<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 24 Aug 2026 06:20:14 +0530</lastBuildDate>
        <atom:link href="https://kannada.asianetnews.com/rss/state" rel="self" type="application/rss+xml"/>
        <item>
            <title><![CDATA[ಬೆಂಗಳೂರು ಏರ್‌ಪೋರ್ಟ್‌ಗೆ ಮುಂದಿನ ವರ್ಷವೇ ಮೆಟ್ರೋ ಶುರು? ಎಂಜಿ ರಸ್ತೆಯಿಂದ ಕೇವಲ 45 ನಿಮಿಷ ಸಾಕು!]]></title>
            <link>https://kannada.asianetnews.com/state/namma-metro-service-to-kempegowda-airport-bengaluru-likely-to-start-next-year-rav/articleshow-1cphi2u</link>
            <guid isPermaLink="true">https://kannada.asianetnews.com/state/namma-metro-service-to-kempegowda-airport-bengaluru-likely-to-start-next-year-rav/articleshow-1cphi2u</guid>
            <pubDate>Sat, 22 Aug 2026 06:13:07 +0530</pubDate>
            <description><![CDATA[ಬೆಂಗಳೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ ಬ್ಲೂ ಲೇನ್ ಮಾರ್ಗದ ಕಾಮಗಾರಿಯು ಶೇ.75ರಷ್ಟು ಪೂರ್ಣಗೊಂಡಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಂಡರೆ, ಮುಂದಿನ ವರ್ಷದಿಂದ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಎಂಜಿ ರಸ್ತೆಯಿಂದ ಕೇವಲ 45 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0ke7zecpn26dd2dpjrdvsg9,imgname-----------------------2026-08-22t060417.420-1787358870988.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.22): &lt;/strong&gt;ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣ ತಲುಪಲು ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತಿದ್ದ ಪ್ರಯಾಣಿಕರಿಗೆ ಶೀಘ್ರ ಸಿಹಿ ಸುದ್ದಿ ನೀಡಲು ನಮ್ಮ ಮೆಟ್ರೋ ಶ್ರಮಿಸುತ್ತಿದ್ದು, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಂಡರೆ ಮುಂದಿನ ವರ್ಷದಿಂದ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಚಾರ ಆರಂಭವಾಗಲಿದೆ.&lt;/p&gt;&lt;p&gt;ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮೆಟ್ರೊ ನಡುವೆ ಬ್ಲೂ ಲೇನ್ ಮಾರ್ಗದ ನಿರ್ಮಾಣ ಕಾಮಗಾರಿ ಶೇ.75ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿ ಪೂರ್ಣಗೊಳಿಸಲು ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆ ಮೆಟ್ರೋ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಸುಮಾರು ಒಂದೂವರೆ ಗಂಟೆ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ಸಭೆಯಲ್ಲಿ ಕಾಮಗಾರಿ ವಿಳಂಬವಾಗಲು ಕಾರಣಗಳು, ಪರಿಹಾರಗಳನ್ನು ಚರ್ಚಿಸಿ ಕೆಳ ಹಂತದ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.&lt;/p&gt;&lt;p&gt;ಏರ್&zwnj;ಪೋರ್ಟ್ ಮಾರ್ಗ ಉದ್ಘಾಟನೆಯಾದರೆ, ಎಂಜಿ ರಸ್ತೆಯಿಂದ ವಿಮಾನನಿಲ್ದಾಣಕ್ಕೆ ಕೇವಲ 45 ನಿಮಿಷದ ಪ್ರಯಾಣ. ಸೆಂಟ್ರಲ್ ಸಿಲ್ಕ್ ಬೋರ್ಡ್, ಎಚ್.ಎಸ್.ಆರ್ ಲೇ ಔಟ್, ಮಾರತಹಳ್ಳಿ, ಇಬ್ಬಲೂರು ಕೆ.ಆರ್.ಪುರಂ, ನಾಗವಾರ, ಹೆಬ್ಬಾಳ ನಂತರ ಏರ್ ಪೋರ್ಟ್ ಮಾರ್ಗಗಳಿಗಾಗಿ ಎರಡು ಹಂತದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಒಳ&zwj;ಭಾಗದಲ್ಲಿ (ಕಾರ್ಗೋ ಬಳಿ ಒಂದು, ಟರ್ಮಿನಲ್ 2ಬಳಿ ಮತ್ತೊಂದು ನಿಲ್ದಾಣ) ಎರಡು ಮೆಟ್ರೋ ನಿಲ್ದಾಣಗಳು ನಿರ್ಮಾಣವಾಗಲಿವೆ. ಇವುಗಳಿಗೆ ಸಿಸಿಟಿವಿ ಅಳವಡಿಕೆ, ನಿರ್ವಹಣೆ, ಚೆಕ್ ಇನ್, ಚೆಕ್ ಔಟ್ ಕೆಲಸಗಳಿಗೆ ಬೇಕಾದ ಎಲ್ಲಾ ಕಟ್ಟಡಗಳ ನಿರ್ಮಾಣ ಜವಾಬ್ದಾರಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ ವಹಿಸಿಕೊಂಡಿದೆ. ಇವುಗಳಿಗೆ ಹಳಿ ನಿರ್ಮಾಣ, ಸಿಗ್ನಲ್, ಕಮ್ಯುನಿಕೇಷನ್ ಕೆಲಸ ಮಾತ್ರ ಮೆಟ್ರೋ ಜವಾಬ್ದಾರಿಯಾಗಿದೆ. ವಿಮಾನ ನಿಲ್ದಾಣದ ಹೊರಗಿನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಸೇರಿದಂತೆ ಎಲ್ಲಾ ಕೆಲಸ ಮೆಟ್ರೋ ವಹಿಸಿಕೊಂಡಿದೆ. ಈ ಎಲ್ಲಾ ಕಾಮಗಾರಿಗಳಿಗೆ ಅಗತ್ಯವಿರುವ ಉಪಕರಣ ಪೂರೈಸಿ, ತ್ವರಿತವಾಗಿ ಕಾಮಗಾರಿ ಮುಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೆಟ್ರೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ಸಿ.ಜಾಫರ್ ಕನ್ನಡಪ್ರಭಕ್ಕೆ ತಿಳಿಸಿದರು.&lt;/p&gt;&lt;p&gt;ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರರ್ ಹಾಗೂ ಅವರ ಅಧಿಕಾರಿಗಳ ತಂಡ ಹಾಗೂ ಮೆಟ್ರೋ ಸಂಸ್ಥೆಯ ಅಧಿಕಾರಿಗಳ ತಂಡ ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಈ ಸಭೆ ಮಹತ್ವವಾಗಿದ್ದು, ಕೆಳಹಂತದಲ್ಲಿ ಇಂತಹ ಸಾಮಾನ್ಯ ವಿಷಯಗಳ ಕುರಿತು ಸಮಸ್ಯೆಯಾದರೂ ಹಿರಿಯ ಅಧಿಕಾರಿಗಳ ಹಂತದಲ್ಲಿ ತಕ್ಷಣ ಬಗೆಹರಿಸಲು ಸುಲಭವಾಗಿದೆ ಎನ್ನಲಾಗಿದೆ.&lt;/p&gt;&lt;h2&gt;ಕಾಮಗಾರಿ ಪೂರ್ಣಕ್ಕೆ ಮೂರು ತಿಂಗಳ ಗಡುವು:&lt;/h2&gt;&lt;p&gt;ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸೂಚಿಸಿ ಮೂರು ತಿಂಗಳ ಒಳಗೆ ಕಾಮಗಾರಿ ಮುಗಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಇಬ್ಬರು ವ್ಯವಸ್ಥಾಪಕ ನಿರ್ದೇಶಕರು ಸಭೆ ಸೇರಿ ಈ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಪ್ರಗತಿ ಪರಿಶೀಲಿಸುತ್ತೇವೆ. ಅಂದುಕೊಂಡಂತೆ ಎಲ್ಲಾ ಮುಗಿದರೆ ಮುಂದಿನ ವರ್ಷ ಟ್ರಯಲ್ ಆರಂಭಿಸಬಹುದು ಎಂದು ಎಂಡಿ ಜಾಫರ್ ತಿಳಿಸಿದರು.&lt;/p&gt;&lt;p&gt;ಈಗ ಪ್ರಮುಖವಾಗಿ ಯಲಹಂಕ ರೈಲ್ವೆ ಕ್ರಾಸಿಂಗ್ ಸೇರಿ ಎರಡು ಸ್ಥಳಗಳಲ್ಲಿ ಕಾಮಗಾರಿ ನಡೆಯಬೇಕು. ಕೆ.ಆರ್.ಪುರಂ ಮತ್ತು ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಸಿವಿಲ್ ಕೆಲಸ ಮುಗಿದಿದೆ. ಕೆ.ಆರ್.ಪುರಂ ಹಾಗೂ ಹೆಬ್ಬಾಳ ಮಧ್ಯೆ, ಟ್ರಾಫಿಕ್ ಸಮಸ್ಯೆ ಹೆಚ್ಚಿರುವುದರಿಂದ ಇಲ್ಲಿ ಸ್ವಲ್ಪ ಕಾಮಗಾರಿ ವಿಳಂಬವಾಗುತ್ತಿದೆ ಎಂದು ತಿಳಿಸಿದರು. ಏರ್ ಪೋರ್ಟ್ ಮಾರ್ಗ (ಬ್ಲೂ ಲೇನ್) ಹಾಗೂ (ಪಿಂಕ್ ಲೇನ್) ಕಾಳೇನ ಅಗ್ರಹಾರದಿಂದ ನಾಗವಾರ ಮಾರ್ಗದ ನಡುವೆ ಸಂಚಾರ ಆರಂಭವಾದರೆ ಎಂಜಿ ರಸ್ತೆಯಿಂದ ಏರ್ ಪೋರ್ಟ್ ಗೆ ಹೋಗುವುದು ಸುಲಭವಾಗುತ್ತದೆ ಎಂದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/namma-metro-service-to-kempegowda-airport-bengaluru-likely-to-start-next-year-rav/articleshow-1cphi2u"/>
        </item>
        <item>
            <title><![CDATA[ಮಹಿಳೆಯರಷ್ಟೇ  ‘ಹೋಮ್‌ ಮೇಕರ್‌’ ಅಲ್ಲ, ಪುರುಷರು..! ಹೈಕೋರ್ಟ್ ಮಹತ್ವದ ತೀರ್ಪು, ಏನಿದು ಪ್ರಕರಣ?]]></title>
            <link>https://kannada.asianetnews.com/state/homemaker-is-gender-neutral-karnataka-hc-says-men-working-professionals-also-included-rav/articleshow-1sgeqqe</link>
            <guid isPermaLink="true">https://kannada.asianetnews.com/state/homemaker-is-gender-neutral-karnataka-hc-says-men-working-professionals-also-included-rav/articleshow-1sgeqqe</guid>
            <pubDate>Fri, 21 Aug 2026 10:36:38 +0530</pubDate>
            <description><![CDATA[&lt;p&gt;'ಹೋಮ್&zwnj;ಮೇಕರ್' ಎಂಬ ಪದ ಮಹಿಳೆಯರಿಗೆ ಮಾತ್ರ ಸೀಮಿತವಲ್ಲ, ಕುಟುಂಬದ ಕಲ್ಯಾಣಕ್ಕಾಗಿ ಶ್ರಮಿಸುವ ಪುರುಷರು ಮತ್ತು ಉದ್ಯೋಗಸ್ಥರೂ ಗೃಹ ನಿರ್ವಾಹಕರೇ ಎಂದು ಹೈಕೋರ್ಟ್&zwnj; ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಪುರುಷರು ಕೂಡ ಹೋಂ ಮೇಕರ್ ಎಂದು ಹೊಸ ವ್ಯಾಖ್ಯಾನ ಬರೆದ ಕೋರ್ಟ್&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m094nv17qq2q7zdgtrjw11cv,imgname-karnataka-high-court-1787013295143.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು (ಆ.21): ಮಹಿಳೆಯರಿಗೆ ಮಾತ್ರ 'ಹೋಮ್&zwnj;ಮೇಕರ್' (ಗೃಹಿಣಿಯರು) ಎಂಬ ಪದ ಸೀಮಿತವಾಗಿಲ್ಲ. ಪುರುಷ, ಮಹಿಳೆ ಅಥವಾ ಉದ್ಯೋಗದಲ್ಲಿರುವ ವೃತ್ತಿಪರರು, ಮನೆಯಲ್ಲಿ ಕುಟುಂಬದ ಕಲ್ಯಾಣಕ್ಕಾಗಿ ಶ್ರಮಿಸುವ ಪ್ರತಿಯೊಬ್ಬರೂ 'ಗೃಹ ನಿರ್ವಾಹಕರು' ಎಂದು ಪರಿಗಣಿಸಲ್ಪಡುತ್ತಾರೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್&zwnj;, ಅಪಘಾತದಲ್ಲಿ ಅಂಗವೈಕಲ್ಯಗೊಂಡಿದ್ದ ಗೃಹಿಣೆಗೆ ನಿಗದಿಪಡಿಸಿದ್ದ ಪರಿಹಾರದ ಮೊತ್ತ ಹೆಚ್ಚಿಸಿ ಆದೇಶಿಸಿದೆ.&lt;/p&gt;&lt;h2&gt;ಏನಿದು ಪ್ರಕರಣ?&lt;/h2&gt;&lt;p&gt;ಕೆಎಸ್&zwnj;ಆರ್&zwnj;ಟಿ ಬಸ್&zwnj; ಅಪಘಾತದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದ ತಮಗೆ ಮೋಟಾರು ಅಪಘಾತಗಳ ಪರಿಹಾರ ನ್ಯಾಯಾಧಿಕರಣ ನಿಗದಿಪಡಿಸಿದ 4.55 ಲಕ್ಷ ರು. ಪರಿಹಾರ ಮೊತ್ತ ಹೆಚ್ಚಿಸುವಂತೆ ಕೋರಿ ಪಶ್ಚಿಮ ಬಂಗಾಳ ಮೂಲದ ಪಂಪಪಾಲ್&zwnj; ಎಂಬಾಕೆ ಹೈಕೋರ್ಟ್&zwnj;ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೇ ವೇಳೆ ಪಂಪಪಾಲ್&zwnj;ಗೆ ಪರಿಹಾರ ಘೋಷಿಸಿದ ನ್ಯಾಯಾಧೀಕರಣದ ಆದೇಶ ಪ್ರಶ್ನಿಸಿ ಕೆಎಸ್&zwnj;ಆರ್&zwnj;ಟಿಸಿ ಪ್ರತ್ಯೇಕ ಅರ್ಜಿ ಸಲ್ಲಿಸಿತ್ತು.&lt;/p&gt;&lt;h3&gt;ಉದ್ಯೋಗದಲ್ಲಿರಲಿಲ್ಲ ಎಂದು ವಾದ:&lt;/h3&gt;&lt;p&gt;ಅಪಘಾತ ಸಂಭವಿಸಿದಾಗ ಪಂಪಪಾಲ್&zwnj; ಉದ್ಯೋಗದಲ್ಲಿ ಇರಲಿಲ್ಲ. ಉನ್ನತ ಶಿಕ್ಷಣ ಪಡೆದಿದ್ದರಿಂದ ಅವರು ಗೃಹಿಣಿಯಾಗಿರುವುದಕ್ಕೆ ಅವಕಾಶವಿಲ್ಲ. ಘಟನೆ ನಡೆದ ದಿನ ಆಕೆ ಗೃಹಿಣಿಯಾಗಿ ಕೆಲಸ ಮಾಡುತ್ತಿದ್ದರು ಎಂಬ ಕಾರಣಕ್ಕೆ ಭವಿಷ್ಯದ ನಷ್ಟ ವರ್ಗದಡಿ ಪರಿಹಾರ ನೀಡಲಾಗದು ಎಂದು ಕೆಎಸ್&zwnj;ಆರ್&zwnj;ಟಿಸಿ ವಾದಿಸಿತ್ತು.&lt;/p&gt;&lt;p&gt;ಈ ವಾದ ಆಕ್ಷೇಪಿಸಿದ ನ್ಯಾಯಮೂರ್ತಿ ಡಾ.ಚಿಲಕೂರು ಸುಮಲತಾ ಅವರ ಪೀಠ, ಗೃಹ ನಿರ್ವಾಹಕರೆಂದರೆ ಕೇವಲ ಅನಕ್ಷರಸ್ಥರಾಗಿರಬೇಕು. ದಿನದ 24 ಗಂಟೆ ಮನೆಯಲ್ಲಿದ್ದು, ಕೇವಲ ಮನೆಕೆಲಸವನ್ನೇ ಮಾಡುತ್ತಿರಬೇಕು ಎಂಬ ಕಲ್ಪನೆ ತಪ್ಪು. ಮಹಿಳೆಯರಿಗೆ ಮಾತ್ರ ಅದೇ ರೀತಿ 'ಹೋಮ್&zwnj;ಮೇಕರ್' (ಗೃಹ ನಿರ್ವಾಹಕರು) ಎಂಬ ಪದ ಸೀಮಿತವಾಗಿಲ್ಲ. ತನ್ನ ವೈಯಕ್ತಿಕ ಹಿತಾಸಕ್ತಿ ತ್ಯಾಗ ಮಾಡಿ, ಕುಟುಂಬದ ಸುಖ-ಶಾಂತಿಗೆ ಆಧಾರಸ್ತಂಭವಾಗಿ ನಿಲ್ಲುವ ಪ್ರತಿಯೊಬ್ಬ ವ್ಯಕ್ತಿಯೂ ಗೃಹ ನಿರ್ವಾಹಕರೇ. ಇದು ಪುರುಷರಿಗೂ ಅನ್ವಯಿಸುತ್ತದೆ ಹಾಗೂ ಉದ್ಯೋಗಸ್ಥರಿಗೂ ಅನ್ವಯಿಸುತ್ತದೆ ಎಂದು ಹೇಳಿದ ಪೀಠ, ಪಂಪಪಾಲ್&zwnj; ಗೆ ನ್ಯಾಯಾಧಿಕರಣ ನೀಡಿದ್ದ ಮೊತ್ತಕ್ಕಿಂತ ಹೆಚ್ಚುವರಿಯಾಗಿ 1,96,800 ರು. ಪರಿಹಾರ ರು. ಘೋಷಿಸಿತು.&lt;/p&gt;&lt;p&gt;ಪಂಪಪಾಲ್&zwnj; 2013ರ ಅ.19ರಂದು ಬೆಂಗಳೂರಿನಿಂದ ಮಡಿಕೇರಿಗೆ ಕೆಎಸ್&zwnj;ಆರ್&zwnj;ಟಿಸಿ ರಾಜಹಂಸ ಬಸ್&zwnj;ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್&zwnj; ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಂಪಪಾಲ್ ತೀವ್ರವಾಗಿ ಗಾಯಗೊಂಡು ಶಾಶ್ವತ ದೈಹಿಕ ವೈಕಲ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ 10 ಲಕ್ಷ ರು.ವರೆಗೂ ವ್ಯಯಿಸಿದ್ದರು. ನ್ಯಾಯಾಧಿಕರಣವು ವೈದ್ಯಕೀಯ ವೆಚ್ಚ ಸೇರಿ ಒಟ್ಟು 4,55,243 ರು. ಪರಿಹಾರ ಘೋಷಿಸಿತ್ತು. ಅದನ್ನು ಹೈಕೋರ್ಟ್&zwnj;ನಲ್ಲಿ ಪ್ರಶ್ನಿಸಲಾಗಿತ್ತು.&lt;/p&gt;&lt;p&gt;ಬಯೋಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ನಾನು, ಅಪಘಾತಕ್ಕೂ ಮುನ್ನ ಅತಿಥಿ ಉಪನ್ಯಾಸಕರಾಗಿ ಉದ್ಯೋಗ ಮಾಡುತ್ತಿದ್ದೆ. ಜತಗೆ, ಮನೆ ಪಾಠವೂ ಮಾಡುತ್ತಿದ್ದೆ. ಆ ಮೂಲಕ ಮಾಸಿಕ 35 ಸಾವಿರ ರು. ಸಂಪಾದಿಸುತ್ತಿದ್ದೆ. ಘಟನೆ ನಡೆದ ದಿನ ಗೃಹಿಣಿಯಾಗಿದ್ದೆ. ಈ ಎಲ್ಲ ಅಂಶ ಪರಿಗಣಿಸಿ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಹೈಕೋರ್ಟ್&zwnj;ಗೆ ಪಂಪ್&zwnj;ಪಾಲ್&zwnj; ಮನವಿ ಮಾಡಿದ್ದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/homemaker-is-gender-neutral-karnataka-hc-says-men-working-professionals-also-included-rav/articleshow-1sgeqqe"/>
        </item>
        <item>
            <title><![CDATA[ಶಾಲೆ ಆರಂಭವಾಗಿ 2 ತಿಂಗಳಾದ್ರೂ ಸಿಗದ ಪಠ್ಯಪುಸ್ತಕ, ಜೆರಾಕ್ಸ್‌ ಕಾಪಿ ಇಟ್ಕೊಂಡು ಕ್ಲಾಸ್‌ನಲ್ಲಿ ವಿದ್ಯಾರ್ಥಿಗಳ ಕಲಿಕೆ!]]></title>
            <link>https://kannada.asianetnews.com/state/karnataka-private-schools-face-textbook-shortage-photocopy-classes-san/articleshow-54kpf6a</link>
            <guid isPermaLink="true">https://kannada.asianetnews.com/state/karnataka-private-schools-face-textbook-shortage-photocopy-classes-san/articleshow-54kpf6a</guid>
            <pubDate>Sat, 22 Aug 2026 12:04:36 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ, ಮುಂಗಡ ಹಣ ಪಾವತಿಸಿದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಪೂರ್ಣ ಪ್ರಮಾಣದ ಪಠ್ಯಪುಸ್ತಕಗಳು ಪೂರೈಕೆಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಜೆರಾಕ್ಸ್ ಪ್ರತಿಗಳನ್ನು ಅವಲಂಬಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0m2qm70sbzxpcw22ded1nrq,imgname-karnataka-private-schools-face-severe-textbook-shortage-1787380355296.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.22): &lt;/strong&gt;ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಪಠ್ಯಪುಸ್ತಕಗಳು ಪೂರ್ಣಪ್ರಮಾಣದಲ್ಲಿ ತಲುಪಿಲ್ಲ. ಇದರಿಂದಾಗಿ ತರಗತಿಗಳನ್ನು ನಡೆಸಲು ಶಾಲಾ ಆಡಳಿತ ಮಂಡಳಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಪರದಾಡುವಂತಾಗಿದೆ ಎಂದು ಡೆಕ್ಕನ್&zwnj; ಹೆರಾಲ್ಡ್&zwnj; ವರದಿ ಮಾಡಿದೆ. ಶೇಕಡಾ 100 ರಷ್ಟು ಮುಂಗಡ ಹಣ (Indent Amount) ಪಾವತಿಸಿದ್ದರೂ ಹಲವು ವಿಷಯಗಳ ಪಠ್ಯಪುಸ್ತಕಗಳನ್ನು ಇದುವರೆಗೂ ಸರಬರಾಜು ಮಾಡಲಾಗಿಲ್ಲ. ಜೊತೆಗೆ, ಜೂನ್ ತಿಂಗಳಲ್ಲಿ ಕರೆಯಬೇಕಿದ್ದ ಎರಡನೇ ಹಂತದ ಪಠ್ಯಪುಸ್ತಕಗಳ ಬೇಡಿಕೆ (Second Indent) ಪ್ರಕ್ರಿಯೆಯನ್ನೂ ಸರ್ಕಾರ ಇದುವರೆಗೆ ಆರಂಭಿಸಿಲ್ಲ ಎಂದು ಖಾಸಗಿ ಶಾಲೆಗಳ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.&lt;/p&gt;&lt;h2&gt;&lt;strong&gt;ಜೆರಾಕ್ಸ್ ಪ್ರತಿಯೇ ಗತಿ!&lt;/strong&gt;&lt;/h2&gt;&lt;p&gt;ಪಠ್ಯಪುಸ್ತಕಗಳ ಕೊರತೆಯಿಂದಾಗಿ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಲಭ್ಯವಿರುವ ಪುಸ್ತಕಗಳ 'ಫೋಟೋಕಾಪಿ' (ಜೆರಾಕ್ಸ್) ಮಾಡಿಸಿಕೊಂಡು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ (KAMS) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ 'ಜನವರಿ ತಿಂಗಳಿನಲ್ಲಿ ಮೊದಲ ಹಂತದ ಇಂಡೆಂಟ್ ಕರೆಯಲಾಗಿತ್ತು. ಹಿಂದಿನ ವರ್ಷದ ದಾಖಲಾತಿ ಆಧಾರದ ಮೇಲೆ ನಾವು ವಿವರಗಳನ್ನು ಸಲ್ಲಿಸಿ, ಪೂರ್ಣ ಹಣ ಪಾವತಿಸಿದ್ದೆವು. ಆದರೆ, ಶೈಕ್ಷಣಿಕ ವರ್ಷ ಆರಂಭವಾದ ನಂತರ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗುವುದು ಸಹಜ. ಹೀಗಾಗಿಯೇ ಎರಡನೇ ಹಂತದ ಇಂಡೆಂಟ್ ಕರೆಯಲಾಗುತ್ತದೆ. ಆದರೆ ಈ ವರ್ಷ ಇದುವರೆಗೆ ಎರಡನೇ ಇಂಡೆಂಟ್ ಕರೆಯದಿರುವುದು ಪ್ರತಿದಿನ ತರಗತಿಗಳನ್ನು ನಡೆಸಲು ದೊಡ್ಡ ಅಡಚಣೆಯಾಗಿದೆ..' ಎಂದು ಆರೋಪಿಸಿದ್ದಾರೆ.&lt;/p&gt;&lt;h2&gt;&lt;strong&gt;ಶಿಕ್ಷಣ ಇಲಾಖೆಗೆ ಮನವಿ&lt;/strong&gt;&lt;/h2&gt;&lt;p&gt;ಪಠ್ಯಪುಸ್ತಕ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಹಾಗೂ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ (Organisation for Unaided Recognised Schools) ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದೆ. 'ಇದು ನಿರ್ಲಕ್ಷಿಸುವ ವಿಷಯವಲ್ಲ. ಜನವರಿಯಲ್ಲೇ ಪೂರ್ಣ ಹಣ ಪಾವತಿಸಿ ಆರ್ಡರ್ ಮಾಡಿದ್ದರೂ ಅನೇಕ ಶಾಲೆಗಳಿಗೆ ಇನ್ನೂ ಪುಸ್ತಕಗಳು ಸಿಕ್ಕಿಲ್ಲ. ಹೆಚ್ಚುವರಿ ಪುಸ್ತಕಗಳಿಗಾಗಿ 'ಸೆಕೆಂಡ್ ಇಂಡೆಂಟ್' ಸಲ್ಲಿಸಲು ಶಾಲೆಗಳಿಗೆ ಸಾಧ್ಯವಾಗುತ್ತಿಲ್ಲ..' ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;h2&gt;&lt;strong&gt;ಜಿಲ್ಲಾ ಮಟ್ಟದಲ್ಲೇ ಪಠ್ಯಪುಸ್ತಕ ವರ್ಗಾವಣೆಗೆ ಸಲಹೆ&lt;/strong&gt;&lt;/h2&gt;&lt;p&gt;ಕೆಲವು ಶಾಲೆಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ದಾಖಲಾತಿ ಹೆಚ್ಚಿದ್ದರೆ, ಇನ್ನು ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಎಲ್ಲಾ ವಿದ್ಯಾರ್ಥಿಗಳ ವಿವರಗಳು ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ಸಿಸ್ಟಮ್ (SATS) ನಲ್ಲೇ ಇರುವುದರಿಂದ, ಕಡಿಮೆ ದಾಖಲಾತಿಯಿರುವ ಶಾಲೆಗಳಿಂದ ಹೆಚ್ಚುವರಿ ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಜಿಲ್ಲಾ ಉಪನಿರ್ದೇಶಕರ (DDPI) ಮಟ್ಟದಲ್ಲೇ ಪುಸ್ತಕಗಳನ್ನು ವರ್ಗಾಯಿಸಿ ಸಮಸ್ಯೆ ಬಗೆಹರಿಸಬಹುದು. ಹೊಸ ಪುಸ್ತಕಗಳಿಗಾಗಿ ಕಾಯಿಸುವ ಬದಲು ಈ ವ್ಯವಸ್ಥೆ ಮಾಡಬೇಕು ಎಂದು ಶಶಿಕುಮಾರ್ ಸಲಹೆ ನೀಡಿದ್ದಾರೆ.&lt;/p&gt;&lt;p&gt;ಪುಸ್ತಕಗಳಿಗಾಗಿ ಈಗಾಗಲೇ ಹಣ ಪಾವತಿಸಿರುವ ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಪ್ರಶ್ನಿಸುತ್ತಿದ್ದಾರೆ. &quot;ಪೋಷಕರು ಹಣ ನೀಡಿರುವುದರಿಂದ ಅವರಿಗೆ ಯಾವುದೇ ಕಾರಣ ಕೊಟ್ಟರೂ ಒಪ್ಪಿಕೊಳ್ಳುವುದಿಲ್ಲ&quot; ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಇದೇ ವೇಳೆ, ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ (KTBS) ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕಗಳನ್ನು ಪೂರೈಸಲು ಸಾಧ್ಯವಾಗದಿದ್ದರೆ, ಖಾಸಗಿ ಮಾರುಕಟ್ಟೆಯಲ್ಲಿ (Open Market) ಪುಸ್ತಕಗಳು ಮುಕ್ತವಾಗಿ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಮನವಿ ಮಾಡಿದೆ.&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/karnataka-private-schools-face-textbook-shortage-photocopy-classes-san/articleshow-54kpf6a"/>
        </item>
        <item>
            <title><![CDATA[KPSC ಮೇಲೆ ಇಡಿ ದಾಳಿ ಬೆನ್ನಲ್ಲೇ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ‘ನಾ’ ಪತ್ತೆ ಹೈಡ್ರಾಮ! ಗೃಹ ಸಚಿವ ಖರ್ಗೆ ಹೇಳಿದ್ದೇನು?]]></title>
            <link>https://kannada.asianetnews.com/state/high-drama-over-the-ias-officer-gnanendra-missing-after-ed-raid-on-kpsc-rav/articleshow-783mwp8</link>
            <guid isPermaLink="true">https://kannada.asianetnews.com/state/high-drama-over-the-ias-officer-gnanendra-missing-after-ed-raid-on-kpsc-rav/articleshow-783mwp8</guid>
            <pubDate>Sun, 23 Aug 2026 07:04:17 +0530</pubDate>
            <description><![CDATA[&lt;p&gt;ಕೆಪಿಎಸ್&zwnj;ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ದಾಳಿಯ ನಂತರ ಐಎಎಸ್&zwnj; ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎಂಬ ವದಂತಿ ಹರಡಿತ್ತು. ಆದರೆ, ಅವರು ರಜೆ ಮೇಲಿದ್ದು,, ಸುರಕ್ಷಿತವಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0p3nk3b0a8ahtr2et52xt68,imgname-----------------------2026-08-23t065201.910-1787448446059.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು (ಆ.23): ಕೆಪಿಎಸ್&zwnj;ಸಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಐಎಎಸ್&zwnj; ಅಧಿಕಾರಿ ಜ್ಞಾನೇಂದ್ರ ಕುಮಾರ್&zwnj; ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಬಿಂಬಿಸಲಾಗಿತ್ತು. ಆದರೆ ಜ್ಞಾನೇಂದ್ರ ಕುಮಾರ್&zwnj; ಸಂಪರ್ಕಕ್ಕೆ ಸಿಕ್ಕಿದ್ದು, ಸುರಕ್ಷಿತವಾಗಿದ್ದಾರೆ ಅವರು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್&zwnj;ಸಿ) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಸಂಬಂಧ ಇ.ಡಿ. ದಾಳಿ ಬೆನ್ನಲ್ಲೇ ಸೂಕ್ಷ್ಮ ಹಾಗೂ ಸಣ್ಣ ಉದ್ಯಮ (ಎಂಎಸ್&zwnj;ಎಂಇ) ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್&zwnj; ನಾಪತ್ತೆಯಾಗಿದ್ದಾರೆ ಎನ್ನಲಾದ ವಿಚಾರ ಶನಿವಾರ ಇಡೀ ದಿನ ಹೈಡ್ರಾಮಕ್ಕೆ ಕಾರಣವಾಯಿತು.&lt;/p&gt;&lt;h2&gt;ಪರೀಕ್ಷಾ ನಿಯಂತ್ರಕರಾಗಿದ್ದರು:&lt;/h2&gt;&lt;p&gt;ಪಶುವೈದ್ಯಾಧಿಕಾರಿ ಪರೀಕ್ಷೆ ನಡೆದ ವೇಳೆ ಜ್ಞಾನೇಂದ್ರ ಕುಮಾರ್&zwnj; ಕೆಪಿಎಸ್&zwnj;ಸಿ ಪರೀಕ್ಷಾ ನಿಯಂತ್ರಕರಾಗಿದ್ದರು. ಹೀಗಾಗಿ ಇ.ಡಿ ಮತ್ತು ಸಿಐಡಿ ಅಧಿಕಾರಿಗಳು ಅವರ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದರಿಂದಾಗಿ ಜ್ಞಾನೇಂದ್ರ ಕುಮಾರ್&zwnj; ಮೂರು ದಿನಗಳ ಹಿಂದೆಯೇ ಮೊಬೈಲ್&zwnj; ಸ್ವಿಚ್ಡ್&zwnj; ಆಫ್&zwnj; ಮಾಡಿಕೊಂಡು ರಾಜ್ಯ ತೊರೆದಿದ್ದಾರೆ ಎಂಬ ವದಂತಿ ಹರಿದಾಡತೊಡಗಿತ್ತು.&lt;/p&gt;&lt;p&gt;ಈ ಮಧ್ಯೆ ಶನಿವಾರ ರಾತ್ರಿ ವೇಳೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಜ್ಞಾನೇಂದ್ರ ಕುಮಾ&zwnj;ರ್ ಮಾತನಾಡಿದ್ದಾರೆ. ಕುಟುಂಬದಲ್ಲಿ ಎದುರಾದ ತುರ್ತು ಪರಿಸ್ಥಿತಿಯಿಂದಾಗಿ ರಜೆ ಪಡೆದು ತರಾತುರಿಯಲ್ಲಿ ಸ್ವಂತ ಊರಿಗೆ ಪ್ರಯಾಣ ಬೆಳೆಸಿದ್ದಾಗಿ ಹೇಳಿಕೊಂಡಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ ಎಂದೂ ತಿಳಿಸಿರುವುದಾಗಿ ಖರ್ಗೆ ಪೋಸ್ಟ್&zwnj;ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ನಾಪತ್ತೆ ಆಗಿರುವ ವದಂತಿಗೆ ತೆರೆ ಎಳೆದರು.&lt;/p&gt;&lt;h3&gt;ಐಎಎಸ್&zwnj; ಅಧಿಕಾರಿ ನಾಪತ್ತೆಯಾಗಿಲ್ಲ: ಪ್ರಿಯಾಂಕ್ ಖರ್ಗೆ&lt;/h3&gt;&lt;p&gt;&lsquo;ಐಎಎಸ್&zwnj; ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಆಗಿಲ್ಲ. ಅವರ ತಂದೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ನೋಡಲು ಊರಿಗೆ ಹೋಗಿದ್ದಾರೆ. ಈ ಬಗ್ಗೆ ತಮ್ಮ ಮೇಲಧಿಕಾರಿಗೆ ಮಾಹಿತಿ ನೀಡಿದ್ದಾರೆ&rsquo; ಎಂದು ಗೃಹ ಸಚಿವ ಪ್ರಿಯಾಂಕ್&zwnj; ಖರ್ಗೆ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಪಶುವೈದ್ಯಧಾರಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಎಸ್&zwnj;ಸಿ ಕಚೇರಿ ಸೇರಿ ಹಲವು ಕಡೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಪರೀಕ್ಷೆ ಕಂಟ್ರೋಲರ್&zwnj; ಆಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.&lt;/p&gt;&lt;p&gt;ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, &lsquo;ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿಲ್ಲ. ಅವರ ತಂದೆಗೆ ಹೃದಯ ಕಾಯಿಲೆ ವಿಚಾರ ತಿಳಿದು ತುರ್ತಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ. ಹೋಗುವಾಗ ಮೇಲ್ ಮೂಲಕ ತಮ್ಮ ಮೇಲಧಿಕಾರಿಗೆ ತಿಳಿಸಿದ್ದಾರೆ. ಆದರೆ ಶುಕ್ರವಾರ ಹಬ್ಬ ಇದ್ದ ಕಾರಣ ಅವರು ನೋಡಿಕೊಂಡಿಲ್ಲ. ಇನ್ನು ಎರಡು ದಿನದಲ್ಲಿ ಅವರು ಬೆಂಗಳೂರಿಗೆ ವಾಪಸ್&zwnj; ಬರಲಿದ್ದಾರೆ. ಯಾವುದೇ ಐಟಿ, ಇ.ಡಿ ಭಯದಿಂದ ಅವರು ನಾಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/high-drama-over-the-ias-officer-gnanendra-missing-after-ed-raid-on-kpsc-rav/articleshow-783mwp8"/>
        </item>
        <item>
            <title><![CDATA['ಬೆಂಗಳೂರಿಗೆ 'ಗಾರ್ಡನ್ ಸಿಟಿ' ಹೆಸರು ಸುಮ್ನೆ ಬಂದಿಲ್ಲ..' ಪಾರ್ಕ್‌ನ 5% ಜಾಗ ಇತರೆ ಉದ್ದೇಶಗಳಿಗೆ ಬಳಕೆಗೆ ಸಂಸದ ಗರಂ]]></title>
            <link>https://kannada.asianetnews.com/state/parks-are-not-real-estate-assets-tejasvi-surya-opposes-karnatakk-cabinet-5-percents-land-diversion-move-rav/articleshow-83g3yxi</link>
            <guid isPermaLink="true">https://kannada.asianetnews.com/state/parks-are-not-real-estate-assets-tejasvi-surya-opposes-karnatakk-cabinet-5-percents-land-diversion-move-rav/articleshow-83g3yxi</guid>
            <pubDate>Sun, 23 Aug 2026 08:29:52 +0530</pubDate>
            <description><![CDATA[&lt;p&gt;ರಾಜ್ಯದ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸುವ ಸರ್ಕಾರದ ತೀರ್ಮಾನವನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದಾರೆ. ಈ ಕಳವಳಕಾರಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kynqd6g872fwv3y3s6rpt73c,imgname-----------------------2026-07-29t065107.994-1785288104456.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.23) &lt;/strong&gt;: ರಾಜ್ಯದ ಸಾರ್ವಜನಿಕ ಉದ್ಯಾನಗಳ ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸುವ ಸರ್ಕಾರದ ತೀರ್ಮಾನ ಅತ್ಯಂತ ಕಳವಳಕಾರಿಯಾಗಿದೆ. ಇದನ್ನು ಮರು ಪರಿಶೀಲಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಅವರಿಗೆ ಸಂಸದ ತೇಜಸ್ವಿ ಸೂರ್ಯ ಶನಿವಾರ ಪತ್ರ ಬರೆದು ಆಗ್ರಹಿಸಿದ್ದಾರೆ.&lt;/p&gt;&lt;p&gt;ರಾಜ್ಯದ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರ ಉದ್ದೇಶಗಳಿಗೆ ಬಳಸುವ ರಾಜ್ಯ ಸರ್ಕಾರದ ತೀರ್ಮಾನವು ಅತ್ಯಂತ ಕಳವಳಕಾರಿಯಾಗಿದೆ. ಇಂತಹ ನಿರ್ಧಾರ ಕೈಗೊಳ್ಳಲು ನಿಮ್ಮ ಆತ್ಮಸಾಕ್ಷಿಯಾದರೂ ಹೇಗೆ ಒಪ್ಪುತ್ತದೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಿ ಎಂದು ಒತ್ತಾಯಿಸಿದ್ದಾರೆ.&lt;/p&gt;&lt;p&gt;ಬೆಂಗಳೂರು ಇಂದು ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆ ಹೊಂದಿರುವುದು ಕೇವಲ ಹೆಸರಿನಿಂದಲ್ಲ. ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಂದ ಈ ನಗರವನ್ನು ರೂಪಿಸಿದ್ದರು. ಹಲವು ತಲೆಮಾರುಗಳ ಜನಪ್ರತಿನಿಧಿಗಳು, ಪರಿಸರ ಪ್ರೇಮಿಗಳು ಹಾಗೂ ನಾಗರಿಕರು ಮರ-ಗಿಡಗಳು ಮತ್ತು ಹಸಿರು ಪ್ರದೇಶಗಳನ್ನು ಉಳಿಸಿಕೊಂಡು ಬಂದಿದ್ದಾರೆ. ಅವರ ಪರಿಶ್ರಮದಿಂದ ರೂಪುಗೊಂಡ ಈ ಹಸಿರು ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.&lt;/p&gt;&lt;h2&gt;ಪಾರ್ಕ್&zwnj;ಗಳು ಖಾಸಗಿ ಆಸ್ತಿಯಲ್ಲ:&lt;/h2&gt;&lt;p&gt;ಸಾರ್ವಜನಿಕ ಪಾರ್ಕ್&zwnj;ಗಳು ಯಾರೊಬ್ಬರ ಖಾಸಗಿ ಅಸ್ತಿಯಲ್ಲ. ಅವು ಕೇವಲ ಜಾಗಗಳಲ್ಲ. ಅವು ಜೀವವೈವಿಧ್ಯದ ಆಸರೆ ತಾಣಗಳು, ನಾಗರಿಕರ ಉಸಿರು, ಹಿರಿಯರ ಆರೋಗ್ಯ, ಮಕ್ಕಳ ನಗು ಹಾಗೂ ಸಾಮಾನ್ಯ ಜನರ ನೆಮ್ಮದಿಯ ತಾಣಗಳು. ಈ ಸಂದರ್ಭದಲ್ಲಿ ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರ ಉದ್ದೇಶಗಳಿಗೆ ಬಳಸುವ ಯಾವುದೇ ಕ್ರಮವು ತೀವ್ರ ಕಳವಳಕಾರಿ. ಉದ್ಯಾನವನಗಳು ಕೇವಲ ಖಾಲಿ ಜಾಗವಲ್ಲ, ಅವು ಪ್ರತಿಯೊಂದು ಊರಿನ ಉಸಿರು, ಪರಿಸರ ಸಮತೋಲನ ಮತ್ತು ಸಾರ್ವಜನಿಕರ ಆರೋಗ್ಯದ ಅವಿಭಾಜ್ಯ ಅಂಗಗಳು ಎಂದು ತಿಳಿಸಿದ್ದಾರೆ.&lt;/p&gt;&lt;h3&gt;ಇತರೆ ಹಸಿರು ಪ್ರದೇಶದ ಮೇಲೆ ಒತ್ತಡ:&lt;/h3&gt;&lt;p&gt;ಈಗಾಗಲೇ ಅತಿಯಾದ ಕಾಂಕ್ರೀಟೀಕರಣ, ವಾಯುಮಾಲಿನ್ಯ, ನಗರ ಉಷ್ಣತೆ ಹಾಗೂ ಮಳೆನೀರು ನಿರ್ವಹಣೆಯ ಸಮಸ್ಯೆಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಸಂಕಷ್ಟ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ಉಳಿದಿರುವ ಹಸಿರು ಪ್ರದೇಶಗಳನ್ನೂ ಬೇರೆ ಉದ್ದೇಶಗಳಿಗೆ ಬಳಸುವುದು ಆತಂಕಕಾರಿ ನಿರ್ಧಾರವಾಗಲಿದೆ. ಇಂದು ಒಂದು ಉದ್ಯಾನವನದ ಜಾಗವನ್ನು ಬೇರೆ ಉದ್ದೇಶಕ್ಕೆ ಬಿಟ್ಟುಕೊಟ್ಟರೆ, ನಾಳೆ ಪ್ರತಿಯೊಂದು ಹಸಿರು ಪ್ರದೇಶದ ಮೇಲೂ ಇದೇ ರೀತಿಯ ಒತ್ತಡ ನಿರ್ಮಾಣವಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;ಪರ್ಯಾಯ ಸರ್ಕಾರಿ ಜಾಗ ಗುರುತಿಸಿ:&lt;/h3&gt;&lt;p&gt;ಒಂದು ಬಾರಿ ಹಸಿರು ಪ್ರದೇಶ ಕಳೆದುಕೊಂಡರೆ ಅದನ್ನು ಮರಳಿ ಪಡೆಯುವುದು ಬಹುತೇಕ ಅಸಾಧ್ಯ. ಇಂತಹ ಸಂದರ್ಭದಲ್ಲಿ ಉಳಿದಿರುವ ಹಸಿರು ಪ್ರದೇಶಗಳನ್ನು ಬೇರೆ ಉದ್ದೇಶಗಳಿಗೆ ಬಲಿಕೊಡುವುದು ಅತ್ಯಂತ ಅವೈಜ್ಞಾನಿಕ ಮತ್ತು ದೂರದೃಷ್ಟಿಯಿಲ್ಲದ ನಿರ್ಧಾರವಾಗಲಿದೆ. ಬೆಂಗಳೂರಿಗೆ ಅಭಿವೃದ್ಧಿ ಅಗತ್ಯ. ಆದರೆ ಬೆಂಗಳೂರಿನ ಹಸಿರನ್ನು ನಾಶಮಾಡುವ ಅಭಿವೃದ್ಧಿ ನಮಗೆ ಬೇಡ. ಯಾವುದೇ ಯೋಜನೆಗೆ ಜಾಗದ ಅಗತ್ಯವಿದ್ದರೆ ಪರ್ಯಾಯ ಸರ್ಕಾರಿ ಜಾಗಗಳನ್ನು ಗುರುತಿಸಿ, ಪರಿಸರಕ್ಕೆ ಕನಿಷ್ಠ ಹಾನಿಯಾಗುವ ಮಾರ್ಗವನ್ನು ಸರ್ಕಾರ ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.&lt;/p&gt;&lt;p&gt;&lt;strong&gt;ಆತ್ಮಸಾಕ್ಷಿ ರಹಿತ ನಿರ್ಧಾರ ಮರುಪರಿಶೀಲಿಸಿ:&lt;/strong&gt;&lt;/p&gt;&lt;p&gt;ಕೆಂಪೇಗೌಡರು ಕಟ್ಟಿದ ನಮ್ಮ ಬೆಂಗಳೂರು, ತಲೆಮಾರುಗಳು ಉಳಿಸಿ, ಬೆಳೆಸಿದ ಬೆಂಗಳೂರು. ಮುಂದಿನ ಪೀಳಿಗೆಗೂ ಉಳಿಸುವುದು ನಮ್ಮೆಲ್ಲರ ಕರ್ತವ್ಯ. ನೂರಾರು ವರ್ಷಗಳಿಂದ ಕಾಯ್ದುಕೊಂಡು ಬಂದಿರುವ ಈ ಹಸಿರು ಪರಂಪರೆ, ಕೇವಲ ರಿಯಲ್ ಎಸ್ಟೇಟ್ ಕಾರಣಗಳಿಗಾಗಿ ಒತ್ತೆ ಇರಿಸುವ ಕ್ರಮವು ಆತ್ಮಸಾಕ್ಷಿ ರಹಿತ ನಿರ್ಧಾರವಾಗಿದೆ. ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದ್ದು, ಈ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/parks-are-not-real-estate-assets-tejasvi-surya-opposes-karnatakk-cabinet-5-percents-land-diversion-move-rav/articleshow-83g3yxi"/>
        </item>
        <item>
            <title><![CDATA[ಶಾಲೆಗಳ ಅಭಿವೃದ್ಧಿಗೆ ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ನಿಂದ ರಾಜ್ಯ ಸರ್ಕಾರಕ್ಕೆ 1750 ಕೋಟಿ ಸಾಲ]]></title>
            <link>https://kannada.asianetnews.com/state/adb-karnataka-govt-sign-rs-1750-cr-loan-for-500-kps-schools-san/articleshow-agmev73</link>
            <guid isPermaLink="true">https://kannada.asianetnews.com/state/adb-karnataka-govt-sign-rs-1750-cr-loan-for-500-kps-schools-san/articleshow-agmev73</guid>
            <pubDate>Sat, 22 Aug 2026 11:27:45 +0530</pubDate>
            <description><![CDATA[&lt;p&gt;ಕರ್ನಾಟಕ ಸರ್ಕಾರವು 500 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆ'ಗಳಾಗಿ ಮೇಲ್ದರ್ಜೆಗೇರಿಸಲು ಏಷ್ಯನ್ ಅಭಿವೃದ್ಧಿ ಬ್ಯಾಂಕ್&zwnj;ನೊಂದಿಗೆ 1,750 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದೆ. ಒಟ್ಟು 2,500 ಕೋಟಿ ರೂ. ವೆಚ್ಚದ ಈ ಯೋಜನೆ ಇದಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0m0k8njqsmd1wngr174s74v,imgname-whatsapp-image-2026-08-21-at-15.32.51-1787378115250.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.22): &lt;/strong&gt;ರಾಜ್ಯದ 500 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ' (KPS) ಮೇಲ್ದರ್ಜೆಗೇರಿಸಲು ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ADB) ನೊಂದಿಗೆ ಕರ್ನಾಟಕ ಸರ್ಕಾರವು 1,750 ಕೋಟಿ ರೂಪಾಯಿಗಳ ಸಾಲ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಈ ಶಾಲಾ ಅಭಿವೃದ್ಧಿ ಯೋಜನೆಗಳು ಪೂರ್ಣಗೊಳ್ಳಲಿವೆ. ವಿಕಾಸಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಮತ್ತು ಎಡಿಬಿ (ADB) ಪ್ರತಿನಿಧಿಗಳು ಈ ಐತಿಹಾಸಿಕ ಒಪ್ಪಂದಕ್ಕೆ ಅಂಕಿತ ಹಾಕಿದರು.&lt;/p&gt;&lt;h2&gt;&lt;strong&gt;ಒಟ್ಟು ಯೋಜನಾ ವೆಚ್ಚ 2,500 ಕೋಟಿ ರೂ&lt;/strong&gt;&lt;/h2&gt;&lt;p&gt;ಈ ಬೃಹತ್ ಯೋಜನೆಯ ಒಟ್ಟು ವೆಚ್ಚ 2,500 ಕೋಟಿ ರೂಪಾಯಿಗಳಾಗಿದ್ದು, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೀಡುವ 1,750 ಕೋಟಿ ರೂ. ಸಾಲದ ಹೊರತಾಗಿ, ಬಾಕಿ 750 ಕೋಟಿ ರೂಪಾಯಿ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಎಲ್ಲಾ 500 ಶಾಲೆಗಳ ನವೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು 2029-30ರ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.&lt;/p&gt;&lt;h2&gt;&lt;strong&gt;ಆಯ್ಕೆ ಮಾನದಂಡ ಮತ್ತು ಸೌಲಭ್ಯಗಳು&lt;/strong&gt;&lt;/h2&gt;&lt;p&gt;ನಿಗದಿಪಡಿಸಿದ ನಿರ್ದಿಷ್ಟ ಮಾನದಂಡಗಳ ಆಧಾರದ ಮೇಲೆ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಕರ್ಷಿಸುವ ಸಾಮರ್ಥ್ಯವಿರುವ ಸರ್ಕಾರಿ ಶಾಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಮೇಲ್ದರ್ಜೆಗೇರಿಸಲಾಗುವ ಪ್ರತಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (KPS) ಕನಿಷ್ಠ 1,200 ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ.&lt;/p&gt;&lt;p&gt;ಈ ಯೋಜನೆಯಡಿ ದ್ವಿಭಾಷಾ ಶಿಕ್ಷಣ (Bilingual Education), ಶಿಕ್ಷಕರಿಗೆ ಆಧುನಿಕ ತರಬೇತಿ, ಕಂಪ್ಯೂಟರ್ ಸೈನ್ಸ್ ಶಿಕ್ಷಣ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence) ಕಲಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ವೃತ್ತಿಪರ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ಜೊತೆಗೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸುರಕ್ಷಿತ ಉಚಿತ ಸಾರಿಗೆ ಸೌಲಭ್ಯವನ್ನು ಒದಗಿಸಲು ಯೋಜನೆ ರೂಪಿಸಲಾಗಿದೆ.&lt;/p&gt;&lt;h2&gt;&lt;strong&gt;ಹಂತ ಹಂತವಾಗಿ ಹಣ ಬಿಡುಗಡೆ&lt;/strong&gt;&lt;/h2&gt;&lt;p&gt;ಎಡಿಬಿ ಸಂಸ್ಥೆಯು ಭಾರತದ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಅತಿ ದೊಡ್ಡ ಆರ್ಥಿಕ ನೆರವು ಇದಾಗಿದೆ. ರಾಜ್ಯದ ಕಪಿಎಸ್ (KPS) ಯೋಜನೆಗಳು ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ಬ್ಯಾಂಕ್ ಈ ಸಾಲಕ್ಕೆ ಅನುಮೋದನೆ ನೀಡಿದೆ. ಈಗಾಗಲೇ ಯೋಜನೆಯ ಮೊದಲ ಕಂತಾಗಿ 262.5 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಉಳಿದ ಹಣ ವರ್ಷವಾರು ಬಿಡುಗಡೆಯಾಗಲಿದೆ. ಅದರಂತೆ, 2026-27 ರಲ್ಲಿ: 358.75 ಕೋಟಿ ರೂ, 2027-28 ರಲ್ಲಿ 385 ಕೋಟಿ ರೂ, 2028-29 ರಲ್ಲಿ 376.25 ಕೋಟಿ ರೂ ಮತ್ತು 2029-30 ರಲ್ಲಿ 367.5 ಕೋಟಿ ರೂಪಾಯಿ ನೀಡಲಿದೆ. ಇದಲ್ಲದೆ, ಈಗಾಗಲೇ 100 ಶಾಲೆಗಳ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಮೇಲ್ದರ್ಜೆಗೇರಿಸಬೇಕಾದ ಶಾಲೆಗಳನ್ನು ಗುರುತಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/adb-karnataka-govt-sign-rs-1750-cr-loan-for-500-kps-schools-san/articleshow-agmev73"/>
        </item>
        <item>
            <title><![CDATA[Karnataka News Live: Karnataka Politics - ಡೆಲ್ಲಿಯಲ್ಲಿ ರಾಹುಲ್ 'ಫೈಟ್'; ಬೆಂಗಳೂರಲ್ಲಿ ಡಿಕೆಶಿ 'ಊಟ್-ಬೈಟ್'! ಅದಾನಿ ಭೇಟಿಗೆ ಬಿಜೆಪಿ ಛಾಟಿ!]]></title>
            <link>https://kannada.asianetnews.com/state/karnataka-news-live-23-august-2026-minister-hc-balakrishna-lashed-out-at-union-minister-hd-kumaraswamy-mrq/liveblog-updates-aiihci8</link>
            <guid isPermaLink="true">https://kannada.asianetnews.com/state/karnataka-news-live-23-august-2026-minister-hc-balakrishna-lashed-out-at-union-minister-hd-kumaraswamy-mrq/liveblog-updates-aiihci8</guid>
            <pubDate>Sun, 23 Aug 2026 22:52:56 +0530</pubDate>
            <description><![CDATA[&lt;p&gt;&lt;strong&gt;ರಾಮನಗರ:&lt;/strong&gt; ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿರುವುದನ್ನು ನೋಡಿದರೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಹೊಟ್ಟೆಯೊಳಗೆ ಬೆಂಕಿ ಇಟ್ಟಂತೆ ಆಗಿದೆ ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದರು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಹೆಲ್ತ್ ಸಿಟಿ ವಸತಿ ಬಡಾವಣೆಯ ಮರು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಿಎಂ ಡಿ.ಕೆ.ಶಿವಕುಮಾರ್ ಅವರು ನಿಂತರು ತಪ್ಪು, ಕುಂತರು ತಪ್ಪು ಎನ್ನುವಂತಾಗಿದೆ.&lt;/p&gt;&lt;p&gt;ನಮ್ಮ ನಡವಳಿಕೆಗಳು ಹೇಗಿರಬೇಕೆಂದು ಕೇಂದ್ರ ಸಚಿವರು ಲಿಸ್ಟ್ ಕೊಟ್ಟರೆ ಅದನ್ನು ಪಾಲಿಸುತ್ತೇವೆ ಎಂದು ಟೀಕಿಸಿದರು. ನಾವು ಈ ಜಿಲ್ಲೆಯ ಮಕ್ಕಳು. ಇಲ್ಲಿ ಹುಟ್ಟಿ, ಇಲ್ಲಿ ಬೆಳೆದಿರುವ ನಾವು ಇಲ್ಲೇ ಸಾಯುವವರು. ನಮ್ಮ ಬದುಕನ್ನು ಇಲ್ಲಿಯೇ ಕಟ್ಟಿಕೊಂಡಿದ್ದೇವೆ. ನಮ್ಮ ಮೇಲೆ ವಿಶ್ವಾಸವಿಡಿ. ಬೇರೆ ಕಡೆ ಹುಟ್ಟಿ ಬಂದವರು ಇಲ್ಲಿ ಸಾಯಬಹುದು. ಬೆಳಗ್ಗೆ ಎದ್ದು ಬಯ್ಯುವವರ ಢೋಂಗಿ ಮಾತುಗಳನ್ನು ನಂಬಬೇಡಿ ಎಂದು ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0qtaj4nep3d7mm1qz1vyqbt,imgname-dk-shivakumar-1787505756309.jpg" type="image/jpeg" height="390" width="690"/>
            <category>state</category>
            <dc:creator>Asianet News</dc:creator>
            <atom:link href="https://kannada.asianetnews.com/state/karnataka-news-live-23-august-2026-minister-hc-balakrishna-lashed-out-at-union-minister-hd-kumaraswamy-mrq/liveblog-updates-aiihci8"/>
        </item>
        <item>
            <title><![CDATA[ಪಾಕಿಸ್ತಾನ್ ಗ್ಯಾಂಗ್‌ಸ್ಟರ್‌ಗಳ ಜೊತೆ ನಂಟು: ದೊಡ್ಡಬಳ್ಳಾಪುರದ ಎಸಿ ರಿಪೇರಿ ಮಾಡುತ್ತಿದ್ದವ ಅರೆಸ್ಟ್]]></title>
            <link>https://kannada.asianetnews.com/state/karnatak-man-arrested-in-contact-pakistan-gangsters-via-instagram-links-doddaballapur-rav/articleshow-fmt3uyp</link>
            <guid isPermaLink="true">https://kannada.asianetnews.com/state/karnatak-man-arrested-in-contact-pakistan-gangsters-via-instagram-links-doddaballapur-rav/articleshow-fmt3uyp</guid>
            <pubDate>Sun, 23 Aug 2026 05:28:23 +0530</pubDate>
            <description><![CDATA[&lt;p&gt;ಪಾಕಿಸ್ತಾನ ಮೂಲದ ಗ್ಯಾಂಗ್&zwnj;ಸ್ಟರ್&zwnj;ಗಳೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ದೊಡ್ಡಬಳ್ಳಾಪುರದ ಸೈಯದ್ ಅಬೂಬಕರ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನದ ಶಾಜದ್ ಬುಟ್ಟಿ ನೆಟ್&zwnj;ವರ್ಕ್ ಜೊತೆ ಇನ್&zwnj;ಸ್ಟಾಗ್ರಾಂನಲ್ಲಿ ಸಂಪರ್ಕದಲ್ಲಿದ್ದ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0nxx3dsrvxpwgm2j6s6xk4c,imgname-----------------------2026-08-23t051626.671-1787442400697.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್&lt;/li&gt; &lt;li&gt;ದೊಡ್ಡಬಳ್ಳಾಪುರದಲ್ಲಿ ಎಸಿ ಮೆಕ್ಯಾನಿಕ್&zwnj;. ಬೆಂಗಳೂರಿನ ಮಸೀದಿಯೊಂದರಲ್ಲಿ ಬೋಧಕನಾಗಿ ಕೆಲಸ&lt;/li&gt; &lt;li&gt;2 ವರ್ಷದಿಂದ ಪಾಕ್&zwnj; ಗ್ಯಾಂಗ್&zwnj;ಸ್ಟರ್&zwnj; ಬುಟ್ಟಿ ನೆಟ್&zwnj;ವರ್ಕ್&zwnj; ಜತೆ ಇನ್&zwnj;ಸ್ಟಾಗ್ರಾಂ ಮೂಲಕ ಸಂಪರ್ಕ&lt;/li&gt; &lt;li&gt;ಕೇರಳ, ದೆಹಲಿಗೆ ಹೋಗಿ ತರಬೇತಿ ಪಡೆದುಕೊಂಡು ಬಂದಿರುವ ಶಂಕೆ ಹಿನ್ನೆಲೆಯಲ್ಲಿ ಬಂಧನ&lt;/li&gt;&lt;/ul&gt;&lt;p&gt;--&lt;/p&gt;&lt;p&gt;&lt;strong&gt;ದೊಡ್ಡಬಳ್ಳಾಪುರ (ಆ.23) &lt;/strong&gt;ಪಾಕಿಸ್ತಾನ ಮೂಲದ ಗ್ಯಾಂಗ್&zwnj;ಸ್ಟರ್&zwnj;ಗಳ ಜೊತೆ ಸಾಮಾಜಿಕ ಜಾಲತಾಣ ಮೂಲಕ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.&lt;/p&gt;&lt;p&gt;ದೊಡ್ಡಬಳ್ಳಾಪುರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ. ಕೌಂಟ&zwnj;ರ್ ಇಂಟಲಿಜೆನ್ಸ್ ಸೆಲ್ ಹಾಗೂ ಕೇಂದ್ರ ಗುಪ್ತಚರ ದಳ ಅಧಿಕಾರಿಗಳಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸೈಯದ್ ಅಬೂಬಕರ್&zwnj;ನನ್ನು ಬಂಧಿಸಿದ್ದಾರೆ.&lt;/p&gt;&lt;h2&gt;ಎರಡು ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್&zwnj;ಸ್ಟರ್&zwnj;ಗಳ ಜೊತೆ ಲಿಂಕ್&lt;/h2&gt;&lt;p&gt;ಪೊಲೀಸರ ಪ್ರಕಾರ, ಸೈಯದ್ ಅಬೂಬಕ&zwnj;ರ್ ಕಳೆದ 2 ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್&zwnj;ಸ್ಟರ್&zwnj;ಗಳ ಜೊತೆ ಇನ್&zwnj;ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಪಾಕಿಸ್ತಾನದ ಶಾಜದ್ ಬುಟ್ಟಿ ನೆಟ್&zwnj;ವರ್ಕ್ ಗ್ಯಾಂಗ್&zwnj;ಗೆ ಸಂಬಂಧಿಸಿದೆ ಎನ್ನಲಾದ ಇನ್&zwnj;ಸ್ಟಾಗ್ರಾಂ ಖಾತೆಯೊಂದರ ಮೂಲಕ ಆತ ಸಂಪರ್ಕ ಹೊಂದಿದ್ದ. ಗಣ್ಯ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಚಟುವಟಿಕೆಗಳಲ್ಲಿ ಈ ಪಾಕಿಸ್ತಾನಿ ಗ್ಯಾಂಗ್ ತೊಡಗಿಸಿಕೊಂಡಿದೆ ಎನ್ನಲಾಗಿದೆ.&lt;/p&gt;&lt;h2&gt;ದೊಡ್ಡಬಳ್ಳಾಪುರದಲ್ಲಿ ಎಸಿ ರಿಪೇರಿ ಮಾಡುತ್ತಿದ್ದ ಶಂಕಿತ&lt;/h2&gt;&lt;p&gt;&lsquo;Hammadmemon33320&rsquo; ಇನ್&zwnj;ಸ್ಟಾಗ್ರಾಂ ಖಾತೆಯ ಮೂಲಕ ಆರೋಪಿ ಸಂಪರ್ಕದಲ್ಲಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯು ತನ್ನ ಆಧಾರ್ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆಗಳ ವಿವರಗಳನ್ನು ನೀಡಿ ಆ ಖಾತೆಗೆ ಲಾಗಿನ್ ಆಗಿದ್ದ. ಈ ಮೂಲಕ ಪಾಕಿಸ್ತಾನದಲ್ಲಿರುವ ಗ್ಯಾಂಗ್ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬ ಆರೋಪ ಕೇಳಿಬಂದಿದೆ. ಸೈಯದ್ ಅಬೂಬಕರ್ ದೊಡ್ಡಬಳ್ಳಾಪುರದಲ್ಲಿ ಎಸಿ ರಿಪೇರಿ ಕೆಲಸ ಮಾಡಿಕೊಂಡಿದ್ದ. ಇದರ ಜೊತೆಗೆ ಬೆಂಗಳೂರಿನ ಮಸೀದಿಯೊಂದರಲ್ಲಿ ಪಾಠ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.&lt;/p&gt;&lt;h3&gt;ದೆಹಲಿ ಕೇರಳಕ್ಕೆ ತೆರಳಿ ಉಗ್ರ ತರಬೇತಿ&lt;/h3&gt;&lt;p&gt;ಗ್ಯಾಂಗ್ ಸದಸ್ಯರ ಸೂಚನೆಯಂತೆ ಆತ ಕೇರಳ ಹಾಗೂ ದೆಹಲಿಗೆ ತೆರಳಿ ತರಬೇತಿಯನ್ನೂ ಪಡೆದುಕೊಂಡು ಬಂದಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ಚಟುವಟಿಕೆಗಳು ಹಾಗೂ ಪಾಕಿಸ್ತಾನಿ ಗ್ಯಾಂಗ್&zwnj;ನೊಂದಿಗಿನ ಸಂಪರ್ಕದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ವಿರುದ್ಧ ಬಿಎನ್&zwnj;ಎಸ್ ಸೆಕ್ಷನ್ 113(3) ಹಾಗೂ 197(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;ಪ್ರಕರಣದ ಹಿಂದೆ ಮತ್ತಷ್ಟು ವ್ಯಕ್ತಿಗಳ ಸಂಪರ್ಕವಿದೆಯೇ, ಆರೋಪಿ ಯಾವ ರೀತಿಯ ತರಬೇತಿ ಪಡೆದಿದ್ದ ಹಾಗೂ ಪಾಕಿಸ್ತಾನಿ ಗ್ಯಾಂಗ್&zwnj;ನೊಂದಿಗೆ ಆತನ ಸಂಪರ್ಕದ ಉದ್ದೇಶವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnatak-man-arrested-in-contact-pakistan-gangsters-via-instagram-links-doddaballapur-rav/articleshow-fmt3uyp"/>
        </item>
        <item>
            <title><![CDATA[ಹೋಟೆಲ್ ಪನ್ನೀರ್ ತಿನ್ನೋ ಮುನ್ನ ಎಚ್ಚರ,  ನಕಲಿ ಪನ್ನೀರ್ ಬ್ಯಾನ್ ಮಾಡಿದ  ಕರ್ನಾಟಕ ಸರ್ಕಾರ!]]></title>
            <link>https://kannada.asianetnews.com/state/karnataka-bans-fake-analogue-paneer-for-1-year-health-risks-and-hotel-rules-explained-gdp/articleshow-g8mtab9</link>
            <guid isPermaLink="true">https://kannada.asianetnews.com/state/karnataka-bans-fake-analogue-paneer-for-1-year-health-risks-and-hotel-rules-explained-gdp/articleshow-g8mtab9</guid>
            <pubDate>Sat, 22 Aug 2026 10:17:53 +0530</pubDate>
            <description><![CDATA[ಕರ್ನಾಟಕ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ, ಪಾಮ್ ಆಯಿಲ್ ಮತ್ತು ರಾಸಾಯನಿಕಗಳಿಂದ ತಯಾರಿಸಲಾಗುವ 'ಅನಲಾಗ್ ಪನ್ನೀರ್' ಮಾರಾಟ ಮತ್ತು ಬಳಕೆಯನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಿದೆ. ಹೋಟೆಲ್&zwnj;ಗಳಲ್ಲಿ ಅಸಲಿ ಪನ್ನೀರ್ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ಈ ನಕಲಿ ಪನ್ನೀರ್ ಸೇವನೆಯು ಹೃದಯಾಘಾತ ಮತ್ತು ಕ್ಯಾನ್ಸರ್&zwnj;ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.]]></description>
            <media:content url="https://static.asianetnews.com/images/w-1280,h-720,format-jpg,imgid-01kz8ah4c64xn0mcctrkfj9gmy,imgname-maharashtra-bans-non-dairy-paneer-1785912136070.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಪನ್ನೀರ್ ಪ್ರಿಯರಿಗೆ ಮತ್ತು ಆಹಾರ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯನ್ನು ತಡೆಯುವ ಉದ್ದೇಶದಿಂದ, ಕೃತಕವಾಗಿ ತಯಾರಿಸಲಾಗುವ &lsquo;ಅನಲಾಗ್ ಪನ್ನೀರ್&rsquo; (Analogue Paneer) ಮಾರಾಟ ಮತ್ತು ಬಳಕೆಯನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.&lt;/p&gt;&lt;h2&gt;ಹೋಟೆಲ್ ಮತ್ತು ರೆಸ್ಟೋರೆಂಟ್&zwnj;ಗಳ ವಿರುದ್ಧ ಕಠಿಣ ಕ್ರಮ&lt;/h2&gt;&lt;p&gt;ರಾಜ್ಯದ ಹಲವು ಹೋಟೆಲ್, ರೆಸ್ಟೋರೆಂಟ್ ಹಾಗೂ ಧಾಬಾಗಳಲ್ಲಿ ಅಸಲಿ ಡೈರಿ ಪನ್ನೀರ್ ಬದಲಿಗೆ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸಿಗುವ ಕೃತಕ ಅನಲಾಗ್ ಪನ್ನೀರ್ ಅನ್ನು ಗ್ರಾಹಕರಿಗೆ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಹಾರ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ ಅನಲಾಗ್ ಪನ್ನೀರ್ ಮಾರಾಟ ಮಾಡುವ ಹಾಗೂ ಬಳಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಛತ್ತೀಸ್&zwnj;ಗಢ, ಮಹಾರಾಷ್ಟ್ರ, ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳ ಬಳಿಕ ಇದೀಗ ಕರ್ನಾಟಕದಲ್ಲೂ ನಕಲಿ ಮತ್ತು ಕೃತಕ ಪನ್ನೀರ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.&lt;/p&gt;&lt;h2&gt;ಏನಿದು &lsquo;ಅನಲಾಗ್ ಪನ್ನೀರ್&rsquo;?&lt;/h2&gt;&lt;p&gt;ನೋಡಲು ತದ್ರೂಪು ಅಸಲಿ ಪನ್ನೀರ್&zwnj;ನಂತೆಯೇ ಕಾಣುವ ಇದು, ವಾಸ್ತವವಾಗಿ ಅಸಲಿ ಹಾಲಿನಿಂದ ತಯಾರಿಸಿದ್ದಲ್ಲ! ಹಾಲಿನ ಬದಲಾಗಿ ಆರೋಗ್ಯಕ್ಕೆ ಹಾನಿಕಾರಕವಾದ ಪಾಮ್ ಆಯಿಲ್, ಸಸ್ಯಜನ್ಯ ಕೊಬ್ಬು (Vegetable Fat), ರಾಸಾಯನಿಕಗಳು ಮತ್ತು ಎಮಲ್ಸಿಫೈಯರ್&zwnj;ಗಳನ್ನು ಬಳಸಿ ಇದನ್ನು ತಯಾರಿಸಲಾಗುತ್ತದೆ. ಇದು ಅಸಲಿ ಪನ್ನೀರ್&zwnj;ಗಿಂತ ಅತ್ಯಂತ ಅಗ್ಗವಾಗಿದ್ದು, ಹೆಚ್ಚಿನ ದಿನಗಳ ಕಾಲ ಹಾಳಾಗದಂತೆ ಸಂಗ್ರಹಿಸಿಡಬಹುದು. ಕಡಿಮೆ ಬೆಲೆಗೆ ಸಿಗುತ್ತದೆ ಮತ್ತು ಸುಲಭವಾಗಿ ಕೆಡುವುದಿಲ್ಲ ಎಂಬ ಕಾರಣಕ್ಕೆ ಹೆಚ್ಚಿನ ಹೋಟೆಲ್ ಹಾಗೂ ರೆಸ್ಟೋರೆಂಟ್&zwnj;ಗಳು ಲಾಭದ ಆಸೆಗೆ ಬಿದ್ದು, ಗ್ರಾಹಕರಿಗೆ ಅಸಲಿ ಪನ್ನೀರ್ ಎಂದು ನಂಬಿಸಿ ಇದನ್ನೇ ಉಣಿಸುತ್ತಿದ್ದವು.&lt;/p&gt;&lt;h2&gt;ಆರೋಗ್ಯದ ಮೇಲಾಗುವ ಭೀಕರ ಪರಿಣಾಮಗಳು&lt;/h2&gt;&lt;p&gt;ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರವಾದ ಮತ್ತು ಗಂಭೀರವಾದ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗಿದೆ. ಅನಲಾಗ್ ಪನ್ನೀರ್ ಸೇವನೆಯಿಂದ ಉಂಟಾಗುವ ಪ್ರಮುಖ ಅಪಾಯಗಳೆಂದರೆ ಅಂಗಾಂಗಗಳ ಹಾನಿ, ರಾಸಾಯನಿಕಯುಕ್ತ ಈ ಪನ್ನೀರ್ ಅನ್ನು ದೀರ್ಘಕಾಲ ಸೇವಿಸುವುದರಿಂದ ಕಿಡ್ನಿ ಮತ್ತು ಲಿವರ್ (ಯಕೃತ್ತು) ಸಮಸ್ಯೆಗಳು ತಲೆದೂರುತ್ತವೆ. ಇದರಲ್ಲಿ ಹಾನಿಕಾರಕ ಕೊಬ್ಬು ಮತ್ತು ಪಾಮ್ ಆಯಿಲ್ ಅಧಿಕವಾಗಿರುವುದರಿಂದ ರಕ್ತನಾಳಗಳಲ್ಲಿ ಕೊಬ್ಬು ಶೇಖರಣೆಯಾಗಿ ಹೃದಯಾಘಾತದ ಅಪಾಯ ಹೆಚ್ಚಿರುತ್ತದೆ. ಇದು ನಿಜವಾದ ಹಾಲಿನಿಂದ ಮಾಡಿರದ ಕಾರಣ, ಅಸಲಿ ಪನ್ನೀರ್&zwnj;ನಲ್ಲಿ ಸಿಗುವ ಪ್ರೋಟೀನ್ ಅಥವಾ ಕ್ಯಾಲ್ಸಿಯಂನಂತಹ ಯಾವುದೇ ಪೌಷ್ಟಿಕಾಂಶಗಳು ಇದರಲ್ಲಿ ಇರುವುದಿಲ್ಲ. ಇದನ್ನು ತಯಾರಿಸಲು ಬಳಸುವ ಕೃತಕ ರಾಸಾಯನಿಕಗಳು ದೀರ್ಘಾವಧಿಯಲ್ಲಿ ಕ್ಯಾನ್ಸರ್&zwnj;ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. ಸಾರ್ವಜನಿಕರು ಹೊರಗಡೆ ಪನ್ನೀರ್ ಖಾದ್ಯಗಳನ್ನು ಸೇವಿಸುವಾಗ ಜಾಗರೂಕರಾಗಿರಲು ಮತ್ತು ಆಹಾರ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆ ಸೂಚಿಸಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-bans-fake-analogue-paneer-for-1-year-health-risks-and-hotel-rules-explained-gdp/articleshow-g8mtab9"/>
        </item>
        <item>
            <title><![CDATA[State News Live: Toxic Pre Release Event - ‘ನಾರ್ತ್‌-ಸೌತ್‌’ ಅಂತ ಕಿತ್ತಾಡೋದು ಬೇಡ - ತೆಲುಗು ನೆಲದಲ್ಲಿ ಯಶ್ ಹವಾ!]]></title>
            <link>https://kannada.asianetnews.com/state/karnataka-news-liv-updates-22-august-2026-minister-nagendra-valmiki-scam-protest-san/liveblog-updates-ga8f55r</link>
            <guid isPermaLink="true">https://kannada.asianetnews.com/state/karnataka-news-liv-updates-22-august-2026-minister-nagendra-valmiki-scam-protest-san/liveblog-updates-ga8f55r</guid>
            <pubDate>Sat, 22 Aug 2026 23:44:39 +0530</pubDate>
            <description><![CDATA[&lt;p&gt;&lt;strong&gt;ಬೆಂಗಳೂರು (ಆ.22):&lt;/strong&gt; ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿ ಸಿದ್ದು, ಬರುವ ಸೋಮವಾರ ಅಥವಾ ಮಂಗಳವಾರದ ಹೊತ್ತಿಗೆ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ. ಇನ್ನೊಂದೆಡೆ, ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಸಚಿವ ನಾಗೇಂದ್ರಗೆ ನೀಡಲಾಗಿರುವುದು ಮತ್ತೊಂದು ವಿವಾದಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್&zwnj;ಡೇಟ್&zwnj; ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0n907ck4h4ts8q36qsrnn80,imgname-nj-1787420482963.png" type="image/jpeg" height="390" width="690"/>
            <category>state</category>
            <dc:creator>Asianet News</dc:creator>
            <atom:link href="https://kannada.asianetnews.com/state/karnataka-news-liv-updates-22-august-2026-minister-nagendra-valmiki-scam-protest-san/liveblog-updates-ga8f55r"/>
        </item>
        <item>
            <title><![CDATA[ಕೆಪಿಎಸ್‌ಸಿ ಹಗರಣ: ಇಡಿ ಅಧಿಕಾರಿಗಳು ಬರ್ತಿದ್ದಂತೆ ಮನೆಗೆ ಬೀಗ ಹಾಕಿ IAS ಜ್ಞಾನೇಂದ್ರ ಕುಮಾರ್ ಪರಾರಿ!]]></title>
            <link>https://kannada.asianetnews.com/gallery/state/kpsc-veterinary-exam-scam-ed-raid-ias-officer-gyanendra-kumar-home-jayamahal-bengaluru-igfucl2</link>
            <guid isPermaLink="true">https://kannada.asianetnews.com/gallery/state/kpsc-veterinary-exam-scam-ed-raid-ias-officer-gyanendra-kumar-home-jayamahal-bengaluru-igfucl2</guid>
            <pubDate>Sun, 23 Aug 2026 17:21:02 +0530</pubDate>
            <description><![CDATA[&lt;p&gt;ಕೆಪಿಎಸ್&zwnj;ಸಿ ಪಶು ವೈದ್ಯಕೀಯ ಪರೀಕ್ಷೆ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಅಧಿಕಾರಿಗಳು ಬರುವಷ್ಟರಲ್ಲಿ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದನು. ಆದರೆ, ದಾಳಿಗೆ ಬಂದ ಇಡಿ ಅಧಿಕಾರಿಗಳು ಪಟ್ಟು ಬಿಡದೇ ಮಾಡಿದ್ದೇನು ನೋಡಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0q6g86q7p181q3694mf2hbp,imgname-ias-gyanendra-kumar--1--1787484971223.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೆಪಿಎಸ್&zwnj;ಸಿ ಪಶು ವೈದ್ಯಕೀಯ ಪರೀಕ್ಷೆ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಅಧಿಕಾರಿಗಳು ಬರುವಷ್ಟರಲ್ಲಿ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದನು. ಆದರೆ, ದಾಳಿಗೆ ಬಂದ ಇಡಿ ಅಧಿಕಾರಿಗಳು ಪಟ್ಟು ಬಿಡದೇ ಮಾಡಿದ್ದೇನು ನೋಡಿ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು: ರಾ&lt;/strong&gt;ಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್&zwnj;ಸಿ (KPSC) ಪಶು ವೈದ್ಯಕೀಯ ಪರೀಕ್ಷೆ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪ ಎದುರಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ಜಯಮಹಲ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ಅಪಾರ್ಟ್&zwnj;ಮೆಂಟ್ ಆವರಣದಲ್ಲಿ ಗಂಟೆಗಳ ಕಾಲ ಭಾರೀ ಹೈಡ್ರಾಮಾ ನಡೆದಿದೆ.&lt;/p&gt;&lt;img&gt;&lt;p&gt;&lt;strong&gt;ತನಿಖೆ ಆರಂಭವಾಗ್ತಿದ್ದಂತೆ ಐಎಎಸ್ ಅಧಿಕಾರಿ ಪರಾರಿ!&lt;/strong&gt;&lt;/p&gt;&lt;p&gt;ಕೆಪಿಎಸ್&zwnj;ಸಿ ಪಶು ವೈದ್ಯಕೀಯ ಅಧಿಕಾರಿಗಳ ನೇಮಕಾತಿ ಪರೀಕ್ಷೆಯ ಅಕ್ರಮದ ತನಿಖೆಯನ್ನು ಇಡಿ ಅಧಿಕಾರಿಗಳು ಕೈಗೆತ್ತಿಕೊಳ್ಳುತ್ತಿದ್ದಂತೆಯೇ, ಎಚ್ಚೆತ್ತ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆಗೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜಯಮಹಲ್&zwnj;ನಲ್ಲಿರುವ ಖಾಸಗಿ ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಜ್ಞಾನೇಂದ್ರ ಕುಮಾರ್ ಅವರ ಫ್ಲ್ಯಾಟ್&zwnj;ಗೆ ಶುಕ್ರವಾರ ಮುಂಜಾನೆ 3 ಇನ್ನೋವಾ (Innova) ಕಾರುಗಳಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯೋಧರೊಂದಿಗೆ ಇಡಿ ಅಧಿಕಾರಿಗಳ ತಂಡ ಆಗಮಿಸಿತು.&lt;/p&gt;&lt;img&gt;&lt;p&gt;ಅಧಿಕಾರಿಗಳು ಬರುತ್ತಿದ್ದಂತೆ ಅಪಾರ್ಟ್&zwnj;ಮೆಂಟ್&zwnj;ನ ಸೆಕ್ಯೂರಿಟಿ ಗಾರ್ಡ್ ಮುಖ್ಯ ಗೇಟ್&zwnj;ಗೆ ಬೀಗ ಹಾಕಿದನು. 'ಯಾರನ್ನೂ ಒಳಗೆ ಬಿಡಲು ನನಗೆ ಅನುಮತಿ ಇಲ್ಲ' ಎಂದು ಅಧಿಕಾರಿಗಳನ್ನು ತಡೆದನು. ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ಅಧಿಕಾರಿಗಳು ಸೆಕ್ಯೂರಿಟಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿ, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಬಳಿಕ ಗೇಟ್ ಓಪನ್ ಮಾಡಲಾಯಿತು. ಬಳಿಕ ಮುಂಜಾಗ್ರತಾ ಕ್ರಮವಾಗಿ ಅಪಾರ್ಟ್&zwnj;ಮೆಂಟ್ ಮುಂಭಾಗ ಬ್ಯಾರಿಕೇಡ್ ಹಾಕಿ ಸಿಆರ್&zwnj;ಪಿಎಫ್ ಭದ್ರತೆ ಒದಗಿಸಲಾಯಿತು.&lt;/p&gt;&lt;img&gt;&lt;p&gt;&lt;strong&gt;ಸಾಕ್ಷಿಗೆ (Witness) ನಿರಾಕರಿಸಿದ ಎದುರು ಮನೆಯವರು!&lt;/strong&gt;&lt;/p&gt;&lt;ul&gt; &lt;li&gt;ಅಧಿಕಾರಿಯ ಮನೆ ಲಾಕ್ ಆಗಿದ್ದರಿಂದ ಬಾಗಿಲು ಮುರಿಯಲು ಸ್ಥಳೀಯ ಸಾಕ್ಷಿಗಳ (Panchas) ಅಗತ್ಯವಿತ್ತು.&lt;/li&gt; &lt;li&gt;ಇಡಿ ಅಧಿಕಾರಿಗಳು ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (Chief Secretary) ಹಾಗೂ ಪೊಲೀಸ್ ಇಲಾಖೆಗೆ ಲಿಖಿತ ಮಾಹಿತಿ ರವಾನಿಸಿದರು.&lt;/li&gt; &lt;li&gt;ಬಳಿಕ ಜ್ಞಾನೇಂದ್ರ ಕುಮಾರ್ ಅವರ ಎದುರು ಮನೆಯ ವ್ಯಕ್ತಿಯ ಬಳಿ ಬಾಗಿಲು ತೆಗೆಯುವಾಗ &lsquo;ಸಾಕ್ಷಿ&rsquo;ಯಾಗುವಂತೆ ಅಧಿಕಾರಿಗಳು ಮನವಿ ಮಾಡಿದರು. ಆದರೆ ಆ ವ್ಯಕ್ತಿ ತಾನು ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ನೇರವಾಗಿ ನಿರಾಕರಿಸಿದರು.&lt;/li&gt; &lt;li&gt;ನಂತರ ಮತ್ತೊಂದು ಮನೆಯವರ ಜೊತೆ ಮಾತನಾಡಿದಾಗ, ಪಕ್ಕದ ಮನೆಯ ಓರ್ವ ವ್ಯಕ್ತಿ ಅಧಿಕೃತ ಸಾಕ್ಷಿಯಾಗಲು ಒಪ್ಪಿಕೊಂಡರು.&lt;/li&gt;&lt;/ul&gt;&lt;img&gt;&lt;p&gt;&lt;strong&gt;ವೈಯಾಲಿಕಾವಲ್&zwnj;ನಿಂದ ಕೀ ಮೇಕರ್ ಕರೆಸಿದ ಇಡಿ: ಬಾಗಿಲು ಓಪನ್&lt;/strong&gt;&lt;/p&gt;&lt;p&gt;ಬೀಗ ಒಡೆಯುವ ಬದಲು ಹೊಸ ಕೀ ತಯಾರಿಸಲು ನಿರ್ಧರಿಸಿದ ಅಧಿಕಾರಿಗಳು, ಸಮೀಪದ ವೈಯಾಲಿಕಾವಲ್&zwnj;ನಿಂದ ನುರಿತ &lsquo;ಕೀ ಮೇಕರ್&rsquo; (Key Maker) ಒಬ್ಬರನ್ನು ಸ್ಥಳಕ್ಕೆ ಕರೆಸಿದರು. ಕೀ ಮೇಕರ್ ಮೂಲಕ ಬಾಗಿಲಿನ ಲಾಕ್ ಓಪನ್ ಮಾಡಿಸಿ, ಸಾಕ್ಷಿಗಳ ಸಮ್ಮುಖದಲ್ಲಿ ಅಧಿಕಾರಿಗಳ ತಂಡ ಫ್ಲ್ಯಾಟ್&zwnj;ನೊಳಗೆ ಪ್ರವೇಶಿಸಿತು.&lt;/p&gt;&lt;img&gt;&lt;p&gt;ಸ್ಕ್ಯಾನರ್, ಪ್ರಿಂಟರ್ ಹಿಡಿದು ಒಳನುಗ್ಗಿದ ಅಧಿಕಾರಿಗಳು!&lt;/p&gt;&lt;p&gt;ಫ್ಲ್ಯಾಟ್ ಒಳಗೆ ಪ್ರವೇಶಿಸಿದ ಬೆನ್ನಲ್ಲೇ ಅಧಿಕಾರಿಗಳು ತಮ್ಮೊಂದಿಗೆ ಪ್ರಿಂಟರ್ ಹಾಗೂ ಸ್ಕ್ಯಾನರ್&zwnj;ಗಳನ್ನು ಒಳಗೆ ಕೊಂಡೊಯ್ದಿದ್ದಾರೆ. ಮನೆಯ ಪ್ರತಿಯೊಂದು ಕೊಠಡಿ, ಕಪಾಟುಗಳನ್ನು ಜಾಲಾಡಲಾಗುತ್ತಿದ್ದು, ಪಶು ವೈದ್ಯಕೀಯ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದ ಕಡತಗಳು, ಅಕ್ರಮ ಆಸ್ತಿ ಪತ್ರಗಳು, ಬ್ಯಾಂಕ್ ಖಾತೆಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಭರದಿಂದ ಸಾಗಿದೆ. ನಾಪತ್ತೆಯಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪತ್ತೆಗೂ ಶೋಧ ತೀವ್ರಗೊಂಡಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/kpsc-veterinary-exam-scam-ed-raid-ias-officer-gyanendra-kumar-home-jayamahal-bengaluru-igfucl2"/>
        </item>
        <item>
            <title><![CDATA[Karnataka Latest News Live: SIR ಬಳಿಕ ರಾಜ್ಯದ ಕರಡು ಮತದಾರರ ಪಟ್ಟಿ ಇಂದು ಪ್ರಕಟ; ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?]]></title>
            <link>https://kannada.asianetnews.com/state/karnataka-latest-news-live-24-august-2026-cloud-seeding-has-been-postponed-by-a-couple-of-days-mrq/liveblog-updates-kbtuqqw</link>
            <guid isPermaLink="true">https://kannada.asianetnews.com/state/karnataka-latest-news-live-24-august-2026-cloud-seeding-has-been-postponed-by-a-couple-of-days-mrq/liveblog-updates-kbtuqqw</guid>
            <pubDate>Mon, 24 Aug 2026 06:20:10 +0530</pubDate>
            <description><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರ ಸೋಮವಾರದಿಂದ ವಿವಿಧೆಡೆ ಆರಂಭಿಸಲು ಉದ್ದೇಶಿಸಿದ್ದ ಮೋಡಬಿತ್ತನೆ ಕಾರ್ಯ ಒಂದೆರಡು ದಿನ ತಡವಾಗಲಿದೆ.&lt;/p&gt;&lt;p&gt;ಕರ್ನಾಟಕ ನೀರಾವರಿ ನಿಗಮ (ಕೆಎನ್&zwnj;ಎನ್&zwnj;ಎಲ್&zwnj;) ಮತ್ತು ಮೋಡಬಿತ್ತನೆ ನಡೆಸುವ ಗುತ್ತಿಗೆ ಪಡೆದ ಕಂಪನಿಯೊಂದಿಗೆ ಸೋಮವಾರ ಅಧಿಕೃತ ಒಡಂಬಡಿಕೆ ಆಗಲಿದೆ. ನಂತರದಲ್ಲಿ ಈ ಪ್ರಕ್ರಿಯೆ ಆರಂಭವಾಗಲಿದೆ. ಬಹುತೇಕ ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ(ಕೆಎಸ್&zwnj;ಎನ್&zwnj;ಡಿಎಂಸಿ) ಸಹಯೋಗದಲ್ಲಿ ಪ್ರಕ್ರಿಯೆ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಜಲಸಂಪನ್ಮೂಲ ಇಲಾಖೆ ಮೂಲಗಳು ತಿಳಿಸಿವೆ.&lt;/p&gt;&lt;p&gt;ಈಗಾಗಲೇ ಕೆಲ ಶಾಸಕರು ಸ್ಥಳೀಯವಾಗಿ ತಮ್ಮ ಅನುದಾನದಲ್ಲಿ ಮಳೆ ಕೊರತೆ ನೀಗಿಸಲು ಖಾಸಗಿ ಕಂಪನಿಯಿಂದ ಮೋಡಬಿತ್ತನೆ ಮಾಡಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಸರ್ಕಾರವೇ ಈಗ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ.&lt;/p&gt;&lt;p&gt;ಈಗಾಗಲೇ ನಿರ್ಧರಿಸಿದಂತೆ ಒಂದು ವಿಮಾನದ ಮೂಲಕ 60 ದಿನಗಳ ಅವಧಿಗೆ 200 ಗಂಟೆಗಳ ವೈಮಾನಿಕ ಹಾರಾಟವನ್ನು ನಡೆಸಲಾಗುತ್ತದೆ. ಖ್ಯಾತಿ ಕ್ಲೈಮೇಟ್&zwnj; ಮಾಡಿಫಿಕೇಷನ್&zwnj; ಕನ್ಸಲ್ಟೆಂಟ್ಸ್&zwnj; ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದು, ಒಟ್ಟು 28.52 ಕೋಟಿ ರು. ವೆಚ್ಚಕ್ಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0epdnaf9nf3p2dz4yr9zbhv,imgname-screenshot-2026-08-20-092230-1787199673679.png" type="image/jpeg" height="390" width="690"/>
            <category>state</category>
            <dc:creator>Asianet News</dc:creator>
            <atom:link href="https://kannada.asianetnews.com/state/karnataka-latest-news-live-24-august-2026-cloud-seeding-has-been-postponed-by-a-couple-of-days-mrq/liveblog-updates-kbtuqqw"/>
        </item>
        <item>
            <title><![CDATA[ಮೈಸೂರು ದಸರಾ ಹೊತ್ತಲ್ಲಿ ಇದೇನು ಹೊಸ ಸಮಸ್ಯೆ! ಚಾಮುಂಡೇಶ್ವರಿ ದೇವಾಲಯದ ಅರ್ಚಕರಿಗೆ ಬಿಳಿಮಚ್ಚೆ ಕಾರಣಕ್ಕೆ ಪೂಜೆಗೆ ಅಡ್ಡಿ? ಕೋರ್ಟ್ ಹೇಳಿದ್ದೇನು?]]></title>
            <link>https://kannada.asianetnews.com/state/mysuru-chamundeshwari-temple-priests-white-patches-case-what-will-the-court-commissioners-report-rav/articleshow-mn4qzo1</link>
            <guid isPermaLink="true">https://kannada.asianetnews.com/state/mysuru-chamundeshwari-temple-priests-white-patches-case-what-will-the-court-commissioners-report-rav/articleshow-mn4qzo1</guid>
            <pubDate>Sat, 22 Aug 2026 06:56:07 +0530</pubDate>
            <description><![CDATA[ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಅನುವಂಶಿಕ ಅರ್ಚಕರಿಗೆ ಬಿಳಿಮಚ್ಚೆ ಕಾರಣಕ್ಕೆ ಪೂಜೆಗೆ ಅಡ್ಡಿಪಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹೈಕೋರ್ಟ್&zwnj;, ಅರ್ಚಕರಿಗೆ ಪೂಜೆಗೆ ಅಡ್ಡಿ ಉಂಟಾಗಿದೆಯೇ ಎಂದು ಪರಿಶೀಲಿಸಲು ಇಬ್ಬರು ವಕೀಲರನ್ನು ಕೋರ್ಟ್ ಕಮಿಷನರ್&zwnj;ಗಳಾಗಿ ನೇಮಿಸಿ ಆದೇಶಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0kgwwm2y4fj90pbkepytxp0,imgname-----------------------2026-08-22t065026.115-1787361653378.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.22):&lt;/strong&gt; ದೇಹದಲ್ಲಿ ಬಿಳಿಮಚ್ಚೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಅನುವಂಶಿಕ ಅರ್ಚಕರಾಗಿರುವ ಎನ್. ಅನಿಲ್ ಕುಮಾರ್ ಅವರಿಗೆ ಪೂಜೆ ನೆರವೇರಿಸಲು ದೇವಾಲಯದ ಆಡಳಿತ ಮಂಡಳಿಯಿಂದ ಅಡ್ಡಿ ಉಂಟಾಗಿದೆಯೇ? ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಲು ವಕೀಲರಿಬ್ಬರನ್ನು ಕೋರ್ಟ್ ಕಮಿಷನರ್&zwnj; ಆಗಿ ಹೈಕೋರ್ಟ್&zwnj; ನೇಮಿಸಿದೆ.&lt;/p&gt;&lt;h2&gt;ಏನಿದು &lsquo;ಬಿಳಿಮಚ್ಚೆ&rsquo; ಪ್ರಕರಣ?&lt;/h2&gt;&lt;p&gt;ನ್ಯಾಯಾಲಯದ ಆದೇಶದ ನಡುವೆಯೂ ಪೂಜಾ ಕೈಂಕರ್ಯಗಳಿಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಆರೋಪಿಸಿ ದೇವಾಲಯದ &lsquo;&rsquo;ಸನ್ನಿಧಿ ಪರಿಚಾರಕ'ರಾಗಿದ್ದ ಎನ್.ಅನಿಲ್ ಕುಮಾರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರ ಪೀಠ ಈ ಆದೇಶ ನೀಡಿ ವಿಚಾರಣೆ ಮುಂದೂಡಿದೆ.&lt;/p&gt;&lt;p&gt;ವಕೀಲರಾದ ನಾರಾಯಣ ರಾವ್ ಮತ್ತು ಶಿವರುದ್ರ ಅವರನ್ನು ಕೋರ್ಟ್ ಕಮಿಷನರ್&zwnj; ಆಗಿ ನೇಮಿಸಿರುವ ಪೀಠ, ಈ ವಕೀಲರಿಬ್ಬರು ದೇವಾಲಯಕ್ಕೆ ಬೇರೆ ಬೇರೆ ದಿನಗಳಲ್ಲಿ ಅರ್ಚಕರೊಂದಿಗೆ ಖುದ್ದಾಗಿ ಭೇಟಿ ನೀಡಬೇಕು. ಅರ್ಜಿದಾರ ಅರ್ಚಕರಿಗೆ ಪೂಜೆ ನೆರವೇರಿಸಲು ಯಾವುದೇ ಅಡ್ಡಿಯಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಪರಿಶೀಲನಾ ಕಾರ್ಯಕ್ಕೆ ದೇವಾಲಯದ ಆಡಳಿತ ಮಂಡಳಿ ಸಂಪೂರ್ಣ ಸಹಕಾರ ನೀಡಬೇಕು. ಈ ಇಬ್ಬರೂ ವಕೀಲರು ವಸ್ತುಸ್ಥಿತಿ ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.&lt;/p&gt;&lt;p&gt;ಅರ್ಜಿದಾರ ಅರ್ಚಕರ ಪರ ವಕೀಲರು, ಅರ್ಜಿದಾರರಿಗೆ ದೇವಾಲಯದಲ್ಲಿ ಪೂಜೆ ನೆರವೇರಿಸಲು ಇಂದಿಗೂ ಪರೋಕ್ಷವಾಗಿ ಕಿರುಕುಳ ಮತ್ತು ಅಡ್ಡಿಗಳು ನೀಡಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಸರ್ಕಾರಿ ವಕೀಲರು, ಅರ್ಜಿದಾರ ಅರ್ಚಕರಿಗೆ ಪೂಜೆ ಮಾಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಅವರು ಮುಕ್ತವಾಗಿ ಕರ್ತವ್ಯ ನಿರ್ವಹಿಸಬಹುದು ಎಂದು ತಿಳಿಸಿದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/mysuru-chamundeshwari-temple-priests-white-patches-case-what-will-the-court-commissioners-report-rav/articleshow-mn4qzo1"/>
        </item>
        <item>
            <title><![CDATA[ಕುಂದಾಪುರ: ಆಸ್ಪತ್ರೆ ಅಕ್ರಮ ಬಯಲಿಗೆಳೆದ 'ಕನ್ನಡಪ್ರಭ' ವರದಿಗಾರನ ಮಲೆ ಹಲ್ಲೆ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್]]></title>
            <link>https://kannada.asianetnews.com/state/govt-doctor-assaults-kannada-prabha-reporter-who-exposed-hospital-irregularities-kundapur-rav/articleshow-mseiohl</link>
            <guid isPermaLink="true">https://kannada.asianetnews.com/state/govt-doctor-assaults-kannada-prabha-reporter-who-exposed-hospital-irregularities-kundapur-rav/articleshow-mseiohl</guid>
            <pubDate>Sat, 22 Aug 2026 05:41:17 +0530</pubDate>
            <description><![CDATA[&lt;p&gt;ಕುಂದಾಪುರ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ 'ಕನ್ನಡಪ್ರಭ' ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ವೈದ್ಯರ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0hsmawecxvfxna6b97w654r,imgname-screenshot-2026-08-21-121327-1787303701390.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಂದಾಪುರ/ಬೆಂಗಳೂರು (ಆ.22): &lt;/strong&gt;ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ವರದಿ ಮಾಡಿದ್ದ ಕುಂದಾಪುರ ತಾಲೂಕು &lsquo;ಕನ್ನಡಪ್ರಭ&rsquo; ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲೆ ಶುಕ್ರವಾರ ಬೆಳಗ್ಗೆ ಆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಹಲ್ಲೆಗೈದ ಡಾ। ಶೆಟ್ಟಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.&lt;/p&gt;&lt;p&gt;2 ವಾರಗಳ ಹಿಂದೆ &lsquo;ಕನ್ನಡಪ್ರಭ&rsquo;ದಲ್ಲಿ &lsquo;ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಭ್ರಷ್ಟಾಚಾರದ ಕರಿನೆರಳು&rsquo; ಶೀರ್ಷಿಕೆಯಡಿ ಶ್ರೀಕಾಂತ್ ಅವರು, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಬಯಲಿಗೆಳೆದಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.&lt;/p&gt;&lt;p&gt;ಕೃತ್ಯವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಖಂಡಿಸಿದ್ದಾರೆ ಹಾಗೂ ಡಾ। ಶೆಟ್ಟಿ ಅವರನ್ನು ಸರ್ಕಾರ ಅಮಾನತು ಮಾಡಿದೆ ಹಾಗೂ ಅವರ ವಿರುದ್ಧ ಕುಂದಾಪುರ ಪೊಲೀಸ್&zwnj; ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯಿಂದ ಕೈ ಮತ್ತು ಎದೆ ನೋವಿಗೊಳಗಾದ ಶ್ರೀಕಾಂತ್ ಹೆಮ್ಮಾಡಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;h2&gt;ಏಕಾಏಕಿ ಹಲ್ಲೆ:&lt;/h2&gt;&lt;p&gt;ಶುಕ್ರವಾರ ಬೆಳಗ್ಗೆ ಪಟ್ಟಣದ ಹೋಟೆಲ್&zwnj;ವೊಂದರಲ್ಲಿ ಶ್ರೀಕಾಂತ್&zwnj; ಅವರು ತಮ್ಮ ಪತ್ನಿಯೊಂದಿಗೆ ತಿಂಡಿ ತಿನ್ನುತ್ತಿದ್ದರು. ಈ ವೇಳೆ, ಶ್ರೀಕಾಂತ್ ಬಳಿ ಬಂದ ಡಾ.ಮಹೇಂದ್ರ ಕುಮಾರ್ ಶೆಟ್ಟಿ, &lsquo;ನಿನ್ನ ಜೊತೆ ಸ್ವಲ್ಪ ಮಾತನಾಡುವುದಿದೆ&rsquo; ಎಂದು ಕೈಹಿಡಿದು ಪಕ್ಕಕ್ಕೆ ಕರೆದುಕೊಂಡು ಹೋಗಿ, ಕಾಲರ್&zwnj;ಗೆ ಕೈ ಹಾಕಿ, ಕೆನ್ನೆಗೆ ಹೊಡೆದಿದ್ದಾರೆ. ವರದಿ ಬರೆದ ಬಗ್ಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ತಕ್ಷಣ ಶ್ರೀಕಾಂತ್ ಅವರ ಪತ್ನಿ ಮತ್ತು ಪತ್ರಕರ್ತ ಯೋಗೀಶ್ ಅವರು ವೈದ್ಯರನ್ನು ತಡೆದಿದ್ದಾರೆ.&lt;/p&gt;&lt;p&gt;ಶ್ರೀಕಾಂತ್ ತಮ್ಮ ವರದಿಯ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದರೂ ಅದನ್ನು ಕೇಳದೆ ಮತ್ತೆ, ಮತ್ತೆ ಶ್ರೀಕಾಂತ್&zwnj; ಅವರ ಮೇಲೆ ಹಲ್ಲೆಗೆ ಯತ್ನಿಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂದರ್ಭ ಈ ಸರ್ಕಾರಿ ವೈದ್ಯರ ಜೊತೆಗಿದ್ದ ಅವರ ಖಾಸಗಿ ಕ್ಲಿನಿಕ್&zwnj;ನ ಪಾಲುದಾರ ಮಹಿಳಾ ವೈದ್ಯೆಯೂ ಸಾಥ್ ನೀಡಿದ್ದಾರೆ.&lt;/p&gt;&lt;p&gt;ಹಲ್ಲೆಯಿಂದ ಕೈ ಮತ್ತು ಎದೆ ನೋವಿಗೊಳಗಾದ ಶ್ರೀಕಾಂತ್ ಹೆಮ್ಮಾಡಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;p&gt;ಇದೀಗ ದೂರಿನ ಮೇರೆಗೆ ಹಲ್ಲೆಯ ದೃಶ್ಯಾವಳಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಶ್ರೀಕಾಂತ್ ಹೇಳಿಕೆ ಪಡೆದು, ಘಟನಾ ಸ್ಥಳದಲ್ಲಿ ಸಾಕ್ಷಿಗಳ ಜೊತೆಗೆ ಹೋಟೆಲ್&zwnj;ನ ಸ್ಥಳ ಮಹಜರು ನಡೆಸಿದ್ದಾರೆ. ಪತ್ರಕರ್ತನ ಮೇಲಿನ ಹಲ್ಲೆಯನ್ನು ವಿವಿಧ ಸಂಘಟನೆಗಳು ಖಂಡಿಸಿವೆ.&lt;/p&gt;&lt;h3&gt;ಶೆಟ್ಟಿ ಅಮಾನತು:&lt;/h3&gt;&lt;p&gt;ಹಲ್ಲೆ ಬೆನ್ನಲ್ಲೇ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಸ್ತು ಪ್ರಾಧಿಕಾರಿ ಮತ್ತು ಆಯುಕ್ತ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.&lt;/p&gt;&lt;p&gt;ಹಲ್ಲೆಯ ದೃಶ್ಯಗಳು ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ರಾಜ್ಯ ಆಯುಕ್ತರಿಗೆ ಘಟನೆ ಬಗ್ಗೆ ವರದಿ ನೀಡಿದ್ದಾರೆ. ಈ ವರದಿಯಂತೆ, ಘಟನೆ ಬಗ್ಗೆ ಇಲಾಖಾ ವಿಚಾರಣೆಗೆ ಆದೇಶಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಶೆಟ್ಟಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.&lt;/p&gt;&lt;p&gt;ಅಲ್ಲದೆ, ತಕ್ಷಣವೇ ಶೆಟ್ಟಿಯವರನ್ನು ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಶಸ್ತ್ರಚಿಕಿತ್ಸಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ. ಆದರೆ, ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.&lt;/p&gt;&lt;h3&gt;ಶಾಸಕರ ಹೇಳಿಕೆಗೆ ಅನುಸಾರ ವರದಿ:&lt;/h3&gt;&lt;p&gt;ವಿಶೇಷ ಎಂದರೆ &lsquo;ಕನ್ನಡಪ್ರಭ&rsquo;ದಲ್ಲಿ ಪ್ರಕಟವಾದ ವರದಿಯಲ್ಲಿ ಯಾವುದೇ ವೈದ್ಯರ ಹೆಸರು ಉಲ್ಲೇಖವಾಗಿಲ್ಲ. ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಶಾಸಕರ ಹೇಳಿಕೆಹೆ ಅನುಗುಣವಾಗಿ ವರದಿ ಪ್ರಕಟಿಸಲಾಗಿತ್ತು. ಆದರೂ, ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರು ಶುಕ್ರವಾರ ಹಲ್ಲೆ ನಡೆಸುವ ಮೂಲಕ ಭ್ರಷ್ಟಾಚಾರದ ಆರೋಪವನ್ನು ತಾವಾಗಿಯೇ ಮೈಮೇಲೆ ಎಳೆದುಕೊಂಡಿದ್ದಾರೆ.&lt;/p&gt;&lt;h3&gt;&lsquo;ಕನ್ನಡಪ್ರಭ&rsquo; ವರದಿಯಲ್ಲೇನಿತ್ತು?:&lt;/h3&gt;&lt;p&gt;ಆಗಸ್ಟ್&zwnj; 1ರಂದು &lsquo;ಕನ್ನಡಪ್ರಭ&rsquo;ದಲ್ಲಿ &lsquo;ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಭ್ರಷ್ಟಾಚಾರದ ಕರಿನೆರಳು&rsquo; ಹೆಸರಿನಲ್ಲಿ ಶ್ರೀಕಾಂತ್ ಹೆಮ್ಮಾಡಿ ಬರೆದ ವರದಿ ಪ್ರಕಟವಾಗಿತ್ತು. ಸ್ವತಃ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು &lsquo;ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಾಗುವ ಬಡ ರೋಗಿಗಳ ಶಸ್ತ್ರಚಿಕಿತ್ಸೆಗೆ ಅಲ್ಲಿನ ವೈದ್ಯರು ಬಲವಂತವಾಗಿ ಹಣ ಪಡೆಯುತ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ&rsquo; ಎಂದು ಜಿಲ್ಲಾಧಿಕಾರಿಗೆ ನೀಡಿದ ಸೂಚನೆ ಆಧರಿಸಿ ಶ್ರೀಕಾಂತ್ ಅವರು ಈ ತನಿಖಾ ವರದಿ ಸಿದ್ಧಪಡಿಸಿದ್ದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/govt-doctor-assaults-kannada-prabha-reporter-who-exposed-hospital-irregularities-kundapur-rav/articleshow-mseiohl"/>
        </item>
        <item>
            <title><![CDATA[Anekal: ತಮಿಳುನಾಡಿನ ಕಡತದಲ್ಲಿದ್ದ ಆನೇಕಲ್‌ ತಾಲೂಕಿನ 8 ಗ್ರಾಮ ಕರ್ನಾಟಕಕ್ಕೆ ಸೇರ್ಪಡೆ]]></title>
            <link>https://kannada.asianetnews.com/state/8-villages-in-anekal-taluk-which-were-previously-in-tamil-nadu-have-been-added-to-karnataka-mrq/articleshow-n5ffmml</link>
            <guid isPermaLink="true">https://kannada.asianetnews.com/state/8-villages-in-anekal-taluk-which-were-previously-in-tamil-nadu-have-been-added-to-karnataka-mrq/articleshow-n5ffmml</guid>
            <pubDate>Sun, 23 Aug 2026 07:13:04 +0530</pubDate>
            <description><![CDATA[&lt;p&gt;ಆನೇಕಲ್&zwnj; ತಾಲೂಕಿನ ಮರಸೂರು ಪಂಚಾಯ್ತಿಗೆ ಸೇರಿದ ಎಂಟು ಗ್ರಾಮಗಳ ಕಂದಾಯ ದಾಖಲೆಗಳು 1956ರಿಂದ ತಮಿಳುನಾಡಿನ ಹೊಸೂರು ಕಡತಗಳಲ್ಲಿದ್ದವು. ಒಂದು ವರ್ಷದ ಸತತ ಪ್ರಯತ್ನದ ನಂತರ, ಈ ದಾಖಲೆಗಳನ್ನು ಅಧಿಕೃತವಾಗಿ ಕರ್ನಾಟಕದ ದಾಖಲೆಗಳಿಗೆ ಸೇರ್ಪಡೆ ಮಾಡಲಾಗಿದ್ದು, ಇದರಿಂದ ಸುಮಾರು 3000 ರೈತರಿಗೆ ಅನುಕೂಲವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kss8x5dy5397p0h7pv82e3xa,imgname-village-style-house-design-1780038407614.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಆನೇಕಲ್ ತಾಲೂಕಿನ ಮರಸೂರು ಪಂಚಾಯ್ತಿಗೆ ಸೇರಿದ್ದ ಎರಡು ಕಂದಾಯ ಗ್ರಾಮಗಳು ಮತ್ತು ಆರು ದಾಖಲೆ ಗ್ರಾಮಗಳ ರೆವೆನ್ಯೂ ದಾಖಲೆಗಳು 1956ನೆಯ ಇಸವಿಯಿಂದಲೂ ತಮಿಳುನಾಡಿನ ಹೊಸೂರು ಕಡತಗಳಲ್ಲಿದ್ದು ಇಂದು ಅಧಿಕೃತವಾಗಿ ಕರ್ನಾಟಕದ ದಾಖಲೆಗಳಲ್ಲಿ ಸೇರ್ಪಡೆ ಆಗಿದೆ ಎಂದು ಎಡಿಎಲ್&zwnj;ಆರ್ ಮದನ್ ಸಿ. ತಿಳಿಸಿದರು.&lt;/p&gt;&lt;p&gt;ತಾಲೂಕಿನ ಮರಸೂರು ಗ್ರಾಮದಲ್ಲಿ ಏರ್ಪಡಿಸಿದ್ದ ಅಧಿಕೃತ ದಾಖಲೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಈ ಎಂಟೂ ಹಳ್ಳಿಗಳು ಅಂದಿನ ಮೈಸೂರು ಪ್ರಾಂತ್ಯಕ್ಕೆ ಸೇರ್ಪಡೆಯಾಗಿ ದಾಖಲೆಗಳು ರಾಜ್ಯ ವಶಕ್ಕೆ ಬಂದರೂ ಆಕಾರ್ ಬಂದ್ ದಾಖಲೆ ಲಭ್ಯವಿಲ್ಲದೆ ನಮ್ಮ ರೈತರ ಪಹಣಿಯಲ್ಲಿ ನಮೂದು ಮಾಡಲಾಗಲಿಲ್ಲ. ಈಗ ಲಭ್ಯವಿರುವ ತಂತ್ರಜ್ಞಾನ ಆಧರಿಸಿ ಎಲ್ಲವನ್ನೂ ಸರಿಪಡಿಸಲಾಗಿದೆ ಎಂದರು.&lt;/p&gt;&lt;h2&gt;&lt;strong&gt;50ಕ್ಕೂ ಹೆಚ್ಚು ನುರಿತ ಸಿಬ್ಬಂದಿ 1 ವರ್ಷಕಾಲ ಕೆಲಸ&lt;/strong&gt;&lt;/h2&gt;&lt;p&gt;ಆನೇಕಲ್ ತಹಸೀಲ್ದಾರ್ ಶಶಿಧರ್ ಮಾಡ್ಯಾಳ್ ಮಾತನಾಡಿ, ಈ ಮಹಾನ್ ಕಾರ್ಯಕ್ಕೆ 50ಕ್ಕೂ ಹೆಚ್ಚು ನುರಿತ ಸಿಬ್ಬಂದಿ 1 ವರ್ಷಕಾಲ ತೊಡಗಿಸಿದ್ದು ಸತತ ಪ್ರಯತ್ನದ ಫಲವಾಗಿದೆ. ಇನ್ನು ಮುಂದೆ ನಮ್ಮ ರೈತರು ರಿವೆನ್ಯು ದಾಖಲೆಗಳನ್ನು ಮ್ಯುಟೇಟ್ ಮಾಡಿಕೊಂಡು ಅಭಿವೃದ್ಧಿ ಕಾಣಬಹುದು.&lt;/p&gt;&lt;p&gt;ಆನೇಕಲ್ ಶಾಸಕ ಬಿ. ಶಿವಣ್ಣ ಅವರು ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ, ಉನ್ನತ ಅಧಿಕಾರಿಗಳಾದ ಮಂಜುನಾಥ್, ಡಾ.ವೆಂಕಟೇಶ್, ನಿಸಾರ್ ಅಹಮದ್ ಅವರ ಮಾರ್ಗದರ್ಶನ ದಲ್ಲಿ ಸಾಧ್ಯವಾಯಿತು. ಈ ಭಾಗದ 3000 ರೈತರ 270 ದಾಖಲೆಗಳ ಪುನರ್ ನಿರ್ಮಾಣ ಮಾಡಿದ್ದು ಬಹಳ ವರ್ಷಗಳ ಕನಸು ನನಸಾಗಿದೆ ಎಂದರು. ವೇದಿಕೆಯಲ್ಲಿ ಶಾಸಕ ಬಿ. ಶಿವಣ್ಣ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಪುರುಷೋತ್ತಮ್, ಇನ್ಸ್&zwnj;ಪೆಕ್ಟರ್ ಚಂದ್ರಪ್ಪ, ಸರ್ವೇ ಹಾಗೂ ಕಂದಾಯ ಅಧಿಕಾರಿಗಳಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;KPSC ಮೇಲೆ ಇಡಿ ದಾಳಿ ಬೆನ್ನಲ್ಲೇ ಐಎಎಸ್&zwnj; ಅಧಿಕಾರಿ ಜ್ಞಾನೇಂದ್ರ &lsquo;ನಾ&rsquo; ಪತ್ತೆ ಹೈಡ್ರಾಮ! ಗೃಹ ಸಚಿವ ಖರ್ಗೆ ಹೇಳಿದ್ದೇನು?&lt;/strong&gt;&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/8-villages-in-anekal-taluk-which-were-previously-in-tamil-nadu-have-been-added-to-karnataka-mrq/articleshow-n5ffmml"/>
        </item>
        <item>
            <title><![CDATA[Karnataka Politics: ಡೆಲ್ಲಿಯಲ್ಲಿ ರಾಹುಲ್ 'ಫೈಟ್'; ಬೆಂಗಳೂರಲ್ಲಿ ಡಿಕೆಶಿ 'ಊಟ್-ಬೈಟ್'! ಅದಾನಿ ಭೇಟಿಗೆ ಬಿಜೆಪಿ ಛಾಟಿ!]]></title>
            <link>https://kannada.asianetnews.com/karnataka-districts/dk-shivakumar-adani-meeting-bengaluru-amid-delhi-protest-bjp-questions-karnataka-politics-viral-news/articleshow-ukpap1n</link>
            <guid isPermaLink="true">https://kannada.asianetnews.com/karnataka-districts/dk-shivakumar-adani-meeting-bengaluru-amid-delhi-protest-bjp-questions-karnataka-politics-viral-news/articleshow-ukpap1n</guid>
            <pubDate>Sun, 23 Aug 2026 22:52:56 +0530</pubDate>
            <description><![CDATA[&lt;p&gt;ಬೆಂಗಳೂರಿನಲ್ಲಿ ಉದ್ಯಮಿ ಗೌತಮ್ ಅದಾನಿ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ನಡೆದ ಗೌಪ್ಯ ಸಭೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಪ್ರಕ್ರಿಯೆಯ ನಿರ್ಣಾಯಕ ಹಂತದಲ್ಲಿ ಈ ಭೇಟಿ ನಡೆದಿದ್ದು, ಇದು ಕಾಂಗ್ರೆಸ್&zwnj;ನ ದ್ವಂದ್ವ ನೀತಿ ಎಂದು ಬಿಜೆಪಿ ತೀವ್ರವಾಗಿ ಟೀಕಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0qtaj4nep3d7mm1qz1vyqbt,imgname-dk-shivakumar-1787505756309.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನಲ್ಲಿ ಪ್ರಮುಖ ಕೈಗಾರಿಕೋದ್ಯಮಿ ಗೌತಮ್ ಅದಾನಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಡೆದ ಒಂದು ಗಂಟೆಯ ಗೌಪ್ಯ ಸಭೆ, ಈಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಸೈದ್ಧಾಂತಿಕ ಸಮರಕ್ಕೆ ಈ ಭೇಟಿ ಮತ್ತೊಮ್ಮೆ ಬೆಂಕಿಗೆ ತುಪ್ಪ ಸುರಿದಂತಾಗಿದೆ. ನಾಯಕರ ನಡುವೆ ಸಾರ್ವಜನಿಕವಾಗಿ ವಾಗ್ದಾಳಿಗಳು ಶುರುವಾಗಿವೆ.&lt;/p&gt;&lt;h2&gt;&lt;strong&gt;ಆರ್ಟ್ ಆಫ್ ಲಿವಿಂಗ್&zwnj;ನಿಂದ ನೇರ ಶಿವಕುಮಾರ್ ಮನೆಗೆ!&lt;/strong&gt;&lt;/h2&gt;&lt;p&gt;ಅದಾನಿ ಗ್ರೂಪ್&zwnj;ನ ಅಧ್ಯಕ್ಷ ಗೌತಮ್ ಅದಾನಿ ಅವರು ಬೆಂಗಳೂರಿನ 'ಆರ್ಟ್ ಆಫ್ ಲಿವಿಂಗ್' ಆಶ್ರಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಆದರೆ, ಕಾರ್ಯಕ್ರಮ ಮುಗಿದ ತಕ್ಷಣ ಅವರು ನೇರವಾಗಿ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ತೆರಳಿ ಸಭೆ ನಡೆಸಿದರು. ಈ ಭೇಟಿಯ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ, ಡಿಕೆಶಿ ಆಪ್ತ ವಲಯ ಹಾಗೂ ಮುಖ್ಯಮಂತ್ರಿ ಕಚೇರಿ &quot;ಇದು ಕೇವಲ ಸೌಜನ್ಯದ ಭೇಟಿ, ಇದರಲ್ಲಿ ಯಾವುದೇ ರಾಜಕೀಯ ಅಥವಾ ವಾಣಿಜ್ಯ ಉದ್ದೇಶವಿಲ್ಲ ಎಂದು ಸ್ಪಷ್ಟನೆ ನೀಡಲು ಯತ್ನಿಸಿದವು. ಆದರೆ, ಈ ಭೇಟಿ ನಡೆದ 'ಸಮಯ'ವೇ ಈಗ ಹತ್ತಾರು ಅನುಮಾನಗಳಿಗೆ ಹಾದಿಮಾಡಿಕೊಟ್ಟಿದೆ.&lt;/p&gt;&lt;h3&gt;&lt;strong&gt;ಸುರಂಗ ರಸ್ತೆ ಯೋಜನೆ ಮತ್ತು ಡೀಲ್ ಊಹಾಪೋಹ!&lt;/strong&gt;&lt;/h3&gt;&lt;p&gt;ಬೆಂಗಳೂರು ನಗರದ ಸಂಚಾರ ದಟ್ಟಣೆ ಶಮನಕ್ಕಾಗಿ ಪ್ರಸ್ತಾಪಿಸಲಾಗಿರುವ, ಹೆಬ್ಬಾಳದಿಂದ ಸಿಲ್ಕ್ ಬೋರ್ಡ್&zwnj;ವರೆಗಿನ ಕೋಟ್ಯಂತರ ರೂಪಾಯಿ ಮೌಲ್ಯದ 'ಮೆಗಾ ಸುರಂಗ ರಸ್ತೆ ಯೋಜನೆ'ಯ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್&zwnj;ಪ್ರೈಸಸ್ ಸಂಸ್ಥೆಯು ಅತ್ಯಂತ ಕಡಿಮೆ ಮೊತ್ತ ನಮೂದಿಸಿದ (L1) ಬಿಡ್ಡರ್ ಆಗಿ ಹೊರಹೊಮ್ಮಿದೆ. ಟೆಂಡರ್ ಪ್ರಕ್ರಿಯೆಗೆ ಇನ್ನು ಅಧಿಕೃತ ಮುದ್ರೆ ಬಿದ್ದಿಲ್ಲ. ಇಂತಹ ನಿರ್ಣಾಯಕ ಘಟ್ಟದಲ್ಲೇ ಈ ಭೇಟಿ ನಡೆದಿರುವುದರಿಂದ, &quot;ಇದು ಸೌಜನ್ಯದ ಸಭೆಯಲ್ಲ, ಟೆಂಡರ್ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಯೋಜನೆಯನ್ನು ತಮ್ಮದಾಗಿಸಿಕೊಳ್ಳಲು ನಡೆದ ಒಳ ಒಪ್ಪಂದ&quot; ಎಂದು ವಿರೋಧ ಪಕ್ಷಗಳು ಗಂಭೀರವಾಗಿ ಆರೋಪಿಸುತ್ತಿವೆ.&lt;/p&gt;&lt;h3&gt;&lt;strong&gt;ಕಾಂಗ್ರೆಸ್&zwnj;ನ ದ್ವಂದ್ವ ನೀತಿಗೆ ಬಿಜೆಪಿ ಛಾಟಿ!&lt;/strong&gt;&lt;/h3&gt;&lt;p&gt;ಭೇಟಿಯ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್&zwnj;ನ ನಡವಳಿಕೆಯನ್ನು ತೀವ್ರವಾಗಿ ತೊಳಗೆದಿದ್ದಾರೆ. ದೆಹಲಿಯಲ್ಲಿ ರಾಹುಲ್ ಗಾಂಧಿ ದಿನವೂ ಅದಾನಿ ಗ್ರೂಪ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಾ ಪ್ರತಿಭಟನೆ ನಡೆಸುತ್ತಾರೆ. ಆದರೆ, ಕರ್ನಾಟಕದಲ್ಲಿ ಅವರದ್ದೇ ಕಾಂಗ್ರೆಸ್ ಸರ್ಕಾರ ಅದಾನಿಗೆ 'ರೆಡ್ ಕಾರ್ಪೆಟ್' ಸ್ವಾಗತ ಕೋರುತ್ತಿದೆ. ಶಿವಕುಮಾರ್ ಅವರಿಗೆ ಅದಾನಿ ಜೊತೆ ಚಹಾ ಕುಡಿಯಲು ರಾಹುಲ್ ಗಾಂಧಿ ಅನುಮತಿ ನೀಡಿದ್ದಾರೆಯೇ? ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ. ಅಷ್ಟೇ ಅಲ್ಲದೆ, ಸುರಂಗ ರಸ್ತೆಗೆ ಕಡಿಯಲಾಗುವ ಗಿಡ-ಮರಗಳನ್ನು ತಬ್ಬಿಕೊಳ್ಳಲು ರಾಹುಲ್ ಗಾಂಧಿ ಶೀಘ್ರವೇ ಬೆಂಗಳೂರಿಗೆ ಬರಲಿ ಎಂದೂ ಕಾಲೆಳೆದಿದ್ದಾರೆ.&lt;/p&gt;&lt;h3&gt;&lt;strong&gt;ನ್ಯಾಯಾಲಯದ ಮೆಟ್ಟಿಲೇರಿದ ಯೋಜನೆ!&lt;/strong&gt;&lt;/h3&gt;&lt;p&gt;ಮತ್ತೊಂದೆಡೆ, ಸುರಂಗ ರಸ್ತೆ ಯೋಜನೆಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ತೀವ್ರವಾಗಿ ವಿರೋಧಿಸಿದ್ದು, ಈಗಾಗಲೇ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯೋಜನೆಯ ವೈಜ್ಞಾನಿಕತೆ ಮತ್ತು ಪಾರದರ್ಶಕತೆಯನ್ನು ಪ್ರಶ್ನಿಸಲಾಗುತ್ತಿದೆ. ಒಟ್ಟಿನಲ್ಲಿ, ದೆಹಲಿಯಲ್ಲಿ ಅದಾನಿ ವಿರುದ್ಧ 'ಫೈಟ್' ಮಾಡುತ್ತಾ, ಬೆಂಗಳೂರಿನಲ್ಲಿ 'ಬೈಟ್' (ಸಭೆ) ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಈ ನಡೆ, ವಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಈ ಚಹಾ ಚರ್ಚೆಯು ರಾಜ್ಯ ರಾಜಕಾರಣದಲ್ಲಿ ಇನ್ನಷ್ಟು ದೊಡ್ಡ ಬಿರುಗಾಳಿ ಎಬ್ಬಿಸುವುದು ಖಚಿತ ಎಂಬಂತಾಗಿದೆ.&lt;/p&gt;]]></content:encoded>
            <category>state</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/dk-shivakumar-adani-meeting-bengaluru-amid-delhi-protest-bjp-questions-karnataka-politics-viral-news/articleshow-ukpap1n"/>
        </item>
        <item>
            <title><![CDATA[ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ ಈ ನಾಲ್ಕು ಜಿಲ್ಲೆಗಳಿಗೆ ಹರಿಯಲಿದೆ ನೀರು!]]></title>
            <link>https://kannada.asianetnews.com/state/bhadra-upper-project-water-to-reach-4-districts-in-december-said-minister-cheluvarayaswamy-rav/articleshow-wc8a9qc</link>
            <guid isPermaLink="true">https://kannada.asianetnews.com/state/bhadra-upper-project-water-to-reach-4-districts-in-december-said-minister-cheluvarayaswamy-rav/articleshow-wc8a9qc</guid>
            <pubDate>Sat, 22 Aug 2026 08:38:12 +0530</pubDate>
            <description><![CDATA[&lt;p&gt;ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿಯು ನವೆಂಬರ್ ಅಥವಾ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0kpvfh1gs0c0hgej7v7wkj7,imgname-----------------------2026-08-22t083444.761-1787367898657.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಧಾನ ಪರಿಷತ್ತು: &lt;/strong&gt;ಭದ್ರಾ ಮೇಲ್ದಂಡೆ ಯೋಜನೆಯ ಹಂತ 1ರ ಕಾಮಗಾರಿಯನ್ನು ನವೆಂಬರ್&zwnj; ಅಥವಾ ಡಿಸೆಂಬರ್&zwnj; ಅಂತ್ಯದೊಳಗೆ ಪೂರ್ಣಗೊಳಿಸಿ ಪ್ರಾಯೋಗಿಕವಾಗಿ ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದರು.&lt;/p&gt;&lt;h2&gt;ಭದ್ರಾ ಜಲಾಶಯಕ್ಕೆ 17.04 ಟಿಎಂಸಿ ನೀರು ಲಿಫ್ಟ್&zwnj;&lt;/h2&gt;&lt;p&gt;ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್&zwnj; ಸದಸ್ಯೆ ಬಲ್ಕೀಸ್&zwnj; ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.04 ಟಿಎಂಸಿ ನೀರು ಲಿಫ್ಟ್&zwnj; ಮಾಡಿ ಹರಿಸಬೇಕಿದೆ. ಈ ಯೋಜನೆ ಕಾಮಗಾರಿಗಾಗಿ 324 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.&lt;/p&gt;&lt;p&gt;ಈ ಯೋಜನೆ ಅನುಷ್ಠಾನದ ವೇಳೆ ಭೂಸ್ವಾಧೀನ, ಅರಣ್ಯ ಹಾಗೂ ತೀರುವಳಿ, ವಿದ್ಯುತ್&zwnj; ಪ್ರಸರಣ ಮಾರ್ಗಕ್ಕೆ ಸಂಬಂಧಿಸಿ ಅನುಮತಿಗಳು ಹಾಗೂ ಇತರೆ ಶಾಸನ ಬದ್ಧ ಅನುಮೋದನೆಗಳನ್ನು ಪಡೆಯುವಲ್ಲಿ ವಿಳಂಬ ಉಂಟಾಗಿತ್ತು. ಅದೆಲ್ಲವನ್ನೂ ಸರಿಪಡಿಸಿಕೊಳ್ಳಲಾಗಿದೆ&lt;/p&gt;&lt;h3&gt;ಎಲ್ಲ ಕಾಮಗಾರಿಗಳು ನವೆಂಬರ್ ಅಂತ್ಯಕ್ಕೆ ಮುಕ್ತಾಯ&lt;/h3&gt;&lt;p&gt;ಈ ಯೋಜನೆಯಲ್ಲಿ 9.53 ಕಿ.ಮೀ. ಕಾಲುವೆಯ ಪೈಕಿ 9.305 ಕಿ.ಮೀ. ಕಾಲುವೆ ಅಗೆತ ಪ್ರಗತಿಯಲ್ಲಿದೆ. 6.90 ಕಿ.ಮೀ. ಲೈನಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿ ಪ್ರಗತಿಯಲ್ಲಿದೆ. ಎರಡು ಪಂಪ್&zwnj;ಹೌಸ್&zwnj; ಕಾಮಗಾರಿ ಮುಕ್ತಾಯ ಹಂತದಲ್ಲಿವೆ. 2,900ಮೀ ರೈಸಿಂಗ್&zwnj; ಮೈನ್&zwnj; ಅಳವಡಿಕೆ ಪೂರ್ಣಗೊಂಡಿದ್ದು, ಆ್ಯಂಕರ್&zwnj;ಬ್ಲಾಕ್&zwnj; ಕೆಲಸಗಳು ನಡೆಯುತ್ತಿವೆ. ಎಲೆಕ್ಟ್ರಿಕಲ್&zwnj; ಸಬ್&zwnj;ಸ್ಟೇಷನ್&zwnj; 1 ಮತ್ತು 2 ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಈ ಎಲ್ಲ ಕಾಮಗಾರಿಗೂ ನವೆಂಬರ್ ಅಂತ್ಯಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್&zwnj; ಅಂತ್ಯದೊಳಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ತಿಳಿಸಿದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bhadra-upper-project-water-to-reach-4-districts-in-december-said-minister-cheluvarayaswamy-rav/articleshow-wc8a9qc"/>
        </item>
        <item>
            <title><![CDATA[Bengaluru fake medicine racket: ನಕಲಿ ಔಷಧ ದಂಧೆ  ಕಿಂಗ್‌ಪಿನ್‌ ಪ್ರಶಾಂತ್‌ ಅಜರ್‌ಬೈಜಾನಲ್ಲಿ ವಶಕ್ಕೆ]]></title>
            <link>https://kannada.asianetnews.com/state/bengaluru-fake-medicine-racket-kingpin-prashanth-detained-in-azerbaijan-rav/articleshow-wctx45q</link>
            <guid isPermaLink="true">https://kannada.asianetnews.com/state/bengaluru-fake-medicine-racket-kingpin-prashanth-detained-in-azerbaijan-rav/articleshow-wctx45q</guid>
            <pubDate>Sun, 23 Aug 2026 07:30:42 +0530</pubDate>
            <description><![CDATA[ಕರ್ನಾಟಕದ ನಕಲಿ ಔಷಧ ಮಾರಾಟ ಜಾಲಕ್ಕೆ ವಿದೇಶಿ ನಂಟು ಪತ್ತೆಯಾಗಿದೆ. ದಂಧೆಯ ಪ್ರಮುಖ ಆರೋಪಿ ಪ್ರಶಾಂತ್, ಅಜರ್&zwnj;ಬೈಜಾನ್&zwnj;ನಿಂದ ಕಡಿಮೆ ಬೆಲೆಯ ಔಷಧ ಸಾಗಿಸಲು ಯತ್ನಿಸುವಾಗ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ವಶಕ್ಕೆ ಪಡೆಯಲು ಎಸ್&zwnj;ಐಟಿ ಈಗ ಇಂಟರ್&zwnj;ಪೋಲ್&zwnj; ನೆರವು ಕೋರಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0p599hpx3nsq3eheqray5aj,imgname-----------------------2026-08-23t072503.672-1787450140214.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗಿರೀಶ್ ಮಾದೇನಹಳ್ಳಿ&amp;nbsp;&lt;/strong&gt;&lt;/p&gt;&lt;p&gt;&lt;strong&gt;ಬೆಂಗಳೂರು (ಆ.23): &lt;/strong&gt;ಕರುನಾಡಿಗೆ ವಿಷವುಣಿಸುತ್ತಿದ್ದ, ರಾಷ್ಟ್ರವನ್ನೇ ಬೆಚ್ಚಿಬೀಳಿಸಿರುವ ನಕಲಿ ಔಷಧ ಮಾರಾಟ ಜಾಲಕ್ಕೆ ವಿದೇಶದ ನಂಟು ಬಯಲಾಗಿದ್ದು, ಈಗ ಕಡಿಮೆ ಬೆಲೆಗೆ ಕೋಟ್ಯಂತರ ಮೌಲ್ಯದ ಔಷಧ ಸಾಗಣೆಗೆ ಯತ್ನಿಸುತ್ತಿದ್ದಾಗ ವಿದೇಶದಲ್ಲಿ ದಂಧೆಯ ಪ್ರಮುಖ ಆರೋಪಿ ಸೇರಿ ಮೂವರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎಂಬ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ.&lt;/p&gt;&lt;p&gt;ನಕಲಿ ಮಾರಾಟ ದಂಧೆ ನಾಯಕ ಎನ್ನಲಾದ ನಾಗರಬಾವಿಯ ಪ್ರಶಾಂತ್&zwnj; ಹಾಗೂ ಆತನ ಇಬ್ಬರು ಸಹಚರರೇ ಸಿಕ್ಕಿಬಿದ್ದವರು. ಅಜರ್&zwnj;ಬೈಜಾನ್ ರಾಷ್ಟ್ರದಿಂದ ಕಡಿಮೆ ದರದ ಔಷಧವನ್ನು ಕರ್ನಾಟಕಕ್ಕೆ ತರುವಾಗ ಅಲ್ಲಿನ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಪಾಸಣೆ ವೇಳೆ ಈ ತಂಡ ಸಿಕ್ಕಿಬಿದ್ದಿದೆ ಎಂದು ಮೂಲಗಳು &lsquo;ಕನ್ನಡಪ್ರಭ&rsquo;ಕ್ಕೆ ತಿಳಿಸಿವೆ.&lt;/p&gt;&lt;p&gt;ಪೊಲೀಸರ ವಿಚಾರಣೆ ವೇಳೆ ಪ್ರಶಾಂತ್ ಪತ್ನಿ ಈ ಹೇಳಿಕೆ ನೀಡಿದ್ದಾರೆ. ಈ ಮಾಹಿತಿ ಆಧಾರದಲ್ಲಿ ಇಂಟರ್&zwnj;ಪೋಲ್&zwnj; ನೆರವು ಪಡೆದು ಆರೋಪಿಯನ್ನು ವಶಕ್ಕೆ ಪಡೆಯಲು ವಿಶೇಷ ತನಿಖಾ ತಂಡ (ಎಸ್&zwnj;ಐಟಿ) ಮುಂದಾಗಿದೆ ಎನ್ನಲಾಗಿದೆ.&lt;/p&gt;&lt;p&gt;ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯಾದ ಫಾರ್ಮ್ ಹೌಸ್&zwnj;ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಔಷಧಗಳ ಪ್ಯಾಕಿಂಗ್ ಘಟಕ ಮೇಲೆ ತಾವರೆಕೆರೆ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಘಟಕದ ಒಡೆತನ ನಾಗರಬಾವಿಯಲ್ಲಿರುವ ಪ್ರಶಾಂತ್ ಅವರಿಗೆ ಸೇರಿದ್ದು ಎಂಬುದು ಪತ್ತೆಯಾಗಿತ್ತು. ಆದರೆ ಈ ಕಾರ್ಯಾಚರಣೆ ಮುನ್ನವೇ, ಅಂದರೆ ಆ.8ರಂದೇ ಔಷಧ ಖರೀದಿ ಸಂಬಂಧ ಆತ ಅಜರ್&zwnj;ಬೈಜಾನ್&zwnj; ದೇಶಕ್ಕೆ ತೆರಳಿದ್ದ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.&lt;/p&gt;&lt;h2&gt;ವಿದೇಶ ನಂಟು ಹೇಗೆ?:&lt;/h2&gt;&lt;p&gt;ಹಲವು ವರ್ಷಗಳಿಂದ ಔಷಧ ಮಾರಾಟ ವ್ಯವಹಾರದಲ್ಲಿ ತೊಡಗಿರುವ ಪ್ರಶಾಂತ್&zwnj;ಗೆ ದೇಶ-ವಿದೇಶದ ಕಂಪನಿಗಳ ಜತೆ ಸಂಪರ್ಕವಿತ್ತು. ಚೆನ್ನೈ, ಹರ್ಯಾಣ ಹಾಗೂ ಚಂಡೀಗಢ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿರುವ ಔಷಧ ತಯಾರಿಕಾ ಕಂಪನಿಗಳಿಂದಲೂ ಕಡಿಮೆ ಬೆಲೆಗೆ ಔಷಧಗಳನ್ನು ಪ್ರಶಾಂತ್ ಖರೀದಿಸಿದ್ದಾನೆ. ಅದೇ ರೀತಿ ಅಗ್ಗದ ಬೆಲೆಗೆ ವಿದೇಶಿ ಔಷಧವನ್ನೂ ರಾಜ್ಯಕ್ಕೆ ತಂದು ನಾಲ್ಕು ಪಟ್ಟು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಮೂಲಗಳು ಹೇಳಿವೆ.&lt;/p&gt;&lt;p&gt;ಹೀಗೆ ದೇಶ-ವಿದೇಶಗಳಿಂದ ಬರುತ್ತಿದ್ದ ಔಷಧವನ್ನು ತಾವರೆಕೆರೆ ಸಮೀಪದ ಸಿ.ಕೆ.ತಾಂಡ್ಯಾದ ಫಾರ್ಮ್ ಹೌಸ್&zwnj;ನಲ್ಲಿ ಸಂಗ್ರಹಿಸುತ್ತಿದ್ದ. ಅಲ್ಲಿ ಆ ಔಷಧಗಳಿಗೆ ದುಬಾರಿ ದರ ತೋರಿಸುವ ಲೇಬಲ್ ಅಂಟಿಸಿ ಹಾಗೂ ಕೆಲ ನಕಲಿ ಔಷಧಗಳಿಗೆ ಪ್ರತಿಷ್ಠಿತ ಕಂಪನಿಗಳ ಲೇಬರ್ ಅಂಟಿಸಿ ಔಷಧ ಮಾರಾಟಗಾರರ ಮೂಲಕ ಜನರಿಗೆ ಬಿಕರಿ ಮಾಡುತ್ತಿದ್ದ ಎಂದು ಗೊತ್ತಾಗಿದೆ.&lt;/p&gt;&lt;h3&gt;ಕ್ಯಾನ್ಸರ್ ಔಷಧ ಖರೀದಿ?:&lt;/h3&gt;&lt;p&gt;ಅಜರ್&zwnj;ಬೈಜಾನ್&zwnj;ನಲ್ಲಿ ಕಡಿಮೆ ಬೆಲೆಗೆ ಕ್ಯಾನ್ಸರ್ ಔಷಧ ದೊರೆಯುತ್ತದೆ. ಹಾಗಾಗಿ ಹಲವು ವರ್ಷಗಳಿಂದ ಆ ದೇಶದ ಔಷಧ ಕಂಪನಿಗಳ ಜತೆ ಪ್ರಶಾಂತ್ ವ್ಯವಹಾರ ನಡೆಸುತ್ತಿದ್ದು, ಕಳೆದ ವಾರ ಕ್ಯಾನ್ಸರ್ ಔಷಧ ಖರೀದಿ ಸಲುವಾಗಿಯೇ ಆ ದೇಶಕ್ಕೆ ತೆರಳಿದ್ದ. ಅದೇ ಹೊತ್ತಿಗೆ ತಾವರೆಕೆರೆಯಲ್ಲಿದ್ದ ಆತನ ನಕಲಿ ಔಷಧ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆದಿತ್ತು. ಆ ದೇಶದಲ್ಲಿ ತನ್ನ ಇಬ್ಬರು ಸಹಚರರ ಮೂಲಕ ಕೋಟ್ಯಂತರ ರು. ಮೌಲ್ಯದ ಔಷಧ ಖರೀದಿಸಿ ಭಾರತಕ್ಕೆ ಸಾಗಿಸಲು ಯೋಜಿಸಿದ್ದ. ಆದರೆ ವಿಮಾನ ನಿಲ್ದಾಣದಲ್ಲಿ ದೊಡ್ಡ ಪ್ರಮಾಣದ ಔಷಧ ಸಾಗಣೆ ಬಗ್ಗೆ ಸಂಶಯಗೊಂಡು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಆಗ ತಾವು ಪ್ರಶಾಂತ್ ಸೂಚನೆ ಮೇರೆಗೆ ಔಷಧ ತಂದಿದ್ದಾಗಿ ಕಸ್ಟಮ್ಸ್ ಅಧಿಕಾರಿಗಳ ಮುಂದೆ ಸಹಚರರು ಬಾಯ್ಬಿಟ್ಟಿದ್ದಾರೆ. ಕೂಡಲೇ ಪ್ರಶಾಂತ್&zwnj;ನನ್ನು ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ವಿಚಾರ ಬಗ್ಗೆ ಪೊಲೀಸರ ಮುಂದೆ ಪ್ರಶಾಂತ್ ಪತ್ನಿಯೇ ಹೇಳಿಕೆ ಕೊಟ್ಟಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.&lt;/p&gt;&lt;p&gt;ತಲೆಮರೆಸಿಕೊಳ್ಳುವ ಮುನ್ನ ಬಲೆಗೆ&lt;/p&gt;&lt;p&gt;ಕಸ್ಟಮ್ಸ್ ಬಲೆಗೆ ಬೀಳುವ ಮುನ್ನವೇ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿರುವ ತನ್ನ ಔಷಧ ಮಾರಾಟ ಘಟಕದ ಮೇಲೆ ಪೊಲೀಸರ ದಾಳಿ ಸಂಗತಿ ಪ್ರಶಾಂತ್&zwnj;ಗೆ ತಿಳಿದಿತ್ತು. ಹೀಗಾಗಿ ಅಜರ್&zwnj;ಬೈಜಾನ್&zwnj;ನಲ್ಲೇ ತಲೆಮರೆಸಿಕೊಳ್ಳಲು ಆತ ಯೋಜಿಸಿದ್ದ. ಆದರೆ ಅಷ್ಟರಲ್ಲಿ ಔಷಧ ಸಾಗಿಸುವಾಗ ಆತನ ಸ್ನೇಹಿತರು ಕಸ್ಟಮ್ಸ್ ಬಲೆಗೆ ಬಿದ್ದಿದ್ದು ಪ್ರಶಾಂತ್&zwnj;ಗೆ ಸಂಕಷ್ಟ ತಂದಿದೆ ಎಂದು ತಿಳಿದು ಬಂದಿದೆ.&lt;/p&gt;&lt;h3&gt;ಪ್ರಶಾಂತ್ ಬಗ್ಗೆ ಮಾಹಿತಿ ಕೋರಿದ ಎಸ್ಐಟಿ&lt;/h3&gt;&lt;p&gt;ಅಜರ್&zwnj;ಬೈಜಾನ್&zwnj; ದೇಶದಲ್ಲಿ ಪ್ರಶಾಂತ್&zwnj;ನನ್ನು ಕಸ್ಟಮ್ಸ್ ವಶಕ್ಕೆ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಇಂಟರ್&zwnj;ಪೋಲ್&zwnj; ಮೂಲಕವೂ ಮಾಹಿತಿ ಕೋರಲಾಗುತ್ತದೆ ಎಂದು ಎಸ್&zwnj;ಐಟಿ ಮೂಲಗಳು ತಿಳಿಸಿವೆ.&lt;/p&gt;&lt;h3&gt;ವಿದೇಶಕ್ಕೆ ಹಾರುವ ಮುನ್ನ ಲಾಕ್&lt;/h3&gt;&lt;p&gt;ಪೊಲೀಸರ ದಾಳಿ ಸಂಗತಿ ತಿಳಿದ ಕೂಡಲೇ ತನ್ನ ವ್ಯವಹಾರಿಕ ಪಾಲುದಾರ ವೆಂಕಟೇಶ್&zwnj;ಗೂ ಅಜರ್&zwnj;ಬೈಜಾನ್ ರಾಷ್ಟ್ರಕ್ಕೆ ಬರುವಂತೆ ತಿಳಿಸಿ ಪ್ರಶಾಂತ್ ಟಿಕೆಟ್ ಬುಕ್ ಮಾಡಿದ್ದ. ಅಷ್ಟರಲ್ಲಿ ಮಾಹಿತಿ ಪಡೆದು ಹೆಬ್ಬಾಳ ಬಳಿ ವೆಂಕಟೇಶ್&zwnj;ನನ್ನು ಬಂಧಿಸಲಾಯಿತು. ಸ್ಪಲ್ಪ ತಡವಾಗಿದ್ದರೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಆತ ಪರಾರಿಯಾಗಿರುತ್ತಿದ್ದ ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bengaluru-fake-medicine-racket-kingpin-prashanth-detained-in-azerbaijan-rav/articleshow-wctx45q"/>
        </item>
        <item>
            <title><![CDATA[SIR ಬಳಿಕ ರಾಜ್ಯದ ಕರಡು ಮತದಾರರ ಪಟ್ಟಿ ಇಂದು ಪ್ರಕಟ; ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?]]></title>
            <link>https://kannada.asianetnews.com/state/after-sir-the-state-s-draft-voter-list-will-be-published-today-how-to-check-your-name-mrq/articleshow-xfv9ixs</link>
            <guid isPermaLink="true">https://kannada.asianetnews.com/state/after-sir-the-state-s-draft-voter-list-will-be-published-today-how-to-check-your-name-mrq/articleshow-xfv9ixs</guid>
            <pubDate>Mon, 24 Aug 2026 06:20:09 +0530</pubDate>
            <description><![CDATA[ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಂತರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಸುಮಾರು 1.08 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶವಿದ್ದು, ಮತದಾರರು ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0epdnaf9nf3p2dz4yr9zbhv,imgname-screenshot-2026-08-20-092230-1787199673679.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್&zwnj;ಐಆರ್&zwnj;) ಪ್ರಕ್ರಿಯೆಯ ಮೊದಲ ಹಂತ ಮುಗಿದಿದ್ದು, ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ರಾಜ್ಯದ ಒಟ್ಟು 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರಷ್ಟೇ ಕರಡು ಮತದಾರರ ಪಟ್ಟಿಯಲ್ಲಿ ಇರಲಿದೆ. ಆಕ್ಷೇಪಣೆ ಸಲ್ಲಿಸಲು ಸೆ.23ರವರೆಗೆ ಅವಕಾಶವಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.&lt;/p&gt;&lt;p&gt;ಈ ಕರಡು ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಹೇಗೆ ಹುಡುಕಬೇಕು ಎಂಬ ಬಗ್ಗೆ ಚುನಾವಣಾ ಆಯೋಗ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದೆ.&lt;/p&gt;&lt;h2&gt;&lt;strong&gt;4.46 ಕೋಟಿ ಮತದಾರರು ಹೆಸರು ಕರಡು ಮತದಾರರ ಪಟ್ಟಿ&lt;/strong&gt;&lt;/h2&gt;&lt;p&gt;ರಾಜ್ಯ ಮತದಾರರ ಪಟ್ಟಿಯಲ್ಲಿ ಒಟ್ಟು 5.54 ಕೋಟಿ ಮತದಾರರು ಇದ್ದಾರೆ. ಈ ಪೈಕಿ ಎಸ್&zwnj;ಐಆರ್&zwnj; ಪ್ರಕ್ರಿಯೆ ವೇಳೆ 1.08 ಕೋಟಿ ಮತದಾರರನ್ನು &lsquo;ಎಎಸ್&zwnj;ಡಿಡಿಒ&rsquo; ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಉಳಿದ 4.46 ಕೋಟಿ ಮತದಾರರು ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಲಿದೆ.&lt;/p&gt;&lt;p&gt;ಈ 4.46 ಕೋಟಿ ಮತದಾರರ ಪೈಕಿ ಮ್ಯಾಪಿಂಗ್&zwnj; ಆಗದ 23.45 ಲಕ್ಷ ಮತದಾರರು ಮತ್ತು ದೋಷಪೂರಿತ ಮಾಹಿತಿ ಇರುವ (ಅನೋಮಲಿಸ್&zwnj;) 20.35 ಲಕ್ಷ ಮತದಾರರು ಸೇರಿದಂತೆ ಒಟ್ಟು 43.80 ಲಕ್ಷ ಮತದಾರರಿಗೆ ನೋಟಿಸ್&zwnj; ನೀಡಲಾಗುತ್ತದೆ. ಈ ಎಲ್ಲರೂ ಅಗತ್ಯ ದಾಖಲೆಗಳೊಂದಿಗೆ ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಿದೆ. ಆ.31ರ ನಂತರ ನೋಟಿಸ್&zwnj; ಸೃಜಿಸಿ, ಮತದಾರರಿಗೆ ನೀಡಲಾಗುತ್ತದೆ.&lt;/p&gt;&lt;h3&gt;&lt;strong&gt;ಹೊಸದಾಗಿ ಫಾರ್ಮ್&zwnj; 6 ಸಲ್ಲಿಕೆ&lt;/strong&gt;&lt;/h3&gt;&lt;p&gt;ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯುವ ಈ 1.08 ಕೋಟಿ ಮತದಾರರ (ಎಎಸ್&zwnj;ಡಿಡಿಒ) ಪೈಕಿ ಗೈರು, ಸ್ಥಳಾಂತರಗೊಂಡಿರುವ ಮತದಾರರು ನಿಗದಿತ ದಾಖಲೆಗಳೊಂದಿಗೆ ಹೊಸದಾಗಿ ಫಾರ್ಮ್&zwnj; 6 ಸಲ್ಲಿಕೆ ಮಾಡಬೇಕು. ಇದರ ಜತೆಗೆ ಅ.1ಕ್ಕೆ 18 ವರ್ಷ ತುಂಬುವ ಯುವ ಮತದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್&zwnj; 6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು. ಮತಗಟ್ಟೆ ಅಧಿಕಾರಿಗಳ ಪರಿಶೀಲನೆಯ ನಂತರ ಆ ಮತದಾರರ ಪಟ್ಟಿಯ ಪೌರತ್ವ ದೃಢಪಟ್ಟರಷ್ಟೇ, ಅವರ ಹೆಸರನ್ನು ಅಂತಿಮ ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಈಗಾಗಲೇ 17 ಲಕ್ಷಕ್ಕೂ ಹೆಚ್ಚು ಮತದಾರರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅ.27ರಂದು ಪ್ರಕಟವಾಗುವ ಅಂತಿಮ ಮತದಾರರ ಪಟ್ಟಿಯಲ್ಲಿ ಇವರ ಹೆಸರು ಪ್ರಕಟಗೊಳ್ಳಲಿದೆ.&lt;/p&gt;&lt;p&gt;ಎಸ್&zwnj;ಐಆರ್&zwnj; ಭಾಗವಾಗಿ ರಾಜ್ಯದ ಎಲ್ಲ ಮತದಾರರ ವಿವರ, ಪೌರತ್ವವನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು. ಮೊದಲ ಹಂತದಲ್ಲಿ ಅಷ್ಟೂ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿತ್ತು. 2026ರ ಮತದಾರರ ವಿವರ ಮತ್ತು 2002ರ ಮತದಾರರ ವಿವರಗಳನ್ನು ಭರ್ತಿ ಮಾಡಿ ಮತದಾರರು ಸಲ್ಲಿಸಬೇಕಿತ್ತು.&lt;/p&gt;&lt;h3&gt;&lt;strong&gt;ಯಾರೆಲ್ಲಾ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರಲ್ಲ&lt;/strong&gt;&lt;/h3&gt;&lt;p&gt;ಈ ಹಂತದಲ್ಲಿಯೇ 1.08 ಕೋಟಿ ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗೆ ಉಳಿದಿದ್ದಾರೆ. ಮತಗಟ್ಟೆ ಅಧಿಕಾರಿಗಳು (ಬಿಎಲ್&zwnj;ಒ) ಮನೆ ಮನೆಗೆ ಭೇಟಿ ನೀಡಿದಾಗ ಪತ್ತೆಯಾಗಿಲ್ಲ ಎಂದು 15.17 ಲಕ್ಷ, ಸ್ಥಳಾಂತರ ಎಂದು 65.45 ಲಕ್ಷ, ಮೃತ ಎಂದು 16.39 ಲಕ್ಷ, ಒಂದಕ್ಕಿಂತೆ ಹೆಚ್ಚು ಕಡೆ ನೋಂದಣಿ ಎಂದು 7.09 ಲಕ್ಷ ಹಾಗೂ ಗಣತಿ ನಮೂನೆಗೆ ಸಹಿ ಮಾಡಿಲ್ಲ ಎಂದು 3.83 ಲಕ್ಷ ಮತದಾರರನ್ನು ವರ್ಗೀಕರಿಸಲಾಗಿತ್ತು. ಈ ಮತದಾರರ ಗಣತಿ ನಮೂನೆ ಸಲ್ಲಿಕೆಯಾಗದೇ ಇರುವ ಕಾರಣಕ್ಕೆ, ಇವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/after-sir-the-state-s-draft-voter-list-will-be-published-today-how-to-check-your-name-mrq/articleshow-xfv9ixs"/>
        </item>
        <item>
            <title><![CDATA[Kabini Dam: ಕಬಿನಿ ಡ್ಯಾಂನಿಂದ 9 ದಿನಗಳಲ್ಲೇ 4 ಟಿಎಂಸಿ ನೀರು ತಮಿಳುನಾಡಿಗೆ! ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?]]></title>
            <link>https://kannada.asianetnews.com/state/kabini-dam-released-4-tmc-water-to-tamil-nadu-in-just-9-days-current-water-levels-in-karnataka-reservoirs-rav/articleshow-xwercmk</link>
            <guid isPermaLink="true">https://kannada.asianetnews.com/state/kabini-dam-released-4-tmc-water-to-tamil-nadu-in-just-9-days-current-water-levels-in-karnataka-reservoirs-rav/articleshow-xwercmk</guid>
            <pubDate>Sat, 22 Aug 2026 05:25:44 +0530</pubDate>
            <description><![CDATA[&lt;p&gt;ಎಚ್&zwnj;.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಒದಗಿಸುವ ಬದಲು, ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನೀರು ನೇರವಾಗಿ ತಮಿಳುನಾಡಿಗೆ ಸೇರುತ್ತಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಜಲಾಶಯದಿಂದ 4 ಟಿಎಂಸಿ ನೀರು ಖಾಲಿ!&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyyfpfbj9xmgwztj0rh7gphj,imgname-kabini-1785582009713.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು (ಆ.22):&lt;/strong&gt; ಎಚ್&zwnj;.ಡಿ.ಕೋಟೆ ತಾಲೂಕು ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯದಿಂದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವ ಬದಲು ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.&lt;/p&gt;&lt;p&gt;ನದಿಗೆ ಬಿಡುವ ನೀರು ನೇರವಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಸೇರುತ್ತಿದೆ. ಕೇರಳದ ವೈನಾಡಲ್ಲಿ ಸುರಿದ ಮಳೆಯಿಂದಾಗಿ ಜಲಾಶಯ (ಗರಿಷ್ಠ ಮಟ್ಟ 2284 ಅಡಿ) ಭರ್ತಿಯಾಗಿತ್ತು. ಈಗ ಜಲಾಶಯದ ನೀರಿನ ಮಟ್ಟ 2275.56 ಅಡಿಗೆ ಕುಸಿದಿದೆ. ಕಳೆದ ಒಂಬತ್ತು ದಿನಗಳಲ್ಲಿ ಜಲಾಶಯದಿಂದ 4 ಟಿಎಂಸಿ ನೀರು ಖಾಲಿ ಮಾಡಲಾಗಿದೆ. ಆ.13ರಂದು 2,282 ಅಡಿ ಇದ್ದ ನೀರಿನ ಮಟ್ಟ, ಶುಕ್ರವಾರ 2,275 ಅಡಿ ಇದೆ. 19.52 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ ಕೇವಲ 14.57 ಟಿಎಂಸಿ ನೀರುವ ಮಾತ್ರ ಲಭ್ಯವಿದೆ.&lt;/p&gt;&lt;h2&gt;ಜಲಾಶಯಗಳ ಇಂದಿನ ನೀರಿನ ಮಟ್ಟ (21-8-2026)&lt;/h2&gt;&lt;ul&gt; &lt;li&gt;ಕಬಿನಿ 78% 2284 2276.25&lt;/li&gt; &lt;li&gt;ಹೇಮಾವತಿ 86% 2922 2916.45&lt;/li&gt; &lt;li&gt;ತುಂಗಭದ್ರಾ 89% 1633 1630.50&lt;/li&gt; &lt;li&gt;ಸೂಪಾ(ಮೀ.) 59% 564 548.00&lt;/li&gt; &lt;li&gt;ಕೆಆರ್&zwnj;ಎಸ್ 62% 124.80 109.05&lt;/li&gt; &lt;li&gt;ಘಟಪ್ರಭಾ 100% 2175 2174.50&lt;/li&gt; &lt;li&gt;ಲಿಂಗನಮಕ್ಕಿ 56% 1819.12 1795.25&lt;/li&gt; &lt;li&gt;ಭದ್ರಾ 82% 2158 2147.10&lt;/li&gt; &lt;li&gt;ಹಾರಂಗಿ 98% 2859 2858.25&lt;/li&gt; &lt;li&gt;ಆಲಮಟ್ಟಿ(ಮೀ.) 99% 519.60 519.50&lt;/li&gt; &lt;li&gt;ನಾರಾಯಣಪುರ(ಮೀ.) 98% 492.12 492.10&lt;/li&gt; &lt;li&gt;ಮಲಪ್ರಭಾ 58% 2079.50 2066.10&lt;/li&gt;&lt;/ul&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/kabini-dam-released-4-tmc-water-to-tamil-nadu-in-just-9-days-current-water-levels-in-karnataka-reservoirs-rav/articleshow-xwercmk"/>
        </item>
    </channel>
</rss>
