<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 16 Jul 2026 07:14:11 +0530</lastBuildDate>
        <atom:link href="https://kannada.asianetnews.com/rss/tumakuru" rel="self" type="application/rss+xml"/>
        <item>
            <title><![CDATA[ತುಮಕೂರು-ರಾಯದುರ್ಗ-ಪಾವಗಡ ರೈಲು ಮಾರ್ಗಕ್ಕೆ ಮರುಜೀವ; ಯಾವಾಗ ಶುರುವಾಗಲಿದೆ ಸಂಚಾರ?]]></title>
            <link>https://kannada.asianetnews.com/gallery/karnataka-districts/indian-railways-work-on-the-new-tumakuru-rayadurga-train-line-resumes-mrq-1bidog4</link>
            <guid isPermaLink="true">https://kannada.asianetnews.com/gallery/karnataka-districts/indian-railways-work-on-the-new-tumakuru-rayadurga-train-line-resumes-mrq-1bidog4</guid>
            <pubDate>Wed, 01 Jul 2026 08:35:21 +0530</pubDate>
            <description><![CDATA[&lt;p&gt;ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಚಾಲನೆ ಸಿಕ್ಕಿದೆ. ಕೇಂದ್ರ ಸಚಿವ ವಿ.ಸೋಮಣ್ಣ 2027ರೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದರೆ, ಡಿಸಿಎಂ ಡಾ.ಜಿ.ಪರಮೇಶ್ವರ್ ಒಂದು ವರ್ಷದೊಳಗೆ ತುಮಕೂರು-ಪಾವಗಡ ಮಾರ್ಗ ಪೂರ್ಣಗೊಳಿಸಲು ಸೂಚಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwdsmxpaacy30hv4pvay9rgp,imgname-indian-railways--2--1782874535626.jpg" type="image/jpeg" height="390" width="690"/>
            <content:encoded><![CDATA[&lt;p&gt;ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಚಾಲನೆ ಸಿಕ್ಕಿದೆ. ಕೇಂದ್ರ ಸಚಿವ ವಿ.ಸೋಮಣ್ಣ 2027ರೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದರೆ, ಡಿಸಿಎಂ ಡಾ.ಜಿ.ಪರಮೇಶ್ವರ್ ಒಂದು ವರ್ಷದೊಳಗೆ ತುಮಕೂರು-ಪಾವಗಡ ಮಾರ್ಗ ಪೂರ್ಣಗೊಳಿಸಲು ಸೂಚಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಕೊರಟಗೆರೆ: ಗಡಿಭಾಗಗಳ ಕನಸಿನ ಕೂಸಾದ ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಕಾಮಗಾರಿಗೆ ಚಾಲನೆ ಸಿಕ್ಕಿದ್ದು ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಹತ್ತಿರ ಬಂದಂತೆ ಕಾಣಿಸುತ್ತಿದೆ.&lt;/p&gt;&lt;p&gt;ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನು 2012ರಲ್ಲಿ ಆರಂಭಿಸಲಾಯಿತು. ಒಟ್ಟು 206 ಕಿ.ಮೀ. ಉದ್ದದ ಲೈನ್ ಇದಾಗಿದ್ದು, ಸುಮಾರು 1850 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಘೋಷಿಸಿದ್ದರೂ, ಆ ನಂತರ 2500 ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ 125 ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ.&lt;/p&gt;&lt;img&gt;&lt;p&gt;ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ 81 ಕಿ.ಮೀ ವರೆಗೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಿಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ನನಗುದ್ದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭವಾಗಿರುವುದು ಈ ಭಾಗದ ಕೂಲಿ ಕಾರ್ಮಿಕರಿಗೆ, ತುಮಕೂರು ಬೆಂಗಳೂರಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಸಂತಸ ತಂದಿದೆ.&lt;/p&gt;&lt;img&gt;&lt;p&gt;ತುಮಕೂರು ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಜಯಗಳಿಸಿದ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ರೈಲ್ಚೆ ಸಚಿವರಾಗಿ ಸೋಮಣ್ಣ ಅವರನ್ನ ಆಯ್ಕೆ ಮಾಡಿದ್ದು ತುಮಕೂರು ಜನರಿಗೆ ಅದೃಷ್ಟ ಬಂದಂತೆ ಆಗಿದೆ. ಜಿಲ್ಲೆಯಲ್ಲಿ ನೆನಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಇಂದು ಚಾಲನೆಗೊಂಡಿವೆ ಕೆಲವು ಕಾಮಗಾರಿಗಳು ಮುಗಿದಿವೆ. ಇದರ ಜೊತೆಗೆ ಹಲವಾರು ವರ್ಷಗಳಿಂದ ಕಾಮಗಾರಿಯೇ ಪ್ರಾರಂಭವಾಗದ ತುಮಕೂರು ರಾಯದುರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಸಚಿವ ವಿ.ಸೋಮಣ್ಣ ಅವರು 2027ರ ಒಳಗೆ ಕಾಮಗಾರಿ ಮುಗಿಯುವ ಭರವಸೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿ ಹಲವು ವರ್ಷಗಳಿಂದ ನೆನಗುದ್ದಿಗೆ ಬಿದ್ದಿದ್ದು, ಉಪ ಮುಖ್ಯಮಂತ್ರಿ ಸ್ಥಾನ ಪಡೆಯುತ್ತಿದಂತೆ ಡಾ.ಜಿ.ಪರಮೇಶ್ವರ್ ಅವರು ಪಾವಗಡ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಂದು ವರ್ಷದೊಳಗೆ ಪಾವಗಡದಿಂದ ತುಮಕೂರಿನವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.&lt;/p&gt;&lt;img&gt;&lt;p&gt;ಬಹು ವರ್ಷಗಳ ಕನಸಿನ ಕೂಸಾದ ತುಮಕೂರು ರಾರ್ಯದುರ್ಗ ರೈಲ್ವೆ ಕಾಮಗಾರಿ ಕನಸಾಗಿ ಉಳಿದಿತ್ತು. ನಾನು ನಮ್ಮ ಹಳ್ಳಿಯಿಂದ ತುಮಕೂರಿಗೆ ಕೆಲಸಕ್ಕೆ ಹೋಗುತ್ತಿದ್ದು, ತುಮಕೂರು ಪಾವಗಡ ರಾಜ್ಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಜಾಸ್ತಿಯಾಗಿದ್ದು, ಬೈಕ್ ಸವಾರರು ಜೀವ ಕೈಯಲ್ಲಿ ಇಟ್ಟುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ವ್ಯಕ್ತಿ ಮಹೇಶ್ ಕೂಲಿ ಹೇಳುತ್ತಾರೆ.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/indian-railways-work-on-the-new-tumakuru-rayadurga-train-line-resumes-mrq-1bidog4"/>
        </item>
        <item>
            <title><![CDATA[ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್:  6 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!]]></title>
            <link>https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</link>
            <guid isPermaLink="true">https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</guid>
            <pubDate>Wed, 08 Jul 2026 11:25:56 +0530</pubDate>
            <description><![CDATA[ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಮೆಗಾ ಆಪರೇಷನ್&zwnj;ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗುವ ಶಂಕೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx04edrp64anbam01r602epp,imgname-lokayukta-raids-in-across-karnataka-1783489836822.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನೂರಾರು ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಈ ಮೆಗಾ ಆಪರೇಷನ್ ಕೈಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ಧಾರವಾಡ ಮತ್ತು ಶಿವಮೊಗ್ಗ: ಎಸಿಎಫ್ ಕಿರಣ್ ಅಂಗಡಿಗೆ ಶಾಕ್!&lt;/h2&gt;&lt;p&gt;ಶಿವಮೊಗ್ಗದ ಅರಣ್ಯ ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಆಗಿ ಸೇವೆ ಸಲ್ಲಿಸುತ್ತಿರುವ ಕಿರಣ್ ಅಂಗಡಿ ಅವರಿಗೆ ಸೇರಿದ ಧಾರವಾಡ ಮತ್ತು ಶಿವಮೊಗ್ಗದ ಒಟ್ಟು ೫ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಧಾರವಾಡದ ಲೋಕಾ ಎಸ್ಪಿ ಸಿದ್ದಲಿಂಗಪ್ಪ ಹಾಗೂ ಶಿವಮೊಗ್ಗದ ಲೋಕಾಯುಕ್ತ ಇನ್&zwnj;ಸ್ಪೆಕ್ಟರ್ ವೀರಬಸಪ್ಪ ಕುಶಲಾಪೂರ ಮತ್ತು ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿರುವ ಐಷಾರಾಮಿ ಮನೆ, ಅಳ್ನಾವರ ರಸ್ತೆಯಲ್ಲಿರುವ ಫಾರ್ಮ್ ಹೌಸ್, ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ (ಪತ್ನಿಯ ಹೆಸರಿನಲ್ಲಿದೆ ಎನ್ನಲಾದ ಉದ್ಯಮ) ಹಾಗೂ ಅವರ ಸೋದರ ಮಾವನ ಮನೆಗಳ ಮೇಲೆ ಶೋಧ ನಡೆಸಲಾಗುತ್ತಿದೆ.&lt;/p&gt;&lt;h2&gt;ಶಿವಮೊಗ್ಗದ ಕಚೇರಿ ಮೇಲೂ ದಾಳಿ&lt;/h2&gt;&lt;p&gt;ಇತ್ತ ಶಿವಮೊಗ್ಗದ ಆಲ್ಕೋಳ ರಸ್ತೆಯಲ್ಲಿರುವ ಕಿರಣ್ ಅಂಗಡಿ ಅವರ ಅರಣ್ಯ ಸಂಶೋಧನಾ ಕಚೇರಿಯ ಮೇಲೂ ಲೋಕಾಯುಕ್ತ ತಂಡ ತಪಾಸಣೆ ನಡೆಸುತ್ತಿದೆ. ದಾಳಿಯ ವೇಳೆ ಅಧಿಕಾರಿ ಕಿರಣ್ ಅಂಗಡಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಐದು ಜನರ ಅಧಿಕಾರಿಗಳ ತಂಡ ಸದ್ಯ ದಾಖಲೆಗಳನ್ನು ಜಾಲಾಡುತ್ತಿದೆ.&lt;/p&gt;&lt;h2&gt;ರಾಯಚೂರು: ಕೆಬಿಜೆಎನ್&zwnj;ಎಲ್ ಇಇ ಬಸನಗೌಡಗೆ ಸೇರಿದ 7 ಕಡೆ ದಾಳಿ&lt;/h2&gt;&lt;p&gt;ರಾಯಚೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾರ್ಯನಿರ್ವಾಹಕ ಇಂಜಿನಿಯರ್ (EE) ಬಸನಗೌಡ ಅವರ ವಿರುದ್ಧ ಲೋಕಾಯುಕ್ತರು ತನಿಖೆ ತೀವ್ರಗೊಳಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ 7 ಪ್ರತ್ಯೇಕ ತಂಡಗಳು ಏಕಕಾಲದಲ್ಲಿ 7 ಕಡೆ ಧಾಳಿ ನಡೆಸಿವೆ. ಬಸನಗೌಡ ಅವರ ರಾಯಚೂರು ನಗರದ ಎಚ್.ಆರ್.ಬಿ ಲೇಔಟ್&zwnj;ನಲ್ಲಿರುವ ಮನೆ, ಯಕ್ಲಾಸಪುರದ ಸೆಲೆಬ್ರಿಟಿ ಗಾರ್ಡನ್&zwnj;ನಲ್ಲಿರುವ ಅಣ್ಣನ ಮನೆ ಹಾಗೂ ಯಕ್ಲಾಪುರದ ತೋಟದ ಮನೆಯಲ್ಲಿ ಶೋಧ ಕಾರ್ಯ ಪ್ರಗತಿಯಲ್ಲಿದೆ.&lt;/p&gt;&lt;h2&gt;ಬಾರ್ ಮತ್ತು ಪೆಟ್ರೋಲ್ ಬಂಕ್ ಪತ್ತೆ&lt;/h2&gt;&lt;p&gt;ಬಸನಗೌಡ ಅವರ ಪತ್ನಿ ಅನಿತಾ ಶೆಟ್ಟಿ ಹೆಸರಿನಲ್ಲಿರುವ ನಾಯರಾ ಪೆಟ್ರೋಲ್ ಬಂಕ್, ಅದರ ಪಕ್ಕದಲ್ಲೇ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಗೋದಾಮಿನ (Warehouse) ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ದೇವದುರ್ಗ ತಾಲೂಕಿನ ಚಿಕ್ಕ ಹೊನ್ನಕುಣಿ ವ್ಯಾಪ್ತಿಯ ಕೆಬಿಜೆಎನ್&zwnj;ಎಲ್ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.&lt;/p&gt;&lt;h2&gt;ಚಿತ್ರದುರ್ಗ ಆರ್&zwnj;ಎಫ್&zwnj;ಒ ಮತ್ತು ಪ್ರೊಫೆಸರ್ ಮನೆಗೆ ಅಧಿಕಾರಿಗಳ ಎಂಟ್ರಿ&lt;/h2&gt;&lt;p&gt;ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಬ್ಬರು ಪ್ರಮುಖ ಅಧಿಕಾರಿಗಳ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದ ತಂಡ ದಾಳಿ ನಡೆಸಿದೆ. ಚಿತ್ರದುರ್ಗದ ಧವಳಗಿರಿ ಬಡಾವಣೆಯಲ್ಲಿರುವ ವಲಯ ಅರಣ್ಯಾಧಿಕಾರಿ (RFO) ದುಗ್ಗಪ್ಪ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರೊಫೆಸರ್ ಶಂಕರ್ ಅವರ ಮನೆ ಹಾಗೂ ತೋಟದ ಮೇಲೂ ಲೋಕಾಯುಕ್ತರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;ಕಲಬುರಗಿ ಜೇಸ್ಕಾಂ ಎಇಇ ಅಮೃತರಾವ್ ಯಲಾಲ್ ಮನೆ, ಫ್ಲ್ಯಾಟ್ ಮೇಲೆ ದಾಳಿ&lt;/h2&gt;&lt;p&gt;ಕಲಬುರಗಿಯಲ್ಲಿ ಜೆಸ್ಕಾಂ (GESCOM) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅಮೃತರಾವ್ ಯಲಾಲ್ ಅವರಿಗೆ ಸೇರಿದ ಕಚೇರಿ ಹಾಗೂ ಮನೆ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ಮಾಡಿದೆ. ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಬಸವ ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಫ್ಲ್ಯಾಟ್, ಮತ್ತು ಕೊತ್ತಂಬರಿ ಲೇಔಟ್&zwnj;ನಲ್ಲಿರುವ ಜೇಸ್ಕಾಂ ಕಚೇರಿಗಳ ಮೇಲೆ ದಾಳಿಯಾಗಿದೆ. ಇದಲ್ಲದೆ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಮನೆಯ ಮೇಲೂ ಅಧಿಕಾರಿಗಳು ಮುಗಿಬಿದ್ದಿದ್ದಾರೆ. ಎಇಇ ಅಮೃತರಾವ್ ಅವರು ಜಾಗೃತಿ ಕಾಲೋನಿಯಲ್ಲಿ 'ಪ್ಲಾಟಿನಂ ಸ್ಟುಡಿಯೋ' ಎಂಬ ಹೈಟೆಕ್ ಸ್ಟುಡಿಯೋ ಹೊಂದಿದ್ದು, ನಂದೂರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫ್ಲ್ಯಾಟ್ ಹಾಗೂ ವಿವಿಧೆಡೆ 20 ಕ್ಕೂ ಹೆಚ್ಚು ಎಕರೆ ಕೃಷಿ ಜಮೀನು ಹೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;ತುಮಕೂರು ಸಣ್ಣ ನೀರಾವರಿ ಇಲಾಖೆ ಎಇಇ ಮನೆ ಮೇಲೆ ಲೋಕಾ ದಾಳಿ&lt;/h2&gt;&lt;p&gt;ಸಣ್ಣ ನೀರಾವರಿ ಇಲಾಖೆಯಲ್ಲಿ ಎಇಇ ಆಗಿರುವ ಮಧುಸೂದನ್ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ಮಧುಸೂದನ್ ಮನೆ. ಸಣ್ಣ ನೀರಾವರಿ ಇಲಾಖೆ ತಿಪಟೂರು ಉಪವಿಭಾಗದಲ್ಲಿ ಎಇಇ ಆಗಿ ಕೆಲಸ ಮಾಡುತ್ತಿರುವ ಮಧುಸೂದನ್ ಅಕ್ರಮ ಹಣ ಗಳಿಕೆ ಆರೋಪದಡಿ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಲೋಕಾ ದಾಳಿ. ಮಧುಸೂದನ್ ಮನೆಯನ್ನ ಪರಿಶೀಲನೆ ನಡೆಸುತ್ತಿರುವ ಲೋಕಾ ಟೀಮ್. ಸದ್ಯ ಎಲ್ಲಾ ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ಚಿನ್ನಾಭರಣ, ನಗದು ಹಾಗೂ ಬ್ಯಾಂಕ್ ಖಾತೆಗಳ ವಿವರಗಳು ಲಭ್ಯವಾಗಬೇಕಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet"/>
        </item>
        <item>
            <title><![CDATA[ತುಮಕೂರು: ಕ್ಯಾಬ್ ಮಾಡಿ ಉತ್ತರಕನ್ನಡಕ್ಕೆ ಯುವತಿ ಜತೆ ಹೊರಟ ಯುವಕ ಕಾರೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಸಾವು!]]></title>
            <link>https://kannada.asianetnews.com/karnataka-districts/tumakuru-pune-highway-horror-man-sets-car-ablaze-with-petrol-bomb-and-dies-gdp/articleshow-4wlb9fw</link>
            <guid isPermaLink="true">https://kannada.asianetnews.com/karnataka-districts/tumakuru-pune-highway-horror-man-sets-car-ablaze-with-petrol-bomb-and-dies-gdp/articleshow-4wlb9fw</guid>
            <pubDate>Sat, 27 Jun 2026 15:50:15 +0530</pubDate>
            <description><![CDATA[ತುಮಕೂರು ಜಿಲ್ಲೆಯ ಶಿರಾ ಬಳಿ, ಚಲಿಸುತ್ತಿದ್ದ ಕಾರಿನಲ್ಲಿ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿದ್ದಾನೆ. ಈ ಭೀಕರ ಘಟನೆಯಲ್ಲಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw49drpb9rmqs4gbkt502r3p,imgname-tumkur-car-fire-incident-1782555534027.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಅತ್ಯಂತ ರೋಮಾಂಚನಕಾರಿ ಹಾಗೂ ಭೀಕರ ಘಟನೆಯೊಂದು ಸಂಭವಿಸಿದೆ. ಚಲಿಸುತ್ತಿದ್ದ ಕಾರಿನೊಳಗೆ ಯುವತಿಯೊಂದಿಗೆ ಗಲಾಟೆ ಮಾಡಿಕೊಂಡ ಯುವಕನೊಬ್ಬ, ಆಕೆಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ನಾಗೇಂದ್ರ (30) ಎಂಬಾತ ಕಾರಿನಲ್ಲೇ ಸುಟ್ಟು ಕರಕಲಾಗಿದ್ದು, ಆತನೊಂದಿಗಿದ್ದ ರಮ್ಯಾ ಉಲ್ಲಾಸ್ (23) ಎಂಬ ಯುವತಿ ತೀವ್ರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.&lt;/p&gt;&lt;h2&gt;ಬೆಂಗಳೂರಿನಿಂದ ಅಂಕೋಲಾಕ್ಕೆ ಹೊರಟಿದ್ದ ಕಾರು&lt;/h2&gt;&lt;p&gt;ಮೂಲಗಳ ಪ್ರಕಾರ, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಒಟಿ ಟೆಕ್ನಿಷಿಯನ್ (OT Technician) ಆಗಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಮ್ಯಾ ಉಲ್ಲಾಸ್ ಹಾಗೂ ನಾಗೇಂದ್ರ ಬೆಂಗಳೂರಿನಿಂದ ಅಂಕೋಲಾಕ್ಕೆ ತೆರಳಲು ಖಾಸಗಿಯಾಗಿ ಕಾರೊಂದನ್ನು ಬುಕ್ ಮಾಡಿದ್ದರು. ಚಾಲಕನೊಂದಿಗೆ ಇವರಿಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ, ಕಾರು ತುಮಕೂರು ದಾಟುತ್ತಿದ್ದಂತೆ ನಾಗೇಂದ್ರ ಹಾಗೂ ರಮ್ಯಾ ನಡುವೆ ಯಾವುದೋ ವೈಯಕ್ತಿಕ ವಿಚಾರಕ್ಕೆ ಕಾರಿನಲ್ಲೇ ತೀವ್ರ ಜಗಳ ಆರಂಭವಾಗಿದೆ.&lt;/p&gt;&lt;h2&gt;ಚಲಿಸುವ ಕಾರಿನಿಂದ ಹಾರಿದ ಯುವತಿ, ಚಾಲಕ ಇಳಿಯುತ್ತಿದ್ದಂತೆ ಕಾರು ಲಾಕ್!&lt;/h2&gt;&lt;p&gt;ಮಾತಿನ ಚಕಮಕಿ ವಿಕೋಪಕ್ಕೆ ಹೋದಾಗ, ನಾಗೇಂದ್ರ ತಾನು ಮೊದಲೇ ಪ್ಲಾನ್ ಮಾಡಿ ತಂದಿದ್ದ ಚಾಕುವಿನಿಂದ ರಮ್ಯಾ ಅವರ ತಲೆ ಹಾಗೂ ದೇಹದ ಭಾಗಕ್ಕೆ ಮನಸೋಇಚ್ಛೆ ಚುಚ್ಚಿದ್ದಾನೆ. ಈ ವೇಳೆ ಪೆಟ್ರೋಲ್ ಬಾಂಬ್ ಇದೆ ಎಂಬುದು ಯುವತಿಗೆ ತಿಳಿದಿದೆ. ನಾಗೇಂದ್ರನ ಈ ರೌದ್ರಾವತಾರದಿಂದ ಬೆಚ್ಚಿಬಿದ್ದ ರಮ್ಯಾ, ಬೊಬ್ಬೆ ಹೊಡೆದು ಜೀವ ಉಳಿಸಿಕೊಳ್ಳಲು ಚಲಿಸುತ್ತಿದ್ದ ಕಾರಿನಿಂದಲೇ ಹೊರಗೆ ಹಾರಿದ್ದಾರೆ. ಕಾರಿನೊಳಗೆ ನಡೆಯುತ್ತಿದ್ದ ಈ ಭೀಕರ ದೃಶ್ಯ ಹಾಗೂ ಯುವತಿ ಕೆಳಗೆ ಬಿದ್ದಿದ್ದನ್ನು ಕಂಡು ಗಾಬರಿಗೊಂಡ ವಾಹನ ಚಾಲಕ ತಕ್ಷಣವೇ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಇಳಿದಿದ್ದಾನೆ. ಚಾಲಕ ಕೆಳಗೆ ಇಳಿಯುತ್ತಿದ್ದಂತೆಯೇ ನಾಗೇಂದ್ರ ಒಳಗಿನಿಂದ ಕಾರಿನ ಎಲ್ಲಾ ಡೋರ್&zwnj;ಗಳನ್ನು ಸೆಂಟ್ರಲ್ ಲಾಕ್ ಮಾಡಿಕೊಂಡಿದ್ದಾನೆ.&lt;/p&gt;&lt;h2&gt;ಮೊದಲೇ ರೂಪಿಸಿದ್ದ ಸ್ಕೆಚ್? ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಶಂಕೆ!&lt;/h2&gt;&lt;p&gt;ಡೋರ್ ಲಾಕ್ ಮಾಡಿಕೊಂಡ ಕೆಲವೇ ಕ್ಷಣಗಳಲ್ಲಿ ಕಾರಿನೊಳಗೆ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಇಡೀ ಕಾರು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ನಾಗೇಂದ್ರ ತಾನು ಮೊದಲೇ ಸಿದ್ಧಪಡಿಸಿಕೊಂಡು ತಂದಿದ್ದ &lsquo;ಪೆಟ್ರೋಲ್ ಬಾಂಬ್&rsquo; ಅನ್ನು ಕಾರಿನೊಳಗೆ ಸಿಡಿಸಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಬೆಂಕಿ ಇಡೀ ಕಾರನ್ನು ಆವರಿಸಿದ್ದರಿಂದ ನಾಗೇಂದ್ರನಿಗೆ ಹೊರಬರಲು ಸಾಧ್ಯವಾಗದೆ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಕಾರು ಹೊತ್ತಿ ಉರಿದು ಭಸ್ಮವಾಗಿದೆ.&lt;/p&gt;&lt;h2&gt;ಸ್ಥಳಕ್ಕೆ ಎಸ್ಪಿ ಭೇಟಿ, ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲು&lt;/h2&gt;&lt;p&gt;ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಅವರು ಉನ್ನತ ಅಧಿಕಾರಿಗಳ ತಂಡದೊಂದಿಗೆ ಜೋಗಿಹಳ್ಳಿ ಬಳಿಯ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕಾರಿನಿಂದ ಜಿಗಿದು ತೀವ್ರ ರಕ್ತಸ್ರಾವ ಹಾಗೂ ಗಾಯಗಳಾಗಿದ್ದ ರಮ್ಯಾ ಉಲ್ಲಾಸ್ ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;p&gt;ಈ ಭೀಕರ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸುಟ್ಟು ಕರಕಲಾದ ಕಾರನ್ನು ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಮತ್ತು ರಮ್ಯಾ ನಡುವೆ ಇದ್ದ ಸಂಬಂಧವೇನು? ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿತ್ತು? ನಾಗೇಂದ್ರ ಮೊದಲೇ ಕೊಲೆ ಹಾಗೂ ಆತ್ಮಹತ್ಯೆಯ ಪ್ಲಾನ್ ಮಾಡಿಕೊಂಡಿದ್ದನೇ? ಎಂಬ ಹಲವು ಆಯಾಮಗಳಲ್ಲಿ ಕಳ್ಳಂಬೆಳ್ಳ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/tumakuru-pune-highway-horror-man-sets-car-ablaze-with-petrol-bomb-and-dies-gdp/articleshow-4wlb9fw"/>
        </item>
        <item>
            <title><![CDATA[ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗ, ದಾಬಸ್ ಪೇಟೆ-ಮಧುಗಿರಿ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ]]></title>
            <link>https://kannada.asianetnews.com/karnataka-districts/tumakur-rayadurga-new-railway-line-request-to-declare-dabaspet-madhugiri-bellary-national-highway-mrq/articleshow-6agp6me</link>
            <guid isPermaLink="true">https://kannada.asianetnews.com/karnataka-districts/tumakur-rayadurga-new-railway-line-request-to-declare-dabaspet-madhugiri-bellary-national-highway-mrq/articleshow-6agp6me</guid>
            <pubDate>Sun, 12 Jul 2026 09:00:11 +0530</pubDate>
            <description><![CDATA[ಕೇಂದ್ರ ಸಚಿವ ವಿ.ಸೋಮಣ್ಣ ಅವರು ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ದಾಬಸ್ ಪೇಟೆ-ಮಧುಗಿರಿ-ಬಳ್ಳಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಿಸಲು ಮನವಿ ಮಾಡಿದ್ದಾರೆ. ಇದರೊಂದಿಗೆ ಶಿರಾ-ಮಧುಗಿರಿ ಚತುಷ್ಪಥ ರಸ್ತೆ ಕಾಮಗಾರಿ ಮತ್ತು ಮಧುಗಿರಿಯಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪಿಸುವ ಯೋಜನೆಗಳನ್ನು ಘೋಷಿಸಿದ್ದು, ಈ ಭಾಗದ ಆರ್ಥಿಕತೆಗೆ ಉತ್ತೇಜನ ನೀಡುವುದಾಗಿ ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxa5v4vdrty4x7vszkr3793r,imgname-train-highway-1783826846573.jpg" type="image/jpeg" height="390" width="690"/>
            <content:encoded><![CDATA[&lt;p&gt;ತುಮಕೂರು: ದಾಬಸ್ ಪೇಟೆಯಿಂದ -ಮಧುಗಿರಿ-ಪಾವಗಡ ಮೂಲಕ ಬಳ್ಳಾರಿ ಸಂಪರ್ಕಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.&lt;/p&gt;&lt;p&gt;ಪಟ್ಟಣದ ಹೊರ ವಲಯದಲ್ಲಿ ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹೊಸ ಹೆದ್ದಾರಿ ನಿರ್ಮಾಣದಿಂದ ಈ ಭಾಗದ ರೈತರ ,ಸಂಚಾರ ವ್ಯಪಾರ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.&lt;/p&gt;&lt;p&gt;ಮಧುಗಿರಿ ರೈಲು ನಿಲ್ದಾಣಕ್ಕೆ ಮಧುಗಿರಿ ಎಂದೇ ನಾಮಕರಣ ಮಾಡಲಾಗುವುದು ಎಂದು ಘೋಷಿಸಿದ ಅವರು, ಮುಂದಿನ 15 ದಿನಗಳ ಒಳಗಾಗಿ 180 ಕೋಟಿ ರು.ವೆಚ್ಚದ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. 2027ರ ಡಿಸೆಂಬರ್ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಧುಗಿರಿ ರೈಲು ನಿಲ್ದಾಣವನ್ನು ಉದ್ಘಾಟಿಸುವ ಗುರಿ ಹೊಂದಿದ್ದು, ಅದಕ್ಕೆ ಬೇಕಾದ ಅಗತ್ಯ ಕ್ರಮ ಕೈಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಮಧುಗಿರಿಯಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪಿಸುವುದಾಗಿ ತಿಳಿಸಿ ಇದರಿಂದ ರೈತರು, ಕೂಲಿಕಾರ್ಮಿಕರು ವ್ಯಾಪಾರಿಗಳು ಕೈಗಾರಿಕೆಗಳಿಗೆ ಸರಕು ಸಾಗಾಣೆ ಸುಲಭವಾಗಿ ಆರ್ಥಿಕ ಚಟುವಟಿಕೆಗಳಿಗೆ ಮತ್ತಷ್ಠು ಉತ್ತೇಜನ ದೊರೆಯಲಿದೆ ಎಂದರು.&lt;/p&gt;&lt;p&gt;ಶಿರಾ ನಗರದಿಂದ ಬಡವನಹಳ್ಳಿ-ಮಧುಗಿರಿ ಮೂಲಕ ಭೈರೇನಹಳ್ಳಿ ಸಂಪರ್ಕಿಸುವ ರಾಷ್ಟ್ರಿಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 675 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವುದಾಗಿ ತಿಳಿಸಿದರು.&lt;/p&gt;&lt;p&gt;ಶಾಸಕ ಕೆ.ಎನ್.ರಾಜಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, 2012ರಲ್ಲಿಯೇ 24 ಎಕರೆ ಭೂಮಿಯನ್ನು ರೈಲು ಮಾರ್ಗ ನಿರ್ಮಾಣಕ್ಕೆ ರೈತರು ಜಮೀನು ಬಿಟ್ಟು ಕೊಟ್ಟಿದ್ದು ಇದೀಗ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿರುವುದು ಸಂತಸದ ವಿಚಾರ. ಭೂಮಿ ನೀಡಿದ ಎಲ್ಲಾ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ನೀರಾವರಿ ಅಭಿವೃದ್ಧಿಗೆ 120 ಕೋಟಿ ಅನುದಾನ ಮಂಜೂರಾಗಿದ್ದು, ಈ ಯೋಜನೆಗಳಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಇದರ ಕೀರ್ತಿ ಸೋಮಣ್ಣಗೆ ಸಲ್ಲಬೇಕು ಎಂದರು.&lt;/p&gt;&lt;p&gt;ಮಧುಗಿರಿಯನ್ನು ಜಿಲ್ಲೆಯಾಗಿಸುವ ಎಲ್ಲ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದ ಅವರು, ಕೊರಟಗೆರೆ, ಶಿರಾ, ಪಾವಗಡ ಹಾಗೂ ಮಧುಗಿರಿ ಈ ನಾಲ್ಕೂ ತಾಲೂಕುಗಳನ್ನು ಸೇರಿಸಿ ಮಧುಗಿರಿ ಜಿಲ್ಲೆಯನ್ನಾಗಿಸಬೇಕಿದೆ. ಅದೇ ರೀತಿ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ಹಾಗೂ ಅರಸೀಕೆರೆ ಸೇರಿ ಜಿಲ್ಲೆಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಎಸಿ ಗೋಟೂರು ಶಿವ್ಪಪ್ಪ , ತಹಸೀಲ್ದಾರ್ ನಂದಿನಿ, ಪ್ರಸಾದ್, ಸೂರಜ್, ವಿಜಯ ಕುಮಾರ್, ಶ್ರೀನಿವಾಸ್, ರಾಜ್ ಗೋಪಾಲ್, ಜಿ.ಜೆ.ರಾಜಣ್ಣ, ಹನುಮಂತರೆಡ್ಡಿ, ಕೆ.ಎಸ್.ಪಾಂಡುರಂಗಾರೆಡ್ಡಿ, ಡಾ.ಎಂ.ಜಿ.ಶ್ರೀನಿವಾಕಸಮೂರ್ತಿ, ಎಲ್&zwnj;.ಸಿ.ನಾಗರಾಜು,ತುಂಗೋಟಿ ರಾಮಣ್ಣ, ಎಂ.ಕೆ.ನಂಜುಂಡರಾಜು, ಲಾಲಪೇಟೆ ಮಂಜುನಾಥ್, ಲಕ್ಷ್ಮೀಪತಿ ಸೇರಿದಂತೆ ಅನೇಕರಿದ್ದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/tumakur-rayadurga-new-railway-line-request-to-declare-dabaspet-madhugiri-bellary-national-highway-mrq/articleshow-6agp6me"/>
        </item>
        <item>
            <title><![CDATA[ಬೆಂಗಳೂರು TO ತುಮಕೂರು: ಐಟಿ ಉದ್ಯೋಗಿಗಳಿಗೆ BMTC ಭರ್ಜರಿ ಗಿಫ್ಟ್​; 101 ಕಿ.ಮೀ ಬಸ್​ ಸೇವೆ ಹೀಗಿದೆ]]></title>
            <link>https://kannada.asianetnews.com/travel/bangalore-to-tumkur-bmtcs-great-gift-for-it-employees-101-km-bus-service-suc/articleshow-a7tqt9f</link>
            <guid isPermaLink="true">https://kannada.asianetnews.com/travel/bangalore-to-tumkur-bmtcs-great-gift-for-it-employees-101-km-bus-service-suc/articleshow-a7tqt9f</guid>
            <pubDate>Tue, 14 Jul 2026 19:46:01 +0530</pubDate>
            <description><![CDATA[ತುಮಕೂರಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸುವ ಐಟಿ ಉದ್ಯೋಗಿಗಳಿಗಾಗಿ ಬಿಎಂಟಿಸಿ ಹೊಸ ವಿಸ್ತಾರ ಎಸಿ ಬಸ್ ಸೇವೆಯನ್ನು ಆರಂಭಿಸಿದೆ. ನೈಸ್ ರಸ್ತೆ ಮೂಲಕ 101 ಕಿ.ಮೀ ಸಂಚರಿಸುವ ಈ ನೇರ ಸೇವೆಯಿಂದಾಗಿ ಪ್ರಯಾಣಿಕರ ಸುಮಾರು ಒಂದು ಗಂಟೆ ಸಮಯ ಉಳಿತಾಯವಾಗಲಿದ್ದು, ಇದು ಬಿಎಂಟಿಸಿಯ ಅತಿ ಉದ್ದದ ಮಾರ್ಗವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvs19q6nrdgcc06hhwsm2dd5,imgname----------------------58--1782177914069.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಬೆಂಗಳೂರಿನ ಐಟಿ ಹಬ್​ ಎಂದೇ ಫೇಮಸ್​ ಆಗಿರೋ ಎಲೆಕ್ಟ್ರಾನಿಕ್​ ಸಿಟಿಗೆ ಬೇರೆ ಬೇರೆ ಊರುಗಳಿಂದ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ. ಅದರಲ್ಲಿಯೂ ತುಮಕೂರಿನಿಂದ ಪ್ರತಿನಿತ್ಯವೂ ಓಡಾಟ ಮಾಡುವವರ ಸಂಖ್ಯೆ ಹೆಚ್ಚಿದೆ. ತುಮಕೂರು ಮತ್ತು ಬೆಂಗಳೂರಿಗೆ ರೈಲಿನ ಮೂಲಕ ಬರುವವರು ಹೆಚ್ಚಾಗಿದ್ದರೂ ಎಲೆಕ್ಟ್ರಾನಿಕ್​ ಸಿಟಿ ತಲುಪಲು ಮತ್ತಷ್ಟು ಸಾಹಸ ಮಾಡಲೇಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ ಇಲ್ಲಿಯ ಉದ್ಯೋಗಿಗಳಿಗೆ ಅದರಲ್ಲಿಯೂ ಹೆಚ್ಚಾಗಿ ಸಾಫ್ಟ್​ವೇರ್​ ಉದ್ಯೋಗಿಗಳಿಗೆ ಈಗ ಬಿಎಂಟಿಸಿ ಭರ್ಜರಿ ಗುಡ್​​ನ್ಯೂಸ್​ ಕೊಟ್ಟಿದೆ. ತುಮಕೂರಿನಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ ನೈಸ್ ರಸ್ತೆಯ ಮುಖಾಂತರ ವಿಸ್ತಾರ ಎಸಿ ಬಸ್ ಸೇವೆ ಆರಂಭಿಸಲಾಗಿದೆ. ಇದು 101 ಕಿಲೋಮಿಟರ್​ಗಳಷ್ಟು ಸಂಚರಿಸಲು ಬಿಎಂಟಿಸಿ ವ್ಯವಸ್ಥೆ ಮಾಡಿದೆ.&lt;/p&gt;&lt;p&gt;ತುಮಕೂರಿನಿಂದ ಬೆಂಗಳೂರು ಐಟಿ ಹಬ್ ಎಲೆಕ್ಟ್ರಾನಿಕ್ಸ್ ಸಿಟಿ ನಡುವೆ ಸುಮಾರು 101 ಕಿಲೋ ಮೀಟರ್ ದೂರವಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಡೆಸುತ್ತಿರುವ ಬಸ್​ ಸರ್ವೀಸ್​ಗಳಲ್ಲಿ ಈ ಮಾರ್ಗವೇ ಅತೀ ಉದ್ದದ ಮಾರ್ಗವಾಗಿದೆ. ಕರ್ನಾಟಕ ಸರ್ಕಾರ ಬಿಎಂಟಿಸಿಗೆ ಗ್ರೇಟರ್ ಬೆಂಗಳೂರು ಗಡಿದಾಟಿ ಸುಮಾರು 40 ಕಿಲೋ ಮೀಟರ್ ದೂರದ ವರೆಗೂ ವಿಸ್ತಾರ ಎಸಿ ಬಸ್ ಓಡಿಸಲು ಅನುಮತಿ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಅತಿ ಉದ್ದನೆಯ ಸೇವೆ&lt;/strong&gt;&lt;/h2&gt;&lt;p&gt;ಸದ್ಯ ಬಂದಿರುವ ಮಾಹಿತಿಗಳ ಪ್ರಕಾರ, ಈ ಬಸ್​ ತುಮಕೂರಿನಿಂದ ಬೆಳಿಗ್ಗೆ 7.45ಕ್ಕೆ ಹೊರಟು ಬೆಳಿಗ್ಗೆ 9.45ರ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ತಲುಪುತ್ತದೆ. ಸಾಯಂಕಾಲ 5.45ಕ್ಕೆ ಎಲೆಕ್ಟ್ರಾನಿಕ್ ಸಿಟಿಯಿಂದ ಹೊರಡುವ ಬಸ್ ರಾತ್ರಿ 9ರ ವೇಳೆಗೆ ತುಮಕೂರು ತಲುಪಲಿದೆ. ಈ ಮಾರ್ಗವು ನೆಲಮಂಗಲ, ಮಾದಾವರ ಮೂಲಕ ನೈಸ್ ರಸ್ತೆಯನ್ನು ಸೇರುತ್ತದೆ. ಏಕಮುಖ ಸಂಚಾರದ ಪ್ರಯಾಣ ದರ 200 ನಿಗದಿಪಡಿಸಲಾಗಿದೆ. ಹೊಸ ಬಸ್ ನೇರವಾದ ಸೇವೆಯಿಂದ ಪ್ರತಿದಿನ ಪ್ರಯಾಣ ಮಾಡುವವರ ಸುಮಾರು 45 ನಿಮಿಷದಿಂದ ಒಂದು ಗಂಟೆಯವರಗೆ ಸಮಯ ಉಳಿಯಲಿದೆ ಎನ್ನಲಾಗಿದೆ.&lt;/p&gt;&lt;h3&gt;&lt;strong&gt;ಎಲ್ಲೆಲ್ಲಿ ಸ್ಟಾಪ್​&lt;/strong&gt;&lt;/h3&gt;&lt;p&gt;ತುಮಕೂರು ಎಲೆಕ್ಟ್ರಾನಿಕ್ ಮಾರ್ಗವಾಗಿ ಸಂಚರಿಸುವ ಈ ಬಸ್​, ತುಮಕೂರು, ನೆಲಮಂಗಲ, ಮಾದವರ, ನೈಸ್ ರೋಡ್​ನಲ್ಲಿ ನಿಲ್ಲಲಿದೆ ಎಂದು ಬಿಎಂಟಿಸಿ ಮುಖ್ಯ ಟ್ರಾಫಿಕ್ ಮ್ಯಾನೇಜರ್ ಜಿಟಿ ಪ್ರಭಾಕರ್ ರೆಡ್​ಡಿ ತಿಳಿಸಿದ್ದಾರೆ. ತುಮಕೂರು ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ನಡುವಿನ ಪ್ರಯಾಣಿಕರ ದಟ್ಟಣೆ ಪ್ರಸ್ತುತ ತುಂಬಾ ಉತ್ತಮವಾಗಿದೆ. ಇದಕ್ಕೂ ಮುನ್ನ ತುಮಕೂರು ಮತ್ತು ಎಲೆಕ್ಟ್ರಾನಿಕ್ ಸಿಟಿ ನಡುವೆ ಪ್ರಯಾಣಿಸಲು ಹಲವು ಬಸ್ ಗಳನ್ನು ಬದಲಾವಣೆ ಮಾಡಬೇಕಿತ್ತು. ಆದರೆ ಈಗ ಒಂದೇ ಬಸ್ ಮೂಲಕ ಪ್ರಯಾಣ ಮಾಡುವುದರಿಂದ ಸುಮಾರು 45 ನಿಮಿಷದಿಂದ ಒಂದು ಗಂಟೆ ಸಮಯ ಉಳಿಯುತ್ತದೆ. ಈ ಹಿಂದೆ ನೆಲಮಂಗಲ ಮತ್ತು ಹೊಸಕೋಟೆ ನಡುವೆ 80 ಕಿ.ಮೀ ಮಾರ್ಗವನ್ನು ಬಿಎಂಟಿಸಿ ಆರಂಭ ಮಾಡಿತ್ತು ಎಂದು ಅವರು ವಿವರಿಸಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>tumakuru</category>
            <dc:creator>Suchethana D</dc:creator>
            <atom:link href="https://kannada.asianetnews.com/travel/bangalore-to-tumkur-bmtcs-great-gift-for-it-employees-101-km-bus-service-suc/articleshow-a7tqt9f"/>
        </item>
        <item>
            <title><![CDATA[ಆಂಧ್ರದಲ್ಲಿ 2 ಸಾವು ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೆ ಕೊರೋನಾ ಸಕ್ರೀಯ, ಈ ತಿಂಗಳು 32 ಪ್ರಕರಣ ಪತ್ತೆ!]]></title>
            <link>https://kannada.asianetnews.com/state/covid-scare-returns-karnataka-cases-rise-high-alert-in-pavagada-gdp/articleshow-a7z4qw6</link>
            <guid isPermaLink="true">https://kannada.asianetnews.com/state/covid-scare-returns-karnataka-cases-rise-high-alert-in-pavagada-gdp/articleshow-a7z4qw6</guid>
            <pubDate>Wed, 15 Jul 2026 11:13:05 +0530</pubDate>
            <description><![CDATA[ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಏರುತ್ತಿದ್ದು, ನೆರೆಯ ಆಂಧ್ರಪ್ರದೇಶದಲ್ಲಿ ಸಾವುಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆಯು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಸಾರ್ವಜನಿಕರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಲು ಸೂಚಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jwr4dcc766esf26fne0c0wat,imgname-social-distancing--1--1748861628807.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ನಾಲ್ಕು ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ನಲುಗಿಸಿ, ಲಕ್ಷಾಂತರ ಜೀವಗಳನ್ನು ಬಲಿಪಡೆದಿದ್ದ ಮಹಾಮಾರಿ ಕೊರೋನಾ (ಕೋವಿಡ್-19) ಮತ್ತೆ ನಿಧಾನವಾಗಿ ಆತಂಕ ಸೃಷ್ಟಿಸಲು ಆರಂಭಿಸಿದೆ. ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆಗೆ ಸಾವುಗಳು ವರದಿಯಾಗುತ್ತಿರುವುದರಿಂದ ದೇಶಾದ್ಯಂತ ಮತ್ತೆ ಕೋವಿಡ್ ಭೀತಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ತೀವ್ರ ನಿಗಾ ವಹಿಸಲು ಆದೇಶಿಸಿದೆ.&lt;/p&gt;&lt;h2&gt;ರಾಜ್ಯದಲ್ಲಿ ನಿಧಾನಗತಿಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳು&lt;/h2&gt;&lt;p&gt;ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ನಿಧಾನಗತಿಯಲ್ಲಿ ತಲೆ ಎತ್ತುತ್ತಿವೆ. ಆರೋಗ್ಯ ಇಲಾಖೆಯು ಬಿಡುಗಡೆ ಮಾಡಿರುವ ಅಂಕಿ-ಅಂಶಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುವಂತಿದೆ. ಕಳೆದ ತಿಂಗಳು ರಾಜ್ಯದಲ್ಲಿ ಕೇವಲ 14 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ಈ ಚಾಲ್ತಿ ತಿಂಗಳಿನಲ್ಲಿ ಆ ಸಂಖ್ಯೆ ದಿಢೀರನೆ 32ಕ್ಕೆ ಏರಿಕೆಯಾಗಿದೆ. ಕೋವಿಡ್ ಲಕ್ಷಣಗಳಿರುವ ಸುಮಾರು 193 ಶಂಕಿತರನ್ನು ಆರೋಗ್ಯ ಇಲಾಖೆ ತಪಾಸಣೆಗೆ ಒಳಪಡಿಸಿದ್ದು, ಈ ಪೈಕಿ 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ.&lt;/p&gt;&lt;h2&gt;ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕರೊನಾ ಅಟ್ಟಹಾಸ&lt;/h2&gt;&lt;p&gt;ಕರ್ನಾಟಕದ ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಆಂಧ್ರದಲ್ಲಿ ಸದ್ಯ 8 ಸಕ್ರಿಯ ಪ್ರಕರಣಗಳಿದ್ದರೂ, ಈಗಾಗಲೇ ಕೋವಿಡ್ ಸೋಂಕಿಗೆ ಇಬ್ಬರು ಬಲಿಯಾಗಿರುವುದು ಇಡೀ ದಕ್ಷಿಣ ಭಾರತವನ್ನು ಎಚ್ಚರಗೊಳ್ಳುವಂತೆ ಮಾಡಿದೆ. ಈ ಸಾವಿನ ವರದಿಗಳ ಬೆನ್ನಲ್ಲೇ ಆಂಧ್ರದ ಗಡಿ ಹಂಚಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತುಮಕೂರಿನ ಪಾವಗಡಲ್ಲಿ ಚೆಕ್&zwnj;ಪೋಸ್ಟ್&zwnj;ಗಳ ನಿರ್ಮಾಣ ಮಾಡಲಾಗಿದೆ.&lt;/p&gt;&lt;h2&gt;ಒಡಿಶಾದ ಗಂಜಾಂ ಜಿಲ್ಲೆಯಲ್ಲೂ ಹೈ ಅಲರ್ಟ್!&lt;/h2&gt;&lt;p&gt;ಆಂಧ್ರಪ್ರದೇಶದಲ್ಲಿ ಕೋವಿಡ್ ಸಾವುಗಳು ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಒಡಿಶಾ ಸರ್ಕಾರವು, ಆಂಧ್ರದ ಗಡಿಗೆ ಹೊಂದಿಕೊಂಡಿರುವ ತನ್ನ ಗಂಜಾಂ ಜಿಲ್ಲೆಯನ್ನು ಕಟ್ಟೆಚ್ಚರದಲ್ಲಿರಿಸಿದೆ. ಒಡಿಶಾ ಆರೋಗ್ಯ ಆಡಳಿತ ಮಂಡಳಿಯು ಜಿಲ್ಲೆಗೆ ಸಮಗ್ರ ಸಿದ್ಧತೆ ಮತ್ತು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.&lt;/p&gt;&lt;p&gt;ಆಂಧ್ರಪ್ರದೇಶ ಮತ್ತು ಗಂಜಾಂ ನಡುವೆ ಪ್ರತಿದಿನ ಸಾವಿರಾರು ಜನರು ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ಪ್ರಯಾಣಿಸುವುದರಿಂದ, ವೈರಸ್ ತೀವ್ರವಾಗಿ ಹರಡುವ ಸಾಧ್ಯತೆಯ ಬಗ್ಗೆ ಆತಂಕಗಳು ಹೆಚ್ಚಾಗಿವೆ. ಆದಾಗ್ಯೂ, ಆರೋಗ್ಯ ಅಧಿಕಾರಿಗಳು ನಿವಾಸಿಗಳು ಭಯಭೀತರಾಗದಂತೆ ಒತ್ತು ನೀಡಿದ್ದು, ಈಗ ಕೈಗೊಂಡಿರುವ ಎಲ್ಲಾ ಕ್ರಮಗಳು ಕೇವಲ ಮುನ್ನೆಚ್ಚರಿಕೆಗಾಗಿ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;ಆರೋಗ್ಯ ಇಲಾಖೆಯಿಂದ ಹೊಸ ಗೈಡ್&zwnj;ಲೈನ್ಸ್ ಮತ್ತು ಮುನ್ನೆಚ್ಚರಿಕೆ&lt;/h2&gt;&lt;p&gt;ಕೋವಿಡ್ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ.&lt;/p&gt;&lt;p&gt;ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಮತ್ತು ಕೋವಿಡ್ ವಾರ್ಡ್&zwnj;ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು ಸೂಚಿಸಲಾಗಿದೆ.&lt;/p&gt;&lt;p&gt;ಕೆಮ್ಮು, ಜ್ವರ, ಶೀತ ಅಥವಾ ಉಸಿರಾಟದ ತೊಂದರೆಯಂತಹ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಕೋವಿಡ್ ಪರೀಕ್ಷೆ (Testing) ಮಾಡಿಸಿಕೊಳ್ಳಲು ನಾಗರಿಕರಿಗೆ ತಿಳಿಸಲಾಗಿದೆ.&lt;/p&gt;&lt;p&gt;ಹಳೇ ದಿನಗಳು ಮರುಕಳಿಸದಂತೆ ತಡೆಯಲು ಸಾರ್ವಜನಿಕರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸ್ವಯಂ ಮುನ್ನೆಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸಲಹೆ ನೀಡಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/state/covid-scare-returns-karnataka-cases-rise-high-alert-in-pavagada-gdp/articleshow-a7z4qw6"/>
        </item>
        <item>
            <title><![CDATA[ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ! ತುಮಕೂರು ಗಡಿಭಾಗ ಪಾವಗಡದಲ್ಲಿ ತೀವ್ರ ನಿಗಾ, 5 ಕಡೆ ಚೆಕ್‌ಪೋಸ್ಟ್ ಸ್ಥಾಪನೆ]]></title>
            <link>https://kannada.asianetnews.com/karnataka-districts/following-two-covid-deaths-in-andhra-pradesh-tumakuru-covid-alert-high-vigil-at-pavagada-border-gdp/articleshow-bqm682a</link>
            <guid isPermaLink="true">https://kannada.asianetnews.com/karnataka-districts/following-two-covid-deaths-in-andhra-pradesh-tumakuru-covid-alert-high-vigil-at-pavagada-border-gdp/articleshow-bqm682a</guid>
            <pubDate>Wed, 15 Jul 2026 10:29:54 +0530</pubDate>
            <description><![CDATA[ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸಾವುಗಳು ವರದಿಯಾದ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರದಿಂದ ಬರುವವರನ್ನು ತಪಾಸಣೆ ಮಾಡಲು ರಾಜವಂತಿ, ನಾಗಲಮಡಿಕೆ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಕೋವಿಡ್ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ, ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01k2cg5tbhr35nv6c3m30j7g2j,imgname-xfg-covid-virus-1754913761649.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೊರೋನಾ ಸೋಂಕಿಗೆ (ಕೋವಿಡ್&zwnj;-19) ಇಬ್ಬರು ಬಲಿಯಾಗಿರುವ ಬೆನ್ನಲ್ಲೇ, ಆಂಧ್ರಪ್ರದೇಶದೊಂದಿಗೆ ಸುದೀರ್ಘ ಗಡಿಯನ್ನು ಹಂಚಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ. ಗಡಿಭಾಗದಲ್ಲಿ ಕೋವಿಡ್ ಹರಡದಂತೆ ತಡೆಯಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಜಂಟಿಯಾಗಿ ಹೈ ಅಲರ್ಟ್ ಘೋಷಿಸಿದ್ದು, ಗಡಿ ದಾಟಿ ಬರುವವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.&lt;/p&gt;&lt;h2&gt;ಆಂಧ್ರ ಸಂಪರ್ಕಿಸುವ 5 ಪ್ರಮುಖ ಕಡೆ ತಪಾಸಣಾ ಕೇಂದ್ರ ಸ್ಥಾಪನೆ&lt;/h2&gt;&lt;p&gt;ಆಂಧ್ರಪ್ರದೇಶದಿಂದ ಪಾವಗಡ ತಾಲೂಕಿಗೆ ಬರುವ ಸಾರ್ವಜನಿಕರು ಹಾಗೂ ವಾಹನಗಳ ತಪಾಸಣೆಗಾಗಿ ಗಡಿಭಾಗದ ಐದು ಆಯಕಟ್ಟಿನ ಸ್ಥಳಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋವಿಡ್ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರಾಜವಂತಿ, ನಾಗಲಮಡಿಕೆ, ಅರಸೀಕೆರೆ, ಮತ್ತು ಟಿ.ಎನ್. ಪೇಟೆ ಸೇರಿದಂತೆ ಒಟ್ಟು ಐದು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್&zwnj;ಪೋಸ್ಟ್ ಕೇಂದ್ರಗಳನ್ನು ತೆರೆಯಲಾಗಿದೆ. ಈ ಎಲ್ಲಾ ಐದು ಕೇಂದ್ರಗಳಲ್ಲಿ ಅಗತ್ಯ ಆರೋಗ್ಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ.&lt;/p&gt;&lt;h2&gt;ಪಾವಗಡ ತಹಶೀಲ್ದಾರ್ ಕಟ್ಟುನಿಟ್ಟಿನ ಆದೇಶ&lt;/h2&gt;&lt;p&gt;ಗಡಿಭಾಗದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು ಎಂದು ಪಾವಗಡ ತಹಶೀಲ್ದಾರ್ ಅವರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಂಧ್ರಪ್ರದೇಶದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಮತ್ತು ಗಡಿ ಗ್ರಾಮಗಳಲ್ಲಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಪಿಡಿಒಗಳಿಗೆ ಆದೇಶ ಹೊರಡಿಸಲಾಗಿದೆ.&lt;/p&gt;&lt;h2&gt;ಜಿಲ್ಲಾಧಿಕಾರಿಗಳ ತುರ್ತು ಸಭೆಯ ಬೆನ್ನಲ್ಲೇ ಆ್ಯಕ್ಷನ್&lt;/h2&gt;&lt;p&gt;ನೆರೆರಾಜ್ಯ ಆಂಧ್ರದಲ್ಲಿ ಕೋವಿಡ್ ನಿಂದ ಸಾವು ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ತುಮಕೂರು ಜಿಲ್ಲಾಧಿಕಾರಿಗಳು ನಿನ್ನೆಯಷ್ಟೇ ಜಿಲ್ಲೆಯ ಎಲ್ಲಾ ತಹಶೀಲ್ದಾರ್&zwnj;ಗಳು ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿದ್ದರು. ಗಡಿಭಾಗದ ತಾಲೂಕುಗಳಲ್ಲಿ ತಕ್ಷಣವೇ ರಕ್ಷಣಾತ್ಮಕ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನೀಡಿದ್ದ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ, ಪಾವಗಡ ತಾಲೂಕು ಆಡಳಿತ ಸಕಲ ಸಿದ್ಧತೆಗಳೊಂದಿಗೆ ಕಣಕ್ಕಿಳಿದಿದೆ. ಸದ್ಯಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲದಿದ್ದರೂ, ಗಡಿ ದಾಟುವಾಗ ತಪಾಸಣೆಗೆ ಸಹಕರಿಸಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/following-two-covid-deaths-in-andhra-pradesh-tumakuru-covid-alert-high-vigil-at-pavagada-border-gdp/articleshow-bqm682a"/>
        </item>
        <item>
            <title><![CDATA[Yettinahole water: 10 ವರ್ಷಗಳ ಬಳಿಕ ಕೊನೆಗೂ ತುಮಕೂರಿಗೆ ಬಂತು ಎತ್ತಿನಹೊಳೆ ನೀರು!]]></title>
            <link>https://kannada.asianetnews.com/karnataka-districts/yettinahole-supplying-water-to-tumakuru-by-septement-rav/articleshow-d32yrxu</link>
            <guid isPermaLink="true">https://kannada.asianetnews.com/karnataka-districts/yettinahole-supplying-water-to-tumakuru-by-septement-rav/articleshow-d32yrxu</guid>
            <pubDate>Thu, 16 Jul 2026 07:14:07 +0530</pubDate>
            <description><![CDATA[ದಶಕದ ಬಳಿಕ ಪೂರ್ಣಗೊಳ್ಳುತ್ತಿರುವ ಎತ್ತಿನಹೊಳೆ ಯೋಜನೆ, ಪದೇ ಪದೇ ಪೈಪ್&zwnj;ಲೈನ್ ಸೋರಿಕೆಯಂತಹ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಈ ಸೋರಿಕೆಯಿಂದಾದ ನಷ್ಟ ಹಾಗೂ ಇದನ್ನು ತಡೆಯಲು ಅಧಿಕಾರಿಗಳು ರೂಪಿಸಿರುವ ಬಟರ್&zwnj;ಫ್ಲೈ ವಾಲ್ವ್ ಮತ್ತು ಆಲ್ಟ್ರಾಸೋನಿಕ್ ಟೆಸ್ಟ್&zwnj;ನಂತಹ ಅತ್ಯಾಧುನಿಕ ಪರಿಹಾರಗಳ ಬಗ್ಗೆ ಈ ಲೇಖನ ವಿವರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxm9bhmk5wtqmy62q8hd3jww,imgname-----------------------2026-07-16t071042.747-1784166074002.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಕಲೇಶಪುರ (ಜು.16): &lt;/strong&gt;ಹೌದು 2014ರಲ್ಲಿ ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಟಿ.ಜಿ ಹಳ್ಳಿ ಜಲಾಶಯ, ಹೆಸರುಘಟ್ಟ ಜಲಾಶಯ,ದೇವನಹಳ್ಳಿ ಕೈಗಾರಿಕ ಪ್ರದೇಶಕ್ಕೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಈ ಯೋಜನೆ ಆರಂಭಗೊಂಡಿತು.&amp;nbsp;&lt;/p&gt;&lt;h2&gt;ಹತ್ತು ವರ್ಷಗಳ ಬಳಿಕ ತುಮಕೂರಿಗೆ ಬಂತು ಎತ್ತಿನಹೊಳೆ ನೀರು&lt;/h2&gt;&lt;p&gt;10 ವರ್ಷಗಳ ಬಳಿಕ ಅಂದರೆ 2024ರಲ್ಲಿ ಉದ್ಘಾಟನೆಗೊಂಡರೂ ಅರಸೀಕೆರೆ ಹಾಗೂ ತುಮಕೂರು ಸಮೀಪ ತಲಾ ಮೂರು ಕಿ.ಮೀ. ಕಾಮಗಾರಿ ವಿವಿಧ ಕಾರಣಗಳಿಂದ ಸಂಪೂರ್ಣಗೊಳ್ಳದ ಕಾರಣ ಎತ್ತಿನಹೊಳೆಯಿಂದ ಮೇಲೆತ್ತುವ ನೀರನ್ನು ಕಾಗೆ ಹಳ್ಳದ ಮೂಲಕ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತಿತ್ತು. ಸದ್ಯ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರ ಪ್ರಯತ್ನದ ಫಲವಾಗಿ ಅರಣ್ಯ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಮೂಲಕ ಅರಸೀಕೆರೆ ತಾಲೂಕಿನ ಐದಳ್ಳ ಕಾವಲಿನ 2.5 ಕಿ.ಮೀ. ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದರೆ, ಬಾಕಿ ಇರುವ ಐದುನೂರು ಮೀಟರ್&zwnj;ನಲ್ಲಿ ರೈತರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಜಮೀನಿನ ಪರಿಹಾರದ ವಿಚಾರ ಸದ್ಯ ಸರ್ಕಾರದ ಮುಂದಿದ್ದು ಸಮಸ್ಯೆಗೆ ಪರಿಹಾರ ದೊರಕಿದ ಕೇವಲ ಒಂದು ತಿಂಗಳಿನಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಪರಿಹಾರ ದೊರೆಯಲಿದೆ ಎಂಬ ಆಶಾಭಾವನೆ ಅಧಿಕಾರಿಗಳಲ್ಲಿದೆ ಇನ್ನೂ ತುಮಕೂರು ಜಿಲ್ಲೆಯಲ್ಲಿ ಬಾಕಿ ಇದ್ದ ಮೂರು ಕಿ.ಮೀ. ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ನೀರು ಹರಿಯಲು ಕಾಲುವೆ ಸಜ್ಜಾಗಿದೆ.&lt;/p&gt;&lt;p&gt;ಸದ್ಯ ವಾಣಿವಿಲಾಸ ಸಾಗರದ ಬದಲಾಗಿ ಯೋಜನೆಯ ಉದ್ದೇಶಿತ ಪ್ರದೇಶಗಳಿಗೆ ನೀರು ಹರಿಸುವುದಾದರೆ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಸ ಬಹುದಾಗಿದ್ದು ಕಾಲುವೆಯ ನೀರು ಹರಿಯುವ ಸಾಮರ್ಥ್ಯ ಪ್ರತಿ ಸೆಂಕೆಡ್&zwnj;ಗೆ ಮೂರು ಸಾವಿರ ಕ್ಯುಸೆಕ್&zwnj; ಆಗಿದ್ದು ಕಳೆದ ಮೂರು ವರ್ಷಗಳಲ್ಲಿ ನಾಲ್ಕರಿಂದ ಐದು ಬಾರಿ ಮಾತ್ರ ಇಷ್ಟು ಪ್ರಮಾಣದ ನೀರು ಹರಿಸಲಾಗಿದೆ. ಉತ್ತಮ ಮಳೆಯಾದರೆ ೧೫೦೦ ರಿಂದ ೨೦೦೦ ಕ್ಯುಸೆಕ್&zwnj; ನೀರು ಹರಿಯುವುದು ಸಾಮಾನ್ಯವಾಗಲಿದೆ ಎಂಬುದು ನಿಗಮದ ಅಧಿಕಾರಿಗಳ ಮಾತು.&lt;/p&gt;&lt;h3&gt;ಸಮಸ್ಯೆ ಏನು?&lt;/h3&gt;&lt;p&gt;ತಾಲೂಕಿನ ಎತ್ತಿನಹೊಳೆ ಅಚ್ಚುಕಟ್ಟು ಪ್ರದೇಶದಿಂದ ತಾಲೂಕಿನ ಹೆಬ್ಬನಹಳ್ಳಿವರಗೆ ಒಟ್ಟು 126 ಕಿ.ಮೀ. ಪೈಪ್&zwnj;ಲೈನ್ ಮೂಲಕ ನೀರು ಹರಿದು ನಂತರ ತೆರೆದ ಕಾಲುವೆ ಮೂಲಕ ನೀರು ಹೊರಹೋಗಲಿದೆ. ಆದರೆ ಪೈಪ್&zwnj;ಲೈನ್ ಪದೇ ಪದೇ ತೆರೆದುಕೊಳ್ಳುವುದು ಎಂಜಿನಿಯರ್&zwnj;ಗಳಿಗೆ ಸಮಸ್ಯೆ ಸೃಷ್ಟಿಸಿದೆ. 2024ರಲ್ಲಿ ಪ್ರಾಯೋಗಿಕ ನೀರು ಹರಿವಿಕೆ ಚಾಲನೆ ನೀಡಿದ ವೇಳೆ ತಾಲೂಕಿನ ಹಾರ್ಲೇ ಕೂಡಿಗೆ, ದೇಖ್ಲಾ, ಕಾಡುಮನೆ ಹಾಗೂ ಹೆಬ್ಬಸಾಲೆ ಗ್ರಾಮಗಳ ಸಮೀಪ ಪೈಪ್&zwnj;ಲೈನ್ ಮ್ಯಾನ್ ಹೋಲು ಹಾಗೂ ಕೀ ಹೋಲುಗಳು ತೆರೆದುಕೊಂಡು ಭಾರಿ ಸಮಸ್ಯೆ ಸೃಷ್ಟಿಸಿದ್ದರಿಂದ ಸಮೀಪದ ಭತ್ತದ ಗದ್ದೆ ಹಾಗೂ ಕಾಫಿ ತೋಟಗಳಿಗೆ ನೀರು ನುಗ್ಗಿ ಬಾರಿ ನಷ್ಟ ಸಂಭವಿಸಿತ್ತು. ಇದರಿಂದ ಎಚ್ಚೆತ್ತಿದ್ದ ಅಧಿಕಾರಿಗಳು ಸಂಪೂರ್ಣ ಪೈಪ್&zwnj;ಲೈನ್ ಪರಿಶೀಲನೆ ನಡೆಸುವ ಮೂಲಕ ಮ್ಯಾನ್ ಹೋಲ್&zwnj; ಹಾಗೂ ಕೀ ಹೋಲ್&zwnj;ಗಳನ್ನು ಭದ್ರಪಡಿಸಿದ್ದಾರೆ.&amp;nbsp;&lt;/p&gt;&lt;p&gt;ಪರಿಶೀಲನೆ ನಂತರ ಇದುವರೆಗೆ ಮ್ಯಾನ್&zwnj;ಹೋಲ್&zwnj; ಹಾಗೂ ಕೀ ಹೋಲುಗಳು ತೆರೆದುಕೊಂಡು ಉದಾಹರಣೆ ಕಂಡುಬಂದಿಲ್ಲ. ಆದರೆ, ೨೦೨೫ರ ಜುಲೈ ತಿಂಗಳಿನಲ್ಲಿ ಬೈಕೆರೆ ಗ್ರಾಮ ಸಮೀಪ ಪೈಪ್&zwnj;ಗಳ ಜಾಯಿಂಟ್ ವಿಫಲವಾಗಿ ನೀರು ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿತ್ತು. ಇದಾದ ನಂತರ 2024 ಜುಲೈ 10ರಂದು ತಾಲೂಕಿನ ಹಲುಸುಲಿಗೆ ಗ್ರಾಮ ಸಮೀಪ ಮತ್ತೆ ಪೈಪ್&zwnj;ಗಳ ಮದ್ಯದ ಜಾಯಿಂಟ್ ವಿಫಲವಾಗಿ ಮತ್ತೆ ನೀರು ಹೊರಹರಿದಿದೆ. ಇದರಿಂದ ಎಚ್ಚೆತ್ತಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಅಧಿಕಾರಿಗಳ ತಂಡ ಸಂಪೂರ್ಣ ಯೋಜನೆಯ ೧೨೬ ಕಿ. ಮೀ. ಉದ್ದದ ಪೈಪ್ ಲೈನ್ ಪರೀಕ್ಷಿಸಿ ಬಟರ್ ಪ್ಲೇ ವಾಲ್ಟ್ ಆಳವಡಿಸಲು ಚಿಂತನೆ ನಡೆಸಿದ್ದು ಇದಕ್ಕಾಗಿ ಸುಮಾರು ೮ ಕೋಟಿ ರು. ಅನುದಾನ ಬೇಕಾಗುತ್ತದೆ ಎನ್ನಲಾಗುತ್ತಿದೆ.&lt;/p&gt;&lt;p&gt;&lt;strong&gt;ಆಲ್ಟ್ರಸ್ಕೋಪಿಕ್ ಟೆಸ್ಟ್:&lt;/strong&gt;&lt;/p&gt;&lt;p&gt;ಸದ್ಯ ಎತ್ತಿನಹೊಳೆಯ ಎಂಟು ಚೆಕ್ ಡ್ಯಾಮ್&zwnj;ಗಳಲ್ಲಿ ಎರಡು ಸಾವಿರದಿಂದ ೧೬ ಸಾವಿರ ಎಚ್.ಪಿ ಸಾಮರ್ಥ್ಯದ ೨೦ಕ್ಕೂ ಅಧಿಕ ಮೋಟರ್&zwnj;ಗಳಿದ್ದು ಪ್ರತಿ ಮೋಟರ್&zwnj;ನಿಂದ ಕನಿಷ್ಠ ೧೦೦ ಕ್ಯುಸೆಕ್&zwnj;ನಿಂದ ಒಂದು ಸಾವಿರ ಕ್ಯುಸೆಕ್&zwnj; ನೀರು ಮೇಲೆತ್ತುವ ಸಾಮರ್ಥ್ಯ ಹೊಂದಿವೆ ಏಕಕಾಲಕ್ಕೆ ನಾಲ್ಕಾರು ಮೋಟರುಗಳು ಕಾರ್ಯನಿರ್ವಯಿಸಿದರೆ ಕನಿಷ್ಠ ೧೫೦೦ ಕ್ಯುಸೆಕ್&zwnj; ನೀರು ಪೈಪ್&zwnj;ಗಳ ಮೂಲಕ ಹರಿಯಲಿದೆ. ಇಷ್ಟೊಂದು ನೀರು ಹರಿಯುವ ವೇಳೆ ಪೈಪ್&zwnj;ಗಳಲ್ಲಿ ಸೋರಿಕೆ ಕಂಡು ಬಂದರೆ ಪತ್ತೆ ಮಾಡಲು ಅತ್ಯಾಧುನಿಕ ಆಲ್ಟ್ರಸ್ಕೋಪಿಕ್ ಟೆಸ್ಟ್ ಆಳವಡಿಸಲಾಗುತ್ತಿದ್ದು. ನೀರು ಸೋರಿಕೆ ಪತ್ತೆಯಾದ ತಕ್ಷಣ ಬಟರ್&zwnj;ಪ್ಲೇ ವಾಲ್ಟ್ ಮೂಲಕ ದುರಸ್ತಿ ನಡೆಸಲು ಯೋಜನೆ ರೂಪಿಸಲಾಗಿದೆ. ಈ ತಂತ್ರಜ್ಞಾನದಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ವ್ಯರ್ಥವಾಗುವುದು ಹಾಗೂ ಅನವಶ್ಯಕವಾಗಿ ಹಣ ಹಾಗೂ ಶ್ರಮ ವ್ಯರ್ಥವಾಗುವುದು ತಪ್ಪಲಿದೆ ಎನ್ನಲಾಗುತ್ತಿದೆ.&lt;/p&gt;&lt;p&gt;\B \B&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/yettinahole-supplying-water-to-tumakuru-by-septement-rav/articleshow-d32yrxu"/>
        </item>
        <item>
            <title><![CDATA[1400 ರೈತರಿಗೆ ಹಸು ಖರೀದಿಸಲು 2 ಲಕ್ಷ ರು. ಸಾಲ; ಹಾಲು ಒಕ್ಕೂಟದಿಂದ ಬ್ಯಾಂಕ್‌ಗೆ ಮನವಿ]]></title>
            <link>https://kannada.asianetnews.com/karnataka-districts/1400-farmers-to-get-rs-2-lakh-loan-to-buy-cows-tumakuru-milk-union-appeals-to-canara-bank-mrq/articleshow-d3vcbkx</link>
            <guid isPermaLink="true">https://kannada.asianetnews.com/karnataka-districts/1400-farmers-to-get-rs-2-lakh-loan-to-buy-cows-tumakuru-milk-union-appeals-to-canara-bank-mrq/articleshow-d3vcbkx</guid>
            <pubDate>Sun, 12 Jul 2026 07:42:40 +0530</pubDate>
            <description><![CDATA[&lt;p&gt;ಸುಮಾರು 1400 ಹೈನುಗಾರರಿಗೆ ಹಸುಗಳನ್ನು ಖರೀದಿಸಲು ತಲಾ 2 ಲಕ್ಷ ರು. ಸಾಲ ನೀಡುವಂತೆ ತುಮಕೂರು ಹಾಲು ಒಕ್ಕೂಟವು ಕೆನರಾ ಬ್ಯಾಂಕ್&zwnj;ಗೆ ಮನವಿ ಮಾಡಿದೆ. ಈ ಸಾಲವನ್ನು ಸದ್ಬಳಕೆ ಮಾಡಿಕೊಂಡು ಪ್ರಾಮಾಣಿಕವಾಗಿ ಮರುಪಾವತಿ ಮಾಡುವುದರ ಮಹತ್ವವನ್ನು ತಿಳಿಸಲಾಗಿದ್ದು, ಇದರಿಂದ ರೈತರ ಅಭಿವೃದ್ಧಿ ಸಾಧ್ಯ ಎಂದು ಒತ್ತಿಹೇಳಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxa17k4da2j9rbnk3skb6avg,imgname-shira--1--1783822011533.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು:&lt;/strong&gt; ಶಿರಾನೂರು ಹೈನುಗಾರರಿಗೆ ಹಸುಗಳನ್ನು ಖರೀದಿಸಲು ಸುಮಾರು 14 ರೈತರಿಗೆ ಕನಿಷ್ಠ 2 ಲಕ್ಷ ರು. ಸಾಲ ನೀಡುವಂತೆ ಕೆನರಾ ಬ್ಯಾಂಕ್&zwnj;ಗೆ ಬೇಡಿಕೆ ಇಡಲಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.&lt;/p&gt;&lt;p&gt;ಅವರು ನಗರದ ನಂದಿನಿ ಕ್ಷೀರ ಭವನದಲ್ಲಿ ತುಮಕೂರು ಹಾಲು ಒಕ್ಕೂಟ, ಕೆನರಾ ಬ್ಯಾಂಕ್ ಜೊತೆ ರೈತರಿಗೆ ಸಾಲ ವಿತರಣೆಗೆ ರೈತ ಸಂಪರ್ಕ ಸಭೆ ಉದ್ಘಾಟಿಸಿದರು. ಪ್ರಸ್ತುತ ಬ್ಯಾಂಕ್ ಪ್ರತಿ ಸಂಘಕ್ಕೆ 10 ರಿಂದ 15 ಲಕ್ಷ ರು.ಗಳ ಸಾಲವನ್ನು ನೀಡಲು ತಯಾರಿವೆ. ಇಂದು ಉತ್ತಮ ಹಸುವಿನ ಬೆಲೆ 70 ಸಾವಿರದಿಂದ 1 ಲಕ್ಷದವರೆಗೆ ಇರುತ್ತದೆ. ಈ ಸಾಲದ ಮೊತ್ತದಲ್ಲಿ ಎರಡು ಹಸುಗಳನ್ನು ಖರೀದಿಸಲು ರೈತರಿಗೆ ಅನುಕೂಲ ಮಾಡಲು ಈ ಕಾರ್ಯಕ್ರಮ ರೂಪಿಸಲಾಗಿದೆ.&amp;nbsp;&lt;/p&gt;&lt;h2&gt;&lt;strong&gt;ಪ್ರಾಮಾಣಿಕ ಮರುಪಾವತಿ&lt;/strong&gt;&lt;/h2&gt;&lt;p&gt;ಕೆಲವು ರೈತರು ಸಾಲ ಮಂಜೂರಾದ ತಕ್ಷಣ, ಹೊಸ ಹಸು ಖರೀದಿಸುವ ಬದಲು ಮನೆಯಲ್ಲಿರುವ ಹಳೆಯ ಹಸುಗಳನ್ನೇ ತೋರಿಸಿ ವಿಮೆ ಮಾಡಿಸಿ, ಬಂದ ಹಣವನ್ನು ಮಗಳ ಮದುವೆ, ಶಿಕ್ಷಣ ಅಥವಾ ಇತರ ವೈಯಕ್ತಿಕ ಖರ್ಚುಗಳಿಗೆ ಬಳಸುವ ಪ್ರವೃತ್ತಿ ಇದೆ. ಇದು ಅತ್ಯಂತ ತಪ್ಪು. ಇದರಿಂದ ಸಾಲ ತೀರಿಸಲಾಗದೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹತ್ತು ಜನ ಸೇರಿ ಈ ರೀತಿ ಮಾಡಿದರೆ, ಸೊಸೈಟಿಯ ಮೇಲಿನ ನಂಬಿಕೆ ಕಳೆದುಹೋಗಿ ಭವಿಷ್ಯದಲ್ಲಿ ನಿಜವಾದ ಅರ್ಹ ರೈತನಿಗೂ ಸಾಲ ಸಿಗದಂತಾಗುತ್ತದೆ. ಈ ಬ್ಯಾಂಕ್ ಸಾಲದ ಸದುಪಯೋಗ ಹಾಗೂ ಪ್ರಾಮಾಣಿಕ ಮರುಪಾವತಿಯಿಂದ ಮಾತ್ರ ರೈತರ ಅಭಿವೃದ್ಧಿ ಸಾಧ್ಯವಾಗಿದೆ.&lt;/p&gt;&lt;p&gt;ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಗಂಗೇಶ್ ಗುಂಜನ್ ಮಾತನಾಡಿ, ರೈತರಿಗೆ ಅನುಕೂಲವಾಗುವಂತೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ), ಹೈನುಗಾರಿಕೆ, ಹಾಗೂ ಸ್ವಸಹಾಯ ಸಂಘಗಳ ಮೂಲಕ ವಿವಿಧ ಕೃಷಿ ಸಾಲ ಯೋಜನೆಗಳನ್ನು ಜಾಮೀನು ರಹಿತವಾಗಿ ಬ್ಯಾಂಕ್ ಒದಗಿಸುತ್ತಿದೆ ಎಂದರು.&lt;/p&gt;&lt;p&gt;ತುಮಕೂರು ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಗಿರೀಶ್ ಮಾತನಾಡಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವಲಯ ಮ್ಯಾನೇಜರ್ ಅಭಿನವ್, ಸೀನಿಯರ್ ಮ್ಯಾನೇಜರ್ ರಮಾನಾಥ್ ರಾಮನ್, ತುಮಕೂರು ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಗಿರೀಶ್, ವಿಸ್ತರಣಾಧಿಕಾರಿ ಚೈತ್ರ, ಹರೀಶ್ ಕುಮಾರ್, ಗಿರೀಶ್, ಬಾಲಾಜಿ, ಪುಷ್ಪಲಕ್ಷ್ಮೀ, ಸುಬೇಂದ್ರ ,ಪ್ರವೀಣ್, ಬಾಬಾ ಫಕೃದ್ಧಿನ್ ಪಿ. ಎಂ., ಹನುಮಂತರಾಯ ಇತರರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನವೀಕರಣಗೊಂಡ ರಾಜ್ಯದ 4 ರೈಲು ನಿಲ್ದಾಣಗಳು ಜುಲೈ 17ರಂದು ಲೋಕಾರ್ಪಣೆ; ಅತ್ಯಾಧುನಿಕ ಸೌಲಭ್ಯ&lt;/strong&gt;&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/1400-farmers-to-get-rs-2-lakh-loan-to-buy-cows-tumakuru-milk-union-appeals-to-canara-bank-mrq/articleshow-d3vcbkx"/>
        </item>
        <item>
            <title><![CDATA[ಎರಡು ಪ್ರತ್ಯೇಕ ರೈಲು ಮಾರ್ಗದ ಕಾಮಗಾರಿಗೆ ವೇಗ; ಮಧುಗಿರಿ–ಶಿರಾ–ಪಾವಗಡ ಜನರ ಕಾಯುವಿಕೆ ಅಂತ್ಯ!]]></title>
            <link>https://kannada.asianetnews.com/gallery/karnataka-districts/minister-v-somanna-gives-an-important-update-on-progress-of-the-new-separate-indian-railways-lines-mrq-gbbsp13</link>
            <guid isPermaLink="true">https://kannada.asianetnews.com/gallery/karnataka-districts/minister-v-somanna-gives-an-important-update-on-progress-of-the-new-separate-indian-railways-lines-mrq-gbbsp13</guid>
            <pubDate>Tue, 14 Jul 2026 12:19:41 +0530</pubDate>
            <description><![CDATA[&lt;p&gt;ಮಧುಗಿರಿ, ಶಿರಾ ಮತ್ತು ಪಾವಗಡ ಭಾಗದ ಜನರ ದಶಕಗಳ ಕಾಲದ ರೈಲ್ವೆ ಕನಸು ಕೊನೆಗೂ ನನಸಾಗುವತ್ತ ದಾಪುಗಾಲು ಇಟ್ಟಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ಭಾಗದ ಎರಡು ಪ್ರತ್ಯೇಕ ನೂತನ ರೈಲು ಮಾರ್ಗಗಳ ಪ್ರಗತಿಯ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxfnmjsmfwhc6rq5aqhdybav,imgname-indian-railways-1784011180852.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಧುಗಿರಿ, ಶಿರಾ ಮತ್ತು ಪಾವಗಡ ಭಾಗದ ಜನರ ದಶಕಗಳ ಕಾಲದ ರೈಲ್ವೆ ಕನಸು ಕೊನೆಗೂ ನನಸಾಗುವತ್ತ ದಾಪುಗಾಲು ಇಟ್ಟಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ಭಾಗದ ಎರಡು ಪ್ರತ್ಯೇಕ ನೂತನ ರೈಲು ಮಾರ್ಗಗಳ ಪ್ರಗತಿಯ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ.&lt;/p&gt;&lt;img&gt;&lt;p&gt;ಮಧುಗಿರಿ, ಶಿರಾ ಹಾಗೂ ಪಾವಗಡ ಭಾಗದ ಜನರು ಹಲವು ದಶಕಗಳಿಂದ ಎದುರು ನೋಡುತ್ತಿದ್ದ ರೈಲ್ವೆ ಸಂಪರ್ಕದ ಕನಸು ಇದೀಗ ನನಸಾಗುವತ್ತ ಸಾಗುತ್ತಿದೆ. 2027ರ ಡಿಸೆಂಬರ್ ವೇಳೆಗೆ ದಾವಣಗೆರೆ&ndash;ಪಾವಗಡ ರೈಲು ಮಾರ್ಗವನ್ನು ಲೋಕಾರ್ಪಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.&lt;/p&gt;&lt;img&gt;&lt;p&gt;ದಾವಣಗೆರೆ&ndash;ತುಮಕೂರು ಹಾಗೂ ತುಮಕೂರು&ndash;ಕಲ್ಯಾಣದುರ್ಗ ಸಂಪರ್ಕ ಕಲ್ಪಿಸುವ ಎರಡು ಮಹತ್ವದ ಹೊಸ ರೈಲು ಮಾರ್ಗಗಳ ಕಾಮಗಾರಿ ವೇಗ ಪಡೆದುಕೊಂಡಿದ್ದು, ಹಲವು ವರ್ಷಗಳಿಂದ ಭೂಸ್ವಾಧೀನ ಹಂತದಲ್ಲೇ ವಿಳಂಬವಾಗಿದ್ದ ಯೋಜನೆಗಳು ಇದೀಗ ಚುರುಕುಗೊಂಡಿವೆ.&lt;/p&gt;&lt;img&gt;&lt;p&gt;ರಾಯದುರ್ಗದಿಂದ ಪಾವಗಡ ಪಟ್ಟಣದವರೆಗೆ ರೈಲು ಮಾರ್ಗದ ಕಾಮಗಾರಿ ಪೂರ್ಣಗೊಂಡಿದ್ದು, ತುಮಕೂರಿನಿಂದ ಊರುಕೆರೆ ಜಂಕ್ಷನ್&zwnj;ವರೆಗಿನ ಕಾಮಗಾರಿಯೂ ಮುಕ್ತಾಯವಾಗಿದೆ. ಪಾವಗಡ&ndash;ಮಧುಗಿರಿ&ndash;ಕೊರಟಗೆರೆ&ndash;ತುಮಕೂರು ಮಾರ್ಗದ ಮಧ್ಯ ಭಾಗದಲ್ಲಿಯೂ ಕಾಮಗಾರಿ ವೇಗವಾಗಿ ನಡೆಯುತ್ತಿದೆ.&lt;/p&gt;&lt;img&gt;&lt;p&gt;ಮಧುಗಿರಿ ರೈಲ್ವೇ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಸಚಿವ ಕೆ.ಎನ್. ರಾಜಣ್ಣ ಗುದ್ದಲಿ ಪೂಜೆ ನೆರವೇರಿಸಿದ್ದು, ಯೋಜನೆಗೆ ಮತ್ತಷ್ಟು ಚೈತನ್ಯ ಸಿಕ್ಕಿದೆ. ಮತ್ತೊಂದೆಡೆ, ದಾವಣಗೆರೆ&ndash;ತುಮಕೂರು ರೈಲು ಮಾರ್ಗದ ಕಾಮಗಾರಿಯೂ ವೇಗ ಪಡೆದುಕೊಂಡಿದ್ದು, ತುಮಕೂರು&ndash;ಶಿರಾ ನಡುವಿನ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.&lt;/p&gt;&lt;img&gt;&lt;p&gt;ಈ ಎರಡೂ ಮಹತ್ವದ ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ ನೀಡಿಸುವ ಉದ್ದೇಶ ಹೊಂದಿರುವ ರೈಲ್ವೆ ಇಲಾಖೆ, ಇನ್ನೊಂದೂವರೆ ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವ ಗಡುವು ನಿಗದಿಪಡಿಸಿದೆ. ಈ ಯೋಜನೆಗಳು ಪೂರ್ಣಗೊಂಡರೆ ತುಮಕೂರು, ಮಧುಗಿರಿ, ಶಿರಾ, ಪಾವಗಡ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಆಂಧ್ರ ಗಡಿಭಾಗದ ಜನರಿಗೆ ಉತ್ತಮ ರೈಲು ಸಂಪರ್ಕ ದೊರೆಯಲಿದ್ದು, ವ್ಯಾಪಾರ, ಶಿಕ್ಷಣ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೊಸ ದಿಕ್ಕು ಸಿಗುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;&lt;strong&gt;1. ತುಮಕೂರು - ಕಲ್ಯಾಣದುರ್ಗ (ಪಾವಗಡ/ಮಧುಗಿರಿ) ಮಾರ್ಗ:&lt;/strong&gt;&lt;/p&gt;&lt;p&gt;ರಾಯದುರ್ಗದಿಂದ ಪಾವಗಡ ಪಟ್ಟಣದವರೆಗಿನ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಇತ್ತ ತುಮಕೂರಿನಿಂದ ಊರುಕೆರೆ ಜಂಕ್ಷನ್ ವರೆಗಿನ ರೈಲ್ವೆ ಕಾಮಗಾರಿಯೂ ಮುಕ್ತಾಯಗೊಂಡಿದೆ. ಸದ್ಯ ಪಾವಗಡ - ಮಧುಗಿರಿ - ಕೊರಟಗೆರೆ - ತುಮಕೂರು ಮಧ್ಯದ ಭಾಗದಲ್ಲಿ ಕಾಮಗಾರಿ ಅತ್ಯಂತ ವೇಗವಾಗಿ ಪ್ರಗತಿಯಲ್ಲಿದೆ.&lt;/p&gt;&lt;p&gt;&lt;strong&gt;2.ತುಮಕೂರು - ದಾವಣಗೆರೆ ನೇರ ಮಾರ್ಗ&lt;/strong&gt;&lt;/p&gt;&lt;p&gt;ದಾವಣಗೆರೆ ರೈಲು ಮಾರ್ಗದ ಕಾಮಗಾರಿಗೂ ಭಾರಿ ವೇಗ ಸಿಕ್ಕಿದ್ದು, ತುಮಕೂರು ಮತ್ತು ಶಿರಾ ನಡುವಿನ ಕಾಮಗಾರಿ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಒಟ್ಟಾರೆಯಾಗಿ, ಈ ಭಾಗದ ಜನರ ಬಹುಕಾಲದ ರೈಲ್ವೆ ಸಂಪರ್ಕದ ಬೇಡಿಕೆಯು ಕಾಲಮಿತಿಯೊಳಗೆ ಪೂರ್ಣಗೊಳ್ಳುವ ಭರವಸೆ ಸಿಕ್ಕಿದ್ದು, ಶೀಘ್ರದಲ್ಲೇ ಈ ಮಾರ್ಗದಲ್ಲಿ ರೈಲುಗಳು ಸಂಚರಿಸಲಿವೆ.&lt;/p&gt;]]></content:encoded>
            <category>tumakuru</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/minister-v-somanna-gives-an-important-update-on-progress-of-the-new-separate-indian-railways-lines-mrq-gbbsp13"/>
        </item>
        <item>
            <title><![CDATA[Tumakuruದೇವರಾಯನದುರ್ಗ ಬೆಟ್ಟದಲ್ಲಿ ರೀಲ್ಸ್ ಹುಚ್ಚು, ಕ್ಯಾಮಾರಾ ಆನ್ ಆಗ್ತಿದ್ದಂತೆಯೇ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ!]]></title>
            <link>https://kannada.asianetnews.com/karnataka-districts/tumakuru-news-pu-college-lecturer-plunges-off-devarayanadurga-cliff-while-making-reels-gdp/articleshow-hxm861x</link>
            <guid isPermaLink="true">https://kannada.asianetnews.com/karnataka-districts/tumakuru-news-pu-college-lecturer-plunges-off-devarayanadurga-cliff-while-making-reels-gdp/articleshow-hxm861x</guid>
            <pubDate>Sun, 28 Jun 2026 14:22:31 +0530</pubDate>
            <description><![CDATA[ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ರೀಲ್ಸ್ ಮಾಡಲು ಹೋಗಿ ಕಾಲೇಜು ಉಪನ್ಯಾಸಕರೊಬ್ಬರು ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಥಳೀಯರ ಸಮಯೋಚಿತ ರಕ್ಷಣೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಿಗಾಗಿ ಪ್ರಾಣ ಪಣಕ್ಕಿಡುವ ಅಪಾಯಕಾರಿ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw6pj6thta8wmpd4z9nze6ja,imgname-tumakuru-1782636419919.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು&lt;/strong&gt;: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆಯಲು ಯುವಜನತೆ ಪ್ರಾಣವನ್ನೇ ಪಣಕ್ಕಿಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ತುಮಕೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾದ ದೇವರಾಯನದುರ್ಗ ಬೆಟ್ಟದಲ್ಲಿ ರೀಲ್ಸ್ ಮಾಡಲು ಹೋಗಿ ಕಾಲೇಜು ಉಪನ್ಯಾಸಕರೊಬ್ಬರು ಕಾಲು ಜಾರಿ ಬೆಟ್ಟದಿಂದ ಆಳವಾದ ಪ್ರಪಾತಕ್ಕೆ ಬಿದ್ದಿರುವ ಗಂಭೀರ ಘಟನೆ ಸಂಭವಿಸಿದೆ.&lt;/p&gt;&lt;h2&gt;ರೀಲ್ಸ್ ಮಾಡುವ ಸಾಹಸಕ್ಕೆ ಕೈಹಾಕಿ ದುರಂತ&lt;/h2&gt;&lt;p&gt;ಗಾಯಗೊಂಡ ದುರ್ದೈವಿ ಉಪನ್ಯಾಸಕನನ್ನು ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಮೂಲತಃ ತುಮಕೂರು ತಾಲೂಕಿನ ಬಳ್ಳಾಪುರದವರಾದ ಶಿವಪ್ರಸಾದ್ ಅವರು ಪ್ರಸ್ತುತ ಹಾಸನ ಜಿಲ್ಲೆಯ ಅರಸೀಕೆರೆಯ ಪಿಯು ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯ ಮಜಾ ಕಳೆಯಲು ದೇವರಾಯನದುರ್ಗ ಬೆಟ್ಟಕ್ಕೆ ಬಂದಿದ್ದ ಶಿವಪ್ರಸಾದ್, ಇಲ್ಲಿನ ಸುಂದರ ವಾತಾವರಣದಲ್ಲಿ ಸಾಮಾಜಿಕ ಮಾಧ್ಯಮಗಳಿಗಾಗಿ 'ರೀಲ್ಸ್' (Reels) ವೀಡಿಯೊ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಅವರು ದೇವರಾಯನದುರ್ಗ ದೇವಾಲಯದ ಹಿಂಭಾಗದಲ್ಲಿರುವ ಅಪಾಯಕಾರಿ ಹಾಗೂ ಕಡಿದಾದ ಬಂಡೆಯೊಂದನ್ನು ಹತ್ತಿದ್ದಾರೆ. ಆದರೆ, ವೀಡಿಯೊ ಚಿತ್ರೀಕರಣದ ಭರದಲ್ಲಿ ಮೈಮರೆತಾಗ ಆಕಸ್ಮಿಕವಾಗಿ ಕಾಲು ಜಾರಿ, ಬೆಟ್ಟದ ಮೇಲಿಂದ ನೂರಾರು ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದ್ದಾರೆ.&lt;/p&gt;&lt;h2&gt;ರಕ್ಷಣೆಗೆ ಧಾವಿಸಿದ ಸ್ಥಳೀಯರು: ಕೂದಲೆಳೆಯ ಅಂತರದಲ್ಲಿ ಬಚಾವ್&lt;/h2&gt;&lt;p&gt;ಶಿವಪ್ರಸಾದ್ ಅವರು ಬೆಟ್ಟದಿಂದ ಕೆಳಗೆ ಬೀಳುತ್ತಿದ್ದಂತೆ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅದೃಷ್ಟವಶಾತ್, ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯ ನಿವಾಸಿಗಳು ಹಾಗೂ ಭಕ್ತಾದಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಅತ್ಯಂತ ಶ್ರಮವಹಿಸಿ ಪ್ರಪಾತಕ್ಕೆ ಇಳಿದ ಸ್ಥಳೀಯರು, ತೀವ್ರವಾಗಿ ಗಾಯಗೊಂಡಿದ್ದ ಶಿವಪ್ರಸಾದ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.&lt;/p&gt;&lt;p&gt;ಬೆಟ್ಟದಿಂದ ಬಿದ್ದ ತೀವ್ರತೆಗೆ ಶಿವಪ್ರಸಾದ್ ಅವರ ಎರಡೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸದ್ಯ ಅವರನ್ನು ತುಮಕೂರಿನ ಪ್ರಸಿದ್ಧ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;ಹೆಚ್ಚುತ್ತಿರುವ ರೀಲ್ಸ್ ಹಾವಳಿ, ಅಪಾಯಕಾರಿ ತಾಣಗಳಲ್ಲಿ ಎಚ್ಚರಿಕೆ ಅಗತ್ಯ&lt;/h2&gt;&lt;p&gt;ಪ್ರವಾಸಿ ತಾಣಗಳು, ಜಲಪಾತಗಳು ಹಾಗೂ ಎತ್ತರದ ಬೆಟ್ಟ-ಗುಡ್ಡಗಳಲ್ಲಿ ಕೇವಲ ಲೈಕ್ಸ್ ಮತ್ತು ವೀಕ್ಷಣೆಗಳಿಗಾಗಿ ಜೀವವನ್ನು ಪಣಕ್ಕಿಡುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ. ವಿದ್ಯಾವಂತ ಉಪನ್ಯಾಸಕರೇ ಇಂತಹ ಬೇಜವಾಬ್ದಾರಿ ವರ್ತನೆಗೆ ಮುಂದಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರವಾಸಿಗರು ಇಂತಹ ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಸೆಲ್ಫಿ ಹಾಗೂ ರೀಲ್ಸ್ ಹುಚ್ಚಿನಿಂದ ದೂರವಿರಬೇಕು ಮತ್ತು ಜಿಲ್ಲಾಡಳಿತವು ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/tumakuru-news-pu-college-lecturer-plunges-off-devarayanadurga-cliff-while-making-reels-gdp/articleshow-hxm861x"/>
        </item>
        <item>
            <title><![CDATA[Tumkuru: ಶಿರಾ ಬಾಂಬ್ ಸ್ಫೋಟ: ಪಾಗಲ್ ಪ್ರೇಮಿಯ ಹಿಂದಿನ ಭಯಾನಕ ರಹಸ್ಯ ಬಯಲು!]]></title>
            <link>https://kannada.asianetnews.com/karnataka-districts/a-significant-turning-point-in-the-crazy-lover-case-important-information-revealed-at-the-sp-press-conference/articleshow-idk5tuk</link>
            <guid isPermaLink="true">https://kannada.asianetnews.com/karnataka-districts/a-significant-turning-point-in-the-crazy-lover-case-important-information-revealed-at-the-sp-press-conference/articleshow-idk5tuk</guid>
            <pubDate>Wed, 01 Jul 2026 12:53:28 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯ ಶಿರಾ ಬಳಿ ಬಾಂಬ್ ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ಮಹತ್ವದ ಮಾಹಿತಿಯೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಎಸ್ಪಿ ಸುದ್ದಿಗೋಷ್ಠಿ ನಡೆಸಿ &amp;nbsp;ಮಹತ್ವದ ಮಾಹಿತಿ ಬಹಿರಂಗಗೊಳಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw49drpb9rmqs4gbkt502r3p,imgname-tumkur-car-fire-incident-1782555534027.jpg" type="image/jpeg" height="390" width="690"/>
            <content:encoded><![CDATA[&lt;p&gt;ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿ ಹಳ್ಳಿ ಬಳಿ ಜೂನ್ ೨೭ರಂದು ಚಲಿಸುತ್ತಿದ್ದ ಕ್ಯಾಬ್&zwnj;ನಲ್ಲಿ ಪ್ರೇಯಸಿಗೆ ಚಾಕುವಿನಿಂದ ಇರಿದು ಕಾರಿನಲ್ಲೇ ಬಾಂಬ್&zwnj; ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಪಡೆದಿದೆ. ಈ ಕುರಿತು ಕಲ್ಲಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಾಗಲ್ ಪ್ರೇಮಿಗೆ ಬಾಂಬ್ ಎಲ್ಲಿಂದ ಸಿಕ್ಕಿತು ಎಂಬುದರ ಎಂಬುದರ ಕುರಿತು ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.&lt;/p&gt;&lt;h2&gt;&lt;strong&gt;ತುಮಕೂರು ಎಸ್&zwnj;ಪಿಯಿಂದ ಸುದ್ದಿಗೋಷ್ಠಿ!&lt;/strong&gt;&lt;/h2&gt;&lt;p&gt;ಕಾರಿನಲ್ಲಿ ಬಾಂಬ್ ಸ್ಪೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿಯೊಂದನ್ನು ತುಮಕೂರು ಎಸ್ಪಿ ಅಶೋಕ್ ಕೆ.ವಿ ಸುದ್ದಿಗೋಷ್ಠಿಯಲ್ಲಿ ಬಿಚ್ಚಿಟ್ಟಿದ್ದಾರೆ. ಸ್ಪೋಟಗೊಂಡಿರೋದು ಕಚ್ಚಾ ಬಾಂಬ್ ಎನ್ನುವುದು ಖಚಿತವಾಗಿದೆ. ಅಲ್ಲದೇ ಮೃತ ನಾಗೇಂದ್ರ ಹೊನ್ನಾವರ ತಾಲೂಕಿನ ಚಂದಾವರ ಗ್ರಾಮದಿಂದ ಕಚ್ಚಾ ಬಾಂಬ್ ತಂದಿರುವುದು ಪಕ್ಕಾ ಆಗಿದೆ. ಇದರೊಂದಿಗೆ ಬಾಂಬ್&zwnj; ಎಲ್ಲಿಂದ ದೊರೆತಿದೆ ಎನ್ನುವುದು ಇದೀಗ ಬೆಳಕಿಗೆ ಬಂದಿದೆ.&lt;/p&gt;&lt;h3&gt;&lt;strong&gt;ಬಾಂಬ್&zwnj; ತಂದಿದ್ದು ಎಲ್ಲಿಂದ?&lt;/strong&gt;&lt;/h3&gt;&lt;p&gt;ಬಾಂಬ್&zwnj; ತಂದ ಕಥೆ ಮಾತ್ರ ರೋಚಕವಾಗಿದೆ. ಮೃತ ನಾಗೇಂದ್ರ ಚಂದಾವರ ಗ್ರಾಮದ ಜಾರ್ಜ್ ನಿಕ್ಲೋವ್ ಫರ್ನಾಂಡೀಸ್ ನಿಂದ ಮೂರು ಕಚ್ಚಾ ಬಾಂಬ್ ಖರೀದಿ ಮಾಡಿದ್ದಾನೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ ಅದನ್ನು ಖರೀದಿಸಲು ಕಾರಣ ಬೇರೆಯದ್ದೇ ಆಗಿತ್ತು ಎನ್ನುವುದು ಈಗ ಬೆಳಕಿಗೆ ಬಂದಿದೆ. ಜಾರ್ಜ್ ನಿಕ್ಲೋವ್ ಫರ್ನಾಂಡೀಸ್ ಎಂಬಾತನು ಮೀನುಗಾರಿಕೆ ಉದ್ದೇಶಕ್ಕೆ ಕಚ್ಚಾ ಬಾಂಬ್ ತಯಾರು ಮಾಡಿ ಮಾರಾಟ ಮಾಡುತಿದ್ದ ಎನ್ನುವುದು ಬಯಲಾಗಿದೆ. ಇದಲ್ಲದೇ ನಿಕ್ಲೋವ್&zwnj; ನಾಗೇಂದ್ರನ ಜೊತೆಗೆ ಅವರ ಸಂಬಂಧಿ ಸಂದೀಪ್ ಗೌಡ, ನಾರಾಯಣ ಡೊಲ್ಲುಗೌಡ ಮತ್ತು ನಾಗರಾಜು ಡೊಲ್ಲುಗೌಡ ಗೂ ಬಾಂಬ್ ಕೊಟ್ಟಿದ್ದ ಎನ್ನುವುದು ಇದೀಗ ಕಂಡುಬಂದಿದೆ ಎನ್ನಲಾಗಿದೆ. ಈ ಮೂವರನ್ನು ಪೊಲೀಸರು ಈಗ ವಶಪಡಿಸಿಕೊಂಡಿದ್ದಾರೆ.&amp;nbsp;&lt;/p&gt;&lt;h3&gt;&lt;strong&gt;3 ಕಚ್ಚಾ ಬಾಂಬ್ ಬೆಂಗಳೂರಿಗೆ ತಂದಿದ್ದ ಪಾಗಲ್&zwnj; ಪ್ರೇಮಿ!&lt;/strong&gt;&lt;/h3&gt;&lt;p&gt;ಆ ಕಚ್ಚಾ ಬಾಂಬ್ ಸ್ಪೋಟಿಸಿಕೊಂಡು ನಾಗೇಂದ್ರ ಕಾರು ಸಮೇತ ಸಜೀವ ದಹನ ಆಗಿದ್ದಾನೆ ಎಂದು ಪೊಲೀಸ್&zwnj; ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಜಾರ್ಜ್ ನಿಕ್ಲೋವ್ ಫರ್ನಾಂಡೀಸ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಾಗ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಫರ್ನಾಂಡೀಸ್&zwnj;ಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಣವಾದ ಮೇಲೆ ಇನ್ನು ಕೆಲ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ ಎನಲಾಗಿದೆ. ಆದ್ದರಿಂದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.&lt;/p&gt;&lt;h3&gt;&lt;strong&gt;ತನಿಖೆ ಮುಂದುವರೆಸಿದ ಪೊಲೀಸ್&zwnj;ರು!&lt;/strong&gt;&lt;/h3&gt;&lt;p&gt;ಇನ್ನು ಜಾರ್ಜ್ ನಿಕ್ಲೋವ್ ಫರ್ನಾಂಡೀಸ್ ಬಳಿ ಕಚ್ಚಾ ಬಾಂಬ್ ಖರೀದಿದ್ದ ನಾಗೇಂದ್ರ ಸಂಬಂಧಿಕರು ಮೀನುಗಾರಿಕೆ ಉದ್ದೇಶಕ್ಕೆ ಬಳಸಿದ್ದಾರೆ. ಸದ್ಯ ಈ ಘಟನೆ ಸಂಬಂಧ ಅಕೋಲಾ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ. ಈ ನಿಟ್ಟಿನಲ್ಲಿ ಅಂಕೋಲಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕೇಸ್&zwnj;ಗೆ ಪೊಲೀಸ್&zwnj; ವವಲಯ ಅಂತ್ಯ ಹಾಡಲಿದೆಯೇ ಎನ್ನುವುದನ್ನು ನೋಡಬೇಕಾಗಿದೆ.&lt;/p&gt;]]></content:encoded>
            <category>tumakuru</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/a-significant-turning-point-in-the-crazy-lover-case-important-information-revealed-at-the-sp-press-conference/articleshow-idk5tuk"/>
        </item>
        <item>
            <title><![CDATA[Tumakuru Manual Scavenging: ಡಿಸಿಎಂ ಪರಮೇಶ್ವರ್ ತವರು ಕ್ಷೇತ್ರದಲ್ಲೇ ಬರಿಗೈಯಲ್ಲೇ ಮಲ ತುಂಬಿದ ಕಾರ್ಮಿಕರು!]]></title>
            <link>https://kannada.asianetnews.com/karnataka-districts/workers-cleaned-toilets-without-any-safety-equipment-in-tumkur-incident-at-keb-engineers-association-fir-rav/articleshow-o8c13ux</link>
            <guid isPermaLink="true">https://kannada.asianetnews.com/karnataka-districts/workers-cleaned-toilets-without-any-safety-equipment-in-tumkur-incident-at-keb-engineers-association-fir-rav/articleshow-o8c13ux</guid>
            <pubDate>Sat, 27 Jun 2026 04:51:31 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದ್ದು ಮುಗ್ದ ಕಾರ್ಮಿಕರಿಂದ ಬರಿಗೈಲಿ ಮಲ ಬಾಚಿಸಿದ ಘಟನೆ ಇಲ್ಲಿನ ಕೆಇಬಿ ಎಂಜಿನಿಯರ್ಸ್ ಸಂಘದ ಆವರಣದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw33hgmczg32j9rtd48xjjvs,imgname----------------------12--1782515810956.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;&amp;nbsp;ಬರೀ ಗೈ, ಬರಿಗಾಲಲ್ಲಿ ಸ್ವಚ್ಛ ಮಾಡಿದ ಕಾರ್ಮಿಕರು&lt;/li&gt; &lt;li&gt;ಕೆಇಬಿ ಎಂಜಿನಿಯರ್&zwnj;ಗಳ ಸಂಘದ ಆವರಣದಲ್ಲಿ ಘಟನೆ&lt;/li&gt;&lt;/ul&gt;&lt;p&gt;ತುಮಕೂರು (ಜೂ.27): ತುಮಕೂರು ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದ್ದು ಮುಗ್ದ ಕಾರ್ಮಿಕರಿಂದ ಬರಿಗೈಲಿ ಮಲ ಬಾಚಿಸಿದ ಘಟನೆ ಇಲ್ಲಿನ ಕೆಇಬಿ ಎಂಜಿನಿಯರ್ಸ್ ಸಂಘದ ಆವರಣದಲ್ಲಿ ನಡೆದಿದೆ.&lt;/p&gt;&lt;h2&gt;ಬರಿಗೈ, ಬರಿಗಾಲಲ್ಲೇ ಮಲ ತುಂಬುತ್ತಿದ್ದ ಕಾರ್ಮಿಕರು&lt;/h2&gt;&lt;p&gt;ನಗರದ ಕೆಇಬಿ ಎಂಜಿನಿಯರ್&zwnj;ಗಳ ಸಂಘದ ಆವರಣದಲ್ಲಿರುವ ಎರಡು ಕಕ್ಕಸು ಗುಂಡಿಗಳಲ್ಲಿನ ಮಲವನ್ನು ಕಾರ್ಮಿಕರು ಯಾವುದೇ ಗ್ಲೌಸ್, ಮಾಸ್ಕ್, ಗಮ್ ಬೂಟ್&zwnj;ಗಳಂತ ಸುರಕ್ಷಾ ಸಾಧನಗಳಿಲ್ಲದೇ ಬರಿಗೈ, ಬರಿಗಾಲಿನಲ್ಲಿ ನಿಂತು ಟ್ರ್ಯಾಕ್ಟರ್&zwnj;ಗೆ ತುಂಬುತ್ತಿದ್ದ ಅಮಾನವೀಯ ಘಟನೆ ನಡೆದಿದೆ.&lt;/p&gt;&lt;p&gt;ತುಮಕೂರಿನ ನಂದೀಶ್, ಅರುಣ್, ಮಧುಗಿರಿ ಮೂಲದ ಮೂರ್ತಿ ನಾಯ್ಕ ಹಾಗೂ ನವೀನ ಕಳೆದ ಮೂರು ದಿನಗಳಿಂದ ಈ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಮಣ್ಣು ತುಂಬಲೆಂದು ಕರೆತಂದರು. ಆದರೆ ಇಲ್ಲಿಗೆ ಬಂದು ನೋಡಿದಾಗ ಶೌಚ ಗುಂಡಿ ಎಂದು ತಿಳಿಯಿತು. ಹೊಟ್ಟೆ ಪಾಡಿಗಾಗಿ ಒಪ್ಪಿಕೊಂಡು ಈ ಕೆಲಸ ಮಾಡುತ್ತಿದ್ದೇವೆ. ಈ ಕೆಲಸ ಮಾಡಬಾರದು ಅಂತಾ ನಮಗೆ ಗೊತ್ತಿರಲಿಲ್ಲ. ಇನ್ನು ಮುಂದೆ ಇಂತಹ ಕೆಲಸಕ್ಕೆ ಕರೆದರೆ ಹೋಗುವುದಿಲ್ಲ ಎಂದು ಕಾರ್ಮಿಕರು ತಿಳಿಸಿದ್ದಾರೆ.&lt;/p&gt;&lt;h3&gt;ಸ್ವಯಂಪ್ರೇರಿತ ದೂರು ದಾಖಲು&lt;/h3&gt;&lt;p&gt;ಇತ್ತೀಚೆಗೆ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಬಾಲ ಕಾರ್ಮಿಕನಿಂದ ಶೌಚ ಗುಂಡಿಯ ಮಲ ಸ್ವಚ್ಛಗೊಳಿಸಲಾಗಿತ್ತು. ಇದೀಗ ತುಮಕೂರಲ್ಲೂ ಇಂತಹ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದ್ದು ಪೊಲೀಸರು ಸ್ವಯಂ ಪ್ರೇರಿತ ಕೇಸ್&zwnj; ದಾಖಲಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/workers-cleaned-toilets-without-any-safety-equipment-in-tumkur-incident-at-keb-engineers-association-fir-rav/articleshow-o8c13ux"/>
        </item>
        <item>
            <title><![CDATA[ನಾಳೆಯಿಂದ ಯಲಹಂಕ-ಅರಸೀಕೆರೆ ನಡುವೆ Memu Train ಸರ್ವೀಸ್‌ ಆರಂಭ, ಈ ಸ್ಟೇಷನ್‌ಗಳಲ್ಲಿ ಇರಲಿದೆ ಸ್ಟಾಪ್‌]]></title>
            <link>https://kannada.asianetnews.com/gallery/bengaluru-urban/yelahanka-arsikere-memu-train-service-starts-july-14-timetable-stoppages-san-op7hr1o</link>
            <guid isPermaLink="true">https://kannada.asianetnews.com/gallery/bengaluru-urban/yelahanka-arsikere-memu-train-service-starts-july-14-timetable-stoppages-san-op7hr1o</guid>
            <pubDate>Mon, 13 Jul 2026 11:32:37 +0530</pubDate>
            <description><![CDATA[&lt;p&gt;ಯಲಹಂಕ ಮತ್ತು ಅರಸೀಕೆರೆ ನಡುವೆ ಹೊಸ ಮೇಮು (MEMU) ರೈಲು ಸೇವೆ ಜುಲೈ 14 ರಿಂದ ಆರಂಭವಾಗಲಿದೆ. ವಾರದಲ್ಲಿ ಆರು ದಿನ ಸಂಚರಿಸುವ ಈ ರೈಲು, ಯಶವಂತಪುರ, ತುಮಕೂರು, ಮತ್ತು ತಿಪಟೂರಿನಂತಹ ಪ್ರಮುಖ ನಿಲ್ದಾಣಗಳನ್ನು ಸಂಪರ್ಕಿಸಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxd0t4yhbyg2axjmk5vpadr9,imgname-railway-board-approves-yelahanka-arsikere-memu-train-service-starting-july-14--2--1783922234321.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಲಹಂಕ ಮತ್ತು ಅರಸೀಕೆರೆ ನಡುವೆ ಹೊಸ ಮೇಮು (MEMU) ರೈಲು ಸೇವೆ ಜುಲೈ 14 ರಿಂದ ಆರಂಭವಾಗಲಿದೆ. ವಾರದಲ್ಲಿ ಆರು ದಿನ ಸಂಚರಿಸುವ ಈ ರೈಲು, ಯಶವಂತಪುರ, ತುಮಕೂರು, ಮತ್ತು ತಿಪಟೂರಿನಂತಹ ಪ್ರಮುಖ ನಿಲ್ದಾಣಗಳನ್ನು ಸಂಪರ್ಕಿಸಲಿದೆ.&lt;/p&gt;&lt;img&gt;&lt;p&gt;ಯಲಹಂಕ ಮತ್ತು ಅರಸೀಕೆರೆ ನಡುವೆ ದೈನಂದಿನ ಪ್ರಯಾಣ ಬೆಳೆಸುವ ಸಾರ್ವಜನಿಕರಿಗೆ ರೈಲ್ವೆ ಮಂಡಳಿಯು ಭರ್ಜರಿ ಕೊಡುಗೆ ನೀಡಿದೆ. ಈ ಎರಡು ಪ್ರಮುಖ ನಿಲ್ದಾಣಗಳ ಮಧ್ಯೆ ಹೊಸ ಮೇಮು (MEMU) ರೈಲು ಸೇವೆಗೆ ಅಧಿಕೃತ ಅನುಮೋದನೆ ದೊರೆತಿದ್ದು, ಜುಲೈ 14 ರಿಂದ (ಮಂಗಳವಾರ) ಈ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.&lt;/p&gt;&lt;img&gt;&lt;p&gt;ರೈಲು ಸಂಖ್ಯೆ 66505 ಯಲಹಂಕ-ಅರಸೀಕೆರೆ ಮೇಮು ರೈಲು ಪ್ರತಿದಿನ ಬೆಳಿಗ್ಗೆ 6:45 ಕ್ಕೆ ಯಲಹಂಕದಿಂದ ಹೊರಟು, 11:00 ಗಂಟೆಗೆ ಅರಸೀಕೆರೆಯನ್ನು ತಲುಪಲಿದೆ. ಅದೇ ರೀತಿ ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 66506 ಅರಸೀಕೆರೆ-ಯಲಹಂಕ ಮೇಮು ರೈಲು ಮಧ್ಯಾಹ್ನ 2:10 ಕ್ಕೆ ಅರಸೀಕೆರೆಯಿಂದ ನಿರ್ಗಮಿಸಿ, ಸಂಜೆ 7:15 ಕ್ಕೆ ಯಲಹಂಕ ನಿಲ್ದಾಣಕ್ಕೆ ಬಂದು ತಲುಪಲಿದೆ.&lt;/p&gt;&lt;img&gt;&lt;p&gt;ಈ ಹೊಸ ರೈಲು ಸೇವೆಯು ಒಟ್ಟು 8 ಮೇಮು (MEMU) ಕೋಚ್&zwnj;ಗಳನ್ನು ಒಳಗೊಂಡಿರುತ್ತದೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ರೈಲು ವಾರದಲ್ಲಿ ಒಟ್ಟು 6 ದಿನಗಳ ಕಾಲ (ಭಾನುವಾರವನ್ನು ಹೊರತುಪಡಿಸಿ) ನಿಯಮಿತವಾಗಿ ಸಂಚರಿಸಲಿದೆ.&lt;/p&gt;&lt;img&gt;&lt;p&gt;ಹೊಸ ಯೋಜನೆಯ ಅಧಿಕೃತ ಚಾಲನೆಗಾಗಿ ಜುಲೈ 13 ರಂದು (ಸೋಮವಾರ) ವಿಶೇಷ ಉದ್ಘಾಟನಾ ರೈಲನ್ನು ಓಡಿಸಲಾಗುತ್ತಿದೆ. ನೈಋತ್ಯ ರೈಲ್ವೆಯ (SWR) ಪ್ರಕಟಣೆಯ ಪ್ರಕಾರ, ಈ ಸೇವೆಯು ಯಲಹಂಕ, ಯಶವಂತಪುರ, ತುಮಕೂರು, ತಿಪಟೂರು ಮತ್ತು ಅರಸೀಕೆರೆ ನಡುವೆ ಸಂಚರಿಸುವ ಮಧ್ಯಮ ವರ್ಗದ ಪ್ರಯಾಣಿಕರಿಗೆ ಅತ್ಯಂತ ಆರ್ಥಿಕ, ಆರಾಮದಾಯಕ ಮತ್ತು ನಂಬಿಕಸ್ಥ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಿದೆ.&lt;/p&gt;&lt;img&gt;&lt;p&gt;ಈ ರೈಲು ಮಾರ್ಗವು ಬೆಂಗಳೂರಿನ ಹೊರವಲಯ ಹಾಗೂ ಗ್ರಾಮಾಂತರ ಪ್ರದೇಶಗಳ ನಡುವಿನ ಸಂಪರ್ಕವನ್ನು ಗಣನೀಯವಾಗಿ ಸುಧಾರಿಸಲಿದೆ. ಯಲಹಂಕದಿಂದ ಹೊರಡುವ ರೈಲು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಯಶವಂತಪುರ, ತುಮಕೂರು ಹಾಗೂ ತಿಪಟೂರು ನಗರಗಳನ್ನು ಜೋಡಿಸುವ ಮೂಲಕ ಸಾವಿರಾರು ದೈನಂದಿನ ಉದ್ಯೋಗಿಗಳಿಗೆ ನೆರವಾಗಲಿದೆ.&lt;/p&gt;&lt;img&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ರೈಲು ಮಾರ್ಗದ ಮಧ್ಯೆ ಬರುವ ಒಟ್ಟು 26 ಸಣ್ಣ ಮತ್ತು ದೊಡ್ಡ ನಿಲ್ದಾಣಗಳಲ್ಲಿ ನಿಲ್ಲಲಿದೆ. ನಿಲ್ದಾಣಗಳ ವಿವರ ಹೀಗಿದೆ:&lt;/p&gt;&lt;p&gt;ಕೊಡಿಗೆಹಳ್ಳಿ, ಯಶವಂತಪುರ, ಚಿಕ್ಕಬಾಣಾವರ, ಗೊಲ್ಲಹಳ್ಳಿ, ಬೈರನಾಯಕನಹಳ್ಳಿ, ದೊಡ್ಡಬೆಲೆ, ಮುದ್ದಲಿಂಗನಹಳ್ಳಿ, ನಿಡವಂದ, ದಾಬಸ್&zwnj;ಪೇಟೆ, ಹಿರೇಹಳ್ಳಿ, ಕ್ಯಾತ್ಸಂದ್ರ, ತುಮಕೂರು, ಹೆಗ್ಗರೆ ಹಾಲ್ಟ್, ಮಲ್ಲಸಂದ್ರ, ಗುಬ್ಬಿ, ನಿಟ್ಟೂರು, ಸಂಪಿಗೆ ರೋಡ್, ಅಮ್ಮಸಂದ್ರ, ಬಾಣಸಂದ್ರ, ಅರಳಗುಪ್ಪೆ, ಕರ್ಡಿ, ಬನಶಂಕರಿ ಹಾಲ್ಟ್, ತಿಪಟೂರು, ಶ್ರೀ ಶಾರದಾನಗರ, ಹೊನ್ನವಳ್ಳಿ ರೋಡ್ ಮತ್ತು ಆದಿಹಳ್ಳಿ.&lt;/p&gt;]]></content:encoded>
            <category>tumakuru</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/bengaluru-urban/yelahanka-arsikere-memu-train-service-starts-july-14-timetable-stoppages-san-op7hr1o"/>
        </item>
        <item>
            <title><![CDATA[ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್, ಕಟಕಟೆಯಲ್ಲಿ ನಿಂತು ಸತ್ಯ ಒಪ್ಪಿಕೊಂಡ ಪ್ರಮುಖ ಸಾಕ್ಷಿ!]]></title>
            <link>https://kannada.asianetnews.com/karnataka-districts/renukaswamy-case-takes-new-turn-as-star-witness-claims-pressure-to-change-statement-in-court-gdp/articleshow-p6qmq8h</link>
            <guid isPermaLink="true">https://kannada.asianetnews.com/karnataka-districts/renukaswamy-case-takes-new-turn-as-star-witness-claims-pressure-to-change-statement-in-court-gdp/articleshow-p6qmq8h</guid>
            <pubDate>Wed, 01 Jul 2026 11:59:49 +0530</pubDate>
            <description><![CDATA[ದರ್ಶನ್ ಪ್ರಮುಖ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪ್ರಮುಖ ಸಾಕ್ಷಿಯೊಬ್ಬರು ತಮಗೆ ಸಾಕ್ಷ್ಯ ತಿರುಚಲು ಅಪರಿಚಿತರಿಂದ ಒತ್ತಡ ಹೇರಲಾಗುತ್ತಿದೆ ಎಂದು ನ್ಯಾಯಾಲಯದಲ್ಲಿ ಬಹಿರಂಗಪಡಿಸಿದ್ದಾರೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಾಕ್ಷಿಗೆ ಸೂಕ್ತ ರಕ್ಷಣೆ ಒದಗಿಸಲು ಆದೇಶಿಸಿದ್ದು, ಸಾಕ್ಷ್ಯ ತಿರುಚಲು ಯತ್ನಿಸುವವರಿಗೆ ಕಠಿಣ ಎಚ್ಚರಿಕೆ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01j12xsvh7kzq4v45bwszb259f,imgname-runukaswamy23.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಸ್ಯಾಂಡಲ್&zwnj;ವುಡ್ ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಆಘಾತಕಾರಿ ತಿರುವುಗಳು ಸಿಗುತ್ತಿವೆ. ಇದೀಗ ಪ್ರಕರಣದ ಪ್ರಮುಖ ಪ್ರಾಸಿಕ್ಯೂಷನ್ ಸಾಕ್ಷಿಯೊಬ್ಬರ ಮೇಲೆ ಪ್ರಭಾವ ಬೀರಲು ಮತ್ತು ಕೋರ್ಟ್&zwnj;ಗೆ ನೀಡುವ ಸಾಕ್ಷ್ಯವನ್ನು ತಿರುಚಲು ಅಪರಿಚಿತ ವ್ಯಕ್ತಿಗಳು ಸಂಚು ರೂಪಿಸಿರುವುದು ಸ್ವತಃ ಸಾಕ್ಷಿದಾರರಿಂದಲೇ ನ್ಯಾಯಾಲಯದಲ್ಲಿ ಬಹಿರಂಗವಾಗಿದೆ. ಸಾಕ್ಷಿಯ ಈ ಆತಂಕಕಾರಿ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಸಾಕ್ಷ್ಯ ತಿರುಚಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಲ್ಲದೆ, ಸಾಕ್ಷಿದಾರನಿಗೆ ತಕ್ಷಣವೇ ಸೂಕ್ತ ರಕ್ಷಣೆ ಒದಗಿಸುವಂತೆ ತನಿಖಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ.&lt;/p&gt;&lt;h2&gt;ಕಟಕಟೆಯಲ್ಲಿ ನಿಂತು ಸತ್ಯ ಒಪ್ಪಿಕೊಂಡ ಪ್ರಮುಖ ಸಾಕ್ಷಿ ಸಂದೀಪ್&lt;/h2&gt;&lt;p&gt;ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ ಮಂಗಳವಾರ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಾಸಿಕ್ಯೂಷನ್ ಸಾಕ್ಷಿಗಳ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ 49ನೇ ಸಾಕ್ಷಿಯಾಗಿರುವ, ಚಿತ್ರದುರ್ಗದ 'ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್' ಕ್ಯಾಷಿಯರ್ ಹಾಗೂ ತುಮಕೂರಿನ ರಂಗಾಪುರ ನಿವಾಸಿ ಸಂದೀಪ್ ವಿಚಾರಣೆಗೆ ಹಾಜರಾಗಿದ್ದರು. ರೇಣುಕಾಸ್ವಾಮಿ ಹಾಗೂ ಆತನನ್ನು ಅಪಹರಿಸಿದ್ದ ಆರೋಪಿಗಳು ಇದೇ ಬಾರ್&zwnj;ನಲ್ಲಿ ಊಟ ಮಾಡಿದ್ದರಿಂದ, ಸಂದೀಪ್ ಈ ಕೇಸ್&zwnj;ನ ಪ್ರಮುಖ ಕಣ್ಣಾರೆ ಕಂಡ ಸಾಕ್ಷಿಯಾಗಿದ್ದಾರೆ.&lt;/p&gt;&lt;p&gt;ವಿಶೇಷ ಸರ್ಕಾರಿ ಅಭಿಯೋಜಕರಾದ (SPP) ಪಿ.ಪ್ರಸನ್ನ ಕುಮಾರ್ ಅವರು ಸಂದೀಪ್ ಅವರನ್ನು ಮುಖ್ಯ ಪರೀಕ್ಷೆಗೆ ಗುರಿಪಡಿಸಲು ಸಜ್ಜಾದರು. ಕಟಕಟೆಯಲ್ಲಿ ನಿಂತು ನ್ಯಾಯಾಲಯಕ್ಕೆ ಸತ್ಯವನ್ನೇ ನುಡಿಯುವುದಾಗಿ ಪ್ರಮಾಣ ಮಾಡಿದ ತಕ್ಷಣವೇ ಸಂದೀಪ್, &quot;ನಾನು ನ್ಯಾಯಾಲಯಕ್ಕೆ ಒಂದು ಮಹತ್ವದ ವಿಷಯವನ್ನು ತಿಳಿಸಲು ಬಯಸುತ್ತೇನೆ, ಅದಕ್ಕೆ ಅನುಮತಿ ನೀಡಬೇಕು&quot; ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.&lt;/p&gt;&lt;h2&gt;ನಾವು ಹೇಳಿದಂತೆ ಸಾಕ್ಷಿ ನುಡಿ ಎಂದು ಅಪರಿಚಿತರಿಂದ ಒತ್ತಡದ ಕರೆ!&lt;/h2&gt;&lt;p&gt;ನ್ಯಾಯಾಲಯದ ಅನುಮತಿ ಸಿಗುತ್ತಿದ್ದಂತೆ ಸಾಕ್ಷಿ ಸಂದೀಪ್ ತಮಗಿದ್ದ ಆತಂಕ ಮತ್ತು ಎದುರಿಸುತ್ತಿದ್ದ ಒತ್ತಡವನ್ನು ಧೈರ್ಯವಾಗಿ ಬಿಚ್ಚಿಟ್ಟರು. ನಮಗೆ ಪರಿಚಯವಿರುವ ಆಕರ್ಷ್ ಎಂಬ ವ್ಯಕ್ತಿಯ ಮೂಲಕ ಕೆಲ ಅಪರಿಚಿತ ವ್ಯಕ್ತಿಗಳು ನನ್ನನ್ನು ದೂರವಾಣಿ ಕರೆಯಲ್ಲಿ ಸಂಪರ್ಕಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ನ್ಯಾಯಾಲಯಕ್ಕೆ ನೀಡಲಿರುವ ಸಾಕ್ಷ್ಯದ ಹೇಳಿಕೆಯ ಮಾಹಿತಿಯನ್ನು ಅವರು ಕೇಳಿದ್ದಾರೆ. ಅಷ್ಟೇ ಅಲ್ಲದೆ, ನ್ಯಾಯಾಲಯದಲ್ಲಿ ಸತ್ಯವನ್ನು ಮರೆಮಾಚಿ, ತಮಗೆ ಅನುಕೂಲವಾಗುವಂತೆ ತಾವು ಹೇಳಿಕೊಟ್ಟಂತೆಯೇ ಸಾಕ್ಷಿ ನುಡಿಯಬೇಕು ಎಂದು ನನಗೆ ತೀವ್ರ ಒತ್ತಡ ಹೇರಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.&lt;/p&gt;&lt;h2&gt;ಸಾಕ್ಷ್ಯ ತಿರುಚುವ ಯತ್ನಕ್ಕೆ ನ್ಯಾಯಾಧೀಶೆ ಸುಜಾತಾ ಸಾಂಬ್ರಾಣಿ ಗರಂ&lt;/h2&gt;&lt;p&gt;ಸಾಕ್ಷಿದಾರನ ಈ ಹೇಳಿಕೆಯಿಂದ ನ್ಯಾಯಾಲಯದಲ್ಲಿ ಕೆಲಕಾಲ ಸನ್ನಿವೇಶ ಗಂಭೀರವಾಯಿತು. ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರಾದ ಸುಜಾತಾ ಎಂ. ಸಾಂಬ್ರಾಣಿ ಅವರು ತಕ್ಷಣವೇ ಆದೇಶವೊಂದನ್ನು ಬರೆಸಿದರು. ಆಕರ್ಷ್ ಎಂಬಾತನ ಮೂಲಕ ಕೆಲವು ವ್ಯಕ್ತಿಗಳು ಸಾಕ್ಷಿ ಸಂದೀಪ್ ಅವರ ಹೇಳಿಕೆಯನ್ನು ತಿರುಚಲು ಪ್ರಯತ್ನಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಅಥವಾ ಸಂಬಂಧಪಡದ ಯಾವುದೇ ವ್ಯಕ್ತಿಯಾಗಲಿ ಸಾಕ್ಷ್ಯವನ್ನು ನಾಶಪಡಿಸಲು ಅಥವಾ ತಿರುಚಲು ಯತ್ನಿಸಿದರೆ ಅದನ್ನು ನ್ಯಾಯಾಲಯವು ಕ್ಷಮಿಸುವುದಿಲ್ಲ. ಅಂತಹವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದರು.&lt;/p&gt;&lt;h2&gt;ನ್ಯಾಯಾಲಯದ ಪ್ರಮುಖ ಆದೇಶಗಳು&lt;/h2&gt;&lt;p&gt;ತನಗೆ ಕರೆ ಮಾಡಿ ಒತ್ತಡ ಹೇರಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ನಿಟ್ಟಿನಲ್ಲಿ, ತಾನು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಅಫಿಡವಿಟ್ (ಪ್ರಮಾಣ ಪತ್ರ) ಸಲ್ಲಿಸುವಂತೆ ಸಾಕ್ಷಿ ಸಂದೀಪ್&zwnj;ಗೆ ಕೋರ್ಟ್ ನಿರ್ದೇಶಿಸಿದೆ.&lt;/p&gt;&lt;p&gt;ಸಾಕ್ಷಿ ಸಂದೀಪ್&zwnj;ಗೆ ಯಾವುದೇ ಪ್ರಾಣಭಯ ಅಥವಾ ಬೆದರಿಕೆ ಬರದಂತೆ ವಿಚಾರಣೆ ಮುಗಿಯುವವರೆಗೂ ಅಗತ್ಯ ಪೊಲೀಸ್ ರಕ್ಷಣೆ ಒದಗಿಸುವಂತೆ ಪ್ರಕರಣದ ತನಿಖಾಧಿಕಾರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.&lt;/p&gt;&lt;h2&gt;ಭಯಪಡುವ ಅಗತ್ಯವಿಲ್ಲ, ಸತ್ಯವನ್ನೇ ಹೇಳು ಎಂದು ಧೈರ್ಯ ತುಂಬಿದ ಕೋರ್ಟ್&lt;/h2&gt;&lt;p&gt;ಒತ್ತಡದಲ್ಲಿದ್ದ ಸಾಕ್ಷಿಗೆ ನ್ಯಾಯಾಧೀಶರು ಮೌಖಿಕವಾಗಿ ಧೈರ್ಯ ತುಂಬಿದರು. &quot;ನೀನು ಯಾರಿಗೂ ಹೆದರಬೇಕಾದ ಅಥವಾ ಭಯಪಡುವ ಅವಶ್ಯಕತೆ ಇಲ್ಲ. ನ್ಯಾಯಾಲಯ ನಿನಗೆ ಸಂಪೂರ್ಣ ರಕ್ಷಣೆ ಕೊಡಲಿದ್ದು, ನಿನಗೆ ಗೊತ್ತಿರುವ ನಿಜ ಸಂಗತಿ ಏನೇ ಇದ್ದರೂ ಅದನ್ನು ಮುಕ್ತವಾಗಿ ಕೋರ್ಟ್&zwnj;ಗೆ ತಿಳಿಸು ಎಂದು ನ್ಯಾಯಾಧೀಶರು ಸೂಚಿಸಿದರು.&lt;/p&gt;&lt;p&gt;ಬುಧವಾರಕ್ಕೆ ಮುಂದೂಡಲ್ಪಟ್ಟ ವಿಚಾರಣೆಯಲ್ಲಿ ಸಂದೀಪ್ ನೀಡಲಿರುವ ಲಿಖಿತ ಪ್ರಮಾಣಪತ್ರದ ಆಧಾರದ ಮೇಲೆ, ಸಾಕ್ಷ್ಯ ತಿರುಚಲು ಯತ್ನಿಸಿದ ಆಕರ್ಷ್ ಹಾಗೂ ಆತನ ಹಿನ್ನೆಲೆಯಲ್ಲಿರುವ ಸೂತ್ರಧಾರಿಗಳ ವಿರುದ್ಧ ಪೊಲೀಸರು ಕಾನೂನು ರೀತಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ. ಈ ಬೆಳವಣಿಗೆಯು ಪ್ರಕರಣದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/renukaswamy-case-takes-new-turn-as-star-witness-claims-pressure-to-change-statement-in-court-gdp/articleshow-p6qmq8h"/>
        </item>
        <item>
            <title><![CDATA[ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!]]></title>
            <link>https://kannada.asianetnews.com/karnataka-districts/renukaswamy-case-twist-darshan-fan-and-prosecution-witness-puneeth-arrested-for-threatening-another-witness-gdp-videoshow-p9ds9r4</link>
            <guid isPermaLink="true">https://kannada.asianetnews.com/karnataka-districts/renukaswamy-case-twist-darshan-fan-and-prosecution-witness-puneeth-arrested-for-threatening-another-witness-gdp-videoshow-p9ds9r4</guid>
            <pubDate>Fri, 03 Jul 2026 14:46:45 +0530</pubDate>
            <description><![CDATA[&lt;p&gt;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್&zwnj;ಗೆ ಅವರ ಅಭಿಮಾನಿಗಳಿಂದಲೇ ಹೊಸ ಸಂಕಷ್ಟ ಎದುರಾಗಿದೆ. ಈ ಪ್ರಕರಣದ ಸಾಕ್ಷಿಯೊಬ್ಬರಿಗೆ, ದರ್ಶನ್ ಅಭಿಮಾನಿಯೂ ಹಾಗೂ ಮತ್ತೊಬ್ಬ ಸಾಕ್ಷಿಯೂ ಆಗಿರುವ ವ್ಯಕ್ತಿಯೇ ಬೆದರಿಕೆ ಹಾಕಿದ್ದು, ಸಾಕ್ಷ್ಯ ನಾಶದ ಯತ್ನದಡಿ ಇದೀಗ ಪೊಲೀಸರ ವಶವಾಗಿದ್ದಾರೆ. &amp;nbsp;&lt;/p&gt;]]></description>
            <media:content url="https://geo.dailymotion.com/player/x1tbu.html?video=xakup52" medium="video" height="768" width="1024"/>
            <content:encoded><![CDATA[&lt;p&gt;ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿ 2 ವರ್ಷವೇ ಕಳೆದುಬಿಟ್ಟಿದೆ. ಅವರನ್ನ ಹೊರಗೆ ತರಲು ಆತನ ಕುಟುಂಬ ಇನ್ನಿಲ್ಲದ ಪ್ರಯತ್ನಗಳನ್ನ ಮಾಡ್ತಿದೆ.. ಬಟ್​ ಕೋರ್ಟ್​ ಮಾತ್ರ ದರ್ಶನ್​ ಒಂದು ವರ್ಷ ಜೈಲಿನಲ್ಲೇ ಇರಬೇಕು ಅಂತ ಹೇಳಿಬಿಟ್ಟಿದೆ.. ಪರಿಸ್ತಿತಿ ಹೀಗಿರುವಾಗ್ಲೇ ದರ್ಶನ್​ ಅಭಿಮಾನಿಗಳು ಮತ್ತೊಂದು ಎಡವಟ್ಟು ಮಾಡಿಬಿಟ್ಟಿದ್ದಾರೆ.. ರೇಣುಕಾಸ್ವಾಮಿ ಕೊಲೆ ಕೇಸ್&zwnj;ನ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿರುವಾಗ್ಲೇ ದರ್ಶನ್​​ ಅಭಿಮಾನಿಗಳು ಮತ್ತು ಈ ಕೇಸ್​ನಲ್ಲೀ ಸಾಕ್ಷಿಯೂ ಆಗಿರುವನೊಬ್ಬ ಮತ್ತೊಬ್ಬ ಸಾಕ್ಷಿಗೆ ಬೆದರಿಕೆ ಹಾಕಿದ್ದಾನೆ. ಕೋರ್ಟ್​ನಲ್ಲಿ ಸಾಕ್ಷಿ ಹೇಳದಂತೆ ವಾರ್ನ್​ ಮಾಡಿದ್ದಾನೆ. ಸದ್ಯ ಬೆದರಿಕೆ ಹಾಕಿದವರೆಲ್ಲರೂ ಪೊಲೀಸರ ಅತಿಥಿಯಾಗಿದ್ದಾರೆ.&lt;/p&gt;&lt;p&gt;ಕೇಸ್​ನಲ್ಲಿ ಸಾಕ್ಷಿಯಾಗಿದ್ದ ಪುನೀತ್, ಈಗ ಸಾಕ್ಷ್ಯ ನಾಶದ ಕೇಸ್ ನಲ್ಲಿ ತನ್ನಿಬ್ಬರು ಸಹಚರರ ಜತೆ ಅರೆಸ್ಟ್ ಆಗಿದ್ದಾನೆ. ಇಂಥಹ ಅಭಿಮಾನಿಗಳಿಂದ ದರ್ಶನ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷಿ ನಾಶ ಮಾಡೋದು.. ಸಾಕ್ಷಿಗಳನ್ನ ಬೆದರಿಸೋದು.. ಇದೇ ಮೊದಲೇನೂ ಅಲ್ಲ.. ಆದ್ರೆ ಸಾಕ್ಷಿ ಹೆಳಬೇಕಿದ್ದೋನೇ ಮತ್ತೊಂದು ಸಾಕ್ಷಿ ಮೇಲೆ ಒತ್ತಡ &amp;nbsp;ಹೇರಿದ್ದು ಈಗ ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಬಿಗ್​​​ ಟ್ವಿಸ್ಟ್​​ ಕೊಡುತ್ತೆ.. ಕೋರ್ಟ್​ ಪ್ರಕರಣವನ್ನ ನೋಡುವ ರೀತಿಯನ್ನೇ ಬದಲಿಸಿಬಿಡುತ್ತೆ ಅನ್ನೋದು ವಕೀಲರ ಮಾತು. ಸೋ ದರ್ಶನ್​ ಅಭಿಮಾನಿಗಳು ಬಾಸ್&zwnj; ಸಹಾಯ ಮಾಡಲು ಹೋಗಿ ಮತ್ತಷ್ಟು ಸಂಕಷ್ಟ ತಂದೊಡ್ಡುತ್ತಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/renukaswamy-case-twist-darshan-fan-and-prosecution-witness-puneeth-arrested-for-threatening-another-witness-gdp-videoshow-p9ds9r4"/>
        </item>
        <item>
            <title><![CDATA[ಬೆಂಗಳೂರಲ್ಲಿ ಕಿಡ್ನಾಪ್, ತುಮಕೂರಲ್ಲಿ ಕಾರ್ ಬ್ಲಾಸ್ಟ್: ಪಾಗಲ್ ಪ್ರೇಮಿ ಸಜೀವ ದಹನ, ಸಿನಿಮೀಯ ರೀತಿ ಬದುಕಿದ ಯುವತಿ!]]></title>
            <link>https://kannada.asianetnews.com/karnataka-districts/bengaluru-kidnap-woman-miracle-escapes-as-obsessive-lover-dies-in-tumakuru-car-bomb-blast-gdp/articleshow-rt04dn7</link>
            <guid isPermaLink="true">https://kannada.asianetnews.com/karnataka-districts/bengaluru-kidnap-woman-miracle-escapes-as-obsessive-lover-dies-in-tumakuru-car-bomb-blast-gdp/articleshow-rt04dn7</guid>
            <pubDate>Sat, 27 Jun 2026 16:58:45 +0530</pubDate>
            <description><![CDATA[ಪ್ರೀತಿ ನಿರಾಕರಿಸಿದ ಕಾರಣಕ್ಕೆ ಬೆಂಗಳೂರಿನಿಂದ ಯುವತಿಯನ್ನು ಅಪಹರಿಸಿದ್ದ ಯುವಕ, ತುಮಕೂರು ಬಳಿ ಚಲಿಸುವ ಕಾರಿನಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಲು ಯತ್ನಿಸಿದ್ದಾನೆ. ಈ ಘಟನೆಯಲ್ಲಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿ ಯುವಕ ಕಾರಿನಲ್ಲೇ ಸಜೀವ ದಹನವಾಗಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw4d4jm9aprn5jvvasmm47xg,imgname-tumakuru-car-bomb-blast-1782559427209.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ತುಮಕೂರು: &lt;/strong&gt;ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಕಾರೊಳಗೆ ಪೆಟ್ರೋಲ್ ಬಾಂಬ್&zwnj; ನಿಂದ ಸ್ಫೋಟಿಸಿಕೊಂಡು ಸಜೀವ ದಹನವಾದ ಪ್ರಕರಣಕ್ಕೆ ಈಗ ಬಿಗ್&zwnj; ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಬೆಂಗಳೂರಿನಿಂದ ಅಪಹರಿಸಿ, ಚಲಿಸುವ ಕಾರಿನಲ್ಲೇ ಬಾಂಬ್ ಸ್ಫೋಟಿಸಿ ಕೊಲ್ಲಲು ಯತ್ನಿಸಿದ್ದ. ಈ ಘಟನೆಯಲ್ಲಿ ಯುವತಿ ಸಿನಿಮೀಯ ಶೈಲಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯನ್ನು ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಕಾರಿನಲ್ಲೇ ಸಜೀವ ದಹನವಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಬ್ಬುಲ್ ಗ್ರಾಮದ ನಿವಾಸಿ ನಾಗೇಂದ್ರ (ಮೃತ) ಹಾಗೂ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಒಟಿ (OT) ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ರಮ್ಯಾ ಈ ಪ್ರಕರಣದ ಕೇಂದ್ರಬಿಂದುವಾಗಿದ್ದಾರೆ.&lt;/p&gt;&lt;h2&gt;ಆರು ವರ್ಷಗಳ ಪ್ರೀತಿ, ಬ್ರೇಕಪ್&zwnj; ತಂದ ವಿರಸ&lt;/h2&gt;&lt;p&gt;ಮೃತ ನಾಗೇಂದ್ರ ಹಾಗೂ ರಮ್ಯಾ ಅಕ್ಕ ಪಕ್ಕದ ಊರಿನವರಾಗಿದ್ದು, ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಾಲೇಜು ದಿನಗಳಲ್ಲೇ ಇವರ ನಡುವೆ ಪ್ರೇಮಾಂಕುರವಾಗಿತ್ತು. ನಾಗೇಂದ್ರ ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿ ಅಬ್ಬೆಪಾರಿಯಂತೆ ತಿರುಗಾಡುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಮದುವೆಯಾಗುವಂತೆ ರಮ್ಯಾಗೆ ಆತ ದೈಹಿಕ ಹಾಗೂ ಮಾನಸಿಕ ಚಿತ್ರಹಿಂಸೆ ನೀಡಲು ಆರಂಭಿಸಿದ್ದನು. ಇದರಿಂದ ರೋಸಿಹೋದ ರಮ್ಯಾ, ನಾಗೇಂದ್ರನ ಜೊತೆಗಿನ ಸಂಬಂಧವನ್ನು ಕಡಿದುಕೊಂಡು ಆತನ ಫೋನ್ ನಂಬರ್ ಬ್ಲಾಕ್ ಮಾಡಿದ್ದಳು. ಅಲ್ಲದೆ ಬೆಂಗಳೂರಿನ ಜಯನಗರದ 1ನೇ ಬ್ಲಾಕ್&zwnj;ನ ಬೈರಸಂದ್ರ ಭೋವಿ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು.&lt;/p&gt;&lt;h2&gt;ಬೆಂಗಳೂರಿನಲ್ಲಿ ಮುಂಜಾನೆಯೇ ಕಿಡ್ನಾಪ್ ಸ್ಕೆಚ್!&lt;/h2&gt;&lt;p&gt;ರಮ್ಯಾ ತನ್ನ ನಂಬರ್ ಬ್ಲಾಕ್ ಮಾಡಿದ್ದರಿಂದ ಆಕ್ರೋಶಗೊಂಡಿದ್ದ ನಾಗೇಂದ್ರ, ಮುಂಜಾನೆಯೇ ಅಂಕೋಲಾದಿಂದ ಬೆಂಗಳೂರಿಗೆ ಬಂದಿದ್ದನು. ಬೆಳಗ್ಗೆ ಸುಮಾರು 7 ಗಂಟೆಯ ವೇಳೆಗೆ ರಮ್ಯಾ ತಂಗಿದ್ದ ರೂಮ್ ಬಳಿ ಪ್ರತ್ಯಕ್ಷನಾಗಿ ಜಗಳ ತೆಗೆದಿದ್ದನು. ಈ ವೇಳೆ ಜಗಳ ಬಿಡಿಸಲು ಬಂದ ರಮ್ಯಾಳ ಗೆಳತಿಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲ್ಲುವುದಾಗಿ ಹೆದರಿಸಿ, ಮೊದಲೇ ಬುಕ್ ಮಾಡಿದ್ದ ಉಬರ್ (Uber) ಕ್ಯಾಬ್&zwnj;ನಲ್ಲಿ ರಮ್ಯಾಳನ್ನು ಬಲವಂತವಾಗಿ ಅಪಹರಿಸಿಕೊಂಡು ಅಂಕೋಲಾ ಕಡೆಗೆ ಪ್ರಯಾಣ ಬೆಳೆಸಿದ್ದನು. ರಮ್ಯಾ ಕಾಣೆಯಾದ ತಕ್ಷಣ ಆಕೆಯ ಸ್ನೇಹಿತೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು.&lt;/p&gt;&lt;h2&gt;ಚಲಿಸುವ ಕಾರಿನಲ್ಲೇ ಚಾಕು ಇರಿತ, ಬಾಂಬ್ ಭೀತಿ&lt;/h2&gt;&lt;p&gt;ಬೆಂಗಳೂರಿನಿಂದ ಹೆದ್ದಾರಿಯಲ್ಲಿ ಕಾರು ಸಾಗುತ್ತಿದ್ದ ಉದ್ದಕ್ಕೂ ನಾಗೇಂದ್ರ ರಮ್ಯಾ ಜೊತೆ ತೀವ್ರವಾಗಿ ಜಗಳವಾಡಿದ್ದಾನೆ. ರಮ್ಯಾಗೆ ತಾನು ಮೊದಲೇ ತಯಾರಿಸಿಕೊಂಡು ತಂದಿದ್ದ ನಾಡ ಬಾಂಬ್ (ಪೆಟ್ರೋಲ್ ಬಾಂಬ್) ತೋರಿಸಿ, ನಿನ್ನನ್ನು ಕೊಂದು ನಾನು ಸಾಯುತ್ತೇನೆ ಎಂದು ಸತತವಾಗಿ ಬೆದರಿಕೆ ಹಾಕಿದ್ದಾನೆ. ಕಾರು ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾ ರಸ್ತೆಯ ಜೋಗಿಹಳ್ಳಿ ಬಳಿ ತಲುಪಿದಾಗ ನಾಗೇಂದ್ರ ಏಕಾಏಕಿ ಚಾಕುವಿನಿಂದ ರಮ್ಯಾಳ ತಲೆ ಹಾಗೂ ಕೈಗೆ ಇರಿದಿದ್ದಾನೆ. ಕಾರಿನೊಳಗೆ ನಡೆಯುತ್ತಿದ್ದ ಈ ಭೀಕರ ಹಿಂಸಾಚಾರ ಹಾಗೂ ಬಾಂಬ್ ಇರುವುದನ್ನು ಕಂಡು ಹೆದರಿದ ಕ್ಯಾಬ್ ಚಾಲಕ ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಾಣಭಯದಿಂದ ಓಡಿಹೋಗಿದ್ದಾನೆ.&lt;/p&gt;&lt;h2&gt;ಸಿನಿಮೀಯ ಶೈಲಿಯಲ್ಲಿ ಹಾರಿ ಬಚಾವಾದ ರಮ್ಯಾ&lt;/h2&gt;&lt;p&gt;ಚಾಲಕ ಓಡಿಹೋಗುತ್ತಿದ್ದಂತೆ ಕಾರಿನೊಳಗೆ ನಾಗೇಂದ್ರ ಬಾಂಬ್ ಸ್ಫೋಟಿಸಲು ಸಜ್ಜಾಗಿದ್ದಾನೆ. ಈ ಆಪತ್ತನ್ನು ಅರಿತ ರಮ್ಯಾ, ತೀವ್ರ ರಕ್ತಸ್ರಾವದ ನಡುವೆಯೂ ಸಮಯಪ್ರಜ್ಞೆ ಮೆರೆದು ಕಾರಿನ ಲಾಕ್ ತೆಗೆದು ಹೊರಗೆ ಜಿಗಿದಿದ್ದಾಳೆ. ರಮ್ಯಾ ಕಾರಿನಿಂದ ಹೊರಬೀಳುತ್ತಿದ್ದಂತೆಯೇ ನಾಗೇಂದ್ರ ತಾನು ತಂದಿದ್ದ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ನಾಗೇಂದ್ರ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ತಲೆ ಹಾಗೂ ಕೈಗೆ ಗಾಯಗೊಂಡ ಯುವತಿ ರಮ್ಯಾ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.&lt;/p&gt;&lt;h2&gt;ತುಮಕೂರು ಎಸ್ಪಿ ಅಶೋಕ್ ಕೆ.ವಿ. ಹೇಳಿಕೆ:&lt;/h2&gt;&lt;p&gt;ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಮೃತನನ್ನು ನಾಗೇಂದ್ರ ಎಂದು ಗುರುತಿಸಲಾಗಿದೆ. ಈತ ಪೆಟ್ರೋಲ್ ಬಾಂಬ್ ತಂದು ತಾನೇ ಸ್ಫೋಟಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತ ನಾಗೇಂದ್ರ ಹಾಗೂ ರಮ್ಯಾ ಪ್ರೀತಿಯಲ್ಲಿದ್ದರು. ಇತ್ತೀಚೆಗೆ ಇವರ ಬ್ರೇಕಪ್ ಆಗಿತ್ತು. ಈ ಹಿನ್ನೆಲೆಯಲ್ಲಿ ಜಯನಗರದಿಂದ ಅಂಕೋಲಾಕ್ಕೆ ಕ್ಯಾಬ್ ಬುಕ್ ಮಾಡಿ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಸದ್ಯ ಗಾಯಾಳು ಯುವತಿ ಮತ್ತು ಚಾಲಕನಿಂದ ಮಾಹಿತಿ ಪಡೆಯಲಾಗುತ್ತಿದ್ದು, ತನಿಖೆ ಮುಂದುವರಿದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಭೀಕರ ಸ್ಫೋಟದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-kidnap-woman-miracle-escapes-as-obsessive-lover-dies-in-tumakuru-car-bomb-blast-gdp/articleshow-rt04dn7"/>
        </item>
        <item>
            <title><![CDATA[46 ಸೆಕೆಂಡಲ್ಲಿ ಮಾನವನಲ್ಲಿನ 206 ಮೂಳೆ ಹೆಸರೇಳಿ ಮಾಚೇನಹಳ್ಳಿಯ 5 ವರ್ಷದ ಚಾರ್ವಿಕ್]]></title>
            <link>https://kannada.asianetnews.com/karnataka-districts/tumakuru-5-year-old-charvik-from-machenahalli-village-names-206-bones-in-a-human-body-in-46-seconds-mrq/articleshow-s8vqgqx</link>
            <guid isPermaLink="true">https://kannada.asianetnews.com/karnataka-districts/tumakuru-5-year-old-charvik-from-machenahalli-village-names-206-bones-in-a-human-body-in-46-seconds-mrq/articleshow-s8vqgqx</guid>
            <pubDate>Tue, 07 Jul 2026 07:19:30 +0530</pubDate>
            <description><![CDATA[&lt;p&gt;ಚಾರ್ವಿಕ್&zwnj;, ಇತ್ತೀಚೆಗೆ ತನ್ನ ದೇಹವನ್ನೇ ತೋರಿಸಿಕೊಂಡು ದೇಹದಲ್ಲಿರುವ ಮೂಳೆಯ ಹೆಸರು ಮತ್ತು ಅಲ್ಲಿರುವ ಮೂಳೆಗಳ ಸಂಖ್ಯೆಯನ್ನು ಕೇವಲ 46 ಸೆಕೆಂಡ್&zwnj;ನಲ್ಲಿ ಹೇಳುವ ಮೂಲಕ ಈ ಸಾಧನೆ ಮಾಡಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwx3ya2sqnv2bfgnq50grnra,imgname-tumakuru-1783388645464.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ಮಾನವನ ದೇಹದಲ್ಲಿರುವ 206 ಮೂಳೆಗಳ ಹೆಸರನ್ನು ಕೇವಲ 46 ಸೆಕೆಂಡ್&zwnj;ನಲ್ಲಿ ಹೇಳುವ ಮೂಲಕ ತುರುವೇಕೆರೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ 5 ವರ್ಷದ ಬಾಲಕ ಚಾರ್ವಿಕ್&zwnj; ಪತ್ರೆಮನೆ, ಇಂಡಿಯಾ ಬುಕ್&zwnj; ಆಫ್ ರೆಕಾರ್ಡ್&zwnj;ಗೆ ಸೇರ್ಪಡೆಯಾಗಿದ್ದಾನೆ. ಅಶ್ವಿನ್&zwnj; ಪತ್ರೆಮನೆ ಮತ್ತು ಪವಿತ್ರ ದಂಪತಿ ಪುತ್ರ ಚಾರ್ವಿಕ್&zwnj;, ಇತ್ತೀಚೆಗೆ ತನ್ನ ದೇಹವನ್ನೇ ತೋರಿಸಿಕೊಂಡು ದೇಹದಲ್ಲಿರುವ ಮೂಳೆಯ ಹೆಸರು ಮತ್ತು ಅಲ್ಲಿರುವ ಮೂಳೆಗಳ ಸಂಖ್ಯೆಯನ್ನು ಕೇವಲ 46 ಸೆಕೆಂಡ್&zwnj;ನಲ್ಲಿ ಹೇಳುವ ಮೂಲಕ ಈ ಸಾಧನೆ ಮಾಡಿದ್ದಾನೆ.&amp;nbsp;&lt;/p&gt;&lt;p&gt;ಇಲ್ಲಿಯ ಶ್ರೀ ಕೃಷ್ಣ ಪ್ರೀ ಸ್ಕೂಲ್&zwnj;ನ ಯುಕೆಜಿಯಲ್ಲಿ ಬಾಲಕ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈ ಹಿಂದೆ 206 ಮೂಳೆಗಳ ಹೆಸರನ್ನು ಸುಮಾರು 11 ವರ್ಷದ ಬಾಲಕನೋರ್ವ 2.30 ನಿಮಿಷದಲ್ಲಿ ಹೇಳಿದ್ದನೆಂದು ತಿಳಿದುಬಂದಿದೆ.&lt;/p&gt;&lt;p&gt;ಈಗ ಚಾರ್ವಿಕ್&zwnj; ಪತ್ರೆಮನೆ ಕೇವಲ 46 ಸೆಕೆಂಡ್&zwnj;ನಲ್ಲಿ ಹೇಳುವ ಮೂಲಕ ನೂತನ ದಾಖಲೆಯನ್ನು ಮಾಡಿದ್ದಾನೆ.&lt;/p&gt;&lt;h2&gt;&lt;strong&gt;ದಿನಕರ ಕಲಾನಿಕೇತನ ವಿದ್ಯಾರ್ಥಿಗಳ ಸಾಧನೆ&lt;/strong&gt;&lt;/h2&gt;&lt;p&gt;ಕಾರವಾರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಈಚೆಗೆ ನಡೆಸಿದ ಗಂಧರ್ವ ಪ್ರಾರಂಭಿಕ ಮತ್ತು ಪ್ರಾವೇಶಿಕ ಸಂಗೀತ ಪರೀಕ್ಷೆಯಲ್ಲಿ ದಿನಕರ ಕಲಾನಿಕೇತನದ ಕಾರವಾರ ಹಾಗೂ ಅಂಕೋಲಾ ಕೇಂದ್ರಗಳ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.&lt;/p&gt;&lt;p&gt;ಪರೀಕ್ಷೆಗೆ ಹಾಜರಾದ ಒಟ್ಟು 25 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ ಐದು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.&lt;/p&gt;&lt;p&gt;ಕಾರವಾರದ ಕಲ್ಪನಾ ರಶ್ಮಿ ಕಲಾ ಲೋಕದಲ್ಲಿ ನಡೆದ ಪ್ರಾರಂಭಿಕ ಪರೀಕ್ಷೆಯಲ್ಲಿ ಡಾ. ಅನುರಾಧ ಗೋವಿಂದರಾಜನ್ ಹಾಗೂ ಅವನಿ ನಾಯ್ಕ ಪ್ರಥಮ, ಮೋನಿಕಾ ಜೆ.ಕೆ. ಹಾಗೂ ಉನ್ನತಿ ನಾಯ್ಕ್ ದ್ವಿತೀಯ ಮತ್ತು ನವಿಕಾ ಭಟ್ ತೃತೀಯ ಸ್ಥಾನ ಗಳಿಸಿದ್ದಾರೆ. ಪ್ರಾವೇಶಿಕ ಪ್ರಥಮದಲ್ಲಿ ವಾತ್ಸಲ್ಯ ಭಂಡಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/tumakuru-5-year-old-charvik-from-machenahalli-village-names-206-bones-in-a-human-body-in-46-seconds-mrq/articleshow-s8vqgqx"/>
        </item>
        <item>
            <title><![CDATA[ನಟ ದರ್ಶನ್‌ಗೆ ಮತ್ತೊಂದು ಭಾರಿ ಹಿನ್ನಡೆ! ಅರ್ಜಿ ವಿಚಾರಣೆಗೆ ಯೋಗ್ಯವಲ್ಲವೆಂದು ನ್ಯಾಯಪೀಠಕ್ಕೆ ಹೋಗುವ ಮುನ್ನವೇ ವಜಾ!]]></title>
            <link>https://kannada.asianetnews.com/state/renukaswamy-case-supreme-court-rejects-actor-darshan-s-modification-plea-gdp/articleshow-vtb19hr</link>
            <guid isPermaLink="true">https://kannada.asianetnews.com/state/renukaswamy-case-supreme-court-rejects-actor-darshan-s-modification-plea-gdp/articleshow-vtb19hr</guid>
            <pubDate>Fri, 03 Jul 2026 15:42:00 +0530</pubDate>
            <description><![CDATA[ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಲ್ಲಿಸಿದ್ದ ಆದೇಶ ಮಾರ್ಪಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಅರ್ಜಿಯು ವಿಚಾರಣೆಗೆ ಯೋಗ್ಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದು, ಇದು ದರ್ಶನ್&zwnj;ಗೆ ಕಾನೂನು ಹೋರಾಟದಲ್ಲಿ ದೊಡ್ಡ ಹಿನ್ನಡೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktrehs8838r62ad1wf0vrt8b,imgname-2-1781084513544.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ನಟ ದರ್ಶನ್ ತೂಗುದೀಪಗೆ ಸುಪ್ರೀಂ ಕೋರ್ಟ್&zwnj;ನಲ್ಲಿ ಮತ್ತೊಂದು ಭಾರಿ ಆಘಾತ ಎದುರಾಗಿದೆ. ತಮ್ಮ 1 ವರ್ಷ ಜೈಲು ಶಿಕ್ಷೆ ಆದೇಶವನ್ನು ಮರುಪರಿಶೀಲನೆ ನಡೆಸುವಂತೆ ಕೋರಿ ಸಲ್ಲಿಸಿದ್ದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್&zwnj; ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್&zwnj; ವಜಾಗೊಳಿಸಿದೆ. &amp;nbsp;&lt;/p&gt;&lt;p&gt;ಜಾಮೀನು ಮತ್ತು ತನಿಖಾ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾಗಿದ್ದ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ರಿಜಿಸ್ಟ್ರಾರ್ ಇಂದು ವಜಾ ಮಾಡಿದ್ದಾರೆ. ನ್ಯಾಯಮೂರ್ತಿಗಳ ಪೀಠಕ್ಕೆ ಹೋಗುವ ಮುನ್ನವೇ ದರ್ಶನ್ ಅರ್ಜಿ ವಜಾ ಆಗಿದೆ. ಒಂದು ವರ್ಷದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಮರು ಪರಿಶೀಲನೆ ಮಾಡುವಂತೆ ದರ್ಶನ್ ಪರ ವಕೀಲರು ಮತ್ತೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಈ ನಿರ್ಧಾರದಿಂದಾಗಿ ಕಾನೂನು ಹೋರಾಟದಲ್ಲಿ ನಟ ದರ್ಶನ್&zwnj;ಗೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ಹೀಗಾಗಿ ದರ್ಶನ್ ಒಂದು ವರ್ಷ ಜೈಲು ವಾಸ ಅನಿವಾರ್ಯವಾಗಿದೆ.&lt;/p&gt;&lt;h2&gt;ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದ ಸುಪ್ರೀಂ ಕೋರ್ಟ್&lt;/h2&gt;&lt;p&gt;ಪ್ರಕರಣದ ಗಂಭೀರತೆ ಮತ್ತು ಕಾನೂನು ಚೌಕಟ್ಟುಗಳನ್ನು ಕೂಲಂಕಷವಾಗಿ ಪರಿಶೀಲಿಸಿ &amp;nbsp;, ದರ್ಶನ್ ಸಲ್ಲಿಸಿದ್ದ ಆದೇಶ ಮಾರ್ಪಾಡು ಅರ್ಜಿಯನ್ನು ಪುರಸ್ಕರಿಸಲು ನಿರಾಕರಿಸಿದೆ. ಈ ಅರ್ಜಿ &quot;ವಿಚಾರಣೆಗೆ ಅರ್ಹವಲ್ಲ&quot; (Not Maintainable) ಎಂದು &amp;nbsp;ಸ್ಪಷ್ಟಪಡಿಸಿದೆ. ತಾಂತ್ರಿಕ ಮತ್ತು ಕಾನೂನಾತ್ಮಕ ನೆಲೆಗಟ್ಟಿನಲ್ಲಿ ಈ ಅರ್ಜಿಯಲ್ಲಿ ಯಾವುದೇ ಬಲವಾದ ಅಂಶಗಳಿಲ್ಲದ ಕಾರಣ, ನ್ಯಾಯಾಲಯವು ವಿಚಾರಣೆಯ ಆರಂಭಿಕ ಹಂತದಲ್ಲೇ ಇದನ್ನು ತಿರಸ್ಕರಿಸಿದೆ.&lt;/p&gt;&lt;h2&gt;ಸುಪ್ರೀಂ ಕೋರ್ಟ್ ವೆಬ್&zwnj;ಸೈಟ್&zwnj;ನಲ್ಲಿ ಅಧಿಕೃತ ಅಪ್&zwnj;ಡೇಟ್&lt;/h2&gt;&lt;p&gt;ಈ ಮಹತ್ವದ ಬೆಳವಣಿಗೆಯ ಅಧಿಕೃತ ಮಾಹಿತಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯು ತನ್ನ ವೆಬ್&zwnj;ಸೈಟ್&zwnj;ನಲ್ಲಿ ಪ್ರಕಟಿಸಿದೆ. ದರ್ಶನ್ ಸಲ್ಲಿಸಿದ್ದ ಅರ್ಜಿಯ ಸ್ಥಿತಿಗತಿಯನ್ನು (Case Status) 'ವಜಾಗೊಳಿಸಲಾಗಿದೆ' (Dismissed) ಎಂದು ವೆಬ್&zwnj;ಸೈಟ್&zwnj;ನಲ್ಲಿ ಅಧಿಕೃತವಾಗಿ ಅಪ್&zwnj;ಡೇಟ್ ಮಾಡಲಾಗಿದ್ದು, ಇದು ದರ್ಶನ್ ಅಭಿಮಾನಿಗಳಿಗೆ ಹಾಗೂ ಅವರ ಪರ ವಕೀಲರ ತಂಡಕ್ಕೆ ತೀವ್ರ ನಿರಾಶೆ ತಂದಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/state/renukaswamy-case-supreme-court-rejects-actor-darshan-s-modification-plea-gdp/articleshow-vtb19hr"/>
        </item>
        <item>
            <title><![CDATA[Karnataka Police: ಹುಳಿಯಾರು ಪಿಎಸ್‌ಐ ಸಾಗರ್ ಅಸ್ಕಿ ಸೇರಿ ಮೂವರು ಪೊಲೀಸರ ಅಮಾನತು; ಕಾರಣ ಕೇಳಿದ್ರೆ ನಗ್ತೀರಿ!]]></title>
            <link>https://kannada.asianetnews.com/karnataka-districts/tumakuru-huliyaru-three-police-officers-suspended-for-visiting-assam-without-permission/articleshow-yrieigr</link>
            <guid isPermaLink="true">https://kannada.asianetnews.com/karnataka-districts/tumakuru-huliyaru-three-police-officers-suspended-for-visiting-assam-without-permission/articleshow-yrieigr</guid>
            <pubDate>Fri, 26 Jun 2026 22:02:12 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸಾಗರ್ ಅಸ್ಕಿ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಸ್ಸಾಂಗೆ ತೆರಳಿ ಕಾರ್ಯಾಚರಣೆಗೆ ಹೋದವರು ಸಸ್ಪೆಂಡ್ ಆಗಿದ್ದಾರೆ. ಇದರ ಹಿಂದೆ ಒಂದು ರೋಚಕ ಕಾರಣವಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw2c1htjvv2gr9ekm7g5nh96,imgname-tumakuru-police-suspend-1782491170642.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.26): ಹು&lt;/strong&gt;ಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಹೊರ ರಾಜ್ಯಕ್ಕೆ ತೆರಳಿರುವುದು ಈ ಕಠಿಣ ಕ್ರಮಕ್ಕೆ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಅಮಾನತುಗೊಂಡವರು ಯಾರು?&lt;/strong&gt;&lt;/h2&gt;&lt;p&gt;ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ (PSI) ಸಾಗರ್ ಅಸ್ಕಿ, ಎಎಸ್ಐ (ASI) ಚಂದ್ರಶೇಖರ್, ಮತ್ತು ಪೊಲೀಸ್ ಕಾನ್ಸ್ಟೇಬಲ್ ರಂಗಧಾಮಯ್ಯ ಅವರು ಅಮಾನತುಗೊಂಡ ಅಧಿಕಾರಿಗಳು. ಕೇಂದ್ರ ವಲಯ ಐಜಿಪಿ ಗಿರೀಶ್ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h2&gt;&lt;p&gt;ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಣವನ್ನು ರಿಕವರಿ ಮಾಡುವ ಉದ್ದೇಶದಿಂದ ಎಎಸ್ಐ ಚಂದ್ರಶೇಖರ್ ಮತ್ತು ಕಾನ್ಸ್ಟೇಬಲ್ ರಂಗಧಾಮಯ್ಯ ಅವರು ಪಿಎಸ್ಐ ಸಾಗರ್ ಅಸ್ಕಿ ಅವರ ಸೂಚನೆಯಂತೆ ಅಸ್ಸಾಂಗೆ ತೆರಳಿದ್ದರು. ಅಲ್ಲಿಗೆ ಹೋಗಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು. ಆದರೆ, ಈ ಕಾರ್ಯಾಚರಣೆಯ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಎಎಸ್ಪಿ (ASP) ಅಥವಾ ಡಿವೈಎಸ್&zwnj;ಪಿ (DySP) ಅವರಿಗೆ ಯಾವುದೇ ಮುನ್ಸೂಚನೆ ಅಥವಾ ಮಾಹಿತಿ ನೀಡಿರಲಿಲ್ಲ.&lt;/p&gt;&lt;h2&gt;&lt;strong&gt;ಸಿಕ್ಕಿಬಿದ್ದಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಹುಳಿಯಾರು ಪೊಲೀಸರು ಅಸ್ಸಾಂನಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದಾಗ, ಈ ಬಗ್ಗೆ ಅಸ್ಸಾಂ ಪೊಲೀಸರು ತುಮಕೂರು ಎಸ್&zwnj;ಪಿಗೆ ಮಾಹಿತಿ ನೀಡಿದ್ದಾರೆ. ತಮ್ಮ ಇಲಾಖೆಯ ಸಿಬ್ಬಂದಿ ತಮ್ಮ ಗಮನಕ್ಕೆ ತರದೆ ಹೊರ ರಾಜ್ಯಕ್ಕೆ ತೆರಳಿರುವುದು ಎಸ್&zwnj;ಪಿ ಅವರಿಗೆ ತಿಳಿದುಬಂದಾಗ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ. ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿರುವುದು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ, ಐಜಿಪಿ ಅವರು ಈ ಮೂವರನ್ನು ಅಮಾನತುಗೊಳಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-huliyaru-three-police-officers-suspended-for-visiting-assam-without-permission/articleshow-yrieigr"/>
        </item>
    </channel>
</rss>
