<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 26 Apr 2026 20:18:26 +0530</lastBuildDate>
        <atom:link href="https://kannada.asianetnews.com/rss/tumakuru" rel="self" type="application/rss+xml"/>
        <item>
            <title><![CDATA[ಕರ್ನಾಟಕದಲ್ಲಿ ಮೇ 5ರ ನಂತರ ಕಾಂಗ್ರೆಸ್‌ ಸರ್ಕಾರ ಪತನ, 'ರಾಷ್ಟ್ರಪತಿ ಆಳ್ವಿಕೆ' ಜಾರಿ; ಶಾಸಕ ಸುರೇಶ್ ಗೌಡ ಹೊಸ ಬಾಂಬ್!]]></title>
            <link>https://kannada.asianetnews.com/politics/karnataka-political-breaking-mla-suresh-gowda-predicts-presidents-rule-after-may-5-sat/articleshow-1dz2h0w</link>
            <guid isPermaLink="true">https://kannada.asianetnews.com/politics/karnataka-political-breaking-mla-suresh-gowda-predicts-presidents-rule-after-may-5-sat/articleshow-1dz2h0w</guid>
            <pubDate>Fri, 24 Apr 2026 13:38:36 +0530</pubDate>
            <description><![CDATA[ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದ ಪತನಗೊಂಡು, ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpz7ysp5t8w8agnkn41ddt1z,imgname-tumakuru-mla-suresh-gowda-1777017513669.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.24): ರಾ&lt;/strong&gt;ಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ತಿರುವುಗಳು ಸಿಗುತ್ತಿವೆ. ಗ್ಯಾರಂಟಿ ಯೋಜನೆಗಳ ಅಬ್ಬರದ ನಡುವೆಯೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್&zwnj; ಸರ್ಕಾರದ ಅಸ್ತಿತ್ವದ ಬಗ್ಗೆ ವಿರೋಧ ಪಕ್ಷದ ನಾಯಕರು ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಈಗ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ನೀಡಿರುವ ಒಂದು ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.&lt;/p&gt;&lt;h3&gt;&lt;strong&gt;ಮೇ 5ರ ನಂತರ ಕ್ರಾಂತಿ, ರಾಷ್ಟ್ರಪತಿ ಆಳ್ವಿಕೆ ಭವಿಷ್ಯ!&lt;/strong&gt;&lt;/h3&gt;&lt;p&gt;ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುರೇಶ್ ಗೌಡ, &quot;ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಕ್ರಾಂತಿಯಾಗಲಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದ ನಂತರ ಕರ್ನಾಟಕದಲ್ಲಿ ಅಲ್ಲೋಲ ಕಲ್ಲೊಲ ಸೃಷ್ಟಿಯಾಗಲಿದೆ. ಕಾಂಗ್ರೆಸ್ ಸರ್ಕಾರವು ಆಂತರಿಕ ಕಚ್ಚಾಟದಿಂದಾಗಿ ಪತನಗೊಳ್ಳಲಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ&quot; ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಸಿಎಂ ಕುರ್ಚಿಗಾಗಿ ಕಾಂಗ್ರೆಸ್&zwnj;ನಲ್ಲಿ ಪಂಚಕೋನ ಸ್ಪರ್ಧೆ?&lt;/strong&gt;&lt;/h3&gt;&lt;p&gt;ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆಯ ಕಿತ್ತಾಟದ ಬಗ್ಗೆ ವಾಗ್ದಾಳಿ ನಡೆಸಿದ ಸುರೇಶ್ ಗೌಡ, 'ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ಮತ್ತು ಸಿದ್ದರಾಮಯ್ಯ ಅವರ ಆಪ್ತ ಬಳಗದ ಜೊತೆಗಿನ ಸಭೆಗಳನ್ನು ಗಮನಿಸಿದರೆ ಸರ್ಕಾರ ಸುಭದ್ರವಾಗಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅತ್ತ ಡಿಕೆಶಿ ನಾನು ಮುಖ್ಯಮಂತ್ರಿ ಆಗಬೇಕು ಎಂದು ತಯಾರಿ ನಡೆಸಿದ್ದಾರೆ. ಮೇ 10ನೇ ತಾರೀಖು ಅವರು ಸಿಎಂ ಆಗಲು ದಿನಾಂಕ ಕೂಡ ಫಿಕ್ಸ್ ಆಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇತ್ತ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಜೊತೆ ಗುಪ್ತವಾಗಿ ಸಭೆ ನಡೆಸುತ್ತಿದ್ದಾರೆ' ಎಂದು ಲೇವಡಿ ಮಾಡಿದರು.&lt;/p&gt;&lt;p&gt;ಕೇವಲ ಸಿದ್ದರಾಮಯ್ಯ ಮತ್ತು ಡಿಕೆಶಿ ಮಾತ್ರವಲ್ಲದೆ, ಮುಖ್ಯಮಂತ್ರಿ ರೇಸ್&zwnj;ನಲ್ಲಿ ಹಲವು ನಾಯಕರಿದ್ದಾರೆ ಎಂದು ಸುರೇಶ್ ಗೌಡ ಪಟ್ಟಿ ಮಾಡಿದರು. 'ನಮ್ಮ ಜಿಲ್ಲೆಯ ಪರಮೇಶ್ವರ್ ಅವರು ನಾನು ಮುಖ್ಯಮಂತ್ರಿ ಆಗಬೇಕು ಎಂದು ಓಡಾಟ ನಡೆಸುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಮತ್ತು ಎಂಬಿ ಪಾಟೀಲ್ ಕೂಡ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈ ಆಂತರಿಕ ಕಚ್ಚಾಟವೇ ಸರ್ಕಾರಕ್ಕೆ ಮುಳುವಾಗಲಿದೆ' ಎಂದರು.&lt;/p&gt;&lt;h2&gt;&lt;strong&gt;ಮತ್ತೆ ಚುನಾವಣೆ ನಡೆದರೆ ಮೈತ್ರಿಗೆ 175 ಸೀಟು!&lt;/strong&gt;&lt;/h2&gt;&lt;p&gt;ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು ರೋಸಿ ಹೋಗಿದ್ದಾರೆ ಎಂದು ಕಿಡಿಕಾರಿದ ಸುರೇಶ್ ಗೌಡ, 'ಇವತ್ತು ರಾಜ್ಯದಲ್ಲಿ ಚುನಾವಣೆ ನಡೆದರೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ 175ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಕೇವಲ ಕುರ್ಚಿ ಉಳಿಸಿಕೊಳ್ಳುವ ಆಟದಲ್ಲಿ ಸರ್ಕಾರ ಮಗ್ನವಾಗಿದೆ' ಎಂದು ಭವಿಷ್ಯ ನುಡಿದರು. ಶಾಸಕ ಸುರೇಶ್ ಗೌಡ ಅವರ ಈ ಹೇಳಿಕೆಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ನಾಯಕರು ಇದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟಾರೆಯಾಗಿ ಮೇ 5ರ ನಂತರದ ರಾಜಕೀಯ ಬೆಳವಣಿಗೆಗಳ ಮೇಲೆ ಇಡೀ ರಾಜ್ಯದ ಕಣ್ಣು ನೆಟ್ಟಿದೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/karnataka-political-breaking-mla-suresh-gowda-predicts-presidents-rule-after-may-5-sat/articleshow-1dz2h0w"/>
        </item>
        <item>
            <title><![CDATA[ಮಧುಗಿರಿ ತಾಲೂಕು ಪಂಚಾಯಿತಿ ನಿವೃತ್ತ ನೌಕರರ ₹4.27 ಕೋಟಿ ಗುಳುಂ ಸ್ವಾಹಃ: ಮಹಿಳಾ ಅಧಿಕಾರಿ ಸಸ್ಪೆಂಡ್!]]></title>
            <link>https://kannada.asianetnews.com/karnataka-districts/tumakuru-sda-suspended-for-rs-4-27-crore-embezzlement-in-madhugiri-taluk-panchayat-sat/articleshow-3gz7q5r</link>
            <guid isPermaLink="true">https://kannada.asianetnews.com/karnataka-districts/tumakuru-sda-suspended-for-rs-4-27-crore-embezzlement-in-madhugiri-taluk-panchayat-sat/articleshow-3gz7q5r</guid>
            <pubDate>Fri, 10 Apr 2026 13:37:02 +0530</pubDate>
            <description><![CDATA[&lt;p&gt;ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ, ನಿವೃತ್ತ ಮತ್ತು ಮೃತ ನೌಕರರ ಗಳಿಕೆ ರಜೆ ನಗದೀಕರಣದ 4.27 ಕೋಟಿ ರೂ.ಗಳನ್ನು ದುರ್ಬಳಕೆ ಮಾಡಿದ ಆರೋಪದ ಮೇಲೆ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knv6p3aycw2rx64mtn8pan9y,imgname-madhugiri-tp-sda-suspended--1--1775808220510.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.10): ಮ&lt;/strong&gt;ಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ಬರೋಬ್ಬರಿ 4.27 ಕೋಟಿ ರೂಪಾಯಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದ್ವಿತೀಯ ದರ್ಜೆ ಸಹಾಯಕಿ (SDA) ಸೌಮ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.&lt;/p&gt;&lt;h3&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h3&gt;&lt;p&gt;ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ಎಸ್&zwnj;ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೌಮ್ಯ ಅವರು, ನಿವೃತ್ತಿ ಹೊಂದಿದ ಅಥವಾ ಮರಣ ಹೊಂದಿದ ಸರ್ಕಾರಿ ನೌಕರರ 'ಗಳಿಕೆ ರಜೆ ನಗದೀಕರಣ' (Earned Leave Encashment) ಮಂಜೂರಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಅರ್ಹ ಫಲಾನುಭವಿಗಳಿಗೆ ಸೇರಬೇಕಿದ್ದ ಹಣವನ್ನು ವಿವಿಧ ಖಾಸಗಿ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.&lt;/p&gt;&lt;h2&gt;&lt;strong&gt;ತನಿಖೆಯಲ್ಲಿ ಬಯಲಾದ ಸತ್ಯ:&lt;/strong&gt;&lt;/h2&gt;&lt;p&gt;ಸುಮಾರು 4 ಕೋಟಿ 27 ಲಕ್ಷ ರೂಪಾಯಿಗಳಷ್ಟು ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿರುವುದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿದೆ. ಇಲಾಖಾ ತನಿಖೆಯ ವೇಳೆ ಈ ಅಕ್ರಮದ ಆಳ ಮತ್ತು ವಿಸ್ತಾರ ಬೆಳಕಿಗೆ ಬಂದಿದ್ದು, ಸೌಮ್ಯ ಅವರು ವ್ಯವಸ್ಥಿತವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿರುವುದು ಪತ್ತೆಯಾಗಿದೆ.&lt;/p&gt;&lt;h3&gt;&lt;strong&gt;ಅಮಾನತು ಆದೇಶ:&lt;/strong&gt;&lt;/h3&gt;&lt;p&gt;ಈ ಗಂಭೀರ ಆರ್ಥಿಕ ಶಿಸ್ತು ಉಲ್ಲಂಘನೆ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಅಶ್ವಿಜಾ ಬಿ.ವಿ. ಅವರು ಸೌಮ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸರ್ಕಾರದ ಹಣವನ್ನು ಸ್ವಂತ ಲಾಭಕ್ಕೆ ಬಳಸಿಕೊಂಡಿರುವ ಈ ಪ್ರಕರಣ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸದ್ಯ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಈ ಅಕ್ರಮದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-sda-suspended-for-rs-4-27-crore-embezzlement-in-madhugiri-taluk-panchayat-sat/articleshow-3gz7q5r"/>
        </item>
        <item>
            <title><![CDATA[ಅಂಕೋಲಾ ಹೆದ್ದಾರಿಯಲ್ಲಿ ಎಥನಾಲ್ ದ್ರಾವಣ ತುಂಬಿದ ಟ್ಯಾಂಕರ್ ಸ್ಟೋಟ, ಅಗ್ನಿ ಜ್ವಾಲೆಗೆ ತುಮಕೂರು ಮೂಲದ ಚಾಲಕ ಗಂಭೀರ]]></title>
            <link>https://kannada.asianetnews.com/karnataka-districts/uttara-kannada-news-ethanol-tanker-explodes-on-nh-66-near-ankola-driver-injured-traffic-disrupted-gdp/articleshow-5kztsb3</link>
            <guid isPermaLink="true">https://kannada.asianetnews.com/karnataka-districts/uttara-kannada-news-ethanol-tanker-explodes-on-nh-66-near-ankola-driver-injured-traffic-disrupted-gdp/articleshow-5kztsb3</guid>
            <pubDate>Fri, 17 Apr 2026 15:00:53 +0530</pubDate>
            <description><![CDATA[ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpdc98zz796fweqdsekfad8y,imgname-ankola-ethanol-tanker-explosion-1776418071551.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಅಂಕೋಲಾ: &lt;/strong&gt;ಎಥನಾಲ್ ದ್ರಾವಣ ತುಂಬಿಕೊಂಡು ಬೆಳಗಾವಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಂಚಿನಬಾಗಿಲ ಬಳಿ ಗುರುವಾರ ನಡೆದಿದೆ. ಸ್ಫೋಟದ ತೀವ್ರತೆಗೆ ಟ್ಯಾಂಕರ್&zwnj;ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನಿಗೂ ಬೆಂಕಿ ತಗುಲಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಟ್ಯಾಂಕರ್ ಚಾಲಕ ಮುರುಗೇಶ ಚಿಕಿತ್ಸೆ ಪಡೆಯುತ್ತಿದ್ದು, ತುಮಕೂರಿನ ಚಿಕ್ಕನಾಯಕನಹಳ್ಳಿಯವರೆಂದು ತಿಳಿದುಬಂದಿದೆ.&lt;/p&gt;&lt;h2&gt;ಮರ-ಗಿಡಗಳಿಗೂ ವ್ಯಾಪಿಸಿದ ಬೆಂಕಿ&lt;/h2&gt;&lt;p&gt;ಟ್ಯಾಂಕರ್ ಸ್ಫೋಟಗೊಂಡ ತಕ್ಷಣ ಸುತ್ತಲಿನ ಮರ-ಗಿಡಗಳಿಗೂ ಬೆಂಕಿ ವ್ಯಾಪಿಸಿದ್ದು, ಪರಿಸ್ಥಿತಿ ಗಂಭೀರಗೊಂಡಿತ್ತು. ಬಳಿಕ ಅಂಕೋಲಾ ಹಾಗೂ ಕಾರವಾರದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಐಎನ್&zwnj;ಎಸ್ ವಜ್ರಕೋಶದ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ವೇಳೆ ರಸ್ತೆ ಸಂಪೂರ್ಣ ಸ್ಥಗಿತವಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ಥಗೊಂಡಿತು. ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ&ndash;ಯಲ್ಲಾಪುರ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಘಟನಾ ಸ್ಥಳಕ್ಕೆ ಅಂಕೋಲಾ ತಹಸೀಲ್ದಾರ್ ನೋರೊನಾ ಹಾಗೂ ಡಿವೈಎಸ್ಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/uttara-kannada-news-ethanol-tanker-explodes-on-nh-66-near-ankola-driver-injured-traffic-disrupted-gdp/articleshow-5kztsb3"/>
        </item>
        <item>
            <title><![CDATA[ಒಣ ಕೊಬ್ಬರಿ ಬೆಲೆಯು ಕ್ವಿಂಟಾಲ್‌ಗೆ ₹32,218 ತಲುಪಿ ಐತಿಹಾಸಿಕ ದಾಖಲೆ; ಮತ್ತಷ್ಟು ಏರಿಕೆ ನಿರೀಕ್ಷೆ]]></title>
            <link>https://kannada.asianetnews.com/state/the-price-of-dry-coconut-in-the-tumakuru-s-tiptur-apmc-market-has-reached-a-historic-record-of-rs-3218-per-quintal-mrq/articleshow-74q2so4</link>
            <guid isPermaLink="true">https://kannada.asianetnews.com/state/the-price-of-dry-coconut-in-the-tumakuru-s-tiptur-apmc-market-has-reached-a-historic-record-of-rs-3218-per-quintal-mrq/articleshow-74q2so4</guid>
            <pubDate>Tue, 07 Apr 2026 08:13:30 +0530</pubDate>
            <description><![CDATA[ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಒಣ ಕೊಬ್ಬರಿ ಬೆಲೆಯು ಕ್ವಿಂಟಾಲ್&zwnj;ಗೆ ₹32,218 ತಲುಪಿ ಐತಿಹಾಸಿಕ ದಾಖಲೆ ಬರೆದಿದೆ. ತೆಂಗಿನ ಇಳುವರಿ ಕುಸಿತ, ಹೆಚ್ಚಿದ ಬೇಡಿಕೆ ಮತ್ತು ಕೊಬ್ಬರಿ ದಾಸ್ತಾನು ಕೊರತೆಯಿಂದಾಗಿ ಬೆಲೆಯಲ್ಲಿ ಈ ಏರಿಕೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knjwy62vghzjnj7s95gqtrj8,imgname-dry-coconut-1775529564251.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು:&lt;/strong&gt; ತಿಪಟೂರು ಎಪಿಎಂಸಿ ಕೊಬ್ಬರಿ ಮಾರುಕಟ್ಟೆಯಲ್ಲಿ ಇಂದಿನ ಸೋಮವಾರದ ಹರಾಜಿನಲ್ಲಿ ಕ್ವಿಂಟಾಲ್ ಕೊಬ್ಬರಿ ಬೆಲೆ 32,218ಕ್ಕೆ ಟೆಂಡರ್ ಆಗಿರುವುದು ಈವರೆಗಿನ ಕೊಬ್ಬರಿ ಬೆಲೆಯಲ್ಲಿ ಇತಿಹಾಸ ದಾಖಲಿಸುವ ಬೆಲೆ ಬಂದಿದೆ ಎಂಬ ಸಂತಸದಲ್ಲಿ ಕೊಬ್ಬರಿ ಬೆಳೆಗಾರರು ಹಾಗೂ ರೈತರು ಖುಷಿಪಡುತ್ತಿರುವುದು ಕಂಡು ಬರುತ್ತಿದೆ.&lt;/p&gt;&lt;p&gt;2024 ರ ಮದ್ಯಭಾಗದಿಂದ ನಿಧಾನವಾಗಿ ಕೊಬ್ಬರಿ ಬೆಲೆಯಲ್ಲಿ ಚೇತರಿಕೆ ಕಂಡುಬಂದು ಕಳೆದ ಗುರುವಾರದ ಹರಾಜಿನಲ್ಲಿ ಕ್ವಿಂಟಾಲ್ ಕೊಬ್ಬರಿ ಬೆಲೆ ರು. 30830 ದಾಖಲಿಸಿದ್ದು ಬೆಳೆಗಾರರಲ್ಲಿ ತುಸು ಮಂದಹಾಸ ಮೂಡಿಸಿದ್ದ ಬೆನ್ನಲ್ಲೇ, ಸೋಮವಾರದ ಹರಾಜು ರು. 32,218 ಸಾವಿರ ಮುಟ್ಟುವ ಮೂಲಕ ಈವರೆಗಿನ ಕೊಬ್ಬರಿ ಬೆಲೆಯಲ್ಲಿ ಇತಿಹಾಸ ದಾಖಲಿಸುವ ಸಂತಸದಲ್ಲಿ ಕೊಬ್ಬರಿ ಬೆಳೆಗಾರರು ಹಾಗೂ ರೈತರು ಸಂತಸದಲ್ಲಿರುವುದು ಕಂಡು ಬರುತ್ತಿದೆ.&lt;/p&gt;&lt;h2&gt;&lt;strong&gt;ಅಪರೂಪದ ಸಿಹಿ ಕೊಬ್ಬರಿ&lt;/strong&gt;&lt;/h2&gt;&lt;p&gt;ತಿಪಟೂರು ಮಾರುಕಟ್ಟೆಯಲ್ಲಿ ದೊರೆಯುವ ವಿಶಿಷ್ಟಗುಣ ಹೊಂದಿರುವ ಅಪರೂಪದ ಸಿಹಿ ಕೊಬ್ಬರಿಯು ತನ್ನದೇ ಆದ ವಿಶೇಷ ಗುಣಗಳಿಂದ ದೇಶ-ವಿದೇಶಗಳಲ್ಲಿ ಪ್ರಸಿದ್ದಿಯಾಗಿದೆ. ಕೊಬ್ಬರಿ ವಹಿವಾಟಿನ ಇತಿಹಾಸದಲ್ಲಿ ಯಾವತ್ತೂ ಕ್ವಿಂಟಾಲ್ ಕೊಬ್ಬರಿ ಬೆಲೆ ರು. 20 ಸಾವಿರ ದಾಟಿಲ್ಲದಿರುವ ಬಗ್ಗೆ ರೈತರಲ್ಲಿ ಆಗಾಗ್ಗೆ ಚರ್ಚೆ ಉಂಟುಮಾಡುತ್ತಿತ್ತು. ಏಳೆಂಟು ವರ್ಷಗಳ ಹಿಂದೆ ಒಮ್ಮೆ 18 ಸಾವಿರದ ಸನಿಹಕ್ಕೆ ಬಂದಿದ್ದ ಬೆಲೆ ನಂತರ ಹಠಾತ್ ಕುಸಿದು 2023ರಲ್ಲಿ 8-10ಸಾವಿರದ ಆಜುಬಾಜಿನಲ್ಲೇ ಗಿರಕಿ ಹೊಡೆಯುತ್ತಿತ್ತು.&amp;nbsp;&lt;/p&gt;&lt;p&gt;ಈ ಸಂದರ್ಭದಲ್ಲಿ ಬೆಳೆಗಾರರಿಗೆ ಕೊಬ್ಬರಿ ಉತ್ಪಾದಿಸಲು ಹೆಚ್ಚಾಗಿ ಆದಾಯ ತುಂಬಾ ಕಡಿಮೆಯಾದ್ದರಿಂದ ತೆಂಗಿನ ಮರಗಳನ್ನು ಬೆಳೆಯುವುದು ಬೇಡವೆಂಬ ಬೇಸರಕ್ಕೆ ಬಂದಿದ್ದರು. ಹಾಗಾಗಿ ರೈತರು ಅಡಿಕೆ, ಬಾಳೆ, ದಾಳಿಂಬೆ ಮತ್ತಿತರೆ ವಾಣಿಜ್ಯ ತೋಟಗಾರಿಕೆಯತ್ತ ಮುಂದಾಗಿದ್ದರು. ಆದರೆ ಕಳೆದ ವರ್ಷದಿಂದ ತೆಂಗಿನ ಕಾಯಿಗಳ ಇಳುವರಿಯಲ್ಲಿ ಬಹುದೊಡ್ಡ ಕುಸಿತ ಕಂಡಿದ್ದರಿಂದ ಎಳನೀರು ಹಾಗೂ ತೆಂಗಿನ ಕಾಯಿಗಳಿಗೆ ನಿರೀಕ್ಷೆ ಮೀರಿ ಬೆಲೆ ಹಾಗೂ ಬೇಡಿಕೆ ಹೆಚ್ಚಾಗತೊಡಗಿದ್ದರಿಂದ ಬೆಳೆಗಾರರು ಎಳನೀರು ಹಾಗೂ ತೆಂಗಿನಕಾಯಿಗಳನ್ನೇ ಮಾರಾಟ ಮಾಡಲು ಪ್ರಾರಂಭಿಸಿದ್ದರಿಂದ, ಕೊಬ್ಬರಿ ದಾಸ್ತಾನು ಸಹಜವಾಗಿ ಕಡಿಮೆಯಾಗಿ ಕೊಬ್ಬರಿ ಬೆಲೆ ಏರುಮುಖದಲ್ಲಿ ಸಾಗುತ್ತಿದ್ದು, ಸೋಮವಾರದ ಹರಾಜಿನಲ್ಲಿ ರು. 32ಸಾವಿರ ಗಡಿ ದಾಟಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬೇಡಿಕೆ-ಬೆಲೆ ಹೆಚ್ಚಾಗಬಹುದೆಂಬ ನಿರೀಕ್ಷೆಯಲ್ಲಿ ರೈತರು, ವರ್ತಕರು ಚರ್ಚೆ ಮಾಡುತ್ತಿರುವುದು ಕಂಡು ಬರುತ್ತಿದೆ.&lt;/p&gt;&lt;h3&gt;&lt;strong&gt;ಬೇಡಿಕೆ ಹೆಚ್ಚು-ಅವಕ ಕಡಿಮೆ&lt;/strong&gt;&lt;/h3&gt;&lt;p&gt;ರೈತರ ಬಳಿ ನಾನಾ ಕಾರಣಗಳಿಂದ ಕೊಬ್ಬರಿ ದಾಸ್ತಾನು ತುಂಬಾ ಕಡಿಮೆ ಇದೆ. ಇತ್ತೀಚಿನ ತಿಂಗಳುಗಳಲ್ಲಿ ಮಾರುಕಟ್ಟೆಗೆ ಬರುವ ಅವಕ ಕಡಿಮೆಯಾಗಿದ್ದು, ಬೇಡಿಕೆ ಹೆಚ್ಚಾಗತೊಡಗಿದೆ. ಉತ್ತರ ಭಾರತದಲ್ಲಿ ಶ್ರಾವಣ ಮಾಸದಿಂದ ಪ್ರಾರಂಭವಾಗಿ, ದೀಪಾವಳಿವರೆಗೂ ಆಚರಿಸುವ ಎಲ್ಲ ಹಬ್ಬಗಳಿಗೂ ಕೊಬ್ಬರಿ ಬೇಡಿಕೆ ಹೆಚ್ಚು ಇರುವುದರಿಂದ ಬೆಲೆಯೂ ಹೆಚ್ಚಾಗುವುದು ವಾಡಿಕೆಯಾದರೂ, ಈ ಸಂದರ್ಭದಲ್ಲಿ ಬೆಲೆ ಹೆಚ್ಚಾಗಿರುವುದು ಭವಿಷ್ಯದಲ್ಲಿ ಬೆಲೆ ಮತ್ತಷ್ಟು ಹೆಚ್ಚಾಗಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂಬುದು ಮಾರುಕಟ್ಟೆ ತಜ್ಞರ ಅನಿಸಿಕೆ.&lt;/p&gt;&lt;p&gt;ಈಗಾಗಲೆ ತಮಿಳುನಾಡು, ಆಂದ್ರ, ಕೇರಳ ಮತ್ತಿತರೆ ತೆಂಗು ಬೆಳೆಯುವ ಪ್ರದೇಶಗಳಲ್ಲೂ ತೆಂಗಿನ ಕಾಯಿಗಳ ಇಳುವರಿ ಕುಸಿತ ಕಂಡಿದ್ದು, ನಮ್ಮ ರಾಜ್ಯದ ಕಲ್ಪತರು ನಾಡಿನಲ್ಲಿ ಇತ್ತೀಚೆಗೆ ಹೆಚ್ಚು ರೈತರು ಉತ್ತಮ ಬೆಲೆ ಬಂದ ಕಾರಣ ಎಳನೀರು ಮತ್ತು ತೆಂಗಿನಕಾಯಿಗಳನ್ನೇ ಮಾರಾಟಮಾಡುತ್ತಿರುವುದರಿಂದ ಕೊಬ್ಬರಿ ದಾಸ್ತಾನು ತುಂಬಾ ಕಡಿಮೆಯಾಗಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;25 ವರ್ಷದ ಭೂಸ್ವಾಧೀನ ಕಾನೂನು ಸಮರದಲ್ಲಿ ಎಪಿಎಂಸಿಗೆ ಜಯ&lt;/strong&gt;&lt;/p&gt;&lt;p&gt;ಇದರ ಜೊತೆಗೆ ಕಳೆದ ಆರೇಳು ವರ್ಷಗಳಿಂದ ಮಳೆ ಕೊರತೆ, ತೆಂಗಿನ ಮರಗಳನ್ನು ಕಾಡುತ್ತಿರುವ ಹಲವಾರು ರೋಗಗಳು ತೆಂಗಿನ ಕಾಯಿಗಳ ಇಳುವರಿಯಲ್ಲಿ ಗಣನೀಯ ಕೊರತೆ ಉಂಟುಮಾಡುತ್ತಿರುವುದಲ್ಲದೆ, ಲೆಕ್ಕವಿಲ್ಲದಷ್ಟು ತೆಂಗಿನ ಮರಗಳು ಬಿದ್ದು ಹೋಗಿರುವ ಕಾರಣಗಳಿಂದಲೂ ಮುಂದಿನ ದಿನಮಾನಗಳಲ್ಲಿ ಎಳನೀರು, ತೆಂಗಿನಕಾಯಿ ಹಾಗೂ ಕೊಬ್ಬರಿಗೆ ನಿರೀಕ್ಷೆ ಮೀರಿ ಬೆಲೆ ಬರುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಜೇಂದ್ರಗಢದಲ್ಲಿ ಕ್ವಿಂಟಾಲ್ ಶೇಂಗಾ 11 ಸಾವಿರಕ್ಕೂ ಅಧಿಕ ದರಕ್ಕೆ ಮಾರಾಟ: ರೈತರು ಖುಷ್&lt;/strong&gt;&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/the-price-of-dry-coconut-in-the-tumakuru-s-tiptur-apmc-market-has-reached-a-historic-record-of-rs-3218-per-quintal-mrq/articleshow-74q2so4"/>
        </item>
        <item>
            <title><![CDATA[ತುಮಕೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳಾ ಪಿಎಸ್ಐ ಪತ್ತೆ! ಎಲ್ಲಿದ್ದರು ಗೊತ್ತಾ?]]></title>
            <link>https://kannada.asianetnews.com/karnataka-districts/missing-tumakuru-woman-psi-found-at-chikkamagaluru-rav/articleshow-7gb3tsr</link>
            <guid isPermaLink="true">https://kannada.asianetnews.com/karnataka-districts/missing-tumakuru-woman-psi-found-at-chikkamagaluru-rav/articleshow-7gb3tsr</guid>
            <pubDate>Sat, 04 Apr 2026 12:18:25 +0530</pubDate>
            <description><![CDATA[ತುಮಕೂರಿನ ಹೊಸ ಬಡಾವಣೆ ಠಾಣೆಯ ಪಿಎಸ್ಐ ಮಂಗಳಮ್ಮ ಅವರ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಕೌಟುಂಬಿಕ ಕಲಹದಿಂದ ಮನನೊಂದು ಮನೆಬಿಟ್ಟು ಹೋಗಿದ್ದ ಅವರು, ತೀವ್ರ ಹುಡುಕಾಟದ ಬಳಿಕ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knbkj756tnc8dy6hnvv5ypgf,imgname----------------------58--1775284853926.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.4): &lt;/strong&gt;ತೀವ್ರ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದ್ದ ಮಹಿಳಾ ಪೊಲೀಸ್ ಸಬ್&zwnj; ಇನ್ಪೆಕ್ಟರ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ-2 ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳಮ್ಮ ಅವರು ಕೊನೆಗೂ ಪತ್ತೆಯಾಗಿದ್ದಾರೆ.&lt;/p&gt;&lt;p&gt;ನಿನ್ನೆ ಬೆಳಗ್ಗೆ ಡಿವೈಎಸ್ ಪಿ ಕಚೇರಿಯಲ್ಲಿ ಮೀಟಿಂಗ್ ನಲ್ಲಿ ಭಾಗಿಯಾಗಿದ್ದ ಮಂಗಳಮ್ಮ ಅವರು, ಸಭೆಯ ಮಧ್ಯೆಯೇ ಇಂಪಾರ್ಟೆಂಟ್ ಫೋನ್&zwnj; ಬಂದಿದೆ ಎಂದು ಮೀಟಿಂಗ್&zwnj;ನಿಂದ ಹೊರಬಂದಿದ್ದರು. ಸಮವಸ್ತ್ರದಲ್ಲೇ ಹೊರಬಂದಿದ್ದ ಮಂಗಳಮ್ಮ ಆ ಬಳಿಕ ಎಲ್ಲಿ ಹೋದರೆಂಬ ಸುಳಿವು ಸಿಕ್ಕಿರಲಿಲ್ಲ. ಇಡೀ ದಿನ ಹುಡುಕಿದ್ರೂ ನಿನ್ನೆ ಇಡೀ ದಿನ ಯಾರ ಸಂಪರ್ಕಕ್ಕೆ ಸಿಗದ ಹಿನ್ನೆಲೆ. ಆತಂಕಗೊಂಡು ಪಿಎಸ್ ಐ ಮಂಗಲಮ್ಮ ಪುತ್ರಿಯಿಂದ ದೂರು ನೀಡಿದ್ದರು.ಹುಡುಕಾಟದ ಬಳಿಕವೂ ತಾಯಿ ಪತ್ತೆಯಾಗಿರುವುದು ಕಂಡು ಮಗಳು ಕೊನೆಗೆ ಪಿಎಸ್&zwnj;ಐ ಮಂಗಳಮ್ಮ ಅವರ ಮಗಲು ಹುಡಕಾಟ ನಡೆಸಿದ್ದರು.ಅನಂತರ ಅವರು ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು.&lt;/p&gt;&lt;p&gt;ತಾಯಿ ಮನೆಗೆ ಬಾರದೆ ಮತ್ತು ಫೋನ್ ಕರೆಗೂ ಲಭ್ಯವಿಲ್ಲದ ಕಾರಣ ಆತಂಕಗೊಂಡ ಮಂಗಳಮ್ಮ ಅವರ ಪುತ್ರಿ, ನಿನ್ನೆ ರಾತ್ರಿ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇತ್ತೀಚೆಗಷ್ಟೇ ಪುತ್ರಿಗೆ ವಿಚ್ಛೇದನವಾಗಿದ್ದ ಕಾರಣ, ತಾಯಿ ಮತ್ತು ಮಗಳು ಒಟ್ಟಿಗೆ ವಾಸವಿದ್ದರು ಎನ್ನಲಾಗಿದೆ.&lt;/p&gt;&lt;h2&gt;ಕೌಟುಂಬಿಕ ಕಲಹವೇ ಕಾರಣ?&lt;/h2&gt;&lt;p&gt;ಪ್ರಾಥಮಿಕ ಮಾಹಿತಿ ಪ್ರಕಾರ, ಮನೆಯಲ್ಲಿ ನಡೆದಿದ್ದ ಕೌಟುಂಬಿಕ ಕಲಹದಿಂದ ಮಂಗಳಮ್ಮ ಅವರು ತೀವ್ರ ಮನನೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಯಾರಿಗೂ ತಿಳಿಸದೆ ಮನೆ ಬಿಟ್ಟು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಹುಡುಕಾಟ ಆರಂಭಿಸಿದ್ದರು.&lt;/p&gt;&lt;h3&gt;ಚಿಕ್ಕಮಗಳೂರಿನಲ್ಲಿ ಪತ್ತೆಯಾದ ಮಂಗಳಮ್ಮ&lt;/h3&gt;&lt;p&gt;ತೀವ್ರ ಹುಡುಕಾಟದ ನಂತರ, ನಾಪತ್ತೆಯಾಗಿದ್ದ ಪಿಎಸ್ಐ ಮಂಗಳಮ್ಮ ಅವರು ಚಿಕ್ಕಮಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿರುವುದು ಪತ್ತೆಯಾಗಿದೆ. ಮನಸ್ಥಾಪದಿಂದ ಬೇಸತ್ತು ಅವರು ಅಲ್ಲಿಗೆ ತೆರಳಿದ್ದರು ಎಂದು ತಿಳಿದುಬಂದಿದ್ದು, ಸದ್ಯ ಪೊಲೀಸರು ಮತ್ತು ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/missing-tumakuru-woman-psi-found-at-chikkamagaluru-rav/articleshow-7gb3tsr"/>
        </item>
        <item>
            <title><![CDATA[ಗೃಹ ಸಚಿವ ಜಿ. ಪರಮೇಶ್ವರ್ ಮೇಲೆ ಆರೋಪ; FIR ದಾಖಲಿಸಲು ಕೋರ್ಟ್ ಆದೇಶ, ಪೊಲೀಸ್ ಠಾಣೆಯಲ್ಲಿ ಮೀನಾಮೇಷ!]]></title>
            <link>https://kannada.asianetnews.com/gallery/state/tumakuru-court-orders-fir-against-home-minister-dr-g-parameshwara-betting-case-sat-8p6kcqq</link>
            <guid isPermaLink="true">https://kannada.asianetnews.com/gallery/state/tumakuru-court-orders-fir-against-home-minister-dr-g-parameshwara-betting-case-sat-8p6kcqq</guid>
            <pubDate>Wed, 22 Apr 2026 18:25:36 +0530</pubDate>
            <description><![CDATA[ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಎಫ್&zwnj;ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಆದರೆ, ಆದೇಶ ಪಾಲಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರುದಾರ ನಾಗಭೂಷಣ್ ಅವರು ತುಮಕೂರಿನ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kptk9n8syvmn13nby23rg8z2,imgname-dr-g-parameshwar-1776861631769.jpg" type="image/jpeg" height="390" width="690"/>
            <content:encoded><![CDATA[ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಎಫ್&zwnj;ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಆದರೆ, ಆದೇಶ ಪಾಲಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರುದಾರ ನಾಗಭೂಷಣ್ ಅವರು ತುಮಕೂರಿನ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ.&lt;img&gt;&lt;p&gt;&lt;strong&gt;ತುಮಕೂರು (ಏ.22): ರಾ&lt;/strong&gt;ಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ 'ಬೆಟ್ಟಿಂಗ್' ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಸ್ವತಃ ಗೃಹ ಸಚಿವ ಜಿ. ಪರಮೇಶ್ವರ್ ಅವರ ವಿರುದ್ಧ ಎಫ್&zwnj;ಐಆರ್ (FIR) ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದರೆ, ನ್ಯಾಯಾಲಯದ ಆದೇಶವಿದ್ದರೂ ಪೊಲೀಸರು ಎಫ್&zwnj;ಐಆರ್ ದಾಖಲಿಸಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿ ದೂರುದಾರರು ಪೊಲೀಸ್ ಠಾಣೆಯ ಮುಂದೆಯೇ ಧರಣಿ ಕುಳಿತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ಗೃಹ ಸಚಿವ ಜಿ. ಪರಮೇಶ್ವರ್ ಅವರು ಜಿಲ್ಲಾಧಿಕಾರಿಯೊಬ್ಬರ ಜೊತೆಗೆ ಕಬಡ್ಡಿ ಆಟಕ್ಕೆ ಸಂಬಂಧಿಸಿಂತೆ ಬೆಟ್ಟಿಂಗ್ ಕಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಮಧುಗಿರಿ ತಾಲೂಕಿನ ಹಂದ್ರಾಳು ಗ್ರಾಮದ ನಾಗಭೂಷಣ್ ಎಂಬುವವರು ಈ ಹಿಂದೆ ಕೊಡಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ರಾಜ್ಯದ ಗೃಹ ಸಚಿವರ ವಿರುದ್ಧ ದೂರು ನೀಡಲು ಹಿಂಜರಿದ್ದ ಪೊಲೀಸರು, ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದರು ಎನ್ನಲಾಗಿದೆ.&lt;/p&gt;&lt;img&gt;&lt;p&gt;ಪೊಲೀಸರಿಂದ ನ್ಯಾಯ ಸಿಗದ ಹಿನ್ನೆಲೆಯಲ್ಲಿ ದೂರುದಾರ ಹಂದ್ರಾಳು ನಾಗಭೂಷಣ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಎಫ್&zwnj;ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೊಡಗೇನಹಳ್ಳಿ ಪೊಲೀಸರಿಗೆ ಖಡಕ್ ಆದೇಶ ನೀಡಿತ್ತು.&lt;/p&gt;&lt;img&gt;&lt;p&gt;ನ್ಯಾಯಾಲಯದ ಆದೇಶದ ಪ್ರತಿ ಹಿಡಿದು ಹಂದ್ರಾಳು ನಾಗಭೂಷಣ್ ಅವರು ಇಂದು ತಮ್ಮ ವಕೀಲರ ತಂಡದೊಂದಿಗೆ ಕೊಡಗೇನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಆದೇಶದ ಪ್ರತಿಯನ್ನು ನೀಡಿ ಕೂಡಲೇ ಎಫ್&zwnj;ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಆದರೆ, ಈ ವೇಳೆ ಪೊಲೀಸರು ಮತ್ತು ದೂರುದಾರರ ನಡುವೆ ಮಾತಿನ ಚಕಮಕಿ ನಡೆದಿದೆ. ನ್ಯಾಯಾಲಯದ ಆದೇಶವಿದ್ದರೂ ಎಫ್&zwnj;ಐಆರ್ ದಾಖಲಿಸಲು ಪೊಲೀಸರು ವಿಳಂಬ ಮಾಡುತ್ತಿರುವುದು ದೂರುದಾರರ ಆಕ್ರೋಶಕ್ಕೆ ಕಾರಣವಾಯಿತು.&lt;/p&gt;&lt;img&gt;&lt;p&gt;ಈ ಕುರಿತು ಪ್ರತಿಕ್ರಿಯಿಸಿರುವ ಕೊಡಗೇನಹಳ್ಳಿ ಪಿಎಸ್&zwnj;ಐ ರಾಜೇಶ್, 'ನಮಗೆ ನ್ಯಾಯಾಲಯದಿಂದ ಅಧಿಕೃತವಾಗಿ ಆದೇಶದ ಪ್ರತಿ ಇನ್ನು ತಲುಪಿಲ್ಲ. ನ್ಯಾಯಾಲಯದ ಸರ್ಟಿಫೈಡ್ ಕಾಪಿ (Certified Copy) ನಮಗೆ ತಲುಪಿದ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ದೂರವಾಣಿ ಮೂಲಕ ವಕೀಲರಿಗೆ ತಿಳಿಸಿದ್ದಾರೆ. ಆದರೆ, ದೂರುದಾರರ ಬಳಿ ಈಗಾಗಲೇ ನ್ಯಾಯಾಲಯದ ಆದೇಶದ ಪ್ರತಿಯಿದ್ದು, ಅದನ್ನು ಆಧರಿಸಿ ಇಂದೇ ದೂರು ದಾಖಲಿಸಬೇಕೆಂದು ಅವರು ಪಟ್ಟು ಹಿಡಿದಿದ್ದಾರೆ.&lt;/p&gt;&lt;img&gt;&lt;p&gt;ಪೊಲೀಸರ ಧೋರಣೆಯನ್ನು ಖಂಡಿಸಿ ಹಂದ್ರಾಳು ನಾಗಭೂಷಣ್ ಅವರು ಪೊಲೀಸ್ ಠಾಣೆಯ ಮುಂದೆಯೇ ಕುಳಿತು ಧರಣಿ ಆರಂಭಿಸಿದ್ದಾರೆ. 'ಕೋರ್ಟ್ ಆದೇಶ ನೀಡಿದ್ದರೂ ಗೃಹ ಸಚಿವರನ್ನು ರಕ್ಷಿಸಲು ಪೊಲೀಸರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಎಫ್&zwnj;ಐಆರ್ ದಾಖಲಾಗುವವರೆಗೂ ನಾನು ಇಲ್ಲಿಂದ ಕದಲುವುದಿಲ್ಲ' ಎಂದು ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯು ತುಮಕೂರು ಜಿಲ್ಲೆಯಾದ್ಯಂತ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಗೃಹ ಸಚಿವರ ವಿರುದ್ಧದ ಪ್ರಕರಣ ಈಗ ಯಾವ ತಿರುವು ಪಡೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/tumakuru-court-orders-fir-against-home-minister-dr-g-parameshwara-betting-case-sat-8p6kcqq"/>
        </item>
        <item>
            <title><![CDATA[ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ]]></title>
            <link>https://kannada.asianetnews.com/karnataka-districts/high-drama-as-two-families-clash-over-woman-in-tumakuru-case-registered/articleshow-baggiem</link>
            <guid isPermaLink="true">https://kannada.asianetnews.com/karnataka-districts/high-drama-as-two-families-clash-over-woman-in-tumakuru-case-registered/articleshow-baggiem</guid>
            <pubDate>Mon, 06 Apr 2026 22:34:29 +0530</pubDate>
            <description><![CDATA[&lt;p&gt;ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ ನಡೆದಿದೆ. ಹಲವರ ಮೊಬೈಲ್&zwnj;ನಲ್ಲಿ ಗಲಾಟೆ ದೃಶ್ಯಗಳು ಸೆರೆಯಾಗಿದ್ದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knhw0714mngk59dvcskzk8z7,imgname-tumkur-1775495027748.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.06) &lt;/strong&gt;ಯುವತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಕುಣಿಗಲ್ ಪಟ್ಟಣದ 15ನೇ ವಾರ್ಡ್&zwnj;ನ ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಯುವತಿ ವಿಚಾರವಾಗಿ ಗಲಾಟೆ ಬಳಿಕ ತೀವ್ರ ಸ್ವರೂಪ ಪಡೆದುಕೊಂಡು ಎರಡು ಮುಸ್ಲಿಂ ಕುಟುಂಬಗಳು ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ ಎರಡು ಕುಟುಂಬದ ಹಲವು ಸದಸ್ಯರು ಗಾಯಗೊಂಡಿದ್ದಾರೆ.&lt;/p&gt;&lt;h2&gt;ಅಕ್ಕ ಪಕ್ಕದ ಮನೆಯವರ ಗಲಾಟೆ&lt;/h2&gt;&lt;p&gt;ಯುವತಿ ವಿಚಾರಕ್ಕೆ ಅಕ್ಕಪಕ್ಕದ ಮನೆಯ ಎರಡು ಮುಸ್ಲಿಂ ಕುಟುಂಬಗಳ ಗಲಾಟೆ ಶುರುವಾಗಿದೆ. ಆರಂಭದಲ್ಲೇ ಕೈಕೈಮಿಲಾಯಿಸಿದ್ದಾರೆ. ಹೀಗಾಗಿ ಕುಟುಂಬ ಸದಸ್ಯರ ಸಂಖ್ಯೆ ಹೆಚ್ಚಾಗಿದೆ. ಗಲಾಟೆ ಜೋರಾಗಿದೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ ಮೂವರಿಗೆ ಗಂಭೀರ ಗಾಯವಾಗಿದೆ. ಇತ್ತ ಹೊಡೆದಾಡಿಕೊಂಡ ಕುಟುಂಬದ ಹಲವು ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.&lt;/p&gt;&lt;p&gt;ಎರಡು ಕುಟುಂಬದ ಪ್ರಮುಖ ಸದಸ್ಯರನ್ನು ಪೊಲೀಸ್ ಠಾಣೆಗೆ ಕರೆಯಿಸಿದ ಕುಣಿಗಲ್ ಪೊಲೀಸರು ರಾಜಿ ಮಾತುಕತೆ ಮಾಡಿದ್ದಾರೆ. ಇದೇ ವೇಳೆ ಮತ್ತೆ ಇದೇ ರೀತಿಯ ಘಟನೆ ಮರುಕಳಿಸಿದರೆ ಇಡೀ ಕುಟುಂಬವೇ ಜೈಲು ಸೇರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;h2&gt;ಮಂಡ್ಯದಲ್ಲಿ ಯುವಕರ ಗುಂಪುಗಳ ನಡುವೆ ಗಲಾಟೆ&lt;/h2&gt;&lt;p&gt;ಕ್ಷುಲ್ಲಕ ವಿಚಾರಕ್ಕೆ&zwnj; ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ಮಂಡ್ಯದ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ನಡೆದಿದೆ. ಸಿಗರೆಟ್ ವಿಚಾರವಾಗಿ ಎರಡು ಗುಂಪಗಳ ನಡುವೆ ಗಲಾಟೆ ಶುರುವಾಗಿದೆ ಎನ್ನಲಾಗಿದೆ. ಬಳಿಕ ಕಳೆದ ರಾತ್ರಿ ರಾಜೀ ಮಾತುಕತೆ&zwnj; ನಡೆಯುವಾಗ ಮತ್ತೆ ಗಲಾಟೆ ಶುರುವಾಗಿದೆ. ಇದು ಪರಿಸ್ಥಿತಿ ಕೈಮೀರಿದೆ. ದೊಣ್ಣೆಯಲ್ಲಿ&zwnj;&zwnj; ಯುವಕರು ಗುಂಪು ದಾಳಿ ಮಾಡಿದೆ. ಇದರ ಪರಿಣಾಮ ಈ ವೇಳೆ ಯುವಕ ಯಶ್ವಂತ್ ಸಾವು ಕಂಡರೆ ದರ್ಶನ್ ಹಾಗೂ ಸಚಿನ್ ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್&zwnj;ಪಿ ಡಾ.ವಿಜೆ ಶೋಭಾರಾಣಿ&zwnj; ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.&lt;/p&gt;&lt;p&gt;.&lt;/p&gt;]]></content:encoded>
            <category>tumakuru</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/high-drama-as-two-families-clash-over-woman-in-tumakuru-case-registered/articleshow-baggiem"/>
        </item>
        <item>
            <title><![CDATA[ತುಮಕೂರು ಗ್ರಾಮ ಆಡಳಿತ ಅಧಿಕಾರಿ (VAO) ಕರ್ತವ್ಯ ಮುಗಿಸಿ ಮನೆಗೆ ಹೊರಟರು; ಆದ್ರೆ ದಾರಿಯಲ್ಲೇ ಮಸಣ ಸೇರಿದರು!]]></title>
            <link>https://kannada.asianetnews.com/karnataka-districts/tumakuru-village-administrative-officer-poovappa-rathod-dies-in-car-accident-mayasandra-sat/articleshow-bhwvhly</link>
            <guid isPermaLink="true">https://kannada.asianetnews.com/karnataka-districts/tumakuru-village-administrative-officer-poovappa-rathod-dies-in-car-accident-mayasandra-sat/articleshow-bhwvhly</guid>
            <pubDate>Tue, 07 Apr 2026 18:15:20 +0530</pubDate>
            <description><![CDATA[&lt;p&gt;ತುಮಕೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ ಪೂವಪ್ಪ ರಾಥೋಡ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ತಗ್ಗಿಗೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knkzfkgaa7rsrvx3c7va8zew,imgname-tumakuru-village-accountant-death-1775565786634.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.07): ಜಿ&lt;/strong&gt;ಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಗ್ರಾಮ ಆಡಳಿತ ಅಧಿಕಾರಿಯೊಬ್ಬರು (VAO) ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ತುರುವೇಕೆರೆ ತಾಲೂಕಿನ ಮಾಯಸಂದ್ರ ಸಮೀಪದ ಕುಂದುರನಹಳ್ಳಿ ಪಾಳ್ಯದ ಬಳಿ ನಡೆದಿದ್ದು, ಇಡೀ ಕಂದಾಯ ಇಲಾಖೆಯನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.&lt;/p&gt;&lt;h3&gt;&lt;strong&gt;ಮೃತ ಅಧಿಕಾರಿಯ ವಿವರ:&lt;/strong&gt;&lt;/h3&gt;&lt;p&gt;ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯನ್ನು 35 ವರ್ಷದ ಪೂವಪ್ಪ ರಾಥೋಡ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಯಚೂರು ಜಿಲ್ಲೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಯಾಗಿ (Village Administrative Officer) ಸೇವೆ ಸಲ್ಲಿಸುತ್ತಿದ್ದರು. ತಮ್ಮ ಕೆಲಸದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಪೂವಪ್ಪ ಅವರು ಇಂದು ನಮ್ಮೊಂದಿಗಿಲ್ಲ ಎಂಬ ಸುದ್ದಿ ಕಂದಾಯ ಇಲಾಖೆಯ ಸಿಬ್ಬಂದಿಗೆ ಆಘಾತ ತಂದಿದೆ.&lt;/p&gt;&lt;h3&gt;&lt;strong&gt;ಘಟನೆಯಲ್ಲಿ ನಡೆದದ್ದೇನು?&lt;/strong&gt;&lt;/h3&gt;&lt;p&gt;ಪೂವಪ್ಪ ರಾಥೋಡ್ ಅವರು ನಿನ್ನೆ ಸಂಜೆ ತಮ್ಮ ಕಚೇರಿಯ ಕೆಲಸಗಳನ್ನು ಮುಗಿಸಿಕೊಂಡು ತಮ್ಮ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಕುಂದುರನಹಳ್ಳಿ ಪಾಳ್ಯದ ಬಳಿ ಚಲಿಸುತ್ತಿದ್ದಾಗ ಕಾರು ಹಠಾತ್ತಾಗಿ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ತಗ್ಗಿಗೆ ಉರುಳಿ ಬಿದ್ದಿದೆ. ಕಾರು ಬಿದ್ದ ರಭಸ ಎಷ್ಟಿತ್ತೆಂದರೆ, ಪೂವಪ್ಪ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಘಟನೆಯು ನಿನ್ನೆ ಸಂಜೆ ನಡೆದಿದ್ದರೂ, ಜನಸಂಚಾರ ವಿರಳವಾಗಿದ್ದ ಪ್ರದೇಶವಾದ್ದರಿಂದ ತಡವಾಗಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;&lt;strong&gt;ಪೊಲೀಸ್ ಭೇಟಿ ಮತ್ತು ತನಿಖೆ:&lt;/strong&gt;&lt;/h2&gt;&lt;p&gt;ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ತುರುವೇಕೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಪೂವಪ್ಪ ಅವರ ಮೃತದೇಹವನ್ನು ಕಾರಿನಿಂದ ಹೊರತೆಗೆದು, ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ರಾಯಚೂರಿನಲ್ಲಿರುವ ಅವರ ಕುಟುಂಬಸ್ಥರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದ್ದು, ಸಂಬಂಧಿಕರು ತುರುವೇಕೆರೆಗೆ ಆಗಮಿಸುತ್ತಿದ್ದಾರೆ.&lt;/p&gt;&lt;p&gt;ಈ ಅಪಘಾತಕ್ಕೆ ಅತಿ ವೇಗ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಸಮರ್ಥ ಅಧಿಕಾರಿಯೊಬ್ಬರು ರಸ್ತೆ ಅಪಘಾತಕ್ಕೆ ಬಲಿಯಾಗಿರುವುದು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ತೀವ್ರ ವಿಷಾದ ಮೂಡಿಸಿದೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-village-administrative-officer-poovappa-rathod-dies-in-car-accident-mayasandra-sat/articleshow-bhwvhly"/>
        </item>
        <item>
            <title><![CDATA[ತುಮಕೂರಿನ ಟೆಕ್ಕಿಯಿಂದ ಬೆಂಗಳೂರಲ್ಲಿ ಮದುವೆ ದಂಧೆ, ಮೂರನೇ ವಿವಾಹಕ್ಕೆ ರೆಡಿಯಾದವ ಗರ್ಭಿಣಿ ಪತ್ನಿಗೆ ಸಿಕ್ಕಿಬಿದ್ದ!]]></title>
            <link>https://kannada.asianetnews.com/karnataka-districts/bengaluru-techie-marries-two-women-engaged-to-another-fraud-case-filed-in-jigani-gdp/articleshow-cirny6n</link>
            <guid isPermaLink="true">https://kannada.asianetnews.com/karnataka-districts/bengaluru-techie-marries-two-women-engaged-to-another-fraud-case-filed-in-jigani-gdp/articleshow-cirny6n</guid>
            <pubDate>Mon, 13 Apr 2026 14:33:02 +0530</pubDate>
            <description><![CDATA[ಜಿಗಣಿಯ ಖಾಸಗಿ ಕಂಪನಿ ಇಂಜಿನಿಯರ್ ರವಿ, ಮದುವೆ ಹೆಸರಿನಲ್ಲಿ ಹಲವು ಯುವತಿಯರಿಗೆ ವಂಚಿಸಿದ್ದಾನೆ. ಈಗಾಗಲೇ ಇಬ್ಬರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈತನ ಕೃತ್ಯ ಬಯಲಾಗಿದ್ದು, ಮೊದಲ ಪತ್ನಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp3177navhw1n8tm6ta7wjqv,imgname-bengaluru-techie-1776070925994.jpg" type="image/jpeg" height="390" width="690"/>
            <content:encoded><![CDATA[&lt;p&gt;ಇಬ್ಬರ ಜೊತೆಗೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ ಅಮಾಯಕ ಹೆಣ್ಮಕ್ಕಳ ಬಾಳಲ್ಲಿ ಆಟ ಆಡೋ ಕಾಮುಕ ಟೆಕ್ಕಿ. ಹೆಣ್ಣು ಮಕ್ಕಳನ್ನ ಶರ್ಟ್ ಬದಲಿಸೋ ಹಾಗೆ ಬದಲಿಸೋ ಕಿಲಾಡಿ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್, ಆದ್ರೆ ಇವನಿಗೆ ಮದುವೆ ಆಗೋದೆ ಬಿಸಿನೆಸ್. ಇವನ ಚಪಲಕ್ಕೆ ಆತನ ಕುಟುಂಬವೇ ಸಾಥ್. ಕಾಮುಕ ಬಣ್ಣ ಬಯಲಾಗಿ ಹುಡುಗಿ ಮನೆಯವರಿಂದಲೇ ಬಿತ್ತು ಗೂಸಾ.&lt;/p&gt;&lt;p&gt;ಆನೇಕಲ್ ಉಪವಿಭಾಗದ ಜಿಗಣಿ ಪ್ರದೇಶದಲ್ಲಿ ವಿವಾಹದ ಹೆಸರಿನಲ್ಲಿ ಯುವತಿಯರ ಜೀವನದೊಂದಿಗೆ ಆಟವಾಡಿದ ವ್ಯಕ್ತಿಯ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿರುವ ರವಿ ಎಂಬಾತನ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ವಂಚನೆ ಹಾಗೂ ಬಹುವಿವಾಹ ಸಂಬಂಧಿತ ಪ್ರಕರಣ ದಾಖಲಾಗಿದೆ.&lt;/p&gt;&lt;h2&gt;ಹಲವು ಯುವತಿಯರನ್ನು ಮೋಸಗೊಳಿಸಿದ ಕಾಮುಕ&lt;/h2&gt;&lt;p&gt;ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನವನಾದ ರವಿ, ಜಿಗಣಿ ಸಮೀಪದ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ, ಮದುವೆಯನ್ನು ವ್ಯವಹಾರವನ್ನಾಗಿಸಿಕೊಂಡು ಹಲವು ಯುವತಿಯರನ್ನು ಮೋಸಗೊಳಿಸಿರುವ ಆರೋಪ ಈತನ ವಿರುದ್ಧ ಕೇಳಿಬಂದಿದೆ. ರವಿ ತನ್ನ ಕುಟುಂಬದವರ ಸಹಕಾರದೊಂದಿಗೆ ಒಂದಕ್ಕಿಂತ ಹೆಚ್ಚು ಮಹಿಳೆಯರೊಂದಿಗೆ ಸಂಬಂಧ ಬೆಳೆಸಿ, ಮದುವೆಯ ಹೆಸರಿನಲ್ಲಿ ವಂಚನೆ ನಡೆಸುತ್ತಿದ್ದನು. ಇದುವೇ ಆತಮ ಕಾಮುಕ ಕಾಯಕವಾಗಿತ್ತು.&lt;/p&gt;&lt;p&gt;2024ರ ಜನವರಿಯಲ್ಲಿ ರವಿ ಪಂಕಜ ಎಂಬ ಯುವತಿಯನ್ನು ಮದುವೆಯಾಗಿದ್ದನು. ಮದುವೆಯ ನಂತರವೂ ಅವನ ವರ್ತನೆ ಅನುಮಾನಾಸ್ಪದವಾಗಿತ್ತು. ಕಂಡ ಕಂಡ ಹೆಣ್ಮಕ್ಕಳ ಕೆಟ್ಟದಾಗಿ ಮಾತನಾಡುವುದು. ಅವನ್ನು ವರ್ಣನೆ ಮಾಡುವುದು, ವರದಕ್ಷಿಣೆ ತಗೊಂಡು ಬರುವಂತೆ ಸ್ನೇಹಿತರನ್ನು ಮನೆಗೆ ಕರೆಸುವಂತೆ ಒತ್ತಾಯಿಸುವುದು ಸೇರಿದಂತೆ ಅಸಹ್ಯ ವರ್ತನೆ ತೋರಿಸುತ್ತಿದ್ದನೆಂದು ಮೊದಲ ಪತ್ನಿ ಆರೋಪಿಸಿದ್ದಾಳೆ. ಈ ನಡುವೆ ಆಕೆ ಗರ್ಭಿಣಿಯಾಗಿದ್ದಾಗಲೇ, ರವಿ ಮತ್ತೊಮ್ಮೆ ಮದುವೆಗಾಗಿ ಹುಡುಕಾಟ ಆರಂಭಿಸಿದ್ದನು.&lt;/p&gt;&lt;h2&gt;ಬೇರೊಬ್ಬಳ ಜತೆ ನಿಶ್ಚಿತಾರ್ಥ, ಮೊತ್ತೊಬ್ಬಳ ಜೊತೆಗೆ ಎರಡನೇ ಮದುವೆ&lt;/h2&gt;&lt;p&gt;ತಾನು ಇನ್ನೂ ಮದುವೆಯಾಗಿಲ್ಲವೆಂದು ಸುಳ್ಳು ಹೇಳಿ, ತನ್ನ ಕುಟುಂಬದವರ ಜೊತೆಗೂಡಿ ವಿವಿಧ ಕಡೆಗಳಲ್ಲಿ ಮದುವೆ ಮಾತುಕತೆ ನಡೆಸುತ್ತಿದ್ದನು. 2024ರ ಅಕ್ಟೋಬರ್ ತಿಂಗಳಲ್ಲಿ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನು. ಈ ವಿಚಾರ ತಿಳಿದ ಮೊದಲ ಪತ್ನಿ, ಆ ಯುವತಿಯ ಕುಟುಂಬಕ್ಕೆ ಮಾಹಿತಿ ನೀಡಿದಳು. ಇದರಿಂದ ಆಕ್ರೋಶಗೊಂಡ ಆ ಕುಟುಂಬಸ್ಥರು ರವಿ ಮನೆಗೆ ಬಂದು ಅವನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.&lt;/p&gt;&lt;p&gt;ಇದಾದ ನಂತರವೂ ತನ್ನ ಕೃತ್ಯಗಳನ್ನು ನಿಲ್ಲಿಸದ ರವಿ, 2025ರ ಡಿಸೆಂಬರ್&zwnj;ನಲ್ಲಿ ನೇಹಾ ಎಂಬ ಮತ್ತೊಬ್ಬ ಯುವತಿಯನ್ನು ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಮದುವೆಯ ಸಮಯದಲ್ಲೂ ತಾನು ಅವಿವಾಹಿತನೆಂದು ಸುಳ್ಳು ಹೇಳಿದ್ದಾನೆ. ಎರಡನೇ ಮದುವೆಯ ವಿಚಾರ ತಿಳಿದ ಮೊದಲ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ರವಿ ಮನೆಗೆ ತೆರಳಿ ಪ್ರಶ್ನಿಸಿದಾಗ, ವಾಗ್ವಾದ ತೀವ್ರಗೊಂಡು ಅವನಿಗೆ ಧರ್ಮದೇಟು ನೀಡಿದ ಘಟನೆ ನಡೆದಿದೆ. ಬಳಿಕ ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಲಾಗಿದೆ.&lt;/p&gt;&lt;p&gt;ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಆರೋಪಿ ರವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಹಿಳೆಯರನ್ನು ಮದುವೆಯ ಹೆಸರಿನಲ್ಲಿ ಮೋಸಗೊಳಿಸಿದ ಈ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-techie-marries-two-women-engaged-to-another-fraud-case-filed-in-jigani-gdp/articleshow-cirny6n"/>
        </item>
        <item>
            <title><![CDATA[ಮಧುಗಿರಿ ತಾ.ಪಂ.ನಲ್ಲಿ ₹4.27 ಕೋಟಿ ಲೂಟಿ: ಕಾಂಗ್ರೆಸ್ ಮುಖಂಡ, ಎಸ್‌ಡಿಎ ಸೇರಿ 6 ಜನರ ವಿರುದ್ಧ FIR ದಾಖಲು!]]></title>
            <link>https://kannada.asianetnews.com/karnataka-districts/madhugiri-taluk-panchayat-rs-4-crore-scam-sda-soumya-congress-leader-fir-sat/articleshow-egdgmm8</link>
            <guid isPermaLink="true">https://kannada.asianetnews.com/karnataka-districts/madhugiri-taluk-panchayat-rs-4-crore-scam-sda-soumya-congress-leader-fir-sat/articleshow-egdgmm8</guid>
            <pubDate>Sat, 11 Apr 2026 15:52:36 +0530</pubDate>
            <description><![CDATA[&lt;p&gt;ತುಮಕೂರಿನ ಮಧುಗಿರಿ ತಾಲ್ಲೂಕು ಪಂಚಾಯ್ತಿಯಲ್ಲಿ 'ಗಳಿಕೆ ರಜೆ ನಗದೀಕರಣ' ಹಣವನ್ನು ದುರ್ಬಳಕೆ ಮಾಡಿಕೊಂಡ 4.27 ಕೋಟಿ ರೂ. ಹಗರಣ ಬೆಳಕಿಗೆ ಬಂದಿದೆ. ಈ ಸಂಬಂಧ, ತಾಲ್ಲೂಕು ಪಂಚಾಯ್ತಿಯ ದ್ವಿತೀಯ ದರ್ಜೆ ಸಹಾಯಕಿ ಮತ್ತು ಕಾಂಗ್ರೆಸ್ ಮುಖಂಡ ಸೇರಿದಂತೆ ಆರು ಜನರ ವಿರುದ್ಧ ಎಫ್&zwnj;ಐಆರ್ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kny0vy0vqwdxg798smxrh9y1,imgname-tumakuru-taluk-panchayat-scam--1--1775902783515.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.11): ಜಿ&lt;/strong&gt;ಲ್ಲೆಯ ಮಧುಗಿರಿ ತಾಲ್ಲೂಕು ಪಂಚಾಯ್ತಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಕ್ರಮವಾಗಿ ಲೂಟಿ ಮಾಡಿರುವ ಬೃಹತ್ ಹಗರಣವೊಂದು ಬಯಲಿಗೆ ಬಂದಿದೆ. ಸುಮಾರು 4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ತಾಲ್ಲೂಕು ಪಂಚಾಯ್ತಿಯ ದ್ವಿತೀಯ ದರ್ಜೆ ಸಹಾಯಕಿ (SDA) ಹಾಗೂ ಕಾಂಗ್ರೆಸ್ ಜಿಲ್ಲಾ ಮುಖಂಡ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಎಫ್&zwnj;ಐಆರ್ ದಾಖಲಾಗಿದೆ.&lt;/p&gt;&lt;h3&gt;&lt;strong&gt;ಏನಿದು 4 ಕೋಟಿ ಹಗರಣ?&lt;/strong&gt;&lt;/h3&gt;&lt;p&gt;ಮಧುಗಿರಿ ತಾಲ್ಲೂಕು ಪಂಚಾಯ್ತಿಯಲ್ಲಿ ಎಸ್&zwnj;ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೌಮ್ಯ ಎಂಬುವವರು ಈ ಹಗರಣದ ಪ್ರಮುಖ ಸೂತ್ರಧಾರಿ ಎನ್ನಲಾಗಿದೆ. ಸರ್ಕಾರಿ ನೌಕರರು ಸ್ವಯಂ ನಿವೃತ್ತಿ ಪಡೆದಾಗ ಅಥವಾ ಸೇವೆಯಲ್ಲಿದ್ದಾಗ ಮರಣ ಹೊಂದಿದ ಸಂದರ್ಭದಲ್ಲಿ ಅವರ &lsquo;ಗಳಿಕೆ ರಜೆ ನಗದೀಕರಣ&rsquo; (Earned Leave Encashment) ಸೌಲಭ್ಯವನ್ನು ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಎಸಗಲಾಗಿದೆ. ಅರ್ಹ ಫಲಾನುಭವಿಗಳಿಗೆ ಹೋಗಬೇಕಿದ್ದ ಹಣವನ್ನು ಸೌಮ್ಯ ಅವರು ತಮಗೆ ಬೇಕಾದವರ ಮತ್ತು ತಮ್ಮ ಸಂಬಂಧಿಕರ ವಿವಿಧ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;&lt;strong&gt;ಕಾಂಗ್ರೆಸ್ ಮುಖಂಡನೂ ಶಾಮೀಲು!&lt;/strong&gt;&lt;/h2&gt;&lt;p&gt;ಈ ಹಗರಣದಲ್ಲಿ ಕೇವಲ ಕಚೇರಿ ಸಿಬ್ಬಂದಿ ಮಾತ್ರವಲ್ಲದೆ ರಾಜಕೀಯ ಪ್ರಭಾವವಿರುವ ವ್ಯಕ್ತಿಗಳೂ ಕೈಜೋಡಿಸಿರುವುದು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರಮೇಶ್, ಶಿವಲೀಲಾ, ಸುಮಾ, ಮೀನಾಕ್ಷಿ ಹಾಗೂ ಕಚೇರಿ ಸಿಬ್ಬಂದಿ ಪ್ರವೀಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಸರ್ಕಾರಿ ಹಣವನ್ನು ಖಾಸಗಿ ವ್ಯಕ್ತಿಗಳ ಖಾತೆಗೆ ವರ್ಗಾಯಿಸುವ ಮೂಲಕ ವ್ಯವಸ್ಥಿತವಾಗಿ ಲೂಟಿ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.&lt;/p&gt;&lt;h2&gt;&lt;strong&gt;ಇಒ ನೀಡಿದ ದೂರಿನ ಮೇರೆಗೆ ಕ್ರಮ:&lt;/strong&gt;&lt;/h2&gt;&lt;p&gt;ಮಧುಗಿರಿ ತಾಲ್ಲೂಕು ಪಂಚಾಯ್ತಿಯ ಇಒ (Executive Officer) ಲಕ್ಷ್ಮಣ ಬಿ.ಎಸ್. ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈಗ ಆರು ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ಅಕ್ರಮವಾಗಿ ವರ್ಗಾವಣೆಯಾದ ಮೊತ್ತವು ಬರೋಬ್ಬರಿ 4,27,00,000 (ನಾಲ್ಕು ಕೋಟಿ ಇಪ್ಪತ್ತೇಳು ಲಕ್ಷ) ರೂಪಾಯಿಗಳಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;h3&gt;&lt;strong&gt;ಅಮಾನತು ಬೆನ್ನಲ್ಲೇ FIR ಕಂಟಕ:&lt;/strong&gt;&lt;/h3&gt;&lt;p&gt;ಈ ಹಗರಣದ ವಾಸನೆ ಬಡಿಯುತ್ತಿದ್ದಂತೆ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಆಂತರಿಕ ತನಿಖೆ ನಡೆಸಿದ್ದರು. ಇಲಾಖಾ ತನಿಖೆಯ ವೇಳೆ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಅಶ್ವಿಜಾ ಬಿ.ವಿ. ಅವರು ಎಸ್&zwnj;ಡಿಎ ಸೌಮ್ಯರನ್ನು ಈ ಹಿಂದೆಯೇ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದರು. ಅಮಾನತು ಆದೇಶದ ಬೆನ್ನಲ್ಲೇ ಈಗ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳಿಗೆ ಜೈಲು ಭೀತಿ ಎದುರಾಗಿದೆ.&lt;/p&gt;&lt;p&gt;ಈ ಪ್ರಕರಣವು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಹಣಕಾಸು ನಿರ್ವಹಣೆಯ ಲೋಪದೋಷಗಳನ್ನು ಎತ್ತಿ ತೋರಿಸಿದೆ. ಸದ್ಯ ಮಧುಗಿರಿ ಪೊಲೀಸರು ತನಿಖೆ ಮುಂದುವರಿಸಿದ್ದು, ಅಕ್ರಮ ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಹಾಗೂ ಹಗರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/madhugiri-taluk-panchayat-rs-4-crore-scam-sda-soumya-congress-leader-fir-sat/articleshow-egdgmm8"/>
        </item>
        <item>
            <title><![CDATA[ತುಮಕೂರು ರಾ.ಹೆ.48ರಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; 35 ಪ್ರಯಾಣಿಕರಿಗೆ ಗಂಭೀರ ಗಾಯ!]]></title>
            <link>https://kannada.asianetnews.com/karnataka-districts/tumakuru-sira-ksrtc-bus-truck-accident-nh48-35-passengers-injured-sat/articleshow-fg00h5m</link>
            <guid isPermaLink="true">https://kannada.asianetnews.com/karnataka-districts/tumakuru-sira-ksrtc-bus-truck-accident-nh48-35-passengers-injured-sat/articleshow-fg00h5m</guid>
            <pubDate>Tue, 14 Apr 2026 13:57:52 +0530</pubDate>
            <description><![CDATA[ತುಮಕೂರು ಜಿಲ್ಲೆಯ ಶಿರಾ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕೆಎಸ್&zwnj;ಆರ್&zwnj;ಟಿಸಿ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp5hmy00dmspysqmjg3z7xjw,imgname-tumakuru-ksrtc-bus-accident-1776155260928.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.14): ಜಿ&lt;/strong&gt;ಲ್ಲೆಯ ಶಿರಾ ತಾಲ್ಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರ ದ್ವಾರಾಳು ಬ್ರಿಡ್ಜ್ ಬಳಿ ಟೈರ್ ಬ್ಲಾಸ್ಟ್ ಆಗಿ ನಿಂತಿದ್ದ ಲಾರಿಗೆ ಕೆಎಸ್&zwnj;ಆರ್&zwnj;ಟಿಸಿ (KSRTC) ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ಬಸ್&zwnj;ನಲ್ಲಿದ್ದ ಸುಮಾರು 35ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಿಂದ ಚಿತ್ರದುರ್ಗದ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್&zwnj;ಆರ್&zwnj;ಟಿಸಿ ಬಸ್, ಶಿರಾ ತಾಲ್ಲೂಕಿನ ದ್ವಾರಾಳು ಸೇತುವೆ ಬಳಿ ತಲುಪಿದಾಗ ಈ ಅವಘಡ ಸಂಭವಿಸಿದೆ. ರಸ್ತೆಯ ಬದಿಯಲ್ಲಿ ಲಾರಿಯೊಂದರ ಟೈರ್ ಸ್ಫೋಟಗೊಂಡಿದ್ದರಿಂದ, ಚಾಲಕ ಲಾರಿಯನ್ನು ಅಲ್ಲೇ ನಿಲ್ಲಿಸಿದ್ದನು. ಈ ವೇಳೆ ವೇಗವಾಗಿ ಬಂದ ಕೆಎಸ್&zwnj;ಆರ್&zwnj;ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್&zwnj;ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ರಕ್ತದ ಮಡುವಿನಲ್ಲಿ ಬಿದ್ದು ಚೀರಾಡುತ್ತಿದ್ದರು.&lt;/p&gt;&lt;h2&gt;&lt;strong&gt;ಗಾಯಾಳುಗಳ ಸ್ಥಿತಿ:&lt;/strong&gt;&lt;/h2&gt;&lt;p&gt;ಅಪಘಾತದಲ್ಲಿ ಗಾಯಗೊಂಡ 35 ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರ ಸಹಾಯದೊಂದಿಗೆ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುರ್ತು ಚಿಕಿತ್ಸಾ ವಾಹನಗಳ ಮೂಲಕ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳ ಆರ್ತನಾದ ಮುಗಿಲು ಮುಟ್ಟಿತ್ತು.&lt;/p&gt;&lt;h3&gt;&lt;strong&gt;ಟ್ರಾಫಿಕ್ ಜಾಮ್ ಹಾಗೂ ಪೊಲೀಸರ ಭೇಟಿ:&lt;/strong&gt;&lt;/h3&gt;&lt;p&gt;ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಕಿಲೋಮೀಟರ್&zwnj;ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ತಾವರೆಕೆರೆ ಪೊಲೀಸರು, ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು.&lt;/p&gt;&lt;h3&gt;&lt;strong&gt;ಪ್ರಕರಣ ದಾಖಲು:&lt;/strong&gt;&lt;/h3&gt;&lt;p&gt;ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಚಾಲಕನ ಅತಿ ವೇಗ ಅಥವಾ ಅಜಾಗರೂಕತೆ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-sira-ksrtc-bus-truck-accident-nh48-35-passengers-injured-sat/articleshow-fg00h5m"/>
        </item>
        <item>
            <title><![CDATA[ಪರಿಹಾರ ನೀಡದಿದ್ದರೆ ವಿಮೆ ತುಂಬಬೇಡಿ ಎಂದು ನಾನೇ ಹೇಳುವೆ: ಗೃಹ ಸಚಿವ ಪರಮೇಶ್ವರ್]]></title>
            <link>https://kannada.asianetnews.com/karnataka-districts/farmers-insurance-companies-warning-dr-g-parameshwar-tumakuru-gvd/articleshow-g3dxxtr</link>
            <guid isPermaLink="true">https://kannada.asianetnews.com/karnataka-districts/farmers-insurance-companies-warning-dr-g-parameshwar-tumakuru-gvd/articleshow-g3dxxtr</guid>
            <pubDate>Sun, 26 Apr 2026 20:18:20 +0530</pubDate>
            <description><![CDATA[&lt;p&gt;ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4xhfwvwx123bnzfr5ztfa93,imgname-----------------------2025-09-12t045335.769-1757633049467.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.26): &lt;/strong&gt;ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯ್ತಿಯಲ್ಲಿ ಶನಿವಾರ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು, ವಿಮಾ ಕಂಪನಿ ರೈತರಿಂದ ವಿಮೆ ಮಾಡಿಸಿ ಪರಿಹಾರ ಕೊಡುವಾಗ ನಿಬಂಧನೆಗಳನ್ನು ವಿಧಿಸಿ ಕಡಿಮೆ ಪರಿಹಾರ ನೀಡುವುದು ಸರಿಯಲ್ಲ. ರೈತರಿಗೆ ಸರಿಯಾದ ವಿಮೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ನಾವೇ ರೈತರಿಗೆ ವಿಮಾ ಮಾಡದಂತೆ ತಿಳಿಸಬೇಕಾಗುತ್ತದೆ ಎಂದರು.&lt;/p&gt;&lt;p&gt;ಅಲ್ಲದೆ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಮಾ ಕಂಪನಿಗಳ ಸಭೆ ಕರೆದು ಚರ್ಚಿಸಿ ನಿಬಂಧನೆಗಳನ್ನು ಸಡಿಲಗೊಳಿಸಲು ತಿಳಿಸಬೇಕು. ಅಲ್ಲದೆ ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ. ಮುಂದಿನ ತೀರ್ಮಾನವನ್ನು ರ್ಕಾ ರ ಕೈಗೊಳ್ಳಲಿದೆ ಎಂದರು. ಕೃಷಿ ಇಲಾಖೆ ಮಾಹಿತಿ ಪಡೆಯುವ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಹೋಲಿಸಿದರೆ ಕುಣಿಗಲ್ ತಾಲೂಕಿನಲ್ಲಿ ಮಾತ್ರ ಅತ್ಯಂತ ಕಡಿಮೆ 1453 ರೈತರು ವಿಮೆ ಮಾಡಿಸಿದ್ದಾರೆ.&lt;/p&gt;&lt;p&gt;ಕಾರಣ ಏನು ಎಂದು ಪ್ರಶ್ನಿಸಿದರು. ಶಾಸಕ ಎಚ್.ಡಿ.ರಂಗನಾಥ್ ಅವರು ಕೇಂದ್ರ ಸರ್ಕಾರದ ಮೇಲೆ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ. ಹಾಗಾಗಿ ರೈತರು ವಿಮೆ ಮಾಡಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರಿಗೆ ವಿಮೆ ಮಾಡಿಸುವ ಸಂಬಂಧ ಜಾಗೃತಿ ಮೂಡಿಸಬೇಕು. ಅಲ್ಲದೆ ವಿಮಾ ಕಂಪನಿಗಳ ನಿಬಂಧನೆಗಳನ್ನು ಪರಿಷ್ಕರಿಸಬೇಕು ಹಾಗೂ ನಿಯಮಗಳ ಸಡಿಲಿಕೆಯೂ ಆಗಬೇಕು. ಈ ಬಗ್ಗೆ ರಾಜ್ಯ ಸರ್ಕಾರರ ಮಧ್ಯ ಪ್ರವೇಶಿಸಬೇಕು ಎಂದು ಸಭೆಯಲ್ಲಿದ್ದ ಶಾಸಕರು ಆಗ್ರಹಿಸಿದರು.&lt;/p&gt;&lt;p&gt;ವಿಮಾ ಕಂಪನಿಗಳು ರೈತರ ವಿಮಾ ಹಣದಿಂದಲೇ ಬದುಕುತ್ತಿರವುದು. ಜಿಲ್ಲೆಯಲ್ಲಿ 7 ಕೋಟಿ ರೂ. ವಿಮೆ ಪಡೆದು 1.5 ಕೋಟಿ ರೂ. ಪರಿಹಾರ ನೀಡಿವೆ ಎಂದರೆ ಏರ್ಥತ ಎಂದು ಸಭೆಯಲ್ಲಿ ಶಾಸಕರು ಪ್ರಶ್ನಿಸಿದರು. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾವು ಬೆಳೆನಷ್ಟದ ಬಗ್ಗೆ ಪರಿಶೀಲಿಸಿ ಸರ್ಕಾರರಕ್ಕೆ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು. ಪ್ರಸ್ತುತ ಜಿಲ್ಲೆಯ ಕೆಲವು ಭಾಗದಲ್ಲಿ ಸರ್ಕಾರಿ ಶಾಲೆ, ಕಟ್ಟಡಗಳು ಸೇರಿದಂತೆ ಡೀಮ್ಡ್ ಅರಣ್ಯ ವ್ಯಾಪ್ತಿಯಲ್ಲಿವೆ ಎಂದು ಹೇಳಲಾಗುತ್ತಿದೆ. ಇದು ಕಂದಾಯ ಹಾಗೂ ಅರಣ್ಯ ಇಲಾಖೆ ನಡುವೆ ತಿಕ್ಕಾಟ ಇದೆ.&lt;/p&gt;&lt;p&gt;ಆದ್ದರಿಂದ ಅರಣ್ಯ ಇಲಾಖೆ ತಕ್ಷಣ ಜಂಟಿ ಸರ್ವೆ ಮಾಡಿಸಿ ಕಂದಾಯ ಇಲಾಖೆ ಜಾಗ ಇದ್ದರೆ ಕಂದಾಯ ಇಲಾಖೆಗೆ ಬಿಟ್ಟು ಕೊಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ 4584 ಜಾನುವಾರುಗಳ ಸಾವಿನ ಕಾರಣದ ಬಗ್ಗೆ ಚರ್ಚಿಸಲಾಯಿತು. ಸಂಬಂಧಿಸಿದ ಪರಿಹಾರಗಳನ್ನು ಶೀಘ್ರ ರೈತರಿಗೆ ನೀಡಬೇಕು ಎಂದರು. ಅಲ್ಲದೆ ನವಿಲುಗಳು ಸಾವೀಡಾಗುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಇದು ಹಕ್ಕಿಜ್ಚರದ ಶಂಕೆ ವ್ಯಕ್ತವಾಗಿದ್ದು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ವಾರದಲ್ಲಿ ವರದಿ ಬರುವ ಸಾಧ್ಯತೆ ಇರುವುದರಿಂದ ಅಲ್ಲಿಯವರೆಗೆ ಕಾಯಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.&lt;/p&gt;&lt;h2&gt;&lt;strong&gt;ಅಧಿಕಾರಿಗಳಿಗೆ ಸೂಚನೆ&lt;/strong&gt;&lt;/h2&gt;&lt;p&gt;ರೇಷ್ಮೆ ಬೆಳೆಗಾರರಿಗೆ ನೀಡಬೇಕಾಗಿರುವ ಪ್ರೋತ್ಸಾಹ ಧನ ಹಾಗೂ ಬೋನಸ್ ಧನ 6 ಕೋಟಿ ರು. ವಿತರಣೆ ಬಾಕಿ ಇದ್ದು, ಈ ಬಗ್ಗೆ ಜಿಲ್ಲೆಯಿಂದ ರೇಷ್ಮೆ ಇಲಾಖೆ ಕೇಂದ್ರ ಕಚೇರಿಗೆ ಪತ್ರ ಬರೆದು ವಿತರಣೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಸಕ್ತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇಕಡಾವಾರು ಫಲಿತಾಂಶ ಉತ್ತಮವಾಗಿದೆ. ಆದರೆ ರಾಜ್ಯದಲ್ಲಿ ಸ್ಥಾನ ಕೆಳಗಿಳಿದಿರುವುದು ಸ್ವಲ್ಪ ಮಟ್ಟಿನ ಅಸಮಾಧಾನ. ಶಾಲಾ ಶಿಕ್ಷಣ ಇಲಾಖೆಯ ತುಮಕೂರು ಹಾಗೂ ಮಧುಗಿರಿ ಎರಡೂ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಿರ್ದಿಷ್ಟ ವಿಷಯಗಳಲ್ಲಿ ಕಳಪೆ ಪ್ರಗತಿ ತೋರಿಸಿರುವ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಕಡಿಮೆ ಸಾಧನೆ ಮಾಡುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ಅವಶ್ಯವಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/farmers-insurance-companies-warning-dr-g-parameshwar-tumakuru-gvd/articleshow-g3dxxtr"/>
        </item>
        <item>
            <title><![CDATA[ಕಾಂಗ್ರೆಸ್‌ಗೆ ಅದೃಶ್ಯ ಮತದಾರರಿದ್ದು ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ: ಮಾಜಿ‌ ಸಚಿವ ಕೆ.ಎನ್.ರಾಜಣ್ಣ]]></title>
            <link>https://kannada.asianetnews.com/politics/kn-rajanna-congress-invisible-voters-win-bypolls-karnataka-gvd/articleshow-igd2nep</link>
            <guid isPermaLink="true">https://kannada.asianetnews.com/politics/kn-rajanna-congress-invisible-voters-win-bypolls-karnataka-gvd/articleshow-igd2nep</guid>
            <pubDate>Tue, 07 Apr 2026 11:55:23 +0530</pubDate>
            <description><![CDATA[&lt;p&gt;ನಾವು ಗ್ಯಾರಂಟಿಗಳನ್ನು ಏನು ಆಶ್ವಾಸನೆ ಕೊಟ್ಟಿದ್ದೆವೋ ಅದನ್ನು ನಾವು ಬಹಳ ಎಫೆಕ್ಟಿವ್ ಆಗಿ ಇಂಪ್ಲಿಮೆಂಟ್ ಕೂಡ ಮಾಡಿದ್ದೇವೆ. ಎರಡೂ ಕ್ಷೇತ್ರಗಳಲ್ಲಿ&zwnj; ಗೆಲ್ಲುತ್ತೇವೆಂದು ಮಾಜಿ&zwnj; ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9yn2ayhv8s8hp1vjz096j7x,imgname-----------------------2025-11-13t183215.867-1763039062993.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.07): &lt;/strong&gt;ಕಾಂಗ್ರೆಸ್&zwnj;ಗೆ ಅದೃಶ್ಯ ಮತದಾರರಿದ್ದು ಎರಡೂ ಕ್ಷೇತ್ರಗಳಲ್ಲಿ&zwnj; ಗೆಲ್ಲುತ್ತೇವೆಂದು ಮಾಜಿ&zwnj; ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಜೊತೆಗೆ ನಿಲ್ಲುವವರು ಎಲ್ಲರೂ ಬಡವರು. ಯಾವತ್ತು ಕೂಡ ಉಪಕಾರ ಸ್ಮರಣೆ ಇಟ್ಟುಕೊಂಡವರು. ನಾವು ಗ್ಯಾರಂಟಿಗಳನ್ನು ಏನು ಆಶ್ವಾಸನೆ ಕೊಟ್ಟಿದ್ದೆವೋ ಅದನ್ನು ನಾವು ಬಹಳ ಎಫೆಕ್ಟಿವ್ ಆಗಿ ಇಂಪ್ಲಿಮೆಂಟ್ ಕೂಡ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಎರಡು ಕಡೆನೂ ನಾವು ಗೆಲ್ಲುತ್ತೇವೆ ಎಂದರು.&lt;/p&gt;&lt;p&gt;ಜನರ ಮನಸ್ಸಿನಲ್ಲಿ ನಾವಿದ್ದೇವೆ, ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರು ಇದ್ದಾರೆ ಎಂದರು. ಒಳಮೀಸಲಾತಿ ಒಂದು ರೀತಿನಲ್ಲಿ ಗೊಂದಲದ ಗೂಡಾಗಿದೆ. ಯಾರೊಬ್ಬರು ಕೂಡ ಅದರಿಂದ ಸಮಾಧಾನ ಪಟ್ಟಂಗೆ ಅನ್ನಿಸುತ್ತಿಲ್ಲ ಲೆಫ್ಟ್ ಆಗಲಿ, ರೈಟ್ ಆಗಲಿ ಅದರ್ಸ್ ಆಗಲಿ ಇನ್ನೊಬ್ಬರಾಗಲಿ ಗೊಂದಲ ಇದೆ ಎಂದರು. ಇನ್ನೆರೆಡು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಅಸೆಂಬ್ಲಿಯಲ್ಲೇ ಇನ್ನೆರೆಡು ಬಜೆಟ್ ಅನ್ನು ಹೈ ಕಮಾಂಡ್ ಒಪ್ಪಿದರೆ ಮಾಡುತ್ತೀನಿ ಅಂತ ಹೇಳಿದ್ದಾರೆ.&lt;/p&gt;&lt;p&gt;ಜನ ಕೂಡ ನಿರೀಕ್ಷೆ ಮಾಡಿದ್ದಾರೆ. ಹೈ ಕಮಾಂಡ್ ಆ ನಿರೀಕ್ಷೆಗೆ ಗೌರವ ಕೊಡುತ್ತಾರೆ ಅಂತ ನಾನು ಅಂದುಕೊಳ್ಳುತ್ತೇನೆ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡಬೇಕು ಅನ್ನುವುದು ಮೊದಲಿಂದಲೂ ನನ್ನ ವಾದ. ಗ್ರಾಮ ಪಂಚಾಯಿತಿ ಇರಲಿ, ಮುನ್ಸಿಪಾಲಿಟಿಗಳು ಇರಲಿ, ಕಾರ್ಪೊರೇಷನ್ ಇರಲಿ, ಜಿಲ್ಲಾ ಪಂಚಾಯಿತಿ ಇರಲಿ, ತಾಲೂಕು ಪಂಚಾಯಿತಿ ಇರಲಿ. ಯಾವತ್ತೂ ಕೂಡ ಜನಪ್ರತಿನಿಧಿಗಳು ಇದ್ದರೆ ಆ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ ಬರುತ್ತದೆ ಎಂದರು.&lt;/p&gt;&lt;h2&gt;&lt;strong&gt;ಯೋಚನೆ ಮಾಡುವುದಿಲ್ಲ&lt;/strong&gt;&lt;/h2&gt;&lt;p&gt;ಜನಪ್ರತಿನಿಧಿಗಳು ಇಲ್ಲದೆ ಬರಿ ಅಧಿಕಾರಿಗಳ ಕಡೆಯಿಂದ ನಾವು ಸರ್ಕಾರ ನಡೆಸುತ್ತೇವೆ. ಅಧಿಕಾರಿಗಳ ಮೂಲಕ ಸ್ಥಳೀಯ ಸಂಸ್ಥೆಗಳು ನಡೆಸುತ್ತೇವೆ ಅನ್ನೋ ಪ್ರಯತ್ನ ಸರಿಯಲ್ಲ ಎಂದರು. ಕ್ಯಾಬಿನೆಟ್ ವಿಸ್ತರಣೆ ಮಾಡಬಹುದು ಮಾಡದೆ ಇರಬಹುದು. ಚುನಾವಣಾ ಫಲಿತಾಂಶಗಳು ಬಂದ ನಂತರ ವಿಸ್ತರಣೆಯಾಗಬಹುದು ಎಂದ ಅವರು ನನಗೆ ಮಂತ್ರಿ ಸ್ಥಾನ ಬಂದರೆ ಬರ್ತದೆ, ಹೋದರೆ ಹೋಗುತ್ತದೆ. ಅದಕ್ಕೆ ನಾವೇನು ಯೋಚನೆ ಮಾಡುವುದಿಲ್ಲ ಎಂದರು.&lt;/p&gt;&lt;p&gt;ಪವರ್ ಇಸ್ ಪಾಯಿಸನ್ ಅಂತ ಒಂದು ಗಾದೆ ಕೇಳಿದ್ದೀನಿ. ಪಾಯಿಸನ್ ಅನ್ನು ಸರಿಯಾಗಿ ಬಳಸಿದರೆ ಔಷಧಿನೂ ಮಾಡಿಕೊಳ್ಳಬಹುದು. ಈಗ ಕ್ಯಾನ್ಸರ್ ಗೆ ಪಾಯಿಸನ್ ಇಂದಾನೆ ಔಷಧಿ ಮಾಡೋದು ಎಂದ ಅವರು ಹಾಗಾಗಿ ಆ ಪವರ್ ಅನ್ನು ಪಾಯಿಸನ್. ಅದನ್ನು ಬಳಸುದರ ಮೇಲೆ ಅದರ ಪರಿಣಾಮ, ದುಷ್ಪರಿಣಾಮ, ಸತ್ಪರಿಣಾಮಗಳು ಗೊತ್ತಾಗುತ್ತದೆ ಎಂದರು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/kn-rajanna-congress-invisible-voters-win-bypolls-karnataka-gvd/articleshow-igd2nep"/>
        </item>
        <item>
            <title><![CDATA[ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾಳ ತಲೆಬುರುಡೆ ಪತ್ತೆ! ಸಿಸಿಟಿವಿಯಲ್ಲಿ ಸೆರೆಯಾಯ್ತು ಕೊನೆಯ ದೃಶ್ಯ !]]></title>
            <link>https://kannada.asianetnews.com/crime/missing-yamunas-skull-found-near-dabaspet-last-scene-captured-on-cctv-rav/articleshow-l439u4u</link>
            <guid isPermaLink="true">https://kannada.asianetnews.com/crime/missing-yamunas-skull-found-near-dabaspet-last-scene-captured-on-cctv-rav/articleshow-l439u4u</guid>
            <pubDate>Fri, 17 Apr 2026 07:56:59 +0530</pubDate>
            <description><![CDATA[ದಾಬಸ್&zwj;ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾ ಎಂಬ ಮಹಿಳೆಯ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpckzvjyv16s1vfp6mrtymt6,imgname-----------------------2026-04-17t074554.140-1776392597086.jpg" type="image/jpeg" height="390" width="690"/>
            <content:encoded><![CDATA[&lt;p&gt;ಬುರುಡೆ, ಮೂಳೆ, ಬ್ಯಾಗ್, ಕಂಪನಿಯ ಐಡಿ ಕಾರ್ಡ್ ಪತ್ತೆ । ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ&lt;/p&gt;&lt;p&gt;&lt;strong&gt;&amp;nbsp;ದಾಬಸ್&zwj;ಪೇಟೆ (ಏ.17): &amp;nbsp;&lt;/strong&gt;ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಕಳೆಬರ ಪತ್ತೆಯಾಗಿರುವ ಘಟನೆ ದಾಬಸ್&zwj;ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.&lt;/p&gt;&lt;p&gt;ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದ ಬಸವೇಶ್ವರ ಬಡಾವಣೆಯಲ್ಲಿ ವಾಸವಿದ್ದ ಯಮುನಾ (38) ಮೃತಪಟ್ಟ ಮಹಿಳೆಯಾಗಿದ್ದು, ಹಳೆನಿಜಗಲ್ ಬಳಿಯಿರುವ ರಿಲಯನ್ಸ್ ಕಂಪನಿಯಲ್ಲಿ ಕಳೆದ ಆರೇಳು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರು. ಮಹಿಳೆ ಮಲ್ಲಿಕಾರ್ಜುನ್ ಎಂಬುವವರ ಜೊತೆ 19 ವರ್ಷದ ಹಿಂದೆ ವಿವಾಹವಾಗಿದ್ದರು. ಈಕೆಗೆ ಒಬ್ಬ ಗಂಡು ಹಾಗೂ ಒಬ್ಬ ಹೆಣ್ಣು ಮಗಳಿದ್ದಾಳೆ. ಈಕೆಯ ತಲೆಬುರುಡೆ, ಬ್ಯಾಗ್, ಬಟ್ಟೆಯು ಸೋಂಪುರ ಹೋಬಳಿಯ ಹಳೆನಿಜಗಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ- 48ರ ರಸ್ತೆಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.&lt;/p&gt;&lt;h2&gt;ಘಟನಾ ಹಿನ್ನೆಲೆ:&lt;/h2&gt;&lt;p&gt;ಮೃತ ಯಮುನಾ ಕಳೆದ ಮಾ.21ರಂದು ಕೆಲಸಕ್ಕೆ ಬಂದಿದ್ದು, ನಂತರ ಮನೆಗೆ ವಾಪಾಸ್ಸು ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮೃತಳ ಪತಿ ಮಲ್ಲಿಕಾರ್ಜುನ್ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.&lt;/p&gt;&lt;p&gt;ನಂದಿಹಳ್ಳಿ ಗ್ರಾಮದ ಉಮೇಶ್ ಎಂಬುವವರು ತನ್ನ ಜಮೀನಿನಲ್ಲಿ ದೇವರ ಕಲ್ಲುಗಳಿದ್ದು, ಅದನ್ನು ಪೂಜಿಸಲು ಬಂದಾಗ ತಲೆಬುರುಡೆ ಬಿದ್ದಿರುವುದನ್ನು ಕಂಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.&lt;/p&gt;&lt;h3&gt;ತಲೆಬುರುಡೆ, ಮೂಳೆ, ಬ್ಯಾಗ್, ಬಟ್ಟೆ ಪತ್ತೆ:&lt;/h3&gt;&lt;p&gt;ಘಟನಾ ಸ್ಥಳಕ್ಕೆ ದಾಬಸ್&zwj;ಪೇಟೆ ಹಾಗೂ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಘಟನಾ ಸ್ಥಳದಲ್ಲಿ ತಲೆಬುರುಡೆ, ಕಾಲಿನ ಮೂಳೆಗಳು, ಬ್ಯಾಗ್, ವಾಟರ್ ಬಾಟಲ್, ಕಂಪನಿ ಐಡಿ ಕಾರ್ಡ್, ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಮಹಿಳೆಯ ಗುರುತು ಪತ್ತೆಯಾಗಿದೆ.&lt;/p&gt;&lt;p&gt;&lt;strong&gt;ಅನೈತಿಕ ಸಂಬಂಧದ ಶಂಕೆ:&lt;/strong&gt;&lt;/p&gt;&lt;p&gt;ಮೃತಳಿಗೆ ಗಂಡನ ತವರೂರಾದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ರಾಘವೇಂದ್ರ ಎಂಬಾತನ ಜೊತೆ ಅನೈತಿಕ ಸಂಬಂಧವಿತ್ತು. ಆತನ ಜೊತೆ ಆರೇಳು ವರ್ಷ ಸಂಸಾರ ನಡೆಸಿ ನಂತರ ಗಂಡನ ಮನೆಗೆ ವಾಪಾಸ್ಸು ಬಂದಿದ್ದರು. ಆದಾದ ಮೇಲೂ ರಾಘವೇಂದ್ರ ಈಕೆಗೆ ಮತ್ತೆ ನನ್ನ ಜೊತೆ ಬಂದು ಸಂಸಾರ ನಡೆಸುವಂತೆ ಕಿರುಕುಳ ಕೊಡುವುದಲ್ಲದೆ ನನ್ನ ಜೊತೆ ಬಾರದಿದ್ದರೆ ನಿನ್ನ ಗಂಡ, ಮಕ್ಕಳು ಸೇರಿದಂತೆ ನಿನ್ನನ್ನು ಸಾಯಿಸುತ್ತೇನೆಂದು ಜೀವ ಬೆದರಿಕೆ ಕೂಡ ಹಾಕಿರುವ ಬಗ್ಗೆ ಕುಟುಂಬಸ್ಥರು ಆರೋಪಿಸಿದ್ದಾರೆ.&lt;/p&gt;&lt;h3&gt;ಕೊಲೆ ಮಾಡಿರುವ ಶಂಕೆ:&lt;/h3&gt;&lt;p&gt;ಮೃತ ಯುಮುನಾ ತನ್ನ ಗಂಡ ಹಾಗೂ ಮಕ್ಕಳೊಂದಿಗೆ ಮಾ.19ರಂದು ಬರ್ತಡೇ ಆಚರಿಸಿಕೊಂಡಿದ್ದರು. ನಂತರ ಮಾ.21ರಂದು ಎಂದಿನಂತೆ ಕೆಲಸಕ್ಕೆ ಬಂದಿದ್ದಾರೆ. ಅಂದು ಸಂಜೆ ಕೆಲಸ ಬಿಟ್ಟಾಗ ಅನೈತಿಕ ಸಂಬಂಧ ಹೊಂದಿದ್ದ ರಾಘವೇಂದ್ರನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.&lt;/p&gt;&lt;p&gt;ರಸ್ತೆ ಪಕ್ಕದಲ್ಲೇ ಇರುವ ಜಮೀನಿಗೆ ಇಬ್ಬರೂ ಹೋಗಿದ್ದು ಅಲ್ಲಿ ಮೃತ ಯುಮುನಾ ಹಾಗೂ ರಾಘವೇಂದ್ರನ ನಡುವೆ ಜಗಳವಾಗಿದ್ದು, ಮಾತಿಗೆ ಮಾತು ಬೆಳೆದು ರಾಘವೇಂದ್ರ ಆಕೆಯನ್ನು ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸುತ್ತಿದ್ದು, ನಾಪತ್ತೆಯಾಗಿರುವ ರಾಘವೇಂದ್ರನ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.&lt;/p&gt;&lt;p&gt;ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಉಪವರಿಷ್ಠಾಧಿಕಾರಿ ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ಜಗದೀಶ್, ಇನ್ಸ್ ಪೆಕ್ಟರ್ ಗಳಾದ ಭರತ್ ಗೌಡ, ಗಿರೀಶ್, ನರೇಂದ್ರಬಾಬು, ಸಬ್ ಇನ್ಸ್ ಪೆಕ್ಟರ್ ಗಳಾದ ಸಿದ್ದಪ್ಪ, ದಿವ್ಯ, ವಿಧಿವಿಜ್ಞಾನ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.&lt;/p&gt;&lt;p&gt;--------&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/crime/missing-yamunas-skull-found-near-dabaspet-last-scene-captured-on-cctv-rav/articleshow-l439u4u"/>
        </item>
        <item>
            <title><![CDATA[ಗಾಯಾಳುವನ್ನು ಕಸದ ಗಾಡಿಯಲ್ಲಿ ಆಸ್ಪತ್ರೆ ಸಾಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು]]></title>
            <link>https://kannada.asianetnews.com/karnataka-districts/sanitation-workers-use-garbage-vehicle-to-transport-accident-victim-for-emergency-care/articleshow-lwpall8</link>
            <guid isPermaLink="true">https://kannada.asianetnews.com/karnataka-districts/sanitation-workers-use-garbage-vehicle-to-transport-accident-victim-for-emergency-care/articleshow-lwpall8</guid>
            <pubDate>Mon, 13 Apr 2026 16:41:17 +0530</pubDate>
            <description><![CDATA[&lt;p&gt;ಗಾಯಾಳುವನ್ನು ಕಸದ ಗಾಡಿಯಲ್ಲಿ ಆಸ್ಪತ್ರೆ ಸಾಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು, ನರಳಾಡುತ್ತಿದ್ದ ಗಾಯಾಳುವನ್ನು ತಕ್ಷಣವೇ ಆಸ್ಪತ್ರೆ ಸಾಗಿಸಲು ವಾಹನ ಇರಲಿಲ್ಲ. ಇತ್ತ ಆ್ಯಂಬುಲೆನ್ಸ್ ವಿಳಂಬವಾಗಿತ್ತು. ಹೀಗಾಗಿ ಪೌರಕಾರ್ಮಿಕರು ನೆರವು ನೀಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp38jdfyynzsgf1y7gns24hk,imgname-tumakuru-accident-1776078632446.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.13) &lt;/strong&gt;ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಗಾಯಾಳುವನ್ನು ತಕ್ಷಣಕ್ಕೆ ಆಸ್ಪತ್ರೆ ಸಾಗಿಸಲು ಯಾವುದೇ ವಾಹನಗಳಿದ್ದ ಕಾರಣ ತಕ್ಷಣವೇ ಪೌರಕಾರ್ಮಿಕರು ನೆರವಿನ ಹಸ್ತಚಾಚಿದ ಘಟನೆ ನಡೆದಿದೆ. ತುಮಕೂರಿನಲ್ಲಿ ನಡೆದ ಬೈಕ್ ಆಫಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳುವನ್ನು ಆಸ್ಪತ್ರೆ ಸಾಗಿಸಲು ಯಾವುದೇ ವಾಹನ ಇರಲಿಲ್ಲ. ಆ್ಯಂಬುಲೆನ್ಸ್ ಸೇವೆಯಿಂದ ಸ್ಪಂದನೆ ವ್ಯಕ್ತವಾಗದ ಕಾರಣ ಪೌರ ಕಾರ್ಮಿಕರು ನೆರವಿಗೆ ಧಾವಿಸಿದ್ದಾರೆ. ಕಸವನ್ನು ಚೆಲ್ಲಿ ಕಸದ ಲಾರಿಯಲ್ಲೇ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಘಟನೆ ನಡೆದಿದೆ.&lt;/p&gt;&lt;p&gt;ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅವಳಗೆರೆ ಬಳಿ ಲಾರಿ ಹಾಕೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪುನೀತ್ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ, ಯಾರೂ ಕೂಡ ಪುನೀತ್ ಆಸ್ಪತ್ರೆ ದಾಖಲಿಸಲು ಮುಂದಾಗಲಿಲ್ಲ. ಇತ್ತ ಆ್ಯಂಬುಲೆನ್ಸ್&zwnj;ಗೆ ಕರೆ ಮಾಡಿದರೆ ಸರಿಯಾದ ಸ್ಪಂದನೆ ಸಿಗಲಿಲ್ಲ. ಇತ್ತ ಪುನೀತ್ ನರಳಾಟ ತೀವ್ರಗೊಂಡಿತ್ತು. ನಡು ರಸ್ತೆಯಲ್ಲೇ ಬಿದ್ದಿದ್ದ ಪುನೀತ್&zwnj;ನನ್ನು ಆಸ್ಪತ್ರೆಗೆ ದಾಖಲಿಸಲು ಪೌರ ಕಾರ್ಮಿಕರು ಮುಂದಾಗಿದ್ದಾರೆ.&lt;/p&gt;&lt;h2&gt;ಕಸದ ಗಾಡಿಯಲ್ಲೇ ಆಸ್ಪತ್ರೆ ಕರೆದೊಯ್ಡ ಪೌರ ಕಾರ್ಮಿಕರು&lt;/h2&gt;&lt;p&gt;ಕಸ ತುಂಬಿಕೊಂಡು ತೆರಳುತ್ತಿದ್ದ ಪೌರ ಕಾರ್ಮಿಕರು ಇದೇ ರಸ್ತೆಯಲ್ಲಿ ಆಗಮಿಸಿದ್ದಾರೆ. ಈ ವೇಳೆ ಪುನೀತ್ ನರಳಾಟ ನೋಡಿ ಆಸ್ಪತ್ರೆ ದಾಖಳಿಸಲು ವಾಹನದ ನೆರವು ಕೋರಿದ್ದಾರೆ. ಆದರೆ ತಕ್ಷಣಕ್ಕೆ ಯಾವುದೇ ವಾಹನ ಸಿಗದ ಕಾರಣ, ಪೌರ ಕಾರ್ಮಿಕರು ತುಂಬಿದ್ದ ಕಸವನ್ನು ರಸ್ತೆ ಬದಿಯಲ್ಲಿ ಚೆಲ್ಲಿ ಅದೇ ಕಸದ ಗಾಡಿಯಲ್ಲಿ ಗಾಯಾಳು ಪುನೀತ್&zwnj;ನನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳುಗೆ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.&lt;/p&gt;&lt;p&gt;ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೋಟಿಹಳ್ಳಿ ನಿವಾಸಿಯಾಗಿರುವ ಪುನೀತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಕ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಸಿಗುವಂತೆ ಮಾಡಿದ ಕಾರಣ ಭಾರಿ ಅಪಾಯ ತಪ್ಪಿದೆ. ಪೌರ ಕಾರ್ಮಿಕರ ಕರ್ತವ್ಯ ಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>tumakuru</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/sanitation-workers-use-garbage-vehicle-to-transport-accident-victim-for-emergency-care/articleshow-lwpall8"/>
        </item>
        <item>
            <title><![CDATA[ತುಮಕೂರು: ಸತ್ಯಮಂಗಲದಲ್ಲಿ ಬಯಲಾದ 700 ವರ್ಷಗಳ ಹಿಂದಿನ ರಹಸ್ಯ! ಅಪರೂಪದ ವಿಶೇಷ ವೀರಗಲ್ಲು ಶಾಸನ ಪತ್ತೆ]]></title>
            <link>https://kannada.asianetnews.com/karnataka-districts/rare-14th-century-hero-stone-inscription-discovered-in-tumakuru-reveals-pre-vijayanagara-history-gdp/articleshow-slfqg1x</link>
            <guid isPermaLink="true">https://kannada.asianetnews.com/karnataka-districts/rare-14th-century-hero-stone-inscription-discovered-in-tumakuru-reveals-pre-vijayanagara-history-gdp/articleshow-slfqg1x</guid>
            <pubDate>Tue, 07 Apr 2026 18:53:40 +0530</pubDate>
            <description><![CDATA[&lt;p&gt;ತುಮಕೂರಿನ ಸತ್ಯಮಂಗಲದಲ್ಲಿ 14ನೇ ಶತಮಾನದ, ವಿಜಯನಗರ ಪೂರ್ವದ ಅಪರೂಪದ ವೀರಗಲ್ಲು ಶಾಸನ ಪತ್ತೆಯಾಗಿದೆ. ಇದು ಅಂದಿನ 'ಮುರುಗಲು ರಾಜ್ಯ'ದ ಬಗ್ಗೆ ತಿಳಿಸುತ್ತದೆ. ದೇವಸ್ಥಾನದ ಜಾತ್ರೆಗೆ ತೆರಳುತ್ತಿದ್ದ ಜನರನ್ನು ರಕ್ಷಿಸಲು ಹೋರಾಡಿ ಮಡಿದ ವೀರನ ಸ್ಮರಣಾರ್ಥ ಇದನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಅಂದಿನ ಸಾಂಸ್ಕೃತಿಕ ಆಚರಣೆಗಳ ಚಿತ್ರಣ ಮತ್ತು ಸತ್ಯಮಂಗಲ ಗ್ರಾಮದ ಉಲ್ಲೇಖವಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knm15x5dz9r3wn4v438178nb,imgname-tumakuru-hero-stone-inscription--1--1775567565997.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು:&lt;/strong&gt; ಇತಿಹಾಸದ ಪುಟಗಳಲ್ಲಿ ಅಡಗಿ ಹೋಗಿದ್ದ 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ನಗರದ ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಎಂ. ಕೊಟ್ರೇಶ್ ಹಾಗೂ ಡಾ. ಸುಧಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ತಂಡ ಈ ಅಪ್ರಕಟಿತ ಶಾಸನವನ್ನು ಗುರುತಿಸಿ ಸಂಶೋಧಿಸಿದೆ.&lt;/p&gt;&lt;h2&gt;ವಿಜಯನಗರ ಸಾಮ್ರಾಜ್ಯದ ಉದಯಕ್ಕೂ ಪೂರ್ವದ್ದಾಗಿದೆ&lt;/h2&gt;&lt;p&gt;ತುಮಕೂರು ನಗರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಸತ್ಯಮಂಗಲದ ಹೊಸ ಬಡಾವಣೆಗಳು ನಿರ್ಮಾಣವಾಗುತ್ತಿವೆ. ಇಲ್ಲಿನ ಖಾಸಗಿ ಶಾಲೆಯ ಕಾಂಪೌಂಡ್ ಪಕ್ಕದಲ್ಲಿ ಪತ್ತೆಯಾಗಿರುವ ಈ ವೀರಗಲ್ಲು ಒಟ್ಟು ಏಳು ಸಾಲುಗಳ ಬರಹವನ್ನು ಹೊಂದಿದೆ. ಶಾಸನದ ಮಾಹಿತಿಯಂತೆ ಇದು ವಿಜಯನಗರ ಸಾಮ್ರಾಜ್ಯದ ಉದಯಕ್ಕೂ ಪೂರ್ವದ ಕಾಲಘಟ್ಟದ್ದಾಗಿದ್ದು, ಅಂದರೆ ವಿಕ್ರಮ ಸಂವತ್ಸರದಲ್ಲಿ ವೀರನರಸಿಂಗದೇವನ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಅಂದು ಈ ಭಾಗವನ್ನು ಮುರುಗಲು ರಾಜ್ಯ ಎಂದು ಕರೆಯಲಾಗುತ್ತಿತ್ತು ಹಾಗೂ ಸಿಂಗೆಯ ದಂಡನಾಯಕರು ಇಲ್ಲಿನ ಪ್ರಧಾನಿಯಾಗಿದ್ದರು ಎಂಬ ಮಹತ್ವದ ಅಂಶಗಳು ಇಲ್ಲಿ ಉಲ್ಲೇಖವಾಗಿವೆ. ವಿಶೇಷವೆಂದರೆ ಶಾಸನದ ಐದನೇ ಸಾಲಿನಲ್ಲಿ ಸತ್ಯಮಂಗಲ ಎಂಬ ಗ್ರಾಮದ ಹೆಸರೇ ಇರುವುದು ಕುತೂಹಲಕಾರಿಯಾಗಿದೆ.&lt;/p&gt;&lt;h2&gt;ದೇವಸ್ಥಾನದ ಜಾತ್ರೆಯ ಬಗ್ಗೆ ಮಾಹಿತಿ&lt;/h2&gt;&lt;p&gt;ಈ ವೀರಗಲ್ಲಿನ ಅತ್ಯಂತ ಆಕರ್ಷಕ ಅಂಶವೆಂದರೆ ಅದರಲ್ಲಿ ಕೆತ್ತಲಾಗಿರುವ ಸಾಂಸ್ಕೃತಿಕ ಚಿತ್ರಣ. 14ನೇ ಶತಮಾನದಲ್ಲಿ ಸಾಮಾನ್ಯ ಜನರು ಹೇಗೆ ಜಾತ್ರೆ ಮತ್ತು ಉತ್ಸವಗಳಲ್ಲಿ ಪಾಲ್ಗೊಳ್ಳುತ್ತಿದ್ದರು ಎಂಬುದಕ್ಕೆ ಇದು ಜೀವಂತ ಸಾಕ್ಷಿಯಂತಿದೆ. ಹೆಣ್ಣು ಮಕ್ಕಳು ಸಾಲಾಗಿ ತಲೆಯ ಮೇಲೆ ಕುಂಭಗಳನ್ನು ಹೊತ್ತುಕೊಂಡು ಸಂಭ್ರಮದಿಂದ ಜಾತ್ರೆಗೆ ಹೊರಟಿರುವ ಸುಂದರ ದೃಶ್ಯವನ್ನು ಈ ಶಿಲೆಯಲ್ಲಿ ಕಡೆಯಲಾಗಿದೆ. ಶಾಸನದ ಕೊನೆಯ ಸಾಲುಗಳು ಯಾವುದೋ ದೇವಸ್ಥಾನದ ಜಾತ್ರೆಯ ಬಗ್ಗೆ ಮಾಹಿತಿ ನೀಡುತ್ತವೆಯಾದರೂ, ಅದು ಯಾವ ದೇವರ ಜಾತ್ರೆ ಎಂಬುದು ಸ್ಪಷ್ಟವಾಗಿಲ್ಲ. ಇತಿಹಾಸಕಾರರ ವಿಶ್ಲೇಷಣೆಯ ಪ್ರಕಾರ, ಜನಸಾಮಾನ್ಯರು ಜಾತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶತ್ರುಗಳು ಅಥವಾ ದರೋಡೆಕೋರರು ಅಡ್ಡಿಪಡಿಸಿರಬಹುದು. ಆ ಸಮಯದಲ್ಲಿ ಜನರ ರಕ್ಷಣೆಗಾಗಿ ಹೋರಾಡಿ ವೀರಮರಣವನ್ನಪ್ಪಿದ ವೀರನ ಸ್ಮರಣಾರ್ಥ ಈ ವೀರಗಲ್ಲನ್ನು ಸ್ಥಾಪಿಸಲಾಗಿದೆ.&lt;/p&gt;&lt;p&gt;ಶಾಸನದಲ್ಲಿ ಆತ &lsquo;ಕಾದಿ ಸತ್ತ&rsquo; ಎಂದು ಉಲ್ಲೇಖಿಸಲಾಗಿದ್ದು, ಆತ ಕೈಲಾಸವಾಸಿಯಾದ ಚಿತ್ರವನ್ನೂ ಇಲ್ಲಿ ಕೆತ್ತಲಾಗಿದೆ. ನಗರೀಕರಣದ ನಡುವೆ ಪತ್ತೆಯಾಗಿರುವ ಈ ಶಾಸನವು ತುಮಕೂರು ಭಾಗದ ಅಂದಿನ ಸಾಮಾಜಿಕ ಭದ್ರತೆ ಮತ್ತು ಧಾರ್ಮಿಕ ಆಚರಣೆಗಳ ಮೇಲೆ ಹೊಸ ಬೆಳಕು ಚೆಲ್ಲಿದೆ ಎಂದು ಪ್ರೊ.ಎಂ. ಕೊಟ್ರೇಶ್ ತಿಳಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-14th-century-hero-stone-inscription-discovered-in-tumakuru-reveals-pre-vijayanagara-history-gdp/articleshow-slfqg1x"/>
        </item>
        <item>
            <title><![CDATA[Silent killers: ಪತ್ನಿಯ ಮೇಲೆ ಕಣ್ಣು, ಪತಿಗೆ ಎಳ್ಳುನೀರು: ಕಿವಿ ಕೇಳದ ಮಾತು ಬಾರದ ವ್ಯಕ್ತಿಗಳಿಂದಲೇ ಭೀಕರ ಕೊಲೆ]]></title>
            <link>https://kannada.asianetnews.com/crime/silent-killers-murder-by-deaf-and-dumb-people-in-kunigal/articleshow-u1i07ln</link>
            <guid isPermaLink="true">https://kannada.asianetnews.com/crime/silent-killers-murder-by-deaf-and-dumb-people-in-kunigal/articleshow-u1i07ln</guid>
            <pubDate>Thu, 09 Apr 2026 16:07:45 +0530</pubDate>
            <description><![CDATA[ನಂಜನಗೂಡಿನಲ್ಲಿ ನಾಪತ್ತೆಯಾಗಿದ್ದ ವಿಶೇಷ ಚೇತನ ವ್ಯಕ್ತಿಯ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ ಆಘಾತ ಕಾದಿತ್ತು. ಪತ್ನಿಯ ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ, ಮಾತು ಬಾರದ, ಕಿವಿ ಕೇಳದ ಆರೋಪಿಗಳೇ ಸಂಚು ರೂಪಿಸಿ ಆತನನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವುದು ತನಿಖೆಯಿಂದ ಬಯಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knk3fr0dwe53ke05sf73nfah,imgname-fotojet---2026-04-07t100333.622-1775536431117.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಮೌನ ಸಂಭಾಷಣೆಯಲ್ಲಿ ಅಡಗಿತ್ತು ಮೃತ್ಯು ಸಂಚು&lt;/strong&gt;&lt;/h2&gt;&lt;p&gt;ಮೈಸೂರು: ಕೊಲೆ ಮಾಡುವವರು ಮಾತನಾಡಿಕೊಂಡು ಕೊಲೆ ಮಾಡುವುದು ಸಾಮಾನ್ಯವಾದ ವಿಚಾರ ಆದರೆ ಮೈಸೂರು ಜಿಲ್ಲೆಯ ನಂಜನಗೂಡು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣ ಬೇಧಿಸಿದ ಪೊಲೀಸರೇ ಶಾಕ್ ಆಗಿದ್ದಾರೆ. ಹೌದು ಈ ಕೇಸ್&zwnj;ನಲ್ಲಿ ಆರೋಪಿಗಳಿಗೆ ಮಾತು ಬರಲ್ಲ ಕಿವಿಯೂ ಕೇಳಲ್ಲ ಆದರೂ ಸಹ ಓರ್ವನನ್ನು ಕೊಲೆ ಮಾಡಿ ಈಗ ಸಿಕ್ಕಿ ಹಾಕಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಪತ್ನಿಗಾಗಿ ಪತಿಯನ್ನೇ ಮುಗಿಸಿದ 'ಮೂಗ' ಘಾತಕರು&lt;/strong&gt;&lt;/h3&gt;&lt;p&gt;ಆಗಿದ್ದೇನು?: ಫೆ.15 ರಂದು ಮನೆಯಿಂದ ನಾಪತ್ತೆಯಾಗಿದ್ದ ಸ್ವಾಮಿ (32) ಎನ್ನುವ ವಿಶೇಷ ಚೇತನ ವ್ಯಕ್ತಿಯನ್ನು ಹುಡುಕುವ ನಿಟ್ಟಿನಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ಅಚ್ಚರಿಯ ಬೆಳವಣಿಗೆ ಬೆಳಕಿಗೆ ಬಂದಿದೆ. ಪ್ರಕರಣ ಬೆನ್ನತ್ತಿದ ಪೊಲೀಸರು ತನಿಖೆ ಆರಂಭಿಸಿ ನಾಪತ್ತೆಯಾಗಿದ್ದ ಸ್ವಾಮಿ ಉಪಯೋಗಿಸುತ್ತಿದ್ದ ದೂರವಾಣಿ ಸಂಖ್ಯೆ, ವಾಟ್ಸಾಪ್, ಸೇರಿದಂತೆ ಹಲವಾರು ಕೋನಗಳ ಮುಖಾಂತರ ತನಿಖೆ ಚುರುಕುಗೊಳಿಸಿದಾಗ ಕಾಣೆಯಾದ ವ್ಯಕ್ತಿಯ ಚಲನವಲನದ ಮೊಬೈಲ್ ನೆಟ್ವರ್ಕ್ ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿಯ ಭಾಗದಲ್ಲಿ ಅಂತ್ಯ ಆಗಿರುವುದು ಕಂಡು ಬಂದಿತ್ತು.&lt;/p&gt;&lt;h3&gt;&lt;strong&gt;ವಾಕ್ ಮತ್ತು ಶ್ರವಣ ಸಂಸ್ಥೆಯ ನೆರವಿನಿಂದ ಹಂತಕರ ಬೇಟೆಯಾಡಿದ ಪೊಲೀಸರು!&lt;/strong&gt;&lt;/h3&gt;&lt;p&gt;ಸ್ವಾಮಿ ಹಾಗೂ ಆತನ ಪತ್ನಿಯೂ ಸಹ ಮಾತುಬಾರದ ಮೂಕಿಯಾಗಿದ್ದು ಆಕೆಗೆ ಗಂಡನ ಸ್ನೇಹಿತ ಇಂದಿರಾನಗರದ ಗಂಗಾಧರ್ ಜೊತೆಯಲ್ಲಿ ವಿಡಿಯೋ ಕಾಲ್&zwnj;ನಲ್ಲಿ ಸ್ನೇಹ ಸಂಬಂಧ ಇತ್ತು ಎಂದು ಮೇಲ್ನೋಟಕ್ಕೆ ತಿಳಿದು ಬಂದಿತ್ತು. ಪೊಲೀಸರು ಈ ದಿಕ್ಕಿನಲ್ಲಿ ತನಿಖೆ ಆರಂಭಿಸಿದಾಗ ನಂಜನಗೂಡು ಮೂಲದ ಸ್ವಾಮಿಗೆ ಪಾರ್ಟಿ ಕೊಡಿಸುವುದಾಗಿ ಹನುಮಾಪುರದ ಶ್ರೀನಿವಾಸ, ಇಂದಿರಾನಗರದ ಗಂಗಾಧರ ಹಾಗೂ ದೇವರಾಜ್&zwnj; ಎಂಬುವರು ಫೆಬ್ರವರಿ 15ರಂದು ಇಂದಿರಾನಗರಕ್ಕೆ ಆತನನ್ನು ಕರೆಸಿಕೊಂಡಿದ್ದಾರೆ. ಬಳಿಕ ಆತನಿಗೆ ಪಾರ್ಟಿ ಕೊಡಲು ಹೊಸಹಳ್ಳಿ ತೋಟದ ಬಾವಿ ಬಳಿ ಕರೆಸಿ ಅತಿಯಾದ ಮದ್ಯ ಕುಡಿಸಿ ನಂತರ ಆತನನ್ನು ಕೊಲೆ ಮಾಡಿ ಬಾವಿಗೆ ಬಿಸಾಕಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಆರೋಪಿಗಳಾದ ಇಂದಿರಾನಗರದ ಗಂಗಾಧರ ಹಾಗೂ ಹನುಮಾಪುರದ ಶ್ರೀನಿವಾಸ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದಾಗ ಕೊಲೆ ಮಾಡಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ. ನಾಪತ್ತೆಯಾಗಿರುವ ದೇವರಾಜ್&zwnj; ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ 22 ದಿನದ ಹಿಂದಿನ ಶವವನ್ನು ಪೊಲೀಸರು ಹೊರ ತೆಗೆದಿದ್ದಾರೆ.&lt;/p&gt;&lt;p&gt;&lt;strong&gt;ಕೊಲೆಗಾರರಿಗೆ ಮಾತು ಬರಲ್ಲ ಕಿವಿ ಕೇಳಲ್ಲ&lt;/strong&gt;&lt;/p&gt;&lt;p&gt;ಈ ಕೊಲೆಯನ್ನು ಸಾಮಾನ್ಯ ವ್ಯಕ್ತಿಗಳು ಮಾಡಿದ್ದರೆ ಅದು ಬೇರೆ ಆಯಾಮದಲ್ಲಿ ತನಿಖೆ ಸಾಗುತ್ತಿತ್ತು. ಆದರೆ ಇಲ್ಲಿ ಎದುರಾದ ಸಮಸ್ಯೆಯೇ ಸ್ವಾಮಿ ಹೆಂಡತಿ ಲತಾ (ಹೆಸರು ಬದಲಾಯಿಸಲಾಗಿದೆ) ಹಾಗೂ ಇಬ್ಬರು ಆರೋಪಿಗಳಾದ ಗಂಗಾಧರ ಹಾಗೂ ಶ್ರೀನಿವಾಸ್&zwnj; ಅವರಿಗೆ ಮಾತು ಬರಲ್ಲ ಹಾಗೂ ಕಿವಿ ಕೇಳುವುದಿಲ್ಲ. ಆದರೂ ಸಹ ಗಂಗಾಧರ ಜೊತೆಗೆ ಮಾತು ಬಾರದ ಲತಾಗೆ ಪ್ರೇಮಾಂಕುರವಾಗಿತ್ತು. ಅವರ ಜೊತೆಗೆ ಆಕೆ ಪ್ರತಿ ದಿನ ಸಂಪರ್ಕದಲ್ಲಿದಳು ಎಂದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಈ ಪ್ರೇಮ ಪ್ರಕರಣವೇ ಈಗ ಸ್ವಾಮಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಈ ಸಂಬಂಧ ನಂಜನಗೂಡು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೇಸಿಗೆ ರಜೆಯಾಯ್ತು ಪೋಷಕರಿಗೆ ಸಜೆ: ಈಜಲು ಹೋಗಿದ್ದ ಬಾಲಕ ನೀರಲ್ಲಿ ಮುಳುಗಿ ಸಾವು&lt;/strong&gt;&lt;/p&gt;&lt;p&gt;ಈ ಪ್ರಕರಣದಲ್ಲಿ ಪೊಲೀಸರು ಮೈಸೂರಿನ ವಾಕ್ ಮತ್ತು ಶ್ರಾವಣ ಸಂಸ್ಥೆಯಿಂದ ಮಾತು ಬಾರದ ಕಿವಿ ಕೇಳದ ವ್ಯಕ್ತಿಗಳ ಸಂಭಾಷಣೆ ಬಗ್ಗೆ ಮಾಹಿತಿ ಪಡೆದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ವಾಮಿ ಹಾಗೂ ಸ್ವಾಮಿ ಪತಿ ಸವಿತಾಗೆ ಶ್ರೀನಿವಾಸ್ ಹಣಕಾಸು ಸಹಾಯ ಮಾಡುತ್ತಿದ್ದ. ಸ್ವಾಮಿಯನ್ನು ಕೊಲೆ ಮಾಡಿದ್ರೆ ಸವಿತಾ ಜೊತೆ ತಾನು ಮದುವೆ ಆಗಬಹುದು ಎಂದು ಯೋಜನೆ ರೂಪಿಸಿದ ಶ್ರೀನಿವಾಸ್ ಸ್ನೇಹಿತನ ಜೊತೆ ಸೇರಿ ಈ ಕೊಲೆ ಮಾಡಿದ್ದಾನೆ. ನಾಪತ್ತೆ ಪ್ರಕರಣ ಬೆನ್ನತ್ತಿದ ಪೊಲೀಸರಿಗೆ ಸವಿತಾ ಹಾಗೂ ಶ್ರೀನಿವಾಸ ನಡುವಿನ ವಿಡಿಯೋ ಕಾಲ್ ಸುಳಿವು ನೀಡಿತ್ತು. ಬಳಿಕ ಮೈಸೂರಿನ ವಾಕ್ ಮತ್ತು ಶ್ರಾವಣ ಸಂಸ್ಥೆಯಿಂದ ಮಾತು ಬಾರದ ಕಿವಿ ಕೇಳದ ವ್ಯಕ್ತಿಗಳ ಸಂಭಾಷಣೆ ಬಗ್ಗೆ ಮಾಹಿತಿ ಪಡೆದು ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೇರಳ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ ಭರವಸೆಗೆ ಕರ್ನಾಟಕದಲ್ಲಿ ರೈತರು ಪರಿಸವಾದಿಗಳ ತೀವ್ರ ಆಕ್ರೋಶ&lt;/strong&gt;&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/crime/silent-killers-murder-by-deaf-and-dumb-people-in-kunigal/articleshow-u1i07ln"/>
        </item>
        <item>
            <title><![CDATA[ದೇಶವನ್ನು ನಶೆ ಮುಕ್ತಗೊಳಿಸಲು ಕೇಂದ್ರ ಸರ್ಕಾರ ಪಣ: ಕೇಂದ್ರ ಸಚಿವ ವಿ.ಸೋಮಣ್ಣ]]></title>
            <link>https://kannada.asianetnews.com/karnataka-districts/v-somanna-drug-free-india-campaign-tumakuru-walkathon-gvd/articleshow-vt4b3pf</link>
            <guid isPermaLink="true">https://kannada.asianetnews.com/karnataka-districts/v-somanna-drug-free-india-campaign-tumakuru-walkathon-gvd/articleshow-vt4b3pf</guid>
            <pubDate>Sat, 25 Apr 2026 23:52:16 +0530</pubDate>
            <description><![CDATA[&lt;p&gt;ದೇಶವನ್ನು ನಶೆ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಕಲ್ಪ ಮಾಡಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k3bsw54jhm01y45dw647d2sg,imgname-v-somanna-9-1755964118161.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಏ.25):&lt;/strong&gt; ದೇಶವನ್ನು ನಶೆ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಕಲ್ಪ ಮಾಡಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಅಮಾನಿಕೆರೆಯ ಗಾಜಿನ ಮನೆವರೆಗೆ ರಾಜೀವ್&zwnj;ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್.ಬಿ.ಸಿ. ಅವರ ನೇತೃತ್ವದಲ್ಲಿ ರಾಜೀವ್&zwnj;ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಸಂಘ, ರಾಜೀವ್&zwnj;ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,&lt;/p&gt;&lt;p&gt;ದಿಶಾ ಬೋಧ ಫೌಂಡೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಭಾರತ ಶ್ರೇಷ್ಠ ಭಾರತ, ಯುವ ಶುದ್ಧಿ ಅಭಿಯಾನ, ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಹಾಗೂ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.&lt;/p&gt;&lt;p&gt;ರಾಷ್ಟ್ರ ಮತ್ತು ರಾಜ್ಯಗಳನ್ನು ಡ್ರಗ್ಸ್ ಮುಕ್ತಗೊಳಿಸಲು ಕೇಂದ್ರ ಸರ್ಕಾರ ಪಣ ತೊಟ್ಟಿದೆ. ಸದೃಢ ಭಾರತ ಕಟ್ಟುವುದು ಪ್ರಧಾನಿ ನರೇಂದ್ರ ಮೋದಿಯವರು ಸಂಕಲ್ಪವಾಗಿದೆ ಎಂದರು. ದೇಶದ ವ್ಯವಸ್ಥೆಯನ್ನು ಮತ್ತಷ್ಟು ಬಲಾಢ್ಯಗೊಳಿಸಲು ಮುಂದಿನ ಪೀಳಿಗೆ ಸಶಕ್ತರಾಗಬೇಕಿದೆ. ಮುಂದಿನ ದಿನಗಳಲ್ಲಿ ದೇಶದ ಸಮಗ್ರತೆಗೆ ನಶೆ ಮುಕ್ತ ಅಭಿಯಾನ ವಾಕಥಾನ್ ಸಹಕಾರಿಯಾಗಲಿದೆ ಎಂದರು.&lt;/p&gt;&lt;h2&gt;&lt;strong&gt;ಆರೋಗ್ಯವೂ ಅಷ್ಟೇ ಅವಶ್ಯಕತೆ&lt;/strong&gt;&lt;/h2&gt;&lt;p&gt;ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಪ್ರಸ್ತುತ ಶಿಕ್ಷಣ ಎಷ್ಟು ಅವಶ್ಯಕತೆ ಇದೆಯೋ ಆರೋಗ್ಯವೂ ಅಷ್ಟೇ ಅವಶ್ಯಕತೆ. ದೃಹಿಕವಾಗಿ ಸದೃಢವಾಗಿದ್ದರೆ ಅದನ್ನು ಆರೋಗ್ಯ ಎಂದು ಕರೆಯಲು ಸಾಧ್ಯವಿಲ್ಲ. ಹಾಗಾಗಿ ಮನುಷ್ಯ ಭೌತಿಕವಾಗಿ, ಸಾಮಾಜಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ಆರೋಗ್ಯವಂತನಾಗಿದ್ದಾನೆ ಎಂದು ಕರೆಯಬಹುದು ಎಂದರು.&lt;/p&gt;&lt;p&gt;ಅಧ್ಯಕ್ಷತೆ ವಹಿಸಿದ್ದ ಶಾಸಕ ಜ್ಯೋತಿಗಣೇಶ್ ಮಾತನಾಡಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ನಶೆ ಮುಕ್ತ ಭಾರತ, ಯುವ ಶುದ್ಧಿ ಅಭಿಯಾನ ವಾಕಥಾನ್ ಉತ್ತಮ ಕಾರ್ಯಕ್ರಮವಾಗಿದ್ದು, ಈ ಅಭಿಯಾನ ಯಶಸ್ವಿಯಾಗಲಿ ಎಂದರು.&lt;/p&gt;&lt;p&gt;ಶಾಸಕ ಡಾ. ರಂಗನಾಥ್ ಮಾತನಾಡಿ, ಯುವ ಜನತೆ ದುಶ್ಚಟಗಳಿಂದ ದೂರ ಉಳಿದು ಬದುಕು ಕಟ್ಟಿಕೊಳ್ಳಬೇಕು. ಬದುಕಿನ ಹಲವಾರು ಜಂಜಾಟಗಳ ಮಧ್ಯೆ ಯುವ ಜನತೆ ದುಶ್ಚಟಗಳ ದಾಸರಾಗುತ್ತಿದ್ದಾರೆ. ಇದರಿಂದ ಯುವಕರನ್ನು ಮುಕ್ತರಾಗಿಸುವ ನಿಟ್ಟಿನಲ್ಲಿ ರಾಜೀವ್&zwnj;ಗಾಂಧಿ ಆರೋಗ್ಯ ವಿವಿ ಹಮ್ಮಿಕೊಂಡಿರುವ ನಶೆ ಮುಕ್ತ ಭಾರತ ಅಭಿಯಾನ ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದರು.&lt;/p&gt;&lt;p&gt;ರಾಜೀವ್&zwnj;ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್.ಬಿ.ಸಿ. ಮಾತನಾಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ನಶೆ ಮುಕ್ತ ಭಾರತ ವಾಕಥಾನ್ ಬಿ.ಎಚ್. ರಸ್ತೆ ಮುಖೇನ ಸಾಗಿ ಬಿಜಿಎಸ್ ಸರ್ಕಲ್&zwnj;ನಿಂದ ಅಶೋಕ ರಸ್ತೆ, ಚರ್ಚ್ ಸರ್ಕಲ್ ಮೂಲಕ ಹಾದು ಗಾಜಿನ ಮನೆ ಮುಂಭಾಗ ಮುಕ್ತಾಯಗೊಂಡಿತು. ಕೋಟೆ ಆಂಜನೇಯಸ್ವಾಮಿ ವೃತ್ತ ಬಳಿ ನಶೆ ಮುಕ್ತ ಭಾರತ ನಿರ್ಮಾಣಕ್ಕೆ ಯುವ ಜನರಲ್ಲಿ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/v-somanna-drug-free-india-campaign-tumakuru-walkathon-gvd/articleshow-vt4b3pf"/>
        </item>
        <item>
            <title><![CDATA[ತುಮಕೂರು ರಥೋತ್ಸವದಲ್ಲಿ ಕಾಂಗ್ರೆಸ್​ ವಿರುದ್ಧ ಹರಕೆ ಸಲ್ಲಿಕೆ! ಬಾಳೆಹಣ್ಣಿನ ಮೇಲೆ ಹೀಗೊಂದು ಬರಹ]]></title>
            <link>https://kannada.asianetnews.com/astrology/we-will-teach-congress-protest-against-congress-at-tumkur-chariot-festival-suc/articleshow-wn03gv2</link>
            <guid isPermaLink="true">https://kannada.asianetnews.com/astrology/we-will-teach-congress-protest-against-congress-at-tumkur-chariot-festival-suc/articleshow-wn03gv2</guid>
            <pubDate>Wed, 22 Apr 2026 16:07:26 +0530</pubDate>
            <description><![CDATA[ಮಹಿಳಾ ಮೀಸಲಾತಿ ಕುರಿತ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಗ್ವಾದದ ನಡುವೆ, ತುಮಕೂರಿನ ರಥೋತ್ಸವದಲ್ಲಿ ವಿಶಿಷ್ಟ ಘಟನೆಯೊಂದು ನಡೆದಿದೆ. ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಾಳೆಹಣ್ಣಿನ ಮೇಲೆ ಸಂದೇಶ ಬರೆದು ರಥಕ್ಕೆ ಎಸೆಯಲಾಗಿದ್ದು, ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kptc6t6yma0arne2js8ex2g4,imgname-ratotsava-1776854198494.jpg" type="image/jpeg" height="390" width="690"/>
            <content:encoded><![CDATA[&lt;h3&gt;ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಿವಾದ ನಡೆಯುತ್ತಲೇ ಇದೆ. ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್​​ ಮತ್ತು ಇತರ ಪಕ್ಷಗಳ ವಿರುದ್ಧ ಬಿಜೆಪಿ ಕಿಡಿ ಕಾರುತ್ತಿದ್ದರೆ, ಇತ್ತ ಉಳಿದ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎನ್ನುತ್ತಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಇದಾಗಲೇ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.&lt;/h3&gt;&lt;h2&gt;&lt;strong&gt;ಕಾಂಗ್ರೆಸ್​ ವಿರುದ್ಧ ಆಕ್ರೋಶ&lt;/strong&gt;&lt;/h2&gt;&lt;p&gt;ಇದರ ನಡುವೆಯೇ ಮಹಿಳಾ ಮೀಸಲಾತಿಯನ್ನು ಜಾರಿ ಮಾಡಲು ಕೊಟ್ಟಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ತುಮಕೂರಿನ ಕೆಂಕೆರೆ ಚೆನ್ನಬಸವೇಶ್ವರ ಸ್ವಾಮಿ ರಥೋತ್ಸವ ನಡೆಯಿತು. ಈ ರಥೋತ್ಸವದಲ್ಲಿ ಜನರು ಬಾಳೆಹಣ್ಣಿನ ಮೇಲೆ ತಮ್ಮ ಇಷ್ಟಾರ್ಥಗಳನ್ನು ಬರೆದು ಅದನ್ನು ರಥಕ್ಕೆ ಎಸೆಯುತ್ತಾರೆ. ಹೀಗೆ ಮಾಡಿದರೆ ತಮ್ಮ ಕೋರಿಕೆ ಈಡೇರುತ್ತದೆ ಎನ್ನುವುದು ಭಕ್ತರ ನಂಬಿಕೆ. ಇಂಥ ರಥೋತ್ಸವ ಹಾಗೂ ಸಂಪ್ರದಾಯ ಕರ್ನಾಟಕದಲ್ಲಿ ಹಲವು ಊರುಗಳಲ್ಲಿ ಇದೆ.&lt;/p&gt;&lt;h2&gt;&lt;strong&gt;ಬಾಳೆಹಣ್ಣಿನ ಮೇಲೆ ಕೋರಿಕೆ&lt;/strong&gt;&lt;/h2&gt;&lt;p&gt;ಪ್ರತಿಬಾರಿಯೂ ಬಾಳೆಹಣ್ಣಿನ ಮೇಲೆ ಚಿತ್ರ ವಿಚಿತ್ರ ಕೋರಿಕೆ ಕೇಳುವ ಫೋಟೋ, ವಿಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ವೈರಲ್​ ಆಗಿರುವ ಬಾಳೆಹಣ್ಣಿನ ಮೇಲೆ ಕಾಂಗ್ರೆಸ್​ ವಿರುದ್ಧ ಬರೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್​ಗೆ ತಕ್ಕಪಾಠ ಕಲಿಸುತ್ತೇವೆ ಎಂದು ಬಾಳೆಹಣ್ಣಿನ ಮೇಲೆ ಬರೆದು ಅದನ್ನು ರಥಕ್ಕೆ ಎಸೆಯಲಾಗಿದೆ.&lt;/p&gt;&lt;p&gt;ಇದರ ಫೋಟೋ ಮತ್ತು ವಿಡಿಯೋಗಳು ಈಗ ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಟ್ಟಿನಲ್ಲಿ ದೇವರ ರಥೋತ್ಸವದಲ್ಲಿಯೂ ರಾಜಕೀಯ ಪ್ರವೇಶ ಮಾಡುತ್ತಿರುವುದಕ್ಕೆ ಹಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>tumakuru</category>
            <dc:creator>Suchethana D</dc:creator>
            <atom:link href="https://kannada.asianetnews.com/astrology/we-will-teach-congress-protest-against-congress-at-tumkur-chariot-festival-suc/articleshow-wn03gv2"/>
        </item>
        <item>
            <title><![CDATA[ಬಣ್ಣ ಬಣ್ಣದ ಬಲೂನ್‌ ಮಾರಿ ಬದುಕುತ್ತಿರುವವನ ಮಗಳಿಗೆ  623 ಅಂಕ! ಗ್ಯಾರೇಜ್‌ನಲ್ಲಿ ಕೆಲಸ ಮಾಡುವವನ ಮಗನಿಗೆ 98%!]]></title>
            <link>https://kannada.asianetnews.com/education/balloon-seller-daughter-secures-state-2nd-rank-in-sslc-2026-inspiring-success-story-from-tumakuru-gdp/articleshow-z20hhvi</link>
            <guid isPermaLink="true">https://kannada.asianetnews.com/education/balloon-seller-daughter-secures-state-2nd-rank-in-sslc-2026-inspiring-success-story-from-tumakuru-gdp/articleshow-z20hhvi</guid>
            <pubDate>Thu, 23 Apr 2026 15:40:26 +0530</pubDate>
            <description><![CDATA[ಮಧುಗಿರಿ ಪಟ್ಟಣದ ವಿದ್ಯಾರ್ಥಿನಿ ಹಿತಾಶ್ರೀ ಡಿ., ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಲೂನ್ ಮಾರಾಟ ಮಾಡಿ ಜೀವನ ಸಾಗಿಸುವ ತಂದೆಯ ಮಗಳಾದ ಇವರು, ಆರ್ಥಿಕ ಸಂಕಷ್ಟಗಳ ನಡುವೆಯೂ ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಿ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpwwtn3jetprypp25mqrzg5d,imgname-success-story-from-tumakuru-1776938734706.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025&ndash;26ನೇ ಶೈಕ್ಷಣಿಕ ಸಾಲಿನ ಎಸ್&zwnj;ಎಸ್&zwnj;ಎಲ್&zwnj;ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯಲ್ಲಿ ಹೆಮ್ಮೆ &amp;nbsp;ಪಡುವಂತಹ ಸಾಧನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯ ಕುಟುಂಬದಿಂದ ಬಂದಿದ್ದರೂ, ಅಪಾರ ಸಂಕಲ್ಪ ಮತ್ತು ಶ್ರಮದಿಂದ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿರುವ ವಿದ್ಯಾರ್ಥಿನಿಯ ಕಥೆ ಎಲ್ಲರ ಗಮನ ಸೆಳೆಯುತ್ತಿದೆ.&lt;/p&gt;&lt;p&gt;ಮಧುಗಿರಿ ಪಟ್ಟಣದ ಚಿರೆಕ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಹಿತಾಶ್ರೀ ಡಿ., ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ 625ರಲ್ಲಿ 623 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅವಳ ಈ ಸಾಧನೆ ಕೇವಲ ವೈಯಕ್ತಿಕ ಜಯವಲ್ಲ; ಬಡತನದ ನಡುವೆಯೂ ಶಿಕ್ಷಣದ ಮಹತ್ವವನ್ನು ಎತ್ತಿಹಿಡಿಯುವ ಪ್ರೇರಣಾದಾಯಕ ಉದಾಹರಣೆಯಾಗಿದೆ.&lt;/p&gt;&lt;h2&gt;ಆರ್ಥಿಕ ಸಂಕಷ್ಟಗಳ ನಡುವೆ ಗೆದ್ದ ಮಗಳು&lt;/h2&gt;&lt;p&gt;ಹಿತಾಶ್ರೀಯ ತಂದೆ ದಿನನಿತ್ಯ ಬಣ್ಣಬಣ್ಣದ ಬಲೂನ್&zwnj;ಗಳನ್ನು ಮಾರಾಟ ಮಾಡಿ ಕುಟುಂಬವನ್ನು ನಡೆಸುವ ಸಾಮಾನ್ಯ ವ್ಯಾಪಾರಿ. ಆರ್ಥಿಕ ಸಂಕಷ್ಟಗಳ ನಡುವೆಯೂ ಮಗಳ ವಿದ್ಯಾಭ್ಯಾಸಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರಮಿಸಿದ ಅವರ ಪರಿಶ್ರಮ ಇಂದು ಫಲ ತಂದಿದೆ. ಬಲೂನ್ ಮಾರಾಟದಿಂದ ಬಂದ ಸಣ್ಣ ಆದಾಯದಲ್ಲೇ ಮಗಳನ್ನು ಓದಿಸಿ ದೊಡ್ಡ ಸಾಧನೆ ಮಾಡಿಸಬೇಕು ಎಂಬ ಅವರ ಕನಸು ಈಗ ನನಸಾಗಿದೆ.&lt;/p&gt;&lt;p&gt;ಕಷ್ಟದ ಪರಿಸ್ಥಿತಿಗಳ ನಡುವೆಯೂ ಹಿತಾಶ್ರೀ ತನ್ನ ಓದಿನಲ್ಲಿ ನಿರಂತರ ಪರಿಶ್ರಮ ತೋರಿದ್ದು, ಸಮಯವನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಿದ್ದಾಳೆ. ದಿನನಿತ್ಯದ ಸವಾಲುಗಳನ್ನು ಎದುರಿಸುತ್ತಾ, ಗುರಿಯತ್ತ ಗಮನ ಹರಿಸಿದ ಅವಳ ದೃಢಸಂಕಲ್ಪವೇ ಇಂತಹ ಅಸಾಧಾರಣ ಫಲಿತಾಂಶಕ್ಕೆ ಕಾರಣವಾಗಿದೆ. ರಾಜ್ಯದ ಟಾಪ್ 28 ವಿದ್ಯಾರ್ಥಿಗಳ ಪೈಕಿ ಸ್ಥಾನ ಪಡೆದಿರುವುದು ಅವಳ ಪ್ರತಿಭೆಗೆ ಸಾಕ್ಷಿಯಾಗಿದೆ.&lt;/p&gt;&lt;h2&gt;ಅನೇಕರಿಗೆ ಸ್ಫೂರ್ತಿ&lt;/h2&gt;&lt;p&gt;ಈ ಸಾಧನೆಗೆ ಶಾಲೆಯ ಶಿಕ್ಷಕರು, ಕುಟುಂಬದ ಸದಸ್ಯರು ಹಾಗೂ ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ. &ldquo;ಬಣ್ಣದ ಬಲೂನ್ ಮಾರುವ ಮನೆಯಲ್ಲೂ ಜ್ಞಾನದ ಬೆಳಕು ಹಬ್ಬಬಹುದು&rdquo; ಎಂಬುದನ್ನು ಹಿತಾಶ್ರೀ ತನ್ನ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾಳೆ. ಹಿತಾಶ್ರೀಯ ಸಾಧನೆ ಅನೇಕ ಬಡ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವಂತಿದ್ದು, ಪರಿಶ್ರಮ ಮತ್ತು ದೃಢ ನಿಶ್ಚಯ ಇದ್ದರೆ ಯಾವುದೇ ಅಡೆತಡೆಗಳು ಗುರಿಯನ್ನು ತಲುಪುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನೀಡುತ್ತದೆ.&lt;/p&gt;&lt;h2&gt;ಬೈಕ್ ಗ್ಯಾರೇಜ್&zwnj;ನಲ್ಲಿ ಮೆಕ್ಯಾನಿಕ್ ಮಗನ ಸಾಧನೆ&lt;/h2&gt;&lt;p&gt;ಹಾವೇರಿ ಜಿಲ್ಲೆಯಲ್ಲೊಂದು ಪ್ರೇರಣಾದಾಯಕ ಸಾಧನೆಯ ಕಥೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಠಿಣ ಪರಿಸ್ಥಿತಿಗಳ ನಡುವೆಯೂ ಪರಿಶ್ರಮದಿಂದ ಶ್ರೇಷ್ಠ ಫಲಿತಾಂಶ ಸಾಧಿಸಿರುವ ವಿದ್ಯಾರ್ಥಿಯೊಬ್ಬನ ಕಥೆ ಹಲವರಿಗೆ ಸ್ಪೂರ್ತಿಯಾಗಿದೆ.&lt;/p&gt;&lt;p&gt;ಹಾವೇರಿ ತಾಲೂಕು ನೆಗಳೂರು ಗ್ರಾಮದ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ಭರತ್ ಬಸವರಾಜ ಹಿರೇಮಠ ಅವರು ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ 98 ಶೇಕಡಾ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಕಡಿಮೆ ಸೌಲಭ್ಯಗಳ ನಡುವೆಯೂ ಉನ್ನತ ಗುರಿಯನ್ನು ಸಾಧಿಸಿರುವ ಭರತ್ ಅವರ ಸಾಧನೆಗೆ ಶಿಕ್ಷಕರು, ಗ್ರಾಮಸ್ಥರು ಮತ್ತು ಬಂಧು-ಬಳಗದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;&lt;p&gt;ಭರತ್ ಅವರ ತಂದೆ ಬೈಕ್ ಗ್ಯಾರೇಜ್&zwnj;ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಮನೆಮಠಗಳಲ್ಲಿ ಅಡುಗೆ ಕೆಲಸ ಮಾಡಿ ಕುಟುಂಬವನ್ನು ನಡೆಸುತ್ತಿದ್ದಾರೆ. ಇಂತಹ ಆರ್ಥಿಕ ಸಂಕಷ್ಟಗಳ ನಡುವೆಯೂ ಮಗನ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಬರದಂತೆ ಪೋಷಕರು ಶ್ರಮಿಸಿದ್ದು, ಇಂದು ಅದರ ಫಲವಾಗಿ ಭರತ್ ಅತ್ಯುತ್ತಮ ಅಂಕಗಳನ್ನು ಗಳಿಸಿದ್ದಾರೆ.&lt;/p&gt;&lt;p&gt;ಈ ಬಗ್ಗೆ ಮಾತನಾಡಿದ ಭರತ್, &ldquo;ನನ್ನ ತಂದೆ ಗ್ಯಾರೇಜ್&zwnj;ನಲ್ಲಿ ಮೆಕ್ಯಾನಿಕ್ ಆಗಿ ದುಡಿಯುತ್ತಾರೆ. ತಾಯಿ ಅಡುಗೆ ಕೆಲಸ ಮಾಡಿ ನನ್ನನ್ನು ಓದಿಸಿದ್ದಾರೆ. ಅವರ ಪರಿಶ್ರಮವೇ ನನಗೆ ಪ್ರೇರಣೆ. ನಾನು 98% ಅಂಕಗಳನ್ನು ಪಡೆದಿದ್ದೇನೆ. ಇನ್ನೂ ಹೆಚ್ಚು ಅಂಕಗಳು ಬರಬೇಕೆಂದು ನಿರೀಕ್ಷಿಸಿದ್ದೆ. ಆದ್ದರಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದಾಗಿ ಯೋಚಿಸುತ್ತಿದ್ದೇನೆ&rdquo; ಎಂದು ಹೇಳಿದ್ದಾರೆ.&lt;/p&gt;&lt;p&gt;ಮುಂದಿನ ವಿದ್ಯಾಭ್ಯಾಸದ ಬಗ್ಗೆ ಮಾತನಾಡಿದ ಅವರು, &ldquo;ನನಗೆ ವೈದ್ಯರಾಗುವ ಅಥವಾ ಉದ್ಯಮಿಯಾಗುವ ಕನಸಿದೆ. ಆದರೆ ವಿಜ್ಞಾನ ವಿಭಾಗಕ್ಕೆ ಸೇರ್ಪಡೆಯಾಗಲು ಅಗತ್ಯವಿರುವ ಶುಲ್ಕ ಕಟ್ಟಲು ನಮ್ಮಲ್ಲಿ ಹಣದ ಕೊರತೆ ಇದೆ. ಆದರೂ ನಾನು ಪಡೆದ ಅಂಕಗಳ ಆಧಾರದ ಮೇಲೆ ಮುಂದಿನ ಅವಕಾಶಗಳನ್ನು ಹುಡುಕಲು ಪ್ರಯತ್ನಿಸುತ್ತೇನೆ&rdquo; ಎಂದು ತಮ್ಮ ಸಂಕಲ್ಪವನ್ನು ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಭರತ್ ಅವರ ಸಾಧನೆ, ಆರ್ಥಿಕ ಅಡಚಣೆಗಳು ಇದ್ದರೂ ದಿಟ್ಟ ಮನಸ್ಸು ಮತ್ತು ಪರಿಶ್ರಮದಿಂದ ದೊಡ್ಡ ಗುರಿಗಳನ್ನು ಸಾಧಿಸಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಿಯಾದ ಪ್ರೋತ್ಸಾಹ ಮತ್ತು ಸಹಾಯ ದೊರೆತರೆ ಅವರು ಇನ್ನಷ್ಟು ಎತ್ತರಗಳನ್ನು ಮುಟ್ಟುವುದು ಖಚಿತ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/education/balloon-seller-daughter-secures-state-2nd-rank-in-sslc-2026-inspiring-success-story-from-tumakuru-gdp/articleshow-z20hhvi"/>
        </item>
    </channel>
</rss>
