<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 06 Jun 2026 19:19:43 +0530</lastBuildDate>
        <atom:link href="https://kannada.asianetnews.com/rss/ramanagara" rel="self" type="application/rss+xml"/>
        <item>
            <title><![CDATA[ರಾಮನಗರಕ್ಕೆ 5ನೇ ಬಾರಿಮುಖ್ಯಮಂತ್ರಿ ಹುದ್ದೆ ಭಾಗ್ಯ? ಮೊದಲ ಐವರು ಯಾರು?]]></title>
            <link>https://kannada.asianetnews.com/politics/will-ramanagara-district-get-its-5th-cm-rav/articleshow-1mhsmd7</link>
            <guid isPermaLink="true">https://kannada.asianetnews.com/politics/will-ramanagara-district-get-its-5th-cm-rav/articleshow-1mhsmd7</guid>
            <pubDate>Fri, 29 May 2026 08:43:31 +0530</pubDate>
            <description><![CDATA[ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದ್ದು, ಇದು ಬೆಂಗಳೂರು ದಕ್ಷಿಣ ಜಿಲ್ಲೆಗೆ ಐದನೇ ಸಿಎಂ ಕೊಡುಗೆಯಾಗಲಿದೆ. ಈ ಹಿಂದೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಜಿಲ್ಲೆಯಿಂದ ಸಿಎಂ ಆಗಿದ್ದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ksps9v1xpj32wfc58z61rk3e,imgname-siddaramaiah-and-dk-shivakumar--2--1779954936893.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.29): &lt;/strong&gt;ಕರುನಾಡಿಗೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಡುಗೆಯಾಗಿ ನೀಡಿರುವ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(KPCC President DK Shivakumar) ಮೂಲಕ ಐದನೇ ಬಾರಿಗೆ ಸಿಎಂ(5th Chief Ministers from Ramanagara) ಗಾದಿ ಒಲಿಯುತ್ತಿದೆಯೇ ಎಂಬ ಕುತೂಹಲ ಮೂಡಿದೆ.&lt;/p&gt;&lt;p&gt;ಸರಾಜ್ಯದಲ್ಲಿ ಹಲವು ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ಇತಿಶ್ರೀ ಹಾಡಲಾಗಿದೆ. ಸಿದ್ದರಾಮಯ್ಯ(Siddaramaiah)ನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ(resignation) ಸಲ್ಲಿಸಿದ್ದು, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬ ಸಂದೇಶ ನೀಡಿದ್ದಾರೆ.&lt;/p&gt;&lt;p&gt;8ನೇ ಬಾರಿ ವಿಧಾನಸಭೆ ಪ್ರವೇಶಿಸಿರುವ ಡಿ.ಕೆ.ಶಿವಕುಮಾರ್ ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದಲ್ಲಿ ಡೈನಾಮಿಕ್ ಲೀಡರ್ ಎಂದೇ ಬಿಂಬಿತಗೊಂಡವರು. ಈಗ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಿಂದ ಮುಖ್ಯಮಂತ್ರಿ ಗಾದಿ ಅಲಂಕರಿಸಿದ ಕಾಂಗ್ರೆಸ್&zwnj;ನ ಎರಡನೇ ನಾಯಕ ಎಂಬ ಪ್ರಶಂಸೆಗೆ ಪಾತ್ರರಾಗಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.&lt;/p&gt;&lt;p&gt;ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಮೂಲತಃ ರಾಮನಗರದವರು. 1952 ಮತ್ತು 1957ರ ಚುನಾವಣೆಗಳಲ್ಲಿ ರಾಮನಗರ ಕ್ಷೇತ್ರದಿಂದ ಕೆಂಗಲ್ ಆಯ್ಕೆಯಾಗಿದ್ದರು. 1952ರಲ್ಲಿ ಸಿಎಂ ಪಟ್ಟ ಅವರಿಗೆ ಒಲಿದು ಬಂದಿತ್ತು. 1983ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಜನತಾಪಕ್ಷದ ಸರ್ಕಾರದಲ್ಲಿ ರಾಮಕೃಷ್ಣ ಹೆಗಡೆಗೆ ಮುಖ್ಯಮಂತ್ರಿ ಹುದ್ದೆ ಒಲಿದಿತ್ತು. ಈಗ ಡಿಕೆಶಿಗೆ ಅವಕಾಶ ಸಿಕ್ಕರೆ ಕನಕಪುರ ಕ್ಷೇತ್ರಕ್ಕೆ 2ನೇ ಬಾರಿ ಸಿಎಂ ಹುದ್ದೆ ಲಭಿಸಿದಂತಾಗುತ್ತದೆ.&lt;/p&gt;&lt;h2&gt;ಗೌಡರ ಕುಟುಂಬಕ್ಕೆ 3 ಬಾರಿ ಅವಕಾಶ:&lt;/h2&gt;&lt;p&gt;1994ರಲ್ಲಿ ರಾಮನಗರದಿಂದಲೇ ಗೆದ್ದ ದೇವೇಗೌಡರು ಮುಖ್ಯಮಂತ್ರಿ ಹುದ್ದೆಗೇರಿ 17 ತಿಂಗಳು ಆಡಳಿತ ನಡೆಸಿದರು. ಇನ್ನು, 2004ರಲ್ಲಿ ರಾಮನಗರ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಪ್ರವೇಶಿಸಿದ ಕುಮಾರಸ್ವಾಮಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರದಲ್ಲಿ 20 ತಿಂಗಳು ಮುಖ್ಯಮಂತ್ರಿಯಾದರು.&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/will-ramanagara-district-get-its-5th-cm-rav/articleshow-1mhsmd7"/>
        </item>
        <item>
            <title><![CDATA[ಪ್ರಧಾನಿ ಮೋದಿ ಸಾಗುವ ದಾರಿ ಸ್ಫೋಟಿಸೋದಾಗಿ ಪೊಲೀಸರಿಗೆ ಸಂದೇಶ; ತಾತಗುಣಿಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ!]]></title>
            <link>https://kannada.asianetnews.com/gallery/state/gelatin-sticks-found-near-pm-modi-s-route-in-bengaluru-one-detained-sat-1ukfceu</link>
            <guid isPermaLink="true">https://kannada.asianetnews.com/gallery/state/gelatin-sticks-found-near-pm-modi-s-route-in-bengaluru-one-detained-sat-1ukfceu</guid>
            <pubDate>Sun, 10 May 2026 14:59:50 +0530</pubDate>
            <description><![CDATA[ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ, ಅವರು ಸಂಚರಿಸುವ ಮಾರ್ಗದ ಸಮೀಪದ ತಾತಗುಣಿಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಫೋಟದ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಘಟನೆಯ ಹಿಂದಿನ ಸತ್ಯಾಸತ್ಯತೆಯನ್ನು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr8jpdk0a28gtqcrfgsa86z4,imgname-whatsapp-image-2026-05-10-at-10.55.52-am--1--1778404505184.jpeg" type="image/jpeg" height="390" width="690"/>
            <content:encoded><![CDATA[ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ, ಅವರು ಸಂಚರಿಸುವ ಮಾರ್ಗದ ಸಮೀಪದ ತಾತಗುಣಿಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಫೋಟದ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಘಟನೆಯ ಹಿಂದಿನ ಸತ್ಯಾಸತ್ಯತೆಯನ್ನು ತನಿಖೆ ನಡೆಸುತ್ತಿದ್ದಾರೆ.&lt;img&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹೊತ್ತಲ್ಲೇ ಸಿಲಿಕಾನ್ ಸಿಟಿಯಲ್ಲಿ ಭಾರಿ ಆತಂಕ ಮೂಡಿಸುವ ಘಟನೆಯೊಂದು ನಡೆದಿದೆ. ಪ್ರಧಾನಿಗಳು ಸಂಚರಿಸುವ ಮಾರ್ಗದ ಸಮೀಪದಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ಲೋಪದ ಬಗ್ಗೆ ಅನುಮಾನ ಮೂಡಿಸಿವೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಬೆಂಗಳೂರು ಹೊರವಲಯದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಬಳಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಈ ಪ್ರದೇಶವು ಪ್ರಧಾನಿ ಮೋದಿ ಅವರು ಸಂಚರಿಸುವ ರಸ್ತೆಯ ಸಮೀಪದಲ್ಲೇ ಇರುವುದು ಪೊಲೀಸರ ನಿದ್ದೆ ಗೆಡಿಸಿದೆ. ಆಂಟಿ ಸಬೊಟೇಜ್ ಚೆಕ್ (ASC) ತಂಡವು ಪ್ರಧಾನಿಗಳ ಆಗಮನಕ್ಕೂ ಮುನ್ನ ರಸ್ತೆಯನ್ನು ಸ್ಯಾನಿಟೈಜ್ ಮಾಡುತ್ತಿದ್ದಾಗ, ರಸ್ತೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಈ ಜಿಲೆಟಿನ್ ಕಡ್ಡಿಗಳನ್ನು ಪತ್ತೆ ಹಚ್ಚಿದೆ.&lt;/p&gt;&lt;img&gt;&lt;p&gt;ಈ ಜಿಲೆಟಿನ್ ಕಡ್ಡಿಗಳ ಪತ್ತೆಯ ಹಿಂದೆ ಕುತೂಹಲಕಾರಿ ಕಥೆಯಿದೆ. ಮುಂಜಾನೆ ಕೋರಮಂಗಲ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದ. 'ಹೆಚ್ ಎ ಎಲ್ (HAL) ಹಾಗೂ ಆರ್ಟ್ ಆಫ್ ಲಿವಿಂಗ್ ಬಳಿ ಸ್ಫೋಟಿಸುತ್ತೇನೆ' ಎಂದು ಬೆದರಿಕೆ ಹಾಕಿದ್ದ. ತಕ್ಷಣ ಅಲರ್ಟ್ ಆದ ಬೆಂಗಳೂರು ಪೊಲೀಸರು ರಾಮನಗರ ಭಾಗದ ಪೊಲೀಸರಿಗೆ ಮಾಹಿತಿ ರವಾನಿಸಿದರು. ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಪೊಲೀಸರು ತಪಾಸಣೆ ನಡೆಸಿದಾಗ HAL ಬಳಿ ಏನೂ ಸಿಗಲಿಲ್ಲ. ಆದರೆ, ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಹೊರಗಡೆ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.&lt;/p&gt;&lt;img&gt;&lt;p&gt;ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಕೋರಮಂಗಲ ಸಮೀಪದ ಮನೆಯೊಂದರಲ್ಲಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಈತ ಈ ಹಿಂದೆಯೂ ವಿಐಪಿಗಳು ನಗರಕ್ಕೆ ಬಂದಾಗಲೆಲ್ಲಾ ಇದೇ ರೀತಿ ಹುಸಿ ಬಾಂಬ್ ಕರೆಗಳನ್ನು ಮಾಡುತ್ತಿದ್ದ ಎಂಬ ಆಘಾತಕಾರಿ ವಿಷಯ ಬಯಲಾಗಿದೆ.&lt;/p&gt;&lt;p&gt;&lt;strong&gt;ಮಾನಸಿಕ ಸ್ಥಿತಿ: &lt;/strong&gt;ಈ ಹಿಂದೆ ಈತನನ್ನು ವಶಕ್ಕೆ ಪಡೆದಾಗ ಆತನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದರು.&lt;/p&gt;&lt;p&gt;&lt;strong&gt;ಈ ಬಾರಿಯ ಗಂಭೀರತೆ: &lt;/strong&gt;ಪ್ರತಿ ಬಾರಿ ಕೇವಲ ಹುಸಿ ಕರೆ ಮಾಡುತ್ತಿದ್ದ ವ್ಯಕ್ತಿ, ಈ ಬಾರಿ ಜಿಲೆಟಿನ್ ಕಡ್ಡಿಗಳನ್ನು ಎಸೆದಿರುವುದು ಪೊಲೀಸರ ತೀವ್ರ ತನಿಖೆಗೆ ಕಾರಣವಾಗಿದೆ. ನಿಜವಾಗಿಯೂ ಆತನೇ ಇಟ್ಟಿದ್ದಾನಾ ಅಥವಾ ಇದರ ಹಿಂದೆ ಬೇರೆ ಯಾರಾದರೂ ಇದ್ದಾರಾ ಎಂಬ ನಿಟ್ಟಿನಲ್ಲಿ ಸದ್ಯ ನಿಗೂಢ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ.&lt;/p&gt;&lt;img&gt;&lt;p&gt;ಕೇಂದ್ರ ವಲಯದ ಡಿಐಜಿ ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. 'ಜಿಲೆಟಿನ್ ಕಡ್ಡಿಗಳು ಸಿಕ್ಕಿರುವುದು ನಿಜ, ಕರೆ ಮಾಡಿದ ವ್ಯಕ್ತಿಗೂ ಈ ಸ್ಫೋಟಕಗಳಿಗೂ ಇರುವ ಸಂಬಂಧದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ' ಎಂದು ಅವರು ತಿಳಿಸಿದ್ದಾರೆ. ಸದ್ಯ ಸಿಕ್ಕಿರುವ ಜಿಲೆಟಿನ್ ಕಡ್ಡಿಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲಾಗಿದ್ದು, ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/gelatin-sticks-found-near-pm-modi-s-route-in-bengaluru-one-detained-sat-1ukfceu"/>
        </item>
        <item>
            <title><![CDATA[25 ವರ್ಷಗಳಲ್ಲಾಗದ ಅಭಿವೃದ್ಧಿ 3 ವರ್ಷದಲ್ಲಿ ಮಾಡಿರುವೆ: ಎಚ್‌ಡಿಕೆ ವಿರುದ್ಧ ಇಕ್ಬಾಲ್ ಹುಸೇನ್ ವಾಗ್ದಾಳಿ]]></title>
            <link>https://kannada.asianetnews.com/karnataka-districts/iqbal-hussain-slams-kumaraswamy-over-ramanagara-development-gvd/articleshow-3bxz8mz</link>
            <guid isPermaLink="true">https://kannada.asianetnews.com/karnataka-districts/iqbal-hussain-slams-kumaraswamy-over-ramanagara-development-gvd/articleshow-3bxz8mz</guid>
            <pubDate>Sun, 10 May 2026 20:32:58 +0530</pubDate>
            <description><![CDATA[&lt;p&gt;ರಾಮನಗರ ಕ್ಷೇತ್ರದಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 3 ವರ್ಷಗಳಲ್ಲಿ ಮಾಡಿ ತೋರಿಸಿದ್ದೇನೆ ಎಂದು ಎಚ್&zwnj;ಡಿಕೆ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kdphskv0t488bvg9wj4dsjxf,imgname-iqbal-hussain--1--1767062163296.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.10): &lt;/strong&gt;ರಾಮನಗರ ಕ್ಷೇತ್ರದಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 3 ವರ್ಷಗಳಲ್ಲಿ ಮಾಡಿ ತೋರಿಸಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಈ ಹಿಂದೆ ಶಾಸಕರಾಗಿದ್ದವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡಿದರು. ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರೂ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದರು.&lt;/p&gt;&lt;p&gt;ಆದರೆ, ನಾನು ಶಾಸಕನಾದ ಮೇಲೆ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿದ್ದೇನೆ ಎಂದರು. ಅಭಿವೃದ್ಧಿಕೆ ಕ್ರಮ ಕೈಗೊಂಡಿದ್ದೇನೆ ಎಂದರು. ಸಿ.ಎಂ.ಲಿಂಗಪ್ಪರವರು ಶಾಸಕರಾಗಿದ್ದ ವೇಳೆ ಸೂರಿಲ್ಲದವರಿಗೆ ನಿವೇಶನ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಉಳುಮೆ ಚೀಟಿ ನೀಡಿದ್ದರು. ಆನಂತರ 25 ವರ್ಷಗಳ ಅವಧಿಯಲ್ಲಿ ಒಬ್ಬನೇ ಒಬ್ಬ ಬಡವನಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ. ಇಷ್ಟಾದರೂ ತಾವು ಮಣ್ಣಿನ ಮಕ್ಕಳೆಂದು ಹೇಳಿಕೊಂಡು ಕಣ್ಣೀರು ಹಾಕುತ್ತಾರೆ ಎಂದು ಟೀಕಿಸಿದರು.&lt;/p&gt;&lt;p&gt;ಈಗ 10 ಸಾವಿರ ನಿವೇಶನ ಹಂಚಲು 300 ಎಕರೆ ಜಾಗ ಗುರುತಿಸಲಾಗಿದೆ. ಈಗಾಗಲೇ ಸೂರಿಲ್ಲದ ಕಡುಬಡವರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂಬರುವ 3 -4 ತಿಂಗಳಲ್ಲಿ ನಿವೇಶನ ಹಂಚಲಾಗುವುದು. ಬಗರ್&zwnj;ಹುಕುಂ ಸಾಗುವಳಿದಾರರ ಜಮೀನುಗಳ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಉಳುಮೆ ಚೀಟಿ ನೀಡಲಾಗುವುದು ಎಂದರು. ಕಳೆದ ಮೂರು ದಶಕಗಳಿಂದ ಜೆಡಿಎಸ್ ಪಕ್ಷದಲ್ಲಿ ದುಡಿದವರು ಸೂಕ್ತ ಸ್ಥಾನಮಾನ ದೊರೆಯದ ಹಿನ್ನೆಲೆ ಹಾಗೂ ತಮ್ಮ ಗ್ರಾಮಗಳ ಅಭಿವೃದ್ಧಿ ಆಗದಿರುವುದರಿಂದ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಕಾಂಗ್ರೆಸ್ ಪಕ್ಷವನ್ನು ಸೇರುವಂತೆ ಮನವಿ&lt;/strong&gt;&lt;/h2&gt;&lt;p&gt;ಸಮ ಸಮಾಜದ ನಿರ್ಮಾಣ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರವರ ಕೈ ಬಲಪಡಿಸಲು ಯುವಕರು ಕಾಂಗ್ರೆಸ್ ಪಕ್ಷವನ್ನು ಸೇರುವಂತೆ ಇಕ್ಬಾಲ್ ಹುಸೇನ್ ಮನವಿ ಮಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು ಮಾತನಾಡಿ, ಈ ಹಿಂದೆ ಶಾಸಕರಾಗಿದ್ದವರ ನಿರ್ಲಕ್ಷ್ಯದಿಂದ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿತ್ತು. ಆದರೀಗ ಇಕ್ಬಾಲ್ ಹುಸೇನ್ ಶಾಸಕರಾದ ನಂತರ ಅಭಿವೃದ್ಧಿ ಪರ್ವ ಪ್ರಾರಂಭಗೊಂಡಿದೆ.&lt;/p&gt;&lt;p&gt;ಇದನ್ನು ಮೆಚ್ಚಿದ ಅನ್ಯಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದಾರೆ. ಇದು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್&zwnj;ಕುಮಾರ್ ಮಾತನಾಡಿ, ಈ ಹಿಂದೆ ಶಾಸಕರನ್ನು ನೋಡಲು ಬೆಂಗಳೂರಿಗೆ ಹೋಗಬೇಕಿತ್ತು. ಈಗ ಶಾಸಕರು ನಿಮ್ಮ ಮನೆ ಬಾಗಿಲಿಗೇ ಆಗಮಿಸಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಯುವಕರು ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಶಾಸಕರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/iqbal-hussain-slams-kumaraswamy-over-ramanagara-development-gvd/articleshow-3bxz8mz"/>
        </item>
        <item>
            <title><![CDATA[ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಿರುವುದು‌ ನನ್ನ ಅದೃಷ್ಟ: ಶಾಸಕ ಇಕ್ಬಾಲ್ ಹುಸೇನ್]]></title>
            <link>https://kannada.asianetnews.com/karnataka-districts/dk-shivakumar-becoming-cm-is-our-luck-ramanagara-mla-iqbal-hussain-gvd/articleshow-7mkzg5t</link>
            <guid isPermaLink="true">https://kannada.asianetnews.com/karnataka-districts/dk-shivakumar-becoming-cm-is-our-luck-ramanagara-mla-iqbal-hussain-gvd/articleshow-7mkzg5t</guid>
            <pubDate>Tue, 02 Jun 2026 21:48:59 +0530</pubDate>
            <description><![CDATA[&lt;p&gt;ರಾಮನಗರ ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ತರಲು ನನ್ನನ್ನು ಆಯ್ಕೆ ಮಾಡಿದ ಡಿ.ಕೆ.ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನನ್ನ&zwnj; ಪಾಲಿನ&zwnj; ಅದೃಷ್ಟ ಎಂದು ಶಾಸಕ ಇಕ್ಬಾಲ್ ಹುಸೇನ್ ಬಣ್ಣಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq9jbccfv1jtq5pbcr3wq8xd,imgname-mla-iqbal-hussain-dk-shivakumar-1777363956111.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜೂ.02):&lt;/strong&gt; ರಾಮನಗರ ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ತರಲು ನನ್ನನ್ನು ಆಯ್ಕೆ ಮಾಡಿದ ಡಿ.ಕೆ.ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನನ್ನ&zwnj; ಪಾಲಿನ&zwnj; ಅದೃಷ್ಟ ಎಂದು ಶಾಸಕ ಇಕ್ಬಾಲ್ ಹುಸೇನ್ ಬಣ್ಣಿಸಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಸಹಕಾರದಿಂದ ಕ್ಷೇತ್ರದಲ್ಲಿ ಹಲವು ಕೆಲಸಗಳು ನಡೆದಿವೆ. ಮುಂದುವರಿದ ಭಾಗದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಸಾಕಾರವಾಗಲಿದ್ದು, ರಾಜ್ಯದ ಎಲ್ಲ ವರ್ಗದ ಜನರ ಬಗ್ಗೆ ಚಿಂತನೆ, ದೂರದೃಷ್ಟಿತ್ವ ಇಟ್ಟುಕೊಂಡಿರುವ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಉತ್ತಮ ಆಡಳಿತ ನಡೆಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.&lt;/p&gt;&lt;p&gt;ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಕ್ಕಿರುವುದು ಜಿಲ್ಲೆಯ ಜನರ ಸಂತಸ ಹೆಚ್ಚಿಸಿರುವುದು ಒಂದೆಡೆಯಾದರೆ, ಜಿಲ್ಲೆಯ ಹಿರಿಮೆಯೂ ಸಹ ಹೆಚ್ಚಿಸಿದೆ. ಡಿಕೆ ಬ್ರದರ್ ಕನಸು ನಮ್ಮ&zwnj; ಕನಸಾಗಿದೆ. ದೇಶದೆಲ್ಲೆಡೆ ಅವರದೇ ಆದ ಅಭಿಮಾನಿಗಳ ಬಳಗವಿದ್ದು, ಅವರಿಗೂ ಮುಖ್ಯಮಂತ್ರಿ ಹುದ್ದೆ ಸಿಕ್ಕಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಮನಗರ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಳ್ಳಲಿದ್ದು, ನಗರದಲ್ಲಿ ಶೇಕಡ 70ರಷ್ಟು ಭಾಗ ಯುಜಿಡಿ ಕೆಲಸ ಆಗಬೇಕಿದೆ. ಇದಕ್ಕಾಗಿ 300 ಕೋಟಿ ರುಪಾಯಿಗಳ ಪ್ರಸ್ತಾವನೆ ಸಲ್ಲಿಸಿದ್ದೇನೆ. ಇನ್ನು ರಸ್ತೆ, ಚರಂಡಿಗಳ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿ, ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣದಂತಹ ಹತ್ತು ಹಲವು ಅಭಿವೃದ್ಧಿ ಕೆಲಸಗಳು ನಡೆಯಬೇಕಿದ್ದು, ಅವೆಲ್ಲವೂ ಇನ್ನೆರೆಡು ವರ್ಷಗಳಲ್ಲಿ ಪೂರ್ಣಗೊಂಡು ಕ್ಷೇತ್ರದ ಚಿತ್ರಣ ಬದಲಾಗಲಿದೆ ಎಂದು ಹೇಳಿದರು.&lt;/p&gt;&lt;p&gt;ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಆಶೀರ್ವಾದದಿಂದ ಜಿಲ್ಲೆಯ ಜನರ ಕನಸಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಚಾಲನೆ ಸಿಕ್ಕಿದೆ. ನಗರದಲ್ಲಿ ಕುಡಿಯುವ ನೀರು, ಸೂರು ಕಲ್ಪಿಸಲು 300 ಎಕರೆಗೂ ಹೆಚ್ಚು ಸರ್ಕಾರಿ ಜಮೀನು ಗುರುತಿಸಿರುವುದು, ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ, ಸಾಗುವಳ ಚೀಟಿಗಳ ವಿತರಣೆ, ಸೇತುವೆಗಳ ನಿರ್ಮಾಣ, ಕೆರೆ ತುಂಬಿಸುವುದು, ಅರ್ಕಾವತಿ&zwnj; ನದಿ ದಂಡೆಯಲ್ಲಿ ಪಾರ್ಕ್ ನಿರ್ಮಾಣದಂತಹ ಹತ್ತು ಹಲವು ಯೋಜನೆಗಳು ಕ್ಷೇತ್ರದಲ್ಲಿ ಸಾಕಾರವಾಗುತ್ತಿವೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಅಪಪ್ರಚಾರಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ&lt;/strong&gt;&lt;/h2&gt;&lt;p&gt;ರಾಮನಗರದ ಇತಿಹಾಸ ಉಳ್ಳ ಅರ್ಕೇಶ್ವರ ದೇವಾಲಯ, ಪೀರನ್ ಷಾ ವಲಿ ದರ್ಗಾ ಹಾಗೂ ಜನವಸತಿ ಪ್ರದೇಶಗಳನ್ನು ಉಳಿಸಿಕೊಂಡು ಅರ್ಕಾವತಿ ನದಿ ದಂಡೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ನಾನೊಬ್ಬ ಜನರ ಪ್ರತಿನಿಧಿಯಾಗಿದ್ದು, ಜನರಿಗೆ ವಿರುದ್ಧವಾದ ಕೆಲಸ ಮಾಡುವುದಿಲ್ಲ. ದೇವಾಲಯ ಮತ್ತು ದರ್ಗಾಕ್ಕೆ ಅನುದಾನ ತಂದುಕೊಟ್ಟು ಅಭಿವೃದ್ಧಿ ಮಾಡುತ್ತಿದ್ದೇನೆ. ಕೆಲವರು ಪ್ರಚಾರಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಅದಕ್ಕೆಲ್ಲ ನಾನು ತಲೆ&zwnj;ಕಡೆಸಿಕೊಳ್ಳುವುದಿಲ್ಲ. ಸಾರ್ವಜನಿಕರು ಆ ವಿಷಯದ ಬಗ್ಗೆ ತಲೆ&zwnj;ಕೆಡಿಸಿಕೊಳ್ಳುವುದು ಬೇಡ.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dk-shivakumar-becoming-cm-is-our-luck-ramanagara-mla-iqbal-hussain-gvd/articleshow-7mkzg5t"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್  ಬಗ್ಗೆ ದೇವೇಗೌಡರು ರಾಹುಲ್ ಗಾಂಧಿಗೆ ಯಾಕೆ ಪತ್ರ ಬರೀತಾರೆ? ಅವರು ಮೋದಿಗೆ ಪತ್ರ ಬರೆಯಬೇಕು:ಡಿಕೆಶಿ]]></title>
            <link>https://kannada.asianetnews.com/gallery/karnataka-districts/dk-shivakumar-takes-on-jds-leadership-over-bidadi-row-challenges-hdk-to-debate-gdp-8a15m26</link>
            <guid isPermaLink="true">https://kannada.asianetnews.com/gallery/karnataka-districts/dk-shivakumar-takes-on-jds-leadership-over-bidadi-row-challenges-hdk-to-debate-gdp-8a15m26</guid>
            <pubDate>Wed, 20 May 2026 17:17:06 +0530</pubDate>
            <description><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ಕುಮಾರಸ್ವಾಮಿ ಕಾಲದ್ದೇ ಎಂದು ಸ್ಪಷ್ಟಪಡಿಸಿ, ರೈತರಿಗೆ ಶೀಘ್ರ ಪರಿಹಾರದ ಭರವಸೆ ನೀಡಿದ್ದಾರೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks1sa4d6heep209mq8k7qarq,imgname-dk-shivakumar--4--1779250303398.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ಕುಮಾರಸ್ವಾಮಿ ಕಾಲದ್ದೇ ಎಂದು ಸ್ಪಷ್ಟಪಡಿಸಿ, ರೈತರಿಗೆ ಶೀಘ್ರ ಪರಿಹಾರದ ಭರವಸೆ ನೀಡಿದ್ದಾರೆ. &amp;nbsp;&lt;/p&gt;&lt;img&gt;&lt;p&gt;ಬೆಂಗಳೂರು: ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ತಮ್ಮ ಸರ್ಕಾರದ ಮೂರು ವರ್ಷಗಳ ಐತಿಹಾಸಿಕ ಸಾಧನೆಗಳನ್ನು ಹೆಮ್ಮೆಯಿಂದ ಜನರ ಮುಂದೆ ತೆರೆದಿಟ್ಟಿದ್ದಾರೆ.&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್ ಮತ್ತು ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಹೆಚ್.ಡಿ. ದೇವೇಗೌಡರು ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದನ್ನು ಡಿ.ಕೆ. ಶಿವಕುಮಾರ್ ತೀವ್ರವಾಗಿ ಪ್ರಶ್ನಿಸಿದ್ದಾರೆ. ಭೂಸ್ವಾಧೀನ ವಿರೋಧಿಸಿ ದೇವೇಗೌಡರು ರಾಹುಲ್ ಗಾಂಧಿಯವರಿಗೆ ಪತ್ರ ಬರೆಯುತ್ತಿರುವುದರ ಅರ್ಥವೇನು? ರಾಹುಲ್ ಗಾಂಧಿ ಅವರೇನಾದರೂ ಈಗ ಅಧಿಕಾರದಲ್ಲಿದ್ದಾರೆಯೇ? ಅವರು ಪತ್ರ ಬರೆಯಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಂದು ತಿರುಗೇಟು ನೀಡಿದರು.&lt;/p&gt;&lt;img&gt;&lt;p&gt;ಇದೇ ವೇಳೆ ದೇವೇಗೌಡರು ಚರ್ಚೆಗೆ ಬರುವಂತೆ ಹಾಕಿರುವ ಪಂಥಾಹ್ವಾನದ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಅವರ ಆರೋಗ್ಯದ ದೃಷ್ಟಿಯಿಂದ ನಾನು ಹೆಚ್ಚೇನೂ ಮಾತನಾಡಲ್ಲ, ಅವರನ್ನು ಚರ್ಚೆಗೆ ಕರೆಯುವುದೂ ಇಲ್ಲ. ಆದರೆ, ಇತ್ತೀಚೆಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಾರ ಪ್ರೀತಿಯಿಂದ ಮಾತನಾಡುತ್ತಿದ್ದಾರೆ. ಆ ಪ್ರೀತಿಯ ಹಿಂದಿನ ಮರ್ಮವೇನೋ ನನಗೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದರು.&lt;/p&gt;&lt;img&gt;&lt;p&gt;ಬಿಡದಿ ಟೌನ್&zwnj;ಶಿಪ್ ಕುರಿತು ಸ್ಪಷ್ಟನೆ ನೀಡಿದ ಡಿ.ಕೆ. ಶಿವಕುಮಾರ್, ಇದು ನನ್ನ ಅವಧಿಯಲ್ಲಿ ಜಾರಿಗೆ ಬಂದ ಯೋಜನೆಯಲ್ಲ. ಸ್ವತಃ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಂದ ಯೋಜನೆ. ಆಗ ಇದನ್ನು 'ರೆಡ್ ಝೋನ್' ಮಾಡಲಾಗಿತ್ತು ಮತ್ತು ಸಾಕಷ್ಟು ಜನ ಇದರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈಗ ನಾವು ಗ್ರೇಟರ್ ಬೆಂಗಳೂರು ಅಥಾರಿಟಿ' (GBA) ಅಡಿಯಲ್ಲಿ ಸ್ಮಾರ್ಟ್ ಟೌನ್&zwnj;ಶಿಪ್ ಮಾಡಲು ಹೊರಟಿದ್ದೇವೆ. ಬಿಡದಿಯನ್ನು ಬೆಂಗಳೂರಿಗೆ ಸೇರಿಸಿದ್ದಕ್ಕಾಗಿ ಸಾವಿರಾರು ರೈತರು ನಮಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೆಐಎಡಿಬಿ (KIADB) ಮೂಲಕವೂ 1,000 ಎಕರೆ ಭೂಸ್ವಾಧೀನ ಮಾಡಲಾಗುತ್ತಿದೆ ಎಂದರು.&lt;/p&gt;&lt;img&gt;&lt;p&gt;ರೈತರ ಹಿತರಕ್ಷಣೆಯ ಕುರಿತು ಮಾತನಾಡುತ್ತಾ, ರೈತರು ಸರ್ಕಾರ ಘೋಷಿಸಿರುವ ಪರಿಹಾರಕ್ಕೆ ಒಪ್ಪಿಗೆ ಸೂಚಿಸಿ, ಭೂಮಿ ನೀಡಲು ಮುಂದೆ ಬಂದಿದ್ದಾರೆ. ಅಲ್ಲದೆ ಪರಿಹಾರದ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಇನ್ನು ಕೇವಲ ಎರಡು ದಿನಗಳಲ್ಲಿ ಇದರ ಅಧಿಕೃತ ನೋಟಿಫಿಕೇಶನ್ ಹೊರಬೀಳಲಿದ್ದು, ಜೂನ್ ಮೊದಲ ವಾರದಿಂದಲೇ ರೈತರ ಖಾತೆಗೆ ಮೂರು ಹಂತಗಳಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಇದರಲ್ಲಿ ಶೇ. 40 ರಷ್ಟು ಕಮರ್ಷಿಯಲ್ ಪಾಲು ಇರಲಿದೆ. ರೈತರು ಯಾರೂ ತಮ್ಮ ಜಮೀನನ್ನು ಅಗ್ಗದ ಬೆಲೆಗೆ ಮಧ್ಯವರ್ತಿಗಳಿಗೆ ಮಾರಿಕೊಳ್ಳಬಾರದು ಎಂದು ಮನವಿ ಮಾಡಿದರು.&lt;/p&gt;&lt;img&gt;&lt;p&gt;ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಕಿರುವ ಬಹಿರಂಗ ಚರ್ಚೆಯ ಸವಾಲನ್ನು ಮುಕ್ತವಾಗಿ ಸ್ವೀಕರಿಸಿದ ಡಿಸಿಎಂ, ಕುಮಾರಣ್ಣ ಅವರೇ ಸಮಯ ಮತ್ತು ಸ್ಥಳವನ್ನು ನಿಗದಿಪಡಿಸಲಿ, ನಾನು ಚರ್ಚೆಗೆ ಸದಾ ಸಿದ್ಧ. ಹಿಂದೆ ಸಾತನೂರಿನಲ್ಲೂ ಅವರ ಸವಾಲನ್ನು ಸ್ವೀಕರಿಸಿದ್ದೆ, ಈಗಲೂ ರೆಡಿ ಇದ್ದೇನೆ. ನನ್ನ ಜೊತೆಗೆ ಶಾಸಕ ಬಾಲಕೃಷ್ಣ ಕೂಡ ಬರುವುದಾಗಿ ಹೇಳಿದ್ದಾರೆ ಎಂದರು.&lt;/p&gt;&lt;p&gt;ಮುಂದುವರಿದು ರೈತರ ಮನವಿಯೊಂದನ್ನು ಕುಮಾರಸ್ವಾಮಿ ಅವರ ಗಮನಕ್ಕೆ ತಂದ ಶಿವಕುಮಾರ್, ಇತ್ತೀಚೆಗೆ ಸಿಮೆಂಟ್ ಹಾಗೂ ಕಬ್ಬಿಣದ ಬೆಲೆ ಗಗನಕ್ಕೇರಿದೆ. ಕುಮಾರಸ್ವಾಮಿ ಅವರು ದೇಶದ ಉಕ್ಕು (ಸ್ಟೀಲ್) ಸಚಿವರಾಗಿದ್ದಾರೆ. 'ಸ್ವಲ್ಪ ಕಬ್ಬಿಣದ ಬೆಲೆ ಕಡಿಮೆ ಮಾಡಲು ಕುಮಾರಣ್ಣನಿಗೆ ಹೇಳಿ' ಎಂದು ರೈತರು ನನ್ನ ಬಳಿ ವಿನಂತಿಸಿದ್ದಾರೆ. ರೈತರ ಪರವಾಗಿ ನಾನು ಕೇಂದ್ರ ಸಚಿವ ಕುಮಾರಣ್ಣ ಅವರಲ್ಲಿ ಕಬ್ಬಿಣದ ಬೆಲೆ ಇಳಿಸುವಂತೆ ಕೋರುತ್ತೇನೆ ಎಂದು ಟಾಂಗ್ ನೀಡಿದರು.&lt;/p&gt;&lt;img&gt;&lt;p&gt;ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಯಶಸ್ವಿಯಾಗಿ 3 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಡಿಸಿಎಂ ಬಿಡುಗಡೆ ಮಾಡಿದರು.&lt;/p&gt;&lt;p&gt;ನಮ್ಮ ಸರ್ಕಾರದ 3 ವರ್ಷಗಳ ಸಾಧನೆ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ ಮತ್ತು ಬಿಹಾರ್ ರಾಜ್ಯಗಳು ಈಗ ನಮ್ಮದೇ ಮಾದರಿಯನ್ನು ತಮ್ಮ ರಾಜ್ಯಗಳಲ್ಲಿ ಘೋಷಣೆ ಮಾಡಿ ನಮ್ಮನ್ನು ಫಾಲೋ ಮಾಡುತ್ತಿವೆ. ರಾಜ್ಯದ 1 ಕೋಟಿ 34 ಲಕ್ಷ ಕುಟುಂಬಗಳು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುತ್ತಿದ್ದು, ನೇರವಾಗಿ 1.30 ಲಕ್ಷ ಕೋಟಿ ರೂಪಾಯಿ ಜನರಿಗೆ ತಲುಪಿದೆ. ಗೃಹಲಕ್ಷ್ಮಿಯಲ್ಲಿ 1 ಕೋಟಿ 24 ಲಕ್ಷ ಮಹಿಳೆಯರ ಖಾತೆಗೆ ಒಟ್ಟು 69,000 ಕೋಟಿ ರೂ. ಜಮೆಯಾಗಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ 18,943 ಕೋಟಿ ರೂ. ಭರಿಸಲಾಗಿದೆ. ಗೃಹಜ್ಯೋತಿ ಉಚಿತ ವಿದ್ಯುತ್&zwnj;ಗಾಗಿ 12,000 ಕೋಟಿ ರೂ. ನೀಡಲಾಗಿದೆ. ಯುವನಿಧಿ ಮೂಲಕ ನಿರುದ್ಯೋಗಿ ಯುವಕರಿಗೆ 915 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗಿದೆ.&lt;/p&gt;&lt;p&gt;ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್&zwnj;ನಿಂದ ತತ್ತರಿಸಿದ ಜನರಿಗೆ ಏನೂ ಮಾಡಲಾಗಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ಮೇಲೆ, ಕೋವಿಡ್ ಸಮಯದಲ್ಲಿ ಪ್ರಾಣ ಕಳೆದುಕೊಂಡ ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ನೆರವಾಗಿದ್ದೇವೆ ಎಂದರು.&lt;/p&gt;&lt;img&gt;&lt;p&gt;ಮನೆ ಬಾಗಿಲಿಗೆ 'ಇ-ಖಾತಾ' ಹಂಚುವ ಸರ್ಕಾರದ ನಿರ್ಧಾರವನ್ನು ಕ್ರಾಂತಿಕಾರಿ ಹೆಜ್ಜೆ ಎಂದು ಬಣ್ಣಿಸಿದ ಅವರು, ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು 100 ದಿನಗಳ ಕಾಲಾವಕಾಶ ನೀಡಲಾಗಿದ್ದು, ಬಳಿಕ ನಿಯಮಾನುಸಾರ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಇನ್ನು ಜಿಬಿಎ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ಆಗಸ್ಟ್ 31ರ ಒಳಗಾಗಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಚುನಾವಣಾ ಆಯೋಗ ತನ್ನ ಪಾಡಿಗೆ ತಾನು ಪ್ರಕ್ರಿಯೆ ನಡೆಸಲಿದೆ, ನಾವು ಎದುರಿಸಲು ಸಿದ್ಧರಿದ್ದೇವೆ ಎಂದರು.&lt;/p&gt;&lt;p&gt;ನಾವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ವಿರೋಧ ಪಕ್ಷಗಳು ಮಾಡುವ ಟೀಕೆಗಳನ್ನು ನಾವು ಸಂತೋಷದಿಂದ ಸ್ವೀಕರಿಸುತ್ತೇವೆ ಮತ್ತು ನಮ್ಮ ಕಡೆಯಿಂದ ಏನಾದರೂ ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ. ಸರ್ಕಾರಕ್ಕೆ 3 ವರ್ಷ ತುಂಬಿದ ಈ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಮಾಧ್ಯಮ ಮಿತ್ರರು ಮತ್ತು ವಿರೋಧ ಪಕ್ಷದ ನಾಯಕರಿಗೂ ಧನ್ಯವಾದಗಳು ಎಂದು ಡಿ.ಕೆ. ಶಿವಕುಮಾರ್ ಜವಾಬ್ದಾರಿಯುತವಾಗಿ ತಮ್ಮ ಮಾತು ಮುಗಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/dk-shivakumar-takes-on-jds-leadership-over-bidadi-row-challenges-hdk-to-debate-gdp-8a15m26"/>
        </item>
        <item>
            <title><![CDATA[ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂಬುದು ಜನರ ಅಭಿಲಾಷೆ: ಶಾಸಕ ಇಕ್ಬಾಲ್ ಹುಸೇನ್]]></title>
            <link>https://kannada.asianetnews.com/karnataka-districts/dk-shivakumar-next-karnataka-cm-mla-iqbal-hussain-gvd/articleshow-f37qsin</link>
            <guid isPermaLink="true">https://kannada.asianetnews.com/karnataka-districts/dk-shivakumar-next-karnataka-cm-mla-iqbal-hussain-gvd/articleshow-f37qsin</guid>
            <pubDate>Fri, 29 May 2026 00:28:07 +0530</pubDate>
            <description><![CDATA[&lt;p&gt;ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬುದು ರಾಜ್ಯದ ಲಕ್ಷಾಂತರ ಜನರ ಅಭಿಲಾಷೆ, ಅದನ್ನು ಭಗವಂತ ಈಡೇರಿಸಿದ್ದಾನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸಂತಸ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j1ht7kkgbp54s5m3wtzqndyt,imgname-ddvdv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.29): &lt;/strong&gt;ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬುದು ರಾಜ್ಯದ ಲಕ್ಷಾಂತರ ಜನರ ಅಭಿಲಾಷೆ, ಅದನ್ನು ಭಗವಂತ ಈಡೇರಿಸಿದ್ದಾನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸಂತಸ ವ್ಯಕ್ತಪಡಿಸಿದರು. ನಗರದ ಎಪಿಎಂಸಿ ಬಳಿಯಿರುವ ಈದ್ಗಾ ಮೈದಾನದಲ್ಲಿ ಗುರುವಾರ ಬಕ್ರೀದ್ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುವ ಶುಭ ಸುದ್ದಿ ಬಕ್ರೀದ್ ಹಬ್ಬದಂದು ಸಿಕ್ಕಿರುವುದು ಶುಭ ಮತ್ತು ಯಶಸ್ಸಿನ ಸಂಕೇತ ಎಂದರು.&lt;/p&gt;&lt;p&gt;8 ಬಾರಿ ವಿಧಾನಸಭಾ ಸದಸ್ಯರಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಸಾಕಷ್ಟು ರಾಜಕೀಯ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದರ ಹಿಂದೆ ಅವರ ಶ್ರಮ, ಬಲಿದಾನವಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ರಾಜ್ಯದ ಲಕ್ಷಾಂತರ ಕಾರ್ಯಕರ್ತರು, ಮುಖಂಡರು ಹಾಗೂ ಜನರ ಆಸೆಯಾಗಿತ್ತು. ಅದರಂತೆ ನನಗೂ ಸಹ ಆಸೆ, ಅಭಿಲಾಷೆ ಇದ್ದು&zwnj; ಅದು ಸಾಕಾರವಾಗುತ್ತಿದೆ ಎಂದರು.&lt;/p&gt;&lt;p&gt;ಸಾರ್ವಜನಿಕವಾಗಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ನಾನು ಮೌನ ಮುರಿದು ಮಾತಾಡಿದ್ದೆ. ಕೆಲವರು ಮೌನವಾಗಿಯೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಅದು ಈಡೇರುವ ಕಾಲ ಹತ್ತಿರ ಬಂದಿದೆ. ನಮ್ಮ ನಾಯಕರಿಗೆ ದೆಹಲಿ ವರಿಷ್ಠರು, ಸಿದ್ದರಾಮಯ್ಯ ಅವರು ಅವಕಾಶ ಕಲ್ಪಿಸಿಕೊಡುತ್ತಿದ್ದಾರೆ. ಭಗವಂತನಿಗೆ ಕೋಟಿ&zwnj; ನಮಸ್ಕಾರಗಳನ್ನು ಮಾಡುತ್ತೇನೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಕೇಳುವುದರಲ್ಲಿ ತಪ್ಪೇನಿಲ್ಲ&lt;/strong&gt;&lt;/h2&gt;&lt;p&gt;ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಪರಮೇಶ್ವರ್ ಕೂಡಾ ನಮ್ಮ ನಾಯಕರೇ, ಅವರು ನಮ್ಮ ಹಿರಿಯ ನಾಯಕರು. ಅವರು ಕೇಳುವುದರಲ್ಲಿ ತಪ್ಪೇನಿಲ್ಲ.ಈ ಹಿಂದೆ ಅವರು ಕೂಡಾ ಕೆಪಿಸಿಸಿ ಅಧ್ಯಕ್ಷರಾಗಿದ್ದವರು ಅವಕಾಶ ಕೇಳುವುದರಲ್ಲಿ ತಪ್ಪೇನು ಇಲ್ಲ. ನಮ್ಮ ಜಿಲ್ಲೆಯವದಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಅವಕಾಶ ಸಿಗಬೇಕೆಂಬುದು ನಮ್ಮೆಲ್ಲರ ಮೊದಲ ಆದ್ಯತೆ. ಅದು ಖಂಡಿತ ಈಡೇರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಂ.ಮುಷೀರ್, ಮುಖಂಡ ಇನಾಯತ್ ಸೇರಿದಂತೆ ಅಲ್ಪಸಂಖ್ಯಾತ ಮುಖಂಡರು ಹಾಜರಿದ್ದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dk-shivakumar-next-karnataka-cm-mla-iqbal-hussain-gvd/articleshow-f37qsin"/>
        </item>
        <item>
            <title><![CDATA[ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ: ಶಾಸಕ ಎಚ್.ಸಿ.ಬಾಲಕೃಷ್ಣ]]></title>
            <link>https://kannada.asianetnews.com/politics/dk-shivakumar-cm-race-after-siddaramaiah-hc-balakrishna-gvd/articleshow-fnuy3bg</link>
            <guid isPermaLink="true">https://kannada.asianetnews.com/politics/dk-shivakumar-cm-race-after-siddaramaiah-hc-balakrishna-gvd/articleshow-fnuy3bg</guid>
            <pubDate>Tue, 28 Apr 2026 18:06:58 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ರೇಸ್&zwnj;ನಲ್ಲಿರೋದು ಡಿ.ಕೆ.ಶಿವಕುಮಾರ್ ಮಾತ್ರ&zwnj;. ಬೇರೆಯವರೂ ರೇಸ್&zwnj;ನಲ್ಲಿ ಇರಬಹುದು. ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jx0eq5przgsx0jehvwdys4mv,imgname-bfb-1749140870872.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಏ.28): &lt;/strong&gt;ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ರೇಸ್&zwnj;ನಲ್ಲಿರೋದು ಡಿ.ಕೆ.ಶಿವಕುಮಾರ್ ಮಾತ್ರ&zwnj;. ಬೇರೆಯವರೂ ರೇಸ್&zwnj;ನಲ್ಲಿ ಇರಬಹುದು. ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯನವರು ಬೇಡ ಅಂದಾಗ ಆ ಸ್ಥಾನ ಡಿ.ಕೆ.ಶಿವಕುಮಾರ್ ಅವರಿಗೆ ಸಿಗಲಿದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅವಧಿಯಲ್ಲಿಯೇ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ.&lt;/p&gt;&lt;p&gt;ನಮ್ಮ ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು. ಡಿ.ಸುಧಾಕರ್ ಅನಾರೋಗ್ಯ ವಿಚಾರ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ನಾಯಕರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಬಾಲಿಷವಾದ ಹೇಳಿಕೆ. ಯಾವ ಆಧಾರದಲ್ಲಿ ಇದನ್ನು ಹೇಳಿದ್ದಾರೆ ಅಂತ ಗೊತ್ತಿಲ್ಲ. ಹೆಬ್ಬೆಟ್ಟು ಹಾಕಿಸಿಕೊಳ್ಳಲು ಯಾರು ಹೋಗಿದ್ದಾರೆ ಅಂತ ಅವರೇ ಹೇಳಲಿ ಎಂದರು.&lt;/p&gt;&lt;p&gt;ಡಿ.ಕೆ.ಶಿವಕುಮಾರ್ ಗು ಸುಧಾಕರ್&zwnj; ಗೂ ಹಳೇ ವಿಶ್ವಾಸ. ಅಂದಿನಿಂದ ಇಂದಿನವರೆಗೂ ಅವರ ಕುಟುಂಬದ ಜೊತೆ ಡಿ.ಕೆ.ಶಿವಕುಮಾರ್ ನಿಂತಿದ್ದಾರೆ. ಅವರ ಆರೋಗ್ಯದ ವಿಚಾರ ನೋಡಿಕೊಳ್ಳಲು ಕುಣಿಗಲ್ ಶಾಸಕ ರಂಗನಾಥ್&zwnj; ಅವರಿಗೆ ತಿಳಿಸಿದ್ದಾರೆ. ಅವರ ಆರೋಗ್ಯದ ಕಡೆ ಮೊದಲು ಗಮನ ಹರಿಸೋಣ. ಅದನ್ನು ಬಿಟ್ಟು ಇಂತಹ ಹೇಳಿಕೆಗಳನ್ನು ಕೊಟ್ಟು ಕುಮಾರಸ್ವಾಮಿ ಸಣ್ಣವರಾಗುವುದು ಬೇಡ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದರು.&lt;/p&gt;&lt;h2&gt;&lt;strong&gt;ಶೀಘ್ರದಲ್ಲಿ ತೀರ್ಮಾನ&lt;/strong&gt;&lt;/h2&gt;&lt;p&gt;ಸಂಪುಟ ಪುನರಚನೆ ಬಗ್ಗೆ ಮಾತನಾಡಿದ ಬಾಲಕೃಷ್ಣ, ಈ ಬಗ್ಗೆ ನಾವು ಮನವಿ ಮಾಡಿದ್ದೀವಿ. ಹೈಕಮಾಂಡ್ ಶೀಘ್ರದಲ್ಲಿ ತೀರ್ಮಾನ ತಗೆದುಕೊಳ್ಳಲಿದೆ. ಹೈಕಮಾಂಡ್ ಯಾಕೆ ವಿಳಂಬ ಮಾಡುತ್ತಿದಿಯೊ ಗೊತ್ತಿಲ್ಲ. ನಾಳೆಯೇ ಸಂಪುಟ ವಿಸ್ತಾರಣೆ ಮಾಡಿದರೂ ನಮಗೆ ಖುಷಿ ಎಂದರು. ನಮ್ಮ ಹೈಕಮಾಂಡ್ ವೀಕ್ ಇಲ್ಲ, ಸ್ಟ್ರಾಂಗ್ ಇದೆ. ಸಂಪುಟ ರಚನೆ ಬಗ್ಗೆ ಸಾಧಕ ಬಾಧಕಗಳ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ಹಾಗಾಗಿ, ವಿಳಂಬ ಆಗುತ್ತಿದೆ ಎಂದು ಬಾಲಕೃಷ್ಣ ತಿಳಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/dk-shivakumar-cm-race-after-siddaramaiah-hc-balakrishna-gvd/articleshow-fnuy3bg"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್ ವಿವಾದ:ಭೂ ಮಾಫಿಯಾ ಖಂಡಿಸಿ ಹೋರಾಟಕ್ಕಿಳಿದ ಹೆಚ್‌ಡಿಡಿ, ಸೋನಿಯಾ ಗಾಂಧಿ, ರಾಹುಲ್‌ಗೆ ದೇವೇಗೌಡ ಪತ್ರ]]></title>
            <link>https://kannada.asianetnews.com/gallery/state/hd-devegowda-flags-land-mafia-in-bidadi-township-project-writes-letter-to-sonia-and-rahul-gandhi-gdp-fzb8peo</link>
            <guid isPermaLink="true">https://kannada.asianetnews.com/gallery/state/hd-devegowda-flags-land-mafia-in-bidadi-township-project-writes-letter-to-sonia-and-rahul-gandhi-gdp-fzb8peo</guid>
            <pubDate>Mon, 18 May 2026 11:36:24 +0530</pubDate>
            <description><![CDATA[&lt;p&gt;ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪ್ರಸ್ತಾವಿತ ಬಿಡದಿ ಟೌನ್&zwnj;ಶಿಪ್&zwnj; ಯೋಜನೆಯು ರೈತರ ಜಮೀನು ಕಬಳಿಸುವ ಭೂ ದಂಧೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಅನ್ಯಾಯದ ವಿರುದ್ಧ ಹೋರಾಟ ಘೋಷಿಸಿರುವ ಅವರು, &amp;nbsp;ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದು &amp;nbsp;ಪ್ರಶ್ನಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krwt4fffx0sgwbs2keyak2xd,imgname-hdd--2--1779083394543.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪ್ರಸ್ತಾವಿತ ಬಿಡದಿ ಟೌನ್&zwnj;ಶಿಪ್&zwnj; ಯೋಜನೆಯು ರೈತರ ಜಮೀನು ಕಬಳಿಸುವ ಭೂ ದಂಧೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಅನ್ಯಾಯದ ವಿರುದ್ಧ ಹೋರಾಟ ಘೋಷಿಸಿರುವ ಅವರು, &amp;nbsp;ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದು &amp;nbsp;ಪ್ರಶ್ನಿಸಿದ್ದಾರೆ.&lt;/p&gt;&lt;img&gt;&lt;p&gt;ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್&zwnj;ಶಿಪ್&zwnj; ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್&zwnj; ರಾಷ್ಟ್ರೀಯ ಅಧ್ಯಕ್ಷರಾದ ಹೆಚ್&zwnj;.ಡಿ.ದೇವೇಗೌಡ ಅವರು ಕಾಂಗ್ರೆಸ್&zwnj; ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಹೊರಿಸಿದ್ದಾರೆ. ಬಿಡದಿ ಟೌನ್&zwnj;ಶಿಪ್&zwnj; ಹೆಸರಿನಲ್ಲಿ ರೈತರ ಜಮೀನನ್ನು ಕಬಳಿಸಿ ಭೂ ದಂಧೆ ನಡೆಸಲು ಯತ್ನಿಸಲಾಗುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿ, ಈ ಅನ್ಯಾಯದ ವಿರುದ್ಧ ತಾನು ಹೋರಾಟಕ್ಕೆ ದುಮುಕಿದ್ದೇನೆ ಎಂದು ಘೋಷಿಸಿದ್ದಾರೆ. ರಾಮನಗರ ಪ್ರದೇಶದಲ್ಲಿ ಭೂ ವ್ಯವಹಾರಗಳು ಮತ್ತು ಅಭಿವೃದ್ಧಿ ಪ್ರಾಧಿಕಾರಗಳ ಪುನರ್ರಚನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ದೇವೇಗೌಡರು ಹೇಳಿದ್ದಾರೆ.&lt;/p&gt;&lt;img&gt;&lt;p&gt;ಈ ಕುರಿತು ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್&zwnj; ಆಶ್ರಯದಲ್ಲಿ ಭೂ ಮಾಫಿಯಾ ಬಲವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಡದಿಯನ್ನು ಅಭಿವೃದ್ಧಿ ಹೆಸರಿನಲ್ಲಿ ರಿಯಲ್&zwnj; ಎಸ್ಟೇಟ್&zwnj; ವ್ಯವಹಾರಗಳ ಕೇಂದ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದೆ. ಈ ವಿವಾದದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್&zwnj;. ಡಿ. ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧ ಮಾಡಿದ ಆರೋಪಗಳ ನಂತರವೇ ದೇವೇಗೌಡರ ಪ್ರತಿಕ್ರಿಯೆ ಮತ್ತಷ್ಟು ಪುಷ್ಠಿ ನೀಡಿದೆ&lt;/p&gt;&lt;img&gt;&lt;p&gt;ರಾಮನಗರ ಪ್ರದೇಶದ ಭೂ ವ್ಯವಹಾರಗಳು ಹಾಗೂ ಅಭಿವೃದ್ಧಿ ಪ್ರಾಧಿಕಾರಗಳ ಪುನರ್&zwnj;ರಚನೆ ಬಗ್ಗೆ ಆತಂಕ ವ್ಯಕ್ತಪಡಿಸಿದ ದೇವೇ ಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್&zwnj; ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಅವರಿಗೆ ಪತ್ರ ಬರೆದಿದ್ದಾರೆ. ನಾನು ರಾಮನಗರದಿಂದಲೇ ರಾಜಕೀಯವಾಗಿ ಬೆಳೆದವನು. ಜನರ ಬೆಂಬಲದಿಂದ ಪ್ರಧಾನಿಯೂ ಆಗಿದ್ದೆ. ಆದರೆ ಈಗ ಅದೇ ಪ್ರದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನನಗೆ ನೋವುಂಟುಮಾಡುತ್ತಿವೆ, ಎಂದರು.&lt;/p&gt;&lt;img&gt;&lt;p&gt;ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಐದು ನಿಗಮಗಳ ರಚನೆ ಮತ್ತು ಅವುಗಳ ನಿಯಂತ್ರಣವನ್ನು ಭೂ ವ್ಯವಹಾರಗಳೊಂದಿಗೆ ಸಂಪರ್ಕಿಸಿ ದೇವೇಗೌಡರು ಪರೋಕ್ಷವಾಗಿ ಟೀಕಿಸಿದರು. ನೀರಾವರಿ ಸಚಿವರ ಅಧೀನದಲ್ಲಿರುವ ಈ ನಿಗಮಗಳ ಮೂಲಕ ಭೂ ಮಾಫಿಯಾ ಚಟುವಟಿಕೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ನಡೆಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬರು ರೈತರಿಂದ ಹೊಡೆಸಿಕೊಳ್ಳುವೆ ಎಂದು ಹೇಳುತ್ತಾರೆ. ಮೊದಲು ಅವರು ಹೋಗಿ ಹೊಡೆಸಿಕೊಂಡು ಬರಲಿ, ನಂತರ ನಾನು ರೈತರನ್ನು ಭೇಟಿಯಾಗುತ್ತೇನೆ ಎಂದು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.&lt;/p&gt;&lt;img&gt;&lt;p&gt;ಇದೇ ಸಂದರ್ಭದಲ್ಲಿ, ತಮ್ಮ ವಿರುದ್ಧ ಆಗಿದ್ದ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ನಾನು ಅಳುತ್ತೇನೆ ಎಂದು ಕೆಲವರು ವ್ಯಂಗ್ಯ ಮಾಡುತ್ತಾರೆ. ಆದರೆ ಇಂತಹ ವ್ಯವಸ್ಥೆಯನ್ನು ನೋಡಿ ನಾನು ನಗುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಹಳೆಯ ಸ್ನೇಹಿತರು. ಆದರೆ ನಡೆಯುತ್ತಿರುವ ಅನ್ಯಾಯವನ್ನು ಅವರು ಗಮನಿಸುತ್ತಿಲ್ಲ ಎಂಬುದು ನೋವು ತಂದಿದೆ ಎಂದರು.&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್&zwnj; ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು. ಹಿಂದೆ ಕುಮಾರಸ್ವಾಮಿ ಅವರು ಐದು ಟೌನ್&zwnj;ಶಿಪ್&zwnj; ಯೋಜನೆಗಳನ್ನು ಪ್ರಸ್ತಾಪಿಸಿದಾಗ ಕಾಂಗ್ರೆಸ್&zwnj; ನಾಯಕರು ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಸತ್ಯಶೋಧನಾ ಸಮಿತಿಯೂ ರಚಿಸಲಾಯಿತು. ಆ ವರದಿಯಲ್ಲಿ ಏನು ಬಂದಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಜನರ ವಿರೋಧದ ಹಿನ್ನೆಲೆ ಆ ಯೋಜನೆಗಳನ್ನು ಕೈಬಿಡಲಾಯಿತು. ಈಗಲೂ ಬಿಡದಿಯಲ್ಲಿ ಜನರ ತೀವ್ರ ವಿರೋಧ ಇದೆ ಎಂದು ಹೇಳಿದರು.&lt;/p&gt;&lt;img&gt;&lt;p&gt;ಇನ್ನೂ ಮುಂದುವರಿದು, ಬೆಂಗಳೂರು ಸುತ್ತಮುತ್ತ ಸುಮಾರು 20 ಸಾವಿರ ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ತನಿಖೆ ನಡೆಸಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೀವು, ಜನರ ಸಮಸ್ಯೆಯನ್ನು ಕೇಳಬೇಕು. ಬಿಡದಿಯ ರೈತರ ಕಷ್ಟವನ್ನು ಯಾರಾದರೂ ಕೇಳಿದ್ದೀರಾ? ಎಂದು ಪ್ರಶ್ನಿಸಿದರು.&lt;/p&gt;&lt;img&gt;&lt;p&gt;ಕೊನೆಗೆ, ಸಿಎಂ ಸಿದ್ದರಾಮಯ್ಯ ಅವರನ್ನು ಬಿಡದಿಗೆ ಭೇಟಿ ನೀಡಲು ಆಹ್ವಾನಿಸಿದ ದೇವೇಗೌಡರು, &ldquo;ನಾನು ಕೂಡ ಬರುತ್ತೇನೆ. ನೀವು ಬನ್ನಿ, ರೈತರ ಸಮಸ್ಯೆಯನ್ನು ಸ್ಥಳದಲ್ಲೇ ನೋಡೋಣ. ಸ್ಥಳೀಯ ಅಧಿಕಾರಿಗಳು ಕೂಡ ಜನರ ಅಹವಾಲುಗಳನ್ನು ಕೇಳುತ್ತಿಲ್ಲ. ಇಲ್ಲಿ ಭಾರೀ ದಂಧೆ ನಡೆಯುತ್ತಿದೆ,&rdquo; ಎಂದು ಆರೋಪಿಸಿದರು. ಕನಕಪುರ ಪ್ರದೇಶದಲ್ಲಿಯೂ ಭೂಸ್ವಾಧೀನದ ಕುರಿತು ತಮ್ಮ ಬಳಿ ಮಾಹಿತಿ ಇದೆ ಎಂದು ಸೂಚಿಸಿ, ಸರ್ಕಾರದ ವಿರುದ್ಧ ತಮ್ಮ ಹೋರಾಟ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/hd-devegowda-flags-land-mafia-in-bidadi-township-project-writes-letter-to-sonia-and-rahul-gandhi-gdp-fzb8peo"/>
        </item>
        <item>
            <title><![CDATA[ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಸ್ಪೋಟಕ ಪತ್ತೆ: ಭದ್ರತಾ ಲೋಪ ಹಿನ್ನೆಲೆ ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು!]]></title>
            <link>https://kannada.asianetnews.com/karnataka-districts/pm-modi-route-explosives-found-case-6-police-suspended-bengaluru-south-sat/articleshow-grumzek</link>
            <guid isPermaLink="true">https://kannada.asianetnews.com/karnataka-districts/pm-modi-route-explosives-found-case-6-police-suspended-bengaluru-south-sat/articleshow-grumzek</guid>
            <pubDate>Sun, 24 May 2026 13:41:10 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಪಿಎಸ್&zwnj;ಐ ಸೇರಿದಂತೆ 6 ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೋದಿ ಸಂಚರಿಸಬೇಕಿದ್ದ ರಸ್ತೆಯಲ್ಲಿ ಸ್ಫೋಟಕ ಪತ್ತೆಯಾಗಿದ್ದರೂ, ನಿರ್ಲಕ್ಷ್ಯ ತೋರಿದ್ದರಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kscgafyv911aecf07a8kxasq,imgname-ramanagara-6-police-suspended-1779609976794.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ರಾಮನಗರ (ಮೇ 24): ರಾ&lt;/strong&gt;ಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಗಂಭೀರ ಲೋಪದ ಬೆನ್ನಲ್ಲೇ ಇದೀಗ ದೊಡ್ಡ ಮಟ್ಟದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಮೋದಿ ಸಂಚರಿಸಬೇಕಾಗಿದ್ದ ರಸ್ತೆಯ ಪಕ್ಕದಲ್ಲೇ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್&zwnj;ಪೆಕ್ಟರ್ (PSI) ಸೇರಿದಂತೆ ಒಟ್ಟು ಆರು ಜನ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.&lt;/p&gt;&lt;h3&gt;&lt;strong&gt;ಬೆಂಗಳೂರು ದಕ್ಷಿಣ ಎಸ್ಪಿ ಕಠಿಣ ಆದೇಶ&lt;/strong&gt;&lt;/h3&gt;&lt;p&gt;ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಅಧೀಕ್ಷಕರಾದ (SP) ಶ್ರೀನಿವಾಸ್ ಗೌಡ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಒಬ್ಬರು ಪಿಎಸ್&zwnj;ಐ (PSI), ಒಬ್ಬರು ಎಎಸ್&zwnj;ಐ (ASI) ಹಾಗೂ ನಾಲ್ವರು ಪೊಲೀಸ್ ಪೇದೆಗಳು (Constables) ಸೇರಿದ್ದಾರೆ. ವಿವಿಐಪಿ (VVIP) ಭದ್ರತೆಯಂತಹ ಅತ್ಯಂತ ಸೂಕ್ಷ್ಮ ಜವಾಬ್ದಾರಿಯ ಸಮಯದಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಕಾರಣಕ್ಕಾಗಿ ಇವರ ವಿರುದ್ಧ ಈ ಕಠಿಣ ಕ್ರಮ ಜರುಗಿಸಲಾಗಿದೆ.&lt;/p&gt;&lt;h2&gt;&lt;strong&gt;ಭದ್ರತಾ ಸ್ಥಳದ ಬಳಿಯೇ ಸಿಕ್ಕಿದ್ದವು ಸ್ಫೋಟಕಗಳು!&lt;/strong&gt;&lt;/h2&gt;&lt;p&gt;ಕಳೆದ ಮೇ 10ರಂದು ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಈ ಆಘಾತಕಾರಿ ಘಟನೆ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಭೇಟಿಯ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಅಮಾನತುಗೊಂಡಿರುವ ಆರು ಜನ ಪೊಲೀಸರನ್ನು ಸ್ಫೋಟಕಗಳು ಪತ್ತೆಯಾದ ವಡೇರಹಳ್ಳಿ ಗೇಟ್&zwnj;ನ ನಿಗದಿತ ಜಾಗದಲ್ಲೇ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಆದರೆ, ಇವರು ಕರ್ತವ್ಯದಲ್ಲಿದ್ದ ಸ್ಥಳದ ಅತ್ಯಂತ ಸಮೀಪದಲ್ಲೇ ತೀವ್ರ ತರಹದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು ಇಡೀ ಪೊಲೀಸ್ ಇಲಾಖೆಯನ್ನು ತಲ್ಲಣಗೊಳಿಸಿತ್ತು.&lt;/p&gt;&lt;h3&gt;&lt;strong&gt;ಅಲರ್ಟ್ ಇರಲಿಲ್ಲ ಪೊಲೀಸರು; ಹಿರಿಯ ಅಧಿಕಾರಿಗಳ ತರಾಟೆ&lt;/strong&gt;&lt;/h3&gt;&lt;p&gt;ವಿವಿಐಪಿಗಳು ಬರುವ ಮುನ್ನ ಇಡೀ ಮಾರ್ಗವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿ ಹದ್ದಿನ ಕಣ್ಣಿಡಬೇಕಾದದ್ದು ಕರ್ತವ್ಯದ ನಿಯಮ. ಆದರೆ ಸ್ಫೋಟಕಗಳು ಪತ್ತೆಯಾದ ಸ್ಥಳದಲ್ಲೇ ಇದ್ದರೂ ಈ ಸಿಬ್ಬಂದಿಗಳು ಯಾವುದೇ ರೀತಿಯ ಮುನ್ನೆಚ್ಚರಿಕೆ ವಹಿಸಿಲ್ಲ ಹಾಗೂ ಅಲರ್ಟ್ ಆಗಿರಲಿಲ್ಲ ಎನ್ನುವುದು ಉನ್ನತ ಮಟ್ಟದ ತನಿಖೆಯಲ್ಲಿ ಸಾಬೀತಾಗಿದೆ. ಕರ್ತವ್ಯದ ವೇಳೆ ತೋರಿದ ಈ ಅತಿಯಾದ ಅಲಕ್ಷ್ಯವು ಪ್ರಧಾನಿಯವರ ಸುರಕ್ಷತೆಗೆ ಧಕ್ಕೆ ತರುವಂತಹ ಗಂಭೀರ ಲೋಪ ಎಂದು ಪರಿಗಣಿಸಿ, ಎಸ್&zwnj;ಪಿ ಶ್ರೀನಿವಾಸ್ ಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲ ಆರು ಜನರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.&lt;/p&gt;&lt;p&gt;ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆಯಾದ ದಿನದಿಂದಲೇ ಆಂತರಿಕ ತನಿಖೆ ಚುರುಕುಗೊಂಡಿತ್ತು. ಸದ್ಯ ಪೊಲೀಸರ ಅಮಾನತು ನಡೆಸಿರುವುದು ಇಲಾಖೆಯ ಇತರೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದಂತಾಗಿದೆ. ಈ ಪ್ರಕರಣದ ಕುರಿತು ಮತ್ತಷ್ಟು ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/pm-modi-route-explosives-found-case-6-police-suspended-bengaluru-south-sat/articleshow-grumzek"/>
        </item>
        <item>
            <title><![CDATA[ಪೂಜೆಗೆ ಮಚ್ಚೆ ಇಲ್ಲದ ನಗ್ನ ಫೋಟೋ ಕಳ್ಸು ₹30 ಲಕ್ಷ ಕೊಡ್ತೇನೆ, ರಾಮನಗರದಲ್ಲಿ ಮಹಿಳೆಗೆ ಕಿರುಕುಳ]]></title>
            <link>https://kannada.asianetnews.com/state/ramanagara-case-woman-targeted-with-obscene-demand-in-name-of-ritual/articleshow-grvfvyt</link>
            <guid isPermaLink="true">https://kannada.asianetnews.com/state/ramanagara-case-woman-targeted-with-obscene-demand-in-name-of-ritual/articleshow-grvfvyt</guid>
            <pubDate>Sun, 03 May 2026 12:50:41 +0530</pubDate>
            <description><![CDATA[&lt;p&gt;ಮಚ್ಚೆ ಇಲ್ಲದ ನಿನ್ನ ನಗ್ನ ಫೋಟೋ ಕಳುಹಿಸು ₹30 ಲಕ್ಷ ಕೊಡ್ತೇನೆ, ರಾಮನಗರದಲ್ಲಿ ಮಹಿಳೆಗೆ ಕಿರುಕುಳ, ವಿಶೇಷ ಪೂಜೆಗೆ ನಿನ್ನನ್ನು ಸೆಲೆಕ್ಟ್ ಮಾಡುತ್ತೇನೆ, ಪೂಜೆ ಬಳಿಕ ಹಣ ಕೊಡುತ್ತೇನೆ ಎಂದು ಕಿರುಕುಳ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqpbbn53xnf57q8jgqzg2c6z,imgname-ramanagar-case-1777792832675.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.03) &lt;/strong&gt;ಮಹಿಳೆಗೆ ಪದೇ ಪದೆ ಮೇಸೇಜ್ ಮಾಡಿ ನಗ್ನ ಫೋಟೋ ಕಳುಹಿಸುವಂತೆ ಕಿರುಕುಳ ನೀಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ವಿಶೇಷ ಪೂಜೆ ಮಾಡಿಸುತ್ತಿದ್ದೇನೆ. ಈ ಪೂಜೆಗೆ ಮಹಿಳೆಯ ನಗ್ನ ಫೋಟೋ ಅವಶ್ಯಕತೆ ಇದೆ. ನಿನ್ನ ಮಚ್ಚೆ ಇಲ್ಲದ ನಗ್ನ ದೇಹದ ಫೋಟೋ ಕಳುಹಿಸು. ಪೂಜೆ ಮುಗಿದ ಬಳಿಕ 30 ಲಕ್ಷ ರೂಪಾಯಿ ಕಳುಹಿಸುತ್ತೇನೆ ಎಂದು ಕಿರಣ್ ಎಂಬಾತ ಕಿರುಕುಳ ನೀಡಿದ್ದಾನೆ. ಈ ಸಂಬಂಧ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ.&lt;/p&gt;&lt;h2&gt;ನಗ್ನ ಪೋಟೋ ಕಳುಹಿಸಿದ್ರೆ 30 ಲಕ್ಷ ಹಣ&lt;/h2&gt;&lt;p&gt;ಮನಿ ಡಬ್ಲಿಂಗ್ ಮಾಡುವ ಪೂಜೆಯೊಂದಕ್ಕೆ ಸೆಲೆಕ್ಟ್ ಮಾಡಲು ನಗ್ನ ಪೋಟೊ ಕಳುಹಿಸುವಂತೆ ಕಿರುಕುಳ ನೀಡಿದ್ದಾನೆ. ರಾಮನಗರ ತಾಲೂಕಿನ ದೊಡ್ಡಮಣ್ಣುಗುಡ್ಡೆ ಗ್ರಾಮದ ಮಹಿಳೆಯೊಬ್ಬರ ನಂಬರನ್ನು ಪಡೆದ ಅದೇ ಗ್ರಾಮದ ಆರೋಪಿ ಕಿರಣ್ ನಗ್ನ ಫೋಟೋ ಕಳುಹಿಸುವಂತೆ ಕಿರುಕುಳ ನೀಡಿದ್ದಾರೆ. ಪದೇ ಪದೇ ವ್ಯಾಟ್ಸಾಪ್ ಮೆಸೇಜ್ ಮಾಡಿ ಕಿರುಕಳ ನೀಡಿದ್ದಾನೆ.&lt;/p&gt;&lt;h2&gt;ಪೂಜೆ ನೆಪದಲ್ಲಿ ಮಹಿಳೆಯರಿಗೆ ಕಿರುಕಳ&lt;/h2&gt;&lt;p&gt;ನಾನು ಬೆಂಗಳೂರಿನಲ್ಲಿ ವಿಶೇಷ ಪೂಜೆ ಮಾಡಿಸ್ತಿದ್ದೀನಿ, ಇದಕ್ಕೆ ಮೈ ಮೇಲೆ ಮಚ್ಚೆ ಇಲ್ಲದ ಮಹಿಳೆ ನಗ್ನವಾಗಿ ಕೂರಬೇಕು.ಈ ಪೂಜೆಗೆ ನಿನ್ನನ್ನ ಸೆಲೆಕ್ಟ್ ಮಾಡಲು ನಿನ್ನ ಬೆತ್ತಲೆ ಪೋಟೊ ಕಳುಹಿಸು ಎಂದು ಕಿರಣ್ ಕಿರುಕುಳ ನೀಡಲು ಆರಂಭಿಸಿದ್ದಾನೆ. ಪೂಜೆ ಮುಗಿಯುತ್ತಿದ್ದಂತೆ 30 ಲಕ್ಷ ರೂಪಾಯಿ ಹಣ ನೀಡುತ್ತೇನೆ ಎಂದಿದ್ದಾನೆ. ಕಳೆದ ಒಂದು ವಾರದಿಂದ ಕಿರಣ್ ಸತತವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.&lt;/p&gt;&lt;h2&gt;ಮಹಿಳಾ ಠಾಣೆಗೆ ದೂರು&lt;/h2&gt;&lt;p&gt;ಕಿರಣ್ ಎಂಬಾತನ ಕಿರುಕುಳ ತೀವ್ರಗೊಳ್ಳುತ್ತಿದ್ದಂತೆ ಎರಡು ದಿನಗಳ ಹಿಂದೆ ಮಹಿಳೆ ದೂರು ನೀಡಿದ್ದಾರೆ, ರಾಮನಗರ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಇದೀಗ ಎರಡು ದಿನ ಕಳೆದರೂ ಆರೋಪಿಯನ್ನು ಬಂದಿಸಿಲ್ಲ ಅನ್ನೋ ಆರೋಪವೂ ಕೇಳಿಬಂದಿದೆ. ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮಹಿಳೆ ಮನವಿ ಮಾಡಿದ್ದಾಳೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>ramanagara</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/ramanagara-case-woman-targeted-with-obscene-demand-in-name-of-ritual/articleshow-grvfvyt"/>
        </item>
        <item>
            <title><![CDATA[ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಸರಣಿ ಅಪಘಾತದಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಕಾರು ಜಖಂ]]></title>
            <link>https://kannada.asianetnews.com/gallery/state/former-mla-kb-chandrashekhar-car-damaged-in-bengaluru-mysuru-expressway-chain-collision-gx5lhfs</link>
            <guid isPermaLink="true">https://kannada.asianetnews.com/gallery/state/former-mla-kb-chandrashekhar-car-damaged-in-bengaluru-mysuru-expressway-chain-collision-gx5lhfs</guid>
            <pubDate>Sat, 06 Jun 2026 19:19:39 +0530</pubDate>
            <description><![CDATA[&lt;p&gt;ಬೆಂಗಳೂರು ಮೈಸೂರು ಎಕ್ಸ್&zwnj;ಪ್ರೇಸ್&zwnj;ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. 5ಕ್ಕೂ ಹೆಚ್ಚು ವಾಹನಗಳು ಅಪಘಾಕ್ಕೀಡಾಗಿದೆ. ಅಪಘಾತದಲ್ಲಿ ಮಾಜಿ ಶಾಸಕ ಸಂಚರಿಸುತ್ತಿದ್ದ ಕಾರು ಜಖಂ ಗೊಂಡಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktejtgfvcs1tfbr5g4q0zz2b,imgname-former-legislator-kb-chandrashekhar-escapes-unhurt-1780753449467.png" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು ಮೈಸೂರು ಎಕ್ಸ್&zwnj;ಪ್ರೇಸ್&zwnj;ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. 5ಕ್ಕೂ ಹೆಚ್ಚು ವಾಹನಗಳು ಅಪಘಾಕ್ಕೀಡಾಗಿದೆ. ಅಪಘಾತದಲ್ಲಿ ಮಾಜಿ ಶಾಸಕ ಸಂಚರಿಸುತ್ತಿದ್ದ ಕಾರು ಜಖಂ ಗೊಂಡಿದೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಬೆಂಗಳೂರು ಮೈಸೂರು ಎಕ್ಸ್&zwnj;ಪ್ರೇಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. 5ಕ್ಕೂ ಹೆಚ್ಚು ಕಾರುಗಳು, ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಾಮನಗರದ ಜಯಪುರು ಗೇಟ್ ಬಳಿಕ ಅಪಘಾತ ಸಂಭವಿಸಿದೆ. ಅತೀ ವೇಗದಲ್ಲಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಚಲಿಸುತ್ತಿದ್ದ ಕಾರು ಜಖಂ ಗೊಂಡಿದೆ.&lt;/p&gt;&lt;img&gt;&lt;p&gt;ಕೆಆರ್ ಪೇಟೆ ಮಾಜಿ ಶಾಸಕರ ಕೆಬಿ ಚಂದ್ರಶೇಕರ್ ಫಾರ್ಚುನರ್ ಕಾರಿನ ಮೂಲಕ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಜಿ ಶಾಸಕರ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಠವಶಾತ್ ಕೆಬಿ ಚಂದ್ರಶೇಖರ್ ಅಪಾಯದಿಂದ ಪಾರಾಗಿದ್ದಾರೆ.&lt;/p&gt;&lt;img&gt;&lt;p&gt;ಕೆಬಿ ಚಂದ್ರಶೇಖರ್ ಕಾರಿನ ಮುಂಭಾಗ ಹಾಗೂ ಕೋ ಡ್ರೈವರ್ ಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ವೇಗವಾಗಿ ಸಾಗುತ್ತಿದ್ದ ವೇಳೆ ಆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕೆಬಿ ಚಂದ್ರಶೇಖರ್ ಬೇರೆ ವಾಹನದಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.&lt;/p&gt;&lt;img&gt;&lt;p&gt;ಸರಣಿ ಅಪಘಾತದಲ್ಲಿ ಕಾರಿನ ಚಾಲಕರು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಅತೀ ವೇಗವಾಗಿದ್ದ ಕಾರಣ ಕೆಲ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದೆ. ಹೆದ್ದಾರಿಯಲ್ಲಿ ಮತ್ತೆ ಅಪಘಾತಗಳ ಸರಣಿ ಹೆಚ್ಚಾಗುತ್ತಿದೆ.&lt;/p&gt;&lt;img&gt;&lt;p&gt;ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶನಿವಾರ ಆಗಿರುವ ಕಾರಣ ಹೆದ್ದಾರಿಯಲ್ಲಿ ವಿಪರೀತ ವಾಹನಗಳು ಪ್ರಯಾಣಿಸುತ್ತಿದೆ. ಹೀಗಾಗಿ ತಕ್ಷಣವೇ ಕಾರ್ಯಪ್ರವತ್ತರಾದ ಪೊಲೀಸರು ವಾಹನಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿದ್ದಾರೆ.&lt;/p&gt;]]></content:encoded>
            <category>ramanagara</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/former-mla-kb-chandrashekhar-car-damaged-in-bengaluru-mysuru-expressway-chain-collision-gx5lhfs"/>
        </item>
        <item>
            <title><![CDATA[ಹನಿಯೂರು ಚಂದ್ರೇಗೌಡನ ಅಶ್ಲೀಲ ವಿಡಿಯೋ ಪ್ರಕರಣ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಿ ನಾಯಿಯಂತೆ ಬಿಂಬಿಸಿಕೊಂಡಿದ್ದ ಆಸಾಮಿ!]]></title>
            <link>https://kannada.asianetnews.com/karnataka-districts/bengaluru-haniyuru-chandregowda-case-fake-identity-accused-chandregowda-linked-to-blackmail-network-gdp/articleshow-izer39b</link>
            <guid isPermaLink="true">https://kannada.asianetnews.com/karnataka-districts/bengaluru-haniyuru-chandregowda-case-fake-identity-accused-chandregowda-linked-to-blackmail-network-gdp/articleshow-izer39b</guid>
            <pubDate>Fri, 01 May 2026 16:04:06 +0530</pubDate>
            <description><![CDATA[ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್&zwnj;ಮೇಲ್ ಆರೋಪದ ಮೇಲೆ, ಈ ಹಿಂದೆ ಪ್ರೊಫೆಸರ್ ಹಾಗೂ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದ ಹನಿಯೂರು ಚಂದ್ರೇಗೌಡನನ್ನು ಬಂಧಿಸಲಾಗಿದೆ. ಆತ ಆರ್&zwnj;ಟಿಐ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದ ಪ್ರಕರಣವೂ ಬೆಳಕಿಗೆ ಬಂದಿದ್ದು, ಇದೊಂದು ಸಂಘಟಿತ ಜಾಲವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhhhwqekfhd9zck7hjb3pre,imgname-haniyuru-chandregowda-case-1777631556334.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು&lt;/strong&gt; ನಗರದಲ್ಲಿ ಹಲವಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್&zwnj;ಮೇಲ್ ಪ್ರಕರಣದಲ್ಲಿ ಬಂಧಿತರಾಗಿರುವ ಹನಿಯೂರು ಚಂದ್ರೇಗೌಡ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಸಾರ್ವಜನಿಕ ಜೀವನದಲ್ಲಿ ವಿವಿಧ ರೀತಿಯ ಗುರುತುಗಳನ್ನು ಕಟ್ಟಿಕೊಂಡು ಹೆಸರು ಮಾಡಿದ್ದ ಚಂದ್ರೇಗೌಡನ ನಿಜಸ್ವರೂಪ ಇದೀಗ ಬಹಿರಂಗವಾಗುತ್ತಿರುವುದು ಗಮನಾರ್ಹ.&lt;/p&gt;&lt;p&gt;ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹನಿಯೂರು ಚಂದ್ರೇಗೌಡ, ತಾನು ಕನ್ನಡ ಅಸೋಸಿಯೇಟ್ ಪ್ರೊಫೆಸರ್, ಬುಡಕಟ್ಟು ಜನಪದ ಸಂಶೋಧಕ, ಕಿರುತೆರೆ ನಟ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಲೇಖಕ ಎಂದು ಹೇಳಿಕೊಂಡು ಮತದಾರರ ಮುಂದೆ ತನ್ನನ್ನು ಪರಿಚಯಿಸಿಕೊಂಡಿದ್ದ. ಹಣಬಲ ಮತ್ತು ತೋಳ್ಬಲದ ವಿರುದ್ಧ ವಿದ್ಯಾಬಲಕ್ಕೆ ಮತ ನೀಡಿ ಎಂಬ ಘೋಷಣೆಯೊಂದಿಗೆ ಪ್ರಚಾರ ನಡೆಸಿದ್ದ ಆತ, ತನ್ನನ್ನು ನಿಮ್ಮ ನಾಯಿ ಎಂದು ಬಿಂಬಿಸುವ ರೀತಿಯ ಪೋಸ್ಟ್&zwnj;ಗಳ ಮೂಲಕವೂ ಜನರ ಗಮನ ಸೆಳೆಯಲು ಪ್ರಯತ್ನಿಸಿದ್ದನು.&lt;/p&gt;&lt;p&gt;ಆದರೆ ಈಗ ಹಲವು ಮಹಿಳೆಯರೊಂದಿಗೆ ಆತ್ಮೀಯತೆ ಬೆಳೆಸಿ, ಅವರನ್ನು ದೈಹಿಕವಾಗಿ ದುರುಪಯೋಗಪಡಿಸಿಕೊಂಡು ಖಾಸಗಿ ಫೋಟೋ ಹಾಗೂ ವಿಡಿಯೋಗಳ ಮೂಲಕ ಬ್ಲ್ಯಾಕ್&zwnj;ಮೇಲ್ ಮಾಡುತ್ತಿದ್ದನೆಂಬ ಗಂಭೀರ ಆರೋಪಗಳಡಿ ಆತ ಬಂಧನಕ್ಕೊಳಗಾಗಿದ್ದಾನೆ. ಈ ಪ್ರಕರಣದ ತನಿಖೆ ಮುಂದುವರಿದಂತೆ, ಅವನ ವಿರುದ್ಧ ಇನ್ನಷ್ಟು ಅಚ್ಚರಿ ಮೂಡಿಸುವ ಮಾಹಿತಿ ಹೊರಬರುತ್ತಿದೆ.&lt;/p&gt;&lt;h2&gt;ಚಂದ್ರೇಗೌಡ ವಿರುದ್ಧ ಬೆದರಿಕೆ ಪ್ರಕರಣ&lt;/h2&gt;&lt;p&gt;ಇದಕ್ಕೂ ಮೊದಲು ಚಂದ್ರೇಗೌಡ ವಿರುದ್ಧ ಬೆದರಿಕೆ ಪ್ರಕರಣವೂ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆ ಪ್ರಕರಣದಲ್ಲಿ, ಯುವಜನ ಮತ್ತು ಕ್ರೀಡಾ ಇಲಾಖೆಯ ಎನ್&zwnj;ಎಸ್&zwnj;ಎಸ್ ಅಧಿಕಾರಿ ಪ್ರತಾಪ್ ಅವರಿಗೆ ಆತ ಬೆದರಿಕೆ ಹಾಕಿದ್ದನೆಂದು ಆರೋಪಿಸಲಾಗಿದೆ.&lt;/p&gt;&lt;p&gt;ಈ ಕುರಿತು ಪ್ರತಾಪ್ ನೀಡಿರುವ ಹೇಳಿಕೆಯಲ್ಲಿ, ಕಳೆದ ಆರು-ಏಳು ತಿಂಗಳಿಂದ ಚಂದ್ರೇಗೌಡ ಆರ್&zwnj;ಟಿಐ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳನ್ನು ಬೆದರಿಸುತ್ತಿದ್ದನೆಂದು ತಿಳಿಸಿದ್ದಾರೆ. &ldquo;ಆರ್&zwnj;ಟಿಐ ಅರ್ಜಿಗಳನ್ನು ಹಾಕಿ ನಂತರ ಬೆದರಿಕೆ ಹಾಕುವುದು ಅವನ ಚಟುವಟಿಕೆಯಾಗಿತ್ತು. ನನ್ನ ಸ್ನೇಹಿತರ ಮೂಲಕ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದನು. ನಂತರ ನೇರವಾಗಿ ಮೆಸೇಜ್ ಕಳುಹಿಸಿ &lsquo;ನಿನ್ನನ್ನು ಜೈಲಿಗೆ ಕಳುಹಿಸುತ್ತೇನೆ, ನಿನ್ನ ನೇಮಕಾತಿ ಸರಿಯಿಲ್ಲ, ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ&rsquo; ಎಂದು ಬೆದರಿಕೆ ಹಾಕಿದನು&rdquo; ಎಂದು ಪ್ರತಾಪ್ ವಿವರಿಸಿದ್ದಾರೆ.&lt;/p&gt;&lt;h2&gt;ಇತರರಿಗೂ ಇದೇ ರೀತಿಯಲ್ಲಿ ಬೆದರಿಕೆ&lt;/h2&gt;&lt;p&gt;ಅಷ್ಟೇ ಅಲ್ಲದೆ, ಅವನ ವರ್ತನೆ ಕ್ರಮೇಣ ಅತಿರೇಕಕ್ಕೆ ಹೋಗಿದ್ದು, ಕಚೇರಿ ಬಳಿ ಬಂದು ಅಧಿಕಾರಿಗಳನ್ನು ಬೆದರಿಸಲು ಆರಂಭಿಸಿದ್ದಾನೆ. ಈ ಹಿನ್ನೆಲೆ ಪ್ರತಾಪ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಚಂದ್ರೇಗೌಡ ಇತರರಿಗೂ ಇದೇ ರೀತಿಯಲ್ಲಿ ಬೆದರಿಕೆ ಹಾಕಿದ್ದಾನೆ ಎಂಬ ಮಾಹಿತಿಯೂ ಬಹಿರಂಗವಾಗಿದೆ.&lt;/p&gt;&lt;p&gt;ಈಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಹಿನ್ನೆಲೆಯಲ್ಲಿ, ಅವನ ಎಲ್ಲಾ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಪ್ರತಾಪ್ ಒತ್ತಾಯಿಸಿದ್ದಾರೆ. ಬ್ಲ್ಯಾಕ್&zwnj;ಮೇಲ್ ಮಾಡಿ ಹಣ ಪಡೆಯುವುದು ಅವನ ಪ್ರಮುಖ ಉದ್ದೇಶವಾಗಿದ್ದು, ಇದರ ಹಿಂದೆ ಒಂದು ತಂಡವೂ ಕಾರ್ಯನಿರ್ವಹಿಸುತ್ತಿರುವ ಸಾಧ್ಯತೆ ಇದೆ. ಲ್ಯಾಪ್&zwnj;ಟಾಪ್ ಹಾಗೂ ಇತರ ಸಾಧನಗಳಲ್ಲಿ ಇರುವ ಡೇಟಾವನ್ನು ಪರಿಶೀಲಿಸಬೇಕು. ಕೆಲವರು ಹಣ ನೀಡಿ ಅವನ ಮೂಲಕ ಕೆಲಸ ಮಾಡಿಸಿಕೊಂಡಿರಬಹುದು&rdquo; ಎಂದು ಅವರು ಹೇಳಿದ್ದಾರೆ.&lt;/p&gt;&lt;p&gt;ಒಟ್ಟಿನಲ್ಲಿ, ಹನಿಯೂರು ಚಂದ್ರೇಗೌಡ ಪ್ರಕರಣವು ಸಾಮಾನ್ಯ ಅಪರಾಧ ಪ್ರಕರಣಕ್ಕಿಂತ ಹೆಚ್ಚಾಗಿ ಸಂಘಟಿತ ವಂಚನೆ ಮತ್ತು ಬ್ಲ್ಯಾಕ್&zwnj;ಮೇಲ್ ಜಾಲದ ಸುಳಿವು ನೀಡುತ್ತಿರುವುದರಿಂದ, ಪೊಲೀಸರು ಈ ದಿಕ್ಕಿನಲ್ಲಿ ತೀವ್ರ ತನಿಖೆ ಮುಂದುವರಿಸಿದ್ದಾರೆ.&lt;/p&gt;]]></content:encoded>
            <category>ramanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-haniyuru-chandregowda-case-fake-identity-accused-chandregowda-linked-to-blackmail-network-gdp/articleshow-izer39b"/>
        </item>
        <item>
            <title><![CDATA[BREAKING: ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಮುಂದಿನ 3 ಗಂಟೆ 'ಯಲ್ಲೋ ಅಲರ್ಟ್'; ಹಾಸನಕ್ಕೆ ಆರೆಂಜ್ ಅಲರ್ಟ್]]></title>
            <link>https://kannada.asianetnews.com/gallery/bengaluru-urban/karnataka-rain-alert-bengaluru-yellow-alert-hassan-orange-alert-weather-update-san-lzi7va4</link>
            <guid isPermaLink="true">https://kannada.asianetnews.com/gallery/bengaluru-urban/karnataka-rain-alert-bengaluru-yellow-alert-hassan-orange-alert-weather-update-san-lzi7va4</guid>
            <pubDate>Mon, 25 May 2026 18:03:58 +0530</pubDate>
            <description><![CDATA[ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಹತ್ವದ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಹಾಸನಕ್ಕೆ 'ಆರೆಂಜ್ ಅಲರ್ಟ್' ಮತ್ತು ಇತರೆ 6 ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krzxjj84544nkh17j6s99v9v,imgname-karnataka-rain-alert-1779187665156.jpg" type="image/jpeg" height="390" width="690"/>
            <content:encoded><![CDATA[ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಹತ್ವದ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಹಾಸನಕ್ಕೆ 'ಆರೆಂಜ್ ಅಲರ್ಟ್' ಮತ್ತು ಇತರೆ 6 ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.&lt;img&gt;&lt;p&gt;ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರು ನಗರದಲ್ಲಿ ಮುಂದಿನ 3 ಗಂಟೆಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, 'ಯಲ್ಲೋ ಅಲರ್ಟ್' (Yellow Alert) ಘೋಷಿಸಲಾಗಿದೆ. ಕಚೇರಿ ಮುಗಿಸಿ ಮನೆಗೆ ಮರಳುವ ಐಟಿ ಉದ್ಯೋಗಿಗಳು ಹಾಗೂ ವಾಹನ ಸವಾರರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಕೇವಲ ಸಾಧಾರಣ ಮಳೆಯಷ್ಟೇ ಅಲ್ಲದೆ, ಗಂಟೆಗೆ ಭಾರಿ ವೇಗದಲ್ಲಿ ಬೀಸಲಿರುವ ಸುಂಟರಗಾಳಿ ಹಾಗೂ ಗುಡುಗು-ಮಿಂಚಿನ ಸಹಿತ ವರುಣ ಆರ್ಭಟಿಸಲಿದ್ದಾನೆ. ಹೀಗಾಗಿ ಸಾರ್ವಜನಿಕರು ಮರಗಳ ಕೆಳಗೆ ಹಾಗೂ ದುರ್ಬಲ ಕಟ್ಟಡಗಳ ಬಳಿ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.&lt;/p&gt;&lt;img&gt;&lt;p&gt;ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಹಾಸನ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಅತ್ಯಂತ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆಯು ಹಾಸನಕ್ಕೆ ಕಟ್ಟುನಿಟ್ಟಿನ 'ಆರೆಂಜ್ ಅಲರ್ಟ್' (Orange Alert) ಜಾರಿಗೊಳಿಸಿದೆ. ಇಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.&lt;/p&gt;&lt;img&gt;&lt;p&gt;ಬೆಂಗಳೂರು ನಗರದ ಜೊತೆಗೆ ರಾಜ್ಯದ ಪ್ರಮುಖ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ರಾಮನಗರ, ಚಾಮರಾಜನಗರ ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಗಳಿಗೂ ಮುಂದಿನ 3 ಗಂಟೆಗಳ ಕಾಲ 'ಯಲ್ಲೋ ಅಲರ್ಟ್' ನಿಯೋಜಿಸಲಾಗಿದೆ. ಈ ಜಿಲ್ಲೆಗಳಲ್ಲೂ ದಿಢೀರ್ ಮಳೆ ಸುರಿಯುವ ಸಾಧ್ಯತೆ ಇದೆ.&lt;/p&gt;&lt;img&gt;&lt;p&gt;ಮುಂದಿನ 3 ಗಂಟೆಗಳ ಅವಧಿ ಅತ್ಯಂತ ನಿರ್ಣಾಯಕವಾಗಿದ್ದು, ಆಯಾ ಜಿಲ್ಲಾಡಳಿತಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಅಲರ್ಟ್ ಆಗಿವೆ. ತಗ್ಗು ಪ್ರದೇಶದ ಜನರಿಗೆ ಮತ್ತು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಕೋರಿದೆ.&lt;/p&gt;]]></content:encoded>
            <category>ramanagara</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/bengaluru-urban/karnataka-rain-alert-bengaluru-yellow-alert-hassan-orange-alert-weather-update-san-lzi7va4"/>
        </item>
        <item>
            <title><![CDATA[ರೈತರ ಬದುಕು ಹಸನಾಗಿಸಲು ಹೇಮಾವತಿ ನೀರು ಹರಿಸಿಯೇ ತೀರುತ್ತೇವೆ: ಶಾಸಕ ಎಚ್.ಸಿ.ಬಾಲಕೃಷ್ಣ]]></title>
            <link>https://kannada.asianetnews.com/karnataka-districts/mla-hc-balakrishna-hemavathi-water-farmers-gobar-gas-kuduru-gvd/articleshow-ntc1xmm</link>
            <guid isPermaLink="true">https://kannada.asianetnews.com/karnataka-districts/mla-hc-balakrishna-hemavathi-water-farmers-gobar-gas-kuduru-gvd/articleshow-ntc1xmm</guid>
            <pubDate>Wed, 13 May 2026 17:45:16 +0530</pubDate>
            <description><![CDATA[&lt;p&gt;ರೈತರ ಬದುಕು ಹಸನಾಗಿಸಲು ಹೇಮಾವತಿ ನದಿ ನೀರನ್ನು ಹರಿಸುವ ಕೆಲಸ ಮಾಡಿಯೇ ತೀರುತ್ತೇವೆ. ಇದು ನಮ್ಮ ಬಲವಾದ ಸಂಕಲ್ಪ ಈ ನಿಟ್ಟಿನಲ್ಲಿ ಶ್ರಮ ಹಾಕಿ ದುಡಿಯುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krgm55bqws9bzzs6xa4hrshb,imgname-chc-1778674472311.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುದೂರು (ಮೇ.13): &lt;/strong&gt;ರೈತರ ಬದುಕು ಹಸನಾಗಿಸಲು ಹೇಮಾವತಿ ನದಿ ನೀರನ್ನು ಹರಿಸುವ ಕೆಲಸ ಮಾಡಿಯೇ ತೀರುತ್ತೇವೆ. ಇದು ನಮ್ಮ ಬಲವಾದ ಸಂಕಲ್ಪ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮತ್ತು ನಾವು ಶ್ರಮ ಹಾಕಿ ದುಡಿಯುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ರೈತರ ಕುರಿತಾದ ಈ ಆಭಿಯಾನವನ್ನು ಗ್ರಾಮ ಪಂಚಾಯ್ತಿ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಿದೆ.&lt;/p&gt;&lt;p&gt;ಸರ್ಕಾರಿ ಕಾರ್ಯಕ್ರಮಗಳನ್ನು ಸಾಂಕೇತಿಕವಾಗಿ ಮಾಡಿ ಅದರದೊಂದು ಫೋಟೋ ಲಗತ್ತಿಸಿದರೆ ಅಧಿಕಾರಿಗಳ ಜವಾಬ್ದಾರಿ ಮುಗಿಯುವುದಿಲ್ಲ. ರೈತರ ಅಭಿಯಾನವನ್ನು ಪಂಚಾಯ್ತಿ ಮಟ್ಟಕ್ಕೆ ತೆಗೆದುಕೊಂಡು ಹೋಗದೆ ಇರಲು ರಾಜಕಾರಣಿಗಳಾದ ನಮ್ಮದು ಪಾತ್ರವಿದೆ. ಇನ್ನು ಮುಂದೆ ನಮ್ಮ ತಪ್ಪುಗಳನ್ನು ತಿದ್ದುಕೊಂಡು ನಿಮ್ಮೊಂದಿಗೆ ಇರುತ್ತೇವೆ. ಕೆವಿಕೆಯವರು ಗ್ರಾಮಗಳಿಗೆ ಸರ್ಕಾರದ ಸೌಲಭ್ಯಗಳು ಮತ್ತು ಮಾರ್ಗದರ್ಶವನ್ನು ತೆಗೆದುಕೊಂಡು ಹೋಗಲು ಶ್ರಮಿಸಬೇಕು ಎಂದು ಹೇಳಿದರು.&lt;/p&gt;&lt;h2&gt;&lt;strong&gt;ರೈತರು ಎಲ್ಪಿಜಿ ಸಿಲಿಂಡರ್ ಗೆ ಒಗ್ಗಬಾರದು&lt;/strong&gt;&lt;/h2&gt;&lt;p&gt;ಅಲ್ಲೆಲ್ಲೋ ಯುದ್ದ ನಡೆದರೆ ನಮ್ಮ ದೇಶ ಗ್ಯಾಸ್ ಮತ್ತು ಪೆಟ್ರೋಲ್ , ಡೀಸಲ್ ಸಮಸ್ಯೆ ಅನುಭವಿಸುತ್ತಿದ್ದೇವೆ. ಗ್ಯಾಸ್ ಸಿಲಿಂಡರ್&zwnj;ಗಳು ಬೇಕು ಎಂದು ಪೋನು ಮಾಡುತ್ತಾರೆ. ಆಗೆಲ್ಲಾ ನನಗನಿಸುವುದು ರೈತರು ಗ್ಯಾಸ್ ಸಿಲಿಂಡರ್&zwnj;ಗಳಿಗೆ ಅವಲಂಬಿತರಾಗುವ ಬದಲು ಸಗಣಿ ಗೊಬ್ಬರದಿಂದ ನಡೆಯುವ ಗೋಬರ್ ಗ್ಯಾಸ್&zwnj; ಅನ್ನು ಅಳವಡಿಸಿಕೊಳ್ಳಬೇಕು. ರೈತರು ಇದನ್ನು ಅಳವಡಿಸಿಕೊಂಡಿದ್ದೇ ಆದರೆ ತಮ್ಮ ಮನೆಗೆ ಸಾಕಾಗುವಷ್ಟು ಗ್ಯಾಸ್ ಉತ್ಪಾದನೆಯನ್ನು ನಾವೇ ಮಾಡಿಕೊಂಡು ಹೆಚ್ಚಿನ ಗ್ಯಾಸನ್ನು ಮಾರಾಟ ಮಾಡಬಹುದು ಎಂದು ತಿಳಿಸಿದರು.&lt;/p&gt;&lt;p&gt;ಇಂದು ವ್ಯಾಪಾರ ಮಾಡುವವರು ಚೆನ್ನಾಗಿ ಬದುಕುತ್ತಿದ್ದಾರೆ. ಆದರೆ ರೈತರು ಮಾತ್ರ ಅಂತಹ ನೆಮ್ಮದಿಯನ್ನು ಕಾಣಲಾಗುತ್ತಿಲ್ಲ. ಇದು ಮಳೆಯಿಲ್ಲದ್ದು ಮತ್ತು ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಇರುವುದು ಕಾರಣವಾಗಬಹುದು. ಯಾವ ಬೆಳೆಯನ್ನು ಯಾವ ಜಿಲ್ಲೆಯವರು ಬೆಳೆಯಬೇಕು ಎಂಬ ನೀತಿಗಳು ಇಲ್ಲದೇ ಇರುವುದು ಕಾರಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.&lt;/p&gt;&lt;p&gt;ಕುದೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಪರಮಾನಂದ ಸ್ವಾಮೀಜಿ, ಭೂಮಿಯನ್ನು ವಿಷಮಯವನ್ನಾಗಿ ಮಾಡದೆ, ಭೂಮಿಗೆ ವಿಪರೀತ ಔಷಧಿಗಳು, ರಸಾಯನಿಕ ಗೊಬ್ಬರಗಳನ್ನು ಹಾಕಿ ಭೂಮಿಯನ್ನು ಉಸಿರಾಡಲು ಕಷ್ಟ ಪಡುವಂತೆ ಮಾಡುತ್ತಿದ್ದೇವೆ. ಇಂತಹ ಸ್ಥಿತಿ ಮುಂದುವರಿದರೆ ನಾವು ಸೇವಿಸುವ ಆಹಾರ ವಿಷಮಯವಾಗಿ ನೂರಾರು ಕಾಯಿಲೆಗಳಿಗೆ ದಾಸರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.&lt;/p&gt;&lt;p&gt;ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಶ್ವೇತಾ ಮಾತನಾಡಿ, ಭಾರತದಲ್ಲಿ ಕೃಷಿ ಮುಖ್ಯ ಭೂಮಿಕೆಗೆ ಬರುವಂತಾಗಬೇಕು. ಆಧುನಿಕತೆಯ ಸ್ಪರ್ಶದಿಂದ ಪ್ರಾಚೀಣ ಕಾಲದ ವ್ಯವಸಾಯ ಪದ್ದತಿಯನ್ನು ಅಳವಡಿಸಿಕೊಂಡು, ಮಣ್ಣಿನ ಪರೀಕ್ಷೆ ಮಾಡಿಸಿ ನೀರಿನ ಪ್ರಮಾಣವನ್ನು ಪರೀಕ್ಷೆ ಮಾಡಿಸಿ ಬೆಳೆಯನ್ನು ಬೆಳೆಯಲು ನಮ್ಮ ಇಲಾಖೆಯಿಂದ ಸಂಪೂರ್ಣ ಮಾಹಿತಿ ನೀಡಿ, ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mla-hc-balakrishna-hemavathi-water-farmers-gobar-gas-kuduru-gvd/articleshow-ntc1xmm"/>
        </item>
        <item>
            <title><![CDATA[ಡಿಕೆ ಸರ್ಕಾರದಲ್ಲಿ ಚುರುಕಾದ ಇಕ್ಬಾಲ್ ಹುಸೇನ್; ಮಂಚನಬೆಲೆ ಜಲಾಶಯದ ಬಲ ದಂಡೆ ವೀಕ್ಷಿಸಿದ ಶಾಸಕ]]></title>
            <link>https://kannada.asianetnews.com/karnataka-districts/ramanagar-mla-iqbal-hussain-looking-at-the-right-bank-of-manchanabele-reservoir-rav/articleshow-qt9ufaa</link>
            <guid isPermaLink="true">https://kannada.asianetnews.com/karnataka-districts/ramanagar-mla-iqbal-hussain-looking-at-the-right-bank-of-manchanabele-reservoir-rav/articleshow-qt9ufaa</guid>
            <pubDate>Fri, 05 Jun 2026 12:42:24 +0530</pubDate>
            <description><![CDATA[ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಮಂಚನಬೆಲೆ ಜಲಾಶಯದ ಬಲದಂಡೆ ನಾಲೆಯ ದುಸ್ಥಿತಿಯನ್ನು ವೀಕ್ಷಿಸಿದರು. ಮುರಿದು ಬಿದ್ದ ಸ್ಲ್ಯಾಬ್&zwnj;ಗಳಿಂದಾಗಿ ನೀರು ಹರಿಯಲು ಉಂಟಾಗಿರುವ ತಡೆಯನ್ನು ನಿವಾರಿಸಿ, ರೈತರಿಗೆ ಅನುಕೂಲವಾಗುವಂತೆ ಕೂಡಲೇ ನಾಲೆ ದುರಸ್ಥಿಪಡಿಸಲು ಎಂಜಿನಿಯರ್&zwnj;ಗಳಿಗೆ ಸೂಚನೆ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ktb9zab58fyx5t66ffz3tyc4,imgname-----------------------2026-06-05t123415.780-1780643506533.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಜೂ.5)&lt;/strong&gt; ಮಂಚನಬೆಲೆ ಜಲಾಶಯದ ಬಲದಂಡೆ ನಾಲೆಯಲ್ಲಿ ನೀರು ಹರಿಯಲು ತೊಡಕಾಗಿರುವ ಸ್ಥಳವನ್ನು ಶಾಸಕ ಇಕ್ಬಾಲ್ ಹುಸೇನ್ ರವರು ಎಂಜಿನಿಯರ್ ಗಳೊಂದಿಗೆ &zwj;ವೀಕ್ಷಣೆ ಮಾಡಿದರು.&lt;/p&gt;&lt;p&gt;ಮಂಚನಬೆಲೆ ಜಲಾಶಯದ ಸನಿಹದ ಗುಡ್ಡದಲ್ಲಿ ಹಾದು ಹೋಗಿರುವ ಬಲದಂಡೆ ನಾಲೆ ಮೇಲೆ ಹಾಕಿರುವ ಸ್ಲ್ಯಾಬ್ ಗಳು ಮುರಿದು ಬಿದ್ದಿರುವುದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರು ನಾಲೆಯ ಸ್ಥಿತಿಗತಿ ವೀಕ್ಷಿಸಿದರು.&lt;/p&gt;&lt;p&gt;ಜಲಾಶಯದಿಂದ ಸುಮಾರು 400 ಮೀಟರ್ ವರೆಗಿನ ಬಲದಂಡೆ ನಾಲೆ ದುಸ್ಥಿತಿಯಲ್ಲಿದ್ದು, ನಾಲೆಯೊಳಗೆ ಸ್ಲ್ಯಾಬ್ ಗಳು, ಕಲ್ಲು ಮಣ್ಣು ತುಂಬಿಕೊಂಡಿದೆ. ಅದನ್ನು ತೆರವುಗೊಳಿಸಿ ನಾಲೆಯನ್ನು ದುರಸ್ಥಿ ಪಡಿಸಿದ ಬಳಿಕವಷ್ಟೇ ನೀರು ಸರಾಗವಾಗಿ ಹರಿಯಲಿದ್ದು, ಈ ಸಂಬಂಧ ಶಾಸಕರು ಮಂಚನಬೆಲೆ ಯೋಜನಾ ವಿಭಾಗದ ಎಇಇ ಉಮೇರಾ ಅವರಿಗೆ ಕೆಲ ಸೂಚನೆಗಳನ್ನು ನೀಡಿದರು.&lt;/p&gt;&lt;p&gt;ಈಗಾಗಲೇ ಕಸಬಾ ಹೋಬಳಿ ವ್ಯಾಪ್ತಿಯ ರೈತರ ಕೃಷಿ ಚಟುವಟಿಕೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸಲು ಎಡದಂಡೆ ನಾಲೆಯಲ್ಲಿ ನೀರು ಹರಿಸಲಾಗುತ್ತಿದೆ. ಅದೇ ರೀತಿಯಲ್ಲಿ ಬಲದಂಡೆ ನಾಲೆಯನ್ನು ದುರಸ್ಥಿ ಪಡಿಸಿ ಕೂಡಲೇ ನೀರು ಹರಿಸುವಂತೆ ಶಾಸಕರು ಎಂಜಿನಿಯರ್ ಗೆ ತಾಕೀತು ಮಾಡಿದರು.&lt;/p&gt;&lt;p&gt;ಈ ಬಲ ಮತ್ತು ಎಡ ದಂಡೆ ನಾಲೆಗಳನ್ನು ಸುಮಾರು 70 ಲಕ್ಷ ರುಪಾಯಿ ವೆಚ್ಚದಲ್ಲಿ ದುರಸ್ಥಿ ಪಡಿಸಲಾಗಿದ್ದು, ಈಗಾಗಲೇ ಎಡದಂಡೆ ನಾಲೆಯಲ್ಲಿ ಸುಮಾರು 20 ಕಿ.ಮೀ.ವರೆಗೆ ನೀರು ಹರಿಯುತ್ತಿದೆ. ಬಲದಂಡೆ ನಾಲೆಯಲ್ಲಿ ಸುಮಾರು 400 ಮೀಟರ್ ವರೆಗೆ ಸಮಸ್ಯೆ ಎದುರಾಗಿದ್ದು, ಅದನ್ನು ಸರಿಪಡಿಸಿದ ಬಳಿಕವಷ್ಟೇ ಅಡೆತಡೆಯಿಲ್ಲದೆ ನಾಲೆಯಲ್ಲಿ ನೀರು ಹರಿಯಲಿದೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.&lt;/p&gt;&lt;p&gt;ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ , ಸಾಗುವಳಿ ಸಮಿತಿ ಸದಸ್ಯ ಕೆ.ರವಿ, ಕೆಡಿಪಿ ಸದಸ್ಯ ಮುಕುಂದ, ಯುವ ಕಾಂಗ್ರೆಸ್ ಮುಖಂಡರಾದ ಗುರುಪ್ರಸಾದ್ , ರಂಜಿತ್ ಮತ್ತಿತರರು ಹಾಜರಿದ್ದರು.&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ramanagar-mla-iqbal-hussain-looking-at-the-right-bank-of-manchanabele-reservoir-rav/articleshow-qt9ufaa"/>
        </item>
        <item>
            <title><![CDATA[ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್ ಸಂಚಾರ ಆರಂಭ; ಕೇವಲ 3 ಸ್ಟಾಪ್, ಟಿಕೆಟ್ ದರ ಎಷ್ಟು ಗೊತ್ತಾ?]]></title>
            <link>https://kannada.asianetnews.com/gallery/state/good-news-for-bengaluru-and-channapatna-commuters-bmtc-launches-ac-bus-service-sat-sv9fb1d</link>
            <guid isPermaLink="true">https://kannada.asianetnews.com/gallery/state/good-news-for-bengaluru-and-channapatna-commuters-bmtc-launches-ac-bus-service-sat-sv9fb1d</guid>
            <pubDate>Fri, 08 May 2026 17:53:31 +0530</pubDate>
            <description><![CDATA[&lt;p&gt;ಬೆಂಗಳೂರು ಮತ್ತು ಚನ್ನಪಟ್ಟಣ ನಡುವೆ 8 ಬಿಎಂಟಿಸಿ ಎಸಿ ಬಸ್&zwnj;ಗಳ ಸಂಚಾರ ಆರಂಭವಾಗಿದೆ. ಶಾಸಕ ಸಿ.ಪಿ. ಯೋಗೇಶ್ವರ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಚಾಲನೆ ನೀಡಿದರು.ಈ ಬಸ್ ರಾಮನಗರ ಮತ್ತು ಕೆಂಗೇರಿಯಲ್ಲಿ ಸ್ಟಾಪ್ ನೀಡಲಿದೆ. ಆದರೆ, ಟಿಕೆಟ್ ಬೆಲೆ ಎಷ್ಟಿದೆ ನೋಡಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3r39v1bxgtzyb9yh95sx8c,imgname-bengaluru-channapatna-bmtc-bus-1778242398049.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು ಮತ್ತು ಚನ್ನಪಟ್ಟಣ ನಡುವೆ 8 ಬಿಎಂಟಿಸಿ ಎಸಿ ಬಸ್&zwnj;ಗಳ ಸಂಚಾರ ಆರಂಭವಾಗಿದೆ. ಶಾಸಕ ಸಿ.ಪಿ. ಯೋಗೇಶ್ವರ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಚಾಲನೆ ನೀಡಿದರು.ಈ ಬಸ್ ರಾಮನಗರ ಮತ್ತು ಕೆಂಗೇರಿಯಲ್ಲಿ ಸ್ಟಾಪ್ ನೀಡಲಿದೆ. ಆದರೆ, ಟಿಕೆಟ್ ಬೆಲೆ ಎಷ್ಟಿದೆ ನೋಡಿ..&lt;/p&gt;&lt;img&gt;&lt;p&gt;ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇನ್ಮುಂದೆ ಜನರು ಬಿರು ಬೇಸಿಗೆಯಲ್ಲೂ ತಂಪಾಗಿ, ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ.&lt;/p&gt;&lt;img&gt;&lt;p&gt;&lt;strong&gt;ದಳಪತಿ ಮತ್ತು ಸಾಹುಕಾರನ ಸಮಾಗಮ:&lt;/strong&gt;&lt;/p&gt;&lt;p&gt;ಚನ್ನಪಟ್ಟಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಸಿ.ಪಿ. ಯೋಗೇಶ್ವರ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಜಂಟಿಯಾಗಿ ಎಂಟು ಬಿಎಂಟಿಸಿ ಎಸಿ ಬಸ್&zwnj;ಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ, ಜನರ ಅನುಕೂಲಕ್ಕಾಗಿ ಇಬ್ಬರು ನಾಯಕರು ಒಟ್ಟಾಗಿ ಈ ಯೋಜನೆಗೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.&lt;/p&gt;&lt;img&gt;&lt;p&gt;&lt;strong&gt;ದಿನಕ್ಕೆ 44 ಟ್ರಿಪ್&zwnj;ಗಳ ಸಂಚಾರ:&lt;/strong&gt;&lt;/p&gt;&lt;p&gt;ಬೆಂಗಳೂರು ಮತ್ತು ಚನ್ನಪಟ್ಟಣದ ನಡುವೆ ಕೇವಲ ಎಸಿ ಬಸ್&zwnj;ಗಳ ಸಂಚಾರ ಮಾತ್ರವಲ್ಲದೆ, ದಿನಕ್ಕೆ ಒಟ್ಟು 44 ಟ್ರಿಪ್&zwnj;ಗಳನ್ನು ಈ ಬಸ್&zwnj;ಗಳು ಕೈಗೊಳ್ಳಲಿವೆ. ಒಟ್ಟು 8 ಐಷಾರಾಮಿ ಎಸಿ ಬಸ್&zwnj;ಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಇದರಿಂದಾಗಿ ಪ್ರತಿ ಅರ್ಧ ಅಥವಾ ಒಂದು ಗಂಟೆಗೊಮ್ಮೆ ಪ್ರಯಾಣಿಕರಿಗೆ ಎಸಿ ಬಸ್ ಸೌಲಭ್ಯ ದೊರೆಯಲಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬರುವ ನೂರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳಿಗೆ ಇದು ವರದಾನವಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಟಿಕೆಟ್ ದರ ಮತ್ತು ನಿಲ್ದಾಣಗಳು:&lt;/strong&gt;&lt;/p&gt;&lt;p&gt;ಮೆಜೆಸ್ಟಿಕ್&zwnj;ನಿಂದ (ಬೆಂಗಳೂರು) ಚನ್ನಪಟ್ಟಣಕ್ಕೆ ಪ್ರಯಾಣಿಸಲು ಬಿಎಂಟಿಸಿ 105 ರೂಪಾಯಿ ಟಿಕೆಟ್ ದರವನ್ನು ನಿಗದಿಪಡಿಸಿದೆ. ರೈಲು ಪ್ರಯಾಣಕ್ಕೆ ಹೋಲಿಸಿದರೆ ಸ್ವಲ್ಪ ದರ ಹೆಚ್ಚಿದ್ದರೂ, ಆರಾಮದಾಯಕ ಪ್ರಯಾಣ ಮತ್ತು ಸಮಯದ ಉಳಿತಾಯವನ್ನು ಗಮನಿಸಿದರೆ ಇದು ಸೂಕ್ತವಾಗಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಈ ಬಸ್&zwnj;ಗಳು ಚನ್ನಪಟ್ಟಣದಿಂದ ಹೊರಟು ರಾಮನಗರ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ. ಇದರಿಂದ ಈ ಎರಡು ಪ್ರಮುಖ ನಗರಗಳ ಪ್ರಯಾಣಿಕರಿಗೂ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಬಿರು ಬೇಸಿಗೆಯಲ್ಲಿ ತಂಪು ಪ್ರಯಾಣ:&lt;/strong&gt;&lt;/p&gt;&lt;p&gt;ಪ್ರಸ್ತುತ ರಾಜ್ಯದಲ್ಲಿ ತಾಪಮಾನ ಏರುತ್ತಿದ್ದು, ಜನರು ಬಸ್ಸಿನಲ್ಲಿ ಪ್ರಯಾಣಿಸಲು ಹೈರಾಣಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಎಸಿ ಬಸ್ ಸೌಲಭ್ಯ ಕಲ್ಪಿಸಿರುವುದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ. ಬಸ್&zwnj;ಗಳ ಒಳಾಂಗಣ ವಿನ್ಯಾಸ ಮತ್ತು ಆಸನ ವ್ಯವಸ್ಥೆಯು ಅತ್ಯಂತ ಆರಾಮದಾಯಕವಾಗಿದ್ದು, ದೂರದ ಪ್ರಯಾಣದ ದಣಿವು ತಿಳಿಯದಂತೆ ಮಾಡುತ್ತದೆ. ಒಟ್ಟಾರೆಯಾಗಿ, ಚನ್ನಪಟ್ಟಣ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಬಿಎಂಟಿಸಿ ಹೊಸ ವೇಗ ಮತ್ತು ಸೌಕರ್ಯವನ್ನು ನೀಡಿದೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/good-news-for-bengaluru-and-channapatna-commuters-bmtc-launches-ac-bus-service-sat-sv9fb1d"/>
        </item>
        <item>
            <title><![CDATA[ಬಿಡದಿ ಟೌನ್ ಶಿಪ್ ನಮ್ಮ ಹೆಣದ ಮೇಲೆ ಕಟ್ಬೇಕಾಗುತ್ತೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/nikhil-kumaraswamy-bidadi-township-farmers-protest-ramanagara-gvd/articleshow-w600h19</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-bidadi-township-farmers-protest-ramanagara-gvd/articleshow-w600h19</guid>
            <pubDate>Thu, 28 May 2026 19:51:23 +0530</pubDate>
            <description><![CDATA[&lt;p&gt;ಮಗಾ ಈ ಭೂ ತಾಯಿನ ನಂಬ್ಕೊಂಡು ಬದುಕು ಕಟ್ಕೊಂಡಿದಿವಿ, ಇದಿಲ್ಲ ಅಂದ್ರೆ ನಮ್ಗೆ ಜೀವನನೇ ಇಲ್ಲ... ಅವ್ರು ಕೊಡೊ ಕೋಟಿ ರುಪಾಯಿಗೆ ಯಾವ ರೈತನೂ ಆಸೆ ಪಡಲ್ಲ, ಬೇಕಾದ್ರೆ ಅವ್ರೆ ನಮ್ಮತ್ರ ಕೂಲಿಗೆ ಬರ್ಲಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksqfb6m7mjb632dv78j65905,imgname-cvjc-1779978050183.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.28): &lt;/strong&gt;ಮಗಾ ಈ ಭೂ ತಾಯಿನ ನಂಬ್ಕೊಂಡು ಬದುಕು ಕಟ್ಕೊಂಡಿದಿವಿ, ಇದಿಲ್ಲ ಅಂದ್ರೆ ನಮ್ಗೆ ಜೀವನನೇ ಇಲ್ಲ... ಅವ್ರು ಕೊಡೊ ಕೋಟಿ ರುಪಾಯಿಗೆ ಯಾವ ರೈತನೂ ಆಸೆ ಪಡಲ್ಲ, ಬೇಕಾದ್ರೆ ಅವ್ರೆ ನಮ್ಮತ್ರ ಕೂಲಿಗೆ ಬರ್ಲಿ... ಟೌನ್ ಶಿಪ್ ನ ಭೂಮಿ ಮೇಲಲ್ಲ, ಅನ್ನದಾತರ ಹೆಣದ ಮೇಲೆ ಕಟ್ಬೇಕಾಗುತ್ತೆ... ನಮ್ ಜೀವ ಹೋದ್ರೂ ಸರಿ ಭೂಮಿ ಮಾತ್ರ ಕೊಡಲ್ಲ...&lt;/p&gt;&lt;p&gt;ಇದು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಬಿಡದಿ ಟೌನ್ ಶಿಪ್ ) ಯೋಜನೆ ವ್ಯಾಪ್ತಿಯ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿರವರು ರಿಯಾಲಿಟಿ ಚೆಕ್ ನಡೆಸಲು ಭೇಟಿ ನೀಡಿದ ವೇಳೆ ಅನ್ನದಾತರಿಂದ ಕೇಳಿ ಬಂದ ಆಕ್ರೋಶದ ನುಡಿಗಳು. ಭೈರಮಂಗಲ ವೃತ್ತದಲ್ಲಿ ಧರಣಿ ನಿರತರ ಸ್ಥಳಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರಿಗೆ ರೈತರು ಜಿಲ್ಲಾಡಳಿತಕ್ಕೆ ಸಲ್ಲಿಸಿರುವ 3600 ಆಕ್ಷೇಪಣ ಅರ್ಜಿಗಳ ಪ್ರತಿಗಳನ್ನು ನೀಡಿದರು. ಆ ವೇಳೆ&lt;/p&gt;&lt;p&gt;ರೈತ ಮಹಿಳೆಯರು ಅಳಲು ತೋಡಿಕೊಂಡರು. ಅಲ್ಲದೇ ನಮ್ಮ ಭೂಮಿ ಉಳಿಸಿಕೊಡುವಂತೆ ಹಲವು ರೈತರ ಮನವಿಗೆ ಸ್ಪಂದಿಸಿದ ನಿಖಿಲ್ ಇಂದಿನಿಂದ ಇದು ನಿಮ್ಮ ಹೋರಾಟವಲ್ಲ ನನ್ನ ಹೋರಾಟ ಎಂದು ಬಲ&zwnj; ತುಂಬಿದರು. ಆನಂತರ ನಿಖಿಲ್ ರವರು ಮಾಜಿ ಶಾಸಕ ಎ.ಮಂಜುನಾಥ್ ಅವರೊಂದಿಗೆ ಗ್ರಾಮಗಳು ಮಾತ್ರವಲ್ಲದೆ ರೈತರ ಕೃಷಿ ಜಮೀನು , ತೋಟಗಳಲ್ಲಿನ ಬೆಳೆಗಳು ಹಾಗೂ ರೇಷ್ಮೆ ಸಾಕಾಣಿಕೆ ಕೇಂದ್ರಕ್ಕೂ ಭೇಟಿ ನೀಡಿ ವೀಕ್ಷಣೆ ಮಾಡಿದರು.&lt;/p&gt;&lt;p&gt;ಕಂಚುಗಾರನಹಳ್ಳಿ ಗ್ರಾಮದಲ್ಲಿನ ಹಾಲು ಉತ್ಪಾದಕರ ಸಹಕಾರ ಕೇಂದ್ರಕ್ಕೆ ಭೇಟಿ ನೀಡಿದ ನಿಖಿಲ್ ರವರು ಹಾಲಿನ ಉತ್ಪಾದನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಆನಂತರ ಅರಳಾಳುಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ವೇಲೆ ರೈತ ಹೊನ್ನಪ್ಪ ಅವರ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ,ರೈತರ ಸಂಕಷ್ಟ ಆಲಿಸಿದ ನಿಖಿಲ್ , ನೀವು ಧೃತಿಗೇಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.&lt;/p&gt;&lt;h2&gt;&lt;strong&gt;ಸತ್ಯದ ಮನವರಿಕೆ ಮಾಡಿಕೊಡುವ ಪ್ರಯತ್ನ&lt;/strong&gt;&lt;/h2&gt;&lt;p&gt;ಕೆಂಪಶೆಟ್ಟಿದೊಡ್ಡಿ, ಕೆಂಪಯ್ಯನಪಾಳ್ಯ, ಅರಳಾಳುಸಂದ್ರ, ಕಂಚುಗಾರನಹಳ್ಳಿ, ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳಲ್ಲಿ ನಿಖಿಲ್ ರವರು ಪ್ರವಾಸ ನಡೆಸಿ ಸರ್ಕಾರಕ್ಕೆ ವಾಸ್ತವ ಸತ್ಯದ ಮನವರಿಕೆ ಮಾಡಿಕೊಡುವ ಪ್ರಯತ್ನ &zwnj;ನಡೆಸಿದರು. ಈ ಸಂದರ್ಭದಲ್ಲಿ ಅಹವಾಲು ಹೇಳಿಕೊಂಡ ರೈತರು ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಬೈರಮಂಗಲ-ಕಂಚುಗಾರನಹಳ್ಳಿ ಭಾಗದ ಹಲವಾರು ಹಳ್ಳಿಗಳಲ್ಲಿ ರಿಯಾಲಿಟಿ ಚೆಕ್ ನಡೆಸಿದ ನಿಖಿಲ್ ಕುಮಾರಸ್ವಾಮಿರವರು ಈ ಭಾಗದಲ್ಲಿ ರೈತರೇ ಇಲ್ಲ ಎಂದು ಅನ್ನದಾತರ ಬಗ್ಗೆ ಲಘುವಾಗಿ ಮಾತನಾಡುವ ಮಾನ್ಯ ಉಪ ಮುಖ್ಯಮಂತ್ರಿಗಳೇ, ಇಲ್ಲಿನ ರೈತರನ್ನು ಒಮ್ಮೆಯಾದರೂ ಭೇಟಿ ಮಾಡಿ, ಅವರ ಮನವಿಯನ್ನು ಆಲಿಸಿ ಎಂದು ಹರಿಹಾಯ್ದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-bidadi-township-farmers-protest-ramanagara-gvd/articleshow-w600h19"/>
        </item>
        <item>
            <title><![CDATA[ಉ.ಪ್ರದೇಶ ಯೋಗಿ ಆದಿತ್ಯನಾಥ್‌ರಂತೆ ಕರ್ನಾಟಕದಲ್ಲಿ ನಿರ್ಮಲಾನಂದ ಸ್ವಾಮೀಜಿ ಸಿಎಂ? ನಡೆದಿದೆ ದೊಡ್ಡ ಚರ್ಚೆ, ಶ್ರೀಗಳು ಹೇಳಿದ್ದೇನು?]]></title>
            <link>https://kannada.asianetnews.com/state/adichunchanagiri-matha-does-not-indulge-in-politics-says-nirmalananda-sri-rav/articleshow-wo2n4gc</link>
            <guid isPermaLink="true">https://kannada.asianetnews.com/state/adichunchanagiri-matha-does-not-indulge-in-politics-says-nirmalananda-sri-rav/articleshow-wo2n4gc</guid>
            <pubDate>Tue, 19 May 2026 04:48:34 +0530</pubDate>
            <description><![CDATA[&lt;p&gt;ಆದಿಚುಂಚನಗಿರಿ ಮಠವು ರಾಜಕೀಯದಿಂದ ದೂರವಿದ್ದು, ಕೇವಲ ಆಧ್ಯಾತ್ಮಿಕ ಕೇಂದ್ರವಾಗಿದೆ ಎಂದು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರಂತೆ ತಾವೂ ಸಿಎಂ ಆಗಬೇಕೆಂಬ ಚರ್ಚೆಗೆ ತೆರೆ ಎಳೆದ ಅವರು, ಮಠವು ಧಾರ್ಮಿಕ ಪರಂಪರೆಯ ಹಾದಿಯಲ್ಲೇ ಮುಂದುವರಿಯಲಿದೆ ಎಂದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-7f097489-cb1d-4527-9feb-db821a710bde,imgname-image.jpg" type="image/jpeg" height="390" width="690"/>
            <content:encoded><![CDATA[&lt;p&gt;- ಉ.ಪ್ರ. ಸಿಎಂ ಯೋಗಿಂತೆ ಚುಂಚಶ್ರೀಯೂ ಸಿಎಂ ಆಗಲೆಂದು ಚರ್ಚೆ&lt;/p&gt;&lt;p&gt;- ನಮ್ಮ ಪೀಠ ಕೇವಲ ಧಾರ್ಮಿಕ ಪರಂಪರೆ ಹಾದಿ ಅನುಸರಿಸುತ್ತದೆ: ಶ್ರೀ&lt;/p&gt;&lt;p&gt;&amp;nbsp;&lt;strong&gt;ಚನ್ನಪಟ್ಟಣ (ಮೇ.19) &lt;/strong&gt;ಆದಿಚುಂಚನಗಿರಿ ಮಠ ರಾಷ್ಟ್ರ ಹಾಗೂ ರಾಜ್ಯ ಆಳುವವರನ್ನು ಸೃಷ್ಟಿ ಮಾಡುತ್ತದೆಯೇ ಹೊರತು, ರಾಜಕಾರಣ ಮಾಡುವುದಿಲ್ಲ. ನಮ್ಮದು ಶುದ್ದ ಆಧ್ಯಾತ್ಮಿಕ ಮಠ. ರಾಜಕಾರಣದ ಕೊಂಚ ಸೊಕ್ಕು ಕೂಡ ಇಲ್ಲ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ಬಸವಪ್ಪನ ಪುಣ್ಯಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೋಗಿಗಳ ಸಮಾವೇಶ ಹಾಗೂ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥರು ಸಿಎಂ ಆಗುವ ಮುಂಚೆಯೇ ಅವರ ಮನೆತನ ರಾಜಕಾರಣದಲ್ಲಿದೆ. ಆದರೆ, ಆದಿಚುಂಚನಗಿರಿ ಮಠ ಎಂದಾದರೂ ರಾಜಕಾರಣ ಪ್ರವೇಶ ಮಾಡಿದ್ದನ್ನು ನೋಡಿದ್ದೀರಾ?. ಅವರಿಗೂ, ನಮಗೂ ವ್ಯತ್ಯಾಸ ಇಷ್ಟೇ. ಎಂದೂ ಕೂಡ ಆ ಆಲೋಚನೆ ಬೇಡ ಎಂದರು.&lt;/p&gt;&lt;p&gt;ನಾಥ ಪರಂಪರೆಯ ಯೋಗಿ ಆದಿತ್ಯನಾಥ್ ಅವರು ಸಿಎಂ ಆದಾಗ ಇಲ್ಲಿ ಯಾಕೆ ಚುಂಚನಗಿರಿ ಶ್ರೀಗಳು ಸಿಎಂ ಆಗಬಾರದು ಎಂಬ ಚರ್ಚೆ ಆರಂಭವಾಯಿತು. ಈ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಅದು ಅವರ ಪರಂಪರೆ. ಆದರೆ, ನಮ್ಮ ಪೀಠ ಕೇವಲ ಧಾರ್ಮಿಕ ಪರಂಪರೆಯ ಹಾದಿಯಲ್ಲಿ ಮಾತ್ರ ಸಾಗಿ ಬಂದಿದೆ. ಮುಂದೆ ಅದರ ದಾರಿಯಲ್ಲಿಯೇ ಶ್ರೀ ಮಠ ಸಾಗುತ್ತದೆ ಎಂದರು.&lt;/p&gt;]]></content:encoded>
            <category>ramanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/adichunchanagiri-matha-does-not-indulge-in-politics-says-nirmalananda-sri-rav/articleshow-wo2n4gc"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್‌ ಯೋಜನೆ ಇನ್ಮುಂದೆ ನನ್ನ, ಎಚ್‌ಡಿಕೆ ಹೋರಾಟ: ನಿಖಿಲ್ ಕುಮಾರಸ್ವಾಮಿ ಆಶ್ವಾಸನೆ]]></title>
            <link>https://kannada.asianetnews.com/karnataka-districts/nikhil-kumaraswamy-supports-bidadi-farmers-land-acquisition-gvd/articleshow-xnogyz8</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-supports-bidadi-farmers-land-acquisition-gvd/articleshow-xnogyz8</guid>
            <pubDate>Thu, 28 May 2026 18:41:39 +0530</pubDate>
            <description><![CDATA[&lt;p&gt;ಎಚ್.ಡಿ.ಕುಮಾರಸ್ವಾಮಿ ಅವರ ಮಗನಾಗಿ, ನಾನು ನಿಮಗೆ ಮಾತು ನೀಡುತ್ತಿದ್ದೇನೆ. ಇಂದಿನಿಂದ ಇದು ನಿಮ್ಮ ಹೋರಾಟ ಮಾತ್ರವಲ್ಲ ನನ್ನ ಮತ್ತು ಕುಮಾರಸ್ವಾಮಿರವರ ಹೋರಾಟ ಎಂದು ನಿಖಿಲ್ ಕುಮಾರಸ್ವಾಮಿ ಆಶ್ವಾಸನೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kgenktw7brfx4dbb2bzrsm4v,imgname-nikhil-kumaraswamy--1--1770018958215.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ.28): &lt;/strong&gt;ಮಣ್ಣಿನ ಮಗ ಎಚ್.ಡಿ.ಕುಮಾರಸ್ವಾಮಿ ಅವರ ಮಗನಾಗಿ, ನಾನು ನಿಮಗೆ ಮಾತು ನೀಡುತ್ತಿದ್ದೇನೆ. ಇಂದಿನಿಂದ ಇದು ನಿಮ್ಮ ಹೋರಾಟ ಮಾತ್ರವಲ್ಲ ನನ್ನ ಮತ್ತು ಕುಮಾರಸ್ವಾಮಿರವರ ಹೋರಾಟ. ಸರ್ಕಾರ ತಂದೊಡ್ಡಿರುವ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವುದೇ ನನ್ನ ಗುರಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೈತರಿಗೆ ಆಶ್ವಾಸನೆ ನೀಡಿದರು.&lt;/p&gt;&lt;p&gt;ಬಿಡದಿ ಟೌನ್ ಶಿಪ್ ಯೋಜನೆಗೆ ಭೂಮಿ ಸ್ವಾಧೀನ ಪಡಿಸಿಕೊಳ್ಳುವ ಗ್ರಾಮಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ಡೆಸುವುದಕ್ಕೂ ಮುನ್ನ ಬೈರಮಂಗಲ ವೃತ್ತದಲ್ಲಿ ಧರಣಿ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರೈತರನ್ನು ವಿಶ್ವಾಸಕ್ಕೆ ಪಡೆಯದೆ ಒಕ್ಕಲೆಬ್ಬಿಸಲು ಹೊಂಚು ಹಾಕುತ್ತಿರುವ ಸರ್ಕಾರದ ವಿರುದ್ಧ ನೀವು ನಡೆಸುತ್ತಿರುವ ಹೋರಾಟದಲ್ಲಿ ನಾನೂ ಭಾಗಿಯಾಗುತ್ತೇನೆ ಎಂದು ಧೈರ್ಯ ತುಂಬಿದರು.&lt;/p&gt;&lt;p&gt;&lt;strong&gt;ಅಧಿಕಾರ ನೀವು ನೀಡಿರುವ ಭಿಕ್ಷೆ: &lt;/strong&gt;ಮಹಾನ್ ವ್ಯಕ್ತಿಗಳು (ಡಿ.ಕೆ.ಶಿವಕುಮಾರ್) ಕುಳಿತಿರುವ ಕುರ್ಚಿ ನೀವು ನೀಡಿರುವ ಭಿಕ್ಷೆ. ಅದನ್ನು ಮರೆತರೆ ಯಾರೂ ಕೂಡ ರಾಜಕೀಯದಲ್ಲಿ ಮುಂದುವರಿಯಲು ಅಸಾಧ್ಯ. ನಿಮ್ಮ ಜಮೀನು ಕಸಿಯಲು ಬಂದಿರುವವರು ಇದನ್ಮು ಅರ್ಥ ಮಾಡಿಕೊಳ್ಳಬೇಕು. ನಿವು ಏಕಾಂಗಿಯಲ್ಲ ನಿಮ್ಮ ಹಿಂದೆ ಇಡೀ ಕನ್ನಡ ನಾಡಿನ ಏಳು ಕೋಟಿ ಜನ ಇದ್ದಾರೆ. ನೀವು ಯಾವುದೇ ಕಾರಣಕ್ಕೂ ಧೈರ್ಯಗೆಡಬೇಡಿ ಎಂದು ಹೇಳಿದರು.&lt;/p&gt;&lt;p&gt;ಈ ತಿಂಗಳ ಅಂತ್ಯಕ್ಕೆ ಅಂತಿಮ ಅಧಿಸೂಚನೆಗೆ ಸಿದ್ಧತೆ ನಡೆದಿದೆ, ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ, ಎಂತಹ ಸನ್ನಿವೇಶ ಬಂದರೂ ನಾನು, ನಮ್ಮ ಕುಟುಂಬ ನಿಮ್ಮ ಜತೆಗೆ ಸದಾ ಕಾಲ ಇರುತ್ತೇವೆ. ರಾಜ್ಯದ ಒಬ್ಬ ಪ್ರಜೆಯಾಗಿ, ಒಬ್ಬ ಕನ್ನಡಿಗನಾಗಿ, ಈ ಜಿಲ್ಲೆಯ ಮತದಾರನಾಗಿ ನಾನು ನಿಮ್ಮೊಡನಿರುತ್ತೇನೆ ಎಂದು ಭರವಸೆ ನೀಡಿದರು.&lt;/p&gt;&lt;p&gt;&lt;strong&gt;ಸ್ವಾಭಿಮಾನದ ಹೋರಾಟ : &lt;/strong&gt;ಭೂ ಸ್ವಾಧೀನ ವಿರೋಧಿಸಿ 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 26 ಗ್ರಾಮಗಳ ಜನರು ಕಳೆದ 436 ದಿನಗಳಿಂದ ಹೋರಾಟ ಮಾಡುತ್ತಿದ್ದೀರಿ. ಇದು ಕೇವಲ ಭೂಮಿ ಉಳಿಸಿಕೊಳ್ಳುವ ಹೋರಾಟ ಮಾತ್ರವಲ್ಲ. ಇದು ರೈತರ ಸ್ವಾಭಿಮಾನದ ಹೋರಾಟ. ರಾಜ್ಯ ಸರ್ಕಾರ ನಿಮ್ಮ ಮೇಲೆ ಮಾಡುತ್ತಿರುವ ದಬ್ಬಾಳಿಕೆ ಹಾಗೂ ಸರ್ಕಾರದ ವಿರುದ್ಧ ರೈತರು ಮಾಡುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವ ಜತೆಗೆ ದಪ್ಪ ಚರ್ಮದ ಸರ್ಕಾರವನ್ನು ಎಚ್ಚರಿಸಲು ನಾನಿಲ್ಲಿಗೆ ಬಂದಿದ್ದೇನೆ ಎಂದರು.&lt;/p&gt;&lt;p&gt;ಈ ಯೋಜನೆ ಕುಮಾರಸ್ವಾಮಿ ಅವರ ಕನಸಿನ ಕೂಸು ಎಂದು ಬಿಂಬಿಸಿ, ಅದನ್ನು ಅವರ ತಲೆಗೆ ಕಟ್ಟಲು ಈ ಯೋಜನೆಯನ್ನು ಜಾರಿಗೆ ಮುಂದಾಗಿರುವ ಜನಪ್ರತಿನಿಧಿಗಳು ಹೇಳುತ್ತಿದ್ದಾರೆ. 2006ರಲ್ಲಿ ಯೋಜನೆ ಮುಂದಾಗಿದ್ದು ನಿಜ. ಆದರೆ, ರೈತರ ಭಾವನೆಗಳಿಗೆ ಬೆಲೆ ನೀಡಿ ಯೋಜನೆಯನ್ನು ಕೈಬಿಡಲಾಗಿತ್ತು.&lt;/p&gt;&lt;p&gt;ಒಂದು ವೇಳೆ ಈ ಯೋಜನೆ ಮುಂದುವರಿಸಬೇಕು ಎಂಬ ದುರುದ್ದೇಶ ಕುಮಾರಸ್ವಾಮಿ ಅವರಿಗಿದ್ದಿದ್ದರೆ 2018ರಲ್ಲಿ ಎರಡನೇ ಬಾರಿಗೆ ಸಿಎಂ ಆಗಿದ್ದಾಗ ಆ ಯೋಜನೆಯನ್ನು ಮುಂದುವರಿಸುತ್ತಿದ್ದರು. ನಮ್ಮ ಕುಟುಂಬ ಮತ್ತು ಪಕ್ಷವಾಗಲೀ ಎಂದೆಂದಿಗೂ ರೈತಪರವಾಗಿಯೇ ರಾಜಕೀಯ ಮಾಡಿದ್ದೇವೆ. ರೈತರಿಗಾಗಿಯೇ ಇರುವ ಏಕೈಕ ಪಕ್ಷ ನಮ್ಮ ಜೆಡಿಎಸ್. ಹಾಗಾಗಿ ನಮ್ಮ ಪಕ್ಷದ ವಿರುದ್ಧದ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.&lt;/p&gt;&lt;h2&gt;&lt;strong&gt;ಶೋ ಕೊಡಲು ಬಂದಿಲ್ಲ&lt;/strong&gt;&lt;/h2&gt;&lt;p&gt;ನಾನು ಶೋ ಕೊಟ್ಟು ಹೋಗಲು ಇಲ್ಲಿಗೆ ಬಂದಿಲ್ಲ. ಸರ್ಕಾರಕ್ಕೆ ಯೋಜನೆಯನ್ನು ಹಿಂಪಡೆಯುವ ಮನಸ್ಥಿತಿ ಇಲ್ಲ. ಇದು ನಿಮಗೂ ತಿಳಿದಿರುವ ವಿಚಾರ. ಆದರೆ, ನಾವು ಈ ನೆಲದ ಕಾನೂನಿನ ಪ್ರಕಾರವೇ ಹೋರಾಟ ಮಾಡೋಣ. ಯಾರೂ ಧೈರ್ಯಗೆಡುವುದು ಬೇಡ.&lt;/p&gt;&lt;p&gt;ಯಾವುದೇ ಜನಪ್ರತಿನಿಧಿಗಳಾಗಲೀ, ಸರ್ಕಾರಿ ಅಧಿಕಾರಿಗಳಾಗಲೀ ನಮ್ಮ ಗ್ರಾಮಕ್ಕೆ ಆಗಮಿಸಿ ನೀವು ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದೀರಾ ಎಂಬುದಾಗಿ ಕೇಳಿಲ್ಲ. ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇಲ್ಲಿ ಯಾರೂ ವ್ಯವಸಾಯವನ್ನೇ ಮಾಡುತ್ತಿಲ್ಲ ಎಂಬುದಾಗಿ ಸುಳ್ಳನ್ನು ಹರಡುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಲು ಬಿಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.&lt;/p&gt;]]></content:encoded>
            <category>ramanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-supports-bidadi-farmers-land-acquisition-gvd/articleshow-xnogyz8"/>
        </item>
        <item>
            <title><![CDATA[ಪಶ್ಚಿಮ ಬಂಗಾಳ ಗೆಲುವಿನ ಬೆನ್ನಲ್ಲೇ ಮೇ 10ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ; ಸಂಸದ ಡಾ.ಸಿ.ಎನ್. ಮಂಜುನಾಥ್]]></title>
            <link>https://kannada.asianetnews.com/state/west-bengal-politics-bjp-cm-oath-taking-pm-modi-karnataka-visit-dr-cn-manjunath-sat/articleshow-y69iq6s</link>
            <guid isPermaLink="true">https://kannada.asianetnews.com/state/west-bengal-politics-bjp-cm-oath-taking-pm-modi-karnataka-visit-dr-cn-manjunath-sat/articleshow-y69iq6s</guid>
            <pubDate>Thu, 07 May 2026 13:05:36 +0530</pubDate>
            <description><![CDATA[&lt;p&gt;ದೇಶದ ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಜಯಶಾಲಿಯಾಗಿದೆ. ಇದರ ಬೆನ್ನಲ್ಲಿಯೇ ಮೋದಿ ರಾಜ್ಯಕ್ಕೆ ಆಗಮಿಸಿ ಸ್ಥಳೀಯ ಬಿಜೆಪಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದುಂ ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr0n6mqzn22rv9bymfg8q9s0,imgname-narendra-modi-visit-karnataka-dr-cn-manjunath-1778138698495.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಮನಗರ (ಮೇ 07): &lt;/strong&gt;&lsquo;ಮೇ 10ರಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ಹೆಚ್&zwnj;ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಗಳನ್ನು ರಾಜ್ಯ ಬಿಜೆಪಿಯಿಂದ ಅಭಿನಂದಿಸಲಾಗುವುದು. ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ&rsquo; ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾಹಿತಿ ನೀಡಿದರು&lt;strong&gt;.&lt;/strong&gt;&lt;/p&gt;&lt;h3&gt;&lt;strong&gt;ಬಂಗಾಳದಲ್ಲಿ ಸಂವಿಧಾನ ವಿರೋಧಿ ಧೋರಣೆ:&lt;/strong&gt;&lt;/h3&gt;&lt;p&gt;ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಮಂಜುನಾಥ್, 'ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವದ ಕದನ ಕುತೂಹಲ ಮೂಡಿಸಿದೆ. ಒಂದು ಅಸೆಂಬ್ಲಿಗೆ ನಿರ್ದಿಷ್ಟ ಅವಧಿ ಎಂಬುದು ಇರುತ್ತದೆ. ಇವತ್ತಿಗೆ ಆ ಅವಧಿ ಪೂರ್ಣಗೊಂಡಿದೆ. ನೈತಿಕವಾಗಿ ಮಮತಾ ಬ್ಯಾನರ್ಜಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು. ಒಂದು ವೇಳೆ ಅವರು ಮೊಂಡುಹಠ ಮುಂದುವರಿಸಿದರೆ, ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಆಟೋಮ್ಯಾಟಿಕ್ ಆಗಿ ಕ್ರಮ ಕೈಗೊಳ್ಳಲಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನವಿದ್ದರೆ ಕೋರ್ಟ್ ಮೆಟ್ಟಿಲೇರಬಹುದೇ ಹೊರತು, ಈ ರೀತಿ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವುದು ಸರಿಯಲ್ಲ' ಎಂದು ಕಿಡಿಕಾರಿದರು.&lt;/p&gt;&lt;h2&gt;&lt;strong&gt;ಮೇ 9ಕ್ಕೆ ಬಿಜೆಪಿ ಮುಖ್ಯಮಂತ್ರಿ ಪಟ್ಟ?&lt;/strong&gt;&lt;/h2&gt;&lt;p&gt;ಪಶ್ಚಿಮ ಬಂಗಾಳದ ರಾಜಕೀಯ ಹೈಡ್ರಾಮಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದ ಸಂಸದರು, 'ಬರುವ ಮೇ 9ರಂದು ಬೆಳಿಗ್ಗೆ 11 ಗಂಟೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಕೇಂದ್ರ ನಾಯಕರು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ' ಎಂಬ ಆಶ್ಚರ್ಯಕರ ಮಾಹಿತಿ ಹಂಚಿಕೊಂಡರು.&lt;/p&gt;&lt;h3&gt;&lt;strong&gt;ಹಿಂಸಾಚಾರದ ವಿರುದ್ಧ ಆಕ್ರೋಶ:&lt;/strong&gt;&lt;/h3&gt;&lt;p&gt;ಟಿಎಂಸಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಪಿಎ ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. 'ಬಂಗಾಳದಲ್ಲಿ ಇದುವರೆಗೆ ಸುಮಾರು 450ಕ್ಕೂ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ. ಸೋತ ಮೇಲೂ ಟಿಎಂಸಿ ಕಾರ್ಯಕರ್ತರು ಹಿಂಸಾಚಾರದಲ್ಲಿ ತೊಡಗಿರುವುದು ಸಂವಿಧಾನ ವಿರೋಧಿ ಧೋರಣೆಯಾಗಿದೆ. ಜನರ ರಕ್ಷಣೆಗಾಗಿ ಬಿಜೆಪಿ ಸರ್ಕಾರ ಬಂದ ಮೇಲೂ ಆರು ತಿಂಗಳ ಕಾಲ ಅಲ್ಲಿ ಸಿಆರ್&zwnj;ಪಿಎಫ್ (CRPF) ನಿಯೋಜನೆ ಮುಂದುವರಿಯಲಿದೆ. ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತ ಅಂತ್ಯವಾಗಿ ಹೊಸ ಅಧ್ಯಾಯ ಶುರುವಾಗಲಿದೆ' ಎಂದರು.&lt;/p&gt;&lt;h3&gt;&lt;strong&gt;ಮೇ 10ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ:&lt;/strong&gt;&lt;/h3&gt;&lt;p&gt;ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿಯ ಬಗ್ಗೆಯೂ ಮಾಹಿತಿ ನೀಡಿದ ಡಾ. ಮಂಜುನಾಥ್, 'ಮೇ 10ರಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ಹೆಚ್&zwnj;ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಗಳನ್ನು ರಾಜ್ಯ ಬಿಜೆಪಿಯಿಂದ ಅಭಿನಂದಿಸಲಾಗುವುದು. ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತದನಂತರ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ (Art of Living) ಆಶ್ರಮಕ್ಕೆ ತೆರಳಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ' ಎಂದು ತಿಳಿಸಿದರು.&lt;/p&gt;&lt;p&gt;ಒಟ್ಟಾರೆಯಾಗಿ, ಪಶ್ಚಿಮ ಬಂಗಾಳದ ರಾಜಕೀಯ ಬದಲಾವಣೆ ಮತ್ತು ಪ್ರಧಾನಿಗಳ ಭೇಟಿ ಎರಡೂ ವಿಚಾರಗಳಲ್ಲಿ ಸಂಸದರ ಹೇಳಿಕೆಗಳು ಈಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ.&lt;/p&gt;]]></content:encoded>
            <category>ramanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/west-bengal-politics-bjp-cm-oath-taking-pm-modi-karnataka-visit-dr-cn-manjunath-sat/articleshow-y69iq6s"/>
        </item>
    </channel>
</rss>
