<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 23 Apr 2026 08:04:14 +0530</lastBuildDate>
        <atom:link href="https://kannada.asianetnews.com/rss/shivamogga" rel="self" type="application/rss+xml"/>
        <item>
            <title><![CDATA[ತೀರ್ಥಹಳ್ಳಿ ಟ್ರಯಲ್ ಬ್ಲಾಸ್ಟ್ ಕೇಸ್: ಐಸಿಸ್ ಪಿತೂರಿ ಪ್ರಕರಣದ ಮೂರನೇ ಉಗ್ರ ಅರಾಫತ್‌ ಅಲಿಗೆ 6 ವರ್ಷ ಜೈಲು]]></title>
            <link>https://kannada.asianetnews.com/karnataka-districts/thirthahalli-trial-blast-case-6-years-jail-for-isis-conspirator-arafat-ali-rav/articleshow-0co27d9</link>
            <guid isPermaLink="true">https://kannada.asianetnews.com/karnataka-districts/thirthahalli-trial-blast-case-6-years-jail-for-isis-conspirator-arafat-ali-rav/articleshow-0co27d9</guid>
            <pubDate>Wed, 22 Apr 2026 09:43:14 +0530</pubDate>
            <description><![CDATA[&lt;p&gt;ಶಿವಮೊಗ್ಗದ ಐಸಿಸ್&zwnj; ಭಯೋತ್ಪಾದನಾ ಪಿತೂರಿ ಪ್ರಕರಣದ 10ನೇ ಆರೋಪಿ ಅರಾಫತ್&zwnj; ಅಲಿಗೆ ಎನ್&zwnj;ಐಎ ವಿಶೇಷ ನ್ಯಾಯಾಲಯವು 6 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 47 ಸಾವಿರ ರೂ. ದಂಡ ವಿಧಿಸಿದೆ. ಐಸಿಸ್&zwnj;ಗೆ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km7gs3z5syqk3t1kdbvs9vv8,imgname-fake-news-fact-check-ukrainians-india-nia-arrest-mizoram-drone-training-security-alert-1774073974757.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.22)&lt;/strong&gt; ಶಿವಮೊಗ್ಗದ ಐಸಿಸ್&zwnj; ಭಯೋತ್ಪಾದನಾ ಪಿತೂರಿ ಪ್ರಕರಣದ 10ನೇ ಆರೋಪಿಯಾಗಿದ್ದ ಐಸಿಸ್&zwnj; ಉಗ್ರ ಸಂಘಟನೆ ಸದಸ್ಯ ಅರಾಫತ್&zwnj; ಅಲಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್&zwnj;ಐಎ) ವಿಶೇಷ ನ್ಯಾಯಾಲಯ 6 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 47 ಸಾವಿರ ರು. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.&lt;/p&gt;&lt;p&gt;ಪ್ರಕರಣ ಸಂಬಂಧ ಎನ್&zwnj;ಐಎ ವಿಶೇಷ ನ್ಯಾಯಾಲಯವು 2025ರ ನವೆಂಬರ್&zwnj;ನಲ್ಲಿ ಇಬ್ಬರು ಅಪರಾಧಿಗಳಿಗೆ ಆರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮೂರನೇ ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿವಮೊಗ್ಗದ ಐಸಿಸ್&zwnj; ಭಯೋತ್ಪಾದನಾ ಪಿತೂರಿ ಪ್ರಕರಣ ಸಂಬಂಧ ಎನ್&zwnj;ಐಎ ಅಧಿಕಾರಿಗಳು 12 ಮಂದಿ ವಿರುದ್ಧ ಐಪಿಸಿ ವಿವಿಧ ಸೆಕ್ಷನ್&zwnj; ಯುಎಪಿಎ ಕಾಯ್ದೆಯ ವಿವಿಧ ಸೆಕ್ಷನ್&zwnj;ಗಳಡಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ಎನ್&zwnj;ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಅರಾಫತ್&zwnj; ಅಲಿಗೆ ಎನ್&zwnj;ಐಎ ವಿಶೇಷ ನ್ಯಾಯಾಲಯ ಇದೀಗ 6 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 47 ಸಾವಿರ ರು. ದಂಡ ವಿಧಿಸಿದೆ.&lt;/p&gt;&lt;h2&gt;ಪ್ರಕರಣದ ಹಿನ್ನೆಲೆ:&lt;/h2&gt;&lt;p&gt;2022ರ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಿವಮೊಗ್ಗದ ಅಮೀರ್ ಅಹಮದ್&zwnj; ವೃತ್ತದಲ್ಲಿ ವೀರ್&zwnj; ಸಾವರ್ಕರ್&zwnj; ಬ್ಯಾನರ್&zwnj; ಹಾಕುವಾಗ ನಡೆದ ಜಗಳದ ವೇಳೆ ದುಷ್ಕರ್ಮಿಗಳು ಪ್ರೇಮ್&zwnj; ಸಿಂಗ್&zwnj; ಎಂಬಾತನಿಗೆ ಚಾಕುವಿನಿಂದ ಇರಿದಿದ್ದರು. ಈ ಸಂಬಂಧ ಜಬೀವುಲ್ಲಾ, ತನ್ವೀರ್ ಅಹಮ್ಮದ್&zwnj;, ನದೀಮ್ ಫೈಜಲ್&zwnj; ಸೇರಿ ಕೆಲವರನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಶಂಕಿತ ಉಗ್ರರ ಬಗ್ಗೆ ಮಾಹಿತಿ ಸಿಕ್ಕಿತ್ತು.&lt;/p&gt;&lt;h3&gt;ತುಂಗಾ ನದಿ ತಟದಲ್ಲಿ ಬಾಂಬ್&zwnj; ಬ್ಲಾಸ್ಟ್&zwnj;:&lt;/h3&gt;&lt;p&gt;ಆರೋಪಿ ಜಬೀವುಲ್ಲಾಗೆ ತೀರ್ಥಹಳ್ಳಿಯ ಶಾರೀಕ್&zwnj; ಗಲಾಟೆ ಎಬ್ಬಿಸಲು ಪ್ರಚೋದನೆ ನೀಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮುಂದುವರೆದ ತನಿಖೆಯಲ್ಲಿ ಶಿವಮೊಗ್ಗದ ಸೈಯ್ಯದ್ ಯಾಸೀನ್, ಮಂಗಳೂರಿನ ನಿವಾಸಿ ಮಾಝ್ ಹಾಗೂ ತೀರ್ಥಹಳ್ಳಿಯ ಶಾರೀಕ್ ಸೇರಿಕೊಂಡು ಬಾಂಬ್ ತಯಾರಿಸಿ ತುಂಗಾ ನದಿಯ ತಟದಲ್ಲಿ ಪ್ರಾಯೋಗಿಕವಾಗಿ ಸ್ಫೋಟಿಸಿರುವುದು ಮತ್ತು ತ್ರಿವರ್ಣ ಧ್ವಜ ಸುಟ್ಟಿರುವ ವಿಚಾರವೂ ಬಯಲಾಗಿತ್ತು.&lt;/p&gt;&lt;p&gt;ಈ ಸಂಬಂಧ ಎನ್&zwnj;ಐಎ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಆರೋಪಿಗಳು ರಾಜ್ಯದಲ್ಲಿ ಐಸಿಸ್&zwnj; ಉಗ್ರ ಚಟುವಟಿಕೆಗಳನ್ನು ವಿಸ್ತರಿಸಲು ಮತ್ತು ವಿಧ್ವಂಸಕ ಕೃತ್ಯಗಳು, ಹಿಂಸಾಚಾರ ನಡೆಸಲು ಸಂಚು ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿತ್ತು. ಬಳಿಕ ಎನ್&zwnj;ಐಎ ಅಧಿಕಾರಿಗಳು ಒಬ್ಬೊಬ್ಬರೇ ಶಂಕಿತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್&zwnj; ಸ್ಫೋಟದ ಪ್ರಮುಖ ಆರೋಪಿ ಶಾರಿಕ್&zwnj;ಗೂ ಅರಾಫತ್&zwnj; ಅಲಿಗೂ ನಂಟಿರುವುದು ತನಿಖೆಯಲ್ಲಿ ಬಯಲಾಗಿತ್ತು.&lt;/p&gt;&lt;p&gt;&lt;strong&gt;ದೆಹಲಿ ಏರ್&zwnj;ಪೋರ್ಟ್&zwnj;ನಲ್ಲಿ ಬಂಧನ:&lt;/strong&gt;&lt;/p&gt;&lt;p&gt;ಐಸಿಸ್&zwnj; ಉಗ್ರ ಸಂಘಟನೆಗೆ ಸೇರಿದ್ದ ತೀರ್ಥಹಳ್ಳಿಯ ಅರಾಫತ್&zwnj; ಅಲಿ ಬಂಧನ ಭೀತಿಯಿಂದ 2020ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2023ರ ಸೆ.14ರಂದು ಕೀನ್ಯಾದ ನೈರೋಬಿಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅರಾಫತ್&zwnj; ಅಲಿಯನ್ನು ಎನ್&zwnj;ಐಎ ಅಧಿಕಾರಿಗಳು ಬಂಧಿಸಿದ್ದರು. ನಿಷೇಧಿತ ಐಸಿಸ್&zwnj; ಉ್ರಗ ಸಂಘಟನೆ ಸದಸ್ಯನಾಗಿದ್ದ ಅರಾಫತ್&zwnj; ಅಲಿ ಭಾರತದ ನೆಲದಲ್ಲಿ ಹಿಂಸಾತ್ಮಕ ಭಯೋತ್ಪಾದಕ ಸಿದ್ಧಾಂತ ಪ್ರಚಾರ ಮಾಡುವ ಕ್ರಿಮಿನಲ್&zwnj; ಪಿತೂರಿಯಲ್ಲಿ ಭಾಗಿಯಾಗಿದ್ದ. ಶಿವಮೊಗ್ಗ ಐಸಿಸ್ ಭಯೋತ್ಪಾದನಾ ಘಟಕಕ್ಕೆ ಯುವಕರನ್ನು ಸೆಳೆದು ಇಸ್ಲಾಂ ಮೂಲಭೂತವಾದ ಭೋದಿಸುತ್ತಿದ್ದ. ಐಸಿಸ್&zwnj; ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದ ಎಂಬುದು ಎನ್&zwnj;ಐಎ ತನಿಖೆಯಲ್ಲಿ ಬಯಲಾಗಿತ್ತು.&lt;/p&gt;&lt;p&gt;&lt;strong&gt;ಉಗ್ರ ಸಂಘಟನೆಗಳಿಗೆ ಬೆಂಬಲ:&lt;/strong&gt;&lt;/p&gt;&lt;p&gt;ಐಸಿಸ್ ಮತ್ತು ಲಷ್ಕರ್-ಎ-ತೊಯ್ಬಾ ಸೇರಿ ಇತರ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ಸಲುವಾಗಿ ಮಂಗಳೂರು ನಗರದಲ್ಲಿ ಪ್ರಚೋದನಾಕಾರಿ ಗೀಚುಬರಹಗಳನ್ನು ಕೆತ್ತಲು ಇತರೆ ಆರೋಪಿಗಳಿಗೆ ಪ್ರಚೋದನೆ ಮತ್ತು ಪ್ರೇರೇಪಿಸಿದ್ದ. ವಿವಿಧ ಧರ್ಮಗಳ ಜನರಲ್ಲಿ ದ್ವೇಷ ಬಿತ್ತುವುದು, ಸಮಾಜದ ಶಾಂತಿ ಕದಡುವ ಗುರಿ ಹೊಂದಿದ್ದರು. ಅರಾಫತ್&zwnj; ಅಲಿ ಐಸಿಸ್ ಆನ್&zwnj;ಲೈನ್&zwnj; ಹ್ಯಾಂಡ್ಲರ್&zwnj; ಜೊತೆ ಸಂಪರ್ಕದಲ್ಲಿದ್ದ. ಶಿವಮೊಗ್ಗ ಭಯೋತ್ಪಾದನಾ ಘಟಕಕ್ಕೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣಕಾಸು ಒದಗಿಸುತ್ತಿದ್ದ ವಿಚಾರ ಎನ್&zwnj;ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/thirthahalli-trial-blast-case-6-years-jail-for-isis-conspirator-arafat-ali-rav/articleshow-0co27d9"/>
        </item>
        <item>
            <title><![CDATA[ಕಾಂಗ್ರೆಸ್‌ ಸರ್ಕಾರ ಮಹಿಳಾ ಮೀಸಲಾತಿ ವಿರೋಧಿ ಪಕ್ಷ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ]]></title>
            <link>https://kannada.asianetnews.com/karnataka-districts/ks-eshwarappa-slams-congress-women-reservation-bill-karnataka-gvd/articleshow-1gbgnoi</link>
            <guid isPermaLink="true">https://kannada.asianetnews.com/karnataka-districts/ks-eshwarappa-slams-congress-women-reservation-bill-karnataka-gvd/articleshow-1gbgnoi</guid>
            <pubDate>Thu, 23 Apr 2026 00:25:27 +0530</pubDate>
            <description><![CDATA[&lt;p&gt;60 ವರ್ಷ ಆಡಳಿತ ನಡೆಸಿದರೂ ಮಹಿಳಾ ಮೀಸಲಾತಿ ಕಲ್ಪಿಸಲಾಗದ ಕಾಂಗ್ರೆಸ್ ಈಗ ಪ್ರಧಾನಿ ಮೋದಿಯವರಿಗೂ ಇದನ್ನು ಜಾರಿಗೆ ತರಲು ಬಿಡಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kms072ysmz8zjcb80ms8j7ye,imgname-ks-eshwarappa--1774660586457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.23): &lt;/strong&gt;60 ವರ್ಷ ಆಡಳಿತ ನಡೆಸಿದರೂ ಮಹಿಳಾ ಮೀಸಲಾತಿ ಕಲ್ಪಿಸಲಾಗದ ಕಾಂಗ್ರೆಸ್ ಈಗ ಪ್ರಧಾನಿ ಮೋದಿಯವರಿಗೂ ಇದನ್ನು ಜಾರಿಗೆ ತರಲು ಬಿಡಲಿಲ್ಲ. ಕಾಂಗ್ರೆಸ್ ಎಲ್ಲಾ ಕಾಲದಲ್ಲೂ ಮಹಿಳಾ ಮೀಸಲಾತಿ ವಿರೋಧಿಸುತ್ತಾ ಬಂದಿರುವುದು ಈಗ ಸ್ಪಷ್ಟವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಲೋಕಸಭೆಯಲ್ಲಿ ನಾರೀಶಕ್ತಿ ವಂದನಾ ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸೋಲಿಸುವ ಮೂಲಕ ತಾವು ಮಹಿಳಾ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿವೆ ಎಂದು ಆರೋಪಿಸಿದರು.&lt;/p&gt;&lt;p&gt;ಈ ಹಿಂದೆ ವಾಜಪೇಯಿ ಸರ್ಕಾರವಿದ್ದಾಗಲೂ ಈ ಮಸೂದೆ ಮಂಡಿಸಲಾಗಿತ್ತು. ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ ವಾಗಿತ್ತು. ಆದರೆ ಲೋಕಸಭೆಯಲ್ಲಿ ಮಸೂದೆ ಮಂಡಿಸದೇ ಕಾಂಗ್ರೆಸ್ ದೇಶದ ಮಹಿಳೆಯರಿಗೆ ಅನ್ಯಾಯ ಮಾಡಿತ್ತು. ಈಗಲೂ ಅದನ್ನೇ ಮಾಡಿದೆ. ಕಾಯ್ದೆಯಲ್ಲಿ ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎನ್ನುವುದು ಸಂವಿಧಾನಕ್ಕೆ ವಿರೋಧ. ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ ಎಂದು ಸಂವಿಧಾನವೇ ಹೇಳುತ್ತಿದೆ. ಆದರೂ ಮುಸ್ಲಿಮರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ ಎಂದು ದೂರಿದರು.&lt;/p&gt;&lt;p&gt;ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಎರಡನ್ನೂ ಒಟ್ಟಿಗೆ ತಂದಿದ್ದರಿಂದ ನಾವು ಇದನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದರೆ ಮತಕ್ಕೆ ಹಾಕಿದ್ದು ಮಹಿಳಾ ಮೀಸಲಾತಿ ಮಾತ್ರ. ಆದರೂ ಕಾಂಗ್ರೆಸ್ ಇದನ್ನು ಬೆಂಬಲಿಸಲಿಲ್ಲ ಮತ್ತು ಕ್ಷೇತ್ರ ಮರುವಿಂಗಡಣೆಯಾದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಕಾಂಗ್ರೆಸ್ ಮತ್ತೊಂದು ಸುಳ್ಳು ಹೇಳುತ್ತದೆ. ಈಗಾಗಲೇ ಒಟ್ಟಾರೆ ಶೇ.50ರಷ್ಟು ಹೆಚ್ಚಳವಾಗಬೇಕು ಎಂದಿದೆ. ಅದರಂತೆ ಕರ್ನಾಟಕದಲ್ಲಿ 28 ಇದ್ದ ಸಂಸದರ ಕ್ಷೇತ್ರ 42ಕ್ಕೆ ಏರಿಕೆಯಾಗಲಿದೆ. ಇದು ಕಾಂಗ್ರೆಸಿಗರಿಗೆ ಅರ್ಥವಾಗುತ್ತಿಲ್ಲ ಎಂದರು.&lt;/p&gt;&lt;p&gt;ಒಟ್ಟಾರೆ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ವಿಂಗಡಣೆ ಮಸೂದೆ ಯಾವುದೇ ರಾಜಕೀಯ ಉದ್ದೇಶಗಳನ್ನು ಈಡೇರಿಸಿ ಕೊಳ್ಳಲು ಸರ್ಕಾರ ಮಾಡುತ್ತಿರುವ ಪ್ರಕ್ರಿಯೆಗಳಲ್ಲ. ಬದಲಾಗಿ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಗೊಳಿಸುವ ನಿರ್ಧಾರ. ಕಾಂಗ್ರೆಸ್ ಪಕ್ಷ ಕ್ಷುಲ್ಲಕ ಕಾರಣ ನೀಡಿ ಈ ಐತಿಹಾಸಿಕ ಬದಲಾವಣೆಗೆ ತಡೆಯೊಡ್ಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಎಂದರು.&lt;/p&gt;&lt;h2&gt;&lt;strong&gt;ಆರ್&zwnj;ಎಸ್&zwnj;ಎಸ್&zwnj;ನ್ನು ನಿಂದಿಸಿದರೆ ಎಂದಿಗೂ ಉದ್ಧಾರವಾಗಲ್ಲ&lt;/strong&gt;&lt;/h2&gt;&lt;p&gt;ಕಾಂಗ್ರೆಸ್&zwnj;ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರ್&zwnj;ಎಸ್&zwnj;ಎಸ್&zwnj;ನ್ನು ವಿಷ ಜಂತುವಿಗೆ ಹೋಲಿಸಿದ್ದಾರೆ. ಅಷ್ಟೇ ಅಲ್ಲ, ಜಗತ್ತೇ ಮೆಚ್ಚುವ ಪ್ರಧಾನಿ ಮೋದಿ ಬಗ್ಗೆ ಹದ್ದು ಮೀರಿ ಮಾತನಾಡಿದ್ದಾರೆ. ಇದು ತೀರಾ ಖಂಡನೀಯ. ಯಾರೇ ಆಗಲಿ ಆರ್&zwnj;ಎಸ್&zwnj;ಎಸ್&zwnj;ನ್ನು ವಿರೋಧಿಸಿದರೆ ಅವರು ಎಂದಿಗೂ ಉದ್ಧಾರವಾಗಲ್ಲ ಎಂದರು. ಖರ್ಗೆಯವರಾದರೂ ಕೂಡಾ ತಪ್ಪನ್ನು ತಿದ್ದಿಕೊಂಡಿದ್ದಾರೆ. ಆದರೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರ್&zwnj;ಎಸ್&zwnj;ಎಸ್ ಬಗ್ಗೆ ಖರ್ಗೆ ಹೇಳಿದ ಮಾತನ್ನು ನಾನು ಸಮರ್ಥಿಸಿಕೊಳ್ಳುತ್ತೇನೆ ಎಂದಿದ್ದಾರೆ.&lt;/p&gt;&lt;p&gt;ಕಿಮ್ಮನೆಯವರಿಗೆ ಗೊತ್ತಿರಲಿ, ಆರ್&zwnj;ಎಸ್&zwnj;ಎಸ್ ಬಹುದೊಡ್ಡ ಸಂಘಟನೆ ಮತ್ತು ಮೋದಿ ಆಕಾಶದಲ್ಲಿರುವ ಸೂರ್ಯನಂತೆ, ಆ ಸೂರ್ಯನಿಗೆ ಉಗುಳಿದರೆ ತನ್ನ ಮೈಮೇಲೆಯೇ ಚೆಲ್ಲುತ್ತದೆ. ಇದನ್ನು ಕಿಮ್ಮನೆ ರತ್ನಾಕರ್ ಅರ್ಥಮಾಡಿಕೊಳ್ಳಲಿ ಎಂದ ಅವರು ಕಿಮ್ಮನೆ ರತ್ನಾಕರ್ ಆರ್&zwnj;ಎಸ್&zwnj;ಎಸ್ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಜೊತೆ ಚರ್ಚೆಗೆ ಸಿದ್ಧ ಎಂದಿದ್ದಾರೆ. ನಾನು ಅವರೊಂದಿಗೆ ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ks-eshwarappa-slams-congress-women-reservation-bill-karnataka-gvd/articleshow-1gbgnoi"/>
        </item>
        <item>
            <title><![CDATA[ಎರಡು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ: ಕೆ.ಎಸ್.ಈಶ್ವರಪ್ಪ  ಭವಿಷ್ಯ]]></title>
            <link>https://kannada.asianetnews.com/karnataka-districts/ks-eshwarappa-predicts-big-changes-in-karnataka-politics-congress-gvd/articleshow-2eai4kf</link>
            <guid isPermaLink="true">https://kannada.asianetnews.com/karnataka-districts/ks-eshwarappa-predicts-big-changes-in-karnataka-politics-congress-gvd/articleshow-2eai4kf</guid>
            <pubDate>Tue, 14 Apr 2026 17:07:50 +0530</pubDate>
            <description><![CDATA[&lt;p&gt;ಅಧಿಕಾರ ದಾಹ ಚಟುವಟಿಕೆಗಳಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್&zwnj; ಮುಖಂಡರ ನಡೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಎರಡು ತಿಂಗಳ ಒಳಗಾಗಿ ಸಾಕಷ್ಟು ಬದಲಾವಣೆಗಳಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gft5svwrs98nj1eg2sc4rcsg,imgname-ishwarappa.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.14): &lt;/strong&gt;ಅಧಿಕಾರ ದಾಹ ಚಟುವಟಿಕೆಗಳಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್&zwnj; ಮುಖಂಡರ ನಡೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಎರಡು ತಿಂಗಳ ಒಳಗಾಗಿ ಸಾಕಷ್ಟು ಬದಲಾವಣೆಗಳಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.&lt;/p&gt;&lt;p&gt;ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಮಸ್ಯೆಗಳಿದ್ದರೂ ಸಹ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ಉಳಿಸಿಕೊಳ್ಳಲು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಮುಸುಕಿನ ಗುದ್ದಾಟ ನಡೆಸುತ್ತಿದ್ದಾರೆ. ಇನ್ನೊಂದೆಡೆ ಹಲವಾರು ಶಾಸಕರು ಸಚಿವರಾಗಲು ಹಾತೊರೆಯುತ್ತಿದ್ದು, ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಇಡೀ ರಾಜ್ಯದಲ್ಲಿ ಆಡಳಿತ, ಅಭಿವೃದ್ಧಿ ನೋಡಬೇಕಾದವರು ಇಂತಹ ಕಚ್ಚಾಟದಲ್ಲಿ ತೊಡಗಿದರೆ ಅಭಿವೃದ್ಧಿ ಸಾಧ್ಯವಾಗುವುದಾದರೂ ಹೇಗೆ ಎಂದು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಕೈ ಬಿಡುವ ಆತಂಕ&lt;/strong&gt;&lt;/h2&gt;&lt;p&gt;ದಾವಣಗೆರೆ ಉಪಚುನಾವಣೆಯಿಂದ ಮುಸ್ಲಿಂ ಸಮುದಾಯದವರಲ್ಲಿ ಗೊಂದಲ ಉಂಟಾಗಿದೆ. ಆ ಧರ್ಮದ ನಾಯಕರುಗಳಲ್ಲಿ ಕಚ್ಚಾಟ ನಡೆಯುತ್ತಿದೆ. ಮುಸ್ಲಿಂರ ಓಟನ್ನೆ ನೆಚ್ಚಿಕೊಂಡಿದ್ದ ಕಾಂಗ್ರೆಸ್&zwnj; ಗೆ ಈಗಿನ ಬೆಳವಣಿಗೆಯಿಂದ ಆ ಸಮುದಾಯದ ಮತಗಳು ಕೈ ಬಿಡುವ ಆತಂಕ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್&zwnj; ಪಕ್ಷ ಅಸ್ತಿತ್ವದಲ್ಲಿ ಉಳಿಯುವುದೇ ಸಂಶಯ ಎಂದರು.&lt;/p&gt;&lt;p&gt;ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುತ್ತಿರುವುದು ಸ್ವಾಗತಿಸಿದ ಅವರು ಮಹಿಳೆಯರು ಆಡಳಿತಲ್ಲಿ ಸೈ ಎನಿಸಿಕೊಂಡ ಉದಾಹರಣೆಗಳು ನಮ್ಮ ಇತಿಹಾಸದಲ್ಲಿದೆ. ಇಂದಿರಾ ಗಾಂಧಿ, ಸುಷ್ಮಾ ಸ್ವರಾಜ್ ಸೇರಿದಂತೆ ಹಲವರು ಇದಕ್ಕೆ ಉದಾಹರಣೆ ಎಂದು ಹೇಳಿದರು. ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನಕ್ಕೆ ಈಶ್ವರಪ್ಪ ಸಂತಾಪ ಸೂಚಿಸಿದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ks-eshwarappa-predicts-big-changes-in-karnataka-politics-congress-gvd/articleshow-2eai4kf"/>
        </item>
        <item>
            <title><![CDATA[ಸರ್ಕಾರಿ ಶಾಲೆಗಳು ಅಮೃತ ಮಹೋತ್ಸವ ಆಚರಿಸಿಕೊಳ್ಳುವುದು ಸಂತಸದ ಸಂಗತಿ]]></title>
            <link>https://kannada.asianetnews.com/karnataka-districts/celebration-of-amrit-mahotsav-by-government-schools-is-a-matter-of-pride-araga-jnanendra/articleshow-2qgbrwn</link>
            <guid isPermaLink="true">https://kannada.asianetnews.com/karnataka-districts/celebration-of-amrit-mahotsav-by-government-schools-is-a-matter-of-pride-araga-jnanendra/articleshow-2qgbrwn</guid>
            <pubDate>Mon, 13 Apr 2026 20:39:47 +0530</pubDate>
            <description><![CDATA[&lt;p&gt;ಖಾಸಗಿ ಶಾಲೆಗಳ ಅಬ್ಬರದ ನಡುವೆ ಸರ್ಕಾರಿ ಶಾಲೆಗಳು ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಿಕೊಳ್ಳುವುದು ಸಂತಸದ ಸಂಗತಿ. ಸರ್ಕಾರಿ ಶಾಲೆಗಳು ಉಳಿದಾಗ ಮಾತ್ರ ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp3nv8nkmcp9c750cxy3r6y7,imgname-school-1776092553906.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸನಗರ: &lt;/strong&gt;ಖಾಸಗಿ ಶಾಲೆಗಳ ಅಬ್ಬರದ ನಡುವೆ ಸರ್ಕಾರಿ ಶಾಲೆಗಳು ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಿಕೊಳ್ಳುವುದು ಸಂತಸದ ಸಂಗತಿ. ಸರ್ಕಾರಿ ಶಾಲೆಗಳು ಉಳಿದಾಗ ಮಾತ್ರ ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.&lt;/p&gt;&lt;h2&gt;ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ&lt;/h2&gt;&lt;p&gt;ತಾಲೂಕಿನ ಸಂಪೆಕಟ್ಟೆ ಸಮೀಪದ ಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೊಸೂರು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳು ಎಂಬ ಕೀಳರಿಮೆ ಪಾಲಕರಿಂದ ದೂರವಾದಾಗ ಮಾತ್ರ ಸರ್ಕಾರಿ ಶಾಲೆಗಳು ಉಳಿದು ಬೆಳೆಯಲು ಸಾಧ್ಯವಾಗಲಿದೆ ಎಂದರು.&lt;/p&gt;&lt;h3&gt;ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಎಲ್ಲಾ ಸೌಕರ್ಯಗಳು ಲಭ್ಯವಿವೆ&lt;/h3&gt;&lt;p&gt;ಇಂದು ಸರ್ಕಾರಿ ಶಾಲೆಗಳಲ್ಲಿಯೂ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಎಲ್ಲಾ ಸೌಕರ್ಯಗಳು ಲಭ್ಯವಿವೆ. ಹೀಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಮುಂದೆ ಬರಬೇಕು. ತಾವು ಓದುವ ಸಂದರ್ಭದಲ್ಲಿ ಯಾವುದೇ ಸೌಕರ್ಯಗಳು ಇರಲಿಲ್ಲ. ಆದರೆ ಇಂದಿನ ಮಕ್ಕಳಿಗೆ ಎಲ್ಲಾ ರೀತಿಯ ಸೌಕರ್ಯಗಳು ಸಿಗುತ್ತಿದ್ದು, ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.&lt;/p&gt;&lt;p&gt;ಹಿಂದೆ ಶೇಕಡ 35 ರಷ್ಟು ಅಂಕ ಪಡೆದು ತೇರ್ಗಡೆಗೊಂಡರೆ ಸಾಕು ಎನ್ನುವ ಸ್ಥಿತಿಯಿತ್ತು. ಆದರೆ ಇಂದು ಕಾಲ ಬದಲಾಗಿದೆ ಮಕ್ಕಳು ಶೇಕಡ 98 ರಷ್ಟು ಅಂಕ ಪಡೆದರು ಅವರಿಗೆ ಸಮಾಧಾನವೇ ಇಲ್ಲವಾಗಿದೆ ಎಂದು ಹೇಳಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಎಸ್ ಡಿಎಂಸಿ ಅಧ್ಯಕ್ಷ ಕೆ.ವಿ.ಶ್ರೀಧರ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ನಾಗಪ್ಪ ಕೊಟ್ಟಿಗೆಮನೆ, ಶಾಲೆಯ ಮುಖ್ಯ ಶಿಕ್ಷಕಿ ಗಾಯತ್ರಿ ಶೆಣೈ, ಪ್ರಮುಖರಾದ ಕೆ.ಕುಮಾರ್, ಎನ್.ಎಂ ಸತ್ಯನಾರಾಯಣ, ವೈ. ಗಣಪತಿ, ನವೀನ್ ಮತ್ತಿತರರಿದ್ದರು.&lt;/p&gt;]]></content:encoded>
            <category>shivamogga</category>
            <dc:creator>Sujatha NR</dc:creator>
            <atom:link href="https://kannada.asianetnews.com/karnataka-districts/celebration-of-amrit-mahotsav-by-government-schools-is-a-matter-of-pride-araga-jnanendra/articleshow-2qgbrwn"/>
        </item>
        <item>
            <title><![CDATA[Shivamogga: ನಾನ್‌ವೆಜ್ ತಿನ್ನೋವಾಗ ಗಂಟಲಿನಲ್ಲಿ ಮೂಳೆ ಸಿಲುಕಿ ಪ್ರಾಣಬಿಟ್ಟ 21 ವರ್ಷದ ಯುವಕ]]></title>
            <link>https://kannada.asianetnews.com/gallery/karnataka-districts/shivamogga-21-year-old-sachin-dies-after-chicken-bone-gets-stuck-in-throat-while-eating-non-veg-mrq-5hpdnad</link>
            <guid isPermaLink="true">https://kannada.asianetnews.com/gallery/karnataka-districts/shivamogga-21-year-old-sachin-dies-after-chicken-bone-gets-stuck-in-throat-while-eating-non-veg-mrq-5hpdnad</guid>
            <pubDate>Sat, 18 Apr 2026 16:30:33 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಚೆನ್ನಹಳ್ಳಿ ಗ್ರಾಮದಲ್ಲಿ, ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 21 ವರ್ಷದ ಸಚಿನ್ ಎಂಬ ಯುವಕ ಮೃತಪಟ್ಟಿದ್ದಾನೆ. ನಾನ್&zwnj;ವೆಜ್ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpg3mrx4nsfg5sn1m7jr9he4,imgname-shivamogga-death-1776509674404.jpg" type="image/jpeg" height="390" width="690"/>
            <content:encoded><![CDATA[ಶಿವಮೊಗ್ಗ ಜಿಲ್ಲೆಯ ಚೆನ್ನಹಳ್ಳಿ ಗ್ರಾಮದಲ್ಲಿ, ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 21 ವರ್ಷದ ಸಚಿನ್ ಎಂಬ ಯುವಕ ಮೃತಪಟ್ಟಿದ್ದಾನೆ. ನಾನ್&zwnj;ವೆಜ್ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;img&gt;&lt;p&gt;21 ವರ್ಷದ ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ನಾನ್&zwnj;ವೆಜ್ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಯುವಕನ ಜೀವ ಹೋಗಿದೆ ಎಂದು ಹೇಳಲಾಗುತ್ತಿದೆ.&lt;/p&gt;&lt;img&gt;&lt;p&gt;ಏಪ್ರಿಲ್ 17ರಂದು ಚೆನ್ನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ರಾತ್ರಿ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಗ್ರಾಮಸ್ಥರೊಂದಿಗೆ ಸಚಿನ್ ಸಹ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದನು. ಪಾರ್ಟಿಯಲ್ಲಿ ಮಾಂಸದಡುಗೆಯನ್ನು ಸಿದ್ಧಪಡಿಸಲಾಗಿತ್ತು.&lt;/p&gt;&lt;img&gt;&lt;p&gt;ರಾತ್ರಿ ಪಾರ್ಟಿ ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದರು. ಆದ್ರೆ ಸಚಿನ್ ಮಾತ್ರ ನಿರ್ಮಾಣ ಹಂತದ ಕಟ್ಟದಲ್ಲಿಯೇ ಇದ್ದನು ಎಂದು ಹೇಳಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಅಂದ್ರೆ ಏಪ್ರಿಲ್ 18ರಂದು ಕಟ್ಟಡ ಕಾರ್ಮಿಕರು ಆಗಮಿಸಿದಾಗ ಸಚಿನ್ ಶವ ಪತ್ತೆಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನಾನು ರಾಜಾ ಮಾನ್ಸಿಂಗ್! ಅಕ್ಬರನ ನಿಷ್ಠಾವಂತ ಸೈನಿಕ, ಶೀಲಾ ದೇವಿಯ ರಹಸ್ಯ ಗೊತ್ತು.. ಪುನರ್ಜನ್ಮದ ಕಥೆ ಹೇಳಿದ ಬಾಲಕ!&lt;/strong&gt;&lt;/p&gt;&lt;img&gt;&lt;p&gt;ಕೂಡಲೇ ಕಟ್ಟಡ ಕಾರ್ಮಿಕರು ಸಚಿನ್ ಕುಟುಂಬಸ್ಥರಿಗೂ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಶಿಫ್ಟ್ ಮಾಡಿದ್ದಾರೆ. ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಮೃತಪಟ್ಟಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ &amp;nbsp;ಓದಿ: &lt;/strong&gt;&lt;strong&gt;ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು ; ಈ ಬಾರಿ ಸಮಯ ರಾತ್ರಿ 8 ಗಂಟೆ ಅಲ್ಲ, 8.30 ಯಾಕೆ?&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/shivamogga-21-year-old-sachin-dies-after-chicken-bone-gets-stuck-in-throat-while-eating-non-veg-mrq-5hpdnad"/>
        </item>
        <item>
            <title><![CDATA[ಶಿವಮೊಗ್ಗ ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿ ಜೀವಂತ ಸಮಾಧಿಯಾದ ಮೂವರು ಕಾರ್ಮಿಕರು!]]></title>
            <link>https://kannada.asianetnews.com/karnataka-districts/shivamogga-hulikal-ghat-landslide-three-workers-dead-retaining-wall-collapse-sat/articleshow-68ptai1</link>
            <guid isPermaLink="true">https://kannada.asianetnews.com/karnataka-districts/shivamogga-hulikal-ghat-landslide-three-workers-dead-retaining-wall-collapse-sat/articleshow-68ptai1</guid>
            <pubDate>Thu, 09 Apr 2026 20:45:02 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್&zwnj;ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರಂತದಿಂದ ಮಲೆನಾಡು-ಕರಾವಳಿ ಸಂಪರ್ಕಿಸುವ ಪ್ರಮುಖ ಮಾರ್ಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knscsb0sfqht0rzfac7nmfb6,imgname-shivamogga-hulkal-ghat-landslide--1--1775747509261.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.09): ಜಿ&lt;/strong&gt;ಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಹುಲಿಕಲ್ ಘಾಟ್ ರಸ್ತೆಯ ಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ದಿಢೀರನೆ ಗುಡ್ಡ ಕುಸಿದ ಪರಿಣಾಮ, ಮಣ್ಣಿನಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯಿಂದಾಗಿ ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಹಾದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಹೊಸನಗರ ತಾಲೂಕಿನ ಹುಲಿಕಲ್ ಘಾಟ್&zwnj;ನಲ್ಲಿ ವಾಹನ ಸವಾರರ ಸುರಕ್ಷತೆಗಾಗಿ ತಡೆಗೋಡೆ (Retaining Wall) ನಿರ್ಮಾಣದ ಕೆಲಸ ನಡೆಯುತ್ತಿತ್ತು. ಗುತ್ತಿಗೆದಾರ ಚಂದ್ರಶೇಖರ್ ಎಂಬುವವರ ನೇತೃತ್ವದಲ್ಲಿ ಈ ಕಾಮಗಾರಿ ಪ್ರಗತಿಯಲ್ಲಿತ್ತು. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಮೇಲ್ಭಾಗದಿಂದ ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ದಿಢೀರನೆ ಕುಸಿದಿವೆ. ಈ ವೇಳೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ತಪ್ಪಿಸಿಕೊಳ್ಳಲು ಸಮಯ ಸಿಗದೆ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದಾರೆ.&lt;/p&gt;&lt;h2&gt;&lt;strong&gt;ಮೂವರು ಕಾರ್ಮಿಕರ ಸಾವು:&lt;/strong&gt;&lt;/h2&gt;&lt;p&gt;ಗುಡ್ಡ ಕುಸಿತದ ತೀವ್ರತೆಗೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರ ವಿವರಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಸ್ಥಳೀಯರು ಮತ್ತು ಸಹ ಕಾರ್ಮಿಕರು ಮಣ್ಣನ್ನು ತೆರವುಗೊಳಿಸಿ ರಕ್ಷಣೆಗೆ ಮುಂದಾದರಾದರೂ, ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಇದೇ ಘಟನೆಯಲ್ಲಿ ಹಲವು ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಕುಂದಾಪುರ ಹಾಗೂ ಉಡುಪಿಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಮಳೆ ಅಥವಾ ಮಣ್ಣಿನ ಸಡಿಲಿಕೆಯಿಂದಾಗಿ ಈ ದುರಂತ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.&lt;/p&gt;&lt;h3&gt;&lt;strong&gt;ಸ್ಥಳಕ್ಕೆ ಪೊಲೀಸರ ಭೇಟಿ:&lt;/strong&gt;&lt;/h3&gt;&lt;p&gt;ಘಟನೆ ನಡೆದ ತಕ್ಷಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಅಥವಾ ನಿರ್ಲಕ್ಷ್ಯ ವಹಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಗುತ್ತಿಗೆದಾರರಿಂದ ಮಾಹಿತಿ ಪಡೆಯಲಾಗುತ್ತಿದೆ. ಹುಲಿಕಲ್ ಘಾಟ್ ದಟ್ಟವಾದ ಕಾಡು ಮತ್ತು ಕಡಿದಾದ ಗುಡ್ಡಗಳಿಂದ ಕೂಡಿದ ಪ್ರದೇಶವಾಗಿದೆ. ಇಲ್ಲಿ ಸಣ್ಣ ಮಳೆಯಾದರೂ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ಅತಿಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ನಡೆಸುವಾಗ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯವಿರುತ್ತದೆ. ಈ ಘಟನೆಯ ನಂತರ ಘಾಟ್ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಕಾರ್ಮಿಕರ ಸಾವು ಅವರ ಕುಟುಂಬಗಳಿಗೆ ಬರಸಿಡಿಲು ಬಡಿದಂತಾಗಿದೆ. ದಿನಗೂಲಿ ನಂಬಿ ಹೊಟ್ಟೆ ಹೊರೆಯುತ್ತಿದ್ದ ಇವರ ಬದುಕು ಈಗ ಕತ್ತಲಿಗೆ ಸರಿದಿದೆ. ಮೃತ ಕಾರ್ಮಿಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸಹ ಕಾರ್ಮಿಕರು ಆಗ್ರಹಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಘಟನಾ ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಹಾಗೂ ತನಿಖೆಯನ್ನು ಮುಂದುವರಿಸಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-hulikal-ghat-landslide-three-workers-dead-retaining-wall-collapse-sat/articleshow-68ptai1"/>
        </item>
        <item>
            <title><![CDATA[ಕಾಂಗ್ರೆಸ್ ಏನೇ ಪುಂಗಿ ಬಾರಿಸಿದರೂ 2 ಕ್ಷೇತ್ರದಲ್ಲಿ ಬಿಜೆಪಿಯೇ ಗೆಲ್ಲುವುದು; ವಿಜಯೇಂದ್ರ ವಾಗ್ದಾಳಿ]]></title>
            <link>https://kannada.asianetnews.com/politics/karnataka-bypolls-bjp-will-win-both-davanagere-bagalkote-predicts-by-vijayendra-rav/articleshow-6t8e44y</link>
            <guid isPermaLink="true">https://kannada.asianetnews.com/politics/karnataka-bypolls-bjp-will-win-both-davanagere-bagalkote-predicts-by-vijayendra-rav/articleshow-6t8e44y</guid>
            <pubDate>Wed, 15 Apr 2026 07:12:46 +0530</pubDate>
            <description><![CDATA[&lt;p&gt;ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ. ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jqt8s7et6wcqxt5tk7h4aepm,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.15): &lt;/strong&gt;ಮುಖ್ಯಮಂತ್ರಿಗಳಾದಿಯಾಗಿ ಕಾಂಗ್ರೆಸ್&zwnj;ನವರು ಏನೇ ಪುಂಗಿ ಬಾರಿಸಿದರೂ ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.&lt;/p&gt;&lt;p&gt;ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ ಎಂದರು.&lt;/p&gt;&lt;p&gt;ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ. ಆಡಳಿತ ಯಂತ್ರ ಕುಸಿದಿರುವುದು ಹಾಗೂ ಮುಖ್ಯಮಂತ್ರಿಯ ಕುರ್ಚಿಗಾಗಿ ಬೀದಿ ಕಾಳಗ ನಡೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಿಕೊಂಡು ಹಿಂದುಗಳಿಗೆ ಅಪಮಾನ ಮಾಡುತ್ತಿದೆ. ಈ ಎಲ್ಲದರ ಪರಿಣಾಮ ಎರಡು ಕ್ಷೇತ್ರದಲ್ಲಿ ಬಿಜೆಪಿಗೆ ಜನ ಆಶೀರ್ವಾದ ಮಾಡಲಿದ್ದಾರೆ ಎಂದರು.&lt;/p&gt;&lt;p&gt;ಬಿಜೆಪಿ ಅಭಿವೃದ್ದಿ ಮಾಡಿಲ್ಲ ಎನ್ನುವ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದ ಮುಖ್ಯಮಂತ್ರಿಗಳಿಗೆ ನಾನು ಸವಾಲನ್ನು ಹಾಕುತ್ತೇನೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಏನು ಅಭಿವೃದ್ಧಿ ಕಾರ್ಯಗಳಾಗಿವೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ ಮೈಸೂರಿಗೆ ಏನು ಅಭಿವೃದ್ಧಿ ಕೆಲಸಗಳಾಗಿವೆ ಎಂಬುದನ್ನು ಬಹಿರಂಗಗೊಳಿಸಲಿ. ಈ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.&lt;/p&gt;&lt;p&gt;ಮೈಸೂರಿನಲ್ಲಿ ಮೈಸೂರು ಸಿಲ್ಕ್ ಸೀರೆ ಉಳಿಸಿಕೊಳ್ಳಲು ಸಿಎಂಗೆ ಆಗುತ್ತಿಲ್ಲ. ಎಂಎಸ್&zwnj;ಐಎಲ್ ಅನ್ನು ಮುಚ್ಚಿ ಅಲ್ಲೊಂದು ಸ್ಟೇಡಿಯಂ ಮಾಡಲು ಹೊರಟಿದ್ದಾರೆ. ಇವರಿಗೆ ಅಭಿವೃದ್ಧಿಯ ಮೇಲೆ ಯಾವುದೇ ಕಾಳಜಿ ಇಲ್ಲ. ಏನೇ ಭಾಷಣ ಬೀಗಿದರೂ ಮೇ 4ರಂದು ಜನ ಕೊಟ್ಟಿರುವ ಉತ್ತರ ತಿಳಿಯಲಿದೆ ಎಂದರು.&lt;/p&gt;&lt;p&gt;2028ಕ್ಕೆ ಮೈತ್ರಿ ಸರ್ಕಾರ ಎಂಬ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕಾಲ ನಿರ್ಧಾರ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ವರಿಷ್ಠರ ತೀರ್ಮಾನದಂತೆ ನಡೆಯುತ್ತದೆ. ರಾಜ್ಯ ಹಾಗೂ ಪಕ್ಷದ ಹಿತದೃಷ್ಟಿಯಿಂದ ಅವರ ನಿರ್ಧಾರವನ್ನು ಪಾಲನೆ ಮಾಡುತ್ತೇವೆ ಎಂದರು.&lt;/p&gt;&lt;p&gt;ಮಹಿಳಾ ಮೀಸಲಾತಿ ಮಸೂದೆ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿಯವರ ಇಚ್ಛಾಸಕ್ತಿ- ಸಂಕಲ್ಪ ಇದು. ಮಹಿಳೆಯರು ಶೇ.50ಕ್ಕೂ ಹೆಚ್ಚು ಇದ್ದಾರೆ. ಮಹಿಳೆಯರಿಗೆ ಸಾಮಾಜಿಕ ನ್ಯಾಯದ ಜೊತೆಗೆ ರಾಜಕೀಯ ಶಕ್ತಿ ನೀಡಲು ಹೊರಟಿದ್ದಾರೆ ಎಂದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-bypolls-bjp-will-win-both-davanagere-bagalkote-predicts-by-vijayendra-rav/articleshow-6t8e44y"/>
        </item>
        <item>
            <title><![CDATA[ಅಂಗಳದಲ್ಲಿ ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ: ಚಿಕಿತ್ಸೆ ಫಲಿಸದೆ  ಸಾವು!]]></title>
            <link>https://kannada.asianetnews.com/karnataka-districts/shivamogga-child-death-snake-bite-sagara-tragedy-gvd/articleshow-9099k52</link>
            <guid isPermaLink="true">https://kannada.asianetnews.com/karnataka-districts/shivamogga-child-death-snake-bite-sagara-tragedy-gvd/articleshow-9099k52</guid>
            <pubDate>Thu, 16 Apr 2026 20:51:32 +0530</pubDate>
            <description><![CDATA[&lt;p&gt;ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಸಾಗರ ಪಟ್ಟಣದ ಎಸ್&zwnj;ಎನ್ ನಗರದಲ್ಲಿ ನಡೆದಿದೆ. ಭವೀನ್ (2.5) ಮೃತಪಟ್ಟ ಬಾಲಕ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpbe3p2pqrwm6dfjxkq2q717,imgname-iigi-1776352876629.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.16): &lt;/strong&gt;ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಸಾಗರ ಪಟ್ಟಣದ ಎಸ್&zwnj;ಎನ್ ನಗರದಲ್ಲಿ ನಡೆದಿದೆ. ಭವೀನ್ (2.5) ಮೃತಪಟ್ಟ ಬಾಲಕ. ಮೃತ ಮಗು ಭವೀನ್ ತನ್ನ ತಂದೆ-ತಾಯಿಯೊಂದಿಗೆ ರಜೆ ಕಳೆಯಲು ಅಜ್ಜಿ ಮನೆಗೆ ಬಂದಿದ್ದನು.&lt;/p&gt;&lt;p&gt;ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಾಗರಹಾವೊಂದು ಮಗುವಿನ ಕೈಗೆ ಕಚ್ಚಿದೆ. ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮಗು ಕೊನೆಯುಸಿರೆಳೆದಿದೆ.&lt;/p&gt;&lt;h2&gt;&lt;strong&gt;ಮಧುಗಿರಿಯಲ್ಲಿ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆ&lt;/strong&gt;&lt;/h2&gt;&lt;p&gt;ಮಧುಗಿರಿ ಪಟ್ಟಣದ ಬೆಟ್ಟದ ಇಳಿಜಾರಿನ ಕಲ್ಲು ಬಂಡೆಗಳಿಂದ ಕೂಡಿದ ಬಂಡೆಯ ಬುಡದಲ್ಲಿ ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದ್ದು ಉರಗ ಪ್ರೇಮಿಗಳಿಗೆ ಕುತೂಹಲ ಹೆಚ್ಚಾಗಿದೆ ಎಂದು ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಅಧ್ಯಕ್ಷ ಬಿ.ವಿ.ಗುಂಡಪ್ಪ ತಿಳಿಸಿದ್ದಾರೆ.&lt;/p&gt;&lt;p&gt;ಇದು ರಸೆಲ್ಸ್ ಕುಕ್ರಿ ಹಾವನ್ನು ಹೋಲುತ್ತದೆಯಾದರೂ ಮೊನಚಾದ ತಲೆ,ದೇಹದ ಮೇಲಿನ ಹುರುಪೆಗಳು ಹಾಗೂ ಬಣ್ಣದ ಸಹಾಯದಿಂದ ವ್ಯತ್ಯಾಸ ತಿಳಿಯಬಹುದು. ನೀಳ ದೇಹದ ಮೇಲೆ ಮೃದುವಾದ ಹುರುಪೆಗಳು, ಬೆನ್ನಿನ ಭಾಗದಲ್ಲಿ ಗಾಡವಾದ ಬೂದು ಬಣ್ಣದ ಉಂಗುರಾಕಾರದ ರಚನೆಗಳು ದೇಹದ ಅರ್ದ ಭಾಗದವರೆಗೂ ಕಂಡುಬರುತ್ತವೆ.ದೇಹದ ನಡು ಭಾಗದಿಂದ ಬಾಲದ ತುದಿಯವರೆಗೆ ಉಂಗುರಾಕಾರದ ರಚನೆಗಳು ಕಂಡು ಬರುವುದಿಲ್ಲ.&lt;/p&gt;&lt;p&gt;ದಕ್ಷಿಣ ಭಾರತದ ದಖನ್ ಪ್ರಸ್ಥಭೂಮಿಯಲ್ಲಿ ಮಾತ್ರ ಕಂಡು ಬರುವ ಈ ಹಾವು 1976 ರಲ್ಲಿ ಆಂಧ್ರ ಪ್ರದೇಶದ ಗೂಂಟೂರು ಜಿಲ್ಲೆಯ ನಾಗಾರ್ಜುನ ಬೆಟ್ಟದಲ್ಲಿ ಕಂಡು ಬಂದಿದ್ದರಿಂದ ಈ ಹಾವಿಗೆ ಈ ಹೆಸರಿಟ್ಟಿದ್ದಾರೆ. ಈ ಹಾವುಗಳು ಶತೃಗಳಿಂದ ರಕ್ಷಸಿ ಕೊಳ್ಳಲು ಹಾಗೂ ಆಹಾರ ಜೀವಿಗಳನ್ನು ಹಿಡಿಯಲು ವೇಗ ಗತಿಯಲ್ಲಿ ಸಾಗುವುದರಿಂದ ರೇಸರ್ ಹೆಸರು ಬಂದಿದೆ. ಇದು ವಿಷ ರಹಿತ ಹಾವಾಗಿದ್ದು ಮಾನವರಿಗೆ ಯಾವುದೇ ಹಾನಿ ಇಲ್ಲ. ಹಗಲು ಹೊತ್ತಿನಲ್ಲಿ ಹಲ್ಲಿ,ಓತಿ, ಹಾವುರಾಣಿ, ಸಣ್ಣ ಇಲಿ ಮರಿಗಳನ್ನು ತಿಂದು ಕಲ್ಲಿನ ಪೊಟರೆಗಳಲ್ಲಿ ವಾಸಿಸುತ್ತದೆ ಎಂದು ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/shivamogga-child-death-snake-bite-sagara-tragedy-gvd/articleshow-9099k52"/>
        </item>
        <item>
            <title><![CDATA[ಪತಿ ಶವಕ್ಕಾಗಿ ಮಹಿಳೆಯರ ಕಿತ್ತಾಟ; ಅನಾಥವಾಯ್ತು ಇಬ್ಬರು ಹೆಂಡ್ತಿಯರ ಮುದ್ದಿನ ಗಂಡನ ಹೆಣ]]></title>
            <link>https://kannada.asianetnews.com/gallery/relationship/two-wives-kamalamma-pratibha-fight-over-husband-hanumanth-dead-body-a-two-day-big-drama-in-police-station-shivamogga-mrq-aw2hhf1</link>
            <guid isPermaLink="true">https://kannada.asianetnews.com/gallery/relationship/two-wives-kamalamma-pratibha-fight-over-husband-hanumanth-dead-body-a-two-day-big-drama-in-police-station-shivamogga-mrq-aw2hhf1</guid>
            <pubDate>Sat, 18 Apr 2026 17:20:52 +0530</pubDate>
            <description><![CDATA[ಶಿವಮೊಗ್ಗದಲ್ಲಿ, ಹನುಮಂತಪ್ಪ ಎಂಬವರ ಮರಣದ ನಂತರ ಅವರ ಶವಕ್ಕಾಗಿ ಇಬ್ಬರು ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿ, ಕೊನೆಗೆ ಪೊಲೀಸರು ಮತ್ತು ಗ್ರಾಮಸ್ಥರ ಸಂಧಾನದ ಮೂಲಕ ಅಂತ್ಯಸಂಸ್ಕಾರವನ್ನು ಮೃತರ ಹುಟ್ಟೂರಿನಲ್ಲಿ ನಡೆಸಲು ಒಪ್ಪಿಗೆಯಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kpg6akdw43g6cey8x54cnpv4,imgname-shivamogga-husband-wife-death--3--1776512486844.jpg" type="image/jpeg" height="390" width="690"/>
            <content:encoded><![CDATA[ಶಿವಮೊಗ್ಗದಲ್ಲಿ, ಹನುಮಂತಪ್ಪ ಎಂಬವರ ಮರಣದ ನಂತರ ಅವರ ಶವಕ್ಕಾಗಿ ಇಬ್ಬರು ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿ, ಕೊನೆಗೆ ಪೊಲೀಸರು ಮತ್ತು ಗ್ರಾಮಸ್ಥರ ಸಂಧಾನದ ಮೂಲಕ ಅಂತ್ಯಸಂಸ್ಕಾರವನ್ನು ಮೃತರ ಹುಟ್ಟೂರಿನಲ್ಲಿ ನಡೆಸಲು ಒಪ್ಪಿಗೆಯಾಯಿತು.&lt;img&gt;&lt;p&gt;ಶಿವಮೊಗ್ಗ ಜಿಲ್ಲೆಯಲ್ಲಿ ಮಾನವೀಯ ಸಂಬಂಧಗಳ ನಡುವಿನ ವಿಚಿತ್ರ ಮತ್ತು ಸಂಕಟದ ಘಟನೆಯೊಂದು ನಡೆದಿದೆ. ಮೆಡಿಕಲ್ ರಿಪ್ರೆಸೆಂಟಿಟಿವ್ ಆಗಿ ಕೆಲಸ ಮಾಡುತ್ತಿದ್ದ 52 ವರ್ಷದ ಹನುಮಂತಪ್ಪ ಎಂಬವರು ಅನಾರೋಗ್ಯದಿಂದ ನಿಧನರಾದ ಬೆನ್ನಲ್ಲೇ, ಅವರ ಶವಕ್ಕಾಗಿ ಇಬ್ಬರು ಪತ್ನಿಯರ ನಡುವೆ ಗಲಾಟೆ ನಡೆದಿದೆ.&lt;/p&gt;&lt;img&gt;&lt;p&gt;ಮೃತ ಹನುಮಂತಪ್ಪ ಅವರಿಗೆ ಕಮಲಮ್ಮ ಎಂಬ ಮೊದಲ ಪತ್ನಿಯಾಗಿದ್ದು, ಪ್ರತಿಭಾ ಎಂಬ ಎರಡನೇ ಪತ್ನಿಯಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬ್ರೈನ್ ಸ್ಟ್ರೋಕ್ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಹನುಮಂತಪ್ಪ , ಎರಡನೇ ಪತ್ನಿ ಪ್ರತಿಭಾ ಅವರೊಂದಿಗೆ ವಾಸವಿದ್ದರು.&lt;/p&gt;&lt;img&gt;&lt;p&gt;ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ ನಂತರ, ಶವಕ್ಕಾಗಿ ಇಬ್ಬರು ಪತ್ನಿಯರ ನಡುವೆ ಜಗಳ ಆರಂಭವಾಯಿತು. &quot;ನಾನೇ ಕಾನೂನುಬದ್ಧ ಪತ್ನಿ, ಶವ ನನ್ನ ವಶಕ್ಕೆ ಬೇಕು&quot; ಎಂದು ಕಮಲಮ್ಮ ಪಟ್ಟು ಹಿಡಿದರೆ, ಅಂತಿಮ ದಿನಗಳಲ್ಲಿ ಹನುಮಂತಪ್ಪ ತಮ್ಮೊಂದಿಗಿದ್ದರು ಎಂದು ಪ್ರತಿಭಾ ವಾದಿಸಿದ್ದರು.&lt;/p&gt;&lt;img&gt;&lt;p&gt;ಈ ಕಿತ್ತಾಟ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿತು. ಗ್ರಾಮಸ್ಥರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದೊಡ್ಡ ಮಟ್ಟದ ವಾಗ್ವಾದಗಳೇ ನಡೆದವು. ಶವಸಂಸ್ಕಾರ ಎಲ್ಲಿ ನಡೆಯಬೇಕು ಎಂಬ ಬಗ್ಗೆಯೂ ಗೊಂದಲ ಏರ್ಪಟ್ಟಿತ್ತು. ಒಬ್ಬರಿಗೆ ಪುರಲೆ ಗ್ರಾಮದಲ್ಲಿ ಅಂತ್ಯಸಂಸ್ಕಾರವಾಗಬೇಕೆಂಬ ಆಸೆ ಇತ್ತು, ಇನ್ನೊಬ್ಬರಿಗೆ ರೋಟರಿ ಚಿತಾಗಾರದಲ್ಲಿ ಸಂಸ್ಕಾರ ಮಾಡುವ ಇಚ್ಛೆ ಇತ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Shivamogga: ನಾನ್&zwnj;ವೆಜ್ ತಿನ್ನೋವಾಗ ಗಂಟಲಿನಲ್ಲಿ ಮೂಳೆ ಸಿಲುಕಿ ಪ್ರಾಣಬಿಟ್ಟ 21 ವರ್ಷದ ಯುವಕ&lt;/strong&gt;&lt;/p&gt;&lt;img&gt;&lt;p&gt;ಪೊಲೀಸರು ಮತ್ತು ಗ್ರಾಮಸ್ಥರ ಸುದೀರ್ಘ ಸಂಧಾನದ ನಂತರ, ಕೊನೆಗೂ ಇಬ್ಬರು ಪತ್ನಿಯರು ಒಮ್ಮತಕ್ಕೆ ಬಂದರು. ಇಬ್ಬರೂ ಪತ್ನಿಯರು ಮೃತದೇಹಕ್ಕೆ ಪೂಜೆ ಸಲ್ಲಿಸಿದ ನಂತರ, ಹನುಮಂತಪ್ಪ ಅವರ ಹುಟ್ಟೂರಾದ ಬೇಡರ ಹೊಸಹಳ್ಳಿ ಗ್ರಾಮದಲ್ಲಿಯೇ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಯಿತು. ಈ ಮೂಲಕ ಎರಡು ದಿನಗಳಿಂದ ಶವಾಗಾರದಲ್ಲಿ ಅನಾಥವಾಗಿದ್ದ ಶವಕ್ಕೆ ಮುಕ್ತಿ ಸಿಕ್ಕಂತಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಂಡ ಸತ್ತ ಮೇಲೆ ಮಹಿಳೆಯರು ಹೂ ಮುಡಿಬಾರದಾ? ಏನಿದು ಆಚರಣೆ? ಈ ನಂಬಿಕೆ ಎಷ್ಟು ಸರಿ?&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/relationship/two-wives-kamalamma-pratibha-fight-over-husband-hanumanth-dead-body-a-two-day-big-drama-in-police-station-shivamogga-mrq-aw2hhf1"/>
        </item>
        <item>
            <title><![CDATA[ಕುಂದಾಪುರ–ತೀರ್ಥಹಳ್ಳಿ ಸಂಪರ್ಕಿಸುವ ಬಾಳೆಬರೆ ಘಾಟಿ ಸಂಪೂರ್ಣ ಬಂದ್!  ಪರ್ಯಾಯವಾಗಿ ಈ ಮಾರ್ಗ ಬಳಸಿ]]></title>
            <link>https://kannada.asianetnews.com/karnataka-districts/balebare-ghat-closed-due-to-landslide-on-nh-52-between-kundapura-and-thirthahalli-alternate-routes-announced-gdp/articleshow-c6ogmtc</link>
            <guid isPermaLink="true">https://kannada.asianetnews.com/karnataka-districts/balebare-ghat-closed-due-to-landslide-on-nh-52-between-kundapura-and-thirthahalli-alternate-routes-announced-gdp/articleshow-c6ogmtc</guid>
            <pubDate>Tue, 14 Apr 2026 19:49:22 +0530</pubDate>
            <description><![CDATA[ಉಡುಪಿಯ ಕುಂದಾಪುರ&ndash;ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52ರಲ್ಲಿರುವ ಬಾಳೆಬರೆ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ, ಸಾರ್ವಜನಿಕರ ಸುರಕ್ಷತೆಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp65h0k4j3dwzekqz9pqmgrs,imgname-balebare-ghat-1776176104036.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ&lt;/strong&gt; ಜಿಲ್ಲೆಯ ಕುಂದಾಪುರ&ndash;ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52ರಲ್ಲಿ ಇರುವ ಬಾಳೆಬರೆ ಘಾಟಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಏಪ್ರಿಲ್ 9ರಂದು ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಸುಮಾರು 12 ಮೀಟರ್ ಎತ್ತರದಲ್ಲಿರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ರಸ್ತೆ ಮೇಲ್ಮೈಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸಂಚಾರಕ್ಕೆ ಅಪಾಯ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.&lt;/p&gt;&lt;h2&gt;&amp;nbsp;ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣ ಬಂದ್&lt;/h2&gt;&lt;p&gt;ಈ ಹಿನ್ನೆಲೆಯಲ್ಲಿ, ರಕ್ಷಣಾತ್ಮಕ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ತೀರ್ಥಹಳ್ಳಿ&ndash;ಕುಂದಾಪುರ ಸಂಪರ್ಕಿಸುವ ಈ ಘಾಟಿ ಮಾರ್ಗದಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;h2&gt;ಪರ್ಯಾಯ ಮಾರ್ಗ&lt;/h2&gt;&lt;p&gt;ಪರ್ಯಾಯ ಮಾರ್ಗಗಳ ವಿವರ ತೀರ್ಥಹಳ್ಳಿ&ndash;ರಾವೆ&ndash;ಕಾನುಗೋಡು&ndash;ನಗರ&ndash;ಕೊಲ್ಲೂರು&ndash;ಕುಂದಾಪುರ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ. ತೀರ್ಥಹಳ್ಳಿ&ndash;ಯಡೂರು&ndash;ಮಾಸ್ತಿಕಟ್ಟೆ&ndash;ಕಾನುಗೋಡು&ndash;ನಗರ&ndash;ಕೊಲ್ಲೂರು&ndash;ಕುಂದಾಪುರ ಮಾರ್ಗವೂ ಪ್ರಯಾಣಿಕರಿಗೆ ಲಭ್ಯವಿದೆ. ಶಿವಮೊಗ್ಗ ಅಥವಾ ಸಾಗರ ಕಡೆಯಿಂದ ಬರುವ ವಾಹನಗಳು, ಶಿವಮೊಗ್ಗ&ndash;ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ತಲುಪಿ, ಅಲ್ಲಿಂದ ಭಟ್ಕಳ&ndash;ಬೈಂದೂರು ಮಾರ್ಗವಾಗಿ ಕುಂದಾಪುರ ತಲುಪುವಂತೆ ಸೂಚಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ಬಾಳೆಬರೆ ಘಾಟಿಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಸಂಚಾರಕ್ಕೆ ತೀವ್ರ ಅಪಾಯ ಇರುವುದರಿಂದ, ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಸಾರ್ವಜನಿಕರಿಗೆ ಮನವಿ ಮಾಡಿದೆ. ರಕ್ಷಣಾತ್ಮಕ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಂಚಾರವನ್ನು ಪುನಃ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/balebare-ghat-closed-due-to-landslide-on-nh-52-between-kundapura-and-thirthahalli-alternate-routes-announced-gdp/articleshow-c6ogmtc"/>
        </item>
        <item>
            <title><![CDATA[ಶಿವಮೊಗ್ಗ: ನೇಣು ಬಿಗಿದ ಸ್ಥಿತಿಯಲ್ಲಿ 6ನೇ ಕ್ಲಾಸ್ ಬಾಲಕಿಯ ಶವ ಪತ್ತೆ: ಪೋಷಕರು ಕೆಲಸಕ್ಕೆ ಹೋಗಿದ್ದಾಗ ದುರಂತ]]></title>
            <link>https://kannada.asianetnews.com/state/shivamogga-6th-class-girl-found-hanging-tragedy-occurred-while-parents-at-work/articleshow-cq9vqel</link>
            <guid isPermaLink="true">https://kannada.asianetnews.com/state/shivamogga-6th-class-girl-found-hanging-tragedy-occurred-while-parents-at-work/articleshow-cq9vqel</guid>
            <pubDate>Thu, 09 Apr 2026 12:48:48 +0530</pubDate>
            <description><![CDATA[&lt;p&gt;&lt;strong&gt;Bommanakatte girl found dead: &lt;/strong&gt;6ನೇ ಕ್ಲಾಸ್&zwnj;ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಪೋಷಕರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಸಮಯದಲ್ಲಿ ಈ ಅವಾಂತರ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knrgs4yyv826gym38gknpd4p,imgname-6th-class-student-commits-suicide-1775718142942.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;6ನೇ ಕ್ಲಾಸ್ ಹುಡುಗಿಗೆ ಸಾವಿಗೆ ಶರಣಾಗುವಂತದ್ದು ಏನಾಗಿತ್ತು?&lt;/strong&gt;&lt;/h2&gt;&lt;p&gt;ಶಿವಮೊಗ್ಗ: 6ನೇ ಕ್ಲಾಸ್&zwnj;ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್&zwnj;ನಲ್ಲಿ ಯುವತಿ ತನ್ನ ಪೋಷಕರೊಂದಿಗೆ ವಾಸ ಮಾಡುತ್ತಿದ್ದಳು. ಆದರೆ ಈಗ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ.&amp;nbsp;&lt;/p&gt;&lt;h3&gt;&lt;strong&gt;ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಅವಘಡ&lt;/strong&gt;&lt;/h3&gt;&lt;p&gt;ಜೀವಿತಾ ಸಾವನ್ನಪ್ಪಿದ ಬಾಲಕಿ, 12 ವರ್ಷದ ಜೀವಿತಾ ಬೊಮ್ಮನ ಕಟ್ಟೆಯ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚೆಗೆ ಆಕೆಗೆ ಪರೀಕ್ಷೆ ಮುಗಿದು ರಜೆ ಇದ್ದ ಕಾರಣ ಮನೆಯಲ್ಲೇ ಒಬ್ಬಳೇ ಇದ್ದಳು. ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ಸಾವಿಗೆ ಶರಣಾಗಿದ್ದಾಳೆ ಸಂಜೆ ಪೋಷಕರು ಮನೆಗೆ ಮರಳಿದ ನಂತರವೇ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಟ್ಟ ಮಗಳ ಈ ಹಠಾತ್ ಸಾವಿನಿಂದ ಪೋಷಕರು ಕಂಗಾಲಾಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ: ಬ್ಯಾಟರಿ ಗೋದಾಮಿಗೆ ಬೆಂಕಿ: ಆಕಾಶದೆತ್ತರಕ್ಕೆ ದಟ್ಟ ಹೊಗೆ&lt;/strong&gt;&lt;strong&gt;&amp;nbsp;&lt;/strong&gt;&lt;/p&gt;&lt;p&gt;&lt;strong&gt;ವಿಶೇಷ ಮನವಿ:&lt;/strong&gt;&lt;/p&gt;&lt;p&gt;ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:&lt;/p&gt;&lt;p&gt;Sahai Helpline - 080 2549 7777&lt;/p&gt;]]></content:encoded>
            <category>shivamogga</category>
            <dc:creator>Anusha Kb</dc:creator>
            <atom:link href="https://kannada.asianetnews.com/state/shivamogga-6th-class-girl-found-hanging-tragedy-occurred-while-parents-at-work/articleshow-cq9vqel"/>
        </item>
        <item>
            <title><![CDATA['ಮಗ ವಾಪಸ್ ಬರದಿದ್ರೂ ಉಗ್ರರ ಮೇಲೆ ಪ್ರಧಾನಿ ಮೋದಿ ತೆಗೆದುಕೊಂಡ ಆ ಪ್ರತಿಕಾರ ಸಮಾಧಾನ ತಂದಿದೆ, ಮೃತ ಮಂಜುನಾಥ ತಾಯಿಯ ಮನಕಲುಕುವ ಮಾತು]]></title>
            <link>https://kannada.asianetnews.com/karnataka-districts/pahalgam-terror-attack-pm-modi-s-revenge-against-terrorists-brings-me-peace-late-soldier-manjunaths-mother/articleshow-dt23kg9</link>
            <guid isPermaLink="true">https://kannada.asianetnews.com/karnataka-districts/pahalgam-terror-attack-pm-modi-s-revenge-against-terrorists-brings-me-peace-late-soldier-manjunaths-mother/articleshow-dt23kg9</guid>
            <pubDate>Thu, 23 Apr 2026 08:04:09 +0530</pubDate>
            <description><![CDATA[&lt;p&gt;ಪಹಲ್ಗಾಂನಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಅವರ ತಾಯಿ ಸುಮತಿ, ಮಗನ ಸಾವಿನ ದುಃಖದ ನಡುವೆಯೂ ಭಯೋತ್ಪಾದಕರ ವಿರುದ್ಧ ಪ್ರಧಾನಿ ಮೋದಿ ಪ್ರತೀಕಾರ ತೀರಿಸಿದ್ದು ಅಲ್ಪ ಸಮಾಧಾನ ತಂದಿದೆ ಎಂದು ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpw2ywd05c2jffy4gvwapt6x,imgname-untitled-design--3--1776911610272.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಶಿವಮೊಗ್ಗ (ಏ.23): &lt;/strong&gt;&lsquo;ಮಗನಿಗೆ ಕಾಶ್ಮೀರಕ್ಕೆ ಹೋಗಬೇಡ ಎಂದಿದ್ವಿ, ಆದರೂ ಹೋಗಿದ್ದರು. ಮಗ ವಾಪಸ್&zwnj; ಬರ್ತಾನೆ ಅಂದುಕೊಂಡರೆ ಶಾಕಿಂಗ್ ನ್ಯೂಸ್ ಬಂತು. ನನ್ನ ಮಗ ಬರದಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಯೋತ್ಪಾದಕರ ವಿರುದ್ಧ ಪ್ರತಿಕಾರ ತೀರಿಸಿದ್ದಾರಲ್ಲ ಎಂಬ ಅಲ್ಪ ಸಮಾಧಾನ ಇದೆ&rsquo; ಎಂದು ಪಹಲ್ಗಾಂನಲ್ಲಿ ಮೃತಪಟ್ಟ ಮಂಜುನಾಥ್ ರಾವ್ ತಾಯಿ ಸುಮತಿ ಹೇಳಿದರು.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆನಪು ಹೋಗುವುದಿಲ್ಲ. ನಾವು ಸಾಯುವ ತನಕವೂ ಇರುತ್ತದೆ, ದಿನ ಬೆಳಗ್ಗೆ ಎದ್ದಾಗ ನೆನಪು ಆಗುತ್ತದೆ. ರಾತ್ರಿ ಮಲಗಿದ್ದಾಗ ಇಡೀ ಪ್ರಪಂಚ ಮರೆತು ಹೋಗುತ್ತದೆ, ಬೆಳಗ್ಗೆ ಮತ್ತೆ ನೆನಪಾಗುತ್ತದೆ. ಸರಿ ಮಾಡಿಕೊಂಡು ಹೋಗಲೇಬೇಕಾದ ಅನಿವಾರ್ಯತೆ ಇದೆ ಎಂದರು.&lt;/p&gt;&lt;p&gt;ನನ್ನ ಮಗ ಸತ್ತಿದ್ದನ್ನು ಮನಸ್ಸು ಒಪ್ಪಲೇ ಇಲ್ಲ, ಬರ್ತಾನೆ ಅಂದು ಕೊಂಡಿದ್ದೆ. ಆತ ಸಾವನ್ನಪ್ಪಿದ್ದ ಸುದ್ದಿ ತಿಳಿದ ನಂತರ ಸತ್ತಿದ್ದು ನಂಬುವುದಕ್ಕೆ ಒಂದು ತಿಂಗಳು ಬೇಕಾಯಿತು. ಏನ್ ಮಾಡೋದು ಅನಿವಾರ್ಯ ಸಹಿಸಿಕೊಳ್ಳಲೇಬೇಕು ಎಂದು ಬೇಸರಿಸಿದರು.----&lt;/p&gt;&lt;h2&gt;ತಾಯಿಗೆ ಆದಷ್ಟೇ ದುಃಖ ಆಗಿದೆ: ನಳಿನಿ&lt;/h2&gt;&lt;p&gt;ಹೆತ್ತ ತಾಯಿಗೆ ಯಾವ ರೀತಿಯ ನೋವಾಗುತ್ತಿದೆ ಅಷ್ಟೇ ದುಃಖ ನಮಗೂ ಆಗುತ್ತಿದೆ. ಫೋಟೋ ನೋಡಿದಾಗ ಸಾಕಷ್ಟು ನೆನಪಾಗುತ್ತದೆ ಎಂದು ಪಹಲ್ಗಾಮ್&zwnj;ನಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಚಿಕ್ಕಮ್ಮ ನಳಿನಿ ಹೇಳಿದರು. ಮಂಜುನಾಥ ನಮ್ಮ ತಾಯಿ ಮನೆಯಲ್ಲಿ ಹುಟ್ಟಿದ ಪ್ರೀತಿಯ ಮೊದಲ ಮೊಮ್ಮಗ ಆಗಿದ್ದ ಎಂದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/pahalgam-terror-attack-pm-modi-s-revenge-against-terrorists-brings-me-peace-late-soldier-manjunaths-mother/articleshow-dt23kg9"/>
        </item>
        <item>
            <title><![CDATA[ಹುಲಿಕಲ್ ಘಾಟ್ ದುರಸ್ತಿ ವೇಳೆ 3 ಕಾರ್ಮಿಕರು ಬಲಿ ಹಿನ್ನೆಲೆ ಮುಂದಿನ ಆದೇಶದವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್!]]></title>
            <link>https://kannada.asianetnews.com/state/deadly-landslide-at-hulikal-ghat-in-shivamogga-3-workers-killed-highway-closed-gdp/articleshow-f0kvs4e</link>
            <guid isPermaLink="true">https://kannada.asianetnews.com/state/deadly-landslide-at-hulikal-ghat-in-shivamogga-3-workers-killed-highway-closed-gdp/articleshow-f0kvs4e</guid>
            <pubDate>Fri, 10 Apr 2026 12:39:15 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್&zwnj;ನಲ್ಲಿ ರಸ್ತೆ ದುರಸ್ತಿ ಕಾಮಗಾರಿ ವೇಳೆ ಭೀಕರ ಭೂಕುಸಿತ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ, ಶಿವಮೊಗ್ಗ-ಉಡುಪಿ ಸಂಪರ್ಕಿಸುವ ಪ್ರಮುಖ ಹೆದ್ದಾರಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knv3gx3fdt1zpnj30a8br132,imgname-hulikal-ghat-highway-closed--1--1775804904559.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹುಲಿಕಲ್ (ಬಾಳೇಬರೆ) ಘಾಟ್&zwnj;ನಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತವು ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಘಾಟ್&zwnj; ರಸ್ತೆಯ ದುರಸ್ತಿ ಮತ್ತು ತಡೆಗೋಡೆ (ಕಾಂಕ್ರೀಟ್ ವಾಲ್) ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಅಕಸ್ಮಿಕವಾಗಿ ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನಗರ ಮತ್ತು ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್&zwnj;ನಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.&lt;/p&gt;&lt;h2&gt;ಹುಲಿಕಲ್ ಘಾಟ್ ಮಾರ್ಗ ಬಂದ್&zwnj;&lt;/h2&gt;&lt;p&gt;ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾದ ಕಾರಣದಿಂದ ಮುಂದಿನ ಆದೇಶದವರೆಗೆ ಹುಲಿಕಲ್ ಘಾಟ್ ಮಾರ್ಗವನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಗುರುಲಿಂಗ ಕವಳಿಮಠ ಆದೇಶ ಹೊರಡಿಸಿದ್ದಾರೆ. ಕರಾವಳಿ ಮತ್ತು ಮಧ್ಯ ಕರ್ನಾಟಕವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಈ ರಸ್ತೆಯ ಬಂದ್&zwnj;ನಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ವಾಹನ ಸವಾರರು ತೀರ್ಥಹಳ್ಳಿಯ ಆಗುಂಬೆ ಘಾಟ್ ಹಾಗೂ ಹೊಸನಗರ ತಾಲೂಕಿನ ನಿಟ್ಟೂರು-ನಾಗೋಡಿ ಘಾಟ್ ಮಾರ್ಗಗಳನ್ನು ಪರ್ಯಾಯವಾಗಿ ಬಳಸುವಂತೆ ಜಿಲ್ಲಾಡಳಿತ ಸೂಚಿಸಿದೆ.&lt;/p&gt;&lt;h2&gt;ಮೃತದೇಹಗಳ ಗುರುತು ಪತ್ತೆ&lt;/h2&gt;&lt;p&gt;ಈ ದುರ್ಘಟನೆ ಚಂಡಿಕಾಂಬ ದೇವಸ್ಥಾನದ ಮೊದಲ ಹೇರ್&zwnj;ಪಿನ್ ತಿರುವಿನ ಬಳಿ ಸಂಭವಿಸಿದೆ. ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲೇ ಈ ಅನಾಹುತ ಸಂಭವಿಸಿದ್ದು, ಕಾಮಗಾರಿಯನ್ನು ಚಂದ್ರಶೇಖರ್ ಎಂಬ ಗುತ್ತಿಗೆದಾರರು ನಿರ್ವಹಿಸುತ್ತಿದ್ದರು. ಪ್ರಾರಂಭಿಕ ರಕ್ಷಣಾ ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಕಾಮಗಾರಿ ಮೇಲ್ವಿಚಾರಕ ರಾಘು (37) ಮತ್ತು ಕಾರ್ಮಿಕ ರಾಜು (30) ಎಂದು ಗುರುತಿಸಲಾಯಿತು. ನಂತರ ತಡರಾತ್ರಿ ವರೆಗೆ ಮುಂದುವರಿದ ಶೋಧ ಕಾರ್ಯಾಚರಣೆಯಲ್ಲಿ ಹಾವೇರಿ ಜಿಲ್ಲೆಯ ಶಬ್ಬೀರ್ (40) ಅವರ ಮೃತದೇಹವನ್ನು ಬೆಳಗಿನ ಜಾವ ಸುಮಾರು 3 ಗಂಟೆಗೆ ಎಸ್&zwnj;ಡಿಆರ್&zwnj;ಎಫ್, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಹೊರತೆಗೆದರು.&lt;/p&gt;&lt;p&gt;ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ, ಎಸ್&zwnj;ಡಿಆರ್&zwnj;ಎಫ್ ತಂಡ ಹಾಗೂ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದರು. ಇದೀಗ ಮೂರು ಮೃತದೇಹಗಳನ್ನು ನಗರ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.&amp;nbsp;&lt;/p&gt;&lt;p&gt;ಇನ್ನೂ ಘಟನಾ ಸ್ಥಳಕ್ಕೆ ಮಾಜಿ ಗೃಹ ಸಚಿವ ಹಾಗೂ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸ್ಥಳದ ಸ್ಥಿತಿಗತಿಗಳನ್ನು ಅವಲೋಕಿಸಿ, ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, &ldquo;ನಡೆಯಬಾರದ ಘಟನೆ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಸರ್ಕಾರ ಮತ್ತು ನಾವು ಆ ಕುಟುಂಬಗಳ ಜೊತೆ ನಿಲ್ಲುತ್ತೇವೆ,&rdquo; ಎಂದು ಸಂತಾಪ ವ್ಯಕ್ತಪಡಿಸಿದರು.&lt;/p&gt;&lt;p&gt;ಈ ದುರ್ಘಟನೆ ನಿರ್ಮಾಣ ಕಾಮಗಾರಿಗಳ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದೆ. ಸ್ಥಳೀಯ ಆಡಳಿತವು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯವೂ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/state/deadly-landslide-at-hulikal-ghat-in-shivamogga-3-workers-killed-highway-closed-gdp/articleshow-f0kvs4e"/>
        </item>
        <item>
            <title><![CDATA[1 Year After Pahalgam Terror Attack : ಪಹಲ್ಗಾಂ ಆಘಾತದಿಂದ ಇನ್ನೂಹೊರಬರದ ಮಂಜುನಾಥ್‌ ಕುಟುಂಬ, ಪತ್ನಿ ಪಲ್ಲವಿ ಈಗ ಹೇಗಿದ್ದಾರೆ?]]></title>
            <link>https://kannada.asianetnews.com/state/1-year-after-pahalgam-terror-attack-manjunath-family-is-still-reeling-from-the-shock-rav/articleshow-geh2a3g</link>
            <guid isPermaLink="true">https://kannada.asianetnews.com/state/1-year-after-pahalgam-terror-attack-manjunath-family-is-still-reeling-from-the-shock-rav/articleshow-geh2a3g</guid>
            <pubDate>Wed, 22 Apr 2026 06:36:06 +0530</pubDate>
            <description><![CDATA[&lt;p&gt;1 Year After Pahalgam Terror Attack ಕಳೆದ ವರ್ಷ ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಉದ್ಯಮಿ ಮಂಜುನಾಥ್&zwnj;ರ ಕುಟುಂಬ ಇನ್ನೂ ಆಘಾತದಲ್ಲಿದೆ. ಘಟನೆಯ ಒಂದು ವರ್ಷದ ನಂತರ, ಪತ್ನಿ ಪಲ್ಲವಿ ಕುಟುಂಬದ ಜವಾಬ್ದಾರಿ ಹೊತ್ತಿದ್ದು, ನೋವನ್ನು ಮರೆಯಲು ಯತ್ನ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpsayjnccr5m0m98kednqqkh,imgname-----------------------2026-04-22t062459.387-1776819325612.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗೋಪಾಲ್ ಯಡಗೆರೆ&lt;/strong&gt;&lt;/p&gt;&lt;p&gt;&lt;strong&gt;ಶಿವಮೊಗ್ಗ (ಏ.22):&lt;/strong&gt; ಕಳೆದ ವರ್ಷ ಇದೇ ಸಮಯದಲ್ಲಿ ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದ ಶಿವಮೊಗ್ಗದ ಉದ್ಯಮಿ ಮಂಜುನಾಥ್&zwnj;ರ ಕುಟುಂಬ, ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಆದರೆ ಕುಟುಂಬ ನಿರ್ವಹಣೆಯ ಅನಿವಾರ್ಯತೆ ಮತ್ತು ಏಕೈಕ ಪುತ್ರನ ಭವಿಷ್ಯದ ಕಾರಣ ಮಂಜುನಾಥ್ ಪತ್ನಿ ಪಲ್ಲವಿ ಕುಟುಂಬದ ಪೋಷಣೆಯ ಜವಾಬ್ದಾರಿ ಹೊತ್ತಿದ್ದಾರೆ.&lt;/p&gt;&lt;p&gt;2025ರ ಏ. 22ರ ಮಟ ಮಟ ಮಧ್ಯಾಹ್ನ 2.40ರ ಸುಮಾರಿಗೆ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದಿತ್ತು. ಘಟನೆಗೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಮಾಧ್ಯಮಗಳ ಸಂದರ್ಶನ ಅಥವಾ ಭೇಟಿಯ ಬಗ್ಗೆ ಪಲ್ಲವಿ ಒಪ್ಪದೆ ದೂರ ಉಳಿದಿದ್ದಾರೆ. ಯಾರೂ ಮಾಧ್ಯಮದವರು ನಮ್ಮ ಮನೆ ಬಳಿ ಬಾರದಂತೆ ಮನವಿ ಮಾಡಿದ್ದಾರೆ. ತಮ್ಮ ಜೊತೆ ಮಾತ್ರವಲ್ಲ, ತಮ್ಮ ಕುಟುಂಬದ ಹಿರಿಯರ ಜೊತೆ ಕೂಡ ಯಾರೂ ಮಾತನಾಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರಲ್ಲದೆ, ನಾನೂ ಕೂಡ ಯಾರೊಂದಿಗೂ ಈ ವಿಷಯ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;ಘಟನೆಯ ನೆನಪು:&lt;/h2&gt;&lt;p&gt;ಪುತ್ರ ಅಭಿಜೇಯ ದ್ವಿತೀಯ ಪಿಯುಸಿಯಲ್ಲಿ ಶೇ.97 ಅಂಕ ಪಡೆದಿದ್ದರು. ಇದನ್ನು ಸಂಭ್ರಮಿಸಲು ಕುಟುಂಬ ಸಹಿತ ಕಾಶ್ಮೀರದ ಪ್ರವಾಸ ಕೈಗೊಂಡಿದ್ದರು. ಕುಟುಂಬ ಸ್ನೇಹಿತರಾಗಿದ್ದ ಗಣೇಶ್ ಅವರ ಜೊತೆ ಈ ಪ್ರವಾಸ ಯೋಜಿಸಿದ್ದರೂ, ಅದು ಸಾಧ್ಯವಾಗದೆ ಒಂದು ವಾರ ತಡವಾಗಿ ಮಂಜುನಾಥ್ ಕುಟುಂಬದ ಪ್ರವಾಸ ನಿಗದಿಯಾಗಿತ್ತು. ಅತ್ತ ಗಣೇಶ್ ಪ್ರವಾಸಕ್ಕೆ ಹೋಗಿ ವಾಪಸ್ಸು ಬಂದಿದ್ದರು. ಆದರೆ ಒಂದು ವಾರ ತಡವಾಗಿ ಹೋದ ಮಂಜುನಾಥ್ ಮತ್ತೆ ಹಿಂತಿರುಗಿ ಬರಲೇ ಇಲ್ಲ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/1-year-after-pahalgam-terror-attack-manjunath-family-is-still-reeling-from-the-shock-rav/articleshow-geh2a3g"/>
        </item>
        <item>
            <title><![CDATA[ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಗಮನವಹಿಸಿ: ಅಧಿಕಾರಿಗಳಿಗೆ ವಿಜಯೇಂದ್ರ ಸೂಚನೆ]]></title>
            <link>https://kannada.asianetnews.com/karnataka-districts/by-vijayendra-slams-officials-water-power-issues-shikaripura-gvd/articleshow-hg5fker</link>
            <guid isPermaLink="true">https://kannada.asianetnews.com/karnataka-districts/by-vijayendra-slams-officials-water-power-issues-shikaripura-gvd/articleshow-hg5fker</guid>
            <pubDate>Mon, 13 Apr 2026 20:26:31 +0530</pubDate>
            <description><![CDATA[&lt;p&gt;ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರು, ರೈತರು ವಿದ್ಯುತ್ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ವ್ಯವಸ್ಥೆಯಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ ಎಂದು ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wp2b5v03z6v8krfh3yrqaf,imgname-gnghmn-1757604293819.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿಕಾರಿಪುರ (ಏ.13):&lt;/strong&gt; ನೀರು, ವಿದ್ಯುತ್ ಮತ್ತಿತರ ಮೂಲಭೂತ ಸಮಸ್ಯೆ ಎದುರಾಗದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯವನ್ನು ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಕಲ್ಪಿಸಿಕೊಟ್ಟಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಬೇಜವಾಬ್ದಾರಿತನದಿಂದಾಗಿ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರು, ರೈತರು ವಿದ್ಯುತ್ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ವ್ಯವಸ್ಥೆಯಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ ಎಂದು ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;p&gt;ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಚರ್ಚಿಸಲು ತಾಲೂಕು ಮಟ್ಟದ ಅಧಿಕಾರಿಗಳ ಜತೆ ಗ್ರಾ.ಪಂ ಪಿಡಿಒ ಹಾಗೂ ಆಡಳಿತಾಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಎರಡು ತಿಂಗಳು ನೀರಿನ ಸಮಸ್ಯೆ ಎದುರಾಗುವ ಸಾದ್ಯತೆ ಹೆಚ್ಚಿದೆ. ದನಕರು ಜಾನುವಾರುಗಳ ಜತೆಗೆ ಶಾಲಾ ಕಾಲೇಜುಗಳಲ್ಲಿ ನೀರಿನ ಸಮಸ್ಯೆ ಪರಿಹರಿಸುವ ಜತೆಗೆ ಸ್ವಚ್ಚತೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು.&lt;/p&gt;&lt;h2&gt;&lt;strong&gt;ಅಲೆದಾಟ ತಪ್ಪುತ್ತಿಲ್ಲ&lt;/strong&gt;&lt;/h2&gt;&lt;p&gt;ಬಹುತೇಕ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಯುವಕರಿದ್ದು, ಗ್ರಾಮೀಣ ಜನತೆಯ ಕಷ್ಟ ಆಲಿಸಿ ಪರಿಹರಿಸಲು ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು. ಟ್ರಾನ್ಸ್&zwnj;ಫಾರ್ಮರ್ ಪದೇಪದೇ ದುರಸ್ತಿಯಿಂದ ರೈತರು ಮೆಸ್ಕಾಂ ಕಚೇರಿಗೆ ಅಲೆದಾಟ ತಪ್ಪುತ್ತಿಲ್ಲ, ವ್ಯವಸ್ಥೆಯಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನಸಾಮಾನ್ಯರ ಕಷ್ಟಕ್ಕೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು, ಸಬೂಬು ಹೇಳದೆ ಪರಿಹಾರಕ್ಕೆ ಪ್ರಯತ್ನಿಸಬೇಕು ಈ ದಿಸೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದರು.&lt;/p&gt;&lt;p&gt;ತಾ.ಪಂ ಇಒ ನಾಗರಾಜ್ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಕೆರೆ ಕಟ್ಟೆಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದಂತೆ ಸಮೀಪದಲ್ಲಿ ಗುಂಡಿ ತೆಗೆದು ಬೋರ್ ವೆಲ್ ನೀರು ಸಂಗ್ರಹಿಸಿ ಬೆಳಿಗ್ಗೆ ಸಂಜೆ ಕುಡಿಯಲು ವಿತರಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕೆರೆ ತೂಬುಗಳನ್ನು ಬಿಗಿಪಡಿಸಿ ಅನಾವಶ್ಯಕ ಪೋಲು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಪುರಸಭಾ ಮುಖ್ಯಾಧಿಕಾರಿ ಭರತ್ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ 180 ಕೊಳವೆ ಬಾವಿಗಳಿದ್ದು, ಕುಡಿಯುವ ನೀರಿಗೆ ಸಮಸ್ಯೆ ಇಲ್ಲ.&lt;/p&gt;&lt;p&gt;ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಕಳೆದ 720 ಗಂಟೆಯಲ್ಲಿ 156 ಗಂಟೆ ಸ್ಥಗಿತದಿಂದ ಶೇ.22 ವಿದ್ಯುತ್ ನಿಲುಗಡೆಯಾಗಿದ್ದು, ವಿದ್ಯುತ್ ಕೊರತೆಯಿಂದ ನೀರಿನ ಸಮಸ್ಯೆ ತಲೆದೋರುವ ಸಾದ್ಯತೆ ಹೆಚ್ಚಿದೆ ಎಂದರು. ಮೆಸ್ಕಾಂ ಇಇ ಶ್ರೀಧರ್ ಮಾತನಾಡಿ, ಅಂಜನಾಪುರ-ಜೋಗಿಹಳ್ಳಿ ಎಕ್ಸ್ ಪ್ರೆಸ್ ಲೈನ್ ಕಾಮಗಾರಿಯಿಂದಾಗಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ ಎಂದು ತಿಳಿಸಿ ತಾಲೂಕಿನ 28 ಗ್ರಾ.ಪಂ ರು.23.8 ಕೋಟಿ ವಿದ್ಯುತ್ ಬಾಕಿ ಇಲಾಖೆಗೆ ಹೊರೆಯಾಗಿದೆ ಎಂದು ತಿಳಿಸಿದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/by-vijayendra-slams-officials-water-power-issues-shikaripura-gvd/articleshow-hg5fker"/>
        </item>
        <item>
            <title><![CDATA[ಎರಡು ಕಾರ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ನಜ್ಜುಗುಜ್ಜು]]></title>
            <link>https://kannada.asianetnews.com/gallery/karnataka-districts/shivamogga-ripponpet-accident-head-on-collision-between-two-cars-four-people-including-two-children-injured-mrq-khyogn6</link>
            <guid isPermaLink="true">https://kannada.asianetnews.com/gallery/karnataka-districts/shivamogga-ripponpet-accident-head-on-collision-between-two-cars-four-people-including-two-children-injured-mrq-khyogn6</guid>
            <pubDate>Sun, 19 Apr 2026 11:54:23 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್&zwnj;ಪೇಟೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpj64fp2tmpp4eqr68f9ke46,imgname-shivamogga-accident--1--1776579395266.jpg" type="image/jpeg" height="390" width="690"/>
            <content:encoded><![CDATA[ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್&zwnj;ಪೇಟೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ.&lt;img&gt;&lt;p&gt;ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್&zwnj;ಪೇಟೆ ಪಟ್ಟಣದಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್&zwnj;ಗಳು ಅಪಘಾತಗೊಳಗಾಗುತ್ತಿದ್ದಂತೆ ವಾಹನಗಳಲ್ಲಿದ್ದ ಜನರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.&lt;/p&gt;&lt;img&gt;&lt;p&gt;ಕೊಪ್ಪದತ್ತ ಪ್ರಯಾಣಿಸುತ್ತಿದ್ದ ಕಾರು ಹಾಗೂ ಶಿರಸಿಯತ್ತ ತೆರಳುತ್ತಿದ್ದ ಮಾರುತಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಈ ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ನುಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.&lt;/p&gt;&lt;img&gt;&lt;p&gt;ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಾಳುಗಳನ್ನ ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತಕ್ಕೀಡಾದ ಮಾರುತಿ ಅಲ್ಟೋ ಕಾರು ಹೊಸನಗರ ತಾಲೂಕಿನ ಹಿಂಡ್ಲೆಮನೆ ಗ್ರಾಮ ದವರಿಗೆ ಸೇರಿದ್ದು, ಐ20 ಕಾರು ಶಿರಸಿ ಮೂಲದವರದ್ದು ಎಂದು ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕಾರ್&zwnj;, ಸರ್ಕಾರಿ ಬಸ್, ಮೂರು ಬೈಕ್&zwnj;ಗಳಿಗೆ ಡಿಕ್ಕಿ ಹೊಡೆದ ಲಾರಿ: ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ&lt;/strong&gt;&lt;/p&gt;&lt;img&gt;&lt;p&gt;ವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೊಳಗಾದ ವಾಹನಗಳನ್ನು ಶಿಫ್ಟ್ ಮಾಡಲಾಗುತ್ತಿದೆ. ಜನಸಂದಣಿಯುಳ್ಳ ಸ್ಥಳದಲ್ಲಿ ಅಪಘಾತ ಸಂಭವಿಸಿದ್ದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Mysuru: ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/shivamogga-ripponpet-accident-head-on-collision-between-two-cars-four-people-including-two-children-injured-mrq-khyogn6"/>
        </item>
        <item>
            <title><![CDATA[ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನ ಬಲಿ ಪಡೆದಿದ್ದ ನೀರಾನೆ 'ಹಂಸಿನಿ'ಯೂ ಸಾವು! ಕಾರಣವೇನು ಗೊತ್ತಾ?]]></title>
            <link>https://kannada.asianetnews.com/gallery/state/shivamogga-female-hippo-hansini-who-attacked-vet-sameeksha-reddy-dies-due-to-uterine-infection-sat-mfd3q1m</link>
            <guid isPermaLink="true">https://kannada.asianetnews.com/gallery/state/shivamogga-female-hippo-hansini-who-attacked-vet-sameeksha-reddy-dies-due-to-uterine-infection-sat-mfd3q1m</guid>
            <pubDate>Tue, 14 Apr 2026 18:12:09 +0530</pubDate>
            <description><![CDATA[&lt;p&gt;ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ 12 ವರ್ಷದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದೆ. ಈ ಹಿಂದೆ ಎರಡು ಬಾರಿ ಮರಿಗಳನ್ನು ಕಳೆದುಕೊಂಡಿದ್ದ ಹಂಸಿನಿಯ ಸಾವು ಮೃಗಾಲಯಕ್ಕೆ ನಷ್ಟವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp5z8e8150z8mnxfssqzhacm,imgname-shivamogga-hippopotamus-hamsini-death--1--1776169531649.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ 12 ವರ್ಷದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದೆ. ಈ ಹಿಂದೆ ಎರಡು ಬಾರಿ ಮರಿಗಳನ್ನು ಕಳೆದುಕೊಂಡಿದ್ದ ಹಂಸಿನಿಯ ಸಾವು ಮೃಗಾಲಯಕ್ಕೆ ನಷ್ಟವಾಗಿದೆ.&lt;/p&gt;&lt;img&gt;&lt;p&gt;ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ (Tyavarekoppa Safari) ಕಳೆದ ಕೆಲವು ದಿನಗಳ ಹಿಂದೆ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ನೀರಾನೆ ಕೂಡ ಇಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) ಹಂಸಿನಿಯ ಗರ್ಭದಲ್ಲೇ ಮರಿ ಸಾವನ್ನಪ್ಪಿದ ಪರಿಣಾಮ ಉಂಟಾದ ಗಂಭೀರ ಸೋಂಕಿನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.&lt;/p&gt;&lt;img&gt;&lt;p&gt;ಹಂಸಿನಿಯ ಜೀವನದ ಕಥೆ ಒಂದು ನೋವಿನ ಇತಿಹಾಸದಂತಿದೆ. 12 ವರ್ಷದ ಈ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಆ ಎರಡೂ ಮರಿಗಳು ಹುಟ್ಟಿದ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದ್ದವು. ಈ ಬಾರಿ ಹಂಸಿನಿ ಮೂರನೇ ಬಾರಿಗೆ ಗರ್ಭ ಧರಿಸಿದ್ದಳು.&lt;/p&gt;&lt;img&gt;&lt;p&gt;ಮೃಗಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಸಿನಿಯ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದರು. ಆದರೆ, ದುರದೃಷ್ಟವಶಾತ್ ಈ ಬಾರಿಯೂ ಮರಿ ಭೂಮಿಗೆ ಬರುವ ಮೊದಲೇ ಗರ್ಭದಲ್ಲೇ ಸಾವನ್ನಪ್ಪಿದೆ.&lt;/p&gt;&lt;img&gt;&lt;p&gt;ಗರ್ಭದಲ್ಲೇ ಮರಿ ಮೃತಪಟ್ಟಿದ್ದರಿಂದ ಹಂಸಿನಿಯ ಗರ್ಭಾಶಯದಲ್ಲಿ ತೀವ್ರವಾದ ಸೋಂಕು (Uterine Infection) ಕಾಣಿಸಿಕೊಂಡಿತ್ತು. ಇದು ಕ್ರಮೇಣ ರಕ್ತಕ್ಕೆ ಹರಡಿ 'ಸೆಪ್ಟಿಸೇಮಿಯಾ' ಎಂಬ ಸ್ಥಿತಿಗೆ ತಲುಪಿತ್ತು. ಇದರಿಂದಾಗಿ ಹಂಸಿನಿಯ ದೇಹದ ಬಹು ಅಂಗಾಂಗಗಳು ವೈಫಲ್ಯಗೊಂಡು (Multiple Organ Failure) ಅದು ಸಾವನ್ನಪ್ಪಿದೆ. ಏಪ್ರಿಲ್ 10 ರಂದು ಹಂಸಿನಿಯ ಗರ್ಭಾಶಯದ ದ್ರವ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಗರ್ಭದಲ್ಲಿ ಭ್ರೂಣ ಮೃತಪಟ್ಟಿದ್ದು, ಅದರಿಂದ ಸೋಂಕು ಇಡೀ ದೇಹಕ್ಕೆ ಹರಡಿದೆ ಎಂಬುದು ದೃಢಪಟ್ಟಿತ್ತು.&lt;/p&gt;&lt;img&gt;&lt;p&gt;ಇದೇ ನೀರಾನೆ ಹಂಸಿನಿ ಕಳೆದ ಮಾರ್ಚ್ ತಿಂಗಳಿನಲ್ಲಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಮಾರ್ಚ್ 19 ರಂದು ಮಧ್ಯರಾತ್ರಿ ಹಂಸಿನಿಗೆ ಚಿಕಿತ್ಸೆ ನೀಡಲು ಹೋದಾಗ, ಅದು ದಿಢೀರನೆ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ದಾಳಿ ಮಾಡಿತ್ತು. ಈ ಭೀಕರ ದಾಳಿಯಲ್ಲಿ ಡಾ. ಸಮೀಕ್ಷಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಆ ಘಟನೆಯ ನಂತರ ಮೃಗಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದರು. ಡಾ. ಸಮೀಕ್ಷಾ ಅವರ ಸಾವಿನ ನಂತರ ಹಂಸಿನಿಯ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು.&lt;/p&gt;&lt;img&gt;&lt;p&gt;ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ ಹಂಸಿನಿ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿತ್ತು. ಅದರ ಸಾವಿನಿಂದಾಗಿ ಮೃಗಾಲಯದ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಈಗಾಗಲೇ ಡಾ. ಸಮೀಕ್ಷಾ ಅವರ ಸಾವಿನ ನೋವಿನಲ್ಲಿದ್ದ ಮೃಗಾಲಯಕ್ಕೆ, ಈಗ ಹಂಸಿನಿಯ ಸಾವು ಮತ್ತೊಂದು ದೊಡ್ಡ ನಷ್ಟ ತಂದಿದೆ. ಮೃತ ನೀರಾನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ವನ್ಯಜೀವಿ ನಿಯಮದಂತೆ ಅಂತ್ಯಕ್ರಿಯೆ ನೆರವೇರಿಸಲು ಅಧಿಕಾರಿಗಳು ಮುಂದಾಗಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/shivamogga-female-hippo-hansini-who-attacked-vet-sameeksha-reddy-dies-due-to-uterine-infection-sat-mfd3q1m"/>
        </item>
        <item>
            <title><![CDATA[ವೈದ್ಯೆ ಮೇಲೆ ದಾಳಿ ಮಾಡಿ ಕೊಂದಿದ್ದ ತ್ಯಾವರೆಕೊಪ್ಪ ಸಫಾರಿ ನೀರಾನೆ ಹಂಸಿನಿಯ ಗರ್ಭದೊಳಗೆ ಮರಿ ಸಾವನ್ನಪ್ಪಿರುವ ಶಂಕೆ!]]></title>
            <link>https://kannada.asianetnews.com/karnataka-districts/pregnant-hippo-hamsini-under-watch-in-shivamogga-calf-death-rumors-denied-amid-rising-concerns-gdp/articleshow-n7s997k</link>
            <guid isPermaLink="true">https://kannada.asianetnews.com/karnataka-districts/pregnant-hippo-hamsini-under-watch-in-shivamogga-calf-death-rumors-denied-amid-rising-concerns-gdp/articleshow-n7s997k</guid>
            <pubDate>Sun, 12 Apr 2026 12:58:22 +0530</pubDate>
            <description><![CDATA[ಶಿವಮೊಗ್ಗದ ತ್ಯಾವರೆಕೊಪ್ಪ ಸಫಾರಿಯಲ್ಲಿರುವ ಗರ್ಭಿಣಿ ನೀರಾನೆ 'ಹಂಸಿನಿ'ಯ ಗರ್ಭದಲ್ಲಿನ ಮರಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಎರಡು ಮರಿಗಳನ್ನು ಕಳೆದುಕೊಂಡಿದ್ದ ಹಂಸಿನಿಯ ಆರೋಗ್ಯದ ಮೇಲೆ ತಜ್ಞ ವೈದ್ಯರು ನಿಗಾ ಇಟ್ಟಿದ್ದು, ಪ್ರಯೋಗಾಲಯದ ವರದಿಗಾಗಿ ಕಾಯಲಾಗುತ್ತಿದೆ. ಈ ಘಟನೆಯು ಇತ್ತೀಚೆಗೆ ವೈದ್ಯೆಯೊಬ್ಬರ ಮೇಲೆ ದಾಳಿ ಮಾಡಿ ಕೊಂದಿದ್ದ ದುರಂತದ ಹಿನ್ನೆಲೆಯಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp09dgydh6b0ar28q48b3wq9,imgname-tyavarekoppa-safari-hippo-hamsini-1775978857421.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಗರ್ಭಿಣಿ ನೀರಾನೆ &ldquo;ಹಂಸಿನಿ&rdquo; ಕುರಿತು ಮೂಡಿರುವ ಆತಂಕ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಹಂಸಿನಿಯ ಗರ್ಭದಲ್ಲಿದ್ದ ಮರಿ ಸಾವನ್ನಪ್ಪಿದೆಯೇ ಎಂಬ ಅನುಮಾನ ಪ್ರಾಣಿಪ್ರೇಮಿಗಳು ಹಾಗೂ ಅಧಿಕಾರಿಗಳಲ್ಲಿ ಕಳವಳ ಉಂಟುಮಾಡಿದೆ.&lt;/p&gt;&lt;h2&gt;ಎರಡು ಬಾರಿ ಮಗು ಕಳೆದುಕೊಂಡಿದ್ದ ಹಂಸಿನಿ&lt;/h2&gt;&lt;p&gt;ಹಂಸಿನಿ ಈಗಾಗಲೇ ಮೂರನೇ ಬಾರಿ ತನ್ನ ಮರಿಯನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದೆ. ಈ ಹಿಂದೆಯೂ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿದ್ದರೂ, ಹುಟ್ಟಿದ ಕೆಲವೇ ದಿನಗಳಲ್ಲಿ ಅವುಗಳನ್ನು ಕಳೆದುಕೊಂಡಿತ್ತು. ಈ ಬಾರಿ ಆದರೂ ಮರಿ ಸುರಕ್ಷಿತವಾಗಿ ಬದುಕಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದ್ದರೂ, ಪ್ರಸ್ತುತ ಬೆಳವಣಿಗೆಗಳು ಆತಂಕಕ್ಕೆ ಕಾರಣವಾಗಿವೆ.&lt;/p&gt;&lt;p&gt;ಆದರೆ, ಮೃಗಾಲಯದ ನಿರ್ದೇಶಕ ಅಮರಾಕ್ಷರ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ಹಂಸಿನಿಯ ಗರ್ಭದಲ್ಲಿರುವ ಮರಿ ಸಾವನ್ನಪ್ಪಿದೆಯೆಂಬುದು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ. ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳಿಂದ ಆಗಮಿಸಿದ ಪರಿಣಿತ ಪಶುವೈದ್ಯರು ಹಂಸಿನಿಯ ಆರೋಗ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದಾರೆ. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳು ನಡೆಸಲಾಗಿದ್ದು, ಇದುವರೆಗೆ ಮರಿ ಸಾವನ್ನಪ್ಪಿರುವ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.&lt;/p&gt;&lt;p&gt;ಇದರಿಂದಾಗಿ ಹೆಚ್ಚಿನ ಪರೀಕ್ಚೆಗೆ ಹಂಸಿನಿಯ ರಕ್ತದ ಮಾದರಿ ಹಾಗೂ ದೇಹದ ಫ್ಲೂಯಿಡ್&zwnj;ಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮಾತ್ರ ತಾಯಿ ಮತ್ತು ಮರಿಯ ಆರೋಗ್ಯದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಇನ್ನೊಂದೆಡೆ, ಹಂಸಿನಿಯ ಆರೋಗ್ಯದ ಮೇಲೆ ಅರಣ್ಯ ಇಲಾಖೆಯ ಪಶುವೈದ್ಯರು ತೀವ್ರ ನಿಗಾವಹಿಸಿದ್ದಾರೆ. ಒಂದು ವೇಳೆ ಗರ್ಭದಲ್ಲಿರುವ ಮರಿಯನ್ನು ಹೊರತೆಗೆದು ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ಬಂದರೆ, ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಹಂಸಿನಿಯ ಜೀವಕ್ಕೆ ಯಾವುದೇ ಅಪಾಯವಾಗದಂತೆ ವೈದ್ಯಕೀಯ ತಂಡ ಅತ್ಯಂತ ಜಾಗ್ರತೆಯಿಂದ ಕಾರ್ಯನಿರ್ವಹಿಸುತ್ತಿದೆ.&lt;/p&gt;&lt;h2&gt;ಕರ್ತವ್ಯದಲ್ಲಿದ್ದ ವೈದ್ಯೆ ಮೇಲೆ ದಾಳಿ ಮಾಡಿ ಕೊಂದಿದ್ದ ಹಂಸಿನಿ&lt;/h2&gt;&lt;p&gt;ಇದರ ನಡುವೆಯೇ, ಕಳೆದ ಒಂದು ತಿಂಗಳಿನಿಂದ ತ್ಯಾವರೆಕೊಪ್ಪ ಸಫಾರಿಯಲ್ಲಿ ಸರಣಿ ದುರಂತಗಳು ನಡೆಯುತ್ತಿರುವುದು ಗಮನಾರ್ಹವಾಗಿದೆ. ಮಾರ್ಚ್ 19ರಂದು ಸಫಾರಿಯಲ್ಲಿ ಕರ್ತವ್ಯದಲ್ಲಿದ್ದ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೇಲೆ ಗರ್ಭಿಣಿ ನೀರಾನೆ ಹಂಸಿನಿ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಮೀಕ್ಷಾ ರೆಡ್ಡಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.&lt;/p&gt;&lt;p&gt;ಈ ಘಟನೆ ನಂತರ ಸಫಾರಿಯ ಭದ್ರತೆ, ಪ್ರಾಣಿಗಳ ಆರೈಕೆ ಹಾಗೂ ವೈದ್ಯಕೀಯ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಮೂಡಿದ್ದು, ಇದೀಗ ಹಂಸಿನಿಯ ಆರೋಗ್ಯದ ವಿಚಾರ ಮತ್ತಷ್ಟು ಗಂಭೀರ ಚರ್ಚೆಗೆ ಕಾರಣವಾಗಿದೆ. ಹಂಸಿನಿ ಮತ್ತು ಅದರ ಮರಿಯ ಸ್ಥಿತಿ ಬಗ್ಗೆ ಅಂತಿಮ ವರದಿ ಬರಬೇಕಿದ್ದು, ಪ್ರಾಣಿಪ್ರೇಮಿಗಳು ಆತಂಕದ ಮಧ್ಯೆ ನಿರೀಕ್ಷೆಯಲ್ಲಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/pregnant-hippo-hamsini-under-watch-in-shivamogga-calf-death-rumors-denied-amid-rising-concerns-gdp/articleshow-n7s997k"/>
        </item>
        <item>
            <title><![CDATA[ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್]]></title>
            <link>https://kannada.asianetnews.com/state/justice-served-shivamogga-court-sentences-five-for-assault-and-criminal-intimidation/articleshow-o8lln1p</link>
            <guid isPermaLink="true">https://kannada.asianetnews.com/state/justice-served-shivamogga-court-sentences-five-for-assault-and-criminal-intimidation/articleshow-o8lln1p</guid>
            <pubDate>Fri, 17 Apr 2026 11:23:17 +0530</pubDate>
            <description><![CDATA[&lt;p&gt;ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್ ಸಂಬಂಧ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಕಟಿಸಿದೆ. ಏನಿದು ಪ್ರಕರಣ?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01khadhzj3jrk4f60tggjf2m7a,imgname-uttar-pradesh-sonbhadra-minor-girl-rape-father-life-imprisonment-pocso-court-verdict-india-news-1-1770950032963.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.17) &lt;/strong&gt;ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ ಯೋಗೇಶ್ ಗೌಡ ಕೊಲೆ ಪ್ರಕರಣ ಹಾಗೂ ವಿನಯ್ ಕುಲಕರ್ಣಿ ಶಿಕ್ಷೆ ಕೇಸ್ ನಡುವೆ ಇದೀಗ ಶಿವಮೊಗ್ಗದ ಅಂತರಗಂಗೆಯಲ್ಲಿ ನಡೆದಿದ್ದ ಹಲ್ಲೆ ಹಾಗೂ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ నిందిసి, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಧಲ್ಲಿ ಅಪರಾಧಿಗಳಿಗೆ 2 ವರ್ಷ ಜೈಲು ಶಿಕ್ಷೆ ಜೊತೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.&lt;/p&gt;&lt;h2&gt;ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು&lt;/h2&gt;&lt;p&gt;2023ರಲ್ಲಿ ನಡೆದ ಈ ಪ್ರಕರಣ ಸಂಬಂಧ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಐವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಅಂತರಗಂಗೆಯ ನವೀನ್ (25), ಮನು (31), ಕೆ ಸಂತೋಷ್(31), ಅಭಿಷೇಕ್ (24), ವಿ.ಮಂಜುನಾಥ&zwnj;ಗೆ(33) ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.&lt;/p&gt;&lt;h2&gt;ಏನಿದು ಪ್ರಕರಣ&lt;/h2&gt;&lt;p&gt;2023 ರ ಜೂನ್ 6 ರಂದು ರಾತ್ರಿ 11:45 ಸುಮಾರಿಗೆ ಅದೇ ಗ್ರಾಮದ ರಾಧಾ(35) ಎಂಬುವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ಮಾಡಿದ್ದಲ್ಲದೆ, ಜಾತಿ 'ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದರು. ರಾಧಾ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಎಎಸ್&zwnj;ಪಿ ಜಿತೇಂದ್ರಕುಮಾರ ದಯಾಮ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪ ಸಾಬೀತಾಗಿದ್ದರಿಂದ ಐವರಿಗೂ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ರತ್ನಮ್ಮ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.&lt;/p&gt;&lt;h2&gt;ಯೋಗೇಶ್ ಗೌಡ ಪ್ರಕರಣ&lt;/h2&gt;&lt;p&gt;ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಲಯ 17 ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪೈಕಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದ್ದಾರೆ. ಇಂದು (ಏ.17) ಕೋರ್ಟ್ ಎಲ್ಲಾ ಆರೋಪಿಗಳ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಈ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ. ಈ ತೀರ್ಪಿನ ನಡುವೆ ಭದ್ರಾವತಿ ಕೋರ್ಟ್ ನೀಡಿದ ತೀರ್ಪು ಮಹತ್ವ ಪಡೆದುಕೊಂಡಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>shivamogga</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/justice-served-shivamogga-court-sentences-five-for-assault-and-criminal-intimidation/articleshow-o8lln1p"/>
        </item>
        <item>
            <title><![CDATA[ಶಿವಮೊಗ್ಗ ನಗರದಲ್ಲಿ ಬೀದಿ ಹೆಣವಾದ ಟೊಳ್ಳೇ ಮಂಜುನಾಥ್; ಗೆಳೆಯನ ಜೊತೆಗೆ ಹೋದವನು ಅನುಮಾನಾಸ್ಪದ ಸಾವು!]]></title>
            <link>https://kannada.asianetnews.com/karnataka-districts/shivamogga-tunga-nagar-youth-suspicious-death-murder-allegation-santosh-sat/articleshow-y71t6b6</link>
            <guid isPermaLink="true">https://kannada.asianetnews.com/karnataka-districts/shivamogga-tunga-nagar-youth-suspicious-death-murder-allegation-santosh-sat/articleshow-y71t6b6</guid>
            <pubDate>Thu, 09 Apr 2026 13:06:39 +0530</pubDate>
            <description><![CDATA[&lt;p&gt;ಶಿವಮೊಗ್ಗದ ತುಂಗಾ ನಗರದಲ್ಲಿ ಮಂಜುನಾಥ್ ಎಂಬ ಯುವಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಗೆಳೆಯನೊಂದಿಗೆ ಮನೆಯಿಂದ ಹೊರಹೋದವನು ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಗೆಳೆಯನ ಮೇಲೆಯೇ ಆರೋಪ ಹೊರಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knrjgs9yt71883exyasz1zx1,imgname-shivamogga-manjunath-tolle-died-1775719966014.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.09): ಶಿ&lt;/strong&gt;ವಮೊಗ್ಗ ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಲೇಔಟ್ ಒಂದರಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಸಾಧಾರಣ ಸಾವೋ ಎಂಬ ಸಂಶಯ ಸಾರ್ವಜನಿಕರಲ್ಲಿ ಮೂಡಿದೆ. ಮೃತನ ಕುಟುಂಬಸ್ಥರು ಇದನ್ನು ವ್ಯವಸ್ಥಿತ ಕೊಲೆ ಎಂದು ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಶಿವಮೊಗ್ಗದ ಮೇಲಿನ ತುಂಗಾ ನಗರದ ನಿವಾಸಿ ಮಂಜುನಾಥ್ (30) ಎಂಬಾತನೇ ಮೃತಪಟ್ಟ ದುರ್ದೈವಿ. ಸ್ಥಳೀಯವಾಗಿ ಈತನನ್ನು 'ಟೊಳ್ಳೇ ಮಂಜುನಾಥ್' ಎಂದೇ ಕರೆಯಲಾಗುತ್ತಿತ್ತು. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮಂಜುನಾಥ್, ತುಂಗಾ ನಗರದ ಖಾಸಗಿ ಲೇಔಟ್&zwnj;ನ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶನಿವಾರ ರಾತ್ರಿ ಮನೆಯಿಂದ ಹೊರಗೆ ಹೋದವನು ಮತ್ತೆ ಮರಳಿ ಬರಲೇ ಇಲ್ಲ. ಇಂದು ಬೆಳಗ್ಗೆ ಆತನ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಗೆಳೆಯನ ಮೇಲೆ ಕುಟುಂಬಸ್ಥರ ಸಂಶಯ:&lt;/strong&gt;&lt;/h2&gt;&lt;p&gt;ಮಂಜುನಾಥ್ ಸಾವಿನ ಹಿಂದೆ ಆತನ ಗೆಳೆಯ ಸಂತೋಷ್ ಎಂಬಾತನ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. 'ನಿನ್ನೆ ರಾತ್ರಿ ಮಂಜುನಾಥ್&zwnj;ನನ್ನು ಸಂತೋಷ್ ಎಂಬಾತನೇ ಬಂದು ಮನೆಯಿಂದ ಕರೆದುಕೊಂಡು ಹೋಗಿದ್ದ. ಅವರಿಬ್ಬರೂ ಒಟ್ಟಿಗೆ ಹೋದವರು, ಈಗ ನನ್ನ ತಮ್ಮ ಹೆಣವಾಗಿ ಬಿದ್ದಿದ್ದಾನೆ. ಆ ಸಂತೋಷನೇ ಏನೋ ಮಾಡಿದ್ದಾನೆ' ಎಂದು ಮೃತನ ಅಕ್ಕ ಲಕ್ಷ್ಮಿ ಪೊಲೀಸರ ಮುಂದೆ ಕಣ್ಣೀರು ಹಾಕುತ್ತಾ ದೂರಿದ್ದಾರೆ.&lt;/p&gt;&lt;h3&gt;&lt;strong&gt;ಕುಡಿತದ ಚಟ ಮತ್ತು ಗಾರೆ ಕೆಲಸ:&lt;/strong&gt;&lt;/h3&gt;&lt;p&gt;ಮೃತ ಮಂಜುನಾಥ್ ಕಳೆದ ಹಲವು ವರ್ಷಗಳಿಂದ ಗಾರೆ ಕೆಲಸ ಮಾಡಿಕೊಂಡಿದ್ದ. ಆತನಿಗೆ ಮದ್ಯಪಾನದ ವಿಪರೀತ ಚಟವಿತ್ತು ಎನ್ನಲಾಗಿದೆ. ಪ್ರತಿದಿನ ಕೆಲಸ ಮುಗಿಸಿ ಬಂದ ಮೇಲೆ ಕುಡಿಯುವ ಅಭ್ಯಾಸ ಹೊಂದಿದ್ದ ಮಂಜುನಾಥ್, ನಿನ್ನೆ ರಾತ್ರಿ ಕೂಡ ಸಂತೋಷ್ ಜೊತೆಗೆ ಕುಡಿಯಲು ಹೋಗಿರಬಹುದು ಎಂದು ಶಂಕಿಸಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆಯಾಗಿ ಈ ಸಾವು ಸಂಭವಿಸಿದೆಯೇ ಅಥವಾ ಯಾವುದೋ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂತೋಷ್ ಕೊಲೆ ಮಾಡಿದ್ದಾನೆಯೇ ಎಂಬ ಸತ್ಯಾಸತ್ಯತೆ ಹೊರಬರಬೇಕಿದೆ.&lt;/p&gt;&lt;h2&gt;&lt;strong&gt;ಪೊಲೀಸ್ ತನಿಖೆ ಆರಂಭ:&lt;/strong&gt;&lt;/h2&gt;&lt;p&gt;ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವುದೇ ಗುರುತರ ಗಾಯದ ಗುರುತುಗಳಿವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಕುಟುಂಬಸ್ಥರ ದೂರಿನ ಮೇರೆಗೆ ಸಂತೋಷ್ ಎಂಬಾತನನ್ನು ವಶಕ್ಕೆ ಪಡೆಯಲು ಹುಡುಕಾಟ ನಡೆಸುತ್ತಿದ್ದಾರೆ. ಮಂಜುನಾಥ್ ಸಾವು ಇಡೀ ಕುಟುಂಬವನ್ನು ಬೀದಿಗೆ ತಂದಿದ್ದು, ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-tunga-nagar-youth-suspicious-death-murder-allegation-santosh-sat/articleshow-y71t6b6"/>
        </item>
    </channel>
</rss>
