<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 13 May 2026 10:29:07 +0530</lastBuildDate>
        <atom:link href="https://kannada.asianetnews.com/rss/shivamogga" rel="self" type="application/rss+xml"/>
        <item>
            <title><![CDATA[ತೀರ್ಥಹಳ್ಳಿ ಟ್ರಯಲ್ ಬ್ಲಾಸ್ಟ್ ಕೇಸ್: ಐಸಿಸ್ ಪಿತೂರಿ ಪ್ರಕರಣದ ಮೂರನೇ ಉಗ್ರ ಅರಾಫತ್‌ ಅಲಿಗೆ 6 ವರ್ಷ ಜೈಲು]]></title>
            <link>https://kannada.asianetnews.com/karnataka-districts/thirthahalli-trial-blast-case-6-years-jail-for-isis-conspirator-arafat-ali-rav/articleshow-0co27d9</link>
            <guid isPermaLink="true">https://kannada.asianetnews.com/karnataka-districts/thirthahalli-trial-blast-case-6-years-jail-for-isis-conspirator-arafat-ali-rav/articleshow-0co27d9</guid>
            <pubDate>Wed, 22 Apr 2026 09:43:14 +0530</pubDate>
            <description><![CDATA[&lt;p&gt;ಶಿವಮೊಗ್ಗದ ಐಸಿಸ್&zwnj; ಭಯೋತ್ಪಾದನಾ ಪಿತೂರಿ ಪ್ರಕರಣದ 10ನೇ ಆರೋಪಿ ಅರಾಫತ್&zwnj; ಅಲಿಗೆ ಎನ್&zwnj;ಐಎ ವಿಶೇಷ ನ್ಯಾಯಾಲಯವು 6 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 47 ಸಾವಿರ ರೂ. ದಂಡ ವಿಧಿಸಿದೆ. ಐಸಿಸ್&zwnj;ಗೆ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km7gs3z5syqk3t1kdbvs9vv8,imgname-fake-news-fact-check-ukrainians-india-nia-arrest-mizoram-drone-training-security-alert-1774073974757.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.22)&lt;/strong&gt; ಶಿವಮೊಗ್ಗದ ಐಸಿಸ್&zwnj; ಭಯೋತ್ಪಾದನಾ ಪಿತೂರಿ ಪ್ರಕರಣದ 10ನೇ ಆರೋಪಿಯಾಗಿದ್ದ ಐಸಿಸ್&zwnj; ಉಗ್ರ ಸಂಘಟನೆ ಸದಸ್ಯ ಅರಾಫತ್&zwnj; ಅಲಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್&zwnj;ಐಎ) ವಿಶೇಷ ನ್ಯಾಯಾಲಯ 6 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 47 ಸಾವಿರ ರು. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.&lt;/p&gt;&lt;p&gt;ಪ್ರಕರಣ ಸಂಬಂಧ ಎನ್&zwnj;ಐಎ ವಿಶೇಷ ನ್ಯಾಯಾಲಯವು 2025ರ ನವೆಂಬರ್&zwnj;ನಲ್ಲಿ ಇಬ್ಬರು ಅಪರಾಧಿಗಳಿಗೆ ಆರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮೂರನೇ ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿವಮೊಗ್ಗದ ಐಸಿಸ್&zwnj; ಭಯೋತ್ಪಾದನಾ ಪಿತೂರಿ ಪ್ರಕರಣ ಸಂಬಂಧ ಎನ್&zwnj;ಐಎ ಅಧಿಕಾರಿಗಳು 12 ಮಂದಿ ವಿರುದ್ಧ ಐಪಿಸಿ ವಿವಿಧ ಸೆಕ್ಷನ್&zwnj; ಯುಎಪಿಎ ಕಾಯ್ದೆಯ ವಿವಿಧ ಸೆಕ್ಷನ್&zwnj;ಗಳಡಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ಎನ್&zwnj;ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಅರಾಫತ್&zwnj; ಅಲಿಗೆ ಎನ್&zwnj;ಐಎ ವಿಶೇಷ ನ್ಯಾಯಾಲಯ ಇದೀಗ 6 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 47 ಸಾವಿರ ರು. ದಂಡ ವಿಧಿಸಿದೆ.&lt;/p&gt;&lt;h2&gt;ಪ್ರಕರಣದ ಹಿನ್ನೆಲೆ:&lt;/h2&gt;&lt;p&gt;2022ರ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಿವಮೊಗ್ಗದ ಅಮೀರ್ ಅಹಮದ್&zwnj; ವೃತ್ತದಲ್ಲಿ ವೀರ್&zwnj; ಸಾವರ್ಕರ್&zwnj; ಬ್ಯಾನರ್&zwnj; ಹಾಕುವಾಗ ನಡೆದ ಜಗಳದ ವೇಳೆ ದುಷ್ಕರ್ಮಿಗಳು ಪ್ರೇಮ್&zwnj; ಸಿಂಗ್&zwnj; ಎಂಬಾತನಿಗೆ ಚಾಕುವಿನಿಂದ ಇರಿದಿದ್ದರು. ಈ ಸಂಬಂಧ ಜಬೀವುಲ್ಲಾ, ತನ್ವೀರ್ ಅಹಮ್ಮದ್&zwnj;, ನದೀಮ್ ಫೈಜಲ್&zwnj; ಸೇರಿ ಕೆಲವರನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಶಂಕಿತ ಉಗ್ರರ ಬಗ್ಗೆ ಮಾಹಿತಿ ಸಿಕ್ಕಿತ್ತು.&lt;/p&gt;&lt;h3&gt;ತುಂಗಾ ನದಿ ತಟದಲ್ಲಿ ಬಾಂಬ್&zwnj; ಬ್ಲಾಸ್ಟ್&zwnj;:&lt;/h3&gt;&lt;p&gt;ಆರೋಪಿ ಜಬೀವುಲ್ಲಾಗೆ ತೀರ್ಥಹಳ್ಳಿಯ ಶಾರೀಕ್&zwnj; ಗಲಾಟೆ ಎಬ್ಬಿಸಲು ಪ್ರಚೋದನೆ ನೀಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮುಂದುವರೆದ ತನಿಖೆಯಲ್ಲಿ ಶಿವಮೊಗ್ಗದ ಸೈಯ್ಯದ್ ಯಾಸೀನ್, ಮಂಗಳೂರಿನ ನಿವಾಸಿ ಮಾಝ್ ಹಾಗೂ ತೀರ್ಥಹಳ್ಳಿಯ ಶಾರೀಕ್ ಸೇರಿಕೊಂಡು ಬಾಂಬ್ ತಯಾರಿಸಿ ತುಂಗಾ ನದಿಯ ತಟದಲ್ಲಿ ಪ್ರಾಯೋಗಿಕವಾಗಿ ಸ್ಫೋಟಿಸಿರುವುದು ಮತ್ತು ತ್ರಿವರ್ಣ ಧ್ವಜ ಸುಟ್ಟಿರುವ ವಿಚಾರವೂ ಬಯಲಾಗಿತ್ತು.&lt;/p&gt;&lt;p&gt;ಈ ಸಂಬಂಧ ಎನ್&zwnj;ಐಎ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಆರೋಪಿಗಳು ರಾಜ್ಯದಲ್ಲಿ ಐಸಿಸ್&zwnj; ಉಗ್ರ ಚಟುವಟಿಕೆಗಳನ್ನು ವಿಸ್ತರಿಸಲು ಮತ್ತು ವಿಧ್ವಂಸಕ ಕೃತ್ಯಗಳು, ಹಿಂಸಾಚಾರ ನಡೆಸಲು ಸಂಚು ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿತ್ತು. ಬಳಿಕ ಎನ್&zwnj;ಐಎ ಅಧಿಕಾರಿಗಳು ಒಬ್ಬೊಬ್ಬರೇ ಶಂಕಿತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್&zwnj; ಸ್ಫೋಟದ ಪ್ರಮುಖ ಆರೋಪಿ ಶಾರಿಕ್&zwnj;ಗೂ ಅರಾಫತ್&zwnj; ಅಲಿಗೂ ನಂಟಿರುವುದು ತನಿಖೆಯಲ್ಲಿ ಬಯಲಾಗಿತ್ತು.&lt;/p&gt;&lt;p&gt;&lt;strong&gt;ದೆಹಲಿ ಏರ್&zwnj;ಪೋರ್ಟ್&zwnj;ನಲ್ಲಿ ಬಂಧನ:&lt;/strong&gt;&lt;/p&gt;&lt;p&gt;ಐಸಿಸ್&zwnj; ಉಗ್ರ ಸಂಘಟನೆಗೆ ಸೇರಿದ್ದ ತೀರ್ಥಹಳ್ಳಿಯ ಅರಾಫತ್&zwnj; ಅಲಿ ಬಂಧನ ಭೀತಿಯಿಂದ 2020ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2023ರ ಸೆ.14ರಂದು ಕೀನ್ಯಾದ ನೈರೋಬಿಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅರಾಫತ್&zwnj; ಅಲಿಯನ್ನು ಎನ್&zwnj;ಐಎ ಅಧಿಕಾರಿಗಳು ಬಂಧಿಸಿದ್ದರು. ನಿಷೇಧಿತ ಐಸಿಸ್&zwnj; ಉ್ರಗ ಸಂಘಟನೆ ಸದಸ್ಯನಾಗಿದ್ದ ಅರಾಫತ್&zwnj; ಅಲಿ ಭಾರತದ ನೆಲದಲ್ಲಿ ಹಿಂಸಾತ್ಮಕ ಭಯೋತ್ಪಾದಕ ಸಿದ್ಧಾಂತ ಪ್ರಚಾರ ಮಾಡುವ ಕ್ರಿಮಿನಲ್&zwnj; ಪಿತೂರಿಯಲ್ಲಿ ಭಾಗಿಯಾಗಿದ್ದ. ಶಿವಮೊಗ್ಗ ಐಸಿಸ್ ಭಯೋತ್ಪಾದನಾ ಘಟಕಕ್ಕೆ ಯುವಕರನ್ನು ಸೆಳೆದು ಇಸ್ಲಾಂ ಮೂಲಭೂತವಾದ ಭೋದಿಸುತ್ತಿದ್ದ. ಐಸಿಸ್&zwnj; ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದ ಎಂಬುದು ಎನ್&zwnj;ಐಎ ತನಿಖೆಯಲ್ಲಿ ಬಯಲಾಗಿತ್ತು.&lt;/p&gt;&lt;p&gt;&lt;strong&gt;ಉಗ್ರ ಸಂಘಟನೆಗಳಿಗೆ ಬೆಂಬಲ:&lt;/strong&gt;&lt;/p&gt;&lt;p&gt;ಐಸಿಸ್ ಮತ್ತು ಲಷ್ಕರ್-ಎ-ತೊಯ್ಬಾ ಸೇರಿ ಇತರ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ಸಲುವಾಗಿ ಮಂಗಳೂರು ನಗರದಲ್ಲಿ ಪ್ರಚೋದನಾಕಾರಿ ಗೀಚುಬರಹಗಳನ್ನು ಕೆತ್ತಲು ಇತರೆ ಆರೋಪಿಗಳಿಗೆ ಪ್ರಚೋದನೆ ಮತ್ತು ಪ್ರೇರೇಪಿಸಿದ್ದ. ವಿವಿಧ ಧರ್ಮಗಳ ಜನರಲ್ಲಿ ದ್ವೇಷ ಬಿತ್ತುವುದು, ಸಮಾಜದ ಶಾಂತಿ ಕದಡುವ ಗುರಿ ಹೊಂದಿದ್ದರು. ಅರಾಫತ್&zwnj; ಅಲಿ ಐಸಿಸ್ ಆನ್&zwnj;ಲೈನ್&zwnj; ಹ್ಯಾಂಡ್ಲರ್&zwnj; ಜೊತೆ ಸಂಪರ್ಕದಲ್ಲಿದ್ದ. ಶಿವಮೊಗ್ಗ ಭಯೋತ್ಪಾದನಾ ಘಟಕಕ್ಕೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣಕಾಸು ಒದಗಿಸುತ್ತಿದ್ದ ವಿಚಾರ ಎನ್&zwnj;ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/thirthahalli-trial-blast-case-6-years-jail-for-isis-conspirator-arafat-ali-rav/articleshow-0co27d9"/>
        </item>
        <item>
            <title><![CDATA[ಬೇಸೂರಲ್ಲಿ ಅಣು ವಿದ್ಯುತ್ ಘಟಕಕ್ಕೆ ವಿರೋಧ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/besuru-nuclear-power-plant-protest-ks-eshwarappa-statement-gvd/articleshow-0tebpr5</link>
            <guid isPermaLink="true">https://kannada.asianetnews.com/karnataka-districts/besuru-nuclear-power-plant-protest-ks-eshwarappa-statement-gvd/articleshow-0tebpr5</guid>
            <pubDate>Thu, 07 May 2026 00:25:11 +0530</pubDate>
            <description><![CDATA[&lt;p&gt;ಬೇಸೂರಿನಲ್ಲಿ ಎನ್&zwnj;ಟಿಪಿಸಿ ಮಾರಕ ಅಣು ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಿದೆ ಎಂಬ ಅಧಿಕೃತ ಮಾಹಿತಿ ದೊರೆತ್ತಿದೆ. ಇದಕ್ಕೆ ಅನುಮತಿ ನೀಡುವುದರ ಮೂಲಕ ಜಿಲ್ಲಾಡಳಿತ ತನ್ನ ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದೆ ಎಂದು ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kms072ysmz8zjcb80ms8j7ye,imgname-ks-eshwarappa--1774660586457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಮೇ.07): &lt;/strong&gt;ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶವಾದ ಈ ಭಾಗದಲ್ಲಿ ಭೂಮಿಯಲ್ಲಿ ಬೃಹತ್ ಯೋಜನೆಗಳನ್ನು ಹೊರುವ ಧಾರಣ ಸಾಮರ್ಥ್ಯವಿಲ್ಲ. ಪಂಪ್ಡ್ ಸ್ಟೋರೇಜ್, ಚಕ್ರಾ, ವರಾಹಿ, ಲಿಂಗನಮಕ್ಕಿ, ಹಿರೇಭಾಸ್ಕರ, ಮಡೆನೂರು , ಸಾವೇಹಕ್ಲು, ಮಾಣಿ ಜಲಾಶಯದಂತಹ ಪರಿಸರ ಮಾರಕ ಯೋಜನೆಗಳು ಜಾರಿಗೊಂಡಿದ್ದು, ಈಗ ಸಾಗರ ಸಮೀಪದ ಬೇಸೂರಿನಲ್ಲಿ ಎನ್&zwnj;ಟಿಪಿಸಿ ಮಾರಕ ಅಣು ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಿದೆ ಎಂಬ ಅಧಿಕೃತ ಮಾಹಿತಿ ದೊರೆತ್ತಿದೆ. ಇದಕ್ಕೆ ಅನುಮತಿ ನೀಡುವುದರ ಮೂಲಕ ಜಿಲ್ಲಾಡಳಿತ ತನ್ನ ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಫೆ.6ರಂದು ಎನ್&zwnj;ಟಿಪಿಸಿ ಸಂಸ್ಥೆಯ ನಿರ್ದೇಶನದಂತೆ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ವೀಡಿಯೋ ಕಾನೆರೆನ್ಸ್ ಮೂಲಕ ಐದು ಜಿಲ್ಲೆಗಳ ಜಿಲ್ಲಾಧಿಕಾರಿ ಸಭೆಯನ್ನು ಕರೆದು ಪರಮಾಣು ಸ್ಥಾವರನ್ನು ಸ್ಥಾಪಿಸಲು ಸಂಭಾವ್ಯ ಪ್ರದೇಶಗಳ ಸೂಕ್ತತೆ ಕುರಿತು ಪ್ರಾಥಮಿಕ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂಬ ನಿಖರ ಮಾಹಿತಿ ಲಭ್ಯವಾಗಿದೆ ಎಂದರು.&lt;/p&gt;&lt;p&gt;ಬೇಸೂರಿನಲ್ಲಿ 3,190 ಎಕರೆ ಜಮೀನು ಲಭ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಅಣುಸ್ಥಾವರ ಯೋಜನೆಗೆ ರಾಯಚೂರು, ವಿಜಯನಗರ, ಕೊಪ್ಪಳ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ತಮ್ಮಲ್ಲಿ ಭೂಮಿ ಇಲ್ಲ. ಮಾಲಿನ್ಯ ಉಂಟು ಮಾಡುವ, ಅಣುಸ್ಥಾವರದ ಅಣು ವಿಕೇಂದ್ರೀಕರಣದಿಂದ ಆಗುವ ಹಾನಿ ಹಾಗೂ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸಬಾರದೆಂದು ಸಾರ್ವಜನಿಕರು, ಪರಿಸರವಾದಿಗಳು, ಧರಣಿ, ಮುಷ್ಕರ ನಡೆಸುತ್ತಿದ್ದಾರೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸುತ್ತಿರುವಾಗ ನಮ್ಮ ಜಿಲ್ಲಾಧಿಕಾರಿಗೆ ಏನಾಗಿದೆ? ಜಾಗ ಇದೆ ಎಂದು ತಿಳಿಸುವುದರ ಮರ್ಮವೇನು? ಇಂತಹ ಮಾರಕ ಯೋಜನೆಗಳು ಬೇಡ ಎಂದು ಜಲ್ಲಾಧಿಕಾರಿ ಏಕೆ ಹೇಳುತ್ತಿಲ್ಲ. ಇಲ್ಲಿಯ ಜನ ಧಂಗೆ ಏಳುವುದನ್ನು ಜಿಲ್ಲಾಧಿಕಾರಿ ಇಷ್ಟಪಡುತ್ತಿದ್ದಾರೆಯೇ? ಎಂದು ಕಿಡಿಕಾರಿದರು.&lt;/p&gt;&lt;p&gt;ಬೇಸೂರು ಅಣುಸ್ಥಾವರ ಸ್ಥಾಪನೆಯ ಕುರಿತಂತೆ ಇಲ್ಲಿಯವರೆಗೆ ಆದ ಸಭೆಗಳ ನಡಾವಳಿಗಳನ್ನು ತೆಗೆದುಕೊಳ್ಳುತ್ತೇನೆ. ಡಿಸಿಯವರು ರಜೆ ಮುಗಿಸಿ ಬಂದ ಬಳಿಕ ಅವರ ಜತೆ ಸಭೆ ಮಾಡುತ್ತೇನೆ. ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್&zwnj; ಜೋಷಿಯವರು ಸೋಲಾರ್, ಪವನ ವಿದ್ಯುತ್&zwnj;ಗಳಿಗೆ ತಾವು ಆದ್ಯತೆ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ. ಪರಿಸರಕ್ಕೆ ಮಾರಕವಲ್ಲದ ಯೋಜನೆಗಳನ್ನು ಜಾರಿಗೆ ತರಲು ಎಲ್ಲಾ ಜಿಲ್ಲಾಡಳಿತಗಳು ಮುಂದಾಗಬೇಕು ಎಂದು ಸಲಹೆ ನೀಡಿದರು.&lt;/p&gt;&lt;h2&gt;&lt;strong&gt;ಬೇಸೂರಿನಲ್ಲಿ ಅಣುಸ್ಥಾವರದಿಂದ ಪರಿಸರಕ್ಕೆ ಹಾನಿ&lt;/strong&gt;&lt;/h2&gt;&lt;p&gt;ಕೈಗಾದಲ್ಲಿ 2000 ಇಸವಿಯಲ್ಲೇ 1600 ಮೆಗಾವ್ಯಾಟ್ ಸಾಮರ್ಥ್ಯದ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲಾಗಿತ್ತು. ಆದರೆ ಅದು ಸ್ಥಾಪನೆಯಾಗಿ 25 ವರ್ಷಗಳು ಕಳೆದರೂ ಇಂದು ಕೇವಲ 800 ಮೆಗಾವ್ಯಾಟ್ ಅಣುವಿದ್ಯುತ್ ಸ್ಥಾಪಿಸಲಾಗುತ್ತಿದೆ. ಅಲ್ಲಿನ ಸುತ್ತಮುತ್ತಲಿನ ಜನರು ಅಲ್ಲಿಯ ವಾತಾವರಣ ಮತ್ತು ನೀರಿನಿಂದ ಅನೇಕ ರೋಗರುಜಿನಗಳಿಗೆ ತುತ್ತಾಗಿ ನರಳಾಡುತ್ತಿದ್ದಾರೆ. ಅಣುಸ್ಥಾವರದ ಸುತ್ತಮುತ್ತಲಿನ 5.5 ಕಿ.ಮೀ. ವ್ಯಾಪ್ತಿಯಲ್ಲಿ ಯಾರೂ ವಾಸಿಸಬಾರದೆಂಬ ನಿಯಮವಿದೆ. ಪ್ರಸ್ತಾವಿತ ಅಣುಸ್ಥಾವರದ ಬೇಸೂರು ಸಾಗರದಿಂದ ಕೇವಲ 16 ಕಿ.ಮೀ., ಧಾರ್ಮಿಕ ಕ್ಷೇತ್ರ ಸಿಗಂದೂರಿನಿಂದ 20 ಕಿ.ಮೀ. ದೂರದಲ್ಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಇಲ್ಲಿ ಅಣುವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪಿಸಬಾರದು ಎಂದು ರಾಷ್ಟ್ರಭಕ್ತ ಬಳಗದ ಶ್ರೀಕಾಂತ್&zwnj; ಹೇಳಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/besuru-nuclear-power-plant-protest-ks-eshwarappa-statement-gvd/articleshow-0tebpr5"/>
        </item>
        <item>
            <title><![CDATA[ಶಿವಮೊಗ್ಗ: ನೀರು ಕೇಳಿ ಬಂದ ಅಪರಿಚಿತರಿಂದ ವೃದ್ಧೆಯ ಮನೆ ದರೋಡೆ: 18 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ]]></title>
            <link>https://kannada.asianetnews.com/gallery/crime/shivamogga-strangers-rob-elderly-womans-house-after-asking-for-water-0w3hgnb</link>
            <guid isPermaLink="true">https://kannada.asianetnews.com/gallery/crime/shivamogga-strangers-rob-elderly-womans-house-after-asking-for-water-0w3hgnb</guid>
            <pubDate>Fri, 24 Apr 2026 11:35:35 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ, ಮನೆಯಲ್ಲಿ ಒಂಟಿಯಾಗಿದ್ದ 74 ವರ್ಷದ ವೃದ್ಧೆಯ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಸುಮಾರು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದರೋಡೆ ಮಾಡಲಾಗಿದೆ. ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಮೂವರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpz0pavbvf7jhe2d0y7m80b4,imgname-robbery-of-a-single-woman-s-house--4--1777009896299.jpg" type="image/jpeg" height="390" width="690"/>
            <content:encoded><![CDATA[ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ, ಮನೆಯಲ್ಲಿ ಒಂಟಿಯಾಗಿದ್ದ 74 ವರ್ಷದ ವೃದ್ಧೆಯ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಸುಮಾರು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದರೋಡೆ ಮಾಡಲಾಗಿದೆ. ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಮೂವರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ.&lt;img&gt;&lt;p&gt;ಶಿವಮೊಗ್ಗ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಕೈಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಲಕ್ಕುಂದ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವಿಶಾಲಾಕ್ಷಮ್ಮ ಎಂಬ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು ರೂ. 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿದ್ದಾರೆ.ವಿಶಾಲಾಕ್ಷಿ ಅವರ ಪತಿ 15 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಹಾಗಾಗಿ ಅವರು ಮನೆಯಲ್ಲಿ ಒಬ್ಬರೇ ವಾಸವಿದ್ದರು.&lt;/p&gt;&lt;img&gt;&lt;p&gt;ಏಪ್ರಿಲ್ 21 ರಂದು ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ವಿಶಾಲಾಕ್ಷಿ ಅವರು ಮನೆಯಲ್ಲಿ ಮಲಗಿದ್ದಾಗ ಯಾರೋ ಬಾಗಿಲು ತಟ್ಟಿದ ಶಬ್ದ ಕೇಳಿಸಿದೆ.. ಕಿಟಕಿಯ ಮೂಲಕ ನೋಡಿದಾಗ ಮೂವರು ಅಪರಿಚಿತರು ನಿಂತಿದ್ದರು. ಮೂವರು ಅಪರಿಚಿತರು ಕುಡಿಯಲು ನೀರು ಕೊಡಿ ಎಂದು ವಿಶಾಲಾಕ್ಷಿ ಅವರನ್ನು ಕೇಳಿದ್ದರು. ಬಾಗಿಲು ತೆರೆಯದ ಅವರು, ಕಿಟಕಿಯ ಮೂಲಕವೇ ನಲ್ಲಿಯಲ್ಲಿ ಇರುವ ನೀರು ಕುಡಿಯಿರಿ ಎಂದು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಚಿಕ್ಕಮಗಳೂರು: ಜಾತಿ ಸಂಕೋಲೆ ಮೀರಿ ದಲಿತ ಹುಡುಗಿ ಕೈ ಹಿಡಿದ ಬ್ರಾಹ್ಮಣ ಸಮುದಾಯದ ಯುವಕ&lt;/strong&gt;&lt;/p&gt;&lt;img&gt;&lt;p&gt;ಈ ವೇಳೆ ಮೂವರು ಅಪರಿಚಿತರು ಅಲ್ಲೇ ಮರೆಯಾಗಿ ನಿಂತಿದ್ದರು. ಕೆಲವು ನಿಮಿಷಗಳ ಬಳಿಕ ಅನುಮಾನಗೊಂಡ ವೃದ್ಧೆ ಹಿತ್ತಲ ಬಾಗಿಲು ತೆರೆದು ಪರಿಶೀಲಿಸಿದಾಗ. ಮೂವರು ಒಮ್ಮೆಲೆ ಮನೆಯೊಳಗೆ ನುಗ್ಗಿ ದರೋಡೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಗುಂಬೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಿಜಯಪುರ: ಸಂಬಂಧಿಕರಿಂದಲೇ ಗ್ರಾ.ಪಂ ಮಾಜಿ ಸದಸ್ಯನ ಭೀಕರ ಹತ್ಯೆ: ಆರು ಹಂತಕರ ಬಂಧನ&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/crime/shivamogga-strangers-rob-elderly-womans-house-after-asking-for-water-0w3hgnb"/>
        </item>
        <item>
            <title><![CDATA[ಕಾಂಗ್ರೆಸ್‌ ಸರ್ಕಾರ ಮಹಿಳಾ ಮೀಸಲಾತಿ ವಿರೋಧಿ ಪಕ್ಷ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ]]></title>
            <link>https://kannada.asianetnews.com/karnataka-districts/ks-eshwarappa-slams-congress-women-reservation-bill-karnataka-gvd/articleshow-1gbgnoi</link>
            <guid isPermaLink="true">https://kannada.asianetnews.com/karnataka-districts/ks-eshwarappa-slams-congress-women-reservation-bill-karnataka-gvd/articleshow-1gbgnoi</guid>
            <pubDate>Thu, 23 Apr 2026 00:25:27 +0530</pubDate>
            <description><![CDATA[&lt;p&gt;60 ವರ್ಷ ಆಡಳಿತ ನಡೆಸಿದರೂ ಮಹಿಳಾ ಮೀಸಲಾತಿ ಕಲ್ಪಿಸಲಾಗದ ಕಾಂಗ್ರೆಸ್ ಈಗ ಪ್ರಧಾನಿ ಮೋದಿಯವರಿಗೂ ಇದನ್ನು ಜಾರಿಗೆ ತರಲು ಬಿಡಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kms072ysmz8zjcb80ms8j7ye,imgname-ks-eshwarappa--1774660586457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.23): &lt;/strong&gt;60 ವರ್ಷ ಆಡಳಿತ ನಡೆಸಿದರೂ ಮಹಿಳಾ ಮೀಸಲಾತಿ ಕಲ್ಪಿಸಲಾಗದ ಕಾಂಗ್ರೆಸ್ ಈಗ ಪ್ರಧಾನಿ ಮೋದಿಯವರಿಗೂ ಇದನ್ನು ಜಾರಿಗೆ ತರಲು ಬಿಡಲಿಲ್ಲ. ಕಾಂಗ್ರೆಸ್ ಎಲ್ಲಾ ಕಾಲದಲ್ಲೂ ಮಹಿಳಾ ಮೀಸಲಾತಿ ವಿರೋಧಿಸುತ್ತಾ ಬಂದಿರುವುದು ಈಗ ಸ್ಪಷ್ಟವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಲೋಕಸಭೆಯಲ್ಲಿ ನಾರೀಶಕ್ತಿ ವಂದನಾ ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸೋಲಿಸುವ ಮೂಲಕ ತಾವು ಮಹಿಳಾ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿವೆ ಎಂದು ಆರೋಪಿಸಿದರು.&lt;/p&gt;&lt;p&gt;ಈ ಹಿಂದೆ ವಾಜಪೇಯಿ ಸರ್ಕಾರವಿದ್ದಾಗಲೂ ಈ ಮಸೂದೆ ಮಂಡಿಸಲಾಗಿತ್ತು. ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ ವಾಗಿತ್ತು. ಆದರೆ ಲೋಕಸಭೆಯಲ್ಲಿ ಮಸೂದೆ ಮಂಡಿಸದೇ ಕಾಂಗ್ರೆಸ್ ದೇಶದ ಮಹಿಳೆಯರಿಗೆ ಅನ್ಯಾಯ ಮಾಡಿತ್ತು. ಈಗಲೂ ಅದನ್ನೇ ಮಾಡಿದೆ. ಕಾಯ್ದೆಯಲ್ಲಿ ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎನ್ನುವುದು ಸಂವಿಧಾನಕ್ಕೆ ವಿರೋಧ. ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ ಎಂದು ಸಂವಿಧಾನವೇ ಹೇಳುತ್ತಿದೆ. ಆದರೂ ಮುಸ್ಲಿಮರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ ಎಂದು ದೂರಿದರು.&lt;/p&gt;&lt;p&gt;ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಎರಡನ್ನೂ ಒಟ್ಟಿಗೆ ತಂದಿದ್ದರಿಂದ ನಾವು ಇದನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದರೆ ಮತಕ್ಕೆ ಹಾಕಿದ್ದು ಮಹಿಳಾ ಮೀಸಲಾತಿ ಮಾತ್ರ. ಆದರೂ ಕಾಂಗ್ರೆಸ್ ಇದನ್ನು ಬೆಂಬಲಿಸಲಿಲ್ಲ ಮತ್ತು ಕ್ಷೇತ್ರ ಮರುವಿಂಗಡಣೆಯಾದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಕಾಂಗ್ರೆಸ್ ಮತ್ತೊಂದು ಸುಳ್ಳು ಹೇಳುತ್ತದೆ. ಈಗಾಗಲೇ ಒಟ್ಟಾರೆ ಶೇ.50ರಷ್ಟು ಹೆಚ್ಚಳವಾಗಬೇಕು ಎಂದಿದೆ. ಅದರಂತೆ ಕರ್ನಾಟಕದಲ್ಲಿ 28 ಇದ್ದ ಸಂಸದರ ಕ್ಷೇತ್ರ 42ಕ್ಕೆ ಏರಿಕೆಯಾಗಲಿದೆ. ಇದು ಕಾಂಗ್ರೆಸಿಗರಿಗೆ ಅರ್ಥವಾಗುತ್ತಿಲ್ಲ ಎಂದರು.&lt;/p&gt;&lt;p&gt;ಒಟ್ಟಾರೆ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ವಿಂಗಡಣೆ ಮಸೂದೆ ಯಾವುದೇ ರಾಜಕೀಯ ಉದ್ದೇಶಗಳನ್ನು ಈಡೇರಿಸಿ ಕೊಳ್ಳಲು ಸರ್ಕಾರ ಮಾಡುತ್ತಿರುವ ಪ್ರಕ್ರಿಯೆಗಳಲ್ಲ. ಬದಲಾಗಿ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಗೊಳಿಸುವ ನಿರ್ಧಾರ. ಕಾಂಗ್ರೆಸ್ ಪಕ್ಷ ಕ್ಷುಲ್ಲಕ ಕಾರಣ ನೀಡಿ ಈ ಐತಿಹಾಸಿಕ ಬದಲಾವಣೆಗೆ ತಡೆಯೊಡ್ಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಎಂದರು.&lt;/p&gt;&lt;h2&gt;&lt;strong&gt;ಆರ್&zwnj;ಎಸ್&zwnj;ಎಸ್&zwnj;ನ್ನು ನಿಂದಿಸಿದರೆ ಎಂದಿಗೂ ಉದ್ಧಾರವಾಗಲ್ಲ&lt;/strong&gt;&lt;/h2&gt;&lt;p&gt;ಕಾಂಗ್ರೆಸ್&zwnj;ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರ್&zwnj;ಎಸ್&zwnj;ಎಸ್&zwnj;ನ್ನು ವಿಷ ಜಂತುವಿಗೆ ಹೋಲಿಸಿದ್ದಾರೆ. ಅಷ್ಟೇ ಅಲ್ಲ, ಜಗತ್ತೇ ಮೆಚ್ಚುವ ಪ್ರಧಾನಿ ಮೋದಿ ಬಗ್ಗೆ ಹದ್ದು ಮೀರಿ ಮಾತನಾಡಿದ್ದಾರೆ. ಇದು ತೀರಾ ಖಂಡನೀಯ. ಯಾರೇ ಆಗಲಿ ಆರ್&zwnj;ಎಸ್&zwnj;ಎಸ್&zwnj;ನ್ನು ವಿರೋಧಿಸಿದರೆ ಅವರು ಎಂದಿಗೂ ಉದ್ಧಾರವಾಗಲ್ಲ ಎಂದರು. ಖರ್ಗೆಯವರಾದರೂ ಕೂಡಾ ತಪ್ಪನ್ನು ತಿದ್ದಿಕೊಂಡಿದ್ದಾರೆ. ಆದರೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರ್&zwnj;ಎಸ್&zwnj;ಎಸ್ ಬಗ್ಗೆ ಖರ್ಗೆ ಹೇಳಿದ ಮಾತನ್ನು ನಾನು ಸಮರ್ಥಿಸಿಕೊಳ್ಳುತ್ತೇನೆ ಎಂದಿದ್ದಾರೆ.&lt;/p&gt;&lt;p&gt;ಕಿಮ್ಮನೆಯವರಿಗೆ ಗೊತ್ತಿರಲಿ, ಆರ್&zwnj;ಎಸ್&zwnj;ಎಸ್ ಬಹುದೊಡ್ಡ ಸಂಘಟನೆ ಮತ್ತು ಮೋದಿ ಆಕಾಶದಲ್ಲಿರುವ ಸೂರ್ಯನಂತೆ, ಆ ಸೂರ್ಯನಿಗೆ ಉಗುಳಿದರೆ ತನ್ನ ಮೈಮೇಲೆಯೇ ಚೆಲ್ಲುತ್ತದೆ. ಇದನ್ನು ಕಿಮ್ಮನೆ ರತ್ನಾಕರ್ ಅರ್ಥಮಾಡಿಕೊಳ್ಳಲಿ ಎಂದ ಅವರು ಕಿಮ್ಮನೆ ರತ್ನಾಕರ್ ಆರ್&zwnj;ಎಸ್&zwnj;ಎಸ್ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಜೊತೆ ಚರ್ಚೆಗೆ ಸಿದ್ಧ ಎಂದಿದ್ದಾರೆ. ನಾನು ಅವರೊಂದಿಗೆ ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ks-eshwarappa-slams-congress-women-reservation-bill-karnataka-gvd/articleshow-1gbgnoi"/>
        </item>
        <item>
            <title><![CDATA[ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ]]></title>
            <link>https://kannada.asianetnews.com/gallery/karnataka-districts/death-penalty-for-wife-and-boyfriend-in-shivamogga-husband-murder-case-2h7vyqc</link>
            <guid isPermaLink="true">https://kannada.asianetnews.com/gallery/karnataka-districts/death-penalty-for-wife-and-boyfriend-in-shivamogga-husband-murder-case-2h7vyqc</guid>
            <pubDate>Mon, 11 May 2026 12:14:27 +0530</pubDate>
            <description><![CDATA[&lt;p&gt;ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kraw54d70hqjfd03mryjztjd,imgname-shivamogga-husband-murder-case-1778481533351.png" type="image/jpeg" height="390" width="690"/>
            <content:encoded><![CDATA[&lt;p&gt;ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.&lt;/p&gt;&lt;img&gt;&lt;p&gt;ಅಕ್ರಮ ಸಂಬಂಧ ಹಲವು ಸಂಸಾರಗಳನ್ನು ಹಾಳು ಮಾಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುವ ಪತಿ ಅಥವಾ ಪತ್ನಿಯನ್ನು ಹತ್ಯೆ ಮಾಡಿದ ಹಲವು ಘಟನೆಗಳು ನಡೆದಿದೆ. ಹೀಗೆ ಶಿವಮೊಗ್ಗದ ಭದ್ರಾವತಿಯ ಪೇಪರ್&zwnj;ಟೌನ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ ಘಟನೆ ನಡೆದಿತ್ತು. ಪತ್ನಿ ಹಾಗೂ ಆಕೆಯ ಪ್ರಿಯಕರ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧ ತೀರ್ಪು ಪ್ರಕಟಗೊಂಡಿದೆ. ಪತ್ನಿ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.&lt;/p&gt;&lt;img&gt;&lt;p&gt;ಖಾಸಗಿ ನರ್ಸಿಂಗ್ ಹೋಂನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಫ್ಲೋರಾ ನ್ಯಾನ್ಸಿ 2020ರಲ್ಲಿ ಟ್ಯಾಕ್ಸಿ ಚಾಲಕ ಬಿ.ಎಸ್.ಪ್ರಕಾಶ್ ಬಾಬು ಎಂಬುವರ ಜತೆ ವಿವಾಹವಾಗಿದ್ದಳು. ಕೆಲವೇ ವರ್ಷದಲ್ಲಿ ನ್ಯಾನ್ಸಿಗೆ ರಾಜಶೇಕರಯ್ಯ ಜೊತೆ ಅನೈತಿಕ ಸಂಬಂಧ ಹುಟ್ಟಿತ್ತು. ಇದು ತೀವ್ರಗೊಂಡಿತ್ತು. ಇದಕ್ಕೆ ಪತಿ ಪ್ರಕಾಶ್ ಬಾಬು ಅಡ್ಡಿಯಾಗಿದ್ದ. ಈ ಸಂಬಂಧ ಇಬ್ಬರಿಗೂ ಜಗಳವಾಗಿದೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ.&lt;/p&gt;&lt;img&gt;&lt;p&gt;2020ನೇ ಜ.15ರ ರಾತ್ರಿ ಸುರಗಿತೋಪಿನಲ್ಲಿರುವ ತನ್ನ ಮನೆಯಲ್ಲಿ ಪತಿಗೆ ಹಾಗಲಕಾಯಿ ಜ್ಯೂಸ್&zwnj;ನಲ್ಲಿ ಮತ್ತು ಭರಿಸುವ ಮಾತ್ರೆ ಬೆರೆಸಿ ಕುಡಿಸಿದ್ದಳು. ನಿದ್ರೆಗೆ ಜಾರಿದ್ದ ಪ್ರಕಾಶ್&zwnj;ಬಾಬುನ ಕತ್ತು ಹಿಸುಕಿ ರಾಜಶೇಖರಯ್ಯ ಹಾಗೂ ಫ್ಲೋರಾ ನ್ಯಾನ್ಸಿ ಸೇರಿ ಕೊಲೆ ಮಾಡಿದ್ದರು. ಬಳಿಕ ಇಬ್ಬರೂ ಪ್ರಕಾಶ್&zwnj;ಬಾಬು ಶವವನ್ನು ಆತನ ಕಾರಿನಲ್ಲಿ ತೆಗೆದುಕೊಂಡು ಹೋಗಿ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಭದ್ರಾ ನಾಲೆಗೆ ಎಸೆದಿದ್ದರು.&lt;/p&gt;&lt;img&gt;&lt;p&gt;ಘಟನೆ ನಡೆದ ಮೂರು ದಿನ ಬಳಿಕ ಶವ ದೊರಕಿದ್ದು, ಆರಂಭದಲ್ಲಿ ಪ್ರಕಾಶ್ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಮೃತನ ಸಹೋದರ ಫ್ರಾನ್ಸಿಸ್ ನೀಡಿದ ದೂರಿನ ಮೇಲೆ ತನಿಖೆ ಆರಂಭಿಸಿದ ಪೇಪರ್&zwnj;ಟೌನ್ ಠಾಣೆ ಪೊಲೀಸರು, ಫ್ಲೋರಾ ನ್ಯಾನ್ಸಿ ಹಾಗೂ ಆಕೆ ಪ್ರಿಯಕರನನ್ನು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ.&lt;/p&gt;&lt;img&gt;&lt;p&gt;ಇಬ್ಬರ ವಿರುದ್ಧ ಐಪಿಸಿ ಕಲಂ 302 ಹಾಗು 201ರಡಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಇಬ್ಬರಿಗೂ ಗಲ್ಲುಶಿಕ್ಷೆ ಹಾಗೂ 14 ಲಕ್ಷ ರೂ. ದಂಡ ವಿಧಿಸಿದ್ದಾರೆ. ಮೃತನ ಸಹೋದರ ಫ್ರಾನ್ಸಿಸ್&zwnj;ಗೆ ಐದು ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.&lt;/p&gt;&lt;h2&gt;ಇಬ್ಬರಿಗೂ ಗಲ್ಲು ಶಿಕ್ಷೆ&lt;/h2&gt;]]></content:encoded>
            <category>shivamogga</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/karnataka-districts/death-penalty-for-wife-and-boyfriend-in-shivamogga-husband-murder-case-2h7vyqc"/>
        </item>
        <item>
            <title><![CDATA[ಮೂರು ನಗರ, ಮೂರು ದುರಂತ: ಪೋಕ್ಸೋ ಕೇಸ್ ಖೈದಿ ಜೈಲಿನಲ್ಲಿ ಆತ್ಮ*ಹತ್ಯೆ, ಪ್ರಿಯತಮೆ ಹಲ್ಲೆ ಮಾಡಿದ್ದಕ್ಕೆ ಪ್ರೇಮಿ ಸಾವು!]]></title>
            <link>https://kannada.asianetnews.com/karnataka-districts/dharwad-jail-undertrial-prisoner-in-pocso-case-found-dead-in-central-prison-gdp/articleshow-31vard5</link>
            <guid isPermaLink="true">https://kannada.asianetnews.com/karnataka-districts/dharwad-jail-undertrial-prisoner-in-pocso-case-found-dead-in-central-prison-gdp/articleshow-31vard5</guid>
            <pubDate>Sat, 25 Apr 2026 14:51:19 +0530</pubDate>
            <description><![CDATA[&lt;p&gt;ಧಾರವಾಡ ಕಾರಾಗೃಹದಲ್ಲಿ ಪೋಕ್ಸೋ ಆರೋಪಿ, ಪ್ರೀತಿ ನಿರಾಕರಣೆಯಿಂದ ಶಿವಮೊಗ್ಗದಲ್ಲಿ ಯುವಕ, ಮತ್ತು ಆನ್&zwnj;ಲೈನ್ ಗೇಮ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ಮೂರು ಪ್ರತ್ಯೇಕ ಘಟನೆಗಳು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq1ynpgztm4ctz5wbzha2nqh,imgname-dharwad-jail-1777108441631.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಮೃತ ಖೈದಿಯನ್ನು ಮಹಾಂತೇಶ್ ಕುಂಬಾರ್ (29) ಎಂದು ಗುರುತಿಸಲಾಗಿದೆ. ಅವರು ಪೋಕ್ಸೋ (POCSO) ಪ್ರಕರಣದಡಿ ಬಂಧನಕ್ಕೊಳಗಾಗಿ ಕಾರಾಗೃಹದಲ್ಲಿ ಇರಿಸಲಾಗಿತ್ತು ಎನ್ನಲಾಗಿದೆ. ಆದರೆ, ಜೈಲಿನಲ್ಲಿದ್ದ ಸಂದರ್ಭದಲ್ಲಿ ಮಹಾಂತೇಶ್ ಕುಂಬಾರ್ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿದ ತಕ್ಷಣ ಧಾರವಾಡ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮ*ಹತ್ಯೆಗೆ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಕಾರಾಗೃಹದ ಒಳಾಂಗಣ ಪರಿಸ್ಥಿತಿ ಹಾಗೂ ಘಟನೆಯ ಹಿನ್ನೆಲೆ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.&lt;/p&gt;&lt;p&gt;ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಆತ್ಮ*ಹತ್ಯೆಯ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ. ಈ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.&lt;/p&gt;&lt;h2&gt;ಪ್ರಿಯತಮೆ ಹಲ್ಲೆ ಮಾಡಿದ್ದಕ್ಕೆ ವಿಷ ಸೇವಿಸಿದ್ದ ಯುವಕ ಕೊನೆಯುಸಿರು&lt;/h2&gt;&lt;p&gt;ಶಿವಮೊಗ್ಗ: ಪ್ರೀತಿ ನಿರಾಕರಣೆ ಹಾಗೂ ಯುವತಿಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಮೃತ. ತೀರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಶಬರೀಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಈ ಮಧ್ಯೆ ಯುವತಿಯು ಶಬರೀಶ್&zwnj;ಗೆ ಕರೆ ಮಾಡಿ, ನಿನ್ನ ಬಳಿ ಮಾತನಾಡಬೇಕು. ಶಿವಮೊಗ್ಗದ ಬಸ್ ನಿಲ್ದಾಣಕ್ಕೆ ಬಾ ಎಂದಿದ್ದಳು. ಶಬರೀಶ್ ಅಲ್ಲಿಗೆ ಹೋದಾಗ ಮಾತಿನ ಚಕಮಕಿ ನಡೆದಿದ್ದು, ತನ್ನ ಸಂಬಂಧಿಕರೊಂದಿಗೆ ಸೇರಿ ಶಬರೀಶ್ ಮೇಲೆ ಯುವತಿ ಹಲ್ಲೆ ನಡೆಸಿದ್ದಾಳೆ. ಇದರಿಂದ ಮನನೊಂದ ಶಬರೀಶ್, ಬಸ್ ನಿಲ್ದಾಣದಲ್ಲೇ ವಿಷ ಸೇವಿಸಿದ್ದ. ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಏ.22ರಂದು ಶಬರೀಶ್ ಮೃತಪಟ್ಟಿದ್ದಾನೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h2&gt;ಆನ್ಲೈನ್&zwnj; ಗೇಮ್&zwnj; ಆಡಬೇಡ ಎಂದಿದ್ದಕ್ಕೆ ಬಾಲಕ ನೇಣಿಗೆ&lt;/h2&gt;&lt;p&gt;ಹುಬ್ಬಳ್ಳಿ: ಮೊಬೈಲ್&zwnj;ನಲ್ಲಿ ಆನ್&zwnj;ಲೈನ್ ಗೇಮ್ ಆಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಬಾಲಕನೋರ್ವ ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಇಲ್ಲಿನ ಉದಯನಗರದಲ್ಲಿ ನಡೆದಿದೆ. ಸಮರ್ಥ ಪಟಕೆ (14) ಮೃತ ಬಾಲಕ. ಈತ ಹೆಚ್ಚಾಗಿ ಮೊಬೈಲ್&zwnj;ನಲ್ಲಿ ವೀಡಿಯೋ ಗೇಮ್ ಆಡುತ್ತಿದ್ದ. ಇದರಿಂದ ವಿದ್ಯಾಭ್ಯಾಸ ಹಾಳಾಗುತ್ತದೆ ಎಂದು ಪಾಲಕರು ಬುದ್ಧಿ ಹೇಳಿದ್ದರು, ಅಷ್ಟಾದರೂ ಬಿಟ್ಟಿರಲಿಲ್ಲ. ಗುರುವಾರ ರಾತ್ರಿ 9.30ಕ್ಕೆ ಮೊಬೈಲ್&zwnj;ನಲ್ಲಿ ಗೇಮ್ ಆಡುತ್ತಿದ್ದ ವೇಳೆ ಆತನ ತಾಯಿ ಬೈದು ಮೊಬೈಲ್ ಕಸಿದುಕೊಂಡಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/dharwad-jail-undertrial-prisoner-in-pocso-case-found-dead-in-central-prison-gdp/articleshow-31vard5"/>
        </item>
        <item>
            <title><![CDATA[ಮಗನ ರಾಜ್ಯಾಧ್ಯಕ್ಷ ಪಟ್ಟ ಉಳಿಸಲು ಅಭಿಮಾನೋತ್ಸವ: ಸಚಿವ ಮಧು ಬಂಗಾರಪ್ಪ ವ್ಯಂಗ್ಯ]]></title>
            <link>https://kannada.asianetnews.com/karnataka-districts/minister-madhu-bangarappa-slams-yediyurappa-abhimanotsava-gvd/articleshow-4b1kpqh</link>
            <guid isPermaLink="true">https://kannada.asianetnews.com/karnataka-districts/minister-madhu-bangarappa-slams-yediyurappa-abhimanotsava-gvd/articleshow-4b1kpqh</guid>
            <pubDate>Sat, 09 May 2026 22:26:08 +0530</pubDate>
            <description><![CDATA[&lt;p&gt;ಮಗನಿಗೆ ರಾಜಕೀಯ ಬಳುವಳಿ ನೀಡಲು ಮೇ 9 ರಂದು ಚಿತ್ರದುರ್ಗದಲ್ಲಿ ಬಿಎಸ್&zwnj; ಯಡಿಯೂರಪ್ಪ ಅಭಿಮಾನೋತ್ಸವ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k593k2vtf3w6f4v0sngfbrpr,imgname-madhu-bangarappa--1--1758021127034.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಮೇ.09): &lt;/strong&gt;ಇತ್ತೀಚಿನ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಮಗನಿಗೆ ರಾಜಕೀಯ ಬಳುವಳಿ ನೀಡಲು ಮೇ 9 ರಂದು ಚಿತ್ರದುರ್ಗದಲ್ಲಿ ಬಿಎಸ್&zwnj;ವೈ ಅಭಿಮಾನೋತ್ಸವ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.&lt;/p&gt;&lt;p&gt;ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಎಷ್ಟು ಹೋರಾಟ ಮಾಡಿದ್ದಾರೆ ಎಂದು ನನ್ನ ಬಳಿ ಲೆಕ್ಕ ಇಲ್ಲ. ಜಿಲ್ಲೆಯಲ್ಲಿ ಜೆ.ಎಚ್.ಪಟೇಲರು ಹೋರಾಟ ಮಾಡಿದ್ದರು. ಬಂಗಾರಪ್ಪ ಅವರ ಹೋರಾಟವನ್ನು ಜನರು ಇಂದಿಗೂ ಸ್ಮರಿಸಿಕೊಳ್ಳುತ್ತಾರೆ. ಯಡಿಯೂರಪ್ಪನವರು ರೈತ ಪರ ಹೋರಾಟ ಮಾಡಿದ್ದಾರೆ ನಿಜ. ಇದನ್ನು ಪಿಕ್ಚರ್ ಮಾಡಿ ತೋರಿಸಲಿ, ಇದನ್ನು ನಾನು ಇಲ್ಲ ಎನ್ನುತ್ತಿಲ್ಲ. ಬೇರೆಯವರಿಗೆ ಹೋಲಿಸಿದರೆ ಯಡಿಯೂರಪ್ಪರ ಹೋರಾಟ ಲೆಕ್ಕಕ್ಕೆ ಇರಲ್ಲ. ಹಾವೇರಿಯಲ್ಲಿ ಗೊಬ್ಬರ ಕೇಳಿದವರಿಗೆ ಗುಂಡಿಟ್ಟು ಹೊಡೆದರು. ಅದಕ್ಕೂ, ಇವರು ಸನ್ಮಾನ ಮಾಡಬೇಕಲ್ಲ ಎಂದು ಕುಟುಕಿದರು.&lt;/p&gt;&lt;p&gt;ಯಡಿಯೂರಪ್ಪನವರ ಹಿರಿತನದ ಬಗ್ಗೆ ನನಗೆ ಗೌರವವಿದೆ. ನಾನೂ ಅನೇಕ ಹೋರಾಟಗಳನ್ನು ಮಾಡಿಯೇ ರಾಜಕೀಯದಲ್ಲಿ ಬೆಳೆದು ಬಂದಿದ್ದೇನೆ. ನಮ್ಮ ತಂದೆ ಬಂಗಾರಪ್ಪನವರೂ ಮುಖ್ಯಮಂತ್ರಿಗಳಾಗಿ ಇನ್ನೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ಯೋಜನೆಗಳನ್ನು ಜಾರಿಗೊಳಿಸಿದ್ದರು. ಅಂತಹ ಒಂದಾದರೂ ಯೋಜನೆಗಳನ್ನು ಯಡಿಯೂರಪ್ಪ ಜಾರಿಗೆ ತಂದಿದ್ದಾರಾ ಎಂದು ಪ್ರಶ್ನಿಸಿದ ಅವರು, ನಕಲಿ ಛೋಟಾ ಸಹಿಯಿಂದಾಗಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಜೈಲಿಗೆ ಹೋಗಬೇಕಾಯಿತು. ಅದು ದುರ್ದೈವದ ಸಂಗತಿ. ಅವರಿಂದ ಜನ ಯಾವ ಪಾಠ ಕಲಿಯಲು ಸಾಧ್ಯ? ಎಲ್ಲಿ ಮಗನ ರಾಜ್ಯಾಧ್ಯಕ್ಷ ಪಟ್ಟ ಕೈ ತಪ್ಪಿ ಹೋಗುತ್ತೋ ಎಂಬ ಭಯದಿಂದ ಅಭಿಮಾನೋತ್ಸವ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಮಗನ ರಕ್ಷಣೆಗೆ ಮುಂದಾಗಿದ್ದಾರೆ. ಜನತೆ ಅದನ್ನು ತಿಳಿಯದಷ್ಟು ಮೂರ್ಖರಲ್ಲ ಎಂದು ತಿರುಗೇಟು ನೀಡಿದರು.&lt;/p&gt;&lt;p&gt;ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಫ್ಲಾಪ್ ಆಗಿದ್ದಾರೆ. ಬಿಜೆಪಿಯಲ್ಲಿ ಐದಾರು ಬಾಗಿಲುಗಳು ಇವೆ. ಅದರಲ್ಲಿ ಒಂದು ಬಾಗಿಲು ಮಾಡಿ ವಿಜಯೇಂದ್ರಗೆ ಬಳುವಳಿ ನೀಡಲು ಯಡಿಯೂರಪ್ಪ ಹೊರಟಿದ್ದಾರೆ. ಯಡಿಯೂರಪ್ಪನವರನ್ನು ಭ್ರಷ್ಟಾಚಾರಿ ಎಂದು ಇದೇ ಅಮಿತ್ ಷಾ ಹೇಳಿದ್ದಾರೆ. ಇದು ಅಪ್ಪಟ ರಾಜಕೀಯ ಕಾರ್ಯಕ್ರಮ ಎಂದರು.&lt;/p&gt;&lt;h2&gt;&lt;strong&gt;ದುರ್ದೈವದ ಸಂಗತಿ&lt;/strong&gt;&lt;/h2&gt;&lt;p&gt;ಬೇಸೂರು ಅಣು ಸ್ಥಾವರ ಸ್ಥಾಪನೆಗೆ ತಮ್ಮ ತೀವ್ರ ವಿರೋಧವಿದೆ. ಯಾವುದೇ ಕಾರಣಕ್ಕೂ ಈ ಮಾರಕ ಯೋಜನೆಯನ್ನು ಒಪ್ಪುವುದಿಲ್ಲ ಎಂದ ಅವರು, ಕೇಂದ್ರ ಸರ್ಕಾರದವರು ನಮ್ಮ ಸರ್ಕಾರವನ್ನು ಕೇಳದೆ ಪರಿಸರ ಮಾರಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದು ದುರ್ದೈವದ ಸಂಗತಿ. ಈಗ ಬೇಸೂರು ಅಣುಸ್ಥಾವರದ ಪ್ರಸ್ತಾವನೆ ಮುನ್ನೆಲೆಗೆ ಬಂದಿದೆ. ಮೊದಲು ಕೇಂದ್ರ ಸರ್ಕಾರ ಈ ಭಾಗದ ಅರಣ್ಯವಾಸಿಗಳಿಗೆ ಭೂ ಹಕ್ಕು ನೀಡುವ ಕೆಲಸ ಮಾಡಲಿ. ಅದನ್ನು ಬಿಟ್ಟು ತನಗೆ ಬೇಕಾದ ಯೋಜನೆ ಜಾರಿಗೆ ತರುವುದನ್ನು ನಿಲ್ಲಿಸಲಿ ಎಂದು ತಾಕೀತು ಮಾಡಿದರು.&lt;/p&gt;&lt;p&gt;ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಅವರು, ಅದನ್ನು ನಿರ್ಮಿಸಿದ್ದು ರಾಜ್ಯ ಸರ್ಕಾರದ ದುಡ್ಡಿನಿಂದ. ರಾಜ್ಯ ಸರ್ಕಾರದಿಂದ ಅದರ ನಿರ್ವಹಣೆ ಸಾಧ್ಯವಾಗದಿದ್ದರೆ ಕೇಂದ್ರ ಸರ್ಕಾರಕ್ಕೆ ವಹಿಸಿಕೊಡಿ ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ. ನಿಲ್ದಾಣ ನಿರ್ಮಾಣವಾಗಿದ್ದು ಅವರಪ್ಪನ ದುಡ್ಡಿನಿಂದಲ್ಲ ಎಂದು ಗುಡುಗಿದ ಸಚಿವರು, ಇನ್ನೆರಡು ತಿಂಗಳಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಆಗುತ್ತದೆ. ಆಗ ಎಲ್ಲ ಸರಿಯಾಗುತ್ತದೆ ಎಂದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-madhu-bangarappa-slams-yediyurappa-abhimanotsava-gvd/articleshow-4b1kpqh"/>
        </item>
        <item>
            <title><![CDATA[ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಕುಲದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು]]></title>
            <link>https://kannada.asianetnews.com/karnataka-districts/belur-gopalakrishna-minister-post-demand-sagar-nuclear-plant-gvd/articleshow-4r51gea</link>
            <guid isPermaLink="true">https://kannada.asianetnews.com/karnataka-districts/belur-gopalakrishna-minister-post-demand-sagar-nuclear-plant-gvd/articleshow-4r51gea</guid>
            <pubDate>Fri, 01 May 2026 19:24:52 +0530</pubDate>
            <description><![CDATA[&lt;p&gt;ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕುಲದೇವತೆ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಪತ್ನಿ ಜತೆ ಆಗಮಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqhx3ztp9b7pa5p68az29vvx,imgname-kn-1777643683670.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿಕಾರಿಪುರ (ಮೇ.01): &lt;/strong&gt;ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕುಲದೇವತೆ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಪತ್ನಿ ಜತೆ ಆಗಮಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಪಡೆದ ನಂತರದಲ್ಲಿ ಪತ್ರಕರ್ತರ ಜತೆ ಮಾತನಾಡಿ ಶ್ರೀ ಹುಚ್ಚರಾಯಸ್ವಾಮಿ ನಮ್ಮ ಮನೆ ದೇವರು ಆದ್ದರಿಂದ ಕುಟುಂಬ ಸಹಿತ ಬಂದು ದರ್ಶನ ಮಾಡಿದ್ದೇವೆ ಎಂದರು.&lt;/p&gt;&lt;p&gt;ನೀವು ಸಚಿವ ಸ್ಥಾನದ ಆಕಾಂಕ್ಷಿಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಖಂಡಿತಾ ನಾನು ಒಬ್ಬ ಪ್ರಬಲ ಆಕಾಂಕ್ಷಿ, ಮೂರು ಬಾರಿ ಶಾಸಕನಾಗಿದ್ದು ಸಚಿವ ಪದವಿ ಕೇಳುವುದು ನನ್ನ ಹಕ್ಕು, ಬಾಗಲಕೋಟೆ ಮತ್ತು ದಾವಣಗೆರೆ ಎರಡು ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಿಸುವ ಸಾಧ್ಯತೆ ಹೆಚ್ಚಾಗಿದ್ದು ಎರಡುವರೆ ವರ್ಷದ ನಂತರ ಹೊಸಬರಿಗೆ ಸಚಿವ ಸ್ಥಾನ ಕೊಡಬೇಕು ಆದರೆ ಈಗ 3 ವರ್ಷ ಪೂರ್ಣಗೊಳ್ಳುತ್ತಿದೆ. ಆದ್ದರಿಂದ ಹೊಸಬರಿಗೆ ಅವಕಾಶ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.&lt;/p&gt;&lt;p&gt;ಸಾಗರ ತಾಲೂಕಿನ ಬೇಸೂರಿನಲ್ಲಿ ಅಣು ಸ್ಥಾವರ ನಿರ್ಮಾಣದ ಬಗೆಗಿನ ಪ್ರಶ್ನೆಗೆ ಈ ಯೋಜನೆ ಯಿಂದ ಸ್ಥಳೀಯರು ತಮ್ಮ ಮನೆ ಮಠ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇದು ಕೇಂದ್ರ ಸರ್ಕಾರದ ಯೋಜನೆ. ಇದನ್ನು ತಡೆಯುವಲ್ಲಿ ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಜವಾಬ್ದಾರಿ ಇದೆ. ರಾಜ್ಯದಲ್ಲಿ ನಾವು ಕೇಂದ್ರದಲ್ಲಿ ಸಂಸದರು ಯೋಜನೆ ನಿಲ್ಲಿಸಲು ಎಲ್ಲ ರೀತಿ ಯಲ್ಲಿ ಪ್ರಯತ್ನಿಸಬೇಕಾಗಿದೆ ಎಂದರು.&lt;/p&gt;&lt;h2&gt;&lt;strong&gt;ಇನ್ನು ನ್ಯಾಯ ಸಿಕ್ಕಿಲ್ಲ&lt;/strong&gt;&lt;/h2&gt;&lt;p&gt;ಸಾಗರ ತಾಲೂಕಿಗೆ ಹೊಸ ಯೋಜನೆಗಳು ಬಂದಾಗಲೆಲ್ಲ ಜನ ಹೆದರುತ್ತಿದ್ದಾರೆ. ಉದಾಹರಣೆಗೆ ಮಡೆನೂರು ಡ್ಯಾಮ್, ಶರಾವತಿ ಮುಳುಗಡೆ ಸಂಸತ್ರರಿಗೆ ಇನ್ನು ನ್ಯಾಯ ಸಿಕ್ಕಿಲ್ಲ. ಜನ ಈಗಲೂ ತತ್ತರಿಸು ತ್ತಿದ್ದಾರೆ ಅಲ್ಲದೆ ಇದೀಗ ಒಂದು ಮೊರಾರ್ಜಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕೊಡಲು ಜಾಗವಿಲ್ಲ. ನಿವೃತ್ತ ಸೈನಿಕರಿಗೆ ಕೊಡಲು ಜಾಗವಿಲ್ಲ ಇಂತಹ ಸಂದರ್ಭದಲ್ಲಿ ಮಲೆನಾಡು ಪ್ರದೇಶದಲ್ಲಿ ಅಣುಸ್ಥಾವರ ತರಲು ನಮ್ಮ ಜನ ಒಪ್ಪುವುದಿಲ್ಲ ಎಂದರು.&lt;/p&gt;&lt;p&gt;ಹೆಲಿಕ್ಯಾಪ್ಟರಲ್ಲಿ ಸರ್ವೆ ಮಾಡಿದ ತಕ್ಷಣ ಕೆಲಸ ಪ್ರಾರಂಭವಾಗೋದಿಲ್ಲ ಸಂಬಂಧಿಸಿದ ಅಧಿಕಾರಿಗಳು ಹಾಗೂ ಮುಖ್ಯ ಮಂತ್ರಿಗಳ ಜತೆ ಮಾತನಾಡಿ ಮನವಿ ಮಾಡುವುದಾಗಿ ತಿಳಿಸಿ ಈಗಾಗಲೇ ಶರಾವತಿ ನಿರಾಶ್ರಿತರು ಸಂಕಷ್ಟದಲ್ಲಿದ್ದು ಪದೇ ಪದೇ ಕಷ್ಟ ಕೊಡಬಾರದು ತಕ್ಷಣ ಈ ಯೋಜನೆ ಉದ್ದೇಶದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/belur-gopalakrishna-minister-post-demand-sagar-nuclear-plant-gvd/articleshow-4r51gea"/>
        </item>
        <item>
            <title><![CDATA[ಪೋಷಕರಿಗೆ ಸಜೆಯಾದ ಬೇಸಿಗೆ ರಜೆ: ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು]]></title>
            <link>https://kannada.asianetnews.com/state/girl-dies-after-rope-turned-as-noose-while-playing-in-swing/articleshow-685vzmr</link>
            <guid isPermaLink="true">https://kannada.asianetnews.com/state/girl-dies-after-rope-turned-as-noose-while-playing-in-swing/articleshow-685vzmr</guid>
            <pubDate>Fri, 24 Apr 2026 14:41:57 +0530</pubDate>
            <description><![CDATA[&lt;p&gt;ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ, ಬೇಸಿಗೆ ರಜೆ ಕಳೆಯಲು ಚಿಕ್ಕಮ್ಮನ ಮನೆಗೆ ಹೋಗಿದ್ದ 9 ವರ್ಷದ ಬಾಲಕಿ ಪ್ರಣಮ್ಯ, ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾಳೆ. ರೂಮಿನ ಬಾಗಿಲು ಹಾಕಿಕೊಂಡು ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpzbrn3z4vg69gk76re3h5ep,imgname-shivamogga-girl-died-1777021506687.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು&lt;/strong&gt;&lt;/h2&gt;&lt;p&gt;ಶಿವಮೊಗ್ಗ: ಜೋಕಾಲಿ ಆಡಲು ಹೋಗಿ, ಕುಣಿಕೆ ಬಿಗಿದು ಬಾಲಕಿ ಸಾವಿಗೀಡಾದಂತಹ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಮೂರು ದಿನದ ಹಿಂದೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು 9 ವರ್ಷದ ಪ್ರಣಮ್ಯ ಎಂದು ಗುರುತಿಸಲಾಗಿದೆ. ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಪ್ರಣಮ್ಯ ರೂಮಿನಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಡುತ್ತಿದ್ದಳು, ಬಾಗಿಲು ಹಾಕಿ ಜೋಕಾಲಿ ಆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಡುತ್ತಿದ್ದ ಜೋಕಾಲಿಯೇ ನೇಣಿನಂತೆ ಕತ್ತನ್ನು ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ್ದಾಳೆ.&lt;/p&gt;&lt;h3&gt;&lt;strong&gt;ಪೋಷಕರಿಗೆ ರಜೆಯಾದ ಬೇಸಿಗೆ ರಜೆ&lt;/strong&gt;&lt;/h3&gt;&lt;p&gt;ಬಾಲಕಿ ಪ್ರಣಮ್ಯ ವಿದ್ಯಾನಗರದ ನಿವಾಸಿಯಾಗಿದ್ದು, ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ ಬೇಸಿಗೆ ರಜೆ ಕಳೆಯಲು ಹೋಗಿದ್ದ ವೇಳೆ ಈ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ರಜೆ ಪೋಷಕರಿಗೆ ಸಜೆಯಂತಾಗಿದ್ದು, ಮಕ್ಕಳನ್ನು ನೋಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಬೇಸಿಗೆಯ ಸೆಖೆಯಿಂದಾಗಿ ನೀರಿನ ಮೂಲಗಳಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ರಾಜ್ಯದಲ್ಲಿ ಎರಡಂಕಿ ದಾಟಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಪ್ರೀ ಫೈರ್ ಗೇಮ್ ಚಟ: ಅಮ್ಮ ಗೇಮ್ ಆಡೋಕೆ ಫೋನ್ ಕೊಟ್ಟಿಲ್ಲ ಅಂತ ಅಮ್ಮನ ಸೀರೆಯಲ್ಲೇ ನೇಣಿಗೆ ಶರಣಾದ ಬಾಲಕ&lt;/strong&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>shivamogga</category>
            <dc:creator>Anusha Kb</dc:creator>
            <atom:link href="https://kannada.asianetnews.com/state/girl-dies-after-rope-turned-as-noose-while-playing-in-swing/articleshow-685vzmr"/>
        </item>
        <item>
            <title><![CDATA[Shivamogga: 2ನೇ ಪತ್ನಿಯ ಆತ್ಮ*ಹತ್ಯೆ:  ಸೊರಬದ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿ ಬಂಧನ]]></title>
            <link>https://kannada.asianetnews.com/gallery/karnataka-districts/shivamogga-soraba-bjp-leader-prabhu-maestri-arrested-mrq-ae9g96g</link>
            <guid isPermaLink="true">https://kannada.asianetnews.com/gallery/karnataka-districts/shivamogga-soraba-bjp-leader-prabhu-maestri-arrested-mrq-ae9g96g</guid>
            <pubDate>Wed, 29 Apr 2026 08:21:07 +0530</pubDate>
            <description><![CDATA[&lt;p&gt;ಸೊರಬದ ಬಿಜೆಪಿ ಮುಖಂಡ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮಂಜುಳಾ ಅವರ ಆತ್ಮ*ಹತ್ಯೆಗೆ ಪತಿಯ ಕಿರುಕುಳವೇ ಕಾರಣ ಎಂದು ಮಂಜುಳಾ ಅವರ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqbhx529c2d62fc3dg4bes4h,imgname-soraba--2--1777430598729.jpg" type="image/jpeg" height="390" width="690"/>
            <content:encoded><![CDATA[&lt;p&gt;ಸೊರಬದ ಬಿಜೆಪಿ ಮುಖಂಡ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮಂಜುಳಾ ಅವರ ಆತ್ಮ*ಹತ್ಯೆಗೆ ಪತಿಯ ಕಿರುಕುಳವೇ ಕಾರಣ ಎಂದು ಮಂಜುಳಾ ಅವರ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ.&lt;/p&gt;&lt;img&gt;&lt;p&gt;ಶಿವಮೊಗ್ಗ ಜಿಲ್ಲೆಯ ಸೊರಬದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಭು ಮೇಸ್ತ್ರಿ ಬಂಧಿತ ಬಿಜೆಪಿ ಮುಖಂಡನಾಗಿದ್ದು, ಸೊರಬ ಪುರಸಭೆ ಮಾಜಿ ಅಧ್ಯಕ್ಷ. ಹಾರ್ಡ್&zwnj;ವೇರ್ ವ್ಯವಹಾರ ಜೊತೆ ಪ್ರಭು ಮೇಸ್ತ್ರಿ ರಾಜಕೀಯದಲ್ಲಿಯೂ ಸಕ್ರಿಯರಾಗಿ ಗುರುತಿಸಿಕೊಂಡಿದ್ದನು.&lt;/p&gt;&lt;img&gt;&lt;p&gt;ಭಾನುವಾರ ಪ್ರಭು ಮೇಸ್ತ್ರಿ ಪತ್ನಿ ಮಂಜುಳಾ (39) ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದರು. ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯ ನಿವಾಸದಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಮಗಳ ಸಾವಿಗೆ ಪತಿಯ ಕಿರುಕುಳ ಕಾರಣ ಎಂದು ಮಂಜುಳಾ ಪೋಷಕರು ಆರೋಪಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಬಂಧನ ಮಾಡಿದ್ದಾರೆ.&lt;/p&gt;&lt;img&gt;&lt;p&gt;2024ರಲ್ಲಿ ಹಾವೇರಿಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ ಜೊತೆ ಪ್ರಭು ಮೇಸ್ತ್ರಿ ಮದುವೆಯಾಗಿತ್ತು. ಎರಡನೇ ಮದುವೆ ಬಳಿಕವೂ ಪ್ರಭು ಮೇಸ್ತ್ರಿ ಮಹಿಳೆ ಜೊತೆ ಒಡನಾಟ ಹೊಂದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ರಾಜೀ ಪಂಚಾಯ್ತಿಯೂ ನಡೆದಿತ್ತು ಎಂದು ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪತ್ನಿಯನ್ನ ಕೊಂದು ಕಾಂಕ್ರೀಟ್&zwnj; ಹಾಕಿ ಸಮಾಧಿ ಮಾಡಿದ ಪತಿ! ಮಗನ ಕೈಗೆ ಸಿಕ್ಕ ಚೀಟಿಯಿಂದ ಬಯಲಾಯ್ತು ಪ್ರಕರಣ!&lt;/strong&gt;&lt;/p&gt;&lt;img&gt;&lt;p&gt;ರಾಜೀ ಪಂಚಾಯ್ತಿ ಬಳಿಕವೂ ಪ್ರಭು ಮತ್ತೆ ಅದೇ ಮಹಿಳೆಯೊಂದಿಗೆ ಓಡಾಡ್ತಿದ್ದ ಆರೋಪವಿದೆ. ಈ ಹಿನ್ನೆಲೆ ಮಂಜುಳಾ ಅವರಿಗೆ ಕಿರುಕುಳ ನೀಡುತ್ತಿದ್ದ. ಪತಿ ಪ್ರಭು ಮೇಸ್ತ್ರಿಯ ಕಿರುಕುಳ ತಾಳಲಾರದೇ ಮಗಳು ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪಿಸಿ ಮಂಜುಳಾ ತಾಯಿ ದೂರು ನೀಡಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Bengaluru: ಬೆತ್ತಲೆ ಸ್ಥಿತಿಯಲ್ಲಿ ಜಾರ್ಖಂಡ್ ಮೂಲದ ಯುವತಿಯ ಅರೆಕೊಳೆತ ಶವ ಪತ್ತೆ&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/shivamogga-soraba-bjp-leader-prabhu-maestri-arrested-mrq-ae9g96g"/>
        </item>
        <item>
            <title><![CDATA[NEET UG 2026 : ಇಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ; ರಾಜ್ಯದಲ್ಲಿ ಹೇಗಿದೆ ಸಿದ್ಧತೆ?]]></title>
            <link>https://kannada.asianetnews.com/state/neet-exam-today-prohibitory-order-issued-rav/articleshow-afbqrg8</link>
            <guid isPermaLink="true">https://kannada.asianetnews.com/state/neet-exam-today-prohibitory-order-issued-rav/articleshow-afbqrg8</guid>
            <pubDate>Sun, 03 May 2026 06:32:41 +0530</pubDate>
            <description><![CDATA[ಶಿವಮೊಗ್ಗ ಮತ್ತು ವಿಜಯಪುರದಲ್ಲಿ ನಡೆಯಲಿರುವ ನೀಟ್-ಯುಜಿ 2026 ಪರೀಕ್ಷೆಗೆ ಜಿಲ್ಲಾಡಳಿತಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪಾರದರ್ಶಕ ಮತ್ತು ಸುಸೂತ್ರ ಪರೀಕ್ಷೆಗಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqnnhfv7fs8c5dpv3x6agkp7,imgname-----------------------2026-05-03t062849.326-1777769955175.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ ವಿಜಯಪುರ:&lt;/strong&gt; ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಪ್ರ) ಎನ್. ಹೇಮಂತ್ ತಿಳಿಸಿದರು.&lt;/p&gt;&lt;p&gt;ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.&lt;/p&gt;&lt;p&gt;ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.&lt;/p&gt;&lt;p&gt;ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.&lt;/p&gt;&lt;p&gt;ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್&zwnj;ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದಲ್ಲಿ, ಅಭ್ಯರ್ಥಿಗಳ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದರು.&lt;/p&gt;&lt;p&gt;ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.&lt;/p&gt;&lt;h2&gt;ಇಂದು ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ&lt;/h2&gt;&lt;p&gt;&lt;strong&gt;ವಿಜಯಪುರ&lt;/strong&gt;: ನಗರದ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆಯು ಇಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್&zwnj;ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಗ್ಗೆ 9.30ರಿಂದ ಪರೀಕ್ಷೆ ಮುಕ್ತಾಯವಾಗುವ ವರೆಗೆ ತೆರೆಯದಂತೆ ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/neet-exam-today-prohibitory-order-issued-rav/articleshow-afbqrg8"/>
        </item>
        <item>
            <title><![CDATA[ಡಿಜಿಸಿಎ ನಿಯಮಗಳ ಬೆನ್ನಿಗೆ ಇಂಡಿಗೋ ಶಾಕ್: ಶಿವಮೊಗ್ಗ-ಬೆಂಗಳೂರು ವಿಮಾನ ಕಾರ್ಯಾಚರಣೆ ಸ್ಥಗಿತ]]></title>
            <link>https://kannada.asianetnews.com/karnataka-districts/shivamogga-bengaluru-indigo-flight-suspended-may-1-pilot-shortage-dgca-gvd/articleshow-bowle6l</link>
            <guid isPermaLink="true">https://kannada.asianetnews.com/karnataka-districts/shivamogga-bengaluru-indigo-flight-suspended-may-1-pilot-shortage-dgca-gvd/articleshow-bowle6l</guid>
            <pubDate>Fri, 01 May 2026 22:17:02 +0530</pubDate>
            <description><![CDATA[&lt;p&gt;ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಮಾರ್ಗಸೂಚಿ ಅನ್ವಯ ಕಾರ್ಯಾಚರಣೆಗೆ, ಪೈಲಟ್&zwnj;ಗಳ ಕೊರತೆ ಕಾರಣಕ್ಕೆ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಮೇ 1 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kbs3z6z5qv5tveyy73y45s30,imgname-indigo-flight-1765000846309.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಮೇ.01): &lt;/strong&gt;ಬೆಂಗಳೂರು - ಶಿವಮೊಗ್ಗ ಮಧ್ಯೆ ನಿತ್ಯ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಸೇವೆ ಸ್ಥಗಿತಗೊಳಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಮಾರ್ಗಸೂಚಿ ಅನ್ವಯ ಕಾರ್ಯಾಚರಣೆಗೆ, ಪೈಲಟ್&zwnj;ಗಳ ಕೊರತೆ ಕಾರಣಕ್ಕೆ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಮೇ 1 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇಂಡಿಗೊ ಸಂಸ್ಥೆ ನಿತ್ಯ ಶಿವಮೊಗ್ಗ-ಬೆಂಗಳೂರು ಮಧ್ಯೆ ವಿಮಾನ ಹಾರಾಟ ನಡೆಸುತ್ತಿತ್ತು. ಮೂರು ತಿಂಗಳ ಅವಧಿಗೆ (ಅಕ್ಟೋಬರ್) ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಸಂಸ್ಥೆ ತಿಳಿಸಿದೆ.&lt;/p&gt;&lt;p&gt;ಶಿವಮೊಗ್ಗ-ಬೆಂಗಳೂರು ನಡುವೆ ಹೆಚ್ಚಿನ ಜನದಟ್ಟಣೆ ಇರುವುದರಿಂದ ವಿಮಾನ ಹಾರಾಟ ನಿಲ್ಲಿಸದಂತೆ ಇಂಡಿಗೊ ಸಂಸ್ಥೆಗೆ ಸರ್ಕಾರ ಮನವಿ ಮಾಡಿತ್ತು. ಆದರೆ ಅದಕ್ಕೆ ಸಂಸ್ಥೆ ಒಪ್ಪಿಲ್ಲ. ಡಿಜಿಸಿಎ ಮಾರ್ಗಸೂಚಿ ಪಾಲನೆಗಾಗಿ ಬೆಂಗಳೂರು?ಶಿವಮೊಗ್ಗ ಮಾತ್ರವಲ್ಲ ಕಡಿಮೆ ದೂರದ ಮಾರ್ಗಗಳಲ್ಲಿ ಬಹಳಷ್ಟು ಕಡೆ ಶುಕ್ರವಾರದಿಂದ ಸಂಸ್ಥೆ ವಿಮಾನ ಹಾರಾಟ ನಿಲ್ಲಿಸುತ್ತಿದೆ. ಗುಜರಾತ್&zwnj;ನ ಅಹಮದಾಬಾದ್&zwnj;ನಲ್ಲಿ 2025ರ ಜೂನ್ 12 ರಂದು ಏರ್&zwnj;ಇಂಡಿಯಾ ವಿಮಾನ (ಎಐ171) ಪತನದ ನಂತರ ವಿಮಾನಗಳ ಸುರಕ್ಷಿತ ಕಾರ್ಯಾಚರಣೆಗೆ ಡಿಜಿಸಿಎ ಕೆಲವು ನಿಯಮಾವಳಿ ರೂಪಿಸಿದೆ.&lt;/p&gt;&lt;p&gt;ಅವುಗಳ ಅಳವಡಿಕೆಗೆ ಒಂದು ವರ್ಷದ ಕಾಲಾವಕಾಶ ವಿಮಾನಯಾನ ಸಂಸ್ಥೆಗಳಿಗೆ ನೀಡಲಾಗಿದೆ. ಆ ನಿಯಮಾವಳಿ ಪಾಲನೆಯಿಂದ ಇಂಡಿಗೊ ಸಂಸ್ಥೆಗೆ ಪೈಲಟ್&zwnj;ಗಳ ಕೊರತೆ ಆಗಿದೆ. ಮಧ್ಯಪ್ರಾಚ್ಯ ಯುದ್ದದ ಹಿನ್ನೆಲೆ ಇಂಧನ ದರ ಏರಿಕೆಯಾಗಿದೆ. ವೈಮಾನಿಕ ಇಂಧನದ ಬೆಲೆ ಗಗನಕ್ಕೇರಿದೆ. ಭಾರತದ ಜನಪ್ರಿಯ ವಿಮಾನಯಾನ ಸಂಸ್ಥೆ ಇಂಡಿಗೋ ಏರ್&zwnj;ಲೈನ್ಸ್&zwnj;ಗೆ ಇದರಿಂದ ಭಾರಿ ಪೆಟ್ಟು ಬಿದ್ದಿದೆ.&lt;/p&gt;&lt;h2&gt;&lt;strong&gt;ವಿಜಿಎ- ಒಪ್ಪಂದ ಮುಕ್ತಾಯ&lt;/strong&gt;&lt;/h2&gt;&lt;p&gt;ಬೆಂಗಳೂರು- ಶಿವಮೊಗ್ಗ ಮಾರ್ಗವು ಉಡಾನ್ ಯೋಜನೆ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರವೆ ವಯೋಬಲಿಟಿ ಗ್ಯಾಪ್ ಫಂಡಿಂಗ್ ಒಪ್ಪಂದದ ಮೂಲಕ ನೆರವು ನೀಡುತ್ತಿತ್ತು. ಪ್ರತಿ ಟಿಕೆಟ್&zwnj;ಗೆ 500 ರು. ಸಹಾಯಧನವನ್ನು ರಾಜ್ಯ ಸರ್ಕಾರ ಒದಗಿಸುತ್ತಿತ್ತು. ಈ ಒಪ್ಪಂದವು 2025ರ ಆಗಸ್ಟ್&zwnj;ನಲ್ಲಿ ಮುಕ್ತಾಯಗೊಂಡಿತ್ತು. ಇದರಿಂದ ಇಂಡಿಗೋ ಸಂಸ್ಥೆಗೆ ನಷ್ಟವಾಗಿತ್ತು. ಆದರು 2026ರ ಏಪ್ರಿಲ್ 30ರವರೆಗೆ ಸೇವೆ ಮುಂದುವರೆದಿತ್ತು. ಬೆಂಗಳೂರು - ಶಿವಮೊಗ್ಗ - ಬೆಂಗಳೂರು ಮಾರ್ಗದ ರದ್ದತಿ ತಾತ್ಕಾಲಿಕ.ಆದರೆ ಸಮಸ್ಯೆಗಳೆಲ್ಲ ಪರಿಹಾರವಾಗಿ ಸೇವೆ ಪುನಾರಂಭ ಆಗುವುದಕ್ಕೆ ಯಾವುದೇ ಕಾಲಮಿತಿ ಘೋಷಣೆ ಆಗಿಲ್ಲ.&lt;/p&gt;&lt;p&gt;ಇದರ ಬೆನ್ನಿಗೆ ಇತರೆ ವಿಮಾನಯಾನ ಸಂಸ್ಥೆಗಳ ಜೊತೆಗೆ ಚರ್ಚೆ ಆರಂಭವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸದ್ಯ ಸ್ಟಾರ್ ಏರ್ ಸಂಸ್ಥೆ ಹೈದರಾಬಾದ್, ಗೋವಾ ಹಾಗೂ ತಿರುಪತಿಗೆ, ಸ್ಪೈಸ್ ಜೆಟ್ ಸಂಸ್ಥೆ ಶಿವಮೊಗ್ಗದಿಂದ ಹೈದರಾಬಾದ್ ಹಾಗೂ ಚೆನ್ನೈಗೆ ನಿತ್ಯ ವಿಮಾನ ಓಡಾಟ ನಡೆಸುತ್ತಿವೆ.ಇನ್ನಷ್ಟು ಪ್ರಮುಖ ಸ್ಥಳಗಳಿಗೆ ವಿಮಾನಯಾನ ಆರಂಭವಾಗುವ ನಿರೀಕ್ಷೆ ಇತ್ತು. ಆದರೆ ಈಗ ಜನಪ್ರಿಯ ಮಾರ್ಗವಾಗಿದ್ದ ಬೆಂಗಳೂರಿಗೆ ವಿಮಾನಯಾನ ಸೇವೆ ಸ್ಥಗಿತವಾಗಿರುವುದು ಚರ್ಚೆಗೆ ಕಾರಣವಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/shivamogga-bengaluru-indigo-flight-suspended-may-1-pilot-shortage-dgca-gvd/articleshow-bowle6l"/>
        </item>
        <item>
            <title><![CDATA[ಶಿವಮೊಗ್ಗ ಜನತೆಯ ಬೇಡಿಕೆ ಈಡೇರಿಕೆ: ಯಶವಂತಪುರ-ತಾಳಗುಪ್ಪ ರೈಲು ಪ್ರಯಾಣಿಕರಿಗೆ ಹ್ಯಾಪಿ ನ್ಯೂಸ್]]></title>
            <link>https://kannada.asianetnews.com/gallery/travel/indian-railways-yeshwanthpur-to-talaguppa-express-train-service-to-be-made-permanent-mrq-d57n0it</link>
            <guid isPermaLink="true">https://kannada.asianetnews.com/gallery/travel/indian-railways-yeshwanthpur-to-talaguppa-express-train-service-to-be-made-permanent-mrq-d57n0it</guid>
            <pubDate>Wed, 13 May 2026 10:13:18 +0530</pubDate>
            <description><![CDATA[ಇದುವರೆಗೆ ವಿಶೇಷ ರೈಲಾಗಿದ್ದ ಯಶವಂತಪುರ-ತಾಳಗುಪ್ಪ ರೈಲು (16555/16556) ಈಗ ಕಾಯಂ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲಾಗಿ ಸಂಚರಿಸಲಿದೆ. ಈ ಹೊಸ ಸೇವೆಯು ಮೇ 15 ರಿಂದ ಆರಂಭವಾಗಲಿದ್ದು, ಶಿವಮೊಗ್ಗ ಮತ್ತು ಮಲೆನಾಡು ಭಾಗದ ಪ್ರಯಾಣಿಕರಿಗೆ ಹಾಗೂ ಸ್ಥಳೀಯ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01k0gcd4mnppqdhpwk91k7cc6x,imgname-talaguppa--3--1752896541333.jpg" type="image/jpeg" height="390" width="690"/>
            <content:encoded><![CDATA[ಇದುವರೆಗೆ ವಿಶೇಷ ರೈಲಾಗಿದ್ದ ಯಶವಂತಪುರ-ತಾಳಗುಪ್ಪ ರೈಲು (16555/16556) ಈಗ ಕಾಯಂ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲಾಗಿ ಸಂಚರಿಸಲಿದೆ. ಈ ಹೊಸ ಸೇವೆಯು ಮೇ 15 ರಿಂದ ಆರಂಭವಾಗಲಿದ್ದು, ಶಿವಮೊಗ್ಗ ಮತ್ತು ಮಲೆನಾಡು ಭಾಗದ ಪ್ರಯಾಣಿಕರಿಗೆ ಹಾಗೂ ಸ್ಥಳೀಯ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ.&lt;img&gt;&lt;p&gt;ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನತೆಗೆ ಮತ್ತೊಂದು ಸಂತಸದ ಸುದ್ದಿ ದೊರೆತಿದೆ. ದಕ್ಷಿಣ ಪಶ್ಚಿಮ ರೈಲ್ವೆಯು ಈವರೆಗೆ ವಿಶೇಷ ರೈಲಾಗಿ ಸಂಚರಿಸುತ್ತಿದ್ದ ಯಶವಂತಪುರ - ತಾಳಗುಪ್ಪ - ಯಶವಂತಪುರ ರೈಲನ್ನು ಇದೀಗ ಕಾಯಂ ರೈಲಾಗಿ ನಿಯಮಿತ ಸೇವೆಗೆ ನಿಗದಿಪಡಿಸಿದೆ.&lt;/p&gt;&lt;img&gt;&lt;p&gt;ರೈಲ್ವೆ ಸಂಖ್ಯೆ 06587/06588 ರೈಲು ಇದುವರೆಗೂ ವಿಶೇಷ ಸಂದರ್ಭಗಳಲ್ಲಿ ಮಾತ್ರ ಯಶವಂತಪುರ-ತಾಳಗುಪ್ಪ-ಯಶವಂತಪುರ ಸಂಚರಿಸುತ್ತಿತ್ತು. ಈಗ ಇದನ್ನು ರೈಲು ಗಾಡಿ ಸಂಖ್ಯೆ 16555/16556 ಎಂದು ಮಾರ್ಪಡಿಸಿ, ಯಶವಂತಪುರ - ತಾಳಗುಪ್ಪ - ಯಶವಂತಪುರ ವಾರಕ್ಕೆ ಒಂದು ಸಲ, ಪ್ರತಿ ಶುಕ್ರವಾರದಂದು ಯಶವಂತಪುರದಿಂದ ಹಾಗೂ ತಾಳಗುಪ್ಪದಿಂದ ಪ್ರತಿ ಶನಿವಾರ ಈ ಎಕ್ಸ್ ಪ್ರೆಸ್ ರೈಲು ಖಾಯಂ ಆಗಿ ನಿಯಮಿತ ಸೇವೆ ನೀಡಲಿದೆ.&amp;nbsp;&lt;/p&gt;&lt;p&gt;ಈ ಸೇವೆಯು ಇದೇ ಮೇ 15ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಇದರಿಂದ ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಹಾಗೂ ಮಲೆನಾಡು ಭಾಗದ ಪ್ರಯಾಣಿಕರಿಗೆ ಬಹಳ ಅನುಕೂಲಕರವಾಗಲಿದೆ ಎಂದಿದ್ದಾರೆ. ಬೆಂಗಳೂರಿಗೆ ಉದ್ಯೋಗ, ಶಿಕ್ಷಣ, ವ್ಯಾಪಾರ ಹಾಗೂ ವೈದ್ಯಕೀಯ ಕಾರಣಗಳಿಗೆ ತೆರಳುವ ಜನರಿಗೆ ಈ ಸೇವೆ ಹೆಚ್ಚಿನ ನೆರವಾಗಲಿದೆ, ಜೊತೆಗೆ ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಈ ನಿರ್ಧಾರ ಕೈಗೊಂಡಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಸಚಿವ ವಿ.ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.&lt;/p&gt;&lt;p&gt;ಶಿವಮೊಗ್ಗ ಹಾಗೂ ಮಲೆನಾಡು ಭಾಗದ ರೈಲ್ವೆ ಅಭಿವೃದ್ಧಿಗೆ ಇನ್ನಷ್ಟು ಹೊಸ ಯೋಜನೆಗಳು ಹಾಗೂ ರೈಲು ಸೌಲಭ್ಯಗಳನ್ನು ತರಲು ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/travel/indian-railways-yeshwanthpur-to-talaguppa-express-train-service-to-be-made-permanent-mrq-d57n0it"/>
        </item>
        <item>
            <title><![CDATA['ಮಗ ವಾಪಸ್ ಬರದಿದ್ರೂ ಉಗ್ರರ ಮೇಲೆ ಪ್ರಧಾನಿ ಮೋದಿ ತೆಗೆದುಕೊಂಡ ಆ ಪ್ರತಿಕಾರ ಸಮಾಧಾನ ತಂದಿದೆ, ಮೃತ ಮಂಜುನಾಥ ತಾಯಿಯ ಮನಕಲುಕುವ ಮಾತು]]></title>
            <link>https://kannada.asianetnews.com/karnataka-districts/pahalgam-terror-attack-pm-modi-s-revenge-against-terrorists-brings-me-peace-late-soldier-manjunaths-mother/articleshow-dt23kg9</link>
            <guid isPermaLink="true">https://kannada.asianetnews.com/karnataka-districts/pahalgam-terror-attack-pm-modi-s-revenge-against-terrorists-brings-me-peace-late-soldier-manjunaths-mother/articleshow-dt23kg9</guid>
            <pubDate>Thu, 23 Apr 2026 08:04:09 +0530</pubDate>
            <description><![CDATA[&lt;p&gt;ಪಹಲ್ಗಾಂನಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಅವರ ತಾಯಿ ಸುಮತಿ, ಮಗನ ಸಾವಿನ ದುಃಖದ ನಡುವೆಯೂ ಭಯೋತ್ಪಾದಕರ ವಿರುದ್ಧ ಪ್ರಧಾನಿ ಮೋದಿ ಪ್ರತೀಕಾರ ತೀರಿಸಿದ್ದು ಅಲ್ಪ ಸಮಾಧಾನ ತಂದಿದೆ ಎಂದು ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpw2ywd05c2jffy4gvwapt6x,imgname-untitled-design--3--1776911610272.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಶಿವಮೊಗ್ಗ (ಏ.23): &lt;/strong&gt;&lsquo;ಮಗನಿಗೆ ಕಾಶ್ಮೀರಕ್ಕೆ ಹೋಗಬೇಡ ಎಂದಿದ್ವಿ, ಆದರೂ ಹೋಗಿದ್ದರು. ಮಗ ವಾಪಸ್&zwnj; ಬರ್ತಾನೆ ಅಂದುಕೊಂಡರೆ ಶಾಕಿಂಗ್ ನ್ಯೂಸ್ ಬಂತು. ನನ್ನ ಮಗ ಬರದಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಯೋತ್ಪಾದಕರ ವಿರುದ್ಧ ಪ್ರತಿಕಾರ ತೀರಿಸಿದ್ದಾರಲ್ಲ ಎಂಬ ಅಲ್ಪ ಸಮಾಧಾನ ಇದೆ&rsquo; ಎಂದು ಪಹಲ್ಗಾಂನಲ್ಲಿ ಮೃತಪಟ್ಟ ಮಂಜುನಾಥ್ ರಾವ್ ತಾಯಿ ಸುಮತಿ ಹೇಳಿದರು.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆನಪು ಹೋಗುವುದಿಲ್ಲ. ನಾವು ಸಾಯುವ ತನಕವೂ ಇರುತ್ತದೆ, ದಿನ ಬೆಳಗ್ಗೆ ಎದ್ದಾಗ ನೆನಪು ಆಗುತ್ತದೆ. ರಾತ್ರಿ ಮಲಗಿದ್ದಾಗ ಇಡೀ ಪ್ರಪಂಚ ಮರೆತು ಹೋಗುತ್ತದೆ, ಬೆಳಗ್ಗೆ ಮತ್ತೆ ನೆನಪಾಗುತ್ತದೆ. ಸರಿ ಮಾಡಿಕೊಂಡು ಹೋಗಲೇಬೇಕಾದ ಅನಿವಾರ್ಯತೆ ಇದೆ ಎಂದರು.&lt;/p&gt;&lt;p&gt;ನನ್ನ ಮಗ ಸತ್ತಿದ್ದನ್ನು ಮನಸ್ಸು ಒಪ್ಪಲೇ ಇಲ್ಲ, ಬರ್ತಾನೆ ಅಂದು ಕೊಂಡಿದ್ದೆ. ಆತ ಸಾವನ್ನಪ್ಪಿದ್ದ ಸುದ್ದಿ ತಿಳಿದ ನಂತರ ಸತ್ತಿದ್ದು ನಂಬುವುದಕ್ಕೆ ಒಂದು ತಿಂಗಳು ಬೇಕಾಯಿತು. ಏನ್ ಮಾಡೋದು ಅನಿವಾರ್ಯ ಸಹಿಸಿಕೊಳ್ಳಲೇಬೇಕು ಎಂದು ಬೇಸರಿಸಿದರು.----&lt;/p&gt;&lt;h2&gt;ತಾಯಿಗೆ ಆದಷ್ಟೇ ದುಃಖ ಆಗಿದೆ: ನಳಿನಿ&lt;/h2&gt;&lt;p&gt;ಹೆತ್ತ ತಾಯಿಗೆ ಯಾವ ರೀತಿಯ ನೋವಾಗುತ್ತಿದೆ ಅಷ್ಟೇ ದುಃಖ ನಮಗೂ ಆಗುತ್ತಿದೆ. ಫೋಟೋ ನೋಡಿದಾಗ ಸಾಕಷ್ಟು ನೆನಪಾಗುತ್ತದೆ ಎಂದು ಪಹಲ್ಗಾಮ್&zwnj;ನಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಚಿಕ್ಕಮ್ಮ ನಳಿನಿ ಹೇಳಿದರು. ಮಂಜುನಾಥ ನಮ್ಮ ತಾಯಿ ಮನೆಯಲ್ಲಿ ಹುಟ್ಟಿದ ಪ್ರೀತಿಯ ಮೊದಲ ಮೊಮ್ಮಗ ಆಗಿದ್ದ ಎಂದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/pahalgam-terror-attack-pm-modi-s-revenge-against-terrorists-brings-me-peace-late-soldier-manjunaths-mother/articleshow-dt23kg9"/>
        </item>
        <item>
            <title><![CDATA[ಮಂಗಳೂರು ಕುಕ್ಕರ್ ಬ್ಲಾಸ್ಟ್: ಉಗ್ರ ಮೊಹಮ್ಮದ್ ಶಾರೀಖ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ, 94 ಸಾವಿರ ದಂಡ!]]></title>
            <link>https://kannada.asianetnews.com/state/mangaluru-cooker-blast-mohammed-shariq-sentenced-10-years-jail-nia-court-sat/articleshow-dy5g9zq</link>
            <guid isPermaLink="true">https://kannada.asianetnews.com/state/mangaluru-cooker-blast-mohammed-shariq-sentenced-10-years-jail-nia-court-sat/articleshow-dy5g9zq</guid>
            <pubDate>Mon, 27 Apr 2026 17:32:41 +0530</pubDate>
            <description><![CDATA[ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್&zwnj;ಗೆ ಎನ್&zwnj;ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಶಾರೀಖ್, ಜೈಲು ಬದಲಾವಣೆಗೆ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kq7d2zke4ctcpr84eg39p8qr,imgname-mangaluru-cooker-bomb-blast-1777291329134.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.27): ಇ&lt;/strong&gt;ಡೀ ರಾಜ್ಯವನ್ನೇ ನಡುಗಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್&zwnj;ಗೆ ಎನ್ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 94 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ, ವಿಚಾರಣೆ ವೇಳೆ ಆರೋಪಿ ಮೊಹಮ್ಮದ್ ಶಾರೀಖ್ ತನ್ನ ಮೇಲಿನ ತಪ್ಪುಗಳನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದನು.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ತನಿಖೆಯ ವೇಳೆ ಉಗ್ರ ಶಾರೀಖ್ ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನವನ್ನು ಗುರಿಯಾಗಿಸಿಕೊಂಡು ಬಾಂಬ್ ಇಡಲು ಹೋಗುತ್ತಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು. ಆದರೆ, ವಿಧಿಯಾಟ ಎಂಬಂತೆ ದೇವಸ್ಥಾನ ತಲುಪುವ ಮೊದಲೇ ಮಾರ್ಗಮಧ್ಯೆ ಆಟೋದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಇದರಿಂದ ದೊಡ್ಡ ಮಟ್ಟದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿತ್ತು.&lt;/p&gt;&lt;h2&gt;&lt;strong&gt;ಗಾಯಗೊಂಡಿದ್ದ ಆಟೋ ಚಾಲಕ:&lt;/strong&gt;&lt;/h2&gt;&lt;p&gt;ಈ ಸ್ಫೋಟದಲ್ಲಿ ಆರೋಪಿ ಶಾರೀಖ್ ಸ್ವತಃ ಗಾಯಗೊಂಡಿದ್ದಲ್ಲದೆ, ಮುಗ್ಧ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಅವರು ತೀವ್ರವಾಗಿ ಗಾಯಗೊಂಡಿದ್ದರು. ಸುಮಾರು 3 ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಶಾರೀಖ್&zwnj;ನನ್ನು ಎನ್ಐಎ ವಶಕ್ಕೆ ಪಡೆದಿತ್ತು. ಸುದೀರ್ಘ ತನಿಖೆ ನಡೆಸಿದ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.&lt;/p&gt;&lt;h3&gt;&lt;strong&gt;ಜೈಲು ಶಿಫ್ಟ್ ಮನವಿ ತಿರಸ್ಕರಿಸಿದ ನ್ಯಾಯಾಧೀಶರು:&lt;/strong&gt;&lt;/h3&gt;&lt;p&gt;ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಶಾರೀಖ್ ನ್ಯಾಯಾಧೀಶರ ಮುಂದೆ ವಿಚಿತ್ರ ಮನವಿಯೊಂದನ್ನು ಸಲ್ಲಿಸಿದ್ದನು. 'ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದೇನೆ, ಆರೋಗ್ಯ ಸರಿ ಇಲ್ಲದ ಕಾರಣ ಔಷಧಿಗಳನ್ನು ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ದಯವಿಟ್ಟು ನನ್ನನ್ನು ಬೆಂಗಳೂರಿನಿಂದ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಿ' ಎಂದು ಕೋರಿದ್ದನು.&lt;/p&gt;&lt;p&gt;ಆದರೆ ಈ ಮನವಿಯನ್ನು ಕಡಾಖಂಡಿತವಾಗಿ ತಿರಸ್ಕರಿಸಿದ ನ್ಯಾಯಾಧೀಶರು, 'ಬೆಂಗಳೂರಿನಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಸೌಲಭ್ಯಗಳು ಲಭ್ಯವಿವೆ. ಶಿವಮೊಗ್ಗಕ್ಕಿಂತ ಇಲ್ಲಿಯೇ ಚಿಕಿತ್ಸೆ ಉತ್ತಮವಾಗಿದೆ' ಎಂದು ಕಿವಿಮಾತು ಹೇಳಿ ಮನವಿಯನ್ನು ವಜಾಗೊಳಿಸಿದರು. ಶಾರೀಖ್ ವಿರುದ್ಧ ಕೇವಲ ಈ ಪ್ರಕರಣ ಮಾತ್ರವಲ್ಲದೆ, ಶಿವಮೊಗ್ಗದ ತುಂಗಾ ತೀರದಲ್ಲಿ ನಡೆಸಿದ ಟ್ರಯಲ್ ಬ್ಲಾಸ್ಟ್ ಪ್ರಕರಣದ ವಿಚಾರಣೆಯೂ ಬಾಕಿ ಇದೆ. ಸದ್ಯ ಎನ್ಐಎ ನ್ಯಾಯಾಲಯ ನೀಡಿರುವ ಈ ತೀರ್ಪು ಉಗ್ರ ಚಟುವಟಿಕೆಗಳಲ್ಲಿ ತೊಡಗುವವರಿಗೆ ಕಠಿಣ ಸಂದೇಶ ರವಾನಿಸಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/mangaluru-cooker-blast-mohammed-shariq-sentenced-10-years-jail-nia-court-sat/articleshow-dy5g9zq"/>
        </item>
        <item>
            <title><![CDATA[ಶಿವಮೊಗ್ಗದಲ್ಲಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಬೇಡ: ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/shivamogga-nuclear-power-plant-proposal-by-raghavendra-response-gvd/articleshow-i0x3u46</link>
            <guid isPermaLink="true">https://kannada.asianetnews.com/karnataka-districts/shivamogga-nuclear-power-plant-proposal-by-raghavendra-response-gvd/articleshow-i0x3u46</guid>
            <pubDate>Mon, 27 Apr 2026 22:26:33 +0530</pubDate>
            <description><![CDATA[&lt;p&gt;ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿದಂತೆ ಪ್ರಸ್ತಾವನೆ ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gh8arwhewpqvv4tfxmz5vp98,imgname-by.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.27):&lt;/strong&gt; ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿದಂತೆ ಪ್ರಸ್ತಾವನೆ ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಇತ್ತೀಚಿಗೆ ಪತ್ರಿಕೆಗಳಲ್ಲಿ ಸಾಗರ ತಾಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಸಂಬಂಧ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾದ ನಂತರ ಈ ಕುರಿತು ಹೇಳಿಕೆ ನೀಡಿದ್ದಾರೆ.&lt;/p&gt;&lt;p&gt;ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ.&lt;/p&gt;&lt;h2&gt;&lt;strong&gt;ವ್ಯಾಪಕ ವಿರೋಧ&lt;/strong&gt;&lt;/h2&gt;&lt;p&gt;ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುವುದಾಗಿ ಹೇಳಿದ್ದಾರೆ.&lt;/p&gt;&lt;p&gt;ಕೇಂದ್ರ ಸರ್ಕಾರ ಅಧೀನದ ಎನ್&zwnj;ಟಿಪಿಸಿ (ನ್ಯಾಷನಲ್&zwnj; ಥರ್ಮಲ್&zwnj; ಪವರ್&zwnj; ಕಾರ್ಪೊರೇಷನ್&zwnj;) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/shivamogga-nuclear-power-plant-proposal-by-raghavendra-response-gvd/articleshow-i0x3u46"/>
        </item>
        <item>
            <title><![CDATA[ಶಿವಮೊಗ್ಗ ಜಿಲ್ಲೆಯಲ್ಲಿ  ಅಪರೂಪ ಮಾಹಿತಿಯುಳ್ಳ ವಿಜಯನಗರ ಕಾಲದ ನಂದಿಗಂಬ ದಾನ ಶಾಸನ ಪತ್ತೆ]]></title>
            <link>https://kannada.asianetnews.com/karnataka-districts/a-rare-nandigamba-donation-inscription-from-the-vijayanagara-period-was-discovered-in-shivamogga-district-mrq/articleshow-lzwpuyw</link>
            <guid isPermaLink="true">https://kannada.asianetnews.com/karnataka-districts/a-rare-nandigamba-donation-inscription-from-the-vijayanagara-period-was-discovered-in-shivamogga-district-mrq/articleshow-lzwpuyw</guid>
            <pubDate>Mon, 27 Apr 2026 05:52:24 +0530</pubDate>
            <description><![CDATA[ಶಿವಮೊಗ್ಗದ ಹೊಸನಗರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ವಿಜಯನಗರ ಕಾಲದ ಸಂಗಮ ವಂಶಕ್ಕೆ ಸೇರಿದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ. ಕ್ರಿ.ಶ. 1424ರ ಈ ಶಾಸನವು, ಎರಡನೇ ದೇವರಾಯನು ಹಂಪಿಯ ವಿರೂಪಾಕ್ಷ ದೇವರಿಗೆ ಕಲ್ಲೂರು ನಾಡನ್ನು ದಾನವಾಗಿ ನೀಡಿದ ಐತಿಹಾಸಿಕ ವಿವರಗಳನ್ನು ಒಳಗೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kq64x6xg90s718r5agp9zy4j,imgname-shivamogga-1777249196975.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ:&lt;/strong&gt; ಹೊಸನಗರ ತಾಲೂಕಿನ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ. ಇದು ಸಂಗಮ ವಂಶದ ಆಳ್ವಿಕೆ ಕಾಲದ್ದು ಎನ್ನಲಾಗಿದೆ. ದಾನ ಪತ್ರದಲ್ಲಿ ಕಲೂರ ನಾಡು ಎಂದು ಕಲ್ಲೂರು ಗ್ರಾಮದ ಉಲ್ಲೇಖವಿದೆ.&amp;nbsp;&lt;/p&gt;&lt;h2&gt;&lt;strong&gt;ಭೂದಾನ ನೀಡುವ ಪರಂಪರೆ ಮಹತ್ವ&lt;/strong&gt;&lt;/h2&gt;&lt;p&gt;ಸಂಶೋಧಕ ಅದಿತ್ಯ ನಂಜುವಳ್ಳಿ, ಕೆ.ಎನ್.ಗಣೇಶ, ಪತ್ರಕರ್ತ ಎನ್.ಕಾರ್ತೀಕ್&zwj; ಕೌಂಡಿನ್ಯ ಅವರು ಶಾಸನ ಪತ್ತೆ ಹಚ್ಚಿ ಅಧ್ಯಯನ ನಡೆಸಿದ್ದಾರೆ. ಕ್ರಿ.ಶ.1424 (ಶಕ ವರ್ಷ1346)ರಲ್ಲಿ 3ನೇ ಬುಕ್ಕರಾಯನ ಮಗನಾದ 2ನೇ ದೇವರಾಯನು ಆಳ್ವಿಕೆ ನಡೆಸುತ್ತಿದ್ದ ಕಾಲಘಟ್ಟದಲ್ಲಿ ಆರಗದನಾಡಿನ ವ್ಯಾಪ್ತಿಗೆ ಸೇರಿದ ಕಲೂರು ನಾಡನ್ನು ಹಂಪಿಯ ಪ್ರಸಿದ್ಧ ವಿರೂಪಾಕ್ಷ ದೇವರಿಗೆ ಅಮೃತ ಪಡಿ (ನೈವೇದ್ಯ) ಸೇವೆಗಾಗಿ ಧಾರೆಯೆರೆದು ಕೊಟ್ಟಿರುವುದಾಗಿ ಶಾಸನದಲ್ಲಿ ಉಲ್ಲೇಖವಿದೆ. ಆ ಕಾಲದಲ್ಲಿ ದೇವಾಲಯಗಳ ನಿರ್ವಹಣೆ ಮತ್ತು ಪೂಜಾ ಕಾರ್ಯಗಳಿಗೆ ಭೂದಾನ ನೀಡುವ ಪರಂಪರೆ ಮಹತ್ವ ಪಡೆದಿತ್ತು ಎಂಬುದು ಸ್ಪಷ್ಟವಾಗಿದೆ.&lt;/p&gt;&lt;h3&gt;&lt;strong&gt;ರಾಜಕೀಯ ವೈಭವ ಶೌರ್ಯ&lt;/strong&gt;&lt;/h3&gt;&lt;p&gt;3ನೇ ಬುಕ್ಕರಾಯನನ್ನು &quot;ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀವೀರಪ್ರತಾಪ ವಿಜಯಬುಕ್ಕರಾಯ ಎಂದು ಹಾಗೂ 2ನೇ ದೇವರಾಯನನ್ನು ವೀರಪ್ರತಾಪ ದೇವರಾಯ ಮಹಾರಾಯ ಎಂದು ಕೊಂಡಾಡಲಾಗಿದೆ. ಈ ಬಿರುದುಗಳು ಆ ಕಾಲದ ರಾಜಕೀಯ ವೈಭವ ಶೌರ್ಯವನ್ನು ಪ್ರತಿಬಿಂಬಿಸುತ್ತವೆ.&lt;/p&gt;&lt;p&gt;ವಿಜಯನಗರ ಸಾಮ್ರಾಜ್ಯದ ಆಧೀನ ರಾಜ್ಯವಾಗಿ ಅರಗನಾಡು (ಇಂದಿನ ಅರಗ) ಅಸ್ತಿತ್ವಕ್ಕೆ ಬಂದಿದೆ. ಸ್ಥಳೀಯ ಗ್ರಾಮಗಳ ಗಡಿಗಳ ಮಾಹಿತಿ ಇಲ್ಲಿ ಲಭ್ಯವಾಗಿದೆ. ಗ್ರಾಮಗಳ ವಿಸ್ತೀರ್ಣದ ಮಾಹಿತಿಗೆ ಪೂರಕ ದಾಖಲೆಯಾಗಿದೆ ಎಂದು ಇತಿಹಾಸ ಸಂಶೋಧಕ ಆದಿತ್ಯ ನಂಜುವಳ್ಳಿ ಹೇಳುತ್ತಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/a-rare-nandigamba-donation-inscription-from-the-vijayanagara-period-was-discovered-in-shivamogga-district-mrq/articleshow-lzwpuyw"/>
        </item>
        <item>
            <title><![CDATA[ಶಿವಮೊಗ್ಗ ಏರ್‌ಪೋರ್ಟ್‌ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವಂತೆ ಒತ್ತಾಯ, ರಾಜ್ಯ ಸರ್ಕಾರದ ಮುಂದೆ ಹಲವು ಬೇಡಿಕೆ]]></title>
            <link>https://kannada.asianetnews.com/karnataka-districts/shivamogga-airport-handover-to-centre-sought-mp-by-raghavendra-raises-vgf-flight-issues-gdp/articleshow-qo2n5om</link>
            <guid isPermaLink="true">https://kannada.asianetnews.com/karnataka-districts/shivamogga-airport-handover-to-centre-sought-mp-by-raghavendra-raises-vgf-flight-issues-gdp/articleshow-qo2n5om</guid>
            <pubDate>Fri, 01 May 2026 18:53:06 +0530</pubDate>
            <description><![CDATA[ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲು ಮತ್ತು ಬಿರುಗಾಳಿ ಮಳೆಯಿಂದಾದ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಮಾನ ನಿಲ್ದಾಣದ ಅನುದಾನ, ಸ್ಥಗಿತಗೊಂಡಿರುವ ವಿಮಾನ ಸೇವೆ ಮತ್ತು ನೈಟ್ ಲ್ಯಾಂಡಿಂಗ್ ವಿಳಂಬದ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhtzdrr5h5fqy2p74q7t8sd,imgname-shivamogga-airport-1777641436951.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳನ್ನು ಮುಂದಿರಿಸಿ ಸಂಸದ ಬಿ. ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿಶೇಷವಾಗಿ, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.&lt;/p&gt;&lt;p&gt;ಗುರುವಾರ ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣವನ್ನು Airports Authority of Indiaಗೆ ಹಸ್ತಾಂತರಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು. ಈ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ರಾಜ್ಯ ಸರ್ಕಾರ ದೆಹಲಿಗೆ ಕಳುಹಿಸಿದ್ದು, ಚರ್ಚೆಯ ವೇಳೆ ಎರಡು ಪ್ರಮುಖ ವಿಚಾರಗಳನ್ನು ಮುಂದಿರಿಸಲಾಗಿದೆ. ಇದುವರೆಗೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಖರ್ಚಾದ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುವುದೇ ಹಾಗೂ ಭವಿಷ್ಯದಲ್ಲಿ ವಿಮಾನ ನಿಲ್ದಾಣವನ್ನು ಖಾಸಗಿ ನಿರ್ವಹಣೆಗೆ ವಹಿಸುವ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವಿವರಿಸಿದರು.&lt;/p&gt;&lt;p&gt;ಇನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ Viability Gap Funding (VGF) ಯೋಜನೆ 2025ರ ಜುಲೈನಲ್ಲಿ ಅಂತ್ಯಗೊಂಡಿದೆ. ಇದನ್ನು ಮುಂದುವರಿಸಲು ರಾಜ್ಯ ಸರ್ಕಾರದಿಂದ ಅಗತ್ಯ ಪತ್ರ ನೀಡುವಲ್ಲಿ ವಿಳಂಬವಾಗುತ್ತಿರುವುದಾಗಿ ಅವರು ಬೇಸರ ವ್ಯಕ್ತಪಡಿಸಿದರು. ಈ ವಿಷಯವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದರೂ, ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದರು. ಅದೇ ವೇಳೆ ಬೀದರ್ ವಿಮಾನ ನಿಲ್ದಾಣಕ್ಕೆ ಈಗಾಗಲೇ VGF ಸಂಬಂಧಿತ ಪತ್ರ ನೀಡಲಾಗಿದೆ ಎಂಬುದನ್ನೂ ಉಲ್ಲೇಖಿಸಿದರು.&lt;/p&gt;&lt;p&gt;ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುತ್ತಿದ್ದ IndiGo ವಿಮಾನ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಬಗ್ಗೆ ಮಾತನಾಡಿದ ಅವರು, ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ವಿಮಾನ ಸೇವೆಗಳ ಪುನರಾರಂಭಕ್ಕೆ ಪರ್ಯಾಯ ಮಾರ್ಗಗಳನ್ನು ಹುಡುಕುವ ಭರವಸೆ ಅವರು ನೀಡಿದ್ದಾರೆ ಎಂದು ತಿಳಿಸಿದರು.&lt;/p&gt;&lt;p&gt;ಮಧ್ಯ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಮಹತ್ವವನ್ನು ವಿವರಿಸಿದ ಅವರು, ತುರ್ತು ಸಂದರ್ಭಗಳಲ್ಲಿ ಇದರ ಉಪಯೋಗಿತ್ವ ಸ್ಪಷ್ಟವಾಗುತ್ತದೆ ಎಂದರು. ಇತ್ತೀಚೆಗೆ ಗಾಂಧಿ ಬಜಾರ್&zwnj;ನ ಯುವತಿಯನ್ನು ತುರ್ತು ಚಿಕಿತ್ಸೆಗೆ ಮುಂಬೈಗೆ ಕರೆದೊಯ್ಯಲು ಇದೇ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಏರ್&zwnj;ಲಿಫ್ಟ್ ಮಾಡಲಾಗಿತ್ತು ಎಂದು ಉದಾಹರಣೆ ನೀಡಿದರು.&lt;/p&gt;&lt;p&gt;ಇದೇ ವೇಳೆ ನೈಟ್ ಲ್ಯಾಂಡಿಂಗ್ ಸೌಲಭ್ಯ ಕಾಮಗಾರಿ ವಿಳಂಬವಾಗಿರುವುದರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಟೆಂಡರ್ ಪ್ರಕ್ರಿಯೆಗೆ ಮೂರು ತಿಂಗಳು ಕಳೆದಿದ್ದರೂ, ಕಾಮಗಾರಿ ಪ್ರಾರಂಭಕ್ಕೆ ಆರು ತಿಂಗಳು ಕಳೆದಿದ್ದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಹೇಳಿದರು.&lt;/p&gt;&lt;p&gt;ಉಡಾನ್ ಯೋಜನೆಯಡಿ ರಾಜಧಾನಿಗೆ ವಿಮಾನ ಸೇವೆ ನೀಡಲು ಅವಕಾಶ ಇಲ್ಲದ ಹಿನ್ನೆಲೆಯಲ್ಲಿ, ಹಿಂದಿನ B. S. Yediyurappa ಸರ್ಕಾರ ಶಿವಮೊಗ್ಗ&ndash;ಬೆಂಗಳೂರು ಮಾರ್ಗಕ್ಕೆ ಪ್ರತಿ ಟಿಕೆಟ್&zwnj;ಗೆ ₹500 ಸಹಾಯಧನ ನೀಡುತ್ತಿತ್ತು. ಆದರೆ ಈ ಯೋಜನೆ ಒಂದು ವರ್ಷದಿಂದ ಸ್ಥಗಿತಗೊಂಡಿದ್ದು, ಪುನರಾರಂಭಕ್ಕೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ವಿಷಾದಿಸಿದರು.&lt;/p&gt;&lt;h2&gt;ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಒತ್ತಾಯ&lt;/h2&gt;&lt;p&gt;ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚೆಗೆ ಸಂಭವಿಸಿದ ಬಿರುಗಾಳಿ ಮತ್ತು ಮಳೆಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸಂಸದರು ಆಗ್ರಹಿಸಿದರು.&lt;/p&gt;&lt;p&gt;ಸುಮಾರು 10,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಅದರಲ್ಲಿ 5ರಿಂದ 6 ಸಾವಿರ ಹೆಕ್ಟೇರ್ ಪ್ರದೇಶದ ಅಡಕೆ ತೋಟಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ತಿಳಿಸಿದರು. ಸುಮಾರು 35ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾರೀ ಹಾನಿ ಸಂಭವಿಸಿದ್ದು, ಮನೆಗಳು ಹಾನಿಗೊಳಗಾಗಿವೆ ಹಾಗೂ ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ಒಂದು ಜೀವ ಹಾನಿಯೂ ಸಂಭವಿಸಿರುವುದು ವರದಿಯಾಗಿದೆ.&lt;/p&gt;&lt;p&gt;ಪ್ರಸ್ತುತ ಎನ್&zwnj;ಡಿಆರ್&zwnj;ಎಫ್ ಮತ್ತು ಎಸ್&zwnj;ಡಿಆರ್&zwnj;ಎಫ್ ನಿಯಮಗಳ ಪ್ರಕಾರ ಪ್ರತಿ ಹೆಕ್ಟೇರ್&zwnj;ಗೆ ₹33,000 ಪರಿಹಾರ ನೀಡಲಾಗುತ್ತದೆ. ಆದರೆ ಈ ಮೊತ್ತ ಸಾಲದು ಎಂದು ಅಭಿಪ್ರಾಯಪಟ್ಟ ಅವರು, ಪ್ರತಿ ಹೆಕ್ಟೇರ್&zwnj;ಗೆ ₹1 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮನೆ ಹಾನಿಗೆ ಕನಿಷ್ಠ ₹1.5 ಲಕ್ಷ ಪರಿಹಾರ ನೀಡುವ ಬದಲು ವಿಶೇಷ ಪ್ಯಾಕೇಜ್ ಮೂಲಕ ಹೆಚ್ಚುವರಿ ಪರಿಹಾರ ಘೋಷಿಸಬೇಕು ಎಂದು ಹೇಳಿದರು.&lt;/p&gt;&lt;h2&gt;ಬಿಎಸ್&zwnj;ವೈ &ldquo;ಅಭಿಮಾನೋತ್ಸವ&quot;&lt;/h2&gt;&lt;p&gt;ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಸವಿ ನೆನಪಿಗೆ ಮೇ 9 ರಂದು ಚಿತ್ರದುರ್ಗದಲ್ಲಿ ಸಂಸದ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ &ldquo;ಅಭಿಮಾನೋತ್ಸವ&quot; ಆಯೋಜಿಸಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ, ಜಿಲ್ಲೆಯ ಎಲ್ಲ ಬಿ.ಜೆ.ಪಿ.ಶಾಸಕರ ಮುಂದಾಳತ್ವದಲ್ಲಿ ಜಿಲ್ಲೆಯಿಂದ ಸುಮಾರು 50 ಸಾವಿರ ಕಾರ್ಯಕರ್ತರು ಸಮಾವೇಶಕ್ಕೆ ತೆರಳಲಿದ್ದಾರೆ.&lt;/p&gt;&lt;p&gt;-ಎನ್.ಕೆ.ಜಗದೀಶ್, ಬಿಜೆಪಿ ಜಿಲ್ಲಾಧ್ಯಕ್ಷ.&lt;/p&gt;]]></content:encoded>
            <category>shivamogga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/shivamogga-airport-handover-to-centre-sought-mp-by-raghavendra-raises-vgf-flight-issues-gdp/articleshow-qo2n5om"/>
        </item>
        <item>
            <title><![CDATA[ಹುಲಿಕಲ್ ಘಾಟ್ ಮಣ್ಣು ಕುಸಿತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ]]></title>
            <link>https://kannada.asianetnews.com/karnataka-districts/karnataka-hulikal-ghat-road-landslide-madhu-bangarappa-statement-gvd/articleshow-tggsgzx</link>
            <guid isPermaLink="true">https://kannada.asianetnews.com/karnataka-districts/karnataka-hulikal-ghat-road-landslide-madhu-bangarappa-statement-gvd/articleshow-tggsgzx</guid>
            <pubDate>Wed, 29 Apr 2026 21:47:40 +0530</pubDate>
            <description><![CDATA[&lt;p&gt;ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kcntehsj5znq0d6h9xw7swp8,imgname-----------------------2025-12-17t145802.366-1765963941682.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸನಗರ (ಏ.29): &lt;/strong&gt;ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.&lt;/p&gt;&lt;p&gt;ತಾಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಮಾತನಾಡಿದರು. ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.&lt;/p&gt;&lt;p&gt;ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು. ಹಾಗೂ ಲೋಕೋಪಯೋಗಿ ಸಚಿವರೊಂದಿಗೆ , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತಾಗಿ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಲು ಕ್ರಮ ವಹಿಸಲಾಗುವುದು ಎಂದ ಅವರು ಈ ಭಾಗದ ಜನಸಾಮಾನ್ಯರ ಅಹವಾಲುಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಮುಂದೆಯೂ ಮಾಡುತ್ತೇನೆಂದು ಭರವಸೆ ನೀಡಿದರು.&lt;/p&gt;&lt;p&gt;&lt;strong&gt;ಹೇರ್ ಪಿನ್ ತಿರುವುಗಳ ಸುಧಾರಣೆ: &lt;/strong&gt;ರಸ್ತೆಯ ಸರಪಳಿ 42.05 ಕಿ.ಮೀ ನಿಂದ 42.25 ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಹುಲಿಕಲ್ ಘಾಟ್ ರಸ್ತೆ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ಅನುದಾನ ನಿಗದಿಗೊಳಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದರು.&lt;/p&gt;&lt;h2&gt;&lt;strong&gt;ಹುಲಿಕಲ್ ಘಾಟ್ ತಡೆಗೋಡೆ ಕಾಮಗಾರಿ ವಿವರ&lt;/strong&gt;&lt;/h2&gt;&lt;p&gt;ಮಳೆಯಿಂದ ಭೂಕುಸಿತ ಉಂಟಾಗಿದ್ದ ಹುಲಿಕಲ್ ಘಾಟ್ ಸ್ಥಳದಲ್ಲಿ ಶಾಶ್ವತ ಪರಿಹಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮೊದಲ ಹಂತದಲ್ಲಿ ರೂ.&zwnj;435 ಲಕ್ಷಗಳ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ.&lt;/p&gt;&lt;p&gt;ಡಿಸೆಂಬರ್ ಮಾಹೆಯಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ. ಹೊಸನಗರ ತಾಲೂಕಿನ ತೀರ್ಥಹಳ್ಳಿ - ಕುಂದಾಪುರ ರಾಷ್ಟ್ರೀಯ ಹೆದ್ದಾರಿ 52ರ ಸರಪಳಿ 38.00 ಕಿ.ಮೀ ನಿಂದ 43.58 ಕಿ.ಮೀ ವರೆಗಿನ ಸುಮಾರು 5.58 ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.&lt;/p&gt;]]></content:encoded>
            <category>shivamogga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-hulikal-ghat-road-landslide-madhu-bangarappa-statement-gvd/articleshow-tggsgzx"/>
        </item>
        <item>
            <title><![CDATA[ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಬಗ್ಗೆ ಬಿಎಸ್ ಯಡಿಯೂರಪ್ಪ ಅಚ್ಚರಿ ಹೇಳಿಕೆ! ಗೆಲ್ಲೋದ್ಯಾರು?]]></title>
            <link>https://kannada.asianetnews.com/politics/west-bengal-election-2026-bjp-will-victory-certain-due-to-high-voter-turnout-says-bsy/articleshow-y8bds6l</link>
            <guid isPermaLink="true">https://kannada.asianetnews.com/politics/west-bengal-election-2026-bjp-will-victory-certain-due-to-high-voter-turnout-says-bsy/articleshow-y8bds6l</guid>
            <pubDate>Sat, 25 Apr 2026 12:14:00 +0530</pubDate>
            <description><![CDATA[&lt;p&gt;ಪ ಬಂಗಾಳದಲ್ಲಿ ಹೆಚ್ಚಿನ ಮತದಾನದಿಂದಾಗಿ ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಲ್ಲಿಕಾರ್ಜುನ್ ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಕ್ಷಮೆ ಕೇಳಬೇಕು ಎಂದು ಹೇಳಿದ್ದು, ಉಪಚುನಾವಣೆಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpfmhysk5rk6y32s502rjnhm,imgname-----------------------2026-04-18t111509.582-1776493853491.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.26)&lt;/strong&gt;: ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.&amp;nbsp;&lt;/p&gt;&lt;p&gt;ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಮತದಾನವಾಗಿದೆ. ಅಲ್ಲಿನ ಜನರು ಬಿಜೆಪಿ ಪರ ಉತ್ತಮ ನಿಲುವು ಹೊಂದಿದ್ದರು. ಹೀಗಾಗಿ ಅಲ್ಲಿ ಬಿಜೆಪಿಗೆ ಗೆಲ್ಲಲಿದೆ. ಇನ್ನು ಉಪಚುನಾವಣೆ ನಡೆದಿರುವ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.&lt;/p&gt;&lt;p&gt;&amp;nbsp;ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರರನ್ನು ಭಯೋತ್ಪಾದಕ ಎಂದು ಕರೆಯ ಬಾರದಾಗಿತ್ತು. ಕ್ಷಮೆ ಕೇಳಿ ಇದನ್ನು ಕೊನೆಗಾಣಿಸಬೇಕು. ಮೇ 4ರ ನಂತರ ಸಿಎಂ ಬದಲಾವಣೆ ವಿಷಯವೂ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರವಾಗಿದ್ದು, ಕಾದು ನೋಡೋಣ ಎಂದು ಹೇಳಿದರು.&lt;/p&gt;&lt;p&gt;ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;ಬಿಜೆಪಿ-ಟಿಎಂಸಿ ನೇರಾನೇರ ಸ್ಪರ್ಧೆ&lt;/h2&gt;&lt;p&gt;ದೇಶದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಪ.ಬಂಗಾಳ ವಿಧಾನಸಭೆ ಚುನಾವಣೆಗಳು 2 ಹಂತದಲ್ಲಿ ನಡೆಯಲಿವೆ. ಈಗಾಗಲೇ ಎಂದರೆ ಏ.23 ರಂದು ನಡೆದಿದ್ದು ಮುಂದಿನ ಹಂತ ಏ.29ಕ್ಕೆ ನಡೆಯಲಿವೆ. 294 ಕ್ಷೇತ್ರಗಳನ್ನು ರಾಜ್ಯ ಹೊಂದಿದೆ. ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್&zwnj; ಹಾಗೂ ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/west-bengal-election-2026-bjp-will-victory-certain-due-to-high-voter-turnout-says-bsy/articleshow-y8bds6l"/>
        </item>
    </channel>
</rss>
