<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 21:12:29 +0530</lastBuildDate>
        <atom:link href="https://kannada.asianetnews.com/rss/tumakuru" rel="self" type="application/rss+xml"/>
        <item>
            <title><![CDATA[ಕರ್ನಾಟಕಕ್ಕೆ ವಂದೇ ಭಾರತ್ ಸ್ಲೀಪರ್, ಬುಲೆಟ್ ಟ್ರೈನ್: ಹೈದರಾಬಾದ್‌ಗೆ ಕೇವಲ 2 ಗಂಟೆ, ಚೆನ್ನೈಗೆ 75 ನಿಮಿಷ ಅಷ್ಟೇ!]]></title>
            <link>https://kannada.asianetnews.com/gallery/state/south-india-bullet-train-network-may-cut-bengaluru-chennai-travel-to-75-minutes-gdp-08zx2xc</link>
            <guid isPermaLink="true">https://kannada.asianetnews.com/gallery/state/south-india-bullet-train-network-may-cut-bengaluru-chennai-travel-to-75-minutes-gdp-08zx2xc</guid>
            <pubDate>Mon, 18 May 2026 16:41:16 +0530</pubDate>
            <description><![CDATA[&lt;p&gt;ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಲಿದೆ. &amp;nbsp;ಬೆಂಗಳೂರಿನಿಂದ ಹೈದರಾಬಾದ್ ಮತ್ತು ಚೆನ್ನೈಗೆ ಬುಲೆಟ್ ಟ್ರೈನ್ ಕಾರಿಡಾರ್&zwnj;ಗಳನ್ನು ಘೋಷಿಸಲಾಗಿದ್ದು, ಇದು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಮಂಗಳೂರಿಗೂ ವಂದೇ ಭಾರತ್ ರೈಲು ಆರಂಭಿಸಲು ಯೋಜಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krx9mm2s1sz6d5c4eprq7zrj,imgname-karnataka-railway-project--7--1779099652185.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಲಿದೆ. &amp;nbsp;ಬೆಂಗಳೂರಿನಿಂದ ಹೈದರಾಬಾದ್ ಮತ್ತು ಚೆನ್ನೈಗೆ ಬುಲೆಟ್ ಟ್ರೈನ್ ಕಾರಿಡಾರ್&zwnj;ಗಳನ್ನು ಘೋಷಿಸಲಾಗಿದ್ದು, ಇದು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಮಂಗಳೂರಿಗೂ ವಂದೇ ಭಾರತ್ ರೈಲು ಆರಂಭಿಸಲು ಯೋಜಿಸಲಾಗಿದೆ.&lt;/p&gt;&lt;img&gt;&lt;p&gt;ಬೆಂಗಳೂರು: ಬೆಂಗಳೂರು- ಮುಂಬೈ ನಡುವೆ ನೂತನ ವಂದೇ ಭಾರತ್ ಸ್ಲೀಪರ್ ರಾತ್ರಿ ರೈಲನ್ನು ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ. ಬೆಂಗಳೂರು ಎಸ್ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಡುವೆ ನೂತನ ದ್ವಿಸಾಪ್ತಾಹಿಕ ರೈಲಿಗೆ ಭಾನುವಾರ ವರ್ಚುವಲ್&zwnj; ವಿಧಾನದ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.&lt;/p&gt;&lt;p&gt;ದಕ್ಷಿಣ ಮತ್ತು ಉತ್ತರ ಕರ್ನಾಟಕ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ಈ ರೈಲು ಸಂಚಾರದ ಮೂಲಕ ಈಡೇರಿಸಿದ್ದೇವೆ. ಜನರ ಅಪೇಕ್ಷೆಯಂತೆ ಬೆಂಗಳೂರಿನಿಂದ ಮುಂಬೈಗೆ ಶೀಘ್ರ ವಂದೇ ಭಾರತ್ ರೈಲನ್ನೂ ಒದಗಿಸಲಾಗುವುದು. ಇದು ಕರ್ನಾಟಕಕ್ಕೆ ಅನೇಕ ಸಾಧ್ಯತೆಗಳನ್ನು ತೆರೆಯಲಿದೆ ಎಂದು ಹೇಳಿದರು.&lt;/p&gt;&lt;img&gt;&lt;p&gt;ಬೆಂಗಳೂರನ್ನು ಕರಾವಳಿ ಕರ್ನಾಟಕ ಮೂಲಕ ಮಡಗಾಂವ್&zwnj;ವರೆಗೆ ಸಂಪರ್ಕಿಸುವ ವಂದೇ ಭಾರತ್ ರೈಲು ಸಂಚಾರವನ್ನು ಶೀಘ್ರ ಆರಂಭಿಸಲು ಯೋಜಿಸಲಾಗಿದೆ. ಪ್ರಸ್ತುತ ಪರೀಕ್ಷಾ ಹಂತದಲ್ಲಿದ್ದು, ಘಾಟ್ ಪ್ರದೇಶದಲ್ಲಿ ವಿಶೇಷ ಬ್ರೇಕಿಂಗ್ ಸಿಸ್ಟಮ್ ಅಳವಡಿಸುವ ಕೆಲಸ ನಡೆಯುತ್ತಿದೆ ಎಂದು ಅಶ್ವಿನಿ ವೈಷ್ಣವ್&zwnj; ತಿಳಿಸಿದರು.&lt;/p&gt;&lt;img&gt;&lt;p&gt;ಬೆಂಗಳೂರಿನಿಂದ ಹೈದರಾಬಾದ್ ಹಾಗೂ ಚೆನ್ನೈಗೆ ನೂತನ ಬುಲೆಟ್ ಟ್ರೈನ್ ಕಾರಿಡಾರ್ ಯೋಜನೆಯನ್ನು ಕಳೆದ ಬಜೆಟ್&zwnj;ನಲ್ಲಿ ಘೋಷಣೆ ಮಾಡಲಾಗಿದೆ. ಇದು ಸಾಕಾರವಾದರೆ ಬೆಂಗಳೂರಿನಿಂದ ಹೈದರಾಬಾದ್&zwnj;ಗೆ ಕೇವಲ 2 ಗಂಟೆ ಅವಧಿಯಲ್ಲಿ ಹಾಗೂ ಬೆಂಗಳೂರಿನಿಂದ ಚೆನ್ನೈಗೆ 73 ನಿಮಿಷಗಳಲ್ಲಿ ಸಂಚಾರ ಮಾಡಬಹುದು. ದೇಶದಲ್ಲಿ ಒಟ್ಟು 7 ಸಾವಿರ ಕಿಮೀ ಬುಲೆಟ್ ಟ್ರೈನ್ ಯೋಜನೆಯ ಗುರಿ ಹೊಂದಲಾಗಿದ್ದು, ಅದರಲ್ಲಿ ಈವರೆಗೆ 4000 ಕಿಮೀ ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್&zwnj; ತಿಳಿಸಿದರು.&lt;/p&gt;&lt;img&gt;&lt;p&gt;ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ದಾವಣಗೆರೆ ಮಾರ್ಗವಾಗಿ ಮುಂಬೈ- ಬೆಂಗಳೂರು ನಡುವೆ ಹೈಸ್ಪೀಡ್ ರೈಲು/ ಬುಲೆಟ್ ಟ್ರೈನ್ ಕಾರಿಡಾರ್ ನಿರ್ಮಿಸುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಆನ್&zwnj;ಲೈನ್&zwnj; ಮೂಲಕ ಪಾಲ್ಗೊಂಡು ಮಾತನಾಡಿದ ಅ&zwj;ವರು, ಉತ್ತರ ಕರ್ನಾಟಕಕ್ಕೆ ಕ್ಷಿಪ್ರ ಸಂಪರ್ಕ ಕಲ್ಪಿಸುವುದರಿಂದ ಉದ್ಯೋಗ, ಉದ್ಯಮ, ಹೂಡಿಕೆ ಮತ್ತು ಅವಕಾಶಗಳ ವಿಷಯದಲ್ಲಿ ಅತ್ಯಂತ ಮಹತ್ವದ ಬದಲಾವಣೆ ಸಾಧ್ಯವಾಗಲಿದೆ. ರಾಜ್ಯದ ಬೆಳವಣಿಗೆಯ ಇತಿಹಾಸದಲ್ಲಿ ಉತ್ತರ ಕರ್ನಾಟಕವು ತನ್ನ ಅರ್ಹ ಪಾಲನ್ನು ಪಡೆಯಲೇಬೇಕಿದೆ. ಕರ್ನಾಟಕವು 1 ಟ್ರಿಲಿಯನ್ ಆರ್ಥಿಕತೆಯ ಗುರಿ ಸಾಧಿಸಬೇಕಾದರೆ ಉತ್ತರ ಮತ್ತು ಮಧ್ಯ ಕರ್ನಾಟಕವನ್ನು ಹಿಂದೆ ಬಿಡಲು ಸಾಧ್ಯವಿಲ್ಲ. ಆದ್ದರಿಂದ ಕ್ಷಿಪ್ರ ಸಂಚಾರ ವ್ಯವಸ್ಥೆಗಳನ್ನು ಕಲ್ಪಿಸಬೇಕಿದೆ ಎಂದು ಅವರು ಪ್ರತಿಪಾದಿಸಿದರು.&lt;/p&gt;&lt;img&gt;&lt;p&gt;ದಕ್ಷಿಣ ಭಾರತದ ಮೊದಲ ಬುಲೆಟ್&zwnj; ರೈಲು ಜಾಲದ ಅಭಿವೃದ್ಧಿಯತ್ತ ಮಹತ್ವದ ಹೆಜ್ಜೆಯಾಗಿ, ಬೆಂಗಳೂರನ್ನು ಹೈದರಾಬಾದ್ ಮತ್ತು ಚೆನ್ನೈ ನಗರಗಳೊಂದಿಗೆ ಸಂಪರ್ಕಿಸುವ ಪ್ರಸ್ತಾವಿತ ಹೈ-ಸ್ಪೀಡ್ ರೈಲು ಕಾರಿಡಾರ್&zwnj;ಗಳಿಗೆ ಕರ್ನಾಟಕ ಸರ್ಕಾರ ಆಡಳಿತಾತ್ಮಕ ಅನುಮೋದನೆ ಕೂಡ ನೀಡಿದೆ. ಈ ಮಹತ್ವಾಕಾಂಕ್ಷಿ ಯೋಜನೆಗಳು ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೈಗಾರಿಕಾ ವಿಸ್ತರಣೆ, ರಿಯಲ್ ಎಸ್ಟೇಟ್ ಅಭಿವೃದ್ಧಿ ಹಾಗೂ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ, ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಪ್ರಸ್ತಾವಿತ 607 ಕಿ.ಮೀ ಉದ್ದದ ಹೈದರಾಬಾದ್&ndash;ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳನ್ನು ಸಂಪರ್ಕಿಸಲಿದೆ. ಈ ಮಾರ್ಗದಲ್ಲಿ ಸುಮಾರು 101 ಕಿ.ಮೀ ಭಾಗ ಕರ್ನಾಟಕದ ಮೂಲಕ ಹಾದುಹೋಗಲಿದ್ದು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಪ್ರದೇಶಗಳನ್ನು ಒಳಗೊಂಡಿದೆ.&lt;/p&gt;&lt;p&gt;ಪ್ರಸ್ತುತ, ನೈಋತ್ಯ ರೈಲ್ವೆ ವಲಯದ ಅಡಿಯಲ್ಲಿ ಸಂಚರಿಸುವ ಎಕ್ಸ್&zwnj;ಪ್ರೆಸ್ ರೈಲುಗಳು ಹೈದರಾಬಾದ್&zwnj;ನಿಂದ ಬೆಂಗಳೂರಿಗೆ ತಲುಪಲು 8ರಿಂದ 12 ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಬುಲೆಟ್ ರೈಲು ಸೇವೆ ಪ್ರಾರಂಭವಾದ ಬಳಿಕ ಈ ಪ್ರಯಾಣ ಸಮಯವು ಸುಮಾರು 2 ಗಂಟೆ 10 ನಿಮಿಷಗಳಿಗೆ ಇಳಿಯುವ ಸಾಧ್ಯತೆ ಇದೆ.&lt;/p&gt;&lt;p&gt;ಈ ಕಾರಿಡಾರ್&zwnj;ನಲ್ಲಿ ಹೊಸಕೋಟೆ ತಾಲ್ಲೂಕಿನ ಕೋಡಿಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಮತ್ತು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿಲ್ದಾಣಗಳನ್ನು ನಿರ್ಮಿಸುವ ಯೋಜನೆ ಇದೆ. ನಿರಂತರ ವೇಗದ ಸಂಚಾರಕ್ಕೆ ಅನುಕೂಲವಾಗುವಂತೆ, ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲು ಮಾರ್ಗವನ್ನು ನಿರ್ಮಿಸುವಂತೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ.&lt;/p&gt;&lt;img&gt;&lt;p&gt;ಎರಡನೇ ಪ್ರಸ್ತಾವಿತ ಕಾರಿಡಾರ್ ಮೈಸೂರು, ಬೆಂಗಳೂರು ಮತ್ತು ಚೆನ್ನೈ ನಗರಗಳನ್ನು ಸಂಪರ್ಕಿಸುವ 435ರಿಂದ 463 ಕಿ.ಮೀ ಉದ್ದದ ಹೈಸ್ಪೀಡ್ ರೈಲು ಜಾಲವಾಗಿರಲಿದೆ. ಈ ಮಾರ್ಗದಲ್ಲಿ ಚೆನ್ನೈ&ndash;ಬೆಂಗಳೂರು ವಿಭಾಗವು ಸುಮಾರು 306 ಮೈಲುಗಳಷ್ಟು ಉದ್ದವಾಗಿರಲಿದೆ. ಪ್ರಸ್ತುತ ಬೆಂಗಳೂರು&ndash;ಚೆನ್ನೈ ನಡುವಿನ ಪ್ರಯಾಣವು 5ರಿಂದ 7 ಗಂಟೆಗಳವರೆಗೆ ತೆಗೆದುಕೊಳ್ಳುತ್ತಿದ್ದು, ಹೈಸ್ಪೀಡ್ ರೈಲು ಸೇವೆ ಪ್ರಾರಂಭವಾದ ನಂತರ ಈ ಸಮಯವು ಸುಮಾರು 1 ಗಂಟೆ 15 ನಿಮಿಷಗಳಿಗೆ ಇಳಿಯುವ ನಿರೀಕ್ಷೆಯಿದೆ. ಈ ಕಾರಿಡಾರ್&zwnj;ನಲ್ಲಿನ ಪ್ರಮುಖ ನಿಲ್ದಾಣಗಳಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್, ಹೊಸಕೋಟೆಯ ಕೋಡಿಹಳ್ಳಿ, ಬೆಂಗಳೂರಿನ ವೈಟ್&zwnj;ಫೀಲ್ಡ್ ಮತ್ತು ಬೈಯಪ್ಪನಹಳ್ಳಿ ಸೇರಿವೆ. ಹೈದರಾಬಾದ್ ಮತ್ತು ಚೆನ್ನೈ ಬುಲೆಟ್ ರೈಲು ಮಾರ್ಗಗಳ ಸಂಧಿ ಬಿಂದುವಾಗಿರುವುದರಿಂದ ಕೋಡಿಹಳ್ಳಿ ಪ್ರಮುಖ ಇಂಟರ್&zwnj;ಚೇಂಜ್ ಕೇಂದ್ರವಾಗಿ ಅಭಿವೃದ್ಧಿಯಾಗುವ ಸಾಧ್ಯತೆ ಇದೆ. ಇಲ್ಲಿ ಡಿಪೋ ಹಾಗೂ ನಿರ್ವಹಣಾ ಸೌಲಭ್ಯಗಳನ್ನು ಸ್ಥಾಪಿಸುವ ಯೋಜನೆಯೂ ಇದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/south-india-bullet-train-network-may-cut-bengaluru-chennai-travel-to-75-minutes-gdp-08zx2xc"/>
        </item>
        <item>
            <title><![CDATA[Pavagada Venkataramanappa passes away: ಬೆಳ್ಳಬೆಳಗ್ಗೆ ಪಾವಗಡ ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ]]></title>
            <link>https://kannada.asianetnews.com/state/former-karnataka-minister-venkataramanappa-passes-away-after-heart-attack-in-bengaluru-hospital/articleshow-2rvqu4g</link>
            <guid isPermaLink="true">https://kannada.asianetnews.com/state/former-karnataka-minister-venkataramanappa-passes-away-after-heart-attack-in-bengaluru-hospital/articleshow-2rvqu4g</guid>
            <pubDate>Fri, 29 May 2026 07:44:27 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ಅಗಲಿಕೆಯಿಂದ, ಅವರ ಪುತ್ರ ಹಾಗೂ ಹಾಲಿ ಶಾಸಕ ಎಚ್&zwnj;.ವಿ ವೆಂಕಟೇಶ್&zwnj; ಅವರಿಗೆ ಪಿತೃ ವಿಯೋಗ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksrqqaqr2vbz79w6zc1scjmm,imgname-----------------------2026-05-29t072100.550-1780020390648.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ.29):&lt;/strong&gt; ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ (Fortis Hospital) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಹೃದಯಾಘಾತ(Heart attack)ದಿಂದ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ; ಪಾವಗಡ ರಾಜಕೀಯದ ಪ್ರಭಾವಿ ನಾಯಕ&lt;/h2&gt;&lt;p&gt;ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಹಾಗೂ ಜನಪರ ರಾಜಕಾರಣದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಅವರು, ತುಮಕೂರು ಜಿಲ್ಲೆ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದರು. ಅವರ ಅಗಲಿಕೆಯಿಂದ ಪಾವಗಡ ಜನರಿಗೆ ಆಘಾತವುಂಟು ಮಾಡಿದೆ.&lt;/p&gt;&lt;h3&gt;ಶಾಸಕ ಎಚ್&zwnj;.ವಿ ವೆಂಕಟೇಶ್&zwnj;ಗೆ ಪಿತೃ ವಿಯೋಗ&lt;/h3&gt;&lt;p&gt;ಮಾಜಿ ಸಚಿವರ ನಿಧನದಿಂದ ಪಾವಗಡ ಶಾಸಕ ಎಚ್&zwnj;.ವಿ ವೆಂಕಟೇಶ್ ಅವರಿಗೆ ಪಿತೃ ವಿಯೋಗ ಉಂಟಾಗಿದೆ. ರಾಜಕೀಯ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೆಂಕಟರಮಣಪ್ಪ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ. ಹಲವು ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೊಬ್ಬ ಹಿರಿಯ ನಾಯಕರನ್ನು ಕಳೆದುಕೊಂಡಿದೆ.&lt;/p&gt;]]></content:encoded>
            <category>tumakuru</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/former-karnataka-minister-venkataramanappa-passes-away-after-heart-attack-in-bengaluru-hospital/articleshow-2rvqu4g"/>
        </item>
        <item>
            <title><![CDATA[ಬೆಂಗಳೂರು ಮುಂಬೈ ನಡುವೆ ಹೊಸ ದ್ವಿಸಾಪ್ತಾಹಿಕ ಎಕ್ಸಪ್ರೆಸ್‌ ರೈಲು ಆರಂಭ, ಸಚಿವ ಜೋಶಿ ಚಾಲನೆ, ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</link>
            <guid isPermaLink="true">https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</guid>
            <pubDate>Sun, 17 May 2026 20:29:20 +0530</pubDate>
            <description><![CDATA[ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಹೊಸ ದ್ವಿಸಪ್ತಾಹಿಕ ವಿಶೇಷ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸಲು ಹೆಚ್ಚು ಅನುಕೂಲಕರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6zk5wx9t8zxpzhr580ac2,imgname-pralhad-joshi-flags-off-train-1779029757116.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಲ್&zwnj;, ಮುಂಬೈ ನಡುವೆ ಹುಬ್ಬಳ್ಳಿ ಮುಖಾಂತರ ಸಂಚರಿಸುವ ನೂತನ ವಿಶೇಷ ರೈಲಿಗೆ (06557) ಮೇ 17ರಂದು ಸಂಜೆ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿದರು.&lt;/p&gt;&lt;h2&gt;ಯಾವ ಊರೆಲ್ಲ ಹಾದು ಹೋಗಲಿದೆ?&lt;/h2&gt;&lt;p&gt;ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚರಿಸುವಂತೆ ಜೋಶಿ ಮನವಿ ಮೇರೆಗೆ ಈ ರೈಲಿಗೆ ಅನುಮೋದನೆ ನೀಡಲಾಗಿತ್ತು. ಈ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ರೈಲು ಮಾರ್ಗದ (16553/16554) ಮೇ 23ರಿಂದ ಬೆಂಗಳೂರು ಮತ್ತು ಮೇ 24ರಿಂದ ಮುಂಬೈನಿಂದ ಪ್ರಾರಂಭವಾಗಲಿದೆ.&lt;/p&gt;&lt;h2&gt;ಯಾವಾಗ ಎಲ್ಲಿಂದ ಹೊರಡಲಿದೆ?&lt;/h2&gt;&lt;p&gt;ಪ್ರತಿ ಶನಿವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಪ್ರತಿ ಭಾನುವಾರ ಮತ್ತು ಬುಧವಾರ ಮುಂಬೈನಿಂದ ರೈಲು ಸಂಚರಿಸಲಿದೆ. ಈ ಹೊಸ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಉದ್ಯೋಗ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕಾಗಿ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸುವವರಿಗೆ ವರದಾನವಾಗಲಿದೆ.&lt;/p&gt;&lt;p&gt;ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರಧಾನಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯವನ್ನು ಬಲಪಡಿಸಲು ನಮ್ಮಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯದ ಪ್ರತಿಯೊಂದು ಯೋಜನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ,ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ ಮುಖಾಂತರ ಸಂಪರ್ಕದ ಹೊಸ ಕ್ರಾಂತಿ!&amp;nbsp;ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿಯ ಮೂಲಕ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ಪ್ರಾರಂಭ.ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್, ಮುಂಬೈ ನಡುವೆ&hellip; pic.twitter.com/NddQEBPea4&lt;/p&gt;&lt;p&gt;&mdash; Pralhad Joshi (@JoshiPralhad) May 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8"/>
        </item>
        <item>
            <title><![CDATA[4.50 ಲಕ್ಷದ ಸಾಲಕ್ಕೆ  6.14 ಎಕರೆ ಜಮೀನು ಹರಾಜು ಹಾಕಿದ ಬ್ಯಾಂಕ್? ರೈತ ಸಂಘದ ಆರೋಪ]]></title>
            <link>https://kannada.asianetnews.com/karnataka-districts/tumakuru-turuvekere-farmers-association-alleges-bank-auctioned-6-acres-of-land-for-a-loan-of-rs-4-lakh-50-thousand-mrq/articleshow-7aps7zb</link>
            <guid isPermaLink="true">https://kannada.asianetnews.com/karnataka-districts/tumakuru-turuvekere-farmers-association-alleges-bank-auctioned-6-acres-of-land-for-a-loan-of-rs-4-lakh-50-thousand-mrq/articleshow-7aps7zb</guid>
            <pubDate>Fri, 15 May 2026 10:18:35 +0530</pubDate>
            <description><![CDATA[&lt;p&gt;ಬ್ಯಾಂಕ್, ರಿಯಲ್ ಎಸ್ಟೇಟ್&zwnj;ನವರೊಂದಿಗೆ ಶಾಮೀಲಾಗಿ ರೈತನ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಅತಿ ಕಡಿಮೆ ಬೆಲೆಗೆ ಹರಾಜು ಹಾಕಿದೆ ಎಂದು ರೈತ ಸಂಘ ಆರೋಪಿಸಿದೆ. ಈ ಹಿಂದೆ ನೀಡಿದ ಭರವಸೆಯಂತೆ ರೈತನಿಗೆ ಭೂಮಿ ಹಿಂತಿರುಗಿಸದಿದ್ದರೆ, ಬ್ಯಾಂಕ್ ವಿರುದ್ಧ ಅಹೋರಾತ್ರಿ ಚಳುವಳಿ ನಡೆಸುವುದಾಗಿ ಸಂಘದ ಅಧ್ಯಕ್ಷರು ಎಚ್ಚರಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ke8xzaqp5dcrwds7ktg19xyy,imgname-d64fd18c-18d0-4c57-9733-98686904b57d-1767678913270.jpg" type="image/jpeg" height="390" width="690"/>
            <content:encoded><![CDATA[&lt;p&gt;ತುರುವೇಕೆರೆ: ಇಲ್ಲಿಯ ಕರ್ಣಾಟಕ ಬ್ಯಾಂಕ್ ರಿಯಲ್ ಎಸ್ಟೇಟ್ ನವರೊಂದಿಗೆ ಶಾಮೀಲಾಗಿ ಕೋಟ್ಯಂತರ ರು ಬೆಲೆ ಬಾಳುವ ಜಮೀನನ್ನು ಕೇವಲ ಕೆಲವೇ ಲಕ್ಷಗಳಿಗೆ ಮಾರಾಟ ಮಾಡಿಸಿ ರೈತನನ್ನು ಬೀದಿಪಾಲು ಮಾಡಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಶ್ರೀನಿವಾಸ ಗೌಡ ಆರೋಪಿಸಿದ್ದಾರೆ.&lt;/p&gt;&lt;h2&gt;&lt;strong&gt;ನಾಲ್ಕೂವರೆ ಲಕ್ಷ ಪಡೆದಿದ್ರು!&lt;/strong&gt;&lt;/h2&gt;&lt;p&gt;ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ತಾಲೂಕಿನ ತಾಳಕೆರೆ ಗ್ರಾಮದ ಈರಯ್ಯ ಹಾಗೂ ಕೃಷ್ಣಪ್ಪ ಕುಟುಂಬದವರು ಸರ್ವೆ ನಂ 273 ರ 6.14 ಎಕರೆ ಜಮೀನಿನ ಮೇಲೆ 4.50 ಸಾವಿರ ಸಾಲ ಪಡೆದಿದ್ದರು. ಅದನ್ನು ಬ್ಯಾಂಕ್ ಬಡ್ಡಿ, ಸುಸ್ತಿ ಬಡ್ಡಿ ಎಲ್ಲಾ ಸೇರಿ 34.80 ಲಕ್ಷ ರು.ಗಳ ಸಾಲ ಎಂದು ಡಿಕ್ರಿ ಮಾಡಿಸಿ 2024ರಲ್ಲಿ ರಿಯಲ್ ಎಸ್ಟೇಟ್ ನವರೊಂದಿಗೆ ಶಾಮೀಲಾಗಿ ರೈತನಿಗೆ ಗೊತ್ತಿಲ್ಲದಂತೆ ಈ ಹರಾಜು ಮೂಲಕ ಹರಾಜು ಮಾಡಿದೆ.&lt;/p&gt;&lt;p&gt;ಜಮೀನನ್ನು ಬ್ಯಾಂಕ್ ನವರು ರಿಯಲ್ ಎಸ್ಟೇಟ್ ಗಳ ಜೊತೆ ಶಾಮೀಲಾಗಿ ಬಿಡ್ ಹಾಕಿಸಿ ರೈತರ ಭೂಮಿಯನ್ನು ಪಡೆದುಕೊಂಡು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡಿದೆ. ಈ ಹರಾಜು ರದ್ದುಪಡಿಸಿ ರೈತನ ಭೂಮಿಯನ್ನು ರೈತನ ಹೆಸರಿಗೆ ಹಾಕಬೇಕು ಎಂದು ಆಗ್ರಹಿಸಿ ಈ ಹಿಂದೆಯೇ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಂತರ ಕರ್ನಾಟಕ ಬ್ಯಾಂಕ್ ಮುಖ್ಯಸ್ಥರು ಹಾಗೂ ರಾಜ್ಯ ರೈತಸಂಘದ ಮುಖಂಡರು ಮಾತಕತೆ ನಡೆಸಿ ರೈತ 5 ಲಕ್ಷ ಡಿಡಿ ತೆಗೆದು ಕಟ್ಟಿ ಜಮೀನು ವಾಪಸ್ಸು ರೈತನ ಹೆಸರಿಗೆ ನೀಡಬೇಕು ಎಂದು ಒಡಂಬಡಿಕೆ ಮಾಡಿಕೊಂಡು ಪ್ರತಿಭಟನೆ ಕೈಬಿಡಲಾಗಿತ್ತು.&amp;nbsp;&lt;/p&gt;&lt;p&gt;ನಂತರ ಸುಮಾರು 2 ವರ್ಷಗಳಿಂದ ಸಬೂಬು ಹೇಳಿಕೊಂಡು ಬಂದ ಬ್ಯಾಂಕ್ ಸಿಬ್ಬಂದಿಗಳು ಹರಾಜು ಮಾಡಿಕೊಂಡಿರುವ ಸುಬ್ರಮಣಿ ಎಂಬ ರಿಯಲ್ ಎಸ್ಟೇಟ್ ಉದ್ಯಮಿಗೆ ಭೂಮಿ ಬಿಡಿಸಿಕೊಡಲು ಪೋಲೀಸರನ್ನು ಜಮೀನಿನ ಬಳಿ ಕರೆದುಕೊಂಡು ಹೋಗಿದ್ದರು. ವಿಷಯ ತಿಳಿದ ರಾಜ್ಯ ರೈತಸಂಘದವರು ಬ್ಯಾಂಕ್ ನ ರೈತ ವಿರೋಧಿ ಕ್ರಮ ಖಂಡಿಸಿ ಸಿಬ್ಬಂದಿ ಮತ್ತು ರಿಯಲ್ ಎಸ್ಟೇಟ್ ನವರನ್ನು ವಾಪಸ್ಸು ಕಳಿಸಲಾಗಿದೆ.&lt;/p&gt;&lt;h3&gt;&lt;strong&gt;ಬ್ಯಾಂಕ್ ಎದುರು ಅಹೋರಾತ್ರಿ ಚಳುವಳಿ&lt;/strong&gt;&lt;/h3&gt;&lt;p&gt;ದಲಿತ ಕುಟುಂಬದ ರೈತರು ಇದೇ ಜಮೀನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಭೂಮಿ ಕಿತ್ತುಕೊಂಡರೆ ರೈತರು ಆತ್ಮ*ಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಕೂಡಲೇ ಬ್ಯಾಂಕ್ ನ ಅಧಿಕಾರಿಗಳು ಮಾತು ನೀಡಿದಂತೆ ರೈತನಿಂದ ಹಣ ಪಡೆದು ರೈತನ ಹೆಸರಿಗೆ ವಾಪಸ್ಸು ಭೂಮಿಯನ್ನು ನೀಡಬೇಕು. ಇಲ್ಲವಾದರೆ ಬ್ಯಾಂಕ್ ಎದುರು ಅಹೋರಾತ್ರಿ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಶ್ರೀನಿವಾಸ್ ಗೌಡ ಎಚ್ಚರಿಸಿದರು.&lt;/p&gt;&lt;p&gt;ಈ ವೇಳೆ ರೈತ ಸಂಘದ ಮುಖಂಡರಾದ ಸಿದ್ದರಾಮಣ್ಣ, ಗೋವಿಂದರಾಜು, ದೇವರಾಜು, ಚೆಂಡೂರು ರಹಮತ್, ಚರಣ್ ರಾಜ್, ಬ್ಯಾಟಪ್ಪ, ಪರಮೇಶ್ವರಯ್ಯ, ಶಶಿಕುಮಾರ್, ನಾಗರಾಜು, ಮಹಾಲಿಂಗಯ್ಯ ಸೇರಿದಂತೆ ರೈತ ಮುಖಂಡರು ಇದ್ದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/tumakuru-turuvekere-farmers-association-alleges-bank-auctioned-6-acres-of-land-for-a-loan-of-rs-4-lakh-50-thousand-mrq/articleshow-7aps7zb"/>
        </item>
        <item>
            <title><![CDATA[ಬೆಂಗಳೂರು ಟು ತುಮಕೂರಿಗೆ ಮೆಟ್ರೊ: ಒಂದು ಗಂಟೆಯ ಪ್ರಯಾಣ; ಎಲ್ಲೆಲ್ಲಿ ಸ್ಟಾಪ್​? ಡಿಟೇಲ್ಸ್​ ಇಲ್ಲಿದೆ]]></title>
            <link>https://kannada.asianetnews.com/gallery/travel/namma-metro-green-line-extended-from-bengaluru-to-tumakuru-details-here-suc-93cv7ce</link>
            <guid isPermaLink="true">https://kannada.asianetnews.com/gallery/travel/namma-metro-green-line-extended-from-bengaluru-to-tumakuru-details-here-suc-93cv7ce</guid>
            <pubDate>Thu, 28 May 2026 15:05:20 +0530</pubDate>
            <description><![CDATA[&lt;p&gt;ಬೆಂಗಳೂರು ಮತ್ತು ತುಮಕೂರು ನಡುವೆ ನಮ್ಮ ಮೆಟ್ರೋ ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದು ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ ಆಗಲಿದೆ. ಹಸಿರು ಮಾರ್ಗದ ವಿಸ್ತರಣೆಯಾಗಿ ಮಾದಾವರದಿಂದ ಸಿರಾ ಗೇಟ್&zwnj;ವರೆಗೆ 60 ಕಿ.ಮೀ ಉದ್ದದ ಈ ಮಾರ್ಗದಲ್ಲಿ 16 ನಿಲ್ದಾಣ ನಿರ್ಮಿಸಲು BMRCL ಯೋಜನಾ ವರದಿ &amp;nbsp;ಸಲ್ಲಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspyt6ehrwyw47xgjz5vpe2r,imgname-namma-metro-1779960715728.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು ಮತ್ತು ತುಮಕೂರು ನಡುವೆ ನಮ್ಮ ಮೆಟ್ರೋ ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದು ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ ಆಗಲಿದೆ. ಹಸಿರು ಮಾರ್ಗದ ವಿಸ್ತರಣೆಯಾಗಿ ಮಾದಾವರದಿಂದ ಸಿರಾ ಗೇಟ್&zwnj;ವರೆಗೆ 60 ಕಿ.ಮೀ ಉದ್ದದ ಈ ಮಾರ್ಗದಲ್ಲಿ 16 ನಿಲ್ದಾಣ ನಿರ್ಮಿಸಲು BMRCL ಯೋಜನಾ ವರದಿ &amp;nbsp;ಸಲ್ಲಿಸಿದೆ.&lt;/p&gt;&lt;img&gt;&lt;p&gt;ನಮ್ಮ ಮೆಟ್ರೊ ಇದಾಗಲೇ ಬೆಂಗಳೂರನ್ನು ಕವರ್​ ಮಾಡುತ್ತಿದೆ. ಕೆಲವು ಪ್ರದೇಶಗಳಲ್ಲಿ ಇನ್ನೂ ಮೆಟ್ರೊ ಕಾಮಗಾರಿ ಆರಂಭವಾಗದಿದ್ದರೂ ಕೆಲವೇ ವರ್ಷಗಳಲ್ಲಿ ಸಂಪೂರ್ಣ ಬೆಂಗಳೂರು ಮೆಟ್ರೊಮಯ ಆಗಲಿದೆ. ಇದರ ನಡುವೆಯೇ ಬೆಂಗಳೂರು ಮತ್ತು ತುಮಕೂರು ನಡುವೆ ಕೇವಲ ಒಂದು ಗಂಟೆಯ ಅವಧಿಗೆ ಮೆಟ್ರೊ ವಿಸ್ತರಣೆ ಆಗಲಿದೆ. ಈ ಕುರಿತು ಇದಾಗಲೇ ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ವಿವರವಾದ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.&lt;/p&gt;&lt;img&gt;&lt;p&gt;ಸರ್ಕಾರದ ಸದ್ಯದ ರಾಜಕೀಯ ಪರಿಸ್ಥಿತಿ ತಿಳಿಯಾದ ಮೇಲೆ ಇದರ ಬಗ್ಗೆ ಸರ್ಕಾರ ಗಮನ ಹರಿಸಲಿದೆ. ಬೆಂಗಳೂರು ಮತ್ತು ತುಮಕೂರು ಎರಡು ಪ್ರತ್ಯೇಕ ಜಿಲ್ಲೆಗಳಾಗಿರುವ ಹಿನ್ನೆಲೆಯಲ್ಲಿ, ಈ ಮೆಟ್ರೋದಿಂದ ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ.&lt;/p&gt;&lt;img&gt;&lt;p&gt;18-20 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಹಸಿರು ಲೈನ್​ ಕಾರ್ಯ ನಿರ್ವಹಿಸಲಿದೆ. ಮಾದಾವರದಿಂದ ಸಿರಾ ಗೇಟ್&zwnj;ವರೆಗೆ 60 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಇದು ಸಂಚರಿಸಲಿದೆ. ಒಟ್ಟೂ 16 ನಿಲ್ದಾಣಗಳನ್ನು ಫಿಕ್ಸ್ ಮಾಡಲಾಗಿದೆ. ಆರಂಭಿಕ ಕಾರ್ಯಸಾಧ್ಯತಾ ವರದಿಯಲ್ಲಿ ಈ ಮಾರ್ಗದಲ್ಲಿ 25 ನಿಲ್ದಾಣಗಳನ್ನು ನಿರ್ಮಿಸುವ ಪ್ರಸ್ತಾಪವಿತ್ತು. ಆದರೆ, ಪ್ರಸ್ತುತ ಡಿಪಿಆರ್&zwnj;ನಲ್ಲಿ ಆ ಸಂಖ್ಯೆಯನ್ನು 16ಕ್ಕೆ ಇಳಿಸಲಾಗಿದೆ.&lt;/p&gt;&lt;img&gt;&lt;p&gt;ಅಂದಹಾಗೆ ಈ ಉದ್ದೇಶಿತ ಮೆಟ್ರೋ ಆರಂಭವಾಗುವುದು ಹಾಲಿ ಇರುವ ಹಸಿರು ಮಾರ್ಗದ ಕೊನೆಯ ನಿಲ್ದಾಣ ಮಾದಾವರ (ಬಿಐಇಸಿ)ದಿಂದ. ಇದು ನೆಲಮಂಗಲ, ಡಾಬಸ್&zwnj;ಪೇಟೆ ಮತ್ತು ಕ್ಯಾತಸಂದ್ರ ಮಾರ್ಗವಾಗಿ ತುಮಕೂರು ಪ್ರವೇಶಿಸಲಿದೆ. ಕ್ಯಾತಸಂದ್ರದ ನಂತರ, ತುಮಕೂರು ವಿಶ್ವವಿದ್ಯಾಲಯ, ಸಿದ್ದಗಂಗಾ ವೈದ್ಯಕೀಯ ಕಾಲೇಜು, ತುಮಕೂರು ಬಸ್ ನಿಲ್ದಾಣದಲ್ಲಿ ನಿಲ್ದಾಣಗಳು ಬರಲಿದ್ದು, ಸಿರಾ ಗೇಟ್ ಬಳಿ ಟರ್ಮಿನಲ್ (ಕೊನೆಯ) ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ.&lt;/p&gt;&lt;img&gt;&lt;p&gt;ಮಾದಾವರದಿಂದ ಆರಂಭವಾಗುವ ಈ ಮೆಟ್ರೊ ನೆಲಮಂಗಲ, ಡಾಬಸ್&zwnj;ಪೇಟೆ, ಕ್ಯಾತಸಂದ್ರ, ತುಮಕೂರು ವಿಶ್ವವಿದ್ಯಾಲಯ, ಸಿದ್ದಗಂಗಾ ವೈದ್ಯಕೀಯ ಕಾಲೇಜು, ತುಮಕೂರು ಬಸ್ ನಿಲ್ದಾಣದಲ್ಲಿ ಸ್ಟಾಪ್​ ನೀಡಲಿದೆ. ಸಿರಾ ಗೇಟ್ ಇದು ತುಮಕೂರಿನ ಕೊನೆಯ ಅಥವಾ ಟರ್ಮಿನಲ್ ನಿಲ್ದಾಣವಾಗಲಿದೆ. ಸುಮಾರು ಮೂರು ಲಕ್ಷ ಪ್ರಯಾಣಿಕರು ಇದರಲ್ಲಿ ದಿನನಿತ್ಯ ಸಂಚರಿಸುವ ನಿರೀಕ್ಷೆ ಇದೆ.&lt;/p&gt;&lt;img&gt;&lt;p&gt;ಬಿಎಂಆರ್&zwnj;ಸಿಎಲ್ ತಾನೇ ನೇರವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿದರೆ ಅಂದಾಜು 18,000 ಕೋಟಿ ರೂ. ವೆಚ್ಚವಾಗಲಿದೆ. ಪಿಪಿಪಿ ಮಾದರಿ ಅರ್ಥಾತ್​ ಸಾರ್ವಜನಿಕ - ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ನಿರ್ಮಿಸಿದರೆ ಯೋಜನಾ ವೆಚ್ಚವು ಸುಮಾರು 20,000 ಕೋಟಿ ರೂ. ಆಗಲಿದೆ ಎನ್ನಲಾಗಿದೆ.&lt;/p&gt;]]></content:encoded>
            <category>tumakuru</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/travel/namma-metro-green-line-extended-from-bengaluru-to-tumakuru-details-here-suc-93cv7ce"/>
        </item>
        <item>
            <title><![CDATA[ಕಿಸಾನ್ ಸಮ್ಮಾನ್ ಯೋಜನೆಯ 4 ಸಾವಿರ ನಿಲ್ಲಿಸಿದ್ದು ಸರಿಯಲ್ಲ: ಸಂಸದ ಗೋವಿಂದ ಕಾರಜೋಳ]]></title>
            <link>https://kannada.asianetnews.com/karnataka-districts/mp-govind-karjol-kisan-samman-yojana-4000-scheme-karnataka-gvd/articleshow-aosq1wh</link>
            <guid isPermaLink="true">https://kannada.asianetnews.com/karnataka-districts/mp-govind-karjol-kisan-samman-yojana-4000-scheme-karnataka-gvd/articleshow-aosq1wh</guid>
            <pubDate>Sat, 16 May 2026 22:27:49 +0530</pubDate>
            <description><![CDATA[&lt;p&gt;ಬಿಜೆಪಿ ಸರ್ಕಾರದಿಂದ ನೀಡಲಾಗುತ್ತಿದ್ದ ಕಿಸಾನ್&zwnj; ಸಮ್ಮಾನ್&zwnj; ಯೋಜನೆಯ 4 ಸಾವಿರ ನೀಡುವ ಯೋಜನೆಯನ್ನು ಪ್ರಸ್ತುತ ಸರ್ಕಾರ ನಿಲ್ಲಿಸಿದ್ದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ggdhkn8akrw19gf8h434eqdv,imgname-govinda-karjola.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿರಾ (ಮೇ.16): &lt;/strong&gt;ಬಿಜೆಪಿ ಸರ್ಕಾರದಿಂದ ನೀಡಲಾಗುತ್ತಿದ್ದ ಕಿಸಾನ್&zwnj; ಸಮ್ಮಾನ್&zwnj; ಯೋಜನೆಯ 4 ಸಾವಿರ ನೀಡುವ ಯೋಜನೆಯನ್ನು ಪ್ರಸ್ತುತ ಸರ್ಕಾರ ನಿಲ್ಲಿಸಿದ್ದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ &rsquo;ಕಿಸಾನ್ ಸಮ್ಮಾನ್ ಯೋಜನೆ&rsquo;ಯಡಿ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂಪಾಯಿ ಜಮೆಯಾಗುತ್ತಿದೆ. ರಾಜ್ಯದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಈ ಮೊತ್ತಕ್ಕೆ 4 ಸಾವಿರ ರೂಪಾಯಿ ಸೇರಿಸಿ ಒಟ್ಟು 10 ಸಾವಿರ ರೂಪಾಯಿ ನೀಡುವ ಯೋಜನೆ ರೂಪಿಸಲಾಗಿತ್ತು. ಆದರೆ, ಪ್ರಸ್ತುತ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿರುವುದು ಬೇಸರದ ಸಂಗತಿ. ಸರ್ಕಾರಗಳು ಬದಲಾದಾಗ ಜನಪರ ಯೋಜನೆಗಳನ್ನು ನಿಲ್ಲಿಸಬಾರದು ಎಂದು ಅವರು ಆಗ್ರಹಿಸಿದರು.&lt;/p&gt;&lt;p&gt;ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಪ್ರತಿ ತಿಂಗಳು 14.5 ಕೋಟಿ ರುಪಾಯಿ ಪ್ರೋತ್ಸಾಹಧನ ಬರುತ್ತಿರುವುದು ಶ್ಲಾಘನೀಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಾಲಿಗೆ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಜಾರಿಗೆ ತಂದು, ಪ್ರತಿ ಲೀಟರ್ ಹಾಲಿಗೆ 3 ರುಪಾಯಿ ಇದ್ದ ಪ್ರೋತ್ಸಾಹಧನವನ್ನು 5 ರುಪಾಯಿಗೆ ಹೆಚ್ಚಿಸಲಾಗಿತ್ತು. ಪ್ರಸ್ತುತ ಹಸು, ಎಮ್ಮೆಗಳ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಈಗಿನ ರಾಜ್ಯ ಸರ್ಕಾರ ಪ್ರೋತ್ಸಾಹಧನವನ್ನು ಇನ್ನಷ್ಟು ಹೆಚ್ಚಿಸುವ ಅಗತ್ಯವಿದೆ ಎಂದರು.&lt;/p&gt;&lt;p&gt;ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ, ಮಾತನಾಡಿ ನೇಜಂತಿ ಕುಗ್ರಾಮದಲ್ಲಿ ಇಂದು ಸಹಕಾರ ಸಂಘ ಪ್ರಾರಂಭ ಆಗಿರುವುದು ಇಡೀ ಊರಿಗೆ ಒಂದು ಆರ್ಥಿಕವಾಗಿ ಶಕ್ತಿ ಕೊಡುವಂತಹ ಕಾರ್ಯಕ್ರಮ. ಗ್ರಾಮದವರೆಲ್ಲರೂ ಕೂಡ ಅರ್ಥೈಸಿ ಆದಾಯ ಇರತಕ್ಕಂತ ಹೈನುಗಾರಿಕೆ ಉದ್ಯಮವನ್ನು ನೀವು ಉಳಿಸಿಕೊಂಡು ಬೆಳೆಸುವತ್ತ ಹೆಚ್ಚು ಪ್ರಾಮುಖ್ಯತೆ ಕೊಡಬೇಕಿದೆ ಎಂದರು.&lt;/p&gt;&lt;h2&gt;&lt;strong&gt;ಉದ್ಯೋಗ ಸೃಷ್ಟಿಸುವಲ್ಲಿ ಯಶಸ್ವಿ&lt;/strong&gt;&lt;/h2&gt;&lt;p&gt;ತುಮಕೂರು ಹಾಲು ಒಕ್ಕೂಟದ ಗುಬ್ಬಿ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ, ಈ ಪುಟ್ಟ ಗ್ರಾಮದಲ್ಲಿ ಹುಟ್ಟಿದ ಅಭಿಲಾಷ್ ಗೌಡ ಇಂಜಿನಿಯರ್ ಪದವಿ ಮುಗಿಸಿ, ಬೆಂಗಳೂರಿನಲ್ಲಿ ಲಕ್ಷಗಟ್ಟಲೆ ಸಂಬಳ ಪಡೆದು ಜೀವನ ನಡೆಸುತ್ತಿದ್ದರು. ಇಂದು ತಮ್ಮ ಸ್ವಗ್ರಾಮದಲ್ಲಿ ಗೆಳೆಯ ಮೋಹನ್ ಜೊತೆ ಗೂಡಿ ಬೃಹತ್ ಆಧಾರ್ ಡೈರಿ ಫಾರಂ ಮತ್ತು ಸೈಲೇಜ್ ಘಟಕ ಸ್ಥಾಪಿಸಿ, ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪನೆಗೆ ಶ್ರಮಿಸಿ ಇಂದು ಉದ್ಘಾಟನೆ ಮಾಡಿ ಹೈನುಗಾರಿಕೆ ಉದ್ಯಮಕ್ಕೆ ಹೊಸ ಅರ್ಥ ನೀಡುವಲ್ಲಿ ಜೊತೆಗೆ ಉದ್ಯೋಗ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ, ಇವರ ಈ ನಡೆ ಇತರರಿಗೂ ಸ್ಫೂರ್ತಿದಾಯಕವಾಗಲಿ ಎಂದರು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-govind-karjol-kisan-samman-yojana-4000-scheme-karnataka-gvd/articleshow-aosq1wh"/>
        </item>
        <item>
            <title><![CDATA[ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಚಾಟ್ ಬಹಿರಂಗ, ತುಮಕೂರಿನ ಅಲ್ಲಾ ಬಕ್ಷು ಅರೆಸ್ಟ್]]></title>
            <link>https://kannada.asianetnews.com/karnataka-districts/tumakuru-man-alla-bakshu-arrested-for-alleged-links-with-foreign-suspected-extremists/articleshow-b47p6bb</link>
            <guid isPermaLink="true">https://kannada.asianetnews.com/karnataka-districts/tumakuru-man-alla-bakshu-arrested-for-alleged-links-with-foreign-suspected-extremists/articleshow-b47p6bb</guid>
            <pubDate>Fri, 05 Jun 2026 08:40:48 +0530</pubDate>
            <description><![CDATA[&lt;p&gt;ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿದ್ದ ತುಮಕೂರಿನ 24ರ ಹರೆಯದ ಯುವಕ ಅಲ್ಲಾ ಬಕ್ಷುವನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಚಾಟ್&zwnj;ಗಳು, ಉಗ್ರರ ಚಟುವಟಿಕೆ ಕುರಿತು ಚಾಟ್ ಮಾಡಿರುವುದು ಬಯಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k64977kynmhykf4djk3syhaa,imgname-pc-1758932999806.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.05) &lt;/strong&gt;ವಿದೇಶದ ಶಂಕಿತ ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಹಲವು ಉಗ್ರ ಚಟುವಟಿಕೆಗಳಿಗೆ ಪ್ಲಾನ್ ರೂಪಿಸುತ್ತಿದ್ದ ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾ ಬಕ್ಷುನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಾ ಬಕ್ಷು ಚುಟವಟಿಕೆ ಕುರಿತು ಕೇಂದ್ರ ತನಿಖಾ ತಂಡ ನಿಗಾವಹಿಸಿತ್ತು. ಉಗ್ರ ಚಟುವಟಿಕೆಗಳು ಖಚಿತವಾಗುತ್ತಿದ್ದಂತೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಹೀಗಾಗಿ ತುಮಕೂರು ನಗರ ಠಾಣೆಯ ಇನ್ಸ್ ಪೆಕ್ಟರ್ ಅವಿನಾಷ್ ತಂಡ ಉಗ್ರರ ಜೊತೆ ಲಿಂಕ್ ಹೊಂದಿದ್ದ ಅಲ್ಲಾ ಬಕ್ಷುವನ್ನು ಅರೆಸ್ಟ್ ಮಾಡಿದ್ದಾರೆ.&lt;/p&gt;&lt;h2&gt;ಉಗ್ರರ ಜೊತೆ ನಿರಂತರ ಸಂಪರ್ಕ, ಚಾಟ್ ಮಾಹಿತಿ ಬಹಿರಂಗ&lt;/h2&gt;&lt;p&gt;ಕ್ಯಾತಸಂದ್ರದಲ್ಲಿ ಅಲ್ಲಾಬಕ್ಷುನನ್ನು ಪೊಲೀಸರು ಬಂಧಿಸಿದ್ದಾರೆ. ಶಂಕಿತ ಉಗ್ರ ಸಂಘಟನೆಯ ವ್ಯಕ್ತಿ ಜೊತೆ ಲಿಂಕ್ ಹೊಂದಿರುವ ಬಗ್ಗೆ ಮಾಹಿತಿ ಪಡೆದ ಕೇಂದ್ರ ತನಿಖಾ ತಂಡ ಯುವಕನ ಮೇಲೆ ನಿಗಾ ಇಟ್ಟಿತ್ತು.ಎಕ್ಸ್ ಖಾತೆಯ ಮುಖಾಂತರ ವಿದೇಶಿ ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿತ್ತು. ಇದೇ ವೇಳೆ ದೇಶದ ಭದ್ರತೆಗೆ ಧಕ್ಕೆ ಬರುವ ರೀತಿ ಚಾಟ್ ನಡೆಸಿರುವುದು ಬೆಳಕಿಗೆ ಬಂದಿದೆ.&lt;/p&gt;&lt;h2&gt;ಪ್ಪಚೋದನಾತ್ಮಕ ಸಂದೇಶ&lt;/h2&gt;&lt;p&gt;ಸಮುದಾಯಕ್ಕೆ ಸೀಮಿತವಾಗಿ ದೇಶದೊಳಗೆ ಆದ ಬೆಳವಣಿಗೆ ಸಂಬಂಧಿತ ಪ್ರಚೋಧನಾತ್ಮಕ ಸಂದೇಶಗಳು ಪತ್ತೆಯಾಗಿದೆ. ಅಲ್ಲಾ ಬಕ್ಷು ಪ್ರತಿ ಚಲನವಲನಗಳ ಬಗ್ಗೆ ನಿಗಾವಹಿಸಿದ್ದ ಕೇಂದ್ರ ತನಿಖಾ ತಂಡ ಪೊಲೀಸರಿಗೆ ಮಾಹಿತಿ ನೀಡಿತ್ತು. ಮಾಹಿತಿ ಹಿನ್ನಲೆಯಲ್ಲಿ ಅಲ್ಲಾ ಬಕ್ಷುವನ್ನು ಅರೆಸ್ಟ್ ಮಾಡಿದ್ದಾರೆ. ಈತನ ಜೊತೆ ಮತ್ತೊಬ್ಬ ಸಂಹ ಸಂಪರ್ಕದ ಮಾಹಿತಿಗಳು ಬಯಲಾಗಿದೆ. ಅಲ್ಲಾ ಬಕ್ಷು ಅರೆಸ್ಟ್ ಆಗುತ್ತಿದ್ದಂತೆ ಮತ್ತೋರ್ವ ಪರಾರಿಯಾಗಿದ್ದಾನೆ. ಆತನ ಪತ್ತೆ ತುಮಕೂರು ನಗರ ಠಾಣಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಘಟನೆ ಸಂಬಂಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು.&lt;/p&gt;&lt;h2&gt;ತುಮಕೂರಿನಲ್ಲಿ ದೇಶ ವಿರೋಧಿ ಚುಟವಟಿಕೆ&lt;/h2&gt;&lt;p&gt;ಇದೇ ವೇಳೆ ಕೇಂದ್ರ ತನಿಖಾ ತಂಡ ಅಲ್ಲಾ ಬಕ್ಷು ಜೊತೆ ಆತ್ಮೀಯ ಸಂಪರ್ಕದಲ್ಲಿರುವ ಮಾಹಿತಿಯನ್ನು ಕಲೆ ಹಾಕಿದೆ. ತುಮಕೂರಿನಲ್ಲಿ ದೇಶದ ಭದ್ರತೆಗೆ ಸವಾಲು ಹಾಕುವ ರೀತಿಯ ಚುಟವಟಿಕೆಗಳು ನಡೆಯುತ್ತರುವುದು ಸ್ಥಳೀಯರ ಆತಂಕಕ್ಕೆ ಕಾರಣಾಗಿದೆ. ಶಾಂತವಾಗಿದ್ದ ತುಮಕೂರಿನಲ್ಲೂ ದೇಶ ವಿರೋಧಿ ಚಟುವಟಿಗೆಳು ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇದೀಗ ಕಾರ್ಯಪ್ರವೃತ್ತರಾಗಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>tumakuru</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/tumakuru-man-alla-bakshu-arrested-for-alleged-links-with-foreign-suspected-extremists/articleshow-b47p6bb"/>
        </item>
        <item>
            <title><![CDATA[ತುಮಕೂರು-ಯಶವಂತಪುರ ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ: KSRಗೆ ವಿಸ್ತರಣೆ ಆಗುತ್ತಾ?]]></title>
            <link>https://kannada.asianetnews.com/gallery/travel/tumakuru-yesvantpur-memu-train-timings-likely-to-change-will-there-be-an-extension-to-ksr-bengaluru-station-mrq-bb8nit8</link>
            <guid isPermaLink="true">https://kannada.asianetnews.com/gallery/travel/tumakuru-yesvantpur-memu-train-timings-likely-to-change-will-there-be-an-extension-to-ksr-bengaluru-station-mrq-bb8nit8</guid>
            <pubDate>Thu, 21 May 2026 14:10:48 +0530</pubDate>
            <description><![CDATA[&lt;p&gt;ಉದ್ಯೋಗಿಗಳಿಗೆ ಅನುಕೂಲವಾಗಲು ತುಮಕೂರು-ಯಶವಂತಪುರ ಮೆಮು ರೈಲಿನ ಸಮಯವನ್ನು ಬದಲಾಯಿಸುವಂತೆ ಮಾಡಿದ ಮನವಿಗೆ ನೈಋತ್ಯ ರೈಲ್ವೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಮಯ ಬದಲಾವಣೆ, ಹೊಸ ನಿಲುಗಡೆ ಹಾಗೂ ಮತ್ತೊಂದು ರೈಲಿನ ವೇಳಾಪಟ್ಟಿ ಪರಿಶೀಲಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks4rgymnn9r2mc9d8qdrpkk4,imgname-indian-railways--4--1779350141589.jpg" type="image/jpeg" height="390" width="690"/>
            <content:encoded><![CDATA[&lt;p&gt;ಉದ್ಯೋಗಿಗಳಿಗೆ ಅನುಕೂಲವಾಗಲು ತುಮಕೂರು-ಯಶವಂತಪುರ ಮೆಮು ರೈಲಿನ ಸಮಯವನ್ನು ಬದಲಾಯಿಸುವಂತೆ ಮಾಡಿದ ಮನವಿಗೆ ನೈಋತ್ಯ ರೈಲ್ವೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಮಯ ಬದಲಾವಣೆ, ಹೊಸ ನಿಲುಗಡೆ ಹಾಗೂ ಮತ್ತೊಂದು ರೈಲಿನ ವೇಳಾಪಟ್ಟಿ ಪರಿಶೀಲಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.&lt;/p&gt;&lt;img&gt;&lt;p&gt;ಉದ್ಯೋಗಿ ಪ್ರಯಾಣಿಕರು ಮೆಜೆಸ್ಟಿಕ್ ತಲುಪಲು ಅನುಕೂಲವಾಗುಬಂತೆ ನಗರದಿಂದ ಬೆಳಗ್ಗೆ 8 &zwnj;ಕ್ಕೆ ಹೊರಡುವ ತುಮಕೂರು-ಯಶವಂತಪುರ ಮೆಮು ರೈಲು ಹೊರಡುವ ಸಮಯವನ್ನು ಬೆಳಗ್ಗೆ 7.45 ಕ್ಕೆ ಬದಲಾಯಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ಪ್ರಧಾನ ವ್ಯವಸ್ಥಾಪಕ ಅಶುತೋಶ್ ಕೆ.&zwnj;ಸಿಂಗ್ ಭರವಸೆ ನೀಡಿದರು.&lt;/p&gt;&lt;p&gt;ಬುಧವಾರ ಬೆಂಗಳೂರಿನಲ್ಲಿ ನಡೆದ ನೈಋತ್ಯ ರೈಲ್ವೆ ವಲಯದ ಬೆಂಗಳೂರು ವಿಭಾಗದ ರೈಲು ಪ್ರಯಾಣಿಕರ ಸಲಹಾ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಹಾಗೂ ತುಮಕೂರು ಜಿಲ್ಲಾ ರೈಲ್ವೆ ಪ್ರಯಾಣಿಕರ&zwnj; ವೇದಿಕೆ ಅಧ್ಯಕ್ಷ ಕರಣಂ ರಮೇಶ್ ಅವರ ಮನವಿಗೆ ಸ್ಪಂದಿಸಿ ಮಾತನಾಡಿದರು.&lt;/p&gt;&lt;img&gt;&lt;p&gt;ಉದ್ಯೋಗಿ ಪ್ರಯಾಣಿಕರಿಗಾಗಿಯೇ ಆರಂಭಿಸಿದ ಸದರಿ ಮೆಮು ರೈಲು ಆರಂಭದಿಂದಲೂ ಕೆಎಸ್ಆರ್ ವರೆಗೆ ಸಾಗುತ್ತಿತ್ತು. ಆದರೆ ಶಿವಮೊಗ್ಗ ಜನಶತಾಬ್ಧಿ ರೈಲಿಗೆ ದಾರಿ ಮಾಡಿಕೊಡಲು&zwnj; ಮೆಮು ರೈಲನ್ನು ಯಶವಂತಪುರಕ್ಕೆ ಸೀಮಿತಗೊಳಿಸಲಾಯಿತು. ಇದರಿಂದ ಸಾವಿರಕ್ಕೂ ಹೆಚ್ಚು ಉದ್ಯೋಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆರ್ಥಿಕವಾಗಿಯೂ ಹೊರೆಯಾಗುತ್ತಿದೆ.&amp;nbsp;&lt;/p&gt;&lt;p&gt;ವಿಳಂಬದಿಂದ ಹಲವರು ಉದ್ಯೋಗ ಕಳೆದುಕೊಳ್ಳುವಂತಾಗಿದೆ ಎಂದು ಪ್ರಯಾಣಿಕರ ಸಮಸ್ಯೆಯನ್ನು ವಿವರಿಸಿ ಮೆಮು ರೈಲನ್ನು ಕೆಎಸ್ಆರ್ ವರೆಗೆ ವಿಸ್ತರಿಸಬೇಕೆಂದು ಮನವಿ ಮಾಡಿದರು.&lt;/p&gt;&lt;img&gt;&lt;p&gt;ಇದಕ್ಕೆ ಉತ್ತರಿಸಿದ ಡಿ ಆರ್ ಎಂ, ಕೆಎಸ್ಆರ್ ನಲ್ಲಿ ಪ್ಲಾಟ್ ಫಾರಂಗಳ ತೀವ್ರ ತೊಂದರೆ&zwnj;ಯಿದ್ದು ಮೆಮು ವಿಸ್ತರಣೆ ಸಾಧ್ಯವಿಲ್ಲ ಎಂದರಲ್ಲದೆ, ನಿಮ್ಮ ಸಲಹೆಯಂತೆ ಸಮಯ ಬದಲಾವಣೆ ಮಾಡಿ ಯಶವಂತಪುರದಲ್ಲಿ ಕೋಲಾರ-ಬೆಂಗಳೂರು ರೈಲಿಗೆ ಸಂಪರ್ಕ ಕಲ್ಪಿಸುವ ಬಗ್ಗೆ ಸಕಾರಾತ್ಮಕವಾಗಿ ಪರಿಶೀಲಿಸಿ ಸೂಕ್ತ ಕ್ರ&zwnj;ಮ ಕೈಗೊಳ್ಳಲಾಗುವುದು ಎಂದರು.&lt;/p&gt;&lt;p&gt;ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಪ್ಲಾಟ್ ಫಾರಂಗಳ ಕೊರತೆ ಹಿನ್ನಲೆಯಲ್ಲಿ ಸದರಿ ನಿಲ್ದಾಣವನ್ನು ಪಾಸಿಂಗ್ ಥ್ರೂ ನಿಲ್ದಾಣವನ್ನಾಗಿಸಿದರೆ&zwnj; ಹೆಚ್ಚು ರೈಲುಗಳನ್ನು ಬೆಂಗಳೂರಿನವರೆಗೆ ವಿಸ್ತರಿಸಬಹುದಾಗಿದೆ. ಈ ಬಗ್ಗೆ ಗಮನ ಹರಿಸಬೇಕೆಂದು&zwnj; ಕರಣಂ ರಮೇಶ್ ಸಲಹೆ ನೀಡಿದರು&lt;/p&gt;&lt;img&gt;&lt;p&gt;ಯಶವಂತಪುರ ತುಮಕೂರು ನಡುವೆ ಸಂಚರಿಸುವ ಮೆಮು ರೈಲುಗಳಿಗೆ ಭೈರನಾಯಕನಹಳ್ಳಿ, ಮುದ್ದಲಿಂಗನಗಳ್ಳಿ, ನಿಡುವಂದ ನಿಲ್ದಾಣಗಳಲ್ಲಿ ನಿಲುಗಡೆ ಕಲ್ಪಿಸಬೇಕೆಂಬ ಮನವಿಗೆ ಉತ್ತರಿಸಿದ ಡಿ ಆರ್ ಎಂ, ಎಲ್ಲ ಮೆಮು ರೈಲುಗಳಿಗೆ ಎಲ್ಲ&zwnj; ನಿಲ್ದಾಣಗಳಲ್ಲಿ ನಿಲುಗಡೆ ಕಲ್ಪಿಸಲು ಸಾಧ್ಯವಾಗದು. ಅದರೆ ಮುದ್ದನಾಯಕನಹಳ್ಳಿಯಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.&lt;/p&gt;&lt;img&gt;&lt;p&gt;ಚಾಮರಾಜನಗರ ತುಮಕೂರಿಗೆ ಬರುವ ರೈಲು ಸಂಚಾರವನ್ನು ಮಧ್ಯಾಹ್ನಕ್ಕೆ ಬದಲಾಗಿ ಸಂಜೆ 4.30 ಕ್ಕೆ ಬೆಂಗಳೂರಿನಿಂದ ಹೊರಡುವಂತೆ ಮಾಡಬೇಕು. ಇದರಿಂದ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನೇರ ರೈಲು ಸಂಪರ್ಕ ಕಲ್ಪಿಸಿದಂತಾಗುತ್ತದೆ. ಅಲ್ಲದೆ, ವಿದ್ಯಾರ್ಥಿಗಳು, ಉದ್ಯೋಗಿಗಳು, ಶಿಕ್ಷಕರು ಮತ್ತು ಉಪನ್ಯಾಸಕರು ಹಾಗೂವ ಸರ್ವಂಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕರಣಂ ರಮೇಶ್ ಮಾಡಿದ ಮನವಿಗೆ ಉತ್ತರಿಸಿದ ಡಿ ಆರ್ ಎಂ ಅಶುತೋಷ್ ಕೆ.&zwnj; ಸಿಂಗ್ ಅವರು ಓ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/travel/tumakuru-yesvantpur-memu-train-timings-likely-to-change-will-there-be-an-extension-to-ksr-bengaluru-station-mrq-bb8nit8"/>
        </item>
        <item>
            <title><![CDATA[ತುಮಕೂರಿನಲ್ಲಿ ಅಸ್ವಸ್ಥಗೊಂಡು ರಸ್ತೆಯಲ್ಲೇ ಕುಸಿದು ಬಿದ್ದ ಪೊಲೀಸ್ ಪೇದೆ: ಆಮೇಲೆನಾಯ್ತು?]]></title>
            <link>https://kannada.asianetnews.com/karnataka-districts/tumakuru-police-constable-sudden-death-on-duty-gvd/articleshow-d68230d</link>
            <guid isPermaLink="true">https://kannada.asianetnews.com/karnataka-districts/tumakuru-police-constable-sudden-death-on-duty-gvd/articleshow-d68230d</guid>
            <pubDate>Sun, 24 May 2026 21:16:56 +0530</pubDate>
            <description><![CDATA[&lt;p&gt;ತುಮಕೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಕೋತಿತೋಪು ರಸ್ತೆಯಲ್ಲಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksdanhv2k0gdv2dazwr67m8r,imgname-cjc-1779637602146.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ.24): &lt;/strong&gt;ತುಮಕೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದ್ದು, ಅವರು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.&lt;/p&gt;&lt;p&gt;ನಗರದ ಕೋತಿತೋಪು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಶಾಂತಕುಮಾರ್ ಅಸ್ವಸ್ಥಗೊಂಡು ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;p&gt;ಮೃತ ಶಾಂತಕುಮಾರ್ ತುಮಕೂರು ನಗರದ ಎನ್.ಆರ್ ಕಾಲೋನಿ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ದಿಢೀರ್ ಅಸ್ವಸ್ಥತೆಯಿಂದ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;&lt;strong&gt;ಅಕಾಲಿಕ ನಿಧನಕ್ಕೆ ಸಂತಾಪ&lt;/strong&gt;&lt;/h2&gt;&lt;p&gt;ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಹಿತಿ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/tumakuru-police-constable-sudden-death-on-duty-gvd/articleshow-d68230d"/>
        </item>
        <item>
            <title><![CDATA[ಬೆಂಗಳೂರು-ತುಮಕೂರು ಚತುಷ್ಪಥ ರೈಲ್ವೆ ಮಾರ್ಗಕ್ಕೆ 6000 ಕೋಟಿಯ ಕ್ರಿಯಾ ಯೋಜನೆ ಘೋಷಣೆ]]></title>
            <link>https://kannada.asianetnews.com/karnataka-districts/rs-6000-crore-action-plan-announced-for-bengaluru-tumakuru-four-lane-railway-line-v-somanna-mrq/articleshow-ge889mz</link>
            <guid isPermaLink="true">https://kannada.asianetnews.com/karnataka-districts/rs-6000-crore-action-plan-announced-for-bengaluru-tumakuru-four-lane-railway-line-v-somanna-mrq/articleshow-ge889mz</guid>
            <pubDate>Tue, 02 Jun 2026 08:25:46 +0530</pubDate>
            <description><![CDATA[ಕೇಂದ್ರ ಸಚಿವ ವಿ. ಸೋಮಣ್ಣ ಅವರು ಬೆಂಗಳೂರು-ತುಮಕೂರು ಚತುಷ್ಪಥ ರೈಲ್ವೆ ಮಾರ್ಗಕ್ಕೆ 6000 ಕೋಟಿ ರೂ. ಕ್ರಿಯಾಯೋಜನೆ ಸಿದ್ಧವಾಗಿದೆ ಎಂದು ಘೋಷಿಸಿದ್ದಾರೆ. ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದಲ್ಲಿ ರೈಲ್ವೆ ಕೆಳಸೇತುವೆಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು, ತುಮಕೂರು ರೈಲ್ವೆ ನಿಲ್ದಾಣದ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಸಮಗ್ರ ರೈಲ್ವೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kt34201jn0bfe2sc13dm78xm,imgname-bangalore-tumkur-four-track-railway-line-1780368867378.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಬೆಂಗಳೂರು- ತುಮಕೂರು ಮಾರ್ಗದ ನಾಲ್ಕು ಪಥಗಳ ರೈಲ್ವೆ ಕಾಮಗಾರಿಗೆ 6000 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದೆ. ಇದು ಸಭೆಯಲ್ಲಿ ಅನುಮೋದನೆಗೊಂಡ ನಂತರ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.&lt;/p&gt;&lt;p&gt;ತಾಲೂಕಿನ ಕಳ್ಳಿಪಾಳ್ಯ ಗ್ರಾಮದಲ್ಲಿ 10.86 ಕೋಟಿ ರು. ವೆಚ್ಚದ ರೈಲ್ವೆ ಕೆಳಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಜನರು ತುಮಕೂರು ಕಡೆ ಮುಖ ಮಾಡುತ್ತಿದ್ದಾರೆ. ಇಲ್ಲಿನ ರೈತರು ಯಾವುದೇ ಕಾರಣಕ್ಕೂ ಜಮೀನುಗಳನ್ನು ಮಾರಾಟ ಮಾಡದೆ ಉಳಿಸಿಕೊಳ್ಳಲು ಹೇಳಿದರು.&amp;nbsp;&lt;/p&gt;&lt;h2&gt;&lt;strong&gt;ತುಮಕೂರಿನ ರೈಲ್ವೆ ನಿಲ್ದಾಣಕ್ಕೆ 100 ಕೋಟಿ ಅನುದಾನ&lt;/strong&gt;&lt;/h2&gt;&lt;p&gt;ತುಮಕೂರಿನ ರೈಲ್ವೆ ನಿಲ್ದಾಣಕ್ಕೆ 100 ಕೋಟಿ ಅನುದಾನ ಬಿಡುಗಡೆ ಆಗಿದ್ದು, ಹೈಟೆಕ್ ರೈಲ್ವೆ ನಿಲ್ದಾಣವಾಗಲಿದೆ. ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಶ್ರೀ ಹೆಸರನ್ನು ಇಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.&amp;nbsp;&lt;/p&gt;&lt;p&gt;ಕರ್ನಾಟಕದಲ್ಲಿ 2 ಕೋಟಿಗೂ ಹೆಚ್ಚು ಅನುದಾನ ತಂದು 61 ಕಡೆ ನವೀಕರಣ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ತುಮಕೂರು ಜಿಲ್ಲೆಯ ಎಲ್ಲಾ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಮುಗಿದ ನಂತರ ಪ್ರಧಾನಮಂತ್ರಿಯವರನ್ನು ಜಿಲ್ಲೆಗೆ ಆಹ್ವಾನಿಸಿ ಅಭಿವೃದ್ಧಿ ಕೆಲಸವನ್ನು ವೀಕ್ಷಣೆ ಮಾಡುವಂತೆ ಪ್ರಯತ್ನ ಮಾಡುತ್ತೇನೆ. ಅವರು ಜಿಲ್ಲೆಗೆ ಬಂದರೆ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ.&lt;/p&gt;&lt;p&gt;ಕೆಳ ಸೇತುವೆಯ ನಿರ್ಮಾಣದಿಂದ ಕಳ್ಳಿಪಾಳ್ಯ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸುರಕ್ಷಿತ ಮತ್ತು ತಡೆರಹಿತ ರಸ್ತೆ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;ಶಾಸಕ ಎಸ್ ಆರ್ ಶ್ರೀನಿವಾಸ್&lt;/strong&gt;&lt;/h3&gt;&lt;p&gt;ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಸಂಸದರಾಗಿ ಏನೆಲ್ಲ ಮಾಡಬಹುದು ಎಂದು ತೋರಿಸಿದ ವ್ಯಕ್ತಿ ಸೋಮಣ್ಣ. ಇದುವರೆಗೆ ಸಂಸದರಾದವರು ಈ ಮಟ್ಟಿಗೆ ಕೆಲಸ ಮಾಡಿರಲಿಲ್ಲ. ತಾಲೂಕಿನಲ್ಲಿ ಬಹುತೇಕ ರೈಲ್ವೆ ಇಲಾಖೆ ವತಿಯಿಂದ ರೈಲ್ವೆ ಕಾಮಗಾರಿಗಳು ಅಭಿವೃದ್ಧಿ ಕಾರ್ಯವಾಗಿದೆ. ಅಭಿವೃದ್ಧಿ ವಿಚಾರಕ್ಕೆ ಬಂದರೆ ಸೋಮಣ್ಣ ಹಿಡಿದ ಕೆಲಸ ಮಾಡದೇ ಬಿಡದ ವ್ಯಕ್ತಿ. ಮುಂದಿನ ದಿನಗಳಲ್ಲಿ ಅವರ ಋಣವನ್ನು ತೀರಿಸುವ ಕೆಲಸ ಮಾಡಬೇಕಿದೆ.&amp;nbsp;&lt;/p&gt;&lt;p&gt;ತಾಲೂಕಿನಲ್ಲಿ 80 ರಿಂದ 90 ಕೋಟಿ ಅನುದಾನವನ್ನು ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ವಿ.ಸೊಮಣ್ಣ ಹಾಕಿದ್ದಾರೆ. ತಾಲೂಕಿನಲ್ಲಿ 135 ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗಿದೆ. ಹಾಗಲವಾಡಿ, ನಿಟ್ಟೂರು, ಸಿ ಎಸ್ ಪುರ ಭಾಗದಲ್ಲಿ ನಿರ್ಮಾಣ ಮಾಡಿದ್ದು ಅಂತರ್ಜಲ ವೃದ್ಧಿ ಹೆಚ್ಚಾಗಲು ಸಹಕಾರಿಯಾಗಿದೆ. ಕೇಂದ್ರ ಸರ್ಕಾರದ ವತಿಯಿಂದ ಇನ್ನಷ್ಟು ಚೆಕ್ ಡ್ಯಾಮ್ ನಿರ್ಮಾಣ ಮಾಡಲು ಸಹಕಾರ ನೀಡಿದರೆ ತಾಲೂಕಿನಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿಪಡಿಸಬಹುದು ಎಂದು ತಿಳಿಸಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿ ತಹಸೀಲ್ದಾರ್&zwnj; ಆರತಿ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ್&zwnj;, ಮುಖಂಡರಾದ ದಿಲೀಪ್&zwnj; ಕುಮಾರ್, ಚಂದ್ರಶೇಖರ್&zwnj;, ಕಳ್ಳಿಪಾಳ್ಯ ಲೋಕೇಶ್&zwnj; ಇತರರಿದ್ದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rs-6000-crore-action-plan-announced-for-bengaluru-tumakuru-four-lane-railway-line-v-somanna-mrq/articleshow-ge889mz"/>
        </item>
        <item>
            <title><![CDATA[ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು; ಚಿನ್ನದ ಪದಕ ನೀಡಬೇಕಾದ ಗುತ್ತಿಗೆದಾರ ನಾಪತ್ತೆ, ವಿದ್ಯಾರ್ಥಿಗಳಿಗೆ ನಿರಾಸೆ]]></title>
            <link>https://kannada.asianetnews.com/gallery/education/tumakuru-university-gold-medal-row-gives-cash-check-instead-of-gold-medal-student-outraged-rav-gelvpcm</link>
            <guid isPermaLink="true">https://kannada.asianetnews.com/gallery/education/tumakuru-university-gold-medal-row-gives-cash-check-instead-of-gold-medal-student-outraged-rav-gelvpcm</guid>
            <pubDate>Thu, 04 Jun 2026 11:42:32 +0530</pubDate>
            <description><![CDATA[&lt;p&gt;ತುಮಕೂರು ವಿಶ್ವವಿದ್ಯಾಲಯದ 19 ನೇ ಘಟಿಕೋತ್ಸವದಲ್ಲಿ ಗೋಲ್ಡ್ ಮೆಡಲಿಸ್ಟ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ಹಣದ ಚೆಕ್ ನೀಡಿರುವುದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿನ್ನದ ಪದಕ ತಯಾರಿಕೆ, ವಿತರಣೆಗೆ ಗುತ್ತಿಗೆ ನೀಡಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೊಬ್ಬರು ಹಣದೊಂದಿಗೆ ನಾಪತ್ತೆ!&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt8kp4y453vdtj3yhj0h6sth,imgname-----------------------2026-06-04t113130.241-1780553028548.jpg" type="image/jpeg" height="390" width="690"/>
            <content:encoded><![CDATA[&lt;p&gt;ತುಮಕೂರು ವಿಶ್ವವಿದ್ಯಾಲಯದ 19 ನೇ ಘಟಿಕೋತ್ಸವದಲ್ಲಿ ಗೋಲ್ಡ್ ಮೆಡಲಿಸ್ಟ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ಹಣದ ಚೆಕ್ ನೀಡಿರುವುದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿನ್ನದ ಪದಕ ತಯಾರಿಕೆ, ವಿತರಣೆಗೆ ಗುತ್ತಿಗೆ ನೀಡಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೊಬ್ಬರು ಹಣದೊಂದಿಗೆ ನಾಪತ್ತೆ!&lt;/p&gt;&lt;img&gt;&lt;p&gt;ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯುವ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯವರು ಮಾಡಿದ ಯಡವಟ್ಟಿನಿಂದ ನಿರಾಸೆ ಉಂಟು ಮಾಡಿದ್ದು ವಿದ್ಯಾರ್ಥಿಗಳ ಅಸಮಾಧಾನ, ಆಕ್ರೋಶ ವ್ಯಕ್ತವಾಗಿದೆ..&lt;/p&gt;&lt;p&gt;ಹೌದು ಹಲವು ವರ್ಷಗಳಿಂದ ಕಠಿಣ ಶ್ರಮವಹಿಸಿ ಅಧ್ಯಯನ ಮಾಡಿ ಇದೀಗ ಚಿನ್ನದ ಪದಕ ಪಡೆಯುವ ಹಿಗ್ಗಿನಲ್ಲಿದ್ದರು ವಿದ್ಯಾರ್ಥಿಗಳು. ಆದರೆ ವಿಶ್ವವಿದ್ಯಾಲಯದ ಬೇಜವಾಬ್ದಾರಿ ಯಡವಟ್ಟಿನಿಂದಾಗಿ ಕೊನೆ ಕ್ಷಣದಲ್ಲಿ ಚಿನ್ನದ ಪದಕದ ಬದಲಿಗೆ ಹಣದ ಚೆಕ್&zwnj;ಗಳನ್ನು ನೀಡಿ ಕೈತೊಳೆದುಕೊಂಡಿರುವ ಆರೋಪ ಕೇಳಿಬಂದಿದ್ದು, ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ...&lt;/p&gt;&lt;img&gt;&lt;p&gt;ಚಿನ್ನದ ಪದಕ ನೀಡಬೇಕಾದ ಗುತ್ತಿಗೆದಾರನೇ ನಾಪತ್ತೆ!&lt;/p&gt;&lt;p&gt;ತುಮಕೂರು ವಿವಿ ಆಡಳಿತ ಮಂಡಳಿಯು ಚಿನ್ನದ ಪದಕಗಳ ತಯಾರಿಕೆ ಮತ್ತು ವಿತರಣೆಗಾಗಿ ಮಧ್ಯಪ್ರದೇಶ ಮೂಲದ ವ್ಯಕ್ತಿಗೆ ಗುತ್ತಿಗೆ ನೀಡಲಾಗಿತ್ತು. ಸುಮಾರು 7 ಲಕ್ಷ 90 ಸಾವಿರ ರೂಪಾಯಿ ವೆಚ್ಚದಲ್ಲಿ 119 ಚಿನ್ನ ಲೇಪಿತ ಬೆಳ್ಳಿ ಪದಕಗಳನ್ನು ತಯಾರಿಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ ಘಟಿಕೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಗುತ್ತಿಗೆದಾರ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇದರ ಪರಿಣಾಮ ಪದಕಗಳು ವಿಶ್ವವಿದ್ಯಾಲಯಕ್ಕೆ ತಲುಪಲೇ ಇಲ್ಲ. ಆದ್ದರಿಂದ ಆಡಳಿತ ಮಂಡಳಿ ಪದಕಗಳ ಬದಲಿಗೆ ಹಣದ ಚೆಕ್ ನೀಡಿ ಕೈತೊಳೆದುಕೊಂಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;ಚಿನ್ನದ ಪದಕ ನೀಡುವ ಬದಲು ಹಣದ ಚೆಕ್ ನೀಡಿದ ವಿವಿ ಆಡಳಿತ ಮಂಡಳಿ ಕ್ರಮಕ್ಕೆ ವಿದ್ಯಾರ್ಥಿಗಳು ವೇದಿಕೆಯ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನಮಗೆ ಹಣ ಬೇಡ, ನಾವು ಗಳಿಸಿದ ಚಿನ್ನದ ಪದಕವೇ ಬೇಕು' ಎಂದು ಪಟ್ಟು ಹಿಡಿದರು. ಗುತ್ತಿಗೆದಾರನ ವಂಚನೆ, ತುಮಕೂರು ವಿವಿ ಆಡಳಿತ ಮಂಡಳಿ ಯಡವಟ್ಟಿನಿಂದಾಗಿ ನಮಗೆ ಅನ್ಯಾಯವಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟಿಕೋತ್ಸವದಲ್ಲಾದ ಈ ಘಟನೆ ಚರ್ಚೆಗೆ ಅನುಮಾನಕ್ಕೆ ಕಾರಣವಾಗಿದೆ.&lt;/p&gt;&lt;img&gt;&lt;p&gt;ತುಮಕೂರು ವಿವಿ ಆಡಳಿತ ಮಂಡಳಿ ಚಿನ್ನದ ಪದಕಗಳ ತಯಾರಿಕೆಗೆ ಮಧ್ಯಪ್ರದೇಶ ಮೂಲದ ವ್ಯಕ್ತಿಗೆ ಗುತ್ತಿಗೆ ನೀಡಿರುವುದು ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳು ಹೇಳುವಂತೆ, ಕರ್ನಾಟಕದಲ್ಲೇ ಹಲವು ಸಂಸ್ಥೆಗಳು, ಗುತ್ತಿಗೆದಾರರು ಲಭ್ಯವಿದ್ದರೂ ಅನ್ಯರಾಜ್ಯದ ವ್ಯಕ್ತಿಗೆ ಯಾವ ಆಧಾರದ ಮೇಲೆ ಗುತ್ತಿಗೆ ನೀಡಲಾಯಿತು?&amp;nbsp;&lt;/p&gt;&lt;img&gt;&lt;p&gt;ಆತನ ಹಿನ್ನೆಲೆ, ವಿಶ್ವಾಸಾರ್ಹತೆ ಪರಿಶೀಲಿಸಲಾಗಿತ್ತೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ. ಅಲ್ಲದೇ ಇಷ್ಟೊಂದು ಮಹತ್ವದ ಘಟಿಕೋತ್ಸವಕ್ಕೆ ಸಂಬಂಧಿಸಿದ ಕೆಲಸ ನೀಡುವಾಗ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಮುಂದಾಲೋಚನೆ ಮಾಡಿರಲಿಲ್ಲವೇ ಎಂಬ ಟೀಕೆಗಳೂ ವ್ಯಕ್ತವಾಗಿವೆ.&lt;/p&gt;&lt;img&gt;&lt;p&gt;ಇನ್ನೂ ಮಧ್ಯಪ್ರದೇಶ ಮೂಲದ ವ್ಯಕ್ತಿ ₹7.90 ಲಕ್ಷ ಮೊತ್ತದ ಗುತ್ತಿಗೆ ಪಡೆದು ಘಟಿಕೋತ್ಸವದ ಕೊನೆಯ ಕ್ಷಣದಲ್ಲಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುವುದು ಅನುಮಾನಗಳಿಗೆ ಮತ್ತಷ್ಟು ಎಡೆಮಾಡಿಕೊಟ್ಟಿದೆ. ಈ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಅಥವಾ ನಿರ್ಲಕ್ಷ್ಯ ನಡೆದಿದೆಯೇ ಎಂಬ ಅನುಮಾನವನ್ನು ಕೆಲ ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಗುತ್ತಿಗೆ ನೀಡಿದ ಪ್ರಕ್ರಿಯೆಯಿಂದ ಹಿಡಿದು ಹಣಕಾಸಿನ ವ್ಯವಹಾರಗಳವರೆಗೆ ಸಮಗ್ರ ತನಿಖೆ ನಡೆಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಘಟಿಕೋತ್ಸವದ ಸಂಭ್ರಮದ ದಿನವೇ ವಿದ್ಯಾರ್ಥಿಗಳಿಗೆ ನಿರಾಸೆಯಾಗಿರುವುದರಿಂದ ಈ ಪ್ರಕರಣದ ಸತ್ಯಾಂಶ ಹೊರಬರಬೇಕು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/education/tumakuru-university-gold-medal-row-gives-cash-check-instead-of-gold-medal-student-outraged-rav-gelvpcm"/>
        </item>
        <item>
            <title><![CDATA[ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ: ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!]]></title>
            <link>https://kannada.asianetnews.com/crime/tumakuru-student-dies-after-falling-into-water-pit-gvd/articleshow-ib586rm</link>
            <guid isPermaLink="true">https://kannada.asianetnews.com/crime/tumakuru-student-dies-after-falling-into-water-pit-gvd/articleshow-ib586rm</guid>
            <pubDate>Fri, 05 Jun 2026 21:12:23 +0530</pubDate>
            <description><![CDATA[&lt;p&gt;ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 9 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸೈಯದ್ ಸಾಬ್ ಪಾಳ್ಯದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktc6tdg07zrs9j6tvtxnykm3,imgname-chjc-1780673754624.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.05): &lt;/strong&gt;ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 9 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಸೈಯದ್ ಸಾಬ್ ಪಾಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಮನ್ (9) ಎಂದು ಗುರುತಿಸಲಾಗಿದೆ. ಆತ ಮತ್ತಿಘಟ್ಟ ಸರ್ಕಾರಿ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.&lt;/p&gt;&lt;p&gt;ಇಂದು ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ರಾಮನ್, ಬ್ಯಾಗ್ ಇಟ್ಟು ಸ್ನೇಹಿತರೊಂದಿಗೆ ಆಟವಾಡಲು ತೆರಳಿದ್ದ. ಈ ವೇಳೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮೀಪದ ನೀರಿನ ಹೊಂಡಕ್ಕೆ ಬಿದ್ದಿದ್ದಾನೆ. ರಾಮನ್ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜೊತೆಯಲ್ಲಿದ್ದ ಸ್ನೇಹಿತರು ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಧಾವಿಸಿ ಬಾಲಕನನ್ನು ನೀರಿನಿಂದ ಹೊರತೆಗೆದಿದ್ದಾರೆ.&lt;/p&gt;&lt;h2&gt;&lt;strong&gt;ಪ್ರಕರಣ ದಾಖಲು&lt;/strong&gt;&lt;/h2&gt;&lt;p&gt;ಆ ವೇಳೆ ಬಾಲಕನಲ್ಲಿ ಉಸಿರಾಟ ಇತ್ತಾದರೂ, ಹೆಚ್ಚಿನ ಚಿಕಿತ್ಸೆಗೆ ತಿಪಟೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾಲಕನ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/tumakuru-student-dies-after-falling-into-water-pit-gvd/articleshow-ib586rm"/>
        </item>
        <item>
            <title><![CDATA[ಪ್ರೀತಿ ವಿಚಾರಕ್ಕೆ 17ರ ಮಗಳನ್ನೇ ಕೊಂದ ಪಾಪಿ ತಂದೆ! ಶವ ಹೂತು ಹಾಕಿ ತಿಂಗಳ ಕಾಲ ನಾಟಕವಾಡಿದ್ದ ಆರೋಪಿ ಅರೆಸ್ಟ್]]></title>
            <link>https://kannada.asianetnews.com/karnataka-districts/tumakuru-honor-killing-case-father-thimmarayappa-arrested-for-daughter-s-murder-sat/articleshow-m1uuc4x</link>
            <guid isPermaLink="true">https://kannada.asianetnews.com/karnataka-districts/tumakuru-honor-killing-case-father-thimmarayappa-arrested-for-daughter-s-murder-sat/articleshow-m1uuc4x</guid>
            <pubDate>Sun, 17 May 2026 16:22:20 +0530</pubDate>
            <description><![CDATA[ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ, ಪ್ರೀತಿಯ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ ತಂದೆಯೊಬ್ಬ ತನ್ನ 17 ವರ್ಷದ ಮಗಳನ್ನು ಹತ್ಯೆ ಮಾಡಿದ್ದಾನೆ. ಒಂದು ತಿಂಗಳ ನಂತರ, ಪೊಲೀಸರ ತನಿಖೆಯಿಂದ ಈ ಘೋರ ಕೃತ್ಯ ಬಯಲಾಗಿದ್ದು, ಜಮೀನಿನ ಬಳಿ ಹೂತಿದ್ದ ಮೃತದೇಹವನ್ನು ಹೊರತೆಗೆಯಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krtrx4q6wvefyqy5ymp26ypa,imgname-tumakuru-news-1779014996710.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ 17): ಮ&lt;/strong&gt;ಕ್ಕಳ ರಕ್ಷಣೆಗೆ ನಿಲ್ಲಬೇಕಾದ ತಂದೆಯೇ ಕಾಲಾಂತಕನಾದ ಘೋರ ಘಟನೆಯೊಂದು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಯ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಂದೆ, ತನ್ನ 17 ವರ್ಷದ ಮಗಳನ್ನು ಹತ್ಯೆ ಮಾಡಿ, ಜಮೀನಿನ ಪಕ್ಕದ ಹಳ್ಳದಲ್ಲಿ ಹೂತು ಹಾಕಿದ್ದ ಆತಂಕಕಾರಿ ವಿಷಯ ಈಗ ಬಯಲಾಗಿದೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಕೊಲೆಯಾದ ಯುವತಿಯನ್ನು ಮೇಘನಾ (17) ಎಂದು ಗುರುತಿಸಲಾಗಿದೆ. ಈಕೆಯ ತಂದೆ ತಿಮ್ಮರಾಯಪ್ಪ (48) ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಹಂತಕ. ಮೇಘನಾ ತನ್ನ ತಾಯಿಯ ಸಂಬಂಧಿಕರ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಆದರೆ, ಈ ಪ್ರೇಮ ಸಂಬಂಧಕ್ಕೆ ತಂದೆ ತಿಮ್ಮರಾಯಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಮನೆಯಲ್ಲಿ ಈ ವಿಚಾರವಾಗಿ ಹಲವು ಬಾರಿ ಗಲಾಟೆಗಳೂ ನಡೆದಿದ್ದವು.&lt;/p&gt;&lt;h3&gt;&lt;strong&gt;ಏಪ್ರಿಲ್ 16 ರಂದು ನಡೆದಿದ್ದ ಘೋರ ಕೃತ್ಯ:&lt;/strong&gt;&lt;/h3&gt;&lt;p&gt;ಮಗಳ ಹಠಕ್ಕೆ ಬೇಸತ್ತಿದ್ದ ತಿಮ್ಮರಾಯಪ್ಪ, ಕಳೆದ ಏಪ್ರಿಲ್ 16 ರಂದೇ ಮೇಘನಾಳನ್ನು ಕೊಲೆ ಮಾಡಿದ್ದ. ಯಾರಿಗೂ ಸಂಶಯ ಬಾರದಂತೆ ತನ್ನ ಜಮೀನಿನ ಪಕ್ಕದಲ್ಲೇ ಇರುವ ಸರ್ಕಾರಿ ಹಳ್ಳವೊಂದರಲ್ಲಿ ಮಗಳ ಶವವನ್ನು ಹೂತು ಹಾಕಿದ್ದ. ಮಗಳು ಮನೆಗೆ ಬಾರದೇ ಇದ್ದಾಗ, ಏನೂ ಅರಿಯದವನಂತೆ ನಾಟಕವಾಡಿದ್ದ ಈತ, ಬಳಿಕ ಮಗಳ ಮಿಸ್ಸಿಂಗ್ ಕೇಸ್ ದಾಖಲಾಗುವಂತೆ ನೋಡಿಕೊಂಡಿದ್ದ.&lt;/p&gt;&lt;h2&gt;&lt;strong&gt;ಪೊಲೀಸರ ತನಿಖೆ ಮತ್ತು ಬಯಲಾದ ಸತ್ಯ:&lt;/strong&gt;&lt;/h2&gt;&lt;p&gt;ಮೇಘನಾ ನಾಪತ್ತೆಯಾಗಿರುವ ಕುರಿತು ಆಕೆಯ ತಾಯಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದಾಗ ತಿಮ್ಮರಾಯಪ್ಪನ ವರ್ತನೆ ಮೇಲೆ ಅನುಮಾನ ವ್ಯಕ್ತವಾಗಿತ್ತು. ಪೊಲೀಸರು ವಿಚಾರಣೆಗೆ ಕರೆದಾಗ ಗಾಬರಿಗೊಂಡ ತಿಮ್ಮರಾಯಪ್ಪ, ನಾಪತ್ತೆಯಾಗಿದ್ದ. ಸುಮಾರು ಒಂದು ತಿಂಗಳ ಕಾಲ ತಿರುಪತಿ, ಧರ್ಮಸ್ಥಳ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಇತ್ತ ಪತಿಯೂ ನಾಪತ್ತೆಯಾದ ಹಿನ್ನೆಲೆಯಲ್ಲಿ ಪತ್ನಿ ಮತ್ತೆ ಕಳ್ಳಂಬೆಳ್ಳ ಠಾಣೆಗೆ ಪತಿ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದರು. ಈ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ತಿಮ್ಮರಾಯಪ್ಪನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಮಗಳನ್ನು ಕೊಲೆ ಮಾಡಿದ ಸತ್ಯವನ್ನು ಆತ ಒಪ್ಪಿಕೊಂಡಿದ್ದಾನೆ.&lt;/p&gt;&lt;h3&gt;&lt;strong&gt;ತಿಂಗಳ ಬಳಿಕ ಹೊರಬಂತು ಮೃತದೇಹ:&lt;/strong&gt;&lt;/h3&gt;&lt;p&gt;ಕೊಲೆಯಾಗಿ ಒಂದು ತಿಂಗಳ ಬಳಿಕ ಪ್ರಕರಣ ಬಯಲಾಗಿದ್ದು, ಇಂದು ಶಿರಾ ತಹಸೀಲ್ದಾರ್ ಸಮ್ಮುಖದಲ್ಲಿ ಹೂತು ಹಾಕಿದ್ದ ಮೃತದೇಹವನ್ನು ಹೊರತೆಗೆಯಲಾಯಿತು. ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. 'ಗೌರವ'ದ ಹೆಸರಿನಲ್ಲಿ ಹೆತ್ತ ಮಗಳನ್ನೇ ಬಲಿಪಡೆದ ತಂದೆಯ ಕ್ರೌರ್ಯಕ್ಕೆ ಜಿಲ್ಲೆಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಳ್ಳಂಬೆಳ್ಳ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-honor-killing-case-father-thimmarayappa-arrested-for-daughter-s-murder-sat/articleshow-m1uuc4x"/>
        </item>
        <item>
            <title><![CDATA[ತುಮಕೂರಿನಲ್ಲಿ ಇನ್ನೋವಾ-ಓಮ್ನಿ ಮುಖಾಮುಖಿ ಡಿಕ್ಕಿ: ಟೆಕ್ಕಿ ರವಿ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ!]]></title>
            <link>https://kannada.asianetnews.com/karnataka-districts/tumakuru-innova-omni-horrific-collision-near-huliyar-techie-family-3-killed-on-spot-sat/articleshow-seg0v9v</link>
            <guid isPermaLink="true">https://kannada.asianetnews.com/karnataka-districts/tumakuru-innova-omni-horrific-collision-near-huliyar-techie-family-3-killed-on-spot-sat/articleshow-seg0v9v</guid>
            <pubDate>Thu, 04 Jun 2026 19:10:58 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಬಳಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರ ಮೂಲದ ಸಾಫ್ಟ್&zwnj;ವೇರ್ ಇಂಜಿನಿಯರ್ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt9dqw2zf548a189fjsrrtsw,imgname-tumakuru-car-accident-1780580347999.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.04): ತು&lt;/strong&gt;ಮಕೂರು ಜಿಲ್ಲೆಯ ಗಡಿಭಾಗದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ಎರಡು ಕಾರುಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಮೃತರ ಹಿನ್ನೆಲೆ ಮತ್ತು ಅಪಘಾತದ ವಿವರ:&lt;/strong&gt;&lt;/h2&gt;&lt;p&gt;ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಕೆರೆ ಬಳಿ ಈ ಭೀಕರ ದುರಂತ ನಡೆದಿದೆ. ಮೃತ ದುರ್ದೈವಿಗಳನ್ನು ಆಂಧ್ರಪ್ರದೇಶದ ಆದೋನಿ ಮೂಲದ ಸಾಫ್ಟ್&zwnj;ವೇರ್ ಇಂಜಿನಿಯರ್ ರವಿ ಎಂಬುವವರ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಟೆಕ್ಕಿ ರವಿ ಅವರು ತಮ್ಮ ಹೆಂಡತಿ, ತಂದೆ, ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಕುಟುಂಬವು ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಓಮ್ನಿ ಕಾರು ಇನೋವಾಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.&lt;/p&gt;&lt;p&gt;ಡಿಕ್ಕಿಯಾದ ರಭಸ ಎಷ್ಟು ತೀವ್ರವಾಗಿತ್ತೆಂದರೆ, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಈ ಘೋರ ಅಪಘಾತದಲ್ಲಿ ಕಾರಿನಲ್ಲಿದ್ದ ರವಿ ಅವರ ಹೆಂಡತಿ, ತಾಯಿ ಹಾಗೂ ತಂದೆ ತೀವ್ರ ರಕ್ತಸ್ರಾವದಿಂದಾಗಿ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;&lt;strong&gt;ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ರವಾನೆ:&lt;/strong&gt;&lt;/h2&gt;&lt;p&gt;ಇನ್ನು ಕಾರಿನಲ್ಲಿದ್ದ ಇಬ್ಬರು ಅಪ್ರಾಪ್ತ ಮಕ್ಕಳು ಹಾಗೂ ಮತ್ತೊಬ್ಬರು ಸೇರಿದಂತೆ ಒಟ್ಟು ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಡಿಕ್ಕಿ ಹೊಡೆದ ಚಿಕ್ಕನಾಯಕನಹಳ್ಳಿಯ ಎಳನಾಡು ಮೂಲದ ಓಮ್ನಿ ಕಾರು ಚಾಲಕನಿಗೂ ಕೂಡ ಗಂಭೀರ ಗಾಯಗಳಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;&lt;strong&gt;ಸ್ಥಳಕ್ಕೆ ಪೊಲೀಸರ ಭೇಟಿ:&lt;/strong&gt;&lt;/h2&gt;&lt;p&gt;ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಹುಳಿಯಾರು ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸಹಾಯದಿಂದ ಜರ್ಜರಿತವಾಗಿದ್ದ ಕಾರುಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸದ್ಯ ಮೃತದೇಹಗಳನ್ನು ಹುಳಿಯಾರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.&lt;/p&gt;&lt;p&gt;ಅಪಘಾತದ ಭೀಕರತೆಗೆ ರಸ್ತೆಯುದ್ದಕ್ಕೂ ರಕ್ತದ ಮಡುವಿನಂತಾಗಿದ್ದು, ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಆಂಧ್ರ ಮೂಲದ ಸಾಫ್ಟ್&zwnj;ವೇರ್ ಇಂಜಿನಿಯರ್ ಕುಟುಂಬದಲ್ಲಿ ನಡೆದ ಈ ಕರುಣಾಜನಕ ಘಟನೆ ಇಡೀ ಭಾಗದಲ್ಲಿ ತೀವ್ರ ಕಣ್ಣೀರು ತರಿಸಿದೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-innova-omni-horrific-collision-near-huliyar-techie-family-3-killed-on-spot-sat/articleshow-seg0v9v"/>
        </item>
        <item>
            <title><![CDATA['ಎಲ್ಲಿ ಬಂದಿದೆ ಮೋದಿ ಸರ್ಕಾರದ ಅಚ್ಛೇ ದಿನ?' ಗುಜರಾತ್‌ ಮಾದರಿ ಟೊಳ್ಳು, ಕರ್ನಾಟಕ ಮಾದರಿ ಆಡಳಿತವೇ ಉತ್ತಮ: ಸಿಎಂ]]></title>
            <link>https://kannada.asianetnews.com/politics/tumakuru-congress-samavesha-2026-cm-siddaramaiah-speech-details-rav/articleshow-sxo3714</link>
            <guid isPermaLink="true">https://kannada.asianetnews.com/politics/tumakuru-congress-samavesha-2026-cm-siddaramaiah-speech-details-rav/articleshow-sxo3714</guid>
            <pubDate>Wed, 20 May 2026 04:41:21 +0530</pubDate>
            <description><![CDATA[&lt;p&gt;ತುಮಕೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು 'ಕರ್ನಾಟಕ ಮಾದರಿ'ಯನ್ನು ಶ್ಲಾಘಿಸಿ, 'ಗುಜರಾತ್ ಮಾದರಿ'ಯನ್ನು ಟೀಕಿಸಿದರು. ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಶ್ಲಾಘಿಸಿದ ಅವರು, ಕೇಂದ್ರ ಸರ್ಕಾರದ ವೈಫಲ್ಯಗಳು ಮತ್ತು ಬೆಲೆ ಏರಿಕೆಯನ್ನು ಖಂಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks17j5scz3h66kptmfbga5xk,imgname-----------------------2026-05-20t043055.068-1779231692588.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ.20): &lt;/strong&gt;&lsquo;ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು&rsquo; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.&lt;/p&gt;&lt;p&gt;ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.&lt;/p&gt;&lt;p&gt;ಕಳೆದ 35 ವರ್ಷಗಳಿಂದ ಗುಜರಾತ್&zwnj;ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮೊನ್ನೆಯಷ್ಟೇ ಕೇವಲ ₹2000 ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಮಗಳ ಮೇಲೆ ಮನೆಯ ಮಾಲೀಕ ಅತ್ಯಾ೧ಚಾರ ಎಸಗಿರುವ ಘಟನೆ ನಡೆದಿದೆ. ಇದು ನಿಜವಾದ ಗುಜರಾತ್ ಮಾದರಿ ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;ಚುನಾವಣಾ ಪೂರ್ವದಲ್ಲಿ ನಾವು ರಾಜ್ಯದ ಜನತೆಗೆ ನೀಡಿದ್ದ ವಚನದಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದೊಳಗೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆಗಳು ನಾಡಿನ ಆರ್ಥಿಕತೆಗೆ ಅಪಾಯವಾಗಲಿವೆ ಎಂಬ ಹಲವರ ಮಾತುಗಳು ಹುಸಿಯಾಗಿ, ಕರ್ನಾಟಕ ಇಂದು ದೇಶದ ತಲಾದಾಯದಲ್ಲಿ ನಂಬರ್ ಒನ್ ಸ್ಥಾನಕ್ಕೆ ತಲುಪಿದೆ. ಕಳೆದ ಮೂರು ವರ್ಷಗಳಲ್ಲಿ ನಾವು ಗ್ಯಾರಂಟಿಗಳ ಮೂಲಕ ನವ ಕರ್ನಾಟಕ ಕಟ್ಟಿದ್ದೇವೆ ಎಂದು ಹೇಳಿದರು. ನಾವು ನುಡಿದಂತೆ ನಡೆದಿರುವುದರಿಂದ ಮತ್ತೆ 2028ರ ವಿಧಾನಸಭಾ ಚುನಾವಣೆಯಲ್ಲೂ ನಾವೇ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರ.&lt;/p&gt;&lt;p&gt;ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು? ಈಗ ಅದು ಆಕಾಶಕ್ಕೆ ಏರಿದೆ. ಟ್ರಂಪ್ ಅವರ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡರು. ಈಗ ಅವರ ಆಸ್ತಿ ₹8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದೆ. ಮೋದಿ, ಮೋದಿ ಎಂದು ಕುಣಿಯುತ್ತಿದ್ದ ಭಾರತದ ಬಡ ಜನರು ಮತ್ತು ಮಧ್ಯಮ ವರ್ಗದವರಿಗೆ ಭ್ರಮನಿರಸನವಾಗಿದೆ ಎಂದರು.&lt;/p&gt;&lt;p&gt;ನೀಟ್ ಪರೀಕ್ಷೆ ರದ್ದು ಮಾಡಿ 22 ಲಕ್ಷ ವಿದ್ಯಾರ್ಥಿಗಳ&zwnj; ಭವಿಷ್ಯದ ಜೊತೆ ಚೆಲ್ಲಾಟ ಆಡಿದ್ದಾರೆ. ನೀಟ್&zwnj; ಪರೀಕ್ಷೆ ರದ್ದಾಗಿದ್ದರಿಂದ ಕೆಲ ವಿದ್ಯಾರ್ಥಿಗಳು ಆತ್ಮ೧ಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಮೋದಿ ಸರ್ಕಾರವೇ ಕಾರಣ. ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆ ತಿರಸ್ಕರಿಸಿ, ನೀಟ್ ನಲ್ಲಿ ಅಧ್ವಾನ ಮಾಡಿದ್ದಾರೆ ಎಂದು ಆರೋಪಿಸಿದರು.&lt;/p&gt;&lt;p&gt;ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯ ಅಚ್ಚೇ ದಿನ್&zwnj; ಬರಲಿಲ್ಲ. ರೈತರ ಆದಾಯವನ್ನೂ ದುಪ್ಪಟ್ಟು ಮಾಡಲಿಲ್ಲ. ವಿದೇಶದಿಂದ ಕಪ್ಪು ಹಣವನ್ನು ವಾಪಸ್&zwnj; ತರಲಿಲ್ಲ. ದೇಶದ ಸಾಲವನ್ನು ₹220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು.&lt;/p&gt;&lt;h2&gt;250ಕ್ಕೂ ಹೆಚ್ಚು ಭರವಸೆ ಈಡೇರಿಕೆ:&lt;/h2&gt;&lt;p&gt;ಕಳೆದ ಚುನಾವಣೆ ವೇಳೆ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಸಿದ್ಧಗೊಂಡಿದ್ದ ಪ್ರಣಾಳಿಕೆಯಲ್ಲಿ ಒಟ್ಟು 592 ಭರವಸೆಗಳನ್ನು ಜನರಿಗೆ ನೀಡಲಾಗಿತ್ತು. ಆ ಪೈಕಿ ಈಗಾಗಲೇ 250ಕ್ಕೂ ಹೆಚ್ಚು ಭರವಸೆಗಳನ್ನು ಸರ್ಕಾರ ಯಶಸ್ವಿಯಾಗಿ ಈಡೇರಿಸಿದ್ದು, ಉಳಿದ ಭರವಸೆಗಳನ್ನೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.&lt;/p&gt;&lt;p&gt;2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಅಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದಿದ್ದರೂ ಸಾರ್ವಜನಿಕರ ಹಿತದೃಷ್ಟಿಯಿಂದ ಸುಮಾರು 30ಕ್ಕೂ ಹೆಚ್ಚು ಆದ್ಯತಾ ಕಾರ್ಯಕ್ರಮಗಳನ್ನು ಜಾರಿಗೆ ತಂದ ಇತಿಹಾಸ ನಮ್ಮ ಸರ್ಕಾರದ್ದು ಎಂದು ಅವರು ಸ್ಮರಿಸಿಕೊಂಡರು.&lt;/p&gt;&lt;h3&gt;ಒಂದೇ ವರ್ಷದಲ್ಲಿ ಗ್ಯಾರಂಟಿ ಜಾರಿ:&lt;/h3&gt;&lt;p&gt;ಸ್ವತಃ ದೇಶದ ಪ್ರಧಾನಿ ಮೋದಿ ಸೇರಿ ವಿರೋಧ ಪಕ್ಷದವರು ನಮ್ಮ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದರು. ಇವನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ, ಒಂದು ವೇಳೆ ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಮತ್ತು ಅಭಿವೃದ್ಧಿ ಕೆಲಸಗಳಿಗೆ ಹಣವಿರುವುದಿಲ್ಲ ಎಂದು ಟೀಕಿಸಿದ್ದರು. ಆದರೆ, ನಾವು ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಈ ಎಲ್ಲಾ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದೇವೆ. ಇದಕ್ಕಾಗಿ ರಾಜ್ಯ ಸರ್ಕಾರ ಈವರೆಗೆ ₹1.40 ಲಕ್ಷ ಕೋಟಿ ವೆಚ್ಚ ಮಾಡಿದೆ. ಅಲ್ಲದೆ, ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದೇವೆ ಎಂದು ತಿಳಿಸಿದರು.&lt;/p&gt;&lt;p&gt;ನಾವು ನುಡಿದಂತೆ ನಡೆದಿದ್ದೇವೆ. ತಲಾದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿ ಇದ್ದಾರೆ. ಇಡೀ ದೇಶದ ಜಿಎಸ್&zwnj;ಟಿಗೆ ನಮ್ಮ ಕೊಡುಗೆಯೇ ಅಪಾರವಾಗಿದೆ. ದೇಶದ ತಲಾದಾಯಕ್ಕಿಂತ ರಾಜ್ಯದ ತಲಾದಾಯ ಹೆಚ್ಚಾಗಿರುವ ರೀತಿಯಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ ಎಂದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/tumakuru-congress-samavesha-2026-cm-siddaramaiah-speech-details-rav/articleshow-sxo3714"/>
        </item>
        <item>
            <title><![CDATA[ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಘೋಷಿಸಿ: ಸಿಎಂಗೆ ಪರಮೇಶ್ವರ್ ಮನವಿ]]></title>
            <link>https://kannada.asianetnews.com/karnataka-districts/tumakuru-to-become-bengaluru-north-district-dr-g-parameshwar-request-gvd/articleshow-td4g1uv</link>
            <guid isPermaLink="true">https://kannada.asianetnews.com/karnataka-districts/tumakuru-to-become-bengaluru-north-district-dr-g-parameshwar-request-gvd/articleshow-td4g1uv</guid>
            <pubDate>Wed, 20 May 2026 22:26:14 +0530</pubDate>
            <description><![CDATA[&lt;p&gt;ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಘೋಷಿಸುವಂತೆ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ತುಮಕೂರು ಜಿಲ್ಲೆಯನ್ನು ಬೆಂಗಳೂರಿನ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kae1dej7gsearqqt8xcp80jg,imgname-dr-g-parameshwar-1763555326535.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ.20): &lt;/strong&gt;ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಘೋಷಿಸುವಂತೆ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ತುಮಕೂರು ಜಿಲ್ಲೆಯನ್ನು ಬೆಂಗಳೂರಿನ ಒಂದು ಭಾಗವಾಗಿ ಮಾಡಲು ವಿನಂತಿ ಮಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಿದಂತೆ ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವಂತೆ ಮನವಿ ಮಾಡುತ್ತೇನೆ. ಮುಂದೆ ತುಮಕೂರು ಬೆಂಗಳೂರಿನ ಒಂದು ಭಾಗವಾಗಲಿದೆ ಎಂದರು.&lt;/p&gt;&lt;p&gt;ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಬಡವರು, ರೈತರು, ಕಾರ್ಮಿಕರು ಮತ್ತು ಶೋಷಿತರ ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದಕ್ಕಾಗಿ ಈ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ ₹2 ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.&lt;/p&gt;&lt;p&gt;ಹಲವು ದಶಕಗಳಿಂದ ರಾಜ್ಯದ ಹಟ್ಟಿ, ತಾಂಡ, ಮಜರೆ ಗ್ರಾಮಗಳು ಕಂದಾಯ ಗ್ರಾಮಗಳಾಗದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದರು. ಇದನ್ನು ರಾಜ್ಯ ಕಂದಾಯ ಇಲಾಖೆ ಆದ್ಯತೆ ಕಾರ್ಯಕ್ರಮವಾಗಿ ತೆಗೆದುಕೊಂಡು 14 ಲಕ್ಷಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ರಾಜ್ಯದಲ್ಲಿ ವಿತರಿಸಿದೆ. ತುಮಕೂರು ಜಿಲ್ಲೆಯೊಂದರಲ್ಲೇ 22 ಸಾವಿರ ಕಂದಾಯ ಗ್ರಾಮಗಳ ಹಕ್ಕು ಪತ್ರಗಳನ್ನು ನೀಡುವ ಮೂಲಕ ಇಂದು ಗಿನ್ನಿಸ್ ದಾಖಲೆ ಸೃಷ್ಟಿಸಲಾಗಿದೆ ಎಂದು ಅವರು ತಿಳಿಸಿದರು.&lt;/p&gt;&lt;p&gt;ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ 650 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ನೀಡಿ ಇಂದು ಮತ್ತೊಂದು ದಾಖಲೆ ಸೃಷ್ಟಿಸಿದೆ ಎಂದು ತಿಳಿಸಿದರು. ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, ವಿದೇಶಿ ನೇರ ಹೂಡಿಕೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ ₹10 ಲಕ್ಷದ, 24 ಸಾವಿರ ಕೋಟಿ ಬಂಡವಾಳ ಹರಿದುಬಂದಿದೆ ಎಂದು ತಿಳಿಸಿದರು.&lt;/p&gt;&lt;p&gt;ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ನೀಡಿದ ಪ್ರತಿಯೊಂದು ಮಾತನ್ನು ಉಳಿಸಿಕೊಂಡಿದ್ದಾರೆ ಎಂದರು. ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಕಳೆದ 16 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಾಗೂ ಅಸಾಧ್ಯವೆನಿಸಿದ್ದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳನ್ನು ಇಂದು ಜನರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಕಂದಾಯ ಇಲಾಖೆಯು ಒಂದು ಕ್ರಾಂತಿಕಾರಿ ಬದಲಾವಣೆ ತರಲಾಗಿದೆ ಎಂದರು.&lt;/p&gt;&lt;p&gt;ಕಂದಾಯ ಇಲಾಖೆಯಲ್ಲಿ ಬಾವಿಯ ಆಳದಷ್ಟೇ ಕೆಲಸಗಳಿರುತ್ತವೆ. ಎಷ್ಟೇ ಕೆಲಸ ಮಾಡಿದರೂ ಇನ್ನೂ ಮಾಡಬೇಕಾದದ್ದು ಬಾಕಿ ಇರುತ್ತದೆ. ಸಾರ್ವಜನಿಕರ ಪ್ರೋತ್ಸಾಹ ಮತ್ತು ಶಕ್ತಿಯಿಂದ ಬಾಕಿ ಉಳಿದಿರುವ ಎಲ್ಲಾ ಕಂದಾಯ ಸೇವೆಗಳನ್ನು ಶೀಘ್ರದಲ್ಲೇ ಜನರ ಬಾಗಿಲಿಗೆ ತಲುಪಿಸಲು ನಮ್ಮ ಇಲಾಖೆ ಬದ್ಧವಾಗಿದೆ. ವಿಧಾನಸೌಧದಲ್ಲಿ ನಮಗೆ ದೊರೆತಿರುವ ಅಧಿಕಾರವು ಕೇವಲ ಆಡಳಿತ ನಡೆಸುವುದಕ್ಕಾಗಿ ಅಲ್ಲ. ಬದಲಿಗೆ ಸಾರ್ವಜನಿಕರ ಸೇವೆಗಾಗಿ ಎಂಬುದನ್ನು ಅರಿತಿದ್ದೇವೆ ಎಂದರು.&lt;/p&gt;&lt;h2&gt;&lt;strong&gt;ಐತಿಹಾಸಿಕ ಕಾರ್ಯ ಯಶಸ್ವಿ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿನ ಲಂಬಾಣಿ ತಾಂಡಗಳು, ಗೊಲ್ಲರಹಟ್ಟಿ ಹಾಗೂ ನಾಯಕರ ಹಟ್ಟಿಗಳ ನಿವಾಸಿಗಳಿಗೆ ಶಾಶ್ವತ ನೆಲೆಯನ್ನು ತಲುಪಿಸುವ ನಿಟ್ಟಿನಲ್ಲಿ ಸರ್ಕಾರವು ಆಂದೋಲನದ ರೂಪದಲ್ಲಿ ಅವರ ಮನೆ ಬಾಗಿಲಿಗೆ ಹೋಗಿ ಹಕ್ಕುಪತ್ರ ವಿತರಿಸುವ ಐತಿಹಾಸಿಕ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಹಿಂದೆ ಕೃಷಿ ಹಾಗೂ ಕೂಲಿ ಕಾರ್ಮಿಕರಾಗಿ ಊರಿನ ಹೊರಗಿನ ವಸತಿ ಪ್ರದೇಶಗಳಲ್ಲಿ ಜನರು ವಾಸಿಸುತ್ತಿದ್ದರು. ಅವರಿಗೆ ಯಾವುದೇ ಹಕ್ಕುಪತ್ರ ಇರಲಿಲ್ಲ. ಇಂದು ಕೃಷಿ ಮತ್ತು ಕೂಲಿ ಕಾರ್ಮಿಕರಿಗೆ ಹಕ್ಕುಪತ್ರವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು.&lt;/p&gt;&lt;p&gt;ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭಕ್ಕೆ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸಿದ್ಧಪಡಿಸಿದ್ದ ಸರ್ಕಾರದ 3 ವರ್ಷಗಳ ಸಾಧನೆಗಳನ್ನು ಬಿಂಬಿಸುವ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು, ಕಂದಾಯ ಇಲಾಖೆಯ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳ ವಿತರಣೆಯ ಮಾಹಿತಿಯನ್ನು ಒಳಗೊಂಡ ಬೃಹತ್ ವಸ್ತುಪ್ರದರ್ಶನವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿತ್ತು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/tumakuru-to-become-bengaluru-north-district-dr-g-parameshwar-request-gvd/articleshow-td4g1uv"/>
        </item>
        <item>
            <title><![CDATA[ಆ ಒಂದು ಕಾರಣಕ್ಕೆ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಏಕಾಏಕಿ 20ರಿಂದ 19ಕ್ಕೆ ಶಿಫ್ಟ್!]]></title>
            <link>https://kannada.asianetnews.com/state/karnataka-govt-sadhana-samavesha-event-shifted-to-may-19-rav/articleshow-to3vw4t</link>
            <guid isPermaLink="true">https://kannada.asianetnews.com/state/karnataka-govt-sadhana-samavesha-event-shifted-to-may-19-rav/articleshow-to3vw4t</guid>
            <pubDate>Sat, 16 May 2026 10:16:12 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶ ತುಮಕೂರಿನಲ್ಲಿ ಆಯೋಜನೆ. ಕೆಎಸ್&zwnj;ಆರ್&zwnj;ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ, ಮೇ 20ರಂದು ನಡೆಯಬೇಕಿದ್ದ 'ಸಾರ್ಥಕ ಸೇವೆಗಳ ಸಮರ್ಪಣೆ' ಕಾರ್ಯಕ್ರಮ ಮೇ 19ಕ್ಕೆ ಬದಲಾಯಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krqhbr2ztjg8gj31t2yd98w4,imgname-----------------------2026-05-16t100954.700-1778906423391.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಮೇ.16): &lt;/strong&gt;ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ 3 ವರ್ಷಗಳು ತುಂಬಲಿದೆ. ಅದರ ಅಂಗವಾಗಿ ತುಮಕೂರಿನಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅದಕ್ಕೆ ಮುನ್ನಾ ದಿನ 19ಕ್ಕೆ ಅಧಿಕೃತವಾಗಿ ಕಾರ್ಯಕ್ರಮ ನಿಗದಿಯಾಗಿದೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್&zwnj; ಅವರು ತಿಳಿಸಿದ್ದಾರೆ.&lt;/p&gt;&lt;p&gt;ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಮಾತನಾಡಿ, ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಜನಸಮುದಾಯದೊಂದಿಗೆ ಹಂಚಿಕೊಳ್ಳಬೇಕಿತ್ತು. 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 2ನೇ ಅವಧಿಯ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಸಂದ ಹಿನ್ನೆಲೆಯಲ್ಲಿ ಆ ದಿನದಂದು ಕಾರ್ಯಕ್ರಮ ಆಯೋಜಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅದಕ್ಕೆ ಮುನ್ನಾ ದಿನ 19ರಂದೇ ಕಾರ್ಯಕ್ರಮ ಆಯೋಜಿಸಲು ಮುಖ್ಯಮಂತ್ರಿಯವರು ಸೂಚಿಸಿದ ಹಿನ್ನೆಲೆಯಲ್ಲಿ ದಿನಾಂಕ ಮಾತ್ರ ಬದಲಾಗಿದೆ. ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವ ಯೋಜಿತದಂತೆ ನಡೆಯಲಿವೆ ಎಂದು ವಿವರಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-govt-sadhana-samavesha-event-shifted-to-may-19-rav/articleshow-to3vw4t"/>
        </item>
        <item>
            <title><![CDATA[ತುಮಕೂರು ಜಿಲ್ಲೆಯ ಗುಬ್ಬಿ ಬಳಿ HALಗೆ 300 ಎಕರೆ ಜಾಗ: ಸಚಿವ ಡಾ. ಜಿ. ಪರಮೇಶ್ವರ್]]></title>
            <link>https://kannada.asianetnews.com/karnataka-districts/300-acres-of-land-for-hal-near-gubbi-in-tumakuru-district-says-home-minister-dr-g-parameshwara-mrq/articleshow-v2ndwoh</link>
            <guid isPermaLink="true">https://kannada.asianetnews.com/karnataka-districts/300-acres-of-land-for-hal-near-gubbi-in-tumakuru-district-says-home-minister-dr-g-parameshwara-mrq/articleshow-v2ndwoh</guid>
            <pubDate>Sun, 24 May 2026 17:08:43 +0530</pubDate>
            <description><![CDATA[ಗೃಹ ಸಚಿವ ಡಾ.ಜಿ. ಪರಮೇಶ್ವರ್ ತುಮಕೂರಿನಲ್ಲಿ ಹಲವು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಗುಬ್ಬಿ ಬಳಿ ಎಚ್&zwnj;ಎಎಲ್&zwnj;ಗೆ 300 ಎಕರೆ ಜಾಗ, ಬೆಂಗಳೂರು-ತುಮಕೂರು ಮೆಟ್ರೋಗೆ ಡಿಪಿಆರ್ ಸಿದ್ಧವಾಗಿರುವುದಾಗಿ ತಿಳಿಸಿದ್ದಾರೆ. ಜೊತೆಗೆ, ತಮಗೆ ಮುಖ್ಯಮಂತ್ರಿ ಹುದ್ದೆ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಪುನರುಚ್ಚರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kscwdgjkss29v1v5sdsgmxa9,imgname-parameshwar-gubbi-1779622658643.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ಎಚ್&zwnj;ಎಎಲ್&zwnj;ನವರು ಲೈಟ್ ಕಂಪ್ಯಾಕ್ಟ್ ಹೆಲಿಕಾಪ್ಟರ್ ತಯಾರು ಮಾಡುವುದಕ್ಕೆ ಜಾಗ ಕೇಳಿದ್ದಾರೆ&zwnj; ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗುಬ್ಬಿ ಬಳಿಯಿರುವ ಎಚ್&zwnj;ಎಎಲ್ ಪಕ್ಕದಲ್ಲಿ 300 ಎಕರೆ ಜಾಗ ಗುರುತಿಸಿ ಕೊಡುತ್ತೀವೆಂದು ಸರ್ಕಾರ ಹೇಳಿದೆ. ಅದಕ್ಕೆ ಅವರು ಮುಂದೆ ಆ ಜಾಗ ಇಟ್ಟುಕೊಂಡು ಪ್ರಕ್ರಿಯೆ ಮಾಡಿಕೊಳ್ಳಬಹುದು ಎಂದರು. 6 ಸಾವಿರದಿಂದ 8 ಸಾವಿರದ ರವರೆಗೆ ಉದ್ಯೋಗ ಕೊಡುವುದಾಗಿ ಅವರು ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಬೆಂಗಳೂರು-ತುಮಕೂರು ಮೆಟ್ರೋಗೆ ಡಿಪಿಆರ್ ಸಿದ್ದ&lt;/strong&gt;&lt;/h2&gt;&lt;p&gt;ಬೆಂಗಳೂರು-ತುಮಕೂರು ಮೆಟ್ರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆಯಾಗಿದೆ. ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟುಕೊಂಡು ಚರ್ಚೆ ಮಾಡಿ ಟೆಂಡರ್ ಕರಿತಾರೆ ಎಂದರು. ಬೆಂಗಳೂರಿನ ಆನೇಕಲ್ ಬಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸರ್ಕಾರದ ವತಿಯಿಂದ ಮಾಡಲಾಗುತ್ತಿದೆ. ತುಮಕೂರಿನಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಅವರು ಮಾಡುತ್ತಿರುವುದು. ಆನೇಕಲ್ ಹೊಸೂರು ಭಾಗದಲ್ಲಿ ತುಂಬಾ ದೊಡ್ಡದಾಗಿ ಮಾಡಬೇಕು ಅಂತ ಇದೆ ಎಂದರು.&lt;/p&gt;&lt;h3&gt;&lt;strong&gt;ನನಗೆ ಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯ ಇದೆ: ಪರಮೇಶ್ವರ್&zwnj;&lt;/strong&gt;&lt;/h3&gt;&lt;p&gt;ಮುಖ್ಯಮಂತ್ರಿ ಹುದ್ದೆ ಜವಾಬ್ದಾರಿ ನೀಡಿದರೆ, ಅದನ್ನು ನಿಭಾಯಿಸುವ ಸಾಮರ್ಥ್ಯ ನನಗಿದೆ. ಪಕ್ಷ ನೀಡುವ ಯಾವುದೇ ಜವಾಬ್ದಾರಿ ಹೊರಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್&zwnj; ಪುನರುಚ್ಚರಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಪುನಾರಚನೆಗೆ ಶಾಸಕರು ಒತ್ತಾಯ ಮಾಡುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಸಚಿವರಾಗಲು ನಮ್ಮ ಶಾಸಕರಿಗೂ ಸಾಮರ್ಥ್ಯ ಇದೆ. ಅವರು ಕೇಳುವುದು ಸಹಜ. ಆದರೆ, ಸಂವಿಧಾನದ ಪ್ರಕಾರ ಒಟ್ಟು ಶಾಸಕರ ಸಂಖ್ಯೆಯ ಶೇ.15ರಷ್ಟು ಮಂದಿಯನ್ನು ಮಾತ್ರ ಸಚಿವರನ್ನಾಗಿ ಮಾಡಲು ಅವಕಾಶವಿದೆ. ಹೀಗಾಗಿ ಸಂಖ್ಯೆಗಳು ಸೀಮಿತವಾಗಿರುತ್ತವೆ ಎಂದರು. ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಕೈಬಿಡಬೇಕು ಎಂಬುದು ಹೈಕಮಾಂಡ್&zwnj; ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.&lt;/p&gt;&lt;p&gt;ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳು ಒಂದು ನಿರಂತರ ಪ್ರಕ್ರಿಯೆ. ಅದಕ್ಕೆ ಅಭ್ಯರ್ಥಿಗಳ ಆಯ್ಕೆಯನ್ನು ಅಧ್ಯಕ್ಷರು ಮತ್ತು ಮುಖ್ಯಮಂತ್ರಿಯವರು ಮಾಡಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/300-acres-of-land-for-hal-near-gubbi-in-tumakuru-district-says-home-minister-dr-g-parameshwara-mrq/articleshow-v2ndwoh"/>
        </item>
        <item>
            <title><![CDATA[ರಾಜ್ಯ ಕೈಗಾರಿಕಾ ರಂಗದಲ್ಲಿ ಹೊಸ ಕ್ರಾಂತಿ: ‘ಕ್ವಿನ್ ಸಿಟಿ’ಗೆ ಎಂಟ್ರಿ ಕೊಟ್ಟ ಟೊಯೋಟಾದಿಂದ ₹1,200 ಕೋಟಿ ಬೂಸ್ಟರ್ ಡೋಸ್]]></title>
            <link>https://kannada.asianetnews.com/business/toyota-to-invest-1200-crore-bizintel-hub-karnataka-kwin-city-san/articleshow-wocsq10</link>
            <guid isPermaLink="true">https://kannada.asianetnews.com/business/toyota-to-invest-1200-crore-bizintel-hub-karnataka-kwin-city-san/articleshow-wocsq10</guid>
            <pubDate>Mon, 25 May 2026 21:33:25 +0530</pubDate>
            <description><![CDATA[ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ಕರ್ನಾಟಕ ಸರ್ಕಾರದ 'ಕ್ವಿನ್ ಸಿಟಿ' ಯೋಜನೆಯಲ್ಲಿ ₹1,200 ಕೋಟಿ ಹೂಡಿಕೆ ಮಾಡಿ 'ಬಿಜ್&zwnj;ಇಂಟೆಲ್ ಹಬ್' ಸ್ಥಾಪಿಸಲಿದೆ. ಈ ಒಪ್ಪಂದದ ಅಡಿಯಲ್ಲಿ, ಮುಂದಿನ ಐದು ವರ್ಷಗಳಲ್ಲಿ ಸುಮಾರು 200 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಯೋಜನೆಗೆ 300 ಎಕರೆ ಜಮೀನು ಹಂಚಿಕೆ ಮಾಡಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksfxqnahs22cy3bngcb8p8x5,imgname-toyota-1779724703057.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.25):&lt;/strong&gt; ಪ್ರಮುಖ ಆಟೋಮೊಬೈಲ್ ದೈತ್ಯ ಸಂಸ್ಥೆಯಾದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (TKM), ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಸಮಗ್ರ ಟೌನ್&zwnj;ಶಿಪ್ ಯೋಜನೆಯಾದ &lsquo;ಕ್ವಿನ್ ಸಿಟಿ&rsquo;ಯಲ್ಲಿ (KWIN City) ಜಾಗತಿಕ ಗುಣಮಟ್ಟದ &lsquo;ಬಿಜ್&zwnj;ಇಂಟೆಲ್ ಹಬ್&rsquo; (BizIntel Hub) ಅನ್ನು ಸ್ಥಾಪಿಸುವುದಾಗಿ ಪ್ರಕಟಿಸಿದೆ. ಈ ಬೃಹತ್ ಯೋಜನೆಗಾಗಿ ಕಂಪನಿಯು ₹1,200 ಕೋಟಿ ಹೂಡಿಕೆ ಮಾಡಲಿದ್ದು, ಮುಂದಿನ ಐದು ವರ್ಷಗಳಲ್ಲಿ ಸುಮಾರು 200 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.&lt;/p&gt;&lt;p&gt;ದಾಬಸ್&zwnj;ಪೇಟೆ ಮತ್ತು ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ &lsquo;ಕ್ವಿನ್ ಸಿಟಿ&rsquo;ಯಲ್ಲಿ ಈ ಅತ್ಯಾಧುನಿಕ ಕೇಂದ್ರ ತಲೆಯೆತ್ತಲಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ಅಧಿಕೃತ ತಿಳುವಳಿಕಾ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು. ರಾಜ್ಯ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಟೊಯೋಟಾ ಸಂಸ್ಥೆಯ ಸಿಒಒ ಹಾಗೂ ವಿಶೇಷ ಯೋಜನೆಗಳ ನಿರ್ದೇಶಕ ಸುದೀಪ್ ದಾಲ್ವಿ ಒಪ್ಪಂದಕ್ಕೆ ಸಹಿ ಹಾಕಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಟೊಯೋಟಾ ಸಂಸ್ಥೆಯ ಈ ಬೃಹತ್ ಹೂಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಪ್ರಸ್ತಾವಿತ ಈ ಜಾಗತಿಕ ಕೇಂದ್ರವು ಇಡೀ ವಿಶ್ವದಲ್ಲೇ ತನ್ನದೇ ಆದ ಮಾದರಿಯಲ್ಲಿ ಮೊದಲನೆಯದಾಗಿರಲಿದೆ ಎಂದು ತಿಳಿಯಲು ಅತ್ಯಂತ ಸಂತೋಷವಾಗುತ್ತಿದೆ ಎಂದರು.&lt;/p&gt;&lt;h2&gt;&lt;strong&gt;ಉದ್ಯೋಗ ಸೃಷ್ಟಿ ಮತ್ತು 300 ಎಕರೆ ಜಮೀನು ಹಂಚಿಕೆ&lt;/strong&gt;&lt;/h2&gt;&lt;p&gt;ಬಳಿಕ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, &quot;ಕ್ವಿನ್ ಸಿಟಿಯಲ್ಲಿ ಸಾಕಾರಗೊಳ್ಳುತ್ತಿರುವ ಮೊದಲ ಪ್ರಮುಖ ಬೃಹತ್ ಹೂಡಿಕೆ ಇದಾಗಿದೆ. ಟೊಯೋಟಾ ಕಂಪನಿಯು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಆರಂಭಿಕ ಬಂಡವಾಳ ವೆಚ್ಚವಾಗಿ ₹1,200 ಕೋಟಿ ಹೂಡಿಕೆ ಮಾಡಲಿದ್ದು, ಸುಮಾರು 200 ನೇರ ಉದ್ಯೋಗಗಳನ್ನು ಸೃಷ್ಟಿಸಲಿದೆ. ಈ ಮಹತ್ವದ ಯೋಜನೆಗಾಗಿ ಒಟ್ಟು 300 ಎಕರೆ ಜಮೀನನ್ನು ಹಂಚಿಕೆ ಮಾಡಲಾಗುವುದು,&quot; ಎಂದು ವಿವರ ನೀಡಿದರು.&lt;/p&gt;&lt;p&gt;ಈ ಅತ್ಯಾಧುನಿಕ ಸೌಲಭ್ಯದ ಕೇಂದ್ರದಲ್ಲಿ ಪ್ರಮುಖವಾಗಿ ವಾಹನಗಳ ತಯಾರಿಕೆ, ಸುಧಾರಿತ ಟೆಸ್ಟಿಂಗ್ (ಪರೀಕ್ಷಾರ್ಥ) ಚಟುವಟಿಕೆಗಳು ಹಾಗೂ ಅತ್ಯಾಧುನಿಕ ಆಟೋಮೊಬೈಲ್ ಉತ್ಪಾದನಾ ಕೇಂದ್ರದ ಸ್ಥಾಪನೆಯನ್ನು ಕೈಗೊಳ್ಳಲಾಗುವುದು. ಈ ಯೋಜನೆಯು ರಾಜ್ಯದ ಯುವಜನತೆಗೆ ಉದ್ಯೋಗ ಮತ್ತು ತಾಂತ್ರಿಕ ರಂಗದಲ್ಲಿ ದೂಡ್ಡ ಮಟ್ಟದ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಕ್ವಿನ್ ಸಿಟಿಗೆ ಸಿಗಲಿದೆ ₹48,000 ಕೋಟಿ ಹೂಡಿಕೆಯ ಬಲ&lt;/strong&gt;&lt;/h2&gt;&lt;p&gt;ಸಚಿವ ಎಂ.ಬಿ. ಪಾಟೀಲ್ ಅವರ ಪ್ರಕಾರ, ಕ್ವಿನ್ ಸಿಟಿಯಲ್ಲಿ ನಾವೀನ್ಯತೆ (ಇನೋವೇಶನ್), ಆರೋಗ್ಯ ರಕ್ಷಣೆ (ಹೆಲ್ತ್&zwnj;ಕೇರ್) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ವಲಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ಜಾಗತಿಕವಾಗಿ ಪ್ರಸಿದ್ಧಿ ಪಡೆದಿರುವ 7 ರಿಂದ 8 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು, ಪ್ರಮುಖ ಆರೋಗ್ಯ ಸಂಸ್ಥೆಗಳು ಮತ್ತು ಸಂಶೋಧನಾ ಸಂಸ್ಥೆಗಳು ಇಲ್ಲಿ ಹೂಡಿಕೆ ಮಾಡಲು ತೀವ್ರ ಆಸಕ್ತಿ ತೋರಿಸಿದ್ದು, ಅವುಗಳೊಂದಿಗಿನ ಒಪ್ಪಂದಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.&lt;/p&gt;&lt;p&gt;ಈ ಅತ್ಯಾಧುನಿಕ ಅಲ್ಟ್ರಾ-ಮಾಡರ್ನ್ ಸಿಟಿಯನ್ನು ಒಟ್ಟು 5,800 ಎಕರೆ ಪ್ರದೇಶದಲ್ಲಿ ವಿವಿಧ ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸ್ತುತ ಮೊದಲ ಹಂತದ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಈ ಸಮಗ್ರ ಯೋಜನೆಯ ಮೂಲಕ ಒಟ್ಟಾರೆಯಾಗಿ ರಾಜ್ಯಕ್ಕೆ ₹48,000 ಕೋಟಿ ಹೂಡಿಕೆಯನ್ನು ಆಕರ್ಷಿಸುವ ಹಾಗೂ ಸುಮಾರು 1 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಕರ್ನಾಟಕ ಸರ್ಕಾರ ಹೊಂದಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>tumakuru</category>
            <dc:creator>Santosh Naik</dc:creator>
            <atom:link href="https://kannada.asianetnews.com/business/toyota-to-invest-1200-crore-bizintel-hub-karnataka-kwin-city-san/articleshow-wocsq10"/>
        </item>
        <item>
            <title><![CDATA[6 ಕಾರಣಗಳಿಗೆ ತುಮಕೂರಿಗೆ ಮೆಟ್ರೋ ರೈಲು ಯೋಜನೆ ಬೇಡವಂತೆ;  ಪತ್ರಿಕಾ ಹೇಳಿಕೆ ಬಿಡುಗಡೆ]]></title>
            <link>https://kannada.asianetnews.com/karnataka-districts/6-reasons-why-tumakuru-does-not-need-a-metro-rail-project-press-statement-released-mrq/articleshow-z5k0w7n</link>
            <guid isPermaLink="true">https://kannada.asianetnews.com/karnataka-districts/6-reasons-why-tumakuru-does-not-need-a-metro-rail-project-press-statement-released-mrq/articleshow-z5k0w7n</guid>
            <pubDate>Wed, 03 Jun 2026 07:46:30 +0530</pubDate>
            <description><![CDATA[ತುಮಕೂರಿಗೆ ಪ್ರಸ್ತಾಪಿತ ಮೆಟ್ರೋ ರೈಲು ಯೋಜನೆಯು ಅನುಕೂಲಕ್ಕಿಂತ ಅನಾನುಕೂಲವನ್ನೇ ಹೆಚ್ಚು ತರಲಿದೆ ಎಂದು ಜನಸಂಗ್ರಾಮ ಪರಿಷತ್ ವಿರೋಧ ವ್ಯಕ್ತಪಡಿಸಿದೆ. 25 ಸಾವಿರ ಕೋಟಿ ವೆಚ್ಚ, ಅಧಿಕ ಪ್ರಯಾಣ ದರ ಮತ್ತು ಸಮಯವನ್ನು ಉಲ್ಲೇಖಿಸಿ, ಅಸ್ತಿತ್ವದಲ್ಲಿರುವ ಸಾಮಾನ್ಯ ರೈಲು ಸೇವೆಯೇ ಉತ್ತಮ ಪರ್ಯಾಯ ಎಂದು ಪ್ರತಿಪಾದಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kt5kxwfha6090f0qvse0t6n6,imgname-tumakuru-1780452618737.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ಮೆಟ್ರೋ ರೈಲು ಲಾಭದಾಯಕವಾಗಿದ್ದರೆ ಶೇಕಡ 50ರಷ್ಟು ಬೆಂಗಳೂರಿನಲ್ಲಿ ಬೆಲೆ ಜಾಸ್ತಿ ಯಾಕೆ ಮಾಡುತ್ತಿದ್ದರು? ಕ್ರಮೇಣ ಇದು ರೋಗಗ್ರಸ್ತ ಯೋಜನೆಯಾಗಿ 25 ಸಾವಿರ ಕೋಟಿ ವಸೂಲಾಗದ ಸಾಲದ ಪಟ್ಟಿಗೆ ಸೇರಬಹುದು ಎಂದು ಜನಸಂಗ್ರಾಮ ಪರಿಷತ್ ಜಿಲ್ಲಾಧ್ಯಕ್ಷ ಪಂಡಿತ ಜವಾಹರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಯೋಜನೆಯಿಂದ ಜನರಿಗೆ ಯಾವುದೇ ಲಾಭವಾಗುವುದಿಲ್ಲ. ಲಾಭವಾಗುವುದು ಏನಾದರೂ ಇದ್ದರೆ ಅದು ಗುತ್ತಿಗೆದಾರರು ಹಾಗೂ ನಮ್ಮನ್ನು ಆಳುವ ಜನರಿಗೆ ಮಾತ್ರ ಎಂದು ಹೇಳಿದ್ದಾರೆ.&lt;/p&gt;&lt;h2&gt;&lt;strong&gt;40 ಸ್ಟೇಷನ್&zwnj;ನಲ್ಲಿ ಒಂದೂವರೆ ನಿಮಿಷ ನಿಲುಗಡೆ&lt;/strong&gt;&lt;/h2&gt;&lt;p&gt;ತುಮಕೂರಿಗೆ ಮೆಟ್ರೋ ರೈಲು ತರುವ ಪ್ರಯತ್ನಗಳು ನಡೆಯುತ್ತಿದ್ದು ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿರುವುಪದರಿಂದ ತುನಮಕೂರಿಗೆ ಮೆಟ್ರೋ ಬೇಡವೇ ಬೇಡ. ಈ ಯೋಜನೆಗೆ ಸುಮಾರು 25 ಸಾವಿರ ಕೋಟಿ ಹೂಡಿಕೆ ಬೇಕಾಗುತ್ತದೆ. ತುಮಕೂರಿಂದ ಬೆಂಗಳೂರಿನವರೆಗೆ ಸುಮಾರು 40 ಸ್ಟೇಷನ್ ಗಳು ರೈಲು ಯೋಜನೆಯಲ್ಲಿ ಇರುತ್ತದೆ. ಒಂದೊಂದು ಸ್ಟೇಷನ್ನಲ್ಲಿ ಒಂದುವರೆ ನಿಮಿಷ ನಿಲುಗಡೆ ಇರುತ್ತದೆ ಒಟ್ಟು 40 ಸ್ಟೇಷನ್ ಗಳಿಂದ ಒಂದು ಗಂಟೆ ನಿಲುಗಡೆ ಸಮಯವಿರುತ್ತದೆ ಇನ್ನು ಒಂದು ಗಂಟೆ ಪ್ರಯಾಣದ ಅವಧಿಯಾಗುತ್ತದೆ.&lt;/p&gt;&lt;h3&gt;&lt;strong&gt;ಮೆಟ್ರೋ ಮತ್ತು ಸಾಮಾನ್ಯ ರೈಲಿಗೆ ಹೋಲಿಕೆ&lt;/strong&gt;&lt;/h3&gt;&lt;p&gt;ಸುಮಾರು 250 ರಿಂದ 300 ರು. ವರೆಗೆ ಬೆಂಗಳೂರಿಗೆ ಚಾರ್ಜ್ ಇರಬಹುದು. ಕುಳಿತುಕೊಳ್ಳುವ ವ್ಯವಸ್ಥೆ ಶೇಕಡ 30 ರಷ್ಟು ಜನರಿಗೆ ಮಾತ್ರ ಇರುತ್ತದೆ ಇನ್ನ ಶೇಕಡ 70 ರಷ್ಟು ಜನರು ನಿಂತುಕೊಂಡೇ ಹೋಗಬೇಕು. ವಯಸ್ಸಾದವರು ಗರ್ಭಿಣಿಯರು ಹಾಗೂ ಹೆಚ್ಚಿನ ಲಗೇಜ್ ಕೊಂಡೋಯ್ಯುವವರು ಪರಿಸ್ಥಿತಿ ಹೇಳಲಾಗದು. ಮಾಮೂಲು ರೈಲಿನ ವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಹೇಳಿದರು.&lt;/p&gt;&lt;p&gt;ಕೇವಲ 20 ರು.ಕೊಟ್ಟು ಡೆಮೋ ರೈಲಿನಲ್ಲಿ ಒಂದುವರೆ ಗಂಟೆ ಪ್ರಯಾಣದ ಅವಧಿಯಲ್ಲಿ ಬೆಂಗಳೂರು ತಲುಪಬಹುದು. ಎಕ್ಸಪ್ರೆಸ್ ಟ್ರೈನ್ ನಲ್ಲಿ ಪ್ರಯಾಣದ ಅವಧಿ ಕೇವಲ ಒಂದು ಗಂಟೆ. ಇದನ್ನು ಬಿಟ್ಟು ರೂ.300 ಕೊಟ್ಟು 80 ಮೆಟ್ಟಿಲು ಹತ್ತಿ ಎರಡು ಗಂಟೆ ಪ್ರಯಾಣದ ಅವಧಿಯಲ್ಲಿ ನಿಂತುಕೊಂಡು ಬೆಂಗಳೂರು ತಲುಪುವುದು ಉತ್ತಮ ಪ್ರಯಾಣವೇ ಎಂದಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮೈಸೂರಿನಿಂದ ವಿಶಾಖಪಟ್ಟಣಂಗೆ ನೇರ ರೈಲು ಸೇವೆ ಆರಂಭಕ್ಕೆ ಮನವಿ; ರೂಟ್&zwnj; ಈ ರೀತಿಯಾಗಿರಲಿದೆ&lt;/strong&gt;&lt;/p&gt;&lt;p&gt;&lt;strong&gt;ಮೆಟ್ರೋ ಬೇಡ ಅಂತ ಹೇಳಲು ಪ್ರಮುಖ ಕಾರಣಗಳು&lt;/strong&gt;&lt;/p&gt;&lt;ol&gt; &lt;li&gt;ಸುಮಾರು 25 ಸಾವಿರ ಕೋಟಿ ಹೂಡಿಕೆ&lt;/li&gt; &lt;li&gt;ಇದು ಸಹ ಒಂದು ಗಂಟೆಯ ಪ್ರಯಾಣದ ಅವಧಿ&lt;/li&gt; &lt;li&gt;ಸುಮಾರು 250 ರಿಂದ 300 ರೂಪಾಯಿ ಟಿಕೆಟ್ ದರ ಸಾಧ್ಯತೆ&lt;/li&gt; &lt;li&gt;ಶೇ.30ರಷ್ಟು ಮಾತ್ರ ಆಸನ ವ್ಯವಸ್ಥೆ&lt;/li&gt; &lt;li&gt;ಡೆಮೋ ರೈಲಿನಲ್ಲಿ 20 ರೂಪಾಯಿಯಲ್ಲಿ ಬೆಂಗಳೂರಿಗೆ ಹೋಗಬಹುದು&lt;/li&gt; &lt;li&gt;ಎಕ್ಸಪ್ರೆಸ್ ಟ್ರೈನ್ ನಲ್ಲಿ ಪ್ರಯಾಣದ ಅವಧಿ ಕೇವಲ ಒಂದು ಗಂಟೆ&lt;/li&gt;&lt;/ol&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರು-ತುಮಕೂರು ಚತುಷ್ಪಥ ರೈಲ್ವೆ ಮಾರ್ಗಕ್ಕೆ 6000 ಕೋಟಿಯ ಕ್ರಿಯಾ ಯೋಜನೆ ಘೋಷಣೆ&lt;/strong&gt;&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/6-reasons-why-tumakuru-does-not-need-a-metro-rail-project-press-statement-released-mrq/articleshow-z5k0w7n"/>
        </item>
    </channel>
</rss>
