<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 27 Jun 2026 16:58:55 +0530</lastBuildDate>
        <atom:link href="https://kannada.asianetnews.com/rss/tumakuru" rel="self" type="application/rss+xml"/>
        <item>
            <title><![CDATA[ತುಮಕೂರು: ಕ್ಯಾಬ್ ಮಾಡಿ ಉತ್ತರಕನ್ನಡಕ್ಕೆ ಯುವತಿ ಜತೆ ಹೊರಟ ಯುವಕ ಕಾರೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಸಾವು!]]></title>
            <link>https://kannada.asianetnews.com/karnataka-districts/tumakuru-pune-highway-horror-man-sets-car-ablaze-with-petrol-bomb-and-dies-gdp/articleshow-4wlb9fw</link>
            <guid isPermaLink="true">https://kannada.asianetnews.com/karnataka-districts/tumakuru-pune-highway-horror-man-sets-car-ablaze-with-petrol-bomb-and-dies-gdp/articleshow-4wlb9fw</guid>
            <pubDate>Sat, 27 Jun 2026 15:50:15 +0530</pubDate>
            <description><![CDATA[ತುಮಕೂರು ಜಿಲ್ಲೆಯ ಶಿರಾ ಬಳಿ, ಚಲಿಸುತ್ತಿದ್ದ ಕಾರಿನಲ್ಲಿ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿದ್ದಾನೆ. ಈ ಭೀಕರ ಘಟನೆಯಲ್ಲಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw49drpb9rmqs4gbkt502r3p,imgname-tumkur-car-fire-incident-1782555534027.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಅತ್ಯಂತ ರೋಮಾಂಚನಕಾರಿ ಹಾಗೂ ಭೀಕರ ಘಟನೆಯೊಂದು ಸಂಭವಿಸಿದೆ. ಚಲಿಸುತ್ತಿದ್ದ ಕಾರಿನೊಳಗೆ ಯುವತಿಯೊಂದಿಗೆ ಗಲಾಟೆ ಮಾಡಿಕೊಂಡ ಯುವಕನೊಬ್ಬ, ಆಕೆಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ನಾಗೇಂದ್ರ (30) ಎಂಬಾತ ಕಾರಿನಲ್ಲೇ ಸುಟ್ಟು ಕರಕಲಾಗಿದ್ದು, ಆತನೊಂದಿಗಿದ್ದ ರಮ್ಯಾ ಉಲ್ಲಾಸ್ (23) ಎಂಬ ಯುವತಿ ತೀವ್ರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.&lt;/p&gt;&lt;h2&gt;ಬೆಂಗಳೂರಿನಿಂದ ಅಂಕೋಲಾಕ್ಕೆ ಹೊರಟಿದ್ದ ಕಾರು&lt;/h2&gt;&lt;p&gt;ಮೂಲಗಳ ಪ್ರಕಾರ, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಒಟಿ ಟೆಕ್ನಿಷಿಯನ್ (OT Technician) ಆಗಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಮ್ಯಾ ಉಲ್ಲಾಸ್ ಹಾಗೂ ನಾಗೇಂದ್ರ ಬೆಂಗಳೂರಿನಿಂದ ಅಂಕೋಲಾಕ್ಕೆ ತೆರಳಲು ಖಾಸಗಿಯಾಗಿ ಕಾರೊಂದನ್ನು ಬುಕ್ ಮಾಡಿದ್ದರು. ಚಾಲಕನೊಂದಿಗೆ ಇವರಿಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ, ಕಾರು ತುಮಕೂರು ದಾಟುತ್ತಿದ್ದಂತೆ ನಾಗೇಂದ್ರ ಹಾಗೂ ರಮ್ಯಾ ನಡುವೆ ಯಾವುದೋ ವೈಯಕ್ತಿಕ ವಿಚಾರಕ್ಕೆ ಕಾರಿನಲ್ಲೇ ತೀವ್ರ ಜಗಳ ಆರಂಭವಾಗಿದೆ.&lt;/p&gt;&lt;h2&gt;ಚಲಿಸುವ ಕಾರಿನಿಂದ ಹಾರಿದ ಯುವತಿ, ಚಾಲಕ ಇಳಿಯುತ್ತಿದ್ದಂತೆ ಕಾರು ಲಾಕ್!&lt;/h2&gt;&lt;p&gt;ಮಾತಿನ ಚಕಮಕಿ ವಿಕೋಪಕ್ಕೆ ಹೋದಾಗ, ನಾಗೇಂದ್ರ ತಾನು ಮೊದಲೇ ಪ್ಲಾನ್ ಮಾಡಿ ತಂದಿದ್ದ ಚಾಕುವಿನಿಂದ ರಮ್ಯಾ ಅವರ ತಲೆ ಹಾಗೂ ದೇಹದ ಭಾಗಕ್ಕೆ ಮನಸೋಇಚ್ಛೆ ಚುಚ್ಚಿದ್ದಾನೆ. ಈ ವೇಳೆ ಪೆಟ್ರೋಲ್ ಬಾಂಬ್ ಇದೆ ಎಂಬುದು ಯುವತಿಗೆ ತಿಳಿದಿದೆ. ನಾಗೇಂದ್ರನ ಈ ರೌದ್ರಾವತಾರದಿಂದ ಬೆಚ್ಚಿಬಿದ್ದ ರಮ್ಯಾ, ಬೊಬ್ಬೆ ಹೊಡೆದು ಜೀವ ಉಳಿಸಿಕೊಳ್ಳಲು ಚಲಿಸುತ್ತಿದ್ದ ಕಾರಿನಿಂದಲೇ ಹೊರಗೆ ಹಾರಿದ್ದಾರೆ. ಕಾರಿನೊಳಗೆ ನಡೆಯುತ್ತಿದ್ದ ಈ ಭೀಕರ ದೃಶ್ಯ ಹಾಗೂ ಯುವತಿ ಕೆಳಗೆ ಬಿದ್ದಿದ್ದನ್ನು ಕಂಡು ಗಾಬರಿಗೊಂಡ ವಾಹನ ಚಾಲಕ ತಕ್ಷಣವೇ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಇಳಿದಿದ್ದಾನೆ. ಚಾಲಕ ಕೆಳಗೆ ಇಳಿಯುತ್ತಿದ್ದಂತೆಯೇ ನಾಗೇಂದ್ರ ಒಳಗಿನಿಂದ ಕಾರಿನ ಎಲ್ಲಾ ಡೋರ್&zwnj;ಗಳನ್ನು ಸೆಂಟ್ರಲ್ ಲಾಕ್ ಮಾಡಿಕೊಂಡಿದ್ದಾನೆ.&lt;/p&gt;&lt;h2&gt;ಮೊದಲೇ ರೂಪಿಸಿದ್ದ ಸ್ಕೆಚ್? ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಶಂಕೆ!&lt;/h2&gt;&lt;p&gt;ಡೋರ್ ಲಾಕ್ ಮಾಡಿಕೊಂಡ ಕೆಲವೇ ಕ್ಷಣಗಳಲ್ಲಿ ಕಾರಿನೊಳಗೆ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಇಡೀ ಕಾರು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ನಾಗೇಂದ್ರ ತಾನು ಮೊದಲೇ ಸಿದ್ಧಪಡಿಸಿಕೊಂಡು ತಂದಿದ್ದ &lsquo;ಪೆಟ್ರೋಲ್ ಬಾಂಬ್&rsquo; ಅನ್ನು ಕಾರಿನೊಳಗೆ ಸಿಡಿಸಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಬೆಂಕಿ ಇಡೀ ಕಾರನ್ನು ಆವರಿಸಿದ್ದರಿಂದ ನಾಗೇಂದ್ರನಿಗೆ ಹೊರಬರಲು ಸಾಧ್ಯವಾಗದೆ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಕಾರು ಹೊತ್ತಿ ಉರಿದು ಭಸ್ಮವಾಗಿದೆ.&lt;/p&gt;&lt;h2&gt;ಸ್ಥಳಕ್ಕೆ ಎಸ್ಪಿ ಭೇಟಿ, ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲು&lt;/h2&gt;&lt;p&gt;ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಅವರು ಉನ್ನತ ಅಧಿಕಾರಿಗಳ ತಂಡದೊಂದಿಗೆ ಜೋಗಿಹಳ್ಳಿ ಬಳಿಯ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕಾರಿನಿಂದ ಜಿಗಿದು ತೀವ್ರ ರಕ್ತಸ್ರಾವ ಹಾಗೂ ಗಾಯಗಳಾಗಿದ್ದ ರಮ್ಯಾ ಉಲ್ಲಾಸ್ ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;p&gt;ಈ ಭೀಕರ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸುಟ್ಟು ಕರಕಲಾದ ಕಾರನ್ನು ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಮತ್ತು ರಮ್ಯಾ ನಡುವೆ ಇದ್ದ ಸಂಬಂಧವೇನು? ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿತ್ತು? ನಾಗೇಂದ್ರ ಮೊದಲೇ ಕೊಲೆ ಹಾಗೂ ಆತ್ಮಹತ್ಯೆಯ ಪ್ಲಾನ್ ಮಾಡಿಕೊಂಡಿದ್ದನೇ? ಎಂಬ ಹಲವು ಆಯಾಮಗಳಲ್ಲಿ ಕಳ್ಳಂಬೆಳ್ಳ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/tumakuru-pune-highway-horror-man-sets-car-ablaze-with-petrol-bomb-and-dies-gdp/articleshow-4wlb9fw"/>
        </item>
        <item>
            <title><![CDATA[Rain Yellow Alert: ಮುಂದಿನ 3 ಗಂಟೆ ಭಾರಿ ಎಲ್ಲೋ ಅಲರ್ಟ್‌, ಬೆಂಗಳೂರು ಸೇರಿ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆ]]></title>
            <link>https://kannada.asianetnews.com/gallery/bengaluru-urban/karnataka-weather-update-bengaluru-rain-yellow-alert-8-districts-next-3-hours-san-9gsnwhy</link>
            <guid isPermaLink="true">https://kannada.asianetnews.com/gallery/bengaluru-urban/karnataka-weather-update-bengaluru-rain-yellow-alert-8-districts-next-3-hours-san-9gsnwhy</guid>
            <pubDate>Fri, 12 Jun 2026 18:03:12 +0530</pubDate>
            <description><![CDATA[ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ರಾಜಧಾನಿಯ ಹಲವೆಡೆ ಈಗಾಗಲೇ ಮಳೆ ಆರಂಭವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktxwvsdz0hykz097kg2gb48y,imgname-bengaluru-rains--2--1781267293631.jpg" type="image/jpeg" height="390" width="690"/>
            <content:encoded><![CDATA[ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ರಾಜಧಾನಿಯ ಹಲವೆಡೆ ಈಗಾಗಲೇ ಮಳೆ ಆರಂಭವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.&lt;img&gt;&lt;p&gt;ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಈ ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್' (Yellow Alert) ಘೋಷಿಸಿದೆ.&lt;/p&gt;&lt;img&gt;&lt;p&gt;ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ Yellow Alert ನೀಡಿದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಈಗಾಗಲೇ ವರುಣನ ಆರ್ಭಟ ಶುರುವಾಗಿದೆ. ಪ್ರಮುಖವಾಗಿ ವಿಧಾನಸೌಧ, ವಸಂತನಗರ, ಶಿವಾಜಿನಗರ, ಕೆ.ಆರ್. ಸರ್ಕಲ್ ಪರಿಸರದಲ್ಲಿ ಭಾರಿ ಮಳೆಯಾಗುತ್ತಿರುವುದು ವರದಿಯಾಗಿದೆ.&lt;/p&gt;&lt;img&gt;&lt;p&gt;ನಗರದ ಪ್ರಮುಖ ಆಯಕಟ್ಟಿನ ಜಾಗಗಳಾದ ಕೆ.ಆರ್. ಮಾರ್ಕೆಟ್, ಚಿಕ್ಕಪೇಟೆ, ಯಶವಂತಪುರ ಹಾಗೂ ಮೆಜೆಸ್ಟಿಕ್ ಸೇರಿದಂತೆ ಸುತ್ತಮುತ್ತಲಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಕೊಂಚ ಅಸ್ತವ್ಯಸ್ತಗೊಂಡಿದೆ.&lt;/p&gt;&lt;img&gt;&lt;p&gt;ಕಚೇರಿ ಹಾಗೂ ಇತರೆ ಕೆಲಸಗಳಿಗೆ ಹೊರಟಿದ್ದ ಸಾರ್ವಜನಿಕರು ಈ ದಿಢೀರ್ ಮಳೆಯಿಂದಾಗಿ ಪರದಾಡುವಂತಾಗಿದೆ. ರಸ್ತೆಯಲ್ಲೇ ಸಿಲುಕಿಕೊಂಡ ಬೈಕ್ ಸವಾರರು ಮಳೆಯಿಂದ ರಕ್ಷಣೆ ಪಡೆಯಲು ಹತ್ತಿರದ ಬಸ್ ನಿಲ್ದಾಣಗಳು ಹಾಗೂ ಫ್ಲೈಓವರ್&zwnj;ಗಳ ಕೆಳಗೆ ಆಶ್ರಯ ಪಡೆದಿರುವುದು ಕಂಡುಬಂದಿದೆ.&lt;/p&gt;]]></content:encoded>
            <category>tumakuru</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/bengaluru-urban/karnataka-weather-update-bengaluru-rain-yellow-alert-8-districts-next-3-hours-san-9gsnwhy"/>
        </item>
        <item>
            <title><![CDATA[Tumakuru: 'ನಾನು ಮತ್ತು ಡಿಕೆಶಿ ಜೋಡೆತ್ತು': ಅನಾರೋಗ್ಯದ ನಡುವೆಯೂ ಡಿಸಿಎಂ ಪರಮೇಶ್ವರ್ ಹೇಳಿಕೆ ವೈರಲ್!]]></title>
            <link>https://kannada.asianetnews.com/politics/dcm-dr-g-parameshwar-emotional-speech-koratagere-dk-shivakumar-congress-gvd/articleshow-bd3oar2</link>
            <guid isPermaLink="true">https://kannada.asianetnews.com/politics/dcm-dr-g-parameshwar-emotional-speech-koratagere-dk-shivakumar-congress-gvd/articleshow-bd3oar2</guid>
            <pubDate>Sun, 14 Jun 2026 18:22:51 +0530</pubDate>
            <description><![CDATA[&lt;p&gt;Tumakuru: ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅನಾರೋಗ್ಯದ ನಡುವೆಯೂ ಭಾಗವಹಿಸಿ ಭಾವನಾತ್ಮಕ ಭಾಷಣ ಮಾಡಿದರು. ದಣಿದ ಧ್ವನಿಯಲ್ಲಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv32yc16tqjw7xc2chjn30ga,imgname-gxh-1781441441830.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.14): &lt;/strong&gt;ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅನಾರೋಗ್ಯದ ನಡುವೆಯೂ ಭಾಗವಹಿಸಿ ಭಾವನಾತ್ಮಕ ಭಾಷಣ ಮಾಡಿದರು. ದಣಿದ ಧ್ವನಿಯಲ್ಲಿ ಮಾತನಾಡಿದ ಅವರು, ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರೂ ಜನರ ಪ್ರೀತಿಗಾಗಿ ಕಾರ್ಯಕ್ರಮಕ್ಕೆ ಬಂದಿರುವುದಾಗಿ ತಿಳಿಸಿದರು.&lt;/p&gt;&lt;p&gt;&quot;ನನಗೆ ಆರೋಗ್ಯ ಸರಿಯಿಲ್ಲ. ವೈದ್ಯರು ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ಸಲಹೆ ನೀಡಿದ್ದರು. ಆದರೆ ಎರಡು ಇಂಜೆಕ್ಷನ್ ಹಾಕಿಸಿಕೊಂಡು ನಿಮ್ಮನ್ನು ಭೇಟಿ ಮಾಡಲು ಬಂದಿದ್ದೇನೆ. ನಿಮ್ಮ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಚಿರಋಣಿ,&quot; ಎಂದು ಪರಮೇಶ್ವರ್ ಹೇಳಿದರು.&lt;/p&gt;&lt;p&gt;ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ಅವರು, &quot;ಎರಡನೇ ಬಾರಿ ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಹೈಕಮಾಂಡ್ ಈ ಜವಾಬ್ದಾರಿ ನೀಡಿರಬಹುದು, ಆದರೆ ನನ್ನನ್ನು ಈ ಸ್ಥಾನಕ್ಕೆ ತಂದು ನಿಲ್ಲಿಸಿದ್ದು ಕೊರಟಗೆರೆ ಮತ್ತು ಮಧುಗಿರಿ ಭಾಗದ ಜನರು. ನನ್ನ ರಾಜಕೀಯ ಜೀವನಕ್ಕೆ ಜನ್ಮ ನೀಡಿದವರು ಮಧುಗಿರಿ ಜನರು. ನಿಮ್ಮ ಋಣವನ್ನು ಹೇಗೆ ತೀರಿಸಬೇಕು ಎಂಬುದೇ ನನಗೆ ತಿಳಿಯುತ್ತಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಅದನ್ನು ತೀರಿಸಲು ಪ್ರಯತ್ನಿಸುತ್ತೇನೆ,&quot; ಎಂದರು.&lt;/p&gt;&lt;p&gt;&lt;strong&gt;ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್&zwnj;ಗೆ ಅಭಿನಂದನೆ&lt;/strong&gt;&lt;/p&gt;&lt;p&gt;ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವನ್ನು ಶ್ಲಾಘಿಸಿದರು. &quot;ಸಿದ್ದರಾಮಯ್ಯ ಅವರು ಮೂರು ವರ್ಷಗಳ ಕಾಲ ರಾಜ್ಯವನ್ನು ಮುನ್ನಡೆಸಿದ್ದಾರೆ. ಕಾಂಗ್ರೆಸ್ ಸಿದ್ಧಾಂತಗಳನ್ನು ಆಡಳಿತದ ಮೂಲಕ ಜನರಿಗೆ ತಲುಪಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ,&quot; ಎಂದರು.&lt;/p&gt;&lt;p&gt;ಇದೇ ವೇಳೆ ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇಮಕಾತಿಯನ್ನು ಸ್ವಾಗತಿಸಿದ ಅವರು, &quot;136 ಸ್ಥಾನಗಳ ಐತಿಹಾಸಿಕ ಗೆಲುವಿಗೆ ಡಿ.ಕೆ. ಶಿವಕುಮಾರ್ ಅವರ ಕೊಡುಗೆ ಅಪಾರ. ಅವರಿಗೆ ಒಂದು ಅವಕಾಶ ನೀಡಬೇಕು ಎಂದು ಹೈಕಮಾಂಡ್ ನಿರ್ಧರಿಸಿದೆ. ಅವರ ನಾಯಕತ್ವದಲ್ಲಿ ಸರ್ಕಾರ ಅಭಿವೃದ್ಧಿಯ ದಾರಿಯಲ್ಲಿ ಮುಂದುವರಿಯಲಿದೆ,&quot; ಎಂದು ಹೇಳಿದರು.&lt;/p&gt;&lt;p&gt;&lt;strong&gt;2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು&lt;/strong&gt;&lt;/p&gt;&lt;p&gt;ಕಾಂಗ್ರೆಸ್ ಸಂಘಟನೆಯ ಬಲವನ್ನು ಉಲ್ಲೇಖಿಸಿದ ಪರಮೇಶ್ವರ್, &quot;ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ನಾನು &ndash; ನಾವು ಮೂವರು ಸಾಮಾನ್ಯ ಕಾರ್ಯಕರ್ತರಾಗಿ ಬೆಳೆದು ಬಂದವರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸೈನಿಕರು. 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ,&quot; ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;ಎತ್ತಿನಹೊಳೆ ಯೋಜನೆಗೆ ವೇಗ; ಭೈರಗೊಂಡ್ಲು ಜನರಿಗೆ ಮನವಿ&lt;/strong&gt;&lt;/p&gt;&lt;p&gt;ಎತ್ತಿನಹೊಳೆ ಯೋಜನೆ ಕುರಿತು ಮಾತನಾಡಿದ ಪರಮೇಶ್ವರ್, ಕೇಂದ್ರ ಸರ್ಕಾರದಿಂದ ಅರಣ್ಯ ಇಲಾಖೆಯ ಅನುಮತಿ ದೊರೆತಿರುವುದರಿಂದ ಯೋಜನೆಗೆ ವೇಗ ಸಿಗಲಿದೆ ಎಂದರು. &quot;ಜುಲೈನಲ್ಲಿ ಬರಬೇಕಿದ್ದ ನೀರು ಕೆಲ ಕಾರಣಗಳಿಂದ ತಡವಾಗಿದೆ. ಆದರೆ ಮುಂದಿನ ದಿನಗಳಲ್ಲಿ ಖಂಡಿತವಾಗಿ ಬರಲಿದೆ. ಕೊರಟಗೆರೆ ಸೇರಿದಂತೆ ಈ ಭಾಗದ ಸಾವಿರಾರು ಎಕರೆ ಕೃಷಿಭೂಮಿಗೆ ಹಾಗೂ ಕೆರೆಗಳಿಗೆ ನೀರು ತಲುಪಲಿದೆ. ಪಾವಗಡವರೆಗೂ ಅಂತರ್ಜಲ ಮಟ್ಟ ಹೆಚ್ಚಾಗಲಿದೆ,&quot; ಎಂದು ಹೇಳಿದರು.&lt;/p&gt;&lt;p&gt;ಭೈರಗೊಂಡ್ಲು ಭಾಗದ ರೈತರಿಗೆ ಮನವಿ ಮಾಡಿದ ಅವರು, &quot;ಡ್ಯಾಂ ನಿರ್ಮಾಣಕ್ಕಾಗಿ ಕೇವಲ 500 ಎಕರೆ ಜಮೀನು ಬೇಕಾಗಿದೆ. ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ಭೂಮಿಯ ವ್ಯವಸ್ಥೆ ಮಾಡಲಾಗುತ್ತದೆ. 67 ಕೆರೆಗಳಿಗೆ ನೀರು ತಲುಪಿಸುವ ಮಹತ್ವದ ಯೋಜನೆಗಾಗಿ ಎಲ್ಲರೂ ಸಹಕರಿಸಬೇಕು,&quot; ಎಂದು ಕೋರಿದರು.&lt;/p&gt;&lt;h2&gt;&lt;strong&gt;'ನಾನು ಮತ್ತು ಡಿಕೆ ಶಿವಕುಮಾರ್ ಜೋಡೆತ್ತು'&lt;/strong&gt;&lt;/h2&gt;&lt;p&gt;ಭಾಷಣದ ಕೊನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮ್ಮ ಹೊಂದಾಣಿಕೆಯನ್ನು ವಿವರಿಸಿದ ಪರಮೇಶ್ವರ್, &quot;ನಾನು ಮತ್ತು ಡಿ.ಕೆ. ಶಿವಕುಮಾರ್ ಜೋಡೆತ್ತಿನಂತೆ ಕೆಲಸ ಮಾಡುತ್ತೇವೆ. ನಾವು ಇಬ್ಬರೂ ಮೂಲ ಕಾಂಗ್ರೆಸ್ ಕಾರ್ಯಕರ್ತರು. ಪಕ್ಷ ಮತ್ತು ಜನರ ಅಭಿವೃದ್ಧಿಗಾಗಿ ಒಟ್ಟಾಗಿ ದುಡಿಯುತ್ತೇವೆ,&quot; ಎಂದು ಹೇಳಿದರು. ಈ ಮೂಲಕ ಅನಾರೋಗ್ಯದ ನಡುವೆಯೂ ಜನರ ಪ್ರೀತಿ, ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಎತ್ತಿನಹೊಳೆ ಯೋಜನೆ ಕುರಿತು ಡಿಸಿಎಂ ಜಿ. ಪರಮೇಶ್ವರ್ ಭಾವನಾತ್ಮಕ ಮತ್ತು ರಾಜಕೀಯವಾಗಿ ಮಹತ್ವದ ಸಂದೇಶವನ್ನು ರವಾನಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/dcm-dr-g-parameshwar-emotional-speech-koratagere-dk-shivakumar-congress-gvd/articleshow-bd3oar2"/>
        </item>
        <item>
            <title><![CDATA[KSR Bengaluru ಕಾಮಗಾರಿ: 2 ತಿಂಗಳು ರೈಲು ಸಂಚಾರದಲ್ಲಿ ಭಾರಿ ಏರುಪೇರು, 58 ರೈಲು ರದ್ದು! ವಂದೇ ಭಾರತ್ ಕೂಡ ವ್ಯತ್ಯಯ!]]></title>
            <link>https://kannada.asianetnews.com/gallery/karnataka-districts/karnataka-railway-updates-bengaluru-station-mega-work-vande-bharat-rajdhani-many-route-changes-58-trains-cancelled-gdp-dgiycq8</link>
            <guid isPermaLink="true">https://kannada.asianetnews.com/gallery/karnataka-districts/karnataka-railway-updates-bengaluru-station-mega-work-vande-bharat-rajdhani-many-route-changes-58-trains-cancelled-gdp-dgiycq8</guid>
            <pubDate>Tue, 16 Jun 2026 15:58:37 +0530</pubDate>
            <description><![CDATA[&lt;p&gt;ಕೆಎಸ್&zwnj;ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಕಾಮಗಾರಿಯಿಂದಾಗಿ, ಮುಂದಿನ 2 ತಿಂಗಳ ಕಾಲ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಲಿದೆ. ಹಲವು ರೈಲುಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ರದ್ದುಗೊಳಿಸಲಾಗಿದ್ದು, ಇನ್ನು ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kshamfcb642ftj4pq07ab7fn,imgname-indian-railways-rules--1--1779771784587.jpg" type="image/jpeg" height="390" width="690"/>
            <content:encoded><![CDATA[&lt;p&gt;ಕೆಎಸ್&zwnj;ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಕಾಮಗಾರಿಯಿಂದಾಗಿ, ಮುಂದಿನ 2 ತಿಂಗಳ ಕಾಲ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಲಿದೆ. ಹಲವು ರೈಲುಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ರದ್ದುಗೊಳಿಸಲಾಗಿದ್ದು, ಇನ್ನು ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.&amp;nbsp;&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು&lt;/strong&gt;: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರವಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಬೆಂಗಳೂರು ರೈಲು ನಿಲ್ದಾಣದಲ್ಲಿ ಮುಂಬರುವ ವಾರಗಳಲ್ಲಿ ಪ್ರಮುಖ ರೈಲು ಸಂಚಾರ ಅಡಚಣೆಗಳು ಎದುರಾಗಲಿವೆ. ನಿಲ್ದಾಣದ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ರೈಲುಗಳ ಕಾರ್ಯಾಚರಣೆಯನ್ನು ಸುಗಮಗೊಳಿಸಲು ಗತಿ ಶಕ್ತಿ ಘಟಕದ ವತಿಯಿಂದ ಯಾರ್ಡ್ ನವೀಕರಣ ಹಾಗೂ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಎರಡು ಪ್ರಮುಖ ರೈಲು ಮಾರ್ಗಗಳನ್ನು ನಿರ್ಬಂಧಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ಈ ಬೃಹತ್ ತಾಂತ್ರಿಕ ಬದಲಾವಣೆಯ ಹಿನ್ನೆಲೆಯಲ್ಲಿ ಜೂನ್ 16ರ ಮಂಗಳವಾರದಿಂದಲೇ ಜಾರಿಗೆ ಬರುವಂತೆ ಸುಮಾರು 2 ತಿಂಗಳ ಕಾಲ ವಿವಿಧ ರೈಲುಗಳ ಸೇವೆಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಇಲಾಖೆಯ ಪ್ರಕಟಣೆಯ ಪ್ರಕಾರ ಈ ಅವಧಿಯಲ್ಲಿ ಒಟ್ಟು 58 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುತ್ತಿದ್ದು, 116ಕ್ಕೂ ಹೆಚ್ಚು ರೈಲುಗಳನ್ನು ಭಾಗಶಃ ರದ್ದುಪಡಿಸಲಾಗುತ್ತಿದೆ. ಇದರೊಂದಿಗೆ 4 ರೈಲುಗಳನ್ನು ಭಾಗಶಃ ವಿಸ್ತರಣೆ ಮಾಡಲಾಗುತ್ತಿದ್ದು, 26 ರೈಲುಗಳನ್ನು ಪರ್ಯಾಯ ಮಾರ್ಗಗಳಲ್ಲಿ ಬದಲಾವಣೆ ಮಾಡಿ ಚಲಾಯಿಸಲು ತೀರ್ಮಾನಿಸಲಾಗಿದೆ. ಕೇವಲ 2 ರೈಲುಗಳನ್ನು ಮರು ನಿಗದಿಪಡಿಸಲಾಗುತ್ತಿದ್ದು, ಇನ್ನುಳಿದ 5 ಪ್ರಮುಖ ರೈಲುಗಳನ್ನು ಮಾರ್ಗಮಧ್ಯದ ಕೆಲವು ಆಯ್ದ ನಿಲ್ದಾಣಗಳಲ್ಲಿ 15ರಿಂದ ಹಿಡಿದು 60 ನಿಮಿಷಗಳ ಕಾಲ ನಿಯಂತ್ರಿಸಿ ಅವುಗಳ ನಿಲುಗಡೆ ಸಮಯವನ್ನು ಹೆಚ್ಚಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.&lt;/p&gt;&lt;img&gt;&lt;p&gt;ಈ ಯಾರ್ಡ್ ನವೀಕರಣ ಕಾಮಗಾರಿಯ ನೇರ ಪರಿಣಾಮವು ಮೈಸೂರು ಮತ್ತು ತುಮಕೂರು ಭಾಗದ ನಿತ್ಯ ಪ್ರಯಾಣಿಕರ ಮೇಲೆ ಭಾರಿ ಪ್ರಮಾಣದಲ್ಲಿ ಬೀರಲಿದೆ. ಮೈಸೂರು ಅಥವಾ ಅಶೋಕಪುರಂ ರೈಲು ನಿಲ್ದಾಣಗಳಲ್ಲಿ ತಮ್ಮ ಸಂಚಾರವನ್ನು ಪ್ರಾರಂಭಿಸುವ ಅಥವಾ ಅಲ್ಲಿಗೆ ಬಂದು ಕೊನೆಗೊಳ್ಳುವ 16 ಪ್ರಮುಖ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಇದರ ಜೊತೆಗೆ ಕೆಎಸ್&zwnj;ಆರ್ ಬೆಂಗಳೂರು ನಗರವನ್ನು ಸುತ್ತಮುತ್ತಲಿನ ಉಪನಗರಗಳು ಮತ್ತು ತುಮಕೂರಿನೊಳಗಿನ ವಿವಿಧ ನಿಲ್ದಾಣಗಳಿಗೆ ಸಂಪರ್ಕಿಸುವ 9 ಪ್ರಮುಖ ಮೆಮು (MEMU) ರೈಲುಗಳ ಸಂಚಾರವನ್ನು ಕೂಡ ರದ್ದುಪಡಿಸಲಾಗಿದೆ. ಇನ್ನು ಭಾಗಶಃ ರದ್ದಾಗಿರುವ ರೈಲುಗಳು ಕೆಎಸ್&zwnj;ಆರ್ ಬೆಂಗಳೂರು ನಿಲ್ದಾಣಕ್ಕೆ ಬರುವ ಬದಲಾಗಿ ಬೆಂಗಳೂರು ನಗರದ ಇತರ ಉಪನಗರ ನಿಲ್ದಾಣಗಳಲ್ಲಿ ತಮ್ಮ ಪ್ರಯಾಣವನ್ನು ಕೊನೆಗೊಳಿಸಲಿವೆ ಅಥವಾ ಅಲ್ಲಿಂದಲೇ ತಮ್ಮ ಮುಂದಿನ ಪ್ರಯಾಣವನ್ನು ಆರಂಭಿಸಲಿವೆ. ಅತ್ಯಂತ ಪ್ರಮುಖವಾಗಿ 10 ವಂದೇ ಭಾರತ್ ಎಕ್ಸ್&zwnj;ಪ್ರೆಸ್ ರೈಲುಗಳ ಸಂಚಾರದ ಮೇಲೂ ಈ ಕಾಮಗಾರಿ ಪರಿಣಾಮ ಬೀರಲಿದೆಯಾದರೂ, ಸಾರ್ವಜನಿಕರ ಅನುಕೂಲಕ್ಕಾಗಿ ಯಾವುದೇ ವಂದೇ ಭಾರತ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸದೆ ಕೇವಲ ಅವುಗಳ ನಿಲ್ದಾಣಗಳನ್ನು ಮಾತ್ರ ಬದಲಾಯಿಸಲಾಗಿದೆ.&lt;/p&gt;&lt;img&gt;&lt;p&gt;ನೈಋತ್ಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ಪ್ರಮುಖವಾಗಿರುವ ಈ ಯಾರ್ಡ್ ನವೀಕರಣ ಕಾರ್ಯವು ಭವಿಷ್ಯದಲ್ಲಿ 5 ದೊಡ್ಡ ಕಾರ್ಯಾಚರಣೆಯ ಪ್ರಯೋಜನಗಳನ್ನು ತಂದುಕೊಡಲಿದೆ. ಮೊದಲನೆಯದಾಗಿ ರಸ್ತೆ ಸಂಖ್ಯೆ 1ರ ಹಳಿಯಲ್ಲಿ ಒಂದೇ ಸಮಯದಲ್ಲಿ ರೈಲನ್ನು ಸ್ವಾಗತಿಸುವಾಗಲೇ ರಸ್ತೆ ಸಂಖ್ಯೆ 2ರ ಹಳಿಯಿಂದ ಬೆಂಗಳೂರು ಕಂಟೋನ್ಮಂಟ್ ಕಡೆಗೆ ಮತ್ತೊಂದು ರೈಲನ್ನು ಏಕಕಾಲದಲ್ಲಿ ರವಾನಿಸಲು ಸಾಧ್ಯವಾಗುತ್ತದೆ. ಎರಡನೆಯದಾಗಿ 24 ಬೋಗಿಗಳನ್ನು ಹೊಂದಿರುವ ಪೂರ್ಣ ಪ್ರಮಾಣದ ಉದ್ದದ ರೈಲುಗಳನ್ನು ಸುಲಭವಾಗಿ ನಿಲ್ಲಿಸಲು ಮತ್ತು ನಿರ್ವಹಿಸಲು ಅನುಕೂಲವಾಗುವಂತೆ ಪ್ಲಾಟ್&zwnj;ಫಾರ್ಮ್ ಸಂಖ್ಯೆ 7ರ ಉದ್ದವನ್ನು ಪ್ರಸ್ತುತ ಇರುವ 460 ಮೀಟರ್&zwnj;ಗಳಿಂದ 600 ಮೀಟರ್&zwnj;ಗಳಿಗೆ ವಿಸ್ತರಿಸಲಾಗುತ್ತಿದೆ. ಮೂರನೆಯದಾಗಿ ಪ್ಲಾಟ್&zwnj;ಫಾರ್ಮ್ ಅಲ್ಲದ ಚಾಲನೆಯಲ್ಲಿರುವ ಪ್ರತ್ಯೇಕ ಮಾರ್ಗವು ಪ್ಲಾಟ್&zwnj;ಫಾರ್ಮ್ ಮಾರ್ಗಗಳಲ್ಲಿ ನಿರ್ವಹಿಸಲ್ಪಡುವ ಸರಕು ಸಾಗಣೆ ರೈಲುಗಳನ್ನು ನೇರವಾಗಿ ಸ್ವೀಕರಿಸಲು ಮತ್ತು ರವಾನಿಸಲು ನೆರವಾಗುತ್ತದೆ.&lt;/p&gt;&lt;img&gt;&lt;p&gt;ನಾಲ್ಕನೆಯ ಪ್ರಯೋಜನವಾಗಿ ಮೈಸೂರು ಮತ್ತು ಬೆಂಗಳೂರು ಕಂಟೋನ್ಮಂಟ್ ಕಡೆಗೆ ರೈಲುಗಳ ಏಕಕಾಲಿಕ ಸ್ವಾಗತ ಹಾಗೂ ರವಾನೆಗಾಗಿ ಸುಧಾರಿತ ಸಿಗ್ನಲಿಂಗ್ ತಂತ್ರಜ್ಞಾನವನ್ನು ತರಲಾಗುತ್ತಿದ್ದು, ಹಳೆಯ ವಿದ್ಯುತ್ ಪತ್ತೆಯಾದ ಬಿಂದುಗಳನ್ನು ಸಂಪೂರ್ಣವಾಗಿ ಮೋಟಾರ್ ಚಾಲಿತ ಬಿಂದುಗಳೊಂದಿಗೆ ಬದಲಾಯಿಸಿ ಸಿಗ್ನಲ್ ಓವರ್&zwnj;ಲ್ಯಾಪ್&zwnj;ಗಳನ್ನು ಒದಗಿಸಲಾಗುತ್ತದೆ. ಕೊನೆಯದಾಗಿ ರೈಲುಗಳ ಅತ್ಯಂತ ಸುರಕ್ಷಿತ ಕಾರ್ಯಾಚರಣೆಗಾಗಿ ಪ್ರಸ್ತುತ ಅಸ್ತಿತ್ವದಲ್ಲಿರುವ ಸಾಲಿಡ್ ಸ್ಟೇಟ್ ಇಂಟರ್&zwnj;ಲಾಕಿಂಗ್ ಸಿಗ್ನಲಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅತ್ಯಾಧುನಿಕ ಎಲೆಕ್ಟ್ರಾನಿಕ್ ಇಂಟರ್&zwnj;ಲಾಕಿಂಗ್ ವ್ಯವಸ್ಥೆಗೆ ಪರಿವರ್ತಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ಕೆಎಸ್&zwnj;ಆರ್ ಬೆಂಗಳೂರು ನಿಲ್ದಾಣದಲ್ಲಿ ರೈಲುಗಳ ಸಂಚಾರ ಸಾಮರ್ಥ್ಯವನ್ನು ವಿಸ್ತರಿಸಲು ಕೈಗೊಳ್ಳಲಾಗಿರುವ 2 ಪ್ರಮುಖ ಯಾರ್ಡ್ ನವೀಕರಣ ಯೋಜನೆಗಳಲ್ಲಿ ಇದು ಮೊದಲನೇ ಹಂತದ ಯೋಜನೆಯಾಗಿದೆ. ಇದರ ಮುಂದುವರಿದ ಭಾಗವಾಗಿರುವ ಎರಡನೇ ಯೋಜನೆಯು ಯಶವಂತಪುರ ಗ್ರಿಡ್&zwnj;ನಲ್ಲಿ ಇನ್ನೂ 2 ಹೊಸ ಪ್ಲಾಟ್&zwnj;ಫಾರ್ಮ್&zwnj;ಗಳನ್ನು ನಿರ್ಮಿಸುವುದನ್ನು ಒಳಗೊಂಡಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಾಡಿ ಅವರು, ನಗರದ ರೈಲ್ವೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಈ ಕಾಮಗಾರಿಗಳನ್ನು ಪ್ರಯಾಣಿಕರಿಗೆ ಅತಿ ಹೆಚ್ಚು ತೊಂದರೆಯಾಗದಂತೆ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವುದು ಮೊದಲ ಹಂತದ ಕೆಲಸವಾಗಿದ್ದು, ಇದು ರೈಲುಗಳ ಸ್ವಾಗತ ಮತ್ತು ರವಾನೆಗಾಗಿ ಸಿಗ್ನಲಿಂಗ್ ವ್ಯವಸ್ಥೆಗಳ ಮೂಲಕ ಕಾರ್ಯಾಚರಣೆಯ ನಮ್ಯತೆಯನ್ನು ಸರಾಗಗೊಳಿಸುವ ಪ್ರಮುಖ ಗುರಿಯನ್ನು ಹೊಂದಿದೆ ಎಂದು ತಿಳಿಸಿರುವ ಅವರು, ಇದರ ಮುಂದಿನ ಎರಡನೇ ಹಂತದಲ್ಲಿ ಹೆಚ್ಚುವರಿ ವೇದಿಕೆಗಳ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವಿವರಿಸಿದ್ದಾರೆ.&lt;/p&gt;&lt;img&gt;&lt;p&gt;ಜುಲೈ ಕೊನೆಯ ವಾರದಿಂದ ಆಗಸ್ಟ್ ಮೊದಲ ವಾರದವರೆಗೆ ವಿವಿಧ ಪ್ರಮುಖ ಎಕ್ಸ್&zwnj;ಪ್ರೆಸ್ ರೈಲುಗಳ ನಿಲ್ದಾಣಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.&lt;/p&gt;&lt;p&gt;&lt;strong&gt;ಆಗಸ್ಟ್ 1ರಿಂದ 3ರವರೆಗೆ:&lt;/strong&gt; ಬೆಳಗಾವಿ ಮತ್ತು ಕೆಎಸ್&zwnj;ಆರ್ ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲು (26751) ತನ್ನ ಪ್ರಯಾಣವನ್ನು ಕೆಎಸ್&zwnj;ಆರ್ ಬೆಂಗಳೂರು ಬದಲಿಗೆ ಯಶವಂತಪುರದಲ್ಲಿ ಕೊನೆಗೊಳಿಸಲಿದೆ ಹಾಗೂ ಕೆಎಸ್&zwnj;ಆರ್ ಬೆಂಗಳೂರು-ಬೆಳಗಾವಿ ವಂದೇ ಭಾರತ್ (26752) ಯಶವಂತಪುರದಿಂದಲೇ ಮರಳಿ ಬೆಳಗಾವಿಗೆ ತನ್ನ ಸಂಚಾರವನ್ನು ಆರಂಭಿಸಲಿದೆ. ಇದೇ ಅವಧಿಯಲ್ಲಿ ಕಲಬುರಗಿ ಮತ್ತು ಎಸ್&zwnj;ಎಂವಿಟಿ ಬೆಂಗಳೂರು ವಂದೇ ಭಾರತ್ ರೈಲು (22232) ಯಲಹಂಕ ನಿಲ್ದಾಣದಲ್ಲಿ ಮುಕ್ತಾಯಗೊಳ್ಳಲಿದೆ, ಅಲ್ಲಿಂದಲೇ ಅಂದರೆ ಮರಳಿ ಕಲಬುರಗಿಗೆ ವಂದೇ ಭಾರತ್ ರೈಲು ಸಂಖ್ಯೆ (22231) ಹೊರಡಲಿದೆ. ಕೆಎಸ್&zwnj;ಆರ್ ಬೆಂಗಳೂರು ಮತ್ತು ಧಾರವಾಡ ವಂದೇ ಭಾರತ್ ರೈಲು (20661) ಕೂಡ ಯಶವಂತಪುರದಿಂದಲೇ ತನ್ನ ಸಂಚಾರವನ್ನು ಆರಂಭಿಸಲಿದೆ.&lt;/p&gt;&lt;p&gt;&lt;strong&gt;ಜುಲೈ 31 ರಿಂದ ಆಗಸ್ಟ್ 3 ರವರೆಗೆ:&lt;/strong&gt; ಧಾರವಾಡದಿಂದ ಬರುವ ಧಾರವಾಡ-ಕೆಎಸ್&zwnj;ಆರ್ ಬೆಂಗಳೂರು ವಂದೇ ಭಾರತ್ (20662 ಯಶವಂತಪುರದಲ್ಲಿ ಕೊನೆಗೊಂಡರೆ, ಎರ್ನಾಕುಲಂನಿಂದ ಬರುವ ವಂದೇ ಭಾರತ್ (26652) ಕೆಆರ್ ಪುರಂ ನಿಲ್ದಾಣದಲ್ಲಿ ತನ್ನ ಪ್ರಯಾಣ ಮುಗಿಸಲಿದೆ.&lt;/p&gt;&lt;p&gt;&lt;strong&gt;ಆಗಸ್ಟ್ 1 ರಿಂದ 4 ರವರೆಗೆ:&lt;/strong&gt;ಕೆಎಸ್&zwnj;ಆರ್ ಬೆಂಗಳೂರಿನಿಂದ ಎರ್ನಾಕುಲಂಗೆ ಹೋಗುವ ಕೆಎಸ್&zwnj;ಆ&zwnj;ರ್ ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ (26651) ಬೆಂಗಳೂರು ಕಂಟೋನ್ಮಂಟ್ ನಿಲ್ದಾಣದಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ಆಗಸ್ಟ್ 1 ರಿಂದ 3 ರವರೆಗೆ: &lt;/strong&gt;ಇದೇ ವೇಳೆ ದೇಶದ ಅತ್ಯಂತ ಪ್ರಮುಖ ರೈಲಾದ ಕೆಎಸ್&zwnj;ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್&zwnj;ಪ್ರೆಸ್&zwnj; (22691) ಕೆಎಸ್&zwnj;ಆರ್ ಬೆಂಗಳೂರು ಬದಲಾಗಿ ಯಶವಂತಪುರ ನಿಲ್ದಾಣದಿಂದಲೇ ನವದೆಹಲಿಯ ಕಡೆಗೆ ಹೊರಡಲಿದ್ದು, ಅದರ ಜೋಡಿ ರೈಲು (22692) ಆಗಸ್ಟ್ 2 ರಂದು ಮಾರ್ಗದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲು ನಿರ್ಧರಿಸಲಾಗಿದೆ.&lt;/p&gt;&lt;p&gt;&lt;strong&gt;ಜುಲೈ 29 ರಿಂದ ಆಗಸ್ಟ್ 1 ರವರೆಗೆ: &lt;/strong&gt;ಇನ್ನು ದೆಹಲಿ ಸಂಪರ್ಕದ ಮತ್ತೊಂದು ಪ್ರಮುಖ ರೈಲಾದ ನವದೆಹಲಿ-ಕೆಎಸ್&zwnj;ಆ&zwnj;ರ್ ಬೆಂಗಳೂರು ಕರ್ನಾಟಕ ಎಕ್ಸ್&zwnj;ಪ್ರೆಸ್ (12628) ಕೆಎಸ್&zwnj;ಆರ್ ಬೆಂಗಳೂರಿಗೆ ಬರುವ ಬದಲಾಗಿ ಬೈಯಪ್ಪನಹಳ್ಳಿ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಹಾಗೂ ಅದರ ಜೋಡಿ ರೈಲು ಆಗಸ್ಟ್ 1 ರಿಂದ 3 ರವರೆಗೆ ಬೈಯಪ್ಪನಹಳ್ಳಿ ನಿಲ್ದಾಣದಿಂದಲೇ ನವದೆಹಲಿಯ ಕಡೆಗೆ ತನ್ನ ಸಂಚಾರವನ್ನು ಆರಂಭಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/karnataka-railway-updates-bengaluru-station-mega-work-vande-bharat-rajdhani-many-route-changes-58-trains-cancelled-gdp-dgiycq8"/>
        </item>
        <item>
            <title><![CDATA[ದಕ್ಷಿಣ ಭಾರತದ ರೈಲ್ವೆ ಅಭಿವೃದ್ಧಿಗೆ 448 ಕೋಟಿ, ಪುಣೆ-ಬೆಂಗಳೂರು-ಕನ್ಯಾಕುಮಾರಿ ಹಳಿ ಮೇಲ್ದರ್ಜೆಗೆ 162.57 ಕೋಟಿ!]]></title>
            <link>https://kannada.asianetnews.com/gallery/state/indian-railways-approves-rs448-cr-for-major-south-india-route-upgrades-including-karnatakas-bengaluru-tumakuru-gdp-hs2t0lb</link>
            <guid isPermaLink="true">https://kannada.asianetnews.com/gallery/state/indian-railways-approves-rs448-cr-for-major-south-india-route-upgrades-including-karnatakas-bengaluru-tumakuru-gdp-hs2t0lb</guid>
            <pubDate>Wed, 10 Jun 2026 18:35:55 +0530</pubDate>
            <description><![CDATA[&lt;p&gt;ಭಾರತೀಯ ರೈಲ್ವೆಯು ದಕ್ಷಿಣ ಭಾರತದ ಎರಡು ಪ್ರಮುಖ ರೈಲು ಮಾರ್ಗಗಳಾದ ಬೆಂಗಳೂರು-ತುಮಕೂರು ಮತ್ತು ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗಗಳಲ್ಲಿ ವಿದ್ಯುತ್ ಎಳೆತ ವ್ಯವಸ್ಥೆಯನ್ನು ಆಧುನೀಕರಿಸಲು 448 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt31x002f35r72n6m3ej59d9,imgname-indian-railways-1780366606338.jpg" type="image/jpeg" height="390" width="690"/>
            <content:encoded><![CDATA[&lt;p&gt;ಭಾರತೀಯ ರೈಲ್ವೆಯು ದಕ್ಷಿಣ ಭಾರತದ ಎರಡು ಪ್ರಮುಖ ರೈಲು ಮಾರ್ಗಗಳಾದ ಬೆಂಗಳೂರು-ತುಮಕೂರು ಮತ್ತು ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗಗಳಲ್ಲಿ ವಿದ್ಯುತ್ ಎಳೆತ ವ್ಯವಸ್ಥೆಯನ್ನು ಆಧುನೀಕರಿಸಲು 448 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. &amp;nbsp;&lt;/p&gt;&lt;img&gt;&lt;p&gt;ದಕ್ಷಿಣ ಭಾರತದ ಪ್ರಮುಖ ರೈಲ್ವೆ ಕಾರಿಡಾರ್&zwnj;ಗಳಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ಮತ್ತು ರೈಲು ವಿಳಂಬದ ಸಮಸ್ಯೆಗೆ ಶೀಘ್ರದಲ್ಲೇ ಮುಕ್ತಿ ಸಿಗಲಿದೆ. ದಕ್ಷಿಣ ಮಧ್ಯ ರೈಲ್ವೆ ಮತ್ತು ನೈಋತ್ಯ ರೈಲ್ವೆ ವ್ಯಾಪ್ತಿಯ ಎರಡು ಪ್ರಮುಖ ಮಾರ್ಗಗಳಲ್ಲಿ ವಿದ್ಯುತ್ ಎಳೆತ ವ್ಯವಸ್ಥೆಯನ್ನು (ಟ್ರಾಕ್ಷನ್ ಸಿಸ್ಟಮ್) ಆಧುನೀಕರಿಸಲು ಭಾರತೀಯ ರೈಲ್ವೆಯು 448 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ.&lt;/p&gt;&lt;p&gt;ದಕ್ಷಿಣ ಮಧ್ಯ ರೈಲ್ವೆಯ ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗ ಹಾಗೂ ನೈಋತ್ಯ ರೈಲ್ವೆಯ ಬೆಂಗಳೂರು-ತುಮಕೂರು ವಿಭಾಗಗಳು ಈ ಯೋಜನೆಯಡಿ ನವೀಕರಣಗೊಳ್ಳಲಿವೆ. ರೈಲುಗಳ ಸಾಮರ್ಥ್ಯವನ್ನು ಹೆಚ್ಚಿಸುವುದು, ಕಾರ್ಯಾಚರಣೆಯಲ್ಲಿ ವಿಶ್ವಾಸಾರ್ಹತೆ ತರುವುದು ಮತ್ತು ಪ್ರಯಾಣಿಕ ಹಾಗೂ ಸರಕು ಸಾಗಣೆಗೆ ವೇಗ ನೀಡುವುದು ಈ ಹೆಜ್ಜೆಯ ಮುಖ್ಯ ಉದ್ದೇಶವಾಗಿದೆ.&lt;/p&gt;&lt;img&gt;&lt;p&gt;ಈ ಯೋಜನೆಯ ಮೂಲಕ ಹಳೆಯ ವಿದ್ಯುತ್ ವ್ಯವಸ್ಥೆಯ ಜಾಗದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದ್ದು, ಇದು ಭವಿಷ್ಯದ ಹೆಚ್ಚುವರಿ ಸಂಚಾರದ ಬೇಡಿಕೆಯನ್ನು ಸಮರ್ಥವಾಗಿ ನಿಭಾಯಿಸಲಿದೆ.&lt;/p&gt;&lt;p&gt;ರೈಲ್ವೆ ಸಚಿವಾಲಯವು ಎರಡೂ ಮಾರ್ಗಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ 1x25 kV ವಿದ್ಯುತ್ ಎಳೆತ ವ್ಯವಸ್ಥೆಯನ್ನು ಅತ್ಯಾಧುನಿಕ 2x25 kV ವ್ಯವಸ್ಥೆಗೆ ಮೇಲ್ದರ್ಜೆಗೇರಿಸಲು ಹಸಿರು ನಿಶಾನೆ ತೋರಿಸಿದೆ. ಇಲಾಖೆಯ ಪ್ರಕಾರ, ಈ ಹೊಸ ತಂತ್ರಜ್ಞಾನವು ರೈಲುಗಳ ಸುಗಮ ಸಂಚಾರಕ್ಕೆ ಹೆಚ್ಚು ಸ್ಥಿರ ಹಾಗೂ ದಕ್ಷತೆಯಿಂದ ಕೂಡಿದ ವಿದ್ಯುತ್ ಸರಬರಾಜನ್ನು ಖಚಿತಪಡಿಸುತ್ತದೆ.&lt;/p&gt;&lt;img&gt;&lt;p&gt;ಬೆಂಗಳೂರು-ತುಮಕೂರು ರೈಲು ವಿಭಾಗವು ಪುಣೆ-ಹುಬ್ಬಳ್ಳಿ-ಚಿಕ್ಕಜಾಜೂರು-ಬೀರೂರು-ತುಮಕೂರು-ಬೆಂಗಳೂರು-ಸೇಲಂ- ಕನ್ಯಾಕುಮಾರಿ ಕಾರಿಡಾರ್&zwnj;ನ ಪ್ರಮುಖ ಭಾಗವಾಗಿದೆ. ಇದು ದಕ್ಷಿಣದ ಪ್ರಮುಖ ಆರ್ಥಿಕ ಮತ್ತು ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುವ ಅತ್ಯಂತ ಜನನಿಬಿಡ ನೆಟ್&zwnj;ವರ್ಕ್ (High Utilization Network - HUN Route-10) ಎನಿಸಿಕೊಂಡಿದೆ.&lt;/p&gt;&lt;p&gt;ಸುಮಾರು 120 ಹಳಿ ಕಿಲೋಮೀಟರ್&zwnj;ಗಳಷ್ಟು ವ್ಯಾಪಿಸಲಿರುವ ಈ ನವೀಕರಣ ಯೋಜನೆಯಿಂದಾಗಿ, ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ರೈಲುಗಳ ದಟ್ಟಣೆ ಕಡಿಮೆಯಾಗಲಿದೆ. ಅಲ್ಲದೆ, ಸಾರ್ವಜನಿಕರ ಪ್ರಯಾಣ ಹಾಗೂ ಸರಕು ಸಾಗಣೆ ಮತ್ತಷ್ಟು ಸುಗಮವಾಗಲಿದೆ.&lt;/p&gt;&lt;img&gt;&lt;p&gt;ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗವು ಧರ್ಮಾವರಂ, ಧೋನೆ, ಸಿಕಂದರಾಬಾದ್, ಮುದ್ಖೇಡ್, ಇಂದೋರ್ ಮತ್ತು ಅಜ್ಮೀರ್ ನಗರಗಳನ್ನು ಜೋಡಿಸುವ ಹೈ-ಡೆನ್ಸಿಟಿ ನೆಟ್&zwnj;ವರ್ಕ್ (ಅತಿ ಹೆಚ್ಚು ಜನದಟ್ಟಣೆಯ ಮಾರ್ಗ) ಆಗಿದೆ.&lt;/p&gt;&lt;p&gt;ಹೊಸ ಎಳೆತ ವ್ಯವಸ್ಥೆಯು ಈ ಮಾರ್ಗದ ಸಾಮರ್ಥ್ಯ ಮತ್ತು ದಕ್ಷತೆಯನ್ನು ಗಣನೀಯವಾಗಿ ಹೆಚ್ಚಿಸಲಿದೆ. ಇದರಿಂದ ಸರಕು ಸಾಗಣೆ ರೈಲುಗಳ ವೇಗ ಹೆಚ್ಚಲಿದ್ದು, ಈ ಭಾಗದ ವ್ಯಾಪಾರ ಮತ್ತು ಕೈಗಾರಿಕಾ ವಲಯಕ್ಕೆ ಭಾರಿ ನೆರವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;&lt;img&gt;&lt;p&gt;ಸ್ಥಿರ ವಿದ್ಯುತ್ ಸರಬರಾಜು: ನವೀಕೃತ 2x25 kV ವ್ಯವಸ್ಥೆಯು ರೈಲುಗಳಿಗೆ ನಿರಂತರ ಹಾಗೂ ಬಲಿಷ್ಠ ವಿದ್ಯುತ್ ಸಂಪರ್ಕವನ್ನು ಒದಗಿಸುತ್ತದೆ. ತಾಂತ್ರಿಕ ಅಡಚಣೆಗಳು ಕಡಿಮೆಯಾಗುತ್ತವೆ.&lt;/p&gt;&lt;p&gt;ಹೆಚ್ಚಿನ ರೈಲುಗಳ ಸಂಚಾರ: ಮುಂಬರುವ ದಿನಗಳಲ್ಲಿ ಈ ಮಾರ್ಗಗಳಲ್ಲಿ ರೈಲ್ವೆ ಇಲಾಖೆಗೆ ಮತ್ತಷ್ಟು ಹೊಸ ರೈಲುಗಳನ್ನು ಓಡಿಸಲು ಸಾಧ್ಯವಾಗುತ್ತದೆ.&lt;/p&gt;&lt;p&gt;ಸಮಯ ಉಳಿತಾಯ: ಕಾರ್ಯಾಚರಣೆಯ ದಕ್ಷತೆ ಹೆಚ್ಚಳದಿಂದಾಗಿ ಪ್ರಯಾಣಿಕರು ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದು ಹಾಗೂ ಸರಕು ಸಾಗಣೆಯೂ ವೇಗವಾಗಿ ನಡೆಯುತ್ತದೆ.&lt;/p&gt;&lt;img&gt;&lt;p&gt;ದಕ್ಷಿಣ ರೈಲ್ವೆ ಅಭಿವೃದ್ಧಿಗೆ ಒಟ್ಟು ರೂ. 447.58 ಕೋಟಿ ಅಂದರೆ ಸುಮಾರು 448 ಕೋಟಿ ಹೂಡಿಕೆ ಮಾಡಲಾಗುತ್ತಿದೆ. ರೈಲುಗಳ ಸಾಮರ್ಥ್ಯ, ದಕ್ಷತೆ ಮತ್ತು ಸಂಚಾರದ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಬೃಹತ್ ಜಂಟಿ ಯೋಜನೆ ಇದಾಗಿದೆ&lt;/p&gt;&lt;p&gt;ಇದರಲ್ಲಿ ನೈರುತ್ಯ ರೈಲ್ವೆ ವಿಭಾಗವಾದ ಬೆಂಗಳೂರು - ತುಮಕೂರು ರೈಲು ಅಭಿವೃದ್ಧಿಗೆ ರೂ. 162.57 ಕೋಟಿ ಮೀಸಲಿಡಲಾಗಿದೆ. ಇದು ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಮತ್ತು ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುವ ನಿರಂತರ ಕಾರ್ಯನಿರತ ಕಾರಿಡಾರ್.&lt;/p&gt;&lt;img&gt;&lt;p&gt;ಮಹಬೂಬ್&zwnj;ನಗರ - ಸಿಕಂದರಾಬಾದ್ - ಮೇಡ್ಚಲ್ ದಕ್ಷಿಣ ಮಧ್ಯ ರೈಲ್ವೆ (South Central Railway) ವಿಭಾಗಕ್ಕೆ ಸೇರಿದ್ದು, ರೂ. 285.01 ಕೋಟಿ ಹೂಡಿಕೆ ಮಾಡಲಾಗಿದೆ. ಅತಿ ಹೆಚ್ಚು ಜನದಟ್ಟಣೆ ಹೊಂದಿರುವ ಮಾರ್ಗವಾಗಿದ್ದು, ಭಾರೀ ಪ್ರಮಾಣದ ಪ್ರಯಾಣಿಕ ಹಾಗೂ ಸರಕು ಸಾಗಣೆ ಅವಲಂಬಿತವಾದ ಮಾರ್ಗವಾಗಿದೆ.&lt;/p&gt;&lt;p&gt;ದಿನನಿತ್ಯ ರೈಲು ಪ್ರಯಾಣ ಮಾಡುವ ಸಾರ್ವಜನಿಕರಿಗೆ ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ರೈಲ್ವೆಯನ್ನು ನೆಚ್ಚಿಕೊಂಡಿರುವ ಉದ್ಯಮಗಳಿಗೆ ಈ ಹೂಡಿಕೆಯು ವರದಾನವಾಗಲಿದೆ. ಇದು ಮುಂಬರುವ ವರ್ಷಗಳಲ್ಲಿ ದಕ್ಷಿಣ ಭಾರತದಲ್ಲಿ ಅತ್ಯಂತ ಬಲಿಷ್ಠ ಮತ್ತು ಸುಸಜ್ಜಿತ ರೈಲ್ವೆ ಜಾಲವನ್ನು ನಿರ್ಮಿಸಲು ದಾರಿದೀಪವಾಗಲಿದೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/indian-railways-approves-rs448-cr-for-major-south-india-route-upgrades-including-karnatakas-bengaluru-tumakuru-gdp-hs2t0lb"/>
        </item>
        <item>
            <title><![CDATA[ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ: ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!]]></title>
            <link>https://kannada.asianetnews.com/crime/tumakuru-student-dies-after-falling-into-water-pit-gvd/articleshow-ib586rm</link>
            <guid isPermaLink="true">https://kannada.asianetnews.com/crime/tumakuru-student-dies-after-falling-into-water-pit-gvd/articleshow-ib586rm</guid>
            <pubDate>Fri, 05 Jun 2026 21:12:23 +0530</pubDate>
            <description><![CDATA[&lt;p&gt;ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 9 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸೈಯದ್ ಸಾಬ್ ಪಾಳ್ಯದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktc6tdg07zrs9j6tvtxnykm3,imgname-chjc-1780673754624.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.05): &lt;/strong&gt;ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 9 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಸೈಯದ್ ಸಾಬ್ ಪಾಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಮನ್ (9) ಎಂದು ಗುರುತಿಸಲಾಗಿದೆ. ಆತ ಮತ್ತಿಘಟ್ಟ ಸರ್ಕಾರಿ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.&lt;/p&gt;&lt;p&gt;ಇಂದು ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ರಾಮನ್, ಬ್ಯಾಗ್ ಇಟ್ಟು ಸ್ನೇಹಿತರೊಂದಿಗೆ ಆಟವಾಡಲು ತೆರಳಿದ್ದ. ಈ ವೇಳೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮೀಪದ ನೀರಿನ ಹೊಂಡಕ್ಕೆ ಬಿದ್ದಿದ್ದಾನೆ. ರಾಮನ್ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜೊತೆಯಲ್ಲಿದ್ದ ಸ್ನೇಹಿತರು ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಧಾವಿಸಿ ಬಾಲಕನನ್ನು ನೀರಿನಿಂದ ಹೊರತೆಗೆದಿದ್ದಾರೆ.&lt;/p&gt;&lt;h2&gt;&lt;strong&gt;ಪ್ರಕರಣ ದಾಖಲು&lt;/strong&gt;&lt;/h2&gt;&lt;p&gt;ಆ ವೇಳೆ ಬಾಲಕನಲ್ಲಿ ಉಸಿರಾಟ ಇತ್ತಾದರೂ, ಹೆಚ್ಚಿನ ಚಿಕಿತ್ಸೆಗೆ ತಿಪಟೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾಲಕನ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/tumakuru-student-dies-after-falling-into-water-pit-gvd/articleshow-ib586rm"/>
        </item>
        <item>
            <title><![CDATA[ಬೆಂಗಳೂರು-ಹೊನ್ನಾವರ ರಸ್ತೆಗಾಗಿ 30 ಎಕರೆ ಸ್ವಾಧೀನಕ್ಕೆ ಹೈಕೋರ್ಟ್‌ ಅಸ್ತು]]></title>
            <link>https://kannada.asianetnews.com/karnataka-districts/hc-approves-30-acre-land-acquisition-bengaluru-honnavar-road-development-san/articleshow-io6gdf2</link>
            <guid isPermaLink="true">https://kannada.asianetnews.com/karnataka-districts/hc-approves-30-acre-land-acquisition-bengaluru-honnavar-road-development-san/articleshow-io6gdf2</guid>
            <pubDate>Fri, 19 Jun 2026 10:33:31 +0530</pubDate>
            <description><![CDATA[&lt;p&gt;ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದ 30 ಎಕರೆ ಭೂಮಿಗೆ ಸಂಬಂಧಿಸಿದಂತೆ 14 ವರ್ಷಗಳ ಹಿಂದೆ ಏಕಸದಸ್ಯ ಪೀಠ ನೀಡಿದ್ದ ರದ್ದತಿ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಇದೀಗ ವಜಾಗೊಳಿಸಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvf3yxy3rqs4051m48twda16,imgname-banglore-honnavar-road-1781845161923.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜೂ.19): &lt;/strong&gt;ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನ ಮಾಡಿಕೊಂಡಿದ್ದ 30 ಎಕರೆ ಭೂ ಸ್ವಾಧೀನವನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಸುಮಾರು 14 ವರ್ಷಗಳ ಹಿಂದೆ ನೀಡಿದ್ದ ಹೊರಡಿಸಿದ್ದ ಆದೇಶವನ್ನು ವಿಭಾಗೀಯ ಪೀಠ ಇದೀಗ ವಜಾ ಮಾಡಿದೆ. ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮತ್ತು ಶ್ರೀ ಪ್ರಸನ್ನ ಆಂಜನೇಯ ಟ್ರಸ್ಟ್&zwnj; ಸಲ್ಲಿಸಿದ ಮೇಲ್ಮನವಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿಗಳಾದ ಡಿ.ಕೆ.ಸಿಂಗ್&zwnj; ಮತ್ತು ಎಸ್&zwnj;.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.&lt;/p&gt;&lt;p&gt;ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗೆ 30 ಎಕರೆ ಭೂ ಸ್ವಾಧೀನ ಪ್ರಸ್ತಾವನೆಗೆ 1986ರ ಅ.9 ರಂದು ಅನುಮೋದಿಸಿ ಸರ್ಕಾರ ಆದೇಶ ಹೊರಡಿಸುವ ಮೊದಲು, ಭೂಮಾಲೀಕರು ಮಾರಾಟದ ಒಪ್ಪಂದಗಳನ್ನು ಕಾರ್ಯಗತಗೊಳಿಸಿದ್ದರು. ಸಂಪೂರ್ಣ ಮಾರಾಟದ ಮೊತ್ತ ಪಡೆದಿದ್ದರು. ಭೂಮಿ ಸ್ವಾಧೀನವನ್ನೂ ನೀಡಲಾಗಿತ್ತು ಎಂದು ವಿಭಾಗೀಯ ಪೀಠ ಆದೇಶದಲ್ಲಿ ಹೇಳಿದೆ.&lt;/p&gt;&lt;p&gt;ಆದ್ದರಿಂದ ಭೂಮಾಲೀಕರು ಸ್ವಾಧೀನ ಪ್ರಕ್ರಿಯೆಗಳನ್ನು ಪ್ರಶ್ನಿಸದಂತೆ ತಡೆಯಲಾಗಿತ್ತು. ನಂತರ ಅದೂ ಅಂತಿಮ ಅಧಿಸೂಚನೆ ಹೊರಬಿದ್ದ ಸುಮಾರು ಎರಡು ದಶಕಗಳ ನಂತರ ಅದನ್ನು ಪ್ರಶ್ನಿಸಲಾಗಿತ್ತು. ಜಕ್ಕಸಂದ್ರ ಗ್ರಾಮದಲ್ಲಿರುವ ಭೂಮಿಯನ್ನು ಟ್ರಸ್ಟ್&zwnj; ಪರ ಸ್ವಾಧೀನಪಡಿಸಿಕೊಳ್ಳಲಾಯಿತು, ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿತರಣೆಗಾಗಿ 150 ನಿವೇಶನಗಳನ್ನು (30&times;40 ಚದರ ಅಡಿ) ಅಂದಿನ ನೆಲಮಂಗಲ ನಗರ ಪುರಸಭೆಗೆ ಉಚಿತವಾಗಿ ಹಸ್ತಾಂತರಿಸಲು ಒಪ್ಪಿಕೊಂಡಿತ್ತು. ಉಳಿದ ನಿವೇಶನಗಳನ್ನು ಟ್ರಸ್ಟ್&zwnj;ನ ಸದಸ್ಯರ ನಡುವೆ ವಿತರಿಸಬೇಕಾಗಿತ್ತು. ಅಂತಿಮ ಅಧಿಸೂಚನೆಯನ್ನು 1987ರಲ್ಲಿ ಹೊರಡಿಸಲಾಯಿತು ಎಂದು ಪೀಠ ಆದೇಶದಲ್ಲಿ ವಿವರಿಸಿದೆ.&lt;/p&gt;&lt;p&gt;&lt;strong&gt;ಪ್ರಕರಣದ ವಿವರ: &lt;/strong&gt;ಭೂ ಸ್ವಾಧೀನವನ್ನು 2006 ಮತ್ತು 2008ರ ನಡುವೆ&zwnj; ಕೆಲ ಭೂಮಾಲೀಕರು ಸ್ವಾಧೀನವನ್ನು ಪ್ರಶ್ನಿಸಿದರು. 2012ರಲ್ಲಿ, ಏಕಸದಸ್ಯಪೀಠ ಸ್ವಾಧೀನ ರದ್ದುಗೊಳಿಸಿ, ಭೂಮಿ ವಾಪಸ್&zwnj; ನೀಡಲು ಆದೇಶಿಸಿತು. ರಾಜ್ಯ ಸರ್ಕಾರ ಹಾಗೂ ಟ್ರಸ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯಲ್ಲಿ ಸಂಪೂರ್ಣ ಮೊತ್ತ ಪಾವತಿಸಿದ ಟ್ರಸ್ಟ್&zwnj; ಪರ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ನಿವೇಶನಗಳ ಮಾಲೀಕರು ತಮ್ಮ ಕುಟುಂಬ ಸದಸ್ಯರೊಂದಿಗೆ ವಸತಿಗಳನ್ನು ನಿರ್ಮಿಸುವ ಮೂಲಕ ಭೂಮಿ ಅಭಿವೃದ್ಧಿಪಡಿಸಿ, ಹಲವು ದಶಕಗಳೇ ಕಳೆದಿವೆ. ನಂತರ ಏಕಸದಸ್ಯಪೀಠ ಭೂ ಸ್ವಾಧೀನ ರದ್ದುಗೊಳಿಸಿರುವುದು ಸರಿಯಲ್ಲ ಎಂದು ಹೇಳಲಾಗಿತ್ತು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>tumakuru</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/hc-approves-30-acre-land-acquisition-bengaluru-honnavar-road-development-san/articleshow-io6gdf2"/>
        </item>
        <item>
            <title><![CDATA[ಜನರ ಮೇಲೆ ಮತ್ತೊಂದು ಹೊರೆ... ಸಿಲಿಂಡರ್ ದರ ಏರಿಕೆಗೆ ಡಿಸಿಎಂ ಪರಮೇಶ್ವರ್ ಆಕ್ರೋಶ]]></title>
            <link>https://kannada.asianetnews.com/karnataka-districts/lpg-cylinder-price-hike-dcm-dr-g-parameshwar-slams-central-government-gvd/articleshow-ism5tmb</link>
            <guid isPermaLink="true">https://kannada.asianetnews.com/karnataka-districts/lpg-cylinder-price-hike-dcm-dr-g-parameshwar-slams-central-government-gvd/articleshow-ism5tmb</guid>
            <pubDate>Sun, 07 Jun 2026 17:18:49 +0530</pubDate>
            <description><![CDATA[&lt;p&gt;ಗೃಹ ಬಳಕೆಯ ಎಲ್&zwnj;ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಿಲಿಂಡರ್..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktgykppahwk8d92k1f5fvdxd,imgname-chc-1780832918218.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.07): &lt;/strong&gt;ಗೃಹ ಬಳಕೆಯ ಎಲ್&zwnj;ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಿಲಿಂಡರ್ ದರವನ್ನು ಈ ತಿಂಗಳಲ್ಲೇ ಎರಡು ಬಾರಿ ಹೆಚ್ಚಿಸಲಾಗಿದ್ದು, ಇದೀಗ ಮತ್ತೊಮ್ಮೆ 29 ರೂಪಾಯಿ ಏರಿಕೆ ಮಾಡಿರುವುದಾಗಿ ಹೇಳಿದರು.&lt;/p&gt;&lt;p&gt;ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ಪೂರೈಕೆ ಕುಂಠಿತವಾಗಿದೆ ಎಂಬ ಕಾರಣವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆದರೆ ರಷ್ಯಾ ಸೇರಿದಂತೆ ಹಲವು ಪರ್ಯಾಯ ಮೂಲಗಳು ಲಭ್ಯವಿರುವಾಗಲೂ ಪದೇ ಪದೇ ಬೆಲೆ ಏರಿಕೆ ಮಾಡುತ್ತಿರುವುದು ಸಮರ್ಥನೀಯವಲ್ಲ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.&lt;/p&gt;&lt;h2&gt;&lt;strong&gt;ಕೇಂದ್ರ ಸರ್ಕಾರದ ಜವಾಬ್ದಾರಿ&lt;/strong&gt;&lt;/h2&gt;&lt;p&gt;ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತ, ಅನಿಲದ ಲಭ್ಯತೆ ಹಾಗೂ ಇತರೆ ಆರ್ಥಿಕ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಬೆಲೆ ನಿಗದಿಪಡಿಸಬೇಕು. ಸಾಮಾನ್ಯ ಜನರ ಹಿತಾಸಕ್ತಿ ಮತ್ತು ಜೀವನೋಪಾಯವನ್ನು ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು.&lt;/p&gt;&lt;p&gt;ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳನ್ನು ಪದೇ ಪದೇ ಹೆಚ್ಚಿಸುವ ಬದಲು, ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವತ್ತ ಗಮನಹರಿಸಬೇಕು. ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಿ ಜನಹಿತದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಡಿಸಿಎಂ ಪರಮೇಶ್ವರ್ ಆಗ್ರಹಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/lpg-cylinder-price-hike-dcm-dr-g-parameshwar-slams-central-government-gvd/articleshow-ism5tmb"/>
        </item>
        <item>
            <title><![CDATA[Ghost story: ಮಧ್ಯರಾತ್ರಿ ಮಾಯವಾದ ಬಸ್, ಬಿಳಿ ಸೀರೆಯ ಮಹಿಳೆ... ತುಮಕೂರು ರಸ್ತೆಯ ನಿಗೂಢ ಕಥೆ ವೈರಲ್!]]></title>
            <link>https://kannada.asianetnews.com/gallery/tumakuru/tumakuru-koratagere-road-white-saree-woman-ghost-story-mystery-kannada-suh-kecmtyx</link>
            <guid isPermaLink="true">https://kannada.asianetnews.com/gallery/tumakuru/tumakuru-koratagere-road-white-saree-woman-ghost-story-mystery-kannada-suh-kecmtyx</guid>
            <pubDate>Tue, 23 Jun 2026 14:42:27 +0530</pubDate>
            <description><![CDATA[&lt;p&gt;Tumakuru koratagere road white saree woman ತುಮಕೂರು-ಕೊರಟಗೆರೆ ರಸ್ತೆಯ &lsquo;ಬಿಳಿ ಸೀರೆಯ ಮಹಿಳೆ&rsquo; ಸ್ಥಳೀಯರ ಪ್ರಕಾರ, ತುಮಕೂರು-ಕೊರಟಗೆರೆ ರಸ್ತೆಯ ಕೆಲ ಭಾಗಗಳಲ್ಲಿ ಮಧ್ಯರಾತ್ರಿ ವಿಚಿತ್ರ ಘಟನೆಗಳು ನಡೆಯುತ್ತವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvsvt04ydxsnkynwk7td4g64,imgname-tumakuru-koratagere-road-white-saree-woman-1782205710494.jpeg" type="image/jpeg" height="390" width="690"/>
            <content:encoded><![CDATA[&lt;p&gt;Tumakuru koratagere road white saree woman ತುಮಕೂರು-ಕೊರಟಗೆರೆ ರಸ್ತೆಯ &lsquo;ಬಿಳಿ ಸೀರೆಯ ಮಹಿಳೆ&rsquo; ಸ್ಥಳೀಯರ ಪ್ರಕಾರ, ತುಮಕೂರು-ಕೊರಟಗೆರೆ ರಸ್ತೆಯ ಕೆಲ ಭಾಗಗಳಲ್ಲಿ ಮಧ್ಯರಾತ್ರಿ ವಿಚಿತ್ರ ಘಟನೆಗಳು ನಡೆಯುತ್ತವೆ.&lt;/p&gt;&lt;img&gt;&lt;p&gt;ತುಮಕೂರು-ಕೊರಟಗೆರೆ ರಸ್ತೆಯ &lsquo;ಬಿಳಿ ಸೀರೆಯ ಮಹಿಳೆ&rsquo; ಸ್ಥಳೀಯರ ಪ್ರಕಾರ, ತುಮಕೂರು-ಕೊರಟಗೆರೆ ರಸ್ತೆಯ ಕೆಲ ಭಾಗಗಳಲ್ಲಿ ಮಧ್ಯರಾತ್ರಿ ವಿಚಿತ್ರ ಘಟನೆಗಳು ನಡೆಯುತ್ತವೆ. ವಾಹನಗಳು ಹಠಾತ್ತನೆ ನಿಲ್ಲುವುದು, ಮಂಜಿನಲ್ಲಿ ಆಕೃತಿಗಳು ಕಾಣಿಸುವುದು, ಯಾರೂ ಇಲ್ಲದಿದ್ದರೂ ಧ್ವನಿಗಳು ಕೇಳಿಸುವುದು ಸಾಮಾನ್ಯ ಎನ್ನಲಾಗುತ್ತದೆ.&lt;/p&gt;&lt;img&gt;&lt;p&gt;ಒಮ್ಮೆ ಐವರು ಸ್ನೇಹಿತರು ಮದುವೆ ಮುಗಿಸಿ ರಾತ್ರಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ, ರಸ್ತೆ ಬದಿಯಲ್ಲಿ ಬಿಳಿ ಸೀರೆಯ ಮಹಿಳೆಯೊಬ್ಬಳು ನಿಂತಿರುವುದು ಕಂಡಿತಂತೆ. ಕಾರು ಹತ್ತಿರ ಹೋಗುತ್ತಿದ್ದಂತೆ ಆಕೆ ಮಾಯವಾಗಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಕಾರು ಏಕಾಏಕಿ ನಿಂತುಹೋಯಿತು. ಮೊಬೈಲ್ ಸಿಗ್ನಲ್ ಕೂಡ ಇರಲಿಲ್ಲ. ಇದೇ ವೇಳೆ ಬಂದ ಟ್ರಕ್ ಚಾಲಕ, &quot;ಈ ಸಮಯದಲ್ಲಿ ಇಲ್ಲಿ ನಿಲ್ಲಬೇಡಿ... ಈ ರಸ್ತೆ ಸುರಕ್ಷಿತವಲ್ಲ!&quot; ಎಂದು ಎಚ್ಚರಿಸಿ ಅಲ್ಲಿಂದ ಹೊರಟುಹೋದ.&lt;/p&gt;&lt;p&gt;ಮುಂದೆ ಒಂದು ಹಳೆಯ ಬಸ್ ಕಾಣಿಸಿಕೊಂಡಿತು. ಒಳಗೆ ಬೆಳಕು ಇದ್ದರೂ ಯಾರೂ ಇರಲಿಲ್ಲ. ಕಿಟಕಿಗಳ ಮೇಲೆ ನೂರಾರು ಕೈಗುರುತುಗಳು ಮಾತ್ರ ಕಂಡುಬಂದವು. ಕಾರು ಮತ್ತೆ ಚಲಿಸಲು ಆರಂಭಿಸಿದಾಗ ಹಿಂದಿನ ಕನ್ನಡಿಯಲ್ಲಿ ಆ ಬಸ್ ಸಂಪೂರ್ಣ ಮಾಯವಾಗಿತ್ತು. ಕೊನೆಗೆ ಮಂಜಿನ ಮಧ್ಯೆ ಮತ್ತೆ ಕಾಣಿಸಿಕೊಂಡ ಅದೇ ಬಿಳಿ ಸೀರೆಯ ಮಹಿಳೆಯ ಮುಖದಲ್ಲಿ ರಕ್ತದ ಕಲೆಗಳು ಮತ್ತು ಗಾಯದ ಗುರುತುಗಳು ಕಂಡುಬಂದವು ಎನ್ನಲಾಗಿದೆ. ಸ್ಥಳೀಯರು ಹೇಳುವ ಪ್ರಕಾರ, ವರ್ಷಗಳ ಹಿಂದೆ ಈ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದರು.&lt;/p&gt;&lt;img&gt;&lt;p&gt;ಅಂದಿನಿಂದ ಮಧ್ಯರಾತ್ರಿ ಸಮಯದಲ್ಲಿ ಅವರ ಆತ್ಮಗಳು ಈ ರಸ್ತೆಯಲ್ಲಿ ಅಲೆದಾಡುತ್ತವೆ ಎಂಬ ನಂಬಿಕೆ ಇಂದಿಗೂ ಜೀವಂತವಾಗಿದೆ. ಇದು ನಿಜವೇ? ಮೂಢನಂಬಿಕೆಯೇ? ಈ ಘಟನೆಗಳಿಗೆ ಯಾವುದೇ ಅಧಿಕೃತ ಸಾಕ್ಷ್ಯಗಳಿಲ್ಲ. ಕೆಲವರು ಇದನ್ನು ಭಯ, ಮಾನಸಿಕ ಒತ್ತಡ ಮತ್ತು ರಾತ್ರಿ ಕತ್ತಲೆಯ ಪರಿಣಾಮ ಎನ್ನುತ್ತಾರೆ. ಮತ್ತೊಬ್ಬರು ಇದನ್ನು ಅತೀಂದ್ರಿಯ ಶಕ್ತಿಗಳ ಪ್ರಭಾವವೆಂದು ನಂಬುತ್ತಾರೆ. ಆದರೆ ಒಂದು ವಿಷಯ ಮಾತ್ರ ಸತ್ಯ&mdash;ತುಮಕೂರು-ಕೊರಟಗೆರೆ ರಸ್ತೆಯ ಈ ಕಥೆಗಳು ಇಂದಿಗೂ ಸ್ಥಳೀಯರ ನಡುವೆ ಭಯ ಮತ್ತು ಕುತೂಹಲದ ವಿಷಯವಾಗಿವೆ.&lt;/p&gt;]]></content:encoded>
            <category>tumakuru</category>
            <dc:creator>Sushma Hegde</dc:creator>
            <atom:link href="https://kannada.asianetnews.com/gallery/tumakuru/tumakuru-koratagere-road-white-saree-woman-ghost-story-mystery-kannada-suh-kecmtyx"/>
        </item>
        <item>
            <title><![CDATA[ನನ್ನದು ಒಂದೇ ಒಂದು ಆಸೆ...... ಭಾವನಾತ್ಮಕ ಪತ್ರ ಬರೆದು ತುಮಕೂರಿನಲ್ಲಿ ದಾವಣಗೆರೆ ಮೂಲದ ವಿದ್ಯಾರ್ಥಿ ಸಾವು!]]></title>
            <link>https://kannada.asianetnews.com/karnataka-districts/karnataka-news-tumakuru-shocker-sit-engineering-student-from-davanagere-self-death-in-hostel-gdp/articleshow-lfgrgq8</link>
            <guid isPermaLink="true">https://kannada.asianetnews.com/karnataka-districts/karnataka-news-tumakuru-shocker-sit-engineering-student-from-davanagere-self-death-in-hostel-gdp/articleshow-lfgrgq8</guid>
            <pubDate>Mon, 22 Jun 2026 16:28:49 +0530</pubDate>
            <description><![CDATA[ತುಮಕೂರಿನ ಎಸ್&zwnj;ಐಟಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ವೆಂಕಟೇಶ್, ಬಿಸಿಎಂ ಹಾಸ್ಟೆಲ್&zwnj;ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್&zwnj;ನಲ್ಲಿ, ತನ್ನ ಕುಟುಂಬದ ಐದು ಮಂದಿ ಸದಾ ಒಟ್ಟಾಗಿರಬೇಕೆಂಬ ಕೊನೆಯಾಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಕುಟುಂಬ ಕಲಹದ ಶಂಕೆಯನ್ನು ಹುಟ್ಟುಹಾಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvqf7vp6ncxxcexkq6806njw,imgname-davanagere-1782125424326.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು: &lt;/strong&gt;ವಿದ್ಯಾ ನಗರಿ ತುಮಕೂರಿನಲ್ಲಿ ಅತ್ಯಂತ ಕರುಣಾಜನಕ ಘಟನೆಯೊಂದು ಸಂಭವಿಸಿದೆ. ನಗರದ ಪ್ರಸಿದ್ಧ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಿಂದುಳಿದ ವರ್ಗಗಳ (BCM) ವಸತಿ ನಿಲಯದಲ್ಲಿ ಸಾವಿಗೆ ಶರಣಾಗಿದ್ದಾನೆ. ಅದಕ್ಕೂ ಮುನ್ನ ಆತ ಪೋಷಕರಿಗೆ ಬರೆದಿಟ್ಟಿರುವ ಡೆತ್ ನೋಟ್ ಮಾತ್ರ ಎಂತವರನ್ನೂ ಕಣೀರಲ್ಲಿ ಮುಳುಗುವಂತೆ ಮಾಡಬಹುದು.&lt;/p&gt;&lt;h2&gt;ಕೊಠಡಿಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು&lt;/h2&gt;&lt;p&gt;ಮೃತರನ್ನು ಮೂಲತಃ ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ಜಿ. ಇ ವೆಂಕಟೇಶ್ (25) ಎಂದು ಗುರುತಿಸಲಾಗಿದೆ. ವೆಂಕಟೇಶ್ ತುಮಕೂರು ನಗರದ ಪ್ರಖ್ಯಾತ ಎಸ್&zwnj;ಐಟಿ (SIT) ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ನಗರದ ಉಪ್ಪಾರಹಳ್ಳಿಯಲ್ಲಿರುವ ಬಿಸಿಎಂ (BCM) ಹಾಸ್ಟೆಲ್&zwnj;ನಲ್ಲಿ ಉಳಿದುಕೊಂಡಿದ್ದ ಅವರು, ಕೊಠಡಿಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ನೋಡಿಕೊಂಡು ನೇಣು ಬಿಗಿದುಕೊಂಡಿದ್ದಾನೆ. ಇಂದು (ಸೋಮವಾರ) ಬೆಳಿಗ್ಗೆ ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಈ ಭೀಕರ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;h2&gt;ನೀವು ಐದು ಜನ ಒಟ್ಟಿಗೆ ಇರಬೇಕು, ಮನ ಕಲಕುವ ಕೊನೆಯ ಆಸೆ!&lt;/h2&gt;&lt;p&gt;ವಿದ್ಯಾರ್ಥಿ ವೆಂಕಟೇಶ್ ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಸಾವಿಗೂ ಮುನ್ನ ಅವರು ತಮ್ಮ ಹೆತ್ತ ಪೋಷಕರು ಹಾಗೂ ಕುಟುಂಬಸ್ಥರನ್ನು ಉದ್ದೇಶಿಸಿ ಭಾವನಾತ್ಮಕ ಡೆತ್ ನೋಟ್ (Death Note) ಒಂದನ್ನು ಬರೆದಿಟ್ಟಿದ್ದಾರೆ.&lt;/p&gt;&lt;h2&gt;ಡೆತ್ ನೋಟ್&zwnj;ನಲ್ಲಿ ಏನಿದೆ?&lt;/h2&gt;&lt;p&gt;ನನ್ನದು ಒಂದೇ ಒಂದು ಆಸೆ. ನೀವು ಐದು ಜನ ಯಾವಾಗಲೂ ಒಟ್ಟಿಗೆ ಇರಬೇಕೆಂಬುದೇ ನನ್ನ ಕೊನೆಯ ಆಸೆ. ಒಬ್ಬರನ್ನೊಬ್ಬರು ಯಾವುದೇ ಕಾರಣಕ್ಕೂ ಬಿಟ್ಟುಕೊಡಬೇಡಿ, ಯಾರೂ ಬೇರೆಯಾಗಬೇಡಿ. ಸದಾ ಹೀಗೆಯೇ ಒಗ್ಗಟ್ಟಿನಿಂದ ಇರಬೇಕು ಎನ್ನುವುದೇ ನನ್ನ ಕೊನೆಯ ಹಾರೈಕೆ... ಇಂತಿ ನಿಮ್ಮ ಪ್ರೀತಿಯ ಮಗ.&lt;/p&gt;&lt;p&gt;&mdash; ಮೃತ ವಿದ್ಯಾರ್ಥಿ ವೆಂಕಟೇಶ್ ಬರೆದಿರುವ ನೋಟ್&lt;/p&gt;&lt;p&gt;ಕುಟುಂಬದಲ್ಲಿ ಎಲ್ಲರೂ ಒಟ್ಟಾಗಿ ಇರಬೇಕೆಂದು ಮಗ ಕೊನೆಯದಾಗಿ ಕೇಳಿಕೊಂಡಿರುವ ಈ ಮಾತುಗಳು ಇಡೀ ಕುಟುಂಬವನ್ನು ಕಣ್ಣೀರಿನ ಕಡಲಲ್ಲಿ ಮುಳುಗಿಸಿದೆ. ಕುಟುಂಬದ ಆಂತರಿಕ ಕಲಹ ಅಥವಾ ಮತ್ಯಾವುದೋ ಗೊಂದಲಗಳು ವಿದ್ಯಾರ್ಥಿಯ ಮನಸ್ಸಿನ ಮೇಲೆ ತೀವ್ರ ಪರಿಣಾಮ ಬೀರಿದ್ದವೇ ಎಂಬ ಅನುಮಾನಗಳು ಈ ಡೆತ್ ನೋಟ್&zwnj;ನಿಂದ ಮೂಡುತ್ತಿವೆ.&lt;/p&gt;&lt;h2&gt;ಸ್ಥಳಕ್ಕೆ ಜಯನಗರ ಪೊಲೀಸರ ಭೇಟಿ&lt;/h2&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಸಿಗುತ್ತಿದ್ದಂತೆಯೇ ತುಮಕೂರಿನ ಜಯನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ದಾವಣಗೆರೆಯಲ್ಲಿರುವ ಮೃತನ ಪೋಷಕರಿಗೆ ಅಧಿಕೃತ ಮಾಹಿತಿ ನೀಡಿದ್ದು, ಕಣ್ಣೀರು ಹಾಕುತ್ತಲೇ ಪೋಷಕರು ತುಮಕೂರಿನತ್ತ ಧಾವಿಸುತ್ತಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯ ಸಾವಿನ ಹಿಂದಿರುವ ನೈಜ ಕಾರಣವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-news-tumakuru-shocker-sit-engineering-student-from-davanagere-self-death-in-hostel-gdp/articleshow-lfgrgq8"/>
        </item>
        <item>
            <title><![CDATA[ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2028ಕ್ಕೆ ಪೂರ್ಣ: ರೈಲ್ವೆ ರಾಜ್ಯ ಸಚಿವ ಸೋಮಣ್ಣ]]></title>
            <link>https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3</link>
            <guid isPermaLink="true">https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3</guid>
            <pubDate>Wed, 10 Jun 2026 13:32:50 +0530</pubDate>
            <description><![CDATA[ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೆಂಗಳೂರು ಮತ್ತು ತುಮಕೂರು ಭಾಗದ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಭೆಯಲ್ಲಿ, ಬಹುನಿರೀಕ್ಷಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗವನ್ನು 2028ರೊಳಗೆ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಘೋಷಿಸಿದರು. ಜೊತೆಗೆ, ತುಮಕೂರು-ರಾಯದುರ್ಗ ಯೋಜನೆ ಮತ್ತು 32 ಆರ್&zwnj;ಒಬಿ/ಆರ್&zwnj;ಯುಬಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01ktr8pzmb8s9xfx9jv0bed22g,imgname-v-somanna--1--1781078392458.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಬೆಂಗಳೂರು ಮತ್ತು ತುಮಕೂರು ಭಾಗಗಳಲ್ಲಿ ನಡೆಯುತ್ತಿರುವ ಹಾಗೂ ಪ್ರಸ್ತಾವಿತ ರೈಲ್ವೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳವಾರ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಮೀಕ್ಷಾ ಸಭೆ ನಡೆಸಿದರು. ಈ ಪರಿಶೀಲನೆಯಲ್ಲಿ ರಸ್ತೆ ಮೇಲ್ಸೇತುವೆಗಳು (ROB), ರಸ್ತೆ ಕೆಳಸೇತುವೆಗಳು (RUB) ಮತ್ತು ಪಾದಚಾರಿ ಮೇಲ್ಸೇತುವೆಗಳು (FOB) ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಒಳಗೊಂಡಿದ್ದವು. ಈ ವೇಳೆ ಕರ್ನಾಟಕ ಬಹುನಿರೀಕ್ಷಿತ ಹೊಸ ರೈಲು ಯೋಜನೆಯಾದ ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲು ಮಾರ್ಗವು 2028ರಲ್ಲಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.&lt;/p&gt;&lt;h2&gt;ಸಚಿವರ ಸ್ವಕ್ಷೇತ್ರ ತುಮಕೂರಿನಲ್ಲಿ 32 ಆರ್&zwnj;ಒಬಿ, ಆರ್&zwnj;ಯುಬಿ ಕಾಮಗಾರಿ: 2026-27ರ ಗಡುವು&lt;/h2&gt;&lt;p&gt;ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 32 ROB ಮತ್ತು RUB ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪಂಡಿತನಹಳ್ಳಿ, ಮೈದಾಳ, ಬಡ್ಡಿಹಳ್ಳಿ, ಬಟವಾಡಿ, ಹೆಗ್ಗೆರೆ, ಮಲ್ಲಸಂದ್ರ, ಬೆಂಚೆಗೆರೆ, ನಿಟ್ಟೂರು-ಮೈಸೂರು ಮಾರ್ಗ, ನಂದಿಹಳ್ಳಿ ಗೇಟ್ ಹಾಗೂ ಹಾಸನ ಮತ್ತು ಬಿದಿರೆಗುಡಿ ಕಡೆಗೆ ಬಿಎಚ್ ರಸ್ತೆಯಲ್ಲಿನ ಸೇತುವೆಗಳು ಪ್ರಮುಖವಾಗಿವೆ. ಈ ಎಲ್ಲಾ ಕಾಮಗಾರಿಗಳನ್ನು 2026&ndash;27ರೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.&lt;/p&gt;&lt;h2&gt;ರೂ. 1,801 ಕೋಟಿ ವೆಚ್ಚದ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ&lt;/h2&gt;&lt;p&gt;ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಇಲಾಖೆಯ ನಡುವೆ 50:50 ವೆಚ್ಚ ಹಂಚಿಕೆ ಮಾದರಿಯಡಿಯಲ್ಲಿ ಒಟ್ಟು 1,801 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿಗೊಳ್ಳುತ್ತಿರುವ 191 ಕಿ.ಮೀ. ಉದ್ದದ ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಯನ್ನು ಸಚಿವರು ಸೂಕ್ಷ್ಮವಾಗಿ ಪರಿಶೀಲಿಸಿದರು. ಈ ಯೋಜನೆಯು ಮಧ್ಯ ಕರ್ನಾಟಕದ ಕನೆಕ್ಟಿವಿಟಿಗೆ ಹೊಸ ಕ್ರಾಂತಿಯನ್ನೇ ತರಲಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿನ ಶೇ.92ಕ್ಕಿಂತ ಹೆಚ್ಚು ಭಾಗವನ್ನು ಈಗಾಗಲೇ ಸ್ವಾಧೀನಪಡಿಸಿಕೊಂಡಿರುವುದಾಗಿ ಸಚಿವರು ತಿಳಿಸಿದರು. ಉರುಕೆರೆ&ndash;ತಿಮ್ಮರಾಜನಹಳ್ಳಿ (13.31 ಕಿ.ಮೀ.) ವಿಭಾಗ ಪೂರ್ಣಗೊಂಡಿದ್ದು, ಕಾರ್ಯಾಚರಣೆಗೆ ಸಿದ್ಧವಾಗಿದೆ. ಸಂಪೂರ್ಣ ಯೋಜನೆಯನ್ನು ಫೆಬ್ರವರಿ 2028ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.&lt;/p&gt;&lt;h2&gt;&amp;nbsp;ರೂ. 2,496 ಕೋಟಿ ವೆಚ್ಚದ ತುಮಕೂರು-ರಾಯದುರ್ಗ ಅಂತರರಾಜ್ಯ ಯೋಜನೆ&amp;nbsp;&lt;/h2&gt;&lt;p&gt;ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನು ಬೆಸೆಯುವ ಅತ್ಯಂತ ಮಹತ್ವಾಕಾಂಕ್ಷೆಯ 206 ಕಿ.ಮೀ. ಉದ್ದದ ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿಯನ್ನು ಸಭೆಯಲ್ಲಿ ಮುನ್ನೆಲೆಗೆ ತರಲಾಯಿತು. ಈ ಬೃಹತ್ ಯೋಜನೆಗೆ ಒಟ್ಟು 2,496 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತಿದೆ.&lt;/p&gt;&lt;p&gt;ಈ ಯೋಜನೆಯ ಒಟ್ಟು ಉದ್ದದ ಪೈಕಿ ಈಗಾಗಲೇ 83 ಕಿ.ಮೀ. ರೈಲು ಮಾರ್ಗ ಯಶಸ್ವಿಯಾಗಿ ಕಾರ್ಯಾರಂಭ ಮಾಡಿದೆ. ಪ್ರಸ್ತುತ ಪ್ರಗತಿಯಲ್ಲಿರುವ ತುಮಕೂರು-ಉರುಕೆರೆ ವಿಭಾಗವು ಶಾಸನಬದ್ಧ ಸುರಕ್ಷತಾ ತಪಾಸಣೆಯಲ್ಲಿ (Statutory Safety Inspection) ಉತ್ತೀರ್ಣಗೊಂಡಿದ್ದು, ಪಾವಗಡ-ದೊಡ್ಡಹಳ್ಳಿ ವಿಭಾಗವು ಉದ್ಘಾಟನೆಗೆ ಸಂಪೂರ್ಣ ಸಜ್ಜಾಗಿದೆ. ಇನ್ನುಳಿದ ಮಾರ್ಗಗಳ ಕಾಮಗಾರಿಗಳು ಅತ್ಯಂತ ವೇಗವಾಗಿ ಪ್ರಗತಿಯಲ್ಲಿದ್ದು, ಶೇ. 97 ಕ್ಕೂ ಹೆಚ್ಚು ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯದ ಹಂತ ತಲುಪಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.&lt;/p&gt;&lt;p&gt;ಉಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರಗೊಳಿಸಲು, ರಸ್ತೆ ಮುಚ್ಚುವಿಕೆ ಮತ್ತು ತಿರುವುಗಳಿಗೆ ಸಮಯೋಚಿತ ಅನುಮೋದನೆ ಪಡೆಯಲು ಹಾಗೂ ವಿದ್ಯುತ್ ಮಾರ್ಗಗಳು, ನೀರಿನ ಪೈಪ್&zwnj;ಲೈನ್&zwnj;ಗಳು ಮತ್ತು ಅರಣ್ಯ ಅನುಮತಿಗಳಂತಹ ಉಪಯುಕ್ತತೆ ಸ್ಥಳಾಂತರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಅತ್ಯವಶ್ಯಕ ಎಂದು ಸೋಮಣ್ಣ ಒತ್ತಿ ಹೇಳಿದರು. ಈ ಸಭೆಯಲ್ಲಿ ನೈಋತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3"/>
        </item>
        <item>
            <title><![CDATA[Tumakuru Manual Scavenging: ಡಿಸಿಎಂ ಪರಮೇಶ್ವರ್ ತವರು ಕ್ಷೇತ್ರದಲ್ಲೇ ಬರಿಗೈಯಲ್ಲೇ ಮಲ ತುಂಬಿದ ಕಾರ್ಮಿಕರು!]]></title>
            <link>https://kannada.asianetnews.com/karnataka-districts/workers-cleaned-toilets-without-any-safety-equipment-in-tumkur-incident-at-keb-engineers-association-fir-rav/articleshow-o8c13ux</link>
            <guid isPermaLink="true">https://kannada.asianetnews.com/karnataka-districts/workers-cleaned-toilets-without-any-safety-equipment-in-tumkur-incident-at-keb-engineers-association-fir-rav/articleshow-o8c13ux</guid>
            <pubDate>Sat, 27 Jun 2026 04:51:31 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದ್ದು ಮುಗ್ದ ಕಾರ್ಮಿಕರಿಂದ ಬರಿಗೈಲಿ ಮಲ ಬಾಚಿಸಿದ ಘಟನೆ ಇಲ್ಲಿನ ಕೆಇಬಿ ಎಂಜಿನಿಯರ್ಸ್ ಸಂಘದ ಆವರಣದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw33hgmczg32j9rtd48xjjvs,imgname----------------------12--1782515810956.jpg" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;&amp;nbsp;ಬರೀ ಗೈ, ಬರಿಗಾಲಲ್ಲಿ ಸ್ವಚ್ಛ ಮಾಡಿದ ಕಾರ್ಮಿಕರು&lt;/li&gt; &lt;li&gt;ಕೆಇಬಿ ಎಂಜಿನಿಯರ್&zwnj;ಗಳ ಸಂಘದ ಆವರಣದಲ್ಲಿ ಘಟನೆ&lt;/li&gt;&lt;/ul&gt;&lt;p&gt;ತುಮಕೂರು (ಜೂ.27): ತುಮಕೂರು ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದ್ದು ಮುಗ್ದ ಕಾರ್ಮಿಕರಿಂದ ಬರಿಗೈಲಿ ಮಲ ಬಾಚಿಸಿದ ಘಟನೆ ಇಲ್ಲಿನ ಕೆಇಬಿ ಎಂಜಿನಿಯರ್ಸ್ ಸಂಘದ ಆವರಣದಲ್ಲಿ ನಡೆದಿದೆ.&lt;/p&gt;&lt;h2&gt;ಬರಿಗೈ, ಬರಿಗಾಲಲ್ಲೇ ಮಲ ತುಂಬುತ್ತಿದ್ದ ಕಾರ್ಮಿಕರು&lt;/h2&gt;&lt;p&gt;ನಗರದ ಕೆಇಬಿ ಎಂಜಿನಿಯರ್&zwnj;ಗಳ ಸಂಘದ ಆವರಣದಲ್ಲಿರುವ ಎರಡು ಕಕ್ಕಸು ಗುಂಡಿಗಳಲ್ಲಿನ ಮಲವನ್ನು ಕಾರ್ಮಿಕರು ಯಾವುದೇ ಗ್ಲೌಸ್, ಮಾಸ್ಕ್, ಗಮ್ ಬೂಟ್&zwnj;ಗಳಂತ ಸುರಕ್ಷಾ ಸಾಧನಗಳಿಲ್ಲದೇ ಬರಿಗೈ, ಬರಿಗಾಲಿನಲ್ಲಿ ನಿಂತು ಟ್ರ್ಯಾಕ್ಟರ್&zwnj;ಗೆ ತುಂಬುತ್ತಿದ್ದ ಅಮಾನವೀಯ ಘಟನೆ ನಡೆದಿದೆ.&lt;/p&gt;&lt;p&gt;ತುಮಕೂರಿನ ನಂದೀಶ್, ಅರುಣ್, ಮಧುಗಿರಿ ಮೂಲದ ಮೂರ್ತಿ ನಾಯ್ಕ ಹಾಗೂ ನವೀನ ಕಳೆದ ಮೂರು ದಿನಗಳಿಂದ ಈ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಮಣ್ಣು ತುಂಬಲೆಂದು ಕರೆತಂದರು. ಆದರೆ ಇಲ್ಲಿಗೆ ಬಂದು ನೋಡಿದಾಗ ಶೌಚ ಗುಂಡಿ ಎಂದು ತಿಳಿಯಿತು. ಹೊಟ್ಟೆ ಪಾಡಿಗಾಗಿ ಒಪ್ಪಿಕೊಂಡು ಈ ಕೆಲಸ ಮಾಡುತ್ತಿದ್ದೇವೆ. ಈ ಕೆಲಸ ಮಾಡಬಾರದು ಅಂತಾ ನಮಗೆ ಗೊತ್ತಿರಲಿಲ್ಲ. ಇನ್ನು ಮುಂದೆ ಇಂತಹ ಕೆಲಸಕ್ಕೆ ಕರೆದರೆ ಹೋಗುವುದಿಲ್ಲ ಎಂದು ಕಾರ್ಮಿಕರು ತಿಳಿಸಿದ್ದಾರೆ.&lt;/p&gt;&lt;h3&gt;ಸ್ವಯಂಪ್ರೇರಿತ ದೂರು ದಾಖಲು&lt;/h3&gt;&lt;p&gt;ಇತ್ತೀಚೆಗೆ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಬಾಲ ಕಾರ್ಮಿಕನಿಂದ ಶೌಚ ಗುಂಡಿಯ ಮಲ ಸ್ವಚ್ಛಗೊಳಿಸಲಾಗಿತ್ತು. ಇದೀಗ ತುಮಕೂರಲ್ಲೂ ಇಂತಹ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದ್ದು ಪೊಲೀಸರು ಸ್ವಯಂ ಪ್ರೇರಿತ ಕೇಸ್&zwnj; ದಾಖಲಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/workers-cleaned-toilets-without-any-safety-equipment-in-tumkur-incident-at-keb-engineers-association-fir-rav/articleshow-o8c13ux"/>
        </item>
        <item>
            <title><![CDATA[ಬೆಂಗಳೂರಲ್ಲಿ ಕಿಡ್ನಾಪ್, ತುಮಕೂರಲ್ಲಿ ಕಾರ್ ಬ್ಲಾಸ್ಟ್: ಪಾಗಲ್ ಪ್ರೇಮಿ ಸಜೀವ ದಹನ, ಸಿನಿಮೀಯ ರೀತಿ ಬದುಕಿದ ಯುವತಿ!]]></title>
            <link>https://kannada.asianetnews.com/karnataka-districts/bengaluru-kidnap-woman-miracle-escapes-as-obsessive-lover-dies-in-tumakuru-car-bomb-blast-gdp/articleshow-rt04dn7</link>
            <guid isPermaLink="true">https://kannada.asianetnews.com/karnataka-districts/bengaluru-kidnap-woman-miracle-escapes-as-obsessive-lover-dies-in-tumakuru-car-bomb-blast-gdp/articleshow-rt04dn7</guid>
            <pubDate>Sat, 27 Jun 2026 16:58:45 +0530</pubDate>
            <description><![CDATA[ಪ್ರೀತಿ ನಿರಾಕರಿಸಿದ ಕಾರಣಕ್ಕೆ ಬೆಂಗಳೂರಿನಿಂದ ಯುವತಿಯನ್ನು ಅಪಹರಿಸಿದ್ದ ಯುವಕ, ತುಮಕೂರು ಬಳಿ ಚಲಿಸುವ ಕಾರಿನಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಲು ಯತ್ನಿಸಿದ್ದಾನೆ. ಈ ಘಟನೆಯಲ್ಲಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿ ಯುವಕ ಕಾರಿನಲ್ಲೇ ಸಜೀವ ದಹನವಾಗಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw4d4jm9aprn5jvvasmm47xg,imgname-tumakuru-car-bomb-blast-1782559427209.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ತುಮಕೂರು: &lt;/strong&gt;ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಕಾರೊಳಗೆ ಪೆಟ್ರೋಲ್ ಬಾಂಬ್&zwnj; ನಿಂದ ಸ್ಫೋಟಿಸಿಕೊಂಡು ಸಜೀವ ದಹನವಾದ ಪ್ರಕರಣಕ್ಕೆ ಈಗ ಬಿಗ್&zwnj; ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಬೆಂಗಳೂರಿನಿಂದ ಅಪಹರಿಸಿ, ಚಲಿಸುವ ಕಾರಿನಲ್ಲೇ ಬಾಂಬ್ ಸ್ಫೋಟಿಸಿ ಕೊಲ್ಲಲು ಯತ್ನಿಸಿದ್ದ. ಈ ಘಟನೆಯಲ್ಲಿ ಯುವತಿ ಸಿನಿಮೀಯ ಶೈಲಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯನ್ನು ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಕಾರಿನಲ್ಲೇ ಸಜೀವ ದಹನವಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಬ್ಬುಲ್ ಗ್ರಾಮದ ನಿವಾಸಿ ನಾಗೇಂದ್ರ (ಮೃತ) ಹಾಗೂ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಒಟಿ (OT) ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ರಮ್ಯಾ ಈ ಪ್ರಕರಣದ ಕೇಂದ್ರಬಿಂದುವಾಗಿದ್ದಾರೆ.&lt;/p&gt;&lt;h2&gt;ಆರು ವರ್ಷಗಳ ಪ್ರೀತಿ, ಬ್ರೇಕಪ್&zwnj; ತಂದ ವಿರಸ&lt;/h2&gt;&lt;p&gt;ಮೃತ ನಾಗೇಂದ್ರ ಹಾಗೂ ರಮ್ಯಾ ಅಕ್ಕ ಪಕ್ಕದ ಊರಿನವರಾಗಿದ್ದು, ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಾಲೇಜು ದಿನಗಳಲ್ಲೇ ಇವರ ನಡುವೆ ಪ್ರೇಮಾಂಕುರವಾಗಿತ್ತು. ನಾಗೇಂದ್ರ ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿ ಅಬ್ಬೆಪಾರಿಯಂತೆ ತಿರುಗಾಡುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಮದುವೆಯಾಗುವಂತೆ ರಮ್ಯಾಗೆ ಆತ ದೈಹಿಕ ಹಾಗೂ ಮಾನಸಿಕ ಚಿತ್ರಹಿಂಸೆ ನೀಡಲು ಆರಂಭಿಸಿದ್ದನು. ಇದರಿಂದ ರೋಸಿಹೋದ ರಮ್ಯಾ, ನಾಗೇಂದ್ರನ ಜೊತೆಗಿನ ಸಂಬಂಧವನ್ನು ಕಡಿದುಕೊಂಡು ಆತನ ಫೋನ್ ನಂಬರ್ ಬ್ಲಾಕ್ ಮಾಡಿದ್ದಳು. ಅಲ್ಲದೆ ಬೆಂಗಳೂರಿನ ಜಯನಗರದ 1ನೇ ಬ್ಲಾಕ್&zwnj;ನ ಬೈರಸಂದ್ರ ಭೋವಿ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು.&lt;/p&gt;&lt;h2&gt;ಬೆಂಗಳೂರಿನಲ್ಲಿ ಮುಂಜಾನೆಯೇ ಕಿಡ್ನಾಪ್ ಸ್ಕೆಚ್!&lt;/h2&gt;&lt;p&gt;ರಮ್ಯಾ ತನ್ನ ನಂಬರ್ ಬ್ಲಾಕ್ ಮಾಡಿದ್ದರಿಂದ ಆಕ್ರೋಶಗೊಂಡಿದ್ದ ನಾಗೇಂದ್ರ, ಮುಂಜಾನೆಯೇ ಅಂಕೋಲಾದಿಂದ ಬೆಂಗಳೂರಿಗೆ ಬಂದಿದ್ದನು. ಬೆಳಗ್ಗೆ ಸುಮಾರು 7 ಗಂಟೆಯ ವೇಳೆಗೆ ರಮ್ಯಾ ತಂಗಿದ್ದ ರೂಮ್ ಬಳಿ ಪ್ರತ್ಯಕ್ಷನಾಗಿ ಜಗಳ ತೆಗೆದಿದ್ದನು. ಈ ವೇಳೆ ಜಗಳ ಬಿಡಿಸಲು ಬಂದ ರಮ್ಯಾಳ ಗೆಳತಿಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲ್ಲುವುದಾಗಿ ಹೆದರಿಸಿ, ಮೊದಲೇ ಬುಕ್ ಮಾಡಿದ್ದ ಉಬರ್ (Uber) ಕ್ಯಾಬ್&zwnj;ನಲ್ಲಿ ರಮ್ಯಾಳನ್ನು ಬಲವಂತವಾಗಿ ಅಪಹರಿಸಿಕೊಂಡು ಅಂಕೋಲಾ ಕಡೆಗೆ ಪ್ರಯಾಣ ಬೆಳೆಸಿದ್ದನು. ರಮ್ಯಾ ಕಾಣೆಯಾದ ತಕ್ಷಣ ಆಕೆಯ ಸ್ನೇಹಿತೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು.&lt;/p&gt;&lt;h2&gt;ಚಲಿಸುವ ಕಾರಿನಲ್ಲೇ ಚಾಕು ಇರಿತ, ಬಾಂಬ್ ಭೀತಿ&lt;/h2&gt;&lt;p&gt;ಬೆಂಗಳೂರಿನಿಂದ ಹೆದ್ದಾರಿಯಲ್ಲಿ ಕಾರು ಸಾಗುತ್ತಿದ್ದ ಉದ್ದಕ್ಕೂ ನಾಗೇಂದ್ರ ರಮ್ಯಾ ಜೊತೆ ತೀವ್ರವಾಗಿ ಜಗಳವಾಡಿದ್ದಾನೆ. ರಮ್ಯಾಗೆ ತಾನು ಮೊದಲೇ ತಯಾರಿಸಿಕೊಂಡು ತಂದಿದ್ದ ನಾಡ ಬಾಂಬ್ (ಪೆಟ್ರೋಲ್ ಬಾಂಬ್) ತೋರಿಸಿ, ನಿನ್ನನ್ನು ಕೊಂದು ನಾನು ಸಾಯುತ್ತೇನೆ ಎಂದು ಸತತವಾಗಿ ಬೆದರಿಕೆ ಹಾಕಿದ್ದಾನೆ. ಕಾರು ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾ ರಸ್ತೆಯ ಜೋಗಿಹಳ್ಳಿ ಬಳಿ ತಲುಪಿದಾಗ ನಾಗೇಂದ್ರ ಏಕಾಏಕಿ ಚಾಕುವಿನಿಂದ ರಮ್ಯಾಳ ತಲೆ ಹಾಗೂ ಕೈಗೆ ಇರಿದಿದ್ದಾನೆ. ಕಾರಿನೊಳಗೆ ನಡೆಯುತ್ತಿದ್ದ ಈ ಭೀಕರ ಹಿಂಸಾಚಾರ ಹಾಗೂ ಬಾಂಬ್ ಇರುವುದನ್ನು ಕಂಡು ಹೆದರಿದ ಕ್ಯಾಬ್ ಚಾಲಕ ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಾಣಭಯದಿಂದ ಓಡಿಹೋಗಿದ್ದಾನೆ.&lt;/p&gt;&lt;h2&gt;ಸಿನಿಮೀಯ ಶೈಲಿಯಲ್ಲಿ ಹಾರಿ ಬಚಾವಾದ ರಮ್ಯಾ&lt;/h2&gt;&lt;p&gt;ಚಾಲಕ ಓಡಿಹೋಗುತ್ತಿದ್ದಂತೆ ಕಾರಿನೊಳಗೆ ನಾಗೇಂದ್ರ ಬಾಂಬ್ ಸ್ಫೋಟಿಸಲು ಸಜ್ಜಾಗಿದ್ದಾನೆ. ಈ ಆಪತ್ತನ್ನು ಅರಿತ ರಮ್ಯಾ, ತೀವ್ರ ರಕ್ತಸ್ರಾವದ ನಡುವೆಯೂ ಸಮಯಪ್ರಜ್ಞೆ ಮೆರೆದು ಕಾರಿನ ಲಾಕ್ ತೆಗೆದು ಹೊರಗೆ ಜಿಗಿದಿದ್ದಾಳೆ. ರಮ್ಯಾ ಕಾರಿನಿಂದ ಹೊರಬೀಳುತ್ತಿದ್ದಂತೆಯೇ ನಾಗೇಂದ್ರ ತಾನು ತಂದಿದ್ದ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ನಾಗೇಂದ್ರ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ತಲೆ ಹಾಗೂ ಕೈಗೆ ಗಾಯಗೊಂಡ ಯುವತಿ ರಮ್ಯಾ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.&lt;/p&gt;&lt;h2&gt;ತುಮಕೂರು ಎಸ್ಪಿ ಅಶೋಕ್ ಕೆ.ವಿ. ಹೇಳಿಕೆ:&lt;/h2&gt;&lt;p&gt;ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಮೃತನನ್ನು ನಾಗೇಂದ್ರ ಎಂದು ಗುರುತಿಸಲಾಗಿದೆ. ಈತ ಪೆಟ್ರೋಲ್ ಬಾಂಬ್ ತಂದು ತಾನೇ ಸ್ಫೋಟಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತ ನಾಗೇಂದ್ರ ಹಾಗೂ ರಮ್ಯಾ ಪ್ರೀತಿಯಲ್ಲಿದ್ದರು. ಇತ್ತೀಚೆಗೆ ಇವರ ಬ್ರೇಕಪ್ ಆಗಿತ್ತು. ಈ ಹಿನ್ನೆಲೆಯಲ್ಲಿ ಜಯನಗರದಿಂದ ಅಂಕೋಲಾಕ್ಕೆ ಕ್ಯಾಬ್ ಬುಕ್ ಮಾಡಿ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಸದ್ಯ ಗಾಯಾಳು ಯುವತಿ ಮತ್ತು ಚಾಲಕನಿಂದ ಮಾಹಿತಿ ಪಡೆಯಲಾಗುತ್ತಿದ್ದು, ತನಿಖೆ ಮುಂದುವರಿದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಭೀಕರ ಸ್ಫೋಟದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.&lt;/p&gt;]]></content:encoded>
            <category>tumakuru</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-kidnap-woman-miracle-escapes-as-obsessive-lover-dies-in-tumakuru-car-bomb-blast-gdp/articleshow-rt04dn7"/>
        </item>
        <item>
            <title><![CDATA[Tumkur ghost story: ತುಮಕೂರು ಹೈವೆಯಲ್ಲಿ ಮಟನ್ ಸಾಂಬಾರ್ ಕೇಳಿದ ಅಪರಿಚಿತ ಧ್ವನಿ, ನೀವು ಎಚ್ಚರ!]]></title>
            <link>https://kannada.asianetnews.com/gallery/karnataka-districts/ghost-asked-for-mutton-sambar-hanumantapura-tumkur-road-story-suh-s115myz</link>
            <guid isPermaLink="true">https://kannada.asianetnews.com/gallery/karnataka-districts/ghost-asked-for-mutton-sambar-hanumantapura-tumkur-road-story-suh-s115myz</guid>
            <pubDate>Fri, 19 Jun 2026 13:25:49 +0530</pubDate>
            <description><![CDATA[&lt;p&gt;Hanumantapura tumkur road story ತುಮಕೂರು ಜಿಲ್ಲೆಯ ಹನುಮಂತಪುರ ಮತ್ತು ಕೊರಟಗೆರೆ ಭಾಗದ ರಸ್ತೆಗಳಲ್ಲಿ ಮಧ್ಯರಾತ್ರಿ ಸಮಯದಲ್ಲಿ ವಿಚಿತ್ರ ಘಟನೆಗಳು ನಡೆಯುತ್ತವೆ ಎಂಬ ಮಾತುಗಳು ವರ್ಷಗಳಿಂದ ಕೇಳಿಬರುತ್ತಿವೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvfdkv1gk8apjm814cxv54wy,imgname-hanumantapura-tumkur-road-story-1781855284272.jpeg" type="image/jpeg" height="390" width="690"/>
            <content:encoded><![CDATA[&lt;p&gt;Hanumantapura tumkur road story ತುಮಕೂರು ಜಿಲ್ಲೆಯ ಹನುಮಂತಪುರ ಮತ್ತು ಕೊರಟಗೆರೆ ಭಾಗದ ರಸ್ತೆಗಳಲ್ಲಿ ಮಧ್ಯರಾತ್ರಿ ಸಮಯದಲ್ಲಿ ವಿಚಿತ್ರ ಘಟನೆಗಳು ನಡೆಯುತ್ತವೆ ಎಂಬ ಮಾತುಗಳು ವರ್ಷಗಳಿಂದ ಕೇಳಿಬರುತ್ತಿವೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;2010ರ ಅಕ್ಟೋಬರ್ ತಿಂಗಳಲ್ಲಿ, ಪಿತೃಪಕ್ಷ ಮುಗಿಯುವ ದಿನಗಳಲ್ಲಿ ನಡೆದ ಈ ಘಟನೆ ಅಜಯ್ ಜೀವನವನ್ನೇ ಬದಲಾಯಿಸಿತ್ತು. ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ರಾತ್ರಿ 11 ಗಂಟೆ ಸುಮಾರಿಗೆ ಸೈಕಲ್&zwnj;ನಲ್ಲಿ ಮನೆಗೆ ಹೊರಟಿದ್ದ ಅಜಯ್, ತನ್ನ ಜೊತೆ ಯಾರೋ ಮಾತನಾಡುತ್ತಿರುವ ಅನುಭವಕ್ಕೆ ಒಳಗಾಗಿದ್ದ.&lt;/p&gt;&lt;p&gt;ಮೊದಲಿಗೆ &quot;ನಾನು ಬರಲಾ ಅಜ್ಜ?&quot; ಎಂಬ ಧ್ವನಿ ಕೇಳಿಸಿತು. ಸುತ್ತಲೂ ನೋಡಿದರೂ ಯಾರೂ ಕಾಣಿಸಲಿಲ್ಲ. ಸ್ವಲ್ಪ ದೂರ ಹೋಗುತ್ತಿದ್ದಂತೆ ಅದೇ ಧ್ವನಿ ಮತ್ತೆ ಕೇಳಿಸಿತು. ಈ ಬಾರಿ ಅದು ಸಿಟ್ಟಿನಿಂದ ಮಾತನಾಡುವ ಮಹಿಳೆಯ ಧ್ವನಿಯಂತಿತ್ತು.&lt;/p&gt;&lt;img&gt;&lt;p&gt;&quot;ನನ್ನನ್ನೂ ಕರೆದುಕೊಂಡು ಹೋಗು... ಒಬ್ಬನೇ ಹೋಗ್ತಿದೀಯಾ?&quot; ಎಂಬ ಮಾತು ಕೇಳುತ್ತಿದ್ದಂತೆ ಅಜಯ್ ಭಯದಿಂದ ನಡುಗತೊಡಗಿದ. ವಿಚಿತ್ರವೆಂದರೆ, ಅವನ ಕೈಯಲ್ಲಿದ್ದ ಮಟನ್ ಸಾಂಬಾರ್ ಪಾರ್ಸಲ್ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. ಆದರೆ ಆ ಧ್ವನಿ,&lt;/p&gt;&lt;p&gt;&quot;ನನಗೂ ಸ್ವಲ್ಪ ಮಟನ್ ಸಾಂಬಾರ್ ಕೊಡ್ತೀಯಾ? ನನಗೂ ಹಸಿವಾಗಿದೆ...&quot; ಎಂದು ಕೇಳಿತಂತೆ.&lt;/p&gt;&lt;img&gt;&lt;p&gt;ಈ ಮಾತು ಕೇಳಿದ ಕ್ಷಣ ಅಜಯ್ ನಿಯಂತ್ರಣ ಕಳೆದುಕೊಂಡು ಸೈಕಲ್&zwnj;ನಿಂದ ಕೆಳಗೆ ಬಿದ್ದ. ಟಿಫಿನ್ ಬಾಕ್ಸ್ ತೆರೆದು ಸಾಂಬಾರ್ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿತ್ತು. ಭಯದಿಂದ ನಡುಗುತ್ತಿದ್ದ ಅಜಯ್ ಸೈಕಲ್ ಎತ್ತಿಕೊಂಡು ಹಿಂದೆ ತಿರುಗಿ ನೋಡದೆ ಮನೆಗೆ ಓಡಿಹೋಗಿದ್ದ.&lt;/p&gt;&lt;img&gt;&lt;p&gt;ಮರುದಿನ ಬೆಳಗ್ಗೆ ಅಜಯ್&zwnj;ಗೆ ತೀವ್ರ ಜ್ವರ ಕಾಣಿಸಿಕೊಂಡಿತು. ಔಷಧಿ ತೆಗೆದುಕೊಂಡರೂ ಜ್ವರ ಕಡಿಮೆಯಾಗದ ಕಾರಣ ಕುಟುಂಬದವರು ಹನುಮಂತಪುರದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಿಶೇಷ ಪೂಜೆ ಮಾಡಿಸಿದರು. ದೇವಸ್ಥಾನದ ಅರ್ಚಕರು ರಕ್ಷಣಾ ಯಂತ್ರ ಕಟ್ಟಿದ ಬಳಿಕವೇ ಜ್ವರ ಕಡಿಮೆಯಾಯಿತಂತೆ.&lt;/p&gt;]]></content:encoded>
            <category>tumakuru</category>
            <dc:creator>Sushma Hegde</dc:creator>
            <atom:link href="https://kannada.asianetnews.com/gallery/karnataka-districts/ghost-asked-for-mutton-sambar-hanumantapura-tumkur-road-story-suh-s115myz"/>
        </item>
        <item>
            <title><![CDATA[ಮೆಟ್ರೋ ಬರುವ ಖುಷಿಯಲ್ಲಿದ್ದ ತುಮಕೂರಿನ ಜನತೆಗೆ ಬೇಸರದ ಸಂಗತಿ; ನಮಗ್ಯಾಕೆ ಬೇಕೆಂದ ಜನ]]></title>
            <link>https://kannada.asianetnews.com/gallery/karnataka-districts/number-of-stations-in-the-proposed-madavara-to-tumakuru-metro-project-is-likely-to-be-reduced-from-26-to-16-mrq-s2avf51</link>
            <guid isPermaLink="true">https://kannada.asianetnews.com/gallery/karnataka-districts/number-of-stations-in-the-proposed-madavara-to-tumakuru-metro-project-is-likely-to-be-reduced-from-26-to-16-mrq-s2avf51</guid>
            <pubDate>Wed, 10 Jun 2026 09:59:47 +0530</pubDate>
            <description><![CDATA[&lt;p&gt;ತುಮಕೂರು ನಗರಕ್ಕೆ ಮೆಟ್ರೋ ರೈಲು ಬರುತ್ತೆ ಎಂಬ ಖುಷಿಯಲ್ಲಿದ್ದ ಈ ಭಾಗದ ಜನತೆಗೆ ಬೇಸರದ ಸಂಗತಿಯೊಂದು ಬಂದಿದೆ. ಈ ವಿಷಯ ತಿಳಿದ ಜನರು, ನಮಗ್ಯಾಕೆ ಬೇಕು ಮೆಟ್ರೋ ರೈಲು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktqw9jy41gy82ew0zcrfncd2,imgname-bengaluru-to-tumakuru--2--1781065370564.jpg" type="image/jpeg" height="390" width="690"/>
            <content:encoded><![CDATA[&lt;p&gt;ತುಮಕೂರು ನಗರಕ್ಕೆ ಮೆಟ್ರೋ ರೈಲು ಬರುತ್ತೆ ಎಂಬ ಖುಷಿಯಲ್ಲಿದ್ದ ಈ ಭಾಗದ ಜನತೆಗೆ ಬೇಸರದ ಸಂಗತಿಯೊಂದು ಬಂದಿದೆ. ಈ ವಿಷಯ ತಿಳಿದ ಜನರು, ನಮಗ್ಯಾಕೆ ಬೇಕು ಮೆಟ್ರೋ ರೈಲು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಮಾದಾವರದಿಂದ ತುಮಕೂರು ನಡುವೆ ಮೆಟ್ರೋ ರೈಲು ಬರುತ್ತೆ ಎಂಬ ಖುಷಿಯಲ್ಲಿದ್ದ ಜನರಿಗೆ ಬೇಸರದ ಸಂಗತಿ ಎದುರಾಗಿದೆ. ನಮ್ಮೂರಿಗೆ ನಿಲ್ದಾಣಗಳಿಲ್ಲದ ಮೆಟ್ರೋ ನಮಗ್ಯಾಕೆ ಎಂದು ಈ ಭಾಗದ ಜನರು ಬಿಎಂಆರ್&zwnj;ಸಿಎಲ್&zwnj;ನ್ನು ಪ್ರಶ್ನೆ ಮಾಡುತ್ತಿದ್ದಾರೆ.&lt;/p&gt;&lt;img&gt;&lt;p&gt;ಮಾದಾವರ ಮತ್ತು ತುಮಕೂರು ಮಾರ್ಗದ ಡಿಪಿಆರ್&zwnj;ನಲ್ಲಿ 26 ನಿಲ್ದಾಣಗಳ ಸಂಖ್ಯೆಯನ್ನು 16ಕ್ಕೆ ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಟು ತುಮಕೂರು ವರೆಗೆ ಪ್ರತಿ 4.5 ಕಿ.ಮೀಗೆ ಒಂದೇ ನಿಲ್ದಾಣ ಮಾಡುವ ಸಾಧ್ಯತೆಗಳಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನಿಲ್ದಾಣಗಳು ಕಡಿತವಾಗಬಹುದು ಎಂದು ಅಂದಾಜಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ನಿಲ್ದಾಣಗಳ ಸಂಖ್ಯೆ ಕಡಿತವಾಗುವ ವಿಷಯ ತಿಳಿದು ತುಮಕೂರು ಭಾಗದ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. 58 ಕಿಲೋಮೀಟರ್&zwnj; ಮಾರ್ಗ, ಕೇವಲ 16 ನಿಲ್ದಾಣಗಳನ್ನು ಮಾಡುವ ಕುರಿತು ಡಿಪಿಆರ್&zwnj;ನಲ್ಲಿ ಪ್ರಸ್ತಾಪವಿದೆ ಎಂದು ಹೇಳಲಾಗುತ್ತಿದೆ.&lt;/p&gt;&lt;img&gt;&lt;p&gt;ಬಿಎಂಆರ್&zwnj;ಸಿಎಲ್ ಮೊದಲ ಬಾರಿಗೆ ಮೊದಲ ಬಾರಿಗೆ ಅಂತರ್&zwnj; ಜಿಲ್ಲೆ ಮೆಟ್ರೋ ಶುರು ಮಾಡಲು ಮುಂದಾಗಿದೆ. ಈಗಾಗಗಲೇ ಬೆಂಗಳೂರಿನ ಹಸಿರು ಮಾರ್ಗ ಹೊರವಲಯ ಮಾದಾವರ ತಲುಪಿದೆ. ಇಲ್ಲಿಂದ ತುಮಕೂರು ನಗರಕ್ಕೆ ಮೆಟ್ರೋ ವಿಸ್ತರಿಸಲು ಬಿಎಂಆರ್&zwnj;ಸಿಎಲ್ ಮುಂದಾಗಿದ್ದು, ಇದು ಅಂದಾಜು 20 ಸಾವಿರ ಕೋಟಿಯ ಬೃಹತ್ ಯೋಜನೆಯಾಗಿದೆ.&lt;/p&gt;&lt;img&gt;&lt;p&gt;ಸದ್ಯ ಈ ಮಾರ್ಗದಲ್ಲಿ ಹೆಚ್ಚಿನ ನಿಲ್ದಾಣಗಳನ್ನು ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ನಾನ್ ಸ್ಟಾಪ್ ಬಸ್ ಮತ್ತು ಸಾಮಾನ್ಯ ಬಸ್&zwnj; ರೀತಿಯಲ್ಲಿ ಮೆಟ್ರೋ ರೈಲುಗಳಾದ್ರೆ ಎಲ್ಲಾ ವರ್ಗದವರಿಗೆ ಸೇವೆ ಸಿಗಲಿದೆ ಎಂಬುವುದು ಸ್ಥಳೀಯರ ಅಭಿಪ್ರಾಯವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 6 ಕಾರಣಗಳಿಗೆ ತುಮಕೂರಿಗೆ ಮೆಟ್ರೋ ರೈಲು ಯೋಜನೆ ಬೇಡವಂತೆ; ಪತ್ರಿಕಾ ಹೇಳಿಕೆ ಬಿಡುಗಡೆ&lt;/strong&gt;&lt;/p&gt;]]></content:encoded>
            <category>tumakuru</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/number-of-stations-in-the-proposed-madavara-to-tumakuru-metro-project-is-likely-to-be-reduced-from-26-to-16-mrq-s2avf51"/>
        </item>
        <item>
            <title><![CDATA[ಬಳ್ಳಾರಿ–ರಾಯದುರ್ಗ–ತುಮಕೂರು ನಡುವಿನ ರೈಲ್ವೆ ಮಾರ್ಗ ಆರಂಭ ಯಾವಾಗ? ಜಿ.ಪರಮೇಶ್ವರ ಮಾಹಿತಿ]]></title>
            <link>https://kannada.asianetnews.com/karnataka-districts/when-will-the-railway-line-between-ballari-rayadurga-tumakuru-start-information-from-dcm-g-parameshwara-mrq/articleshow-s7452eq</link>
            <guid isPermaLink="true">https://kannada.asianetnews.com/karnataka-districts/when-will-the-railway-line-between-ballari-rayadurga-tumakuru-start-information-from-dcm-g-parameshwara-mrq/articleshow-s7452eq</guid>
            <pubDate>Tue, 09 Jun 2026 08:45:15 +0530</pubDate>
            <description><![CDATA[ಬಳ್ಳಾರಿ-ರಾಯದುರ್ಗ-ತುಮಕೂರು ರೈಲ್ವೆ ಮಾರ್ಗವನ್ನು 2027ರೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ.ಪರಮೇಶ್ವರ ತಿಳಿಸಿದ್ದಾರೆ. ಭೂಸ್ವಾಧೀನ ವಿಳಂಬದಿಂದ ಕುಂಠಿತಗೊಂಡಿದ್ದ ಈ ಯೋಜನೆಯ ಜೊತೆಗೆ, ಎಸ್ಕಾಂಗಳ ಖಾಸಗೀಕರಣ ವಿರೋಧಿಸಿ ನೌಕರರು ಸಲ್ಲಿಸಿದ ಮನವಿಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktn5wq7bwmrxn0bv1zdgx826,imgname-ballari-tumakuru-1780974771435.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು:&lt;/strong&gt; ತುಂಗಭದ್ರಾ ಕುಡಿಯುವ ನೀರಿನ ಯೋಜನೆಗೆ 2700 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲಾಗುವುದು. ಪಾವಗಡ ಬಸ್ ನಿಲ್ದಾಣ ನಿರ್ಮಾಣ ಹಾಗೂ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. 2027ರ ಒಳಗೆ ಬಳ್ಳಾರಿ&ndash;ರಾಯದುರ್ಗ&ndash;ತುಮಕೂರು ರೈಲ್ವೆ ಮಾರ್ಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಭೂಸ್ವಾಧೀನ ವಿಳಂಬದಿಂದ ಯೋಜನೆ ಕುಂಠಿತ&lt;/strong&gt;&lt;/h2&gt;&lt;p&gt;&amp;nbsp;2007ರಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವಧಿಯಲ್ಲಿ ಈ ಯೋಜನೆಗೆ ಅನುಮೋದನೆ ದೊರೆತಿದ್ದು, ಅಂದಿನ ಶಾಸಕರು ಹಾಗೂ ಮುಖಂಡರ ಮನವಿಯಿಂದ ಪಿಂಕ್ ಬುಕ್&zwnj;ನಲ್ಲಿ ದಾಖಲೆಯಾಗಿತ್ತು ಎಂದು ಅವರು ಸ್ಮರಿಸಿದರು. ಆರಂಭದಲ್ಲಿ 98 ಕೋಟಿ ರೂ. ಮೀಸಲಿದ್ದರೂ ಭೂಸ್ವಾಧೀನ ವಿಳಂಬದಿಂದ ಯೋಜನೆ ಕುಂಠಿತಗೊಂಡಿತ್ತು ಈಗಾಗಲೇ ಬಳ್ಳಾರಿಯಿಂದ ಪಾವಗಡದವರೆಗೆ ಟ್ರ್ಯಾಕ್ ಅಳವಡಿಕೆ ಪೂರ್ಣಗೊಂಡಿದೆ ಎಂದರು.&lt;/p&gt;&lt;p&gt;ತುಮಕೂರಿನವರೆಗೆ ಕಾಮಗಾರಿ ಬಾಕಿಯಿದೆ. ಮಧುಗಿರಿ ಮತ್ತು ಕೊರಟಗೆರೆ ಭಾಗಗಳಲ್ಲಿ ಭೂಸ್ವಾಧೀನ ಪೂರ್ಣಗೊಂಡಿದ್ದು,ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ರೈಲು ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೆಸ್ಕಾಂ ನೌಕರರು ಎಸ್ಕಾಂಗಳ ಖಾಸಗೀಕರಣ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಡಿಸಿಎಂಗೆ ಮನವಿ ಸಲ್ಲಿಸಿದರು.&lt;/p&gt;&lt;h3&gt;&lt;strong&gt;ಖಾಸಗೀಕರಣ&lt;/strong&gt;&lt;/h3&gt;&lt;p&gt;ಈ ವೇಳೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಅಧ್ಯಕ್ಷ ತಿಮ್ಮಪ್ಪ ಮಾತನಾಡಿ, &amp;nbsp;ಖಾಸಗೀಕರಣದಿಂದ ವಿದ್ಯುತ್ ದರ ಏರಿಕೆ, ಉದ್ಯೋಗ ಭದ್ರತೆ ಕುಗ್ಗುವಿಕೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೇವಾ ಗುಣಮಟ್ಟ ಕುಸಿಯುವ ಭೀತಿ ಇದೆಯಿದೆ. ವಿದ್ಯುತ್ ಕ್ಷೇತ್ರವು ಸಾರ್ವಜನಿಕ ಸೇವೆಯ ಪ್ರಮುಖ ಅಂಗವಾಗಿದ್ದು, ಲಾಭಕೇಂದ್ರಿತ ಖಾಸಗಿ ಸಂಸ್ಥೆಗಳ ಹಸ್ತಕ್ಷೇಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗಬಹುದು. ಪ್ರಕೃತಿ ವಿಕೋಪಗಳಲ್ಲಿಯೂ ನಿರಂತರ ಸೇವೆ ನೀಡುತ್ತಿರುವ ನೌಕರರ ಪಾತ್ರವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.&lt;/p&gt;&lt;p&gt;ಮಾಜಿ ಸಚಿವ ವೆಂಕಟರಮಣಪ್ಪ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ಭಾವುಕತೆಯ ಕ್ಷಣಗಳಿಗೆ ಸಾಕ್ಷಿಯಾಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಭಾಗವಹಿಸಿ ಆತ್ಮೀಯ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/when-will-the-railway-line-between-ballari-rayadurga-tumakuru-start-information-from-dcm-g-parameshwara-mrq/articleshow-s7452eq"/>
        </item>
        <item>
            <title><![CDATA[Snake Rescue: ಕೈಯಲ್ಲೇ ಹಾವು ಹಿಡಿದು ರಕ್ಷಿಸಿದ ನಟ ಜಗ್ಗೇಶ್: ನವರಸ ನಾಯಕನ ವಿಡಿಯೋ ವೈರಲ್!]]></title>
            <link>https://kannada.asianetnews.com/gallery/sandalwood/actor-jaggesh-rescues-snake-in-tumakuru-farm-viral-video-gvd-u5stguk</link>
            <guid isPermaLink="true">https://kannada.asianetnews.com/gallery/sandalwood/actor-jaggesh-rescues-snake-in-tumakuru-farm-viral-video-gvd-u5stguk</guid>
            <pubDate>Thu, 18 Jun 2026 20:38:52 +0530</pubDate>
            <description><![CDATA[&lt;p&gt;Actor Jaggesh: ತಮ್ಮ ತೋಟದಲ್ಲಿ ನೀರಿನ ತೊಟ್ಟಿಗೆ ಬಿದ್ದಿದ್ದ ಹಾವನ್ನು ನಟ ಜಗ್ಗೇಶ್ ರಕ್ಷಿಸಿದ್ದಾರೆ. ಈ ವಿಡಿಯೋವನ್ನು ಅವರು ಇನ್&zwnj;ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvdkwr1mnn3bv66e6vra16dh,imgname-k-1781794758708.png" type="image/jpeg" height="390" width="690"/>
            <content:encoded><![CDATA[&lt;p&gt;Actor Jaggesh: ತಮ್ಮ ತೋಟದಲ್ಲಿ ನೀರಿನ ತೊಟ್ಟಿಗೆ ಬಿದ್ದಿದ್ದ ಹಾವನ್ನು ನಟ ಜಗ್ಗೇಶ್ ರಕ್ಷಿಸಿದ್ದಾರೆ. ಈ ವಿಡಿಯೋವನ್ನು ಅವರು ಇನ್&zwnj;ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.&lt;/p&gt;&lt;img&gt;&lt;p&gt;&lt;strong&gt;ತುಮಕೂರು (ಜೂ.18): &lt;/strong&gt;ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿರುವ ತಮ್ಮ ತೋಟದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಹಾವೊಂದನ್ನು ನಟ ಜಗ್ಗೇಶ್ ರಕ್ಷಿಸಿರುವ ಘಟನೆ ನಡೆದಿದೆ. ಈ ಕುರಿತ ವಿಡಿಯೋವನ್ನು ಅವರು ತಮ್ಮ ಇನ್&zwnj;ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.&lt;/p&gt;&lt;img&gt;&lt;p&gt;ತೋಟದಲ್ಲಿರುವ ನೀರಿನ ತೊಟ್ಟಿಗೆ ಬಿದ್ದಿದ್ದ ಹಾವು ಹೊರಬರಲಾಗದೆ ಪರದಾಡುತ್ತಿತ್ತು. ಇದನ್ನು ಗಮನಿಸಿದ ಜಗ್ಗೇಶ್ ಸ್ವತಃ ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿ, ಬಳಿಕ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.&lt;/p&gt;&lt;img&gt;&lt;p&gt;ಘಟನೆಯ ಬಗ್ಗೆ ಪೋಸ್ಟ್ ಮಾಡಿರುವ ಜಗ್ಗೇಶ್, &quot;ಕಾಕತಾಳೀಯ ಎಂಬಂತೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬಗ್ಗೆ ಮಾತನಾಡುತ್ತ ಕುಳಿತಿದ್ದ ವೇಳೆ ಈ ಹಾವು ಕಾಣಿಸಿತು. ನಂಬಿದವರ ಬಳಿ ದೇವರ ವಾಸ ಇರುತ್ತದೆ ಎನ್ನುವ ಭಾವನೆ ಮೂಡಿತು&quot; ಎಂದು ಬರೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಹಾವನ್ನು ರಕ್ಷಿಸಿ ಜೀವ ಉಳಿಸಿದ ಜಗ್ಗೇಶ್ ಅವರ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.&lt;/p&gt;]]></content:encoded>
            <category>tumakuru</category>
            <dc:creator>Govindaraj S</dc:creator>
            <atom:link href="https://kannada.asianetnews.com/gallery/sandalwood/actor-jaggesh-rescues-snake-in-tumakuru-farm-viral-video-gvd-u5stguk"/>
        </item>
        <item>
            <title><![CDATA[Karnataka drought: ರಾಜ್ಯಕ್ಕೆ 'ಸೂಪರ್ ಎಲ್ ನಿನೋ' ಭೀತಿ! ಸಂಭವನೀಯ ಬರ ಎದುರಿಸಲು ಡಿಸಿಎಂ ಜಿ. ಪರಮೇಶ್ವರ್ ಸೂಚನೆ]]></title>
            <link>https://kannada.asianetnews.com/gallery/state/super-el-nino-effect-karnataka-probably-drought-minister-g-parameshwara-order-preparedness-vh1lyz7</link>
            <guid isPermaLink="true">https://kannada.asianetnews.com/gallery/state/super-el-nino-effect-karnataka-probably-drought-minister-g-parameshwara-order-preparedness-vh1lyz7</guid>
            <pubDate>Thu, 25 Jun 2026 17:23:18 +0530</pubDate>
            <description><![CDATA[&lt;p&gt;'ಸೂಪರ್ ಎಲ್ ನಿನೋ' ಪರಿಣಾಮದಿಂದ ರಾಜ್ಯದಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರವು ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿದೆ. ಸಚಿವ ಜಿ. ಪರಮೇಶ್ವರ್ ನೇತೃತ್ವದ ಸಭೆಯಲ್ಲಿ, ಇವುಗಳನ್ನು ನಿರ್ವಹಣೆಗೆ ಮಾಡುವುದಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvz9m5qmxfvqy19ya9gp3286,imgname-karnataka-probably-drought--1782387971828.jpg" type="image/jpeg" height="390" width="690"/>
            <content:encoded><![CDATA[&lt;p&gt;'ಸೂಪರ್ ಎಲ್ ನಿನೋ' ಪರಿಣಾಮದಿಂದ ರಾಜ್ಯದಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರವು ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿದೆ. ಸಚಿವ ಜಿ. ಪರಮೇಶ್ವರ್ ನೇತೃತ್ವದ ಸಭೆಯಲ್ಲಿ, ಇವುಗಳನ್ನು ನಿರ್ವಹಣೆಗೆ ಮಾಡುವುದಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು/ತುಮಕೂರು (ಜೂ.25): ಜಾ&lt;/strong&gt;ಗತಿಕ ಹವಾಮಾನ ಬದಲಾವಣೆ ಹಾಗೂ 'ಸೂಪರ್ ಎಲ್ ನಿನೋ' (Super El Ni&ntilde;o) ಪರಿಣಾಮದಿಂದ ರಾಜ್ಯದಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಾಮಯ್ಯ ಸರ್ಕಾರ ಈಗಿನಿಂದಲೇ ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವ ಜಿ. ಪರಮೇಶ್ವರ್ ಅವರು, ಯಾವುದೇ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಸಭೆಯ ಪ್ರಮುಖಾಂಶಗಳು:&lt;/p&gt;&lt;p&gt;ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ನಡೆದ ಈ ಸಭೆಯಲ್ಲಿ, ಮಳೆ ಕೊರತೆಯಿಂದ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಲಭ್ಯತೆ ಮತ್ತು ಕೃಷಿ ಚಟುವಟಿಕೆಗಳ ನಿರ್ವಹಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. 'ಸೂಪರ್ ಎಲ್ ನಿನೋ ಪರಿಣಾಮವಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರುವ ಸಾಧ್ಯತೆಯಿದೆ. ಇದನ್ನು ಎದುರಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ (Coordination) ಕಾರ್ಯನಿರ್ವಹಿಸಬೇಕು' ಎಂದು ಪರಮೇಶ್ವರ್ ತಿಳಿಸಿದರು.&lt;/p&gt;&lt;img&gt;&lt;p&gt;&lt;strong&gt;ಕುಡಿಯುವ ನೀರಿಗೆ ಮೊದಲ ಆದ್ಯತೆ:&lt;/strong&gt;&lt;/p&gt;&lt;p&gt;ರಾಜ್ಯದ 122 ತಾಲ್ಲೂಕುಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಪ್ರಸ್ತುತ 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು 789 ಖಾಸಗಿ ಬೋರ್&zwnj;ವೆಲ್&zwnj;ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, 669 ಹಳ್ಳಿಗಳಿಗೆ ಇವುಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿಗಾಗಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಅಧಿಕಾರಿಗಳಿಗೆ ನೀಡಿದ ಪ್ರಮುಖ ಆದೇಶಗಳು:&lt;/strong&gt;&lt;/p&gt;&lt;p&gt;&lt;strong&gt;ಜಿಲ್ಲಾವಾರು ಕಾರ್ಯಯೋಜನೆ:&lt;/strong&gt; ಕುಡಿಯುವ ನೀರು, ಮೇವು ಮತ್ತು ನೀರಿನ ಸಂರಕ್ಷಣೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳು ತಕ್ಷಣವೇ ಜಿಲ್ಲಾವಾರು ಕಾರ್ಯಯೋಜನೆ ಸಿದ್ಧಪಡಿಸಬೇಕು.&lt;/p&gt;&lt;p&gt;&lt;strong&gt;ಜಲಾಶಯಗಳ ನಿಗಾ: &lt;/strong&gt;ಜಲಾಶಯಗಳ ನೀರಿನ ಮಟ್ಟ ಮತ್ತು ಅಂತರ್ಜಲ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು.&lt;/p&gt;&lt;p&gt;&lt;strong&gt;ಅನುಮತಿ ಶೀಘ್ರ: &lt;/strong&gt;ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ತ್ವರಿತವಾಗಿ ಅನುಮತಿ ನೀಡಬೇಕು.&lt;/p&gt;&lt;p&gt;&lt;strong&gt;ಮೇವು ಬ್ಯಾಂಕ್:&lt;/strong&gt; ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್&zwnj;ಗಳ ಸ್ಥಾಪನೆ ಮತ್ತು ವಿತರಣೆಗೆ ಗಮನ ಹರಿಸಬೇಕು.&lt;/p&gt;&lt;img&gt;&lt;p&gt;ಸಭೆಯಲ್ಲಿ ಹಾಜರಿದ್ದ ಹಿರಿಯ ಅಧಿಕಾರಿಗಳು ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಮುಂಬರುವ ದಿನಗಳಲ್ಲಿ ಬಿಸಿಲಿನ ತಾಪ ಮತ್ತು ನೀರಿನ ಬೇಡಿಕೆ ಹೆಚ್ಚಾಗುವುದರಿಂದ ಆಡಳಿತ ಯಂತ್ರವು ಸದಾ ಜಾಗೃತವಾಗಿರಬೇಕು ಎಂದು ಪರಮೇಶ್ವರ್ ಅವರು ಈ ಸಂದರ್ಭದಲ್ಲಿ ತಿಳಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/super-el-nino-effect-karnataka-probably-drought-minister-g-parameshwara-order-preparedness-vh1lyz7"/>
        </item>
        <item>
            <title><![CDATA[ಪ್ರತಿದಿನ 1.20 ಲಕ್ಷ ಲೀಟರ್ ಹಾಲು ಸಂಗ್ರಹ; ತಿಂಗಳಿಗೆ 13.50 ಕೋಟಿ ರೂಪಾಯಿ ಬಟವಾಡೆ]]></title>
            <link>https://kannada.asianetnews.com/karnataka-districts/tumakuru-1-point-20-lakh-liters-of-milk-collected-daily-income-of-rs-13-crore-per-month-in-turuvekere-taluk-mrq/articleshow-ylipt32</link>
            <guid isPermaLink="true">https://kannada.asianetnews.com/karnataka-districts/tumakuru-1-point-20-lakh-liters-of-milk-collected-daily-income-of-rs-13-crore-per-month-in-turuvekere-taluk-mrq/articleshow-ylipt32</guid>
            <pubDate>Wed, 24 Jun 2026 10:36:18 +0530</pubDate>
            <description><![CDATA[&lt;p&gt;ತಾಲೂಕಿನಲ್ಲಿ ಪ್ರತಿದಿನ 1.20 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಪಟ್ಟಣದ ಸಮೀಪ ನೂತನವಾಗಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಲಾಯಿತು. ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಅವರು ಹಾಲು ಉತ್ಪಾದಕರಿಗೆ ವಿಮೆ, ಆರ್ಥಿಕ ನೆರವು ಸೇರಿದಂತೆ ಹಲವು ಸೌಲಭ್ಯಗಳನ್ನು ಘೋಷಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvvzxp8tx25tr9n5nraxaes2,imgname-turuvekere--1782277134618.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು:&lt;/strong&gt; &amp;nbsp;ತುರುವೇಕೆರೆ ತಾಲೂಕಿನಲ್ಲಿರುವ ಸುಮಾರು 130 ಹಾಲು ಉತ್ಪಾದಕರ ಸಹಕಾರ ಸಂಘದ ಮೂಲಕ ಜಿಲ್ಲಾ ಹಾಲು ಒಕ್ಕೂಟಕ್ಕೆ ಪ್ರತಿದಿನ ಸರಾಸರಿ 1.20 ಲಕ್ಷ ಲೀಟರ್ ಹಾಲು ಶೇಖರಣೆ ಮಾಡಲಾಗುತ್ತಿದೆ. ಅದರ ಮೊತ್ತ ತಿಂಗಳಿಗೆ ಸುಮಾರು 13.50 ಕೋಟಿ ಆಗಲಿದ್ದು ಅಷ್ಟೂ ಹಣವನ್ನು ಹಾಲು ಉತ್ಪಾದಕರ ಖಾತೆಗೆ ನೇರವಾಗಿ ಹಾಕಲಾಗುತ್ತಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಹೇಳಿದರು.&lt;/p&gt;&lt;p&gt;ಪಟ್ಟಣಕ್ಕೆ ಹೊಂದಿಕೊಂಡಂತಿರುವ ವಿಶ್ವನಾಥಪುರ ಮಾಳೆಯಲ್ಲಿ ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.&lt;/p&gt;&lt;h2&gt;&lt;strong&gt;ಆರ್ಥಿಕ ನೆರವು, ವಿಮೆ ಸೌಲಭ್ಯ&lt;/strong&gt;&lt;/h2&gt;&lt;p&gt;ಜಿಲ್ಲೆಯ ಹಾಲು ಒಕ್ಕೂಟಕ್ಕೆ ಹಾಲು ಸರಬರಾಜು ಮಾಡುವ ರೈತಾಪಿಗಳಿಗೆ ಉತ್ತಮ ಸೇವೆಯೂ ದೊರೆಯಲಿದೆ. ರೈತರಿಗೆ ಅಗತ್ಯವಿರುವ ಪರಿಕರಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು. ಹಾಲು ಉತ್ಪಾದಕರು ಮೃತ ಪಟ್ಟರೆ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುವುದು. ರಾಸುಗಳು ಮೃತಪಟ್ಟರೂ ಸಹ ವಿಮೆ ಸೌಲಭ್ಯ ನೀಡಲಾಗುವುದು. ಉತ್ಪಾದಕರ ಮಕ್ಕಳಿಗೆ ಹೆಚ್ಚಿನ ಶಿಕ್ಷಣಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು. ಉಚಿತ ವಸತಿ ನಿಲಯ ತೆರೆಯಲಾಗಿದೆ ಎಂದು ಸಿ.ವಿ.ಮಹಲಿಂಗಯ್ಯ ಹೇಳಿದರು.&lt;/p&gt;&lt;p&gt;ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷೆ ವಿನೋಧ ವಹಿಸಿದ್ದರು. ಸದಸ್ಯರಾದ ಹೇಮಾವತಿ, ಚಂದನ, ಭಾಗ್ಯಮ್ಮ, ಸುಮಿತ್ರಮ್ಮ, ಶೋಭಾ, ರೇಣುಕಮ್ಮ, ಶೋಭಾ ಶಿವಕುಮಾರ್, ಮಹಾಲಕ್ಷ್ಮಮ್ಮ, ವೀಣಾ, ರೇಣುಕಮ್ಮ ಮಹೇಶ್, ವಿನೋಧಾ ಮಂಜುನಾಥ್, ವಿಸ್ತರಣಾಧಿಕಾರಿ ಕಿರಣ್ ಕುಮಾರ್ , ಕಾರ್ಯದರ್ಶಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಸ್ತೀರಣಾಧಿಕಾರಿ ಕಿರಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.&lt;/p&gt;]]></content:encoded>
            <category>tumakuru</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/tumakuru-1-point-20-lakh-liters-of-milk-collected-daily-income-of-rs-13-crore-per-month-in-turuvekere-taluk-mrq/articleshow-ylipt32"/>
        </item>
        <item>
            <title><![CDATA[Karnataka Police: ಹುಳಿಯಾರು ಪಿಎಸ್‌ಐ ಸಾಗರ್ ಅಸ್ಕಿ ಸೇರಿ ಮೂವರು ಪೊಲೀಸರ ಅಮಾನತು; ಕಾರಣ ಕೇಳಿದ್ರೆ ನಗ್ತೀರಿ!]]></title>
            <link>https://kannada.asianetnews.com/karnataka-districts/tumakuru-huliyaru-three-police-officers-suspended-for-visiting-assam-without-permission/articleshow-yrieigr</link>
            <guid isPermaLink="true">https://kannada.asianetnews.com/karnataka-districts/tumakuru-huliyaru-three-police-officers-suspended-for-visiting-assam-without-permission/articleshow-yrieigr</guid>
            <pubDate>Fri, 26 Jun 2026 22:02:12 +0530</pubDate>
            <description><![CDATA[&lt;p&gt;ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸಾಗರ್ ಅಸ್ಕಿ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಸ್ಸಾಂಗೆ ತೆರಳಿ ಕಾರ್ಯಾಚರಣೆಗೆ ಹೋದವರು ಸಸ್ಪೆಂಡ್ ಆಗಿದ್ದಾರೆ. ಇದರ ಹಿಂದೆ ಒಂದು ರೋಚಕ ಕಾರಣವಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw2c1htjvv2gr9ekm7g5nh96,imgname-tumakuru-police-suspend-1782491170642.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು (ಜೂ.26): ಹು&lt;/strong&gt;ಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಹೊರ ರಾಜ್ಯಕ್ಕೆ ತೆರಳಿರುವುದು ಈ ಕಠಿಣ ಕ್ರಮಕ್ಕೆ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಅಮಾನತುಗೊಂಡವರು ಯಾರು?&lt;/strong&gt;&lt;/h2&gt;&lt;p&gt;ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ (PSI) ಸಾಗರ್ ಅಸ್ಕಿ, ಎಎಸ್ಐ (ASI) ಚಂದ್ರಶೇಖರ್, ಮತ್ತು ಪೊಲೀಸ್ ಕಾನ್ಸ್ಟೇಬಲ್ ರಂಗಧಾಮಯ್ಯ ಅವರು ಅಮಾನತುಗೊಂಡ ಅಧಿಕಾರಿಗಳು. ಕೇಂದ್ರ ವಲಯ ಐಜಿಪಿ ಗಿರೀಶ್ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h2&gt;&lt;p&gt;ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಣವನ್ನು ರಿಕವರಿ ಮಾಡುವ ಉದ್ದೇಶದಿಂದ ಎಎಸ್ಐ ಚಂದ್ರಶೇಖರ್ ಮತ್ತು ಕಾನ್ಸ್ಟೇಬಲ್ ರಂಗಧಾಮಯ್ಯ ಅವರು ಪಿಎಸ್ಐ ಸಾಗರ್ ಅಸ್ಕಿ ಅವರ ಸೂಚನೆಯಂತೆ ಅಸ್ಸಾಂಗೆ ತೆರಳಿದ್ದರು. ಅಲ್ಲಿಗೆ ಹೋಗಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು. ಆದರೆ, ಈ ಕಾರ್ಯಾಚರಣೆಯ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಎಎಸ್ಪಿ (ASP) ಅಥವಾ ಡಿವೈಎಸ್&zwnj;ಪಿ (DySP) ಅವರಿಗೆ ಯಾವುದೇ ಮುನ್ಸೂಚನೆ ಅಥವಾ ಮಾಹಿತಿ ನೀಡಿರಲಿಲ್ಲ.&lt;/p&gt;&lt;h2&gt;&lt;strong&gt;ಸಿಕ್ಕಿಬಿದ್ದಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಹುಳಿಯಾರು ಪೊಲೀಸರು ಅಸ್ಸಾಂನಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದಾಗ, ಈ ಬಗ್ಗೆ ಅಸ್ಸಾಂ ಪೊಲೀಸರು ತುಮಕೂರು ಎಸ್&zwnj;ಪಿಗೆ ಮಾಹಿತಿ ನೀಡಿದ್ದಾರೆ. ತಮ್ಮ ಇಲಾಖೆಯ ಸಿಬ್ಬಂದಿ ತಮ್ಮ ಗಮನಕ್ಕೆ ತರದೆ ಹೊರ ರಾಜ್ಯಕ್ಕೆ ತೆರಳಿರುವುದು ಎಸ್&zwnj;ಪಿ ಅವರಿಗೆ ತಿಳಿದುಬಂದಾಗ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ. ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿರುವುದು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ, ಐಜಿಪಿ ಅವರು ಈ ಮೂವರನ್ನು ಅಮಾನತುಗೊಳಿಸಿದ್ದಾರೆ.&lt;/p&gt;]]></content:encoded>
            <category>tumakuru</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/tumakuru-huliyaru-three-police-officers-suspended-for-visiting-assam-without-permission/articleshow-yrieigr"/>
        </item>
    </channel>
</rss>
