<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 11 Aug 2026 12:25:46 +0530</lastBuildDate>
        <atom:link href="https://kannada.asianetnews.com/rss/state-government-jobs" rel="self" type="application/rss+xml"/>
        <item>
            <title><![CDATA[ಬಡ ಕೂಲಿ ಕಾರ್ಮಿಕನ ಹೆಣ್ಣುಮಕ್ಕಳ ಸರ್ಕಾರಿ ನೌಕರಿ ಸಾಧನೆ; ಅಕ್ಕ ಎಸ್‌ಐ, ತಂಗಿ ಕಾನ್‌ಸ್ಟೆಬಲ್!]]></title>
            <link>https://kannada.asianetnews.com/state-government-jobs/madhya-pradesh-laborer-sanman-daughters-state-government-jobs-elder-sister-si-another-constable/articleshow-2xv74kk</link>
            <guid isPermaLink="true">https://kannada.asianetnews.com/state-government-jobs/madhya-pradesh-laborer-sanman-daughters-state-government-jobs-elder-sister-si-another-constable/articleshow-2xv74kk</guid>
            <pubDate>Fri, 10 Jul 2026 20:04:10 +0530</pubDate>
            <description><![CDATA[&lt;p&gt;ಕೂಲಿ ಕಾರ್ಮಿಕರೊಬ್ಬರ ಇಬ್ಬರು ಹೆಣ್ಣುಮಕ್ಕಳು ಬಡತನವನ್ನು ಮೆಟ್ಟಿ ನಿಂತು ಸರ್ಕಾರಿ ಹುದ್ದೆಗಳನ್ನು ಪಡೆದಿದ್ದಾರೆ. ಹಿರಿಯ ಮಗಳು ಪೂಜಾ ಅಹಿರ್ವಾರ್, ಎಸ್&zwnj;ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಅವರ ತಂಗಿ ಪೊಲೀಸ್ ಕಾನ್&zwnj;ಸ್ಟೆಬಲ್ ಆಗಿ ಆಯ್ಕೆಯಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx6767q74f284b2cpcj2ktvj,imgname-laborer-daughters-state-government-jobs-1783694040807.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಡತನದ ನಡುವೆಯೂ ಸಾಧಿಸುವ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ಮಧ್ಯಪ್ರದೇಶದ ಈ ಸಹೋದರಿಯರೇ ಸಾಕ್ಷಿಯಾಗಿದ್ದಾರೆ. ಅಪ್ಪ ಕೂಲಿ ಮಾಡುತ್ತಿದ್ದರೂ ಮಕ್ಕಳು ಮಾತ್ತು ಸರ್ಕಾರದ ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ.&lt;/p&gt;&lt;p&gt;ಕೂಲಿ ಕಾರ್ಮಿಕರೊಬ್ಬರ ಹಿರಿಯ ಮಗಳು ಪೂಜಾ ಅಹಿರ್ವಾರ್, ಮಧ್ಯಪ್ರದೇಶ ಸಬ್&zwnj;-ಇನ್ಸ್&zwnj;ಪೆಕ್ಟರ್ (ಎಸ್&zwnj;ಐ) ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಇದೇ ಹೊತ್ತಿನಲ್ಲಿ, ಅವರ ತಂಗಿಯೂ ಪೊಲೀಸ್ ಕಾನ್&zwnj;ಸ್ಟೆಬಲ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಇಡೀ ಕುಟುಂಬಕ್ಕೆ ಡಬಲ್ ಖುಷಿ ನೀಡಿದ್ದಾರೆ. ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯವರಾದ ಪೂಜಾ, ಎಸ್&zwnj;ಐ ಪರೀಕ್ಷೆಯ ಪರಿಶಿಷ್ಟ ಜಾತಿ (ಎಸ್&zwnj;ಸಿ) ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ. ಕಡು ಬಡತನ ಮತ್ತು ಆರ್ಥಿಕ ಸಂಕಷ್ಟಗಳೇ ಇವರ ದಾರಿಗೆ ಅಡ್ಡಿಯಾಗಿದ್ದವು. ಆದರೆ, ಇವೆಲ್ಲವನ್ನೂ ಮೆಟ್ಟಿ ನಿಂತು ಈ ಸಹೋದರಿಯರು ಸರ್ಕಾರಿ ಹುದ್ದೆ ಗಿಟ್ಟಿಸಿಕೊಂಡಿರುವುದು ನಿಜಕ್ಕೂ ದೊಡ್ಡ ಸಾಧನೆ.&lt;/p&gt;&lt;h2&gt;&lt;strong&gt;ಬಡತನವನ್ನೇ ಮೆಟ್ಟಿ ನಿಂತ ಸಹೋದರಿಯರು&lt;/strong&gt;&lt;/h2&gt;&lt;p&gt;ಪೂಜಾ ಮತ್ತು ಅವರ ತಂಗಿಯ ತಂದೆ ಒಬ್ಬ ದಿನಗೂಲಿ ಕಾರ್ಮಿಕ. ಮನೆಯಲ್ಲಿನ ಆರ್ಥಿಕ ಪರಿಸ್ಥಿತಿ ಹೇಳತೀರದು. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ಹೆಣ್ಣುಮಕ್ಕಳ ಓದಿಗೆ ಅವರ ತಂದೆ ಎಂದಿಗೂ ಅಡ್ಡಿಪಡಿಸಲಿಲ್ಲ. ತಮ್ಮ ಮಕ್ಕಳ ಕನಸು ನನಸಾಗಿಸಲು ಅವರು ಹಗಲಿರುಳು ಶ್ರಮಿಸಿದ್ದಾರೆ. ತಂದೆಯ ಕಷ್ಟವನ್ನು ಅರಿತಿದ್ದ ಈ ಹೆಣ್ಣುಮಕ್ಕಳು, ತಮ್ಮ ಗುರಿ ತಲುಪಲೇಬೇಕೆಂದು ಹಠಕ್ಕೆ ಬಿದ್ದಿದ್ದರು. ಯಾವುದೇ ಕೋಚಿಂಗ್ ಅಥವಾ ವಿಶೇಷ ತರಬೇತಿಗಳಿಲ್ಲದೆ, ಸ್ವಂತ ಪರಿಶ್ರಮದಿಂದಲೇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಇವರ ಈ ಯಶಸ್ಸಿನ ಹಿಂದೆ ಅಪಾರವಾದ ಶ್ರಮ ಮತ್ತು ತ್ಯಾಗ ಅಡಗಿದೆ.&lt;/p&gt;&lt;h2&gt;&lt;strong&gt;ಅಕ್ಕ ಎಸ್&zwnj;ಐ, ತಂಗಿ ಕಾನ್&zwnj;ಸ್ಟೆಬಲ್!&lt;/strong&gt;&lt;/h2&gt;&lt;p&gt;ಪೂಜಾ ಅಹಿರ್ವಾರ್ ಅವರ ಸಾಧನೆ ಸಾಮಾನ್ಯವಾದುದಲ್ಲ. ಇಡೀ ರಾಜ್ಯಕ್ಕೆ ಎಸ್&zwnj;ಸಿ ಕೆಟಗರಿಯಲ್ಲಿ ಮೊದಲ ರ&zwj;್ಯಾಂಕ್ ಪಡೆಯುವುದು ಎಂದರೆ ಸುಲಭದ ಮಾತಲ್ಲ. ಅವರ ಈ ಯಶಸ್ಸು ಸಾವಿರಾರು ಯುವಕ-ಯುವತಿಯರಿಗೆ ಸ್ಫೂರ್ತಿ ನೀಡಿದೆ. ಇದೇ ವೇಳೆ, ಪೂಜಾ ಅವರ ತಂಗಿ ಕೂಡ ಪೊಲೀಸ್ ಇಲಾಖೆಯ ಕಾನ್&zwnj;ಸ್ಟೆಬಲ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಒಂದೇ ಮನೆಯ ಇಬ್ಬರು ಹೆಣ್ಣುಮಕ್ಕಳು ಪೊಲೀಸ್ ಇಲಾಖೆಗೆ ಆಯ್ಕೆಯಾಗಿರುವುದು ಅವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಜಿಲ್ಲೆಗೇ ಹೆಮ್ಮೆ ತಂದಿದೆ. ಇವರ ಕಥೆ ಕೇಳಿದರೆ ಎಂಥವರಿಗೂ ಸ್ಫೂರ್ತಿ ಬಾರದೇ ಇರದು.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state-government-jobs/madhya-pradesh-laborer-sanman-daughters-state-government-jobs-elder-sister-si-another-constable/articleshow-2xv74kk"/>
        </item>
        <item>
            <title><![CDATA[ವಿಜಯಪುರದಲ್ಲಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ?; ಲಾಠಿ ಚಾರ್ಜ್ ಖಂಡಿಸಿದ ಬಿಜೆಪಿ ಮುಖಂಡ ವಿಜುಗೌಡ]]></title>
            <link>https://kannada.asianetnews.com/karnataka-districts/vijayapura-tikota-police-constable-exam-chaos-bjp-vijugouda-patil-alleges-congress-govt-failure/articleshow-43im2zl</link>
            <guid isPermaLink="true">https://kannada.asianetnews.com/karnataka-districts/vijayapura-tikota-police-constable-exam-chaos-bjp-vijugouda-patil-alleges-congress-govt-failure/articleshow-43im2zl</guid>
            <pubDate>Sun, 02 Aug 2026 20:21:24 +0530</pubDate>
            <description><![CDATA[&lt;p&gt;ವಿಜಯಪುರದ ತಿಕೋಟಾದಲ್ಲಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಗೊಂದಲವು ರಾಜಕೀಯ ತಿರುವು ಪಡೆದುಕೊಂಡಿದೆ. ಪರೀಕ್ಷಾ ವ್ಯವಸ್ಥೆಯ ವೈಫಲ್ಯ ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಆರೋಪಿಸಿದ್ದು, ಸರ್ಕಾರದ ರಾಜೀನಾಮೆಗೆ ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz1a16w9p1ev9xjwr3t73jt4,imgname-vijayapura-police-constable-exam-vijugowda-1785676733321.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಆ.02): ವಿ&lt;/strong&gt;ಜಯಪುರ ಜಿಲ್ಲೆಯ ತಿಕೋಟಾ (Tikota) ಪರೀಕ್ಷಾ ಕೇಂದ್ರದಲ್ಲಿ (Exam Centre) ನಡೆದಿದ್ದ ಎನ್ನಲಾದ ಪರೀಕ್ಷಾ (Exam) ಗೊಂದಲ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಜಿಲ್ಲಾ ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಠಿ (Press Conference) ನಡೆಸಿದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ (Vijugouda Patil), ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಪರೀಕ್ಷಾರ್ಥಿಗಳನ್ನು (Candidates) ಪೊಲೀಸರು ಬಲವಂತವಾಗಿ ಕರೆದೊಯ್ಯುತ್ತಿರುವ ವಿಡಿಯೋ (Video) ಪ್ರದರ್ಶಿಸಿದ ಅವರು, ಪರೀಕ್ಷೆ (Exam) ನಡೆಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ದೂರದ ಧಾರವಾಡ (Dharwad) ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳಿಗೆ (Candidates) ಸರಿಯಾದ ವ್ಯವಸ್ಥೆ (Arrangements) ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಿದರು.&lt;/p&gt;&lt;h2&gt;&lt;strong&gt;11.15ರವರೆಗೆ ಪ್ರಶ್ನೆಪತ್ರಿಕೆ ಕೊಟ್ಟಿಲ್ಲ:&lt;/strong&gt;&lt;/h2&gt;&lt;p&gt;ವಿಜುಗೌಡ ಪಾಟೀಲ್ ಅವರ ಆರೋಪದ ಪ್ರಕಾರ, ಬೆಳಿಗ್ಗೆ ಸುಮಾರು 11.15 ಗಂಟೆಯವರೆಗೂ ಅನೇಕ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ (Question Paper) ಹಾಗೂ ಒಎಂಆರ್ ಶೀಟ್ (OMR Sheet) ವಿತರಣೆ ಮಾಡಲಾಗಿಲ್ಲ. ಕೆಲವು ಕಡೆ OMR ಶೀಟ್ ಸಂಖ್ಯೆ (OMR Number) ಮತ್ತು ಪ್ರಶ್ನೆಪತ್ರಿಕೆ ಸಂಖ್ಯೆ (Question Paper Number) ಹೊಂದಿಕೆಯಾಗದ ಕಾರಣ ಪರೀಕ್ಷಾರ್ಥಿಗಳು ಗೊಂದಲಕ್ಕೆ ಸಿಲುಕಿದರು ಎಂದು ಹೇಳಿದರು.&lt;/p&gt;&lt;p&gt;ಈ ಸಮಸ್ಯೆಯನ್ನು ಅಧಿಕಾರಿಗಳ (Officials) ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಗಲಿಲ್ಲ. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಪರೀಕ್ಷಾ ಕೇಂದ್ರದ (Exam Centre) ಹೊರಗಡೆಯೇ ಉಳಿಯುವಂತಾಯಿತು ಎಂದು ಅವರು ಆರೋಪಿಸಿದರು.&lt;/p&gt;&lt;p&gt;ಪರಿಸ್ಥಿತಿಯನ್ನು ಸಮಾಧಾನದಿಂದ ನಿಭಾಯಿಸುವ ಬದಲು ಪೊಲೀಸರು (Police) ಲಾಠಿಚಾರ್ಜ್ (Lathi Charge) ನಡೆಸಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ವಿಜುಗೌಡ ಪಾಟೀಲ್ ಗಂಭೀರ ಆರೋಪ ಮಾಡಿದರು. ಪರೀಕ್ಷೆಗೆ (Exam) ಬಂದ ಯುವಕರ ಮೇಲೆ ದೌರ್ಜನ್ಯ (Police Excess) ನಡೆದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;p&gt;ಈ ಘಟನೆಗೆ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವರು (Education Minister), ಉಸ್ತುವಾರಿ ಸಚಿವರು (District In-charge Minister) ಹಾಗೂ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು. 'ಇತರ ರಾಜ್ಯಗಳಲ್ಲಿ ಇಂತಹ ವೈಫಲ್ಯಗಳಿಗೆ ಸಚಿವರು ರಾಜೀನಾಮೆ ನೀಡಿದ ಉದಾಹರಣೆಗಳಿವೆ. ಹಾಗಿದ್ದರೆ ಕರ್ನಾಟಕದಲ್ಲಿ (Karnataka) ಹೊಣೆಗಾರಿಕೆ ಯಾರು ಹೊರುತ್ತಾರೆ?' ಎಂದು ಪ್ರಶ್ನಿಸಿದರು.&lt;/p&gt;&lt;p&gt;ಅಧಿಕಾರಿಗಳ ನಿರ್ಲಕ್ಷ್ಯ (Negligence) ಹಾಗೂ ಪರೀಕ್ಷಾ ವ್ಯವಸ್ಥೆಯ (Examination System) ವೈಫಲ್ಯದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ (Students Future) ಧಕ್ಕೆಯಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.&lt;/p&gt;&lt;p&gt;&amp;nbsp;&lt;/p&gt;&amp;nbsp;&amp;nbsp;&amp;nbsp;&amp;nbsp;View this post on Instagram&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&lt;p&gt;A post shared by    (@kirik_nanmaklu_official)&lt;/p&gt;&lt;p&gt;&amp;nbsp;&lt;/p&gt;&lt;p&gt;&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/vijayapura-tikota-police-constable-exam-chaos-bjp-vijugouda-patil-alleges-congress-govt-failure/articleshow-43im2zl"/>
        </item>
        <item>
            <title><![CDATA[KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್ ಬೆನ್ನಲ್ಲೇ ಡಾ.ಪ್ರಭುದೇವ್‌ಗೆ ಹಂಗಾಮಿ ಜವಾಬ್ದಾರಿ! ಇವರ ಹಿನ್ನೆಲೆ?]]></title>
            <link>https://kannada.asianetnews.com/state/kpsc-chairman-shivashankarappa-sahukar-suspended-interim-head-dr-prabhudev-details/articleshow-571g5i9</link>
            <guid isPermaLink="true">https://kannada.asianetnews.com/state/kpsc-chairman-shivashankarappa-sahukar-suspended-interim-head-dr-prabhudev-details/articleshow-571g5i9</guid>
            <pubDate>Mon, 13 Jul 2026 20:05:47 +0530</pubDate>
            <description><![CDATA[ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್&zwnj;ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಗಂಭೀರ ಆರೋಪಗಳ ಮೇಲೆ ರಾಜ್ಯಪಾಲರು ಅಮಾನತುಗೊಳಿಸಿದ್ದಾರೆ. ತಮ್ಮ ಪುತ್ರಿಯರಿಗೆ ಅಕ್ರಮವಾಗಿ ಹುದ್ದೆ ಕೊಡಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪ ಅವರ ಮೇಲಿದ್ದು, ಡಾ. ಬಿ. ಪ್ರಭುದೇವ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxdyebfa80vjz0qk2w6mdp7s,imgname-kpsc-interim-head-dr-prabhudev-1783953305064.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜು.13): ಕ&lt;/strong&gt;ರ್ನಾಟಕ ಲೋಕಸೇವಾ ಆಯೋಗ (Karnataka Public Service Commission - KPSC) ದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಆಯೋಗದ ಅಧ್ಯಕ್ಷರಾಗಿದ್ದ (Chairman) ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲ (Governor) ಥಾವರ್&zwnj;ಚಂದ್ ಗೆಹ್ಲೋಟ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ (Suspended) ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಭ್ರಷ್ಟಾಚಾರ (Corruption) ಮತ್ತು ಸ್ವಜನಪಕ್ಷಪಾತದ (Favoritism) ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ, ಆಯೋಗದ ಹಿರಿಯ ಸದಸ್ಯರಾದ ಡಾ. ಬಿ. ಪ್ರಭುದೇವ್ ಅವರನ್ನು ಕೆಪಿಎಸ್&zwnj;ಸಿಯ ಹಂಗಾಮಿ ಅಧ್ಯಕ್ಷರನ್ನಾಗಿ (Interim Chairman) ನೇಮಕ ಮಾಡಲಾಗಿದೆ.&lt;/p&gt;&lt;h2&gt;&lt;strong&gt;ಅಮಾನತಿಗೆ ಕಾರಣವೇನು? (Reasons for Suspension)&lt;/strong&gt;&lt;/h2&gt;&lt;p&gt;ರಾಜ್ಯಪಾಲರು ಹೊರಡಿಸಿರುವ ಸುದೀರ್ಘ ಆದೇಶದ (Order) ಪ್ರತಿಗಳ ಪ್ರಕಾರ, ಶಿವಶಂಕರಪ್ಪ ಸಾಹುಕಾರ್ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ (Abuse of Power) ಮಾಡಿಕೊಂಡು ತಮ್ಮ ಇಬ್ಬರು ಪುತ್ರಿಯರನ್ನು ಕೈಗಾರಿಕಾ ವಿಸ್ತರಣಾಧಿಕಾರಿ (Industrial Extension Officer - IEO) ಹುದ್ದೆಗಳಿಗೆ ಅಕ್ರಮವಾಗಿ ಆಯ್ಕೆ ಮಾಡಲು ನೆರವಾಗಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾರೆ.&lt;/p&gt;&lt;p&gt;ಪ್ರಮುಖವಾಗಿ, ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ಅವರು ಓಬಿಸಿ 3ಬಿ (OBC 3B) ಮೀಸಲಾತಿಯಡಿ ಆಯ್ಕೆಯಾಗಲು ವಾರ್ಷಿಕ ಆದಾಯ ಕೇವಲ 40,000 ರೂ. ಇದೆ ಎಂಬ ಸುಳ್ಳು ಆದಾಯ ಪ್ರಮಾಣಪತ್ರವನ್ನು (Fraudulent Income Certificate) ಸಲ್ಲಿಸಿದ್ದರು. ಆದರೆ, ಶಿವಶಂಕರಪ್ಪ ಅವರ ವಾರ್ಷಿಕ ಆದಾಯ 12 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿದ್ದು, ಅವರ ಮಕ್ಕಳು 'ಕ್ರೀಮಿ ಲೇಯರ್' (Creamy Layer) ವ್ಯಾಪ್ತಿಗೆ ಬರುತ್ತಾರೆ. ಹೀಗಿದ್ದರೂ ಸುಳ್ಳು ದಾಖಲೆ ನೀಡಿ ಸರ್ಕಾರಕ್ಕೆ ವಂಚಿಸಿರುವುದು ಮೇಲ್ನೋಟಕ್ಕೆ (Prima Facie) ಸಾಬೀತಾಗಿದೆ. ಅಲ್ಲದೆ, ಆಯ್ಕೆ ಪ್ರಕ್ರಿಯೆಯಲ್ಲಿ (Selection Process) ತಮ್ಮ ಮಕ್ಕಳೇ ಅಭ್ಯರ್ಥಿಗಳಾಗಿದ್ದರೂ ಅಧ್ಯಕ್ಷರು ಆ ಪ್ರಕ್ರಿಯೆಯಿಂದ ದೂರ ಉಳಿಯದೆ (Recusal) ಹಿತಾಸಕ್ತಿ ಸಂಘರ್ಷದ (Conflict of Interest) ನಿಯಮ ಉಲ್ಲಂಘಿಸಿದ್ದಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಯಾರು ಈ ಡಾ. ಬಿ. ಪ್ರಭುದೇವ್?&lt;/strong&gt;&lt;/h2&gt;&lt;p&gt;ಶಿವಶಂಕರಪ್ಪ ಅವರ ಅಮಾನತಿನಿಂದ ತೆರವಾದ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಾ. ಬಿ. ಪ್ರಭುದೇವ್ (Dr. B. Prabhudev) ಅವರು 2021 ರಿಂದ ಕೆಪಿಎಸ್&zwnj;ಸಿ ಸದಸ್ಯರಾಗಿ (Member) ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೆಪಿಎಸ್&zwnj;ಸಿಯಲ್ಲಿ ತರಲಾದ ಹಲವು ಪ್ರಮುಖ ಸುಧಾರಣೆಗಳು (Reforms) ಮತ್ತು ಬದಲಾವಣೆಗಳಲ್ಲಿ ಇವರು ಮಹತ್ತರ ಪಾತ್ರ ವಹಿಸಿದ್ದರು. ಇವರ ದಕ್ಷತೆ ಮತ್ತು ಹಿರಿತನವನ್ನು (Seniority) ಪರಿಗಣಿಸಿ ರಾಜ್ಯಪಾಲರು ಇವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಸಂವಿಧಾನದ 317(2) ಅಡಿಯಲ್ಲಿ ಕ್ರಮ&lt;/strong&gt;&lt;/h2&gt;&lt;p&gt;ರಾಜ್ಯಪಾಲರು ಭಾರತ ಸಂವಿಧಾನದ ವಿಧಿ 317(2) (Article 317(2) of the Constitution) ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಬಳಸಿ ಈ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಮೂಲಕ ತನಿಖೆ ನಡೆಸಲು ರಾಷ್ಟ್ರಪತಿಗಳಿಗೆ (President of India) ಶಿಫಾರಸು ಮಾಡಲಾಗಿದೆ. ತನಿಖೆ ಮುಗಿಯುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರು ಕಚೇರಿ ಕೆಲಸಗಳಲ್ಲಿ ಭಾಗವಹಿಸುವಂತಿಲ್ಲ.&lt;/p&gt;&lt;p&gt;ಲಕ್ಷಾಂತರ ಅಭ್ಯರ್ಥಿಗಳ (Candidates) ಭವಿಷ್ಯವನ್ನು ನಿರ್ಧರಿಸುವ ಸಾಂವಿಧಾನಿಕ ಸಂಸ್ಥೆಯ (Constitutional Body) ಮುಖ್ಯಸ್ಥರೇ ಇಂತಹ ಆರೋಪಕ್ಕೆ ಗುರಿಯಾಗಿರುವುದು ಸಾರ್ವಜನಿಕ ನಂಬಿಕೆಗೆ (Public Confidence) ಧಕ್ಕೆ ತಂದಿದೆ. ನೂತನ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರು ಆಯೋಗದ ಪಾರದರ್ಶಕತೆಯನ್ನು (Transparency) ಮರುಸ್ಥಾಪಿಸುತ್ತಾರೆಯೇ ಎಂದು ಕಾದು ನೋಡಬೇಕಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/kpsc-chairman-shivashankarappa-sahukar-suspended-interim-head-dr-prabhudev-details/articleshow-571g5i9"/>
        </item>
        <item>
            <title><![CDATA[ಕರ್ನಾಟಕ ಲೋಕಾಯುಕ್ತ ನೇಮಕಾತಿ 2026: ಕ್ಲರ್ಕ್, ಟೈಪಿಸ್ಟ್ ಹುದ್ದೆ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!]]></title>
            <link>https://kannada.asianetnews.com/jobs/karnataka-lokayukta-recruitment-2026-apply-online-for-clerk-and-typist-posts-salary-up-to-67600-gdp/articleshow-61odw3i</link>
            <guid isPermaLink="true">https://kannada.asianetnews.com/jobs/karnataka-lokayukta-recruitment-2026-apply-online-for-clerk-and-typist-posts-salary-up-to-67600-gdp/articleshow-61odw3i</guid>
            <pubDate>Sat, 18 Jul 2026 13:33:53 +0530</pubDate>
            <description><![CDATA[ಕರ್ನಾಟಕ ಲೋಕಾಯುಕ್ತವು 25 ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪಾಸಾದ ಅರ್ಹ ಅಭ್ಯರ್ಥಿಗಳು ಆನ್&zwnj;ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ 67,600 ರೂ. ವರೆಗೆ ವೇತನ ನೀಡಲಾಗುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwjpwac1efee4yf0v117axvs,imgname----------------------95--1783039404417.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ಲೋಕಾಯುಕ್ತವು ಖಾಲಿ ಇರುವ ಕ್ಲರ್ಕ್ (ಗುಮಾಸ್ತ) ಮತ್ತು ಟೈಪಿಸ್ಟ್ (ಬೆರಳಚ್ಚುಗಾರ) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್&zwnj;ಲೈನ್&zwnj; ಮೂಲಕ ಅರ್ಜಿ ಸಲ್ಲಸಬಹುದು.&lt;/p&gt;&lt;h2&gt;ಹುದ್ದೆಗಳ ವಿವರ:&lt;/h2&gt;&lt;p&gt;ಸಂಸ್ಥೆಯ ಹೆಸರು: ಕರ್ನಾಟಕ ಲೋಕಾಯುಕ್ತ&lt;/p&gt;&lt;p&gt;ಒಟ್ಟು ಹುದ್ದೆಗಳ ಸಂಖ್ಯೆ: 25&lt;/p&gt;&lt;p&gt;ಹುದ್ದೆಯ ಹೆಸರು: ಕ್ಲರ್ಕ್ ಮತ್ತು ಟೈಪಿಸ್ಟ್&lt;/p&gt;&lt;p&gt;ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)&lt;/p&gt;&lt;h2&gt;ಶೈಕ್ಷಣಿಕ ಅರ್ಹತೆ:&lt;/h2&gt;&lt;p&gt;ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ ಪೂರ್ಣಗೊಳಿಸಿರಬೇಕು.&lt;/p&gt;&lt;h2&gt;ವೇತನ:&lt;/h2&gt;&lt;p&gt;ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 34,100-67,600 ರು. ವರೆಗೆ ವೇತನವನ್ನು ನೀಡಲಾಗುತ್ತದೆ&lt;/p&gt;&lt;h2&gt;ವಯೋಮಿತಿ:&lt;/h2&gt;&lt;p&gt;ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.&lt;/p&gt;&lt;h3&gt;ವಯೋಮಿತಿ ಸಡಿಲಿಕೆ:&lt;/h3&gt;&lt;p&gt;2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ&lt;/p&gt;&lt;p&gt;ಎಸ್&zwnj;ಸಿ/ಎಸ್&zwnj;ಟಿ ಅಭ್ಯರ್ಥಿಗಳಿಗೆ: 5 ವರ್ಷ&lt;/p&gt;&lt;h2&gt;ಅರ್ಜಿ ಶುಲ್ಕದ ವಿವರ&lt;/h2&gt;&lt;p&gt;ಕ್ಯಾಟ್ 2A, 2B, 3A, 3B, ಮಾಜಿ ಸೇವಾ ಅಭ್ಯರ್ಥಿಗಳಿಗೆ: 250&lt;/p&gt;&lt;p&gt;ಎಸ್&zwnj;ಸಿ/ಎಸ್&zwnj;ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ&lt;/p&gt;&lt;p&gt;ಪಾವತಿ ವಿಧಾನ: ಆನ್&zwnj;ಲೈನ್&lt;/p&gt;&lt;h2&gt;ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?&lt;/h2&gt;&lt;p&gt;ಮೆರಿಟ್ ಪಟ್ಟಿ&lt;/p&gt;&lt;p&gt;ಸಂದರ್ಶನ&lt;/p&gt;&lt;h2&gt;ಅರ್ಜಿ ಸಲ್ಲಿಸುವುದು ಹೇಗೆ:&lt;/h2&gt;&lt;p&gt;ಮೊದಲು ಕರ್ನಾಟಕ ಲೋಕಾಯುಕ್ತದ ಅಧಿಕೃತ ವೆಬ್&zwnj;ಸೈಟ್&zwnj;ಗೆ ಭೇಟಿ ನೀಡಿ ಅಥವಾ ಕೆಳಗಿನ ಲಿಂಕ್ ಬಳಸಿ.&lt;/p&gt;&lt;p&gt;https://lokayukta.karnataka.gov.in/onlinerecruitment/ctk/home.php&lt;/p&gt;&lt;p&gt;ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್&zwnj;ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.&lt;/p&gt;&lt;p&gt;ನಿಮ್ಮ ಇತ್ತೀಚಿನ ಛಾಯಾಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ಅಪ್&zwnj;ಲೋಡ್ ಮಾಡಿ.&lt;/p&gt;&lt;p&gt;ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್&zwnj;ಲೈನ್ ಮೂಲಕ ಪಾವತಿಸಿ.&lt;/p&gt;&lt;p&gt;ಕೊನೆಯದಾಗಿ, ಎಲ್ಲವನ್ನೂ ಮರುಪರಿಶೀಲಿಸಿ &lsquo;Submit&rsquo; ಬಟನ್ ಒತ್ತಿ. ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಫಾರ್ಮ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.&lt;/p&gt;&lt;h2&gt;ಪ್ರಮುಖ ದಿನಾಂಕಗಳು&lt;/h2&gt;&lt;p&gt;ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ: ಜುಲೈ 17-2026&lt;/p&gt;&lt;p&gt;ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್&zwnj; 17-2026&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/jobs/karnataka-lokayukta-recruitment-2026-apply-online-for-clerk-and-typist-posts-salary-up-to-67600-gdp/articleshow-61odw3i"/>
        </item>
        <item>
            <title><![CDATA[ಬೆಂಗಳೂರಿನಲ್ಲಿ ಖಾಕಿ ಖದೀಮರು: ಎಸ್‌ಐ ಯೇಸುದಾಸ್, ಪೇದೆ ಸಂತೋಷ್ ವಿರುದ್ಧ ಕಮಿಷನರ್‌ಗೆ ರಾಬರಿ ದೂರು!]]></title>
            <link>https://kannada.asianetnews.com/gallery/karnataka-districts/bengaluru-varthur-police-robbery-case-psi-yesudas-pc-santosh-naik-cctv-evidence-allegations-65b8b1g</link>
            <guid isPermaLink="true">https://kannada.asianetnews.com/gallery/karnataka-districts/bengaluru-varthur-police-robbery-case-psi-yesudas-pc-santosh-naik-cctv-evidence-allegations-65b8b1g</guid>
            <pubDate>Tue, 28 Jul 2026 12:54:18 +0530</pubDate>
            <description><![CDATA[&lt;p&gt;ಕೌಟುಂಬಿಕ ಕಲಹದ ಕೇಸ್ ಇತ್ಯರ್ಥಪಡಿಸುವ ನೆಪದಲ್ಲಿ ಬೆಂಗಳೂರಿನ ವರ್ತೂರು ಠಾಣೆಯ ಪೊಲೀಸರು ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ. ಪಿಎಸ್&zwnj;ಐ ಮತ್ತು ಪೇದೆಯೊಬ್ಬರು 137 ಗ್ರಾಂ ಚಿನ್ನ ಹಾಗೂ ಲಕ್ಷಾಂತರ ರೂಪಾಯಿ ನಗದು ದೋಚಿದ್ದು, ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyks44e426r7eavexj58jk27,imgname-bengaluru-police-robbery-allegation-1785222795716.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೌಟುಂಬಿಕ ಕಲಹದ ಕೇಸ್ ಇತ್ಯರ್ಥಪಡಿಸುವ ನೆಪದಲ್ಲಿ ಬೆಂಗಳೂರಿನ ವರ್ತೂರು ಠಾಣೆಯ ಪೊಲೀಸರು ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ. ಪಿಎಸ್&zwnj;ಐ ಮತ್ತು ಪೇದೆಯೊಬ್ಬರು 137 ಗ್ರಾಂ ಚಿನ್ನ ಹಾಗೂ ಲಕ್ಷಾಂತರ ರೂಪಾಯಿ ನಗದು ದೋಚಿದ್ದು, ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು: ಜ&lt;/strong&gt;ನರ ಆಸ್ತಿ, ಪಾಸ್ತಿ ಹಾಗೂ ಜೀವರಕ್ಷಣೆ ಮಾಡಬೇಕಾದ ಪೊಲೀಸರೇ ಖದೀಮರಂತೆ (Robbers) ಮನೆಗೆ ನುಗ್ಗಿ ದರೋಡೆ ಮಾಡಿರುವ ಅತಿ ಆಘಾತಕಾರಿ ಘಟನೆ ಸಿಲಿಕ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕೌಟುಂಬಿಕ ಕಲಹದ (Domestic Dispute) ಕೇಸ್ ಇತ್ಯರ್ಥ ಪಡಿಸುವ ನೆಪದಲ್ಲಿ ಮನೆಗೆ ನುಗ್ಗಿದ ಪೊಲೀಸರು, ಬರೋಬ್ಬರಿ 137 ಗ್ರಾಂ ಚಿನ್ನ ಹಾಗೂ ಲಕ್ಷಾಂತರ ರೂಪಾಯಿ ನಗದನ್ನು ದೋಚಿಕೊಂಡು ಹೋಗಿರುವ ಕರಾಳ ಕರ್ಮಕಾಂಡ ಬಯಲಾಗಿದೆ. ಈ ದರೋಡೆಯ ಸಂಪೂರ್ಣ ದೃಶ್ಯಾವಳಿಗಳು 'ಏಷ್ಯಾನೆಟ್ ಸುವರ್ಣ ನ್ಯೂಸ್'ಗೆ (Asianet Suvarna News EXCLUSIVE) ಲಭ್ಯವಾಗಿದ್ದು, ಇಡೀ ರಾಜ್ಯ ಪೊಲೀಸ್ ಇಲಾಖೆಯ ಮಾನ ಹರಾಜಾಗಿದೆ.&lt;/p&gt;&lt;img&gt;&lt;p&gt;&lt;strong&gt;ವರ್ತೂರು ಪೊಲೀಸರ ವಿರುದ್ಧ ಕಮಿಷನರ್&zwnj;ಗೆ ದೂರು:&lt;/strong&gt;&lt;/p&gt;&lt;p&gt;ಈ ಕೃತ್ಯ ಎಸಗಿದ ವರ್ತೂರು ಪೊಲೀಸ್ ಠಾಣೆಯ (Varthur Police Station) ಪಿಎಸ್&zwnj;ಐ ಯೇಸುದಾಸ್ (PSI Yesudas) ಹಾಗೂ ಪೇದೆ ಸಂತೋಷ್ ನಾಯಕ್ (PC Santosh Naik) ವಿರುದ್ಧ ಉಮೇರಾ ಎಂಬ ಸಂತ್ರಸ್ತ ಮಹಿಳೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ (City Police Commissioner) ಬಿ.ದಯಾನಂದ್ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (SHRC) ಸಿಸಿಟಿವಿ (CCTV Footage) ಸಾಕ್ಷ್ಯಾಧಾರಗಳ ಸಮೇತ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಘಟನೆಯ ಹಿನ್ನೆಲೆ ಏನು?&lt;/strong&gt;&lt;/p&gt;&lt;p&gt;ಬೆಂಗಳೂರಿನ ವರ್ತೂರಿನ ಪ್ರಕಾಶ್ ಲೇಔಟ್ ನಿವಾಸಿ ಉಮೇರಾ ಅವರ ಮಗ ಜುನೈದ್ ಎಂಬುವವರ ಜೊತೆಗೆ ಕುಲ್ಸುಮ್ ಎಂಬಾಕೆಯ ಮದುವೆ ಇದೇ ವರ್ಷ ನಡೆದಿತ್ತು. ಮದುವೆಯಾಗಿ 4 ತಿಂಗಳ ನಂತರ ದಂಪತಿ ನಡುವೆ ಮನಸ್ತಾಪ ಉಂಟಾಗಿ, ಕುಲ್ಸುಮ್ ಗಂಡ ಮತ್ತು ಅತ್ತೆಗೆ ತಿಳಿಸದೇ ತವರು ಮನೆಗೆ ಹೋಗಿದ್ದಳು. ಹಲವು ಬಾರಿ ಮಾತುಕತೆ ನಡೆಸಿದರೂ ಆಕೆ ಗಂಡನ ಮನೆಗೆ ಬರಲಿಲ್ಲ. ಇತ್ತೀಚೆಗೆ ಕುಲ್ಸುಮ್ ವರ್ತೂರು ಪೊಲೀಸ್ ಠಾಣೆಯಲ್ಲಿ ಗಂಡ ಜುನೈದ್ ವಿರುದ್ಧ ಕೌಟುಂಬಿಕ ದೌರ್ಜನ್ಯ ದೂರು ನೀಡಿದ್ದಳು.&lt;/p&gt;&lt;img&gt;&lt;p&gt;&lt;strong&gt;20-30 ಜನರ ಗುಂಪು ಕರೆತಂದು ಪೊಲೀಸರಿಂದಲೇ ಲೂಟಿ!&lt;/strong&gt;&lt;/p&gt;&lt;p&gt;ಜುಲೈ 17ರಂದು &lsquo;ನಿಮ್ಮ ಮೇಲೆ ಕೇಸ್ ಇದೆ&rsquo; ಎಂದು ಹೇಳಿ ವರ್ತೂರು ಪಿಎಸ್&zwnj;ಐ ಯೇಸುದಾಸ್ ಹಾಗೂ ಪೇದೆ ಸಂತೋಷ್ ನಾಯಕ್, ದೂರುದಾರ ಕುಲ್ಸುಮ್, ಆಕೆಯ ತಂದೆ-ತಾಯಿ ಮತ್ತು ಬರೋಬ್ಬರಿ 20 ರಿಂದ 30 ಜನರ ಅಕ್ರಮ ಗುಂಪನ್ನು (Illegal Mob) ಕರೆದುಕೊಂಡು ಉಮೇರಾ ಅವರ ಮನೆಗೆ ಏಕಾಏಕಿ ನುಗ್ಗಿದ್ದಾರೆ. ನ್ಯಾಯಾಲಯದ ಯಾವುದೇ ಸರ್ಚ್ ವಾರಂಟ್ (Search Warrant) ಇಲ್ಲದೆ ಕಾನೂನುಬಾಹಿರವಾಗಿ ಮನೆಗೆ ನುಗ್ಗಿದ ಪೊಲೀಸರು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾರೆ.&lt;/p&gt;&lt;img&gt;&lt;p&gt;137 ಗ್ರಾಂ ಚಿನ್ನಾಭರಣ (Gold Jewellery)&lt;/p&gt;&lt;p&gt;₹5 ಲಕ್ಷ ನಗದು ಹಣ (Cash)&lt;/p&gt;&lt;p&gt;ಅಡುಗೆ ಮನೆಯಲ್ಲಿದ್ದ ₹10,000 ನಗದು (Kitchen Cash)&lt;/p&gt;&lt;p&gt;ಬೆಲೆಬಾಳುವ ಸೀರೆಗಳು, ಬ್ರಾಂಡೆಡ್ ವಾಚ್, ಕೂಲಿಂಗ್ ಗ್ಲಾಸ್ ಹಾಗೂ 3 ಮೊಬೈಲ್&zwnj;ಗಳು&lt;/p&gt;&lt;p&gt;ಪೇದೆ ಸಂತೋಷ್ ನಾಯಕ್ ಸ್ವತಃ ನಿಂತು ಮನೆಯಲ್ಲಿದ್ದ ವಸ್ತುಗಳನ್ನು ಜಾಲಾಡಿ, ಅಡುಗೆ ಮನೆಯಲ್ಲಿದ್ದ 10 ಸಾವಿರ ಹಣವನ್ನೂ ಬಿಡದೇ ಕದ್ದುಕೊಂಡು ಹೋಗಿದ್ದಾನೆ ಎಂದು ಉಮೇರಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಖಾಕಿ ಕಳಂಕ: ತೀವ್ರ ಆಕ್ರೋಶ!&lt;/strong&gt;&lt;/p&gt;&lt;p&gt;ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಪೊಲೀಸರು (Karnataka Police) ಹೊರ ರಾಜ್ಯಗಳಲ್ಲಿ ಅರೆಸ್ಟ್ ಆಗುವುದು, ಹಫ್ತಾ ವಸೂಲಿ, ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ಇಲಾಖೆಗೆ ಕಪ್ಪುಚುಕ್ಕೆ ತರುತ್ತಿದ್ದಾರೆ. ಈಗ ಬೆಂಗಳೂರಿನಲ್ಲೇ ರಕ್ಷಣೆ ನೀಡಬೇಕಾದ ಪೊಲೀಸರು ಸುಪಾರಿ ಗ್ಯಾಂಗ್&zwnj;ನಂತೆ ಮನೆಗೆ ನುಗ್ಗಿ ರಾಬರಿ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಪ್ಪಿತಸ್ಥ ಪಿಎಸ್&zwnj;ಐ ಹಾಗೂ ಪೇದೆಯನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಿ (Dismissal) ಜೈಲಿಗಟ್ಟಬೇಕು ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bengaluru-varthur-police-robbery-case-psi-yesudas-pc-santosh-naik-cctv-evidence-allegations-65b8b1g"/>
        </item>
        <item>
            <title><![CDATA[ಕೆಇಎ ಮಹತ್ವದ ಘೋಷಣೆ: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಸಮಯ ಬದಲು!]]></title>
            <link>https://kannada.asianetnews.com/state/kea-reschedules-kkr-civil-police-constable-exam-timing-on-august-2-for-candidate-convenience-gdp/articleshow-e8bed8d</link>
            <guid isPermaLink="true">https://kannada.asianetnews.com/state/kea-reschedules-kkr-civil-police-constable-exam-timing-on-august-2-for-candidate-convenience-gdp/articleshow-e8bed8d</guid>
            <pubDate>Wed, 29 Jul 2026 14:36:16 +0530</pubDate>
            <description><![CDATA[ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್&zwnj;ಟೇಬಲ್ (CPC) ನೇಮಕಾತಿಯ ಲಿಖಿತ ಪರೀಕ್ಷೆಯ ಸಮಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬದಲಾವಣೆ ಮಾಡಿದೆ. ಆಗಸ್ಟ್ 2ರಂದು ಮಧ್ಯಾಹ್ನ 2:30ಕ್ಕೆ ನಡೆಯಬೇಕಿದ್ದ ಪರೀಕ್ಷೆಯು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಂಜೆ 4:00 ಗಂಟೆಗೆ ಆರಂಭವಾಗಲಿದೆ. ಬೆಳಗಿನ ಅವಧಿಯ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.]]></description>
            <media:content url="https://static.asianetnews.com/images/w-1280,h-720,format-jpg,imgid-01kyjc1wzc8ppfjzt8211kc147,imgname-mixcollage-27-jul-2026-11-34-pm-4866-1785175536620.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್&zwnj;ಟೇಬಲ್ (CPC) ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂಬರುವ ಆಗಸ್ಟ್ 2ರಂದು (ಭಾನುವಾರ) ನಡೆಯಲಿರುವ ಲಿಖಿತ ಪರೀಕ್ಷೆಯ ಮಧ್ಯಾಹ್ನದ ಅವಧಿಯ ವೇಳಾಪಟ್ಟಿಯಲ್ಲಿ ಪ್ರಾಧಿಕಾರವು ಮಹತ್ವದ ಬದಲಾವಣೆ ಮಾಡಿದ್ದು, ಪರಿಷ್ಕೃತ ಸಮಯವನ್ನು ಪ್ರಕಟಿಸಿದೆ.&lt;/p&gt;&lt;p&gt;ಪೂರ್ವಾಪರ ನಿಗದಿಯಾಗಿದ್ದ ವೇಳಾಪಟ್ಟಿಯ ಪ್ರಕಾರ ಈ ಪರೀಕ್ಷೆಯು ಮಧ್ಯಾಹ್ನ 2:30ಕ್ಕೆ ಆರಂಭವಾಗಬೇಕಿತ್ತು. ಆದರೆ, ಈಗ ಪರಿಷ್ಕೃತ ನಿಯಮದನ್ವಯ ಪರೀಕ್ಷೆಯು ಮಧ್ಯಾಹ್ನದ ಬದಲಿಗೆ ಸಂಜೆ 4:00 ಗಂಟೆಗೆ ಆರಂಭವಾಗಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.&lt;/p&gt;&lt;h2&gt;ಸಮಯ ಬದಲಾವಣೆಗೆ ಕಾರಣವೇನು?&lt;/h2&gt;&lt;p&gt;ಪರೀಕ್ಷಾ ಪ್ರಾಧಿಕಾರದ ಈ ಹಠಾತ್ ನಿರ್ಧಾರದ ಹಿಂದೆ ಅಭ್ಯರ್ಥಿಗಳ ಹಿತರಕ್ಷಣೆ ಅಡಗಿದೆ. ರಾಜ್ಯದಾದ್ಯಂತ ಹಲವು ಅಭ್ಯರ್ಥಿಗಳಿಗೆ ಬೆಳಗಿನ ಅವಧಿಯಲ್ಲಿ ಒಂದು ಪರೀಕ್ಷಾ ಕೇಂದ್ರ ಹಾಗೂ ಮಧ್ಯಾಹ್ನದ ಅವಧಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿದ್ದವು. ಕೆಲವು ಅಭ್ಯರ್ಥಿಗಳಿಗೆ ಈ ಎರಡು ಕೇಂದ್ರಗಳ ನಡುವಿನ ಅಂತರವು ಅತ್ಯಂತ ಹೆಚ್ಚಾಗಿದ್ದು, ನಿಗದಿತ ಸಮಯದೊಳಗೆ ತಲುಪುವುದು ತೀವ್ರ ಕಷ್ಟಸಾಧ್ಯವಾಗಿತ್ತು.&lt;/p&gt;&lt;p&gt;ಬೆಳಗಿನ ಪರೀಕ್ಷೆ ಮುಗಿದ ತಕ್ಷಣ, ದೂರದ ಊರು ಅಥವಾ ದೂರದ ಪ್ರದೇಶದಲ್ಲಿರುವ ಮಧ್ಯಾಹ್ನದ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಸಮಯದಲ್ಲಿ ಪ್ರಯಾಣ ಬೆಳೆಸುವುದು ಅಭ್ಯರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ಉಂಟುಮಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಉಂಟಾಗಬಹುದಾದ ಸಂಚಾರ ದಟ್ಟಣೆ ಹಾಗೂ ಸಾರಿಗೆ ಸಮಸ್ಯೆಯನ್ನು ಮನಗಂಡ ಹಲವು ಅಭ್ಯರ್ಥಿಗಳು ಮತ್ತು ಪೋಷಕರು ಪ್ರಾಧಿಕಾರಕ್ಕೆ ಮನವಿ ಮಾಡಿದ್ದರು. ಅಭ್ಯರ್ಥಿಗಳ ಈ ನ್ಯಾಯಸಮ್ಮತವಾದ ಆತಂಕ ಹಾಗೂ ಹಿತದೃಷ್ಟಿಯನ್ನು ಗಂಭೀರವಾಗಿ ಪರಿಗಣಿಸಿದ ಕೆಇಎ, ಅವರು ನಿರಾಳವಾಗಿ ಪರೀಕ್ಷಾ ಕೇಂದ್ರವನ್ನು ತಲುಪಲು ಅನುಕೂಲವಾಗುವಂತೆ ಪರೀಕ್ಷೆಯನ್ನು ಒಂದೂವರೆ ಗಂಟೆ ತಡವಾಗಿ ಆರಂಭಿಸಲು ನಿರ್ಧರಿಸಿದೆ.&lt;/p&gt;&lt;h2&gt;ಪರಿಷ್ಕೃತ ಪರೀಕ್ಷಾ ಅವಧಿ ಹೀಗಿದೆ:&lt;/h2&gt;&lt;p&gt;ಹೊಸ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ 2ರ ಎರಡನೇ ಅವಧಿಯ ಲಿಖಿತ ಪರೀಕ್ಷೆಯು ಸಂಜೆ 4:00 ಗಂಟೆಗೆ ಪ್ರಾರಂಭವಾಗಿ, ಸಂಜೆ 5:30 ರವರೆಗೆ ನಡೆಯಲಿದೆ.&lt;/p&gt;&lt;p&gt;ಪರೀಕ್ಷೆ ನಡೆಯುವ ದಿನಾಂಕ: ಆಗಸ್ಟ್ 2&lt;/p&gt;&lt;p&gt;ಪರಿಷ್ಕೃತ ಆರಂಭಿಕ ಸಮಯ: ಸಂಜೆ 4:00 ಗಂಟೆಗೆ (ಹಳೆಯ ಸಮಯ: ಮಧ್ಯಾಹ್ನ 2:30)&lt;/p&gt;&lt;p&gt;ಪರೀಕ್ಷೆ ಮುಕ್ತಾಯದ ಸಮಯ: ಸಂಜೆ 5:30 ರವರೆಗೆ&lt;/p&gt;&lt;h2&gt;ಬೆಳಗಿನ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ!&lt;/h2&gt;&lt;p&gt;ಇದೇ ವೇಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳಿಗೆ ಮತ್ತೊಂದು ಪ್ರಮುಖ ಸ್ಪಷ್ಟನೆಯನ್ನು ನೀಡಿದೆ. ಮಧ್ಯಾಹ್ನದ ನಂತರದ ಪರೀಕ್ಷಾ ಸಮಯದಲ್ಲಿ ಮಾತ್ರ ಬದಲಾವಣೆ ಮಾಡಲಾಗಿದ್ದು, ಅಂದು ಬೆಳಗಿನ ಅವಧಿಯಲ್ಲಿ ನಡೆಯಲಿರುವ ಪರೀಕ್ಷೆಗಳು ಮುಂಚಿತವಾಗಿ ನಿಗದಿಯಾಗಿದ್ದ ವೇಳಾಪಟ್ಟಿಯಂತೆಯೇ ಯಾವುದೇ ಅಡೆತಡೆಯಿಲ್ಲದೆ ನಡೆಯಲಿವೆ. ಬೆಳಗಿನ ಪರೀಕ್ಷೆಯ ಸಮಯದಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಕೆಇಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.&lt;/p&gt;&lt;p&gt;ಹೀಗಾಗಿ ಅಭ್ಯರ್ಥಿಗಳು ಗೊಂದಲಕ್ಕೊಳಗಾಗದೆ, ಬೆಳಗಿನ ಪರೀಕ್ಷೆಗೆ ಎಂದಿನಂತೆ ಸಿದ್ಧರಾಗುವಂತೆ ಹಾಗೂ ಮಧ್ಯಾಹ್ನದ ಪರೀಕ್ಷೆಗೆ ಸಿಕ್ಕಿರುವ ಹೆಚ್ಚುವರಿ ಸಮಯವನ್ನು ಸದುಪಯೋಗಪಡಿಸಿಕೊಂಡು ಪ್ರಶಾಂತ ಮನಸ್ಸಿನಿಂದ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕೋರಲಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/state/kea-reschedules-kkr-civil-police-constable-exam-timing-on-august-2-for-candidate-convenience-gdp/articleshow-e8bed8d"/>
        </item>
        <item>
            <title><![CDATA[ಚನ್ನಪಟ್ಟಣದ ಪುರುಷ ತಹಸೀಲ್ದಾರರಿಗೆ ಅಸಹಜ ಲೈಂಗಿಕ ದೌರ್ಜನ್ಯ; ಮೈಸೂರಿನ ಮೂವರಿಂದ ನಡೆದೇಹೋಯ್ತು ವಿಕೃತಿ!]]></title>
            <link>https://kannada.asianetnews.com/karnataka-districts/bengaluru-south-district-channapatna-tahsildar-physical-harassment-life-threat-attempt-case-anush-arrest/articleshow-ex76evb</link>
            <guid isPermaLink="true">https://kannada.asianetnews.com/karnataka-districts/bengaluru-south-district-channapatna-tahsildar-physical-harassment-life-threat-attempt-case-anush-arrest/articleshow-ex76evb</guid>
            <pubDate>Tue, 07 Jul 2026 22:58:09 +0530</pubDate>
            <description><![CDATA[ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರ ಮೇಲೆ ಅವರ ಸರ್ಕಾರಿ ನಿವಾಸದಲ್ಲೇ ಲೈಂಗಿಕ ದೌರ್ಜನ್ಯ, ದರೋಡೆ ಮತ್ತು ಕೊಲೆ ಯತ್ನ ನಡೆದಿದೆ. ಫೇಸ್&zwnj;ಬುಕ್ ಮೂಲಕ ಪರಿಚಯವಾದ ವ್ಯಕ್ತಿಗಳು ಜ್ಯೂಸ್&zwnj;ನಲ್ಲಿ ಮಾತ್ರೆ ಬೆರೆಸಿ ಈ ಕೃತ್ಯ ಎಸಗಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwysw65hqw07ytprv13xhkqm,imgname-channapatna-tahsildar-1783445199025.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು ದಕ್ಷಿಣ/ರಾಮನಗರ (ಜು.07): ಜಿ&lt;/strong&gt;ಲ್ಲೆಯ ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ಲೈಂಗಿಕ ಕಿರುಕುಳ, ದರೋಡೆ ಹಾಗೂ ಕೊಲೆ ಯತ್ನಕ್ಕೆ ಒಳಗಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೇಸ್&zwnj;ಬುಕ್ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ತಹಶೀಲ್ದಾರ್ ಅವರ ಸರ್ಕಾರಿ ನಿವಾಸದಲ್ಲೇ ಈ ವಿಕೃತಿ ಎಸೆಗಿದ್ದಾನೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.&lt;/p&gt;&lt;h2&gt;&lt;strong&gt;ಪರಿಚಯವಾಗಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಮೈಸೂರು ಮೂಲದ ಅನುಶ್ ಎಂಬಾತನಿಗೆ ತಹಶೀಲ್ದಾರ್ ಗಿರೀಶ್ ಅವರ ಪರಿಚಯ ಫೇಸ್&zwnj;ಬುಕ್ ಮೂಲಕವಾಗಿತ್ತು. ಇದೇ ಸ್ನೇಹವನ್ನು ಬಳಸಿಕೊಂಡ ಅನುಶ್, ಕಳೆದ ಜೂನ್ 28ರಂದು ತನ್ನ ಸ್ನೇಹಿತರಾದ ಶೋಭರಾಜನ್ ಮತ್ತು ನವೀನ್ ಎಂಬುವವರ ಜೊತೆ ಚನ್ನಪಟ್ಟಣದಲ್ಲಿರುವ ತಹಶೀಲ್ದಾರ್ ಅವರ ಸರ್ಕಾರಿ ನಿವಾಸಕ್ಕೆ ಬಂದಿದ್ದನು.&lt;/p&gt;&lt;h2&gt;&lt;strong&gt;ಜೂಸ್&zwnj;ನಲ್ಲಿ ಮಾತ್ರೆ ಬೆರೆಸಿ ದೌರ್ಜನ್ಯ:&lt;/strong&gt;&lt;/h2&gt;&lt;p&gt;ದೂರಿನ ಪ್ರಕಾರ, ಅಂದು ರಾತ್ರಿ ತಹಶೀಲ್ದಾರ್ ನಿವಾಸದಲ್ಲೇ ಮದ್ಯಪಾನ ಮಾಡಿದ್ದ ಆರೋಪಿಗಳು, ನಂತರ ಗಿರೀಶ್ ಅವರಿಗೆ ನೀಡಿದ್ದ ಜೂಸ್&zwnj;ನಲ್ಲಿ ಮಂಕುಬೂದಿ ಅಥವಾ ಪ್ರಜ್ಞೆ ತಪ್ಪಿಸುವ ಮಾತ್ರೆಗಳನ್ನು ಬೆರೆಸಿದ್ದರು. ಜೂಸ್ ಕುಡಿದು ಗಿರೀಶ್ ಪ್ರಜ್ಞೆ ತಪ್ಪುತ್ತಿದ್ದಂತೆಯೇ, ಆರೋಪಿಗಳು ತಮ್ಮ ಅಸಲಿ ರೂಪ ತೋರಿಸಿದ್ದಾರೆ. ಗಿರೀಶ್ ಮೈಮೇಲಿದ್ದ ಬಟ್ಟೆಗಳನ್ನು ಬಿಚ್ಚಿ ವಿಕೃತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅಸಹಜ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.&lt;/p&gt;&lt;h2&gt;&lt;strong&gt;ಚಿನ್ನಾಭರಣ ದರೋಡೆ ಮತ್ತು 10 ಲಕ್ಷಕ್ಕೆ ಬೇಡಿಕೆ:&lt;/strong&gt;&lt;/h2&gt;&lt;p&gt;ಕಿಡಿಗೇಡಿಗಳು ತಹಶೀಲ್ದಾರ್ ಮೈಮೇಲಿದ್ದ ಚಿನ್ನದ ಸರ ಮತ್ತು ಉಂಗುರಗಳನ್ನು ಕಸಿದುಕೊಂಡಿದ್ದಾರೆ. ಅಷ್ಟಕ್ಕೇ ನಿಲ್ಲದ ಅವರು, 10 ಲಕ್ಷ ರೂಪಾಯಿ ಹಣ ನೀಡುವಂತೆ ತಹಶೀಲ್ದಾರ್ ಅವರಿಗೆ ಬೆದರಿಕೆ ಹಾಕಿದ್ದಾರೆ. ಗಿರೀಶ್ ಹಣ ನೀಡಲು ನಿರಾಕರಿಸಿದಾಗ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎನ್ನಲಾಗಿದೆ. ಜೂನ್ 29ರಂದು ನಡೆದ ಈ ಕೃತ್ಯದಿಂದ ತಹಶೀಲ್ದಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ಕ್ರಮ:&lt;/strong&gt;&lt;/h2&gt;&lt;p&gt;ಈ ಭೀಕರ ಘಟನೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಎ1 ಆರೋಪಿ ಅನುಶ್&zwnj;ನನ್ನು ಈಗಾಗಲೇ ಬಂಧಿಸಿ ಜೈಲಿಗಟ್ಟಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಅವರ ನಿವಾಸದಲ್ಲೇ ಇಂತಹ ದೌರ್ಜನ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bengaluru-south-district-channapatna-tahsildar-physical-harassment-life-threat-attempt-case-anush-arrest/articleshow-ex76evb"/>
        </item>
        <item>
            <title><![CDATA[ಕೋರ್ಟ್ ಮೆಟ್ಟಿಲೇರಿದ್ದ 341 OBC ಶಿಕ್ಷಕಿಯರಿಗೆ ಕೊನೆಗೂ ಸಿಕ್ತು ಮುಕ್ತಿ!; ಷರತ್ತುಬದ್ಧ ಸೇರ್ಪಡೆಗೆ ಶಾಲಾ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್!]]></title>
            <link>https://kannada.asianetnews.com/state-government-jobs/341-obc-married-women-allowed-to-join-as-govt-teachers-karnataka-hc-order-san/articleshow-g6pnaza</link>
            <guid isPermaLink="true">https://kannada.asianetnews.com/state-government-jobs/341-obc-married-women-allowed-to-join-as-govt-teachers-karnataka-hc-order-san/articleshow-g6pnaza</guid>
            <pubDate>Mon, 06 Jul 2026 18:55:42 +0530</pubDate>
            <description><![CDATA[&lt;p&gt;ಪ್ರಮಾಣಪತ್ರಗಳ ತಾಂತ್ರಿಕ ವಿವಾದದಿಂದ ನೇಮಕಾತಿ ವಂಚಿತರಾಗಿದ್ದ 341 ವಿವಾಹಿತ ಮಹಿಳಾ ಶಿಕ್ಷಕಿಯರಿಗೆ ಹೈಕೋರ್ಟ್ ಮಧ್ಯಂತರ ಆದೇಶದಿಂದ ರಿಲೀಫ್ ಸಿಕ್ಕಿದೆ. ಶಾಲಾ ಶಿಕ್ಷಣ ಇಲಾಖೆಯು ಷರತ್ತುಬದ್ಧ ಅನುಮತಿಯೊಂದಿಗೆ ಇವರಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwvskeas2yschdyd9d17tz48,imgname-karnataka-15000-teacher-recruitment-1783344249177.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜು.6):&lt;/strong&gt; ಸರ್ಕಾರಿ ಶಾಲೆಗಳ 6 ರಿಂದ 8ನೇ ತರಗತಿಗಳ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದರೂ, ಪ್ರಮಾಣಪತ್ರಗಳ ತಾಂತ್ರಿಕ ವಿವಾದದಿಂದಾಗಿ ನೇಮಕಾತಿ ವಂಚಿತರಾಗಿದ್ದ 481 ವಿವಾಹಿತ ಮಹಿಳಾ ಅಭ್ಯರ್ಥಿಗಳ ಪೈಕಿ 341 ಅಭ್ಯರ್ಥಿಗಳಿಗೆ ಕೊನೆಗೂ ದೊಡ್ಡ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಇತ್ತೀಚಿನ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ, ಈ 341 ಶಿಕ್ಷಕಿಯರು ಶಾಲೆಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಷರತ್ತುಬದ್ಧ ಅನುಮತಿ ನೀಡಿದೆ.&lt;/p&gt;&lt;p&gt;2026 ಜೂನ್ 24ರಂದು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಆಧರಿಸಿ ಶಾಲಾ ಶಿಕ್ಷಣ ಇಲಾಖೆಯು ಈ ಪ್ರಕಟಣೆ ಹೊರಡಿಸಿದೆ. ನೇಮಕಾತಿ ಆದೇಶ ಪಡೆದು ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಿದ್ದ 341 ಒಬಿಸಿ (OBC) ಮಹಿಳಾ ಅಭ್ಯರ್ಥಿಗಳಿಗೆ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಲು ಇಲಾಖೆ ಸಮ್ಮತಿಸಿದೆ. ಆದರೆ, &quot;ಈ ನೇಮಕಾತಿಯು ಪ್ರಸ್ತುತ ನ್ಯಾಯಾಲಯದ ಮುಂದೆ ಬಾಕಿ ಇರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ&quot; ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಇದೇ ವೇಳೆ, ಕೌನ್ಸೆಲಿಂಗ್ ತಡೆಹಿಡಿಯಲಾದ ಉಳಿದ 140 ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಹೊಸದಾಗಿ ಯಾವುದೇ ನೇಮಕಾತಿ ಆದೇಶಗಳನ್ನು ಸೃಷ್ಟಿಸಬಾರದು ಅಥವಾ ನೀಡಬಾರದು ಎಂದು ಶಿಕ್ಷಣ ಇಲಾಖೆ ಕಮಿಷನರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ವಿವಾದಕ್ಕೆ ಕಾರಣವಾಗಿದ್ದು ತಂದೆ ಮತ್ತು ಗಂಡನ ಆದಾಯ ಪ್ರಮಾಣಪತ್ರ!&lt;/strong&gt;&lt;/h2&gt;&lt;p&gt;ಈ ಇಡೀ ವಿವಾದದ ಮೂಲ ಇರುವುದು ಅಭ್ಯರ್ಥಿಗಳು ಸಲ್ಲಿಸಿದ ಜಾತಿ ಮತ್ತು ಆದಾಯ ಪ್ರಮಾಣಪತ್ರದಲ್ಲಿ (Caste and Income Certificate). ನೇಮಕಾತಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಈ ಒಬಿಸಿ ಮಹಿಳಾ ಅಭ್ಯರ್ಥಿಗಳು ಅವಿವಾಹಿತರಾಗಿದ್ದರು. ಹಾಗಾಗಿ ಅವರು ತಮ್ಮ ತಂದೆಯ ಹೆಸರಿನಲ್ಲಿರುವ ಪ್ರಮಾಣಪತ್ರಗಳನ್ನು ಲಗತ್ತಿಸಿದ್ದರು. ಆದರೆ, ಸ್ಪರ್ಧಾತ್ಮಕ ಪರೀಕ್ಷೆ ಮುಗಿದು, ಶಾರ್ಟ್&zwnj;ಲಿಸ್ಟ್ ಪ್ರಕಟವಾಗಿ, ದಾಖಲಾತಿ ಪರಿಶೀಲನೆ (Document Verification) ನಡೆಯುವ ವೇಳೆಗೆ ಇವರಲ್ಲಿ ಹಲವರಿಗೆ ಮದುವೆಯಾಗಿತ್ತು. ಇಲಾಖೆಯು ದಾಖಲಾತಿ ಪರಿಶೀಲನೆ ವೇಳೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ವಿವಾಹಿತ ಒಬಿಸಿ ಮಹಿಳೆಯರು ಕಡ್ಡಾಯವಾಗಿ ತಮ್ಮ &lsquo;ಗಂಡನ&rsquo; ಹೆಸರಿನಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನೇ ಸಲ್ಲಿಸಬೇಕು ಎಂದು ಪಟ್ಟು ಹಿಡಿಯಿತು. ಇದು ಸಾಧ್ಯವಾಗದಿದ್ದಾಗ 481 ಅಭ್ಯರ್ಥಿಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಇಲಾಖೆ ತಡೆಹಿಡಿದು, ಉಳಿದ ಅಭ್ಯರ್ಥಿಗಳ ನೇಮಕಾತಿಯನ್ನು ಪೂರ್ಣಗೊಳಿಸಿತ್ತು.&lt;/p&gt;&lt;h2&gt;&lt;strong&gt;ಸುಪ್ರೀಂ ಕೋರ್ಟ್ ಮತ್ತು ಕೆಎಸ್&zwnj;ಎಟಿ ಮೆಟ್ಟಿಲೇರಿದ್ದ ಅಭ್ಯರ್ಥಿಗಳು&lt;/strong&gt;&lt;/h2&gt;&lt;p&gt;ಇಲಾಖೆಯ ಈ ಹಠಾತ್ ನಿರ್ಧಾರವನ್ನು ಪ್ರಶ್ನಿಸಿ ನೊಂದ ಮಹಿಳಾ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KSAT), ರಾಜ್ಯ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವರೆಗೂ ಸುದೀರ್ಘ ಕಾನೂನು ಹೋರಾಟ ನಡೆಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ವಿವಾದವನ್ನು ಕೆಎಸ್&zwnj;ಎಟಿ (KSAT) ನಲ್ಲೇ ಇತ್ಯರ್ಥಪಡಿಸಿಕೊಳ್ಳುವಂತೆ ಅಂತಿಮ ಆದೇಶ ನೀಡಿತ್ತು. ಅದರಂತೆ ಸುದೀರ್ಘ ವಿಚಾರಣೆ ನಡೆಸಿದ ಕೆಎಸ್&zwnj;ಎಟಿ, 2026 ಏಪ್ರಿಲ್ 30 ರಂದು ಶಿಕ್ಷಕಿಯರ ಪರವಾಗಿ ಮಹತ್ವದ ತೀರ್ಪು ನೀಡಿತು ಹಾಗೂ ತಡೆಹಿಡಿಯಲಾದ ಅಭ್ಯರ್ಥಿಗಳ ಕೌನ್ಸೆಲಿಂಗ್ ನಡೆಸುವಂತೆ ಆದೇಶಿಸಿತು.&lt;/p&gt;&lt;p&gt;ಕೆಎಸ್&zwnj;ಎಟಿ ತೀರ್ಪನ್ನು ಅನುಸರಿಸಿ, ಶಾಲಾ ಶಿಕ್ಷಣ ಇಲಾಖೆಯು 2026 ಮೇ 16ರಂದು ಈ 481 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಈ ಅಂತಿಮ ಆಯ್ಕೆ ಪಟ್ಟಿಯನ್ನು ವಿರೋಧಿಸಿ ಮತ್ತೆ ಕೆಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದರು. ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣದ ಮೇಲೆ &lsquo;ಯಥಾಸ್ಥಿತಿ&rsquo; (Status Quo) ಕಾಯ್ದುಕೊಳ್ಳುವಂತೆ ಆದೇಶ ನೀಡಿತು. ಕೋರ್ಟ್&zwnj;ನ ಈ ಆದೇಶಕ್ಕೆ ಗೌರವ ನೀಡಿ ಇಲಾಖೆಯು ತಾನು ನೀಡಿದ್ದ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿತ್ತು.&lt;/p&gt;&lt;h2&gt;&lt;strong&gt;15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯ ಸುದೀರ್ಘ ಇತಿಹಾಸ&lt;/strong&gt;&lt;/h2&gt;&lt;p&gt;ಈ ಇಡೀ ವಿವಾದದ ಹಿನ್ನೆಲೆ ನೋಡುವುದಾದರೆ, ರಾಜ್ಯ ಸರ್ಕಾರವು 2022-23ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಿಗಾಗಿ ಒಟ್ಟು 15,000 ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ಬೃಹತ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು. ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಇಲಾಖೆಯು ಒಟ್ಟು 13,352 ಅಭ್ಯರ್ಥಿಗಳನ್ನು ಯಶಸ್ವಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ಈ 481 ಅಭ್ಯರ್ಥಿಗಳ ಪ್ರಮಾಣಪತ್ರದ ಗೊಂದಲದಿಂದಾಗಿ ಇಡೀ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ಇದೀಗ ಹೈಕೋರ್ಟ್&zwnj;ನ ತಾತ್ಕಾಲಿಕ ಮಧ್ಯಂತರ ಆದೇಶದ ಮೇರೆಗೆ 341 ಶಿಕ್ಷಕಿಯರು ಕೊನೆಗೂ ಶಾಲೆಗೆ ಪ್ರವೇಶಿಸುವಂತಾಗಿದ್ದು, ಇಲಾಖೆಯ ಅಂತಿಮ ತೀರ್ಪಿನ ಮೇಲೆ ಇವರ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>state-government-jobs</category>
            <dc:creator>Santosh Naik</dc:creator>
            <atom:link href="https://kannada.asianetnews.com/state-government-jobs/341-obc-married-women-allowed-to-join-as-govt-teachers-karnataka-hc-order-san/articleshow-g6pnaza"/>
        </item>
        <item>
            <title><![CDATA[Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!]]></title>
            <link>https://kannada.asianetnews.com/state/bengaluru-hal-police-station-psi-and-2-cops-trapped-by-jaipur-acb-in-bribe-case-sat/articleshow-gqvfb9z</link>
            <guid isPermaLink="true">https://kannada.asianetnews.com/state/bengaluru-hal-police-station-psi-and-2-cops-trapped-by-jaipur-acb-in-bribe-case-sat/articleshow-gqvfb9z</guid>
            <pubDate>Sun, 14 Jun 2026 19:11:17 +0530</pubDate>
            <description><![CDATA[&lt;p&gt;ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್&zwnj;ಎಎಲ್ ಠಾಣೆಯ ಮೂವರು ಪೊಲೀಸರು, ಆರೋಪಿಯಿಂದಲೇ ಲಂಚ ಪಡೆಯುವಾಗ ಅಲ್ಲಿನ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಿಎಸ್&zwnj;ಐ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv35pxpj48f85403w911wt4z,imgname-karnataka-police-anitha-arrest-1781444343505.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಜೈಪುರ (ಜೂ.14): ವ&lt;/strong&gt;ರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್&zwnj;ಎಎಲ್ (HAL) ಪೊಲೀಸ್ ಠಾಣೆಯ ಸಿಬ್ಬಂದಿಗಳು ಈಗ ಅಲ್ಲಿನ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳ ಅತಿಥಿಗಳಾಗಿದ್ದಾರೆ. ಆರೋಪಿಯನ್ನು ಬಿಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ಪಿಎಸ್&zwnj;ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳು ರೆಡ್&zwnj;ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬೆಂಗಳೂರಿನ ಎಚ್&zwnj;ಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಗಾಗಿ ಪಿಎಸ್&zwnj;ಐ ಅನಿತಾ, ಹೆಡ್ ಕಾನ್&zwnj;ಸ್ಟೇಬಲ್ ಉಳುವಪ್ಪ ಮತ್ತು ಕಾನ್&zwnj;ಸ್ಟೇಬಲ್ ಯತೀಶ್ ಕಳೆದ ಶುಕ್ರವಾರ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಅಲ್ಲಿ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು, ಆತನನ್ನು ಬಂಧಿಸದಿರಲು ಅಥವಾ ಕೇಸ್&zwnj;ನಿಂದ ರಕ್ಷಿಸಲು ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.&lt;/p&gt;&lt;h2&gt;&lt;strong&gt;2 ಲಕ್ಷಕ್ಕೆ ಬೇಡಿಕೆ, 40 ಸಾವಿರ ಪಡೆಯುವಾಗ ಟ್ರ್ಯಾಪ್:&lt;/strong&gt;&lt;/h2&gt;&lt;p&gt;ಆರೋಪಿಯ ಬಳಿ ಬೆಂಗಳೂರು ಪೊಲೀಸರು ಒಟ್ಟು 2 ಲಕ್ಷ ರೂಪಾಯಿ ಹಣ ನೀಡುವಂತೆ ಪೀಡಿಸಿದ್ದರು. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಜೈಪುರದ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಯೋಜನೆಯಂತೆ, ಮೊದಲ ಕಂತಾಗಿ 40 ಸಾವಿರ ರೂಪಾಯಿ ಹಣವನ್ನು ಪಡೆಯುತ್ತಿದ್ದಾಗ ಜೈಪುರ ಎಸಿಬಿ ಎಎಸ್&zwnj;ಪಿ ಭೂಪೇಂದ್ರ ಚೌದರಿ ನೇತೃತ್ವದ ತಂಡ ದಾಳಿ ನಡೆಸಿದೆ. ಹಣದ ಸಮೇತ ಪಿಎಸ್&zwnj;ಐ ಅನಿತಾ ಮತ್ತು ಇಬ್ಬರು ಕಾನ್&zwnj;ಸ್ಟೇಬಲ್&zwnj;ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.&lt;/p&gt;&lt;h2&gt;&lt;strong&gt;ಬೆಂಗಳೂರು ಹಿರಿಯ ಅಧಿಕಾರಿಗಳಿಗೆ ಮಾಹಿತಿ:&lt;/strong&gt;&lt;/h2&gt;&lt;p&gt;ತಮ್ಮದೇ ಇಲಾಖೆಯ ಸಿಬ್ಬಂದಿಗಳು ಪರರಾಜ್ಯದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವುದು ಬೆಂಗಳೂರು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಈ ಬಗ್ಗೆ ಜೈಪುರ ಎಸಿಬಿ ಅಧಿಕಾರಿಗಳು ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಧಿಕೃತ ಮಾಹಿತಿ ರವಾನಿಸಿದ್ದಾರೆ. ಸದ್ಯ ಮೂವರನ್ನು ಬಂಧಿಸಿರುವ ರಾಜಸ್ಥಾನ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕರ್ತವ್ಯದ ಹೆಸರಿನಲ್ಲಿ ಪರರಾಜ್ಯಕ್ಕೆ ಹೋಗಿ ಭ್ರಷ್ಟಾಚಾರ ನಡೆಸಿದ ಈ ಪೊಲೀಸರ ವಿರುದ್ಧ ಇಲಾಖಾ ತನಿಖೆಯೂ ನಡೆಯುವ ಸಾಧ್ಯತೆಯಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/bengaluru-hal-police-station-psi-and-2-cops-trapped-by-jaipur-acb-in-bribe-case-sat/articleshow-gqvfb9z"/>
        </item>
        <item>
            <title><![CDATA[KPSC ಅಧ್ಯಕ್ಷರ ಪುತ್ರಿಗೆ ಸರ್ಕಾರಿ ನೌಕರಿ, FIR ದಾಖಲು; ಸುಳ್ಳು ದಾಖಲೆ ಸಲ್ಲಿಸಿ ಸಿಕ್ಕಿಬಿದ್ದರಾ ಸುಮಾ ಸಾಹುಕಾರ್!]]></title>
            <link>https://kannada.asianetnews.com/state-government-jobs/kpsc-chairman-daughter-suma-sahukar-fake-income-certificate-fir-vidhana-soudha/articleshow-kf1l5qr</link>
            <guid isPermaLink="true">https://kannada.asianetnews.com/state-government-jobs/kpsc-chairman-daughter-suma-sahukar-fake-income-certificate-fir-vidhana-soudha/articleshow-kf1l5qr</guid>
            <pubDate>Fri, 10 Jul 2026 22:23:01 +0530</pubDate>
            <description><![CDATA[ಕೆಪಿಎಸ್&zwnj;ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ, ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ಹುದ್ದೆ ಪಡೆಯಲು ಯತ್ನಿಸಿದ ಆರೋಪದ ಮೇಲೆ ಎಫ್&zwnj;ಐಆರ್ ದಾಖಲಾಗಿದೆ. ಲಕ್ಷಾಂತರ ಸಂಬಳ ಪಡೆಯುವ ತಂದೆಯ ಆದಾಯವನ್ನು ಕೇವಲ 40 ಸಾವಿರ ಎಂದು ತೋರಿಸಿ ಮೀಸಲಾತಿ ದುರುಪಯೋಗಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx6f30f9v04b846swtjxw1vh,imgname-kpsc-chairman-shivashankarappa-sahukar-1783702323689.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜು.10): ರಾ&lt;/strong&gt;ಜ್ಯದ ಪ್ರತಿಷ್ಠಿತ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರ ಪುತ್ರಿಯೇ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಯತ್ನಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕೆಪಿಎಸ್&zwnj;ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧ ಈಗ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್&zwnj;ಐಆರ್ (FIR) ದಾಖಲಾಗಿದೆ.&lt;/p&gt;&lt;h2&gt;&lt;strong&gt;ಪ್ರಕರಣದ ಹಿನ್ನೆಲೆ:&lt;/strong&gt;&lt;/h2&gt;&lt;p&gt;ಕೆಪಿಎಸ್&zwnj;ಸಿಯ ಕೈಗಾರಿಕಾ ವಿಸ್ತರಣಾಧಿಕಾರಿಯ 50 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷರ ಪುತ್ರಿ ಸುಮಾ ಅವರು ಪಾಲ್ಗೊಂಡಿದ್ದರು. ಮೇ 12, 2025 ರಂದು ನಡೆದಿದ್ದ ಕನ್ನಡ ಭಾಷಾ ಪರೀಕ್ಷೆ ಹಾಗೂ ಜುಲೈ 13, 2025 ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅವರು ಹಾಜರಾಗಿದ್ದರು. ಜನವರಿ 21, 2026 ರಂದು ಪ್ರಕಟವಾದ ಅರ್ಹತಾ ಪಟ್ಟಿಯಲ್ಲಿ ಸುಮಾ ಅವರ ಹೆಸರು ಆಯ್ಕೆಯಾಗಿತ್ತು. ಫೆಬ್ರವರಿ 19, 2026 ರಂದು ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆದಾಗ ವಂಚನೆಯ ಅಸಲಿ ಮುಖವಾಡ ಕಳಚಿದೆ.&lt;/p&gt;&lt;h2&gt;&lt;strong&gt;ನಕಲಿ ಆದಾಯ ಪ್ರಮಾಣ ಪತ್ರದ ಹಗರಣ:&lt;/strong&gt;&lt;/h2&gt;&lt;p&gt;ಸುಮಾ ಸಾಹುಕಾರ್ ಅವರು ಪರೀಕ್ಷೆಯಲ್ಲಿ ಮೀಸಲಾತಿ ಪಡೆಯುವ ಉದ್ದೇಶದಿಂದ ನಕಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಅವರು ಸಲ್ಲಿಸಿದ ದಾಖಲೆಯಲ್ಲಿ ಕುಟುಂಬದ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂಪಾಯಿ ಎಂದು ನಮೂದಿಸಲಾಗಿತ್ತು. ಆದರೆ, ಸುಮಾ ಅವರ ತಂದೆ ಶಿವಶಂಕರಪ್ಪ ಸಾಹುಕಾರ್ ಅವರು ಕೆಪಿಎಸ್&zwnj;ಸಿ ಅಧ್ಯಕ್ಷರಾಗಿದ್ದು, ಅವರ ಮಾಸಿಕ ವೇತನವೇ ಸುಮಾರು 2 ಲಕ್ಷದ 25 ಸಾವಿರ ರೂಪಾಯಿಗಳಾಗಿದೆ. ಮಾಸಿಕ ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ತಂದೆಯ ಆದಾಯವನ್ನು ವಾರ್ಷಿಕವಾಗಿ ಕೇವಲ 40 ಸಾವಿರ ಎಂದು ತೋರಿಸಿರುವುದು ಸ್ಪಷ್ಟವಾಗಿ ನಿಯಮಗಳ ಉಲ್ಲಂಘನೆ ಮತ್ತು ಕಾನೂನುಬಾಹಿರ ಕೃತ್ಯವಾಗಿದೆ.&lt;/p&gt;&lt;h2&gt;&lt;strong&gt;ವಿಧಾನಸೌಧ ಠಾಣೆಯಲ್ಲಿ ಎಫ್&zwnj;ಐಆರ್:&lt;/strong&gt;&lt;/h2&gt;&lt;p&gt;ಅರ್ಜಿಯ ಘೋಷಣೆ ಕಾಲಂನಲ್ಲಿ ಸುಳ್ಳು ಮಾಹಿತಿ ನೀಡಿ ಸರ್ಕಾರದ ಕಣ್ಣಿಗೆ ಮಣ್ಣೆರಚಲು ಯತ್ನಿಸಿದ ಸುಮಾ ವಿರುದ್ಧ ಕೆಪಿಎಸ್&zwnj;ಸಿ ಸಹಾಯಕ ಕಾರ್ಯದರ್ಶಿ ಶೋಭಾ ಬಿ.ಎನ್. ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರಂಭದಲ್ಲಿ ದೂರಿನ ಪರಿಶೀಲನೆ ನಡೆಸಿದ ಪೊಲೀಸರು, ಈಗ ಅಧಿಕೃತವಾಗಿ ಎಫ್&zwnj;ಐಆರ್ ದಾಖಲಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ನೀಡಿ ಮೀಸಲಾತಿ ದುರುಪಯೋಗಪಡಿಸಿಕೊಳ್ಳಲು ಯತ್ನಿಸಿದ ಸುಮಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕಾದ ಅಧ್ಯಕ್ಷರ ಕುಟುಂಬವೇ ಇಂತಹ ಹಗರಣದಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state-government-jobs/kpsc-chairman-daughter-suma-sahukar-fake-income-certificate-fir-vidhana-soudha/articleshow-kf1l5qr"/>
        </item>
        <item>
            <title><![CDATA[Govt Jobs: ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 6 ತಿಂಗಳಲ್ಲಿ 72,186 ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ!]]></title>
            <link>https://kannada.asianetnews.com/gallery/state-government-jobs/karnataka-govt-orders-72000-govt-jobs-direct-recruitment-in-6-months-l79wfmd</link>
            <guid isPermaLink="true">https://kannada.asianetnews.com/gallery/state-government-jobs/karnataka-govt-orders-72000-govt-jobs-direct-recruitment-in-6-months-l79wfmd</guid>
            <pubDate>Thu, 25 Jun 2026 13:42:18 +0530</pubDate>
            <description><![CDATA[ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72,186 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆದೇಶಿಸಿದೆ. ಈ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ 6 ತಿಂಗಳೊಳಗೆ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಕಾಲಮಿತಿ ನಿಗದಿಪಡಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvyxbed5btm6tr230vqghc3z,imgname-dharwad-govt-job-protest-1782375102885.jpg" type="image/jpeg" height="390" width="690"/>
            <content:encoded><![CDATA[ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72,186 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆದೇಶಿಸಿದೆ. ಈ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ 6 ತಿಂಗಳೊಳಗೆ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಕಾಲಮಿತಿ ನಿಗದಿಪಡಿಸಲಾಗಿದೆ.&lt;img&gt;&lt;p&gt;ಬೆಂಗಳೂರು (ಜೂ.25): ಸರ್ಕಾರಿ ಕೆಲಸಕ್ಕಾಗಿ ವರ್ಷಗಳಿಂದ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮುಂದಿನ 6 ತಿಂಗಳೊಳಗೆ ಭರ್ತಿ ಮಾಡುವಂತೆ ಆದೇಶ ಹೊರಡಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಮುಗಿಸಲು ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ.&lt;/p&gt;&lt;img&gt;&lt;p&gt;ಹುದ್ದೆಗಳ ವಿವರ ಮತ್ತು ಆರ್ಥಿಕ ಇಲಾಖೆ ಒಪ್ಪಿಗೆ:&lt;/p&gt;&lt;p&gt;ಸರ್ಕಾರದ ನಡವಳಿಗಳ ಪ್ರಕಾರ, 2023-24ನೇ ಸಾಲಿನಿಂದ ಇಲ್ಲಿಯವರೆಗೆ ಖಾಲಿ ಇರುವ ಹುದ್ದೆಗಳ ಪೈಕಿ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಸಹಮತಿ ನೀಡಿದೆ. ಅಲ್ಲದೆ, ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇಕಡಾ 80ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಹಸಿರು ನಿಶಾನೆ ಸಿಕ್ಕಿದೆ.&lt;/p&gt;&lt;img&gt;&lt;p&gt;&lt;strong&gt;ಟೈಮ್&zwnj;ಲೈನ್ ಫಿಕ್ಸ್: 6 ತಿಂಗಳಲ್ಲಿ ಕೈಗೆ ಸಿಗುತ್ತೆ ಅಪಾಯಿಂಟ್&zwnj;ಮೆಂಟ್ ಆರ್ಡರ್!&lt;/strong&gt;&lt;/p&gt;&lt;p&gt;ನೇಮಕಾತಿಯಲ್ಲಿ ಯಾವುದೇ ವಿಳಂಬವಾಗದಂತೆ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಡೆಡ್&zwnj;ಲೈನ್ ನೀಡಿದೆ:&lt;/p&gt;&lt;p&gt;&lt;strong&gt;ಮುಂದಿನ 2 ತಿಂಗಳಲ್ಲಿ: &lt;/strong&gt;ಎಲ್ಲಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ (Notification) ಹೊರಡಿಸಬೇಕು.&lt;/p&gt;&lt;p&gt;&lt;strong&gt;ಮುಂದಿನ 4 ತಿಂಗಳಲ್ಲಿ: &lt;/strong&gt;ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಬೇಕು.&lt;/p&gt;&lt;p&gt;&lt;strong&gt;ಮುಂದಿನ 6 ತಿಂಗಳಲ್ಲಿ: &lt;/strong&gt;ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ, ಅಭ್ಯರ್ಥಿಗಳಿಗೆ ಕಡ್ಡಾಯವಾಗಿ 'ನೇಮಕಾತಿ ಆದೇಶ' (Appointment Order) ನೀಡಬೇಕು.&lt;/p&gt;&lt;img&gt;&lt;p&gt;&lt;strong&gt;ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ:&lt;/strong&gt;&lt;/p&gt;&lt;p&gt;ಒಟ್ಟು 51 ಇಲಾಖೆಗಳಲ್ಲಿ ಈ ನೇಮಕಾತಿ ನಡೆಯಲಿದ್ದು, ಕೃಷಿ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿದಂತೆ 17 ಇಲಾಖೆಗಳ ಜವಾಬ್ದಾರಿಯನ್ನು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ನೀಡಲಾಗಿದೆ. ಇನ್ನುಳಿದ ಗೃಹ, ಶಿಕ್ಷಣ, ಆರೋಗ್ಯ, ಅರಣ್ಯ ಸೇರಿದಂತೆ 34 ಇಲಾಖೆಗಳ ಜವಾಬ್ದಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ.&lt;/p&gt;&lt;img&gt;&lt;p&gt;ಚುನಾವಣೆಗಳು ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿರುವ ಸರ್ಕಾರ, ನಿರುದ್ಯೋಗ ಸಮಸ್ಯೆಗೆ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರಿ ಹುದ್ದೆಯ ಕನಸು ಕಾಣುತ್ತಿರುವ ಅಭ್ಯರ್ಥಿಗಳು ಇಂದಿನಿಂದಲೇ ಸಿದ್ಧತೆ ಆರಂಭಿಸುವುದು ಉತ್ತಮ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state-government-jobs/karnataka-govt-orders-72000-govt-jobs-direct-recruitment-in-6-months-l79wfmd"/>
        </item>
        <item>
            <title><![CDATA[2500 Govt Jobs: ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ಸುದ್ದಿ: ಬರೋಬ್ಬರಿ 2500 ಹುದ್ದೆಗಳಿಗೆ ನೇಮಕಾತಿ ಬಿಗ್ ಅಪ್ಡೇಟ್!]]></title>
            <link>https://kannada.asianetnews.com/state/important-update-for-the-recruitment-of-2-500-computer-science-teachers-rav/articleshow-mvzuaif</link>
            <guid isPermaLink="true">https://kannada.asianetnews.com/state/important-update-for-the-recruitment-of-2-500-computer-science-teachers-rav/articleshow-mvzuaif</guid>
            <pubDate>Wed, 01 Jul 2026 08:08:19 +0530</pubDate>
            <description><![CDATA[&lt;p&gt;ಸರ್ಕಾರಿ ನೌಕರಿ ಕನಸು ಕಂಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಿಗೆ 2,500 ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿದ್ದ ಸರ್ಕಾರವು, ಈ ಹುದ್ದೆಗಳ ನೇಮಕಾತಿಗೆ ನಿಯಮಾವಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwdracfdfyj5hy0bterktj56,imgname----------------------74--1782873141740.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜು.1):&lt;/strong&gt; ಇತ್ತೀಚೆಗಷ್ಟೆ ರಾಜ್ಯದ ಸರ್ಕಾರಿ ಶಾಲೆಗಳಿಗೆ 2,500 ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿದ್ದ ಸರ್ಕಾರವು, ಈ ಹುದ್ದೆಗಳ ನೇಮಕಾತಿಗೆ ಅನುಕೂಲವಾಗುವಂತೆ ಶಿಕ್ಷಕರ ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.&amp;nbsp;&lt;/p&gt;&lt;h2&gt;ಕಂಪ್ಯೂಟರ್ ಸೈನ್ಸ್ ಶಿಕ್ಷಕರ ನೇರ ನೇಮಕಾತಿ:&lt;/h2&gt;&lt;p&gt;ಕಂಪ್ಯೂಟರ್&zwnj; ಸೈನ್ಸ್&zwnj; ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ತಿದ್ದುಪಡಿ ನಿಯಮಗಳಲ್ಲಿ ಅವಕಾಶ ನೀಡಲಾಗಿದ್ದು, ನೇಮಕಗೊಂಡ 5 ವರ್ಷಗಳ ಒಳಗಾಗಿ ಎನ್&zwnj;ಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಡ್ ಪದವಿ ಪಡೆಯಬೇಕು ಮತ್ತು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂಬ ಷರತ್ತು ವಿಧಿಸಲಾಗಿದೆ.&lt;/p&gt;&lt;h3&gt;1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣಕ್ಕೆ ಆದೇಶ!&lt;/h3&gt;&lt;p&gt;ಕರ್ನಾಟಕ ಪಬ್ಲಿಕ್&zwnj; ಶಾಲೆಗಳಲ್ಲಿ (ಕೆಪಿಎಸ್&zwnj;) 1ನೇ ತರಗತಿಯಿಂದಲೇ ಕಂಪ್ಯೂಟರ್&zwnj; ಶಿಕ್ಷಣ ನೀಡಲು ಆದೇಶಿಸಿರುವ ಸರ್ಕಾರ, ಇದಕ್ಕೆ ಅಗತ್ಯ ಶೈಕ್ಷಣಿಕ ಅರ್ಹತೆ ಹೊಂದಿರುವ ಶಿಕ್ಷಕರು ಇಲಾಖೆಯಲ್ಲಿ ಇಲ್ಲದ ಕಾರಣ ಹೊಸ ನೇಮಕಾತಿಗೆ 2500 ಹುದ್ದೆಗಳನ್ನು ಮಂಜೂರು ಮಾಡಿದೆ. ಈ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್&zwnj;ನಲ್ಲಿ ಬಿ.ಎಸ್ಸಿ, ಬಿಸಿಎ, ಬಿಐಟಿ, ಅಥವಾ ಕಂಪ್ಯೂಟರ್ ಸೈನ್ಸ್&zwnj;ನಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಹೊಂದಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಬಹುದು. ಎಸ್&zwnj;ಎಸ್&zwnj;ಎಲ್&zwnj;ಸಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಮತ್ತು ಪಿಯುಸಿಯಲ್ಲಿ ಭಾಷೆಯನ್ನಾಗಿ ಕನ್ನಡವನ್ನು ಓದಿರಬೇಕು ಎಂದು ತಿಳಿಸಲಾಗಿದೆ.&lt;/p&gt;&lt;p&gt;&lt;strong&gt;ಆಕ್ಷೇಪಣೆಗೆ ಅವಕಾಶ:&lt;/strong&gt;&lt;/p&gt;&lt;p&gt;ಈ ಕರಡು ನಿಯಮಗಳ ಕುರಿತು ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ, ಈ ಅಧಿಸೂಚನೆ ರಾಜ್ಯಪತ್ರದಲ್ಲಿ ಪ್ರಕಟವಾದ 7 ದಿನಗಳ ಒಳಗಾಗಿ ಅಪರ ಮುಖ್ಯ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು ಇವರಿಗೆ ಸಲ್ಲಿಸಬಹುದೆಂದು ತಿಳಿಸಲಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/important-update-for-the-recruitment-of-2-500-computer-science-teachers-rav/articleshow-mvzuaif"/>
        </item>
        <item>
            <title><![CDATA[KEA ನೇಮಕಾತಿ 2026: ಫಾರ್ಮಸಿ ಮತ್ತು ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ]]></title>
            <link>https://kannada.asianetnews.com/jobs/kea-recruitment-2026-apply-online-for-233-pharmacy-and-nursing-officer-posts-gdp/articleshow-nq2tq9k</link>
            <guid isPermaLink="true">https://kannada.asianetnews.com/jobs/kea-recruitment-2026-apply-online-for-233-pharmacy-and-nursing-officer-posts-gdp/articleshow-nq2tq9k</guid>
            <pubDate>Tue, 11 Aug 2026 12:25:40 +0530</pubDate>
            <description><![CDATA[ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ ಒಟ್ಟು 233 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್&zwnj;ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಲೇಖನವು ಹುದ್ದೆಗಳ ವಿವರ, ಅರ್ಹತಾ ಮಾನದಂಡಗಳು, ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kaj48a9ywbb8d8v1wj8vybp1,imgname-----------------------2025-11-21t080448.839-1763692521790.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಆನ್&zwnj;ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.&lt;/p&gt;&lt;h2&gt;ಹುದ್ದೆಗಳ ವಿವರ&lt;/h2&gt;&lt;p&gt;ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ&lt;/p&gt;&lt;p&gt;ಒಟ್ಟು ಹುದ್ದೆಗಳು: 233&lt;/p&gt;&lt;p&gt;ಹುದ್ದೆಗಳ ಹೆಸರು: ಫಾರ್ಮಸಿ ಆಫೀಸರ್, ನರ್ಸಿಂಗ್ ಆಫೀಸರ್&lt;/p&gt;&lt;p&gt;ಉದ್ಯೋಗ ಸ್ಥಳ: ಕರ್ನಾಟಕ&lt;/p&gt;&lt;p&gt;ವೇತನ ಶ್ರೇಣಿ: ತಿಂಗಳಿಗೆ ₹44,425 ರಿಂದ ₹99,400&lt;/p&gt;&lt;h3&gt;ವಿಭಾಗವಾರು ಹುದ್ದೆಗಳ ವಿವರಣೆ&lt;/h3&gt;&lt;p&gt;ಫಾರ್ಮಸಿ ಆಫೀಸರ್ಸ್ ಉಳಿಕೆ ಮೂಲ ವೃಂದ (RPC)98&lt;/p&gt;&lt;p&gt;ನರ್ಸಿಂಗ್ ಆಫೀಸರ್ಸ್ ಉಳಿ ಮೂಲ ವೃಂದ (RPC)90&lt;/p&gt;&lt;p&gt;ಫಾರ್ಮಸಿ ಆಫೀಸರ್ಸ್ ಕಲ್ಯಾಣ ಕರ್ನಾಟಕ (KK)11&lt;/p&gt;&lt;p&gt;ನರ್ಸಿಂಗ್ ಆಫೀಸರ್ಸ್ ಕಲ್ಯಾಣ ಕರ್ನಾಟಕ (KK)34&lt;/p&gt;&lt;h2&gt;ಅರ್ಹತಾ ಮಾನದಂಡಗಳು&lt;/h2&gt;&lt;h3&gt;ಶೈಕ್ಷಣಿಕ ಅರ್ಹತೆ:&lt;/h3&gt;&lt;p&gt;ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಪಿಯುಸಿ (12ನೇ), ಜಿಎನ್&zwnj;ಎಂ (GNM), ಬಿ.ಎಸ್ಸಿ ನರ್ಸಿಂಗ್ (B.Sc Nursing) ಅಥವಾ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.&lt;/p&gt;&lt;h2&gt;ವಯೋಮಿತಿ:&lt;/h2&gt;&lt;p&gt;ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷಗಳು.&lt;/p&gt;&lt;h3&gt;ವಯೋಮಿತಿ ಸಡಿಲಿಕೆ:&lt;/h3&gt;&lt;p&gt;ಪ್ರವರ್ಗ 2A, 2B, 3A, 3B: 3 ವರ್ಷಗಳು&lt;/p&gt;&lt;p&gt;SC / ST / ಪ್ರವರ್ಗ-1: 5 ವರ್ಷಗಳು&lt;/p&gt;&lt;h3&gt;ಅರ್ಜಿ ಶುಲ್ಕ ವಿವರ&lt;/h3&gt;&lt;p&gt;SC / ST / ಪ್ರವರ್ಗ-1 / ಮಾಜಿ ಸೈನಿಕರು: ₹500&lt;/p&gt;&lt;p&gt;ವಿಕಲಚೇತನ (PH) ಅಭ್ಯರ್ಥಿಗಳು: ₹250&lt;/p&gt;&lt;p&gt;ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು: ₹750&lt;/p&gt;&lt;p&gt;ಪಾವತಿ ವಿಧಾನ: ಆನ್&zwnj;ಲೈನ್ ಮೂಲಕ ಮಾತ್ರ&lt;/p&gt;&lt;h2&gt;ಆಯ್ಕೆ ಪ್ರಕ್ರಿಯೆ&lt;/h2&gt;&lt;p&gt;ಸ್ಪರ್ಧಾತ್ಮಕ/ಲಿಖಿತ ಪರೀಕ್ಷೆ&lt;/p&gt;&lt;p&gt;ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ&lt;/p&gt;&lt;h2&gt;ಆನ್&zwnj;ಲೈನ್&zwnj;ನಲ್ಲಿ ಅರ್ಜಿ ಸಲ್ಲಿಸುವ ವಿಧಾನ&lt;/h2&gt;&lt;ul&gt; &lt;li&gt;ಅರ್ಜಿ ಸಲ್ಲಿಸುವ ಮುನ್ನ KEA ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.&lt;/li&gt; &lt;li&gt;ಸಕ್ರಿಯವಾಗಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಳ್ಳಿ.&lt;/li&gt; &lt;li&gt;ಗುರುತಿನ ಚೀಟಿ, ವಯಸ್ಸಿನ ಪುರಾವೆ, ಶೈಕ್ಷಣಿಕ ಅಂಕಪಟ್ಟಿಗಳು, ಅನುಭವ ಪ್ರಮಾಣಪತ್ರ (ಇದ್ದಲ್ಲಿ) ಮತ್ತು ಇತ್ತೀಚಿನ ಭಾವಚಿತ್ರದ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ರೆಡಿ ಇಟ್ಟುಕೊಳ್ಳಿ.&lt;/li&gt; &lt;li&gt;KEA ಅಧಿಕೃತ ವೆಬ್&zwnj;ಸೈಟ್&zwnj;ಗೆ ಭೇಟಿ ನೀಡಿ, ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.&lt;/li&gt; &lt;li&gt;ನಿಮ್ಮ ವರ್ಗಕ್ಕೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್&zwnj;ಲೈನ್ ಮೂಲಕ ಪಾವತಿಸಿ.&lt;/li&gt; &lt;li&gt;ಅರ್ಜಿ ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.&lt;/li&gt;&lt;/ul&gt;&lt;h2&gt;ಪ್ರಮುಖ ದಿನಾಂಕಗಳು&lt;/h2&gt;&lt;p&gt;ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 07 ಆಗಸ್ಟ್ 2026&lt;/p&gt;&lt;p&gt;ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಆಗಸ್ಟ್ 2026&lt;/p&gt;&lt;p&gt;ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31 ಆಗಸ್ಟ್ 2026&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/jobs/kea-recruitment-2026-apply-online-for-233-pharmacy-and-nursing-officer-posts-gdp/articleshow-nq2tq9k"/>
        </item>
        <item>
            <title><![CDATA[Police: ಕನ್ನಡ ಪರೀಕ್ಷೆ ಬರೆಯದಿದ್ದರೂ ಸಿಗುತ್ತಾ ಸಿವಿಲ್ ಪೊಲೀಸ್ ಕೆಲಸ?  ಯಾರಿಗೆ ಅನ್ವಯಿಸುತ್ತೆ ಈ ರೂಲ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!]]></title>
            <link>https://kannada.asianetnews.com/state-government-jobs/karnataka-civil-police-constable-recruitment-kannada-language-exam-exemption-rules-bmk/articleshow-p3q0acr</link>
            <guid isPermaLink="true">https://kannada.asianetnews.com/state-government-jobs/karnataka-civil-police-constable-recruitment-kannada-language-exam-exemption-rules-bmk/articleshow-p3q0acr</guid>
            <pubDate>Sat, 11 Jul 2026 16:02:26 +0530</pubDate>
            <description><![CDATA[&lt;p&gt;ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿದ್ದರೂ, ಈಗಾಗಲೇ ಶಾಲಾ-ಕಾಲೇಜು ಹಂತದಲ್ಲಿ ಕನ್ನಡ ಕಲಿತವರಿಗೆ ಮತ್ತೊಮ್ಮೆ ಪರೀಕ್ಷೆ ಬರೆವ ಹೊರೆಯಿಂದ ಮುಕ್ತಿ ನೀಡಲು ಈ ಮಹತ್ವದ ರೂಲ್ ಜಾರಿಗೆ ತರಲಾಗಿದೆ. ಈ ನಿಯಮ ಯಾರಿಗೆಲ್ಲ ಅನ್ವಯಿಸುತ್ತದೆ ಮತ್ತು ವಿನಾಯಿತಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01fq6eb7qkj65j3y12nbcbx83r,imgname-ksp-recruitment.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿದ್ದರೂ, ಈಗಾಗಲೇ ಶಾಲಾ-ಕಾಲೇಜು ಹಂತದಲ್ಲಿ ಕನ್ನಡ ಕಲಿತವರಿಗೆ ಮತ್ತೊಮ್ಮೆ ಪರೀಕ್ಷೆ ಬರೆವ ಹೊರೆಯಿಂದ ಮುಕ್ತಿ ನೀಡಲು ಈ ಮಹತ್ವದ ರೂಲ್ ಜಾರಿಗೆ ತರಲಾಗಿದೆ. ಈ ನಿಯಮ ಯಾರಿಗೆಲ್ಲ ಅನ್ವಯಿಸುತ್ತದೆ ಮತ್ತು ವಿನಾಯಿತಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.&lt;/p&gt;&lt;h2&gt;&lt;strong&gt;ಕನ್ನಡ ಪರೀಕ್ಷೆಯಿಂದ ಯಾರಿಗೆ ಸಿಗಲಿದೆ ವಿನಾಯಿತಿ?&lt;/strong&gt;&lt;/h2&gt;&lt;p&gt;ಕರ್ನಾಟಕ ನಾಗರಿಕ ಸೇವಾ ನಿಯಮಗಳ ತಿದ್ದುಪಡಿ ಅನ್ವಯ, ಈ ಕೆಳಗಿನ ಅರ್ಹತೆ ಹೊಂದಿರುವ ಸಿವಿಲ್ ಪೊಲೀಸ್ ಅಭ್ಯರ್ಥಿಗಳಿಗೆ ಮಾತ್ರ ಕಡ್ಡಾಯ ಕನ್ನಡ ಪರೀಕ್ಷೆಯಿಂದ ಸಂಪೂರ್ಣ ವಿನಾಯಿತಿ ಇರುತ್ತದೆ. ಪ್ರಥಮ/ದ್ವಿತೀಯ ಭಾಷೆ ಕನ್ನಡ: ಎಸ್&zwnj;ಎಸ್&zwnj;ಎಲ್&zwnj;ಸಿ (SSLC) ಅಥವಾ ಅದಕ್ಕಿಂತ ಉನ್ನತ ಮಟ್ಟದ (ಪಿಯುಸಿ, ಪದವಿ) ಪರೀಕ್ಷೆಗಳಲ್ಲಿ ಕನ್ನಡವನ್ನು ಮೊದಲ ಅಥವಾ ಎರಡನೇ ಭಾಷೆಯಾಗಿ (First or Second Language) ಅಭ್ಯಸಿಸಿ ಉತ್ತೀರ್ಣರಾಗಿರಬೇಕು.&lt;/p&gt;&lt;h3&gt;&lt;strong&gt;ಕನ್ನಡ ಮಾಧ್ಯಮ ಅಭ್ಯರ್ಥಿಗಳು!&lt;/strong&gt;&lt;/h3&gt;&lt;p&gt;ಒಂದರಿಂದ ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿ ಪರೀಕ್ಷೆ ಪಾಸ್ ಮಾಡಿದವರಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಕರ್ನಾಟಕ ಲೋಕಸೇವಾ ಆಯೋಗ ಅಥವಾ ಇಲಾಖೆಯ ಇತರೆ ಯಾವುದೇ ಆಯ್ಕೆ ಪ್ರಾಧಿಕಾರಗಳು ಈ ಹಿಂದೆ ನಡೆಸಿದ್ದ 'ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ'ಯಲ್ಲಿ ಈಗಾಗಲೇ ಪಾಸ್ ಆಗಿ ಪ್ರಮಾಣಪತ್ರ ಹೊಂದಿದ್ದರೆ, ಅವರು ಮತ್ತೊಮ್ಮೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ.&lt;/p&gt;&lt;h3&gt;&lt;strong&gt;ಪರೀಕ್ಷೆ ಯಾರಿಗೆ ಕಡ್ಡಾಯ?&lt;/strong&gt;&lt;/h3&gt;&lt;p&gt;ಯಾರು ತಮ್ಮ ಶಾಲಾ ದಿನಗಳಲ್ಲಿ ಕನ್ನಡವನ್ನು ಕೇವಲ ತೃತೀಯ ಭಾಷೆಯಾಗಿ ಓದಿದ್ದಾರೋ ಅಥವಾ ಇಂಗ್ಲಿಷ್/ಇತರ ಮಾಧ್ಯಮದಲ್ಲಿ ಓದಿ ಕನ್ನಡವನ್ನು ಒಂದು ವಿಷಯವಾಗಿ ತೆಗೆದುಕೊಳ್ಳದ ಹೊರ ರಾಜ್ಯದ ಅಥವಾ ಸಿಬಿಎಸ್&zwnj;ಇ/ಐಸಿಎಸ್&zwnj;ಇ ವಿದ್ಯಾರ್ಥಿಗಳಿದ್ದಾರೋ, ಅಂತವರು ಕಡ್ಡಾಯವಾಗಿ ಈ ಪರೀಕ್ಷೆ ಬರೆಯಬೇಕು.&lt;/p&gt;&lt;h3&gt;&lt;strong&gt;ಹೇಗಿರುತ್ತದೆ ಪರೀಕ್ಷೆ!&lt;/strong&gt;&lt;/h3&gt;&lt;p&gt;ಈ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಒಟ್ಟು 150 ಅಂಕಗಳ ಬಹು ಆಯ್ಕೆ ಮಾದರಿಯ (MCQ) ಪ್ರಶ್ನೆಪತ್ರಿಕೆ ಹೊಂದಿರುತ್ತದೆ. ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಹುದ್ದೆಗೆ ಅರ್ಹತೆ ಪಡೆಯಲು ಕನಿಷ್ಠ 50 ಅಂಕಗಳನ್ನು ಗಳಿಸಲೇಬೇಕು.&lt;/p&gt;&lt;h3&gt;&lt;strong&gt;ಗಮನಿಸಬೇಕಾದ ಅಂಶವೇನು?&lt;/strong&gt;&lt;/h3&gt;&lt;p&gt;ಇದರಲ್ಲಿ ಪಡೆದ ಅಂಕಗಳನ್ನು ಅಂತಿಮ ಮೆರಿಟ್ ಅಥವಾ ಶ್ರೇಯಾಂಕ ಪಟ್ಟಿ ಸಿದ್ಧಪಡಿಸಲು ಪರಿಗಣಿಸುವುದಿಲ್ಲ. ಇದು ಕೇವಲ ಅರ್ಹತಾ ಪರೀಕ್ಷೆಯಷ್ಟೇ ಆಗಿರುತ್ತದೆ. ಆದರೆ ಇದರಲ್ಲಿ ಫೇಲ್ ಆದರೆ ಅಥವಾ ಗೈರಾದರೆ ನೇಮಕಾತಿ ಪ್ರಕ್ರಿಯೆಯಿಂದಲೇ ಹೊರಬೀಳಬೇಕಾಗುತ್ತದೆ.&lt;/p&gt;&lt;p&gt;&lt;strong&gt;ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ?&lt;/strong&gt;&lt;/p&gt;&lt;p&gt;ಸಿವಿಲ್ ಪೊಲೀಸ್ ಕಾನ್&zwnj;ಸ್ಟೆಬಲ್ ಹುದ್ದೆಗಳ ಅಂತಿಮ ಆಯ್ಕೆಯು ಸಂಪೂರ್ಣವಾಗಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ತಪಾಸಣೆಯ ಮೆರಿಟ್ ಆಧಾರದ ಮೇಲೆ ನಡೆಯುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ ತಿಂಗಳಲ್ಲೇ ಕನ್ನಡ ಭಾಷಾ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್&zwnj;ನಲ್ಲಿ ಮುಖ್ಯ ಲಿಖಿತ ಪರೀಕ್ಷೆ ನಡೆಯಲಿದೆ.&lt;/p&gt;&lt;h3&gt;&lt;strong&gt;ಮಾಹಿತಿಗಾಗಿ ಏನು ನೋಡಬೇಕು?&lt;/strong&gt;&lt;/h3&gt;&lt;p&gt;ಅರ್ಹ ಅಭ್ಯರ್ಥಿಗಳು ಹೆಚ್ಚಿನ ಅಧಿಕೃತ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣವಾದ ಕೆಇಎ ಪೋರ್ಟಲ್ ಅಥವಾ ಪೊಲೀಸ್ ನೇಮಕಾತಿ ಪೋರ್ಟಲ್ KSP Recruitmentಗೆ ಭೇಟಿ ನೀಡಬಹುದು. ನಿಮ್ಮ ಎಸ್&zwnj;ಎಸ್&zwnj;ಎಲ್&zwnj;ಸಿ ಅಂಕಪಟ್ಟಿಯಲ್ಲಿ ಕನ್ನಡ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿದ್ದರೆ, ನೀವು ಯಾವುದೇ ಆತಂಕವಿಲ್ಲದೆ ನೇರವಾಗಿ ಮುಖ್ಯ ಲಿಖಿತ ಪರೀಕ್ಷೆಯ ತಯಾರಿಯತ್ತ ಗಮನ ಹರಿಸಬಹುದು.&lt;/p&gt;]]></content:encoded>
            <category>state-government-jobs</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/state-government-jobs/karnataka-civil-police-constable-recruitment-kannada-language-exam-exemption-rules-bmk/articleshow-p3q0acr"/>
        </item>
        <item>
            <title><![CDATA[ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 1600 ಕಾನ್ಸ್‌ಟಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೊನೆ ದಿನಾಂಕ, ಅರ್ಹತೆ, ವಯೋಮಿತಿ ಎಷ್ಟಿರಬೇಕು?]]></title>
            <link>https://kannada.asianetnews.com/gallery/state/karnataka-police-department-recruitment-for-1600-post-what-last-date-age-rav-qaiad8u</link>
            <guid isPermaLink="true">https://kannada.asianetnews.com/gallery/state/karnataka-police-department-recruitment-for-1600-post-what-last-date-age-rav-qaiad8u</guid>
            <pubDate>Tue, 23 Jun 2026 07:56:25 +0530</pubDate>
            <description><![CDATA[&lt;p&gt;ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್&zwnj;ಪಿ) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್&zwnj;ಟೇಬಲ್ (ಸಿಎಆರ್&zwnj;/ಡಿಎಆರ್&zwnj;) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvs3bpwng3zhqyns36wrznf7,imgname----------------------59--1782180076437.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್&zwnj;ಪಿ) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್&zwnj;ಟೇಬಲ್ (ಸಿಎಆರ್&zwnj;/ಡಿಎಆರ್&zwnj;) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್&zwnj;ಟೇಬಲ್ (ಸಿಎಆರ್&zwnj;/ಡಿಎಆರ್&zwnj;) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಆನ್&zwnj;ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.&lt;/p&gt;&lt;img&gt;&lt;p&gt;ಕಾನ್&zwnj;ಸ್ಟೇಬಲ್&zwnj; (ಸಿಎರ್ಆ/ ಡಿಎಆರ್) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್&zwnj;ಲೈನ್&zwnj;ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜುಲೈ 22 ಕೊನೆ ದಿನವಾಗಿದೆ.&lt;/p&gt;&lt;img&gt;&lt;p&gt;ಮಿಕ್ಕುಳಿದ ವೃಂದದ 1,421 ಹಾಗೂ ಸ್ಥಳೀಯ ವೃಂದದ 179 ಹುದ್ದೆಗಳಿಗೆ ಪ್ರತ್ಯೇಕವಾದ ಅರ್ಜಿ ಆಹ್ವಾನಿಸಲಾಗಿದೆ. ಸೆ.6ರಂದು ಪ್ರತ್ಯೇಕವಾಗಿಯೇ ಲಿಖಿತಪರೀಕ್ಷೆ ನಡೆಸಲಾಗುವುದು ಎಂದುಎಂದುಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಉತ್ತರಿಸದೇ ಇರುವ ಪ್ರಶ್ನೆಗಳಿಗೆ ಐದನೇ ವೃತ್ತವನ್ನು ಶೇಡ್ ಮಾಡುವುದು ಕಡ್ಡಾಯ. ಇದಕ್ಕೆ ಹೆಚ್ಚುವರಿಯಾಗಿ ಐದು ನಿಮಿಷ ಸಮಯ ನೀಡಲಾಗುತ್ತದೆ. ಒಂದು ವೇಳೆ ಐದನೇ ವೃತ್ತವನ್ನು ಶೇಡ್&zwnj; ಮಾಡದೇ ಇದ್ದಲ್ಲಿ ಪ್ರತಿ ಪ್ರಶ್ನೆಗೆ 0.25 ಅಂಕ ಕಡಿತಗೊಳಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಅರ್ಜಿ ಸಲ್ಲಿಸುವ ವಿಧಾನ&lt;/strong&gt;&lt;/p&gt;&lt;p&gt;ಅಧಿಕೃತ ವೆಬ್&zwnj;ಸೈಟ್ https://cetonline.karnataka.gov.in/kea/ ಭೇಟಿ ನೀಡಿ. ನಿಮ್ಮ ಆದ್ಯತೆಗೆ ಅನುಗುಣವಾಗಿ KK ಅಥವಾ RPC ವಲಯದ ಸಕ್ರಿಯ ಲಿಂಕ್ ಅನ್ನು ಆಯ್ಕೆ ಮಾಡಿ. ಅಧಿಕೃತ ಪಿಡಿಎಫ್ (PDF) ಅಧಿಸೂಚನೆ ಡೌನ್&zwnj;ಲೋಡ್ ಮಾಡಿ, ನಿಮ್ಮ ಅರ್ಹತೆಯನ್ನು ಸಂಪೂರ್ಣವಾಗಿ ಓದಿ ಖಚಿತಪಡಿಸಿಕೊಳ್ಳಿ.&lt;/p&gt;&lt;p&gt;'Apply Online' ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.&lt;/p&gt;&lt;p&gt;ನಿಮ್ಮ ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್&zwnj;ಲೋಡ್ ಮಾಡಿ.&lt;/p&gt;&lt;p&gt;ನಿಮ್ಮ ಪ್ರವರ್ಗಕ್ಕೆ ಅನುಗುಣವಾಗಿ ಆನ್&zwnj;ಲೈನ್ ಪೇಮೆಂಟ್ ಗೇಟ್&zwnj;ವೇ ಬಳಸಿ ಅರ್ಜಿ ಶುಲ್ಕವನ್ನು ಪಾವತಿಸಿ.&lt;/p&gt;&lt;p&gt;ಫಾರ್ಮ್ ಅನ್ನು ಸಬ್ಮಿಟ್ ಮಾಡುವ ಮುನ್ನ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ, ನಂತರ ಪ್ರಿಂಟೌಟ್ ಪಡೆದು ಇಟ್ಟುಕೊಳ್ಳಿ.&lt;/p&gt;&lt;p&gt;ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 22-06-2026&lt;/p&gt;&lt;p&gt;ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2026&lt;/p&gt;]]></content:encoded>
            <category>state-government-jobs</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/state/karnataka-police-department-recruitment-for-1600-post-what-last-date-age-rav-qaiad8u"/>
        </item>
        <item>
            <title><![CDATA[ಕಾನ್‌ಸ್ಟೇಬಲ್‌ ನೇಮಕಾತಿಗೆ ಮರುಪರೀಕ್ಷೆ..? ನಿನ್ನೆ ಪರೀಕ್ಷೆ ಬರೆದವರಿಗೆ ಶುರುವಾಯ್ತು ಗೊಂದಲ]]></title>
            <link>https://kannada.asianetnews.com/vijayapura/will-the-police-constable-re-exam-be-held-again-in-karnataka-protest-in-vijayapura-gkn/articleshow-v6wzdhg</link>
            <guid isPermaLink="true">https://kannada.asianetnews.com/vijayapura/will-the-police-constable-re-exam-be-held-again-in-karnataka-protest-in-vijayapura-gkn/articleshow-v6wzdhg</guid>
            <pubDate>Mon, 03 Aug 2026 12:53:59 +0530</pubDate>
            <description><![CDATA[ಸಿವಿಲ್ ಪೊಲೀಸ್ ಕಾನ್&zwnj;ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಒಎಂಆರ್ ಶೀಟ್ ಗೊಂದಲದ ವದಂತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಳ್ಳಿಹಾಕಿದ್ದು, ಅಭ್ಯರ್ಥಿಗಳಲ್ಲಿ ಮರುಪರೀಕ್ಷೆಯ ಬಗ್ಗೆ ಆತಂಕ ಮುಂದುವರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz382kddrfcjvphdfr00yhcd,imgname-vijayapura-abvp-protest-1785741790637.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ/ಬೆಂಗಳೂರು: &lt;/strong&gt;ನಿನ್ನೆಯಷ್ಟೇ ನಡೆದ ಸಿವಿಲ್ ಪೊಲೀಸ್ ಕಾನ್&zwnj;ಸ್ಟೇಬಲ್ (CPC) ನೇಮಕಾತಿ ಪರೀಕ್ಷೆಯ ಸುತ್ತ ಗೊಂದಲದ ಮೋಡಗಳು ಕವಿದಿವೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ವ್ಯಕ್ತವಾಗಿದ್ದರೆ, ಅತ್ತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದೆ. ಈ ನಡುವೆ ಅಭ್ಯರ್ಥಿಗಳಲ್ಲಿ ಮರುಪರೀಕ್ಷೆ ನಡೆಯುತ್ತಾ? ಎಂಬ ಆತಂಕ ಮನೆಮಾಡಿದೆ.&lt;/p&gt;&lt;h2&gt;&lt;strong&gt;ವಿಜಯಪುರದಲ್ಲಿ ಎಬಿವಿಪಿ ಕಿಚ್ಚು&lt;/strong&gt;&lt;/h2&gt;&lt;p&gt;ಪರೀಕ್ಷೆ ವೇಳೆ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಎಬಿವಿಪಿ (ABVP) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ಚೌಕ್&zwnj;ನಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಕೂಡಲೇ ಮರುಪರೀಕ್ಷೆ ನಡೆಸಬೇಕು ಎಂದು ಪಟ್ಟು ಹಿಡಿದರು.&lt;/p&gt;&lt;p&gt;ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಭಾರೀ ವಾಗ್ವಾದ ಹಾಗೂ ಜಟಾಪಟಿ ನಡೆಯಿತು. ಸರ್ಕಾರದ ವಿರುದ್ಧ ಪೋಸ್ಟರ್ ಪ್ರದರ್ಶಿಸಲು ಮುಂದಾದ ಯುವಕರ ಕೈಯಲ್ಲಿದ್ದ ಪೋಸ್ಟರ್&zwnj;ಗಳನ್ನು ಪೊಲೀಸರು ಕಸಿದುಕೊಂಡರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು 10ಕ್ಕೂ ಅಧಿಕ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳನ್ನು ವ್ಯಾನ್&zwnj;ಗೆ ಹತ್ತಿಸಲು ಹರಸಾಹಸ ಪಡಬೇಕಾಯಿತು.&lt;/p&gt;&lt;h2&gt;&lt;strong&gt;ಪ್ರಶ್ನೆ ಪತ್ರಿಕೆ ಲೀಕ್ ವದಂತಿಗೆ ಕೆಇಎ ಬ್ರೇಕ್&lt;/strong&gt;&lt;/h2&gt;&lt;p&gt;ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಒಎಂಆರ್ (OMR) ಶೀಟ್ ಗೊಂದಲಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷೆಯಲ್ಲಿ ಒಎಂಆರ್ ಶೀಟ್ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಒಂದೇ ಇರಬೇಕು ಎಂಬ ನಿಯಮವಿಲ್ಲ. ಸೀರಿಯಲ್ ನಂಬರ್ ಬೇರೆ ಬೇರೆಯಾಗಿರಬಹುದು. ಆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ವರ್ಷನ್ ಕೋಡ್ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆಯನ್ನು ಒಎಂಆರ್&zwnj;ನಲ್ಲಿ ಪ್ರತ್ಯೇಕವಾಗಿ ನಮೂದಿಸಲು ಅವಕಾಶವಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಅಭ್ಯರ್ಥಿಗಳಲ್ಲಿ ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಮರುಪರೀಕ್ಷೆ ನಡೆಯುತ್ತಾ?&lt;/strong&gt;&lt;/h2&gt;&lt;p&gt;ಸದ್ಯದ ಪರಿಸ್ಥಿತಿಯಲ್ಲಿ ಕೆಇಎ ಪರೀಕ್ಷೆಯು ಪಾರದರ್ಶಕವಾಗಿ ನಡೆದಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ವಿಜಯಪುರ ಸೇರಿದಂತೆ ಕೆಲವು ಕೇಂದ್ರಗಳಲ್ಲಿ ನಡೆದಿದೆ ಎನ್ನಲಾದ ತಾಂತ್ರಿಕ ಗೊಂದಲ ಮತ್ತು ಗಲಾಟೆಗಳು ಅಭ್ಯರ್ಥಿಗಳಲ್ಲಿ ಸಂಶಯ ಹುಟ್ಟಿಸಿವೆ. ಪ್ರತಿಭಟನಾಕಾರರು ಮರುಪರೀಕ್ಷೆಗೆ ಪಟ್ಟು ಹಿಡಿದಿದ್ದರೂ, ಸರ್ಕಾರದ ಮಟ್ಟದಲ್ಲಿ ಅಥವಾ ಕೆಇಎ ವತಿಯಿಂದ ಮರುಪರೀಕ್ಷೆಯ ಬಗ್ಗೆ ಯಾವುದೇ ಅಧಿಕೃತ ಸೂಚನೆ ಬಂದಿಲ್ಲ. ಪರೀಕ್ಷಾ ಪ್ರಾಧಿಕಾರದ ಸ್ಪಷ್ಟನೆಯ ನಂತರವೂ ಅಭ್ಯರ್ಥಿಗಳ ಆಕ್ರೋಶ ತಣ್ಣಗಾಗದಿದ್ದರೆ ಮುಂದಿನ ದಿನಗಳಲ್ಲಿ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.&lt;/p&gt;]]></content:encoded>
            <category>state-government-jobs</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/vijayapura/will-the-police-constable-re-exam-be-held-again-in-karnataka-protest-in-vijayapura-gkn/articleshow-v6wzdhg"/>
        </item>
        <item>
            <title><![CDATA[Rohini Vs Roopa: ವೃತ್ತಿ ಜೀವನ ಹೀಗೆ ಮಾಡ್ಕೊಬೇಡಿ? ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್‌ಗೆ ಕಿವಿ ಹಿಂಡಿದ ಸುಪ್ರೀಂ!]]></title>
            <link>https://kannada.asianetnews.com/gallery/state/supreme-court-mediation-rohini-sindhuri-ias-roopa-moudgil-ips-dispute-sat-voekhf4</link>
            <guid isPermaLink="true">https://kannada.asianetnews.com/gallery/state/supreme-court-mediation-rohini-sindhuri-ias-roopa-moudgil-ips-dispute-sat-voekhf4</guid>
            <pubDate>Fri, 12 Jun 2026 18:14:01 +0530</pubDate>
            <description><![CDATA[&lt;p&gt;ಕರ್ನಾಟಕದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktxwzwsdq2zyk19c10bhqq6v,imgname-rohini-sindhuri-vs-roopa-moudgil-1781267428140.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ.&lt;/p&gt;&lt;img&gt;&lt;p&gt;ಕರ್ನಾಟಕದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ (Retired Justice Kurian Joseph) ಅವರನ್ನು ಸಂಧಾನಕಾರರನ್ನಾಗಿ ನೇಮಕ ಮಾಡಿದೆ.&lt;/p&gt;&lt;img&gt;&lt;p&gt;ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್&zwnj;ದೇವ್ ಅವರ ಪೀಠವು ಅಧಿಕಾರಿಗಳ ವರ್ತನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. 'ಈ ಇಬ್ಬರು ಅಧಿಕಾರಿಗಳು ತಮ್ಮ ಕಾನೂನು ಹೋರಾಟದ ಮೂಲಕ ಪರಸ್ಪರರ ವೃತ್ತಿಜೀವನವನ್ನು ತಾವೇ ಹಾಳುಮಾಡಿಕೊಳ್ಳುತ್ತಿದ್ದಾರೆ' ಎಂದು ನ್ಯಾಯಮೂರ್ತಿ ಶರ್ಮಾ ಮಾರ್ಮಿಕವಾಗಿ ನುಡಿದರು.&amp;nbsp;&lt;/p&gt;&lt;p&gt;ಸುದೀರ್ಘ ಕೋರ್ಟ್ ಕಲಾಪಗಳಿಗಿಂತ ಮಧ್ಯಸ್ಥಿಕೆಯ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ನ್ಯಾಯಾಲಯ ಬಂದಿದೆ.&lt;/p&gt;&lt;img&gt;&lt;p&gt;&lt;strong&gt;ಎಲ್ಲಾ ಪ್ರಕರಣಗಳಿಗೂ ತಡೆ:&lt;/strong&gt;&lt;/p&gt;&lt;p&gt;ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುವವರೆಗೆ ಇಬ್ಬರು ಅಧಿಕಾರಿಗಳ ನಡುವೆ ನಡೆಯುತ್ತಿರುವ ಎಲ್ಲಾ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಧಿಕಾರಿಗಳು ಈಗ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರ ಮುಂದೆ ಹಾಜರಾಗಿ ಮಾತುಕತೆಯ ಮೂಲಕ ವಿವಾದವನ್ನು ಅಂತ್ಯಗೊಳಿಸಲು ಪ್ರಯತ್ನಿಸಬೇಕಿದೆ.&lt;/p&gt;&lt;img&gt;&lt;p&gt;&lt;strong&gt;ವಿವಾದದ ಹಿನ್ನೆಲೆ ಏನು?&lt;/strong&gt;&lt;/p&gt;&lt;p&gt;2023ರಲ್ಲಿ ಡಿ. ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಫೇಸ್&zwnj;ಬುಕ್&zwnj;ನಲ್ಲಿ ಸರಣಿ ಪೋಸ್ಟ್&zwnj;ಗಳನ್ನು ಹಾಕುವ ಮೂಲಕ ಈ ವಿವಾದ ಆರಂಭವಾಗಿತ್ತು. ರೋಹಿಣಿ ಸಿಂಧೂರಿ ಅವರು ಜಾಲಹಳ್ಳಿಯಲ್ಲಿ ಬೃಹತ್ ಬಂಗಲೆ ನಿರ್ಮಿಸಿದ್ದಾರೆ ಮತ್ತು ತಮ್ಮ ಆಸ್ತಿ ವಿವರದಲ್ಲಿ ಅದನ್ನು ಘೋಷಿಸಿಲ್ಲ ಎಂದು ರೂಪಾ ಆರೋಪಿಸಿದ್ದರು. ಅಲ್ಲದೆ ಕೆಲವು ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.&lt;/p&gt;&lt;p&gt;ಇದಕ್ಕೆ ಪ್ರತಿಯಾಗಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡಿದ್ದರು. ನಂತರ ಡಿ. ರೂಪಾ ಕೂಡ ರೋಹಿಣಿ ಸಿಂಧೂರಿ ವಿರುದ್ಧ ದೂರು ದಾಖಲಿಸಿದ್ದರು. ರೋಹಿಣಿ ಅವರು ತಮ್ಮನ್ನು 'ಮಾನಸಿಕ ಅಸ್ವಸ್ಥತೆ' ಎಂದು ಕರೆದು ಅವಮಾನಿಸಿದ್ದಾರೆ ಎಂದು ರೂಪಾ ಆರೋಪಿಸಿದ್ದರು. ಈ ಸಂಬಂಧ ಕರ್ನಾಟಕ ಹೈಕೋರ್ಟ್&zwnj;ನಲ್ಲಿ ನಡೆದ ವಿಚಾರಣೆಯಲ್ಲಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು, ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.&lt;/p&gt;&lt;img&gt;&lt;p&gt;&lt;strong&gt;ಹೈಕೋರ್ಟ್ ನೀಡಿದ್ದ ತೀರ್ಪು:&lt;/strong&gt;&lt;/p&gt;&lt;p&gt;ಕರ್ನಾಟಕ ಹೈಕೋರ್ಟ್ ತನ್ನ ತೀರ್ಪಿನಲ್ಲಿ, 'ಒಬ್ಬ ಅಧಿಕಾರಿಯ ವಿರುದ್ಧದ ಆರೋಪವು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣೆಯ ಹಂತದಲ್ಲಿ ಸಾಕ್ಷ್ಯಾಧಾರಗಳ ಮೂಲಕ ನಿರ್ಧರಿಸಬೇಕು. ಇದನ್ನು ಆರಂಭಿಕ ಹಂತದಲ್ಲೇ ರದ್ದುಗೊಳಿಸಲು ಸಾಧ್ಯವಿಲ್ಲ' ಎಂದು ಹೇಳಿತ್ತು. ಹೈಕೋರ್ಟ್ ಆದೇಶದಿಂದಾಗಿ ರೋಹಿಣಿ ಸಿಂಧೂರಿ ಅವರು ವಿಚಾರಣಾ ನ್ಯಾಯಾಲಯದಲ್ಲಿ ಕ್ರಿಮಿನಲ್ ವಿಚಾರಣೆ ಎದುರಿಸುವಂತಾಗಿತ್ತು.&lt;/p&gt;&lt;img&gt;&lt;p&gt;ಈಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ ಆದೇಶಿಸಿರುವುದರಿಂದ, ಕಳೆದ ಎರಡು ವರ್ಷಗಳಿಂದ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಈ 'ಐಎಎಸ್ ವರ್ಸಸ್ ಐಪಿಎಸ್' ಸಮರವು ಶಾಂತಿಯುತವಾಗಿ ಅಂತ್ಯಗೊಳ್ಳುವ ನಿರೀಕ್ಷೆಯಿದೆ. ರಾಜ್ಯದ ಉನ್ನತ ಅಧಿಕಾರಿಗಳೇ ಹೀಗೆ ಬೀದಿಯಲ್ಲಿ ಜಗಳವಾಡುವುದು ಆಡಳಿತ ಯಂತ್ರದ ಘನತೆಗೆ ಧಕ್ಕೆ ತರುತ್ತದೆ ಎಂಬ ಸಾರ್ವಜನಿಕರ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್&zwnj;ನ ಈ ನಡೆ ಪೂರಕವಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/supreme-court-mediation-rohini-sindhuri-ias-roopa-moudgil-ips-dispute-sat-voekhf4"/>
        </item>
        <item>
            <title><![CDATA[ರೋಹಿಣಿ ಸಿಂಧೂರಿ ಕಡತಕ್ಕೆ ಸಿಎಂ ಅಸ್ತು, ವರ್ಷಗಳಿಂದ ಠಿಕಾಣಿ ಹೂಡಿದ್ದ 80% ಗಣಿ ಇಲಾಖೆ ಸಿಬ್ಬಂದಿಗೆ ವರ್ಗಾವಣೆ ಶಾಕ್!]]></title>
            <link>https://kannada.asianetnews.com/state/biggest-administrative-reshuffle-cm-dk-shivakumar-orders-mass-transfer-160-officials-in-karnataka-mining-department-gdp/articleshow-xf5hpwp</link>
            <guid isPermaLink="true">https://kannada.asianetnews.com/state/biggest-administrative-reshuffle-cm-dk-shivakumar-orders-mass-transfer-160-officials-in-karnataka-mining-department-gdp/articleshow-xf5hpwp</guid>
            <pubDate>Mon, 20 Jul 2026 17:11:39 +0530</pubDate>
            <description><![CDATA[ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 'ಮೇಜರ್ ಸರ್ಜರಿ' ಮಾಡಿದ್ದು, ದಶಕಗಳಿಂದ ಒಂದೇ ಸ್ಥಳದಲ್ಲಿದ್ದ ಸುಮಾರು 160 ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿ, ಇಲಾಖೆಯ ಆದಾಯ ಹೆಚ್ಚಿಸುವ ಉದ್ದೇಶದಿಂದ ಈ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxzn3sx5jnefdn2jyrc5649g,imgname-mining-department-1784547501988.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದಶಕಗಳಿಂದ ಒಂದೇ ಸ್ಥಳದಲ್ಲಿ ಬೀಡುಬಿಟ್ಟಿದ್ದ ಅಧಿಕಾರಿಗಳ ದರ್ಬಾರ್&zwnj;ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾರಿ ಬ್ರೇಕ್ ಹಾಕಿದ್ದಾರೆ. ಇಲಾಖೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡದಾದ ಆಡಳಿತಾತ್ಮಕ ಪುನರ್&zwnj; ವ್ಯವಸ್ಥೆಗೆ ಕೈಹಾಕಿರುವ ಸಿಎಂ, ಒಂದೇ ಸೂಕ್ಷ್ಮ ಹುದ್ದೆಗಳಲ್ಲಿ ಠಿಕಾಣಿ ಹೂಡಿದ್ದ ಸುಮಾರು ಶೇ. 80 ರಷ್ಟು ಸಿಬ್ಬಂದಿಯನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡುವ ಮೂಲಕ ಇಲಾಖೆಗೆ 'ಮೇಜರ್ ಸರ್ಜರಿ' ಮಾಡಿದ್ದಾರೆ.&lt;/p&gt;&lt;p&gt;ಅನಧಿಕೃತ ಗಣಿಗಾರಿಕೆಗೆ ಸಂಪೂರ್ಣ ಕಡಿವಾಣ ಹಾಕುವುದು, ಸ್ಥಳೀಯ ಪ್ರಭಾವಿ ರಾಜಕಾರಣಿಗಳ ಒಡನಾಟಕ್ಕೆ ಬ್ರೇಕ್ ಹಾಕುವುದು ಮತ್ತು ಇಲಾಖೆಯ ಆದಾಯವನ್ನು ಹೆಚ್ಚಿಸುವ ಜವಾಬ್ದಾರಿಯೊಂದಿಗೆ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದೆ.&lt;/p&gt;&lt;h2&gt;160 ಅಧಿಕಾರಿಗಳ ಬೃಹತ್ ವರ್ಗಾವಣೆ&lt;/h2&gt;&lt;p&gt;ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಆದೇಶದನ್ವಯ ಇಲಾಖೆಯ ವಿವಿಧ ವೃಂದದ ಒಟ್ಟು 160 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೇರೆ ಬೇರೆ ಸ್ಥಳಗಳಿಗೆ ವರ್ಗಾಯಿಸಲಾಗಿದೆ. ವರ್ಗಾವಣೆಗೊಂಡವರ ವಿವರ ಈ ಕೆಳಗಿನಂತಿದೆ:&lt;/p&gt;&lt;ul&gt; &lt;li&gt;ಭೂ ವಿಜ್ಞಾನಿಗಳು: 131 ಅಧಿಕಾರಿಗಳು&lt;/li&gt; &lt;li&gt;ಹಿರಿಯ ಭೂ ವಿಜ್ಞಾನಿಗಳು: 23 ಅಧಿಕಾರಿಗಳು&lt;/li&gt; &lt;li&gt;ಉಪನಿರ್ದೇಶಕರು (Deputy Directors): 06 ಅಧಿಕಾರಿಗಳು&lt;/li&gt;&lt;/ul&gt;&lt;p&gt;ದಶಕಗಳ ಕಾಲ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ತಮ್ಮ ಸ್ವಂತ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಲ್ಲೇ ರಾಜಕೀಯ ಪ್ರಭಾವ ಬಳಸಿ ಹುದ್ದೆ ಗಿಟ್ಟಿಸಿಕೊಂಡಿದ್ದ ಅಧಿಕಾರಿಗಳನ್ನು ಈ ಬಾರಿ ಕಡ್ಡಾಯವಾಗಿ ದೂರದ ಜಿಲ್ಲೆಗಳಿಗೆ ಸ್ಥಳಾಂತರಿಸಲಾಗಿದೆ.&lt;/p&gt;&lt;h2&gt;ರೋಹಿಣಿ ಸಿಂಧೂರಿ ಸಭೆಯಲ್ಲಿ ಪ್ರಸ್ತಾಪಿಸಿದ್ದ ಕಡತಕ್ಕೆ ಸಿಎಂ ಅಸ್ತು!&lt;/h2&gt;&lt;p&gt;ಜುಲೈ 1 ರಂದು ನಡೆದಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳ ಸುದೀರ್ಘ ಕಾಲದ ವಾಸ್ತವ್ಯದ ಬಗ್ಗೆ ಪ್ರಸ್ತಾಪಿಸಿದ್ದರು. ಇಲಾಖೆಯಲ್ಲಿ ಪಾರದರ್ಶಕತೆ ಬರಬೇಕಾದರೆ ತಳಮಟ್ಟದಿಂದ ಬದಲಾವಣೆ ಅಗತ್ಯ ಎಂದು ಅವರು ವಿವರಿಸಿದ್ದರು.&lt;/p&gt;&lt;p&gt;ವಿಷಯದ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸ್ಥಳೀಯ ಪ್ರಭಾವ ಹಾಗೂ ಅಧಿಕಾರಿಗಳ ಶಾಮೀಲಾಗಿರುವಿಕೆಯನ್ನು ಮುರಿಯಲು ತಕ್ಷಣವೇ ವರ್ಗಾವಣೆಯ ಸಮಗ್ರ ಕಡತವನ್ನು ಮಂಡಿಸುವಂತೆ ಸಭೆಯಲ್ಲೇ ರೋಹಿಣಿ ಸಿಂಧೂರಿ ಅವರಿಗೆ ಖಡಕ್ ಸೂಚನೆ ನೀಡಿದ್ದರು. ಸಿಎಂ ಸೂಚನೆ ನೀಡಿದ ಕೆಲವೇ ದಿನಗಳಲ್ಲಿ ಈ ಬೃಹತ್ ಆಡಳಿತಾತ್ಮಕ ಮರುಹಂಚಿಕೆ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದೆ.&lt;/p&gt;&lt;h2&gt;ಸರ್ಕಾರದ ಈ ಕಠಿಣ ಕ್ರಮದ ಹಿಂದಿನ ಪ್ರಮುಖ ಉದ್ದೇಶಗಳು&lt;/h2&gt;&lt;p&gt;ಒಂದೇ ಸ್ಥಳದಲ್ಲಿದ್ದ ಅಧಿಕಾರಿಗಳು ಸ್ಥಳೀಯ ಅಕ್ರಮ ಗಣಿಗಾರಿಕೆ ದಂಧೆಕೋರರೊಂದಿಗೆ ಶಾಮೀಲಾಗುವುದನ್ನು ತಡೆಯುವುದು. ರಾಜಕೀಯ ಮತ್ತು ಪ್ರಾದೇಶಿಕ ಒತ್ತಡಗಳಿಗೆ ಮಣಿಯದೆ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲು ವಾತಾವರಣ ನಿರ್ಮಿಸುವುದು. ಇಲಾಖೆಯ ಇತಿಹಾಸದಲ್ಲೇ ಇಷ್ಟು ದೊಡ್ಡ ಮಟ್ಟದ ವರ್ಗಾವಣೆ ನಡೆದಿರುವುದು ಇದೇ ಮೊದಲು. ಇದರ ನೇರ ಉದ್ದೇಶ ಸರ್ಕಾರದ ಖಜನೆಗೆ ಬರುವ ಗಣಿಗಾರಿಕೆ ಆದಾಯವನ್ನು ಗಣನೀಯವಾಗಿ ಹೆಚ್ಚಿಸುವುದಾಗಿದೆ. ಸೂಕ್ಷ್ಮ ಮತ್ತು ಆಯಕಟ್ಟಿನ ಹುದ್ದೆಗಳಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸುವ ಮೂಲಕ ಇಲಾಖೆಯಲ್ಲಿ ಪಾರದರ್ಶಕತೆ ಹಾಗೂ ಜವಾಬ್ದಾರಿಯನ್ನು ತರುವುದು ಮುಖ್ಯ ಉದ್ದೇಶವಾಗಿದೆ. ಮುಖ್ಯಮಂತ್ರಿಗಳ ಈ ದಿಟ್ಟ ಕ್ರಮದಿಂದಾಗಿ ಗಣಿ ದಂಧೆಕೋರರಿಗೆ ಹಾಗೂ ಅವರಿಗೆ ಸಾಥ್ ನೀಡುತ್ತಿದ್ದ ಅಧಿಕಾರಿ ವಲಯಕ್ಕೆ ತೀವ್ರ ನಡುಕ ಉಂಟಾಗಿದ್ದು, ಇಲಾಖೆಯಲ್ಲಿ ಹೊಸ ಆಡಳಿತ ಪರ್ವ ಆರಂಭವಾದಂತಾಗಿದೆ.&lt;/p&gt;]]></content:encoded>
            <category>state-government-jobs</category>
            <dc:creator>Gowthami K</dc:creator>
            <atom:link href="https://kannada.asianetnews.com/state/biggest-administrative-reshuffle-cm-dk-shivakumar-orders-mass-transfer-160-officials-in-karnataka-mining-department-gdp/articleshow-xf5hpwp"/>
        </item>
        <item>
            <title><![CDATA[ಬೆಂಗಳೂರು ಪೊಲೀಸ್‌ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: 5 ಹೊಸ ಕಮಿಷನರೇಟ್‌, 6,633 ಹೊಸ ಹುದ್ದೆ ಸೃಷ್ಟಿಗೆ ಪ್ರಸ್ತಾವನೆ!]]></title>
            <link>https://kannada.asianetnews.com/state/bengaluru-police-commissionerate-split-into-5-zones-proposal-details-khs/articleshow-y9qxtom</link>
            <guid isPermaLink="true">https://kannada.asianetnews.com/state/bengaluru-police-commissionerate-split-into-5-zones-proposal-details-khs/articleshow-y9qxtom</guid>
            <pubDate>Mon, 03 Aug 2026 18:52:22 +0530</pubDate>
            <description><![CDATA[ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಅಪರಾಧಗಳನ್ನು ನಿಯಂತ್ರಿಸಲು, ನಗರ ಪೊಲೀಸ್ ಕಮಿಷನರೇಟ್ ಅನ್ನು ಐದು ಪ್ರತ್ಯೇಕ ಕಮಿಷನರೇಟ್&zwnj;ಗಳಾಗಿ ವಿಭಜಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬೃಹತ್ ಯೋಜನೆಗಾಗಿ 6,633 ಹೊಸ ಹುದ್ದೆಗಳನ್ನು ಸೃಷ್ಟಿಸಲು ಶಿಫಾರಸು ಮಾಡಲಾಗಿದ್ದು, ಇಡೀ ನಗರಕ್ಕೆ ಒಬ್ಬರು 'ಮುಖ್ಯ ಪೊಲೀಸ್ ಆಯುಕ್ತರು' ಮೇಲ್ವಿಚಾರಣೆ ನಡೆಸಲಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz3wcr3x0q9anckcr065gb93,imgname-bengaluru-police-commissionerate-split-into-5-zones-1785763094652.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.03): ರಾ&lt;/strong&gt;ಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ವಾಹನ ದಟ್ಟಣೆ (Traffic Congestion), ಸೈಬರ್ ಅಪರಾಧಗಳು (Cyber Crimes) ಹಾಗೂ ಭೌಗೋಳಿಕ ವಿಸ್ತರಣೆಗೆ ತಕ್ಕಂತೆ ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು (Law and Order) ಮತ್ತಷ್ಟು ಬಲಪಡಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬೃಹತ್ ಯೋಜನೆಯೊಂದನ್ನು ರೂಪಿಸಿದೆ.&lt;/p&gt;&lt;p&gt;ಬೆಂಗಳೂರು ಮಹಾನಗರ ಪ್ರಾಧಿಕಾರ (GBA) ವಲಯಗಳ ಮಾದರಿಯಲ್ಲೇ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಅನ್ನು ಐದು (5) ಪ್ರತ್ಯೇಕ ಪೊಲೀಸ್ ಕಮಿಷನರೇಟ್&zwnj;ಗಳಾಗಿ (Police Commissionerates) ವಿಂಗಡಿಸಿ, ಇಡೀ ನಗರಕ್ಕೆ ಒಬ್ಬರು 'ಮುಖ್ಯ ಪೊಲೀಸ್ ಆಯುಕ್ತರನ್ನು' (Chief Commissioner of Police) ನೇಮಿಸಲು ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಲಾಗಿದೆ.&lt;/p&gt;&lt;h2&gt;&lt;strong&gt;ಐದು ಹೊಸ ಕಮಿಷನರೇಟ್&zwnj;ಗಳು ಯಾವುವು?&lt;/strong&gt;&lt;/h2&gt;&lt;p&gt;ಪ್ರಸ್ತುತ ಇರುವ ಬೆಂಗಳೂರು ನಗರ ಪೊಲೀಸ್ ಘಟಕವನ್ನು ಮರುಸಂಘಟಿಸಿ (Re-organisation) ಕೆಳಗಿನಂತೆ 5 ಪ್ರತ್ಯೇಕ ಕಮಿಷನರೇಟ್&zwnj;ಗಳನ್ನಾಗಿ ಮಾಡಲು ಉದ್ದೇಶಿಸಲಾಗಿದೆ:&lt;/p&gt;&lt;ol&gt; &lt;li&gt;ಸೆಂಟ್ರಲ್ ಕಮಿಷನರೇಟ್ (Central COP): CBD ವಲಯ, ವಿಧಾನಸೌಧ, ಉಚ್ಚ ನ್ಯಾಯಾಲಯ ಹಾಗೂ ಪ್ರಮುಖ ವಾಣಿಜ್ಯ ಪ್ರದೇಶಗಳು.&lt;/li&gt; &lt;li&gt;ನಾರ್ತ್ ಕಮಿಷನರೇಟ್ (North COP): ಯಲಹಂಕ, ದೇವನಹಳ್ಳಿ, ವಿಮಾನ ನಿಲ್ದಾಣ (KIAB) ಹಾಗೂ ಸುತ್ತಮುತ್ತಲ ಪ್ರದೇಶಗಳು.&lt;/li&gt; &lt;li&gt;ಸೌತ್ ಕಮಿಷನರೇಟ್ (South COP): ಜಯನಗರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಹಾಗೂ ದಕ್ಷಿಣ ಭಾಗಗಳು.&lt;/li&gt; &lt;li&gt;ವೆಸ್ಟ್ ಕಮಿಷನರೇಟ್ (West COP): ವಿಜಯನಗರ, ಪೀಣ್ಯ, ಕೆಂಗೇರಿ ಹಾಗೂ ಪಶ್ಚಿಮ ವಲಯದ ಕೈಗಾರಿಕಾ ಪ್ರದೇಶಗಳು.&lt;/li&gt; &lt;li&gt;ಈಸ್ಟ್ ಕಮಿಷನರೇಟ್ (East COP): ವೈಟ್&zwnj;ಫೀಲ್ಡ್, ಕೆ.ಆರ್. ಪುರಂ, ಮಹದೇವಪುರ ಮತ್ತು ಕೃಷ್ಣರಾಜಪುರ ಭಾಗಗಳು.&lt;/li&gt;&lt;/ol&gt;&lt;p&gt;ಈ ಐದೂ ವಲಯಗಳ ಮೇಲ್ವಿಚಾರಣೆಯನ್ನು ಐಜಿಪಿ/ಡಿಐಜಿಪಿ (IGP/DIGP) ದರ್ಜೆಯ ಅಧಿಕಾರಿಗಳು ವಹಿಸಿಕೊಳ್ಳಲಿದ್ದು, ಇವರೆಲ್ಲರೂ &lsquo;ಚೀಫ್ ಕಮಿಷನರ್ ಆಫ್ ಪೊಲೀಸ್&rsquo; (Chief Commissioner of Police) ಅವರ ಅಧೀನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.&lt;/p&gt;&lt;h2&gt;&lt;strong&gt;6,633 ಹೊಸ ಹುದ್ದೆಗಳ ಸೃಷ್ಟಿಗೆ ಸಿಫಾರಸು!&lt;/strong&gt;&lt;/h2&gt;&lt;p&gt;ಈ ಬೃಹತ್ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಒಟ್ಟು 6,633 ಹೊಸ ಹುದ್ದೆಗಳನ್ನು (New Posts Creation) ಸೃಷ್ಟಿಸಲು ಪ್ರಸ್ತಾವನೆಯಲ್ಲಿ ಕೋರಲಾಗಿದೆ.&lt;/p&gt;&lt;p&gt;&lt;strong&gt;ವಲಯವಾರು ಅಗತ್ಯವಿರುವ ಹೊಸ ಹುದ್ದೆಗಳು:&lt;/strong&gt;&lt;/p&gt;&lt;ul&gt; &lt;li&gt;ಈಸ್ಟ್ ಕಮಿಷನರೇಟ್ (East COP): 2,734 ಹುದ್ದೆಗಳು&lt;/li&gt; &lt;li&gt;ವೆಸ್ಟ್ ಕಮಿಷನರೇಟ್ (West COP): 1,235 ಹುದ್ದೆಗಳು&lt;/li&gt; &lt;li&gt;ಸೌತ್ ಕಮಿಷನರೇಟ್ (South COP): 1,043 ಹುದ್ದೆಗಳು&lt;/li&gt; &lt;li&gt;ನಾರ್ತ್ ಕಮಿಷನರೇಟ್ (North COP): 944 ಹುದ್ದೆಗಳು&lt;/li&gt; &lt;li&gt;ಸೆಂಟ್ರಲ್ ಕಮಿಷನರೇಟ್ (Central COP): 677 ಹುದ್ದೆಗಳು&lt;/li&gt;&lt;/ul&gt;&lt;h2&gt;&lt;strong&gt;ಬದಲಾವಣೆಗೆ ಪ್ರಮುಖ ಕಾರಣಗಳೇನು?&lt;/strong&gt;&lt;/h2&gt;&lt;p&gt;&lt;strong&gt;ಬೃಹತ್ ಜನಸಂಖ್ಯೆ: &lt;/strong&gt;ಬೆಂಗಳೂರಿನ ಹಾಲಿ ಜನಸಂಖ್ಯೆ ಸುಮಾರು 1.56 ಕೋಟಿಗೂ ಮೀರಿದ್ದು, ನಗರದ ವಿಸ್ತೀರ್ಣ 712 ಚದರ ಕಿಲೋಮೀಟರ್&zwnj;ಗೆ ತಲುಪಿದೆ.&lt;/p&gt;&lt;p&gt;&lt;strong&gt;ಐಟಿ-ಬಿಟಿ ವಲಯ ಮತ್ತು ಕೈಗಾರಿಕೆಗಳು:&lt;/strong&gt; ವೈಟ್&zwnj;ಫೀಲ್ಡ್, ಪೀಣ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿಯಂತಹ ವಲಯಗಳಲ್ಲಿ ಭದ್ರತೆ (Security) ಮತ್ತು ಸಂಚಾರ ನಿರ್ವಹಣೆ ಅತ್ಯಂತ ಸವಾಲಿನದ್ದಾಗಿದೆ.&lt;/p&gt;&lt;p&gt;&lt;strong&gt;ತನಿಖೆಯ ವೇಗ (Fast Investigation): &lt;/strong&gt;ಪ್ರತ್ಯೇಕ ಕಮಿಷನರೇಟ್&zwnj;ಗಳಿಂದಾಗಿ ಅಪರಾಧ ಪ್ರಕರಣಗಳ ತನಿಖೆ (Crime Investigation) ಹಾಗೂ ವಿಲೇವಾರಿ ವೇಗವಾಗಿ ನಡೆಯಲಿದೆ.&lt;/p&gt;&lt;p&gt;&lt;strong&gt;ಸಂಚಾರ ನಿಯಂತ್ರಣ (Traffic Management):&lt;/strong&gt; ಪ್ರತಿ ಕಮಿಷನರೇಟ್&zwnj;ನಲ್ಲಿಯೂ ಪ್ರತ್ಯೇಕ ಸಂಚಾರ ವಿಭಾಗ (Traffic Division) ಇರುವುದರಿಂದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹೆಚ್ಚಿನ ಗಮನ ಹರಿಸಬಹುದು.&lt;/p&gt;&lt;h2&gt;&lt;strong&gt;ಅಂದಾಜು ವೆಚ್ಚ ಎಷ್ಟು?&lt;/strong&gt;&lt;/h2&gt;&lt;p&gt;ಈ ಯೋಜನೆಗಾಗಿ ಒಟ್ಟು ₹7,648.72 ಕೋಟಿ (₹764.87 Crore / 7648.72 Million) ವೆಚ್ಚವಾಗಲಿದ್ದು, ಇದರಲ್ಲಿ ಸಿಬ್ಬಂದಿ ವೇತನ ಒಳಗೊಂಡಂತೆ ಆವರ್ತಕ ವೆಚ್ಚ (Recurring Cost) ₹3,687.12 ಕೋಟಿ ಹಾಗೂ ಸಿಸಿಟಿವಿ (CCTV), ವಾಹನಗಳು, ತಂತ್ರಜ್ಞಾನ ಮತ್ತು ಮೂಲಸೌಕರ್ಯಕ್ಕಾಗಿ (Non-Recurring Cost) ₹3,961.60 ಕೋಟಿ ಅನುದಾನದ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.&lt;/p&gt;&lt;p&gt;ರಾಜ್ಯ ಸಚಿವ ಸಂಪುಟವು (Karnataka Cabinet) ಈ ಪ್ರಸ್ತಾವನೆಗೆ ಅನುಮೋದನೆ ನೀಡಿದರೆ, ರಾಜಧಾನಿ ಬೆಂಗಳೂರಿನ ಭದ್ರತಾ ವ್ಯವಸ್ಥೆಯಲ್ಲಿ ಇತಿಹಾಸದಲ್ಲೇ ಅತ್ಯಂತ ದೊಡ್ಡ ನವೀಕರಣ (Upgrade) ಆಗಲಿದೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/bengaluru-police-commissionerate-split-into-5-zones-proposal-details-khs/articleshow-y9qxtom"/>
        </item>
        <item>
            <title><![CDATA[ಕೆಪಿಎಸ್‌ಸಿ ಮತ್ತೊಂದು ಭಾರೀ ಹಗರಣ: ₹80 ಲಕ್ಷಕ್ಕೆ ಪಶುವೈದ್ಯ ಹುದ್ದೆ ಮಾರಾಟ? ವಿಡಿಯೋ ಸಮೇತ ಮದ್ಯವರ್ತಿ ಲಾಕ್!]]></title>
            <link>https://kannada.asianetnews.com/state-government-jobs/kpsc-veterinary-doctors-and-officers-recruitment-scam-80-lakhs-for-one-post-exclusive-sat/articleshow-yed2fin</link>
            <guid isPermaLink="true">https://kannada.asianetnews.com/state-government-jobs/kpsc-veterinary-doctors-and-officers-recruitment-scam-80-lakhs-for-one-post-exclusive-sat/articleshow-yed2fin</guid>
            <pubDate>Thu, 23 Jul 2026 12:43:38 +0530</pubDate>
            <description><![CDATA[ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಒಂದು ಹುದ್ದೆಗೆ 80 ಲಕ್ಷ ರೂ. ವರೆಗೆ ಮಾರಾಟ ಮಾಡಲಾಗಿದ್ದು, ಈ ಅಕ್ರಮಕ್ಕೆ ಸಂಬಂಧಿಸಿದ ಮಧ್ಯವರ್ತಿಯ ವಿಡಿಯೋವೊಂದು ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆಗ್ರಹಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ky6x53gaf3pp5mrdtwf22n3g,imgname-kpsc-scam--1--1784790814218.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜು.23): ಪ್ರ&lt;/strong&gt;ತಿಭಾವಂತ ನಿರುದ್ಯೋಗಿ ಯುವಕರಿಗೆ ಆಸರೆಯಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ (Massive Scam) ಬಯಲಾಗಿದೆ. ರಾಜ್ಯದ ಪಶು ವೈದ್ಯಾಧಿಕಾರಿಗಳ ನೇಮಕಾತಿ (Veterinary Officer Recruitment) ಪ್ರಕ್ರಿಯೆಯಲ್ಲಿ ಭಾರೀ ಗೋಲ್ಮಾಲ್ ನಡೆದಿದ್ದು, ಒಂದು ಸರ್ಕಾರಿ ಹುದ್ದೆಯನ್ನು ಬರೋಬ್ಬರಿ 80 ಲಕ್ಷ ರೂಪಾಯಿಗಳಿಗೆ (80 Lakh Rupees) ಮಾರಾಟ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;&lt;strong&gt;ಶೇ. 60ರಷ್ಟು ಹುದ್ದೆಗಳಲ್ಲಿ ಅಕ್ರಮ!:&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ [342 ಸಾಮಾನ್ಯ + 58 ಬ್ಯಾಕ್&zwnj;ಲಾಗ್ (Backlog Posts)] ಕಳೆದ ಜನವರಿ 8 ರಂದು ಲಿಖಿತ ಪರೀಕ್ಷೆ (Written Exam) ನಡೆದಿತ್ತು. ಇತ್ತೀಚೆಗಷ್ಟೇ, ಅಂದರೆ ಜುಲೈ 17 ರಂದು ಇದರ ಫಲಿತಾಂಶ (Exam Results) ಹೊರಬಿದ್ದಿತ್ತು. ಆದರೆ, ಫಲಿತಾಂಶ ನೋಡಿದ ನೈಜ ಆಕಾಂಕ್ಷಿಗಳು ದಿಗ್ಭ್ರಮೆಗೊಳಗಾಗಿದ್ದಾರೆ. ಒಟ್ಟು ನೇಮಕಾತಿ ಪ್ರಕ್ರಿಯೆಯಲ್ಲಿ ಶೇ. 60ರಷ್ಟು ಹುದ್ದೆಗಳಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು (Candidates) ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗಷ್ಟೇ ಅಮಾನತ್ತಾದ ಕೆಪಿಎಸ್&zwnj;ಸಿ ಸದಸ್ಯ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ಅವರ ಕೈವಾಡ ಈ ಹಗರಣದಲ್ಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.&lt;/p&gt;&lt;h2&gt;&lt;strong&gt;ವಿಡಿಯೋದಲ್ಲಿ ಸಿಕ್ಕಿಬಿದ್ದ ಮಧ್ಯವರ್ತಿ!:&lt;/strong&gt;&lt;/h2&gt;&lt;p&gt;ಈ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಪುಷ್ಟಿ ನೀಡುವಂತೆ ಮಧ್ಯವರ್ತಿಗಳ (Middlemen) ಡೀಲಿಂಗ್&zwnj;ನ ಎಕ್ಸ್&zwnj;ಕ್ಲೂಸಿವ್ ವಿಡಿಯೋವೊಂದು (Exclusive Video) ಲಭ್ಯವಾಗಿದೆ. ಮೊಹಮ್ಮದ್ ಆರಿಫ್ (Mohammed Arif) ಎಂಬ ಮಧ್ಯವರ್ತಿಯು ಕಾಂತಕುಮಾರ್ ಎಂಬುವವರ ಜೊತೆ ಫೋನ್ ಕರೆಯಲ್ಲಿ (Phone Call) ನೇರವಾಗಿ ಹಣಕ್ಕೆ ಡಿಮ್ಯಾಂಡ್ (Direct Cash Demand) ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಒಂದೊಂದು ಪೋಸ್ಟ್&zwnj;ಗೂ ಲಕ್ಷ ಲಕ್ಷ ಹಣದ ಚೌಕಾಸಿ ನಡೆದಿರುವುದು ಈ ವಿಡಿಯೋದಿಂದ ಸ್ಪಷ್ಟವಾಗಿದೆ.&lt;/p&gt;&lt;h2&gt;&lt;strong&gt;ವಿಧಾನಸೌಧ ಠಾಣೆ ಮೆಟ್ಟಿಲೇರಿದ ಅಭ್ಯರ್ಥಿಗಳು:&lt;/strong&gt;&lt;/h2&gt;&lt;p&gt;ಪರೀಕ್ಷೆ ಬರೆದು ಹಗಲಿರುಳು ಕಷ್ಟಪಟ್ಟಿದ್ದ ವೆಟರ್ನರಿ ಡಾಕ್ಟರ್ಸ್ (Veterinary Doctors) ಈಗ ಆಕ್ರೋಶಗೊಂಡಿದ್ದಾರೆ. ಈ ಭಾರೀ ಅಕ್ರಮದ ವಿರುದ್ಧ ಸಿಡಿದೆದ್ದಿರುವ 50ಕ್ಕೂ ಹೆಚ್ಚು ಅಭ್ಯರ್ಥಿಗಳು ನೇರವಾಗಿ ವಿಧಾನಸೌಧ ಪೊಲೀಸ್ ಠಾಣೆಗೆ (Vidhana Soudha Police Station) ಆಗಮಿಸಿ ದೂರು (Complaint) ದಾಖಲಿಸಲು ಮುಂದಾಗಿದ್ದಾರೆ.&lt;/p&gt;&lt;h2&gt;&lt;strong&gt;ಆಕಾಂಕ್ಷಿಗಳ ಪ್ರಮುಖ ಬೇಡಿಕೆಗಳೇನು?:&lt;/strong&gt;&lt;/h2&gt;&lt;p&gt;ಹಣವಿದ್ದವರಿಗೆ ಮಾತ್ರ ಕೆಪಿಎಸ್&zwnj;ಸಿಯಲ್ಲಿ ಕೆಲಸ ಸಿಗುವುದಾದರೆ ನಾವೇಕೆ ಓದಬೇಕು ಎಂದು ಪ್ರಶ್ನಿಸಿರುವ ಅಭ್ಯರ್ಥಿಗಳು, ಈಗ ನಡೆದಿರುವ ಇಡೀ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು (Cancel Recruitment Process) ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಪಾರದರ್ಶಕವಾಗಿ ಮರು ಪ್ರಕ್ರಿಯೆ ಹಾಗೂ ಮರು ಪರೀಕ್ಷೆ (Re-examination) ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>state-government-jobs</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state-government-jobs/kpsc-veterinary-doctors-and-officers-recruitment-scam-80-lakhs-for-one-post-exclusive-sat/articleshow-yed2fin"/>
        </item>
    </channel>
</rss>
