&gt;ಆಪ್ತ ಗೆಳೆಯನ ಅಗಲಿಕೆಗೆ ಡಿಕೆಶಿ ಕಂಬನಿ&lt;/h3&gt;&lt;p&gt;ತಮ್ಮ ಸಂಪುಟ ಸಹೋದ್ಯೋಗಿಯ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. 'ನಮ್ಮ ಸಂಪುಟ ಸಹೋದ್ಯೋಗಿ ಹಾಗೂ ನನ್ನ ಆಪ್ತರೂ ಆಗಿದ್ದ ಡಿ. ಸುಧಾಕರ್ ಅವರ ಸಾವು ನನಗೆ ಅತೀವ ದುಃಖವನ್ನುಂಟು ಮಾಡಿದೆ. ಉತ್ತಮ ಜನಪರ ಸೇವಕನನ್ನು ನಾವು ಕಳೆದುಕೊಂಡಿದ್ದೇವೆ' ಎಂದು ಭಾವುಕರಾಗಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ಆಪ್ತರೂ ಆಗಿದ್ದ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದಿದ್ದು ಅತೀವ ದುಃಖವನ್ನುಂಟು ಮಾಡಿದೆ.&amp;nbsp;ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಉತ್ತಮ ರೀತಿಯಲ್ಲಿ ಜನಪರ ಸೇವೆ&hellip; pic.twitter.com/XqMbuzm08f&lt;/p&gt;&lt;p&gt;&mdash; DK Shivakumar (@DKShivakumar) May 10, 2026&lt;/p&gt;&lt;p&gt;&amp;nbsp;&lt;/p&gt;&lt;h3&gt;'ಶೋಕ ಸಾಗರದಲ್ಲಿ ಆಪ್ತರು&lt;/h3&gt;&lt;p&gt;'ಭಗವಂತ ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ' ಎಂದು ಡಿಕೆ ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಸಚಿವರ ನಿಧನದ ಹಿನ್ನೆಲೆಯಲ್ಲಿ ಇಂದಿನ ರಾಯಚೂರು ಪ್ರವಾಸ ಬಹುತೇಕ ರದ್ದಾಗಿದೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/minister-d-sudhakar-passes-away-dcm-dk-shivakumar-s-raichur-visit-abruptly-cancelled/articleshow-wzazyzn"/>
        </item>
        <item>
            <title><![CDATA[ಇಂದು ಸಿಂಧನೂರು ಪಟ್ಟಣಕ್ಕೆ ಕಿಚ್ಚ ಸುದೀಪ್! ಅಭಿಮಾನಿಗಳಿಗೆ ಹಬ್ಬ, ಏನಿದು, ಎಲ್ಲಿದೆ ಕಾರ್ಯಕ್ರಮ? ಇಲ್ಲಿದೆ ವಿವರ]]></title>
            <link>https://kannada.asianetnews.com/state/ichcha-sudeep-will-attend-the-massive-social-program-organized-by-the-basanagouda-foundation-in-sindhanur-rav/articleshow-xgcbm78</link>
            <guid isPermaLink="true">https://kannada.asianetnews.com/state/ichcha-sudeep-will-attend-the-massive-social-program-organized-by-the-basanagouda-foundation-in-sindhanur-rav/articleshow-xgcbm78</guid>
            <pubDate>Sun, 03 May 2026 08:31:16 +0530</pubDate>
            <description><![CDATA[ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬಸನಗೌಡ ಫೌಂಡೇಶನ್ ವತಿಯಿಂದ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು 'ಉಡಿ ತುಂಬುವ' ಕಾರ್ಯಕ್ರಮ ನಡೆಯಲಿದ್ದು, ನಟ ಕಿಚ್ಚ ಸುದೀಪ್, ಸಾಧುಕೋಕಿಲ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqnw9z1wqbtxb4qhnw6scykt,imgname-----------------------2026-05-03t081142.085-1777777048636.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮೇ.3):&lt;/strong&gt; ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣ ಇಂದು ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಗುತ್ತಿದೆ. ಬಸನಗೌಡ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ಭಾಗವಹಿಸಲು ಸ್ಯಾಂಡಲ್&zwnj;ವುಡ್ ನಟ ಕಿಚ್ಚ ಸುದೀಪ್ ಹಾಗೂ ಹಾಸ್ಯ ನಟ ಸಾಧುಕೋಕಿಲ ಇಂದು ಆಗಮಿಸುತ್ತಿದ್ದಾರೆ.&lt;/p&gt;&lt;h2&gt;ಬೃಹತ್ ಸಾಮಾಜಿಕ ಕಾರ್ಯಕ್ರಮದಲ್ಲಿ ಕಿಚ್ಚ ಭಾಗಿ&lt;/h2&gt;&lt;p&gt;ಸಿಂಧನೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಈ ಅದ್ಧೂರಿ ಸಮಾರಂಭ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಉಚಿತ ಸಾಮೂಹಿಕ ವಿವಾಹ ಹಾಗೂ 5001 ಮಹಿಳೆಯರಿಗೆ 'ಉಡಿ ತುಂಬುವ' ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.&lt;/p&gt;&lt;h3&gt;ರಾಜಕೀಯ ನಾಯಕರ ದಂಡು&lt;/h3&gt;&lt;p&gt;ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಸಚಿವರಾದ ಈಶ್ವರ್ ಖಂಡ್ರೆ, ಆರ್.ವಿ. ತಿಮ್ಮಾಪುರ, ಮಧು ಬಂಗಾರಪ್ಪ ಹಾಗೂ ಎನ್.ಎಸ್&zwnj;. ಬೋಸರಾಜು ಆಗಮಿಸಲಿದ್ದಾರೆ.&lt;/p&gt;&lt;p&gt;ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಹತ್ತಾರು ಶಾಸಕರು ಸಾಕ್ಷಿಯಾಗಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸಮಾರಂಭ ಆರಂಭವಾಗಲಿದ್ದು, ನೆಚ್ಚಿನ ನಟ ಹಾಗೂ ನಾಯಕರನ್ನು ನೋಡಲು ಜನರು ಕಾತುರರಾಗಿದ್ದಾರೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/ichcha-sudeep-will-attend-the-massive-social-program-organized-by-the-basanagouda-foundation-in-sindhanur-rav/articleshow-xgcbm78"/>
        </item>
        <item>
            <title><![CDATA[ರಾಜ್ಯದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ: ಪ್ರಧಾನಿ ಮಾತಿಗೆ ಡಿ.ಕೆ.ಶಿವಕುಮಾರ್ ತಿರುಗೇಟು]]></title>
            <link>https://kannada.asianetnews.com/karnataka-districts/dcm-dk-shivakumar-reaction-to-pm-modi-karnataka-cm-chair-gvd/articleshow-ykq26ae</link>
            <guid isPermaLink="true">https://kannada.asianetnews.com/karnataka-districts/dcm-dk-shivakumar-reaction-to-pm-modi-karnataka-cm-chair-gvd/articleshow-ykq26ae</guid>
            <pubDate>Mon, 11 May 2026 23:25:21 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ke4e92kg74w41s7hkcx6tsvt,imgname-----------------------2026-01-04t173327.258-1767528237680.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮುದಗಲ್&zwnj; (ಮೇ.11): &lt;/strong&gt;ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್&zwnj;ನಲ್ಲೂ ಇದೇ ರೀತಿ ಆಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.&lt;/p&gt;&lt;p&gt;ಇನ್ನು ಅಗಲಿದ ಸಚಿವ ಡಾ. ಸುಧಾಕರ್&zwnj; ಅವರನ್ನು ನೆನೆದ ಡಿಸಿಎಂ ಡಿ.ಕೆ.ಶಿವಕುಮಾರ್&zwnj;, ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಇರಬೇಕಿತ್ತು. ಕಳೆದೊಂದು ತಿಂಗಳ ಹಿಂದೆ ಮಂಡಿ ಶಸ್ತ್ರಚಿಕಿತ್ಸೆಗೆಂದು ಆತ್ಮೀಯರಾದ ಸುಧಾಕರ್&zwnj; ಅವರು ಆಸ್ಪತ್ರೆಗೆ ಹೋಗಿದ್ದರು. ನಂತರ ಲಂಗ್ಸ್&zwnj; ಇನ್ಫೆಕ್ಷನ್&zwnj; ಆಗಿ ಸಾಕಷ್ಟು ತೊಂದರೆ ಉಂಟಾಗಿತ್ತು. ಎಲ್ಲ ರೀತಿಯ ಪ್ರಯತ್ನಗಳು ಮಾಡಿದರೂ ಸಹ ಫಲ ದೊರೆಯಲಿಲ್ಲ. ಸಹಕಾರಿ ಕ್ಷೇತ್ರದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಬಹಳ ವರ್ಷಗಳ ಕಾಲ ಅಪೆಕ್ಷ್ ಬ್ಯಾಂಕ್&zwnj;ನಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅವರು ಭದ್ರಾ ಮೇಲ್ದಂಡೆ ಯೋಜನೆಯ ನೀರಾವರಿ ಮಾಡಲು ಎಲ್ಲ ಶಾಸಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗಲು ಯಶಸ್ವಿಯಾಗಿದ್ದರು.&lt;/p&gt;&lt;p&gt;ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು. ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತ ಉಂಟಾಗಿದೆ ಎಂದು ನೋವು ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ&lt;/strong&gt;&lt;/h2&gt;&lt;p&gt;ಸದನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚೆಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಕುಡಿಯುವ ನೀರು ನೀಡಲು ನಮ್ಮ ಇಲಾಖೆಯಿಂದ ಹೆಚ್ಚಿನ ಆದ್ಯತೆಯಿದೆ. ಈ ಕುರಿತು ಇಲಾಖೆ ಅಧಿಕಾರಿಗಳ ಹತ್ತಿರ ಮಾತನಾಡಿ, ಯಾವ ಯಾವ ರೀತಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಅದನ್ನು ಮಾಡಲಾಗುವುದು ಎಂದು ಡಿಕೆಶಿ ಅವರು ತಿಳಿಸಿದರು.&lt;/p&gt;]]></content:encoded>
            <category>raichur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dcm-dk-shivakumar-reaction-to-pm-modi-karnataka-cm-chair-gvd/articleshow-ykq26ae"/>
        </item>
    </channel>
</rss>
