<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 29 Apr 2026 17:53:35 +0530</lastBuildDate>
        <atom:link href="https://kannada.asianetnews.com/rss/state-government-jobs" rel="self" type="application/rss+xml"/>
        <item>
            <title><![CDATA[ವಾಯುವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅನಿರೀಕ್ಷಿತ ತಿರುವು,  KEA ಮಹತ್ವದ ಘೋಷಣೆ]]></title>
            <link>https://kannada.asianetnews.com/education/karnataka-nwkrtc-recruitment-exam-postponed-to-april-10-due-to-by-elections-gdp/articleshow-0bc1hod</link>
            <guid isPermaLink="true">https://kannada.asianetnews.com/education/karnataka-nwkrtc-recruitment-exam-postponed-to-april-10-due-to-by-elections-gdp/articleshow-0bc1hod</guid>
            <pubDate>Sat, 28 Mar 2026 16:24:40 +0530</pubDate>
            <description><![CDATA[ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ, ಏಪ್ರಿಲ್ 9ರಂದು ನಡೆಯಬೇಕಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಪ್ರಿಲ್ 10ಕ್ಕೆ ಮುಂದೂಡಿದೆ. ಒಟ್ಟು 33 ಹುದ್ದೆಗಳಿಗೆ ನಡೆಯುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರಿಷ್ಕೃತ ದಿನಾಂಕದಂದು ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಾಧಿಕಾರ ಸೂಚಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kaj48a9ywbb8d8v1wj8vybp1,imgname-----------------------2025-11-21t080448.839-1763692521790.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಅದೇ ದಿನ ನಿಗದಿಯಾಗಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಪ್ರಿಲ್ 10ಕ್ಕೆ ಮುಂದೂಡಿದೆ.&lt;/p&gt;&lt;p&gt;ಈ ಕುರಿತು ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ಕಾರ್ಯಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಹಾಗೂ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.&lt;/p&gt;&lt;h2&gt;ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಪರೀಕ್ಷೆ&lt;/h2&gt;&lt;p&gt;ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 33 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪರೀಕ್ಷೆಯನ್ನು ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈಗಾಗಲೇ ಸುಮಾರು 2,500 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಹೊಸ ವೇಳಾಪಟ್ಟಿಯ ಪ್ರಕಾರವೇ ಲಿಖಿತ ಪರೀಕ್ಷೆ ನಡೆಯಲಿದೆ.&lt;/p&gt;&lt;p&gt;ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಮಾತನಾಡಿ, &ldquo;ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯನ್ನು ಏಪ್ರಿಲ್ 10ಕ್ಕೆ ಮುಂದೂಡಲಾಗಿದೆ. ಶೀಘ್ರದಲ್ಲೇ ಪ್ರವೇಶ ಪತ್ರಗಳನ್ನು (Admit Cards) ಅಧಿಕೃತ ವೆಬ್&zwnj;ಸೈಟ್&zwnj;ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿಯನ್ನು ಗಮನಿಸಿ ಪರೀಕ್ಷೆಗೆ ಹಾಜರಾಗಬೇಕು&rdquo; ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ, KEA ಅಧಿಕೃತ ವೆಬ್&zwnj;ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಪಡೆಯುವಂತೆ ಸೂಚಿಸಲಾಗಿದೆ.&lt;/p&gt;&lt;h2&gt;ಅಗ್ನಿಪಥ ನೇಮಕಾತಿ: ಆನ್&zwj;ಲೈನ್ ನೋಂದಣಿ ಆರಂಭ&lt;/h2&gt;&lt;p&gt;ಕಲಬುರಗಿ: ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್&zwj;ಕ್ವಾಟರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ &ldquo;ಅಗ್ನಿಪಥ&rdquo; ನೇಮಕಾತಿಗಾಗಿ 2026ರ ಫೆಬ್ರವರಿ 13 ರಿಂದ ಏಪ್ರಿಲ್ 01 ರವರೆಗೆ ಆನ್&zwj;ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ. ಉಪಾಧ್ಯಾಯ ಅವರು ತಿಳಿಸಿದ್ದಾರೆ. ಬೆಳಗಾವಿ, ಬೀದರ್&zwnj;, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಭಾರತೀಯ ಸೇನೆಯ www.joinindianarmy.nic.in ವೆಬ್&zwj;ಸೈಟ್&zwj;ನಲ್ಲಿ 2026ರ ಏಪ್ರಿಲ್ 1 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ಸೇನೆಯಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್&zwj;ಮೆನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಗ್ನಿವೀರ್ ಟ್ರೇಡ್ಸ್&zwj;ಮೆನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಅಗ್ನಿವೀರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ. ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ 2026ರ ಫೆಬ್ರವರಿ 13ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್&zwj;ದಿಂದ ಹೊರಡಿಸಿದ ಅಧಿಸೂಚನೆಯನ್ನು ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/education/karnataka-nwkrtc-recruitment-exam-postponed-to-april-10-due-to-by-elections-gdp/articleshow-0bc1hod"/>
        </item>
        <item>
            <title><![CDATA[ಪೊಲೀಸ್ ಸಿಬ್ಬಂದಿಗೆ ಬಂದೂಕು ಹೊರಿಸಿ ರಣಬಿಸಿಲಲ್ಲಿ ನಿಲ್ಲಿಸಿದ್ದ PSI ನೇತ್ರಾವತಿಗೆ, ಕೇವಲ ಎತ್ತಂಗಡಿ ಶಿಕ್ಷೆ!]]></title>
            <link>https://kannada.asianetnews.com/state/chitradurga-psi-netravati-transferred-punishing-police-staff-in-sunlight-chikkajajuru-sat/articleshow-1n4g9cs</link>
            <guid isPermaLink="true">https://kannada.asianetnews.com/state/chitradurga-psi-netravati-transferred-punishing-police-staff-in-sunlight-chikkajajuru-sat/articleshow-1n4g9cs</guid>
            <pubDate>Wed, 08 Apr 2026 21:52:17 +0530</pubDate>
            <description><![CDATA[&lt;p&gt;ಚಿತ್ರದುರ್ಗದ ಚಿಕ್ಕಜಾಜೂರು ಠಾಣೆಯ ಪಿಎಸ್ಐ ನೇತ್ರಾವತಿ, ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ 12 ಸಿಬ್ಬಂದಿಗಳಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರು. ಈ ಘಟನೆಯಿಂದಾಗಿ ಸಿಬ್ಬಂದಿ ಅಸ್ವಸ್ಥರಾಗಿದ್ದು, ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಪಿಎಸ್ಐ ನೇತ್ರಾವತಿ ಈಗ ವರ್ಗಾವಣೆ ಆಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knkxgcknj27d34qbq55brsme,imgname-chitradurga-police-news--1--1775563715189.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಏ.08): ಕ&lt;/strong&gt;ರ್ತವ್ಯ ನಿರ್ಲಕ್ಷ್ಯದ ನೆಪವೊಡ್ಡಿ ತನ್ನದೇ ಸಹೋದ್ಯೋಗಿಗಳಿಗೆ ಶಾಲಾ ಮಕ್ಕಳಂತೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ ಪಿಎಸ್ಐ ನೇತ್ರಾವತಿ ವಿರುದ್ಧ ಕೊನೆಗೂ ಶಿಸ್ತು ಕ್ರಮ ಜರುಗಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯ ಪಿಎಸ್ಐ ನೇತ್ರಾವತಿ ಅವರನ್ನು ಕಂಟ್ರೋಲ್ ರೂಂಗೆ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಕುಮಾರ್ ಬಂಡಾರು ಆದೇಶ ಹೊರಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಏನಿದು &lsquo;ಬಿಸಿಲು ಶಿಕ್ಷೆ&rsquo; ಘಟನೆ?:&lt;/strong&gt;&lt;/h3&gt;&lt;p&gt;ಕೆಲವು ದಿನಗಳ ಹಿಂದೆ ಚಿಕ್ಕಜಾಜೂರು ಪೊಲೀಸ್ ಠಾಣೆಯ ಪಿಎಸ್ಐ ನೇತ್ರಾವತಿ ಅವರು ತಮ್ಮ ಠಾಣೆಯ ಸಿಬ್ಬಂದಿಗಳ ಮೇಲೆ ದರ್ಪ ತೋರಿದ್ದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಕಾರಣ ನೀಡಿ, ಒಬ್ಬ ಎಎಸ್ಐ (ASI) ಸೇರಿದಂತೆ ಒಟ್ಟು 12 ಜನ ಪೊಲೀಸ್ ಸಿಬ್ಬಂದಿಗೆ ಕಠಿಣ ಶಿಕ್ಷೆ ವಿಧಿಸಿದ್ದರು. ಅದು ಸಣ್ಣಪುಟ್ಟ ಶಿಕ್ಷೆಯಾಗಿರಲಿಲ್ಲ; ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಸುಡುವ ರಣಬಿಸಿಲಿನಲ್ಲಿ ಬಂದೂಕು ಹಿಡಿದು ನಿಲ್ಲುವಂತೆ ಆದೇಶಿಸಿದ್ದರು.&lt;/p&gt;&lt;p&gt;&lt;/p&gt;&lt;h3&gt;&lt;strong&gt;ಆಸ್ಪತ್ರೆ ಪಾಲಾಗಿದ್ದ ಸಿಬ್ಬಂದಿ:&lt;/strong&gt;&lt;/h3&gt;&lt;p&gt;ಏಪ್ರಿಲ್ ತಿಂಗಳ ಅತೀವ ಬಿಸಿಲಿನಲ್ಲಿ ಸತತ ಮೂರು ಗಂಟೆಗಳ ಕಾಲ ಭಾರವಾದ ಬಂದೂಕು ಹೊತ್ತು ನಿಂತಿದ್ದರಿಂದ ಹಲವು ಸಿಬ್ಬಂದಿಗಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಿಸಿಲ ಧಗೆ ತಾಳಲಾರದೆ ಸುಸ್ತಾಗಿದ್ದ ಕೆಲವು ಪೊಲೀಸರು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಿಂದ ಮನನೊಂದ ಸಿಬ್ಬಂದಿಗಳು ಪಿಎಸ್ಐ ನೇತ್ರಾವತಿ ಅವರ ವರ್ತನೆಯ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಇಲಾಖೆಯ ಒಳಗಿನ ಶಿಸ್ತಿನ ಹೆಸರಿನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.&lt;/p&gt;&lt;h2&gt;&lt;strong&gt;ಎಸ್ಪಿ ಕಟ್ಟುನಿಟ್ಟಿನ ಕ್ರಮ:&lt;/strong&gt;&lt;/h2&gt;&lt;p&gt;ಘಟನೆಯ ಗಾಂಭೀರ್ಯವನ್ನು ಅರಿತ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ತಕ್ಷಣವೇ ತನಿಖೆಗೆ ಆದೇಶಿಸಿದ್ದರು. ಡಿವೈಎಸ್ಪಿ ಅರುಣ್ ಗೌಡ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ವರದಿ ನೀಡುವಂತೆ ಸೂಚಿಸಿದ್ದರು. ಡಿವೈಎಸ್ಪಿ ಅವರು ನೀಡಿದ ಪ್ರಾಥಮಿಕ ತನಿಖಾ ವರದಿಯಲ್ಲಿ ಪಿಎಸ್ಐ ನೇತ್ರಾವತಿ ಅವರು ಸಿಬ್ಬಂದಿಗಳಿಗೆ ಶಿಕ್ಷೆ ನೀಡಿರುವುದು ಮತ್ತು ದರ್ಪ ತೋರಿರುವುದು ದೃಢಪಟ್ಟಿದೆ.&lt;/p&gt;&lt;h3&gt;&lt;strong&gt;ಕಂಟ್ರೋಲ್ ರೂಂಗೆ ವರ್ಗಾವಣೆ:&lt;/strong&gt;&lt;/h3&gt;&lt;p&gt;ತನಿಖಾ ವರದಿ ಕೈ ಸೇರಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಪಿಎಸ್ಐ ನೇತ್ರಾವತಿ ಅವರನ್ನು ಚಿಕ್ಕಜಾಜೂರು ಠಾಣೆಯಿಂದ ಚಿತ್ರದುರ್ಗದ ಪೊಲೀಸ್ ನಿಯಂತ್ರಣ ಕೊಠಡಿಗೆ (Control Room) ವರ್ಗಾವಣೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮುಖ್ಯವಾದರೂ, ಅಮಾನವೀಯವಾಗಿ ಶಿಕ್ಷೆ ನೀಡುವುದು ತಪ್ಪು ಎಂಬ ಸಂದೇಶವನ್ನು ಈ ಕ್ರಮದ ಮೂಲಕ ರವಾನಿಸಲಾಗಿದೆ. ಸದ್ಯ ಈ ಘಟನೆ ಇಡೀ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/chitradurga-psi-netravati-transferred-punishing-police-staff-in-sunlight-chikkajajuru-sat/articleshow-1n4g9cs"/>
        </item>
        <item>
            <title><![CDATA[ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ; SC-C ಕೆಟಗರಿಯಲ್ಲಿದೆ ಟ್ವಿಸ್ಟ್!]]></title>
            <link>https://kannada.asianetnews.com/state/karnataka-govt-issues-order-on-scheduled-castes-internal-reservation-56432-jobs-recruitment-sat/articleshow-303tac4</link>
            <guid isPermaLink="true">https://kannada.asianetnews.com/state/karnataka-govt-issues-order-on-scheduled-castes-internal-reservation-56432-jobs-recruitment-sat/articleshow-303tac4</guid>
            <pubDate>Tue, 28 Apr 2026 20:39:02 +0530</pubDate>
            <description><![CDATA[&lt;p&gt;ಕರ್ನಾಟಕ ಸರ್ಕಾರವು ಹೈಕೋರ್ಟ್&zwnj;ನ ಮಧ್ಯಂತರ ಆದೇಶದ ಮೇರೆಗೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ನಿಯಮದ ಅಡಿಯಲ್ಲಿ, 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ. ಈ ಮೀಸಲಾತಿಯನ್ನು ಪ್ರವರ್ಗ-ಎ, ಬಿ, ಮತ್ತು ಸಿ ಎಂದು ವರ್ಗೀಕರಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01cmhbvs9q5f2p3b9b489b69dd,imgname-banner.00_02_04_18.Still176.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.28): ಕ&lt;/strong&gt;ರ್ನಾಟಕದ ಪರಿಶಿಷ್ಟ ಜಾತಿ (SC) ಸಮುದಾಯಗಳಲ್ಲಿ ದಶಕಗಳಿಂದ ನಡೆಯುತ್ತಿದ್ದ ಒಳಮೀಸಲಾತಿ ಹೋರಾಟಕ್ಕೆ ಈಗ ದೊಡ್ಡ ತಾರ್ಕಿಕ ಅಂತ್ಯ ಸಿಕ್ಕಿದೆ. ಮಾನ್ಯ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಬಹಳ ದಿನಗಳಿಂದ ಬಾಕಿ ಉಳಿದಿದ್ದ 56,432 ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆ:&lt;/strong&gt;&lt;/h2&gt;&lt;p&gt;ಸರ್ಕಾರದ ಹೊಸ ಆದೇಶದ ಪ್ರಕಾರ, ಈ ಹಿಂದೆ ಶೇಕಡಾ 17ರಷ್ಟಿದ್ದ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಹೈಕೋರ್ಟ್&zwnj;ನ ಮಧ್ಯಂತರ ಆದೇಶದ ಅನ್ವಯ ತಾತ್ಕಾಲಿಕವಾಗಿ ಶೇಕಡಾ 15ಕ್ಕೆ ಮಿತಗೊಳಿಸಲಾಗಿದೆ. ಈ ಬದಲಾವಣೆಯು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.&lt;/p&gt;&lt;h2&gt;&lt;strong&gt;ಒಳಮೀಸಲಾತಿ ವರ್ಗೀಕರಣ ಹೇಗೆ?&lt;/strong&gt;&lt;/h2&gt;&lt;p&gt;ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಉಪಜಾತಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮೀಸಲಾತಿಯನ್ನು ಮೂರು ಪ್ರಮುಖ ಪ್ರವರ್ಗಗಳಾಗಿ ವಿಂಗಡಿಸಲಾಗಿದೆ:&lt;/p&gt;&lt;ul&gt; &lt;li&gt;&lt;strong&gt;ಪ್ರವರ್ಗ-ಎ (SC-A):&lt;/strong&gt; ಶೇಕಡಾ 5.25 ರಷ್ಟು ಮೀಸಲಾತಿ.&lt;/li&gt; &lt;li&gt;&lt;strong&gt;ಪ್ರವರ್ಗ-ಬಿ (SC-B):&lt;/strong&gt; ಶೇಕಡಾ 5.25 ರಷ್ಟು ಮೀಸಲಾತಿ.&lt;/li&gt; &lt;li&gt;&lt;strong&gt;ಪ್ರವರ್ಗ-ಸಿ (SC-C):&lt;/strong&gt; ಶೇಕಡಾ 4.5 ರಷ್ಟು ಮೀಸಲಾತಿ.&lt;/li&gt;&lt;/ul&gt;&lt;p&gt;ವಿಶೇಷವೆಂದರೆ, ಪ್ರವರ್ಗ-ಸಿ ಅಡಿಯಲ್ಲಿ ಬರುವ ಒಟ್ಟು ಹುದ್ದೆಗಳಲ್ಲಿ ಶೇಕಡಾ 20ರಷ್ಟು ಹುದ್ದೆಗಳನ್ನು ಪರಿಶಿಷ್ಟ ಜಾತಿಯಲ್ಲಿರುವ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿಡಲಾಗಿದೆ. ಒಂದು ವೇಳೆ ಈ ಗುಂಪಿನ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ, ಆ ಹುದ್ದೆಗಳನ್ನು ಪ್ರವರ್ಗ-ಸಿ ಅಡಿಯಲ್ಲಿರುವ ಇತರ ಜಾತಿಗಳ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅವಕಾಶ ನೀಡಲಾಗಿದೆ.&lt;/p&gt;&lt;h2&gt;&lt;strong&gt;56,432 ಹುದ್ದೆಗಳ ಭರ್ತಿಗೆ ಆದೇಶ:&lt;/strong&gt;&lt;/h2&gt;&lt;p&gt;ಉದ್ಯೋಗಾಕಾಂಕ್ಷಿಗಳಿಗೆ ಇದು ಅತ್ಯಂತ ಸಿಹಿ ಸುದ್ದಿಯಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದಿರುವ ವಿವಿಧ ಇಲಾಖೆಗಳ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣವೇ ಆರಂಭಿಸಲು ಸರ್ಕಾರ ಸೂಚಿಸಿದೆ. ಈ ನೇಮಕಾತಿಗಳಲ್ಲಿ 400 ಬಿಂದುಗಳ ರೋಸ್ಟರ್ ಪದ್ಧತಿಯನ್ನು ಅನುಸರಿಸಲು ನಿರ್ದೇಶನ ನೀಡಲಾಗಿದೆ. ಒಳಮೀಸಲಾತಿ ಅಳವಡಿಸದೆ ಹೊರಡಿಸಲಾಗಿದ್ದ ಹಳೆಯ ಅಧಿಸೂಚನೆಗಳನ್ನು ಹಿಂಪಡೆದು, ಹೊಸ ಒಳಮೀಸಲಾತಿ ನಿಯಮದಡಿ ತಕ್ಷಣವೇ ಮರು-ಅಧಿಸೂಚನೆ ಹೊರಡಿಸಲು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;h3&gt;&lt;strong&gt;ಸಮರ್ಪಕ ಜಾರಿಗಾಗಿ ಸೂಚನೆ:&lt;/strong&gt;&lt;/h3&gt;&lt;p&gt;ಈ ಹೊಸ ಮೀಸಲಾತಿ ನೀತಿಯನ್ನು ಸಮರ್ಪಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರವು 400 ಬಿಂದುಗಳ ರೋಸ್ಟರ್ ವರ್ತುಲಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದೆ. ಯಾವುದೇ ವೃಂದದಲ್ಲಿ 3ಕ್ಕಿಂತ ಕಡಿಮೆ ಪರಿಶಿಷ್ಟ ಜಾತಿ ಬಿಂದುಗಳಿದ್ದಲ್ಲಿ, ಅಂತಹ ಹುದ್ದೆಗಳನ್ನು 'ಪರಿಶಿಷ್ಟ ಜಾತಿ ಸಾಮಾನ್ಯ' ಎಂದು ಪರಿಗಣಿಸಿ ನೇಮಕಾತಿ ಮಾಡಲು ಸೂಚಿಸಲಾಗಿದೆ.&lt;/p&gt;&lt;p&gt;ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ಪರಿಶಿಷ್ಟ ಜಾತಿಯೊಳಗಿನ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವ ನಿರೀಕ್ಷೆಯಿದೆ. ಈ ಐತಿಹಾಸಿಕ ಬದಲಾವಣೆಯು ರಾಜ್ಯದ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಮೂಡಿಸಲಿದೆ.&lt;/p&gt;&lt;p&gt;&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-govt-issues-order-on-scheduled-castes-internal-reservation-56432-jobs-recruitment-sat/articleshow-303tac4"/>
        </item>
        <item>
            <title><![CDATA[ಸರ್ಕಾರಿ ಕೆಲಸ ಮುಗಿಸಿ ಮನೆಗೆ ಬಂದ ಮಗಳು ಹೆಣವಾದಳು: ಕೂಸಿನ ಹಾಲ್ದುಟಿ ಆರುವ ಮುನ್ನ ಅಮ್ಮನ ಪ್ರಾಣಪಕ್ಷಿ ಹಾರಿಹೋಯ್ತು!]]></title>
            <link>https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb</link>
            <guid isPermaLink="true">https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb</guid>
            <pubDate>Mon, 30 Mar 2026 15:13:25 +0530</pubDate>
            <description><![CDATA[&lt;p&gt;ರಾಯಚೂರಿನಲ್ಲಿ 11 ತಿಂಗಳ ಹಸುಗೂಸಿನ ತಾಯಿ, ಸರ್ಕಾರಿ ಮಹಿಳಾ ಉದ್ಯೋಗಿ ವಿದ್ಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಲೆ ಮಾಡಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmz1cfc4y1ssv58e1a7v42mp,imgname-raichur-govt-employee-vidya-death-1774863138180.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರಿನಲ್ಲಿ 11 ತಿಂಗಳ ಹಸುಗೂಸಿನ ತಾಯಿ, ಸರ್ಕಾರಿ ಮಹಿಳಾ ಉದ್ಯೋಗಿ ವಿದ್ಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಲೆ ಮಾಡಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ರಾಯಚೂರು (ಮಾ.30): ನ&lt;/strong&gt;ಗರದ ಐಬಿ ಕಾಲೋನಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 11 ತಿಂಗಳ ಹಸುಗೂಸಿನ ತಾಯಿ ವಿದ್ಯಾ (30) ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ಎದ್ದಿದ್ದು, ಗಂಡ ಮತ್ತು ಅತ್ತೆಯೇ ಸೇರಿ ನೇಣು ಬಿಗಿದು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ಮೃತ ವಿದ್ಯಾ ರಾಯಚೂರು ನಗರದ ಉಪ ವಿಜ್ಞಾನ ಕೇಂದ್ರದಲ್ಲಿ (Sub-Science Center) ಉದ್ಯೋಗಿಯಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಇವರು ಮಂಜುನಾಥ್ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯ ಸಂದರ್ಭದಲ್ಲಿ ವಿದ್ಯಾ ಅವರ ಪೋಷಕರು 30 ಗ್ರಾಂ ಚಿನ್ನಾಭರಣ ಮತ್ತು ಅರ್ಧ ಕೆಜಿ ಬೆಳ್ಳಿಯನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೂ, ಮದುವೆಯಾದಾಗಿನಿಂದಲೂ ಗಂಡ ಮಂಜುನಾಥ್ ಹಾಗೂ ಅತ್ತೆ ಕವಿತಾ ವರದಕ್ಷಿಣೆಗಾಗಿ ವಿದ್ಯಾ ಅವರಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ&lt;/p&gt;&lt;img&gt;&lt;p&gt;&lt;strong&gt;ಸಾವಿನ ಹಿಂದಿನ ದಿಗಿಲು ಹುಟ್ಟಿಸುವ ಕ್ಷಣಗಳು:&lt;/strong&gt;&lt;/p&gt;&lt;p&gt;ನಿನ್ನೆ ಸಂಜೆ ಮಂಜುನಾಥ್ ಕಂಠಪೂರ್ತಿ ಕುಡಿದು ವಿದ್ಯಾ ಅವರ ಕೆಲಸದ ಸ್ಥಳಕ್ಕೆ ಹೋಗಿ ಆಕೆಯನ್ನು ಮನೆಗೆ ಕರೆತಂದಿದ್ದ ಎನ್ನಲಾಗಿದೆ. ಮನೆಗೆ ಬಂದ ನಂತರ ವಿದ್ಯಾ ತನ್ನ 11 ತಿಂಗಳ ಹಸುಗೂಸಿಗೆ ಹಾಲುಣಿಸುತ್ತಿದ್ದರು. ಆ ಸಮಯದಲ್ಲಿ ಗಂಡನ ವಿಪರೀತ ಕುಡಿತದ ಬಗ್ಗೆ ಅತ್ತೆ ಕವಿತಾ ಬಳಿ ವಿದ್ಯಾ ಬೇಸರ ವ್ಯಕ್ತಪಡಿಸಿದ್ದರು. ಆದರೆ, ಮಗು ಹಾಲು ಕುಡಿದು ಮುಗಿಸುವಷ್ಟರಲ್ಲೇ ವಿದ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;img&gt;&lt;p&gt;&lt;strong&gt;ಕುಟುಂಬಸ್ಥರ ಆರೋಪವೇನು?&lt;/strong&gt;&lt;/p&gt;&lt;p&gt;&lsquo;ವಿದ್ಯಾ ಆತ್ಮ*ಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಆಕೆಗೆ ಕಿರುಕುಳ ನೀಡಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಂದಿದ್ದಾರೆ&rsquo; ಎಂದು ವಿದ್ಯಾ ಅವರ ತವರು ಮನೆಯವರು ಆರೋಪಿಸಿದ್ದಾರೆ. ಮಗುವಿಗೆ ಹಾಲುಣಿಸುತ್ತಿದ್ದ ತಾಯಿ ಇಷ್ಟು ಬೇಗ ಸಾವನ್ನಪ್ಪಲು ಸಾಧ್ಯವಿಲ್ಲ, ಇದು ಪಕ್ಕಾ ಪ್ಲಾನ್ ಮಾಡಿ ನಡೆಸಿರುವ ಕೊಲೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನನಗೆ ಮಾತ್ರವಲ್ಲ, ನನ್ನ ಗೆಳತಿಯರನ್ನೂ ಹಾಸಿಗೆಯಲ್ಲಿ ಖುಷಿಪಡಿಸಿ; ಹೆಂಡತಿ ಆಫರ್ ಕೇಳಿ ಪೊಲೀಸ್ ಠಾಣೆಗೆ ಬಂದ ಗಂಡ!&lt;/strong&gt;&lt;/p&gt;&lt;img&gt;&lt;p&gt;&lt;strong&gt;ಪೊಲೀಸ್ ತನಿಖೆ ಚುರುಕು:&lt;/strong&gt;&lt;/p&gt;&lt;p&gt;ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾ ಅವರ ಕುಟುಂಬಸ್ಥರ ದೂರಿನ ಮೇರೆಗೆ ಗಂಡ ಮಂಜುನಾಥ್ ಮತ್ತು ಅತ್ತೆ ಕವಿತಾ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;p&gt;ಸದ್ಯ ರಾಯಚೂರು ಡಿವೈಎಸ್&zwnj;ಪಿ (DySP) ಶಾಂತವೀರ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಹಿಂದಿನ ಅಸಲಿ ಸತ್ಯ ಹೊರಬರಲಿದೆ. 11 ತಿಂಗಳ ಕಂದಮ್ಮನನ್ನು ಅಗಲಿದ ತಾಯಿಯ ಸಾವು ರಾಯಚೂರಿನಲ್ಲಿ ಅತೀವ ವಿಷಾದ ಮೂಡಿಸಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb"/>
        </item>
        <item>
            <title><![CDATA[ಚಾಮರಾಜನಗರ ಆಕ್ಸಿಜನ್ ದುರಂತ: ಸಂತ್ರಸ್ತರ ಕುಟುಂಬಕ್ಕೆ ಕೊನೆಗೂ ಸಿಕ್ತು ಸರ್ಕಾರಿ ನೌಕರಿ; ಅರ್ಹರ ಪಟ್ಟಿ ಇಲ್ಲಿದೆ ನೋಡಿ]]></title>
            <link>https://kannada.asianetnews.com/state/chamarajanagar-oxygen-tragedy-victims-get-government-jobs-cm-siddaramaiah-sat/articleshow-3qefgfp</link>
            <guid isPermaLink="true">https://kannada.asianetnews.com/state/chamarajanagar-oxygen-tragedy-victims-get-government-jobs-cm-siddaramaiah-sat/articleshow-3qefgfp</guid>
            <pubDate>Sun, 19 Apr 2026 13:17:42 +0530</pubDate>
            <description><![CDATA[&lt;p&gt;2021ರ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಕಳೆದ ಐದು ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ರಾಜ್ಯ ಸರ್ಕಾರವು ಸಂತ್ರಸ್ತ ಕುಟುಂಬಗಳ ಅರ್ಹ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲು ಏ.21 ರಂದು ಸಿದ್ದರಾಮಯ್ಯ ನೇಮಕಾತಿ ಆದೇಶ ಪತ್ರ ವಿತರಿಸಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpjawjzwe65n240sq115k28h,imgname-chamarajanagar-oxygen-tragedy--1--1776584379388.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏ.19): ಆ&lt;/strong&gt; ಕರಾಳ ರಾತ್ರಿಯ ಘೋರ ದುರಂತ ನಡೆದು ಇಂದಿಗೆ ಸುಮಾರು 5 ವರ್ಷಗಳಾಗುತ್ತಾ ಬಂದಿವೆ. ಉಸಿರಾಡಲು ಆಕ್ಸಿಜನ್ ಸಿಗದೆ ಪ್ರಾಣಪಕ್ಷಿ ಹಾರಿಹೋದ ಆ ನೋವಿನ ನೆನಪುಗಳು ಇಂದಿಗೂ ಸಂತ್ರಸ್ತ ಕುಟುಂಬಗಳನ್ನು ಕಾಡುತ್ತಿವೆ. ಆದರೆ, ಸಂಕಷ್ಟದಲ್ಲಿದ್ದ ಆ ಕುಟುಂಬಗಳಿಗೆ ಇದೀಗ ಮರುಜೀವ ಸಿಕ್ಕಂತಾಗಿದೆ. ಕಳೆದ ಹಲವು ವರ್ಷಗಳಿಂದ ನಡೆಸುತ್ತಿದ್ದ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ನೌಕರಿಯನ್ನು ನೀಡಲು ಮುಂದಾಗಿದೆ.&lt;/p&gt;&lt;h2&gt;&lt;strong&gt;ಏಪ್ರಿಲ್ 21ಕ್ಕೆ ನೇಮಕಾತಿ ಆದೇಶ ವಿತರಣೆ&lt;/strong&gt;&lt;/h2&gt;&lt;p&gt;ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಏಪ್ರಿಲ್ 21ರಂದು ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಅಧಿಕೃತವಾಗಿ ಸರ್ಕಾರಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಿದ್ದಾರೆ. ಮೊದಲ ಹಂತದಲ್ಲಿ ಅರ್ಹತೆ ಹೊಂದಿರುವ 21 ಮಂದಿಗೆ ಈ ಸರ್ಕಾರಿ ಉದ್ಯೋಗದ ಭಾಗ್ಯ ಸಿಗಲಿದೆ.&lt;/p&gt;&lt;h2&gt;&lt;strong&gt;ಏನಿದು ಘಟನೆ? ಅಂದು ನಡೆದಿದ್ದೇನು?&lt;/strong&gt;&lt;/h2&gt;&lt;p&gt;2021ರ ಮೇ 2ರಂದು ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿತ್ತು. ಕೊರೋನಾ ಎರಡನೇ ಅಲೆಯ ವೇಳೆ ಆಕ್ಸಿಜನ್ ಕೊರತೆಯಿಂದಾಗಿ ಒಂದೇ ರಾತ್ರಿ ಸುಮಾರು 36ಕ್ಕೂ ಹೆಚ್ಚು ಮಂದಿ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಕುಟುಂಬದ ಆಧಾರ ಸ್ತಂಭಗಳನ್ನೇ ಕಳೆದುಕೊಂಡ ಕುಟುಂಬಗಳು ಬೀದಿಗೆ ಬಿದ್ದಿದ್ದವು. ಅಂದಿನಿಂದ ಇಂದಿನವರೆಗೆ ಈ ಕುಟುಂಬಗಳು ತಮಗೆ ನ್ಯಾಯ ಬೇಕು ಮತ್ತು ಜೀವನೋಪಾಯಕ್ಕಾಗಿ ಸರ್ಕಾರಿ ನೌಕರಿ ನೀಡಬೇಕು ಎಂದು ಸತತವಾಗಿ ಹೋರಾಟ ನಡೆಸುತ್ತಾ ಬಂದಿದ್ದರು.&lt;/p&gt;&lt;h3&gt;&lt;strong&gt;ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ನೀಡಿದ್ದ ಭರವಸೆ&lt;/strong&gt;&lt;/h3&gt;&lt;p&gt;ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮತ್ತು 'ಭಾರತ್ ಜೋಡೋ ಯಾತ್ರೆ'ಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ನೀಡಿದ ಮಾತಿನಂತೆ ಸಿದ್ದರಾಮಯ್ಯ ಸರ್ಕಾರ ತನ್ನ ಭರವಸೆಯನ್ನು ಈಡೇರಿಸುತ್ತಿದೆ.&lt;/p&gt;&lt;h3&gt;&lt;strong&gt;ವಿದ್ಯಾರ್ಹತೆಗೆ ತಕ್ಕಂತೆ ನೌಕರಿ&lt;/strong&gt;&lt;/h3&gt;&lt;p&gt;ಸಂತ್ರಸ್ತ ಕುಟುಂಬದ ಸದಸ್ಯರ ವಿದ್ಯಾರ್ಹತೆಯನ್ನು ಪರಿಗಣಿಸಿ ಅವರಿಗೆ ಸೂಕ್ತವಾದ ಹುದ್ದೆಗಳನ್ನು ನೀಡಲಾಗುತ್ತಿದೆ. ಪ್ರಮುಖವಾಗಿ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲೇ (CIMS) ಈ ಉದ್ಯೋಗಗಳನ್ನು ನೀಡಲಾಗುತ್ತಿದ್ದು, ಇದು ಸಂತ್ರಸ್ತರಿಗೆ ತಮ್ಮ ಸ್ವಂತ ಜಿಲ್ಲೆಯಲ್ಲೇ ಕೆಲಸ ಮಾಡುವ ಅವಕಾಶ ಕಲ್ಪಿಸಿದೆ. ಐದು ವರ್ಷಗಳ ಸುದೀರ್ಘ ಕಾಯುವಿಕೆ ಮತ್ತು ಹೋರಾಟದ ನಂತರ ಸಂತ್ರಸ್ತರ ಕಣ್ಣೀರು ವೊರೆಸುವ ಕೆಲಸಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.&lt;/p&gt;&lt;p&gt;ಸರ್ಕಾರಿ ಉದ್ಯೋಗ ಪಡೆದವರ ಪಟ್ಟಿ ಇಲ್ಲಿದೆ ನೋಡಿ.&lt;/p&gt;&lt;p&gt;&lt;img&gt;&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/chamarajanagar-oxygen-tragedy-victims-get-government-jobs-cm-siddaramaiah-sat/articleshow-3qefgfp"/>
        </item>
        <item>
            <title><![CDATA[ಕೃಷಿ ಇಲಾಖೆಯಲ್ಲಿ ನಿಮಗಿದೋ ಸುವರ್ಣಾವಕಾಶ, ಕೆಇಎಯಿಂದ ಅರ್ಜಿ ಆಹ್ವಾನ!]]></title>
            <link>https://kannada.asianetnews.com/jobs/karnataka-kea-recruitment-890-agriculture-officer-posts-announced-apply-online-before-may-10-gdp/articleshow-4varya4</link>
            <guid isPermaLink="true">https://kannada.asianetnews.com/jobs/karnataka-kea-recruitment-890-agriculture-officer-posts-announced-apply-online-before-may-10-gdp/articleshow-4varya4</guid>
            <pubDate>Wed, 22 Apr 2026 18:44:05 +0530</pubDate>
            <description><![CDATA[ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಅರ್ಹ ಅಭ್ಯರ್ಥಿಗಳು ಮೇ 10ರೊಳಗೆ ಆನ್&zwnj;ಲೈನ್&zwnj;ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ ತಿಂಗಳಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ. ಈ ನೇಮಕಾತಿಯು ಕೃಷಿ ಪದವೀಧರರಿಗೆ ಸರ್ಕಾರಿ ವಲಯದಲ್ಲಿ ಸೇವೆ ಸಲ್ಲಿಸಲು ಉತ್ತಮ ಅವಕಾಶವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kktgd6bd5fgq0amyfwsjav01,imgname-agriculture-officer-salary-1773637376365.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯದ ಕೃಷಿ ಕ್ಷೇತ್ರದ ಆಡಳಿತಾತ್ಮಕ ಹಾಗೂ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಹತ್ವದ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 890 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್&zwnj;ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.&lt;/p&gt;&lt;h2&gt;ಹುದ್ದೆಗಳ ವಿವರ ಮತ್ತು ವರ್ಗೀಕರಣ&lt;/h2&gt;&lt;p&gt;ಈ ನೇಮಕಾತಿ ಪ್ರಕ್ರಿಯೆ ಮುಖ್ಯವಾಗಿ ಎರಡು ವೃಂದಗಳಲ್ಲಿ ನಡೆಯಲಿದೆ. ಒಟ್ಟು 890 ಹುದ್ದೆಗಳ ಪೈಕಿ &lsquo;ಗ್ರೂಪ್-ಬಿ&rsquo; ವೃಂದದ ಅಡಿಯಲ್ಲಿ 632 ಹುದ್ದೆಗಳು ಸೇರಿವೆ. ಇದರಲ್ಲಿ 81 ಕೃಷಿ ಅಧಿಕಾರಿ ಮತ್ತು 551 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿವೆ. ಉಳಿದಂತೆ, ಕಲ್ಯಾಣ ಕರ್ನಾಟಕ (371ಜೆ) ವೃಂದಕ್ಕೆ ಮೀಸಲಾದ 258 ಹುದ್ದೆಗಳಿಗೂ ಪ್ರತ್ಯೇಕ ನೇಮಕಾತಿ ನಡೆಯಲಿದೆ. ಕೃಷಿ ಪದವೀಧರರಿಗೆ ಸರ್ಕಾರದ ವಲಯದಲ್ಲಿ ಸೇವೆ ಸಲ್ಲಿಸಲು ಇದು ಮಹತ್ವದ ಅವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ.&lt;/p&gt;&lt;h2&gt;ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು&lt;/h2&gt;&lt;p&gt;ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮೇ 10ರೊಳಗೆ ಆನ್&zwnj;ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ದಿನಾಂಕವು ಕಲ್ಯಾಣ ಕರ್ನಾಟಕ ಹಾಗೂ ಇತರ ಎಲ್ಲಾ ವೃಂದದ ಅಭ್ಯರ್ಥಿಗಳಿಗೆ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸಿದ ನಂತರ ನಿಗದಿತ ಶುಲ್ಕವನ್ನು ಪಾವತಿಸಲು ಮೇ 12ರವರೆಗೆ ಅವಕಾಶ ನೀಡಲಾಗಿದೆ. ಕೊನೆಯ ಕ್ಷಣದ ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ ಎಂದು ಕೆಇಎ ಸಲಹೆ ನೀಡಿದೆ.&lt;/p&gt;&lt;h2&gt;ಪರೀಕ್ಷಾ ವೇಳಾಪಟ್ಟಿ&lt;/h2&gt;&lt;p&gt;ನೇಮಕಾತಿ ಪ್ರಕ್ರಿಯೆಯ ಅಂಗವಾಗಿ ಲಿಖಿತ ಪರೀಕ್ಷೆಗಳು ಜೂನ್ ತಿಂಗಳಲ್ಲಿ ನಡೆಯಲಿವೆ.&lt;/p&gt;&lt;p&gt;ಕನ್ನಡ ಭಾಷಾ ಪರೀಕ್ಷೆ: ಮೂಲ ಹಾಗೂ ಕಲ್ಯಾಣ ಕರ್ನಾಟಕ ಎರಡೂ ವೃಂದದ ಅಭ್ಯರ್ಥಿಗಳಿಗೆ ಜೂನ್ 6ರಂದು ಕಡ್ಡಾಯವಾಗಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಗ್ರೂಪ್-ಬಿ ಪರೀಕ್ಷೆ: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಜೂನ್ 7ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ವೃಂದ: 371ಜೆ ವೃಂದಕ್ಕೆ ಸೇರಿದ 258 ಹುದ್ದೆಗಳಿಗಾಗಿ ಜೂನ್ 14ರಂದು ಪರೀಕ್ಷೆ ನಿಗದಿಯಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಮಾರ್ಗದರ್ಶನ&lt;/p&gt;&lt;p&gt;ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿದ್ದ ಹುದ್ದೆಗಳ ಭರ್ತಿಯಿಂದ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಾಗುವ ನಿರೀಕ್ಷೆಯಿದೆ. ರೈತರಿಗೆ ತಾಂತ್ರಿಕ ಸಲಹೆ ನೀಡುವುದು, ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಈ ಅಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ.&lt;/p&gt;&lt;p&gt;ಅರ್ಹತೆ, ಅರ್ಜಿ ವಿಧಾನ ಮತ್ತು ಇತರ ವಿವರಗಳಿಗಾಗಿ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್&zwnj;ಸೈಟ್&zwnj;ಗೆ ಭೇಟಿ ನೀಡಬಹುದು. ಜೂನ್ ತಿಂಗಳಲ್ಲಿ ಪರೀಕ್ಷೆಗಳು ನಡೆಯಲಿರುವುದರಿಂದ ಅಭ್ಯರ್ಥಿಗಳಿಗೆ ಸಿದ್ಧತೆಗಾಗಿ ಸೀಮಿತ ಸಮಯ ಮಾತ್ರ ಇರುವುದರಿಂದ, ಕೃಷಿ ಪದವೀಧರರು ಈಗಿನಿಂದಲೇ ಯೋಜಿತವಾಗಿ ಅಭ್ಯಾಸ ಆರಂಭಿಸುವುದು ಅಗತ್ಯವಾಗಿದೆ.&lt;/p&gt;&lt;p&gt;ಒಟ್ಟಾರೆ, ಈ ನೇಮಕಾತಿ ಪ್ರಕ್ರಿಯೆ ಕೃಷಿ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬುವ ಜೊತೆಗೆ, ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವನ್ನು ಒದಗಿಸಿದೆ.&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/jobs/karnataka-kea-recruitment-890-agriculture-officer-posts-announced-apply-online-before-may-10-gdp/articleshow-4varya4"/>
        </item>
        <item>
            <title><![CDATA[ಲೋಕಾಯುಕ್ತ ಬಲೆಗೆ ಬಿತ್ತು ಮೀನುಗಾರಿಕೆ ಇಲಾಖೆಯ ದೊಡ್ಡ ತಿಮಿಂಗಲ; ಉಪ ನಿರ್ದೇಶಕ ಶಿವಣ್ಣನ ಮನೇಲಿ ಕೋಟಿ, ಕೋಟಿ ಆಸ್ತಿ!]]></title>
            <link>https://kannada.asianetnews.com/karnataka-districts/ballari-lokayukta-raid-fisheries-deputy-director-shivanna-assets-found-sat/articleshow-55vgd28</link>
            <guid isPermaLink="true">https://kannada.asianetnews.com/karnataka-districts/ballari-lokayukta-raid-fisheries-deputy-director-shivanna-assets-found-sat/articleshow-55vgd28</guid>
            <pubDate>Tue, 07 Apr 2026 20:38:02 +0530</pubDate>
            <description><![CDATA[&lt;p&gt;ಬಳ್ಳಾರಿಯ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿದ್ದು, ಬೇನಾಮಿ ಆಸ್ತಿಗಳ ಬಗ್ಗೆಯೂ ತನಿಖೆ ಮುಂದುವರೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knm7pew50f96bmgvwvzc6sam,imgname-ballari-shivanna-lokayukta-trap-1775574399874.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.07): ಭ್ರ&lt;/strong&gt;ಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇಂದು ನಸುಕಿನ ಜಾವವೇ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಆಸ್ತಿ ವಿವರಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಯೊಬ್ಬರು ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣದ ಆಸ್ತಿ ಮಾಡಿದ್ದಾರೆ ಎಂಬುದು ಈಗ ಬಯಲಾಗಿದೆ.&lt;/p&gt;&lt;h3&gt;&lt;strong&gt;ಆಸ್ತಿಯ ವಿವರಗಳು:&lt;/strong&gt;&lt;/h3&gt;&lt;p&gt;ಲೋಕಾಯುಕ್ತ ದಾಳಿಯ ವೇಳೆ ಪತ್ತೆಯಾದ ಆಸ್ತಿಗಳ ಪಟ್ಟಿ ಬೆಟ್ಟದಷ್ಟಿದೆ. ಬಳ್ಳಾರಿ ನಗರವೊಂದರಲ್ಲೇ ಶಿವಣ್ಣ ಅವರು ಬರೋಬ್ಬರಿ 14 ಸೈಟುಗಳನ್ನು ಹೊಂದಿದ್ದಾರೆ. ಇದಲ್ಲದೆ ಬಳ್ಳಾರಿ ನಗರದ ವಿವಿಧ ಬಡಾವಣೆಗಳಲ್ಲಿ 3 ಐಷಾರಾಮಿ ಮನೆಗಳು ಪತ್ತೆಯಾಗಿವೆ. ಇನ್ನು ಕೃಷಿ ಭೂಮಿಯ ವಿಷಯಕ್ಕೆ ಬಂದರೆ, ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 44 ಎಕರೆ ಜಮೀನು ಇರುವುದು ದಾಖಲೆಗಳಿಂದ ದೃಢಪಟ್ಟಿದೆ.&lt;/p&gt;&lt;h2&gt;&lt;strong&gt;ಚಿನ್ನ, ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್:&lt;/strong&gt;&lt;/h2&gt;&lt;p&gt;ಮನೆಯಲ್ಲಿ ನಡೆಸಿದ ಶೋಧದ ವೇಳೆ 600 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಮನೆಯಲ್ಲೇ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದು, ಒಟ್ಟು 8.5 ಲಕ್ಷ ರೂಪಾಯಿ ನಗದನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಇದರ ಜೊತೆಗೆ, ಶಿವಣ್ಣ ಅವರ ಬ್ಯಾಂಕ್ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.&lt;/p&gt;&lt;h3&gt;&lt;strong&gt;ಬೇನಾಮಿ ಆಸ್ತಿಯ ಶಂಕೆ:&lt;/strong&gt;&lt;/h3&gt;&lt;p&gt;ಕೇವಲ ಇಷ್ಟೇ ಅಲ್ಲದೆ, ಶಿವಣ್ಣ ಅವರು ತಮ್ಮ ಕುಟುಂಬಸ್ಥರು ಹಾಗೂ ಇತರರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಗಳನ್ನು ಮಾಡಿರುವ ಬಲವಾದ ಶಂಕೆ ವ್ಯಕ್ತವಾಗಿದೆ. ಕಚೇರಿ ಕೆಲಸದಲ್ಲಿ ಭ್ರಷ್ಟಾಚಾರ ನಡೆಸಿ, ಅಕ್ರಮ ಮಾರ್ಗದ ಮೂಲಕ ಈ ಹಣ ಸಂಪಾದನೆ ಮಾಡಿರಬಹುದು ಎಂಬ ನಿಟ್ಟಿನಲ್ಲಿ ತನಿಖೆ ತೀವ್ರಗೊಂಡಿದೆ. ಮನೆಯಲ್ಲಿ ಸಿಕ್ಕಿರುವ ಹಲವು ಪ್ರಮುಖ ದಾಖಲೆಗಳು ಮತ್ತು ಡೈರಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ತಲಾಶ್ ಮುಂದುವರಿಕೆ:&lt;/strong&gt;&lt;/h3&gt;&lt;p&gt;ಬಳ್ಳಾರಿಯ ಲೋಕಾಯುಕ್ತ ಅಧಿಕಾರಿಗಳ ತಂಡವು ಇನ್ನೂ ಶೋಧ ಕಾರ್ಯವನ್ನು ಮುಂದುವರೆಸಿದೆ. ಶಿವಣ್ಣ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳ ಮೇಲೂ ನಿಗಾ ಇಡಲಾಗಿದ್ದು, ದಾಖಲೆಗಳ ಪರಿಶೀಲನೆಯ ನಂತರ ಆಸ್ತಿಯ ಒಟ್ಟು ಮೌಲ್ಯ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಸರ್ಕಾರಿ ಅಧಿಕಾರಿಯೊಬ್ಬರು ಅಕ್ರಮವಾಗಿ ಇಷ್ಟೊಂದು ಆಸ್ತಿ ಮಾಡಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.&lt;/p&gt;&lt;p&gt;ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಮೇಲೆ 10 ಕ್ಕೂ ಹೆಚ್ಚು ದೂರುಗಳು ಲೊಕಾಯುಕ್ತರಿಗೆ ಸಲ್ಲಿಕೆಯಾಗಿದ್ದವು. ಭಷ್ಟಚಾರ ಹಾಗೂ ಅಕ್ರಮ ಆದಾಯದ ದೂರುಗಳು ಸಲ್ಲಿಕೆ ಪ್ರಕರಣಗಳು ಇವಾಇದ್ದವು. ಕಳೆದ ಹತ್ತು ವರ್ಷದಿಂದ ಶಿವಣ್ಣ ಎಲ್ಲಿಯೂ ವರ್ಗಾವಣೆ ಆಗದೇ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ತನ್ನ ಪ್ರಭಾವವನ್ನು ಬಳಸಿಕೊಂಡು ಎಲ್ಲಿಗೂ ವರ್ಗಾವಣೆ ಆಗದಂತೆ ನೋಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/ballari-lokayukta-raid-fisheries-deputy-director-shivanna-assets-found-sat/articleshow-55vgd28"/>
        </item>
        <item>
            <title><![CDATA[ಕರ್ನಾಟಕ ಪೊಲೀಸ್ ನೇರ ನೇಮಕಾತಿ ವಯೋಮಿತಿ ಸಡಿಲಿಸಿ ಮಹಾ ನಿರ್ದೇಶಕ ಡಾ ಸಲೀಂ ಆದೇಶ! ಅಭ್ಯರ್ಥಿಗಳಿಗೆ ಸುವರ್ಣಾವಕಾಶ]]></title>
            <link>https://kannada.asianetnews.com/state/karnataka-police-recruitment-2026-age-limit-relaxed-by-5-years-for-all-categories-gdp/articleshow-ayltqsw</link>
            <guid isPermaLink="true">https://kannada.asianetnews.com/state/karnataka-police-recruitment-2026-age-limit-relaxed-by-5-years-for-all-categories-gdp/articleshow-ayltqsw</guid>
            <pubDate>Wed, 25 Mar 2026 16:30:18 +0530</pubDate>
            <description><![CDATA[ಕರ್ನಾಟಕ ಪೊಲೀಸ್ ಇಲಾಖೆಯು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಘೋಷಿಸಿದೆ. ಈ ಒಂದು ಬಾರಿಯ ವಿಶೇಷ ಕ್ರಮವು 2026ರ ಮಾರ್ಚ್ 24 ರಿಂದ 2027ರ ಡಿಸೆಂಬರ್ 31ರ ವರೆಗಿನ ಅಧಿಸೂಚನೆಗಳಿಗೆ ಅನ್ವಯವಾಗಲಿದೆ. ಕೋವಿಡ್ ಮತ್ತು ಆಡಳಿತಾತ್ಮಕ ವಿಳಂಬದಿಂದ ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmjaabrmgp1twassk88bctn8,imgname-m-a-saleem-ips-1774436298516.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಕರ್ನಾಟಕ ಪೊಲೀಸ್ ಇಲಾಖೆಯ ನೇರ ನೇಮಕಾತಿಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ (DGP) ಡಾ. ಎಂ.ಎ. ಸಲೀಂ ಅವರು ಘೋಷಿಸಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;h2&gt;ಒಮ್ಮೆ ಮಾತ್ರ ಅನ್ವಯಿಸುವ ವಿಶೇಷ ಕ್ರಮ&lt;/h2&gt;&lt;p&gt;ಈ ವಯೋಮಿತಿ ಸಡಿಲಿಕೆ ಒಮ್ಮೆ ಮಾತ್ರ (One-Time Measure) ಅನ್ವಯವಾಗುವ ವಿಶೇಷ ಕ್ರಮವಾಗಿದ್ದು, 2026ರ ಮಾರ್ಚ್ 24ರಿಂದ 2027ರ ಡಿಸೆಂಬರ್ 31ರವರೆಗೆ ಹೊರಡಿಸಲ್ಪಡುವ ಎಲ್ಲಾ ಪೊಲೀಸ್ ನೇಮಕಾತಿ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ.&lt;/p&gt;&lt;p&gt;ಅಂದರೆ, ಈ ಅವಧಿಯಲ್ಲಿ ಪ್ರಕಟವಾಗುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ, ಈಗಿನ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಗೆ ಹೆಚ್ಚುವರಿಯಾಗಿ 5 ವರ್ಷಗಳ ಅವಕಾಶ ದೊರೆಯಲಿದೆ.&lt;/p&gt;&lt;h2&gt;ಯಾರು ಪ್ರಯೋಜನ ಪಡೆಯಬಹುದು?&lt;/h2&gt;&lt;p&gt;ಈ ಸಡಿಲಿಕೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಸಮಾನವಾಗಿ ಅನ್ವಯವಾಗುತ್ತದೆ:&lt;/p&gt;&lt;p&gt;ಸಾಮಾನ್ಯ ವರ್ಗ (General) ಇತರೆ ಹಿಂದುಳಿದ ವರ್ಗಗಳು (OBC) ಪರಿಶಿಷ್ಟ ಜಾತಿ (SC) ಪರಿಶಿಷ್ಟ ಪಂಗಡ (ST) ಹೀಗಾಗಿ, ವಯೋಮಿತಿ ಕಾರಣದಿಂದಾಗಿ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶವಾಗಿದೆ.&lt;/p&gt;&lt;h2&gt;ಯಾವ ಹುದ್ದೆಗಳಿಗೆ ಅನ್ವಯ?&lt;/h2&gt;&lt;p&gt;ಈ ವಯೋಮಿತಿ ಸಡಿಲಿಕೆ ಪೊಲೀಸ್ ಇಲಾಖೆಯ ವಿವಿಧ ನೇರ ನೇಮಕಾತಿಗಳಿಗೆ ಅನ್ವಯವಾಗುತ್ತದೆ:&lt;/p&gt;&lt;p&gt;ಪೊಲೀಸ್ ಸಬ್&zwnj; ಇನ್ಸ್&zwnj;ಪೆಕ್ಟರ್ (PSI) ಪೊಲೀಸ್ ಕಾನ್ಸ್&zwnj;ಟೇಬಲ್ (PC) ಇತರೆ ನೇರ ನೇಮಕಾತಿ ಹುದ್ದೆಗಳು ಸರ್ಕಾರದ ನಿರ್ಧಾರದ ಹಿನ್ನೆಲೆ ಕೊವಿಡ್-19 ಮಹಾಮಾರಿ ಹಾಗೂ ಇತರ ಆಡಳಿತಾತ್ಮಕ ಕಾರಣಗಳಿಂದ ಕಳೆದ ಕೆಲವು ವರ್ಷಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿದ್ದವು. ಇದರ ಪರಿಣಾಮವಾಗಿ ಅನೇಕ ಅಭ್ಯರ್ಥಿಗಳು ವಯೋಮಿತಿ ಮೀರಿದ್ದರು. ಈ ಸಮಸ್ಯೆಯನ್ನು ಮನಗಂಡ ಸರ್ಕಾರ, ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ವಿಶೇಷ ವಯೋಮಿತಿ ಸಡಿಲಿಕೆ ಘೋಷಿಸಿದೆ.&lt;/p&gt;&lt;h2&gt;ಅಭ್ಯರ್ಥಿಗಳಿಗೆ ಮಹತ್ವದ ಅವಕಾಶ&lt;/h2&gt;&lt;p&gt;ಈ ನಿರ್ಧಾರವು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಸಾವಿರಾರು ಯುವಕರಿಗೆ ಹೊಸ ಭರವಸೆ ಮತ್ತು ಅವಕಾಶ ನೀಡಲಿದೆ. ವಯೋಮಿತಿ ಮೀರಿದ ಕಾರಣದಿಂದ ಕನಸು ತ್ಯಜಿಸಿದ್ದ ಅಭ್ಯರ್ಥಿಗಳು ಇದೀಗ ಮತ್ತೆ ತಮ್ಮ ಪ್ರಯತ್ನ ಮುಂದುವರಿಸಲು ಅವಕಾಶ ಪಡೆದಿದ್ದಾರೆ.&lt;/p&gt;&lt;p&gt;ಕರ್ನಾಟಕ ಸರ್ಕಾರದ ಈ ನಿರ್ಧಾರವು ಪೊಲೀಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಅಭ್ಯರ್ಥಿಗಳಿಗೆ ದೊಡ್ಡ ಮಟ್ಟದ ಸಹಾಯವಾಗಲಿದೆ. 2027ರ ಅಂತ್ಯದವರೆಗೆ ಈ ಸಡಿಲಿಕೆಯ ಪ್ರಯೋಜನ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.&lt;/p&gt;&lt;p&gt;&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-police-recruitment-2026-age-limit-relaxed-by-5-years-for-all-categories-gdp/articleshow-ayltqsw"/>
        </item>
        <item>
            <title><![CDATA[ತುಮಕೂರು ಗ್ರಾಮ ಆಡಳಿತ ಅಧಿಕಾರಿ (VAO) ಕರ್ತವ್ಯ ಮುಗಿಸಿ ಮನೆಗೆ ಹೊರಟರು; ಆದ್ರೆ ದಾರಿಯಲ್ಲೇ ಮಸಣ ಸೇರಿದರು!]]></title>
            <link>https://kannada.asianetnews.com/karnataka-districts/tumakuru-village-administrative-officer-poovappa-rathod-dies-in-car-accident-mayasandra-sat/articleshow-bhwvhly</link>
            <guid isPermaLink="true">https://kannada.asianetnews.com/karnataka-districts/tumakuru-village-administrative-officer-poovappa-rathod-dies-in-car-accident-mayasandra-sat/articleshow-bhwvhly</guid>
            <pubDate>Tue, 07 Apr 2026 18:15:20 +0530</pubDate>
            <description><![CDATA[&lt;p&gt;ತುಮಕೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ ಪೂವಪ್ಪ ರಾಥೋಡ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ತಗ್ಗಿಗೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knkzfkgaa7rsrvx3c7va8zew,imgname-tumakuru-village-accountant-death-1775565786634.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.07): ಜಿ&lt;/strong&gt;ಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಗ್ರಾಮ ಆಡಳಿತ ಅಧಿಕಾರಿಯೊಬ್ಬರು (VAO) ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ತುರುವೇಕೆರೆ ತಾಲೂಕಿನ ಮಾಯಸಂದ್ರ ಸಮೀಪದ ಕುಂದುರನಹಳ್ಳಿ ಪಾಳ್ಯದ ಬಳಿ ನಡೆದಿದ್ದು, ಇಡೀ ಕಂದಾಯ ಇಲಾಖೆಯನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.&lt;/p&gt;&lt;h3&gt;&lt;strong&gt;ಮೃತ ಅಧಿಕಾರಿಯ ವಿವರ:&lt;/strong&gt;&lt;/h3&gt;&lt;p&gt;ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯನ್ನು 35 ವರ್ಷದ ಪೂವಪ್ಪ ರಾಥೋಡ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಯಚೂರು ಜಿಲ್ಲೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಯಾಗಿ (Village Administrative Officer) ಸೇವೆ ಸಲ್ಲಿಸುತ್ತಿದ್ದರು. ತಮ್ಮ ಕೆಲಸದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಪೂವಪ್ಪ ಅವರು ಇಂದು ನಮ್ಮೊಂದಿಗಿಲ್ಲ ಎಂಬ ಸುದ್ದಿ ಕಂದಾಯ ಇಲಾಖೆಯ ಸಿಬ್ಬಂದಿಗೆ ಆಘಾತ ತಂದಿದೆ.&lt;/p&gt;&lt;h3&gt;&lt;strong&gt;ಘಟನೆಯಲ್ಲಿ ನಡೆದದ್ದೇನು?&lt;/strong&gt;&lt;/h3&gt;&lt;p&gt;ಪೂವಪ್ಪ ರಾಥೋಡ್ ಅವರು ನಿನ್ನೆ ಸಂಜೆ ತಮ್ಮ ಕಚೇರಿಯ ಕೆಲಸಗಳನ್ನು ಮುಗಿಸಿಕೊಂಡು ತಮ್ಮ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಕುಂದುರನಹಳ್ಳಿ ಪಾಳ್ಯದ ಬಳಿ ಚಲಿಸುತ್ತಿದ್ದಾಗ ಕಾರು ಹಠಾತ್ತಾಗಿ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ತಗ್ಗಿಗೆ ಉರುಳಿ ಬಿದ್ದಿದೆ. ಕಾರು ಬಿದ್ದ ರಭಸ ಎಷ್ಟಿತ್ತೆಂದರೆ, ಪೂವಪ್ಪ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಘಟನೆಯು ನಿನ್ನೆ ಸಂಜೆ ನಡೆದಿದ್ದರೂ, ಜನಸಂಚಾರ ವಿರಳವಾಗಿದ್ದ ಪ್ರದೇಶವಾದ್ದರಿಂದ ತಡವಾಗಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;&lt;strong&gt;ಪೊಲೀಸ್ ಭೇಟಿ ಮತ್ತು ತನಿಖೆ:&lt;/strong&gt;&lt;/h2&gt;&lt;p&gt;ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ತುರುವೇಕೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಪೂವಪ್ಪ ಅವರ ಮೃತದೇಹವನ್ನು ಕಾರಿನಿಂದ ಹೊರತೆಗೆದು, ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ರಾಯಚೂರಿನಲ್ಲಿರುವ ಅವರ ಕುಟುಂಬಸ್ಥರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದ್ದು, ಸಂಬಂಧಿಕರು ತುರುವೇಕೆರೆಗೆ ಆಗಮಿಸುತ್ತಿದ್ದಾರೆ.&lt;/p&gt;&lt;p&gt;ಈ ಅಪಘಾತಕ್ಕೆ ಅತಿ ವೇಗ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಸಮರ್ಥ ಅಧಿಕಾರಿಯೊಬ್ಬರು ರಸ್ತೆ ಅಪಘಾತಕ್ಕೆ ಬಲಿಯಾಗಿರುವುದು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ತೀವ್ರ ವಿಷಾದ ಮೂಡಿಸಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-village-administrative-officer-poovappa-rathod-dies-in-car-accident-mayasandra-sat/articleshow-bhwvhly"/>
        </item>
        <item>
            <title><![CDATA[ಚಿತ್ರದುರ್ಗ PSI ನೇತ್ರಾವತಿ ದರ್ಪ: ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ!]]></title>
            <link>https://kannada.asianetnews.com/gallery/state/karnataka-police-chitradurga-chikkajajuru-psi-netravathi-punishes-12-police-staff-in-sunlight-sat-d6s5l92</link>
            <guid isPermaLink="true">https://kannada.asianetnews.com/gallery/state/karnataka-police-chitradurga-chikkajajuru-psi-netravathi-punishes-12-police-staff-in-sunlight-sat-d6s5l92</guid>
            <pubDate>Tue, 07 Apr 2026 17:48:00 +0530</pubDate>
            <description><![CDATA[ಚಿತ್ರದುರ್ಗದ ಚಿಕ್ಕಜಾಜೂರು ಠಾಣೆಯ ಪಿಎಸ್&zwnj;ಐ ನೇತ್ರಾವತಿ, ಕರ್ತವ್ಯ ಲೋಪದ ಆರೋಪದ ಮೇಲೆ 12 ಸಿಬ್ಬಂದಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದಾರೆ. ಈ ಅಮಾನವೀಯ ಶಿಕ್ಷೆಯಿಂದಾಗಿ ಕೆಲ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಎಸ್ಪಿ ತನಿಖೆಗೆ ಆದೇಶಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knkxgcknj27d34qbq55brsme,imgname-chitradurga-police-news--1--1775563715189.jpg" type="image/jpeg" height="390" width="690"/>
            <content:encoded><![CDATA[ಚಿತ್ರದುರ್ಗದ ಚಿಕ್ಕಜಾಜೂರು ಠಾಣೆಯ ಪಿಎಸ್&zwnj;ಐ ನೇತ್ರಾವತಿ, ಕರ್ತವ್ಯ ಲೋಪದ ಆರೋಪದ ಮೇಲೆ 12 ಸಿಬ್ಬಂದಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದಾರೆ. ಈ ಅಮಾನವೀಯ ಶಿಕ್ಷೆಯಿಂದಾಗಿ ಕೆಲ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಎಸ್ಪಿ ತನಿಖೆಗೆ ಆದೇಶಿಸಿದ್ದಾರೆ.&lt;img&gt;&lt;p&gt;&lt;strong&gt;ಚಿತ್ರದುರ್ಗ (ಏ.07): ಶಿ&lt;/strong&gt;ಸ್ತಿನ ಇಲಾಖೆ ಎಂದೇ ಕರೆಯಲ್ಪಡುವ ಪೊಲೀಸ್ ಇಲಾಖೆಯಲ್ಲಿ ಮೇಲಾಧಿಕಾರಿಗಳು ಕೆಳಹಂತದ ಸಿಬ್ಬಂದಿಗೆ ಶಿಕ್ಷೆ ನೀಡುವುದು ಹೊಸದೇನಲ್ಲ. ಆದರೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪಿಎಸ್&zwnj;ಐ ನೇತ್ರಾವತಿ ಅವರು ತಮ್ಮದೇ ಸಿಬ್ಬಂದಿಗೆ ನೀಡಿರುವ ಶಿಕ್ಷೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕರ್ತವ್ಯ ಲೋಪದ ಹೆಸರಿನಲ್ಲಿ ಬರೋಬ್ಬರಿ 12 ಮಂದಿ ಸಿಬ್ಬಂದಿಯನ್ನು ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಲಾಗಿದ್ದು, ಇಲಾಖೆಯ ಒಳಗಿನ ಶಿಸ್ತು ಮತ್ತು ಮಾನವೀಯತೆಯ ಬಗ್ಗೆ ಚರ್ಚೆಗಳು ಆರಂಭವಾಗಿವೆ.&lt;/p&gt;&lt;img&gt;&lt;p&gt;ಚಿಕ್ಕಜಾಜೂರು ಠಾಣೆಯ ಪಿಎಸ್&zwnj;ಐ ನೇತ್ರಾವತಿ ಅವರು ತಮ್ಮ ಠಾಣೆಯ ಎಎಸ್&zwnj;ಐ (ASI) ಸೇರಿದಂತೆ ಒಟ್ಟು 12 ಮಂದಿ ಸಿಬ್ಬಂದಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಅಂದರೆ ಸೂರ್ಯನ ಶಾಖ ಅತಿ ಹೆಚ್ಚಿರುವ ಸಮಯದಲ್ಲಿ, ಸಿಬ್ಬಂದಿಯನ್ನು ಠಾಣೆಯ ಹೊರಗೆ ನಿಲ್ಲಿಸಲಾಗಿದೆ. ಕೇವಲ ನಿಲ್ಲಿಸುವುದು ಮಾತ್ರವಲ್ಲದೆ, ಹೆಗಲ ಮೇಲೆ ಭಾರವಾದ ಬಂದೂಕುಗಳನ್ನು (Rifles) ಹೊತ್ತು ನಿಲ್ಲುವಂತೆ ಆದೇಶಿಸಿದ್ದರು. ಸುಮಾರು ಮೂರು ಗಂಟೆಗಳ ಕಾಲ ಅಗ್ನಿ ಉಗುಳುವ ಬಿಸಿಲಿನಲ್ಲಿ ಸಿಬ್ಬಂದಿ ಈ ಶಿಕ್ಷೆಯನ್ನು ಅನುಭವಿಸಿದ್ದಾರೆ.&lt;/p&gt;&lt;img&gt;&lt;p&gt;ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಸ್ತುತ ತಾಪಮಾನ ಏರಿಕೆಯಾಗಿದ್ದು, ಜನಸಾಮಾನ್ಯರೇ ಹೊರಬರಲು ಭಯಪಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ 3 ಗಂಟೆಗಳ ಕಾಲ ಬಂದೂಕು ಹೊತ್ತು ಬಿಸಿಲಿನಲ್ಲಿ ನಿಂತ ಪರಿಣಾಮ, ಶಿಕ್ಷೆ ಅನುಭವಿಸಿದ ಸಿಬ್ಬಂದಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವರು ತೀವ್ರ ಸುಸ್ತಿನಿಂದ ಬಳಲಿದರೆ, ಇನ್ನು ಕೆಲವರಿಗೆ ತಲೆಸುತ್ತು ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಕೆಲ ಸಿಬ್ಬಂದಿಯನ್ನು ತಕ್ಷಣವೇ ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆಯಿಂದ ಪೊಲೀಸ್ ಸಿಬ್ಬಂದಿ ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಪಿಎಸ್&zwnj;ಐ ಅವರ ಈ ನಡೆ 'ದರ್ಪ'ದ ಪರಮಾವಧಿ ಎಂದು ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದರೆ ಇಲಾಖಾ ತನಿಖೆ ನಡೆಸಿ ನೋಟಿಸ್ ನೀಡಬಹುದಿತ್ತು ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳಬಹುದಿತ್ತು. ಅದನ್ನು ಬಿಟ್ಟು ಇಂತಹ ಅಮಾನವೀಯ ಶಿಕ್ಷೆ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಡಿವೈಎಸ್ಪಿ ಗಿರೀಶ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮುಖ್ಯ ನಿಜ, ಆದರೆ ಶಿಕ್ಷೆಯ ಹೆಸರಿನಲ್ಲಿ ಸಿಬ್ಬಂದಿಯ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪಿಎಸ್&zwnj;ಐ ನೇತ್ರಾವತಿ ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗುತ್ತಿದ್ದು, ತನಿಖಾ ವರದಿಯ ನಂತರ ಅವರ ವಿರುದ್ಧ ಯಾವ ರೀತಿಯ ಕ್ರಮ ಜರುಗಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆಯಾಗಿ, ರಕ್ಷಣೆ ನೀಡಬೇಕಾದ ಪೊಲೀಸರೇ ತಮ್ಮ ಅಧಿಕಾರಿಯ ದರ್ಪಕ್ಕೆ ಬಲಿಯಾಗಿ ಆಸ್ಪತ್ರೆ ಸೇರಿರುವುದು ಇಲಾಖೆಗೆ ಮುಜುಗರ ತಂದಿಟ್ಟಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-police-chitradurga-chikkajajuru-psi-netravathi-punishes-12-police-staff-in-sunlight-sat-d6s5l92"/>
        </item>
        <item>
            <title><![CDATA[ಬಾಡಿಬಿಲ್ಡಿಂಗ್ ಚಾಂಪಿಯನ್‌ಗಳ ಪೊಲೀಸ್ ನೇಮಕಾತಿ: ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಖ್ಯಾತ ಬಾಡಿಬಿಲ್ಡರ್‌ಗೆ ನಿರಾಸೆ]]></title>
            <link>https://kannada.asianetnews.com/state-government-jobs/bodybuilder-chitharesh-nadesan-police-appointment-flat-foot-medical-issue-san/articleshow-ebkiqqo</link>
            <guid isPermaLink="true">https://kannada.asianetnews.com/state-government-jobs/bodybuilder-chitharesh-nadesan-police-appointment-flat-foot-medical-issue-san/articleshow-ebkiqqo</guid>
            <pubDate>Sat, 11 Apr 2026 13:16:50 +0530</pubDate>
            <description><![CDATA[&lt;p&gt;ಕೇರಳ ಸರ್ಕಾರದ ವಿವಾದಾತ್ಮಕ ನಿರ್ಧಾರದಂತೆ ಪೊಲೀಸ್ ಇನ್ಸ್&zwnj;ಪೆಕ್ಟರ್ ಹುದ್ದೆಗೆ ನೇಮಕಗೊಂಡಿದ್ದ ಬಾಡಿಬಿಲ್ಡರ್ ಚಿತ್ತರೇಶ್ ನಟೇಶನ್ ಅವರಿಗೆ ವೈದ್ಯಕೀಯ ಪರೀಕ್ಷೆಯಲ್ಲಿ 'ಫ್ಲಾಟ್ ಫೂಟ್' ಇರುವುದು ಪತ್ತೆಯಾಗಿದೆ. ಈ ಕಾರಣದಿಂದ ಅವರ ನೇಮಕಾತಿ ತಡೆಹಿಡಿಯಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knxcaxn43z8nfv0b62qqhprk,imgname-fotojet--60--1775881254563.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಚ್ಚಿ (ಏ.11): &lt;/strong&gt;ಬಾಡಿ ಬಿಲ್ಡಿಂಗ್&zwnj; ಚಾಂಪಿಯನ್&zwnj;ಷಿಪ್&zwnj;ನ ವಿಜೇತರನ್ನು ನೇರವಾಗಿ ಪೊಲೀಸ್ ಇನ್ಸ್&zwnj;ಪೆಕ್ಟರ್&zwnj;ಗಳಾಗಿ ನೇಮಿಸುವ ಸರ್ಕಾರದ ನಿರ್ಧಾರದ ಬೆನ್ನಲ್ಲೇ, ಕೇರಳದ ಖ್ಯಾತ ಬಾಡಿಬಿಲ್ಡರ್ ಚಿತ್ತರೇಶ್ ನಟೇಶನ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಅವರಿಗೆ 'ಫ್ಲಾಟ್ ಫೂಟ್' (Flat Foot) ಇರುವುದು ಪತ್ತೆಯಾಗಿದೆ. ಈ ಕಾರಣದಿಂದಾಗಿ ಅವರನ್ನು ಪೊಲೀಸ್ ಸೇವೆಗೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ವರದಿ ಬಂದಿದೆ. ಮತ್ತೊಂದೆಡೆ, ಶಿನು ಚೊವ್ವಾ ಅವರು ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.&lt;/p&gt;&lt;p&gt;ಒಲಿಂಪಿಕ್ಸ್ ಅಥವಾ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಧಿಕೃತ ಕ್ರೀಡೆಯಲ್ಲದ ಪುರುಷರ ಬಾಡಿ ಬಿಲ್ಡಿಂಗ್&zwnj; ಸ್ಪರ್ಧೆಯ ವಿಜೇತರನ್ನು ನೇರವಾಗಿ ಸಶಸ್ತ್ರ ಪೊಲೀಸ್ ಇನ್ಸ್&zwnj;ಪೆಕ್ಟರ್&zwnj;ಗಳಾಗಿ ನೇಮಿಸುವ ಸಚಿವ ಸಂಪುಟದ ತೀರ್ಮಾನವು ಮೊದಲೇ ವಿವಾದಕ್ಕೆ ಕಾರಣವಾಗಿತ್ತು. ಕಾಯ್ದೆಗಳಿಗೆ ತಿದ್ದುಪಡಿ ತಂದು, 'ಸೂಪರ್ ನ್ಯೂಮರರಿ' ಹುದ್ದೆಗಳನ್ನು ಸೃಷ್ಟಿಸಿ ಇವರಿಗೆ ಕೆಲಸ ನೀಡಲಾಗಿತ್ತು. ದೈಹಿಕ ಕ್ಷಮತೆ ಪರೀಕ್ಷೆಯಲ್ಲಿ ವಿಫಲರಾದವರನ್ನು ನೇರವಾಗಿ ಇನ್ಸ್&zwnj;ಪೆಕ್ಟರ್ ಹುದ್ದೆಗೆ ನೇಮಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.&lt;/p&gt;&lt;h2&gt;&lt;strong&gt;ನಿಯಮಗಳ ಉಲ್ಲಂಘನೆ ಮತ್ತು ಕ್ರೀಡಾಪಟುಗಳ ಆಕ್ರೋಶ&lt;/strong&gt;&lt;/h2&gt;&lt;p&gt;ಸಾಮಾನ್ಯವಾಗಿ ಒಲಿಂಪಿಕ್ಸ್ ಅಥವಾ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗುರುತಿಸಲ್ಪಟ್ಟ ಕ್ರೀಡೆಗಳಲ್ಲಿ ಪದಕ ಗೆದ್ದವರಿಗೆ ಮಾತ್ರ ಸ್ಪೋರ್ಟ್ಸ್ ಕೋಟಾದಡಿ ಪೊಲೀಸ್ ನೇಮಕಾತಿ ನೀಡಲಾಗುತ್ತದೆ. ಆದರೆ, ಈ ನಿಯಮವನ್ನು ಬದಿಗಿಟ್ಟು ಅಂತರಾಷ್ಟ್ರೀಯ ಬಾಡಿಬಿಲ್ಡಿಂಗ್ ಚಾಂಪಿಯನ್ ಚಿತ್ತರೇಶ್ ನಟೇಶನ್ ಮತ್ತು ವಿಶ್ವ ಪುರುಷ ಬಾಡಿ ಬಿಲ್ಡಿಂಗ್&zwnj; ಸ್ಪರ್ಧೆಯ ಬೆಳ್ಳಿ ಪದಕ ವಿಜೇತ ಶಿನು ಚೊವ್ವಾ ಅವರಿಗೆ ನೇಮಕಾತಿ ನೀಡಲಾಗಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ನೇಮಕಾತಿಗಾಗಿ ಕಾಯುತ್ತಿರುವಾಗ ಈ ನಿರ್ಧಾರ ಕೈಗೊಳ್ಳಲಾಗಿದೆ.&lt;/p&gt;&lt;p&gt;ಇತಿಹಾಸದಲ್ಲೇ ಮೊದಲ ಬಾರಿಗೆ ಬಾಡಿ ಬಿಲಗ್ಡಿಂಗ್&zwnj; ಸ್ಪರ್ಧೆಯ ವಿಜೇತರನ್ನು ನೇರವಾಗಿ ಗೆಜೆಟೆಡ್ (ಗೆಜೆಟೆಡ್) ಹುದ್ದೆಗೆ ನೇಮಿಸಲಾಗುತ್ತಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತ ಎಂ. ಶ್ರೀಶಂಕರ್ ಅವರನ್ನು ಸಶಸ್ತ್ರ ಇನ್ಸ್&zwnj;ಪೆಕ್ಟರ್ ಹುದ್ದೆಗೆ ನೇಮಿಸಬೇಕೆಂಬ ಪೊಲೀಸ್ ಮುಖ್ಯಸ್ಥರ ಶಿಫಾರಸನ್ನು, &quot;ಗೆಜೆಟೆಡ್ ಹುದ್ದೆಗೆ ನೇರ ನೇಮಕಾತಿ ಸಾಧ್ಯವಿಲ್ಲ&quot; ಎಂದು ಹೇಳಿ ಸರ್ಕಾರ ಈ ಹಿಂದೆ ತಿರಸ್ಕರಿಸಿತ್ತು. ಆದರೆ ಈಗ ಬಾಡಿಬಿಲ್ಡರ್&zwnj;ಗಳಿಗೆ ಅದೇ ಹುದ್ದೆ ನೀಡಿರುವುದು ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತಿದೆ.&lt;/p&gt;&lt;p&gt;ಚಿತ್ತರೇಶ್ ಮತ್ತು ಶಿನು ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆ ಹಾಗೂ ಅವರ ಕುಟುಂಬದ ಹಿನ್ನೆಲೆಯನ್ನು ಪರಿಗಣಿಸಿ ಈ ನೇಮಕಾತಿ ನೀಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಆದರೆ ಈಗ ವೈದ್ಯಕೀಯ ವರದಿಯ ಕಾರಣದಿಂದ ಚಿತ್ತರೇಶ್ ಅವರ ನೇಮಕಾತಿ ತಡೆಹಿಡಿಯಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state-government-jobs</category>
            <dc:creator>Santosh Naik</dc:creator>
            <atom:link href="https://kannada.asianetnews.com/state-government-jobs/bodybuilder-chitharesh-nadesan-police-appointment-flat-foot-medical-issue-san/articleshow-ebkiqqo"/>
        </item>
        <item>
            <title><![CDATA[ಕರ್ನಾಟಕ ಹೈಕೋರ್ಟ್‌ನಲ್ಲಿ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿ, 1.42 ಲಕ್ಷದವರೆಗೆ ವೇತನ!]]></title>
            <link>https://kannada.asianetnews.com/jobs/karnataka-high-court-recruitment-2026-apply-online-for-70-assistant-court-secretary-posts-gdp/articleshow-f2ugau7</link>
            <guid isPermaLink="true">https://kannada.asianetnews.com/jobs/karnataka-high-court-recruitment-2026-apply-online-for-70-assistant-court-secretary-posts-gdp/articleshow-f2ugau7</guid>
            <pubDate>Thu, 26 Mar 2026 15:23:40 +0530</pubDate>
            <description><![CDATA[ಕರ್ನಾಟಕ ಉಚ್ಚ ನ್ಯಾಯಾಲಯವು ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 70 ಹುದ್ದೆಗಳು ಲಭ್ಯವಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವೀಧರರು ಆನ್&zwnj;ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01h2ye3q7thgpepzadhtx7kjcc,imgname-Karnataka-High-Court-1686796098810.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಒದಗಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯ (High Court of Karnataka) ಸಹಾಯಕ ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತರಾಗಿರುವ ಪದವಿ ಹಾಗೂ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಆನ್&zwnj;ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.&lt;/p&gt;&lt;h2&gt;ಹುದ್ದೆಗಳ ವಿವರ&lt;/h2&gt;&lt;p&gt;ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 70 ಹುದ್ದೆಗಳು ಲಭ್ಯವಿದ್ದು, ಅವುಗಳನ್ನು ಕೆಳಗಿನಂತೆ ವಿಂಗಡಿಸಲಾಗಿದೆ:&lt;/p&gt;&lt;p&gt;ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (RPC) &ndash; 59 ಹುದ್ದೆಗಳು&lt;/p&gt;&lt;p&gt;ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (KKR) &ndash; 11 ಹುದ್ದೆಗಳು&lt;/p&gt;&lt;p&gt;ಉದ್ಯೋಗ ಸ್ಥಳ: ಬೆಂಗಳೂರು&lt;/p&gt;&lt;p&gt;ಅಪ್ಲಿಕೇಶನ್ ಮೋಡ್: ಆನ್&zwnj;ಲೈನ್&lt;/p&gt;&lt;h2&gt;ವೇತನ ವಿವರ&lt;/h2&gt;&lt;p&gt;ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹44,900 ರಿಂದ ₹1,42,400ರವರೆಗೆ ವೇತನ ನೀಡಲಾಗುತ್ತದೆ. ಜೊತೆಗೆ ಸರ್ಕಾರದ ನಿಯಮಾನುಸಾರ ಇತರ ಭತ್ಯೆಗಳು ಕೂಡ ದೊರೆಯುತ್ತವೆ.&lt;/p&gt;&lt;h2&gt;ವಯೋಮಿತಿ&lt;/h2&gt;&lt;p&gt;ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.&lt;/p&gt;&lt;p&gt;ಸರ್ಕಾರದ ನಿಯಮಾನುಸಾರ ವಿವಿಧ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.&lt;/p&gt;&lt;h2&gt;ಶೈಕ್ಷಣಿಕ ಅರ್ಹತೆ&lt;/h2&gt;&lt;p&gt;ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.&lt;/p&gt;&lt;h2&gt;ಅರ್ಜಿಯ ಶುಲ್ಕ&lt;/h2&gt;&lt;h3&gt;ಪೂರ್ವಭಾವಿ ಪರೀಕ್ಷೆ ಶುಲ್ಕ:&lt;/h3&gt;&lt;p&gt;SC / ST / ಪ್ರವರ್ಗ-I / PwBD ಅಭ್ಯರ್ಥಿಗಳು &ndash; ₹250&lt;/p&gt;&lt;p&gt;ಸಾಮಾನ್ಯ / ಪ್ರವರ್ಗ-IIA / IIB / IIIA / IIIB ಅಭ್ಯರ್ಥಿಗಳು &ndash; ₹500&lt;/p&gt;&lt;h3&gt;ಮುಖ್ಯ ಪರೀಕ್ಷೆ ಶುಲ್ಕ:&lt;/h3&gt;&lt;p&gt;SC / ST / ಪ್ರವರ್ಗ-I / PwBD ಅಭ್ಯರ್ಥಿಗಳು &ndash; ₹750&lt;/p&gt;&lt;p&gt;ಸಾಮಾನ್ಯ / ಪ್ರವರ್ಗ-IIA / IIB / IIIA / IIIB ಅಭ್ಯರ್ಥಿಗಳು &ndash; ₹1500&lt;/p&gt;&lt;h2&gt;ಆಯ್ಕೆ ಪ್ರಕ್ರಿಯೆ&lt;/h2&gt;&lt;p&gt;ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:&lt;/p&gt;&lt;ul&gt; &lt;li&gt;ಪೂರ್ವಭಾವಿ ಪರೀಕ್ಷೆ&lt;/li&gt; &lt;li&gt;ಮುಖ್ಯ ಲಿಖಿತ ಪರೀಕ್ಷೆ&lt;/li&gt; &lt;li&gt;ಸ್ಟೆನೋಗ್ರಫಿ ಪರೀಕ್ಷೆ&lt;/li&gt; &lt;li&gt;ಸಂದರ್ಶನ&lt;/li&gt;&lt;/ul&gt;&lt;h2&gt;ಅರ್ಜಿ ಸಲ್ಲಿಸುವ ವಿಧಾನ&lt;/h2&gt;&lt;p&gt;ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು:&lt;/p&gt;&lt;p&gt;ಅಧಿಕೃತ ವೆಬ್&zwnj;ಸೈಟ್ karnatakajudiciary.kar.nic.in ಗೆ ಭೇಟಿ ನೀಡಿ&lt;/p&gt;&lt;p&gt;ನೇಮಕಾತಿ ಅಧಿಸೂಚನೆಯನ್ನು ಡೌನ್&zwnj;ಲೋಡ್ ಮಾಡಿ ಮತ್ತು ಗಮನದಿಂದ ಓದಿ&lt;/p&gt;&lt;p&gt;ಆನ್&zwnj;ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ&lt;/p&gt;&lt;p&gt;ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ&lt;/p&gt;&lt;p&gt;ಅನ್ವಯಿಸಿದರೆ ಅರ್ಜಿ ಶುಲ್ಕ ಪಾವತಿಸಿ&lt;/p&gt;&lt;p&gt;ಫೋಟೋ ಮತ್ತು ಸಹಿಯನ್ನು ಅಪ್&zwnj;ಲೋಡ್ ಮಾಡಿ&lt;/p&gt;&lt;p&gt;ಸಲ್ಲಿಸುವ ಮೊದಲು ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ&lt;/p&gt;&lt;p&gt;ಅಂತಿಮವಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ&lt;/p&gt;&lt;h2&gt;ಪ್ರಮುಖ ದಿನಾಂಕಗಳು&lt;/h2&gt;&lt;p&gt;ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 16 ಮಾರ್ಚ್ 2026&lt;/p&gt;&lt;p&gt;ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ಕೊನೆಯ ದಿನಾಂಕ: 15 ಏಪ್ರಿಲ್ 2026&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/jobs/karnataka-high-court-recruitment-2026-apply-online-for-70-assistant-court-secretary-posts-gdp/articleshow-f2ugau7"/>
        </item>
        <item>
            <title><![CDATA[ತುಮಕೂರು: ಸರಕಾರಿ ನೌಕರಿ ನಕಲಿ ಆದೇಶ ಪತ್ರ ತಯಾರಿಕಾ ಜಾಲ ಪತ್ತೆ, ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ಆಪ್ತನ ಕೃತ್ಯ!]]></title>
            <link>https://kannada.asianetnews.com/state/tumakuru-job-scam-busted-fake-forest-department-appointment-letters-used-to-cheat-job-seekers-of-lakhs-gdp/articleshow-fgosdpa</link>
            <guid isPermaLink="true">https://kannada.asianetnews.com/state/tumakuru-job-scam-busted-fake-forest-department-appointment-letters-used-to-cheat-job-seekers-of-lakhs-gdp/articleshow-fgosdpa</guid>
            <pubDate>Fri, 27 Mar 2026 11:26:34 +0530</pubDate>
            <description><![CDATA[ತುಮಕೂರಿನಲ್ಲಿ ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ, ಅರಣ್ಯ ಇಲಾಖೆಯ ನಕಲಿ ನೇಮಕಾತಿ ಆದೇಶ ನೀಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಜಾಲವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ರಾಜಕಾರಣಿಯೊಬ್ಬರ ಆಪ್ತನ ತೋಟದ ಶೆಡ್&zwnj;ನಲ್ಲಿ ಈ ವಂಚನೆ ನಡೆಯುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmpxre3pp3kx090kdy5p7fbx,imgname-tumakuru-job-scam-1774590900342.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು&lt;/strong&gt; ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ ನಕಲಿ ನೇಮಕಾತಿ ಆದೇಶ ಪತ್ರಗಳನ್ನು ತಯಾರಿಸಿ ವಂಚನೆ ಮಾಡುತ್ತಿದ್ದ ದೊಡ್ಡ ಜಾಲವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನಕಲಿ ನೇಮಕಾತಿ ಆದೇಶಗಳನ್ನು ನೀಡಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.&lt;/p&gt;&lt;p&gt;ಈ ವಂಚನೆ ಜಾಲವು ತುಮಕೂರು ತಾಲೂಕಿನ ವಡ್ಡರಹಳ್ಳಿ ಗ್ರಾಮದ ಸಮೀಪದ ತೋಟದ ಶೆಡ್&zwnj;ನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಶೆಡ್&zwnj; ತುಮಕೂರು ಮೂಲ್ ಒಬ್ಬ ಪ್ರಭಾವಿ ರಾಜಕಾರಣಿಯ ಪರಮಾಪ್ತನಾದ ವಾಲೆ ಚಂದ್ರು ಒಡೆತನದಲ್ಲಿದೆ ಎನ್ನಲಾಗಿದ್ದು, ಅವನೇ ಈ ಜಾಲದ ಪ್ರಮುಖ ಸೂತ್ರಧಾರನಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ನಕಲಿ ನೇಮಕಾತಿ ಆದೇಶಗಳ ಮೂಲಕ ವಂಚನೆ&lt;/h2&gt;&lt;p&gt;ವಂಚಕರು ಪರಿಸರ ಮತ್ತು ಅರಣ್ಯ ಇಲಾಖೆಯ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಪತ್ರಗಳನ್ನು ಸೃಷ್ಟಿಸಿ, ಅದರಲ್ಲಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ನೇಗಿ ಅವರ ನಕಲಿ ಸಹಿಯನ್ನು ಬಳಸಿಕೊಂಡಿದ್ದರು. ಈ ನಕಲಿ ದಾಖಲೆಗಳನ್ನು ನಂಬಿದ ನೂರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ವಂಚನೆಗೆ ಒಳಗಾಗಿರುವ ಸಾಧ್ಯತೆ ಇದೆ.&lt;/p&gt;&lt;p&gt;ಪ್ರತಿ ಅಭ್ಯರ್ಥಿಯಿಂದ ₹3 ಲಕ್ಷದಿಂದ ₹5 ಲಕ್ಷವರೆಗೆ ಹಣ ವಸೂಲಿ ಮಾಡಲಾಗಿದ್ದು, ತರಬೇತಿ ನೀಡುವುದಾಗಿ ನಂಬಿಸಿ ಅವರನ್ನು ತೋಟದ ಶೆಡ್&zwnj;ಗೆ ಕರೆಸಿಕೊಳ್ಳಲಾಗುತ್ತಿತ್ತು. ಅಲ್ಲದೇ, ತರಬೇತಿ ಮುಗಿದ ಬಳಿಕ ಇನ್ನಷ್ಟು ಹಣ ಪಡೆಯುವ ಉದ್ದೇಶದಿಂದ ಮತ್ತಷ್ಟು ನಾಟಕವನ್ನೂ ರೂಪಿಸಲಾಗಿತ್ತು.&lt;/p&gt;&lt;h2&gt;ತರಬೇತಿ ಹೆಸರಿನಲ್ಲಿ ನಾಟಕ&lt;/h2&gt;&lt;p&gt;ವಂಚಕರು ಉದ್ಯೋಗಾಕಾಂಕ್ಷಿಗಳಿಗೆ ಅನುಮಾನ ಬಾರದಂತೆ ವಿವಿಧ ಕಡೆಗಳಲ್ಲಿ ತರಬೇತಿ ನೀಡುತ್ತಿರುವಂತೆ ತೋರಿಸುತ್ತಿದ್ದರು. ದೇವರಾಯದುರ್ಗ ಬೆಟ್ಟ, ಚಿನಗಾ ಬೆಟ್ಟ ಸೇರಿದಂತೆ ಹಲವಾರು ಸ್ಥಳಗಳಲ್ಲಿ ತರಬೇತಿ ಶಿಬಿರಗಳನ್ನು ನಡೆಸಲಾಗುತ್ತಿತ್ತು. ಕೆಲವೊಮ್ಮೆ ನಿವೃತ್ತ ಅರಣ್ಯಾಧಿಕಾರಿಗಳನ್ನು ಕೂಡ ಕರೆಸಿ ತರಬೇತಿ ನೀಡುತ್ತಿರುವಂತೆ ನಾಟಕ ಮಾಡಲಾಗುತ್ತಿತ್ತು.&lt;/p&gt;&lt;p&gt;ಒಂದು ವೇಳೆ ಸುಮಾರು 15 ಮಂದಿ ಅಭ್ಯರ್ಥಿಗಳನ್ನು ಶೆಡ್&zwnj;ಗೆ ಕರೆತಂದು ತರಬೇತಿ ನೀಡುತ್ತಿರುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ವೇಳೆ ಸ್ಥಳದಲ್ಲಿದ್ದ ಯುವಕರನ್ನು ರಕ್ಷಿಸಲಾಗಿದ್ದು, ವಂಚಕರ ತಂಡ ಸ್ಥಳದಿಂದ ಪರಾರಿಯಾಗಿದೆ.&lt;/p&gt;&lt;h2&gt;ಪೊಲೀಸ್ ಕ್ರಮ ಮತ್ತು ತನಿಖೆ&lt;/h2&gt;&lt;p&gt;ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ವಲಯ ಅಧಿಕಾರಿ ನಮಿತಾ ಅವರು ಎಫ್&zwnj;ಐಆರ್ ದಾಖಲಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ವಂಚಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.&lt;/p&gt;&lt;p&gt;ಆದರೆ, ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಾಲೆ ಚಂದ್ರು ಹೆಸರು ಎಫ್&zwnj;ಐಆರ್&zwnj;ನಲ್ಲಿ ಇಲ್ಲದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಪ್ರಭಾವಿ ವ್ಯಕ್ತಿಗಳಿಗೆ ಪೊಲೀಸರ ಶ್ರೀರಕ್ಷೆ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.&lt;/p&gt;&lt;h2&gt;ಡಿಎಫ್ಓ ಸ್ಪಷ್ಟನೆ&lt;/h2&gt;&lt;p&gt;ಈ ಕುರಿತು ತುಮಕೂರು ಡಿಎಫ್ಓ ಶಶಿಧರ್ ಪ್ರತಿಕ್ರಿಯೆ ನೀಡಿದ್ದು, &ldquo;ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡವನ್ನು ರಚಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಅಲ್ಲಿ ಸುಮಾರು 15 ಮಂದಿ ಅಭ್ಯರ್ಥಿಗಳು ಇದ್ದರು. ವಿಚಾರಣೆ ವೇಳೆ &lsquo;ನೇಚರ್ ಕ್ಯಾಂಪ್&rsquo; ಸಂಬಂಧಿತ ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಅವರ ಬಳಿ ನಕಲಿ ಪ್ರಮಾಣಪತ್ರಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗೆ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ನಮ್ಮ ವಲಯ ಅಧಿಕಾರಿ ಎಫ್&zwnj;ಐಆರ್ ದಾಖಲಿಸಿದ್ದು, ತನಿಖೆ ಮುಂದುವರಿದಿದೆ&rdquo; ಎಂದು ಹೇಳಿದ್ದಾರೆ.&lt;/p&gt;&lt;h2&gt;ಉದ್ಯೋಗಾಕಾಂಕ್ಷಿಗಳ ಸ್ಥಿತಿ ದಯನೀಯ&lt;/h2&gt;&lt;p&gt;ಈ ವಂಚನೆಗೆ ಒಳಗಾದ ಅನೇಕ ಯುವಕರು ತಮ್ಮ ಹಣ ಕಳೆದುಕೊಂಡಷ್ಟೇ ಅಲ್ಲದೆ, ಉದ್ಯೋಗದ ಆಶೆಯೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದರಿಂದ ಇದೀಗ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ.&lt;/p&gt;&lt;p&gt;ಒಟ್ಟಾರೆ, ಪ್ರಭಾವಿ ವ್ಯಕ್ತಿಗಳ ನೆರಳಿನಲ್ಲಿ ನಡೆಯುತ್ತಿದ್ದ ಈ ವಂಚನೆ ಜಾಲ ರಾಜ್ಯದ ವಿವಿಧ ಭಾಗಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬರುತ್ತಿದೆ.&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/state/tumakuru-job-scam-busted-fake-forest-department-appointment-letters-used-to-cheat-job-seekers-of-lakhs-gdp/articleshow-fgosdpa"/>
        </item>
        <item>
            <title><![CDATA[ದಕ್ಷಿಣ ಮಧ್ಯ ರೈಲ್ವೆ ಭರ್ಜರಿ ನೇಮಕಾತಿ, ಬರೋಬ್ಬರಿ 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!]]></title>
            <link>https://kannada.asianetnews.com/jobs/south-central-railway-recruitment-2026-apply-for-2801-apprentice-posts-gdp/articleshow-h6pymyb</link>
            <guid isPermaLink="true">https://kannada.asianetnews.com/jobs/south-central-railway-recruitment-2026-apply-for-2801-apprentice-posts-gdp/articleshow-h6pymyb</guid>
            <pubDate>Fri, 27 Mar 2026 15:36:20 +0530</pubDate>
            <description><![CDATA[ದಕ್ಷಿಣ ಮಧ್ಯ ರೈಲ್ವೆಯು 2801 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಸ್&zwnj;ಎಸ್&zwnj;ಎಲ್&zwnj;ಸಿ, ಪಿಯುಸಿ, ಮತ್ತು ಐಟಿಐ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್&zwnj;ಸೈಟ್ ಮೂಲಕ ಆನ್&zwnj;ಲೈನ್&zwnj;ನಲ್ಲಿ ಅರ್ಜಿ ಸಲ್ಲಿಸಬಹುದು.]]></description>
            <media:content url="https://static.asianetnews.com/images/w-1280,h-720,format-jpg,imgid-01jjem60gc4nhmw7x24089v0bd,imgname-RRB-NTPC-1737805201932.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಉದ್ಯೋಗಾಕಾಂಕ್ಷಿಗಳಿಗೆ ದಕ್ಷಿಣ ಮಧ್ಯ ರೈಲ್ವೆ (South Central Railway) ಮಹತ್ವದ ಅವಕಾಶವೊಂದನ್ನು ನೀಡಿದ್ದು, 2801 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಎಸ್&zwnj;ಎಸ್&zwnj;ಎಲ್&zwnj;ಸಿ, ಪಿಯುಸಿ ಹಾಗೂ ಐಟಿಐ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಅಧಿಕೃತ ವೆಬ್&zwnj;ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದ್ದು, ವಿವಿಧ ತಾಂತ್ರಿಕ ವಿಭಾಗಗಳಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆ ವಿಧಾನ, ಅರ್ಹತೆ, ವಯೋಮಿತಿ ಹಾಗೂ ಶುಲ್ಕದ ವಿವರಗಳನ್ನು ಕೆಳಗಿನಂತೆ ನೀಡಲಾಗಿದೆ.&lt;/p&gt;&lt;h2&gt;ಹುದ್ದೆಗಳ ವಿವರ (ಒಟ್ಟು 2801)&lt;/h2&gt;&lt;p&gt;ದಕ್ಷಿಣ ಮಧ್ಯ ರೈಲ್ವೆ ವಿವಿಧ ವಿಭಾಗಗಳಲ್ಲಿ ಕೆಳಕಂಡಂತೆ ಹುದ್ದೆಗಳನ್ನು ಪ್ರಕಟಿಸಿದೆ:&lt;/p&gt;&lt;p&gt;ಎಸಿ ಮೆಕ್ಯಾನಿಕ್ &ndash; 251&lt;/p&gt;&lt;p&gt;ಬಡಗಿ (Carpenter) &ndash; 22&lt;/p&gt;&lt;p&gt;ಕೋಪಾ (COPA) &ndash; 181&lt;/p&gt;&lt;p&gt;ಡೀಸೆಲ್ ಮೆಕ್ಯಾನಿಕ್ &ndash; 105&lt;/p&gt;&lt;p&gt;ಎಲೆಕ್ಟ್ರಿಷಿಯನ್ &ndash; 1258&lt;/p&gt;&lt;p&gt;ಎಲೆಕ್ಟ್ರಾನಿಕ್ ಮೆಕ್ಯಾನಿಕ್ &ndash; 88&lt;/p&gt;&lt;p&gt;ಫಿಟ್ಟರ್ &ndash; 539&lt;/p&gt;&lt;p&gt;ಕೈಗಾರಿಕಾ ಎಲೆಕ್ಟ್ರಾನಿಕ್ಸ್ &ndash; 33&lt;/p&gt;&lt;p&gt;ಯಂತ್ರಶಿಲ್ಪಿ (Machinist) &ndash; 54&lt;/p&gt;&lt;p&gt;ಎಂಎಂಟಿಎಂ &ndash; 24&lt;/p&gt;&lt;p&gt;ಮೋಟಾರ್ ಮೆಕ್ಯಾನಿಕ್ &ndash; 12&lt;/p&gt;&lt;p&gt;ವರ್ಣಚಿತ್ರಕಾರ (Painter) &ndash; 32&lt;/p&gt;&lt;p&gt;ವೆಲ್ಡರ್ &ndash; 202&lt;/p&gt;&lt;h2&gt;ಉದ್ಯೋಗ ಸ್ಥಳ&lt;/h2&gt;&lt;p&gt;ಈ ನೇಮಕಾತಿ ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ವಿವಿಧ ರೈಲ್ವೆ ಘಟಕಗಳಲ್ಲಿ ನಿಯೋಜಿಸಲಾಗುತ್ತದೆ.&lt;/p&gt;&lt;h2&gt;ವಯೋಮಿತಿ&lt;/h2&gt;&lt;p&gt;ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 24 ವರ್ಷ ಮೀರಬಾರದು. (ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ)&lt;/p&gt;&lt;h2&gt;ಶೈಕ್ಷಣಿಕ ಅರ್ಹತೆ&lt;/h2&gt;&lt;p&gt;ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ:&lt;/p&gt;&lt;p&gt;10ನೇ ತರಗತಿ (SSLC)&lt;/p&gt;&lt;p&gt;12ನೇ ತರಗತಿ (PUC)&lt;/p&gt;&lt;p&gt;ITI (ಸಂಬಂಧಿತ ಟ್ರೇಡ್&zwnj;ನಲ್ಲಿ) ಪೂರ್ಣಗೊಳಿಸಿರಬೇಕು.&lt;/p&gt;&lt;h2&gt;ಅರ್ಜಿ ಶುಲ್ಕ&lt;/h2&gt;&lt;p&gt;SC/ST/ಮಹಿಳೆ/ಟ್ರಾನ್ಸ್&zwnj;ಜೆಂಡರ್ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ&lt;/p&gt;&lt;p&gt;ಇತರ ಅಭ್ಯರ್ಥಿಗಳಿಗೆ: ₹100&lt;/p&gt;&lt;h2&gt;ಆಯ್ಕೆ ವಿಧಾನ&lt;/h2&gt;&lt;p&gt;ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಆಧಾರದ ಮೇಲೆ ನಡೆಯಲಿದೆ:&lt;/p&gt;&lt;p&gt;ಲಿಖಿತ ಪರೀಕ್ಷೆ&lt;/p&gt;&lt;p&gt;ದಾಖಲೆಗಳ ಪರಿಶೀಲನೆ&lt;/p&gt;&lt;p&gt;ಸಂದರ್ಶನ&lt;/p&gt;&lt;h2&gt;ಅರ್ಜಿ ಸಲ್ಲಿಸುವ ವಿಧಾನ&lt;/h2&gt;&lt;p&gt;ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಹಂತಗಳನ್ನು ಅನುಸರಿಸಬೇಕು:&lt;/p&gt;&lt;p&gt;ಅಧಿಕೃತ ವೆಬ್&zwnj;ಸೈಟ್ scr.indianrailways.gov.in ಗೆ ಭೇಟಿ ನೀಡಿ&lt;/p&gt;&lt;p&gt;ನೇಮಕಾತಿ ಅಧಿಸೂಚನೆಯನ್ನು ಡೌನ್&zwnj;ಲೋಡ್ ಮಾಡಿ ಮತ್ತು ಸಂಪೂರ್ಣವಾಗಿ ಓದಿ&lt;/p&gt;&lt;p&gt;ಆನ್&zwnj;ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ&lt;/p&gt;&lt;p&gt;ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ&lt;/p&gt;&lt;p&gt;ಅನ್ವಯಿಸುವಲ್ಲಿ ಅರ್ಜಿ ಶುಲ್ಕ ಪಾವತಿಸಿ&lt;/p&gt;&lt;p&gt;ಫೋಟೋ ಮತ್ತು ಸಹಿಯನ್ನು ಅಪ್&zwnj;ಲೋಡ್ ಮಾಡಿ&lt;/p&gt;&lt;p&gt;ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ&lt;/p&gt;&lt;p&gt;ಭವಿಷ್ಯಕ್ಕಾಗಿ ಅರ್ಜಿಯ ಪ್ರಿಂಟ್ ತೆಗೆದುಕೊಂಡಿರಲಿ&lt;/p&gt;&lt;h2&gt;ಪ್ರಮುಖ ದಿನಾಂಕಗಳು&lt;/h2&gt;&lt;p&gt;ಅರ್ಜಿ ಪ್ರಾರಂಭ ದಿನಾಂಕ: 12 ಮಾರ್ಚ್ 2026&lt;/p&gt;&lt;p&gt;ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಏಪ್ರಿಲ್ 2026&lt;/p&gt;&lt;p&gt;ದಕ್ಷಿಣ ಮಧ್ಯ ರೈಲ್ವೆಯಲ್ಲಿ ಪ್ರಕಟವಾದ ಈ ಅಪ್ರೆಂಟಿಸ್ ಹುದ್ದೆಗಳು, ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/jobs/south-central-railway-recruitment-2026-apply-for-2801-apprentice-posts-gdp/articleshow-h6pymyb"/>
        </item>
        <item>
            <title><![CDATA[ಕರ್ನಾಟಕದಲ್ಲಿ 56,834 ಹುದ್ದೆಗಳ ನೇಮಕಾತಿಗೆ ಶೀಘ್ರವೇ ಗ್ರೀನ್ ಸಿಗ್ನಲ್: ಗೃಹ ಸಚಿವ ಪರಮೇಶ್ವರ]]></title>
            <link>https://kannada.asianetnews.com/jobs/karnataka-govt-recruitment-notification-soon-for-56834-vacancies-says-home-minister-dr-g-parameshwara-at-kalaburagi-gdp/articleshow-k695hxd</link>
            <guid isPermaLink="true">https://kannada.asianetnews.com/jobs/karnataka-govt-recruitment-notification-soon-for-56834-vacancies-says-home-minister-dr-g-parameshwara-at-kalaburagi-gdp/articleshow-k695hxd</guid>
            <pubDate>Wed, 29 Apr 2026 17:53:28 +0530</pubDate>
            <description><![CDATA[ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,834 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕಲಬುರಗಿಯಲ್ಲಿ ಘೋಷಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 8 ಸಾವಿರ ಪೊಲೀಸ್ ಕಾನ್ಸ್ಟೇಬಲ್ ಮತ್ತು 600 ಪಿಎಸ್&zwnj;ಐ ಹುದ್ದೆಗಳು ಸೇರಿದ್ದು, ಒಳಮೀಸಲಾತಿ ಸಮಸ್ಯೆ ಬಗೆಹರಿದ ನಂತರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqcj0ae0386pfjc2yt5zm1fj,imgname-dr.-g-parameshwara-1777464256960.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಲಬುರಗಿ: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮಹತ್ವದ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿನ ಪೊಲೀಸ್ ಆಯುಕ್ತಾಲಯ ಕಚೇರಿಯಲ್ಲಿ ಕೆಕೆಆರ್&zwnj;ಡಿಬಿ (Kalyana Karnataka Region Development Board) ಅನುದಾನದಡಿ ಖರೀದಿಸಲಾದ ನೂತನ ವಾಹನಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS) ಉದ್ಘಾಟನೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.&lt;/p&gt;&lt;h2&gt;ರಾಜ್ಯದಲ್ಲಿ ಒಟ್ಟು 56,834 ಖಾಲಿ ಹುದ್ದೆ&amp;nbsp;&lt;/h2&gt;&lt;p&gt;ರಾಜ್ಯದಲ್ಲಿ ಒಟ್ಟು 56,834 ಖಾಲಿ ಹುದ್ದೆಗಳಿದ್ದು, ಅವುಗಳ ಭರ್ತಿಗೆ ಈಗಾಗಲೇ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಪ್ರಕ್ರಿಯೆ ವಿಳಂಬವಾಗಲು ಒಳಮೀಸಲಾತಿ ಸಂಬಂಧಿತ ಸಮಸ್ಯೆಗಳು ಕಾರಣವಾಗಿದ್ದರೂ, ಇದೀಗ ಅವುಗಳನ್ನು ಸರ್ಕಾರ ಬಗೆಹರಿಸಿದೆ. ಸಚಿವ ಸಂಪುಟವು ಈಗಾಗಲೇ ಸಾವಿರಾರು ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.&lt;/p&gt;&lt;h2&gt;ಒಟ್ಟು 947 ಪಿಎಸ್&zwnj;ಐಗಳ ನೇಮಕಾತಿ ಪೂರ್ಣ&lt;/h2&gt;&lt;p&gt;ಈ ಹುದ್ದೆಗಳಲ್ಲೇ 8 ಸಾವಿರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಹಾಗೂ ಸುಮಾರು 600 ಹೊಸ ಪೊಲೀಸ್ ಸಬ್ ಇನ್ಸ್&zwnj;ಪೆಕ್ಟರ್ (PSI) ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ 545 ಪಿಎಸ್&zwnj;ಐ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾದ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ನೇಮಕಾತಿಯನ್ನು ಸ್ಥಗಿತಗೊಳಿಸಿ, ಮರು ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಇದಲ್ಲದೆ, 402 ಪಿಎಸ್&zwnj;ಐಗಳನ್ನು ಈಗಾಗಲೇ ನೇಮಕ ಮಾಡಿ ತರಬೇತಿಗೆ ಕಳುಹಿಸಲಾಗಿದೆ. ಈ ಮೂಲಕ ಒಟ್ಟು 947 ಪಿಎಸ್&zwnj;ಐಗಳ ನೇಮಕಾತಿ ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.&lt;/p&gt;&lt;p&gt;ಕೆಕೆಆರ್&zwnj;ಡಿಬಿ ಅನುದಾನದಡಿ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್&zwnj;ಗಳನ್ನು ಜಾರಿಗೊಳಿಸುವ ಜೊತೆಗೆ ವಿವಿಧ ಪೊಲೀಸ್ ವಾಹನಗಳನ್ನು ಖರೀದಿಸಲಾಗಿದೆ. ಕಳೆದ ಬಾರಿ ಮಂಡಳಿಯಿಂದ 50 ಕೋಟಿ ರೂಪಾಯಿ ಅನುದಾನ ದೊರೆತಿದ್ದು, ಇದೀಗ 100 ಕೋಟಿ ರೂಪಾಯಿ ಅನುದಾನವನ್ನು ಕೇಳಲಾಗಿದೆ ಎಂದು ಹೇಳಿದರು. ಜೊತೆಗೆ, 20 ಕೋಟಿ ರೂಪಾಯಿ ವೆಚ್ಚದಲ್ಲಿ 72 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗಿದ್ದು, 2030ರೊಳಗೆ ರಾಜ್ಯದ ಶೇ.80ರಷ್ಟು ಪೊಲೀಸರಿಗೆ ವಸತಿ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;ಬೀದರ್&zwnj;ನ ಎಟಿಎಂ ದರೋಡೆ ಪ್ರಕರಣ ಕುರಿತು ಮಾತನಾಡಿದ ಅವರು, ಆರೋಪಿಗಳು ವಿದೇಶದಲ್ಲಿ ನೆಲೆಸಿರುವ ಸಾಧ್ಯತೆ ಇರುವ ಮಾಹಿತಿ ದೊರೆತಿದ್ದು, ತನಿಖಾ ತಂಡ ಅವರ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಇನ್ನೂ, ಈ ವರ್ಷದ ಬಜೆಟ್&zwnj;ನಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಇಲಾಖೆಗೆ ಮಂಜೂರಾದ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಸೈಬರ್ ಅಪರಾಧ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ಡಿಜಿಪಿ ಹುದ್ದೆಯನ್ನು ಸೃಷ್ಟಿಸಲಾಗಿದೆ. 2024ರಲ್ಲಿ ಸುಮಾರು 24 ಸಾವಿರ ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿದ್ದರೆ, 2025ರಲ್ಲಿ ಅವುಗಳ ಸಂಖ್ಯೆ 14 ಸಾವಿರಕ್ಕೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದರು.&lt;/p&gt;&lt;p&gt;ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಬಿ.ಆರ್. ಪಾಟೀಲ್, ಶಾಸಕಿ ಖನೀಜಾ ಫಾತಿಮಾ, ಅಫಜಲಪುರ ಶಾಸಕ ಎಂ.ವೈ. ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಜಗದೇವ್ ಗುತ್ತೇದಾರ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜೊತೆಗೆ, ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯದ್ ಮೊಹಮ್ಮದ್ ಚಿಸ್ತಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರ ಪಾಲಿಕೆಯ ಮೇಯರ್ ವರ್ಷಾ ರಾಜೀವ್ ಜಾನೆ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಿಕಾ ಪರಮೇಶ್ವರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/jobs/karnataka-govt-recruitment-notification-soon-for-56834-vacancies-says-home-minister-dr-g-parameshwara-at-kalaburagi-gdp/articleshow-k695hxd"/>
        </item>
        <item>
            <title><![CDATA[ವಾಯವ್ಯ ಸಾರಿಗೆ ಸಂಸ್ಥೆ ಹುದ್ದೆಗಳ ಪರೀಕ್ಷೆ ಮುಂದೂಡಿದ-KEA; ಹೊಸ ವೇಳಾಪಟ್ಟಿ ಮತ್ತು ಪ್ರಮುಖ ನಿಯಮಗಳು ಇಲ್ಲಿವೆ]]></title>
            <link>https://kannada.asianetnews.com/state/karnataka-examinations-authority-nwkrtc-recruitment-exam-postponed-new-date-april-10-sat/articleshow-ktrxztw</link>
            <guid isPermaLink="true">https://kannada.asianetnews.com/state/karnataka-examinations-authority-nwkrtc-recruitment-exam-postponed-new-date-april-10-sat/articleshow-ktrxztw</guid>
            <pubDate>Fri, 27 Mar 2026 21:30:28 +0530</pubDate>
            <description><![CDATA[&lt;p&gt;ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ದರ್ಜೆ-2 ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಉಪಚುನಾವಣೆಯ ಕಾರಣದಿಂದ ಏಪ್ರಿಲ್ 9 ರಿಂದ ಏಪ್ರಿಲ್ 10, 2026 ಕ್ಕೆ ಮುಂದೂಡಿದೆ. ಈ ಪರೀಕ್ಷೆಯ ಪರಿಷ್ಕೃತ ವೇಳಾಪಯಟ್ಟಿನ್ನು ಪ್ರಕಟಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmr01yneth8x9y3qjr2w7thg,imgname-kea-exam-postpone-1774626863790.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮಾ.27): ಕ&lt;/strong&gt;ರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ (NWKRTC) ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪರಿಷ್ಕರಿಸಿದೆ. ಏಪ್ರಿಲ್ 9 ರಂದು ನಡೆಯಬೇಕಿದ್ದ ಪರೀಕ್ಷೆಯು ಈಗ ಏಪ್ರಿಲ್ 10 ಕ್ಕೆ ಮುಂದೂಡಲ್ಪಟ್ಟಿದೆ.&lt;/p&gt;&lt;h3&gt;&lt;strong&gt;ದಿನಾಂಕ ಬದಲಾವಣೆಗೆ ಕಾರಣವೇನು?&lt;/strong&gt;&lt;/h3&gt;&lt;p&gt;ಪ್ರಾಧಿಕಾರದ ಪ್ರಕಟಣೆಯ ಪ್ರಕಾರ, ಏಪ್ರಿಲ್ 9, 2026 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ಪ್ರಕ್ರಿಯೆ ಮತ್ತು ಭದ್ರತೆಯ ದೃಷ್ಟಿಯಿಂದ ಅಂದು ಪರೀಕ್ಷೆ ನಡೆಸುವುದು ಕಷ್ಟಸಾಧ್ಯವಾದ ಕಾರಣ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಅವರು ಪರೀಕ್ಷೆಯನ್ನು ಒಂದು ದಿನ ಮುಂದಕ್ಕೆ ಅಂದರೆ ಏಪ್ರಿಲ್ 10, 2026 ರ ಶುಕ್ರವಾರದಂದು ನಡೆಸಲು ತೀರ್ಮಾನಿಸಿದ್ದಾರೆ.&lt;/p&gt;&lt;h2&gt;&lt;strong&gt;ಪರೀಕ್ಷೆಯ ವಿವರಗಳು:&lt;/strong&gt;&lt;/h2&gt;&lt;p&gt;ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಟ್ಟು 33 ವಿವಿಧ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸುಮಾರು 2,500 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಮಾತ್ರ ಈ ಲಿಖಿತ ಪರೀಕ್ಷೆ ನಡೆಯಲಿದೆ. ಸದ್ಯದಲ್ಲೇ ಅಧಿಕೃತ ವೆಬ್&zwnj;ಸೈಟ್&zwnj;ನಲ್ಲಿ ಪ್ರವೇಶ ಪತ್ರಗಳನ್ನು (Hall Tickets) ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.&lt;/p&gt;&lt;p&gt;&lt;strong&gt;ಪರಿಷ್ಕೃತ ವೇಳಾಪಟ್ಟಿ (ಏಪ್ರಿಲ್ 10, 2026 - ಶುಕ್ರವಾರ)&lt;/strong&gt;&lt;/p&gt;&lt;ul&gt; &lt;li&gt;ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದೆ:&lt;/li&gt; &lt;li&gt;ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ: ಪತ್ರಿಕೆ-1 (ಸಾಮಾನ್ಯ ಪತ್ರಿಕೆ) - 100 ಪ್ರಶ್ನೆಗಳು, 300 ಅಂಕಗಳು.&lt;/li&gt; &lt;li&gt;ಮಧ್ಯಾಹ್ನ 02:30 ರಿಂದ ಸಂಜೆ 04:30 ರವರೆಗೆ: ಪತ್ರಿಕೆ-2 (ನಿರ್ದಿಷ್ಟ ಪತ್ರಿಕೆ) - 100 ಪ್ರಶ್ನೆಗಳು, 300 ಅಂಕಗಳು.&lt;/li&gt;&lt;/ul&gt;&lt;p&gt;ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಸಹಾಯಕ ತಾಂತ್ರಿಕ ಶಿಲ್ಪಿ ಹಾಗೂ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ.&lt;/p&gt;&lt;p&gt;#KEARecruitmentExam: ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು ನಡೆಸಬೇಕಾಗಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಏ.10ರಂದು ನಡೆಸಲು #KEA ತೀರ್ಮಾನಿಸಿದೆ.ಒಟ್ಟು&zwnj; 33 ಹುದ್ದೆಗಳಿಗೆ ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಅಂದು&hellip; pic.twitter.com/TYuD6Lsb6I&lt;/p&gt;&lt;p&gt;&mdash; ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 27, 2026&lt;/p&gt;&lt;p&gt;&amp;nbsp;&lt;/p&gt;&lt;p&gt;&lt;strong&gt;ಅಭ್ಯರ್ಥಿಗಳು ಗಮನಿಸಬೇಕಾದ ಕಟ್ಟುನಿಟ್ಟಿನ ನಿಯಮಗಳು:&lt;/strong&gt;&lt;/p&gt;&lt;p&gt;ಋಣಾತ್ಮಕ ಮೌಲ್ಯಮಾಪನ (Negative Marking): ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 1/4 ರಷ್ಟು ಅಂಕಗಳನ್ನು (0.75 ಅಂಕ) ಕಳೆಯಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕರಾಗಿ ಉತ್ತರ ನೀಡಬೇಕು.&lt;/p&gt;&lt;p&gt;ಐದನೇ ಆಯ್ಕೆಯ ನಿಯಮ: ಉತ್ತರ ನೀಡದ ಪ್ರಶ್ನೆಗಳಿಗೆ 'ಐದನೇ ಆಯ್ಕೆ/ವೃತ್ತ'ವನ್ನು ಶೇಡ್ ಮಾಡುವುದು ಕಡ್ಡಾಯ. ಯಾವುದೇ ಆಯ್ಕೆಯನ್ನು ಶೇಡ್ ಮಾಡದಿದ್ದಲ್ಲಿ ಆ ಪ್ರಶ್ನೆಗೆ 0.75 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಇದಕ್ಕಾಗಿ ಪರೀಕ್ಷೆಯ ನಂತರ ಹೆಚ್ಚುವರಿಯಾಗಿ 5 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.&lt;/p&gt;&lt;p&gt;ವರದಿ ಮಾಡುವ ಸಮಯ: ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ (Friscking) ಪ್ರಕ್ರಿಯೆ ಇರುವುದರಿಂದ ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಹಾಜರಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್&zwnj;ಸೈಟ್ http://kea.kar.nic.in ಅನ್ನು ಗಮನಿಸುತ್ತಿರಲು ಸೂಚಿಸಲಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-examinations-authority-nwkrtc-recruitment-exam-postponed-new-date-april-10-sat/articleshow-ktrxztw"/>
        </item>
        <item>
            <title><![CDATA[ಸಾರಿಗೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ ಮಾಡಿದ ಸರ್ಕಾರ!]]></title>
            <link>https://kannada.asianetnews.com/state/karnataka-government-releases-rupees-450-crore-salary-arrears-for-ksrtc-bmtc-employees-sat/articleshow-n1kwx9g</link>
            <guid isPermaLink="true">https://kannada.asianetnews.com/state/karnataka-government-releases-rupees-450-crore-salary-arrears-for-ksrtc-bmtc-employees-sat/articleshow-n1kwx9g</guid>
            <pubDate>Wed, 29 Apr 2026 13:11:03 +0530</pubDate>
            <description><![CDATA[ಕರ್ನಾಟಕ ಸರ್ಕಾರವು ಸಾರಿಗೆ ನಿಗಮಗಳ ನೌಕರರ 26 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿಗಾಗಿ ಮೊದಲ ಹಂತವಾಗಿ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಕೆಎಸ್&zwnj;ಆರ್&zwnj;ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಲಕ್ಷಾಂತರ ನೌಕರರಿಗೆ ಈ ನಿರ್ಧಾರದಿಂದ ಆರ್ಥಿಕ ನೆರವು ದೊರೆತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqc2xwfhvgmqq0yxx3e0sx1m,imgname-ksrtc-employees--1--1777448448497.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.29): ರಾ&lt;/strong&gt;ಜ್ಯದ ಸಾರಿಗೆ ಸಂಸ್ಥೆಗಳ ನೌಕರರಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಯ ಹಿಂಬಾಕಿ (Arrears) ಪಾವತಿಸಲು ಸರ್ಕಾರವು ಭಾರಿ ಮೊತ್ತದ ಅನುದಾನವನ್ನು ಬಿಡುಗಡೆಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದಾಗಿ ಕೆಎಸ್&zwnj;ಆರ್&zwnj;ಟಿಸಿ (KSRTC), ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ಲಕ್ಷಾಂತರ ನೌಕರರಿಗೆ ಆರ್ಥಿಕ ನೆರವು ಸಿಕ್ಕಂತಾಗಿದೆ.&lt;/p&gt;&lt;h3&gt;&lt;strong&gt;26 ತಿಂಗಳ ವೇತನ ಬಾಕಿ ಪಾವತಿಗೆ ಕ್ರಮ:&lt;/strong&gt;&lt;/h3&gt;&lt;p&gt;ದಿನಾಂಕ 01.01.2021 ರಿಂದ 28.02.2023 ರವರೆಗಿನ ಒಟ್ಟು 26 ತಿಂಗಳ ಅವಧಿಯ ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು ಪಾವತಿಸಲು ನೌಕರರು ಸತತವಾಗಿ ಒತ್ತಾಯಿಸುತ್ತಿದ್ದರು. ಈ ಬಾಕಿ ಮೊತ್ತದ ಒಟ್ಟು ಬೇಡಿಕೆ 1271.92 ಕೋಟಿ ರೂಪಾಯಿಗಳಷ್ಟಿತ್ತು. ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಮೊದಲ ಹಂತವಾಗಿ 450 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನದಡಿ ಬಿಡುಗಡೆಗೊಳಿಸಿದೆ.&lt;/p&gt;&lt;h2&gt;&lt;strong&gt;ಯಾವ ನಿಗಮಕ್ಕೆ ಎಷ್ಟು ಅನುದಾನ? (ಕೋಟಿ ರೂ.ಗಳಲ್ಲಿ):&lt;/strong&gt;&lt;/h2&gt;&lt;ul&gt; &lt;li&gt;ಸರ್ಕಾರದ ಆದೇಶದಂತೆ ಬಿಡುಗಡೆಯಾದ 450 ಕೋಟಿ ರೂ.ಗಳನ್ನು ನಾಲ್ಕು ನಿಗಮಗಳಿಗೆ ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ:&lt;/li&gt; &lt;li&gt;ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC): 143.85 ಕೋಟಿ ರೂ.&lt;/li&gt; &lt;li&gt;ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC): 137.24 ಕೋಟಿ ರೂ.&lt;/li&gt; &lt;li&gt;ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC): 87.00 ಕೋಟಿ ರೂ.&lt;/li&gt; &lt;li&gt;ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC): 81.91 ಕೋಟಿ ರೂ.&lt;/li&gt; &lt;li&gt;ಒಟ್ಟು ಮೊತ್ತ: 450.00 ಕೋಟಿ ರೂ.&lt;/li&gt;&lt;/ul&gt;&lt;h3&gt;&lt;strong&gt;ಕಟ್ಟುನಿಟ್ಟಿನ ಷರತ್ತುಗಳು:&lt;/strong&gt;&lt;/h3&gt;&lt;ul&gt; &lt;li&gt;ಅನುದಾನ ಬಿಡುಗಡೆ ಮಾಡುವ ವೇಳೆ ಸರ್ಕಾರವು ಕೆಲವು ಪ್ರಮುಖ ಷರತ್ತುಗಳನ್ನು ವಿಧಿಸಿದೆ:&lt;/li&gt; &lt;li&gt;ಬಿಡುಗಡೆ ಮಾಡಲಾದ ಈ ಮೊತ್ತವನ್ನು ಕೇವಲ ನೌಕರರ ವೇತನ ಬಾಕಿ ಪಾವತಿಸಲು ಮಾತ್ರ ಬಳಸತಕ್ಕದ್ದು.&lt;/li&gt; &lt;li&gt;ಯಾವುದೇ ವಿಳಂಬವಿಲ್ಲದೆ ತಕ್ಷಣವೇ ನೌಕರರ ಖಾತೆಗೆ ಈ ಹಣವನ್ನು ತಲುಪಿಸಬೇಕು.&lt;/li&gt; &lt;li&gt;ಅನುದಾನ ಬಳಕೆಯ ನಂತರ ಸಾರಿಗೆ ಸಂಸ್ಥೆಗಳು ಕಡ್ಡಾಯವಾಗಿ ಬಳಕೆಯ ಪ್ರಮಾಣ ಪತ್ರವನ್ನು (Utilization Certificate) ಸರ್ಕಾರಕ್ಕೆ ಸಲ್ಲಿಸಬೇಕು.&lt;/li&gt;&lt;/ul&gt;&lt;h3&gt;&lt;strong&gt;ನೌಕರರ ಸಂಘಟನೆಗಳ ಹರ್ಷ:&lt;/strong&gt;&lt;/h3&gt;&lt;p&gt;ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಸಾರಿಗೆ ನೌಕರರಿಗೆ ಈ ನಿರ್ಧಾರವು ದೊಡ್ಡ ಸಮಾಧಾನ ತಂದಿದೆ. ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಕ್ಷೀಣಿಸಿರುವ ಹಿನ್ನೆಲೆಯಲ್ಲಿ, ಸರ್ಕಾರವು ಮಧ್ಯಪ್ರವೇಶಿಸಿ ಈ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ ಎಂದು ನೌಕರರ ಸಂಘಟನೆಗಳು ಅಭಿಪ್ರಾಯಪಟ್ಟಿವೆ. 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಹಂತ ಹಂತವಾಗಿ ಬಾಕಿ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.&lt;/p&gt;&lt;p&gt;ಈ ಆದೇಶಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಪುಷ್ಪ ವಿ.ಎಸ್. ಅವರು ಸಹಿ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚಿಸಿದ್ದಾರೆ. ಈ ನಿರ್ಧಾರದಿಂದಾಗಿ ಸಾರಿಗೆ ನೌಕರರ ಕುಟುಂಬಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-government-releases-rupees-450-crore-salary-arrears-for-ksrtc-bmtc-employees-sat/articleshow-n1kwx9g"/>
        </item>
        <item>
            <title><![CDATA[ಕೊಪ್ಪಳ ಪಿಎಸ್‌ಐ ಸುನೀಲ್ ಅಮಾನತು; ಅಕ್ರಮಗಳಿಗೆ ಕಡಿವಾಣ ಹಾಕದ ಹಿನ್ನೆಲೆ ಎಸ್ಪಿ ರಾಮ್ ಅರಸಿದ್ದಿ ಖಡಕ್ ಆದೇಶ!]]></title>
            <link>https://kannada.asianetnews.com/state/koppal-munirabad-psi-sunil-suspended-sp-ram-arasiddi-illegal-activities-sat/articleshow-q3lzsgk</link>
            <guid isPermaLink="true">https://kannada.asianetnews.com/state/koppal-munirabad-psi-sunil-suspended-sp-ram-arasiddi-illegal-activities-sat/articleshow-q3lzsgk</guid>
            <pubDate>Wed, 01 Apr 2026 16:40:37 +0530</pubDate>
            <description><![CDATA[&lt;p&gt;ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್&zwnj;ಐ ಸುನೀಲ್ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗುದೆ. ಅಕ್ರಮ ವಿದೇಶಿ ಪಾರ್ಟಿಗಳು, ಕಲ್ಲು ಗಣಿಗಾರಿಕೆ, ಮತ್ತು ಅನ್ನ ಭಾಗ್ಯ ಅಕ್ಕಿ ದಂಧೆಯಂತಹ ಸರಣಿ ಅಕ್ರಮಗಳನ್ನು ತಡೆಯಲು ವಿಫಲರಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn4bp3w7w5vqe144emrzg2n8,imgname-koppal-psi-sunil-susopended-1775041712007.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ (ಏ.01): ಕ&lt;/strong&gt;ರ್ತವ್ಯ ಲೋಪ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್&zwnj;ಐ (PSI) ಸುನೀಲ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಾಮ್ ಅರಸಿದ್ದಿ ಅವರು ಈ ಖಡಕ್ ಆದೇಶವನ್ನು ಹೊರಡಿಸಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಣಿ ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಅಮಾನತ್ತಿಗೆ ಕಾರಣಗಳೇನು?:&lt;/strong&gt;&lt;/h2&gt;&lt;p&gt;ಕಳೆದ ಎರಡು ವರ್ಷಗಳಿಂದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪಿಎಸ್&zwnj;ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರ ವಿರುದ್ಧ ಇತ್ತೀಚಿನ ದಿನಗಳಲ್ಲಿ ದೂರುಗಳು ಕೇಳಿಬರುತ್ತಿದ್ದವು. ಕಚೇರಿಯ ಆಡಳಿತಾತ್ಮಕ ವಿಚಾರಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಶಿಸ್ತು ಕ್ರಮ ಜರುಗಿಸಲಾಗಿದೆ.&lt;/p&gt;&lt;h3&gt;&lt;strong&gt;ಸರಣಿ ಅಕ್ರಮಗಳ ಸುಳಿವು:&lt;/strong&gt;&lt;/h3&gt;&lt;p&gt;ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವಾರು ಅಕ್ರಮ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇದು ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿತ್ತು.&lt;/p&gt;&lt;p&gt;&lt;strong&gt;ಪ್ರಮುಖವಾಗಿ:&lt;/strong&gt;&lt;/p&gt;&lt;p&gt;&lt;strong&gt;ವಿದೇಶಿಗರ ಪಾರ್ಟಿ: &lt;/strong&gt;ಅನುಮತಿ ಇಲ್ಲದೆ ವಿದೇಶಿ ಪ್ರಜೆಗಳು ಭಾಗವಹಿಸಿದ್ದ ಪಾರ್ಟಿಗಳು ನಡೆದಿದ್ದು ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು.&lt;/p&gt;&lt;p&gt;&lt;strong&gt;ಅಕ್ರಮ ಕಲ್ಲು ಗಣಿಗಾರಿಕೆ:&lt;/strong&gt; ಮುನಿರಾಬಾದ್ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಪೊಲೀಸರು ಮೌನಕ್ಕೆ ಶರಣಾಗಿದ್ದರು ಎಂಬ ಆರೋಪವಿತ್ತು.&lt;/p&gt;&lt;p&gt;&lt;strong&gt;ಅನ್ನ ಭಾಗ್ಯ ಅಕ್ಕಿ ದಂಧೆ: &lt;/strong&gt;ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲವೊಂದು ಇಲ್ಲಿ ಸಕ್ರಿಯವಾಗಿತ್ತು.&lt;/p&gt;&lt;p&gt;ಈ ಎಲ್ಲಾ ಪ್ರಕರಣಗಳು ಒಂದಾದ ಮೇಲೊಂದರಂತೆ ಬೆಳಕಿಗೆ ಬಂದಾಗ, ಸ್ಥಳೀಯ ಪೊಲೀಸರ ಶಾಮೀಲಾತಿ ಅಥವಾ ನಿರ್ಲಕ್ಷ್ಯದ ಬಗ್ಗೆ ಮೇಲಧಿಕಾರಿಗಳಿಗೆ ಶಂಕೆ ವ್ಯಕ್ತವಾಗಿತ್ತು.&lt;/p&gt;&lt;h2&gt;&lt;strong&gt;ಎಸ್ಪಿ ಖಡಕ್ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಆಡಳಿತಾತ್ಮಕ ವಿಚಾರದಲ್ಲಿ ವಿಫಲರಾದ ಸುನೀಲ್ ಅವರಿಗೆ ಈ ಹಿಂದೆಯೇ ಎಚ್ಚರಿಕೆಗಳನ್ನು ನೀಡಲಾಗಿತ್ತು ಎನ್ನಲಾಗಿದೆ. ಆದರೂ ಕೆಲಸದಲ್ಲಿ ಸುಧಾರಣೆ ಕಂಡುಬರದ ಹಿನ್ನೆಲೆಯಲ್ಲಿ, ಎಸ್ಪಿ ರಾಮ್ ಅರಸಿದ್ದಿ ಅವರು ಅಮಾನತ್ತಿನ ಅಸ್ತ್ರ ಪ್ರಯೋಗಿಸಿದ್ದಾರೆ. ಈ ಆದೇಶವು ಜಿಲ್ಲೆಯ ಇತರೆ ಪೊಲೀಸ್ ಅಧಿಕಾರಿಗಳಿಗೂ ಒಂದು ಎಚ್ಚರಿಕೆಯ ಸಂದೇಶವಾಗಿದೆ. ಠಾಣಾ ವ್ಯಾಪ್ತಿಯಲ್ಲಿ ಅಕ್ರಮಗಳಿಗೆ ಅವಕಾಶ ನೀಡುವ ಅಥವಾ ಕರ್ತವ್ಯದಲ್ಲಿ ಬೇಜವಾಬ್ದಾರಿತನ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸೂಚನೆಯನ್ನು ಈ ಮೂಲಕ ನೀಡಲಾಗಿದೆ. ಪ್ರಸ್ತುತ ಪಿಎಸ್&zwnj;ಐ ಸುನೀಲ್ ಅವರನ್ನು ಅಮಾನತ್ತುಗೊಳಿಸಲಾಗಿದ್ದು, ಇಲಾಖಾ ತನಿಖೆ ಮುಂದುವರಿಯಲಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/koppal-munirabad-psi-sunil-suspended-sp-ram-arasiddi-illegal-activities-sat/articleshow-q3lzsgk"/>
        </item>
        <item>
            <title><![CDATA[ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಿಪಿಐ ರಘುನಾಥ್ ಸಾವು!]]></title>
            <link>https://kannada.asianetnews.com/gallery/state/vijayanagara-cpi-raghunath-dcre-koppal-dies-in-car-accident-musturu-davanagere-border-sat-x1stp5u</link>
            <guid isPermaLink="true">https://kannada.asianetnews.com/gallery/state/vijayanagara-cpi-raghunath-dcre-koppal-dies-in-car-accident-musturu-davanagere-border-sat-x1stp5u</guid>
            <pubDate>Wed, 15 Apr 2026 19:03:43 +0530</pubDate>
            <description><![CDATA[ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp8mt9frrnbjm9dk83grq8cz,imgname-dcre-cpi-raghunath-passed-away-1776259245560.jpg" type="image/jpeg" height="390" width="690"/>
            <content:encoded><![CDATA[ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ.&lt;img&gt;&lt;p&gt;&lt;strong&gt;ವಿಜಯನಗರ (ಏ.15): ವಿ&lt;/strong&gt;ಜಯನಗರ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬಲಿಪಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.&lt;/p&gt;&lt;img&gt;&lt;p&gt;ಈ ದುರ್ಘಟನೆಯು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಯ ಗಡಿ ಭಾಗದಲ್ಲಿರುವ ಮುಸ್ಟೂರು ಮತ್ತು ಕಡಬನಕಟ್ಟೆ ಗ್ರಾಮಗಳ ಮಧ್ಯೆ ಸಂಭವಿಸಿದೆ. ಸಿಪಿಐ ರಘುನಾಥ್ ಅವರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಹಠಾತ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬೇವಿನ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಘುನಾಥ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;img&gt;&lt;p&gt;ಮೃತ ರಘುನಾಥ್ ಅವರು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್&zwnj;ಇ (DCRE) ಘಟಕದ ಸಿಪಿಐ ಆಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿಶೇಷವೆಂದರೆ, ಕೇವಲ ಮೊನ್ನೆಯಷ್ಟೇ ಅವರು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆಯಾಗಿದ್ದರು. ಬೆಂಗಳೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸಿದ್ಧತೆ ನಡೆಸುತ್ತಿದ್ದ ಅವರು, ಇನ್ನೂ ಅಧಿಕೃತವಾಗಿ ವರದಿ ಮಾಡಿಕೊಂಡಿರಲಿಲ್ಲ. ಆದರೆ, ಬೆಂಗಳೂರಿಗೆ ತೆರಳುವ ಮೊದಲೇ ವಿಧಿಯಾಟ ಬೇರೆಯೇ ಆಗಿತ್ತು. ವರ್ಗಾವಣೆ ಆದೇಶ ಬಂದ ಎರಡೇ ದಿನಗಳಲ್ಲಿ ಈ ದುರ್ಘಟನೆ ನಡೆದಿರುವುದು ಅವರ ಕುಟುಂಬಸ್ಥರು ಮತ್ತು ಪೊಲೀಸ್ ಇಲಾಖೆಯ ಸಹೋದ್ಯೋಗಿಗಳಲ್ಲಿ ತೀವ್ರ ನೋವುಂಟು ಮಾಡಿದೆ.&lt;/p&gt;&lt;img&gt;&lt;p&gt;ರಘುನಾಥ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನ ತಾಂತ್ರಿಕ ದೋಷ ಅಥವಾ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.&lt;/p&gt;&lt;img&gt;&lt;p&gt;ಚಿತ್ರದುರ್ಗ ಜಿಲ್ಲೆಯ ಮೂಲದವರಾದ ರಘುನಾಥ್ ಅವರು ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಚಿತ್ರದುರ್ಗದಲ್ಲಿರುವ ಅವರ ಮನೆಯಲ್ಲಿ ಶೋಕ ಸಾಗರವೇ ಆವರಿಸಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಿರಿಯ ಅಧಿಕಾರಿಗಳ ಪ್ರಾಣವನ್ನೂ ಉಳಿಸುತ್ತಿಲ್ಲ ಎಂಬುದು ದುರದೃಷ್ಟಕರ ಸಂಗತಿಯಾಗಿದೆ. ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಹೊಸ ಜವಾಬ್ದಾರಿ ವಹಿಸಿಕೊಳ್ಳಬೇಕಿದ್ದ ಅಧಿಕಾರಿಯೊಬ್ಬರು ಹೀಗೆ ಅರ್ಧದಲ್ಲೇ ಬದುಕು ಮುಗಿಸಿರುವುದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/vijayanagara-cpi-raghunath-dcre-koppal-dies-in-car-accident-musturu-davanagere-border-sat-x1stp5u"/>
        </item>
        <item>
            <title><![CDATA[ಸರ್ಕಾರಿ ಟೆಂಡರ್ ಹೈಟೆಕ್ ವಂಚನೆ: ತಾನು IAS ಅಧಿಕಾರಿ ಎಂದು ನಂಬಿಸಿ ಉದ್ಯಮಿಗೆ ₹41 ಲಕ್ಷ ಪಂಗನಾಮ ಹಾಕಿದ ಕಿರಾತಕ!]]></title>
            <link>https://kannada.asianetnews.com/state/fake-ias-officer-fraud-bengaluru-amruthahally-41-lakh-scam-sat/articleshow-xpa24gk</link>
            <guid isPermaLink="true">https://kannada.asianetnews.com/state/fake-ias-officer-fraud-bengaluru-amruthahally-41-lakh-scam-sat/articleshow-xpa24gk</guid>
            <pubDate>Thu, 16 Apr 2026 13:27:37 +0530</pubDate>
            <description><![CDATA[&lt;p&gt;ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಚಿಕ್ಕಮಗಳೂರಿನ ಉದ್ಯಮಿಗೆ ಆಮಿಷವೊಡ್ಡಿ, ಅವರಿಂದ 41 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ. ವಂಚನೆಗೊಳಗಾದ ಉದ್ಯಮಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpamab2phv2cjs3qmxqcvhs9,imgname-chikkamagaluru-fake-ias-officer-scam-1776325831766.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಚಿಕ್ಕಮಗಳೂರು (ಏ.16): ರಾ&lt;/strong&gt;ಜಧಾನಿ ಬೆಂಗಳೂರಿನಲ್ಲಿ ಹೈಟೆಕ್ ವಂಚನೆಯೊಂದು ಬೆಳಕಿಗೆ ಬಂದಿದೆ. ತಾನು ಐಎಎಸ್ (IAS) ಅಧಿಕಾರಿ ಎಂದು ಸುಳ್ಳು ಹೇಳಿ, ಸರ್ಕಾರಿ ಗುತ್ತಿಗೆ ಕೊಡಿಸುವುದಾಗಿ ನಂಬಿಸಿ ಚಿಕ್ಕಮಗಳೂರಿನ ಉದ್ಯಮಿಯೊಬ್ಬರಿಂದ ಬರೋಬ್ಬರಿ 41 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ನಡೆದಿದೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್&zwnj;ಐಆರ್ ದಾಖಲಾಗಿದೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಮೂಲತಃ ಚಿಕ್ಕಮಗಳೂರಿನ ನಿವಾಸಿಯಾದ ಸತೀಶ್ ಜಿ.ಆರ್. ಅವರು ಅಲ್ಲಿ ಮೆಡಿಕಲ್ ಮತ್ತು ಜನರಲ್ ಸ್ಟೋರ್ ನಡೆಸುತ್ತಿದ್ದಾರೆ. ಇವರಿಗೆ ಚಿಕ್ಕಮಗಳೂರಿನ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಚಂದ್ರಶೇಖರ್ ಅವರ ಮೂಲಕ ಮಿಥುನ್ (A1) ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಈ ಮಿಥುನ್ ತಾನು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಐಎಎಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವುದಾಗಿ ಸುಳ್ಳು ಹೇಳಿ ಸತೀಶ್ ಅವರ ನಂಬಿಕೆ ಗಳಿಸಿದ್ದಾನೆ.&lt;/p&gt;&lt;h2&gt;&lt;strong&gt;ಸಬ್ಸಿಡಿ ಮತ್ತು ಗುತ್ತಿಗೆಯ ಆಮಿಷ:&lt;/strong&gt;&lt;/h2&gt;&lt;p&gt;ಚಿಕ್ಕಮಗಳೂರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧ ಸರಬರಾಜು ಮಾಡುವ (NHM) ಗುತ್ತಿಗೆಯನ್ನು ಕೊಡಿಸುವುದಾಗಿ ಮಿಥುನ್ ಆಮಿಷವೊಡ್ಡಿದ್ದಾನೆ. ಇದಕ್ಕಾಗಿ ಸುಮಾರು 1.8 ಕೋಟಿ ರೂಪಾಯಿ ಮೌಲ್ಯದ ಔಷಧ ಸರಬರಾಜು ಆದೇಶ ಕೊಡಿಸಲು 20% ಕಮಿಷನ್ ನೀಡಬೇಕೆಂದು ಬೇಡಿಕೆಯಿಟ್ಟಿದ್ದಾನೆ. ಡಾ. ಚಂದ್ರಶೇಖರ್ ಅವರೇ ಈತನನ್ನು ಪರಿಚಯಿಸಿದ್ದರಿಂದ ಸತೀಶ್ ಅವರು ಯಾವುದೇ ಅನುಮಾನವಿಲ್ಲದೆ ಹಣ ನೀಡಲು ಒಪ್ಪಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಲಕ್ಷಾಂತರ ರೂಪಾಯಿ ವಸೂಲಿ:&lt;/strong&gt;&lt;/h3&gt;&lt;p&gt;ದೂರಿನ ಪ್ರಕಾರ, ದಿನಾಂಕ 18/01/2026 ರಂದು ಬೆಂಗಳೂರಿನ ಜಕ್ಕೂರು ಏರೋಡ್ರೋಮ್ ರಸ್ತೆಯಲ್ಲಿ ಸತೀಶ್ ಅವರು ಮಿಥುನ್&zwnj;ಗೆ ಮೊದಲ ಕಂತಿನ ರೂಪದಲ್ಲಿ 36 ಲಕ್ಷ ರೂಪಾಯಿ ನಗದು ಹಣವನ್ನು ನೀಡಿದ್ದಾರೆ. ನಂತರ ಮತ್ತೆ 5 ಲಕ್ಷ ರೂಪಾಯಿಗಳನ್ನು ಆನ್&zwnj;ಲೈನ್ ಬ್ಯಾಂಕಿಂಗ್ ಮೂಲಕ ಮಿಥುನ್&zwnj;ನ ಹೆಚ್&zwnj;ಡಿಎಫ್&zwnj;ಸಿ (HDFC) ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ. ಒಟ್ಟಾರೆಯಾಗಿ 41 ಲಕ್ಷ ರೂಪಾಯಿಗಳನ್ನು ಆರೋಪಿಯು ವಂಚನೆಯಿಂದ ಪಡೆದುಕೊಂಡಿದ್ದಾನೆ.&lt;/p&gt;&lt;h2&gt;&lt;strong&gt;ಬೆಳಕಿಗೆ ಬಂದ ಸತ್ಯ:&lt;/strong&gt;&lt;/h2&gt;&lt;p&gt;ಹಣ ಪಡೆದ ನಂತರ ಗುತ್ತಿಗೆ ಆದೇಶ ನೀಡದೆ ಮಿಥುನ್ ಸತಾಯಿಸಲು ಶುರು ಮಾಡಿದ್ದಾನೆ. ಇದರಿಂದ ಅನುಮಾನಗೊಂಡ ಸತೀಶ್ ಅವರು ಆರೋಗ್ಯ ಸೌಧಕ್ಕೆ ಭೇಟಿ ನೀಡಿ ವಿಚಾರಿಸಿದಾಗ, ಮಿಥುನ್ ಎಂಬ ಹೆಸರಿನ ಯಾವುದೇ ಐಎಎಸ್ ಅಧಿಕಾರಿ ಅಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಆಘಾತಕಾರಿ ಸತ್ಯ ತಿಳಿದುಬಂದಿದೆ. ತಾನು ವಂಚನೆಗೆ ಒಳಗಾಗಿರುವುದು ಖಚಿತವಾದ ನಂತರ ಸತೀಶ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ತನಿಖೆ:&lt;/strong&gt;&lt;/h2&gt;&lt;p&gt;ಅಮೃತಹಳ್ಳಿ ಪೊಲೀಸರು ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 318(4) (ವಂಚನೆ) ಮತ್ತು 319(2) (ಆದರ್ಶ ಪುರುಷನಂತೆ ನಟಿಸಿ ವಂಚನೆ ಮಾಡುವುದು/Impersonation) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಎಸ್&zwnj;ಐ ಪ್ರಭು ಕೆ.ಎಲ್. ಅವರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಮಿಥುನ್ ಪತ್ತೆಗೆ ಬಲೆ ಬೀಸಿದ್ದಾರೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರಿಗೆ ಎಚ್ಚರಿಕೆ:&lt;/strong&gt;&lt;/h3&gt;&lt;p&gt;ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳ ಹೆಸರಲ್ಲಿ ಅಥವಾ ಪ್ರಭಾವಿ ವ್ಯಕ್ತಿಗಳ ಸೋಗಿನಲ್ಲಿ ಗುತ್ತಿಗೆ ಮತ್ತು ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸುವ ಜಾಲಗಳು ಹೆಚ್ಚಾಗುತ್ತಿವೆ. ಯಾರೇ ಆಗಲಿ ಅಧಿಕೃತ ಕಚೇರಿಗಳಲ್ಲಿ ವಿಚಾರಿಸದೆ ಯಾರಿಗೂ ಲಕ್ಷಾಂತರ ರೂಪಾಯಿ ಹಣ ನೀಡಬಾರದು ಎಂದು ಪೊಲೀಸರು ಈ ಮೂಲಕ ಜನತೆಗೆ ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/fake-ias-officer-fraud-bengaluru-amruthahally-41-lakh-scam-sat/articleshow-xpa24gk"/>
        </item>
    </channel>
</rss>
