<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 18 Apr 2026 17:59:06 +0530</lastBuildDate>
        <atom:link href="https://kannada.asianetnews.com/rss/state" rel="self" type="application/rss+xml"/>
        <item>
            <title><![CDATA[Women Reservation Bill: ಸ್ವಾರ್ಥ, ಅಪಸ್ವರವಿಲ್ಲದೆ ಮಹಿಳಾ ಮೀಸಲಾತಿ ಜಾರಿಯಾಗಲಿ]]></title>
            <link>https://kannada.asianetnews.com/state/let-women-s-reservation-be-implemented-without-selfishness-or-discord-malavika-avinashh-rav/articleshow-q80ia01</link>
            <guid isPermaLink="true">https://kannada.asianetnews.com/state/let-women-s-reservation-be-implemented-without-selfishness-or-discord-malavika-avinashh-rav/articleshow-q80ia01</guid>
            <pubDate>Sat, 18 Apr 2026 08:06:47 +0530</pubDate>
            <description><![CDATA[&lt;p&gt;ರಾಜಕಾರಣಿಗಳು ಶಕ್ತಿ ದೇವತೆಗಳ ಆರಾಧಿಸುವುದಕ್ಕೂ, ರಾಜಕೀಯದಲ್ಲಿ ಮಹಿಳೆಯರ ಪ್ರವೇಶಕ್ಕೆ ದಶಕಗಳ ಕಾಲ ಅಡ್ಡಿಪಡಿಸಿದ್ದಕ್ಕೂ ಇರುವ ವಿಪರ್ಯಾಸವನ್ನು ಈ ಲೇಖನ ಚರ್ಚಿಸುತ್ತದೆ. ಅಂಬೇಡ್ಕರ್&zwnj;ರಿಂದ ಹಿಡಿದು, ಪಿ.ವಿ.ನರಸಿಂಹ ರಾವ್&zwnj; ಮತ್ತು ಮೋದಿಯವರ ಕಾಲದವರೆಗೆ ಮಹಿಳಾ ಮೀಸಲಾತಿಯ ಐತಿಹಾಸಿಕ ಹಾದಿ ವಿವರಿಸುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpf6nbdt5t40ts6xmw5n8ch9,imgname-----------------------2026-04-18t075741.702-1776479284666.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಾಳವಿಕಾ ಅವಿನಾಶ್&zwnj;, &lt;/strong&gt;ರಾಜ್ಯ ಬಿಜೆಪಿ ಉಪಾಧ್ಯಕ್ಷೆ&lt;/p&gt;&lt;p&gt;ತಂಜಾವೂರಿನ ಬೃಹದೀಶ್ವರ ದೇವಾಲಯ ಪ್ರವೇಶಿಸುತ್ತಿದ್ದಂತೆಯೇ ಎಡಕ್ಕೆ ಶ್ರೀ ವಾರಾಹಿ ಕಂಗೊಳಿಸುತ್ತಾಳೆ. ಆ ಅದ್ಭುತ ದೇವಾಲಯವನ್ನು ನಿರ್ಮಿಸಿದ ಸಾಮ್ರಾಟ ರಾಜ ರಾಜ ಚೋಳ, ವಾರಾಹಿಗೆ ಕೈಮುಗಿದೇ ಯುದ್ಧಕ್ಕೆ ತೆರಳುತಿದ್ದ ಎಂಬುದು ಇತಿಹಾಸ. ತಿಳಿದವರಿಗೆ ಗೊತ್ತು ವಾರಾಹಿ, ತಂತ್ರ ಮಾರ್ಗದಲ್ಲಿ ಪೂಜಿಸಲ್ಪಡುವ ಶಕ್ತಿ ದೇವತೆ ಎಂದು.&lt;/p&gt;&lt;p&gt;ಛತ್ರಪತಿ ಶಿವಾಜಿ ಮಹಾರಾಜರು ಕೂಡ ಮೊರೆ ಹೋಗುತ್ತಿದ್ದುದು ಶಕ್ತಿ ಪೀಠಗಳಲ್ಲಿ ಒಂದಾದ ತುಳಜಾಪುರದ ಭವಾನಿಯನ್ನು. ನಮ್ಮ ಕದಂಬರು ಬನವಾಸಿಯ ಭುವನೇಶ್ವರಿಯನ್ನು ನಂಬಿದ್ದರು. ಯದು ವಂಶದ ಒಡೆಯರಿಗೆ ಚಾಮುಂಡಿಯೇ ಸರ್ವಸ್ವ. ಅಂದಿನ ಸಾಮ್ರಾಟರು, ಯೋಧರಿಂದ ಇಂದಿನ ರಾಜಕಾರಣಿಗಳವರೆಗೆ ಎಲ್ಲರೂ &lsquo;ಶಾಕ್ತೇಯರು&rsquo;, ಅರ್ಥಾತ್ ಶಕ್ತಿಯ ಆರಾಧಕರು ಎಂಬುದು ರಾಜಕಾರಣಿಯಾಗಿ ನಾನು ಕಂಡುಕೊಂಡ ಸತ್ಯ.&lt;/p&gt;&lt;p&gt;ಅಸ್ಸಾಂನ ಕಾಮಾಕ್ಯ, ಬೆಂಗಳೂರಿನ ರಾಜರಾಜೇಶ್ವರಿ, ಮಧುರೈ ಮೀನಾಕ್ಷಿ/ರಾಜ ಮಾತಂಗಿ, ದೆಹಲಿಯ ಛತ್ತರ್&zwnj;ಪುರದ ಕಾತ್ಯಾಯಿನಿಯಂತಹ ದೇವಾಲಯಗಳಿಗೆ ಅನೇಕರು ಮೊರೆ ಹೋಗುವುದು ಸಾರ್ವಜನಿಕ ಜ್ಞಾನ. ನನಗೆ ಅಚ್ಚರಿಯೆನಿಸಿದ್ದೇನೆಂದರೆ, ಹೀಗೆ ಶಕ್ತಿಯನ್ನು ಆರಾಧಿಸುವ ರಾಜಕಾರಣಿಗಳು, ಮಹಿಳೆಯರ ರಾಜಕೀಯ ಭೂಮಿಕೆಗೆ ಇಷ್ಟು ದಶಕಗಳ ಕಾಲ ಅಡ್ಡಿಪಡಿಸಿದ್ದೇಕೆ ಎಂಬುದು?&lt;/p&gt;&lt;p&gt;ಸಂವಿಧಾನ ಶಿಲ್ಪಿ ಅಂಬೇಡ್ಕರರಿಂದಾಗಿ 1952ರ ಸ್ವತಂತ್ರ ಭಾರತದ ಮೊದಲ ಚುನಾವಣೆಯಲ್ಲಿ ಮಹಿಳೆಯರೂ ಪುರುಷರಂತೆಯೇ ಮತದಾನ ಮಾಡಿದ್ದರು. ಅಮೆರಿಕದಲ್ಲಿ ಸ್ವಾತಂತ್ರ್ಯ ಬಂದು ಮಹಿಳೆಯರು ಮತದಾನ ಮಾಡಲು 200 ವರ್ಷ ಕಾಯಬೇಕಿತ್ತು. ನಮ್ಮನ್ನಾಳಿದ ಬ್ರಿಟಿಷರೇ ಮತದಾನದ ಹಕ್ಕು ನೀಡಲು ಮಹಿಳೆಯರನ್ನು ದಶಕಗಳ ಕಾಲ ಕಾಯಿಸಿದರು.&lt;/p&gt;&lt;h2&gt;ಭಾರತೀಯ ಮಹಿಳೆಯೇ ಧನ್ಯ:&lt;/h2&gt;&lt;p&gt;ಅಂಬೇಡ್ಕರ್&zwnj; ಅವರು ಬದುಕಿದ ಈ ನೆಲದಲ್ಲಿ ಹುಟ್ಟಿದ ಭಾರತೀಯ ಮಹಿಳೆಯೇ ಧನ್ಯ. ನಮ್ಮ ಸಂವಿಧಾನವನ್ನು ಜಾರಿಗೊಳಿಸಿದ ಕಾನ್&zwnj;ಸ್ಟಿಟ್ಯುಯೆಂಟ್&zwnj; ಅಸೆಂಬ್ಲಿಯಲ್ಲಿ 15 ಮಂದಿ ಮಹಿಳೆಯರಿದ್ದರು ಎಂಬುದೂ ಸ್ಮರಿಸಿಕೊಳ್ಳಬೇಕಾದ ಸತ್ಯ. 1952ರಲ್ಲೇ ಮತದಾನದ ಹಕ್ಕು ಸಿಕ್ಕಿದ್ದರೂ ಚುನಾವಣಾ ರಾಜಕೀಯದಲ್ಲಿ ತೊಡಗುವುದು ಮಹಿಳೆಗೆ ಸುಲಭವಿರಲಿಲ್ಲ. ಸಹಜವಾಗಿಯೇ ಪುರುಷ ಪ್ರಧಾನ ಸಮಾಜದಲ್ಲಿ ಕಷ್ಟ. ಅದರಲ್ಲೂ ಜಾತಿ, ಹಣದ ರಾಜಕಾರಣದಲ್ಲಿ ಸಾಮಾನ್ಯ ಮಹಿಳೆಗೆ ಕಾಲೂರಲೂ ಅವಕಾಶವಿರಲಿಲ್ಲ.&lt;/p&gt;&lt;p&gt;ಕಾಂಗ್ರೆಸ್ಸಿನಲ್ಲಿ ಸರ್ವೋಚ್ಚ ಪ್ರಧಾನಿ ಸ್ಥಾನ, ಸಂಘಟನೆಯ ಅಧ್ಯಕ್ಷೆ ಸ್ಥಾನ ಒಂದು ಕುಟುಂಬಕ್ಕೆ ಮೀಸಲು, ಹಾಗಾಗಿ ನಾನು ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಎಲ್ಲ ಅಡೆತಡೆಗಳನ್ನೂ ಮೆಟ್ಟಿ ನಿಂತು, ಯಾವುದೇ ರಾಜಕೀಯ ಹಿನ್ನಲೆ ಇಲ್ಲದೆ ಬಂದು, ಟಿಕೆಟ್ ಪಡೆದು, ಗೆದ್ದು, ಸ್ವಂತ ಪರಿಶ್ರಮದಿಂದ ಬೆಳೆದು ಅತ್ಯುನ್ನತ ಪದವಿಗಳನ್ನು ಅಲಂಕರಿಸಿದ ಸುಷ್ಮಾ ಸ್ವರಾಜ್, ಉಮಾ ಭಾರತಿ, ಜಯಲಲಿತಾ, ಮಾಯಾವತಿ, ಮಮತಾ ಬ್ಯಾನರ್ಜಿ, ಸುಮಿತ್ರಾ ಮಹಾಜನ್, ಮೋಟಮ್ಮ ರಂಥ ಅನೇಕ ಮಹಿಳೆಯರ ಸಾಧನೆಯನ್ನು ನೋಡಿದಾಗ ಮನಸ್ಸು, ಹೃದಯಗಳು ತುಂಬಿ ಬರುತ್ತವೆ.&lt;/p&gt;&lt;p&gt;ಸಂವಿಧಾನದ 73ನೇ ತಿದ್ದುಪಡಿ ಮೂಲಕ ಪಿ.ವಿ.ನರಸಿಂಹ ರಾಯರು ಪ್ರಧಾನಿಯಾಗಿದ್ದ ಕಾಲದಲ್ಲಿ 33% ಮಹಿಳಾ ಮೀಸಲಾತಿಯನ್ನು ಪಂಚಾಯತಿಗಳಲ್ಲಿ/ಸ್ಥಳೀಯ ಸಂಸ್ಥೆಗಳಾದ ನಗರ-ಪುರ ಸಭೆಗಳಲ್ಲಿ 1992ರಲ್ಲಿ ಜಾರಿಗೊಳಿಸಲಾಯಿತು. ಸಾಮಾನ್ಯ ಮಹಿಳೆಯರ ಪಾಲಿಗೆ ಭಾಗ್ಯದ ಬಾಗಿಲೇ ತೆರೆದಂತಾಯಿತು. ಅಲ್ಲಿಯವರೆಗೆ, ಹೆಂಡತಿಯನ್ನು ಕಸಕ್ಕಿಂತ ಕೀಳಾಗಿ ನೋಡುತ್ತಿದ್ದ ಗಂಡ, ಓದು- ಬರಹ ಗೊತ್ತಿಲ್ಲದ ಗ್ರಾಪಂ ಅಧ್ಯಕ್ಷೆ-ಹೆಂಡತಿಯ ಬಳಿ ಸಹಿ ಪಡೆದೇ ಪಾಸ್ಪೋರ್ಟ್ ಮಾಡಿಸಿಕೊಳ್ಳುವ ವಿನೋದ ಪ್ರಸಂಗದಂಥವು ಹಲವು ನಡೆದು ಹೋದವು. ಮೊನ್ನೆಯ ಭಾಷಣದಲ್ಲಿ ಪ್ರಧಾನಿಗಳು ಉಲ್ಲೇಖಿಸಿದ ಗುಜರಾತಿನ ಪ್ರಸಂಗ ಅದರಲ್ಲಿ ಅತಿ ವಿನೋದದ್ದು. ಒಂದು ಗ್ರಾಪಂನಲ್ಲಿನ 13 ಸ್ಥಾನಗಳನ್ನೂ ಪುರುಷರು ಸ್ಪರ್ಧೆಯೇ ಮಾಡದೆ ಮಹಿಳೆಯರಿಗೆ ಬಿಟ್ಟುಕೊಟ್ಟಿದ್ದಾರೆ. ಆ ಎಲ್ಲ ಮಹಿಳೆಯರು ಆಗ ಮುಖ್ಯಮಂತ್ರಿಯಾಗಿದ್ದ ಮೋದಿ ಅವರನ್ನು ಕಾಣಲು ಬಂದಾಗ, ಎಲ್ಲರಂತೆ ಇವರೂ ಅನುದಾನಕ್ಕೆ ಬಂದಿರುವುದೆಂದುಕೊಂಡು ಏನು ಬೇಕು ಎಂದರಂತೆ ಮೋದಿ. ನಮಗೇನೂ ಬೇಡ. ನಿಮ್ಮನ್ನು ಕಾಣುವ ಆಸೆಯಷ್ಟೆ ಎಂದು ಉತ್ತರ ಕೊಟ್ಟರಂತೆ ಸದಸ್ಯೆಯರು. ಶಾಲೆ, ರಸ್ತೆ, ಕಾರ್ಖಾನೆಯಂಥ ಯಾವುದನ್ನೋ ತರುತ್ತೇವೆ ಎನ್ನುತ್ತಾರೆ ಅಂದುಕೊಂಡು, ಹೇಗೆ ಹಳ್ಳಿಯನ್ನು ಸುಧಾರಿಸುತ್ತೀರಾ? ನಿಮ್ಮ ಯೋಜನೆ ಏನು ಎಂದಾಗ, ನಮ್ಮ ಹಳ್ಳಿಯಲ್ಲಿ ಒಬ್ಬರೂ ಬಡವರಾಗಿ ಉಳಿಯಬಾರದು. ಅದೇ ನಮ್ಮ ಧ್ಯೇಯ ಎಂದರಂತೆ. ಭುವನದ ಯಾವ ಆರ್ಥಿಕ ತಜ್ಞನೂ ನೀಡಲಾರದ ಸರಳ ಉತ್ತರವನ್ನು ಹೈಸ್ಕೂಲ್&zwnj; ದಾಟದ ತಾಯಿಯೊಬ್ಬರು ಕೊಟ್ಟರು. ಆಕೆಯ ಉತ್ತರ ಮಹಿಳೆಯರ ಸಾಮರ್ಥ್ಯದ ಮತ್ತೊಂದು ಆಯಾಮ ತೆರೆದಿಟ್ಟಿತು ಎಂದು ಪ್ರಧಾನಿಗಳು ಸ್ಮರಿಸಿಕೊಂಡರು.&lt;/p&gt;&lt;p&gt;ಸ್ತ್ರೀಯರಿಗೆ ಮೀಸಲಾತಿ ಕೊಟ್ಟರೆ ಹೆಂಡತಿಯನ್ನು ಮುಂದೆ ನಿಲ್ಲಿಸಿ ಪುರುಷರೇ ಆಡಳಿತ ಮಾಡುತ್ತಾರೆಂಬ ಅಪಸ್ವರ ಪಂಚಾಯತಿಗಳಲ್ಲಿ ಮೀಸಲಾತಿ ಬಂದಾಗಲೂ ಎದ್ದಿತ್ತು. ಆದರೆ ಕ್ರಮೇಣ ಹೆಚ್ಚು ಓದದ, ಅನುಕೂಲಸ್ಥರಲ್ಲದ, ಸಾಮಾನ್ಯರಿಗೂ ಅಧಿಕಾರ ಸಿಗತೊಡಗಿ, ಇಂದು ಹಲವು ಮಹಿಳಾ ಅಧ್ಯಕ್ಷರು, ಮೇಯರುಗಳು ಆಡಳಿತಾತ್ಮಕವಾಗಿ ಅದ್ಭುತಗಳನ್ನು ಜರುಗಿಸಿ ತೋರಿಸಿದ್ದಾರೆ.&lt;/p&gt;&lt;h3&gt;ಮಹಿಳೆಯರ ನಾಯಕತ್ವದಲ್ಲಿ ಅಭಿವೃದ್ಧಿ:&lt;/h3&gt;&lt;p&gt;ಕರ್ನಾಟದ ಮಟ್ಟಿಗೆ ಮಹಿಳೆಯರಿಗಿದ್ದ ಶೇ.33 ಮೀಸಲಾತಿಯನ್ನು ಶೇ.50ಕ್ಕೆ ಏರಿಸಿದ ಕೀರ್ತಿ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರುತ್ತದೆ. ಆ ಪ್ರಯುಕ್ತ ಅನೇಕ ಮಹಿಳೆಯರು, ಬೆಂಗಳೂರು ಸಮೇತವಾಗಿ ನಗರಗಳಲ್ಲಿ ಮಹಾಪೌರರು, ಜಿಲ್ಲಾ-ತಾಲೂಕು-ಗ್ರಾಪಂ ಆದಿಯಾಗಿ ಅಧ್ಯಕ್ಷರಾಗುವ ಭಾಗ್ಯ ಪಡೆದಿದ್ದಾರೆ.&lt;/p&gt;&lt;p&gt;Women&rsquo;s development-ಮಹಿಳೆಯರ ಅಭಿವೃದ್ಧಿ ಮಾತ್ರವಲ್ಲ, Women led development-ಮಹಿಳೆಯರ ನಾಯಕತ್ವದಲ್ಲಿ ಅಭಿವೃದ್ಧಿ ಎನ್ನುವುದು ಮೋದಿಯವರ ಮಂತ್ರ. 2047ರ ವಿಕಸಿತ ಭಾರತದಲ್ಲಿ ಮಹಿಳೆಯರು ಪ್ರಧಾನ ಭೂಮಿಕೆ ವಹಿಸಬೇಕೆಂಬುದು ಅವರ ದೂರದೃಷ್ಟಿ.&lt;/p&gt;&lt;p&gt;ಯಾವ ರೀತಿ ಭಾರತೀಯ ಮಹಿಳೆ ಮನೆಯಲ್ಲಿ ತನ್ನ ಆತ್ಮಗೌರವ ಉಳಿಸುವ ಶೌಚಾಲಯಕ್ಕಾಗಿ, ಹೊಗೆಯಿಂದ ಮುಕ್ತಿ ಪಡೆಯಲು ಉಜ್ವಲಾ ಗ್ಯಾಸಿಗಾಗಿ, ನಲ್ಲಿ ನೀರಿಗಾಗಿ, ತನ್ನ ಹೆಸರಿನಲ್ಲಿ ಸರ್ಕಾರಿ ಮನೆಗಾಗಿ, ತ್ರಿವಳಿ ತಲಾಕಿನಿಂದ ಮುಕ್ತಿ ಪಡೆಯಲು, ಜಮ್ಮು ಕಾಶ್ಮೀರದ ಮಹಿಳೆಯಾಗಿ ಹೊರ ರಾಜ್ಯದವರನ್ನು ಮದುವೆಯಾದರೂ ಆಸ್ತಿಯಲ್ಲಿ ಹಕ್ಕು ಪಡೆಯಲು, ಬ್ಯಾಂಕ್ ಖಾತೆ ಪಡೆಯಲು ಜನ್ ಧನ್&zwnj;ಗಾಗಿ, ಷ್ಯೂರಿಟಿ ಇಲ್ಲದೆ ಸಾಲ ಪಡೆಯಲು ಮುದ್ರಾಗಾಗಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ 5 ಲಕ್ಷ ರು.ವರೆಗಿನ ಆಯುಷ್ಮಾನ್ ಭಾರತ್&zwnj;ಗಾಗಿ, ಸ್ಟಾರ್ಟ್ ಅಪ್ ಶುರು ಮಾಡಲು, ಸೈನಿಕ ಶಾಲೆಯಲ್ಲಿ ಭರ್ತಿಯಾಗಲು, ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಪ್ರವೇಶ ಪಡೆಯಲು, ರಾಷ್ಟ್ರದ ಹೆಮ್ಮೆಯ ರಿಪಬ್ಲಿಕ್ ಡೇ ಪರೇಡ್&zwnj; ಮುನ್ನಡೆಸಲು, ಫಾಸ್ಟ್ ಟ್ರ್ಯಾಕ್ ಕೋರ್ಟುಗಳಿಂದ ನ್ಯಾಯ ಪಡೆಯಲು, ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಗುವವರನ್ನು ಗಲ್ಲಿಗೇರಿಸಲು, ಈ ರಾಷ್ಟ್ರದ ವಿದೇಶಾಂಗ, ರಕ್ಷಣಾ, ವಿತ್ತ ಮಂತ್ರಿಯಾಗಲು&hellip;ನರೇಂದ್ರಮೋದಿ ಎಂಬ ಯುಗಪುರುಷನಿಗಾಗಿ ಕಾಯಬೇಕಾಯಿತೋ&hellip;ಅಂತೆಯೇ ಇಂದು ವಿಧಾನಸಭೆ, ಸಂಸತ್ ಸಭೆಯಲ್ಲಿ ಶೇ.33ರ ಮಹಿಳಾ ಮೀಸಲಾತಿ ಪಡೆಯಲೂ ಮೋದಿ ಅವರಿಗಾಗಿಯೇ ಕಾಯಬೇಕಾಯಿತು.&lt;/p&gt;&lt;p&gt;2023ರಲ್ಲೇ ಈ ಐತಿಹಾಸಿಕ ಕಾಯ್ದೆ ಜಾರಿಯಾಗಿದ್ದರೂ ಅದರಲ್ಲಿನ ಒಂದು ಷರತ್ತು ನಮ್ಮನ್ನು ಹಿಮ್ಮೆಟ್ಟಿಸುವ ಸಾಧ್ಯತೆ ಇತ್ತು. 2011ರ ನಂತರ 2021ರಲ್ಲಿ ಜನಗಣತಿ ಆಗಿಲ್ಲ, ಆಗಬೇಕು. ಆಗ ಸಹಜವಾಗಿಯೇ ಹೆಚ್ಚಿದ ಜನಸಂಖ್ಯೆ ಪ್ರಕಾರ ಕ್ಷೇತ್ರಗಳ ಮರುವಿಂಗಡನೆ ಆಗುತ್ತದೆ. ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಹೆಚ್ಚುವ ವೇಗ ಉತ್ತರಕ್ಕಿಂತ ಕಡಿಮೆ. ಅದರ ಪ್ರಕಾರ, ಸಂಸತ್ತಿನಲ್ಲಿ ನಮ್ಮ ಸೀಟುಗಳು ಕಡಿಮೆ ಹೆಚ್ಚಳ ಆಗುತ್ತವೆ. ನಾವು ಜನಸಂಖ್ಯೆ ನಿಯಂತ್ರಿಸಿದ್ದಕ್ಕೆ ಅನ್ಯಾಯ ಸಹಿಸಿಕೊಳ್ಳಬೇಕೇ ಎಂದು ದಕ್ಷಿಣದ ರಾಜ್ಯಗಳು ಕೋರ್ಟಿಗೆ ಹೋದರೆ, ನಿಮ್ಮ ಶೇ.33ರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಹಲವರು ನಮ್ಮನ್ನು ಹಂಗಿಸಿದರು. ಎಂದಿನಂತೆ ಮೋದಿ ಅದಕ್ಕೂ ಉತ್ತರವನ್ನು ಹುಡುಕಿ ಮಹಿಳೆಯರ ಅಧಿಕಾರವನ್ನು ಅವರಿಗೆ ಕೊಡಿಸುತ್ತಿದ್ದಾರೆ.&lt;/p&gt;&lt;p&gt;ಮೀಸಲಾತಿ ಒಮ್ಮೆ ಬಂದಮೇಲೆ, ಒಳಮೀಸಲಾತಿಯೂ ಬಂದೇ ಬರುತ್ತದೆಂಬ ಭರವಸೆಯಿದೆ. ಯಾವ ರಾಜಕಾರಣಿ/ರಾಜಕೀಯ ಪಕ್ಷವೂ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಅಪಸ್ವರವೆತ್ತದೆ ಸರ್ವ ಸಮ್ಮತಿಯೊಂದಿಗೆ ಈ ಕೆಲಸ ನೆರವೇರಲಿ ಎಂಬುದು ಮಹಿಳಾ ರಾಜಕಾರಣಿಯಾಗಿ ನನ್ನ ಆಶಯ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/let-women-s-reservation-be-implemented-without-selfishness-or-discord-malavika-avinashh-rav/articleshow-q80ia01"/>
        </item>
        <item>
            <title><![CDATA[ಪರವಾನಗಿ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಂಕಷ್ಟ, ಭೂ ವ್ಯವಹಾರಕ್ಕೆ ಬಿದ್ದ ಬೀಗ! ಏನಿದು ಬಿಕ್ಕಟ್ಟು?]]></title>
            <link>https://kannada.asianetnews.com/state/land-survey-services-halted-for-50-days-amid-protest-by-licensed-surveyors-public-faces-hardship-gdp/articleshow-t261r6s</link>
            <guid isPermaLink="true">https://kannada.asianetnews.com/state/land-survey-services-halted-for-50-days-amid-protest-by-licensed-surveyors-public-faces-hardship-gdp/articleshow-t261r6s</guid>
            <pubDate>Sat, 18 Apr 2026 17:43:24 +0530</pubDate>
            <description><![CDATA[&lt;p&gt;&amp;nbsp;ಪರವಾನಗಿ ಭೂಮಾಪಕರು ಖಾಯಮಾತಿಗಾಗಿ 50 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಭೂಮಾಪನ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ತಾಲೂಕಿನಲ್ಲಿ 710ಕ್ಕೂ ಹೆಚ್ಚು ಅರ್ಜಿಗಳು ಬಾಕಿಯಾಗಿದ್ದು, ಜಮೀನು ನೋಂದಣಿ, ಖರೀದಿ-ಮಾರಾಟದಂತಹ ಪ್ರಮುಖ ವ್ಯವಹಾರಗಳು ನಿಂತು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpg7pvy737tx9av0jh5cj2r5,imgname-land-survey-services-1776513937351.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ರಾಂ ಅಜೆಕಾರು&lt;/p&gt;&lt;p&gt;&lt;strong&gt;ಕಾರ್ಕಳ: &lt;/strong&gt;ರಾಜ್ಯದ ಪರವಾನಗಿ ಹೊಂದಿದ ಭೂಮಾಪಕರನ್ನು (ಲೈಸೆನ್ಸ್ ಸರ್ವೆಯರ್&zwnj;ಗಳನ್ನು) ಖಾಯಂಗೊಳಿಸುವಂತೆ ಒತ್ತಾಯಿಸಿ ಕಳೆದ 50 ದಿನಗಳಿಂದ ನಡೆಯುತ್ತಿರುವ ರಾಜ್ಯಮಟ್ಟದ ಪ್ರತಿಭಟನೆಯಿಂದಾಗಿ ಕಾರ್ಕಳ ತಾಲೂಕಿನಲ್ಲಿ ಭೂಮಾಪನ ಸಂಬಂಧಿತ ಎಲ್ಲ ಪ್ರಮುಖ ಸೇವೆಗಳು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.&lt;/p&gt;&lt;p&gt;ಕಾರ್ಕಳ ತಾಲೂಕಿನಲ್ಲಿ ಆಲಿನೇಷನ್, ಹದ್ದುಬಸ್ತು, ತತ್ಕಾಲ್ ಪೋಡಿ ಸೇರಿದಂತೆ ಒಟ್ಟು 710 ಅರ್ಜಿಗಳು ಬಾಕಿ ಉಳಿದಿವೆ. ಇದರಲ್ಲಿ ಹೆಬ್ರಿ ಭಾಗದಲ್ಲೇ 166 ಅರ್ಜಿಗಳು ಇನ್ನೂ ನಿರ್ವಹಣೆಯಾಗದೇ ಉಳಿದಿವೆ. ಕಾರ್ಕಳ ತಾಲ್ಲೂಕಿನಲ್ಲಿ ಒಟ್ಟು 39 ಗ್ರಾಮಗಳಿದ್ದು, ಹೆಬ್ರಿ ಭಾಗದಲ್ಲಿ 16 ಗ್ರಾಮಗಳಿವೆ. ಈ ಎಲ್ಲ ಪ್ರದೇಶಗಳಲ್ಲಿ ಭೂಮಾಪನ ಕಾರ್ಯಗಳು ಸಂಪೂರ್ಣವಾಗಿ ನಿಂತಿರುವುದು ಜನರಲ್ಲಿ ಆತಂಕವನ್ನು ಉಂಟುಮಾಡಿದೆ.&lt;/p&gt;&lt;p&gt;ಪ್ರಸ್ತುತ ಕಾರ್ಕಳದಲ್ಲಿ 21 ಮಂದಿ ಹಾಗೂ ಹೆಬ್ರಿಯಲ್ಲಿ 6 ಮಂದಿ ಪರವಾನಗಿ ಹೊಂದಿದ ಭೂಮಾಪಕರು ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರತಿಭಟನೆಯ ಹಿನ್ನೆಲೆಯಲ್ಲಿ ಅವರು ಕಾರ್ಯನಿರ್ವಹಣೆ ನಿಲ್ಲಿಸಿದ್ದಾರೆ.&lt;/p&gt;&lt;p&gt;ಇದರಿಂದಾಗಿ ಜಮೀನು ರಿಜಿಸ್ಟ್ರೇಷನ್, ಖರೀದಿ&ndash;ಮಾರಾಟ, ದಾನಪತ್ರ ಸೇರಿದಂತೆ ಪ್ರಮುಖ ವ್ಯವಹಾರಗಳು ಸಂಪೂರ್ಣವಾಗಿ ನಿಂತಿವೆ. ಜಮೀನು ಖರೀದಿಸಲು ಮುಂಗಡ ಒಪ್ಪಂದ ಮಾಡಿಕೊಂಡಿದ್ದವರು ಹಣಕಾಸಿನ ಒತ್ತಡಕ್ಕೆ ಒಳಗಾಗಿದ್ದು, ಸಾಲ ಪಡೆದು ವ್ಯವಹಾರ ಆರಂಭಿಸಲು ಯೋಚಿಸಿದ್ದವರು ಸಮಸ್ಯೆಗೆ ಸಿಲುಕಿದ್ದಾರೆ. ಮನೆ ನಿರ್ಮಾಣ, ಕೃಷಿ ವಿಸ್ತರಣೆ ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ಭೂಮಿ ಬಳಸಲು ಮುಂದಾದವರ ಯೋಜನೆಗಳು ಅಸ್ಥವ್ಯಸ್ತಗೊಂಡಿವೆ.&lt;/p&gt;&lt;p&gt;ವಿದೇಶಗಳಿಂದ ಅಥವಾ ಇತರ ರಾಜ್ಯಗಳಿಂದ ಸ್ವಗ್ರಾಮಕ್ಕೆ ಬಂದಿರುವವರು ತಮ್ಮ ಜಮೀನಿನ ನೋಂದಣಿ ಅಥವಾ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಯದ ಅಭಾವದಿಂದ ಮತ್ತೆ ಹಿಂತಿರುಗಬೇಕಾದ ಪರಿಸ್ಥಿತಿ ಎದುರಾಗುತ್ತಿದ್ದು, ಇದರಿಂದ ಅವರಿಗೆ ಆರ್ಥಿಕ ನಷ್ಟವೂ ಉಂಟಾಗಿದೆ.&lt;/p&gt;&lt;p&gt;ರೈತ ವರ್ಗಕ್ಕೂ ಈ ಪರಿಸ್ಥಿತಿ ದೊಡ್ಡ ಹೊಡೆತ ನೀಡಿದೆ. ಹದ್ದುಬಸ್ತು, ಆಲಿನೇಷನ್, ಪೋಡಿ ಮುಂತಾದ ಭೂಮಾಪನ ಪ್ರಕ್ರಿಯೆಗಳು ನಡೆಯದೆ ಇರುವುದರಿಂದ ಜಮೀನಿನ ಗಡಿ ವಿವಾದಗಳು ಬಗೆಹರಿಯುತ್ತಿಲ್ಲ. ಇದರಿಂದ ನೆರೆಹೊರೆಯವರ ನಡುವೆ ಕಲಹಗಳು ಹೆಚ್ಚುವ ಸಾಧ್ಯತೆ ಇದೆ. ಕೃಷಿ ಸಾಲ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸಾಧ್ಯವಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.&lt;/p&gt;&lt;h2&gt;ಪ್ರತಿಭಟನೆಗೆ ಕಾರಣವೇನು?&lt;/h2&gt;&lt;p&gt;ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಹಾಗೂ ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಭೂಮಾಪಕರು ಹೋರಾಟಕ್ಕೆ ಇಳಿದಿದ್ದಾರೆ.&lt;/p&gt;&lt;p&gt;ಪ್ರಸ್ತುತ ದರ್ಕಾಸು ಪೋಡಿ ಸೇರಿದಂತೆ ಭೂಮಾಪನ ಸಂಬಂಧಿತ ಕಾರ್ಯಗಳಿಗೆ ಸರ್ಕಾರ ನಿಗದಿಪಡಿಸಿರುವ ದರ ಕೇವಲ ₹160 ಮಾತ್ರ. ಗ್ರಾಮಾಂತರ ಪ್ರದೇಶಗಳಲ್ಲಿ ದೂರದೂರಿಗೆ ಪ್ರಯಾಣಿಸಿ ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಈ ಮೊತ್ತ ಪ್ರಯಾಣ ವೆಚ್ಚಕ್ಕೂ ಸಾಕಾಗುತ್ತಿಲ್ಲ ಎಂದು ಭೂಮಾಪಕರು ಆರೋಪಿಸುತ್ತಿದ್ದಾರೆ. ಇದರಿಂದ ತಮ್ಮ ಕೆಲಸದಲ್ಲಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದೇವೆ ಎಂಬುದು ಅವರ ಅಸಮಾಧಾನವಾಗಿದೆ.&lt;/p&gt;&lt;p&gt;ಇದಲ್ಲದೆ, ಭೂಮಾಪನ ಕಾರ್ಯಕ್ಕೆ ಅಗತ್ಯವಾದ ಚೈನ್ ಮ್ಯಾನ್&rdquo; (ಬಾಂದೂ ಜವಾನರು) ಸೌಲಭ್ಯವೂ ಇಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಹಾಯಕ ಸಿಬ್ಬಂದಿಗೆ ಸರ್ಕಾರದಿಂದ ಯಾವುದೇ ಸಂಬಳ ಅಥವಾ ಭತ್ಯೆ ನೀಡಲಾಗುತ್ತಿಲ್ಲ. ಇದರಿಂದ ಸರ್ವೇಯರ್&zwnj;ಗಳು ತಮ್ಮ ಖರ್ಚಿನಲ್ಲಿ ಸಹಾಯಕರನ್ನು ನೇಮಿಸಬೇಕಾದ ಪರಿಸ್ಥಿತಿ ಎದುರಾಗಿದೆ.&lt;/p&gt;&lt;p&gt;ಸೌಕರ್ಯಗಳ ಕೊರತೆ, ಸಮರ್ಪಕ ವೇತನದ ಅಭಾವ ಹಾಗೂ ಉದ್ಯೋಗ ಭದ್ರತೆ ಇಲ್ಲದಿರುವುದು . ಭೂಮಾಪಕರ ಅಸಮಾಧಾನಕ್ಕೆ ಕಾರಣವಾಗಿದೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಖಾಯಂ ಹುದ್ದೆ ನೀಡದಿರುವುದನ್ನು ವಿರೋಧಿಸಿ ತಮ್ಮ ಹಕ್ಕುಗಳಿಗಾಗಿ ಈ ಪ್ರತಿಭಟನೆ ನಡೆಸುತ್ತಿದ್ದಾರೆ.&lt;/p&gt;&lt;p&gt;ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವೆ ಖಾಯಂಗೊಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ದರ್ಖಾಸ್ ಪೋಡಿಗೆ ಸರ್ಕಾರ 160 ರುಪಾಯಿ ನಿಗದಿಪಡಿಸಿದೆ. ಈ ದರ ಪ್ರಯಾಣ ವೆಚ್ಚಕ್ಕೂ ಸಾಲದು. ಚೈನ್ ಮ್ಯಾನ್&rsquo; ಸೌಲಭ್ಯವೂ ಇಲ್ಲ, ಸಹಾಯಕರಿಗೆ ಸಂಬಳವಿಲ್ಲ. ಸೌಕರ್ಯಗಳ ಕೊರತೆಯಿಂದ ಆರ್ಥಿಕ ನಷ್ಟ ಅನುಭವಿಸುತ್ತಿದ್ದೇವೆ. ಸರ್ಕಾರ ತಕ್ಷಣವೇ ವೇತನ ಪರಿಷ್ಕರಣೆ ಮಾಡಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು,&lt;/p&gt;&lt;p&gt;ನಟರಾಜ್ ಅಧ್ಯಕ್ಷರು ಪರವಾನಗಿ ಭೂ ಮಾಪಕರ ಸಂಘ ಕಾರ್ಕಳ&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/land-survey-services-halted-for-50-days-amid-protest-by-licensed-surveyors-public-faces-hardship-gdp/articleshow-t261r6s"/>
        </item>
        <item>
            <title><![CDATA[ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಆಫ್ರಿಕಾದ 4  ಚೀತಾಗಳ ಆಗಮನ, 30 ದಿನ ಸೂಕ್ಷ್ಮ ನಿಗಾ]]></title>
            <link>https://kannada.asianetnews.com/state/bengaluru-welcomes-4-cheetahs-from-south-africa-quarantine-at-bannerghatta-biological-park-begins-gdp/articleshow-y7i1vrw</link>
            <guid isPermaLink="true">https://kannada.asianetnews.com/state/bengaluru-welcomes-4-cheetahs-from-south-africa-quarantine-at-bannerghatta-biological-park-begins-gdp/articleshow-y7i1vrw</guid>
            <pubDate>Sat, 18 Apr 2026 15:11:20 +0530</pubDate>
            <description><![CDATA[ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿವೆ. ಈ ವನ್ಯಜೀವಿಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ಪರಿಸರಕ್ಕೆ ಹೊಂದಿಕೊಳ್ಳಲು 30 ದಿನಗಳ ಕಾಲ ವಿಶೇಷ ಕ್ವಾರಂಟೈನ್&zwnj;ನಲ್ಲಿ ಇರಿಸಲಾಗುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpfz49ff3hhgt3x4vym3tvm7,imgname-bannerghatta-biological-park-1776504940015.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯರಾತ್ರಿ ಅಪರೂಪದ ಅತಿಥಿಗಳಾಗಿ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳು ಆಗಮಿಸಿವೆ. ಈ ವನ್ಯಜೀವಿಗಳನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ವಾಗತಿಸಿದ್ದು, ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಈ ಘಟನೆ ಪರಿಗಣಿಸಲಾಗಿದೆ.&lt;/p&gt;&lt;p&gt;ಈ ನಾಲ್ಕು ಚೀತಾಗಳನ್ನು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸುರಕ್ಷಿತವಾಗಿ ಕರೆದೊಯ್ಯಲಾಗುತ್ತಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವುದರಿಂದ, ಇಲ್ಲಿ ಇರುವ ಹವಾಮಾನ ಮತ್ತು ಪರಿಸರಕ್ಕೆ ಹೊಂದಿಕೊಳ್ಳುವವರೆಗೆ ವಿಶೇಷ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಚೀತಾಗಳ ಆರೋಗ್ಯದ ಮೇಲೆ ಯಾವುದೇ ಹಾನಿ ಉಂಟಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ.&lt;/p&gt;&lt;h2&gt;30 ದಿನಗಳ ಕಾಲ ಪ್ರತ್ಯೇಕವಾಗಿ ಇಟ್ಟು ನಿಗಾ&lt;/h2&gt;&lt;p&gt;ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶುವೈದ್ಯರು ಸೂಚಿಸಿರುವಂತೆ, ಮುಂದಿನ 30 ದಿನಗಳ ಕಾಲ ಚೀತಾಗಳನ್ನು ಪ್ರತ್ಯೇಕವಾಗಿ ಇಟ್ಟು ನಿಗಾವಹಿಸಲಾಗುತ್ತದೆ. ಈ ಅವಧಿಯಲ್ಲಿ ಅವುಗಳಿಗೆ ನಿಗದಿತ ಆಹಾರವನ್ನು ಮಾತ್ರ ನೀಡಲಾಗುತ್ತದೆ. ಜೊತೆಗೆ ವಿದೇಶಿ ವನ್ಯಜೀವಿಗಳಲ್ಲಿ ಯಾವುದೇ ಸೋಂಕು ಅಥವಾ ಆರೋಗ್ಯ ಸಮಸ್ಯೆಗಳಿರುವುದೇ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತದೆ.&lt;/p&gt;&lt;h2&gt;ಹೊಸ ಆಕರ್ಷಣೆ&lt;/h2&gt;&lt;p&gt;ವಿಶೇಷವಾಗಿ ಹವಾಮಾನ ಬದಲಾವಣೆಯಿಂದ ಪ್ರಾಣಿಗಳಿಗೆ ತೊಂದರೆ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸೂಕ್ತ ಆರೈಕೆ ಕ್ರಮಗಳನ್ನು ಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಚೀತಾಗಳ ಸುರಕ್ಷಿತ ಸಾಗಣೆ, ಆರೋಗ್ಯ ನಿರ್ವಹಣೆ ಮತ್ತು ಹೊಸ ಪರಿಸರಕ್ಕೆ ಹೊಂದಿಕೊಳ್ಳುವ ಪ್ರಕ್ರಿಯೆ ಬಗ್ಗೆ ಎಲ್ಲಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ದಕ್ಷಿಣ ಆಫ್ರಿಕಾದಿಂದ ಬಂದಿರುವ ಈ ನಾಲ್ಕು ಚೀತಾಗಳ ಆಗಮನವು ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಆಕರ್ಷಣೆಯಾಗಿದ್ದು, ವನ್ಯಜೀವಿ ಸಂರಕ್ಷಣೆಯತ್ತ ರಾಜ್ಯ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಮುಂದಿನ ದಿನಗಳಲ್ಲಿ ಈ ಚೀತಾಗಳು ಹೊಸ ವಾತಾವರಣಕ್ಕೆ ಹೊಂದಿಕೊಂಡು ಸಾರ್ವಜನಿಕರಿಗೆ ಆಕರ್ಷಕವಾಗುವ ನಿರೀಕ್ಷೆಯಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/bengaluru-welcomes-4-cheetahs-from-south-africa-quarantine-at-bannerghatta-biological-park-begins-gdp/articleshow-y7i1vrw"/>
        </item>
        <item>
            <title><![CDATA[Davanagere By-Election 2026: ಕಾಂಗ್ರೆಸ್ ಪಕ್ಷ ನಮಗೆ ಅನಿವಾರ್ಯವಲ್ಲ, ಹೊಸ ಪಕ್ಷ ಕಟ್ಟುವ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡ!]]></title>
            <link>https://kannada.asianetnews.com/state/if-zameer-resign-congress-wont-win-even-20-seats-muslim-leader-warns-of-forming-a-new-party-rav/articleshow-g2gxmnq</link>
            <guid isPermaLink="true">https://kannada.asianetnews.com/state/if-zameer-resign-congress-wont-win-even-20-seats-muslim-leader-warns-of-forming-a-new-party-rav/articleshow-g2gxmnq</guid>
            <pubDate>Sat, 18 Apr 2026 09:14:06 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ಕ್ಷೇತ್ರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ತಲೆದಂಡವಾದರೆ, ಮುಸ್ಲಿಂ ಸಮುದಾಯ ಕಾಂಗ್ರೆಸ್&zwnj;ನಿಂದ ದೂರ ಸರಿದು ಹೊಸ ಪ್ರಾದೇಶಿಕ ಪಕ್ಷವನ್ನು ಕಟ್ಟಲಿದೆ ಎಂದು ವಿಶ್ವ ಮುಸ್ಲಿಂ ಪರಿಷತ್ ರಾಜ್ಯಾಧ್ಯಕ್ಷ ಸುಭಾನ್ ಖಾನ್ ಎಚ್ಚರಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpfatd0ymgc3x29zh49jndvx,imgname-----------------------2026-04-18t091021.800-1776483644446.jpg" type="image/jpeg" height="390" width="690"/>
            <content:encoded><![CDATA[&lt;p&gt;- ಮುಸ್ಲಿಂ ಸಮುದಾಯ ಕಾಂಗ್ರೆಸ್ಸಿಂದ ದೂರಾಗಿ, ಹೊಸ ಪಕ್ಷ ಕಟ್ಟಲಿದೆ: ಸುಭಾನ್ ಖಾನ್&lt;/p&gt;&lt;p&gt;-&lt;strong&gt;ದಾವಣಗೆರೆ (ಏ.18): &lt;/strong&gt;ದಾವಣಗೆರೆ ದಕ್ಷಿಣ ಕ್ಷೇತ್ರದ ಬೆಳವಣಿಗೆ ಆಧಾರದಲ್ಲಿ ಸಚಿವ ಜಮೀರ್ ಅಹಮ್ಮದ್ ತಲೆದಂಡವಾದರೆ ವಿಧಾನಸಭೆ ಚುನಾವಣೆ-2028ರಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ 20-30 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಾದೀತು. ಮುಸ್ಲಿಂ ಸಮುದಾಯವೇ ಕಾಂಗ್ರೆಸ್ಸಿನಿಂದ ದೂರವಾಗುತ್ತದೆ ಎಂದು ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಸುಭಾನ್ ಖಾನ್ ಎಚ್ಚರಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆ.ಅಬ್ದುಲ್ ಜಬ್ಬಾರ್&zwnj;, ದಕ್ಷಿಣ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹಮ್ಮದ್&zwnj;ಗೆ ತಲೆದಂಡ ಮಾಡಿದ ಕಾಂಗ್ರೆಸ್&zwnj; ಪಾಠ ಕಲಿಯದಿದ್ದರೆ, ಮುಸ್ಲಿಂ ಸಮುದಾಯ ಪಾಠ ಕಲಿಸುವ ಕೆಲಸ ಮಾಡುತ್ತದೆ ಎಂದರು.&lt;/p&gt;&lt;p&gt;ಮುಸ್ಲಿಂ ನಾಯಕರಿಗೆ ತೊಂದರೆ ನೀಡಿದರೆ ಕಾಂಗ್ರೆಸ್ಸಿಂದ ದೂರ ಸರಿದು, ಪ್ರಾದೇಶಿಕ ಪಕ್ಷ ಹುಟ್ಟು ಹಾಕುತ್ತೇವೆ. ಮುಸ್ಲಿಂ ಸೇರಿದಂತೆ ಅಹಿಂದ ವರ್ಗ ಸೇರಿದಂತೆ ಎಲ್ಲ ಜಾತಿ, ಸಮುದಾಯ ಒಳಗೊಂಡಂತೆ ಕಾಂಗ್ರೆಸ್&zwnj;- ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಗಳು, ಜೆಡಿಎಸ್&zwnj;ನಂತಹ ಪ್ರಾದೇಶಿಕ ಪಕ್ಷಕ್ಕೆ ಪರ್ಯಾಯ ಶಕ್ತಿಯ ಉದಯವಾಗಲಿದೆ. ವಿಶ್ವ ಮುಸ್ಲಿಂ ಪರಿಷತ್ ರಾಜಕೀಯ ಪಕ್ಷವಾಗಿ ಮಾಡುತ್ತೇವೆ. ಜಮೀರ್ ಅಹ್ಮದ್&zwnj; ಅವರನ್ನೇ ಕರೆಸಿ ಲಕ್ಷಾಂತರ ಜನರ ಸೇರಿಸಿ, ಸಮಾವೇಶ ಮಾಡುತ್ತೇವೆ. ಜಮೀರ್&zwnj; ಅವರನ್ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಡುತ್ತೇವೆ ಎಂದು ಅವರು ತಿಳಿಸಿದರು.&lt;/p&gt;&lt;p&gt;ಕಾಂಗ್ರೆಸ್&zwnj;ನಲ್ಲಿ ಜಮೀರ್ ಅಹಮ್ಮದ್ ತಲೆದಂಡವಾದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ. ಕೆ.ಅಬ್ದುಲ್ ಜಬ್ಬಾರ್&zwnj; ಅವರಿಗೆ ಏನಾದರೂ ತೊಂದರೆಯಾದರೆ ಕಾಂಗ್ರೆಸ್ ದಾವಣಗೆರೆ ನಗರ, ಜಿಲ್ಲೆಯಲ್ಲಷ್ಟೇ ಅಲ್ಲ, ಎಲ್ಲ ಕಡೆ ಸರ್ವನಾಶವಾಗುತ್ತದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ವಿರುದ್ಧ ಅಬ್ದುಲ್ ಜಬ್ಬಾರ್ ಪಕ್ಷವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ತೆಗೆದು ಹಾಕಿದ್ದು ಖಂಡನೀಯ ಎಂದು ಅವರು ತಿಳಿಸಿದರು.&lt;/p&gt;&lt;p&gt;ನಸೀರ್ ಅಹಮ್ಮದ್&zwnj; ಅವರಿಂದ ಬಲವಂತದಿಂದ ರಾಜೀನಾಮೆ ಪಡೆಯಲಾಗಿದೆ. ಇದೀಗ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹಮ್ಮದ್ ತಲೆದಂಡ ಮಾಡಿದರೆ ಕರ್ನಾಟಕ, ತೆಲಂಗಾಣದಲ್ಲಿ ಇರುವಂತಹ ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚಲಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಕಡೆಗಣಿಸಿದರೆ, ರಾಜಕೀಯವಾಗಿ ಮುಗಿಸಲು ಹೊರಟರೆ ಅದೇ ಕಾಂಗ್ರೆಸ್ ಕೈಕಟ್ಟಿಕೊಂಡು ಕೂಡುವ ಸ್ಥಿತಿ ತಂದುಕೊಳ್ಳುತ್ತದೆ. ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಸೋಲನುಭವಿಸಲಿದೆ ಎಂದು ಸುಭಾನ್ ಖಾನ್ ಹೇಳಿದರು.&lt;/p&gt;&lt;p&gt;ಈ ಸಂದರ್ಭ ಪರಿಷತ್&zwnj; ಮುಖಂಡರಾದ ಪರ್ವೇಜ್, ಮಂಜುನಾಥ, ಅಲ್ಲಾಭಕ್ಷಿ ಇದ್ದರು&lt;/p&gt;&lt;p&gt;&lt;strong&gt;*ಸಾದಿಕ್ ನಾಮಪತ್ರ ಹಾಕಿಸಿದ್ದೇ ನಾನು: ಸುಭಾನ್&lt;/strong&gt;&lt;/p&gt;&lt;p&gt;- ಇದರಲ್ಲಿ ಜಮೀರ್&zwnj;, ಜಬ್ಬಾರ್, ನಸೀರ್&zwnj;ರ ಯಾವುದೇ ಪಾತ್ರವೂ ಇಲ್ಲ: ಸ್ಪಷ್ಟನೆ&lt;/p&gt;&lt;p&gt;ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನನ್ನ 40 ವರ್ಷದ ಸ್ನೇಹಿತ ಸಾದಿಕ್ ಪೈಲ್ವಾನ್ ನಾಮಪತ್ರ ತುಂಬಿ, ಹಾಕಿಸಿದ್ದೇ ನಾನು. ಸಾದಿಕ್&zwnj;ಗೆ ನಾಮಪತ್ರ ಸಲ್ಲಿಸಲು ಕೆ.ಅಬ್ದುಲ್ ಜಬ್ಬಾರ್, ನಸೀರ್ ಅಹಮ್ಮದ್, ಜಮೀರ್ ಅಹಮ್ಮದ್ ಯಾರೂ ಹೇಳಿಲ್ಲ ಎಂದು ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಸುಭಾನ್ ಖಾನ್ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಇನ್ನೂ ಬಂದೇ ಇಲ್ಲ. ಆದರೂ, ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರನ್ನು ಗುರಿಯಾಗಿಸಿಕೊಂಡು, ಕ್ರಮ ಕೈಗೊಳ್ಳಲಾಗುತ್ತಿದೆ. ಸಚಿವ ಎಸ್&zwnj;.ಎಸ್&zwnj;. ಮಲ್ಲಿಕಾರ್ಜುನ ಅವರ ಶಿಫಾರಸಿನಿಂದ ಹೀಗೆ ಕಾಂಗ್ರೆಸ್ ವರಿಷ್ಠರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.&lt;/p&gt;&lt;p&gt;ನನ್ನ ಗೆಳೆಯ ಸಾದಿಕ್ ಪೈಲ್ವಾನ್ ಕಾಂಗ್ರೆಸ್ಸಿನಲ್ಲಿ ದುಡಿದರೂ ತನ್ನನ್ನು ಗುರುತಿಸಲಿಲ್ಲವೆಂದು ಬೇಸರ ತೋಡಿಕೊಂಡಿದ್ದ. ನಾನೂ ಉಪ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಸಾದಿಕ್&zwnj;ಗೂ ನಾಮಪತ್ರ ಸಲ್ಲಿಸಲು ಹೇಳಿ, ನಾನೇ ನಾಮಪತ್ರ ತುಂಬಿ, ನನ್ನದೇ ಹಣದಲ್ಲಿ ಠೇವಣಿ ಕಟ್ಟಿದ್ದೆ. ಆದರೆ, ಸೆಡ್ಡು ಹೊಡೆದಿದ್ದ ಆತ ಇದ್ದಕ್ಕಿದ್ದಂತೆ ಯು ಟರ್ನ್ ಆಗುತ್ತಾನೆಂದು ನಾನಂತೂ ಅಂದುಕೊಂಡಿರಲಿಲ್ಲ ಎಂದು ಅವರು ತಿಳಿಸಿದರು.&lt;/p&gt;&lt;p&gt;ಚುನಾವಣಾ ಕಣದಲ್ಲಿ ಉಳಿಯುವುದು, ಬಿಡುವುದು ಅವನ ಇಷ್ಟ. ಸಾದಿಕ್&zwnj; ಪೈಲ್ವಾನ್&zwnj;ಗೆ ನಾಮಪತ್ರ ಸಲ್ಲಿಸಲು, ಹಿಂದಕ್ಕೆ ಪಡೆಯದಂತೆ ಹೇಳಿದ್ದು ನಾನೇ ಹೊರತು ಅಬ್ದುಲ್ ಜಬ್ಬಾರ್&zwnj;, ಜಮೀರ್ ಅಹಮ್ಮದ್, ನಸೀರ್ ಅಹಮ್ಮದ್ ಆಗಲಿ ಅಲ್ಲ. ಉಪ ಚುನಾವಣೆಗೆ ಇಡೀ ಕ್ಯಾಬಿನೆಟ್&zwnj; ದಾವಣಗೆರೆಗೆ ಬಂದು, ಠಿಕಾಣಿ ಹೂಡಿತ್ತು. ಇಲ್ಲಿಯೇ ಇದ್ದವರು ಒಂದು ಸಲ ಅಬ್ದುಲ್&zwnj; ಜಬ್ಬಾರ್ ಮನೆಗೆ ಭೇಟಿ ನೀಡಬೇಕಿತ್ತು. ಜಬ್ಬಾರ್ ಅಲ್ಪಸಂಖ್ಯಾತರ ನಾಯಕ. ಸಾದಿಕ್ ಮನೆ ಕೂಗಳತೆ ದೂರದಲ್ಲಿದ್ದರೂ ಸಾದಿಕ್&zwnj; ಮನೆಯಲ್ಲಿ ಊಟ ಮಾಡಿದ ಸಿಎಂ ಸಿದ್ದರಾಮಯ್ಯ, ಜಬ್ಬಾರ್ ಮನೆಗೆ ಹೋಗಲಿಲ್ಲ ಎಂದು ಅವರು ದೂರಿದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/if-zameer-resign-congress-wont-win-even-20-seats-muslim-leader-warns-of-forming-a-new-party-rav/articleshow-g2gxmnq"/>
        </item>
        <item>
            <title><![CDATA[ಹಿಂದಿಗೆ ಅಂಕ: ಆದೇಶ ಮರು ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಅರ್ಜಿ ಸಲ್ಲಿಕೆ]]></title>
            <link>https://kannada.asianetnews.com/state/karnataka-govt-files-review-petition-in-hc-on-sslc-third-language-grading-san/articleshow-b86yx4e</link>
            <guid isPermaLink="true">https://kannada.asianetnews.com/state/karnataka-govt-files-review-petition-in-hc-on-sslc-third-language-grading-san/articleshow-b86yx4e</guid>
            <pubDate>Sat, 18 Apr 2026 08:08:15 +0530</pubDate>
            <description><![CDATA[&lt;p&gt;ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಬೇಕೆಂಬ ಹೈಕೋರ್ಟ್&zwnj; ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರವು ಅರ್ಜಿ ಸಲ್ಲಿಸಿದೆ. ಪರೀಕ್ಷಾ ಒತ್ತಡ ಕಡಿಮೆ ಮಾಡಲು ಗ್ರೇಡಿಂಗ್ ವ್ಯವಸ್ಥೆ ಸುಧಾರಣಾ ಕ್ರಮವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpca3w440bgpyyt6vq3ksgj3,imgname-----------------------2026-04-17t050003.796-1776382242948.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕನ್ನಡಪ್ರಭ ವಾರ್ತೆ ಬೆಂಗಳೂರು (ಏ.18): &lt;/strong&gt;ಈ ಬಾರಿಯ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳ ನೀಡಲು ಸೂಚಿಸಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್&zwnj;ಗೆ ಅರ್ಜಿ ಸಲ್ಲಿಸಿದೆ. ಈ ಕುರಿತು ರಾಜ್ಯ ಸರ್ಕಾರವು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಸ್ವೀಕರಿಸಬೇಕು ಎಂದು ರಾಜ್ಯ ಸರ್ಕಾರ ಸೋಮವಾರ ಅಥವಾ ಮಂಗಳವಾರ ನ್ಯಾಯಮೂರ್ತಿ ಇ.ಎಸ್.&zwnj;ಇಂದಿರೇಶ್ ಅವರ ಪೀಠಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.&lt;/p&gt;&lt;p&gt;ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮತ್ತು ಎನ್ ಎಸ್ ಕ್ಯೂ ಎಫ್ ವಿಷಯಗಳಿಗೆ ಅಂಕದ ಬದಲು ಗ್ರೇಡ್ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ಪರೀಕ್ಷೆ ನಡೆಯುತ್ತಿದ್ದ ಸಂದರ್ಭ (ಮಾ.28)ದಲ್ಲಿ ಪ್ರಕಟಿಸಿದ್ದರು. ಆ ಕ್ರಮ&zwnj; ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್, ಉಡುಪಿಯ ಅನುಷಾ ಮತ್ತು ಸುದೀಕ್ಷಾ ಅವರು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು.&lt;/p&gt;&lt;p&gt;ಆ ಅರ್ಜಿಯನ್ನು ಏ.15ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಪೀಠ, 2025-26ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ನಿಯಮದಂತೆ ಮೌಲ್ಯಮಾಪನ ನಡೆಸಬೇಕು. ಹಿಂದಿ ಸೇರಿ ತೃತೀಯ ಭಾಷೆಗಳ ವಿಷಯಗಳಿಗೆ ಗ್ರೇಡ್ ಬದಲಾಗಿ ಅಂಕ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥ ಮಾಡಿತ್ತು.&zwnj; ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೋರಿ ಹೈ ಕೋರ್ಟ್ ಗೆ ಸರ್ಕಾರವು ಶುಕ್ರವಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.&lt;/p&gt;&lt;h2&gt;&lt;strong&gt;ಅರ್ಜಿಯ ವಿವರ&lt;/strong&gt;&lt;/h2&gt;&lt;p&gt;ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್ ಇಎಬಿ) ನಿಯಮಗಳಿಗೆ ತಿದ್ದುಪಡಿ ತರಲು ಈಗಾಗಲೇ ಕರಡು ಅಧಿಸೂಚನೆಯನ್ನು ಏ.10ರಂದು ರಾಜ್ಯ ಸರ್ಕಾರ ತನ್ನ ವಿಶೇಷ ಗೆಜೆಟ್&zwnj;ನಲ್ಲಿ ಪ್ರಕಟಿಸಿದೆ. ಈ ಅಂಶವನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತರದೇ ಆದೇಶ ಪಡೆದುಕೊಂಡಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿ ಕೆಲವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಈಗಾಗಲೇ ವಜಾಗೊಳಿಸಿ, ಆ ಅರ್ಜಿದಾರರಿಗೆ 1 ಲಕ್ಷ ರು. ದಂಡ ವಿಧಿಸಿತ್ತು. ಈ ವಿಷಯವನ್ನು ಪ್ರಸ್ತುತ ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತರದೆ ಸತ್ಯಾಂಶ ಮರೆಮಾಚಿದ್ದಾರೆ ಎಂದು ಸರ್ಕಾರ ತನ್ನ ಮರು ಪರಿಶೀಲನಾ ಅರ್ಜಿಯಲ್ಲಿ ಪ್ರತಿಪಾದಿಸಿದೆ.&lt;/p&gt;&lt;p&gt;ಹಾಗೆಯೇ, ಮೂಲ ತಕರಾರು ಅರ್ಜಿ ಸಂಬಂಧ&zwnj; ನ್ಯಾಯಾಲಯಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಅವಕಾಶವೇ ಸಿಕ್ಕಿಲ್ಲ. ಅರ್ಜಿದಾರರು ಕರಡು ಅಧಿಸೂಚನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿಲ್ಲ ಎಂದು ಸರ್ಕಾರ ಆಕ್ಷೇಪಿಸಿದೆ. ಹಿಂದಿ ಸೇರಿ ಎಲ್ಲ ತೃತೀಯ ಭಾಷೆ ಮತ್ತು ಎನ್ ಎಸ್ ಕ್ಯೂ ಎಫ್ ವಿಷಯಗಳಲ್ಲಿ 80ಕ್ಕಿಂತ ಅಧಿಕ ಅಂಕ ಪಡೆದರೆ ಎ ಶ್ರೇಣಿ, 50ರಿಂದ 79 ಅಂಕ ಪಡೆದರೆ ಬಿ ಶ್ರೇಣಿ, 49 ಕ್ಕಿಂತ ಕಡಿಮೆ ಅಂಕ ಪಡೆದರೆ ಸಿ ಶ್ರೇಣಿ ಎಂದು ಗ್ರೇಡ್ ನೀಡಲಾಗುತ್ತದೆ. ಆದರೆ, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವುದಿಲ್ಲ ಎಂದು ಅರ್ಜಿಯಲ್ಲಿ ಸರ್ಕಾರ ವಿವರಿಸಿದೆ.&lt;/p&gt;&lt;p&gt;ಅಲ್ಲದೆ, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವೆ ಸಮಾನ ಅವಕಾಶ ಕಲ್ಪಿಸಲು ಹಾಗೂ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲು ತೃತೀಯ ಭಾಷೆ ಮತ್ತು ಎನ್&zwnj;ಎಸ್&zwnj;ಕ್ಯೂಎಫ್ ವಿಷಯಗಳಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಉದ್ದೇಶಿಸಲಾಗಿದೆ. ಅಂಕದ ಬದಲು ಗ್ರೇಡ್ ನೀಡುವುದು ಸುಧಾರಣಾ ಕ್ರಮವಾಗಿದೆ. ಇದು ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಿದೆ. ಸರ್ಕಾರದ ನಡೆಯಿಂದ ತೃತೀಯ ಭಾಷೆ ತಿರಸ್ಕಾರಕ್ಕೆ ಒಳಗಾಗುತ್ತದೆ ಎಂಬ ವಾದದಲ್ಲಿ ಹುರುಳಿಲ್ಲ. ಆದ್ದರಿಂದ ಏ.15ರಂದು ಹೊರಡಿಸಿರುವ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ಸರ್ಕಾರ ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-govt-files-review-petition-in-hc-on-sslc-third-language-grading-san/articleshow-b86yx4e"/>
        </item>
        <item>
            <title><![CDATA[ವಿದ್ಯುತ್ ದರ ಮತ್ತೆ ಹೆಚ್ಚಳ: ಬೆಸ್ಕಾಂ ಪ್ರತಿ ಯುನಿಟ್‌ಗೆ 56 ಪೈಸೆ, ಸೆಸ್ಕ್‌ನಿಂದ 15 ಪೈಸೆ ಏರಿಕೆ]]></title>
            <link>https://kannada.asianetnews.com/state/electricity-prices-up-again-bescom-hikes-rates-by-56-paise-cesc-by-15-paise-per-unit-rav/articleshow-v2o1c7r</link>
            <guid isPermaLink="true">https://kannada.asianetnews.com/state/electricity-prices-up-again-bescom-hikes-rates-by-56-paise-cesc-by-15-paise-per-unit-rav/articleshow-v2o1c7r</guid>
            <pubDate>Sat, 18 Apr 2026 07:47:30 +0530</pubDate>
            <description><![CDATA[&lt;p&gt;2026-27ನೇ ಸಾಲಿನಲ್ಲಿ ಆದಾಯ ಕೊರತೆ ಸರಿದೂಗಿಸಲು ಬೆಸ್ಕಾಂ ಮತ್ತು ಸೆಸ್ಕ್ ಗ್ರಾಹಕರಿಗೆ ವಿದ್ಯುತ್ ದರ ಕ್ರಮವಾಗಿ 56 ಮತ್ತು 15 ಪೈಸೆ ಹೆಚ್ಚಳವಾಗಲಿದೆ. ಇದೇ ವೇಳೆ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಹುಕ್ಕೇರಿ ಎಸ್ಕಾಂ ಗ್ರಾಹಕರಿಗೆ ಹೆಚ್ಚುವರಿ ಆದಾಯದ ಹಿನ್ನೆಲೆಯಲ್ಲಿ ದರ ಇಳಿಕೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-ani20250630195736,imgname-image-ed6d0269-e198-4dd5-b9e4-d07bbd0eb8bf.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.19)&lt;/strong&gt;: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್&zwnj; ಸರಬರಾಜು ನಿಗಮಗಳಿಗೆ (ಸೆಸ್ಕ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್&zwnj;ಗೆ 56 ಪೈಸೆ ಹಾಗೂ ಸೆಸ್ಕ್&zwnj; ಗ್ರಾಹಕರಿಂದ ಪ್ರತಿ ಯುನಿಟ್&zwnj;ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್&zwnj;ಸಿ ಆದೇಶ ಮಾಡಿದೆ.&lt;/p&gt;&lt;p&gt;ಇದೇ ವೇಳೆ 2024-25ರಲ್ಲಿ ನಿರ್ವಹಣಾ ವೆಚ್ಚಕ್ಕಿಂತ ಹೆಚ್ಚು ಆದಾಯ ಸಂಗ್ರಹ ಮಾಡಿರುವ ಹೆಸ್ಕಾಂ (ಹುಬ್ಬಳ್ಳಿ) ತನ್ನ ಗ್ರಾಹಕರಿಗೆ 2026-27ನೇ ಸಾಲಿನಲ್ಲಿ ಪ್ರತಿ ತಿಂಗಳು ಪ್ರತಿ ಯುನಿಟ್&zwnj;ಗೆ 10 ಪೈಸೆಯಂತೆ ಮರುಪಾವತಿ ಮಾಡಬೇಕು.&lt;/p&gt;&lt;p&gt;ಜತೆಗೆ ಜೆಸ್ಕಾಂ (ಕಲಬುರಗಿ) ಗ್ರಾಹಕರಿಗೆ 10 ಪೈಸೆ, ಮಂಗಳೂರಿನ ಮೆಸ್ಕಾಂ ಗ್ರಾಹಕರಿಗೆ 9 ಪೈಸೆ ಹಾಗೂ ಹುಕ್ಕೇರಿ ಗ್ರಾಮೀಣ ವಿದ್ಯುತ್&zwnj; ಸರಬರಾಜು ಸಹಕಾರ ಸೊಸೈಟಿಯ (ಎಚ್&zwnj;ಆರ್&zwnj;ಇಸಿಎಸ್) ಗ್ರಾಹಕರಿಗೆ ಪ್ರತಿ ಯುನಿಟ್&zwnj;ಗೆ ಬರೋಬ್ಬರಿ 155 ಪೈಸೆಯಷ್ಟು ಹಣವನ್ನು ಮರು ಪಾವತಿ ಮಾಡಬೇಕು ಎಂದು ಆದೇಶ ಮಾಡಿದೆ.&lt;/p&gt;&lt;p&gt;ತನ್ಮೂಲಕ 2026-27ನೇ ಸಾಲಿಗೆ ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯುನಿಟ್&zwnj;ಗೆ 56 ಪೈಸೆ ಹಾಗೂ ಮೈಸೂರು ಚಾಮುಂಡೇಶ್ವರಿ ವಿದ್ಯುತ್&zwnj; ಸರರಬಾಜು ಕಂಪೆನಿ ಗ್ರಾಹಕರಿಗೆ 15 ಪೈಸೆ ಹೊರೆ ಬಿದ್ದಿದೆ. ಆದರೆ ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಹಾಗೂ ಹುಕ್ಕೇರಿ ಎಸ್ಕಾಂಗಳ ಗ್ರಾಹಕರಿಗೆ ವಿದ್ಯುತ್ ದರ ಕಡಿಮೆಯಾಗಲಿದೆ.&lt;/p&gt;&lt;p&gt;ಈ ಆದೇಶ 2026 ಮೇ 1 ರಿಂದ 2027ರ ಏಪ್ರಿಲ್&zwnj; 31ರವರೆಗೆ ಬಳಕೆಯಾಗುವ ವಿದ್ಯುತ್&zwnj; ಬಿಲ್&zwnj;ಗೆ ಅನ್ವಯವಾಗಲಿದೆ.&lt;/p&gt;&lt;h2&gt;ಮರು ಪಾವತಿ ಹೇಗೆ?:&lt;/h2&gt;&lt;p&gt;ಎಸ್ಕಾಂಗಳಿಂದ ಮರುಪಾವತಿ ಪಡೆಯಲು ಅರ್ಹರಾಗಿರುವ 2024-25ನೇ ಸಾಲಿನಲ್ಲಿ ಬಳಕೆ ಮಾಡಿರುವ ವಿದ್ಯುತ್&zwnj; ಪ್ರಮಾಣದ ಆಧಾರದ ಮೇಲೆ 2026-27ನೇ ಸಾಲಿನಲ್ಲಿ ಮರುಪಾವತಿ ಪಡೆಯುತ್ತಾರೆ. ಉದಾ: 2024-25ನೇ ಸಾಲಿನಲ್ಲಿ ಮೆಸ್ಕಾಂನ ಗ್ರಾಹಕನೊಬ್ಬ ಪ್ರತಿ ತಿಂಗಳು ಸರಾಸರಿ 100 ಯುನಿಟ್&zwnj; ವಿದ್ಯುತ್&zwnj; ಬಳಕೆ ಮಾಡುತ್ತಿರುತ್ತಾರೆ. ಕೆಇಆರ್&zwnj;ಸಿ ಮೆಸ್ಕಾಂ ಗ್ರಾಹಕರಿಗೆ 9 ಪೈಸೆ ವಾಪಸು ಮಾಡುವಂತೆ ಆದೇಶಿಸಿದೆ. ಹೀಗಾಗಿ 2026-27ನೇ ಸಾಲಿನಲ್ಲಿ ಆ ಗ್ರಾಹಕ ಪ್ರತಿ ತಿಂಗಳು ಬಳಕೆ ಮಾಡುವ 100 ಯುನಿಟ್&zwnj;ಗಳಿಗೆ ಪ್ರತಿ ಯುನಿಟ್&zwnj;ಗೆ ತಲಾ 9 ಪೈಸೆಯಂತೆ ಹಣ ಮರು ಪಾವತಿ ಆಗಲಿದೆ.&lt;/p&gt;&lt;p&gt;ಇದನ್ನು ವಿದ್ಯುತ್&zwnj; ಬಿಲ್&zwnj;ನಲ್ಲಿ &lsquo;ಎಫ್&zwnj;ವೈ25 ಟ್ರೂ ಅಪ್&zwnj; ಚಾರ್ಜಸ್&zwnj;&rsquo; ಹೆಸರಿನಲ್ಲಿ ಪ್ರತ್ಯೇಕವಾಗಿ ನಮೂದಿಸಿ ಲೆಕ್ಕಾಚಾರ ಮಾಡಲಾಗುತ್ತದೆ.&lt;/p&gt;&lt;h3&gt;ಬೆಸ್ಕಾಂಗೆ ಭಾರಿ ನಷ್ಟ:&lt;/h3&gt;&lt;p&gt;2024-25ನೇ ಸಾಲಿನಲ್ಲಿ ಕೆಇಆರ್&zwnj;ಸಿಯು ಬೆಸ್ಕಾಂಗೆ 32,019 ಕೋಟಿ ರು. ನಿರ್ವಹಣಾ ವೆಚ್ಚ ತಗಲುವ ಆಧಾರದ ಮೇಲೆ ದರ ಪರಿಷ್ಕರಣೆ ಮಾಡಿತ್ತು. ಆದರೆ, 2024-25ನೇ ಸಾಲಿನಲ್ಲಿ ಬೆಸ್ಕಾಂಗೆ 34,087 ಕೋಟಿ ರು. ವೆಚ್ಚ ಉಂಟಾಗಿ 2024 ಕೋಟಿ ರು. ಆದಾಯ ಕೊರತೆ ಉಂಟಾಗಿತ್ತು.&lt;/p&gt;&lt;p&gt;ಈ ಕೊರತೆಯನ್ನು ತುಂಬಿಕೊಡುವಂತೆ 2024-25ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ವರದಿ (ಎಪಿಆರ್&zwnj;) ಆಧಾರದ ಮೇಲೆ ಬೆಸ್ಕಾಂ ಕೆಇಆರ್&zwnj;ಸಿ ಮೊರೆ ಹೋಗಿತ್ತು. ಇದೀಗ ಕೆಇಆರ್&zwnj;ಸಿಯು ಪ್ರತಿ ಯುನಿಟ್&zwnj;ಗೆ 56 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಿ ನಷ್ಟ ತುಂಬಿಕೊಳ್ಳುವಂತೆ ಆದೇಶ ನೀಡಿದೆ. ಉಳಿದಂತೆ ಚಾಮುಂಡೇಶ್ವರಿ ವಿದ್ಯುತ್&zwnj; ಸರಬರಾಜು ನಿಗಮಕ್ಕೆ 121.71 ಕೋಟಿ ರು. ಆದಾಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರತಿ ಯುನಿಟ್&zwnj;ಗೆ 15 ಪೈಸೆ ಹೆಚ್ಚಳ ಮಾಡಲಾಗಿದೆ.&lt;/p&gt;&lt;p&gt;ಆದರೆ, ಮಂಗಳೂರಿನ ಮೆಸ್ಕಾಂ 276.48 ಕೋಟಿ ರು. ಉಳಿತಾಯ ದಾಖಲಿಸಿರುವುದರಿಂದ ಪ್ರತಿ ಯುನಿಟ್&zwnj;ಗೆ 9 ಪೈಸೆ ಮರುಪಾವತಿಗೆ ಸೂಚಿಸಲಾಗಿದೆ. ಹೆಸ್ಕಾಂ 133.46 ಕೋಟಿ ರು. ಉಳಿತಾಯ ದಾಖಲಿಸಿರುವುದರಿಂದ 10 ಪೈಸೆ, ಜೆಸ್ಕಾಂ 90.40 ಕೋಟಿ ರು. ಉಳಿತಾಯ ದಾಖಲಿಸಿರುವುದಕ್ಕೆ 10 ಪೈಸೆ ಮರುಪಾವತಿಗೆ ಆದೇಶಿಸಲಾಗಿದೆ. ಎಚ್ಆರ್&zwnj;ಇಸಿಎಸ್&zwnj; (ಹುಕ್ಕೇರಿ) 381 ಮಿಲಿಯನ್&zwnj; ಯುನಿಟ್&zwnj; ವಿದ್ಯುತ್ ಪೂರೈಕೆ ಮಾಡಿದ್ದು, 267.35 ಕೋಟಿ ರು. ಖರ್ಚು ಮಾಡಿದೆ. ಇದಕ್ಕಿಂತ ಹೆಚ್ಚು ಆದಾಯ ಗಳಿಸಿರುವ ಹಿನ್ನೆಲೆಯಲ್ಲಿ ಪ್ರತಿ ಯುನಿಟ್&zwnj;ಗೆ 155 ಪೈಸೆಯಂತೆ ಮರುಪಾವತಿ ಮಾಡಲು ಆದೇಶಿಸಲಾಗಿದೆ.&lt;/p&gt;&lt;p&gt;&lt;strong&gt;ಎಸ್ಕಾಂಗಳು - ದರ ಬದಲಾವಣೆ (ಪ್ರತಿ ಯುನಿಟ್&zwnj;ಗೆ)&lt;/strong&gt;&lt;/p&gt;&lt;p&gt;ಬೆಸ್ಕಾಂ - 56 ಪೈಸೆ ಹೆಚ್ಚಳ&lt;/p&gt;&lt;p&gt;ಮೈಸೂರು ಸೆಸ್ಕ್- 15 ಪೈಸೆ ಹೆಚ್ಚಳ&lt;/p&gt;&lt;p&gt;ಮೆಸ್ಕಾಂ - 9 ಪೈಸೆ ಇಳಿಕೆ&lt;/p&gt;&lt;p&gt;ಹೆಸ್ಕಾಂ- 10 ಪೈಸೆ ಇಳಿಕೆ&lt;/p&gt;&lt;p&gt;ಜೆಸ್ಕಾಂ- 10 ಪೈಸೆ ಇಳಿಕೆ&lt;/p&gt;&lt;p&gt;ಹುಕ್ಕೇರಿಯ ಎಚ್&zwnj;ಆರ್&zwnj;ಇಸಿಎಸ್&zwnj;- 155 ಪೈಸೆ ಇಳಿಕೆ&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/electricity-prices-up-again-bescom-hikes-rates-by-56-paise-cesc-by-15-paise-per-unit-rav/articleshow-v2o1c7r"/>
        </item>
        <item>
            <title><![CDATA[ತಮಿಳುನಾಡು, ಬಿಹಾರ ಬಳಿಕ ಇದೀಗ ರಾಜ್ಯಕ್ಕೆ ಕಾಲಿಟ್ಟ ಹಕ್ಕಿಜ್ವರ, 7444 ಕೋಳಿ ನಾಶ!]]></title>
            <link>https://kannada.asianetnews.com/state/after-tamil-nadu-and-bihar-bird-flu-enters-the-state-7-444-chickens-culled-rav/articleshow-gzu6syz</link>
            <guid isPermaLink="true">https://kannada.asianetnews.com/state/after-tamil-nadu-and-bihar-bird-flu-enters-the-state-7-444-chickens-culled-rav/articleshow-gzu6syz</guid>
            <pubDate>Sat, 18 Apr 2026 07:25:40 +0530</pubDate>
            <description><![CDATA[ಬೆಂಗಳೂರಿನ ಹೆಸರಘಟ್ಟದ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ (ಹಕ್ಕಿ ಜ್ವರ) ಪತ್ತೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, 7,444 ಕೋಳಿಗಳನ್ನು ನಾಶಪಡಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಕಣ್ಗಾವಲು ಇರಿಸಲಾಗಿದೆ. ಇದು ಈ ವರ್ಷ ರಾಜ್ಯದಲ್ಲಿ ವರದಿಯಾದ ಮೊದಲ ಹಕ್ಕಿ ಜ್ವರ ಪ್ರಕರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpf4jhp5qe0qm5rw4539kg98,imgname-----------------------2026-04-18t072110.210-1776477095621.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.18) &lt;/strong&gt;ತಮಿಳುನಾಡು, ಬಿಹಾರ ಬಳಿಕ ಇದೀಗ ಕರ್ನಾಟಕದಲ್ಲೂ ಹಕ್ಕಿ ಜ್ವರದ ಆತಂಕ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಹೆರಸಘಟ್ಟದ ಪೌಲ್ಟ್ರಿ ಫಾರಂನಲ್ಲಿ ಕೋಳಿಗಳಿಗೆ H5 N1 ವೈರಸ್ (ಹಕ್ಕಿ ಜ್ವರ) ಬಾಧೆ ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 7,444 ಕೋಳಿಗಳ ನಾಶ ಮಾಡಲಾಗಿದೆ. ಇದು ರಾಜ್ಯದಲ್ಲಿ ಈ ವರ್ಷ ಪತ್ತೆಯಾಗಿರುವ ಮೊದಲ ಹಕ್ಕಿಜ್ವರ ಪ್ರಕರಣವಾಗಿದೆ.&lt;/p&gt;&lt;p&gt;ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಪೌಲ್ಟ್ರಿ ಫಾರಂನ ಕೋಳಿಗಳಲ್ಲಿ ಮೊದಲ ತಪಾಸಣೆಯಲ್ಲೇ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಆದ್ದರಿಂದ ಅಲ್ಲಿದ್ದ 7,444 ಕೋಳಿಗಳನ್ನು ಗುಂಡಿ ತೆಗೆದು ಹೂಳಲಾಗಿದೆ. ಅಷ್ಟೇ ಅಲ್ಲ, 10 ಕೋಳಿ ಸಾಕಾಣೆಗಾರರನ್ನು ಕ್ವಾರಂಟೈನ್ ಮಾಡಲಾಗಿದೆ. ಬಿಸಿಲಿನ ತಾಪದಿಂದಾಗಿ ಬೇಸಿಗೆಯಲ್ಲಿ ಹಕ್ಕಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಹಕ್ಕಿಗಳಿಂದ ಕೋಳಿಗಳಿಗೂ ಜ್ವರ ಹಬ್ಬಿದ್ದು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.&lt;/p&gt;&lt;p&gt;ಏ.14 ರಂದು ಹೆಸರಘಟ್ಟದ ಮುತ್ಕೂರು ಗ್ರಾಮದಲ್ಲಿ ಕೋಳಿಗಳಿಗೆ ಹಕ್ಕಿಜ್ವರ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಬಳಿಕ ಕ್ಷಿಪ್ರ ಕಾರ್ಯಪಡೆ ತಂಡ, ಪಶು ಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. 7,444 ಕೋಳಿ, 14,788 ಮೊಟ್ಟೆ, 2250 ಕೆಜಿ ಪೌಲ್ಟ್ರಿ ಆಹಾರ, ಕೋಳಿ ತ್ಯಾಜ್ಯವನ್ನು ಏ.15 ರಂದು ಪಶು ಸಂಗೋಪನಾ ಇಲಾಖೆಯು ನಿಯಮಾನುಸಾರ ವಿಲೇವಾರಿ ಮಾಡಿತ್ತು.&lt;/p&gt;&lt;h2&gt;ಅಗತ್ಯ ಮುನ್ನೆಚ್ಚರಿಕೆ:&lt;/h2&gt;&lt;p&gt;ಈ ಬಗ್ಗೆ &lsquo;ಕನ್ನಡ ಪ್ರಭ&rsquo;ದೊಂದಿಗೆ ಮಾತನಾಡಿದ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ನಿರ್ದೇಶಕ ಡಾ.ಪಿ.ಶ್ರೀನಿವಾಸ್&zwnj;, &lsquo;ಹೆಸರಘಟ್ಟದ ಪೌಲ್ಟ್ರಿ ಫಾರಂನಲ್ಲಿ ಹಕ್ಕಿಜ್ವರ ಖಚಿತವಾಗಿದ್ದು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. 7,444 ಕೋಳಿ ಮತ್ತು ಕೋಳಿ ತ್ಯಾಜ್ಯವನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ&rsquo; ಎಂದು ಸ್ಪಷ್ಟಪಡಿಸಿದರು.&lt;/p&gt;&lt;p&gt;&lsquo;ಬಾಧಿತ ಪೌಲ್ಟ್ರಿ ಫಾರಂ ಬಯಲು ಪ್ರದೇಶದಲ್ಲಿದ್ದು ಒಂದು ಕಿ.ಮೀ. ಸುತ್ತಳತೆಯಲ್ಲಿ ಯಾವುದೇ ಹಳ್ಳಿಗಳಿಲ್ಲ. ಆದ್ದರಿಂದ ಹಳ್ಳಿಗಳು ಅಥವಾ ಪೌಲ್ಟ್ರಿ ಫಾರಂಗಳಿಗೆ ತೆರಳಿ ಕೋಳಿಗಳನ್ನು ನಾಶ ಮಾಡುವ ಅಗತ್ಯವಿಲ್ಲ. 1 ರಿಂದ 10 ಕಿ.ಮೀ. ವ್ಯಾಪ್ತಿಯೊಳಗೆ ಕಣ್ಗಾವಲು ಪ್ರದೇಶ ಎಂದು ಗುರುತಿಸಲಿದ್ದು 15 ದಿನಗಳಿಗೊಮ್ಮೆ ರ್&zwj;ಯಾಂಡಮ್&zwnj; ಆಗಿ ಪರೀಕ್ಷೆ ನಡೆಸಲಾಗುವುದು&rsquo; ಎಂದು ಮಾಹಿತಿ ನೀಡಿದರು.&lt;/p&gt;&lt;p&gt;&lsquo;ಎಲ್ಲೆಲ್ಲಿ ನಾಟಿ ಕೋಳಿಗಳು, ಫಾರಂ ಕೋಳಿಗಳು, ಎಲ್ಲೆಲ್ಲಿ ಖಾಸಗಿ ಫಾರಂಗಳಿವೆಯೋ ಅಲ್ಲಿಗೆ ತೆರಳಿ ಸ್ಯಾಂಪಲ್&zwnj; ಸಂಗ್ರಹಿಸಲಾಗುವುದು. ಅದನ್ನು 15 ದಿನಗಳಿಗೊಮ್ಮೆ ಸತತವಾಗಿ ಎರಡು ತಿಂಗಳು ಭೂಪಾಲ್&zwnj;ನಲ್ಲಿರುವ ಲ್ಯಾಬ್&zwnj;ಗೆ ಪರೀಕ್ಷೆ ನಡೆಸಲು ಕಳುಹಿಸುತ್ತೇವೆ. ನೆಗೆಟಿವ್&zwnj; ಬಂದರೆ ನೆಗೆಟಿವ್&zwnj; ಎಂದು ಘೋಷಣೆ ಮಾಡುತ್ತೇವೆ&rsquo; ಎಂದು ತಿಳಿಸಿದರು.&lt;/p&gt;&lt;h3&gt;54 ಚಿಕನ್&zwnj; ಸೆಂಟರ್&zwnj;, 36 ಹಳ್ಳಿ ಗುರುತು:&lt;/h3&gt;&lt;p&gt;ಬಾಧಿತ ಪ್ರದೇಶದ ಸುತ್ತಮುತ್ತ 54 ಚಿಕನ್&zwnj; ಸೆಂಟರ್&zwnj;, 36 ಹಳ್ಳಿಗಳನ್ನು ಗುರುತಿಸಲಾಗಿದೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಪಂಗಳ ಪಿಡಿಓಗಳಿಗೆ ಸೂಚಿಸಲಾಗಿದೆ. ಹೆಸರಘಟ್ಟದಲ್ಲಿ ಕೆರೆ ಇರುವುದರಿಂದ ಹಕ್ಕಿಗಳ ಮೂಲಕ ಜ್ವರ ಬಂದಿದೆ. ಇಲಾಖೆ ಸಚಿವರು. ಆಯುಕ್ತರು, ಜಿಲ್ಲಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಸದ್ಯ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/after-tamil-nadu-and-bihar-bird-flu-enters-the-state-7-444-chickens-culled-rav/articleshow-gzu6syz"/>
        </item>
        <item>
            <title><![CDATA[ರಾಜಧಾನಿಯಲ್ಲೀಗ ಹೀಟ್‌ ಸ್ಟ್ರೋಕ್‌ ಆತಂಕ; ಬಿಸಿಲಿನ ತಾಪದಿಂದ ತಿಂಗಳೊಳಗೆ 10 ಮಂದಿ ಅಸ್ವಸ್ಥ!]]></title>
            <link>https://kannada.asianetnews.com/state/bengaluru-heatwave-alert-10-heat-stroke-cases-reported-in-a-month-amid-rising-temperatures-rav/articleshow-huhnwp1</link>
            <guid isPermaLink="true">https://kannada.asianetnews.com/state/bengaluru-heatwave-alert-10-heat-stroke-cases-reported-in-a-month-amid-rising-temperatures-rav/articleshow-huhnwp1</guid>
            <pubDate>Sat, 18 Apr 2026 06:40:10 +0530</pubDate>
            <description><![CDATA[&lt;p&gt;Bengaluru Heatwave Alert ಉದ್ಯಾನ ನಗರಿ ಬೆಂಗಳೂರು ತೀವ್ರ ಬಿಸಿಲಿನ ತಾಪಕ್ಕೆ ತುತ್ತಾಗಿದ್ದು, ಹೀಟ್&zwnj; ಸ್ಟ್ರೋಕ್&zwnj; ಶಂಕೆಯಿಂದ 10 ಮಂದಿ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆ ಪಾಲಿಕೆಯ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಿದ್ದು, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpf26af9kjdwhg6jt18a90d7,imgname-----------------------2026-04-18t062636.452-1776474597865.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಮಾಶಂಕರ ಕಾರ್ಯ&lt;/strong&gt;&lt;/p&gt;&lt;p&gt;&lt;strong&gt;ಬೆಂಗಳೂರು (ಏ.18): &lt;/strong&gt;ಉದ್ಯಾನ ನಗರಿ, ಹವಾನಿಯಂತ್ರಿತ ನಗರ ಎಂಬ ಖ್ಯಾತಿವೆತ್ತ ಬೆಂದಕಾಳೂರು ಅಕ್ಷರಶಃ ಬಿಸಿಲಿನ ತಾಪಕ್ಕೆ ಬೇಯುತ್ತಿದ್ದು, ಹೀಟ್&zwnj; ಸ್ಟ್ರೋಕ್&zwnj;ಗೆ ತುತ್ತಾಗಿ ನಗರದ 10 ಮಂದಿ ನಾಗರೀಕರು ಅಸ್ವಸ್ಥರಾಗಿದ್ದಾರೆ ಎಂದು ಪಾಲಿಕೆಯ ಆರೋಗ್ಯ ಇಲಾಖೆ ಖಚಿತಪಡಿಸಿದೆ.&lt;/p&gt;&lt;p&gt;ಮಾರ್ಚ್ 1ರಿಂದ ಏಪ್ರಿಲ್ 16ರವರೆಗೆ ಬಿಸಿಲಿನಿಂದಾಗಿ ನಗರದಲ್ಲಿ 10 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದವರಿಗೆ ಪಾಲಿಕೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಸಂತೈಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಇಷ್ಟು ಮಂದಿ ಅಸ್ವಸ್ಥರಾಗಿದ್ದು, ಇವುಗಳನ್ನು ಶಂಕಿತ ಹೀಟ್ ಸ್ಟ್ರೋಕ್ ಪ್ರಕರಣಗಳೆಂದು ಪರಿಗಣಿಸಲಾಗಿದೆ.&lt;/p&gt;&lt;p&gt;ಈ ಸಂಬಂಧ ಪಾಲಿಕೆ ತೀವ್ರ ಕಟ್ಟೆಚ್ಚರ ವಹಿಸಿದೆ. ಪಾಲಿಕೆಯ ಆರೋಗ್ಯ ಅಧಿಕಾರಿಗಳು ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳುವ ವಿಧಾನಗಳ ಕುರಿತು ನಗರ ನಿವಾಸಿಗಳಲ್ಲಿ ಜಾಗೃತಿ ಮೂಡಿಸುವಂತೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಚಿಸಿದ್ದಾರೆ.&lt;/p&gt;&lt;p&gt;ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 369 ವಾರ್ಡ್ ಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ನಿರೀಕ್ಷಣಾಧಿಕಾರಿಗಳು ಬಿಸಿಲಿನ ಸಮಯದಲ್ಲಿ ಆರೋಗ್ಯ ಕೇಂದ್ರಗಳಲ್ಲಿಯೇ ಇದ್ದು ಬಿಸಿಲಿನ ತಾಪದಿಂದ ಬಳಲಿ ಬರುವ ಜನರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಜಿಬಿಎ ಮುಖ್ಯ ಆರೋಗ್ಯಾಧಿಕಾರಿ ಡಾ. ಸಿರಾಜ್ ಮದನಿ ಕನ್ನಡಪ್ರಭಕ್ಕೆ ತಿಳಿಸಿದರು.&lt;/p&gt;&lt;p&gt;ಈ ಪ್ರಕರಣಗಳಲ್ಲಿ ಜನರು ಅವರ ದೇಹದಲ್ಲಿ ನೀರಿನ ಅಂಶ ಕಡಿಮೆ ಇದ್ದು ದೇಹ ಡಿಹೈಡ್ರೇಟ್ ಆಗಿರುವುದು ಕಂಡು ಬಂದಿದೆ. ಕೆಲವರು ಬಿಸಿಲಿನ ಸಮಯದಲ್ಲಿ ನಿಲುಗಡೆ ಮಾಡಿರುವ ವಾಹನಗಳಲ್ಲಿ ಕುಳಿತುಕೊಂಡು ಬಿಸಿಲಿನ ತಾಪಕ್ಕೆ ಸಿಲುಕಿರುವುದು ಕಂಡು ಬಂದಿದೆ. ತಲೆಸುತ್ತು, ಸುಸ್ತಾಗುವುದು, ಕಣ್ಣು ಮಂಜಾಗುವುದು ಕಂಡು ಬಂದಲ್ಲಿ ಕೂಡಲೆ ಹತ್ತಿರದ ಪಾಲಿಕೆಯ ಆರೋಗ್ಯ ಕೇಂದ್ರಗಳಿಗೆ ತೆರಳಿ ಚಿಕಿತ್ಸೆ ಪಡೆಯಬಹುದು ಎಂದು ಅಧಿಕಾರಿ ತಿಳಿಸಿದರು.&lt;/p&gt;&lt;p&gt;ಜಾಗೃತಿ ಭಿತ್ತಿಪತ್ರ: ಇಂತಹ ಸಮಯದಲ್ಲಿ ಎಳನೀರು, ಮಜ್ಜಿಗೆ ಸೇವಿಸುವುದು, ತಂಪಾದ ಪಾನೀಯ ಸೇವಿಸುವುದು ಉತ್ತಮ. ಈ ಸಂದೇಶಗಳಿರುವ ಭಿತ್ತಿ ಪತ್ರಗಳನ್ನು 143 ಪ್ರಾಥಮಿಕ ಆರೋಗ್ಯ ಕೇಂದ್ರ, 242 ನಮ್ಮ ಕ್ಲಿನಿಕ್ ಗಳಲ್ಲಿ ಬಿತ್ತರಿಸಲಾಗಿದೆ.&lt;/p&gt;&lt;h2&gt;ಹೀಟ್ ಸ್ಟ್ರೋಕ್&zwnj;ನಿಂದ ಪಾರಾಗೋದು ಹೇಗೆ?&lt;/h2&gt;&lt;p&gt;ನಗರದಲ್ಲಿ ಬಿಸಿಲು ಹೆಚ್ಚಾದ ಸಮಯದಲ್ಲಿ ನೀರು ಹೆಚ್ಚು ಸೇವಿಸಬೇಕು, ಎಳನೀರು, ಮಜ್ಜಿಗೆ ಸೇವಿಸುವುದು, ತಂಪಾದ ಪಾನೀಯ ಸೇವಿಸುವುದು ಉತ್ತಮ, ಜಿಮ್ ಗಳಲ್ಲಿ ಹೆಚ್ಚು ವ್ಯಾಯಾಮ ಮಾಡುವುದು ಸೂಕ್ತವಲ್ಲ. ಹೆಚ್ಚು ಕಾಟನ್ ಬಟ್ಟೆಗಳನ್ನು ಧರಿಸುವುದು ಉತ್ತಮ. ಬಿಸಿಲಿನಲ್ಲಿ ನಿಲುಗಡೆ ಮಾಡಿರುವ ವಾಹನಗಳ ಮೇಲೆ ಗಂಟೆಗಟ್ಟಲೆ ಕುಳಿತುಕೊಳ್ಳುವುದು ಹೀಟ್ ಸ್ಟ್ರೋಕ್ ಗೆ ಕಾರಣವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bengaluru-heatwave-alert-10-heat-stroke-cases-reported-in-a-month-amid-rising-temperatures-rav/articleshow-huhnwp1"/>
        </item>
        <item>
            <title><![CDATA[ಯೋಗೇಶ್ ಗೌಡ ಕೊಲೆ ಪ್ರಕರಣ: ಜನಪ್ರತಿನಿಧಿ ಕೋರ್ಟ್ ತೀರ್ಪು, ವಿನಯ್ ಕುಲಕರ್ಣಿಗೆ ಜೀವಾವಧಿ ಎನ್ನುತ್ತಿದ್ದಂತೆ ಗಳಗಳನೆ ಅತ್ತ ಶಾಸಕ]]></title>
            <link>https://kannada.asianetnews.com/state/karnataka-congress-mla-vinay-kulkarni-gets-life-imprisonment-in-yogesh-gowda-murder-case-rav/articleshow-g9ohrzf</link>
            <guid isPermaLink="true">https://kannada.asianetnews.com/state/karnataka-congress-mla-vinay-kulkarni-gets-life-imprisonment-in-yogesh-gowda-murder-case-rav/articleshow-g9ohrzf</guid>
            <pubDate>Sat, 18 Apr 2026 05:35:31 +0530</pubDate>
            <description><![CDATA[&lt;p&gt;ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್&zwnj; ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ಓರ್ವ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp8mhxkyn1ggn98rsk20f2vw,imgname-vinay-kulkarni-convicted-1776258971261.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.18):&lt;/strong&gt; ಹತ್ತು ವರ್ಷಗಳ ಹಿಂದೆ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 17 ಮಂದಿ ಅಪರಾಧಿಗಳಿಗೆ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್&zwnj; ಹಾಲಿ ಶಾಸಕ ವಿನಯ್&zwnj; ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ಒಬ್ಬ ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.&lt;/p&gt;&lt;p&gt;ಪ್ರಕರಣದ 21 ಮಂದಿ ಆರೋಪಿಗಳ ಪೈಕಿ 17 ಮಂದಿಯನ್ನು ದೋಷಿ ಎಂದು ತೀರ್ಮಾನಿಸಿ ಏ.15ರಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್&zwnj;, ಶುಕ್ರವಾರ ತೆರೆದ ನ್ಯಾಯಾಲಯದಲ್ಲಿ 17 ಮಂದಿ ಅಪರಾಧಿಗಳಿಗೂ ಶಿಕ್ಷೆ ಪ್ರಮಾಣ ಪ್ರಕಟಿಸಿದರು.&lt;/p&gt;&lt;p&gt;ಶಿಕ್ಷೆ ಪ್ರಮಾಣ ಪ್ರಕಟವಾಗುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ಬೆಳಗ್ಗೆ ಬಿಗಿ ಭದ್ರತೆಯಲ್ಲಿ 17 ಮಂದಿ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆತಂದಿದ್ದರು. ಸಂಜೆ ಸುಮಾರು 4.10ಕ್ಕೆ ನ್ಯಾಯಾಧೀಶ ಸಂತೋಷ್&zwnj; ಗಜಾನನ ಭಟ್&zwnj; ನ್ಯಾಯಾಲಯದ ಕೊಠಡಿ ಪ್ರವೇಶಿಸಿದರು. ಬಳಿಕ 17 ಮಂದಿ ಅಪರಾಧಿಗಳ ಹೆಸರು ಕೂಗಿದರು. ಈ ವೇಳೆ ವಿನಯ್&zwnj; ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ನ್ಯಾಯಾಧೀಶರಿಗೆ ಕೈ ಮುಗಿದು ನಿಂತರು. ಈ ವೇಳೆ ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಜೀವಾವಧಿ ಶಿಕ್ಷೆ ಎಂದು ಹೇಳುತ್ತಿದಂತೆ ವಿನಯ್&zwnj; ಕುಲಕರ್ಣಿ ಸೇರಿ ಎಲ್ಲ ಆರೋಪಿಗಳು ಕಣ್ಣೀರಿಟ್ಟರು.&lt;/p&gt;&lt;p&gt;ನ್ಯಾಯಾಲಯದ ತೀರ್ಪಿನ ಬಳಿಕ ಅಪರಾಧಿಗಳನ್ನು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.&lt;/p&gt;&lt;h2&gt;ಯಾವುದಕ್ಕೆ ಎಷ್ಟು ಶಿಕ್ಷೆ?:&lt;/h2&gt;&lt;p&gt;ಭಾರತೀಯ ದಂಡ&zwnj; ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಜತೆಗೆ 120ಬಿ (ಪಿತೂರಿ) ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಗಳಿಗಾಗಿ ವಿಕ್ರಮ್ ಬಳ್ಳಾರಿ (ಎ2), ಕೀರ್ತಿಕುಮಾರ್ ಬಸವರಾಜ ಕುರಹಟ್ಟಿ (ಎ3), ಸಂದೀಪ್ ಸವದತ್ತಿ (ಎ4), ವಿನಾಯಕ ಕಟಗಿ (ಎ5), ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ (ಎ6), ಸಂತೋಷ್ ಸವದತ್ತಿ (ಎ7), ಎಂ. ದಿನೇಶ್ (ಎ8), ಅಶ್ವತ್ (ಎ9), ಸುನೀಲ್ (ಎ10), ನಜೀರ್ ಅಹಮದ್ (ಎ11), ಶಹನವಾಜ್ (ಎ12), ನೂತನ್ (ಎ13), ಹರ್ಷಿತ್ (ಎ14), ವಿನಯ ಕುಲಕರ್ಣಿ (ಎ15), ಚಂದ್ರಶೇಖರ್ ಇಂಡಿ (ಎ16) ಹಾಗೂ ವಿಕಾಸ್ ಕಲ್ಬುರ್ಗಿಗೆ (ಎ18) ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 30 ಸಾವಿರ ರು. ದಂಡ ವಿಧಿಸಿದೆ.&lt;/p&gt;&lt;p&gt;ಅಂತೆಯೇ ಐಪಿಸಿ ಸೆಕ್ಷನ್ 143 (ಅಕ್ರಮ ಕೂಟ) ಜತೆಗೆ 120ಬಿ (ಪಿತೂರಿ) ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಕ್ಕಾಗಿ 2 ರಿಂದ 14 ಹಾಗೂ 18ನೇ ಆರೋಪಿಗಳಿಗೆ ತಲಾ 2 ಸಾವಿರ ರು. ದಂಡದೊಂದಿಗೆ 6 ತಿಂಗಳ ಅವಧಿಗೆ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಐಪಿಸಿ ಸೆಕ್ಷನ್ 147 (ಗಲಭೆ) ಜತೆಗೆ 120ಬಿ ಅಡಿಯ ಅಪರಾಧಕ್ಕಾಗಿ ಆರೋಪಿ ಸಂಖ್ಯೆ 2 ರಿಂದ 14 ಹಾಗೂ 18ನೇ ಆರೋಪಿಗೆ ತಲಾ 2 ಸಾವಿರ ರು. ದಂಡದೊಂದಿಗೆ 1 ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದೆ.&lt;/p&gt;&lt;p&gt;ಐಪಿಸಿ ಸೆಕ್ಷನ್ 148 (ಮಾರಕಾಸ್ತ್ರ ಹಿಡಿದು ಗಲಭೆ) ಜತೆಗೆ 120ಬಿ ಅಡಿಯಲ್ಲಿನ ಅಪರಾಧ ಕೃತ್ಯಕ್ಕಾಗಿ 2 ರಿಂದ 14 ಮತ್ತು 18ನೇ ಆರೋಪಿಗಳಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 2 ಸಾವಿರ ರು. ದಂಡ ವಿಧಿಸಲಾಗಿದೆ. ಐಪಿಸಿ ಸೆಕ್ಷನ್ 120ಬಿ (ಪಿತೂರಿ) ಅಡಿಯಲ್ಲಿನ ಅಪರಾಧಕ್ಕಾಗಿ 2 ರಿಂದ 16 ಹಾಗೂ 18ನೇ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 30 ಸಾವಿರ ರು. ದಂಡ ವಿಧಿಸಲಾಗಿದೆ.&lt;/p&gt;&lt;p&gt;ಚನ್ನಕೇಶವ ಟಿಂಗರೀಕರ್&zwnj;ಗೆ (ಎ19) ಐಪಿಸಿ ಸೆಕ್ಷನ್ 218 (ಸರ್ಕಾರಿ ಅಧಿಕಾರಿಯು ವ್ಯಕ್ತಿಯನ್ನು ಶಿಕ್ಷೆಯಿಂದ ಅಥವಾ ಆಸ್ತಿ ಮುಟ್ಟುಗೋಲಿನಿಂದ ರಕ್ಷಿಸಲು ಸುಳ್ಳು ದಾಖಲೆ ಸೃಷ್ಟಿ) ಅಡಿ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರು. ದಂಡ, ಐಪಿಸಿ ಸೆಕ್ಷನ್ 201 (ಸಾಕ್ಷ್ಯಗಳ ಕಣ್ಮರೆಗೆ ಕಾರಣ ಅಥವಾ ಅಪರಾಧಿ ರಕ್ಷಿಸಲು ಸುಳ್ಳು ಮಾಹಿತಿ ನೀಡುವುದು) ಜತೆಗೆ 120ಬಿ ಅಡಿಯಲ್ಲಿನ ಅಪರಾಧಕ್ಕಾಗಿ, 2 ರಿಂದ 16, 18 ಮತ್ತು 19ನೇ ಆರೋಪಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರು. ದಂಡ ವಿಧಿಸಿದೆ.&lt;/p&gt;&lt;p&gt;ಐಪಿಸಿ ಸೆಕ್ಷನ್ 218 ಜತೆಗೆ 120ಬಿ ಅಡಿಯಲ್ಲಿನ ಅಪರಾಧಕ್ಕಾಗಿ ಎ19 ಚೆನ್ನಕೇಶವ ಟಿಂಗರೀಕರ್&zwnj;ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರು. ದಂಡ ವಿಧಿಸಲಾಗಿದೆ. ಮೇಲಿನ ಎಲ್ಲ ಪ್ರಕರಣಗಳಲ್ಲೂ ಅಪರಾಧಿಗಳು ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;h3&gt;ಯೋಗೇಶ್&zwnj; ಗೌಡ ಮಕ್ಕಳಿಗೆ 16 ಲಕ್ಷ ರು. ಪರಿಹಾರ:&lt;/h3&gt;&lt;p&gt;ಅಪರಾಧಿಗಳು ದಂಡ ಪಾವತಿಸಲು ವಿಫಲವಾಗಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಿದರೂ ದಂಡ ಪಾವತಿಸುವ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಪರಾಧಿಗಳಿಗೆ ವಿಧಿಸಲಾಗಿರುವ ಎಲ್ಲ ಶಿಕ್ಷೆಗಳೂ ಏಕಕಾಲದಲ್ಲಿ ಜಾರಿಯಾಗಲಿವೆ. ವಿಚಾರಣಾಧೀನ ಕೈದಿಗಳಾಗಿ ಅನುಭವಿಸಿದ ಬಂಧನದ ಅವಧಿ ಜೈಲು ಶಿಕ್ಷೆಯಿಂದ ಕಡಿತಗೊಳ್ಳಲಿದೆ. ದಂಡದ ಒಟ್ಟು ಮೊತ್ತದಿಂದ ಮೃತ ಯೋಗೇಶ್ ಗೌಡ ಮತ್ತು ಗುರುನಾಥ ಗೌಡ ಅವರ ಮಕ್ಕಳಿಗೆ 16 ಲಕ್ಷ ರು. ಪರಿಹಾರ ನೀಡಬೇಕು. ಉಳಿದ ದಂಡದ ಮೊತ್ತವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;&lt;strong&gt;ಏನಿದು ಪ್ರಕರಣ?:&lt;/strong&gt;&lt;/p&gt;&lt;p&gt;ಧಾರವಾಡದ ಜಿ.ಪಂ. ಮಾಜಿ ಸದಸ್ಯ ಯೋಗೇಶ್&zwnj; ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಈ ಪ್ರಕರಣವನ್ನು 2019ರಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ಬೆಳಕಿಗೆ ಬಂದಿತ್ತು. ಇದಕ್ಕೆ ಪೂರಕವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಿದ ಸಿಬಿಐ ಅಧಿಕಾರಿಗಳು 2020ರ ನ.5ರಂದು ವಿನಯ್&zwnj; ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್&zwnj; ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.&lt;/p&gt;&lt;p&gt;&lt;strong&gt;ಖುಲಾಸೆ ಗೊಂಡವರು ಯಾರು?&lt;/strong&gt;&lt;/p&gt;&lt;p&gt;ಪ್ರಕರಣದ 20ನೇ ಆರೋಪಿ ವಾಸುದೇವ ರಾಮ ನಿಲೇಕಣಿ, 21 ಆರೋಪಿ ಸೋಮಶೇಖರ್ ಬಸಪ್ಪ ನ್ಯಾಮನಗೌಡ, ಮಾಫಿ ಸಾಕ್ಷಿಯಾಗಿದ್ದ 1ನೇ ಆರೋಪಿ ಬಸವರಾಜ ಮುತ್ತಗಿ, 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ್.&lt;/p&gt;&lt;p&gt;&lt;strong&gt;17ನೇ ಆರೋಪಿ ವಿರುದ್ಧ ಕ್ರಮಕ್ಕೆ ಅವಕಾಶ&lt;/strong&gt;&lt;/p&gt;&lt;p&gt;ಈ ಪ್ರಕರಣದಲ್ಲಿ ಮೊದಲಿಗೆ ಮಾಫಿ ಸಾಕ್ಷಿಯಾಗಿ ನಂತರ ವಿಚಾರಣಾ ನ್ಯಾಯಾಲಯದ ಎದುರು ಪ್ರತಿಕೂಲ ಸಾಕ್ಷ್ಯ ನುಡಿದಿದ್ದ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ್&zwnj; ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.&lt;/p&gt;&lt;p&gt;&lt;strong&gt;ಸುಳ್ಳು ಸಾಕ್ಷ್ಯ ಪ್ರಕರಣ ದಾಖಲಿಸಲು ನಿರ್ದೇಶನ&lt;/strong&gt;&lt;/p&gt;&lt;p&gt;ವಿಚಾರಣಾ ನ್ಯಾಯಾಲಯದ ಮುಂದೆ ಸುಳ್ಳು ಸಾಕ್ಷ್ಯ ನೀಡಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳಾದ ಶಿವಾನಂದ ಚಲವಾದಿ, ಬಾಬು ಕಟಗಿ, ಶಂಕರಗೌಡ ಬಸನಗೌಡ ಪಾಟೀಲ್ ಹಾಗೂ ಇತರ ಸ್ವತಂತ್ರ ಸಾಕ್ಷಿಗಳಾದ ದತ್ತಾತ್ರೇಯ ಗುಡಗಂಟಿ, ಆನಂದ ಈರಪ್ಪ ಉದ್ದಣ್ಣವರ್&zwnj;, ವಿನಾಯಕ ಬಿಂಜಿಯವರ್&zwnj;, ಮೋಹನ್&zwnj; ಈಚರಪ್ಪ ಮಲ್ಮುತ್ತಲ್, ವಿವೇಕಾನಂದ ದಳವಾಯಿ, ನಟರಾಜ್&zwnj; ಸರದೇಸಾಯಿ ಮತ್ತು ವಿಜಯ್&zwnj; ಕುಲಕರ್ಣಿ ವಿರುದ್ಧ ಸುಳ್ಳು ಸಾಕ್ಷ್ಯದ ಪ್ರಕರಣವನ್ನು ದಾಖಲಿಸಲು ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್&zwnj;ಗೆ ನ್ಯಾಯಾಲಯ ನಿರ್ದೇಶಿಸಿದೆ.&lt;/p&gt;&lt;p&gt;&lt;strong&gt;ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಕುಲಕರ್ಣಿ&lt;/strong&gt;&lt;/p&gt;&lt;p&gt;ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್&zwnj; ಅವರು ತೆರೆದ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸುವಾಗ ಕಟಕಟೆ ಎದುರು 17 ಮಂದಿ ಅಪರಾಧಿಗಳು ತಲೆ ಬಗ್ಗಿಸಿ ಮೌನವಾಗಿ ನಿಂತಿದ್ದರು. ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳುತ್ತಿದ್ದಂತೆ ಅಪರಾಧಿ ವಿನಯ್&zwnj; ಕುಲಕರ್ಣಿ ಭಾವೋದ್ವೇಗಕ್ಕೆ ಒಳಗಾಗಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟರು. ಉಳಿದ 16 ಮಂದಿ ಆರೋಪಿಗಳು ಭಾವುಕರಾಗಿ ಕಣ್ಣೀರು ಸುರಿಸಿದರು.&lt;/p&gt;&lt;p&gt;&lt;strong&gt;ಹೈಕೋರ್ಟ್&zwnj;ನಲ್ಲಿ ಮೇಲ್ಮನವಿಗೆ ಅವಕಾಶ&lt;/strong&gt;&lt;/p&gt;&lt;p&gt;ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್&zwnj; ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಈ ಪ್ರಕರಣದಲ್ಲಿ ಅಪರಾಧಿ ವಿನಯ್&zwnj; ಕುಲಕರ್ಣಿ ಜನಪ್ರತಿನಿಧಿ ಆಗಿರುವುದರಿಂದ ಜನಪ್ರತಿನಿಧಿಗಳ ಹೈಕೋರ್ಟ್&zwnj; ವಿಭಾಗೀಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಲಿದೆ.&lt;/p&gt;&lt;p&gt;&lt;strong&gt;ಶಿಕ್ಷೆ ಅಮಾನತು, ಬೇಲ್&zwnj; ಹೈಕೋರ್ಟ್&zwnj; ವಿವೇಚನೆಗೆ:&lt;/strong&gt;&lt;/p&gt;&lt;p&gt;ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಈ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ತಮಗೆ ಜಾಮೀನು ನೀಡುವಂತೆ ಅಪರಾಧಿಗಳು ಹೈಕೋರ್ಟ್&zwnj;ಗೆ ಮೇಲ್ಮನವಿ ಸಲ್ಲಿಸಬಹುದು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೂ ಅವಕಾಶವಿದೆ. ಅಂತಿಮವಾಗಿ ಶಿಕ್ಷೆ ಅಮಾನತುಗೊಳಿಸುವ ಮತ್ತು ಜಾಮೀನು ಮಂಜೂರು ಮಾಡುವುದು ಹೈಕೋರ್ಟ್&zwnj; ವಿವೇಚನೆಗೆ ಒಳಪಟ್ಟಿರುತ್ತದೆ.&lt;/p&gt;&lt;p&gt;&lt;strong&gt;ಬೇರೆ ಬಟ್ಟೆ ಧರಿಸಲು ಅವಕಾಶಕ್ಕೆ ಮನವಿ&lt;/strong&gt;&lt;/p&gt;&lt;p&gt;ನ್ಯಾಯಾಧೀಶ ಸಂತೋಷ್&zwnj; ಗಜಾನನ ಭಟ್&zwnj; ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ ಬಳಿಕ ಅಪರಾಧಿ ವಿನಯ್&zwnj; ಕುಲಕರ್ಣಿ ಪರ ವಕೀಲರು, ಅಪರಾಧಿಗಳು ಕಳೆದ ಮೂರು ದಿನಗಳಿಂದ ಒಂದೇ ಬಟ್ಟೆಯಲ್ಲಿದ್ದಾರೆ. ಹೀಗಾಗಿ ಬೇರೆ ಬಟ್ಟೆ ಧರಿಸಲು ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಜೈಲು ಮ್ಯಾನುವೆಲ್&zwnj;ನಲ್ಲಿ ಇರುವ ಅವಕಾಶದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.&lt;/p&gt;&lt;p&gt;&lt;strong&gt;ಇತ್ತೀಚಿನ 2ನೇ ಮಹತ್ವದ ತೀರ್ಪು:&lt;/strong&gt;&lt;/p&gt;&lt;p&gt;ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್&zwnj; ಗಜಾನನ ಭಟ್&zwnj; ಅವರು ಇತ್ತೀಚೆಗೆ ನೀಡಿದ ಎರಡನೇ ಮಹತ್ವದ ತೀರ್ಪು ಇದಾಗಿದೆ. ಅತ್ಯಾ೧ಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್&zwnj; ರೇವಣ್ಣ ಅವರಿಗೆ ಜೀವಿತಾವಧಿ ಜೈಲು ಶಿಕ್ಷೆ ನೀಡಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಹಾಲಿ ಶಾಸಕ ವಿನಯ್&zwnj; ಕುಲಕರ್ಣಿ ಸೇರಿ 16 ಮದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಾರೆ.&lt;/p&gt;&lt;p&gt;&lt;strong&gt;ಸನ್ನಡತೆ ಮೇಲೆ ಬಿಡುಗಡೆಗೆ ಅವಕಾಶ:&lt;/strong&gt;&lt;/p&gt;&lt;p&gt;ಘೋರ ಅಪರಾಧ ಪ್ರಕರಣಗಳಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ ಜೀವ ಇರುವವರೆಗೂ ಜೈಲು ಶಿಕ್ಷೆ ಅನುಭವಿಸಬೇಕು. ಇದರಲ್ಲಿ ಅಪರಾಧಿಗೆ ಶಿಕ್ಷೆ ಕಡಿಮೆ ಮಾಡುವ ಅಥವಾ ಕ್ಷಮಾಧಾನಕ್ಕೆ ಅವಕಾಶವೇ ಇಲ್ಲ. ಆದರೆ, ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ 14 ವರ್ಷಗಳ ಶಿಕ್ಷೆ ಅನುಭವಿಸಿದ ಬಳಿಕ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಅವಕಾಶವಿದೆ. ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 16 ಮಂದಿ ಅಪರಾಧಿಗಳೂ ಸನ್ನಡತೆ ವ್ಯಾಪ್ತಿಗೆ ಬರುತ್ತಾರೆ.&lt;/p&gt;&lt;p&gt;&lt;strong&gt;ಶಾಸಕ ಸ್ಥಾನದಿಂದ ಅನರ್ಹತೆ ನಿಶ್ಚಿತ:&lt;/strong&gt;&lt;/p&gt;&lt;p&gt;ಯಾವುದೇ ಶಾಸಕ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದರೆ ತಕ್ಷಣ ಆತನ ಶಾಸಕನ ಸ್ಥಾನ ರದ್ದಾಗುತ್ತದೆ. ಇದೀಗ ಕಾಂಗ್ರೆಸ್&zwnj; ಶಾಸಕ ವಿನಯ್&zwnj; ಕುಲಕರ್ಣಿ ಜೀವಾಧಿಗೆ ಶಿಕ್ಷೆಗೆ ಗುರಿಯಾಗಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ. ನ್ಯಾಯಾಲಯದ ತೀರ್ಪು ಪ್ರತಿ ವಿಧಾನಸಭಾ ಸ್ಪೀಕರ್&zwnj;ಗೆ ತಲುಪಿದ ತಕ್ಷಣ ಸ್ಪೀಕರ್&zwnj; ಅವರು ಶಾಸಕ ಸ್ಥಾನ ಅನರ್ಹ ಸಂಬಂಧ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;&lt;strong&gt;ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು?&lt;/strong&gt;&lt;/p&gt;&lt;p&gt;ವಿನಯ್&zwnj; ಕುಲಕರ್ಣಿ ಹೈಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಕೋರಬಹುದು ಅಥವಾ ದೋಷಿ ಎಂಬ ತೀರ್ಪಿಗೆ ತಡೆಯಾಜ್ಞೆ ಕೋರಬಹುದು. ಒಂದು ವೇಳೆ ಹೈಕೋರ್ಟ್&zwnj; ತಡೆಯಾಜ್ಞೆ ನೀಡಿದರೆ ಶಾಸಕ ಸ್ಥಾನ ಉಳಿಯಲಿದೆ. ಇಲ್ಲವಾದರೆ, ಜೈಲುವಾಸದ ಜೊತೆಗೆ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ. ಮುಂದೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲು ಕಾನೂನಿನಲ್ಲಿ ಅವಕಾಶವಿದೆ.&lt;/p&gt;&lt;p&gt;&lt;strong&gt;ಮುಂದೇನು?&lt;/strong&gt;&lt;/p&gt;&lt;ul&gt; &lt;li&gt;ಶಿಕ್ಷೆ ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಬಹುದು&lt;/li&gt; &lt;li&gt;ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಜಾಮೀನು ನೀಡುವಂತೆ ಕೋರಬಹುದು&lt;/li&gt; &lt;li&gt;ಪ್ರಕರಣದ ತನಿಖಾಧಿಕಾರಿಗಳೂ ಇದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಬಹುದು&lt;/li&gt; &lt;li&gt;ಶಿಕ್ಷೆ ಅಮಾನತು, ಜಾಮೀನು ಮಂಜೂರು ಹೈಕೋರ್ಟ್&zwnj; ವಿವೇಚನೆಗೆ&lt;/li&gt; &lt;li&gt;ಶಿಕ್ಷೆಗೆ ಹೈಕೋರ್ಟ್&zwnj; ತಡೆಯಾಜ್ಞೆ ನೀಡಿದರೆ ವಿನಯ್&zwnj; ಶಾಸಕತ್ವ ಸುರಕ್ಷಿತ&lt;/li&gt;&lt;/ul&gt;&lt;p&gt;&lt;strong&gt;ಶಾಸಕ ಸ್ಥಾನದಿಂದ ಶೀಘ್ರವೇ ಅನರ್ಹ&lt;/strong&gt;&lt;/p&gt;&lt;p&gt;ಯಾವುದೇ ಶಾಸಕ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದರೆ ತಕ್ಷಣ ಆತನ ಶಾಸಕನ ಸ್ಥಾನ ರದ್ದಾಗುತ್ತದೆ. ನ್ಯಾಯಾಲಯದ ತೀರ್ಪು ಪ್ರತಿ ವಿಧಾನಸಭಾ ಸ್ಪೀಕರ್&zwnj;ಗೆ ತಲುಪಿದ ತಕ್ಷಣ ಸ್ಪೀಕರ್&zwnj; ಅವರು ವಿನಯ್&zwnj; ಕುಲಕರ್ಣಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-congress-mla-vinay-kulkarni-gets-life-imprisonment-in-yogesh-gowda-murder-case-rav/articleshow-g9ohrzf"/>
        </item>
        <item>
            <title><![CDATA[ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ರಾಜ್ಯದಲ್ಲಿ ಕೋಮುಗಲಭೆ ನಡೆದೇ ಇಲ್ಲ, ಕರ್ನಾಟಕ ಪೊಲೀಸ್ ದೇಶದಲ್ಲೇ ನಂ.1 : ಪರಂ]]></title>
            <link>https://kannada.asianetnews.com/state/no-communal-riot-in-the-karnataka-since-the-congress-government-came-to-power-says-home-minister-parameshwara-rav/articleshow-ixvxeg6</link>
            <guid isPermaLink="true">https://kannada.asianetnews.com/state/no-communal-riot-in-the-karnataka-since-the-congress-government-came-to-power-says-home-minister-parameshwara-rav/articleshow-ixvxeg6</guid>
            <pubDate>Sat, 18 Apr 2026 04:36:22 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಕೋಮು ಗಲಭೆಗಳಿಗೆ ಕಡಿವಾಣ, ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ, ಪೊಲೀಸ್ ಸಿಬ್ಬಂದಿಗೆ ವಸತಿ ಸೌಕರ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jmh4yabe87z7w1zf5np6m6r3,imgname-param-5.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಳಗಾವಿ (ಏ.18): &lt;/strong&gt;ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ನ್ಯಾಯ ವಿತರಣೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ಕಾಪಾಡುತ್ತಿದೆ. ಇತರೆ ರಾಜ್ಯಗಳಿಂದ ಬಂಡವಾಳ ಹೂಡಿಕೆದಾರರು ಬರುತ್ತಿದ್ದು, ರಾಜ್ಯಕ್ಕೆ ಆದಾಯ ಮತ್ತು ಉದ್ಯೋಗವಕಾಶಗಳು ದೊರೆಯುತ್ತಿವೆ. ನಮ್ಮ ಸರ್ಕಾರ ಬಂದ ನಂತರ ಕೋಮು ಗಲಭೆಗಳಿಗೆ ಕಡಿವಾಣ ಹಾಕಿದ್ದು, ರಾಜ್ಯದಲ್ಲಿ ಕೋಮುಗಲಭೆ ನಡೆದಿಲ್ಲ. ನಡೆಯಲೂ ಬಿಡುವುದಿಲ್ಲ. ಯುವಕರಿಗೆ ಮಾದಕ ವಸ್ತುಗಳ ಹಂಚಿಕೆ ಹಾಗೂ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.&lt;/p&gt;&lt;p&gt;ಕಾನೂನು ರಕ್ಷಣೆ ಮಾಡುವ ದೃಷ್ಟಿಯಿಂದ ಪೊಲೀಸ್&zwnj; ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಗೆ ಸೌಕರ್ಯ ಒದಗಿಸಲು ಸರ್ಕಾರ ಸ್ಪಂದಿಸಿದ್ದು, ಪೊಲೀಸ್ ಸಿಬ್ಬಂದಿಗೆ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಜನಸೇವೆಗೆ ತಕ್ಷಣ ಸ್ಪಂದಿಸಬೇಕು ಎಂದು ಕರೆ ನೀಡಿದರು.&lt;/p&gt;&lt;h2&gt;ಕಾಲೇಜುಗಳಲ್ಲಿ ಡ್ರಗ್ಸ್ ಜಾಗೃತಿ&lt;/h2&gt;&lt;p&gt;ದುಶ್ಚಟಗಳಿಂದ ಯುವ ಸಮುದಾಯವನ್ನು ರಕ್ಷಿಸಲು ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತು ಸೇವನೆ ಕುರಿತು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಂತ್ರಜ್ಞಾನದಿಂದ ಅಂಥ ಪ್ರಕರಣ ಪತ್ತೆಮಾಡಿ ವಂಚಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.&lt;/p&gt;&lt;h3&gt;ಪ್ರತಿಮನೆಗೆ ₹38 ಲಕ್ಷ ವೆಚ್ಚ:&lt;/h3&gt;&lt;p&gt;ಶಾಂತಿ-ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರ ಕುಟುಂಬಗಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಸತಿ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಬೆಳಗಾವಿ ಜಿಲ್ಲೆಯ ವಿವಿಧೆಡೆ ₹67.79 ಕೋಟಿ ವೆಚ್ಚದಲ್ಲಿ, ಶಹಾಪುರದಲ್ಲಿ ₹3.92 ಕೋಟಿ ವೆಚ್ಚದಲ್ಲಿ ವಸತಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಪ್ರತಿಮನೆಗೆ ₹38 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಕಳೆದ ವರ್ಷ ₹2000 ಕೋಟಿ ಹಾಗೂ ಈ ವರ್ಷ ₹350 ಕೋಟಿ ವೆಚ್ಚದಲ್ಲಿ ಪೊಲೀಸ್ ವಸತಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಹೇಳಿದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/no-communal-riot-in-the-karnataka-since-the-congress-government-came-to-power-says-home-minister-parameshwara-rav/articleshow-ixvxeg6"/>
        </item>
        <item>
            <title><![CDATA['ಗ್ರೇಟರ್ ಬೆಂಗಳೂರು' ಚುನಾವಣೆ ಮತ್ತೆ ಮುಂದೂಡಿಕೆ?; ಸೆಪ್ಟೆಂಬರ್‌ವರೆಗೆ ಕಾಲಾವಕಾಶ ಕೋರಿ ಆಯೋಗಕ್ಕೆ ಸರ್ಕಾರ ಪತ್ರ!]]></title>
            <link>https://kannada.asianetnews.com/state/karnataka-govt-requests-election-commission-to-postpone-greater-bengaluru-authority-elections-until-september-2026-sat/articleshow-saw802n</link>
            <guid isPermaLink="true">https://kannada.asianetnews.com/state/karnataka-govt-requests-election-commission-to-postpone-greater-bengaluru-authority-elections-until-september-2026-sat/articleshow-saw802n</guid>
            <pubDate>Fri, 17 Apr 2026 21:19:16 +0530</pubDate>
            <description><![CDATA[&lt;p&gt;ರಾಜ್ಯ ಸರ್ಕಾರವು ಜನಗಣತಿ ಕಾರ್ಯ ಮತ್ತು ಸಿಬ್ಬಂದಿ ಕೊರತೆಯ ಕಾರಣ ನೀಡಿ, ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸೆಪ್ಟೆಂಬರ್ 30, 2026 ರವರೆಗೆ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತವಾಗಿ ಪತ್ರ ಬರೆದಿದೆ. ಇದಕ್ಕೆ 4 ಕಾರಣಗಳನ್ನೂ ಕೊಟ್ಟಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk82q6byytxcv8x2jjv36378,imgname-----------------------2026-03-09t064657.095-1773019044222.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): ಸಿ&lt;/strong&gt;ಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಹಲವು ವರ್ಷಗಳಿಂದ ನಿರೀಕ್ಷಿಸುತ್ತಿದ್ದ ನಗರ ಸ್ಥಳೀಯ ಸಂಸ್ಥೆಗಳ (ಗ್ರೇಟರ್ ಬೆಂಗಳೂರು ಪ್ರದೇಶ) ಚುನಾವಣೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ಜನಗಣತಿ ಕಾರ್ಯ ಹಾಗೂ ಸಿಬ್ಬಂದಿಗಳ ಕೊರತೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವು ಚುನಾವಣೆಯನ್ನು ಸೆಪ್ಟೆಂಬರ್ 30, 2026 ರವರೆಗೆ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತವಾಗಿ ಪತ್ರ ಬರೆದಿದೆ.&lt;/p&gt;&lt;h2&gt;&lt;strong&gt;ಸರ್ಕಾರದ ಪತ್ರದಲ್ಲೇನಿದೆ?&lt;/strong&gt;&lt;/h2&gt;&lt;p&gt;ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಕಾರ್ಯದರ್ಶಿ ಡಾ. ಕೆ.ಜಿ. ಜಗದೀಶ್ ಅವರು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ, ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಾಲಾವಕಾಶದ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಈ ಪತ್ರದ ಪ್ರಕಾರ, 1948ರ ಜನಗಣತಿ ಕಾಯ್ದೆಯಡಿ ನಡೆಯುತ್ತಿರುವ ಜನಗಣತಿ ಕಾರ್ಯಗಳಲ್ಲಿ ಇಡೀ ಆಡಳಿತ ಯಂತ್ರವು ಪ್ರಸ್ತುತ ತೊಡಗಿಸಿಕೊಂಡಿದೆ. ಜನಗಣತಿಯು ಒಂದು ಶಾಸನಬದ್ಧ ಮತ್ತು ನಿಗದಿತ ಸಮಯದೊಳಗೆ ಮುಗಿಸಬೇಕಾದ ಕಾರ್ಯವಾಗಿದ್ದು, ಎಣಿಕೆ, ಮೇಲ್ವಿಚಾರಣೆ, ತರಬೇತಿ ಮತ್ತು ಲಾಜಿಸ್ಟಿಕ್ಸ್ಗಾಗಿ ವ್ಯಾಪಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.&lt;/p&gt;&lt;h2&gt;&lt;strong&gt;ಚುನಾವಣೆ ಮುಂದೂಡಿಕೆಗೆ ಪ್ರಮುಖ ಕಾರಣಗಳು:&lt;/strong&gt;&lt;/h2&gt;&lt;p&gt;&lt;strong&gt;1. ಜನಗಣತಿ ಕಾರ್ಯದ ಒತ್ತಡ: &lt;/strong&gt;ಇಡೀ ಜಿಲ್ಲಾ ಮತ್ತು ಕ್ಷೇತ್ರ ಮಟ್ಟದ ಆಡಳಿತ ಯಂತ್ರವು ಜನಗಣತಿಯಲ್ಲಿ ಬ್ಯುಸಿಯಾಗಿರುವುದರಿಂದ, ಚುನಾವಣಾ ಪೂರ್ವಸಿದ್ಧತಾ ಕಾರ್ಯಗಳಿಗೆ ಸಿಬ್ಬಂದಿಗಳ ಲಭ್ಯತೆ ತೀರಾ ಕಡಿಮೆ ಇದೆ ಎಂದು ಸರ್ಕಾರ ಹೇಳಿದೆ.&lt;/p&gt;&lt;p&gt;&lt;strong&gt;2. ಮತದಾರರ ಪಟ್ಟಿಯ ಪರಿಷ್ಕರಣೆ (SIR): &lt;/strong&gt;ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯವು ಏಕಕಾಲದಲ್ಲಿ ನಡೆಯಬೇಕಿದೆ. ಈ ಕೆಲಸಕ್ಕೂ ಅದೇ ಕ್ಷೇತ್ರ ಮಟ್ಟದ ಕಾರ್ಯನಿರ್ವಾಹಕರನ್ನು ಬಳಸಿಕೊಳ್ಳಬೇಕಾಗಿರುವುದರಿಂದ ಮಾನವಶಕ್ತಿಯ ಕೊರತೆ ಎದುರಾಗಿದೆ.&lt;/p&gt;&lt;p&gt;&lt;strong&gt;3. ಶೈಕ್ಷಣಿಕ ಪರೀಕ್ಷೆಗಳ ಕರ್ತವ್ಯ: &lt;/strong&gt;ಮೇ ಮತ್ತು ಜೂನ್ ತಿಂಗಳಲ್ಲಿ 10ನೇ ಮತ್ತು 12ನೇ ತರಗತಿಯ ಪೂರಕ ಪರೀಕ್ಷೆಗಳು ನಡೆಯಲಿವೆ. ಈ ಶೈಕ್ಷಣಿಕ ಪರೀಕ್ಷಾ ಕರ್ತವ್ಯಗಳಿಗೆ ಶಿಕ್ಷಕರು ಮತ್ತು ಸರ್ಕಾರಿ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕಾಗಿರುವುದರಿಂದ ಚುನಾವಣಾ ಕಾರ್ಯಕ್ಕೆ ಹಿನ್ನಡೆಯಾಗಲಿದೆ.&lt;/p&gt;&lt;p&gt;&lt;strong&gt;4. ನಗರೀಕರಣದ ಸವಾಲುಗಳು: &lt;/strong&gt;ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ಮಹಾನಗರವಾಗಿದ್ದು, ಇಲ್ಲಿನ ಮತದಾರರ ಪಟ್ಟಿಯ ನಿಖರತೆ ಮತ್ತು ವಾರ್ಡ್&zwnj;ಗಳ ವಿಂಗಡಣೆಯ ಕಾರ್ಯಕ್ಕೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.&lt;/p&gt;&lt;h2&gt;&lt;strong&gt;ಸಮರ್ಪಕ ಸಿದ್ಧತೆಗಾಗಿ ವಿಸ್ತರಣೆ:&lt;/strong&gt;&lt;/h2&gt;&lt;p&gt;ಈ ಎಲ್ಲಾ ಕಾರಣಗಳಿಂದಾಗಿ, ಚುನಾವಣೆಗಳನ್ನು ಮುಕ್ತ, ನ್ಯಾಯಸಮ್ಮತ ಮತ್ತು ವ್ಯವಸ್ಥಿತವಾಗಿ ನಡೆಸಲು ಈಗಿರುವ ಕಾಲಮಿತಿಯನ್ನು ಸೆಪ್ಟೆಂಬರ್ 30, 2026 ರವರೆಗೆ ವಿಸ್ತರಿಸುವಂತೆ ಮುಖ್ಯ ಆಯುಕ್ತರು ಕೋರಿದ್ದಾರೆ. ಈ ಪ್ರಸ್ತಾವನೆಗೆ ಮುಖ್ಯ ಕಾರ್ಯದರ್ಶಿಯವರಿಂದಲೂ ಅನುಮೋದನೆ ಸಿಕ್ಕಿದ್ದು, ಈಗ ಚೆಂಡು ರಾಜ್ಯ ಚುನಾವಣಾ ಆಯೋಗದ ಅಂಗಳದಲ್ಲಿದೆ.&lt;/p&gt;&lt;p&gt;ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಯದೆ ಈಗಾಗಲೇ ವರ್ಷಗಳೇ ಕಳೆದಿವೆ. ಈಗ 'ಗ್ರೇಟರ್ ಬೆಂಗಳೂರು' ಪರಿಕಲ್ಪನೆಯಡಿ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದರೂ, ಸರ್ಕಾರದ ಈ ಹೊಸ ಮನವಿಯು ಚುನಾವಣೆಗಾಗಿ ಕಾಯುತ್ತಿರು&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-govt-requests-election-commission-to-postpone-greater-bengaluru-authority-elections-until-september-2026-sat/articleshow-saw802n"/>
        </item>
        <item>
            <title><![CDATA[ರಾಜ್ಯದ ಜನತೆಗೆ 'ವಿದ್ಯುತ್ ದರ ಏರಿಕೆ' ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!]]></title>
            <link>https://kannada.asianetnews.com/state/karnataka-govt-kerc-electricity-tariff-hike-all-escom-s-56-paise-per-unit-from-may-2026-sat/articleshow-szs4nly</link>
            <guid isPermaLink="true">https://kannada.asianetnews.com/state/karnataka-govt-kerc-electricity-tariff-hike-all-escom-s-56-paise-per-unit-from-may-2026-sat/articleshow-szs4nly</guid>
            <pubDate>Fri, 17 Apr 2026 19:58:45 +0530</pubDate>
            <description><![CDATA[&lt;p&gt;ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್&zwnj;ಗೆ 56 ಪೈಸೆ ವಿದ್ಯುತ್ ದರ ಏರಿಕೆಗೆ ಅನುಮೋದನೆ ನೀಡಿದೆ. ಆದಾಯ ಕೊರತೆ ಸರಿದೂಗಿಸಲು ಈ 'ಟ್ರೂ ಅಪ್' ಶುಲ್ಕವನ್ನು ವಿಧಿಸಲಾಗಿದ್ದು, ಮೇ 2026 ರಿಂದ ಗ್ರಾಹಕರ ಬಿಲ್&zwnj;ನಲ್ಲಿ ಇದು ಜಾರಿಗೆ ಬರಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdxfp3bn2cqhts9n9av6jte,imgname-karnataka-electricity-tariff-hike-1776436107371.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): ಸು&lt;/strong&gt;ಡುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ವಿದ್ಯುತ್ (ಎಲ್ಲಾ ಎಸ್ಕಾಂಗಳು-ESCOM) ಗ್ರಾಹಕರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ವಿದ್ಯುತ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ಆದೇಶದನ್ವಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಯ ಮೇಲೆ 56 ಪೈಸೆ ಹೆಚ್ಚುವರಿ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ.&lt;/p&gt;&lt;h2&gt;&lt;strong&gt;ದರ ಏರಿಕೆಗೆ ಕಾರಣವೇನು?&lt;/strong&gt;&lt;/h2&gt;&lt;p&gt;ಕೆಇಆರ್&zwnj;ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ದರ ಏರಿಕೆಯು 2024-25ರ ಆರ್ಥಿಕ ವರ್ಷದ ಆದಾಯದ ಕೊರತೆಯನ್ನು ಸರಿದೂಗಿಸಲು ಮಾಡಲಾದ 'ಟ್ರೂ ಅಪ್' (True up Charges) ಪ್ರಕ್ರಿಯೆಯಾಗಿದೆ. 2024-25ರ ಹಣಕಾಸು ವರ್ಷದಲ್ಲಿ ಬೆಸ್ಕಾಂ ಒಟ್ಟು 34,087.94 ಕೋಟಿ ರೂಪಾಯಿ ಆದಾಯವನ್ನು ನಿರೀಕ್ಷಿಸಿತ್ತು. ಆದರೆ, ವಾಸ್ತವದಲ್ಲಿ ವಿದ್ಯುತ್ ಮಾರಾಟದಿಂದ ಬಂದ ಆದಾಯ ಕೇವಲ 32,019.56 ಕೋಟಿ ರೂಪಾಯಿಗಳು ಮಾತ್ರ. ಇದರಿಂದಾಗಿ ಬೆಸ್ಕಾಂಗೆ ಬರೋಬ್ಬರಿ 2,068.38 ಕೋಟಿ ರೂಪಾಯಿಗಳ ಬೃಹತ್ ಆದಾಯದ ಕೊರತೆ ಉಂಟಾಗಿದೆ.&lt;/p&gt;&lt;p&gt;ಈ ಎರಡು ಸಾವಿರ ಕೋಟಿಗೂ ಅಧಿಕ ಮೊತ್ತದ ಕೊರತೆಯನ್ನು ತುಂಬಿಕೊಳ್ಳಲು ಎಸ್ಕಾಂಗಳು ದರ ಏರಿಕೆಯ ಪ್ರಸ್ತಾವನೆಯನ್ನು ಸಲ್ಲಿಸಿದ್ದವು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಕೆಇಆರ್ಸಿ, ಕೊರತೆಯನ್ನು ನೀಗಿಸಲು ಪ್ರತಿ ಯೂನಿಟ್&zwnj;ಗೆ 56 ಪೈಸೆಯಂತೆ ಗ್ರಾಹಕರಿಂದ ವಸೂಲಿ ಮಾಡಲು ಅನುಮತಿ ನೀಡಿದೆ.&lt;/p&gt;&lt;h2&gt;&lt;strong&gt;ಯಾವಾಗಿನಿಂದ ಜಾರಿಗೆ ಬರಲಿದೆ?&lt;/strong&gt;&lt;/h2&gt;&lt;p&gt;ಕೆಇಆರ್&zwnj;ಸಿಯ ಈ ಆದೇಶವು ಏಪ್ರಿಲ್ 17, 2026 ರಂದು ಹೊರಬಿದ್ದಿದ್ದು, ಪರಿಷ್ಕೃತ ದರವು 2026 ರ ಮೇ 1 ರಿಂದ ಜಾರಿಗೆ ಬರಲಿದೆ. ಅಂದರೆ, ಮೇ ತಿಂಗಳಿನಲ್ಲಿ ಬರುವ ವಿದ್ಯುತ್ ಬಿಲ್&zwnj;ಗಳಲ್ಲಿ ಗ್ರಾಹಕರು ಈ ಹೆಚ್ಚುವರಿ 56 ಪೈಸೆ 'ಟ್ರೂ ಅಪ್' ದರವನ್ನು ಪಾವತಿಸಬೇಕಾಗುತ್ತದೆ. ಈ ವಸೂಲಾತಿಯು 2026-27ರ ಇಡೀ ಆರ್ಥಿಕ ವರ್ಷದಲ್ಲಿ ಅನ್ವಯವಾಗಲಿದ್ದು, ಏಪ್ರಿಲ್ 30, 2027 ರವರೆಗೆ ಮುಂದುವರಿಯಲಿದೆ.&lt;/p&gt;&lt;h3&gt;&lt;strong&gt;ಗ್ರಾಹಕರ ಮೇಲೆ ಬೀರುವ ಪ್ರಭಾವ:&lt;/strong&gt;&lt;/h3&gt;&lt;p&gt;ಗೃಹಬಳಕೆದಾರರು ಮಾತ್ರವಲ್ಲದೆ ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶದ ವಿದ್ಯುತ್ ಗ್ರಾಹಕರಿಗೂ ಈ ಏರಿಕೆ ಅನ್ವಯವಾಗಲಿದೆ. ಉದಾಹರಣೆಗೆ, ಒಂದು ಮನೆ ತಿಂಗಳಿಗೆ 200 ಯೂನಿಟ್ ವಿದ್ಯುತ್ ಬಳಸಿದರೆ, ಆ ಮನೆಯ ಬಿಲ್&zwnj;ನಲ್ಲಿ ಕನಿಷ್ಠ 112 ರೂಪಾಯಿಗಳಷ್ಟು ಹೆಚ್ಚುವರಿ ಮೊತ್ತ ಸೇರ್ಪಡೆಯಾಗಲಿದೆ. ಬೃಹತ್ ಪ್ರಮಾಣದಲ್ಲಿ ವಿದ್ಯುತ್ ಬಳಸುವ ಕೈಗಾರಿಕೆಗಳಿಗೆ ಈ ದರ ಏರಿಕೆ ದೊಡ್ಡ ಹೊರೆಯಾಗಿ ಪರಿಣಮಿಸಲಿದೆ.&lt;/p&gt;&lt;h2&gt;&lt;strong&gt;ಆದೇಶದ ಮುಖ್ಯಾಂಶಗಳು:&lt;/strong&gt;&lt;/h2&gt;&lt;ul&gt; &lt;li&gt;&lt;strong&gt;56 ಪೈಸೆ ಹೆಚ್ಚಳ: &lt;/strong&gt;ಪ್ರತಿ ಯೂನಿಟ್&zwnj;ಗೆ 56 ಪೈಸೆ ಟ್ರೂ ಅಪ್ ಚಾರ್ಜ್ ಸಂಗ್ರಹ.&lt;/li&gt; &lt;li&gt;&lt;strong&gt;ಮೇ 2026 ರಿಂದ ಜಾರಿ: &lt;/strong&gt;ಮೇ 1 ರಿಂದ ಪಡೆಯುವ ಮೀಟರ್ ರೀಡಿಂಗ್&zwnj;ಗಳಲ್ಲಿ ದರ ಅನ್ವಯ.&lt;/li&gt; &lt;li&gt;&lt;strong&gt;ಕೊರತೆ ನೀಗಿಸುವ ಗುರಿ:&lt;/strong&gt; 2,068.38 ಕೋಟಿ ರೂ.ಗಳ ಕಂದಾಯ ಕೊರತೆ ತುಂಬಿಕೊಳ್ಳಲು ಕ್ರಮ.&lt;/li&gt; &lt;li&gt;&lt;strong&gt;ಪ್ರತ್ಯೇಕ ಲೆಕ್ಕಾಚಾರ: &lt;/strong&gt;ವಸೂಲಿ ಮಾಡುವ ಮೊತ್ತದ ಬಗ್ಗೆ ಬೆಸ್ಕಾಂ ಪ್ರತ್ಯೇಕ ಲೆಕ್ಕಪತ್ರವನ್ನು ನಿರ್ವಹಿಸಬೇಕೆಂದು ಕೆಇಆರ್ಸಿ ಸೂಚಿಸಿದೆ.&lt;/li&gt;&lt;/ul&gt;&lt;p&gt;ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಈ ವಿದ್ಯುತ್ ದರ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-govt-kerc-electricity-tariff-hike-all-escom-s-56-paise-per-unit-from-may-2026-sat/articleshow-szs4nly"/>
        </item>
        <item>
            <title><![CDATA[ವಿನಯ್ ಕುಲಕರ್ಣಿ ಶಿಕ್ಷೆ ಹಿಂದಿದೆ ಬಿಜೆಪಿ 'ಒಳಸಂಚು': ನನಗೂ ಹೀಗೆಯೇ ಕಿರುಕುಳ ಕೊಟ್ಟಿದ್ದರು! ಡಿಕೆಶಿ ಸ್ಫೋಟಕ ಹೇಳಿಕೆ]]></title>
            <link>https://kannada.asianetnews.com/state/dk-shivakumar-reaction-on-vinay-kulkarni-life-imprisonment-bjp-conspiracy-allegation-sat/articleshow-x0trr11</link>
            <guid isPermaLink="true">https://kannada.asianetnews.com/state/dk-shivakumar-reaction-on-vinay-kulkarni-life-imprisonment-bjp-conspiracy-allegation-sat/articleshow-x0trr11</guid>
            <pubDate>Fri, 17 Apr 2026 18:32:04 +0530</pubDate>
            <description><![CDATA[&lt;p&gt;ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ವಿಧಿಸಲಾದ ಜೀವಾವಧಿ ಶಿಕ್ಷೆಯು ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕುಲಕರ್ಣಿಯವರ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಅವರನ್ನು ಸಿಲುಕಿಸಲಾಗಿದೆ ಎಂದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdr9z7v0em636q8kj0wtycz,imgname-dk-shivakumar-about-vinay-kulkarni-in-jail-1776430677243.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನವದೆಹಲಿ (ಏ.17): ಧಾ&lt;/strong&gt;ರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯ ಬಗ್ಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ವಿನಯ್ ಕುಲಕರ್ಣಿ ವಿರುದ್ಧದ ಈ ತೀರ್ಪಿನ ಹಿಂದೆ ರಾಜಕೀಯ ಪಿತೂರಿ ಇದೆ' ಎಂದು ನೇರವಾಗಿ ಬಿಜೆಪಿಯತ್ತ ಬೆರಳು ತೋರಿಸಿದ್ದಾರೆ.&lt;/p&gt;&lt;h3&gt;&lt;strong&gt;ಇದು ಬಿಜೆಪಿಯ ರಾಜಕೀಯ ಒಳಸಂಚು:&lt;/strong&gt;&lt;/h3&gt;&lt;p&gt;'ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಆದರೆ ಈ ಇಡೀ ಪ್ರಕರಣದ ತನಿಖೆ ನಡೆದ ಹಾದಿಯಲ್ಲಿ ದೊಡ್ಡ ಒಳಸಂಚು ಅಡಗಿದೆ. ಬಿ-ರಿಪೋರ್ಟ್ ಸಲ್ಲಿಕೆಯಾಗುವ ಹಂತದಲ್ಲಿದ್ದ ಪ್ರಕರಣವನ್ನು ಮತ್ತೆ ಕೆದಕಿ ಅವರನ್ನು ಸಿಲುಕಿಸಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ವಿನಯ್ ಕುಲಕರ್ಣಿ ಅವರು ದೊಡ್ಡ ಶಕ್ತಿಯಾಗಿ ಬೆಳೆಯುತ್ತಿದ್ದರು. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿ ನಾಯಕರು, ಅವರನ್ನು ರಾಜಕೀಯವಾಗಿ ಮುಗಿಸಲು ಈ ಸಂಚು ರೂಪಿಸಿದ್ದಾರೆ' ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದರು.&lt;/p&gt;&lt;h2&gt;&lt;strong&gt;ನನಗೂ ಕಿರುಕುಳ ನೀಡಿದ್ದರು:&lt;/strong&gt;&lt;/h2&gt;&lt;p&gt;ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡ ಡಿಕೆಶಿ, 'ನನಗೂ ಇದೇ ರೀತಿ ಕಿರುಕುಳ ನೀಡಲಾಗಿತ್ತು. ನಾನು ಜೈಲಿಗೆ ಹೋಗಿ ಬಂದೆ, ಆದರೆ ಅಂತಿಮವಾಗಿ ಸುಪ್ರೀಂಕೋರ್ಟ್&zwnj;ನಲ್ಲಿ ನನಗೆ ನ್ಯಾಯ ಸಿಕ್ಕಿತು. ವಿನಯ್ ಕುಲಕರ್ಣಿ ಅವರ ಕುಟುಂಬದ ಜೊತೆ ನಾನು ಮಾತನಾಡಿದ್ದೇನೆ. ಅವರು ತಪ್ಪು ಮಾಡಿಲ್ಲ ಎಂಬ ವಿಶ್ವಾಸ ನನಗಿದೆ. ಕಾನೂನಿನಲ್ಲಿ ಇನ್ನು ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ, ಅವರನ್ನು ನಂಬಿದ ದೇವರು ಕೈಬಿಡುವುದಿಲ್ಲ' ಎಂದು ಧೈರ್ಯ ತುಂಬಿದರು.&lt;/p&gt;&lt;h2&gt;&lt;strong&gt;ಸಚಿವ ಸ್ಥಾನ ಮತ್ತು ಜಮೀರ್ ರಾಜೀನಾಮೆ:&lt;/strong&gt;&lt;/h2&gt;&lt;p&gt;ರಾಜ್ಯ ಕಾಂಗ್ರೆಸ್&zwnj;ನಲ್ಲಿ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಒತ್ತಡ ಹೇರುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, 'ಅದೆಲ್ಲವೂ ಹಿರಿಯ ಶಾಸಕರಿಗೆ ಬಿಟ್ಟಿದ್ದು. ನಮ್ಮಲ್ಲಿ ಸಿದ್ದರಾಮಯ್ಯ ತಂಡ ಅಥವಾ ಡಿ.ಕೆ. ಶಿವಕುಮಾರ್ ತಂಡ ಎಂಬ ಭೇದವಿಲ್ಲ. ದೆಹಲಿಗೆ ಬರುವ ವಿಚಾರದ ಬಗ್ಗೆ ಮುಖ್ಯಮಂತ್ರಿಗಳೇ ಉತ್ತರಿಸುತ್ತಾರೆ' ಎಂದರು. ಇನ್ನು ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದ ಡಿಕೆಶಿ, 'ಈ ಬಗ್ಗೆ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಪತ್ರಿಕೆಗಳಲ್ಲಿ ಬಂದ ಸುದ್ದಿ ಬಗ್ಗೆ ನನಗೆ ಗೊತ್ತಿಲ್ಲ' ಎಂದು ಸ್ಪಷ್ಟಪಡಿಸಿದರು.&lt;/p&gt;&lt;h3&gt;&lt;strong&gt;ಮುಸ್ಲಿಂ ನಾಯಕರು ಟಾರ್ಗೆಟ್ ಆಗಿಲ್ಲ:&lt;/strong&gt;&lt;/h3&gt;&lt;p&gt;ಅಲ್ಪಸಂಖ್ಯಾತ ನಾಯಕರನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, 'ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ನೀಡಿದಷ್ಟು ಬೆಂಬಲವನ್ನು ಬೇರೆ ಯಾರೂ ನೀಡಿಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರವು ಕೇವಲ ಅಲ್ಪಸಂಖ್ಯಾತರ ಸೀಟು ಅಲ್ಲ, ಅಲ್ಲಿ ಶಾಮನೂರು ಶಿವಶಂಕರಪ್ಪ ಅವರು ದಶಕಗಳಿಂದ ಕ್ಷೇತ್ರವನ್ನು ಉಳಿಸಿಕೊಂಡು ಬಂದಿದ್ದಾರೆ. ಟಿಕೆಟ್ ಹಂಚಿಕೆ ಕೆಲವು ವರದಿಗಳ ಆಧಾರದ ಮೇಲೆ ನಡೆದಿದೆ. ಯಾರನ್ನೂ ನಾವು ಟಾರ್ಗೆಟ್ ಮಾಡುತ್ತಿಲ್ಲ' ಎಂದು ಸಮರ್ಥಿಸಿಕೊಂಡರು.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/dk-shivakumar-reaction-on-vinay-kulkarni-life-imprisonment-bjp-conspiracy-allegation-sat/articleshow-x0trr11"/>
        </item>
        <item>
            <title><![CDATA[ವಿನಯ್‌ ಕುಲಕರ್ಣಿಗೆ ಜೀವಾವಧಿ: ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು]]></title>
            <link>https://kannada.asianetnews.com/state/bs-yediyurappa-reacts-to-vinay-kulkarni-life-sentence-emotional-statement-in-chikkamagaluru-gdp/articleshow-15e2arw</link>
            <guid isPermaLink="true">https://kannada.asianetnews.com/state/bs-yediyurappa-reacts-to-vinay-kulkarni-life-sentence-emotional-statement-in-chikkamagaluru-gdp/articleshow-15e2arw</guid>
            <pubDate>Fri, 17 Apr 2026 18:19:23 +0530</pubDate>
            <description><![CDATA[ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹಿಂದೆ ತಾನು ಹೇಳಿದ್ದೇ ಇಂದು ಸತ್ಯವಾಗಿದೆ ಎಂದಿದ್ದಾರೆ. 2019ರಲ್ಲಿ ತಾವೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿತ್ತು ಎಂದು ಅವರು ಸ್ಮರಿಸಿಕೊಂಡರು.]]></description>
            <media:content url="https://static.asianetnews.com/images/w-1280,h-720,format-jpg,imgid-01kpdqh461n7b0sf06fd06jsxx,imgname-bs-yediyurappa-1776429863104.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.17): &lt;/strong&gt;ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆಜಾದ್ ಪಾರ್ಕ್ ವೃತ್ತದಲ್ಲಿ ಮಾತನಾಡಿದ ಅವರು, ಈ ಘಟನೆ ಬಗ್ಗೆ ಏನು ಹೇಳಬೇಕು ಎನ್ನುವುದು ನನಗೆ ತೋಚುತ್ತಿಲ್ಲ. ಆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ. ಈ ರೀತಿಯ ಘಟನೆ ನಡೆಯಬಾರದಿತ್ತು, ಆದರೆ ನಡೆದಿದ್ದು ದುಃಖಕರ. ಅಪರಾಧ ನಡೆದ ಸಂದರ್ಭದಲ್ಲಿ ನಾನು ಹೇಳಬೇಕಿದ್ದನ್ನು ಆಗಲೇ ಹೇಳಿದ್ದೆ. ಇಂದು ನಾನು ಹೇಳಿದ್ದೇ ಸತ್ಯ ಎಂಬಂತೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.&lt;/p&gt;&lt;h2&gt;ಬಿಎಸ್&zwnj;ವೈಗೆ &amp;nbsp;ಜೈಕಾರ ಹಾಕಲು ಕಾರಣ&lt;/h2&gt;&lt;p&gt;2016ರಲ್ಲಿ ಯೋಗೇಶ್ ಗೌಡ ಕೊಲೆ ನಡೆದಾಗ ಇಂದಿನ ಸಿಎಂ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿತ್ತು. ಸಿಬಿಐಗೆ ನೀಡಬೇಕೆಂದು ಯೋಗೇಶ್ ಗೌಡ ಕುಟುಂಬ ಒತ್ತಾಯಿಸಿದ್ರು. ಆದರೆ ಆಗ ಕೇಸ್ ಬಗ್ಗೆ ಯಾವ ಬೆಳವಣಿಗೆಯೂ ನಡೆಯಲಿಲ್ಲ. ಆದರೆ ಮೈತ್ರಿ ಸರ್ಕಾರ ಇದ್ದಾಗ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಈ ಕೇಸ್ ಅನ್ನು 2019ರಲ್ಲಿ ಸಿಬಿಐಗೆ ವಹಿಸಿದರು. ಅಲ್ಲಿಂದ ಈ ಪ್ರಕರಣಕ್ಕೆ ಟರ್ನಿಂಗ್ ಪಾಯಿಂಟ್ ಸಿಕ್ಕಿತು.&lt;/p&gt;&lt;h2&gt;ಘೋಷಣೆ ವೇಳೆ ಗೊಂದಲ&lt;/h2&gt;&lt;p&gt;ಇದಕ್ಕೂ ಮೊದಲು ಚಿಕ್ಕಮಗಳೂರಿಗೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸುವ ವೇಳೆ ಒಂದು ವಿಚಿತ್ರ ಘಟನೆ ಗಮನಸೆಳೆಯಿತು. ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ವೇಳೆ ಗೊಂದಲ ಉಂಟಾಗಿ, ಕೆಲವರು ತಪ್ಪಾಗಿ ಯಡಿಯೂರಪ್ಪ ವಿರುದ್ಧವೇ ಘೋಷಣೆ ಕೂಗಲು ಮುಂದಾದರು. ವಿನಯ್ ಕುಲಕರ್ಣಿಯನ್ನು ಜೈಲಿಗೆ ಕಳುಹಿಸಿದ ಯಡಿಯೂರಪ್ಪನವರಿಗೆ ಜೈ ಎಂದು ಘೋಷಣೆ ಕೂಗುವ ವೇಳೆ, ಕೆಲವರು ತಪ್ಪಾಗಿ ವಿರೋಧದ ಘೋಷಣೆ ಕೂಗಿದಂತಾಗಿದೆ. ನಂತರ ತಕ್ಷಣವೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕಾರ್ಯಕರ್ತರು ತಮ್ಮ ಘೋಷಣೆಯನ್ನು ನಿಲ್ಲಿಸಿದರು. ಈ ಘಟನೆ ಸ್ಥಳದಲ್ಲಿದ್ದವರ ಗಮನಸೆಳೆಯಿತು.&lt;/p&gt;&lt;h2&gt;ಚಿಕ್ಕಮಗಳೂರಿನಲ್ಲಿ ಬಿ.ಎಸ್.ವೈ. ವಾಸ್ತವ್ಯ&lt;/h2&gt;&lt;p&gt;ಬಿ.ಎಸ್. ಯಡಿಯೂರಪ್ಪ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದು, ನಾಳೆ ಲಿಂಗಾಯಿತ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೈತ್ರಾದೇವಿ-ಯಡಿಯೂರಪ್ಪ ವೀರಶೈವ ಲಿಂಗಾಯಿತ ಸಮುದಾಯ ಭವನವು ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ ಈ ಭವನ ನಿರ್ಮಾಣವಾಗಿದೆ. ಕಾರ್ಯಕ್ರಮದ ಬಳಿಕ ಅವರು ನಾಳೆ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/bs-yediyurappa-reacts-to-vinay-kulkarni-life-sentence-emotional-statement-in-chikkamagaluru-gdp/articleshow-15e2arw"/>
        </item>
        <item>
            <title><![CDATA[ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ]]></title>
            <link>https://kannada.asianetnews.com/gallery/state/lorry-carrying-illegal-ration-rice-overturns-tons-of-rice-fall-onto-the-road-xhaxfaf</link>
            <guid isPermaLink="true">https://kannada.asianetnews.com/gallery/state/lorry-carrying-illegal-ration-rice-overturns-tons-of-rice-fall-onto-the-road-xhaxfaf</guid>
            <pubDate>Fri, 17 Apr 2026 17:42:32 +0530</pubDate>
            <description><![CDATA[&lt;p&gt;ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್&zwnj;ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdn7wjmvgmmraeh9tq69550,imgname-ration-lorry-overturn--4--1776427463252.jpg" type="image/jpeg" height="390" width="690"/>
            <content:encoded><![CDATA[&lt;p&gt;ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್&zwnj;ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.&lt;/p&gt;&lt;img&gt;&lt;p&gt;ಬೀದರ್: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಈ ಲಾರಿ ಹೋಗುತ್ತಿತ್ತು.&lt;/p&gt;&lt;img&gt;&lt;p&gt;ಬೀದರ್ ನಗರದ ಝರಣಿ ನರಸಿಂಹ ದೇವಸ್ಥಾನದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ನೂರು ಟನ್&zwnj;ಗೂ ಅಧಿಕ&zwnj; ಪಡಿತರ ಅಕ್ಕಿ ಇರೋ ಬಗ್ಗೆ ಮಾಹಿತಿ ಇದೆ.&lt;/p&gt;&lt;img&gt;&lt;p&gt;ಕಾರು ಹಾಗೂ ಟಾಟಾ ಮ್ಯಾಜಿಕ್&zwnj;ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಅಕ್ಕಿ ತುಂಬಿದ ಈ ಟ್ರಕ್ ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಬೀದರ್&zwnj;ನ ರಿಂಗ್ ರೋಡ್&zwnj; ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ 6 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.&lt;/p&gt;&lt;img&gt;&lt;p&gt;ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಭಾಗ್ಯದ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದಿರಬಹುದು ಎಂಬ ಶಂಕೆ ಮೂಡಿದ್ದು, ಅಪಘಾತದ ನಂತರ ಲಾರಿ ಮಗುಚಿ ಬಿದ್ದಿದ್ದರಿಂದ ರಸ್ತೆ ತುಂಬಾ ಅಕ್ಕಿ ಚೆಲ್ಲಿದೆ.&lt;/p&gt;]]></content:encoded>
            <category>state</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/lorry-carrying-illegal-ration-rice-overturns-tons-of-rice-fall-onto-the-road-xhaxfaf"/>
        </item>
        <item>
            <title><![CDATA[ಯೋಗೇಶ್ ಗೌಡ ಕೊಂದ 16 ಮಂದಿಗೆ ಜೀವಾವಧಿ, ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು? ಜೀವಾವಧಿ ಶಿಕ್ಷೆ ಎಂದರೇನು?]]></title>
            <link>https://kannada.asianetnews.com/state/what-is-mean-by-life-sentence-vinay-kulkarni-and-others-gets-life-sentence-in-dharwad-yogesh-gowda-murder-case-gdp/articleshow-gsupd69</link>
            <guid isPermaLink="true">https://kannada.asianetnews.com/state/what-is-mean-by-life-sentence-vinay-kulkarni-and-others-gets-life-sentence-in-dharwad-yogesh-gowda-murder-case-gdp/articleshow-gsupd69</guid>
            <pubDate>Fri, 17 Apr 2026 17:30:11 +0530</pubDate>
            <description><![CDATA[ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸುಮಾರು 10 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಪು ಹೊರಬಿದ್ದಿದ್ದು, ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್&zwnj;ಪೆಕ್ಟರ್&zwnj;ಗೆ 7 ವರ್ಷಗಳ ಜೈಲು ಶಿಕ್ಷೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd0c4911kmv10hee03q82wy,imgname-vinay-kulkarni-1776405582113.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದೆ. ಜೊತೆಗೆ ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷದಂತೆ ಒಟ್ಟು ₹16 ಲಕ್ಷ ದಂಡ ವಿಧಿಸಲಾಗಿದ್ದು, ಈ ಮೊತ್ತವನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಹಾಗೂ ಅವರ ಸಹೋದರ ಗುರುನಾಥ್ ಗೌಡ ಅವರಿಗೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಇನ್ಸ್&zwnj;ಪೆಕ್ಟರ್ ಚನ್ನಕೇಶವ ಟಿಂಗರೀಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಲಾಗಿದೆ.&lt;/p&gt;&lt;h2&gt;ಜೀವಾವಧಿ ಶಿಕ್ಷೆ ಎಂದರೆ ಏನು?&lt;/h2&gt;&lt;p&gt;ಜೀವಾವಧಿ ಶಿಕ್ಷೆ ಎಂದರೆ ಅಪರಾಧಿಯು ತನ್ನ ನೈಸರ್ಗಿಕ ಜೀವಿತಾವಧಿಯ ಅಂತ್ಯದವರೆಗೆ ಜೈಲಿನಲ್ಲಿ ಇರಬೇಕಾದ ಶಿಕ್ಷೆಯಾಗಿದೆ. ಇದು ಕೇವಲ 14 ಅಥವಾ 20 ವರ್ಷಗಳ ಶಿಕ್ಷೆಯಲ್ಲ. ವ್ಯಕ್ತಿ ಜೀವಿಸುವವರೆಗೂ ಜೈಲಿನಲ್ಲೇ ಇರಬೇಕಾಗುತ್ತದೆ. ಕೆಲವು ವಿಶೇಷ ಸಂದರ್ಭಗಳಲ್ಲಿ, ಸರ್ಕಾರ ಸನ್ನಡತೆ ಆಧಾರವಾಗಿ ಶಿಕ್ಷೆಯನ್ನು ಕಡಿಮೆ ಮಾಡಬಹುದು ಅಥವಾ ಪೆರೋಲ್ ನೀಡಬಹುದು. ಆದರೆ ಇದು ಕಡ್ಡಾಯವಲ್ಲ. ಸಾಮಾನ್ಯವಾಗಿ ಕೊಲೆ, ಭಯೋತ್ಪಾದನೆ, ಲೈಂಗಿಕ ದೌರ್ಜನ್ಯ ಹಾಗೂ ರಾಷ್ಟ್ರದ್ರೋಹದಂತಹ ಗಂಭೀರ ಅಪರಾಧಗಳಿಗೆ ಈ ಶಿಕ್ಷೆ ವಿಧಿಸಲಾಗುತ್ತದೆ.&lt;/p&gt;&lt;h2&gt;ಅಪರಾಧಿಗಳ ಮುಂದಿರುವ ಆಯ್ಕೆಗಳೇನು?&lt;/h2&gt;&lt;p&gt;ಜೀವಾವಧಿ ಶಿಕ್ಷೆಗೆ ಒಳಗಾಗಿರುವ 16 ಅಪರಾಧಿಗಳು ಮತ್ತು 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ A19 ಅಪರಾಧಿಗೆ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೆಟ್ಟಲೇರುವ ಅವಕಾಶವಿದ್ದು, ಅದಾಗಲೇ ಅಪರಾಧಿಗಳ ವಕೀಲರು ಈ ಬಗ್ಗೆ ಮುಂದಿನ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;ದೀರ್ಘಕಾಲದ ವಿಚಾರಣೆಗೆ ತೆರೆ&lt;/h2&gt;&lt;p&gt;2016ರ ಜೂನ್&zwnj;ನಲ್ಲಿ ನಡೆದ ಈ ಹತ್ಯೆ ಪ್ರಕರಣವು ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆಗೆ ಒಳಪಟ್ಟಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, 17 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಜತೆಗೆ ಸಿಬಿಐ ಅಧಿಕಾರಿಗಳ ತನಿಖೆಯನ್ನು ಅಭಿನಂದಿಸಿದರು.&lt;/p&gt;&lt;h2&gt;ಶಿಕ್ಷೆಗೆ ಗುರಿಯಾದ ಪ್ರಮುಖ ಆರೋಪಿಗಳು&lt;/h2&gt;&lt;p&gt;ವಿನಯ್ ಕುಲಕರ್ಣಿ (A15) ಸೇರಿದಂತೆ ವಿಕ್ರಂ ಬಳ್ಳಾರಿ, ಕೀರ್ತಿ ಕುಮಾರ್, ಸಂದೀಪ್, ವಿನಾಯಕ, ಮಹಾಬಲೇಶ್ವರ, ಸಂತೋಷ್, ದಿನೇಶ್, ಅಶ್ವತ್ಥ್, ಸುನೀಲ್, ನಜೀರ್ ಅಹ್ಮದ್, ಶಹನವಾಜ್, ನೂತನ್, ಹರ್ಷಿತ್, ಚಂದ್ರಶೇಖರ್ ಇಂಡಿ ಮತ್ತು ವಿಕಾಸ್ ಕಲಬುರಗಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. A19 ಅಪರಾಧಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ. A1 ಬಸವರಾಜ್ ಮುತ್ತಗಿ ಮತ್ತು A17 ಶಿವಾನಂದ್ ಶ್ರೀಶೈಲ ಬಿರಾದರ್ ಅವರನ್ನು ಮಾಫಿ ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.&lt;/p&gt;&lt;h2&gt;ಯಾವ ಸೆಕ್ಷನ್ ಅಡಿಯಲ್ಲಿ ಶಿಕ್ಷೆ?&lt;/h2&gt;&lt;p&gt;ನ್ಯಾಯಾಲಯವು ಆರೋಪಿಗಳಿಗೆ ವಿವಿಧ ಭಾರತೀಯ ದಂಡ ಸಂಹಿತೆ (IPC) ವಿಧಿಗಳಡಿ ಶಿಕ್ಷೆ ವಿಧಿಸಿದೆ:&lt;/p&gt;&lt;p&gt;ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ&lt;/p&gt;&lt;p&gt;ಕಲಂ 120(B) (ಅಪರಾಧಿಕ ಸಂಚು): ಜೀವಾವಧಿ ಶಿಕ್ಷೆ&lt;/p&gt;&lt;p&gt;ಕಲಂ 201 (ಸಾಕ್ಷ್ಯ ನಾಶ): 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ&lt;/p&gt;&lt;p&gt;ಕಲಂ 143, 147, 148, 149 (ಅಕ್ರಮ ಕೂಟ, ಗಲಭೆ, ಆಯುಧಗಳಿಂದ ದಾಳಿ): 3 ವರ್ಷಗಳವರೆಗೆ ಶಿಕ್ಷೆ&lt;/p&gt;&lt;p&gt;ಚನ್ನಕೇಶವ ಟಿಂಗರೀಕರ್ (A19) ವಿರುದ್ಧ ಕಲಂ 218 ಅಡಿಯಲ್ಲಿ, ತಪ್ಪು ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಸಾಬೀತಾಗಿ ಶಿಕ್ಷೆ ವಿಧಿಸಲಾಗಿದೆ.&lt;/p&gt;&lt;h2&gt;ಯಾವ ಸೆಕ್ಷನ್&zwnj; ಯಾರ ಮೇಲೆ?&lt;/h2&gt;&lt;p&gt;ಪ್ರಕರಣದ 2 ರಿಂದ 16 ಮತ್ತು 18ನೇ ಆರೋಪಿಗಳು ಭಾರತೀಯ ದಂಡ ಸಂಹಿತೆ 302 (ಕೊಲೆ) ಆರೋಪದಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿ ಶಿಕ್ಷೆಗೊಳಗಾಗಿದ್ದಾರೆ. (ಯಾರೆಲ್ಲ A2 - ವಿಕ್ರಂ ಬಳ್ಳಾರಿ, A3 - ಕೀರ್ತಿ ಕುಮಾರ್​, A4 - ಸಂದೀಪ್​, A5 - ವಿನಾಯಕ್, ​​A6 - ಮಹಾಬಲೇಶ್ವರ, A7 - ಸಂತೋಷ್, A8 - ದಿನೇಶ್​​, A9 - ಅಶ್ವಥ್​​, A10 - ಸುನೀಲ್​​ ಕೆ.ಎಸ್​, A11 - ನಜರ್ ಅಹಮದ್​, A12 - ಶಹನವಾಜ್​​, A13 - ನೂತನ್, ​​A14 - ಹರ್ಷಿತ್, ​​A15 - ವಿನಯ್ ಕುಲಕರ್ಣಿ, A16 - ಚಂದ್ರಶೇಖರ್​ ಇಂಡಿ ಮತ್ತು ​A18 - ವಿಕಾಸ್​​ ಕಲಬುರ್ಗಿ )&lt;/p&gt;&lt;p&gt;ಹಾಗೆಯೇ 2 ರಿಂದ 16 ಮತ್ತು 18 ಹಾಗೂ 19ನೇ ಆರೋಪಿಗಳು 120 (ಬಿ) (ಅಪರಾಧಿಕ ಒಳ ಸಂಚು) ರೂಪಿಸಿದ್ದಾರೆ ಮತ್ತು ಮತ್ತು 201 (ಸಾಕ್ಷ್ಯ ನಾಶ ಪಡಿಸಿದ್ದಾರೆ. (ಯಾರೆಲ್ಲ A2 - ವಿಕ್ರಂ ಬಳ್ಳಾರಿ, A3 - ಕೀರ್ತಿ ಕುಮಾರ್​, A4 - ಸಂದೀಪ್​, A5 - ವಿನಾಯಕ್, ​​A6 - ಮಹಾಬಲೇಶ್ವರ, A7 - ಸಂತೋಷ್, A8 - ದಿನೇಶ್​​, A9 - ಅಶ್ವಥ್​​, A10 - ಸುನೀಲ್​​ ಕೆ.ಎಸ್​, A11 - ನಜರ್ ಅಹಮದ್​, A12 - ಶಹನವಾಜ್​​, A13 - ನೂತನ್, ​​A14 - ಹರ್ಷಿತ್, ​​A15 - ವಿನಯ್ ಕುಲಕರ್ಣಿ, A16 - ಚಂದ್ರಶೇಖರ್​ ಇಂಡಿ ಮತ್ತು ​A18 - ವಿಕಾಸ್​​ ಕಲಬುರ್ಗಿ ಮತ್ತು A19 - ಚೆನ್ನಕೇಶವ ಟಿಂಗರಿಕರ್).&lt;/p&gt;&lt;p&gt;ಇನ್ನು ಆರೋಪಿ 2 ರಿಂದ 14 ಮತ್ತು 18ನೇ ಆರೋಪಿಗಳು 143, 149 (ಅಕ್ರಮ ಕೂಟ), 147 (ಗಲಭೆ), 148 (ಆಯುಧಗಳಿಂದ ಕೃತ್ಯ) ಎಸಗಿದ್ದಾರೆ. ( ಯಾರೆಲ್ಲ A2 - ವಿಕ್ರಂ ಬಳ್ಳಾರಿ, A3 - ಕೀರ್ತಿ ಕುಮಾರ್​, A4 - ಸಂದೀಪ್​, A5 - ವಿನಾಯಕ್, ​​A6 - ಮಹಾಬಲೇಶ್ವರ, A7 - ಸಂತೋಷ್, A8 - ದಿನೇಶ್​​, A9 - ಅಶ್ವಥ್​​, A10 - ಸುನೀಲ್​​ ಕೆ.ಎಸ್​, A11 - ನಜರ್ ಅಹಮದ್​, A12 - ಶಹನವಾಜ್​​, A13 - ನೂತನ್, ​​A14 - ಹರ್ಷಿತ್ ಮತ್ತು ​A18 - ವಿಕಾಸ್​​ ಕಲಬುರ್ಗಿ)&lt;/p&gt;&lt;p&gt;19ನೇ ಆರೋಪಿ 218 ಅಡಿಯಲ್ಲಿ ಸಾರ್ವಜನಿಕ ಸೇವೆಯಲ್ಲಿದ್ದು ತಪ್ಪುದಾಖಲೆಗಳನ್ನು ಸೃಷ್ಟಿಸಿ ಆರೋಪಿಯನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ. (ಯಾರು A19 - ಚೆನ್ನಕೇಶವ ಟಿಂಗರಿಕರ್)&lt;/p&gt;&lt;h2&gt;ರಾಜಕೀಯ ಹಾಗೂ ಕಾನೂನು ಮಹತ್ವ&lt;/h2&gt;&lt;p&gt;ಯೋಗೇಶ್ ಗೌಡ ಹತ್ಯೆ ಪ್ರಕರಣದ ಈ ತೀರ್ಪು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ದೀರ್ಘಕಾಲದ ವಿಚಾರಣೆಯ ನಂತರ ಹೊರಬಿದ್ದ ಈ ತೀರ್ಪು, ರಾಜಕೀಯ ಪ್ರಭಾವದ ಪ್ರಕರಣಗಳಲ್ಲಿಯೂ ನ್ಯಾಯ ಸಿಗುತ್ತದೆ ಎಂಬುದಕ್ಕೆ ಉದಾಹರಣೆಯಾಗಿದೆ. &amp;nbsp;ಈ ಪ್ರಕರಣದ ತೀರ್ಪು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಕಾದು ನೋಡಬೇಕಾಗಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/what-is-mean-by-life-sentence-vinay-kulkarni-and-others-gets-life-sentence-in-dharwad-yogesh-gowda-murder-case-gdp/articleshow-gsupd69"/>
        </item>
        <item>
            <title><![CDATA[ಉಟ್ಟ ಬಟ್ಟೆಯಲ್ಲಿ 3 ದಿನ ಕಳೆದ ವಿನಯ್ ಕುಲಕರ್ಣಿ & ಗ್ಯಾಂಗ್; ಬಟ್ಟೆ ಬದಲಿಸಲು ಅನುಮತಿ ಕೇಳಿ ಕಣ್ಣೀರಿಟ್ಟ ಕೊಲೆಗಾರರು!]]></title>
            <link>https://kannada.asianetnews.com/state/vinay-kulkarni-sentenced-to-life-imprisonment-yogesh-gowda-murder-case-final-verdict-clothes-change-request-sat/articleshow-bbcpm8b</link>
            <guid isPermaLink="true">https://kannada.asianetnews.com/state/vinay-kulkarni-sentenced-to-life-imprisonment-yogesh-gowda-murder-case-final-verdict-clothes-change-request-sat/articleshow-bbcpm8b</guid>
            <pubDate>Fri, 17 Apr 2026 17:07:56 +0530</pubDate>
            <description><![CDATA[&lt;p&gt;ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಅಂತಿಮ ತೀರ್ಪು ನೀಡುವುದಕ್ಕೆ ಮೂರು ದಿನಗಳ ಕಾಲ ಕೋರ್ಟ್ ವಿಚಾರಣೆ ನಡೆಸಿ, ಇಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ ಅಪರಾಧಿಗಳು ಬಟ್ಟೆ ಬದಲಿಸಿ 3 ದಿನಗಳಾಗಿದ್ದು, ಬಟ್ಟೆ ಬದಲಿಸಲು ಅವಕಾಶಕ್ಕೆ ಮನವಿ ಮಾಡಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdkegv1hjw084hcqkre1n9r,imgname-vinay-kulkarni-in-jail-1776425583457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): ಧಾ&lt;/strong&gt;ರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕೊನೆಗೂ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಜನರ ಗ್ಯಾಂಗ್&zwnj;ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ವೇಳೆ ಕಣ್ಣೀರಿಟ್ಟ ಎಲ್ಲ ಅಪರಾಧಿಗಳು ಕಳೆದ ಮೂರು ದಿನಗಳಿಂದ ಕೋರ್ಟ್ ವಿಚಾರಣೆಗೆ ಬಂದು ಒಂದೇ ಬಟ್ಟೆಯಲ್ಲಿದ್ದಾರೆ. ಅವರಿಗೆ ಬಟ್ಟೆಯನ್ನು ಬದಲಾವಣೆಗೆ ಅವಕಾಶ ಮಾಡಿಕೊಡಿ ಎಂದು ವಕೀಲರು ಮನವಿ ಮಾಡಿದ್ದಾರೆ.&lt;/p&gt;&lt;p&gt;ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯ ದೇವತೆ ಅಂತಿಮ ತೀರ್ಪು ನೀಡಿದ್ದಾಳೆ. ಪ್ರಭಾವಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಬೆನ್ನಲ್ಲೇ, ಈಗ ಅಪರಾಧಿಗಳು 3 ದಿನಗಳ ಕಾಲ ಜೈಲಿನಲ್ಲಿ ಕಳೆದ ಸ್ಥಿತಿ ಹೇಗಿತ್ತು ಎಂಬ ಕುತೂಹಲಕಾರಿ ಸಂಗತಿಯೊಂದು ಹೊರಬಿದ್ದಿದೆ.&lt;/p&gt;&lt;h2&gt;&lt;strong&gt;ಮೂರು ದಿನದಿಂದ ಒಂದೇ ಬಟ್ಟೆಯಲ್ಲಿ ಅಪರಾಧಿಗಳು!&lt;/strong&gt;&lt;/h2&gt;&lt;p&gt;ಪ್ರಕರಣದ ತೀರ್ಪು ಪ್ರಕಟವಾದ ದಿನದಿಂದಲೂ ಅಂದರೆ ಕಳೆದ ಮೂರು ದಿನಗಳಿಂದ ಅಪರಾಧಿಗಳು ಒಂದೇ ಬಟ್ಟೆಯಲ್ಲಿದ್ದಾರೆ ಎಂಬ ಅಂಶ ನ್ಯಾಯಾಲಯದ ಗಮನಕ್ಕೆ ಬಂದಿದೆ. ಏಪ್ರಿಲ್ 15 ರಂದು ನ್ಯಾಯಾಲಯವು ಇವರನ್ನು ದೋಷಿಗಳೆಂದು ಘೋಷಿಸಿ ವಶಕ್ಕೆ ಪಡೆದ ಕ್ಷಣದಿಂದಲೂ ಇವರು ಬಟ್ಟೆ ಬದಲಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಅಪರಾಧಿಗಳ ಪರ ವಕೀಲರು ನ್ಯಾಯಾಲಯಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ. 'ಅಪರಾಧಿಗಳು ಕಳೆದ ಮೂರು ದಿನಗಳಿಂದ ಒಂದೇ ಬಟ್ಟೆಯಲ್ಲಿದ್ದು, ಅವರಿಗೆ ಬಟ್ಟೆ ಬದಲಿಸಲು ಹಾಗೂ ಅಗತ್ಯ ವೈಯಕ್ತಿಕ ವಸ್ತುಗಳನ್ನು ಬಳಸಲು ಅವಕಾಶ ನೀಡಬೇಕು' ಎಂದು ಕೋರಿದರು. ಈ ಮನವಿಯನ್ನು ಆಲಿಸಿದ ನ್ಯಾಯಾಧೀಶರು, ಜೈಲು ಮ್ಯಾನುವಲ್ (Jail Manual) ಪ್ರಕಾರ ನಿಯಮಾನುಸಾರ ಬಟ್ಟೆ ಬದಲಾವಣೆಗೆ ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.&lt;/p&gt;&lt;h3&gt;&lt;strong&gt;ಶಿಕ್ಷೆಯ ವಿವರ ಮತ್ತು ದಂಡದ ಮೊತ್ತ:&lt;/strong&gt;&lt;/h3&gt;&lt;p&gt;ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದ್ದಾರೆ. ಹತ್ಯೆಯ ಸಂಚು ರೂಪಿಸಿದ 15ನೇ ಆರೋಪಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಇನ್ಸ್&zwnj;ಪೆಕ್ಟರ್ ಆಗಿದ್ದ ಚನ್ನಕೇಶವ ಟಿಂಗರೀಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಲಾಗಿದೆ. ಉಳಿದ ಅಪರಾಧಿಗಳಿಗೆ ಒಟ್ಟು 16 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಈ ಮೊತ್ತವನ್ನು ಮೃತ ಯೋಗೇಶ್ ಗೌಡ ಅವರ ಮಕ್ಕಳಿಗೆ ಮತ್ತು ಸಹೋದರ ಗುರುನಾಥ್ ಗೌಡ ಅವರಿಗೆ ಪರಿಹಾರವಾಗಿ ನೀಡಲು ನ್ಯಾಯಾಲಯ ಆದೇಶಿಸಿದೆ.&lt;/p&gt;&lt;h2&gt;&lt;strong&gt;ಪ್ರಕರಣದ ಹಿನ್ನೆಲೆ:&lt;/strong&gt;&lt;/h2&gt;&lt;p&gt;2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್&zwnj;ನಲ್ಲಿ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ನಂತರ ಪ್ರಕರಣವು ಸಿಬಿಐ ಕೈಗೆ ಹಸ್ತಾಂತರವಾಯಿತು. ಸುಮಾರು 8 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ 17 ಮಂದಿ ಅಪರಾಧಿಗಳು ಎಂದು ಸಾಬೀತಾಗಿದೆ. ಸಿಬಿಐ ಪರ ವಕೀಲರು ಈ ಪ್ರಕರಣವನ್ನು &quot;ಅಪರೂಪದಲ್ಲಿ ಅಪರೂಪದ ಪ್ರಕರಣ&quot; ಎಂದು ಪರಿಗಣಿಸಿ ಗರಿಷ್ಠ ಶಿಕ್ಷೆ ನೀಡಬೇಕೆಂದು ವಾದಿಸಿದ್ದರು.&lt;/p&gt;&lt;h3&gt;&lt;strong&gt;ಯಾರ ಮೇಲೆ ಯಾವ ಸೆಕ್ಷನ್?&lt;/strong&gt;&lt;/h3&gt;&lt;p&gt;ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ), 120 ಬಿ (ಅಪರಾಧಿಕ ಒಳಸಂಚು), 201 (ಸಾಕ್ಷ್ಯ ನಾಶ) ಸೇರಿದಂತೆ ಅಕ್ರಮ ಕೂಟ ಮತ್ತು ಗಲಭೆ ಎಸಗಿದ ಆರೋಪದಡಿ ಶಿಕ್ಷೆ ವಿಧಿಸಿದೆ. ವಿಶೇಷವೆಂದರೆ, 19ನೇ ಆರೋಪಿಯಾಗಿದ್ದ ಇನ್ಸ್&zwnj;ಪೆಕ್ಟರ್ ಚನ್ನಕೇಶವ ಅವರು ಸಾರ್ವಜನಿಕ ಸೇವೆಯಲ್ಲಿದ್ದುಕೊಂಡು ತಪ್ಪು ದಾಖಲೆ ಸೃಷ್ಟಿಸಿ ಅಪರಾಧಿಗಳಿಗೆ ಸಹಾಯ ಮಾಡಿದ ಕಾರಣಕ್ಕಾಗಿ ಸೆಕ್ಷನ್ 218ರ ಅಡಿ ಶಿಕ್ಷೆಗೊಳಗಾಗಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ಮಾಫಿ ಸಾಕ್ಷಿಗಳನ್ನಾಗಿ ಮಾಡಲಾಗಿತ್ತು.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/vinay-kulkarni-sentenced-to-life-imprisonment-yogesh-gowda-murder-case-final-verdict-clothes-change-request-sat/articleshow-bbcpm8b"/>
        </item>
        <item>
            <title><![CDATA[Breaking: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಶಾಸಕ ಸ್ಥಾನದಿಂದ ಅನರ್ಹತೆ ಸಾಧ್ಯತೆ, ನಾಳೆ ಅಧಿಸೂಚನೆ ಪ್ರಕಟ?]]></title>
            <link>https://kannada.asianetnews.com/karnataka-districts/vinay-kulkarni-life-imprisonment-disqualification-dharwad-mla-seat-karnataka-san/articleshow-d5ppg01</link>
            <guid isPermaLink="true">https://kannada.asianetnews.com/karnataka-districts/vinay-kulkarni-life-imprisonment-disqualification-dharwad-mla-seat-karnataka-san/articleshow-d5ppg01</guid>
            <pubDate>Fri, 17 Apr 2026 16:35:45 +0530</pubDate>
            <description><![CDATA[&lt;p&gt;ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ, ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯಲ್ಲಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಕೈಸೇರಿದ ತಕ್ಷಣ ಸ್ಪೀಕರ್ ಕಚೇರಿಯು ಅನರ್ಹತೆಯ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdh942e2d4ymngdazxwe5vk,imgname-vinay-kulkarni-1776423309390.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿ ನ್ಯಾಯಾಲ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ನ್ಯಾಯಾಲಯದ ಈ ಆದೇಶದ ಬೆನ್ನಲ್ಲೇ ಅವರ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕುತ್ತು ಬಂದಿದ್ದು, ಸದ್ಯದಲ್ಲೇ ಅನರ್ಹತೆಯ ಭೀತಿ ಎದುರಾಗಿದೆ.&lt;/p&gt;&lt;p&gt;ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸುವ ಪ್ರಕ್ರಿಯೆಗೆ ವಿಧಾನಸಭೆ ಸ್ಪೀಕರ್ ಕಚೇರಿ ಸಿದ್ಧತೆ ನಡೆಸುತ್ತಿದೆ. ನ್ಯಾಯಾಲಯದ ಅಧಿಕೃತ ತೀರ್ಪಿನ ಪ್ರತಿ (Order Copy) ಕೈ ಸೇರಿದ ಕೂಡಲೇ ಅನರ್ಹತೆಯ ಆದೇಶವನ್ನು ಪ್ರಕಟಿಸಲು ಸ್ಪೀಕರ್ ಕಚೇರಿ ನಿರ್ಧರಿಸಿದೆ. ಕಾನೂನು ತಜ್ಞರ ಸಲಹೆಯ ಮೇರೆಗೆ ಈ ಅಧಿಸೂಚನೆ ಹೊರಬೀಳಲಿದೆ.&lt;/p&gt;&lt;h2&gt;&lt;strong&gt;ನಾಳೆ ಅಧಿಕೃತ ಅಧಿಸೂಚನೆ ಸಾಧ್ಯತೆ&lt;/strong&gt;&lt;/h2&gt;&lt;p&gt;ವಿಧಾನಸಭಾ ಸ್ಪೀಕರ್ ಕಚೇರಿಯ ಮೂಲಗಳ ಪ್ರಕಾರ, ನಾಳೆಯೊಳಗೆ (ಶನಿವಾರ) ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ. ಜನಪ್ರತಿನಿಧಿಗಳ ಕಾಯ್ದೆಯ ಪ್ರಕಾರ, ಯಾವುದೇ ಚುನಾಯಿತ ಪ್ರತಿನಿಧಿಗೆ ಎರಡು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಯಾದರೆ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ಅನರ್ಹರಾಗುತ್ತಾರೆ. ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯಾಗಿರುವುದರಿಂದ ಅವರು ಶಾಸಕ ಸ್ಥಾನವನ್ನು ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆಯಿಂದ ಧಾರವಾಡ ರಾಜಕಾರಣದಲ್ಲಿ ಭಾರಿ ಬದಲಾವಣೆಗಳಾಗುವ ಮುನ್ಸೂಚನೆ ಸಿಕ್ಕಿದ್ದು, ಒಂದು ವೇಳೆ ಅನರ್ಹತೆ ಪ್ರಕಟವಾದರೆ ಆ ಕ್ಷೇತ್ರದಲ್ಲಿ ಉಪಚುನಾವಣೆಯ ಅನಿವಾರ್ಯತೆ ಎದುರಾಗಲಿದೆ.&lt;/p&gt;&lt;h2&gt;&lt;strong&gt;89,333 ಮತ ಗಳಿಸಿದ್ದ ವಿನಯ್&zwnj; ಕುಲಕರ್ಣಿ&lt;/strong&gt;&lt;/h2&gt;&lt;p&gt;2023ರ ವಿಧಾನಸಭೆ ಚುನಾವಣೆ ವೇಳೆ ವಿನಯ್&zwnj; ಕುಲಕರ್ಣಿಗೆ ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಹೋಗಲು ಕೂಡ ಕೋರ್ಟ್&zwnj; ಅವಕಾಶ ನೀಡಿರಲಿಲ್ಲ. ಈ ವೇಳೆ ವಿನಯ್&zwnj; ಕುಲಕರ್ಣಿಯ ಹೆಂಡ್ತಿ ಹಾಗೂ ಮಕ್ಕಳು ಪ್ರಚಾರ ನಡೆಸಿ ಗೆಲುವು ತಂದುಕೊಟ್ಟಿದ್ದರು. ವಿನಯ್&zwnj; ಕುಲಕರ್ಣಿ 89,333 ಮತಗಳಿಸಿದ್ದರೆ, 2ನೇ ಸ್ಥಾನ ಪಡೆದಿದ್ದ ಬಿಜೆಪಿಯ ಅಮೃತ್&zwnj; ಅಯ್ಯಪ್ಪ ದೇಸಾಯಿ 71, 296 ಮತ ಸಂಪಾದನೆ ಮಾಡಿದ್ದರು. ಬರೋಬ್ಬರಿ 18,037 ಮತಗಳ ಅಂತರದಿಂದ ವಿನಯ್&zwnj; ಕುಲಕರ್ಣಿ ಗೆದ್ದಿದ್ದರು. ಅದಕ್ಕೂ ಮುನ್ನ 2013ರ ಚುನಾವಣೆಯಲ್ಲೂ ಈತ ಶಾಸಕನಾಗಿದ್ದ. ಆಗ 18,320 ಮತಗಳಿಂದ 2ನೇ ಸ್ಥಾನ ಪಡೆದಿದ್ದ ಆಗ ಜೆಡಿಎಸ್&zwnj;ನಲ್ಲಿದ್ದ ಅಮೃತ್&zwnj; ಅಯ್ಯಪ್ಪ ದೇಸಾಯಿಯನ್ನು ಸೋಲಿಸಿದ್ದರು.&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/vinay-kulkarni-life-imprisonment-disqualification-dharwad-mla-seat-karnataka-san/articleshow-d5ppg01"/>
        </item>
        <item>
            <title><![CDATA[Breaking: ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೊಲೆಗಾರ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ]]></title>
            <link>https://kannada.asianetnews.com/state/life-imprisonment-for-mla-vinay-kulkarni-in-yogesh-gowda-murder-case-gdp/articleshow-8gmbe6n</link>
            <guid isPermaLink="true">https://kannada.asianetnews.com/state/life-imprisonment-for-mla-vinay-kulkarni-in-yogesh-gowda-murder-case-gdp/articleshow-8gmbe6n</guid>
            <pubDate>Fri, 17 Apr 2026 16:19:20 +0530</pubDate>
            <description><![CDATA[ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಈ ಹತ್ಯೆಗೆ ಸಂಬಂಧಿಸಿದಂತೆ ಕುಲಕರ್ಣಿ ಸೇರಿದಂತೆ ಒಟ್ಟು 17 ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpdgr23jay4as83c4regv6f2,imgname-whatsapp-image-2026-04-17-at-4.12.18-pm-1776422750322.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ, ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿಗೆ ಸೇರಿ 16 ಮಂದಿ &amp;nbsp;ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. &amp;nbsp;ಟಿಂಗರೀಕರ್&zwnj; ಒಬ್ಬರಿಗೆ ಜೀವಾವಧಿ ಸಿಗದೆ 7 ವರ್ಷಗಳ ಜೈಲು ಮತ್ತು 30000 ದಂಡ ಪ್ರಕಟಿಸಲಾಗಿದೆ. &amp;nbsp;ಇದರ ಜೊತೆಗೆ ಉಳಿದ ಅಪರಾಧಿಗಳಿಗೂ ಶಿಕ್ಷೆಯನ್ನು ಪ್ರಕಟ ಮಾಡಿದೆ. 16ಲಕ್ಷ ರೂ. ದಂಡದ ಮೊತ್ತ ವಿಧಿಸಲಾಗಿದ್ದು ಈ ಪರಿಹಾರವನ್ನು ಯೋಗೇಶ್ ಗೌಡ ಮಕ್ಕಳಿಗೆ ಹಾಗೂ ಸಹೋದರ ಗುರುನಾಥ್ ಗೌಡ ಗೆ ನೀಡಲು ಸೂಚನೆ ನೀಡಲಾಗಿದೆ. &amp;nbsp;&lt;/p&gt;&lt;p&gt;ವಿನಯ್ ಕುಲಕರ್ಣಿ, ಪೊಲೀಸ್&zwnj; ಇನ್ಸ್&zwnj;ಪೆಕ್ಟರ್&zwnj; ಆಗಿದ್ದ ಚನ್ನಕೇಶವ ಟಿಂಗರೀಕರ್&zwnj; ಸೇರಿದಂತೆ 17 ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 15ರಂದು ದೋಷಿಗಳೆಂದು ಘೋಷಿಸಿ ಮಹತ್ವದ ತೀರ್ಪು ನೀಡಿತ್ತು. ಗುರುವಾರವಾಕ್ಕೆ ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲವು ಸಿಬಿಐ ಮತ್ತು ಆರೋಪಿಗಳ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿತು. ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಪಿಗಳ ಪರ ವಕೀಲರು ವಾದ ಮಂಡಿಸಿದ್ದರೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು. ಬಳಿಕ ಇಂದಿಗೆ ಅಂದರೆ ಏಪ್ರಿಲ್ 17ಕ್ಕೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಪ್ರಕರಣದ 15ನೇ ಅಪರಾಧಿಯಾಗಿರುವ ಪ್ರಭಾವಿ ರಾಜಕಾರಣಿ ವಿನಯ್ ಕುಲಕರ್ಣಿ ಹತ್ಯೆಯ ಹಿಂದೆ ನಡೆದ ಒಳಸಂಚಿನಲ್ಲಿ ಭಾಗಿಯಾದ ಹಿನ್ನೆಲೆ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಉಳಿದ ಆರೋಪಿಗಳಿಗೂ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.&lt;/p&gt;&lt;p&gt;2016ರ ಜೂನ್&zwnj;ನಲ್ಲಿ ನಡೆದ ಕೊಲೆಗೆ ಸಂಬಂಧಿಸಿ ಯೋಗೇಶ್&zwnj; ಗೌಡ ಕೊಲೆ ಪ್ರಕರಣ ಸಂಬಂಧ ಸುಮಾರು 8 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಸಂಜೆ ಅಂತಿಮ ತೀರ್ಪು ಪ್ರಕಟಿಸಿ ಅಪರಾಧಿಗಳೆಂದು ಘೋಷಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್&zwnj; ಗಜಾನನ ಭಟ್&zwnj; ಅವರು, 15ನೇ ಆರೋಪಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ವಿಕ್ರಮ್&zwnj; ಬಳ&zwj;್ಳಾರಿ, ಕೀರ್ತಿ ಕುಮಾರ್&zwnj; ಬಸವರಾಜ್&zwnj; ಕುರಹಟ್ಟಿ, ಸಂದೀಪ್&zwnj; ಸವದತ್ತಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್&zwnj;, ಸಂತೋಷ್&zwnj; ಸವದತ್ತಿ, ದಿನೇಶ್&zwnj;, ಅಶ್ವತ್ಥ್, ಸುನೀಲ್&zwnj;, ನಜೀರ್ ಅಹ್ಮದ್&zwnj;, ಶಹನವಾಜ್&zwnj;, ನೂತನ್&zwnj;, ಹರ್ಷಿತ್&zwnj;, ಚಂದ್ರಶೇಖರ್&zwnj; ಇಂಡಿ, ವಿಕಾಸ್&zwnj; ಕಲಬುರಗಿ, ಪೊಲೀಸ್&zwnj; ಇನ್ಸ್&zwnj;ಪೆಕ್ಟರ್&zwnj; ಚನ್ನಕೇಶವ ಬಿ.ಟಿಂಗರಿಕರ್&zwnj; ಒಟ್ಟು 17 ಮಂದಿಗೆ ಶಿಕ್ಷೆ ಪ್ರಕಟಿಸಿದ್ದಾರೆ.&lt;/p&gt;&lt;h2&gt;17 ಅಪರಾಧಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು&lt;/h2&gt;&lt;p&gt;ಏಪ್ರಿಲ್ 15ರಂದು ನ್ಯಾಯಾಧೀಶರ ಸೂಚನೆಯ ಹಿನ್ನೆಲೆಯಲ್ಲಿ ಅಪರಾಧಿಗಳನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋದರು. ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಹಿನ್ನೆಲೆಯಲ್ಲಿ 17 ಅಪರಾಧಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆದರೆ ವಾದ ಪ್ರತಿವಾದ ಮಾತ್ರ ನಡೆದಿತ್ತು. ಹೀಗಾಗಿ ಇಂದು ಮತ್ತೆ ಎಲ್ಲಾ ಆರೋಪಿಗಳನ್ನು ಕೋರ್ಟ್&zwnj;ಗೆ ಕರೆತಂದಿದ್ದರು.&lt;/p&gt;&lt;p&gt;ಈ ಪ್ರಕರಣದಲ್ಲಿ ಮೊದಲನೇ ಆರೋಪಿ ಬಸವರಾಜ್&zwnj; ಮುತ್ತಗಿ ಮತ್ತು 17ನೇ ಆರೋಪಿ ಶಿವಾನಂದ್&zwnj; ಅವರನ್ನು ಮಾಫಿ ಸಾಕ್ಷಿಯನ್ನಾಗಿಸಲಾಗಿದೆ. ಜತೆಗೆ 20ನೇ ಆರೋಪಿ ವಾಸುದೇವ್&zwnj; ರಾಮ ನೀಲೆಕಣಿ ಮತ್ತು 21ನೇ ಆರೋಪಿ ಸೋಮಶೇಖರ್&zwnj; ಬಸಪ್ಪ ನ್ಯಾಮಗೌಡ ಅವರನ್ನು ನಿರ್ದೋಷಿಗಳೆಂದು ಕೋರ್ಟ್ ಹೇಳಿದೆ.&lt;/p&gt;&lt;h2&gt;ಯಾವ ಸೆಕ್ಷನ್&zwnj; ಯಾರ ಮೇಲೆ?&lt;/h2&gt;&lt;p&gt;ಪ್ರಕರಣದ 2 ರಿಂದ 16 ಮತ್ತು 18ನೇ ಆರೋಪಿಗಳು ಭಾರತೀಯ ದಂಡ ಸಂಹಿತೆ 302 (ಕೊಲೆ) ಆರೋಪದಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿ ಶಿಕ್ಷೆಗೊಳಗಾಗಿದ್ದಾರೆ. ಹಾಗೆಯೇ 2 ರಿಂದ 16 ಮತ್ತು 18 ಹಾಗೂ 19ನೇ ಆರೋಪಿಗಳು 120 (ಬಿ) (ಅಪರಾಧಿಕ ಒಳ ಸಂಚು) ರೂಪಿಸಿದ್ದಾರೆ ಮತ್ತು 201 (ಸಾಕ್ಷ್ಯ ನಾಶ ಪಡಿಸಿದ್ದಾರೆ). ಇನ್ನು ಆರೋಪಿ 2 ರಿಂದ 14 ಮತ್ತು 18ನೇ ಆರೋಪಿಗಳು 143, 149 (ಅಕ್ರಮ ಕೂಟ), 147 (ಗಲಭೆ), 148 (ಆಯುಧಗಳಿಂದ ಕೃತ್ಯ) ಎಸಗಿದ್ದಾರೆ. 19ನೇ ಆರೋಪಿ 218 ಅಡಿಯಲ್ಲಿ ಸಾರ್ವಜನಿಕ ಸೇವೆಯಲ್ಲಿದ್ದು ತಪ್ಪುದಾಖಲೆಗಳನ್ನು ಸೃಷ್ಟಿಸಿ ಆರೋಪಿಯನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/life-imprisonment-for-mla-vinay-kulkarni-in-yogesh-gowda-murder-case-gdp/articleshow-8gmbe6n"/>
        </item>
        <item>
            <title><![CDATA[ಮಂಡ್ಯ: ಸ್ಟ್ಯಾಲಿನ್ ಗೆ ಬುದ್ದಿ ಇಲ್ಲ ಬುದ್ದಿ ಕಡಿಮೆ, ಆರ್. ಅಶೋಕ್ ಮಾತಿನ ಸಮರ]]></title>
            <link>https://kannada.asianetnews.com/karnataka-districts/karnataka-opposition-leader-r-ashoka-slams-congress-praises-modi-over-women-reservation-bill-gdp/articleshow-ir07b8s</link>
            <guid isPermaLink="true">https://kannada.asianetnews.com/karnataka-districts/karnataka-opposition-leader-r-ashoka-slams-congress-praises-modi-over-women-reservation-bill-gdp/articleshow-ir07b8s</guid>
            <pubDate>Fri, 17 Apr 2026 16:06:48 +0530</pubDate>
            <description><![CDATA[ಮಂಡ್ಯದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಮಹಿಳಾ ಮೀಸಲಾತಿ ಬಿಲ್ ಕುರಿತು ಕೇಂದ್ರವನ್ನು ಶ್ಲಾಘಿಸಿದರು. ಇದೇ ವೇಳೆ, ಕ್ಷೇತ್ರ ಮರುವಿಂಗಡಣೆ, ಹಿಂದಿ ಪರೀಕ್ಷೆ ವಿವಾದ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದು ಅವರು ಟೀಕಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kpdfnjbr95edhpdps6a4dekb,imgname-r-ashoka-1776421620088.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಡ್ಯ : &lt;/strong&gt;ಮಂಡ್ಯದಲ್ಲಿ ನಡೆದ ಕಾರ್ಯಕ್ರಮದ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಲವು ರಾಜಕೀಯ ಹಾಗೂ ಸಮಕಾಲೀನ ವಿಚಾರಗಳ ಕುರಿತು ತೀಕ್ಷ್ಣ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಬಿಲ್&zwnj;ನಿಂದ ಹಿಡಿದು ರಾಜ್ಯ ರಾಜಕೀಯದ ಬೆಳವಣಿಗೆಗಳವರೆಗೆ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದರು.&lt;/p&gt;&lt;h2&gt;ಮಹಿಳಾ ಮೀಸಲಾತಿ ಬಿಲ್&zwnj;ಗೆ ಅಭಿನಂದನೆ&lt;/h2&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸಾಗಿರುವುದನ್ನು ಆರ್. ಅಶೋಕ್ ಸ್ವಾಗತಿಸಿದರು. ಬಹಳ ವರ್ಷಗಳಿಂದ ಹಲವರು ಪ್ರಯತ್ನಿಸಿದರೂ ಸಾಧ್ಯವಾಗದ ಕೆಲಸವನ್ನು ಮೋದಿ ಅವರು ಸಾಧಿಸಿದ್ದಾರೆ. ಇದು ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು, ದೇಶದ ಮಹಿಳೆಯರಿಗೆ ಸಮಾನತೆ ಒದಗಿಸುವ ಮಹತ್ವದ ಕ್ರಮ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ಮಹಿಳೆಯರು ಕೂಡ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಹೇಳಿದರು.&lt;/p&gt;&lt;h2&gt;ಕಾಂಗ್ರೆಸ್ ವಿರುದ್ಧ ಟೀಕೆ&lt;/h2&gt;&lt;p&gt;ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಶೋಕ್, ಕಾಂಗ್ರೆಸ್ ಧರ್ಮ ಆಧಾರಿತ ರಾಜಕೀಯ ಮಾಡುತ್ತಿದೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಅನಗತ್ಯ ವಿವಾದ ಸೃಷ್ಟಿಸುತ್ತಿದೆ. ಇದು ಇತಿಹಾಸ ನಿರ್ಮಾಣದ ಕ್ಷಣವಾಗಿದ್ದು, ಅದನ್ನು ರಾಜಕೀಯವಾಗಿ ತಿರುಗಿಸುವುದು ಸರಿಯಲ್ಲ ಎಂದು ಹೇಳಿದರು.&lt;/p&gt;&lt;h2&gt;ಕ್ಷೇತ್ರ ಮರುವಿಂಗಡಣೆ ವಿವಾದ&lt;/h2&gt;&lt;p&gt;ತಮಿಳುನಾಡಿನಲ್ಲಿ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಿಲ್&zwnj;ನಲ್ಲಿ ಜನಸಂಖ್ಯೆ ಆಧಾರದ ಯಾವುದೇ ಅಂಶವಿಲ್ಲ. ಹಿಂದೆಯೇ ಕಾಂಗ್ರೆಸ್ ಈ ರೀತಿಯ ಕ್ರಮಗಳನ್ನು ಕೈಗೊಂಡಿತ್ತು. ಈಗ ತಮಿಳುನಾಡಿನ ಕ್ಷೇತ್ರಗಳು ಹೆಚ್ಚಾಗುತ್ತಿರುವುದರಲ್ಲಿ ಏನು ಸಮಸ್ಯೆ? ಎಂದು ಪ್ರಶ್ನಿಸಿದರು. ತಮಿಳುನಾಡು ಸಿಎಂ ಸ್ಟಾಲಿನ್&zwnj;ಗೆ ಬುದ್ಧಿ ಕಡಿಮೆ ಇದೆ. ಇದೇ ರೀತಿ ಕಾಂಗ್ರೆಸ್&zwnj; ನಾಯಕರು ಕೂಡ ಅನ್ಯಾಯ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಿಂದೆ ಲೋಕಸಭೆ ಕ್ಷೇತ್ರ ಎಷ್ಟಿರಬೇಕೆಂದು ಕಾಂಗ್ರೆಸ್&zwnj; ನಾಯಕರೇ ತೀರ್ಮಾನ ಮಾಡಿದ್ದರು. ಜನಸಂಖ್ಯೆ ಆಧಾರಿತವಾಗಿಯೇ ಕ್ಷೇತ್ರ ಮರುವಿಂಗಡಣೆ ಮಾಡಲಾಗುತ್ತಿತ್ತು. ರಾಜ್ಯದಲ್ಲಿ 28 ಲೋಕಸಭೆ ಕ್ಷೇತ್ರಗಳು 42 ಆಗುತ್ತಿವೆ. ಇಲ್ಲಿ ಕ್ಷೇತ್ರಗಳು ಕಡಿಮೆಯಾಗುವುದಿಲ್ಲ. ಕೇರಳದಲ್ಲಿ 20 ಕ್ಷೇತ್ರಗಳಿಂದ 30 ಕ್ಕೆ, ತಮಿಳುನಾಡಿನಲ್ಲಿ 39 ರಿಂದ 59 ಕ್ಕೆ ಏರಿಕೆಯಾಗಲಿದೆ. ಆದರೂ ವಿರೋಧ ಮಾಡುತ್ತಿದ್ದಾರೆ. ಇದನ್ನು ಜಾರಿ ಮಾಡಿದರೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಿ ಎಲ್ಲರೂ ಟೆಂಟ್&zwnj; ಕಟ್ಟಿಕೊಂಡು ಹೋಗಬೇಕಾಗುತ್ತದೆ ಎಂಬ ಭಯ ವಿರೋಧ ಪಕ್ಷಗಳ ನಾಯಕರಲ್ಲಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಯಾವುದೇ ಅನ್ಯಾಯ ಆಗುತ್ತಿಲ್ಲ. ಯಾವುದೇ ರಾಜ್ಯಗಳಲ್ಲಿ ಸ್ಥಾನಗಳು ಕಡಿಮೆಯಾಗುತ್ತಿಲ್ಲ. ವಿರೋಧ ಪಕ್ಷಗಳ ನಾಯಕರಿಗೆ ಅಭಿವೃದ್ಧಿ ಬೇಕಿಲ್ಲ. ಕಾಂಗ್ರೆಸ್&zwnj;ನ ವಂಶಾಡಳಿತಕ್ಕೆ ಪೂರಕವಾಗಿ ಎಲ್ಲರೂ ಮಾತಾಡುತ್ತಿದ್ದಾರೆ ಎಂದರು.&lt;/p&gt;&lt;h2&gt;ಯೋಗೇಶ್ ಗೌಡ ಹತ್ಯೆ ಪ್ರಕರಣ&lt;/h2&gt;&lt;p&gt;ಯೋಗೇಶ್ ಗೌಡ ಹತ್ಯೆ ಪ್ರಕರಣದ ತೀರ್ಪಿನ ಕುರಿತು ಮಾತನಾಡಿದ ಅವರು, ಈ ಪ್ರಕರಣವು ರಾಜಕೀಯ ಕೊಲೆಗಳಿಗೆ ಒಂದು ಪಾಠವಾಗಿದೆ. ಯಾರಾದರೂ ರಾಜಕಾರಣಿಯ ಮಾತು ಕೇಳಿ ಅಪರಾಧದಲ್ಲಿ ಭಾಗಿಯಾದರೆ ಅದರ ಪರಿಣಾಮ ಏನಾಗುತ್ತದೆ ಎಂಬುದಕ್ಕೆ ಇದು ಉದಾಹರಣೆ. ಕಾಂಗ್ರೆಸ್ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿತ್ತು, ಆದರೆ ಸಿಬಿಐ ತನಿಖೆಯಿಂದ ಸತ್ಯ ಬಹಿರಂಗವಾಗಿದೆ ಎಂದು ಹೇಳಿದರು.&lt;/p&gt;&lt;h2&gt;ದೇವೇಗೌಡರ ರಾಜ್ಯಸಭೆ ವಿಚಾರ&lt;/h2&gt;&lt;p&gt;ಹೆಚ್&zwnj;.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಆಯ್ಕೆ ಮಾಡುವ ವಿಚಾರ ಕುರಿತು ಮಾತನಾಡಿದ ಅವರು, ಇದು ರಾಷ್ಟ್ರೀಯ ಮಟ್ಟದ ನಾಯಕರು ತೀರ್ಮಾನಿಸುವ ವಿಷಯ ಎಂದು ತಿಳಿಸಿದರು.&lt;/p&gt;&lt;h2&gt;ಹಿಂದಿ ಪರೀಕ್ಷೆ, ಗ್ರೇಸ್ ಮಾರ್ಕ್ಸ್ ವಿವಾದ&lt;/h2&gt;&lt;p&gt;ಹಿಂದಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶವನ್ನು ಪಾಲಿಸಬೇಕು. ವಿದ್ಯಾರ್ಥಿಗಳ ವಿಚಾರದಲ್ಲಿ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.&lt;/p&gt;&lt;h2&gt;ಕನ್ನಡಕ್ಕೆ ಆದ್ಯತೆ&lt;/h2&gt;&lt;p&gt;ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಬೇಕು. 365 ದಿನ ಓದಿದ ಮಕ್ಕಳಿಗೆ ಅನ್ಯಾಯವಾಗಬಾರದು ಎಂದು ಹೇಳಿದರು. ಉರ್ದು ಶಾಲೆಗಳಲ್ಲಿ ಕನ್ನಡದ ಸ್ಥಿತಿ ಕುರಿತೂ ಪ್ರಶ್ನೆ ಎತ್ತಿದ ಅವರು, ಈ ವಿಷಯದಲ್ಲಿ ಸಮಗ್ರ ಚರ್ಚೆ ಅಗತ್ಯವಿದೆ ಎಂದರು. ರಾಜ್ಯದ ಮಕ್ಕಳು ಹಿಂದಿ ಓದುವ ಮೊದಲೇ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಪರೀಕ್ಷೆಯ ಸಮಯದಲ್ಲಿ ತುಘಲಕ್&zwnj; ದರ್ಬಾರ್&zwnj; ಮಾಡುವ ಅಗತ್ಯವಿರಲಿಲ್ಲ. ನಾನು ಕೂಡ ಕನ್ನಡದ ಹೋರಾಟಗಾರನಾಗಿದ್ದು, ಗೋಕಾಕ್&zwnj; ಚಳವಳಿಯಲ್ಲಿ ಭಾಗವಹಿಸಿ ಪೊಲೀಸರ ಲಾಠಿ ಏಟಿನಿಂದ ಕಾಲಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದೆ. ಹೊಸೂರಿನಲ್ಲಿ ಹೆಚ್ಚಿನವರು ಕನ್ನಡ ಮಾತಾಡುತ್ತಾರೆ. ಕಾಸರಗೋಡಿನಲ್ಲೂ ಕನ್ನಡಿಗರು ಹೆಚ್ಚಿದ್ದಾರೆ. ಅಲ್ಲಿ ಕನ್ನಡ ಇಲ್ಲವೆಂದರೆ ಸಮಸ್ಯೆಯಾಗುತ್ತದೆ. ಉರ್ದು ಶಾಲೆಗಳಲ್ಲಿ ಮೊದಲಿಗೆ ಉರ್ದು, ಎರಡನೇ ಭಾಷೆಯಾಗಿ ಇಂಗ್ಲಿಷ್&zwnj; ಓದುತ್ತಾರೆ. ಕೊನೆಯ ಭಾಷೆಯಾಗಿ ಕನ್ನಡ ಓದುತ್ತಾರೆ. ತ್ರಿಭಾಷಾ ಸೂತ್ರ ಇಲ್ಲವೆಂದರೆ ಅಲ್ಲಿ ಕನ್ನಡವೂ ಇರುವುದಿಲ್ಲ. ವಿದ್ಯಾರ್ಥಿಗಳ ವಿಚಾರ ಬಂದಾಗ ಸದನ ಸಮಿತಿ ರಚಿಸಿ ಚರ್ಚೆ ಮಾಡಬೇಕಿತ್ತು ಎಂದರು&lt;/p&gt;&lt;h2&gt;ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ&lt;/h2&gt;&lt;p&gt;ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ ಅಶೋಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲದಲ್ಲಿದೆ. ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಒಳಪೈಪೋಟಿ ನಡೆಯುತ್ತಿದೆ. ಶಾಸಕರು ದೆಹಲಿಗೆ ತೆರಳುತ್ತಿರುವುದು ಇದಕ್ಕೆ ಸಾಕ್ಷಿ ಎಂದರು. ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಲಾಗುತ್ತಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದರು. ದಾವಣಗೆರೆಯಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಿರುವುದಕ್ಕೆ ಮುಸ್ಲಿಮ್&zwnj; ಮುಖಂಡರು ಕಾಂಗ್ರೆಸ್&zwnj; ವಿರುದ್ಧ ಮಾತಾಡುತ್ತಿದ್ದಾರೆ. ಸಚಿವ ಜಮೀರ್&zwnj; ಅಹ್ಮದ್&zwnj; ಅವರನ್ನೂ ಟಾರ್ಗೆಟ್&zwnj; ಮಾಡಲಾಗುತ್ತಿದೆ. ಇಡೀ ಪಕ್ಷ ಹಾಗೂ ಸರ್ಕಾರ ಸಂಪೂರ್ಣ ಗೊಂದಲದಲ್ಲಿದೆ. ಇಂದೇ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್&zwnj;ಡಿಎ ಸರ್ಕಾರ ಬರಲಿದೆ. ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಬಿಜೆಪಿ ಗೆಲ್ಲಲಿದೆ. ನರೇಂದ್ರ ಮೋದಿ ಪ್ರಧಾನಿಯಾಗಿದ್ದಕ್ಕೆ ನಮಗೇನೂ ಸಮಸ್ಯೆಯಾಗಿಲ್ಲ, ಬಿಜೆಪಿ ಬೆಂಬಲಿಸುತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ. ಅವರ ಈ ನಡೆಯನ್ನು ಸ್ವಾಗತಿಸುತ್ತೇನೆ ಎಂದರು.&lt;/p&gt;&lt;h2&gt;ಮುಂದಿನ ಚುನಾವಣೆ ಕುರಿತು ಭವಿಷ್ಯ&lt;/h2&gt;&lt;p&gt;ಮುಂದಿನ ಚುನಾವಣೆಯ ಕುರಿತು ಮಾತನಾಡಿದ ಅವರು, 2028ರಲ್ಲ, ಇಂದೇ ಚುನಾವಣೆ ನಡೆದರೂ ನಮ್ಮ ಎನ್&zwnj;ಡಿಎ ಮೈತ್ರಿ ಶೇ.100 ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಒಟ್ಟಾರೆ ಮಂಡ್ಯದಲ್ಲಿ ಆರ್. ಅಶೋಕ್ ನೀಡಿದ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-opposition-leader-r-ashoka-slams-congress-praises-modi-over-women-reservation-bill-gdp/articleshow-ir07b8s"/>
        </item>
        <item>
            <title><![CDATA[ಸಿದ್ದರಾಮಯ್ಯ ಅಸಹಾಯಕರು, ಡಿಕೆಶಿ ಹಾದಿ ತಪ್ಪುತ್ತಿದ್ದಾರೆ! ಕೈ ನಾಯಕರ ವಿರುದ್ಧ ಕೆ.ಎನ್. ರಾಜಣ್ಣ ಗುಡುಗು!]]></title>
            <link>https://kannada.asianetnews.com/politics/kn-rajanna-statement-against-dk-shivakumar-and-siddaramaiah-helplessness-congress-internal-rift-sat/articleshow-vfwuzs7</link>
            <guid isPermaLink="true">https://kannada.asianetnews.com/politics/kn-rajanna-statement-against-dk-shivakumar-and-siddaramaiah-helplessness-congress-internal-rift-sat/articleshow-vfwuzs7</guid>
            <pubDate>Fri, 17 Apr 2026 14:44:18 +0530</pubDate>
            <description><![CDATA[&lt;p&gt;ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಚಿವ ಸತೀಶ್ ಜಾರಕಿಹೊಳಿ ಭೇಟಿ ನಂತರ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತವನ್ನು ಬಹಿರಂಗಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಅಸಹಾಯಕತೆ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಶಿಸ್ತು ಉಲ್ಲಂಘನೆಯ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kbk7pn2k4paqt3kdndf5t1f2,imgname-----------------------2025-12-04t043559.099-1764803433555.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): ಕ&lt;/strong&gt;ರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಬಹಿರಂಗ ಸತ್ಯವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ನಂತರ ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ತಟಸ್ಥ ಧೋರಣೆ' ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 'ಶಿಸ್ತು' ಉಲ್ಲಂಘನೆಯ ಬಗ್ಗೆ ರಾಜಣ್ಣ ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ.&lt;/p&gt;&lt;h3&gt;&lt;strong&gt;ಸಿದ್ದರಾಮಯ್ಯ ಅಸಹಾಯಕತೆ ನಮಗೆ ಬೇಸರ ತಂದಿದೆ!&lt;/strong&gt;&lt;/h3&gt;&lt;p&gt;ರಾಜಣ್ಣ ಅವರ ಮಾತಿನ ಮೊದಲ ಗುರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಿದ್ದರು. 'ಸಿದ್ದರಾಮಯ್ಯ ಅವರಿಂದ ಇಂಥ ಅಸಹಾಯಕತೆಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಸಿದ್ದರಾಮಯ್ಯ ಪರವಾಗಿ ಇರುವವರನ್ನು ಸತತವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಿಎಂ ಗಟ್ಟಿಯಾಗಿ ನಿಲ್ಲಬೇಕಿತ್ತು, ಆದರೆ ಅವರು ಯಾಕೆ ತಟಸ್ಥರಾಗಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ. ಅವರ ಧ್ವನಿ ಕುಗ್ಗಿದಾಗ ನಮಗೂ ಅಸಹಾಯಕತೆ ಎನಿಸುತ್ತದೆ' ಎಂದು ರಾಜಣ್ಣ ಬೇಸರ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರಿಗೆ ಯಾವುದಾದರೂ 'ಕಂಪಲ್ಶನ್' (ಒತ್ತಡ) ಇದೆಯೇ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.&lt;/p&gt;&lt;h2&gt;&lt;strong&gt;ಹೆಸರೇಳದೆ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿ:&lt;/strong&gt;&lt;/h2&gt;&lt;p&gt;ಪಕ್ಷದ ಶಿಸ್ತಿನ ಬಗ್ಗೆ ಮಾತನಾಡುವ ಡಿ.ಕೆ. ಶಿವಕುಮಾರ್ ವಿರುದ್ಧ ಕೆ.ಎನ್. ರಾಜಣ್ಣ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದರು. 'ಹಿಂದೆ 'Who is Rahul Gandhi?' (ರಾಹುಲ್ ಗಾಂಧಿ ಅಂದ್ರೆ ಯಾರು?) ಎಂದು ಕೇಳಿದವರ ಜೊತೆ ವೇದಿಕೆ ಹಂಚಿಕೊಳ್ಳುವುದು ಪಕ್ಷದ ಶಿಸ್ತಾ? ರಾಹುಲ್ ಗಾಂಧಿಯವರ ಶತ್ರುಗಳಿಂದ ಆಮಂತ್ರಣ ಬಂದರೂ ಅವರು ಹೋಗುವುದಿಲ್ಲ, ಆದರೆ ಇವರು ಅಂತಹವರ ಮನೆ ಮದುವೆಗಳಿಗೆ ಹೋಗಿ ಬರುತ್ತಾರೆ' ಎಂದು ಟೀಕಿಸಿದರು. ಅಲ್ಲದೆ, 'ಪ್ರಯಾಗ್&zwnj;ರಾಜ್&zwnj;ನಲ್ಲಿ ಹೋಗಿ ಮುಳುಗಿದರೆ ಬಡತನ ಹೋಗುತ್ತಾ ಎಂದು ಎಐಸಿಸಿ ಅಧ್ಯಕ್ಷರೇ ಪ್ರಶ್ನಿಸಿದ್ದರು, ಆದರೆ ಇವರು ಅಲ್ಲಿಗೂ ಹೋಗಿ ಮುಳುಗಿ ಬಂದರು' ಎನ್ನುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ನಡವಳಿಕೆಗಳನ್ನೂ ರಾಜಕೀಯ ಅಸ್ತ್ರವಾಗಿ ಬಳಸಿದರು.&lt;/p&gt;&lt;h2&gt;&lt;strong&gt;ಶಿಸ್ತಿನ ಕ್ರಮದಲ್ಲಿ ತಾರತಮ್ಯವೇಕೆ?&lt;/strong&gt;&lt;/h2&gt;&lt;p&gt;ಪಕ್ಷದಲ್ಲಿ ಶಿಸ್ತು ಎನ್ನುವುದು ಕೇವಲ ಕೆಲವರಿಗೆ ಮಾತ್ರವೇ? ಎಂಬ ಪ್ರಶ್ನೆಯನ್ನು ರಾಜಣ್ಣ ಕೇಳಿದ್ದಾರೆ. 'ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ ಶಾಮನೂರು ಶಿವಶಂಕಪ್ಪ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಲಿಲ್ಲ. ಇನ್ನೊಂದು ಪಕ್ಷಕ್ಕೆ ಮತ ಹಾಕಿ ಎನ್ನುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ವಾ?' ಎಂದು ಪ್ರಶ್ನಿಸುವ ಮೂಲಕ ಹೈಕಮಾಂಡ್ ಮತ್ತು ರಾಜ್ಯ ನಾಯಕತ್ವದ ದ್ವಂದ್ವ ನೀತಿಯನ್ನು ಎತ್ತಿ ತೋರಿಸಿದರು.&lt;/p&gt;&lt;h3&gt;&lt;strong&gt;ಸತೀಶ್ ಜಾರಕಿಹೊಳಿ ಭೇಟಿಯ ಮರ್ಮ:&lt;/strong&gt;&lt;/h3&gt;&lt;p&gt;ಸತೀಶ್ ಜಾರಕಿಹೊಳಿ ಮತ್ತು ಡಿ.ಕೆ. ಶಿವಕುಮಾರ್ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, 'ಅವರೆಲ್ಲರೂ ಸಂಪುಟದ ಸದಸ್ಯರು, ಯಾರು ಯಾರನ್ನಾದರೂ ಭೇಟಿ ಮಾಡಬಹುದು. ಅದರಲ್ಲಿ ತಪ್ಪು ಭಾವಿಸುವ ಅಗತ್ಯವಿಲ್ಲ. ಆದರೆ ಸಿದ್ದರಾಮಯ್ಯ ಪರ ಇರುವವರನ್ನು ತುಳಿಯುವ ಪ್ರಯತ್ನ ನಡೆದರೆ ನಾವು ಸುಮ್ಮನಿರುವುದಿಲ್ಲ,' ಎಂದು ಎಚ್ಚರಿಸಿದ್ದಾರೆ. ತಮಗೆ ಸಚಿವ ಸ್ಥಾನದ ಆಕಾಂಕ್ಷೆ ಇಲ್ಲ ಎಂದು ಸ್ಪಷ್ಟಪಡಿಸಿದ ರಾಜಣ್ಣ, ಪಕ್ಷದ ನಿಷ್ಠಾವಂತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿರುವುದಾಗಿ ತಿಳಿಸಿದ್ದಾರೆ.&lt;/p&gt;&lt;p&gt;ಒಟ್ಟಾರೆಯಾಗಿ, ಕೆ.ಎನ್. ರಾಜಣ್ಣ ಅವರ ಈ ಹೇಳಿಕೆಗಳು ಸಿದ್ದರಾಮಯ್ಯ ಬಣದಲ್ಲಿರುವ ಅಸಮಾಧಾನ ಸ್ಫೋಟಗೊಂಡಿರುವುದಕ್ಕೆ ಸಾಕ್ಷಿಯಾಗಿವೆ. ಇದು ಮುಂಬರುವ ದಿನಗಳಲ್ಲಿ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/kn-rajanna-statement-against-dk-shivakumar-and-siddaramaiah-helplessness-congress-internal-rift-sat/articleshow-vfwuzs7"/>
        </item>
        <item>
            <title><![CDATA[ದೇಶದಲ್ಲೇ ಮೊದಲು! ಪ್ರತಿಷ್ಠಿತ ISO 50001:2018 ಪ್ರಮಾಣಪತ್ರ ಮುಡಿಗೇರಿಸಿಕೊಂಡ ಬೆಂಗಳೂರು ಜಲಮಂಡಳಿ!]]></title>
            <link>https://kannada.asianetnews.com/state/bengaluru-bwssb-first-water-board-india-to-get-iso-50001-2018-certification-dk-shivakumar-sat/articleshow-26u4mop</link>
            <guid isPermaLink="true">https://kannada.asianetnews.com/state/bengaluru-bwssb-first-water-board-india-to-get-iso-50001-2018-certification-dk-shivakumar-sat/articleshow-26u4mop</guid>
            <pubDate>Fri, 17 Apr 2026 13:19:02 +0530</pubDate>
            <description><![CDATA[&lt;p&gt;ಬೆಂಗಳೂರು ಜಲಮಂಡಳಿಯು (BWSSB) ಇಂಧನ ನಿರ್ವಹಣಾ ವ್ಯವಸ್ಥೆಯಲ್ಲಿನ ಅತ್ಯುತ್ತಮ ಸಾಧನೆಗಾಗಿ ISO 50001:2018 ಪ್ರಮಾಣಪತ್ರವನ್ನು ಪಡೆದಿದೆ. ಈ ಮೂಲಕ, ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ದೇಶದ ಮೊದಲ ಜಲಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpd6k63nm609bpnbf8mfbntv,imgname-bwssb-dk-shivakumar-1776412104821.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): ಸಿ&lt;/strong&gt;ಲಿಕಾನ್ ಸಿಟಿ ಬೆಂಗಳೂರಿನ ಜೀವನಾಡಿಯಾಗಿರುವ ಬೆಂಗಳೂರು ಜಲಮಂಡಳಿ (BWSSB) ಈಗ ಇತಿಹಾಸ ನಿರ್ಮಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಇಂಧನ ನಿರ್ವಹಣಾ ವ್ಯವಸ್ಥೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಜಲಮಂಡಳಿ, ಇದೀಗ ISO 50001:2018 ಪ್ರಮಾಣಪತ್ರವನ್ನು ಪಡೆದ ದೇಶದ ಪ್ರಥಮ ಜಲಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಬೆಂಗಳೂರಿನ ನೀರಿನ ಸರಬರಾಜು ವ್ಯವಸ್ಥೆ ಕೇವಲ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ಮಾನದಂಡಗಳನ್ನು ಹೊಂದಿದೆ ಎಂಬುದು ಸಾಬೀತಾಗಿದೆ.&lt;/p&gt;&lt;h2&gt;&lt;strong&gt;ಏನಿದು ISO 50001:2018 ಸಾಧನೆ?&lt;/strong&gt;&lt;/h2&gt;&lt;p&gt;ಬ್ಯೂರೋ ವೆರಿಟಾಸ್ (Bureau Veritas) ನೀಡಿರುವ ಈ ಪ್ರತಿಷ್ಠಿತ ಪ್ರಮಾಣಪತ್ರವು ಜಲಮಂಡಳಿಯ ಅತ್ಯುತ್ತಮ ಇಂಧನ ನಿರ್ವಹಣಾ ವ್ಯವಸ್ಥೆಯನ್ನು (Energy Management Systems) ಗುರುತಿಸಿ ನೀಡಲಾಗಿದೆ. ಮುಖ್ಯವಾಗಿ ಕಾವೇರಿ ನೀರನ್ನು ನಗರಕ್ಕೆ ಪಂಪ್ ಮಾಡುವ ಪ್ರಮುಖ ಕೇಂದ್ರಗಳಾದ ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿ ಪಂಪಿಂಗ್ ಸ್ಟೇಷನ್&zwnj;ಗಳಲ್ಲಿ ಇಂಧನವನ್ನು ಅತ್ಯಂತ ದಕ್ಷತೆಯಿಂದ ಬಳಸಲಾಗುತ್ತಿದೆ ಎಂಬುದಕ್ಕೆ ಈ ಪ್ರಮಾಣಪತ್ರ ಸಾಕ್ಷಿಯಾಗಿದೆ. ಬೃಹತ್ ಪ್ರಮಾಣದ ನೀರನ್ನು ಸರಬರಾಜು ಮಾಡುವಾಗ ಇಂಧನ ಉಳಿತಾಯ ಮತ್ತು ದಕ್ಷತೆ ಕಾಪಾಡುವುದು ಸವಾಲಿನ ಕೆಲಸ, ಅದನ್ನು BWSSB ಅಚ್ಚುಕಟ್ಟಾಗಿ ನಿಭಾಯಿಸಿದೆ.&lt;/p&gt;&lt;h3&gt;&lt;strong&gt;ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣಪತ್ರ ಹಸ್ತಾಂತರ:&lt;/strong&gt;&lt;/h3&gt;&lt;p&gt;ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್&zwnj; ಪ್ರಸಾತ್&zwnj; ಮನೋಹರ್&zwnj; ಅವರ ನೇತೃತ್ವದಲ್ಲಿ ಜಲಮಂಡಳಿಯ ಹಿರಿಯ ಅಧಿಕಾರಿಗಳ ತಂಡವು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಈ ಅಂತಾರಾಷ್ಟ್ರೀಯ ಪ್ರಮಾಣಪತ್ರವನ್ನು ಹಸ್ತಾಂತರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, 'ಇದು ಕೇವಲ ಜಲಮಂಡಳಿಯ ಸಾಧನೆಯಲ್ಲ, ಇದು ಬ್ರ್ಯಾಂಡ್ ಬೆಂಗಳೂರು (Brand Bengaluru) ಪರಿಕಲ್ಪನೆಯ ಗೆಲುವು. ಸುಸ್ಥಿರ ಜಲ ಮೂಲಸೌಕರ್ಯ ನಿರ್ಮಿಸುವ ನಮ್ಮ ಸರ್ಕಾರದ ಬದ್ಧತೆಗೆ ಇದು ಪ್ರತಿಫಲ' ಎಂದು ಶ್ಲಾಘಿಸಿದರು.&lt;/p&gt;&lt;h2&gt;&lt;strong&gt;ತಂತ್ರಜ್ಞಾನ ಮತ್ತು ದಕ್ಷತೆಗೆ ಆದ್ಯತೆ:&lt;/strong&gt;&lt;/h2&gt;&lt;p&gt;ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಮಾತನಾಡಿ, 'ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ತಲುಪಿಸುವುದು ನಮ್ಮ ಗುರಿ. ಇದಕ್ಕಾಗಿ ನಾವು ತಂತ್ರಜ್ಞಾನವನ್ನು ನಿರಂತರವಾಗಿ ಮೇಲ್ದರ್ಜೆಗೇರಿಸುತ್ತಿದ್ದೇವೆ. ಈ ಮೈಲಿಗಲ್ಲು ಸಾಧಿಸುವಲ್ಲಿ ಮುಖ್ಯ ಅಭಿಯಂತರರಾದ ಡಾ. ರಾಜೀವ್ ಮತ್ತು ಶ್ರೀ ರಾಜಶೇಖರ್ ಅವರ ಶ್ರಮ ಅಪಾರವಾಗಿದೆ' ಎಂದರು. ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಸಹ ಜಲಮಂಡಳಿಯ ಈ ರೂಪಾಂತರವನ್ನು ಕೊಂಡಾಡಿದ್ದಾರೆ.&lt;/p&gt;&lt;h2&gt;&lt;strong&gt;ಸತತ ಎರಡನೇ ರಾಷ್ಟ್ರೀಯ ಮೈಲಿಗಲ್ಲು:&lt;/strong&gt;&lt;/h2&gt;&lt;p&gt;ಗಮನಾರ್ಹ ವಿಷಯವೆಂದರೆ, BWSSB ಕಳೆದ ವರ್ಷವಷ್ಟೇ ಭಾರತೀಯ ಮಾನದಂಡಗಳ ಬ್ಯೂರೋ (BIS) ಪ್ರಮಾಣಪತ್ರ ಪಡೆದ ದೇಶದ ಮೊದಲ ಜಲಮಂಡಳಿಯಾಗಿ ಹೊರಹೊಮ್ಮಿತ್ತು. ಈಗ ISO 50001:2018 ಸೇರ್ಪಡೆಯೊಂದಿಗೆ, ಜಲಮಂಡಳಿಯು ಇಂಧನ ದಕ್ಷತೆ ಮತ್ತು ಗುಣಮಟ್ಟದ ಸೇವೆಯಲ್ಲಿ ದ್ವಿಪದಕ ಗೆದ್ದಂತಾಗಿದೆ. ಇದು ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಹವಾಮಾನ-ಸ್ಥಿತಿಸ್ಥಾಪಕ (Climate-resilient) ಹಾಗೂ ಸುಸ್ಥಿರ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.&lt;/p&gt;&lt;p&gt;ಬೆಂಗಳೂರು ಜಲಮಂಡಳಿಯ ಈ ಸಾಧನೆಯು ದೇಶದ ಇತರ ರಾಜ್ಯಗಳ ಜಲಮಂಡಳಿಗಳಿಗೆ ಮಾದರಿಯಾಗಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/bengaluru-bwssb-first-water-board-india-to-get-iso-50001-2018-certification-dk-shivakumar-sat/articleshow-26u4mop"/>
        </item>
        <item>
            <title><![CDATA[ಪದೇ ಪದೇ ಸಿದ್ದರಾಮಯ್ಯ ಆಪ್ತರ ಟಾರ್ಗೆಟ್; ರಕ್ಷಣೆಗೆ ಮುಂದಾಗದ ಸಿಎಂ, ಆಪ್ತರಿಂದಲೇ ಬಹಿರಂಗ ಅಸಮಾಧಾನ!]]></title>
            <link>https://kannada.asianetnews.com/state/cm-s-aides-targeted-repeatedly-what-reason-behind-siddaramaiah-s-silence/articleshow-ct622hy</link>
            <guid isPermaLink="true">https://kannada.asianetnews.com/state/cm-s-aides-targeted-repeatedly-what-reason-behind-siddaramaiah-s-silence/articleshow-ct622hy</guid>
            <pubDate>Fri, 17 Apr 2026 12:45:33 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದ ನಾಯಕರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಚರ್ಚೆ ಕಾಂಗ್ರೆಸ್&zwnj;ನಲ್ಲೇ ಶುರುವಾಗಿದೆ. ಈ ಷಡ್ಯಂತ್ರದ ನಡುವೆಯೂ ಸಿಎಂ ತಮ್ಮ ಆಪ್ತರ ರಕ್ಷಣೆಗೆ ನಿಲ್ಲದೆ ಮೌನ ವಹಿಸಿರುವುದು ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ &amp;nbsp;ಆತಂಕಕ್ಕೆ ಕಾರಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpd4e4reqsw40dzqxj6zwhga,imgname-----------------------2026-04-17t124020.451-1776409842446.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ರಾಜ್ಯ ರಾಜಕೀಯದಲ್ಲೀಗ ಹೊಸದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ಯಂತ ಆಪ್ತರು ಎಂದು ಗುರುತಿಸಿಕೊಂಡಿರುವ ನಾಯಕರನ್ನು ಪದೇ ಪದೇ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗೆ ಆರೋಪಿಸುತ್ತಿರುವವರು ವಿರೋಧ ಪಕ್ಷಗಳ ನಾಯಕರಲ್ಲ ಬದಲಾಗಿ ಆಡಳಿತ ಪಕ್ಷದ ನಾಯಕರಲ್ಲೇ ಇಂಥ ಆರೋಪ, ಚರ್ಚೆಗಳು ನಡೆಯಲಾರಂಭಿಸಿವೆ. ಸಿದ್ದರಾಮಯ್ಯ ಅವರ ಬಲವನ್ನು ಕುಗ್ಗಿಸಲು ಈ ರೀತಿ ಷಡ್ಯಂತ್ರ ನಡೆಯುತ್ತಿದೆ. ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಆತಂಕ, ಅಸಮಾಧಾನಕ್ಕೆ ಕಾರಣವಾಗಿದೆ.&lt;/p&gt;&lt;h2&gt;ಆಪ್ತರ ರಕ್ಷಣೆಗೆ ಮುಂದಾಗದ ಸಿಎಂ&lt;/h2&gt;&lt;p&gt;ಸಿಎಂ ಆಪ್ತರೆಂದೇ ಗುರುತಿಸಿಕೊಂಡಿರುವ ಕೆಲವು ನಾಯಕರ ಮೇಲೆ ಈಗಾಗಲೇ ಟಾರ್ಗೆಟ್ ಮಾಡಲಾಗಿದೆ. ಇನ್ನು ಕೆಲವರ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಮಾತುಗಳು ಆಪ್ತಬಳಗದಲ್ಲಿ ಕೇಳಿಬರುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಸಿದ್ದರಾಮಯ್ಯ ಅವರು ಆಪ್ತರ ರಕ್ಷಣೆಗೆ ನಿಲ್ಲುತ್ತಿಲ್ಲ, ಆಪ್ತರ ವಿಷಯದಲ್ಲಿ ಗಟ್ಟಿ ನಿಲುವು ತಾಳುತ್ತಿಲ್ಲ ಎಂಬ ಬಹಿರಂಗ ಅಸಮಾಧಾನಕ್ಕೆ ಕಾರಣವಾಗಿದೆ.&lt;/p&gt;&lt;h3&gt;ಹೈಕಮಾಂಡ್ ಮುಂದೆ ಸಿಎಂ ಅಸಹಾಯಕತೆ?&lt;/h3&gt;&lt;p&gt;ಆಪ್ತರ ವಿರುದ್ಧ ಯಾವುದೇ ಕಠಿಣ ಕ್ರಮಗಳು ಜರುಗಿಸುವಾಗ ಅಥವಾ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳಾಗುವಾಗ ಸಿದ್ದರಾಮಯ್ಯ ಅವರು ಅಸಹಾಯಕರಂತೆ ವರ್ತಿಸುತ್ತಿದ್ದಾರೆ, ತಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತೆ ಮೌನಕ್ಕೆ ಜಾರಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಆಪ್ತರ ರಕ್ಷಣೆಗೆ ಏನು ಕ್ರಮ ಕೈಗೊಳ್ಳುತ್ತಿಲ್ಲ. ಇದು ಅವರ ಅಸಹಾಯಕತೆ ತೋರಿಸುತ್ತಿದೆ. ಹೀಗಾದರೆ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಭಾರೀ ಹಿನ್ನಡೆ ಆಗಬಹುದು. ಪಕ್ಷಕ್ಕೆ ಹಗಲಿರುಳು ದುಡಿದವರನ್ನೇ ಉದ್ದೇಶಪೂರ್ವಕ ಟಾರ್ಗೆಟ್ ಮಾಡಿದರೆ ಪಕ್ಷ ಸಂಘಟನೆ ಹೇಗೆ ಸಾಧ್ಯ ಇಂಥ ಸಂದರ್ಭದಲ್ಲಿ ಸಿಎಂ ಆಪ್ತರನ್ನ ಸಮರ್ಥಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಕಠಿಣ ಪರಿಸ್ಥಿತಿ ಎದುರಾದಾಗ ಅವರು ಕೈ ಕಟ್ಟಿ ಕುಳಿತಿರುವುದು ಅವರ ಆಪ್ತರ ಬೇಸರಕ್ಕೆ ಕಾರಣವಾಗಿದೆ.&lt;/p&gt;&lt;p&gt;&lt;strong&gt;ಸಮುದಾಯಗಳ ಆಕ್ರೋಶ ಮತ್ತು ಹಿನ್ನಡೆ&lt;/strong&gt;&lt;/p&gt;&lt;p&gt;ಈ ಬೆಳವಣಿಗೆ ಕೇವಲ ವ್ಯಕ್ತಿಗಳ ಮೇಲಿನ ಟಾರ್ಗೆಟ್ ಆಗಿ ಉಳಿದಿಲ್ಲ. ಹೀಗೆ ಗುರಿಯಾಗುತ್ತಿರುವ ನಾಯಕರು ಬೇರೆ ಬೇರೆ ಸಮುದಾಯಗಳನ್ನ ಪ್ರತಿನಿಧಿಸುತ್ತಿರುವುದರಿಂದ ಆಯಾ ಸಮುದಾಯಗಳು ಈಗ ಕಾಂಗ್ರೆಸ್ ವಿರುದ್ಧ ತಿರುಗಿ ಬೀಳುವ ಸಾಧ್ಯತೆ ದಟ್ಟವಾಗಿದೆ. ಪಕ್ಷಕ್ಕಾಗಿ ಹಗಲಿರುಳು ದುಡಿದವರನ್ನು ಹೀಗೆ ಮೂಲೆಗುಂಪು ಮಾಡಿದರೆ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಭಾರೀ ಹಿನ್ನಡೆಯಾಗಲಿದೆ ಎಂಬ ಎಚ್ಚರಿಕೆ ನೀಡುತ್ತಿದ್ದಾರೆ.&lt;/p&gt;&lt;p&gt;&lt;strong&gt;ಆಪ್ತರಿಗೆ ಆಘಾತ:&lt;/strong&gt;&lt;/p&gt;&lt;p&gt;ತಮ್ಮ ನಾಯಕ ಸಿದ್ದರಾಮಯ್ಯ ಎಂಥ ಸಂದರ್ಭದಲ್ಲೂ ನಮ್ಮ ಕೈಬಿಡುವುದಿಲ್ಲ ಎಂದು ಅವರ ಮೇಲೆ ಅಪಾರ ನಂಬಿಕೆ ಇಟ್ಟಿದ್ದ ಆಪ್ತರು ಈಗ ತೀವ್ರ ಆಘಾತಕ್ಕೊಳಗಾಗಿದ್ದಾರೆ. ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿದಾಗ ನಾಯಕನೇ ರಕ್ಷಿಸದಿದ್ದರೆ ಮುಂದೆ ದಾರಿ ಏನು ಎಂಬ ಪ್ರಶ್ನೆ ಅವರ ಮುಂದಿದೆ. ಸಿದ್ದರಾಮಯ್ಯ ಅವರ ಈ ನಿಗೂಢ ಮೌನ ಮತ್ತು ಅಸಹಾಯಕತೆ ರಾಜ್ಯ ರಾಜಕಾರಣದಲ್ಲಿ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>state</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/cm-s-aides-targeted-repeatedly-what-reason-behind-siddaramaiah-s-silence/articleshow-ct622hy"/>
        </item>
        <item>
            <title><![CDATA[ಕ್ಷೇತ್ರ ವಿಂಗಡಣೆ: ಕನ್ನಡಿಗರ ಪಾಲೇ ಕಡಿಮೆ ಆಗುತ್ತೆ, ಅದನ್ನೇಕೆ ಹೇಳ್ತಿಲ್ಲ?: ಕರವೇ  ನಾರಾಯಣಗೌಡ]]></title>
            <link>https://kannada.asianetnews.com/state/delimitation-kannadigas-share-will-decrease-why-isnt-that-being-mentioned-krv-narayana-gowda-rav/articleshow-adgyynd</link>
            <guid isPermaLink="true">https://kannada.asianetnews.com/state/delimitation-kannadigas-share-will-decrease-why-isnt-that-being-mentioned-krv-narayana-gowda-rav/articleshow-adgyynd</guid>
            <pubDate>Fri, 17 Apr 2026 11:41:05 +0530</pubDate>
            <description><![CDATA[&lt;p&gt;ಕ್ಷೇತ್ರ ಪುನರ್ ವಿಂಗಡಣೆ ಜನಸಂಖ್ಯೆ ನಿಯಂತ್ರಿಸಿದ ಕರ್ನಾಟಕದಂತಹ ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ &amp;nbsp;ಕುಗ್ಗಿಸುವ ಅಪಾಯ ಒಡ್ಡಿದೆ. ಇದು ದಕ್ಷಿಣದ ರಾಜ್ಯಗಳು ತಮ್ಮ ಯಶಸ್ವಿ ಜನಸಂಖ್ಯಾ ನೀತಿಗಾಗಿ ಶಿಕ್ಷೆ ಅನುಭವಿಸಿದಂತೆ ಆಗಲಿದ್ದು, ತೆರಿಗೆ ಹಂಚಿಕೆಯಲ್ಲಿ ಅನ್ಯಾಯವನ್ನು ಮತ್ತಷ್ಟು ಹೆಚ್ಚಿಸಲಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hb75xgzk2ys1w3bg12wkztne,imgname-nray.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಟಿ.ಎ.ನಾರಾಯಣಗೌಡ&lt;/strong&gt;&lt;/p&gt;&lt;p&gt;ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ&lt;/p&gt;&lt;p&gt;ನಾವು ಕನ್ನಡಿಗರು ಅದೇನು ಪಾಪ ಮಾಡಿದ್ದೇವೋ ಎಂಬುದು ಅರ್ಥವಾಗುತ್ತಿಲ್ಲ. ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ನಾವು ಹೋರಾಡಿದೆವು. ಆ ಬಂಧನದಿಂದ ಬಿಡುಗಡೆಯಾದಾಗ ಅತ್ಯಂತ ಸಂತೋಷದಿಂದ ಭಾರತ ಒಕ್ಕೂಟವನ್ನು ಸೇರಿಕೊಂಡೆವು. ರಾಷ್ಟ್ರೀಯ ಮನೋಭಾವವನ್ನು ಬೆಳೆಸಿಕೊಂಡೆವು. ಭಾರತ ಸರ್ಕಾರದ ಕೆಲವು ನಿಲುವುಗಳು ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ನಾವು ಇದೇ ರಾಷ್ಟ್ರೀಯ ಮನೋಭಾವದಿಂದ ಶಿರಬಾಗಿ ಪಾಲಿಸಿದೆವು. ಆದರೆ ನಮಗೆ ಸಿಕ್ಕಿದ್ದೇನು? ಅನ್ಯಾಯಗಳ ಮೇಲೆ ಅನ್ಯಾಯ, ಮಾಡದ ತಪ್ಪಿಗಾಗಿ ಶಿಕ್ಷೆಗಳು.&lt;/p&gt;&lt;p&gt;ಈಗ ಕ್ಷೇತ್ರ ಪುನರ್ ವಿಂಗಡಣೆಯ ತೂಗುಗತ್ತಿ ನಮ್ಮ ಮೇಲೆ ತೂಗುತ್ತಿದೆ. ಈ ಕತ್ತಿ ನೇರವಾಗಿ ನಮ್ಮ ಅಸ್ಮಿತೆಯನ್ನೇ ಸೀಳಿ ಹಾಕಲಿದೆ. ನಮ್ಮ ಧ್ವನಿಯನ್ನು ಕ್ಷೀಣವಾಗುವಂತೆ ಮಾಡಲಿದೆ. ನಮ್ಮ ಸಂಕಟಗಳನ್ನು ಹೆಚ್ಚಿಸುತ್ತಾ ಹೋಗಲಿದೆ. ನಮ್ಮ ಪಾಲಿನ ಹಕ್ಕನ್ನು ನಗಣ್ಯಗೊಳಿಸಲಿದೆ. ನಮ್ಮನ್ನು ಈ ದೇಶದ ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡಲಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ನಮ್ಮ ಹಿತಾಸಕ್ತಿಗೆ ವಿರುದ್ಧವಾಗಿ ಇನ್ನಷ್ಟು ಅಮಾನವೀಯ ಶಾಸನಗಳನ್ನು ರೂಪಿಸಲು ಅವಕಾಶವನ್ನು ಕೊಡಲಿದೆ.&lt;/p&gt;&lt;h2&gt;ನಾವು ಏಕೆ ಸಹಿಸಿಕೊಳ್ಳಬೇಕು?&lt;/h2&gt;&lt;p&gt;ಕೊನೆಯ ಬಾರಿ 1971ರ ಜನಗಣತಿ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಮಾಡಲಾಯಿತು. ಅದರ ನಂತರ 1976ರಲ್ಲಿ ಜನಸಂಖ್ಯಾ ನಿಯಂತ್ರಣಕ್ಕಾಗಿ ಸೀಟುಗಳ ಸಂಖ್ಯೆಯನ್ನು ಸ್ಥಗಿತಗೊಳಿಸಲಾಯಿತು (ಫ್ರೀಜ್). ಈಗ 2026ರ ಜನಗಣತಿ ನಂತರ ಈ ಫ್ರೀಜ್ ತೆಗೆದುಹಾಕಿ ಹೊಸದಾಗಿ ವಿಂಗಡಣೆ ಮಾಡುವ ಯೋಜನೆಯನ್ನು ರೂಪಿಸಲಾಗುತ್ತಿದೆ. ಈಗ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಇಲ್ಲಿ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಶನ್ ಮಸೂದೆಗಳನ್ನು ಚರ್ಚಿಸಲಾಗುತ್ತಿದೆ. ಸರ್ಕಾರ ಲೋಕಸಭಾ ಸದಸ್ಯ ಸ್ಥಾನಗಳನ್ನು 543ರಿಂದ ಸುಮಾರು 850ಕ್ಕೆ ಏರಿಸುವ ಪ್ರಸ್ತಾವವನ್ನು ಮಂಡಿಸಿದೆ.&lt;/p&gt;&lt;p&gt;ಮೊಟ್ಟ ಮೊದಲನೆಯದಾಗಿ ಈ ಕ್ಷೇತ್ರ ಪುನರ್ ವಿಂಗಡಣೆ ಜಾರಿಗೆ ಬಂದರೆ ನಮ್ಮ ರಾಜ್ಯದ ಲೋಕಸಭಾ ಸದಸ್ಯರ ಸಂಖ್ಯೆ ಅಲ್ಪಪ್ರಮಾಣದಲ್ಲಿ ಹೆಚ್ಚಬಹುದು. ಆದರೆ ಇತರ ಉತ್ತರ ರಾಜ್ಯಗಳ ಹೋಲಿಕೆಯಲ್ಲಿ ನಮ್ಮ ಪ್ರಾತಿನಿಧ್ಯದ ಪ್ರಮಾಣ ಗಂಭೀರ ಸ್ವರೂಪದಲ್ಲಿ ಕಡಿಮೆಯಾಗಲಿದೆ. ಇದನ್ನು ನಮ್ಮ ಕೆಲವು ಅರೆಬೆಂದ ರಾಜಕಾರಣಿಗಳು, ಹೈಕಮಾಂಡ್ ಗುಲಾಮಗಿರಿಯ ರೋಗದಿಂದ ಬಳಲುತ್ತಿರುವ ನಾಯಕರು ತಪ್ಪುತಪ್ಪಾಗಿ ವ್ಯಾಖ್ಯಾನ ಮಾಡುತ್ತಾರೆ. ಕರ್ನಾಟಕದ ಲೋಕಸಭಾ ಸದಸ್ಯರ ಸಂಖ್ಯೆ ಹೆಚ್ಚುತ್ತದೆಯಲ್ಲ, ಏನು ಸಮಸ್ಯೆ ಎಂದು ಪ್ರಶ್ನಿಸುತ್ತಾರೆ. ಆದರೆ ನಮ್ಮ ಪಾಲು (ರಿಲೇಟಿವ್ ಶೇರ್) ಕುಗ್ಗುತ್ತದೆ ಎಂಬುದನ್ನು ಅವರು ಮರೆಮಾಚುತ್ತಾರೆ.&lt;/p&gt;&lt;h3&gt;ದಕ್ಷಿಣಕ್ಕೆ &lsquo;ಶಿಕ್ಷೆ&rsquo; ತಪ್ಪಿಸಿದ್ದ ಇಂದಿರಾ&lt;/h3&gt;&lt;p&gt;ಕ್ಷೇತ್ರ ವಿಂಗಡಣೆಗೆ ಸಂಬಂಧಿಸಿದಂತೆ ಚರ್ಚೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಬಹಳ ಮುಖ್ಯವಾಗಿ ಇಂದಿರಾಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರುಗಳ ಕಾಲಘಟ್ಟದಲ್ಲಿ ಆದ ತೀರ್ಮಾನಗಳನ್ನು ನಾವು ಗಮನಿಸಬೇಕು. ತುರ್ತುಪರಿಸ್ಥಿತಿ ಸಮಯದಲ್ಲಿ ಇಂದಿರಾ ಗಾಂಧಿ ಅವರ ಸರ್ಕಾರ 42ನೇ ಸಂವಿಧಾನ ತಿದ್ದುಪಡಿ ತಂದು ಲೋಕಸಭಾ ಮತ್ತು ರಾಜ್ಯ ವಿಧಾನಸಭೆಗಳ ಸೀಟುಗಳನ್ನು 1971ರ ಜನಗಣತಿ ಆಧಾರದಲ್ಲಿ ಸ್ಥಗಿತ(ಫ್ರೀಜ್)ಗೊಳಿಸಿತು. ಇದು 2001ರ ಜನಗಣತಿಯವರೆಗೆ ಮುಂದುವರಿಯುವಂತೆ ಮಾಡಲಾಯಿತು.&lt;/p&gt;&lt;p&gt;ಹೀಗೆ ಫ್ರೀಜ್ ಮಾಡುವುದರ ಹಿಂದಿನ ಉದ್ದೇಶ ಸ್ಪಷ್ಟವಾಗಿತ್ತು. ಜನಸಂಖ್ಯಾ ನಿಯಂತ್ರಣ (ಫ್ಯಾಮಿಲಿ ಪ್ಲಾನಿಂಗ್) ಕಾರ್ಯಕ್ರಮಗಳನ್ನು ರಾಜ್ಯಗಳು ಯಶಸ್ವಿಯಾಗಿ ಅನುಸರಿಸುವಂತೆ ಪ್ರೋತ್ಸಾಹಿಸುವುದಾಗಿತ್ತು. ದಕ್ಷಿಣ ಭಾರತದ ರಾಜ್ಯಗಳು ರಾಷ್ಟ್ರೀಯ ಜನಸಂಖ್ಯಾ ನೀತಿಯನ್ನು ಚೆನ್ನಾಗಿ ಅನುಸರಿಸಿ ಜನಸಂಖ್ಯೆ ನಿಯಂತ್ರಿಸಿದ್ದವು. ಅವುಗಳ ಲೋಕಸಭಾ ಸದಸ್ಯ ಸ್ಥಾನಗಳು ಕಡಿಮೆಯಾಗುವುದು ಅನ್ಯಾಯ ಎಂದು ಭಾವಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಉತ್ತರ ಭಾರತದಲ್ಲಿ ಅಲ್ಪ ಪ್ರಮಾಣದಲ್ಲಿ ಜನಸಂಖ್ಯಾ ನಿಯಂತ್ರಣ ಕಡಿಮೆಯಾಗಿದ್ದರೂ, ದಕ್ಷಿಣದ ಯಶಸ್ಸನ್ನು ಶಿಕ್ಷಿಸಬಾರದು ಎಂಬುದು ಗುರಿಯಾಗಿತ್ತು.&lt;/p&gt;&lt;p&gt;&lt;strong&gt;ವಾಜಪೇಯಿ ವಿವೇಕಯುತ ನಡೆ&lt;/strong&gt;&lt;/p&gt;&lt;p&gt;2001ರಲ್ಲಿ ಫ್ರೀಜ್ ಅವಧಿ ಮುಗಿಯುವ ಸಮಯ ಬಂದಾಗ, ವಾಜಪೇಯಿ ಅವರ ಎನ್&zwnj;ಡಿಎ ಸರ್ಕಾರ 84ನೇ ಸಂವಿಧಾನ ತಿದ್ದುಪಡಿ ತಂದು ಈ ಸ್ಥಗಿತವನ್ನು 2026ರ ನಂತರದ ಮೊದಲ ಜನಗಣತಿಯವರೆಗೆ ವಿಸ್ತರಿಸಿತು. ಅಂದು ಕಾನೂನು ಸಚಿವ ಅರುಣ್ ಜೇಟ್ಲಿ ಅವರು ಸಂಸತ್ತಿನಲ್ಲಿ ಬಹಳ ಸ್ಪಷ್ಟವಾಗಿ ಹೀಗೆ ಹೇಳಿದ್ದರು: &ldquo;ಕೆಲವು ರಾಜ್ಯಗಳು ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವನ್ನು ಬಹಳ ಯಶಸ್ವಿಯಾಗಿ ಅನುಸರಿಸಿವೆ, ಕೆಲವು ಅನುಸರಿಸಿಲ್ಲ. ರಾಷ್ಟ್ರೀಯ ಜನಸಂಖ್ಯಾ ನೀತಿ 2026ರಲ್ಲಿ ಜನಸಂಖ್ಯೆ ಸ್ಥಿರೀಕರಣವನ್ನು ಗುರಿಯಾಗಿಟ್ಟುಕೊಂಡಿದೆ. ಆದ್ದರಿಂದ ಮತ್ತೆ 25 ವರ್ಷಗಳ ಕಾಲ ಫ್ರೀಜ್ ಮುಂದುವರಿಸುತ್ತೇವೆ.ʼʼ ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರವೂ ಅತ್ಯಂತ ವಿವೇಕಯುತವಾಗಿ ನಡೆದುಕೊಂಡು ದಕ್ಷಿಣದ ರಾಜ್ಯಗಳಿಗೆ ಆಗಬಹುದಾಗಿದ್ದ ಅನ್ಯಾಯವನ್ನು ತಪ್ಪಿಸಿತ್ತು. ಈ ಎರಡು ಐತಿಹಾಸಿಕ ನಿರ್ಧಾರಗಳು ದಕ್ಷಿಣ ಭಾರತದ ಜನರು ಮತ್ತು ನಾಯಕರು ಮಾಡಿದ ತ್ಯಾಗವನ್ನು ಗೌರವಿಸುವಂತಿದ್ದವು.&lt;/p&gt;&lt;p&gt;ದಕ್ಷಿಣ ಭಾರತದ ರಾಜ್ಯಗಳು (ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ) ದಶಕಗಳಿಂದ ಜನಸಂಖ್ಯಾ ನಿಯಂತ್ರಣದಲ್ಲಿ ಯಶಸ್ಸು ಕಂಡಿವೆ. ಟೋಟಲ್ ಫರ್ಟಿಲಿಟಿ ರೇಟ್ (TFR &ndash; ಪ್ರತಿ ಮಹಿಳೆಗೆ ಸರಾಸರಿ ಮಕ್ಕಳ ಸಂಖ್ಯೆ):&lt;/p&gt;&lt;p&gt;&lt;strong&gt;- ಕೇರಳ ಮತ್ತು ತಮಿಳುನಾಡು: 1.8&lt;/strong&gt;&lt;/p&gt;&lt;p&gt;- ಆಂಧ್ರ, ತೆಲಂಗಾಣ, ಕರ್ನಾಟಕ: 1.7ರ ಸುಮಾರು&lt;/p&gt;&lt;p&gt;ಇದು ರಾಷ್ಟ್ರೀಯ ಸರಾಸರಿ 2.0ಕ್ಕಿಂತ ಕಡಿಮೆ.&lt;/p&gt;&lt;p&gt;ಉತ್ತರ ಭಾರತದಲ್ಲಿ: ಬಿಹಾರ 3.0+, ಉತ್ತರ ಪ್ರದೇಶ 2.7! ಇದು ಏನನ್ನು ಹೇಳುತ್ತಿದೆ ಎಂದರೆ ಉತ್ತರದ ಜನಸಂಖ್ಯೆ ಬೆಳೆಯುತ್ತಿದೆ, ದಕ್ಷಿಣ ಭಾರತದಲ್ಲಿ ಸ್ಥಿರವಾಗುತ್ತಿದೆ ಅಥವಾ ಕುಸಿಯುತ್ತಿದೆ. ಜಾಗತಿಕ ಸರಾಸರಿಯ ಮಾನದಂಡವಾದ 2.1 ಸರಾಸರಿಗಿಂತ ಕರ್ನಾಟಕದ (ಕನ್ನಡಿಗರ) ಜನಸಂಖ್ಯೆ ತೀವ್ರ ಪ್ರಮಾಣದಲ್ಲಿ ಕುಸಿಯುತ್ತಿದ್ದು 1.7 ತಲುಪಿದೆ. ಇದೇ ಸಂದರ್ಭದಲ್ಲಿ ಉತ್ತರದ ರಾಜ್ಯಗಳಲ್ಲಿ ಅದು ಅಪಾಯಕಾರಿ ಮಟ್ಟದಲ್ಲಿಯೇ ಇದೆ.&lt;/p&gt;&lt;p&gt;ಕ್ಷೇತ್ರ ಪುನರ್ ವಿಂಗಡಣೆಯ ನಂತರ ಲೋಕಸಭಾ ಸ್ಥಾನಗಳು 543ರಲ್ಲೇ ಉಳಿದರೆ: ದಕ್ಷಿಣ ರಾಜ್ಯಗಳು ಒಟ್ಟು 24-27 ಸೀಟುಗಳನ್ನು ಕಳೆದುಕೊಳ್ಳಬಹುದು (ತಮಿಳುನಾಡು -9, ಕೇರಳ -6, ಕರ್ನಾಟಕ -3, ಆಂಧ್ರ -4, ತೆಲಂಗಾಣ -2). ಒಂದು ವೇಳೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಿದರೆ ಉತ್ತರ ಪ್ರದೇಶ 80ರಿಂದ 120+, ಬಿಹಾರ 40ರಿಂದ 60+ಕ್ಕೆ ಏರಬಹುದು. ದಕ್ಷಿಣದ ಸ್ಥಾನಗಳ ಪಾಲು 24%ರಿಂದ 19%ಕ್ಕೆ ಕುಸಿಯುತ್ತದೆ. ಕರ್ನಾಟಕಕ್ಕೆ ಕೆಲವು ಹೆಚ್ಚಿನ ಸ್ಥಾನಗಳು ಸಿಗಬಹುದು. ಆದರೆ ಲೋಕಸಭೆಯಲ್ಲಿ ಪ್ರಾತಿನಿಧ್ಯದ ಪ್ರಮಾಣ ದೊಡ್ಡಮಟ್ಟದಲ್ಲಿ ಕುಸಿಯುತ್ತದೆ. ಇದು ದಕ್ಷಿಣದ ಇತರ ರಾಜ್ಯಗಳಿಗೂ ಅನ್ವಯಿಸುತ್ತದೆ.&lt;/p&gt;&lt;p&gt;&lt;strong&gt;ಇದು ಯಾವ ಸೀಮೆಯ ನ್ಯಾಯ?&lt;/strong&gt;&lt;/p&gt;&lt;p&gt;ದಕ್ಷಿಣವು ದೇಶದ ಜಿಡಿಪಿಗೆ 30-35% ಕೊಡುಗೆ ನೀಡುತ್ತದೆ. ಅತಿ ಹೆಚ್ಚು ತೆರಿಗೆಯನ್ನು ನೀಡುತ್ತದೆ. ಈಗ ಕರ್ನಾಟಕದ ಉದಾಹರಣೆಯನ್ನು ತೆಗೆದುಕೊಳ್ಳೋಣ. ಕರ್ನಾಟಕ ಭಾರತ ಸರ್ಕಾರಕ್ಕೆ ನೀಡುವ ಎಲ್ಲ ಬಗೆಯ ತೆರಿಗೆಗಳು (Direct Tax, GST, Customs, Excise, Cess, Surcharge ಎಲ್ಲವೂ ಸೇರಿ) ಮತ್ತು ಕೇಂದ್ರದಿಂದ ಹಿಂತಿರುಗುವ ಹಣದ ಅನುಪಾತವನ್ನು ಸರಾಸರಿಯಾಗಿ ಹೇಳುವುದಾದರೆ ಕರ್ನಾಟಕ ಪ್ರತಿ ವರ್ಷ ಕೇಂದ್ರಕ್ಕೆ ಸುಮಾರು ₹4.3 ಲಕ್ಷ ಕೋಟಿ ರುಪಾಯಿ (₹4,30,000 ಕೋಟಿ) ತೆರಿಗೆಯ ರೂಪದಲ್ಲಿ ಕೊಡುತ್ತದೆ. ಕೇಂದ್ರದಿಂದ ಕರ್ನಾಟಕಕ್ಕೆ ಹಿಂತಿರುಗುವುದು (Tax Devolution + Grants) ಸುಮಾರು ₹50,000 ಕೋಟಿ ರುಪಾಯಿ ಮಾತ್ರ (ಕೆಲವು ವರ್ಷಗಳಲ್ಲಿ ₹45,000 ರಿಂದ ₹79,000 ಕೋಟಿವರೆಗೆ ಇದೆ). ಸರಾಸರಿ ಅನುಪಾತ ನೋಡುವುದಾದರೆ ಭಾರತ ಸರ್ಕಾರಕ್ಕೆ ನಾವು ₹100 ಕೊಟ್ಟರೆ ಕರ್ನಾಟಕಕ್ಕೆ ಹಿಂದಿರುಗುವುದು ₹12 ರಿಂದ ₹15 ಮಾತ್ರ.&lt;/p&gt;&lt;p&gt;ಇದೇ ಸಂದರ್ಭದಲ್ಲಿ ಕೇಂದ್ರದಿಂದ ತೆರಿಗೆ ಹಂಚಿಕೆ (Tax Devolution)ಯಲ್ಲಿ ಉತ್ತರ ಪ್ರದೇಶ ರಾಜ್ಯವು ಸುಮಾರು 15.8% ಪಾಲು ಪಡೆಯುತ್ತದೆ. ಸರಾಸರಿ ಅನುಪಾತ ನೋಡುವುದಾದರೆ ಭಾರತ ಸರ್ಕಾರಕ್ಕೆ ಉತ್ತರ ಪ್ರದೇಶ ರಾಜ್ಯವು ತೆರಿಗೆ ರೂಪದಲ್ಲಿ ₹100 ಕೊಟ್ಟರೆ ಸುಮಾರು ₹170 ರಿಂದ ₹200 ಅವರಿಗೆ ವಾಪಸ್&zwnj; ಬರುತ್ತದೆ. ಬಿಹಾರ ರಾಜ್ಯದ ಕತೆಯೂ ಹೀಗೇ ಇದೆ. ಬಿಹಾರ ರಾಜ್ಯವು ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಸುಮಾರು 9.9% ರಿಂದ 10% ಪಾಲು ಪಡೆಯುತ್ತದೆ. ಸರಾಸರಿ ಅನುಪಾತ ನೋಡುವುದಾದರೆ ಪ್ರತಿ ₹100 ತೆರಿಗೆ ಕೊಟ್ಟರೆ ಸುಮಾರು ₹300 ರಿಂದ ₹700 ಬಿಹಾರಕ್ಕೆ ಹಿಂದಿರುಗುತ್ತದೆ!&lt;/p&gt;&lt;p&gt;ಇದನ್ನು ನಾವು ಯಾವ ಸೀಮೆಯ ನ್ಯಾಯ ಎಂದು ಕರೆಯಬೇಕು? ಜನಸಂಖ್ಯಾ ನಿಯಂತ್ರಣ ಮಾಡಿಕೊಂಡ ನಾವು ಶಿಕ್ಷೆ ಅನುಭವಿಸಬೇಕು, ನಿಯಂತ್ರಣ ಮಾಡಿಕೊಳ್ಳದ ರಾಜ್ಯಗಳು ಬಂಪರ್&zwnj; ಕೊಡುಗೆಗಳನ್ನು ಪಡೆಯಬೇಕು!&lt;/p&gt;&lt;p&gt;ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿದ್ದಾರೆ. ದಕ್ಷಿಣ ಭಾರತದ ಶಾಂತಿಯನ್ನು ಕದಡಬೇಡಿ, ಇಲ್ಲಿ ಕ್ಷೋಭೆಯನ್ನು ಹೊತ್ತಿಸಬೇಡಿ ಎಂದು ಎಚ್ಚರಿಸಿದ್ದಾರೆ. ಎಲ್ಲ ದಕ್ಷಿಣ ರಾಜ್ಯಗಳೊಂದಿಗೆ ಜಂಟಿ ಕ್ರಿಯಾ ಸಮಿತಿ (ಜೆಎಸಿ) ರಚಿಸಿ ಪ್ರತಿಭಟನೆ ಮಾಡುವುದಾಗಿ ಹೇಳುತ್ತಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹ ಡಿಲಿಮಿಟೇಶನ್ ಎಂಬುದು ದಕ್ಷಿಣ ಭಾರತದ ಮೇಲೆ ಡಾಮೋಕ್ಲೀಸ್ ಕತ್ತಿಯಂತೆ ಹೇರಲಾಗುತ್ತಿದೆ. ರಾಷ್ಟ್ರೀಯ ಜನಸಂಖ್ಯಾ ನೀತಿಯನ್ನು ಅನುಸರಿಸಿದ್ದಕ್ಕೆ ನಮಗೆ ಶಿಕ್ಷೆ ಸಿಗುತ್ತಿದೆ ಎಂದು ಹೇಳುತ್ತಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ: ಇದು ನರೇಂದ್ರ ಮೋದಿ ಸರ್ಕಾರ ದಕ್ಷಿಣ ರಾಜ್ಯಗಳ ವಿರುದ್ಧ ನಡೆಸುತ್ತಿರುವ ಸಂಚು. ಜನಸಂಖ್ಯೆ ನಿಯಂತ್ರಿಸಿದ್ದಕ್ಕೆ ನಾವು ಪಡೆದುಕೊಳ್ಳುತ್ತಿರುವ ಶಿಕ್ಷೆ ಎಂದು ಹೇಳುತ್ತಿದ್ದಾರೆ.&lt;/p&gt;&lt;p&gt;ಆದರೆ ಪ್ರಧಾನಿ ಮೋದಿ ಅವರು, ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದು ಮೋಸದ ಮಾತು. ಸೀಟು ಕಳೆದುಕೊಳ್ಳುತ್ತೇವೆ ಎಂಬ ಆತಂಕ ನಮಗಿಲ್ಲ, ನಮಗಿರುವ ಆತಂಕ ನಮ್ಮ ಸ್ಥಾನಗಳ ಪ್ರಮಾಣ ಕುಸಿಯುತ್ತದೆ ಎಂಬುದು. ಅದು ಮೋದಿಯವರಿಗೆ ಗೊತ್ತಿಲ್ಲದ ವಿಷಯವೇನಲ್ಲ.&lt;/p&gt;&lt;p&gt;&lt;strong&gt;ಉತ್ತರ- ದಕ್ಷಿಣ ವಿಭಜನೆ ಇನ್ನಷ್ಟು ಆಳ&lt;/strong&gt;&lt;/p&gt;&lt;p&gt;ಕ್ಷೇತ್ರ ಪುನರ್ ವಿಂಗಡಣೆ ಜಾರಿಯಾದರೆ ಅದರ ಪರಿಣಾಮ ಏನಾಗುತ್ತದೆ ಎಂಬುದನ್ನು ಊಹಿಸಲು ಕಷ್ಟವೇನೂ ಆಗದು. ನಿಸ್ಸಂಶಯವಾಗಿ ಲೋಕಸಭೆಯಲ್ಲಿ ದಕ್ಷಿಣದ ಧ್ವನಿ ಕ್ಷೀಣವಾಗುತ್ತದೆ. ದೇಶದ ಭವಿಷ್ಯವನ್ನು ರೂಪಿಸುವ ಕಾನೂನು, ಬಜೆಟ್, ಯೋಜನೆಗಳು ಉತ್ತರದ ಪ್ರಭಾವಕ್ಕೆ ಒಳಗಾಗುತ್ತವೆ. ಉತ್ತರದ ರಾಜ್ಯಗಳು ಈಗಾಗಲೇ ಸಿಂಹಪಾಲನ್ನು ಪಡೆಯುತ್ತಿವೆ. ಅದು ದುಪ್ಪಟ್ಟಾಗುತ್ತದೆ. ದಕ್ಷಿಣದ ಕೃಷಿ, ಉದ್ಯಮ, ನೀರಾವರಿ, ತಂತ್ರಜ್ಞಾನ, ಮೂಲ ಸೌಕರ್ಯ ಅಭಿವೃದ್ಧಿ ಸೇರಿದಂತೆ ಎಲ್ಲ ಯೋಜನೆಗಳು ನಿರ್ಲಕ್ಷಕ್ಕೆ ಒಳಗಾಗುತ್ತವೆ.&lt;/p&gt;&lt;p&gt;ಕ್ಷೇತ್ರ ಪುನರ್ ವಿಂಗಡಣೆ ಜಾರಿಯಾದರೆ ಪ್ರಾದೇಶಿಕ ಅಸಮಾನತೆ ಇನ್ನಷ್ಟು ಹೆಚ್ಚುತ್ತದೆ. ದಕ್ಷಿಣವು ಹೆಚ್ಚು ತೆರಿಗೆ ಕೊಡುತ್ತದೆ, ಆದರೆ ಪ್ರಾತಿನಿಧ್ಯ ಕಡಿಮೆಯಾದರೆ ಕೇಂದ್ರ ನೆರವು ಇನ್ನಷ್ಟು ಕಡಿಮೆಯಾಗುತ್ತದೆ. ಇದು ಆರ್ಥಿಕ ಅಸಮತೋಲನಕ್ಕೆ ಕಾರಣವಾಗುತ್ತದೆ.&lt;/p&gt;&lt;p&gt;ಮತ್ತೊಂದು ಬಹಳ ಮುಖ್ಯವಾದ ಅಂಶವೆಂದರೆ ಭಾರತದ ಒಕ್ಕೂಟ ವ್ಯವಸ್ಥೆ ದುರ್ಬಲವಾಗುತ್ತದೆ. ಎಲ್ಲ ರಾಜ್ಯಗಳಿಗೆ ಸಮಾನ ಗೌರವ ಬೇಕು ಎಂಬ ನೀತಿ ಮೂಲೆಗೆ ಸೇರುತ್ತದೆ. ಅಷ್ಟೇ ಅಲ್ಲ ಉತ್ತರ-ದಕ್ಷಿಣ ವಿಭಜನೆಯನ್ನು ಇನ್ನಷ್ಟು ಆಳವಾಗಿಸುತ್ತದೆ.&lt;/p&gt;&lt;p&gt;ನಾವು ಅತ್ಯಂತ ಗಂಭೀರವಾಗಿ ಚಿಂತಿಸಬೇಕಾದ ಮತ್ತೊಂದು ಆಯಾಮವೂ ಇದೆ. ಇದು ದೇಶದ ಏಕತೆಗೆ ಧಕ್ಕೆ ತರುತ್ತದೆ. ದಕ್ಷಿಣದ ಜನರು ಈ ಅನ್ಯಾಯಗಳ ವಿರುದ್ಧ ಸಿಡಿದು ನಿಂತರೆ ಅದು ದೇಶದ ಒಗ್ಗಟ್ಟಿಗೆ ಮಾರಕವಾಗಲಿದೆ.&lt;/p&gt;&lt;p&gt;&lt;strong&gt;ಇದಕ್ಕೆಲ್ಲಾ ಪರಿಹಾರ ಏನು?&lt;/strong&gt;&lt;/p&gt;&lt;p&gt;ಹಾಗಿದ್ದರೆ ಇದಕ್ಕೆ ಪರಿಹಾರವೇನು ಎಂದು ಹಲವರು ಪ್ರಶ್ನಿಸಬಹುದು. ಜನಸಂಖ್ಯಾ ನಿಯಂತ್ರಣದಲ್ಲಿ ಎಲ್ಲ ಭಾಗದಲ್ಲೂ ಸ್ಥಿರತೆಯನ್ನು ಕಾಪಾಡಿಕೊಳ್ಳುವವರೆಗೆ ಕ್ಷೇತ್ರ ಪುನರ್ ವಿಂಗಡಣೆಯನ್ನು ಮುಂದೂಡಬೇಕಾಗುತ್ತದೆ. ಉತ್ತರದ ರಾಜ್ಯಗಳಿಗೆ ಇನ್ನೂ ಎಪ್ಪತ್ತೈದು ವರ್ಷಗಳ ಕಾಲಾವಧಿಯನ್ನು ನೀಡಿ, 2100ರವರೆಗೆ ಈಗಿನ ಲೋಕಸಭಾ ಸದಸ್ಯ ಸ್ಥಾನಗಳನ್ನು ಫ್ರೀಜ್ ಮಾಡುವುದು ಉತ್ತಮ. ಅದನ್ನು ಹೊರತಾಗಿ ಇನ್ಯಾವ ಪರಿಹಾರವೂ ಇಲ್ಲ ಎಂಬುದು ಸ್ಪಷ್ಟ. ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಶಿಕ್ಷೆಯನ್ನು ಯಾಕೆ ಅನುಭವಿಸಬೇಕು?&lt;/p&gt;&lt;p&gt;ದಕ್ಷಿಣ ಭಾರತವು ಈಗಾಗಲೇ ದೇಶದ ಹಿತಕ್ಕಾಗಿ ಸಾಕಷ್ಟು ತ್ಯಾಗಗಳನ್ನು ಮಾಡಿವೆ. ನಮ್ಮ ತೆರಿಗೆ ಹಣವು ಉತ್ತರದ ರಾಜ್ಯಗಳಿಗೆ ಹಂಚಿಕೆಯಾದರೂ ದೇಶದ ಒಗ್ಗಟ್ಟಿಗೆ ಧಕ್ಕೆಯಾಗಬಾರದೆಂದು ನಾವು ಹಲ್ಲು ಕಚ್ಚಿ ಸಹಿಸಿಕೊಂಡಿದ್ದೇವೆ. ನಾವು ದೇಶದ ಪ್ರಗತಿಗೆ ಯಾವತ್ತಿಗೂ ಮುಂಚೂಣಿಯಲ್ಲಿ ನಿಂತಿದ್ದೇವೆ. ಜಿಡಿಪಿಯನ್ನು ಹೆಚ್ಚಿಸಿದ್ದೇವೆ, ತಲಾದಾಯವನ್ನು ಹೆಚ್ಚಿಸಿದ್ದೇವೆ. ಜನಸಂಖ್ಯಾ ನಿಯಂತ್ರಣ ಆಗಬೇಕು ಎಂದು ಭಾರತ ಸರ್ಕಾರ ಹೇಳಿದಾಗಿನಿಂದ ಅದನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಜನಸಂಖ್ಯೆಯನ್ನು ಕಡಿಮೆ ಮಾಡಿಕೊಂಡಿದ್ದೇವೆ. ಇಷ್ಟಾದ ಮೇಲೂ ನಾವು ಇನ್ನೇನು ತ್ಯಾಗ ಮಾಡಬೇಕು?&lt;/p&gt;&lt;p&gt;ಉತ್ತರದ ರಾಜ್ಯಗಳ ಜನಸಂಖ್ಯಾ ಸ್ಫೋಟದಿಂದಾಗಿ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅಲ್ಲಿಂದ ಮಹಾವಲಸೆ ಅಬಾಧಿತವಾಗಿ ನಡೆಯುತ್ತಿದೆ. ಈ ವಲಸೆ ಇದೇ ಪ್ರಮಾಣದಲ್ಲಿ ನಡೆದರೆ ಮುಂದಿನ ಐವತ್ತು ವರ್ಷಗಳಲ್ಲಿ ಕನಿಷ್ಠ ಇಪ್ಪತ್ತು ಕೋಟಿ ಉತ್ತರ ಭಾರತೀಯರನ್ನು ದಕ್ಷಿಣ ಭಾರತಕ್ಕೆ ಕಳುಹಿಸುವ ಸಾಧ್ಯತೆ ಇದೆ. ಈ ಮಹಾವಲಸೆಯು ಈಗಾಗಲೇ ನಮ್ಮ ಅಸ್ಮಿತೆಯನ್ನು ನಾಶಮಾಡುತ್ತಿದೆ. ಇದು ಇನ್ನಷ್ಟು ತೀವ್ರವಾಗುತ್ತ ಹೋಗಲಿದೆ. ಇದರ ನಡುವೆ ಕ್ಷೇತ್ರ ಪುನರ್ ವಿಂಗಡಣೆಯ ಹೆಸರಿನಲ್ಲಿ ಭಾರತ ಸರ್ಕಾರ ನಮ್ಮ ಕುತ್ತಿಗೆಯ ಮೇಲೆ ಕಾಲಿಟ್ಟಿದೆ. ಈಗ ನಾವೇನು ಮಾಡಬೇಕು? ಯಾರ ಮೊರೆ ಹೋಗಬೇಕು?&lt;/p&gt;&lt;p&gt;ನಿಜ, ಭಾರತ ಮಾತೆಯನ್ನು ನಾವು ತಾಯಿ ಎಂದು ಆರಾಧಿಸಿದೆವು. ಆದರೆ ತಾಯ ಮೊಲೆ ಹಾಲು ನಂಜಾಗಿ ಹೋದರೆ ಏನು ಮಾಡುವುದು?&lt;/p&gt;&lt;p&gt;ಆದರೆ ಜನಸಾಮಾನ್ಯರ ಸಿಟ್ಟು ರಟ್ಟೆಗೆ ಬಂದರೆ ಅದನ್ನು ತಡೆಹಿಡಿಯುವವರು ಯಾರು? ದಕ್ಷಿಣ ಭಾರತ ಒಂದೇ ಬಾರಿಗೆ ಸಿಡಿದೆದ್ದು ನಿಂತರೆ ಅದರ ಹೊಡೆತವನ್ನು ನರೇಂದ್ರ ಮೋದಿಯವರ ಸರ್ಕಾರ ತಡೆದುಕೊಳ್ಳುವುದೇ? ಅಥವಾ ನಮ್ಮ ಮೇಲೂ ಮಿಲಿಟರಿಯನ್ನು ಬಿಟ್ಟು ನಮ್ಮ ಧ್ವನಿಯನ್ನು ಹತ್ತಿಕ್ಕುವುದೇ?&lt;/p&gt;&lt;p&gt;ಸನ್ನಿವೇಶ ನಿಜಕ್ಕೂ ಗಂಭೀರವಾಗಿದೆ. ನಮ್ಮನ್ನು ಆಳುವ ಜನರಿಗೆ ಆ ದೇವರು ಸದ್ಬುದ್ಧಿಯನ್ನು ಕೊಡಲಿ. ಇಂದಿರಾಗಾಂಧಿ, ವಾಜಪೇಯಿ ಅವರು ತೋರಿದ ವಿವೇಕವನ್ನು ನರೇಂದ್ರ ಮೋದಿಯವರೂ ತೋರುವಂತಾಗಲಿ ಎಂದು ಆಶಿಸುತ್ತೇನೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/delimitation-kannadigas-share-will-decrease-why-isnt-that-being-mentioned-krv-narayana-gowda-rav/articleshow-adgyynd"/>
        </item>
        <item>
            <title><![CDATA[ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್]]></title>
            <link>https://kannada.asianetnews.com/state/justice-served-shivamogga-court-sentences-five-for-assault-and-criminal-intimidation/articleshow-o8lln1p</link>
            <guid isPermaLink="true">https://kannada.asianetnews.com/state/justice-served-shivamogga-court-sentences-five-for-assault-and-criminal-intimidation/articleshow-o8lln1p</guid>
            <pubDate>Fri, 17 Apr 2026 11:23:17 +0530</pubDate>
            <description><![CDATA[&lt;p&gt;ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್ ಸಂಬಂಧ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಕಟಿಸಿದೆ. ಏನಿದು ಪ್ರಕರಣ?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01khadhzj3jrk4f60tggjf2m7a,imgname-uttar-pradesh-sonbhadra-minor-girl-rape-father-life-imprisonment-pocso-court-verdict-india-news-1-1770950032963.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.17) &lt;/strong&gt;ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ ಯೋಗೇಶ್ ಗೌಡ ಕೊಲೆ ಪ್ರಕರಣ ಹಾಗೂ ವಿನಯ್ ಕುಲಕರ್ಣಿ ಶಿಕ್ಷೆ ಕೇಸ್ ನಡುವೆ ಇದೀಗ ಶಿವಮೊಗ್ಗದ ಅಂತರಗಂಗೆಯಲ್ಲಿ ನಡೆದಿದ್ದ ಹಲ್ಲೆ ಹಾಗೂ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ నిందిసి, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಧಲ್ಲಿ ಅಪರಾಧಿಗಳಿಗೆ 2 ವರ್ಷ ಜೈಲು ಶಿಕ್ಷೆ ಜೊತೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.&lt;/p&gt;&lt;h2&gt;ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು&lt;/h2&gt;&lt;p&gt;2023ರಲ್ಲಿ ನಡೆದ ಈ ಪ್ರಕರಣ ಸಂಬಂಧ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಐವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಅಂತರಗಂಗೆಯ ನವೀನ್ (25), ಮನು (31), ಕೆ ಸಂತೋಷ್(31), ಅಭಿಷೇಕ್ (24), ವಿ.ಮಂಜುನಾಥ&zwnj;ಗೆ(33) ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.&lt;/p&gt;&lt;h2&gt;ಏನಿದು ಪ್ರಕರಣ&lt;/h2&gt;&lt;p&gt;2023 ರ ಜೂನ್ 6 ರಂದು ರಾತ್ರಿ 11:45 ಸುಮಾರಿಗೆ ಅದೇ ಗ್ರಾಮದ ರಾಧಾ(35) ಎಂಬುವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ಮಾಡಿದ್ದಲ್ಲದೆ, ಜಾತಿ 'ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದರು. ರಾಧಾ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಎಎಸ್&zwnj;ಪಿ ಜಿತೇಂದ್ರಕುಮಾರ ದಯಾಮ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪ ಸಾಬೀತಾಗಿದ್ದರಿಂದ ಐವರಿಗೂ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ರತ್ನಮ್ಮ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.&lt;/p&gt;&lt;h2&gt;ಯೋಗೇಶ್ ಗೌಡ ಪ್ರಕರಣ&lt;/h2&gt;&lt;p&gt;ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಲಯ 17 ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪೈಕಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದ್ದಾರೆ. ಇಂದು (ಏ.17) ಕೋರ್ಟ್ ಎಲ್ಲಾ ಆರೋಪಿಗಳ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಈ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ. ಈ ತೀರ್ಪಿನ ನಡುವೆ ಭದ್ರಾವತಿ ಕೋರ್ಟ್ ನೀಡಿದ ತೀರ್ಪು ಮಹತ್ವ ಪಡೆದುಕೊಂಡಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/justice-served-shivamogga-court-sentences-five-for-assault-and-criminal-intimidation/articleshow-o8lln1p"/>
        </item>
        <item>
            <title><![CDATA[ಅನಂತಕುಮಾರ್ ಹೆಗಡೆ ಪುತ್ರನ  ವಿರುದ್ಧದ ಗಲಾಟೆ ಪ್ರಕರಣಕ್ಕೆ ಹೈಕೋರ್ಟ್ ತಡೆ; ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ಕೇಸಿನಲ್ಲಿ ಸಿಲುಕಿದ್ದೇಕೆ?]]></title>
            <link>https://kannada.asianetnews.com/state/high-court-stays-proceedings-in-scuffle-case-against-former-minister-anant-kumar-hegdes-son-rav/articleshow-kihu5gh</link>
            <guid isPermaLink="true">https://kannada.asianetnews.com/state/high-court-stays-proceedings-in-scuffle-case-against-former-minister-anant-kumar-hegdes-son-rav/articleshow-kihu5gh</guid>
            <pubDate>Fri, 17 Apr 2026 11:15:54 +0530</pubDate>
            <description><![CDATA[&lt;p&gt;ಮಾಜಿ ಸಚಿವ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ಹೆಗಡೆ ವಿರುದ್ಧದ ಗಲಾಟೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಫ್&zwnj;ಐಆರ್ ಅಥವಾ ಆರೋಪಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಮತ್ತು ಮೇಲ್ನೋಟಕ್ಕೆ ಅಪರಾಧದ ಆರೋಪಗಳಿಲ್ಲವೆಂದು ಪರಿಗಣಿಸಿ, ನ್ಯಾಯಪೀಠವು ಈ ಮಧ್ಯಂತರ ಆದೇಶವನ್ನು ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-ani20250701141517,imgname-image-408d05c9-671c-48f0-8364-ade811f01f6b.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು ಏ.17): &lt;/strong&gt;ಗುಂಪೊಂದರ ಜೊತೆ ಗಲಾಟೆ ಮಾಡಿಕೊಂಡ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮಾಜಿ ಸಂಸದ ಅನಂತಕುಮಾರ್&zwnj; ಹೆಗಡೆ ಪುತ್ರ ಅಶುತೋಷ್&zwnj; ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್&zwnj; ಗುರುವಾರ ತಡೆಯಾಜ್ಞೆ ನೀಡಿದೆ.&lt;/p&gt;&lt;p&gt;ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್&zwnj;ಐಆರ್&zwnj; ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ ಕೈಬಿಡುವಂತೆ ಕೋರಿ ಅಶುತೋಷ್&zwnj; ಹೆಗಡೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಸ್&zwnj;.ಸುನೀಲ್&zwnj; ದತ್&zwnj; ಯಾದವ್&zwnj; ಅವರ ಪೀಠ ವಿಚಾರಣೆ ನಡೆಸಿತು.&lt;/p&gt;&lt;p&gt;ಅರ್ಜಿ ಕುರಿತು ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ನಾಲ್ಕನೇ ಆರೋಪಿ ಅಶುತೋಷ್&zwnj; ವಿರುದ್ಧ ಮೇಲ್ನೋಟಕ್ಕೆ ಅಪರಾಧವಾಗುವಂತಹ ಆರೋಪಗಳಿಲ್ಲ. ಮುಂದಿನ ವಿಚಾರಣೆಗೆ ಒಳಪಟ್ಟು ಮುಂದಿನ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಈ ಮಧ್ಯಂತರ ಆದೇಶ ನಾಲ್ಕನೇ ಆರೋಪಿಗೆ ಮಾತ್ರ ಸೀಮಿತವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.&lt;/p&gt;&lt;p&gt;ಅಶುತೋಷ್&zwnj; ಪರ ವಕೀಲ ಪವನ್&zwnj;ಚಂದ್ರ ಶೆಟ್ಟಿ ಅವರು, ಎಫ್&zwnj;ಐಆರ್&zwnj; ಅಥವಾ ಆರೋಪ ಪಟ್ಟಿಯಲ್ಲಿ ಅಶುತೋಷ್&zwnj; ಹೆಸರಿಲ್ಲ. ತನ್ನ ಅಜ್ಜನನ್ನು ನೋಡಲು ಅವರು ಭಾರತಕ್ಕೆ ಬಂದಿದ್ದರು. ತಂದೆಯ ಅಧಿಕೃತ ಕಾರಿನಲ್ಲಿ ವಾಪಸ್&zwnj; ಬರುವಾಗ ಕೃತ್ಯ ನಡೆದಿದೆ. ಅದರಲ್ಲಿ ಅಶುತೋಷ್&zwnj; ಪಾತ್ರವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.&lt;/p&gt;&lt;p&gt;ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್&zwnj;.ಜಗದೀಶ್&zwnj; ಅವರು, ಅರ್ಜಿಯಲ್ಲಿ ಮೊದಲಿಗೆ ಅಶುತೋಷ್&zwnj; ಪಕ್ಷಕಾರರಾಗಿಲ್ಲ. ಹೀಗಾಗಿ, ಅರ್ಜಿಯನ್ನು ತಿದ್ದುಪಡಿ ಮಾಡಿ ಅಥವಾ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದರೆ ನ್ಯಾಯಾಲಯದ ಅದನ್ನು ಪರಿಗಣಿಸಬೇಕು ಎಂದು ಕೋರಿದರು.&lt;/p&gt;&lt;h2&gt;ಪ್ರಕರಣದ ಹಿನ್ನೆಲೆ:&lt;/h2&gt;&lt;p&gt;ತುಮಕೂರಿನಲ್ಲಿ ಮದುವೆಗೆ ಹೋಗಿ, ಮುಸ್ಲಿಂ ಸಮುದಾಯದ ಏಳು ಮಂದಿ ಇನ್ನೋವಾ ಕಾರಿನಲ್ಲಿ ಹಳೇ ನಿಜಗಲ್&zwnj; ಬಳಿ ಬರುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಕಾರಿನ ಚಾಲಕ ನಮ್ಮ ಕಾರನ್ನು ನಿಲ್ಲಿಸುವಂತೆ ಹೇಳಿದರು. ಕಾರು ನಿಲುಗಡೆ ಮಾಡುತ್ತಿದ್ದಂತೆಯೇ ಮುಖಕ್ಕೆ ಗುದ್ದಿದರು. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದರು. ಇದರಿಂದ&zwnj; ಕಾರಿನಲ್ಲಿದ್ದ ಸಲ್ಮಾನ್&zwnj; ಖಾನ್&zwnj; ಅವರ ಮೂರು ಹಲ್ಲುಗಳು ಮುರಿದಿವೆ. ಅನಂತ್&zwnj; ಕುಮಾರ್&zwnj; ಹೆಗಡೆ ಕಾರಿನಲ್ಲಿದ್ದರು. ಅವರು ಕರೆದ ತಕ್ಷಣವೇ ಉಳಿದವರು ಬಂದು ನಮ್ಮ ಮೇಲೆ ಹಲ್ಲೆ ಮಾಡಿದರು. ನಮ್ಮ ತಾಯಿ ಮೇಲೆ ಅನಂತ್&zwnj; ಕುಮಾರ್&zwnj; ಹಲ್ಲೆ ನಡೆಸಿದರು. ಭದ್ರತಾ ಸಿಬ್ಬಂದಿ ಪಿಸ್ತೂಲ್&zwnj; ತೋರಿಸಿ ಜೀವ ಬೆದರಿಕೆ ಹಾಕಿದರು ಎಂದು ಎಂದು ಗಾಯಾಳು, ಹಾಲೇನಹಳ್ಳಿಯ ಸೈಫ್&zwnj; ಖಾನ್&zwnj; ದೂರು ನೀಡಿದ್ದರು.&lt;/p&gt;&lt;p&gt;ದೂರು ಆಧರಿಸಿ ದಾಬಸ್&zwnj; ಠಾಣೆಯ ಪೊಲೀಸರು ಅನಂತ್&zwnj; ಕುಮಾರ್&zwnj; ಹೆಗಡೆ, ಭದ್ರತಾ ಸಿಬ್ಬಂದಿ ಶ್ರೀಧರ್&zwnj; ಹಾಗೂ ಕಾರು ಚಾಲಕ ಮಹೇಶ್&zwnj; ವಿರುದ್ಧ ಬಿಎನ್&zwnj;ಎಸ್&zwnj; ಸೆಕ್ಷನ್&zwnj;ಗಳಾದ 117 (ಸ್ವಯಂಪ್ರೇರಿತವಾಗಿ ತೀವ್ರ ಹಾನಿ ಮಾಡುವುದು), 126 (ತಪ್ಪಾಗಿ ನಿರ್ಬಂಧಿಸುವುದು), 74 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಆಕೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗವನ್ನು ಶಿಕ್ಷಿಸಲು ಅವಕಾಶ ನೀಡುತ್ತದೆ), 351(4) (ಅನಾಮಧೇಯ ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಿದ್ದರು.&lt;/p&gt;&lt;p&gt;ಈ ಪ್ರಕರಣ ಕುರಿತ ಎಫ್&zwnj;ಐಆರ್ ರದ್ದುಪಡಿಸುವಂತೆ ಕೋರಿ ಅನಂತ್&zwnj; ಕುಮಾರ್&zwnj; ಹೆಗಡೆ, ಭದ್ರತಾ ಸಿಬ್ಬಂದಿ ಶ್ರೀಧರ್&zwnj; ಹಾಗೂ ಕಾರು ಚಾಲಕ ಮಹೇಶ್&zwnj; ಹೈಕೋರ್ಟ್&zwnj;ಗೆ ಅರ್ಜಿ ಸಲ್ಲಿಸಿದ್ದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/high-court-stays-proceedings-in-scuffle-case-against-former-minister-anant-kumar-hegdes-son-rav/articleshow-kihu5gh"/>
        </item>
        <item>
            <title><![CDATA[ಚಿನ್ನ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾಗೆ ಸುಪ್ರೀಂನಲ್ಲಿ ಹಿನ್ನಡೆ, ಸಿಇಐಬಿ ಕಾಫಿಪೋಸಾ ಬಂಧನ ಎತ್ತಿಹಿಡಿದ ಕೋರ್ಟ್]]></title>
            <link>https://kannada.asianetnews.com/gallery/state/supreme-court-upholds-cofeposa-detention-of-actress-ranya-rao-in-gold-smuggling-case-gdp-u7at7xx</link>
            <guid isPermaLink="true">https://kannada.asianetnews.com/gallery/state/supreme-court-upholds-cofeposa-detention-of-actress-ranya-rao-in-gold-smuggling-case-gdp-u7at7xx</guid>
            <pubDate>Fri, 17 Apr 2026 11:03:02 +0530</pubDate>
            <description><![CDATA[&lt;p&gt;ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸುಪ್ರೀಂ ಕೋರ್ಟ್&zwnj;ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಕಾಫಿಪೋಸಾ ಕಾಯ್ದೆಯಡಿ ಅವರ ಮುನ್ನೆಚ್ಚರಿಕಾ ಬಂಧನವನ್ನು ನ್ಯಾಯಾಲಯ ಎತ್ತಿಹಿಡಿದಿದ್ದು, ಅವರ ಪರವಾಗಿ ಸಲ್ಲಿಸಲಾದ ಮೇಲ್ಮನವಿಗಳನ್ನು ವಜಾಗೊಳಿಸಿದೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jq9qrd9hev3j63z28kzhas4y,imgname-ranya-rao.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸುಪ್ರೀಂ ಕೋರ್ಟ್&zwnj;ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಕಾಫಿಪೋಸಾ ಕಾಯ್ದೆಯಡಿ ಅವರ ಮುನ್ನೆಚ್ಚರಿಕಾ ಬಂಧನವನ್ನು ನ್ಯಾಯಾಲಯ ಎತ್ತಿಹಿಡಿದಿದ್ದು, ಅವರ ಪರವಾಗಿ ಸಲ್ಲಿಸಲಾದ ಮೇಲ್ಮನವಿಗಳನ್ನು ವಜಾಗೊಳಿಸಿದೆ. &amp;nbsp;&lt;/p&gt;&lt;img&gt;&lt;p&gt;ನವದೆಹಲಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ ಗೆ ಸುಪ್ರೀಂ ಕೋರ್ಟ್&zwnj;ನಲ್ಲಿ ದೊಡ್ಡ ಹಿನ್ನಡೆ ಉಂಟಾಗಿದೆ. ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ (CEIB) ಹೊರಡಿಸಿದ್ದ ಮುನ್ನೆಚ್ಚರಿಕಾ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದ್ದು, ಈ ಮೂಲಕ ನಟಿಯ ಪರವಾಗಿ ಸಲ್ಲಿಸಲಾದ ಮೇಲ್ಮನವಿಗಳನ್ನು ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಈ ಮಹತ್ವದ ತೀರ್ಪು ನೀಡಿದೆ. ರನ್ಯಾ ರಾವ್ ಅವರ ತಾಯಿ ಹಾಗೂ ಇನ್ನೊಬ್ಬ ಆರೋಪಿ ಸಾಹಿಲ್ ಸರ್ಕರಿಯಾ ಜೈನ್ ಅವರ ಸೋದರ ಸಂಬಂಧಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಾಲಯ ತಳ್ಳಿ ಹಾಕಿದೆ.&lt;/p&gt;&lt;img&gt;&lt;p&gt;ತೀರ್ಪಿನಲ್ಲಿ ನ್ಯಾಯಪೀಠವು, ಬಂಧನ ಆದೇಶವು ಸಂವಿಧಾನದ ಅನುಚ್ಛೇದ 22(3)(ಬಿ) ಉಲ್ಲಂಘನೆಯಡಿ ಹೊರಡಿಸಲಾಗಿಲ್ಲ ಎಂಬುದನ್ನು ಅಧಿಕಾರಿಗಳು ಸಮರ್ಪಕವಾಗಿ ಸಾಬೀತುಪಡಿಸಿದ್ದಾರೆ. ಜೊತೆಗೆ, COFEPOSA ಕಾಯ್ದೆಯ ವಿಧಿ 8(ಇ) ಮತ್ತು ಸಂವಿಧಾನದ ಅನುಚ್ಛೇದ 22(3)(ಬಿ) ಪ್ರಕಾರ ಮುನ್ನೆಚ್ಚರಿಕಾ ಬಂಧನಕ್ಕೊಳಗಾದವರಿಗೆ ಕಾನೂನು ಸಹಾಯವನ್ನು ಹಕ್ಕಿನ ರೂಪದಲ್ಲಿ ಬೇಡುವ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.&lt;/p&gt;&lt;img&gt;&lt;p&gt;ಪ್ರಕರಣದ ವಿವರಗಳ ಪ್ರಕಾರ, ರನ್ಯಾ ರಾವ್ ಅವರನ್ನು 2025ರ ಮಾರ್ಚ್ 3ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ದುಬೈನಿಂದ ಅಕ್ರಮವಾಗಿ ಸುಮಾರು 14 ಕೆ.ಜಿ. ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಅವರು ದೇಹದಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ 12.56 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಬಂಧನದ ಬಳಿಕ ಅವರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ, 2.06 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2.67 ಕೋಟಿ ರೂಪಾಯಿ ನಗದು ಹಣವನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದರು.&lt;/p&gt;&lt;img&gt;&lt;p&gt;ಈ ಪ್ರಕರಣ ಸಂಬಂಧ ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (DRI) ಮತ್ತು ಸಿಬಿಐ ದಾಖಲಿಸಿದ್ದ ಎಫ್&zwnj;ಐಆರ್ ಆಧಾರವಾಗಿ ಜಾರಿಗೆ ನಿರ್ದೇಶನಾಲಯ (ED) ತನಿಖೆ ಆರಂಭಿಸಿತ್ತು. ತನಿಖೆಯಲ್ಲಿ ಆಶ್ಚರ್ಯಕರ ಮಾಹಿತಿಗಳು ಬಹಿರಂಗವಾಗಿದ್ದು, ಆರೋಪಿಗಳು 2024ರ ಮಾರ್ಚ್&zwnj;ನಿಂದ 2025ರ ಮಾರ್ಚ್ ಅವಧಿಯೊಳಗೆ ಒಟ್ಟು 102.55 ಕೋಟಿ ರೂಪಾಯಿ ಮೌಲ್ಯದ 127 ಕೆ.ಜಿ. ಚಿನ್ನವನ್ನು ವಿದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಕಳ್ಳ ಸಾಗಣೆ ಮಾಡಿರುವುದು ಪತ್ತೆಯಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ, ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ರನ್ಯಾ ರಾವ್ ಅವರಿಗೆ ಸುಪ್ರೀಂ ಕೋರ್ಟ್&zwnj;ನ ಈ ತೀರ್ಪು ಮತ್ತೊಂದು ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಮತ್ತು ತನಿಖೆಯ ಮೇಲಿನ ಗಮನ ಇದೀಗ ಹೆಚ್ಚಿದೆ.&lt;/p&gt;&lt;img&gt;&lt;p&gt;ವಿದೇಶದಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನ ಕಳ್ಳ ಸಾಗಿಸಿದ ಪ್ರಕರಣದಲ್ಲಿ ನಟಿ ರನ್ಯಾ ರಾವ್&zwnj;, ತರುಣ್&zwnj; ಕೊಂಡೂರು ರಾಜು ಮತ್ತು ಸಾಹೀಲ್&zwnj; ಜೈನ್&zwnj; ಅವರನ್ನು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (ಕಾಫಿಪೋಸಾ) ಅಡಿ ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಕೂಡ ಕಳೆದ 2025ರ ಡಿಸೆಂಬರ್&zwnj;ನಲ್ಲಿ ಎತ್ತಿ ಹಿಡಿದಿತ್ತು. ಕಾಫಿಪೋಸಾ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲು ಬಂಧನ ಮಾಡಿರುವುದು ಕಾನೂನುಬಾಹಿರವೆಂದು ಘೋಷಿಸುವಂತೆ ಕೋರಿ ರನ್ಯಾ ತಾಯಿ ಎಚ್&zwnj;.ಎಸ್&zwnj;.ರೋಹಿಣಿ, ತರುಣ್&zwnj; ಅವರ ತಾಯಿ ರಮಾ ರಾಜು ಮತ್ತು ಸಾಹೀಲ್&zwnj; ಜೈನ್&zwnj; ತಾಯಿ ಪ್ರಿಯಾಂಕಾ ಸರ್ಕಾರಿಯಾ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಅನು ಶಿವರಾಮನ್&zwnj; ಅವರ ನೇತೃತ್ವದ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿತ್ತು. ಈ ಮೂವರು ಆರೋಪಿಗಳ ಮೇಲೆ ಕಾಫಿಫೋಸಾ ಅಡಿ ಹೇರಿ ಕೇಂದ್ರ ಸರ್ಕಾರದ ಹಣಕಾಸು, ಕಂದಾಯ ಇಲಾಖೆ, ಆರ್ಥಿಕ ಗುಪ್ತಚರ ದಳದ ಜಂಟಿ ಕಾರ್ಯದರ್ಶಿ ಏ.22ರಂದು ಆದೇಶಿಸಿದ್ದರು. ಈ ಕ್ರಮ ಕಾನುನು ಬಾಹಿರವೆಂದು ಘೋಷಿಸುವಂತೆ ಕೋರಿ ಅರ್ಜಿದಾರರು ಹೇಬಿಯಸ್&zwnj; ಕಾರ್ಪಸ್&zwnj; ಅರ್ಜಿ ಸಲ್ಲಿಸಿದ್ದರು.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/supreme-court-upholds-cofeposa-detention-of-actress-ranya-rao-in-gold-smuggling-case-gdp-u7at7xx"/>
        </item>
        <item>
            <title><![CDATA[ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಾಣೆಗಾರರ ಕ್ವಾರಂಟೈನ್ ಮಾಡಿದ ವೈದ್ಯರು]]></title>
            <link>https://kannada.asianetnews.com/state/bird-flu-scare-in-karnataka-h5n1-virus-detected-at-hesaraghatta-poultry-farm/articleshow-fl6qzar</link>
            <guid isPermaLink="true">https://kannada.asianetnews.com/state/bird-flu-scare-in-karnataka-h5n1-virus-detected-at-hesaraghatta-poultry-farm/articleshow-fl6qzar</guid>
            <pubDate>Fri, 17 Apr 2026 11:01:10 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಾಣೆಗಾರರ ಕ್ವಾರಂಟೈನ್ ಮಾಡಿದ ವೈದ್ಯರು, ಕೇಂದ್ರ ಸರ್ಕಾರದ ಅನುಮತಿ ಮೇರೆ ರಾಜ್ಯದಲ್ಲಿ ತಪಾಸಣೆ ನಡೆಯುತ್ತಿದೆ. ಈ ವೇಳೆ ವೈರಸ್ ಪತ್ತೆಯಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01e2w05hh7de8mwrwdned3fany,imgname-pjimage---2020-03-08t080845-020-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17)&lt;/strong&gt; ಕರ್ನಾಟಕದಲ್ಲಿ H5 N1 ಹಕ್ಕಿ ಜ್ವರ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಅನುಮತಿ ಮೇರೆಗೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂಗಳಲ್ಲಿ ತಪಾಸಣೆ ನಡೆಲಾಗಿದೆ. ಈ ವೇಳೆ ಕೋಳಿಗಳಲ್ಲಿ H5 N1 ವೈರಸ್ ಪತ್ತೆಯಾಗಿದೆ. ಮೊದಲ ತಪಾಸಣೆಯಲ್ಲಿ H5 N1 ವೈರಸ್ ಪತ್ತೆಯಾಗಿರುವ ಹಿನ್ನಲ್ಲೆ ಅಲರ್ಟ್ ನೀಡಲಾಗಿದೆ. ವೈರಸ್ ಪತ್ತೆಯಾದ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ಹಾಕಿ ಮುಚ್ಚಲಾಗಿದೆ.&lt;/p&gt;&lt;h2&gt;ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂ&lt;/h2&gt;&lt;p&gt;ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ H5 N1 ಹಕ್ಕಿ ಜ್ವರ ಪತ್ತೆಯಾಗಿದೆ. ಇದೇ ಪೌಲ್ಟ್ರಿ ಫಾರಂನಿಂದ ರಾಜ್ಯದ ಹಲವು ಕಡೆಗೆ ಕೋಳಿಗಳನ್ನು ಸರಬರಾಜು ಮಾಡಲಾಗುತ್ತದೆ. ಇದೇ ಘಟಕದಲ್ಲಿ H5 N1 ವೈರಸ್ ಪತ್ತೆಯಾಗಿರುವ ಕಾರಣ ಈ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ.&lt;/p&gt;&lt;h2&gt;ಕೋಳಿ ಸಾಗಾಣೆಗಾರರು ಕ್ವಾರಂಟೈನ್&lt;/h2&gt;&lt;p&gt;H5 N1 ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ಹೆಸರಘಟ್ಟ ಪೌಲ್ಟ್ರಿ ಫಾರಂನಿಂದ ಇತರ ಭಾಗಗಳಿಗೆ ಕೋಳಿ ಸಾಗಾಣೆ ಮಾಡುವ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಮೂಲಕ H5 N1 ವೈರಸ್ ಮತ್ತಷ್ಟು ಹರಡದಂತೆ ಎಚ್ಚರವಹಿಸಲಾಗಿದೆ. ಸರ್ಕಾರದ ಪಶು ವೈದ್ಯಾಧಿಕಾರಿಗಳಿಂದ ಸುತ್ತಮುತ್ತ ಪಂಚಾಯಿತಿಗಳಿಗೂ ನೋಟಿಸ್ ನೀಡಲಾಗಿದೆ.&lt;/p&gt;&lt;p&gt;ಕೋಳಿ ಸಾಕಾಣೆ ಶೆಡ್ ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಬಿಸಿಲ ತಾಪದಲ್ಲಿ H5 N1 ಹಕ್ಕಿ ಜ್ವರ ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಬಾರಿ ಬಿಸಿಲ ಬೇಗೆ ಹೆಚ್ಚಾಗಿದೆ. ಇದರಿಂದ ಕೋಳಿಗಳಲ್ಲಿH5 N1 ವೈರಸ್ ತೀವ್ರವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಪಶು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸುತ್ತ ಮುತ್ತಲಿನ ಕೋಳಿ ಶೆಡ್ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/bird-flu-scare-in-karnataka-h5n1-virus-detected-at-hesaraghatta-poultry-farm/articleshow-fl6qzar"/>
        </item>
        <item>
            <title><![CDATA[ಬಿಡಿಎ ವಿರುದ್ಧ ಹೋರಾಡಿ ₹56 ಲಕ್ಷ ಬಡ್ಡಿ ಗೆದ್ದ ನಿವೇಶನದಾರೆ! ಏನಿದು ಪ್ರಕರಣ?]]></title>
            <link>https://kannada.asianetnews.com/state/site-owner-wins-rs-56-lakh-in-interest-after-fighting-against-bda-rav/articleshow-dv81ykr</link>
            <guid isPermaLink="true">https://kannada.asianetnews.com/state/site-owner-wins-rs-56-lakh-in-interest-after-fighting-against-bda-rav/articleshow-dv81ykr</guid>
            <pubDate>Fri, 17 Apr 2026 07:40:32 +0530</pubDate>
            <description><![CDATA[&lt;p&gt;ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ ಮನೆ ಕಟ್ಟಲು ಅಗತ್ಯವಾದ ಮೂಲಸೌಲಭ್ಯ ನೀಡದ ಕಾರಣಕ್ಕಾಗಿ ನಿವೇಶನದಾರರೊಬ್ಬರಿಗೆ ಬರೋಬ್ಬರಿ ₹56.3 ಲಕ್ಷ ಬಡ್ಡಿ ಪರಿಹಾರ ನೀಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಆದೇಶಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpcjveceqjp76c54qkf0ketm,imgname-----------------------2026-04-17t073306.162-1776391403918.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ ಮನೆ ಕಟ್ಟಲು ಅಗತ್ಯವಾದ ಮೂಲಸೌಲಭ್ಯ ನೀಡದ ಕಾರಣಕ್ಕಾಗಿ ನಿವೇಶನದಾರರೊಬ್ಬರಿಗೆ ಬರೋಬ್ಬರಿ ₹56.3 ಲಕ್ಷ ಬಡ್ಡಿ ಪರಿಹಾರ ನೀಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಆದೇಶಿಸಿದೆ.&lt;/p&gt;&lt;p&gt;ಬೆಂಗಳೂರಿನ ಜಯನಗರ ನಿವಾಸಿ ಮೃದುಲಾ ಕೃಷ್ಣಪುರ್ ಎಂಬುವರು ನಾಡಪ್ರಭು ಕೆಂಪೇಗೌಡ ಬಡಾವಣೆಯ 8ನೇ ಬ್ಲಾಕ್&zwnj;ನಲ್ಲಿ 50x80 ಅಳತೆಯ (ಸೈಟ್ ಸಂಖ್ಯೆ 456) ನಿವೇಶನವನ್ನು 2020ರಲ್ಲಿ ಸುಮಾರು ₹96,87,510 ಗಳನ್ನು ಪಾವತಿಸಿ ಪಡೆದಿದ್ದರು. ಬಿಡಿಎ ಅವರಿಗೆ 2020ರ ಜೂ.16 ರಂದು ಸ್ವಾಧೀನ ಪತ್ರವನ್ನೂ ನೀಡಿತ್ತು. ಆದರೆ, ನಿವೇಶನ ಹಂಚಿಕೆಯಾಗಿದ್ದರೂ ರಸ್ತೆ, ಕುಡಿಯುವ ನೀರು, ವಿದ್ಯುತ್&zwnj; ಸಂಪರ್ಕ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳಿಲ್ಲದೆ ಮನೆ ಕಟ್ಟಲು ಸಾಧ್ಯವಾಗಿರಲಿಲ್ಲ. ಈ ಕುರಿತು ನಿವೇಶನದ ಮಾಲೀಕರಾದ ಮೃದುಲಾ ಅವರು ರೇರಾ ಕೋರ್ಟ್&zwnj; ಮೊರೆ ಹೋಗಿದ್ದರು.&lt;/p&gt;&lt;p&gt;ಪ್ರಕರಣದ ವಿಚಾರಣೆ ನಡೆಸಿದ ರೇರಾ ಅಧ್ಯಕ್ಷ ರಾಕೇಶ್&zwnj; ಸಿಂಗ್ ಮತ್ತು ಸದಸ್ಯ ಜಿ.ಆರ್.ರೆಡ್ಡಿ ಅವರ ಪೀಠ ಬಿಡಿಎ ಧೋರಣೆಯನ್ನು ತೀವ್ರವಾಗಿ ಖಂಡಿಸಿದೆ. ''ಕೇವಲ ಕಾಗದದ ಮೇಲೆ ಸೈಟ್ ಸ್ವಾಧೀನ ಪತ್ರ ನೀಡುವುದು ಸಾಕಾಗುವುದಿಲ್ಲ. ಒಬ್ಬ ನಿವೇಶನದಾರ ಆ ಸೈಟ್&zwnj;ನಲ್ಲಿ ಮನೆ ಕಟ್ಟಲು ಮತ್ತು ನೆಮ್ಮದಿಯಿಂದ ವಾಸಿಸಲು ಅಗತ್ಯವಿರುವ ರಸ್ತೆ, ನೀರು, ಚರಂಡಿಯಂತಹ ಕನಿಷ್ಠ ಸೌಲಭ್ಯಗಳನ್ನು ಒದಗಿಸುವುದು ಡೆವಲಪರ್&zwnj;ನ (ಬಿಡಿಎ) ಪ್ರಾಥಮಿಕ ಕರ್ತವ್ಯ ಎಂದು ಸ್ಪಷ್ಟಪಡಿಸಿದೆ.&lt;/p&gt;&lt;p&gt;ಸುಪ್ರೀಂ ಕೋರ್ಟ್&zwnj;ನ ಈ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ರೇರಾ, ವಿಳಂಬ ಅವಧಿಗೆ ಎಸ್&zwnj;ಬಿಐ ಎಂಸಿಎಲ್&zwnj; ಆರ್&zwnj; + ಶೇ.2 ದರದಲ್ಲಿ ಬಡ್ಡಿ ನೀಡಲು ಆದೇಶಿಸಿದೆ. ಮೃದುಲಾ ಅವರಿಗೆ 2020 ಜೂ.10ರಿಂದ 2026 ಫೆ.2ರ ವರೆಗಿನ ಅವಧಿಗೆ ಒಟ್ಟು ₹56,03,736 ಬಡ್ಡಿಯನ್ನು 60 ದಿನಗಳ ಒಳಗಾಗಿ ಪಾವತಿಸಬೇಕು. 2026 ಫೆ.3ರಿಂದ ಬಡಾವಣೆಯಲ್ಲಿ ಮೂಲಸೌಕರ್ಯಗಳು ಪೂರ್ಣಗೊಳ್ಳುವವರೆಗೂ ಪ್ರತಿ ತಿಂಗಳು ಇದೇ ದರದಲ್ಲಿ ಬಡ್ಡಿ ಪರಿಹಾರವನ್ನು ನೀಡುತ್ತಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/site-owner-wins-rs-56-lakh-in-interest-after-fighting-against-bda-rav/articleshow-dv81ykr"/>
        </item>
        <item>
            <title><![CDATA[ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಇನ್ನು ಇರೋಲ್ಲ? 13,262 ಕೋಟಿ ವೆಚ್ಚದಲ್ಲಿ 11 ಎಲಿವೇಟೆಡ್ ಕಾರಿಡಾರ್‌ಗೆ ಸಂಪುಟ ಅಸ್ತು!]]></title>
            <link>https://kannada.asianetnews.com/state/solution-to-bengaluru-traffic-problem-cabinet-approves-construction-of-11-elevated-corridors-rav/articleshow-k7l88sx</link>
            <guid isPermaLink="true">https://kannada.asianetnews.com/state/solution-to-bengaluru-traffic-problem-cabinet-approves-construction-of-11-elevated-corridors-rav/articleshow-k7l88sx</guid>
            <pubDate>Fri, 17 Apr 2026 09:58:48 +0530</pubDate>
            <description><![CDATA[&lt;p&gt;ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 13,262.70 ಕೋಟಿ ರು. ವೆಚ್ಚದಲ್ಲಿ 72.60 ಕಿ.ಮೀ ಉದ್ದದ 11 ಎಲಿವೇಟೆಡ್ ಕಾರಿಡಾರ್&zwnj;ಗಳ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ಸ್ಮಾರ್ಟ್&zwnj; ಇನ್&zwnj;ಫ್ರಾಸ್ಟ್ರಕ್ಚರ್&zwnj; ಲಿ. (ಬಿ-ಸ್ಮೈಲ್&zwnj;) ಸಂಸ್ಥೆಯು ಈ ಯೋಜನೆ ಅನುಷ್ಠಾನಗೊಳಿಸಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpctt390b6q1vma3ybbfevs2,imgname-----------------------2026-04-17t095201.571-1776399748383.jpg" type="image/jpeg" height="390" width="690"/>
            <content:encoded><![CDATA[&lt;p&gt;&amp;nbsp;&lt;strong&gt;ಬೆಂಗಳೂರು (ಏ.17) &lt;/strong&gt;ಗ್ರೇಟರ್&zwnj; ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿನ 13262.70 ಕೋಟಿ ರು. ವೆಚ್ಚದಲ್ಲಿ 72.60 ಕಿಮೀ ಉದ್ದದ 11 ಎಲಿವೇಟೆಡ್&zwnj; ಕಾರಿಡಾರ್&zwnj; ನಿರ್ಮಾಣಕ್ಕೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.&lt;/p&gt;&lt;p&gt;ಬೆಂಗಳೂರು ಸ್ಮಾರ್ಟ್&zwnj; ಇನ್&zwnj;ಫ್ರಾಸ್ಟ್ರಕ್ಚರ್&zwnj; ಲಿ. (ಬಿ-ಸ್ಮೈಲ್&zwnj;) ಸಂಸ್ಥೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ 11 ಎಲಿವೇಟೆಡ್&zwnj; ಕಾರಿಡಾರ್&zwnj; ನಿರ್ಮಾಣಕ್ಕೆ ಸಂಬಂಧಿಸಿದಂತೆ ಅನುಮೋದಿಸಲಾಗಿದೆ. 2025-26ನೇ ಸಾಲಿನ ರಾಜ್ಯ ಬಜೆಟ್&zwnj;ನಲ್ಲಿ 120 ಕಿಮೀ ಉದ್ದದ ಸಿಗ್ನಲ್&zwnj; ಫ್ರೀ ಎಲೆವೇಟೆಡ್&zwnj; ಕಾರಿಡಾರ್&zwnj;ಗಳ ನಿರ್ಮಾಣದ ಘೋಷಣೆ ಮಾಡಲಾಗಿತ್ತು. ಅದರಲ್ಲಿ 72.60 ಕಿಮೀ ಉದ್ದದ 11 ಎಲಿವೇಟೆಡ್&zwnj; ಕಾರಿಡಾರ್&zwnj;ಗಳ ನಿರ್ಮಾಣಕ್ಕೆ ಅನುಮೋದಿಸಲಾಗಿದೆ. ಒಟ್ಟಾರೆ ಯೋಜನೆಗೆ 13262.70 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ. ಆ ಪೈಕಿ 2 ಮೇಲ್ಸೇತುವೆಗಳು ಬಿಒಟಿ ಮಾದರಿಯಲ್ಲಿ ನಿರ್ಮಾಣಗೊಂಡರೆ, ಉಳಿದ 9 ಮೇಲ್ಸೇತುವೆಗಳು ಇಟಿಸಿ ಮಾದರಿಯಲ್ಲಿ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ 11 ಮೇಲ್ಸೇತುವೆಗಳ ನಿರ್ಮಾಣಕ್ಕೆ13262.70 ಕೋಟಿ ರು.ಗಳಾಗಲಿದ್ದು, ಅದರಲ್ಲಿ ರಾಜ್ಯ ಸರ್ಕಾರ 7150 ಕೋಟಿ ರು. ನೀಡಲಿದೆ. ಉಳಿದಂತೆ 2072.57 ಕೋಟಿ ರು. ಭೂಸ್ವಾಧೀನಕ್ಕೆ ವ್ಯಯಿಸಲಾಗುತ್ತದೆ. ಬಾಕಿ ಅನುದಾನವನ್ನು ಖಾಸಗಿ ಸಂಸ್ಥೆ ಮೂಲಕ ಪಡೆಯುವ ಯೋಚನೆ ಮಾಡಲಾಗಿದೆ.&lt;/p&gt;&lt;h2&gt;ಎಲ್ಲೆಲ್ಲಿ ಮೇಲ್ಸೇತುವೆಗಳ ನಿರ್ಮಾಣ&lt;/h2&gt;&lt;p&gt;ಯಶವಂತಪುರದಿಂದ ಹಳೇ ಮದ್ರಾಸ್&zwnj; ರಸ್ತೆ, ಮಾರೇನಹಳ್ಳಿ ಮುಖ್ಯರಸ್ತೆಯಿಂದ ಕನಕಪುರ ಮುಖ್ಯರಸ್ತೆ, ಶೋಲೇ ವೃತ್ತದಿಂದ ಸೇಂಟ್&zwnj; ಜಾನ್&zwnj; ಆಸ್ಪತ್ರೆ, ಹಳೇ ಮದ್ರಾಸ್&zwnj; ರಸ್ತೆಯಿಂದ ಎಲೆಕ್ಟ್ರಾನಿಕ್&zwnj; ಸಿಟಿ ಮೇಲ್ಸೇತುವೆವರೆಗೆ, ದೊಡ್ಡಬಳ್ಳಾಪುರ ರಸ್ತೆಯಿಂದ ಕೋಗಿಲು ವೃತ್ತ, ಕೋಣನಕುಂಟೆ ಕ್ರಾಸ್&zwnj; ಬಳಿ, ಸಿರ್ಸಿ ವೃತ್ತದಿಂದ ನಾಯಂಡಹಳ್ಳಿ, ಕನಕಪುರ ರಸ್ತೆ ರಘುವನಹಳ್ಳಿ ಕ್ರಾಸ್&zwnj;, ಮಿನರ್ವ ವೃತ್ತದಿಂದ ಹಡ್ಸನ್&zwnj; ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ನೃಪತುಂಗ ರಸ್ತೆ, ತುಮಕೂರು ರಸ್ತೆಯ ಎಂಇಐ ಜಂಕ್ಷನ್&zwnj;, ವೆಸ್ಟ್&zwnj; ಆಫ್&zwnj; ಕಾರ್ಡ್&zwnj; ರಸ್ತೆಯಿಂದ ಹೊರವರ್ತುಲ ರಸ್ತೆ, ನಾಗವಾರ ಜಂಕ್ಷನ್&zwnj;ನಿಂದ ಬಾಗಲೂರು ಮುಖ್ಯರಸ್ತೆ, ಮದರ್&zwnj; ಥೆರೇಸಾ ಕ್ರಾಸ್&zwnj;ನಿಂದ ಬಾಗಲೂರು&lt;/p&gt;&lt;h3&gt;ರೋಟರಿ ಮೇಲ್ಸೇತುವೆಗೂ ಅಸ್ತು&lt;/h3&gt;&lt;p&gt;ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೈಯಪ್ಪನಹಳ್ಳಿಯ ಐಒಸಿ ಜಂಕ್ಷನ್&zwnj;ನಲ್ಲಿ ರೋಟರಿ ಮೇಲ್ಸೇತುವೆ ನಿರ್ಮಾಣ ಯೋಜನೆಯ 436.44 ಕೋಟಿ ರು. ಪರಿಷ್ಕೃತ ಅಂದಾಜಿಗೂ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.&lt;/p&gt;&lt;p&gt;ಹಾಗೆಯೇ, ಜಲಮಂಡಳಿಯ 5 ತ್ಯಾಜ್ಯ ನೀರು ಸಂರಕ್ಷಣಾ ಘಟಕದಿಂದ ಉತ್ಪತ್ತಿಯಾಗುವ ಬಯೋಗ್ಯಾಸ್&zwnj;ನ್ನು ಬಳಸಿ ಬಯೋಗ್ಯಾಸ್&zwnj; ಪ್ಯೂರಿಫಿಕೇಷನ್&zwnj; ಆ್ಯಂಡ್&zwnj; ಕಾಂಪ್ರಹೇನ್ಸಿವ್&zwnj; ಸಿಸ್ಟಂ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 85 ಕೋಟಿ ರು. ಮುಂದಿನ 20 ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/solution-to-bengaluru-traffic-problem-cabinet-approves-construction-of-11-elevated-corridors-rav/articleshow-k7l88sx"/>
        </item>
        <item>
            <title><![CDATA[ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ]]></title>
            <link>https://kannada.asianetnews.com/state/karnataka-schools-to-reopen-for-2026-27-academic-year-on-may-29/articleshow-uq8fg0p</link>
            <guid isPermaLink="true">https://kannada.asianetnews.com/state/karnataka-schools-to-reopen-for-2026-27-academic-year-on-may-29/articleshow-uq8fg0p</guid>
            <pubDate>Fri, 17 Apr 2026 09:49:29 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ದಸರಾ ರಜೆ ದಿನವನ್ನು ನಿರ್ಧರಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmm9bahnss2hkr4z98zkc1ey,imgname-private-school-book-price-hike-class-5-english-book-1035-parents-protest-fee-regulation-ncert-vs-private-publishers-1-1774502390324.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17) &lt;/strong&gt;ಪರೀಕ್ಷೆ, ಫಲಿತಾಂಶ ಮುಗಿಸಿ ರಜೆಯ ಮಜಾ ಸವಿಯುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ 2026-27ರ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನರ್ ಆರಂಭಗೊಳ್ಳಲಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 2026-27 ನೆ ಶೈಕ್ಷಣಿಕ ವರ್ಷವು ಮೇ 29 ರಿಂದ ಆರಂಭವಾಗಲಿವೆ ಎಂದಿದೆ.&lt;/p&gt;&lt;h2&gt;ದಸರಾಗೆ 18 ದಿನ ರಜೆ&lt;/h2&gt;&lt;p&gt;ಮೇ.29 ರಿಂದ ಶಾಲೆಗಳು ಆರಂಭಗೊಂಡರೆ, ಈ ಬಾರಿ ದಸರಾ ಹಬ್ಬಕ್ಕೆ 18 ದಿನ ರಜೆ ನೀಡಲಾಗಿದೆ. ಹೀಗಾಗಿ ಶೈಕ್ಷಣಿಕ ಸಾಲಿನ ಮೊದಲ ಅವಧಿ ಮೇ.29 ರಿಂದ ಅಕ್ಟೋಬರ್ 2ರ ವರೆಗೆ ಇರಲಿದೆ. ಬಳಿಕ 18 ದಿನ ದಸರ ರಜೆ ಸವಿಯನ್ನು ವಿದ್ಯಾರ್ಥಿಗಳು ಅನುಭವಿಸಲಿದ್ದಾರೆ.&lt;/p&gt;&lt;h2&gt;ಅಕ್ಟೋಬರ್ 22ರಿಂದ ಎರಡನೇ ಅವಧಿ&lt;/h2&gt;&lt;p&gt;2026-27ರ ಸಾಲಿನ ಶೈಕ್ಷಣಿಕ ವರ್ಷದ ಎರಡನೇ ಅವಧಿ ಅಕ್ಟೋಬರ್ 22 ರಿಂದ ಆರಂಭಗೊಳ್ಳಲಿದೆ. ಈ ಅವಧಿ ಎಪ್ರಿಲ್ ತಿಂಗಳವರೆಗೆ ಇರಲಿದೆ. ಎಪ್ರಿಲ್ ತಿಂಗಳಲ್ಲಿ ಪರೀಕ್ಷೆಯೊಂದಿಗೆ ಶೈಕ್ಷಣಿಕ ವರ್ಷ ಅಂತ್ಯಗೊಳ್ಳಲಿದೆ. ಒಟ್ಟು 365 ದಿನಗಳಲ್ಲಿ 245 ಕರ್ತವ್ಯ ದಿನಗಳಾಗಿದೆ ಎಂದಿದೆ. ಇದರಲ್ಲಿ ಬೋಧನೆಗೆ 181 ದಿನ , ಪಠ್ಯೇತರ ಚಟುವಟಿಕೆ ಉಳಿದ ದಿನಗಳನ್ನು ಮೀಸಲಿಡಲಾಗುವುದು ಎಂದು ಶೈಕ್ಷಣಿಕ ಪ್ರಕಟಣೆಯಲ್ಲಿ ಹೇಳಲಾಗಿದೆ. ಜೂನ್ 30ರೊಳಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ.&lt;/p&gt;&lt;h2&gt;ಶಾಲೆ ಬಿಟ್ಟ ಮಕ್ಕಳಿಗಾಗಿ ವಿಶೇಷ ಆಂದೋಲನ&lt;/h2&gt;&lt;p&gt;ಶಾಲೆ ಬಿಟ್ಟ 6 ರಿಂದ 18 ವರ್ಷದ ಮಕ್ಕಳನ್ನು ಮರಳಿ ತರಲು ವಿಶೇಷ ಆಂದೋಲನ ನಡೆಸಲು ಇಲಾಖೆ ಆದೇಶಿಸಿಸಿದೆ. ಜಿಲ್ಲೆ, ತಾಲೂಕು, ಹಾಗೂ ಗ್ರಾಮಮಟ್ಟದಲ್ಲಿ ಈ ಆಂದೋಲ ಸಕ್ರಿಯವಾಗಿ ಜಾರಿಗೊಳಿಸಲು ಇಲಾಖೆ ತಯಾರಿ ಮಾಡಿಕೊಂಡಿದೆ. ಈ ಮೂಲಕ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಮಟ್ಟ ಹೆಚ್ಚಿಸಲು, ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಇಲಾಖೆ ಮುಂದಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/karnataka-schools-to-reopen-for-2026-27-academic-year-on-may-29/articleshow-uq8fg0p"/>
        </item>
        <item>
            <title><![CDATA[ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟು ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ]]></title>
            <link>https://kannada.asianetnews.com/gallery/state/mahindra-showroom-under-fire-for-allowing-test-drive-to-inebriated-customer-bengaluru-x9xakf4</link>
            <guid isPermaLink="true">https://kannada.asianetnews.com/gallery/state/mahindra-showroom-under-fire-for-allowing-test-drive-to-inebriated-customer-bengaluru-x9xakf4</guid>
            <pubDate>Fri, 17 Apr 2026 09:14:47 +0530</pubDate>
            <description><![CDATA[&lt;p&gt;ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ, ಕುಡಿದ ಮತ್ತಿನಲ್ಲಿ ಮನಸ್ಸೋ ಇಚ್ಚೆ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpcrc4m0n7vy0zjsh5rs3j6c,imgname-mahindra-test-drive-goes-wrong-1776397193856.png" type="image/jpeg" height="390" width="690"/>
            <content:encoded><![CDATA[&lt;p&gt;ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ, ಕುಡಿದ ಮತ್ತಿನಲ್ಲಿ ಮನಸ್ಸೋ ಇಚ್ಚೆ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ಕಂಠಪೂರ್ತಿ ಕುಡಿದ ಬಂದ ಗ್ರಾಹಕನೊಬ್ಬನಿಗೆ ಮಹಿಂದ್ರ ಶೋ ರೂಂ ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಕೇಸ್ ದಾಖಲಾಗಿದೆ. ಮಹಾದೇವಪುರ ಸಿಬ್ಬಂದಿಗಳು ಅಭಿಲಾಶ್ ಅನ್ನೋ ಗ್ರಾಹಕನ ಹೆಚ್ಚು ಪರಿಶೀಲಿಸದೆ, ಕಣ್ಮುಚ್ಚಿ ಟೆಸ್ಟ್ ಡ್ರೈವ್ ಮಾಡಲು ಮಹೀಂದ್ರ ಎಲೆಕ್ಟ್ರಿಕ್ ಕಾರು ನೀಡಿದ್ದಾರೆ.&lt;/p&gt;&lt;img&gt;&lt;p&gt;ಮಹಾದೇವರ ಮಹೀಂದ್ರ ಶೋ ರೂಂ ಸಿಬ್ಬಂದಿಗಳು ಗ್ರಾಹಕನ ಟೆಸ್ಟ್ ಡ್ರೈವ್ ಕೇಳಿದ ಬೆನ್ನಲ್ಲೇ ಕಾರು ನೀಡಿದ್ದಾರೆ. ಹೆಚ್ಚಿನ ಪರಿಶೀಲನೆ ಇಲ್ಲದೆ ಕಾರು ನೀಡಲಾಗಿದೆ. ಆದರೆ ಕಂಠಪೂರ್ತಿ ಕುಡಿದಿದ್ದ ಅಭಿಲಾಶ್ ಕಾರನ್ನು ಅಡ್ಡಾದಿಟ್ಟಿ ಚಲಾಯಿಸಿದ್ದಾನೆ. ಇದರ ಪರಿಣಾಮ ಅಪಘಾತ ಸಂಭವಿಸಿದೆ.&lt;/p&gt;&lt;img&gt;&lt;p&gt;ಅಭಿಲಾಶ್ ಕುಡಿದ ನಶೆಯಲ್ಲಿ ಮಹೀಂದ್ರ ಎಲೆಕ್ಟ್ರಿಕ್ ಕಾರು ಟೆಸ್ಟ್ ಡ್ರೈವ್ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಹ್ಯುಂಡೈ ಕ್ರೆಟಾ ಸೇರಿದಂತೆ ನಾಲ್ಕು ಕಾರುಗಳು ಜಖಂ ಗೊಂಡಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ&lt;/p&gt;&lt;img&gt;&lt;p&gt;ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದ ಅಭಿಲಾಶ್, ರಮೇಶ್ ಎಂಬುವವರಿಗೂ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ರಮೇಶ್ ಕಾಲು ಕಟ್ ಆಗಿದೆ. ರಮೇಶ್ ಅವರನ್ನು ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದ ಮತ್ತಿನಲ್ಲಿ ಗ್ರಾಹಕ ಅಭಿಲಾಶ್ ಟೆಸ್ಟ್ ಡ್ರೈವ್ ಮಾಡಿ ಹಲವು ಅವಾಂತರ ಸೃಷ್ಟಿಸಿದ್ದಾನೆ.&lt;/p&gt;&lt;img&gt;&lt;p&gt;ರಮೇಶ್ ಕಾಲು ಮುರಿದು ನಾಲ್ಕು ಕಾರುಗಳನ್ನು ಜಖಂ ಗೊಳಿಸಿದ ಅಭಿಲಾಶ್&zwnj;ನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಅಭಿಲಾಶ್&zwnj;ನ ವಶಕ್ಕೆ ಪಡೆದಿದ್ದಾರೆ. ಗಾಯಗೊಂಡಿದ್ದ ಅಭಿಲಾಶ್&zwnj;ನನ್ನು ಆಸ್ಪತ್ರೆ ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಲಾಶ್&zwnj;ಗೆ ಮಹಾದೇವಪುರ ಸಂಚಾರಿ ಪೊಲೀಸರು ನೋಟಿಸ್ ನೀಡಿದ್ದಾರೆ. ಭಾರತೀಯ ಮೋಟಾರು ಕಾಯ್ದೆ ಹಾಗೂ BNS 125(a), 281 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h2&gt;ಅಭಿಲಾಶ್&zwnj;ಗೆ ನೋಟಿಸ್&lt;/h2&gt;]]></content:encoded>
            <category>state</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/mahindra-showroom-under-fire-for-allowing-test-drive-to-inebriated-customer-bengaluru-x9xakf4"/>
        </item>
        <item>
            <title><![CDATA[ಮಹಾರಾಷ್ಟ್ರ ಮಾದರಿಯಲ್ಲಿ ಕನ್ನಡ ಮಾತಾಡಲು ಬಾರದ ಟ್ಯಾಕ್ಸಿ ಚಾಲಕರ ಡಿಎಲ್ ರದ್ದಾಗಲಿ: ಕರವೇ]]></title>
            <link>https://kannada.asianetnews.com/state/cancel-the-dl-of-taxi-drivers-who-cannot-speak-kannada-krv-narayanagowda-demand-rav/articleshow-et7s80d</link>
            <guid isPermaLink="true">https://kannada.asianetnews.com/state/cancel-the-dl-of-taxi-drivers-who-cannot-speak-kannada-krv-narayanagowda-demand-rav/articleshow-et7s80d</guid>
            <pubDate>Fri, 17 Apr 2026 09:14:03 +0530</pubDate>
            <description><![CDATA[&lt;p&gt;ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಪರವಾನಗಿ ರದ್ದುಗೊಳಿಸುವ ನಿರ್ಧಾರವನ್ನು ಸ್ವಾಗತಿಸಿರುವ ಕರವೇ, ಕರ್ನಾಟಕದಲ್ಲೂ ಇದೇ ನಿಯಮ ಜಾರಿಗೆ ತರಲು ಆಗ್ರಹಿಸಿದೆ. ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರ ಪರವಾನಗಿ ರದ್ದುಗೊಳಿಸಲು ಕರವೇ ಆಗ್ರಹಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hb75xgzk2ys1w3bg12wkztne,imgname-nray.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಇದೇ ನಿಯಮವನ್ನು ಇಲ್ಲಿಯೂ ಕರ್ನಾಟಕ ಸರ್ಕಾರ ಅನುಷ್ಠಾನಕ್ಕೆ ತರಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.&lt;/p&gt;&lt;h2&gt;ಕರವೇ ಎಕ್ಸ್ ಖಾತೆಯಲ್ಲಿ ಏನಿದೆ?&lt;/h2&gt;&lt;p&gt;ಈ ನಿಯಮ ಮಹಾರಾಷ್ಟ್ರದಲ್ಲಿ ಮೇ 1ರಿಂದ ಜಾರಿಗೆ ಬರಲಿದೆ. ಈಗಾಗಲೇ ಸಾರಿಗೆ ಇಲಾಖೆಯ ಅಧಿಕಾರಿಗಳು ಆ ರಾಜ್ಯಾದ್ಯಂತ 59 ಆರ್&zwnj;ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಆರಂಭಿಸಿರುವುದನ್ನು ಕರವೇ ಸ್ವಾಗತಿಸುತ್ತದೆ ಎಂದು &lsquo;ಎಕ್ಸ್&zwnj;&rsquo; ಖಾತೆಯಲ್ಲಿ ಟ್ವೀಟ್&zwnj; ಮಾಡಿದ್ದಾರೆ.&lt;/p&gt;&lt;h3&gt;ಮಹಾರಾಷ್ಟ್ರ ತೀರ್ಮಾನ ಸರಿ ಇದೆ&lt;/h3&gt;&lt;p&gt;ಜೀವನ ನಿರ್ವಹಣೆಗಾಗಿ ಬೇರೆ ರಾಜ್ಯಗಳಿಗೆ ವಲಸೆ ಹೋಗುವವರು ಆ ರಾಜ್ಯದ ಅಧಿಕೃತ ಭಾಷೆಯನ್ನು ಕಲಿಯುವುದು ಅತ್ಯಂತ ಮೂಲಭೂತ ಕರ್ತವ್ಯವಾಗಿದೆ. ತಮ್ಮ ಜೀವನಾಧಾರಕ್ಕಾಗಿ ಆ ರಾಜ್ಯದ ಮಣ್ಣು, ನೀರು ಮತ್ತು ಜನರನ್ನು ಅವಲಂಬಿಸುವಾಗ, ಅಲ್ಲಿನ ಭಾಷೆ, ಸಂಸ್ಕೃತಿ ಮತ್ತು ಜನರೊಂದಿಗೆ ಬೆರೆಯುವುದು ಸಹಜವಾದ ನೈತಿಕ ಜವಾಬ್ದಾರಿಯಾಗಿದೆ. ಹಾಗಾಗಿ ಮಹಾರಾಷ್ಟ್ರ ಸರ್ಕಾರದ ಈ ತೀರ್ಮಾನ ಸಂಪೂರ್ಣವಾಗಿ ಸರಿಯಾಗಿದ್ದು ಇಂದಿನ ಅಗತ್ಯವಾದದ್ದು ಎಂದಿದ್ದಾರೆ.&lt;/p&gt;&lt;p&gt;ತಮಿಳುನಾಡಿನಲ್ಲೂ ಅಲ್ಲಿನ ಚಾಲಕರು ಪರವಾನಗಿ ಪಡೆಯುವಾಗ ಅಥವಾ ನವೀಕರಿಸುವಾಗ ತಮಿಳು ಭಾಷೆಯಲ್ಲಿ ಕನಿಷ್ಠ ಮಟ್ಟದ ಜ್ಞಾನ ಇದೆಯೇ ಎಂದು ಪರೀಕ್ಷಿಸಲಾಗುತ್ತಿದೆ. ಈ ಧೋರಣೆಯನ್ನು ಕರ್ನಾಟಕ ಸರ್ಕಾರವೂ ತಕ್ಷಣ ಅನುಸರಿಸಬೇಕು. ಕನ್ನಡ ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಮತ್ತು ಇತರ ಸಾರಿಗೆ ವಾಹನ ಚಾಲಕರ ಪರವಾನಗಿ ರದ್ದುಗೊಳಿಸುವ ಸ್ಪಷ್ಟ ನಿಯಮಾವಳಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/cancel-the-dl-of-taxi-drivers-who-cannot-speak-kannada-krv-narayanagowda-demand-rav/articleshow-et7s80d"/>
        </item>
        <item>
            <title><![CDATA[ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಇಂದು ಶಿಕ್ಷೆ ಪ್ರಕಟ | ಯಾರಿಗೂ ತೊಂದರೆ ಕೊಟ್ಟಿಲ್ಲ: ಜಡ್ಜ್‌ ಮುಂದೆ ಕಣ್ಣೀರಿಟ್ಟ ಶಾಸಕ]]></title>
            <link>https://kannada.asianetnews.com/state/yogesh-gowda-murder-case-vinay-kulkarni-sentenced-today-rav/articleshow-tqgsczu</link>
            <guid isPermaLink="true">https://kannada.asianetnews.com/state/yogesh-gowda-murder-case-vinay-kulkarni-sentenced-today-rav/articleshow-tqgsczu</guid>
            <pubDate>Fri, 17 Apr 2026 06:31:49 +0530</pubDate>
            <description><![CDATA[&lt;p&gt;ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣದ ಕುರಿತ ವಾದ-ವಿವಾದದ ವೇಳೆ, ಕುಲಕರ್ಣಿ ಕಣ್ಣೀರಿಟ್ಟು ಕಡಿಮೆ ಶಿಕ್ಷೆಗಾಗಿ ಮನವಿ ಮಾಡಿದ್ದು ಇಂದು ಪ್ರಕಟವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp8mhxkyn1ggn98rsk20f2vw,imgname-vinay-kulkarni-convicted-1776258971261.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್&zwnj; ಶಾಸಕ ವಿನಯ್&zwnj; ಕುಲಕರ್ಣಿ ಸೇರಿ 17 ಅಪರಾಧಿಗಳ ಶಿಕ್ಷೆ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ಹೇಳಿದೆ.&lt;/p&gt;&lt;p&gt;ಶಿಕ್ಷೆಯ ಪ್ರಮಾಣದ ಬಗ್ಗೆ ಗುರುವಾರ ನ್ಯಾಯಾಲಯದಲ್ಲಿ ಸುದೀರ್ಘ ವಾದ-ಪ್ರತಿವಾದ ನಡೆಯಿತು. ಈ ವೇಳೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ಪ್ರತಿಯೊಬ್ಬ ಅಪರಾಧಿಯೂ ತಮ್ಮ ಕೊನೆಯ ಹೇಳಿಕೆ ದಾಖಲಿಸಿದರು. ಈ ವೇಳೆ ಕೆಲವರು ತಮ್ಮ ವೈಯಕ್ತಿಕ ಸಮಸ್ಯೆಗಳು, ಆರೋಗ್ಯದ ಸ್ಥಿತಿ ಹಾಗೂ ಕುಟುಂಬದ ಜವಾಬ್ದಾರಿಯನ್ನು ವಿವರಿಸುತ್ತಾ ಶಿಕ್ಷೆ ಕಡಿಮೆ ಮಾಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿ ಕಣ್ಣೀರಿಟ್ಟರು.&lt;/p&gt;&lt;p&gt;ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ, ಒಬ್ಬ ಪೊಲೀಸ್ ಅಧಿಕಾರಿ ಸೇರಿ 17 ಮಂದಿ ಅಪರಾಧಿಗಳಿಗೆ ಜೀವಿತಾವಧಿ ಶಿಕ್ಷೆ ಜತೆಗೆ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಿಬಿಐ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.&lt;/p&gt;&lt;p&gt;ನ್ಯಾಯಾಧೀಶರಾದ ಸಂತೋಷ್&zwnj; ಗಜಾನನ ಭಟ್&zwnj; ಅವರು ಬುಧವಾರ ವಿನಯ್ ಕುಲಕರ್ಣಿ ಸೇರಿ 17 ಮಂದಿ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿ ತೀರ್ಪು ಪ್ರಕಟಿಸಿದ್ದರು. ಶಿಕ್ಷೆಯ ಪ್ರಮಾಣ ಕುರಿತು ಗುರುವಾರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಶುಕ್ರವಾರ ತೀರ್ಪು ನೀಡುವುದಾಗಿ ಹೇಳಿದರು.&lt;/p&gt;&lt;p&gt;ಇದಕ್ಕೂ ಮೊದಲು ಸಿಬಿಐ ಪರ ವಾದ ಮಂಡಿಸಿದ ಸಿಬಿಐ ವಿಶೇಷ ಅಭಿಯೋಜಕರಾದ ಶಿವಾನಂದ ಪೆರ್ಲ ಮತ್ತು ಹೇಮಾ, ಯೋಗೇಶ್&zwnj;ಗೌಡ ಕೊಲೆ ಪ್ರಕರಣದಲ್ಲಿ ಭಾರೀ ಪ್ರಮಾಣದಲ್ಲಿ ಅಪರಾಧಿಕ ಒಳಸಂಚು ನಡೆದಿದೆ. ಉದ್ದೇಶಪೂರ್ವಕವಾಗಿಯೇ ಹತ್ಯೆ ಮಾಡಿದ್ದಾರೆ. ಹೀಗಾಗಿ ಅಪರಾಧಿಗಳಿಗೆ ಯಾವುದೇ ವಿನಾಯಿತಿ ನೀಡದೆ, ಕಠಿಣಾತಿ ಕಠಿಣ ಶಿಕ್ಷೆಯಾದ ಜೀವಿತಾವಧಿ (ಕ್ಷಮಾದಾನವಿಲ್ಲದ ಜೀವನ ಪರ್ಯಂತ) ಶಿಕ್ಷೆ ವಿಧಿಸಬೇಕು. ಜತೆಗೆ ಹತ್ಯೆಗೀಡಾದ ಯೋಗೇಶ್&zwnj;ಗೌಡನ ಮೂವರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕೋರಿದರು.&lt;/p&gt;&lt;h2&gt;ವಿರಳಾತಿ ವಿರಳ ಪ್ರಕರಣ- ಸಿಬಿಐ:&lt;/h2&gt;&lt;p&gt;ಯೋಗೇಶ್&zwnj; ಗೌಡನ ಕಣ್ಣಿಗೆ ಕಾರದಪುಡಿ ಎರಚಿ, ತಪ್ಪಿಸಿಕೊಳ್ಳಲು ಅವಕಾಶ ನೀಡದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೊಂದು ವಿರಳಾತಿ ವಿರಳ ಪ್ರಕರಣವಾಗಿದ್ದು, ಸಿಬಿಐ ತನಿಖೆ ಆರಂಭಿಸಿದ ಬಳಿಕ ಪಿತೂರಿ ಬಯಲಾಗಿದೆ. ಪೊಲೀಸ್&zwnj; ಅಧಿಕಾರಿಗಳು ಮತ್ತು ಇಡೀ ವ್ಯವಸ್ಥೆಯನ್ನು ದುರ್ಬಳಕೆ ಮಾಡಲಾಗಿದೆ. ನ್ಯಾಯಾಂಗಕ್ಕೆ ವಂಚಿಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷೆ ವಿಧಿಸಬೇಕು. ಈ ಮೂಲಕ ಸಮಾಜದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದು ಹೇಳುವ ಸಂದೇಶ ನೀಡಬೇಕು ಎಂದು ಸಿಬಿಐ ಪರ ವಕೀಲರು ಕೋರಿದರು.&lt;/p&gt;&lt;p&gt;--&lt;/p&gt;&lt;h3&gt;ಅಪರಾಧಿಗಳ ಅಳಲು ಹೇಗಿತ್ತು?&lt;/h3&gt;&lt;p&gt;&lt;strong&gt;15ನೇ ಅಪರಾಧಿ ವಿನಯ್ ಕುಲಕರ್ಣಿ&lt;/strong&gt;&lt;/p&gt;&lt;p&gt;ಕಳೆದ 27 ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿದ್ದೇನೆ, ಯಾರಿಗೂ ತೊಂದರೆ ನೀಡಿಲ್ಲ. ಮದುವೆ ವಯಸ್ಸಿಗೆ ಬಂದಿರುವ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ರಾಜಕೀಯ ದ್ವೇಷಕ್ಕಾಗಿ ಕೇಸ್ ಹಾಕಲಾಗಿದೆ. ನಾನೊಬ್ಬ ಕೃಷಿಕ, ಸುಮಾರು ಮೂರೂವರೆ ಸಾವಿರ ಹಸು ಮತ್ತು ಎಮ್ಮೆಗಳನ್ನು ಸಾಕುತ್ತಿದ್ದೇನೆ, ನನ್ನ ಮೇಲೆ ಅವಲಂಬಿತರಾದವರಿದ್ದಾರೆ.&lt;/p&gt;&lt;p&gt;&lt;strong&gt;4ನೇ ಅಪರಾಧಿ ಸಂದೀಪ್&zwnj; ಸವದತ್ತಿ:&lt;/strong&gt;&lt;/p&gt;&lt;p&gt;ಚಾಲಕನಾಗಿದ್ದು, ವಯಸ್ಸಾದ ತಂದೆ-ತಾಯಿ ಇದ್ದಾರೆ. ಮನೆಯಲ್ಲಿ ನಾನು ಒಬ್ಬನೇ ದುಡಿಯುವುದು, ಶಿಕ್ಷೆ ಕಠಿಣವಾದರೆ ಅವರ ಜೀವನ ಬೀದಿಗೆ ಬೀಳುತ್ತದೆ.&lt;/p&gt;&lt;p&gt;&lt;strong&gt;5ನೇ ಅಪರಾಧಿ ವಿನಾಯಕ್&zwnj; ಕಾಟಗಿ:&lt;/strong&gt;&lt;/p&gt;&lt;p&gt;ರಿಯಲ್ ಎಸ್ಟೇಟ್ ಉದ್ಯೋಗಿಯಾಗಿದ್ದು, ನನ್ನ ಪೋಷಕರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ.&lt;/p&gt;&lt;p&gt;&lt;strong&gt;3ನೇ ಅಪರಾಧಿ ಕೀರ್ತಿ ಕುಮಾರ್&zwnj;:&lt;/strong&gt;&lt;/p&gt;&lt;p&gt;ರಿಯಲ್&zwnj; ಎಸ್ಟೇಟ್&zwnj; ಏಜೆಂಟ್&zwnj; ಆಗಿದ್ದೆ. ನಾನು ತಪ್ಪು ಮಾಡಿಲ್ಲ.&lt;/p&gt;&lt;p&gt;&lt;strong&gt;ಅಪರಾಧಿ 4- ಸಂದೀಪ್&zwnj; ಸವದತ್ತಿ&lt;/strong&gt;&lt;/p&gt;&lt;p&gt;ನನಗೆ ಚಿಕ್ಕ ಮಕ್ಕಳಿದ್ದಾರೆ. ನಾನು ತಪ್ಪು ಮಾಡಿಲ್ಲ.&lt;/p&gt;&lt;p&gt;&lt;strong&gt;ಅಪರಾಧಿ-9 ಅಶ್ವತ್ಥ್, ಅಪರಾಧಿ-10 ಸುನೀಲ್, ಅಪರಾಧಿ-11 ನಾಜೀರ್&zwnj; ಅಹಮ್ಮದ್:&lt;/strong&gt;&lt;/p&gt;&lt;p&gt;ವಯಸ್ಸಾದ ತಂದೆ-ತಾಯಿ ಇದ್ದಾರೆ. ಸಣ್ಣ ಮಕ್ಕಳ ಭವಿಷ್ಯಕ್ಕಾಗಿ ಕರುಣೆ ತೋರಿ.&lt;/p&gt;&lt;p&gt;&lt;strong&gt;ಅಪರಾಧಿ- 6 ಮಹಾಬಲೇಶ್ವರ್:&lt;/strong&gt;&lt;/p&gt;&lt;p&gt;ನನಗೆ ಒಂದು ವರ್ಷದ ಹಾಗೂ ಮೂರು ವರ್ಷದ ಮಕ್ಕಳಿದ್ದಾರೆ. ನಾನು ದುಡಿದರೆ ಮಾತ್ರ ನಮ್ಮ ಕುಟುಂಬ ನಡೆಯುತ್ತದೆ.&lt;/p&gt;&lt;p&gt;&lt;strong&gt;ಅಪರಾಧಿ-12 ಶಾನವಾಜ್&zwnj; ಮತ್ತು ಅಪರಾಧಿ-18 ವಿಕಾಸ್&zwnj; ಕಲಬುರ್ಗಿ:&lt;/strong&gt;&lt;/p&gt;&lt;p&gt;ವೃತ್ತಿಯಲ್ಲಿ ಗುತ್ತಿಗೆದಾರರು ಮತ್ತು ಕೃಷಿಕರಾಗಿದ್ದು, ಚಿಕ್ಕ ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಮದುವೆ ಮಾಡುವ ಜವಾಬ್ದಾರಿ ಇದೆ.&lt;/p&gt;&lt;p&gt;&lt;strong&gt;13ನೇ ಅಪರಾಧಿ ನೂತನ್&zwnj;:&lt;/strong&gt; ನನಗೆ ಹೃದಯ ಶಸ್ತ್ರಚಿಕಿತ್ಸೆಯಾಗಿ ಸ್ಟಂಟ್ ಅಳವಡಿಸಲಾಗಿದೆ ಶಿಕ್ಷೆ ಕಡಿಮೆ ಮಾಡಿ.&lt;/p&gt;&lt;p&gt;&lt;strong&gt;ಅಪರಾಧಿ-16 ಚಂದ್ರಶೇಖರ್&zwnj; ಹಿಂಡಿ:&lt;/strong&gt;&lt;/p&gt;&lt;p&gt;ನಾನು ಮತ್ತು ನನ್ನ ಪತ್ನಿ ಇಬ್ಬರೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇತ್ತೀಚೆಗೆ ನಮ್ಮ ಮೊಮ್ಮಗನನ್ನು ಕಳೆದುಕೊಂಡಿದ್ದೇವೆ.&lt;/p&gt;&lt;p&gt;&lt;strong&gt;ಅಪರಾಧಿ-7 ಸಂತೋಷ್&zwnj; ಸವದತ್ತಿ:&lt;/strong&gt;&lt;/p&gt;&lt;p&gt;ತೀವ್ರ ಕಣ್ಣಿನ ಸಮಸ್ಯೆಯಿಂದ ದೃಷ್ಟಿ ದೋಷ ಎದುರಿಸುತ್ತಿದ್ದೇನೆ.&lt;/p&gt;&lt;p&gt;&lt;strong&gt;ಅಪರಾಧಿ-19 ಚನ್ನಕೇಶವ (ಪೊಲೀಸ್ ಅಧಿಕಾರಿ):&lt;/strong&gt;&lt;/p&gt;&lt;p&gt;ನಾನು ಇದುವರೆಗೂ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಿಲ್ಲ ಮತ್ತು ಸಮಾಜದಲ್ಲಿ ಉತ್ತಮ ಹೆಸರು ಹೊಂದಿದ್ದೇನೆ. ಈ ಹಿಂದೆ ಪ್ರಶಸ್ತಿ ಕೂಡ ಪಡೆದುಕೊಂಡಿದ್ದೇನೆ.&lt;/p&gt;&lt;p&gt;&lt;strong&gt;ನೊಂದವರಿಗೆ ಪರಿಹಾರಕ್ಕೆ ಮನವಿ:&lt;/strong&gt;&lt;/p&gt;&lt;p&gt;ಸಿಬಿಐ ವಿಶೇಷ ಅಭಿಯೋಜಕರಾದ ಹೇಮಾ, ನೊಂದವರಿಗೆ ಪರಿಹಾರ ನೀಡುವಂತೆ ಕೋರಿದರು. ಇದಕ್ಕೆ ನ್ಯಾಯಾಧೀಶರು ಯಾರಿಗೆ ಪರಿಹಾರ ಎಂದು ಪ್ರಶ್ನಿಸಿದರು. ಯೋಗೇಶ್&zwnj;ಗೌಡ ಅವರ ಮಕ್ಕಳಿಗೆ ಪರಿಹಾರ ನೀಡಬೇಕು ಎಂದರು. ನ್ಯಾಯಾಧೀಶರು, ಪತ್ನಿ ಮಲ್ಲಮ್ಮ ಈ ಪ್ರಕರಣದಲ್ಲಿ ನೊಂದ ವ್ಯಕ್ತಿ ಅಲ್ಲ ಎಂದರು. ಪತ್ನಿ ಮಲ್ಲಮ್ಮಗೆ ಅಲ್ಲ. ಬದಲಿಗೆ ಮಕ್ಕಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು. ಈ ಪ್ರಕರಣದಲ್ಲಿ ಪರಿಹಾರಕ್ಕೆ ಆದೇಶಿಸಬಾರದು ಎಂದು ವಿನಯ್&zwnj; ಕುಲಕರ್ಣಿ ಪರ ವಕೀಲರಾದ ಶ್ಯಾಮ್&zwnj; ಸುಂದರ್&zwnj; ಇದೇ ವೇಳೆ ಮನವಿ ಮಾಡಿದರು.&lt;/p&gt;&lt;p&gt;&lt;strong&gt;ಯಾರಿಗೂ ತೊಂದರೆ ಕೊಟ್ಟಿಲ್ಲ: ಜಡ್ಜ್&zwnj; ಮುಂದೆ ವಿನಯ್&zwnj; ಕಣ್ಣೀರು:&lt;/strong&gt;&lt;/p&gt;&lt;p&gt;ನಾನು ಕಳೆದ 27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯಾರಿಗೂ ತೊಂದರೆ ಕೊಟ್ಟಿಲ್ಲ. ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕೃಷಿಕನಾದ ನಾನು ಸಾವಿರಾರು ಹಸುಗಳನ್ನು ಸಾಕುತ್ತಿದ್ದೇನೆ. ರಾಜಕೀಯ ಕಾರಣಕ್ಕೆ ನನ್ನ ಮೇಲೆ ಕೇಸ್ ಹಾಕಲಾಗಿದೆ. ಹೀಗಾಗಿ ಕಡಿಮೆ ಶಿಕ್ಷೆ ವಿಧಿಸಿ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ನ್ಯಾಯಾಧೀಶರ ಮುಂದೆ ಅಲವತ್ತುಕೊಂಡಿದ್ದಾರೆ.&lt;/p&gt;&lt;p&gt;ಗುರುವಾರ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಬಗ್ಗೆ ಸುದೀರ್ಘ ವಾದ-ಪ್ರತಿವಾದ ನಡೆಯಿತು. ಈ ವೇಳೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ವಿನಯ್&zwnj; ಕುಲಕರ್ಣಿ ತಮ್ಮ ಕೊನೆಯ ಹೇಳಿಕೆ ದಾಖಲಿಸಿದರು.&lt;/p&gt;&lt;p&gt;ವಿನಯ್&zwnj; ಕುಲಕರ್ಣಿ ಪರ ವಕೀಲರಾದ ಎಂ.ಎಸ್&zwnj;.ಶ್ಯಾಮ್&zwnj;ಸುಂದರ್&zwnj; ಅವರು, ವಿನಯ್&zwnj; ಕುಲಕರ್ಣಿ ಜನರ ವಿಶ್ವಾಸ ಗಳಿಸಿ ಜೈಲಿನಿಂದಲೇ ಸ್ಪರ್ಧಿಸಿ ಗೆದ್ದಿದ್ದಾರೆ. ಮೂರು ಬಾರಿ ಶಾಸಕ, ಒಮ್ಮೆ ಸಚಿವರು ಆಗಿದ್ದರು. ಅವರಿಗೆ ಮೂವರು ಮಕ್ಕಳಿದ್ದು, 3,500ಕ್ಕೂ ಅಧಿಕ ಆಕಳು/ಎಮ್ಮೆ ಸಾಕಿದ್ದು, ಅವುಗಳನ್ನು ನೋಡಿಕೊಳ್ಳಬೇಕಿದೆ. ರಾಜಕೀಯ ಕಾರಣಕ್ಕಾಗಿ ಅವರನ್ನು ಕೃತ್ಯದಲ್ಲಿ ಸಿಲುಕಿಸಲಾಗಿದೆ. ಕಡಿಮೆ ಶಿಕ್ಷೆ ವಿಧಿಸಬೇಕು ಎಂದು ಕೋರಿದರು.&lt;/p&gt;&lt;p&gt;&lt;strong&gt;ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ:&lt;/strong&gt;&lt;/p&gt;&lt;p&gt;ನ್ಯಾಯಾಲಯದ ಸೂಚನೆಯಂತೆ ಪೀಠದ ಮುಂದೆ ಹಾಜರಾದ ವಿನಯ್&zwnj; ಕುಲಕರ್ಣಿ, ನಾನು 27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನ ಜೀವನದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ. ರಾಜಕೀಯ ಪ್ರತೀಕಾರಕ್ಕಾಗಿ ಈ ಕೆಲಸ ಮಾಡಿದ್ದಾರೆ. ಮೂವರು ಮಕ್ಕಳಿದ್ದಾರೆ. ಆ ಪೈಕಿ ಇಬ್ಬರು ಹೆಣ್ಣುಮಕ್ಕಳು ಮದುವೆ ವಯಸ್ಸಿಗೆ ಬಂದಿದ್ದಾರೆ. ಮೂರು ಬಾರಿ ಶಾಸಕನಾಗಿದ್ದೇನೆ. ಎರಡು ಬಾರಿ ಸಂಸತ್&zwnj; ಚುನಾವಣೆಯಲ್ಲಿ ನಿಂತು ಸೋತಿದ್ದೇನೆ. ಒಮ್ಮೆ ಸಚಿವನಾಗಿದ್ದೇನೆ. ರಾಜಕೀಯ ಉದ್ದೇಶದಿಂದ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ. ಜತೆಗೆ 3,500 ಹಸು/ಎಮ್ಮೆ ಇವೆ. ಅವುಗಳನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ, ವಿನಾಯಿತಿ ತೋರಬೇಕು ಎಂದು ಕೈಮುಗಿದು ಕಣ್ಣೀರಿಟ್ಟು ಮನವಿ ಮಾಡಿದರು.&lt;/p&gt;&lt;p&gt;&lt;strong&gt;ಮುತ್ತಗಿ ಮನೆಗೆ ಹೆಚ್ಚುವರಿ ಭದ್ರತೆ:&lt;/strong&gt;&lt;/p&gt;&lt;p&gt;ಜಿಪಂ ಸದಸ್ಯ ಯೋಗೇಶಗೌಡ ಹತ್ಯೆಯ ಎ-1 ಆರೋಪಿ, ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರ ಮನೆಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಶಾಸಕ ವಿನಯ್&zwnj; ಕುಲಕರ್ಣಿ ಪರಮಾಪ್ತನಾಗಿದ್ದ ಮುತ್ತಗಿ, ವಿನಯ್&zwnj; ವಿರುದ್ಧವಾಗಿ ಮಾಫಿ ಸಾಕ್ಷಿಯಾಗಿದ್ದಾರೆ. ಹೀಗಾಗಿ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ಕೋರ್ಟ್&zwnj;ಗೆ ತಿಳಿಸಿದ್ದರು. ಅದರಂತೆ ಭದ್ರತೆ ಒದಗಿಸಲಾಗಿತ್ತು. ಬುಧವಾರ ವಿನಯ್&zwnj; ಸೇರಿದಂತೆ 17 ಜನ ಅಪರಾಧಿಗಳು ಎಂದು ಘೋಷಿಸಿದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಬಂದೋಬಸ್ತ್&zwnj; ನಿಯೋಜನೆ ಮಾಡಲಾಗಿದೆ. ಧಾರವಾಡದ ಕೆಲಗೇರಿ ರಸ್ತೆಯಲ್ಲಿರುವ ಮುತ್ತಗಿ ನಿವಾಸಕ್ಕೆ ಸಿಆರ್&zwnj;ಫಿಎಫ್&zwnj;ನ 12 ಸಿಬ್ಬಂದಿ, ಒಂದು ಸಿಎಆರ್ ತುಕಡಿ ನಿಯೋಜಿಸಲಾಗಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/yogesh-gowda-murder-case-vinay-kulkarni-sentenced-today-rav/articleshow-tqgsczu"/>
        </item>
        <item>
            <title><![CDATA[Delimitation 2026: ಕ್ಷೇತ್ರ ಮರುವಿಂಗಡಣೇಲಿ ದಕ್ಷಿಣ ಭಾರತಕ್ಕೆ ಅನ್ಯಾಯವೇ? ಕಾಂಗ್ರೆಸ್‌ ವಾದವೇ ಪೂರ್ವಾಗ್ರಹಪೀಡಿತ!]]></title>
            <link>https://kannada.asianetnews.com/state/injustice-to-south-india-in-delimitation-congress-allegations-are-biased-and-prejudiced-rav/articleshow-17axwi1</link>
            <guid isPermaLink="true">https://kannada.asianetnews.com/state/injustice-to-south-india-in-delimitation-congress-allegations-are-biased-and-prejudiced-rav/articleshow-17axwi1</guid>
            <pubDate>Fri, 17 Apr 2026 05:29:55 +0530</pubDate>
            <description><![CDATA[&lt;p&gt;'ನಾರಿ ಶಕ್ತಿ ವಂದನ್ ಅಧಿನಿಯಮ'ದ ಜೊತೆಗೆ ಲೋಕಸಭೆ ಹಾಗೂ ವಿಧಾನಸಭೆಗಳ ಸದಸ್ಯಬಲ ಹೆಚ್ಚಳದ ಪ್ರಸ್ತಾಪವು ಚರ್ಚೆಯಲ್ಲಿದೆ. 1971ರ ಜನಗಣತಿಯ ಆಧಾರದ ಮೇಲೆ ಇಂದಿರಾ ಗಾಂಧಿಯವರಿಂದ ಸ್ಥಗಿತಗೊಂಡಿದ್ದ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯು ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpcbh2r9tmnrdv09h6phrftr,imgname-----------------------2026-04-17t052445.169-1776383724296.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಕಾಸ್ ಪುತ್ತೂರು, &lt;/strong&gt;ಬಿಜೆಪಿ ಮುಖಂಡರು, &lsquo;ಸಂವಿಧಾನ ಬದಲಾಯಿಸಿದ್ದು ಯಾರು&rsquo; ಕೃತಿ ಲೇಖಕ&lt;/p&gt;&lt;p&gt;ಸಂಸತ್ತಿನ ಕಲಾಪವು ಇದೀಗ ಹೆಚ್ಚುವರಿಯಾಗಿ ಪ್ರಾರಂಭವಾಗಿದ್ದು ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಹಿನ್ನೆಲೆಯಲ್ಲಿ &lsquo;ನಾರಿ ಶಕ್ತಿ ವಂದನ್ ಅಧಿನಿಯಮ&rsquo;ಕ್ಕೆ ತಿದ್ದುಪಡಿ ತರುವುದು ಹಾಗೂ ಉಭಯ ಸದನಗಳ ಸಂಖ್ಯಾಬಲವನ್ನು ಹೆಚ್ಚಿಸುವ ಕಾನೂನು ರೂಪಿಸುವುದು ಈ ಅಧಿವೇಶನದ ಉದ್ದೇಶ ಎಂಬುದು ಮಂಡನೆಯಾದ ಪ್ರಸ್ತಾವನೆಗಳಿಂದ ದೇಶದ ಗಮನಕ್ಕೆ ಬಂದಿದೆ.&lt;/p&gt;&lt;p&gt;ಪ್ರಧಾನಿ ಮೋದಿ ಅವರೂ ತಮ್ಮ ಭಾಷಣದಲ್ಲಿ, &lsquo;ಸದನದ ಸಂಖ್ಯಾಬಲ ವೃದ್ಧಿಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಯಾವುದೇ ಅನ್ಯಾಯವಾಗುವುದಿಲ್ಲ&rsquo; ಎಂದು ಹೇಳಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಪ್ರಧಾನಿಗಳ ಈ ಹೇಳಿಕೆಯ ಬೆನ್ನಲ್ಲೇ ಪೂರ್ವಾಗ್ರಹಪೂರಿತ ಪ್ರತಿಕ್ರಿಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದಿಯಾಗಿ ಪ್ರತಿಪಕ್ಷಗಳು ಸಾಲುಸಾಲಾಗಿ ನೀಡಿರುವುದು ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;h2&gt;ಅಂಬೇಡ್ಕರ್&zwnj; ಅವರು ರೂಪಿಸಿದ್ದ ಸೂತ್ರ&lt;/h2&gt;&lt;p&gt;ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ಜನಸಂಖ್ಯೆ ಸುಮಾರು 40 ಕೋಟಿಯಷ್ಟು ಇರಬಹುದೆಂಬ ಲೆಕ್ಕಾಚಾರದಲ್ಲಿ ಹಾಗೂ ಮುಂದುವರಿದ ರಾಷ್ಟ್ರಗಳು ತಮ್ಮ ಸದನಗಳ ಸದಸ್ಯಬಲ ನಿಶ್ಚಯಿಸಲು ಅನುಸರಿಸುತ್ತಿದ್ದ &lsquo;ಜನಸಂಖ್ಯೆ-ಜನಪ್ರತಿನಿಧಿಗಳ ಅನುಪಾತ&rsquo;ವನ್ನು ಆಧರಿಸಿ ಬಾಬಾಸಾಹೇಬರು 1949ರ ಮೇ 19 ಹಾಗೂ ಜೂ.3ರಂದು ನಡೆದ ಸಂವಿಧಾನ ರಚನಾ ಸಭೆಯಲ್ಲಿ ಒಂದು ಸೂತ್ರವನ್ನು ಅಂತಿಮಗೊಳಿಸಿದರು. ಅದರಂತೆ ಕನಿಷ್ಠ 5 ಲಕ್ಷ ಹಾಗೂ ಗರಿಷ್ಠ 7.5 ಲಕ್ಷ ಜನರಿಗೊಬ್ಬರಂತೆ ಲೋಕಸಭಾ ಸದಸ್ಯರು ಆಯ್ಕೆಯಾಗುವ ಹಾಗೆ ಹಾಗೂ ಅದಕ್ಕನುಗುಣವಾಗಿಯೇ ಲೋಕಸಭೆಯ ಒಟ್ಟು ಸದಸ್ಯಬಲ 500 ಮೀರದಂತೆ ಅನುಚ್ಛೇದ 81ರ ಅಡಿಯಲ್ಲಿ ನೀತಿ ರೂಪಿಸಲಾಯಿತು. ಹಾಗೆಯೇ ಪ್ರತಿ 75 ಸಾವಿರ ಜನರಿಗೊಬ್ಬರು ವಿಧಾನಸಭಾ ಸದಸ್ಯರು ಆಯ್ಕೆಯಾಗುವಂತೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿಯೂ ಕನಿಷ್ಠ 60 ಹಾಗೂ ಗರಿಷ್ಠ 500 ಸದಸ್ಯ ಬಲವಿರುವಂತೆ ಅನುಚ್ಛೇದ 170ರ ಅಡಿಯಲ್ಲಿ ನೀತಿ ನಿರೂಪಿಸಲಾಯಿತು. ಅಷ್ಟೇ ಅಲ್ಲದೆ, ಪ್ರತಿ ದಶವಾರ್ಷಿಕ ಜನಗಣತಿಯ ಬಳಿಕ ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ಮರುವಿಂಗಡಣೆಯ ಕಾರ್ಯವನ್ನು ಕಡ್ಡಾಯವಾಗಿ ಜರುಗಿಸಬೇಕೆಂಬ ನಿಯಮವನ್ನೂ ಬಾಬಾಸಾಹೇಬರು ರೂಪಿಸಿದ್ದರು.&lt;/p&gt;&lt;h3&gt;ಇಂದಿರಾ ಗಾಂಧಿ ಮಾಡಿದ್ದು ಏನು?&lt;/h3&gt;&lt;p&gt;ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ನಿಗದಿಪಡಿಸಲಾಗಿದ್ದ ಜನಸಂಖ್ಯೆಯ ಕೆಳಮಿತಿ ಹಾಗೂ ಮೇಲು ಮಿತಿಯನ್ನು 1952 ಹಾಗೂ 1956ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ತೆಗೆದುಹಾಕಲಾಯಿತು. ನೆಹರೂ ಕಾಲದ ಈ ತಿದ್ದುಪಡಿಗಳಿಂದ ಮತಕ್ಷೇತ್ರಗಳಿಗೆ ಜನಸಂಖ್ಯೆಯ ಇತಿ-ಮಿತಿ ಇಲ್ಲದಂತಾಯಿತಾದರೂ, ಕ್ಷೇತ್ರ ಮರುವಿಂಗಡಣೆಯ ಕಾರ್ಯ ಮಾತ್ರ ಬಾಬಾಸಾಹೇಬರು ನಿಗದಿಪಡಿಸಿದಂತೆಯೇ ಪ್ರತಿ ದಶವಾರ್ಷಿಕ ಜನಗಣತಿಯ ಬಳಿಕ ಜರುಗುತ್ತಿತ್ತು. 1961ರ ಜನಗಣತಿಯ ಆಧಾರದ ಮೇಲೆ 1963ರಲ್ಲಿ ಜರುಗಿದ ಎರಡನೇ ಮರುವಿಂಗಡಣೆಯಂತೆ ಲೋಕಸಭೆಗೆ 522 ಕ್ಷೇತ್ರಗಳು ಹಾಗೂ ಕರ್ನಾಟಕ ವಿಧಾನಸಭೆಗೆ 216 ಕ್ಷೇತ್ರಗಳೆಂದು ನಿಶ್ಚಯವಾದವು. ಮುಂದೆ 1971ರ ಜನಗಣತಿ ಆಧಾರದ ಮೇಲೆ 1973ರಲ್ಲಿ ಜರುಗಿದ ಮೂರನೇ ವಿಂಗಡಣೆಯಂತೆ ಲೋಕಸಭಾ ಕ್ಷೇತ್ರಗಳು 543ಕ್ಕೆ ವೃದ್ಧಿಯಾದರೆ, ಕರ್ನಾಟಕ ವಿಧಾನಸಭೆಗೆ 224 ಕ್ಷೇತ್ರಗಳೆಂದು ನಿಶ್ಚಯವಾದವು. ಅದೇ ಕೊನೆ. ಸದನದ ಸದಸ್ಯಬಲವು ಅಷ್ಟಕ್ಕೇ ಸಿಲುಕಿಕೊಂಡು ಇಂದಿಗೂ ಸ್ತಬ್ಧವಾಗಿದೆ!&lt;/p&gt;&lt;p&gt;ದೇಶದ ಮೇಲೆ 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ ಹಲವು ಬಾರಿ ಸಂವಿಧಾನದ ಮೇಲೆ ಪ್ರಹಾರ ಮಾಡಿದ ಇಂದಿರಾ ಗಾಂಧಿಯವರು, ಸಂವಿಧಾನದ 42ನೇ ತಿದ್ದುಪಡಿಯ ಮೂಲಕ ಕ್ಷೇತ್ರ ಮರುವಿಂಗಡಣೆಯನ್ನೂ ಸ್ತಬ್ಧಗೊಳಿಸಿದರು. ಕ್ಷೇತ್ರ ಮರುವಿಂಗಡಣೆಯನ್ನು ಮುಂದಿನ 25 ವರ್ಷಗಳ ಕಾಲ, ಅಂದರೆ 2000ನೇ ಇಸವಿಯವರೆಗೂ ಮಾಡಬಾರದೆಂದೂ; ಆನಂತರದ ಮರುವಿಂಗಡಣೆಯನ್ನು 2000ನೇ ಇಸವಿಯ ನಂತರ ಕೈಗೊಳ್ಳುವ ಮೊದಲ ಜನಗಣತಿಯ ಆಧಾರದ ಮೇಲೆ ಮಾಡಬೇಕೆಂದೂ ನಿಯಮ ರೂಪಿಸಲಾಯಿತು. ಅಲ್ಲಿಯವರೆಗೂ 1971ರ ಜನಗಣತಿಯ ಆಧಾರದಲ್ಲಿರುವ ಕ್ಷೇತ್ರ ವಿಂಗಡಣೆಯನ್ನೇ ಅನುಸರಿಸುವಂತೆ ಅನುಚ್ಛೇದ 81 ಹಾಗೂ 170 ಅನ್ನು ಬದಲಿಸಲಾಯಿತು.&lt;/p&gt;&lt;p&gt;2001ರಲ್ಲಿ ಸಹಜ ಪರಿಷ್ಕರಣೆಗೆ ಬಂದ ಈ ವಿಧೇಯಕವನ್ನು ಬಾಬಾಸಾಹೇಬರ ಆಶಯದ ಮೂಲಸ್ವರೂಪಕ್ಕೆ ಹಿಂದಿರುಗಿಸಲು ಅಂದಿನ ಬಿಜೆಪಿ ಸರ್ಕಾರಕ್ಕೆ ಸಹಮತ ಸಿಗಲಿಲ್ಲ. ಪ್ರಾದೇಶಿಕ ಪಕ್ಷಗಳ ಬೆಂಬಲದ ಮೇಲೆ ಅವಲಂಬಿತವಾಗಿದ್ದ ಸರ್ಕಾರವು, ಒಲ್ಲದ ಮನಸ್ಸಿನಿಂದ ಅವರ ಆಗ್ರಹಕ್ಕೆ ಮಣಿದು ಕ್ಷೇತ್ರ ಮರುವಿಂಗಡಣೆಯನ್ನು ಯಥಾವತ್ತಾಗಿ ಮುಂದಿನ 25 ವರ್ಷಗಳ ಕಾಲ, ಅಂದರೆ 2026ರವರೆಗೆ ಅನಿವಾರ್ಯವಾಗಿ ಮುಂದೂಡಿತು.&lt;/p&gt;&lt;h3&gt;ಕಾಂಗ್ರೆಸ್ ವಾದ ಮತ್ತು ವಾಸ್ತವ&lt;/h3&gt;&lt;p&gt;ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆಯಾಗುವುದರಿಂದ, ಜನಸಂಖ್ಯೆಯನ್ನು ನಿಯಂತ್ರಿಸುತ್ತಿರುವ ದಕ್ಷಿಣದ ರಾಜ್ಯಗಳಿಗಿಂತ ಉಳಿದ ರಾಜ್ಯಗಳಿಗೆ ಲೋಕಸಭೆಯಲ್ಲಿ ಪ್ರಾತಿನಿಧ್ಯ ಹೆಚ್ಚು ದೊರೆಯಲಿದೆ; ಆ ಕಾರಣಕ್ಕಾಗಿ ಕ್ಷೇತ್ರ ವಿಂಗಡಣೆಯನ್ನೇ ಸ್ಥಗಿತಗೊಳಿಸಬೇಕೆಂಬ ವಾದವನ್ನು ಐದು ದಶಕಗಳ ಕಾಲ ಕಾಂಗ್ರೆಸ್ ಪ್ರತಿಪಾದಿಸಿದೆ. ಈ ವಾದವನ್ನು ಇದೀಗ ಕಾಂಗ್ರೆಸ್ ಕೊಂಚ ಬದಲಿಸಿದಂತಿದೆ. &lsquo;ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳು ಏರಿಕೆಯಾಗಬಾರದೆಂದಲ್ಲ, ಆದರೆ ಅದು ಹೇಗೆ ಏರಿಕೆಯಾಗಲಿದೆ ಎಂಬುದು ನಮ್ಮ ಪ್ರಶ್ನೆ&rsquo; ಎಂದು ಸಿದ್ದರಾಮಯ್ಯನವರು ಕೇಳಿದ್ದಾರೆ.&lt;/p&gt;&lt;p&gt;ಸಿದ್ದರಾಮಯ್ಯನವರ ಈ ಪ್ರಶ್ನೆಯನ್ನು ಗಾಢವಾಗಿ ಅಧ್ಯಯನ ಮಾಡಿದಾಗ, &lsquo;ಕ್ಷೇತ್ರಗಳನ್ನು ಹೆಚ್ಚಿಸುವುದಕ್ಕೆ&rsquo; ಅವರಿಗೆ ಮತ್ತು ಕಾಂಗ್ರೆಸ್&zwnj;ಗೆ ಮೊದಲಿದ್ದ ಆಕ್ಷೇಪ ಈಗ ಇಲ್ಲದಿರುವ ಸಕಾರಾತ್ಮಕ ಅಂಶ ಗೋಚರವಾಗುತ್ತದೆ.&lt;/p&gt;&lt;p&gt;ಎಲ್ಲಾ ರಾಜ್ಯಗಳಲ್ಲಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಲಿದೆ; ಅದರಿಂದ ಬಿಜೆಪಿ ಆಡಳಿತವಿರುವ ಯು.ಪಿ., ಬಿಹಾರ, ಎಂ.ಪಿ., ರಾಜಸ್ಥಾನ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಲಾಭವಾಗಲಿದೆ ಎಂಬುದು ಅವರ ತಕರಾರು. ಕರ್ನಾಟಕ, ಕೇರಳ, ಆಂಧ್ರ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಒಟ್ಟು 129 ಲೋಕಸಭಾ ಕ್ಷೇತ್ರಗಳಿದ್ದು, ಈ ಪ್ರಸ್ತಾವನೆಯಿಂದ ಸುಮಾರು 66 ಕ್ಷೇತ್ರಗಳು ಮಾತ್ರ ವೃದ್ಧಿಯಾಗಲಿವೆ; ಇದನ್ನು ಭಾರತದ ಇತರ ರಾಜ್ಯಗಳಿಗೆ ತುಲನೆ ಮಾಡಿದಾಗ ಈ ಹೆಚ್ಚಳ ಕಡಿಮೆ ಮತ್ತು ದಕ್ಷಿಣದ ರಾಜ್ಯಗಳ ಒಟ್ಟು ಕ್ಷೇತ್ರಗಳ ಪ್ರಮಾಣ ಕೇವಲ ಶೇ.24ರಷ್ಟು ಮಾತ್ರ ಉಳಿಯಲಿದೆ ಎಂದು ಅವರು ವಾದಿಸುತ್ತಿದ್ದಾರೆ.&lt;/p&gt;&lt;h3&gt;ದಕ್ಷಿಣಕ್ಕೆ ಅನ್ಯಾಯವಾದಂತೆ ಕಾಣುವುದಿಲ್ಲ&lt;/h3&gt;&lt;p&gt;ಕ್ಷೇತ್ರ ವಿಂಗಡಣೆಯ ಮಾನದಂಡಗಳನ್ನಾಗಲಿ ಅಥವಾ ಅವುಗಳ ಏರಿಕೆಯ ಪ್ರಮಾಣದ ಬಗ್ಗೆಯಾಗಲಿ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಹೀಗಿದ್ದರೂ ಸಿದ್ದರಾಮಯ್ಯನವರು ಕೆಲವು ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಅವುಗಳನ್ನೇ ಆಧಾರವಾಗಿಟ್ಟು ನೋಡಿದರೂ ದಕ್ಷಿಣದ ರಾಜ್ಯಗಳಿಗೆ ಯಾವುದೇ ಅನ್ಯಾಯವಾಗುವಂತೆ ಕಾಣುವುದಿಲ್ಲ. ಭಾರತದ ದಕ್ಷಿಣದ ರಾಜ್ಯಗಳನ್ನು ಒಂದು ವಿಭಾಗದಂತೆ ಹಾಗೂ ಇನ್ನುಳಿದ ಸಂಪೂರ್ಣ ಭಾರತವನ್ನು ಮತ್ತೊಂದು ವಿಭಾಗದಂತೆ ನೋಡುವುದು ಪೂರ್ವಾಗ್ರಹ ಪೀಡಿತವಾಗುತ್ತದೆ.&lt;/p&gt;&lt;p&gt;ಭೌಗೋಳಿಕ ಹಾಗೂ ಆಡಳಿತಾತ್ಮಕ ದೃಷ್ಟಿಕೋನದಿಂದ ನೋಡಿದಾಗ ಭಾರತದಲ್ಲಿ ಕನಿಷ್ಠ ಐದು ವಿಭಾಗಗಳು ಕಂಡುಬರುತ್ತವೆ. ಕನ್ನಡಿಗರಾದ ನಮ್ಮನ್ನು ಉತ್ತರಭಾಗದವರು ಎಂದು ಯಾರಾದರೂ ಕರೆದಾಗ ನಮಗೆ ಹೇಗೆ ಒಪ್ಪಲು ಸಾಧ್ಯವಿಲ್ಲವೋ, ಅದೇ ರೀತಿ ಪಶ್ಚಿಮ, ಪೂರ್ವ ಮತ್ತು ಮಧ್ಯ ಭಾಗದ ಭಾರತೀಯರು ಕೂಡ ತಮ್ಮನ್ನು &lsquo;ಉತ್ತರ ಭಾಗದವರು&rsquo; ಎಂದು ಕರೆಸಿಕೊಳ್ಳಲು ಒಪ್ಪಲಾರರು. ನಮ್ಮದು ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ. ನಮ್ಮದಲ್ಲದ ಎಲ್ಲವನ್ನೂ ಒಂದೇ ತಕ್ಕಡಿಯಲ್ಲಿ ಹಾಕುವ ಮೂಲಕ ಸಿದ್ದರಾಮಯ್ಯನವರು ದೇಶದ ಒಕ್ಕೂಟ ವ್ಯವಸ್ಥೆಯ ಸಾರಕ್ಕೆ ಧಕ್ಕೆ ತರುತ್ತಿದ್ದಾರೆಯೇ?&lt;/p&gt;&lt;h3&gt;ಜನರ ದಾರಿ ತಪ್ಪಿಸಿದಂತಾಗುವುದಿಲ್ಲವೇ&lt;/h3&gt;&lt;p&gt;ಅಂದಹಾಗೆ 5 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳು ಭಾರತದ ದಕ್ಷಿಣಕ್ಕಿದ್ದು, ಅವು ಶೇ.24ರಷ್ಟು ಲೋಕಸಭಾ ಕ್ಷೇತ್ರಗಳನ್ನು ಹೊಂದಿವೆ. ಹಾಗೆಯೇ 6 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳು ಭಾರತದ ಉತ್ತರಕ್ಕಿದ್ದು, ಅವು ಶೇ.23ರಷ್ಟು ಕ್ಷೇತ್ರಗಳನ್ನು ಹೊಂದಿವೆ. ಭಾರತದ ಮಧ್ಯಭಾಗ, ಪಶ್ಚಿಮ ಹಾಗೂ ಪೂರ್ವಗಳು ಕ್ರಮವಾಗಿ 5, 4 ಹಾಗೂ 9 ರಾಜ್ಯಗಳನ್ನು ಮತ್ತು ಶೇ.18, 13 ಹಾಗೂ 22ರಷ್ಟು ಲೋಕಸಭಾ ಕ್ಷೇತ್ರಗಳನ್ನು ಹೊಂದಿವೆ.&lt;/p&gt;&lt;p&gt;ಸಿದ್ದರಾಮಯ್ಯ ಅವರು ಹೇಳಿರುವ ಪ್ರಸ್ತಾವಿತ ಅಂಕಿ-ಅಂಶಗಳನ್ನು ಆಧರಿಸಿದರೂ, ಪ್ರಸ್ತುತವಿರುವ ಪ್ರಮಾಣದಲ್ಲಿಯೇ ಕ್ಷೇತ್ರಗಳ ಸಂಖ್ಯೆ ವೃದ್ಧಿಯಾಗಲಿದ್ದು, ದಕ್ಷಿಣದ ಪಾಲಿಗೆ ನ್ಯಾಯಯುತ ಪ್ರಾತಿನಿಧ್ಯ ಸಿಗಲಿದೆ. ಹೀಗಿರುವಾಗ ದಕ್ಷಿಣಕ್ಕೆ ಅನ್ಯಾಯವಾಗಲಿದೆ ಎನ್ನುವುದು ಜನರ ಹಾದಿ ತಪ್ಪಿಸಿದಂತಾಗುವುದಿಲ್ಲವೇ?&lt;/p&gt;&lt;p&gt;ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿಯೂ ಕಾಂಗ್ರೆಸ್&zwnj;ಗೆ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲವೆಂಬುದನ್ನು ಅರಿತಿರುವ ಸಿದ್ದರಾಮಯ್ಯನವರು, ಈ ಮೂಲಕ ತಮ್ಮ ಹತಾಶೆಯನ್ನು ಹೊರಹಾಕುತ್ತಿದ್ದಾರೆ. ಜನಬೆಂಬಲ ಸಿಗದ ಕಾರಣಕ್ಕೆ ಜನಪ್ರಾತಿನಿಧ್ಯವನ್ನೇ ಕುಂಠಿತಗೊಳಿಸುವುದು ಸೂಕ್ತವೆಂಬ ಕಾಂಗ್ರೆಸ್&zwnj;ನ ಈ ಒಳಸಂಚು ಲೋಕತಂತ್ರ ಮತ್ತು ಸಂವಿಧಾನದ ಆಶಯಗಳನ್ನು ಅಣಕಿಸುವಂತಿದೆ.&lt;/p&gt;&lt;h3&gt;ಕಲಾಪ ಪ್ರಕ್ರಿಯೆ&lt;/h3&gt;&lt;p&gt;ಸದನದಲ್ಲಿ ಕೇಂದ್ರ ಸರ್ಕಾರ ಮಂಡಸಿರುವ ನಾರಿಶಕ್ತಿ ವಂದನ ಅಧಿನಿಯಮವನ್ನು ಒಪ್ಪಲೇ ಬೇಕಾದ ನೈತಿಕ ಅನಿವಾರ್ಯತೆ ಪ್ರತಿಪಕ್ಷಗಳಿಗಿರುವುದರಿಂದ ಅದು ಜಾರಿಯಾಗುವುದು ಬಹುತೇಕ ನಿಶ್ಚಿತ. ಇದಾದ ಬಳಿಕ ಮುಂಬರುವ ಎಲ್ಲ ವಿಧಾನಸಭೆ ಹಾಗು ಲೋಕಸಭೆಯ ಚುನಾವಣೆಯಲ್ಲಿ ಶೇ.33ರಷ್ಟು ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗುತ್ತದೆ. ಕ್ಷೇತ್ರ ಮರುವಿಂಗಡಣೆಯ ಕುರಿತ ವಿಧೇಯಕವೂ ಸಾಂವಿಧಾನಕ ಅನಿವಾರ್ಯತೆಯಾಗಿರುವ ಕಾರಣ ಇದರ ಬೆನ್ನಲ್ಲೇ ಮಂಡನೆಯಾಗಿದೆ. ಇದರ ಕುರಿತು ಕೇಂದ್ರ ಸರ್ಕಾರದ ಪ್ರಸ್ತಾವನೆಗಿಂತಲೂ ಉತ್ತಮವಾದ ಪ್ರಸ್ತಾವನೆಯನ್ನು ಕಾಂಗ್ರೆಸ್ ಹೊಂದಿದ್ದ ಪಕ್ಷದಲ್ಲಿ, ಸದನದಲ್ಲಿ ಅದನ್ನು ಮಂಡಿಸಿ, ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬದ್ಧತೆ ಪ್ರದರ್ಶಿಸಲಿ. ಲೋಕತಂತ್ರಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಲಿ. ಅದಲ್ಲದೆ ಅವರು ತಮ್ಮ ಎಂದಿನ ಪರಿಪಾಠವನ್ನೇ ಈ ಬಾರಿಯೂ ಮುಂದುವರಿಸಿದರೆ ಬಾಬಾಸಾಹೇಬರ ಆಶಯಗಳಿಗೆ ಅವರು ಮಾಡುವ ಮಹಾಪಚಾರವಾಗಲಿದೆಯೇ ಹೊರತು ಕ್ಷೇತ್ರ ಮರುವಿಂಗಡನೆಯ ಪ್ರಕ್ರಿಯೆಗೆ ಹಿನ್ನಡೆಯಾಗದು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/injustice-to-south-india-in-delimitation-congress-allegations-are-biased-and-prejudiced-rav/articleshow-17axwi1"/>
        </item>
        <item>
            <title><![CDATA[SSLC ತೃತೀಯ ಭಾಷಾ ಪರೀಕ್ಷೆಗೆ ಗ್ರೇಡಿಂಗ್‌ ಪದ್ಧತಿ ಜಾರಿಗೆ ಹೈಕೋರ್ಟ್‌ ತಡೆ; ಹಲವು ಮಕ್ಕಳಿಗೆ ಹಿಂದಿ ಫೇಲ್‌ ಆಗುವ ಆತಂಕ!]]></title>
            <link>https://kannada.asianetnews.com/state/high-court-stays-sslc-grading-system-third-language-exam-many-students-fear-failing-hindi-rav/articleshow-d9iv108</link>
            <guid isPermaLink="true">https://kannada.asianetnews.com/state/high-court-stays-sslc-grading-system-third-language-exam-many-students-fear-failing-hindi-rav/articleshow-d9iv108</guid>
            <pubDate>Fri, 17 Apr 2026 05:06:06 +0530</pubDate>
            <description><![CDATA[ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್ ನೀಡುವ ಸರ್ಕಾರದ ತರಾತುರಿ ನಿರ್ಧಾರಕ್ಕೆ ಹೈಕೋರ್ಟ್&zwnj; ತಡೆ ನೀಡಿದೆ. ಈ ಆದೇಶದಿಂದ ಶಿಕ್ಷಣ ಇಲಾಖೆ ಇಕ್ಕಟ್ಟಿಗೆ ಸಿಲುಕಿದ್ದು, ಗ್ರೇಡಿಂಗ್ ಎಂದು ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸದ ವಿದ್ಯಾರ್ಥಿಗಳಲ್ಲಿ ಫಲಿತಾಂಶದ ಬಗ್ಗೆ ಆತಂಕ ಸೃಷ್ಟಿಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpca3w440bgpyyt6vq3ksgj3,imgname-----------------------2026-04-17t050003.796-1776382242948.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಪರೀಕ್ಷಾ ಫಲಿತಾಂಶದಲ್ಲಿ ಈ ಬಾರಿಯಿಂದಲೇ ಅಂಕಗಳ ಬದಲು ಗ್ರೇಡಿಂಗ್&zwnj; ನೀಡುವ ತರಾತುರಿ ನಿರ್ಧಾರಕ್ಕೆ ಹೈಕೋರ್ಟ್&zwnj; ಬ್ರೇಕ್&zwnj; ಹಾಕಿರುವುದು ಶಾಲಾ ಶಿಕ್ಷಣ ಇಲಾಖೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.&lt;/p&gt;&lt;p&gt;ಹೈಕೋರ್ಟ್&zwnj; ಆದೇಶದಿಂದ ಇಲಾಖೆ ಮುಖಭಂಗಕ್ಕೀಡಾಗಿದೆ. ಈ ಮಧ್ಯೆ, ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಈ ವರ್ಷ ಆದೇಶ ಪಾಲಿಸಿ ತೃತೀಯ ಭಾಷೆಗೂ ಅಂಕಗಳನ್ನೇ ನೀಡಬೇಕೇ ಎನ್ನುವ ಕುರಿತು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ತಜ್ಞರ ಸಲಹೆ ಬಳಿಕ ಶೀಘ್ರ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.&lt;/p&gt;&lt;p&gt;ಮತ್ತೊಂದೆಡೆ ಗ್ರೇಡಿಂಗ್&zwnj; ಪದ್ಧತಿ ಎನ್ನುವ ಕಾರಣಕ್ಕೆ ತೃತೀಯ ಭಾಷಾ ಪರೀಕ್ಷೆಯನ್ನು ಗಂಭೀರವಾಗಿ ಎದುರಿಸದ ಬಹಳಷ್ಟು ವಿದ್ಯಾರ್ಥಿಗಳಲ್ಲಿ ಈಗ ಅನುತ್ತೀರ್ಣದ ಆತಂಕವನ್ನೂ ಸೃಷ್ಟಿಸಿದೆ. ಹಿಂದಿ ಸೇರಿದಂತೆ ತೃತೀಯ ಭಾಷಾ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಸಿದ್ಧರಾಗಿದ್ದ ವಿದ್ಯಾರ್ಥಿಗಳು ಕೂಡ ಒಟ್ಟಾರೆ ಫಲಿತಾಂಶಕ್ಕೆ ಈ ವಿಷಯದ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವಂತೆ ಮಾಡಿದ ಕಾರಣಕ್ಕೆ ತುಂಬಾ ಉತ್ತಮವಾಗಿ ಅಥವಾ ಶೇ.100ಕ್ಕೆ ನೂರು ಅಂಕ ಪಡೆಯುವ ನಿಟ್ಟಿನಲ್ಲಿ ಪರೀಕ್ಷೆಗೆ ಸಿದ್ಧರಾದವರೂ ಅಷ್ಟು ಗಾಂಭೀರ್ಯವಾಗಿ ಪರೀಕ್ಷೆ ಬರೆಯದೆ ಹೋಗಿರುವ ಸಾಧ್ಯತೆ ಹೆಚ್ಚಿದೆ. ಇದರಿಂದ ಅಂತಹ ಮಕ್ಕಳನ್ನೂ ಸರ್ಕಾರದ ನಿರ್ಧಾರ ಫಲಿತಾಂಶ ಕಡಿಮೆಯಾಗುವ ಆತಂಕಕ್ಕೆ ದೂಡಿದೆ.&lt;/p&gt;&lt;p&gt;ಸಾಮಾನ್ಯವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ತರುವುದಾದರೆ ಶೈಕ್ಷಣಿಕ ವರ್ಷದ ಆರಂಭದಲ್ಲೇ ನಿಯಮಾವಳಿ ಬದಲಾವಣೆ ಮಾಡಿ ತರಬೇಕು. ಅದನ್ನು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಂಬಂಧಿಸಿದ ಎಲ್ಲಾ ಭಾಗೀದಾರರಿಗೂ ತಿಳಿಸಬೇಕು. ಆದರೆ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆಯಂತಹ ವಿಷಯದಲ್ಲಿ ಶೈಕ್ಷಣಿಕ ವರ್ಷಾಂತ್ಯದಲ್ಲಿ ಅದರಲ್ಲೂ ಪರೀಕ್ಷೆ ನಡೆಯುತ್ತಿರುವಾಗ ತೃತೀಯ ಭಾಷೆ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ. ಗ್ರೇಡಿಂಗ್&zwnj; ಅಷ್ಟೇ ನೀಡಲಾಗುತ್ತದೆ ಎಂದು ಸರ್ಕಾರ ಘೋಷಿಸಿದ್ದು ವಿವೇಚನಾರಹಿತ ನಿರ್ಧಾರ. ಅಲ್ಲದೆ, 2026ನೇ ಸಾಲಿನ ಪರೀಕ್ಷೆಗಳು ಮುಗಿದ ಮೇಲೆ ಆ ಪರೀಕ್ಷೆಗಳ ಬದಲಾವಣೆಗೆ ಕರಡು ನಿಯಮಾವಳಿ ಪ್ರಕಟಿಸಿದ ಸರ್ಕಾರದ ನಿರ್ಧಾರ ಇನ್ನೂ ಮೂರ್ಖತನದ್ದು ಎನ್ನುತ್ತಾರೆ ಶಿಕ್ಷಣ ತಜ್ಞರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/high-court-stays-sslc-grading-system-third-language-exam-many-students-fear-failing-hindi-rav/articleshow-d9iv108"/>
        </item>
        <item>
            <title><![CDATA[ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ]]></title>
            <link>https://kannada.asianetnews.com/state/karnataka-ips-dr-ma-saleem-s-tenure-as-dg-igp-extended-till-2027-rav/articleshow-8cqp80b</link>
            <guid isPermaLink="true">https://kannada.asianetnews.com/state/karnataka-ips-dr-ma-saleem-s-tenure-as-dg-igp-extended-till-2027-rav/articleshow-8cqp80b</guid>
            <pubDate>Fri, 17 Apr 2026 04:48:58 +0530</pubDate>
            <description><![CDATA[&lt;p&gt;ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ। ಎಂ.ಎ.ಸಲೀಂ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಿಸಿ ರಾಜ್ಯ ಸರ್ಕಾರ ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಜೂನ್&zwnj;ನಲ್ಲಿ ನಿವೃತ್ತರಾಗಬೇಕಿದ್ದ ಅವರಿಗೆ, ಸುಪ್ರೀಂ ಕೋರ್ಟ್&zwnj;ನ ನಿರ್ದೇಶನದಂತೆ ಈ ವಿಸ್ತರಣೆ ದೊರೆತಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpc8v67srxza5bdmqzdtyrsc,imgname-----------------------2026-04-17t043808.356-1776380909817.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.17): &lt;/strong&gt;ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ। ಎಂ.ಎ.ಸಲೀಂ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಿಸಿ ರಾಜ್ಯ ಸರ್ಕಾರ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.&lt;/p&gt;&lt;p&gt;ಇದೇ ವರ್ಷದ ಜೂನ್ ತಿಂಗಳಿಗೆ ಸಲೀಂ ಅವರು ನಿವೃತ್ತರಾಗಲಿದ್ದರು. ಆದರೆ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ 2027ರ ಆಗಸ್ಟ್&zwnj;ನಲ್ಲಿ ರಾಜ್ಯ ಪೊಲೀಸ್ ಮಹಾದಂಡನಾಯಕ ಹುದ್ದೆಯಿಂದ ಅವರು ಬಿಡುಗಡೆ ಆಗಲಿದ್ದಾರೆ. ಸುಪ್ರೀಂಕೋರ್ಟ್ ಆದೇಶದನ್ವಯ ಡಿಜಿ-ಐಜಿಪಿ ಸಲೀಂ ಅವರಿಗೆ ಅಧಿಕಾರಾವಧಿ ವಿಸ್ತರಣೆ ಮಾಡಲಾಗಿದೆ ಎಂದು ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸೇವಾ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಬಿ.ಎಸ್&zwnj;.ಸಂಜಯ್ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.&lt;/p&gt;&lt;p&gt;2006ರಲ್ಲಿ ಪಂಜಾಬ್&zwnj; ರಾಜ್ಯದ ಐಪಿಎಸ್ ಅಧಿಕಾರಿ ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಅಧಿಕಾರಾವಧಿ ಕನಿಷ್ಠ 2 ವರ್ಷಗಳಿರಬೇಕು ಎಂದು ಆದೇಶಿಸಿತ್ತು. ಆದರೆ ಡಿಜಿ-ಐಜಿ ಹುದ್ದೆಗೆ ನೇಮಕಗೊಳ್ಳುವ ಐಪಿಎಸ್&zwnj; ಅಧಿಕಾರಿ ನಿವೃತ್ತಿಗೆ ಕನಿಷ್ಠ 6 ತಿಂಗಳಿಗಿಂತ ಹೆಚ್ಚಿನ ಸೇವಾವಧಿ ಇದ್ದರೆ ಪರಿಗಣಿಸಬಹುದು ಎಂಬ ನಿಯಮ ರೂಪಿಸಿತ್ತು. ಈ ನ್ಯಾಯಾಲಯದ ಆದೇಶದನ್ವಯ ಸಲೀಂ ಅವರಿಗೆ ಅಧಿಕಾರಾವಧಿ ವಿಸ್ತರಣೆಯಾಗಿದೆ.&lt;/p&gt;&lt;h2&gt;ನಾಲ್ಕು ತಿಂಗಳಿಗಿಂತ ಮುನ್ನ:&lt;/h2&gt;&lt;p&gt;ಇದೇ ವರ್ಷದ ಜೂನ್&zwnj; ತಿಂಗಳಿಗೆ ಸಲೀಂ ಅವರು ಸೇವಾ ನಿವೃತ್ತಿ ಆಗಲಿದ್ದರು. ಅಲ್ಲದೆ 2024ರ ಮೇ 22ರಂದು ಅವರು ಡಿಜಿ-ಐಜಿಪಿ ಹುದ್ದೆ ನೇಮಕಗೊಂಡಿದ್ದರು. ಹೀಗಾಗಿ ಜೂನ್&zwnj; ಅಥವಾ ಆಗಸ್ಟ್&zwnj;ನಲ್ಲಿ ಅಧಿಕಾರ ವಿಸ್ತರಣೆ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಬೇಕಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಸಲೀಂ ಅವರ ಅಧಿಕಾರ ವಿಸ್ತರಣೆ ಆದೇಶ ಹೊರಬಿದ್ದಿರುವುದು ಇಲಾಖೆಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.&lt;/p&gt;&lt;p&gt;ಮೊದಲು ಪ್ರಭಾರಿಯಾಗಿ ಡಿಜಿಪಿ ಹುದ್ದೆಗೆ ಅಧಿಕಾರ ವಹಿಸಿಕೊಂಡ ಅವರು ನಾಲ್ಕು ತಿಂಗಳ ಬಳಿಕ ಕೇಂದ್ರ ಲೋಕಸೇವಾ ಆಯೋಗದ ಅನುಮೋದನೆ ಮೇರೆಗೆ ಕಾಯಂ ಆಗಿದ್ದರು. ಇನ್ನು ಈ ಹಿಂದೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರಿಗೆ ಪ್ರಭಾರ ಆಡಳಿತಾವಧಿಯನ್ನು ಸರ್ಕಾರ ಪರಿಗಣಿಸಿತ್ತು. ಆದರೆ ಸಲೀಂ ಅವರ ವಿಚಾರದಲ್ಲಿ ಉಸ್ತುವಾರಿ ಅವಧಿಯನ್ನು ಪರಿಗಣಿಸದೆ ಹುದ್ದೆ ಕಾಯಂಗೊಂಡ ದಿನದಿಂದ ಲೆಕ್ಕ ಹಾಕಿ ಅಧಿಕಾರಾವಧಿಯನ್ನು ಸರ್ಕಾರ ವಿಸ್ತರಿಸಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-ips-dr-ma-saleem-s-tenure-as-dg-igp-extended-till-2027-rav/articleshow-8cqp80b"/>
        </item>
        <item>
            <title><![CDATA[ಕೆಂಪೇಗೌಡ ಲೇಔಟ್‌ಗೆ ಮೂಲ ಸೌಕರ್ಯ ಕಲ್ಪಿಸದ  BDAಗೆ ಬರೆ ಎಳೆದ K-RERA; ಸೈಟ್ ಓನರ್‌ಗೆ ಕೊಡಿ ₹56 ಲಕ್ಷ ಬಡ್ಡಿ ಪರಿಹಾರ]]></title>
            <link>https://kannada.asianetnews.com/state/karnataka-rera-order-bda-nadaprabhu-kempegowda-layout-site-owners-compensation-interest-sat/articleshow-73b41dg</link>
            <guid isPermaLink="true">https://kannada.asianetnews.com/state/karnataka-rera-order-bda-nadaprabhu-kempegowda-layout-site-owners-compensation-interest-sat/articleshow-73b41dg</guid>
            <pubDate>Thu, 16 Apr 2026 20:38:55 +0530</pubDate>
            <description><![CDATA[&lt;p&gt;ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಸೌಕರ್ಯ ಒದಗಿಸದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (BDA) ಕರ್ನಾಟಕ ರೇರಾ (K-RERA) ಐತಿಹಾಸಿಕ ಆದೇಶ ನೀಡಿದೆ. ನಿವೇಶನದಾರರೊಬ್ಬರಿಗೆ ₹56 ಲಕ್ಷಕ್ಕೂ ಅಧಿಕ ಬಡ್ಡಿ ಪರಿಹಾರ ಪಾವತಿಸುವಂತೆ ಸೂಚಿಸಿದ್ದು, ಇದು ಬಡಾವಣೆ ಇತರ ನಿವೇಶನದಾರರಿಗೂ ಭರವಸೆ ಮೂಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpbd7dmqfchcfhvv183rw20g,imgname-bda-nadaprahu-kempegowda-layout--1--1776351950487.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.16): ನಾ&lt;/strong&gt;ಡಪ್ರಭು ಕೆಂಪೇಗೌಡ ಬಡಾವಣೆಯ (NPKL) ಸಾವಿರಾರು ನಿವೇಶನದಾರರಿಗೆ ದಶಕಗಳಿಂದ ಮೂಲಸೌಕರ್ಯ ಒದಗಿಸದೆ ಸತಾಯಿಸುತ್ತಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (BDA) ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ಈಗ ಸರಿಯಾದ ಪಾಠ ಕಲಿಸಿದೆ. ಬಡಾವಣೆಯಲ್ಲಿ ಸೈಟ್ ನೀಡಿದರೂ ಮನೆ ಕಟ್ಟಲು ಅಗತ್ಯವಾದ ಕನಿಷ್ಠ ಸೌಲಭ್ಯಗಳನ್ನು ನೀಡದ ಕಾರಣಕ್ಕಾಗಿ, ಒಬ್ಬರೇ ನಿವೇಶನದಾರರಿಗೆ ಬರೋಬ್ಬರಿ ₹56,03,736 ಬಡ್ಡಿ ಪರಿಹಾರ ನೀಡುವಂತೆ ಬಿಡಿಎಗೆ ರೇರಾ ಐತಿಹಾಸಿಕ ಆದೇಶ ನೀಡಿದೆ.&lt;/p&gt;&lt;h2&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h2&gt;&lt;p&gt;ಬೆಂಗಳೂರಿನ ಜಯನಗರ ನಿವಾಸಿ ಮೃದುಲಾ ಕೃಷ್ಣಪುರ್ ಎಂಬುವವರು ನಾಡಪ್ರಭು ಕೆಂಪೇಗೌಡ ಬಡಾವಣೆಯ 8ನೇ ಬ್ಲಾಕ್&zwnj;ನಲ್ಲಿ 50x80 ಅಳತೆಯ (ಸೈಟ್ ಸಂಖ್ಯೆ 456) ನಿವೇಶನವನ್ನು 2020ರಲ್ಲಿ ಸುಮಾರು ₹96,87,510 ಪಾವತಿಸಿ ಪಡೆದಿದ್ದರು. ಬಿಡಿಎ ಅವರಿಗೆ 2020ರ ಜೂನ್ 16ರಂದು ಸ್ವಾಧೀನ ಪತ್ರವನ್ನೂ (Possession Certificate) ನೀಡಿತ್ತು. ಆದರೆ, ಸೈಟ್ ಕೈಗೆ ಸಿಕ್ಕರೂ ಅಲ್ಲಿ ರಸ್ತೆ ಇಲ್ಲ, ಕುಡಿಯುವ ನೀರಿಲ್ಲ, ವಿದ್ಯುತ್ ಸಂಪರ್ಕವಿಲ್ಲ ಅಥವಾ ಒಳಚರಂಡಿ ವ್ಯವಸ್ಥೆಯೂ ಇಲ್ಲ. ಮೂಲಸೌಕರ್ಯಗಳಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿ ಮೃದುಲಾ ಅವರು ರೇರಾ ಮೊರೆ ಹೋಗಿದ್ದರು.&lt;/p&gt;&lt;h2&gt;&lt;strong&gt;ರೇರಾ ಪೀಠದ ಕಠಿಣ ನಿಲುವು:&lt;/strong&gt;&lt;/h2&gt;&lt;p&gt;ಪ್ರಕರಣದ ವಿಚಾರಣೆ ನಡೆಸಿದ ರೇರಾ ಅಧ್ಯಕ್ಷ ರಾಕೇಶ್&zwnj; ಸಿಂಗ್ ಮತ್ತು ಸದಸ್ಯ ಜಿ.ಆರ್. ರೆಡ್ಡಿ ಅವರ ಪೀಠವು ಬಿಡಿಎ ಧೋರಣೆಯನ್ನು ತೀವ್ರವಾಗಿ ಖಂಡಿಸಿದೆ. 'ಕೇವಲ ಕಾಗದದ ಮೇಲೆ ಸೈಟ್ ಸ್ವಾಧೀನ ಪತ್ರ ನೀಡುವುದು ಸಾಕಾಗುವುದಿಲ್ಲ. ಒಬ್ಬ ನಿವೇಶನದಾರ ಆ ಸೈಟ್&zwnj;ನಲ್ಲಿ ಮನೆ ಕಟ್ಟಲು ಮತ್ತು ನೆಮ್ಮದಿಯಿಂದ ವಾಸಿಸಲು ಅಗತ್ಯವಿರುವ ರಸ್ತೆ, ನೀರು, ಚರಂಡಿಯಂತಹ ಕನಿಷ್ಠ ಸೌಲಭ್ಯಗಳನ್ನು ಒದಗಿಸುವುದು ಡೆವಲಪರ್&zwnj;ನ (ಬಿಡಿಎ) ಪ್ರಾಥಮಿಕ ಕರ್ತವ್ಯ' ಎಂದು ರೇರಾ ಸ್ಪಷ್ಟಪಡಿಸಿದೆ.&lt;/p&gt;&lt;h2&gt;&lt;strong&gt;ಪರಿಹಾರದ ಲೆಕ್ಕಾಚಾರ ಹೀಗಿದೆ:&lt;/strong&gt;&lt;/h2&gt;&lt;p&gt;ಸುಪ್ರೀಂ ಕೋರ್ಟ್&zwnj;ನ ಈ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ರೇರಾ, ವಿಳಂಬ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ನೀಡಲು ಆದೇಶಿಸಿದೆ.&lt;/p&gt;&lt;p&gt;ಮೃದುಲಾ ಅವರಿಗೆ 10-06-2020 ರಿಂದ 02-02-2026ರ ವರೆಗಿನ ಅವಧಿಗೆ ಒಟ್ಟು ₹56,03,736 ಬಡ್ಡಿಯನ್ನು 60 ದಿನಗಳ ಒಳಗಾಗಿ ಪಾವತಿಸಬೇಕು.&lt;/p&gt;&lt;p&gt;ಅಷ್ಟೇ ಅಲ್ಲದೆ, 03-02-2026 ರಿಂದ ಬಡಾವಣೆಯಲ್ಲಿ ಮೂಲಸೌಕರ್ಯಗಳು ಪೂರ್ಣಗೊಳ್ಳುವವರೆಗೂ ಪ್ರತಿ ತಿಂಗಳು ಇದೇ ದರದಲ್ಲಿ ಬಡ್ಡಿ ಪರಿಹಾರವನ್ನು ನೀಡುತ್ತಿರಬೇಕು.&lt;/p&gt;&lt;h2&gt;&lt;strong&gt;ಇತರೆ ಸೈಟ್ ಮಾಲೀಕರಿಗೆ ಇದು ಸುವರ್ಣ ಅವಕಾಶ:&lt;/strong&gt;&lt;/h2&gt;&lt;p&gt;ಈ ತೀರ್ಪು ಕೇವಲ ಒಬ್ಬರಿಗೆ ಸೀಮಿತವಲ್ಲ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಸೈಟ್ ಪಡೆದು ಇನ್ನೂ ಮೂಲಸೌಕರ್ಯಕ್ಕಾಗಿ ಕಾಯುತ್ತಿರುವ ಸಾವಿರಾರು ಮಾಲೀಕರಿಗೆ ಇದೊಂದು ಭರವಸೆಯ ಕಿರಣವಾಗಿದೆ. ರೇರಾ ಪೀಠವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ, ಯಾರು ಅಗತ್ಯ ದಾಖಲೆಗಳೊಂದಿಗೆ ದೂರು ಸಲ್ಲಿಸುತ್ತಾರೋ ಅವರೆಲ್ಲರಿಗೂ ಇಂತಹದ್ದೇ ಪರಿಹಾರ ದೊರಕಲಿದೆ. ಬಿಡಿಎಯ ನಿಷ್ಕ್ರಿಯತೆಯಿಂದ ಸಾವಿರಾರು ಕುಟುಂಬಗಳ ಜೀವಮಾನದ ಉಳಿತಾಯ ನೆನೆಗುದಿಗೆ ಬಿದ್ದಿದೆ. ಬಡಾವಣೆಯ ಅಭಿವೃದ್ಧಿ ಕಾರ್ಯಗಳು ಕುಂಟುತ್ತಾ ಸಾಗುತ್ತಿರುವುದಕ್ಕೆ ಈ ದಂಡದ ರೂಪದ ಬಡ್ಡಿ ಪರಿಹಾರವು ಬಿಡಿಎಗೆ ದೊಡ್ಡ ಹೊಡೆತ ನೀಡಲಿದೆ. ಈ ತೀರ್ಪಿನಿಂದಾಗಿ ಈಗಲಾದರೂ ಬಿಡಿಎ ಎಚ್ಚೆತ್ತುಕೊಂಡು ಬಡಾವಣೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುತ್ತದೆಯೇ ಎಂದು ನಿವೇಶನದಾರರು ಕಾದು ನೋಡಬೇಕಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-rera-order-bda-nadaprabhu-kempegowda-layout-site-owners-compensation-interest-sat/articleshow-73b41dg"/>
        </item>
        <item>
            <title><![CDATA[ರಾಜ್ಯದ 12 ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್': ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ!]]></title>
            <link>https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv</link>
            <guid isPermaLink="true">https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv</guid>
            <pubDate>Thu, 16 Apr 2026 19:23:32 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ 'ಎಲ್ಲೋ ಅಲರ್ಟ್' ಘೋಷಿಸಿದೆ. ಈ ಅವಧಿಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knds8w34zxderfy8e77w0egc,imgname-delhi-ncr-weather-alert-rain-hailstorm-thunderstorm-western-disturbance-imd-warning-wind-speed-storm-india-4-1775357948004.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.16): &lt;/strong&gt;ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಮೂರು ಗಂಟೆಗಳ ಕಾಲ 12 ಜಿಲ್ಲೆಗಳಲ್ಲಿ 'ಎಲ್ಲೋ ಅಲರ್ಟ್' ಘೋಷಿಸಿದೆ. ವಾತಾವರಣದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಎಲ್ಲೆಲ್ಲಿ ಅಲರ್ಟ್ ಘೋಷಿಸಲಾಗಿದೆ?&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈ ಎಚ್ಚರಿಕೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆ&lt;/strong&gt;&lt;/h2&gt;&lt;p&gt;ಕೇವಲ ಸಾಧಾರಣ ಮಳೆಯಲ್ಲದೆ, ಗಾಳಿಯ ವೇಗ ಹೆಚ್ಚಿರಲಿದ್ದು ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಇದರಿಂದ ಕೃಷಿ ಭೂಮಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಗುಡುಗು ಸಹಿತ ಮಳೆ ಬರುವಾಗ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ. ಬಿರುಗಾಳಿಯ ತೀವ್ರತೆಗೆ ಹಳೆಯ ಕಟ್ಟಡಗಳು ಹಾಗೂ ದುರ್ಬಲ ಮರಗಳು ಉರುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv"/>
        </item>
        <item>
            <title><![CDATA[ರಾಜ್ಯದಲ್ಲಿ ಬಿಸಿಗಾಳಿ ಆರ್ಭಟ: 12 ಜಿಲ್ಲೆಗಳಿಗೆ 4 ದಿನ ಕಾಲ ಹೀಟ್‌ವೇವ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ!]]></title>
            <link>https://kannada.asianetnews.com/state/karnataka-heatwave-alert-12-districts-under-warning-as-kalaburagi-records-45c-gdp/articleshow-kx8ucyr</link>
            <guid isPermaLink="true">https://kannada.asianetnews.com/state/karnataka-heatwave-alert-12-districts-under-warning-as-kalaburagi-records-45c-gdp/articleshow-kx8ucyr</guid>
            <pubDate>Thu, 16 Apr 2026 19:14:50 +0530</pubDate>
            <description><![CDATA[ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹವಾಮಾನ ಇಲಾಖೆಯು ಉತ್ತರ ಕರ್ನಾಟಕ ಸೇರಿದಂತೆ 12 ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಬಿಸಿಗಾಳಿಯ ಯೆಲ್ಲೋ ಅಲರ್ಟ್&zwnj; ಘೋಷಿಸಿದ್ದು, ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಸೂಚಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01hyjjqpac85zwfh821211zw9n,imgname-imd-weather-heat-wave-alert-IN-Rajasthan-1716463065420.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹಲವೆಡೆ ತಾಪಮಾನ ತಾರಕಕ್ಕೇರಿದೆ. ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ರಾಜ್ಯದ 12 ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಹೀಟ್&zwnj;ವೇವ್&zwnj; (ಬಿಸಿಗಾಳಿ) ಎಚ್ಚರಿಕೆ ನೀಡಲಾಗಿದೆ.&lt;/p&gt;&lt;p&gt;ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಏಪ್ರಿಲ್&zwnj; 15ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಗಾಳಿ ತೀವ್ರಗೊಂಡಿದ್ದು, ಏಪ್ರಿಲ್&zwnj; 19ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯ ಭಾರತದಲ್ಲಿ ಉಂಟಾಗಿರುವ ವಾಯು ಒತ್ತಡದ ಹೆಚ್ಚಳ ಹಾಗೂ ಜಾಗತಿಕ ಉಷ್ಣಾಂಶ ಏರಿಕೆಯಿಂದಾಗಿ ಈ ಬಿಸಿಗಾಳಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಲಾಗಿದೆ.&lt;/p&gt;&lt;p&gt;ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್&zwnj; ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ತಾಪಮಾನ ಹೆಚ್ಚಾಗಿ, ಬಿಸಿಗಾಳಿಯ ಪರಿಣಾಮ ತೀವ್ರವಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು&lt;/h2&gt;&lt;p&gt;ಈ ಕುರಿತು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಸಿ.ಎಸ್&zwnj;. ಪಾಟೀಲ್&zwnj; ಅವರು ಪ್ರತಿಕ್ರಿಯಿಸಿ, &ldquo;ರಾಜ್ಯದ 12 ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಬಿಸಿಗಾಳಿಯ ವಾತಾವರಣ ಮುಂದುವರಿಯಲಿದೆ. ಕಲಬುರಗಿಯಲ್ಲಿ ಸದ್ಯ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದ್ದು, ಮುಂದಿನ ದಿನಗಳಲ್ಲಿ ಅದು 44 ರಿಂದ 45 ಡಿಗ್ರಿ ಸೆಲ್ಸಿಯಸ್&zwnj;ಗೆ ಏರಬಹುದು ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಅದೇ ವೇಳೆ, ಬೆಂಗಳೂರಿನಲ್ಲಿ ಈಗಾಗಲೇ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಅದು 38 ರಿಂದ 39 ಡಿಗ್ರಿ ಸೆಲ್ಸಿಯಸ್&zwnj;ಗೆ ಏರಬಹುದು. ಕರಾವಳಿ ಜಿಲ್ಲೆಗಳಲ್ಲಿಯೂ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್&zwnj;ವರೆಗೆ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಮಾತ್ರವಲ್ಲದೆ ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಇನ್ನೂ ಹಲವು ರಾಜ್ಯಗಳಲ್ಲಿಯೂ ಬಿಸಿಗಾಳಿ ತೀವ್ರವಾಗಿರುವುದಾಗಿ ಅವರು ವಿವರಿಸಿದರು.&lt;/p&gt;&lt;h2&gt;ಏಪ್ರಿಲ್&zwnj;ನಲ್ಲೇ ಕಾಣಿಸಿಕೊಂಡಿರುವುದು ಅಸಾಮಾನ್ಯ ಬೆಳವಣಿಗೆ&lt;/h2&gt;&lt;p&gt;ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಉಷ್ಣಾಂಶ ತೀವ್ರವಾಗಿ ಏರಿಕೆಯಾಗಿದ್ದು, ಕಲಬುರಗಿಯಲ್ಲಿ ದಾಖಲೆಯ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ದಾಖಲಾಗುವ ಈ ಮಟ್ಟದ ಉಷ್ಣಾಂಶ ಈ ಬಾರಿ ಏಪ್ರಿಲ್&zwnj;ನಲ್ಲೇ ಕಾಣಿಸಿಕೊಂಡಿರುವುದು ಅಸಾಮಾನ್ಯ ಬೆಳವಣಿಗೆಯಾಗಿದೆ.&lt;/p&gt;&lt;p&gt;ಇದೇ ವೇಳೆ ವಿಜಯಪುರ ಮತ್ತು ರಾಯಚೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್, ಕೊಪ್ಪಳ, ಬೀದರ್, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ 39 ಡಿಗ್ರಿ ಸೆಲ್ಸಿಯಸ್, ಧಾರವಾಡ ಮತ್ತು ಚಿತ್ರದುರ್ಗದಲ್ಲಿ 38 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ, ಹಾವೇರಿ, ದಾವಣಗೆರೆ, ಬೆಂಗಳೂರು ಹಾಗೂ ಮೈಸೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.&lt;/p&gt;&lt;h2&gt;ಆರೆಂಜ್&zwnj; ಅಲರ್ಟ್&zwnj; ಘೋಷಣೆ&lt;/h2&gt;&lt;p&gt;ವಿಪರೀತ ಬಿಸಿಲು ಹಾಗೂ ಉಷ್ಣಾಂಶ ಏರಿಕೆಯಿಂದಾಗಿ ಕಲಬುರಗಿ ಜಿಲ್ಲಾಡಳಿತ ಆರೆಂಜ್&zwnj; ಅಲರ್ಟ್&zwnj; ಘೋಷಿಸಿದೆ. ಬೆಳಗ್ಗೆ 11ರಿಂದ ಮಧ್ಯಾಹ್ನದವರೆಗೆ ಅನಾವಶ್ಯಕವಾಗಿ ಹೊರಗೆ ಹೋಗದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದು, ನೆರಳಿನಲ್ಲಿ ಕಾಲ ಕಳೆಯುವುದು, ತಲೆ ಮುಚ್ಚಿಕೊಳ್ಳುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.&lt;/p&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಮಧ್ಯಾಹ್ನ ವೇಳೆಗೆ ರಸ್ತೆಗಳು ಬಿಕೋ ಎನ್ನುತ್ತಿವೆ. ಸಂಜೆ 6 ಗಂಟೆಯ ನಂತರ ಬಿಸಿಲು ತಗ್ಗಿದಾಗ ಮಾತ್ರ ಜನರು ಹೊರಗೆ ಬರುತ್ತಿರುವುದು ಕಂಡು ಬರುತ್ತಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿಸಿಗಾಳಿಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಾಗಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-12-districts-under-warning-as-kalaburagi-records-45c-gdp/articleshow-kx8ucyr"/>
        </item>
        <item>
            <title><![CDATA[ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...]]></title>
            <link>https://kannada.asianetnews.com/state/former-minister-vinay-kulkarni-convicted-in-yogesh-gowda-murder-case-update-news-sat-videoshow-mtde3wt</link>
            <guid isPermaLink="true">https://kannada.asianetnews.com/state/former-minister-vinay-kulkarni-convicted-in-yogesh-gowda-murder-case-update-news-sat-videoshow-mtde3wt</guid>
            <pubDate>Thu, 16 Apr 2026 18:30:02 +0530</pubDate>
            <description><![CDATA[&lt;p&gt;ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯ 'ಅಪರಾಧಿ' ಎಂದು ಘೋಷಿಸಿದೆ. ಸಿಬಿಐ ತನಿಖೆಯು ಈ ಕೊಲೆಯ ಮಾಸ್ಟರ್ ಮೈಂಡ್ ವಿನಯ್ ಕುಲಕರ್ಣಿ ಎಂದು ಸಾಕ್ಷ್ಯ ಸಮೇತ ಸಾಬೀತುಪಡಿಸಿದ ನಂತರ, ಸುದೀರ್ಘ ಕಾನೂನು ಹೋರಾಟಕ್ಕೆ ಅಂತಿಮ ತೆರೆ ಬಿದ್ದಿದೆ.&amp;nbsp;&lt;/p&gt;]]></description>
            <media:content url="https://geo.dailymotion.com/player/x1tbu.html?video=xa5nrha" medium="video" height="768" width="1024"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಧಾರವಾಡ (ಏ.16): 'ನ್ಯಾ&lt;/strong&gt;ಯ ವಿಳಂಬವಾಗಬಹುದು, ಆದರೆ ಸತ್ಯಕ್ಕೆ ಸೋಲಿಲ್ಲ' (Justice may be delayed but truth prevail) ಎಂಬ ಮಾತಿಗೆ ಇಂದು ಮತ್ತೆ ಜಯ ಸಿಕ್ಕಿದೆ. ದಶಕದ ಹಿಂದೆ ನಡೆದಿದ್ದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಬರ್ಬರ ಕೊಲೆ ಪ್ರಕರಣದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯವು 'ಅಪರಾಧಿ' ಎಂದು ಘೋಷಿಸಿದೆ. ಈ ತೀರ್ಪಿನೊಂದಿಗೆ ಹತ್ತು ವರ್ಷಗಳ ಕಾಲ ನಡೆದ ಸುದೀರ್ಘ ಕಾನೂನು ಹೋರಾಟ ಮತ್ತು ರಾಜಕೀಯ ಹಸ್ತಕ್ಷೇಪಗಳ ನಾಟಕಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.&lt;/p&gt;&lt;p&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/p&gt;&lt;p&gt;2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್&zwnj;ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಆರಂಭದಲ್ಲಿ ಇದೊಂದು ಭೂಮಿ ವಿವಾದದ ಕೊಲೆ ಎಂದು ಬಿಂಬಿಸಲು ರಾಜ್ಯ ಪೊಲೀಸರ ಮೇಲೆ ತೀವ್ರ ರಾಜಕೀಯ ಒತ್ತಡ ಹೇರಲಾಗಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ಹೆಸರು ಈ ಪ್ರಕರಣದಲ್ಲಿ ಕೇಳಿಬಂದಿದ್ದರೂ, ಸ್ಥಳೀಯ ಪೊಲೀಸರು ಪ್ರಕರಣವನ್ನು ಹಳ್ಳ ಹಿಡಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು.&lt;/p&gt;&lt;p&gt;&lt;strong&gt;ಸುವರ್ಣ ನ್ಯೂಸ್ ಬೆನ್ನತ್ತಿದ ಪ್ರಕರಣ:&lt;/strong&gt;&lt;/p&gt;&lt;p&gt;ಯೋಗೇಶ್ ಗೌಡ ಅವರ ಕುಟುಂಬದವರು ನ್ಯಾಯಕ್ಕಾಗಿ ಕಣ್ಣೀರಿಡುತ್ತಿದ್ದಾಗ, ಏಷ್ಯಾನೆಟ್ ಸುವರ್ಣ ನ್ಯೂಸ್ ಈ ಪ್ರಕರಣವನ್ನು ತನ್ನ 'ಎಫ್.ಐ.ಆರ್' (FIR) ಕಾರ್ಯಕ್ರಮದ ಮೂಲಕ ನಿರಂತರವಾಗಿ ಬೆನ್ನತ್ತಿತ್ತು. ಅಧಿಕಾರದ ಬಲದಿಂದ ಈ ಕೊಲೆಯನ್ನು ಹೇಗೆ ಮುಚ್ಚಿ ಹಾಕಲಾಗುತ್ತಿದೆ ಎಂಬುದನ್ನು ದಾಖಲೆ ಸಮೇತವಾಗಿ ಸಮಾಜದ ಮುಂದೆ ತೆರೆದಿಟ್ಟಿತ್ತು. ಈ ನಿರಂತರ ಹೋರಾಟದ ಫಲವಾಗಿಯೇ ಪ್ರಕರಣಕ್ಕೆ ಹೊಸ ಜೀವ ಸಿಕ್ಕಿತು.&lt;/p&gt;&lt;p&gt;&lt;strong&gt;ಸಿಬಿಐ ಎಂಟ್ರಿ ಮತ್ತು ಅಸಲಿ ಸತ್ಯ ಬಯಲು:&lt;/strong&gt;&lt;/p&gt;&lt;p&gt;ರಾಜ್ಯದಲ್ಲಿ ಅಧಿಕಾರ ಬದಲಾದ ಮೇಲೆ ಮತ್ತು ಯೋಗೇಶ್ ಗೌಡ ಅವರ ಪತ್ನಿ ಹಾಗೂ ಕುಟುಂಬದವರ ಹಕ್ಕೊತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಲಾಯಿತು. ಸಿಬಿಐ ತನಿಖೆಯನ್ನು ತಡೆಯಲು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್&zwnj;ಗಳಲ್ಲಿ ಹಲವು ಸ್ಟೇ ಆರ್ಡರ್&zwnj;ಗಳನ್ನು ತರಲಾಗಿತ್ತು. ಆದರೆ, ಅಂತಿಮವಾಗಿ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದ ನಂತರ ಸಿಬಿಐ ಅಧಿಕಾರಿಗಳು ಫೀಲ್ಡ್&zwnj;ಗೆ ಇಳಿದರು. ಸಿಬಿಐ ತನಿಖೆಯ ವೇಳೆ ನೈಜ ಹಂತಕರು ಯಾರು ಎಂಬುದು ಬಯಲಾಯಿತು. ಈ ಹಿಂದೆ ತಾವೇ ಕೊಲೆ ಮಾಡಿದ್ದೇವೆ ಎಂದು ಶರಣಾಗಿದ್ದವರು ನಕಲಿ ಆರೋಪಿಗಳು ಎಂಬುದು ಸಾಬೀತಾಯಿತು. ಸಿಬಿಐ ಅಧಿಕಾರಿಗಳು ಒಬ್ಬ ಆರೋಪಿಯನ್ನು 'ಮಾಫಿ ಸಾಕ್ಷಿ'ಯನ್ನಾಗಿ (Approver) ಮಾಡಿಕೊಂಡಿದ್ದು ಈ ಕೇಸ್&zwnj;ನಲ್ಲಿ ದೊಡ್ಡ ತಿರುವು ನೀಡಿತು. ಒಟ್ಟು 21 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಬಿಐ, ವಿನಯ್ ಕುಲಕರ್ಣಿಯೇ ಈ ಕೊಲೆಯ ಮಾಸ್ಟರ್ ಮೈಂಡ್ ಎಂಬುದನ್ನು ಸಾಕ್ಷ್ಯಧಾರ ಸಮೇತ ನಿರೂಪಿಸಿತು.&lt;/p&gt;&lt;p&gt;&lt;strong&gt;ನ್ಯಾಯದೇವತೆಯ ತೀರ್ಪು:&lt;/strong&gt;&lt;/p&gt;&lt;p&gt;ದಶಕದ ಕಾಲ ನಡೆದ ವಾದ-ಪ್ರತಿವಾದಗಳ ನಂತರ, ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಈ ಮೂಲಕ ಯೋಗೇಶ್ ಗೌಡ ಅವರ ಆತ್ಮಕ್ಕೆ ಅಂತಿಮವಾಗಿ ಶಾಂತಿ ಸಿಕ್ಕಿದೆ. ಯಾರು ಎಷ್ಟೇ ಪ್ರಭಾವಿಯಾಗಿದ್ದರೂ, ಕಾನೂನು ಮತ್ತು ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು ಎಂಬುದಕ್ಕೆ ಈ ತೀರ್ಪು ಸಾಕ್ಷಿಯಾಗಿದೆ. ಅಧಿಕಾರದ ಅಹಂಕಾರದಿಂದ ಕೊಲೆ ಮಾಡಿ ಬಚಾವಾಗಬಹುದು ಎಂಬ ಕನಸು ಕಂಡಿದ್ದ ರಾಜಕಾರಣಿಗೆ ನ್ಯಾಯಾಲಯವು ಕಠಿಣ ಸಂದೇಶ ರವಾನಿಸಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/former-minister-vinay-kulkarni-convicted-in-yogesh-gowda-murder-case-update-news-sat-videoshow-mtde3wt"/>
        </item>
        <item>
            <title><![CDATA[ಭದ್ರಾ ಅರಣ್ಯದಲ್ಲಿ 'ಬೆಂಗಾಲ್ ಟೈಗರ್' ರಾಜ ಗಾಂಭೀರ್ಯದ ನಡಿಗೆ: ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾದ ಶಾರ್ದೂಲ]]></title>
            <link>https://kannada.asianetnews.com/gallery/state/bengal-tiger-walks-majestically-in-bhadra-forest-shardul-caught-on-tourists-camera-1leek83</link>
            <guid isPermaLink="true">https://kannada.asianetnews.com/gallery/state/bengal-tiger-walks-majestically-in-bhadra-forest-shardul-caught-on-tourists-camera-1leek83</guid>
            <pubDate>Thu, 16 Apr 2026 18:20:13 +0530</pubDate>
            <description><![CDATA[&lt;p&gt;&lt;strong&gt;Bhadra Wildlife Sanctuary tiger sighting:&lt;/strong&gt; ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ದೈತ್ಯಾಕಾರದ ಹುಲಿಯ ದರ್ಶನವಾಗಿದೆ. ಕೆಮ್ಮಣ್ಣುಗುಂಡಿಯ ಹೆಬ್ಬೆ ಫಾಲ್ಸ್ ರಸ್ತೆಯಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದ ಹುಲಿ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpb52nc4hdmxnt7bzzya4jp7,imgname--bengal-tiger-walks-majestically-in-bhadra-forest--2--1776343405956.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;Bhadra Wildlife Sanctuary tiger sighting:&lt;/strong&gt; ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ದೈತ್ಯಾಕಾರದ ಹುಲಿಯ ದರ್ಶನವಾಗಿದೆ. ಕೆಮ್ಮಣ್ಣುಗುಂಡಿಯ ಹೆಬ್ಬೆ ಫಾಲ್ಸ್ ರಸ್ತೆಯಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದ ಹುಲಿ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವನ್ಯಜೀವಿ ಚಟುವಟಿಕೆ ಹೆಚ್ಚಳವಾಗಿದ್ದು, ತರೀಕೆರೆ ತಾಲೂಕಿನ ಭದ್ರಾ ಅರಣ್ಯದಲ್ಲಿ ಮತ್ತೆ ಹುಲಿ ಚಲನವಲನ ಕಾಣಿಸಿಕೊಂಡಿದೆ&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೇವಲ ಒಂದು ದಿನ ಖಡ್ಗಮೃಗ ಮರಿಯ ಎಂದಾದರೂ ನೋಡಿದ್ದೀರಾ? IFS ಅಧಿಕಾರಿ ಹಂಚಿಕೊಂಡ ಅಪರೂಪದ ವೀಡಿಯೋ&lt;/strong&gt;&lt;/p&gt;&lt;img&gt;&lt;p&gt;ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ ಪ್ರವಾಸಿಗರಿಗೆ ಹುಲಿಯ ದರ್ಶನವಾಗಿದೆ. ಕೆಮ್ಮಣ್ಣುಗುಂಡಿಯ ಹೆಬ್ಬೆ ಫಾಲ್ಸ್ ರಸ್ತೆಯಲ್ಲಿ ಹುಲಿ ಸಂಚಾರ ಕ್ಯಾಮರಾದಲ್ಲಿ ಸೆರೆಯಾಗಿದೆ.&lt;/p&gt;&lt;p&gt;ಪ್ರವಾಸಿಗರ ಕ್ಯಾಮೆರಾದಲ್ಲಿ ದೈತ್ಯಾಕಾರದ ಹುಲಿಯ ಓಡಾಟ ಸೆರೆಯಾಗಿದ್ದು, ಹುಲಿಯನ್ನು ನೋಡಿ ಸಫಾರಿಗೆ ತೆರಳಿದವರು ಸಂತಸಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ರಸ್ತೆ ಬದಿಯಲ್ಲಿ ನಿರ್ಭೀತಿಯಿಂದ ಹುಲಿಯೊಂದು ಓಡಾಡುತ್ತಿರುವುದನ್ನು ನೋಡಿದ ಪ್ರವಾಸಿಗರು ಹುಲಿಯನ್ನು ನೋಡಿ ಖುಷಿಪಡುತ್ತಿದ್ದಾರೆ. ಹುಲಿಯ ಓಡಾಟದಿಂದ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳುವ ಪ್ರವಾಸಿಗರಲ್ಲಿ ಸಂತಸ ಮನೆ ಮಾಡಿದೆ.&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಅಂಕೋಲಾ: ಹೆದ್ದಾರಿ 52ರಲ್ಲಿ ರಾಸಾಯನಿಕ ಟ್ಯಾಂಕರ್ ಸ್ಫೋಟ, ಚಾಲಕ ನಾಪತ್ತೆ&lt;/strong&gt;&lt;/p&gt;]]></content:encoded>
            <category>state</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/bengal-tiger-walks-majestically-in-bhadra-forest-shardul-caught-on-tourists-camera-1leek83"/>
        </item>
        <item>
            <title><![CDATA[ಕಾರವಾರ: ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಾಸಾಯನಿಕ ಟ್ಯಾಂಕರ್ ಸ್ಫೋಟ, ಚಾಲಕ ನಾಪತ್ತೆ]]></title>
            <link>https://kannada.asianetnews.com/state/chemical-tanker-explodes-on-national-highway-52-near-ankola-driver-missing/articleshow-f5uggrl</link>
            <guid isPermaLink="true">https://kannada.asianetnews.com/state/chemical-tanker-explodes-on-national-highway-52-near-ankola-driver-missing/articleshow-f5uggrl</guid>
            <pubDate>Thu, 16 Apr 2026 17:52:15 +0530</pubDate>
            <description><![CDATA[ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಸ್ಫೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ನಂತರ ಚಾಲಕ ನಾಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpb2qqw9c8h50w5rx36cvvjr,imgname-chemical-tanker-blast-near-ankola-1776340950921.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಹೆದ್ದಾರಿ 52ರಲ್ಲಿ ರಾಸಾಯನಿಕ ಟ್ಯಾಂಕರ್ ಸ್ಫೋಟ, ಚಾಲಕ ನಾಪತ್ತೆ&lt;/strong&gt;&lt;/h2&gt;&lt;p&gt;ಕಾರವಾರ: ರಾಷ್ಟ್ರೀಯ ಹೆದ್ದಾರಿಯಲ್ಲೇ ಟ್ಯಾಂಕರ್&zwnj;ವೊಂದು ಸ್ಫೋಟವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಘಟನೆ ನಡೆದಿದ್ದು, ರಾಸಾಯನಿಕ ತುಂಬಿದ ಟ್ಯಾಂಕರ್ ಬ್ಲಾಸ್ಟ್ ಆಗಿ ಹೊತ್ತಿ ಉರಿದಿದೆ.&lt;/p&gt;&lt;h3&gt;&lt;strong&gt;ಹೆದ್ದಾರಿಯಲ್ಲೇ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್&lt;/strong&gt;&lt;/h3&gt;&lt;p&gt;ಘಟನೆಯ ಬಳಿಕ ಟ್ಯಾಂಕರ್ ಚಾಲಕನ ಸುಳಿವು ಯಾರಿಗೂ ಸಿಕ್ಕಿಲ್ಲ, ಹೀಗಾಗಿ ಚಾಲಕ ಈ ಬೆಂಕಿಗೆ ಸಿಲುಕಿರಬಹುದೇ ಎಂಬ ಅನುಮಾನ ಮೂಡಿದೆ. ಟ್ಯಾಂಕರ್ ಧಗಧಗನೇ ಹೊತ್ತಿ ಉರಿಯುತ್ತಿರುವ ಹಿನ್ನೆಲೆ ಟ್ಯಾಂಕರ್&zwnj;ನ ಹತ್ತಿರ ಯಾರಿಗೂ ಹೋಗಲಾಗದಂತಹ ಸ್ಥಿತಿ ಇದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ಈ ಘಟನೆ ನಡೆದಿದೆ.&lt;/p&gt;&lt;p&gt;&lt;strong&gt;ಹುಬ್ಬಳ್ಳಿ-ಅಂಕೋಲಾ ಸಂಚಾರ ಸಂಪೂರ್ಣ ಸ್ಥಗಿತ.&lt;/strong&gt;&lt;/p&gt;&lt;p&gt;ಘಟನೆಯ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ಸಂಪರ್ಕಿಸುವ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಂಕಿಯಿಂದಾಗಿ ಟ್ಯಾಂಕರ್ ಧಗಧಗಿಸಿ ಹೊತ್ತಿ ಉರಿಯುತ್ತಿದ್ದು, ಬೆಂಕಿಯ ಕೆನ್ನಾಲಿಗೆ ಆಕಾಶಕ್ಕೆ ಚಾಚಿದೆ ದಟ್ಟ ಹೊಗೆ ಅಲ್ಲಿ ಮೇಲೆರುತ್ತಿದೆ. ಸ್ಥಳಕ್ಕೆ ಅಂಕೋಲಾ ಪೋಲಿಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಕೇವಲ ಒಂದು ದಿನದ ಖಡ್ಗಮೃಗ ಮರಿಯ ಎಂದಾದರೂ ನೋಡಿದ್ದೀರಾ? IFS ಅಧಿಕಾರಿ ಹಂಚಿಕೊಂಡ ಅಪರೂಪದ ವೀಡಿಯೋ&amp;nbsp;&lt;/p&gt;]]></content:encoded>
            <category>state</category>
            <dc:creator>Anusha Kb</dc:creator>
            <atom:link href="https://kannada.asianetnews.com/state/chemical-tanker-explodes-on-national-highway-52-near-ankola-driver-missing/articleshow-f5uggrl"/>
        </item>
        <item>
            <title><![CDATA[ಯೋಗೇಶ ಗೌಡ ಹತ್ಯೆ: ಕುಲಕರ್ಣಿಗೆ  ಪರಮಾಪ್ತನೇ ತಿರುಗಿ ಬಿದ್ದ! ಮಾತು ಬದಲಿಸಿ ಕಾಂಗ್ರೆಸ್ ಸೇರಿದ್ದ ಯೋಗೇಶ್ ಪತ್ನಿ!]]></title>
            <link>https://kannada.asianetnews.com/gallery/karnataka-districts/dharwad-yogesh-gowda-murder-case-timeline-is-vinay-kulkarni-political-future-at-risk-after-conviction-gdp-3b89m9d</link>
            <guid isPermaLink="true">https://kannada.asianetnews.com/gallery/karnataka-districts/dharwad-yogesh-gowda-murder-case-timeline-is-vinay-kulkarni-political-future-at-risk-after-conviction-gdp-3b89m9d</guid>
            <pubDate>Thu, 16 Apr 2026 17:49:32 +0530</pubDate>
            <description><![CDATA[&lt;p&gt;ವರದಿ: ಶಿವಾನಂದ ಗೊಂಬಿ&lt;/p&gt;&lt;p&gt;ಬರೋಬ್ಬರಿ 10 ವರ್ಷಗಳ ಬಳಿಕಯೋಗೇಶಗೌಡ ಹತ್ಯೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಈ ಕೊಲೆಯು ಸಿಬಿಐ ತನಿಖೆಯಿಂದಾಗಿ ತಾರ್ಕಿಕ ಅಂತ್ಯ ಕಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpb2fe5345hq3nbrg5gymf10,imgname-vinay-kulkarni-and-yogesh-gowda--2--1776340678819.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಶಿವಾನಂದ ಗೊಂಬಿ&lt;/p&gt;&lt;p&gt;ಬರೋಬ್ಬರಿ 10 ವರ್ಷಗಳ ಬಳಿಕಯೋಗೇಶಗೌಡ ಹತ್ಯೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಈ ಕೊಲೆಯು ಸಿಬಿಐ ತನಿಖೆಯಿಂದಾಗಿ ತಾರ್ಕಿಕ ಅಂತ್ಯ ಕಂಡಿದೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ: ಇಡೀ ರಾಜ್ಯ ರಾಜಕೀಯದಲ್ಲೇ ತೀವ್ರ ಸಂಚಲನ ಉಂಟು ಮಾಡಿದ್ದ ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ತೀರ್ಫು ಬರೋಬ್ಬರಿ 10 ವರ್ಷದ ಬಳಿಕ ಹೊರಬಂದಿದ್ದು, ಮಾಜಿ ಸಚಿವ, ಶಾಸಕ ವಿನಯ್&zwnj; ಕುಲಕರ್ಣಿ ಸೇರಿದಂತೆ 17 ಜನ ಆರೋಪಿಗಳು ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ಇದರಿಂದಾಗಿ ವಿನಯ್&zwnj;ಗೆ ಸಂಕಷ್ಟ ಎದುರಾಗಿದೆ. ರಾಜಕೀಯವಾಗಿ ಯೋಗೇಶಗೌಡ ಬೆಳೆಯುತ್ತಿರುವುದನ್ನು ಸಹಿಸದೇ ಸುಪಾರಿ ಕೊಟ್ಟು ಮಾಡಿಸಿದ್ದ ಕೊಲೆ ಇದೀಗ ವಿನಯ್&zwnj; ಕುಲಕರ್ಣಿ ರಾಜಕೀಯ ಭವಿಷ್ಯಕ್ಕೆ ಕಂಟಕವಾಗಿದೆ.&lt;/p&gt;&lt;img&gt;&lt;p&gt;ಬಿಜೆಪಿಯಿಂದ ಜಿಪಂ ಸದಸ್ಯನಾಗಿದ್ದ ಯೋಗೇಶಗೌಡ ರಾಜಕೀಯವಾಗಿ ಹಂತ ಹಂತವಾಗಿ ಬೆಳೆಯುತ್ತಿದ್ದ. ಇದನ್ನು ಆಗ ಮಂತ್ರಿಯಾಗಿದ್ದ ವಿನಯ್&zwnj; ಕುಲಕರ್ಣಿಗೆ ಸಹಿಸಲು ಆಗದೇ ಮುಂದೆ ತಮ್ಮ ರಾಜಕೀಯ ಎದುರಾಳಿಯಾಗಬಹುದು ಎಂದು ದ್ವೇಷ ಸಾಧಿಸುತ್ತಿದ್ದರಂತೆ. 2016ರ ಜೂನ್&zwnj; 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ತಮ್ಮದೇ ಮಾಲೀಕತ್ವದ ಉದಯ್ ಜಿಮ್&zwnj;ನಲ್ಲಿ ಯೋಗೇಶಗೌಡ ಅವರ ಹತ್ಯೆ ನಡೆದಿತ್ತು. ಇದೊಂದು ಜಮೀನಿನ ವಿವಾದದ ಪ್ರಕರಣವೆಂದು ಪೊಲೀಸರು ತನಿಖೆ ನಡೆಸಿ ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ್ದರು.&lt;/p&gt;&lt;p&gt;ಇದು ರಾಜಕೀಯ ದ್ವೇಷದಿಂದ ಆದಂತಹ ಕೊಲೆ ಸಿಬಿಐಗೆ ವಹಿಸಿ ಎಂದು ಯೋಗೇಶಗೌಡ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದರು. 2018ರ ವರೆಗೂ ಇದೇ ಆಗಿತ್ತು. ಮುಂದೆ ರಾಜ್ಯದ ಕಾಂಗ್ರೆಸ್&zwnj; ಸರ್ಕಾರ ಬದಲಾಗಿ ಬಿ.ಎಸ್&zwnj;.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಬಳಿಕ ಈ ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು.&lt;/p&gt;&lt;img&gt;&lt;p&gt;2019 ಸೆಪ್ಟೆಂಬರ್&zwnj;ನಲ್ಲಿ ತನಿಖೆಯ ಜವಾಬ್ದಾರಿ ಹೊತ್ತುಕೊಂಡ ಸಿಬಿಐ, ಮೊದಲಿದ್ದ 6 ಜನ ಆರೋಪಿಗಳ ಜತೆಗೆ ಮತ್ತೆ 15 ಜನ ಹೊಸ ಆರೋಪಿಗಳನ್ನು ಸೇರಿಸಿತ್ತು. ಮಾಜಿ ಸಚಿವ, ಶಾಸಕ ವಿನಯ್&zwnj; ಕುಲಕರ್ಣಿ ಹೆಸರು ಪ್ರಬಲವಾಗಿತ್ತು. ಸಾಕ್ಷಿ ನಾಶದ ಆರೋಪದ ಹಿನ್ನೆಲೆಯಲ್ಲಿ 2020ರಲ್ಲಿ ನವೆಂಬರ್&zwnj;ನಲ್ಲಿ ವಿನಯ್&zwnj; ಬಂಧನವಾಗಿತ್ತು. 2021ರ ಆಗಸ್ಟ್&zwnj;ನಲ್ಲಿ ಅಂದರೆ ಬರೋಬ್ಬರಿ 9 ತಿಂಗಳ ಬಳಿಕ ವಿನಯ್&zwnj;ಗೆ ಜಾಮೀನು ಸಿಕ್ಕಿತ್ತಾದರೂ ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಿತ್ತು. ಅಂದಿನಿಂದ ಈವರೆಗೂ ವಿನಯ್&zwnj; ಧಾರವಾಡ ಜಿಲ್ಲೆಗೆ ಪ್ರವೇಶವೇ ಪಡೆದಿಲ್ಲ. 2023ರ ಚುನಾವಣೆಯನ್ನು ಜಿಲ್ಲೆಯ ಹೊರಗಿದ್ದುಕೊಂಡೇ ವಿನಯ್&zwnj; ಗೆದ್ದಿದ್ದಾರೆ. ಸಿಬಿಐ ತನಿಖೆಯಿಂದ ನಿಜವಾದ ಆರೋಪಿಗಳ ಬಂಧನವೂ ಆಯಿತು. ಮೊದಲು ತನಿಖೆ ಮಾಡಿ ಪ್ರಕರಣದ ದಿಕ್ಕನೇ ತಪ್ಪಿಸಿದ್ದ ಪೊಲೀಸ್&zwnj; ಅಧಿಕಾರಿಗಳೂ ವಿಚಾರಣೆ ಎದುರಿಸಿದ್ದರು. ಆರೋಪಿಗಳೂ ಆಗಿದ್ದು ಈ ಪ್ರಕರಣದ ವಿಶೇಷ.&lt;/p&gt;&lt;img&gt;&lt;p&gt;ವಿನಯ್&zwnj; ಕುಲಕರ್ಣಿ ಪರಮಾಪ್ತ, ಪೊಲೀಸರು ನಡೆಸಿದ್ದ ತನಿಖೆಯಲ್ಲಿ ಮೊದಲ ಆರೋಪಿಯಾಗಿದ್ದ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗುವ ಮೂಲಕ ವಿನಯ್&zwnj; ವಿರುದ್ಧವೇ ತಿರುಗಿ ಬಿದ್ದಿದ್ದರು. ಹಾಗೆ ನೋಡಿದರೆ ಮೊದಲಿಗೆ ಮುತ್ತಗಿ ವಿನಯ್&zwnj;ಗೆ ನಿಷ್ಠವಾಗಿಯೇ ಇದ್ದ. ಯಾವಾಗ ಸಿಬಿಐ ವಿಚಾರಣೆ ಒಂದು ಹಂತಕ್ಕೆ ಬರುತ್ತಿದ್ದಂತೆ ಮುತ್ತಗಿಯನ್ನೇ ಮುಗಿಸಲು ವಿನಯ್&zwnj; ಕುಲಕರ್ಣಿ ಸುಪಾರಿ ಕೊಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರಿಂದ ರೊಚ್ಚಿಗೆದ್ದ ಮುತ್ತಗಿ ತನ್ನ ಗುರು ವಿನಯ್&zwnj; ವಿರುದ್ಧ ಸಾಕ್ಷಿಯಾದರು. ಜತೆಗೆ ಮಾಫಿ ಸಾಕ್ಷಿಯಾಗುವುದಾಗಿ ಲಿಖಿತ ಅರ್ಜಿ ಕೂಡ ಸಲ್ಲಿಸಿದ್ದನು.&lt;/p&gt;&lt;img&gt;&lt;p&gt;ಈ ಎಲ್ಲದರ ನಡುವೆಯೇ 2025ರಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ಸುಪ್ರೀಂ ಕೋರ್ಟ್&zwnj; ವಿನಯ್&zwnj;ಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಿತ್ತು. ಇದರಿಂದಾಗಿ 2025ರ ಜೂನ್&zwnj;ನಲ್ಲಿ ಮತ್ತೆ ಜೈಲು ಪಾಲಾಗಿದ್ದ ವಿನಯ್&zwnj; ಕುಲಕರ್ಣಿಗೆ 2026ರ ಫೆಬ್ರವರಿಯಲ್ಲಷ್ಟೇ ಮತ್ತೆ ಜಾಮೀನು ಮಂಜೂರಾಗಿ ಹೊರಬಂದಿದ್ದರು. ಇದರಿಂದಾಗಿ ಪ್ರಕರಣದಲ್ಲಿ 2 ಬಾರಿ ಆರೋಪಿಯಾಗಿ ಜೈಲುವಾಸ ಅನುಭವಿಸಿದ್ದ ವಿನಯ್&zwnj; ಇದೀಗ, ಅಪರಾಧಿಯಾಗಿ ಜೈಲು ಸೇರಿದ್ದಾರೆ. ರಾಜಕೀಯವಾಗಿ ಮುಳುವಾಗುತ್ತಾನೆ ಎಂದು ಸುಪಾರಿ ಕೊಟ್ಟು ಮಾಡಿಸಿದ ಕೊಲೆ, ಇದೀಗ ವಿನಯ್&zwnj; ರಾಜಕೀಯ ಭವಿಷ್ಯಕ್ಕೆ ಮುಳುವಾದಂತಾಗಿದೆ.&lt;/p&gt;&lt;img&gt;&lt;p&gt;ಈ ಪ್ರಕರಣದಲ್ಲಿ ಒಟ್ಟು 123 ಸಾಕ್ಷಿಗಳಿದ್ದಾರೆ. ಈ ಮುಂಚೆ ಪ್ರಮುಖ ಆರೋಪಿಗಳ ಪೈಕಿ ಮೊದಲ ಆರೋಪಿ ಬಸವರಾಜ ಮುತ್ತಗಿ ಸೇರಿದಂತೆ ಇಬ್ಬರು ಹಾಗೂ ಓರ್ವ ಪೊಲೀಸ್ ಅಧಿಕಾರಿ ಮಾಫಿ ಸಾಕ್ಷಿಯಾಗಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿ ಕೂಡ ಆರೋಪಿಗಳಲ್ಲೊಬ್ಬರು ಆಗಿರುವುದು ಗಮನಾರ್ಹ. ಇವರು ಯೋಗೇಶಗೌಡ ಸಹೋದರ ಗುರುನಾಥಗೌಡ ಅವರಿಗೆ ಆಮಿಷ ಒಡ್ಡಿ ಪ್ರಕರಣ ಹಿಂಪಡೆಯುವಂತೆ ಪ್ರಯತ್ನಿಸಿದ್ದರು. ಈ ಮೂಲಕ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದರು ಎಂಬ ಆರೋಪ ಇದೆ.&lt;/p&gt;&lt;img&gt;&lt;p&gt;ಯೋಗೇಶಗೌಡ ಪತ್ನಿ ಮಲ್ಲಮ್ಮ ಮೊದಲಿಗೆ ಆರೋಪಿಗಳ ವಿರುದ್ಧ ಹೋರಾಟ ನಡೆಸಿ ಸಿಬಿಐಗೆ ತನಿಖೆ ವಹಿಸಬೇಕು ಎಂದು ಒತ್ತಾಯಿಸಿದ್ದುಂಟು. ಆದರೆ ಮುಂದೆ ಏನಾಯಿತೋ ತನ್ನ ಹೇಳಿಕೆ ಬದಲಿಸಿ, ವಿನಯ್&zwnj; ಕುಲಕರ್ಣಿ ಅವರೊಂದಿಗೆ ಗುರುತಿಸಿಕೊಂಡಿದ್ದರು. ಅಲ್ಲದೇ, 2019 ಲೋಕಸಭೆ ಚುನಾವಣೆಯಲ್ಲಿ ವಿನಯ್&zwnj; ಕುಲಕರ್ಣಿ ಪರವಾಗಿ ಪ್ರಚಾರದಲ್ಲಿ ತೊಡಗುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದರು. ಆದರೆ ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಯೋಗೇಶಗೌಡ ಸಹೋದರ ಗುರುನಾಥಗೌಡ ಕೊನೆವರೆಗೂ ಸಹೋದರನ ಸಾವಿಗೆ ನ್ಯಾಯ ಒದಗಿಸಲು ಹೋರಾಟ ನಡೆಸಿದರು.&lt;/p&gt;&lt;img&gt;&lt;p&gt;ಈ ಮಧ್ಯೆ, ತನಗೆ ಹಾಗೂ ತನ್ನ ಕುಟುಂಬಕ್ಕೆ ಪ್ರಕರಣದ 9ನೇ ಆರೋಪಿ ಅಶ್ವತ್ಥನಿಂದ ಜೀವ ಬೆದರಿಕೆ ಇದೆ ಎಂದು ಬಸವರಾಜ ಮುತ್ತಗಿ ನ್ಯಾಯಾಲಯಕ್ಕೆ ಹೇಳಿದ್ದನು. ಇದೇ ವೇಳೆ ತಾನು ತಪ್ಯೂಪ್ಪಿಗೆ ನೀಡುತ್ತೇನೆ ಎಂದು ಹೇಳಿದ ಬಳಿಕ ಜೀವ ಬೆದರಿಕೆ ಹೆಚ್ಚುತ್ತಿದೆ. ಇದೇ ಕಾರಣಕ್ಕೆ ನ್ಯಾಯಾಲಯದ ಆದೇಶದಂತೆ ಬಸವರಾಜ ಮುತ್ತಗಿ ಹಾಗೂ ಆತನ ಕುಟುಂಬಕ್ಕೆ ಪೊಲೀಸರು ಭದ್ರತೆ ನೀಡಿದ್ದರು.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/dharwad-yogesh-gowda-murder-case-timeline-is-vinay-kulkarni-political-future-at-risk-after-conviction-gdp-3b89m9d"/>
        </item>
    </channel>
</rss>
