<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 06 Aug 2026 12:19:55 +0530</lastBuildDate>
        <atom:link href="https://kannada.asianetnews.com/rss/shivamogga" rel="self" type="application/rss+xml"/>
        <item>
            <title><![CDATA[ಶಿವಮೊಗ್ಗ ಕಲಾಲೋಕದಲ್ಲಿ ಮೌನ: ತೀರ್ಥಹಳ್ಳಿಯ ಹುಲಿವೇಷ ಕಲಾವಿದ, ಡ್ಯಾನ್ಸ್ ಮಾಸ್ಟರ್ ರಾಕೇಶ್ ದುರಂತ ಅಂತ್ಯ!]]></title>
            <link>https://kannada.asianetnews.com/karnataka-districts/shivamogga-popular-huli-vesha-artist-dance-master-rakesh-passes-away-in-thirthahalli/articleshow-07xfibu</link>
            <guid isPermaLink="true">https://kannada.asianetnews.com/karnataka-districts/shivamogga-popular-huli-vesha-artist-dance-master-rakesh-passes-away-in-thirthahalli/articleshow-07xfibu</guid>
            <pubDate>Wed, 22 Jul 2026 11:09:01 +0530</pubDate>
            <description><![CDATA[&lt;p&gt;ತೀರ್ಥಹಳ್ಳಿಯ ದಸರಾ ಹುಲಿವೇಷದಿಂದ ಖ್ಯಾತರಾಗಿದ್ದ 29 ವರ್ಷದ ಯುವ ಕಲಾವಿದ ರಾಕೇಶ್ ನಿಧನರಾಗಿದ್ದಾರೆ. ವೃತ್ತಿಯಲ್ಲಿ ನೃತ್ಯ ತರಬೇತುದಾರರಾಗಿದ್ದ ಇವರು, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಈ ಪ್ರತಿಭಾನ್ವಿತ ಕಲಾವಿದನ ಅಕಾಲಿಕ ಮರಣವು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಶೋಕವನ್ನುಂಟುಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky44xmtz480b6y1bkq36e6pd,imgname-shivamogga-artist-rakesh-no-more-1784698295135.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜು.22): ಮ&lt;/strong&gt;ಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ದಸರಾ (Thirthahalli Dasara) ಸಂಭ್ರಮದಲ್ಲಿ ಹುಲಿವೇಷದ ಬಣ್ಣ ಹಚ್ಚಿ, ಅಬ್ಬರದ ಹೆಜ್ಜೆಗಳನ್ನು ಹಾಕುತ್ತಿದ್ದ ಯುವ ಕಲಾವಿದ ರಾಕೇಶ್ (Rakesh) ಅವರು ಇಂದು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕೇವಲ 29 ವರ್ಷದ ಈ ಪ್ರತಿಭಾನ್ವಿತ ಕಲಾವಿದನ ಅಕಾಲಿಕ ನಿರ್ಗಮನ (Untimely Demise) ಇಡೀ ತೀರ್ಥಹಳ್ಳಿ ತಾಲ್ಲೂಕನ್ನು ಶೋಕಸಾಗರದಲ್ಲಿ ಮುಳುಗಿಸಿದೆ.&lt;/p&gt;&lt;h2&gt;&lt;strong&gt;ಪ್ರತಿಭಾನ್ವಿತ ಡಾನ್ಸ್ ಮಾಸ್ಟರ್ :&lt;/strong&gt;&lt;/h2&gt;&lt;p&gt;ತೀರ್ಥಹಳ್ಳಿಯ ಸೀಬಿನಕೆರೆ (Seebinakere) ನಿವಾಸಿಯಾಗಿದ್ದ ರಾಕೇಶ್, ವೃತ್ತಿಯಲ್ಲಿ ನೃತ್ಯ ತರಬೇತುದಾರರಾಗಿ (Dance Master) ಗುರುತಿಸಿಕೊಂಡಿದ್ದರು. ಕರಾವಳಿ ನಗರಿ ಉಡುಪಿಯಲ್ಲಿ (Udupi) ನೃತ್ಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಅನೇಕ ಯುವ ಪ್ರತಿಭೆಗಳಿಗೆ ತರಬೇತಿ ನೀಡುತ್ತಿದ್ದರು. ಇವರ ನೃತ್ಯದ ಚಾತುರ್ಯ ಮತ್ತು ಕಲಾ ಪ್ರೇಮಕ್ಕೆ ಸಾಕಷ್ಟು ಅಭಿಮಾನಿಗಳಿದ್ದರು.&lt;/p&gt;&lt;h2&gt;&lt;strong&gt;ಹುಲಿವೇಷದ ಅಬ್ಬರ ಮರೆಯಾಯಿತು:&lt;/strong&gt;&lt;/h2&gt;&lt;p&gt;ಕಳೆದ ಮೂರ್ನಾಲ್ಕು ವರ್ಷಗಳಿಂದ ತೀರ್ಥಹಳ್ಳಿ ದಸರಾ ಕಾರ್ಯಕ್ರಮದಲ್ಲಿ ರಾಕೇಶ್ ತಮ್ಮದೇ ಆದ ಕಲಾ ತಂಡದೊಂದಿಗೆ ಹುಲಿವೇಷ (Huli Vesha) ಹಾಕಿ ಕುಣಿಯುತ್ತಿದ್ದರು. ಇವರ ಶೈಲಿ ಮತ್ತು ಚೈತನ್ಯಕ್ಕೆ ದಸರಾ ಮೆರವಣಿಗೆಯಲ್ಲಿ ವಿಶೇಷ ಮೆರುಗು ಸಿಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಯಾವುದೋ ಮಾನಸಿಕ ಸಂಕಷ್ಟದಲ್ಲಿದ್ದರೋ ಅಥವಾ ವೈಯಕ್ತಿಕ ಕಾರಣವೋ ಎಂಬಂತೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಠಿಣ ನಿರ್ಧಾರ (Extreme Step) ಕೈಗೊಂಡು ತಮ್ಮ ಜೀವನದ ಪಯಣವನ್ನು ಮುಗಿಸಿದ್ದಾರೆ.&lt;/p&gt;&lt;h2&gt;&lt;strong&gt;ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ:&lt;/strong&gt;&lt;/h2&gt;&lt;p&gt;ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತೀರ್ಥಹಳ್ಳಿ ಪೊಲೀಸರು (Thirthahalli Police) ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯಾಸತ್ಯತೆ ಹೊರಬರಬೇಕಿದೆ. ಒಬ್ಬ ಉದಯೋನ್ಮುಖ ಕಲಾವಿದ ಇಷ್ಟು ಬೇಗ ಬದುಕಿನ ರಂಗಸ್ಥಳದಿಂದ ನಿರ್ಗಮಿಸಿರುವುದು ಕಲಾವಿದರ ವಲಯಕ್ಕೆ ತುಂಬಲಾರದ ನಷ್ಟವಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-popular-huli-vesha-artist-dance-master-rakesh-passes-away-in-thirthahalli/articleshow-07xfibu"/>
        </item>
        <item>
            <title><![CDATA[ಸಿದ್ದರಾಮಯ್ಯಗೆ ಪರೋಕ್ಷ ಟಾಂಗ್, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ..! ಉಲ್ಟಾ ಹೊಡೆದ ಶಾಸಕ ಬೇಳೂರು ಗೋಪಾಲಕೃಷ್ಣ]]></title>
            <link>https://kannada.asianetnews.com/karnataka-districts/belur-gopalakrishna-withdraws-resignation-threat-after-meeting-dk-shivakumar-kvn/articleshow-1mkepr4</link>
            <guid isPermaLink="true">https://kannada.asianetnews.com/karnataka-districts/belur-gopalakrishna-withdraws-resignation-threat-after-meeting-dk-shivakumar-kvn/articleshow-1mkepr4</guid>
            <pubDate>Tue, 04 Aug 2026 11:50:36 +0530</pubDate>
            <description><![CDATA[ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರಾಜೀನಾಮೆ ಘೋಷಿಸಿದ್ದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಡಿಕೆ ಶಿವಕುಮಾರ್ ಅವರ ಮಾತಿಗೆ ಬೆಲೆಕೊಟ್ಟು ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01gft02xqrepkcwm6v6afg1rxg,imgname-beluru.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬೆಳಗ್ಗೆ 10 ಗಂಟೆಗೆ ರಾಜೀನಾಮೆ ನೀಡುವುದಾಗಿ ನಿನ್ನೆ ಘೋಷಿಸಿದ್ದರು. ಆದರೆ ಇದೀಗ ಬೇಳೂರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡುವುದರ ಜತೆಗೆ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.&lt;/p&gt;&lt;p&gt;ಸಿದ್ದರಾಮಯ್ಯ ಅವರು ಈಗ ಖುಷಿ ಇದ್ದಾರಲ್ಲ. ಹಾಗೆ ನೂರು ವರ್ಷ ಖುಷಿಯಿಂದ ಇರಲಿ. ನನಗೆ ಕಣ್ಣೀರು ಬರ್ತಿದೆ. ಗ್ಲಾಸ್ ತೆಗೆದು ತೋರಿಸಲಾ ಎಂದು ಪರೋಕ್ಷವಾಗಿ ಮಾಜಿ ಸಿಎಂ ಮೇಲೆ ಬೇಳೂರು ಗೋಪಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;h2&gt;&lt;strong&gt;ರಾಜೀನಾಮೆ ಕೊಡೋದಿಲ್ಲ!&lt;/strong&gt;&lt;/h2&gt;&lt;p&gt;ರಾಜೀನಾಮೆ ನೀಡುವವರದ್ದನ್ನು ತಕ್ಷಣವೇ ಪರಿಗಣಿಸಿ ಎಂದಿದ್ದಕ್ಕೆ ನಾನೇನು ಭಯಪಟ್ಟಿಲ್ಲ. ನಾನು ಭಯಪಡುವ ಮನುಷ್ಯ ಅಲ್ಲ. ನಾನೇ ಸಿಎಂ, ಹಾಗಾಗಿ ನಿಮ್ಮ ಜತೆ ಇದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರಿಗಾಗಿ ನಾನು ರಾಜೀನಾಮೆ ನಿರ್ಣಯವನ್ನು ವಾಪಾಸ್ ಪಡೆದುಕೊಂಡಿದ್ದೇನೆ. ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ:&lt;/strong&gt;&lt;/h3&gt;&lt;p&gt;ಇನ್ನು ಮುಂದುವರೆದು, ಯಾದೂ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು. ಇಂದು ಸಭೆಯಿದೆ. ಅಲ್ಲಿ ಯಾರೂ ರಾಜೀನಾಮೆ ಕೊಡಬೇಡಿ ಎಂದು ಹೇಳುತ್ತೇನೆ. ಈಗಾಗಲೇ ಸುರ್ಜೇವಾಲಾ ಅವರು ಮಾತನಾಡಿದ್ದಾರೆ. ಅದೇ ರೀತಿ ಯಶವಂತರಾಯ ಗೌಡರ ಜತೆಯೂ ಸಹ ಮಾತನಾಡಿದ್ದಾರೆ. ನಾನು ಕ್ಷೇತ್ರದ ಜನರ ಜತೆ ಮಾತನಾಡುತ್ತೇನೆ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಹೀಗಾಗಿ ಎಲ್ಲರಿಗೂ ರಾಜೀನಾಮೆ ವಾಪಾಸ್ ಪಡೆಯಲು ಹೇಳುತ್ತೇನೆ ಎಂದು ಬೇಳೂರು ಹೇಳಿದ್ದಾರೆ.&lt;/p&gt;&lt;h3&gt;&lt;strong&gt;ನಿನ್ನೆ ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?&lt;/strong&gt;&lt;/h3&gt;&lt;p&gt;ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯಿಂದ ಸಚಿವ ಸ್ಥಾನ ಸಿಕ್ಕಿದ ಬೆನ್ನಲ್ಲೇ ಆಕ್ರೋಶಗೊಂಡಿದ್ದ ಬೇಳೂರು ಗೋಪಾಲಕೃಷ್ಣ, ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಎಕ್ಸ್&zwnj;ಕ್ಲೂಸಿವ್ ಆಗಿ ಮಾತನಾಡಿ ಇಲ್ಲಿ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ನಾನು ಕೂಡಾ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್&zwnj;ನಲ್ಲಿ ಮುಖ್ಯಮಂತ್ರಿಗಳ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದ ಆರೋಪಿಸಿದ್ದರು.&lt;/p&gt;]]></content:encoded>
            <category>shivamogga</category>
            <dc:creator>Naveen Kodase</dc:creator>
            <atom:link href="https://kannada.asianetnews.com/karnataka-districts/belur-gopalakrishna-withdraws-resignation-threat-after-meeting-dk-shivakumar-kvn/articleshow-1mkepr4"/>
        </item>
        <item>
            <title><![CDATA[School Holiday: ರಾಜ್ಯದಲ್ಲಿ ಭಾರೀ ಮಳೆ ಆರ್ಭಟ, ಈ ಜಿಲ್ಲೆಗಳ ಕೆಲವು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ!]]></title>
            <link>https://kannada.asianetnews.com/karnataka-districts/shivamogga-uttara-kannada-school-holiday-heavy-rain-august-3-2026/articleshow-340kxbd</link>
            <guid isPermaLink="true">https://kannada.asianetnews.com/karnataka-districts/shivamogga-uttara-kannada-school-holiday-heavy-rain-august-3-2026/articleshow-340kxbd</guid>
            <pubDate>Sun, 02 Aug 2026 21:42:36 +0530</pubDate>
            <description><![CDATA[ಕರ್ನಾಟಕದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳಲ್ಲಿ ಆಗಸ್ಟ್ 3ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz1kz6q8q04x5gj0w58c6ngp,imgname-shivamogga-uttara-kannada-school-holiday-1785687153384.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ (Karnataka) ಮಲೆನಾಡು (Malnad) ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ (Students) ಸುರಕ್ಷತೆಯನ್ನು (Safety) ಗಮನದಲ್ಲಿಟ್ಟುಕೊಂಡು ಶಿವಮೊಗ್ಗ (Shivamogga) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಗಳ ಕೆಲವು ತಾಲೂಕುಗಳಲ್ಲಿ ಆಗಸ್ಟ್ 3ರಂದು (ಸೋಮವಾರ) ಶಾಲೆ-ಕಾಲೇಜುಗಳಿಗೆ (Schools &amp;amp; Colleges) ರಜೆ (Holiday) ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಸಾಗರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ&lt;/strong&gt;&lt;/h2&gt;&lt;p&gt;ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagar) ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕು ಆಡಳಿತವು ರಜೆ ಘೋಷಿಸಿದೆ.&lt;/p&gt;&lt;p&gt;ಸಾಗರ ತಹಶೀಲ್ದಾರ್ (Tahsildar) ಡಾ. ಪ್ರತಿಭಾ (Dr. Prathibha) ಅವರು ಹೊರಡಿಸಿರುವ ಆದೇಶದಂತೆ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools), ಪ್ರೌಢಶಾಲೆಗಳು (High Schools), ಪದವಿ ಪೂರ್ವ ಕಾಲೇಜುಗಳು (PU Colleges), ಡಿಪ್ಲೊಮಾ ಕಾಲೇಜುಗಳು (Diploma Colleges) ಹಾಗೂ ಐಟಿಐ (ITI) ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೂ ರಜೆ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆ ಜಿಲ್ಲಾಡಳಿತ (District Administration) ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ (Deputy Commissioner) ಲಕ್ಷ್ಮೀ ಪ್ರಿಯಾ (Lakshmi Priya) ಅವರು ಹೊರಡಿಸಿರುವ ಆದೇಶದಂತೆ ದಾಂಡೇಲಿ (Dandeli) ಹಾಗೂ ಜೋಯಿಡಾ (Joida) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools) ಮತ್ತು ಪ್ರೌಢಶಾಲೆಗಳಿಗೆ (High Schools) ಆಗಸ್ಟ್ 3ರಂದು ರಜೆ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಸುರಕ್ಷತೆಗೆ ಮೊದಲ ಆದ್ಯತೆ&lt;/strong&gt;&lt;/h2&gt;&lt;p&gt;ನಿರಂತರ ಮಳೆ (Continuous Rain), ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹಾಗೂ ಗುಡ್ಡ ಪ್ರದೇಶಗಳಲ್ಲಿ (Hilly Areas) ಭೂಕುಸಿತದ (Landslide) ಆತಂಕ ಇರುವ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪೋಷಕರು (Parents) ಹಾಗೂ ಸಾರ್ವಜನಿಕರು ಜಿಲ್ಲಾಡಳಿತ (District Administration) ಮತ್ತು ಹವಾಮಾನ ಇಲಾಖೆ (Weather Department) ನೀಡುವ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-uttara-kannada-school-holiday-heavy-rain-august-3-2026/articleshow-340kxbd"/>
        </item>
        <item>
            <title><![CDATA[ಶರಾವತಿ ಪಂಪ್ಡ್‌ ಸ್ಟೋರೇಜ್‌ ಶೀಘ್ರದಲ್ಲೇ ಶುರು ಮಾಡ್ತೇವೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್]]></title>
            <link>https://kannada.asianetnews.com/karnataka-districts/sharavathi-pumped-storage-project-will-be-implemented-despite-opposition-says-cm-dk-shivakumar-kvn/articleshow-92fw57u</link>
            <guid isPermaLink="true">https://kannada.asianetnews.com/karnataka-districts/sharavathi-pumped-storage-project-will-be-implemented-despite-opposition-says-cm-dk-shivakumar-kvn/articleshow-92fw57u</guid>
            <pubDate>Tue, 21 Jul 2026 09:21:47 +0530</pubDate>
            <description><![CDATA[ವಿರೋಧದ ನಡುವೆಯೂ ಶರಾವತಿ ಪಂಪ್ಡ್&zwnj; ಸ್ಟೋರೇಜ್&zwnj; ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ, ಎಲ್ಲಾ ಅನುಮತಿಗಳನ್ನು ಪಡೆದು ಯೋಜನೆ ಅನುಷ್ಠಾನಗೊಳಿಸಲಾಗುವುದು ಮತ್ತು ಹಿಂದಿನ ಬಿಜೆಪಿ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ky1cd1x6vmrrs5h27hz5wa3m,imgname-dk-shivakumar-1784605476771.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಶರಾವತಿ ಪಂಪ್ಡ್&zwnj; ಸ್ಟೋರೇಜ್&zwnj; ಯೋಜನೆಯನ್ನು ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಡಬಲ್&zwnj; ಎಂಜಿನ್&zwnj; ಬಿಜೆಪಿ ಸರ್ಕಾರವೇ ಮಾಡಬೇಕಿತ್ತು. ಆದರೆ, ಆ ಡಬಲ್&zwnj; ಎಂಜಿನ್&zwnj; ಸ್ಟಾರ್ಟ್&zwnj; ಆಗಲೇ ಇಲ್ಲ. ಈಗ ನಾವು ಎಲ್ಲರ ಅನುಮತಿ ಪಡೆದ ನಂತರ ವಿರೋಧ ವ್ಯಕ್ತವಾದರೂ ಶರಾವತಿ ಪಂಪ್ಡ್&zwnj; ಸ್ಟೋರೇಜ್&zwnj; ಯೋಜನೆ ಅನುಷ್ಠಾನಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ತಿಳಿಸಿದರು.&lt;/p&gt;&lt;p&gt;ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕರ್ನಾಟಕ ವಿದ್ಯುತ್&zwnj; ನಿಗಮ ನಿಯಮಿತದ 57ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿ.ಕೆ.ಶಿವಕುಮಾರ್&zwnj;, ಈ ಹಿಂದೆ ಶರಾವತಿ ಜಲವಿದ್ಯುತ್&zwnj; ಉತ್ಪಾದನಾ ಘಟಕದಲ್ಲಿ ವಿದ್ಯುತ್&zwnj; ಅವಘಡ ಸಂಭವಿಸಿ ಸುಟ್ಟು ಹೋದಾಗ ಕೇವಲ 28 ದಿನಗಳಲ್ಲಿ 3 ಯುನಿಟ್ ಕೆಲಸ ಮಾಡುವಂತೆ ಮಾಡಿದ್ದೆವು. ಅದಾದ ನಂತರ ಶರಾವತಿ ಯೋಜನೆಯ ಮುಂದುವರಿದ ಭಾಗವಾದ ಶರಾವತಿ ಪಂಪ್ಡ್&zwnj; ಸ್ಟೋರೇಜ್&zwnj; ಯೋಜನೆಯನ್ನು ಹಿಂದಿನ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸುತ್ತದೆ ಎಂದು ತಿಳಿದಿದ್ದೆವು. ಆದರೆ, ಯೋಜನೆ ಅನುಷ್ಠಾನಗೊಳಿಸುವತ್ತ ಡಬಲ್&zwnj; ಎಂಜಿನ್&zwnj; ಸ್ಟಾರ್ಟ್&zwnj; ಆಗಲಿಲ್ಲ. ಈಗ ನಾವು ಯೋಜನೆಗೆ ಸಂಬಂಧಿಸಿ ಎಲ್ಲ ರೀತಿಯ ಅನುಮತಿ ಪಡೆಯಲು ಕ್ರಮ ಕೈಗೊಳ್ಳುತ್ತಿದ್ದೇವೆ. ಅನುಮತಿ ದೊರೆತ ನಂತರ ಯಾವುದೇ ವಿರೋಧ ಬಂದರೂ ಪರಿಸರಕ್ಕೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳಿಸುತ್ತೇವೆ ಎಂದರು.&lt;/p&gt;&lt;h2&gt;&lt;strong&gt;1.61 ಕೋಟಿ ಕುಟುಂಬಗಳಿಗೆ ಬೆಳಕು:&amp;nbsp;&lt;/strong&gt;&lt;/h2&gt;&lt;p&gt;ರಾಜ್ಯದ ಇಂಧನ ಇಲಾಖೆ 1.61 ಕೋಟಿ ಕುಟುಂಬಗಳಿಗೆ ಬೆಳಕು ನೀಡುತ್ತಿದೆ. ಅದರಲ್ಲೂ ಗೃಹಜ್ಯೋತಿಗೆ ರಾಜ್ಯ ಸರ್ಕಾರ 10 ಸಾವಿರ ಕೋಟಿ ರು. ವ್ಯಯಿಸುತ್ತಿದೆ. ಜತೆಗೆ ಕೃಷಿ ಪಂಪ್&zwnj;ಸೆಟ್&zwnj;ಗೆ ಉಚಿತ ವಿದ್ಯುತ್&zwnj; ನೀಡಲು 20 ಸಾವಿರ ಕೋಟಿ ರು. ಖರ್ಚು ಮಾಡುತ್ತಿದೆ. ಇಂಧನ ಇಲಾಖೆಯು ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಕೆಲಸ ಮಾಡುತ್ತಿದೆ. ಸರ್ಕಾರದಿಂದ ಹಣ ನೀಡುವುದು ಬಾಕಿಯಿದ್ದರೂ, ಜನರ ಸೇವೆ ಮಾಡುತ್ತಿದೆ ಎಂದು ತಿಳಿಸಿದರು.&lt;/p&gt;&lt;p&gt;ಈ ಹಿಂದೆ ನಾನು ಇಂಧನ ಸಚಿವನಾಗಿದ್ದಾಗ ಪಾವಗಡ ಸೌರ ವಿದ್ಯುತ್&zwnj; ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಸಾಕಷ್ಟು ವಿರೋಧಗಳು ವ್ಯಕ್ತವಾದವು. ಆದರೆ ನಾನು ಯಾವುದೇ ಭೂಸ್ವಾಧೀನ ಮಾಡಿಕೊಳ್ಳದೆ ರೈತರ ಭೂಮಿಯನ್ನು 25 ವರ್ಷಕ್ಕೆ ಬಾಡಿಗೆಗೆ ಪಡೆದು ಯೋಜನೆ ಅನುಷ್ಠಾನಗೊಳಿಸಿದೆ. ಇದೀಗ ಯೋಜನೆ ವಿಸ್ತರಿಸಲು ಮತ್ತೆ 10 ಸಾವಿರ ಎಕರೆ ನೀಡಲು ರೈತರೇ ಮುಂದೆ ಬಂದಿದ್ದಾರೆ. ಅದರ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಯೋಜನೆ ವಿಸ್ತರಿಸಲಾಗುವುದು ಎಂದು ವಿವರಿಸಿದರು.&lt;/p&gt;&lt;p&gt;ಇಂಧನ ಸಚಿವ ಕೆ.ಜೆ.ಜಾರ್ಜ್&zwnj; ಮಾತನಾಡಿ, ಶರಾವತಿ ಪಂಪ್ಡ್&zwnj; ಸ್ಟೋರೇಜ್&zwnj; ಯೋಜನೆ ಅನುಷ್ಠಾನಕ್ಕೆ ಮುನ್ನವೇ ಕೆಲವರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯೋಜನೆಗೆ 125 ಎಕರೆ ಭೂಮಿಯಷ್ಟೇ ಬಳಕೆಯಾಗುತ್ತದೆ. ಇನ್ನು, ಇಲ್ಲಿ ಕಡಿಯಲಾಗುವ ಮರಗಳ ಬದಲಿಗೆ ಬೇರೆಡೆ 10 ಪಟ್ಟು ಹೆಚ್ಚಿನ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹಾಗೆಯೇ, ಯೋಜನೆ ಅನುಷ್ಠಾನಗೊಳಿಸಲಾಗುವ ಅರಣ್ಯ ಭೂಮಿಯಲ್ಲಿ ಗೋಲ್ಡನ್&zwnj; ಟೇಲ್&zwnj; ಮಂಗಗಳಿವೆ. ಅವುಗಳಿಗೂ ಪುನರ್ವಸತಿ ಕಲ್ಪಿಸಲಾಗುವುದು. ಯೋಜನೆಗೆ ಬೇಕಾಗುವ ಎಲ್ಲ ಅನುಮತಿ ಪಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.&lt;/p&gt;&lt;p&gt;ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯುತ್&zwnj; ಬೇಡಿಕೆ ಹೆಚ್ಚುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂಬುದಕ್ಕೆ ಇದು ಸಾಕ್ಷಿ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ 200 ಯುನಿಟ್&zwnj;ವರೆಗೆ ಉಚಿತ ವಿದ್ಯುತ್&zwnj; ನೀಡಲಾಗುತ್ತಿದೆ. ಈ ಯೋಜನೆ ಫಲಾನುಭವಿಗಳ ಪಟ್ಟಿ ಪರಿಷ್ಕರಿಸಲಾಗುತ್ತಿದ್ದು, ಅರ್ಹರಿಗೆ ಮಾತ್ರ ಯೋಜನೆ ಲಾಭ ಪಡೆಯುವಂತೆ ಮಾಡಲಾಗುತ್ತಿದೆ. ಗೃಹಜ್ಯೋತಿ ಯಶಸ್ವಿ ಅನುಷ್ಠಾನದಲ್ಲಿ ಇಂಧನ ಇಲಾಖೆ ಅಡಿಯ ಎಲ್ಲ ಸಂಸ್ಥೆಗಳ ಸಿಬ್ಬಂದಿ, ಅಧಿಕಾರಿಗಳ ಶ್ರಮ ಬಹಳಷ್ಟಿದೆ ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;8 ಮಂದಿಗೆ ಗೌರವ:&amp;nbsp;&lt;/strong&gt;&lt;/h3&gt;&lt;p&gt;ಕೆಪಿಸಿಎಲ್&zwnj;ನಲ್ಲಿ 25 ವರ್ಷ ಸೇವೆ ಸಲ್ಲಿಸಿದ 8 ಮಂದಿಯನ್ನು ಗೌರವಿಸಲಾಯಿತು. ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್&zwnj; ಗುಪ್ತಾ, ಕೆಪಿಸಿಎಲ್&zwnj; ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್&zwnj; ಇತರರಿದ್ದರು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/sharavathi-pumped-storage-project-will-be-implemented-despite-opposition-says-cm-dk-shivakumar-kvn/articleshow-92fw57u"/>
        </item>
        <item>
            <title><![CDATA[Shivamogga shock: ತೀರ್ಥಹಳ್ಳಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 60+ ಮಕ್ಕಳು ಅಸ್ವಸ್ಥ!]]></title>
            <link>https://kannada.asianetnews.com/education/children-fell-ill-afterfood-at-national-residency-residential-school-konandur-thirthahalli-rav/articleshow-9osausu</link>
            <guid isPermaLink="true">https://kannada.asianetnews.com/education/children-fell-ill-afterfood-at-national-residency-residential-school-konandur-thirthahalli-rav/articleshow-9osausu</guid>
            <pubDate>Sun, 26 Jul 2026 07:48:42 +0530</pubDate>
            <description><![CDATA[&lt;p&gt;ಕಲುಷಿತ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kye3etr114djgxm32nrshaz9,imgname-----------------------2026-07-26t072947.445-1785032305409.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತೀರ್ಥಹಳ್ಳಿ (ಜು.26):&lt;/strong&gt; ಕಲುಷಿತ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿದೆ.&amp;nbsp;&lt;/p&gt;&lt;h2&gt;ಕಲುಷಿತ ಆಹಾರ ಸೇವಿಸಿ ವಾಂತಿ ಭೇದಿ&lt;/h2&gt;&lt;p&gt;ಶುಕ್ರವಾರ ರಾತ್ರಿ ಅವಲಕ್ಕಿ ಹಾಗೂ ಬೇಳೆ, ಚಪಾತಿ ಸೇವಿಸಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಸಮಸ್ಯೆ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ತೀವ್ರ ಅಸ್ವಸ್ಥಗೊಂಡಿದ್ದ 11 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;h3&gt;ವಸತಿ ಶಾಲೆ ನೈರ್ಮಲ್ಯದ ಬಗ್ಗೆ ಪೋಷಕರು ಅಸಮಾಧಾನ&lt;/h3&gt;&lt;p&gt;ವಸತಿ ಶಾಲೆಯ ನೈರ್ಮಲ್ಯದ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹಂತ ಹಂತವಾಗಿ ಕೆಲವು ವಿದ್ಯಾರ್ಥಿಗಳು ಗುಣಮುಖರಾಗುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.&lt;/p&gt;&lt;p&gt;ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲ. ಆಹಾರ ಪರೀಕ್ಷೆಯ ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/children-fell-ill-afterfood-at-national-residency-residential-school-konandur-thirthahalli-rav/articleshow-9osausu"/>
        </item>
        <item>
            <title><![CDATA[ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಸುವರ್ಣ ನ್ಯೂಸ್‌ಗೆ ಬೇಳೂರು ಗೋಪಾಲಕೃಷ್ಣ ಅಧಿಕೃತ ಹೇಳಿಕೆ]]></title>
            <link>https://kannada.asianetnews.com/karnataka-districts/karnataka-cabinet-row-congress-mla-belur-gopalakrishna-set-to-resign-kvn/articleshow-be3wy8w</link>
            <guid isPermaLink="true">https://kannada.asianetnews.com/karnataka-districts/karnataka-cabinet-row-congress-mla-belur-gopalakrishna-set-to-resign-kvn/articleshow-be3wy8w</guid>
            <pubDate>Mon, 03 Aug 2026 15:05:13 +0530</pubDate>
            <description><![CDATA[ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ, ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿ ಪ್ರಭಾವಿ ಕುಟುಂಬಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01cbnxv039qddmf1tkfbzq862t,imgname-Beluru-Gopala-Krishna.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಕಾಂಗ್ರೆಸ್&zwnj;ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇಂದು 20 ಸಚಿವರ ಪಟ್ಟಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆಯಾಗಿದೆ. ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದ ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಗೋಪಾಲಕೃಷ್ಣಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ತಮ್ಮ ಶಾಸಕ ಸ್ಥಾನಕ್ಕೆ ನಾಳೆ ಬೆಳಗ್ಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಏಷ್ಯಾನೆಟ್&zwnj; ಸುವರ್ಣ ನ್ಯೂಸ್&zwnj;ಗೆ ಎಕ್ಸ್&zwnj;ಕ್ಲೂಸಿವ್ ಹೇಳಿಕೆ ನೀಡಿದ್ದಾರೆ.&lt;/p&gt;&lt;p&gt;ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ 20 ಸ್ಥಾನಗಳು ಬಾಕಿ ಉಳಿದಿದ್ದವು. ಇಂದು ಕಾಂಗ್ರೆಸ್ ಹೈಕಮಾಂಡ್&zwnj; ಸಾಕಷ್ಟು ಅಳೆದುತೂಗಿ 20 ಸಚಿವರ ಹೆಸರನ್ನು ಅಂತಿಮಗೊಳಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯಿಂದ ಮತ್ತೊಮ್ಮೆ ಮಧು ಬಂಗಾರಪ್ಪ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಲಾಗಿದೆ. ಈಡಿಗ ಕೋಟಾದಡಿ ಸಚಿವರಾಗಲು ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ಲಾಭಿ ನಡೆಸಿದ್ದರು. ಜತೆಗೆ ಡಿಕೆ ಸಂಪುಟದಲ್ಲಿ ಸಚಿವರಾಗುವ ವಿಶ್ವಾಸದಲ್ಲಿದ್ದರು. ಆದರೆ ಮತ್ತೊಮ್ಮೆ ಬೇಳೂರು ಗೋಪಾಲಕೃಷ್ಣಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಕೊಟ್ಟಿದೆ.&lt;/p&gt;&lt;h2&gt;&lt;strong&gt;ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೇಳೂರು ಘೋಷಣೆ:&lt;/strong&gt;&lt;/h2&gt;&lt;p&gt;ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಎಕ್ಸ್&zwnj;ಕ್ಲೂಸಿವ್ ಆಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ನಾನೇನು ಪಕ್ಷ ವಿರೋಧಿ ಚಟುವಟಿಕೆ ಮಾಡಿರಲಿಲ್ಲ. ಇಲ್ಲಿ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ನಾನು ಕೂಡಾ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್&zwnj;ನಲ್ಲಿ ಮುಖ್ಯಮಂತ್ರಿಗಳ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದ ಆರೋಪಿಸಿದ್ದಾರೆ.&lt;/p&gt;&lt;p&gt;ಇನ್ನು ಮುಂದುವರೆದು, ನಿನ್ನೆಯವರೆಗೂ ಸಚಿವರಾಗುವ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಕಡೆಯ ಕ್ಷಣದಲ್ಲಿ ತಮ್ಮ ಹೆಸರು ಕೈತಪ್ಪಿದೆ. ಹೀಗಾಗಿ ಈ ಅನ್ಯಾಯದಿಂದ ನೊಂದು ನಾಳೆ ಬೆಳಗ್ಗೆ ಅಂದರೆ ಆಗಸ್ಟ್&zwnj; 4ರಂದು ಬೆಳಗ್ಗೆ 10 ಗಂಟೆಗೆ ತಮ್ಮ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇವೆ. ಇದು ಒತ್ತಡ ತಂತ್ರವಲ್ಲ, ಖಂಡಿತ ನಾಳೆ ಬೆಳಗ್ಗೆ 10 ಗಂಟೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.&lt;/p&gt;&lt;h3&gt;&lt;strong&gt;ಡಿಕೆ ಸಚಿವ ಸಂಪುಟ ಸೇರುತ್ತಿರುವ 20 ಶಾಸಕರ ಮಾಹಿತಿ:&lt;/strong&gt;&lt;/h3&gt;&lt;p&gt;1 ಪಿ.ಎಂ ನರೇಂದ್ರಸ್ವಾಮಿ ಮಳವಳ್ಳಿ (2ನೇ ಬಾರಿ ಸಚಿವ ಸ್ಥಾನ )&lt;/p&gt;&lt;p&gt;2 ಶಿವರಾಜ ತಂಗಡಗಿ ಕನಕಗಿರಿ (4ನೇ ಬಾರಿ ಸಚಿವ ಸ್ಥಾನ&lt;/p&gt;&lt;p&gt;3 ರುದ್ರಪ್ಪ ಲಮಾಣಿ ಹಾವೇರಿ (ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;4 ಕೆ.ಎಸ್ ಬಸವಂತಪ್ಪ ಮಾಯಕೊಂಡ (ಮೊದಲ ಬಾರಿ ಸಚಿವ ಸ್ಥಾನ&lt;/p&gt;&lt;p&gt;5 ಬಿ.ನಾಗೇಂದ್ರ ಬಳ್ಳಾರಿ (2ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;6 ಟಿ ರಘುಮೂರ್ತಿ ಚಳ್ಳಕೆರೆ (ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;7 ಜಮೀರ್ ಅಹಮದ್ ಖಾನ್ ಚಾಮರಾಜಪೇಟೆ (4 ಬಾರಿ ಸಚಿವ ಸ್ಥಾನ)&lt;/p&gt;&lt;p&gt;8 ರಿಜ್ವಾನ್ ಅರ್ಷದ್ ಶಿವಾಜಿನಗರ (ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;9 ಸಂತೋಷ್ ಲಾಡ್&zwnj; ಕಲಘಟಗಿ (3ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;10 ಮಧು ಬಂಗಾರಪ್ಪ ಸೊರಬ (2ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;11 ಸಿ ಪುಟ್ಟರಂಗಶೆಟ್ಟಿ ಚಾಮರಾಜನಗರ (2ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;12 ಎಸ್ ಎಸ್ ಮಲ್ಲಿಕಾರ್ಜುನ್(ಮೂರನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;13 ಅಜಯ್ ಸಿಂಗ್ ಜೇವರ್ಗಿ (ಮೊದಲ ಬಾರಿ ಸಚಿವ ಸ್ಥಾನ&lt;/p&gt;&lt;p&gt;14 ಎನ್.ಚಲುವರಾಯಸ್ವಾಮಿ ನಾಗಮಂಗಲ (3ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;15 ಕೆ.ಎಂ ಶಿವಲಿಂಗೇಗೌಡ ಅರಸೀಕೆರೆ ( ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;16 ಎಚ್.ಸಿ ಬಾಲಕೃಷ್ಣ ಮಾಗಡಿ (ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;17 ಗಾಯತ್ರಿ ಶಾಂತೇಗೌಡ ಪರಿಷತ್ ಸದಸ್ಯೆ (ಮೊದಲ ಬಾರಿ ಶಾಸಕಿ, ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;18 ಬಸವರಾಜ್ ರಾಯರೆಡ್ಡಿ ಯಲಬುರ್ಗಾ (4ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;19 ವಿಜಯಾನಂದ ಕಾಶಪ್ಪನವರ್ ಹುನಗುಂದ (ಮೊದಲ ಬಾರಿ ಸಚಿವ ಸ್ಥಾನ)&lt;/p&gt;&lt;p&gt;20 ಲಕ್ಷ್ಮಣ ಸವದಿ ಅಥಣಿ (3ನೇ ಬಾರಿ ಸಚಿವ ಸ್ಥಾನ)&lt;/p&gt;&lt;p&gt;&lt;/p&gt;]]></content:encoded>
            <category>shivamogga</category>
            <dc:creator>Naveen Kodase</dc:creator>
            <atom:link href="https://kannada.asianetnews.com/karnataka-districts/karnataka-cabinet-row-congress-mla-belur-gopalakrishna-set-to-resign-kvn/articleshow-be3wy8w"/>
        </item>
        <item>
            <title><![CDATA[ಅರಣ್ಯ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ 'ಆ ಘಟನೆ'ಗೆ ಬಿಗ್ ಟ್ವಿಸ್ಟ್!  ಆರೋಪಿ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ?]]></title>
            <link>https://kannada.asianetnews.com/karnataka-districts/shivamogga-hosanagar-accused-arrested-after-attacking-forest-staff-and-fleeing-rav/articleshow-cyed6yh</link>
            <guid isPermaLink="true">https://kannada.asianetnews.com/karnataka-districts/shivamogga-hosanagar-accused-arrested-after-attacking-forest-staff-and-fleeing-rav/articleshow-cyed6yh</guid>
            <pubDate>Mon, 03 Aug 2026 13:00:51 +0530</pubDate>
            <description><![CDATA[ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸಿ, ನ್ಯಾಯಾಂಗ ಬಂಧನದಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಮರುಬಂಧಿಸಿದ್ದಾರೆ. ಹೊಸನಗರ ತಾಲೂಕಿನ ವೆಂಕಟೇಶ್&zwnj;ನನ್ನು ರಿಪ್ಪನ್&zwnj;ಪೇಟೆ ಪೊಲೀಸರು ಆತನ ಮನೆಯ ಸಮೀಪವೇ ಕಾರ್ಯಾಚರಣೆ ನಡೆಸಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz381h3z5pcpscw38nw03nbk,imgname-----------------------2026-08-03t125218.291-1785741755519.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಆ.3): &lt;/strong&gt;ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿ ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.&lt;/p&gt;&lt;p&gt;ಹೊಸನಗರ ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್ (36) ಬಂಧಿತ. ಅರಣ್ಯ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಜು.15ರಂದು ಜೆಎಂಎಫ್&zwnj;ಸಿ ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಜೀಪಿನಲ್ಲಿ ಜೈಲಿಗೆ ಕರೆದೊಯ್ಯುವಾಗ ಬಟ್ಟೆಮಲ್ಲಪ್ಪ ಗ್ರಾಮ(Battemallappa village)ದ ಹೋಟೆಲ್ ಬಳಿ ಆಹಾರ ತರಲು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜೀಪಿನಲ್ಲಿದ್ದ ಸಿಬ್ಬಂದಿ ಚಕ್ರಪಾಣಿ ಮತ್ತು ಚಾಲಕ ನಾಗೇಂದ್ರ ಅವರ ಮೇಲೆ ದಾಳಿ ನಡೆಸಿ ಆರೋಪಿ ಪರಾರಿಯಾಗಿದ್ದ. ಈ ಕುರಿತು ಕೊಲ್ಲೂರು ವನ್ಯಜೀವಿ ವಲಯದ ಉಪವಲಯ ಅರಣ್ಯಾಧಿಕಾರಿ ಸುನೀಲ್ ಡಿ. ಕುಂಬಾ&zwnj;ರ್ ನೀಡಿದ ದೂರಿನನ್ವಯ ರಿಪ್ಪನ್ ಪೇಟೆ ಪೊಲೀಸ್&zwnj; ಠಾಣೆಯಲ್ಲಿ ದೂರು ದಾಖಲಾಗಿತ್ತು.&lt;/p&gt;&lt;p&gt;ಸಿಪಿಐ ಗೌಡಪ್ಪ ಗೌಡ ಪಿಎಸ್&zwnj;ಐ ಶಂಕರ ಗೌಡ ಪಾಟೀಲ್ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿ ವೆಂಕಟೇಶ್ ನನ್ನು ಆತನ ಮನೆಯ ಸಮೀಪವೇ ಬಂಧಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/shivamogga-hosanagar-accused-arrested-after-attacking-forest-staff-and-fleeing-rav/articleshow-cyed6yh"/>
        </item>
        <item>
            <title><![CDATA[ಮೈಸೂರು ಮಹಾರಾಜರಿಗೆ ಸಂತಾನ ಭಾಗ್ಯ ಕರುಣಿಸಿದ್ದ ಆ ಸ್ವಾಮಿಗಳು; ಕರ್ನಾಟಕದಲ್ಲಿ ಅವರ ಆಶ್ರಮ ಎಲ್ಲಿದೆ?]]></title>
            <link>https://kannada.asianetnews.com/karnataka-districts/mysore-maharaja-blessed-with-child-saint-sridhar-swami-ashram-karnataka-suh/articleshow-h0gb5yh</link>
            <guid isPermaLink="true">https://kannada.asianetnews.com/karnataka-districts/mysore-maharaja-blessed-with-child-saint-sridhar-swami-ashram-karnataka-suh/articleshow-h0gb5yh</guid>
            <pubDate>Fri, 31 Jul 2026 13:04:39 +0530</pubDate>
            <description><![CDATA[&lt;p&gt;ಈ ಸ್ಥಳ ಇಂದು ಸಾವಿರಾರು ಭಕ್ತರ ಪಾಲಿಗೆ ಪವಿತ್ರ ಕ್ಷೇತ್ರವಾಗಿದೆ. ಆಶ್ರಮಕ್ಕೆ ಭೇಟಿ ನೀಡುವ ಭಕ್ತರನ್ನು ವಿಶೇಷವಾಗಿ ಸೆಳೆಯುವುದು ಇಲ್ಲಿನ ಪವಿತ್ರ ತೀರ್ಥ ಮತ್ತು ಜಲಧಾರೆ. ಅಂದು ನೀರಿನ ಸೌಲಭ್ಯವೇ ಇಲ್ಲದಿದ್ದ ಈ ಪ್ರದೇಶದಲ್ಲಿ ಭಕ್ತರ ಕಷ್ಟವನ್ನು ನಿವಾರಿಸುವ ಉದ್ದೇಶದಿಂದ ಸ್ವಾಮಿಗಳು ಈ ತೀರ್ಥವನ್ನು ಸೃಷ್ಟಿಸಿದರು ಎಂದು ಭಕ್ತರು ನಂಬುತ್ತಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyvhh6rt7t9bewcfzvc4d4tz,imgname-mysore-raja-1785483270938.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಮೀಪದಲ್ಲಿರುವ ವರದಪುರ (ವರದಹಳ್ಳಿ) ಧಾರ್ಮಿಕ ಹಾಗೂ ಆಧ್ಯಾತ್ಮಿಕವಾಗಿ ಪ್ರಸಿದ್ಧಿ ಪಡೆದಿರುವ ಪುಣ್ಯಕ್ಷೇತ್ರ. ಸಮರ್ಥ ರಾಮದಾಸರ ಪರಂಪರೆಯ ಪರಮ ಪೂಜ್ಯ ಶ್ರೀ ಶ್ರೀಧರ ಸ್ವಾಮಿಗಳು ತಪಸ್ಸು ಮಾಡಿದ ಈ ಸ್ಥಳ ಇಂದು ಸಾವಿರಾರು ಭಕ್ತರ ಪಾಲಿಗೆ ಪವಿತ್ರ ಕ್ಷೇತ್ರವಾಗಿದೆ. ಆಶ್ರಮಕ್ಕೆ ಭೇಟಿ ನೀಡುವ ಭಕ್ತರನ್ನು ವಿಶೇಷವಾಗಿ ಸೆಳೆಯುವುದು ಇಲ್ಲಿನ ಪವಿತ್ರ ತೀರ್ಥ ಮತ್ತು ಜಲಧಾರೆ. ಶ್ರೀಧರ ಸ್ವಾಮಿಗಳೇ ಸ್ವತಃ ತಮ್ಮ ಹಸ್ತದಿಂದ ಮಣ್ಣನ್ನು ಬಗೆದು ಈ ಜಲಧಾರೆಯನ್ನು ಉದ್ಭವಗೊಳಿಸಿದರು ಎಂಬ ಐತಿಹ್ಯವಿದೆ. ಅಂದು ನೀರಿನ ಸೌಲಭ್ಯವೇ ಇಲ್ಲದಿದ್ದ ಈ ಪ್ರದೇಶದಲ್ಲಿ ಭಕ್ತರ ಕಷ್ಟವನ್ನು ನಿವಾರಿಸುವ ಉದ್ದೇಶದಿಂದ ಸ್ವಾಮಿಗಳು ಈ ತೀರ್ಥವನ್ನು ಸೃಷ್ಟಿಸಿದರು ಎಂದು ಭಕ್ತರು ನಂಬುತ್ತಾರೆ.&lt;/p&gt;&lt;h2&gt;365 ದಿನವೂ ಹರಿಯುವ ಜಲಧಾರೆ&lt;/h2&gt;&lt;p&gt;ವರದಪುರದ ಈ ಪವಿತ್ರ ತೀರ್ಥವು ವರ್ಷದ 365 ದಿನವೂ ನಿರಂತರವಾಗಿ ಹರಿಯುತ್ತದೆ ಎಂಬುದು ಇಲ್ಲಿಗೆ ಬರುವ ಭಕ್ತರ ನಂಬಿಕೆ. ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸಿ ತೀರ್ಥಸ್ನಾನ ಮಾಡುತ್ತಾರೆ. ಕೆಲವರು ಈ ಪವಿತ್ರ ನೀರನ್ನು ಲೀಟರ್&zwnj;ಗಟ್ಟಲೆ ತಮ್ಮ ಮನೆಗಳಿಗೆ ಕೊಂಡೊಯ್ಯುತ್ತಾರೆ. ಈ ತೀರ್ಥದ ನೀರನ್ನು ಹಲವು ವರ್ಷಗಳ ಕಾಲ ಇಟ್ಟರೂ ಹಾಳಾಗುವುದಿಲ್ಲ ಎಂಬ ನಂಬಿಕೆಯೂ ಭಕ್ತರಲ್ಲಿ ಇದೆ. ಕೆಲವರು 40ರಿಂದ 50 ವರ್ಷಗಳ ಕಾಲ ಸಂಗ್ರಹಿಸಿಟ್ಟರೂ ನೀರು ಶುದ್ಧವಾಗಿಯೇ ಉಳಿದಿದೆ ಎಂದು ಹೇಳುತ್ತಾರೆ.&lt;/p&gt;&lt;h2&gt;ತೀರ್ಥಸ್ನಾನ ಮಾಡಿದರೆ ಕಷ್ಟಗಳು ದೂರವಾಗುತ್ತವೆಯೇ?&lt;/h2&gt;&lt;p&gt;ವರದಪುರದ ತೀರ್ಥಕ್ಕೆ ವಿಶೇಷ ಆಧ್ಯಾತ್ಮಿಕ ಶಕ್ತಿ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ. ಜೀವನದಲ್ಲಿ ಕಷ್ಟ-ನಷ್ಟಗಳನ್ನು ಎದುರಿಸುತ್ತಿರುವವರು, ಅನಾರೋಗ್ಯ ಅಥವಾ ಮಾನಸಿಕ ಸಂಕಷ್ಟಗಳಿಂದ ಬಳಲುತ್ತಿರುವವರು ನಂಬಿಕೆಯಿಂದ ಇಲ್ಲಿಗೆ ಬಂದು ತೀರ್ಥಸ್ನಾನ ಹಾಗೂ ತೀರ್ಥ ಸೇವನೆ ಮಾಡಿದರೆ ತಮ್ಮ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ ಎಂದು ಅನೇಕ ಭಕ್ತರು ನಂಬುತ್ತಾರೆ. ಆದರೆ ಇವು ಭಕ್ತರ ನಂಬಿಕೆ ಮತ್ತು ಸ್ಥಳೀಯ ಐತಿಹ್ಯಗಳಿಗೆ ಸಂಬಂಧಿಸಿದ ವಿಚಾರಗಳಾಗಿದ್ದು, ವೈದ್ಯಕೀಯ ಸಮಸ್ಯೆಗಳಿಗೆ ವೈದ್ಯರ ಸಲಹೆಯನ್ನು ಪಡೆಯುವುದು ಅಗತ್ಯ.&lt;/p&gt;&lt;h2&gt;ಮೈಸೂರು ಮಹಾರಾಜರ ವಂಶಕ್ಕೂ ಶ್ರೀಧರ ಸ್ವಾಮಿಗಳ ಆಶೀರ್ವಾದ?&lt;/h2&gt;&lt;p&gt;ಶ್ರೀಧರ ಸ್ವಾಮಿಗಳ ಕುರಿತಾಗಿ ಹಲವು ಐತಿಹ್ಯಗಳು ಇಂದಿಗೂ ಪ್ರಚಲಿತದಲ್ಲಿವೆ. ಮೈಸೂರು ಮಹಾರಾಜರ ಪರಂಪರೆಯ ಶ್ರೀಕಂಠದತ್ತ ಒಡೆಯರ್ ಅವರ ಜನನದ ಹಿಂದೆಯೂ ಶ್ರೀಧರ ಸ್ವಾಮಿಗಳ ಅನುಗ್ರಹ ಮತ್ತು ಮಂತ್ರಾಕ್ಷತೆಯ ಆಶೀರ್ವಾದವಿತ್ತು ಎಂಬ ನಂಬಿಕೆ ಭಕ್ತರಲ್ಲಿ ಇದೆ. ಇದೇ ರೀತಿ ಬೆಂಗಳೂರಿನ ವಿಧಾನಸೌಧ ನಿರ್ಮಾಣದ ಸಂದರ್ಭದಲ್ಲಿ ಎದುರಾದ ಕೆಲವು ತೊಂದರೆಗಳ ನಿವಾರಣೆಗೆ ಶ್ರೀಧರ ಸ್ವಾಮಿಗಳು ನೀಡಿದ ಮಂತ್ರಾಕ್ಷತೆಯನ್ನು ವಿಧಾನಸೌಧದ ಪಾಯದಲ್ಲಿ ಹಾಕಲಾಗಿತ್ತು ಎಂಬ ಐತಿಹ್ಯವೂ ಪ್ರಸಿದ್ಧವಾಗಿದೆ.&lt;/p&gt;&lt;h2&gt;ದುಡ್ಡು ಪಡೆದು ಪೂಜೆ ಮಾಡಿಸುವುದಿಲ್ಲ&lt;/h2&gt;&lt;p&gt;ವರದಪುರ ಆಶ್ರಮದ ಮತ್ತೊಂದು ವಿಶೇಷತೆ ಎಂದರೆ ಇಲ್ಲಿ ವಾಣಿಜ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದಿಲ್ಲ ಎಂಬುದು. ಭಕ್ತರಿಂದ ಹಣ ಕೇಳುವುದಿಲ್ಲ, ಹಣ ಪಡೆದು ವಿಶೇಷ ಪೂಜೆ ಮಾಡಿಸುವುದಿಲ್ಲ ಮತ್ತು ಯಾರ ಪರವಾಗಿಯೂ ಪ್ರಾರ್ಥನೆ ಮಾಡುವುದಿಲ್ಲ ಎಂಬುದು ಆಶ್ರಮದ ಪರಂಪರೆಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಭಕ್ತರು ತೀರ್ಥಸ್ನಾನ ಮಾಡಿ, ಶ್ರೀಧರ ಸ್ವಾಮಿಗಳ ಸನ್ನಿಧಿಯಲ್ಲಿ ತಾವೇ ಸ್ವತಃ ಪ್ರಾರ್ಥನೆ ಸಲ್ಲಿಸಬಹುದು.&lt;/p&gt;&lt;h2&gt;ಪ್ರತಿದಿನವೂ ಅನ್ನದಾನ, ನೂರಾರು ಗೋವುಗಳ ರಕ್ಷಣೆ&lt;/h2&gt;&lt;p&gt;ವರದಪುರದಲ್ಲಿ ಪ್ರತಿದಿನವೂ ಭಕ್ತರಿಗೆ ಉಚಿತ ಅನ್ನದಾನ ನಡೆಯುತ್ತದೆ. ಯಾವುದೇ ಭೇದಭಾವವಿಲ್ಲದೆ ಇಲ್ಲಿಗೆ ಬರುವ ಭಕ್ತರು ಪ್ರಸಾದ ಸ್ವೀಕರಿಸುತ್ತಾರೆ. ಇದರ ಜೊತೆಗೆ ಶ್ರೀಧರ ಸ್ವಾಮಿಗಳ ಕಾಲದಿಂದಲೂ ಗೋಸೇವೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಶ್ರಮದ ಗೋಶಾಲೆಯಲ್ಲಿ ನೂರಾರು ಗೋವುಗಳ ರಕ್ಷಣೆ ಮತ್ತು ಪೋಷಣೆ ನಡೆಯುತ್ತಿದೆ.&lt;/p&gt;&lt;h2&gt;ಎಲ್ಲಿದೆ ಈ ಪುಣ್ಯಕ್ಷೇತ್ರ?&lt;/h2&gt;&lt;p&gt;ಶ್ರೀ ಕ್ಷೇತ್ರ ವರದಪುರ (ವರದಹಳ್ಳಿ) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಮೀಪದಲ್ಲಿದೆ. ಸಾಗರ ನಗರದಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ರಸ್ತೆ ಮಾರ್ಗದ ಮೂಲಕ ತಲುಪಬಹುದು.&lt;/p&gt;&lt;p&gt;ಬೆಂಗಳೂರು ಅಥವಾ ಶಿವಮೊಗ್ಗದ ಕಡೆಯಿಂದ ಬರುವವರು ಮೊದಲು ಸಾಗರ ನಗರ ತಲುಪಿ, ಅಲ್ಲಿಂದ ವರದಪುರಕ್ಕೆ ಖಾಸಗಿ ವಾಹನ ಅಥವಾ ಬಸ್ ಮೂಲಕ ಪ್ರಯಾಣಿಸಬಹುದು.nಆಧ್ಯಾತ್ಮಿಕ ಶಾಂತಿ, ಪವಿತ್ರ ತೀರ್ಥ, ಅನ್ನದಾನ ಮತ್ತು ಶ್ರೀಧರ ಸ್ವಾಮಿಗಳ ಸ್ಮರಣೆಯೊಂದಿಗೆ ಭಕ್ತರನ್ನು ಸೆಳೆಯುತ್ತಿರುವ ವರದಪುರ ಇಂದು ಕರ್ನಾಟಕದ ಪ್ರಮುಖ ಧಾರ್ಮಿಕ ತಾಣಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇಲ್ಲಿ ನಡೆಯುವ ಪವಾಡಗಳು ಮತ್ತು ತೀರ್ಥದ ಮಹತ್ವದ ಕುರಿತ ಹಲವು ನಂಬಿಕೆಗಳು ಭಕ್ತರ ನಡುವೆ ಇಂದಿಗೂ ಜೀವಂತವಾಗಿವೆ.&lt;/p&gt;]]></content:encoded>
            <category>shivamogga</category>
            <dc:creator>Sushma Hegde</dc:creator>
            <atom:link href="https://kannada.asianetnews.com/karnataka-districts/mysore-maharaja-blessed-with-child-saint-sridhar-swami-ashram-karnataka-suh/articleshow-h0gb5yh"/>
        </item>
        <item>
            <title><![CDATA[Shivamogga: ಕೋಟೆಗಂಗೂರು ಡಿಪೋ: ಶಿವಮೊಗ್ಗದಿಂದಲೇ ಎಕ್ಸ್‌ಪ್ರೆಸ್ ರೈಲು ನಿರ್ವಹಣೆ ಶೀಘ್ರ]]></title>
            <link>https://kannada.asianetnews.com/karnataka-districts/indian-railways-kotegangur-depot-express-train-maintenance-from-shivamogga-soon-mrq/articleshow-hf2b7yk</link>
            <guid isPermaLink="true">https://kannada.asianetnews.com/karnataka-districts/indian-railways-kotegangur-depot-express-train-maintenance-from-shivamogga-soon-mrq/articleshow-hf2b7yk</guid>
            <pubDate>Thu, 06 Aug 2026 06:51:45 +0530</pubDate>
            <description><![CDATA[&lt;p&gt;ಶಿವಮೊಗ್ಗ ಜಿಲ್ಲೆಯ ಮಹತ್ವಾಕಾಂಕ್ಷೆಯ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಯು ಶೇ.77ಕ್ಕೂ ಹೆಚ್ಚು ಆರ್ಥಿಕ ಪ್ರಗತಿ ಸಾಧಿಸಿ ವೇಗವಾಗಿ ಪೂರ್ಣಗೊಳ್ಳುವತ್ತ ಸಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಬಾಕಿ ಯೋಜನೆಗಳ ತ್ವರಿತ ಜಾರಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzaafv4tyn4b4h0pp49c5dqa,imgname-shivamogga-1785979202714.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ:&lt;/strong&gt; ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಮಲೆನಾಡಿನ ರೈಲು ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವಕಾಂಕ್ಷೆಯ ಯೋಜನೆಯಾದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಯು ವೇಗವಾಗಿ ಪೂರ್ಣಗೊಳ್ಳುವತ್ತ ಸಾಗುತ್ತಿದೆ. ಪ್ರಸಕ್ತ ಅಧಿವೇಶನದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಯೋಜನೆಯ ಪ್ರಸ್ತುತ ಪ್ರಗತಿಯ ವಿವರಗಳನ್ನು ಒದಗಿಸಿದ್ದಾರೆ.&lt;/p&gt;&lt;p&gt;ಕೇಂದ್ರ ಸರ್ಕಾರ ಒಟ್ಟು 76.01 ಕೋಟಿ ಅಂದಾಜು ವೆಚ್ಚದಲ್ಲಿ ಮಂಜೂರು ಮಾಡಿರುವ ಈ ಯೋಜನೆಗೆ, ಸಂಸದ ರಾಘವೇಂದ್ರ ಅವರ ನಿರಂತರ ಪರಿಶ್ರಮದ ಫಲವಾಗಿ ಮಾರ್ಚ್ 31, 2026ರವರೆಗೆ 58.82 ಕೋಟಿರು.ಗಳಷ್ಟು ಕಾಮಗಾರಿಗಳನ್ನು ಮುಗಿಸಿ, ಶೇ.77 ಕ್ಕಿಂತ ಹೆಚ್ಚು ಹಣಕಾಸು ಪ್ರಗತಿ ಸಾಧಿಸಲಾಗಿದೆ. ಅಷ್ಟೇ ಅಲ್ಲದೆ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೇಂದ್ರ ರೈಲ್ವೆ ಸಚಿವಾಲಯ, ಪ್ರಸಕ್ತ ಸಾಲಿನಲ್ಲಿ 9.5 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.&lt;/p&gt;&lt;h2&gt;&lt;strong&gt;ಕೋಟೆಗಂಗೂರಿನ ರೈಲ್ವೆ ನಿಲ್ದಾಣದ ಕಟ್ಟಡ&lt;/strong&gt;&lt;/h2&gt;&lt;p&gt;ಕೋಟೆಗಂಗೂರಿನ ರೈಲ್ವೆ ನಿಲ್ದಾಣದ ಕಟ್ಟಡ ಹಾಗೂ ಸೇವಾ ಕಟ್ಟಡ ನಿರ್ಮಾಣ ಕಾರ್ಯ, ರೈಲು ಬೋಗಿಗಳ ದುರಸ್ತಿ ಮತ್ತು ನಿರ್ವಹಣೆಗೆ ಅಗತ್ಯವಿರುವ ಸಿಕ್ ಲೈನ್ ಕವರ್ಡ್ ಶೆಡ್&zwnj;ನ ಪಾಯದ ಕಾಮಗಾರಿ ಪೂರ್ಣಗೊಂಡಿದೆ. 24 ಬೋಗಿಗಳ ಸುಸಜ್ಜಿತ ರೈಲುಗಳನ್ನು ತಪಾಸಣೆ ಮಾಡುವ 2 ಫಿಟ್ ಲೈನ್&zwnj;ಗಳು , 2 ಸ್ಟೇಬ್ಲಿಂಗ್ ಲೈನ್&zwnj;ಗಳು , 1 ಲೂಪ್ ಲೈನ್ ಹಾಗೂ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.&lt;/p&gt;&lt;p&gt;&lt;strong&gt;ಭೂಸ್ವಾಧೀನ ಪ್ರಕ್ರಿಯೆ: &lt;/strong&gt;ಯೋಜನೆಗೆ ಅಗತ್ಯವಿರುವ ಒಟ್ಟು 38 ಎಕರೆ ಭೂಮಿಯಲ್ಲಿ ಈಗಾಗಲೇ 31.3 ಎಕರೆ ಭೂಸ್ವಾಧೀನ ಪೂರ್ಣಗೊಂಡಿದೆ. ಶಂಟಿಂಗ್ ನೆಕ್&zwnj;ಗೆ ಅಗತ್ಯವಿರುವ ಬಾಕಿ 6.7 ಎಕರೆ ಭೂಮಿಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಶೀಘ್ರವೇ ಪಡೆದುಕೊಳ್ಳಲು ಕ್ರಮ ವಹಿಸಲಾಗಿದೆ.&lt;/p&gt;&lt;p&gt;ಸಚಿವ ಸೋಮಣ್ಣ ಭೇಟಿ ಮಾಡಿದ ರಾಘವೇಂದ್ರ&lt;/p&gt;&lt;p&gt;ಶಿವಮೊಗ್ಗ ಜಿಲ್ಲೆ ಹಾಗೂ ಬೈಂದೂರಿನ ಬಾಕಿ ರೈಲ್ವೇ ಯೋಜನೆಗಳ ತ್ವರಿತ ಜಾರಿ ಹಾಗೂ ಕ್ಷೇತ್ರದ ಅಭಿವೃದ್ಧಿ, ವ್ಯಾಪಾರ ವಹಿವಾಟಿಗೆ ವೇಗ ನೀಡುವ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಬುಧವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಮುಖ ಪ್ರತಿನಿಧಿಗಳ ನಿಯೋಗ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದರು.&lt;/p&gt;&lt;p&gt;ಈ ವೇಳೆ, ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಬಾಕಿಯಿರುವ ಎಲ್ಲಾ ಪ್ರಮುಖ ರೈಲ್ವೇ ಯೋಜನೆಗಳು ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಸಂಸದರು ಸಚಿವರಿಗೆ ಮನವಿ ಮಾಡಿದರು. ಪ್ರದೇಶದ ಕೈಗಾರಿಕಾ ಹಾಗೂ ಸಾರಿಗೆ ಪ್ರಗತಿಗೆ ಈ ಯೋಜನೆಗಳು ಅತ್ಯಗತ್ಯವಾಗಿದ್ದು, ತ್ವರಿತವಾಗಿ ಎಲ್ಲ ಅನುಮೋದಿತ ಯೋಜನೆಗಳನ್ನು ಪೂರೈಸುವಂತೆ ನಿಯೋಗದ ಪರವಾಗಿ ಸಂಸದ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.&lt;/p&gt;&lt;p&gt;ಯೋಜನೆ ಕುರಿತಂತೆ ಪ್ರತಿಕ್ರಿಯಿಸಿರುವ ಸಂಸದ ಬಿ.ವೈ.ರಾಘವೇಂದ್ರ, ಕೋಟೆಗಂಗೂರು ಕೋಚಿಂಗ್ ಡಿಪೋ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರ ದಶಕಗಳ ಕನಸಾಗಿದೆ. ಈ ಡಿಪೋ ನಿರ್ಮಾಣಗೊಂಡ ನಂತರ ಶಿವಮೊಗ್ಗ ಸ್ವತಂತ್ರ ರೈಲ್ವೆ ಹಬ್ ಆಗಿ ಹೊರಹೊಮ್ಮಲಿದೆ. 24 ಬೋಗಿಗಳ ರೈಲುಗಳ ನಿರ್ವಹಣೆ ಇಲ್ಲೇ ಸಾಧ್ಯವಾಗುವುದರಿಂದ, ಬೆಂಗಳೂರು ಅಥವಾ ಮೈಸೂರು ನಗರಗಳನ್ನು ನೆಚ್ಚಿಕೊಳ್ಳದೇ ಶಿವಮೊಗ್ಗದಿಂದಲೇ ದೇಶದ ವಿವಿಧ ಪ್ರಮುಖ ನಗರಗಳಿಗೆ ಹೊಸ ಎಕ್ಸ್&zwnj;ಪ್ರೆಸ್ ಹಾಗೂ ವಂದೇ ಭಾರತ್ ರೈಲುಗಳನ್ನು ಆರಂಭಿಸಲು ಹಾದಿ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಶಿವಮೊಗ್ಗ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಯಂತೆ, ಕೋಟೆಗಂಗೂರು ರೈಲ್ವೆ ಡಿಪೋವನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಿ ಮಲೆನಾಡಿನ ಸಾರಿಗೆ ಕ್ಷೇತ್ರದ ಅಭಿವೃದ್ಧಿಯ ಮತ್ತೊಂದು ಪರ್ವವನ್ನು ಆರಂಭಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿರುವುದಾಗಿ ಸಂಸದ ರಾಘವೇಂದ್ರ ತಿಳಿಸಿದ್ದಾರೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/indian-railways-kotegangur-depot-express-train-maintenance-from-shivamogga-soon-mrq/articleshow-hf2b7yk"/>
        </item>
        <item>
            <title><![CDATA[School Holiday Declare: ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಆದೇಶ ಹೊರಡಿಸಿದ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳು!]]></title>
            <link>https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g</link>
            <guid isPermaLink="true">https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g</guid>
            <pubDate>Sun, 02 Aug 2026 23:10:40 +0530</pubDate>
            <description><![CDATA[ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಆಯ್ದ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz1rv26za6zwc62ygmsz1c1j,imgname-school-holiday-declare-1785692260575.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ (Karnataka) ಕರಾವಳಿ (Coastal Karnataka) ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ (Heavy Rain) ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ (Dakshina Kannada) ಮತ್ತು ಚಿಕ್ಕಮಗಳೂರು (Chikkamagaluru) ಶಿವಮೊಗ್ಗ, ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಕೆಲವು ಪ್ರದೇಶಗಳಲ್ಲಿ ಪಿಯುಸಿ (PUC) ಕಾಲೇಜುಗಳಿಗೆ ರಜೆ (School Holiday) ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ರಜೆ&lt;/strong&gt;&lt;/h2&gt;&lt;p&gt;ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (Deputy Commissioner) ದರ್ಶನ್ ಎಚ್.ವಿ. (Darshan H.V.) ಅವರು ಆದೇಶ ಹೊರಡಿಸಿದ್ದಾರೆ. ಮಂಗಳೂರು (Mangaluru) ಉಪವಿಭಾಗದ ಮಂಗಳೂರು, ಉಳ್ಳಾಲ (Ullal), ಮೂಡಬಿದಿರೆ (Moodbidri), ಬಂಟ್ವಾಳ (Bantwal) ಹಾಗೂ ಮುಲ್ಕಿ (Mulki) ತಾಲೂಕುಗಳಲ್ಲಿ ಅಂಗನವಾಡಿಯಿಂದ ಹೈಸ್ಕೂಲ್ (High School) ವರೆಗೆ ರಜೆ ಘೋಷಿಸಲಾಗಿದೆ.&lt;/p&gt;&lt;p&gt;ಇನ್ನೊಂದೆಡೆ ಪುತ್ತೂರು (Puttur) ಉಪವಿಭಾಗದ ಪುತ್ತೂರು, ಬೆಳ್ತಂಗಡಿ (Belthangady), ಕಡಬ (Kadaba) ಹಾಗೂ ಸುಳ್ಯ (Sulya) ತಾಲೂಕುಗಳಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು (PUC) ವರೆಗೆ ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿಯಲ್ಲೂ ರಜೆ&lt;/strong&gt;&lt;/h2&gt;&lt;p&gt;ಕಾಫಿನಾಡು (Coffee Land) ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪ (Koppa) ಹಾಗೂ ಶೃಂಗೇರಿ (Sringeri) ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ (Primary School) ಮತ್ತು ಪ್ರೌಢಶಾಲೆಗಳಿಗೆ (High School) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ (Deputy Commissioner) ಭನ್ವರ್ ಸಿಂಗ್ ಮೀನಾ (Bhanwar Singh Meena) ಆದೇಶ ಹೊರಡಿಸಿದ್ದಾರೆ.&lt;/p&gt;&lt;h3&gt;&lt;strong&gt;ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿವು&lt;/strong&gt;&lt;/h3&gt;&lt;p&gt;ನಿರಂತರ ಮಳೆಯ ಪರಿಣಾಮ ತುಂಗಾ ನದಿ (Tunga River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು (Public) ಹಾಗೂ ಪ್ರವಾಸಿಗರು (Tourists) ನದಿ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆಯ (Weather Department) ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಸಾಗರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ&lt;/strong&gt;&lt;/h2&gt;&lt;p&gt;ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagar) ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕು ಆಡಳಿತವು ರಜೆ ಘೋಷಿಸಿದೆ.&lt;/p&gt;&lt;p&gt;ಸಾಗರ ತಹಶೀಲ್ದಾರ್ (Tahsildar) ಡಾ. ಪ್ರತಿಭಾ (Dr. Prathibha) ಅವರು ಹೊರಡಿಸಿರುವ ಆದೇಶದಂತೆ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools), ಪ್ರೌಢಶಾಲೆಗಳು (High Schools), ಪದವಿ ಪೂರ್ವ ಕಾಲೇಜುಗಳು (PU Colleges), ಡಿಪ್ಲೊಮಾ ಕಾಲೇಜುಗಳು (Diploma Colleges) ಹಾಗೂ ಐಟಿಐ (ITI) ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೂ ರಜೆ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆ ಜಿಲ್ಲಾಡಳಿತ (District Administration) ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ (Deputy Commissioner) ಲಕ್ಷ್ಮೀ ಪ್ರಿಯಾ (Lakshmi Priya) ಅವರು ಹೊರಡಿಸಿರುವ ಆದೇಶದಂತೆ ದಾಂಡೇಲಿ (Dandeli) ಹಾಗೂ ಜೋಯಿಡಾ (Joida) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools) ಮತ್ತು ಪ್ರೌಢಶಾಲೆಗಳಿಗೆ (High Schools) ಆಗಸ್ಟ್ 3ರಂದು ರಜೆ ಘೋಷಿಸಲಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g"/>
        </item>
        <item>
            <title><![CDATA[ಆಗಸ್ಟ್ ಮೊದಲ ದಿನವೇ ಭರ್ತಿಯಾದ ತುಂಗಾ ಜಲಾಶಯ, 65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ]]></title>
            <link>https://kannada.asianetnews.com/gallery/karnataka-districts/tunga-reservoir-fills-to-capacity-on-first-day-of-august-65000-cusecs-water-released-po3cd61</link>
            <guid isPermaLink="true">https://kannada.asianetnews.com/gallery/karnataka-districts/tunga-reservoir-fills-to-capacity-on-first-day-of-august-65000-cusecs-water-released-po3cd61</guid>
            <pubDate>Sat, 01 Aug 2026 15:49:34 +0530</pubDate>
            <description><![CDATA[&lt;p&gt;ನೀರಿನ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಕೆಲ ಜಲಾಶಗಳು ಭರ್ತಿಯಾಗುತ್ತಿದೆ. ಆಗಸ್ಟ್ 1 ರಂದೇ ತುಂಗಾ ಜಲಾಶಯ ಭರ್ತಿಯಾಗಿದ್ದು ನೀರು ಬಿಡುಗಡೆ ಮಾಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyyd2dfs3r5qeew95da419s8,imgname-tunga-dam-water--5--1785579255289.jpeg" type="image/jpeg" height="390" width="690"/>
            <content:encoded><![CDATA[&lt;p&gt;ನೀರಿನ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಕೆಲ ಜಲಾಶಗಳು ಭರ್ತಿಯಾಗುತ್ತಿದೆ. ಆಗಸ್ಟ್ 1 ರಂದೇ ತುಂಗಾ ಜಲಾಶಯ ಭರ್ತಿಯಾಗಿದ್ದು ನೀರು ಬಿಡುಗಡೆ ಮಾಡಲಾಗಿದೆ.&lt;/p&gt;&lt;img&gt;&lt;p&gt;ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರಮುಖವಾಗಿ ತುಂಗಾ ನದಿ ಪಾತ್ರದ ಶೃಂಗೇರಿ , ಕೊಪ್ಪ, ತೀರ್ಥಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಕಳೆದ ಹಲವು ದಿನಗಳಿಂದ ನೀರಿನ ಕೊರತೆ ಎದುರಿಸುತ್ತಿದ್ದ ತುಂಗಾ ಜಲಾಶಯ ಇದೀಗ ಭಾರಿ ಮಳೆಯಿಂದ ಭರ್ತಿಯಾಗಿದೆ. ಮಳೆಗಾಲ ಆರಂಭಗೊಂಡ ಬರೋಬ್ಬರಿ 2 ತಿಂಗಳ ಬಳಿಕ ತುಂಗಾ ಜಲಶಯ ಭರ್ತಿಯಾಗಿದೆ.&lt;/p&gt;&lt;img&gt;&lt;p&gt;ಮಲೆನಾಡಿನ ಜೀವನಾಡಿ ಎಂದೇ ಗುರುತಿಸಿಕೊಂಡಿರುವ ತುಂಗಾ ನದಿ ತುಂಬಿ ಹರಿಯುತ್ತಿದೆ. ಪರಿಣಾಮ ತುಂಬಾ ಜಲಾಶಯ ಭರ್ತಿಯಾಗಿದೆ. ಕಳೆದೆರಡು ದಿನದಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ತುಂಗಾಜಲಾಯಶಕ್ಕೆ ನೀರು ಹರಿದು ಬಂದಿದೆ. ತುಂಗಾ ಜಲಾಶಯ ಭರ್ತಿಯಾದ ಪರಿಣಾಮ ನದಿಗೆ ನೀರು ಬಿಡಲಾಗಿದೆ.&lt;/p&gt;&lt;img&gt;&lt;p&gt;ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತುಂಗಾ ಜಲಾಶಯದಿಂದ ಸುಮಾರು 65 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ 22 ಗೇಟ್ ತೆರೆಯಲಾಗಿದೆ. ತುಂಗಾ ಜಲಾಶಯದ ಎಲ್ಲಾ ಗೇಟ್ ತೆರೆಯಲಾಗಿದ್ದು ನೀರು ರಭಸದಿಂದ ಹರಿಯುತ್ತಿದೆ. ತುಂಗಾ ಜಲಾಶಯ ಇದೀಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.&lt;/p&gt;&lt;img&gt;&lt;p&gt;ತುಂಗಾ ಜಲಾಶದಲ್ಲಿ 3.24 ಟಿಎಂಸಿ ನೀರಿನ ಸಂಗ್ರವಾಗಲಿದೆ. 588.24 ಮೀಟರ್ ಎತ್ತರದ ತುಂಗಾ ಜಲಾಶಯ ಭರ್ತಿಯಾಗಿದೆ. ಪರಿಣಾಮ ನದಿ ಪಾತ್ರದ ಕೆಳಭಾಗದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಬಾರಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿದೆ. ಕುದುರೆಮುಖ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಾಲತಿ ನದಿ ಉಕ್ಕಿ ಹರಿಯುತ್ತಿದ್ದು ನಾಬಳ ರಸ್ತೆ ಸಂಚಾರ ಸ್ಥಗಿತಗೊಂಡಿದೆ.&lt;/p&gt;&lt;img&gt;&lt;p&gt;ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಸೆಗಳು ಜಲಾವೃತಗೊಂಡಿದೆ. ಶೃಂಗೇರಿ ದೇಗುಲದ ಪಾರ್ಕಿಂಗ್ ಲಾಟ್ ಗೆ ಹೋಗುವ ಪ್ಯಾರಲಲ್ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ಮೂರರಿಂದ ನಾಲ್ಕು ಅಡಿಗಳಷ್ಟು ನೀರು ನಿಂತಿದೆ.&lt;/p&gt;]]></content:encoded>
            <category>shivamogga</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/karnataka-districts/tunga-reservoir-fills-to-capacity-on-first-day-of-august-65000-cusecs-water-released-po3cd61"/>
        </item>
        <item>
            <title><![CDATA[ಇನ್ನೂ ಎಷ್ಟು ದಿನ ಮಳೆ ಸುರಿಯುತ್ತೆ..? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?]]></title>
            <link>https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</link>
            <guid isPermaLink="true">https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</guid>
            <pubDate>Mon, 03 Aug 2026 10:52:13 +0530</pubDate>
            <description><![CDATA[&lt;p&gt;ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತಗೊಂಡಿದ್ದು, ಬಂಟ್ವಾಳದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೂ ಕಾರ್ಕಳದಲ್ಲಿ ಕಿರು ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz313w30f1gdqv7pkgfgntfd,imgname-rain--1--1785734492255.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು/ಕಾರವಾರ: &lt;/strong&gt;ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಇಂದು ಆರೆಂಜ್ ಅಲರ್ಟ್, ನಾಳೆ ಎಲ್ಲೋ ಅಲರ್ಟ್&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ನಾಳೆಯಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ.&lt;/p&gt;&lt;h2&gt;&lt;strong&gt;ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ಕೋಟೆ ಕೆರೆ ತುಂಬಿ ಹರಿಯುತ್ತಿದ್ದು, ನೀರು ರಸ್ತೆಗೆ ನುಗ್ಗಿದೆ. ಹಲವು ಬಡಾವಣೆಗಳು ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಬರಲಾರದ ಸ್ಥಿತಿ ನಿರ್ಮಾಣವಾಗಿದೆ.&lt;/p&gt;&lt;p&gt;ಇತ್ತ ದಾಂಡೇಲಿಯಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಗೆ ಮಸಿದಿಗಲ್ಲಿಯ ಯುಸೂಫ್ ಶೇಖ್ ಎಂಬುವವರ ಮನೆ ಕುಸಿದಿದೆ. ಮನೆಯಲ್ಲಿದ್ದ ಇಬ್ಬರು ವೃದ್ಧರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;h2&gt;&lt;strong&gt;ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು&lt;/strong&gt;&lt;/h2&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಎಎಂಆರ್ (AMR) ಡ್ಯಾಂನಿಂದ ನೀರನ್ನು ಹೊರಬಿಡಲಾಗುತ್ತಿದ್ದು, ನೇತ್ರಾವತಿ ನದಿ ತೀರದ ಜನರಲ್ಲಿ ಆತಂಕ ಶುರುವಾಗಿದೆ. ಬಂಟ್ವಾಳದ ಅಲಡ್ಕ, ಬೋಗೋಡಿ, ನಂದಾವರ, ಗೂಡಿನಬಳಿ ಸೇರಿದಂತೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.&lt;/p&gt;&lt;h2&gt;&lt;strong&gt;ಸಂಪರ್ಕ ಕಡಿತಗೊಳಿಸಿದ ಕಿರು ಸೇತುವೆ&lt;/strong&gt;&lt;/h2&gt;&lt;p&gt;ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾದ ಕಾರಣ ಇಲ್ಲಿನ ಕಿರು ಸೇತುವೆಯೊಂದು ಮುಳುಗಡೆಯಾಗಿದ್ದು, ಸ್ಥಳೀಯ ಗ್ರಾಮಸ್ಥರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಹೊಳೆ-ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸದ್ಯ ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ನದಿ ಪಾತ್ರದ ಜನರು ಹಾಗೂ ಗುಡ್ಡಗಾಡು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;]]></content:encoded>
            <category>shivamogga</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn"/>
        </item>
        <item>
            <title><![CDATA[ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮೋದಿಯಿಂದ ಮಾತ್ರ ಸಾಧ್ಯ: ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ]]></title>
            <link>https://kannada.asianetnews.com/karnataka-districts/only-pm-modi-can-permanently-stop-exam-paper-leaks-says-shivamogga-mp-by-raghavendra-kvn/articleshow-rx7c72p</link>
            <guid isPermaLink="true">https://kannada.asianetnews.com/karnataka-districts/only-pm-modi-can-permanently-stop-exam-paper-leaks-says-shivamogga-mp-by-raghavendra-kvn/articleshow-rx7c72p</guid>
            <pubDate>Mon, 27 Jul 2026 11:55:46 +0530</pubDate>
            <description><![CDATA[ಪರೀಕ್ಷಾ ಪತ್ರಿಕೆ ಸೋರಿಕೆಯನ್ನು ಶಾಶ್ವತವಾಗಿ ತಡೆಯುವುದು ಪ್ರಧಾನಿ ಮೋದಿಯವರಿಂದ ಮಾತ್ರ ಸಾಧ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆ ವಿಚಾರದಲ್ಲಿ ಯುವಕರಿಗೆ ನ್ಯಾಯ ಸಿಗಬೇಕು ಎಂದ ಅವರು, ಶಿವಮೊಗ್ಗದಲ್ಲಿ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kyh3qbcs0jhjyytjkqe5jcg3,imgname-by-raghavendra-mp-1785133247897.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಮೊಗ್ಗ: ಪರೀಕ್ಷೆ ಸಮಯದಲ್ಲಿ ಪತ್ರಿಕೆ ಸೋರಿಕೆ ಅನ್ನೋದು ಬಹಳ ವರ್ಷಗಳ ಶಾಪ. ಅದನ್ನು ಶಾಶ್ವತವಾಗಿ ತಡೆಯೋದು ಪ್ರಧಾನಿ ಮೋದಿಯವರಿಂದ ಮಾತ್ರ ಸಾಧ್ಯವಿದೆ. ಈ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಸಂಸದ ಬಿ.ವೈ&zwnj;. ರಾಘವೇಂದ್ರ ಹೇಳಿದರು.&lt;/p&gt;&lt;p&gt;ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಕದ ಮನೆಯಲ್ಲಿ ಗಂಡು ಮಗು ಹುಟ್ಟಿತು ಅಂತ ಮೈಸೂರು ಪಾಕ್, ಜಿಲೇಬಿ ತಿನ್ನೋ ಜನರನ್ನು ನಾವು ನೋಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದ್ರೂ ಪಟಾಕಿ ಹೊಡೆಯಲಿ. ಯಾರು ಬೇಕಾದ್ರೂ ಘೋಷಣೆ ಕೂಗಲಿ. ಗೌರವಾನ್ವಿತ ಪ್ರಧಾನಿ ಮೋದಿ ಅವರ ಉದ್ದೇಶವನ್ನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಅವರು ಉದ್ದೇಶ ಬಹಳ ಸ್ಪಷ್ಟವಾಗಿ ಇದೆ. ಯುವಕರಿಗೆ ಮನ್ನಣೆ ಕೊಡೋ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡುತ್ತದೆ ಎಂದು ತಿರುಗೇಟು ನೀಡಿದರು.&lt;/p&gt;&lt;h2&gt;&lt;strong&gt;ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಿರೀಕ್ಷಿಸಿರಲಿಲ್ಲ&lt;/strong&gt;&lt;/h2&gt;&lt;p&gt;ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. ನೀಟ್ ವಿಚಾರಕ್ಕೆ ಸಿಜೆಪಿ ನೇತೃತ್ವದಲ್ಲಿ ಹೋರಾಟ ನಡೆಯಿತು. ಬೇರೆ ಶಕ್ತಿಗಳು ಕೈ ಜೋಡಿಸುವ ಕೆಲಸವೂ ಆಯ್ತು. ಯುವಕರು, ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಮಕ್ಕಳನ್ನು ಬಳಸಿ ರಾಜಕೀಯ ಮಾಡುವ ತಂಡ ದೇಶದಲ್ಲಿದೆ.&zwnj; ಅವರಿಗೆ ಮಕ್ಕಳು ಆಹಾರ ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ವೇಳೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.&lt;/p&gt;&lt;p&gt;ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಮೇ ನಲ್ಲಿ ಲೀಕ್ ಔಟ್ ಆಗಿತ್ತು. ಆನಂತರ ಸಾಕಷ್ಟು ಕ್ರಮ ಕೇಂದ್ರದಿಂದ ಆಗಿದೆ. ಶಾಶ್ವತ ಪರಿಹಾರ ಸಿಗಬೇಕು ಅನ್ನೋದು ಯುವಕರ ಅಪೇಕ್ಷೆ. ಸ್ವತಃ ಜೆ.ಪಿ&zwnj;.ನಡ್ಡಾ ಹಾಗೂ ಸಿಂಗ್ ಅವರು ಆಶ್ವಾಸನೆ ನೀಡಿದ್ದಾರೆ. ಪ್ರಹ್ಲಾದ್ ಜೋಶಿಯವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದ್ದಾರೆ. 5 ನೇ ಬಾರಿ ಸಂಸದರಾಗಿ&zwnj; ಎಲ್ಲಾ ಕೆಲಸ ಯಶಸ್ವಿಯಾಗಿ ಮಾಡಿದ್ದಾರೆ. ಓರ್ವ ಸಚಿವರಾಗಿ ಹೆಚ್ಚಿವರಿ ಹೊಣೆ ಸಿಕ್ಕಿದೆ. ಕರ್ನಾಟಕಕ್ಕೆ ಸಿಕ್ಕ ಗೌರವ ಎಂದರು.&lt;/p&gt;&lt;h3&gt;------------------&lt;strong&gt;ನೂರಾರು ಮಂದಿ ಮನ್ ಕಿ ಬಾತ್ ವೀಕ್ಷಣೆ&lt;/strong&gt;&lt;/h3&gt;&lt;p&gt;ಪ್ರಧಾನ ಮೋದಿಯವರ 136ನೇ ಮನ್ ಕಿ ಬಾತ್ ಕಾರ್ಯಕ್ರಮ ಹಿನ್ನೆಲೆ. ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ನೂರಾರು ಮಂದಿ ಮನ್ ಕಿ ಬಾತ್ ವೀಕ್ಷಿಸಿದರು. ಆಟೋ ಚಾಲಕರು, ಮಹಿಳೆಯರು, ಕಾರ್ಮಿಕರು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಮನ್ ಕಿ ಬಾತ್ ವೀಕ್ಷಣೆ ಮಾಡಿದ್ದು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್&zwnj; ಸದಸ್ಯರಾದ ಧನಂಜಯ ಸರ್ಜಿ, ಡಿ.ಎಸ್.ಅರುಣ್ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.&lt;/p&gt;&lt;p&gt;ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, 136ನೇ ಮನ್ ಕಿ ಬಾತ್ ಇಂದು ಪ್ರಸಾರ ಆಗ್ತಿದೆ. ಅದರಲ್ಲಿ ಶಿವಮೊಗ್ಗವನ್ನು ಕೂಡ ಲೈವ್ ಆಗಿ ತಗೋತ್ತಿದ್ದಾರೆ. ಅದು ನಮ್ಮ ಹೆಮ್ಮೆ. ಮನ್&zwnj; ಕಿ ಬಾತ್&zwnj; ಮೂಲಕ ಅಂತರಿಕ್ಷ, ಕೃಷಿ, ಕಲೆ, ಸಾಹಿತ್ಯ ಎಲ್ಲವನ್ನ ಪ್ರಧಾನಿ ಹಂಚಿಕೊಳ್ಳುತ್ತಿದ್ದಾರೆ. ದೇಶದಲ್ಲಿನ ಬದಲಾವಣೆ ತಂದ ವಿಷಯಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಯುದ್ಧ, ಕೋವಿಡ್ ಎಂತಾ ಸವಾಲು ಬಂದರೂ ಮನ್ ಕಿ ಬಾತ್ ನಿಂತಿಲ್ಲ. ಇದು ವಿಶ್ವದಲ್ಲೇ ದಾಖಲೆ. ಶಿವಮೊಗ್ಗ ಜನರ ಪರವಾಗಿ ನಾನು ಪ್ರಧಾನಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.&lt;/p&gt;&lt;p&gt;----------&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/only-pm-modi-can-permanently-stop-exam-paper-leaks-says-shivamogga-mp-by-raghavendra-kvn/articleshow-rx7c72p"/>
        </item>
        <item>
            <title><![CDATA[ಶಿವಮೊಗ್ಗದಲ್ಲಿ ದಾರುಣ ಘಟನೆ.. ದೇವಸ್ಥಾನದ ಲಿಫ್ಟ್‌ಗೆ ಸಿಲುಕಿ ನಿವೃತ್ತ ಇಂಜಿನಿಯರ್ ಸಾವು]]></title>
            <link>https://kannada.asianetnews.com/shivamogga/in-shimogga-retired-engineer-dies-in-lift-accident-at-shivamoggas-sri-dattatreya-temple-gkn/articleshow-ult5wsp</link>
            <guid isPermaLink="true">https://kannada.asianetnews.com/shivamogga/in-shimogga-retired-engineer-dies-in-lift-accident-at-shivamoggas-sri-dattatreya-temple-gkn/articleshow-ult5wsp</guid>
            <pubDate>Mon, 03 Aug 2026 10:18:25 +0530</pubDate>
            <description><![CDATA[ಶಿವಮೊಗ್ಗದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ ಮೃತಪಟ್ಟಿದ್ದಾರೆ. ಲಿಫ್ಟ್ ಇಲ್ಲದಿದ್ದರೂ ಬಾಗಿಲು ತೆರೆದಿದ್ದರಿಂದ ಒಳಗೆ ಪ್ರವೇಶಿಸಿದ ಅವರ ಮೇಲೆ ಲಿಫ್ಟ್ ಬಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kz2z5hks84c1ytcfdr2s7r0c,imgname-shivamogga-lift-1785732449911.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ: &lt;/strong&gt;ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ನಗರದ ಪ್ರಸಿದ್ಧ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಲಿಫ್ಟ್ ಅವಘಡಕ್ಕೆ ಸಿಲುಕಿದ್ದ ನಿವೃತ್ತ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?&lt;/strong&gt;&lt;/h2&gt;&lt;p&gt;ಶಿವಮೊಗ್ಗದ ರೋಟರಿ ರಕ್ತನಿಧಿ ಬಳಿ ಇರುವ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಈ ಅನಾಹುತ ಸಂಭವಿಸಿದೆ. ನಿವೃತ್ತ ಇಂಜಿನಿಯರ್ ಆಗಿದ್ದ ಕುಮಾರಸ್ವಾಮಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ದೇಗುಲದ ಗರ್ಭಗುಡಿಯ ಹಿಂಭಾಗದಲ್ಲಿ ಭಕ್ತರ ಅನುಕೂಲಕ್ಕಾಗಿ ಹಳೆ ಮಾದರಿಯ ಮ್ಯಾನುಯಲ್ ಲಿಫ್ಟ್ ವ್ಯವಸ್ಥೆ ಮಾಡಲಾಗಿತ್ತು. ಇದೇ ಲಿಫ್ಟ್ ಇಂದು ಕುಮಾರಸ್ವಾಮಿ ಅವರ ಪಾಲಿಗೆ ಮೃತ್ಯುಪಾಶವಾಗಿದೆ.&lt;/p&gt;&lt;h2&gt;&lt;strong&gt;ಅಜಾಗರೂಕತೆ ತಂದ ಆಪತ್ತು&lt;/strong&gt;&lt;/h2&gt;&lt;p&gt;ಲಿಫ್ಟ್ ನೆಲ ಮಹಡಿಯಲ್ಲಿ ಇಲ್ಲದಿದ್ದರೂ ತಾಂತ್ರಿಕ ದೋಷವೋ ಅಥವಾ ಅಜಾಗರೂಕತೆಯಿಂದಲೋ ಬಾಗಿಲು ತೆರೆದಿತ್ತು. ಲಿಫ್ಟ್ ಬಂದಿದೆ ಎಂದು ಭಾವಿಸಿದ ಕುಮಾರಸ್ವಾಮಿ ಅವರು ಒಳಗೆ ಪ್ರವೇಶಿಸಿದ್ದಾರೆ. ಅದೇ ಸಮಯದಲ್ಲಿ ಮೇಲಿನ ಮಹಡಿಯಲ್ಲಿದ್ದ ಲಿಫ್ಟ್ ವೇಗವಾಗಿ ಕೆಳಕ್ಕೆ ಬಂದಿದೆ. ಇದರ ಪರಿಣಾಮವಾಗಿ ಕುಮಾರಸ್ವಾಮಿ ಅವರು ಲಿಫ್ಟ್&zwnj;ನ ಅಡಿಯಲ್ಲಿ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು.&lt;/p&gt;&lt;h2&gt;&lt;strong&gt;ರಕ್ಷಣಾ ಕಾರ್ಯಾಚರಣೆ ಮತ್ತು ಸಾವು&lt;/strong&gt;&lt;/h2&gt;&lt;p&gt;ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಜಯನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ಲಿಫ್ಟ್ ಅಡಿಯಲ್ಲಿದ್ದ ಕುಮಾರಸ್ವಾಮಿ ಅವರನ್ನು ಹೊರತೆಗೆದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೇವಸ್ಥಾನದ ಲಿಫ್ಟ್ ನಿರ್ವಹಣೆಯಲ್ಲಿ ಲೋಪವಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ದೇವಸ್ಥಾನದ ಆವರಣದಲ್ಲಿ ನಡೆದ ಈ ದುರಂತ ಭಕ್ತಾದಿಗಳಲ್ಲಿ ತೀವ್ರ ಆತಂಕ ಹಾಗೂ ಶೋಕ ಮೂಡಿಸಿದೆ.&lt;/p&gt;]]></content:encoded>
            <category>shivamogga</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/shivamogga/in-shimogga-retired-engineer-dies-in-lift-accident-at-shivamoggas-sri-dattatreya-temple-gkn/articleshow-ult5wsp"/>
        </item>
        <item>
            <title><![CDATA[ಸಂಪುಟದಲ್ಲಿ ಮಧು ಬಂಗಾರಪ್ಪಗೆ ಮತ್ತೆ ಲಾಟರಿ..! ಮಧುಗೆ ಮತ್ತೆ ಸಚಿವ ಸ್ಥಾನ ಸಿಕ್ಕಿದ್ದು ಹೇಗೆ?]]></title>
            <link>https://kannada.asianetnews.com/karnataka-districts/how-madhu-bangarappa-secured-a-second-ministerial-term-in-karnataka-kvn/articleshow-usqbzlu</link>
            <guid isPermaLink="true">https://kannada.asianetnews.com/karnataka-districts/how-madhu-bangarappa-secured-a-second-ministerial-term-in-karnataka-kvn/articleshow-usqbzlu</guid>
            <pubDate>Tue, 04 Aug 2026 10:16:36 +0530</pubDate>
            <description><![CDATA[ಹಿರಿಯ ಶಾಸಕರಾದ ಬಿ.ಕೆ. ಸಂಗಮೇಶ್ ಮತ್ತು ಬೇಳೂರು ಗೋಪಾಲಕೃಷ್ಣ ಅವರ ತೀವ್ರ ಪೈಪೋಟಿಯ ನಡುವೆಯೂ ಮಧು ಬಂಗಾರಪ್ಪ ಮತ್ತೊಮ್ಮೆ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈ ಲೇಖನವು ಅವರ ಆಕಸ್ಮಿಕ ರಾಜಕೀಯ ಪ್ರವೇಶ, ಸವಾಲುಗಳನ್ನು ಮೆಟ್ಟಿನಿಂತ ರೀತಿ ಮತ್ತು ಸಚಿವ ಸ್ಥಾನ ಸಿಗದಿದ್ದಕ್ಕೆ ಇತರ ನಾಯಕರ ಅಸಮಾಧಾನವನ್ನು ವಿವರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz5hak1wxzt00c4480k2rejb,imgname-madhu-bangarappa-1785818598456.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗೋಪಾಲ್&zwnj; ಯಡಗೆರೆ, ಕನ್ನಡಪ್ರಭ ವಾರ್ತೆ&lt;/strong&gt;&lt;/p&gt;&lt;p&gt;ಶಿವಮೊಗ್ಗ: ಮಧು ಬಂಗಾರಪ್ಪ ಮತ್ತೆ ಲಾಟರಿ ಹೊಡೆದಿದ್ದಾರೆ. ಜಿಲ್ಲೆಯ ಇಬ್ಬರು ಹಿರಿಯ ಶಾಸಕರನ್ನು ಬದಿಗೆ ಸರಿಸಿ ಮತ್ತೊಮ್ಮೆ ಸಚಿವ ಸ್ಥಾನ ಪಡೆಯುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ.&lt;/p&gt;&lt;p&gt;ಸೊರಬ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಬೀಗಿದ್ದ ಅವರು ಮೊದಲ ಹಂತದಲ್ಲಿಯೇ ಸಚಿವ ಸ್ಥಾನ ಪಡೆಯುವ ಬಗ್ಗೆ ಸಾಕಷ್ಟು ಅನುಮಾನಗಳಿದ್ದವು. ಎರಡನೇ ಹಂತದಲ್ಲಿಯಂತೂ ಇದು ಇನ್ನೂ ಕಠಿಣ ಎನ್ನುವ ಸ್ಥಿತಿಗೆ ಬಂದು ತಲುಪಿತ್ತು. ಆದರೆ ಮಧು ಅದನ್ನೂ ಸಾಧಿಸಿ ಮುನ್ನಡೆದಿದ್ದಾರೆ.&lt;/p&gt;&lt;p&gt;ಅದರಲ್ಲಿಯೂ ನಾಲ್ಕು ಬಾರಿ ಶಾಸಕರಾಗಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್&zwnj;, ಮೂರು ಬಾರಿ ಶಾಸಕರಾಗಿರುವ ಸಾಗರದ ಬೇಳೂರು ಗೋಪಾಲಕೃಷ್ಣ ಪ್ರಮುಖವಾಗಿ ಪ್ರತಿಸ್ಪರ್ಧಿಯಾಗಿದ್ದರು. ಅವರಿಬ್ಬರನ್ನು ಕೂಡ ಸುಲಭವಾಗಿ ಕಡೆಗಣಿಸುವಂತಿರಲಿಲ್ಲ. ಆದರೆ ಈ ಎಲ್ಲ ಅಡೆತಡೆಗಳನ್ನು ಗೆದ್ದು ನಗೆ ಬೀರಿದ್ದಾರೆ.&lt;/p&gt;&lt;p&gt;ಜಾತಿವಾರು ಹಂಚಿಕೆಯಲ್ಲಿ ಕಳೆದ ಬಾರಿ ಅವಕಾಶ ತಪ್ಪಿಸಿಕೊಂಡ, ಹೈಕಮಾಂಡ್&zwnj; ಗೆ ಅತ್ಯಂತ ಆಪ್ತರೂ ಆದ ಹಿರಿಯ ರಾಜಕಾರಣಿ ಬಿ. ಕೆ. ಹರಿಪ್ರಸಾದ್ ಸಚಿವ ಸ್ಥಾನ ಪಡೆಯುವಲ್ಲಿ ಸಹಜವಾಗಿ ಮುಂಚೂಣಿಯಲ್ಲಿದ್ದರು. ಆದರೆ, ಅವರು ಕೆಪಿಸಿಸಿ ಅಧ್ಯಕ್ಷರಾಗುವ ಮೂಲಕ ತಮ್ಮ ಸ್ಪರ್ಧೆಯನ್ನು ಮೊದಲ ಸುತ್ತಿನಲ್ಲಿಯೇ ಅಂತ್ಯಗೊಳಿಸಿದ್ದು, ಈ ಮಧು ಮತ್ತು ಬೇಳೂರು ಅವರಿಗೆ ಖುಷಿ ತಂದಿತ್ತು. ಆದರೆ ಬೇಳೂರು ಗೋಪಾಲಕೃಷ್ಣ ಅವರಿಗೆ ಈ ಖುಷಿ ಹೆಚ್ಚು ಸಮಯ ಉಳಿಯಲಿಲ್ಲ.&lt;/p&gt;&lt;p&gt;ಆದರೆ ಬಿ.ಕೆ. ಸಂಗಮೇಶ್&zwnj; ಅವರಿಗೆ ಮಾತ್ರ ಯಾಕೆ ನಿರಾಕರಿಸಲಾಯಿತು ಎಂಬುದು ಈಗಲೂ ನಿಗೂಢ. ಹಲವಾರು ಸಂದರ್ಭಗಳಲ್ಲಿ ಪಕ್ಷ ನಿಷ್ಠೆ ಪ್ರದರ್ಶಿಸಿದ ಅವರಿಗೆ ಕೊನೆಗೂ ಏನೂ ಸಿಗದೆ ನಿರಾಶರಾಗಿ ರಾಜಕೀಯ ಅಂತ್ಯದತ್ತ ತೆರಳುವುದು ಅನಿವಾರ್ಯವಾಗಿದೆ.&lt;/p&gt;&lt;h2&gt;&lt;strong&gt;ಮಧು ಬಂಗಾರಪ್ಪಗೆ ಸಚಿವ ಸ್ಥಾನ ದಕ್ಕಿದ್ದು ಹೇಗೆ?:&lt;/strong&gt;&lt;/h2&gt;&lt;p&gt;ಮೊದಲ ಹಂತದಲ್ಲಿ ಹೇಗೋ ಮಾಡಿ ಮಧು ಬಂಗಾರಪ್ಪ ಅವರು ಸಿದ್ಧರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡರು. ಮುಖ್ಯವಾಗಿ ಹೀಗೆ ಪಡೆದ ಸಚಿವ ಸ್ಥಾನವನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ತಾವು ಇದಕ್ಕೆ ಅರ್ಹ ಎಂದು ಸಾಬೀತುಪಡಿಸಿದ್ದು ಬಹಳ ವಿಶೇಷ. ಇವರಿಗೆ ಸಚಿವ ಸ್ಥಾನ, ಅದರಲ್ಲಿಯೂ ಪ್ರಾಥಮಿಕ ಶಿಕ್ಷಣದಂತಹ ಖಾತೆ ನೀಡಿದಾಗ ಬಹುತೇಕರು ಮೂಗಿನ ಮೇಲೆ ಬೆರಳಿಟ್ಟಿದ್ದರು. ಮಧು ಬಂಗಾರಪ್ಪನವರಿಗೆ ಇಂತಹ ಖಾತೆ ನಿರ್ವಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು. ಅವರ ಕನ್ನಡ ಉಚ್ಚಾರಣೆ ಮತ್ತು ಹೇರ್&zwnj; ಸ್ಟೈಲ್&zwnj; ಅನ್ನು ಕೂಟ ಟ್ರೋಲ್&zwnj; ಮಾಡಿದ್ದರು. ಆದರೆ ಇದಕ್ಕೆ ಮಧು ಬಂಗಾರಪ್ಪ ಖಡಕ್&zwnj; ಮಾತಿನಲ್ಲಿ ಪ್ರತ್ಯುತ್ತರ ನೀಡಿದ್ದರು.&lt;/p&gt;&lt;h3&gt;&lt;strong&gt;ರಾಜಕೀಯ ಹೆಜ್ಜೆ:&lt;/strong&gt;&lt;/h3&gt;&lt;p&gt;ಮಧು ಬಂಗಾರಪ್ಪನವರ ರಾಜಕೀಯ ಪ್ರವೇಶವೇ ಒಂದು ಆಕಸ್ಮಿಕ. ದಿ.ಎಸ್&zwnj;. ಬಂಗಾರಪ್ಪನವರಿಗೆ ಪ್ರೀತಿಯ ಪುತ್ರನಾದರೂ ಹಿರಿಯ ಮಗ ಕುಮಾರ್&zwnj; ಬಂಗಾರಪ್ಪ ಅದಾಗಲೇ ಸೊರಬದಲ್ಲಿ ಬಂಗಾರಪ್ಪ ಉತ್ತರಾಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಆದರೆ 2004 ರಲ್ಲಿ ಬಂಗಾರಪ್ಪನವರು ಕಾಂಗ್ರೆಸ್&zwnj; ತೊರೆದು ಬಿಜೆಪಿ ಸೇರಿದ ಸಂದರ್ಭದಲ್ಲಿ ಅವರ ಜೊತೆ ಇಬ್ಬರು ಪುತ್ರರು ಕೂಡ ಬಿಜೆಪಿ ಸೇರಿದ್ದರು. ಆದರೆ ಅಷ್ಟರಲ್ಲಾಗಲೇ ಕುಟುಂಬದಲ್ಲಿ ಎದ್ದ ಬಿರುಗಾಳಿಯಿಂದಾಗಿ ಬಂಗಾರಪ್ಪನವರು ತಮ್ಮ ಹಿರಿಯ ಪುತ್ರ ಕುಮಾರ್&zwnj; ಬಂಗಾರಪ್ಪನವರನ್ನು ಬಿಜೆಪಿಯೊಳಗೆ ಬಿಟ್ಟುಕೊಳ್ಳಲಿಲ್ಲ. ಇದರಿಂದ ಕುಮಾರ್&zwnj; ಬಂಗಾರಪ್ಪ 24 ಗಂಟೆಯ ಒಳಗೆ ಮರಳಿ ಕಾಂಗ್ರೆಸ್ ಗೂಡು ಸೇರಿದರು.&lt;/p&gt;&lt;p&gt;ಇದರಿಂದಾಗಿ ಮಧು ಬಂಗಾರಪ್ಪನವರಿಗೆ ರಾಜಕೀಯ ಜಾಕ್ ಪಾಟ್&zwnj; ಹೊಡೆಯಿತು. 2004 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮಧು ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ಸ್ಪರ್ಧಿಸಿ ಸ್ವತಃ ಸೋದರ ಕುಮಾರ್&zwnj; ಬಂಗಾರಪ್ಪ ಮತ್ತು ಹರತಾಳು ಹಾಲಪ್ಪ ಅವರನ್ನು ಎದುರಿಸಿದರೂ ಗೆಲ್ಲಲಾಗಲಿಲ್ಲ. 2008 ರಲ್ಲಿ ಬಂಗಾರಪ್ಪನವರು ಸಮಾಜವಾದಿ ಪಾರ್ಟಿ ಸೇರಿದ್ದರಿಂದ ಅದೇ ಚಿಹ್ನೆಯಡಿಯಲ್ಲಿ ಮಧು ಬಂಗಾರಪ್ಪನವರೂ ಸ್ಪರ್ಧಿಸಿದರು. ಆಗಲೂ ಗೆಲ್ಲಲಾಗಲಿಲ್ಲ. ಬಳಿಕ ಬಂಗಾರಪ್ಪನವರು ಜೆಡಿಎಸ್&zwnj; ಪಕ್ಷ ಸೇರಿದರು. ಹೀಗಾಗಿ ಮಧು ಬಂಗಾರಪ್ಪನವರು 2013 ರಲ್ಲಿ ಜೆಡಿಎಸ್&zwnj; ಪಕ್ಷದಿಂದ ಸ್ಪರ್ಧಿಸಿದರು. ಬಂಗಾರಪ್ಪ ಮೊದಲ ಬಾರಿ ಗೆದ್ದು ಬೀಗಿದರು.&lt;/p&gt;&lt;p&gt;ಪುನಃ 2018 ರಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದರು. ಆದರೆ ಗೆಲ್ಲಲಾಗಲಿಲ್ಲ. ಸೋದರರ ನಡುವಿನ ಕಾಳಗದಲ್ಲಿ ಮಧು ಸೋಲನ್ನು ಒಪ್ಪಿಕೊಳ್ಳುವಂತಾಯಿತು. ಆದರೆ 2023 ರಲ್ಲಿ ಮಧು ಬಂಗಾರಪ್ಪ ಮತ್ತೆ ಗೆಲುವಿನ ನಗೆ ಬೀರಿದರು. ಸಚಿವರಾದರೂ ಕೂಡ!&lt;/p&gt;&lt;h3&gt;&lt;strong&gt;ಅಸಮಾಧಾನ ಸ್ಫೋಟ&lt;/strong&gt;&lt;/h3&gt;&lt;p&gt;ತಮಗೆ ಸಚಿವ ಸ್ಥಾನ ಸಿಗದೆ ಇದ್ದುದರಿಂದ ಬೇಳೂರು ಗೋಪಾಲಕೃಷ್ಣ ಮತ್ತು ಬಿ.ಕೆ. ಸಂಗಮೇಶ್&zwnj; ಇಬ್ಬರಿಂದಲೂ ಅಸಮಾಧಾನ ಸ್ಫೋಟಗೊಂಡಿದೆ.&lt;/p&gt;&lt;p&gt;ಹಿರಿಯ ಸಚಿವರಾಗಿ ತಮಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರು ಹೈಕಮಾಂಡ್&zwnj; ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಬೆಂಬಲಿಗರ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ.&lt;/p&gt;&lt;p&gt;ಇತ್ತ ಬೇಳೂರು ಗೋಪಾಲಕೃಷ್ಣ ಅವರಂತೂ ತೀರಾ ನಿರಾಶೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ನಿಗಮ ಮಂಡಳಿ ಮತ್ತು ಶಾಸಕ ಸ್ಥಾನ ಎರಡಕ್ಕೂ ರಾಜೀನಾಮೆ ನೀಡುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.&lt;/p&gt;&lt;p&gt;ಈ ಇಬ್ಬರೂ ಕೂಡ ಕೊನೆಗಳಿಗೆಯಲ್ಲಿ ಹೈಕಮಾಂಡ್&zwnj; ಮತ್ತು ಮುಖ್ಯಮಂತ್ರಿಗಳ ಮನವೊಲಿಕೆಗೆ ಸೋತು ಒಪ್ಪಿಕೊಳ್ಳುವ ಸಾಧ್ಯತೆ ಇದ್ದೇ ಇದೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/how-madhu-bangarappa-secured-a-second-ministerial-term-in-karnataka-kvn/articleshow-usqbzlu"/>
        </item>
        <item>
            <title><![CDATA[ಶಿವಮೊಗ್ಗ: ಮಕ್ಕಳಿಗೆ ಪೌಷ್ಟಿಕ ಮೊಟ್ಟೆ ಖರೀದಿ: ಶಿಕ್ಷಕರ ಜೇಬಿಗೆ ಕತ್ತರಿ..!]]></title>
            <link>https://kannada.asianetnews.com/karnataka-districts/financial-burden-on-teachers-soaring-egg-prices-force-school-staff-to-pay-out-of-pocket-in-shivamogga-kvn/articleshow-v3iofqz</link>
            <guid isPermaLink="true">https://kannada.asianetnews.com/karnataka-districts/financial-burden-on-teachers-soaring-egg-prices-force-school-staff-to-pay-out-of-pocket-in-shivamogga-kvn/articleshow-v3iofqz</guid>
            <pubDate>Mon, 27 Jul 2026 11:33:50 +0530</pubDate>
            <description><![CDATA[ಹೊಸನಗರ ತಾಲೂಕಿನ ಶಾಲೆಗಳಲ್ಲಿ ಸರ್ಕಾರದ ಮೊಟ್ಟೆ ವಿತರಣೆ ಯೋಜನೆಯಿಂದಾಗಿ ಶಿಕ್ಷಕರು ತಮ್ಮ ಕೈಯಿಂದ ಹಣ ಹಾಕುವಂತಾಗಿದೆ. ಇದರ ಜೊತೆಗೆ, ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳಾದರೂ 60ಕ್ಕೂ ಹೆಚ್ಚು ಶಾಲೆಗಳಿಗೆ ಇನ್ನೂ ಪಠ್ಯಪುಸ್ತಕಗಳು ತಲುಪಿಲ್ಲ, ಇದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kyh2jeb493wspe2yb0sqxtx5,imgname-egg-bhagya-1785132038499.jpg" type="image/jpeg" height="390" width="690"/>
            <content:encoded><![CDATA[&lt;p&gt;ರಿಪ್ಪನ್&zwj;ಪೇಟೆ: ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆ ನೀಗಿಸುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರ ಒಂದನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗಿನ ಸರ್ಕಾರಿ ಮತ್ತು ಅನುದಾನಿತ ಕಿರಿಯ ಹಿರಿಯ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಮೊಟ್ಟೆ, ಬಾಳೆಹಣ್ಣಿನ ವಿತರಣೆಯಿಂದ ಶಿಕ್ಷಕರು ತಮ್ಮ ಕೈಯಿಂದ ಹಣ ಹಾಕುವ ಮೂಲಕ ಜೇಬಿಗೆ ಕತ್ತರಿ ಬಿದ್ದಿದೆ!&lt;/p&gt;&lt;p&gt;ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ 264 ಶಾಲೆಗಳು ಬರುತ್ತಿದ್ದು ಒಂದರಿಂದ ಎಸ್.ಎಸ್.ಎಲ್.ಸಿ.ವರೆಗೆ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಕಿರಿಯ ಮತ್ತು ಹಿರಿಯ ಪ್ರೌಢಶಾಲೆಗಳಲ್ಲಿ 13.775 ವಿದ್ಯಾರ್ಥಿಗಳಿಗೆ ವಾರದ ಎರಡು ದಿನ ಸರ್ಕಾರದಿಂದ ಉಚಿತವಾಗಿ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ಯೋಜನೆಗೆ ಶಿಕ್ಷಕ ವರ್ಗ ತಮ್ಮ ಕಿಸೆಯಿಂದ ಹಣ ಹಾಕುವಂತಾಗಿದೆ.&lt;/p&gt;&lt;p&gt;ಮೊಟ್ಟೆ ಒಂದಕ್ಕೆ ಸರ್ಕಾರ 6 ರು.ಗಳನ್ನು ನೀಡುತ್ತಿದೆ. ಆದರೆ, ಅಂಗಡಿಗಳಲ್ಲಿ ಮೊಟ್ಟೆಯ ಬೆಲೆ ಈಗ 8 ರಿಂದ 9 ರು. ಬೆಲೆ ಇದೆ. ಹೆಚ್ಚುವರಿ ವೆಚ್ಚವನ್ನು ಶಿಕ್ಷಕರೆ ಭರಿಸಿ, ಮೊಟ್ಟೆ ಖರೀದಿಸಿ ತಂದು ಮಕ್ಕಳಿಗೆ ನೀಡಬೇಕಾಗಿದೆ. ಇದರಿಂದಾಗಿ ಶಿಕ್ಷಕರು ತಮ್ಮ ಜೇಬಿನಿಂದ ಹೆಚ್ಚುವರಿ ತಲಾ ಒಂದು ಮೊಟ್ಟಗೆ 2.80 ತೆರಬೇಕಾಗಿದೆ.&lt;/p&gt;&lt;p&gt;ಪ್ರೇಮ್&zwj;ಜಿ ಫೌಂಡೇಷನ್ ವತಿಯಿಂದ ವಾರದ ನಾಲ್ಕು ದಿನ ಉಚಿತ ಮೊಟ್ಟೆ ಪೂರೈಕೆಯಾದರೆ ಉಳಿದ ಎರಡು ದಿನ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮೊಟ್ಟೆ ವಿತರಣೆಗಾಗಿ ತಮ್ಮ ಕೈಯಿಂದ ಹಣ ಹಾಕಿ ಮೊಟ್ಟೆ ತಂದು ವಿತರಣೆ ಮಾಡಬೇಕಾಗಿದೆ ಎಂದು ಕೆಲಶಾಲೆಯ ಶಿಕ್ಷಕರು ತಮ್ಮ ನೋವಿನ ಕತೆಯನ್ನು ಮಾಧ್ಯಮದವರಲ್ಲಿ ಹಂಚಿಕೊಂಡರು.&lt;/p&gt;&lt;h2&gt;&lt;strong&gt;60 ಕ್ಕೂ ಆಧಿಕ ಶಾಲೆಗಳಿಗೆ ಇನ್ನೂ ಇಲ್ಲ ಪಠ್ಯಪುಸ್ತಕ&lt;/strong&gt;&lt;/h2&gt;&lt;p&gt;ಈಗಾಗಲೇ ಶಾಲಾ ಕಾಲೇಜು ಆರಂಭಗೊಂಡು ಎರಡು ತಿಂಗಳು ಕಳೆಯುತ್ತಾ ಬಂದರೂ ಹೊಸನಗರ ತಾಲೂಕಿನ 60 ಕ್ಕೂ ಅಧಿಕ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಬಂದಿಲ್ಲ ಎನ್ನಲಾಗಿದೆ.&lt;/p&gt;&lt;p&gt;ರಾಜ್ಯ ಸರ್ಕಾರ ಶಾಲೆ ಆರಂಭದ ದಿನವೇ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸರಬರಾಜು ಮಾಡಲಾಗುತ್ತದೆ. ಕೆಲವು ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪಠ್ಯಪಸ್ತಕ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಧಿಕಾರಿ ವರ್ಗ ಹಾಗೂ ಶಾಲೆಯ ಶಿಕ್ಷಕರು ಹೇಳುವಂತೆ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಕೆಲವು ವಿದ್ಯಾರ್ಥಿಗಳು ಸರ್ಕಾರಿ ಶಾಲೆಯತ್ತ ಬಂದು ದಾಖಲಾಗುವುದರಿಂದಾಗಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎನ್ನುತ್ತಾರೆ.&lt;/p&gt;&lt;p&gt;ಕಳೆದ ವರ್ಷದ ದಾಖಲಾತಿಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ಪಠ್ಯಪುಸ್ತಕ ಸರಬರಾಜು ಮಾಡಲಾಗಿದೆ.ಈಗ ಶಾಲೆ ಪ್ರಾರಂಭಗೊಂಡಿದ್ದು ಕೆಲವು ವಿದ್ಯಾರ್ಥಿಗಳು ಹೊಸದಾಗಿ ಬಂದು ಪ್ರವೇಶ ಪಡೆದ ಕಾರಣ ಮಕ್ಕಳ ಅಂಕಿ ಅಂಶವನ್ನು ತಾಲೂಕು ಮಟ್ಟದ ಶಿಕ್ಷಣಾಧಿಕಾರಿ ಕಚೇರಿಗೆ ಸಲ್ಲಿಸಿ ಅಗತ್ಯ ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಿದರೆ ಆಗ ಸಂಬಂಧ ಪಟ್ಟ ಅಧಿಕಾರಿವರ್ಗ ತಕ್ಷಣ ಕ್ರಮಕೈಗೊಳ್ಳವ ಮೂಲಕ ಅಕ್ಕ ಪಕ್ಕದ ಶಾಲೆಗಳಲ್ಲಿ ಹೆಚ್ಚುವರಿ ಪಠ್ಯಪುಸ್ತಕಗಳನ್ನು ಪಡೆದು ವಿತರಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.&lt;/p&gt;&lt;p&gt;ಒಟ್ಟಾರೆಯಾಗಿ ಹೊಸನಗರ ತಾಲೂಕಿನ ಕೆಲವು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭಗೊಂಡಿದ್ದು, ಕೊರತೆಯಿರುವ ಪಠ್ಯ ಪುಸ್ತಕವನ್ನು ತಕ್ಷಣವೇ ಸರಬರಾಜು ಮಾಡಲು ಪ್ರಸ್ತಾವನೆ ಕಳುಹಿಸಲಾಗಿದೆ. ಅದಷ್ಟು ಬೇಗ ಸಮಸ್ಯೆಯಾಗದಂತೆ ಪಠ್ಯಪುಸ್ತಕವನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಎನ್ನಲಾಗಿದೆ.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/financial-burden-on-teachers-soaring-egg-prices-force-school-staff-to-pay-out-of-pocket-in-shivamogga-kvn/articleshow-v3iofqz"/>
        </item>
        <item>
            <title><![CDATA[ದಾವಣಗೆರೆ ಟು ಶಿವಮೊಗ್ಗ:  ಝೀರೋ ಟ್ರಾಫಿಕಲ್ಲಿ ಸಾಗಿಸಿದರೂ ಬದುಕದ 3 ತಿಂಗಳ ಹಸೂಗೂಸು!]]></title>
            <link>https://kannada.asianetnews.com/karnataka-districts/davanagere-to-shivamogga-3-monthold-infant-could-not-be-saved-despite-transported-zerotraffic-conditions-rav/articleshow-vaaph9w</link>
            <guid isPermaLink="true">https://kannada.asianetnews.com/karnataka-districts/davanagere-to-shivamogga-3-monthold-infant-could-not-be-saved-despite-transported-zerotraffic-conditions-rav/articleshow-vaaph9w</guid>
            <pubDate>Fri, 31 Jul 2026 06:16:13 +0530</pubDate>
            <description><![CDATA[ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ 3 ತಿಂಗಳ ಕೂಸನ್ನು ದಾವಣಗೆರೆಯಿಂದ ಮಣಿಪಾಲಕ್ಕೆ ಝೀರೋ ಟ್ರಾಫಿಕ್&zwnj;ನಲ್ಲಿ ಸಾಗಿಸುವಾಗ ಆ್ಯಂಬುಲೆನ್ಸ್ ಟೈರ್ ಪಂಕ್ಚರ್ ಆಗಿದೆ. ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kytspzgd2zedkb31qk1sj606,imgname-----------------------2026-07-31t060128.830-1785458294285.jpg" type="image/jpeg" height="390" width="690"/>
            <content:encoded><![CDATA[&lt;p&gt;ದಾವಣಗೆರೆ (ಜು.31): ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ 3 ತಿಂಗಳ ಕೂಸನ್ನು ತುರ್ತು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್&zwnj;ನಲ್ಲಿ ಝೀರೋ ಟ್ರಾಫಿಕ್&zwnj;ನಲ್ಲಿ ಸಾಗಿಸುವ ಪ್ರಯತ್ನ ಅರ್ಧದಲ್ಲಿಯೇ ವ್ಯರ್ಥವಾಗಿದೆ. ದಾವಣಗೆರೆ ಬಾಪೂಜಿ ಮಕ್ಕಳ ಆಸ್ಪತ್ರೆಯಿಂದ ಉಡುಪಿಯ ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಗೆ ಗುರುವಾರ ರಾತ್ರಿ ಕಳುಹಿಸಿ ಕೊಡಲಾಯಿತಾದರೂ ಮಗು ಬದುಕುಳಿಯಲಿಲ್ಲ.&lt;/p&gt;&lt;h2&gt;ಆ್ಯಂಬುಲೆನ್ಸ್&zwnj; ಟೈರ್&zwnj; ಪಂಕ್ಚರ್&lt;/h2&gt;&lt;p&gt;ದಾವಣಗೆರೆ ಜಿಲ್ಲೆ ಹರಿಹರದ ಮೂಲದ ಪಲ್ಲವಿ ಅವರನ್ನು ಕೊಪ್ಪಳದ ಹನುಮೇಶ್ವ&zwnj;ರ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಯ 3 ತಿಂಗಳು 26 ದಿನದ ಅನ್ವಿಕಾಳಿಗೆ ವಿಪರೀತ ಜ್ವರ ಬಂದ ಹಿನ್ನೆಲೆಯಲ್ಲಿ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ಪತ್ತೆ ಆಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದ್ದರು. ಅದಕ್ಕಾಗಿ ಮಗುವನ್ನು ಆ್ಯಂಬುಲೆನ್ಸ್&zwnj;ನಲ್ಲಿ ಝೀರೋ ಟ್ರಾಫಿಕ್&zwnj;ನಲ್ಲಿ ಕಳುಹಿಸಲು ನಿರ್ಧರಿಸಿ ದಾವಣಗೆರೆ, ಶಿವಮೊಗ್ಗ, ಉಡುಪಿ ಪೊಲೀಸರು ಟೊಂಕ ಕಟ್ಟಿ ವ್ಯವಸ್ಥೆ ಕೈಗೊಂಡಿದ್ದರು. ಅದರಂತೆ ವೈದ್ಯರ ತಂಡದೊಂದಿಗೆ ಹೋಗುವಾಗ ದಾವಣಗೆರೆಯ ಹೊನ್ನಾಳಿ ತಾಲೂಕಿನ ಚಿ.ಕಡದಕಟ್ಟೆ ಬಳಿ ಆ್ಯಂಬುಲೆನ್ಸ್&zwnj; ಟೈರ್&zwnj; ಪಂಕ್ಚರ್ ಆಯಿತು. ತಕ್ಷಣವೇ ಜೊತೆಯಲ್ಲಿದ್ದ ಪೊಲೀಸರು ಟಯರ್&zwnj; ಬದಲಿಸಿದರು. ಈ ವೇಳೆ ಮಗುವಿನ ಪಲ್ಸ್ ರೇಟ್ ಕಡಿಮೆ ಆಗುತ್ತಿತ್ತು. ಇದನ್ನು ಗಮನಿಸಿದ ವೈದ್ಯರ ತಂಡ ಅತಿ ತುರ್ತು ಚಿಕ್ಸಿತ್ಸೆಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಯಿತು.&lt;/p&gt;&lt;h3&gt;ವಿಶೇಷ ಆ್ಯಂಬುಲೆನ್ಸ್&zwnj;ನಲ್ಲೇ ಪುನಃ ಮಗುವಿನ ಶವ ಹರಿಹರಕ್ಕೆ&lt;/h3&gt;&lt;p&gt;ಆದರೆ ಸರ್ಜಿ ಆಸ್ಪತ್ರೆಯಲ್ಲಿ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತಾದರೂ ಮಗು ಬದುಕಲೇ ಇಲ್ಲ. ಮಗು ಕಳೆದುಕೊಂಡ ಹೆತ್ತೊಡಲು ಆಕ್ರಂದನ ಮುಗಿಲು ಮುಟ್ಟಿತ್ತು. ಮಗುವ ಪ್ರಾಣ ರಕ್ಷಣೆ ಮಾಡಲು ಹೊರಟಿದ್ದ ವಿಶೇಷ ಆ್ಯಂಬುಲೆನ್ಸ್&zwnj;ನಲ್ಲೇ ಪುನಃ ಮಗುವಿನ ಶವವನ್ನು ಹರಿಹರಕ್ಕೆ ಸಾಗಿಸಲಾಯಿತು.&lt;/p&gt;]]></content:encoded>
            <category>shivamogga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/davanagere-to-shivamogga-3-monthold-infant-could-not-be-saved-despite-transported-zerotraffic-conditions-rav/articleshow-vaaph9w"/>
        </item>
        <item>
            <title><![CDATA[8 ಕಾಲು, 3 ಕಿವಿಗಳಿರೋ ವಿಚಿತ್ರ ಆಡಿನ ಮರಿ ಜನನ; ಸೊರಬ ತಾಲೂಕಿನಲ್ಲಿ ಅಪರೂಪದ ಘಟನೆ]]></title>
            <link>https://kannada.asianetnews.com/karnataka-districts/shivamogga-a-strange-goat-with-8-legs-and-3-ears-is-born-a-rare-incident-in-soraba-taluk-mrq/articleshow-wcc9wmf</link>
            <guid isPermaLink="true">https://kannada.asianetnews.com/karnataka-districts/shivamogga-a-strange-goat-with-8-legs-and-3-ears-is-born-a-rare-incident-in-soraba-taluk-mrq/articleshow-wcc9wmf</guid>
            <pubDate>Thu, 06 Aug 2026 12:19:50 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಎಂಟು ಕಾಲು, ಮೂರು ಕಿವಿ, ಎರಡು ಬಾಲ ಮತ್ತು ಎರಡು ನಾಲಿಗೆಗಳಿದ್ದ ವಿಚಿತ್ರ ಆಡಿನ ಮರಿಯೊಂದು ಜನಿಸಿದೆ. ಕಾಳಿಂಗಪ್ಪ ಭಾವಿಕಟ್ಟೇರ್ ಅವರ ಮನೆಯಲ್ಲಿ ಜನಿಸಿದ ಈ ಮರಿಯು, ಕೆಲ ಗಂಟೆಗಳ ಕಾಲ ಬದುಕುಳಿದು ನಂತರ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ತೀವ್ರ ಕುತೂಹಲ ಮೂಡಿಸಿತ್ತು.]]></description>
            <media:content url="https://static.asianetnews.com/images/w-1280,h-720,format-jpg,imgid-01kzax8a1v3rv49tz9cc2kca5d,imgname-goat-1785998878779.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ: &lt;/strong&gt;ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ವಿಚಿತ್ರವಾದ ಆಡಿನ ಮರಿಯೊಂದು ಜನಿಸಿದ್ದು, ಇದು ಗ್ರಾಮಸ್ಥರಲ್ಲಿ ತೀವ್ರ ಅಚ್ಚರಿ ಮೂಡಿಸಿದೆ. ಈ ಘಟನೆಯು ಗ್ರಾಮದ ಕಾಳಿಂಗಪ್ಪ ಭಾವಿಕಟ್ಟೇರ್ ಹಾಗೂ ಪಟ್ಟಮ್ಮ ದಂಪತಿಯ ಮನೆಯಲ್ಲಿ ನಡೆದಿದೆ. ಇವರು ಕೃಷಿ ಚಟುವಟಿಕೆಯೊಂದಿಗೆ ಕುರಿ ಸಾಕಾಣಿಕೆಯನ್ನೂ ಮಾಡುತ್ತಿದ್ದಾರೆ.&lt;/p&gt;&lt;h2&gt;&lt;strong&gt;8 ಕಾಲು, ಮೂರು ಕಿವಿ, ಎರಡು ಬಾಲ&lt;/strong&gt;&lt;/h2&gt;&lt;p&gt;ಕಾಳಿಂಗಪ್ಪ ಭಾವಿಕಟ್ಟೇರ್ ಅವರರ ಮನೆಯ ಆಡು ಮರಿಗೆ ಜನ್ಮ ನೀಡುವಾಗ, ಆರಂಭದಲ್ಲಿ ಅವಳಿ ಮರಿಗಳು ಜನಿಸಬಹುದು ಎಂದು ಭಾವಿಸಲಾಗಿತ್ತು. ಆದರೆ, ಆಡು ಜನ್ಮ ನೀಡಿದ ಒಂದೇ ಮರಿಗೆ 8 ಕಾಲು, ಮೂರು ಕಿವಿ, ಎರಡು ಬಾಲ ಮತ್ತು ಎರಡು ನಾಲಿಗೆಗಳಿದ್ದವು.&lt;/p&gt;&lt;p&gt;ಈ ವಿಚಿತ್ರ ಆಡಿನ ಮರಿಯನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಕುತೂಹಲದಿಂದ ಆಗಮಿಸಿದ್ದರು. ನಿನ್ನೆ ಮಧ್ಯಾಹ್ನದ ಸಮಯದಲ್ಲಿ ಜನಿಸಿದ ಈ ವಿಚಿತ್ರ ಆಡಿನ ಮರಿ, ಅಚ್ಚರಿಯೆಂಬಂತೆ ಸಂಜೆಯವರೆಗೂ ಬದುಕುಳಿದಿತ್ತು. ನಂತರ ಸಾವನ್ನಪ್ಪಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 2 ತಲೆ, 4 ಕಣ್ಣಿನ ಹಲ್ಲಿ; ಮನುಷ್ಯರ ಉಗುರಿಗಿಂತಲೂ ಚಿಕ್ಕದು, 10 ವರ್ಷ ಬದುಕುತ್ತಾ?&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹುಲಿ-ಸಿಂಹ ನೋಡಿದ್ರೂ ಹೆದರದ ಹೆಣ್ಮಕ್ಳು&hellip; ಗೋಡೆ ಮೇಲಿನ ಹಲ್ಲಿ ಕಂಡ್ರೆ ಹಿಂಗ್ಯಾಕೆ ಆಡ್ತಾರೆ?&lt;/strong&gt;&lt;/p&gt;]]></content:encoded>
            <category>shivamogga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/shivamogga-a-strange-goat-with-8-legs-and-3-ears-is-born-a-rare-incident-in-soraba-taluk-mrq/articleshow-wcc9wmf"/>
        </item>
        <item>
            <title><![CDATA[ಶಿವಮೊಗ್ಗ: ಚಲಿಸುತ್ತಿದ್ದ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ರೂ ಬದುಕುಳಿದ ಚಾಲಕ!]]></title>
            <link>https://kannada.asianetnews.com/karnataka-districts/shivamogga-driver-survives-after-massive-tree-falls-on-moving-vehicle-rav/articleshow-wtfmfh3</link>
            <guid isPermaLink="true">https://kannada.asianetnews.com/karnataka-districts/shivamogga-driver-survives-after-massive-tree-falls-on-moving-vehicle-rav/articleshow-wtfmfh3</guid>
            <pubDate>Sun, 02 Aug 2026 08:16:55 +0530</pubDate>
            <description><![CDATA[ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ, ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದೆ. ಈ ದುರಂತದಲ್ಲಿ ವಾಹನದೊಳಗೆ ಸಿಲುಕಿದ್ದ ಚಾಲಕ ತೌಸಿಫ್ ಅವರನ್ನು ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಟ್ಟು ರಕ್ಷಿಸಿದ್ದು, ಚಾಲಕ ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz05tdtz4bc9yg2xfqmchhb7,imgname-----------------------2026-08-02t080032.838-1785638762335.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ, (ಆ.2): &lt;/strong&gt;ಚಲಿಸುತ್ತಿದ್ದ ಟಾಟಾ ಏಸ್ (ಪಿಕಪ್) ವಾಹನದ ಮೇಲೆ ಬೃಹತ್ ಮರವೊಂದು ಏಕಾಏಕಿ ಉರುಳಿ ಬಿದ್ದು, ಚಾಲಕ ವಾಹನದಲ್ಲೇ ಸಿಲುಕಿಕೊಂಡ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದಲ್ಲಿ ನಡೆದಿದೆ.&lt;/p&gt;&lt;h2&gt;ತರಕಾರಿ ಮಾರಾಟ ಮಾಡಿ ಮನೆಗೆ ಹಿಂದಿರುವಾಗ ದುರ್ಘಟನೆ&lt;/h2&gt;&lt;p&gt;ರಿಪ್ಪನ್ ಪೇಟೆ ಸಮೀಪದ ಬರುವೆ ಗ್ರಾಮದ ಆಚಾರ್ ಕೇರಿ ಬಳಿ ಈ ಘಟನೆ ನಡೆದಿದೆ. ಮದೀನಾ ಕಾಲೋನಿ ನಿವಾಸಿ ತೌಸಿಫ್ ಎಂಬವರು ಟಾಟಾ ಏಸ್ ವಾಹನದಲ್ಲಿ ತರಕಾರಿ ಮಾರಾಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.&lt;/p&gt;&lt;p&gt;ನಿರಂತರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ವಾಹನದ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು.&lt;/p&gt;&lt;h3&gt;ಚಾಲಕನ ರಕ್ಷಣೆ&lt;/h3&gt;&lt;p&gt;ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆ ಪೊಲೀಸ್ ಠಾಣೆ ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸಾಕಷ್ಟು ಹರಸಾಹಸದ ಬಳಿಕ ವಾಹನದಲ್ಲಿ ಸಿಲುಕಿದ್ದ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದರು.&lt;/p&gt;&lt;p&gt;ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸದಿದ್ದರೂ ಚಾಲಕ ತೌಸಿಫ್ ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.&lt;/p&gt;]]></content:encoded>
            <category>shivamogga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/shivamogga-driver-survives-after-massive-tree-falls-on-moving-vehicle-rav/articleshow-wtfmfh3"/>
        </item>
        <item>
            <title><![CDATA[Shivamogga: ವಸತಿ ಶಾಲೆ ಪ್ರವೇಶಕ್ಕೆ ₹20,000 ಲಂಚ ಕೇಳಿದ ಚೇಲ: ಹಣದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಾಲ!]]></title>
            <link>https://kannada.asianetnews.com/karnataka-districts/shivamogga-residential-school-principal-caught-by-lokayukta-while-taking-bribe-for-7th-grade-seat/articleshow-zaepxgt</link>
            <guid isPermaLink="true">https://kannada.asianetnews.com/karnataka-districts/shivamogga-residential-school-principal-caught-by-lokayukta-while-taking-bribe-for-7th-grade-seat/articleshow-zaepxgt</guid>
            <pubDate>Tue, 21 Jul 2026 11:13:20 +0530</pubDate>
            <description><![CDATA[&lt;p&gt;ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು, ಶಾಲಾ ಪ್ರವೇಶಾತಿಗಾಗಿ ಬಾಲಕಿಯ ತಂದೆಯಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಡ್ರಮ್ ಸೆಟ್ ಕೊಡಿಸುವ ನೆಪದಲ್ಲಿ 20,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರಾಂಶುಪಾಲ ನಾಮದೇವ್, 10,000 ರೂ. ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky1k1qx2acya3cyxnvf4x9nj,imgname-shivamogga-principal-arrest-1784612446114.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಜು.21): ಶಾ&lt;/strong&gt;ಲಾ ಪ್ರವೇಶಾತಿ (School Admission) ನೀಡಲು ಬಾಲಕಿಯ ತಂದೆಯಿಂದ ಲಂಚ (Bribe) ಪಡೆಯುತ್ತಿದ್ದ ಸರ್ಕಾರಿ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು (Principal) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ (Kittur Rani Chennamma Residential School) ಈ ಘಟನೆ ನಡೆದಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿಯಾಗಿರುವ ಮೇಘರಾಜ ಸಿ. ಎಂಬುವವರು ಎಳನೀರು ವ್ಯಾಪಾರ (Tender Coconut Vendor) ಮಾಡುತ್ತಿದ್ದಾರೆ. ಇವರು ತಮ್ಮ ಮಗಳು ಕುಮಾರಿ ದೀಕ್ಷಾಳನ್ನು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 7ನೇ ತರಗತಿಗೆ (7th Grade) ಸೇರಿಸಲು ಬಯಸಿದ್ದರು. ಈ ವೇಳೆ ಶಾಲೆಯ ಪ್ರಾಂಶುಪಾಲರಾದ ನಾಮದೇವ್ (Namadev), ಮಗಳಿಗೆ ಸೀಟು ಕೊಡಿಸಲು 'ಡ್ರಮ್ ಸೆಟ್' (Drum Set) ಕೊಡಿಸುವ ನೆಪದಲ್ಲಿ 20,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.&lt;/p&gt;&lt;h2&gt;&lt;strong&gt;ಲೋಕಾಯುಕ್ತ ಪೊಲೀಸರಿಗೆ ದೂರು:&lt;/strong&gt;&lt;/h2&gt;&lt;p&gt;ಕಷ್ಟಪಟ್ಟು ಜೀವನ ನಡೆಸುತ್ತಿರುವ ಮೇಘರಾಜ್ ಅವರು ಲಂಚ ನೀಡಲು ಇಷ್ಟವಿಲ್ಲದೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ (Lokayukta Police Station) ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಾಳಿಗೆ ಸಿದ್ಧತೆ ನಡೆಸಿದ್ದರು.&lt;/p&gt;&lt;h3&gt;&lt;strong&gt;ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಾಂಶುಪಾಲ:&lt;/strong&gt;&lt;/h3&gt;&lt;p&gt;ವಸತಿ ಶಾಲೆಯ ತಮ್ಮ ಕೊಠಡಿಯಲ್ಲಿ (Office) ಪ್ರಾಂಶುಪಾಲ ನಾಮದೇವ್ ಅವರು ಮೇಘರಾಜ್ ಅವರಿಂದ ಲಂಚದ ಹಣದ ಮೊದಲ ಕಂತು 10,000 ರೂಪಾಯಿ ಸ್ವೀಕರಿಸುತ್ತಿದ್ದರು. ಈ ವೇಳೆ ಹೊಂಚು ಹಾಕಿದ್ದ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ, ಲಂಚದ ಹಣದೊಂದಿಗೆ ಪ್ರಾಂಶುಪಾಲನನ್ನು ವಶಕ್ಕೆ ಪಡೆದಿದ್ದಾರೆ.&lt;/p&gt;&lt;h2&gt;&lt;strong&gt;ಕಾರ್ಯಾಚರಣೆ ತಂಡ:&lt;/strong&gt;&lt;/h2&gt;&lt;p&gt;ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಇನ್&zwnj;ಸ್ಪೆಕ್ಟರ್ (Inspector) ರುದ್ರೇಶ್ ಕೆ.ಪಿ. ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಬಡ ವ್ಯಾಪಾರಿಯ ಮಗಳ ಶಿಕ್ಷಣದ ಹಕ್ಕಿಗೆ ಲಂಚದ ಅಡ್ಡಿ ಉಂಟುಮಾಡಿದ್ದ ಅಧಿಕಾರಿಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಆರೋಪಿ ನಾಮದೇವ್ ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>shivamogga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-residential-school-principal-caught-by-lokayukta-while-taking-bribe-for-7th-grade-seat/articleshow-zaepxgt"/>
        </item>
    </channel>
</rss>
