<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 16:30:47 +0530</lastBuildDate>
        <atom:link href="https://kannada.asianetnews.com/rss/udupi" rel="self" type="application/rss+xml"/>
        <item>
            <title><![CDATA[ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾಲಯ ಸಂಗೀತ-ನೃತ್ಯ ಪರೀಕ್ಷೆ, ಕರಾವಳಿಯಲ್ಲಿ ದಾಖಲೆ ಮಂದಿ ಹಾಜರ್!]]></title>
            <link>https://kannada.asianetnews.com/education/gangubai-hangal-music-university-exams-conclude-in-coastal-districts-gdp/articleshow-032zykk</link>
            <guid isPermaLink="true">https://kannada.asianetnews.com/education/gangubai-hangal-music-university-exams-conclude-in-coastal-districts-gdp/articleshow-032zykk</guid>
            <pubDate>Mon, 25 May 2026 20:11:18 +0530</pubDate>
            <description><![CDATA[ಡಾ. ಗಂಗೂಬಾಯಿ ಹಾನಗಲ್&zwnj; ವಿಶ್ವವಿದ್ಯಾಲಯವು ಕರಾವಳಿ ಜಿಲ್ಲೆಗಳಲ್ಲಿ ನಡೆಸಿದ ಸಂಗೀತ ಮತ್ತು ನೃತ್ಯ ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಒಟ್ಟು 3,398 ವಿದ್ಯಾರ್ಥಿಗಳು ಹಾಜರಾಗಿದ್ದು, ಇದು ಕಳೆದ ಬಾರಿಗಿಂತ ದ್ವಿಗುಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksfre4v1nfysjbrhphq9d49v,imgname-gangubai-hangal-music-university-exams-1779719148376.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ಮೈಸೂರಿನ ಡಾ.ಗಂಗೂಬಾಯಿ ಹಾನಗಲ್&zwnj; ವಿಶ್ವವಿದ್ಯಾಲಯ ಸಂಘಟಿಸಿದ ಸಂಗೀತ, ನೃತ್ಯ, ತಾಳವಾದ್ಯ ವಿಶೇಷ ಪರೀಕ್ಷೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಂಗಳವಾರ ಮುಕ್ತಾಯಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 3,398 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ ಬಾರಿಗಿಂತ ಎರಡುಪಟ್ಟು ಹೆಚ್ಚು ಮಂದಿ ಪರೀಕ್ಷೆಗೆ ಹಾಜರಾಗಿದ್ದರು.&lt;/p&gt;&lt;h2&gt;18,400 ಮಂದಿ ಪರೀಕ್ಷೆಗೆ ನೋಂದಾಣಿ&lt;/h2&gt;&lt;p&gt;ಈ ಬಾರಿ ರಾಜ್ಯದಲ್ಲಿ 32 ಕೇಂದ್ರಗಳಲ್ಲಿ ಒಟ್ಟು 18,400 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಮೊದಲ ಹಂತದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮೇ 10 ರಿಂದ 19ರ ವರೆಗೆ ಸಂಗೀತ, ಭರತನಾಟ್ಯ, ಕಥಕ್&zwnj; ಹಾಗೂ ಕೂಚುಪುಡಿ ನೃತ್ಯಗಳ ಜೂನಿಯರ್&zwnj;, ಸೀನಿಯರ್&zwnj;, ವಿದ್ವತ್ ಪೂರ್ವ ಹಾಗೂ ವಿದ್ವತ್&zwnj; ಅಂತಿಮ ಪರೀಕ್ಷೆಗಳು ನಡೆದಿತ್ತು. ದ.ಕ. ಜಿಲ್ಲೆಯ ಪುತ್ತೂರಲ್ಲಿ 933, ಮಂಗಳೂರಲ್ಲಿ 1,318, ಉಡುಪಿಯಲ್ಲಿ 939 ಹಾಗೂ ಉತ್ತರ ಕನ್ನಡದ ಹೊನ್ನಾವರದಲ್ಲಿ 208 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಉತ್ತರ ಕರ್ನಾಟಕದಲ್ಲಿ ಹುಬ್ಬ&zwj;ಳ್ಳಿ ಹೊರತುಪಡಿಸಿ ಬೇರೆ ಕಡೆಗಳಲ್ಲಿ ಈ ಪರೀಕ್ಷೆ ಮುಕ್ತಾಯಗೊಂಡಿದೆ. ಮೇ 22 ರಿಂದ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜೂ.2ರಂದು ಪರೀಕ್ಷೆಗಳು ಕೊನೆಗೊಳ್ಳಲಿವೆ.&lt;/p&gt;&lt;h2&gt;ತ್ವರಿತ ಫಲಿತಾಂಶಕ್ಕೆ ಕ್ರಮ&lt;/h2&gt;&lt;p&gt;ಪರೀಕ್ಷೆಗಳು ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಜೂ.30ರಂದು ಕೊನೆ ಪರೀಕ್ಷೆಗಳು ಮುಕ್ತಾಯಗೊಂಡ ಬಳಿಕ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳಿಗೆ ಹಿಂದಿನಂತೆಯೇ ವಿಶ್ವವಿದ್ಯಾಲಯದ ಅಂಕಪಟ್ಟಿ ಲಭ್ಯವಾಗಲಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಜಿ.ಮಂಜುನಾಥ್&zwnj; ತಿಳಿಸಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/education/gangubai-hangal-music-university-exams-conclude-in-coastal-districts-gdp/articleshow-032zykk"/>
        </item>
        <item>
            <title><![CDATA[ಉಡುಪಿ: ಕಣ್ಣೀರಲ್ಲಿ ಅರಳಿದ ಮಾನವೀಯತೆ!  ಹೃದಯಸ್ಪರ್ಶಿ ಘಟನೆ ಹಂಚಿಕೊಂಡ ಸಚಿವೆ ಹೆಬ್ಬಾಳ್ಕರ್]]></title>
            <link>https://kannada.asianetnews.com/karnataka-districts/communal-harmony-is-the-essence-of-our-india-minister-laxmi-hebbalkar-shares-a-heart-warming-incident-in-udupi-mrq/articleshow-2pyroib</link>
            <guid isPermaLink="true">https://kannada.asianetnews.com/karnataka-districts/communal-harmony-is-the-essence-of-our-india-minister-laxmi-hebbalkar-shares-a-heart-warming-incident-in-udupi-mrq/articleshow-2pyroib</guid>
            <pubDate>Sun, 17 May 2026 07:36:53 +0530</pubDate>
            <description><![CDATA[&lt;p&gt;ಉಡುಪಿ ಪ್ರವಾಸದಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ಅಪರೂಪದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಈ ಮಾನವೀಯ ಕಾರ್ಯವನ್ನು ಸಚಿವರು ಶ್ಲಾಘಿಸಿ, ತಕ್ಷಣವೇ ಆ ತಾಯಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krstr5gfy1e6gdbp4hgb0ern,imgname-laxmi-hebbalkar-1778983376399.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ:&lt;/strong&gt; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಘಟನೆಯ ಬಗ್ಗೆ ಬರೆದುಕೊಂಡಿದ್ದಾರೆ. ಕೋಮು ಸೌಹಾರ್ದತೆಯೇ ನಮ್ಮ ಭಾರತದ ಅಸ್ತಿತ್ವ ಎಂಬ ಶೀರ್ಷಿಕೆ ಜೊತೆ ಉಡುಪಿಯಲ್ಲಿ ತಮ್ಮನ್ನು ಸಂಪರ್ಕಿಸಿದ ಮೂವರು ಮಹಿಳೆಯರ ಬಗ್ಗೆ ಸಚಿವರು ಬರೆದುಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಅತ್ಯಂತ ಅಪರೂಪದ ಘಟನೆ: ಲಕ್ಷ್ಮೀ ಹೆಬ್ಬಾಳ್ಕರ್&lt;/strong&gt;&lt;/h2&gt;&lt;p&gt;​ಉಡುಪಿಯ ಪ್ರವಾಸದಲ್ಲಿದ್ದಾಗ ಭಾರತದ ನೈಜ ಸಾಮರಸ್ಯ ಮತ್ತು ಮಾನವೀಯತೆಗೆ ಸಾಕ್ಷಿಯಾಗುವಂತಹ ಒಂದು ಅತ್ಯಂತ ಅಪರೂಪದ ಘಟನೆ ಜರುಗಿತು. ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿಯಾದ ಗಿರಿಜಾ ಶೆಟ್ಟಿಗಾರ್ ಎಂಬ ಬಡ ವಿಧವೆ ಮಹಿಳೆಗೆ 1989 ರಲ್ಲೇ ನಿವೇಶನ ಮಂಜೂರಾಗಿದ್ದರೂ, ತಾಂತ್ರಿಕ ಅಡಚಣೆಗಳಿಂದಾಗಿ ಇಂದಿಗೂ ಮನೆ ಕಟ್ಟಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅತ್ಯಂತ ಭಾವುಕ ಸಂಗತಿಯೆಂದರೆ, ಈ ಹಿಂದು ತಾಯಿಯ ಪರವಾಗಿ ಧ್ವನಿಯೆತ್ತಿ, ಅವರಿಗೆ ನ್ಯಾಯ ಕೊಡಿಸಬೇಕೆಂದು ಕಣ್ಣೀರು ಹಾಕುತ್ತಾ ನನ್ನ ಬಳಿ ನೆರವು ಕೇಳಿಕೊಂಡು ಬಂದಿದ್ದು ನೆರೆಮನೆಯ ಮುಸ್ಲಿಂ ಮಹಿಳೆಯರು!&lt;/p&gt;&lt;p&gt;ಧರ್ಮಗಳ ಹೆಸರಿನಲ್ಲಿ ರಾಜಕೀಯ ಮಾಡುವವರು ಸಮಾಜದಲ್ಲಿ ಗೋಡೆಗಳನ್ನು ಕಟ್ಟುತ್ತಿದ್ದರೆ, ಇಂತಹ ಸಾಮಾನ್ಯ ಜನರೇ ನಮ್ಮ ದೇಶದ ನಿಜವಾದ ಸೌಹಾರ್ದತೆಯ ರಾಯಭಾರಿಗಳು. ಈ ಮುಸ್ಲಿಂ ಸಹೋದರಿಯರ ಕಾಳಜಿಯನ್ನು ಕಂಡು &ldquo;ಇದು ನೋಡಿ ನಮ್ಮ ಹೆಮ್ಮೆಯ ಭಾರತ&rdquo; ಎಂದು ನನಗೆ ಹೆಮ್ಮೆ ಎನಿಸಿತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Bengaluru: ಮನೆಯಲ್ಲಿರುವ ಹಳೆ ಬಟ್ಟೆ, ಹಾಸಿಗೆ,ಸೋಫಾ, ಚಪ್ಪಲಿ ಸಂಗ್ರಹಕ್ಕೆ ಆ್ಯಪ್&zwnj;&lt;/strong&gt;&lt;/p&gt;&lt;h3&gt;&lt;strong&gt;ಮಾನವೀಯತೆಯೊಂದೇ ಪರಮ ಧರ್ಮ&lt;/strong&gt;&lt;/h3&gt;&lt;p&gt;​ಬಡತನ ಮತ್ತು ಕಷ್ಟಗಳಿಗೆ ಯಾವುದೇ ಧರ್ಮವಿರುವುದಿಲ್ಲ, ಮಾನವೀಯತೆಯೊಂದೇ ಪರಮ ಧರ್ಮ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಷ್ಟದಲ್ಲಿರುವ ಆ ತಾಯಿಗೆ ಕಾನೂನುಬದ್ಧವಾಗಿ ಭೂಮಿಯ ವಾಸ್ತವ್ಯ ದೊರಕಿಸಿಕೊಟ್ಟು, ಮನೆ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ತಕ್ಷಣವೇ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಸಮಾಜದಲ್ಲಿ ದ್ವೇಷ ಬಿತ್ತುವವರು ಸಾಮಾನ್ಯ ಜನರ ಈ ಪ್ರೀತಿ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ನೋಡಿ ಕಲಿಯಬೇಕಿದೆ. ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವುದು ಮತ್ತು ಇಂತಹ ಸೌಹಾರ್ದತೆಯನ್ನು ಎತ್ತಿಹಿಡಿಯುವುದೇ ನಮ್ಮ ಸರ್ಕಾರದ ಮುಖ್ಯ ಆಶಯವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ಆರಂಭಿಸಿ ಸ್ವಾವಲಂಬಿ ಬದುಕಿನತ್ತ ಕುಷ್ಟಗಿಯ ಮಹಿಳೆಯರು&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಕೋಮು ಸೌಹಾರ್ದತೆಯೇ ನಮ್ಮ ಭಾರತದ ಅಸ್ತಿತ್ವ, ಉಡುಪಿಯಲ್ಲೊಂದು ಹೃದಯಸ್ಪರ್ಶಿ ಘಟನೆ!​ಉಡುಪಿಯ ಪ್ರವಾಸದಲ್ಲಿದ್ದಾಗ ಭಾರತದ ನೈಜ ಸಾಮರಸ್ಯ ಮತ್ತು ಮಾನವೀಯತೆಗೆ ಸಾಕ್ಷಿಯಾಗುವಂತಹ ಒಂದು ಅತ್ಯಂತ ಅಪರೂಪದ ಘಟನೆ ಜರುಗಿತು. ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿಯಾದ ಗಿರಿಜಾ ಶೆಟ್ಟಿಗಾರ್ ಎಂಬ ಬಡ ವಿಧವೆ ಮಹಿಳೆಗೆ 1989 ರಲ್ಲೇ ನಿವೇಶನ&hellip; pic.twitter.com/6d9lrsyouY&lt;/p&gt;&lt;p&gt;&mdash; Laxmi Hebbalkar (@laxmi_hebbalkar) May 16, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>udupi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/communal-harmony-is-the-essence-of-our-india-minister-laxmi-hebbalkar-shares-a-heart-warming-incident-in-udupi-mrq/articleshow-2pyroib"/>
        </item>
        <item>
            <title><![CDATA[ಭಾರತದಲ್ಲಿ ಆಭರಣ ರಫ್ತಿಗೆ ವಿಫುಲ ಅವಕಾಶ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್]]></title>
            <link>https://kannada.asianetnews.com/karnataka-districts/udupi-iigj-jewellery-training-export-demand-nirmala-sitharaman-gvd/articleshow-5cu3tdb</link>
            <guid isPermaLink="true">https://kannada.asianetnews.com/karnataka-districts/udupi-iigj-jewellery-training-export-demand-nirmala-sitharaman-gvd/articleshow-5cu3tdb</guid>
            <pubDate>Wed, 29 Apr 2026 22:25:30 +0530</pubDate>
            <description><![CDATA[&lt;p&gt;ಭಾರತದಲ್ಲಿ ತಯಾರಾದ ಪಾರಂಪರಿಕ ಶೈಲಿಯ ರತ್ನಾಭರಣಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ಭಾರತದಿಂದ ರತ್ನಾಭರಣ ರಪ್ತಿಗೂ ವಿಫುಲ ಅವಕಾಶಗಳಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kg7019j9erdad87vqqmr8b9m,imgname-budget-2026-longest-shortest-budget-speech-nirmala-sitharaman-manmohan-02-1769761449545.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಏ.29):&lt;/strong&gt; ಭಾರತದಲ್ಲಿ ತಯಾರಾದ ಪಾರಂಪರಿಕ ಶೈಲಿಯ ರತ್ನಾಭರಣಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ಭಾರತದಿಂದ ರತ್ನಾಭರಣ ರಪ್ತಿಗೂ ವಿಫುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಯುವಜನತೆಗೆ ಆಭರಣ ತಯಾರಿಕೆಗೆ ತರಬೇತಿ ನೀಡುವುದಕ್ಕಾಗಿ ಉಡುಪಿಯೂ ಸೇರಿದಂತೆ ದೇಶದ 5 ಕಡೆಗಳಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ (ಐಐಜಿಜೆ)ಗಳನ್ನು ತೆರೆಯಲಾಗಿದೆ ಎಂದು ಕೇಂದ್ರ ಸರ್ಕಾರದ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.&lt;/p&gt;&lt;p&gt;ಭಾರತದಲ್ಲಿರುವ 5 ಐಐಜಿಜೆಗಳಲ್ಲಿ ಉಡುಪಿಯ ಕೇಂದ್ರವು 4ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಉದ್ಯಮಾಧಾರಿತ ಕೌಶಲ್ಯ ತರಬೇತಿ ಯೋಜನೆಯು ದಕ್ಷಿಣ ಭಾರತದಾದ್ಯಂತ ಯುವಕರಿಗೆ ಜೀವನವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದಕ್ಕೆ ಉಡುಪಿ ಐಐಜಿಜೆ ಅತ್ಯಂತ ಪ್ರಶಸ್ತ ಉದಾಹರಣೆಯಾಗಿದೆ. ಉಡುಪಿಯಂತಹ ಚಿಕ್ಕ ಪಟ್ಟಣದಲ್ಲಿರುವ ಈ ಸಂಸ್ಥೆಯು ಕರ್ನಾಟಕ, ಕೇರಳ, ತಮಿಳುನಾಡಿನ ವಿದ್ಯಾರ್ಥಿಗಳನ್ನು ಇಲ್ಲಿಗೆ ಆಕರ್ಷಿಸುತ್ತಿದೆ. ಕಳೆದೊಂದು ವರ್ಷದಲ್ಲಿ ಈ ಕೇಂದ್ರವು 600ಕ್ಕೂ ಹೆಚ್ಚು ಯುವಕರಿಗೆ ಚಿನ್ನಾಭರಣ ತಯಾರಿಕೆಯ ತರಬೇತಿ ನೀಡಿದೆ.&lt;/p&gt;&lt;p&gt;ಅವರಲ್ಲಿ ಅನೇಕ ಮಂದಿ ಬೇರೆ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿದ್ದರೆ, ಸಾಕಷ್ಟು ಮಂದಿ ಸ್ವಂತ ವ್ಯವಹಾರವನ್ನೂ ಆರಂಭಿಸಿದ್ದಾರೆ ಎಂಬುದೇ ಈ ಕೇಂದ್ರದ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ಅವರು ಶ್ಲಾಘಿಸಿದರು. ರತ್ನಗಿರಿಯಿಂದ ತಿರುವಂತನಪುರದವರೆಗಿನ ಪಶ್ಚಿಮ ಕರಾವಳಿಯಲ್ಲಿ ಆಭರಣ ತಯಾರಿ ಒಂದು ಕಲೆಯಾಗಿ ಗುರುತಿಸಲ್ಪಡುತ್ತದೆ. ಇಲ್ಲಿನ ಆಭರಣಗಳಿಗೆ ಅಮೆರಿಕದಂತಹ ದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಆದ್ದರಿಂದಲೇ ಉಡುಪಿಯ ಐಐಜಿಜೆ ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಕೇಂದ್ರವಾಗಿ ರೂಪುಗೊಳ್ಳುತ್ತದೆ ಎಂದು ಅವರು ಹೇಳಿದರು.&lt;/p&gt;&lt;p&gt;ರತ್ನ ಮತ್ತು ಆಭರಣ ರಫ್ತು ಉತ್ತೇಜನಾ ಮಂಡಳಿ (ಜಿಜೆಇಪಿಸಿ) ಅಧ್ಯಕ್ಷ ಕಿರಿಟ್ ಬನ್ಸಾಲಿ, ದೇಶದಲ್ಲಿ ನಾಲ್ಕು ವರ್ಷಗಳ ಹಿಂದೆ ಆರಂಭವಾದ ಐಐಜಿಜೆ ಕೇಂದ್ರಗಳು ಇದುವರೆಗೆ 7,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿವೆ ಮತ್ತು ಭಾರತೀಯ ಆಭರಣ ಉದ್ಯಮಕ್ಕೆ ಅತ್ಯಂತ ಪ್ರತಿಭಾನ್ವಿತ ಕುಶಲಕರ್ಮಿಗಳನ್ನು ನೀಡಿದೆ. ಇಂದು ಭಾರತೀಯ ರತ್ನ ಮತ್ತು ಆಭರಣ ರಪ್ಥು ಉದ್ಯಮವು 28 ಶತಕೋಟಿ ಡಾಲರ್ ವ್ಯವಹಾರ ನಡೆಸುತ್ತಿದೆ ಮತ್ತು 5 ಕೋಟಿಗಿಂತಲೂ ಹೆಚ್ಚು ಜನರ ಜೀವನೋಪಾಯಕ್ಕೆ ಸಹಕಾರಿಯಾಗಿದೆ ಎಂದರು.&lt;/p&gt;&lt;p&gt;ಕೇಂದ್ರ ಸರ್ಕಾರದ ವಿಕಸಿತ್ ಭಾರತ್ 2047ರ ದೃಷ್ಟಿಕೋನವನ್ನು ಹೊಂದಿರುವ ಭಾರತೀಯ ರತ್ನ ಮತ್ತು ಆಭರಣ ರಫ್ತನ್ನು 100 ಶತಕೋಟಿ ಡಾಲರ್ ಗೆ ಮುಟ್ಟಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದೇ ಸಂದರ್ಭ ಉಡುಪಿಯ ಐಐಜಿಜೆಯ 5 ಮಂದಿ ಅತ್ಯುತ್ತಮ ನಿರ್ಗಮನ ವಿದ್ಯಾರ್ಥಿಗಳನ್ನು ಮತ್ತು 3 ಮಂದಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅತ್ಯುತ್ತಮ ಫಲಾನುಭವಿಗಳನ್ನು ಅಭಿನಂದಿಸಲಾಯಿತು.&lt;/p&gt;&lt;h2&gt;&lt;strong&gt;ಐಐಜಿಜೆ- ಐಐಟಿ-ಎಂ ನಡುವೆ ಒಪ್ಪಂದ&lt;/strong&gt;&lt;/h2&gt;&lt;p&gt;ಈ ಕಾರ್&zwj;ಯಕ್ರಮದಲ್ಲಿ ಭಾರತೀಯ ರತ್ನಗಳು ಮತ್ತು ಆಭರಣ ಸಂಸ್ಥೆ (ಐಐಜಿಜೆ) ಮತ್ತು ಐಐಟಿ ಮದ್ರಾಸ್ (ಐಐಟಿ-ಎಂ) ನಡುವೆ ಒಪ್ಪಂದವೊಂದಕ್ಕೆ ಸಹಿ ಹಾಕಲಾಯಿತು. ಇದು ಪ್ರಯೋಗಾಲಯದಲ್ಲಿ ವಜ್ರಗಳನ್ನು ಸೃಷ್ಟಿಸುವ ತಂತ್ರಜ್ಞಾನ ಮತ್ತು ಪ್ರಮಾಣೀಕರಣ ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಮೇಕ್ ಇನ್ ಇಂಡಿಯಾ ಮತ್ತು ಸ್ಕಿಲ್ ಇಂಡಿಯಾದ ದೃಷ್ಟಿಕೋನಕ್ಕೆ ಅನುಗುಣವಾಗಿ ಪ್ರಯೋಗಾಲಯದಲ್ಲಿ ವಜ್ರ ಬೆಳೆಸುವ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಕಟಿಸಲಾಗಿದೆ.&lt;/p&gt;]]></content:encoded>
            <category>udupi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/udupi-iigj-jewellery-training-export-demand-nirmala-sitharaman-gvd/articleshow-5cu3tdb"/>
        </item>
        <item>
            <title><![CDATA[ಇಂಗ್ಲೆಂಡ್‌ ಫ್ಲೀಟ್ ನಗರಸಭೆ ಚುನಾವಣೆ: ಅನಿವಾಸಿ ಕನ್ನಡಿಗ ಕುಮಾರ್ ಕುಂಟಿಕಾನಮಠ ಹ್ಯಾಟ್ರಿಕ್ ಜಯ]]></title>
            <link>https://kannada.asianetnews.com/state/nri-kannadiga-kumar-kuntikanamata-wins-consecutive-election-in-england-fleet-town-council-gdp/articleshow-5rat1cw</link>
            <guid isPermaLink="true">https://kannada.asianetnews.com/state/nri-kannadiga-kumar-kuntikanamata-wins-consecutive-election-in-england-fleet-town-council-gdp/articleshow-5rat1cw</guid>
            <pubDate>Tue, 12 May 2026 21:31:49 +0530</pubDate>
            <description><![CDATA[ಇಂಗ್ಲೆಂಡ್&zwnj;ನ ಫ್ಲೀಟ್ ನಗರಸಭೆ ಚುನಾವಣೆಯಲ್ಲಿ ಅನಿವಾಸಿ ಕನ್ನಡಿಗ ಕುಮಾರ್ ಕುಂಟಿಕಾನಮಠ ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದಾರೆ. ಮೂಲತಃ ಕಾಸರಗೋಡಿನವರಾದ ಅವರು, ಫಾರ್ಮಾ ಸಂಶೋಧನೆ, ಭಾರತ-ಯುಕೆ ವಾಣಿಜ್ಯ ಸಂಬಂಧ ಹಾಗೂ ಕನ್ನಡ ಸಂಸ್ಕೃತಿ ಪ್ರಸಾರದಲ್ಲಿಯೂ ಸಕ್ರಿಯರಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kreehzn3yvmvkrt9aqgd2eg0,imgname-nri-kannadiga-kumar-kuntikanamata-1778601492131.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಂಗಳೂರು: ಇಂಗ್ಲೆಂಡ್&zwnj;ನ ಹ್ಯಾಂಪ್&zwnj;ಶೈರ್ ಕೌಂಟಿಯ ಫ್ಲೀಟ್ ನಗರಸಭೆ ಚುನಾವಣೆಯಲ್ಲಿ ಅನಿವಾಸಿ ಕನ್ನಡಿಗ ಕುಮಾರ್ ಕುಂಟಿಕಾನಮಠ ಸತತ ಮೂರನೇ ಬಾರಿ ಭರ್ಜರಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಅವರು ಸ್ಥಳೀಯ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಬಲಿಷ್ಠ ಸ್ಥಾನ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.&lt;/p&gt;&lt;h2&gt;ಸಂಶೋಧನಾ ಕ್ಷೇತ್ರದಲ್ಲಿ ಅಪಾರ ಅನುಭವ&lt;/h2&gt;&lt;p&gt;ಅವರು ಜಾಗತಿಕ ಫಾರ್ಮಾಸ್ಯೂಟಿಕಲ್ ಮತ್ತು ಕ್ಲಿನಿಕಲ್ ಸಂಶೋಧನಾ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಯುನೈಟೆಡ್ ಕಿಂಗ್&zwnj;ಡಮ್, ಭಾರತ, ಮಧ್ಯಪ್ರಾಚ್ಯ ಮತ್ತು ಅಮೆರಿಕಾದಲ್ಲಿ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಬ್ರಿಟನ್&zwnj;ನ ರಾಷ್ಟ್ರೀಯ ಆರೋಗ್ಯ ಸೇವೆಯಲ್ಲಿಯೂ ಕಾರ್ಯನಿರ್ವಹಿಸಿದ್ದಾರೆ. 2001ರಲ್ಲೇ ಯೋಗ ಮತ್ತು ಆಯುರ್ವೇದ ಕುರಿತ ಕ್ಲಿನಿಕಲ್ ಸಂಶೋಧನೆ ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅಡಕೆಯ ಕ್ಯಾನ್ಸರ್ ಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಮಹತ್ವದ ಅಧ್ಯಯನಗಳನ್ನು ಕೈಗೊಂಡಿದ್ದಾರೆ.&lt;/p&gt;&lt;p&gt;ಬ್ರಿಟಿಷ್ ಸಂಸತ್ತಿನಲ್ಲಿ ಭಾರತ-ಯುಕೆ ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕುಮಾರ್ ಅವರು ಸಕ್ರಿಯ ಪಾತ್ರವಹಿಸಿದ್ದಾರೆ. ಸೌತ್&zwnj;ಹಾಲ್&zwnj;ನ ಮಾಜಿ ಸಂಸದ ವೀರೇಂದ್ರ ಶರ್ಮಾ ಸೇರಿದಂತೆ ಗಣ್ಯರೊಂದಿಗೆ &lsquo;ಬ್ರಿಟಿಷ್ ಸೌತ್ ಇಂಡಿಯಾ ಕೌನ್ಸಿಲ್ ಆಫ್ ಕಾಮರ್ಸ್&rsquo; ಸಂಸ್ಥೆಯನ್ನು ಸ್ಥಾಪಿಸಿದ್ದು, ಸಂಸತ್ತಿನ ಆವರಣದಲ್ಲಿ ಆಯೋಜಿಸಿದ ಉದ್ಯಮ ಸಭೆಗಳಲ್ಲಿ ಮಾಜಿ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ನಾಯಕರು ಮತ್ತು ಜಾಗತಿಕ ಹೂಡಿಕೆದಾರರು ಭಾಗವಹಿಸಿದ್ದಾರೆ.&lt;/p&gt;&lt;h2&gt;ಕಾಸರಗೋಡಿನ ಕುಂಟಿಕಾನಮಠದವರು&lt;/h2&gt;&lt;p&gt;ಮೂಲತಃ ಕಾಸರಗೋಡಿನ ಕುಂಟಿಕಾನಮಠದ ಕುಮಾರ್ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಮೈಸೂರಿನ ಜೆ.ಎಸ್.ಎಸ್ ಫಾರ್ಮಸಿ ಕಾಲೇಜಿನಲ್ಲಿ ಬಿ.ಫಾರ್ಮಾ ಪದವಿ ಪಡೆದು, ನಂತರ ಲಂಡನ್&zwnj;ನಲ್ಲಿ ಎಂ.ಬಿ.ಎ ಪೂರ್ಣಗೊಳಿಸಿದ್ದಾರೆ. ಯುಕೆಯ ಅರಸ್ ಮಾರ್ಕೆಟಿಂಗ್ ಲಿಮಿಟೆಡ್ ಹಾಗೂ ಅಮೆರಿಕದ ಅರಸ್ ಮಾರ್ಕೆಟಿಂಗ್ ಎಲ್&zwnj;ಎಲ್&zwnj;ಸಿ&rsquo; ಸಂಸ್ಥೆಗಳ ನಿರ್ದೇಶಕರಾಗಿದ್ದು, &lsquo;Ondudo&rsquo; ಎಂಬ ಎಡ್-ಟೆಕ್ ವೇದಿಕೆಯ ಹಾಗೂ ಸೌತ್&zwnj;ಹಾಲ್&zwnj;ನ ಮಾಜಿ ಸಂಸದ ವೀರೇಂದ್ರ ಶರ್ಮಾ ಸೇರಿದಂತೆ ಗಣ್ಯರೊಂದಿಗೆ &lsquo;ಬ್ರಿಟಿಷ್ ಸೌತ್ ಇಂಡಿಯಾ ಕೌನ್ಸಿಲ್ ಆಫ್ ಕಾಮರ್ಸ್&rsquo; ಸಂಸ್ಥೆಯನ್ನು ಸ್ಥಾಪಿಸಿದ್ದಾರೆ.&lt;/p&gt;&lt;p&gt;ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ಸಕ್ರಿಯರಾಗಿದ್ದಾರೆ. ವಿದ್ವಾನ್ ಕುಂಟಿಕಾನಮಠ ಬಾಲಕೃಷ್ಣ ಭಟ್ ಅವರ ಪುತ್ರರಾಗಿರುವ ಅವರು, 500 ವರ್ಷಗಳ ಇತಿಹಾಸವಿರುವ ಕುಂಟಿಕಾನಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಆರಾಧನೆ, ಜೀರ್ಣೋದ್ಧಾರ, ಆಡಳಿತದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಆರ್ಯಭಟ ಸಾಂಸ್ಕೃತಿಕ ಪ್ರಶಸ್ತಿ ಹಾಗೂ ಮಂತ್ರಾಲಯ ಪರಿಮಳ ಪ್ರಶಸ್ತಿ ದೊರೆತಿವೆ. ಜೊತೆಗೆ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು, ಯೂರೋಪಿನಾದ್ಯಂತ ಕನ್ನಡ ಸಂಸ್ಕೃತಿಯನ್ನು ಹರಡುತ್ತಿದ್ದಾರೆ.&lt;/p&gt;&lt;p&gt;ಫಾರ್ಮಾ ಉದ್ಯಮ, ವ್ಯವಸ್ಥಾಪನಾ ಶಾಸ್ತ್ರ ಮತ್ತು ಭೌಗೋಳಿಕ ರಾಜಕೀಯ ವಿಷಯಗಳ ಕುರಿತು &lsquo;ಕನ್ನಡಪ್ರಭ&rsquo; ಪತ್ರಿಕೆಯಲ್ಲಿ 70ಕ್ಕೂ ಹೆಚ್ಚು ಲೇಖನಗಳನ್ನು ಬರೆದು ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಫಾರ್ಮಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ವಿಶ್ವ ಫಾರ್ಮಾಸಿಸ್ಟ್ ದಿನದಂದು ಮೈಸೂರಿನ ಜೆ.ಎಸ್.ಎಸ್ ಫಾರ್ಮಸಿ ಕಾಲೇಜಿನಲ್ಲಿ ಇಂಡಿಯನ್ ಫಾರ್ಮಾಸ್ಯೂಟಿಕಲ್ ಅಸೋಸಿಯೇಷನ್ ವತಿಯಿಂದ ಕುಮಾರ್ ಕುಂಟಿಕಾನಮಠ ಅವರನ್ನು ಗೌರವಿಸಲಾಗಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/state/nri-kannadiga-kumar-kuntikanamata-wins-consecutive-election-in-england-fleet-town-council-gdp/articleshow-5rat1cw"/>
        </item>
        <item>
            <title><![CDATA[ಉಡುಪಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೌಹಾರ್ದತೆ ಪಾಠಕ್ಕೆ ಮುಜುಗರ ತಂದ ಮುಸ್ಲಿಂ ಮಹಿಳೆಯ ಅಸಲಿಯತ್ತು ಬಯಲು!]]></title>
            <link>https://kannada.asianetnews.com/karnataka-districts/udupi-controversy-bjp-hits-back-at-minister-lakshmi-hebbalkar-over-misleading-harmony-narrative-gdp/articleshow-7rmslx7</link>
            <guid isPermaLink="true">https://kannada.asianetnews.com/karnataka-districts/udupi-controversy-bjp-hits-back-at-minister-lakshmi-hebbalkar-over-misleading-harmony-narrative-gdp/articleshow-7rmslx7</guid>
            <pubDate>Mon, 18 May 2026 19:31:55 +0530</pubDate>
            <description><![CDATA[ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘಿಸಿದ ಹಿಂದೂ-ಮುಸ್ಲಿಂ ಸೌಹಾರ್ದತೆಯ ಘಟನೆಯೊಂದು ಹೊಸ ತಿರುವು ಪಡೆದಿದೆ. ವೃದ್ಧೆಗೆ ಸಹಾಯ ಮಾಡಿದ ಮುಸ್ಲಿಂ ಮಹಿಳೆ ನೆರೆಮನೆಯವರಲ್ಲ, ಬದಲಿಗೆ ಆಕೆಯ ಮತಾಂತರಗೊಂಡ ಸ್ವಂತ ಮಗಳು ಎಂಬ ಸತ್ಯ ಬಹಿರಂಗವಾಗಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krxp4jfh2m20bwmpxcfnrd66,imgname-lakshmi-hebbalkar--1--1779112757745.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ: &lt;/strong&gt;ಜಿಲ್ಲೆಯಲ್ಲೊಂದು ಘಟನೆ ಮೊದಲು ಧಾರ್ಮಿಕ ಸೌಹಾರ್ದತೆಯ ಉದಾಹರಣೆಯಾಗಿ ಬಿಂಬಿತವಾಗಿದ್ದರೂ, ಇದೀಗ ಅದೇ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಭೇಟಿ ವೇಳೆ ನಡೆದ ಘಟನೆಯಲ್ಲಿ, ಅಸಹಾಯಕ ಹಿಂದೂ ವೃದ್ಧ ಮಹಿಳೆಯನ್ನು ಇಬ್ಬರು ಮುಸ್ಲಿಂ ಮಹಿಳೆಯರು ಕರೆದುಕೊಂಡು ಬಂದು ನೆರವು ಕೇಳಿದ್ದ ದೃಶ್ಯವು ಬಹಳ ಗಮನ ಸೆಳೆದಿತ್ತು. ಈ ಘಟನೆ ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿ ಎಂಬಂತೆ ವ್ಯಾಪಕವಾಗಿ ಚರ್ಚೆಯಾಗಿತ್ತು. ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಇದು ಸೌಹಾರ್ದತೆಗೆ ಉದಾಹರಣೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಘಟನೆಯ ಅಸಲಿಯತ್ತು ಈಗ ಬಿಜೆಪಿಯ ಕೋಪಕ್ಕೆ ಕಾರಣವಾಗಿದೆ.&lt;/p&gt;&lt;h2&gt;ಸೌಹಾರ್ದತೆಯ ಉದಾಹರಣೆಯಾಗಿ ಬಿಂಬಿತವಾದ ಘಟನೆ&lt;/h2&gt;&lt;p&gt;ಶನಿವಾರ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ, ವಾಕರ್ ಹಿಡಿದುಕೊಂಡು ಬಂದ ವೃದ್ಧ ಮಹಿಳೆ ತನ್ನ ಸಂಕಷ್ಟವನ್ನು ಸಚಿವರ ಮುಂದೆ ವಿವರಿಸಿದರು. ಐದು ಸೆಂಟ್ಸ್ ಜಮೀನಿನ ದಾಖಲೆ ಸಮಸ್ಯೆಯಿಂದ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಳುತ್ತಾ ಮನವಿ ಮಾಡಿದರು. ಅವರನ್ನು ಕರೆದುಕೊಂಡು &amp;nbsp;ಬಂದಿದ್ದು ಮುಸ್ಲಿಂ ಮಹಿಳೆಯರು, &ldquo;ಈ ಅಜ್ಜಿಗೆ ಯಾರೂ ದಿಕ್ಕಿಲ್ಲ. ನಾವು ನೆರೆಮನೆಯವರು. ಆಕೆಗೆ ಊಟ ಕೊಡುತ್ತೇವೆ. ಹಲವೆಡೆ ಸಹಾಯ ಕೇಳಿದ್ದರೂ ಪ್ರಯೋಜನವಾಗಿಲ್ಲ. ಬೆಳಿಗ್ಗೆಯೇ ಕರೆದುಕೊಂಡು ಬಂದು ಇಲ್ಲಿ ಕಾಯುತ್ತಿದ್ದೇವೆ,&rdquo; ಎಂದು ಹೇಳಿ ಕಣ್ಣೀರು ಹಾಕಿದರು.&lt;/p&gt;&lt;p&gt;ಈ ದೃಶ್ಯದಿಂದ ಸ್ಪಂದಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, &ldquo;ಇದು ನಿಜವಾದ ಹಿಂದೂ-ಮುಸ್ಲಿಂ ಸೌಹಾರ್ದತೆ. ಬಿಜೆಪಿಯವರು ಇದನ್ನು ನೋಡಿ ಕಲಿಯಬೇಕು,&rdquo; ಎಂದು ಹೇಳಿ ಘಟನೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ್ದರು.&lt;/p&gt;&lt;h2&gt;ಘಟನೆಗೆ ಟ್ವಿಸ್ಟ್ ನೀಡಿದ್ದು ಮತಾಂತರಿ ಮಹಿಳೆ&lt;/h2&gt;&lt;p&gt;ಆದರೆ, ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಹೊಸ ವಿಚಾರಗಳು &amp;nbsp;ಬೆಳಕಿಗೆ ಬಂದಿದೆ. ಘಟನೆಯ ನೈಜ ಸ್ವರೂಪದ ಬಗ್ಗೆ ಚರ್ಚೆ ಆರಂಭವಾಗಿದೆ. ಮಾಹಿತಿ ಪ್ರಕಾರ, ನೆರವು ಕೇಳಿದ ಮುಸ್ಲಿಂ ಮಹಿಳೆಯರಲ್ಲಿ ಒಬ್ಬರು ಹಿಂದೂ ವೃದ್ಧ ಮಹಿಳೆಯ ಸ್ವಂತ ಮಗಳು ಎಂಬುದು ಬಹಿರಂಗವಾಗಿದೆ.&lt;/p&gt;&lt;p&gt;ಸುಮಾರು 25 ವರ್ಷಗಳ ಹಿಂದೆ ಆಕೆ ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದು, ತಾಯಿಯನ್ನು ಕರೆದುಕೊಂಡು ಬಂದು ಸಹಾಯಕ್ಕಾಗಿ ಮನವಿ ಮಾಡಿದ್ದಾಳೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಇದರಿಂದ, ಮೊದಲಿಗೆ ನೆರೆಮನೆಯವರಂತೆ ಬಿಂಬಿತವಾಗಿದ್ದ ಸಂಬಂಧ ವಾಸ್ತವದಲ್ಲಿ ತಾಯಿ-ಮಗಳು ಎಂಬುದು ತಿಳಿದು ಬಂದಿದೆ.&lt;/p&gt;&lt;h2&gt;ಬಿಜೆಪಿಯಿಂದ ತಿರುಗೇಟು&lt;/h2&gt;&lt;p&gt;ಈ ಬೆಳವಣಿಗೆಯ ನಂತರ ಭಾರತೀಯ ಜನತಾ ಪಕ್ಷ ಹಾಗೂ ಅದರ ಮಹಿಳಾ ಮೋರ್ಚಾ ನಾಯಕಿಯರು ಸಚಿವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&ldquo;ಸ್ವಂತ ಮಗಳಾಗಿದ್ದರೂ ನೆರೆಮನೆಯವರು ಎಂದು ಹೇಳಿಕೊಂಡು ಸೌಹಾರ್ದತೆಯ ಉದಾಹರಣೆ ನೀಡುವುದು ಎಷ್ಟು ಸಮಂಜಸ? ಈ ರೀತಿಯ ಘಟನೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸರಿಯಲ್ಲ,&rdquo; ಎಂದು ಟೀಕಿಸಿದ್ದಾರೆ. ಇದೇ ವೇಳೆ, &ldquo;ಸೌಹಾರ್ದತೆಯ ಪಾಠವನ್ನು ನಿಮ್ಮಿಂದ ಕಲಿಯಬೇಕಾಗಿಲ್ಲ&rdquo; ಎಂದು ಹೇಳಿ ಸಚಿವರಿಗೆ ತಿರುಗೇಟು ನೀಡಿದ್ದಾರೆ. ಜೊತೆಗೆ, ಜಿಲ್ಲೆಗೆ ಬರುವ ಸಂದರ್ಭಗಳಲ್ಲಿ ಇಂತಹ ಘಟನೆಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ.&lt;/p&gt;&lt;h2&gt;ರಾಜಕೀಯ ಚರ್ಚೆಗೆ ಕಾರಣವಾದ ಘಟನೆ&lt;/h2&gt;&lt;p&gt;ಒಟ್ಟಾರೆ, ಆರಂಭದಲ್ಲಿ ಮಾನವೀಯತೆ ಮತ್ತು ಸೌಹಾರ್ದತೆಯ ಸಂಕೇತವಾಗಿ ಕಂಡಿದ್ದ ಈ ಘಟನೆ, ಇದೀಗ ಕುಟುಂಬ ಸಂಬಂಧ ಬಹಿರಂಗವಾದ ಹಿನ್ನೆಲೆ ಹೊಸ ವಿವಾದಕ್ಕೆ ಕಾರಣವಾಗಿದೆ. ಇದರಿಂದ ರಾಜಕೀಯ ವಾಗ್ವಾದ ಹೆಚ್ಚಾಗಿದ್ದು, ಸತ್ಯಾಸತ್ಯತೆ ಕುರಿತು ಚರ್ಚೆಗಳು ಮುಂದುವರಿದಿವೆ. ಈ ಪ್ರಕರಣವು ಮಾನವೀಯತೆ, ಧಾರ್ಮಿಕ ಸೌಹಾರ್ದತೆ ಮತ್ತು ರಾಜಕೀಯ ವ್ಯಾಖ್ಯಾನಗಳ ನಡುವೆ ಇರುವ ಸೂಕ್ಷ್ಮ ಸಂಬಂಧವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/udupi-controversy-bjp-hits-back-at-minister-lakshmi-hebbalkar-over-misleading-harmony-narrative-gdp/articleshow-7rmslx7"/>
        </item>
        <item>
            <title><![CDATA[ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್ ಆಗಿ ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ ಸಿಕ್ತು ಟ್ವಿಸ್ಟ್!]]></title>
            <link>https://kannada.asianetnews.com/karnataka-districts/udupi-kollur-accident-dead-womans-gold-stolen-by-govt-hospital-d-group-employee-arrested-sat/articleshow-7tn89fp</link>
            <guid isPermaLink="true">https://kannada.asianetnews.com/karnataka-districts/udupi-kollur-accident-dead-womans-gold-stolen-by-govt-hospital-d-group-employee-arrested-sat/articleshow-7tn89fp</guid>
            <pubDate>Mon, 25 May 2026 13:40:17 +0530</pubDate>
            <description><![CDATA[&lt;p&gt;ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿದ್ದರೂ, ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಏನಿದು, ಇಲ್ಲಿದೆ ವಿವರ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksf2pc977bja3de0v37cr298,imgname-udupi-kollur-accident-dead-womans-gold-stolen-1779696349479.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಮೇ 25): ಕೊ&lt;/strong&gt;ಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಅತ್ಯಂತ ಆಘಾತಕಾರಿ ಹಾಗೂ ಅನಿರೀಕ್ಷಿತ ತಿರುವು (Twist) ಸಿಕ್ಕಿದೆ! ಅಪಘಾತ ನಡೆದ ಜಾಗದಲ್ಲಿ ಸಾರ್ವಜನಿಕರು ಅಥವಾ ದಾರಿಹೋಕರು ಈ ಚಿನ್ನವನ್ನು ದೋಚಿದ್ದಾರೆ ಎಂದು ಇಷ್ಟು ದಿನ ಶಂಕಿಸಲಾಗಿತ್ತು. ಆದರೆ, ಪೊಲೀಸರ ತನಿಖೆಯಲ್ಲಿ ಕಳ್ಳತನ ನಡೆದಿರುವುದು ಅಪಘಾತದ ಸ್ಥಳದಲ್ಲಲ್ಲ, ಬದಲಿಗೆ ರೋಗಿಗಳನ್ನು ಕಾಯಬೇಕಾದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ (Mortuary) ಎಂಬ ಆಘಾತಕಾರಿ ಸತ್ಯ ಬಯಲಾಗಿದೆ!&lt;/p&gt;&lt;p&gt;ಮೃತದೇಹದ ಮೇಲಿದ್ದ ಚಿನ್ನಾಭರಣಗಳನ್ನು ಕದ್ದ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಡಿ-ಗ್ರೂಪ್ ನೌಕರನನ್ನು ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.&lt;/p&gt;&lt;h3&gt;&lt;strong&gt;ಬಂಧಿತ ಆರೋಪಿ ಮತ್ತು ವಶಪಡಿಸಿಕೊಂಡ ಮಾಲು&lt;/strong&gt;&lt;/h3&gt;&lt;p&gt;ಬಂಧಿತ ಆರೋಪಿಯನ್ನು ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ (40) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಡಿ-ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿ ಹೇಮಂತನಿಂದ ಪೊಲೀಸರು ಕಳವು ಮಾಡಲಾಗಿದ್ದ ಬಳೆ, ಉಂಗುರ ಹಾಗೂ ಚಿನ್ನದ ಸರ ಸೇರಿದಂತೆ ಒಟ್ಟು 2 ಲಕ್ಷದ 7 ಸಾವಿರ ರೂಪಾಯಿ ಮೌಲ್ಯದ 14.52 ಗ್ರಾಂ ಚಿನ್ನಾಭರಣಗಳನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ತನಿಖೆಯಲ್ಲಿ ಕಳ್ಳಾಟ ಬಯಲಾಗಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಕಳೆದ ಮೇ 17 ರಂದು ಕೊಲ್ಲೂರಿನ ದಳಿ ಎಂಬಲ್ಲಿ ಜೀಪ್ ಹಾಗೂ ಮೀನು ಸಾಗಾಟದ ಇನ್ಸುಲೇಟರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ ಕೇರಳದ ಜ್ಯೋತಿ ಹಾಗೂ ಆಫಿಯಾ ಅನೂಫ್ ದಾರುಣವಾಗಿ ಸಾವನ್ನಪ್ಪಿದ್ದರು. ಜ್ಯೋತಿ ಅವರ ಮೈಮೇಲಿದ್ದ ಒಡವೆಗಳು ಕಾಣೆಯಾದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಿಸಿದ್ದರು.&lt;/p&gt;&lt;p&gt;ಪ್ರಕರಣದ ಬೆನ್ನುಹತ್ತಿದ ಕೊಲ್ಲೂರು ಪೊಲೀಸರು ತನಿಖೆ ಆರಂಭಿಸಿದಾಗ, ಅಪಘಾತದ ಸ್ಥಳದಲ್ಲಿ ಜ್ಯೋತಿ ಅವರ ಮೃತದೇಹವನ್ನು ಆಂಬ್ಯುಲೆನ್ಸ್&zwnj;ಗೆ ಹತ್ತಿಸುವವರೆಗೂ ಅವರ ಮೈಮೇಲೆ ಚಿನ್ನಾಭರಣಗಳು ಹಾಗೇ ಇದ್ದವು ಎಂಬ ಬಲವಾದ ಸಾಕ್ಷ್ಯಗಳು ಸಿಕ್ಕವು. ತದನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿತ್ತು. ಪೊಲೀಸರು ತಮ್ಮ ತನಿಖೆಯ ದಿಕ್ಕನ್ನು ಆಸ್ಪತ್ರೆಯ ಶವಾಗಾರದ ಕಡೆಗೆ ತಿರುಗಿಸಿದಾಗ, ಅಲ್ಲಿ ಕರ್ತವ್ಯದಲ್ಲಿದ್ದ ಡಿ-ಗ್ರೂಪ್ ನೌಕರ ಹೇಮಂತನ ನಡವಳಿಕೆ ಮೇಲೆ ಶಂಕೆ ಮೂಡಿದೆ. ಆತನನ್ನು ವಶಕ್ಕೆ ಪಡೆದು ಕಠಿಣ ವಿಚಾರಣೆಗೆ ಒಳಪಡಿಸಿದಾಗ, ಶವದ ಮೇಲಿದ್ದ ಒಡವೆಗಳನ್ನು ತಾನೇ ಕದ್ದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.&lt;/p&gt;&lt;h2&gt;&lt;strong&gt;ಶವಾಗಾರದಲ್ಲಿ ನಡೆದಿದ್ದೇನು?&lt;/strong&gt;&lt;/h2&gt;&lt;p&gt;ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಿದ್ದಾಗ, ಅಲ್ಲಿ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡ ಹೇಮಂತ, ಜ್ಯೋತಿ ಅವರ ಮೃತದೇಹದಲ್ಲಿದ್ದ ಬಂಗಾರದ ಸರ, ಬಳೆ ಮತ್ತು ಉಂಗುರವನ್ನು ಅತ್ಯಂತ ಕಿತ್ತುಕೊಂಡಿದ್ದ. ಮೃತರ ಕುಟುಂಬಸ್ಥರು ಶವದ ಅಂತ್ಯಸಂಸ್ಕಾರದ ಆಘಾತದಲ್ಲಿದ್ದಾಗ, ಆಸ್ಪತ್ರೆಯ ನೌಕರನೇ ಈ ರೀತಿ ಕಳ್ಳತನ ಮಾಡಿ ವಿಕೃತಿ ಮೆರೆದಿದ್ದಾನೆ.&lt;/p&gt;&lt;p&gt;ಪ್ರಾಣ ಉಳಿಸಬೇಕಾದ ಹಾಗೂ ಮೃತದೇಹಗಳಿಗೆ ಗೌರವ ನೀಡಬೇಕಾದ ಸರ್ಕಾರಿ ಆಸ್ಪತ್ರೆಯ ನೌಕರನೇ ಶವಾಗಾರದಲ್ಲಿ ಹೆಣದ ಒಡವೆ ಕದ್ದಿರುವುದು ಉಡುಪಿ ಜಿಲ್ಲಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಆರೋಪಿ ಹೇಮಂತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ. ಆಸ್ಪತ್ರೆಯ ಸಿಬ್ಬಂದಿಯ ಈ ಅಮಾನವೀಯ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>udupi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/udupi-kollur-accident-dead-womans-gold-stolen-by-govt-hospital-d-group-employee-arrested-sat/articleshow-7tn89fp"/>
        </item>
        <item>
            <title><![CDATA[ಸೋಮಾಲಿಯಾ ಜೆಟ್ ವೇವ್ಸ್ ಮೂಲಕ ಕರಾವಳಿಗೆ ಮುಂಗಾರು ಮಳೆ ಎಂಟ್ರಿ, ಸಮುದ್ರ ಅಬ್ಬರದ ಆತಂಕ ಜಲಕ್ರೀಡೆ ಸ್ಥಗಿತ!]]></title>
            <link>https://kannada.asianetnews.com/gallery/karnataka-districts/imd-cyclone-warning-forces-shutdown-of-tourist-boating-in-coastal-karnataka-gdp-e84qr22</link>
            <guid isPermaLink="true">https://kannada.asianetnews.com/gallery/karnataka-districts/imd-cyclone-warning-forces-shutdown-of-tourist-boating-in-coastal-karnataka-gdp-e84qr22</guid>
            <pubDate>Tue, 19 May 2026 16:24:22 +0530</pubDate>
            <description><![CDATA[&lt;p&gt;ಹವಾಮಾನ ಇಲಾಖೆಯ ಚಂಡಮಾರುತ ಹಾಗೂ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜಲಸಾಹಸ ಕ್ರೀಡೆ ಮತ್ತು ಪ್ರವಾಸಿ ಬೋಟಿಂಗ್ ಅನ್ನು ನಿಷೇಧಿಸಲಾಗಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗೋಕರ್ಣ, ಮುರುಡೇಶ್ವರ, ಮತ್ತು ನೇತ್ರಾಣಿ ದ್ವೀಪದಂತಹ ಪ್ರಮುಖ ತಾಣಗಳಲ್ಲಿ ನಿರ್ಬಂಧ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jzqn5nj8kc5r1ea9fgsg8bn5,imgname-scuba-diving-best-location-in-india-1752066872904.jpg" type="image/jpeg" height="390" width="690"/>
            <content:encoded><![CDATA[&lt;p&gt;ಹವಾಮಾನ ಇಲಾಖೆಯ ಚಂಡಮಾರುತ ಹಾಗೂ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜಲಸಾಹಸ ಕ್ರೀಡೆ ಮತ್ತು ಪ್ರವಾಸಿ ಬೋಟಿಂಗ್ ಅನ್ನು ನಿಷೇಧಿಸಲಾಗಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗೋಕರ್ಣ, ಮುರುಡೇಶ್ವರ, ಮತ್ತು ನೇತ್ರಾಣಿ ದ್ವೀಪದಂತಹ ಪ್ರಮುಖ ತಾಣಗಳಲ್ಲಿ ನಿರ್ಬಂಧ.&lt;/p&gt;&lt;img&gt;&lt;p&gt;ಕಾರವಾರ: ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದ ಪ್ರಭಾವ ತೀವ್ರವಾಗಿ ಕಾಣಿಸಿಕೊಳ್ಳುತ್ತಿದ್ದು, ಭಾರೀ ಮಳೆ ಹಾಗೂ ಚಂಡಮಾರುತದ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡದಾದ್ಯಂತ ಜಲಸಾಹಸ ಕ್ರೀಡೆ ಹಾಗೂ ಪ್ರವಾಸಿ ಬೋಟಿಂಗ್ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಬ್ರೇಕ್ ಹಾಕಲಾಗಿದೆ. ಭಾರತೀಯ ಹವಾಮಾನ ಇಲಾಖೆಯು (IMD) ಚಂಡಮಾರುತದ ಮುನ್ನೆಚ್ಚರಿಕೆ ನೀಡಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಮುಂಬರುವ ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಪ್ರವಾಸಿಗರ ಸುರಕ್ಷತೆಗಾಗಿ ಈ ಕಠಿಣ ಕ್ರಮಗಳನ್ನು ಕೈಗೊಂಡಿದೆ.&lt;/p&gt;&lt;img&gt;&lt;p&gt;ಜಿಲ್ಲಾಡಳಿತದ ಆದೇಶದನ್ವಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಗೋಕರ್ಣ, ಮುರುಡೇಶ್ವರ ಹಾಗೂ ಕಾರವಾರ ಬೀಚ್&zwnj;ಗಳಲ್ಲಿ ಸದ್ಯಕ್ಕೆ ಪ್ರವಾಸಿ ಬೋಟಿಂಗ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಗೋಕರ್ಣದ ಪ್ರಮುಖ ಕಡಲತೀರಗಳಾದ ಓಂ ಬೀಚ್, ಕೂಡ್ಲೆ, ಹಾಫ್&zwnj;ಮೂನ್ ಹಾಗೂ ಪ್ಯಾರಡೈಸ್ ಬೀಚ್&zwnj;ಗಳಲ್ಲಿ ನಡೆಯುತ್ತಿದ್ದ ಎಲ್ಲಾ ರೀತಿಯ ಜಲಸಾಹಸ (Water Sports) ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ.&lt;/p&gt;&lt;img&gt;&lt;p&gt;ಅಷ್ಟೇ ಅಲ್ಲದೆ, ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಸ್ಕೂಬಾ ಡೈವಿಂಗ್ (Scuba Diving) ಪ್ರಕ್ರಿಯೆಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಸಮುದ್ರದ ಅಲೆಗಳು ಮಾತ್ರವಲ್ಲದೆ ನದಿಗಳಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಶರಾವತಿ ಹಿನ್ನೀರು ಹಾಗೂ ಅಘನಾಶಿನಿ ನದಿಯಲ್ಲಿ ಕಾರ್ಯಾಚರಿಸುತ್ತಿದ್ದ ಪ್ರವಾಸಿ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ನೈಸರ್ಗಿಕ ಸೌಂದರ್ಯದ ತಾಣವಾದ ಹೊನ್ನಾವರದ ಅಪ್ಸರಕೊಂಡ ಬೀಚ್&zwnj;ನಲ್ಲಿ ಪ್ರೀವೆಡ್ಡಿಂಗ್ ಶೂಟಿಂಗ್ (Pre-wedding shoot) ಸೆಟ್&zwnj;ಗಳನ್ನು ಅಳವಡಿಸುವುದಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಪ್ರವಾಸಿಗರು ಹಾಗೂ ಮೀನುಗಾರರು ಕಡಲತೀರ ಮತ್ತು ನದಿತೀರ ಪ್ರದೇಶಗಳಿಗೆ ತೆರಳದಂತೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.&lt;/p&gt;&lt;img&gt;&lt;p&gt;ಮಂಗಳವಾರದ (ಇಂದು) ವೇಳೆಗೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ಸಾಂದ್ರತೆ ಗಣನೀಯವಾಗಿ ಹೆಚ್ಚಾಗಲಿದೆ. ಆರಂಭದಲ್ಲಿ ಸಣ್ಣ ಹನಿಗಳ ಮಳೆಯಾಗಲಿದ್ದು, ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿಯ ಅವಧಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಸ್ತುತ ಹವಾಮಾನ ವರದಿಯ ಪ್ರಕಾರ, ಮೇ 20ರಿಂದಲೂ ಕರಾವಳಿಯಾದ್ಯಂತ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಆದರೆ, ಮೇ 26ರ ನಂತರ ಕರಾವಳಿ ತೀರದಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.&lt;/p&gt;&lt;img&gt;&lt;p&gt;ಹಿಂದೂ ಮಹಾಸಾಗರದ ಮೂಲಕ ಸಾಗಿ ಬರುವ ಮುಂಗಾರು ಮಾರುತಗಳು ಸದ್ಯಕ್ಕೆ ಕೆಲವೆಡೆ ದುರ್ಬಲಗೊಂಡಂತೆ ಕಂಡುಬರುತ್ತಿದ್ದರೂ, ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಹೊಸ ವಾಯು ಪರಿಚಲನೆಯು ಮುಂಗಾರಿಗೆ ಹೊಸ ಚೇತರಿಕೆ ನೀಡಲಿದೆ. ಪ್ರಮುಖವಾಗಿ &lsquo;ಸೋಮಾಲಿಯಾ ಜೆಟ್ ವೇವ್ಸ್&rsquo; (ಸೋಮಾಲಿ ಕಡಿಮೆ ಮಟ್ಟದ ಗಾಳಿಯ ಪ್ರವಾಹ) ಮೂಲಕ ಮೇ 26ರಿಂದ ಅರಬ್ಬಿ ಸಮುದ್ರದಲ್ಲಿ ತೇವಾಂಶಭರಿತ ಮಾರುತಗಳು ತೀವ್ರವಾಗಿ ಚುರುಕಾಗಲಿವೆ. ಈ ಪ್ರಬಲ ಗಾಳಿಯ ಪರಿಚಲನೆಯು ಸಮುದ್ರದ ಮೇಲ್ಮೈಯಲ್ಲಿ ಹೆಚ್ಚಿನ ಮೋಡಗಳು ಸೃಷ್ಟಿಯಾಗಲು ಕಾರಣವಾಗಲಿದ್ದು, ಇಡೀ ಕರಾವಳಿ ಭಾಗದಲ್ಲಿ ಮುಂಗಾರು ಸಕ್ರಿಯಗೊಳ್ಳಲು ಪೂರಕ ವಾತಾವರಣವನ್ನು ನಿರ್ಮಿಸಲಿದೆ.&lt;/p&gt;&lt;img&gt;&lt;p&gt;ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಮತ್ತು ಪರಿಚಲನೆ ಹೆಚ್ಚಾಗುತ್ತಿರುವುದರಿಂದ ಸಮುದ್ರದ ಅಲೆಗಳ ತೀವ್ರತೆ ರೌದ್ರರೂಪ ಪಡೆಯುವ ಸಾಧ್ಯತೆಯಿದೆ. ಮೇ 26ರಿಂದ ಮಾರುತಗಳು ಭಾರೀ ಚುರುಕಾಗಲಿರುವುದರಿಂದ, ತೀರ ಪ್ರದೇಶಗಳಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ದಾಟುವ ನಿರೀಕ್ಷೆಯಿದೆ. ಈ ಆತಂಕಕಾರಿ ಹಿನ್ನೆಲೆಯಲ್ಲಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರು ಹೆಚ್ಚಿನ ಜಾಗ್ರತೆ ವಹಿಸಬೇಕು ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರದ ಹವಾಮಾನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿಕೊಂಡೇ ತಮ್ಮ ಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/imd-cyclone-warning-forces-shutdown-of-tourist-boating-in-coastal-karnataka-gdp-e84qr22"/>
        </item>
        <item>
            <title><![CDATA[ಮಣಿಪಾಲದಲ್ಲಿ ರಾಜ್ಯದ ಪ್ರಥಮ ಹೋಮ್ ಅವೇ ಫ್ರಮ್ ಹೋಮ್: ಏನಿದು ಹೊಸ ವ್ಯವಸ್ಥೆ?]]></title>
            <link>https://kannada.asianetnews.com/karnataka-districts/manipal-bone-marrow-transplant-center-for-cancer-children-gvd/articleshow-etih8md</link>
            <guid isPermaLink="true">https://kannada.asianetnews.com/karnataka-districts/manipal-bone-marrow-transplant-center-for-cancer-children-gvd/articleshow-etih8md</guid>
            <pubDate>Sun, 24 May 2026 18:34:50 +0530</pubDate>
            <description><![CDATA[&lt;p&gt;ಯಾವುದೇ ಕಾರಣಕ್ಕೆ ಕ್ಯಾನ್ಸರ್ ಪೀಡಿತ ಮಕ್ಕಳು ಚಿಕಿತ್ಸೆಯಿಂದ ದೂರ ಉಳಿಯಬಾರದು ಎಂಬ ಉದ್ದೇಶವನ್ನು ಹೊಂದಿರುವ ನೋಂದಾಯಿತ ಭಾರತೀಯ ಲಾಭರಹಿತ ಸಂಸ್ಥೆಯಾದ ಆಕ್ಸೆಸ್ ಲೈಫ್ ಮತ್ತು ಚೆಲ್ಲಾರಾಮ್..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksd1cssye4p1kjzmse44pje9,imgname-cvjcv-1779627878206.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಣಿಪಾಲ (ಮೇ.24):&lt;/strong&gt; ಯಾವುದೇ ಕಾರಣಕ್ಕೆ ಕ್ಯಾನ್ಸರ್ ಪೀಡಿತ ಮಕ್ಕಳು ಚಿಕಿತ್ಸೆಯಿಂದ ದೂರ ಉಳಿಯಬಾರದು ಎಂಬ ಉದ್ದೇಶವನ್ನು ಹೊಂದಿರುವ ನೋಂದಾಯಿತ ಭಾರತೀಯ ಲಾಭರಹಿತ ಸಂಸ್ಥೆಯಾದ ಆಕ್ಸೆಸ್ ಲೈಫ್ ಮತ್ತು ಚೆಲ್ಲಾರಾಮ್ ಫೌಂಡೇಶನ್&zwnj;ಗಳು ಜೊತೆಯಾಗಿ, ರಾಜ್ಯದ ಪ್ರಥಮ, ಮೂಳೆ ಮಜ್ಜೆಯ ಕಸಿ (ಬಿಎಂಟಿ) ರೋಗಿ ಮಕ್ಕಳಿಗಾಗಿ ತನ್ನ ಹೋಮ್ ಅವೇ ಫ್ರಮ್ ಹೋಮ್ (ಎಚ್ಎಎಚ್) ಕೇಂದ್ರವನ್ನು ಮಣಿಪಾಲ ಮಾಹೆ ಕ್ಯಾಂಪಸ್&zwnj;ನಲ್ಲಿ ಶನಿವಾರ ಚಾಲನೆ ನೀಡಿದೆ.&lt;/p&gt;&lt;p&gt;ಈ ಕಾರ್ಯಕ್ರಮದಲ್ಲಿ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಧ್ಯಕ್ಷತೆಯಲ್ಲಿ, ಮುಂಬೈನ ಚೆಲ್ಲಾರಾಮ್ ಫೌಂಡೇಶನ್&zwnj;ನ ಮುಖ್ಯಸ್ಥ ಡಾ. ಅಶೋಕ್ ಗವಾಂಡೆ ಮಾಹೆಯ ಸಿಒಒ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅನಿಲ್ ಕೆ ಭಟ್; ಮಣಿಪಾಲ ಫೌಂಡೇಶನ್&zwnj;ನ ಮು.ಕಾ.ನಿ.ಅಧಿಕಾರಿ ಹರಿನಾರಾಯಣ್ ಶರ್ಮಾ ಮತ್ತು ಆಸ್ಪತ್ರೆಯ ಮಕ್ಕಳ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ವಾಸುದೇವ ಭಟ್ ಕೆ, ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್&zwnj;ನ ಸ್ಥಾಪಕ ಅಧ್ಯಕ್ಷ ಗಿರೀಶ್ ನಾಯರ್ ಮತ್ತು ಸಹಸಂಸ್ಥಾಪಕ ಅಂಕಿತ್ ದೇವ್ ಉಪಸ್ಥಿತರಿದ್ದರು.&lt;/p&gt;&lt;h2&gt;&lt;strong&gt;ನಿಯಂತ್ರಿತ ವಾತಾವರಣ&lt;/strong&gt;&lt;/h2&gt;&lt;p&gt;ಹೊಸದಾಗಿ ಪ್ರಾರಂಭಿಸಲಾದ 10 ಘಟಕ ಸೌಲಭ್ಯವಿರುವ ಈ ಕೇಂದ್ರವನ್ನು ಮೂಳೆ ಮಜ್ಜೆಯ ಕಸಿ ಚಿಕಿತ್ಸೆಗಳಿಗೆ ಒಳಗಾಗುವ ಮಕ್ಕಳಿಗಾಗಿ ವಿಶೇಷವಾಗಿ, ಚಿಕಿತ್ಸೆ ಮತ್ತು ಚೇತರಿಕೆಯ ಸಮಯದಲ್ಲಿ ರೋಗನಿರೋಧಕ ಶಕ್ತಿ, ಸುರಕ್ಷಿತ, ನೈರ್ಮಲ್ಯ ಮತ್ತು ನಿಯಂತ್ರಿತ ವಾತಾವರಣಕ್ಕೆ ಪೂರಕವಾಗುವಂತೆ ವಿನ್ಯಾಸಗೊಳಿಸಲಾಗಿದೆ.&lt;/p&gt;&lt;p&gt;ಈ ಹಿಂದೆ 2022ರಲ್ಲಿ ಇಂತಹ 12 ಘಟಕಗಳಿರುವ ಎಚ್&zwnj;ಎಎಚ್&zwnj; ಕೇಂದ್ರವನ್ನು ಆಕ್ಸಿಸ್ ಲೈಫ್ ಸಹೋಗದಲ್ಲಿ ಆರಂಭಿಸಲಾಗಿದ್ದು, ಇದುವರೆಗೆ ಅಲ್ಲಿ ಸುಮಾರು 350 ರೋಗಿ ಮಕ್ಕಳಿಗೆ ಉಚಿತ ವಸತಿ ನೀಡಲಾಗಿದೆ. ಈ ಎರಡನೇ ಕೇಂದ್ರದೊಂದಿಗೆ, ಮಕ್ಕಳು ತಮ್ಮ ಚಿಕಿತ್ಸೆಯನ್ನು ಗೌರವದಿಂದ ಪೂರ್ಣಗೊಳಿಸಲು ಮಾತ್ರವಲ್ಲದೆ, ಸುರಕ್ಷಿತ, ಕಾಳಜಿಯುಳ್ಳ ಮತ್ತು ಕುಟುಂಬ ಸ್ನೇಹಿ ವಾತಾವರಣದಲ್ಲಿ ಚೇತರಿಸಿಕೊಳ್ಳಲು ಸಹಾಯ ಮಾಡುವ ಮೂಲಕ ಇನ್ನೂ ಅನೇಕ ಹಿಂದುಳಿದ ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಮಕ್ಕಳ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ವಾಸುದೇವ ಭಟ್ ಕೆ ಹೇಳಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/manipal-bone-marrow-transplant-center-for-cancer-children-gvd/articleshow-etih8md"/>
        </item>
        <item>
            <title><![CDATA[ಮಣಿಪಾಲದ ಎಂಐಟಿಗೆ ವಿಶ್ವ ಗರಿ, CFA ಮಾನ್ಯತೆ ಪಡೆದ ದೇಶದ ಮೊದಲ ಎಂಜಿನಿಯರಿಂಗ್ ಸಂಸ್ಥೆ! ಇನ್ಮುಂದೆ ಜಾಗತಿಕ ಶಿಕ್ಷಣ]]></title>
            <link>https://kannada.asianetnews.com/education/mit-manipal-becomes-first-engineering-institute-in-india-to-receive-cfa-institute-recognition-gdp/articleshow-ffgu2tp</link>
            <guid isPermaLink="true">https://kannada.asianetnews.com/education/mit-manipal-becomes-first-engineering-institute-in-india-to-receive-cfa-institute-recognition-gdp/articleshow-ffgu2tp</guid>
            <pubDate>Sun, 10 May 2026 18:06:20 +0530</pubDate>
            <description><![CDATA[ಮಣಿಪಾಲದ ಎಂಐಟಿಯು ಪ್ರತಿಷ್ಠಿತ ಸಿಎಫ್&zwnj;ಎ ಇನ್&zwnj;ಸ್ಟಿಟ್ಯೂಟ್&zwnj;ನಿಂದ ಮಾನ್ಯತೆ ಪಡೆದ ಭಾರತದ ಮೊದಲ ಮತ್ತು ಏಕೈಕ ಎಂಜಿನಿಯರಿಂಗ್ ಸಂಸ್ಥೆಯಾಗಿದೆ. ಈ ಮಾನ್ಯತೆಯು ವಿದ್ಯಾರ್ಥಿಗಳಿಗೆ ಹಣಕಾಸು ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸಲಿದೆ. ಸಂಸ್ಥೆಯು 2023ರಿಂದ ಕಂಪ್ಯೂಟರ್ ಸೈನ್ಸ್ ಮತ್ತು ಫೈನಾನ್ಶಿಯಲ್ ಟೆಕ್ನಾಲಜಿಯಲ್ಲಿ ಬಿಟೆಕ್ ಕೋರ್ಸ್ ಅನ್ನು ಸಹ ಆರಂಭಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr8xykemzxs2053j4vh0t6hw,imgname-mit-manipal--1--1778416307667.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಣಿಪಾಲ: &lt;/strong&gt;ಮಣಿಪಾಲ್ ಅಕಾಡೆಮಿ ಆಫ್&zwnj; ಹೈಯರ್&zwnj; ಎಜುಕೇಶನ್&zwnj; (ಮಾಹೆ) ವಿವಿಯ ಅಂಗ ಸಂಸ್ಥೆ ಮಣಿಪಾಲ್ ಇನ್&zwnj;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ಎಂಐಟಿ)ಗೆ ಪ್ರತಿಷ್ಠಿತ ಸಿಎಫ್&zwnj;ಎ ಇನ್&zwnj;ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಮಾನ್ಯತೆ ಸಿಕ್ಕಿದ್ದು, ಎಂಐಟಿಯು ಈ ಮಾನ್ಯತೆ ಪಡೆದ ಭಾರತದ ಮೊದಲ ಮತ್ತು ಏಕೈಕ ಎಂಜಿನಿಯರಿಂಗ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.&lt;/p&gt;&lt;p&gt;ಮೇ 6ರಂದು ಮಣಿಪಾಲದಲ್ಲಿ ನಡೆದ ಕಾರ್&zwj;ಯಕ್ರಮದಲ್ಲಿ ಸಿಎಫ್&zwnj;ಎ ಇನ್&zwnj;ಸ್ಟಿಟ್ಯೂಟ್&zwnj;ನ ಪ್ರತಿನಿಧಿಗಳಾದ ಸೈಮ್ ಫಕಿಹ್ ಮತ್ತು ಕುಮಾರಿ ಅಂಜನಾ ನಹರ್ ಅವರು ಮಾಹೆಯ ಕುಲಸಚಿವ ಡಾ. ಪಿ. ಗಿರಿಧರ್ ಕಿಣಿ ಅವರಿಗೆ ಈ ಮಾನ್ಯತೆ ಪ್ರಮಾಣಪತ್ರ ಅಧಿಕೃತವಾಗಿ ಹಸ್ತಾಂತರಿಸಿದರು.&lt;/p&gt;&lt;p&gt;ಎಂಐಟಿ ನಿರ್ದೇಶಕರಾದ ಕಮಾಂಡರ್ (ಡಾ) ಅನಿಲ್ ರಾಣಾ ಮತ್ತು ಡಾ. ಕುಂಚಂ ಶ್ಯಾಮ್ ಪ್ರಸಾದ್, ಎಂಐಟಿ ಸ್ಕೂಲ್ ಆಫ್ ಬೇಸಿಕ್ ಸೈನ್ಸಸ್, ಹ್ಯುಮಾನಿಟೀಸ್ ಅಂಡ್ ಮ್ಯಾನೇಜ್&zwnj;ಮೆಂಟ್&zwnj;ನ ಸಹ ಡೀನ್ ಡಾ. ಯೋಗೇಶ್ ಪೈ ಪಿ. ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.&lt;/p&gt;&lt;h2&gt;ಜಾಗತಿಕ ಮಟ್ಟದ ಶಿಕ್ಷಣ&lt;/h2&gt;&lt;p&gt;ಈ ಮಾನ್ಯತೆಯಿಂದ ಎಂಐಟಿ ವಿದ್ಯಾರ್ಥಿಗಳಿಗೆ ಹಣಕಾಸು ತಂತ್ರಜ್ಞಾನದ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಶಿಕ್ಷಣ ದೊರೆಯಲಿದೆ. ಈ ಮಾನ್ಯತೆಯು ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಅಧ್ಯಯನ ಸಾಮಗ್ರಿಗಳನ್ನು ಒದಗಿಸುವುದಲ್ಲದೆ, ಉದ್ಯಮದ ತಜ್ಞರೊಂದಿಗೆ ಸಂಪರ್ಕ ಸಾಧಿಸಲು ಮತ್ತು ವಿವಿಧ ವಿದ್ಯಾರ್ಥಿವೇತನಗಳನ್ನು ಪಡೆಯಲು ದಾರಿಯಾಗಲಿದೆ.&lt;/p&gt;&lt;p&gt;ಜಾಗತಿಕ ಮಟ್ಟದಲ್ಲಿ ಹಣಕಾಸು ಮತ್ತು ಹೂಡಿಕೆ ಕ್ಷೇತ್ರದಲ್ಲಿ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಸಿಎಫ್&zwnj;ಎ ಇನ್&zwnj;ಸ್ಟಿಟ್ಯೂಟ್&zwnj;ನೊಂದಿಗೆ ಕೈಜೋಡಿಸಿರುವುದು ಎಂಐಟಿಯಲ್ಲಿ ಎಂಜಿನಿಯರಿಂಗ್ ಶಿಕ್ಷಣದ ಜತೆಗೆ ಹಣಕಾಸು ಕ್ಷೇತ್ರದ ಜಾಗತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ್ದಾಗಿದೆ.&lt;/p&gt;&lt;h2&gt;ಬಿಟೆಕ್ ನೂತನ ಕೋರ್ಸ್ ಆರಂಭ&lt;/h2&gt;&lt;p&gt;ಸಿಎಸ್&zwnj;-ಎಫ್&zwnj;ಟಿ ಕೋರ್ಸ್ ಎಂಐಟಿಯ 2023ರಿಂದ ಬಿಟೆಕ್ (ಕಂಪ್ಯೂಟರ್ ಸೈನ್ಸ್ ಮತ್ತು ಫೈನಾನ್ಶಿಯಲ್ ಟೆಕ್ನಾಲಜಿ) ಎಂಬ ವಿನೂತನ ಕೋರ್ಸನ್ನು ಆರಂಭಿಸಿದೆ. ಕಂಪ್ಯೂಟರ್ ಸೈನ್ಸ್ ಜತೆಗೆ ಹಣಕಾಸು, ಅನಲಿಟಿಕ್ಸ್&zwnj;, ತಂತ್ರಜ್ಞಾನಗಳನ್ನು ಒಳಗೊಂಡ ಅಂತರಶಿಸ್ತೀಯ ಕೋರ್ಸ್&zwnj; ಪರಿಚಯಿಸಿದ ದೇಶದ ಮೊದಲ ಮತ್ತು ಏಕೈಕ ಸಂಸ್ಥೆ ಎಂಬ ಕೀರ್ತಿಗೆ ಎಂಐಟಿ ಪಾತ್ರವಾಗಿದೆ. ಇಂದಿನ ಆಧುನಿಕ ಉದ್ಯೋಗ ಮಾರುಕಟ್ಟೆಗೆ ಪೂರಕವಾದ ಪರಿಣಿತರನ್ನು ಸಿದ್ಧಪಡಿಸುವಲ್ಲಿ ಎಂಐಟಿ ಮಹತ್ವದ ಪಾತ್ರ ವಹಿಸುತ್ತಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/education/mit-manipal-becomes-first-engineering-institute-in-india-to-receive-cfa-institute-recognition-gdp/articleshow-ffgu2tp"/>
        </item>
        <item>
            <title><![CDATA[ಉಡುಪಿ: ತ್ರಾಸಿ ಬಳಿ ಟ್ಯಾಂಕರ್-ಬಸ್ ಭೀಕರ ಅಪಘಾತ, ಕರಾವಳಿಗೆ ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳ ದುರಂತ ಅಂತ್ಯ!]]></title>
            <link>https://kannada.asianetnews.com/karnataka-districts/udupi-many-dead-several-injured-as-tourist-bus-crashes-into-tanker-near-trasi-beach-gdp/articleshow-ldl1bpb</link>
            <guid isPermaLink="true">https://kannada.asianetnews.com/karnataka-districts/udupi-many-dead-several-injured-as-tourist-bus-crashes-into-tanker-near-trasi-beach-gdp/articleshow-ldl1bpb</guid>
            <pubDate>Wed, 29 Apr 2026 15:15:22 +0530</pubDate>
            <description><![CDATA[ಉಡುಪಿಯ ಬೈಂದೂರು ತಾಲೂಕಿನ ತ್ರಾಸಿ ಬಳಿ, ಪ್ರವಾಸಕ್ಕೆ ಬಂದಿದ್ದ ಭದ್ರಾವತಿ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ನಿಂತಿದ್ದ ಟ್ಯಾಂಕರ್&zwnj;ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqc9yy1hkq5vvs34geqr77p0,imgname-udupi-trasi-beach-accident-1777455822897.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ:&lt;/strong&gt; ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಬಸ್ ಟ್ಯಾಂಕರ್&zwnj;ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಬೈಂದೂರು ತಾಲೂಕಿನ ತ್ರಾಸಿ ಸಮೀಪ ನಡೆದಿದೆ.&lt;/p&gt;&lt;p&gt;ತ್ರಾಸಿ ಬೀಚ್ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಟ್ಯಾಂಕರ್&zwnj;ಗೆ ಅತಿ ವೇಗದಲ್ಲಿ ಬಂದ &amp;nbsp;ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮವಾಗಿ ಬಸ್&zwnj;ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.&lt;/p&gt;&lt;h2&gt;ಕರಾವಳಿ ಭಾಗಕ್ಕೆ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳು&lt;/h2&gt;&lt;p&gt;ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬಸ್&zwnj;ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕಾಗಿ ಬಂದಿದ್ದು, ಮುರುಡೇಶ್ವರದಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.&lt;/p&gt;&lt;p&gt;ಸುಮಾರು 47 ಮಂದಿ ಪ್ರಯಾಣಿಸುತ್ತಿದ್ದ ಈ ಬಸ್&zwnj;ನಲ್ಲಿ ಡಿಕ್ಕಿಯ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h2&gt;ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ&lt;/h2&gt;&lt;p&gt;ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;p&gt;ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆಯುವಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಾಲಕರು ವಿಶೇಷ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ದುರ್ಘಟನೆ ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿಸಿದ್ದು, ಮೃತರ ಗುರುತು ಹಾಗೂ ಗಾಯಾಳುಗಳ ಸ್ಥಿತಿಗತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/udupi-many-dead-several-injured-as-tourist-bus-crashes-into-tanker-near-trasi-beach-gdp/articleshow-ldl1bpb"/>
        </item>
        <item>
            <title><![CDATA[ಕೊಂಕಣ ರೈಲ್ವೆಯ ಮೂಲ್ಕಿ ರೈಲು ನಿಲ್ದಾಣದ ಬಹುದೊಡ್ಡ ಬದಲಾವಣೆ, ಬಹುವರ್ಷದ ಪ್ರಯಾಣಿಕರ ಬಹುದಿನಗಳ ಕನಸು ನನಸು]]></title>
            <link>https://kannada.asianetnews.com/karnataka-districts/new-platform-ready-for-launch-at-mulki-railway-station-swr-and-konkan-railway-complete-the-project-gdp/articleshow-p716h84</link>
            <guid isPermaLink="true">https://kannada.asianetnews.com/karnataka-districts/new-platform-ready-for-launch-at-mulki-railway-station-swr-and-konkan-railway-complete-the-project-gdp/articleshow-p716h84</guid>
            <pubDate>Sun, 24 May 2026 18:44:18 +0530</pubDate>
            <description><![CDATA[ಮೂಲ್ಕಿ ರೈಲು ನಿಲ್ದಾಣದಲ್ಲಿ ಸಂಸದರ ಅನುದಾನದಿಂದ 1.42 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಪ್ಲಾಟ್&zwnj;ಫಾರ್ಮ್ ಲೋಕಾರ್ಪಣೆಗೆ ಸಿದ್ಧವಾಗಿದೆ. ಈ ಅಭಿವೃದ್ಧಿಯ ನಡುವೆಯೂ, ನಿಲ್ದಾಣದ ಸಂಪರ್ಕ ರಸ್ತೆಯ ದುಸ್ಥಿತಿ ಮತ್ತು ಪ್ರಮುಖ ರೈಲುಗಳ ನಿಲುಗಡೆಗೆ ಬೇಡಿಕೆಯಂತಹ ಸಮಸ್ಯೆಗಳು ಇನ್ನೂ ಉಳಿದಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksd1tabts8jt0qc9ftgsarkj,imgname-mulki-railway-station-1779628321146.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೂಲ್ಕಿ: &lt;/strong&gt;ಮೂಲ್ಕಿ ಭಾಗದ ರೈಲು ಪ್ರಯಾಣಿಕರ ಬಹು ವರ್ಷಗಳ ಬೇಡಿಕೆಯಾಗಿದ್ದ ಕೊಂಕಣ ರೈಲ್ವೆ ವ್ಯಾಪ್ತಿಯ ಮೂಲ್ಕಿ ರೈಲು ನಿಲ್ದಾಣದ ನೂತನ ಪ್ಲಾಟ್&zwnj;ಫಾರ್ಮ್ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಸಂಸದ ಕ್ಯಾಪ್ಟನ್&zwnj; ಬ್ರಿಜೇಶ್ ಚೌಟ ಅವರ ಅನುದಾನದಿಂದ ಮೂಲ್ಕಿ ರೈಲು ನಿಲ್ದಾಣದಲ್ಲಿ ಸುಮಾರು 1.42 ಕೋಟಿ ರು. ವೆಚ್ಚದಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ದಿಕ್ಕಿನಲ್ಲಿ ನೂತನ ಪ್ಲಾಟ್&zwnj;ಫಾರ್ಮ್ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಪೂರ್ಣಗೊಂಡಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ.&lt;/p&gt;&lt;h2&gt;ಸ್ಕ್ಯೆ ವಾಕ್ ನಿರ್ಮಾಣ ಕಾಮಗಾರಿ&lt;/h2&gt;&lt;p&gt;ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ದಿಕ್ಕಿನಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ಲಾಟ್&zwnj;ಫಾರ್ಮ್ ಗೆ ಸಂಪರ್ಕ ಕಲ್ಪಿಸುವ ಸ್ಕ್ಯೆ ವಾಕ್ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಶೀಘ್ರ ನಡೆಯಲಿದೆ. ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು ಮಾತನಾಡಿ, ನೂತನ ಪ್ಲಾಟ್&zwnj;ಫಾರ್ಮ್ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ ಅವರು ಶೀಘ್ರದಲ್ಲೇ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.&lt;/p&gt;&lt;h2&gt;ಮೂಲ್ಕಿ ರೈಲು ನಿಲ್ದಾಣ ಸಮಸ್ಯೆ:&lt;/h2&gt;&lt;p&gt;ಮೂಲ್ಕಿ ರೈಲು ನಿಲ್ದಾಣ ಮೇಲ್ದರ್ಜೆಗೇರಿಸಿದರೂ ನಿಲ್ದಾಣದ ಸಂಪರ್ಕ ರಸ್ತೆ ಅವ್ಯವಸ್ಥೆಗಳ ಆಗರವಾಗಿದೆ. ಮೂಡುಬಿದಿರೆ, ಕಾರ್ಕಳ, ಕಿನ್ನಿಗೋಳಿ, ಕಟೀಲು ಮತ್ತಿತರ ಕಡೆಗಳಿಂದ ಮೂಲ್ಕಿ ರೈಲು ನಿಲ್ದಾಣಕ್ಕೆ ಮುಂಬೈ ಮತ್ತಿತರ ದೂರದ ಪ್ರದೇಶಕ್ಕೆ ಹೋಗಲು ಅನೇಕ ಪ್ರಯಾಣಿಕರು ಆಗಮಿಸುತ್ತಿದ್ದು, ಮೂಲ್ಕಿಯ ರಾಜ್ಯ ಹೆದ್ದಾರಿಯಿಂದ ರೈಲು ನಿಲ್ದಾಣ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಭಾಗದಲ್ಲಿ ಕೆಲವು ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ತ್ಯಾಜ್ಯ ಕೂಡ ಎಸೆಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವಾಗ ದುರ್ನಾತ ಬೀರುತ್ತಿದೆ. ಇದನ್ನು ನಿಯಂತ್ರಿಸಲು ಸಿಸಿ ಕ್ಯಾಮೆರಾದ ಅಗತ್ಯವಿದೆ. ಮುಲ್ಕಿ ರೈಲು ನಿಲ್ದಾಣ ಅಭಿವೃದ್ಧಿಯಾಗುತ್ತಿದ್ದು, ವಂದೇ ಭಾರತ್&zwnj; ಸಹಿತ ದೂರದ ಊರಿಗೆ ಸಂಚರಿಸುವ ಪ್ರಮುಖ ರೈಲುಗಳ ನಿಲುಗಡೆ ಅವಶ್ಯಕತೆ ಇದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-platform-ready-for-launch-at-mulki-railway-station-swr-and-konkan-railway-complete-the-project-gdp/articleshow-p716h84"/>
        </item>
        <item>
            <title><![CDATA[ಲಕ್ಷ್ಮೀ ಹೆಬ್ಬಾಳ್ಕರ್​ಗೆ ಪಂಗನಾಮ ಹಾಕಿದ ಬುರ್ಖಾಧಾರಿ ಮನವಿಗೆ ಸಿಗತ್ತಾ ಮನ್ನಣೆ? ಆದೇಶದ ಗತಿಯೇನು? ಬಿಸಿಬಿಸಿ ಚರ್ಚೆ]]></title>
            <link>https://kannada.asianetnews.com/gallery/karnataka-districts/will-muslim-woman-who-requested-lakshmi-hebbalkar-for-house-case-suc-pyrzgn4</link>
            <guid isPermaLink="true">https://kannada.asianetnews.com/gallery/karnataka-districts/will-muslim-woman-who-requested-lakshmi-hebbalkar-for-house-case-suc-pyrzgn4</guid>
            <pubDate>Tue, 19 May 2026 22:19:54 +0530</pubDate>
            <description><![CDATA[&lt;p&gt;ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ದ್ಯೋತಕವೆಂದು ಭಾವಿಸಿ ಹಿಂದೂ ವಿಧವೆಯೊಬ್ಬರಿಗೆ ಮನೆ ಕೊಡಿಸಲು ಬಂದ ಬುರ್ಖಾಧಾರಿ ಮಹಿಳೆಯರಿಗೆ ಸಹಾಯ ಮಾಡಲು ಮುಂದಾದರು. ಆದರೆ, ಆ ಬುರ್ಖಾಧಾರಿ ಮಹಿಳೆಯರಲ್ಲಿ ಒಬ್ಬರು ಆ ವಿಧವೆಯ ಮತಾಂತರಗೊಂಡ ಮಗಳೇ ಎಂಬ ಸತ್ಯ ಬಯಲಾಗಿದೆ, ಮುಂದೇನು?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks0j6t2ej363me05mvdqv1rq,imgname-lakshmi-hebbalkar-1779209300046.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ದ್ಯೋತಕವೆಂದು ಭಾವಿಸಿ ಹಿಂದೂ ವಿಧವೆಯೊಬ್ಬರಿಗೆ ಮನೆ ಕೊಡಿಸಲು ಬಂದ ಬುರ್ಖಾಧಾರಿ ಮಹಿಳೆಯರಿಗೆ ಸಹಾಯ ಮಾಡಲು ಮುಂದಾದರು. ಆದರೆ, ಆ ಬುರ್ಖಾಧಾರಿ ಮಹಿಳೆಯರಲ್ಲಿ ಒಬ್ಬರು ಆ ವಿಧವೆಯ ಮತಾಂತರಗೊಂಡ ಮಗಳೇ ಎಂಬ ಸತ್ಯ ಬಯಲಾಗಿದೆ, ಮುಂದೇನು?&lt;/p&gt;&lt;img&gt;&lt;p&gt;ಉಡುಪಿಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೇ ಪಂಗನಾಮ ಹಾಕಿರುವ ಘಟನೆ ಜಾಲತಾಣದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಸದ್ದು ಮಾಡುತ್ತಿದೆ. ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿಯಾದ ಗಿರಿಜಾ ಶೆಟ್ಟಿಗಾರ್ ಎಂಬ ಬಡ ವಿಧವೆ ಮಹಿಳೆಗೆ 1989 ರಲ್ಲೇ ನಿವೇಶನ ಮಂಜೂರಾಗಿದ್ದರೂ, ತಾಂತ್ರಿಕ ಅಡಚಣೆಗಳಿಂದಾಗಿ ಇಂದಿಗೂ ಮನೆ ಕಟ್ಟಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅವರಿಗೆ ಮನೆ ಕಟ್ಟಿಸಿಕೊಡಲು ನೆರವಾಗಿ ಎಂದು ಕಣ್ಣೀರು ಸುರಿಸುತ್ತಾ ಇಬ್ಬರು ಬುರ್ಖಾಧಾರಿಗಳು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬಳಿ ಬಂದಿದ್ದರು.&lt;/p&gt;&lt;img&gt;&lt;p&gt;ಹಿಂದೂ ಮಹಿಳೆಗೆ ನ್ಯಾಯ ಕೋರಿದ್ದ ಮುಸ್ಲಿಂ ಮಹಿಳೆಯರನ್ನು ನೋಡಿ ಸಚಿವೆ ಭಾವುಕರಾಗಿಬಿಟ್ಟರು. ಅಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲಾಯಿತು. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್​ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್​ ಅವರು, ಈ ಹೃದಯಸ್ಪರ್ಶಿ ಘಟನೆಯ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದರು.&lt;/p&gt;&lt;img&gt;&lt;p&gt;ಕೋಮು ಸೌಹಾರ್ದತೆಯೇ ನಮ್ಮ ಭಾರತದ ಅಸ್ತಿತ್ವ ಎಂಬ ಶೀರ್ಷಿಕೆ ಕೊಟ್ಟು ಕೋಮು ಸೌಹಾರ್ದತೆ ಬಗ್ಗೆ ಬಿಜೆಪಿಯವರಿಗೆ ಸಚಿವೆ ಪಾಠ ಮಾಡಿದರು. ಧರ್ಮಗಳ ಹೆಸರಿನಲ್ಲಿ ರಾಜಕೀಯ ಮಾಡುವವರು ಸಮಾಜದಲ್ಲಿ ಗೋಡೆಗಳನ್ನು ಕಟ್ಟುತ್ತಿದ್ದರೆ, ಇಂತಹ ಸಾಮಾನ್ಯ ಜನರೇ ನಮ್ಮ ದೇಶದ ನಿಜವಾದ ಸೌಹಾರ್ದತೆಯ ರಾಯಭಾರಿಗಳು. ಈ ಮುಸ್ಲಿಂ ಸಹೋದರಿಯರ ಕಾಳಜಿಯನ್ನು ಕಂಡು &ldquo;ಇದು ನೋಡಿ ನಮ್ಮ ಹೆಮ್ಮೆಯ ಭಾರತ&rdquo; ಎಂದು ನನಗೆ ಹೆಮ್ಮೆ ಎನಿಸಿತು ಎಂದರು.&lt;/p&gt;&lt;img&gt;&lt;p&gt;​ಬಡತನ ಮತ್ತು ಕಷ್ಟಗಳಿಗೆ ಯಾವುದೇ ಧರ್ಮವಿರುವುದಿಲ್ಲ, ಮಾನವೀಯತೆಯೊಂದೇ ಪರಮ ಧರ್ಮ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಷ್ಟದಲ್ಲಿರುವ ಆ ತಾಯಿಗೆ ಕಾನೂನುಬದ್ಧವಾಗಿ ಭೂಮಿಯ ವಾಸ್ತವ್ಯ ದೊರಕಿಸಿಕೊಟ್ಟು, ಮನೆ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ತಕ್ಷಣವೇ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಸಮಾಜದಲ್ಲಿ ದ್ವೇಷ ಬಿತ್ತುವವರು ಸಾಮಾನ್ಯ ಜನರ ಈ ಪ್ರೀತಿ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ನೋಡಿ ಕಲಿಯಬೇಕಿದೆ. ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವುದು ಮತ್ತು ಇಂತಹ ಸೌಹಾರ್ದತೆಯನ್ನು ಎತ್ತಿಹಿಡಿಯುವುದೇ ನಮ್ಮ ಸರ್ಕಾರದ ಮುಖ್ಯ ಆಶಯವಾಗಿದೆ ಎಂದರು.&lt;/p&gt;&lt;img&gt;&lt;p&gt;ಆದರೆ ಆಮೇಲೆ ಆಗಿದ್ದೇ ಬೇರೆ. ಬಿಜೆಪಿ ಮುಖಂಡರು ಈ ಮುಸ್ಲಿಂ ಮಹಿಳೆಯರ ಜಾತಕ ತೆರೆದಾಗ, ಅಲ್ಲಿಗೆ ಬಂದ ಹಿಂದೂ ಮಹಿಳೆಯ ಮತಾಂತರಗೊಂಡಿರುವ ಅಸಲಿ ಮಗಳೇ ಈ ಬುರ್ಖಾಧಾರಿ ಎಂದು ಗೊತ್ತಾಯಿತು. ಇದು ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಈವರೆಗೂ ಈ ಬಗ್ಗೆ ಸಚಿವೆ ರಿಯಾಕ್ಷನ್​ ಕೊಟ್ಟಂತಿಲ್ಲ.&lt;/p&gt;&lt;img&gt;&lt;p&gt;ಈಗ ಇದರ ನಡುವೆಯೇ, ಸೋಷಿಯಲ್​ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಇಂಥ ಸುದ್ದಿ ಸಿಕ್ಕರೆ ನೆಟ್ಟಿಗರು ಬಿಡ್ತಾರಾ? ಹಿಂದೂ ಮಹಿಳೆ ಅರ್ಥಾತ್​ ತನ್ನನ್ನು ಹುಟ್ಟಿಸಿದ ಅಮ್ಮನನ್ನೇ ನೆರೆಮನೆಯವಳು ಎಂದಿರುವ ಈ ಬುರ್ಖಾಧಾರಿ ಮಹಿಳೆಗೆ ಮನೆ ಸಿಗುತ್ತಾ? ಅಮ್ಮನಿಗೆ ಮನೆ ಕೊಟ್ಟರೆ ಅದು ಈ ಮಹಿಳೆಗೇ ಕೊಟ್ಟಂತೇ ಎನ್ನೋದು ನೆಟ್ಟಿಗರ ಅಭಿಮತ. ಏಕೆಂದ್ರೆ ಭೂಮಿಯ ವಾಸ್ತವ್ಯ ದೊರಕಿಸಿಕೊಟ್ಟು, ಮನೆ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವಂತೆ ಇದಾಗಲೇ ಡಿಸಿಗೆ ಆದೇಶ ಮಾಡಿರೋ ಸಚಿವೆ ಅದನ್ನು ವಾಪಸ್​ ತಗೋತಾರಾ, ಅಥವಾ ಮುಂದಿನ ಕ್ರಮ ಜರುಗಿಸುತ್ತಾರಾ ಎಂದು ಜನರು ಪ್ರಶ್ನಿಸುತ್ತಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Suchethana D</dc:creator>
            <atom:link href="https://kannada.asianetnews.com/gallery/karnataka-districts/will-muslim-woman-who-requested-lakshmi-hebbalkar-for-house-case-suc-pyrzgn4"/>
        </item>
        <item>
            <title><![CDATA[ಉಡುಪಿ ಗ್ರಾಪಂ ದೇಶಕ್ಕೇ ನಂಬರ್ ಒನ್, ಬಡತನರಹಿತ ವಿಭಾಗದಲ್ಲಿ ಮುದ್ರಾಡಿ ಗ್ರಾಪಂಗೆ ₹1 ಕೋಟಿಯ ಪ್ರಥಮ ಪ್ರಶಸ್ತಿ]]></title>
            <link>https://kannada.asianetnews.com/india-news/udupi-gram-panchayat-ranks-no-1-in-india-mudradi-gp-wins-first-prize-of-rs-1-crore-in-poverty-free-category-rav/articleshow-qi56zwr</link>
            <guid isPermaLink="true">https://kannada.asianetnews.com/india-news/udupi-gram-panchayat-ranks-no-1-in-india-mudradi-gp-wins-first-prize-of-rs-1-crore-in-poverty-free-category-rav/articleshow-qi56zwr</guid>
            <pubDate>Sun, 10 May 2026 06:07:42 +0530</pubDate>
            <description><![CDATA[&lt;p&gt;ಕೇಂದ್ರ ಪಂಚಾಯತ್ ರಾಜ್ ಸಚಿವಾಲಯವು 2025ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳನ್ನು ಘೋಷಿಸಿದ್ದು, 'ಬಡತನ ರಹಿತ ಮತ್ತು ವೃದ್ಧಿತ ಜೀವನೋಪಾಯ ಪಂಚಾಯಿತಿ' ವಿಭಾಗದಲ್ಲಿ ಉಡುಪಿ ಜಿಲ್ಲೆಯ ಮುದ್ರಾಡಿ ಗ್ರಾಮ ಪಂಚಾಯತ್ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr7mn5feyjgrvnqzqt8c5gcx,imgname-----------------------2026-05-10t055919.140-1778373006830.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನವದೆಹಲಿ (ಮೇ.10): &lt;/strong&gt;ಕೇಂದ್ರ ಪಂಚಾಯತ್ ರಾಜ್ ಸಚಿವಾಲಯವು 2025ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳನ್ನು ಘೋಷಿಸಿದ್ದು, &lsquo;ಬಡತನ ರಹಿತ ಮತ್ತು ವೃದ್ಧಿತ ಜೀವನೋಪಾಯ ಪಂಚಾಯಿತಿ&rsquo; ವಿಭಾಗದಲ್ಲಿ ಉಡುಪಿ ಜಿಲ್ಲೆಯ ಮುದ್ರಾಡಿ ಗ್ರಾಮ ಪಂಚಾಯತ್&zwnj;, ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ.&lt;/p&gt;&lt;p&gt;ರಾಜ್ಯದ ಒಟ್ಟಾರೆ 6 ಗ್ರಾ.ಪಂ.ಗಳು ವಿವಿಧ ವಿಭಾಗಗಳಲ್ಲಿ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿವೆ. ರಾಜ್ಯಕ್ಕೆ ಲಭಿಸಿದ 6 ಪ್ರಶಸ್ತಿಗಳ ಪೈಕಿ 5 ಪ್ರಶಸ್ತಿಗಳು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳಿಗೆ ಲಭಿಸಿವೆ. ಜೂನ್&zwnj; 3ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆಯ್ಕೆಯಾದ ಗ್ರಾ.ಪಂ.ಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.&lt;/p&gt;&lt;p&gt;ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ, &lsquo;ಬಡತನ ರಹಿತ ಮತ್ತು ವೃದ್ಧಿತ ಜೀವನೋಪಾಯ ಪಂಚಾಯಿತಿ&rsquo; ವಿಭಾಗದಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಅಪೂರ್ವ ಸಾಧನೆಗಾಗಿ ಪಂಚಾಯಿತಿಗೆ ಕೇಂದ್ರ ಸರ್ಕಾರದಿಂದ ಒಂದು ಕೋಟಿ ರುಪಾಯಿ ನಗದು ಬಹುಮಾನ ಘೋಷಿಸಲಾಗಿದೆ. ಆ ಮೂಲಕ ಮುದ್ರಾಡಿ, ಇಂದು ಭಾರತದ ಮಾದರಿ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.&lt;/p&gt;&lt;p&gt;ಈ ಮಧ್ಯೆ, ಆರೋಗ್ಯ ಮತ್ತು ಕಲ್ಯಾಣ ವಿಭಾಗದಲ್ಲಿ ಉಡುಪಿ ಜಿಲ್ಲೆಯ ವಂಡ್ಸೆ ಗ್ರಾಮ ಪಂಚಾಯಿತಿ ಹಾಗೂ ಮಕ್ಕಳ ಸ್ನೇಹಿ ಪಂಚಾಯಿತಿ ವಿಭಾಗದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಹಲನಾಯಕನಹಳ್ಳಿ ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ. ಸಮಗ್ರ ನೀರು ನಿರ್ವಹಣೆ ವಿಭಾಗದಲ್ಲಿ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದು, ಇವುಗಳಿಗೆ ತಲಾ ₹75 ಲಕ್ಷ ಬಹುಮಾನ ಘೋಷಿಸಲಾಗಿದೆ.&lt;/p&gt;&lt;p&gt;ಅಲ್ಲದೆ, ಸ್ವಾವಲಂಬಿ ಮೂಲಸೌಕರ್ಯ ಅಭಿವೃದ್ಧಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಸಾಣೂರು ಹಾಗೂ ಸಾಮಾಜಿಕ ನ್ಯಾಯ ವಿಭಾಗದಲ್ಲಿ ಉಡುಪಿ ಜಿಲ್ಲೆ ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯಿತಿಗಳು ದೇಶದಲ್ಲಿ ಮೂರನೇ ಸ್ಥಾನ ಪಡೆದು, ತಲಾ 50 ಲಕ್ಷ ರುಪಾಯಿ ಬಹುಮಾನ ಗಳಿಸಿವೆ. ಮುದ್ರಾಡಿ ಗ್ರಾಪಂ ಸಾಧನೆಯೇನು?:&lt;/p&gt;&lt;p&gt;ಮುದ್ರಾಡಿ ಪಂಚಾಯಿತಿ ಒಟ್ಟು 1,671 ಮನೆಗಳನ್ನು ಹೊಂದಿದ್ದು, ಸುಮಾರು 6,102 ಜನರಿಗೆ ಸಮರ್ಪಕ ಸೇವೆ ಒದಗಿಸುತ್ತಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿರುವ 1,046 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಏಳಿಗೆಗಾಗಿ ವಿಶೇಷ ಆದ್ಯತೆ ನೀಡಲಾಗಿದೆ.ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ಪಂಚಾಯಿತಿ, ಕಾಡು ಉತ್ಪನ್ನ ಆಧಾರಿತ ಜೀವನೋಪಾಯ, ನೀರಿನ ಸಂರಕ್ಷಣೆ, ಮಣ್ಣಿನ ಸುಧಾರಣೆ ಮತ್ತು ಹಸಿರು ಆರ್ಥಿಕತೆಯತ್ತ ಗ್ರಾಮಸ್ಥರನ್ನು ಪ್ರೇರೇಪಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದು, ಗ್ರಾಮೀಣ ಕುಟುಂಬಗಳಿಗೆ ನಿರಂತರ ಉದ್ಯೋಗ ಭದ್ರತೆ ಒದಗಿಸುವುದರ ಜೊತೆಗೆ ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೂ ಯೋಜನೆಯ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡಿದೆ. ಸಾಮಾಜಿಕ ಭದ್ರತಾ ಯೋಜನೆಗಳ ಶೇ.100ರಷ್ಟು ವ್ಯಾಪ್ತಿ ಸಾಧಿಸಿರುವುದು ಇಲ್ಲಿನ ಮತ್ತೊಂದು ಮೈಲಿಗಲ್ಲು. ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ನೆರವು ಸೇರಿದಂತೆ ಸರ್ಕಾರದ ಎಲ್ಲಾ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸಿದೆ.-----&lt;/p&gt;&lt;p&gt;ಪಂಚಾಯತಿಗಳ ಅಭಿವೃದ್ಧಿಯ ದೃಷ್ಟಿಕೋನ, ಸಿಬ್ಬಂದಿಗಳ ಕಾರ್ಯಕ್ಷಮತೆ ಹಾಗೂ ಎಲ್ಲರ ಸಹಕಾರದಿಂದ ಈ ಅಭಿವೃದ್ಧಿ ಸಾಧ್ಯವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.&lt;/p&gt;&lt;h2&gt;-ವಿ&zwnj;.ಸುನೀಲ್ ಕುಮಾರ್, ಶಾಸಕರು ಕಾರ್ಕಳ.&lt;/h2&gt;&lt;p&gt;ಬಡತನ ನಿರ್ಮೂಲನೆ, ಮಹಿಳಾ ಸಬಲೀಕರಣ, ಶಾಶ್ವತ ಉದ್ಯೋಗ ಸೃಷ್ಟಿ ಹಾಗೂ ಸಾಮಾಜಿಕ ಭದ್ರತೆಯನ್ನು ಸಮಗ್ರವಾಗಿ ಜಾರಿಗೊಳಿಸಿದ ಮುದ್ರಾಡಿ ಪಂಚಾಯಿತಿ, ಗ್ರಾಮೀಣಾಭಿವೃದ್ಧಿಯಲ್ಲಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ.&lt;/p&gt;&lt;p&gt;&lt;strong&gt;-ಸುಭಾಸ್, ಪಿಡಿಒ, ಮುದ್ರಾಡಿ.&lt;/strong&gt;&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/india-news/udupi-gram-panchayat-ranks-no-1-in-india-mudradi-gp-wins-first-prize-of-rs-1-crore-in-poverty-free-category-rav/articleshow-qi56zwr"/>
        </item>
        <item>
            <title><![CDATA[ಕುದುರೆಮುಖ ವನ್ಯಜೀವಿ ವಿಭಾಗದ ಕಾಡಿನಲ್ಲಿ ಗುಡ್ಡ ಕುಸಿತ, 2019ರ ದುರ್ಘಟನೆ ಮತ್ತೆ ನೆನಪು]]></title>
            <link>https://kannada.asianetnews.com/karnataka-districts/minor-landslide-hits-bandaje-forest-kudremukh-division-reopens-major-trekking-trails-with-strict-sops-gdp/articleshow-tkp7vgg</link>
            <guid isPermaLink="true">https://kannada.asianetnews.com/karnataka-districts/minor-landslide-hits-bandaje-forest-kudremukh-division-reopens-major-trekking-trails-with-strict-sops-gdp/articleshow-tkp7vgg</guid>
            <pubDate>Fri, 05 Jun 2026 16:30:41 +0530</pubDate>
            <description><![CDATA[ಬೆಳ್ತಂಗಡಿಯ ಬಂಡಾಜೆ ಕಾಡಿನಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಯಾವುದೇ ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಜೂನ್ 1 ರಿಂದ ಚಾರಣಕ್ಕೆ ಅಧಿಕೃತವಾಗಿ ಅವಕಾಶ ನೀಡಲಾಗಿದ್ದು, ಸುರಕ್ಷತಾ ಕ್ರಮಗಳೊಂದಿಗೆ ಆನ್&zwnj;ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktbpq4wdmt4dca4q47je5g5b,imgname-landslide-hits-bandaje-forest-kudremukh-1780656870285.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳ್ತಂಗಡಿ: &lt;/strong&gt;ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡ ಕುಸಿತ ಉಂಟಾಗಿದೆ. ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು, ಒಂದು ಕಿ.ಮೀ. ದೂರದಲ್ಲಿರುವ ಜನರು ಇದನ್ನು ಕಂಡಿದ್ದಾರೆ. ಈ ಅರಣ್ಯ ಪ್ರದೇಶದಲ್ಲಿ ಯಾವುದೇ ಜನ ವಾಸ್ತವ್ಯ ಇಲ್ಲ. 2019ರ ನೆರೆ ಸಂದರ್ಭದಲ್ಲಿ ಬಂಡಾಜೆ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವು ಅವಾಂತರ ಸಂಭವಿಸಿದ್ದವು. ಈ ನೆನಪು ಇನ್ನೂ ತಾಲೂಕಿನ ಜನರಲ್ಲಿ ಹಸಿರಾಗಿದೆ. ಪ್ರಸ್ತುತ ಅಂತಹ ದೊಡ್ಡ ಪ್ರಮಾಣದ ಕುಸಿತ ಉಂಟಾಗಿಲ್ಲ. ಬಂಡಾಜೆ ಅರಣ್ಯದಲ್ಲಿ ಇಂತಹ ಲಘು ಪ್ರಮಾಣದ ಕುಸಿತಗಳು ಮಳೆ ಸಂದರ್ಭದಲ್ಲಿ ಆಗಾಗ ನಡೆಯುತ್ತಿರುತ್ತವೆ. ಮಳೆಗಾಲ ಆರಂಭಕ್ಕೆ ಗುಡ್ಡ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವುದು ಸಾಮಾನ್ಯವಾಗಿದ್ದು, ಕೆಲವು ಲಘು ಪ್ರಮಾಣದ ಕುಸಿತಗಳು ಉಂಟಾಗುತ್ತವೆ. ಇದರಿಂದ ಯಾವುದೇ ಅಪಾಯಕಾರಿ ಸನ್ನಿವೇಶ ಉಂಟಾಗುವುದಿಲ್ಲ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.&lt;/p&gt;&lt;h2&gt;ಕುದುರೆಮುಖ ಚಾರಣಕ್ಕೆ ಅವಕಾಶ&lt;/h2&gt;&lt;p&gt;ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳ ಚಾರಣಕ್ಕೆ ಅರಣ್ಯ ಇಲಾಖೆ ಜೂ. 1ರಿಂದ ಅಧಿಕೃತ ಅನುಮತಿ ನೀಡಿದೆ.&lt;/p&gt;&lt;p&gt;ಅರಣ್ಯ ಇಲಾಖೆ ಪ್ರಕಟಣೆ ಪ್ರಕಾರ,ಈ ನಾಲ್ಕು ಪ್ರಮುಖ ಚಾರಣ ತಾಣಗಳಿಗೆ ಭೇಟಿ ನೀಡಲು ಬಯಸುವವರು ಕಡ್ಡಾಯವಾಗಿ &lsquo;ಅರಣ್ಯ ವಿಹಾರ&rsquo; ವೆಬ್&zwnj;ಸೈಟ್ ಮೂಲಕ ಆನ್&zwnj;ಲೈನ್&zwnj;ನಲ್ಲಿ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಪ್ರಮಾಣಿತ ಕಾರ್ಯವಿಧಾನ (ಎಸ್&zwnj;ಒಪಿ) ಅನುಸಾರ ಚಾರಣ ಚಟುವಟಿಕೆಗಳನ್ನು ನಡೆಸಲಾಗುತ್ತಿದ್ದು, ಪರಿಸರ ಸಂರಕ್ಷಣೆ ಹಾಗೂ ಚಾರಣಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.&lt;/p&gt;&lt;p&gt;ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್&zwnj;ಒ ಶುವರಾಮ್ ಬಾಬು ಅವರು ಮಾಹಿತಿ ನೀಡಿ, ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 300 ಮಂದಿ ಸ್ಥಳೀಯ ಗೈಡ್&zwnj;ಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಗೈಡ್&zwnj;ಗಳಿಗೆ ವಾಕಿಟಾಕಿ, ಪ್ರಥಮ ಚಿಕಿತ್ಸಾ ಕಿಟ್, ಸುರಕ್ಷತಾ ಜಾಕೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಕ್ಷಣ ನೆರವು ಒದಗಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.&lt;/p&gt;&lt;p&gt;ಚಾರಣದ ವೇಳೆ ಹಾದಿ ತಪ್ಪುವ ಸಾಧ್ಯತೆಯನ್ನು ಕಡಿಮೆಗೊಳಿಸಲು ಮಾರ್ಗದುದ್ದಕ್ಕೂ ಸೂಚನಾ ಫಲಕಗಳು, ದಿಕ್ಕು ಸೂಚಿಸುವ ಸೈನ್&zwnj;ಬೋರ್ಡ್&zwnj;ಗಳು ಹಾಗೂ ಸ್ಥಳದ ಮಾಹಿತಿ ಒಳಗೊಂಡ ಹ್ಯಾಂಡ್&zwnj;ಬುಕ್&zwnj;ಗಳನ್ನು ವ್ಯವಸ್ಥೆ ಮಾಡಲಾಗಿದೆ. ಚಾರಣಿಗರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/minor-landslide-hits-bandaje-forest-kudremukh-division-reopens-major-trekking-trails-with-strict-sops-gdp/articleshow-tkp7vgg"/>
        </item>
        <item>
            <title><![CDATA[ಕೊಲ್ಲೂರು ದೇಗುಲ; ಹುಂಡಿ ಎಣಿಕೆಯಲ್ಲಿ ಸರ್ವಕಾಲಿಕ ದಾಖಲೆ; ಹಣ, ಚಿನ್ನ, ಬೆಳ್ಳಿ ಅರ್ಪಣೆ]]></title>
            <link>https://kannada.asianetnews.com/gallery/karnataka-districts/udupi-kollur-monthly-hundi-counting-function-of-sri-mookambika-temple-rs-19444173-collection-mrq-vubp4hk</link>
            <guid isPermaLink="true">https://kannada.asianetnews.com/gallery/karnataka-districts/udupi-kollur-monthly-hundi-counting-function-of-sri-mookambika-temple-rs-19444173-collection-mrq-vubp4hk</guid>
            <pubDate>Wed, 27 May 2026 08:34:51 +0530</pubDate>
            <description><![CDATA[&lt;p&gt;ನಾಡಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮೇ ತಿಂಗಳ ಹುಂಡಿ ಎಣಿಕೆಯಲ್ಲಿ ಸರ್ವಕಾಲಿಕ ದಾಖಲೆ ಕಾಣಿಕೆ ಸಂಗ್ರಹವಾಗಿದೆ. ನಗದು ಜೊತೆಗೆ, ಭಕ್ತರು ಚಿನ್ನ ಮತ್ತು ಬೆಳ್ಳಿಯನ್ನು ಸಹ ಅರ್ಪಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksknqd7kcf8p6wyqvr4pym9h,imgname-kollur--1--1779850523891.jpg" type="image/jpeg" height="390" width="690"/>
            <content:encoded><![CDATA[&lt;p&gt;ನಾಡಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮೇ ತಿಂಗಳ ಹುಂಡಿ ಎಣಿಕೆಯಲ್ಲಿ ಸರ್ವಕಾಲಿಕ ದಾಖಲೆ ಕಾಣಿಕೆ ಸಂಗ್ರಹವಾಗಿದೆ. ನಗದು ಜೊತೆಗೆ, ಭಕ್ತರು ಚಿನ್ನ ಮತ್ತು ಬೆಳ್ಳಿಯನ್ನು ಸಹ ಅರ್ಪಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಉಡುಪಿ: ನಾಡಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ತಿಂಗಳ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆಯಿತು. ದೇವಸ್ಥಾನದ 41 ಹುಂಡಿಗಳನ್ನು ತೆರೆಯಲಾಗಿದ್ದು, ಮೇ ತಿಂಗಳಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.&lt;/p&gt;&lt;img&gt;&lt;p&gt;ದೇವಸ್ಥಾನ ಮೂಲಗಳ ಪ್ರಕಾರ, ಹುಂಡಿಗಳಲ್ಲಿ ಒಟ್ಟು 1,90,43,819 ರು. ನಗದು ಲಭಿಸಿದೆ. ಇತರೆ ಕಾಣಿಕೆಗಳು ಸೇರಿ ಒಟ್ಟು 1,94,44,173 ರು. ಸಂಗ್ರಹವಾಗಿದ್ದು, ಇದು ಇದುವರೆಗಿನ ಸರ್ವಾಧಿಕ ದಾಖಲೆ ಮೊತ್ತವಾಗಿದೆ. ಇದಲ್ಲದೆ ಭಕ್ತರು ಕಾಣಿಕೆಯಾಗಿ ಸಲ್ಲಿಸಿದ್ದ 0.325 ಗ್ರಾಂ ಚಿನ್ನ ಹಾಗೂ 2.370 ಕೆ.ಜಿ ಬೆಳ್ಳಿಯೂ ಲಭ್ಯವಾಗಿದೆ.&lt;/p&gt;&lt;img&gt;&lt;p&gt;ಪ್ರತಿ ತಿಂಗಳು ಸರಾಸರಿ 1.25 ಕೋಟಿ ರು.ಗಳಷ್ಟು ಕಾಣಿಕೆ ಸಂಗ್ರಹವಾಗುತಿತ್ತು, ಆದರೇ ಈ ತಿಂಗಳಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಅಧಿಕಾರಿಗಳ ಸಮ್ಮುಖದಲ್ಲಿ ಭದ್ರತಾ ಕ್ರಮಗಳೊಂದಿಗೆ ನಡೆಯಿತು. ಈ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಲ್ಲದೆ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಕಾಣಿಕೆ ಸಂಗ್ರಹದಲ್ಲೂ ನಿರಂತರ ಏರಿಕೆ ಕಂಡುಬರುತ್ತಿದೆ.&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/udupi-kollur-monthly-hundi-counting-function-of-sri-mookambika-temple-rs-19444173-collection-mrq-vubp4hk"/>
        </item>
        <item>
            <title><![CDATA[ಕರಾವಳಿಗೆ ಖುಷಿ, ಸೂರತ್-ಮಂಗಳೂರು ಸ್ಪೆಷಲ್ ರೈಲು ಶಾಶ್ವತ  ಸೇವೆಗೆ ಪರಿವರ್ತಿಸಿದ ರೈಲ್ವೆ ಇಲಾಖೆ, ಗೋವಾ ಈಗ ಹತ್ತಿರ!]]></title>
            <link>https://kannada.asianetnews.com/karnataka-districts/western-railway-regularizes-surat-mangaluru-special-into-permanent-bi-weekly-express-train-check-route-and-timings-gdp/articleshow-x0fhv66</link>
            <guid isPermaLink="true">https://kannada.asianetnews.com/karnataka-districts/western-railway-regularizes-surat-mangaluru-special-into-permanent-bi-weekly-express-train-check-route-and-timings-gdp/articleshow-x0fhv66</guid>
            <pubDate>Tue, 02 Jun 2026 17:31:21 +0530</pubDate>
            <description><![CDATA[ಪಶ್ಚಿಮ ರೈಲ್ವೆಯು ಸೂರತ್ ಮತ್ತು ಮಂಗಳೂರು ನಡುವಿನ ವಿಶೇಷ ಎಕ್ಸ್&zwnj;ಪ್ರೆಸ್ ರೈಲನ್ನು ಶಾಶ್ವತ ವಾರಕ್ಕೆ ಎರಡು ಬಾರಿಯ ಸೇವೆಗೆ ಪರಿವರ್ತಿಸಿದೆ. ಜೂನ್ 2026 ರಿಂದ ನಿಯಮಿತ ಸಂಚಾರ ಆರಂಭಿಸಲಿರುವ ಈ ರೈಲು, ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಕರಾವಳಿ ಭಾಗದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01gxacphd5f0g2e36jgxnae9tb,imgname-otpz5z75-1680754820517.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು:&lt;/strong&gt; ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಕರಾವಳಿ ಭಾಗದ ನಡುವೆ ಸಂಚರಿಸುವ ರೈಲ್ವೆ ಪ್ರಯಾಣಿಕರಿಗೆ ಪಶ್ಚಿಮ ರೈಲ್ವೆಯು (Western Railway) ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ದೀರ್ಘಕಾಲದಿಂದ ಇದ್ದ ಪ್ರಯಾಣಿಕರ ಅತಿಯಾದ ಬೇಡಿಕೆಯನ್ನು ಪರಿಗಣಿಸಿ, ಸೂರತ್ ಮತ್ತು ಮಂಗಳೂರು ನಡುವೆ ಸಂಚರಿಸುತ್ತಿದ್ದ &quot;ವಿಶೇಷ ಎಕ್ಸ್&zwnj;ಪ್ರೆಸ್&quot; ರೈಲನ್ನು ಇನ್ಮುಂದೆ ಶಾಶ್ವತ ವಾರಕ್ಕೆ ಎರಡು ಬಾರಿಯ (Bi-weekly) ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನಾಗಿ ಪರಿವರ್ತಿಸಲು ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.&lt;/p&gt;&lt;p&gt;ಇದುವರೆಗೆ ಕೇವಲ ರಜೆ ಹಾಗೂ ಹಬ್ಬದ ದಿನಗಳ ವಿಶೇಷ ರೈಲಾಗಿ ಓಡುತ್ತಿದ್ದ ಈ ಸೇವೆಯನ್ನು ಈಗ ರದ್ದುಗೊಳಿಸುವ ಬದಲು ಕಾಯಂ ಗೊಳಿಸಲಾಗಿದ್ದು, ಜೂನ್ 3, 2026 ರಿಂದ ಈ ರೈಲು ತನ್ನ ನಿಯಮಿತ ಹಾಗೂ ನಿಗದಿತ ವೇಳಾಪಟ್ಟಿಯೊಂದಿಗೆ ಹಳಿಗಳ ಮೇಲೆ ಓಡಲು ಪ್ರಾರಂಭಿಸಲಿದೆ. ಇದು ನಾಲ್ಕು ರಾಜ್ಯಗಳ ನಡುವಿನ ಕನೆಕ್ಟಿವಿಟಿಯನ್ನು ಮತ್ತಷ್ಟು ಬಲಪಡಿಸಲಿದೆ.&lt;/p&gt;&lt;h2&gt;ರೈಲು ಸಂಚಾರದ ದಿನಗಳು ಮತ್ತು ವೇಳಾಪಟ್ಟಿ (Train Timings &amp;amp; Schedule)&lt;/h2&gt;&lt;p&gt;ಈ ರೈಲು ಇನ್ಮುಂದೆ ಎರಡೂ ದಿಕ್ಕುಗಳಿಂದ ವಾರಕ್ಕೆ ಎರಡು ದಿನಗಳ ಕಾಲ ನಿಯಮಿತವಾಗಿ ಸಂಚರಿಸಲಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ:&lt;/p&gt;&lt;p&gt;&lt;strong&gt;ಸೂರತ್&zwnj;ನಿಂದ ಮಂಗಳೂರಿಗೆ (ರೈಲು ಸಂಖ್ಯೆ: 19057) &lt;/strong&gt;ನಿಯಮಿತ ಸೇವೆ ಜೂನ್ 03, 2026 ರಿಂದ ಆರಂಭವಾಗಿದೆ. ಈ ರೈಲು ಪ್ರತಿ ವಾರದ ಬುಧವಾರ ಮತ್ತು ಭಾನುವಾರ ಸೂರತ್&zwnj;ನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ಮಂಗಳೂರಿನಿಂದ ಸೂರತ್&zwnj;ಗೆ (ರೈಲು ಸಂಖ್ಯೆ: 19058) &lt;/strong&gt;ಹಿಂತಿರುಗುವ ಪ್ರಯಾಣವು ಜೂನ್ 04, 2026 ರಿಂದ ಆರಂಭವಾಗಿದೆ. ಈ ರೈಲು ಪ್ರತಿ ವಾರದ ಗುರುವಾರ ಮತ್ತು ಸೋಮವಾರ ಮಂಗಳೂರಿನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ಕೊಂಕಣ ರೈಲ್ವೆ ಮಾರ್ಗದ ಪ್ರಮುಖ ನಿಲ್ದಾಣಗಳು (Stoppages &amp;amp; Route)&lt;/strong&gt;&lt;/p&gt;&lt;p&gt;ಈ ಎಕ್ಸ್&zwnj;ಪ್ರೆಸ್ ರೈಲು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದ ಪ್ರಸಿದ್ಧ ವಾಣಿಜ್ಯ, ಪ್ರವಾಸಿ ಮತ್ತು ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುತ್ತಾ ಸಾಗಲಿದ್ದು, ಪ್ರಮುಖ ನಿಲುಗಡೆಗಳ ಪಟ್ಟಿ ಈ ಕೆಳಗಿನಂತಿದೆ:&lt;/p&gt;&lt;p&gt;ಗುಜರಾತ್ ಮತ್ತು ಮಹಾರಾಷ್ಟ್ರ ಭಾಗ: ಸೂರತ್, ಉದ್ನಾ, ವಲ್ಸಾದ್, ವಾಪಿ, ಪಾಲ್ಘರ್, ವಸಾಯಿ ರಸ್ತೆ, ಭಿವಂಡಿ ರಸ್ತೆ, ಪನ್ವೇಲ್, ಪೆನ್, ರೋಹಾ, ಮಂಗಾಂವ್, ಖೇಡ್, ಚಿಪ್ಲುನ್, ಸವಾರ್ದಾ, ಸಂಗಮೇಶ್ವರ ರಸ್ತೆ, ರತ್ನಗಿರಿ, ರಾಜಾಪುರ ರಸ್ತೆ, ವೈಭವ್ವಾಡಿ ರಸ್ತೆ, ಕಂಕವ್ಲಿ, ಕುಡಾಲ್, ಸಾವಂತವಾಡಿ ರಸ್ತೆ.&lt;/p&gt;&lt;p&gt;&lt;strong&gt;ಗೋವಾ ಮತ್ತು ಉತ್ತರ ಕನ್ನಡ ಭಾಗ: &lt;/strong&gt;ಕರ್ಮಾಲಿ, ಥಿವಿಮ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರ್ಡೇಶ್ವರ, ಭಟ್ಕಳ.&lt;/p&gt;&lt;p&gt;&lt;strong&gt;ಉಡುಪಿ ಮತ್ತು ಮಂಗಳೂರು ಭಾಗ: &lt;/strong&gt;ಮೂಕಾಂಬಿಕಾ ರಸ್ತೆ ಬೈಂದೂರು (ಕೊಲ್ಲೂರು ಭಕ್ತರಿಗೆ ಅನುಕೂಲ), ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್ ಮತ್ತು ಮಂಗಳೂರು.&lt;/p&gt;&lt;h2&gt;ಪ್ರಯಾಣಿಕರಿಗೆ ಸಿಗಲಿರುವ ದೊಡ್ಡ ರಿಲೀಫ್ ಏನು?&lt;/h2&gt;&lt;p&gt;&lt;strong&gt;ವಿಶೇಷ ರೈಲುಗಳ ಮೇಲಿನ ಅವಲಂಬನೆ ಮುಕ್ತಿ:&lt;/strong&gt; ಇದುವರೆಗೆ ಹಬ್ಬ ಅಥವಾ ಬೇಸಿಗೆ ರಜೆಯ ಸಂದರ್ಭದಲ್ಲಿ ಮಾತ್ರ ಘೋಷಣೆಯಾಗುತ್ತಿದ್ದ ವಿಶೇಷ ರೈಲುಗಳಿಗಾಗಿ ಪ್ರಯಾಣಿಕರು ಕಾಯಬೇಕಾಗುತ್ತಿತ್ತು. ಆದರೆ ಈಗ ಇದು ಕಾಯಂ ಆಗಿರುವುದರಿಂದ ಸಾರ್ವಜನಿಕರು ಹಲವು ತಿಂಗಳುಗಳ ಮುಂಚಿತವಾಗಿಯೇ ತಮ್ಮ ಪ್ರಯಾಣವನ್ನು ವ್ಯವಸ್ಥಿತವಾಗಿ ಪ್ಲಾನ್ ಮಾಡಿಕೊಳ್ಳಬಹುದು.&lt;/p&gt;&lt;p&gt;&lt;strong&gt;ಜನದಟ್ಟಣೆಗೆ ಬ್ರೇಕ್: &lt;/strong&gt;ಮುಂಬೈ ಮತ್ತು ಗೋವಾ ಮಾರ್ಗವಾಗಿ ಮಂಗಳೂರಿಗೆ ಬರುವ ಇತರ ರೈಲುಗಳಲ್ಲಿ ಸದಾ ಕಾಲ ಇರುವ ಭಾರಿ ವೇಟಿಂಗ್ ಲಿಸ್ಟ್ ಸಮಸ್ಯೆಗೆ ಈ ರೈಲು ದೊಡ್ಡ ಪರಿಹಾರ ನೀಡಲಿದೆ. ಅಲ್ಲದೆ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರಾವಳಿ ಮೂಲದ ಉದ್ಯಮಿಗಳಿಗೆ, ಉದ್ಯೋಗಿಗಳಿಗೆ ಮತ್ತು ಕೊಲ್ಲೂರು, ಮುರ್ಡೇಶ್ವರ, ಗೋಕರ್ಣಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಇದು ಅತ್ಯಂತ ಆರಾಮದಾಯಕ ಹಾಗೂ ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯಾಗಲಿದೆ.&lt;/p&gt;&lt;p&gt;ಈ ಮಾರ್ಗದ ಟಿಕೆಟ್ ಬುಕ್ಕಿಂಗ್ ಶೀಘ್ರದಲ್ಲೇ ರೈಲ್ವೆ ಕೌಂಟರ್ ಹಾಗೂ ಐಆರ್&zwnj;ಸಿಟಿಸಿ (IRCTC) ವೆಬ್&zwnj;ಸೈಟ್&zwnj;ನಲ್ಲಿ ಲಭ್ಯವಾಗಲಿದ್ದು, ಪ್ರಯಾಣಿಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/western-railway-regularizes-surat-mangaluru-special-into-permanent-bi-weekly-express-train-check-route-and-timings-gdp/articleshow-x0fhv66"/>
        </item>
        <item>
            <title><![CDATA[3 ವರ್ಷದ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ]]></title>
            <link>https://kannada.asianetnews.com/karnataka-districts/mp-kota-srinivas-poojary-slams-siddaramaiah-government-gvd/articleshow-yacowq3</link>
            <guid isPermaLink="true">https://kannada.asianetnews.com/karnataka-districts/mp-kota-srinivas-poojary-slams-siddaramaiah-government-gvd/articleshow-yacowq3</guid>
            <pubDate>Mon, 25 May 2026 00:26:49 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಮೂರು ವರ್ಷ ನಡೆಸಿದ ಆಡಳಿತ, ರಾಜ್ಯದ ಜನತೆಯ ಹಿತರಕ್ಷಣೆಯಲ್ಲಿ ಪೂರ್ಣ ವಿಫಲವಾಗಿದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಪಾದಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g2cjx1e241b7s3nvkyk8x1pv,imgname-kota-srinivas-poojary.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಮೇ.25): &lt;/strong&gt;ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಮೂರು ವರ್ಷ ನಡೆಸಿದ ಆಡಳಿತ, ರಾಜ್ಯದ ಜನತೆಯ ಹಿತರಕ್ಷಣೆಯಲ್ಲಿ ಪೂರ್ಣ ವಿಫಲವಾಗಿದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಚರಂಡಿ, ಆರೋಗ್ಯ, ಆರ್ಥಿಕ, ಕಾನೂನು ಸುವ್ಯವಸ್ಥೆಗಳಲ್ಲಿ ಸಿದ್ದರಾಮಯ್ಯನವರ ಆಡಳಿತ ಸಂಪೂರ್ಣ ಹದಗೆಟ್ಟು ಹೋಗಿದೆ.&lt;/p&gt;&lt;p&gt;ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರದಿಂದ ರಾಜ್ಯದ 1 ಕೋಟಿ ಮೀರಿದ ಸರ್ಕಾರಿ ಬಸ್ ಪ್ರಯಾಣಿಕರು ಗೊಂದಲದಲ್ಲಿದ್ದಾರೆ. ಸಾಲದ್ದಕ್ಕೆ ನೌಕರರಿಗೆ ಕಳೆದ 30 ತಿಂಗಳುಗಳಿಂದ ಸಂಬಳವನ್ನೇ ಸರ್ಕಾರ ಕೊಟ್ಟಿಲ್ಲ ಎಂದರೆ ಆ ಬಡವರ ಸಂಕಷ್ಟ ಕೇಳುವವರಾರು. ಒಂದೆಡೆ ಪ್ರಯಾಣಿಕರಿಗೆ ಬಸ್ಸಿಲ್ಲ, ಮತ್ತೊಂದೆಡೆ ಸಿಬ್ಬಂದಿಗಳಿಗೆ ಸಂಬಳವಿಲ್ಲ, ಅಂದರೆ ಯಾರ ಸಾಧನೆ, ಯಾವ ಸಾಧನೆ ಎಂದು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.&lt;/p&gt;&lt;p&gt;ವಿದ್ಯುತ್ ದರ ಏರಿಕೆ, ಇ.ವಿ ವಾಹನಗಳಿಗೆ ರಾಜ್ಯದ ಮೂಲಕ ತೆರಿಗೆ ಹೇರಿಕೆ, ವಾಹನ ತೆರಿಗೆ, ನೋಂದಾವಣೆ ಶುಲ್ಕ ಏರಿಕೆ, ರೈತರ ಆರ್.ಟಿ.ಸಿ.ಗೂ ಶುಲ್ಕ ಹೆಚ್ಚಳ, ಒಟ್ಟಾರೆ, ಹಾಲಿನಿಂದ ಆಲ್ಕೋಹಾಲ್ ವರೆಗೆ ಸಿದ್ದರಾಮಯ್ಯನವರ ಸರ್ಕಾರ ಹಾಕಿದ ಬೆಲೆ ಏರಿಕೆಯ ಬರೆಯಿಂದ ರಾಜ್ಯದ ಜನತೆ ಕಂಗಲಾಗಿದ್ದಾರೆ ಎಂದು ಕೋಟ ಆಪಾದಿಸಿದ್ದಾರೆ.&lt;/p&gt;&lt;p&gt;ಕೇಂದ್ರ ಸರ್ಕಾರ ಕೊಡುವ 15 ನೇ ಹಣಕಾಸು ಪಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಪಂಚಾಯತ್ ರಾಜ್ ಚುನಾವಣೆಯನ್ನು ನಡೆಸದೆ ರಾಜ್ಯ ಕೇಂದ್ರದ ಆರ್ಥಿಕ ನೆರವು ಕೈಯಾರೆ ಕಳೆದುಕೊಂಡಿತು ಎಸ್ಸಿ - ಎಸ್ಟಿ ಮೀಸಲು 60,000 ಕೋಟಿ ರು.ಗಳನ್ನು ಸಿದ್ದರಾಮಯ್ಯನವರ ಸರ್ಕಾರ ಅನ್ಯ ಕಾರ್ಯಕ್ಕೆ ಬಳಸಿ ಆಪಾದನೆಗೆ ಗುರಿಯಾಯಿತು ಎಂದು ಕೋಟ ವಿವರಿಸಿದ್ದಾರೆ.&lt;/p&gt;&lt;p&gt;&lt;strong&gt;ಮನೆ ಮಂಜೂರಿಲ್ಲ&lt;/strong&gt;&lt;/p&gt;&lt;p&gt;ಸಿದ್ದರಾಮಯ್ಯ ಸರ್ಕಾರ ಬಸವ ವಸತಿಯೂ ಸೇರಿದಂತೆ ಬಡವರಿಗೆ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ, ಮಾತ್ರವಲ್ಲ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಸತಿ ಯೋಜನೆಯೂ ಅನುಷ್ಟಾನ ಮಾಡುತ್ತಿಲ್ಲ ಎಂದ ಮೇಲೆ ಯಾವ ಸಾಧನೆ ಎಂದು ಮುಖ್ಯಮಂತ್ರಿಗಳು ವಿವರಿಸಬೇಕೆಂದು ಕೋಟ ಆಗ್ರಹಿಸಿದರು.&lt;/p&gt;&lt;h2&gt;&lt;strong&gt;ಕೇಂದ್ರದ ಅಕ್ಕಿ&lt;/strong&gt;&lt;/h2&gt;&lt;p&gt;ಅನ್ನಭಾಗ್ಯ ನಾವು ಕೊಟ್ಟೆವು ಎಂದು ಹೇಳಿದ್ದು ಬಿಟ್ಟರೆ ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿಯನ್ನು ತನ್ನ ಬೊಕ್ಕಸದಿಂದ ಬಡವರಿಗೆ ಹಂಚುತ್ತಿಲ್ಲ. ಕೇಂದ್ರ ಸರ್ಕಾರ ನೀಡಿದ ಉಚಿತ ಅಕ್ಕಿ ಬಿಟ್ಟರೆ ಸಿದ್ದರಾಮಯ್ಯ ರಾಜ್ಯ ಸರ್ಕಾರದಿಂದ ಅಕ್ಕಿ ಬಿಡುಗಡೆಯೇ ಮಾಡಿಲ್ಲ ಎಂದು ಸಂಸದ ಕೋಟ ದೂರಿದ್ದಾರೆ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆಗಲಿ ಇಎಸ್&zwnj;ಐ ಯಾಗಲಿ ರಾಜ್ಯದಲ್ಲಿ ಅನುಷ್ಠಾನವಾಗದೆ ಬಡವರಿಗೆ ತೊಂದರೆಯಾಗುತ್ತಿದೆ ಎಂದು ವಿವರಿಸಿದ ಕೋಟ ಸಿದ್ದರಾಮಯ್ಯನವರು 3 ವರ್ಷ ಅಧಿಕಾರ ನಡೆಸಿದ್ದೇ ಸಾಧನೆ ಎನ್ನುವುದಾದರೆ ಯಾರ ಆಕ್ಷೇಪವೂ ಇಲ್ಲ. ಆದರದು ಜನಪರ ಸರ್ಕಾರದ ಆಡಳಿತವಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-kota-srinivas-poojary-slams-siddaramaiah-government-gvd/articleshow-yacowq3"/>
        </item>
        <item>
            <title><![CDATA[ಉಡುಪಿ: ಶ್ರೀಕೃಷ್ಣನ ಸನ್ನಿಧಿಯಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ಹರಿಪ್ರಿಯಾ-ವಸಿಷ್ಠ ಸಿಂಹ ಜೋಡಿ]]></title>
            <link>https://kannada.asianetnews.com/karnataka-districts/vasishta-simha-hariprriya-udupi-krishna-temple-visit-son-harake-nelabhojana-san/articleshow-yeco9u4</link>
            <guid isPermaLink="true">https://kannada.asianetnews.com/karnataka-districts/vasishta-simha-hariprriya-udupi-krishna-temple-visit-son-harake-nelabhojana-san/articleshow-yeco9u4</guid>
            <pubDate>Sun, 31 May 2026 16:41:22 +0530</pubDate>
            <description><![CDATA[ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ತಮ್ಮ ಪುತ್ರನೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಮಗು ಜನಿಸಿದ್ದಕ್ಕಾಗಿ ಹೊತ್ತಿದ್ದ 'ನೆಲಭೋಜನ' ಹರಕೆಯನ್ನು ಅವರು ಸಾಮಾನ್ಯ ಭಕ್ತರಂತೆ ಸರಳವಾಗಿ ಪೂರೈಸಿದ್ದು, ಅವರ ಈ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksyvg7p55frtr63rcac8r13f,imgname-udupi-1780225679045.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಮೇ.31): &lt;/strong&gt;ಸ್ಯಾಂಡಲ್&zwnj;ವುಡ್&zwnj;ನ ಪ್ರಸಿದ್ಧ ತಾರಾ ದಂಪತಿಗಳಾದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರು ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ತಮ್ಮ ವಿಶೇಷ ಹರಕೆಯನ್ನು ಭಕ್ತಿಯಿಂದ ತೀರಿಸಿದ್ದಾರೆ. ಸುಮಾರು ಒಂದೂವರೆ ವರ್ಷದ ಹಿಂದೆ ತಾವು ಹೊತ್ತುಕೊಂಡಿದ್ದ ಹರಕೆಯ ಪ್ರಕಾರ, ಈ ಸ್ಟಾರ್ ದಂಪತಿಗಳು ತಮ್ಮ ಪುಟ್ಟ ಮಗನೊಂದಿಗೆ ಮಠದಲ್ಲಿ ಜನಸಾಮಾನ್ಯರಂತೆ ನೆಲದ ಮೇಲೆ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಸರಳತೆ ಮೆರೆದಿದ್ದಾರೆ.&lt;/p&gt;&lt;p&gt;ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿಗಳಿಗೆ ಒಂದೂವರೆ ವರ್ಷದ ಹಿಂದೆ ಮಗು ಜನಿಸಿತ್ತು. ತಮಗೆ ಮಗು ಹುಟ್ಟಿದರೆ ಉಡುಪಿಯ ಶ್ರೀ ಕೃಷ್ಣನ ಸನ್ನಿಧಿಯಲ್ಲಿ &lsquo;ನೆಲಭೋಜನ&rsquo; (ನೆಲದ ಮೇಲೆ ಕುಳಿತು ಅನ್ನಪ್ರಸಾದ ಸ್ವೀಕರಿಸುವುದು) ಮಾಡುವುದಾಗಿ ದಂಪತಿಗಳು ವಿಶೇಷ ಹರಕೆ ಕಟ್ಟಿಕೊಂಡಿದ್ದರು. ಅದರಂತೆಯೇ, ಈಗ ತಮ್ಮ ಮುದ್ದಾದ ಮಗನಿಗೆ ಮೊದಲ ಬಾರಿಗೆ ಉಡುಪಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ (ಆಂಜನೇಯ) ಭವ್ಯ ದರ್ಶನ ಮಾಡಿಸಿ, ಹರಕೆ ತೀರಿಸಿ ದಂಪತಿಗಳು ಅಪಾರ ಹರ್ಷ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಪರ್ಯಾಯ ಶ್ರೀಗಳ ಆಶೀರ್ವಾದ ಹಾಗೂ ಮಠದಲ್ಲಿ ಭೋಜನ&lt;/strong&gt;&lt;/h2&gt;&lt;p&gt;ಮಗನೊಂದಿಗೆ ದೇವರ ದರ್ಶನ ಪಡೆದ ಬಳಿಕ ವಸಿಷ್ಠ ಸಿಂಹ ದಂಪತಿಗಳು ಪ್ರಸ್ತುತ ಉಡುಪಿ ಕೃಷ್ಣ ಮಠದ ಪರ್ಯಾಯ ಪೀಠ ಅಲಂಕರಿಸಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀಗಳ ಭೇಟಿಯ ನಂತರ ಮುಖ್ಯಪ್ರಾಣನ ಸನ್ನಿಧಿಯ ಭೋಜನ ಶಾಲೆಯಲ್ಲಿ ಹರಕೆಯಂತೆ ಜನಸಾಮಾನ್ಯ ಭಕ್ತಾದಿಗಳ ಜೊತೆಯಲ್ಲೇ ಸಾಲಿನಲ್ಲಿ ಕುಳಿತು ನೆಲಭೋಜನದ ಅನ್ನಪ್ರಸಾದವನ್ನು ಅತ್ಯಂತ ಶ್ರದ್ಧೆಯಿಂದ ಸ್ವೀಕರಿಸಿದರು.&lt;/p&gt;&lt;p&gt;ಯಾವುದೇ ಸ್ಟಾರ್ ಗಿಮಿಕ್ ಅಥವಾ ಹಮ್ಮು-ಬಿಮ್ಮು ಇಲ್ಲದೆ, ಮಠದ ನಿಯಮದಂತೆ ಸಾಧಾರಣ ಭಕ್ತರಂತೆ ನೆಲದ ಮೇಲೆ ಕುಳಿತು ಊಟ ಮಾಡಿದ ತಾರಾ ದಂಪತಿಗಳ ಸರಳತೆಗೆ ಮಠಕ್ಕೆ ಬಂದಿದ್ದ ಇತರೆ ಭಕ್ತರು ಹಾಗೂ ಅಭಿಮಾನಿಗಳು ಮನಸೋತಿದ್ದಾರೆ. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>udupi</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/vasishta-simha-hariprriya-udupi-krishna-temple-visit-son-harake-nelabhojana-san/articleshow-yeco9u4"/>
        </item>
        <item>
            <title><![CDATA[ಡೀಮ್ಡ್ ಅರಣ್ಯ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಬದ್ಧ: ಸಚಿವ ಈಶ್ವರ್ ಖಂಡ್ರೆ ಭರವಸೆ]]></title>
            <link>https://kannada.asianetnews.com/karnataka-districts/minister-eshwar-khandre-on-deemed-forest-karnataka-gvd/articleshow-zp0l5dn</link>
            <guid isPermaLink="true">https://kannada.asianetnews.com/karnataka-districts/minister-eshwar-khandre-on-deemed-forest-karnataka-gvd/articleshow-zp0l5dn</guid>
            <pubDate>Mon, 25 May 2026 22:50:04 +0530</pubDate>
            <description><![CDATA[&lt;p&gt;ಅರಣ್ಯ ಪ್ರದೇಶವು ಮೀಸಲು ಅರಣ್ಯ, ವನ್ಯಜೀವಿ ಧಾಮಗಳು, ರಾಷ್ಟ್ರೀಯ ಉದ್ಯಾನಗಳು ಮತ್ತು ನದಿ ಮೂಲಗಳ ಮೂಲಕ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hn609mh069pn8afcxvh5rps5,imgname-ddbfb.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರ್ಕಳ (ಮೇ.25): &lt;/strong&gt;ಪಶ್ಚಿಮ ಘಟ್ಟದ ಒಟ್ಟು ಭೌಗೋಳಿಕ ವ್ಯಾಪ್ತಿಯ ಪೈಕಿ ಶೇ. 83ರಷ್ಟು ಅರಣ್ಯ ಪ್ರದೇಶವು ಮೀಸಲು ಅರಣ್ಯ, ವನ್ಯಜೀವಿ ಧಾಮಗಳು, ರಾಷ್ಟ್ರೀಯ ಉದ್ಯಾನಗಳು ಮತ್ತು ನದಿ ಮೂಲಗಳ ಮೂಲಕ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ (ಕುದುರೆಮುಖ ವನ್ಯಜೀವಿ ಉಪವಿಭಾಗ) ಹಾಗೂ ವಲಯ ಅರಣ್ಯಾಧಿಕಾರಿಗಳ ಕಚೇರಿ (ಪ್ರಾದೇಶಿಕ ವಲಯ) ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಮತ್ತು ಅರಣ್ಯ ಸಂರಕ್ಷಣೆಯ ಜವಾಬ್ದಾರಿಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದರು.&lt;/p&gt;&lt;p&gt;ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶವನ್ನು ಗುರುತಿಸುವಾಗ ನಡೆದ ಅವೈಜ್ಞಾನಿಕ ಸಮೀಕ್ಷೆಯಿಂದಾಗಿ ಸಾರ್ವಜನಿಕರಿಗೆ ದೊಡ್ಡ ಮಟ್ಟದ ಸಮಸ್ಯೆ ಉಂಟಾಗಿದೆ ಎಂದು ಸಚಿವರು ಟೀಕಿಸಿದರು. 2022ರಲ್ಲಿ ಯಾವುದೇ ಸಮರ್ಪಕ ಪರಿಶೀಲನೆ ನಡೆಸದೆ ಕಂದಾಯ ಮತ್ತು ಅರಣ್ಯ ಇಲಾಖೆ ಆತುರದಲ್ಲಿ 3 ಲಕ್ಷದ 30 ಸಾವಿರ ಹೆಕ್ಟೇರ್ ಜಮೀನನ್ನು ಡೀಮ್ಡ್ ಅರಣ್ಯ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದವು. ಈ ತಪ್ಪಿನಿಂದಾಗಿ ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿಗಳು, ಸರ್ಕಾರಿ ವಸತಿ ನಿಲಯಗಳು ಮತ್ತು ಮಧ್ಯಮ ವರ್ಗದ ಜನರ ಪಟ್ಟಾ ಭೂಮಿ ಅರಣ್ಯ ವ್ಯಾಪ್ತಿಗೆ ಸೇರ್ಪಡೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.&lt;/p&gt;&lt;p&gt;ಈ ಲೋಪ ಸರಿಪಡಿಸಲು ಪ್ರಸ್ತುತ ಸರ್ಕಾರ ಬದ್ಧವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಮಟ್ಟದಲ್ಲಿ ಪ್ರಾದೇಶಿಕ ಆಯುಕ್ತರು ಮತ್ತು ರಾಜ್ಯ ಮಟ್ಟದಲ್ಲಿ ಅರಣ್ಯ ಇಲಾಖೆಯ ಅಪರ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆ ಕಾರ್ಯ ಶೇ. 65ರಷ್ಟು ಪೂರ್ಣಗೊಂಡಿದೆ. ಸಮೀಕ್ಷೆ ಸಂಪೂರ್ಣವಾದ ನಂತರ ಸುಪ್ರೀಂ ಕೋರ್ಟ್&zwnj;ಗೆ ಮರು ಮನವಿ ಸಲ್ಲಿಸುವ ಮೂಲಕ ಡೀಮ್ಡ್ ಅರಣ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.&lt;/p&gt;&lt;p&gt;ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಗಣಿಗಾರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವರು, ಕುದುರೆಮುಖ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯುತ್ತಿಲ್ಲ ಮತ್ತು ಭವಿಷ್ಯದಲ್ಲೂ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು. ಕೆಐಒಸಿಎಲ್ ಅರಣ್ಯ ಇಲಾಖೆಗೆ ಪಾವತಿಸಬೇಕಾದ ದಂಡದ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ದಂಡ ವಸೂಲಿ ಮಾಡಲಿದೆ. ದಂಡ ಪಾವತಿಸಲು ನ್ಯಾಯಾಲಯವು ಕಾಲಮಿತಿಯನ್ನು ವಿಧಿಸಿದ್ದು, ಆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.&lt;/p&gt;&lt;h2&gt;&lt;strong&gt;ಅಧಿಕಾರಿಗಳಿಗೆ ಸೂಚನೆ&lt;/strong&gt;&lt;/h2&gt;&lt;p&gt;ಅರಣ್ಯ ರಕ್ಷಣೆಯಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುವ ಸಿಬ್ಬಂದಿಯ ಸುರಕ್ಷತೆ ಸರ್ಕಾರಕ್ಕೆ ಮುಖ್ಯವಾಗಿದೆ. ಇದಕ್ಕಾಗಿ ಸಿಬ್ಬಂದಿಗೆ ಸುಧಾರಿತ ವಿದ್ಯುತ್ ಪ್ರವಹಿಸುವ ಕೈಗೋಲು (ಸ್ಟಿಕ್), ಮಳೆಯಿಂದ ರಕ್ಷಿಸಿಕೊಳ್ಳಲು ಅಗತ್ಯವಿರುವ ಜಾಕೆಟ್ ಮತ್ತು ಶೂಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಆನೆ ಕಾರ್ಯಪಡೆ, ಕಳ್ಳಬೇಟೆ ನಿಗ್ರಹ ದಳ ಮತ್ತು ಮುಂಚೂಣಿ ಸಿಬ್ಬಂದಿಗೆ ವಸತಿ ಗೃಹಗಳ ಲಭ್ಯತೆ ಮತ್ತು ಅವರಿಗೆ ಅಪಾಯ ಭತ್ಯೆ (ರಿಸ್ಕ್ ಅಲೊಯನ್ಸ್) ಸರಿಯಾಗಿ ತಲುಪುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.&lt;/p&gt;&lt;p&gt;ರಾಜ್ಯದಲ್ಲಿ ಪರಿಸರ ಸಮತೋಲನ ಕಾಪಾಡುವ ದಿಸೆಯಲ್ಲಿ &lsquo;ಮರಗಂತಿ ಕಪ್ಪೆ&rsquo;ಯನ್ನು ರಾಜ್ಯದ ಅಧಿಕೃತ ಉಭಯ ಜೀವಿ ಮತ್ತು &lsquo;ತುಡುವೆ ಜೇನು&rsquo;ವನ್ನು ರಾಜ್ಯದ ಕೀಟವನ್ನಾಗಿ ಘೋಷಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ನದಿ ಮಾಲಿನ್ಯ ಮತ್ತು ಇತರ ಪರಿಸರ ಸಂಬಂಧಿತ ದೂರುಗಳು ತಮ್ಮ ಗಮನಕ್ಕೆ ಬಂದರೆ, ತಜ್ಞರ ವರದಿ ಆಧರಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ನ್ಯೂಕ್ಲಿಯರ್ ಪವರ್ ಪ್ಲಾಂಟ್ ಸ್ಥಾಪನೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ, ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.&lt;/p&gt;]]></content:encoded>
            <category>udupi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-eshwar-khandre-on-deemed-forest-karnataka-gvd/articleshow-zp0l5dn"/>
        </item>
        <item>
            <title><![CDATA[ಚಂಡಮಾರುತ ಹಾಗೂ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ 61 ದಿನಗಳ ಕಾಲ ಮೀನುಗಾರಿಕೆ ನಿಷೇಧ]]></title>
            <link>https://kannada.asianetnews.com/karnataka-districts/karnataka-monsoon-preparedness-61-day-fishing-ban-imposed-in-dakshina-kannada-and-udupi-coastal-waters-gdp/articleshow-ztx6bmp</link>
            <guid isPermaLink="true">https://kannada.asianetnews.com/karnataka-districts/karnataka-monsoon-preparedness-61-day-fishing-ban-imposed-in-dakshina-kannada-and-udupi-coastal-waters-gdp/articleshow-ztx6bmp</guid>
            <pubDate>Thu, 21 May 2026 17:21:34 +0530</pubDate>
            <description><![CDATA[ಮುಂಗಾರು ಪೂರ್ವ ಮಳೆ ಹಾಗೂ ಚಂಡಮಾರುತದ ಮುನ್ಸೂಚನೆ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಗೋಕರ್ಣ, ಮುರ್ಡೇಶ್ವರ ಸೇರಿದಂತೆ ಕರಾವಳಿಯಾದ್ಯಂತ ಜಲಸಾಹಸ ಕ್ರೀಡೆಗಳು ಮತ್ತು ಪ್ರವಾಸಿ ಬೋಟಿಂಗ್ ಚಟುವಟಿಕೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01k9kasxz099r0m8t5jk64f3tc,imgname-india---fishing-boats---7250-1762659203040.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.&lt;/p&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.&lt;/p&gt;&lt;h2&gt;ನಿಷೇಧದ ಅವಧಿಯಲ್ಲಿ ಏನು ಮಾಡೋದು?&lt;/h2&gt;&lt;p&gt;ನಿಷೇಧದ ಅವಧಿಯಲ್ಲಿ ಜಿಲ್ಲೆಯಲ್ಲಿ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿ ರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.&lt;/p&gt;&lt;p&gt;ಮೀನುಗಾರಿಕೆ ನಿಷೇಧಿಸಿದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲ ಮೀನುಗಾರರು ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;&lt;h2&gt;ಗಾಳಿ ಮಳೆ ಸಾಧ್ಯತೆ, ಜಲಸಾಹಸ ಚಟುವಟಿಕೆ ನಿರ್ಬಂಧ&lt;/h2&gt;&lt;p&gt;ಚಂಡಮಾರುತ, ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಗೋಕರ್ಣ, ಮುರ್ಡೇಶ್ವರ, ಕಾರವಾರ ಬೀಚ್&zwnj;ಗಳಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಗೋಕರ್ಣದ ಓಂ ಬೀಚ್, ಕುಡ್ಲೆ ಬೀಚ್, ಹಾಫ್&zwnj;ಮೂನ್ ಬೀಚ್, ಪ್ಯಾರಡೈಸ್ ಬೀಚ್ ಜಲಸಾಹಸ ಚಟುವಟಿಕೆ ಬಂದ್ ಮಾಡಲು ಆದೇಶಿಸಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್&zwnj;ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಶರಾವತಿ ಹಿನ್ನೀರು, ಅಘನಾಶಿನಿ ನದಿಯಲ್ಲಿ ಪ್ರವಾಸಿಗರ ಬೋಟಿಂಗ್ ಕೂಡ ಸ್ಥಗಿತಗೊಳಿಸಲಾಗಿದೆ. ಅಪ್ಸರಕೊಂಡ ಬೀಚ್&zwnj;ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರು ಹಾಗೂ ಮೀನುಗಾರರು ಕಡಲತೀರ ಹಾಗೂ ನದಿತೀರ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-monsoon-preparedness-61-day-fishing-ban-imposed-in-dakshina-kannada-and-udupi-coastal-waters-gdp/articleshow-ztx6bmp"/>
        </item>
    </channel>
</rss>
