<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 24 Jun 2026 09:05:18 +0530</lastBuildDate>
        <atom:link href="https://kannada.asianetnews.com/rss/shivamogga" rel="self" type="application/rss+xml"/>
        <item>
            <title><![CDATA[ವರ್ಷಧಾರೆ ಕೊರತೆಗೆ ಸೊರಗಿದ ಲಿಂಗನಮಕ್ಕಿ ಜಲಾಶಯ; ಶರಾವತಿ ಜಲಾನಯನದಲ್ಲಿ ಮಳೆ ಅಭಾವ]]></title>
            <link>https://kannada.asianetnews.com/karnataka-districts/water-level-in-the-linganamakki-reservoir-on-sharavathi-river-is-decreasing-day-by-day-due-to-lack-of-inflow-mrq/articleshow-0zv3pfn</link>
            <guid isPermaLink="true">https://kannada.asianetnews.com/karnataka-districts/water-level-in-the-linganamakki-reservoir-on-sharavathi-river-is-decreasing-day-by-day-due-to-lack-of-inflow-mrq/articleshow-0zv3pfn</guid>
            <pubDate>Tue, 23 Jun 2026 08:50:23 +0530</pubDate>
            <description><![CDATA[ಶರಾವತಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ, ರಾಜ್ಯದ ಪ್ರಮುಖ ವಿದ್ಯುತ್ ಮೂಲವಾದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಆತಂಕಕಾರಿಯಾಗಿ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಳಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಇದು ವಿದ್ಯುತ್ ಉತ್ಪಾದನೆಯ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಬಾರದೆ ಹೋದರೆ ರಾಜ್ಯವು ಗಂಭೀರ ವಿದ್ಯುತ್ ಸಂಕಷ್ಟವನ್ನು ಎದುರಿಸುವ ಸಾಧ್ಯತೆಯಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvs7fjjvdewb3gka533ss616,imgname-linganamakki-1782184397403.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಗಾರು ಲಕ್ಷ್ಮೀನಾರಾಯಣ ಹೆಗಡೆ&lt;/strong&gt;&lt;/p&gt;&lt;p&gt;&lt;strong&gt;ಶಿವಮೊಗ್ಗ: &lt;/strong&gt;ಹವಾಮಾನ ವೈಪರೀತ್ಯದಿಂದ ಜೂನ್ ತಿಂಗಳು ಗತಿಸುತ್ತಿದ್ದರೂ ಮಳೆಗಾಲ ಪ್ರಾರಂಭವಾಗಿಲ್ಲ. ಇದರಿಂದ ಮಳೆಯನ್ನೇ ಅವಲಂಬಿಸಿದ ಶರಾವತಿ ನದಿಯ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಇಲ್ಲದೆ ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದೆ.&lt;/p&gt;&lt;p&gt;ನಾಡಿನ ಬೆಳ್ಳಿ ಬೆಳಕಿನ ಮೂಲ ಸೆಲೆ ಲಿಂಗನಮಕ್ಕಿ ಜಲಾಶಯ. ಶಕ್ತಿ ನದಿ ಶರಾವತಿಗೆ ಲಿಂಗನಮಕ್ಕಿ ಎಂಬ ಸ್ಥಳದಲ್ಲಿ 9020 ಅಡಿ (2750 ಮೀಟರ್)ಉದ್ದ ಹಾಗೂ ನದಿ ಪಾತಳಿಯಿಂದ 181 ಅಡಿ (55 ಮೀಟರ್) ಎತ್ತರದ ಅಣೆಕಟ್ಟೆ ಕಟ್ಟಿ ಈ ಜಲಾಶಯ ನಿರ್ಮಿಸಲಾಗಿದೆ. 2000 ಚದುರ ಕಿಮಿ ಜಲಾಯನ ಪ್ರದೇಶ ಹೊಂದಿರುವ ಲಿಂಗನಮಕ್ಕಿ ಜಲಾಶಯವು ಮಾನವ ನಿರ್ಮಿತವಾಗಿದೆ.&lt;/p&gt;&lt;p&gt;ನಿರ್ಮಾಣ ಕಾಲದಲ್ಲಿ ಏಷಿಯಾ ಖಂಡದಲ್ಲಿ ಬೃಹತ್ ಎನಿಸಿಕೊಂಡಿದ್ದ ಲಿಂಗನಮಕ್ಕಿ ಜಲಾಶಯದಲ್ಲಿ 1963 ರಿಂದ ನೀರು ಸಂಗ್ರಹಣೆ ಪ್ರಾರಂಭಗೊಂಡಿದೆ. 156 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಜಲಾಶಯಕ್ಕಿದ್ದು, 326 ಚದುರ ಕಿಮೀ ಪ್ರದೇಶ ವ್ಯಾಪ್ತಿಯ ಹಿನ್ನೀರು ಹೊಂದಿದೆ.&lt;/p&gt;&lt;h2&gt;&lt;strong&gt;ವಿದ್ಯುತ್ ಉತ್ಪಾದನಾ ಸಾಮರ್ಥ್ಯ&lt;/strong&gt;&lt;/h2&gt;&lt;p&gt;ಶರಾವತಿ ಕಣಿವೆಯ ಜಲವಿದ್ಯುತ್ ಯೋಜನೆಗೆ ಲಿಂಗನಮಕ್ಕಿ ಜಲಾಶಯವೇ ಮೂಲಾಧಾರ. ಈ ಜಲಾಶಯವನ್ನು ಅವಲಂಬಿಸಿ 1035 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಶರಾವತಿ ಜಲ ವಿದ್ಯುದಾಗರ, 139 ಮೆಗಾವಾಟ್ ಉತ್ಪಾದನಾ ಸಾಮರ್ಥ್ಯದ ಮಹಾತ್ಮಾಗಾಂಧಿ ವಿದ್ಯುದಾಗರ, 55 ಮೆಗಾವಾಟ್ ಉತ್ಪಾದನಾ ಸಾಮಥ್ರ್ಯದ ಲಿಂಗನಮಕ್ಕಿ ವಿದ್ಯುದಾಗರ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದ ವಿದ್ಯುತ್ ಬಳಕೆಯ ಶೇ 30 ರಷ್ಟು ಶರಾವತಿ ಕಣಿವೆಯ ಜಲ ವಿದ್ಯುದೋಜನೆಯಿಂದಲೇ ಲಭ್ಯವಾಗುತ್ತದೆ.&lt;/p&gt;&lt;p&gt;ಈ ವರ್ಷದ ಮಳೆಗಾಲದ ಹಂಗಾಮಿನಲ್ಲಿ ಜಲಾನಯನ ಪ್ರದೇಶದಲ್ಲಿ ಕೇವಲ ಒಂಬತ್ತು ಸೆಂಟಿಮೀಟರ್ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 72 ಸೆ.ಮೀ ನಷ್ಟು ಮಳೆ ಆಗಿತ್ತು. ಪ್ರಸ್ತುತ ಜಲಾಶಯದಲ್ಲಿ 1746.00 ಅಡಿ ನೀರು ಮಾತ್ರವಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 1772.80 ಅಡಿ ನೀರಿತ್ತು. ಸದ್ಯ ಇರುವ ನೀರಲ್ಲಿ ಸುಮಾರು 473 .85 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದಿಸಬಹುದಾಗಿದ್ದು, ಬೇಡಿಕೆಗೆ ಅನುಗುಣವಾಗಿ ವಿದ್ಯುದುತ್ಪಾದನೆಗೆ ಬಳಸಲಾಗುತ್ತಿದೆ ಎನ್ನುತ್ತಾರೆ ಕೆಪಿಸಿಯ ಅಧಿಕಾರಿಗಳು.&lt;/p&gt;&lt;h3&gt;&lt;strong&gt;ನೀರಿನ ಅಭಾವದಿಂದ ಸ್ಥಗಿತಗೊಂಡ ಜನರೇಟರ್&lt;/strong&gt;&lt;/h3&gt;&lt;p&gt;ರಾಜ್ಯದಲ್ಲಿ ಕೆಲವೆಡೆ ಮಳೆ ಆಗುತ್ತಿರುವುದರಿಂದ ವಿದ್ಯತ್ ಬೇಡಿಕೆ ಕುಸಿದಿದೆ. ಶರಾವತಿ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಒಟ್ಟು ಹತ್ತು ಜನರೇಟರ್&zwj;ಗಳು ಕಾರ್ಯನಿರ್ವಹಿಸುತ್ತಿದ್ದು, ಈಗ ಕೇವಲ ಏಳು ಜನರೇಟರ್&zwnj;ಗಳನ್ನು ಮಾತ್ರ ಬಳಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಮಹಾತ್ಮ ಗಾಂಧಿ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಒಟ್ಟು ಎಂಟು ಜನರೇಟರ್&zwnj;ಗಳು ಇದ್ದು ಒಂದು ದುರಸ್ತಿಯಲ್ಲಿದೆ. ಇನ್ನು 7 ಕಾರ್ಯನಿರ್ವಹಿಸುತ್ತಿದೆ. ಮಾಡಲಾಗುತ್ತಿದೆ. ಲಿಂಗನಮಕ್ಕಿ ಪವರ್ ಹೌಸ್&zwj;ನಲ್ಲಿ ಒಂದು ಜನರೇಟರ್ ಕಾರ್ಯ ನಿರ್ವಹಿಸುತ್ತಿದೆ. ನೀರಿನ ಅಭಾವದಿಂದ ಸ್ಥಗಿತಗೊಂಡಿದೆ. ಮಳೆಬಾರದೆ ಹೋದರೆ ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪ ಪಡೆಯಲಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; &lsquo;ವಾಡಿಕೆ ಮಳೆಯ ಆಸೆನೇ ಬಿಟ್ಟುಬಿಡಿ!&rsquo;: ದೇಶಾದ್ಯಂತ ಶೇ. 42 ರಷ್ಟು ಮುಂಗಾರು ಕೊರತೆ, ಹವಾಮಾನ ಇಲಾಖೆಯಿಂದ ಶಾಕಿಂಗ್ ನ್ಯೂಸ್!&lt;/strong&gt;&lt;/p&gt;&lt;p&gt;&lt;strong&gt;ಮಳೆ ನಿರೀಕ್ಷೆ&lt;/strong&gt;&lt;/p&gt;&lt;p&gt;ಶರಾವತಿ ಜಲಾನಯನ ಪ್ರದೇಶದಲ್ಲಿ ಈವರೆಗೂ ಮಳೆಬಾರದೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಆದರೆ ರಾಜ್ಯದ ಹಲವಡೆ ಮಳೆ ಆಗುತ್ತಿರುವುದರಿಂದ ವಿದ್ಯುತ್ ಬೇಡಿಕೆ ಕುಸಿತವಾಗಿದೆ. ಸದ್ಯ ನಾವು ಸಹ ವಿದ್ಯುತ್ ಉತ್ಪಾದನೆಯನ್ನು ಕಡಿತಗೊಳಿಸಿದ್ದು ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಮಳೆ ನಿರೀಕ್ಷೆಯಲ್ಲಿ ಇದ್ದೇವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;3 ದಶಕಗಳ ಬಳಿಕ ಮೊದಲ ಬಾರಿಗೆ ಬರಿದಾದ ಭದ್ರೆಯ ಒಡಲು; ಬರದ ಛಾಯೆ, ಸ್ಥಳೀಯರಲ್ಲಿ ಆತಂಕ&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/water-level-in-the-linganamakki-reservoir-on-sharavathi-river-is-decreasing-day-by-day-due-to-lack-of-inflow-mrq/articleshow-0zv3pfn"/>
        </item>
        <item>
            <title><![CDATA[Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!]]></title>
            <link>https://kannada.asianetnews.com/gallery/karnataka-districts/shivamogga-hulikal-ghat-thirthahalli-kundapura-road-reopens-for-light-vehicles-after-landslide-repairs-1gfk5ot</link>
            <guid isPermaLink="true">https://kannada.asianetnews.com/gallery/karnataka-districts/shivamogga-hulikal-ghat-thirthahalli-kundapura-road-reopens-for-light-vehicles-after-landslide-repairs-1gfk5ot</guid>
            <pubDate>Sat, 13 Jun 2026 22:01:54 +0530</pubDate>
            <description><![CDATA[ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯ ಹುಲಿಕಲ್ ಘಾಟ್ ಮಾರ್ಗವನ್ನು ಇದೀಗ ಲಘು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ. ತಾತ್ಕಾಲಿಕ ದುರಸ್ತಿ ಮತ್ತು ಸುರಕ್ಷತಾ ಕ್ರಮಗಳ ನಂತರ, ಅಧಿಕಾರಿಗಳು ಸಂಚಾರಕ್ಕೆ ಚಾಲನೆ ನೀಡಿದ್ದು, ಮಲೆನಾಡು-ಕರಾವಳಿ ಪ್ರಯಾಣಿಕರಿಗೆ ನಿರಾಳವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv0watje575fv8b33s9wc64e,imgname-screenshot-2026-06-13-214430-1781367401037.png" type="image/jpeg" height="390" width="690"/>
            <content:encoded><![CDATA[ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯ ಹುಲಿಕಲ್ ಘಾಟ್ ಮಾರ್ಗವನ್ನು ಇದೀಗ ಲಘು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ. ತಾತ್ಕಾಲಿಕ ದುರಸ್ತಿ ಮತ್ತು ಸುರಕ್ಷತಾ ಕ್ರಮಗಳ ನಂತರ, ಅಧಿಕಾರಿಗಳು ಸಂಚಾರಕ್ಕೆ ಚಾಲನೆ ನೀಡಿದ್ದು, ಮಲೆನಾಡು-ಕರಾವಳಿ ಪ್ರಯಾಣಿಕರಿಗೆ ನಿರಾಳವಾಗಿದೆ.&lt;img&gt;&lt;p&gt;&lt;strong&gt;ಶಿವಮೊಗ್ಗ (ಜೂ.13): ಮ&lt;/strong&gt;ಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಹುಲಿಕಲ್ ಘಾಟ್&zwnj;ನಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಕೊನೆಗೂ ನಿರಾಳತೆಯ ಸುದ್ದಿ ಸಿಕ್ಕಿದೆ. ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ಮಾರ್ಗದಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.&lt;/p&gt;&lt;p&gt;ಶಾಸಕ ಹಾಗೂ ಮಾಜಿ ಸಚಿವ ಹರಗ ಜ್ಞಾನೇಂದ್ರ ಮತ್ತು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಜಂಟಿಯಾಗಿ ವಾಹನ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಈ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಸಂಚಾರ ದುಸ್ತರವಾಗಿದ್ದ ಮಾರ್ಗದಲ್ಲಿ ಮತ್ತೆ ವಾಹನಗಳ ಸದ್ದು ಕೇಳಲಾರಂಭಿಸಿದೆ.&lt;/p&gt;&lt;img&gt;&lt;p&gt;&lt;strong&gt;ಏನಾಗಿತ್ತು? ಸಂಪೂರ್ಣ ಹಿನ್ನೆಲೆ:&lt;/strong&gt;&lt;/p&gt;&lt;p&gt;ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್&zwnj;ನ ಪ್ರಮುಖ ಹೇರ್&zwnj;ಪಿನ್ ತಿರುವಿನಲ್ಲಿ ಭಾರಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಭೂಕುಸಿತ ಉಂಟಾಗಿತ್ತು. ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಮಣ್ಣು ಕುಸಿದು ಬಿದ್ದಿತ್ತು. ಇದರ ಬೆನ್ನಲ್ಲೇ ರಸ್ತೆಯ ಮೇಲ್ಭಾಗದಲ್ಲೂ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದವು. ಸಾರ್ವಜನಿಕರು ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತವು ತಕ್ಷಣವೇ ಎಚ್ಚೆತ್ತುಕೊಂಡು, ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಬಳಿಕ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.&lt;/p&gt;&lt;img&gt;&lt;p&gt;ನಂತರದ ದಿನಗಳಲ್ಲಿ ಸಾರ್ವಜನಿಕರ ತೀವ್ರ ಕಷ್ಟಗಳನ್ನು ಮನಗಂಡು, ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು (ಷಟಲ್ ಸರ್ವೀಸ್) ಮಾಡುವ ಮೂಲಕ ಪ್ರಯಾಣಕ್ಕೆ ತಾತ್ಕಾಲಿಕ ಅನುವು ಮಾಡಿಕೊಡಲಾಗಿತ್ತು. ಆದರೆ ಇದು ಪ್ರಯಾಣಿಕರಿಗೆ ತೀವ್ರ ಕಿರಿಕಿರಿ ಉಂಟುಮಾಡಿತ್ತು.&lt;/p&gt;&lt;img&gt;&lt;p&gt;&lt;strong&gt;ತಾತ್ಕಾಲಿಕ ದುರಸ್ತಿ ಮತ್ತು ಸುರಕ್ಷತಾ ಕ್ರಮಗಳು:&lt;/strong&gt;&lt;/p&gt;&lt;p&gt;ಸದ್ಯ ಲೋಕೋಪಯೋಗಿ ಇಲಾಖೆ (PWD) ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಜಂಟಿ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ಜಿಲ್ಲಾಡಳಿತ ಈ ಮಹತ್ವದ ತೀರ್ಮಾನ ಕೈಗೊಂಡಿದೆ.&lt;/p&gt;&lt;p&gt;ಘಾಟ್ ರಸ್ತೆಯ ತಿರುವಿನಲ್ಲಿ ಭದ್ರವಾದ ತಡೆಗೋಡೆ (Retaining Wall) ನಿರ್ಮಿಸಲಾಗಿದ್ದು, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ಸುಸ್ಥಿತಿಗೆ ತರಲಾಗಿದೆ. ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆಯಾಗಿ ಈ ಕೆಳಗಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ:&lt;/p&gt;&lt;img&gt;&lt;p&gt;&lt;strong&gt;ಎಚ್ಚರಿಕೆ ಫಲಕಗಳು: &lt;/strong&gt;ಘಾಟಿ ರಸ್ತೆಯುದ್ದಕ್ಕೂ ತಡೆಗೋಡೆ ಹಾಗೂ ಅಗತ್ಯ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.&lt;/p&gt;&lt;p&gt;&lt;strong&gt;ಮಾಹಿತಿ ಸೂಚಿಗಳು: &lt;/strong&gt;ಸವಾರರ ಗಮನ ಸೆಳೆಯಲು ಸೂಕ್ತ ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.&lt;/p&gt;&lt;p&gt;&lt;strong&gt;ರಾತ್ರಿ ಸಂಚಾರಕ್ಕೆ ಸುಲಭ: &lt;/strong&gt;ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ರಸ್ತೆಯ ಇಕ್ಕೆಲಗಳಲ್ಲಿ 'ಕ್ಯಾಟ್ ಐ' (Cat Eye) ಹಾಗೂ ಸೋಲಾರ್ ಸ್ಟಡ್ಸ್&zwnj;ಗಳನ್ನು (Solar Studs) ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ.&lt;/p&gt;&lt;img&gt;&lt;p&gt;ಪ್ರಸ್ತುತ ಕೇವಲ ಲಘು ವಾಹನಗಳಿಗೆ (ಕಾರು, ಜೀಪ್, ಆಟೋ, ದ್ವಿಚಕ್ರ ವಾಹನಗಳು) ಮಾತ್ರ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ಇನ್ನೂ ಕಾಯಬೇಕಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/shivamogga-hulikal-ghat-thirthahalli-kundapura-road-reopens-for-light-vehicles-after-landslide-repairs-1gfk5ot"/>
        </item>
        <item>
            <title><![CDATA[ಪ್ರಯಾಣಿಕರೇ ಗಮನಿಸಿ; ಜೂನ್ 18, 23 ರಂದು ಮೈಸೂರು-ಅರಸೀಕೆರೆ-ತಾಳಗುಪ್ಪ ಮಾರ್ಗದ ಪ್ರಮುಖ ರೈಲುಗಳ ಸಂಚಾರ ರದ್ದು!]]></title>
            <link>https://kannada.asianetnews.com/gallery/karnataka-districts/mysore-arasikere-talaguppa-train-passengers-alert-major-trains-cancelled-on-june-18-23-2bm8mub</link>
            <guid isPermaLink="true">https://kannada.asianetnews.com/gallery/karnataka-districts/mysore-arasikere-talaguppa-train-passengers-alert-major-trains-cancelled-on-june-18-23-2bm8mub</guid>
            <pubDate>Mon, 15 Jun 2026 20:53:50 +0530</pubDate>
            <description><![CDATA[&lt;p&gt;ಹೊಳೆನರಸೀಪುರ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಅತ್ಯಗತ್ಯವಾಗಿ ನಡೆಯಬೇಕಾಗಿರುವ ರಸ್ತೆ ಕೆಳಸೇತುವೆ (ಆರ್&zwnj;ಯುಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಜೂನ್ 18 ಮತ್ತು 23 ರಂದು ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksphq7ck9atjhr7p4x09t11k,imgname-shivamogga-railway-station-1779946986898.jpg" type="image/jpeg" height="390" width="690"/>
            <content:encoded><![CDATA[&lt;p&gt;ಹೊಳೆನರಸೀಪುರ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಅತ್ಯಗತ್ಯವಾಗಿ ನಡೆಯಬೇಕಾಗಿರುವ ರಸ್ತೆ ಕೆಳಸೇತುವೆ (ಆರ್&zwnj;ಯುಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಜೂನ್ 18 ಮತ್ತು 23 ರಂದು ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.&lt;/p&gt;&lt;img&gt;&lt;p&gt;&lt;strong&gt;ಭಾಗಶಃ ರದ್ದು ಹಾಗೂ ನಿಯಂತ್ರಣ&lt;/strong&gt;ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವೆ ರಸ್ತೆ ಕೆಳಸೇತುವೆ (ಆರ್&zwnj;ಯುಬಿ) ಕಾಮಗಾರಿ ನಡೆಯುತ್ತಿರುವುದರಿಂದ ಜೂನ್ 18 ಮತ್ತು 23 ರಂದು ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ಈ ದಿನಗಳಲ್ಲಿ ಕೆಲವು ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದ್ದರೆ, ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದು ಹಾಗೂ ನಿಯಂತ್ರಣ (ವಿಳಂಬ) ಮಾಡಲಾಗುತ್ತಿದೆ. ಆ ವಿವರಗಳು ಹೀಗಿವೆ..&lt;/p&gt;&lt;img&gt;&lt;p&gt;&lt;strong&gt;ಸಂಪೂರ್ಣವಾಗಿ ರದ್ದಾಗಿರುವ ರೈಲುಗಳು (ಜೂನ್ 18 ಮತ್ತು 23)&lt;/strong&gt;ಕೆಳಕಂಡ ದೈನಂದಿನ ರೈಲುಗಳ ಸಂಚಾರವನ್ನು ಈ ಎರಡು ದಿನಗಳ ಕಾಲ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆಅರಸೀಕೆರೆ&ndash;ಮೈಸೂರು ಪ್ಯಾಸೆಂಜರ್ (ರೈಲು ಸಂಖ್ಯೆ: 56267)ಮೈಸೂರು&ndash;ತಾಳಗುಪ್ಪ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16206)ತಾಳಗುಪ್ಪ&ndash;ಮೈಸೂರು ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16205)&lt;/p&gt;&lt;img&gt;&lt;p&gt;&lt;strong&gt;ಭಾಗಶಃ ರದ್ದಾಗಿರುವ ರೈಲುಗಳು&lt;/strong&gt;ಮೈಸೂರು&ndash;ಶಿವಮೊಗ್ಗ ಟೌನ್ ದೈನಂದಿನ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16225): ಜೂನ್ 18 ಮತ್ತು 23 ರಂದು ಈ ರೈಲನ್ನು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಹೀಗಾಗಿ, ಈ ರೈಲು ಮೈಸೂರಿನಿಂದ ಹೊರಡುವ ಬದಲು ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಶಿವಮೊಗ್ಗದ ಕಡೆಗೆ ಪ್ರಯಾಣ ಬೆಳೆಸಲಿದೆ.&lt;/p&gt;&lt;img&gt;&lt;p&gt;&lt;strong&gt;ತಡವಾಗಿ ಓಡಲಿರುವ ರೈಲುಗಳು (ನಿಯಂತ್ರಣ)&lt;/strong&gt;ಮೈಸೂರು&ndash;ಯಶವಂತಪುರ ದೈನಂದಿನ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16208): ಜೂನ್ 18 ಮತ್ತು 23 ರಂದು ಹೊರಡುವ ಈ ರೈಲಿನ ಸಂಚಾರವನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುತ್ತದೆ. ಜೂನ್ 18 ರಂದು 30 ನಿಮಿಷ ಹಾಗೂ ಜೂನ್ 23 ರಂದು 120 ನಿಮಿಷ (2 ಗಂಟೆ) ಕಾಲ ಈ ರೈಲು ತಡವಾಗಿ ಸಂಚರಿಸಲಿದೆ.&lt;/p&gt;]]></content:encoded>
            <category>shivamogga</category>
            <dc:creator>Ashwini HR</dc:creator>
            <atom:link href="https://kannada.asianetnews.com/gallery/karnataka-districts/mysore-arasikere-talaguppa-train-passengers-alert-major-trains-cancelled-on-june-18-23-2bm8mub"/>
        </item>
        <item>
            <title><![CDATA[Shivamogga: ಗ್ರಾಮಸ್ಥರೇ ಎರಡು ಕಿಲೋ ಮೀಟರ್ ರಸ್ತೆ ನಿರ್ಮಿಸಿ ವಿನೂತನ ಪ್ರತಿಭಟನೆ!]]></title>
            <link>https://kannada.asianetnews.com/karnataka-districts/villagers-repair-road-themselves-in-sagara-stage-unique-protest-against-administrative-apathy-kvn/articleshow-4r8znie</link>
            <guid isPermaLink="true">https://kannada.asianetnews.com/karnataka-districts/villagers-repair-road-themselves-in-sagara-stage-unique-protest-against-administrative-apathy-kvn/articleshow-4r8znie</guid>
            <pubDate>Sat, 13 Jun 2026 09:06:28 +0530</pubDate>
            <description><![CDATA[&lt;p&gt;ಸಾಗರ ತಾಲೂಕಿನ ಪಡವಗೋಡು ಗ್ರಾಮದಲ್ಲಿ, ಆಡಳಿತದ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರು ರೈತ ಸಂಘದ ಸಹಯೋಗದೊಂದಿಗೆ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿದ್ದಾರೆ. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಜೆಸಿಬಿ, ಟಿಪ್ಪರ್ ಬಳಸಿ ಶ್ರಮದಾನದ ಮೂಲಕ ರಸ್ತೆ ಅಭಿವೃದ್ಧಿಪಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktzgjg692707c1vqmpp2a0pj,imgname-sagara-road-1781321515209.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಾಗರ: ತಾಲೂಕಿನ ಪಡವಗೋಡು ಗ್ರಾಮದಲ್ಲಿ ರಸ್ತೆ ಅಭಿವೃದ್ದಿಗೆ ಆಡಳಿತ ಸ್ಪಂದಿಸದೆ ಇರುವ ಹಿನ್ನೆಲೆಯಲ್ಲಿ ರೈತ ಸಂಘದ ಸಹಯೋಗದೊಂದಿಗೆ ಗ್ರಾಮಸ್ಥರೇ ರಸ್ತೆ ದುರಸ್ತಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.&lt;/p&gt;&lt;p&gt;ಕಳೆದ ಒಂದೂವರೆ ವರ್ಷದಿಂದ ಪಡವಗೋಡು ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿತ್ತು. ರಸ್ತೆ ದುರಸ್ತಿಪಡಿಸಲು ಸ್ಥಳೀಯ ಗ್ರಾಮ ಪಂಚಾಯ್ತಿಗೆ, ತಾಲ್ಲೂಕು ಪಂಚಾಯ್ತಿ, ಶಾಸಕರಿಗೆ ಮನವಿ ಸಲ್ಲಿಸಿದ್ದಾಗ್ಯೂ ಸ್ಪಂದಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರೈತ ಸಂಘಕ್ಕೆ ವಿಷಯ ತಿಳಿಸಿದ್ದರು. ಶುಕ್ರವಾರ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜೆಸಿಬಿ, ಟಿಪ್ಪರ್ ಬಳಸಿ ಶ್ರಮದಾನ ಮಾಡಿ ಸುಮಾರು ಎರಡು ಕಿ.ಮೀ. ರಸ್ತೆಯನ್ನು ಅಭಿವೃದ್ದಿ ಪಡಿಸಿ ಆಡಳಿತಕ್ಕೆ ಸಡ್ಡು ಹೊಡೆದಿದ್ದಾರೆ.&lt;/p&gt;&lt;h2&gt;&lt;strong&gt;ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿ&lt;/strong&gt;&lt;/h2&gt;&lt;p&gt;ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಗ್ರಾಮೀಣ ಭಾಗಗಳು ಅಭಿವೃದ್ದಿ ಆಗದೆ ಹೋದರೆ ದೇಶ ಅಭಿವೃದ್ದಿ ಆಗುವುದಿಲ್ಲ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಪಡವಗೋಡು ಗ್ರಾಮದಲ್ಲಿ ಎರಡು ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ಮನವಿ ನೀಡಿದರೂ ಸ್ಪಂದಿಸದೆ ನಿರ್ಲಕ್ಷ್ಯ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ವಂತ ಹಣ ಹಾಕಿ ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಯನ್ನು ಪ್ರತಿಭಟನೆ ರೂಪದಲ್ಲಿ ನಿರ್ವಹಿಸಿದೆ ಎಂದು ಹೇಳಿದರು.&lt;/p&gt;&lt;p&gt;ರೈತ ಸಂಘದ ಕಾರ್ಯಾಧ್ಯಕ್ಷ ರಮೇಶ್ ಈ. ಕೆಳದಿ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಎಲ್ಲಾ ಪಕ್ಷಗಳು ಆಡಳಿತ ನಡೆಸಿದ್ದು ಸ್ಥಳೀಯ ಸಂಸ್ಥೆಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆ ನಡೆದಿಲ್ಲ. ಚುನಾವಣೆ ನಡೆಯದೆ ಇರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿAದ ಯಾವುದೇ ಅನುದಾನ ಬರುತ್ತಿಲ್ಲ. ಇದರಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಪಡವಗೋಡು ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದ್ದಿ ನಿಂತ ನೀರಾಗಿದೆ. ಗ್ರಾಮಸ್ಥರು ಸ್ಮಶಾನಕ್ಕೆ ಶವ ಸಾಗಿಸಲು ಸಹ ಸಾಧ್ಯವಾಗದ ಸ್ಥಿತಿಯಲ್ಲಿದ್ದರು. ಇದನ್ನು ಮನಗಂಡು ಗ್ರಾಮಸ್ಥರ ಮನವಿ ಮೇರೆಗೆ ರೈತ ಸಂಘ ಕೈಜೋಡಿಸಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಿಸಲಾಗಿದೆ ಎಂದರು.&lt;/p&gt;&lt;p&gt;ಗ್ರಾಮಸ್ಥ ಮಂಜುನಾಥ ಗೌಡ ಮಾತನಾಡಿದರು. ಮೇಘರಾಜ್ ಪಡವಗೋಡು, ಅಜ್ಜಪ್ಪ ಪಡವಗೋಡು, ಸಂತೋಷ್, ಲಿಂಗರಾಜ್, ಮಹೇಶ್, ಉಮೇಶ್, ನವೀನ್, ರಾಮಚಂದ್ರ, ಶಶಿಕಲಾ, ಸುಜಾತ ಇತರರು ಹಾಜರಿದ್ದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/villagers-repair-road-themselves-in-sagara-stage-unique-protest-against-administrative-apathy-kvn/articleshow-4r8znie"/>
        </item>
        <item>
            <title><![CDATA[ಜೂನ್ 21ರಿಂದ ಜೋಗ, ಸಿಗಂದೂರು ಪ್ರವಾಸಕ್ಕೆ ವಿಶೇಷ ವೇಗದೂತ ಬಸ್ ಸೇವೆ: ಇಲ್ಲಿದೆ ಮಾಹಿತಿ]]></title>
            <link>https://kannada.asianetnews.com/karnataka-districts/special-vegadhoota-bus-service-for-jog-falls-sigandur-trips-from-june-21st-here-is-the-information-mrq/articleshow-8lqth1d</link>
            <guid isPermaLink="true">https://kannada.asianetnews.com/karnataka-districts/special-vegadhoota-bus-service-for-jog-falls-sigandur-trips-from-june-21st-here-is-the-information-mrq/articleshow-8lqth1d</guid>
            <pubDate>Wed, 17 Jun 2026 07:42:04 +0530</pubDate>
            <description><![CDATA[&lt;p&gt;ಜೋಗ್ ಫಾಲ್ಸ್ ಮತ್ತು ಸಿಗಂದೂರು ದೇವಸ್ಥಾನಕ್ಕೆ ಜೂ. 21 ರಿಂದ ವಿಶೇಷ ವೇಗದೂತ ಬಸ್ ಸೇವೆ ಆರಂಭವಾಗಲಿದೆ. ಈ ಲೇಖನದಲ್ಲಿ ಬಸ್&zwnj;ನ ಸಮಯ, ಮಾರ್ಗ, ದರ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಲಭ್ಯವಿಲ್ಲದಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಜೊತೆಗೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನದ ವಿವರಗಳೂ ಇವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv9ndc6ec921wkxz9babnns8,imgname-jog-sigandur-1781662134478.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &amp;nbsp;&lt;/strong&gt;ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಹಾವೇರಿ ಮತ್ತು ರಾಣಿಬೆನ್ನೂರು ನಗರಗಳಿಂದ ಶಿವಮೊಗ್ಗ ಜಿಲ್ಲೆಯ ವಿಶ್ವ ಪ್ರಸಿದ್ದ ಪ್ರೇಕ್ಷಣೀಯ ಸ್ಥಳವಾದ ಜೋಗ್ ಫಾಲ್ಸ್ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾಧಿಗಳು/ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ವೀಕ್ಷಣೆಗಾಗಿ ತೆರಳುವ ಜೂ. 21ರಿಂದ ಹಾವೇರಿ ಮತ್ತು ರಾಣಿಬೆನ್ನೂರು ಬಸ್ ನಿಲ್ದಾಣಗಳಿಂದ ಜೋಗ್&zwnj;ಫಾಲ್ಸ್ ಮತ್ತು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ವಿಶೇಷ ವೇಗದೂತ ವಾಹನಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.&lt;/p&gt;&lt;h2&gt;&lt;strong&gt;ಹಾವೇರಿಯಿಂದ ಬೆಳಗ್ಗೆ 8 ಗಂಟೆಗೆ ಬಸ್ ಸಂಚಾರ ಆರಂಭ&lt;/strong&gt;&lt;/h2&gt;&lt;p&gt;ಹಾವೇರಿಯಿಂದ ಜೋಗ್ ಫಾಲ್ಸ್ ಬೆಳಗ್ಗೆ 8 ಗಂಟೆಯಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಮಾಡಿಸಿಕೊಂಡು ಜೋಗ್ ಫಾಲ್ಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಪುನಃ ಜೋಗ್&zwnj;ಫಾಲ್ಸ್&zwnj;ನಿಂದ ಸಂಜೆ 4 ಗಂಟೆಗೆ ನಿರ್ಗಮಿಸಿ, ಹಾವೇರಿಗೆ ಸಂಜೆ 7.30ಕ್ಕೆ ತಲುಪುವುದು. ಜೋಗ್ ಫಾಲ್ಸ್ ವೀಕ್ಷಣೆಗೆ 4 ಗಂಟೆಗಳ ಕಾಲಾವಕಾಶ ಇದ್ದು, ಹಾವೇರಿಯಿಂದ ಜೋಗ್ ಫಾಲ್ಸ್&zwnj;ಗೆ 390 ರು. (ಹೋಗಿ ಬರುವ ಸೇರಿ) ಪ್ರಯಾಣದರ ಇರುತ್ತದೆ.&lt;/p&gt;&lt;p&gt;ಹಾವೇರಿಯಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬೆಳಗ್ಗೆ 7.30 ಗಂಟೆಗೆ ಆಡೂರು, ಅಕ್ಕಿಆಲೂರು, ನಾಲ್ಕರ ಕ್ರಾಸ್, ಗೊಂದಿ, ಆನವಟ್ಟಿ, ಉಳವಿ, ಸಾಗರ ಮಾರ್ಗವಾಗಿ ಕಾರ್ಯಚರಣೆ ಮಾಡಲಾಗುತ್ತದೆ. ಪುನಃ ಸಂಜೆ 3.30 ಗಂಟೆಗೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದ ನಿರ್ಗಮಿಸಿ ಸಂಜೆ 7.30ಕ್ಕೆ ಹಾವೇರಿಗೆ ತಲುಪುವುದು. ಹಾವೇರಿಯಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ 455 ರು. (ಹೋಗಿ ಬರುವ ಸೇರಿ) ಪ್ರಯಾಣದರ ಇರುತ್ತದೆ.&lt;/p&gt;&lt;h3&gt;&lt;strong&gt;ರಾಣಿಬೆನ್ನೂರಿನಿಂದ ಜೋಗ್ ಫಾಲ್ಸ್&zwnj;ಗೆ ಬಸ್&lt;/strong&gt;&lt;/h3&gt;&lt;p&gt;ರಾಣಿಬೆನ್ನೂರಿನಿಂದ ಜೋಗ್ ಫಾಲ್ಸ್&zwnj;ಗೆ ಬೆಳಗ್ಗೆ 8.30 ಗಂಟೆಗೆ ಹಿರೇಕೆರೂರು, ಶಿರಾಳಕೊಪ್ಪ, ಸೊರಬ, ಸಿದ್ದಾಪುರ ಮಾರ್ಗವಾಗಿ ಬನವಾಸಿಯಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ, ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಮಾಡಿಸಿಕೊಂಡು ಕಾರ್ಯಚರಣೆ ಮಾಡಲಾಗುತ್ತದೆ. ಪುನಃ ಜೋಗ್ ಫಾಲ್ಸ್&zwnj;ನಿಂದ ಸಂಜೆ 4 ಗಂಟೆಗೆ ನಿರ್ಗಮಿಸಿ, ರಾಣಿಬೆನ್ನೂರಿಗೆ ಸಂಜೆ 7.30ಕ್ಕೆ ತಲುಪುವುದು. ಜೋಗ್ ಫಾಲ್ಸ್ ವೀಕ್ಷಣೆಗೆ 4 ಗಂಟೆಗಳ ಕಾಲಾವಕಾಶ ಇದ್ದು, ರಾಣಿಬೆನ್ನೂರನಿಂದ ಜೋಗ್ ಫಾಲ್ಸ್ 460 ರು. (ಹೋಗಿ ಬರುವ ಸೇರಿ) ಪ್ರಯಾಣದರ ಇರುತ್ತದೆ.&lt;/p&gt;&lt;p&gt;ರಾಣಿಬೆನ್ನೂರಿನಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬೆಳಗ್ಗೆ 7.30 ಗಂಟೆಗೆ ಕೋಡ, ಹಿರೇಕೆರೂರು, ಶಿರಾಳಕೊಪ್ಪ, ಇಂಡುವಳ್ಳಿ, ಉಳವಿ, ಸಾಗರ ಮಾರ್ಗವಾಗಿ ಕಾರ್ಯಚರಣೆ ಮಾಡಲಾಗುತ್ತದೆ. ಪುನಃ ಮಧ್ಯಾಹ್ನ 3 ಗಂಟೆಗೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಿಂದ ನಿರ್ಗಮಿಸಿ ಸಂಜೆ 6.30ಕ್ಕೆ ರಾಣಿಬೆನ್ನೂರಿಗೆ ತಲುಪುವುದು. ರಾಣಿಬೆನ್ನೂರನಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ 430 ರು. (ಹೋಗಿ ಬರುವ ಸೇರಿ) ಪ್ರಯಾಣದರ ಇರುತ್ತದೆ.&lt;/p&gt;&lt;p&gt;ಈ ವಿಶೇಷ ಬಸ್&zwnj;ಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿ ಆಸನಗಳನ್ನು ಕಾಯ್ದಿರಿಸಬಹುದಾಗಿರುತ್ತದೆ. ಈ ಸಾರಿಗೆಗಳು ವಿಶೇಷ ಸಾರಿಗೆಗಳಾಗಿ ಕಾರ್ಯಾಚರಣೆ ಮಾಡುವುದರಿಂದ ''''ಮಹಿಳಾ ಪ್ರಯಾಣಿಕರಿಗೆ'''' ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ ಎಂದು ವಾ.ಕ.ರ.ಸಾ.ಸಂಸ್ಥೆ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;&lt;h3&gt;&lt;strong&gt;ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ&lt;/strong&gt;&lt;/h3&gt;&lt;p&gt;ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ, ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್&zwnj;ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ಆ.31ರೊಳಗಾಗಿ ಆನ್&zwnj;ಲೈನ್&zwnj;ನಲ್ಲಿ ಅರ್ಜಿ ಸಲ್ಲಿಸಬೇಕು.&lt;/p&gt;&lt;p&gt;ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲಾತಿಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಅದೇಶಗಳ ಬಗ್ಗೆ ವೆಬ್&zwnj;ಸೈಟ್ ಇಲಾಖಾ ಸಹಾಯವಾಣಿ 8050770004 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಕೆಲಸ ಸಮಯದಲ್ಲಿ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/special-vegadhoota-bus-service-for-jog-falls-sigandur-trips-from-june-21st-here-is-the-information-mrq/articleshow-8lqth1d"/>
        </item>
        <item>
            <title><![CDATA[Shivamogga Crime News: ರೌಡಿಶೀಟರ್ 'ಬ್ಯಾಟ್ ನರಸಿಂಹ' ಮಚ್ಚಿನೇಟಿಗೆ ಬಲಿ; ಗ್ಯಾಂಗ್ ವಾರ್ ಶಂಕೆ!]]></title>
            <link>https://kannada.asianetnews.com/karnataka-districts/shivamogga-rowdy-sheeter-bat-narasimha-brutally-murdered-by-ambu-gang-sat/articleshow-8qrpg3b</link>
            <guid isPermaLink="true">https://kannada.asianetnews.com/karnataka-districts/shivamogga-rowdy-sheeter-bat-narasimha-brutally-murdered-by-ambu-gang-sat/articleshow-8qrpg3b</guid>
            <pubDate>Fri, 12 Jun 2026 22:50:42 +0530</pubDate>
            <description><![CDATA[&lt;p&gt;ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ 'ಬ್ಯಾಟ್ ನರಸಿಂಹ' ಎಂಬ ರೌಡಿಶೀಟರ್&zwnj;ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಂಬು ಮತ್ತು ಆತನ ಗ್ಯಾಂಗ್ ಈ ಕೃತ್ಯ ಎಸಗಿದ್ದು, ಇದು ಗ್ಯಾಂಗ್ ವಾರ್&zwnj;ನ ಭಾಗವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktydf6zkrbjeyxewjz9z1frr,imgname-shivamogga-bat-narasimha-1781284707315.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜೂ.12): ಮ&lt;/strong&gt;ಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ನಗರದ ಲಷ್ಕರ್ ಮೊಹಲ್ಲಾದಲ್ಲಿ ಇಂದು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಹಾಗೂ ಇಸ್ಪೀಟ್ ಗ್ಯಾಂಬ್ಲರ್ ಆಗಿದ್ದ 'ಬ್ಯಾಟ್ ನರಸಿಂಹ' ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.&lt;/p&gt;&lt;h2&gt;&lt;strong&gt;ಸಿನೆಮಾ ಶೈಲಿಯಲ್ಲಿ ದಾಳಿ:&lt;/strong&gt;&lt;/h2&gt;&lt;p&gt;ಕೊಲೆಯಾದ ನರಸಿಂಹ ಮತ್ತೊಬ್ಬ ಕುಖ್ಯಾತ ರೌಡಿಶೀಟರ್ ಕಾಡಾ ಕಾರ್ತಿಕ್&zwnj;ನ ಆಪ್ತ ಸಹಚರ ಎಂದು ತಿಳಿದುಬಂದಿದೆ. ಇಂದು ಲಷ್ಕರ್ ಮೊಹಲ್ಲಾ ಬಳಿ ನರಸಿಂಹ ಒಂಟಿಯಾಗಿ ಸಿಕ್ಕಿದ್ದನ್ನು ಗಮನಿಸಿದ ಅಂಬು ಮತ್ತವನ ಗ್ಯಾಂಗ್, ಮಚ್ಚು ಮತ್ತು ಲಾಂಗ್&zwnj;ಗಳಂತಹ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿದೆ. ರಕ್ತದ ಮಡುವಿನಲ್ಲಿ ಬಿದ್ದ ನರಸಿಂಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ದಾಳಿ ನಡೆಸಿದ ಅಂಬು ಮತ್ತು ಆತನ ಸಹಚರರು ಸ್ಥಳದಿಂದ ಪರಾರಿಯಾಗಿದ್ದಾರೆ.&lt;/p&gt;&lt;p&gt;&lt;strong&gt;ಸ್ಥಳಕ್ಕೆ ಪೊಲೀಸರ ಭೇಟಿ:&lt;/strong&gt;&lt;/p&gt;&lt;p&gt;ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಕೋಟೆ ಪೊಲೀಸ್ ಠಾಣೆಯ ಇನ್ಸ್&zwnj;ಪೆಕ್ಟರ್ ಹರೀಶ್ ಪಟೇಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಹತ್ಯೆಯು ಶಿವಮೊಗ್ಗದ ರೌಡಿಗಳ ನಡುವಿನ ಗ್ಯಾಂಗ್ ವಾರ್&zwnj;ನ ಭಾಗವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಅಂಬು ಮತ್ತು ಆತನ ಗ್ಯಾಂಗ್&zwnj;ಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಲಷ್ಕರ್ ಮೊಹಲ್ಲಾ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-rowdy-sheeter-bat-narasimha-brutally-murdered-by-ambu-gang-sat/articleshow-8qrpg3b"/>
        </item>
        <item>
            <title><![CDATA[RSS: ಇಷ್ಟು ವರ್ಷ ಸಂಘದ ನೋಂದಣಿ ಏಕೆ ಪ್ರಶ್ನಿಸಲಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ]]></title>
            <link>https://kannada.asianetnews.com/karnataka-districts/rss-registration-row-ks-eshwarappa-slams-priyank-kharge-gvd/articleshow-bwlg8he</link>
            <guid isPermaLink="true">https://kannada.asianetnews.com/karnataka-districts/rss-registration-row-ks-eshwarappa-slams-priyank-kharge-gvd/articleshow-bwlg8he</guid>
            <pubDate>Tue, 23 Jun 2026 22:52:26 +0530</pubDate>
            <description><![CDATA[&lt;p&gt;RSS Registration Controversy: ಸ್ವಾತಂತ್ರ್ಯ ಪೂರ್ವದಲ್ಲಿಯೇ ಸ್ಥಾಪಿತವಾದ ಆರ್&zwnj;ಎಸ್&zwnj;ಎಸ್&zwnj; ಸಂಘದ ನೋಂದಣಿ ಬಗ್ಗೆ ಈಗ ಪ್ರಶ್ನಿಸುತ್ತಿರುವವರು ಇಷ್ಟು ವರ್ಷ ಏಕೆ ಸುಮ್ಮನಿದ್ದರು ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kms072ysmz8zjcb80ms8j7ye,imgname-ks-eshwarappa--1774660586457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜೂ.23): &lt;/strong&gt;ಸ್ವಾತಂತ್ರ್ಯ ಪೂರ್ವದಲ್ಲಿಯೇ ಸ್ಥಾಪಿತವಾದ ಆರ್&zwnj;ಎಸ್&zwnj;ಎಸ್&zwnj; ಸಂಘದ ನೋಂದಣಿ ಬಗ್ಗೆ ಈಗ ಪ್ರಶ್ನಿಸುತ್ತಿರುವವರು ಇಷ್ಟು ವರ್ಷ ಏಕೆ ಸುಮ್ಮನಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪದೇ ಪದೇ ಆರ್&zwnj;ಎಸ್&zwnj;ಎಸ್ ಬಗ್ಗೆ ಮಾತನಾಡುತ್ತಿರುವ ರಾಜ್ಯ ಗೃಹಮಂತ್ರಿ ಪ್ರಿಯಾಂಕ್ ಖರ್ಗೆಯವರಿಗೆ ಸಂವಿಧಾನದ ಬಗ್ಗೆ ಅರಿವೇ ಇಲ್ಲ. ಆರ್&zwnj;ಎಸ್&zwnj;ಎಸ್ ಸಂಘದ ನೋಂದಣಿ ವಿಷಯವಾಗಿ ಪ್ರಿಯಾಂಕ್ ಖರ್ಗೆ ಸಂಘದ ಸರಸಂಘ ಸಂಚಾಲಕ ಮೋಹನ್ ಭಾಗವತ್ ಅವರಿಗೆ ಬರೆದಿರುವ ಪತ್ರ ಮತ್ತು ಕೇಳಿರುವ ಪ್ರಶ್ನೆಗಳು ಪ್ರಿಯಾಂಕ್ ಖರ್ಗೆ ಅವರದ್ದೋ ಅಥವಾ ಕಾಂಗ್ರೆಸ್ ಪಕ್ಷದ್ದೋ ಎಂದು ಪ್ರಶ್ನಿಸಿದರು.&lt;/p&gt;&lt;p&gt;ಅಷ್ಟಕ್ಕೂ ಯಾವುದೇ ಸಂಘಗಳ ಅಥವಾ ಸಂಸ್ಥೆಗಳನ್ನು ನೋಂದಣಿ ಮಾಡಿಸುವುದು-ಬಿಡುವುದು ಆಯಾ ಸಂಸ್ಥೆಗೆ ಸೇರಿದ್ದಾಗಿದೆ. ಒಂದು ಸ್ವಯಂಪ್ರೇರಿತ ವ್ಯಕ್ತಿಗಳ ಸಮೂಹ ಸಂವಿಧಾನದ ಅನುಚ್ಛೇದ 19 (1) (ಸಿ) ಪ್ರಕಾರ ದೇಶದ ಯಾವುದೇ ವ್ಯಕ್ತಿ ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಭೂತ ಹಕ್ಕನ್ನು ಹೊಂದಿರುತ್ತದೆ. ನೋಂದಣಿ ಮಾಡಿಸಲೇಬೇಕೆಂಬ ನಿಯಮವೂ ಇಲ್ಲ. 1982ರ ಸಂಘಗಳ ನೋಂದಣಿ ಕಾರ್ಯಕೂಡ ಇದನ್ನೇ ಹೇಳುತ್ತದೆ. ಸರ್ಕಾರದಿಂದ ಅನುದಾನ ಪಡೆಯಲು ಅಥವಾ ಪ್ರತ್ಯೇಕ ಕಾನೂನುಬದ್ಧ ಘಟಕವಾಗಿ ಕಾರ್ಯನಿರ್ವಹಿಸಲು ಬಯಸಿದಾಗ ಮಾತ್ರ ನೋಂದಣಿ ಬೇಕಾಗುತ್ತದೆ. ಆರ್&zwnj;ಎಸ್&zwnj;ಎಸ್ ವ್ಯಕ್ತಿಗಳ ಸಮೂಹವಾಗಿದ್ದು, ಅದು ಯಾವುದೇ ಆಸ್ತಿ ಅನುದಾನವನ್ನು ಬಯಸುವುದಿಲ್ಲ. ಆದ್ದರಿಂದ ಸಂಘದ ನೋಂದಣಿ ಕಡ್ಡಾಯವಲ್ಲ. ಇದು ಪ್ರಿಯಾಂಕ್ ಖರ್ಗೆಯವರಿಗೆ ಗೊತ್ತಿರಬೇಕು ಎಂದು ಟೀಕಿಸಿದರು.&lt;/p&gt;&lt;p&gt;ಈಗಾಗಲೇ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಕಾನೂನು ತಜ್ಞರು ಉತ್ತರ ನೀಡಿದ್ದಾರೆ. ಸುಪ್ರೀಂ ಕೋರ್ಟ್&zwnj;ನ ಹಿರಿಯ ವಕೀಲ, ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ.ಆಚಾರ್&zwj;ಯ ಹೇಳಿಕೆ ನೀಡಿ, ಪ್ರಿಯಾಂಕ್&zwnj; ಖರ್ಗೆ ಅವರಿಗೆ ಸಂಘಕ್ಕೆ ಪತ್ರ ಅಥವಾ ನೋಟೀಸ್ ಕೊಡುವ ಯಾವ ಅಧಿಕಾರವೂ ಇಲ್ಲ ಎಂದಿದ್ದಾರೆ. ಹಾಗೆಯೇ ಹೈಕೋರ್ಟಿನ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರು ಕೂಡ ಖರ್ಗೆಯವರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದಿದ್ದಾರೆ. ಇದನ್ನು ಪ್ರಿಯಾಂಕ್ ಖರ್ಗೆ ಅರ್ಥಮಾಡಿಕೊಳ್ಳಬೇಕು ಎಂದು ಕುಟುಕಿದರು.&lt;/p&gt;&lt;p&gt;ಅಲ್ಲದೆ, ವಕೀಲರು, ಮಾಜಿ ಅಡ್ವೋಕೇಟ್ ಜನರಲ್&zwnj;ಗಳು, ಸುಪ್ರೀಂಕೋರ್ಟ್ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳು ತಮ್ಮ ಅರಿವಿನ ಮತ್ತು ಜ್ಞಾನದಿಂದ ನೀಡಿದ ಹೇಳಿಕೆಗಳನ್ನು ಪ್ರಿಯಾಂಕ್ ಖರ್ಗೆ ಧಿಕ್ಕರಿಸಿ ಇಂತಹ ವ್ಯಕ್ತಿಗಳನ್ನು ಗುಲಾಮರು ಎಂದು ಕರೆಯುವ ಮೂಲಕ ತಮ್ಮ ಸಂಸ್ಕೃತಿಯನ್ನು ಬಹಿರಂಗಪಡಿಸಿದ್ದಾರೆ. ಪ್ರಿಯಾಂಕ್&zwnj; ಅವರ ಹೇಳಿಕೆ ಅವರ ವಿದ್ಯೆ, ಜ್ಞಾನ ಮತ್ತು ಅರ್ಹತೆ ನಿರ್ಧರಿಸುತ್ತದೆ ಎಂದು ವ್ಯಂಗ್ಯವಾಡಿದರು. ಹೊಸದಾಗಿ ಅಧಿಕಾರದ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಈ ಇಬ್ಬರು ಒಂದು ರೀತಿಯಲ್ಲಿ ಅರ್ಬನ್ ನಕ್ಸಲರು ಎಂದು ಜರಿದ ಅವರು, ಈ ಇಬ್ಬರೂ ಹಿರಣ್ಯ-ಕಶ್ಯಪು ಇದ್ದಂತೆ. ಇವರನ್ನು ನಾಶಮಾಡಲು ಭಕ್ತಪ್ರಹ್ಲಾದನ ರೀತಿಯಲ್ಲಿ ನಾವಿದ್ದೇವೆ ಎಂದು ಪೌರಾಣಿಕೆ ಹಿನ್ನಲೆಯೊಂದಿಗೆ ಟೀಕಿಸಿದರು.&lt;/p&gt;&lt;h2&gt;&lt;strong&gt;ಕವಡೆ ಕಾಸಿನ ಕಿಮ್ಮತ್ತಿಲ್ಲ&lt;/strong&gt;&lt;/h2&gt;&lt;p&gt;ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆಣೆ-ಪ್ರಮಾಣದ ವಿರುದ್ಧ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ಅವರು, ಕೋಟ್ಯಂತರ ಜನರ ಆರಾಧ್ಯ ದೈವವಾಗಿರುವ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಭಕ್ತಿಯನ್ನು ವಿಜಯೇಂದ್ರ ಓರೆಗೆ ಹಚ್ಚಬಾರದು. ಮೊದಲು ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಅಡ್ಡ ಮತದಾನ ಮಾಡಿದವರು ಮಂಜುನಾಥನ ಮುಂದೆ ಆಣೆ ಮಾಡಿ, ಅಣ್ಣಪ್ಪ ಸ್ವಾಮಿ ಮುಂದೆ ಕ್ಷಮೆ ಕೇಳಿದರೆ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿರುವುದಿಲ್ಲ. ಹೀಗೆ ಶಿವಮೊಗ್ಗದ ವಾರ್ಡ್ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬ ಸಿಗಂದೂರು ಚೌಡೇಶ್ವರಿ ದೇವಿಯ ಫೋಟೊ ಹಾಗೂ 5 ರುಪಾಯಿ ಕೊಟ್ಟು ಆಣೆ ಮಾಡಿಸಿದ್ದ. ಮರುದಿನ ಮತ್ತೊಬ್ಬ ಅಭ್ಯರ್ಥಿ ಮಾರಮ್ಮನ ಫೋಟೊ ಜತೆ 10 ರೂಪಾಯಿ ಕೊಟ್ಟು ಆಣೆ ಮಾಡಿಸಿದ. ಕೊನೆಗೆ ಹತ್ತು ರುಪಾಯಿ ಕೊಟ್ಟವನೇ ಚುನಾವಣೆಯಲ್ಲಿ ಗೆದ್ದ ಎಂದು ಲೇವಡಿ ಮಾಡಿದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/rss-registration-row-ks-eshwarappa-slams-priyank-kharge-gvd/articleshow-bwlg8he"/>
        </item>
        <item>
            <title><![CDATA[Shivamogga: ತಿಂಗಳುಗಾಗುವಷ್ಟು ರಕ್ತ ಒಂದೇ ದಿನ ಸಂಗ್ರಹ!]]></title>
            <link>https://kannada.asianetnews.com/karnataka-districts/shivamogga-leads-in-blood-donation-awareness-record-collection-on-world-blood-donor-day-kvn/articleshow-dlbwyua</link>
            <guid isPermaLink="true">https://kannada.asianetnews.com/karnataka-districts/shivamogga-leads-in-blood-donation-awareness-record-collection-on-world-blood-donor-day-kvn/articleshow-dlbwyua</guid>
            <pubDate>Mon, 15 Jun 2026 07:47:54 +0530</pubDate>
            <description><![CDATA[ವಿಶ್ವ ರಕ್ತದಾನಿಗಳ ದಿನದಂದು ಶಿವಮೊಗ್ಗದಲ್ಲಿ ಯಶಸ್ವಿ ರಕ್ತ ಸಂಗ್ರಹ ನಡೆದಿದ್ದು, ಜಿಲ್ಲೆಯು ರಕ್ತ ಸಂಗ್ರಹಣೆಯಲ್ಲಿ ಸ್ವಾವಲಂಬನೆ ಸಾಧಿಸುತ್ತಿದೆ. ಜಿಲ್ಲೆಯಲ್ಲಿರುವ 9 ರಕ್ತನಿಧಿ ಕೇಂದ್ರಗಳು ಮತ್ತು ಸ್ವಯಂ ಪ್ರೇರಿತ ದಾನಿಗಳ ನೆರವಿನಿಂದ, ಇದೀಗ ನೆರೆಯ ಜಿಲ್ಲೆಗಳಿಗೂ ರಕ್ತ ಪೂರೈಸುವ ಮಟ್ಟಕ್ಕೆ ಬೆಳೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv29vvrbg0pmef6etrn1ebdk,imgname-fotojet---2026-06-14t110203.083-1781415145227.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ಭಾನುವಾರ ವಿಶ್ವ ರಕ್ತದಾನಿಗಳ ದಿನಾಚರಣೆ ಯಶಸ್ವಿಯಾಗಿ ನಡೆದಿದೆ. ಇವತ್ತೇ ತಿಂಗಳಿಗೆ ಆಗುವಷ್ಟು ರಕ್ತ ಸಂಗ್ರಹವಾಗಿದೆ. ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಸೇರಿದಂತೆ ಹಲವಾರು ಮಂದಿ ರಕ್ತದಾನ ಮಾಡಿದರು. ವಿವಿಧ ಕಡೆ ರಕ್ತದಾನ ಶಿಬಿರ ನಡೆದರೆ, ಹಲವಾರು ದಾನಿಗಳು ರಕ್ತನಿಧಿ ಕೇಂದ್ರಕ್ಕೆ ಬಂದು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.&lt;/p&gt;&lt;h2&gt;&lt;strong&gt;ಹಿನ್ನೋಟ&lt;/strong&gt;:&lt;/h2&gt;&lt;p&gt;ರಕ್ತದಾನದ ಕುರಿತು ಅರಿವು ಮೂಡಿ ದಾನಿಗಳ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿದ್ದಂತೆ ರಕ್ತದ ಬೇಡಿಕೆಯೂ ಅದೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ಅರಿವು ಇನ್ನಷ್ಟು ಹೆಚ್ಚಬೇಕೆಂಬ ಆಂದೋಲನದ ನಡುವೆಯೇ ಶಿವಮೊಗ್ಗ ರಕ್ತ ಸಂಗ್ರಹದಲ್ಲಿ ಸುತ್ತಮುತ್ತಲಿನ ಜಿಲ್ಲೆಗೆ ಹೋಲಿಸಿದರೆ ಮುಂಚೂಣಿಯಲ್ಲಿ ಬಂದು ನಿಂತಿದೆ.&lt;/p&gt;&lt;p&gt;ಒಬ್ಬ ರಕ್ತದಾನಿಯಿಂದ ನಾಲ್ಕು ಜೀವ ಉಳಿಸಬಹುದು ಎಂಬ ವಿಚಾರ, ರಕ್ತದಾನದ ಕುರಿತು ತೀವ್ರ ತರಹದ ಅರಿವು, ರಕ್ತದಾನದ ಶ್ರೇಷ್ಠತೆ, ಸುಶೀಕ್ಷತೆ, ಸಂಘ ಸಂಸ್ಥೆಗಳ ಜನಮುಖಿಯಾದ ಚಟುವಟಿಕೆ, ಉತ್ಸಾಹ ಇತ್ಯಾದಿ ಕಾರಣಗಳಿಂದ ರಕ್ತ ಸಂಗ್ರಹದಲ್ಲಿ ಪರವಾಗಿಲ್ಲ ಎನ್ನುವಷ್ಟರ ಮಟ್ಟಿಗೆ ಸ್ವಾವಲಂಬಿಯಾಗುವತ್ತ ಹೆಜ್ಜೆ ಇಟ್ಟಿರುವುದು ಮಾತ್ರವಲ್ಲ, ನೆರೆಯ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗೂ ರಕ್ತ ಪೂರೈಸುವ ಮಟ್ಟಕ್ಕೆ ಶಿವಮೊಗ್ಗ ಜಿಲ್ಲೆ ಬಂದು ನಿಂತಿದೆ.&lt;/p&gt;&lt;h3&gt;&lt;strong&gt;ಶಿವಮೊಗ್ಗ ಜಿಲ್ಲೆಯಲ್ಲಿವೆ 9 ಬ್ಲಡ್&zwnj; ಬ್ಯಾಂಕ್ ಸೆಂಟರ್&lt;/strong&gt;&lt;/h3&gt;&lt;p&gt;ಶಿವಮೊಗ್ಗ ಜಿಲ್ಲೆಯಲ್ಲಿ 9 ರಕ್ತನಿಧಿ ಕೇಂದ್ರಗಳಿವೆ. ಒಂದೆರಡು ಖಾಸಗಿ ಆಸ್ಪತ್ರೆಗಳು ಕೂಡ ಸ್ವತಃ ರಕ್ತನಿಧಿ ಕೇಂದ್ರ ಸ್ಥಾಪಿಸಿಕೊಂಡಿವೆ. ಜಿಲ್ಲೆಯಲ್ಲಿ ಪ್ರತಿ ತಿಂಗಳೂ ಸರಾಸರಿ ಬೇಡಿಕೆ 250-300 ಯೂನಿಟ್&zwnj;ಗಳಿದ್ದು, ಈ ವರ್ಷ ಸರಾಸರಿ ಪೂರೈಕೆ ಕೂಡ ಬಹುತೇಕ ಸಮನಾಗಿದೆ. ಕೆಲವು ತಿಂಗಳಲ್ಲಿ ಜಾಸ್ತಿ ಆಗಿದ್ದು, ಪ್ರತಿ ರಕ್ತದಾನ ಶಿಬಿರದಲ್ಲಿಯೂ ಸಂಗ್ರಹವಾದ ರಕ್ತದಲ್ಲಿ ಶೇ.25 ರಷ್ಟು ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸಬೇಕೆಂಬ ನಿಯಮದಂತೆ ನೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೂ ಇಲ್ಲಿಂದ ರಕ್ತ ನೀಡಲಾಗುತ್ತದೆ.&lt;/p&gt;&lt;p&gt;ಮಲೆನಾಡಿನ ಕೇಂದ್ರವಾದ ಶಿವಮೊಗ್ಗದಲ್ಲಿ ಈ ವರ್ಷ ನೆರೆ ಜಿಲ್ಲೆಗಳಿಗೆ ಹೋಲಿಸಿದರೆ ಬೇಡಿಕೆ ಮತ್ತು ಪೂರೈಕೆ ಹೆಚ್ಚಿದೆ. ಹಿಂದಿನ ವರ್ಷಗಳಲ್ಲಿ ಪೂರೈಕೆಗಿಂತ ಬೇಡಿಕೆ ಹೆಚ್ಚಿತ್ತು. ಬೇಡಿಕೆ ಹೆಚ್ಚಲು ಪ್ರಮುಖ ಕಾರಣವೆಂದರೆ ಶಿವಮೊಗ್ಗವು ವೈದ್ಯಕೀಯ ಹಬ್ ಆಗಿ ಬೆಳೆಯುತ್ತಿದ್ದು, ನೆರೆ ಜಿಲ್ಲೆಗಳ ರೋಗಿಗಳು ಇಲ್ಲಿಗೇ ಬರುತ್ತಾರೆ.&lt;/p&gt;&lt;p&gt;ಆದರೆ ಈ ವರ್ಷ ಈ ಪೂರೈಕೆಯಲ್ಲಿ ಏರಿಕೆ ಕಾಣಿಸಿದೆ. ಇದಕ್ಕೆ ಕಾರಣವೆಂದರೆ, ಇಲ್ಲಿನ ಜನರಲ್ಲಿನ ಉತ್ಸಾಹ, ಅರಿವು ಮತ್ತು ಸಂಘ ಸಂಸ್ಥೆಗಳ ನಿರಂತರ ಆಸಕ್ತಿಯ ಫಲವಾಗಿದೆ. ಶಿವಮೊಗ್ಗದಲ್ಲಿ ಸುಮಾರು 100 ಜನ ರಕ್ತದಾನಿಗಳು ನಿಯಮಿತವಾಗಿ ರಕ್ತದಾನ ಮಾಡುತ್ತಿದ್ದು, ರಕ್ತದಾನಿಗಳ ಸಂಘ, ವ್ಯಾಟ್ಸಾಪ್ ಗ್ರೂಪ್&zwnj;ಗಳು ಕೂಡ ಇದೆ.&lt;/p&gt;&lt;p&gt;ಮಾರ್ಚ್ ತಿಂಗಳಿಂದ ಜುಲೈಯವರೆಗೆ ರಕ್ತ ಸಂಗ್ರಹಣೆಯಲ್ಲಿ ತೀವ್ರ ಕುಸಿತ ಕಾಣುತ್ತದೆ. ಇದಕ್ಕೆ ಶಾಲಾ ಕಾಲೇಜುಗಳ ರಜಾ ದಿನಗಳು, ಜನರ ಪ್ರವಾಸ ಕಾರ್ಯಕ್ರಮ ಇತ್ಯಾದಿಗಳಿಂದಾಗಿ ರಕ್ತ ದಾನ ಮಾಡುವವರ ಸಂಖ್ಯೆ ಕಡಿಮೆಯಾಗುತ್ತದೆ. ಸಂಘ ಸಂಸ್ಥೆಗಳು ಕೂಡ ಈ ಅವಧಿಯಲ್ಲಿ ಶಿಬಿರಗಳನ್ನು ಆಯೋಜಿಸುವುದಿಲ್ಲ. ಇದರಿಂದ ರಕ್ತ ಕೇಂದ್ರಗಳ ಮೇಲೆ, ಆಸ್ಪತ್ರೆಯ ಮೇಲೆ ತೀವ್ರ ಒತ್ತಡ ಬೀಳುತ್ತದೆ. ಬೇಡಿಕೆಯ ಅರ್ಧಕ್ಕಿಂತ ಕಡಿಮೆ ಪೂರೈಕೆಯಾಗುತ್ತದೆ.&lt;/p&gt;&lt;p&gt;ರಕ್ತದಾನದ ಮಹತ್ವ ಅರಿತಾಗಲೇ ಇದರ ಕುರಿತು ನಿಜವಾದ ಅರಿವು ಮೂಡುತ್ತದೆ. ಆರೋಗ್ಯವಂತ ವ್ಯಕ್ತಿಯು ಮಾಡುವ ರಕ್ತದಾನದಿಂದ ಮೂರು ಜನರ ಜೀವ ಉಳಿಸುವುದು ಮಾತ್ರವಲ್ಲ, ದಾನಿಯ ಆರೋಗ್ಯ ಕೂಡ ಸುಧಾರಿಸುತ್ತದೆ. ಇದೊಂದು ಶ್ರೇಷ್ಠ ದಾನ ಎಂಬುದು ಅರ್ಥ ಮಾಡಿಕೊಳ್ಳಬೇಕು. ಮುಖ್ಯವಾಗಿ ಯುವ ಜನತೆಯಲ್ಲಿ ಇದರ ಕುರಿತು ಇರುವ ತಪ್ಪು ಕಲ್ಪನೆ, ಭಯ ಎಲ್ಲವೂ ಹೋಗಿ, ಇದೊಂದು ಆಂಧೋಲನದ ರೀತಿ ಬೆಳೆಯಬೇಕು. ಸಂಘ ಸಂಸ್ಥೆಗಳು ರಕ್ತದಾನ ಶಿಬಿರ ಯೋಜಿಸುವ ವಿಚಾರ ತಿಳಿಸಿದರೆ ನಾವೇ ಸ್ಥಳಕ್ಕೆ ಬಂದು ಎಲ್ಲ ರೀತಿಯಲ್ಲಿ ನಿರ್ವಹಣೆ ಮಾಡುತ್ತೇವೆ. ನಾನೇ ಸ್ವತಃ 98 ಬಾರಿ ರಕ್ತದಾನ ಮಾಡಿದ್ದೇನೆ.&lt;/p&gt;&lt;p&gt;ಎಸ್.ಕೆ.ಸತೀಶ್ ಪಿ.ಆರ್.ಒ., ರೋಟರಿ ರಕ್ತನಿಧಿ ಕೇಂದ್ರ, ಶಿವಮೊಗ್ಗ.&amp;nbsp;&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/shivamogga-leads-in-blood-donation-awareness-record-collection-on-world-blood-donor-day-kvn/articleshow-dlbwyua"/>
        </item>
        <item>
            <title><![CDATA[ಸರಿಗಮಪ ಸ್ಪರ್ಧಿ ಕೀರ್ತಿ ಬೆಂಬಲಕ್ಕೆ ಸೊರಬದಿಂದ ಬೆಂಗಳೂರಿಗೆ ಬಂದ್ರು ಫ್ರೆಂಡ್ಸ್, ಟೀಚರ್ಸ್]]></title>
            <link>https://kannada.asianetnews.com/karnataka-districts/friends-teachers-from-soraba-came-to-bengaluru-to-support-zee-kannada-saregamapa-2026-contestant-keerthi-mrq/articleshow-dtl9sgp</link>
            <guid isPermaLink="true">https://kannada.asianetnews.com/karnataka-districts/friends-teachers-from-soraba-came-to-bengaluru-to-support-zee-kannada-saregamapa-2026-contestant-keerthi-mrq/articleshow-dtl9sgp</guid>
            <pubDate>Sat, 13 Jun 2026 10:34:16 +0530</pubDate>
            <description><![CDATA[ಜೀ ಕನ್ನಡದ ಸರಿಗಮಪ ಲಿಟಲ್&zwnj;ಚಾಂಪ್ಸ್ ಸ್ಪರ್ಧಿ, ಸೊರಬದ ಕೀರ್ತಿ ಅವರಿಗೆ ಬೆಂಬಲ ಸೂಚಿಸಲು ಅವರ ಶಾಲೆಯ ಸಹಪಾಠಿಗಳು ಮತ್ತು ಶಿಕ್ಷಕರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಕಂಠೀರವ ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿ, ಈ ಗ್ರಾಮೀಣ ಪ್ರತಿಭೆಗೆ ಪ್ರೋತ್ಸಾಹ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kty6ss932g7fpbr528a8x3nn,imgname-saregamapa-keerthi-1781277713699.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಲಿಟಲ್&zwnj;ಚಾಂಪ್ಸ್ ಸೀಸನ್-22ರ ಸ್ಪರ್ಧಿ ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕೀರ್ತಿ ಅವರ ಬೆಂಬಲಕ್ಕೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡ ಬೆಂಗಳೂರಿಗೆ ಪಯಣ ಬೆಳೆಸಿತು. ಈ ವೇಳೆ ಗ್ರಾಮಸ್ಥರು ತಂಡಕ್ಕೆ ಆತ್ಮೀಯವಾಗಿ ಶುಭ ಕೋರಿ, ಪ್ರೋತ್ಸಾಹ ನೀಡಿದರು.&lt;/p&gt;&lt;p&gt;ವಾಹಿನಿಯ ವಿಶೇಷ ಆಹ್ವಾನದ ಮೇರೆಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಭಾಗವಹಿಸಿದ ಶಾಲಾ ತಂಡ, ಕೀರ್ತಿ ಅವರಿಗೆ ನೇರವಾಗಿ ಬೆಂಬಲ ವ್ಯಕ್ತಪಡಿಸಿತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಿಂದೂ ಗೀತೆ ಹಾಡಿದ್ದಕ್ಕೆ ಝಡ್​ ಪ್ಲಸ್​ ರೀತಿ ಭದ್ರತೆ ಕೊಡ್ಬೇಕಾಯ್ತು: ಕರಾಳ ದಿನ ನೆನೆದ ಸುಹಾನಾ ಸೈಯದ್​&lt;/strong&gt;&lt;/p&gt;&lt;h2&gt;&lt;strong&gt;ಗ್ರಾಮೀಣ ಭಾಗದ ಅಪರೂಪದ ಪ್ರತಿಭೆ&lt;/strong&gt;&lt;/h2&gt;&lt;p&gt;ಗ್ರಾಮೀಣ ಭಾಗದ ಈ ಅಪರೂಪದ ಪ್ರತಿಭೆಗೆ ನೆರವಾಗಲು ಮುಂದಾಗಿರುವ ವಿದ್ಯಾರ್ಥಿಗಳ ಈ ಪ್ರಯಾಣಕ್ಕೆ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಎಸ್. ಮಧು ಬಂಗಾರಪ್ಪ ಹಾಗೂ ಅವರ ತಂಡ ಸಂಪೂರ್ಣ ಸಹಕಾರ ನೀಡಿದೆ ಎಂದು ತಾಪಂ ಮಾಜಿ ಸದಸ್ಯ ಸುನೀಲ್&zwnj;ಗೌಡ ತಿಳಿಸಿದರು.&lt;/p&gt;&lt;p&gt;ತಾಪಂ ಮಾಜಿ ಸದಸ್ಯ ಸುನೀಲ್&zwnj;ಗೌಡ, ಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಮಾರ್ಯಪ್ಪ, ತಾಲೂಕು ಹಿಂದುಳಿದ ವರ್ಗದ ಅಧ್ಯಕ್ಷ ಎನ್.ಜಿ. ನಾಗರಾಜ್, ಗ್ರಾಮಸ್ಥರು ಹಾಜರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪ್ರತಿಭೆಗಳಿಗಲ್ಲ, ಕಷ್ಟ ಹೇಳ್ಕೊಳ್ಳೋರಿಗೆ ಮಾತ್ರ ಚಾನ್ಸ್ ಎಂದ ವಿಪಿ ಸರ್&hellip; ಸರಿಗಮಪ ಚಿಂದಿ ಪ್ರೊಮೋ ರಿಲೀಸ್&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/friends-teachers-from-soraba-came-to-bengaluru-to-support-zee-kannada-saregamapa-2026-contestant-keerthi-mrq/articleshow-dtl9sgp"/>
        </item>
        <item>
            <title><![CDATA[ಶಿವಮೊಗ್ಗದಲ್ಲಿ ಮನಕಲುಕುವ ಘಟನೆ: ಹೃದಯಾಘಾತದಿಂದ ಒಂದನೇ ತರಗತಿ ವಿದ್ಯಾರ್ಥಿ ಸಾವು!]]></title>
            <link>https://kannada.asianetnews.com/karnataka-districts/shivamogga-6-years-old-student-dies-after-heart-attack/articleshow-e5angow</link>
            <guid isPermaLink="true">https://kannada.asianetnews.com/karnataka-districts/shivamogga-6-years-old-student-dies-after-heart-attack/articleshow-e5angow</guid>
            <pubDate>Tue, 16 Jun 2026 13:52:19 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಸರ್ಕಾರಿ ಶಾಲೆಯಲ್ಲಿ ಆರು ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಒಂದನೇ ತರಗತಿ ವಿದ್ಯಾರ್ಥಿ ತ್ರಿಲೋಕ್ ಜೈನ್, ಸಂಜೆ ಶಾಲಾ ಆವರಣದಲ್ಲಿ ಆಟವಾಡುವಾಗ ಕುಸಿದುಬಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv7r42rrqnr20nwwyj8b3h1n,imgname-----------------------2026-06-16t134723.798-1781597866776.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜೂ.16): &lt;/strong&gt;ಹೃದಯಾಘಾತ(Heart attack)ದಿಂದ ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ(Sagar) ತಾಲೂಕಿನ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆ(Halasasi Government Primary School)ಯಲ್ಲಿ ಆವರಣದಲ್ಲಿ ನಡೆದಿದೆ.&lt;/p&gt;&lt;h2&gt;ಮನಕಲುಕುವ ಘಟನೆ&lt;/h2&gt;&lt;p&gt;ತ್ರಿಲೋಕ್ ಜೈನ್(Trilok jain) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್, ಹಾಳಸಸಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ರಜೆ ಮುಗಿದು ಇತ್ತೀಚೆಗಷ್ಟೆ ಶಾಲೆ ಪ್ರಾರಂಭವಾಗಿದ್ದ ಖುಷಿಯಲ್ಲಿದ್ದ ಬಾಲಕ. ದಿನವಿಡೀ ಆಟ ಪಾಠದಲ್ಲಿ ಲವಲವಿಕೆಯಿಂದ ಬಾಲಕ ಸಂಜೆ ಶಾಲೆ ಬಿಡುವ ಹೊತ್ತಿನಲ್ಲಿ ಆಟವಾಡುತ್ತಿದ್ದ. ಆಟವಾಡುವಾಗಲೇ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದುಬಿದ್ದಿದ್ದಾನೆ.&lt;/p&gt;&lt;p&gt;ಘಟನೆ ಬಳಿಕ ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತಾದರೂ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿರುವ ಬಾಲಕ. ಬೆಳಗ್ಗೆ ಕಣ್ಮುಂದೆ ಶಾಲೆಗೆ ಹೋಗಿದ್ದ ಮಗ, ಸಂಜೆ ವೇಳೆಗೆ ಶವವಾಗಿ ಕಂಡು ಪೋಷಕರ ಅಕ್ರಂದನ ಮುಗಿಲುಮುಟ್ಟಿತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಹೃದಯಾಘಾತವೇ ಬೇರೆ ಹೃದಯ ಸ್ತಂಭನವೇ ಬೇರೆ; ಹೃದಯ ಸ್ತಂಭನದ ಲಕ್ಷಣಗಳಿವು; ಈಗಲೇ ತಿಳಿದುಕೊಳ್ಳಿ!&lt;/p&gt;]]></content:encoded>
            <category>shivamogga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/shivamogga-6-years-old-student-dies-after-heart-attack/articleshow-e5angow"/>
        </item>
        <item>
            <title><![CDATA[ಬಹುನಿರೀಕ್ಷಿತ ತಾಳಗುಪ್ಪ-ಹುಬ್ಬಳ್ಳಿ ಮಾರ್ಗದ ಕುರಿತು ಮಹತ್ವದ ಅಪ್‌ಡೇಟ್ ನೀಡಿದ ಸಂಸದರು]]></title>
            <link>https://kannada.asianetnews.com/gallery/karnataka-districts/shivamogga-mp-by-raghavendra-s-give-important-update-on-the-much-awaited-talaguppa-hubballi-indian-railways-route-mrq-hpe4y8c</link>
            <guid isPermaLink="true">https://kannada.asianetnews.com/gallery/karnataka-districts/shivamogga-mp-by-raghavendra-s-give-important-update-on-the-much-awaited-talaguppa-hubballi-indian-railways-route-mrq-hpe4y8c</guid>
            <pubDate>Sat, 13 Jun 2026 10:10:23 +0530</pubDate>
            <description><![CDATA[&lt;p&gt;ಸಂಸದ ಬಿ.ವೈ.ರಾಘವೇಂದ್ರ ಅವರು ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಖಚಿತ ಎಂದು ಭರವಸೆ ನೀಡಿದ್ದಾರೆ. ₹3.93 ಕೋಟಿ ವೆಚ್ಚದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktzm2ep3zxgh3mec8b4w7a5e,imgname-b-y-raghavendra--2--1781325183683.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಂಸದ ಬಿ.ವೈ.ರಾಘವೇಂದ್ರ ಅವರು ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಖಚಿತ ಎಂದು ಭರವಸೆ ನೀಡಿದ್ದಾರೆ. ₹3.93 ಕೋಟಿ ವೆಚ್ಚದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು.&amp;nbsp;&lt;/p&gt;&lt;img&gt;&lt;p&gt;ತಾಳಗುಪ್ಪ-ಹುಬ್ಬಳ್ಳಿ ಸಂಪರ್ಕದ ರೈಲು ಮಾರ್ಗ ಖಚಿತವಾಗಿ ಆಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರ ತಾಳಗುಪ್ಪ ರೈಲ್ವೆ ನಿಲ್ದಾಣದ ಮೇಲ್ದರ್ಜೆ ಕಾಮಗಾರಿ ವೀಕ್ಷಣೆಗೆ ಬಂದಾಗ ತಮ್ಮನ್ನು ಭೇಟಿಯಾದ ಸಿದ್ದಾಪುರ ರೈಲ್ವೆ ಹೋರಾಟ ಸಮಿತಿಯ ಸದಸ್ಯರೊಡನೆ ಮಾತನಾಡಿದರು.&lt;/p&gt;&lt;img&gt;&lt;p&gt;2023-24ರ ಬಜೆಟನಲ್ಲಿ ₹3.93 ಕೋಟಿ ವೆಚ್ಚದಲ್ಲಿ ತಾಳಗುಪ್ಪ-ಹುಬ್ಬಳ್ಳಿ ರೈಲುಮಾರ್ಗದ ಸಮೀಕ್ಷೆ ನಡೆದು ಟೆಂಡರ್ ಪಡೆದ ಹೈದರಾಬಾದ್ ಮೂಲದ ಕಂಪನಿ ಎಫ್ಎಸ್ಎಲ್ ವರದಿ ಸಲ್ಲಿಸಿದೆ. ರೈಲ್ವೆ ಇಲಾಖೆ ಡಿಪಿಆರ್ ಸಿದ್ದಪಡಿಸಿ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಸಲ್ಲಿಸಿ ಅನಮೋದನೆ ಪಡೆದು ಬಹುದಶಕದ ಬೇಡಿಕೆಯಾದ ಮಾರ್ಗ ನಿರ್ಮಾಣ ಕಾರ್ಯವನ್ನು ತಾವು ಹಾಗೂ ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸೇರಿ ಕೈಗೊಳ್ಳುವ ಭರವಸೆ ನೀಡಿದರು. ರೈಲು ಮಾರ್ಗ ನಿರ್ಮಾಣ ಖಂಡಿತವಾಗಿ ಆಗುತ್ತದೆ. ಈ ಕುರಿತು ಸಂಶಯ ಬೇಡ ಎಂದರು.&lt;/p&gt;&lt;img&gt;&lt;p&gt;ಸಿದ್ದಾಪುರ ರೈಲ್ವೆ ಹೋರಾಟ ಸಮಿತಿಯ ವಾಸುದೇವ ಬಿಳಗಿ, ನಾಗರಾಜ ದೋಶೆಟ್ಟಿ, ಗುರುನಾಥ ವೆರ್ಣೆಕರ್, ವೆಂಕಟರಮಣ ಮಡಿವಾಳ, ಕಾಶಿನಾಥ ಗುಡಿಗಾರ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ, ಪ್ರಸನ್ನ ಕೆರೆಕೈ, ರಾಜಶೇಖರ ಗಾಳಿಪುರ, ಮಲ್ಲಿಕಾರ್ಜುನ ಹಕ್ರೆ, ಮೋಹನ ಶೇಟ್ ಮತ್ತಿತರರಿದ್ದರು.&lt;/p&gt;&lt;img&gt;&lt;p&gt;ತಾಳಗುಪ್ಪ-ಶಿರಸಿ ಮೂಲಕ ಹುಬ್ಬಳ್ಳಿಗೆ ತೆರಳುವ ರೈಲು ಮಾರ್ಗದ ಸರ್ವೇ ಕಾರ್ಯ ಆರಂಭಗೊಂಡಿದ್ದು, ಕಳೆದ 2 ವರ್ಷಗಳ ಹಿಂದೆ ಸರ್ವೆ ನಡೆಸಿ, ಗಲ್ಲು ಗುರುತು ಹಾಕಲಾಗಿದೆ. ಇದೀಗ ಎರಡನೇ ಹಂತದ ಸರ್ವೇ ಪ್ರಾರಂಭಗೊಂಡಿದೆ. ಸಿದ್ದಾಪುರ ತಾಲೂಕಿನ ಕಾವಂಚೂರು, ಸಿದ್ದಾಪುರ ಹಾಗೂ ಕುಣಜಿಯಲ್ಲಿ ರೈಲ್ವೆ ನಿಲ್ದಾಣ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ತೆಲಗುಂದ್ಲಿ, ಶಿರಸಿ ತಾಲೂಕಿನಲ್ಲಿ ಒಡ್ಡಿನಕೊಪ್ಪ, ಒಕ್ಕಲಕೊಪ್ಪ, ಗೌಡಳ್ಳಿ, ಮಳಲಗಾಂವ್ ಹಾಗೂ ಗೋಟಗಾಡಿ ಬಳಿ ನಿಲ್ದಾಣ ಸ್ಥಾಪನೆಗೆ ನಕ್ಷೆ ಸಿದ್ಧವಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/shivamogga-mp-by-raghavendra-s-give-important-update-on-the-much-awaited-talaguppa-hubballi-indian-railways-route-mrq-hpe4y8c"/>
        </item>
        <item>
            <title><![CDATA[ಬೆಂಗಳೂರು-ಹೊನ್ನಾವರ ರಸ್ತೆಗಾಗಿ 30 ಎಕರೆ ಸ್ವಾಧೀನಕ್ಕೆ ಹೈಕೋರ್ಟ್‌ ಅಸ್ತು]]></title>
            <link>https://kannada.asianetnews.com/karnataka-districts/hc-approves-30-acre-land-acquisition-bengaluru-honnavar-road-development-san/articleshow-io6gdf2</link>
            <guid isPermaLink="true">https://kannada.asianetnews.com/karnataka-districts/hc-approves-30-acre-land-acquisition-bengaluru-honnavar-road-development-san/articleshow-io6gdf2</guid>
            <pubDate>Fri, 19 Jun 2026 10:33:31 +0530</pubDate>
            <description><![CDATA[&lt;p&gt;ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದ 30 ಎಕರೆ ಭೂಮಿಗೆ ಸಂಬಂಧಿಸಿದಂತೆ 14 ವರ್ಷಗಳ ಹಿಂದೆ ಏಕಸದಸ್ಯ ಪೀಠ ನೀಡಿದ್ದ ರದ್ದತಿ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಇದೀಗ ವಜಾಗೊಳಿಸಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvf3yxy3rqs4051m48twda16,imgname-banglore-honnavar-road-1781845161923.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜೂ.19): &lt;/strong&gt;ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನ ಮಾಡಿಕೊಂಡಿದ್ದ 30 ಎಕರೆ ಭೂ ಸ್ವಾಧೀನವನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಸುಮಾರು 14 ವರ್ಷಗಳ ಹಿಂದೆ ನೀಡಿದ್ದ ಹೊರಡಿಸಿದ್ದ ಆದೇಶವನ್ನು ವಿಭಾಗೀಯ ಪೀಠ ಇದೀಗ ವಜಾ ಮಾಡಿದೆ. ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮತ್ತು ಶ್ರೀ ಪ್ರಸನ್ನ ಆಂಜನೇಯ ಟ್ರಸ್ಟ್&zwnj; ಸಲ್ಲಿಸಿದ ಮೇಲ್ಮನವಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿಗಳಾದ ಡಿ.ಕೆ.ಸಿಂಗ್&zwnj; ಮತ್ತು ಎಸ್&zwnj;.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.&lt;/p&gt;&lt;p&gt;ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗೆ 30 ಎಕರೆ ಭೂ ಸ್ವಾಧೀನ ಪ್ರಸ್ತಾವನೆಗೆ 1986ರ ಅ.9 ರಂದು ಅನುಮೋದಿಸಿ ಸರ್ಕಾರ ಆದೇಶ ಹೊರಡಿಸುವ ಮೊದಲು, ಭೂಮಾಲೀಕರು ಮಾರಾಟದ ಒಪ್ಪಂದಗಳನ್ನು ಕಾರ್ಯಗತಗೊಳಿಸಿದ್ದರು. ಸಂಪೂರ್ಣ ಮಾರಾಟದ ಮೊತ್ತ ಪಡೆದಿದ್ದರು. ಭೂಮಿ ಸ್ವಾಧೀನವನ್ನೂ ನೀಡಲಾಗಿತ್ತು ಎಂದು ವಿಭಾಗೀಯ ಪೀಠ ಆದೇಶದಲ್ಲಿ ಹೇಳಿದೆ.&lt;/p&gt;&lt;p&gt;ಆದ್ದರಿಂದ ಭೂಮಾಲೀಕರು ಸ್ವಾಧೀನ ಪ್ರಕ್ರಿಯೆಗಳನ್ನು ಪ್ರಶ್ನಿಸದಂತೆ ತಡೆಯಲಾಗಿತ್ತು. ನಂತರ ಅದೂ ಅಂತಿಮ ಅಧಿಸೂಚನೆ ಹೊರಬಿದ್ದ ಸುಮಾರು ಎರಡು ದಶಕಗಳ ನಂತರ ಅದನ್ನು ಪ್ರಶ್ನಿಸಲಾಗಿತ್ತು. ಜಕ್ಕಸಂದ್ರ ಗ್ರಾಮದಲ್ಲಿರುವ ಭೂಮಿಯನ್ನು ಟ್ರಸ್ಟ್&zwnj; ಪರ ಸ್ವಾಧೀನಪಡಿಸಿಕೊಳ್ಳಲಾಯಿತು, ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿತರಣೆಗಾಗಿ 150 ನಿವೇಶನಗಳನ್ನು (30&times;40 ಚದರ ಅಡಿ) ಅಂದಿನ ನೆಲಮಂಗಲ ನಗರ ಪುರಸಭೆಗೆ ಉಚಿತವಾಗಿ ಹಸ್ತಾಂತರಿಸಲು ಒಪ್ಪಿಕೊಂಡಿತ್ತು. ಉಳಿದ ನಿವೇಶನಗಳನ್ನು ಟ್ರಸ್ಟ್&zwnj;ನ ಸದಸ್ಯರ ನಡುವೆ ವಿತರಿಸಬೇಕಾಗಿತ್ತು. ಅಂತಿಮ ಅಧಿಸೂಚನೆಯನ್ನು 1987ರಲ್ಲಿ ಹೊರಡಿಸಲಾಯಿತು ಎಂದು ಪೀಠ ಆದೇಶದಲ್ಲಿ ವಿವರಿಸಿದೆ.&lt;/p&gt;&lt;p&gt;&lt;strong&gt;ಪ್ರಕರಣದ ವಿವರ: &lt;/strong&gt;ಭೂ ಸ್ವಾಧೀನವನ್ನು 2006 ಮತ್ತು 2008ರ ನಡುವೆ&zwnj; ಕೆಲ ಭೂಮಾಲೀಕರು ಸ್ವಾಧೀನವನ್ನು ಪ್ರಶ್ನಿಸಿದರು. 2012ರಲ್ಲಿ, ಏಕಸದಸ್ಯಪೀಠ ಸ್ವಾಧೀನ ರದ್ದುಗೊಳಿಸಿ, ಭೂಮಿ ವಾಪಸ್&zwnj; ನೀಡಲು ಆದೇಶಿಸಿತು. ರಾಜ್ಯ ಸರ್ಕಾರ ಹಾಗೂ ಟ್ರಸ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯಲ್ಲಿ ಸಂಪೂರ್ಣ ಮೊತ್ತ ಪಾವತಿಸಿದ ಟ್ರಸ್ಟ್&zwnj; ಪರ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ನಿವೇಶನಗಳ ಮಾಲೀಕರು ತಮ್ಮ ಕುಟುಂಬ ಸದಸ್ಯರೊಂದಿಗೆ ವಸತಿಗಳನ್ನು ನಿರ್ಮಿಸುವ ಮೂಲಕ ಭೂಮಿ ಅಭಿವೃದ್ಧಿಪಡಿಸಿ, ಹಲವು ದಶಕಗಳೇ ಕಳೆದಿವೆ. ನಂತರ ಏಕಸದಸ್ಯಪೀಠ ಭೂ ಸ್ವಾಧೀನ ರದ್ದುಗೊಳಿಸಿರುವುದು ಸರಿಯಲ್ಲ ಎಂದು ಹೇಳಲಾಗಿತ್ತು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>shivamogga</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/hc-approves-30-acre-land-acquisition-bengaluru-honnavar-road-development-san/articleshow-io6gdf2"/>
        </item>
        <item>
            <title><![CDATA[ಕರ್ನಾಟಕದ ಅಡಕೆಗೆ ಮಹಾರಾಷ್ಟ್ರ ಕಿರಿಕ್; ವರ್ತಕರಿಗೆ ಸಂಕಷ್ಟ..! ಅಡಕೆ ಖರೀದಿಗೆ ದೊಡ್ಡ ಹೊಡೆತ]]></title>
            <link>https://kannada.asianetnews.com/state/35-arecanut-laden-trucks-held-up-in-maharashtra-karnataka-traders-fear-major-supply-disruption-kvn/articleshow-k5eedwi</link>
            <guid isPermaLink="true">https://kannada.asianetnews.com/state/35-arecanut-laden-trucks-held-up-in-maharashtra-karnataka-traders-fear-major-supply-disruption-kvn/articleshow-k5eedwi</guid>
            <pubDate>Sat, 20 Jun 2026 09:03:25 +0530</pubDate>
            <description><![CDATA[ಮಲೆನಾಡಿನಿಂದ ಉತ್ತರ ಭಾರತಕ್ಕೆ ಸಾಗಿಸುತ್ತಿದ್ದ ಸುಮಾರು 35 ಅಡಕೆ ಲಾರಿಗಳನ್ನು ಮಹಾರಾಷ್ಟ್ರದ ಅಧಿಕಾರಿಗಳು ತಪಾಸಣೆ ನೆಪದಲ್ಲಿ ತಡೆಹಿಡಿದಿದ್ದಾರೆ. ಇದರಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಅಡಕೆ ನಿಗದಿತ ಸಮಯಕ್ಕೆ ತಲುಪದೆ ವರ್ತಕರು ನಷ್ಟ ಅನುಭವಿಸುತ್ತಿದ್ದು, ಇದು ವ್ಯವಸ್ಥಿತ ಕಿರುಕುಳ ಎಂದು ಆರೋಪಿಸಿದ್ದಾರೆ. ಈ ಪರಿಸ್ಥಿತಿ ಮುಂದುವರಿದರೆ ಉತ್ತರ ಭಾರತದ ಅಡಕೆ ಖರೀದಿಯೇ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01gfshf8x2p72bk1pkgv7exbx3,imgname-areca.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗೋಪಾಲ್ ಯಡಗೆರೆ, ಕನ್ನಡಪ್ರಭ ವಾರ್ತೆ&lt;/strong&gt;&lt;/p&gt;&lt;p&gt;ಶಿವಮೊಗ್ಗ: ಮಲೆನಾಡು, ಕರಾವಳಿಯಿಂದ ಉತ್ತರ ಭಾರತದ ಖರೀದಿದಾರರಿಗೆ ಪೂರೈಕೆ ಮಾಡಲು ಕೊಂಡೊಯ್ಯುತ್ತಿದ್ದ ಸುಮಾರು 35 ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಆಹಾರ ಮತ್ತು ಔಷಧ ಆಡಳಿತ (ಎಫ್&zwnj;ಡಿಎ) ಇಲಾಖೆಯ ಅಧಿಕಾರಿಗಳು ತಪಾಸಣೆ (ಕಳಪೆ ಗುಣಮಟ್ಟ) ನೆಪದಲ್ಲಿ ತಡೆ ಹಿಡಿದಿದ್ದಾರೆ. ಇದರಿಂದಾಗಿ ಅಡಕೆ ತಲುಪಬೇಕಾದ ಸ್ಥಳಕ್ಕೆ ನಿಗದಿತ ಸಮಯಕ್ಕೆ ತಲುಪುತ್ತಿಲ್ಲ. ಇದು ವರ್ತಕರ ಚಿಂತೆಗೆ ಕಾರಣವಾಗಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದೆ ಉತ್ತರ ಭಾರತದಿಂದ ಅಡಕೆ ಖರೀದಿಯೇ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.&lt;/p&gt;&lt;p&gt;ಮಹಾರಾಷ್ಟ್ರದ ನಾಗ್ಪುರದ ಕಾಂಪ್ಟಿಯಲ್ಲಿ ತಡೆಹಿಡಿಯಲಾಗಿರುವ ಈ ಲಾರಿಗಳು ಶಿವಮೊಗ್ಗ, ಮಂಗಳೂರು, ಶಿರಸಿ ಭಾಗದಿಂದ ಹೋಗಿರುವಂತಹವು. ಈ ಎಲ್ಲಾ ಲಾರಿಗಳು ಮಹಾರಾಷ್ಟ್ರದ ಮೂಲಕ ಉತ್ತರ ಭಾರತದ ರಾಜ್ಯಗಳಿಗೆ ತೆರಳುತ್ತವೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಹರ್ಯಾಣದ ಕಡೆ ಹೋಗುವ ಅಡಕೆ ತುಂಬಿದ ಲಾರಿಗಳು ಮಹಾರಾಷ್ಟ್ರದ ಮೂಲಕವೇ ತೆರಳುತ್ತವೆ.&lt;/p&gt;&lt;p&gt;ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ (ಎಫ್&zwnj;ಡಿಎ) ಇಲಾಖೆಯ ಅಧಿಕಾರಿಗಳು ಈ ಲಾರಿಗಳನ್ನು ತಡೆದು ಪರಿಶೀಲನೆ ನಡೆಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಪರಿಶೀಲನೆ ನೆಪದಲ್ಲಿ ತಿಂಗಳುಗಟ್ಟಲೆ ಲಾರಿಯನ್ನು ಅಲ್ಲಿಯೇ ನಿಲ್ಲಿಸುತ್ತಿದ್ದಾರೆ. ಇದರಿಂದಾಗಿ ಅಡಕೆ ತಲುಪಬೇಕಾದ ಸ್ಥಳಕ್ಕೆ ನಿಗದಿತ ಸಮಯಕ್ಕೆ ತಲುಪುತ್ತಿಲ್ಲ. ಇದರಿಂದಾಗಿ ಮುಂದಿನ ದಿನಗಳಲ್ಲಿ ಉತ್ತರ ಭಾರತದಲ್ಲಿ ಅಡಕೆ ಖರೀದಿ ಪ್ರಕ್ರಿಯೆಯೇ ನಿಲ್ಲುವ ಆತಂಕ ಎದುರಾಗಿದೆ.&lt;/p&gt;&lt;p&gt;ಇಲ್ಲಿ ತಪಾಸಣೆ ನಡೆಸುವ ಅಧಿಕಾರಿಗಳು, ಲಾರಿಯಲ್ಲಿರುವ ಅಡಕೆ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸುತ್ತಾರೆ. ಅದರ ವರದಿ ಬರಲು ಒಂದು ತಿಂಗಳು ಬೇಕು. ಅಲ್ಲಿಯವರೆಗೂ ಲಾರಿಗಳನ್ನು ಅಲ್ಲಿಯೇ ನಿಲ್ಲಿಸಬೇಕಿದೆ. ಇದರಿಂದಾಗಿ ಲಾರಿ ಚಾಲಕರು ರಸ್ತೆಯಲ್ಲೇ ಉಳಿದರೆ, ವ್ಯಾಪಾರಿಗಳು ತೊಡಗಿಸಿರುವ ಕೋಟ್ಯಂತರ ರುಪಾಯಿ ಬಂಡವಾಳಕ್ಕೆ ಸಮಸ್ಯೆ ಎದುರಾಗುತ್ತದೆ. ಒಂದು ಲೋಡ್&zwnj;ಗೆ ಅಂದಾಜು ₹1.40 ಕೋಟಿ ಮೌಲ್ಯ ಇದೆ. ಸದ್ಯ ಇಂತಹ 35 ಅಡಕೆ ಲಾರಿಗಳನ್ನು (ಸುಮಾರು ₹50 ಕೋಟಿ ಮೌಲ್ಯ) ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿದೆ.&lt;/p&gt;&lt;h2&gt;&lt;strong&gt;ಇದೊಂದು ವ್ಯವಸ್ಥಿತ ಕಿರುಕುಳ: ವರ್ತಕರ ಆರೋಪ&lt;/strong&gt;&lt;/h2&gt;&lt;p&gt;&lsquo;ಈ ಅಡಕೆಗೆ ಜಿಎಸ್&zwnj;ಟಿ, ಇ-ವೇ ಬಿಲ್ ಸೇರಿ ಎಲ್ಲಾ ಸೂಕ್ತ ದಾಖಲೆಗಳಿದ್ದರೂ, ಕೇವಲ ತೇವಾಂಶ ಹಾಗೂ ಅಡಕೆ ಹಾಳಾಗದಂತೆ ದುವಾ ಬಳಸುತ್ತಾರೆಂಬ ನೆಪ ಒಡ್ಡಿ ಲಾರಿಗಳನ್ನು ತಡೆ ಹಿಡಿಯುತ್ತಿದ್ದಾರೆ. ಇದೊಂದು ವ್ಯವಸ್ಥಿತ ಕಿರುಕುಳ&rsquo; ಎಂಬುದು ಶಿವಮೊಗ್ಗ ಸಹಕಾರಿ ಸಂಘಗಳು ಹಾಗೂ ವರ್ತಕರ ಆರೋಪ.&lt;/p&gt;&lt;p&gt;ನಾವು ಮಹಾರಾಷ್ಟ್ರ ಮೂಲಕ ಉತ್ತರ ಭಾರತದ ರಾಜ್ಯಗಳಿಗೆ ಅಡಕೆಯನ್ನು ಕಳುಹಿಸುತ್ತೇವೆಯೇ ಹೊರತು ಮಹಾರಾಷ್ಟ್ರದಲ್ಲಿ ಅಡಕೆ ಇಳಿಸುವುದಿಲ್ಲ. ನಾವು ಲಾರಿಗಳಲ್ಲಿ ಅಡಕೆಯನ್ನು ಮಾತ್ರ ಕಳಿಸುತ್ತಿರುವುದೇ ಹೊರತು, ಬ್ಯಾನ್ ಆಗಿರುವ ಸ್ವೀಟ್ ಸುಫಾರಿ ಅಥವಾ ಗುಟ್ಕಾವನ್ನು ನಾವು ಸಾಗಿಸುತ್ತಿಲ್ಲ. ಆದರೂ, ಮಹಾರಾಷ್ಟ್ರದ ಅಧಿಕಾರಿಗಳು ತಪಾಸಣೆ ನೆಪದಲ್ಲಿ ತಿಂಗಳುಗಟ್ಟಲೇ ಲಾರಿಗಳನ್ನು ತಡೆ ಹಿಡಿಯುತ್ತಿದ್ದಾರೆ.&lt;/p&gt;&lt;p&gt;ಕೇಳಿದರೆ, ಔರಂಗಾಬಾದ್&zwnj;ನ ಲ್ಯಾಬ್&zwnj;ಗೆ ಸ್ಯಾಂಪಲ್&zwnj;ಗಳನ್ನು ಕಳುಹಿಸುತ್ತೇವೆ. ಅದರ ರಿಪೋರ್ಟ್ ಆಧಾರದ ಮೇಲೆ ಮಾಲಿನ ಗುಣಮಟ್ಟ ನಿರ್ಧರಿಸಲಾಗುವುದು. ಅಡಕೆಯ ಗುಣಮಟ್ಟ ಸರಿ ಇಲ್ಲ ಎಂದರೆ ಅದನ್ನು ಸುಟ್ಟು ಹಾಕುತ್ತೇವೆ, ಇಲ್ಲ ದಂಡ ಹಾಕುತ್ತೇವೆ. ಈಗಾಗಲೇ ಹಲವು ಟ್ರಾನ್ಸ್&zwnj;ಪೋರ್ಟ್&zwnj; ಮಾಲೀಕರ ಮೇಲೆ, ಕಂಪನಿಗಳ ಮೇಲೆ ಮತ್ತು ಪೂರೈಕೆದಾರರ ಮೇಲೆ ಕೇಸು ಹಾಕಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಬೆದರಿಕೆ ಹಾಕುತ್ತಾರೆ ಎಂಬುದು ವರ್ತಕರ ಅಳಲು.&lt;/p&gt;&lt;p&gt;ಈ ರೀತಿಯಾದರೆ ಬೆಳೆಗಾರರು ಹಾಗೂ ವರ್ತಕರ ಕಥೆ ಏನು? ಇದರ ನಷ್ಟವನ್ನು ಯಾರು ತುಂಬಿಕೊಡುತ್ತಾರೆ? ಎಂದು ಆರೋಪಿಸಿರುವ ಶಿವಮೊಗ್ಗ ಸಹಕಾರಿ ಸಂಘಗಳು ಹಾಗೂ ವರ್ತಕರು, ಸಂಸದ ಬಿ.ವೈ.ರಾಘವೇಂದ್ರ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಸಮಸ್ಯೆ ಬಗೆಹರಿಸಿಕೊಡುವಂತೆ ಮನವಿ ಮಾಡಿದ್ದಾರೆ.&lt;/p&gt;&lt;p&gt;ಇತ್ತೀಚಿನ ದಿನಗಳಲ್ಲಿ ಅಡಕೆ ಬೆಳೆಗಾರರಿಗೆ ಸಂಕಷ್ಟ ತಪ್ಪಿದ್ದಲ್ಲ. ಒಂದಲ್ಲ ಒಂದು ರೀತಿಯ ಸಮಸ್ಯೆ ಎದುರಾಗುತ್ತಲೇ ಇದೆ. ರೋಗ-ಬಾಧೆಗಳಿಂದ ಹೈರಾಣಾಗಿರುವ ಮಲೆನಾಡಿನ ಅಡಕೆಗೀಗ ಮಹಾರಾಷ್ಟ್ರ ಅಧಿಕಾರಿಗಳ ಈ ಕಿರುಕುಳ ಹೊಸ ಸಂಕಷ್ಟವನ್ನು ತಂದೊಡ್ಡಿದೆ. ಈ ಸಂಕಷ್ಟ ವರ್ತಕರಷ್ಟೇ ಅಲ್ಲ, ಬೆಳೆಗಾರರೂ ಆತಂಕಪಡುವಂತೆ ಮಾಡಿದೆ. ಮಹಾರಾಷ್ಟ್ರದ ಅಧಿಕಾರಿಗಳ ಕೆಲಸದಿಂದ ಅಡಕೆ ಖರೀದಿಯೇ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ ಎನ್ನುತ್ತಾರೆ ವರ್ತಕರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/35-arecanut-laden-trucks-held-up-in-maharashtra-karnataka-traders-fear-major-supply-disruption-kvn/articleshow-k5eedwi"/>
        </item>
        <item>
            <title><![CDATA[ಮಹಾರಾಜ ಟ್ರೋಫಿಗೆ ಶಿವಮೊಗ್ಗ ಯೋಧಾಸ್ ತಂಡದ ಹೊಸ ಜರ್ಸಿ ಬಿಡುಗಡೆ]]></title>
            <link>https://kannada.asianetnews.com/cricket-sports/shivamogga-yodhas-unveil-new-jersey-and-official-anthem-ahead-of-maharaja-trophy-ksca-t20-2026-kvn/articleshow-o163pkg</link>
            <guid isPermaLink="true">https://kannada.asianetnews.com/cricket-sports/shivamogga-yodhas-unveil-new-jersey-and-official-anthem-ahead-of-maharaja-trophy-ksca-t20-2026-kvn/articleshow-o163pkg</guid>
            <pubDate>Thu, 18 Jun 2026 09:36:58 +0530</pubDate>
            <description><![CDATA[ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಟಿ-20 ಪಂದ್ಯಾವಳಿಗಾಗಿ ಶಿವಮೊಗ್ಗ ಯೋಧಾಸ್ ತಂಡದ ನೂತನ ಜರ್ಸಿ ಮತ್ತು ಅಧಿಕೃತ ಗೀತೆಯನ್ನು ಸಂಸದ ಬಿ.ವೈ.ರಾಘವೇಂದ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ, ಶಿವಮೊಗ್ಗದಲ್ಲಿ ಭವಿಷ್ಯದ ಪಂದ್ಯಗಳನ್ನು ಆಯೋಜಿಸುವ ಮತ್ತು ಒಳಾಂಗಣ ಕ್ರಿಕೆಟ್ ಸೌಲಭ್ಯವನ್ನು ಅಭಿವೃದ್ಧಿಪಡಿಸುವ ಕೆಎಸ್&zwnj;ಸಿಎ ಯೋಜನೆಗಳನ್ನು ಪ್ರಕಟಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kvceb66wj2pdk2m340me8140,imgname-shivamogga-yoddhas-1781755386075.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸುತ್ತಿರುವ ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಪಂದ್ಯಾವಳಿಯ 5ನೇ ಆವೃತ್ತಿಗೆ ಅದ್ಧೂರಿ ವೇದಿಕೆ ಸಿದ್ಧಗೊಂಡಿದ್ದು, ಶಿವಮೊಗ್ಗ ಯೋಧಾಸ್ ತಂಡದ ನೂತನ ಜರ್ಸಿ ಹಾಗೂ ಅಧಿಕೃತ ಆಲ್ಬಂ ಗೀತೆಯನ್ನು ಬಿಡುಗಡೆ ಮಾಡಲಾಯಿತು.&lt;/p&gt;&lt;h2&gt;&lt;strong&gt;ಶಿವಮೊಗ್ಗ ಯೋಧಾಸ್ ತಂಡಕ್ಕೆ ಶುಭಹಾರೈಸಿದ ಸಂಸದ ರಾಘವೇಂದ್ರ&lt;/strong&gt;&lt;/h2&gt;&lt;p&gt;ನಗರದ ಹೊರವಲಯದಲ್ಲಿರುವ ಮಲ್ನಾಡ್ ಶೈರ್ ಹೋಟೆಲ್&zwnj;ನಲ್ಲಿ ಮಂಗಳವಾರ ಸಂಜೆ ಸಂಸದ ಬಿ.ವೈ.ರಾಘವೇಂದ್ರ ಪೋಷಾಕನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಮಹಾರಾಜ ಟ್ರೋಫಿಯು ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದ ಯುವ ಕ್ರಿಕೆಟ್ ಪ್ರತಿಭೆಗಳಿಗೆ ತಮ್ಮ ಅಪ್ರತಿಮ ಕೌಶಲ್ಯವನ್ನು ಪ್ರದರ್ಶಿಸಲು ಸಿಕ್ಕಿರುವ ಸುವರ್ಣ ಅವಕಾಶವಾಗಿದೆ. ಈ ಕ್ರೀಡಾಕೂಟವು ಕರ್ನಾಟಕದ ಕ್ರಿಕೆಟ್ ಪ್ರಗತಿಯಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸುತ್ತಿದೆ ಎಂದರು.&lt;/p&gt;&lt;p&gt;ಈ ಬಾರಿ ಶಿವಮೊಗ್ಗ ಯೋಧಾಸ್ ತಂಡವು ಮೈದಾನದಲ್ಲಿ ಅಮೋಘ ಪ್ರದರ್ಶನ ನೀಡಲಿದ್ದು, ಈ ಹೊಸ ಉಡುಪು ಕೇವಲ ಡ್ರೆಸ್ ಕೋಡ್ ಆಗಿ ಉಳಿಯದೆ ತಂಡದ ವಿಜಯದ ಹೆಗ್ಗುರುತಾಗಲಿ ಎಂದು ಹಾರೈಸಿದರು.&lt;/p&gt;&lt;p&gt;ತಂಡದ ರಾಯಭಾರಿ ನಟ ದಿಗಂತ್ ಮಂಚಾಲೆ ಮಾತನಾಡಿ, ಕ್ರೀಡೆಯು ಜಾತಿ, ಧರ್ಮಗಳ ಗಡಿಗಳನ್ನು ಮೀರಿ ಜನರನ್ನು ಒಗ್ಗೂಡಿಸುವ ಶಕ್ತಿ ಹೊಂದಿದೆ. ಮಲೆನಾಡಿನ ಕ್ರೀಡಾಭಿಮಾನಿಗಳು ನಮ್ಮ ಶಿವಮೊಗ್ಗ ಯೋಧಾಸ್ ತಂಡಕ್ಕೆ ಕ್ರೀಡಾಂಗಣದಲ್ಲಿ ಭರ್ಜರಿ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.&lt;/p&gt;&lt;p&gt;ಕೆಎಸ್&zwnj;ಸಿಎ ವಕ್ತಾರ ವಿನಯ್ ಮೃತ್ಯುಂಜಯ ಮಾತನಾಡಿ, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಕ್ರಿಕೆಟ್ ಮೂಲಸೌಕರ್ಯವನ್ನು ಬಲಪಡಿಸುವ ಕೆಎಸ್&zwnj;ಸಿಎ ಬದ್ಧತೆಯನ್ನು ಒತ್ತಿ ಹೇಳಿದರು.&lt;/p&gt;&lt;p&gt;ಮುಂದಿನ ಮಹಾರಾಜ ಟ್ರೋಫಿ ಕೆಎಸ್&zwnj;ಸಿಎ ಟಿ20 ಆವೃತ್ತಿಗಳಲ್ಲಿ ಶಿವಮೊಗ್ಗದಲ್ಲಿ ಪಂದ್ಯಗಳನ್ನು ಆಯೋಜಿಸುವ ಯೋಜನೆ ಇದೆ ಎಂದು ತಿಳಿಸಿದ ಅವರು, ಕ್ರೀಡಾಂಗಣದಲ್ಲಿ ಶೀಘ್ರವೇ ಫ್ಲಡ್&zwnj;ಲೈಟ್&zwnj;ಗಳನ್ನು ಅಳವಡಿಸಲು ಕೆಎಸ್&zwnj;ಸಿಎ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದರು.&lt;/p&gt;&lt;p&gt;ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಹಾಗೂ ನಮ್ಮ ಹೆಮ್ಮೆಯ &quot;ಶಿವಮೊಗ್ಗ ಯೋಧಾಸ್&quot; ತಂಡದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಂಡದ ಅಧಿಕೃತ ಜರ್ಸಿ ಅನಾವರಣ, ಆಂಥೆಮ್ ಬಿಡುಗಡೆ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಲಾಯಿತು,ಮಹಾರಾಜ ಟ್ರೋಫಿ ಕೆಎಸ್&zwnj;ಸಿಎ T2೦ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗವನ್ನು ಪ್ರತಿನಿಧಿಸುತ್ತಿರುವ &quot;ಶಿವಮೊಗ್ಗ&hellip; pic.twitter.com/NkCipshuWJ&lt;/p&gt;&lt;p&gt;&mdash; B Y Raghavendra (@BYRBJP) June 16, 2026&lt;/p&gt;&lt;p&gt;&amp;nbsp;&lt;/p&gt;&lt;p&gt;ಇದಲ್ಲದೆ, ಶಿವಮೊಗ್ಗ ನಗರದಲ್ಲಿ ಅತ್ಯಾಧುನಿಕ ಒಳಾಂಗಣ (ಇಂಡೋರ್) ಕ್ರಿಕೆಟ್ ಸೌಲಭ್ಯವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನೂ ಅವರು ಪ್ರಕಟಿಸಿದರು. ಈ ಮೂಲಕ ಆಟಗಾರರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವುದು ಹಾಗೂ ಈ ಭಾಗದ ಕ್ರಿಕೆಟ್ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಕೆಎಸ್&zwnj;ಸಿಎಯ ಉದ್ದೇಶವಾಗಿದೆ ಎಂದು ತಿಳಿಸಿದರು&lt;/p&gt;&lt;p&gt;ಜಂಟಿ ಕಾರ್ಯದರ್ಶಿ ಬಿ.ಕೆ. ರವಿ ಮಾತನಾಡಿ, ಮುಂಬರುವ ಜೂನ್ 20 ರಂದು ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಈ ಟಿ-20 ಕ್ರೀಡಾ ಹಬ್ಬಕ್ಕೆ ಅಧಿಕೃತ ಚಾಲನೆ ನೀಡಲಿದ್ದು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ತಲಾ 12 ಮತ್ತು ಬೆಂಗಳೂರಿನಲ್ಲಿ 10 ಪಂದ್ಯಗಳು ಸೇರಿ ಒಟ್ಟು 34 ಟಿ-20 ಪಂದ್ಯಗಳು ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿವೆ ಎಂದು ಮಾಹಿತಿ ನೀಡಿದರು.&lt;/p&gt;&lt;p&gt;ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್.ಆರುಣ್, ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಮಾಜಿ ಸದಸ್ಯೆ ಶಾಂತಾ ರಂಗಸ್ವಾಮಿ, ತಂಡದ ಮಾಲೀಕ ಮಿಥುನ್ ಕುಮಾರ್, ಅಭಿಷೇಕ್ ಆಗರ್ವಾಲ್, ಕೆಎಸ್&zwnj;ಸಿಎ ವ್ಯವಸ್ಥಾಪನಾ ಸಮಿತಿ ಸದಸ್ಯೆ ಕಲ್ಪನಾ ವೆಂಕಟಾಚಾರ್, ಸುಭಾಷ್ ರಾಘವೇಂದ್ರ, ವಲಯ ಅಧ್ಯಕ್ಷ ನಾಗೇಂದ್ರ ಪಂಡಿತ್ ಹಾಗೂ ಉದ್ಯಮಿ ಶ್ರೀನಿವಾಸ ಮೂರ್ತಿ ಪ್ರಮುಖರು ಹಾಜರಿದ್ದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/cricket-sports/shivamogga-yodhas-unveil-new-jersey-and-official-anthem-ahead-of-maharaja-trophy-ksca-t20-2026-kvn/articleshow-o163pkg"/>
        </item>
        <item>
            <title><![CDATA[ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳ ಪುಂಡಾಟ, ವಾರ್ಡನ್ ಮೇಲೆ ಭೀಕರ ಹಲ್ಲೆ, ಜೈಲರ್  ಕಠಿಣ ಶಿಕ್ಷೆ!]]></title>
            <link>https://kannada.asianetnews.com/karnataka-districts/shivamogga-harsha-murder-accused-attack-warden-in-dharwad-central-jail-gdp/articleshow-r0vve5c</link>
            <guid isPermaLink="true">https://kannada.asianetnews.com/karnataka-districts/shivamogga-harsha-murder-accused-attack-warden-in-dharwad-central-jail-gdp/articleshow-r0vve5c</guid>
            <pubDate>Sat, 13 Jun 2026 15:52:57 +0530</pubDate>
            <description><![CDATA[ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪುಂಡಾಟಿಕೆಯಿಂದಾಗಿ, ಆರೋಪಿಗಳಿಗೆ ಒಂದು ತಿಂಗಳ ಕಾಲ ಕುಟುಂಬಸ್ಥರ ಭೇಟಿಯನ್ನು ನಿಷೇಧಿಸಲಾಗಿದ್ದು, ಭೇಟಿಗೆ ಬಂದಿದ್ದ ಅವರ ಕುಟುಂಬಸ್ಥರು ನಿರಾಸೆಯಿಂದ ವಾಪಸ್ಸಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv07x88r8ve4er5qvrg0j8q0,imgname-dharwad-jail-harsha-murder-accused-assault-1781345984790.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಶಿವಮೊಗ್ಗದ ಪ್ರಸಿದ್ಧ ಬಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ (Dharwad Central Jail) ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸುವ ಮೂಲಕ ಮತ್ತೆ ತಮ್ಮ ಪುಂಡಾಟಿಕೆಯನ್ನು ಪ್ರದರ್ಶಿಸಿದ್ದಾರೆ. ಈ ಘಟನೆ ಕಾರಾಗೃಹದ ಆವರಣದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಹಲ್ಲೆ ನಡೆಸಿದ ಕೈದಿಗಳಿಗೆ ಜೈಲಾಧಿಕಾರಿಗಳು ತಕ್ಷಣವೇ ಕಠಿಣ ಪನಿಷಮೆಂಟ್ ನೀಡಿದ್ದಾರೆ.&lt;/p&gt;&lt;h2&gt;ಸೆಲ್&zwnj;ನಿಂದ ಹೊರಗೆ ಬಿಡುವ ವಿಚಾರಕ್ಕೆ ಗಲಾಟೆ&lt;/h2&gt;&lt;p&gt;ಕಳೆದ 2022 ರಲ್ಲಿ ಶಿವಮೊಗ್ಗದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ ಎ-1 (A1) ಮತ್ತು ಎ-2 (A2) ಆರೋಪಿಗಳನ್ನು ಅಂದಿನಿಂದಲೇ ಸುರಕ್ಷತೆಯ ದೃಷ್ಟಿಯಿಂದ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಶನಿವಾರದಂದು ಜೈಲಿನ ಸೆಲ್&zwnj;ನಿಂದ (ಬ್ಯಾರಕ್) ಹೊರಗೆ ಬಿಡುವ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.&lt;/p&gt;&lt;p&gt;ಮಾತು ಮೀರಿದಾಗ ಉದ್ಧಟತನ ತೋರಿದ ಇಬ್ಬರು ಆರೋಪಿಗಳು, ಅಲ್ಲಿಯೇ ಕರ್ತವ್ಯದಲ್ಲಿದ್ದ ಜೈಲು ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ತೀವ್ರವಾಗಿ ಗಾಯಗೊಂಡ ವಾರ್ಡನ್ ಕಿರಣ್ ಅವರನ್ನು ತಕ್ಷಣವೇ ಜೈಲಿನ ವೈದ್ಯಕೀಯ ವಿಭಾಗದಿಂದ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಪ್ರಸಿದ್ಧ ಎಸ್&zwnj;ಡಿಎಂ (SDM) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;h2&gt;ಸಬ್ ಅರ್ಬನ್ ಠಾಣೆಯಲ್ಲಿ ಕೇಸ್ ದಾಖಲು&lt;/h2&gt;&lt;p&gt;ಜೈಲಿನೊಳಗೆ ಸರ್ಕಾರಿ ನೌಕರನ ಮೇಲೆ ನಡೆದಿರುವ ಈ ದಾಳಿಯನ್ನು ಜೈಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ತವ್ಯನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ (Obstruction of Duty) ಆರೋಪದಡಿಯಲ್ಲಿ ಹರ್ಷಾ ಕೊಲೆ ಆರೋಪಿಗಳ ವಿರುದ್ಧ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಹೊಸ ಪ್ರಕರಣ ದಾಖಲಿಸಲಾಗಿದೆ.&lt;/p&gt;&lt;h2&gt;ಕುಟುಂಬಸ್ಥರ ಭೇಟಿಗೆ ಒಂದು ತಿಂಗಳು ನಿಷೇಧ&lt;/h2&gt;&lt;p&gt;ಜೈಲಿನ ನಿಯಮಾವಳಿಗಳನ್ನು ಗಾಳಿಗೆ ತೂರಿ ವಾರ್ಡನ್ ಮೇಲೆ ಹಲ್ಲೆ ನಡೆಸಿದ ಕೈದಿಗಳಿಗೆ ಜೈಲರ್ ತಕ್ಷಣವೇ ಜಾರಿಗೆ ಬರುವಂತೆ ಕಠಿಣ ಶಿಕ್ಷೆ ಪ್ರಕಟಿಸಿದ್ದಾರೆ. ಮುಂದಿನ ಒಂದು ತಿಂಗಳ ಅವಧಿಗೆ ಯಾವುದೇ ಕುಟುಂಬದ ಸದಸ್ಯರು ಅಥವಾ ಬಂಧುಗಳು ಈ ಕೈದಿಗಳನ್ನು ಭೇಟಿ ಮಾಡದಂತೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.&lt;/p&gt;&lt;h2&gt;ಶಿವಮೊಗ್ಗದಿಂದ ಬಂದಿದ್ದ ತಾಯಿ, ಪತ್ನಿ ಕಣ್ಣೀರು ಹಾಕುತ್ತಾ ವಾಪಸ್!&lt;/h2&gt;&lt;p&gt;ಜೈಲಾಧಿಕಾರಿಗಳು ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ, ಶಿವಮೊಗ್ಗದಿಂದ ಇಬ್ಬರು ಆರೋಪಿಗಳನ್ನು ನೋಡಲು ಅವರ ತಾಯಿ ಮತ್ತು ಪತ್ನಿಯರು ಧಾರವಾಡ ಜೈಲಿನ ಬಳಿಗೆ ಆಗಮಿಸಿದ್ದರು. ಆದರೆ ಕೈದಿಗಳ ಪುಂಡಾಟಿಕೆಯಿಂದ ಆಕ್ರೋಶಗೊಂಡಿದ್ದ ಜೈಲರ್, ನಿಯಮದ ಪ್ರಕಾರ ಮುಲಾಜಿಲ್ಲದೆ ಭೇಟಿಗೆ ಅವಕಾಶ ನಿರಾಕರಿಸಿದರು. ದೂರದ ಊರಿನಿಂದ ಬಂದಿದ್ದರೂ ಸಹ ಆರೋಪಿಗಳ ಕುಟುಂಬಸ್ಥರಿಗೆ ಒಳಗೆ ಹೋಗಲು ಅನುಮತಿ ಸಿಗದ ಕಾರಣ, ಎ1 ಮತ್ತು ಎ2 ಆರೋಪಿಗಳ ಪತ್ನಿ ಹಾಗೂ ತಾಯಿ ಜೈಲಿನ ಗೇಟ್&zwnj;ನಿಂದಲೇ ಕಣ್ಣೀರು ಹಾಕುತ್ತಾ ನಿರಾಸೆಯಿಂದ ಶಿವಮೊಗ್ಗಕ್ಕೆ ವಾಪಸ್ ಹೋಗಿದ್ದಾರೆ. ಈ ಘಟನೆಯು ಜೈಲಿನೊಳಗಿನ ಭದ್ರತೆ ಮತ್ತು ಕೈದಿಗಳ ವರ್ತನೆಯ ಕುರಿತು ಮತ್ತೊಮ್ಮೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/shivamogga-harsha-murder-accused-attack-warden-in-dharwad-central-jail-gdp/articleshow-r0vve5c"/>
        </item>
        <item>
            <title><![CDATA[Shivamogga: ಹಿರಿಯ ಪತ್ರಕರ್ತನ ಹೆಂಡತಿ ನಿಗೂಢ ಸಾವು; ದೇವರ ಕೋಣೆಯಲ್ಲಿ ಹೆಣ ಕೊಳೆತು ನಾರಿದರೂ ಗೊತ್ತೇ ಆಗಲಿಲ್ಲ!]]></title>
            <link>https://kannada.asianetnews.com/karnataka-districts/shivamogga-janavarthe-journalist-ashraya-nagaraj-wife-prabhavathi-found-dead-suspicious/articleshow-rt50slo</link>
            <guid isPermaLink="true">https://kannada.asianetnews.com/karnataka-districts/shivamogga-janavarthe-journalist-ashraya-nagaraj-wife-prabhavathi-found-dead-suspicious/articleshow-rt50slo</guid>
            <pubDate>Sun, 14 Jun 2026 20:13:18 +0530</pubDate>
            <description><![CDATA[ಶಿವಮೊಗ್ಗದ ಹಿರಿಯ ಪತ್ರಕರ್ತ ಆಶ್ರಯ ನಾಗರಾಜ್ ಅವರ ಪತ್ನಿ ಪ್ರಭಾವತಿ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹದ ಜೊತೆಗೆ ಸಾಕು ನಾಯಿಯೂ ಮೃತಪಟ್ಟಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv39ba0bn3y88bj2whyfn2rn,imgname-shivamogga-journalist-ashraya-nagaraj-wife-death-1781448157195.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜೂ.14): &amp;nbsp;ಶಿ&lt;/strong&gt;ವಮೊಗ್ಗದಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ನಗರದ ಹಿರಿಯ ಪತ್ರಕರ್ತ ಹಾಗೂ 'ಜನ ವಾರ್ತೆ' ದಿನಪತ್ರಿಕೆಯ ಆಶ್ರಯ ನಾಗರಾಜ್ (Janavarthe journalist ashraya nagaraj) ಅವರ ಪತ್ನಿ ಪ್ರಭಾವತಿ (57) ಅವರು ತಮ್ಮ ನಿವಾಸದಲ್ಲಿ ನಿಗೂಢವಾಗಿ (prabhavathi found dead suspicious) ಸಾವನ್ನಪ್ಪಿದ್ದಾರೆ. ವಿಶೇಷವೆಂದರೆ, ಅವರ ಮೃತದೇಹದ ಜೊತೆಗೆ ಅವರ ಸಾಕು ನಾಯಿ (Pet dog) ಕೂಡ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.&lt;/p&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ಶಿವಮೊಗ್ಗದ ರವೀಂದ್ರ ನಗರದ 1ನೇ (Shivamogga Ravindra Nagar) ಅಡ್ಡರಸ್ತೆಯಲ್ಲಿರುವ ಮನೆಯಲ್ಲಿ ಪ್ರಭಾವತಿ ಅವರು ವಾಸವಿದ್ದರು. ಕಳೆದ ಕೆಲವು ದಿನಗಳಿಂದ ಮನೆಯಿಂದ ಯಾರು ಹೊರಬಂದಿರಲಿಲ್ಲ ಎನ್ನಲಾಗಿದೆ. ಆದರೆ, ಇಂದು ಮನೆಯಿಂದ ವಿಪರೀತ ದುರ್ವಾಸನೆ ಬರಲಾರಂಭಿಸಿದಾಗ ಗಾಬರಿಗೊಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಕೊಳೆತ ಸ್ಥಿತಿಯಲ್ಲಿ ಮೃತದೇಹ:&lt;/strong&gt;&lt;/h2&gt;&lt;p&gt;ಸ್ಥಳಕ್ಕೆ ಆಗಮಿಸಿದ ಜಯನಗರ ಠಾಣೆಯ ಪೊಲೀಸರು ಮನೆಯ ಬಾಗಿಲು ತೆರೆದು ನೋಡಿದಾಗ ಪ್ರಭಾವತಿ ಅವರ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಜೊತೆಯಲ್ಲೇ ಮನೆಯಲ್ಲಿದ್ದ ಸಾಕು ನಾಯಿ ಕೂಡ ಸಾವನ್ನಪ್ಪಿದೆ. ಪ್ರಭಾವತಿ ಅವರು ಕೆಲವು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.&lt;/p&gt;&lt;h2&gt;&lt;strong&gt;ತನಿಖೆ ಚುರುಕು:&lt;/strong&gt;&lt;/h2&gt;&lt;p&gt;ಸ್ಥಳಕ್ಕೆ ಎಫ್&zwnj;ಎಸ್&zwnj;ಎಲ್ (FSL) ಹಾಗೂ ಸುಕೋ ತಂಡ ಭೇಟಿ ನೀಡಿ, ಮನೆಯಲ್ಲಿನ ಸಾಕ್ಷ್ಯಗಳನ್ನು ಕಲೆಹಾಕಿದೆ. ಇದು ಸಹಜ ಸಾವೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಹಿರಿಯ ಪತ್ರಕರ್ತ ಆಶ್ರಯ ನಾಗರಾಜ್ ಅವರ ಪತ್ನಿಯ ನಿಗೂಢ ಸಾವು ಅವರ ಕುಟುಂಬಸ್ಥರು ಹಾಗೂ ಪತ್ರಕರ್ತ ಮಿತ್ರರಲ್ಲಿ ಆಘಾತ ತಂದಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-janavarthe-journalist-ashraya-nagaraj-wife-prabhavathi-found-dead-suspicious/articleshow-rt50slo"/>
        </item>
        <item>
            <title><![CDATA[ಶಿವಮೊಗ್ಗದಲ್ಲಿ ವಿಚಿತ್ರ ಘಟನೆ: ಕೈದಿ ಮಾತು ಕೇಳಿ ಪತ್ನಿಗೆ ಬೆದರಿಸಲು ಬಂದು ಗೂಸಾ ತಿಂದ ಬುರ್ಖಾಧಾರಿಗಳು!]]></title>
            <link>https://kannada.asianetnews.com/karnataka-districts/shivamogga-locals-beat-up-four-men-who-came-to-threaten-wife-of-prisoner-rav/articleshow-sr9shzq</link>
            <guid isPermaLink="true">https://kannada.asianetnews.com/karnataka-districts/shivamogga-locals-beat-up-four-men-who-came-to-threaten-wife-of-prisoner-rav/articleshow-sr9shzq</guid>
            <pubDate>Fri, 12 Jun 2026 09:45:46 +0530</pubDate>
            <description><![CDATA[ಜೈಲಿನಲ್ಲಿರುವ ಪತಿ, ತನ್ನನ್ನು ನೋಡಲು ಬಾರದ ಪತ್ನಿಗೆ ಬೆದರಿಸಲು ನಾಲ್ವರು ಸಹಚರರನ್ನು ಬುರ್ಖಾ ಹಾಕಿ ಕಳುಹಿಸಿದ್ದಾನೆ. ಆದರೆ, ಸ್ಥಳೀಯರಿಗೆ ಅನುಮಾನ ಬಂದು ಬುರ್ಖಾಧಾರಿಗಳಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktx0j3p78s8m2q6zd1zdhgjk,imgname-----------------------2026-06-12t094307.340-1781237616327.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜೂ.12)&lt;/strong&gt;: ಜೈಲಿನಲ್ಲಿರುವ ನನ್ನನ್ನು ನೋಡಲು ಬಂದಿಲ್ಲ, ಖರ್ಚಿಗೆ ಹಣವನ್ನೂ ನೀಡುತ್ತಿಲ್ಲ ಎಂದು ಪತ್ನಿಗೆ ಬೆದರಿಸಲು ಕಳುಹಿಸಲು ನಾಲ್ವರು ಬುರ್ಖಾಧಾರಿಗಳಿಗೆ ಗೂಸಾ ಕೊಟ್ಟು ಪೊಲೀಸರಿಗೊಪ್ಪಿದ ವಿಚಿತ್ರ ಘಟನೆ ಶಿವಮೊಗ್ಗದ ಕೆಆರ್ ಪುರಂನಲ್ಲಿ ನಡೆದಿದೆ.&lt;/p&gt;&lt;h2&gt;ಕೈದಿ ತನ್ನ ಪತ್ನಿಗೆ ಬೆದರಿಸಲು ಕಾರಣವೇನು?&lt;/h2&gt;&lt;p&gt;ಕೊಲೆ ಪ್ರಕರಣ ಸಂಬಂಧ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ಪತಿ. ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋದ ಬಳಿಕ ಪತ್ನಿ ಕೈದಿಯನ್ನ ನೋಡಲಾಗಲಿ, ವಿಚಾರಣಿಸಲಾಗಲಿ ಬಂದಿಲ್ಲ. ಇತ್ತ ಜೈಲಿನಲ್ಲಿದ್ದ ಕೈದಿಗೆ ಪತ್ನಿ ಮೇಲೆ ಕೋಪ. ಕನಿಷ್ಟ ಖರ್ಚಿಗಾದರೂ ಹಣ ಕಳಿಸಬೇಕಿತ್ತು. ಹಣ ಕೂಡ ಕಳಿಸಿಲ್ಲವೆಂದು ಪತ್ನಿಗೆ ಬೆದರಿಕೆ ಹಾಕಲು ಮುಂದಾದ ಪತಿ. ತನ್ನ ನಾಲ್ವರು ಸಹಚರರನ್ನು ಮನೆ ಬಳಿ ಕಳಿಸಿದ್ದ.&lt;/p&gt;&lt;h3&gt;ಕೈದಿಯ ಪತ್ನಿ ಬೆದರಿಸಲು ಬಂದು ಗೂಸಾ ತಿಂದ ಬುರ್ಖಾಧಾರಿಗಳು!&lt;/h3&gt;&lt;p&gt;ಯಾರಿಗೂ ಗುರುತು ಸಿಗಬಾರದೆಂದು ಬುರ್ಖಾಧಾರಿಯಾಗಿ ಕೈದಿಯ ಆದೇಶದಂತೆ ಪತ್ನಿಗೆ ಬೆದರಿಕೆ ಹಾಕಲು ಬಂದಿದ್ದರು. ಕೈದಿಗಳ ಪ್ಲಾನೇ ತಿರುಗುಬಾಣವಾಗಿದೆ. ಬುರ್ಖಾಧಾರಿ ಕೈದಿಗಳು ಮಹಿಳೆಯ ಮನೆ ಬಳಿ ಬರುತ್ತಿದ್ದಂತೆ ಅವರ ವೇಷ, ವರ್ತನೆಯಿಂದ ಸ್ಥಳೀಯರಿಗೆ ಅನುಮಾನ ಬಂದಿದೆ. ತಕ್ಷಣವೇ ನಾಲ್ವರನ್ನು ಸುತ್ತುವರಿದು ವಿಚಾರಿಸಿದ್ದಾರೆ. ಆಗ ಮಾತನಾಡದೇ ತಡವರಿಸಿದ್ದಾರೆ. ಇದರಿಂದ ಇನ್ನಷ್ಟು ಅನುಮಾನಗೊಂಡ ಸ್ಥಳೀಯರು ನಾಲ್ವರನ್ನ ತರಾಟೆಗೆ ತೆಗೆದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಾಲ್ವರ ಪೈಕಿ ಒಬ್ಬ ಸ್ಥಳೀಯರಿಂದ ತಪ್ಪಿಸಿಕೊಂಡಿದ್ದಾನೆ. ಇನ್ನುಳಿದ ಮೂವರಿಗೆ ಬಿಸಿಬಿಸಿ ಕಜ್ಜಾಯ ನೀಡಿ ಗ್ರಾಮಸ್ಥರು ಪೊಲೀಸರಿಗೊಪ್ಪಿಸಿದ್ದಾರೆ.&lt;/p&gt;&lt;p&gt;&lt;strong&gt;ವಿಚಾರಣೆ ವೇಳೆ ಬಾಯ್ಬಿಟ್ಟ ಖದೀಮರು&lt;/strong&gt;&lt;/p&gt;&lt;p&gt;ಕೈದಿಯ ಆದೇಶದಂತೆ ಬೆದರಿಕೆ ಹಾಕಲು ಬಂದಿರುವುದಾಗಿ ಪುಂಡರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಪತಿ-ಪತ್ನಿ ನಡುವಿನ ಜಗಳದಲ್ಲಿ ನಾಲ್ವರು ಮಧ್ಯಪ್ರವೇಶಿಸಿ ಸ್ಥಳೀಯರಿಂದ ಗೂಸಾ ತಿಂದು ಜೈಲು ಸೇರುವಂತಾಗಿದೆ. ಸದ್ಯ ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.&lt;/p&gt;]]></content:encoded>
            <category>shivamogga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/shivamogga-locals-beat-up-four-men-who-came-to-threaten-wife-of-prisoner-rav/articleshow-sr9shzq"/>
        </item>
        <item>
            <title><![CDATA[ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್]]></title>
            <link>https://kannada.asianetnews.com/gallery/karnataka-districts/train-alert-shivamogga-janshatabdi-and-talaguppa-express-cancelled-diverted-on-these-dates-u40gg60</link>
            <guid isPermaLink="true">https://kannada.asianetnews.com/gallery/karnataka-districts/train-alert-shivamogga-janshatabdi-and-talaguppa-express-cancelled-diverted-on-these-dates-u40gg60</guid>
            <pubDate>Sun, 14 Jun 2026 19:55:39 +0530</pubDate>
            <description><![CDATA[&lt;p&gt;&lt;strong&gt;South Western Railway train status: &lt;/strong&gt;ನೈಋತ್ಯ ರೈಲ್ವೆಯು ಶಿವಮೊಗ್ಗ, ತಾಳಗುಪ್ಪ ಮತ್ತು ಮೈಸೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ಜನಶತಾಬ್ದಿ ಹಾಗೂ ಎಕ್ಸ್&zwnj;ಪ್ರೆಸ್ ರೈಲುಗಳ ಸೇವೆಯಲ್ಲಿ ಭಾರಿ ಬದಲಾವಣೆ ಮಾಡಿದೆ. ಕೆಲವು ರೈಲುಗಳು ಸಂಪೂರ್ಣವಾಗಿ ರದ್ದಾಗಿದ್ದರೆ, ಇನ್ನು ಕೆಲವು ಮಾರ್ಗ ಬದಲಾಯಿಸಲಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krz89gnr90c53b77bdjb73pz,imgname-4-1779165348536.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;South Western Railway train status: &lt;/strong&gt;ನೈಋತ್ಯ ರೈಲ್ವೆಯು ಶಿವಮೊಗ್ಗ, ತಾಳಗುಪ್ಪ ಮತ್ತು ಮೈಸೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ಜನಶತಾಬ್ದಿ ಹಾಗೂ ಎಕ್ಸ್&zwnj;ಪ್ರೆಸ್ ರೈಲುಗಳ ಸೇವೆಯಲ್ಲಿ ಭಾರಿ ಬದಲಾವಣೆ ಮಾಡಿದೆ. ಕೆಲವು ರೈಲುಗಳು ಸಂಪೂರ್ಣವಾಗಿ ರದ್ದಾಗಿದ್ದರೆ, ಇನ್ನು ಕೆಲವು ಮಾರ್ಗ ಬದಲಾಯಿಸಲಾಗಿದೆ.&amp;nbsp;&lt;/p&gt;&lt;img&gt;&lt;p&gt;&lt;strong&gt;ಈ ಕೆಳಗಿನ ವಿವರಗಳನ್ನು ಗಮನಿಸಿ&lt;/strong&gt;ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಶಿವಮೊಗ್ಗ ಮತ್ತು ತಾಳಗುಪ್ಪ ಮಾರ್ಗವಾಗಿ ಸಂಚರಿಸುವ ಹಲವು ಪ್ರಮುಖ ರೈಲುಗಳ ಸೇವೆಯನ್ನು ರದ್ದು ಹಾಗೂ ಮಾರ್ಗ ಬದಲಾವಣೆ ಮಾಡಿದೆ. ಆಗಸ್ಟ್ ತಿಂಗಳಲ್ಲಿ ಪ್ರಯಾಣಿಸುವವರು ಈ ಕೆಳಗಿನ ವಿವರಗಳನ್ನು ಗಮನಿಸುವುದು ಅಗತ್ಯ.&lt;/p&gt;&lt;img&gt;&lt;p&gt;&lt;strong&gt;ಸಂಪೂರ್ಣ ರದ್ದಾಗಿರುವ ರೈಲುಗಳು (ಆಗಸ್ಟ್ 4)&lt;/strong&gt;&lt;strong&gt;ಯಶವಂತಪುರ&ndash;ಶಿವಮೊಗ್ಗ ಟೌನ್ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16581): &lt;/strong&gt;2026ರ ಆಗಸ್ಟ್ 4ರಂದು ಈ ರೈಲಿನ ಸಂಚಾರ ಇರುವುದಿಲ್ಲ.&lt;strong&gt;ಶಿವಮೊಗ್ಗ ಟೌನ್&ndash;ಯಶವಂತಪುರ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16582):&lt;/strong&gt; 2026ರ ಆಗಸ್ಟ್ 4ರಂದು ಈ ರೈಲಿನ ಸೇವೆಯನ್ನೂ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.&lt;/p&gt;&lt;img&gt;&lt;p&gt;&lt;strong&gt;ಭಾಗಶಃ ರದ್ದಾಗಿರುವ ರೈಲುಗಳು (ಆಗಸ್ಟ್ 1 ರಿಂದ ಆಗಸ್ಟ್ 3)&lt;/strong&gt;&lt;strong&gt;ತಾಳಗುಪ್ಪ&ndash;ಬೆಂಗಳೂರು ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 20652): &lt;/strong&gt;ಆಗಸ್ಟ್ 1ರಿಂದ 3ರವರೆಗೆ ಈ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ಸಂಚರಿಸುವುದಿಲ್ಲ. ಇದು ಅರಸೀಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣ ಕೊನೆಗೊಳಿಸಲಿದೆ.&lt;strong&gt;ಶಿವಮೊಗ್ಗ ಟೌನ್&ndash;ಬೆಂಗಳೂರು ಜನಶತಾಬ್ದಿ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 12090): &lt;/strong&gt;ಆಗಸ್ಟ್ 1ರಿಂದ 3ರವರೆಗೆ ಈ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲೇ ನಿಲ್ಲಲಿದೆ.&lt;strong&gt;ಬೆಂಗಳೂರು&ndash;ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 12089): &lt;/strong&gt;ಆಗಸ್ಟ್ 1ರಿಂದ 3ರವರೆಗೆ ಈ ರೈಲು ಬೆಂಗಳೂರಿನ ಬದಲಾಗಿ ಅರಸೀಕೆರೆ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.&lt;/p&gt;&lt;img&gt;&lt;p&gt;&lt;strong&gt;ಮಾರ್ಗ ಬದಲಾವಣೆ ಆಗಿರುವ ರೈಲುಗಳು (ಆಗಸ್ಟ್ 3)&lt;/strong&gt;ಬೆಂಗಳೂರು ನಿಲ್ದಾಣದ ಕಾಮಗಾರಿ ಹಿನ್ನೆಲೆಯಲ್ಲಿ ಕೆಳಗಿನ ರೈಲುಗಳು ಬೆಂಗಳೂರು, ಯಶವಂತಪುರ ಮತ್ತು ತುಮಕೂರು ನಿಲ್ದಾಣಗಳಿಗೆ ಬರುವುದಿಲ್ಲ. ಬದಲಾಗಿ ಪರ್ಯಾಯ ಮಾರ್ಗದಲ್ಲಿ ಚಲಿಸಲಿವೆ:&lt;strong&gt;ತಾಳಗುಪ್ಪ&ndash;ಮೈಸೂರು ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16228): &lt;/strong&gt;ಆಗಸ್ಟ್ 3ರಂದು ತಾಳಗುಪ್ಪದಿಂದ ಹೊರಡುವ ಈ ರೈಲು ಅರಸೀಕೆರೆ, ಹಾಸನ ಮತ್ತು ಕೃಷ್ಣರಾಜನಗರ ಮಾರ್ಗವಾಗಿ ಮೈಸೂರು ತಲುಪಲಿದೆ.&lt;strong&gt;ಮೈಸೂರು&ndash;ತಾಳಗುಪ್ಪ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16227): &lt;/strong&gt;ಆಗಸ್ಟ್ 3ರಂದು ಮೈಸೂರಿನಿಂದ ಹೊರಡುವ ಈ ರೈಲು ಕೃಷ್ಣರಾಜನಗರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಚಲಿಸಲಿದೆ.&lt;/p&gt;&lt;img&gt;&lt;p&gt;&lt;strong&gt;ಗಮನಿಸಿ: &lt;/strong&gt;ಮಾರ್ಗ ಬದಲಾಗಿರುವ ಕಾರಣ ಈ ಎರಡೂ ರೈಲುಗಳಿಗೆ ತುಮಕೂರು, ಯಶವಂತಪುರ ಮತ್ತು ಕೆಎಸ್&zwnj;ಆರ್&zwnj; ಬೆಂಗಳೂರು ನಿಲ್ದಾಣಗಳ ನಿಲುಗಡೆಯನ್ನು ಕೈಬಿಡಲಾಗಿದೆ. ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Ashwini HR</dc:creator>
            <atom:link href="https://kannada.asianetnews.com/gallery/karnataka-districts/train-alert-shivamogga-janshatabdi-and-talaguppa-express-cancelled-diverted-on-these-dates-u40gg60"/>
        </item>
        <item>
            <title><![CDATA[Shivamogga: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವು]]></title>
            <link>https://kannada.asianetnews.com/karnataka-districts/shivamogga-6-year-old-boy-dies-of-heart-attack-while-playing-in-school-premises-mrq/articleshow-y9el7sn</link>
            <guid isPermaLink="true">https://kannada.asianetnews.com/karnataka-districts/shivamogga-6-year-old-boy-dies-of-heart-attack-while-playing-in-school-premises-mrq/articleshow-y9el7sn</guid>
            <pubDate>Tue, 16 Jun 2026 11:48:23 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮತ್ತೊಂದು ಘಟನೆಯಲ್ಲಿ, ಬೈಕ್ ವ್ಹೀಲಿಂಗ್ ಮಾಡಿದ ಬ್ಯಾಂಕ್ ನೌಕರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv7h986kkwe2m219sffh93q1,imgname-shivamogga-death-1781590696147.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ&lt;/strong&gt;: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಾಳಸಸಿ ಗ್ರಾಮದಲ್ಲಿ ನಡೆದಿದೆ. ಅರು ವರ್ಷದ ತ್ರಿಲೋಕ್ ಜೈನ್ ಮೃತ ಬಾಲಕ. ಕೊಡವನಹಳ್ಳಿಯ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದ ತ್ರಿಲೋಕ್, ಆಟವಾಡುತ್ತಿರುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ರೂ ತ್ರಿಲೋಕ್ ಸಾವನ್ನಪ್ಪಿದ್ದಾನೆ. ಹೃದಯಾಘಾತದಿಂದಲೇ ತ್ರಿಲೋಕ್ ಸಾವನ್ನಪ್ಪಿದ್ದು ಎಂದು ಹೇಳಲಾಗುತ್ತಿದ್ದು, ಬಾಲಕ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದನಾ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.&lt;/p&gt;&lt;h2&gt;&lt;strong&gt;ಬೈಕ್ ವ್ಹೀಲಿಂಗ್ ಮಾಡಿದ ಬ್ಯಾಂಕ್ ನೌಕರನ ವಿರುದ್ಧ ಕೇಸ್&lt;/strong&gt;&lt;/h2&gt;&lt;p&gt;ಬೈಕ್ ವ್ಹೀಲಿಂಗ್ ಮಾಡಿದ ಬ್ಯಾಂಕ್ ನೌಕರನ ವಿರುದ್ದ ಶಿವಮೊಗ್ಗ ಪೂರ್ವ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ಮಲವಗೊಪ್ಪ ಸಮೀಪದ ರಾಷ್ಟ್ರೀಯ ಹೆದ್ದಾರಿ-69ರ 3 ಕ್ರಾಸ್ ಬಳಿ ಬ್ಯಾಂಕ್ ನೌಕರ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ವೀಲಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.&lt;/p&gt;&lt;p&gt;ವ್ಹೀಲಿಂಗ್ ಮಾಡಿದ್ದ ಯುವಕ 20 ವರ್ಷದ, ಹೊಳೆಬೆನವಳ್ಳಿ ದೊಡ್ಡತಾಂಡಾ ನಿವಾಸಿ ಹಾಗೂ ಶಿವಮೊಗ್ಗದ ಬ್ಯಾಂಕ್&zwnj;ವೊಂದರ ನೌಕರ ಎಂದು ಗುರುತಿಸಲಾಗಿದೆ. ವೀಲಿಂಗ್&zwnj;ಗೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋಜು ಮಸ್ತಿ ಮಾಡಿದ್ದಕ್ಕಾಗಿ ಯುವಕ ದಂಡ ತೆರಬೇಕಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/shivamogga-6-year-old-boy-dies-of-heart-attack-while-playing-in-school-premises-mrq/articleshow-y9el7sn"/>
        </item>
        <item>
            <title><![CDATA[ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ: ಸಂಸದ ಬಿ.ವೈ.ರಾಘವೇಂದ್ರ]]></title>
            <link>https://kannada.asianetnews.com/karnataka-districts/mp-by-raghavendra-urges-governor-for-high-court-circuit-bench-in-shivamogga-kvn/articleshow-zcvm0eb</link>
            <guid isPermaLink="true">https://kannada.asianetnews.com/karnataka-districts/mp-by-raghavendra-urges-governor-for-high-court-circuit-bench-in-shivamogga-kvn/articleshow-zcvm0eb</guid>
            <pubDate>Wed, 24 Jun 2026 09:05:12 +0530</pubDate>
            <description><![CDATA[ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರಿಗೆ ಅನುಕೂಲವಾಗುವಂತೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪಿಸಲು ರಾಜ್ಯಪಾಲ ಥಾವರ್&zwnj;ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೀಠ ಸ್ಥಾಪನೆಯಾಗುವವರೆಗೂ ಶಿವಮೊಗ್ಗ ಜಿಲ್ಲೆಯನ್ನು ಬೆಂಗಳೂರು ಹೈಕೋರ್ಟ್&zwnj;ನ ಪ್ರಧಾನ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವಂತೆಯೂ ಅವರು ಕೋರಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvvtgb84exetz76jb66tmjkm,imgname-by-raghavendra-1782271454468.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ನಗರದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ವಿಶೇಷವಾಗಿ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಪ್ರಯೋಜನಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಲು ತುರ್ತು ಸಲಹೆ ನೀಡುವಂತೆ ಕೋರಿ ರಾಜ್ಯಪಾಲ ಥಾವರ್&zwnj;ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಔಪಚಾರಿಕ ಮನವಿ ಸಲ್ಲಿಸಿದ್ದಾರೆ.&lt;/p&gt;&lt;p&gt;ಸಂಸದ ರಾಘವೇಂದ್ರ ಅವರು ಮಂಗಳವಾರ ಲೋಕ ಭವನದಲ್ಲಿ ರಾಜ್ಯಪಾಲರಾದ ಥಾವರ್&zwnj;ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಕೋರಿ ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿದರು.&lt;/p&gt;&lt;h2&gt;&lt;strong&gt;ರಾಜ್ಯಪಾಲರ ಗಮನ ಸೆಳೆದ ಸಂಸದ ರಾಘವೇಂದ್ರ&lt;/strong&gt;&lt;/h2&gt;&lt;p&gt;ಭೇಟಿಯ ಸಂದರ್ಭದಲ್ಲಿ ಸಂಸದರು, ಶಿವಮೊಗ್ಗದ ಭೌಗೋಳಿಕ ಅನುಕೂಲ ಮತ್ತು ಮಧ್ಯ ಕರ್ನಾಟಕದ ಪ್ರಮುಖ ಆಡಳಿತ, ಶೈಕ್ಷಣಿಕ, ವಾಣಿಜ್ಯ ಮತ್ತು ಸಾರಿಗೆ ಕೇಂದ್ರವಾಗಿ ಜಿಲ್ಲೆ ಹೊರಹೊಮ್ಮಿರುವುದರ ಕಡೆಗೆ ರಾಜ್ಯಪಾಲರ ಗಮನ ಸೆಳೆದಿದ್ದಾರೆ. ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯಿಂದ ಶಿವಮೊಗ್ಗ ಜಿಲ್ಲೆಯ ಜನರಿಗೆ ಮಾತ್ರವಲ್ಲದೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳು ಸೇರಿದಂತೆ ಮಲೆನಾಡು ಮತ್ತು ಮಧ್ಯ ಕರ್ನಾಟಕ ಪ್ರದೇಶದ ಜನರಿಗೆ ಹಾಗೂ ನ್ಯಾಯಿಕ ವಲಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಒತ್ತಿ ತಿಳಿಸಿದ್ದಾರೆ, ಇದರಿಂದಾಗಿ ನ್ಯಾಯ ಪ್ರಾಪ್ತಿಯ ಜನರ ಹಕ್ಕು ಹೆಚ್ಚು ಸುಲಭವಾಗಿ, ಅನುಕೂಲಕರವಾಗಿ ಮತ್ತು ಪರಿಣಾಮಕಾರಿಯಾಗಿ ಸಾಧ್ಯವಾಗಲಿದೆ ಎಂದಿದ್ದಾರೆ. ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ.&lt;/p&gt;&lt;p&gt;ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವವರೆಗೆ ಬೆಂಗಳೂರು ನ್ಯಾಯವ್ಯಾಪ್ತಿಯಡಿಯಲ್ಲಿಯೇ ಶಿವಮೊಗ್ಗ ಇರಲಿ: ಇದೇ ಸಂದರ್ಭದಲ್ಲಿ, ಶಿವಮೊಗ್ಗದಲ್ಲಿ ಪ್ರತ್ಯೇಕ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸುವವರೆಗೆ ಶಿವಮೊಗ್ಗ ಜಿಲ್ಲೆ ಬೆಂಗಳೂರಿನ ಹೈಕೋರ್ಟ್&zwnj;ನ ಪ್ರಧಾನ ಪೀಠದ ವ್ಯಾಪ್ತಿಯಲ್ಲಿ ಮುಂದುವರಿಯಬೇಕೆಂದು ಸಂಸದರು ಹೇಳಿದ್ದಾರೆ. ವಕೀಲರು, ಧಾವೆ ಹೂಡುವವರು ಮತ್ತು ಸಾರ್ವಜನಿಕರು ವ್ಯಕ್ತಪಡಿಸಿರುವ ಕಳವಳಗಳಿಗೆ ಧ್ವನಿಯಾಗಿ, ಬೆಂಗಳೂರು ಶಿವಮೊಗ್ಗದ ಜನರಿಗೆ ಅತ್ಯಂತ ಸುಲಭವಾಗಿ ತಲುಪಬಹುದಾದ ಕೇಂದ್ರವಾಗಿದೆ ಎಂದು ಪ್ರತಿಪಾದಿಸಿದ್ದಾರೆ.&lt;/p&gt;&lt;p&gt;ಶಿವಮೊಗ್ಗವನ್ನು ಮಂಗಳೂರಿನಲ್ಲಿ ಪ್ರಸ್ತಾಪಿತ ನ್ಯಾಯಪೀಠದ ವ್ಯಾಪ್ತಿಗೆ ತರುವುದರ ವಿರುದ್ಧ ಶಿವಮೊಗ್ಗದ ವಲಯದಿಂದ ವ್ಯಕ್ತವಾಗುತ್ತಿರುವ ಭಾವನೆಗಳನ್ನು ಮತ್ತು ಅದಕ್ಕೆ ಕಾರಣಗಳನ್ನು ಸಂಸದರು ರಾಜ್ಯಪಾಲರಿಗೆ ತಿಳಿಸಿಕೊಟ್ಟಿದ್ದಾರೆ. ಪ್ರಸ್ತಾಪಿತ ಮಂಗಳೂರು ಪೀಠದೊಂದಿಗೆ ಶಿವಮೊಗ್ಗವನ್ನು ಜೋಡಿಸುವುದರಿಂದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಧಾವೆದಾರರ ಹಿತಾಸಕ್ತಿ ಮತ್ತು ಅನುಕೂಲವನ್ನು ಸಮರ್ಪಕವಾಗಿ ಪೂರೈಸುವುದು ಸಾಧ್ಯವಿಲ್ಲ ಎಂದು ಹೇಳಿದರು.&lt;/p&gt;&lt;p&gt;ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠದ ಸ್ಥಾಪನೆಯು ಆ ಭಾಗದ ಜನರ ನ್ಯಾಯಪ್ರಾಪ್ತಿಯ ಹಕ್ಕಿಗೆ ಗಮನಾರ್ಹ ಬಲ ನೀಡುತ್ತದೆ, ಧಾವೆದಾರರ ವೆಚ್ಚದ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ದೀರ್ಘಕಾಲದ ಆಕಾಂಕ್ಷೆಯನ್ನು ಈಡೇರಿಸುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mp-by-raghavendra-urges-governor-for-high-court-circuit-bench-in-shivamogga-kvn/articleshow-zcvm0eb"/>
        </item>
    </channel>
</rss>
