<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 27 Apr 2026 09:44:44 +0530</lastBuildDate>
        <atom:link href="https://kannada.asianetnews.com/rss/raichur" rel="self" type="application/rss+xml"/>
        <item>
            <title><![CDATA[ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ದಾರುಣ ಸಾವು, ಯುವತಿ ಕಾಲು ಕಟ್: ಅಪಘಾತದ ರಭಸಕ್ಕೆ ಛಿದ್ರವಾದ ದೇಹಗಳು]]></title>
            <link>https://kannada.asianetnews.com/state/two-killed-as-tipper-hits-bike-carrying-four-people-in-siravara/articleshow-0r8n9po</link>
            <guid isPermaLink="true">https://kannada.asianetnews.com/state/two-killed-as-tipper-hits-bike-carrying-four-people-in-siravara/articleshow-0r8n9po</guid>
            <pubDate>Mon, 27 Apr 2026 09:44:38 +0530</pubDate>
            <description><![CDATA[&lt;p&gt;&amp;nbsp;ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ನಾಲ್ವರು ಸಂಚರಿಸುತ್ತಿದ್ದ ಬೈಕ್&zwnj;ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾ &amp;nbsp;ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knht9m06rbn2d19a02pgnxck,imgname-belagavi-accident-1775493238789.jpeg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಜಾತ್ರೆ ನೋಡಲು ಹೋದವರು ಮಸಣಕ್ಕೆ&lt;/strong&gt;&lt;/h2&gt;&lt;p&gt;ರಾಯಚೂರು: ಜಾತ್ರೆಗೆ ತೆರಳಿದವರು ಅಪಘಾತಕ್ಕೆ ಬಲಿಯಾದಂತಹ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆಂದು ಬಂದು ವಾಪಸ್ ಹೋಗುವ ವೇಳೆ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್&zwnj;ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;p&gt;&lt;strong&gt;ನಾಲ್ವರು ಸಂಚರಿಸುತ್ತಿದ್ದ ಬೈಕ್&zwnj;ಗೆ ಡಿಕ್ಕಿ ಹೊಡೆದ ಟಿಪ್ಪರ್&lt;/strong&gt;&lt;/p&gt;&lt;p&gt;ಬಸವೇಶ್ವರ ಜಾತ್ರೆಯ ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಮೃತರ ದೇಹ ನಜ್ಜುಗುಜ್ಜಾಗಿದ್ದು, ದೇಹದ ಭಾಗಗಳು ಛಿದ್ರ ಛಿದ್ರವಾಗಿವೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಓಡಿಸುತ್ತಿದ್ದ 37 ವರ್ಷದ ಅಂಜಿನಯ್ಯ ನಾಯಕ ಹಾಗೂ 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ 19 ಶ್ವೇತಾ ಅವರ ಕಾಲು ಕಟ್ ಆಗಿದೆ ಹಾಗೂ 22 ವರ್ಷದ ಲಕ್ಷ್ಮಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಬ್ಬರನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;p&gt;ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳು ನಿನ್ನೆ ಸಂಜೆ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ಬಂದಿದ್ದರು. ಬಳಿಕ ರಾತ್ರಿ ಶಾಖಾಪುರಕ್ಕೆ ಒಂದೇ ಬೈಕ್&zwnj;ನಲ್ಲಿ ಹೋಗುತ್ತಿದ್ದ ವೇಳೆ ಮಾರ್ಗಮಧ್ಯೆ ಇವರು ಸಾಗುತ್ತಿದ್ದ ಬೈಕ್&zwnj;ಗೆ ಟಿಪ್ಪರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಿಷಕಾರಿ ಹಾವಿನಿಂದ 30 ಮಕ್ಕಳ ರಕ್ಷಿಸಿ ಪ್ರಾಣ ಬಿಟ್ಟ ಶ್ವಾನ: ಬೀದಿನಾಯಿ ಕಾಳಿಗೆ ಗ್ರಾಮಸ್ಥರ ಭಾವುಕ ವಿದಾಯ&lt;/strong&gt;&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/state/two-killed-as-tipper-hits-bike-carrying-four-people-in-siravara/articleshow-0r8n9po"/>
        </item>
        <item>
            <title><![CDATA[ಜೆಡಿಎಸ್‌ಗೆ ಪೂರ್ಣ ಬಹುಮತ ದಕ್ಕುತ್ತಿಲ್ಲ; ನನ್ನನ್ನು ಹೊಗಳುವ ಜನರು ಚುನಾವಣೇಲಿ ಮತ ಹಾಕೋಲ್ಲ: ಎಚ್‌ಡಿಕೆ ಬೇಸರ]]></title>
            <link>https://kannada.asianetnews.com/politics/people-praise-me-but-dont-vote-when-elections-come-kumaraswamy-is-upset-rav/articleshow-15legpr</link>
            <guid isPermaLink="true">https://kannada.asianetnews.com/politics/people-praise-me-but-dont-vote-when-elections-come-kumaraswamy-is-upset-rav/articleshow-15legpr</guid>
            <pubDate>Sun, 05 Apr 2026 08:51:05 +0530</pubDate>
            <description><![CDATA[&lt;p&gt;ಸಿಂಧನೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್&zwnj;.ಡಿ.ಕುಮಾರಸ್ವಾಮಿ, ಜನರು ತನ್ನನ್ನು ಹೊಗಳಿದರೂ ಚುನಾವಣೆಯಲ್ಲಿ ಜೆಡಿಎಸ್&zwnj;ಗೆ ಮತ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯ ಸರ್ಕಾರದ ಜೊತೆ ನಿಲ್ಲುವುದಾಗಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kndt3f0z9jxp0gk6pryq2jxn,imgname----------------------69--1775358819359.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಿಂಧನೂರು (ಏ.5): &lt;/strong&gt;ನನ್ನನ್ನು ಹೊಗಳುವ ಜನರು, ಚುನಾವಣೆಯಲ್ಲಿ ಜೆಡಿಎಸ್&zwnj;ಗೆ ಮತ ಹಾಕುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;ಜನ ನನ್ನ ಹೊಗಳುತ್ತಾರೆ ಚುನಾವಣೆ ಬಂದಾಗ ಮತ ಹಾಕೋಲ್ಲ&lt;/h2&gt;&lt;p&gt;ಜನರು ನನ್ನ ಬಗ್ಗೆ ಮಾತನಾಡುತ್ತಾರೆ. ಸಾಲ ಮನ್ನಾದಂತಹ ಕಾರ್ಯಕ್ರಮಗಳನ್ನು ಹಾಡಿ ಹೊಗಳುತ್ತಾರೆ. ಆದರೆ ಚುನಾವಣೆ ಬಂದಾಗ ನಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ. ಜೆಡಿಎಸ್ ಪೂರ್ಣ ಬಹುಮತದ ಸರ್ಕಾರ ಇದುವರೆಗೂ ರಚನೆ ಆಗಿಲ್ಲ. ನಾನು ಎರಡು ಬಾರಿ ಮುಖ್ಯಮಂತ್ರಿ ಆದರೂ ಅದೃಷ್ಟದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳಿದರು.&lt;/p&gt;&lt;h3&gt;ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಎಚ್ಡಿಕೆ&lt;/h3&gt;&lt;p&gt;ರಾಜ್ಯ ಸರ್ಕಾರದ ಜತೆ ಇದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು. ಎಲ್ಲರೂ ಸಂಘಟಿತವಾಗಿ ಕೆಲಸ ಮಾಡಿದರೆ ಮಾತ್ರ ರಾಜ್ಯಕ್ಕೆ ಒಳ್ಳೆದಾಗುತ್ತದೆ. ಅಭಿವೃದ್ಧಿ ವಿಷಯದಲ್ಲಿ ನಾನು ಎಂದೆಂದಿಗೂ ರಾಜ್ಯ ಸರ್ಕಾರದ ಜೊತೆಗೆ ನಿಲ್ಲುತ್ತೇನೆ.&lt;/p&gt;&lt;p&gt;ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯ ಅನೇಕ ಕೆಲಸಗಳು ಆಗಬೇಕಿದೆ. ಅದಕ್ಕಾಗಿ ರಾಜಕೀಯ ಭಿನ್ನಮತ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾ ಗುತ್ತದೆ. ನನ್ನ ಕಡೆಯಿಂದ ಏನೇ ಕೆಲಸ ಆಗಬೇಕಿದ್ದರೂ ಯಾರೇ ಆಗಲಿ ನನ್ನನ್ನು ಮುಕ್ತವಾಗಿ ಸಂಪರ್ಕಿಸಬಹುದು. ರಾಜ್ಯಕ್ಕೆ ಒಳ್ಳೆಯದು ಮಾಡುವುದು ನನ್ನ ಕರ್ತವ್ಯ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.&lt;/p&gt;&lt;p&gt;9 ಕೈಗಾರಿಕೆ ಕ್ಲಸ್ಟರ್ ನೆನಪಿಸಿದ ಹೆಚ್ಡಿಕೆ&lt;/p&gt;&lt;p&gt;ಕರ್ನಾಟಕ ರಾಜ್ಯ ಸಮಾನವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಕಾಂಪೀಟ್ ವಿಥ್ ಚೈನಾ ಎನ್ನುವ ಕಾರ್ಯಕ್ರಮ ರೂಪಿಸಿದೆ. 2018ರಲ್ಲಿ ಕಾಂಗ್ರೆಸ್ ಜೊತೆ ನಾನು ಮೈತ್ರಿ ಸರ್ಕಾರ ರಚಿಸಿದಾಗ 9 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಿ ರಾಜ್ಯಾದ್ಯಂತ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಸೆ ನೀಡುವ ದೊಡ್ಡ ಪ್ರಯತ್ನ ಮಾಡಿದ್ದೆ. ಅದರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬೊಂಬೆಗಳ ಕ್ಲಸ್ಟರ್ ಸ್ಥಾಪನೆ ಮಾಡಲು ನಿರ್ಧಾರ ಮಾಡಿದೆ. ಅಷ್ಟರಲ್ಲಿ ನನ್ನ ಸರ್ಕಾರ ಹೋಯಿತು. ಆ ಯೋಜನೆಗಳು ನನೆಗುದಿಗೆ ಬಿದ್ದವೆಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/people-praise-me-but-dont-vote-when-elections-come-kumaraswamy-is-upset-rav/articleshow-15legpr"/>
        </item>
        <item>
            <title><![CDATA[ಸಿಂಧನೂರು: ಗ್ರಾಹಕರಂತೆ ಬಂದ ಬುರ್ಖಾದಾರಿ ಮಹಿಳೆಯರು ಬಟ್ಟೆ ಕದ್ದು ಎಸ್ಕೇಪ್, ಸಿಸಿಟಿವಿಯಲ್ಲಿ ಬಯಲಾಯ್ತು ಕಳ್ಳಿಯರ ಕೈಚಳಕ!]]></title>
            <link>https://kannada.asianetnews.com/karnataka-districts/sindhanur-burqa-clad-women-pose-as-customers-to-steal-clothes-theft-caught-on-cctv-raichur/articleshow-2tk4u9r</link>
            <guid isPermaLink="true">https://kannada.asianetnews.com/karnataka-districts/sindhanur-burqa-clad-women-pose-as-customers-to-steal-clothes-theft-caught-on-cctv-raichur/articleshow-2tk4u9r</guid>
            <pubDate>Sun, 19 Apr 2026 12:14:50 +0530</pubDate>
            <description><![CDATA[ರಾಯಚೂರು ಜಿಲ್ಲೆಯ ಸಿಂಧನೂರಿನ ಬಟ್ಟೆ ಅಂಗಡಿಯೊಂದರಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಕಳ್ಳತನ ಮಾಡಿದ್ದಾರೆ. ಒಬ್ಬಳು ಮಾಲೀಕರ ಗಮನ ಬೇರೆಡೆ ಸೆಳೆದರೆ, ಮತ್ತೊಬ್ಬಳು ಬಟ್ಟೆಗಳ ಚೀಲವನ್ನು ಕದ್ದು ಪರಾರಿಯಾಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpj7ngmy2k9wdxy33ptefr30,imgname-----------------------2026-04-19t121305.136-1776581001886.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಏ.19):&lt;/strong&gt; ಅವರು ನೋಡೋದಕ್ಕೆ ಅಪ್ಪಟ ಗ್ರಾಹಕರಂತಿದ್ದರು. ಬಟ್ಟೆ ಖರೀದಿ ಮಾಡ್ಕೊಂಡು ಹೋಗೋರು ರೀತಿ ಅಂಗಡಿಯೊಳಗೆ ಬಂದಿದ್ದಾರೆ. ಆದರೆ ಬುರ್ಖಾಧಾರಿ ಕಳ್ಳಿಯರ ಪ್ಲಾನ್ ಬೇರೆಯೇ ಇತ್ತು. ಶಾಪಿಂಗ್ ಮಾಡುವ ಆಸೆಯಲ್ಲ, ಬದಲಿಗೆ ಮಾಲೀಕನ ಕಣ್ಣಿಗೆ ಮಣ್ಣೆರಚಿ ಕೈಚಳಕ ತೋರುವ ಕ್ರಿಮಿನಲ್ ಪ್ಲಾನ್!&lt;/p&gt;&lt;p&gt;ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಇಬ್ಬರು ಖತರ್ನಾಕ್ ಮಹಿಳೆಯರು ನಡೆಸಿದ ಈ 'ಹೈಟೆಕ್' ಕಳ್ಳತನ ಈಗ ಇಡೀ ನಗರದ ವ್ಯಾಪಾರಿಗಳನ್ನು ಬೆಚ್ಚಿಬೀಳಿಸಿದೆ. ಬಟ್ಟೆ ಅಂಗಡಿ ಮಾಲೀಕರು ಸ್ವಲ್ಪ ಯಾಮಾರಿದ್ರೂ ಸಾಕು, ಕಣ್ಣು ಮಿಟುಕಿಸುವುದರೊಳಗೆ ಮಾಲು ಮಾಯವಾಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.&lt;/p&gt;&lt;h2&gt;ಸಿಂಧನೂರು ಬಟ್ಟೆ ಅಂಗಡಿಗೆ ಬಂದವರು ಮಾಡಿದ್ದೇನು?&lt;/h2&gt;&lt;p&gt;ಸಿಂಧನೂರಿನ ಆ ಬಟ್ಟೆ ಅಂಗಡಿಗೆ ಇಬ್ಬರು ಬುರ್ಖಾಧಾರಿ ಮಹಿಳೆಯರು ಪ್ರವೇಶಿಸುತ್ತಾರೆ. ಒಬ್ಬಳು ಬಟ್ಟೆಗಳನ್ನು ನೋಡುತ್ತಾ ಮಾಲೀಕನ ಗಮನ ಬೇರೆಡೆ ಸೆಳೆಯುತ್ತಿದ್ದರೆ, ಮತ್ತೊಬ್ಬಳು ತನ್ನ ತನ್ನ ಖತರ್ನಾಕ್ ಬುದ್ಧಿ ಪ್ರಯೋಗಕ್ಕಿಳಿಸ್ತಾಳೆ. ಈ ಗ್ಯಾಂಗ್ ಯಾವ ರೀತಿ ಟ್ರೈನ್ಡ್ ಆಗಿದೆ ಎಂದರೆ ಮಾಲೀಕ ಮುಂದೆಯೇ ಇದ್ರೂ ರಾಜಾರೋಷವಾಗಿ ಬಟ್ಟೆ ಕಳ್ಳತನ ನಡೆದಿದೆ.&lt;/p&gt;&lt;h3&gt;ಸಿಸಿಟಿವಿಯಲ್ಲಿ ಬಯಲಾಯ್ತು ಬುರ್ಖಾಧಾರಿ ಅಸಲಿ ಆಟ!&lt;/h3&gt;&lt;p&gt;ಈ ಖತರ್ನಾಕ್ ಮಹಿಳೆಯರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ನಿಚ್ಚಳವಾಗಿ ಸೆರೆಯಾಗಿದೆ. ಒಬ್ಬ ಮಹಿಳೆ ಬಟ್ಟೆ ಚೀಲವನ್ನು ತೆಗೆದು ಕಳ್ಳತನಕ್ಕೆ ಬೇಕಾದ ಪ್ಲಾಟ್&zwnj;ಫಾರ್ಮ್ ರೆಡಿ ಮಾಡಿಕೊಟ್ಟರೆ, ಮತ್ತೊಬ್ಬಳು ಆ ಚೀಲವನ್ನು ತನ್ನ ಕಾಲಿನ ಸಂದುಗಳಲ್ಲಿ ಅಡಗಿಸಿಕೊಂಡು, ಯಾರಿಗೂ ಅನುಮಾನ ಬಾರದಂತತೆ ಅಂಗಡಿಯಿಂದ ಎಸ್ಕೇಪ್ ಆಗಿದ್ದಾಳೆ. ನಂತರ ಹಿಂದೆಯೇ ನಡೆದು ಎಸ್ಕೇಪ್ ಆಗಿರೋ ಇನ್ನೊಬ್ಬ ಕಳ್ಳಿ.&lt;/p&gt;&lt;p&gt;&lt;strong&gt;ಮಾಲೀಕ ಎಚ್ಚರಗೊಳ್ಳುವಷ್ಟರಲ್ಲಿ ಮಾಲು ಮಾಯ!&lt;/strong&gt;&lt;/p&gt;&lt;p&gt;ಖತರ್ನಾಕ್ ಕಳ್ಳಿಯರು ಬಂದಿದ್ದೇ ದೋಚಲು ಅಂತಾ ಮಾಲೀಕನಿಗೆ ಗೊತ್ತಾಗುವ ಹೊತ್ತಿಗೆ ತಡವಾಗಿತ್ತು. ಹೋದ ಮೇಲೆ ಬಟ್ಟೆಗಳ ಲೆಕ್ಕ ನೋಡಿದಾಗ ಲೆಕ್ಕ ತಪ್ಪಿ ಶಾಕ್ ಆಗಿದೆ. ಗಾಬರಿಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆ ಮಹಿಳೆಯರ ಅಸಲಿ ಮುಖವಾಡ ಬಯಲಾಗಿದೆ. ಕಾಲಿನಲ್ಲೇ ಬಟ್ಟೆ ಚೀಲ ಇಟ್ಟುಕೊಂಡು ಹೋಗಿರುವ ದೃಶ್ಯ ಕಂಡು ಅಂಗಡಿ ಸಿಬ್ಬಂದಿ ದಂಗಾಗಿದ್ದಾರೆ.&lt;/p&gt;&lt;p&gt;ಸದ್ಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖತರ್ನಾಕ್ ಕಳ್ಳಿಯರಿಗೆ ಬಲೆ ಬೀಸಿದ್ದಾರೆ.&lt;/p&gt;&lt;p&gt;&lt;strong&gt;ಅಂಗಡಿ ಮಾಲೀಕರೇ ಎಚ್ಚರ&lt;/strong&gt;: ಬುರ್ಖಾಧಾರಿಗಳಾಗಲಿ ಅಥವಾ ಸಾಮಾನ್ಯ ಗ್ರಾಹಕರೇ ಆಗಲಿ, ಅಂಗಡಿಗೆ ಬಂದಾಗ ಅವರ ಚಲನವಲನದ ಮೇಲೆ ಕಣ್ಣಿರಲಿ. ನಿಮ್ಮ ಮೈಮರೆವು ಕಳ್ಳರಿಗೆ ಹಬ್ಬವಾಗಬಹುದು!&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/sindhanur-burqa-clad-women-pose-as-customers-to-steal-clothes-theft-caught-on-cctv-raichur/articleshow-2tk4u9r"/>
        </item>
        <item>
            <title><![CDATA[ಸರ್ಕಾರಿ ಕೆಲಸ ಮುಗಿಸಿ ಮನೆಗೆ ಬಂದ ಮಗಳು ಹೆಣವಾದಳು: ಕೂಸಿನ ಹಾಲ್ದುಟಿ ಆರುವ ಮುನ್ನ ಅಮ್ಮನ ಪ್ರಾಣಪಕ್ಷಿ ಹಾರಿಹೋಯ್ತು!]]></title>
            <link>https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb</link>
            <guid isPermaLink="true">https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb</guid>
            <pubDate>Mon, 30 Mar 2026 15:13:25 +0530</pubDate>
            <description><![CDATA[&lt;p&gt;ರಾಯಚೂರಿನಲ್ಲಿ 11 ತಿಂಗಳ ಹಸುಗೂಸಿನ ತಾಯಿ, ಸರ್ಕಾರಿ ಮಹಿಳಾ ಉದ್ಯೋಗಿ ವಿದ್ಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಲೆ ಮಾಡಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmz1cfc4y1ssv58e1a7v42mp,imgname-raichur-govt-employee-vidya-death-1774863138180.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರಿನಲ್ಲಿ 11 ತಿಂಗಳ ಹಸುಗೂಸಿನ ತಾಯಿ, ಸರ್ಕಾರಿ ಮಹಿಳಾ ಉದ್ಯೋಗಿ ವಿದ್ಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಲೆ ಮಾಡಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ರಾಯಚೂರು (ಮಾ.30): ನ&lt;/strong&gt;ಗರದ ಐಬಿ ಕಾಲೋನಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 11 ತಿಂಗಳ ಹಸುಗೂಸಿನ ತಾಯಿ ವಿದ್ಯಾ (30) ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ಎದ್ದಿದ್ದು, ಗಂಡ ಮತ್ತು ಅತ್ತೆಯೇ ಸೇರಿ ನೇಣು ಬಿಗಿದು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ಮೃತ ವಿದ್ಯಾ ರಾಯಚೂರು ನಗರದ ಉಪ ವಿಜ್ಞಾನ ಕೇಂದ್ರದಲ್ಲಿ (Sub-Science Center) ಉದ್ಯೋಗಿಯಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಇವರು ಮಂಜುನಾಥ್ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯ ಸಂದರ್ಭದಲ್ಲಿ ವಿದ್ಯಾ ಅವರ ಪೋಷಕರು 30 ಗ್ರಾಂ ಚಿನ್ನಾಭರಣ ಮತ್ತು ಅರ್ಧ ಕೆಜಿ ಬೆಳ್ಳಿಯನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೂ, ಮದುವೆಯಾದಾಗಿನಿಂದಲೂ ಗಂಡ ಮಂಜುನಾಥ್ ಹಾಗೂ ಅತ್ತೆ ಕವಿತಾ ವರದಕ್ಷಿಣೆಗಾಗಿ ವಿದ್ಯಾ ಅವರಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ&lt;/p&gt;&lt;img&gt;&lt;p&gt;&lt;strong&gt;ಸಾವಿನ ಹಿಂದಿನ ದಿಗಿಲು ಹುಟ್ಟಿಸುವ ಕ್ಷಣಗಳು:&lt;/strong&gt;&lt;/p&gt;&lt;p&gt;ನಿನ್ನೆ ಸಂಜೆ ಮಂಜುನಾಥ್ ಕಂಠಪೂರ್ತಿ ಕುಡಿದು ವಿದ್ಯಾ ಅವರ ಕೆಲಸದ ಸ್ಥಳಕ್ಕೆ ಹೋಗಿ ಆಕೆಯನ್ನು ಮನೆಗೆ ಕರೆತಂದಿದ್ದ ಎನ್ನಲಾಗಿದೆ. ಮನೆಗೆ ಬಂದ ನಂತರ ವಿದ್ಯಾ ತನ್ನ 11 ತಿಂಗಳ ಹಸುಗೂಸಿಗೆ ಹಾಲುಣಿಸುತ್ತಿದ್ದರು. ಆ ಸಮಯದಲ್ಲಿ ಗಂಡನ ವಿಪರೀತ ಕುಡಿತದ ಬಗ್ಗೆ ಅತ್ತೆ ಕವಿತಾ ಬಳಿ ವಿದ್ಯಾ ಬೇಸರ ವ್ಯಕ್ತಪಡಿಸಿದ್ದರು. ಆದರೆ, ಮಗು ಹಾಲು ಕುಡಿದು ಮುಗಿಸುವಷ್ಟರಲ್ಲೇ ವಿದ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;img&gt;&lt;p&gt;&lt;strong&gt;ಕುಟುಂಬಸ್ಥರ ಆರೋಪವೇನು?&lt;/strong&gt;&lt;/p&gt;&lt;p&gt;&lsquo;ವಿದ್ಯಾ ಆತ್ಮ*ಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಆಕೆಗೆ ಕಿರುಕುಳ ನೀಡಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಂದಿದ್ದಾರೆ&rsquo; ಎಂದು ವಿದ್ಯಾ ಅವರ ತವರು ಮನೆಯವರು ಆರೋಪಿಸಿದ್ದಾರೆ. ಮಗುವಿಗೆ ಹಾಲುಣಿಸುತ್ತಿದ್ದ ತಾಯಿ ಇಷ್ಟು ಬೇಗ ಸಾವನ್ನಪ್ಪಲು ಸಾಧ್ಯವಿಲ್ಲ, ಇದು ಪಕ್ಕಾ ಪ್ಲಾನ್ ಮಾಡಿ ನಡೆಸಿರುವ ಕೊಲೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನನಗೆ ಮಾತ್ರವಲ್ಲ, ನನ್ನ ಗೆಳತಿಯರನ್ನೂ ಹಾಸಿಗೆಯಲ್ಲಿ ಖುಷಿಪಡಿಸಿ; ಹೆಂಡತಿ ಆಫರ್ ಕೇಳಿ ಪೊಲೀಸ್ ಠಾಣೆಗೆ ಬಂದ ಗಂಡ!&lt;/strong&gt;&lt;/p&gt;&lt;img&gt;&lt;p&gt;&lt;strong&gt;ಪೊಲೀಸ್ ತನಿಖೆ ಚುರುಕು:&lt;/strong&gt;&lt;/p&gt;&lt;p&gt;ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾ ಅವರ ಕುಟುಂಬಸ್ಥರ ದೂರಿನ ಮೇರೆಗೆ ಗಂಡ ಮಂಜುನಾಥ್ ಮತ್ತು ಅತ್ತೆ ಕವಿತಾ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;p&gt;ಸದ್ಯ ರಾಯಚೂರು ಡಿವೈಎಸ್&zwnj;ಪಿ (DySP) ಶಾಂತವೀರ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಹಿಂದಿನ ಅಸಲಿ ಸತ್ಯ ಹೊರಬರಲಿದೆ. 11 ತಿಂಗಳ ಕಂದಮ್ಮನನ್ನು ಅಗಲಿದ ತಾಯಿಯ ಸಾವು ರಾಯಚೂರಿನಲ್ಲಿ ಅತೀವ ವಿಷಾದ ಮೂಡಿಸಿದೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb"/>
        </item>
        <item>
            <title><![CDATA[ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!]]></title>
            <link>https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd</link>
            <guid isPermaLink="true">https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd</guid>
            <pubDate>Fri, 17 Apr 2026 13:36:19 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಸುರಪುರ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd7knr6ry08qs6jy7peng04,imgname-yadagiri-accident-1776413169412.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ/ರಾಯಚೂರು : &lt;/strong&gt;ನಿನ್ನೆ ಅಂದರೆ ಎಪ್ರಿಲ್ 16ರಂದು ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆಂದು ಹೊರಟ್ಟಿದ್ದ ಚಿಕ್ಕಮಗಳೂರು ಮತ್ತು ಹಾಸನದ 8 ಮಂದಿ ಕುಟುಂಬದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಕಹಿ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ದುರಂತ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು.&lt;/p&gt;&lt;h2&gt;ಬೆಳಗ್ಗೆ ನಡೆದ ಭೀಕರ ಅಪಘಾತ&lt;/h2&gt;&lt;p&gt;ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.&lt;/p&gt;&lt;h2&gt;ಒಂದೇ ಕುಟುಂಬದ 6 ಮಂದಿ ಸಜೀವ ದಹನ&lt;/h2&gt;&lt;p&gt;ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ.&lt;/p&gt;&lt;h2&gt;ಇಬ್ಬರಿಗೆ ಗಂಭೀರ ಗಾಯ&lt;/h2&gt;&lt;p&gt;ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ&lt;/p&gt;&lt;h2&gt;ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ&lt;/h2&gt;&lt;p&gt;ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್&zwnj;ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;h2&gt;ಭೀಕರ ದೃಶ್ಯ &ndash; ಕಾರು ಭಸ್ಮ&lt;/h2&gt;&lt;p&gt;ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು.&lt;/p&gt;&lt;h2&gt;ತನಿಖೆ ಆರಂಭ&lt;/h2&gt;&lt;p&gt;ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd"/>
        </item>
        <item>
            <title><![CDATA[ರಾಯಚೂರು: ಗೃಹಿಣಿ ಆ*ತ್ಮಹ*ತ್ಯೆ ಪ್ರಕರಣ, ಆರೋಪಿಗಳನ್ನು ಬಂಧಿಸದ ಪೊಲೀಸರ ನಡೆಗೆ ಆಕ್ರೋಶ!]]></title>
            <link>https://kannada.asianetnews.com/raichur/housewife-self-death-case-kavital-police-protest-arrest-demands-san/articleshow-bltdv5x</link>
            <guid isPermaLink="true">https://kannada.asianetnews.com/raichur/housewife-self-death-case-kavital-police-protest-arrest-demands-san/articleshow-bltdv5x</guid>
            <pubDate>Fri, 03 Apr 2026 09:06:45 +0530</pubDate>
            <description><![CDATA[ರಾಯಚೂರಿನ ಜಿನ್ನಾಪುರ ಗ್ರಾಮದಲ್ಲಿ ಸಾಲದ ವಿಚಾರವಾಗಿ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ಪತಿಯನ್ನು ಮಾತ್ರ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮೃತರ ಕುಟುಂಬಸ್ಥರು ಕವಿತಾಳ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn8pd6s0fqzcsr588dhnfzgv,imgname-raicur-papamma-case-1775187172127.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಏ.3): &lt;/strong&gt;ಸಿರವಾರ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಗೃಹಿಣಿಯೊಬ್ಬರು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಪ್ರಕರಣವು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮೃತರ ಕುಟುಂಬಸ್ಥರು ಕವಿತಾಳ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪಾಪಮ್ಮ (24) ಎಂಬುವರು ಕಳೆದ ಮಾರ್ಚ್ 29 ರಂದು ತಮ್ಮ ಜಿನ್ನಾಪುರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದರು. 2020 ರಲ್ಲಿ ಪಾಪಮ್ಮ ಮತ್ತು ಮರಿಸ್ವಾಮಿ ಎಂಬುವರಿಗೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.&lt;/p&gt;&lt;h2&gt;&lt;strong&gt;ಸಾಲದ ಸುಳಿಯಲ್ಲಿ ಬದುಕು&lt;/strong&gt;&lt;/h2&gt;&lt;p&gt;ಇತ್ತೀಚೆಗೆ ಪಾಪಮ್ಮ ಅವರು ಖಾಸಗಿ ಬ್ಯಾಂಕ್ ಒಂದರಲ್ಲಿ ಸಾಲ ಪಡೆದಿದ್ದರು. ಆ ಹಣವನ್ನು ತಮ್ಮ ಪತಿ ಮರಿಸ್ವಾಮಿಯ ಅಣ್ಣ ಮೌನೇಶ್ ಅವರಿಗೆ ನೀಡಿದ್ದರು. ಸಾಲದ ಮರುಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಮೌನೇಶ್ ಮತ್ತು ಕುಟುಂಬಸ್ಥರು ಪಾಪಮ್ಮ ಅವರಿಗೆ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಪತಿ ಮರಿಸ್ವಾಮಿ, ಆತನ ಅಣ್ಣ ಮೌನೇಶ್ ಮತ್ತು ತಂಗಿ ಸಾಬಮ್ಮ ಸೇರಿದಂತೆ ಮೂವರೂ ಸೇರಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದರಿಂದ ಬೇಸತ್ತು ಪಾಪಮ್ಮ ಆ*ತ್ಮಹ*ತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸರ ನಡೆಗೆ ಆಕ್ರೋಶ&lt;/strong&gt;&lt;/h2&gt;&lt;p&gt;ಆ*ತ್ಮಹ*ತ್ಯೆಯ ನಂತರ ಮೃತಳ ಸಹೋದರ ಕವಿತಾಳ ಪೊಲೀಸ್ ಠಾಣೆಯಲ್ಲಿ ಪತಿ ಮರಿಸ್ವಾಮಿ, ಮೌನೇಶ್ ಮತ್ತು ಸಾಬಮ್ಮ ಅವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಕೇವಲ ಪತಿ ಮರಿಸ್ವಾಮಿಯನ್ನು ಮಾತ್ರ ಬಂಧಿಸಿದ್ದಾರೆ. ಆದರೆ, ಉಳಿದ ಇಬ್ಬರು ಪ್ರಮುಖ ಆರೋಪಿಗಳಾದ ಮೌನೇಶ್ ಮತ್ತು ಸಾಬಮ್ಮ ಅವರನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.&lt;/p&gt;&lt;h2&gt;&lt;strong&gt;ನ್ಯಾಯಕ್ಕಾಗಿ ಹೋರಾಟ&lt;/strong&gt;&lt;/h2&gt;&lt;p&gt;ಆರೋಪಿಗಳನ್ನು ರಕ್ಷಿಸುವ ಉದ್ದೇಶದಿಂದಲೇ ಪೊಲೀಸರು ಇತರೆ ಆರೋಪಿಗಳನ್ನು ಬಂಧಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು ಮತ್ತು ಸಂಬಂಧಿಕರು, ಕವಿತಾಳ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಹೋರಾಟ ನಡೆಸಿದರು. ಈ ತಾರತಮ್ಯದ ತನಿಖೆಯನ್ನು ಖಂಡಿಸಿದ ಕುಟುಂಬಸ್ಥರು, ಕೂಡಲೇ ಉಳಿದ ಆರೋಪಿಗಳನ್ನು ಬಂಧಿಸಿ ಪಾಪಮ್ಮನಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Santosh Naik</dc:creator>
            <atom:link href="https://kannada.asianetnews.com/raichur/housewife-self-death-case-kavital-police-protest-arrest-demands-san/articleshow-bltdv5x"/>
        </item>
        <item>
            <title><![CDATA[ಬಂಗಾರ ದುಪ್ಪಟ್ಟು ಉತ್ಪಾದನೆ ದಾಖಲೆ ಬರೆದ ದ. ಏಷ್ಯಾದ ಪ್ರತಿಷ್ಠಿತ ಏಕೈಕ ಸರ್ಕಾರಿ ಸ್ವಾಮ್ಯದ ರಾಯಚೂರು ಹಟ್ಟಿ ಗಣಿ!]]></title>
            <link>https://kannada.asianetnews.com/gallery/karnataka-districts/hatti-gold-mines-achieves-record-production-of-1691-kg-gold-in-fy-2025-26-gdp-bpriou9</link>
            <guid isPermaLink="true">https://kannada.asianetnews.com/gallery/karnataka-districts/hatti-gold-mines-achieves-record-production-of-1691-kg-gold-in-fy-2025-26-gdp-bpriou9</guid>
            <pubDate>Fri, 10 Apr 2026 15:53:03 +0530</pubDate>
            <description><![CDATA[&lt;p&gt;ವರದಿ: ಬಲಭೀಮರಾವ್ ಕುಲಕರ್ಣಿ&lt;/p&gt;&lt;p&gt;ದಕ್ಷಿಣ ಏಷ್ಯಾದ ಪ್ರತಿಷ್ಠಿತ ಹಟ್ಟಿ ಚಿನ್ನದಗಣಿ ಕಂಪನಿಯು 2025-26ನೇ ಸಾಲಿನಲ್ಲಿ 1691.575 ಕೆಜಿ ಚಿನ್ನ ಉತ್ಪಾದಿಸಿ ದಾಖಲೆ ನಿರ್ಮಿಸಿದೆ. ಕೊನೆಯ ನಾಲ್ಕು ತಿಂಗಳಲ್ಲಿ ಉತ್ಪಾದನೆ ಭಾರಿ ಚೇತರಿಕೆ ಕಂಡು, ಕಳೆದ ವರ್ಷದ ₹430 ಕೋಟಿ ಲಾಭವನ್ನು ದುಪ್ಪಟ್ಟುಗೊಳಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knvdhgn1rkq0yq10n74dharv,imgname-hatti-gold-mine-limited--3--1775815410337.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಬಲಭೀಮರಾವ್ ಕುಲಕರ್ಣಿ&lt;/p&gt;&lt;p&gt;ದಕ್ಷಿಣ ಏಷ್ಯಾದ ಪ್ರತಿಷ್ಠಿತ ಹಟ್ಟಿ ಚಿನ್ನದಗಣಿ ಕಂಪನಿಯು 2025-26ನೇ ಸಾಲಿನಲ್ಲಿ 1691.575 ಕೆಜಿ ಚಿನ್ನ ಉತ್ಪಾದಿಸಿ ದಾಖಲೆ ನಿರ್ಮಿಸಿದೆ. ಕೊನೆಯ ನಾಲ್ಕು ತಿಂಗಳಲ್ಲಿ ಉತ್ಪಾದನೆ ಭಾರಿ ಚೇತರಿಕೆ ಕಂಡು, ಕಳೆದ ವರ್ಷದ ₹430 ಕೋಟಿ ಲಾಭವನ್ನು ದುಪ್ಪಟ್ಟುಗೊಳಿಸಿದೆ.&lt;/p&gt;&lt;img&gt;&lt;p&gt;&lt;strong&gt;ರಾಯಚೂರು: &lt;/strong&gt;2025-26 ನೇ ಆರ್ಥಿಕ ವರ್ಷಕ್ಕೆ ದಕ್ಷಿಣ ಏಷ್ಯಾದ ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಏಕೈಕ ಹಟ್ಟಿ ಚಿನ್ನದಗಣಿ ಕಂಪನಿ 1691 ಕೆಜಿ 575 ಗ್ರಾಂ ಚಿನ್ನ ಉತ್ಪಾದಿಸಿ ದಾಖಲೆ ಮೆರೆದಿದೆ. 6 ಲಕ್ಷ 49 ಸಾವಿರ 690 ಮೆಟ್ರಿಕ್ ಟನ್ ಅದಿರನ್ನು ಕಂಪನಿ ಭೇದಿಸಿದೆ. 1700 ಕೆಜಿ ಚಿನ್ನ ಉತ್ಪಾದನೆ ಗುರಿ ಹೊಂದಿದ್ದು, 772.190 ಕೆಜಿ ಚಿನ್ನ ಉತ್ಪಾದನೆಯಾಗಿದ್ದು, 1691 ಕೆಜಿ 575 ಗ್ರಾಂ ಚಿನ್ನ ಉತ್ಪಾದಿಸಿ ಕೆಜಿ ಚಿನ್ನ ಉತ್ಪಾದಿಸಿ 99ರಷ್ಟು ಪ್ರಗತಿ ಸಾಧಿಸಿದೆ.ಪ್ರತಿ ಟನ್ ಅದಿರಿನಲ್ಲಿ 2.57 ಗ್ರಾಮ್ ಉತ್ಪಾದನೆ ಗುರಿ ಹೊಂದಿದ್ದು, ಪ್ರತಿ ಟನ್ನಿಗೆ ಹೆಚ್ಚುವರಿಯಾಗಿ 2.90 ಗ್ರಾಮ್ ಹಳದಿ ಲೋಹ ಉತ್ಪಾದನೆ ಸಾಧನೆಯಾಗಿದೆ.&lt;/p&gt;&lt;img&gt;&lt;p&gt;ಏಪ್ರಿಲ್&zwnj;ನಲ್ಲಿ 113.011, ಮೇ 104.737, ಜೂನ್ 75.945, ಜುಲೈ 94.238, ಆಗಸ್ಟ್ 119.405 ಸೆಪ್ಟೆಂಬರ್ 83.018, ಅಕ್ಟೋಬರ್ 91.201, ನವೆಂಬರ್&zwnj;ನಲ್ಲಿ 86.978 ಪ್ರಾರಂಭದ 8 ತಿಂಗಳಲ್ಲಿ ಮಂದಗತಿಯಲ್ಲಿ ಸಾಗಿದ್ದ ಉತ್ಪಾದನೆ ಚೇತರಿಸಿಕೊಂಡು, ಕೊನೆಯ ನಾಲ್ಕು ತಿಂಗಳು ಡಿಸೆಂಬರ್ 133.ಕೆ.ಜಿ, ಜನವರಿ 246.076 ಕೆ.ಜಿ, ಫೆಬ್ರವರಿ 257.121 ಹಾಗೂ ಮಾರ್ಚ್ ತಿಂಗಳಲ್ಲಿ 286.839 ಕೆ.ಜಿ ಚಿನ್ನ ಉತ್ಪಾದಿಸಿದೆ.&lt;/p&gt;&lt;img&gt;&lt;p&gt;ನವೆಂಬರ್&zwnj;ನಲ್ಲಿ 130.084 ಆರ್ಥಿಕ ವರ್ಷದ ಪ್ರಾರಂಭದಲ್ಲಿ 1700 ಕೆ.ಜಿ ಗುರಿ ಹೊಂದಲಾಗಿತ್ತು. ಹಟ್ಟಿಚಿನ್ನದಗಣಿ ಕಂಪನಿ ಉತ್ಪಾದಿಸುವ 24 ಕ್ಯಾರೇಟ್ ಚಿನ್ನದ ದರ ಇಂದಿನ ಮಾರುಕಟ್ಟೆಯಲ್ಲಿ 1.45 ಸಾವಿರ ಆಸು-ಪಾಸಿನಲ್ಲಿದೆ. ಅಲ್ಪ ಸ್ವಲ್ಪ ಬೆಲೆಯಲ್ಲಿ ಏರಿಳಿಕೆ ಕಂಡರೂ ಸಹಿತ ಇಂದಿನ ದರಕ್ಕೆ ಹೋಲಿಸಿದರೆ ತಿಂಗಳಿಗೆ ಸರಾಸರಿ 60 ರಿಂದ 65 ಕೆ.ಜಿ ಚಿನ್ನ ಉತ್ಪಾದಿಸಿದರೆ ಗಣಿಯ ಕಾರ್ಯಕ್ಷಮತೆ ಉಳಿಸಿಕೊಂಡು ಅಧಿಕ ಲಾಭ ಗಳಿಸಬಹುದೆಂಬ ಲೆಕ್ಕಾಚಾರವಿದೆ. 1691 ಕೆ.ಜಿ ಉತ್ಪಾದಿಸಿ ಕಳೆದ ವರ್ಷದ ಲಾಭಕ್ಕೆ ಮುಮ್ಮಡಿಯಾಗುವಂತೆ ಸಾಧನೆಗೈದಿದೆ.&lt;/p&gt;&lt;img&gt;&lt;p&gt;ಗಣಿ ಕಂಪನಿ ಆಧೀನದ ಸಿರವಾರ ತಾಲೂಕಿನ ಹೀರಾ-ಬುದ್ಧಿನ್ನಿ ಹೊಸ ಯೋಜನೆಯಲ್ಲಿ ಉತ್ಪಾದನೆ ಕುಂಟುತ್ತಾ ಸಾಗಿದೆ. ಪ್ರತಿ ಟನ್ ಅದಿರಿಗೆ ಚಿನ್ನದ ಪ್ರಮಾಣ ಕಡಿಮೆ ಸಿಗುತ್ತದೆ. 25 ಕಿ.ಮೀ ಅಂತರದಿಂದ ಅದಿರನ್ನು ಹಟ್ಟಿ ಲೋಹ ವಿಭಾಗಕ್ಕೆ ತಂದು ಸಂಸ್ಕರಿಸುವಲ್ಲಿ ಉತ್ಪಾದನಾ ವೆಚ್ಚವೂ ಕೂಡ ಅಧಿಕವಾಗಿದೆ. ಊಟಿ, ಹೀರಾ-ಬುದ್ಧಿನ್ನಿ ಹೊಸ ಯೋಜನೆಯಲ್ಲಿ ಕಡಿಮೆ ಚಿನ್ನದ ಪ್ರಮಾಣ ಸಿಗುವ ಸ್ಥಳಗಳಿಂದ ಉಂಟಾಗುವ ನಷ್ಟವನ್ನು ಹಟ್ಟಿಗಣಿಯಲ್ಲಿ ಹೆಚ್ಚು ಚಿನ್ನ ತೆಗೆದು ಸರಾಸರಿಯಲ್ಲಿ ಸರಿದೂಗಿಸಬೇಕಿದೆ.&lt;/p&gt;&lt;img&gt;&lt;p&gt;ಈಗಿರುವ ಚಿನ್ನದ ಉತ್ಪಾದನೆಯಿಂದ ಕಳೆದ ವರ್ಷ ₹430 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಬಾರಿಯು ಲಾಭಾಂಶ ತರುವಲ್ಲಿ ಯಾವುದೇ ಗೊಂದಲವಿಲ್ಲ. ಉತ್ಪಾದನೆಗೆ ಚುರುಕು ಮೂಡಿಸಲು ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸಿ ತಿಳಿಸಲಾಗಿದೆ. ಉತ್ಪಾದನೆ ಜತೆಗೆ ಕಂಪನಿಯ ಕಾರ್ಯಕ್ಷಮತೆಯೂ ಮುಖ್ಯ ವಾಗಿದೆ. ನಿಸರ್ಗದ ವಿರುದ್ಧವಾಗಿ ಕಾರ್ಯ ನಿರ್ವಹಿಸುವ ಕಾರ್ಮಿಕ-ಅಧಿಕಾರಿ ವರ್ಗದ ಶ್ರಮದ ಫಲದಿಂದ, ಕಡಿಮೆ ಅವಘಡಗಳಿಂದ ಉತ್ಪಾದನೆಗೈದ ತೃಪ್ತಿ ಕಂಪನಿಗಿದೆ.&lt;/p&gt;&lt;p&gt;- ಪ್ರಕಾಶ್ ರಾಯಮಾಜಿ, ಗಣಿ ಕಂಪನಿ ಕಾರ್ಯನಿರ್ವಾಹಕ ನಿರ್ದೇಶಕ&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/hatti-gold-mines-achieves-record-production-of-1691-kg-gold-in-fy-2025-26-gdp-bpriou9"/>
        </item>
        <item>
            <title><![CDATA[ರಾಯರ ದರ್ಶನಕ್ಕೆ ಹೊರಟವರ ವಾಹನ ಅಪಘಾತ; ಸ್ಥಳದಲ್ಲಿಯೇ 8 ಭಕ್ತರ ದುರ್ಮರಣ, 13  ಮಂದಿಗೆ ಗಾಯ]]></title>
            <link>https://kannada.asianetnews.com/gallery/state/raichur-a-terrible-road-accident-occurred-near-mantralaya-8-devotees-from-chikkaballapur-died-mrq-c2kpguq</link>
            <guid isPermaLink="true">https://kannada.asianetnews.com/gallery/state/raichur-a-terrible-road-accident-occurred-near-mantralaya-8-devotees-from-chikkaballapur-died-mrq-c2kpguq</guid>
            <pubDate>Thu, 16 Apr 2026 07:37:09 +0530</pubDate>
            <description><![CDATA[&lt;p&gt;ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಯರ ದರ್ಶನಕ್ಕೆ ಬೊಲೆರೋ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpa09deh5jq86s94afpgae2m,imgname-mantralaya-accident--5--1776304829905.jpg" type="image/jpeg" height="390" width="690"/>
            <content:encoded><![CDATA[&lt;p&gt;ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಯರ ದರ್ಶನಕ್ಕೆ ಬೊಲೆರೋ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.&lt;/p&gt;&lt;img&gt;&lt;p&gt;ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತರಾಗಿದ್ದಾರೆ. ಅಪಘಾತದ ತೀವ್ರತೆಗೆ ಭಕ್ತರಿದ್ದ ವಾಹನ ನಜ್ಜುಗುಜ್ಜಾಗಿದೆ.&lt;/p&gt;&lt;img&gt;&lt;p&gt;ಚಿಕ್ಕಬಳ್ಳಾಪುರ ಮೂಲದ ಭಕ್ತರು ಬೊಲೆರೋ ವಾಹನದ ಮೂಲಕ ರಾಯರ ದರ್ಶನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಬೊಲೆರೋ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್&zwnj; ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 21 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;21 ಜನರು ಪೈಕಿ ಆರು ಭಕ್ತರು ಸ್ಥಳದಲ್ಲಿ ಸಾವನ್ನಪ್ಪಿದ್ರೆ, ಇಬ್ಬರು ಎಮಿಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಕಾರಿಯಾಗದೇ ಉಸಿರು ಚೆಲ್ಲಿದ್ದಾರೆ. ಇನ್ನುಳಿದ 13 ಜನರಿಗೆ ಎಮಿಗನೂರು ಹಾಗೂ ಕರ್ನೂಲ್ ಸರ್ಕಾರಿ ಚಿಕಿತ್ಸೆ ಕೊಡಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ಮೃತರ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೊಳಗಾದ ವಾಹನವನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;'ಕರ್ನಾಟಕ ನನಗೆ ಪ್ರೇರಣೆ': ಭೈರವೈಕ್ಯ ಮಂದಿರ ಉದ್ಘಾಟಿಸಿ &lsquo;ವಿಕಸಿತ ಭಾರತ' ನಿರ್ಮಾಣಕ್ಕೆ ನಮೋ ಪಣ, ಮೋದಿ ಹೇಳಿದ 9 ಸಂಕಲ್ಪಗಳಾವುವು?&lt;/strong&gt;&lt;/p&gt;&lt;img&gt;&lt;p&gt;ಬೊಲೆರೋ ವಾಹನಕ್ಕೆ ಡಿಕ್ಕಿಯಾದ ಬಳಿಕ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್&zwnj; ಸಹ ಪಲ್ಟಿಯಾಗಿದೆ. ಪೊಲೀಸರು ಮೃತರ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯೋಗೇಶ್ ಗೌಡ ಹತ್ಯೆ ಅಪರಾಧಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ನಾಳೆಯೇ ಕಳೆದುಕೊಳ್ತಾರಾ? ಜನರ ಪ್ರಶ್ನೆಗೆ ಇಲ್ಲಿದೆ ಉತ್ತರ!&lt;/strong&gt;&lt;/p&gt;]]></content:encoded>
            <category>raichur</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/state/raichur-a-terrible-road-accident-occurred-near-mantralaya-8-devotees-from-chikkaballapur-died-mrq-c2kpguq"/>
        </item>
        <item>
            <title><![CDATA[ಈ ಸಾವಿಗೆ ಯಾರು ಹೊಣೆ? ಬಯಲಾಟ ನೋಡುವ ವೇಳೆ ಕುಸಿದು ಬಿದ್ದ ಬೋರ್ಡ್‌, ಬದುಕಿ ಬಾಳಬೇಕಾದ ಇಬ್ಬರು ಮಕ್ಕಳ ಸಾವು!]]></title>
            <link>https://kannada.asianetnews.com/karnataka-districts/raichur-bayalata-tragedy-cement-board-collapse-kills-two-children-manvi-san/articleshow-e6l3lr8</link>
            <guid isPermaLink="true">https://kannada.asianetnews.com/karnataka-districts/raichur-bayalata-tragedy-cement-board-collapse-kills-two-children-manvi-san/articleshow-e6l3lr8</guid>
            <pubDate>Sat, 18 Apr 2026 13:08:02 +0530</pubDate>
            <description><![CDATA[ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ನಡೆದ ಬಯಲಾಟ ಕಾರ್ಯಕ್ರಮದಲ್ಲಿ ಸಮುದಾಯ ಭವನದ ಸಿಮೆಂಟ್ ನಾಮಫಲಕ ಕುಸಿದು ಬಿದ್ದಿದೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ-ಮಗಳ ಕಾಲುಗಳು ತುಂಡಾಗುವುದು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpfqctqka6vzptpdnjvyjr95,imgname-raichur-accident-1776496831218.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಏ.18): &lt;/strong&gt;ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ರಾತ್ರಿ ನಡೆದ ಬಯಲಾಟ ಕಾರ್ಯಕ್ರಮವು ರಕ್ತಸಿಕ್ತವಾಗಿ ಅಂತ್ಯಗೊಂಡಿದೆ. ಬಯಲಾಟ ನೋಡಲು ಬಂದಿದ್ದವರ ಮೇಲೆ ಸಮುದಾಯ ಭವನದ ಬೃಹತ್ ಸಿಮೆಂಟ್ ನಾಮಫಲಕ ಕುಸಿದು ಬಿದ್ದ ಪರಿಣಾಮ, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.&lt;/p&gt;&lt;p&gt;ದುರ್ಘಟನೆಯಲ್ಲಿ 8 ವರ್ಷದ ಬಾಲಕ ವಿಶ್ವನಾಥ್ ಹಾಗೂ ಕೇವಲ ಒಂದೂವರೆ ವರ್ಷದ ಹಸುಗೂಸು ಸನ್ವಿತಾ ಸಿಮೆಂಟ್ ಬೋರ್ಡ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಪ್ರಾಣ ಚೆಲ್ಲಿದ್ದಾರೆ. ಇಡೀ ಗ್ರಾಮವೇ ಸಂಭ್ರಮದಿಂದ ಬಯಲಾಟ ವೀಕ್ಷಿಸುತ್ತಿದ್ದಾಗ ಕ್ಷಣಾರ್ಧದಲ್ಲಿ ಈ ಸಾವು ಸಂಭವಿಸಿದ್ದು, ಹಬ್ಬದ ಮನೆಗಳಲ್ಲಿ ಸೂತಕದ ಛಾಯೆ ಆವರಿಸಿದೆ.&lt;/p&gt;&lt;h2&gt;&lt;strong&gt;ತಾಯಿ-ಮಗಳ ಕಾಲುಗಳು ಕಟ್!&lt;/strong&gt;&lt;/h2&gt;&lt;p&gt;ನಾಮಫಲಕ ಕುಸಿದ ತೀವ್ರತೆಗೆ ಕೆಳಗೆ ಕುಳಿತಿದ್ದವರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಬಸಮ್ಮ (28) ಎಂಬುವವರ ಒಂದು ಕಾಲು ಕತ್ತರಿಸಲ್ಪಟ್ಟಿದ್ದರೆ, ಅವರ ಮಗಳಾದ ಲಕ್ಷ್ಮಿ (17) ಎಂಬಾಕೆಯ ಎರಡೂ ಕಾಲುಗಳು ತುಂಡಾಗಿವೆ. ಗಂಭೀರವಾಗಿ ಗಾಯಗೊಂಡಿರುವ ವಿಶಾಲಮ್ಮ (20) ಮತ್ತು ಯಲ್ಲಮ್ಮ (4) ಸೇರಿದಂತೆ ನಾಲ್ವರನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ದುರಂತ ಸಂಭವಿಸಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಗ್ರಾಮದ ಸಮುದಾಯ ಭವನದ ಆವರಣದಲ್ಲಿ ನಿನ್ನೆ ರಾತ್ರಿ ಬಯಲಾಟ ನಡೆಯುತ್ತಿತ್ತು. ಗ್ರಾಮಸ್ಥರೆಲ್ಲರೂ ಸಮುದಾಯ ಭವನದ ಮುಂಭಾಗದಲ್ಲಿ ಕುಳಿತು ಆಟ ವೀಕ್ಷಿಸುತ್ತಿದ್ದರು. ಈ ವೇಳೆ ಕಟ್ಟಡದ ಮೇಲ್ಭಾಗದಲ್ಲಿದ್ದ ಭಾರಿ ತೂಕದ ಸಿಮೆಂಟ್&zwnj;ನ ನಾಮಫಲಕ (ಬೋರ್ಡ್) ಇದ್ದಕ್ಕಿದ್ದಂತೆ ಕುಸಿದು ಕೆಳಗೆ ಕುಳಿತಿದ್ದವರ ಮೇಲೆ ಬಿದ್ದಿದೆ. ಕಟ್ಟಡದ ಕಳಪೆ ಕಾಮಗಾರಿಯೇ ಈ ದುರ್ಘಟನೆಗೆ ಕಾರಣ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.&lt;/p&gt;&lt;p&gt;ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.&lt;/p&gt;&lt;h2&gt;&lt;strong&gt;ವಿಷಾದ ವ್ಯಕ್ತಪಡಿಸಿದ ಶಾಸಕ&lt;/strong&gt;&lt;/h2&gt;&lt;p&gt;ದುರಂತದ ವಿಷಯ ತಿಳಿಯುತ್ತಿದ್ದಂತೆಯೇ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಕೂಡಲೇ ಓಪೆಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ಮಾನ್ವಿ ತಾಲೂಕು ಆಸ್ಪತ್ರೆಗೆ ತೆರಳಿ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು, &quot;ಗ್ರಾಮಸ್ಥರೆಲ್ಲರೂ ಕುಳಿತು ಬಯಲಾಟ ನೋಡುತ್ತಿದ್ದಾಗ ಏಕಾಏಕಿ ನಾಮಫಲಕ ಬಿದ್ದು ಇಬ್ಬರು ಮಕ್ಕಳ ಸಾವು ಸಂಭವಿಸಿರುವುದು ಅತ್ಯಂತ ನೋವಿನ ಸಂಗತಿ. ಗ್ರಾಮದ ಇತಿಹಾಸದಲ್ಲಿ ಇಂತಹ ಘಟನೆ ಎಂದೂ ಸಂಭವಿಸಿರಲಿಲ್ಲ, ಇದು ಆಕಸ್ಮಿಕವಾಗಿ ನಡೆದ ದುರ್ಘಟನೆಯಾಗಿದೆ. ಮೃತರ ಕುಟುಂಬಸ್ಥರಿಗೆ ಹಾಗೂ ಗ್ರಾಮಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ&quot; ಎಂದು ವಿಷಾದ ವ್ಯಕ್ತಪಡಿಸಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/raichur-bayalata-tragedy-cement-board-collapse-kills-two-children-manvi-san/articleshow-e6l3lr8"/>
        </item>
        <item>
            <title><![CDATA[ಸ್ನೇಹಿತರ ಜೊತೆ ಪ್ರವಾಸ ಹೋಗಿ ಬರುವ ವೇಳೆ ರೈಲಿನಿಂದ ಬಿದ್ದು ಯುವಕ ನಿಗೂಢ ಸಾವು]]></title>
            <link>https://kannada.asianetnews.com/state/raichur-man-died-mysteriously-after-falling-from-train-while-returning-trip-with-friends/articleshow-gddnglg</link>
            <guid isPermaLink="true">https://kannada.asianetnews.com/state/raichur-man-died-mysteriously-after-falling-from-train-while-returning-trip-with-friends/articleshow-gddnglg</guid>
            <pubDate>Fri, 24 Apr 2026 12:19:31 +0530</pubDate>
            <description><![CDATA[&lt;p&gt;ಸ್ನೇಹಿತರ ಜೊತೆ ಟ್ರಿಪ್ ಹೋಗಿ ವಾಪಸ್ ಆಗ್ತಿದ್ದ ವೇಳೆ ಟ್ರೈನ್ ನಿಂದ ಬಿದ್ದು ಯುವಕ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾ. ಸಾಸಲಮರಿ ಬ್ರಿಡ್ಜ್ ಬಳಿ ನಡೆದಿದೆ. 18 ವರ್ಷದ ಸುಮಂತ್ ಕುಮಾರ್ ಮೃತಪಟ್ಟ ಯುವಕ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpz3j4n3xfv1hwg4t1hrftdb,imgname-raichur-suspicious-death-1777012904611.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಟ್ರಿಪ್ ಹೋಗಿ ವಾಪಸ್ ಆಗ್ತಿದ್ದ ವೇಳೆ ಟ್ರೈನ್ ನಿಂದ ಬಿದ್ದು ಯುವಕ ಸಾವು&lt;/strong&gt;&lt;/h2&gt;&lt;p&gt;ರಾಯಚೂರು: ಸ್ನೇಹಿತರ ಜೊತೆ ಟ್ರಿಪ್ ಹೋಗಿ ವಾಪಸ್ ಆಗ್ತಿದ್ದ ವೇಳೆ ಟ್ರೈನ್ ನಿಂದ ಬಿದ್ದು ಯುವಕ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾ. ಸಾಸಲಮರಿ ಬ್ರಿಡ್ಜ್ ಬಳಿ ನಡೆದಿದೆ. 18 ವರ್ಷದ ಸುಮಂತ್ ಕುಮಾರ್ ಮೃತಪಟ್ಟ ಯುವಕ. ಸುಮಂತ್&zwnj; ಕುಮಾರ್ ರಾಯಚೂರು ಜಿಲ್ಲೆ ಲಿಂಗಸೂಗೂರು ತಾ&zwnj;ಲೂಕಿನ ಕಸಬಾ ಲಿಂಗಸುಗೂರು&zwnj; ನಿವಾಸಿಯಾಗಿದ್ದಾನೆ. ಸುಮಂತ್&zwnj; ಕುಮಾರ್ ಮೊನ್ನೆಯಷ್ಟೇ ಆರು ಸ್ನೇಹಿತರ ಜೊತೆ ದಾಂಡೇಲಿಗೆ ಟ್ರಿಪ್ ಹೋಗಿದ್ದ. ನಿನ್ನೆ ಹುಬ್ಬಳ್ಳಿ ಮೂಲಕ ಸಿಂಧನೂರಿಗೆ ವಾಪಸ್ ಬರ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.&lt;/p&gt;&lt;h3&gt;&lt;strong&gt;ಸಿಂಧನೂರು ತಲುಪುವುದಕ್ಕೆ ಕೇವಲ 5 ಕಿಲೋ ಮೀಟರ್ ಇರುವಾಗ ದುರಂತ:&lt;/strong&gt;&lt;/h3&gt;&lt;p&gt;ರೈಲು ರಾಯಚೂರಿನ ಸಿಂಧನೂರು ತಲುಪುವುದಕ್ಕೆ ಕೇವಲ 5 ಕಿಲೋ ಮೀಟರ್ ಇರುವಾಗ ಈ ದುರಂತ ನಡೆದಿದೆ. ಬಳಿಕ ಸ್ನೇಹಿತರು ರೈಲಿನಿಂದ ಇಳಿದು ಸುಮಂತ್&zwnj;ಗಾಗಿ ಹುಡುಕಾಟ ನಡೆಸಿದಾಗ ಸಾಸಲಮರಿ ಕ್ಯಾಂಪ್ ಬಳಿ ಸುಮಂತ್ ಶವ ಪತ್ತೆಯಾಗಿದೆ. ಆದರೆ ಬೆಳಗಿನ ಜಾವದಲ್ಲಿ ಸುಮಂತ್ ರೈಲಿನಿಂದ ಕೆಳಗೆ ಬಿದ್ದಿದ್ದು ಹೇಗೆ ಎಂಬುದೇ ಈಗ ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;ಶಿವಮೊಗ್ಗ: ನೀರು ಕೇಳಿ ಬಂದ ಅಪರಿಚಿತರಿಂದ ವೃದ್ಧೆಯ ಮನೆ ದರೋಡೆ: 18 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/state/raichur-man-died-mysteriously-after-falling-from-train-while-returning-trip-with-friends/articleshow-gddnglg"/>
        </item>
        <item>
            <title><![CDATA[Raichur: ಸಹಾಯಧನ ಬಿಡುಗಡೆಗೆ 15 ಸಾವಿರ ಲಂಚ ಪಡೆದಿದ್ದ PDOಗೆ ಏಳು ವರ್ಷ ಜೈಲು ಶಿಕ್ಷೆ]]></title>
            <link>https://kannada.asianetnews.com/karnataka-districts/raichur-7-years-in-prison-for-panchayat-development-officer-who-took-rs-15000-bribe-for-release-of-subsidy-money-mrq/articleshow-gga4awi</link>
            <guid isPermaLink="true">https://kannada.asianetnews.com/karnataka-districts/raichur-7-years-in-prison-for-panchayat-development-officer-who-took-rs-15000-bribe-for-release-of-subsidy-money-mrq/articleshow-gga4awi</guid>
            <pubDate>Thu, 16 Apr 2026 10:40:20 +0530</pubDate>
            <description><![CDATA[&lt;p&gt;ದನದ ಶೆಡ್ ನಿರ್ಮಾಣದ ಸಹಾಯಧನ ಬಿಡುಗಡೆ ಮಾಡಲು ₹15,000 ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗೊರೇಬಾಳ ಗ್ರಾಪಂ ಪಿಡಿಒಗೆ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpaamk0qqhfhsrbj24bzprwa,imgname-pdo-1776315681815.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು: &lt;/strong&gt;ದನದ ಶೆಡ್ ನಿರ್ಮಿಸಲು ಸರ್ಕಾರದ ಸಹಾಯಧನ ಒದಗಿಸಲು ಲಂಚ ಪಡೆದ ಆರೋಪ ಸಾಬೀತು ಆಗಿದ್ದರಿಂದ 3ನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಪಿಡಿಒಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.&lt;/p&gt;&lt;p&gt;ಲಿಂಗಸಗೂರು ತಾಲೂಕಿನ ಗೊರೇಬಾಳ ತಾಂಡಾದ ಚೇತನ ಲೋಕಪ್ಪ ಇವರು ದನದ ಶೆಡ್ ನಿರ್ಮಿಸಿದ್ದು, ಅದಕ್ಕೆ ಸಹಾಯಧನವಾಗಿ ಸರಕಾರದಿಂದ ಹಣ ಬಂದಿದ್ದು ಸದರಿ ಗೋರೆಬಾಳ ಗ್ರಾಪಂ ಪಿಡಿಒ ಮಹ್ಮದ್&zwnj; ಖಾಜಾ ಇವರು ಸಹಾಯ ಧನದ ಹಣದ ಬಿಡುಗಡೆಗಾಗಿ 15 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ರಾಯಚೂರಿನ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪೀಠಾಸೀನ ಲಿಂಗಸುಗೂರ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಏಳು ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದ್ದಾರೆ.&amp;nbsp;&lt;/p&gt;&lt;h2&gt;&lt;strong&gt;2017ರಲ್ಲಿ ಎಸಿಬಿಯಿಂದ ಬಂಧನ&lt;/strong&gt;&lt;/h2&gt;&lt;p&gt;ಕಳೆದ 2017 ನ.22 ರಂದು ಫಿಯಾರ್ದಿ ನೀಡಿದ ದೂರಿನ ಮೇಲೆ 15 ಸಾವಿರ ರು. ಲಂಚ ಪಡೆಯುವ ಸಮಯದಲ್ಲಿ ಎಸಿಬಿ ಪೊಲೀಸರಾದ ಶ್ರೀಧರ ದೊಡ್ಡಿ ಟ್ರಾಪ್ ಮಾಡಿ ಲಂಚದ ಸಮೇತ ಆರೋಪಿಯನ್ನು ಬಂದಿಸಿದ್ದು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.&lt;/p&gt;&lt;p&gt;ಪ್ರಕರಣದ ವಿಚಾರಣೆ ನಡೆಸಿದ ರಾಯಚೂರಿನ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪೀಠಾಸಿನ ಲಿಂಗಸುಗೂರ ನ್ಯಾಯಾಧೀಶರು ಆರೋಪಿ ಗೆ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ 1988 ರ ಕಲಂ 7 ರಡಿಯಲ್ಲಿ 25 ಸಾವಿರ ರು. ದಂಡ ಹಾಗೂ 3 ವರ್ಷ ಶಿಕ್ಷೆ ಹಾಗೂ ಕಲಂ 13 (1) (ಡಿ) ಸಹಿತ 13 (2) ಅಡಿ ಯಲ್ಲಿ 4 ವರ್ಷ ಜೈಲು ಶಿಕ್ಷೆ 50 ಸಾವಿರ ರು. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಶ್ರೀರಂಗಪಟ್ಟಣದ 21 ಗ್ರಾಮ ಪಂಚಾಯ್ತಿಗಳಿಂದ 2,83,34,944 ರೂ ಗುಳುಂ; ವ್ಯಾಪಕ ಅಕ್ರಮ&lt;/strong&gt;&lt;/p&gt;&lt;h3&gt;&lt;strong&gt;ಸುಳ್ಳು ಸಾಕ್ಷಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಕರಣ ದಾಖಲು&lt;/strong&gt;&lt;/h3&gt;&lt;p&gt;ಸರ್ಕಾರಿ ಅಭಿಯೋಜಕ ಕೆ.ಬಸವರಾಜ ಹೊಸಹಳ್ಳಿ ಅವರು ಈ ಪ್ರಕರಣದಲ್ಲಿ ಲೋಕಾಯುಕ್ತರ ಪರವಾಗಿ ವಾದ ಮಂಡಿಸಿದ್ದರು. ಈ ಪ್ರಕರಣದಲ್ಲಿ ಪಿರ್ಯಾದಿದಾರನು ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷಿ ನೀಡಿದ್ದು, ಸರ್ಕಾರಿ ಅಭಿಯೋಜಕರು ಪಿರ್ಯಾದಿಯ ಮೇಲೆ ಪ್ರತಿಕೂಲ ಸಾಕ್ಷಿ ನೀಡಿದ್ದಕ್ಕಾಗಿ ಕ್ರಮ ಕೈಕೊಳ್ಳುವಂತೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿಯನ್ನು ಪರಿಗಣಿಸಿ ನ್ಯಾಯಾಲಯದ ಶಿರಸ್ತೇದಾರರಿಗೆ ಪಿರ್ಯಾದುದಾರನಾದ ಚೇತನ ಲೋಕಪ್ಪ ಗೊರೇಬಾಳ ತಾಂಡಾ ಇವರ ಮೇಲೆ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶ ಸಹ ನೀಡಿದೆ.&lt;/p&gt;&lt;p&gt;&lt;strong&gt;ಇದನ್ನು ಓದಿ: &lt;/strong&gt;&lt;strong&gt;ಮಧುಗಿರಿ ತಾ.ಪಂ.ನಲ್ಲಿ ₹4.27 ಕೋಟಿ ಲೂಟಿ: ಕಾಂಗ್ರೆಸ್ ಮುಖಂಡ, ಎಸ್&zwnj;ಡಿಎ ಸೇರಿ 6 ಜನರ ವಿರುದ್ಧ FIR ದಾಖಲು!&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;Dharwad: 16 ವರ್ಷಗಳ ಬಳಿಕ ದೇವಸ್ಥಾನದ ಬಾಗಿಲು ಓಪನ್; ಗುಂಪುಗಳ ಭಿನ್ನಾಭಿಪ್ರಾಯ ಇತ್ಯರ್ಥ#Dharwad #Temple https://t.co/dnyv91eIt0&lt;/p&gt;&lt;p&gt;&mdash; Asianet Suvarna News (@AsianetNewsSN) April 16, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/raichur-7-years-in-prison-for-panchayat-development-officer-who-took-rs-15000-bribe-for-release-of-subsidy-money-mrq/articleshow-gga4awi"/>
        </item>
        <item>
            <title><![CDATA[ರಾಯಚೂರು: ಬಿಸಿಲ ತಾಪ ತಡೆಯಲಾಗದೆ 47 ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು, ಹಾಲುಣಿಸಲು ಅಮ್ಮಂದಿರ ಹರಸಾಹಸ]]></title>
            <link>https://kannada.asianetnews.com/karnataka-districts/severe-heatwave-in-raichur-47-newborns-hospitalized-due-to-dehydration-and-fever-gdp/articleshow-iupsn80</link>
            <guid isPermaLink="true">https://kannada.asianetnews.com/karnataka-districts/severe-heatwave-in-raichur-47-newborns-hospitalized-due-to-dehydration-and-fever-gdp/articleshow-iupsn80</guid>
            <pubDate>Wed, 22 Apr 2026 11:31:37 +0530</pubDate>
            <description><![CDATA[ರಾಯಚೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣಾಂಶದಿಂದ ನವಜಾತ ಶಿಶುಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಜ್ವರ ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳಿಂದ 47ಕ್ಕೂ ಹೆಚ್ಚು ಶಿಶುಗಳು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರು ಪೋಷಕರಿಗೆ ವಿಶೇಷ ಆರೈಕೆಯ ಸಲಹೆಗಳನ್ನು ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpq6y1qzmn8am46z8x0r60yk,imgname-imd-heatwave-warning-india-april-june-2026-alert-gangetic-plains-up-bihar-rajasthan-gujarat-maharashtra-news---4-1776748005119.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರು ಜಿಲ್ಲೆಯಲ್ಲಿ ದಿನೇ ದಿನೇ ಉಷ್ಣಾಂಶ ಏರಿಕೆಯಾಗುತ್ತಿದ್ದು, ತೀವ್ರ ಬಿಸಿಲಿನ ಪರಿಣಾಮ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ವಿಶೇಷವಾಗಿ ನವಜಾತ ಶಿಶುಗಳ ಆರೋಗ್ಯದ ಮೇಲೆ ಇದರ ದುಷ್ಪರಿಣಾಮ ಗಂಭೀರವಾಗಿ ಕಾಣಿಸಿಕೊಂಡಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಶಿಶುಗಳಲ್ಲಿ ಜ್ವರ, ನಿರ್ಜಲೀಕರಣ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.&lt;/p&gt;&lt;h2&gt;47 ಕ್ಕೂ ಹೆಚ್ಚು ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲು&lt;/h2&gt;&lt;p&gt;ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ 47ಕ್ಕೂ ಹೆಚ್ಚು ನವಜಾತ ಶಿಶುಗಳನ್ನು ದಾಖಲಿಸಲಾಗಿದೆ. ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿರುವ ಈ ಶಿಶುಗಳ ಮೇಲ್ವಿಚಾರಣೆಗೆ ವೈದ್ಯರು ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ದಿನದ 24 ಗಂಟೆಗಳ ಕಾಲ ಮಕ್ಕಳ ಆರೈಕೆ ನಡೆಯುತ್ತಿದ್ದು, ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;p&gt;ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತೀವ್ರ ಬಿಸಿಲಿನ ಸೆಕೆ ಕಂಡುಬರುತ್ತಿದ್ದು, ಈ ಅವಧಿಯಲ್ಲಿ ಶಿಶುಗಳು ಹೆಚ್ಚು ತೊಂದರೆ ಅನುಭವಿಸುತ್ತಿವೆ. ಬಿಸಿಲಿನ ಪರಿಣಾಮವಾಗಿ ದೇಹದಲ್ಲಿನ ನೀರಿನ ಅಂಶ ಕಡಿಮೆಯಾಗುವುದರಿಂದ ನಿರ್ಜಲೀಕರಣ ಉಂಟಾಗುತ್ತದೆ. ಇದರಿಂದ ಜ್ವರ, ದೌರ್ಬಲ್ಯ, ಜಾಂಡಿಸ್ (ಕಾಮಾಲೆ) ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವು ಪ್ರಕರಣಗಳಲ್ಲಿ ಕಿಡ್ನಿ ಹಾಗೂ ಇತರೆ ಅಂಗಾಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.&lt;/p&gt;&lt;h2&gt;ಶಿಶುಗಳಿಗೆ ಹಾಲುಣಿಸಲು ಹರಸಾಹಸ&lt;/h2&gt;&lt;p&gt;ಮಕ್ಕಳ ಅಸ್ವಸ್ಥತೆಯಿಂದಾಗಿ ಅವರ ನಿರಂತರ ಕಿರುಚಾಟ ತಾಯಂದಿರಿಗೂ ಕಷ್ಟಕರ ಪರಿಸ್ಥಿತಿ ಉಂಟುಮಾಡಿದೆ. ಬಾಣಂತಿಯರು ಶಿಶುಗಳಿಗೆ ಹಾಲುಣಿಸಲು ಹರಸಾಹಸ ಪಡುತ್ತಿದ್ದಾರೆ. ತಾಯಿಯರು ಸರಿಯಾಗಿ ಹಾಲುಣಿಸದಿದ್ದರೆ ಶಿಶುಗಳಲ್ಲಿ ನಿರ್ಜಲೀಕರಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಮಕ್ಕಳ ಆರೋಗ್ಯ ಮತ್ತಷ್ಟು ಹದಗೆಡುತ್ತಿದೆ.&lt;/p&gt;&lt;p&gt;ಈ ಕುರಿತು ಮಕ್ಕಳ ತಜ್ಞ ಡಾ. ವಿಜಯ ಸುಖಾಣಿ ಅವರು ಪ್ರತಿಕ್ರಿಯಿಸಿ, ಬಿಸಿಲಿನ ತೀವ್ರತೆಯಿಂದ ನವಜಾತ ಶಿಶುಗಳಲ್ಲಿ ಜ್ವರ ಹಾಗೂ ನಿರ್ಜಲೀಕರಣ ಸಾಮಾನ್ಯವಾಗಿ ಕಾಣಿಸುತ್ತಿದೆ. ದೇಹದಲ್ಲಿ ನೀರಿನ ಕೊರತೆ ಉಂಟಾದಾಗ ಜಾಂಡಿಸ್ ಸಮಸ್ಯೆಯೂ ಕಾಣಿಸಬಹುದು. ಆದ್ದರಿಂದ ತಾಯಂದಿರು ಶಿಶುಗಳಿಗೆ ನಿಯಮಿತವಾಗಿ ಹಾಗೂ ಸಮರ್ಪಕವಾಗಿ ಹಾಲುಣಿಸುವುದು ಅತ್ಯಗತ್ಯ ಎಂದು ಸಲಹೆ ನೀಡಿದ್ದಾರೆ.&lt;/p&gt;&lt;p&gt;ಅದೇ ರೀತಿ, ಬಿಸಿಲಿನ ತಾಪಮಾನ ಕಡಿಮೆಯಾಗುವವರೆಗೆ ಮಕ್ಕಳನ್ನು ವಿಶೇಷ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿಶುಗಳನ್ನು ಹೊರಗೆ ತೆಗೆದುಕೊಂಡು ಹೋಗಬಾರದು. ಮಕ್ಕಳಿಗೆ ಹಗುರವಾದ, ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವಂತೆ ಮಾಡಬೇಕು. ತಾಪಮಾನದಿಂದ ರಕ್ಷಿಸಲು ಸಾಧ್ಯವಾದಷ್ಟು ತಂಪಾದ ವಾತಾವರಣದಲ್ಲಿ ಇರಿಸುವುದು ಒಳಿತು ಎಂದು ಹೇಳಿದ್ದಾರೆ.&lt;/p&gt;&lt;p&gt;ರಾಯಚೂರಿನಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ನವಜಾತ ಶಿಶುಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ಪೋಷಕರು ಮತ್ತು ಆರೋಗ್ಯ ಇಲಾಖೆ ಹೆಚ್ಚಿನ ಜಾಗೃತಿಯನ್ನು ವಹಿಸುವುದು ಅತ್ಯಗತ್ಯವಾಗಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/severe-heatwave-in-raichur-47-newborns-hospitalized-due-to-dehydration-and-fever-gdp/articleshow-iupsn80"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ಕೊಪ್ಪಳದಲ್ಲಿ ಕುಡಿಯುವ ನೀರಿಗಾಗಿ ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ಮತ್ತೊಂದೆಡೆ ಪಿಡಿಒ ಕಚೇರಿಗೆ ಮುತ್ತಿಗೆ]]></title>
            <link>https://kannada.asianetnews.com/gallery/karnataka-districts/koppal-raichur-drinking-water-crisis-minister-shivaraj-tangadagi-car-blocked-strike-on-pdo-office-sat-nu9wh1f</link>
            <guid isPermaLink="true">https://kannada.asianetnews.com/gallery/karnataka-districts/koppal-raichur-drinking-water-crisis-minister-shivaraj-tangadagi-car-blocked-strike-on-pdo-office-sat-nu9wh1f</guid>
            <pubDate>Wed, 22 Apr 2026 16:26:15 +0530</pubDate>
            <description><![CDATA[&lt;p&gt;ಕಲ್ಯಾಣ ಕರ್ನಾಟಕದ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಕೊಪ್ಪಳದಲ್ಲಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಸಚಿವರ ಕಾರನ್ನು ಅಡ್ಡಗಟ್ಟಿ ಪ್ರತಿಭಟಿಸಿದರೆ, ರಾಯಚೂರಿನಲ್ಲಿ ಕೋಟಿಗಳ ಯೋಜನೆ ವಿಫಲವಾದ ಹಿನ್ನೆಲೆ, ಪಿಡಿಒ ಕಚೇರಿಗೆ ಮುತ್ತಿಗೆ ಹಾಕಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kptc2mggf0sk74zrqzsn1z7n,imgname-koppal-and-raichur-water-crisis-shivraj-tangadagi-1776854061584.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಲ್ಯಾಣ ಕರ್ನಾಟಕದ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಕೊಪ್ಪಳದಲ್ಲಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಸಚಿವರ ಕಾರನ್ನು ಅಡ್ಡಗಟ್ಟಿ ಪ್ರತಿಭಟಿಸಿದರೆ, ರಾಯಚೂರಿನಲ್ಲಿ ಕೋಟಿಗಳ ಯೋಜನೆ ವಿಫಲವಾದ ಹಿನ್ನೆಲೆ, ಪಿಡಿಒ ಕಚೇರಿಗೆ ಮುತ್ತಿಗೆ ಹಾಕಿದರು.&lt;/p&gt;&lt;img&gt;&lt;p&gt;&lt;strong&gt;ಕೊಪ್ಪಳ/ರಾಯಚೂರು (ಏ.22): ಬಿ&lt;/strong&gt;ಸಿಲ ನಾಡು ಖ್ಯಾತಿಯ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಈಗ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹನಿ ನೀರಿಗಾಗಿ ಮೈಲುಗಟ್ಟಲೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನೀರಿನ ಬವಣೆಯ ವಿರುದ್ಧ ಜನರ ಆಕ್ರೋಶದ ಕಟ್ಟೆ ಒಡೆದಿದ್ದು, ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಾರನ್ನೇ ತಡೆದು ಮಹಿಳೆಯರು ಪ್ರತಿಭಟಿಸಿದರೆ, ರಾಯಚೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ವಿನೂತನ ಹೋರಾಟ ನಡೆಸಿದ್ದಾರೆ.&lt;/p&gt;&lt;img&gt;&lt;p&gt;ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಇಂದು ಹೈಡ್ರಾಮಾ ನಡೆದಿದೆ. ನವಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮಹಿಳೆಯರು ಶಾಕ್ ನೀಡಿದ್ದಾರೆ. ನೀರಿನ ಸಮಸ್ಯೆ ತಾಳಲಾರದೆ ಆಕ್ರೋಶಗೊಂಡಿದ್ದ ಗ್ರಾಮದ ಮಹಿಳೆಯರು, ಸಚಿವರ ಕಾರಿನ ಮುಂದೆ ಖಾಲಿ ಕೊಡಗಳನ್ನು ಹಿಡಿದು ಅಡ್ಡ ನಿಂತು ಪ್ರತಿಭಟನೆ ನಡೆಸಿದರು.&lt;/p&gt;&lt;img&gt;&lt;p&gt;'ನಮಗೆ ಅಭಿವೃದ್ಧಿ ಕಾಮಗಾರಿಗಳಿಗಿಂತ ಮೊದಲು ಕುಡಿಯಲು ನೀರು ಕೊಡಿ' ಎಂದು ಮಹಿಳೆಯರು ಸಚಿವರ ಮುಂದೆ ಅಳಲು ತೋಡಿಕೊಂಡರು. ಈ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸಚಿವರು ಮಹಿಳೆಯರ ಮನವೊಲಿಸಲು ಯತ್ನಿಸಿದರಾದರೂ, ಕೂಡಲೇ ಶಾಶ್ವತ ಪರಿಹಾರ ಕಲ್ಪಿಸುವಂತೆ ಮಹಿಳೆಯರು ಪಟ್ಟು ಹಿಡಿದರು.&lt;/p&gt;&lt;img&gt;&lt;p&gt;ಇನ್ನೊಂದೆಡೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದಲ್ಲಿ ನೀರಿನ ಸಮಸ್ಯೆ ವಿಕೋಪಕ್ಕೆ ಹೋಗಿದೆ. ಈ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಬರೋಬ್ಬರಿ 11 ಕೋಟಿ ರೂಪಾಯಿ ವೆಚ್ಚದಲ್ಲಿ 'ಬಹುಗ್ರಾಮ ಕುಡಿಯುವ ನೀರಿನ ಯೋಜನೆ' ಜಾರಿಯಲ್ಲಿದೆ. ಆದರೆ, ಕಳೆದ ಒಂದು ವಾರದಿಂದ ಈ ಯೋಜನೆಯ ಎರಡು ಮೋಟಾರುಗಳು ಸುಟ್ಟು ಹೋಗಿದ್ದು, ಪಲಕನಮರಡಿ, ಮದರಕಲ್, ವಂದಲಿ ಮತ್ತು ದೇವರಗುಡ್ಡ ಗ್ರಾಮಗಳು ಸಂಪೂರ್ಣವಾಗಿ ಬಾಯಾರಿಕೆಯಿಂದ ತತ್ತರಿಸುತ್ತಿವೆ.&lt;/p&gt;&lt;img&gt;&lt;p&gt;ಮೋಟಾರು ಸುಟ್ಟು ಹೋಗಿದ್ದರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ತಿಮ್ಮಣ್ಣ ಅವರು ಕ್ಯಾರೆ ಎನ್ನುತ್ತಿಲ್ಲ ಎಂಬುದು ಗ್ರಾಮಸ್ಥರ ಗಂಭೀರ ಆರೋಪ. ಮೋಟಾರು ರಿಪೇರಿ ಮಾಡಿಸಿ ಎಂದು ಕೇಳಿದರೆ, 'ಪಂಚಾಯತ್&zwnj;ನಲ್ಲಿ ಅನುದಾನವಿಲ್ಲ' ಎಂಬ ಹಾರಿಕೆ ಉತ್ತರ ನೀಡಿ ದುರ್ವರ್ತನೆ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.&amp;nbsp;&lt;/p&gt;&lt;p&gt;ಇದರಿಂದ ಬೇಸತ್ತ ಜನರು ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಸರ್ಕಾರದ ಗಮನ ಸೆಳೆದರು.&lt;/p&gt;&lt;img&gt;&lt;p&gt;ಕೋಟಿ ಕೋಟಿ ರೂಪಾಯಿ ವೆಚ್ಚದ ಯೋಜನೆಗಳು ಕಾಗದದ ಮೇಲೆ ಕಾಣಿಸುತ್ತಿದ್ದರೂ, ಜನರ ಗಂಟಲು ಮಾತ್ರ ಒಣಗುತ್ತಿದೆ. ಅಧಿಕಾರಿಗಳ ಸಮನ್ವಯದ ಕೊರತೆ ಮತ್ತು ನಿರ್ಲಕ್ಷ್ಯದಿಂದಾಗಿ ಜನರು ರಸ್ತೆಗಿಳಿದು ಹೋರಾಡುವಂತಾಗಿದೆ. ಇನ್ನಾದರೂ ಸರ್ಕಾರ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/koppal-raichur-drinking-water-crisis-minister-shivaraj-tangadagi-car-blocked-strike-on-pdo-office-sat-nu9wh1f"/>
        </item>
        <item>
            <title><![CDATA[Raichur: ತಿಂಗಳಿನಿಂದ ಕುಡಿಯಲು ನೀರಿಲ್ಲದೇ ಪರದಾಡುತ್ತಿರುವ ಜನರು; ಕ್ಯಾರೆ ಅಂತಿಲ್ಲ PDO]]></title>
            <link>https://kannada.asianetnews.com/karnataka-districts/severe-shortage-of-drinking-water-for-months-due-to-groundwater-depletion-yamanaik-tanda-arakera-raichur-mrq/articleshow-urvcinb</link>
            <guid isPermaLink="true">https://kannada.asianetnews.com/karnataka-districts/severe-shortage-of-drinking-water-for-months-due-to-groundwater-depletion-yamanaik-tanda-arakera-raichur-mrq/articleshow-urvcinb</guid>
            <pubDate>Thu, 16 Apr 2026 11:39:11 +0530</pubDate>
            <description><![CDATA[ಅರಕೇರಾ ತಾಲೂಕಿನ ಯಮನಾಯ್ಕ ತಾಂಡಾದಲ್ಲಿ ಅಂತರ್ಜಲ ಕುಸಿತದಿಂದಾಗಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಈ ಸಮಸ್ಯೆಯ ಬಗ್ಗೆ ಶಾಸಕಿ ಕರೆಮ್ಮ ಜಿ. ನಾಯಕರ ಗಮನ ಸೆಳೆದಾಗ, ಅವರು ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpaefhy8xfzky4k0q97g8px5,imgname-lack-of-drinking-water-1776319711176.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು:&lt;/strong&gt; &amp;nbsp;ದೇವದುರ್ಗಸಮೀಪದ ಅರಕೇರಾ ತಾಲೂಕಿನ ಕೆ.ಇರಬಗೇರಾ ಗ್ರಾಪಂ ವ್ಯಾಪ್ತಿಯ ಯಮನಾಯ್ಕ ತಾಂಡಾ ವಾಸಿಗಳಿಗೆ ಕಳೆದ ಒಂದು ತಿಂಗಳಿನಿಂದ ಕುಡಿಯಲು ನೀರಿಲ್ಲದೇ ಪರದಾಡುತ್ತಿದ್ದಾರೆ.ಅನೇಕ ಬಾರಿ ಗ್ರಾಪಂ ಪಿಡಿಒರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಸಿಗಳು ದೂರಿದ್ದಾರೆ.&lt;/p&gt;&lt;h2&gt;&lt;strong&gt;ಅಂತರ್ಜಲ ಕುಸಿತ&lt;/strong&gt;&lt;/h2&gt;&lt;p&gt;ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಶಾಸಕಿ ಕರೆಮ್ಮ ಜಿ. ನಾಯಕರನ್ನು ತಾಂಡಾ ವಾಸಿಗಳ ನಿಯೋಗ ಭೇಟಿ ಮಾಡಿ, ಕುಡಿವ ನೀರಿನ ತೊಂದರೆ ಕುರಿತು ಗಮನ ಸೆಳೆದರು. ನೀರು ಸರಬಾಜು ಮಾಡುತ್ತಿದ್ದ ಕೊಳವೆ ಬಾವಿಯಲ್ಲಿ ಅಂತರ್ಜಲ ಕುಸಿದ ಪರಿಣಾಮ ನೀರು ಲಭ್ಯವಿಲ್ಲ. ಪರ್ಯಾಯ ದಾರಿಯಿಲ್ಲದೇ ತಾಂಡಾ ವಾಸಿಗಳು ಹೊಲಗಳಿಗೆ ಹೋಗಿ ನೀರು ತರುವ ಅನಿವಾರ್ಯತೆ ಇದೆ. ಇನ್ನೂ ಕೆಲವರು ಪಕ್ಕದ ತಾಂಡಾಗಳಿಗೆ ಹೋಗಿ ನೀರು ತರುತ್ತಿದ್ದಾರೆ. ಈ ಕುರಿತು ಅನೇಕ ಬಾರಿ ಪಿಡಿಒಯವರ ಗಮನಕ್ಕೆ ತಂದರೂ ಕ್ಯಾರೇ ಎನ್ನುತ್ತಿಲ್ಲ ಎಂದು ವಾಸಿಗಳು ದೂರಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಿಜಯನಗರ: ಹೊಲಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ, ಕೈ, ಕಾಲು ಭಾಗಕ್ಕೆ ಪರಚಿ ತೀವ್ರ ಗಾಯ&lt;/strong&gt;&lt;/p&gt;&lt;p&gt;ಶಾಸಕಿ ಕರೆಮ್ಮ ಜಿ.ನಾಯಕ ತಾಪಂ ಇಒ ಮತ್ತು ಪಿಡಿಒರಿಗೆ ದೂರವಾಣಿಯಲ್ಲಿ ಮಾತನಾಡಿ, ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಹಾಗೂ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸೂಚಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶರಣಪ್ಪ ಬಳೆ, ಬಸನಗೌಡ ದೇಸಾಯಿ, ಗೋವಿಂದರಾಜ್ ನಾಯಕ ಕೊತ್ತದೊಡ್ಡಿ, ಶಾಲಂ ಉದ್ದಾರ, ತಾಂಡಾ ವಾಸಿಗಳಾದ ಶಂಕರಪ್ಪ ಚವ್ಹಾಣ, ಕೃಷ್ಣಪ್ಪನಾಯ್ಕ, ಆಡಕಪ್ಪ, ದ್ಯಾಮ್ಲಾನಾಯಕ ಹಾಗೂ ಇತರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯೋಗೇಶ್ ಗೌಡ ಹ*ತ್ಯೆ: ಪಾಪಪ್ರಜ್ಞೆ ಕಾಡ್ತಿತ್ತು ಹೀಗಾಗಿ ಕೋರ್ಟ್&zwnj;ನಲ್ಲಿ ಸತ್ಯ ಹೇಳಿದೆ, ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ರಾಯರ ದರ್ಶನಕ್ಕೆ ಹೊರಟವರ ವಾಹನ ಅಪಘಾತ; ಸ್ಥಳದಲ್ಲಿಯೇ 8 ಭಕ್ತರ ದುರ್ಮರಣ, 13 ಮಂದಿಗೆ ಗಾಯ#Mantralaya #Accident #Devotees https://t.co/adtfl7u76k&lt;/p&gt;&lt;p&gt;&mdash; Asianet Suvarna News (@AsianetNewsSN) April 16, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/severe-shortage-of-drinking-water-for-months-due-to-groundwater-depletion-yamanaik-tanda-arakera-raichur-mrq/articleshow-urvcinb"/>
        </item>
        <item>
            <title><![CDATA[ಎರಡೂ ಕ್ಷೇತ್ರಗಳನ್ನ ನಾವೇ ಗೆಲ್ತೀವಿ, ,ಯತ್ನಾಳ್ ವಿರುದ್ಧ ಎನ್‌ಎಸ್ ಬೋಸರಾಜು ಕಿಡಿ]]></title>
            <link>https://kannada.asianetnews.com/politics/minister-ns-bosaraju-battle-against-congress-rav-rav/articleshow-vw0s9ix</link>
            <guid isPermaLink="true">https://kannada.asianetnews.com/politics/minister-ns-bosaraju-battle-against-congress-rav-rav/articleshow-vw0s9ix</guid>
            <pubDate>Sun, 05 Apr 2026 10:28:49 +0530</pubDate>
            <description><![CDATA[&lt;p&gt;ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಚಿವ ಎನ್&zwnj;ಎಸ್ ಬೋಸರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಮತ್ತು ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಪ್ರಮುಖ ಕಾರಣವಾಗಲಿದ್ದು, ಬಿಜೆಪಿಯ ಅಪಪ್ರಚಾರದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jaqq1b3ezmdr66e36996p623,imgname-1--4-.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಏ.&lt;/strong&gt;5): ದಾವಣಗೆರೆ, ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ. ನಮ್ಮ ಮೇನ್ ಇಂಪ್ಯಾಕ್ಟ್ ಮಹಿಳೆಯರು ಇದ್ದಾರೆ ಎಂದು ಸಚಿವ ಎನ್&zwnj;ಎಸ್ ಬೋಸರಾಜು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಇಂದು ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವರು, ಹಿಂದೆ ಮಂಡ್ಯ, ಶಿಗ್ಗಾಂವಿ ಉಪಚುನಾವಣೆಯಲ್ಲಿ ನಮಗೇ ಗೆಲುವು ಸಿಕ್ತು. ಮಹಿಳೆಯರ ಗ್ಯಾರಂಟಿ ಯೋಜನೆ ನಮಗೆ ರಿಜಲ್ಟ್ ಕೊಟ್ಟಿತ್ತು. ಈಗಲೂ ನಾವು ನೋಡಿದಂತೆ ದಾವಣಗೆರೆ, ಬಾಗಲಕೋಟೆ ಎರಡೂ ಕ್ಷೇತ್ರವನ್ನೂ ನಾವು ಗೆಲ್ಲಲಿದ್ದೇವೆ ಎಂದರು.&lt;/p&gt;&lt;p&gt;ಮಹಿಳೆಯರು ಬಹಳ ಉತ್ಸಾಹದಲ್ಲಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ನಮಗೆ ಬಹಳ ಅನುಕೂಲ ಆಗಿದೆ ಎಂದು ಮಾತನಾಡುತ್ತಿದ್ದಾರೆ.ಗ್ಯಾರೆಂಟಿ ಯೋಜನೆಗಳು ನಮಗೆ ಶ್ರೀರಕ್ಷವಲ್ಲ; ಮಹಿಳೆಯರ ಹೆಚ್ಚಿನ ಓಟು ಕಾಂಗ್ರೆಸ್ ಬರಲು ಗ್ಯಾರೆಂಟಿಗಳು ಅನುಕೂಲವಾಗಿವೆ. ನಮ್ಮ ಪಾರ್ಟಿ ಕಾರ್ಯಕರ್ತರು, ಅಲ್ಲದೇ &zwnj;ನಾವು ಮೂರು ವರ್ಷಗಳ ಕಾಲ ಕೊಟ್ಟ ಗ್ಯಾರೆಂಟಿ ಯೋಜನೆಗಳು ನಮಗೆ ಲಾಭವಾಗಲಿದೆ ಎಂದರು.&lt;/p&gt;&lt;h2&gt;ಗ್ಯಾರಂಟಿ ಬಗ್ಗೆ ಬಿಜೆಪಿಯವ್ರು ಅಪಪ್ರಚಾರ&lt;/h2&gt;&lt;p&gt;ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತ ಬಂದಿದೆ. ಇದು ಈ ಎಲೆಕ್ಷನ್&zwnj;ನಲ್ಲೂ ಅಪಪ್ರಚಾರ ಮಾಡಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಸರಕಾರಿ ಖಜಾನೆ ಖಾಲಿ ಆಗುತ್ತೆ ಆಮೇಲೆ ಗ್ಯಾರಂಟಿ ಇರಲ್ಲ, ಗೌರಮೆಂಟ್ ಖಜಾನೆ ಲೂಟಿ ಆಗುತ್ತೆ ಅಂತ ಬಿಜೆಪಿಯವರು ಅಪಪ್ರಚಾರ ಮಾಡಿದ್ರು ಆದ್ರೆ ಸರ್ಕಾರ ಬಂದು ಇಷ್ಟು ವರ್ಶದಲ್ಲಿ ಏನಾಯ್ತ? ಏನೂ ಆಗಿಲ್ಲ. ನಾವು ಮೂರು ವರ್ಷದಲ್ಲಿ 1ಲಕ್ಷ 23 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ. ಇಲ್ಲಿ ಭ್ರಷ್ಟಾಚಾರ ಇಲ್ಲ ಏನು ಇಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹೋಗುತ್ತೆ. ಗೃಹ ಜ್ಯೋತಿ ಯೋಜನೆದ್ದು&lt;/p&gt;&lt;p&gt;200 ಯೂನಿಟ್ ಜಿಯೋ ಬಿಲ್ ಕೊಡುತ್ತಿದ್ದೇವೆ. 2 ಸಾವಿರ ರೂ. ಅವರ ಅಕೌಂಟ್ ಗೆ ಹೋಗುತ್ತೆ. ಅಕ್ಕಿ ಅವರ ಕೈಗೆ ಬರುತ್ತಿದೆ. ಮಹಿಳೆಯರುಬಸ್ ನಲ್ಲಿ ಆರಾಮ ಆಗಿ ಓಡಾಟ ಮಾಡುತ್ತಿದ್ದಾರೆ ಎಂದರು.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/minister-ns-bosaraju-battle-against-congress-rav-rav/articleshow-vw0s9ix"/>
        </item>
        <item>
            <title><![CDATA[ಬಿಸಿಲ ಧಗೆಯ ನಡುವೆ ರಾಯಚೂರಲ್ಲೂ ಮಾಂಸದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಮೂವರು ಪಿಂಪ್‌ಗಳು ಅಂದರ್]]></title>
            <link>https://kannada.asianetnews.com/state/3-middleman-arrested-in-hightech-prostitution-at-raichur/articleshow-x1bo4nn</link>
            <guid isPermaLink="true">https://kannada.asianetnews.com/state/3-middleman-arrested-in-hightech-prostitution-at-raichur/articleshow-x1bo4nn</guid>
            <pubDate>Wed, 15 Apr 2026 13:34:33 +0530</pubDate>
            <description><![CDATA[&lt;p&gt;ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಕಿಂಗ್&zwnj;ಪಿನ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನು ಕರೆತಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp821h07mrdq4rtbdfn04t55,imgname-3-arrested-for-prostitution-1776239559687.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನು ಕರೆಸಿ ದಂಧೆ ನಡೆಸುತ್ತಿದ್ದ ಕಿಂಗ್&zwnj;ಪಿನ್ ಅರೆಸ್ಟ್&lt;/strong&gt;&lt;/h2&gt;&lt;p&gt;ರಾಯಚೂರು: ಬಿಸಿಲೂರು ರಾಯಚೂರು ಜಿಲ್ಲೆಯಲ್ಲೂ ವೇಶ್ಯಾವಾಟಿಕೆ ದಂಧೆಯೊಂದು ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಈ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.&lt;/p&gt;&lt;p&gt;ಜಿಲ್ಲೆಯ ಸಿಂಧನೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹಟ್ಟಿ ರಸ್ತೆಯ ನ್ಯಾಶನಲ್ ಲೇಔಟ್&zwnj; ನಲ್ಲಿ ಈ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಬಂಧಿತರನ್ನ ವಿಜಯ್, ಗಂಗಾಧರ, ಮೆಹಬೂಬ್ ಎಂದು ಗುರುತಿಸಲಾಗಿದೆ.&lt;/p&gt;&lt;h3&gt;&lt;strong&gt;ಬಿಸಿಲ ಧಗೆಯ ನಡುವೆ ರಾಯಚೂರಲ್ಲೂ ಮಾಂಸದಂಧೆ&lt;/strong&gt;&lt;/h3&gt;&lt;p&gt;ಈ ಆರೋಪಿಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನ ಇಲ್ಲಿಗೆ ಕರೆಸಿ ಗಿರಾಕಿಗಳಿಗೆ ಪೂರೈಕೆ ಮಾಡುವ ಮೂಲಕ ಹಣ ಮಾಡುತ್ತಿದ್ದರು. ಈ ಪ್ರಕರಣದ ಪ್ರಮುಖ ಕಿಂಗ್ ಪಿನ್ ವಿಜಯ್ ಎಂದು ತಿಳಿದು ಬಂದಿದ್ದು, ಪೊಲೀಸರು ಈಗ ಮೂವರನ್ನು ವಶಕ್ಕೆ ಪಡೆದು ವಿಚಾರಣ ನಡೆಸುತ್ತಿದ್ದು, ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಅಯಾಜ್&zwnj;ನಿಂದ 180 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಸಂತ್ರಸ್ತರಿಗೆ ಬುದ್ಧಿಮಾತು ಹೇಳಿದ ಕೈ ನಾಯಕಿ ಬೇಜವಾಬ್ದಾರಿ ಹೇಳಿಕೆಗೆ ಆಕ್ರೋಶ&lt;/strong&gt;&lt;/p&gt;&lt;p&gt;ಸಾಮಾನ್ಯವಾಗಿ ಇಂತಹ ಚಟುವಟಿಕೆಗಳು ಕೆಲವು ಪ್ರವಾಸಿ ತಾಣಗಳಲ್ಲಿ ಕದ್ದುಮುಚ್ಚಿ ಸಾಮಾನ್ಯ ಎಂಬಂತೆ ನಡೆಯುತ್ತಿರುತ್ತವೆ. ಆದರೆ ಬಿಸಿಲಿನ ದಾಹ ಭಯಾನಕವಾಗಿರುವ ರಾಯಚೂರಿನಲ್ಲಿ ಬೇಸಿಗೆಯಲ್ಲಿ ಉಸಿರಾಡಿದರೆ ಸಾಕು ಎಂಬಂತಹ ಸ್ಥಿತಿ ಇದ್ದು, ಇಂತಹ ಸ್ಥಳದಲ್ಲೂ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಅಚ್ಚರಿ ಮೂಡಿಸಿದೆ..&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/state/3-middleman-arrested-in-hightech-prostitution-at-raichur/articleshow-x1bo4nn"/>
        </item>
        <item>
            <title><![CDATA[ತಂಗಿಯನ್ನು ಚುಡಾಯಿಸಿದಕ್ಕೆ ಯುವಕನ ಎತ್ತಾಕೊಂಡೋಗಿ ಸರಿಯಾಗಿ ಬಾರಿಸಿದ ಅಕ್ಕ]]></title>
            <link>https://kannada.asianetnews.com/state/raichur-news-elder-sister-assaults-man-for-teasing-her-young-sister/articleshow-xe4bc9f</link>
            <guid isPermaLink="true">https://kannada.asianetnews.com/state/raichur-news-elder-sister-assaults-man-for-teasing-her-young-sister/articleshow-xe4bc9f</guid>
            <pubDate>Tue, 21 Apr 2026 12:09:06 +0530</pubDate>
            <description><![CDATA[ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಯುವತಿಯನ್ನು ಚುಡಾಯಿಸಿದ ಆರೋಪದ ಮೇಲೆ ಮೆಹಬೂಬ್ ಎಂಬ ಯುವಕನನ್ನು ಯುವತಿಯ ಕಡೆಯವರು ಮನೆಗೆ ಕರೆದೊಯ್ದು ಕೋಣೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯ ವೀಡಿಯೋ ವೈರಲ್ ಆಗಿದ್ದು, ಸದರ್&zwnj; ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpqbvqkd0twvpt694eeaw85t,imgname-woman-assault-on-man-for-teasing-girl-1776753172076.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಆಸ್ಪತ್ರೆಗೆ ಬಂದ ಯುವತಿಗೆ ಚುಡಾಯಿಸಿದ ಮೆಹಾಬೂಬ್&lt;/strong&gt;&lt;/h2&gt;&lt;p&gt;ರಾಯಚೂರು: ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದಂತಹ ಘಟನೆ ರಾಯಚೂರು ನಗರದ ಐಡಿಎಂಸಿ ಲೇಔಟ್&zwnj;ನಲ್ಲಿ ನಡೆದಿದೆ. ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ರೂಮ್&zwnj;ನ ಡೋರ್ ಲಾಕ್ ಮಾಡಿದ ಯುವತಿ ಬಳಿಕ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ಮೆಹಬೂಬ್ ಯುವತಿಯಿಂದ ಹಲ್ಲೆಗೊಳಗಾದ ಯುವಕ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೆಹಬೂಬ್ ಕೆಲಸ ಮಾಡುತ್ತಿದ್ದ.&lt;/p&gt;&lt;h3&gt;&lt;strong&gt;ಆಗಿದ್ದೇನು?&lt;/strong&gt;&lt;/h3&gt;&lt;p&gt;ಮೆಹಬೂಬ್ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ಯುವತಿಯೊಬ್ಬಳು ಚಿಕಿತ್ಸೆಗಾಗಿ ಬಂದಿದ್ದಳು. ಈ ವೇಳೆ ಮೆಹಬೂಬ್ ಆಕೆಗೆ ಚುಡಾಯಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹೊರರೋಗಿಗಳ ವಿಭಾಗದಲ್ಲಿ ಕುಳಿತಿದ್ದ ಯುವತಿಗೆ ಯುವಕ ಮೆಹಬೂಬ್ ಕಿಚಾಯಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಯುವತಿ ಕಡೆಯವರು ಮೆಹಬೂಬ್&zwnj;ನನ್ನು ಮನೆಗೆ ಎತ್ತು ಹಾಕಿಕೊಂಡು ಹೋಗಿ ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಿನ್ನ ಅಕ್ಕನೂ ಇಲ್ಲಿಗೆ ಬಂದಿದ್ದಳು ಆಕೆಯೂ ಚೆನ್ನಾಗಿದ್ದಳು ಎಂದು ಆರೋಪಿ ಹೇಳಿದ್ದಾನೆ ಎಂದು ಯುವತಿಯ ಸೋದರಿ ಹೇಳುತ್ತಿರುವುದು ವೀಡಿಯೋದಲ್ಲಿ ಕಾಣಬಹುದು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಜರ್ಮನಿಯ ಗುರುದ್ವಾರದಲ್ಲಿ ಘರ್ಷಣೆ: ರಕ್ಷಿಸಲು ಬಳಸುವ ಕಿರ್ಪಾನ್ ಆಯುಧದಿಂದಲೇ ರಕ್ತ ಹರಿಸಿದರು: 11 ಜನರಿಗೆ ಗಾಯ&lt;/strong&gt;&lt;/p&gt;&lt;p&gt;ಇದರಿಂದ ಸಿಟ್ಟಾದ ಯುವತಿ ಕಡೆಯವರು ಮೆಹಬೂಬ್&zwnj;ನನ್ನು ಎತ್ತಾಕಿಕೊಂಡು ಹೋಗಿ ಮನೆಯ ಕೋಣೆಯಲ್ಲಿ ಮೊಣಕಾಲಿನಲ್ಲಿ ಕೂರಿಸಿ ಸರಿಯಾಗಿ ಕೆನ್ನೆಗೆ ಬಾರಿಸಿದ್ದಾರೆ. ಹಲ್ಲೆಯ ವೀಡಿಯೋ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ಇಲ್ಲ. ಈಗ ಸದರ್&zwnj; ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿದ ಕಾರು&lt;/strong&gt;&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/state/raichur-news-elder-sister-assaults-man-for-teasing-her-young-sister/articleshow-xe4bc9f"/>
        </item>
        <item>
            <title><![CDATA[ಹಾಸನ: ರಾಯರ ದರ್ಶನಕ್ಕೂ ಮುನ್ನವೇ ಮಸಣ ಸೇರಿದ 8 ಮಂದಿ ಸಂಬಂಧಿಕರು, ಸಾವನ್ನಪ್ಪಿದ ಒಂದೊಂದು ಕುಟುಂಬದ್ದು ಒಂದೊಂದು ಕಥೆ!]]></title>
            <link>https://kannada.asianetnews.com/karnataka-districts/mantralayam-road-accident-8-from-hassan-and-chikkamagaluru-killed-in-tragic-crash-near-raichur-gdp/articleshow-z5sp26i</link>
            <guid isPermaLink="true">https://kannada.asianetnews.com/karnataka-districts/mantralayam-road-accident-8-from-hassan-and-chikkamagaluru-killed-in-tragic-crash-near-raichur-gdp/articleshow-z5sp26i</guid>
            <pubDate>Thu, 16 Apr 2026 16:52:43 +0530</pubDate>
            <description><![CDATA[ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ರಾಯರ ದರ್ಶನಕ್ಕೆ ತೆರಳುತ್ತಿದ್ದ ಹಾಸನ ಮತ್ತು ಚಿಕ್ಕಮಗಳೂರು ಮೂಲದ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ. ಗೂಡ್ಸ್ ವಾಹನ ಮತ್ತು ಟ್ಯಾಂಕರ್ ನಡುವಿನ ಈ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಾಯಗೊಂಡಿದ್ದು, ಈ ದುರ್ಘಟನೆ ಗ್ರಾಮಗಳಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpb0b1kczs7ryf7d827z9qb8,imgname-mantralaya-road-accident-1776338437740.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು/ಹಾಸನ: &lt;/strong&gt;ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ ಕುಟುಂಬಗಳನ್ನೇ ನಡುಗಿಸಿದೆ. ರಾಯರ ದರ್ಶನಕ್ಕಾಗಿ ಹೊರಟಿದ್ದ ಒಂದೇ ಕುಟುಂಬದ ಸದಸ್ಯರು ಮಸಣ ಸೇರಿರುವುದು ಹೃದಯವಿದ್ರಾವಕ ಘಟನೆ ಇಡೀ ಜಿಲ್ಲೆಯ ಜನರನ್ನು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಒಬ್ಬೊಬ್ಬರದು ಒದೊಂದು ಕಥೆ ಹೇಳುತ್ತಿದೆ.&lt;/p&gt;&lt;p&gt;ಗುರುವಾರ ಬೆಳಗ್ಗೆ ಮಂತ್ರಾಲಯದತ್ತ ಸಾಗುತ್ತಿದ್ದ KA-46-9745 ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಮತ್ತು KA-32-AC-1117 ಸಂಖ್ಯೆಯ ಟ್ಯಾಂಕರ್ ನಡುವೆ ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ಭೀಕರ ಅಪಘಾತ ಮಂತ್ರಾಲಯ ಮಠದಿಂದ ಸುಮಾರು 7 ಕಿ.ಮೀ ದೂರದಲ್ಲಿ ಸಂಭವಿಸಿದ್ದು, ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.&lt;/p&gt;&lt;p&gt;ಈ ಗೂಡ್ಸ್ ವಾಹನದಲ್ಲಿ ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 21 ಜನ ಪ್ರಯಾಣಿಸುತ್ತಿದ್ದು, ಅದರಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕರ್ನೂಲ್ ಜಿಲ್ಲಾ ಆಸ್ಪತ್ರೆ ಹಾಗೂ ಏಮಿಗನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h2&gt;ಒಂದೇ ಕುಟುಂಬದ ದುರಂತ&lt;/h2&gt;&lt;p&gt;ಮೃತರು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಶೆಟ್ಟಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗ್ರಾಮಸ್ಥರಾಗಿದ್ದಾರೆ. ಸಂಬಂಧಿಕರೆಲ್ಲರೂ ಒಟ್ಟಾಗಿ ಮಂತ್ರಾಲಯ ಪ್ರವಾಸ ಕೈಗೊಂಡಿದ್ದರು. ಆದರೆ ಈ ಪ್ರಯಾಣವೇ ಅವರ ಜೀವನದ ಕೊನೆಯ ಪ್ರಯಾಣವಾಗಿರುವುದು ದೊಡ್ಡ ದುರಂತ&lt;/p&gt;&lt;h2&gt;ಮೃತರ ಪಟ್ಟಿ:&lt;/h2&gt;&lt;p&gt;ಕುಮಾರ್ (51)&lt;/p&gt;&lt;p&gt;ಜಯಮ್ಮ (60) &ndash; ಕುಮಾರ್ ಅವರ ಅತ್ತೆ&lt;/p&gt;&lt;p&gt;ಸುನೀಲ್ (27) &ndash; ಕುಮಾರ್ ಪುತ್ರ&lt;/p&gt;&lt;p&gt;ವೀಣಾ (25) &ndash; ಕುಮಾರ್ ಪುತ್ರಿ&lt;/p&gt;&lt;p&gt;ನಿಶಿತಾ (3) &ndash; ವೀಣಾ ಮಗಳು&lt;/p&gt;&lt;p&gt;ಲೋಲಾಕ್ಷಿ (38) &ndash; ಕುಮಾರ್ ತಮ್ಮನ ಪತ್ನಿ&lt;/p&gt;&lt;p&gt;ಪುಟ್ಟಮ್ಮ (60) &ndash; ತರೀಕೆರೆ ತಾಲೂಕು ಉಡೇವಾ ಗ್ರಾಮ&lt;/p&gt;&lt;p&gt;ಮೀನಾಕ್ಷಮ್ಮ (54) &ndash; ತರೀಕೆರೆ ತಾಲೂಕು ಉಡೇವಾ ಗ್ರಾಮ&lt;/p&gt;&lt;h2&gt;ಕನಸು ಕಂಡಿದ್ದ ಜಯಮ್ಮ&hellip; ಕನಸೇ ಉಳಿಯಿತು&lt;/h2&gt;&lt;p&gt;ಈ ದುರಂತದಲ್ಲಿ ಮೃತಪಟ್ಟ ಜಯಮ್ಮ ಅವರ ಕಥೆ ಎಲ್ಲರನ್ನೂ ಕಣ್ಣೀರಿಟ್ಟಿದೆ. 65ನೇ ವಯಸ್ಸಿನಲ್ಲಿ ಒಂದು ಮನೆ ಕಟ್ಟಬೇಕೆಂಬ ಕನಸು ಕಂಡಿದ್ದ ಅವರು, ಎಲ್ಲರೂ ಮನೆ ಕಟ್ಟಿಕೊಂಡು ಹೋಗಿದ್ದಾರೆ, ನಾವು ಕೂಡ ಕಟ್ಟೋಣ ಎಂದು ಕುಟುಂಬದವರೊಂದಿಗೆ ಹೇಳಿಕೊಂಡಿದ್ದರಂತೆ. ಧರ್ಮಸ್ಥಳ ಸಂಘದಿಂದ 3 ಲಕ್ಷ ರೂಪಾಯಿ ಸಾಲ ಪಡೆದು ಮನೆ ಕಟ್ಟುವ ಯೋಚನೆ ಮಾಡಿದ್ದ ಅವರು, ಕೂಲಿ ಕೆಲಸ ಮಾಡಿ ಸಾಲ ತೀರಿಸೋಣ ಎಂದು ನಿರ್ಧರಿಸಿದ್ದರು. ಮಂತ್ರಾಲಯದಿಂದ ಹಿಂದಿರುಗಿದ ಬಳಿಕ ಈ ಕುರಿತು ಚಿಂತನೆ ನಡೆಸಬೇಕೆಂದು ಕೊಂಡಿದ್ದರು, ಅದಕ್ಕೆ ಅವಕಾಶವೇ ಸಿಕ್ಕಿಲ್ಲ. ಮಂತ್ರಾಲಯಕ್ಕೆ ಹೊರಡುವ ಮುನ್ನ ರಾಯರಿಗೆ ಕಾಣಿಕೆ ಎಂದು ₹100 ಪಡೆದುಕೊಂಡು ಹೋಗಿದ್ದ ಜಯಮ್ಮ, ಬದುಕಿನ ಕೊನೆಯ ಪ್ರಯಾಣ ಮುಗಿಸಿರುವುದು ಅತ್ಯಂತ ದುಃಖಕರ ಸಂಗತಿ.&lt;/p&gt;&lt;h2&gt;ಹೋಗಬೇಕಿತ್ತು&hellip; ಆದರೆ ಹಣ ಇರಲಿಲ್ಲ&lt;/h2&gt;&lt;p&gt;ಕುಟುಂಬದ ಶೋಭಾ ಎಂಬವರು ಕೂಡ ಈ ಪ್ರವಾಸಕ್ಕೆ ಹೋಗಬೇಕಾಗಿತ್ತು. ಆದರೆ ಹಣದ ಅಭಾವದಿಂದ ಅವರು ಹೋಗಿರಲಿಲ್ಲ. ಹೋಗಿದ್ದರೆ ನನ್ನ ಸ್ಥಿತಿಯೂ ಇದೇ ಆಗುತ್ತಿತ್ತು ಎಂದು ಅತ್ತೆಯ ಮಾತು ನೆನೆದು ಕಣ್ಣೀರಿಟ್ಟಿದ್ದಾರೆ ಸೊಸೆ.&lt;/p&gt;&lt;h2&gt;ಗಾಯಾಳುಗಳ ಸ್ಥಿತಿ ಗಂಭೀರ&lt;/h2&gt;&lt;p&gt;ತರೀಕೆರೆ ತಾಲೂಕಿನ ಉಡೇವಾ ಗ್ರಾಮದಿಂದ ಒಟ್ಟು 9 ಜನ ತೆರಳಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;h2&gt;ಅಧಿಕಾರಿಗಳ ಭೇಟಿ, ಪ್ರಕರಣ ದಾಖಲು&lt;/h2&gt;&lt;p&gt;ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯ ರಾಜಕೀಯ ಮುಖಂಡರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರ್&zwnj;ಟಿಒ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಿ ಘಟನೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದರು.&lt;/p&gt;&lt;p&gt;ಈ ಸಂಬಂಧ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಮೃತದೇಹಗಳನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಏಮಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಮೃತರ ಬಂಧುಗಳು ಸ್ಥಳಕ್ಕೆ ಆಗಮಿಸುತ್ತಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.&lt;/p&gt;&lt;h2&gt;ಗ್ರಾಮಗಳಲ್ಲಿ ನೀರವ ಮೌನ&lt;/h2&gt;&lt;p&gt;ಒಂದೇ ಕುಟುಂಬದ ಹಲವು ಮಂದಿ ಪ್ರಾಣ ಕಳೆದುಕೊಂಡಿರುವುದು ಗ್ರಾಮಗಳಲ್ಲಿ ಬಾರೀ ನೋವು ತರಿಸಿದೆ. ಬದುಕಿನ ಕನಸುಗಳನ್ನು ಹೊತ್ತು ಹೊರಟವರು ಮರಣದ ಕದ ತಟ್ಟಿದ ಈ ಘಟನೆ, ರಸ್ತೆ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಚಿಂತನೆಗೆ ದಾರಿ ಮಾಡಿಕೊಟ್ಟಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mantralayam-road-accident-8-from-hassan-and-chikkamagaluru-killed-in-tragic-crash-near-raichur-gdp/articleshow-z5sp26i"/>
        </item>
        <item>
            <title><![CDATA[ಪೆಟ್ರೋಲ್ ಸುರಿದು ಹೊಲದಲ್ಲಿದ್ದ 37 ಕ್ವಿಂಟಲ್‌ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ]]></title>
            <link>https://kannada.asianetnews.com/karnataka-districts/miscreants-set-fire-to-37-quintals-of-red-chili-in-a-field-after-pouring-petrol-on-them-yadivala-manvi-raichur-mrq/articleshow-zsap5fg</link>
            <guid isPermaLink="true">https://kannada.asianetnews.com/karnataka-districts/miscreants-set-fire-to-37-quintals-of-red-chili-in-a-field-after-pouring-petrol-on-them-yadivala-manvi-raichur-mrq/articleshow-zsap5fg</guid>
            <pubDate>Tue, 31 Mar 2026 11:24:27 +0530</pubDate>
            <description><![CDATA[&lt;p&gt;ರೈತ ಮೌಲಪ್ಪ ನಾಯಕರ 37 ಕ್ವಿಂಟಲ್&zwnj;ಗೂ ಅಧಿಕ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದಾಗಿ ರೈತರಿಗೆ ಅಂದಾಜು ಏಳು ಲಕ್ಷ ರೂಪಾಯಿ ನಷ್ಟವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn177gys2erj6xhg8zvhmc5d,imgname-manvi-chili-1774936376280.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು: &lt;/strong&gt;ಜಿಲ್ಲೆಯ ಮಾನ್ವಿ ತಾಲೂಕಿನ ಯಡಿವಾಳ ಗ್ರಾಮದ ಸರ್ವೆ ನಂ.20ರಲ್ಲಿನ ರೈತ ಮೌಲಪ್ಪ ನಾಯಕ ಇವರ ಹೂಲದಲ್ಲಿ ಅಂದಾಜು 37 ಕ್ವಿಂಟಲ್&zwnj;ಗೂ ಅಧಿಕ ಮೆಣಸಿನ ಕಾಯಿ ಬೆಳೆಯ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಭಾನುವಾರ ನಡೆದಿದೆ.&lt;/p&gt;&lt;h2&gt;&lt;strong&gt;ಏಳು ಲಕ್ಷ ಮೌಲ್ಯದ ಬೆಳೆ&lt;/strong&gt;&lt;/h2&gt;&lt;p&gt;ರಾತ್ರಿ 8 ಗಂಟೆ ಸುಮಾರಿಗೆ ಹೊಲದಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳು ಈ ಕೃತ್ಯ ಮಾಡಿರುವುದಾಗಿ ನಷ್ಟ ಅನುಭವಿಸಿದ ರೈತ ಮೌಲಪ್ಪ ಮೆಣಸಿಕಾಯಿ ಬೆಳೆದಿದ್ದು ಇನ್ನೇನು ಮಾರುಕಟ್ಟೆ ಹಾಕೋಣ ಎನ್ನುವಷ್ಟರಲ್ಲಿ ಈ ರೀತಿ ಘಟನೆ ನಡೆಸಿದ್ದಾರೆಂದು ಕಣ್ಣೀರು ಹಾಕಿದ್ದಾರೆ. ಇವರ ಎರಡುವರೆ ಎಕರೆ ಸ್ವಂತ ಜಮೀನಲ್ಲಿ ಬಾಡಿಗೆ ನೀರು ಪಡೆದು ಅಂದಾಜು ಮೂರು ಲಕ್ಷ ರು. ಖರ್ಚು ಮಾಡಿದ್ದರು. ಮೆಣಸಿನ ಕಾಯಿ ಬೆಳೆಯನ್ನ ಮಾರುಕಟ್ಟೆಗೆ ಹಾಕಿದರೆ ಅಂದಾಜು ಏಳು ಲಕ್ಷ ಮೌಲ್ಯ ಬೆಲೆ ಬಾಳುತಿತ್ತು ಎಂದು ಹೇಳುತಿದ್ದಾರೆ.&lt;/p&gt;&lt;p&gt;ವಿಷಯ ತಿಳಿದ ಕೂಡಲೇ ಸ್ಥಳಕ್ಕೆ 112 ಪೋಲಿಸರು ಭೇಟಿ ನೀಡಿದ್ದಾರೆ. ಹಾಗೆಯೆ ಬೆಂಕಿ ನಂದಿಸಲು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಭೇಟಿ ನೀಡಿದರು ಪ್ರಯೋಜನ ಆಗಿಲ್ಲ, ಒಟ್ಟಾರೆಯಾಗಿ ಕೈಗೆ ಬಂದಂತಹ ತುತ್ತು ಬಾಯಿಗೆ ಬಂದಿಲ್ಲದಂತಾಗಿದೆ ರೈತನ ಪಾಡು.&amp;nbsp;&lt;/p&gt;&lt;h3&gt;&lt;strong&gt;ಹೊಲಕ್ಕೆ ಶಾಸಕರ ಭೇಟಿ&lt;/strong&gt;&lt;/h3&gt;&lt;p&gt;ಈ ರೈತನಿಗೆ ಸ್ಥಳೀಯ ಶಾಸಕರು ಹಂಪಯ್ಯ ನಾಯಕ ಮತ್ತು ತಾಲೂಕಿನ ಆಡಳಿತವು ರೈತನ ಹೊಲಕ್ಕೆ ಭೇಟಿ ಕೊಟ್ಟು ಪರಿಶೀಲಿಸಿ ಸೂಕ್ತ ಪರಿಹಾರಕ್ಕೆ ಮುಂದಾಗಬೇಕು. ತಾಲೂಕಿನ ಸುತ್ತಮುತ್ತಲು ಇಂತಹ ಘಟನೆಗಳು ನಡೆಯದಂತೆ ತಪಿತಸ್ಥರಿಗೆ ಶಿಸ್ತು ಕಾನೂನು ಕ್ರಮಕೈಗೊಳ್ಳಬೇಕು ಎಂದು ಗ್ರಾಮದ ಜನರು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್&zwnj;: ತಾನೇ ಬೆಳೆದ ನಾಲ್ಕು ಎಕರೆ ಹೂಕೋಸು ನಾಶಪಡಿಸಿದ ರೈತ!&lt;/strong&gt;&lt;/p&gt;&lt;p&gt;ಈ ಹಿಂದೆ ಇದೇ ರೀತಿ ದುಷ್ಕರ್ಮಿಗಳು ಜಾಗೀರಪನ್ನೂರು ಗ್ರಾಮದಲ್ಲಿ ಕೂಡಾ ಪೆಟ್ರೋಲ್ ಸುರಿದು ಜೋಳದ ರಾಶಿಗೂ ಬೆಂಕಿ ಹಚ್ಚಿರುವ ಪ್ರಕರಣ ನಡೆದಿತ್ತು. ದೂರು ದಾಖಲಿಸಿಕೊಂಡ ಮಾನ್ವಿ ಪೋಲಿಸರು ಈ ಪ್ರಕರಣ ಭೇಧಿಸುವ ಮುನ್ನವೇ ಇನ್ನೊಂದು ಪ್ರಕರಣ ನಡೆದಿರುವುದು ಕಂಡರೆ ಇಂತಹ ಕಿಡಿಗೇಡಿಗಳಿಗೆ ಕಾನೂನು ಭಯವಿಲ್ಲ ಎಂಬಂತೆ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತಿದ್ದಾರೆ ಗ್ರಾಮಸ್ಥರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Raichur : ಬಾಣಂತಿಯ ನಿಗೂಢ ಸಾವಿಗೆ ದೆವ್ವ ಕಾರಣ? CCTV ದೃಶ್ಯ ನೋಡಿ ಬೆಚ್ಚಿದ ಸ್ಥಳೀಯರು&lt;/strong&gt;&lt;/p&gt;&lt;p&gt;----------&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/miscreants-set-fire-to-37-quintals-of-red-chili-in-a-field-after-pouring-petrol-on-them-yadivala-manvi-raichur-mrq/articleshow-zsap5fg"/>
        </item>
    </channel>
</rss>
