<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 14 Jul 2026 08:02:41 +0530</lastBuildDate>
        <atom:link href="https://kannada.asianetnews.com/rss/shivamogga" rel="self" type="application/rss+xml"/>
        <item>
            <title><![CDATA[ವಯನಾಡು ರೀತಿ ರಾಜ್ಯದಲ್ಲೂ ಭೂಕುಸಿತದ ಆತಂಕ! ಚಂದ್ರಗಿರಿ ಪರ್ವತದಲ್ಲಿ ಕುಸಿತಿದೆ ಗುಡ್ಡ!]]></title>
            <link>https://kannada.asianetnews.com/karnataka-districts/landslides-mirror-wayanad-tragedy-in-karnataka-towns-chikkamagaluru-shivamogga-rav/articleshow-0mxrize</link>
            <guid isPermaLink="true">https://kannada.asianetnews.com/karnataka-districts/landslides-mirror-wayanad-tragedy-in-karnataka-towns-chikkamagaluru-shivamogga-rav/articleshow-0mxrize</guid>
            <pubDate>Thu, 09 Jul 2026 06:25:20 +0530</pubDate>
            <description><![CDATA[&lt;p&gt;ನೆರೆಯ ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು(Wayanad landslide) ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲೇ ರಾಜ್ಯದ ಕೆಲವೆಡೆ ಬೆಟ್ಟ ಕುಸಿತವಾಗಿದೆ. ಚಿಕ್ಕಮಗಳೂರಿನ ಚಂದ್ರಗಿರಿ ಪರ್ವತದಲ್ಲಿ ಭೂ ಕುಸಿತವಾಗಿದೆ. ಭೂ ಕುಸಿತದಿಂದಾಗಿ ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್&zwnj; ಪ್ರವೇಶ ನಿಷೇಧಿಸಲಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx25pwxk0c2stbw8d5x31zr4,imgname-----------------------2026-07-09t061723.717-1783558271923.jpg" type="image/jpeg" height="390" width="690"/>
            <content:encoded><![CDATA[&lt;p&gt;&amp;nbsp;ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದ.ಕದಲ್ಲಿ ಭೂ ಕುಸಿತ । ಜನರಲ್ಲಿ ತೀವ್ರ ಆತಂಕ&lt;/p&gt;&lt;p&gt;&lt;strong&gt;ಬೆಂಗಳೂರು (ಜು.9): &lt;/strong&gt;ನೆರೆಯ ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು(Wayanad landslide) ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲೇ ರಾಜ್ಯದ ಕೆಲವೆಡೆ ಬೆಟ್ಟ ಕುಸಿತವಾಗಿದೆ. ಚಿಕ್ಕಮಗಳೂರಿನ ಚಂದ್ರಗಿರಿ ಪರ್ವತದಲ್ಲಿ ಭೂ ಕುಸಿತವಾಗಿದೆ. ಭೂ ಕುಸಿತದಿಂದಾಗಿ ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್&zwnj; ಪ್ರವೇಶ ನಿಷೇಧಿಸಲಾಗಿದೆ. ಶಿವಮೊಗ್ಗದಲ್ಲಿ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದಿದ್ದು ಒಂದೇ ಕುಟುಂಬದ ಮೂವರು ಪ್ರಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;p&gt;ಇನ್ನು ಗುಡ್ಡ ಕುಸಿತದ ಆತಂಕದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆ ಫಾಲ್ಸ್&zwnj; (ಕಡಮಗುಂಡಿ), ನೇತ್ರಾವತಿ ಪೀಕ್&zwnj;ಗೆ ಜು.9, 10ರಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ನಗರದ ಕೆಎಸ್&zwj;ಆರ್&zwj;ಟಿಸಿ ಬಸ್ ನಿಲ್ದಾಣ ಬಳಿ ಭೂ ಕುಸಿತ ಉಂಟಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರ ಮಾರ್ಪಾಡು ಮಾಡಲಾಗಿದೆ. ಇದಕ್ಕಾಗಿ ರಾಜಾಸೀಟ್&zwnj;ಗೆ ಪ್ರವೇಶ ನಿಷೇಧಿಸಲಾಗಿದೆ.&lt;/p&gt;&lt;p&gt;ಇನ್ನು ವಯನಾಡು ಟನಲ್&zwnj; ಕಂಪನಿಯಿಂದ ಮಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕೆತ್ತಿಕಲ್&zwnj;ನಲ್ಲಿ ಹೆದ್ದಾರಿ ನಿರ್ಮಾಣಕ್ಕಾಗಿ ತಡೆಗೋಡೆ ನಿರ್ಮಿಸುತ್ತಿರುವ ಡಿಬಿಎಲ್&zwnj; ಕಂಪನಿ ಅವೈಜ್ಞಾನಿಕವಾಗಿ ಮಣ್ಣು ತೆಗೆದಿತ್ತು. ಇದರಿಂದಾಗಿ ರಸ್ತೆಗೆ ಅಪಾರ ಪ್ರಮಾಣದ ಮಣ್ಣುಕಲ್ಲು ಬಿದ್ದಿದೆ. ಇದರಿಂದ ಗುಡ್ಡದ ಮೇಲ್ಭಾಗದ ನಿವಾಸಿಗಳಿಗೆ ಭಾರಿ ಆತಂಕದ ಸ್ಥಿತಿ ಆಗಿದೆ.&lt;/p&gt;&lt;p&gt;ಕರ್ನಾಟಕ-ಮಹಾರಾಷ್ಟ್ರ ಗಡಿಭಾಗಕ್ಕೆ ಸಮೀಪವಿರುವ ಪ್ರವಾಸಿ ತಾಣ ಅಂಬೋಲಿ ಫಾಲ್ಸ್ ಸಮೀಪ ತಡರಾತ್ರಿ ಭಾರಿ ಗುಡ್ಡ ಕುಸಿದು ನಾಲ್ಕು ಬೃಹತ್ ಬಂಡೆಗಳು ರಸ್ತೆಯ ಮೇಲೆ ಉರುಳಿ ಬಿದ್ದಿವೆ. ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಸಾವಂತವಾಡಿ ತಾಲೂಕಿನ ಅಂಬೋಲಿ ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಡ್ಡದ ಮೇಲ್ಭಾಗದಿಂದ ಏಕಾಏಕಿ ಬೃಹತ್ ಬಂಡೆಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿ-ಸಿಂಧದುರ್ಗ ನಡುವಿನ ವಾಹನ ಸಂಚಾರವನ್ನು ಮಧ್ಯರಾತ್ರಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/landslides-mirror-wayanad-tragedy-in-karnataka-towns-chikkamagaluru-shivamogga-rav/articleshow-0mxrize"/>
        </item>
        <item>
            <title><![CDATA[ಅಪ್ಪು Milana ಸಿನಿಮಾದಂತೆ ಶಿವಮೊಗ್ಗ ಕೋರ್ಟ್‌ನಲ್ಲಿ ಡಿವೋರ್ಸ್‌ ತಗೊಂಡು, ಕಾಫಿ ಕುಡಿದು ರೀಲ್ಸ್‌ ಮಾಡಿದ್ರು]]></title>
            <link>https://kannada.asianetnews.com/gallery/relationship/the-tattoo-ghost-and-kavya-divorce-reels-video-at-shivamogga-0ufg394</link>
            <guid isPermaLink="true">https://kannada.asianetnews.com/gallery/relationship/the-tattoo-ghost-and-kavya-divorce-reels-video-at-shivamogga-0ufg394</guid>
            <pubDate>Sat, 11 Jul 2026 15:09:58 +0530</pubDate>
            <description><![CDATA[&lt;p&gt;The Tattoo Ghost divorce: ಡಿವೋರ್ಸ್&zwnj; ತಗೊಳ್ಳಲು ಸಾಕಷ್ಟು ಕಾರಣಗಳು ಇರುತ್ತವೆ. ಕೆಲವರು ಡಿವೋರ್ಸ್&zwnj; ತಗೊಂಡೆವು ಎಂದು ಕೂಡ ಹೇಳೋದಿಲ್ಲ. ಇನ್ನೂ ಕೆಲವರು ಇದರಿಂದ ಹೊರಗಡೆ ಬರಲು ತುಂಬ ಸಮಯ ತಗೊಳ್ತಾರೆ. ಆದರೆ ಇಲ್ಲೊಂದು ಜೋಡಿಯೊಂದು ರೀಲ್ಸ್&zwnj; ಮಾಡಿ ಸೋಶಿಯಲ್&zwnj; ಮೀಡಿಯಾದಲ್ಲಿ ಹಂಚಿಕೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx88d9y02rfmxw1vx46952f9,imgname-new-project--13--1783762429888.jpg" type="image/jpeg" height="390" width="690"/>
            <content:encoded><![CDATA[&lt;p&gt;The Tattoo Ghost divorce: ಡಿವೋರ್ಸ್&zwnj; ತಗೊಳ್ಳಲು ಸಾಕಷ್ಟು ಕಾರಣಗಳು ಇರುತ್ತವೆ. ಕೆಲವರು ಡಿವೋರ್ಸ್&zwnj; ತಗೊಂಡೆವು ಎಂದು ಕೂಡ ಹೇಳೋದಿಲ್ಲ. ಇನ್ನೂ ಕೆಲವರು ಇದರಿಂದ ಹೊರಗಡೆ ಬರಲು ತುಂಬ ಸಮಯ ತಗೊಳ್ತಾರೆ. ಆದರೆ ಇಲ್ಲೊಂದು ಜೋಡಿಯೊಂದು ರೀಲ್ಸ್&zwnj; ಮಾಡಿ ಸೋಶಿಯಲ್&zwnj; ಮೀಡಿಯಾದಲ್ಲಿ ಹಂಚಿಕೊಂಡಿದೆ.&lt;/p&gt;&lt;img&gt;&lt;p&gt;&ldquo;ಇವತ್ತು ನನ್ನ ಜೀವನದಲ್ಲಿ ಮರೆಯೋಕಾಗದಿರೋಂಥ ದಿನ, ನಾನೀಗ ಶಿವಮೊಗ್ಗದಲ್ಲಿ ಕೋರ್ಟ್ ಹತ್ರ ಇದ್ದೀನಿ. ಐದು ವರ್ಷದ ನಂತರ ನಾನು ಇವರನ್ನು ಭೇಟಿ ಆಗ್ತಿದೀನಿ&rdquo; ಎಂದು ದಿ ಟ್ಯಾಟೂ ಘೋಸ್ಟ್&zwnj; ಅವರು ಹೇಳಿಕೊಂಡಿದ್ದಾರೆ.&lt;/p&gt;&lt;p&gt;ಇವರು ಟ್ಯಾಟೂ ಶಾಪ್&zwnj; ಹೊಂದಿದ್ದಾರೆ, ಇವರ ನಿಜವಾದ ಹೆಸರಿನ ಬಗ್ಗೆ ಮಾಹಿತಿ ಇಲ್ಲ, ಆದರೆ ನಟನೆಯಲ್ಲಿ ಆಸಕ್ತಿ ಇದೆಯಂತೆ. ಸೋಶಿಯಲ್&zwnj; ಮೀಡಿಯಾದಲ್ಲಿ ಸಾಕಷ್ಟು ನಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ನಾನು, ನನ್ನ ಗಂಡನ ಕೊನೆಯ ಹೆಜ್ಜೆ ಇದು. ನಾನು ಇವರ ಪತ್ನಿ ಎಂದು ಕಾವ್ಯ ಅವರು ವಿಡಿಯೋದಲ್ಲಿ ಹೇಳಿದ್ದಾರೆ.&lt;/p&gt;&lt;p&gt;&ldquo;ಕಾರಣಾಂತರಗಳಿಂದ ಫ್ರೆಂಡ್ಸ್ ಆಗಿ ಉಳ್ಕೊಂಡಿದ್ದೀವಿ. ಕೆಲವೊಂದು ಸನ್ನಿವೇಶಗಳು ಯಾವ ತರ ಆಗತ್ತೆ ಅಂತಂದ್ರೆ ಫ್ರೆಂಡ್ರಿಪ್ ಅಲ್ಲಿದ್ದು ದೂರ ಇರದೇ ಒಳ್ಳೆಯದು. ಇಬ್ರು ಕೂಡ ಡಿವೋರ್ಸ್ ತಗೊಳ್ತಿದ್ದೀವಿ&rdquo; ಎಂದು ದಿ ಟ್ಯಾಟೂ ಘೋಸ್ಟ್ ಹೇಳಿದ್ದಾರೆ.&lt;/p&gt;&lt;img&gt;&lt;p&gt;ಬೆಸ್ಟ್&zwnj; ಆಫ್&zwnj; ಲಕ್&zwnj;, ನಿಮ್ಮ ಭವಿಷ್ಯ ಚೆನ್ನಾಗಿರಲಿ ಎಂದು ಮಾಜಿ ಪತ್ನಿಗೆ ಹೇಳಿದ್ದಾರೆ. ಅಂದಹಾಗೆ ಮಾಜಿ ಪತ್ನಿ ಕೂಡ &ldquo;ನಿಮ್ಮ ಭವಿಷ್ಯ ಚೆನ್ನಾಗಿರುತ್ತದೆ ಎಂದು ಗೊತ್ತಿದೆ, ಚೆನ್ನಾಗಿರು&rdquo; ಎಂದು ಕಾವ್ಯ ಹೇಳಿದ್ದಾರೆ.&lt;/p&gt;&lt;img&gt;&lt;p&gt;ಇವರಿಬ್ಬರು ಫ್ಯಾನ್ಸಿ ಸ್ಟೋರ್&zwnj;ಗೆ ಹೋಗಿ, ಹಾರ್ಟ್&zwnj; ಸಿಂಗೋಲ್&zwnj; ಇರೋ ಕೀ ಚೈನ್&zwnj; ತಗೊಂಡು, ಆಮೇಲೆ ಹೋಟೆಲ್&zwnj;ನಲ್ಲಿ ಟೀ ಕುಡಿದಿದ್ದಾರೆ, ಬೈಕ್&zwnj; ಸವಾರಿ ಮಾಡಿದ್ದಾರೆ, ಆಮೇಲೆ ಆಟೋದಲ್ಲಿ ಕೂಡ ಸ್ವಲ್ಪ ಓಡಾಡಿದ್ದು ವಿಡಿಯೋ ಮಾಡಿದ್ದಾರೆ.&lt;/p&gt;&lt;p&gt;ಮಿಲನ ಸಿನಿಮಾದಲ್ಲಿ ಆಕಾಶ್&zwnj; ಹಾಗೂ ಅಂಜಲಿ ಖುಷಿಯಿಂದ ಫ್ರೆಂಡ್ಸ್&zwnj; ಆಗಿರೋಣ ಎಂದು ಹೇಳಿ ಡಿವೋರ್ಸ್&zwnj; ತಗೊಂಡಿರೋ ತರ ಇವರು ವಿಡಿಯೋ ಮಾಡಿರೋದು ಅಚ್ಚರಿ ಮೂಡಿಸಿದೆ.&lt;/p&gt;]]></content:encoded>
            <category>shivamogga</category>
            <dc:creator>Padmashree Bhat</dc:creator>
            <atom:link href="https://kannada.asianetnews.com/gallery/relationship/the-tattoo-ghost-and-kavya-divorce-reels-video-at-shivamogga-0ufg394"/>
        </item>
        <item>
            <title><![CDATA[ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್:  6 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!]]></title>
            <link>https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</link>
            <guid isPermaLink="true">https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</guid>
            <pubDate>Wed, 08 Jul 2026 11:25:56 +0530</pubDate>
            <description><![CDATA[ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಮೆಗಾ ಆಪರೇಷನ್&zwnj;ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗುವ ಶಂಕೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx04edrp64anbam01r602epp,imgname-lokayukta-raids-in-across-karnataka-1783489836822.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನೂರಾರು ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಈ ಮೆಗಾ ಆಪರೇಷನ್ ಕೈಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ಧಾರವಾಡ ಮತ್ತು ಶಿವಮೊಗ್ಗ: ಎಸಿಎಫ್ ಕಿರಣ್ ಅಂಗಡಿಗೆ ಶಾಕ್!&lt;/h2&gt;&lt;p&gt;ಶಿವಮೊಗ್ಗದ ಅರಣ್ಯ ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಆಗಿ ಸೇವೆ ಸಲ್ಲಿಸುತ್ತಿರುವ ಕಿರಣ್ ಅಂಗಡಿ ಅವರಿಗೆ ಸೇರಿದ ಧಾರವಾಡ ಮತ್ತು ಶಿವಮೊಗ್ಗದ ಒಟ್ಟು ೫ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಧಾರವಾಡದ ಲೋಕಾ ಎಸ್ಪಿ ಸಿದ್ದಲಿಂಗಪ್ಪ ಹಾಗೂ ಶಿವಮೊಗ್ಗದ ಲೋಕಾಯುಕ್ತ ಇನ್&zwnj;ಸ್ಪೆಕ್ಟರ್ ವೀರಬಸಪ್ಪ ಕುಶಲಾಪೂರ ಮತ್ತು ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿರುವ ಐಷಾರಾಮಿ ಮನೆ, ಅಳ್ನಾವರ ರಸ್ತೆಯಲ್ಲಿರುವ ಫಾರ್ಮ್ ಹೌಸ್, ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ (ಪತ್ನಿಯ ಹೆಸರಿನಲ್ಲಿದೆ ಎನ್ನಲಾದ ಉದ್ಯಮ) ಹಾಗೂ ಅವರ ಸೋದರ ಮಾವನ ಮನೆಗಳ ಮೇಲೆ ಶೋಧ ನಡೆಸಲಾಗುತ್ತಿದೆ.&lt;/p&gt;&lt;h2&gt;ಶಿವಮೊಗ್ಗದ ಕಚೇರಿ ಮೇಲೂ ದಾಳಿ&lt;/h2&gt;&lt;p&gt;ಇತ್ತ ಶಿವಮೊಗ್ಗದ ಆಲ್ಕೋಳ ರಸ್ತೆಯಲ್ಲಿರುವ ಕಿರಣ್ ಅಂಗಡಿ ಅವರ ಅರಣ್ಯ ಸಂಶೋಧನಾ ಕಚೇರಿಯ ಮೇಲೂ ಲೋಕಾಯುಕ್ತ ತಂಡ ತಪಾಸಣೆ ನಡೆಸುತ್ತಿದೆ. ದಾಳಿಯ ವೇಳೆ ಅಧಿಕಾರಿ ಕಿರಣ್ ಅಂಗಡಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಐದು ಜನರ ಅಧಿಕಾರಿಗಳ ತಂಡ ಸದ್ಯ ದಾಖಲೆಗಳನ್ನು ಜಾಲಾಡುತ್ತಿದೆ.&lt;/p&gt;&lt;h2&gt;ರಾಯಚೂರು: ಕೆಬಿಜೆಎನ್&zwnj;ಎಲ್ ಇಇ ಬಸನಗೌಡಗೆ ಸೇರಿದ 7 ಕಡೆ ದಾಳಿ&lt;/h2&gt;&lt;p&gt;ರಾಯಚೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾರ್ಯನಿರ್ವಾಹಕ ಇಂಜಿನಿಯರ್ (EE) ಬಸನಗೌಡ ಅವರ ವಿರುದ್ಧ ಲೋಕಾಯುಕ್ತರು ತನಿಖೆ ತೀವ್ರಗೊಳಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ 7 ಪ್ರತ್ಯೇಕ ತಂಡಗಳು ಏಕಕಾಲದಲ್ಲಿ 7 ಕಡೆ ಧಾಳಿ ನಡೆಸಿವೆ. ಬಸನಗೌಡ ಅವರ ರಾಯಚೂರು ನಗರದ ಎಚ್.ಆರ್.ಬಿ ಲೇಔಟ್&zwnj;ನಲ್ಲಿರುವ ಮನೆ, ಯಕ್ಲಾಸಪುರದ ಸೆಲೆಬ್ರಿಟಿ ಗಾರ್ಡನ್&zwnj;ನಲ್ಲಿರುವ ಅಣ್ಣನ ಮನೆ ಹಾಗೂ ಯಕ್ಲಾಪುರದ ತೋಟದ ಮನೆಯಲ್ಲಿ ಶೋಧ ಕಾರ್ಯ ಪ್ರಗತಿಯಲ್ಲಿದೆ.&lt;/p&gt;&lt;h2&gt;ಬಾರ್ ಮತ್ತು ಪೆಟ್ರೋಲ್ ಬಂಕ್ ಪತ್ತೆ&lt;/h2&gt;&lt;p&gt;ಬಸನಗೌಡ ಅವರ ಪತ್ನಿ ಅನಿತಾ ಶೆಟ್ಟಿ ಹೆಸರಿನಲ್ಲಿರುವ ನಾಯರಾ ಪೆಟ್ರೋಲ್ ಬಂಕ್, ಅದರ ಪಕ್ಕದಲ್ಲೇ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಗೋದಾಮಿನ (Warehouse) ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ದೇವದುರ್ಗ ತಾಲೂಕಿನ ಚಿಕ್ಕ ಹೊನ್ನಕುಣಿ ವ್ಯಾಪ್ತಿಯ ಕೆಬಿಜೆಎನ್&zwnj;ಎಲ್ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.&lt;/p&gt;&lt;h2&gt;ಚಿತ್ರದುರ್ಗ ಆರ್&zwnj;ಎಫ್&zwnj;ಒ ಮತ್ತು ಪ್ರೊಫೆಸರ್ ಮನೆಗೆ ಅಧಿಕಾರಿಗಳ ಎಂಟ್ರಿ&lt;/h2&gt;&lt;p&gt;ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಬ್ಬರು ಪ್ರಮುಖ ಅಧಿಕಾರಿಗಳ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದ ತಂಡ ದಾಳಿ ನಡೆಸಿದೆ. ಚಿತ್ರದುರ್ಗದ ಧವಳಗಿರಿ ಬಡಾವಣೆಯಲ್ಲಿರುವ ವಲಯ ಅರಣ್ಯಾಧಿಕಾರಿ (RFO) ದುಗ್ಗಪ್ಪ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರೊಫೆಸರ್ ಶಂಕರ್ ಅವರ ಮನೆ ಹಾಗೂ ತೋಟದ ಮೇಲೂ ಲೋಕಾಯುಕ್ತರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;ಕಲಬುರಗಿ ಜೇಸ್ಕಾಂ ಎಇಇ ಅಮೃತರಾವ್ ಯಲಾಲ್ ಮನೆ, ಫ್ಲ್ಯಾಟ್ ಮೇಲೆ ದಾಳಿ&lt;/h2&gt;&lt;p&gt;ಕಲಬುರಗಿಯಲ್ಲಿ ಜೆಸ್ಕಾಂ (GESCOM) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅಮೃತರಾವ್ ಯಲಾಲ್ ಅವರಿಗೆ ಸೇರಿದ ಕಚೇರಿ ಹಾಗೂ ಮನೆ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ಮಾಡಿದೆ. ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಬಸವ ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಫ್ಲ್ಯಾಟ್, ಮತ್ತು ಕೊತ್ತಂಬರಿ ಲೇಔಟ್&zwnj;ನಲ್ಲಿರುವ ಜೇಸ್ಕಾಂ ಕಚೇರಿಗಳ ಮೇಲೆ ದಾಳಿಯಾಗಿದೆ. ಇದಲ್ಲದೆ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಮನೆಯ ಮೇಲೂ ಅಧಿಕಾರಿಗಳು ಮುಗಿಬಿದ್ದಿದ್ದಾರೆ. ಎಇಇ ಅಮೃತರಾವ್ ಅವರು ಜಾಗೃತಿ ಕಾಲೋನಿಯಲ್ಲಿ 'ಪ್ಲಾಟಿನಂ ಸ್ಟುಡಿಯೋ' ಎಂಬ ಹೈಟೆಕ್ ಸ್ಟುಡಿಯೋ ಹೊಂದಿದ್ದು, ನಂದೂರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫ್ಲ್ಯಾಟ್ ಹಾಗೂ ವಿವಿಧೆಡೆ 20 ಕ್ಕೂ ಹೆಚ್ಚು ಎಕರೆ ಕೃಷಿ ಜಮೀನು ಹೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;ತುಮಕೂರು ಸಣ್ಣ ನೀರಾವರಿ ಇಲಾಖೆ ಎಇಇ ಮನೆ ಮೇಲೆ ಲೋಕಾ ದಾಳಿ&lt;/h2&gt;&lt;p&gt;ಸಣ್ಣ ನೀರಾವರಿ ಇಲಾಖೆಯಲ್ಲಿ ಎಇಇ ಆಗಿರುವ ಮಧುಸೂದನ್ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ಮಧುಸೂದನ್ ಮನೆ. ಸಣ್ಣ ನೀರಾವರಿ ಇಲಾಖೆ ತಿಪಟೂರು ಉಪವಿಭಾಗದಲ್ಲಿ ಎಇಇ ಆಗಿ ಕೆಲಸ ಮಾಡುತ್ತಿರುವ ಮಧುಸೂದನ್ ಅಕ್ರಮ ಹಣ ಗಳಿಕೆ ಆರೋಪದಡಿ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಲೋಕಾ ದಾಳಿ. ಮಧುಸೂದನ್ ಮನೆಯನ್ನ ಪರಿಶೀಲನೆ ನಡೆಸುತ್ತಿರುವ ಲೋಕಾ ಟೀಮ್. ಸದ್ಯ ಎಲ್ಲಾ ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ಚಿನ್ನಾಭರಣ, ನಗದು ಹಾಗೂ ಬ್ಯಾಂಕ್ ಖಾತೆಗಳ ವಿವರಗಳು ಲಭ್ಯವಾಗಬೇಕಿದೆ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet"/>
        </item>
        <item>
            <title><![CDATA[ಮುಂಗಾರು ಮಳೆ ಆರ್ಭಟ: ತುಂಬಿದ ಜಲಾಶಯ, ಮುಳುಗಿದ ಸೇತುವೆಗಳು, ರೈತರ ಮೊಗದಲ್ಲಿ ಮಂದಹಾಸ]]></title>
            <link>https://kannada.asianetnews.com/karnataka-districts/karnataka-monsoon-rains-filled-reservoirs-submerged-bridges-farmers-smiles-mrq/articleshow-253zw5w</link>
            <guid isPermaLink="true">https://kannada.asianetnews.com/karnataka-districts/karnataka-monsoon-rains-filled-reservoirs-submerged-bridges-farmers-smiles-mrq/articleshow-253zw5w</guid>
            <pubDate>Mon, 06 Jul 2026 05:35:19 +0530</pubDate>
            <description><![CDATA[ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮಲೆನಾಡು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶಿವಮೊಗ್ಗದ ಗಾಜನೂರು ಜಲಾಶಯ ಈ ಸಾಲಿನಲ್ಲಿ ಮೊದಲ ಬಾರಿಗೆ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಅಲ್ಲದೆ, ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಾನಿ ಸಂಭವಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwtbqh2azxfnjry4s9a27fas,imgname-dam-1783296148554.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಶೃಂಗೇರಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾನದಿ ಮೈದುಂಬಿ ಹರಿಯುತ್ತಿದ್ದು, ಗಾಜನೂರು ಜಲಾಶಯ ಭರ್ತಿಯಾಗಿದೆ. ಇದೇ ವೇಳೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನದಿಯಲ್ಲಿ ಒಳಹರಿವು ಹೆಚ್ಚಿದೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾನದಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಶಿವಮೊಗ್ಗ ಜಿಲ್ಲೆಯ ಗಾಜನೂರು ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.&amp;nbsp;&lt;/p&gt;&lt;h2&gt;&lt;strong&gt;ಮೊದಲು ಭರ್ತಿಯಾದ ಜಲಾಶಯ&lt;/strong&gt;&lt;/h2&gt;&lt;p&gt;ಈ ಮೂಲಕ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಲಾಶಯಕ್ಕೆ 19,708 ಕ್ಯುಸೆಕ್ ಒಳಹರಿವಿದ್ದು, 8 ಕ್ರಸ್ಟ್ ಗೇಟ್&zwnj;ಗಳ ಮೂಲಕ 18,051 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 588.21 ಮೀಟರ್ (ಗರಿಷ್ಠ 588.24 ಮೀಟರ್&zwnj;) ತಲುಪಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಸದ್ಯ 15 ಸಾವಿರ ಕ್ಯುಸೆಕ್&zwnj; ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ 1749.85 ಅಡಿಗೆ ಏರಿಕೆ ಕಂಡಿದೆ.&lt;/p&gt;&lt;p&gt;ಇದೇ ವೇಳೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಜಿಲ್ಲೆಯ ಮಲಪ್ರಭಾ, ಕೃಷ್ಣಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ ನದಿಗಳಿಗೆ ಒಳಹರಿವು ಹೆಚ್ಚಿದೆ. ಖಾನಾಪುರದ ಕಣಕುಂಬಿ ಅರಣ್ಯಪ್ರದೇಶದಲ್ಲಿ ಮಲಪ್ರಭಾ ನದಿ ದಡದಲ್ಲಿರುವ ಹಬ್ಬಾನಟ್ಟಿ ಗ್ರಾಮದ ಪುರಾತನ ಮಾರುತಿ ಮಂದಿರ ಭಾಗಶಃ ಜಲಾವೃತಗೊಂಡಿದೆ.&lt;/p&gt;&lt;h3&gt;&lt;strong&gt;ಕೃಷ್ಣೆಗೆ 55 ಸಾವಿರ ಕ್ಯುಸೆಕ್&zwnj;ಗೂ ಅಧಿಕ ಒಳಹರಿವು&lt;/strong&gt;&lt;/h3&gt;&lt;p&gt;ಜಿಲ್ಲೆಯ ಜೀವನದಿ ಕೃಷ್ಣೆಗೆ ಭಾನುವಾರ 55 ಸಾವಿರ ಕ್ಯುಸೆಕ್&zwnj;ಗೂ ಅಧಿಕ ಒಳಹರಿವಿದ್ದು, ನಿಪ್ಪಾಣಿ ತಾಲೂಕಿನಲ್ಲಿ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಘಟಪ್ರಭಾ ನದಿಗೆ 1,600ಕ್ಕೂ ಅಧಿಕ ಕ್ಯುಸೆಕ್&zwnj; ನೀರು ಹರಿದು ಬರುತ್ತಿದ್ದು, ಗೋಕಾಕ ಫಾಲ್ಸ್&zwnj; ಜಲಪಾತಕ್ಕೆ ಜೀವಕಳೆ ಬಂದಿದೆ. ಹಿಡಕಲ್&zwnj; ಜಲಾಶಯದ ನೀರಿನ ಮಟ್ಟ ಭಾನುವಾರ ಒಂದೂವರೆ ಅಡಿಯಷ್ಟು ಏರಿಕೆಯಾಗಿದೆ.&lt;/p&gt;&lt;p&gt;ಇದೇ ವೇಳೆ, ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಆರೇಹಳ್ಳಿ ಬೀದಿ ಸಮೀಪ ನಿರ್ಮಾಣ ಹಂತದ ಲೇಔಟ್&zwnj;ಗಾಗಿ ಕಟ್ಟಿದ್ದ ತಡೆಗೋಡೆ ಸಂಪೂರ್ಣ ಕುಸಿದು ಹಾನಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಾರವಾರ ತಾಲೂಕಿನ ಬೋಳ್ವೆಯಲ್ಲಿ ಮರದ ಟೊಂಗೆಯೊಂದು ಮುರಿದು ಬಿದ್ದು ಕಾರು ಜಖಂಗೊಂಡಿದೆ. ಧಾರವಾಡದಲ್ಲಿ ಕೆಲವೆಡೆ ಮರಗಳು ಧರೆಗುರುಳಿವೆ. ಕೊಂಬೆಗಳು ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಬಿದ್ದ ಪರಿಣಾಮ ಭಾನುವಾರ ಹಲವು ಬಡಾವಣೆಗಳಲ್ಲಿ ವಿದ್ಯುತ್&zwnj; ಸಂಪರ್ಕ ಕಡಿತಗೊಂಡಿತ್ತು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/karnataka-monsoon-rains-filled-reservoirs-submerged-bridges-farmers-smiles-mrq/articleshow-253zw5w"/>
        </item>
        <item>
            <title><![CDATA[1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!]]></title>
            <link>https://kannada.asianetnews.com/gallery/karnataka-districts/bjp-leader-among-4-arrested-in-shivamogga-shikaripura-minor-girl-case-gdp-3z9rxnu</link>
            <guid isPermaLink="true">https://kannada.asianetnews.com/gallery/karnataka-districts/bjp-leader-among-4-arrested-in-shivamogga-shikaripura-minor-girl-case-gdp-3z9rxnu</guid>
            <pubDate>Wed, 08 Jul 2026 14:50:29 +0530</pubDate>
            <description><![CDATA[&lt;p&gt;ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ತನಿಖೆಯಿಂದ ಬಯಲಾಗಿದೆ. ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ, ಮಾಲೀಕರು ಆಕೆಯ ಶವವನ್ನು ಸೂಟ್&zwnj;ಕೇಸ್&zwnj;ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದಿದ್ದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx0emsj3bp0w1vg088jp524m,imgname-shikaripura-minor-missing-case-1783500531267.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ತನಿಖೆಯಿಂದ ಬಯಲಾಗಿದೆ. ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ, ಮಾಲೀಕರು ಆಕೆಯ ಶವವನ್ನು ಸೂಟ್&zwnj;ಕೇಸ್&zwnj;ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದಿದ್ದರು.&lt;/p&gt;&lt;img&gt;&lt;p&gt;&lt;strong&gt;ಶಿವಮೊಗ್ಗ: &lt;/strong&gt;ಒಂದು ವರ್ಷದ ಹಿಂದೆ ಶಿಕಾರಿಪುರದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸತ್ಯಾಂಶ ಬೆಳಕಿಗೆ ಬಂದಿದೆ. ಪಿಜಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಆತ್ಮHತ್ಯೆ ಮಾಡಿಕೊಂಡಾಗ, ಅದರಿಂದ ತಮಗೆ ಕೆಟ್ಟ ಹೆಸರು ಬರುತ್ತದೆ ಎಂಬ ಭಯದಿಂದ ಶವವನ್ನು ಸೂಟ್&zwnj;ಕೇಸ್&zwnj;ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದು ಬಂದಿದ್ದ ಕರಾಳ ಕಥೆ ಈಗ ಬರೋಬ್ಬರಿ ಒಂದು ವರ್ಷದ ಬಳಿಕ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಆ ನಿಗೂಢ ಪ್ರಕರಣ ಈಗ ತೆರೆದುಕೊಂಡಿದ್ದು ಹೇಗೆ ಎಂಬುದೇ ರೋಚಕವಾಗಿದೆ.&lt;/p&gt;&lt;img&gt;&lt;p&gt;ಈ ಭೀಕರ ಸಾಕ್ಷಿ ನಾಶ ಮತ್ತು ಆತ್ಮHತ್ಯೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಇಟ್ಟಿಗೆಹಳ್ಳಿಯ ಬಿಜೆಪಿ ಮುಖಂಡ ಹಾಗೂ ಬಂಜಾರ ಸಮಾಜದ ತಾಲೂಕು ಅಧ್ಯಕ್ಷ ಗಂಗಾನಾಯ್ಕ, ಆತನ ಎರಡನೇ ಪತ್ನಿ ಸೌಭಾಗ್ಯ ಅಲಿಯಾಸ್ ಭಾಗ್ಯಶ್ರೀ, ಸೋಗಿಲು ಗ್ರಾಮದ ರಂಜಿತಾ ಮತ್ತು ಪೀರ್ಯಾನಾಯ್ಕ ಎಂಬ ನಾಲ್ವರನ್ನು ಈಗ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಗಂಗಾನಾಯ್ಕ ಮುದ್ದನಹಳ್ಳಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷನೂ ಆಗಿದ್ದಾನೆ.&lt;/p&gt;&lt;img&gt;&lt;p&gt;ಮೃತಪಟ್ಟ ಅಪ್ರಾಪ್ತ ಬಾಲಕಿ ಸಂಗೀತಾಗೆ ತಾಯಿ ಇರಲಿಲ್ಲ. ತಂದೆಯ ಜೊತೆ ಇರಲಾರದೆ ಆಕೆ ಕೆಲಸ ಹುಡುಕಿಕೊಂಡು ಶಿಕಾರಿಪುರಕ್ಕೆ ಬಂದು ಸೇರಿದ್ದಳು. ಪಿಜಿ ಮಾಲೀಕತ್ವ ವಹಿಸಿಕೊಂಡಿದ್ದ ಸೌಭಾಗ್ಯ, ಈ ಬಾಲಕಿಯನ್ನು ತನ್ನ ಮಗಳಂತೆ ಸಾಕಿ ಸಲುಹುತ್ತಿದ್ದಳು. 8ನೇ ತರಗತಿಯ ನಂತರ ಓದು ನಿಲ್ಲಿಸಿದ್ದ ಸಂಗೀತಾ, ಅದೇ ಪಿಜಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.&lt;/p&gt;&lt;p&gt;2025 ರ ಮೇ 18 ರಂದು ಪಿಜಿಯಲ್ಲಿದ್ದ ರಂಜಿತಾ ಎಂಬಾಕೆಯೊಂದಿಗೆ ಬಾಲಕಿ ಸಂಗೀತಾಗೆ ಜಗಳವಾಗಿತ್ತು. ಬಾಲಕಿ ಸಂಗೀತಾ ಎಲ್ಲರ ಹತ್ತಿರ ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಿದ್ದಾಳೆ ಎಂದು ಆರೋಪಿಗಳು ಆಕ್ಷೇಪಿಸಿದ್ದರು. ಪಿಜಿ ಕೆಳಗಿರುವ ಬ್ಯೂಟಿ ಪಾರ್ಲರ್&zwnj;ನಲ್ಲಿ ಬಾಲಕಿಯನ್ನು ಕರೆಸಿ, &quot;ಚಾಡಿ ಹೇಳಿ ನಮ್ಮ ಮರ್ಯಾದೆ ತೆಗೆಯುತ್ತಿದ್ದೀಯಾ&quot; ಎಂದು ತೀವ್ರವಾಗಿ ಹೆದರಿಸಿ, ನಿಂದಿಸಿ ಮಾನಸಿಕ ಮತ್ತು ದೈಹಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ತೀವ್ರ ಮನನೊಂದ ಬಾಲಕಿ ಸಂಗೀತ, ಪಿಜಿಯ ಕೊಠಡಿಯೊಂದಕ್ಕೆ ತೆರಳಿ ನೇಣಿಗೆ ಶರಣಾಗಿದ್ದಳು.&lt;/p&gt;&lt;img&gt;&lt;p&gt;ಬಾಲಕಿ ನೇಣು ಬಿಗಿದುಕೊಂಡು ಆತ್ಮHತ್ಯೆ ಮಾಡಿಕೊಂಡಿರುವುದನ್ನು ಕಂಡು ಪಿಜಿ ಮಾಲೀಕರು ಮತ್ತು ಅವರ ಸ್ನೇಹಿತರು ತಲ್ಲಣಗೊಂಡಿದ್ದರು. ಪೊಲೀಸರಿಗೆ ವಿಷಯ ತಿಳಿಸಿದರೆ ತಮ್ಮ ಪಿಜಿಗೆ ಕೆಟ್ಟ ಹೆಸರು ಬರುತ್ತದೆ ಹಾಗೂ ಕಾನೂನಿನ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಹೆದರಿದ ನಾಲ್ವರು ಆರೋಪಿಗಳು ಭೀಕರ ಪ್ಲ್ಯಾನ್ ರೂಪಿಸಿದರು. ಇದಕ್ಕಾಗಿ ಬಾಲಕಿಯ ಶವವನ್ನು ಯಾರಿಗೂ ತಿಳಿಯದಂತೆ ಗೌಪ್ಯವಾಗಿ ವಿಲೇವಾರಿ ಮಾಡಲು ನಿರ್ಧರಿಸಿದರು, ಮೃತದೇಹವನ್ನು ತಂದು ಒಂದು ದೊಡ್ಡ ಸೂಟ್&zwnj;ಕೇಸ್ ಒಳಗೆ ಇಟ್ಟು ಬಂದ್ ಮಾಡಿದರು. ಬಳಿಕ ಆ ಸೂಟ್&zwnj;ಕೇಸ್ ಅನ್ನು ಕಾರಿನಲ್ಲಿ ಇಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ (ಜೋಗ ಜಲಪಾತದ ಸಮೀಪ) ಪ್ರಪಾತದ ಅಜ್ಞಾತ ಸ್ಥಳದಲ್ಲಿ ಎಸೆದು ಯಾರಿಗೂ ತಿಳಿಯದಂತೆ ವಾಪಸ್ ಬಂದಿದ್ದರು. ಈ ಘಟನೆ ನಡೆದು ಒಂದು ವರ್ಷದವರೆಗೂ ಬಾಲಕಿ ಜೀವಂತವಾಗಿದ್ದಾಳೆ ಎಂದು ನಂಬಿಸಲು ಆಕೆಯ ಮೊಬೈಲ್ ಫೋನ್ ಅನ್ನು ಯಾರಿಗೂ ಸಿಗದಂತೆ ಬಚ್ಚಿಟ್ಟಿದ್ದರು.&lt;/p&gt;&lt;img&gt;&lt;p&gt;ಕಳೆದ ಒಂದು ವರ್ಷದಿಂದ ಯಾರಿಗೂ ತಿಳಿಯದ ಈ ರಹಸ್ಯ, ಇತ್ತೀಚೆಗೆ ಆರೋಪಿಗಳಾದ ರಂಜಿತಾ ಹಾಗೂ ಪೀರ್ಯಾನಾಯ್ಕ ನಡುವೆ ನಡೆದ ವೈಯಕ್ತಿಕ ಜಗಳದಿಂದಾಗಿ ಬೀದಿಗೆ ಬಂತು. ಜಗಳದ ವೇಳೆ ಈ ಕೊಲೆಯ ಸತ್ಯಾಂಶ ಹೊರಬೀಳುತ್ತಿದ್ದಂತೆ, ಕಳೆದ ಶುಕ್ರವಾರ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಕೊನೆಯದಾಗಿ ಬಾಲಕಿ ಮಾತನಾಡಿದ್ದ ರಂಜಿತಾಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ, ಆಕೆ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾಳೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರನ್ನೂ ಹೆಡೆಮುರಿ ಕಟ್ಟಿದ್ದಾರೆ.&lt;/p&gt;&lt;img&gt;&lt;p&gt;ಈ ಕುರಿತು ಶಿವಮೊಗ್ಗದಲ್ಲಿ ಅಧಿಕೃತ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ (SP) ನಿಖಿಲ್ ಅವರು, &quot; ಆತ್ಮHತ್ಯೆ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರೆ ಇದು ಇಷ್ಟು ದೊಡ್ಡ ಕ್ರಿಮಿನಲ್ ಕೇಸ್ ಆಗುತ್ತಿರಲಿಲ್ಲ. ಶವ ವಿಲೇವಾರಿ ಮಾಡಿ ಮುಚ್ಚಿಟ್ಟಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಮಾವಿನಗುಂಡಿ ಪ್ರಪಾತದಲ್ಲಿ ಶೋಧ ನಡೆಸಿದಾಗ ಬಾಲಕಿಯ ಶವದ ಕೆಲವು ಭಾಗಗಳು (ಅಸ್ಥಿಪಂಜರದ ಅವಶೇಷಗಳು) ನಮಗೆ ಪತ್ತೆಯಾಗಿವೆ. ಅವು ಬಾಲಕಿಯದ್ದೇ ಎಂದು ದೃಢಪಡಿಸಿಕೊಳ್ಳಲು ತಕ್ಷಣವೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bjp-leader-among-4-arrested-in-shivamogga-shikaripura-minor-girl-case-gdp-3z9rxnu"/>
        </item>
        <item>
            <title><![CDATA[ಹೊಸನಗರ: ಪ್ರಿಯಕರನ ಜೊತೆಗೆ ಸುಖ ಬೇಕಿತ್ತು, ಮಗು ಬೇಡವಾಯ್ತು! ಬಸ್ ನಿಲ್ದಾಣದಲ್ಲಿ  ನವಜಾತ ಶಿಶು ಬಿಟ್ಟು ಹೋದ ಜನ್ಮದಾತೆ!]]></title>
            <link>https://kannada.asianetnews.com/karnataka-districts/newborn-baby-found-with-a-milk-bottle-in-a-bag-in-gavatur-bus-stand-hosanagara-rav/articleshow-4n5uqgc</link>
            <guid isPermaLink="true">https://kannada.asianetnews.com/karnataka-districts/newborn-baby-found-with-a-milk-bottle-in-a-bag-in-gavatur-bus-stand-hosanagara-rav/articleshow-4n5uqgc</guid>
            <pubDate>Mon, 13 Jul 2026 08:57:03 +0530</pubDate>
            <description><![CDATA[ಶಿವಮೊಗ್ಗದ ಗವಟೂರಿನಲ್ಲಿ ಅನಾಥವಾಗಿ ಸಿಕ್ಕ ನವಜಾತ ಹೆಣ್ಣು ಶಿಶುವಿನ ತಾಯಿಯನ್ನು ರಿಪ್ಪನ್&zwnj;ಪೇಟೆ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರೀತಿಯ ಫಲವಾಗಿ ಜನಿಸಿದ ಮಗುವನ್ನು ಜನಾಪವಾದಕ್ಕೆ ಹೆದರಿ ತ್ಯಜಿಸಿದ್ದ 21 ವರ್ಷದ ಯುವತಿಯನ್ನು ಪತ್ತೆಹಚ್ಚಿ, ಮಗುವನ್ನು ತಾಯಿಯ ಮಡಿಲಿಗೆ ಸೇರಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxcqtdg0y2wkt3gkra34gysx,imgname-----------------------2026-07-13t084950.957-1783912805887.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜು.13)&lt;/strong&gt;: ಹೊಸನಗರ ತಾಲೂಕಿನ ಗವಟೂರಿನ ಪ್ರಯಾಣಿಕರ ತಂಗುದಾಣದಲ್ಲಿ ಜುಲೈ.5 ರ ರಾತ್ರಿ ಅನಾಥವಾಗಿ ದೊರೆತಿದ್ದ ನವಜಾತ ಹೆಣ್ಣು ಶಿಶುವಿನ ಜನ್ಮದಾತೆಯನ್ನು ಪತ್ತೆ ಹಚ್ಚುವಲ್ಲಿ ರಿಪ್ಪನ್ ಪೇಟೆ ಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.&lt;/p&gt;&lt;p&gt;ಸಾಗರ ನಗರದ 21 ವರ್ಷದ ಯುವತಿ ಮಗು ಬಿಟ್ಟುಹೋದ ಆರೋಪಿ ಎಂದು ಗುರುತಿಸಲಾಗಿದೆ. ನವಜಾತ ಶಿಶು ಪ್ರೇಮಿಗಳಿಗೆ ಬೇಡವಾಗಿದ್ದ ಕಾರಣ ಬಿಟ್ಟು ಹೋಗಿದ್ದ ಮಹಾತಾಯಿ!&lt;/p&gt;&lt;p&gt;ಬಡ ಕುಟುಂಬದ ಹಿನ್ನೆಲೆಯ ಯುವಕ-ಯುವತಿ ಇಬ್ಬರೂ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದು ಸಲುಗೆ ಬೆಳೆಸಿಕೊಂಡಿದ್ದರು. ಆದರೆ ಇವರ ಪ್ರಣಯವನ್ನು ಮನೆಯವರಿಗೆ ತಿಳಿಯದಂತೆ ಗೌಪ್ಯತೆ ಕಾಪಾಡಿದ್ದಾರೆ. ಹೀಗಿರುವಾಗ ಇವರಿಬ್ಬರ ಪ್ರೇಮದ ಪ್ರತಿಫಲವಾಗಿ ಯುವತಿ ಗರ್ಭವತಿ ಯಾಗಿದ್ದಾಳೆ. ಗರ್ಭ ತ್ಯಜಿಸಲು ಯುವತಿ ಕೆಲವು ಮನೆಮದ್ದುಗಳನ್ನು ಬಳಸಿದರೂ ಪ್ರಯೋಜನವಾಗಿರಲಿಲ್ಲ. ತಿಂಗಳು ತುಂಬಿ ಪ್ರಸವವೇದನೆ ಅನುಭವಿಸ ತೊಡಗಿದಾಗ ತಾಯಿ ಏನಾಗಿದೆ ಎಂದು ವಿಚಾರಿಸಿದರೆ ಯಾಕೋ ಮೈಕೈ ನೋವೆಂದು ಹೇಳಿ ಕಷಾಯ ಮಾಡಿಸಿಕೊಂಡು ಕುಡಿದು ಮರೆ ಮಾಚಿದ್ದಾಳೆ.&lt;/p&gt;&lt;p&gt;ಕೆಲ ದಿನಗಳ ಬಳಿಕ ಮಗಳು ಮನೆಯಲ್ಲೇ ಚಡಪಡಿಸುತ್ತಾ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ತಾಯಿ ದಿಗ್ಧಾಂತರಾಗಿದ್ದಾರೆ. ಬಸಿರಿಗೆ ಕಾರಣವಾದ ವೃತ್ತಾಂತವನ್ನು ಕೇಳಿದ ಪೋಷಕರು ಮಗಳ ದುಡುಕಿನ ನಡವಳಿಕೆಯಿಂದ ದಿಕ್ಕು ತೋಚದಂತಾಗಿದ್ದಾರೆ. ಮಗು ಕರುಣಿಸಲು ಕಾರಣವಾದ ಯುವಕನನ್ನು ಸಂಪರ್ಕಿಸಿ ಜನನದ ವಿಷಯ ತಿಳಿಸಿದ್ದಾರೆ. ಅವಿವಾಹಿತರಾಗಿ ಮಗು ಹೊಂದಿದ ಜನಾಪವಾದಕ್ಕೆ ಹೆದರಿದ ಯುವತಿ ಮಗುವನ್ನು ತ್ಯಜಿಸುವ ನಿರ್ಧಾರ ತಳೆದು ಸಹೋದರನ ದ್ವಿಚಕ್ರ ವಾಹನದಲ್ಲಿ ರಿಪ್ಪನ್&zwnj;ಪೇಟೆ ಮಾರ್ಗವಾಗಿ ಸಾಗಿಬಂದು ರಾತ್ರಿ 7.30ರ ಸಮಯದಲ್ಲಿ ಕೈಚೀಲವೊಂದರಲ್ಲಿ ಶಿಶು ಮತ್ತು ಹಾಲಿನ ಬಾಟಲಿ ಇಟ್ಟು, ಗವಟೂರಿನ ಪ್ರಯಾಣಿಕರ ತಂಗುದಾಣದಲ್ಲಿರಿಸಿ ತೆರಳಿದ್ದಾಳೆ.&lt;/p&gt;&lt;p&gt;ವಿಷಯ ತಿಳಿದು ಭಾನುವಾರ ರಾತ್ರಿ ಮಗುವನ್ನು ರಕ್ಷಿಸಿದ್ದ ಪೊಲೀಸರು ಶಿವಮೊಗ್ಗದ ಆರೈಕೆ ಕೇಂದ್ರಕ್ಕೆ ದಾಖಲಿಸಿದ್ದರು. ಪಿಎಸ್&zwnj;ಐ ರಾಜು ರೆಡ್ಡಿ ಹಲವು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದರು. ಯಾವ ಸುಳಿವೂ ದೊರೆಯದಿದ್ದಾಗ ಮೊಬೈಲ್ ಟವರ್ ಡಂಪ್ ನಂತಹ ತಾಂತ್ರಿಕ ವ್ಯವಸ್ಥೆಯ ನೆರವಿನಿಂದ ಶಿಶುವಿನ ತಾಯಿಯ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ನವಜಾತ ಹೆಣ್ಣು ಶಿಶು ತಾಯಿಯ ಮಡಿಲನ್ನು ಸೇರಿದೆ&lt;/p&gt;]]></content:encoded>
            <category>shivamogga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/newborn-baby-found-with-a-milk-bottle-in-a-bag-in-gavatur-bus-stand-hosanagara-rav/articleshow-4n5uqgc"/>
        </item>
        <item>
            <title><![CDATA[ಬರಗಾಲ ನಡುವೆಯೂ ತುಂಬಿದ ರಾಜ್ಯದ ಮೊದಲ ಆಣೆಕಟ್ಟು; ಶಿವಮೊಗ್ಗದ ತುಂಗಾ ಜಲಾಶಯದಿಂದ ನೀರು ಬಿಡುಗಡೆ!]]></title>
            <link>https://kannada.asianetnews.com/gallery/karnataka-districts/karnataka-rivers-shivamogga-gajanur-tunga-dam-reaches-maximum-level-water-released-4sll0mm</link>
            <guid isPermaLink="true">https://kannada.asianetnews.com/gallery/karnataka-districts/karnataka-rivers-shivamogga-gajanur-tunga-dam-reaches-maximum-level-water-released-4sll0mm</guid>
            <pubDate>Mon, 06 Jul 2026 17:32:56 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಆವರಿಸಿರುವ ಬರಗಾಲದ ಛಾಯೆಯ ನಡುವೆಯೂ ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯವು ಈ ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾಗಿದೆ. ಧಾರಾಕಾರ ಮಳೆಯಿಂದ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwvmdfvntkgpks4t0jzkmnzj,imgname-shivamogga-tunga-dam-full-2026--1783338811253.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದಲ್ಲಿ ಆವರಿಸಿರುವ ಬರಗಾಲದ ಛಾಯೆಯ ನಡುವೆಯೂ ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯವು ಈ ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾಗಿದೆ. ಧಾರಾಕಾರ ಮಳೆಯಿಂದ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.&lt;/p&gt;&lt;img&gt;&lt;p&gt;&lt;strong&gt;ಶಿವಮೊಗ್ಗ (ಜು.06): ಮ&lt;/strong&gt;ಲೆನಾಡಿನ ಜೀವನಾಡಿ ಎಂದೇ ಕರೆಯಲ್ಪಡುವ ಶಿವಮೊಗ್ಗ ಜಿಲ್ಲೆಯ ಗಾಜನೂರು ತುಂಗಾ ಜಲಾಶಯವು ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಮೂರು ದಿನಗಳಿಂದ ಜಲಾನಯನ ಪ್ರದೇಶಗಳಾದ ಶೃಂಗೇರಿ, ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದ್ದು, ಡ್ಯಾಂ ಸಂಪೂರ್ಣ ಭರ್ತಿಯಾಗಿದೆ.&lt;/p&gt;&lt;img&gt;&lt;p&gt;&lt;strong&gt;ಜಲಾಶಯದ ಸದ್ಯದ ಸ್ಥಿತಿ:&lt;/strong&gt;&lt;/p&gt;&lt;p&gt;ಗಾಜನೂರು ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಆಗಿದ್ದು, ಸದ್ಯದ ಮಟ್ಟ 588.21 ಮೀಟರ್ ತಲುಪಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 3.24 ಟಿಎಂಸಿ ಇದ್ದು, ಪ್ರಸ್ತುತ 3.20 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ಕೆಲವು ದಿನಗಳಿಂದ ಒಳಹರಿವು 20,565 ಕ್ಯೂಸೆಕ್&zwnj;ನಿಂದ 25,376 ಕ್ಯೂಸೆಕ್ ವರೆಗೆ ಏರಿಳಿತವಾಗುತ್ತಿದೆ.&lt;/p&gt;&lt;img&gt;&lt;p&gt;&lt;strong&gt;ನದಿಗೆ ನೀರು ಬಿಡುಗಡೆ:&lt;/strong&gt;&lt;/p&gt;&lt;p&gt;ಜುಲೈ 4 ರಿಂದಲೇ ಜಲಾಶಯದಿಂದ ನೀರನ್ನು ಹೊರಬಿಡಲು ಆರಂಭಿಸಲಾಗಿದೆ. ಆರಂಭದಲ್ಲಿ 12 ಕ್ರಸ್ಟ್ ಗೇಟ್&zwnj;ಗಳ ಮೂಲಕ ಸುಮಾರು 22,822 ಕ್ಯೂಸೆಕ್ ವರೆಗೆ ನೀರನ್ನು ಹರಿಸಲಾಗಿತ್ತು. ಸದ್ಯ 8 ಕ್ರೆಸ್ಟ್ ಗೇಟ್ ಮೂಲಕ 13,558 ಕ್ಯೂಸೆಕ್ ನೀರನ್ನು ತುಂಗಭದ್ರಾ ಜಲಾಶಯದ ಕಡೆಗೆ ಬಿಡಲಾಗುತ್ತಿದೆ. ಮಳೆ ಅಬ್ಬರ ಮುಂದುವರಿದಲ್ಲಿ ಹೊರಹರಿವಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;&lt;strong&gt;ಜನತೆಗೆ ಎಚ್ಚರಿಕೆ:&lt;/strong&gt;&lt;/p&gt;&lt;p&gt;ಜಲಾಶಯದಿಂದ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ತುಂಗಾ ನದಿ ಪಾತ್ರದ ಕೆಳಭಾಗದ ನಿವಾಸಿಗಳಿಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ನದಿ ದಡದಲ್ಲಿರುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಹಳ್ಳ-ಕೊಳ್ಳಗಳು ಮತ್ತು ನಾಲೆಯ ಆಸುಪಾಸಿಗೆ ಜಾನುವಾರುಗಳನ್ನು ಬಿಡಬಾರದು ಎಂದು ಆಡಳಿತ ಮಂಡಳಿ ಆದೇಶಿಸಿದೆ.&lt;/p&gt;&lt;img&gt;&lt;p&gt;&lt;strong&gt;ಯೆಲ್ಲೋ ಅಲರ್ಟ್ ಘೋಷಣೆ:&lt;/strong&gt;&lt;/p&gt;&lt;p&gt;ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಜನರು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಮತ್ತು ಪ್ರವಾಸಿಗರು ಜಲಪಾತಗಳ ಬಳಿ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/karnataka-rivers-shivamogga-gajanur-tunga-dam-reaches-maximum-level-water-released-4sll0mm"/>
        </item>
        <item>
            <title><![CDATA[Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!]]></title>
            <link>https://kannada.asianetnews.com/karnataka-districts/karnataka-crime-sangeetha-suitcase-murder-bill-collector-death-davanagere-videoshow-77e7duf</link>
            <guid isPermaLink="true">https://kannada.asianetnews.com/karnataka-districts/karnataka-crime-sangeetha-suitcase-murder-bill-collector-death-davanagere-videoshow-77e7duf</guid>
            <pubDate>Fri, 10 Jul 2026 23:19:44 +0530</pubDate>
            <description><![CDATA[ಮಗಳಂತೆ ನೋಡಿಕೊಳ್ಳುತ್ತೇನೆ ಎಂದು ನಂಬಿಸಿ 16 ವರ್ಷದ ಯುವತಿಯನ್ನು ಕರೆದೊಯ್ದ ವ್ಯಕ್ತಿಯೇ ಆಕೆಯನ್ನು ಕೊಲೆ ಮಾಡಿದ್ದಾನೆ. ಒಂದೂವರೆ ವರ್ಷದ ನಂತರ, ಸೂಟ್&zwnj;ಕೇಸ್&zwnj;ನಲ್ಲಿ ಶವವನ್ನು ಬಿಸಾಡಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಈ ಘೋರ ಕೃತ್ಯವು ಬಯಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.]]></description>
            <media:content url="https://geo.dailymotion.com/player/x1tbu.html?video=xanz9ou" medium="video" height="768" width="1024"/>
            <content:encoded><![CDATA[&lt;p&gt;&lt;strong&gt;'ಮಗಳಂತೆ ಸಲಹುವೆ' ಎಂದವರೇ ಮಾಡಿದ್ರು ಅಮಾನವೀಯ ಕೊಲೆ!&lt;/strong&gt;&lt;/p&gt;&lt;p&gt;ನಂಬಿಕೆಯೇ ಇಂದಿನ ಜಗತ್ತಿನಲ್ಲಿ ಅಪಾಯಕಾರಿ ಎಂಬ ಮಾತಿಗೆ ಈ ಘಟನೆ ಸಾಕ್ಷಿಯಾಗಿದೆ. ಕೇವಲ 16 ವರ್ಷದ ಹುಡುಗಿ ಸಂಗೀತಾಗೆ ಎಲ್ಲವಿದ್ದೂ ಯಾರೂ ಇಲ್ಲದಂತಹ ಸ್ಥಿತಿ. ತಾಯಿ ಕುಟುಂಬ ತೊರೆದಿದ್ದರೆ, ತಂದೆ ಅನಾರೋಗ್ಯ ಪೀಡಿತರು. ಇದ್ದ ಒಬ್ಬ ತಮ್ಮ ಸಂಬಂಧಿಕರ ಮನೆಯಲ್ಲಿದ್ದ. ಇಂತಹ ಸಂದರ್ಭದಲ್ಲಿ ಆಕೆಗೆ ಆಸರೆಯಾಗಿದ್ದು ಒಬ್ಬ ವ್ಯಕ್ತಿ. 'ನಿಮ್ಮ ಮಗಳನ್ನ ನಾನು ಮಗಳಂತೆಯೇ ಸಾಕುತ್ತೇನೆ' ಎಂದು ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆದರೆ, ಈ ಆಶ್ರಯದ ಹಿಂದೆ ಅಡಗಿತ್ತು ಒಂದು ಭೀಕರ ಕ್ರೌರ್ಯ.&lt;/p&gt;&lt;p&gt;ಸಂಗೀತಾಳನ್ನು ಕರೆದುಕೊಂಡು ಹೋದ ಎರಡು ವರ್ಷಗಳ ನಂತರ ತಂದೆ ಮಗಳನ್ನು ನೋಡಲು ಬಂದಾಗ, ಆಕೆ ಅಲ್ಲಿರಲಿಲ್ಲ. 'ಆಕೆ ಯಾರ ಜೊತೆಯೋ ಓಡಿಹೋಗಿದ್ದಾಳೆ' ಎಂದು ಆಶ್ರಯ ಕೊಟ್ಟವರು ಸುಳ್ಳು ಹೇಳಿದ್ದರು. ಮಗಳ ಮೇಲೆ ನಂಬಿಕೆ ಕಳೆದುಕೊಂಡ ಅಪ್ಪ ಅನಿವಾರ್ಯವಾಗಿ ಮೌನಕ್ಕೆ ಶರಣಾಗಿದ್ದರು. ಆದರೆ, ಸುಳ್ಳಿನ ಕಂತೆ ಅದೆಷ್ಟು ದಿನ ತಾನೆ ಅಡಗಿರುತ್ತದೆ? ಬರೋಬ್ಬರಿ ಒಂದೂವರೆ ವರ್ಷದ ನಂತರ ಅಸಲಿ ಸತ್ಯ ಹೊರಬಂದಿದೆ. ಆಶ್ರಯ ಕೊಟ್ಟವರೇ ಸಂಗೀತಾನನ್ನು ಕೊಲೆ ಮಾಡಿದ್ದರು!&lt;/p&gt;&lt;p&gt;ಪಿಜಿಯೊಂದರಲ್ಲಿ ಆಕೆಯನ್ನು ಕೊಂದ ಕಿರಾತಕರು, ಸಾಕ್ಷ್ಯ ನಾಶಪಡಿಸಲು ಶವವನ್ನು ಸೂಟ್&zwnj;ಕೇಸ್&zwnj;ನಲ್ಲಿ ತುಂಬಿ ಯಾರಿಗೂ ಸಿಗದಂತೆ ದೂರದ ಪ್ರದೇಶದಲ್ಲಿ ಬಿಸಾಡಿದ್ದರು. ಈ ರೋಚಕ ಹತ್ಯೆ ಪ್ರಕರಣ ಈಗ ಬಯಲಾಗಿದ್ದು, ಮಗಳಂತೆ ನೋಡಿಕೊಳ್ಳುತ್ತೇನೆ ಎಂದವರೇ ಹಂತಕರಾಗಿರುವುದು ಮನುಕುಲವೇ ತಲೆತಗ್ಗಿಸುವಂತೆ ಮಾಡಿದೆ. ಸದ್ಯ ಪೊಲೀಸರು ಈ ಕಿರಾತಕರನ್ನು ಜೈಲಿಗಟ್ಟಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Suvarna News</dc:creator>
            <atom:link href="https://kannada.asianetnews.com/karnataka-districts/karnataka-crime-sangeetha-suitcase-murder-bill-collector-death-davanagere-videoshow-77e7duf"/>
        </item>
        <item>
            <title><![CDATA[Shivamogga: ಮತದಾರರ ಪಟ್ಟಿ ಸಮೀಕ್ಷೆ ವೇಳೆ ಬಿಎಲ್‌ಒ ಮೇಲೆ ಮುಗಿಬಿದ್ದ ಸಾಕು ನಾಯಿ! ಅಧಿಕಾರಿಗೆ ಗಂಭೀರ ಗಾಯ]]></title>
            <link>https://kannada.asianetnews.com/shivamogga/shivamogga-anandapura-blo-officer-lakshmi-singh-attacked-by-pet-dog-during-survey/articleshow-7bi7rnb</link>
            <guid isPermaLink="true">https://kannada.asianetnews.com/shivamogga/shivamogga-anandapura-blo-officer-lakshmi-singh-attacked-by-pet-dog-during-survey/articleshow-7bi7rnb</guid>
            <pubDate>Fri, 10 Jul 2026 18:31:32 +0530</pubDate>
            <description><![CDATA[&lt;p&gt;ಆನಂದಪುರದಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿದ್ದ ಬಿ.ಎಲ್.ಓ ಲಕ್ಷ್ಮಿ ಸಿಂಗ್ ಅವರ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ಮಾಡಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆಯು ಸರ್ಕಾರಿ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx61sr40v99vnsq9yn0hetey,imgname-shivamogga-blo-lakshmi-sing-dog-attack-1783688388736.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜು.10): &lt;/strong&gt;ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ಮಾಡಿರುವ ಘಟನೆ ನಡೆದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ-ಮನೆ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದ ಬಿ.ಎಲ್.ಓ (BLO) ಲಕ್ಷ್ಮಿ ಸಿಂಗ್ ಅವರು ಶ್ವಾನ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಪ್ರಸ್ತುತ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಲಕ್ಷ್ಮಿ ಸಿಂಗ್ ಅವರು ಆನಂದಪುರ ಭಾಗದಲ್ಲಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರು ನಿಗದಿಪಡಿಸಿದ ಮನೆಯೊಂದರ ಬಳಿ ತೆರಳಿದಾಗ, ಆ ಮನೆಯಲ್ಲಿ ಸಾಕಿದ್ದ ನಾಯಿಯೊಂದು ದಿಢೀರನೆ ಅವರ ಮೇಲೆ ಮುಗಿಬಿದ್ದಿದೆ. ನಾಯಿಯ ರೌದ್ರಾವತಾರಕ್ಕೆ ಬೆಚ್ಚಿಬಿದ್ದ ಅಧಿಕಾರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.&lt;/p&gt;&lt;h2&gt;&lt;strong&gt;ತೀವ್ರ ರಕ್ತಸ್ರಾವ:&lt;/strong&gt;&lt;/h2&gt;&lt;p&gt;ಸಾಕು ನಾಯಿಯು ಲಕ್ಷ್ಮಿ ಸಿಂಗ್ ಅವರ ಕಾಲಿಗೆ ಬಲವಾಗಿ ಕಚ್ಚಿದ್ದು, ದಾಳಿಯ ತೀವ್ರತೆಗೆ ಅವರ ಕಾಲಿನ ಭಾಗದಲ್ಲಿ ಆಳವಾದ ಗಾಯಗಳಾಗಿವೆ. ಇದರಿಂದಾಗಿ ಸ್ಥಳದಲ್ಲೇ ತೀವ್ರ ರಕ್ತಸ್ರಾವ ಉಂಟಾಗಿದ್ದು, ಅಧಿಕಾರಿ ನೋವಿನಿಂದ ಕಿರುಚಾಡಿದ್ದಾರೆ. ಕೂಡಲೇ ಸ್ಥಳೀಯ ನಿವಾಸಿಗಳು ಹಾಗೂ ಅವರ ಜೊತೆಯಲ್ಲಿದ್ದ ಸಹೋದ್ಯೋಗಿಗಳು ಕಾರ್ಯಪ್ರವೃತ್ತರಾಗಿ ನಾಯಿಯನ್ನು ಓಡಿಸಿ, ಲಕ್ಷ್ಮಿ ಸಿಂಗ್ ಅವರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಲಕ್ಷ್ಮಿ ಸಿಂಗ್ ಅವರನ್ನು ತಕ್ಷಣವೇ ಆನಂದಪುರದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;&lt;strong&gt;ಹೆಚ್ಚುತ್ತಿರುವ ಆತಂಕ:&lt;/strong&gt;&lt;/h2&gt;&lt;p&gt;ಸಮೀಕ್ಷೆ ಅಥವಾ ಸರ್ಕಾರಿ ಕೆಲಸದ ನಿಮಿತ್ತ ಮನೆ-ಮನೆಗೆ ತೆರಳುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಇಂತಹ ಘಟನೆಗಳು ಆತಂಕ ತಂದೊಡ್ಡಿವೆ. ಮನೆಯ ಮಾಲೀಕರು ತಮ್ಮ ಸಾಕು ನಾಯಿಗಳನ್ನು ಸರಿಯಾಗಿ ನಿಯಂತ್ರಿಸದ ಕಾರಣ ಇಂತಹ ಅವಘಡಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಕಾರ್ಯದಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಮತ್ತು ಮಾಲೀಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/shivamogga/shivamogga-anandapura-blo-officer-lakshmi-singh-attacked-by-pet-dog-during-survey/articleshow-7bi7rnb"/>
        </item>
        <item>
            <title><![CDATA[ಮಲೆನಾಡಿನಲ್ಲಿ ಮಳೆ ಆರ್ಭಟ: ನಾಳೆ ಮಂಗಳವಾರ ಸಾಗರ ಮತ್ತು ಸಕಲೇಶಪುರ ತಾಲೂಕಿನ ಶಾಲೆಗಳಿಗೂ ರಜೆ ಘೋಷಣೆ!]]></title>
            <link>https://kannada.asianetnews.com/karnataka-districts/karnataka-monsoon-shivamogga-sagar-hassan-sakaleshpura-school-holiday-due-to-heavy-rain-news/articleshow-aygx97w</link>
            <guid isPermaLink="true">https://kannada.asianetnews.com/karnataka-districts/karnataka-monsoon-shivamogga-sagar-hassan-sakaleshpura-school-holiday-due-to-heavy-rain-news/articleshow-aygx97w</guid>
            <pubDate>Mon, 06 Jul 2026 22:08:03 +0530</pubDate>
            <description><![CDATA[ರಾಜ್ಯದ ಮಲೆನಾಡು ಭಾಗವಾದ ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಗರ ಮತ್ತು ಸಕಲೇಶಪುರ ತಾಲೂಕುಗಳ ಶಾಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01k31dk8cz4ayn748s4brxzard,imgname-dharwad-school-holiday-declare-1755615699359.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ/ಹಾಸನ (ಜು.07): ರಾ&lt;/strong&gt;ಜ್ಯದ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ (ಜುಲೈ 07) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಸಾಗರ ತಾಲೂಕಿನಲ್ಲಿ ರಜೆ:&lt;/strong&gt;&lt;/h2&gt;&lt;p&gt;ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಂದ ಪ್ರೌಢಶಾಲೆಯವರೆಗೆ ರಜೆ ಘೋಷಿಸಲಾಗಿದೆ. ಸಾಗರ ತಹಸಿಲ್ದಾರ್ ಪ್ರತಿಭಾ ಅವರ ಸೂಚನೆಯ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸದಾನಂದ ಸ್ವಾಮಿ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಪೋಷಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.&lt;/p&gt;&lt;p&gt;&lt;strong&gt;School holiday: ಕರ್ನಾಟಕ ಮಳೆ ಆರ್ಭಟ: ಉತ್ತರ ಕನ್ನಡ, ಬೆಳಗಾವಿ ಸೇರಿ ಈ ಜಿಲ್ಲೆಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ&lt;/strong&gt;&lt;/p&gt;&lt;h2&gt;&lt;strong&gt;ಸಕಲೇಶಪುರ ತಾಲೂಕಿನಲ್ಲೂ ರಜೆ:&lt;/strong&gt;&lt;/h2&gt;&lt;p&gt;ಇತ್ತ ಹಾಸನ ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ ತಾಲೂಕಿನಲ್ಲೂ ವರುಣನ ಅಬ್ಬರ ಜೋರಾಗಿದೆ. ಸಕಲೇಶಪುರ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಶಾಲಾ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ನೀಡಿ ತಹಸಿಲ್ದಾರ್ ಸುಪ್ರೀತಾ ಅವರು ಆದೇಶಿಸಿದ್ದಾರೆ. ಸಕಲೇಶಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಮಣ್ಣು ಕುಸಿಯುವ ಭೀತಿ ಇರುವುದರಿಂದ ಮತ್ತು ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.&lt;/p&gt;&lt;p&gt;ಇದನ್ನೂ ಓದಿ: &lt;strong&gt;Shivamogga Heavy Rain: ಶಿವಮೊಗ್ಗದಲ್ಲಿ ಮಳೆಯ ಆರ್ಭಟ: ಮಾಲತಿ ನದಿಯಲ್ಲಿ ಕೊಚ್ಚಿಹೋದ ವೃದ್ಧ, ಶವಕ್ಕಾಗಿ ಶೋಧ!&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-monsoon-shivamogga-sagar-hassan-sakaleshpura-school-holiday-due-to-heavy-rain-news/articleshow-aygx97w"/>
        </item>
        <item>
            <title><![CDATA[ರಾಜ್ಯಕ್ಕೆ ಶಿವಮೊಗ್ಗ ‘ಮಹಾರಾಜ’; ಬೆಂಗಳೂರು ಪರ ಸಮಿತ್ ದ್ರಾವಿಡ್ ಹೋರಾಟ ವ್ಯರ್ಥ]]></title>
            <link>https://kannada.asianetnews.com/cricket-sports/shivamogga-yodhas-crowned-ksca-maharaja-trophy-2026-champions-after-thrilling-final-win-kvn/articleshow-e1zmv74</link>
            <guid isPermaLink="true">https://kannada.asianetnews.com/cricket-sports/shivamogga-yodhas-crowned-ksca-maharaja-trophy-2026-champions-after-thrilling-final-win-kvn/articleshow-e1zmv74</guid>
            <pubDate>Mon, 13 Jul 2026 10:43:29 +0530</pubDate>
            <description><![CDATA[ಕೆಎಸ್&zwnj;ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಫೈನಲ್&zwnj;ನಲ್ಲಿ ಶಿವಮೊಗ್ಗ ಯೋಧಾಸ್&zwnj; ತಂಡವು ಬೆಂಗಳೂರು ಬ್ಲಾಸ್ಟರ್ಸ್&zwnj; ವಿರುದ್ಧ 4 ವಿಕೆಟ್&zwnj;ಗಳ ರೋಚಕ ಜಯ ಸಾಧಿಸಿ ಚಾಂಪಿಯನ್&zwnj; ಪಟ್ಟಕ್ಕೇರಿತು. ನಾಯಕ ಲವ್&zwnj;ನಿತ್&zwnj; ಸಿಸೋಡಿಯಾ ಅವರ ಸ್ಫೋಟಕ 87 ರನ್&zwnj;ಗಳ ನೆರವಿನಿಂದ ಶಿವಮೊಗ್ಗ ಗೆಲುವಿನ ನಗೆ ಬೀರಿದರೆ, ಬೆಂಗಳೂರು ಪರ ಸಮಿತ್ ದ್ರಾವಿಡ್ ಅವರ ಆಲ್&zwnj;ರೌಂಡ್ ಪ್ರದರ್ಶನ ವ್ಯರ್ಥವಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kxcxy8w6rf52jyj4rt4y22bc,imgname-shivamogga-yodhas-1783919223686.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಕೆಎಸ್&zwnj;ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಶಿವಮೊಗ್ಗ ಯೋಧಾಸ್&zwnj; ಚಾಂಪಿಯನ್&zwnj; ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ 5ನೇ ಆವೃತ್ತಿ ಟೂರ್ನಿಯ ಫೈನಲ್&zwnj;ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್&zwnj; ವಿರುದ್ಧ ಎರಡು ಎಸೆತಗಳು ಬಾಕಿ ಇರುವಂತೆಯೇ ಶಿವಮೊಗ್ಗ 4 ವಿಕೆಟ್ ರೋಚಕ ಗೆಲುವು ಸಾಧಿಸಿತು.&lt;/p&gt;&lt;p&gt;ಮೊದಲು ಬ್ಯಾಟ್&zwnj; ಮಾಡಿದ ಬೆಂಗಳೂರು 8 ವಿಕೆಟ್&zwnj;ಗೆ 185 ರನ್&zwnj; ಕಲೆಹಾಕಿತು. ಭುವನ್&zwnj; ರಾಜು 23, ರೋಹನ್&zwnj; ಪಾಟೀಲ್&zwnj; 11, ಸಮಿತ್&zwnj; ದ್ರಾವಿಡ್&zwnj; 37, ನಾಯಕ ಶುಭಾಂಗ್&zwnj; ಹೆಗ್ಡೆ 31 ರನ್&zwnj; ಗಳಿಸಿದರು. ತಂಡ 16 ಓವರ್&zwnj; ಅಂತ್ಯಕ್ಕೆ 5 ವಿಕೆಟ್&zwnj;ಗೆ 115 ರನ್&zwnj; ಗಳಿಸಿತ್ತು. ಆದರೆ ಕೊನೆಯಲ್ಲಿ ಅಬ್ಬರಿಸಿದ ವಾಹಿದ್&zwnj; ಫೈಝಾನ್&zwnj; ಖಾನ್&zwnj;(8 ಎಸೆತಗಳಲ್ಲಿ 29) ಹಾಗೂ ರೋಹನ್&zwnj; ನವೀನ್&zwnj;(8 ಎಸೆತಕ್ಕೆ ಔಟಾಗದೆ 25) ದೊಡ್ಡ ಮೊತ್ತ ಕಲೆಹಾಕಲು ನೆರವಾದರು.&lt;/p&gt;&lt;p&gt;ಶಿವಮೊಗ್ಗ ಯೋಧಾಸ್ ಪರ ಧನುಶ್ ಗೌಡ ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದರೆ, ಅಭಿಲಾಷ್ ಶೆಟ್ಟಿ, ಯಶೋವರ್ಧನ್ ಪರನ್&zwnj;ತಾಪ್, ನವೀನ್ ಎಂ.ಜಿ., ಶ್ರೀಶಾ ಆಚಾರ್ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.&lt;/p&gt;&lt;h2&gt;&lt;strong&gt;ಶಿವಮೊಗ್ಗಕ್ಕೆ ಆಸರೆಯಾದ ನಾಯಕ ಸಿಸೋಡಿಯಾ&lt;/strong&gt;&lt;/h2&gt;&lt;p&gt;ಗುರಿ ಬೆನ್ನತ್ತಿದ ಶಿವಮೊಗ್ಗ ಆರಂಭದಲ್ಲೇ ತುಷಾರ್ ಸಿಂಗ್ ವಿಕೆಟ್ ಕಳೆದುಕೊಂಡಿತು. ಸಮಿತ್ ದ್ರಾವಿಡ್ ಎಸೆತದಲ್ಲಿ ಖಾತೆ ತೆರೆಯುವ ಮುನ್ನವೇ ತುಷಾರ್ ಪೆವಿಲಿಯನ್ ಹಾದಿ ಹಿಡಿದರು. ಆದರೆ ಮತ್ತೋರ್ವ ಆರಂಭಿಕ ಬ್ಯಾಟರ್ ಹಾಗೂ ನಾಯಕ ಲವ್&zwnj;ನಿತ್&zwnj; ಸಿಸೋಡಿಯಾ ಆಸರೆಯಾದರು. ಅವರು 45 ಎಸೆತಗಳಲ್ಲಿ 87 ರನ್&zwnj; ಸಿಡಿಸಿ, ತಂಡವನ್ನು 19.4 ಓವರ್&zwnj;ಗಳಲ್ಲಿ ಗೆಲ್ಲುವಂತೆ ಮಾಡಿದರು. ಕೆ.ವಿ.ಅನೀಶ್&zwnj; 19 ಎಸೆತಕ್ಕೆ 38 ರನ್&zwnj; ಕೊಡುಗೆ ನೀಡಿದರು. ಇನ್ನುಳಿದಂತೆ ನವೀನ್ ಎಂ.ಜಿ. 28 ಹಾಗೂ ಹರ್ಷಿಲ್ ಧರ್ಮಾನಿ 17 ರನ್&zwnj;ಗಳ ಉಪಯುಕ್ತ ಕಾಣಿಕೆ ನೀಡಿದರು.&lt;/p&gt;&lt;p&gt;What a finish!  Shivamogga Yodhas held their nerve in a thrilling chase, sealing a 4-wicket victory with two balls to spare. #MaharajaTrophyKSCA2026 #ಆಡಕ್ಕೂರೆಡಿಆಳಕ್ಕೂರೆಡಿ #NammaRajaNammaCricket #GrandFinal #MatchResult pic.twitter.com/wqkpBWjmiO&lt;/p&gt;&lt;p&gt;&mdash; Maharaja Trophy T20 (@maharaja_t20) July 12, 2026&lt;/p&gt;&lt;p&gt;&amp;nbsp;&lt;/p&gt;&lt;h3&gt;&lt;strong&gt;ಸಮಿತ್ ದ್ರಾವಿಡ್ ಹೋರಾಟ ವ್ಯರ್ಥ!&lt;/strong&gt;&lt;/h3&gt;&lt;p&gt;ಇನ್ನು ಬೆಂಗಳೂರು ಬ್ಲಾಸ್ಟರ್ಸ್&zwnj; ಪರವಾಗಿ ಮಧ್ಯಮ ವೇಗದ ಬೌಲರ್ ಸಮಿತ್ ದ್ರಾವಿಡ್ ಮಿಂಚಿನ ದಾಳಿ ನಡೆಸುವ ಮೂಲಕ ಫೈನಲ್&zwnj;ನಲ್ಲಿ ಗಮನ ಸೆಳೆದರು. ಸಮಿತ್ ದ್ರಾವಿಡ್ 3.4 ಓವರ್&zwnj;ನಲ್ಲಿ 36 ರನ್ ನೀಡಿ ಶಿವಮೊಗ್ಗ ತಂಡದ ಪ್ರಮುಖ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಆದರೆ ಉಳಿದ ಬೌಲರ್&zwnj;ಗಳಿಂದ ಸಮಿತ್&zwnj;ಗೆ ಉತ್ತಮ ಸಾಥ್ ಸಿಗಲಿಲ್ಲ. ಹೀಗಾಗಿ ಸಮಿತ್ ಹೋರಾಟ ವ್ಯರ್ಥವಾಯಿತು.&lt;/p&gt;&lt;p&gt;&lt;/p&gt;]]></content:encoded>
            <category>shivamogga</category>
            <dc:creator>Naveen Kodase</dc:creator>
            <atom:link href="https://kannada.asianetnews.com/cricket-sports/shivamogga-yodhas-crowned-ksca-maharaja-trophy-2026-champions-after-thrilling-final-win-kvn/articleshow-e1zmv74"/>
        </item>
        <item>
            <title><![CDATA[ಆಗುಂಬೆ: ಮರಗಳಲ್ಲಿ ಮಾತ್ರ ವಾಸಿರುವ ಭಾರತದ ಏಕೈಕ ಮರವಾಸಿ ಏಡಿ ಪ್ರಭೇದ ಪತ್ತೆ!]]></title>
            <link>https://kannada.asianetnews.com/karnataka-districts/new-tree-living-crab-species-found-in-agumbe-karnataka-rav/articleshow-egwokdx</link>
            <guid isPermaLink="true">https://kannada.asianetnews.com/karnataka-districts/new-tree-living-crab-species-found-in-agumbe-karnataka-rav/articleshow-egwokdx</guid>
            <pubDate>Wed, 08 Jul 2026 06:11:59 +0530</pubDate>
            <description><![CDATA[&lt;p&gt;ಕರ್ನಾಟಕದ ಪಶ್ಚಿಮ ಘಟ್ಟದ ಜೀವವೈವಿಧ್ಯಕ್ಕೆ ಮತ್ತೊಂದು ಮಹತ್ವದ ಪ್ರಾಣಿ ಸೇರ್ಪಡೆಯಾದೆ. ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ &lsquo;ಕನಿ ಮರನಂಡು&rsquo; ಎಂಬ ಅಪರೂಪದ ಪ್ರಾಣಿ ಮೊದಲ ಬಾರಿಗೆ ಆಗುಂಬೆಯಲ್ಲಿ ಪತ್ತೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwzjr2c3a221a1wstdchzwvx,imgname-----------------------2026-07-08t061049.946-1783471278467.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರ್ಕಳ (ಜು.8): &lt;/strong&gt;ಕರ್ನಾಟಕದ ಪಶ್ಚಿಮ ಘಟ್ಟದ ಜೀವವೈವಿಧ್ಯಕ್ಕೆ ಮತ್ತೊಂದು ಮಹತ್ವದ ಪ್ರಾಣಿ ಸೇರ್ಪಡೆಯಾದೆ. ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ &lsquo;ಕನಿ ಮರನಂಡು&rsquo; ಎಂಬ ಅಪರೂಪದ ಪ್ರಾಣಿ ಮೊದಲ ಬಾರಿಗೆ ಆಗುಂಬೆಯಲ್ಲಿ ಪತ್ತೆಯಾಗಿದೆ.&lt;/p&gt;&lt;p&gt;ಕೇರಳದ ಆಗಸ್ತ್ಯಮಲೆ ಜೈವಿಕ ವಲಯದಲ್ಲಷ್ಟೇ ದಾಖಲಾಗಿದ್ದ ಈ ಪ್ರಭೇದವು ಇದೀಗ ಕರ್ನಾಟಕದಲ್ಲಿ ಕಂಡುಬಂದಿದ್ದು, ಜೋಯೆಲ್ ಕೊರೆಯ, ಪವನ್ ಚಿಕ್ಕನಾರಾಯಣಸ್ವಾಮಿ ಹಾಗೂ ವಿಜಯ್ ಕುಮಾರ್ ನಡೆಸಿದ ಸಂಶೋಧನಾ ಅಧ್ಯಯನದಲ್ಲಿ ದೃಢಪಟ್ಟಿದೆ.&lt;/p&gt;&lt;p&gt;&lsquo;ಗೆಕಾರ್ಸಿನುಸಿಡೆ&rsquo; ಕುಟುಂಬದ ಅಪರೂಪದ ಸಿಹಿನೀರಿನ ಮರವಾಸಿ ಏಡಿ&rsquo; ಭಾರತದಲ್ಲಿ ಸಂಪೂರ್ಣವಾಗಿ ಮರಗಳಲ್ಲೇ ವಾಸಿಸುವ ಏಕೈಕ ಏಡಿ ಎಂಬ ವಿಶೇಷತೆ ಹೊಂದಿದೆ. ಈ ಏಡಿಯ ಉದ್ದವಾದ ಕಾಲುಗಳು, ಅಂಡಾಕಾರದ ಕವಚ, ಹಳದಿ-ಕಿತ್ತಳೆ ಬಣ್ಣದ ಕೊಕ್ಕುಗಳು ಹಾಗೂ ನೀಲಿಕಪ್ಪು ದೇಹವು ಪ್ರಮುಖ ಗುರುತಿಸುವ ಲಕ್ಷಣಗಳಾಗಿವೆ. ಇದುವರೆಗೆ ಈ ಪ್ರಭೇದ ಸಂಪೂರ್ಣವಾಗಿ ಮರವಾಸಿಯೆಂದು ಪರಿಗಣಿಸಲಾಗಿತ್ತು. ಆದರೆ ಆಗುಂಬೆಯಲ್ಲಿ ನೆಲದ ಮೇಲೂ ಸಂಚರಿಸುತ್ತಿದ್ದು, ಹೊಸ ಕುತೂಹಲಕಾರಿ ಪ್ರಶ್ನೆಗಳನ್ನು ಎತ್ತಿದೆ. ಸಂಗಾತಿಯನ್ನು ಹುಡುಕುವುದು ಅಥವಾ ಹೊಸ ವಾಸಸ್ಥಳವನ್ನು ಅನ್ವೇಷಿಸುವ ಉದ್ದೇಶದಿಂದ ಇದು ನೆಲಕ್ಕಿಳಿಯುವ ಸಾಧ್ಯತೆ ಇದೆ. ವಿಶೇಷವಾಗಿ ಮಳೆಗಾಲದಲ್ಲಿ ಈ ಚಟುವಟಿಕೆ ಹೆಚ್ಚಾಗುತ್ತದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;p&gt;ಸಂಶೋಧಕರ ಪ್ರಕಾರ, ಈ ಅಪರೂಪದ ಏಡಿಯು ನಿತ್ಯಹರಿದ್ವರ್ಣ ಹಾಗೂ ಅರೆ ನಿತ್ಯಹರಿದ್ವರ್ಣ ಕಾಡಿನ ಮರಗಳ ಕಾಂಡದಲ್ಲಿರುವ ನೀರು ತುಂಬಿದ ಕುಳಿಗಳಲ್ಲಿ ವಾಸಿಸುತ್ತದೆ. ಎಲೆಗಳು, ಬೀಜಗಳು, ಕೀಟಗಳು ಹಾಗೂ ಸ್ಲಗ್&zwnj;ಗಳು ಇದರ ಪ್ರಮುಖ ಆಹಾರವಾಗಿವೆ. ಆಗುಂಬೆಯಲ್ಲಿ ಇದು ಮೈರಿಸ್ಟಿಕಾ ಜೌಗು ಪ್ರದೇಶ ಸಮೀಪ ಕಂಡುಬಂದಿರುವುದು, ನೀರಿನ ಮೂಲಗಳ ಸಮೀಪದ ಪರಿಸರವನ್ನು ಇದು ಹೆಚ್ಚಾಗಿ ಇಷ್ಟಪಡುತ್ತದೆ.&lt;/p&gt;&lt;p&gt;ಈ ಹೊಸ ದಾಖಲೆಯು ಪಶ್ಚಿಮ ಘಟ್ಟದ ಜೀವವೈವಿಧ್ಯದ ಅಧ್ಯಯನಕ್ಕೆ ಮಹತ್ವದ ಕೊಡುಗೆಯಾಗಿದೆ. ಮರಗಳಲ್ಲಿ ಗುಪ್ತವಾಗಿ ವಾಸಿಸುವ ಸ್ವಭಾವದಿಂದಾಗಿ ಈ ಅಪರೂಪದ ಏಡಿ ಇದುವರೆಗೆ ಗಮನಕ್ಕೆ ಬಂದಿರದ ಸಾಧ್ಯತೆ ಇದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದು, ಪಶ್ಚಿಮ ಘಟ್ಟದಾದ್ಯಂತ ಸಮಗ್ರ ಸಮೀಕ್ಷೆ ನಡೆಸಿ ಇದರ ವಿತರಣಾ ಪ್ರದೇಶ, ಪರಿಸರಶಾಸ್ತ್ರ, ವರ್ತನೆ ಹಾಗೂ ಸಂರಕ್ಷಣಾ ಸ್ಥಿತಿಯ ಕುರಿತು ಹೆಚ್ಚಿನ ವೈಜ್ಞಾನಿಕ ಅಧ್ಯಯನ ನಡೆಸುವ ಅಗತ್ಯವಿದೆ ಎಂದು ಶಿಫಾರಸು ಮಾಡಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/new-tree-living-crab-species-found-in-agumbe-karnataka-rav/articleshow-egwokdx"/>
        </item>
        <item>
            <title><![CDATA[ಪ್ರೀತಿ ನೆಪದಲ್ಲಿ ಹೊರ ರಾಜ್ಯದ ಯುವತಿಗೆ ಗರ್ಭಿಣಿ ಮಾಡಿ ಟೈಲರ್ ಪರಾರಿ!]]></title>
            <link>https://kannada.asianetnews.com/karnataka-districts/shivamogga-tailor-cheating-young-woman-from-another-state-under-the-pretext-of-love-rav/articleshow-hvyggog</link>
            <guid isPermaLink="true">https://kannada.asianetnews.com/karnataka-districts/shivamogga-tailor-cheating-young-woman-from-another-state-under-the-pretext-of-love-rav/articleshow-hvyggog</guid>
            <pubDate>Fri, 10 Jul 2026 15:22:56 +0530</pubDate>
            <description><![CDATA[&lt;p&gt;ಪ್ರೀತಿ ಪ್ರೇಮದ ನೆಪದಲ್ಲಿ ಹೊರ ರಾಜ್ಯದ ಯುವತಿಯನ್ನು ನಂಬಿಸಿ ಅತ್ಯಾ೧ಚಾರ ನಡೆಸಿದಲ್ಲದೆ ನಂತರ ಅಬಾರ್ಷನ್ ಕೂಡ ಮಾಡಿಸಿ ವಂಚಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಿರುಕುಳಕ್ಕೆ ಒಳಗಾದ ಸಂತ್ರಸ್ತ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx5pzvqg9y3hswmsv75eqc5q,imgname-image--7--1783677054704.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ(ಜು.10):&lt;/strong&gt; ಪ್ರೀತಿ ಪ್ರೇಮದ ನೆಪದಲ್ಲಿ ಹೊರ ರಾಜ್ಯದ ಯುವತಿಯನ್ನು ನಂಬಿಸಿ ಅತ್ಯಾ೧ಚಾರ ನಡೆಸಿದಲ್ಲದೆ ನಂತರ ಅಬಾರ್ಷನ್ ಕೂಡ ಮಾಡಿಸಿ ವಂಚಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಿರುಕುಳಕ್ಕೆ ಒಳಗಾದ ಸಂತ್ರಸ್ತ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ&lt;/p&gt;&lt;h2&gt;ಯುವತಿಯ ಅಸಹಾಯಕತೆ ಬಂಡವಾಳ ಮಾಡಿಕೊಂಡ ಪಾಪಿ!&lt;/h2&gt;&lt;p&gt;ಕೆಲವೊಮ್ಮೆ ಬಡತನ, ಉದ್ಯೋಗ, ವಿದ್ಯಾಭ್ಯಾಸದ ಕಾರಣಕ್ಕಾಗಿ ಹೊರರಾಜ್ಯಗಳಿಂದ ಬಂದು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಪ್ರಯತ್ನ ಪಡುವ ಯುವತಿಯರು ಇಂಥ ವಂಚನೆ ಜಾಲಕ್ಕೆ ಸಿಲುಕಿಕೊಂಡು ಬದುಕು ನರಕ ಮಾಡಿಕೊಳ್ಳುತ್ತಾರೆ. ಇಲ್ಲಿಯೂ ಇದೇ ಆಗಿದೆ. ಮೊದಲಿಗೆ ಆ ಯುವತಿಯನ್ನ ಪರಿಚಯಿಸಿಕೊಂಡು ಬಳಿಕ ಪ್ರೀತಿಯ ಹೆಸರಿನಲ್ಲಿ ಟಾರ್ಗೆಟ್ ಮಾಡಿ ವಂಚಿಸುವ ದೊಡ್ಡ ಜಾಲವೇ ರಾಜ್ಯದಲ್ಲಿ ಸಕ್ರಿಯವಾಗಿದೆ. ಅಂತೆಯೇ ಶಿವಮೊಗ್ಗದ ಯುವಕನೊಬ್ಬ ಇದೇ ರೀತಿ ಕೃತ್ಯವೆಸಗಿದ್ದಾನೆ.&lt;/p&gt;&lt;h3&gt;ಮದುವೆಯಾಗುವುದಾಗಿ ನಂಬಿಸಿ ಮೋಸ&lt;/h3&gt;&lt;p&gt;ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಕರೆಸಿಕೊಂಡಿದ್ದಾನೆ. ಇವನ ಮಾತನ್ನು ನಂಬಿ ಬಂದ ಹೊರರಾಜ್ಯದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿ ಮಾಡಿರುವ ಆರೋಪಿ ಬಳಿಕ ಕೈಕೊಟ್ಟು ಪರಾರಿಯಾಗಿದ್ದಾನೆ., ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.&lt;/p&gt;&lt;p&gt;ಹೌದು ಇಷ್ಟಕ್ಕೂ ನಡೆದಿದ್ದೇನೆಂದರೆ ಶಿವಮೊಗ್ಗ ನಗರದ ದುರ್ಗಿ ಗುಡಿಯಲ್ಲಿ ಅನುರಾಧ ಕ್ರಿಯೇಶನ್ಸ್ ಹೆಸರಿನ ಟೈಲರಿಂಗ್ ಅಂಗಡಿ ನಡೆಸುತ್ತಿದ್ದ ಶಿವಮೊಗ್ಗದ ಸೀಗೆಹಟ್ಟಿಯ ಯುವಕ ಶ್ರೀನಿಧಿ ಎಂಬಾತ ಹೊರ ರಾಜ್ಯದ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿರುವ ಆರೋಪ ಕೇಳಿಬಂದಿದೆ. ಹೋಟೆಲ್ ಕೆಲಸಕ್ಕೆ ಬಂದಿದ್ದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. ಪ್ರೀತಿಯ ಹೆಸರಿನಲ್ಲಿ ಅಂಗಡಿಗೆ ಕರೆಸಿಕೊಂಡಿದ್ದ. ಸಮಯ ನೋಡಿ ಯುವತಿ ಮೇಲೆ ಅತ್ಯಾ೧ಚಾರ ಎಸಗಿದ್ದಾನೆ. ಇತ್ತೀಚೆಗೆ ಯುವತಿ ಗರ್ಭಿಣಿಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಮದುವೆಯಾಗಲು ನಿರಾಕರಿಸಿ ಕೈಕೊಟ್ಟಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಯುವತಿ ನೀಡಿದ ದೂರಿನನ್ವಯ ಮಹಿಳಾ ಠಾಣೆ ಪೊಲೀಸರು ಆರೋಪಿ ವಿರುದ್ಧ ಅತ್ಯಾ೧ಚಾರ ಮತ್ತು ವಂಚನೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.&lt;/p&gt;&lt;h3&gt;ಟೈಲರ್ ಅಂಗಡಿ ಇಟ್ಕೊಂಡು ಯುವತಿಯರಿಗೆ ಹೊಂಚು ಹಾಕ್ತಿದ್ದ ಕಾಮುಕ&lt;/h3&gt;&lt;p&gt;ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ರವರು ದುರ್ಗಿಗುಡಿ ಯಲ್ಲಿರುವ ಆರೋಪಿ ಕೆಲಸ ಮಾಡುತ್ತಿದ್ದ ಅಂಗಡಿಗೆ ಅತ್ಯಾ೧ಚಾರ ಕ್ಕೊಳಗಾದ ಯುವತಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ. ಅದೇ ಅಂಗಡಿಯಲ್ಲೇ ಯುವತಿ ಮೇಲೆ ಅತ್ಯಾ೧ಚಾರ ಕೃತ್ಯ ನಡೆದಿದೆ ಎಂದು ಆರೋಪಿಸಿದ್ದಾಳೆ. ವಿದ್ಯಾಭ್ಯಾಸ ಅಥವಾ ಉದ್ಯೋಗದ ಕಾರಣದಿಂದ ಹೊರ ರಾಜ್ಯಗಳಿಂದ ಬರುವ ಯುವತಿಯರಿಗೆ ಪಿಜಿ ಅಥವಾ ರೂಮ್ ಮಾಡಿಕೊಂಡ ಸಂದರ್ಭದಲ್ಲಿ ರಕ್ಷಣೆ ಎಂಬುದೇ ಇರುವುದಿಲ್ಲ. ಕುಟುಂಬ ತೊರೆದು ಬರುವ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಳ್ಳುವ ಇಂಥ ಕಾಮುಕರು ಪ್ರೀತಿಯ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ ನಡುನೀರಲ್ಲಿ ಕೈಬಿಟ್ಟು ಪರಾರಿಯಾಗುತ್ತಾರೆ.&lt;/p&gt;&lt;p&gt;ಇದೀಗ ಪ್ರೀತಿಯ ಹೆಸರಿನಲ್ಲಿ ಕಾಮದಾಟ ನಡೆಸಿ ಪರಾರಿಯಾಗಿರುವ ಯುವಕ ಶ್ರೀನಿಧಿ ವಿರುದ್ಧ ಹಲವಾರು ಯುವತಿಯರಿಗೆ ಇದೇ ರೀತಿ ವಂಚಿಸಿರುವ ಆರೋಪಗಳು ಕೇಳಿ ಬರುತ್ತಿವೆ. ಇದೀಗ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿ ಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿ ಅತಂತ್ರ ಪರಿಸ್ಥಿತಿಯಲ್ಲಿ ನಿಂತಿದ್ದಾಳೆ&lt;/p&gt;&lt;p&gt;ಶಿವಮೊಗ್ಗದಿಂದ ರಾಜೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್&lt;/p&gt;]]></content:encoded>
            <category>shivamogga</category>
            <dc:creator>Suvarna News</dc:creator>
            <atom:link href="https://kannada.asianetnews.com/karnataka-districts/shivamogga-tailor-cheating-young-woman-from-another-state-under-the-pretext-of-love-rav/articleshow-hvyggog"/>
        </item>
        <item>
            <title><![CDATA[ತಮ್ಮ ಅಜ್ಜಿಯನ್ನೇ ಕೊಚ್ಚಿ ಕೊಂದ ಮೊಮ್ಮಗನ ಕಾಲಿಗೆ ಶಿವಮೊಗ್ಗ ಪೊಲೀಸರ ಗುಂಡೇಟು! ಎಸ್ಕೇಪ್ ಆಗಲು ಯತ್ನಿಸಿದ್ದ ಕೊಲೆ ಆರೋಪಿ]]></title>
            <link>https://kannada.asianetnews.com/karnataka-districts/shivamogga-murder-case-grandson-shot-in-leg-during-police-arrest-after-attacking-constable-kvn/articleshow-i3n5g8n</link>
            <guid isPermaLink="true">https://kannada.asianetnews.com/karnataka-districts/shivamogga-murder-case-grandson-shot-in-leg-during-police-arrest-after-attacking-constable-kvn/articleshow-i3n5g8n</guid>
            <pubDate>Fri, 03 Jul 2026 10:13:58 +0530</pubDate>
            <description><![CDATA[ಶಿವಮೊಗ್ಗದಲ್ಲಿ ತನ್ನ ಅಜ್ಜಿಯನ್ನು ಹತ್ಯೆಗೈದಿದ್ದ ಮೊಮ್ಮಗ ಕಿಶೋರ್, ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಆತನನ್ನು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwk409jsqhh7fezb6sqjys4w,imgname-shivamogga-police-shotout-1783053166167.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ಬುಧವಾರ ಸಂಜೆ ನಗರದ ಮಿಳಘಟ್ಟದ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಸಂಬಂಧ ಗುರುವಾರ ಬೆಳಗ್ಗೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.&lt;/p&gt;&lt;p&gt;ಸುಶೀಲಮ್ಮ (65) ಹತ್ಯೆಯಾದ ದುರ್ದೈವಿ. ಆರೋಪಿ ಮೊಮ್ಮಗ ಕಿಶೋರ್ (26) ಅಜ್ಜಿಯನ್ನೇ ಕೊಲೆಗೈದು ತಲೆಮರೆಸಿಕೊಂಡಿದ್ದ. ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೊಡ್ಡಪೇಟೆ ಠಾಣೆಯ ಪೊಲೀಸ್ ಠಾಣೆ ಇನ್&zwnj;ಸ್ಪೆಕ್ಟರ್ ಮತ್ತು ಸಿಬ್ಬಂದಿ, ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.&lt;/p&gt;&lt;h2&gt;&lt;strong&gt;ಖಚಿತ ಮಾಹಿತಿಯ ಮೇರೆಗೆ ಪೊಲೀಸರ ಕಾರ್ಯಚರಣೆ&lt;/strong&gt;&lt;/h2&gt;&lt;p&gt;ಆರೋಪಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಪೇಯಿ ಬಡಾವಣೆಯಲ್ಲಿ ಇರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಆತನನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಕಿಶೋರ ಹಲ್ಲೆ ಮಾಡಿದ್ದಾನೆ. ಕಿಶೋರ್ ತನ್ನ ಬಳಿಯಿದ್ದ ಲಾಂಗ್&zwnj;ನಿಂದ ಪೊಲೀಸ್ ಸಿಬ್ಬಂದಿ ಗಣೇಶ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇನ್&zwnj;ಸ್ಪೆಕ್ಟರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.&lt;/p&gt;&lt;p&gt;ಗಾಯಗೊಂಡ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ನಡೆಯುತ್ತಿದೆ. ಜಿಲ್ಲಾ ಎಸ್&zwnj;ಪಿ ಬಿ.ನಿಖಿಲ್ ಆಸ್ಪತ್ರೆಗೆ ಭೇಟಿಕೊಟ್ಟು ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.&lt;/p&gt;&lt;p&gt;ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಎಸ್ಪಿ. ಬಿ.ನಿಖಿಲ್&zwnj; ಅವರು, ತುಂಗಾನಗರ ವ್ಯಾಪ್ತಿಯಲ್ಲಿ ಪೊಲೀಸ್ ಫೈರಿಂಗ್ ನಡೆದಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮರ್ಡರ್ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಕಿಶೋರ್ ಎಂಬುವನನ್ನು ಅರೆಸ್ಟ್ ಮಾಡಲು ಹೋದಾಗ ಈ ಘಟನೆ ನಡೆದಿದೆ. ಕಾರ್ಯಾಚರಣೆ ವೇಳೆ ಆತ ಒಂದು ಲಾಂಗ್ ತೆಗೆದುಕೊಂಡು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಸಿಬ್ಬಂದಿ ಗಣೇಶ್ ಎಂಬುವವರ ಮೇಲೆ ಈ ಹಲ್ಲೆ ನಡೆದಿದೆ. ಆರೋಪಿಗೆ ಎಷ್ಟೇ ಎಚ್ಚರಿಕೆ ನೀಡಿದರೂ ಆತ ಶರಣಾಗಿರಲಿಲ್ಲ ಎಂದು ತಿಳಿಸಿದರು.&lt;/p&gt;&lt;p&gt;ಅಲ್ಲದೇ ಹಲ್ಲೆಯನ್ನು ತಡೆಯುವ ನಿಟ್ಟಿನಲ್ಲಿ ಇನ್ಸ್&zwnj;ಪೆಕ್ಟರ್ ಸತ್ಯನಾರಾಯಣ ಅವರು ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಆನಂತರ ಆರೋಪಿ ಕಿಶೋರ್ ಎಡಗಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಇಬ್ಬರನ್ನೂ ತಕ್ಷಣವೇ ಶಿಫ್ಟ್ ಮಾಡಲಾಗಿದ್ದು, ಪ್ರಸ್ತುತ ಹಲ್ಲೆಗೊಳಗಾದ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/shivamogga-murder-case-grandson-shot-in-leg-during-police-arrest-after-attacking-constable-kvn/articleshow-i3n5g8n"/>
        </item>
        <item>
            <title><![CDATA[ಶಿವಮೊಗ್ಗ ನಗರದಲ್ಲಿ ಇನ್ನೂ 6 ದಿನ ಕುಡಿವ ನೀರು ವ್ಯತ್ಯಯ;  ಟ್ಯಾಂಕರ್‌ ಮೂಲಕ ನೀರು]]></title>
            <link>https://kannada.asianetnews.com/karnataka-districts/drinking-water-shortage-in-shivamogga-city-for-another-6-days-mrq/articleshow-iw3ltvm</link>
            <guid isPermaLink="true">https://kannada.asianetnews.com/karnataka-districts/drinking-water-shortage-in-shivamogga-city-for-another-6-days-mrq/articleshow-iw3ltvm</guid>
            <pubDate>Sat, 11 Jul 2026 06:45:19 +0530</pubDate>
            <description><![CDATA[ಶಿವಮೊಗ್ಗ ನಗರದಲ್ಲಿ ಶುದ್ಧೀಕರಣ ಘಟಕದ ಹಳೆಯ ಯಂತ್ರ ಸಂಪೂರ್ಣ ಹಾಳಾಗಿರುವುದರಿಂದ, ಇನ್ನೂ ಆರು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ದುರಸ್ತಿ ಕಾರ್ಯ ಪರಿಶೀಲಿಸಿದ್ದು, ಪರ್ಯಾಯವಾಗಿ 12ಕ್ಕೂ ಹೆಚ್ಚು ಟ್ಯಾಂಕರ್&zwnj;ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx7bmw3gmz0g1gq20ws2thj0,imgname-shivamogga-1783732269168.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ: &lt;/strong&gt;ನಗರದಲ್ಲಿ ಇನ್ನೂ ಆರು ದಿನ ಶೇ. 30 ಭಾಗದ ಜನರಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ ಮಾಡಿದರು.&lt;/p&gt;&lt;p&gt;ಶುಕ್ರವಾರ ನಗರದ ಮಂಡ್ಲಿಯಲ್ಲಿರುವ ಕೃಷ್ಣರಾಜೇಂದ್ರ ನೀರು ಶುದ್ಧೀಕರಣ ಮತ್ತು ಸರಬರಾಜು ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕ್ಲಾರಿಫ್ಲೆಕ್ಟರ್ ಯಂತ್ರದ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗಾಲದಲ್ಲಿ ನಮಗೆ ಯಥೇಚ್ಛವಾಗಿ ನೀರು ಸಿಗುತ್ತಿದೆಯಾದರೂ ಇಲ್ಲಿನ ಶುದ್ಧೀಕರಣ ಘಟಕದಲ್ಲಿ ಅತ್ಯಂತ ಹಳೆಯ ಮಿಷನರಿ ವ್ಯವಸ್ಥೆ ಇರುವ ಕಾರಣ ಶುದ್ಧ ನೀರು ಸರಬರಾಜು ಮಾಡುವ ಕ್ಲಾರಿಫ್ಲೆಕ್ಟರ್ ಯಂತ್ರವು ಸಂಪೂರ್ಣ ಹಾಳಾಗಿದೆ. ನೀರು ಎಲ್ಲವೂ ಕಾಂಕ್ರಿಟ್ ಒಡೆದಿರುವುದರಿಂದ ಭೂಮಿಯ ಅಡಿಗೆ ಸೇರುತ್ತಿತ್ತು. ಪೈಪ್&zwnj;ಗಳು ತುಕ್ಕು ಹಿಡಿದಿದ್ದವು. ಅದನ್ನು ಸರಿಪಡಿಸಲು ಹೋದಾಗ ದುರಸ್ತಿ ಮಾಡಲೇಬೇಕಾದ ಅನಿವಾರ್ಯತೆ ಇದ್ದ ಕಾರಣ ಮುಂದೆ ಯಾವುದೇ ಸಮಸ್ಯೆ ಆಗಬಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ತುರ್ತಾಗಿ ಜಲಮಂಡಳಿ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;12 ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು&lt;/strong&gt;&lt;/h2&gt;&lt;p&gt;45 ಕಾರ್ಮಿಕರು ಕಳೆದ ಕೆಲವು ದಿನಗಳಿಂದ ಹಗಲಿರುಳು ಮಳೆಯನ್ನೂ ಲೆಕ್ಕಸಿದೇ ಶ್ರಮಿಸುತ್ತಿದ್ದಾರೆ. ಈ ಕಾಮಗಾರಿ ಪೂರ್ಣವಾಗಲು ಇನ್ನೂ 6 ದಿನ ಬೇಕಾಗುತ್ತದೆ. ಹಾಗಾಗಿ ನೀರು ವ್ಯತ್ಯಯವಾಗುವ ಭಾಗಗಳಿಗೆ ಈಗಾಗಲೇ ಪಾಲಿಕೆಯ ವತಿಯಿಂದ 12 ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇಂದಿನಿಂದ ಇನ್ನೂ ಹೆಚ್ಚುವರಿ ಟ್ಯಾಂಕರ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ಸಾರ್ವಜನಿಕರು ಈ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಸಬೇಕು ಎಂದು ವಿನಂತಿಸಿದರು.&lt;/p&gt;&lt;p&gt;24X7 ನೀರು ವಿತರಣೆ ಕಾಮಗಾರಿ ಕೂಡ ನಡೆಯುತ್ತಿದ್ದು, ಅದಕ್ಕೆ ಬೇಕಾದ ಪೂರಕ ಕೆಲಸ ನಡೆಯುತ್ತಿದೆ. ನಗರಾಭಿವೃದ್ಧಿ ಸಚಿವರು ಬಂದಾಗ ನಗರ ಬೆಳೆದು ಜನಸಂಖ್ಯೆ ಹೆಚ್ಚಳವಾಗಿರುವುದರಿಂದ ಇನ್ನೊಂದು ಶುದ್ಧೀಕರಣ ಕೇಂದ್ರಕ್ಕೆ ಮನವಿ ನೀಡಿದ್ದೆವು. ಸುಮಾರು 450 ಕೋಟಿ ರು. ವೆಚ್ಚದ ಈ ಯೋಜನೆಗೆ ಎಲ್ಲಾ ಸಿದ್ಧತೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಾಗವನ್ನೂ ಗುರುತಿಸಿ ಸರ್ಕಾರ ಹಂತ ಹಂತವಾಗಿ ಹಣ ಬಿಡುಗಡೆ ಮಾಡಬೇಕು. ಈ ನಿಟ್ಟಿನಲ್ಲಿ ನೂತನ ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು.&lt;/p&gt;&lt;p&gt;ಈಗಿನ ಶುದ್ಧೀಕರಣ ಘಟಕ 30 ವರ್ಷ ಹಳೆಯದಾಗಿದ್ದು, ಅದರ ಅವಧಿ ಮುಗಿಯುತ್ತಾ ಬಂದಿದೆ. ತುರ್ತಾಗಿ ನಗರಕ್ಕೆ ಇನ್ನೊಂದು ಅತ್ಯಾಧುನಿಕ ಶುದ್ಧೀಕರಣ ಘಟಕ ಬೇಕಾಗಿದೆ. ಹಿಂದೆ ಗಾಜನೂರಿನಿಂದ ನೇರವಾಗಿ ಈ ಘಟಕಕ್ಕೆ ನೀರು ಸರಬರಾಜು ಮಾಡಲು ಅನೇಕು ಹೋರಾಟ ಮಾಡಿದ್ದೆವು. ಈಗಿರುವ ಘಟಕ ಹಳೆಯದಾಗಿದೆ. ಆದಷ್ಟು ಬೇಗ ಈ ದುರಸ್ತಿ ಕಾರ್ಯ ಮುಗಿದು ಒಂದು ವಾರದೊಳಗೆ ನೀರು ಸರಬರಾಜು ಮಾಡುತ್ತೇವೆ ಎಂದರು.&lt;/p&gt;&lt;h3&gt;&lt;strong&gt;ನಗರಕ್ಕೆ ಗಾಜನೂರಿನಿಂದ 84 ಎಂಎಲ್&zwnj;ಡಿ ನೀರು&lt;/strong&gt;&lt;/h3&gt;&lt;p&gt;ಜಲಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ಜೀವನ್ ಮಾತನಾಡಿ, ಪ್ರತಿನಿತ್ಯ ನಗರಕ್ಕೆ ಗಾಜನೂರಿನಿಂದ 84 ಎಂಎಲ್&zwnj;ಡಿ ನೀರು ಸರಬರಾಜಾಗುತ್ತದೆ. ಈಗ 22 ಎಂಎಲ್&zwnj;ಡಿ ಸಾಮರ್ಥ್ಯದ ಶುದ್ಧೀಕರಣ ಘಟಕ ಡ್ಯಾಮೇಜ್ ಆಗಿದೆ. ಸಮರೋಪಾದಿಯಲ್ಲಿ ಅದನ್ನು ದುರಸ್ತಿ ಮಾಡಲಾಗುತ್ತಿದೆ. ನೀರಿನ ಅಗತ್ಯವಿರುವ ಸಾರ್ವಜನಿಕರು ಸಂಪರ್ಕಿಸುವಂತೆ ಅವರು ಕೋರಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಜಲಮಂಡಳಿಯ ಎಂಜಿನಿಯರ್&zwnj; ಟಿ. ರಾಘವೇಂದ್ರ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/drinking-water-shortage-in-shivamogga-city-for-another-6-days-mrq/articleshow-iw3ltvm"/>
        </item>
        <item>
            <title><![CDATA[ಅಯ್ಯೋ, ಪಾಪಿಗಳಾ.. ಬಸ್ ನಿಲ್ದಾಣದಲ್ಲಿ 10 ದಿನದ ಕಂದಮ್ಮನ ಬಿಟ್ಟು ಹೋದ ಅಪ್ಪ-ಅಮ್ಮ]]></title>
            <link>https://kannada.asianetnews.com/shivamogga/newborn-baby-being-abandoned-at-a-bus-stand-has-occurred-in-ripponpet-shivamogga-district-gkn/articleshow-lll8k5m</link>
            <guid isPermaLink="true">https://kannada.asianetnews.com/shivamogga/newborn-baby-being-abandoned-at-a-bus-stand-has-occurred-in-ripponpet-shivamogga-district-gkn/articleshow-lll8k5m</guid>
            <pubDate>Mon, 06 Jul 2026 10:38:06 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಗವಟೂರು ಗ್ರಾಮದ ಬಸ್ ನಿಲ್ದಾಣದಲ್ಲಿ ಕೈಚೀಲವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವನ್ನು ರಕ್ಷಿಸಲಾಗಿದ್ದು, ಪೊಲೀಸರು ಮಗುವನ್ನು ಬಿಟ್ಟುಹೋದ ಪೋಷಕರಿಗಾಗಿ ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwtx4ktfpp67937x0gvgh91m,imgname-shivamogga-newborn-baby-1783314403151.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ:&lt;/strong&gt; ಹೆತ್ತ ಕರುಳನ್ನು ರಕ್ಷಿಸಬೇಕಾದವರೇ ಅನಾಥವಾಗಿ ಬಿಟ್ಟು ಹೋದ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಹಾಲಿನ ಬಾಟಲಿಯನ್ನು ಪಕ್ಕದಲ್ಲಿಟ್ಟು, ಮಗುವನ್ನು ಕೈಚೀಲವೊಂದರಲ್ಲಿ ತುಂಬಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಹೊಸನಗರ ತಾಲೂಕಿನ ರಿಪ್ಪನ್&zwnj;ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;&lt;strong&gt;ಮಗುವಿನ ಅಳು ಕೇಳಿ ಓಡಿ ಬಂದ ನಿವಾಸಿಗಳು&lt;/strong&gt;&lt;/h2&gt;&lt;p&gt;ಗವಟೂರು ಹೊಳೆಯ ಸಮೀಪವಿರುವ ಬಸ್ ನಿಲ್ದಾಣವು ನಿರ್ಜನ ಪ್ರದೇಶದಲ್ಲಿದೆ. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಹಿಂಭಾಗ ನಿವಾಸಿಯೊಬ್ಬರಿಗೆ ಮಗುವಿನ ಅಳುವಿನ ಶಬ್ದ ಕೇಳಿಸಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದಾಗ, ಕೈಚೀಲವೊಂದರಲ್ಲಿ ಬಟ್ಟೆಯಿಂದ ಸುತ್ತಿದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.&lt;/p&gt;&lt;p&gt;ಸ್ಥಳೀಯರು ತಕ್ಷಣವೇ ರಿಪ್ಪನ್&zwnj;ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪಿಎಸ್&zwnj;ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸುಮಾರು 10 ರಿಂದ 15 ದಿನದ ಪ್ರಾಯದ ಈ ಹೆಣ್ಣು ಮಗು 1.6 ಕೆ.ಜಿ ತೂಕವಿದ್ದು, ಸದ್ಯ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;p&gt;ರಕ್ಷಿಸಲಾದ ಮಗುವನ್ನು ಮೊದಲು ರಿಪ್ಪನ್&zwnj;ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಆರೈಕೆ ಮಾಡಲಾಯಿತು. ನಂತರ ಮಗುವಿನ ಹೆಚ್ಚಿನ ಆರೈಕೆ ಮತ್ತು ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಗು ವೈದ್ಯರ ಮೇಲ್ವಿಚಾರಣೆಯಲ್ಲಿದೆ.&lt;/p&gt;&lt;h3&gt;&lt;strong&gt;ತನಿಖೆ ಚುರುಕು&lt;/strong&gt;&lt;/h3&gt;&lt;p&gt;ಮಗುವನ್ನು ಅನಾಥವಾಗಿ ಬಿಟ್ಟು ಹೋದವರು ಯಾರು? ಯಾವ ಕಾರಣಕ್ಕಾಗಿ ಈ ರೀತಿ ಮಾಡಿದ್ದಾರೆ? ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ರಿಪ್ಪನ್&zwnj;ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಗು ಸಿಕ್ಕ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಇತ್ತೀಚೆಗೆ ಹೆರಿಗೆಯಾದವರ&lt;/p&gt;&lt;p&gt;ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಅನಾಥವಾಗಿ ಬಿದ್ದಿದ್ದ ಮಗುವನ್ನು ಸಮಯಪ್ರಜ್ಞೆಯಿಂದ ರಕ್ಷಿಸಿದ ಸಾರ್ವಜನಿಕರು ಹಾಗೂ ತಕ್ಷಣವೇ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಹಾಲಿನ ಬಾಟಲಿ ಪಕ್ಕದಲ್ಲಿ ಇಟ್ಟು ಹೋದ ಆ 'ಹೆತ್ತವರ' ಮನಸ್ಥಿತಿಗೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/shivamogga/newborn-baby-being-abandoned-at-a-bus-stand-has-occurred-in-ripponpet-shivamogga-district-gkn/articleshow-lll8k5m"/>
        </item>
        <item>
            <title><![CDATA[ಶಿವಮೊಗ್ಗ ಶರಾವತಿ ಹಿನ್ನೀರಿನ ಜನರು ಹಾಗೂ ಪ್ರವಾಸಿಗರಿಗೆ ಸಿಹಿ ಸುದ್ದಿ; ಇಂದಿನಿಂದ ಲಾಂಚ್ ಸೇವೆ ಪುನಾರಂಭ!]]></title>
            <link>https://kannada.asianetnews.com/gallery/karnataka-districts/shivamogga-linganamakki-backwater-muppane-launch-service-restarts-from-today-lx111nu</link>
            <guid isPermaLink="true">https://kannada.asianetnews.com/gallery/karnataka-districts/shivamogga-linganamakki-backwater-muppane-launch-service-restarts-from-today-lx111nu</guid>
            <pubDate>Mon, 13 Jul 2026 18:19:19 +0530</pubDate>
            <description><![CDATA[&lt;p&gt;ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದರಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಮತ್ತು ಹಕ್ಕಿ ನಡುವಿನ ಲಾಂಚ್ ಸಂಚಾರವು, ಮಳೆ ಹಾಗೂ ಒಳಹರಿವು ಹೆಚ್ಚಾದ ಕಾರಣ ಜುಲೈ 13ರಿಂದ ಪುನರಾರಂಭಗೊಂಡಿದೆ. ಕರೂರು ಮತ್ತು ಭಾರಂಗಿ ಹೋಬಳಿಯ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxdqwenqykkdw7xqb7xa77te,imgname-shivamogga-muppane-launch-restarts--2--1783946427063.jpg" type="image/jpeg" height="390" width="690"/>
            <content:encoded><![CDATA[&lt;p&gt;ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದರಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಮತ್ತು ಹಕ್ಕಿ ನಡುವಿನ ಲಾಂಚ್ ಸಂಚಾರವು, ಮಳೆ ಹಾಗೂ ಒಳಹರಿವು ಹೆಚ್ಚಾದ ಕಾರಣ ಜುಲೈ 13ರಿಂದ ಪುನರಾರಂಭಗೊಂಡಿದೆ. ಕರೂರು ಮತ್ತು ಭಾರಂಗಿ ಹೋಬಳಿಯ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಶಿವಮೊಗ್ಗ (ಜು.13): ಮ&lt;/strong&gt;ಲೆನಾಡಿನ ಜನರಿಗೆ ಹಾಗೂ ಶರಾವತಿ ಹಿನ್ನೀರಿನ ಸೌಂದರ್ಯ ಸವಿಯುವ ಪ್ರವಾಸಿಗರಿಗೆ ಒಂದು ಮಹತ್ವದ ಸಿಹಿ ಸುದ್ದಿ ಸಿಕ್ಕಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಕರೂರು ಮತ್ತು ಭಾರಂಗಿ ಹೋಬಳಿ ಸಂಪರ್ಕದ ಪ್ರಮುಖ ಕೊಂಡಿಯಾದ ಮುಪ್ಪಾನೆ ಮತ್ತು ಹಕ್ಕಿ ನಡುವಿನ ಲಾಂಚ್ ಸಂಚಾರ ಜುಲೈ 13ರಿಂದ (ಇಂದಿನಿಂದ) ಮತ್ತೆ ಅಧಿಕೃತವಾಗಿ ಆರಂಭವಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಜೂನ್ 1ರಿಂದ ಸ್ಥಗಿತಗೊಂಡಿದ್ದ ಸೇವೆ&lt;/strong&gt;&lt;/p&gt;&lt;p&gt;ಲಿಂಗನಮಕ್ಕಿ ಜಲಾಶಯದಲ್ಲಿ ನೀರು ಕನಿಷ್ಠ ಮಟ್ಟಕ್ಕೆ ತಲುಪಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಕರೂರು ಹಾಗೂ ಭಾರಂಗಿ ಹೋಬಳಿ ಸಂಪರ್ಕಕ್ಕೆ ಅತ್ಯಂತ ಸನಿಹವಾಗಿದ್ದ ಈ ಜಲಮಾರ್ಗದ ಸೇವೆಯನ್ನು ಜೂನ್ 1ರಿಂದ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು.&lt;/p&gt;&lt;img&gt;&lt;p&gt;ಕಾರ್ಗಲ್ ಸಮೀಪದ ಮುಪ್ಪಾನೆ ಮತ್ತು ಹಕ್ಕಿ ನಡುವೆ ಸಂಚರಿಸುವ ಜಲಸಾರಿಗೆ ಲಾಂಚ್ ಸ್ಥಗಿತಗೊಂಡಿದ್ದರಿಂದ ಸ್ಥಳೀಯ ನಿವಾಸಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ದೂರದ ರಸ್ತೆ ಮಾರ್ಗವನ್ನು ಅವಲಂಬಿಸಬೇಕಾಗಿ ಬಂದು ತೀವ್ರ ತೊಂದರೆ ಅನುಭವಿಸುತ್ತಿದ್ದರು.&lt;/p&gt;&lt;img&gt;&lt;p&gt;&lt;strong&gt;ಜಲಾಶಯದಲ್ಲಿ ಹೆಚ್ಚಿದ ನೀರಿನ ಮಟ್ಟ&lt;/strong&gt;&lt;/p&gt;&lt;p&gt;ಕಳೆದ ಕೆಲವು ದಿನಗಳಿಂದ ಮಲೆನಾಡು ಹಾಗೂ ಶರಾವತಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿರುವ ಕಾರಣ, ಇದೀಗ ಜಲಸಾರಿಗೆ ಇಲಾಖೆಯು ಲಾಂಚ್ ಸಂಚಾರವನ್ನು ಪುನಃ ಆರಂಭಿಸಲು ಹಸಿರು ನಿಶಾನೆ ತೋರಿದೆ.&lt;/p&gt;&lt;img&gt;&lt;p&gt;ಸುರಕ್ಷಿತ ಸಂಚಾರಕ್ಕೆ ಲಾಂಚ್ ಸಿದ್ಧ&lt;/p&gt;&lt;p&gt;ಲಾಂಚ್ ಸಂಚಾರ ಸ್ಥಗಿತಗೊಂಡಿದ್ದ ಅವಧಿಯಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ಇಡೀ ಲಾಂಚ್&zwnj;ನ ದುರಸ್ತಿ ಹಾಗೂ ನಿರ್ವಹಣಾ (Maintenance) ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ನಿತ್ಯ ಓಡಾಟ ನಡೆಸಲು ಲಾಂಚ್ ಸಂಪೂರ್ಣ ಸಿದ್ಧವಾಗಿದ್ದು, ಇಂದಿನಿಂದ ಸಾರ್ವಜನಿಕರ ಸೇವೆಗೆ ಲಭ್ಯವಿರಲಿದೆ ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ.&amp;nbsp;&lt;/p&gt;&lt;p&gt;ಲಾಂಚ್ ಸೇವೆ ಮರುಪ್ರಾರಂಭ ಆಗಿರುವುದರಿಂದ ಕರೂರು ಮತ್ತು ಭಾರಂಗಿ ಭಾಗದ ಸಾವಿರಾರು ಜನರಿಗೆ ಸುಲಭ ಹಾಗೂ ಕಡಿಮೆ ವೆಚ್ಚದ ಪ್ರಯಾಣದ ಸೌಲಭ್ಯ ಮರಳಿ ಸಿಕ್ಕಂತಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/shivamogga-linganamakki-backwater-muppane-launch-service-restarts-from-today-lx111nu"/>
        </item>
        <item>
            <title><![CDATA[Shivamogga Heavy Rain: ಶಿವಮೊಗ್ಗದಲ್ಲಿ ಮಳೆಯ ಆರ್ಭಟ: ಮಾಲತಿ ನದಿಯಲ್ಲಿ ಕೊಚ್ಚಿಹೋದ ವೃದ್ಧ, ಶವಕ್ಕಾಗಿ ಶೋಧ!]]></title>
            <link>https://kannada.asianetnews.com/karnataka-districts/shivamogga-elderly-man-missing-swept-away-malathi-river-thirthahalli/articleshow-oen5rgo</link>
            <guid isPermaLink="true">https://kannada.asianetnews.com/karnataka-districts/shivamogga-elderly-man-missing-swept-away-malathi-river-thirthahalli/articleshow-oen5rgo</guid>
            <pubDate>Mon, 06 Jul 2026 19:45:33 +0530</pubDate>
            <description><![CDATA[ಶಿವಮೊಗ್ಗದ ಆಗುಂಬೆ ಬಳಿ ಮಾಲತಿ ನದಿಯ ರಭಸಕ್ಕೆ 65 ವರ್ಷದ ವೃದ್ಧರೊಬ್ಬರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತೋಟಕ್ಕೆಂದು ತೆರಳಿದ್ದ ರಾಮಪ್ಪ ಎಂಬುವವರ ಚಪ್ಪಲಿ ಮತ್ತು ಬಟ್ಟೆಗಳು ನದಿ ದಡದಲ್ಲಿ ಪತ್ತೆಯಾಗಿದ್ದು, ಅವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwvwdfbjetrtc6a3re5zx28e,imgname-shivamogga-rain-old-man-missing-1783347199346.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜು.06): ಮ&lt;/strong&gt;ಲೆನಾಡಿನ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಕೇಳೂರು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮಾಲತಿ ನದಿಯ ಸೆಳವಿಗೆ ಸಿಲುಕಿ 65 ವರ್ಷದ ವೃದ್ಧರೊಬ್ಬರು ತೇಲಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?&lt;/strong&gt;&lt;/h2&gt;&lt;p&gt;ಆಗುಂಬೆ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಳೂರು ಗ್ರಾಮದ ನಿವಾಸಿ ರಾಮಪ್ಪ (65) ನಾಪತ್ತೆಯಾದ ವೃದ್ಧ. ಇವರು ನಿನ್ನೆ ಸಂಜೆ ಎಂದಿನಂತೆ ತಮ್ಮ ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದರು. ಆದರೆ ರಾತ್ರಿಯಾದರೂ ಮನೆಗೆ ಹಿಂತಿರುಗದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತೋಟದ ಪಕ್ಕದಲ್ಲೇ ಹರಿಯುವ ಮಾಲತಿ ನದಿಯ ದಡದಲ್ಲಿ ರಾಮಪ್ಪನವರ ಚಪ್ಪಲಿ ಹಾಗೂ ಬಟ್ಟೆಗಳು ಪತ್ತೆಯಾಗಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ, ಕಾಲು ತೊಳೆಯಲು ಅಥವಾ ನದಿಗೆ ಇಳಿದಾಗ ಸೆಳವಿಗೆ ಸಿಲುಕಿ ಕೊಚ್ಚಿ ಹೋಗಿರಬಹುದು ಎಂದು ಅಂದಾಜಿಸಲಾಗಿದೆ.&lt;/p&gt;&lt;h2&gt;&lt;strong&gt;ಮುಂದುವರಿದ ಶೋಧ ಕಾರ್ಯಾಚರಣೆ:&lt;/strong&gt;&lt;/h2&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಣ್ಣ ಗೌಡ ಪಾಟೀಲ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿ ಶಿವ ಕುಮಾರ್ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿದೆ. ಮಳೆಯ ನಡುವೆಯೂ ನದಿಯಲ್ಲಿ ರಾಮಪ್ಪನವರ ಶವಕ್ಕಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ನದಿ ಪಾತ್ರದಲ್ಲಿ ದಟ್ಟವಾದ ಪೊದೆಗಳು ಹಾಗೂ ನೀರಿನ ವೇಗ ಹೆಚ್ಚಿರುವುದು ಕಾರ್ಯಾಚರಣೆಗೆ ಅಡ್ಡಿಯುಂಟುಮಾಡುತ್ತಿದೆ.&lt;/p&gt;&lt;h3&gt;&lt;strong&gt;ಪೊಲೀಸ್ ತನಿಖೆ:&lt;/strong&gt;&lt;/h3&gt;&lt;p&gt;ಈ ಕುರಿತು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದು ಆಕಸ್ಮಿಕವಾಗಿ ನದಿಗೆ ಬಿದ್ದು ಸಂಭವಿಸಿದ ದುರಂತವೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆಯೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಮಳೆಯ ಅಬ್ಬರಕ್ಕೆ ನದಿಗಿಳಿಯುವಾಗ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಇಂತಹ ಘಟನೆಗಳು ಸಂಭವಿಸುತ್ತಿರುವುದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-elderly-man-missing-swept-away-malathi-river-thirthahalli/articleshow-oen5rgo"/>
        </item>
        <item>
            <title><![CDATA[ಶಿವಮೊಗ್ಗ-ಮಂಗಳೂರು ರೈಲ್ವೆ ಯೋಜನೆ: ತೀರ್ಥಹಳ್ಳಿ-ಶೃಂಗೇರಿ ಮಾರ್ಗಕ್ಕೆ ಹೊಸ ತಿರುವು?]]></title>
            <link>https://kannada.asianetnews.com/karnataka-districts/shivamogga-mangaluru-railway-project-proposal-to-extend-from-shivamogga-to-thirthahalli-sringeri-mrq/articleshow-ofai51f</link>
            <guid isPermaLink="true">https://kannada.asianetnews.com/karnataka-districts/shivamogga-mangaluru-railway-project-proposal-to-extend-from-shivamogga-to-thirthahalli-sringeri-mrq/articleshow-ofai51f</guid>
            <pubDate>Tue, 14 Jul 2026 08:02:35 +0530</pubDate>
            <description><![CDATA[&lt;p&gt;ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಶಿವಮೊಗ್ಗ-ಮಂಗಳೂರು ರೈಲ್ವೇ ಯೋಜನೆಯ ಮಾರ್ಗ ವಿವಾದ, ಶೃಂಗೇರಿಯ ಗ್ರಾಮ ಸಡಕ್ ಯೋಜನೆಗಳ ವಿಳಂಬ ಮತ್ತು ಶಾಶ್ವತ ವಾಸ್ತವ್ಯದ ಪ್ರಮಾಣಪತ್ರಗಳ ದುರ್ಬಳಕೆ ಕುರಿತು ಮಾತನಾಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxf780nsay3a419qt1phmnjr,imgname-shivamogga-1783996089017.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ-ಮಂಗಳೂರು ರೈಲ್ವೇ ಯೋಜನೆ ಶಿವಮೊಗ್ಗದಿಂದ ತೀರ್ಥಹಳ್ಳಿ-ಶೃಂಗೇರಿ ಬರುವ ಪ್ರಸ್ತಾಪ ವರದಿಯಲ್ಲಾಗಿದೆ. ಆದರೆ ಈ ಹಿಂದೆಯೇ ಎನ್.ಆರ್.ಪುರದಲ್ಲಿರುವ ರೈಲ್ವೇ ಹಳಿಯಿಂದಲೇ ಹಾದು ಹೋಗ ಬೇಕು ಎಂದು ಎನ್.ಆರ್.ಪುರದವರು ಒತ್ತಾಯಿಸಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.&lt;/p&gt;&lt;p&gt;ರೈಲ್ವೇ ಮಾರ್ಗದ ಬಗ್ಗೆ ಪರಿಸರವಾದಿ ಹಾಗೂ ಕೆಲವು ಸಣ್ಣಪುಟ್ಟ ತೊಂದರೆಗಳಿವೆ. ಈ ಬಗ್ಗೆ ಈಗಾಗಲೇ ಒಂದು ಬಾರಿ ಸಭೆ ನಡೆಸಿದ್ದು, ಅಲ್ಲಿ ಸಮಸ್ಯೆ ಪೂರ್ಣ ಇತ್ಯರ್ಥವಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಂಬರುವ ಅಧಿವೇಶನದ ನಂತರ ಮತ್ತೊಮ್ಮೆ ಈ ಬಗ್ಗೆ ಸಭೆ ನಡೆಸಿ ಸಾಧಕ ಬಾಧಕ ಮುಂದಿಟ್ಟುಕೊಂಡು ಇವತ್ತಿನ ಕಾಲಘಟ್ಟದಲ್ಲಿ ಪರಿಸರಕ್ಕೆ ಅತ್ಯಂತ ಕಡಿಮೆ ಸಮಸ್ಯೆ ಉಂಟು ಮಾಡುವ ಹಾಗೂ ಜನರಿಗೆ ಅನುಕೂಲವಾಗುವ ಮಾರ್ಗ ಅಂತಿಮಗೊಳಿಸಲಾಗುತ್ತದೆ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.&lt;/p&gt;&lt;h2&gt;&lt;strong&gt;ಗ್ರಾಮ ಸಡಕ್ 13 ರಸ್ತೆ ಪೂರ್ಣಗೊಂಡಿಲ್ಲ&lt;/strong&gt;&lt;/h2&gt;&lt;p&gt;ಗ್ರಾಮ ಸಡಕ್ ಯೋಜನೆಯಲ್ಲಿ ಶೃಂಗೇರಿ ಕ್ಷೇತ್ರಕ್ಕೆ 15 ರಸ್ತೆ ನೀಡಿದ್ದು, ಇದರಲ್ಲಿ 2 ಯೋಜನೆಗಳು ಕಾರ್ಯಗತವಾಗಿದೆ. ಇನ್ನುಳಿದ ಯೋಜನೆ ಪೂರ್ಣವಾಗಿಲ್ಲ ಎಂದು ವರದಿ ಬಂದಿದೆ ಎಂದು ಕೋಟಾ ಶ್ರೀನಿವಾಸಪೂಜಾರಿ ತಿಳಿಸಿದರು.&lt;/p&gt;&lt;p&gt;ಯೋಜನೆ ವೆಬ್&zwnj;ಸೈಟ್ ಲಾಕ್ ಆಗಿ ಸಮಸ್ಯೆಯಾಗಿದೆ ಎಂಬ ವರದಿ ಬಂದಿದೆ. ಈ ಬಗ್ಗೆ ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಭೇಟಿ ಮಾಡಿ ಖುದ್ದು ಪತ್ರ ನೀಡಿ ಅಲ್ಲಿ ಏನಾದರೂ ಸಮಸ್ಯೆಯಿದ್ದರೆ ವೆಬ್&zwnj;ಸೈಟ್&zwnj;ನಲ್ಲಿ ದಾಖಲು ಮಾಡಲು ಕೋರಲಾಗಿದೆ.&lt;/p&gt;&lt;p&gt;ಪಿಎಂಜಿಎಸ್&zwnj;ವೈ ಯೋಜನೆ ಟೆಂಡರ್ ಕರೆಯುವಾಗ ರಸ್ತೆ ನಿರ್ಮಾಣ ಹಾಗೂ ಅದರ ನಿರ್ವಹಣೆ ಬಗ್ಗೆ ಕರಾರು ಆಗಿದೆ. ಟೆಂಡರ್ ಕರೆದಾಗ ಯಾವ ಷರತ್ತು ಇದೆಯೋ ಅದನ್ನು ಅದೇ ಗುತ್ತಿಗೆದಾರರು ನಿರ್ವಹಣೆ ಮಾಡಬೇಕಿದೆ. ಹಾಗೆ ಮಾಡದೆ ಇದ್ದರೆ ಅಲ್ಲಿನ ಎಂಜಿನಿಯರ್ ಮೇಲೆ ದೂರು ದಾಖಲಾಗುತ್ತದೆ ಮತ್ತು ಆ ಗುತ್ತಿಗೆದಾರರ ಡಿಪಾಸಿಟ್ ಹಣ ಮುಟ್ಟುಗೋಲು ಹಾಕಿಕೊಳ್ಳ ಲಾಗುತ್ತದೆ.&lt;/p&gt;&lt;h3&gt;&lt;strong&gt;ಕರ್ನಾಟಕದ ಅಡಕೆ ಲಾರಿ ಸೀಜ್ ಸಮಸ್ಯೆ ಇತ್ಯರ್ಥ&lt;/strong&gt;&lt;/h3&gt;&lt;p&gt;ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಕೆ ಲಾರಿಗಳನ್ನು ಸೀಜ್ ಮಾಡಿರುವ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಕಚೇರಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ನಾನು, ಸಂಸದ ಬ್ರಿಜೇಶ್ ಚೌಟ, ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸಮಸ್ಯೆ ಬಗೆಹರಿದಿದೆ ಎಂಬ ಮಾಹಿತಿ ನನಗೆ ಅಡಕೆ ಬೆಳೆಗಾರರ ಸಂಘದವರು ತಿಳಿಸಿದ್ದಾರೆ ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ಪ್ರಕೃತಿ ವಿಕೋಪ ನಿಧಿ ಹೆಚ್ಚು ತರಲು ಪ್ರಯತ್ನ&lt;/strong&gt;&lt;/p&gt;&lt;p&gt;ಮಳೆ ಕಡಿಮೆಯಾದಾಗ, ಪ್ರವಾಹ ಅಥವಾ ಬರದಂತಹ ಪ್ರಕೃತಿ ವಿಕೋಪ ನಿಧಿ ಕ್ರೋಢೀಕರಿಸಿ ಬಿತ್ತನೆಗೆ, ಕುಡಿಯುವ ನೀರಿಗೆ, ಜನ ಜಾನುವಾರುಗಳಿಗೆ ನೀಡಲು ರಾಜ್ಯ ಸರ್ಕಾರದಲ್ಲಿ ಅವಕಾಶವಿದೆ. ಕಡಿಮೆಯಾದಲ್ಲಿ ಕೇಂದ್ರಕ್ಕೆ ಮನವಿ ಮಾಡಿ ತರಿಸಿಕೊಳ್ಳಬಹುದು. ನಮ್ಮ ಜಿಲ್ಲೆಯಲ್ಲಿ ಯಾವುದಾದರೂ ಸಮಸ್ಯೆ ಉಂಟಾದಲ್ಲಿ ಕೇಂದ್ರದಿಂದ ಯಾವರೀತಿ ಹೆಚ್ಚು ಅನು ದಾನ ತರಬೇಕು. ರಾಜ್ಯ ಎಷ್ಟು ಅನುದಾನ ಕೊಡುತ್ತದೆ ಎಂಬ ಬಗ್ಗೆ ಮಾತನಾಡಿ ಕ್ಷೇತ್ರಕ್ಕೆ ತರುವ ಪ್ರಯತ್ನ ಮಾಡಲಾ ಗುವುದು ಎಂದು ಸಂಸದರು ತಿಳಿಸಿದರು.&lt;/p&gt;&lt;p&gt;&lt;strong&gt;ಅನಧಿಕೃತ ಶಾಶ್ವತ ವಾಸ್ತವ್ಯದ ಸರ್ಟಿಫಿಕೇಟ್&zwnj;ಗೆ ಅಧಿಕಾರಿಗಳೇ ಹೊಣೆ&lt;/strong&gt;&lt;/p&gt;&lt;p&gt;ಚುನಾವಣಾ ಆಯೋಗದ ಎಸ್&zwnj;ಐಆರ್&zwnj;ನ ಮೂಲ ಉದ್ದೇಶ ಭಾರತೀಯ ಪೌರತ್ವ, ಮತದಾನದ ಹಕ್ಕನ್ನು ಖಾತ್ರಿ ಮಾಡು ವುದು, ಮೃತರಾದವರನ್ನು ಪಟ್ಟಿಯಿಂದ ತೆಗೆದು ಹಾಕುವುದು ಹಾಗೂ ಬಾಂಗ್ಲಾ ದೇಶಿಗರು ಸೇರಿದಂತೆ ವಿದೇಶಗರು ಬಂದು ಇಲ್ಲಿ ಅನಾಹುತ ಮಾಡುವುದನ್ನು ತಪ್ಪಿಸುವುದು ಆಗಿದೆ. ಆದರೆ ದುರಂತವೆಂದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅವರಿಗೆ ಓಟು ಬೀಳಬೇಕು ಎಂಬ ಕಾರಣಕ್ಕೆ ಶಾಶ್ವತ ವಾಸ್ತವ್ಯದ ಸರ್ಟಿಫಿಕೇಟ್&zwnj; ಎಸ್&zwnj;ಐಆರ್ ವೇಳೆ ಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೋಟಾ ಶ್ರೀನಿವಾಸಪೂಜಾರಿ ಆರೋಪಿಸಿದರು.&lt;/p&gt;&lt;p&gt;ಸಂವಿಧಾನ, ಚುನಾವಣಾ ಆಯೋಗದ ಚೌಕಟ್ಟಿನಲ್ಲಿ ಶಾಶ್ವತ ವಾಸ್ತವ್ಯದ ಸರ್ಟಿಫಿಕೇಟ್&zwnj;ಗೆ ಮಾನ್ಯತೆಯಿಲ್ಲ. ಶಾಶ್ವತ ವಾಸ್ತವ್ಯದ ಸರ್ಟಿಫಿಕೇಟನ್ನು ಭಾರತದಲ್ಲದವರಿಗೆ, ವಿದೇಶದಿಂದ ಬಂದವರಿಗೆ, ಮತೀಯ ಕಾರಣಗಳಿಗೆ ಓಟು ಹಾಕುತ್ತಾರೆ ಎಂಬುವರಿಗೆ ಮಾತ್ರ ನೀಡಲು ಪ್ರಯತ್ನಿಸಿ ಊರ್ಜಿತ ಮಾಡುವ ಪ್ರಯತ್ನ ನಡೆದಿದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಲಾ ಗುತ್ತಿದೆ. ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅಗತ್ಯವಿದ್ದರೆ ಮತ್ತೊಮ್ಮೆ ದೂರು ನೀಡಲಾಗುವುದು.&lt;/p&gt;&lt;p&gt;ರಾಜಕೀಯ ಕಾರಣಗಳಿಗೆ ಶಾಶ್ವತ ವಾಸ್ತವ್ಯದ ಸರ್ಟಿಫಿಕೇಟ್ ಕೊಡುತ್ತಿರುವುದು ಕೇವಲ ಮತಗಳಿಕೆ ವ್ಯವಸ್ಥೆ ದೃಷ್ಟಿಯಿಂದ ಹೊರತು ವಾಸ್ತವಿಕತೆಗೆ ಹತ್ತಿರವಿರುವುದಿಲ್ಲ. ಅಂತಹ ಮತದಾರರ ನಿರಾಕರಣೆಯಾಗುತ್ತದೆ.&lt;/p&gt;&lt;p&gt;ಸರ್ಕಾರದ ಅಧಿಕಾರಿಗಳು ಸರ್ಕಾರದ ಮಾತನ್ನು ಕೇಳಿ ಶಾಶ್ವತ ವಾಸ್ತವ್ಯದ ಸರ್ಟಿಫಿಕೇಟ್&zwnj; ಅನಧಿಕೃತವಾಗಿ ಕೊಟ್ಟರೆ ಅದಕ್ಕೆ ಅಧಿಕಾರಿಗಳೇ ನೇರವಾಗಿ ಹೊಣೆಯಾಗುತ್ತದೆ. ಇದಕ್ಕೆ ರಾಜಕಾರಣಿ ಹೊಣೆಯಾಗುವುದಿಲ್ಲ ಎಂಬುದನ್ನು ಗಮನವಿಟ್ಟು ಕೊಂಡು ಕೆಲಸ ಮಾಡಬೇಕು ಎಂದು ಕೋಟಾ ಶ್ರೀನಿವಾಸಪೂಜಾರಿ ಹೇಳಿದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/shivamogga-mangaluru-railway-project-proposal-to-extend-from-shivamogga-to-thirthahalli-sringeri-mrq/articleshow-ofai51f"/>
        </item>
        <item>
            <title><![CDATA[Shivamogga Schools Holiday: ಮಳೆ ಆರ್ಭಟಕ್ಕೆ ನಲುಗಿದ ಶಿವಮೊಗ್ಗ, ನಾಳೆಯೂ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ!]]></title>
            <link>https://kannada.asianetnews.com/shivamogga/shivamogga-news-sagar-taluk-school-college-holiday-declared-tomorrow-due-to-heavy-rain/articleshow-xw2we84</link>
            <guid isPermaLink="true">https://kannada.asianetnews.com/shivamogga/shivamogga-news-sagar-taluk-school-college-holiday-declared-tomorrow-due-to-heavy-rain/articleshow-xw2we84</guid>
            <pubDate>Tue, 07 Jul 2026 17:18:03 +0530</pubDate>
            <description><![CDATA[&lt;p&gt;ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರದಿಂದಾಗಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8, 2026 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಹಶೀಲ್ದಾರರು ಈ ಆದೇಶವನ್ನು ಹೊರಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k2ymzyy7xy3j93whatvyz63v,imgname-chikkamagaluru-school-holiday-1755522792391.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜು.07): ಮ&lt;/strong&gt;ಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾಗರ ತಾಲೂಕಿನಾದ್ಯಂತ ನಾಳೆ ಅಂದರೆ ಜುಲೈ 8, 2026ರಂದು (ಬುಧವಾರ) ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಇರಲಿದೆ ಎಂದು ತಹಶೀಲ್ದಾರ್ ಮತ್ತು ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಡಾ. ಪ್ರತಿಭಾ ಅವರು ಆದೇಶ ಹೊರಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಯಾರಿಗೆಲ್ಲಾ ರಜೆ ಅನ್ವಯಿಸುತ್ತದೆ?&lt;/strong&gt;&lt;/h2&gt;&lt;p&gt;ತಹಶೀಲ್ದಾರರ ಕಚೇರಿಯಿಂದ ಹೊರಬಿದ್ದಿರುವ ಅಧಿಕೃತ ಜ್ಞಾಪನದ ಪ್ರಕಾರ, ಸಾಗರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಈ ರಜೆ ಅನ್ವಯಿಸುತ್ತದೆ.&lt;/p&gt;&lt;h2&gt;&lt;strong&gt;ರಜೆಗೆ ಕಾರಣವೇನು?&lt;/strong&gt;&lt;/h2&gt;&lt;p&gt;ಕಳೆದ ಕೆಲವು ದಿನಗಳಿಂದ ಮಲೆನಾಡಿನಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಇಲಾಖೆ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ, ವಿದ್ಯಾರ್ಥಿಗಳು ಶಾಲೆಗೆ ಬರುವಾಗ ಎದುರಾಗಬಹುದಾದ ಅಪಾಯಗಳನ್ನು ತಪ್ಪಿಸಲು ಮತ್ತು ಅವರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.&lt;/p&gt;&lt;p&gt;&lt;strong&gt;ಹೆಚ್ಚುವರಿ ಸೂಚನೆ:&lt;/strong&gt;&lt;/p&gt;&lt;p&gt;ರಜೆಯಿಂದಾಗಿ ಕಳೆದುಹೋಗುವ ಪಠ್ಯ ಪ್ರವಚನಗಳನ್ನು ಸರಿದೂಗಿಸಲು ಮುಂದಿನ ರಜೆ ದಿನಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಪೂರ್ಣಗೊಳಿಸುವಂತೆ ಶಾಲಾ ಮುಖ್ಯಸ್ಥರಿಗೆ ಮತ್ತು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ಸಾಗರ ತಾಲೂಕಿನ ಪೋಷಕರು ಮತ್ತು ವಿದ್ಯಾರ್ಥಿಗಳು ಈ ಬದಲಾವಣೆಯನ್ನು ಗಮನಿಸಬೇಕೆಂದು ಕೋರಲಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/shivamogga/shivamogga-news-sagar-taluk-school-college-holiday-declared-tomorrow-due-to-heavy-rain/articleshow-xw2we84"/>
        </item>
    </channel>
</rss>
