<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 29 May 2026 22:47:48 +0530</lastBuildDate>
        <atom:link href="https://kannada.asianetnews.com/rss/state" rel="self" type="application/rss+xml"/>
        <item>
            <title><![CDATA[Breaking: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಈ ದಿನದಂದು ಡಿಕೆ ಶಿವಕುಮಾರ್‌ ಪ್ರಮಾಣವಚನ]]></title>
            <link>https://kannada.asianetnews.com/state/dk-shivakumar-oath-as-karnataka-25th-chief-minister-june-3-bengaluru-san/articleshow-8egfxaw</link>
            <guid isPermaLink="true">https://kannada.asianetnews.com/state/dk-shivakumar-oath-as-karnataka-25th-chief-minister-june-3-bengaluru-san/articleshow-8egfxaw</guid>
            <pubDate>Fri, 29 May 2026 22:47:43 +0530</pubDate>
            <description><![CDATA[&lt;p&gt;ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂತ್ರದಂತೆ, ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಈ ಅಧಿಕಾರ ಹಸ್ತಾಂತರ ನಡೆಯುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkn0pcvp6nge26vm4kxczgfy,imgname-1-1773453128566.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.29): &lt;/strong&gt;ರಾಜ್ಯ ರಾಜಕೀಯದ ದೀರ್ಘಾವಧಿಯ ನಾಯಕತ್ವದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆಬಿದ್ದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸರ್ಕಾರದ ಅಧಿಕೃತ ಮೂಲಗಳು ಖಚಿತಪಡಿಸಿವೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ ಹಂಚಿಕೆಯ ಹೋರಾಟದ ಬಳಿಕ, ಅವರ ಸಹೋದ್ಯೋಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ.&lt;/p&gt;&lt;p&gt;ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಬೆಂಗಳೂರಿನ ರಾಜಭವನ ಆವರಣದ ಲೋಕ ಭವನದ ಗ್ಲಾಸ್ ಹೌಸ್&zwnj;ನಲ್ಲಿ (Lok Bhavan Glass House) ಜೂನ್ 3 ರಂದು ಅದ್ಧೂರಿಯಾಗಿ ಜರುಗಲಿದೆ. ಈ ಹೈ-ಪ್ರೊಫೈಲ್ ಕಾರ್ಯಕ್ರಮದಲ್ಲಿ ಎಐಸಿಸಿ ಮತ್ತು ಕಾಂಗ್ರೆಸ್ ಹೈಕಮಾಂಡ್&zwnj;ನ ಹಿರಿಯ ನಾಯಕರು, ರಾಜ್ಯ ಸಚಿವ ಸಂಪುಟದ ಸಹೋದ್ಯೋಗಿಗಳು, ಪ್ರಮುಖ ರಾಜಕಾರಣಿಗಳು ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಲಿರುವ ಸಹಸ್ರಾರು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಲಿದ್ದಾರೆ.&lt;/p&gt;&lt;h2&gt;&lt;strong&gt;ಹೈಕಮಾಂಡ್ ಸೂತ್ರದಂತೆ ಅಧಿಕಾರ ಹಸ್ತಾಂತರ!&lt;/strong&gt;&lt;/h2&gt;&lt;p&gt;64 ವರ್ಷದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರ ಈ ನೇಮಕಾತಿಯು, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಡೆದಿದೆ. ಈ ಇಡೀ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು, ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವವು ಸರ್ಕಾರ ರಚನೆಯ ಸಂದರ್ಭದಲ್ಲೇ ರೂಪಿಸಿದ್ದ ನಾಯಕತ್ವದ ಒಪ್ಪಂದ ಹಾಗೂ ಆಂತರಿಕ ಹೊಂದಾಣಿಕೆಯ ಸೂತ್ರದ (Leadership Arrangement) ಪ್ರಮುಖ ಭಾಗ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/dk-shivakumar-oath-as-karnataka-25th-chief-minister-june-3-bengaluru-san/articleshow-8egfxaw"/>
        </item>
        <item>
            <title><![CDATA[ಬೆಂಗಳೂರಿಗೆ 29ರ ಮಳೆ ಕಂಟಕ: ಬೌರಿಂಗ್ ಗೋಡೆಗೆ 7 ಬಲಿಯಾಗಿ ತಿಂಗಳಲ್ಲಿ ವಿಜಯನಗರ ಕ್ಲಬ್ ಗೋಡೆ ಕುಸಿದು ಆಟೋ ಚಾಲಕ ಸಾವು!]]></title>
            <link>https://kannada.asianetnews.com/state/bengaluru-heavy-rain-death-vijayanagar-club-wall-collapse-auto-driver-death-sat/articleshow-d0mp382</link>
            <guid isPermaLink="true">https://kannada.asianetnews.com/state/bengaluru-heavy-rain-death-vijayanagar-club-wall-collapse-auto-driver-death-sat/articleshow-d0mp382</guid>
            <pubDate>Fri, 29 May 2026 21:31:53 +0530</pubDate>
            <description><![CDATA[&lt;p&gt;ಬೆಂಗಳೂರಿಗೆ 29ರ ಮಳೆ ಕಂಟಕ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತಕ್ಕ 7 ಜನರ ಬಲಿಯಾಗಿ ಒಂದು ತಿಂಗಳಿಗೆ ವಿಜಯನಗರ ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಮಳೆಯಿಂದ ರಕ್ಷಣೆ ಪಡೆಯಲು ಆಟೋ ನಿಲ್ಲಿಸಿದ್ದ ಚಾಲಕ ಶಿವ ಬೋರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kst7d5tbpwfk7jzprztxfhej,imgname-bengaluru-vijayanagara-club-wall-collapse-1780070389579.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ 29): ಸಿ&lt;/strong&gt;ಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ಶುಕ್ರವಾರ ಸಂಜೆ ಸುರಿದ ಮಳೆ ಆರ್ಭಟಕ್ಕೆ ಕಾಂಪೌಂಡ್ ಕುಸಿದು (Wall Collapse) ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬೌರಿಂಗ್ ಆಸ್ಪತ್ರೆ ಗೋಡೆಯ ಕುಸಿದು 7 ಜನರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ವಿಜಯನಗರದ ಪ್ರತಿಷ್ಠಿತ ಕ್ಲಬ್ (Vijayanagara Club) ಗೋಡೆ ಕುಸಿದು ಆಟೋ ಚಾಲಕನೊಬ್ಬ ಸ್ಥಳದಲ್ಲೇ (Auto Driver) ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಮಳೆಯಿಂದ ರಕ್ಷಣೆ ಪಡೆಯಲು ಆಟೋವನ್ನು ಪಕ್ಕಕ್ಕೆ ನಿಲ್ಲಿಸಿದ್ದೇ ಆ ದುರ್ದೈವಿ ಮಾಡಿದ ತಪ್ಪಾಯಿತು.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಮೃತ ವ್ಯಕ್ತಿಯನ್ನು ಗಂಗೊಂಡಹಳ್ಳಿ ನಿವಾಸಿ ಶಿವ ಬೋರಯ್ಯ (55) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರು, &amp;nbsp;ಶುಕ್ರವಾರ ಸಂಜೆ ವಿಜಯನಗರದ ಸುತ್ತಮುತ್ತ ಬಾಡಿಗೆಗಾಗಿ ಸಂಚರಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಜೋರು ಮಳೆ ಶುರುವಾದ ಕಾರಣ, ಮಳೆಯಿಂದ ಬಚಾವಾಗಲು ವಿಜಯನಗರ ಕ್ಲಬ್&zwnj;ನ ಸ್ವಿಮ್ಮಿಂಗ್ ಪೂಲ್ ಪಕ್ಕದ ಗೋಡೆಯ ಬಳಿ ತಮ್ಮ ಆಟೋವನ್ನು ಪಾರ್ಕ್ ಮಾಡಿದ್ದರು. ಮಳೆ ಕಡಿಮೆಯಾಗಲಿ ಎಂದು ಆಟೋದ ಒಳಗೇ ಕುಳಿತಿದ್ದಾಗ ಈ ದುರಂತ ಸಂಭವಿಸಿದೆ.&lt;/p&gt;&lt;h2&gt;&lt;strong&gt;ಬೃಹತ್ ಗೋಡೆ ಕುಸಿತ:&lt;/strong&gt;&lt;/h2&gt;&lt;p&gt;ಮಳೆಯ ಅಬ್ಬರಕ್ಕೆ ವಿಜಯನಗರ ಕ್ಲಬ್&zwnj;ನ ಸ್ವಿಮ್ಮಿಂಗ್ ಪೂಲ್ ಆವರಣದ ಬೃಹತ್ ಗೋಡೆ ಸಂಪೂರ್ಣವಾಗಿ ನೆನೆದು ದುರ್ಬಲಗೊಂಡಿತ್ತು. ಶಿವ ಬೋರಯ್ಯ ಅವರು ಆಟೋದಲ್ಲಿ ಕುಳಿತಿದ್ದಾಗಲೇ ಬೃಹತ್ ಗೋಡೆ ರಭಸವಾಗಿ ಆಟೋದ ಮೇಲೆಯೇ ಕುಸಿದು ಬಿದ್ದಿದೆ. ಗೋಡೆಯ ಇಟ್ಟಿಗೆ ಮತ್ತು ಕಲ್ಲುಗಳ ಭಾರಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಕುಳಿತಿದ್ದ ಶಿವ ಬೋರಯ್ಯ ಅವರಿಗೆ ತೀವ್ರ ಪೆಟ್ಟು ಬಿದ್ದಿದೆ. ಗೋಡೆ ಬಿದ್ದ ರಭಸಕ್ಕೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;p&gt;ಇದನ್ನೂ ಓದಿ: &lt;strong&gt;ಬೆಂಗಳೂರು ಮಹಾಮಳೆಗೆ 7 ಬಲಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಭೀಕರ ದುರಂತ; ಮೂವರು ಪುಟ್ಟ ಮಕ್ಕಳೂ ಸಾವು!&lt;/strong&gt;&lt;/p&gt;&lt;h2&gt;&lt;strong&gt;ಸ್ಥಳಕ್ಕೆ ಪೊಲೀಸರ ಭೇಟಿ:&lt;/strong&gt;&lt;/h2&gt;&lt;p&gt;ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಜಯನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಸಹಾಯದಿಂದ ಕುಸಿದಿದ್ದ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಆಟೋದೊಳಗೆ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲಾಯಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ:&lt;/strong&gt;&lt;/h3&gt;&lt;p&gt;ನಗರದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಇಂತಹ ಹಳೆಯ ಮತ್ತು ದುರ್ಬಲ ಗೋಡೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಸಂಬಂಧಪಟ್ಟ ಸಂಸ್ಥೆಗಳು ನಿರ್ಲಕ್ಷ್ಯ ವಹಿಸಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಗೋಡೆ ಕುಸಿತದಿಂದಾಗಿ ಬಡ ಕುಟುಂಬವೊಂದು ತನ್ನ ಆಧಾರಸ್ತಂಭವನ್ನೇ ಕಳೆದುಕೊಂಡಿದೆ. ಮೃತ ಶಿವ ಬೋರಯ್ಯ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;p&gt;ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಲಬ್ ಆಡಳಿತ ಮಂಡಳಿಯ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರು ಮಳೆಯ ಸಮಯದಲ್ಲಿ ಮರಗಳು ಅಥವಾ ಹಳೆಯ ಕಟ್ಟಡಗಳ ಗೋಡೆಗಳ ಪಕ್ಕ ವಾಹನ ನಿಲ್ಲಿಸದಂತೆ ಪೊಲೀಸರು ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 11 ಸಾವು:&amp;nbsp;&lt;/strong&gt;&lt;/h2&gt;&lt;p&gt;ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು, ಮೂವರು ಮಕ್ಕಳು ಸೇರಿದಂತೆ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಈ ದುರಂತ ನಗರದಲ್ಲಿ ಆಘಾತವನ್ನುಂಟು ಮಾಡಿದ್ದು, ಹಳೆಯ ಗೋಡೆಯ ನಿರ್ವಹಣೆ ಕೊರತೆಯೇ ಘಟನೆಗೆ ಕಾರಣವೆಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಂದು ತಿಂಗಳ ಅಂತರಕ್ಕೆ ಸರಿಯಾಗಿ ಮತ್ತೊಬ್ಬ ವ್ಯಕ್ತಿ ಕಾಂಪೌಂಡ್ ಕುಸಿದು ಮೃತಪಟ್ಟಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/bengaluru-heavy-rain-death-vijayanagar-club-wall-collapse-auto-driver-death-sat/articleshow-d0mp382"/>
        </item>
        <item>
            <title><![CDATA[ಆರ್‌ಸಿಬಿ ಈ ಸಲ ಕಪ್ ಗೆದ್ರೂ ಪಟಾಕಿ ಹೊಡೆಯಂಗಿಲ್ಲ, ರೋಡ್‌ಗೆ ಬಂದು ಕುಣಿಯಂಗಿಲ್ಲ; ಪೊಲೀಸರಿಂದ 6 ಮಾರ್ಗಸೂಚಿ ಬಿಡುಗಡೆ!]]></title>
            <link>https://kannada.asianetnews.com/state/bengaluru-police-guidelines-for-rcb-fans-ipl-final-chinnaswamy-stadium-stampede-effect-sat/articleshow-f684gvs</link>
            <guid isPermaLink="true">https://kannada.asianetnews.com/state/bengaluru-police-guidelines-for-rcb-fans-ipl-final-chinnaswamy-stadium-stampede-effect-sat/articleshow-f684gvs</guid>
            <pubDate>Fri, 29 May 2026 20:30:06 +0530</pubDate>
            <description><![CDATA[&lt;p&gt;ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫೈನಲ್ ತಲುಪಿದ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಪೊಲೀಸರು ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಕಳೆದ ವರ್ಷದ ಕಾಲ್ತುಳಿತದ ಘಟನೆಯಿಂದ ಪಾಠ ಕಲಿತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kst3mmw6wd5cxtn2tcnxtqqc,imgname-bengaluru-police-guidelenes-rcb-final-match-1780066440070.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ 29): ರಾ&lt;/strong&gt;ಯಲ್ ಚಾಲೆಂಜರ್ಸ್ ಬೆಂಗಳೂರು (Royal challengers Bengaluru - RCB) ತಂಡವು ಫೈನಲ್ ತಲುಪುತ್ತಿದ್ದಂತೆಯೇ ಇಡೀ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru RCB Fans) ಸಂಭ್ರಮದ ವಾತಾವರಣ ಮನೆಮಾಡಿದೆ. ಆದರೆ, ಈ ಸಂಭ್ರಮ ಹದ್ದುಮೀರಿ ಅನಾಹುತಕ್ಕೆ ದಾರಿ ಮಾಡಿಕೊಡಬಾರದು ಎಂಬ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆ (Bengaluru City Police) ಈಗಿನಿಂದಲೇ ಎಚ್ಚೆತ್ತುಕೊಂಡಿದೆ. ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದ (M Chinnaswamy Stadium) ಬಳಿ ನಡೆದ ಕಾಲ್ತುಳಿತದಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಬಾರಿ ಫೈನಲ್ ಪಂದ್ಯಕ್ಕೂ ಮುನ್ನವೇ ಅಭಿಮಾನಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು (Guidelines) ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಆರ್&zwnj;ಸಿಬಿ ಕಪ್ ಗೆದ್ದರೂ ಪಟಾಕಿ ಹೊಡೆಯುವಂತಿಲ್ಲ ಎಂದು ಸೂಚಿಸಲಾಗಿದೆ.&lt;/p&gt;&lt;h2&gt;&lt;strong&gt;ಚಿನ್ನಸ್ವಾಮಿ ಕಾಲ್ತುಳಿತದ ಎಫೆಕ್ಟ್:&lt;/strong&gt;&lt;/h2&gt;&lt;p&gt;ಕಳೆದ ಬಾರಿ ಆರ್&zwnj;ಸಿಬಿ 18 ವರ್ಷದ ಬಳಿಕ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದು ವಿಜಯೋತ್ಸವ ಆಚರಣೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಾಗ ಅಭಿಮಾನಿಗಳ ನೂಕುನುಗ್ಗಲಿನಿಂದಾಗಿ ಉಂಟಾದ ಅವಾಂತರಗಳು ಪೊಲೀಸರಿಗೆ ದೊಡ್ಡ ಪಾಠ ಕಲಿಸಿವೆ. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಆರ್&zwnj;ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಹೀಗಾಗಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಬಾರಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಲಾಖೆ ಸಿದ್ಧವಿಲ್ಲ. ಹೀಗಾಗಿ, ಪಂದ್ಯದ ದಿನದಂದು ನಗರದಾದ್ಯಂತ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಮುಂದಾಗಿದೆ.&lt;/p&gt;&lt;h2&gt;&lt;strong&gt;ಪೊಲೀಸರು ಹೊರಡಿಸಿರುವ ಪ್ರಮುಖ ಮಾರ್ಗಸೂಚಿಗಳು ಇಲ್ಲಿವೆ:&lt;/strong&gt;&lt;/h2&gt;&lt;p&gt;&lt;strong&gt;ಸಾರ್ವಜನಿಕ ಸಂಭ್ರಮಾಚರಣೆಗೆ ನಿರ್ಬಂಧ: &lt;/strong&gt;ರಸ್ತೆಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ಸಂಭ್ರಮಾಚರಣೆ ಮಾಡುವಂತಿಲ್ಲ. ಇದು ಸಂಚಾರ ದಟ್ಟಣೆ ಮತ್ತು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವುದರಿಂದ ಇದಕ್ಕೆ ನಿಷೇಧ ಹೇರಲಾಗಿದೆ.&lt;/p&gt;&lt;p&gt;&lt;strong&gt;ಎಲ್ ಇ ಡಿ (LED) ವಾಲ್ ಪ್ರಸಾರಕ್ಕೆ ಬ್ರೇಕ್: &lt;/strong&gt;ಅನುಮತಿ ಇಲ್ಲದೆ ರಸ್ತೆಗಳಿಗೆ ಮುಖಮಾಡಿ ದೊಡ್ಡ ಎಲ್ ಇ ಡಿ ವಾಲ್ ಗಳನ್ನು ಅಳವಡಿಸಿ ಪಂದ್ಯ ಪ್ರಸಾರ ಮಾಡುವಂತಿಲ್ಲ. ಈಗಾಗಲೇ ಅಳವಡಿಸಿರುವ ಸ್ಕ್ರೀನ್&zwnj;ಗಳಲ್ಲೂ ಪಂದ್ಯದ ಲೈವ್ ಸ್ಟ್ರೀಮಿಂಗ್ ಮಾಡಲು ಅವಕಾಶವಿಲ್ಲ.&lt;/p&gt;&lt;p&gt;&lt;strong&gt;ಪಟಾಕಿ ಸಿಡಿಸುವಂತಿಲ್ಲ: &lt;/strong&gt;ಆರ್ ಸಿ ಬಿ ಫೈನಲ್ ಗೆದ್ದರೂ ಸಹ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸಿ ಶಬ್ದ ಮಾಲಿನ್ಯ ಅಥವಾ ಅನಾಹುತಗಳಿಗೆ ದಾರಿ ಮಾಡಿಕೊಡುವಂತಿಲ್ಲ.&lt;/p&gt;&lt;p&gt;&lt;strong&gt;ಸಾರಿಗೆ ನಿಯಮಗಳ ಪಾಲನೆ:&lt;/strong&gt; ಬೈಕ್ ರ್ಯಾಲಿ ನಡೆಸುವುದು, ಅತಿವೇಗವಾಗಿ ಚಾಲನೆ ಮಾಡುವುದು, ರಸ್ತೆಗಳಲ್ಲಿ ಸ್ಟಂಟ್ ಮಾಡುವುದು ಮತ್ತು ಕರ್ಕಶ ಹಾರ್ನ್ ಬಳಸುವುದಕ್ಕೆ ಕಟ್ಟುನಿಟ್ಟಿನ ನಿಷೇಧವಿದೆ. ಟ್ರಾಫಿಕ್ ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.&lt;/p&gt;&lt;p&gt;&lt;strong&gt;ಮದ್ಯಪಾನ ನಿಷೇಧ: &lt;/strong&gt;ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು ಅಥವಾ ಮದ್ಯ ಸೇವಿಸಿ ಗಲಾಟೆ ಮಾಡುವುದು ಕಂಡುಬಂದಲ್ಲಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗುವುದು.&lt;/p&gt;&lt;p&gt;&lt;strong&gt;ಸಾಮಾಜಿಕ ಜಾಲತಾಣದ ಮೇಲೆ ನಿಗಾ: &lt;/strong&gt;ಫೇಸ್&zwnj;ಬುಕ್, ಎಕ್ಸ್ (ಟ್ವಿಟರ್) ಅಥವಾ ಇನ್ಸ್ಟಾಗ್ರಾಮ್&zwnj;ನಲ್ಲಿ ಬೇರೆ ತಂಡದ ಅಭಿಮಾನಿಗಳ ವಿರುದ್ಧ ದ್ವೇಷಪೂರಿತ ಪೋಸ್ಟ್ ಹಾಕುವಂತಿಲ್ಲ. ಅಶಾಂತಿ ಸೃಷ್ಟಿಸುವ ಯಾವುದೇ ಪೋಸ್ಟ್ ಹಂಚಿಕೊಂಡರೆ ಐಟಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು.&lt;/p&gt;&lt;h2&gt;&lt;strong&gt;ಅಭಿಮಾನಿಗಳಿಗೆ ಮನವಿ:&lt;/strong&gt;&lt;/h2&gt;&lt;p&gt;ಪಂದ್ಯದ ಫಲಿತಾಂಶ ಏನೇ ಇರಲಿ, ಬೇರೆ ತಂಡದ ಅಭಿಮಾನಿಗಳನ್ನು ನಿಂದಿಸುವುದು ಅಥವಾ ಜಗಳಕ್ಕೆ ಪ್ರಚೋದನೆ ನೀಡುವುದನ್ನು ಮಾಡಬಾರದು. ಕ್ರೀಡೆಯನ್ನು ಕ್ರೀಡಾ ಮನೋಭಾವದಿಂದ ಕಾಣಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ನಗರದ ಪ್ರಮುಖ ವೃತ್ತಗಳು ಮತ್ತು ಜನಸಂದಣಿ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸಿಸಿಟಿವಿ ಮೂಲಕ ಹದ್ದಿನ ಕಣ್ಣು ಇಡಲಾಗಿದೆ.&lt;/p&gt;&lt;p&gt;ಈ ಮಾರ್ಗಸೂಚಿಗಳನ್ನು ಮೀರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಆರ್ ಸಿ ಬಿ ಅಭಿಮಾನಿಗಳು ಜವಾಬ್ದಾರಿಯುತವಾಗಿ ವರ್ತಿಸಿ, ನಗರದ ಶಾಂತಿ ಕಾಪಾಡುವಂತೆ ಕೋರಲಾಗಿದೆ.&lt;/p&gt;]]></content:encoded>
            <category>state</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/bengaluru-police-guidelines-for-rcb-fans-ipl-final-chinnaswamy-stadium-stampede-effect-sat/articleshow-f684gvs"/>
        </item>
        <item>
            <title><![CDATA[ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ಫಿಕ್ಸ್, ಆರ್‌ಸಿಬಿ ನೆನಪಿಟ್ಟುಕೊಂಡು ಎಚ್ಚೆತ್ತ ಅಧಿಕಾರಿ ವರ್ಗ]]></title>
            <link>https://kannada.asianetnews.com/gallery/state/karnataka-cm-oath-ceremony-on-vidhana-soudha-steps-amid-tight-security-arrangements-a55vlah</link>
            <guid isPermaLink="true">https://kannada.asianetnews.com/gallery/state/karnataka-cm-oath-ceremony-on-vidhana-soudha-steps-amid-tight-security-arrangements-a55vlah</guid>
            <pubDate>Fri, 29 May 2026 19:20:43 +0530</pubDate>
            <description><![CDATA[&lt;p&gt;ರಾಜ್ಯ ರಾಜಕಾರಣದಲ್ಲಿ ಎದ್ದ ಬಿರುಗಾಳಿ ಒಂದು ಹಂತಕ್ಕೆ ತಣ್ಣಗಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ನಿಗಧಿಯಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksszm9jvw8vz2phgn5y3vx4k,imgname-cm-oath-ceremony-1780062234203.png" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯ ರಾಜಕಾರಣದಲ್ಲಿ ಎದ್ದ ಬಿರುಗಾಳಿ ಒಂದು ಹಂತಕ್ಕೆ ತಣ್ಣಗಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ನಿಗಧಿಯಾಗಿದೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಕೊನೆಗೂ ಉತ್ತರ ಸಿಗುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.&lt;/p&gt;&lt;img&gt;&lt;p&gt;ಕರ್ನಾಟಕದ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಸ್ಥಳ ನಗಿದಿಯಾಗಿದೆ. ವಿಧಾನಸೌಧದ ಮೆಟ್ಟಿಲು ಮೇಲೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಸ್ಥಳ ನಿಗದಿಯಾಗುತ್ತಿದ್ದಂತೆ ಕಾರ್ಯಕ್ರಮ ಆಯೋಜನೆ ಚಟುವಟಿಕೆ ತೀವ್ರಗೊಂಡಿದೆ.&lt;/p&gt;&lt;img&gt;&lt;p&gt;ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಕಾರ್ಯಕ್ರಮ ನಿಗಧಿಯಾಗುತ್ತಿದ್ದಂತೆ ಅಧಿಕಾರಿ ವರ್ಗ ಎಚ್ಚೆತ್ತುಕೊಂಡಿದೆ. ಆರ್&zwnj;ಸಿಬಿ ವಿಜಯೋತ್ಸವ ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ಸೇರಿ ದುರಂತ ಸಂಭವಿಸಿತ್ತು. ಆರಂಭದಲ್ಲಿ ವಿಧಾನಸೌಧ ಮೆಟ್ಟಿಲು ಮೇಲೆ ಕಾರ್ಯಕ್ರಮ ಬಳಿಕ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ನಡೆದಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಈ ದುರಂತದಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.&lt;/p&gt;&lt;img&gt;&lt;p&gt;ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಿರುವ ಕಾರಣ ಸ್ಥಳಕ್ಕೆ ಡಿಸಿಪಿ ಎಸಿಪಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಜನರು ಆಗಮನ ನಿರೀಕ್ಷೆ ಇರುವುದರಿಂದ ಯಾವುದೇ ಗೊಂದಲ ಆಗದಂತೆ ಎಚ್ಚರಿಕೆ ವಹಿಸಲು ಪ್ಲಾನ್ ಮಾಡಲಾಗುತ್ತಿದೆ.&lt;/p&gt;&lt;img&gt;&lt;p&gt;ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಭ್ರಮ ಜೋರಾಗಿದೆ.&lt;/p&gt;&lt;img&gt;&lt;p&gt;ಕಳೆದ ಕೆಲ ವರ್ಷಗಳಿಂದ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಇದೀಗ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದೆ. ಸಿದ್ದರಾಮಯ್ಯ ಯುಗ ಅಂತ್ಯವಾಗಿದೆ. ರಾಜ್ಯಸಭೆ ಪ್ರವೇಶ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯ ರಾಜಕಾರಣದಲ್ಲೇ ಇರುವುದಾಗಿ ಹೇಳಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/karnataka-cm-oath-ceremony-on-vidhana-soudha-steps-amid-tight-security-arrangements-a55vlah"/>
        </item>
        <item>
            <title><![CDATA[ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಕರ್ನಾಟಕಕ್ಕೆ ಎಚ್ಚರಿಕೆ ಕೊಟ್ಟ ಐಎಂಡಿ!]]></title>
            <link>https://kannada.asianetnews.com/gallery/karnataka-districts/karnataka-weather-update-heavy-rain-likely-for-next-7-days-imd-issues-yellow-alert-gdp-sepgoqg</link>
            <guid isPermaLink="true">https://kannada.asianetnews.com/gallery/karnataka-districts/karnataka-weather-update-heavy-rain-likely-for-next-7-days-imd-issues-yellow-alert-gdp-sepgoqg</guid>
            <pubDate>Fri, 29 May 2026 12:43:25 +0530</pubDate>
            <description><![CDATA[&lt;p&gt;ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 7ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಸೆಕೆ ಮುಂದುವರೆಯಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrzc3b4r2gsc0xpgf8aa2br,imgname-kerala-rain-1780028411236.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 7ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಸೆಕೆ ಮುಂದುವರೆಯಲಿದೆ.&lt;/p&gt;&lt;img&gt;&lt;p&gt;ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ ಚುರುಕಾಗಿದೆ. ಹೀಗಾಗಿ ಮುಂದಿನ ಏಳು ದಿನ ಕಾಲ ಭಾರೀ ಮಳೆ ಬರುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ನೇರ ಪರಿಣಾಮ ಕರಾವಳಿ ತೀರದ ಮೇಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಬಿರುಗಾಳಿಯ ವೇಗ ತೀವ್ರವಾಗಿರುವುದರಿಂದ ಕಡಲು ರೊಚ್ಚಿಗೆದ್ದಿದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಸೂಚನೆ ರವಾನಿಸಿವೆ. ಕರಾವಳಿ ಭಾಗದಲ್ಲಿ ಮೇ 31ರವರೆಗೆ ಹಳದಿ ಎಚ್ಚರಿಕೆ (Yellow Alert) ಜಾರಿಯಲ್ಲಿದ್ದು, ನಿರಂತರ ಮಳೆ ಹಾಗೂ ಬಲವಾದ ಸಮುದ್ರ ಗಾಳಿ ಬೀಸಲಿದೆ.&lt;/p&gt;&lt;img&gt;&lt;p&gt;ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಬೆಳಗಿನಿಂದಲೇ ಸಂಪೂರ್ಣ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆಗೆ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸದ್ಯ ಗರಿಷ್ಠ ತಾಪಮಾನ 32&deg;C ಆಸುಪಾಸಿನಲ್ಲಿದೆ. ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ವಾರಾಂತ್ಯದಲ್ಲಿ (ಮೇ 29 ರಿಂದ ಮೇ 31) ಚಂಡಮಾರುತದ ತೀವ್ರತೆಯು ಸ್ವಲ್ಪ ತಗ್ಗಲಿದ್ದು, ಹಳದಿ ಅಲರ್ಟ್&zwnj;ಗೆ ಇಳಿಕೆಯಾಗಲಿದೆ. ಶನಿವಾರ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಭಾನುವಾರ ಮತ್ತು ಸೋಮವಾರ ಸಂಜೆ ಗುಡುಗು ಸಹಿತ ಮಳೆ ಸುರಿಯಲಿದೆ. ಇದರಿಂದಾಗಿ ತಾಪಮಾನವು 31&deg;C ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ತಂಪಾದ ವಾತಾವರಣವಿರಲಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆಯ ಪ್ರಕಾರ, ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ (Hailstorm) ಮುನ್ಸೂಚನೆ ನೀಡಲಾಗಿದೆ. ಮೇ 30ರಂದು ಈ ಭಾಗಕ್ಕೆ ಹಳದಿ ಎಚ್ಚರಿಕೆ ನೀಡಲಾಗಿದ್ದು, ಅಪಾಯಕಾರಿ ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ಕಲ್ಯಾಣ ಕರ್ನಾಟಕದ ಭಾಗಗಳಾದ ಕಲಬುರಗಿ ಮತ್ತು ರಾಯಚೂರಿನಲ್ಲಿ ಮಾತ್ರ ಗರಿಷ್ಠ 38&deg;C ವರೆಗೆ ತಾಪಮಾನ ದಾಖಲಾಗಲಿದ್ದು, ತೀವ್ರ ಸೆಕೆಯ ವಾತಾವರಣ ಮುಂದುವರೆಯಲಿದೆ.&lt;/p&gt;&lt;img&gt;&lt;ul&gt; &lt;li&gt;ಮುಂದಿನ ಎರಡು ದಿನಗಳಲ್ಲಿ ಹಠಾತ್ ಮತ್ತು ಅಪಾಯಕಾರಿ ಬಿರುಗಾಳಿಗಳು ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಜನರಲ್ಲಿ ಜಾಗರೂಕರಾಗಿರಲು ವಿನಂತಿಸಿದ್ದಾರೆ.&lt;/li&gt; &lt;li&gt;ಚಂಡಮಾರುತ ಅಥವಾ ಭಾರಿ ಗಾಳಿ-ಮಳೆ ಆರಂಭವಾದ ತಕ್ಷಣ ನಾಗರಿಕರು ತೆರೆದ ಪ್ರದೇಶಗಳಲ್ಲಿ ಇರದೆ, ತಕ್ಷಣವೇ ಸುರಕ್ಷಿತ ಹಾಗೂ ಶಾಶ್ವತ ಕಟ್ಟಡಗಳ ಒಳಗೆ ಹೋಗಬೇಕು.&lt;/li&gt; &lt;li&gt;ಹಳೆಯ ಮರಗಳು, ಬೃಹತ್ ಜಾಹೀರಾತು ಫಲಕಗಳು (ಬ್ಯಾನರ್) ಅಥವಾ ವಿದ್ಯುತ್ ಕಂಬಗಳ ಕೆಳಗೆ ನಿಲ್ಲುವುದನ್ನು ಹಾಗೂ ವಾಹನಗಳನ್ನು ನಿಲ್ಲಿಸುವುದನ್ನು ಕಡ್ಡಾಯವಾಗಿ ತಪ್ಪಿಸಬೇಕು.&lt;/li&gt; &lt;li&gt;ತೆರೆದ ಹೊಲಗಳಲ್ಲಿ ಕೊಯ್ಲು ಮಾಡಿ ಇಡಲಾಗಿರುವ ಬೆಳೆಗಳನ್ನು ಮಳೆಯಿಂದ ರಕ್ಷಿಸಲು ತಕ್ಷಣವೇ ಸುರಕ್ಷಿತವಾಗಿ ಮುಚ್ಚಿಡಬೇಕು ಎಂದು ರೈತರಿಗೆ ಸೂಚಿಸಲಾಗಿದೆ.&lt;/li&gt;&lt;/ul&gt;&lt;img&gt;&lt;p&gt;ಪ್ರಸ್ತುತ ಉಂಟಾಗಿರುವ ಮಾನ್ಸೂನ್ ವ್ಯವಸ್ಥೆಯು ಹಂತ-ಹಂತವಾಗಿ ಸ್ಥಿರಗೊಳ್ಳುತ್ತಾ ಸಾಗಲಿದ್ದು, ಜೂನ್ 1 ಮತ್ತು ಜೂನ್ 3 ರ ನಡುವೆ ರಾಜ್ಯಾದ್ಯಂತ ಹವಾಮಾನವು ಅಂತಿಮವಾಗಿ ಸಹಜ ಸ್ಥಿತಿಗೆ ಮರಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/karnataka-weather-update-heavy-rain-likely-for-next-7-days-imd-issues-yellow-alert-gdp-sepgoqg"/>
        </item>
        <item>
            <title><![CDATA['ಇದು ಬೊಂಬೆಯಾಟವಯ್ಯ..' ನಿಜವಾಯ್ತು ಬೊಂಬೆ ಭವಿಷ್ಯ! ಸಿಎಂ ಕುರ್ಚಿ ಬದಲಾವಣೆಗೆ ಮುಂಚೆಯೇ ನುಡಿ!]]></title>
            <link>https://kannada.asianetnews.com/gallery/state/clay-doll-s-prediction-comes-true-karnataka-cm-change-buzz-linked-to-dharwad-village-ritual-rav-5t6c3nq</link>
            <guid isPermaLink="true">https://kannada.asianetnews.com/gallery/state/clay-doll-s-prediction-comes-true-karnataka-cm-change-buzz-linked-to-dharwad-village-ritual-rav-5t6c3nq</guid>
            <pubDate>Fri, 29 May 2026 12:18:45 +0530</pubDate>
            <description><![CDATA[&lt;p&gt;ಧಾರವಾಡದ ಹನುಮನಕೊಪ್ಪ ಗ್ರಾಮದಲ್ಲಿ ಯುಗಾದಿ ದಿನ ಮಣ್ಣಿನ ಬೊಂಬೆ ನೀಡಿದ್ದ ಭವಿಷ್ಯ ಈಗ ನಿಜವಾಗ್ತಿದೆಯಾ? ಸಿಎಂ ಬದಲಾವಣೆ ಚರ್ಚೆ ನಡುವೆ ವೈರಲ್ ಆದ ಭಯಾನಕ ಸಂಪ್ರದಾಯದ ರೋಚಕ ಕಥೆ!&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kss6yrr0x7m0zjcksa1w9c7b,imgname-----------------------2026-05-29t120144.837-1780036363008.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡದ ಹನುಮನಕೊಪ್ಪ ಗ್ರಾಮದಲ್ಲಿ ಯುಗಾದಿ ದಿನ ಮಣ್ಣಿನ ಬೊಂಬೆ ನೀಡಿದ್ದ ಭವಿಷ್ಯ ಈಗ ನಿಜವಾಗ್ತಿದೆಯಾ? ಸಿಎಂ ಬದಲಾವಣೆ ಚರ್ಚೆ ನಡುವೆ ವೈರಲ್ ಆದ ಭಯಾನಕ ಸಂಪ್ರದಾಯದ ರೋಚಕ ಕಥೆ!&lt;/p&gt;&lt;img&gt;&lt;p&gt;ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿ ಸಮೀಪದ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಅಮವಾಸ್ಯೆ ದಿನ ನಡೆಯುವ ವಿಚಿತ್ರ ಆಚರಣೆ ಇದೀಗ ಮತ್ತೆ ರಾಜ್ಯದ ಗಮನ ಸೆಳೆದಿದೆ. ಹಳ್ಳದ ಮಣ್ಣಿನಿಂದ ನಾಲ್ಕು ದಿಕ್ಕುಗಳಿಗೆ ನಾಲ್ಕು ಬೊಂಬೆಗಳನ್ನು ನಿರ್ಮಿಸಿ, ಮರುದಿನ ಬೆಳಿಗ್ಗೆ ಗ್ರಾಮಸ್ಥರು ಅವುಗಳ ಸ್ಥಿತಿಯನ್ನು ಪರಿಶೀಲಿಸುವ ಪದ್ಧತಿ ವರ್ಷಗಳಿಂದ ನಡೆದುಕೊಂಡು ಬಂದಿದೆ.ಸ&lt;/p&gt;&lt;img&gt;&lt;p&gt;ಯಾವ ದಿಕ್ಕಿನ ಬೊಂಬೆಗೆ ಪೆಟ್ಟು ಬೀಳುತ್ತದೆಯೋ, ಆ ದಿಕ್ಕಿನ ನಾಯಕನಿಗೆ ದೊಡ್ಡ ಸಂಕಷ್ಟ ಅಥವಾ ರಾಜಕೀಯ ಬದಲಾವಣೆ ಕಾದಿದೆ ಎಂಬ ನಂಬಿಕೆ ಗ್ರಾಮಸ್ಥರದ್ದು. ಈ ಬಾರಿ ಕರ್ನಾಟಕ ದಿಕ್ಕಿನ ಬೊಂಬೆಗೆ ಪೆಟ್ಟಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಸೂಚನೆ ಎಂದು ಜನರು ಚರ್ಚೆ ಆರಂಭಿಸಿದ್ದರು.&lt;/p&gt;&lt;img&gt;&lt;p&gt;ಬೊಂಬೆಗೆ ಪೆಟ್ಟಾದ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಗರಿಗೆದರಿದ್ದು, ಹನುಮನಕೊಪ್ಪದ ಬೊಂಬೆ ಭವಿಷ್ಯ ಮತ್ತೆ ವೈರಲ್ ಆಗಿದೆ. 'ಈ ಬಾರಿ ದೊಡ್ಡ ನಾಯಕನ ಸ್ಥಾನ ಕದಿಯಲಿದೆ' ಎಂದು ಗ್ರಾಮಸ್ಥರು ಹೇಳಿದ್ದ ಮಾತು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಕುರಿತ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ಬೆನ್ನಲ್ಲೇ, 'ಬೊಂಬೆ ಹೇಳಿದ್ದು ನಿಜವಾಯ್ತಾ?' ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.&lt;/p&gt;&lt;img&gt;&lt;p&gt;ಗ್ರಾಮಸ್ಥರ ಪ್ರಕಾರ, ಈ ಆಚರಣೆಯ ಹಿಂದೆ ಹಲವು ದಶಕಗಳ ವಿಚಿತ್ರ ಘಟನೆಗಳ ಸರಮಾಲೆಯಿದೆ. ಹಿಂದೆ ಉತ್ತರ ದಿಕ್ಕಿನ ಬೊಂಬೆಗೆ ಪೆಟ್ಟಾಗಿದ್ದ ವರ್ಷದಲ್ಲೇ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ನಡೆದಿತ್ತು ಎನ್ನಲಾಗುತ್ತದೆ.&lt;/p&gt;&lt;img&gt;&lt;p&gt;ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರ ಬದಲಾವಣೆಗೂ ಮುನ್ನ ಬೊಂಬೆ ಮುನ್ಸೂಚನೆ ನೀಡಿತ್ತು ಎಂಬ ನಂಬಿಕೆ ಸ್ಥಳೀಯರಲ್ಲಿ ಗಟ್ಟಿಯಾಗಿದೆ. ಹೀಗಾಗಿ ಈ ಆಚರಣೆಯನ್ನು ಕೇವಲ ಮೂಢನಂಬಿಕೆ ಎಂದು ತಳ್ಳಿ ಹಾಕದ ಜನರು, ಪ್ರತಿವರ್ಷವೂ ಭಕ್ತಿಭಾವದಿಂದ &ldquo;ಫಲ ಹಾಕುವ&rdquo; ಸಂಪ್ರದಾಯ ಮುಂದುವರಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಈ ವರ್ಷದ ಬೊಂಬೆ ಭವಿಷ್ಯ ಈಗ ರಾಜ್ಯ ರಾಜಕೀಯದ ಹೈವೋಲ್ಟೇಜ್ ಚರ್ಚೆಯಾಗಿದೆ. ಕರ್ನಾಟಕ ನಾಯಕನ ಬೊಂಬೆಗೆ ಪೆಟ್ಟು ಎಂಬ ವಿಚಾರ ಹೊರಬಿದ್ದ ಬಳಿಕ, ಮುಖ್ಯಮಂತ್ರಿ ಕುರ್ಚಿ ಕಾದಾಟಕ್ಕೂ ಇದು ಸಂಬಂಧವಿದೆಯೇ ಎಂಬ ಕುತೂಹಲ ಹೆಚ್ಚಿದೆ. ಹನುಮನಕೊಪ್ಪದ ಮಣ್ಣಿನ ಬೊಂಬೆಗಳು ಹೇಳುವ ಭವಿಷ್ಯ ಕೇವಲ ಯಾದೃಚ್ಛಿಕವೇ? ಅಥವಾ ನಿಜವಾಗಿಯೂ ರಾಜಕೀಯ ಭೂಕಂಪದ ಮುನ್ಸೂಚನೆಯೇ? ಎಂಬ ಪ್ರಶ್ನೆ ಈಗ ಜನರನ್ನು ಕಾಡತೊಡಗಿದೆ.&lt;/p&gt;]]></content:encoded>
            <category>state</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/state/clay-doll-s-prediction-comes-true-karnataka-cm-change-buzz-linked-to-dharwad-village-ritual-rav-5t6c3nq"/>
        </item>
        <item>
            <title><![CDATA[Karnataka's Yuvan Nidhi: ಯುವ ನಿಧಿ ಅನುದಾನ ಗೃಹಲಕ್ಷ್ಮೀಗೆ ವರ್ಗಾವಣೆ? 3ತಿಂಗಳಿನಿಂದ ಪದವೀಧರರಿಗೆ ತಲುಪದ ನಿರುದ್ಯೋಗ ಭತ್ಯೆ!]]></title>
            <link>https://kannada.asianetnews.com/state/karnataka-s-yuvan-nidhi-scheme-failed-youth-fund-not-reaching-graduates-for-three-months-rav/articleshow-e0zg70n</link>
            <guid isPermaLink="true">https://kannada.asianetnews.com/state/karnataka-s-yuvan-nidhi-scheme-failed-youth-fund-not-reaching-graduates-for-three-months-rav/articleshow-e0zg70n</guid>
            <pubDate>Fri, 29 May 2026 10:08:26 +0530</pubDate>
            <description><![CDATA[ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯ ಹಣ ಕಳೆದ ಮೂರು ತಿಂಗಳಿಂದ ಪದವೀಧರರಿಗೆ ತಲುಪಿಲ್ಲ. ಕೊಪ್ಪಳ ಜಿಲ್ಲೆಯ ಸಾವಿರಾರು ಫಲಾನುಭವಿಗಳು ನಿರುದ್ಯೋಗ ಭತ್ಯೆಗಾಗಿ ಕಾಯುತ್ತಿದ್ದು, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksrzx430rq0frgj706qr4dw0,imgname-----------------------2026-05-29t095845.214-1780028969056.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗಂಗಾವತಿ (ಮೇ.29): &lt;/strong&gt;ಸರ್ಕಾರ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆ ಮುಂದುವರಿದಿದ್ದರೂ ಪದವೀಧರರಿಗೆ ಮಾತ್ರ ಮೂರು ತಿಂಗಳಿಂದ ಯುವ ನಿಧಿ ಯೋಜನೆಯ ನಿರುದ್ಯೋಗ ಭತ್ಯೆ ಮರೀಚಿಕೆಯಾಗಿದೆ.&lt;/p&gt;&lt;p&gt;ಪದವಿ ಮುಗಿಸಿ ಕೆಲಸ ದೊರೆಯದೆ ಯುವ ನಿಧಿ ಯೋಜನೆಗಾಗಿ ತಿಂಗಳ ಕೊನೆಯ ಸಮಯಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ. ಮೂರು ತಿಂಗಳಿಂದ ಬಾರದ ಹಿನ್ನೆಲೆ ಪದವೀಧರರು ಪರದಾಡುವಂತಾಗಿದೆ. ಪದವೀಧರರಿಗೆ ₹3000, ಡಿಪ್ಲೊಮಾ ಪದವೀಧರರಿಗೆ ₹1500 ಸರ್ಕಾರ ನಿಗದಿ ಮಾಡಿದೆ. ಈಗಾಗಲೇ ಗೃಹಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗೆ ಅನುದಾನ ಬರುತ್ತಿದ್ದು, ಯುವ ನಿಧಿ ಫಲಾನುಭವಿಗಳಿಗೆ ಮಾತ್ರ ತಲುಪಲು ವಿಳಂಬವಾಗುತ್ತಿದೆ.&lt;/p&gt;&lt;h2&gt;14404 ಪದವೀಧರ ನೋಂದಣಿ:&lt;/h2&gt;&lt;p&gt;ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 14404 ಪದವೀಧರರು ನೋಂದಣಿ ಮಾಡಿದ್ದು, ಕೊಪ್ಪಳ ತಾಲೂಕಿನಲ್ಲಿ ಜನವರಿ 2026ರ ವೇಳೆಗೆ 3805 ಪದವೀಧರರ ಖಾತೆಗೆ 80292000 ಹಣ ಸಂದಾಯವಾಗಿದೆ. ಕುಷ್ಟಗಿ ತಾಲೂಕಿನಲ್ಲಿ 3037 ಪದವಿ ಫಲಾನುಭವಿಗಳಿದ್ದು, ₹63876000 ಸಂದಾಯವಾಗಿದೆ. ಗಂಗಾವತಿ ತಾಲೂಕಿನಲ್ಲಿ 3381 ಫಲಾನುಭವಿಗಳಿದ್ದು, ₹90637500 ಸಂದಾಯವಾಗಿದೆ. ಕಾರಟಗಿ ತಾಲೂಕಿನಲ್ಲಿ 790 ಫಲಾನುಭವಿಗಳಿದ್ದು, ₹7911000 ಸಂದಾಯವಾಗಿದೆ. ಕನಕಗಿರಿ 727 ಫಲಾನುಭವಿಗಳಿದ್ದು, 70320007 ಸಂದಾಯವಾಗಿದೆ. ಯಲಬುರ್ಗಾ ತಾಲೂಕಿನಲ್ಲಿ 2064 ಫಲಾನುಭವಿಗಳಿದ್ದು, 47167500 ಹಣ ಸಂದಾಯವಾಗಿದ್ದು, ಕುಕನೂರು ತಾಲೂಕಿನಲ್ಲಿ 600 ಫಲಾನುಭವಿಗಳಿದ್ದಾರೆ. ಇವರ ಖಾತೆಗೆ 6286500 ಸಂದಾಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 14404 ಫಲಾನುಭವಿಗಳಿದ್ದು, 303202500 ಹಣ ಸಂದಾಯವಾಗಿದೆ.&lt;/p&gt;&lt;h3&gt;ಗೃಹಲಕ್ಷ್ಮೀ ಯೋಜನೆಗೆ ವರ್ಗಾವಣೆ:&lt;/h3&gt;&lt;p&gt;ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಯುವ ನಿಧಿ ಯೋಜನೆಯ ಕೋಟ್ಯಂತರ ಅನುದಾನ ಗೃಹಲಕ್ಷ್ಮೀ ಯೋಜನೆಗೆ ವರ್ಗಾವಣೆಯಾಗಿರುವದರ ಬಗ್ಗೆ ದೂರು ಕೇಳಿ ಬರುತ್ತದೆ. ಕಳೆದ ಫೆಬ್ರುವರಿಯಿಂದ ಯೋಜನೆ ಹಣ ತಲುಪದ ಕಾರಣ ಫಲಾನುಭವಿಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಯುವ ನಿಧಿ ಕಚೇರಿಗೆ ಸಂಪರ್ಕ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಈ ಯೋಜನೆ ಆಶ್ರಯವಾಗಿದೆ. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಬಾರದ ಕಾರಣ ವಂಚಿತರಾಗುತ್ತಿದ್ದಾರೆ.&lt;/p&gt;&lt;p&gt;ಕಳೆದ ಮೂರು ತಿಂಗಳಿಂದ ಯುವ ನಿಧಿ ಹಣ ಬಂದಿಲ್ಲ, ಪ್ರತಿ ತಿಂಗಳು ಈ ಯೋಜನೆಯ ಅಪ್ಡೇಟ್ ಮಾಡುತ್ತಾ ಬಂದಿರುತ್ತೇವೆ ಈ ಯೋಜನೆಯ ಅನುದಾನ ಗೃಹ ಲಕ್ಷ್ಮಿ ಯೋಜನೆಗೆ ವರ್ಗಾಯಿಸಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ.&lt;/p&gt;&lt;p&gt;&lt;strong&gt;ಯುವ ನಿಧಿ ಫಲಾನುಭವಿ, ಕೊಪ್ಪಳ ಜಿಲ್ಲೆ&lt;/strong&gt;&lt;/p&gt;&lt;p&gt;ಕಳೆದ ಮೂರು ತಿಂಗಳಿಂದ ಯುವ ನಿಧಿ ಬಂದಿಲ್ಲ. ಕೆಲವೊಂದು ತಾಂತ್ರಿಕ ಕಾರಣದಿಂದ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ತಲುಪಿಲ್ಲ. ಈ ಕುರಿತು ಸಚಿವರ ಜತೆಗೆ ಮಾತನಾಡಿದ್ದು, ಇನ್ನೂ 3-4 ದಿನಗಳಲ್ಲಿ ಫಲಾನುಭವಿಗಳಿಗೆ ಭತ್ಯೆ ತಲುಪುತ್ತದೆ.&lt;/p&gt;&lt;p&gt;ರಡ್ಡಿ ಶ್ರೀನಿವಾಸ ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಯೋಜನೆ ಕೊಪ್ಪಳ&lt;/p&gt;&lt;p&gt;&lt;strong&gt;ಫೋಟು 26 ಜಿಎನ್ ಜಿ1- ಯುವ ನಿಧಿ&lt;/strong&gt;&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-s-yuvan-nidhi-scheme-failed-youth-fund-not-reaching-graduates-for-three-months-rav/articleshow-e0zg70n"/>
        </item>
        <item>
            <title><![CDATA[Siddaramaiah: ಸರ್ವ ಸಮುದಾಯದ ನಾಯಕ ಸಿದ್ದರಾಮಯ್ಯ - ಸಚಿವ ಈಶ್ವರ್ ಖಂಡ್ರೆ]]></title>
            <link>https://kannada.asianetnews.com/politics/siddaramaiah-the-leader-of-all-communities-says-minister-ishwar-khandre-rav/articleshow-dcrzp1t</link>
            <guid isPermaLink="true">https://kannada.asianetnews.com/politics/siddaramaiah-the-leader-of-all-communities-says-minister-ishwar-khandre-rav/articleshow-dcrzp1t</guid>
            <pubDate>Fri, 29 May 2026 09:47:13 +0530</pubDate>
            <description><![CDATA[ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಸಚಿವ ಈಶ್ವರ ಖಂಡ್ರೆ ಶ್ಲಾಘಿಸಿದ್ದಾರೆ. ಅನ್ನಭಾಗ್ಯ, ಪಂಚ ಗ್ಯಾರಂಟಿಗಳಂತಹ ಯೋಜನೆಗಳು, ಬಸವತತ್ವಕ್ಕೆ ನೀಡಿದ ಕೊಡುಗೆ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅವರ ಬದ್ಧತೆಯನ್ನು ಈ ಲೇಖನ ವಿವರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksrymmenae4z713rzc3bng39,imgname-----------------------2026-05-29t093651.596-1780027642325.jpg" type="image/jpeg" height="390" width="690"/>
            <content:encoded><![CDATA[&lt;p&gt;- &lt;strong&gt;ಈಶ್ವರ ಬಿ.ಖಂಡ್ರೆ, ಸಚಿವರು.&lt;/strong&gt;&lt;/p&gt;&lt;p&gt;ಬುದ್ಧ-ಬಸವ-ಅಂಬೇಡ್ಕರ್ ವಾದಿ ಸಿದ್ದರಾಮಯ್ಯನವರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಮೇರು ನಾಯಕರು. 2013ರಲ್ಲಿ ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದೂ ಬಸವ ಜಯಂತಿ ದಿನದಂದೇ. ರೈತರ ಸಾಲಮನ್ನಾ, ಅನ್ನಭಾಗ್ಯ, ಕ್ಷೀರಭಾಗ್ಯ... ಮೊದಲಾದ ಹಲವು ಯಶಸ್ವಿ ಯೋಜನೆಗಳ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸರ್ವಜನ ಹಿತಕ್ಕಾಗಿ ಶ್ರಮಿಸಿದ ಸಿದ್ದರಾಮಯ್ಯ ಅವರು, ನಮಗೆ ಮಾರ್ಗದರ್ಶಕರಾಗಿ ನೀಡಿದ ಸಲಹೆಗಳು ಅಮೂಲ್ಯ.&lt;/p&gt;&lt;h2&gt;17 ಬಜೆಟ್&zwnj;ಗಳನ್ನು ಮಂಡಿಸಿದ ಅಪರೂಪದ ನಾಯಕ&lt;/h2&gt;&lt;p&gt;ರಾಜ್ಯದ ಇತಿಹಾಸದಲ್ಲೇ ದಾಖಲೆಯ 17 ಬಜೆಟ್&zwnj;ಗಳನ್ನು ಮಂಡಿಸಿದ ಅಪರೂಪದ ಸಾಧನೆಯೊಂದಿಗೆ 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅತಿ ದೀರ್ಘಕಾಲ ಆಡಳಿತ ನಡೆಸಿದ ಕರುನಾಡ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯ ಜೊತೆಗೆ, ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಸೋಲನ್ನು ಅನುಭವಿಸಿದ ಬಳಿಕ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಕೀರ್ತಿಗೂ ಭಾಜನರಾದವರು.&lt;/p&gt;&lt;h3&gt;ಪಂಚ ಗ್ಯಾರಂಟಿಗಳನ್ನ ಯಶಸ್ವಿಯಾಗಿ ಜಾರಿ ಮಾಡಿದ ಕೀರ್ತಿ&lt;/h3&gt;&lt;p&gt;ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ಹಿಂದುಳಿದವರು, ನಿರ್ಗತಿಕರು, ಅಲ್ಪಸಂಖ್ಯಾತರು ಹಾಗೂ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಮತ್ತು ಪಕ್ಷ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ಬಡತನ ನಿರ್ಮೂಲನೆಯ ಜೊತೆಗೆ ರಾಜ್ಯವನ್ನು ಪ್ರಗತಿಯ ಪಥದಲ್ಲಿ ತೆಗೆದುಕೊಂಡು ಹೋದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.&lt;/p&gt;&lt;p&gt;ವಿಶ್ವಗುರು ಬಸವಣ್ಣ ಅವರನ್ನು ಕರುನಾಡ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವಂತೆ ನಾವು ನಿಯೋಗ ತೆರಳಿ ಮನವಿ ಮಾಡಿದಾಗ, ಕೂಡಲೇ ಅದಕ್ಕೆ ಸಮ್ಮತಿಸಿ ಅಧಿಕೃತ ಘೋಷಣೆ ಮಾಡಿದ ಸಿದ್ದರಾಮಯ್ಯ ಅವರು, ಬಸವಾದಿ ಶರಣರ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ಅತ್ಯಾಧುನಿಕ ಅನುಭವ ಮಂಟಪ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ 280 ಕೋಟಿ ರೂ.ಬಿಡುಗಡೆ ಮಾಡುವ ಮೂಲಕ ತಮ್ಮ ಬಸವಭಕ್ತಿ ಮೆರೆದಿದ್ದಾರೆ. ಜೊತೆಗೆ, ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5,000 ಕೋಟಿ ರೂ.ಬಜೆಟ್ ಅನುದಾನ ನೀಡಿದ ಸಿದ್ದರಾಮಯ್ಯನವರಿಗೆ ಇಡೀ ಕಲ್ಯಾಣ ಕರ್ನಾಟಕ ಋಣಿಯಾಗಿದೆ.&lt;/p&gt;&lt;p&gt;2013ಕ್ಕೆ ಮುನ್ನ ಪ್ರಬಲ ವಿರೋಧ ಪಕ್ಷದ ನಾಯಕರಾಗಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ ಅವರ ದಿಟ್ಟತನ ಎಲ್ಲರಿಗೂ ಸ್ಫೂರ್ತಿಯಾಗಿತ್ತು. ವಿಧಾನಸಭೆಯಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿದವರು ಬಹಳ ಕಡಿಮೆ. ಅವರು ಮಾಹಿತಿಯ ಗಣಿಯಾಗಿದ್ದರು. ಅವರ ನೆನಪಿನ ಶಕ್ತಿ ಅಗಾಧ. ಇದು ಪ್ರತಿಪಕ್ಷದವರನ್ನೇ ಪೇಚಿಗೆ ಸಿಲುಕಿಸುತ್ತಿತ್ತು.&lt;/p&gt;&lt;p&gt;ಸುದೀರ್ಘ ಸಮಯ ಮುಖ್ಯಮಂತ್ರಿ ಹುದ್ದೆಯಲ್ಲಿ ಪ್ರಾಮಾಣಿಕವಾಗಿ, ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಕರುನಾಡ ಜನರ ಮನ ಗೆದ್ದ ಜನಪ್ರಿಯ ನಾಯಕ, ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವೆ, ಸಾಮಾಜಿಕ ನ್ಯಾಯಕ್ಕಾಗಿ ಅವರು ನಡೆಸಿದ ಹೋರಾಟ ಹಾಗೂ ಜನಪರ ಆಡಳಿತ ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಲಿದೆ. ಸಿದ್ದರಾಮಯ್ಯ ಅವರ ಅಮೂಲ್ಯ ಸೇವೆಯನ್ನು ಕರುನಾಡು ಸದಾ ಸ್ಮರಿಸುತ್ತದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/siddaramaiah-the-leader-of-all-communities-says-minister-ishwar-khandre-rav/articleshow-dcrzp1t"/>
        </item>
        <item>
            <title><![CDATA[Bellanduru flyover: ಬೆಳ್ಳಂದೂರು ಸಮೀಪ ಖಾಸಗಿ ನಿರ್ಮಿತ ಫ್ಲೈಓವರ್ ಶೀಘ್ರ ಜನಸಂಚಾರಕ್ಕೆ ಮುಕ್ತ]]></title>
            <link>https://kannada.asianetnews.com/state/privately-built-flyover-near-bellanduru-opened-for-public-traffic-soon-rav/articleshow-yc5p286</link>
            <guid isPermaLink="true">https://kannada.asianetnews.com/state/privately-built-flyover-near-bellanduru-opened-for-public-traffic-soon-rav/articleshow-yc5p286</guid>
            <pubDate>Fri, 29 May 2026 08:27:20 +0530</pubDate>
            <description><![CDATA[&lt;p&gt;ಬೆಳ್ಳಂದೂರು ಹೊರ ವರ್ತುಲ ರಸ್ತೆಯಿಂದ HAL ವಿಮಾನ ನಿಲ್ದಾಣ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಖಾಸಗಿ ಫ್ಲೈಓವರ್ ಶೀಘ್ರದಲ್ಲೇ ಸಾರ್ವಜನಿಕ ಸಂಚಾರಕ್ಕೆ ಮುಕ್ತ. ಈ ಖಾಸಗಿ ಮೇಲ್ಸೇತುವೆಯಿಂದ, ಕಾಡುಬೀಸನಹಳ್ಳಿ ಮತ್ತು ಮಾರತ್ತಹಳ್ಳಿ ಬಳಿ ಟ್ರಾಫಿಕ್ ಜಾಮ್ ಕಡಿಮೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrt63gr2x9c6g4yk2s9s98h,imgname-----------------------2026-05-29t081907.236-1780022971927.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.29)&lt;/strong&gt;: ಬೆಳ್ಳಂದೂರು(Bellanduru) ಹೊರ ವರ್ತುಲ ರಸ್ತೆಯಿಂದ ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆ(HAL Airport Road())ಗೆ ಸಂಪರ್ಕಿಸುವ ಖಾಸಗಿ ಸಂಸ್ಥೆ ನಿರ್ಮಿತ 1.5 ಕಿ.ಮೀ ಉದ್ದದ ಫ್ಲೈಓವರ್(Flyover) ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಶೀಘ್ರದಲ್ಲೇ ಮುಕ್ತವಾಗಲಿದೆ.&lt;/p&gt;&lt;p&gt;ಹೊರ ವರ್ತುಲ ರಸ್ತೆಯಲ್ಲಿರುವ ಪ್ರೆಸ್ಟೀಜ್ ಟೆಕ್&zwnj;ಪಾರ್ಕ್&zwnj;(Prestige Techpark) ಮೂಲಕ ಹಾದು ಹೋಗುವ ಈ ಫ್ಲೈಓವರ್&zwnj; ವಿವಿಧ ಟೆಕ್&zwnj;ಪಾರ್ಕ್&zwnj;ಗಳ ವಾಹನಗಳು, ಉದ್ಯೋಗಿಗಳು ಓಡಾಟಕ್ಕೆ ಅನುಕೂಲ ಕಲ್ಪಿಸುತ್ತದೆ. ಅನುಮೋದನೆ ಪಡೆದ 1 ವರ್ಷದಲ್ಲೇ ನಿರ್ಮಾಣ ಕೆಲಸ ಪೂರ್ಣಗೊಳಿಸಲಾಗಿದೆ. ಟೆಕ್&zwnj;ಪಾರ್ಕ್&zwnj;ನ ಉದ್ಯೋಗಿಗಳ ಸಂಚಾರಕ್ಕೆ ಸೋಮವಾರದಿಂದ ಮುಕ್ತಗೊಳಿಸಲಾಗಿದೆ. ಸಣ್ಣ ಪುಟ್ಟ ಕೆಲಸಗಳು ಬಾಕಿ ಉಳಿದಿದ್ದು, ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಶೀಘ್ರದಲ್ಲೇ ಮುಕ್ತಗೊಳ್ಳಲಿದೆ.&lt;/p&gt;&lt;p&gt;ಕಳೆದ ವರ್ಷ ಏಪ್ರಿಲ್&zwnj;ನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಪಾಲಿಕೆಯಿಂದ ಅನುಮೋದನೆ ನೀಡಲಾಗಿತ್ತು. 1 ವರ್ಷದಲ್ಲಿ ಕಾಮಗಾರಿಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಪ್ರೆಸ್ಟೀಜ್ ಟೆಕ್&zwnj; ಪಾರ್ಕ್&zwnj; ಒಳಗಿನಿಂದಲೇ ಹಾದು ಹೋಗುವ ಈ ಫ್ಲೈಓವರ್&zwnj; ಬಹುತೇಕ ಮಳೆ ನೀರು ಕಾಲುವೆಯ ಬಫರ್ ವಲಯ ಸೇರಿ ಸಾರ್ವಜನಿಕ ರಸ್ತೆಯಲ್ಲಿ ನಿರ್ಮಾಣಗೊಂಡಿದೆ.&lt;/p&gt;&lt;p&gt;ಒಪ್ಪಂದದ ಪ್ರಕಾರ ಈ ಫ್ಲೈಓವರ್&zwnj;ನಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪೂರ್ವ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ತಿಳಿಸಿದ್ದಾರೆ.&lt;/p&gt;&lt;h2&gt;ದಟ್ಟಣೆ ನಿವಾರಣೆ&lt;/h2&gt;&lt;p&gt;ಟೆಕ್&zwnj;ಪಾರ್ಕ್&zwnj;ನ ಸುಮಾರು 5000 ಉದ್ಯೋಗಿಗಳಿಗೆ ಅನುಕೂಲ ಕಲ್ಪಿಸುವ ಜೊತೆಗೆ ಹೊರ ವರ್ತುಲ ರಸ್ತೆಯಿಂದ ಯಮಲೂರು ಮತ್ತು ಎಚ್&zwnj;ಎಎಲ್ ಏರ್&zwnj;ಪೋರ್ಟ್ ಕಡೆ ತೆರಳುವ ವಾಹನ ಸವಾರರಿಗೆ ಪರ್ಯಾಯ ಮಾರ್ಗವಾಗಲಿದೆ. ಕಾಡುಬೀಸನಹಳ್ಳಿ ಹಾಗೂ ಮಾರತ್ತಹಳ್ಳಿ ಬಳಿ ಭಾರಿ ಟ್ರಾಫಿಕ್ ಜಾಮ್ ಉಂಟಾಗುವ ಕಾರಣ ಪರ್ಯಾಯ ಮಾರ್ಗವಾಗಿ ಈ ಫ್ಲೈಓವರ್ ಹೆಚ್ಚು ಅನುಕೂಲವಾಗಲಿದೆ. ಈಗಾಗಲೇ ಬೆಳ್ಳಂದೂರು ಕೆರೆಯ ರಸ್ತೆಯನ್ನು ಅಗಲೀಕರಣ ಮಾಡಲಾಗಿದೆ ಎಂದು ಜಿಬಿಎ ಅಧಿಕಾರಿ ತಿಳಿಸಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/privately-built-flyover-near-bellanduru-opened-for-public-traffic-soon-rav/articleshow-yc5p286"/>
        </item>
        <item>
            <title><![CDATA[ಮಾಲೀಕನ ಸಾಲಕ್ಕೆ ಬಾಡಿಗೆದರ ಹೊಣೆಯಲ್ಲ; ಹೈಕೋರ್ಟ್ ಮಹತ್ವದ ತೀರ್ಪು, ಏನಿದು ಪ್ರಕರಣ?]]></title>
            <link>https://kannada.asianetnews.com/state/landlord-s-loan-is-not-tenant-s-liability-karnataka-hc-significant-verdict-what-is-the-case-about-rav/articleshow-94ssgrt</link>
            <guid isPermaLink="true">https://kannada.asianetnews.com/state/landlord-s-loan-is-not-tenant-s-liability-karnataka-hc-significant-verdict-what-is-the-case-about-rav/articleshow-94ssgrt</guid>
            <pubDate>Fri, 29 May 2026 08:02:22 +0530</pubDate>
            <description><![CDATA[&lt;p&gt;ಬ್ಯಾಂಕ್ ಸಾಲ ಸುಸ್ತಿದಾರರಾದ ಮಾಲೀಕರ ಆಸ್ತಿಯಲ್ಲಿರುವ ಬಾಡಿಗೆದಾರರು, ಸಾಲ ವಸೂಲಾತಿ ನ್ಯಾಯಾಧಿಕರಣದ (ಡಿಆರ್&zwnj;ಟಿ) ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಲದ ಶೇ.50ರಷ್ಟು ಠೇವಣಿ ಇಡುವುದು ಕಡ್ಡಾಯವಲ್ಲವೆಂದು ಹೈಕೋರ್ಟ್ ಆದೇಶಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k5xvrhbtf3jycpmrdj3gwwck,imgname-karnataka-high-court-1758717560186.jpg" type="image/jpeg" height="390" width="690"/>
            <content:encoded><![CDATA[&lt;p&gt;- ಮೇಲ್ಮನವಿ ಸಲ್ಲಿಸಲು&zwnj; 50% ಠೇವಣಿ ಕಡ್ಡಾಯವಲ್ಲ: ಕೋರ್ಟ್&zwnj;&lt;/p&gt;&lt;p&gt;&lt;strong&gt;&amp;nbsp;ಬೆಂಗಳೂರು (ಮೇ.29): &lt;/strong&gt;ಬ್ಯಾಂಕುಗಳಿಂದ ಸಾಲ ಪಡೆದ ಆಸ್ತಿ-ಕಟ್ಟಡಗಳ ಮಾಲೀಕರು ಸುಸ್ತಿದಾರರಾದಾಗ, ಆ ಆಸ್ತಿಯಲ್ಲಿ ವಾಸವಿರುವ ಅಥವಾ ಕಚೇರಿ ಹೊಂದಿರುವ ಬಾಡಿಗೆದಾರರು ಸಾಲ ವಸೂಲಾತಿಗೆ ನ್ಯಾಯಾಧಿಕರಣ (ಡಿಆರ್&zwnj;ಟಿ) ನೀಡಿದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು&zwnj; ಸಾಲದ ಮೊತ್ತದ ಶೇ.50ರಷ್ಟನ್ನು ಠೇವಣಿ ಇಡಬೇಕು ಎನ್ನುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.&lt;/p&gt;&lt;p&gt;ಈ ಕುರಿತಂತೆ ಇಟ್ಟಿಯಂ ಸಿಸ್ಟಮ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾಜ್ ಅವರ ನೇತೃತ್ವದ ವಿಭಾಗೀಯ ಪೀಠ, ಕಟ್ಟಡದಲ್ಲಿರುವ ಬಾಡಿಗೆದಾರರನ್ನು ಯಾವುದೇ ಕಾರಣಕ್ಕೂ ಸಾಲಗಾರ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹಾಗಾಗಿ, ಸಾಲದ ಹೊಣೆಗಾರಿಕೆಯನ್ನು ಬಾಡಿಗೆದಾರನ ಮೇಲೆ ಹೇರಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.&lt;/p&gt;&lt;p&gt;ಹಣಕಾಸು ಆಸ್ತಿಗಳ ಸಕ್ಯುರಿಟೈಸೇಶನ್ ಮತ್ತು ಪುನರ್&zwnj;ನಿರ್ಮಾಣ ಮತ್ತು ಭದ್ರತಾ ಆಸಕ್ತಿ ಜಾರಿ(ಸರ್ಫೇಸಿ) ಕಾಯ್ದೆಯ ಸೆಕ್ಷನ್ 18ರಲ್ಲಿ &lsquo;ಸಾಲಗಾರ&rsquo; ಮತ್ತು &lsquo;ಸಾಲಗಾರನಲ್ಲದ ಇತರ ವ್ಯಕ್ತಿ&rsquo; ಎಂದು ಇಬ್ಬರನ್ನೂ ಪ್ರತ್ಯೇಕವಾಗಿ ಉಲ್ಲೇಖಿಸಲಾಗಿದೆ.&zwnj; 2ನೇ ನಿಬಂಧನೆಯಲ್ಲಿ ಕೇವಲ &lsquo;ಸಾಲಗಾರ&rsquo; ಮಾತ್ರ ಶೇ.50ರಷ್ಟು ಪೂರ್ವ ಠೇವಣಿ ಇಡಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಹಾಗಾಗಿ, ಸಾಲಗಾರನಲ್ಲದ 3ನೇ ವ್ಯಕ್ತಿಯ ಮೇಲೆ ಸಾಲದ ಹೊರೆ ಹೊರಿಸುವುದು ತಾರತಮ್ಯ ಮತ್ತು ಅನ್ಯಾಯವಾಗಲಿದೆ ಎಂದು ಪೀಠ ಹೇಳಿದೆ.&lt;/p&gt;&lt;h2&gt;ಪ್ರಕರಣದ ವಿವರ:&lt;/h2&gt;&lt;p&gt;ಉತ್ತಮ್ ಚಂದಾನಿ ಎಂಬುವರ ಮಾಲೀಕತ್ವದ ಬೆಂಗಳೂರಿನ ರಿಚ್&zwnj;ಮಂಡ್ ರಸ್ತೆಯಲ್ಲಿರುವ &lsquo;ಕಾನ್ಸುಲೇಟ್-1&rsquo; ಕಟ್ಟಡದ 4ನೇ ಮಹಡಿಯಲ್ಲಿ 7,045 ಚದರಡಿಯಲ್ಲಿ ಇಟ್ಟಿಯಂ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿ 2001 ರಿಂದ ಬಾಡಿಗೆಗೆ ಇದೆ. ಈ ಕಟ್ಟಡದ ಮಾಲೀಕ ಉತ್ತಮ್ ಚಂದಾನಿ ಎಂಬುವವರು ಮುಂಬೈನ &lsquo;ಭಾರತ್ ಕೋ-ಆಪರೇಟಿವ್ ಬ್ಯಾಂಕ್&zwnj;ನಿಂದ&rsquo; ಸಾಲ ಪಡೆದಿದ್ದರು. ಆದರೆ, ಸಾಲ ಮರುಪಾವತಿಸಲು ವಿಫಲರಾದಾಗ ಬ್ಯಾಂಕ್ ''ಸರ್ಫೇಸಿ&rsquo; ಕಾಯ್ದೆಯಲ್ಲಿ ಕಟ್ಟಡದ ಸ್ವಾಧೀನ&zwnj; ಪ್ರಕ್ರಿಯೆ ಆರಂಭಿಸಿ ಕಂಪನಿ ಕಚೇರಿಯನ್ನು ತೆರವಿಗೆ ಮುಂದಾಯಿತು. ಅದನ್ನು ಪ್ರಶ್ನಿಸಿ ಕಂಪನಿಯು ಸಾಲ ವಸೂಲಾತಿ ನ್ಯಾಯಾಧೀಕರಣದ (ಡಿಆರ್&zwnj; ಟಿ) ಮೊರೆ ಹೋಗಿತ್ತು. ಆ ಅರ್ಜಿಯನ್ನು ಡಿಆರ್&zwnj;ಟಿಯು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಕಂಪನಿಯು ಚೆನ್ನೈನ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಿತ್ತು.&lt;/p&gt;&lt;p&gt;ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಬೇಕಾದರೆ ನಿಯಮಾವಳಿಗಳ ಪ್ರಕಾರ ಪೂರ್ವ ಠೇವಣಿ ಇಡಬೇಕು ಎಂದು ಡಿಆರ್&zwnj;ಎಟಿ ಆದೇಶಿಸಿ ಮೇಲ್ಮನವಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು&zwnj;.&zwnj; ಇದೀಗ ಚೆನ್ನೈನ ಡಿಆರ್ ಟಿ &zwnj;ಆದೇಶ ರದ್ದುಗೊಳಿಸಿರುವ ಹೈಕೋರ್ಟ್, ಇಟ್ಟಿಯಂ ಸಿಸ್ಟಮ್ಸ್ ಕಂಪನಿಯಿಂದ ಯಾವುದೇ ಪೂರ್ವ ಠೇವಣಿ ಬಯಸದೆ ಅವರ ಮೇಲ್ಮನವಿಯನ್ನು ಮೆರಿಟ್ ಆಧಾರದ ಮೇಲೆ ಆದಷ್ಟು ಬೇಗ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/landlord-s-loan-is-not-tenant-s-liability-karnataka-hc-significant-verdict-what-is-the-case-about-rav/articleshow-94ssgrt"/>
        </item>
        <item>
            <title><![CDATA[Pavagada Venkataramanappa passes away: ಬೆಳ್ಳಬೆಳಗ್ಗೆ ಪಾವಗಡ ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ]]></title>
            <link>https://kannada.asianetnews.com/state/former-karnataka-minister-venkataramanappa-passes-away-after-heart-attack-in-bengaluru-hospital/articleshow-2rvqu4g</link>
            <guid isPermaLink="true">https://kannada.asianetnews.com/state/former-karnataka-minister-venkataramanappa-passes-away-after-heart-attack-in-bengaluru-hospital/articleshow-2rvqu4g</guid>
            <pubDate>Fri, 29 May 2026 07:44:27 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ಅಗಲಿಕೆಯಿಂದ, ಅವರ ಪುತ್ರ ಹಾಗೂ ಹಾಲಿ ಶಾಸಕ ಎಚ್&zwnj;.ವಿ ವೆಂಕಟೇಶ್&zwnj; ಅವರಿಗೆ ಪಿತೃ ವಿಯೋಗ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrqqaqr2vbz79w6zc1scjmm,imgname-----------------------2026-05-29t072100.550-1780020390648.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ.29):&lt;/strong&gt; ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ (Fortis Hospital) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಹೃದಯಾಘಾತ(Heart attack)ದಿಂದ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ; ಪಾವಗಡ ರಾಜಕೀಯದ ಪ್ರಭಾವಿ ನಾಯಕ&lt;/h2&gt;&lt;p&gt;ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಹಾಗೂ ಜನಪರ ರಾಜಕಾರಣದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಅವರು, ತುಮಕೂರು ಜಿಲ್ಲೆ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದರು. ಅವರ ಅಗಲಿಕೆಯಿಂದ ಪಾವಗಡ ಜನರಿಗೆ ಆಘಾತವುಂಟು ಮಾಡಿದೆ.&lt;/p&gt;&lt;h3&gt;ಶಾಸಕ ಎಚ್&zwnj;.ವಿ ವೆಂಕಟೇಶ್&zwnj;ಗೆ ಪಿತೃ ವಿಯೋಗ&lt;/h3&gt;&lt;p&gt;ಮಾಜಿ ಸಚಿವರ ನಿಧನದಿಂದ ಪಾವಗಡ ಶಾಸಕ ಎಚ್&zwnj;.ವಿ ವೆಂಕಟೇಶ್ ಅವರಿಗೆ ಪಿತೃ ವಿಯೋಗ ಉಂಟಾಗಿದೆ. ರಾಜಕೀಯ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೆಂಕಟರಮಣಪ್ಪ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ. ಹಲವು ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೊಬ್ಬ ಹಿರಿಯ ನಾಯಕರನ್ನು ಕಳೆದುಕೊಂಡಿದೆ.&lt;/p&gt;]]></content:encoded>
            <category>state</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/former-karnataka-minister-venkataramanappa-passes-away-after-heart-attack-in-bengaluru-hospital/articleshow-2rvqu4g"/>
        </item>
        <item>
            <title><![CDATA[9ನೇ ಕ್ಲಾಸ್ ಹುಡ್ಗಿಗೆ ಲೈಂಗಿಕ ಕಿರುಕುಳ; ಥಿಯೇಟರ್ ಮಾಲೀಕನ ಜಾಮೀನು ರದ್ದು, ಏನಿದು ಪ್ರಕರಣ?]]></title>
            <link>https://kannada.asianetnews.com/state/karnaaka-hc-bail-revoked-for-man-accused-of-harassing-threatening-minor-rav/articleshow-wciwvlx</link>
            <guid isPermaLink="true">https://kannada.asianetnews.com/state/karnaaka-hc-bail-revoked-for-man-accused-of-harassing-threatening-minor-rav/articleshow-wciwvlx</guid>
            <pubDate>Fri, 29 May 2026 07:18:31 +0530</pubDate>
            <description><![CDATA[&lt;p&gt;ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ ಹಾಗೂ ಆಸಿಡ್ ದಾಳಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ರಾಮನಗರದ ಚಿತ್ರಮಂದಿರ ಮಾಲೀಕ ಎನ್. ಮಂಜುನಾಥ್&zwnj;ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಆರೋಪಿ ವಿರುದ್ಧ ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಾಗಳಿವೆ ಜಾಮೀನು ನೀಡಲು ಸಾಧ್ಯವಿಲ್ಲವೆಂದ ಕೋರ್ಟ್.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrp1jmath62ek5h3dv0kyvg,imgname-----------------------2026-05-29t070622.645-1780018629258.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.29): &lt;/strong&gt;ಅಪ್ರಾಪ್ತೆಗೆ&zwnj; ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಜಾತಿ ನಿಂದನೆ ಮಾಡಿದ ಹಾಗೂ ಆಸಿಡ್ ದಾಳಿ ಮೂಲಕ&zwnj; ಕೊಲೆ ಬೆದರಿಕೆಯೊಡ್ಡಿದ 52 ವರ್ಷದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್(Karnataka High court) ನಿರಾಕರಿಸಿದೆ.&lt;/p&gt;&lt;p&gt;ರಾಮನಗರ(Ramanagar)ದ ಶಂಕರ ಚಿತ್ರಮಂದಿರ()ದ ಮಾಲೀಕ(Shankara Theatre Owner) 52 ವರ್ಷದ ಎನ್. ಮಂಜುನಾಥ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠ ಆದೇಶಿಸಿದೆ.&lt;/p&gt;&lt;p&gt;ಸಂತ್ರಸ್ಥ ಬಾಲಕಿಯ ಪ್ರಾಮಾಣೀಕೃತ ಹೇಳಿಕೆ ಮತ್ತು ಪ್ರಕರಣದ ದಾಖಲೆಗಳನ್ನು ಗಮನಿಸಿದರೆ ಆರೋಪಿಯ ವಿರುದ್ಧ ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಾಧಾರಗಳು ಕಂಡುಬರುತ್ತಿವೆ. ದೂರು ನೀಡಿದ ಹಿನ್ನೆಲೆಯಲ್ಲಿ ಮನೆಗೆ ಕೆಲವು ಹುಡುಗರನ್ನು ಕಳಿಸಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್&zwnj;ಸಿ/ಎಸ್&zwnj;ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಅಪರಾಧ ದೃಢಪಟ್ಟರೆ, ನಿರೀಕ್ಷಣಾ ಜಾಮೀನು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದೆ. ಆದರೆ, ಆರೋಪಿ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು. ಈ ಅರ್ಜಿಯನ್ನು&zwnj; ನ್ಯಾಯಾಲಯ ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ಸೂಚಿಸಿದೆ.&lt;/p&gt;&lt;h2&gt;ಪ್ರಕರಣದ ಹಿನ್ನೆಲೆ&lt;/h2&gt;&lt;p&gt;ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಹಾಗೂ ಕೃಷಿಕನಾದ ಮಂಜುನಾಥ, 9ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತೆ ಬಾಲಕಿ ಶಾಲೆಯ ಬಳಿ ನಿಂತು ಆಕೆಗೆ ಅಸಭ್ಯವಾಗಿ ಸ್ಪರ್ಶಿಸುವುದು ಮತ್ತು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದರು. &zwnj;ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದರಿಂದ ಕೋಪಗೊಂಡ ಆರೋಪಿ, ಕಳೆದ ಮಾ.14ರಂದು ಬಾಲಕಿಯ ಮನೆ ಬಳಿ ಹೋಗಿ ಆಕೆಯ ಜಾತಿಯ ಹೆಸರಿನಲ್ಲಿ ನಿಂದಿಸಿದ್ದ. ಹಾಗೆಯೇ ತನ್ನೊಂದಿಗೆ 4 ಜನ ಹುಡುಗರನ್ನು ಕರೆದೊಯ್ದು ಬಾಲಕಿ ಹಾಗೂ ಆಕೆಯ ಅಜ್ಜಿಗೆ ಕೊಲೆ ಮಾಡುವುದಾಗಿ ಮತ್ತು ಮುಖಕ್ಕೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿಗೆ ಫೋನ್ ಮಾಡಿ ತನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ, ಒಪ್ಪದಿದ್ದರೆ ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಮಾನಸಿಕ ಹಿಂಸೆ ನೀಡಿದ್ದನು.&lt;/p&gt;&lt;p&gt;ಈ ಕುರಿತು ಬಾಲಕಿಯ ಅಜ್ಜಿ ನೀಡಿದ ದೂರಿನನ್ವಯ ರಾಮನಗರ ಟೌನ್ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ. ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರಿಂದ ಬಂಧನ ಭೀತಿಯಲ್ಲಿದ್ದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್&zwnj; ಮೆಟ್ಟಿಲೇರಿದ್ದರು.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnaaka-hc-bail-revoked-for-man-accused-of-harassing-threatening-minor-rav/articleshow-wciwvlx"/>
        </item>
        <item>
            <title><![CDATA[ಸಿದ್ದರಾಮಯ್ಯ, ಡಿಕೆ ಶಿವಕುಮಾರ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ; ಮುಂದಿನ ಸಿಎಂ ಯಾರು? ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ?]]></title>
            <link>https://kannada.asianetnews.com/politics/siddaramaiah-dk-shivakumar-travel-separately-to-delhi-to-form-new-government-rav/articleshow-9idu37v</link>
            <guid isPermaLink="true">https://kannada.asianetnews.com/politics/siddaramaiah-dk-shivakumar-travel-separately-to-delhi-to-form-new-government-rav/articleshow-9idu37v</guid>
            <pubDate>Fri, 29 May 2026 05:43:38 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯನವರ ರಾಜೀನಾಮೆಯ ಬಳಿಕ, ಮುಂದಿನ ಮುಖ್ಯಮಂತ್ರಿ ಮತ್ತು ಸಂಪುಟ ರಚನೆಯ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಜೊತೆಗಿನ ಸಭೆಯ ನಂತರ ಹೊಸ ಸರ್ಕಾರದ ಪ್ರಮಾಣ ವಚನದ ದಿನಾಂಕ ನಿರ್ಧಾರವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksps9v1xgvarn0jh6tkrt3pc,imgname-siddaramaiah-and-dk-shivakumar--1--1779954936893.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.29): &lt;/strong&gt;ಸಿದ್ದರಾಮಯ್ಯ(Siddaramaiah) ಅವರ ರಾಜೀನಾಮೆಯ ನಂತರ ರಾಜ್ಯ ಕಾಂಗ್ರೆಸ್&zwnj; ಸರ್ಕಾರ(Karnataka congress government) ಎರಡನೇ ಹಂತಕ್ಕೆ ಮಗ್ಗಲು ಬದಲಿಸಿದ್ದು, ಮುಂದಿನ ಸರ್ಕಾರದ ರೂಪರೇಷೆ ಹಾಗೂ ಸಂಪುಟ ಸರ್ಕಸ್&zwnj; ಆರಂಭಿಸುವ ಸಲುವಾಗಿ ಹೈಕಮಾಂಡ್&zwnj;(Congress High command) ಜತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಯಂತ್ರಿ ಡಿ.ಕೆ. ಶಿವಕುಮಾರ್&zwnj;(DK Shivakumar) ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.&lt;/p&gt;&lt;p&gt;ದೆಹಲಿಯಲ್ಲಿ ಉಭಯ ನಾಯಕರು ವರಿಷ್ಠರನ್ನು ಭೇಟಿ ಮಾಡಲಿದ್ದು, ಈ ಭೇಟಿಯ ವೇಳೆಯೇ ಶಾಸಕಾಂಗ ಪಕ್ಷದ ಸಭೆ ಯಾವಾಗ? ಹೊಸ ಮುಖ್ಯಮಂತ್ರಿ ಪ್ರಮಾಣ ವಚನದ ದಿನ ಯಾವುದು? ಪ್ರಮಾಣ ವಚನದ ವೇಳೆಯೇ ಹೊಸ ಸಿಎಂ ಸೇರಿ ಒಟ್ಟು 9 ಮಂದಿ ಸಂಪುಟ ಸೇರ್ಪಡೆಯಾಗಲಿದ್ದಾರೆಯೇ ಅಥವಾ ಒಂದೇ ಬಾರಿಗೆ ಪರಿಪೂರ್ಣ ಸಂಪುಟ ರಚನೆಯಾಗಲಿದೆಯೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ಸ್ಪಷ್ಟತೆ ಮೂಡಲಿದೆ.&lt;/p&gt;&lt;h2&gt;ಮುಂದಿನ ಸಿಎಂ ಯಾರು?&amp;nbsp;&lt;/h2&gt;&lt;p&gt;ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಇನ್ನೂ ಅಂಗೀಕರಿಸಬೇಕಿದೆ. ಗುರುವಾರ ತಡರಾತ್ರಿಯೇ ರಾಜ್ಯಪಾಲ ಥಾವರಚಂದ್&zwnj; ಗೆಹ್ಲೋಟ್ ಇಂದೋರ್ ಪ್ರವಾಸದಿಂದ ನಗರಕ್ಕೆ ಹಿಂತಿರುಗಿದ್ದಾರೆ.&lt;/p&gt;&lt;p&gt;ಬಹುತೇಕ ಶುಕ್ರವಾರ ಅವರು ರಾಜೀನಾಮೆ ಅಂಗೀಕರಿಸುವ ಪ್ರಕ್ರಿಯೆ ಆರಂಭಿಸಲಿದ್ದಾರೆ. ಈ ಅಂಗೀಕಾರದ ವೇಳೆ ಅವರು ಮುಖ್ಯಮಂತ್ರಿಯವರನ್ನು ಕರೆಸಿಕೊಂಡು ಮಾತನಾಡ ಬಯಸಿದರೆ ಸಿದ್ದರಾಮಯ್ಯ ಅವರು ದೆಹಲಿಯಿಂದ ಆಗಮಿಸುವವರೆಗೂ ಈ ಪ್ರಕ್ರಿಯೆ ವಿಳಂಬವಾಗಬಹುದು. ಲಭ್ಯ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಶುಕ್ರವಾರವೇ ನಗರಕ್ಕೆ ಹಿಂತಿರುಗಲಿದ್ದು, ಅನಂತರ ರಾಜ್ಯಪಾಲರು ಬಯಸಿದರೆ ಮತ್ತೊಮ್ಮೆ ಅವರನ್ನು ಭೇಟಿಯಾಗಲಿದ್ದಾರೆ.&lt;/p&gt;&lt;p&gt;ಇದಾದ ನಂತರ ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಲಿದ್ದು, ಅನಂತರ ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರ ಬೀಳಬೇಕಿದೆ. ಬಹುತೇಕ ಈ ಪ್ರಕ್ರಿಯೆ ಶುಕ್ರವಾರ ಸಂಜೆ ಅಥವಾ ಶನಿವಾರದ ನಡೆಯಬಹುದು. ಹೀಗಾದಲ್ಲಿ ಶನಿವಾರ ರಾತ್ರಿ ಅಥವಾ ಭಾನುವಾರದಂದು ಕಾಂಗ್ರೆಸ್&zwnj; ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.&lt;/p&gt;&lt;p&gt;ಹೀಗಾಗಿ ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ಯಾವ ರೀತಿ ನಡೆಯುವುದು ಎಂಬುದರ ಆಧಾರದ ಮೇಲೆ ಹಾಗೂ ದೆಹಲಿಯಲ್ಲಿ ಹೈಕಮಾಂಡ್&zwnj;ನೊಂದಿಗೆ ಉಭಯ ನಾಯಕರ ಚರ್ಚೆಯ ನಂತರ ಹೊಸ ಮುಖ್ಯಮಂತ್ರಿಯವರ ಹಾಗೂ ಅವರ ಹೊಸ ಸಂಪುಟದ ಪ್ರಮಾಣ ವಚನದ ದಿನ ನಿರ್ಧಾರವಾಗಲಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಕಾಂಗ್ರೆಸ್&zwnj; ಶಾಸಕಾಂಗ ಪಕ್ಷ ಶನಿವಾರ ನಡೆದು, ಹೈಕಮಾಂಡ್&zwnj;ನ ಒಪ್ಪಿಗೆಯೂ ದೊರೆತರೇ ಭಾನುವಾರವೇ ಪ್ರಮಾಣ ವಚನ ಸಾಧ್ಯತೆಯಿದೆ. ಇದಾಗದೇ ಹೋದರೆ ಸೋಮವಾರ ಅಥವಾ ಬುಧವಾರ ಸಂಪುಟ ಪ್ರಮಾಣ ವಚನ ನಡೆಯಬಹುದು. ಹೊಸ ಮುಖ್ಯಮಂತ್ರಿ ಹಾಗೂ ಎಂಟು ಜನ ಸಂಪುಟ ಸೇರುವುದಿದ್ದರೇ ಈ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಬಹುದು.&lt;/p&gt;&lt;p&gt;ಒಂದು ವೇಳೆ ಪರಿಪೂರ್ಣ ಸಂಪುಟ ಪ್ರಮಾಣ ವಚನ ಅಂದರೆ ಎಲ್ಲ 34 ಮಂದಿಯ ಸಂಪುಟ ಪ್ರಮಾಣ ವಚನ ನಡೆಸುವ ತೀರ್ಮಾನವಾದರೆ ಆಗ ಶುಕ್ರವಾರಕ್ಕೆ ಈ ಪ್ರಕ್ರಿಯೆ ಮುಂದೂಡಿಕೆ ಕಾಣಬಹುದು ಎನ್ನಲಾಗುತ್ತಿದೆ.&lt;/p&gt;&lt;p&gt;--&lt;/p&gt;&lt;h3&gt;ಹೊಸ ಸಂಪುಟದಲ್ಲಿ ಸಿದ್ದು ಆಪ್ತರು?&lt;/h3&gt;&lt;p&gt;ತಮಗೆ ಎರಡು ಅವಧಿಗೆ ಮುಖ್ಯಮಂತ್ರಿಯಾಗಲು ಬೆನ್ನ ಹಿಂದೆ ಗಟ್ಟಿಯಾಗಿ ನಿಂತ ಕಾಂಗ್ರೆಸ್&zwnj; ವರಿಷ್ಠ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುವ ನೆಪ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಹೆಸರನ್ನು ಹೊಸ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಕಾಂಗ್ರೆಸ್&zwnj; ಹೈಕಮಾಂಡ್&zwnj;ಗೆ ಶಿಫಾರಸು ಮಾಡುವ ಸಾಧ್ಯತೆಯಿದೆ.&lt;/p&gt;&lt;p&gt;ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಆಪ್ತ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಪುತ್ರ ಮತ್ತು ಪರಿಷತ್&zwnj; ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಗುರುವಾರ ದೆಹಲಿಗೆ ತೆರಳಿರುವ ಅವರು ಶುಕ್ರವಾರ ರಾಹುಲ್&zwnj; ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.&lt;/p&gt;&lt;p&gt;ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಶುಕ್ರವಾರ ಉಪಹಾರಕ್ಕೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಹೈಕಮಾಂಡ್&zwnj; ಅಣತಿಯಂತೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ವಚನ ನೀಡಿದಂತೆ ನಡೆದುಕೊಂಡಿರುವುದನ್ನು ತಿಳಿಸಲಿದ್ದಾರೆ. ಅಲ್ಲದೆ, ತಮಗೆ ಎರಡು ಅವಧಿಗೆ ಮುಖ್ಯಮಂತ್ರಿಯಾಗಲು ಬೆನ್ನ ಹಿಂದೆ ನಿಂತ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸಲಿದ್ದಾರೆ.&lt;/p&gt;&lt;p&gt;ಜತೆಗೆ, ತಮ್ಮ ಕೆಲ ಆಪ್ತ ಸಚಿವರಿಗೆ ಮುಂದಿನ ಸಚಿವ ಸಂಪುಟದಲ್ಲೂ ಅವಕಾಶ ನೀಡುವಂತೆ ರಾಹುಲ್ ಅವರಿಗೆ ಮನವಿ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.&lt;/p&gt;&lt;h3&gt;ಸಿದ್ದು, ಡಿಕೆಶಿ ನೀಡುವ ಸಚಿವರ ಪಟ್ಟಿ ಆಧರಿಸಿ ವರಿಷ್ಠರ ನಿರ್ಧಾರ?&lt;/h3&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದು ಶುಕ್ರವಾರ ಹೈಕಮಾಂಡ್&zwnj;ನ ಹಿರಿಯ ನಾಯಕರನ್ನು ಭೇಟಿ ಮಾಡಿ ಪ್ರಮಾಣ ವಚನ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;ಡಿ.ಕೆ. ಶಿವಕುಮಾರ್&zwnj; ಅವರು ತಮ್ಮ ಸಂಪುಟಕ್ಕೆ ತಾವು ಸೇರ್ಪಡೆ ಮಾಡಿಕೊಳ್ಳಬಯಸುವ ಸದಸ್ಯರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದು, ಇದಕ್ಕೆ ಹೈಕಮಾಂಡ್&zwnj;ನ ಅವಗಾಹನೆಗೆ ನೀಡಲಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಸಂಪುಟದಲ್ಲಿ ತಮ್ಮ ಆಪ್ತರ ಸೇರ್ಪಡೆಗೂ ಕೆಲ ಹೆಸರನ್ನು ಸೂಚಿಸಲಿದ್ದಾರೆ. ಅದೇ ರೀತಿ ಶಿವಕುಮಾರ್ ಅವರು ತಮ್ಮ ಪಟ್ಟಿಯನ್ನು ಹೈಕಮಾಂಡ್&zwnj;ಗೆ ನೀಡಲಿದ್ದಾರೆ. ಈ ಎರಡೂ ಪಟ್ಟಿಯನ್ನು ಪರಿಶೀಲಿಸಿ ಹೈಕಮಾಂಡ್ ಸಂಪುಟ ವಿಚಾರದಲ್ಲಿ ತನ್ನ ಅಂತಿಮ ತೀರ್ಮಾನ ನೀಡಲಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/siddaramaiah-dk-shivakumar-travel-separately-to-delhi-to-form-new-government-rav/articleshow-9idu37v"/>
        </item>
        <item>
            <title><![CDATA[Siddaramaiah resignation: 'ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ರು': ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!]]></title>
            <link>https://kannada.asianetnews.com/politics/not-just-me-my-family-too-became-victims-of-political-vendetta-siddaramaiah-opens-up-after-resignation-rav/articleshow-3e9luks</link>
            <guid isPermaLink="true">https://kannada.asianetnews.com/politics/not-just-me-my-family-too-became-victims-of-political-vendetta-siddaramaiah-opens-up-after-resignation-rav/articleshow-3e9luks</guid>
            <pubDate>Fri, 29 May 2026 04:43:47 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತ್ತು ತಮ್ಮ ಕುಟುಂಬದ ಮೇಲೆ ನಡೆದ ರಾಜಕೀಯ ದ್ವೇಷದ ಬಗ್ಗೆ ನೋವು ತೋಡಿಕೊಂಡಿದ್ದಾರೆ. ರಾಜಕೀಯದಿಂದ ದೂರವಿದ್ದ ತಮ್ಮ ಪತ್ನಿಯ ಮೇಲೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದರಿಂದ, ಒಂದು ಹಂತದಲ್ಲಿ ರಾಜಕೀಯ ಸನ್ಯಾಸದ ಬಗ್ಗೆ ಯೋಚಿಸಿದ್ದಾಗಿ ಅವರು ಹೇಳಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksrdhhcd44rcnhcvth69ve14,imgname-----------------------2026-05-29t043748.145-1780009715085.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.29)&lt;/strong&gt;: &lsquo;ನಾನು ಮಾತ್ರವಲ್ಲ ನನ್ನ ಕುಟುಂಬವೂ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ರಾಜಕಾರಣದಿಂದ ಬಹುದೂರ ಇದ್ದ ನನ್ನ ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ&rsquo; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋವು ತೋಡಿಕೊಂಡಿದ್ದಾರೆ.&lt;/p&gt;&lt;h2&gt;ರಾಜಕೀಯ ಸನ್ಯಾಸ ಸ್ವೀಕರಿಸಬೇಕು ಎನಿಸಿತ್ತು!&lt;/h2&gt;&lt;p&gt;ಅಲ್ಲದೆ, ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡಬೇಕು ಎನ್ನುವಷ್ಟು ಮನಸ್ಸು ನೊಂದಿತ್ತು ಎಂದಿದ್ದಾರೆ.&lt;/p&gt;&lt;p&gt;ಮುಖ್ಯಮಂತ್ರಿ ಅವರ ಕಚೇರಿಯಿಂದ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರ ವಿದಾಯ ಭಾಷಣ ಕುರಿತ ಪತ್ರಿಕಾ ಹೇಳಿಕೆಯಲ್ಲಿ, &lsquo;ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ನನ್ನ ರಾಜಕೀಯ ವಿರೋಧಿಗಳು ರಾಜಕಾರಣದಿಂದ ಬಹುದೂರ ಇದ್ದು ಕುಟುಂಬದ ಪಾಲನೆ ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು&rsquo; ಎಂದು ತಿಳಿಸಲಾಗಿದೆ.&lt;/p&gt;&lt;h3&gt;ಶತ್ರುಗಳ ದಾಳಿಗೆ ಪಲಾಯನವಾದಿಯಾಗಬೇಡ&lt;/h3&gt;&lt;p&gt;ಒಂದು ಹಂತದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಎನಿಸಿತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ. ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ, ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/not-just-me-my-family-too-became-victims-of-political-vendetta-siddaramaiah-opens-up-after-resignation-rav/articleshow-3e9luks"/>
        </item>
        <item>
            <title><![CDATA[Food department server down: ಆಹಾರ ಇಲಾಖೆ ಸರ್ವರ್‌ಡೌನ್‌ ಶಾಕ್‌: ಮೇ ತಿಂಗಳು ಮುಗಿದರೂ 40% ಜನರಿಗೆ ಇನ್ನೂ ಪಡಿತರ ಸಿಕ್ಕಿಲ್ಲ!]]></title>
            <link>https://kannada.asianetnews.com/state/server-problem-for-ration-distribution-karnataka-rav/articleshow-tgghx0x</link>
            <guid isPermaLink="true">https://kannada.asianetnews.com/state/server-problem-for-ration-distribution-karnataka-rav/articleshow-tgghx0x</guid>
            <pubDate>Fri, 29 May 2026 03:54:49 +0530</pubDate>
            <description><![CDATA[&lt;p&gt;ಕಳೆದೊಂದು ವಾರದಿಂದ ಆಹಾರ ಇಲಾಖೆ ಸರ್ವರ್&zwnj;ಡೌನ್&zwnj; ಸಮಸ್ಯೆ ಪಡಿತರ ವಿತರಕರಿಗೆ ತಲೆನೋವಾಗಿ ಪರಿಣಮಿಸಿದ್ದು, ಮೇ ತಿಂಗಳು ಮುಗಿಯುತ್ತಾ ಬಂದಿದ್ದರೂ ಶೇ.40ರಷ್ಟು ಫಲಾನುಭವಿಗಳಿಗೆ ಆಹಾರ ಧಾನ್ಯ ಹಂಚಿಕೆ ಮಾಡಲು ಪರದಾಡುವಂತಾಗಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ ಪಡಿತರ ವಿತರಕರು ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krg666marwfdr5gc3srz9srv,imgname-images--40--1778659826314.jfif" type="image/jpeg" height="390" width="690"/>
            <content:encoded><![CDATA[&lt;p&gt;ಸಮಸ್ಯೆ ಇತ್ಯರ್ಥಕ್ಕೆ ಪಡಿತರ ವಿತರಕರ ಆಗ್ರಹ&lt;/p&gt;&lt;p&gt;&lt;strong&gt;ಬೆಂಗಳೂರು (ಮೇ.29):&lt;/strong&gt; ಕಳೆದೊಂದು ವಾರದಿಂದ ಆಹಾರ ಇಲಾಖೆ ಸರ್ವರ್&zwnj;ಡೌನ್&zwnj; ಸಮಸ್ಯೆ ಪಡಿತರ ವಿತರಕರಿಗೆ ತಲೆನೋವಾಗಿ ಪರಿಣಮಿಸಿದ್ದು, ಮೇ ತಿಂಗಳು ಮುಗಿಯುತ್ತಾ ಬಂದಿದ್ದರೂ ಶೇ.40ರಷ್ಟು ಫಲಾನುಭವಿಗಳಿಗೆ ಆಹಾರ ಧಾನ್ಯ ಹಂಚಿಕೆ ಮಾಡಲು ಪರದಾಡುವಂತಾಗಿದೆ.&lt;/p&gt;&lt;p&gt;ಈವರೆಗೂ ಕೇವಲ ಶೇ.60ರಷ್ಟು ಮಂದಿಗೆ ಮಾತ್ರ ಪಡಿತರ ಹಂಚಿಕೆ ಮಾಡಲಾಗಿದೆ. ಕಳೆದೊಂದು ವಾರದಿಂದ ಗಂಟೆಗೆ ಇಬ್ಬರಿಗೆ ಆಹಾರ ಧಾನ್ಯ ವಿತರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಸೋಮವಾರದಿಂದ ಈ ಸಮಸ್ಯೆ ಉಲ್ಬಣಿಸಿದ್ದು, ಫಲಾನುಭವಿಗಳು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಇದು ಪಡಿತರ ವಿತರಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರೆ, ತಾಸುಗಟ್ಟಲೆ ಕಾದು ನಿಂತ ಫಲಾನುಭವಿಗಳನ್ನು ಕೆರಳಿಸಿದೆ.&lt;/p&gt;&lt;h2&gt;ಬಹುತೇಕ ಜಿಲ್ಲೆಗಳಲ್ಲಿ ಡೌನ್&zwnj;:&lt;/h2&gt;&lt;p&gt;ಬೆಂಗಳೂರು ನಗರ ಮಾತ್ರವಲ್ಲ, ಹಾಸನ, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಉತ್ತರ ಕನ್ನಡ, ಮಂಗಳೂರು, ತುಮಕೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಸರ್ವರ್&zwnj; ಡೌನ್&zwnj; ಸಮಸ್ಯೆ ಹೆಚ್ಚಾಗಿದೆ. ಹಾಗಾಗಿ ನಿಗದಿತ ಅವಧಿಯೊಳಗೆ (ಮೇ 31ರೊಳಗೆ) ಆಹಾರ ಧಾನ್ಯ ವಿತರಣೆ ಕಷ್ಟವಾಗಲಿದೆ ಎಂದು ಕೆಲ ನ್ಯಾಯಬೆಲೆ ಅಂಗಡಿ ಮಾಲೀಕರು ಹೇಳಿದ್ದಾರೆ.&lt;/p&gt;&lt;p&gt;ಸರ್ವರ್ ಸರಿಯಾಗಿದ್ದರೆ 5 ನಿಮಿಷಕ್ಕೊಬ್ಬರಿಗೆ ಪಡಿತರ ವಿತರಿಸಬಹುದು. ಆದರೆ, ಈಗ ಸರ್ವರ್&zwnj; ಸಮಸ್ಯೆಯಿಂದ ದಿನಕ್ಕೆ 20ಮಂದಿಗೂ ಪಡಿತರ ಕೊಡಲು ಸಾಧ್ಯವಾಗುತ್ತಿಲ್ಲ. ಕೆಲವು ಸಂದರ್ಭದಲ್ಲಿ ಜನರು ಕಾದು, ಕಾದು ಸಾಕಾಗಿ ಮನೆಗೆ ಹೋಗುತ್ತಿದ್ದಾರೆ. ಸರ್ಕಾರ ಕೂಡಲೇ ಸರ್ವರ್&zwnj; ಸಮಸ್ಯೆ ಸರಿಪಡಿಸಲು ಕ್ರಮಕೈಗೊಳ್ಳಬೇಕು ಎಂದು ನ್ಯಾಯಬೆಲೆ ಅಂಗಡಿ ಮಾಲೀಕ ದೇವರಾಜ್ ಆಗ್ರಹಿಸಿದರು.&lt;/p&gt;&lt;h3&gt;ನಿವಾರಣೆಯಾಗದ ಸಮಸ್ಯೆ:&amp;nbsp;&lt;/h3&gt;&lt;p&gt;ಆಹಾರ ಇಲಾಖೆಯ ತಂತ್ರಾಂಶವನ್ನು ಈ ಹಿಂದೆ ಸುಮಾರು 30 ಇಲಾಖೆಗಳು ಬಳಸಿಕೊಳ್ಳುತ್ತಿದ್ದವು. ಇದರಿಂದ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಆಹಾರ ಧಾನ್ಯ ಹಂಚಿಕೆಗೆ ತೊಡಕು ಉಂಟಾಗುತ್ತಿತ್ತು. ಈಗ ನೂತನ ತಂತ್ರಾಂಶ ಅಳವಡಿಸಿಕೊಂಡರೂ ಸರ್ವರ್&zwnj; ಸಮಸ್ಯೆ ಇತ್ಯರ್ಥವಾಗದೇ ಇನ್ನಷ್ಟು ಬಿಗಡಾಯಿಸಿದೆ. ಇದಕ್ಕೆ ಶಾಶ್ವತ ಪರಿಹಾರವನ್ನು ಆಹಾರ ಇಲಾಖೆ ಕಂಡುಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ.&lt;/p&gt;&lt;p&gt;&lt;strong&gt;4.43 ಕೋಟಿ ಫಲಾನುಭವಿಗಳು&lt;/strong&gt;&lt;/p&gt;&lt;p&gt;ರಾಜ್ಯದಲ್ಲಿ ಒಟ್ಟು ಸುಮಾರು 1.20 ಕೋಟಿ ಪಡಿತರ ಚೀಟಿಗಳಿದ್ದು, 4.43 ಕೋಟಿ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ಫಲಾನುಭವಿ ಕೇಂದ್ರ ಸರ್ಕಾರ ಗರೀಬ್&zwnj; ಕಲ್ಯಾಣ ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡುವ ತಲಾ 5 ಕೆಜಿ ಅಕ್ಕಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ಪಡೆಯುತ್ತಾರೆ. ಹಾಗಾಗಿ ಸಿಸಿಎಸ್&zwnj;, ವಿಎಸ್&zwnj;ಎಸ್&zwnj;ಎನ್&zwnj;, ನ್ಯಾಯಬೆಲೆ ಅಂಗಡಿ ಸೇರಿದಂತೆ ಒಟ್ಟು 20,500 ಪಡಿತರ ವಿತರಣಾ ಕೇಂದ್ರಗಳಲ್ಲಿ ಆಹಾರ ಧಾನ್ಯ ವಿತರಣೆಯಾಗುತ್ತಿದೆ.&lt;/p&gt;&lt;p&gt;ಗುರುವಾರ ಮಧ್ಯಾಹ್ನ 2.15ರ ಸುಮಾರಿಗೆ ಸರ್ವರ್&zwnj; ಸಮಸ್ಯೆ ಸ್ವಲ್ಪ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಹೇಗಿರುತ್ತದೋ ಗೊತ್ತಿಲ್ಲ. ಇನ್ನೆರಡು ದಿನಗಳಲ್ಲಿ ಶೇ.40ರಷ್ಟು ಜನರಿಗೆ ಪಡಿತರ ಹಂಚಿಕೆ ಹೇಗೆ ಮಾಡಲು ಸಾಧ್ಯ. ಮೊದಲಿನಂತೆ ಸರ್ಕಾರ ತಿಂಗಳ ಮೊದಲ ವಾರದಲ್ಲೇ ಪಡಿತರವನ್ನು ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಿದರೆ, ಒಳ್ಳೆಯದು.&lt;/p&gt;&lt;p&gt;ಕೃಷ್ಣಪ್ಪ, ಅಧ್ಯಕ್ಷ, ಸರ್ಕಾರಿ ಪಡಿತರ ವಿತರಕರ ಸಂಘ&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/server-problem-for-ration-distribution-karnataka-rav/articleshow-tgghx0x"/>
        </item>
        <item>
            <title><![CDATA['ಹೆಜ್ಜೆ ಹೆಜ್ಜೆಗೂ ನಾನು...' ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಬೆನ್ನಲ್ಲೇ ಭಾವುಕ ಫೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ..!]]></title>
            <link>https://kannada.asianetnews.com/state/siddaramaiah-steps-down-as-karnataka-chief-minister-shares-emotional-farewell-message-kvn/articleshow-uo5s2z1</link>
            <guid isPermaLink="true">https://kannada.asianetnews.com/state/siddaramaiah-steps-down-as-karnataka-chief-minister-shares-emotional-farewell-message-kvn/articleshow-uo5s2z1</guid>
            <pubDate>Thu, 28 May 2026 21:07:45 +0530</pubDate>
            <description><![CDATA[ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ, ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ಭಾವನಾತ್ಮಕ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ಏಳಿಗೆಗೆ ಕಾರಣರಾದ ಜನತೆ, ಪಕ್ಷ ಹಾಗೂ ಗುರುಗಳನ್ನು ಸ್ಮರಿಸಿರುವ ಅವರು, ತಾವು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksppfssv57gdj4qrdj3q7bq7,imgname-mixcollage-28-may-2026-12-34-pm-5253-1779951986491.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಕಂಡ ಅತ್ಯಂತ ದಿಟ್ಟ, ಜನಪರ ಹಾಗೂ ದೀರ್ಘಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆ ಪಾತ್ರರಾಗಿರುವ ಸಿದ್ದರಾಮಯ್ಯ ಅವರ ವರ್ಣರಂಜಿತ ಮುಖ್ಯಮಂತ್ರಿ ಜೀವನಕ್ಕೆ ತೆರೆ ಬಿದ್ದಿದೆ. ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಸಕ್ರಿಯ ರಾಜ್ಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಫೇಸ್&zwnj;ಬುಕ್&zwnj;ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರ ಕಂಪ್ಲೀಟ್ ವಿವರ ಈ ಕೆಳಗಿನಂತಿದೆ.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್&lt;/strong&gt;&lt;/h2&gt;&lt;p&gt;ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ.&lt;/p&gt;&lt;p&gt;* ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ.&lt;/p&gt;&lt;p&gt;* ಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು &lsquo;&rsquo;ಅಭಿಮಾನಿ ದೇವರು&rsquo;&rsquo; ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು &lsquo;&rsquo;ಮತದಾರ ದೇವರು&quot;. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ.&lt;/p&gt;&lt;p&gt;* ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.&lt;/p&gt;&lt;p&gt;* ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.&lt;/p&gt;&lt;p&gt;* ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.&lt;/p&gt;&lt;p&gt;* ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್&zwnj; ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.&lt;/p&gt;&lt;p&gt;* ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.&lt;/p&gt;&lt;p&gt;* ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ಮರಳಿನ ಮೇಲಿನ ಅಕ್ಷರಾಭ್ಯಾಸದ ಮೂಲಕ ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್&hellip;&lt;/p&gt;&lt;p&gt;* ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ ಅವರು.&lt;/p&gt;&lt;p&gt;* ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು.&lt;/p&gt;&lt;p&gt;* ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.&lt;/p&gt;&lt;p&gt;* ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸು ವ್ಯರ್ಥಪ್ರಯತ್ನವನನ್ನು ನಾನು ಮಾಡುವುದಿಲ್ಲ., ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.&lt;/p&gt;&lt;p&gt;* ಜಾತಿ,ದುಡ್ಡು ಮತ್ತು ತೋಳ್ಭಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.&lt;/p&gt;&lt;p&gt;* ರಾಜಕೀಯ ಪಯಣದ ನನ್ನಹಾದಿಯಲ್ಲಿ ಹೆಜ್ಜೆಹೆಜ್ಜೆಗೂ ನಾನು ಪಟ್ಟಭದ್ರರ ದ್ವೇಷ ಅಸೂಯೆಗೆ ಈಡಾಗಿ&zwj;ದ್ದೇನೆ. ಹೊರಗಿನವರ ಮತ್ತು ಒಳಗಿನವರ ಮೋಸ-ವಂಚನೆ-ಪಿತೂರಿಗೆ ಒಳಗಾಗಿದ್ದೇನೆ. ಇದರಿಂದಾಗಿ ಹಲವಾರು ಬಾರಿ ಬಿದ್ದಿದ್ದೇನೆ, ಬಿದ್ದಲ್ಲಿಂದಲೇ ಎದ್ದಿದ್ದೇನೆ.&lt;/p&gt;&lt;p&gt;* ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡುವ ಎನ್ನುವಷ್ಟು ಮನಸ್ಸು ನೊಂದಿತ್ತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ, ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ದ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.&lt;/p&gt;&lt;p&gt;* ನನ್ನ ನೋವು, ದು:ಖ-ದುಮ್ಮಾನಗಳನ್ನು ಈ ಸಂದರ್ಭದಲ್ಲಿ ಪಟ್ಟಿಮಾಡಿ ನನ್ನ ಮನಸ್ಸನ್ನು ಕಹಿಮಾಡಿಕೊಳ್ಳುವುದಿಲ್ಲ.ಆದರೆ ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.&lt;/p&gt;&lt;p&gt;* ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.&lt;/p&gt;&lt;p&gt;* ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.&lt;/p&gt;&lt;p&gt;* ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.&lt;/p&gt;&lt;p&gt;* ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.&lt;/p&gt;&lt;p&gt;* ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್&zwnj;ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್&zwnj;ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.&lt;/p&gt;&lt;p&gt;- ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.&lt;/p&gt;&lt;p&gt;* ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.&lt;/p&gt;&lt;p&gt;* ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.&lt;/p&gt;&lt;p&gt;* ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.&lt;/p&gt;&lt;p&gt;ಮತ್ತೊಮ್ಮೆ ಎಲ್ಲರಿಗೂ ನನ್ನ ಧನ್ಯವಾದಗಳು&lt;/p&gt;]]></content:encoded>
            <category>state</category>
            <dc:creator>Naveen Kodase</dc:creator>
            <atom:link href="https://kannada.asianetnews.com/state/siddaramaiah-steps-down-as-karnataka-chief-minister-shares-emotional-farewell-message-kvn/articleshow-uo5s2z1"/>
        </item>
        <item>
            <title><![CDATA[Breaking: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್]]></title>
            <link>https://kannada.asianetnews.com/state/cm-siddaramaiah-flight-emergency-landing-jaipur-delhi-weather-disruption-san/articleshow-4yindkd</link>
            <guid isPermaLink="true">https://kannada.asianetnews.com/state/cm-siddaramaiah-flight-emergency-landing-jaipur-delhi-weather-disruption-san/articleshow-4yindkd</guid>
            <pubDate>Thu, 28 May 2026 20:24:53 +0530</pubDate>
            <description><![CDATA[ದೆಹಲಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವನ್ನು ಜೈಪುರದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಎಟಿಸಿ ಸೂಚನೆ ಮೇರೆಗೆ ಈ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹವಾಮಾನ ತಿಳಿಯಾದ ನಂತರ ವಿಮಾನ ದೆಹಲಿಗೆ ಪ್ರಯಾಣಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqnj3369hwp4592rz7nyv4hj,imgname-----------------------2026-05-03t052829.280-1777766337737.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು/ದೆಹಲಿ (ಮೇ.28): ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ದೆಹಲಿ ಸುತ್ತಮುತ್ತ ಭಾರಿ ಗಾಳಿ ಮತ್ತು ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಎಟಿಎಸ್&zwnj; (Air Traffic Control) ಸೂಚನೆಯ ಮೇರೆಗೆ ಸಿಎಂ ಇದ್ದ ವಿಮಾನದ ಮಾರ್ಗವನ್ನು ಜೈಪುರದತ್ತ ಬದಲಾಯಿಸಿ ಅಲ್ಲಿ ಇಳಿಸಲಾಗಿದೆ. ಜೈಪುರದಿಂದ ದೆಹಲಿಗೆ ವಿಮಾನವು ಮರಳಿ ಪ್ರಯಾಣ ಬೆಳೆಸಲು ಕನಿಷ್ಠ ಇನ್ನೂ ಒಂದು ಗಂಟೆಗೂ ಅಧಿಕ ಸಮಯ ಬೇಕಾಗಬಹುದು ಎಂದು ವರದಿಯಾಗಿದೆ.&lt;/p&gt;&lt;p&gt;ವಿಮಾನದಲ್ಲಿದ್ದ ಪ್ರಮುಖ ನಾಯಕರು&lt;/p&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್&zwnj;ನ ಪ್ರಮುಖರು ಮತ್ತು ರಾಜ್ಯದ ಸಚಿವರ ದೊಡ್ಡ ದಂಡೇ ಈ ವಿಶೇಷ ವಿಮಾನದಲ್ಲಿದೆ. ರಣದೀಪ್ ಸಿಂಗ್ ಸುರ್ಜೇವಾಲಾ (ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ), ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಎ.ಎಸ್. ಪೊನ್ನಣ್ಣ, ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅಭಿಷೇಕ್ ದತ್ ವಿಮಾನದಲ್ಲಿದ್ದರು.&lt;/p&gt;&lt;p&gt;ಸದ್ಯ ಜೈಪುರದಲ್ಲೇ ಸಿಎಂ ಮತ್ತು ನಾಯಕರ ತಂಡ ಹವಾಮಾನ ತಿಳಿಯಾಗುವವರೆಗೆ ಕಾಯುತ್ತಿದ್ದು, ದೆಹಲಿಯಲ್ಲಿ ವಾತಾವರಣ ಸುಧಾರಿಸಿದ ತಕ್ಷಣವೇ ಜೈಪುರದಿಂದ ದೆಹಲಿಯತ್ತ ವಿಶೇಷ ವಿಮಾನವು ಹಾರಾಟ ನಡೆಸಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/cm-siddaramaiah-flight-emergency-landing-jaipur-delhi-weather-disruption-san/articleshow-4yindkd"/>
        </item>
        <item>
            <title><![CDATA[ರಾಮನಗರ ಜಿಲ್ಲೆಯಿಂದ ಮುಖ್ಯಮಂತ್ರಿಯಾಗಲಿರುವ ಐದನೇ ವ್ಯಕ್ತಿ ಡಿಕೆ ಶಿವಕುಮಾರ್‌!]]></title>
            <link>https://kannada.asianetnews.com/gallery/state/dk-shivakumar-5th-cm-from-ramanagara-district-karnataka-political-history-san-1ehcs1u</link>
            <guid isPermaLink="true">https://kannada.asianetnews.com/gallery/state/dk-shivakumar-5th-cm-from-ramanagara-district-karnataka-political-history-san-1ehcs1u</guid>
            <pubDate>Thu, 28 May 2026 19:09:49 +0530</pubDate>
            <description><![CDATA[ಡಿ.ಕೆ. ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಮುಖ್ಯಮಂತ್ರಿಯಾಗಲಿರುವ 5ನೇ ನಾಯಕರಾಗಲಿದ್ದಾರೆ. ಈ ಹಿಂದೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಈ ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಇತಿಹಾಸವಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krqa2ypn411epexs4cs62qz4,imgname-dk-shivakumar-1778898795221.jpg" type="image/jpeg" height="390" width="690"/>
            <content:encoded><![CDATA[ಡಿ.ಕೆ. ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಮುಖ್ಯಮಂತ್ರಿಯಾಗಲಿರುವ 5ನೇ ನಾಯಕರಾಗಲಿದ್ದಾರೆ. ಈ ಹಿಂದೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಈ ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಇತಿಹಾಸವಿದೆ.&lt;img&gt;&lt;p&gt;ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಜಿಲ್ಲೆಯವರೇ ಆದ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್ ಅವರ ಸಿಎಂ ಪಟ್ಟಾಭಿಷೇಕಕ್ಕೆ ಕಾಲ ಕೂಡಿಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಶಿವಕುಮಾರ್ ಅಧಿಕಾರ ಸ್ವೀಕರಿಸಿದರೆ, ಅವರು ರಾಮನಗರ ಜಿಲ್ಲೆಯಿಂದ (ಪ್ರಸ್ತುತ ಬೆಂಗಳೂರು ದಕ್ಷಿಣ) ಮುಖ್ಯಮಂತ್ರಿ ಹುದ್ದೆಗೇರಿದ 5ನೇ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅಲ್ಲದೆ, ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್&zwnj;ನಿಂದ ಸಿಎಂ ಸ್ಥಾನಕ್ಕೇರಿದ ಜಿಲ್ಲೆಯ ಕೇವಲ 2ನೇ ನಾಯಕ ಇವರಾಗಲಿದ್ದಾರೆ.&lt;/p&gt;&lt;img&gt;&lt;p&gt;ಕರ್ನಾಟಕದ ಮೊದಲ ಚುನಾಯಿತ ಮುಖ್ಯಮಂತ್ರಿ ಎಂಬ ಜಾಗತಿಕ ಖ್ಯಾತಿ ಹೊಂದಿರುವ ಕೆಂಗಲ್ ಹನುಮಂತಯ್ಯ ಅವರು ಮೂಲತಃ ರಾಮನಗರ ತಾಲ್ಲೂಕಿನವರು. ಅಂದಿನ ಮೈಸೂರು ರಾಜ್ಯದಲ್ಲಿ 1952 ಮತ್ತು 1957ರ ಚುನಾವಣೆಗಳಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಇಂದಿನ ಭವ್ಯ ಆಡಳಿತ ಸೌಧವಾದ &lsquo;ವಿಧಾನಸೌಧ&rsquo; ನಿರ್ಮಿಸಿದ ಹೆಗ್ಗಳಿಕೆಯ ಇವರದು. 1952ರ ಮೊದಲ ವಿಧಾನಸಭೆಯಲ್ಲಿ ಮುಖ್ಯಮಂತ್ರಿಯಾಗಿ 4 ವರ್ಷ 5 ತಿಂಗಳುಗಳ ಕಾಲ ಅತ್ಯುತ್ತಮ ಆಡಳಿತ ನೀಡಿದ್ದರು.&lt;/p&gt;&lt;img&gt;&lt;p&gt;ರಾಜ್ಯದಲ್ಲಿ 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಜನತಾ ಪರಿವಾರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಾಮಕೃಷ್ಣ ಹೆಗಡೆ ಅವರಿಗೆ ಸಿಎಂ ಆಗುವ ಯೋಗ ಒದಗಿಬಂದಿತ್ತು. ಆಗ ಅವರು ಯಾವುದೇ ಸದನದ ಸದಸ್ಯರಾಗಿರಲಿಲ್ಲ. ಈ ವೇಳೆ ಕನಕಪುರ ಕ್ಷೇತ್ರದಿಂದ ಗೆದ್ದಿದ್ದ ಪಿ.ಜಿ.ಆರ್. ಸಿಂಧ್ಯ ಅವರು ಹೆಗಡೆ ಅವರಿಗಾಗಿ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ್ದರು. ಆ ಬಳಿಕ ನಡೆದ ಉಪಚುನಾವಣೆಯಲ್ಲಿ ಇದೇ ಕನಕಪುರದಿಂದ ಸ್ಪರ್ಧಿಸಿ ಗೆದ್ದ ಹೆಗಡೆ ಅವರು ಒಂದು ವರ್ಷದ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.&lt;/p&gt;&lt;img&gt;&lt;p&gt;ಮಣ್ಣಿನ ಮಗ ಎಚ್.ಡಿ. ದೇವೇಗೌಡ ಅವರು 1994ರ ಐತಿಹಾಸಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಆಗ ಜನತಾ ದಳ 115 ಸ್ಥಾನಗಳ ಪ್ರಚಂಡ ಬಹುಮತ ಪಡೆದ ಹಿನ್ನೆಲೆಯಲ್ಲಿ ಗೌಡರು ಮುಖ್ಯಮಂತ್ರಿಯಾದರು. ಕೇವಲ 17 ತಿಂಗಳುಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಭರ್ಜರಿ ಆಡಳಿತ ನಡೆಸಿದ ಅವರು, ಬದಲಾದ ದೇಶದ ರಾಜಕೀಯ ವಿದ್ಯಮಾನಗಳಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ನೇರವಾಗಿ ಭಾರತದ ಪ್ರಧಾನಮಂತ್ರಿ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದರು.&lt;/p&gt;&lt;img&gt;&lt;p&gt;ತಮ್ಮ ತಂದೆಯ ಅದೃಷ್ಟದ ಕ್ಷೇತ್ರವಾದ ರಾಮನಗರದಿಂದಲೇ 2004ರಲ್ಲಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಎರಡು ಬಾರಿ ಸಿಎಂ ಆದ ಅಪರೂಪದ ದಾಖಲೆ ಹೊಂದಿದ್ದಾರೆ. 12ನೇ ವಿಧಾನಸಭೆಯಲ್ಲಿ ಜೆಡಿಎಸ್&zwnj;-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದರು. 2018ರ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡರಲ್ಲೂ ಗೆದ್ದು, ಬಳಿಕ ಚನ್ನಪಟ್ಟಣ ಉಳಿಸಿಕೊಂಡರು. ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ರಚನೆಯಾದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ 14 ತಿಂಗಳು ಅಧಿಕಾರ ಚಲಾಯಿಸಿದ್ದರು.&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/state/dk-shivakumar-5th-cm-from-ramanagara-district-karnataka-political-history-san-1ehcs1u"/>
        </item>
        <item>
            <title><![CDATA[ರಾಜಕೀಯದ ಪುಣ್ಯಕೋಟಿ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಕೊಟ್ಟ ಮಾತು ಉಳಿಸಿಕೊಂಡು ಸಿಎಂ ಗದ್ದುಗೆ ತ್ಯಜಿಸಿದ ಸಿದ್ದು]]></title>
            <link>https://kannada.asianetnews.com/state/siddaramaiah-resignation-power-sharing-formula-karnataka-congress-high-command-san/articleshow-zuonvt7</link>
            <guid isPermaLink="true">https://kannada.asianetnews.com/state/siddaramaiah-resignation-power-sharing-formula-karnataka-congress-high-command-san/articleshow-zuonvt7</guid>
            <pubDate>Thu, 28 May 2026 16:45:46 +0530</pubDate>
            <description><![CDATA[ಹೈಕಮಾಂಡ್&zwnj;ಗೆ ನೀಡಿದ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಒಪ್ಪಿ ರಾಜೀನಾಮೆ ನೀಡಿದ್ದಾರೆ. ಛತ್ತೀಸ್&zwnj;ಗಢ ಮತ್ತು ರಾಜಸ್ಥಾನದಲ್ಲಿನ ಅಧಿಕಾರ ಜಗಳದ ನಡುವೆ, ಸಿದ್ದರಾಮಯ್ಯರ ಈ ನಡೆ ಕಾಂಗ್ರೆಸ್&zwnj;ಗೆ ಹೊಸ ಮಾದರಿಯಾಗಿದ್ದು, ಅವರು 'ವಚನ ಪಾಲಕ'ನಾಗಿ ಹೊರಹೊಮ್ಮಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksq4j583tmh7gh2sr7wrdskj,imgname-siddaramaiah-1779966743811.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28):&lt;/strong&gt; ದೇಶದ ಇತರೆ ರಾಜ್ಯಗಳಲ್ಲಿ &lsquo;ಅಧಿಕಾರ ಹಂಚಿಕೆ&rsquo; ಜಗಳದಿಂದಲೇ ಕಾಂಗ್ರೆಸ್ ನೆಲಕಚ್ಚುತ್ತಿರುವ ಹೊತ್ತಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದ ರಾಜಕಾರಣಕ್ಕೇ ಹೊಸ ಮಾದರಿಯಾಗಿ ನಿಂತಿದ್ದಾರೆ. ಹೈಕಮಾಂಡ್&zwnj;ಗೆ ಕೊಟ್ಟ ಮಾತಿನಂತೆ, ಒಂದು ಕ್ಷಣವೂ ಯೋಚಿಸದೆ ಅಧಿಕಾರ ಹಸ್ತಾಂತರಕ್ಕೆ ಒಪ್ಪಿ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ನಡೆಗೆ ಎಐಸಿಸಿ ನಾಯಕರು ಅಕ್ಷರಶಃ ದಿಗ್ಭ್ರಮೆಗೊಂಡಿದ್ದಾರೆ. ರಾಜಕೀಯದಲ್ಲಿ ಕೊಟ್ಟ ಮಾತಿಗೆ ತಪ್ಪಿ ನಡೆಯದ &lsquo;ನಂಬಿಕೆ ರಾಮಯ್ಯ&rsquo; ಇಂದು ರಾಜ್ಯ ರಾಜಕಾರಣದ &lsquo;ಪುಣ್ಯಕೋಟಿ&rsquo;ಯಾಗಿ ಹೊರಹೊಮ್ಮಿದ್ದಾರೆ.&lt;/p&gt;&lt;h2&gt;&lt;strong&gt;ಛತ್ತೀಸ್&zwnj;ಗಢದಲ್ಲಿ ಪ್ರಿಯಾಂಕಾ ಗಾಂಧಿ ಸಾಕ್ಷಿಯಾಗಿದ್ದರೂ ಒಪ್ಪಂದ ಮುರಿದಿದ್ದ ಬಘೇಲ್!&lt;/strong&gt;&lt;/h2&gt;&lt;p&gt;ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಅಧಿಕಾರ ಹಂಚಿಕೆಯ ಸೂತ್ರ ಎನ್ನುವುದು ಅತ್ಯಂತ ದೊಡ್ಡ ತಲೆನೋವಾಗಿತ್ತು. ಇದಕ್ಕೆ ದೃಷ್ಟಾಂತ ಎಂಬಂತೆ ಛತ್ತೀಸ್&zwnj;ಗಢದಲ್ಲಿ ಭೂಪೇಶ್ ಬಘೇಲ್ ಮತ್ತು ಟಿ.ಎಸ್. ಸಿಂಗ್ ದೇವ್ ನಡುವೆ 30-30 ತಿಂಗಳುಗಳ ಕಾಲ ಅಧಿಕಾರ ಹಂಚಿಕೊಳ್ಳುವ ಒಪ್ಪಂದ ನಡೆದಿತ್ತು. ಖುದ್ದು ಪ್ರಿಯಾಂಕಾ ಗಾಂಧಿ ಅವರೇ ಈ ಒಪ್ಪಂದಕ್ಕೆ ಸಾಕ್ಷಿಯಾಗಿದ್ದರು. ಆದರೆ, ಭೂಪೇಶ್ ಬಘೇಲ್ ಕೊನೆಯ ತನಕವೂ ಸಿಂಗ್ ದೇವ್ ಅವರಿಗೆ ಅಧಿಕಾರ ಬಿಟ್ಟುಕೊಡಲೇ ಇಲ್ಲ. ಪರಿಣಾಮವಾಗಿ, ಎರಡನೇ ಬಾರಿಗೆ ಸುಲಭವಾಗಿ ಗೆಲ್ಲಬೇಕಿದ್ದ ಕಾಂಗ್ರೆಸ್ ಪಕ್ಷ, ಅಲ್ಲಿನ ನಾಯಕರ ಜಗಳದಿಂದಾಗಿ ಕೊನೆಗೂ ಸೋತು ಸುಣ್ಣವಾಯಿತು.&lt;/p&gt;&lt;h2&gt;&lt;strong&gt;ರಾಜಸ್ಥಾನದಲ್ಲಿ ಖರ್ಗೆ ಅವರನ್ನೇ ಸತಾಯಿಸಿದ್ದ ಮೂಲ ಕಾಂಗ್ರೆಸ್ಸಿಗ ಗೆಹ್ಲೋಟ್!&lt;/strong&gt;&lt;/h2&gt;&lt;p&gt;ಇನ್ನೊಂದೆಡೆ ರಾಜಸ್ಥಾನದಲ್ಲಿ ಮೂರು ಬಾರಿ ಸಿಎಂ ಆಗಿದ್ದ ಮೂಲ ಕಾಂಗ್ರೆಸ್ಸಿಗ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಭೀಕರ ಅಧಿಕಾರದ ಆಟ ನಡೆದಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಖುದ್ದಾಗಿ ಜೈಪುರಕ್ಕೆ ಹೋಗಿ ಶಾಸಕಾಂಗ ಪಕ್ಷದ (CLP) ಸಭೆ ಕರೆದರೂ, ಗೆಹ್ಲೋಟ್ ತಮ್ಮ ಬೆಂಬಲಿಗ ಶಾಸಕರು ಸಭೆಗೆ ಬರದಂತೆ ನೋಡಿಕೊಂಡಿದ್ದರು. ಅಧಿಕಾರ ಬಿಡಲು ಒಪ್ಪದ ಕಾರಣ ಸಚಿನ್ ಪೈಲಟ್ ಮತ್ತು ಕೆಲವು ಶಾಸಕರು ರೆಸಾರ್ಟ್ ಸೇರಬೇಕಾಯಿತು. ಈ ಆಂತರಿಕ ಕಚ್ಚಾಟದಿಂದ ಹೈಕಮಾಂಡ್&zwnj;ಗೆ ಭಾರಿ ಮುಖಭಂಗವಾಗಿ, ಕೊನೆಗೂ ರಾಜಸ್ಥಾನದಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು.&lt;/p&gt;&lt;h2&gt;&lt;strong&gt;ಮೂಲ ಕಾಂಗ್ರೆಸ್ಸಿಗರು ಪಕ್ಷ ಸೋಲಿಸಿದ್ರು; &lsquo;ವಲಸಿಗ&rsquo; ಸಿದ್ದರಾಮಯ್ಯ ಗೆಲ್ಲಿಸಿದ್ರು!&lt;/strong&gt;&lt;/h2&gt;&lt;p&gt;ಇತಿಹಾಸವನ್ನು ತಿರುವಿ ಹಾಕಿದರೆ, ಕಾಂಗ್ರೆಸ್ ಪಕ್ಷದ ರಕ್ತ ಹಂಚಿಕೊಂಡು ಬಂದಿದ್ದೇವೆ ಎನ್ನುವ ಮೂಲ ಕಾಂಗ್ರೆಸ್ಸಿಗರು ದೇಶಾದ್ಯಂತ ಅಧಿಕಾರಕ್ಕಾಗಿ ಹಠ ಹಿಡಿದು ಪಕ್ಷವನ್ನು ಸೋಲಿಸಿದರು. ಆದರೆ, ಜೆಡಿಎಸ್&zwnj;ನಿಂದ ಬಂದ &lsquo;ವಲಸೆ ಕಾಂಗ್ರೆಸ್ಸಿಗ&rsquo; ಎಂದು ಕರೆಯಲ್ಪಡುವ ಸಿದ್ದರಾಮಯ್ಯ ಮಾತ್ರ ಪಕ್ಷವನ್ನು ಮೂರು ಬಾರಿ (ಮೈತ್ರಿ ಸರ್ಕಾರ ಸೇರಿದಂತೆ) ಅಧಿಕಾರಕ್ಕೆ ತಂದಿದ್ದಾರೆ. ಕೇವಲ ಅಧಿಕಾರಕ್ಕೆ ತರುವುದು ಮಾತ್ರವಲ್ಲ, 'ರಾಹುಲ್ ಗಾಂಧಿ ಅವರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ, ಅದರಂತೆ ನಾನು ಅಧಿಕಾರ ಹಸ್ತಾಂತರ ಮಾಡುತ್ತೇನೆ' ಎಂದು ಹೇಳಿ, ನುಡಿದಂತೆ ನಡೆದು ತೋರಿಸಿದ್ದಾರೆ.&lt;/p&gt;&lt;h2&gt;&lt;strong&gt;ಹೈಕಮಾಂಡ್&zwnj;ಗೆ ಶಾಕ್ ಕೊಟ್ಟ ವಚನ ಪಾಲಕ!&lt;/strong&gt;&lt;/h2&gt;&lt;p&gt;ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸೂತ್ರದ ಕಥೆಯೂ ರಾಜಸ್ಥಾನದಂತೆಯೇ ಆಗಬಹುದು ಎಂದು ಹೈಕಮಾಂಡ್ ಆತಂಕದಲ್ಲಿತ್ತು. ಆದರೆ, ಹೈಕಮಾಂಡ್ ಮುಖಂಡರು ಸೂಚನೆ ನೀಡಿದ ತಕ್ಷಣ ಸಿದ್ದರಾಮಯ್ಯ ಅವರು ಯಾವುದೇ ಹಠ ಹಿಡಿಯದೆ, ಒಂದು ಕ್ಷಣವೂ ಯೋಚಿಸದೆ ಸಿಎಂ ಸ್ಥಾನ ತ್ಯಜಿಸಿದ್ದಾರೆ. ರಾಜಕೀಯ ಲಾಬಿಗಳು, ಹಠಮಾರಿ ಧೋರಣೆಗಳ ನಡುವೆ ಸಿದ್ದರಾಮಯ್ಯ ಅವರ ಈ ಸತ್ಚಾರಿತ್ರ್ಯದ ನಡೆ ಕಂಡು ಹೈಕಮಾಂಡ್ ನಾಯಕರೇ ಒಂದು ಕ್ಷಣ ಶಾಕ್ ಆಗಿದ್ದಾರೆ ಮತ್ತು ಫುಲ್ ಖುಷಿಯಾಗಿದ್ದಾರೆ. ರಾಜಕೀಯ ಲಾಭಕ್ಕಾಗಿ ಕೊಟ್ಟ ವಚನಗಳನ್ನು ಗಾಳಿಗೆ ತೂರುವ ಇಂದಿನ ದಿನಗಳಲ್ಲಿ, ಹೈಕಮಾಂಡ್&zwnj;ನ ಗೌರವ ಮತ್ತು ನಂಬಿಕೆಯನ್ನು ಕಾಪಾಡಿ &lsquo;ವಚನ ಪಾಲಕ&rsquo;ನಾಗಿ ನಿಂತ ಸಿದ್ದರಾಮಯ್ಯ ನಿಜಕ್ಕೂ ರಾಜಕಾರಣದ ಸೌಮ್ಯ ಚಹರೆಯಾಗಿ ಉಳಿದುಬಿಟ್ಟಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/siddaramaiah-resignation-power-sharing-formula-karnataka-congress-high-command-san/articleshow-zuonvt7"/>
        </item>
        <item>
            <title><![CDATA[ರಾಜ್ಯಸಭೆಗೆ ಹೋಗೋದಿಲ್ಲ, ಜನ 5 ವರ್ಷಕ್ಕೆ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ]]></title>
            <link>https://kannada.asianetnews.com/state/siddaramaiah-rejects-rajya-sabha-offer-stays-in-karnataka-politics-after-resignation-san/articleshow-wkdo8bc</link>
            <guid isPermaLink="true">https://kannada.asianetnews.com/state/siddaramaiah-rejects-rajya-sabha-offer-stays-in-karnataka-politics-after-resignation-san/articleshow-wkdo8bc</guid>
            <pubDate>Thu, 28 May 2026 16:29:00 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ತಿರಸ್ಕರಿಸಿ, ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksq3gzzwyatkszbqscv0gp35,imgname-siddaramaiah-1779965657084.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28): &lt;/strong&gt;ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮುಂದಿನ ರಾಜಕೀಯ ನಡೆ ಹಾಗೂ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ತಮಗೆ ದೆಹಲಿ ರಾಜಕಾರಣಕ್ಕೆ ಹೋಗುವಂತೆ ಹೈಕಮಾಂಡ್ ಆಫರ್ ನೀಡಿತ್ತು ಎಂಬ ರಹಸ್ಯವನ್ನು ಬಿಚ್ಚಿಟ್ಟ ಅವರು, ತಾವು ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ರಾಜ್ಯಸಭೆ ಆಫರ್ ತಿರಸ್ಕರಿಸಿದ &lsquo;ಸಿದ್ದು&rsquo;: ರಾಜ್ಯ ರಾಜಕಾರಣದಲ್ಲೇ ಮುಂದುವರಿಕೆ&lt;/strong&gt;&lt;/h2&gt;&lt;p&gt;ಸುದ್ದಿಗೋಷ್ಠಿಯಲ್ಲಿ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡುತ್ತಾ ರಾಜ್ಯಸಭೆಯ ವಿಚಾರವನ್ನು ಸಿದ್ದರಾಮಯ್ಯ ಹೇಳಿದರು. 'ಕಾಂಗ್ರೆಸ್ ಹೈಕಮಾಂಡ್&zwnj;ನ ನಾಯಕರು ನನಗೆ ದೆಹಲಿಗೆ ಬರುವಂತೆ ಹಾಗೂ ರಾಜ್ಯಸಭೆಗೆ ಹೋಗುವಂತೆ ಸೂಚಿಸಿದ್ದರು. ಆದರೆ, ನಾನು ಅತ್ಯಂತ ವಿನಮ್ರವಾಗಿ ಅವರ ಆಫರ್ ಅನ್ನು ನಿರಾಕರಿಸಿದ್ದೇನೆ. ನನಗೆ ದೆಹಲಿ ರಾಜಕಾರಣ ಬೇಡ, ನಾನು ಕರ್ನಾಟಕದ ರಾಜ್ಯ ರಾಜಕಾರಣದಲ್ಲೇ ಉಳಿಯುತ್ತೇನೆ ಎಂದು ಹೈಕಮಾಂಡ್&zwnj;ಗೆ ಸ್ಪಷ್ಟಪಡಿಸಿದ್ದೇನೆ. ಈ ನಾಡಿನ ಜನ ನನ್ನನ್ನು ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ನಾನು ಸಕ್ರಿಯ ರಾಜಕಾರಣದಲ್ಲೇ ಮುಂದುವರಿಯಲಿದ್ದೇನೆ. ಯಾರ ಒತ್ತಡಕ್ಕೂ ಮಣಿಯದೆ ನಾನೇ ಸ್ವಯಂ ಪ್ರೇರಿತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ' ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಸಂವಿಧಾನ ಇಲ್ಲದಿದ್ದರೆ ನಾನು ಕುರಿ ಮೇಯಿಸಿಕೊಂಡು ಇರಬೇಕಿತ್ತು&lt;/strong&gt;&lt;/h2&gt;&lt;p&gt;ತಮ್ಮ 50 ವರ್ಷಗಳ ಸುದೀರ್ಘ ರಾಜಕೀಯ ಜೀವನವನ್ನು ನೆನೆದು ಭಾವುಕರಾದ ಸಿದ್ದರಾಮಯ್ಯ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸಿದರು. 'ನನ್ನ ರಾಜಕೀಯ ಜೀವನ ಒಂದು ತೆರೆದ ಪುಸ್ತಕ. ಈ ದೇಶದಲ್ಲಿ ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ವಿದ್ಯಾವಂತನಾಗಲು ಸಾಧ್ಯವಿರಲಿಲ್ಲ. ಸಂವಿಧಾನ ಇದ್ದಿದ್ದಕ್ಕೆ ಇಂದು ನಾನು ಶಾಸಕ, ಉಪಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಇಲ್ಲದಿದ್ದರೆ ನಾನು ಹಳ್ಳಿಯಲ್ಲಿ ಕುರಿ ಮೇಯಿಸಿಕೊಂಡು ಇರಬೇಕಿತ್ತು' ಎಂದರು.&lt;/p&gt;&lt;p&gt;ನನ್ನ ದೇಹದಲ್ಲಿ ಕೊನೆ ಉಸಿರಿರುವವರೆಗೂ ಸಂವಿಧಾನಕ್ಕೆ ಧಕ್ಕೆ ತರುವವರ ವಿರುದ್ಧ ಹಾಗೂ ಕೋಮುವಾದಿ ಶಕ್ತಿಗಳ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತದೆ. ಸಮಾಜದಲ್ಲಿ ಸಮಾನತೆಗಾಗಿ ನಾನು ಸದಾ ಧ್ವನಿ ಎತ್ತುತ್ತೇನೆ' ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಮುಂದಿನ ಸಿಎಂ ಯಾರು? ಜೆಡಿಎಸ್&zwnj;ನಿಂದ ಹೊರಬಿದ್ದ ದಿನಗಳ ಸ್ಮರಣೆ&lt;/strong&gt;&lt;/h2&gt;&lt;p&gt;ಮುಂದಿನ ಮುಖ್ಯಮಂತ್ರಿ ಯಾರು ಎಂಬ ಮಾಧ್ಯಮಗಳ ನೇರ ಪ್ರಶ್ನೆಗೆ ಉತ್ತರಿಸಿದ ಅವರು, 'ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಹಾಗೂ ಹೈಕಮಾಂಡ್ ನಾಯಕರು ಒಟ್ಟಾಗಿ ತೀರ್ಮಾನ ಮಾಡುತ್ತಾರೆ' ಎಂದರು.&lt;/p&gt;&lt;p&gt;ಇದೇ ವೇಳೆ ತಾವು ಕಾಂಗ್ರೆಸ್ ಸೇರಿದ ದಿನಗಳನ್ನು ನೆನೆದ ಸಿದ್ದರಾಮಯ್ಯ, 'ನನಗೆ 8 ವರ್ಷ ಮುಖ್ಯಮಂತ್ರಿಯಾಗುವ, ಎರಡು ಬಾರಿ ವಿರೋಧ ಪಕ್ಷದ ನಾಯಕನಾಗುವ ಮಹಾನ್ ಅವಕಾಶವನ್ನು ಕಾಂಗ್ರೆಸ್ ಒದಗಿಸಿಕೊಟ್ಟಿದೆ. ನನ್ನನ್ನು ಜೆಡಿಎಸ್&zwnj;ನಿಂದ ಹೊರಹಾಕಿದಾಗ ಪೀರಾನ್ ಎಂಬುವವರು ನನ್ನನ್ನು ಅಹ್ಮದ್ ಪಟೇಲ್ ಬಳಿ ಕರೆದೊಯ್ದರು. ಆ ಮೂಲಕ ನಾನು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರಿದೆ. ಅಂದು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಅಧ್ಯಕ್ಷರಾಗಿದ್ದರು. ನನ್ನ ಜೊತೆ 8 ಜನ ಶಾಸಕರು ಕಾಂಗ್ರೆಸ್ ಸೇರಿದ್ದೆವು, ಅವರಲ್ಲಿ ಕೆಲವರು ಇಂದು ತೀರಿಹೋಗಿದ್ದಾರೆ. ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ' ಎಂದು ಕೃತಜ್ಞತೆ ಸಲ್ಲಿಸಿದರು.&lt;/p&gt;&lt;h2&gt;&lt;strong&gt;ಸಿದ್ಧಾಂತದ ಜೊತೆ ರಾಜಿ ಇಲ್ಲ, ಗ್ಯಾರಂಟಿ ಯೋಜನೆಗಳೇ ನನ್ನ ಹೆಮ್ಮೆ!&lt;/strong&gt;&lt;/h2&gt;&lt;p&gt;ರಾಜಕಾರಣದಲ್ಲಿ ಜನಶಕ್ತಿ ಇದ್ದರೆ ಮಾತ್ರ ಉಳಿಯಲು ಸಾಧ್ಯ, ಜನರೇ ನಮಗೆ ಅಧಿಕಾರ ಕೊಡುವುದು. ನಾನು ನನ್ನ ಇಡೀ ಜೀವನದಲ್ಲಿ ನಂಬಿದ ಮೌಲ್ಯಗಳು ಮತ್ತು ಸಿದ್ಧಾಂತದ ಜೊತೆ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ ಅನ್ನ, ಆರೋಗ್ಯ, ವಸತಿ ಮತ್ತು ಉದ್ಯೋಗ ಸಿಗಬೇಕು ಎಂಬುದೇ ನನ್ನ ಆಶಯ. ಅದಕ್ಕಾಗಿಯೇ ನಮ್ಮ ಸರ್ಕಾರ ಬಡವರಿಗೆ ಉಚಿತ ಅನ್ನ, ಗೃಹಲಕ್ಷ್ಮಿ ಮೂಲಕ ಮಹಿಳೆಯರಿಗೆ 2,000 ರೂ., ಗೃಹಜ್ಯೋತಿ ಮೂಲಕ 1.64 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಹಾಗೂ ಶಕ್ತಿ ಯೋಜನೆ ಮೂಲಕ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪ್ರಯಾಣವನ್ನು ನೀಡಿದೆ. ರಾಜ್ಯದಲ್ಲಿ ಭೀಕರ ಬರಗಾಲ ಬಂದಾಗಲೂ ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಎದುರಿಸಿದೆ. ನೆಲ, ಜಲ, ಭಾಷೆಯ ವಿಚಾರದಲ್ಲಿ ಎಂದೂ ರಾಜಿ ಮಾಡಿಕೊಂಡಿಲ್ಲ ಎಂದು ಹೆಮ್ಮೆಯಿಂದ ನುಡಿದರು.&lt;/p&gt;&lt;p&gt;ಕೊನೆಯದಾಗಿ, ತಮಗೆ ಇಷ್ಟು ದಿನ ಬೆಂಬಲ ನೀಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಹೈಕಮಾಂಡ್ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದರು. ಸುದ್ದಿಗೋಷ್ಠಿಯ ಮುಕ್ತಾಯದ ವೇಳೆ ಡಿಕೆಶಿ ಸೇರಿದಂತೆ ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಕೈಹಿಡಿದು ಮೇಲಕ್ಕೆ ಎತ್ತಿ, ಕಾಂಗ್ರೆಸ್&zwnj;ನಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸಾರುವಂತೆ ಕ್ಯಾಮೆರಾಗಳಿಗೆ ಪೋಸ್ ನೀಡಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/siddaramaiah-rejects-rajya-sabha-offer-stays-in-karnataka-politics-after-resignation-san/articleshow-wkdo8bc"/>
        </item>
        <item>
            <title><![CDATA['ಮುಂದಿನ 8 ವರ್ಷ ಡಿಕೆಶಿಯನ್ನ ಅಲ್ಲಾಡಿಸಲು ಆಗಲ್ಲ.' ಸಿದ್ದು ರಾಜಯೋಗ ಮುಗಿದಿದೆ: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ]]></title>
            <link>https://kannada.asianetnews.com/astrology/dwarakanath-guruji-astrology-prediction-dk-shivakumar-next-cm-karnataka-san/articleshow-pwmwfz4</link>
            <guid isPermaLink="true">https://kannada.asianetnews.com/astrology/dwarakanath-guruji-astrology-prediction-dk-shivakumar-next-cm-karnataka-san/articleshow-pwmwfz4</guid>
            <pubDate>Thu, 28 May 2026 15:58:25 +0530</pubDate>
            <description><![CDATA[&lt;p&gt;ಡಿಕೆ ಶಿವಕುಮಾರ್ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ, ಡಿಕೆಶಿ ಸೋಮವಾರದೊಳಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದು, 8 ವರ್ಷಗಳ ಕಾಲ ಅವರ ಅಧಿಕಾರ ಅಬಾಧಿತವಾಗಿರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksq1vdhdbghfy0fa16f1by6m,imgname-rajguru-dwarakanath-on-dk-shivakumar-1779963901485.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28):&lt;/strong&gt; ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಡಿಕೆಶಿ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ತೆರೆ ಎಳೆದಿದ್ದಾರೆ. 'ಡಿಕೆ ಶಿವಕುಮಾರ್ ಸೋಮವಾರದ ಒಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ&quot; ಎಂದು ಭವಿಷ್ಯ ನುಡಿದಿದ್ದಾರೆ.&lt;/p&gt;&lt;p&gt;&lsquo;ಏಷ್ಯಾನೆಟ್ ಸುವರ್ಣ ನ್ಯೂಸ್&rsquo;ಗೆ ಮಾತನಾಡಿರುವ ದ್ವಾರಕನಾಥ್ ಗುರೂಜಿ, ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. 'ಅವನು (ಡಿಕೆಶಿ) ನನಗೆ ಕಳೆದ 35 ವರ್ಷಗಳಿಂದ ಪರಿಚಯ. ಹಿಂದೆ ಮಾಜಿ ಸಿಎಂ ಬಂಗಾರಪ್ಪ ಅವರ ಸಂಪುಟದಲ್ಲಿ ಅತ್ಯಂತ ಸಣ್ಣ ವಯಸ್ಸಿಗೆ ಜೈಲು ಮಂತ್ರಿಯಾಗಿದ್ದಾಗಲೇ, 'ನೀನು ಮುಂದೊಂದು ದಿನ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗ್ತೀಯಾ' ಎಂದು ಭವಿಷ್ಯ ಹೇಳಿದ್ದೆ. ಅವನು ಸದಾ ನನ್ನ ಸಂಪರ್ಕದಲ್ಲೇ ಇದ್ದಾನೆ. ಅವನು ನಮ್ಮ ಮನೆಯ ಮಗನಿದ್ದಂತೆ' ಎಂದರು.&lt;/p&gt;&lt;h2&gt;&lt;strong&gt;ಶೃಂಗೇರಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಬಂತು ಡಿಕೆಶಿ ಫೋನ್ ಕಾಲ್!&lt;/strong&gt;&lt;/h2&gt;&lt;p&gt;ಡಿಕೆಶಿಗೆ ಸಿಎಂ ಪಟ್ಟ ಸಿಗುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಶೃಂಗೇರಿಗೆ ತೆರಳಿದ್ದ ರಹಸ್ಯವನ್ನು ಗುರೂಜಿ ಬಿಚ್ಚಿಟ್ಟಿದ್ದಾರೆ.'ಅವನಿಗೆ ಸಿಎಂ ಆಗೋದು ನ್ಯಾಯವಾಗಿ ಇನ್ನೂ ಬೇಗ, ಅಂದರೆ ಹೊಸ ವರ್ಷದ ಒಳಗೇ ಆಗಬೇಕಿತ್ತು. ಆದರೆ ನಿಧಾನವಾಗುತ್ತಿತ್ತು. ಅದಕ್ಕಾಗಿಯೇ ನಾನು ಅವನ ಪರವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಹೋಗಿದ್ದೆ. ನಿಧಾನವಾದ ಕಾರಣ ಆ ದೇವರಿಗೇ ಗೊತ್ತು. ಆದರೆ, ನಾನು ಶೃಂಗೇರಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಖುದ್ದು ಡಿ.ಕೆ. ಶಿವಕುಮಾರ್ ನನಗೆ ಫೋನ್ ಕಾಲ್ ಮಾಡಿ 'ಗುರೂಜಿ, ಕೆಲಸ ಆಗಿದೆ' ಎಂದು ಸಿಹಿ ಸುದ್ದಿ ನೀಡಿದ. ನಾನು ಈಗ ಬೆಂಗಳೂರಿಗೆ ಹೋಗಿ ಆತನ ಜೊತೆ ಕುಳಿತು ಮಾತನಾಡುತ್ತೇನೆ. ಸೋಮವಾರದ ಒಳಗೆ ಆತ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾನೆ' ಎಂದರು.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ರಾಜಯೋಗ ಅಂತ್ಯ; ಡಿಕೆಶಿಗೆ ಆರಂಭವಾಯ್ತು ಗುರು ಬಲ!&lt;/strong&gt;&lt;/h2&gt;&lt;p&gt;ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರ ಜಾತಕದ ಗ್ರಹಗತಿಗಳ ಬಗ್ಗೆ ಜ್ಯೋತಿಷ್ಯ ವಿಶ್ಲೇಷಣೆ ನಡೆಸಿದ ಗುರೂಜಿ, 'ಸಿದ್ದರಾಮಯ್ಯ ಅವರದ್ದು ವೃಶ್ಚಿಕ ರಾಶಿ. ಸದ್ಯ ಅವರಿಗೆ ಗುರು ಬಲ ಮತ್ತು ಶನಿ ಬಲ ಎರಡೂ ಇಲ್ಲ. ಈ ಕಾಲ ಯಾರನ್ನೂ ಕೇಳಿ ಬರಲ್ಲ, ಆರಂಭವಾಗಿದ್ದು ಎಂದಿಗೂ ಅಂತ್ಯವಾಗಲೇಬೇಕು. ಸಿದ್ದರಾಮಯ್ಯ ಅವರ ಸಿಎಂ ಆಗುವ 'ರಾಜಯೋಗ' ಈಗ ಮುಗಿದಿದೆ. ಆದರೆ, ಈ ರಾಜ್ಯಕ್ಕೆ ಅವರ ಮಾರ್ಗದರ್ಶನ ಮತ್ತು ಸೇವೆಯ ಅಗತ್ಯ ಖಂಡಿತಾ ಇದೆ' ಎಂದಿದ್ದಾರೆ.&lt;/p&gt;&lt;p&gt;ಈಗ ಡಿಕೆಶಿಗೆ ಅತ್ಯಂತ ಸುವರ್ಣ ಸಮಯ ಆರಂಭವಾಗಿದೆ. ಗೋಚಾರ ಫಲದ ಪ್ರಕಾರ ಗುರು ಈಗ ಮಿಥುನ ರಾಶಿಯಲ್ಲಿದ್ದಾನೆ. ಇದು ಡಿಕೆಶಿಗೆ ಭಾರಿ ರಾಜಯೋಗ ತರಲಿದೆ. ನನ್ನ ಲೆಕ್ಕಾಚಾರದ ಪ್ರಕಾರ ಮುಂದಿನ ಎಂಟು ವರ್ಷ ಈ ರಾಜ್ಯದಲ್ಲಿ ಅವನನ್ನು ಅಲ್ಲಾಡಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಶಿವಕುಮಾರ್ ಅನ್ನೋದೇ ಒಂದು ಬ್ರ್ಯಾಂಡ್&zwnj;&lt;/strong&gt;&lt;/h2&gt;&lt;p&gt;ಮುಂದಿನ ಆಡಳಿತದ ಬಗ್ಗೆ ಮಾತನಾಡಿದ ಗುರೂಜಿ, &quot;ಡಿಕೆಶಿ ಕೇವಲ ಮುಖ್ಯಮಂತ್ರಿ ಮಾತ್ರವಲ್ಲ, ಪಕ್ಷವನ್ನು ಕೂಡ ಮುನ್ನಡೆಸಬೇಕಿದೆ. ಅದನ್ನು ನಿಭಾಯಿಸುವ ಶಕ್ತಿಯನ್ನು ದೇವರು ಕೊಡಲಿ. ಆತ ತುಂಬಾ ಬುದ್ಧಿವಂತ ಮತ್ತು ಜಾಣ. ಕೆಲವೊಮ್ಮೆ ಉದ್ವೇಗ (Aggressive) ಇರುತ್ತದೆಯಾದರೂ ಆತನಿಗೆ ಸಹನೆ ಇದೆ, ಎಲ್ಲವನ್ನೂ ಸಂಭಾಳಿಸುತ್ತಾನೆ. ಹೆಗಲ ಮೇಲೆ ಕೈ ಹಾಕಿ ಯಾರನ್ನು ಬೇಕಾದರೂ ಮಾತನಾಡಿಸುವ ಗುಣ ಆತನಲ್ಲಿದೆ. ಆತ ಇವರ ಕಡೆಯವರು ಅವರ ಕಡೆಯವರು ಅಂತ ಯಾರನ್ನೂ ಬ್ರಾಂಡ್ ಮಾಡಲ್ಲ. ಯಾಕಂದ್ರೆ ಶಿವಕುಮಾರ್ ಅನ್ನೋದೇ ಒಂದು ಬ್ರಾಂಡ್!&quot; ಎಂದು ಬಣ್ಣಿಸಿದರು.&lt;/p&gt;&lt;p&gt;ಡಿಕೆಶಿ ಮುಖ್ಯಮಂತ್ರಿಯಾದ ಮೇಲೆ ಬೆಂಗಳೂರಿನ ಮೂಲಸೌಕರ್ಯ, ಕುಡಿಯುವ ನೀರು ಮತ್ತು ಟ್ರಾಫಿಕ್ ಸಮಸ್ಯೆಯನ್ನು ಆದ್ಯತೆಯ ಮೇರೆಗೆ ಸರಿಪಡಿಸಬೇಕು. ಇಡೀ ರಾಜ್ಯದ ದೊಡ್ಡ ಚಿತ್ರಣ ಆತನ ಕಣ್ಣಮುಂದಿದೆ. ಸಿದ್ದರಾಮಯ್ಯ ಅವರ ಸಹಪಾಠಿಗಳನ್ನು (ಆಪ್ತರನ್ನು) ಕೂಡ ಜೊತೆಯಲ್ಲೇ ಕರೆದುಕೊಂಡು ಹೋಗಿ ಒಂದು ಅತ್ಯುತ್ತಮ ಸರ್ಕಾರವನ್ನು ಆತ ನೀಡಲಿದ್ದಾನೆ. ಆತನ ಕಾಲದಲ್ಲಿ ಕನ್ನಡ ನಾಡು ಮತ್ತಷ್ಟು ಅಭಿವೃದ್ಧಿಯಾಗಲಿದ್ದು, ನನ್ನ ಪ್ರಾರ್ಥನೆ ಸದಾ ಆತನ ಪರವಾಗಿರುತ್ತದೆ&quot; ಎಂದು ಆಶೀರ್ವದಿಸಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/astrology/dwarakanath-guruji-astrology-prediction-dk-shivakumar-next-cm-karnataka-san/articleshow-pwmwfz4"/>
        </item>
        <item>
            <title><![CDATA[Breaking: ಹೈಕಮಾಂಡ್‌ ಹೇಳಿದ್ರೆ ಕೊಡ್ತೀನಿ ಅಂದಿದ್ದೆ, ಮೊನ್ನೆ ಹೇಳಿದ್ರು ಕೊಟ್ಟೆ: ರಾಜೀನಾಮೆ ಬಳಿಕ ಸಿದ್ದು ಮಾತು]]></title>
            <link>https://kannada.asianetnews.com/state/cm-siddaramaiah-resigns-karnataka-governor-secretary-congress-high-command-san/articleshow-8hmw32k</link>
            <guid isPermaLink="true">https://kannada.asianetnews.com/state/cm-siddaramaiah-resigns-karnataka-governor-secretary-congress-high-command-san/articleshow-8hmw32k</guid>
            <pubDate>Thu, 28 May 2026 15:29:27 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯಂತೆ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನದಲ್ಲಿ ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಹೈಕಮಾಂಡ್ ಆದೇಶಕ್ಕೆ ಬದ್ಧನಾಗಿರುವುದಾಗಿ ಸ್ಪಷ್ಟಪಡಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kspzyakeymbvm1m3p3j7wtjm,imgname-siddaramaiah-resignation-1779961899630.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28):&lt;/strong&gt; 'ನಾನು ಮಾಧ್ಯಮದವರು ಸಾಕಷ್ಟು ಬಾರಿ ಸಿಎಂ ಸ್ಥಾನದ ಪ್ರಶ್ನೆ ಮಾಡಿದ್ದಾಗ ಹೇಳಿದ್ದು ಒಂದೇ ಮಾತು. ಹೈಕಮಾಂಡ್&zwnj; ಏನು ಹೇಳುತ್ತೋ ಅದಕ್ಕೆ ಬದ್ಧ. ಅದರಂತೆ ಅವರು ನನಗೆ ರಾಜೀನಾಮೆ ನೀಡಲು ಸೂಚಿಸಿದ್ದರು. ಅದರಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆ ಮೂಲಕ ದೀರ್ಘಾವಧಿಯ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಸಿಎಂ ಅವರ ಅಧಿಕಾರವಧಿ ಕೊನೆಗೊಂಡಂತಾಗಿದೆ.&lt;/p&gt;&lt;p&gt;ರಾಜ್ಯ ರಾಜಕಾರಣದ ಮಹಾತಿರುವಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನದಲ್ಲಿ ರಾಜೀನಾಮೆ ಪತ್ರ ನೀಡಿದ ಬಳಿಕ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಹುದ್ದೆಯನ್ನು ತ್ಯಜಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಮಾಧ್ಯಮ ಮಿತ್ರರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, &quot;ಮಾಧ್ಯಮದ ಸ್ನೇಹಿತರೇ ನಿಮ್ಮೆಲ್ಲರಿಗೂ ನಮಸ್ಕಾರ. ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಭವನದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ಆದರೆ, ಸದ್ಯ ರಾಜ್ಯಪಾಲರು ಊರಿನಲ್ಲಿ ಇಲ್ಲ. ಅವರು ಇವತ್ತು ರಾತ್ರಿ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ ಎಂದು ಅವರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಯ ಮುಖ್ಯ ಕಾರ್ಯದರ್ಶಿಯವರಿಗೆ ಹಸ್ತಾಂತರಿಸಿ ಬಂದಿದ್ದೇನೆ&quot; ಎಂದು ಪ್ರಕ್ರಿಯೆಯ ಸಂಪೂರ್ಣ ವಿವರ ನೀಡಿದರು.&lt;/p&gt;&lt;h2&gt;&lt;strong&gt;&quot;ಹೇಳಿದಂತೆಯೇ ಕೇಳಿದೆ&quot;: ಹೈಕಮಾಂಡ್ ಆದೇಶಕ್ಕೆ ತಲೆಬಾಗಿದ ಸಿದ್ದರಾಮಯ್ಯ!&lt;/strong&gt;&lt;/h2&gt;&lt;p&gt;ತಮ್ಮ ರಾಜೀನಾಮೆಯ ಹಿಂದಿನ ಹೈಕಮಾಂಡ್ ರಹಸ್ಯವನ್ನು ಮುಕ್ತವಾಗಿ ಒಪ್ಪಿಕೊಂಡ ಸಿದ್ದರಾಮಯ್ಯ, &quot;ನಾನು ಮೊದಲಿನಿಂದಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳುತ್ತಾ ಬಂದಿದ್ದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ನನಗೆ ಯಾವಾಗ ಸೂಚನೆ ನೀಡುತ್ತಾರೋ, ಆ ತಕ್ಷಣವೇ ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ. ಅದರಂತೆ, ಮೊನ್ನೆ ಹೈಕಮಾಂಡ್&zwnj;ನಿಂದ ನನಗೆ 'ರಾಜೀನಾಮೆ ನೀಡಿ' ಎಂಬ ಸಂದೇಶ ಬಂದಿತ್ತು. ಅದರ ಪ್ರಕಾರವೇ ಇಂದು (ಗುರುವಾರ) ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ, ಈಗ ಅದರಂತೆಯೇ ನಡೆದುಕೊಂಡು ರಾಜೀನಾಮೆ ಸಲ್ಲಿಸಿದ್ದೇನೆ&quot; ಎಂದು ನುಡಿದರು.&lt;/p&gt;&lt;p&gt;ರಾಜ್ಯಪಾಲರು ಬಂದ ಮೇಲೆ ರಾಜಿನಾಮೆ ಪತ್ರ ಅಂಗೀಕಾರ ಮಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಸಂವಿಧಾನದ ಪ್ರಕಾರ ಮಾಡಲೇಬೇಕು. ಅವರ ನಿಯಮಗಳ ಪ್ರಕಾರ ಏನು ಮಾಡ್ತಾರೋ ಅವರಿಗೆ ಬಿಟ್ಟಿದ್ದರು. ಸಿಎಂ ರಾಜೀನಾಮೆ ಕೊಟ್ಟ ಮೇಲೆ ಅದನ್ನ ಅಂಗೀಕಾರ ಮಾಡಬೇಕು. ಮುಂದಿನ ಮುಖ್ಯಮಂತ್ರಿ ಗೆ ಅನುವು ಮಾಡಿಕೊಡಬೇಕಾದದ್ದು ಅವರ ಜವಾಬ್ದಾರಿ. ನಮ್ಮ ಪಕ್ಷ 135+1 ಸ್ಥಾನ ಪಡೆದಿದ್ದೇವೆ. ಜೊತಗೆ ಇಬ್ಬರು ಪಕ್ಷೇತರರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾವು ಸಂಪೂರ್ಣ ಬಹುಮತದಲ್ಲಿ ಇದ್ದೇವೆ. ಮುಂದಿನ ಮುಖ್ಯಮಂತ್ರಿಗೆ ಅವಕಾಶ ಮಾಡಿಕೊಡಬೇಕಾದದ್ದು ಸಂವಿಧಾನ ಬದ್ದವಾಗಿ ಇದೆ ಎಂದು ಹೇಳಿದ್ದಾರೆ.&lt;/p&gt;&lt;p&gt;&lt;/p&gt;&lt;h2&gt;&lt;strong&gt;ರಾಜ್&zwnj;ಕುಮಾರ್&zwnj; ಮಾತು ನೆನೆದ ಸಿದ್ದರಾಮಯ್ಯ&lt;/strong&gt;&lt;/h2&gt;&lt;p&gt;ಕರ್ನಾಟಕ ಮೇರು ನಟ ರಾಜ್ ಕುಮಾರ್ ಅಭಿಮಾನಿ ದೇವರು ಅಂತ ಕರೆಯುತ್ತಿದ್ದರು. ನಾನು ರಾಜಕಾರಣಿ, ನಾನು ಸಂವಿಧಾನವೇ ನಮ್ಮ ಧರ್ಮ ಅಂತ ತಿಳಿದವನು. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ&zwnj; ನಾಡಿನ ಏಳು ಕೋಟಿ ಜನರ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ವಿಪಕ್ಷ ನಾಯಕ ಆಗುವ ಅವಕಾಶ ಸಿಕ್ಕಿತ್ತು. ಈ ಅವಕಾಶ ಕೊಟ್ಟಂತ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ, ನಮ್ಮ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಂದರ್ಭದಲ್ಲಿ ಅಪಾರ ಧನ್ಯವಾದ ತಿಳಿಸುತ್ತೇನೆ. ನಾನು ಕಾಂಗ್ರೆಸ್ ಸೇರಿದ್ದು 2006, ಆಗಿನಿಂದಲೂ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು, ಸಂಸದರು, ನನಗೆ ಪ್ರೀತಿ ತೋರಿಸಿದ್ದಾರೆ, ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅವರೆಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದರು.&lt;/p&gt;&lt;h2&gt;&lt;strong&gt;ನಾನು ರಾಜಕಾರಣಕ್ಕೆ ಬಂದಿದ್ದು ಆಕಸ್ಮಿಕ&lt;/strong&gt;&lt;/h2&gt;&lt;p&gt;2013 ರಿಂದ 2018 ವರೆಗೆ 2023 ರಿಂದ ಇಲ್ಲಿಯವರೆಗೆ ನನ್ನ ಜೊತೆ ಕೆಲಸ ಮಾಡಿ ಸಹೋದ್ಯೋಗಿಗಳು ಎಲ್ಲಾ ರೀತಿಯ ಬೆಂಬಲ ಮತ್ತು ಸಹಕಾರ ಪ್ರೀತಿ ವ್ಯಕ್ತ ಪಡಿಸಿದ್ದಾರೆ. ಅವರಿಗೆ ನಾನು ಋಣಿ ಆಗಿರುತ್ತೇನೆ. ನಾನು ಹಳ್ಳಿಗಾಡಿನಿಂದ ಬಂದವನು. ನಾನು ಮುಂದೊಂದು ದಿನ ಶಾಸಕ ಆಗ್ತೇನೆ, ಮಂತ್ರಿ ಆಗ್ತೇನೆ, ಮುಖ್ಯಮಂತ್ರಿ ಆಗ್ತೇನೆ, ಮುಖ್ಯಮಂತ್ರಿ ಆಗ್ತೇನೆ ಅಂತ ಕಸನು ಕೂಡ ಕಂಡಿರಲಿಲ್ಲ. ನಾನು ರಾಜಕಾರಣಕ್ಕೆ ಬಂದಿದ್ದು ಆಕಸ್ಮಿಕ. ನಮ್ಮ ಕುಟುಂಬದವರು ಯಾರೂ ರಾಜಕಾರಣಲ್ಲಿ ಇರಲಿಲ್ಲ ಎಂದು ಹೇಳಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state</category>
            <dc:creator>Santosh Naik</dc:creator>
            <atom:link href="https://kannada.asianetnews.com/state/cm-siddaramaiah-resigns-karnataka-governor-secretary-congress-high-command-san/articleshow-8hmw32k"/>
        </item>
        <item>
            <title><![CDATA[ಖಾಸಗಿ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ನೀಡಿದ ಸಿದ್ದರಾಮಯ್ಯ]]></title>
            <link>https://kannada.asianetnews.com/politics/siddaramaiah-resigns-as-karnataka-cm-after-visiting-raj-bhavan-governor-special-secretary-prabhushankar-gdp/articleshow-4qe61dk</link>
            <guid isPermaLink="true">https://kannada.asianetnews.com/politics/siddaramaiah-resigns-as-karnataka-cm-after-visiting-raj-bhavan-governor-special-secretary-prabhushankar-gdp/articleshow-4qe61dk</guid>
            <pubDate>Thu, 28 May 2026 15:18:41 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದ ಅವರು, ರಾಜಭವನದಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರ ತೀವ್ರ ಆಕ್ರೋಶ ಹಾಗೂ ಭಾವನಾತ್ಮಕ ಪ್ರತಿಭಟನೆಯನ್ನು ಎದುರಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kspzrqp32c35mt1wxgfy8t1k,imgname-siddaramaiah--2--1779961716416.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತೀವ್ರ ರಾಜಕೀಯ ಜಿದ್ದಾಜಿದ್ದಿ ಹಾಗೂ ಹೈಕಮಾಂಡ್ ನಿರ್ದೇಶನದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ (ಲೋಕಭವನ) ಆಗಮಿಸಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆಯಾಗಿದ್ದು, ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕಾರ ಮಾಡಿದ್ದಾರೆ.&lt;/p&gt;&lt;p&gt;ವಿಶೇಷವೆಂದರೆ, ಹೈವೋಲ್ಟೇಜ್ ಉಪಾಹಾರ ಕೂಟದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿ ಎನ್ನಲಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದೇ ಕಪ್ಪು ಬಣ್ಣದ ರೇಂಜ್ ರೋವರ್ (Range Rover) ಕಾರಿನಲ್ಲಿ ರಾಜಭವನಕ್ಕೆ ಒಟ್ಟಿಗೆ ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು. ಅವರ ಜೊತೆಗೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಸಿ. ಸುಧಾಕರ್ ಹಾಗೂ ಹಲವಾರು ಕಾಂಗ್ರೆಸ್ ಶಾಸಕರು ಸಹ ರಾಜಭವನಕ್ಕೆ ದೌಡಾಯಿಸಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಅವರೂ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.&lt;/p&gt;&lt;h2&gt;ರಾಜ್ಯಪಾಲರ ಅನುಪಸ್ಥಿತಿ: ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ&lt;/h2&gt;&lt;p&gt;ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವೈಯಕ್ತಿಕ ಕಾರಣಗಳಿಗಾಗಿ ತುರ್ತಾಗಿ ಇಂದೋರ್&zwnj;ಗೆ ಪ್ರಯಾಣ ಬೆಳೆಸಿರುವ ಕಾರಣ, ಅವರು ಇಂದು ರಾಜಭವನದಲ್ಲಿ ಲಭ್ಯವಿರಲಿಲ್ಲ. ಹೀಗಾಗಿ, ರಾಜ್ಯಪಾಲರ ಮುನ್ಸೂಚನೆ ಹಾಗೂ ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭಾವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.&lt;/p&gt;&lt;p&gt;ಸದ್ಯಕ್ಕೆ ಕಾರ್ಯದರ್ಶಿ ಪ್ರಭುಶಂಕರ್ ಅವರು ಮುಖ್ಯಮಂತ್ರಿಗಳ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ. ಆದರೆ, ಇಂದೋರ್&zwnj;ನಿಂದ ರಾಜ್ಯಪಾಲರು ಬೆಂಗಳೂರಿಗೆ ಮರಳಿದ ಬಳಿಕವಷ್ಟೇ ಈ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಲಾಗುವುದು ಎಂದು ರಾಜಭವನದ ಮೂಲಗಳು ಸ್ಪಷ್ಟಪಡಿಸಿವೆ.&lt;/p&gt;&lt;h2&gt;ಇಂದು ಸಂಜೆಯೇ ರಾಜ್ಯಪಾಲರು ವಾಪಸ್&lt;/h2&gt;&lt;p&gt;ಇನ್ನೊಂದೆಡೆ ಇಂದು ಸಂಜೆ 6:30 ಕ್ಕೆ ರಾಜ್ಯಪಾಲರು ಬೆಂಗಳೂರಿಗೆ ಬಂದಿಳಿಯಲಿಯಲಿದ್ದಾರೆ. ನಿನ್ನೆ ರಾತ್ರಿ &amp;nbsp;ವೈಯಕ್ತಿಕ ಕಾರ್ಯದ ನಿಮಿತ್ತ ಮುಂಬೈ ಮೂಲಕ ಇಂಧೋರ್ ಗೆ ಹೋಗಿದ್ದರು. ನಾಳೆ ಉಪರಾಷ್ಟ್ರಪತಿ ಕಾರ್ಯಕ್ರಮದ ಹಿನ್ನೆಲೆ ಇಂದೇ ರಾಜ್ಯಪಾಲರು ವಾಪಸ್. ನಾಳೆ ಬೆಳಗ್ಗೆಯಿಂದಲೇ ಉಪರಾಷ್ಟ್ರಪತಿಗಳ ಜೊತೆ ಬ್ಯುಸಿ ಆಗಲಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್.&lt;/p&gt;&lt;h2&gt;ಸಿಎಂ ಕಾರಿಗೆ ಮುತ್ತಿಗೆ, ಅಡ್ಡ ಬಿದ್ದ ಕಾರ್ಯಕರ್ತರು: ಹತೋಟಿ ಮೀರಿದ ಪರಿಸ್ಥಿತಿ!&lt;/h2&gt;&lt;p&gt;ರಾಜೀನಾಮೆ ಸಲ್ಲಿಕೆಯ ಪ್ರಕ್ರಿಯೆಯನ್ನು ಮುಗಿಸಿ ಸಿದ್ದರಾಮಯ್ಯ ಅವರು ರಾಜಭವನದಿಂದ ಹೊರಬರುತ್ತಿದ್ದಂತೆ ಅಲ್ಲಿ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಆಕ್ರೋಶ ಕಟ್ಟೆ ಒಡೆಯಿತು. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಘೋಷಣೆ ಕೂಗಿದ ಅಭಿಮಾನಿಗಳು, ಅವರು ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿಗೆ ಮುತ್ತಿಗೆ ಹಾಕಿದರು.&lt;/p&gt;&lt;p&gt;ಸಿಎಂ ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಈ ನಡುವೆ ತೀವ್ರ ಭಾವುಕರಾದ ಸಿದ್ದರಾಮಯ್ಯ ಅವರ ಆಪ್ತ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿಗಳ ಕಾರಿನ ಮುಂದೆಯೇ ಅಡ್ಡ ಬಿದ್ದು ರಾಜೀನಾಮೆ ನಿರ್ಧಾರವನ್ನು ಹಿಂಪಡೆಯುವಂತೆ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿ, ಮುಖ್ಯಮಂತ್ರಿಗಳ ಕಾರು ಮುಂದೆ ಸಾಗಲು ದಾರಿ ಮಾಡಿಕೊಟ್ಟರು.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/politics/siddaramaiah-resigns-as-karnataka-cm-after-visiting-raj-bhavan-governor-special-secretary-prabhushankar-gdp/articleshow-4qe61dk"/>
        </item>
        <item>
            <title><![CDATA[ಮುಂದಿನ ಸಿಎಂ ಡಿಕೆಶಿಗೆ ಎಲ್ಲರೂ ಸಹಕರಿಸಿ! ವಿದಾಯದ ಕೂಟದಲ್ಲಿ ಸಿದ್ದರಾಮಯ್ಯ ಭಾವುಕ, ಬಹಿರಂಗವಾಯ್ತು 'ರಹಸ್ಯ ಒಪ್ಪಂದ'!]]></title>
            <link>https://kannada.asianetnews.com/gallery/politics/karnataka-politics-siddaramaiah-officially-endorses-dk-shivakumar-as-next-cm-prepares-to-hand-over-resignation-gdp-vlyz6kv</link>
            <guid isPermaLink="true">https://kannada.asianetnews.com/gallery/politics/karnataka-politics-siddaramaiah-officially-endorses-dk-shivakumar-as-next-cm-prepares-to-hand-over-resignation-gdp-vlyz6kv</guid>
            <pubDate>Thu, 28 May 2026 13:43:31 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ &amp;nbsp;ಉಪಾಹಾರ ಕೂಟದಲ್ಲಿ ತಮ್ಮ ರಾಜೀನಾಮೆಯನ್ನು ಘೋಷಿಸಿ, ಡಿ.ಕೆ. ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದರು. ಈ ಭಾವುಕ ಸಭೆಯಲ್ಲಿ, ತಮ್ಮ ಅಧಿಕಾರಾವಧಿಯ ಕೆಲಸಗಳನ್ನು ಸ್ಮರಿಸಿ, ಪಕ್ಷದ ಸಿದ್ಧಾಂತವನ್ನು ಪಾಲಿಸುವಂತೆ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksps9v1xgvarn0jh6tkrt3pc,imgname-siddaramaiah-and-dk-shivakumar--1--1779954936893.jpg" type="image/jpeg" height="390" width="690"/>
            <content:encoded><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ &amp;nbsp;ಉಪಾಹಾರ ಕೂಟದಲ್ಲಿ ತಮ್ಮ ರಾಜೀನಾಮೆಯನ್ನು ಘೋಷಿಸಿ, ಡಿ.ಕೆ. ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದರು. ಈ ಭಾವುಕ ಸಭೆಯಲ್ಲಿ, ತಮ್ಮ ಅಧಿಕಾರಾವಧಿಯ ಕೆಲಸಗಳನ್ನು ಸ್ಮರಿಸಿ, ಪಕ್ಷದ ಸಿದ್ಧಾಂತವನ್ನು ಪಾಲಿಸುವಂತೆ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದರು.&lt;/p&gt;&lt;img&gt;&lt;p&gt;ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿಗಳ ನಿವಾಸದ ಹೈವೋಲ್ಟೇಜ್ ಉಪಾಹಾರ ಕೂಟದಲ್ಲಿ (Breakfast Meeting) ಅತ್ಯಂತ ಮಹತ್ವದ ಹಾಗೂ ಭಾವುಕ ವಿದ್ಯಮಾನಗಳು ನಡೆದಿವೆ. &quot;ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದಕ್ಕೆ ನನ್ನ ಸಂಪೂರ್ಣ ಒಪ್ಪಿಗೆಯಿದೆ&quot; ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಭೆಯಲ್ಲಿ ಘೋಷಿಸುವ ಮೂಲಕ ರಾಜ್ಯ ರಾಜಕೀಯದ ಮುಂದಿನ ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಡಿಕೆಶಿ ಅವರನ್ನು ನೂತನ ಮುಖ್ಯಮಂತ್ರಿ ಎನ್ನುತ್ತಿದ್ದಂತೆಯೇ ಶಿವಕುಮಾರ್ ಅವರು ಕೂಡ ತೀವ್ರ ಭಾವುಕರಾದರು.&lt;/p&gt;&lt;img&gt;&lt;p&gt;ಉಪಾಹಾರ ಕೂಟ ಆರಂಭವಾಗುತ್ತಿದ್ದಂತೆ ಮಂತ್ರಿಗಳು ಹಾಗೂ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅತ್ಯಂತ ಭಾವುಕರಾದರು. &quot;ನನ್ನ ಅಧಿಕಾರಾವಧಿಯಲ್ಲಿ ನಾನು ಜನರಿಗಾಗಿ ಅತ್ಯಂತ ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ನೀವೆಲ್ಲರೂ ಅದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಬೇಕು. ಪಕ್ಷದ ಸೈದ್ಧಾಂತಿಕ ಬದ್ಧತೆಯನ್ನು ಸದಾ ಪ್ರದರ್ಶಿಸಿ&quot; ಎಂದು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದರು. ಹೊಸದಾಗಿ ನಡೆಯಲಿರುವ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಎಲ್ಲವನ್ನೂ ವಿಸ್ತೃತವಾಗಿ ಚರ್ಚಿಸಿ, ನೂತನ ಸಿಎಂ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲರೂ ಮುಕ್ತವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಭೆಯ ಬಳಿಕ ಉಭಯ ನಾಯಕರು ಅತ್ಯಂತ ಪರಸ್ಪರ ವಿಶ್ವಾಸದಿಂದ ಹಸ್ತಲಾಘವ &amp;nbsp;ಮಾಡಿ ಔಪಚಾರಿಕ ಮಾತುಕತೆ ನಡೆಸಿದರು.&lt;/p&gt;&lt;img&gt;&lt;p&gt;ಬೆಳಗ್ಗೆ 11:30ರ ಸುಮಾರಿಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರು ಈ ಮೊದಲು ರಾಜಭವನಕ್ಕೆ ಸಮಯ ಕೇಳಿದ್ದರು. ಆದರೆ ಬಕ್ರೀದ್ ಹಬ್ಬದ ರಜೆಯ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಸದ್ಯಕ್ಕೆ ರಾಜ್ಯಪಾಲರಾಗಲಿ ಅಥವಾ ಅವರ ಕಾರ್ಯದರ್ಶಿಯಾಗಲಿ ಲಭ್ಯವಿರಲಿಲ್ಲ. ಹೀಗಾಗಿ ಪ್ರಕ್ರಿಯೆ ಕೊಂಚ ವಿಳಂಬವಾಗಿತ್ತು. ಆದಾಗ್ಯೂ, ಹಬ್ಬದ ರಜೆಯ ನಡುವೆಯೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜಭವನಕ್ಕೆ ಆಗಮಿಸಿದ್ದು, ಸಿಎಂ ರಾಜೀನಾಮೆ ಪತ್ರ ಸ್ವೀಕರಿಸಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;img&gt;&lt;p&gt;ನನಗೆ ಹೈಕಮಾಂಡ್ ರಾಜೀನಾಮೆ ಕೊಡಲು ಹೇಳಿದ್ದಾರೆ. ನಾನು ಇವತ್ತು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ಕೊಡಬೇಕು ಅಂದುಕೊಂಡಿದ್ದೆ. ಆದ್ರೆ ರಾಜ್ಯಪಾಲರು ಲೋಕಭವನದಲ್ಲಿ ಇಲ್ಲ. ಆದ್ರು ನಾನು ಲೋಕಭವನಕ್ಕೆ ಹೋಗಿ ರಾಜೀನಾಮೆ ಕೊಟ್ಟು ಬರುತ್ತೇನೆ. ಹೈಕಮಾಂಡ್ ಡಿಕೆಶಿವಕುಮಾರ್ ಸಿಎಂ ಆಗಬೇಕು ಎಂದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲು ನನ್ನ ಒಪ್ಪಿಗೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ .&lt;/p&gt;&lt;img&gt;&lt;p&gt;ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಒಪ್ಪಂದ ಆಗಿತ್ತು. ಆದ್ರೆ ನಾನು ಎಲ್ಲೂ ಕೂಡ ಬಹಿರಂಗವಾಗಿ ಒಪ್ಪಂದದ ಬಗ್ಗೆ ಮಾತನಾಡಿಲ್ಲ. ಸಿಎಂ ಸ್ಥಾನ ಚೇಂಜ್ ಆಗುತ್ತೆ ಅಂತಾನೂ ಹೇಳಿಲ್ಲ. ದೆಹಲಿಗೆ ಹೋಗಿ ಹೈಕಮಾಂಡ್ ಅವರ ಬಳಿ ಕೇಳುತ್ತಿದ್ದೆ ಅಷ್ಟೇ. ಮುಂದೆ ನಿಮ್ಮ(ಸಿದ್ದರಾಮಯ್ಯ) ಸಹಕಾರ ಕೂಡ ಬೇಕು. ನಿಮ್ಮ ಸಹಕಾರದಿಂದಲೇ ಇನ್ನು ಎರಡು ವರ್ಷ ಸರ್ಕಾರ ನಡೆಸೋಣ. 2028 ಕ್ಕೂ ಕಾಂಗ್ರೆಸ್ ಸರ್ಕಾರ ಬರುವಂತೆ ಮಾಡೋಣ ಎಂದು ಮಾತನಾಡಿದ್ದಾರೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;ರಾಜಭವನದ ಸುತ್ತಮುತ್ತ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 02:30ಕ್ಕೆ ಅಧಿಕೃತವಾಗಿ ಲೋಕ ಭವನಕ್ಕೆ (ರಾಜಭವನ) ಭೇಟಿ ನೀಡಿ ರಾಜೀನಾಮೆ ಪತ್ರ ಹಸ್ತಾಂತರಿಸಲಿದ್ದಾರೆ. ಒಂದು ವೇಳೆ ಸರ್ಕಾರದಿಂದ ಅಧಿಕೃತವಾಗಿ ಸಮಯ ಕೋರಿದರೆ, ಇಂದೋರ್ ಪ್ರವಾಸದಲ್ಲಿರುವ ರಾಜ್ಯಪಾಲರು ಮಧ್ಯಾಹ್ನ 3 ಗಂಟೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆಯೂ ಇದೆ. ಒಂದು ವೇಳೆ ರಾಜ್ಯಪಾಲರು ಬರದಿದ್ದರೆ ಅವರ ಸೆಕ್ರೆಟರಿಗೆ ಪತ್ರ ನೀಡಲಾಗುತ್ತದೆ.&lt;/p&gt;&lt;img&gt;&lt;p&gt;ರಾಜೀನಾಮೆ ಸಲ್ಲಿಕೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ತಮ್ಮ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮಹತ್ವದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರಲ್ಲಿ ತಮ್ಮ ರಾಜೀನಾಮೆ ಹಾಗೂ ಮುಂದಿನ ನಿರ್ಧಾರಗಳ ಕುರಿತು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.&lt;/p&gt;&lt;img&gt;&lt;p&gt;ಇದಾದ ನಂತರ, ಇಂದು ಸಂಜೆ 4 ಗಂಟೆ &amp;nbsp;ನಂತರ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ದೆಹಲಿಗೆ ವಿಶೇಷ ವಿಮಾನದ ಮೂಲಕ ಹೊರಡಲಿದ್ದಾರೆ. ತಮಗೆ ಎರಡು ಬಾರಿ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ವೈಯಕ್ತಿಕವಾಗಿ ಧನ್ಯವಾದ ಅರ್ಪಿಸುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ. ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಇಂದೇ ರಾತ್ರಿ ಗಂಟೆಯ ಸುಮಾರಿಗೆ ಅವರು ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಡಿಕೆ ಶಿವಕುಮಾರ್ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/karnataka-politics-siddaramaiah-officially-endorses-dk-shivakumar-as-next-cm-prepares-to-hand-over-resignation-gdp-vlyz6kv"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಮನಸಾರೆ ತಬ್ಬಿಕೊಂಡು ಕಣ್ಣೀರಿಟ್ಟ ಡಿಕೆ ಶಿವಕುಮಾರ್]]></title>
            <link>https://kannada.asianetnews.com/gallery/politics/karnataka-political-updates-dk-shivakumar-touches-siddaramaiah-feet-emotional-breaks-down-hugging-breakfast-meeting-gdp-ccoo9p9</link>
            <guid isPermaLink="true">https://kannada.asianetnews.com/gallery/politics/karnataka-political-updates-dk-shivakumar-touches-siddaramaiah-feet-emotional-breaks-down-hugging-breakfast-meeting-gdp-ccoo9p9</guid>
            <pubDate>Thu, 28 May 2026 11:02:57 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಕಾಲಿಗೆ ನಮಸ್ಕರಿಸಿ, ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು. ನಾಯಕತ್ವ ಬದಲಾವಣೆಯ ತೀವ್ರ ಕುತೂಹಲದ ನಡುವೆ, ಸಚಿವರು ಮತ್ತು ಶಾಸಕರು ಹೈಕಮಾಂಡ್ ನಿರ್ಧಾರಕ್ಕಾಗಿ ಕಾಯುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspfwb96app5rytehwxpa2ax,imgname-dks--1--1779945057574.jpg" type="image/jpeg" height="390" width="690"/>
            <content:encoded><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಕಾಲಿಗೆ ನಮಸ್ಕರಿಸಿ, ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು. ನಾಯಕತ್ವ ಬದಲಾವಣೆಯ ತೀವ್ರ ಕುತೂಹಲದ ನಡುವೆ, ಸಚಿವರು ಮತ್ತು ಶಾಸಕರು ಹೈಕಮಾಂಡ್ ನಿರ್ಧಾರಕ್ಕಾಗಿ ಕಾಯುತ್ತಿದೆ.&lt;/p&gt;&lt;img&gt;&lt;p&gt;ಬೆಂಗಳೂರು: ಕರ್ನಾಟಕ ರಾಜಕೀಯದ ಇತಿಹಾಸದಲ್ಲೇ ಅತ್ಯಂತ ಅಭೂತಪೂರ್ವ ಮತ್ತು ನಾಟಕೀಯ ವಿದ್ಯಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ಜರುಗುತ್ತಿವೆ. ಮುಖ್ಯಮಂತ್ರಿಗಳು ಕರೆದಿದ್ದ ವಿದಾಯದ ಉಪಾಹಾರ ಕೂಟದಲ್ಲಿ (Breakfast Meeting) ಭಾಗವಹಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಸಂಪುಟದ ಸಚಿವರು ಆಪ್ತರು ಬಂದಿದ್ದರು.ಝಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಸಚಿವ ಮಂಕಾಳ್ ವೈದ್ಯ ಅವರೊಂದಿಗೆ ಒಂದೇ ಕಾರಿನಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಡಿಕೆಶಿ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದು, ಅವರನ್ನು ತಬ್ಬಿಕೊಂಡು ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದಾರೆ.&lt;/p&gt;&lt;p&gt;&lt;strong&gt;ಉಪಹಾರ ಕೂಟದಲ್ಲಿ ರಾಜೀನಾಮೆ ನಿರ್ಧಾರ ಘೋಷಿಸಿದ&zwnj; ಸಿಎಂ ಸಿದ್ದರಾಮಯ್ಯ. ಡಿಕೆ ಶಿವಕುಮಾರ್&zwnj;ಗೆ ಕಂಗ್ರಾಚುಲೇಷನ್ಸ್ ಎಂದಾಗ ಡಿಕೆಶಿ ಕಾಲಿಗೆ ಎರಗಿದರು ಈ ವೇಳೆ ಸಿದ್ದರಾಮಯ್ಯ ಅಭಿನಂದನೆ ಹೇಳಿದರು.&lt;/strong&gt; ಏನು ರಾಜ್ಯಪಾಲರು ಇಲ್ವಂತಲ್ಲ, ಹೋಗ್ತೀನಿ ನೋಡೋಣ ಎಂದು ಈ ವೇಳೆ ಸಿದ್ದರಾಮಯ್ಯ ಹೇಳಿದರು. ಇನ್ನು ಉಪಹಾರ ಕೂಟಕ್ಕೂ ಮುನ್ನ 10 ನಿಮಿಷಗಳ ಕಾಲ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಪ್ರತ್ಯೇಕ ಮಾತುಕತೆ ನಡೆಸಿದರು.&lt;/p&gt;&lt;img&gt;&lt;p&gt;ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅಲ್ಲಿ ಜಮಾಯಿಸಿದ್ದ ಸಿದ್ದರಾಮಯ್ಯ ಅವರ ನೂರಾರು ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಕಾರಿಗೆ ಅಡ್ಡ ಬಂದು ಮುತ್ತಿಗೆ ಹಾಕಿದರು. ಐದು ವರ್ಷ ಸಿದ್ದರಾಮಯ್ಯ ಅವರಿಗೆ ಜೈ ಎಂದು ಘೋಷಣೆ ಕೂಗಿದ ಅಭಿಮಾನಿಗಳು, ಸಿದ್ದರಾಮಯ್ಯ ಪರವಾಗಿ ಭಾರಿ ಜೈಕಾರ ಹಾಕಿದರು.&lt;/p&gt;&lt;p&gt;ಈ ನಡುವೆ ಮುಖ್ಯಮಂತ್ರಿಗಳ ನಿವಾಸದ ಹೊರಗೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. &quot;ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟರೆ ನಾವು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್&zwnj;ಗೆ ವೋಟ್ ಹಾಕಲ್ಲ. ನಾವು ಡಿಕೆಶಿ ವಿರೋಧಿಗಳಲ್ಲ, ಅವರೂ ಸಿಎಂ ಆಗಲಿ ಎಂಬ ಆಸೆ ನಮಗಿದೆ. ಆದರೆ 2028ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಅವರು ಸಿಎಂ ಆಗಲಿ. ಈ ರೀತಿ ಸಿದ್ದರಾಮಯ್ಯ ಅವರಿಂದ ಸಿಎಂ ಸ್ಥಾನ ಕಿತ್ತುಕೊಳ್ಳುವುದು ತಪ್ಪು. ಇದರಿಂದ ಅಹಿಂದ ಮತಗಳು ಕಾಂಗ್ರೆಸ್&zwnj;ನಿಂದ ದೂರವಾಗುತ್ತವೆ&quot; ಎಂದು ಭಾವುಕರಾಗಿ ನುಡಿದರು.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆಯ ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಜಾಗರೂಕ ನಡೆ ಇಟ್ಟಿದ್ದಾರೆ. ತಮ್ಮನ್ನು ಭೇಟಿಯಾಗುತ್ತಿರುವ ಶಾಸಕರು, ಮಂತ್ರಿಗಳು ಹಾಗೂ ಬೆಂಬಲಿಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಅವರು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡುವವರೆಗೂ ಈ ರಾಜಕೀಯ ಆಟ ಮುಗಿದಿಲ್ಲ. ಆದ್ದರಿಂದ ಯಾರೂ ಸಹ ಮಾಧ್ಯಮಗಳ ಮುಂದೆ ದುಡುಕಿನ ಅಥವಾ ಅತಿರೇಕದ ಹೇಳಿಕೆಗಳನ್ನು ನೀಡಬಾರದು ಎಂದು ಎಚ್ಚರಿಸಿದ್ದಾರೆ.&lt;/p&gt;&lt;p&gt;ಹೈಕಮಾಂಡ್ ನಡೆ ಮತ್ತು ನಾಯಕತ್ವ ಬದಲಾವಣೆ ಬಗ್ಗೆ ತಮಗೇನೂ ತಿಳಿಯದಂತೆ ವರ್ತಿಸುತ್ತಿರುವ ಡಿ.ಕೆ. ಶಿವಕುಮಾರ್, ಹೈಕಮಾಂಡ್ ನನ್ನ ಜೊತೆಗೆ ನೇರವಾಗಿ ಏನನ್ನೂ ಮಾತನಾಡಿಲ್ಲ. ಏನೇ ಚರ್ಚೆಗಳಿದ್ದರೂ ಸಿದ್ದರಾಮಯ್ಯ ಅವರ ಜೊತೆಯಲ್ಲೇ ನಡೆಸಿದೆ. ಹಾಗಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಷಯ ಸೇರಿದಂತೆ ಮುಂದಿನ ಯಾವುದೇ ಪ್ರಕ್ರಿಯೆಗಳು ಸದ್ಯಕ್ಕೆ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಜಾಣ್ಮೆಯ ಮೌನ ವಹಿಸಿದ್ದಾರೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿಗಳು ರಾಜೀನಾಮೆ ಸಲ್ಲಿಸುವ ಮುನ್ನ ತಮಗೆ ಸಹಕಾರ ನೀಡಿದ ಎಲ್ಲಾ ಸಚಿವರಿಗೆ ಧನ್ಯವಾದ ಅರ್ಪಿಸಲು ಈ ಉಪಾಹಾರ ಕೂಟವನ್ನು ಕರೆದಿದ್ದಾರೆ. ಸಿದ್ದರಾಮಯ್ಯ ಅವರು ದೆಹಲಿ ರಾಜಕಾರಣಕ್ಕೆ ಹೋಗುವ ಅಥವಾ ಅವರಿಗೆ ರಾಜ್ಯಸಭೆ ಸ್ಥಾನ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕಿದೆ, ಆ ಬಗ್ಗೆ ನನಗೇನೂ ತಿಳಿದಿಲ್ಲ. ನಾಯಕತ್ವ ಬದಲಾವಣೆಯಿಂದ ಒಬಿಸಿ ಸಮುದಾಯಗಳು ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದರು.&lt;/p&gt;&lt;img&gt;&lt;p&gt;ಸದ್ಯಕ್ಕೆ ನಮಗೂ ಏನೂ ಗೊತ್ತಿಲ್ಲ. ಹೈಕಮಾಂಡ್&zwnj;ನಿಂದ ಮುಖ್ಯಮಂತ್ರಿಗಳಿಗೆ ಏನು ಸಂದೇಶ ಬಂದಿದೆ ಎಂಬುದನ್ನು ಅವರೇ ಈ ಬ್ರೇಕ್ ಫಾಸ್ಟ್ ಮೀಟಿಂಗ್&zwnj;ನಲ್ಲಿ ನಮಗೆ ತಿಳಿಸಲಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಎಲ್ಲವೂ ನಿಖರವಾಗಿ ತಿಳಿಯಲಿದೆ. ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ನಿರ್ಧಾರ ಪ್ರಕಟಿಸಿದ ಬಳಿಕವಷ್ಟೇ ನಾವು ನಮ್ಮ ಅಭಿಪ್ರಾಯ ಹೇಳುತ್ತೇವೆ&quot; ಎಂದರು.&lt;/p&gt;&lt;img&gt;&lt;p&gt;ನಿನ್ನೆ ರಾತ್ರಿಯೇ ನಾವು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೆವು. ಆದರೆ ಅವರು ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬುದು ಇನ್ನೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದಾಗಿದೆ. ಮುಂದಿನ ನಡೆಗಳೇನು ಎಂಬುದು ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನಿರ್ಧಾರವಾಗಲಿದೆ. ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು. ಈ ನಡುವೆ ಶಾಸಕರ ಭವನದಲ್ಲಿದ್ದ ಬಹುತೇಕ ಕೈ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡದೆ ಸಂಪೂರ್ಣ ಸೌಮ್ಯ ನಿಯಮ (Silent Mode) ಪಾಲಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಡಿ.ಕೆ. ಶಿವಕುಮಾರ್ (ಉಪಮುಖ್ಯಮಂತ್ರಿ), ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಸಂತೋಷ್ ಲಾಡ್. ಎಂ.ಸಿ. ಸುಧಾಕರ್, ಎಸ್.ಎಸ್. ಮಲ್ಲಿಕಾರ್ಜುನ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಎನ್. ಚಲುವರಾಯಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಮಧು ಬಂಗಾರಪ್ಪ, ಡಾ. ಎಚ್.ಸಿ. ಮಹದೇವಪ್ಪ, ಮಂಕಾಳ್ ವೈದ್ಯ, ಆರ್.ಬಿ. ತಿಮ್ಮಾಪುರ್, ಡಾ. ಶರಣಪ್ರಕಾಶ್ ಪಾಟೀಲ್, ಎನ್.ಎಸ್. ಬೋಸರಾಜು, ಕೆ.ಎಚ್. ಮುನಿಯಪ್ಪ, ಈಶ್ವರ್ ಖಂಡ್ರೆ.&lt;/p&gt;&lt;p&gt;ಉಪಾಹಾರ ಕೂಟ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದು, ಇಡೀ ರಾಜ್ಯದ ಕಣ್ಣು ಈಗ ಮುಖ್ಯಮಂತ್ರಿಗಳ ನಿವಾಸದ ಮೇಲಿದೆ&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/karnataka-political-updates-dk-shivakumar-touches-siddaramaiah-feet-emotional-breaks-down-hugging-breakfast-meeting-gdp-ccoo9p9"/>
        </item>
        <item>
            <title><![CDATA[ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?]]></title>
            <link>https://kannada.asianetnews.com/gallery/politics/karnataka-governor-thawar-chand-gehlot-indore-visit-cm-siddaramaiah-resignation-acceptance-rules-in-raj-bhavan-gdp-mwomdin</link>
            <guid isPermaLink="true">https://kannada.asianetnews.com/gallery/politics/karnataka-governor-thawar-chand-gehlot-indore-visit-cm-siddaramaiah-resignation-acceptance-rules-in-raj-bhavan-gdp-mwomdin</guid>
            <pubDate>Thu, 28 May 2026 10:18:55 +0530</pubDate>
            <description><![CDATA[&lt;p&gt;ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನಿರೀಕ್ಷಿತ ಪ್ರಯಾಣದಿಂದಾಗಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ, &amp;nbsp; ರಾಜೀನಾಮೆ ಪತ್ರ ಸಲ್ಲಿಸಲು &amp;nbsp;ಇರುವ ನಿಯಮಗಳೇನು?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspde18ejn7d2bhmf0wqe6q7,imgname-kempegowda-international-airport--1--1779942491406.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನಿರೀಕ್ಷಿತ ಪ್ರಯಾಣದಿಂದಾಗಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ, &amp;nbsp; ರಾಜೀನಾಮೆ ಪತ್ರ ಸಲ್ಲಿಸಲು &amp;nbsp;ಇರುವ ನಿಯಮಗಳೇನು?&lt;/p&gt;&lt;img&gt;&lt;p&gt;ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಭಾರಿ ರೋಚಕ ತಿರುವುಗಳು ಸಿಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಹೊಸದೊಂದು ಗೊಂದಲಕ್ಕೆ ಸಿಲುಕಿದೆ. ಹೈಕಮಾಂಡ್ ಸೂಚನೆಯಂತೆ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡಲು ಸರ್ವಸನ್ನದ್ಧರಾಗಿದ್ದ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮಧ್ಯಪ್ರದೇಶದ ಇಂದೋರ್&zwnj;ಗೆ ಪ್ರಯಾಣ ಬೆಳೆಸಿರುವುದು ರಾಜೀನಾಮೆ ಬಗ್ಗೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.&lt;/p&gt;&lt;img&gt;&lt;p&gt;ಮೂಲಗಳ ಪ್ರಕಾರ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪತ್ನಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಅವರು ತುರ್ತಾಗಿ ಇಂದೋರ್&zwnj;ಗೆ ತೆರಳಿದ್ದಾರೆ. ಬುಧವಾರ ರಾತ್ರಿ 11:45 ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ರಾಜ್ಯಪಾಲರು, ರಾತ್ರಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಮುಂಜಾನೆ 7 ಗಂಟೆಯ ವಿಮಾನದ ಮೂಲಕ ಮುಂಬೈನಿಂದ ಇಂದೋರ್&zwnj;ಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯಪಾಲರು ಬೆಂಗಳೂರಿಗೆ ಮರಳಿ ಬರುವ ಅಧಿಕೃತ ವೇಳಾಪಟ್ಟಿ ಇನ್ನೂ ಖಚಿತವಾಗಿಲ್ಲ. ಆದರೆ, ನಾಳೆ ಅಂದರೆ ಶುಕ್ರವಾರ ಕರ್ನಾಟಕಕ್ಕೆ ಉಪರಾಷ್ಟ್ರಪತಿಗಳು ಭೇಟಿ ನೀಡಲಿರುವ ಕಾರ್ಯಕ್ರಮ ಇರುವುದರಿಂದ, ರಾಜ್ಯಪಾಲರು ಇಂದು ಸಂಜೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆಯೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದರು. ಇದಕ್ಕೆ ಸ್ಪಂದಿಸಿದ್ದ ರಾಜಭವನ, ಬೆಳಗ್ಗೆ 11:30 ಅಥವಾ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶ ನೀಡಿತ್ತು. ಆದರೆ ಈಗ ರಾಜ್ಯಪಾಲರೇ ನಗರದಲ್ಲಿ ಇಲ್ಲದಿರುವುದರಿಂದ ಸಿದ್ದರಾಮಯ್ಯ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಮೂಡಿದೆ.&lt;/p&gt;&lt;p&gt;ರಾಜಭವನದ ಅಧಿಕೃತ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ (ಸೆಕ್ರೆಟರಿ) ಪ್ರಭುಶಂಕರ್ ಅವರಿಗೆ ಸಲ್ಲಿಕೆ ಮಾಡಲು ಕಾನೂನಾತ್ಮಕವಾಗಿ ಅವಕಾಶವಿದೆ. ಸಿದ್ದರಾಮಯ್ಯ ಅವರು ಮಧ್ಯಾಹ್ನದ ಬಳಿಕ ರಾಜಭವನಕ್ಕೆ ತೆರಳಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದರೂ, ಅದರ ಅಂತಿಮ ನಿರ್ಧಾರವನ್ನು ರಾಜ್ಯಪಾಲರೇ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯಪಾಲರು ಬೆಂಗಳೂರಿಗೆ ವಾಪಸ್ ಬಂದ ನಂತರ, ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಖುದ್ದಾಗಿ ಕರೆಸಿ, ರಾಜೀನಾಮೆಯನ್ನು ಖಚಿತಪಡಿಸಿಕೊಂಡ ಬಳಿಕವಷ್ಟೇ ಅದನ್ನು ಅಧಿಕೃತವಾಗಿ ಅಂಗೀಕರಿಸಲಿದ್ದಾರೆ.&lt;/p&gt;&lt;img&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಾಜಭವನದತ್ತ ಧಾವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರಾಜಭವನದ ಸುತ್ತಮುತ್ತ ಬ್ಯಾರಿಕೇಡ್&zwnj;ಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್&zwnj;ನಲ್ಲಿ ತಂಗಿರುವ ಅವರು, ಹೈಕಮಾಂಡ್&zwnj;ನ ರಾಯಭಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಅಧಿಕೃತಗೊಳ್ಳುತ್ತಿದ್ದಂತೆ, ಸುರ್ಜೇವಾಲಾ ಅವರನ್ನು ಭೇಟಿಯಾಗಲು ಕಾಂಗ್ರೆಸ್&zwnj;ನ ಹಿರಿಯ ಮುಖಂಡರು ಹಾಗೂ ಸಚಿವರು ಹೋಟೆಲ್&zwnj;ಗೆ ದೌಡಾಯಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು? ಶಾಸಕಾಂಗ ಪಕ್ಷದ (CLP) ಸಭೆಯನ್ನು ಯಾವಾಗ ಕರೆಯಬೇಕು? ಎಂಬಿತ್ಯಾದಿ ಹೈವೋಲ್ಟೇಜ್ ಚರ್ಚೆಗಳು ಇಂದು ಸಂಜೆಯೊಳಗೆ ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆಯಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/karnataka-governor-thawar-chand-gehlot-indore-visit-cm-siddaramaiah-resignation-acceptance-rules-in-raj-bhavan-gdp-mwomdin"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರವಾಸಕ್ಕೆ ಸಿದ್ಧತೆ, ನಿವಾಸಕ್ಕೆ ಸಚಿವರ ದಂಡು]]></title>
            <link>https://kannada.asianetnews.com/politics/karnataka-political-twist-siddaramaiah-plans-sudden-delhi-visit-to-meet-rahul-gandhi-before-crucial-clp-meet-gdp/articleshow-7kgpvua</link>
            <guid isPermaLink="true">https://kannada.asianetnews.com/politics/karnataka-political-twist-siddaramaiah-plans-sudden-delhi-visit-to-meet-rahul-gandhi-before-crucial-clp-meet-gdp/articleshow-7kgpvua</guid>
            <pubDate>Thu, 28 May 2026 09:26:13 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಹಸನದ ನಡುವೆ, ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದಿಢೀರ್ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಸಿಎಲ್&zwnj;ಪಿ ಸಭೆಗೂ ಮುನ್ನವೇ ನಡೆಯಬಹುದಾದ ಈ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಸಚಿವರು ಸಿಎಂ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಹಸನದ ಬೆನ್ನಲ್ಲೇ, ಅವರು ಮತ್ತೊಮ್ಮೆ ದೇಶದ ರಾಜಧಾನಿ ಹೊಸದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ದಿಢೀರ್ ದೆಹಲಿ ವಿಮಾನ ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ರಾಜ್ಯ ರಾಜಕೀಯದ ಮುಂದಿನ ನಡೆಗಳ ಕುರಿತು ತೀವ್ರ ಕುತೂಹಲ ಮೂಡಿಸಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ, ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವುದು ಈ ಪ್ರವಾಸದ ಮುಖ್ಯ ಉದ್ದೇಶ ಎನ್ನಲಾಗಿದೆ. ತಮಗೆ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಜನಸೇವೆ ಮಾಡಲು ಹೈಕಮಾಂಡ್ ಮುಕ್ತ ಅವಕಾಶ ನೀಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲು ಅವರು ಈ ಭೇಟಿಯನ್ನು ಬಳಸಿಕೊಳ್ಳಲಿದ್ದಾರೆ.&lt;/p&gt;&lt;h2&gt;ಸಿಎಲ್&zwnj;ಪಿ ಸಭೆಗೂ ಮುನ್ನವೇ ದೆಹಲಿ ಪ್ರವಾಸ? ಮೂಡಿದ ಹೊಸ ಟ್ವಿಸ್ಟ್!&lt;/h2&gt;&lt;p&gt;ಪ್ರಸ್ತುತ ಕಾಂಗ್ರೆಸ್ ವಲಯದಲ್ಲಿ ಶಾಸಕಾಂಗ ಪಕ್ಷದ (CLP) ಸಭೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಅಧಿಕೃತವಾಗಿ ನಿಗದಿಯಾಗಿಲ್ಲ. ಹೈಕಮಾಂಡ್ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ದೇಶನವನ್ನು ನೀಡಿಲ್ಲ. ಈ ನಡುವೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ನಡೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.&lt;/p&gt;&lt;h2&gt;ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಚರ್ಚೆ&lt;/h2&gt;&lt;p&gt;ಸಿದ್ದರಾಮಯ್ಯ ಅವರು ಸಿಎಲ್&zwnj;ಪಿ ಸಭೆಯ ಬಳಿಕ ದೆಹಲಿಗೆ ಹೋಗುತ್ತಾರಾ? ಅಥವಾ ಸಭೆಗೂ ಮುನ್ನವೇ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಾರಾ? ಎಂಬ ಕುತೂಹಲ ಮೂಡಿದೆ. ಒಂದು ವೇಳೆ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಸಿದ್ದರಾಮಯ್ಯ ದೆಹಲಿ ತಲುಪಿದರೆ, ರಾಜ್ಯ ರಾಜಕೀಯ ಮತ್ತೊಂದು ಪ್ರಮುಖ ಟ್ವಿಸ್ಟ್ ಪಡೆಯುವ ಸಾಧ್ಯತೆಯಿದೆ. ಹೈಕಮಾಂಡ್ ಮಟ್ಟದಲ್ಲಿ ತಮಗೆ ಆಪ್ತರಾಗಿರುವ ನಾಯಕರನ್ನು ಹುದ್ದೆಗೆ ತರಲು ಅಥವಾ ಮುಂದಿನ ರಾಜಕೀಯ ತಂತ್ರಗಾರಿಕೆಗೆ ಹೊಸ ದಾಳ ಉರುಳಿಸಲು ಸಿದ್ದರಾಮಯ್ಯ ಅವರಿಗೆ ಇದು ಸೂಕ್ತ ವೇದಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.&lt;/p&gt;&lt;h2&gt;ಸಿಎಂ ನಿವಾಸಕ್ಕೆ ಸಚಿವರ ದಂಡು&lt;/h2&gt;&lt;p&gt;ದೆಹಲಿ ಪ್ರವಾಸದ ವದಂತಿಗಳ ಬೆನ್ನಲ್ಲೇ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಸಚಿವರು ಹಾಗೂ ಪ್ರಮುಖ ನಾಯಕರ ದಂಡೇ ಆಗಮಿಸುತ್ತಿದೆ.&lt;/p&gt;&lt;p&gt;ಇಂದು ಬೆಳಿಗ್ಗೆಯಿಂದಲೇ ವಿಶೇಷವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ , ಸಚಿವರಾದ ಎಂ.ಸಿ. ಸುಧಾಕರ್, ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್ ಮತ್ತು ಬೈರತಿ ಸುರೇಶ್ ಅವರು ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ಮತ್ತು ಎನ್.ಎಸ್. ಬೋಸರಾಜು ಅವರೂ ಸಹ ಸಿಎಂ ನಿವಾಸಕ್ಕೆ ಆಗಮಿಸಿ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದಾರೆ.&lt;/p&gt;&lt;p&gt;ಒಟ್ಟಾರೆಯಾಗಿ, ಸಿಎಲ್&zwnj;ಪಿ ಸಭೆಯ ಗೊಂದಲ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಇಡೀ ರಾಜ್ಯದ ಗಮನವನ್ನು ಸೆಳೆದಿದ್ದು, ಇಂದು ಸಂಜೆಯ ವೇಳೆಗೆ ಮುಂದಿನ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆಯಿದೆ.&lt;/p&gt;]]></content:encoded>
            <category>state</category>
            <dc:creator>Gowthami K</dc:creator>
            <atom:link href="https://kannada.asianetnews.com/politics/karnataka-political-twist-siddaramaiah-plans-sudden-delhi-visit-to-meet-rahul-gandhi-before-crucial-clp-meet-gdp/articleshow-7kgpvua"/>
        </item>
        <item>
            <title><![CDATA[SIR ಸಭೆಗೆ ಗೈರಾದ ಭಾವನಾ ರಾಮಣ್ಣ, ನಿಕೇತ್‌ ರಾಜ್‌ ಮೌರ್ಯ ಹುದ್ದೆಯಿಂದ ವಜಾ!]]></title>
            <link>https://kannada.asianetnews.com/state/kpcc-dk-shivakumar-dismisses-bhavana-ramanna-niketh-raj-maurya-who-was-absent-sir-meet-rav/articleshow-ctbvxg7</link>
            <guid isPermaLink="true">https://kannada.asianetnews.com/state/kpcc-dk-shivakumar-dismisses-bhavana-ramanna-niketh-raj-maurya-who-was-absent-sir-meet-rav/articleshow-ctbvxg7</guid>
            <pubDate>Thu, 28 May 2026 08:07:40 +0530</pubDate>
            <description><![CDATA[ಮೇ 25 ರಂದು ನಡೆದ ಎಸ್&zwnj;ಐಆರ್&zwnj; ಸಭೆಗೆ ಗೈರುಹಾಜರಾದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾವನಾ ರಾಮಣ್ಣ ಸೇರಿದಂತೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನು ಅವರ ಹುದ್ದೆಗಳಿಂದ ಬಿಡುಗಡೆಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksp6vmgefcxfyz56rx8nwf3r,imgname-----------------------2026-05-28t080201.512-1779935597070.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.28) &lt;/strong&gt;ಬೆಂಗಳೂರಿನ ಹೊರವಲಯದಲ್ಲಿ ಮೇ 25 ರಂದು ನಡೆದ ಎಸ್&zwnj;ಐಆರ್&zwnj;(SIR) ಕುರಿತು ಸಭೆಗೆ ಗೈರುಹಾಜರಾದ ಹಿನ್ನೆಲೆಯಲ್ಲಿ ಭಾವನಾ ರಾಮಣ್ಣ, ನಿಕೇತ್&zwnj; ರಾಜ್&zwnj; ಮೌರ್ಯ ಸೇರಿದಂತೆ ಪಕ್ಷದ ಮೂರು ಮಂದಿ ಉಪಾಧ್ಯಕ್ಷರು, 29 ಮಂದಿ ಪ್ರಧಾನ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.&amp;nbsp;&lt;/p&gt;&lt;p&gt;ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್&zwnj; ಆದೇಶ ಹೊರಡಿಸಿದ್ದು, ಎಐಸಿಸಿ ಸೂಚನೆ ಮೇರೆಗೆ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರ ಪ್ರಸ್ತುತ ಹುದ್ದೆಗಳಿಂದ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದ್ದಾರೆ.ಕೆಪಿಸಿಸಿ ಉಪಾಧ್ಯಕ್ಷರಾದ ಕೆ. ಶಿವಮೂರ್ತಿ, ಬಾಬುರಾವ್&zwnj; ಜಾಗಿರ್ದಾರ್&zwnj;, ಎಂ.ಸಿ .ವೇಣುಗೋಪಾಲ್ ಅವರನ್ನು ತೆಗೆದು ಹಾಕಲಾಗಿದೆ.&lt;/p&gt;&lt;h2&gt;ಪ್ರಧಾನ ಕಾರ್ಯದರ್ಶಿಗಳು:&lt;/h2&gt;&lt;p&gt;ಪ್ರಧಾನ ಕಾರ್ಯದರ್ಶಿಗಳ ಪೈಕಿ ಎನ್.ಐ ಕೋಡಹಳ್ಳಿ, ಭಾವನಾ ರಾಮಣ್ಣ, ಕೆ.ಸಿ. ಪ್ರಭಾಕರ್&zwnj; ರೆಡ್ಡಿ, ತಿಬ್ಬೇಗೌಡ, ಜುಲ್ಫಿಕರ್&zwnj; ಅಹ್ಮದ್, ಶಂಕರ್&zwnj; ದೊಡ್ಡಿ, ರೇಖಾ ಹುಲಿಯಪ್ಪ, ಎಚ್.ಎ. ಷಣ್ಮುಖಪ್ಪ, ಎಂ. ರಾಮಪ್ಪ, ವಡ್ನಾಳ್&zwnj; ಜಗದೀಶ್, ಷಣ್ಮುಖಪ್ಪ ಶಿವಳ್ಳಿ, ಮಲ್ಲಿಕಾರ್ಜುನ ಅಕ್ಕಿ, ಸ್ವಾತಿ ಮಾಳಗಿ, ಅಲ್ತಾಫ್&zwnj; ನವಾಜ್&zwnj; ಕಿತ್ತೂರು, ನಾಗೇಶ್ವರರಾವ್&zwnj;, ರಮೇಶ್ ಮರಗೋಳು, ಚಂದ್ರಕಲಾ ಪ್ರಸನ್ನ, ಸಿ.ಆರ್&zwnj;. ಮನೋಹರ್&zwnj;, ಎಚ್&zwnj;.ಆರ್&zwnj;. ಶ್ರೀನಾಥ್&zwnj;, ಎಚ್. ತ್ಯಾಗರಾಜ್&zwnj;, ಎಲ್&zwnj;.ಪದ್ಮನಾಭ, ನಿಕೇತ್&zwnj; ರಾಜ್&zwnj; ಮೌರ್ಯ, ಸಿ.ಬಿ. ಶಶಿಧರ್, ವೆಂಕಟೇಶ್ ಹೆಗ್ಡೆ ಹೊಸಬಾಳೆ, ವಿ.ವೈ. ಘೋರ್ಪಡೆ, ಮಕ್ಬುಲ್&zwnj; ಭಗವಾನ್&zwnj;, ಇಸ್ಮಾಯಿಲ್&zwnj; ತಮಟಗರ್, ಬನ್ನಿಕೊಡ್, ಸಂಜಯ್&zwnj; ಜಾಗಿರ್ದಾರ್&zwnj; ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/kpcc-dk-shivakumar-dismisses-bhavana-ramanna-niketh-raj-maurya-who-was-absent-sir-meet-rav/articleshow-ctbvxg7"/>
        </item>
        <item>
            <title><![CDATA[Bengaluru rains: ಬೆಂಗಳೂರಲ್ಲಿ ಸುರಿದ ಭಾರೀ ಮಳೆಯಿಂದ ಅವಾಂತರ: ಒಂದೇ ದಿನದಲ್ಲಿ  67 ಮರ, 104 ರೆಂಬೆ-ಕೊಂಬೆ ತೆರವು!]]></title>
            <link>https://kannada.asianetnews.com/state/heavy-rain-in-bengaluru-67-trees-104-branches-removed-in-a-single-day-rav/articleshow-k92dvv9</link>
            <guid isPermaLink="true">https://kannada.asianetnews.com/state/heavy-rain-in-bengaluru-67-trees-104-branches-removed-in-a-single-day-rav/articleshow-k92dvv9</guid>
            <pubDate>Thu, 28 May 2026 07:25:19 +0530</pubDate>
            <description><![CDATA[&lt;p&gt;ಬೆಂಗಳೂರಿನಲ್ಲಿ ಮಂಗಳವಾರ ಸುರಿದ ಭಾರೀ ಗಾಳಿ ಮಳೆಗೆ 84 ಬೃಹತ್ ಮರಗಳು ಮತ್ತು 147 ಕೊಂಬೆಗಳು ಧರೆಗುರುಳಿವೆ. ಅರಣ್ಯ ಇಲಾಖೆ ಮತ್ತು ಪಾಲಿಕೆ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಉಳಿದ ಮರಗಳನ್ನು ಗುರುವಾರ ತೆರವುಗೊಳಿಸಲಾಗುವುದು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksp4dge9ppw2fpp1tjv9qpvt,imgname-----------------------2026-05-28t072000.670-1779933037001.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.28): &lt;/strong&gt;ನಗರದಲ್ಲಿ ಮಂಗಳವಾರ ಸುರಿದ ಗಾಳಿ ಸಹಿತ ಮಳೆಗೆ ಐದು ನಗರಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 84 ಬೃಹತ್ ಮರಗಳು, 147 ಕೊಂಬೆಗಳು ಮುರಿದು ಬಿದ್ದಿದ್ದು, ಒಂದೇ ದಿನದಲ್ಲಿ ಅರಣ್ಯ ಇಲಾಖೆ ಹಾಗೂ ಖಾಸಗಿ ಸಿಬ್ಬಂದಿ 67 ಬೃಹತ್ ಮರಗಳು ಹಾಗೂ 104 ಕೊಂಬೆಗಳನ್ನು ತೆರೆವುಗೊಳಿಸಿದ್ದಾರೆ.&lt;/p&gt;&lt;p&gt;ಮೇ 26ರಂದು ಬಿದ್ದ ಮಳೆಗೆ ನಗರದ ಪಶ್ಚಿಮ ಹಾಗೂ ದಕ್ಷಿಣ ಪಾಲಿಕೆ ವಿಭಾಗಗಳಲ್ಲಿ ಹೆಚ್ಚು ಮರಗಳು ಮುರಿದು ಬಿದ್ದಿದ್ದು ಪೂರ್ವ, ಉತ್ತರ ಹಾಗೂ ಕೇಂದ್ರ ಭಾಗಗಳಲ್ಲಿ ಕಡಿಮೆ ಮರಗಳು ಮುರಿದುಬಿದ್ದಿವೆ. ಕಲಾಸಿಪಾಳ್ಯ ಸಮೀಪದ ಕೆ.ಆರ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ಮನೆಗೆ ಹಾನಿಯಾಗಿತ್ತು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಈ ಮರವನ್ನು ತೆರವುಗೊಳಿಸಿದ್ದಾರೆ.&lt;/p&gt;&lt;p&gt;ಗಂಗಾನಗರದ ವಿನಾಯಕನಗರ, ಎನ್ ಜಿ ಇ ಎಫ್ ಲೇ ಔಟ್ ಕಸ್ತೂರಿನಗರದಲ್ಲಿ ಮುರಿದು ಬಿದ್ದ ಮರವನ್ನು ತೆರವುಗೊಳಿಸಿ ಈ ಭಾಗದ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ವಿಜಯನಗರ, ಇಂದಿರಾನಗರ ಸೇರಿದಂತೆ ಹಲವು ಕಡೆ ಪಾಲಿಕೆ ಸಿಬ್ಬಂದಿ ಕೊಂಬೆಗಳನ್ನು ವಾಹನಗಳ ಮೂಲಕ ಹೊರವಲಯದ ಪಾಲಿಕೆ ಸ್ಥಳಗಳಿಗೆ ತಲುಪಿಸಿದ್ದಾರೆ.&lt;/p&gt;&lt;p&gt;ನಗರದ ಅಂಡರ್ ಪಾಸ್ ಗಳಲ್ಲಿ ಬುಧವಾರದ ಬೆಳಿಗ್ಗೆ ವೇಳೆಗೆ ನೀರು ಖಾಲಿಯಾಗಿದ್ದು, ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಉಳಿದ 28 ಬೃಹತ್ ಮರಗಳು, 44 ಕೊಂಬೆಗಳನ್ನು ಗುರುವಾರ ತೆರವುಗೊಳಿಸಲಾಗುವುದು ಎಂದು ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/heavy-rain-in-bengaluru-67-trees-104-branches-removed-in-a-single-day-rav/articleshow-k92dvv9"/>
        </item>
        <item>
            <title><![CDATA[Karnataka Caste Census report: ಜಾತಿ ಗಣತಿ ಅಂತಿಮ ವರದಿ ಸಿಎಂಗೆ ಸಲ್ಲಿಕೆ: ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ನಂಬರ್‌ 1!]]></title>
            <link>https://kannada.asianetnews.com/state/karnataka-caste-census-final-report-submitted-to-cm-siddaramaiah-muslims-number-1-in-the-state-population/articleshow-sn5kwi1</link>
            <guid isPermaLink="true">https://kannada.asianetnews.com/state/karnataka-caste-census-final-report-submitted-to-cm-siddaramaiah-muslims-number-1-in-the-state-population/articleshow-sn5kwi1</guid>
            <pubDate>Thu, 28 May 2026 04:48:49 +0530</pubDate>
            <description><![CDATA[&lt;p&gt;ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜಾತಿ ಗಣತಿಯ ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಕೆ., ಮೀಸಲಾತಿ ಶೇ. 32ರಿಂದ 42ಕ್ಕೆ ಹೆಚ್ಚಿಸಲು ಶಿಫಾರಸು. ಈ ವರದಿಯ ಪ್ರಕಾರ, ಮುಸ್ಲಿಂ ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದು, ನಂತರದ ಸ್ಥಾನಗಳಲ್ಲಿ ವೀರಶೈವ-ಲಿಂಗಾಯತ, ಒಕ್ಕಲಿಗ, ಕುರುಬ ಸಮುದಾಯಗಳಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksnv3sv9q30n2y8yqqa9v40d,imgname-----------------------2026-05-28t043718.469-1779923281768.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.28): &lt;/strong&gt;ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಬುಧವಾರ ಸಲ್ಲಿಸಿದ ಜಾತಿ ಗಣತಿ(Caste Census)ಯ ಅಂತಿಮ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡಾ 32ರಿಂದ 42ಕ್ಕೆ ಹೆಚ್ಚಿಸಿ ಶಿಫಾರಸು ಮಾಡಿದೆ. ಅಲ್ಲದೆ, ಮುಸ್ಲಿಂ ಸಮುದಾಯ(Muslim community) ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, 80.14 ಲಕ್ಷ ಜನಸಂಖ್ಯೆ ಹೊಂದಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 14ರಷ್ಟು ಮುಸ್ಲಿಮರಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.&lt;/p&gt;&lt;p&gt;ವರದಿಯು 13 ಅಧ್ಯಾಯ ಒಳಗೊಂಡಿದ್ದು, ರಾಜ್ಯದ ಪ್ರತಿ ಜಾತಿ ಹೊಂದಿರುವ ಜನಸಂಖ್ಯೆ, ಸಾಮಾಜಿಕ, ಆರ್ಥಿಕ, ರಾಜಕೀಯ ಸ್ಥಿತಿ ಸೇರಿದಂತೆ ಸಮಗ್ರ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಈ ವರದಿಯ ಪ್ರಕಾರ, ಮುಸ್ಲಿಂ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ ಶೇ. 14ರಷ್ಟಿದ್ದು, ನಂತರದ ಸ್ಥಾನದಲ್ಲಿ ವೀರಶೈವರು- ಲಿಂಗಾಯತರು ಹಾಗೂ ಕುರುಬ ಸಮುದಾಯ ಇದೆ ಎಂದು ತಿಳಿಸಿದೆ.&lt;/p&gt;&lt;p&gt;ಮುಸ್ಲಿಂ ಸಮುದಾಯದ ನಂತರ ವೀರಶೈವ/ಲಿಂಗಾಯತ ಸಮುದಾಯದ ಜನಸಂಖ್ಯೆ 65 ಲಕ್ಷ ಇದ್ದು, ಜನಸಂಖ್ಯೆಯಲ್ಲಿ ಶೇ.11ರಷ್ಟು ಪಾಲು ಹೊಂದಿದೆ. ಒಕ್ಕಲಿಗರು 60 ಲಕ್ಷ ಇದ್ದು, ಒಟ್ಟು ಜನಸಂಖ್ಯೆಯಲ್ಲಿ ಶೇ. 10ರಷ್ಟಿದೆ. ಕುರುಬರು 45 ಲಕ್ಷ ಇದ್ದು, ಜನಸಂಖ್ಯೆಯಲ್ಲಿ ಶೇ.8ರಷ್ಟಿದ್ದಾರೆ ಎಂದು ತಿಳಿಸಲಾಗಿದೆ.&lt;/p&gt;&lt;p&gt;ರಾಜ್ಯದ 6.14 ಕೋಟಿ ಜನರ ಪೈಕಿ 5.86 ಕೋಟಿ ಜನರು ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಿದ್ದರು. ಈ ಪೈಕಿ ಮುಸ್ಲಿಂ ಸಮುದಾಯದ ಸಂಖ್ಯೆ ಅತಿ ಹೆಚ್ಚುಇರುವುದು ಗಮನಾರ್ಹವಾಗಿದೆ.&lt;/p&gt;&lt;p&gt;ಕಳೆದ ವರ್ಷ ರಾಜ್ಯಾದ್ಯಂತ ನಡೆಸಿದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು (ಜಾತಿ ಗಣತಿ ವರದಿ) ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್&zwnj; ಹಾಗೂ ಸದಸ್ಯರು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ವೇಳೆ ಹಲವು ಸಚಿವರು, ಆಯೋಗದ ಸದಸ್ಯರು ಉಪಸ್ಥಿತರಿದ್ದರು.&lt;/p&gt;&lt;h2&gt;ಮೀಸಲಾತಿ ಶೇ. 42ಕ್ಕೆ ಹೆಚ್ಚಳ:&lt;/h2&gt;&lt;p&gt;ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡಾ 32ರಿಂದ 42ಕ್ಕೆ ಹೆಚ್ಚಿಸಿ ಶಿಫಾರಸು ಮಾಡಿದೆ. ವರದಿಯು 13 ಅಧ್ಯಾಯ ಒಳಗೊಂಡಿದ್ದು, ರಾಜ್ಯದ ಪ್ರತಿ ಜಾತಿ ಹೊಂದಿರುವ ಜನಸಂಖ್ಯೆ, ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಸಮಗ್ರ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಹಲವಾರು ಶಿಫಾರಸುಗಳನ್ನು ಮಾಡಲಾಗಿದೆ.&lt;/p&gt;&lt;p&gt;ಪ್ರಮುಖವಾಗಿ ಪ್ರವರ್ಗ-1ರಲ್ಲಿನ ಜಾತಿಗಳನ್ನು ಎರಡು ಭಾಗ, ಪ್ರವರ್ಗ-2 ಹಾಗೂ ಪ್ರವರ್ಗ-3ರಲ್ಲಿನ ಜಾತಿಗಳನ್ನು ಮೂರು ಭಾಗಗಳಾಗಿ ವಿಂಗಡಿಸಿ ಮೀಸಲಾತಿ ನಿಗದಿ ಪಡಿಸಿದೆ.&lt;/p&gt;&lt;h3&gt;ಎರಡು ಮಾದರಿ ಮೀಸಲಾತಿ:&lt;/h3&gt;&lt;p&gt;ಸರ್ಕಾರ ಹಾಲಿ ಇರುವ ಮೀಸಲಾತಿ ಪ್ರಮಾಣವನ್ನು ಶೇ. 32ಕ್ಕೆ ಸೀಮಿತಗೊಳಿಸಲು ಉದ್ದೇಶಿಸಿದರೆ ಪ್ರವರ್ಗ-1ರ ಎರಡು ಭಾಗಗಳಿಗೆ ತಲಾ ಶೇ.3ರಷ್ಟು, ಪ್ರವರ್ಗ-2ಎಗೆ ಶೇ. 8, ಬಿಗೆ ಶೇ.4 ಹಾಗೂ 2ಸಿಗೆ ಶೇ.5 ರಷ್ಟು ಮೀಸಲಾತಿ ನೀಡಬೇಕು. ಪ್ರವರ್ಗ-3ಗೆ ಶೇ. 3ಬಿಗೆ ಶೇ. 4 ಹಾಗೂ 3ಸಿಗೆ ಶೇ. 2ರಷ್ಟು ಮೀಸಲಾತಿ ನೀಡಲು ಶಿಫಾರಸು ಮಾಡಿದೆ.&lt;/p&gt;&lt;p&gt;ಮೀಸಲಾತಿ ಪ್ರಮಾಣವನ್ನು ಶೇ. 42ಕ್ಕೆ ಹೆಚ್ಚಿಸಲು ನಿರ್ಧರಿಸಿದರೆ ಪ್ರವರ್ಗ 1ಎಗೆ ಶೇ. 4, 1ಬಿಗೆ ಶೇ. 4, 2ಎಗೆ ಶೇ.10, 2ಬಿಗೆ ಶೇ. 6, 2ಸಿಗೆ ಶೇ.6, 3ಎಗೆ ಶೇ.4, 3ಬಿಗೆ ಶೇ.5 ಹಾಗೂ 3ಸಿಗೆ ಶೇ.3ರಷ್ಟು ಮೀಸಲಾತಿ ನೀಡಲು ಆಯೋಗ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;--&lt;strong&gt;-ಮುಸ್ಲಿಮರು&lt;/strong&gt;&lt;/p&gt;&lt;p&gt;80.14 ಲಕ್ಷ 14%&lt;/p&gt;&lt;p&gt;&lt;strong&gt;ವೀರಶೈವ-ಲಿಂಗಾಯತ&lt;/strong&gt;&lt;/p&gt;&lt;p&gt;65 ಲಕ್ಷ 11%&lt;/p&gt;&lt;p&gt;&lt;strong&gt;ಒಕ್ಕಲಿಗರು&lt;/strong&gt;&lt;/p&gt;&lt;p&gt;60 ಲಕ್ಷ 10%&lt;/p&gt;&lt;p&gt;&lt;strong&gt;ಕುರುಬರು&lt;/strong&gt;&lt;/p&gt;&lt;p&gt;45 ಲಕ್ಷ 8%&lt;/p&gt;&lt;p&gt;&lt;strong&gt;ಸಂತೋಷದಿಂದ ವರದಿ ಸ್ವೀಕಾರ&lt;/strong&gt;&lt;/p&gt;&lt;p&gt;ಇಂದು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದೇನೆ. ಮುಂದಿನ ದಿನಗಳಲ್ಲಿ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ಈ ವರದಿಯು ಮಾರ್ಗದರ್ಶಿಯಾಗಲಿ ಎಂದು ಆಶಿಸುತ್ತೇನೆ.&lt;/p&gt;&lt;p&gt;- ಸಿದ್ದರಾಮಯ್ಯ, ಮುಖ್ಯಮಂತ್ರಿ&lt;/p&gt;]]></content:encoded>
            <category>state</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-caste-census-final-report-submitted-to-cm-siddaramaiah-muslims-number-1-in-the-state-population/articleshow-sn5kwi1"/>
        </item>
    </channel>
</rss>
