<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 16 Jul 2026 05:00:43 +0530</lastBuildDate>
        <atom:link href="https://kannada.asianetnews.com/rss/ramanagara" rel="self" type="application/rss+xml"/>
        <item>
            <title><![CDATA['ಮೇಕೆದಾಟು ಯೋಜನೆ ರಹಸ್ಯವಾಗಿ ನಡೆಯುತ್ತಿದೆ..' ಸ್ಥಳ ಪರಿಶೀಲನೆ ಬಳಿಕ ತಮಿಳುನಾಡು ರೈತರ ನಿಯೋಗ ಗಂಭೀರ ಆರೋಪ!]]></title>
            <link>https://kannada.asianetnews.com/karnataka-districts/mekedatu-project-work-is-proceeding-secretly-tamil-nadu-farmers-delegation-makes-serious-allegations-rav/articleshow-1ahcm8r</link>
            <guid isPermaLink="true">https://kannada.asianetnews.com/karnataka-districts/mekedatu-project-work-is-proceeding-secretly-tamil-nadu-farmers-delegation-makes-serious-allegations-rav/articleshow-1ahcm8r</guid>
            <pubDate>Wed, 08 Jul 2026 08:13:29 +0530</pubDate>
            <description><![CDATA[&lt;p&gt;ತಮಿಳುನಾಡು ರೈತಸಂಘದ ಅಧ್ಯಕ್ಷ ಪಿ.ಆರ್.ಪಾಂಡಿಯನ್ ನೇತೃತ್ವದ ನಿಯೋಗವು ಉದ್ದೇಶಿತ ಮೇಕೆದಾಟು ಯೋಜನೆ ಸ್ಥಳಕ್ಕೆ ಭೇಟಿ ನೀಡಿ, ಕರ್ನಾಟಕ ಸರ್ಕಾರ ರಹಸ್ಯವಾಗಿ ಸರ್ವೆ ಕಾರ್ಯ ಆರಂಭಿಸಿದೆ ಎಂದು ಆರೋಪಿಸಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwzsp15cmsq336zhzjjdj7f1,imgname-----------------------2026-07-08t081214.644-1783478551724.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ರಾಮನಗರ (ಜು.8) &lt;/strong&gt;ತಮಿಳುನಾಡು ರೈತಸಂಘಗಳ ಸಮನ್ವಯ ಸಮಿತಿ ಅಧ್ಯಕ್ಷ ಪಿ.ಆರ್.ಪಾಂಡಿಯನ್ ನೇತೃತ್ವದ ರೈತರ ನಿಯೋಗವು ಕರ್ನಾಟಕದ ಉದ್ದೇಶಿತ ಮೇಕೆದಾಟು ಯೋಜನೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದೆ.&lt;/p&gt;&lt;p&gt;ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಕಾಮಗಾರಿಯನ್ನು ರಹಸ್ಯವಾಗಿ ಆರಂಭಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಾಂಡಿಯನ್ ನೇತೃತ್ವದ ರೈತರ ನಿಯೋಗ ಮೇಕೆದಾಟು ಸ್ಥಳಕ್ಕೆ ಭೇಟಿ ನೀಡಿತ್ತು.&lt;/p&gt;&lt;h2&gt;ಮೇಕೆದಾಟು ಯೋಜನೆ ರಹಸ್ಯವಾಗಿ ನಡೆಯುತ್ತಿದೆ..!&lt;/h2&gt;&lt;p&gt;ಆ ನಂತರ ಹೊಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಂಡಿಯನ್, ಮೇಕೆದಾಟಿನಲ್ಲಿ ಕಾವೇರಿ ನದಿಪಾತ್ರದ ಉದ್ದಕ್ಕೂ ಸರ್ವೆ ಬಿಂದುಗಳನ್ನು ಗುರುತಿಸಲು ಕಬ್ಬಿಣದ ಸರಳುಗಳನ್ನು ಬಂಡೆಗಳ ಮೇಲೆ ನೆಡಲಾಗಿದೆ. ಇದು ಮೇಕೆದಾಟು ಯೋಜನೆ ಸರ್ವೆ ಕಾರ್ಯ ಪ್ರಾರಂಭಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.&lt;/p&gt;&lt;p&gt;ಈ ಮೊದಲು ಮೇಕೆದಾಟಿನ ನದಿ ಪಾತ್ರಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೀಗ ಅಲ್ಲಿ ಹೊಸದಾಗಿ ಮೆಟ್ಟಿಲುಗಳನ್ನು ನಿರ್ಮಿಸಿ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಪ್ರವಾಸಿಗರಿಗೆ ಬಸ್&zwnj;ಗಳ ಸೇವೆಯನ್ನು ಒದಗಿಸಲಾಗಿದೆ ಎಂದು ದೂರಿದರು.&lt;/p&gt;&lt;p&gt;ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಸಮಸ್ಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಯಾವುದೇ ಸರ್ಕಾರವು ಯೋಜನೆಯನ್ನು ಸ್ವಂತವಾಗಿ ಪ್ರಾರಂಭಿಸುವ ಅಧಿಕಾರವನ್ನು ಹೊಂದಿಲ್ಲ. ಆದರೆ, ಮೇಕೆದಾಟು ಅಣೆಕಟ್ಟೆಯನ್ನು ಅಕ್ರಮವಾಗಿ ನಿರ್ಮಾಣ ಮಾಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.&lt;/p&gt;&lt;p&gt;ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) 2018 ರಲ್ಲಿ ಕರ್ನಾಟಕಕ್ಕೆ ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಅನುಮತಿ ನೀಡಿತ್ತು. ಇದನ್ನು 2021 ರಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಸಿದ್ದರು. ಈ ಪ್ರಸ್ತಾವನೆ ಕುರಿತು ಚರ್ಚೆಯೇ ಆಗಿಲ್ಲ. ಸಿಡಬ್ಲ್ಯೂಸಿ ಈ ಪ್ರಸ್ತಾವನೆಯನ್ನು ತಿರಸ್ಕರಿಸಿಲ್ಲ ಅಥವಾ ಕರ್ನಾಟಕಕ್ಕೆ ಹಿಂತಿರುಗಿಸಿಲ್ಲ ಎಂದು ಹೇಳಿದರು.&lt;/p&gt;&lt;h3&gt;38 ಜಿಲ್ಲೆಗಳ ಮೇಲೆ ಪರಿಣಾಮ:&lt;/h3&gt;&lt;p&gt;ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ, ಚೆನ್ನೈ ಸೇರಿದಂತೆ 38 ಜಿಲ್ಲೆಗಳ ಸುಮಾರು ಐದು ಕೋಟಿ ಜನರಿಗೆ ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುತ್ತದೆ. ಸುಮಾರು 25 ಲಕ್ಷ ಎಕರೆ ಕೃಷಿ ಭೂಮಿ ಬಂಜರಾಗಿ, ಆಹಾರ ಉತ್ಪಾದನೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಪಾಂಡಿಯನ್ ಆರೋಪಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mekedatu-project-work-is-proceeding-secretly-tamil-nadu-farmers-delegation-makes-serious-allegations-rav/articleshow-1ahcm8r"/>
        </item>
        <item>
            <title><![CDATA[Bidadi Township: ಕುಮಾರಸ್ವಾಮಿ ಚಾಮುಂಡಿ ಮೇಲೆ ಪ್ರಮಾಣ ಮಾಡಲಿ: ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು]]></title>
            <link>https://kannada.asianetnews.com/karnataka-districts/bidadi-township-row-hc-balakrishna-challenge-hd-kumaraswamy-ramanagara-gvd/articleshow-2ahvu9m</link>
            <guid isPermaLink="true">https://kannada.asianetnews.com/karnataka-districts/bidadi-township-row-hc-balakrishna-challenge-hd-kumaraswamy-ramanagara-gvd/articleshow-2ahvu9m</guid>
            <pubDate>Tue, 16 Jun 2026 00:27:40 +0530</pubDate>
            <description><![CDATA[&lt;p&gt;Bidadi Township ಯೋಜನೆಯನ್ನು 2018ರಲ್ಲಿ ಕೈಬಿಡಲು ಒಪ್ಪಿಕೊಂಡಿದ್ದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಚಾಮುಂಡೇಶ್ವರಿ ದೇವಿ ಮೇಲೆ ಪ್ರಮಾಣ ಮಾಡಿ ತೋರಿಸಲಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv66aed2afva21evz00vjyn9,imgname-jvjv-1781545646498.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜೂ.16): &lt;/strong&gt;ಬಿಡದಿ ಟೌನ್&zwnj;ಶಿಪ್ ಯೋಜನೆಯನ್ನು 2018ರಲ್ಲಿ ಕೈಬಿಡಲು ಒಪ್ಪಿಕೊಂಡಿದ್ದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಚಾಮುಂಡೇಶ್ವರಿ ದೇವಿ ಮೇಲೆ ಪ್ರಮಾಣ ಮಾಡಿ ತೋರಿಸಲಿ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ ಯೋಜನೆ ಕುಮಾರಸ್ವಾಮಿಯವರ ಕನಸಿನ ಕೂಸು ಎಂಬುದರಲ್ಲಿ ಎರಡು ಮಾತಿಲ್ಲ. ಸಮಸ್ಯೆ ಹುಟ್ಟು ಹಾಕಿದವರೇ ಈಗ ಹೋರಾಟ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್&zwnj;ಗೆ ಸಂಬಂಧಿಸಿದ ನೋಟಿಫಿಕೇಶನ್&zwnj; ಯಾರ ಅವಧಿಯಲ್ಲಿ ಹೊರಬಂದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ 2018ರಲ್ಲೇ ರೆಡ್&zwnj; ಝೋನ್&zwnj; ತೆರವುಗೊಳಿಸಬೇಕಾಗಿತ್ತು. ಯೋಜನೆ ಕೈಬಿಡುವಂತೆ ರೈತರು ಮನವಿ ಮಾಡಿದರೂ, ಆಗ ಕುಮಾರಸ್ವಾಮಿ ಅದನ್ನು ತಮ್ಮ &quot;ಕನಸಿನ ಕೂಸು&quot; ಎಂದು ಹೇಳಿದ್ದರು. ಈಗ ಅದೇ ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ರಾಜಕೀಯ ದ್ವಂದ್ವ ಎಂದು ಟೀಕಿಸಿದರು.&lt;/p&gt;&lt;p&gt;ರೈತರಿಗೆ ಪರಿಹಾರ ನೀಡುವ ವಿಚಾರದಲ್ಲೂ ಕುಮಾರಸ್ವಾಮಿ ಅವರೇ ಶೇಕಡ 40ರಷ್ಟು ಅಭಿವೃದ್ಧಿ ಪಡಿಸಿದ ಭೂಮಿ ನೀಡುವ ತೀರ್ಮಾನ ಮಾಡಿದ್ದರು ಎಂದು ವಿಡಿಯೋ ಸಾಕ್ಷ್ಯ ಪ್ರದರ್ಶಿಸಿದ ಬಾಲಕೃಷ್ಣ, ಪ್ರಸ್ತುತ ಸರ್ಕಾರ ವಸತಿ ಪ್ರದೇಶಕ್ಕೆ ಶೇ.50 ಹಾಗೂ ವಾಣಿಜ್ಯ ಪ್ರದೇಶಕ್ಕೆ ಶೇ.45ರಷ್ಟು ಅಭಿವೃದ್ಧಿ ಪಡಿಸಿದ ಭೂಮಿ ನೀಡಲು ಮುಂದಾಗಿದೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಚರ್ಚೆಗೆ ಆಹ್ವಾನ&lt;/strong&gt;&lt;/h2&gt;&lt;p&gt;ಭೂಸ್ವಾಧೀನಕ್ಕೆ ಬಹುತೇಕ ರೈತರು ಒಪ್ಪಿಗೆ ನೀಡಿದ್ದಾರೆ. ನೋಟಿಫಿಕೇಶನ್&zwnj; ಆಗಿರುವ ಯೋಜನೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಇವತ್ತಲ್ಲ ನಾಳೆ ಆ ಪ್ರದೇಶ ಅಭಿವೃದ್ಧಿಯಾಗಲೇಬೇಕು. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಭಿವೃದ್ಧಿ ನಡೆಯಬಾರದು ಎಂಬ ಕಾರಣಕ್ಕೆ ವಿರೋಧಿಸಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರನ್ನು ರಿಯಲ್ ಎಸ್ಟೇಟ್ ದಲ್ಲಾಳಿ ಎಂದು ಕರೆಯುವ ಮುನ್ನ ತಮ್ಮ ಆಸ್ತಿ ಬಗ್ಗೆ ಉತ್ತರಿಸಬೇಕು. ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಾರೆ. ಚರ್ಚೆಗೆ ಬರಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಬಾಲಕೃಷ್ಣ ಚರ್ಚೆಗೆ ಆಹ್ವಾನಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bidadi-township-row-hc-balakrishna-challenge-hd-kumaraswamy-ramanagara-gvd/articleshow-2ahvu9m"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಪಾದಯಾತ್ರೆಗೆ ಭರ್ಜರಿ ಜನ ಸ್ಪಂದನೆ]]></title>
            <link>https://kannada.asianetnews.com/karnataka-districts/huge-response-to-jds-leader-nikhil-kumaraswamy-s-walk-against-bidadi-township-mrq/articleshow-2hkk6mt</link>
            <guid isPermaLink="true">https://kannada.asianetnews.com/karnataka-districts/huge-response-to-jds-leader-nikhil-kumaraswamy-s-walk-against-bidadi-township-mrq/articleshow-2hkk6mt</guid>
            <pubDate>Mon, 22 Jun 2026 06:54:39 +0530</pubDate>
            <description><![CDATA[ಬಿಡದಿ ಟೌನ್&zwnj;ಶಿಪ್&zwnj; ಯೋಜನೆ ವಿರೋಧಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ನಮ್ಮ ಭೂಮಿ-ನಮ್ಮ ಹಕ್ಕು' ಘೋಷಣೆಯೊಂದಿಗೆ ಬೃಹತ್ ಪಾದಯಾತ್ರೆ ನಡೆಯಿತು. ಈ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಿಖಿಲ್, ರೈತರ ಭೂಮಿ ಉಳಿಸಲು ಕಾನೂನು ಹೋರಾಟಕ್ಕೂ ಸಿದ್ಧ ಎಂದರು. ಪಾದಯಾತ್ರೆ ವೇಳೆ ಯೋಜನೆ ಪರ-ವಿರೋಧ ಬಣಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kvpemp0y7xr4g66w9jebb0w1,imgname--bidadi-township-1782091241502.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ: &lt;/strong&gt;ಬಿಡದಿ ಟೌನ್&zwnj;ಶಿಪ್&zwnj; (ಗ್ರೇಟರ್ ಬೆಂಗಳೂರು ಸಮಗ್ರ ಉಪ ನಗರ) ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ ಬೃಹತ್ ಪಾದಯಾತ್ರೆ ನಡೆಯಿತು. ಬೆಳಗ್ಗೆ 11.30ಕ್ಕೆ ಅಂಚಿಪುರ ಗ್ರಾಮದಿಂದ ಆರಂಭವಾದ ಪಾದಯಾತ್ರೆ ಹೊಸೂರುವರೆಗೆ 8 ಗ್ರಾಮಗಳ ವ್ಯಾಪ್ತಿಯಲ್ಲಿ 11 ಕಿ.ಮೀ. ದೂರ ಸಾಗಿತು. ಬಳಿಕ, ಹೊಸೂರಿನಲ್ಲಿ ಬಹಿರಂಗ ಸಭೆಯೊಂದಿಗೆ ಮೊದಲ ಹಂತದ ಪಾದಯಾತ್ರೆ ಸಮಾಪ್ತಿಗೊಂಡಿತು.&lt;/p&gt;&lt;p&gt;ಬೆಳಗ್ಗೆ 11.30ಕ್ಕೆ ಅಂಚಿಪುರ ಗ್ರಾಮಕ್ಕೆ ಆಗಮಿಸಿದ ನಿಖಿಲ್&zwnj; ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಅಂಚಿಪುರ ಗ್ರಾಮದ ಶಕ್ತಿದೇವತೆ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, &lsquo;ನಮ್ಮ ಭೂಮಿ-ನಮ್ಮ ಹಕ್ಕು&rsquo; ಘೋಷಣೆಯೊಂದಿಗೆ ನಿಖಿಲ್&zwnj; ಪಾದಯಾತ್ರೆಗೆ ಚಾಲನೆ ನೀಡಿದರು. ಆದರೆ, ಪಾದಯಾತ್ರೆಯಲ್ಲಿ ಎಲ್ಲಿಯೂ ಜೆಡಿಎಸ್ ಪಕ್ಷದ ಬಾವುಟಗಳನ್ನು ಬಳಸಲಿಲ್ಲ. ಬದಲಿಗೆ, ಪ್ರತಿಭಟನಾಕಾರರು ಹೆಗಲ ಮೇಲೆ ಹಸಿರು ಶಾಲು ಹಾಕಿಕೊಂಡು ಪಾದಯಾತ್ರೆಯಲ್ಲಿ ಸಾಗಿದರು. ಜೆಡಿಎಸ್ ಶಾಸಕರು ಸೇರಿ ಸುಮಾರು ಎರಡೂವರೆ ಸಾವಿರ ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.&lt;/p&gt;&lt;h2&gt;&lt;strong&gt;ದೇವನಹಳ್ಳಿಲಿ ಡಿನೋಟಿಫಿಕೇಷನ್ಮಾ ಡಿದ ಸಿದ್ದು ಜೈಲಿಗೆ ಹೋದ್ರಾ?&lt;/strong&gt;&lt;/h2&gt;&lt;p&gt;ಈ ಮಧ್ಯೆ, ಮೆರೆವೇಗೌಡನದೊಡ್ಡಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್&zwnj; ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಅವರು ಮಾತೆತ್ತಿದರೆ ಕುಮಾರಣ್ಣ ರೆಡ್ ಜೋನ್ ಮಾಡಿ ನೋಟಿಫಿಕೇಷನ್ ಹೊರಡಿಸಿದರು. ಆದರೆ, ಡಿನೋಟಿಫಿಕೇಷನ್ ಮಾಡಿ ನಾನು ಜೈಲಿಗೆ ಹೋಗಲ್ಲ ಅಂತ ಹೇಳುತ್ತಾರೆ. ಆದರೆ, ನಿಮ್ಮದೇ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ದೇವನಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದರು. ಅವರು ಜೈಲಿಗೆ ಹೋದರಾ? ಈಗ ನೀವು ಡಿನೋಟಿಫಿಕೇಷನ್ ಮಾಡಿದರೆ ಮಾತ್ರ ಜೈಲಿಗೆ ಹೋಗುತ್ತೀರಾ ಎಂದು ಲೇವಡಿ ಮಾಡಿದರು.&lt;/p&gt;&lt;p&gt;ಸಿದ್ದರಾಮಯ್ಯನವರು ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಕೈ ಬಿಟ್ಟರು. ನೀವು ಇಲ್ಲಿ ರೈತರ ಭೂಮಿ ಕೈಬಿಡಿ, ಇದೇ ಜಿಲ್ಲೆಯಿಂದ ಮುಖ್ಯಮಂತ್ರಿ ಆಗಿದ್ದೀರಿ. ಜನರ ಬಳಿ ಕಾಡಿ ಬೇಡಿ ಪೆನ್ನು ಪೇಪರ್ ಪಡೆದಿದ್ದೀರಿ, ಈಗ ರೈತರ ಪರ ನಿಮ್ಮ ಪೆನ್ನು, ಪೇಪರ್ ಉಪಯೋಗಿಸಿ ಎಂದು ಆಗ್ರಹಿಸಿದರು.&lt;/p&gt;&lt;p&gt;ರೈತರು ಬೇಡ ಅಂದಿದ್ದಕ್ಕೆ ಕುಮಾರಸ್ವಾಮಿ ಈ ಯೋಜನೆ ಕೈಬಿಟ್ಟಿದ್ದರು. ಕುಮಾರಸ್ವಾಮಿ ಯಾವತ್ತೂ ರೈತರ ವಿರುದ್ಧ ತೀರ್ಮಾನ ಮಾಡಿಲ್ಲ. ನಾವು ಎಲ್ಲಾ ರೀತಿಯ ಹೋರಾಟಕ್ಕೆ ಸಿದ್ಧರಿದ್ದೇವೆ. ನಾವು ಹೋರಾಟದಿಂದ ಹೆದರಿ ಓಡಿ ಹೋಗುವುದಿಲ್ಲ. ಯಾರ ಬೆದರಿಕೆಗೂ ದೇವೇಗೌಡರ ಕುಟುಂಬ ಹೆದರಲ್ಲ. ರೈತರ ಜೊತೆ ವಿಧಾನಸೌಧ ಚಲೋ ಮಾಡಲು ಸಿದ್ಧ. ಇದರ ವಿರುದ್ಧ ಕಾನೂನು ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು.&lt;/p&gt;&lt;h3&gt;&lt;strong&gt;ಬೇನಾಮಿ ಆಸ್ತಿ ಸಾಬೀತುಪಡಿಸಿ&lt;/strong&gt;&lt;/h3&gt;&lt;p&gt;ಕುಮಾರಸ್ವಾಮಿಯವರು ಈ ಭಾಗದಲ್ಲಿ 100 ಎಕರೆ ಬೇನಾಮಿ ಹೊಂದಿದ್ದಾರೆ ಅಂತ ಸ್ಥಳೀಯ ಶಾಸಕರು ಆರೋಪಿಸಿದ್ದಾರೆ. ಅದನ್ನು ಸಾಬೀತು ಮಾಡಿದರೆ ಆ ಜಮೀನನ್ನು ನಾನು ಶಾಲೆಗೆ ಅಥವಾ ಆಸ್ಪತ್ರೆಗೆ ದಾನ ಮಾಡುತ್ತೇನೆ ಎಂದು ಸವಾಲು ಹಾಕಿದರು.&lt;/p&gt;&lt;p&gt;ಕೇತಗಾನಹಳ್ಳಿ ಗ್ರಾಮದಲ್ಲಿ 1985ರಲ್ಲಿ ನಮ್ಮ ತಂದೆ ಜಾಗ ಖರೀದಿ ಮಾಡಿದ್ದಾರೆ. ಯಾರ ತಲೆ ಒಡೆದು ಅದನ್ನು ಖರೀದಿ ಮಾಡಿಲ್ಲ. ಸಿನಿಮಾ ಹಂಚಿಕೆ ಮಾಡಿದ ಹಣದಲ್ಲಿ ಆ ಜಮೀನನ್ನು ಖರೀದಿ ಮಾಡಿದ್ದೇವೆ. ನಮ್ಮ ತಾಯಿಯ ಹೆಸರಲ್ಲಿ 27 ಎಕರೆ, ನನ್ನ ಹೆಸರಲ್ಲಿ 5&zwnj; ಎಕರೆ ಜಾಗವನ್ನು ಕೋವಿಡ್ ಸಮಯದಲ್ಲಿ ಖರೀದಿ ಮಾಡಿದ್ದೇವೆ. ನಮ್ಮ ಜಾಗದಲ್ಲಿ ವಾಣಿಜ್ಯ ಕಟ್ಟಡ ಕಟ್ಟಿಲ್ಲ. ರೈತರಿಗೆ ಅನುಕೂಲ ಮಾಡಲು ಹಾಲಿನ ಉತ್ಪನ್ನಗಳ ಉತ್ಪಾದನೆಗೆ ಅದನ್ನು ಬಳಸಲು ಇಟ್ಟಿದ್ದೇವೆ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಅಂಚಿಪುರ ಕಾಲೋನಿಯಲ್ಲಿ ಉದ್ವಿಗ್ನ ವಾತಾವರಣ:&lt;/strong&gt;&lt;/p&gt;&lt;p&gt;ಪಾದಯಾತ್ರೆ ಅಂಚಿಪುರ ಕಾಲೋನಿಗೆ ಬಂದಾಗ ಕಾಲೋನಿಯ ವೃತ್ತದಲ್ಲಿ ಅಳವಡಿಸಿದ್ದ ಟೌನ್ ಶಿಪ್ ಪರವಾದ ಫ್ಲೆಕ್ಸ್&zwnj;ಗಳನ್ನು ಪ್ರತಿಭಟನಾಕಾರರು ಹರಿದು ಹಾಕಿದರು. ಇದು ಯೋಜನೆ ಪರವಾಗಿದ್ದ ದಲಿತ ಮುಖಂಡರನ್ನು ಕೆರಳಿಸಿತು.&lt;/p&gt;&lt;p&gt;ಈ ವೇಳೆ, ನಿಖಿಲ್&zwnj; ಅವರು ಕಾಲೋನಿಯ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಯೋಜನೆಯ ಪರವಾಗಿರುವವರ ಜತೆ ಮಾತುಕತೆ ನಡೆಸಲು ಮುಂದಾದರು. ಆಗ ದಲಿತ ಮುಖಂಡರು ಕೈಯಲ್ಲಿ ಯೋಜನೆ ಪರವಾದ ಫ್ಲೆಕ್ಸ್&zwnj;ಗಳನ್ನು ಹಿಡಿದು ಪಾದಯಾತ್ರಿಗಳಿಗೆ ಎದುರಾದರು.&lt;/p&gt;&lt;p&gt;ನಮ್ಮ ಭೂಮಿಯನ್ನು ಟೌನ್&zwnj;ಶಿಪ್&zwnj;ಗೆ ಕೊಡುತ್ತೇವೆ. ಅದನ್ನು ಪ್ರಶ್ನಿಸಲು ನೀವ್ಯಾರು ಎಂದರು. ಈ ವೇಳೆ, ಪ್ರತಿಭಟನಾಕಾರರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.&lt;/p&gt;&lt;p&gt;ಯಾರ ಉದ್ಧಾರಕ್ಕಾಗಿ ಸಾಲ ತೆಗೆದುಕೊಂಡು ಯೋಜನೆ ಮಾಡುತ್ತಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿಯ ಜೊತೆ ಕಮಿಷನ್ ಪಡೆಯಲು ಯೋಜನೆ ಮಾಡುತ್ತಿದ್ದೀರಾ? ಏನೇ ಯೋಜನೆ ಮಾಡಿದರೂ ಮುಖ್ಯಮಂತ್ರಿಗಳು ₹30 ಸಾವಿರ ಕೋಟಿ ವೆಚ್ಚದ್ದೇ ಮಾಡುತ್ತಾರೆ. ಸುರಂಗ ರಸ್ತೆ, ಕಸದ ಟೆಂಡರ್ ಎಲ್ಲಾ ₹30 ಸಾವಿರ ಕೋಟಿ ಯೋಜನೆಗಳು. ಅದಕ್ಕಿಂತ ಕಮ್ಮಿ ನಮ್ಮ ಸಿಎಂ ಮುಟ್ಟೋದೆ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.&lt;/p&gt;&lt;p&gt;&amp;nbsp;&lt;/p&gt;&lt;p&gt;ಎಲ್ಲೋ ದೂರದಲ್ಲಿ ಕುಳಿತು &quot;80% ರೈತರು ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಒಪ್ಪಿದ್ದಾರೆ&quot; ಎಂದು ಹೇಳುವ ಮುಖ್ಯಮಂತ್ರಿಗಳೇ!ಬನ್ನಿ, ನಮ್ಮ ರೈತ ಮಹಿಳೆಯರ ಅಳಲನ್ನು ಆಲಿಸಿ.&amp;nbsp;ಇಂದು &quot;ಅಂಚಿಪುರ ಗ್ರಾಮದಿಂದ ಹೊಸೂರು ವರೆಗೆ&quot; ನಡೆದ ಪಾದಯಾತ್ರೆಯ ವೇಳೆ ರೈತ ತಾಯಂದಿರು &quot;ದಯವಿಟ್ಟು ನಮ್ಮ ಭೂಮಿ ಉಳಿಸಿಕೊಡಿ&quot; ಎಂದು ಅಳಲು ತೋಡಿಕೊಂಡ ಕ್ಷಣಗಳಿವು.&amp;nbsp;ನಮ್ಮ&hellip; pic.twitter.com/Y9kH1Tkfyc&lt;/p&gt;&lt;p&gt;&mdash; Nikhil Kumar (@Nikhil_Kumar_k) June 21, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/huge-response-to-jds-leader-nikhil-kumaraswamy-s-walk-against-bidadi-township-mrq/articleshow-2hkk6mt"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್ ಯೋಜನೆಗೆ ತಡೆ ಕೋರಿ ಹೈಕೋರ್ಟ್‌ಗೆ ಪಿಐಎಲ್, ಪರಿಸರ ಹಾನಿಯ ಗಂಭೀರ ಆರೋಪ]]></title>
            <link>https://kannada.asianetnews.com/karnataka-districts/pil-filed-in-karnataka-high-court-against-bidadi-township-project-gdp/articleshow-4uybp14</link>
            <guid isPermaLink="true">https://kannada.asianetnews.com/karnataka-districts/pil-filed-in-karnataka-high-court-against-bidadi-township-project-gdp/articleshow-4uybp14</guid>
            <pubDate>Wed, 01 Jul 2026 13:20:21 +0530</pubDate>
            <description><![CDATA[ಬೆಂಗಳೂರಿನ ಹೊರವಲಯದಲ್ಲಿ ಉದ್ದೇಶಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್&zwnj;ಶಿಪ್' (ಬಿಡದಿ ಟೌನ್&zwnj;ಶಿಪ್) ಯೋಜನೆಗಾಗಿ 516 ಎಕರೆಗೂ ಅಧಿಕ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ಪ್ರಶ್ನಿಸಿ ಹೈಕೋರ್ಟ್&zwnj;ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯು ಭೂಸ್ವಾಧೀನ ಕಾಯ್ದೆಯ ಉಲ್ಲಂಘನೆ, ಪ್ರಾದೇಶಿಕ ಅಸಮತೋಲನ ಮತ್ತು ಪರಿಸರ ನಾಶದಂತಹ ಗಂಭೀರ ಆರೋಪಗಳನ್ನು ಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktzqkq2dnytzchv4h38qvdcj,imgname-bidadi-township-1781328895053.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಬೆಂಗಳೂರು ನಗರದ ಹೊರವಲಯದಲ್ಲಿ ಬೃಹತ್ ಉಪನಗರ ನಿರ್ಮಿಸುವ ಉದ್ದೇಶದ &lsquo;ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್&zwnj;ಶಿಪ್&rsquo; (ಬಿಡದಿ ಟೌನ್&zwnj;ಶಿಪ್) ಯೋಜನೆ ಈಗ ಕಾನೂನು ಸಂಘರ್ಷಕ್ಕೆ ಸಿಲುಕಿದೆ. ಯೋಜನೆಗಾಗಿ ಸುಮಾರು 516 ಎಕರೆಗೂ ಅಧಿಕ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್&zwnj;ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.&lt;/p&gt;&lt;p&gt;ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಜೇಶ್ ಕಂಪ್ಲಾಪುರ ಬಸವಣ್ಣ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಪ್ರಮುಖ ಅರ್ಜಿಯು ಹೈಕೋರ್ಟ್&zwnj;ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪೀಠದ ಮುಂದೆ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರೇಟರ್ ಬೆಂಗಳೂರು ಡೆವಲಪ್&zwnj;ಮೆಂಟ್ ಅಥಾರಿಟಿ (BGDA), ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಮತ್ತು ರಾಮನಗರ ಜಿಲ್ಲಾಧಿಕಾರಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.&lt;/p&gt;&lt;h2&gt;ಏನಿದು ಪ್ರಕರಣ?&lt;/h2&gt;&lt;p&gt;ನಗರಾಭಿವೃದ್ಧಿ ಇಲಾಖೆಯು ಬಿಡದಿ ತಾಲೂಕಿನ ಮೂರು ಪ್ರಮುಖ ಗ್ರಾಮಗಳ ಒಟ್ಟು 519 ಎಕರೆ ಕೃಷಿ ಜಮೀನಿನ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ. ಕೆಂಪಯ್ಯನಪಾಳ್ಯ: 384.22 ಎಕರೆ, ಮಂಡಲಹಳ್ಳಿ: 71.13 ಎಕರೆ, ವಡೇರಹಳ್ಳಿ: 63.10 ಎಕರೆ&lt;/p&gt;&lt;h2&gt;ಅರ್ಜಿದಾರರ ಪ್ರಮುಖ ಆಕ್ಷೇಪಣೆಗಳು ಮತ್ತು ಕಾನೂನು ಉಲ್ಲಂಘನೆಗಳು:&lt;/h2&gt;&lt;h3&gt;2013ರ ಭೂಸ್ವಾಧೀನ ಕಾಯ್ದೆಯ ನೇರ ಉಲ್ಲಂಘನೆ&lt;/h3&gt;&lt;p&gt;ಕೇಂದ್ರ ಸರ್ಕಾರದ 2013ರ ಭೂಸ್ವಾಧೀನ ಕಾಯ್ದೆಯ (LARR Act) ಪ್ರಕಾರ, ಯಾವುದೇ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಮುನ್ನ 'ಸಾಮಾಜಿಕ ಪರಿಣಾಮಗಳ ಮೌಲ್ಯಮಾಪನ' (Social Impact Assessment - SIA) ಮಾಡುವುದು ಕಡ್ಡಾಯವಾಗಿದೆ. ಆದರೆ, ರಾಜ್ಯ ಸರ್ಕಾರವು ಯಾವುದೇ ರೀತಿಯ ಮೌಲ್ಯಮಾಪನ ನಡೆಸದೆ, ಕೇವಲ 26 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ಕನ್ಸಲ್ಟೆಂಟ್ ನೇಮಕಾತಿಯ ಟೆಂಡರ್ ಪ್ರಕ್ರಿಯೆಯನ್ನು ಅತಿವೇಗವಾಗಿ ಮುಗಿಸಲು ಮುಂದಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.&lt;/p&gt;&lt;h3&gt;ಪ್ರೊ. ಎಂ. ಗೋವಿಂದ ರಾವ್ ಸಮಿತಿ ವರದಿಯ ನಿರ್ಲಕ್ಷ್ಯ&lt;/h3&gt;&lt;p&gt;ರಾಜ್ಯದಲ್ಲಿನ ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಸಲುವಾಗಿ ರಚಿಸಲಾಗಿದ್ದ ಪ್ರೊ. ಎಂ. ಗೋವಿಂದ ರಾವ್ ಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟವು ಫೆಬ್ರವರಿ 2026 ರಲ್ಲಿ ಅಂಗೀಕರಿಸಿತ್ತು. ಈ ವರದಿಯ ಶಿಫಾರಸಿನ ಪ್ರಕಾರ, ಮುಂದಿನ ಎಲ್ಲಾ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಿಂದುಳಿದ ಜಿಲ್ಲೆಗಳಿಗೆ ಕೊಂಡೊಯ್ಯಬೇಕಿದೆ. ಸರ್ಕಾರವು ತನ್ನದೇ ಸಂಪುಟ ಅಂಗೀಕರಿಸಿದ ವರದಿಯನ್ನು ಸಂಪೂರ್ಣವಾಗಿ ಬದಿಗೊತ್ತಿ, ಬೆಂಗಳೂರಿನ ಸುತ್ತಮುತ್ತಲೇ 12,500 ಕೋಟಿಗೂ ಅಧಿಕ ಹಣವನ್ನು ಸುರಿಯಲು ಮುಂದಾಗಿದೆ. ಇದು ಪ್ರಾದೇಶಿಕ ಅಸಮತೋಲನವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.&lt;/p&gt;&lt;h3&gt;ಪರಿಸರ ನಾಶ ಮತ್ತು ಅಂತರ್ಜಲದ ಬಿಕ್ಕಟ್ಟು&lt;/h3&gt;&lt;p&gt;ಬೆಂಗಳೂರು ನಗರವು ಈಗಾಗಲೇ ಅತಿಯಾದ ಜನಸಂಖ್ಯೆ ಮತ್ತು ನಗರೀಕರಣದಿಂದಾಗಿ ತೀವ್ರ ನೀರಿನ ಬಿಕ್ಕಟ್ಟು ಹಾಗೂ ಪರಿಸರ ಮಾಲಿನ್ಯವನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಗರದ ಹೊರವಲಯದಲ್ಲಿ ಮತ್ತೊಂದು ಬೃಹತ್ ಕಾಂಕ್ರೀಟ್ ನಗರವನ್ನು ನಿರ್ಮಿಸಿದರೆ, ಸುತ್ತಮುತ್ತಲಿನ ಹಸಿರು ವಲಯ ಸಂಪೂರ್ಣವಾಗಿ ನಾಶವಾಗುತ್ತದೆ. ಜೊತೆಗೆ ಅಂತರ್ಜಲ ವ್ಯವಸ್ಥೆಯು ಸಂಪೂರ್ಣವಾಗಿ ಕುಸಿಯಲಿದ್ದು, ಪರಿಸರ ಸಮತೋಲನ ಏರುಪೇರಾಗಲಿದೆ ಎಂಬ ಆತಂಕವನ್ನು ಅರ್ಜಿಯಲ್ಲಿ ವ್ಯಕ್ತಪಡಿಸಲಾಗಿದೆ.&lt;/p&gt;&lt;h2&gt;ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಗಳು&lt;/h2&gt;&lt;ul&gt; &lt;li&gt;ಬಿಡದಿ ಬಳಿ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸಂಬಂಧ 2026ರ ಜೂನ್ 13ರಂದು ಸರ್ಕಾರ ಹೊರಡಿಸಿರುವ ಅಂತಿಮ ಅಧಿಸೂಚನೆಯನ್ನು ತಕ್ಷಣವೇ ರದ್ದುಪಡಿಸಬೇಕು.&lt;/li&gt; &lt;li&gt;ಫಲವತ್ತಾದ ಕೃಷಿ ಭೂಮಿಯನ್ನು ನಾಶಪಡಿಸುವ ಬದಲಿಗೆ, ಉತ್ತರ ಕರ್ನಾಟಕದ ಬರಪೀಡಿತ ಅಥವಾ ಈಗಾಗಲೇ ಕೈಗಾರಿಕಾ ಭೂ ಬ್ಯಾಂಕ್&zwnj;ಗಳಿರುವ ಹಿಂದುಳಿದ ಪ್ರದೇಶಗಳಿಗೆ ಈ ಯೋಜನೆಯನ್ನು ಸ್ಥಳಾಂತರಿಸಲು (ವಿಕೇಂದ್ರೀಕರಿಸಲು) ತಜ್ಞರ ಸಮಿತಿಯನ್ನು ರಚಿಸಬೇಕು.&lt;/li&gt; &lt;li&gt;ಹೈಕೋರ್ಟ್&zwnj;ನಲ್ಲಿ ಈ ಪ್ರಕರಣದ ಅಂತಿಮ ತೀರ್ಪು ಬರುವವರೆಗೆ, ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಗಳು ಮತ್ತು ಟೆಂಡರ್ ನಡಾವಳಿಗಳಿಗೆ ತಕ್ಷಣವೇ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.&lt;/li&gt; &lt;li&gt;ಈ ಬೃಹತ್ ಯೋಜನೆಯ ಭವಿಷ್ಯವು ಈಗ ಉನ್ನತ ನ್ಯಾಯಾಲಯದ ಅಂಗಳದಲ್ಲಿದ್ದು, ಮುಖ್ಯ ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಯನ್ನು ಕೈಗೆತ್ತಿಕೊಂಡಾಗ ಸರ್ಕಾರದ ಮುಂದಿನ ನಡೆ ಏನೆಂಬುದು ಕುತೂಹಲ ಮೂಡಿಸಿದೆ.&lt;/li&gt;&lt;/ul&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/pil-filed-in-karnataka-high-court-against-bidadi-township-project-gdp/articleshow-4uybp14"/>
        </item>
        <item>
            <title><![CDATA[ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?]]></title>
            <link>https://kannada.asianetnews.com/karnataka-districts/hd-deve-gowda-and-hdk-join-forces-against-congress-over-bidadi-township-land-acquisition-gdp-videoshow-4wewhv1</link>
            <guid isPermaLink="true">https://kannada.asianetnews.com/karnataka-districts/hd-deve-gowda-and-hdk-join-forces-against-congress-over-bidadi-township-land-acquisition-gdp-videoshow-4wewhv1</guid>
            <pubDate>Wed, 15 Jul 2026 17:56:36 +0530</pubDate>
            <description><![CDATA[&lt;p&gt;ಬಿಡದಿ &amp;nbsp; ಟೌನ್&zwnj;ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯು ತೀವ್ರಗೊಂಡಿದ್ದು, ಇದನ್ನು ವಿರೋಧಿಸಿದ ರೈತರ ಮೇಲೆ ಪೊಲೀಸರು 'ಕೊಲೆ ಯತ್ನ' ಪ್ರಕರಣ ದಾಖಲಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರೈತರ ಪರ ಹೋರಾಟಕ್ಕಿಳಿದಿದ್ದಾರೆ&lt;/p&gt;]]></description>
            <media:content url="https://geo.dailymotion.com/player/x1tbu.html?video=xapfbf6" medium="video" height="768" width="1024"/>
            <content:encoded><![CDATA[&lt;p&gt;ರಾಮನಗರ/ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಟೌನ್&zwnj;ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯು ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಭೂಸ್ವಾಧೀನವನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಪೊಲೀಸರು 'ಕೊಲೆ ಯತ್ನ'ದಂತಹ ಗಂಭೀರ ಪ್ರಕರಣಗಳನ್ನು ದಾಖಲಿಸುತ್ತಿದ್ದಂತೆ, ಬಿಡದಿಯ ಭೂ ಹೋರಾಟಕ್ಕೆ ರಾಜಕೀಯ ಬಣ್ಣ ಬಂದಿದೆ. ರೈತರ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜಂಟಿ ಹೋರಾಟಕ್ಕೆ ಧುಮುಕಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗಾಗಿ ಭೂಮಿ ಸರ್ವೆ ಮಾಡಲು ಹೋದ ಜಲಮಂಡಳಿ ಮತ್ತು ಕಂದಾಯ ಅಧಿಕಾರಿಗಳ ತಂಡವನ್ನು ರೈತರು ಅಡ್ಡಗಟ್ಟಿದಾಗ ಗಲಾಟೆ ಆರಂಭವಾಗಿದೆ. ರಾಮನಗರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮುರಳಿ ನೀಡಿದ ದೂರಿನ ಆಧಾರದ ಮೇಲೆ ಬಿಡದಿ ಪೊಲೀಸರು ರೈತರ ವಿರುದ್ಧ 2 ಪ್ರತ್ಯೇಕ ಎಫ್&zwnj;ಐಆರ್ ದಾಖಲಿಸಿದ್ದಾರೆ.&lt;/p&gt;&lt;p&gt;ಭೂಸ್ವಾಧೀನದ ಪರವಾಗಿರುವ ರೈತರ ಜಮೀನಿನ ಸರ್ವೆಗೆ ಅಧಿಕಾರಿಗಳು ಹೋದಾಗ, ಯೋಜನೆಯನ್ನು ವಿರೋಧಿಸುತ್ತಿರುವ ರೈತರು ಮತ್ತು ಮಹಿಳೆಯರು ಪೊರಕೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ನಿಮ್ಮನ್ನು ಜೀವಂತ ಬಿಡುವುದಿಲ್ಲ &amp;nbsp;ಎಂದು ಕ್ರಿಮಿನಲ್ ಬೆದರಿಕೆ ಹಾಕಿ, ಕಲ್ಲಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ&quot; ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/hd-deve-gowda-and-hdk-join-forces-against-congress-over-bidadi-township-land-acquisition-gdp-videoshow-4wewhv1"/>
        </item>
        <item>
            <title><![CDATA[Mandya Tourism: ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಐವರ ಜಲಸಮಾಧಿ; ಫೋಟೋ ಕ್ರೇಜ್‌ಗೆ ಒಂದೇ ಕುಟುಂಬದವರ ಸಾವು!]]></title>
            <link>https://kannada.asianetnews.com/karnataka-districts/mandya-tourist-spot-muthathi-cauvery-river-drowning-five-of-family-dead/articleshow-7py3q8l</link>
            <guid isPermaLink="true">https://kannada.asianetnews.com/karnataka-districts/mandya-tourist-spot-muthathi-cauvery-river-drowning-five-of-family-dead/articleshow-7py3q8l</guid>
            <pubDate>Wed, 24 Jun 2026 20:18:32 +0530</pubDate>
            <description><![CDATA[&lt;p&gt;ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ನಡೆದ ಭೀಕರ ದುರಂತದಲ್ಲಿ, ಚನ್ನಪಟ್ಟಣ ಮೂಲದ ಒಂದೇ ಕುಟುಂಬದ ಐವರು ಸದಸ್ಯರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದೇವರ ದರ್ಶನದ ನಂತರ ನದಿಯ ಬಳಿ ಫೋಟೋ ತೆಗೆಯಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvx1n371xv88cknjm0nzp62k,imgname-mandya-muthathi-kaveri-river-tragedy-1782312504545.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ (ಜೂ.24): ಜಿ&lt;/strong&gt;ಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪುಣ್ಯಕ್ಷೇತ್ರ ಮುತ್ತತ್ತಿಯಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಕಾವೇರಿ ನದಿಯಲ್ಲಿ ಫೋಟೋ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ಐವರು ಸದಸ್ಯರು ನದಿ ಪಾಲಾಗಿದ್ದಾರೆ. ಈ ಮನಕಲಕುವ ಘಟನೆಯು ಇಡೀ ಜಿಲ್ಲೆಯನ್ನು ಕಣ್ಣೀರಿಡುವಂತೆ ಮಾಡಿದೆ.&lt;/p&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಕುಟುಂಬ ಮುತ್ತತ್ತಿಯ ಪ್ರಸಿದ್ಧ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿತ್ತು. ದೇವರ ದರ್ಶನ ಮುಗಿಸಿದ ಕುಟುಂಬದ ಸದಸ್ಯರು, ಸಂಜೆ ಸುಮಾರು 4.45 ರ ಸುಮಾರಿಗೆ ಮುತ್ತತ್ತಿಯ ಪಕ್ಕದಲ್ಲಿ ಹರಿಯುವ ಕಾವೇರಿ ನದಿ ತೀರಕ್ಕೆ ತೆರಳಿದ್ದಾರೆ. ನದಿಯ ಹರಿವಿನ ಮಧ್ಯೆ ನಿಂತು ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಮೃತರ ವಿವರ:&lt;/strong&gt;&lt;/h2&gt;&lt;p&gt;ಈ ಜಲಸಮಾಧಿಯಲ್ಲಿ ಮೃತಪಟ್ಟವರೆಲ್ಲರೂ ಚನ್ನಪಟ್ಟಣದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ. ಮೃತರನ್ನು ವಿಜಯಮ್ಮ (50), ಶ್ವೇತಾ (38), ಪ್ರಿಯಾಂಕ (28), ಚೈತ್ರ (20) ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಫೋಟೋ ತೆಗೆದುಕೊಳ್ಳುವ ಆತುರದಲ್ಲಿ ಅಥವಾ ನದಿಯ ಆಳ ತಿಳಿಯದೆ ಒಬ್ಬರು ನೀರಿಗೆ ಜಾರಿದ್ದು, ಅವರನ್ನು ಉಳಿಸಲು ಹೋದ ಉಳಿದವರು ಕೂಡ ನೀರಿನ ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.&lt;/p&gt;&lt;h2&gt;&lt;strong&gt;ಕಾರ್ಯಾಚರಣೆ ಮತ್ತು ಪೊಲೀಸ್ ಭೇಟಿ:&lt;/strong&gt;&lt;/h2&gt;&lt;p&gt;ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪ್ರವಾಸಿಗರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಲಗೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸಿ ಐವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಸ್ತುತ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;p&gt;ಮುತ್ತತ್ತಿಯ ಕಾವೇರಿ ನದಿ ಸ್ಥಳದಲ್ಲಿ ಈ ಹಿಂದೆಯೂ ಇಂತಹ ಅನೇಕ ಅಪಾಯಕಾರಿ ಘಟನೆಗಳು ನಡೆದಿವೆ. &amp;nbsp;ಆದರೂ ಪ್ರವಾಸಿಗರು ಎಚ್ಚರಿಕೆ ಫಲಕಗಳನ್ನು ನಿರ್ಲಕ್ಷಿಸಿ ನೀರಿಗಿಳಿಯುವುದು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ. ದೇವರಿಗೆ ಬಂದ ಸಂಭ್ರಮದಲ್ಲಿದ್ದ ಕುಟುಂಬವೊಂದು ಈಗ ಮಸಣ ಸೇರಿರುವುದು ಚನ್ನಪಟ್ಟಣದಲ್ಲಿ ಶೋಕದ ಛಾಯೆ ಮೂಡಿಸಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mandya-tourist-spot-muthathi-cauvery-river-drowning-five-of-family-dead/articleshow-7py3q8l"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್ ಹೋರಾಟ: ಭೂಮಿ ಅಳತೆಗೆ ಬಂದ ಸರ್ಕಾರಿ ಅಧಿಕಾರಿಗಳಿಗೆ ಪೊರಕೆ ಸೇವೆ ಮಾಡಿದ ರೈತ ಮಹಿಳೆಯರು!]]></title>
            <link>https://kannada.asianetnews.com/karnataka-districts/bengaluru-south-bidadi-township-protest-farmers-broomstick-attack-govt-officials-survey/articleshow-9dqzon9</link>
            <guid isPermaLink="true">https://kannada.asianetnews.com/karnataka-districts/bengaluru-south-bidadi-township-protest-farmers-broomstick-attack-govt-officials-survey/articleshow-9dqzon9</guid>
            <pubDate>Mon, 13 Jul 2026 22:41:13 +0530</pubDate>
            <description><![CDATA[ಉದ್ದೇಶಿತ ಬಿಡದಿ ಟೌನ್&zwnj;ಶಿಪ್&zwnj; ನಿರ್ಮಾಣವನ್ನು ವಿರೋಧಿಸಿ ಬೈರಮಂಗಲದಲ್ಲಿ ರೈತ ಮಹಿಳೆಯರು ಪೊರಕೆ ಚಳುವಳಿ ನಡೆಸಿದರು. ಜಂಟಿ ಅಳತೆ ಕಾರ್ಯಕ್ಕೆ ಮುಂದಾದ ಅಧಿಕಾರಿಗಳೊಂದಿಗೆ ವಾಗ್ವಾದ ನಡೆದು, ಆಕ್ರೋಶಗೊಂಡ ಮಹಿಳೆಯರು ಪೊರಕೆಯಿಂದ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದ್ದು, ಹೋರಾಟ ಮುಂದುವರಿಸಲು ರೈತರು ನಿರ್ಧರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxe77xh5n6a18dccz1frmbdj,imgname-bidadi-township-farmers-attack-govt-officials-1783962531349.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜು.13): ಉ&lt;/strong&gt;ದ್ದೇಶಿತ ಬಿಡದಿ ಟೌನ್ ಶಿಪ್ ನಿರ್ಮಾಣದ ವಿರುದ್ಧ ರೈತರ ಹೋರಾಟ ಇಂದು ಉಗ್ರರೂಪ ತಾಳಿದೆ. ಜಂಟಿ ಅಳತೆ ಕಾರ್ಯಕ್ಕೆ (JMC) ಮುಂದಾದ ಅಧಿಕಾರಿಗಳ ವಿರುದ್ಧ ಕೆರಳಿದ ರೈತ ಮಹಿಳೆಯರು ಪೊರಕೆಯಿಂದ ತಳಿಸಿದ ಘಟನೆ ಬೈರಮಂಗಲದಲ್ಲಿ ನಡೆದಿದೆ.&lt;/p&gt;&lt;h3&gt;&lt;strong&gt;ಹೋರಾಟದ ಹಾದಿ:&lt;/strong&gt;&lt;/h3&gt;&lt;p&gt;ಬಿಡದಿ ಟೌನ್ ಶಿಪ್ ಯೋಜನೆಯನ್ನು ವಿರೋಧಿಸಿ ಇಂದು ಕರೂರು ಮತ್ತು ಭಾರಂಗಿ ವ್ಯಾಪ್ತಿಯ ರೈತರು ಬೈರಮಂಗಲ ಸರ್ಕಲ್&zwnj;ನಲ್ಲಿ 'ಪೊರಕೆ ಚಳುವಳಿ' ಹಮ್ಮಿಕೊಂಡಿದ್ದರು. ನೂರಾರು ರೈತ ಮಹಿಳೆಯರು ಕೈಯಲ್ಲಿ ಪೊರಕೆ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆಗೆ ಸಜ್ಜಾಗಿದ್ದರು.&lt;/p&gt;&lt;h2&gt;&lt;strong&gt;ಅಧಿಕಾರಿಗಳ 'ಗುಪ್ತ' ಕಾರ್ಯಾಚರಣೆ:&lt;/strong&gt;&lt;/h2&gt;&lt;p&gt;ಒಂದೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ಬಿಡದಿಯ ಕೊಡಿಯಾಲ ವ್ಯಾಪ್ತಿಯಲ್ಲಿ ಜೆಎಂಸಿ (JMC) ಸರ್ವೆ ಮಾಡಲು ಅಧಿಕಾರಿಗಳು ಬೇರೆ ಮಾರ್ಗದ ಮೂಲಕ ಸ್ಥಳಕ್ಕೆ ಆಗಮಿಸಿದ್ದರು. ಪ್ರತಿಭಟನೆಯ ನಡುವೆಯೂ ಸರ್ವೆ ಕಾರ್ಯ ಆರಂಭಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಮುಂದಾದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಪ್ರತಿಭಟನಾ ನಿರತ ರೈತರು ಮತ್ತು ಮಹಿಳೆಯರು ಸರ್ವೆ ನಡೆಯುತ್ತಿದ್ದ ಸ್ಥಳದತ್ತ ಓಡಿ ಬಂದರು.&lt;/p&gt;&lt;h2&gt;&lt;strong&gt;ವಾಗ್ವಾದ ಮತ್ತು ಪೊರಕೆ ಏಟು:&lt;/strong&gt;&lt;/h2&gt;&lt;p&gt;ಸ್ಥಳದಲ್ಲಿದ್ದ ಪೊಲೀಸ್ ಮತ್ತು ಅಧಿಕಾರಿಗಳ ಜೊತೆ ರೈತರು ಚರ್ಚಿಸುತ್ತಿದ್ದಾಗಲೇ, ಮತ್ತೊಂದೆಡೆ ಸಿಬ್ಬಂದಿಗಳು ಸರ್ವೆ ಕಾರ್ಯ ಮುಂದುವರಿಸಿದ್ದರು. ಇದನ್ನು ತಡೆಯಲು ಹೋದ ರೈತ ಮಹಿಳೆಯರನ್ನು ಸರ್ವೆ ಸಿಬ್ಬಂದಿಗಳು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯರು ತಾವು ಹಿಡಿದಿದ್ದ ಪೊರಕೆಯಿಂದಲೇ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಏಟು ನೀಡಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.&lt;/p&gt;&lt;h3&gt;&lt;strong&gt;ಮುಂದುವರಿಯಲಿದೆ ಹೋರಾಟ:&lt;/strong&gt;&lt;/h3&gt;&lt;p&gt;ಘಟನೆಯ ನಂತರ ಬೈರಮಂಗಲದಲ್ಲಿ ರೈತರು ಸಭೆ ನಡೆಸಿದ್ದು, ಇಂದಿನ ಘಟನೆಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ನಾಳೆ (ಜುಲೈ 14) ಬೆಳಗ್ಗೆ ಮತ್ತೆ ಬೈರಮಂಗಲ ಸರ್ಕಲ್&zwnj;ನಲ್ಲಿ ಸಭೆ ಸೇರಲು ನಿರ್ಧರಿಸಲಾಗಿದೆ. ಇಂದಿನಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ರೈತ ಮುಖಂಡರು ತೀರ್ಮಾನಿಸಿದ್ದಾರೆ. ಅಧಿಕಾರಿಗಳು ಮತ್ತೆ ಸರ್ವೆಗೆ ಬಂದರೆ ಸ್ಥಳದಲ್ಲೇ ಹೋಗಿ ಮನವಿ ಸಲ್ಲಿಸುವ ಮೂಲಕ ವಿರೋಧ ವ್ಯಕ್ತಪಡಿಸಲು ರೈತರು ಸಜ್ಜಾಗಿದ್ದಾರೆ. ಟೌನ್ ಶಿಪ್ ಹೆಸರಿನಲ್ಲಿ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಬಿಡದಿ ಟೌನ್ ಶಿಪ್ ವಿಷಯವಾಗಿ ಸರ್ಕಾರ ರೈತರ ಒಪ್ಪಿಗೆ ಇಲ್ಲದೇ, ಯಾವುದೇ ರೀತಿಯ ಮಾಹಿತಿ ನೀಡದೆ ಜೆಎಂಸಿ ಸರ್ವೇ ಮಾಡಲು ಹೊರಟಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ರೈತರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ವಿಫಲವಾಗಿರುವ ಸರ್ಕಾರ, ಏನಾದರೂ ಮಾಡಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಹೊರಟಿರುವುದು ದುರ್ದೈವದ ಸಂಗತಿ.ಈ ಕೂಡಲೇ&hellip; pic.twitter.com/7DkK9CWjrX&lt;/p&gt;&lt;p&gt;&mdash; Nikhil Kumar (@Nikhil_Kumar_k) July 13, 2026&lt;/p&gt;&lt;p&gt;&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bengaluru-south-bidadi-township-protest-farmers-broomstick-attack-govt-officials-survey/articleshow-9dqzon9"/>
        </item>
        <item>
            <title><![CDATA[ಬಿಡದಿ ಟೌನ್ ಶಿಪ್ ವಿರುದ್ಧದ ಹೋರಾಟಕ್ಕೆ ಆನೆಬಲ; ಪ್ರತಿಭಟನೆಗೆ ಧುಮುಕಿದ ಸಂತೋಷ್ ಹೆಗ್ಡೆ]]></title>
            <link>https://kannada.asianetnews.com/ramanagara/former-lokayukta-justice-santosh-hegde-has-come-out-to-protest-against-the-bidadi-township-gkn/articleshow-9ncpeu5</link>
            <guid isPermaLink="true">https://kannada.asianetnews.com/ramanagara/former-lokayukta-justice-santosh-hegde-has-come-out-to-protest-against-the-bidadi-township-gkn/articleshow-9ncpeu5</guid>
            <pubDate>Thu, 09 Jul 2026 12:58:44 +0530</pubDate>
            <description><![CDATA[ಬಿಡದಿ ಟೌನ್&zwnj;ಶಿಪ್ ಯೋಜನೆ ವಿರೋಧಿಸಿ 485 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತರ ಭೂಮಿ ಉಳಿಸುವ ನ್ಯಾಯಯುತ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx2we6sxja4ea80tdc1wv3fk,imgname-santosh-hegde-1783582104380.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ/ಬಿಡದಿ: &lt;/strong&gt;ತಮ್ಮ ಫಲವತ್ತಾದ ಭೂಮಿಯನ್ನು ಉಳಿಸಿಕೊಳ್ಳಲು ಬಿಡದಿ ಭಾಗದ ರೈತರು ನಡೆಸುತ್ತಿರುವ ಸಂಘಟಿತ ಹೋರಾಟಕ್ಕೆ ಇಂದು ಮಹತ್ವದ ತಿರುವು ಪಡೆದುಕೊಂಡಿದೆ. ಕಳೆದ 485 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಕೂಗಿಗೆ ಈಗ ಕರ್ನಾಟಕದ ಧ್ವನಿ, ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಧ್ವನಿಗೂಡಿಸಿದ್ದಾರೆ. ಈ ಮೂಲಕ ಬಿಡದಿ ಟೌನ್ ಶಿಪ್ ವಿರೋಧಿ ಹೋರಾಟಕ್ಕೆ ದೊಡ್ಡ ಮಟ್ಟದ ಆನೆಬಲ ಬಂದಂತಾಗಿದೆ.&lt;/p&gt;&lt;h2&gt;&lt;strong&gt;ಪ್ರತಿಭಟನಾ ಕಣದಲ್ಲಿ ಸಂತೋಷ್ ಹೆಗ್ಡೆ&lt;/strong&gt;&lt;/h2&gt;&lt;p&gt;ಬಿಡದಿ ಹೋಬಳಿಯ ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಸಂತೋಷ್ ಹೆಗ್ಡೆ ಅವರು, ರೈತರ ಜೊತೆ ನೆಲದ ಮೇಲೆ ಕುಳಿತು ಅವರ ಅಳಲನ್ನು ಆಲಿಸಿದರು. ಭೂಮಿ ಎಂಬುದು ರೈತನ ಪಾಲಿಗೆ ಬರಿ ಮಣ್ಣಲ್ಲ, ಅದು ಅವನ ಜೀವನಾಡಿ. ಅಭಿವೃದ್ಧಿಯ ಹೆಸರಿನಲ್ಲಿ ಅನ್ನ ನೀಡುವ ರೈತನನ್ನು ಬೀದಿಗೆ ತಳ್ಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಭೂಮಿ ಉಳಿಸಿಕೊಡುವಂತೆ ಕಣ್ಣೀರಿಟ್ಟ ರೈತರಿಗೆ ಧೈರ್ಯ ತುಂಬಿದ ಅವರು, ರೈತರ ಈ ನ್ಯಾಯಯುತ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಘೋಷಿಸಿದರು.&lt;/p&gt;&lt;h3&gt;&lt;strong&gt;ಏನಿದು ಬಿಡದಿ ಟೌನ್ ಶಿಪ್ ವಿವಾದ?&lt;/strong&gt;&lt;/h3&gt;&lt;p&gt;ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಬಿಡದಿ ಸುತ್ತಮುತ್ತ ಸುಮಾರು 10 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಅಥವಾ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಬಿಡಿಎ (BDA) ಮತ್ತು ಕೆಎಚ್&zwnj;ಬಿ (KHB) ಮೂಲಕ ಈ ಯೋಜನೆ ಜಾರಿಗೊಳಿಸಲು ನಕ್ಷೆ ಸಿದ್ಧಪಡಿಸಲಾಗಿದೆ. ಈ ಯೋಜನೆಯ ವ್ಯಾಪ್ತಿಗೆ ಬರುವ ಭೈರಮಂಗಲ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ರೈತರು ಇದನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಹೋರಾಟದ ಕಿಚ್ಚು ಹೆಚ್ಚಿಸಿದ್ದೇಕೆ?&lt;/strong&gt;&lt;/h3&gt;&lt;p&gt;ಈ ಭಾಗದ ಜಮೀನುಗಳು ವರ್ಷಕ್ಕೆ ಮೂರು ಬೆಳೆ ಬೆಳೆಯುವಷ್ಟು ಫಲವತ್ತಾಗಿವೆ. ಈ ಭೂಮಿಯನ್ನು ಕಳೆದುಕೊಂಡರೆ ರೈತರು ಅಕ್ಷರಶಃ ಅನಾಥರಾಗುತ್ತಾರೆ ಎಂಬುದು ಪ್ರತಿಭಟನಾಕಾರರ ವಾದ. 2006 ರಿಂದಲೂ ಈ ಯೋಜನೆಯ ಪ್ರಸ್ತಾಪವಿದ್ದು, ರೈತರು ತಮ್ಮ ಜಮೀನಿನ ಮೇಲೆ ಯಾವುದೇ ಸಾಲ ಪಡೆಯಲು ಅಥವಾ ಅಭಿವೃದ್ಧಿ ಪಡಿಸಲು ಸಾಧ್ಯವಾಗದಂತೆ ನಿರ್ಬಂಧ ಹೇರಲಾಗಿದೆ. ರಾಜ್ಯ ಸರ್ಕಾರವು ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಆಗಿ ಪರಿವರ್ತಿಸಲು ಮತ್ತು ಸುತ್ತಮುತ್ತಲಿನ ಉಪನಗರಗಳನ್ನು (Satellite Towns) ಅಭಿವೃದ್ಧಿಪಡಿಸಲು ವೇಗ ನೀಡಿದೆ. ಇದು ಬಿಡದಿ ರೈತರಲ್ಲಿ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಮುಂದಾಗಿರುವುದು 485 ದಿನಗಳ ಸುದೀರ್ಘ ಪ್ರತಿಭಟನೆಗೆ ಕಾರಣವಾಗಿದೆ.&lt;/p&gt;&lt;h3&gt;&lt;strong&gt;ಆನೆಬಲ ತಂದ ಸಂತೋಷ್ ಹೆಗ್ಡೆ ಭೇಟಿ&lt;/strong&gt;&lt;/h3&gt;&lt;p&gt;ಸಂತೋಷ್ ಹೆಗ್ಡೆ ಅವರಂತಹ ಪ್ರಭಾವಿ ವ್ಯಕ್ತಿಗಳು ಹೋರಾಟಕ್ಕೆ ಕೈಜೋಡಿಸಿರುವುದು ಸರ್ಕಾರದ ಮೇಲೆ ಒತ್ತಡ ಹೇರಲು ಸಹಕಾರಿಯಾಗಲಿದೆ. ಸತತ 485 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ಖೇದಕರ. ನ್ಯಾಯಾಲಯದ ಮಟ್ಟದಲ್ಲೂ ರೈತರಿಗೆ ನ್ಯಾಯ ಸಿಗುವಂತೆ ಪ್ರಯತ್ನಿಸೋಣ ಎಂದು ಹೆಗ್ಡೆ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ, ಬಿಡದಿ ಟೌನ್ ಶಿಪ್ ಯೋಜನೆ ಮತ್ತು ರೈತರ ಭೂಮಿಯ ನಡುವಿನ ಈ ಜಟಾಪಟಿ ಈಗ ರಾಜ್ಯ ಮಟ್ಟದ ಗಮನ ಸೆಳೆದಿದ್ದು, ಸರ್ಕಾರ ರೈತರ ಮನವೊಲಿಸುತ್ತದೆಯೇ ಅಥವಾ ಯೋಜನೆಯನ್ನು ಕೈಬಿಡುತ್ತದೆಯೇ ಎಂದು ಕಾದು ನೋಡಬೇಕಿದೆ.&lt;/p&gt;]]></content:encoded>
            <category>ramanagara</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/ramanagara/former-lokayukta-justice-santosh-hegde-has-come-out-to-protest-against-the-bidadi-township-gkn/articleshow-9ncpeu5"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್ ಕೈಬಿಡದಿದ್ದರೆ ವಿಧಾನ ಸೌಧದ ಮುಂದೆ ಧರಣಿ ಕೂರುವೆ: ಮಾಜಿ ಪ್ರಧಾನಿ ಗೌಡರಿಂದ ಸರ್ಕಾರಕ್ಕೆ ಎಚ್ಚರಿಕೆ]]></title>
            <link>https://kannada.asianetnews.com/karnataka-districts/i-will-protest-at-vidhana-soudha-former-pm-hd-deve-gowda-over-bidadi-township-project-gdp/articleshow-bl9ve2k</link>
            <guid isPermaLink="true">https://kannada.asianetnews.com/karnataka-districts/i-will-protest-at-vidhana-soudha-former-pm-hd-deve-gowda-over-bidadi-township-project-gdp/articleshow-bl9ve2k</guid>
            <pubDate>Tue, 14 Jul 2026 18:02:39 +0530</pubDate>
            <description><![CDATA[ಬಿಡದಿ ಉಪನಗರ ಯೋಜನೆಯ ಭೂಸ್ವಾಧೀನವನ್ನು ವಿರೋಧಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಯೋಜನೆ ಕೈಬಿಡದಿದ್ದರೆ ವಿಧಾನಸೌಧದ ಬಳಿ ಧರಣಿ ಕೂರುವುದಾಗಿ ಎಚ್ಚರಿಸಿರುವ ಅವರು, ಇದು ₹20,000 ಕೋಟಿಯ ಯೋಜನೆಯಾಗಿದ್ದು, ಬಡ ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxg9pnr9t5d3ygnqy28kwg1x,imgname-hd-devegowda-1784032220937.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಬಿಡದಿ ಉಪನಗರ (ಟೌನ್&zwnj;ಶಿಪ್) ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ಭಾಗದ ರೈತರು ನಡೆಸುತ್ತಿರುವ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ನೇರವಾಗಿ ಧುಮುಕಿದ್ದಾರೆ. ಬಿಡದಿ ಯೋಜನೆಯನ್ನು ತಕ್ಷಣವೇ ಕೈಬಿಡದಿದ್ದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ತಾವೇ ಖುದ್ದಾಗಿ ಧರಣಿ ಕೂರುವುದಾಗಿ ದೇವೇಗೌಡರು ತೀವ್ರ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;p&gt;ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ವಿವರಗಳನ್ನು ಬಹಿರಂಗಪಡಿಸಿದರು. ಬಿಡದಿ ಭಾಗದ ಬಡ ರೈತರ ಪರವಾಗಿ ಜೆಡಿಎಸ್ ಸಂಪೂರ್ಣವಾಗಿ ನಿಲ್ಲಲಿದ್ದು, ಸರ್ಕಾರದ ಮುಂದಿನ ನಿರ್ಧಾರಕ್ಕಾಗಿ 4 ರಿಂದ 5 ದಿನಗಳ ಗಡುವು ನೀಡುವುದಾಗಿ ಪ್ರಕಟಿಸಿದರು.&lt;/p&gt;&lt;h2&gt;ಪತ್ರ ಬರೆದು 20 ದಿನವಾದ್ರೂ ಹಿಂಬರಹ ನೀಡುವ ಸೌಜನ್ಯ ಸಿಎಂಗೆ ಇಲ್ಲ!&lt;/h2&gt;&lt;p&gt;ಸುದ್ದಿಗೋಷ್ಠಿಯಲ್ಲಿ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡರು, &quot;ಕಳೆದ ಜೂನ್ 25 ರಂದೇ ನಾನು ಬಿಡದಿ ಉಪನಗರ ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಪತ್ರ ಬರೆದು 20 ದಿನ ಕಳೆದರೂ ಸಿಎಂ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ಕನಿಷ್ಠ ಪಕ್ಷ ಪತ್ರ ತಲುಪಿದೆ ಎಂಬ ಹಿಂಬರಹ (Endorsement) ನೀಡುವ ಸೌಜನ್ಯವೂ ಸಿಎಂಗೆ ಇಲ್ಲದಂತಾಗಿದೆ. ನನಗೀಗ ಯಾವುದೇ ಅಧಿಕಾರ ಇಲ್ಲದಿರಬಹುದು, ಆದರೆ ನಾನು ಒಬ್ಬ ಮಾಜಿ ಪ್ರಧಾನಿ ಎನ್ನುವ ಕನಿಷ್ಠ ಪ್ರಜ್ಞೆಯೂ ಸರ್ಕಾರಕ್ಕೆ ಇದ್ದಂತಿಲ್ಲ. ಮುಖ್ಯಮಂತ್ರಿಗಳೂ ಕೂಡ ರೈತನ ಮಗನೇ ಆಗಿದ್ದು, ರೈತರ ಬಗ್ಗೆ ಕಾಳಜಿ ವಹಿಸುತ್ತಾರೆ ಎಂಬ ನಂಬಿಕೆ ನನಗಿನ್ನೂ ಇದೆ ಎಂದರು.&lt;/p&gt;&lt;h2&gt;₹20,000 ಕೋಟಿ ಯೋಜನೆಯ ಅಸಲಿ ರಹಸ್ಯವೇನು?&lt;/h2&gt;&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಯ ಹಿಂದೆ ಬೃಹತ್ ರಾಜಕೀಯ ಹಿತಾಸಕ್ತಿ ಅಡಗಿದೆ ಎಂದು ಗಂಭೀರ ಆರೋಪ ಮಾಡಿದ ದೇವೇಗೌಡರು, ಕಾಂಗ್ರೆಸ್ ಹೈಕಮಾಂಡ್ ಒಲಿಸಿಕೊಳ್ಳಲು ಏನೇನು ಆಶ್ವಾಸನೆಗಳನ್ನು ಕೊಟ್ಟು ಬಂದಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತು. ಆ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಮತ್ತು ಹೈಕಮಾಂಡ್&zwnj;ಗೆ ನೀಡಿರುವ ಭರವಸೆ ಈಡೇರಿಸಲು ಈ ಬಿಡದಿ ಟೌನ್&zwnj;ಶಿಪ್ ಯೋಜನೆಯನ್ನು ಬಳಸಿಕೊಳ್ಳಲಾಗುತ್ತಿದೆ. ಇದು ಬರೋಬ್ಬರಿ ₹20,000 ಕೋಟಿ ಮೊತ್ತದ ಬೃಹತ್ ಯೋಜನೆ. ಇದನ್ನು ಬಹಳ ದಿನ ಬಚ್ಚಿಡಲು ಸಾಧ್ಯವಿಲ್ಲ. ಹೈಕಮಾಂಡ್&zwnj;ಗೆ ಕೊಟ್ಟ ಆಶ್ವಾಸನೆ ಪೂರೈಸಲು ಬೇರೆ ಮಾರ್ಗಗಳು ಸಾಕಷ್ಟಿವೆ, ಅದನ್ನು ಬಳಸಿಕೊಳ್ಳಿ. ಆದರೆ ಬಡ ರೈತರ ಹೊಟ್ಟೆ ಮೇಲೆ ಹೊಡೆಯಬೇಡಿ ಎಂದು ಡಿ.ಕೆ. ಶಿವಕುಮಾರ್ ಹೆಸರು ಉಲ್ಲೇಖಿಸದೆ ವಾಗ್ದಾಳಿ ನಡೆಸಿದರು. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಬಿಡದಿ ಹತ್ತಿರ ಜಮೀನು ಸರ್ವೆ ಮಾಡಲು ಜನರನ್ನು ಕಳಿಸಿರಲಿಲ್ಲ. ಆದರೆ ಡಿ.ಕೆ. ಶಿವಕುಮಾರ್ ಬಂದ ಕೇವಲ ಒಂದು ತಿಂಗಳೊಳಗೆ ಇದೆಲ್ಲಾ ಯಾಕೆ ಶುರುವಾಗಿದೆ? ಇದರ ಹಿಂದಿನ ಉದ್ದೇಶವೇನು ಎಂಬುದು ಜಗಜ್ಜಾಹೀರಾಗಿದೆ ಎಂದರು.&lt;/p&gt;&lt;h2&gt;40 ಸಾವಿರ ಸೈಟುಗಳು ಖಾಲಿ ಇರುವಾಗ ಬಿಡದಿ ಮೇಲೇಕೆ ಕಣ್ಣು?&lt;/h2&gt;&lt;p&gt;ಬೆಂಗಳೂರಿನಲ್ಲಿ ಈಗಾಗಲೇ ಸಾವಿರಾರು ನಿವೇಶನಗಳು ಹಂಚಿಕೆಯಾಗದೆ ಉಳಿದಿರುವಾಗ ಹೊಸದಾಗಿ ರೈತರ ಜಮೀನು ಕಿತ್ತುಕೊಳ್ಳುವ ಅಗತ್ಯವೇನಿದೆ ಎಂದು ದೇವೇಗೌಡರು ಪ್ರಶ್ನಿಸಿದರು. ಸರ್ಕಾರದ ಹಿರಿಯ ಸಚಿವರೇ ಹೇಳಿರುವ ಪ್ರಕಾರ, ಬಿಡಿಎ ಅಭಿವೃದ್ಧಿಪಡಿಸಿರುವ ಲೇಔಟ್&zwnj;ಗಳಲ್ಲಿ 20 ಸಾವಿರಕ್ಕೂ ಹೆಚ್ಚು ನಿವೇಶನಗಳು ಖಾಲಿ ಇವೆ. ನಾಡಪ್ರಭು ಕೆಂಪೇಗೌಡ ಲೇಔಟ್ ಹಾಗೂ ಡಾ. ಶಿವರಾಮ್ ಕಾರಂತ ಲೇಔಟ್ ಸೇರಿದಂತೆ ಹೊಸ ಬಡಾವಣೆಗಳನ್ನೆಲ್ಲಾ ಸೇರಿಸಿದರೆ ಒಟ್ಟು 40 ಸಾವಿರಕ್ಕೂ ಹೆಚ್ಚು ನಿವೇಶನಗಳು ಹಂಚಿಕೆಯಾಗದೆ ಖಾಲಿ ಬಿದ್ದಿವೆ. ಪರಿಸ್ಥಿತಿ ಹೀಗಿದ್ದರೂ ಬಿಡದಿ ಟೌನ್&zwnj;ಶಿಪ್ ಮೇಲೆ ಇವರಿಗೆ ಯಾಕೆ ಇಷ್ಟೊಂದು ಕಣ್ಣು? ಎಂದು ಖಾರವಾಗಿ ಪ್ರಶ್ನಿಸಿದರು.&lt;/p&gt;&lt;h2&gt;ಸಣ್ಣ ಹಿಡುವಳಿದಾರರ ಬದುಕು ಬೀದಿಗೆ ಸುಳ್ಳು ಹೇಳ್ತಿದೆ ಸರ್ಕಾರ!&lt;/h2&gt;&lt;p&gt;ಸರ್ಕಾರ ಜಮೀನು ಸ್ವಾಧೀನದ ವಿಚಾರದಲ್ಲಿ ಸತ್ಯಾಂಶವನ್ನು ಮುಚ್ಚಿಟ್ಟು ಮಾತನಾಡುತ್ತಿದೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು:&lt;/p&gt;&lt;p&gt;&lt;strong&gt;2 ಸಾವಿರಕ್ಕೂ ಹೆಚ್ಚು ಸಣ್ಣ ರೈತರು:&lt;/strong&gt; ಈ ಯೋಜನೆಯಡಿ ಸುಮಾರು 2,800 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೊರಟಿದೆ. ಈ ಭಾಗದಲ್ಲಿ ಕೇವಲ 1 ರಿಂದ 5 ಗುಂಟೆ ಜಮೀನು ಹೊಂದಿರುವ 2,000ಕ್ಕೂ ಹೆಚ್ಚು ಬಡ ಸಣ್ಣ ಹಿಡುವಳಿದಾರರಿದ್ದಾರೆ. ಆ ಭಾಗದಲ್ಲಿ ಪ್ರತಿದಿನ 50 ಸಾವಿರ ಲೀಟರ್ ಹಾಲು ಕರೆಯಲಾಗುತ್ತದೆ. ರೈತರು ಇದನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಇವರನ್ನೆಲ್ಲಾ ಒಕ್ಕಲೆಬ್ಬಿಸಿ ಎಲ್ಲಿಗೆ ಕಳುಹಿಸುತ್ತೀರಿಯೇ? ಎಂದು ಪ್ರಶ್ನಿಸಿದರು.&lt;/p&gt;&lt;p&gt;&lt;strong&gt;17 ಎಕರೆಯ ಸುಳ್ಳು ಲೆಕ್ಕ:&lt;/strong&gt; &quot;ಕೇವಲ ಶೇ. 40 ರಷ್ಟು ಜನರು ಮಾತ್ರ ದುಡ್ಡು ಕೊಡಿ, ನಮ್ಮ ತಕರಾರಿಲ್ಲ ಎನ್ನುತ್ತಿದ್ದಾರೆ. ಅಂತಹವರ ಒಟ್ಟು ಜಮೀನು ಇರುವುದು ಕೇವಲ 17 ಎಕರೆ ಮಾತ್ರ! ಅದರಲ್ಲಿ ಉಳಿದದ್ದು ಸರ್ಕಾರದ ಗೋಮಾಳ. ಆದರೆ ಸರ್ಕಾರ ಮಾತ್ರ ಈಗಾಗಲೇ 500 ಎಕರೆ ಸ್ವಾದೀನ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದೆ. ಉಳಿದ ಬಡ ಹೆಣ್ಣುಮಕ್ಕಳು ಮತ್ತು ರೈತರು ತಮ್ಮ ಜೀವನಾಧಾರವಾದ ಭೂಮಿಯನ್ನು ಉಳಿಸಿಕೊಳ್ಳಲು ಅಧಿಕಾರಿಗಳನ್ನು ತಡೆದು ಹೋರಾಟ ಮಾಡುತ್ತಿದ್ದಾರೆ.&lt;/p&gt;&lt;p&gt;ಎಚ್&zwnj;ಡಿಕೆ ಅವಧಿಯಲ್ಲೇ ಯೋಜನೆ ಕೈಬಿಡಲಾಗಿತ್ತು: &quot;ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ನಾಯಕರೇ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದರು. ಆ ಸಂದರ್ಭದಲ್ಲಿ ರೈತರ ಹಿತದೃಷ್ಟಿಯಿಂದ ಕುಮಾರಸ್ವಾಮಿಯವರು ನೋಟಿಫಿಕೇಶನ್ ಮಾಡುವುದನ್ನು ಕೈಬಿಟ್ಟಿದ್ದರು. ಆದರೆ ಈಗಿನ ಸಿಎಂ ತಾವೇನೋ ಕುಮಾರಸ್ವಾಮಿ ಮಾಡಿದ್ದನ್ನು ಮುಂದುವರಿಸುತ್ತಿರುವುದಾಗಿ ಮಾತನಾಡುತ್ತಿದ್ದಾರೆ.&lt;/p&gt;&lt;h2&gt;ರೈತರ ಮೇಲಿನ ಎಫ್&zwnj;ಐಆರ್ (FIR) ವಾಪಸ್ ಪಡೆಯಿರಿ&lt;/h2&gt;&lt;p&gt;ಬಿಡದಿಯಲ್ಲಿ ನಡೆದ ರೈತರ ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆದು, ಇನ್ಸ್&zwnj;ಪೆಕ್ಟರ್&zwnj;ಗೆ ಸಣ್ಣ ಗಾಯವಾಗಿರುವ ಘಟನೆಗೆ ಸಂಬಂಧಿಸಿದಂತೆ ರೈತರ ಮೇಲೆ ದಾಖಲಾಗಿರುವ ಎಫ್&zwnj;ಐಆರ್ ಅನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ದೇವೇಗೌಡರು ಒತ್ತಾಯಿಸಿದರು.&quot;ನಿನ್ನೆಯ ಘಟನೆಯಿಂದಾಗಿ ಕುಮಾರಸ್ವಾಮಿ ಅವರಿಗೆ ತೀವ್ರ ನೋವಾಗಿದೆ. ಅವರು ರೈತರಿಗೆ ಹೋರಾಟ ಮುಂದುವರಿಸಲು ಧೈರ್ಯ ತುಂಬಿದ್ದು, ನಾವೂ ಜೊತೆಗಿರುತ್ತೇವೆ ಎಂದಿದ್ದಾರೆ. ರೆವೆನ್ಯೂ ಅಧಿಕಾರಿಗಳ ಕಂಪ್ಲೇಂಟ್ ಆಧರಿಸಿ ರೈತರ ಮೇಲೆ ಎಫ್&zwnj;ಐಆರ್ ಹಾಕಲಾಗಿದೆ. ಆದರೆ ಎಸ್ಪಿ ಅವರು ಡಿಸಿ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎನ್ನುತ್ತಾರೆ. ಇನ್ಸ್&zwnj;ಪೆಕ್ಟರ್&zwnj;ಗೆ ಸಣ್ಣ ಗಾಯವಾಗಿದೆಯೇ ಹೊರತು ಆಸ್ಪತ್ರೆಯಲ್ಲಿ ಮಲಗುವಂತ ಪೆಟ್ಟು ಯಾರಿಗೂ ಬಿದ್ದಿಲ್ಲ. ರೈತರ ನೋವನ್ನ ಅರ್ಥ ಮಾಡ್ಕೋಬೇಕು, ಅವರು ಜೀವನ ಮಾಡಬೇಕಲ್ಲ. ರೈತರ ಆಕ್ರೋಶದ ಪ್ರಚೋದನೆಗೆ ಕಾರಣ ಯಾರು ಎಂಬುದನ್ನು ಸರ್ಕಾರ ಯೋಚಿಸಬೇಕು. ಸದ್ಯಕ್ಕೆ ಸರ್ವೆ ಕಾರ್ಯವನ್ನು ನಿಲ್ಲಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದರು.&lt;/p&gt;&lt;h2&gt;ವಿಪಕ್ಷಗಳ ಒಗ್ಗಟ್ಟು: 5 ದಿನಗಳ ಗಡುವು&lt;/h2&gt;&lt;p&gt;ಬಿಡದಿ ರೈತರ ಹೋರಾಟಕ್ಕೆ ಸುಪ್ರೀಂ ಕೋರ್ಟ್&zwnj;ನ ನಿವೃತ್ತ ನ್ಯಾಯಾಧೀಶರು ಸಹ ಬೆಂಬಲ ಸೂಚಿಸಿದ್ದು, ಯೋಜನೆ ಕೈಬಿಡುವಂತೆ ಹೇಳಿದ್ದಾರೆ. ಅಲ್ಲದೆ, ಈ ಹೋರಾಟಕ್ಕೆ ಬಿಜೆಪಿ ನಾಯಕರು ಹಾಗೂ ಪ್ರಮುಖವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರವಾಗಿ ಪ್ರತಿಕ್ರಿಯಿಸಿ, ರೈತರಿಗೆ ಬೆಂಬಲ ನೀಡಿದ್ದಕ್ಕಾಗಿ ದೇವೇಗೌಡರು ಧನ್ಯವಾದ ಸಲ್ಲಿಸಿದರು.&lt;/p&gt;&lt;p&gt;&quot;ನಾನು ಹೋರಾಟದ ಜಾಗಕ್ಕೆ ಹೋದರೆ ತಕ್ಷಣವೇ ದೇವೇಗೌಡರು ಬಂದು ರೈತರನ್ನು ಪ್ರಚೋದಿಸಿದರು ಎಂದು ನನ್ನ ಮೇಲೆ ಆರೋಪ ಮಾಡುತ್ತಾರೆ. ಕುಮಾರಸ್ವಾಮಿ ರಾಮನಗರದಲ್ಲಿ ಬಂದು ನೆಲೆಸಿ 30 ವರ್ಷಗಳಾಗಿವೆ. ನಮಗೆ ಆ ಭಾಗದ ರೈತರ ನೋವು ಗೊತ್ತು. ಈಗ ಸರ್ಕಾರಕ್ಕೆ 4 ರಿಂದ 5 ದಿನಗಳ ಕಾಲಾವಕಾಶ ನೀಡುತ್ತೇನೆ. ಸರ್ಕಾರದ ನಡವಳಿಕೆ ಮತ್ತು ನಿರ್ಧಾರವನ್ನು ಕಾದು ನೋಡಿ, ಮುಂದಿನ ಹೋರಾಟದ ಕಾರ್ಯರೂಪವನ್ನು ಸಿದ್ಧಪಡಿಸುತ್ತೇನೆ. ಬಿಡದಿ ಯೋಜನೆ ಕೈಬಿಡದಿದ್ದರೆ ನಾನು ಗಾಂಧಿ ಪ್ರತಿಮೆ ಎದುರು ಧರಣಿ ಕೂರುವುದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹೆಚ್&zwnj; ಡಿಕ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಿರಿಯ ನಾಯಕ ದೇವೇಗೌಡರ ಈ ಧರಣಿ ಎಚ್ಚರಿಕೆಯು ಸದ್ಯ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಕಾವೇರಿರುವ ಬಿಡದಿ ಭೂಸ್ವಾಧೀನದ ಹೋರಾಟಕ್ಕೆ ಮತ್ತಷ್ಟು ಬಲ ತಂದಿದೆ.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/i-will-protest-at-vidhana-soudha-former-pm-hd-deve-gowda-over-bidadi-township-project-gdp/articleshow-bl9ve2k"/>
        </item>
        <item>
            <title><![CDATA[Ramanagara: ರೈತರ ಕಣ್ಣೀರಿನ ಶಾಪ ತಟ್ಟದೆ ಬಿಡಲ್ಲ: ಡಿಕೆಶಿ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ]]></title>
            <link>https://kannada.asianetnews.com/karnataka-districts/chalavadi-narayanaswamy-slams-dk-shivakumar-over-bidadi-farmers-land-issue-gvd/articleshow-ctzfshm</link>
            <guid isPermaLink="true">https://kannada.asianetnews.com/karnataka-districts/chalavadi-narayanaswamy-slams-dk-shivakumar-over-bidadi-farmers-land-issue-gvd/articleshow-ctzfshm</guid>
            <pubDate>Thu, 18 Jun 2026 22:57:29 +0530</pubDate>
            <description><![CDATA[&lt;p&gt;Ramanagara ಜಿಲ್ಲೆಯ ಬಿಡದಿ ಭಾಗದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಛಲವಾದಿ ನಾರಾಯಣಸ್ವಾಮಿ, ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಭೂಮಿ ಕಸಿದುಕೊಳ್ಳಬೇಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kbp38hzpjqfqqa55asc6khkx,imgname-----------------------2025-12-05t072014.775-1764899440630.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜೂ.18): &lt;/strong&gt;ರೈತನಾದವನಿಗೆ ಮಾತ್ರ ಕೃಷಿಕರ ಕಷ್ಟ ಗೊತ್ತಾಗುತ್ತೆ. ಜಲ್ಲಿ ಕಲ್ಲು, ಬಂಡೆ ಹೊಡೆಯುವರಿಗೆಲ್ಲ ರೈತರ ಕಷ್ಟ ಗೊತ್ತಾಗಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು. ಬೈರಮಂಗಲ ವೃತ್ತದಲ್ಲಿ ನಡೆಯುತ್ತಿರುವ ರೈತರ ಚಳವಳಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣ್ಣೀರು ಹಾಕಿದ ರೈತರ ಶಾಪ ತಟ್ಟದೆ ಬಿಡುವುದಿಲ್ಲ.&lt;/p&gt;&lt;p&gt;ನಿಮ್ಮಿಂದ ಆ ಶಾಪ ತಡೆದುಕೊಳ್ಳಲು ಆಗಲ್ಲ. ಆದ್ದರಿಂದ ರೈತರ ಕೃಷಿ ಭೂಮಿಯನ್ನು ಬಿಟ್ಟು ಬಿಡಿ ಎಂದರು. ನಿಜವಾದ ರೖತನ ಮಗ ಈ ರೀತಿ ಕೃಷಿಕರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲಾರರು. ನೀವು ನಿಜವಾಗಿಯೂ ರೈತನ ಮಗಾನ ಎಂಬ ಅನುಮಾನ ಕಾಡುತ್ತಿದೆ. ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಐದು ತುಂಡು ಮಾಡಿದಿರಿ. ಆದರೂ ಜನರು ತಡೆದುಕೊಂಡಿದ್ದಾರೆ. ಈಗಿಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಇಷ್ಟೊಂದು ಹಠ ಏಕೆಂದು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಮುಗ್ಧ ರೈತರನ್ನು ಸಂಕಷ್ಟಕ್ಕೆ ದೂಡಬೇಡಿ&lt;/strong&gt;&lt;/h2&gt;&lt;p&gt;ಮುಖ್ಯಮಂತ್ರಿಗಳು ಕನಕಪುರ ಭಾಗದ ರೈತರ ಭೂಮಿಗೆ ಚಿನ್ನದ ಬೆಲೆ ಬರುತ್ತದೆ ಅಂತ ಹೇಳುತ್ತಾರೆ. ಅಲ್ಲಿ ಭೂಮಿ ಮಾರಬೇಡಿ ಎನ್ನುವ ನೀವು, ಇಲ್ಲೇಕೆ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳುತ್ತಿದ್ದೀರಾ. ಬಿಡದಿ ಭಾಗದ ರೈತರು ಭೂಮಿಯಲ್ಲಿ ಚಿನ್ನವನ್ನೇ ಬೆಳೆಯುತ್ತಿದ್ದಾರೆ. ದಯವಿಟ್ಟು ರೈತರನ್ನು ಬಿಟ್ಟುಬಿಡಿ ಎಂದು ಹೇಳಿದರು.&lt;/p&gt;&lt;p&gt;ರಿಯಲ್ ಎಸ್ಟೇಟ್ ಮಾಡಲು ಬೇರೆ ಮಾರ್ಗಗಳಿವೆ. ಅದಕ್ಕಾಗಿ ಮುಗ್ಧ ರೈತರನ್ನು ಸಂಕಷ್ಟಕ್ಕೆ ದೂಡಬೇಡಿ. ಈ ಯೋಜನೆಗೆ ಯಾವುದಾದರು ಒಂದೆರೆಡು ಕೇಸು ಬಿದ್ದರೆ ಎರಡು ಮೂರು ವರ್ಷ ಎಳೆದುಕೊಂಡು ಹೋಗುತ್ತದೆ. ಆ ವೇಳೆಗೆ ಬಿಜೆಪಿ - ಜೆಡಿಎಸ್ ನೇತೃತ್ವದ ಎನ್ ಡಿಎ ಸರ್ಕಾರ ಬಂದಿರುತ್ತದೆ. ಒಂದೂವರೆ ವರ್ಷದಲ್ಲಿ ಟೌನ್ ಶಿಪ್ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.&lt;/p&gt;&lt;p&gt;ಬಿಡದಿ ಭಾಗದಲ್ಲಿ ಅರ್ಧ ಎಕರೆ ಭೂಮಿ ಪಾಳು ಬಿದ್ದಿಲ್ಲ. ಇಲ್ಲಿರುವ ತೆಂಗು, ಅಡಿಕೆ, ಮಾವು, ಸಪೋಟ, ರೇಷ್ಮೆ, ಹೈನುಗಾರಿಕೆ ನೋಡಿದರೆ ರೖೆತರು ಮೖೆಗಳ್ಳರಲ್ಲ ಎಂಬುದು ಸಾಬೀತಾಗಿದೆ. ನೀರಾವರಿ ಭೂಮಿಯನ್ನು ಏಕೆ ಕಸಿದುಕೊಳ್ಳುತ್ತೀರಾ. ಚಿಕ್ಕಬಳ್ಳಾಪುರ ಆದ ಮೇಲೆ ಬೇಕಾದಷ್ಟು ಬರಡು ಭೂಮಿ ಇದೆ. ಅಲ್ಲಿ ಬೇಕಾದರೆ ನಾನೇ 15 ಸಾವಿರ ಭೂಮಿ ಕೊಡಿಸುತ್ತೇನೆ ಬನ್ನಿ ಎಂದು ಛಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chalavadi-narayanaswamy-slams-dk-shivakumar-over-bidadi-farmers-land-issue-gvd/articleshow-ctzfshm"/>
        </item>
        <item>
            <title><![CDATA[ಚನ್ನಪಟ್ಟಣದ ಪುರುಷ ತಹಸೀಲ್ದಾರರಿಗೆ ಅಸಹಜ ಲೈಂಗಿಕ ದೌರ್ಜನ್ಯ; ಮೈಸೂರಿನ ಮೂವರಿಂದ ನಡೆದೇಹೋಯ್ತು ವಿಕೃತಿ!]]></title>
            <link>https://kannada.asianetnews.com/karnataka-districts/bengaluru-south-district-channapatna-tahsildar-physical-harassment-life-threat-attempt-case-anush-arrest/articleshow-ex76evb</link>
            <guid isPermaLink="true">https://kannada.asianetnews.com/karnataka-districts/bengaluru-south-district-channapatna-tahsildar-physical-harassment-life-threat-attempt-case-anush-arrest/articleshow-ex76evb</guid>
            <pubDate>Tue, 07 Jul 2026 22:58:09 +0530</pubDate>
            <description><![CDATA[ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರ ಮೇಲೆ ಅವರ ಸರ್ಕಾರಿ ನಿವಾಸದಲ್ಲೇ ಲೈಂಗಿಕ ದೌರ್ಜನ್ಯ, ದರೋಡೆ ಮತ್ತು ಕೊಲೆ ಯತ್ನ ನಡೆದಿದೆ. ಫೇಸ್&zwnj;ಬುಕ್ ಮೂಲಕ ಪರಿಚಯವಾದ ವ್ಯಕ್ತಿಗಳು ಜ್ಯೂಸ್&zwnj;ನಲ್ಲಿ ಮಾತ್ರೆ ಬೆರೆಸಿ ಈ ಕೃತ್ಯ ಎಸಗಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwysw65hqw07ytprv13xhkqm,imgname-channapatna-tahsildar-1783445199025.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು ದಕ್ಷಿಣ/ರಾಮನಗರ (ಜು.07): ಜಿ&lt;/strong&gt;ಲ್ಲೆಯ ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ಲೈಂಗಿಕ ಕಿರುಕುಳ, ದರೋಡೆ ಹಾಗೂ ಕೊಲೆ ಯತ್ನಕ್ಕೆ ಒಳಗಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೇಸ್&zwnj;ಬುಕ್ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ತಹಶೀಲ್ದಾರ್ ಅವರ ಸರ್ಕಾರಿ ನಿವಾಸದಲ್ಲೇ ಈ ವಿಕೃತಿ ಎಸೆಗಿದ್ದಾನೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.&lt;/p&gt;&lt;h2&gt;&lt;strong&gt;ಪರಿಚಯವಾಗಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಮೈಸೂರು ಮೂಲದ ಅನುಶ್ ಎಂಬಾತನಿಗೆ ತಹಶೀಲ್ದಾರ್ ಗಿರೀಶ್ ಅವರ ಪರಿಚಯ ಫೇಸ್&zwnj;ಬುಕ್ ಮೂಲಕವಾಗಿತ್ತು. ಇದೇ ಸ್ನೇಹವನ್ನು ಬಳಸಿಕೊಂಡ ಅನುಶ್, ಕಳೆದ ಜೂನ್ 28ರಂದು ತನ್ನ ಸ್ನೇಹಿತರಾದ ಶೋಭರಾಜನ್ ಮತ್ತು ನವೀನ್ ಎಂಬುವವರ ಜೊತೆ ಚನ್ನಪಟ್ಟಣದಲ್ಲಿರುವ ತಹಶೀಲ್ದಾರ್ ಅವರ ಸರ್ಕಾರಿ ನಿವಾಸಕ್ಕೆ ಬಂದಿದ್ದನು.&lt;/p&gt;&lt;h2&gt;&lt;strong&gt;ಜೂಸ್&zwnj;ನಲ್ಲಿ ಮಾತ್ರೆ ಬೆರೆಸಿ ದೌರ್ಜನ್ಯ:&lt;/strong&gt;&lt;/h2&gt;&lt;p&gt;ದೂರಿನ ಪ್ರಕಾರ, ಅಂದು ರಾತ್ರಿ ತಹಶೀಲ್ದಾರ್ ನಿವಾಸದಲ್ಲೇ ಮದ್ಯಪಾನ ಮಾಡಿದ್ದ ಆರೋಪಿಗಳು, ನಂತರ ಗಿರೀಶ್ ಅವರಿಗೆ ನೀಡಿದ್ದ ಜೂಸ್&zwnj;ನಲ್ಲಿ ಮಂಕುಬೂದಿ ಅಥವಾ ಪ್ರಜ್ಞೆ ತಪ್ಪಿಸುವ ಮಾತ್ರೆಗಳನ್ನು ಬೆರೆಸಿದ್ದರು. ಜೂಸ್ ಕುಡಿದು ಗಿರೀಶ್ ಪ್ರಜ್ಞೆ ತಪ್ಪುತ್ತಿದ್ದಂತೆಯೇ, ಆರೋಪಿಗಳು ತಮ್ಮ ಅಸಲಿ ರೂಪ ತೋರಿಸಿದ್ದಾರೆ. ಗಿರೀಶ್ ಮೈಮೇಲಿದ್ದ ಬಟ್ಟೆಗಳನ್ನು ಬಿಚ್ಚಿ ವಿಕೃತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅಸಹಜ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.&lt;/p&gt;&lt;h2&gt;&lt;strong&gt;ಚಿನ್ನಾಭರಣ ದರೋಡೆ ಮತ್ತು 10 ಲಕ್ಷಕ್ಕೆ ಬೇಡಿಕೆ:&lt;/strong&gt;&lt;/h2&gt;&lt;p&gt;ಕಿಡಿಗೇಡಿಗಳು ತಹಶೀಲ್ದಾರ್ ಮೈಮೇಲಿದ್ದ ಚಿನ್ನದ ಸರ ಮತ್ತು ಉಂಗುರಗಳನ್ನು ಕಸಿದುಕೊಂಡಿದ್ದಾರೆ. ಅಷ್ಟಕ್ಕೇ ನಿಲ್ಲದ ಅವರು, 10 ಲಕ್ಷ ರೂಪಾಯಿ ಹಣ ನೀಡುವಂತೆ ತಹಶೀಲ್ದಾರ್ ಅವರಿಗೆ ಬೆದರಿಕೆ ಹಾಕಿದ್ದಾರೆ. ಗಿರೀಶ್ ಹಣ ನೀಡಲು ನಿರಾಕರಿಸಿದಾಗ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎನ್ನಲಾಗಿದೆ. ಜೂನ್ 29ರಂದು ನಡೆದ ಈ ಕೃತ್ಯದಿಂದ ತಹಶೀಲ್ದಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ಕ್ರಮ:&lt;/strong&gt;&lt;/h2&gt;&lt;p&gt;ಈ ಭೀಕರ ಘಟನೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಎ1 ಆರೋಪಿ ಅನುಶ್&zwnj;ನನ್ನು ಈಗಾಗಲೇ ಬಂಧಿಸಿ ಜೈಲಿಗಟ್ಟಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಅವರ ನಿವಾಸದಲ್ಲೇ ಇಂತಹ ದೌರ್ಜನ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bengaluru-south-district-channapatna-tahsildar-physical-harassment-life-threat-attempt-case-anush-arrest/articleshow-ex76evb"/>
        </item>
        <item>
            <title><![CDATA[Bidadi township: ಬಿಡದಿ ಟೌನ್‌ಶಿಪ್‌ ರೈತರಿಗೆ ಬಂಪರ್ ಪರಿಹಾರ: ಪ್ರತಿ ಎಕರೆಗೆ ₹2.30 ಕೋಟಿ ಚೆಕ್ ವಿತರಣೆ!]]></title>
            <link>https://kannada.asianetnews.com/gallery/karnataka-districts/bengaluru-south-bidadi-township-land-compensation-farmers-2-crore-per-acre-mla-hc-balakrishna-gfbblv8</link>
            <guid isPermaLink="true">https://kannada.asianetnews.com/gallery/karnataka-districts/bengaluru-south-bidadi-township-land-compensation-farmers-2-crore-per-acre-mla-hc-balakrishna-gfbblv8</guid>
            <pubDate>Fri, 19 Jun 2026 20:17:24 +0530</pubDate>
            <description><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಭೂಮಿ ನೀಡಿದ ರೈತರಿಗೆ ಸರ್ಕಾರವು ಪರಿಹಾರ ಚೆಕ್ ವಿತರಣೆ ಆರಂಭಿಸಿದೆ. ಪ್ರತಿ ಎಕರೆಗೆ 2.30 ಕೋಟಿ ರೂ. ಹಾಗೂ ಬೆಳೆಗಳಿಗೆ ಪ್ರತ್ಯೇಕ ಪರಿಹಾರ ನೀಡಲಾಗುತ್ತಿದ್ದು, ಶಾಸಕ ಬಾಲಕೃಷ್ಣ ಅವರು ರೈತರಿಗೆ ಹಣ ಖಾತೆಗೆ ಜಮೆಯಾಗುವ ಭರವಸೆ ನೀಡಿದ್ದಾರೆ. ಈ ಗ್ರಾಮಗಳ ಹಣ ವಿತರಣೆ ಆಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvg50n2p48dk3531dkh69v7r,imgname-bidadi-township-land-compensation-1781879821398.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಭೂಮಿ ನೀಡಿದ ರೈತರಿಗೆ ಸರ್ಕಾರವು ಪರಿಹಾರ ಚೆಕ್ ವಿತರಣೆ ಆರಂಭಿಸಿದೆ. ಪ್ರತಿ ಎಕರೆಗೆ 2.30 ಕೋಟಿ ರೂ. ಹಾಗೂ ಬೆಳೆಗಳಿಗೆ ಪ್ರತ್ಯೇಕ ಪರಿಹಾರ ನೀಡಲಾಗುತ್ತಿದ್ದು, ಶಾಸಕ ಬಾಲಕೃಷ್ಣ ಅವರು ರೈತರಿಗೆ ಹಣ ಖಾತೆಗೆ ಜಮೆಯಾಗುವ ಭರವಸೆ ನೀಡಿದ್ದಾರೆ. ಈ ಗ್ರಾಮಗಳ ಹಣ ವಿತರಣೆ ಆಗಿದೆ.&lt;/p&gt;&lt;img&gt;&lt;p&gt;&lt;strong&gt;ರಾಮನಗರ (ಜೂ.19): ರಾ&lt;/strong&gt;ಜ್ಯದ ಬಹುಚರ್ಚಿತ ಬಿಡದಿ ಟೌನ್&zwnj;ಶಿಪ್ (Bidadi Township) ಯೋಜನೆಯ ಜಟಾಪಟಿಗಳ ನಡುವೆಯೇ, ಭೂಮಿ ಕಳೆದುಕೊಳ್ಳುವ ರೈತರಿಗೆ ಭೂ ಪರಿಹಾರದ ಚೆಕ್ ವಿತರಿಸುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBDA) ವತಿಯಿಂದ ಯೋಜನೆಯ ಪಾಲುದಾರರು ಹಾಗೂ ಭೂಮಿ ನೀಡಲು ಸಮ್ಮತಿಸಿರುವ ರೈತರಿಗೆ ಶನಿವಾರ ಸಾಂಕೇತಿಕವಾಗಿ ಪರಿಹಾರದ ಚೆಕ್&zwnj;ಗಳನ್ನು ವಿತರಿಸಲಾಯಿತು. ಒಂದು ಎಕರೆಗೆ 2.30 ಕೋಟಿ ಪರಿಹಾರವನ್ನು ನೀಡಿದೆ.&lt;/p&gt;&lt;img&gt;&lt;p&gt;ರಾಮನಗರದ ಕಂದಾಯ ಭವನದಲ್ಲಿರುವ ಜಿಬಿಡಿಎ (GBDA) ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹಾಗೂ ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜು ಅವರು ಫಲಾನುಭವಿ ರೈತರಿಗೆ ಚೆಕ್ ಹಸ್ತಾಂತರಿಸಿದರು. ಮೊದಲ ಹಂತದಲ್ಲಿ ಯೋಜನೆಗೆ ಒಪ್ಪಿಗೆ ನೀಡಿರುವ ಕೆಂಪಯ್ಯನಪಾಳ್ಯ ಗ್ರಾಮದ 7 ಮಂದಿ ಭೂ ಮಾಲೀಕರಿಗೆ ಸಾಂಕೇತಿಕವಾಗಿ ಚೆಕ್ ವಿತರಿಸಲಾಯಿತು.&lt;/p&gt;&lt;img&gt;&lt;p&gt;&lt;strong&gt;ಎಕರೆಗೆ 2.30 ಕೋಟಿ ರೂಪಾಯಿ ಪರಿಹಾರ!&lt;/strong&gt;&lt;/p&gt;&lt;p&gt;ರೈತರಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವು ಭಾರಿ ಕುತೂಹಲ ಮೂಡಿಸಿದೆ. ಅಂತಿಮ ಅಧಿಸೂಚನೆಗೆ ಒಳಪಟ್ಟಿರುವ ಗ್ರಾಮಗಳಲ್ಲಿ ಪ್ರತಿ ಎಕರೆ ಜಮೀನಿಗೆ ಬರೋಬ್ಬರಿ 2 ಕೋಟಿ 30 ಲಕ್ಷದ 7 ಸಾವಿರ ರೂಪಾಯಿ ಪರಿಹಾರ ಹಣವನ್ನು ನಿಗದಿಪಡಿಸಲಾಗಿದೆ. ಕೇವಲ ಭೂಮಿಗೆ ಮಾತ್ರವಲ್ಲದೆ, ಜಮೀನಿನಲ್ಲಿ ಬೆಳೆದ ಬೆಳೆಗಳಿಗೂ ಪ್ರತ್ಯೇಕ ಮತ್ತು ವೈಜ್ಞಾನಿಕವಾಗಿ ಹೆಚ್ಚಿನ ಪರಿಹಾರವನ್ನು ನೀಡಲಾಗುತ್ತಿದೆ.&lt;/p&gt;&lt;img&gt;&lt;p&gt;&lt;strong&gt;ಬೆಳೆಗಳ ಪರಿಹಾರದ ವಿವರ ಇಂತಿದೆ:&lt;/strong&gt;&lt;/p&gt;&lt;ul&gt; &lt;li&gt;ತೆಂಗಿನ ಮರ (ಒಂದಕ್ಕೆ): ₹40,446&lt;/li&gt; &lt;li&gt;ಮಾವಿನ ಗಿಡ (ಒಂದಕ್ಕೆ): ₹62,000&lt;/li&gt; &lt;li&gt;ಅಡಿಕೆ ಮರ (ಒಂದಕ್ಕೆ): ₹7,440&lt;/li&gt; &lt;li&gt;ಬಾಳೆ (ಪ್ರತಿ ಎಕರೆಗೆ): ₹10.86 ಲಕ್ಷ&lt;/li&gt; &lt;li&gt;ರೇಷ್ಮೆ (ಪ್ರತಿ ಎಕರೆಗೆ): ₹14 ಲಕ್ಷ&lt;/li&gt; &lt;li&gt;ಹಲಸು (ಪ್ರತಿ ಎಕರೆಗೆ): ₹42,750&lt;/li&gt; &lt;li&gt;ಹುಣಸೆ (ಪ್ರತಿ ಎಕರೆಗೆ): ₹53,310&amp;nbsp;&amp;nbsp;&lt;/li&gt;&lt;/ul&gt;&lt;p&gt;ವಿಶೇಷವೆಂದರೆ, ಕೇವಲ ಒಂದು ಗುಂಟೆ ಜಮೀನು ಕಳೆದುಕೊಳ್ಳುವ ಸಣ್ಣ ರೈತರಿಗೂ ನ್ಯಾಯ ಒದಗಿಸಲು ಜಿಬಿಡಿಎ ಮುಂದಾಗಿದೆ. ಅಂತಹ ರೈತರಿಗೆ 5 ಲಕ್ಷ ರೂಪಾಯಿಗಳ ಇಡಿಗಂಟು ಪರಿಹಾರ ನೀಡಲು ನಿರ್ಧರಿಸಲಾಗಿದೆ.&lt;/p&gt;&lt;img&gt;&lt;p&gt;ಶಾಸಕ ಬಾಲಕೃಷ್ಣ ಅವರ ಸವಾಲು:&lt;/p&gt;&lt;p&gt;ಚೆಕ್ ವಿತರಿಸಿ ಮಾತನಾಡಿದ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ವಿರೋಧ ಪಕ್ಷಗಳ ಟೀಕೆಗೆ ಕಡಕ್ ಉತ್ತರ ನೀಡಿದ್ದಾರೆ. &quot;ಯೋಜನೆಗೆ ಒಪ್ಪಿಗೆ ನೀಡಿ ನೋಟಿಸ್ ಪಡೆದಿರುವ ರೈತರಿಗೆ ಒಂದು ವಾರದೊಳಗೆ ಅವರ ಖಾತೆಗೆ ಹಣ ಸಂದಾಯವಾಗಲಿದೆ. ಒಂದು ವೇಳೆ ರೈತರಿಗೆ ಹಣ ಕೊಡಿಸಲು ಸಾಧ್ಯವಾಗದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ&quot; ಎಂದು ಸವಾಲು ಹಾಕಿದ್ದಾರೆ. ರೈತರಿಗೆ ಯಾವುದೇ ಆತಂಕ ಬೇಡ, ಸರ್ಕಾರ ಅವರ ಬೆನ್ನಿಗಿದೆ ಎಂದು ಅವರು ಭರವಸೆ ನೀಡಿದರು.&lt;/p&gt;&lt;img&gt;&lt;p&gt;&lt;strong&gt;ಯಾವ ಗ್ರಾಮಗಳಿಗೆ ಮೊದಲ ಹಂತದ ಪರಿಹಾರ?&lt;/strong&gt;&lt;/p&gt;&lt;p&gt;ಸದ್ಯ ಟೌನ್&zwnj;ಶಿಪ್ ಯೋಜನೆಯ ಒಟ್ಟು 9 ಗ್ರಾಮಗಳ ಪೈಕಿ ಮೊದಲ ಹಂತದಲ್ಲಿ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳ ಒಟ್ಟು 519 ಎಕರೆ ಪ್ರದೇಶಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ನಾಳೆಯಿಂದ ಅಂತಿಮ ಅಧಿಸೂಚನೆಗೆ ಒಳಪಟ್ಟಿರುವ ಈ ಗ್ರಾಮಗಳ ಉಳಿದ ರೈತರಿಗೂ ಹಂತ ಹಂತವಾಗಿ ಪರಿಹಾರ ನೀಡಲು ಜಿಬಿಡಿಎ ಸರ್ವ ಸಿದ್ಧತೆ ಮಾಡಿಕೊಂಡಿದೆ. ಟೌನ್&zwnj;ಶಿಪ್ ವಿರೋಧದ ನಡುವೆಯೂ ರೈತರು ಸ್ವಯಂಪ್ರೇರಿತರಾಗಿ ಭೂಮಿ ನೀಡಲು ಮುಂದೆ ಬರುತ್ತಿರುವುದು ಮತ್ತು ಸರ್ಕಾರ ಆಕರ್ಷಕ ಪರಿಹಾರ ನೀಡುತ್ತಿರುವುದು ಯೋಜನೆಯ ವೇಗವನ್ನು ಹೆಚ್ಚಿಸಿದೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bengaluru-south-bidadi-township-land-compensation-farmers-2-crore-per-acre-mla-hc-balakrishna-gfbblv8"/>
        </item>
        <item>
            <title><![CDATA[Bidadi Township: ಸಿಎಂ ಡಿಕೆಶಿಗೆ ಒಂದು ಕುರ್ಚಿ ಮೀಸಲಿಟ್ಟು ಕಾದು ಕುಳಿತ ಹೆಚ್‌ಡಿಕೆ! ಮಳೆ ನಡುವೆ ಭಾಷಣ ಕೇಳುತ್ತ ನಿಂತ ರೈತರು!]]></title>
            <link>https://kannada.asianetnews.com/politics/bidadi-township-dipsute-hd-kumaraswamy-slams-cm-dk-shivakumar-at-byramangala/articleshow-h8cumgd</link>
            <guid isPermaLink="true">https://kannada.asianetnews.com/politics/bidadi-township-dipsute-hd-kumaraswamy-slams-cm-dk-shivakumar-at-byramangala/articleshow-h8cumgd</guid>
            <pubDate>Sat, 27 Jun 2026 15:12:37 +0530</pubDate>
            <description><![CDATA[&lt;p&gt;ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್&zwnj;ಶಿಪ್&zwnj;ಗಾಗಿ ರೈತರ ಭೂಸ್ವಾಧೀನವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬಹಿರಂಗ ಚರ್ಚೆಗೆ ಸವಾಲು ಹಾಕಿ, ಅವರಿಗಾಗಿ ಖಾಲಿ ಕುರ್ಚಿ ಇಟ್ಟು ಕಾದರು. ರೈತರ ಭೂಮಿ ಉಳಿಸುವ ಹೋರಾಟವನ್ನು ಮುಂದುವರೆಸುವುದಾಗಿ ಅವರು ಭರವಸೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw477h9pj302255109xvaxrb,imgname----------------------40--1782553232694.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಮನಗರ: ಬಿಡದಿ ಟೌನ್&zwnj;ಶಿಪ್&zwnj;ಗಾಗಿ ರೈತರ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್&zwnj;.ಡಿ. ಕುಮಾರಸ್ವಾಮಿ(HD Kumaraswamy) ಅವರು, ಈ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರೈತರ ಸಮ್ಮುಖದಲ್ಲೇ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕಿದ್ದಾರೆ. ಈ ಹಿನ್ನೆಲೆ ಇಂದು ಭೈರಮಂಗಲದಲ್ಲಿ ಸಿಎಂ ಆಗಮನಕ್ಕಾಗಿ ಪಕ್ಕದಲ್ಲೇ ಒಂದು ಕುರ್ಚಿ ಮೀಸಲಿಟ್ಟು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾಯುತ್ತಾ ಸ್ಥಳೀಯ ರೈತರು ಹಾಗೂ ವಿವಿಧ ವರ್ಗದ ಜನರ ಅಹವಾಲು ಆಲಿಸಿದರು.&lt;/p&gt;&lt;p&gt;ಈ ವೇಳೆ ಭಾಷಣ ಮಾಡಿದ ಕುಮಾರಸ್ವಾಮಿಯವರು, ನಾನು ಹುಟ್ಟಿದ್ದು ಹಾಸನದಲ್ಲಿ. ಆದರೆ ಇಲ್ಲಿನ ತಾಯಂದಿರು, ಸಹೋದರಿಯರು ರಾಜಕೀಯ ಜನ್ಮ ಕೊಟ್ಟಿದ್ದೀರಾ.. 2004ರ ಚುನಾವಣೆಯಲ್ಲೇ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಘೋಷಣೆ ಕೂಗುತ್ತಿದ್ದರು. ಆದರೆ ನಾನು ಅಧಿಕಾರಕ್ಕಾಗಿ ಸ್ಪರ್ಧಿಸಿಲ್ಲ ಎಂದು ಹೇಳಿದ್ದೆ. ಈ ಭಾಗದ ಜನ ಕಣ್ಣೀರು ಹಾಕದೇ ನೆಮ್ಮದಿಯಿಂದ ಬದುಕಬೇಕು ಎಂಬುದೇ ನನ್ನ ಗುರಿಯಾಗಿತ್ತು. ಮುಂದೆ ಕಾಂಗ್ರೆಸ್ ಜೆಡಿಎಸ್ ಸರ್ಕಾರ ರಚನೆ ಆಯ್ತು. ಅಲ್ಲಿನ ಕೆಲವು ಘಟನಾವಳಿಗಳಿಂದ ಮತ್ತೆ ಬಿಜೆಪಿ ಜೆಡಿಎಸ್ ಸರ್ಕಾರ ರಚನೆ ಆಯ್ತು. ಬಿಜೆಪಿ ನಾಯಕರ ಒತ್ತಡ ಹಾಗೂ ನಮ್ಮ ಶಾಸಕರ ಒತ್ತಡದಿಂದ ನಾನು ಮುಖ್ಯಮಂತ್ರಿ ಆಗಬೇಕಾಯ್ತು. ಈಗ ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ಮಂತ್ರಿ ಆಗಿದ್ದೇನೆ ಎಂದರು.&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್&zwnj; ಯೋಜನೆ ಕುರಿತು ಕಿಡಿಕಾರಿದ ಅವರು,ನಾನು ಬೆಂಗಳೂರಿಗೆ ಬಂದಾಗ ಪ್ರತಿದಿನ ನೂರಾರು ಜನ ನಮ್ಮ ಮನೆ ಬಳಿ ಬರುತ್ತಾರೆ. ಅನೇಕ ಜನರು ಕೆಲಸ ಕೇಳಿಕೊಂಡು ಬಂದಿರುತ್ತಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಯಾರಿಗೂ ಪರ್ಮನೆಂಟ್ ಕೆಲಸ ಕೊಡುತ್ತಿಲ್ಲ. ಒಂದೆರಡು ವರ್ಷ ಔಟ್ ಸೋರ್ಸಿಂಗ್ ಅಂತ ದುಡಿಸಿಕೊಂಡು ನಂತರ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ. ಅಂತಹ ಕಾರ್ಖಾನೆಗಳಿಗೆ ನಾವು ಭೂಮಿ ಕೊಡಬೇಕಾ? ಎಂದು ಪ್ರಶ್ನಿಸಿದರು,&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್ ನನ್ನ ಕನಸಿನ ಕೂಸು ಎಂದು ಹೇಳುವವರು ಒಂದು ಸತ್ಯ ತಿಳಿದುಕೊಳ್ಳಲಿ. ನಾನು ಬಯಸಿದ್ದರೆ ಆಗಲೇ ನೂರಾರು ಎಕರೆ ಭೂಮಿ ಪಡೆದು ರಿಯಲ್&zwnj; ಎಸ್ಟೇಟ್ ಮಾಡಬಹುದಿತ್ತು. ಆದರೆ ರೈತರ ಬದುಕಿಗೆ ಧಕ್ಕೆ ತರುವ ಕೆಲಸ ನಾನು ಮಾಡಿಲ್ಲ ಎಂದು ಹೇಳಿದರು.&lt;/p&gt;&lt;p&gt;'ರೆಡ್&zwnj; ಝೋನ್' ವಿವಾದ ಪ್ರಸ್ತಾಪಿಸಿದ ಕುಮಾರಸ್ವಾಮಿ, ರೆಡ್&zwnj;, ಗ್ರೀನ್&zwnj;, ಬ್ಲೂ, ಯೆಲ್ಲೋ ಝೋನ್&zwnj;ಗಳ ಬಗ್ಗೆ ನನಗಿಂತ ಈ ರಾಜ್ಯದ ಮುಖ್ಯಮಂತ್ರಿಗೆ ಹೆಚ್ಚು ಗೊತ್ತಿರಬೇಕು. ನನ್ನ ವಿರುದ್ಧ ಧಿಕ್ಕಾರ ಕೂಗಿಸುವ ಪ್ರಯತ್ನ ನಡೆಯುತ್ತಿದೆ. ನೈಸ್&zwnj; ರಸ್ತೆ ವಿಚಾರದಲ್ಲಿ ಏನಾಯಿತು ಎಂಬುದು ಜನರಿಗೆ ಗೊತ್ತಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಅಗತ್ಯವೇನು? ಎಂದು ಪ್ರಶ್ನಿಸಿದರು. ಇದೇ ವೇಳೆ ಬೆಂಗಳೂರು ಅಭಿವೃದ್ಧಿ ಕುರಿತು ಸರ್ಕಾರವನ್ನು ಟೀಕಿಸಿದ ಅವರು, ಬೆಂಗಳೂರು ವಿಶ್ವಮಟ್ಟಕ್ಕೆ ಬೆಳೆದಿದೆ ಎನ್ನುತ್ತಾರೆ. ಆದರೆ ಒಂದೇ ಒಂದು ರಸ್ತೆ ಗುಂಡಿಯನ್ನೂ ಮುಚ್ಚಿಲ್ಲ. ಗುಂಡಿ ಮುಚ್ಚುವ ಹೆಸರಿನಲ್ಲಿ 1200 ಕೋಟಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.&lt;/p&gt;&lt;p&gt;ಕುಮಾರಸ್ವಾಮಿ ಭಾಷಣದ ಮಧ್ಯೆ ಮಳೆ ಸುರಿಯಲು ಆರಂಭವಾದರೂ ಜನರು ಸ್ಥಳ ಬಿಟ್ಟು ಕದಲಲಿಲ್ಲ. ಇದನ್ನು ಉಲ್ಲೇಖಿಸಿದ ಅವರು, 'ಮಳೆ ಬಂದರೆ ಏನೂ ಆಗಲ್ಲ, ಬೇಕಾದರೆ ನಾನು ಅಲ್ಲಿಗೂ ಬಂದು ಭಾಷಣ ಮಾಡುತ್ತೇನೆ. ಇದು ನಿಮ್ಮ ಹೋರಾಟಕ್ಕೆ ಶುಭ ಸೂಚನೆ. ವರುಣದೇವನೇ ನಿಮ್ಮ ಪರ ನಿಂತಿದ್ದಾನೆ' ಎಂದು ಹೇಳಿದರು. ಮಳೆಯಲ್ಲೇ ನಿಂತು ಭಾಷಣ ಆಲಿಸಿದ ರೈತರನ್ನು ಅಭಿನಂದಿಸಿದ ಅವರು, ರೈತರ ಭೂಮಿ ಉಳಿಸುವ ಹೋರಾಟ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.&lt;/p&gt;]]></content:encoded>
            <category>ramanagara</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/bidadi-township-dipsute-hd-kumaraswamy-slams-cm-dk-shivakumar-at-byramangala/articleshow-h8cumgd"/>
        </item>
        <item>
            <title><![CDATA[ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ]]></title>
            <link>https://kannada.asianetnews.com/karnataka-districts/bidadi-land-acquisition-farmers-protest-byramangala-gvd-videoshow-i6t2xrp</link>
            <guid isPermaLink="true">https://kannada.asianetnews.com/karnataka-districts/bidadi-land-acquisition-farmers-protest-byramangala-gvd-videoshow-i6t2xrp</guid>
            <pubDate>Wed, 15 Jul 2026 18:28:38 +0530</pubDate>
            <description><![CDATA[&lt;p&gt;Bidadi Farmers Protest: ಭೂ ಸಮೀಕ್ಷೆಗೆ ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ಹೊರಹಾಕಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.&lt;/p&gt;]]></description>
            <media:content url="https://geo.dailymotion.com/player/x1tbu.html?video=xapf9uu" medium="video" height="768" width="1024"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜು.15): &lt;/strong&gt;ಬಿಡದಿ ಸಮೀಪದ ಬೈರಮಂಗಲ ಗ್ರಾಮದಲ್ಲಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭೂ ಸಮೀಕ್ಷೆಗೆ ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ಹೊರಹಾಕಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಭೂಸ್ವಾಧೀನಕ್ಕಾಗಿ ಅಧಿಕಾರಿಗಳು ಸರ್ವೇ ನಡೆಸಲು ಮುಂದಾಗುತ್ತಿದ್ದಂತೆಯೇ ನೂರಾರು ರೈತರು ಅವರನ್ನು ತಡೆದು ಪ್ರತಿಭಟನೆ ನಡೆಸಿದರು. ಕೆಲ ರೈತ ಮಹಿಳೆಯರು ಪೊರಕೆ ಹಿಡಿದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರೆ, ಪ್ರತಿಭಟನಾಕಾರರು ಅಧಿಕಾರಿಗಳ ವಾಹನಗಳನ್ನು ಮುತ್ತಿಗೆ ಹಾಕಿದರು. ಈ ವೇಳೆ ಭೂ ಸಮೀಕ್ಷೆಗೆ ಬಂದ ಕೆಲವು ವಾಹನಗಳ ಗಾಜುಗಳು ಜಖಂಗೊಂಡ ಘಟನೆ ಕೂಡ ನಡೆಯಿತು.&lt;/p&gt;&lt;p&gt;ಸರ್ಕಾರ ಯಾವುದೇ ಕಾರಣಕ್ಕೂ ತಮ್ಮ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. &quot;ಬಲವಂತವಾಗಿ ಸರ್ವೇ ನಡೆಸಲು ಮುಂದಾದರೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ&quot; ಎಂದು ಎಚ್ಚರಿಕೆ ನೀಡಿದ ಕೆಲ ರೈತರು ಕ್ರಿಮಿನಾಶಕದ ಬಾಟಲಿಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ರೈತರೊಂದಿಗೆ ನೇರ ಮಾತುಕತೆ ನಡೆಸಿದ ಅವರು, ಕಾನೂನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದರು. ಆದರೆ, ರೈತರು ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. &quot;ನಮ್ಮ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳಲು ಯತ್ನಿಸಿದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ&quot; ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಇದೇ ವೇಳೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿಡಿಯೋ ಸಂದೇಶದ ಮೂಲಕ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಿದರು. ಶಾಂತಿಯುತ ಹೋರಾಟ ನಡೆಸುವಂತೆ ಮನವಿ ಮಾಡಿದ ಅವರು, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ಸರ್ಕಾರ ಮತ್ತು ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಭೂಸ್ವಾಧೀನ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ, ಬೈರಮಂಗಲದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bidadi-land-acquisition-farmers-protest-byramangala-gvd-videoshow-i6t2xrp"/>
        </item>
        <item>
            <title><![CDATA[ಸಿಎಂ ಗೂಟ ಹೊಡೆದುಕೊಂಡು ಇರಲ್ಲ: ಅಧಿಕಾರಿಗಳಿಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಎಚ್ಚರಿಕೆ]]></title>
            <link>https://kannada.asianetnews.com/karnataka-districts/ramanagar-jds-leader-nikhil-kumaraswamy-protests-alleging-irregularities-in-voter-list-revision-sir-mrq/articleshow-m3e9mm3</link>
            <guid isPermaLink="true">https://kannada.asianetnews.com/karnataka-districts/ramanagar-jds-leader-nikhil-kumaraswamy-protests-alleging-irregularities-in-voter-list-revision-sir-mrq/articleshow-m3e9mm3</guid>
            <pubDate>Sat, 04 Jul 2026 07:07:09 +0530</pubDate>
            <description><![CDATA[ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೆಡಿಎಸ್-ಬಿಜೆಪಿ ನೇತೃತ್ವದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿಗಳು ಶಾಶ್ವತರಲ್ಲ, ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು ಎಂದು ಎಚ್ಚರಿಸಿದ ಅವರು, ಈ ಅಕ್ರಮದ ಬಗ್ಗೆ ದೆಹಲಿಯಲ್ಲಿಯೂ ದೂರು ನೀಡುವುದಾಗಿ ತಿಳಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kwnc3zphermrw74n8pvnqhnr,imgname-nikhil-kumaraswamy-1783128784593.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಮನಗರ: ಸರ್ಕಾರ ಬರುತ್ತೆ ಹೋಗುತ್ತೆ, ಮುಖ್ಯಮಂತ್ರಿಗಳೂ ಬರ್ತಾರೆ ಹೋಗ್ತಾರೆ. ನಿಮ್ಮ ಮುಖ್ಯಮಂತ್ರಿ ಗೂಟ ಹೊಡೆದುಕೊಂಡು ಇರಲ್ಲ. ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದರು.&lt;/p&gt;&lt;p&gt;ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್&zwnj;ಐಆರ್ )ಯಲ್ಲಿ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗಾಳಿಗೆ ತೂರಿ ಅಕ್ರಮ ಎಸಗುತ್ತಿದೆ ಎಂದು ಆರೋಪಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.&lt;/p&gt;&lt;p&gt;ಎಸ್ ಐಆರ್ ಪ್ರಕ್ರಿಯೆಯ ನಿಯಮ ಉಲ್ಲಂಘಿಸಿದ ಬಿಎಲ್&zwnj;ಒಗಳಿಗೆ ಕೇವಲ ನೋಟಿಸ್ ನೀಡಿ ನಾಟಕ ಮಾಡುತ್ತಿದ್ದಾರೆ. ಕೂಡಲೇ ಅವರೆಲ್ಲರನ್ನು ಅಮಾನತು ಮಾಡಬೇಕು. ರಾಮನಗರದ 35 ಸೂಕ್ಷ್ಮ ಮತಗಟ್ಟೆಗಳ ಎಸ್&zwnj;ಐಆರ್ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವೇ ಖುದ್ದಾಗಿ ಬಂದು ನಡೆಸಬೇಕು. ಅಕ್ರಮದ ಎಲ್ಲಾ ವೀಡಿಯೋ ಸಾಕ್ಷ್ಯಗಳನ್ನು ಪೆನ್&zwnj;ಡ್ರೈವ್&zwnj;ನಲ್ಲಿ ಹಾಕಿ ರಾಜ್ಯ ಚುನಾವಣಾ ಆಯೋಗ ಹಾಗೂ ದೆಹಲಿಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗುವುದು. ಅಗತ್ಯಬಿದ್ದರೆ ಪಶ್ಚಿಮ ಬಂಗಾಳದಂತೆ ಸೆಂಟ್ರಲ್ ಫೋರ್ಸ್ ತಂದು ಎಸ್&zwnj;ಐಆರ್ ನಡೆಸುವಂತೆ ಒತ್ತಾಯಿಸುತ್ತೇವೆ ಎಂದರು.&lt;/p&gt;&lt;h2&gt;&lt;strong&gt;ದೆಹಲಿಯಲ್ಲಿ ಇಂಗ್ಲಿಷ್&zwnj;ನಲ್ಲಿ ಪ್ರೆಸ್&zwnj;ಮೀಟ್:&lt;/strong&gt;&lt;/h2&gt;&lt;p&gt;ದೆಹಲಿಯಲ್ಲಿ ಕುಳಿತು ವೋಟ್ ಚೋರಿ ಬಗ್ಗೆ ಮಾತನಾಡುವ ರಾಹುಲ್&zwnj;ಗಾಂಧಿ ಅವರೇ, ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಬಂದು ನೋಡಲಿ. ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್&zwnj;ನಲ್ಲೇ ಪ್ರೆಸ್&zwnj;ಮೀಟ್ ಮಾಡುತ್ತೇನೆ ಎಂದು ತಿಳಿಸಿದರು.&lt;/p&gt;&lt;p&gt;ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಡುತ್ತಿರುವ ಎಲ್ಲಾ ಯೋಜನೆಗಳು 30 ಸಾವಿರ ಕೋಟಿ ದಾಟುತ್ತಿವೆ. ಇದನ್ನು ನೋಡಿದರೆ ದೆಹಲಿಯ ಗಾಂಧಿ ಕುಟುಂಬಕ್ಕೆ ಇವರು ಯಾವುದೋ ದೊಡ್ಡ ಕಮಿಟ್&zwnj;ಮೆಂಟ್ ಕೊಟ್ಟು ಬಂದ ಹಾಗೆ ಕಾಣುತ್ತಿದೆ. ಸುಮಾರು 9 ಸಾವಿರ ಕೋಟಿ ರುಪಾಯಿ ಕೊಳ್ಳೆ ಹೊಡೆದು ಚುನಾವಣೆ ಮಾಡಲು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.&lt;/p&gt;&lt;h3&gt;&lt;strong&gt;ರಾಮನಗರ ರಹೀಂನಗರ ಆಗುವ ಭಯ:&lt;/strong&gt;&lt;/h3&gt;&lt;p&gt;ಮುಸ್ಲಿಮರ ವಾರ್ಡುಗಳಾದ ಟಿಪ್ಪುನಗರ, ಯಾರಬ್&zwnj;ನಗರ, ಮೆಹಬೂಬ್ ನಗರಗಳಲ್ಲಿ ಅಕ್ರಮವಾಗಿ ಎಸ್&zwnj;ಐಆರ್ ನಡೆಯುತ್ತಿದೆ. ಅಲ್ಲಿಗೆ ಹೋಗಲು ಭಯದ ವಾತಾವರಣ ಸೃಷ್ಟಿಸಲಾಗಿದೆ. ಆದರೂ ನಮ್ಮ ಕಾರ್ಯಕರ್ತರು ಧೈರ್ಯ ಮಾಡಿ ಒಳಗೆ ಹೋಗಿ ವಿಡಿಯೋ ಸಾಕ್ಷ್ಯ ತಂದಿದ್ದಾರೆ. ಇದನ್ನು ನೋಡಿದರೆ ರಾಮನಗರ ಮುಂದೆ &lsquo;ರಹೀಂನಗರ&rsquo; ಆಗುತ್ತೋ ಏನೋ ಎಂಬ ಭಯ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.&lt;/p&gt;&lt;p&gt;ಕಳೆದ ಚುನಾವಣೆಯಲ್ಲೂ ನನ್ನ ವಿರುದ್ಧ ಹೊರರಾಜ್ಯದ ಜನರನ್ನು ತಂದು ಕಳ್ಳ ಮತದಾನ ಮಾಡಿಸಿ ಇವರು ಗೆದ್ದಿದ್ದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ರಾಮನಗರದಿಂದ ಆಟೋಗಳಲ್ಲಿ ಬಂದು ಜನ ಮತ ಹಾಕಿದರು. ಈಗಲೂ ರಾಮನಗರದ ಜನತೆ ಎಚ್ಚೆತ್ತುಕೊಳ್ಳದಿದ್ದರೆ ನಿಮ್ಮ ಮಕ್ಕಳ ಭವಿಷ್ಯ ಹಾಳಾಗಲಿದೆ. ಐಎಎಸ್ ಓದಿರುವ ಈ ಆಸಾಮಿಗೆ ಮೂಲ ನಿಯಮಗಳೇ ಗೊತ್ತಿಲ್ಲ. ಅರ್ಜಿ ಹಂಚುವಾಗ ಮೂರೂ ಪಕ್ಷಗಳ ಬಿಎಲ್&zwnj;ಒಗಳು ಇರಬೇಕು, ಮೂರು ಬಾರಿ ಮನೆಮನೆಗೆ ಹೋಗಿ ಹಂಚಬೇಕು. ಆದರೆ ರಾಮನಗರ ಡೀಸಿ ತಾನೇ ಹೊಸ ಕಾನೂನು ಬರೆದಂತೆ ವರ್ತಿಸುತ್ತಾ ನನ್ನನ್ನೇ ದಾರಿ ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದರು.&lt;/p&gt;&lt;p&gt;ಕುಣಿಗಲ್&zwnj;ನಲ್ಲಿ ಒಂದು ಕೆಟ್ಟ ಜೀನ್ ಇದೆ. ಅವರು ಡಾಕ್ಟರ್ ಅಂತೆ, ಯಾವ ರೀತಿ ಆಪರೇಷನ್ ಮಾಡ್ತಾರೋ ಗೊತ್ತಿಲ್ಲ, ಅಲ್ಲೂ ಎಸ್&zwnj;ಐಆರ್ ಅಕ್ರಮ ಮಾಡ್ತಿದ್ದಾರೆ. ಇನ್ನು ಇಲ್ಲಿನ ಜನಪ್ರತಿನಿಧಿ ಪುಣ್ಯಾತ್ಮ ಆಸ್ಪತ್ರೆಯಲ್ಲೇ ಕೂತು ಬಿಎಲ್&zwnj;ಒಗಳಿಗೆ ಫೋನ್ ಮಾಡಿ ನಮ್ಮಪ್ಪನ ಸರ್ಕಾರ ಇದೆ, ನಾನು ಹೇಳಿದ ಹಾಗೆ ಮಾಡು ಎಂದು ಬೆದರಿಸುತ್ತಿದ್ದಾರಂತೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ramanagar-jds-leader-nikhil-kumaraswamy-protests-alleging-irregularities-in-voter-list-revision-sir-mrq/articleshow-m3e9mm3"/>
        </item>
        <item>
            <title><![CDATA[R Ashok ದಲ್ಲಾಳಿ ಪದ ಪ್ರಯೋಗಿಸಿದ್ದಕ್ಕೆ ಕ್ಷಮೆ ಕೇಳಲಿ: ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು]]></title>
            <link>https://kannada.asianetnews.com/karnataka-districts/hc-balakrishna-slams-r-ashok-over-broker-comment-demands-apology-gvd/articleshow-plf957g</link>
            <guid isPermaLink="true">https://kannada.asianetnews.com/karnataka-districts/hc-balakrishna-slams-r-ashok-over-broker-comment-demands-apology-gvd/articleshow-plf957g</guid>
            <pubDate>Wed, 17 Jun 2026 00:28:36 +0530</pubDate>
            <description><![CDATA[&lt;p&gt;Karnataka Politics: ವಿಪಕ್ಷ ನಾಯಕ ಆರ್.ಅಶೋಕ್ ರವರು ಮುಖ್ಯಮಂತ್ರಿಗಳಿಗೆ ದಲ್ಲಾಳಿ ಅನ್ನುವ ಪದ ಉಪಯೋಗಿಸಿದ್ದು ನಮಗೆ ಬೇಸರ ತಂದಿದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hcfkfnbfnng8h79m1zz9v9dr,imgname-vqcsv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜೂ.17): &lt;/strong&gt;ವಿಪಕ್ಷ ನಾಯಕ ಆರ್.ಅಶೋಕ್ ರವರು ಮುಖ್ಯಮಂತ್ರಿಗಳಿಗೆ ದಲ್ಲಾಳಿ ಅನ್ನುವ ಪದ ಉಪಯೋಗಿಸಿದ್ದು ನಮಗೆ ಬೇಸರ ತಂದಿದೆ. ವಿಪಕ್ಷ ನಾಯಕ ಅಂದರೆ ಶಾಡೋ ಸಿಎಂ ಇದ್ದಂಗೆ. ಅವರು ನಮ್ಮಂಥ ಶಾಸಕರುಗಳಿಗೆ ಮಾದರಿಯಾಗಿರಬೇಕು. ನಮಗೆ ಬುದ್ದಿ ಹೇಳುವ ಅವರೂ ಕೂಡಾ ಬುದ್ದಿ ಕಲಿಯಬೇಕು ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಗೆ ನಾನೂ ಕೂಡ ಟ್ವೀಟ್ ನಲ್ಲೇ ಉತ್ತರ ಕೊಟ್ಟಿದ್ದೀನಿ. ಅಶೋಕಣ್ಣನ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ, ಅವರು ಕೂಡ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದರು.&lt;/p&gt;&lt;p&gt;ಸಚಿವ ಸ್ಥಾನ ಸಿಗಲೆಂದು ಬಾಲಕೃಷ್ಣ ಮುಖ್ಯಮಂತ್ರಿಗಳನ್ನು ಒಲೈಕೆ ಮಾಡುತ್ತಿದ್ದಾರೆ&zwnj;ಯೇ ಎಂಬ ಪ್ರಶ್ನೆಗೆ, ಹಾಗಾದರೆ ಮುಂದೆ ಬಿಜೆಪಿ ಸರ್ಕಾರ ಬಂದರೆ ನನ್ನನ್ನು ಸಿಎಂ ಮಾಡಲೆಂದು ಅಶೋಕ್ ಹೀಗೆ ಮಾತನಾಡುತ್ತಿದ್ದಾರಾ. ಸಿಎಂಗೆ ಬೈದರೆ ಮುಂದೆ ಬಿಜೆಪಿ ನನ್ನನ್ನು ಮುಖ್ಯಮಂತ್ರಿ ಮಾಡುತ್ತೆ ಅಂತ ಅಶೋಕ್ ಹೀಗೆಲ್ಲ ಮಾತನಾಡ್ತಿದ್ದಾರಾ. ಅವರು ಅದನ್ನು ಒಪ್ಪಿಕೊಂಡರೆ ಅವರ ಹೇಳಿಕೆಯನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಟಾಂಗ್ ನೀಡಿದರು.&lt;/p&gt;&lt;h2&gt;&lt;strong&gt;ಯಾರು ಸತ್ಯಹರಿಶ್ಚಂದ್ರರಲ್ಲ&lt;/strong&gt;&lt;/h2&gt;&lt;p&gt;ಈ ಹಿಂದೆ ಬಿ.ಎಸ್.ಯಡಿಯೂರಪ್ಪರವರ ಮುಖ್ಯಮಂತ್ರಿ ಆಗಿದ್ದಾಗ ಕೆಐಎಡಿಬಿಗೆ 1 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಾಗ ಅದರ ವಿರುದ್ಧ ನಾನೇ ಹೋರಾಟ ಮಾಡಿದ್ದೆ. ಆಗ ಯಡಿಯೂರಪ್ಪರವರ ನನ್ನನ್ನು ಕರೆದು ಹೋರಾಟ ಮಾಡಬೇಡಿ. ಇದನ್ನು ಕೈಬಿಡಲು ಸಾಧ್ಯವಿಲ್ಲ. ರೆಡ್ ಜೋನ್ ಆಗಿರುವುದರಿಂದ ಒಳ್ಳೆಯ ಬೆಲೆ ಕೊಡಿಸುತ್ತೇನೆ ಎಂದು ಹೇಳಿದ್ದರು. ಈಗ ಯೋಜನೆ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ. ಆವತ್ತು ವಿಜಯೇಂದ್ರರವರು ಇದ್ದರು. ಬೇಕಾದರೆ ದಾಖಲೆ ಕೊಡುತ್ತೇನೆ ಎಂದು ಹೇಳಿದರು.&lt;/p&gt;&lt;p&gt;ಕುಮಾರಸ್ವಾಮಿ ಬಹಳ ಬುದ್ಧಿವಂತರು. ಟೌನ್ ಶಿಪ್ ಯೋಜನಾ ವ್ಯಾಪ್ತಿಯಲ್ಲಿ ಅವರ ಶ್ರೀಮತಿ ಮತ್ತು ಮಗನ ಹೆಸರಲ್ಲಿ 60 ಎಕರೆ ಇದೆ. ಅದರ ಬಗ್ಗೆ ಮಾತನಾಡಿ ಅಂದರೆ ಕೇತಗಾನಹಳ್ಳಿ ಜಮೀನಿನ ಬಗ್ಗೆ ಮಾತನಾಡುತ್ತಾರೆ. ಎಲ್ಲರೂ ಗಾಜಿನ ಮನೆಯಲ್ಲಿ ಕೂತಿದ್ದೇವೆ. ಸುಮ್ಮನೆ ಕಲ್ಲು ಹೊಡೆಯುವುದು ಬೇಡ. ಯಾರು ಸತ್ಯಹರಿಶ್ಚಂದ್ರರು ಅಂತ ಎದೆ ತಟ್ಟಿಕೊಳ್ಳೋದು ಬೇಡ ಎಂದರು.&lt;/p&gt;&lt;p&gt;ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಅವರೇ ರಿಯಲ್ ಎಸ್ಟೇಟ್, ಬಿಸಿನೆಸ್ ಮಾಡಿದೀನಿ ಅಂತ ಹೇಳಿಕೊಂಡಿದ್ದಾರೆ. ಅವರಂತೆ ಕುಮಾರಸ್ವಾಮಿ ಕೂಡಾ ಪ್ರಾಮಾಣಿಕವಾಗಿ ಒಪ್ಪಿಕೊಳ್ಳಲಿ ನೋಡೋಣ. ಅಶೋಕ್ ಮತ್ತು ಕುಮಾರಸ್ವಾಮಿ ಕುಟುಂಬದವರ ಆದಾಯ ಎಷ್ಟಿದೆ, ಅದು ಎಲ್ಲಿಂದ ಬಂತು ಅಂತ ಅ&zwj;ವರುಗಳೇ ವಿಮರ್ಶೆ ಮಾಡಲಿ ಎಂದು ತಿರುಗೇಟು ನೀಡಿದರು.&lt;/p&gt;&lt;p&gt;ಡಿಕೆಶಿ ಸುಳ್ಳು ಹೇಳುವುದಿಲ್ಲ, ಸತ್ಯ ಹೇಳುತ್ತಾರೆ. ಅವರ ಆದಾಯ ನೋಡಿ ದೇಶದಲ್ಲಿ ಇರುವ ಎಲ್ಲಾ ಇಲಾಖೆಯಿಂದಲೂ ತನಿಖೆ ಮಾಡಿಸಿದರು. ಏನು ಸಿಗಲಿಲ್ಲ. ಸುಪ್ರೀಂ ಕೋರ್ಟಿನಲ್ಲಿ ಆ ಪ್ರಕರಣಗಳು ವಜಾಗೊಂಡಿವೆ. ಕುಮಾರಸ್ವಾಮಿ ಮತ್ತು ಅಶೋಕ್ ರವರು ಆ ತನಿಖೆಗಳಿಗೆ ಒಪ್ಪಿಕೊಳ್ಳುತ್ತಾರಾ. ನಾವು ಅವರ ಕುಟುಂಬದ ಆಸ್ತಿ ಎಲ್ಲ ತನಿಖೆಯಾಗಲಿ ಅಂತ ನಾವೂ ಆಗ್ರಹ ಮಾಡುತ್ತೇವೆ ಎಂದು ಬಾಲಕೃಷ್ಣ ಹೇಳಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hc-balakrishna-slams-r-ashok-over-broker-comment-demands-apology-gvd/articleshow-plf957g"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್ ತಾತ್ಕಾಲಿಕ ಸ್ಥಗಿತ, 3 ತಿಂಗಳಲ್ಲಿ ಸಮಿತಿ ರಚನೆ: ಸಿಎಂ ಡಿಕೆಶಿ ಸುದೀರ್ಘ ಸುದ್ದಿಗೋಷ್ಠಿ ಸಾರಾಂಶ]]></title>
            <link>https://kannada.asianetnews.com/karnataka-districts/bidadi-township-row-dk-shivakumar-hits-back-at-hd-kumaraswamy-with-dokuments-review-committee-project-gdp/articleshow-qbz2rpi</link>
            <guid isPermaLink="true">https://kannada.asianetnews.com/karnataka-districts/bidadi-township-row-dk-shivakumar-hits-back-at-hd-kumaraswamy-with-dokuments-review-committee-project-gdp/articleshow-qbz2rpi</guid>
            <pubDate>Wed, 15 Jul 2026 14:56:33 +0530</pubDate>
            <description><![CDATA[ಬಿಡದಿ ಟೌನ್&zwnj;ಶಿಪ್ ಯೋಜನೆ ವಿವಾದದ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್, ಈ ಯೋಜನೆಗೆ ಅಡಿಪಾಯ ಹಾಕಿದ್ದೇ ಕುಮಾರಸ್ವಾಮಿ ಸರ್ಕಾರ ಎಂದು ದಾಖಲೆ ಸಮೇತ ಆರೋಪಿಸಿದ್ದಾರೆ. ರೈತರ ಒಪ್ಪಿಗೆಯಿಲ್ಲದೆ ಭೂಸ್ವಾಧೀನ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿ, ಸದ್ಯಕ್ಕೆ ಯೋಜನೆ ಸ್ಥಗಿತಗೊಳಿಸಿ ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxjhbbc4n19mjqk19hbzy63z,imgname-dk-shivakumar--9--1784107347332.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಬಿಡದಿ ಟೌನ್&zwnj;ಶಿಪ್ (ಉಪನಗರ) ಯೋಜನೆ ವಿವಾದದ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ಹೆಚ್&zwnj; ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ತೀಕ್ಷ್ಣ ಹಾಗೂ ವ್ಯವಸ್ಥಿತ ದಾಖಲೆಗಳೊಂದಿಗೆ ಮಾಧ್ಯಮಗೋಷ್ಠಿ ನಡೆಸಿದ ಡಿಕೆಶಿ , ಈ ಇಡೀ ಯೋಜನೆಯ ಇತಿಹಾಸವನ್ನು ಬಿಚ್ಚಿಡುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ.&lt;/p&gt;&lt;h2&gt;&quot;ನಾನು ಈ ಯೋಜನೆಯ ಪಿತಾಮಹನಲ್ಲ&quot;&lt;/h2&gt;&lt;p&gt;&quot;ಬಿಡದಿಯಲ್ಲಿ ನಿನ್ನೆ ನಡೆದ ಘಟನೆ ನನಗೆ ತೀವ್ರ ನೋವುಂಟು ಮಾಡಿದೆ. ನಮ್ಮ ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಡಲಾಗಿದೆ. ರೈತರನ್ನು ತಪ್ಪು ದಾರಿಗೆ ಎಳೆಯುವ ವ್ಯವಸ್ಥಿತ ಸಂಚು ರಾಜಕೀಯವಾಗಿ ನಡೆಯುತ್ತಿದೆ. ಆದರೆ ನಾನಿಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ ಬಿಡದಿ ಟೌನ್&zwnj;ಶಿಪ್ ಯೋಜನೆ ನನ್ನ ಕನಸಿನ ಯೋಜನೆಯಲ್ಲ, ಇದಕ್ಕೆ ನಾನೇನೂ ಮುನ್ನುಡಿ ಬರೆದಿಲ್ಲ. ಮುನ್ನುಡಿ ಬರೆದವರು ನೀವು. ನಾನು ಕೇವಲ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಅಂದಿನ ಸರ್ಕಾರಗಳ ಆದೇಶದಂತೆ ಕೆಲಸ ಮಾಡುತ್ತಿದ್ದೇನೆ ಅಷ್ಟೇ.&quot; ಎಂದರು.&lt;/p&gt;&lt;p&gt;ವೈಯಕ್ತಿಕವಾಗಿ ನಾನು ವ್ಯವಸಾಯ ಮಾಡದಿದ್ದರೂ, ಜನ್ಮತಃ ನಾನೊಬ್ಬ ರೈತನ ಮಗ. ರೈತರ ಕಷ್ಟ, ಶ್ರಮ ಮತ್ತು ಅವರ ನೋವು ನನಗೆ ಚೆನ್ನಾಗಿ ಗೊತ್ತಿದೆ. ಯಾರಿಗೆ ನೋವುಂಟು ಮಾಡುವುದು ಕೂಡ ನನಗೆ ಇಷ್ಟವಿಲ್ಲ&quot; ಎಂದರು.&lt;/p&gt;&lt;h2&gt;ಟೌನ್&zwnj;ಶಿಪ್ ಅಡಿಪಾಯ ಹಾಕಿದ್ದು ಯಾರು?&lt;/h2&gt;&lt;p&gt;ಬಿಡದಿ ಟೌನ್&zwnj;ಶಿಪ್ ವಿಷಯದಲ್ಲಿ ಜೆಡಿಎಸ್ ನಾಯಕರು ನಡೆಸುತ್ತಿರುವ ಹೋರಾಟ ಕೇವಲ ರಾಜಕೀಯ ಗಿಮಿಕ್ ಎಂದ ಡಿ.ಕೆ. ಶಿವಕುಮಾರ್, ಯೋಜನೆಗೆ ಅಡಿಪಾಯ ಹಾಕಿದ ದಿನಾಂಕಗಳನ್ನು ಕಾಗದಪತ್ರಗಳ ಸಮೇತ ಜನರ ಮುಂದಿಟ್ಟರು.&lt;/p&gt;&lt;p&gt;&lt;strong&gt;ಸೆಪ್ಟೆಂಬರ್ 23, 2006: &lt;/strong&gt;ಅಂದು ರಾಜ್ಯದಲ್ಲಿದ್ದ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು ಮತ್ತು ಬಿ.ಎಸ್. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದರು. ಅವರದೇ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸುತ್ತಮುತ್ತ 5 ಸಮಗ್ರ ಉಪನಗರಗಳನ್ನು (ಟೌನ್&zwnj;ಶಿಪ್&zwnj;ಗಳನ್ನು) ಅಭಿವೃದ್ಧಿಪಡಿಸಬೇಕು ಎಂದು ತೀರ್ಮಾನಿಸಲಾಗಿತ್ತು.&lt;/p&gt;&lt;p&gt;&lt;strong&gt;ಜೂನ್ 28, 2006: &lt;/strong&gt;ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಸಮಗ್ರ ಉಪನಗರ ನಿರ್ಮಾಣಕ್ಕೆ ಗ್ಲೋಬಲ್ ಟೆಂಡರ್ ಕರೆಯಲು ಕುಮಾರಸ್ವಾಮಿ ನೇತೃತ್ವದ ಸರ್ಕಾರವೇ ನಿರ್ಧರಿಸಿತ್ತು.&lt;/p&gt;&lt;p&gt;&lt;strong&gt;ನವೆಂಬರ್ 29, 2006:&lt;/strong&gt; ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದಂತೆ ಬಿಡದಿ ಯೋಜನಾ ಪ್ರದೇಶದ ಜಮೀನುಗಳಲ್ಲಿ ಯಾವುದೇ ಖಾಸಗಿ ಪ್ರಾಧಿಕಾರವಾಗಲಿ ಅಥವಾ ಯಾರೇ ಆಗಲಿ ಯಾವುದೇ ಕಾಮಗಾರಿಗೆ ಅನುಮತಿ ನೀಡಬಾರದು ಎಂದು ಆದೇಶಿಸಿ ಆ ಇಡೀ ಪ್ರದೇಶವನ್ನು 'ರೆಡ್ ಝೋನ್' ಮಾಡಲಾಗಿತ್ತು. ಅಲ್ಲಿನ ವಸತಿ, ವಾಣಿಜ್ಯ ಮತ್ತು ಹಳ್ಳಿಯ ಮನೆಗಳನ್ನು ಒಕ್ಕಲೆಬ್ಬಿಸಲು ಅಂದೇ ಅವಕಾಶ ಕಲ್ಪಿಸಲಾಗಿತ್ತು.&lt;/p&gt;&lt;p&gt;&lt;strong&gt;ಜೂನ್ 11, 2007: &lt;/strong&gt;ಅಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಆರ್. ಅಶೋಕ್ ಅವರು ಸಚಿವರಾಗಿದ್ದಾಗ ಮಂಡಾಲಹಳ್ಳಿ ಸೇರಿದಂತೆ ಮತ್ತೆರಡು ಗ್ರಾಮಗಳನ್ನು ಈ ಯೋಜನೆಗೆ ಸೇರಿಸಲಾಯಿತು.&lt;/p&gt;&lt;p&gt;&lt;strong&gt;2010 ಹಾಗೂ 2011:&lt;/strong&gt; ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗಲೂ ಜಾಗತಿಕ ಟೆಂಡರ್ ಮುಂದುವರೆಸಲಾಯಿತು. ನಂತರ ನವೆಂಬರ್ 16, 2011 ರಂದು ರೈತರಿಗೆ ಪ್ರತಿ ಎಕರೆಗೆ ಗರಿಷ್ಠ 22 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿತ್ತು.&lt;/p&gt;&lt;p&gt;&lt;strong&gt;ಹೊಸ ಹೂಡಿಕೆಗೆ ಚಾಲನೆ&lt;/strong&gt;&lt;/p&gt;&lt;p&gt;2019 ಮತ್ತು ನಂತರ ರಾಜ್ಯಕ್ಕೆ ಹೊಸ ಬಂಡವಾಳ ಹೂಡಿಕೆ ತರಲು ಟೌನ್&zwnj;ಶಿಪ್ ಅಗತ್ಯವಿದೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದರು.&lt;/p&gt;&lt;p&gt;&quot;ಹೀಗೆ ಹಂತ ಹಂತವಾಗಿ ಈ ಇಡೀ ಯೋಜನೆಯನ್ನು ರೂಪಿಸಿ, ರೈತರ ಭೂಮಿಯನ್ನು ರೆಡ್ ಝೋನ್ ವ್ಯಾಪ್ತಿಗೆ ತಂದು, ರಿಯಲ್ ಎಸ್ಟೇಟ್&zwnj;ಗೆ ದಾರಿ ಮಾಡಿಕೊಟ್ಟಿದ್ದೇ ಕುಮಾರಸ್ವಾಮಿ ಅಣ್ಣನವರು. ಇಂದು ಅದೇ ಆದೇಶಗಳನ್ನು ನಾನು ಜಾರಿಗೊಳಿಸುತ್ತಿದ್ದರೆ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ,&quot; ಎಂದು ಡಿಕೆಶಿ ವ್ಯಂಗ್ಯವಾಡಿದರು.&lt;/p&gt;&lt;h2&gt;ನಿಮ್ಮ ಕುಟುಂಬದ 36 ಎಕರೆ ಭೂಮಿ ಹೇಗೆ ಬಚಾವಾಯಿತು?&quot;&lt;/h2&gt;&lt;p&gt;ಜೆಡಿಎಸ್ ನಾಯಕರನ್ನು ನೇರವಾಗಿ ಪ್ರಶ್ನಿಸಿದ ಡಿ.ಕೆ. ಶಿವಕುಮಾರ್, &quot;ನಾನು ರಿಯಲ್ ಎಸ್ಟೇಟ್ ದಂಧೆ ಮಾಡಿದ್ದೇನಾ ಅಣ್ಣಾ, ಅಪ್ಪಾಜಿ? ಯಾರು ಮಾಡಿದ್ದು ಈ ಕೆಲಸವನ್ನು? ಯಾರು ನಿಮಗೆ ರಾಜಕೀಯವಾಗಿ ಬದುಕು ಕೊಟ್ಟರೋ, ಅವರ ಮನೆಗಳನ್ನು, ಆಸ್ತಿಗಳನ್ನು ಕಿತ್ತುಕೊಳ್ಳಲು ಅಂದು ರೂಪಿಸಿದ ಮೋಸದ ಸಂಚನ್ನು ಎಷ್ಟು ದಿನ ಮುಚ್ಚಿಡಲು ಸಾಧ್ಯ?&quot; ಎಂದು ಆಕ್ರೋಶ ಹೊರಹಾಕಿದರು.&lt;/p&gt;&lt;p&gt;&quot;ಇದೇ ಟೌನ್&zwnj;ಶಿಪ್ ವ್ಯಾಪ್ತಿಯಲ್ಲಿ ನಿಮ್ಮ ಕುಟುಂಬಸ್ಥರು 36 ಎಕರೆ ಜಮೀನು ತಗೊಂಡಿದ್ದಾರೆ. ಆದರೆ ಅಚ್ಚರಿಯೆಂದರೆ ಅದರಲ್ಲಿ ನಿಮ್ಮ ಒಂದು ಎಕರೆ ಜಮೀನು ಕೂಡ ಭೂಸ್ವಾಧೀನವಾಗಿಲ್ಲ! ನಿಮ್ಮ ಕ್ಯಾತಗಾನಹಳ್ಳಿ ಜಮೀನು ಏಕೆ ಬಿಡದಿ ಇಂಡಸ್ಟ್ರಿಯಲ್ ಟೌನ್&zwnj;ಗೆ ಒಳಪಡಲಿಲ್ಲ? ಅದರ ಪಕ್ಕದಲ್ಲೇ ಒಂದು ರಸ್ತೆ ಮಾಡಿ, ಭೂಸ್ವಾಧೀನ ಮಾಡಿ ಅಲ್ಲಿ ಭಾರಿ ಪರಿಹಾರ ಪಡೆದುಕೊಂಡಾಗ ಯಾವ ಸರ್ಕಾರ ಅಧಿಕಾರದಲ್ಲಿತ್ತು?&quot;&lt;/p&gt;&lt;p&gt;&quot;ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ, ನೀವು ಆದೇಶ ಮಾಡಿ 15 ವರ್ಷಗಳಾಗಿತ್ತು. ಆಗ ಅದೇ ಟೌನ್&zwnj;ಶಿಪ್ ಭೂಮಿಗೆ 80 ಲಕ್ಷದಿಂದ 1 ಕೋಟಿ ರೂಪಾಯಿವರೆಗೆ ಪರಿಹಾರ ಕೊಡಿಸಿದ್ರಲ್ಲ, ಆಗ ನಿಮ್ಮ ಹೋರಾಟದ ಧ್ವನಿ ಎಲ್ಲಿ ಹೋಗಿತ್ತು? ಆಗ ನಿಮಗೆ ವಿಧಾನಸೌಧದ ಗಾಂಧಿ ಪ್ರತಿಮೆ ನೆನಪಾಗಲಿಲ್ಲವೇ? ಇಂದು ಡಿ.ಕೆ. ಶಿವಕುಮಾರ್ ಅಧಿಕಾರಕ್ಕೆ ಬಂದಾಗ ಇರುವ ಛಲ ಅಂದು ಯಡಿಯೂರಪ್ಪ ಅವರ ಮಗ ಪ್ರತಿಭಟನೆಗೆ ಹೋದಾಗ ನಿಮಗೆ ಯಾಕೆ ಇರಲಿಲ್ಲ?&quot; ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.&lt;/p&gt;&lt;h2&gt;2-3 ತಿಂಗಳಲ್ಲಿ ಸಮಿತಿ ರಚನೆ, ಅಲ್ಲಿಯವರೆಗೆ ಟೌನ್ಶಿಪ್ ಯೋಜನೆ ಸ್ಥಗಿತ&lt;/h2&gt;&lt;p&gt;ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದನ್ನು ತೀವ್ರವಾಗಿ ಖಂಡಿಸಿದ ಡಿ.ಕೆ. ಶಿವಕುಮಾರ್ , ನಮ್ಮ ಅಧಿಕಾರಿಗಳಿಗೆ ಯಾವ ತಾಯಂದಿರು ಕೂಡ ಪೊರಕೆಯಲ್ಲಿ ಹೊಡೆಯುವುದು ಬೇಡ. ನಿಮಗೆ ಹೊಡೆಯಬೇಕು ಎನಿಸಿದರೆ ನನಗೆ ಬಂದು ಹೊಡೆಯಿರಿ, ನಾನು ಸಿದ್ಧನಿದ್ದೇನೆ. ಅಧಿಕಾರಿಗಳು ಕೇವಲ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾನು ಯಾರ ಜಮೀನನ್ನೂ ಬಲವಂತವಾಗಿ ಕಿತ್ತುಕೊಳ್ಳುವುದಿಲ್ಲ. ಯಾರಿಗೆ ಸರ್ಕಾರ ನಿಗದಿಪಡಿಸಿದ ಹಣ ಬೇಕೋ ಅವರು ಜಮೀನು ಕೊಟ್ಟು ಪರಿಹಾರ ಪಡೆಯಬಹುದು. ಇಷ್ಟವಿಲ್ಲದಿದ್ದರೆ ತಮ್ಮ ಭೂಮಿಯನ್ನು ತಾವೇ ಇಟ್ಟುಕೊಂಡು ನೆಮ್ಮದಿಯಾಗಿ ಇರಬಹುದು. ರೈತರು ಒಪ್ಪಿದರೆ ಮಾತ್ರ ಯೋಜನೆ ನಡೆಯುತ್ತದೆ. ರೈತರ ಕಷ್ಟ ಸುಖಗಳನ್ನು ಮತ್ತು ಕಾಯ್ದೆಯ ಲೀಗಲ್ ಪಾಯಿಂಟ್&zwnj;ಗಳನ್ನು ಪರಿಶೀಲಿಸಲು ಇನ್ನು ಎರಡು ತಿಂಗಳಲ್ಲಿ ಒಂದು ವಿಶೇಷ ಸಮಿತಿ ರಚನೆ ಮಾಡುತ್ತೇನೆ. ಅಲ್ಲಿಯವರೆಗೆ ಕುಮಾರಸ್ವಾಮಿ ಮಾಡಿದ ಆ 'ರೆಡ್ ಝೋನ್' ಆದೇಶವನ್ನು ನಾನು ಸದ್ಯಕ್ಕೆ ಮುಟ್ಟಲು ಹೋಗುವುದಿಲ್ಲ. ಅದು ಹೇಗಿದೆಯೋ ಹಾಗೇ ಇರಲಿ ಎಂದು ಹೇಳಿದರು.&lt;/p&gt;&lt;h2&gt;&quot;ಜೈಲು ನನಗೇನು ಹೊಸದಲ್ಲ!&quot;&lt;/h2&gt;&lt;p&gt;ತಮ್ಮನ್ನು ಜೈಲಿಗೆ ಕಳುಹಿಸುವ ಸಂಚಿನ ಬಗ್ಗೆಯೂ ಮಾತನಾಡಿದ ಡಿ.ಕೆ. ಶಿವಕುಮಾರ್, ತಾವು ಯಾವುದಕ್ಕೂ ಹೆದರುವುದಿಲ್ಲ ಎಂದರು. &quot;ನನ್ನನ್ನು ಜೈಲಿಗೆ ಕಳುಹಿಸಲು ಹುನ್ನಾರ ನಡೆಯುತ್ತಿದೆ. ಇವತ್ತು ಕೂಡ ಡಿಕೆಶಿ ಜೈಲಿಗೆ ಹೋಗ್ತಾರೆ ಎಂದು ಕುಮಾರಣ್ಣ ಹೇಳುತ್ತಿದ್ದಾರೆ. ಕುಮಾರಣ್ಣ, ನಿಮ್ಮ ಬಳಿ ಒಳ್ಳೆಯ ವಕೀಲರಿದ್ದಾರೆ. ನನ್ನನ್ನು ಜೈಲಿಗೆ ಕಳಿಸುವ ಕಾಲ ಸಮೀಪಿಸುತ್ತಿದೆ ಎಂದು ನೀವೇ ಹೇಳುತ್ತಿದ್ದೀರಿ. ಅದಕ್ಕೂ ನಾನು ಸಿದ್ಧನಿದ್ದೇನೆ. ಜೈಲು ನನಗೇನು ಹೊಸದಲ್ಲ. ನೋವು ಅನುಭವಿಸಿ ಬೆಂದವನು ನಾನು. ನನ್ನ ಉಸಿರಿರುವ ತನಕ ಜನಸೇವೆ ಮಾಡುವುದೇ ನನ್ನ ಧರ್ಮ. ಈ ಪೆನ್ನು ಮತ್ತು ಪೇಪರ್ ರಾಜ್ಯದ ಜನತೆಗೆ ಸೀಮಿತವಾಗಿರುತ್ತದೆ . ಜೈಲು ನನಗೇನು ಹೊಸದಲ್ಲ. ಜೈಲಿನಿಂದ ಬಂದು ಸಿಎಂ ಆಗಿದ್ದೇನೆ. ನೀವು ಚನ್ನಪಟ್ಟಣದಲ್ಲಿ ಕೂತು ಏನು ಮಾತನಾಡುತ್ತಿದ್ದೀರಿ ಮತ್ತು ರೈತರೊಂದಿಗೆ ಏನು ರಾಜಕೀಯ ಗೇಮ್ ಆಡುತ್ತಿದ್ದೀರಿ ಎಂಬ ಪೂರ್ಣ ಅರಿವು ನನಗಿದೆ ಎಂದು ಸವಾಲು ಹಾಕಿದರು.&lt;/p&gt;&lt;p&gt;ತಾವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಚಿವರಾಗಿದ್ದಾಗ ಕೇವಲ 6 ಲಕ್ಷ ರೂಪಾಯಿಗೆ ರೈತರ ಮನವೊಲಿಸಿ ಭೂಸ್ವಾಧೀನ ಮಾಡಿದ್ದನ್ನು ನೆನಪಿಸಿದ ಅವರು, ಇಂದು ಆ ಭಾಗದ ರೈತರ ಆಸ್ತಿ ಮೌಲ್ಯ ಎಷ್ಟಾಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದರು. ಒಟ್ಟಾರೆಯಾಗಿ, ಜೆಡಿಎಸ್ ನಾಯಕರು ತಮ್ಮದೇ ಹಳೆಯ ನಿರ್ಧಾರಗಳನ್ನು ಮರೆತು, ರಾಜಕೀಯ ಲಾಭಕ್ಕಾಗಿ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidadi-township-row-dk-shivakumar-hits-back-at-hd-kumaraswamy-with-dokuments-review-committee-project-gdp/articleshow-qbz2rpi"/>
        </item>
        <item>
            <title><![CDATA[Bidadi Township row: ನಮ್ಮ ಪಾಲಿಗೆ ಸರ್ಕಾರ ಸತ್ತೋಗಿದೆ..; ಪಿಂಡ ಪಿಂಡ ಪ್ರದಾನ ಮಾಡಿದ ಬಿಡದಿ ರೈತರು!]]></title>
            <link>https://kannada.asianetnews.com/state/bidadi-township-row-haarohalli-farmers-protest-against-karnataka-government-rav/articleshow-towfviy</link>
            <guid isPermaLink="true">https://kannada.asianetnews.com/state/bidadi-township-row-haarohalli-farmers-protest-against-karnataka-government-rav/articleshow-towfviy</guid>
            <pubDate>Thu, 16 Jul 2026 05:00:37 +0530</pubDate>
            <description><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗಾಗಿ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದನ್ನು ವಿರೋಧಿಸಿ ರೈತರು 495 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ನಿರ್ಧಾರದಿಂದ ಆಕ್ರೋಶಗೊಂಡ ರೈತರು, 'ನಮ್ಮ ಪಾಲಿಗೆ ಸರ್ಕಾರ ಸತ್ತೋಗಿದೆ' ಎಂದು ಘೋಷಣೆ ಕೂಗುತ್ತಾ, ಪಿಂಡ ಪ್ರದಾನ ಮಾಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxm1vy0e9qb0xmeyd9qpvbhv,imgname-----------------------2026-07-16t045958.317-1784158222350.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯ ಸರ್ಕಾರದ ವಿರುದ್ಧ ಬಿಡದಿ ರೈತರ ಆಕ್ರೋಶ । ನಮ್ಮ ಪಾಲಿಗೆ ಸರ್ಕಾರ ಸತ್ತೋಗಿದೆ: ಘೋಷಣೆ&lt;/p&gt;&lt;p&gt;&lt;strong&gt;&amp;nbsp;ರಾಮನಗರ (ಜು.16): &lt;/strong&gt;ಬಿಡದಿ ಟೌನ್&zwnj;ಶಿಪ್ ಯೋಜನೆ(Bidadi Township projec) ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು(Farmers protest) ಬುಧವಾರ ರಾಜ್ಯ ಸರ್ಕಾರದಿಂಧ ನಾಲ್ಕು ಗ್ರಾಮಗಳ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರ ಬೀಳುತ್ತಿದ್ದಂತೆ ಬಿಡದಿ-ಹಾರೋಹಳ್ಳಿ ಮಾರ್ಗದ ರಸ್ತೆಯಲ್ಲಿ ಪಿಂಡ ಪ್ರದಾನದ ಅಣಕು ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್&zwnj; ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;ನಮ್ಮ ಪಾಲಿಗೆ ಸರ್ಕಾರ ಸತ್ತೋಗಿದೆ..&lt;/h2&gt;&lt;p&gt;ಜಿಲ್ಲೆಯ ಬಿಡದಿ-ಹಾರೋಹಳ್ಳಿ ರಸ್ತೆಯಲ್ಲಿ ಬುಧವಾರ ತಟ್ಟೆಯಲ್ಲಿ ಮಣ್ಣು ಹಿಡಿದುಕೊಂಡು ವಾಹನಗಳನ್ನು ತಡೆದು ಪ್ರತಿಭಟಿಸಿದ ರೈತರು, ರಾಜ್ಯ ಸರ್ಕಾರಕ್ಕೆ ಪಿಂಡ ಪ್ರದಾನ ಮಾಡಿ ನಮ್ಮ ಪಾಲಿಗೆ ಸರ್ಕಾರ ಸತ್ತೋಗಿದೆ ಎಂದು ಘೋಷಣೆ ಕೂಗಿದರು.&lt;/p&gt;&lt;p&gt;ರೈತರ ಪ್ರತಿಭಟನೆಯನ್ನು ಜೆಡಿಎಸ್ ಕೃಪಾಪೋಷಿತ ನಾಟಕ ಎಂದು ಹೇಳುವ ಮೂಲಕ ಶಾಸಕ ಬಾಲಕೃಷ್ಣ ರೈತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಸ್ವಾಭಿಮಾನದಿಂದ ಜೀವನ ಮಾಡುತ್ತಿರುವ ಮಹಿಳೆಯರನ್ನು ನಾಟಕ ಮಾಡುವವರು ಅಂದಿದ್ದಾರೆ. ಕೂಡಲೇ ಬಾಲಕೃಷ್ಣ ರೈತ ಮಹಿಳೆಯರ ಕ್ಷಮೆ ಕೇಳಬೇಕು. ಇಲ್ಲವಾದರೆ ಬಾಲಕೃಷ್ಣ ಮನೆ ಮುಂದೆ ಧರಣಿ ನಡೆಸುವುದಾಗಿ ರೈತ ಮಹಿಳೆಯರು ಎಚ್ಚರಿಕೆ ನೀಡಿದರು.&lt;/p&gt;&lt;h3&gt;495 ದಿನಗಳಿಂದ ನಾವು ಪ್ರತಿಭಟನೆ ನಡೆಸುತ್ತಿರುವ ರೈತರು&lt;/h3&gt;&lt;p&gt;ಕಳೆದ 495 ದಿನಗಳಿಂದ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಯೋಜನೆಯನ್ನು ವಿರೋಧ ಮಾಡುತ್ತಿದ್ದೇವೆ. ಆದರೂ ಸಹ ನಮ್ಮ ಮಾತಿಗೆ ಮನ್ನಣೆ ನೀಡದೆ ರಾಜ್ಯ ಸರ್ಕಾರ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ನಾವು ಯಾವುದೇ ಕಾರಣಕ್ಕೂ ಭೂಮಿಯನ್ನು ನೀಡುವುದಿಲ್ಲ ಎಂದು ರೈತರು ಬಿಗಿಪಟ್ಟು ಹಿಡಿದರು.&lt;/p&gt;&lt;p&gt;ರೈತರು ರಸ್ತೆ ಮಧ್ಯದಲ್ಲಿ ಕುರ್ಚಿಗಳ ಮೇಲೆ ಕುಳಿತು ಒನಕೆ ಹಿಡಿದು ಪ್ರತಿಭಟಿಸಿದ್ದರಿಂದ ಬಿಡದಿ - ಹಾರೋಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತು. ಪೊಲೀಸರು ರೈತರ ಮನವೊಲೀಸಿ ರಸ್ತೆ ತಡೆ ತೆರವುಗೊಳಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bidadi-township-row-haarohalli-farmers-protest-against-karnataka-government-rav/articleshow-towfviy"/>
        </item>
        <item>
            <title><![CDATA[ಬಾಂಗ್ಲಾ ವಲಸಿಗರನ್ನ ಕೂರಿಸಿಕೊಂಡು ಎಸ್‌ಐಆರ್ ಮಾಡಿದ ಕರ್ನಾಟಕ; ವಿಡಿಯೋ ಪ್ರೂಫ್ ತೋರಿಸಿದ HD Kumaraswamy!]]></title>
            <link>https://kannada.asianetnews.com/politics/sir-in-karnataka-union-minister-hd-kumaraswamy-released-video-on-alleges-illegal-bangladeshi-migrants-in-ramanagara-gdp/articleshow-ykz1g67</link>
            <guid isPermaLink="true">https://kannada.asianetnews.com/politics/sir-in-karnataka-union-minister-hd-kumaraswamy-released-video-on-alleges-illegal-bangladeshi-migrants-in-ramanagara-gdp/articleshow-ykz1g67</guid>
            <pubDate>Thu, 02 Jul 2026 15:50:53 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ನಡೆಯುತ್ತಿರುವ &amp;nbsp;SIR ಪ್ರಕ್ರಿಯೆಯಲ್ಲಿ, ರಾಮನಗರದಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಭಾವ ಬಳಸಿ ಬಾಂಗ್ಲಾ ವಲಸಿಗರು ಸೇರಿದಂತೆ ಕಳ್ಳ ಮತದಾರರನ್ನು ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ವಿಡಿಯೋ ಸಮೇತ ದೂರಿದ್ದು, ಕೇಂದ್ರ ಚುನಾವಣಾ ಆಯೋಗ ಮತ್ತು ಗೃಹ ಸಚಿವ ಅಮಿತ್ ಶಾಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwh4y7tah20kq2w8pcazdntz,imgname-hd-kumarswamy-1782987038538.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಆರಂಭವಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯು ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಮನಗರದಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಪ್ರಭಾವ ಬಳಸಿ ಬಾಂಗ್ಲಾದೇಶದ ವಲಸಿಗರನ್ನು ಕಳ್ಳ ಮತದಾರರನ್ನಾಗಿ ಪೋಷಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (hd kumaraswamy) ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಹಮ್ಮಿಕೊಂಡಿದ್ದ ದಢೀರ್ ಸುದ್ದಿಗೋಷ್ಠಿಯು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.&lt;/p&gt;&lt;p&gt;ರಾಜ್ಯದಲ್ಲಿ 'ಎಸ್​ಐಆರ್' (SIR) ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಚುರುಕಾಗಿ ಸಾಗುತ್ತಿದ್ದು, ಈ ಕುರಿತು ಮೊದಲಿಗೆ ಮುಖ್ಯಮಂತ್ರಿಗಳೇ ಸಾರ್ವಜನಿಕವಾಗಿ ಮಾಹಿತಿ ನೀಡಿದ್ದರು. ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಸರಿಯಾದ ಮಾಹಿತಿ ನೀಡದಿದ್ದರೆ ಅಥವಾ ಯಾವುದೇ ಕಾರಣಕ್ಕೂ ಲಿಸ್ಟ್&zwnj;ನಿಂದ ಹೆಸರು ಹೊರಹೋದರೆ, ಭವಿಷ್ಯದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಯಾವುದೇ ಸರ್ಕಾರಿ ಸವಲತ್ತುಗಳು ಸಿಗದೆ ವಂಚಿತರಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಈ ಪ್ರಕ್ರಿಯೆಯ ಪರವಾಗಿ ಅತ್ಯಂತ ಕಟುವಾದ ಪದಗಳನ್ನು ಬಳಸಿ ಮಾತನಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಜೆಡಿಎಸ್ ನಾಯಕರು ಆಕ್ಷೇಪ ಎತ್ತಿದ್ದಾರೆ.&lt;/p&gt;&lt;h2&gt;ಛತ್ರಗಳಲ್ಲಿ ಕಳ್ಳ ಮತದಾರರನ್ನು ಕೂರಿಸಿ ಪ್ರಕ್ರಿಯೆ: ಎಚ್&zwnj;ಡಿಕೆ ಆಕ್ರೋಶ&lt;/h2&gt;&lt;p&gt;ರಾಮನಗರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಆಘಾತಕಾರಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿಗಳ ನೇರ ಪ್ರಭಾವದಿಂದಾಗಿ ಅಕ್ರಮಗಳು ಸರಾಗವಾಗಿ ಸಾಗುತ್ತಿವೆ ಎಂದು ದೂರಿದ್ದಾರೆ. ನಿಯಮಾವಳಿಗಳ ಪ್ರಕಾರ ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಾದ ಜಾಗದಲ್ಲಿ, ಸಿಎಂ ಪ್ರಭಾವ ಬಳಸಿ ಸಾವಿರಾರು ಜನರನ್ನು ಒಂದೇ ಕಡೆಯಿರುವ ದೊಡ್ಡ ಕಲ್ಯಾಣ ಮಂಟಪ ಅಥವಾ ಚೌಟರಿಗಳಲ್ಲಿ ಒಟ್ಟಿಗೆ ಕೂರಿಸಿ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಹೀಗೆ ಒಂದೇ ಸೂರಿನಡಿ ಕಳ್ಳ ಮತದಾರರನ್ನು ಒಟ್ಟುಗೂಡಿಸಿ ಅವರಿಗೆ ಕಾನೂನುಬಾಹಿರವಾಗಿ ಮತದಾನದ ಹಕ್ಕು ಕಲ್ಪಿಸಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.&lt;/p&gt;&lt;h2&gt;ಬಾಂಗ್ಲಾ ವಲಸಿಗರ ಪೋಷಣೆ ಮತ್ತು ಅಧಿಕಾರಿಗಳ ವೈಫಲ್ಯ&lt;/h2&gt;&lt;p&gt;ಈ ಇಡೀ ಅಕ್ರಮದ ಹಿಂದೆ ಕೇವಲ ಸ್ಥಳೀಯ ಕಳ್ಳ ಮತದಾರರಷ್ಟೇ ಅಲ್ಲದೆ, ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿ ಬಂದಿರುವ ವಲಸಿಗರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವರ ಆರೋಪವಾಗಿದೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ವಲಸಿಗರನ್ನು ರಾಮನಗರದಲ್ಲಿ ಇಟ್ಟುಕೊಂಡು ಪೋಷಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಅವರಿಗೆ ಅಧಿಕೃತ ದಾಖಲೆಗಳನ್ನು ಸೃಷ್ಟಿಸಲು ಈ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳ ವೈಫಲ್ಯವಾಗಿದ್ದು, ಆಡಳಿತ ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕಾನೂನು ಗಾಳಿಗೆ ತೂರಿ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.&lt;/p&gt;&lt;h2&gt;ಕೇಂದ್ರ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಆಯೋಗಕ್ಕೆ ದೂರು&lt;/h2&gt;&lt;p&gt;ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಈ ಗಂಭೀರ ಸ್ವರೂಪದ ಅಕ್ರಮಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ಗಮನಹರಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರುತ್ತಿರುವ ಈ ವಿದ್ಯಮಾನವನ್ನು ನಾನು ಇಲ್ಲಿಗೆ ಬಿಡುವುದಿಲ್ಲ ಎಂದು ಎಚ್ಚರಿಸಿರುವ ಅವರು, ರಾಮನಗರದ ಈ ಅಕ್ರಮದ ಸಂಪೂರ್ಣ ವಿವರ ಹಾಗೂ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗುವುದು ಮತ್ತು ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಅಧಿಕೃತವಾಗಿ ದೂರು ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/politics/sir-in-karnataka-union-minister-hd-kumaraswamy-released-video-on-alleges-illegal-bangladeshi-migrants-in-ramanagara-gdp/articleshow-ykz1g67"/>
        </item>
    </channel>
</rss>
