<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 25 Aug 2026 20:15:03 +0530</lastBuildDate>
        <atom:link href="https://kannada.asianetnews.com/rss/udupi" rel="self" type="application/rss+xml"/>
        <item>
            <title><![CDATA[ಭಾರೀ ಮಳೆ ಮುನ್ಸೂಚನೆ: ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ!]]></title>
            <link>https://kannada.asianetnews.com/karnataka-districts/dakshina-kannada-heavy-rain-school-college-holiday-august-4-san/articleshow-3px7yr6</link>
            <guid isPermaLink="true">https://kannada.asianetnews.com/karnataka-districts/dakshina-kannada-heavy-rain-school-college-holiday-august-4-san/articleshow-3px7yr6</guid>
            <pubDate>Mon, 03 Aug 2026 21:51:57 +0530</pubDate>
            <description><![CDATA[&lt;p&gt;ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 4 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvhwrse23v1n9479bcp3xbjf,imgname-rains-1781938283970.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು (ಆ.3): &lt;/strong&gt;ದಕ್ಷಿಣ ಕನ್ನಡ &amp;nbsp;ಹಾಗೂ ಉಡುಪಿ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್ 4) ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಾಲೂಕುವಾರು ರಜೆಯನ್ನು ಹಂಚಿಕೆ ಮಾಡಲಾಗಿದ್ದು, ಮಂಗಳೂರು ಮತ್ತು ಪುತ್ತೂರು ಉಪವಿಭಾಗಗಳಿಗೆ ಪ್ರತ್ಯೇಕ ನಿಯಮಗಳು ಅನ್ವಯವಾಗಲಿವೆ.&lt;/p&gt;&lt;h2&gt;&lt;strong&gt;ಎಲ್ಲೆಲ್ಲಿ ಎಷ್ಟು ರಜೆ? ಸಂಪೂರ್ಣ ವಿವರ ಇಲ್ಲಿದೆ&lt;/strong&gt;&lt;/h2&gt;&lt;p&gt;ಮಂಗಳೂರು ಉಪವಿಭಾಗ: ಮಂಗಳೂರು, ಉಳ್ಳಾಲ, ಮೂಡಬಿದಿರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆ (ಹೈಸ್ಕೂಲ್) ವರೆಗೆ ಮಾತ್ರ ರಜೆ ನೀಡಲಾಗಿದೆ. (ಪದವಿಪೂರ್ವ ಕಾಲೇಜುಗಳಿಗೆ ರಜೆ ಇರುವುದಿಲ್ಲ).&lt;/p&gt;&lt;p&gt;ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಹಿಡಿದು ಪಿಯುಸಿವರೆಗೂ ಸಂಪೂರ್ಣ ರಜೆ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಡಿಸಿ ದರ್ಶನ್ ಎಚ್.ವಿ. ಆದೇಶ&lt;/strong&gt;&lt;/h2&gt;&lt;p&gt;ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯವಾಗದಂತೆ ತಡೆಯಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ನದಿ, ತೊರೆ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.&lt;/p&gt;&lt;h2&gt;&lt;strong&gt;ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ&lt;/strong&gt;&lt;/h2&gt;&lt;p&gt;ಮಂಗಳವಾರ ವ್ಯಾಪಕ ಮಳೆ ಸಾಧ್ಯತೆ ಇರುವ ಹಿನ್ನಲೆಯಲ್ಲಿ, &amp;nbsp;ಉಡುಪಿ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/dakshina-kannada-heavy-rain-school-college-holiday-august-4-san/articleshow-3px7yr6"/>
        </item>
        <item>
            <title><![CDATA[ಕನಸಿನ ರೆಕ್ಕೆ ಕಟ್ಟಿದ ಕಾರ್ಕಳದ ಹುಡುಗಿ ಉಡುಪಿಯ ಮೊದಲ ಮಹಿಳಾ ಪೈಲಟ್! ಕರ್ನಾಟಕದಲ್ಲಿ ಮಹಿಳಾ ಪೈಲಟ್‌ಗಳೆಷ್ಟು?]]></title>
            <link>https://kannada.asianetnews.com/karnataka-districts/from-childhood-dream-to-cockpit-karkala-shiney-asma-saldanha-becomes-udupi-district-first-woman-commercial-pilot-gdp/articleshow-4fh62ei</link>
            <guid isPermaLink="true">https://kannada.asianetnews.com/karnataka-districts/from-childhood-dream-to-cockpit-karkala-shiney-asma-saldanha-becomes-udupi-district-first-woman-commercial-pilot-gdp/articleshow-4fh62ei</guid>
            <pubDate>Fri, 14 Aug 2026 16:57:09 +0530</pubDate>
            <description><![CDATA[ಕಾರ್ಕಳದ ಶೈನಿ ಅಸ್ಮಾ ಸಲ್ಡಾನಾ ಅವರು ವಾಣಿಜ್ಯ ಪೈಲಟ್ ಪರವಾನಗಿ ಪಡೆದು, ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಾಲ್ಯದಲ್ಲಿ ನಡೆದ ವಿಮಾನ ಅಪಘಾತದಿಂದ ಪ್ರೇರಿತರಾಗಿ, ಕಠಿಣ ಪರಿಶ್ರಮ ಮತ್ತು ತರಬೇತಿಯ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡ ಇವರ ಸಾಧನೆಯು ಕರಾವಳಿಯ ಯುವತಿಯರಿಗೆ ಸ್ಫೂರ್ತಿದಾಯಕವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzzjhaq2k3k3mqh373750y2f,imgname-shiney-asma-saldanha-1786692283105.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ: &lt;/strong&gt;ಕಾರ್ಕಳ ತಾಲೂಕಿನ ಕೌದೂರು ರಂಗನಪಲ್ಕೆಯ ಯುವತಿ ಶೈನಿ ಅಸ್ಮಾ ಸಲ್ಡಾನಾ ಅವರು ತಮ್ಮ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ವಾಣಿಜ್ಯ ಪೈಲಟ್ ಪರವಾನಗಿ (CPL) ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.&lt;/p&gt;&lt;h2&gt;ಬಾಲ್ಯದಲ್ಲೇ ಮೂಡಿದ ಬಲವಾದ ಕನಸು&lt;/h2&gt;&lt;p&gt;ಐದು ವರ್ಷದ ಬಾಲಕಿಯಾಗಿದ್ದಾಗ ಮಂಗಳೂರಿನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತವು ಶೈನಿ ಅವರ ಮನಸ್ಸಿನ ಮೇಲೆ ಆಳವಾದ ಪರಿಣಾಮ ಬೀರಿತ್ತು. ಆ ಸಂದರ್ಭದಲ್ಲಿ ವಿಮಾನ ಹಾಗೂ ಪೈಲಟ್ ವೃತ್ತಿಯ ಬಗ್ಗೆ ಉಂಟಾದ ಕುತೂಹಲವೇ ಮುಂದೆ ಅವರ ಜೀವನದ ಏಕೈಕ ಗುರಿಯಾಗಿ ಬದಲಾಯಿತು.&lt;/p&gt;&lt;p&gt;&quot;ನಾನು ಐದು ವರ್ಷದವಳಿದ್ದಾಗ ನಡೆದ ಮಂಗಳೂರು ವಿಮಾನ ಅಪಘಾತ ನನ್ನ ಮನಸ್ಸನ್ನು ಕಲಕಿತ್ತು. ಆಗಲೇ ನಾನು ಪೈಲಟ್ ಆಗಬೇಕೆಂಬ ದೃಢಸಂಕಲ್ಪ ಮಾಡಿದೆ. ಹಲವು ವರ್ಷಗಳ ಸತತ ಪರಿಶ್ರಮ, ಛಲ ಮತ್ತು ತಾಳ್ಮೆಯ ಫಲವಾಗಿ ಇಂದು ಆ ಬಾಲ್ಯದ ಕನಸು ನನಸಾಗಿದೆ&quot; ಎಂದು ಶೈನಿ ತಮ್ಮ ಸಾಧನೆಯ ಹಾದಿಯನ್ನು ಹಂಚಿಕೊಂಡಿದ್ದಾರೆ.&lt;/p&gt;&lt;h2&gt;ಶಿಕ್ಷಣ ಮತ್ತು ತರಬೇತಿಯ ಹಾದಿ&lt;/h2&gt;&lt;p&gt;ಕೌದೂರಿನ ಅಶೋಕ್ ಜಾಕೋಬ್ ಸಲ್ಡಾನಾ ಮತ್ತು ಮಾರಿಯಾ ಗ್ರೆಟ್ಟಾ ಸಲ್ಡಾನಾ ದಂಪತಿಯ ಪುತ್ರಿಯಾದ ಶೈನಿ, ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಹಾಗೂ ಪದವಿ ಪೂರ್ವ (PUC) ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಿಕಾಂ ಶಿಕ್ಷಣದ ನಂತರ ತಮ್ಮ ಕನಸನ್ನು ಬೆನ್ನತ್ತಿದ ಶೈನಿ, ಬೆಂಗಳೂರಿನಲ್ಲಿ ನಡೆದ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ (IGRUA) ಯ ಪ್ರವೇಶ ಪರೀಕ್ಷೆಗೆ ಹಾಜರಾದರು. ದೇಶಾದ್ಯಂತ 5,000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದ ಈ ಕಠಿಣ ಪರೀಕ್ಷೆಯಲ್ಲಿ ಆಯ್ಕೆಯಾದ 125 ಮಂದಿಯಲ್ಲಿ ಶೈನಿ ಕೂಡ ಒಬ್ಬರಾಗಿದ್ದರು. ತರುವಾಯ, 2023ರ ಆಗಸ್ಟ್&zwnj;ನಿಂದ ಉತ್ತರ ಪ್ರದೇಶದ ಫುರ್ಸತ್&zwnj;ಗಂಜ್&zwnj;ನಲ್ಲಿರುವ IGRUA ಕೇಂದ್ರದಲ್ಲಿ ವೃತ್ತಿಪರ ಪೈಲಟ್ ತರಬೇತಿಯನ್ನು ಪಡೆದರು.&lt;/p&gt;&lt;h2&gt;ಸವಾಲುಗಳನ್ನು ಮೆಟ್ಟಿ ನಿಂತು ಗೆದ್ದ ಸಾಧಕಿ&lt;/h2&gt;&lt;p&gt;ಪೈಲಟ್ ತರಬೇತಿಯು ಸುಲಭದ ಹಾದಿಯಾಗಿರಲಿಲ್ಲ. ತಾಂತ್ರಿಕ ಜ್ಞಾನ, ಮಾನಸಿಕ ಸಿದ್ಧತೆ, ಶಿಸ್ತು ಹಾಗೂ ಸುರಕ್ಷತಾ ಕ್ರಮಗಳ ತರಬೇತಿಯೊಂದಿಗೆ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸುವ ಕೌಶಲ್ಯವನ್ನು ಅವರು ಸಿದ್ಧಿಸಿಕೊಂಡಿದ್ದಾರೆ. ಸದ್ಯ ಹಾರಾಟದ ಅಭ್ಯಾಸವನ್ನು ಯಶಸ್ವಿಯಾಗಿ ಮುಗಿಸಿರುವ ಅವರು, ಡಿಜಿಸಿಎ (DGCA) ಗೆ ಸಂಬಂಧಿಸಿದ ಅಂತಿಮ ಪ್ರಕ್ರಿಯೆಗಳಲ್ಲಿದ್ದಾರೆ.&lt;/p&gt;&lt;h2&gt;ಯುವಜನತೆಗೆ ಸ್ಫೂರ್ತಿ&lt;/h2&gt;&lt;p&gt;&quot;ನನ್ನ ತಂದೆ-ತಾಯಿಯೇ ನನ್ನ ದೊಡ್ಡ ಸ್ಫೂರ್ತಿ. ಬಾಲ್ಯದ ಕನಸನ್ನು ಗುರಿಯಾಗಿಸಿಕೊಂಡು ಮುನ್ನಡೆಯಲು ತಂದೆಯ ಪ್ರೋತ್ಸಾಹವೇ ಪ್ರಮುಖ ಕಾರಣ. ಪ್ರತಿಯೊಬ್ಬರೂ ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ನಿರಂತರ ಶ್ರಮವಹಿಸಿದರೆ ಯಶಸ್ಸು ಖಂಡಿತ ಸಿಗುತ್ತದೆ&quot; ಎನ್ನುತ್ತಾರೆ ಶೈನಿ.&lt;/p&gt;&lt;p&gt;ಉಡುಪಿ ಜಿಲ್ಲೆಯ ವಾಯುಯಾನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿರುವ ಶೈನಿ ಅಸ್ಮಾ ಸಲ್ಡಾನಾ ಅವರ ಈ ಸಾಧನೆ, ಪೈಲಟ್ ಆಗುವ ಕನಸು ಕಾಣುತ್ತಿರುವ ಕರಾವಳಿಯ ನೂರಾರು ಯುವತಿಯರಿಗೆ ದಾರಿದೀಪವಾಗಿದೆ.&lt;/p&gt;&lt;p&gt;ಈ ಸಾಧನೆ ಮೂಲಕ, ಚಿಕ್ಕಮಗಳೂರಿನ 2018 ರಲ್ಲಿ ವಾಯುಪಡೆಯ ಅಕಾಡೆಮಿಯಿಂದ (IAF) ಪದವಿ ಪಡೆದ ನಂತರ ಕರ್ನಾಟಕ ಮತ್ತು ದಕ್ಷಿಣ ಭಾರತದ ಮೊದಲ ಮಹಿಳಾ ಫೈಟರ್ ಪೈಲಟ್ ಮೇಘನಾ ಶಾನ್&zwnj;ಬೌ, 2024 ರ ಕೊನೆಯಲ್ಲಿ 18 ನೇ ವಯಸ್ಸಿನಲ್ಲಿ ವಾಣಿಜ್ಯ ಪೈಲಟ್ ಪರವಾನಗಿ (CPL) ಗಳಿಸಿದ ಭಾರತದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್&zwnj;ಗಳಲ್ಲಿ ಒಬ್ಬರೆಂದು ಮಣ್ಣನೆ ಪಡೆದ ವಿಜಯಪುರದ ಸಮೈರಾ ಹುಲ್ಲೂರ್, 2017 ರಲ್ಲಿ ಉತ್ತರ ಕರ್ನಾಟಕ ಪ್ರದೇಶದಿಂದ ಮೊದಲ ಮಹಿಳಾ ವಾಣಿಜ್ಯ ಪೈಲಟ್ ಎಂದು ಗುರುತಿಸಲ್ಪಟ್ಟ ವಿಜಯಪುರದ ಪ್ರೀತಿ ಬಿರಾದಾರ್ ಸಾಲಿಗೆ ಉಡುಪಿಯ ಶೈನಿ ಅಸ್ಮಾ ಸೇರ್ಪಡೆಯಾಗಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/from-childhood-dream-to-cockpit-karkala-shiney-asma-saldanha-becomes-udupi-district-first-woman-commercial-pilot-gdp/articleshow-4fh62ei"/>
        </item>
        <item>
            <title><![CDATA[ಮಂಗಳೂರು-ಬೆಂಗಳೂರು ರೈಲ್ವೆ ಸಂಚಾರ ರದ್ದು, ಪೊಲೀಸ್‌ ಪರೀಕ್ಷೆ ತಪ್ಪಿಸಿಕೊಂಡ ಅಭ್ಯರ್ಥಿಗಳು, ಮತ್ತೆ ರೈಲು ಆರಂಭ ಯಾವಾಗ?]]></title>
            <link>https://kannada.asianetnews.com/karnataka-districts/western-ghats-edakumeri-landslide-disrupts-mangaluru-bengaluru-trains-full-list-of-cancelled-and-diverted-routes-gdp/articleshow-4mg8mmu</link>
            <guid isPermaLink="true">https://kannada.asianetnews.com/karnataka-districts/western-ghats-edakumeri-landslide-disrupts-mangaluru-bengaluru-trains-full-list-of-cancelled-and-diverted-routes-gdp/articleshow-4mg8mmu</guid>
            <pubDate>Mon, 03 Aug 2026 11:05:23 +0530</pubDate>
            <description><![CDATA[&lt;p&gt;ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸಕಲೇಶಪುರ ಸಮೀಪದ ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿ, ಬದಲಿ ಮಾರ್ಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಪ್ರಯಾಣಿಕರು ವಿವಿಧ ನಿಲ್ದಾಣಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ರೈಲ್ವೆ ಇಲಾಖೆ ಹಳಿ ದುರಸ್ತಿ ಕಾರ್ಯ ಕೈಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz31cs273a27mdbahsh3pqps,imgname-mangaluru-bengaluru-trains--1--1785734784068.jpg" type="image/jpeg" height="390" width="690"/>
            <content:encoded><![CDATA[&lt;p&gt;ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಬೆಟ್ಟಗಳ ಇಳಿಜಾರು ಭಾಗಗಳಲ್ಲಿ ಮಣ್ಣು ಸಡಿಲಗೊಂಡ ಪರಿಣಾಮ ಈ ಭೂಕುಸಿತ ಸಂಭವಿಸುತ್ತಿದೆ. ಸಕಲೇಶಪುರ ಸಮೀಪ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಸಿರಿಬಾಗಿಲು ನಡುವೆ ಶನಿವಾರ ರಾತ್ರಿ ರಾತ್ರಿ 9 ಗಂಟೆಗೆ ಮಣ್ಣು ಕುಸಿದಿದ್ದು, ಪರಿಣಾಮ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾಝಿಕ್ಕೋಡ್&zwnj;- ಬೆಂಗಳೂರು ರೈಲನ್ನು ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣದಿಂದ ವಾಪಸ್&zwnj; ಕಳುಹಿಸಲಾದರೆ, ಮಂಗಳೂರಿಗೆ ತೆರಳುತ್ತಿದ್ದ ಕಾರವಾರ ಎಕ್ಸ್&zwnj;ಪ್ರೆಸ್&zwnj; ರೈಲನ್ನು ಹಾಸನ ರೈಲ್ವೆ ನಿಲ್ದಾಣದಿಂದ ಬದಲಿ ಮಾರ್ಗದಲ್ಲಿ ಕಳುಹಿಸಿಕೊಡಲಾಯಿತು. ಭೂಕುಸಿತದಿಂದ ಈ ಮಾರ್ಗದಲ್ಲಿ ಸಂಚರಿಸುವ ಏಳು ರೈಲುಗಳ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ರೈಲ್ವೆ ಇಲಾಖೆ ಅಧಿಕಾರಿಗಳು ಮೈಸೂರಿನಿಂದ ಇನ್ನೂರಕ್ಕೂ ಅಧಿಕ ಕಾರ್ಮಿಕರನ್ನು ಸ್ಥಳಕ್ಕೆ ಕರೆಸಿ ಮಧ್ಯರಾತ್ರಿಯಿಂದಲೆ ಕಾರ್ಯಾಚರಣೆ ಆರಂಭಿಸಲಾಗಿದೆ. ಆದರೆ ಘಟನಾ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಸಮರೋಪಾಧಿ ಕಾರ್ಯಚರಣೆಗೆ ಅಡ್ಡಿಯಾಗಿದೆ.&lt;/p&gt;&lt;h2&gt;ಸಂಚಾರ ಪುನರಾರಂಭಕ್ಕೆ ಸಮಯ ಬೇಕು:&lt;/h2&gt;&lt;p&gt;ಹಳಿ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಾಂತ್ರಿಕ ತಂಡ ದೃಢಪಡಿಸಿದ ಬಳಿಕವೇ ರೈಲು ಸಂಚಾರ ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು- ಮಂಗಳೂರು ಮಾರ್ಗದಲ್ಲಿ ಪ್ರಯಾಣಿಸಲು ಉದ್ದೇಶಿಸಿರುವ ಪ್ರಯಾಣಿಕರು ರೈಲುಗಳ ಸ್ಥಿತಿಗತಿ ಕುರಿತು ಅಧಿಕೃತ ಮಾಹಿತಿಯನ್ನು ಪರಿಶೀಲಿಸಿಕೊಂಡು ಪ್ರಯಾಣ ಕೈಗೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ. ಮಲೆನಾಡಿನಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆ ಪಶ್ಚಿಮ ಘಟ್ಟ ಪ್ರದೇಶದ ರೈಲ್ವೆ ಮಾರ್ಗಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.&lt;/p&gt;&lt;h2&gt;ತಪ್ಪಿದ ಬಾರೀ ಅನಾಹುತ&lt;/h2&gt;&lt;p&gt;ರೈಲು ಸಂಚಾರ ಆರಂಭಕ್ಕೂ ಮುನ್ನವೇ ಹಳಿ ಮೇಲೆ ಮಣ್ಣು ಕುಸಿದಿರುವುದು ಪತ್ತೆಯಾಗಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಸುರಕ್ಷತಾ ದೃಷ್ಟಿಯಿಂದ ರೈಲ್ವೆ ಅಧಿಕಾರಿಗಳು ತಕ್ಷಣವೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲುಗಳನ್ನು ವಿವಿಧ ನಿಲ್ದಾಣಗಳಲ್ಲಿ ತಡೆದು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿದರು. ಭೂಕುಸಿತದ ಪರಿಣಾಮ ಬೆಂಗಳೂರು- ಮುರುಡೇಶ್ವರ, ಬೆಂಗಳೂರು- ಕೋಝಿಕೋಡ್ ಹಾಗೂ ವಿಜಯಪುರ- ಮಂಗಳೂರು ರೈಲುಗಳನ್ನು ಹಾಸನ ರೈಲು ನಿಲ್ದಾಣದಲ್ಲೇ ನಿಲ್ಲಿಸಲಾಯಿತು. ಬೆಂಗಳೂರು- ಕಾರವಾರ ಎಕ್ಸ್&zwnj;ಪ್ರೆಸ್ ರೈಲು ಸಕಲೇಶಪುರದಲ್ಲಿ ಸ್ಥಗಿತಗೊಂಡರೆ, ಮುರುಡೇಶ್ವರ- ಬೆಂಗಳೂರು ಹಾಗೂ ಮಂಗಳೂರು- ವಿಜಯಪುರ ರೈಲುಗಳನ್ನು ಸುಬ್ರಹ್ಮಣ್ಯ ನಿಲ್ದಾಣದಲ್ಲಿ ತಡೆಹಿಡಿಯಲಾಯಿತು. ಕೋಝಿಕೋಡ್- ಬೆಂಗಳೂರು ರೈಲು ಪುತ್ತೂರು ನಿಲ್ದಾಣದಲ್ಲಿ ನಿಂತಿದ್ದು, ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಇತರೆ ರೈಲುಗಳ ಸಂಚಾರವೂ ಸ್ಥಗಿತಗೊಂಡಿದೆ.&lt;/p&gt;&lt;h2&gt;ಪೊಲೀಸ್&zwnj; ಕಾನ್&zwnj;ಸ್ಟೇಬಲ್&zwnj; ನೇಮಕಾತಿ ಪರೀಕ್ಷೆಗೆ ಹೊರಟಿದ್ದವರಿಗೆ ಶಾಕ್&lt;/h2&gt;&lt;p&gt;ರಾಜ್ಯದಲ್ಲಿ ಭಾನುವಾರ ನಡೆದ ಸಿವಿಲ್&zwnj; ಪೊಲೀಸ್&zwnj; ಕಾನ್&zwnj;ಸ್ಟೇಬಲ್&zwnj; ನೇಮಕಾತಿ ಪರೀಕ್ಷೆಯಲ್ಲಿ ಕರಾವಳಿ ಸೇರಿ ಪಶ್ಚಿಮ ಘಟ್ಟದ ಭಾಗಗಳಿಂದ ಪರೀಕ್ಷೆ ಬರೆಯಲು ಬರಬೇಕಿದ್ದ ಹಲವು ಮಂದಿ ಬರಲಾಗದೆ ನಿರಾಸೆಗೊಂಡರು. ಕಾರಣ ರೈಲು ಸಂಚಾರ ಸಡನ್ ಸ್ಥಗಿತಗೊಂಡಿತು. ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಮಂಗಳೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದ ಅಭ್ಯರ್ಥಿಗಳ ರೈಲು ಸುಬ್ರಹ್ಮಣ್ಯ ರೋಡ್&zwnj;ನಲ್ಲಿ ರದ್ದುಗೊಂಡಿದ್ದು, ಅವರಿಗೆ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗಿಲ್ಲ. ಮಾನವೀಯ ನೆಲೆಯಲ್ಲಿ ರೈಲು ರದ್ದತಿಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಎಲ್ಲ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್&zwnj; ವೈರಲ್&zwnj; ಆಗಿದೆ.&lt;/p&gt;&lt;h2&gt;ನಿಲ್ದಾಣಗಳಲ್ಲಿ ಪ್ರಯಾಣಿಕರ ಪರದಾಟ:&lt;/h2&gt;&lt;p&gt;ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಹಾಗೂ ಪುತ್ತೂರು ರೈಲು ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ರಾತ್ರಿ ಪೂರ್ತಿ ಸಿಲುಕಿಕೊಂಡರು. ಹಲವರು ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದರೆ, ವಿದ್ಯಾರ್ಥಿಗಳು, ಉದ್ಯೋಗಿಗಳು, ಹಿರಿಯ ನಾಗರಿಕರು ಹಾಗೂ ಪ್ರವಾಸಿಗರು ತೀವ್ರ ಸಂಕಷ್ಟ ಅನುಭವಿಸಿದರು. ನಡುರಾತ್ರಿ ವೇಳೆಯಲ್ಲೇ ಪ್ರಯಾಣ ಮುಂದುವರಿಸಲು ಟಿಕೆಟ್ ಹಣ ವಾಪಸ್ ಪಡೆದು ಬಸ್ ಸೇರಿದಂತೆ ಪರ್ಯಾಯ ಸಾರಿಗೆ ವ್ಯವಸ್ಥೆ ಹುಡುಕುತ್ತಾ ಪ್ರಯಾಣಿಕರು ಲಗೇಜ್ ಹೊತ್ತು ಬಸ್ ನಿಲ್ದಾಣಗಳತ್ತ ತೆರಳಿದ ದೃಶ್ಯಗಳು ಕಂಡುಬಂದವು.&lt;/p&gt;&lt;h2&gt;ಪರ್ಯಾಯ ವ್ಯವಸ್ಥೆ ಬಗ್ಗೆ ಅಸಮಾಧಾನ&lt;/h2&gt;&lt;p&gt;ರೈಲುಗಳ ರದ್ದತಿ ಕುರಿತು ರೈಲ್ವೆ ಇಲಾಖೆ ಮಾಹಿತಿ ನೀಡಿದರೂ, ತಕ್ಷಣದ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸದ ಹಿನ್ನೆಲೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಾಸನ ರೈಲು ನಿಲ್ದಾಣದಲ್ಲಿ ಟಿಕೆಟ್ ಹಣ ಮರುಪಾವತಿಗಾಗಿ ಉದ್ದ ಸಾಲುಗಳು ಕಂಡುಬಂದವು. ಹಲವು ಮಂದಿ ತಮ್ಮ ಪ್ರಯಾಣವನ್ನು ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವರು ಖಾಸಗಿ ವಾಹನ ಹಾಗೂ ಬಸ್&zwnj;ಗಳ ಮೊರೆ ಹೋಗಬೇಕಾಯಿತು. ಪ್ರಯಾಣಿಕರ ಅನುಕೂಲ್ಕಕಾಗಿ ಹಾಸನ, ಸುಬ್ರಹ್ಮಣ್ಯ ರೋಡ್&zwnj; ಮತ್ತು ಬಂಟ್ವಾಳ ರೈಲು ನಿಲ್ದಾಣಗಳಲ್ಲಿ ಅಡುಗೆ ವ್ಯವಸ್ಥೆ ಮಾಡಲಾಯಿತು. ಭೂಕುಸಿತ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ವಿಜಯಪುರ ಎಕ್ಸ್&zwnj;ಪ್ರೆಸ್&zwnj; ಪ್ರಯಾಣಿಕರಿಗೆ ಉಪಹಾರಗಳನ್ನು ಸರಬರಾಜು ಮಾಡಲಾಯಿತು.&lt;/p&gt;&lt;h2&gt;ಭಾನುವಾರ ರದ್ದಾದ ರೈಲು ಮತ್ತು ಬದಲಿ ಮಾರ್ಗ&lt;/h2&gt;&lt;ul&gt; &lt;li&gt;ಭಾನುವಾರದ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ - ಯಶವಂತಪುರ ಎಕ್ಸ್&zwnj;ಪ್ರೆಸ್ ಪ್ರಯಾಣ, ರೈಲು ಸಂಖ್ಯೆ 16575 ಯಶವಂತಪುರ - ಮಂಗಳೂರು ಜಂಕ್ಷನ್ ಎಕ್ಸ್&zwnj;ಪ್ರೆಸ್ ಪ್ರಯಾಣ ರದ್ದುಗೊಳಿಸಲಾಯಿತು.&lt;/li&gt; &lt;li&gt;ರೈಲು ಸಂಖ್ಯೆ 17377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್&zwnj;ಪ್ರೆಸ್&zwnj;ನ್ನು ಬದಲಿ ಮಾರ್ಗವಾಗಿ ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ - ಲೋಂಡಾ - ಕ್ಯಾಸಲ್ ರಾಕ್ - ಮಡಗಾಂವ್ - ಕಾರವಾರ - ತೋಕೂರು ಮೂಲಕ ಮಂಗಳೂರು ಜಂಕ್ಷನ್&zwnj;ಗೆ ಸಂಚಾರಕ್ಕೆ, ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ - ವಿಜಯಪುರ ಎಕ್ಸ್&zwnj;ಪ್ರೆಸ್&zwnj;ನ್ನು ಮಂಗಳೂರು ಜಂಕ್ಷನ್ - ತೋಕೂರು - ಕಾರವಾರ - ಮಡಗಾಂವ್ - ಕ್ಯಾಸಲ್ ರಾಕ್ - ಲೋಂಡಾ - ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ಮೂಲಕ ಸಂಚಾರಕ್ಕೆ ಅನುವು ಮಾಡಿ ಕೊಡಲಾಯ್ತು.&lt;/li&gt; &lt;li&gt;ರೈಲು ಸಂಖ್ಯೆ 16586 ಮುರ್ಡೇಶ್ವರ - ಎಸ್&zwnj;ಎಂವಿಟಿ ಬೆಂಗಳೂರು ಎಕ್ಸ್&zwnj;ಪ್ರೆಸ್&zwnj;ನ್ನು ಬದಲಿ ಮಾರ್ಗವಾಗಿ ಮುರ್ಡೇಶ್ವರ - ತೋಕೂರು - ಮಂಗಳೂರು ಸೆಂಟ್ರಲ್ - ಕಣ್ಣೂರು - ಶೋರನೂರು - ಪಾಲಕ್ಕಾಡ್ - ಪೋದನೂರು - ಜೋಲಾರ್&zwnj;ಪೆಟ್ಟೈ - ಎಸ್&zwnj;ಎಂವಿಟಿ ಬೆಂಗಳೂರಿಗೆ ಸಂಚಾರ ಅನುವು ಮಾಡಿ ಕೊಡಲಾಯ್ತು.&lt;/li&gt; &lt;li&gt;ರೈಲು ಸಂಖ್ಯೆ 16512 ಕೋಝಿಕ್ಕೋಡ್ - ಕೆಎಸ್ಆರ್ ಬೆಂಗಳೂರು ಎಕ್ಸ್&zwnj;ಪ್ರೆಸ್&zwnj;ನ್ನು ಬದಲಿ ಮಾರ್ಗವಾಗಿ ಮಂಗಳೂರು ಸೆಂಟ್ರಲ್ - ಕಣ್ಣೂರು - ಶೋರನೂರು - ಪಾಲಕ್ಕಾಡ್ - ಪೊದನೂರು - ಜೋಲಾರ್ಪೆಟ್ಟೈ - ಎಸ್&zwnj;ಎಂವಿಟಿ ಬೆಂಗಳೂರಿಗೆ ಸಂಚಾರಕ್ಕೆ ಅನುವು ಮಾಡಿ ಕೊಡಲಾಯ್ತು.&lt;/li&gt; &lt;li&gt;ರೈಲು ಸಂಖ್ಯೆ. 16511 ಕೆಎಸ್&zwnj;ಆರ್&zwnj; ಬೆಂಗಳೂರು - ಕೋಝಿಕೋಡ್ ಎಕ್ಸ್&zwnj;ಪ್ರೆಸ್&zwnj;ನ್ನು ಬೆಂಗಳೂರು ಎಸ್&zwnj;ಎಂವಿಬಿನಲ್ಲಿ ಪ್ರಯಾಣ ಆರಂಭಿಸಿ ಎಸ್&zwnj;ಎಂವಿಟಿ ಬೆಂಗಳೂರು ಜೋಲಾರ್&zwnj;ಪೇಟ್ಟೈ ಜಂಕ್ಷನ್ - ಪೊದನೂರು ಜಂಕ್ಷನ್ - ಪಾಲಕ್ಕಾಡ್ ಜಂಕ್ಷನ್ - ಶೋರನೂರು ಜಂಕ್ಷನ್ - ಕೋಝಿಕ್ಕೋಡ್ - ಮಂಗಳೂರು ಸೆಂಟ್ರಲ್&zwnj;ಗೆ ಸಂಚಾರ ಅನುವು ಮಾಡಿ ಕೊಡಲಾಯ್ತು.&lt;/li&gt; &lt;li&gt;ರೈಲು ಸಂಖ್ಯೆ 16585 ಎಸ್&zwnj;ಎಂವಿಟಿ ಬೆಂಗಳೂರು - ಮುರ್ಡೇಶ್ವರ ಎಕ್ಸ್&zwnj;ಪ್ರೆಸ್&zwnj;ನ್ನು ಎಸ್&zwnj;ಎಂವಿಟಿ ಬೆಂಗಳೂರು - ಓಮಲೂರು ಜಂಕ್ಷನ್ - ಪೋದನೂರು ಜಂಕ್ಷನ್ - ಪಾಲಕ್ಕಾಡ್ ಜಂಕ್ಷನ್ - ಶೋರನೂರು ಜಂಕ್ಷನ್ - ಕಣ್ಣೂರು - ತೋಕೂರು - ಮುರ್ಡೇಶ್ವರಕ್ಕೆ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.&lt;/li&gt;&lt;/ul&gt;&lt;h2&gt;ಶನಿವಾರ ರದ್ದಾದ ರೈಲುಗಳು&lt;/h2&gt;&lt;ul&gt; &lt;li&gt;ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್&zwnj;- ವಿಜಯಪುರ ಎಕ್ಸ್&zwnj;ಪ್ರೆಸ್ ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಲ್ಪಾವಧಿಗೆ ಮುಕ್ತಾಯಗೊಂಡಿದೆ.&lt;/li&gt; &lt;li&gt;ರೈಲು ಸಂಖ್ಯೆ 16586 ಮುರುಡೇಶ್ವರ - ಎಸ್&zwnj;ಎಂವಿಟಿ ಬೆಂಗಳುರು ಎಕ್ಸ್&zwnj;ಪ್ರೆಸ್&zwnj; ನ್ನು ರಾತ್ರಿ ಸಿರಿಬಾಗಿಲು ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು.&lt;/li&gt; &lt;li&gt;ರೈಲುಸಂಖ್ಯೆ 16512 ಕೋಝಿಕ್ಕೋಡ್&zwnj;-ಕೆಎಸ್&zwnj;ಆರ್&zwnj; ಬೆಂಗಳೂರು ಕಬಕ ಪುತ್ತೂರಿನಲ್ಲಿ ಅಲ್ಪಾವಧಿಗೆ ಮುಕ್ತಾಯಗೊಂಡಿದೆ&lt;/li&gt; &lt;li&gt;ರೈಲು ಸಂಖ್ಯೆ 16596 ಕಾರವಾರ-ಕೆಎಸ್&zwnj;ಆರ್&zwnj; ಬೆಂಗಳೂರಿಗೆ ರಾತ್ರಿ ಬಾರ್ಕೂರಿನಿಂದ ಹೊರಟು ಸಂಚಾರ ವ್ಯತ್ಯಯವಾಯಿತು. ಅದನ್ನು ಮಂಗಳೂರು ಜಂಕ್ಷನ್&zwnj;, ಶೊರನೂರು ಜಂಕ್ಷನ್&zwnj;, ಪಾಲಕ್ಕಾಡ್&zwnj; ಜಂಕ್ಷನ್&zwnj;, ಇರೊಡೆ ಜಂಕ್ಷನ್&zwnj; ಮೂಲಕ ಕೆಎಸ್&zwnj;ಆರ್&zwnj; ಬೆಂಗಳೂರಿಗೆ ಮಾರ್ಗ ಬದಲಿಸಲಾಯಿತು.&lt;/li&gt; &lt;li&gt;ರೈಲುಸಂಖ್ಯೆ 16595 ಕೆಎಸ್&zwnj;ಆರ್&zwnj; ಬೆಂಗಳೂರು-ಕಾರವಾರ ಪಂಚಗಂಗಾ ಎಕ್ಸ್&zwnj;ಪ್ರೆಸ್&zwnj;ನ್ನು ಹಾಸನ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು.&lt;/li&gt; &lt;li&gt;ರೈಲುಸಂಖ್ಯೆ 16585 ಎಸ್&zwnj;ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್&zwnj;ಪ್ರೆಸ್&zwnj; ಬೆಂಗಳೂರಿನಿಂದ ಪ್ರಯಾಣ ಆರಂಭಿಸಿ ಹಾಸನ ತಲುಪಿದ್ದು, ಹಾಸನ-ಮುರುಡೇಶ್ವರ ಪ್ರಯಾಣ ಭಾಗಶಃ ರದ್ದು ಮಾಡಲಾಯಿತು.&lt;/li&gt; &lt;li&gt;ರೈಲುಸಂಖ್ಯೆ 16511 ಕೆಎಸ್&zwnj;ಆರ್&zwnj; ಬೆಂಗಳೂರು-ಕೋಝಿಕೋ ಎಕ್ಸ್&zwnj;ಪ್ರೆಸ್ ರೈಲು ಕೆಎಸ್&zwnj;ಆರ್ ಬೆಂಗಳೂರಿನಿಂದ ಪ್ರಯಾಣ ಆರಂಭಿಸಿದ್ದು, ಹಾಸನದಲ್ಲಿ ಅಲ್ಪಾವಧಿಗೆ ಸಂಚಾರ ಕೊನೆಗೊಂಡಿತು.&lt;/li&gt; &lt;li&gt;ರೈಲು ಸಂಖ್ಯೆ 17377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್&zwnj;ಪ್ರೆಸ್ ಸಂಚಾರ ಹಾಸನದಲ್ಲಿ ಮುಕ್ತಾಯಗೊಂಡಿದೆ.&lt;/li&gt; &lt;li&gt;ರೈಲು ಸಂಖ್ಯೆ 16586 ಮುರುಡೇಶ್ವರ - ಎಸ್&zwnj;ಎಂವಿಟಿ ಬೆಂಗಳೂರು ಎಕ್ಸ್&zwnj;ಪ್ರೆಸ್ ಸುಬ್ರಹ್ಮಣ್ಯ ರೋಡ್&zwnj; ನಿಲ್ದಾಣದಲ್ಲಿ ಅಲ್ಪಾವಧಿಗೆ ಮುಕ್ತಾಯಗೊಂಡಿದೆ.&lt;/li&gt;&lt;/ul&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/western-ghats-edakumeri-landslide-disrupts-mangaluru-bengaluru-trains-full-list-of-cancelled-and-diverted-routes-gdp/articleshow-4mg8mmu"/>
        </item>
        <item>
            <title><![CDATA[ಕಾಮನ್‌ವೆಲ್ತ್ ಗೇಮ್ಸ್ 2026ರ ಭಾರತೀಯ ತಂಡದ ಫಿಸಿಯೋ ಆಗಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪುತ್ರ ರೋಹನ್]]></title>
            <link>https://kannada.asianetnews.com/other-sports/raghupathy-bhat-son-rohan-appointed-team-india-physio-for-glasgow-2026-commonwealth-games-gdp/articleshow-apl1rsz</link>
            <guid isPermaLink="true">https://kannada.asianetnews.com/other-sports/raghupathy-bhat-son-rohan-appointed-team-india-physio-for-glasgow-2026-commonwealth-games-gdp/articleshow-apl1rsz</guid>
            <pubDate>Mon, 27 Jul 2026 11:03:26 +0530</pubDate>
            <description><![CDATA[ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪುತ್ರ ರೋಹನ್ ಆರ್. ಬಾರಿತ್ತಾಯ ಅವರು ಸ್ಕಾಟ್&zwnj;ಲ್ಯಾಂಡ್&zwnj;ನ ಗ್ಲಾಸ್ಕೋದಲ್ಲಿ ನಡೆಯಲಿರುವ 'ಕಾಮನ್&zwnj;ವೆಲ್ತ್ ಗೇಮ್ಸ್ - 2026'ರ ಭಾರತೀಯ ತಂಡದ ಅಧಿಕೃತ ಫಿಸಿಯೋ ಮತ್ತು ರಿಕವರಿ ಥೆರಪಿಸ್ಟ್ ಆಗಿ ಆಯ್ಕೆಯಾಗಿದ್ದಾರೆ. ಕ್ರೀಡಾ ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಪಡೆದಿರುವ ರೋಹನ್ ಅವರ ಈ ಜಾಗತಿಕ ಸಾಧನೆಯು ಉಡುಪಿ ಹಾಗೂ ರಾಜ್ಯಕ್ಕೆ ಹೆಮ್ಮೆ ತಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kyh0vjyy94pyw0j7m5sehgmh,imgname-raghupathy-bhat-son-rohan-1785130240989.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ: &lt;/strong&gt;ಜಾಗತಿಕ ಕ್ರೀಡಾ ಲೋಕದಲ್ಲಿ ಉಡುಪಿಯ ಕೀರ್ತಿಪತಾಕೆ ಮತ್ತೊಮ್ಮೆ ಹಾರಾಡಿದೆ. ಉಡುಪಿಯ ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್ ಅವರ ಸುಪುತ್ರ ರೋಹನ್ ಆರ್. ಬಾರಿತ್ತಾಯ ಅವರು ಸ್ಕಾಟ್&zwnj;ಲ್ಯಾಂಡ್&zwnj;ನ ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 'ಕಾಮನ್&zwnj;ವೆಲ್ತ್ ಗೇಮ್ಸ್ - 2026' ರ ಭಾರತೀಯ ಕ್ರೀಡಾಪಟುಗಳ ತಂಡದ ಅಧಿಕೃತ ಫಿಸಿಯೋ ಮತ್ತು ರಿಕವರಿ ಥೆರಪಿಸ್ಟ್ ಆಗಿ ಕಾರ್ಯನಿರ್ವಹಿಸಲು ಆಯ್ಕೆಯಾಗಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಈ ಅತ್ಯುನ್ನತ ಕ್ರೀಡಾಕೂಟದಲ್ಲಿ ದೇಶವನ್ನು ಪ್ರತಿನಿಧಿಸುವ ಕ್ರೀಡಾಪಟುಗಳ ಫಿಟ್&zwnj;ನೆಸ್ ಜವಾಬ್ದಾರಿಯನ್ನು ಉಡುಪಿಯ ಯುವಕನೊಬ್ಬ ಹೆಗಲಿಗೇರಿಸಿಕೊಂಡಿರುವುದು ಇಡೀ ಜಿಲ್ಲೆ ಹಾಗೂ ರಾಜ್ಯ ಹೆಮ್ಮೆ ಪಡುವಂತಹ ಸಂಗತಿಯಾಗಿದೆ.&lt;/p&gt;&lt;h2&gt;ಉನ್ನತ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನದಲ್ಲಿ ಸಾಧನೆ&lt;/h2&gt;&lt;p&gt;ರೋಹನ್ ಆರ್. ಬಾರಿತ್ತಾಯ ಅವರು ಯುಕೆಯ (UK) ವಿಶ್ವವಿಖ್ಯಾತ ಲಾಫ್&zwnj;ಬೋರೋ ವಿಶ್ವವಿದ್ಯಾಲಯದಿಂದ (Loughborough University) 'MSc Strength and Conditioning' ವಿಷಯದಲ್ಲಿ ಉನ್ನತ ಸ್ನಾತಕೋತ್ತರ ಪದವಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ವಿದೇಶದಲ್ಲಿ ಶಿಕ್ಷಣ ಮುಗಿಸಿ ಬಂದ ನಂತರ, ಅವರು ತಮ್ಮ ಜ್ಞಾನವನ್ನು ಭಾರತೀಯ ಕ್ರೀಡಾಲೋಕಕ್ಕೆ ಧಾರೆ ಎರೆಯಲು ನಿರ್ಧರಿಸಿದರು. ಇದರ ಭಾಗವಾಗಿ ಉಡುಪಿ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ 'ಐಕ್ಯಂ ಸ್ಪೋರ್ಟ್ಸ್ ಸೈನ್ಸ್' (Aikyam Sports Science) ಸಂಸ್ಥೆಯನ್ನು ಆರಂಭಿಸಿ, ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಅತ್ಯಾಧುನಿಕ ಫಿಸಿಯೋ ಮತ್ತು ರಿಕವರಿ ಥೆರಪಿಸ್ಟ್ ಸೇವೆಗಳನ್ನು ನೀಡುತ್ತಾ ಬಂದಿದ್ದಾರೆ. ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಅವರಿಗಿರುವ ಅಪಾರ ಜ್ಞಾನ, ಕೌಶಲ್ಯ ಮತ್ತು ಅನುಭವವನ್ನು ಪರಿಗಣಿಸಿ ಇಂದು ಈ ಜಾಗತಿಕ ಜವಾಬ್ದಾರಿ ಅವರನ್ನರಸಿ ಬಂದಿದೆ.&lt;/p&gt;&lt;h2&gt;ಹೆಮ್ಮೆಯ ವಿಷಯ ಹಂಚಿಕೊಂಡ ಮಾಜಿ ಶಾಸಕ ರಘುಪತಿ ಭಟ್&lt;/h2&gt;&lt;p&gt;ತಮ್ಮ ಮಗನ ಈ ಜಾಗತಿಕ ಸಾಧನೆಯ ಕುರಿತು ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಭಾವುಕರಾಗಿ ಮತ್ತು ಹೆಮ್ಮೆಯಿಂದ ಬರೆದುಕೊಂಡಿದ್ದಾರೆ. &quot;ನನ್ನ ಮಗ ರೋಹನ್ ಆರ್. ಬಾರಿತ್ತಾಯನಿಗೆ 2026ರ ಗ್ಲಾಸ್ಕೋ ಕಾಮನ್&zwnj;ವೆಲ್ತ್ ಗೇಮ್ಸ್&zwnj;ನಲ್ಲಿ ಟೀಮ್ ಇಂಡಿಯಾದ ಫಿಸಿಯೋ ಮತ್ತು ರಿಕವರಿ ಥೆರಪಿಸ್ಟ್ ಆಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನಮ್ಮ ಕುಟುಂಬಕ್ಕೆ ಸಂದ ಅಪಾರ ಗೌರವವಾಗಿದೆ. ರೋಹನ್&zwnj;ನ ನಿರಂತರ ಪರಿಶ್ರಮ, ಕಠಿಣ ಶ್ರಮ, ತ್ಯಾಗ ಮತ್ತು ವೃತ್ತಿಪರ ನಿಷ್ಠೆಗೆ ಸಿಕ್ಕ ಪ್ರತಿಫಲ ಇದಾಗಿದೆ. ಜಾಗತಿಕ ಕ್ರೀಡಾ ವೇದಿಕೆಯಲ್ಲಿ ದೇಶದ ಹೆಮ್ಮೆಯ ಕ್ರೀಡಾಪಟುಗಳ ಆರೋಗ್ಯ ಮತ್ತು ಉತ್ತಮ ಪ್ರದರ್ಶನಕ್ಕಾಗಿ ನನ್ನ ಮಗ ಸೇವೆ ಸಲ್ಲಿಸುತ್ತಿರುವುದನ್ನು ನೋಡುವುದು ಒಬ್ಬ ತಂದೆಯಾಗಿ ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ,&quot; ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಇದೇ ಸಂದರ್ಭದಲ್ಲಿ, ರೋಹನ್ ಅವರ ಕೌಶಲ್ಯವನ್ನು ಗುರುತಿಸಿ ಭಾರತೀಯ ತಂಡದಲ್ಲಿ ಕಾರ್ಯನಿರ್ವಹಿಸಲು ದೊಡ್ಡ ಅವಕಾಶ ಮಾಡಿಕೊಟ್ಟ ಇಂಡಿಯನ್ ಪ್ಯಾರಾ ಒಲಿಂಪಿಕ್ ಸಮಿತಿಯ ಚೀಫ್ ಕೋಚ್ ಸತ್ಯನಾರಾಯಣ್ ಅವರಿಗೆ ರಘುಪತಿ ಭಟ್ ಅವರು ಸಾರ್ವಜನಿಕವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, &quot;ಮಗನ ಪರಿಶ್ರಮ, ವಿನಯ ಮತ್ತು ಸೇವಾ ಮನೋಭಾವವು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಎತ್ತರಕ್ಕೆ ತಲುಪಲಿ. ಉಡುಪಿಯ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಆಶೀರ್ವಾದ ಸದಾ ಅವನ ಮೇಲಿರಲಿ&quot; ಎಂದು ಹಾರೈಸಿದ್ದಾರೆ.&lt;/p&gt;&lt;h2&gt;ಗ್ಲಾಸ್ಕೋದಲ್ಲಿ ಕ್ರೀಡಾ ಹಬ್ಬ&lt;/h2&gt;&lt;p&gt;2026ರ ಜುಲೈ 23 ರಿಂದ ಆಗಸ್ಟ್ 2 ರವರೆಗೆ ಸ್ಕಾಟ್&zwnj;ಲ್ಯಾಂಡ್&zwnj;ನ ಗ್ಲಾಸ್ಕೋದಲ್ಲಿ ಕಾಮನ್&zwnj;ವೆಲ್ತ್ ಕ್ರೀಡಾಕೂಟವು ಅದ್ಧೂರಿಯಾಗಿ ನಡೆಯುತ್ತಿದ್ದು, ವಿಶ್ವದ ವಿವಿಧ ಕಾಮನ್&zwnj;ವೆಲ್ತ್ ರಾಷ್ಟ್ರಗಳ ಸಾವಿರಾರು ಶ್ರೇಷ್ಠ ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಇಂತಹ ಬೃಹತ್ ವೇದಿಕೆಯಲ್ಲಿ ಭಾರತದ ಕ್ರೀಡಾಪಟುಗಳು ಪದಕ ಬೇಟೆಯಾಡಲು ಸಜ್ಜಾಗಿದ್ದು, ಅವರ ಬೆನ್ನೆಲುಬಾಗಿ ನಿಂತು ದೈಹಿಕ ಫಿಟ್&zwnj;ನೆಸ್ ಕಾಯ್ದುಕೊಳ್ಳುವಲ್ಲಿ ಉಡುಪಿಯ ರೋಹನ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ರೋಹನ್ ಅವರ ಈ ಅಂತರರಾಷ್ಟ್ರೀಯ ಸಾಧನೆಗೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಶಂಸೆ ಹಾಗೂ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/other-sports/raghupathy-bhat-son-rohan-appointed-team-india-physio-for-glasgow-2026-commonwealth-games-gdp/articleshow-apl1rsz"/>
        </item>
        <item>
            <title><![CDATA[ಆ.11ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್, 57 ಸುರಂಗ, 226 ಸೇತುವೆ 108 ವಕ್ರಾಕೃತಿ ತಿರುವು ದಾಟಲಿದೆ ರೈಲು!]]></title>
            <link>https://kannada.asianetnews.com/karnataka-districts/indian-railways-swr-bengaluru-mangaluru-vande-bharat-express-trial-run-to-begin-on-august-11-gdp/articleshow-cov2r0i</link>
            <guid isPermaLink="true">https://kannada.asianetnews.com/karnataka-districts/indian-railways-swr-bengaluru-mangaluru-vande-bharat-express-trial-run-to-begin-on-august-11-gdp/articleshow-cov2r0i</guid>
            <pubDate>Fri, 07 Aug 2026 10:27:12 +0530</pubDate>
            <description><![CDATA[ನೈಋತ್ಯ ರೈಲ್ವೆಯು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ 'ವಂದೇ ಭಾರತ್ ಎಕ್ಸ್&zwnj;ಪ್ರೆಸ್' ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಿದ್ಧತೆ ನಡೆಸಿದೆ. ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ಕಡಿದಾದ ಮತ್ತು ನೈಸರ್ಗಿಕ ಸೌಂದರ್ಯದ ಘಟ್ಟ ಪ್ರದೇಶದಲ್ಲಿ ಈ ಪರೀಕ್ಷಾರ್ಥ ಓಟ ನಡೆಯಲಿದ್ದು, ಯಶಸ್ವಿಯಾದರೆ ಸೇವೆಯನ್ನು ಮಡಗಾಂವ್&zwnj;ವರೆಗೆ ವಿಸ್ತರಿಸುವ ಚಿಂತನೆಯಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvsg4t8bkpejxqmnd4qj3ycp,imgname----------------------64--1782193481995.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆ ಕೊನೆಗೂ ಈಡೇರುವ ಸಮಯ ಬಂದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಆ.11 ರಿಂದ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ &lsquo;ವಂದೇ ಭಾರತ್ ಎಕ್ಸ್&zwnj;ಪ್ರೆಸ್&rsquo; ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಿದ್ಧತೆ ನಡೆಸಿದೆ.&amp;nbsp;&lt;/p&gt;&lt;p&gt;ಕೆಲವು ವರದಿಗಳ ಪ್ರಕಾರ ಆಗಸ್ಟ್ 18 ರಿಂದ 22ರವರೆಗೆ ಪರಿಕ್ಷಾರ್ಥ ಪ್ರಯೋಗ ನಡೆಯಲಿದೆ ಎನ್ನಲಾಗಿದೆ. ಕಾರಣ ಯಡಕುಮೇರಿಯಲ್ಲಿ ಕಳೆದವಾರ ಗುಡ್ಡಕುಸಿತದ ಪರಿಣಾಮ ವಿಳಂಭವಾಗಿದೆ ಎನ್ನಲಾಗಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಜೂನ್ ತಿಂಗಳೊಳಗೆ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆ ಆರಂಭಿಸುವುದಾಗಿ ಈ ಹಿಂದೆ ತಿಳಿಸಿದ್ದರು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಅತ್ಯಂತ ಕಡಿದಾದ ಘಾಟ್ ಪ್ರದೇಶದಲ್ಲಿ ಕಡಿದಾದ ಇಳಿಜಾರು ಇರುವುದರಿಂದ, ಸಾಮಾನ್ಯ ರೈಲುಗಳಿಗೆ ಬ್ಯಾಂಕರ್ ಇಂಜಿನ್&zwnj;ಗಳನ್ನು ಜೋಡಿಸಬೇಕಿತ್ತು. ಆದರೆ ವಂದೇ ಭಾರತ್ ರೈಲಿನ ಸ್ವಯಂಚಾಲಿತ ವೇಗ ನಿಯಂತ್ರಣಕ್ಕಾಗಿ ಅತ್ಯಗತ್ಯವಾದ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ತಂತ್ರಜ್ಞಾನ ಹೊಂದಿರುವ 20 ಕೋಚ್&zwnj;ಗಳ ವಂದೇ ಭಾರತ್ ರೇಕ್ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಿಂದ ಆಗಮಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಪಾಂಡವಪುರ ನಿಲ್ದಾಣದಲ್ಲಿದೆ.&lt;/p&gt;&lt;p&gt;ಪಶ್ಚಿಮ ಘಟ್ಟಗಳ ಮೂಲಕ ಹಾದುಹೋಗುವ 55 ಕಿ.ಮೀ. ಉದ್ದದ ಈ ರೈಲು ಭಾರತೀಯ ರೈಲ್ವೆಯ ತಾಂತ್ರಿಕವಾಗಿ ಹೆಚ್ಚು ಬೇಡಿಕೆಯಿರುವ ಪರ್ವತ ಆಗಿರುವುದರಿಂದ ಇದು ಒಂದು ಪ್ರಮುಖ ಪರೀಕ್ಷಾರ್ಥ ಓಟವಾಗಿದೆ. ಮಾರ್ಪಡಿಸಿದ ವಂದೇ ಭಾರತ್ ರೈಲು ಕಡಿದಾದ ಇಳಿಜಾರುಗಳು ಮತ್ತು ಸುರಂಗಗಳನ್ನು ಸುರಕ್ಷಿತವಾಗಿ ದಾಟಬಹುದೇ ಎಂದು ರೈಲ್ವೆ ಎಂಜಿನಿಯರ್&zwnj;ಗಳು ಮೌಲ್ಯಮಾಪನ ಮಾಡುತ್ತಾರೆ. ಕೆಲವು ಸೇತುವೆಗಳು ಮತ್ತು ತೀಕ್ಷ್ಣವಾದ ವಕ್ರಾಕೃತಿಗಳು ಕೂಡ ಈ ಮಾರ್ಗದಲ್ಲಿ ಇದೆ.&lt;/p&gt;&lt;h2&gt;57 ಸುರಂಗಗಳು, 226 ಸೇತುವೆಗಳು ಮತ್ತು 108 ಚೂಪಾದ ತಿರುವು&lt;/h2&gt;&lt;p&gt;ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆಯಲ್ಲಿ ಹಲವು ಅದ್ಭುತಗಳು ಮತ್ತು ನೈಸರ್ಗಿಕ ಸೌಂದರ್ಯಕ್ಕೆ ಈ ಮಾರ್ಗ ಹೆಸರುವಾಸಿಯಾಗಿದೆ. ಈ ರೈಲು ಹಚ್ಚ ಹಸಿರಿನ ಪಶ್ಚಿಮ ಘಟ್ಟಗಳ ಮೂಲಕ ಚಲಿಸುತ್ತದೆ. ಈ ಹಳಿಗಳಲ್ಲಿ 50 ರಲ್ಲಿ 1 ರಷ್ಟು ಕಡಿದಾದ ಇಳಿಜಾರು, 57 ಸುರಂಗಗಳು, 226 ಸೇತುವೆಗಳು ಮತ್ತು 108 ಚೂಪಾದ ತಿರುವುಗಳು ಸೇರಿವೆ. ಈ ಪ್ರದೇಶವು ಭೂಕುಸಿತಗಳಿಗೆ ಹೆಚ್ಚು ಒಳಗಾಗುತ್ತದೆ. ಕಳೆದವಾರ ಅಂದರೆ ವಿಪರೀತ ಮಳೆಗೆ ಜುಲೈ ಅಂತ್ಯದಲ್ಲಿ ಭೂಕುಸಿತವಾಗಿ ರೈಲು ಸಂಚಾರ 3 ದಿನಗಳ ಕಾಲ ರದ್ದಾಗಿತ್ತು.&lt;/p&gt;&lt;p&gt;ವರದಿ ಪ್ರಕಾರ ಮಂಗಳೂರು ಮತ್ತು ಮಡಗಾಂವ್ ನಡುವೆ ಪ್ರಸ್ತುತ ಚಾಲನೆಯಲ್ಲಿರುವ ಸೇವೆಯನ್ನು (20645/20646) ವಿಸ್ತರಿಸುವ ಮೂಲಕ ಬೆಂಗಳೂರು-ಮಂಗಳೂರು ವಂದೇ ಭಾರತ್ ಅನ್ನು ಪರಿಚಯಿಸುವ ಚಿಂತನೆ ಇದೆ. ಯೋಜನೆಗಳು ಕಾರ್ಯರೂಪಕ್ಕೆ ಬಂದರೆ, ರೈಲು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ ಮಂಗಳೂರಿಗೆ ಮತ್ತು ಸಂಜೆ ಮಡಗಾಂವ್ ತಲುಪುತ್ತದೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ, ರೈಲು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ ಮಂಗಳೂರಿಗೆ ಮತ್ತು ಸಂಜೆ ಮಡಗಾಂವ್ ತಲುಪುತ್ತದೆ. ಮಡ್ಗಾಂವ್ ನಿಂದ ರೈಲು ಬೆಳಿಗ್ಗೆ ಹೊರಟು ಮಧ್ಯಾಹ್ನ ಮಂಗಳೂರು ಮತ್ತು ಸಂಜೆ ಬೆಂಗಳೂರು ತಲುಪಲಿದೆ. ಇದಕ್ಕಾಗಿ ಎರಡು ಪ್ರತ್ಯೇಕ ರೇಕ್&zwnj;ಗಳನ್ನು ಬಳಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಬೆಂಗಳೂರು-ಮಂಗಳೂರು ವಂದೇ ಭಾರತ್ ಪೂರ್ಣಗೊಂಡಾಗ, ಭಾರತದ ಅತ್ಯಂತ ಸುಂದರವಾದ ರೈಲು ಪ್ರಯಾಣಗಳಲ್ಲಿ ಒಂದಾಗುವ ನಿರೀಕ್ಷೆಯಿದೆ.&lt;/p&gt;&lt;p&gt;ಇದು ದಟ್ಟವಾದ ಕಾಡುಗಳು, ಮಳೆಗಾಲದಲ್ಲಿ ಜಲಪಾತಗಳು, ಮಂಜಿನಿಂದ ಆವೃತವಾದ ಕಣಿವೆಗಳು, ಆಳವಾದ ಕಂದಕಗಳು ಮತ್ತು ಪಶ್ಚಿಮ ಘಟ್ಟಗಳಲ್ಲಿನ ಹಲವಾರು ಸುರಂಗಗಳ ಮೂಲಕ ಹಾದುಹೋಗುತ್ತದೆ. ಇಲ್ಲಿ ಪ್ರಯಾಣಿಸುವುದೇ ಒಂದು ಅಧ್ಭುತ ಅನುಭವ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ ಪ್ರಯಾಣವನ್ನು ದಕ್ಷಿಣ ಭಾರತದ ಅತ್ಯಂತ ಅದ್ಭುತ ರೈಲ್ವೆ ಪ್ರಯಾಣಗಳಲ್ಲಿ ಒಂದೆಂದು ದೀರ್ಘಕಾಲದಿಂದ ಪರಿಗಣಿಸಲಾಗಿದೆ.&lt;/p&gt;]]></content:encoded>
            <category>udupi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/indian-railways-swr-bengaluru-mangaluru-vande-bharat-express-trial-run-to-begin-on-august-11-gdp/articleshow-cov2r0i"/>
        </item>
        <item>
            <title><![CDATA[ಶಾಲಾ-ಕಾಲೇಜುಗಳು ಸೇರಿ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ..!]]></title>
            <link>https://kannada.asianetnews.com/udupi/general-holiday-declared-for-udupi-district-tomorrow-including-schools-and-colleges-gkn/articleshow-dd3adnm</link>
            <guid isPermaLink="true">https://kannada.asianetnews.com/udupi/general-holiday-declared-for-udupi-district-tomorrow-including-schools-and-colleges-gkn/articleshow-dd3adnm</guid>
            <pubDate>Sun, 16 Aug 2026 22:49:38 +0530</pubDate>
            <description><![CDATA[&lt;p&gt;ನಾಗರಪಂಚಮಿ ಹಬ್ಬದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ನಾಳೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m05s6kymnv4qfhqdm3w2pze9,imgname-general-holiday-has-been-declared-for-all-schools--colleges-1786900598740.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು/ಉಡುಪಿ: &lt;/strong&gt;ಕರಾವಳಿ ಜನರ ಪಾಲಿನ ಅತ್ಯಂತ ಪವಿತ್ರ ಹಾಗೂ ಶ್ರದ್ಧಾಭಕ್ತಿಯ ಹಬ್ಬವಾದ 'ನಾಗರಪಂಚಮಿ'ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ನಾಳೆ (ಶನಿವಾರ) ಸಾರ್ವತ್ರಿಕ ರಜೆ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಜಿಲ್ಲಾಧಿಕಾರಿಗಳ ಆದೇಶ&lt;/strong&gt;&lt;/h2&gt;&lt;p&gt;ನಾಗರಪಂಚಮಿ ಹಬ್ಬದ ದಿನದಂದು ಜಿಲ್ಲೆಯಾದ್ಯಂತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ನಾಗಬನ ಹಾಗೂ ದೇವಾಲಯಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (ಪ್ರಭಾರ ಡಿಸಿ ದರ್ಶನ್ ಎಚ್.ವಿ ಅವರ ಮೂಲಕ) ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ರಜೆಯು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಕರಾವಳಿಯ ನಾಗಾರಾಧನೆಯ ವೈಶಿಷ್ಟ್ಯ&lt;/strong&gt;&lt;/h2&gt;&lt;p&gt;ಕರಾವಳಿ ಭಾಗದಲ್ಲಿ ಅಥವಾ 'ಪರಶುರಾಮ ಸೃಷ್ಟಿ'ಯಲ್ಲಿ ನಾಗರಪಂಚಮಿಗೆ ವಿಶಿಷ್ಟ ಸ್ಥಾನವಿದೆ. ಇಲ್ಲಿ ನಾಗಾರಾಧನೆಯು ಕೇವಲ ಒಂದು ಹಬ್ಬವಲ್ಲ, ಅದು ಒಂದು ಜೀವನ ಪದ್ಧತಿಯಾಗಿದೆ. ಕರಾವಳಿ ಜನರಿಗೆ ನಾಗದೇವತೆಯ ಮೇಲೆ ಅಪಾರ ಭಯ ಮತ್ತು ಭಕ್ತಿ ಎರಡೂ ಇದೆ. ಪ್ರತಿಯೊಂದು ಕುಟುಂಬಕ್ಕೂ ತನ್ನದೇ ಆದ 'ನಾಗಬನ' (ಪವಿತ್ರ ಹಸಿರು ವನ) ಇರುತ್ತದೆ. ಹಬ್ಬದ ದಿನದಂದು ಕುಟುಂಬದ ಸದಸ್ಯರೆಲ್ಲರೂ ಒಂದೆಡೆ ಸೇರಿ ನಾಗಬನದಲ್ಲಿ ನಾಗದೇವತೆಗೆ ತಂಬಿಲ, ಅಭಿಷೇಕ ಮಾಡುವುದು ಇಲ್ಲಿನ ಪರಂಪರೆ.&lt;/p&gt;&lt;p&gt;ನಾಗದೇವನಿಗೆ ಹಾಲು, ಜೇನುತುಪ್ಪ, ಎಳನೀರು ಹಾಗೂ ಅರಿಶಿನದಿಂದ ಅಭಿಷೇಕ ಮಾಡಲಾಗುತ್ತದೆ. ಅಲ್ಲದೆ, ನಾಗದೇವನಿಗೆ ಅತ್ಯಂತ ಪ್ರಿಯವಾದ 'ಕೇದಗೆ' ಹೂವು ಹಾಗೂ 'ಪಿಂಗಾರ' (ಅಡಿಕೆ ಹೂವು) ಅರ್ಪಿಸಲಾಗುತ್ತದೆ. ಹಬ್ಬದ ಪ್ರಯುಕ್ತ ಮನೆಮನೆಗಳಲ್ಲಿ ಅರಿಶಿನ ಎಲೆಯ ಕಡುಬು (ಅರಿಶಿನ ಎಲೆ ಅಡ್ಡೆ) ವಿಶೇಷವಾಗಿ ತಯಾರಿಸಲಾಗುತ್ತದೆ. ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರಿನ ಕುಡುಪು ಅನಂತಪದ್ಮನಾಭ ದೇವಸ್ಥಾನ, ಉಡುಪಿಯ ಅನಂತೇಶ್ವರ ದೇವಸ್ಥಾನಗಳಲ್ಲಿ ನಾಗರಪಂಚಮಿಯಂದು ಭಕ್ತರ ಸಾಗರವೇ ಹರಿದುಬರುತ್ತದೆ. ಸರ್ಪದೋಷ ನಿವಾರಣೆಗಾಗಿ ಸಾವಿರಾರು ಭಕ್ತರು ಆಶ್ಲೇಷ ಬಲಿ, ನಾಗಪ್ರತಿಷ್ಠೆ ಹಾಗೂ ತಂಬಿಲ ಸೇವೆಗಳನ್ನು ಸಲ್ಲಿಸುತ್ತಾರೆ.&lt;/p&gt;&lt;h2&gt;&lt;strong&gt;ನಾಗರಪಂಚಮಿ ಮತ್ತು ಪರಿಸರ&lt;/strong&gt;&lt;/h2&gt;&lt;p&gt;ಕರಾವಳಿಯಲ್ಲಿ ನಾಗಾರಾಧನೆಯು ಪರಿಸರ ಸಂರಕ್ಷಣೆಯ ಸಂಕೇತವೂ ಹೌದು. ನಾಗಬನಗಳ ಹೆಸರಿನಲ್ಲಿ ಕಾಡುಗಳನ್ನು ಉಳಿಸಿಕೊಳ್ಳುವ ಸಂಪ್ರದಾಯ ಇಂದಿಗೂ ಚಾಲ್ತಿಯಲ್ಲಿದೆ. ಈ ಹಬ್ಬವು ಮನುಷ್ಯ ಮತ್ತು ಪ್ರಕೃತಿಯ ನಡುವಿನ ಅವಿನಾಭಾವ ಸಂಬಂಧವನ್ನು ಸಾರುತ್ತದೆ. ಒಟ್ಟಾರೆಯಾಗಿ ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಸಡಗರ ಮನೆಮಾಡಿದ್ದು, ಭಕ್ತರು ಭಕ್ತಿಯಿಂದ ನಾಗದೇವನನ್ನು ಪೂಜಿಸಲು ಸಜ್ಜಾಗಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/udupi/general-holiday-declared-for-udupi-district-tomorrow-including-schools-and-colleges-gkn/articleshow-dd3adnm"/>
        </item>
        <item>
            <title><![CDATA[ಅರಬ್ಬಿ ಸಮುದ್ರದಲ್ಲಿ ಸತತ 3 ಗಂಟೆಗಳಿಂದ ಈಜುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ !]]></title>
            <link>https://kannada.asianetnews.com/karnataka-districts/udupi-kapu-mentally-ill-man-rescued-after-swimming-in-arabian-sea-for-3-hours-mrq/articleshow-evm875i</link>
            <guid isPermaLink="true">https://kannada.asianetnews.com/karnataka-districts/udupi-kapu-mentally-ill-man-rescued-after-swimming-in-arabian-sea-for-3-hours-mrq/articleshow-evm875i</guid>
            <pubDate>Tue, 18 Aug 2026 07:40:33 +0530</pubDate>
            <description><![CDATA[ಕಾಪುವಿನ ಅರಬ್ಬಿ ಸಮುದ್ರದಲ್ಲಿ ಸುಮಾರು 3 ಗಂಟೆಗಳ ಕಾಲ ಈಜುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ರಕ್ಷಿಸಲಾಗಿದೆ. ಶಾಸಕ ಯಶ್ಪಾಲ್ ಸುವರ್ಣ ಅವರ ಸೂಚನೆ ಮೇರೆಗೆ ಸ್ಥಳಕ್ಕೆ ಧಾವಿಸಿದ ಆಪತ್ಬಾಂಧವ ಈಶ್ವರ್ ಮಲ್ಪೆ ಅವರು ಯುವಕನನ್ನು ಮನವೊಲಿಸಿ ದಡಕ್ಕೆ ಕರೆತಂದರು.]]></description>
            <media:content url="https://static.asianetnews.com/images/w-1280,h-720,format-jpg,imgid-01m09a4nnk2v5ar26ykmvrs6fk,imgname-kapu-1787019024051.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ&lt;/strong&gt;: ಅರಬ್ಬಿ ಸಮುದ್ರದಲ್ಲಿ ಸತತ 3 ಗಂಟೆಗಳಿಂದ ಈಜುತ್ತಿದ್ದ ಮಾನಸಿಕ ಅಸ್ವಸ್ಥರೊಬ್ಬರನ್ನು ಭಾನುವಾರ ರಕ್ಷಿಸಲಾಗಿದೆ. ಕಾಡಿಪಟ್ಟ ನಿವಾಸಿ ಯತೀಶ್ (38) ರಕ್ಷಣೆಗೊಳಗಾದವರು. ಯತೀಶ್ ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿಯ ಕೃತ್ಯಗಳಿಗೆ ಪ್ರಯತ್ನಿಸಿದ್ದರು. ಆದರೆ ನಿವಾಸಿಗಳು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದರು.&lt;/p&gt;&lt;p&gt;ಭಾನುವಾರ ಮಧ್ಯಾಹ್ನ ಯತೀಶ್ ಅರಬಿ ಸಮುದ್ರಕ್ಕೆ ಇಳಿದು ಈಜಲಾರಂಭಿಸಿದ್ದರು. ಸಮುದ್ರ ಪ್ರಕ್ಷುಬ್ದವಾಗಿದ್ದು ಅವರಿಗೆ ಅಪಾಯವಾಗುವ ಸಾಧ್ಯತೆ ಇತ್ತು. ದೋಣಿಯಲ್ಲಿ ಹೋಗಿ ಮೀನುಗಾರರು ಅವರನ್ನು ದೋಣಿಗೆ ಎಳೆಯಲು ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರಯತ್ನಿಸಿದರು, ಆದರೆ ಆತ ತಪ್ಪಿಸಿಕೊಳ್ಳುತಿದ್ದರು.&lt;/p&gt;&lt;h2&gt;&lt;strong&gt;ಮೂರು ನಾಟಿಕಲ್ ಮೈಲು ದೂರದಲ್ಲಿ ಈಜುತ್ತಿದ್ದ ಯತೀಶ್&lt;/strong&gt;&lt;/h2&gt;&lt;p&gt;ಈ ಬಗ್ಗೆ ಮಾಹಿತಿ ಪಡೆದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಆಪತ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಈಶ್ವರ್ ಮೂರು ನಾಟಿಕಲ್ ಮೈಲು ದೂರದಲ್ಲಿ ಈಜುತ್ತಿದ್ದ ಯತೀಶ್ ಇರುವಲ್ಲಿ ಈಜುತ್ತಾ ತೆರಳಿ, ಆತ ದಡಕ್ಕೆ ಬರುವಂತೆ ಮನವೊಲಿಸಿದರು.&lt;/p&gt;&lt;p&gt;ನಂತರ ಈಶ್ವರ್ ಅವರು ಯತೀಶ್ ಜೊತೆಗೆ ಈಜುತ್ತಾ ಮಧ್ಯಾಹ್ನ 3.15ರ ಸುಮಾರಿಗೆ ದಡಕ್ಕೆ ಕರೆತಂದರು. ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಲೈಫ್&zwnj;ಗಾರ್ಡ್&zwnj;ಗಳಾದ ಪ್ರಜ್ವಲ್, ಸುಶಾಂತ್ ಮತ್ತು ಬಾದಲ್ ಸಹಕರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಯತೀಶ್ ಅವರನ್ನು ಉಡುಪಿಯ ಡಾ. ಎ.ವಿ. ಬಾಳಿಗಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.&lt;/p&gt;&lt;p&gt;ಸ್ಥಳಕ್ಕೆ ಕರಾವಳಿ ಕಾವಲು ಪೊಲೀಸರು ಮತ್ತು ಗೃಹರಕ್ಷಕ ದಳದವರು ಕೂಡ ಭೇಟಿ ನೀಡಿದ್ದರು. ಆದರೆ ಅವರ ಬಳಿ ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಪೀಡ್ ಬೋಟ್ ಇಲ್ಲದಿರುವ ಬಗ್ಗೆ ಸ್ಥಳೀಯರು ಆಸಮಾಧಾನ ವ್ಯಕ್ತಪಡಿಸಿದ್ದಾರೆ&zwnj;.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಎಡಕುಮೇರಿ ಘಾಟ್&zwnj;ನಲ್ಲಿ ವಂದೇ ಭಾರತ್&zwnj;; ಸೋಮೇಶ್ವರ ರೈಲ್ವೇ ಗೇಟ್&zwnj; ಬಂದ್&zwnj;, ಬದಲಿ ಮಾರ್ಗ&lt;/strong&gt;&lt;/p&gt;]]></content:encoded>
            <category>udupi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/udupi-kapu-mentally-ill-man-rescued-after-swimming-in-arabian-sea-for-3-hours-mrq/articleshow-evm875i"/>
        </item>
        <item>
            <title><![CDATA[Udupi world record: 25 ಗಂಟೆ ದಾಸರ ಕೀರ್ತನೆ ಹಾಡಿ ವಿಶ್ವದಾಖಲೆ ಬರೆದ ವಿದುಷಿ ಸಂಗೀತ ಬಾಲಚಂದ್ರ]]></title>
            <link>https://kannada.asianetnews.com/karnataka-districts/udupi-vidushi-sangeetha-balachandra-sets-world-record-by-singing-dasara-keerthanas-for-25-hours/articleshow-h7bulwc</link>
            <guid isPermaLink="true">https://kannada.asianetnews.com/karnataka-districts/udupi-vidushi-sangeetha-balachandra-sets-world-record-by-singing-dasara-keerthanas-for-25-hours/articleshow-h7bulwc</guid>
            <pubDate>Tue, 25 Aug 2026 04:58:15 +0530</pubDate>
            <description><![CDATA[&lt;p&gt;ಖ್ಯಾತ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ಉಡುಪಿಯ ಶ್ರೀಕೃಷ್ಣನ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ದಾಸರ ಕೀರ್ತನೆಗಳನ್ನು ಹಾಡಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮಹಾಸಾಧನೆಗಾಗಿ ಅವರ ಹೆಸರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್&zwnj;ನಲ್ಲಿ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0v195dj1mj4nznkj3p0pdwx,imgname-----------------------2026-08-25t044736.569-1787613713842.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಆ.25): &lt;/strong&gt;ಖ್ಯಾತ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ಉಡುಪಿಯ ಶ್ರೀಕೃಷ್ಣನ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ನಿರಂತರವಾಗಿ ದಾಸರ ಕೀರ್ತನೆಗಳನ್ನು ಹಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಸಾಧನೆಗಾಗಿ ಅವರ ಹೆಸರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್&zwnj;ನಲ್ಲಿ ದಾಖಲಾಗಿದೆ.&lt;/p&gt;&lt;h2&gt;ಸತತ 25 ಗಂಟೆಗಳ ಕಾಲ ಹಾಡಿ ವಿಶ್ವದಾಖಲೆ!&lt;/h2&gt;&lt;p&gt;ಭಾನುವಾರ ಬೆಳಗ್ಗೆ 6.30ಕ್ಕೆ ಪುತ್ತಿಗೆ ಮಠದ ಗೀತಾಮಂದಿರದ ಶ್ರೀ ನೃಸಿಂಹ ಸಭಾಭವನದಲ್ಲಿ ಆರಂಭಗೊಂಡ ಸಂಗೀತ ಬಾಲಚಂದ್ರ ಅವರ ನಿರಂತರ ಗಾಯನ ಸೋಮವಾರ ಬೆಳಗ್ಗೆ 7.40ಕ್ಕೆ ಮಂಗಳವಾಯಿತು. ಕೇವಲ ದಾಸರ ಪದ ಮತ್ತು ಕೀರ್ತನೆಗಳನ್ನೇ ಸತತ 25 ಗಂಟೆಗಳ ಕಾಲ ಹಾಡಿದ ಅವರ ಈ ಐತಿಹಾಸಿಕ ಸಾಧನೆಯನ್ನು ಅಧಿಕೃತವಾಗಿ ದೃಢೀಕರಿಸಲು ಆಗಮಿಸಿದ್ದ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್&zwnj;ನ ಏಷ್ಯಾ ಹೆಡ್ ಡಾ.ಮನೀಷ್ ವಿಶ್ನೋಯಿ ಅವರು ವಿಶ್ವದಾಖಲೆ ಘೋಷಿಸಿದರು. ಬಳಿಕ, ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ವಿಶ್ವದಾಖಲೆಯ ಪ್ರಮಾಣಪತ್ರವನ್ನು ವಿದುಷಿ ಸಂಗೀತ ಅವರಿಗೆ ಹಸ್ತಾಂತರಿಸಿದರು.&lt;/p&gt;&lt;p&gt;ಜೊತೆಗೆ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶಯದಂತೆ &lsquo;ಗೀತಾ ಗಂಗೋತ್ರಿ&rsquo; ಎಂಬ ಬಿರುದನ್ನು ಪ್ರದಾನ ಮಾಡಿ ಆಶೀರ್ವದಿಸಿದರು.&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/udupi-vidushi-sangeetha-balachandra-sets-world-record-by-singing-dasara-keerthanas-for-25-hours/articleshow-h7bulwc"/>
        </item>
        <item>
            <title><![CDATA[Udupi: ಕಾರ್ಕಳ ತಾಲೂಕಿನ ಪುಟ್ಟ ಗ್ರಾಮದಲ್ಲಿ ಪತ್ತೆಯಾಯ್ತು 400 ವರ್ಷಗಳ ಹಿಂದಿನ ರಹಸ್ಯ]]></title>
            <link>https://kannada.asianetnews.com/karnataka-districts/udupi-an-unpublished-inscription-dating-back-to-1616-ad-has-been-discovered-in-mala-village-of-karkala-taluk-mrq/articleshow-kktrt8r</link>
            <guid isPermaLink="true">https://kannada.asianetnews.com/karnataka-districts/udupi-an-unpublished-inscription-dating-back-to-1616-ad-has-been-discovered-in-mala-village-of-karkala-taluk-mrq/articleshow-kktrt8r</guid>
            <pubDate>Tue, 04 Aug 2026 08:33:06 +0530</pubDate>
            <description><![CDATA[ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಕ್ರಿ.ಶ. 1616ರ ಕಾಲದ ಅಪ್ರಕಟಿತ ಶಿಲಾಶಾಸನವೊಂದು ಪತ್ತೆಯಾಗಿದೆ. ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ತಂಡವು ಅಧ್ಯಯನ ನಡೆಸಿದ್ದು, 15 ಸಾಲುಗಳ ಈ ಕನ್ನಡ ಶಾಸನವು ಸಾಂತೈಯನಯ್ಯನ ಪುತ್ರ ಮಲೈಯ ಎಂಬಾತನಿಂದ ರಚಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz5bjrbf0rnp9v874z8f3g6k,imgname-karkala-1785812574575.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರ್ಕಳ: &lt;/strong&gt;ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳಚೌಕಿ ಪ್ರದೇಶದಲ್ಲಿರುವ ಶ್ರೀ ಪಾಂಡಿರಾಜ ಪೆರ್ಗಡೆ ಮನೆಯ ಮುಂಭಾಗದಲ್ಲಿರುವ ಅಪರೂಪದ ಶಿಲಾಶಾಸನವನ್ನು ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ತಂಡ ಅಧ್ಯಯನ ನಡೆಸಿದ್ದು, ಇದು ಕ್ರಿ.ಶ. 1616ರ ಕಾಲಘಟ್ಟಕ್ಕೆ ಸೇರಿರುವ ಅಪ್ರಕಟಿತ ಶಿಲಾಶಾಸನವಾಗಿರಬಹುದೆಂದು ಪ್ರಾಥಮಿಕ ಅಧ್ಯಯನದಲ್ಲಿ ತಿಳಿದು ಬಂದಿದೆ.&lt;/p&gt;&lt;p&gt;ಧರ್ಮಚಾವಡಿ ಹೆಗ್ಗಡತಿ ಎಂಬ ಹೆಸರಿನ ಮನೆಯ ಹೊರಭಾಗದಲ್ಲಿ ಸಂರಕ್ಷಿಸಲಾಗಿರುವ ಈ ಶಾಸನವು ಹಿಂದೆ ದುಗ್ಗಲ್ಲಾಯ ದೈವಗುಂಡದ ಸಮೀಪದಲ್ಲಿದ್ದು, ಬಳಿಕ ಮನೆ ವಿಸ್ತರಣೆ ವೇಳೆ ಸುರಕ್ಷಿತವಾಗಿ ಹೊರಭಾಗದಲ್ಲಿ ನಿಲ್ಲಿಸಲಾಗಿದೆ ಎಂದು ಪಾಂಡಿರಾಜ ಪೆರ್ಗಡೆ ಹಾಗೂ ರವಿರಾಜ ಪೆರ್ಗಡೆ ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಸಂಶೋಧನಾ ತಂಡದಿಂದ ಪರಿಶೀಲನೆ&lt;/strong&gt;&lt;/h2&gt;&lt;p&gt;ಶಾಸನಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಆಯುರ್ವೇದ ವೈದ್ಯ ಡಾ. ಪಿ. ಸತ್ಯನಾರಾಯಣ ಭಟ್ ಅವರ ಪ್ರಾಥಮಿಕ ಮಾಹಿತಿಯ ಮೇರೆಗೆ ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ಅಧ್ಯಯನ ನಿರ್ದೇಶಕ ಪ್ರೊ. ಎಸ್. ಎ. ಕೃಷ್ಣಯ್ಯ ಅವರು ಸಂಶೋಧನಾ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.&lt;/p&gt;&lt;p&gt;ಅಪ್ರಕಟಿತ ಶಾಸನದ ಅಧ್ಯಯನವನ್ನು ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ನಡೆಸಿದ್ದು, ಕನ್ನಡ ಲಿಪಿ ಹಾಗೂ ಭಾಷೆಯಲ್ಲಿ ರಚಿತವಾಗಿರುವ ಈ ಶಾಸನದಲ್ಲಿ ಒಟ್ಟು 15 ಸಾಲುಗಳಿವೆ.&lt;/p&gt;&lt;h3&gt;&lt;strong&gt;ಶಾಸನದಲ್ಲಿ ಏನಿದೆ?&lt;/strong&gt;&lt;/h3&gt;&lt;p&gt;ಶಾಸನದಲ್ಲಿ ಉಲ್ಲೇಖಿಸಿರುವ ಕಾಲಮಾನವು ಶಾಲಿವಾಹನ ಶಕ 1538, ನಳ ಸಂವತ್ಸರ, ವೈಶಾಖ ಶುದ್ಧ ದ್ವಾದಶಿ, ಇಂದುವಾರ ಎಂದು ದಾಖಲಾಗಿದ್ದು, ಇದು ಸಾಮಾನ್ಯ ಕಾಲಗಣನೆಯ ಪ್ರಕಾರ ಕ್ರಿ.ಶ. 1616ರ ಏಪ್ರಿಲ್ 26ರ ಸೋಮವಾರಕ್ಕೆ ಹೊಂದುತ್ತದೆ. ಇದೇ ವೇಳೆ ಮಾಲ್ಲೂರ (ಇಂದಿನ ಮಲ್ಲಾರ್) ಪ್ರದೇಶದಲ್ಲಿ ಹಿರಿಯರ ಅನುಮತಿಯೊಂದಿಗೆ ಸಾಂತೈಯನಯ್ಯನ ಪುತ್ರ ಮಲೈಯ ಈ ಶಾಸನವನ್ನು ಮಾಡಿಸಿದ್ದಾನೆ ಎಂಬ ಮಾಹಿತಿಯೂ ದೊರೆತಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರು ಮಣ್ಣಲ್ಲಿ ಗಂಗರ ಕಾಲದ ಹುಲಿಬೇಟೆ ವೀರರಹಸ್ಯ! ಕ್ರಿ.ಶ 850ರ ಕಾಲಮಾನದ ಕನ್ನಡದ ಶಾಸನ ರಕ್ಷಣೆಗೆ ಒತ್ತಾಯ&lt;/strong&gt;&lt;/p&gt;&lt;p&gt;ಅಧ್ಯಯನದಲ್ಲಿ ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ಶಶಾಂತ್ ಪಳ್ಳಿ ಹಾಗೂ ಇತಿಹಾಸ ಆಸಕ್ತರಾದ ಕೇಶವ ಡೋಂಗ್ರೆ ಮತ್ತು ಯದುಗೋಪನ್ ಕೆ.ಆರ್. ಸಹಕರಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಉತ್ಖನನ ವೇಳೆ 30ಕ್ಕೂ ಅಧಿಕ ರಾವಣನ ವಿಗ್ರಹಗಳು ಪತ್ತೆ! ಇತಿಹಾಸ ತಜ್ಞರಲ್ಲಿ ಆಶ್ಚರ್ಯ&lt;/strong&gt;&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/udupi-an-unpublished-inscription-dating-back-to-1616-ad-has-been-discovered-in-mala-village-of-karkala-taluk-mrq/articleshow-kktrt8r"/>
        </item>
        <item>
            <title><![CDATA[ಬರದ ಮಧ್ಯೆಯೂ ರಾಜ್ಯದ ಹಲವೆಡೆ ಭಾರೀ ಮಳೆ: ಕಣ್ಮನ ಸೆಳೆದ ಹೊಗೇನಲ್‌ ಜಲಪಾತ!]]></title>
            <link>https://kannada.asianetnews.com/karnataka-districts/karnataka-weather-forecast-heavy-rain-in-many-places-including-udupi-dakshina-kannada-rav/articleshow-knen12n</link>
            <guid isPermaLink="true">https://kannada.asianetnews.com/karnataka-districts/karnataka-weather-forecast-heavy-rain-in-many-places-including-udupi-dakshina-kannada-rav/articleshow-knen12n</guid>
            <pubDate>Wed, 05 Aug 2026 05:29:20 +0530</pubDate>
            <description><![CDATA[&lt;p&gt;ರಾಜ್ಯದ ಹಲವೆಡೆ ಬರಗಾಲದ ಮಧ್ಯೆಯೂ ಕೆಲವಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಮಂಗಳವಾರ ಉಡುಪಿಯಲ್ಲಿ ಹೆಚ್ಚು ಮಳೆ ಸುರಿದಿದೆ. ದಾವಣಗೆರೆಯಲ್ಲಿ ಮಳೆಗೆ 2 ಮನೆಗಳಿಗೆ ಹಾನಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಈ ಮಧ್ಯೆ ಕಬಿನಿ ಜಲಾಶಯದಿಂದ 27 ಸಾವಿರ ಕ್ಯುಸೆಕ್&zwnj; ನೀರು ಬಿಡುಗಡೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz7k3sxapnx47sc2vamewk44,imgname-----------------------2026-08-05t051946.874-1785887582122.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.5)&lt;/strong&gt;: ರಾಜ್ಯದ ಹಲವೆಡೆ ಬರಗಾಲದ ಮಧ್ಯೆಯೂ ಕೆಲವಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಮಂಗಳವಾರ ಉಡುಪಿಯಲ್ಲಿ ಹೆಚ್ಚು ಮಳೆ ಸುರಿದಿದೆ. ದಾವಣಗೆರೆಯಲ್ಲಿ ಮಳೆಗೆ 2 ಮನೆಗಳಿಗೆ ಹಾನಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಈ ಮಧ್ಯೆ ಕಬಿನಿ ಜಲಾಶಯದಿಂದ 27 ಸಾವಿರ ಕ್ಯುಸೆಕ್&zwnj; ನೀರು ಬಿಡುಗಡೆ ಮಾಡಲಾಗಿದೆ.&lt;/p&gt;&lt;p&gt;ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮಳೆಯ ಆರ್ಭಟ ಮುಂದುವರಿದಿದ್ದು, ಕುಂದಾಪುರ ಮತ್ತು ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆಯಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ಕೊರ್ಗಿ ಗ್ರಾಮದ ಮನೆವೊಂದಕ್ಕೆ ಹಾನಿಯಾಗಿ ₹80,000 ನಷ್ಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 104.40 ಮಿ.ಮೀ. ಮಳೆ ದಾಖಲಾಗಿದೆ.&lt;/p&gt;&lt;p&gt;ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸಣ್ಣದಾಗಿ ಬರುತ್ತಿದ್ದ ಮಳೆ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಿ ಎರಡೂವರೆ ಗಂಟೆಗೂ ಹೆಚ್ಚು ಕಾಲ ಭರ್ಜರಿಯಾಗಿ ಸುರಿದಿದೆ. ಚನ್ನಗಿರಿ ತಾಲೂಕಿನ ಹೊಸಕೆರೆ ಮತ್ತು ಕೊರಟಿಕೆರೆ ಗ್ರಾಮದಲ್ಲಿ ತಲಾ ಒಂದೊಂದು ಮನೆಗಳು ನೆಲಸಮವಾಗಿವೆ.&lt;/p&gt;&lt;h2&gt;ಕಣ್ಮನ ಸೆಳೆದ ಹೊಗೇನಲ್&zwnj; ಜಲಪಾತ:&lt;/h2&gt;&lt;p&gt;ಕಬಿನಿ ಜಲಾಶಯದಿಂದ ಮಂಗಳವಾರ 25,000 ಕ್ಯುಸೆಕ್&zwnj; ನೀರು ಕಾವೇರಿ ನದಿಗೆ ಬಿಡುಗಡೆಗೊಳಿಸಲಾಯಿತು. ಇದರ ಪರಿಣಾಮವಾಗಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಜಲಪಾತವು ರುದ್ರ ರಮಣೀಯವಾಗಿ ಹರಿದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕರ್ನಾಟಕದ ನಯಾಗರ ಎಂದೇ ಕರೆಯಲ್ಪಡುವ ಈ ಜಲಪಾತವು ಕಳೆದ ಕೆಲವು ದಿನಗಳಿಂದ ಮಳೆಯ ಕೊರತೆಯಿಂದಾಗಿ ಬತ್ತಿ ಹೋಗುವ ಹಂತಕ್ಕೆ ತಲುಪಿತ್ತು.&lt;/p&gt;&lt;p&gt;ಇದೀಗ ಮತ್ತೆ ತನ್ನ ಮೂಲ ಸೌಂದರ್ಯವನ್ನು ಪಡೆದುಕೊಂಡಿದ್ದು, ದೋಣಿ ವಿಹಾರ, ಜಲಪಾತದ ಸಮೀಪದಲ್ಲಿ ಸ್ನಾನ, ಫೋಟೋ ಶೂಟ್&zwnj; ಮತ್ತು ಪ್ರಕೃತಿ ಸೊಬಗನ್ನು ಸವಿಯಲು ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ.&lt;/p&gt;&lt;p&gt;ರೈತರಿಗೆ ಬಿತ್ತನೆಗೆ ಇದು ಅನುಕೂಲವಾಗಿದ್ದು, ಮೆಕ್ಕೆ ಜೋಳ ಸೇರಿದಂತೆ ಇತರೆ ಬೆಳೆ ಬೆಳೆಯಲು ಮಳೆ ಪೂರಕವಾಗಿದೆ. ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಶಾಲೆ-ಕಾಲೇಜು, ಕಚೇರಿಗಳು ಬಿಡುವ ವೇಳೆಯಲ್ಲಿ ಮಳೆ ಬರುತ್ತಿದ್ದ ಕಾರಣ ಮನೆಗೆ ತೆರಳಲು ಜನರು ಪರದಾಡಿದರು. ರಸ್ತೆಯಲ್ಲಿ ಅಲ್ಲಲ್ಲಿ ನೀರು ನಿಂತ್ತಿದ್ದರಿಂದ ವಾಹನ ಸವಾರರಿಗೆ ದಾರಿ ಕಾಣದಂತಾಗಿತ್ತು. ಮಳೆಯಿಂದಾಗಿ ಬೀದಿಬದಿ ವ್ಯಾಪಾರಿಗಳು ತೊಂದರೆ ಅನುಭವಿಸಿದರು.&lt;/p&gt;&lt;h3&gt;ಸಂಚಾರ ಸ್ಥಗಿತ:&lt;/h3&gt;&lt;p&gt;ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದ್ದು, ಮಡಿಕೇರಿ ರಸ್ತೆಗೆ ಅಡ್ಡಲಾಗಿ ಮರಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತು. ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು ಮಾಡಿದರು. ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ 7147 ಕ್ಯುಸೆಕ್ ನೀರಿನ ಒಳಹರಿವು ಇದ್ದು, 6291 ಕ್ಯುಸೆಕ್ ಹೊರ ಹರಿವು ಕಂಡುಬಂತು.&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/karnataka-weather-forecast-heavy-rain-in-many-places-including-udupi-dakshina-kannada-rav/articleshow-knen12n"/>
        </item>
        <item>
            <title><![CDATA[ಕಟ್ಟಡ, ನಿವೇಶನ ಕಡತಕ್ಕಾಗಿ ಕಾರ್ಕಳ ತಾಲೂಕಿನ ಜನರ 140 ಕಿ.ಮೀ. ಅಲೆದಾಟ;  ಕೊನೆ ಯಾವಾಗ?]]></title>
            <link>https://kannada.asianetnews.com/karnataka-districts/people-of-karkala-taluk-are-forced-to-go-to-kapu-for-building-construction-and-site-development-files-mrq/articleshow-kqrf3tk</link>
            <guid isPermaLink="true">https://kannada.asianetnews.com/karnataka-districts/people-of-karkala-taluk-are-forced-to-go-to-kapu-for-building-construction-and-site-development-files-mrq/articleshow-kqrf3tk</guid>
            <pubDate>Sat, 22 Aug 2026 10:40:29 +0530</pubDate>
            <description><![CDATA[ಕಾರ್ಕಳ ತಾಲೂಕಿನ ಜನರು ಕಟ್ಟಡ ನಿರ್ಮಾಣ ಮತ್ತು ನಿವೇಶನ ಅಭಿವೃದ್ಧಿ ಕಡತಗಳಿಗಾಗಿ ದೂರದ ಕಾಪು ಯೋಜನಾ ಪ್ರಾಧಿಕಾರಕ್ಕೆ ಅಲೆದಾಡಬೇಕಾಗಿದೆ. ಒಂದೇ ಪ್ರಾಧಿಕಾರ ಮತ್ತು ಒಬ್ಬರೇ ಇಂಜಿನಿಯರ್ ಇರುವುದರಿಂದ ಕಡತ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0j359v2k0rjwxbmzkk78xjy,imgname-kapu-1787313694562.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಂ ಅಜೆಕಾರು&lt;/strong&gt;&lt;/p&gt;&lt;p&gt;&lt;strong&gt;ಉಡುಪಿ:&lt;/strong&gt; ಕಾರ್ಕಳ ತಾಲೂಕಿನ ಗ್ರಾಮಗಳ ಜನರು ಕಟ್ಟಡ ನಿರ್ಮಾಣ ಹಾಗೂ ನಿವೇಶನ ಅಭಿವೃದ್ಧಿಗೆ ಸಂಬಂಧಿಸಿದ ಕಡತಗಳಿಗಾಗಿ ಕಾಪು ಯೋಜನಾ ಪ್ರಾಧಿಕಾರದ ಕಚೇರಿಗೆ ಪದೇಪದೇ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದೂರದ ಪ್ರಯಾಣದ ಜತೆಗೆ ಕಡತ ವಿಲೇವಾರಿಯಲ್ಲೂ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರವಾಗಿ ಹೈರಾಣಾಗಿದ್ದಾರೆ.&lt;/p&gt;&lt;h2&gt;&lt;strong&gt;ಕಡತಕ್ಕಾಗಿ 140 ಕಿ.ಮೀ ಪ್ರಯಾಣ!&lt;/strong&gt;&lt;/h2&gt;&lt;p&gt;ಕಾರ್ಕಳ ಹಾಗೂ ಕಾಪು ತಾಲೂಕುಗಳಿಗೆ ಒಂದೇ ಯೋಜನಾ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಈದು, ಬೋಳೆಟ್ಟು ಸೇರಿದಂತೆ ಹಲವು ದೂರದ ಗ್ರಾಮಗಳ ಜನರು ಯೋಜನಾ ಪ್ರಾಧಿಕಾರದ ಅನುಮತಿ ಹಾಗೂ ದಾಖಲೆಗಳಿಗಾಗಿ ಕಾಪುವಿಗೆ ತೆರಳಬೇಕಾಗಿದೆ. ಕೆಲವು ಪ್ರದೇಶಗಳಿಂದ ಕಾಪುವಿಗೆ ಸುಮಾರು 140 ಕಿ.ಮೀ.ವರೆಗೆ ಪ್ರಯಾಣಿಸಬೇಕಾಗುತ್ತದೆ .&lt;/p&gt;&lt;p&gt;ಒಂದು ಕಡತದ ವಿಚಾರವಾಗಿ ಒಂದಕ್ಕಿಂತ ಹೆಚ್ಚು ಬಾರಿ ಕಚೇರಿಗೆ ತೆರಳಬೇಕಾದರೆ ಸಾರ್ವಜನಿಕರ ಸಂಕಷ್ಟ ಇನ್ನಷ್ಟು ಹೆಚ್ಚುತ್ತಿದೆ. ಇದರಿಂದ ಪ್ರಯಾಣ ವೆಚ್ಚದ ಜತೆಗೆ ಒಂದು ದಿನದ ಕೆಲಸವೂ ನಷ್ಟವಾಗುತ್ತಿದೆ. ಕಡತದಲ್ಲಿ ಸಣ್ಣಪುಟ್ಟ ತಿದ್ದುಪಡಿ ಅಥವಾ ಹೆಚ್ಚುವರಿ ದಾಖಲೆ ಬೇಕಾದರೂ ಮತ್ತೆ ಕಾಪುವಿನತ್ತ ಪ್ರಯಾಣಿಸಬೇಕಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.&lt;/p&gt;&lt;h3&gt;&lt;strong&gt;ದೂರದ ಪ್ರಯಾಣ ಅನಿವಾರ್ಯ&lt;/strong&gt;&lt;/h3&gt;&lt;p&gt;ಕಾರ್ಕಳ ತಾಲೂಕಿನಲ್ಲಿ 39 ಕಂದಾಯ ಗ್ರಾಮಗಳು, 27 ಗ್ರಾಮ ಪಂಚಾಯಿತಿಗಳು, ಒಂದು ಪುರಸಭೆ ಹಾಗೂ ಅಜೆಕಾರು ಮತ್ತು ಕಾರ್ಕಳ ಎಂಬ ಎರಡು ಹೋಬಳಿಗಳಿವೆ. ಕಾಪು ತಾಲೂಕಿನಲ್ಲಿ 30 ಕಂದಾಯ ಗ್ರಾಮಗಳು, 16 ಗ್ರಾಮ ಪಂಚಾಯಿತಿಗಳು ಹಾಗೂ ಒಂದು ಹೋಬಳಿ ಇದೆ. ಇಷ್ಟು ವಿಶಾಲ ವ್ಯಾಪ್ತಿಯ ಪ್ರದೇಶಗಳ ಯೋಜನಾ ಸಂಬಂಧಿತ ಕೆಲಸಗಳು ಒಂದೇ ವ್ಯವಸ್ಥೆಯಡಿ ನಡೆಯುತ್ತಿರುವುದರಿಂದ ಕಾರ್ಕಳ ಭಾಗದ ಜನರಿಗೆ ಸೇವೆ ಪಡೆಯಲು ದೂರದ ಪ್ರಯಾಣ ಅನಿವಾರ್ಯವಾಗಿದೆ.&lt;/p&gt;&lt;p&gt;ಈ ಹಿಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ದೊರೆಯುತ್ತಿದ್ದ ಕಟ್ಟಡ ಪರವಾನಿಗೆ ಸೇರಿದಂತೆ ಹಲವು ಅಧಿಕಾರಗಳು ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಬಂದ ಬಳಿಕ ಸಮಸ್ಯೆ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಿಂಗಲ್ ಲೇಔಟ್ ಅನುಮೋದನೆ, ಭೂ ಪರಿವರ್ತನೆ ನಂತರದ 9/11 ದಾಖಲೆ ಸೇರಿದಂತೆ ಹಲವು ಪ್ರಕ್ರಿಯೆಗಳಲ್ಲಿ ವಿಳಂಬವಾಗುತ್ತಿದೆ ಎನ್ನಲಾಗಿದೆ. ಭೂ ಪರಿವರ್ತನೆ ಪೂರ್ಣಗೊಂಡ ಬಳಿಕವೂ 9/11 ದಾಖಲೆ ಪಡೆಯಲು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕಾದ ಸಂದರ್ಭಗಳಿವೆ ಎಂಬ ಆರೋಪ ಕೇಳಿಬಂದಿದೆ.&lt;/p&gt;&lt;h3&gt;&lt;strong&gt;ಎರಡು ತಾಲೂಕಿನ ಹೊಣೆ:&lt;/strong&gt;&lt;/h3&gt;&lt;p&gt;ಕಾಪು ಹಾಗೂ ಕಾರ್ಕಳ ಎರಡೂ ತಾಲೂಕುಗಳ ಯೋಜನಾ ಸಂಬಂಧಿತ ಕೆಲಸಗಳಿಗೆ ಒಬ್ಬರೇ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿರುವುದು ಕೂಡ ಕಡತ ವಿಲೇವಾರಿ ವಿಳಂಬಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಅವರಿಗೆ ಎಸ್&zwnj;ಐಆರ್&zwnj; ಕರ್ತವ್ಯವನ್ನೂ ನೀಡಿರುವುದರಿಂದ ಯೋಜನಾ ಪ್ರಾಧಿಕಾರದ ಕೆಲಸಗಳಿಗೆ ಸಮರ್ಪಕ ಸಮಯ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಅಸಮಾಧಾನವಿದೆ. ಕಾರ್ಕಳಕ್ಕೆ ವಾರದಲ್ಲಿ ಮೀಸಲಾದ ದಿನದಲ್ಲಿ ಇತರ ಕರ್ತವ್ಯಗಳ ಒತ್ತಡ ದಿಂದ ಅಧಿಕಾರಿಗಳನ್ನು ಭೇಟಿಯಾಗಲು ಸಾಧ್ಯವಾಗದ ಪರಿಸ್ಥಿತಿ ಇದೆ.&lt;/p&gt;&lt;h3&gt;&lt;strong&gt;ಅಲೆದಾಟಕ್ಕೆ ಕೊನೆ ಯಾವಾಗ?&lt;/strong&gt;&lt;/h3&gt;&lt;p&gt;ಸಾರ್ವಜನಿಕರ ಸಮಸ್ಯೆಯನ್ನು ಪರಿಗಣಿಸಿ ಕಾರ್ಕಳ ಭಾಗದ ಅರ್ಜಿಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಸಿಬ್ಬಂದಿ ನಿಯೋಜಿಸಬೇಕು, ಅಗತ್ಯವಿದ್ದಲ್ಲಿ ಹೆಚ್ಚುವರಿ ಇಂಜಿನಿಯರ್&zwnj;ರನ್ನು ನೇಮಿಸುವುದು ಹಾಗೂ ಕಾರ್ಕಳಕ್ಕೆ ಮೀಸಲಾದ ದಿನದಂದು ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.&lt;/p&gt;&lt;p&gt;ಕಾಪು ಪ್ರಾದಿಕಾರದ ಇಂಜಿನಿಯರ್ ಗೆ ಎಸ್ ಐ ಅರ್ ಡ್ಯೂಟಿ ನೀಡಲಾಗಿಲ್ಲ. ಕಾರ್ಯವ್ಯಾಪ್ತಿಯು ಹೆಚ್ಚಾಗಿದೆ.ಕಡತ ವಿಲೆವಾರಿಯಲ್ಲಿ ವಿಳಂಬವಾದರೆ ದೂರು ಬಂದರೆ ಕ್ರಮ&zwnj;ಕೈಗೊಳ್ಳಲಾಗುವುದು ಎಂದು ಉಡುಪಿಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಹೇಳುತ್ತಾರೆ.&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/people-of-karkala-taluk-are-forced-to-go-to-kapu-for-building-construction-and-site-development-files-mrq/articleshow-kqrf3tk"/>
        </item>
        <item>
            <title><![CDATA[ಕುಂದಾಪುರ: ಆಸ್ಪತ್ರೆ ಅಕ್ರಮ ಬಯಲಿಗೆಳೆದ 'ಕನ್ನಡಪ್ರಭ' ವರದಿಗಾರನ ಮಲೆ ಹಲ್ಲೆ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್]]></title>
            <link>https://kannada.asianetnews.com/state/govt-doctor-assaults-kannada-prabha-reporter-who-exposed-hospital-irregularities-kundapur-rav/articleshow-mseiohl</link>
            <guid isPermaLink="true">https://kannada.asianetnews.com/state/govt-doctor-assaults-kannada-prabha-reporter-who-exposed-hospital-irregularities-kundapur-rav/articleshow-mseiohl</guid>
            <pubDate>Sat, 22 Aug 2026 05:41:17 +0530</pubDate>
            <description><![CDATA[&lt;p&gt;ಕುಂದಾಪುರ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ 'ಕನ್ನಡಪ್ರಭ' ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ವೈದ್ಯರ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0hsmawecxvfxna6b97w654r,imgname-screenshot-2026-08-21-121327-1787303701390.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಂದಾಪುರ/ಬೆಂಗಳೂರು (ಆ.22): &lt;/strong&gt;ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ವರದಿ ಮಾಡಿದ್ದ ಕುಂದಾಪುರ ತಾಲೂಕು &lsquo;ಕನ್ನಡಪ್ರಭ&rsquo; ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲೆ ಶುಕ್ರವಾರ ಬೆಳಗ್ಗೆ ಆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಹಲ್ಲೆಗೈದ ಡಾ। ಶೆಟ್ಟಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.&lt;/p&gt;&lt;p&gt;2 ವಾರಗಳ ಹಿಂದೆ &lsquo;ಕನ್ನಡಪ್ರಭ&rsquo;ದಲ್ಲಿ &lsquo;ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಭ್ರಷ್ಟಾಚಾರದ ಕರಿನೆರಳು&rsquo; ಶೀರ್ಷಿಕೆಯಡಿ ಶ್ರೀಕಾಂತ್ ಅವರು, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಬಯಲಿಗೆಳೆದಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.&lt;/p&gt;&lt;p&gt;ಕೃತ್ಯವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಖಂಡಿಸಿದ್ದಾರೆ ಹಾಗೂ ಡಾ। ಶೆಟ್ಟಿ ಅವರನ್ನು ಸರ್ಕಾರ ಅಮಾನತು ಮಾಡಿದೆ ಹಾಗೂ ಅವರ ವಿರುದ್ಧ ಕುಂದಾಪುರ ಪೊಲೀಸ್&zwnj; ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯಿಂದ ಕೈ ಮತ್ತು ಎದೆ ನೋವಿಗೊಳಗಾದ ಶ್ರೀಕಾಂತ್ ಹೆಮ್ಮಾಡಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;h2&gt;ಏಕಾಏಕಿ ಹಲ್ಲೆ:&lt;/h2&gt;&lt;p&gt;ಶುಕ್ರವಾರ ಬೆಳಗ್ಗೆ ಪಟ್ಟಣದ ಹೋಟೆಲ್&zwnj;ವೊಂದರಲ್ಲಿ ಶ್ರೀಕಾಂತ್&zwnj; ಅವರು ತಮ್ಮ ಪತ್ನಿಯೊಂದಿಗೆ ತಿಂಡಿ ತಿನ್ನುತ್ತಿದ್ದರು. ಈ ವೇಳೆ, ಶ್ರೀಕಾಂತ್ ಬಳಿ ಬಂದ ಡಾ.ಮಹೇಂದ್ರ ಕುಮಾರ್ ಶೆಟ್ಟಿ, &lsquo;ನಿನ್ನ ಜೊತೆ ಸ್ವಲ್ಪ ಮಾತನಾಡುವುದಿದೆ&rsquo; ಎಂದು ಕೈಹಿಡಿದು ಪಕ್ಕಕ್ಕೆ ಕರೆದುಕೊಂಡು ಹೋಗಿ, ಕಾಲರ್&zwnj;ಗೆ ಕೈ ಹಾಕಿ, ಕೆನ್ನೆಗೆ ಹೊಡೆದಿದ್ದಾರೆ. ವರದಿ ಬರೆದ ಬಗ್ಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ತಕ್ಷಣ ಶ್ರೀಕಾಂತ್ ಅವರ ಪತ್ನಿ ಮತ್ತು ಪತ್ರಕರ್ತ ಯೋಗೀಶ್ ಅವರು ವೈದ್ಯರನ್ನು ತಡೆದಿದ್ದಾರೆ.&lt;/p&gt;&lt;p&gt;ಶ್ರೀಕಾಂತ್ ತಮ್ಮ ವರದಿಯ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದರೂ ಅದನ್ನು ಕೇಳದೆ ಮತ್ತೆ, ಮತ್ತೆ ಶ್ರೀಕಾಂತ್&zwnj; ಅವರ ಮೇಲೆ ಹಲ್ಲೆಗೆ ಯತ್ನಿಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂದರ್ಭ ಈ ಸರ್ಕಾರಿ ವೈದ್ಯರ ಜೊತೆಗಿದ್ದ ಅವರ ಖಾಸಗಿ ಕ್ಲಿನಿಕ್&zwnj;ನ ಪಾಲುದಾರ ಮಹಿಳಾ ವೈದ್ಯೆಯೂ ಸಾಥ್ ನೀಡಿದ್ದಾರೆ.&lt;/p&gt;&lt;p&gt;ಹಲ್ಲೆಯಿಂದ ಕೈ ಮತ್ತು ಎದೆ ನೋವಿಗೊಳಗಾದ ಶ್ರೀಕಾಂತ್ ಹೆಮ್ಮಾಡಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;p&gt;ಇದೀಗ ದೂರಿನ ಮೇರೆಗೆ ಹಲ್ಲೆಯ ದೃಶ್ಯಾವಳಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಶ್ರೀಕಾಂತ್ ಹೇಳಿಕೆ ಪಡೆದು, ಘಟನಾ ಸ್ಥಳದಲ್ಲಿ ಸಾಕ್ಷಿಗಳ ಜೊತೆಗೆ ಹೋಟೆಲ್&zwnj;ನ ಸ್ಥಳ ಮಹಜರು ನಡೆಸಿದ್ದಾರೆ. ಪತ್ರಕರ್ತನ ಮೇಲಿನ ಹಲ್ಲೆಯನ್ನು ವಿವಿಧ ಸಂಘಟನೆಗಳು ಖಂಡಿಸಿವೆ.&lt;/p&gt;&lt;h3&gt;ಶೆಟ್ಟಿ ಅಮಾನತು:&lt;/h3&gt;&lt;p&gt;ಹಲ್ಲೆ ಬೆನ್ನಲ್ಲೇ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಸ್ತು ಪ್ರಾಧಿಕಾರಿ ಮತ್ತು ಆಯುಕ್ತ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.&lt;/p&gt;&lt;p&gt;ಹಲ್ಲೆಯ ದೃಶ್ಯಗಳು ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ರಾಜ್ಯ ಆಯುಕ್ತರಿಗೆ ಘಟನೆ ಬಗ್ಗೆ ವರದಿ ನೀಡಿದ್ದಾರೆ. ಈ ವರದಿಯಂತೆ, ಘಟನೆ ಬಗ್ಗೆ ಇಲಾಖಾ ವಿಚಾರಣೆಗೆ ಆದೇಶಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಶೆಟ್ಟಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.&lt;/p&gt;&lt;p&gt;ಅಲ್ಲದೆ, ತಕ್ಷಣವೇ ಶೆಟ್ಟಿಯವರನ್ನು ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಶಸ್ತ್ರಚಿಕಿತ್ಸಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ. ಆದರೆ, ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.&lt;/p&gt;&lt;h3&gt;ಶಾಸಕರ ಹೇಳಿಕೆಗೆ ಅನುಸಾರ ವರದಿ:&lt;/h3&gt;&lt;p&gt;ವಿಶೇಷ ಎಂದರೆ &lsquo;ಕನ್ನಡಪ್ರಭ&rsquo;ದಲ್ಲಿ ಪ್ರಕಟವಾದ ವರದಿಯಲ್ಲಿ ಯಾವುದೇ ವೈದ್ಯರ ಹೆಸರು ಉಲ್ಲೇಖವಾಗಿಲ್ಲ. ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಶಾಸಕರ ಹೇಳಿಕೆಹೆ ಅನುಗುಣವಾಗಿ ವರದಿ ಪ್ರಕಟಿಸಲಾಗಿತ್ತು. ಆದರೂ, ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರು ಶುಕ್ರವಾರ ಹಲ್ಲೆ ನಡೆಸುವ ಮೂಲಕ ಭ್ರಷ್ಟಾಚಾರದ ಆರೋಪವನ್ನು ತಾವಾಗಿಯೇ ಮೈಮೇಲೆ ಎಳೆದುಕೊಂಡಿದ್ದಾರೆ.&lt;/p&gt;&lt;h3&gt;&lsquo;ಕನ್ನಡಪ್ರಭ&rsquo; ವರದಿಯಲ್ಲೇನಿತ್ತು?:&lt;/h3&gt;&lt;p&gt;ಆಗಸ್ಟ್&zwnj; 1ರಂದು &lsquo;ಕನ್ನಡಪ್ರಭ&rsquo;ದಲ್ಲಿ &lsquo;ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಭ್ರಷ್ಟಾಚಾರದ ಕರಿನೆರಳು&rsquo; ಹೆಸರಿನಲ್ಲಿ ಶ್ರೀಕಾಂತ್ ಹೆಮ್ಮಾಡಿ ಬರೆದ ವರದಿ ಪ್ರಕಟವಾಗಿತ್ತು. ಸ್ವತಃ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು &lsquo;ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಾಗುವ ಬಡ ರೋಗಿಗಳ ಶಸ್ತ್ರಚಿಕಿತ್ಸೆಗೆ ಅಲ್ಲಿನ ವೈದ್ಯರು ಬಲವಂತವಾಗಿ ಹಣ ಪಡೆಯುತ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ&rsquo; ಎಂದು ಜಿಲ್ಲಾಧಿಕಾರಿಗೆ ನೀಡಿದ ಸೂಚನೆ ಆಧರಿಸಿ ಶ್ರೀಕಾಂತ್ ಅವರು ಈ ತನಿಖಾ ವರದಿ ಸಿದ್ಧಪಡಿಸಿದ್ದರು.&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/govt-doctor-assaults-kannada-prabha-reporter-who-exposed-hospital-irregularities-kundapur-rav/articleshow-mseiohl"/>
        </item>
        <item>
            <title><![CDATA[ಆಟಿ ಅಮಾವಾಸ್ಯೆ ವಿಶೇಷ! ಅಮೃತಕ್ಕೆ ಸಮಾನ ಹಾಲೆ ಮರದ ಕಷಾಯ.. ತುಳುನಾಡಿನಲ್ಲಿ ಇವತ್ತು ಇದನ್ನ ಕುಡಿಯೋದು ಯಾಕೆ?]]></title>
            <link>https://kannada.asianetnews.com/gallery/udupi/ati-amavasya-special-why-is-the-nectar-like-pale-tree-decoction-traditionally-consumed-in-tulu-nadu-today-gkn-nyt8g1g</link>
            <guid isPermaLink="true">https://kannada.asianetnews.com/gallery/udupi/ati-amavasya-special-why-is-the-nectar-like-pale-tree-decoction-traditionally-consumed-in-tulu-nadu-today-gkn-nyt8g1g</guid>
            <pubDate>Wed, 12 Aug 2026 21:39:53 +0530</pubDate>
            <description><![CDATA[&lt;p&gt;ತುಳುನಾಡಿನಾದ್ಯಂತ ಪಾರಂಪರಿಕ 'ಪಾಲೆ' ಮರದ ತೊಗಟೆಯ ಕಷಾಯ ಮತ್ತು ಪಿತೃ ಕಾರ್ಯಗಳೊಂದಿಗೆ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಕೇರಳ ಸಮಾಜಂ ವತಿಯಿಂದ ಮಲ್ಪೆ ಕಡಲತೀರದಲ್ಲಿ ಕೇರಳ ಶೈಲಿಯ 'ಬಲಿತರ್ಪಣಂ' ಆಯೋಜಿಸಲಾಗಿತ್ತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzvankcfzgcjp5hkf851wsjg,imgname-ati-amavasya-was-celebrated-across-tulu-nadu--5--1786549816719.jpg" type="image/jpeg" height="390" width="690"/>
            <content:encoded><![CDATA[&lt;p&gt;ತುಳುನಾಡಿನಾದ್ಯಂತ ಪಾರಂಪರಿಕ 'ಪಾಲೆ' ಮರದ ತೊಗಟೆಯ ಕಷಾಯ ಮತ್ತು ಪಿತೃ ಕಾರ್ಯಗಳೊಂದಿಗೆ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಕೇರಳ ಸಮಾಜಂ ವತಿಯಿಂದ ಮಲ್ಪೆ ಕಡಲತೀರದಲ್ಲಿ ಕೇರಳ ಶೈಲಿಯ 'ಬಲಿತರ್ಪಣಂ' ಆಯೋಜಿಸಲಾಗಿತ್ತು.&lt;/p&gt;&lt;img&gt;&lt;p&gt;ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಎಂದರೆ ಅದು ಕೇವಲ ಒಂದು ತಿಥಿಯಲ್ಲ, ಅದು ಪ್ರಕೃತಿ ನೀಡುವ ಔಷಧ ಮತ್ತು ಪೂರ್ವಜರಿಗೆ ಸಲ್ಲಿಸುವ ಕೃತಜ್ಞತೆಯ ಸಮಾಗಮ. ಈ ಬಾರಿ ಉಡುಪಿಯಲ್ಲಿ ಒಂದು ವಿಶೇಷ ಇತಿಹಾಸ ಸೃಷ್ಟಿಯಾಯಿತು. ಸಾಮಾನ್ಯವಾಗಿ ಕೇರಳದ ಓಣಂ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದ ಉಡುಪಿಯ 'ಕೇರಳ ಸಮಾಜಂ' ಇದೇ ಮೊದಲ ಬಾರಿಗೆ ಪಿತೃಗಳಿಗೆ ತರ್ಪಣ ಬಿಡುವ 'ಬಲಿತರ್ಪಣಂ' ಕಾರ್ಯಕ್ರಮವನ್ನು ಕೇರಳದ ಶೈಲಿಯಲ್ಲೇ ಆಯೋಜಿಸಿ ಗಮನ ಸೆಳೆಯಿತು.&lt;/p&gt;&lt;img&gt;&lt;p&gt;ಉಡುಪಿಯಲ್ಲಿ ನೆಲೆಸಿರುವ ಕೇರಳ ಮೂಲದ ನೂರಾರು ಕುಟುಂಬಗಳು ಇಷ್ಟು ವರ್ಷಗಳ ಕಾಲ ಸ್ಥಳೀಯ ಪದ್ಧತಿಯಂತೆ ತರ್ಪಣ ಬಿಡುತ್ತಿದ್ದವು. ಆದರೆ ಈ ವರ್ಷ ಕೇರಳದಿಂದಲೇ ನುರಿತ ತಂತ್ರಿಗಳನ್ನು ಕರೆಸಲಾಗಿತ್ತು. ಮಲ್ಪೆ ಕಡಲತೀರದ ಅಲೆಗಳ ಸದ್ದಿನ ನಡುವೆ, ಕೇರಳದ ವಿಶಿಷ್ಟ ವಿಧಿವಿಧಾನಗಳೊಂದಿಗೆ ಸುಮಾರು 70ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಅಗಲಿದ ಪಿತೃಗಳಿಗೆ ಬಲಿತರ್ಪಣಂ ಸಲ್ಲಿಸಿದವು. ಮೃತರ ಆತ್ಮಕ್ಕೆ ಅವರವರ ಸಂಪ್ರದಾಯದಂತೆಯೇ ಸದ್ಗತಿ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಡಲತೀರದಲ್ಲಿ ಕೇರಳ ಮೂಲದ ಬಾಂಧವರು ಭಕ್ತಿಭಾವದಿಂದ ಪಿತೃಕಾರ್ಯ ಮುಗಿಸಿ ಸಂತೃಪ್ತಿ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;ಇನ್ನೊಂದೆಡೆ, ತುಳುನಾಡಿನ ಪ್ರತಿಯೊಂದು ಮನೆಯಲ್ಲೂ ಸೂರ್ಯೋದಯಕ್ಕೂ ಮುನ್ನವೇ ಸಂಭ್ರಮ ಮನೆಮಾಡಿತ್ತು. ಆಟಿ ಅಮಾವಾಸ್ಯೆಯಂದು ಹಾಲೆ ಮರದ (ಪಾಲೆ ಮರ) ಕಷಾಯ ಕುಡಿಯುವುದು ಇಲ್ಲಿನ ಅನಾದಿಕಾಲದ ಸಂಪ್ರದಾಯ. ನಂಬಿಕೆಯ ಪ್ರಕಾರ, ಈ ದಿನ ಹಾಲೆ ಮರದ ತೊಗಟೆಯಲ್ಲಿ 640 ಬಗೆಯ ಔಷಧೀಯ ಗುಣಗಳು ಅಡಗಿರುತ್ತವೆ.&lt;/p&gt;&lt;p&gt;ಮನೆಯ ಪುರುಷರು ಸೂರ್ಯೋದಯಕ್ಕೂ ಮುನ್ನ ಕಾಡಿಗೆ ಹೋಗಿ, ಮರದ ತೊಗಟೆಯನ್ನು ತರುತ್ತಾರೆ. ಮಹಿಳೆಯರು ಅದನ್ನು ಬೆಣಚು ಕಲ್ಲಿನಿಂದ ಜಜ್ಜಿ, ಕಾಳು ಮೆಣಸು, ಬೆಳ್ಳುಳ್ಳಿ, ಓಮ ಸೇರಿಸಿ ಕಷಾಯ ಸಿದ್ಧಪಡಿಸುತ್ತಾರೆ. ಮನೆಯವರೆಲ್ಲರೂ ಈ ಕಹಿ ಕಷಾಯವನ್ನು ಕುಡಿದು 'ಸರ್ವರೋಗ ನಿವಾರಣೆ'ಗೆ ಪ್ರಾರ್ಥಿಸುತ್ತಾರೆ. ಕಷಾಯದ ಕಹಿ ತಣಿಸಲು ನಂತರ ಮೆಂತ್ಯೆ ಗಂಜಿಯನ್ನು ಸವಿಯುವುದು ಇಲ್ಲಿನ ವಿಶೇಷ. ಇದು ಶರೀರದ ಉಷ್ಣತೆಯನ್ನು ಕಡಿಮೆ ಮಾಡಿ ದೇಹವನ್ನು ತಂಪುಗೊಳಿಸುತ್ತದೆ.&lt;/p&gt;&lt;img&gt;&lt;p&gt;ಉಡುಪಿ ಜಿಲ್ಲೆಯ ಮರುವಂತೆಯ ಮಹಾರಾಜ ವರಾಹ ಸ್ವಾಮಿ ದೇವಸ್ಥಾನದಲ್ಲಿ ಇಂದು ಸಡಗರದ ವಾತಾವರಣ. ಆಟಿ ಅಮಾವಾಸ್ಯೆಯ ಅಂಗವಾಗಿ ಲಕ್ಷಾಂತರ ಭಕ್ತರು ಮರುವಂತೆ ಕಡಲಿನಲ್ಲಿ ಪುಣ್ಯಸ್ನಾನ ಮಾಡಿದರು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಸಾಗರ ಮತ್ತು ನದಿ ಭೇಟಿಯಾಗುವ ಈ ಪುಣ್ಯಕ್ಷೇತ್ರದಲ್ಲಿ ಸಮುದ್ರ ಸ್ನಾನ ಮಾಡಿ ವರಾಹ ಸ್ವಾಮಿಯ ದರ್ಶನ ಪಡೆಯುವುದು ಕರ್ಕಾಟಕ ಅಮಾವಾಸ್ಯೆಯ ವಿಶೇಷತೆಯಾಗಿದೆ.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ ಈ ಬಾರಿಯ ಆಟಿ ಅಮಾವಾಸ್ಯೆಯು ತುಳುನಾಡಿನ ಸಾಂಪ್ರದಾಯಿಕ ಕಷಾಯದ ಆರೋಗ್ಯ ಮತ್ತು ಕೇರಳ ಶೈಲಿಯ ತರ್ಪಣದ ಭಕ್ತಿಯೊಂದಿಗೆ ವಿಶಿಷ್ಟವಾಗಿ ಆಚರಿಸಲ್ಪಟ್ಟಿತು. ಮನುಷ್ಯನ ಆರೋಗ್ಯ ಮತ್ತು ಪೂರ್ವಜರ ಆತ್ಮಕ್ಕೆ ಶಾಂತಿ ಕೋರುವ ಈ ದಿನವು ಕರಾವಳಿಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮತ್ತೊಮ್ಮೆ ಅನಾವರಣಗೊಳಿಸಿತು.&lt;/p&gt;]]></content:encoded>
            <category>udupi</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/gallery/udupi/ati-amavasya-special-why-is-the-nectar-like-pale-tree-decoction-traditionally-consumed-in-tulu-nadu-today-gkn-nyt8g1g"/>
        </item>
        <item>
            <title><![CDATA[ಉಡುಪಿ: ಭ್ರಷ್ಟಾಚಾರ ವರದಿ ಮಾಡಿದ್ದಕ್ಕೆ 'ಕನ್ನಡಪ್ರಭ' ವರದಿಗಾರನ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ!]]></title>
            <link>https://kannada.asianetnews.com/gallery/karnataka-districts/udupi-kundapura-kannada-prabha-journalist-srikanth-hemmadi-attacked-by-government-doctor-mahendra-shetty-q5512ci</link>
            <guid isPermaLink="true">https://kannada.asianetnews.com/gallery/karnataka-districts/udupi-kundapura-kannada-prabha-journalist-srikanth-hemmadi-attacked-by-government-doctor-mahendra-shetty-q5512ci</guid>
            <pubDate>Fri, 21 Aug 2026 14:54:09 +0530</pubDate>
            <description><![CDATA[&lt;p&gt;ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿದ್ದಕ್ಕೆ ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಪತ್ನಿಯ ಎದುರೇ ಹೋಟೆಲ್&zwnj;ನಲ್ಲಿ ನಡೆದ ಈ ಘಟನೆಯನ್ನು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0hsfp4bwtcpfxe70nqbte89,imgname-kundapura-kannada-prabha-reporter-sreekanth-vs-dr-mahendra-1787303549065.jpg" type="image/jpeg" height="390" width="690"/>
            <content:encoded><![CDATA[&lt;p&gt;ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿದ್ದಕ್ಕೆ ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಪತ್ನಿಯ ಎದುರೇ ಹೋಟೆಲ್&zwnj;ನಲ್ಲಿ ನಡೆದ ಈ ಘಟನೆಯನ್ನು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.&lt;/p&gt;&lt;img&gt;&lt;p&gt;ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ಸರಣಿ ವರದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ, &lsquo;ಕನ್ನಡಪ್ರಭ&rsquo; ದಿನಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರೊಬ್ಬರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ಹಲ್ಲೆಗೊಳಗಾದ ಪತ್ರಕರ್ತರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿದ ಆರೋಪಿಯಾಗಿದ್ದಾರೆ. ಇನ್ನು ಹಲ್ಲೆ ಮಾಡುವ ದೃಶ್ಯವೂ ಕೂಡ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೋಟೆಲ್ ಸಿಬ್ಬಂದಿ ಹಲ್ಲೆಯಾಗುವುದನ್ನು ತಡೆದಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಪತ್ನಿ ಎದುರಲ್ಲೇ ಏಕಾಏಕಿ ಹಲ್ಲೆ:&lt;/strong&gt;&lt;/p&gt;&lt;p&gt;ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೋಟೆಲೊಂದರಲ್ಲಿ ಚಹಾ ಕುಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಡಾ. ಮಹೇಂದ್ರ ಶೆಟ್ಟಿ, ಏಕಾಏಕಿ ಆಕ್ರೋಶ ವ್ಯಕ್ತಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 'ನನ್ನ ವಿರುದ್ಧವೇ ವರದಿ ಪ್ರಕಟಿಸುತ್ತೀಯಾ?' ಎಂದು ಬೆದರಿಕೆ ಹಾಕಿ, ಪತ್ನಿಯ ಎದುರಲ್ಲೇ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.&lt;/p&gt;&lt;img&gt;&lt;p&gt;&lt;strong&gt;ಭ್ರಷ್ಟಾಚಾರ ವರದಿ ಮತ್ತು ವರ್ಗಾವಣೆಯ ದ್ವೇಷ:&lt;/strong&gt;&lt;/p&gt;&lt;p&gt;ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮಗಳು ಮತ್ತು ಡಾ. ಮಹೇಂದ್ರ ಶೆಟ್ಟಿ ಅವರ ಭ್ರಷ್ಟಾಚಾರದ ಕುರಿತು ಶ್ರೀಕಾಂತ್ ಹೆಮ್ಮಾಡಿ ಅವರು ಇತ್ತೀಚೆಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದರು. ಈ ವರದಿಗಳು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ವರದಿಯು ಸರ್ಕಾರಕ್ಕೂ ತಲುಪಿದ್ದು, ಇದರ ಪರಿಣಾಮವಾಗಿ ಸರ್ಕಾರವು ಕೂಡಲೇ ಡಾ. ಮಹೇಂದ್ರ ಶೆಟ್ಟಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ವೈದ್ಯ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ&lt;/p&gt;&lt;img&gt;&lt;p&gt;ಕರ್ತವ್ಯನಿರತ ಪತ್ರಕರ್ತನ ಮೇಲೆ ವೈದ್ಯನೊಬ್ಬ ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿರುವುದನ್ನು ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥ ವೈದ್ಯನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದೆ.&lt;/p&gt;]]></content:encoded>
            <category>udupi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/udupi-kundapura-kannada-prabha-journalist-srikanth-hemmadi-attacked-by-government-doctor-mahendra-shetty-q5512ci"/>
        </item>
        <item>
            <title><![CDATA[ಉಡುಪಿಯಲ್ಲಿ ಭೀಕರ ಅಪಘಾತ: ಖಾಸಗಿ ಬಸ್‌ ಡಿಕ್ಕಿಯಾಗಿ ನಗರಸಭೆ ಮಾಜಿ ಉಪಾಧ್ಯಕ್ಷೆ ಸ್ಥಳದಲ್ಲೇ ಸಾವು!]]></title>
            <link>https://kannada.asianetnews.com/karnataka-districts/udupi-former-cmc-vice-president-lakshmi-manjunath-dies-in-bus-accident-san/articleshow-qcx9cc1</link>
            <guid isPermaLink="true">https://kannada.asianetnews.com/karnataka-districts/udupi-former-cmc-vice-president-lakshmi-manjunath-dies-in-bus-accident-san/articleshow-qcx9cc1</guid>
            <pubDate>Sat, 01 Aug 2026 15:15:15 +0530</pubDate>
            <description><![CDATA[&lt;p&gt;ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಹಿಂದೂ ಮುಖಂಡ ಮಂಜುನಾಥ್ ಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಕೊಳ ಅವರು ನಗರದ ಲಯನ್ಸ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ದುರಂತವಾಗಿ ಮೃತಪಟ್ಟಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyyba1gxy2dygwpbt092thew,imgname-udupi-manjunath-kola-wife-lakshmi-1785577408029.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಆ.1): &lt;/strong&gt;ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಹಿಂದೂ ಮುಖಂಡ ಮಂಜುನಾಥ್ ಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಕೊಳ (37) ಸ್ಥಳದಲ್ಲೇ ದುರಂತವಾಗಿ ಮೃತಪಟ್ಟಿದ್ದಾರೆ. ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮೀ ಅವರು, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ತೆರಳಲು ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್&zwnj; ಅವರಿಗೆ ಭೀಕರವಾಗಿ ಢಿಕ್ಕಿ ಹೊಡೆದಿದೆ.&lt;/p&gt;&lt;h2&gt;&lt;strong&gt;ಸ್ಥಳದಲ್ಲೇ ಕೊನೆಯುಸಿರೆಳೆದ ಮಾಜಿ ಉಪಾಧ್ಯಕ್ಷೆ&lt;/strong&gt;&lt;/h2&gt;&lt;p&gt;ಬಸ್ ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಮಂಜುನಾಥ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/udupi-former-cmc-vice-president-lakshmi-manjunath-dies-in-bus-accident-san/articleshow-qcx9cc1"/>
        </item>
        <item>
            <title><![CDATA[ಇನ್ನೂ ಎಷ್ಟು ದಿನ ಮಳೆ ಸುರಿಯುತ್ತೆ..? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?]]></title>
            <link>https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</link>
            <guid isPermaLink="true">https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</guid>
            <pubDate>Mon, 03 Aug 2026 10:52:13 +0530</pubDate>
            <description><![CDATA[&lt;p&gt;ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತಗೊಂಡಿದ್ದು, ಬಂಟ್ವಾಳದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೂ ಕಾರ್ಕಳದಲ್ಲಿ ಕಿರು ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz313w30f1gdqv7pkgfgntfd,imgname-rain--1--1785734492255.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು/ಕಾರವಾರ: &lt;/strong&gt;ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಇಂದು ಆರೆಂಜ್ ಅಲರ್ಟ್, ನಾಳೆ ಎಲ್ಲೋ ಅಲರ್ಟ್&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ನಾಳೆಯಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ.&lt;/p&gt;&lt;h2&gt;&lt;strong&gt;ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ಕೋಟೆ ಕೆರೆ ತುಂಬಿ ಹರಿಯುತ್ತಿದ್ದು, ನೀರು ರಸ್ತೆಗೆ ನುಗ್ಗಿದೆ. ಹಲವು ಬಡಾವಣೆಗಳು ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಬರಲಾರದ ಸ್ಥಿತಿ ನಿರ್ಮಾಣವಾಗಿದೆ.&lt;/p&gt;&lt;p&gt;ಇತ್ತ ದಾಂಡೇಲಿಯಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಗೆ ಮಸಿದಿಗಲ್ಲಿಯ ಯುಸೂಫ್ ಶೇಖ್ ಎಂಬುವವರ ಮನೆ ಕುಸಿದಿದೆ. ಮನೆಯಲ್ಲಿದ್ದ ಇಬ್ಬರು ವೃದ್ಧರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;h2&gt;&lt;strong&gt;ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು&lt;/strong&gt;&lt;/h2&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಎಎಂಆರ್ (AMR) ಡ್ಯಾಂನಿಂದ ನೀರನ್ನು ಹೊರಬಿಡಲಾಗುತ್ತಿದ್ದು, ನೇತ್ರಾವತಿ ನದಿ ತೀರದ ಜನರಲ್ಲಿ ಆತಂಕ ಶುರುವಾಗಿದೆ. ಬಂಟ್ವಾಳದ ಅಲಡ್ಕ, ಬೋಗೋಡಿ, ನಂದಾವರ, ಗೂಡಿನಬಳಿ ಸೇರಿದಂತೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.&lt;/p&gt;&lt;h2&gt;&lt;strong&gt;ಸಂಪರ್ಕ ಕಡಿತಗೊಳಿಸಿದ ಕಿರು ಸೇತುವೆ&lt;/strong&gt;&lt;/h2&gt;&lt;p&gt;ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾದ ಕಾರಣ ಇಲ್ಲಿನ ಕಿರು ಸೇತುವೆಯೊಂದು ಮುಳುಗಡೆಯಾಗಿದ್ದು, ಸ್ಥಳೀಯ ಗ್ರಾಮಸ್ಥರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಹೊಳೆ-ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸದ್ಯ ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ನದಿ ಪಾತ್ರದ ಜನರು ಹಾಗೂ ಗುಡ್ಡಗಾಡು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;]]></content:encoded>
            <category>udupi</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn"/>
        </item>
        <item>
            <title><![CDATA['ಮೇ ಹೆಚ್ ಪಿ ಬೋಲ್ ರಹಾ ಹೂಂ...! 2013ರಲ್ಲೇ ಸತ್ತಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಬದುಕಿದ್ದಾನಾ?]]></title>
            <link>https://kannada.asianetnews.com/karnataka-districts/mumbai-underworld-gangster-hemant-poojary-hp-alive-udupi-mudarangadi-david-murder-audio/articleshow-u6t5xfq</link>
            <guid isPermaLink="true">https://kannada.asianetnews.com/karnataka-districts/mumbai-underworld-gangster-hemant-poojary-hp-alive-udupi-mudarangadi-david-murder-audio/articleshow-u6t5xfq</guid>
            <pubDate>Tue, 25 Aug 2026 20:14:58 +0530</pubDate>
            <description><![CDATA[&lt;p&gt;ಉಡುಪಿಯ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಹತ್ಯೆ ಪ್ರಕರಣವು, ದಶಕದ ಹಿಂದೆ ಸತ್ತಿದ್ದಾನೆಂದು ನಂಬಲಾಗಿದ್ದ ಕುಖ್ಯಾತ ಭೂಗತ ಪಾತಕಿ ಹೇಮಂತ್ ಪೂಜಾರಿಯ (HP) ಪುನರಾಗಮನದ ಬಲವಾದ ಶಂಕೆ ಹುಟ್ಟಿಸಿದೆ. ಹತ್ಯೆಯ ಬಳಿಕ ಶೂಟರ್&zwnj;ಗೆ ಸೂಚನೆ ನೀಡಿರುವುದು ಮತ್ತು ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿರುವುದು 'HP'ಯದೆನ್ನಲಾದ ಆಡಿಯೋದಲ್ಲಿ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0wnzht56dzff1knfpz9z6ww,imgname-mumbai-underworld-gangster-hemant-poojary-1787668973381.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಆ.25): ಮುಂ&lt;/strong&gt;ಬೈ ಭೂಗತ ಜಗತ್ತಿನಲ್ಲಿ ಒಂದು ಕಾಲದಲ್ಲಿ ನಡುಕ ಹುಟ್ಟಿಸಿ, ಕಳೆದ ಒಂದು ದಶಕದಿಂದ ಸತ್ತುಹೋಗಿದ್ದಾನೆ ಎಂದೇ ನಂಬಲಾಗಿದ್ದ ಕುಖ್ಯಾತ ಭೂಗತ ಪಾತಕಿ ಹೇಮಂತ್ ಪೂಜಾರಿ (HP - Hemant Poojary) ಮತ್ತೆ ಪ್ರತ್ಯಕ್ಷನಾಗಿದ್ದಾನಾ? ಕರಾವಳಿಯ ಮುದರಂಗಡಿಯಲ್ಲಿ ಇತ್ತೀಚೆಗೆ ನಡೆದ ಉದ್ಯಮಿ ಡೇವಿಡ್ ಹತ್ಯೆ ಪ್ರಕರಣ ಈಗ ಇಡೀ ರಾಜ್ಯ ಮತ್ತು ಮುಂಬೈ ಪೊಲೀಸರನ್ನು ಬೆಚ್ಚಿಬೀಳಿಸಿದೆ. ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಆಗಸ್ಟ್ 7 ರಂದು ನಡೆದ ಉದ್ಯಮಿ ಡೇವಿಡ್ ಶೂಟೌಟ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಭೂಗತ ಲೋಕದ ನಂಟು ಇರುವುದು ಬಯಲಾಗಿದ್ದು, ಹೇಮಂತ್ ಪೂಜಾರಿಯದ್ದು ಎನ್ನಲಾದ ಆಡಿಯೋ ಕ್ಲಿಪ್&zwnj;ಗಳು ಲಭ್ಯವಾಗಿವೆ.&lt;/p&gt;&lt;h2&gt;&lt;strong&gt;ಆಡಿಯೋದಲ್ಲಿ ಏನಿದೆ? ಡೇವಿಡ್ ಕೊಲೆಯ ಬೆನ್ನಲ್ಲೇ ಕಾಲ್!&lt;/strong&gt;&lt;/h2&gt;&lt;p&gt;&lt;strong&gt;ಶೂಟರ್ ಜೊತೆ ಮಾತುಕತೆ:&lt;/strong&gt; ಡೇವಿಡ್&zwnj;ನನ್ನು ಗುಂಡಿಕ್ಕಿ ಕೊಂದ ಬೆನ್ನಲ್ಲೇ ಶಾರ್ಪ್ ಶೂಟರ್ ರಾಜು ನೇರವಾಗಿ 'HP'ಗೆ ಕರೆ ಮಾಡಿದ್ದಾನೆ ಎನ್ನಲಾಗಿದೆ. ಆ ಕರೆಯಲ್ಲಿ, 'ನಿನಗೆ ಸಲ್ಲಬೇಕಾದ ಹಣ ತಲುಪುತ್ತದೆ, ನೀನು ತಕ್ಷಣವೇ ಯಾವುದಾದರೂ ಸುರಕ್ಷಿತ ಜಾಗ ನೋಡಿ ಅಡಗಿಕೋ' ಎಂದು ಎದುರಿನ ವ್ಯಕ್ತಿ ಹೇಳಿರುವ ಮಾತುಗಳು ರೆಕಾರ್ಡ್ ಆಗಿವೆ.&lt;/p&gt;&lt;p&gt;&lt;strong&gt;ಹೋಟೆಲ್ ಉದ್ಯಮಿಗೆ ಬೆದರಿಕೆ: &lt;/strong&gt;ಅಷ್ಟೇ ಅಲ್ಲದೆ, ಈ ಕೊಲೆಯ ಬಳಿಕ ಉಡುಪಿಯ ಪ್ರಮುಖ ಹೋಟೆಲ್ ಉದ್ಯಮಿಯೊಬ್ಬರಿಗೂ ಕರೆ ಹೋಗಿದ್ದು, 'ಮೇ ಹೆಚ್ ಪಿ ಬೋಲ್ ರಹಾ ಹೂಂ...' (ನಾನು ಹೇಮಂತ್ ಪೂಜಾರಿ ಮಾತನಾಡುತ್ತಿರುವುದು) ಎಂದು ಧಮಕಿ ಹಾಕಿರುವ ಮತ್ತೊಂದು ಆಡಿಯೋ ಕೂಡ ಪೊಲೀಸರ ಕೈಸೇರಿದೆ.&lt;/p&gt;&lt;p&gt;ಸದ್ಯ ಈ ಎರಡೂ ಆಡಿಯೋ ಧ್ವನಿಗಳು ನಿಜಕ್ಕೂ ಹೇಮಂತ್ ಪೂಜಾರಿಯದ್ದೇ ಅಥವಾ ಆತನ ಹೆಸರನ್ನು ಬಳಸಿ ಬೇರೆ ಯಾರಾದರೂ ಕೃತ್ಯ ಎಸಗುತ್ತಿದ್ದಾರೆಯೇ ಎಂಬ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ (FSL) ಮೂಲಕ ತನಿಖೆ ಚುರುಕುಗೊಂಡಿದೆ.&lt;/p&gt;&lt;h2&gt;&lt;strong&gt;ಯಾರೀತ ಹೇಮಂತ್ ಪೂಜಾರಿ (HP)?&lt;/strong&gt;&lt;/h2&gt;&lt;p&gt;ಕರಾವಳಿ ಮೂಲದ ಹೇಮಂತ್ ಪೂಜಾರಿ ಭೂಗತ ಜಗತ್ತಿಗೆ ಕಾಲಿಟ್ಟ ಕಥೆ ಸಿನಿಮಾ ಕಥೆಗಿಂತ ರೋಚಕವಾಗಿದೆ. ಮುಂಬೈನ ಘಾಟ್&zwnj;ಕೋಪರ್&zwnj;ನಲ್ಲಿರುವ ಹೋಟೆಲ್&zwnj;ವೊಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಹೇಮಂತ್ ಪೂಜಾರಿ, 1999ರಲ್ಲಿ ಮುಂಬೈ ಅಂಡರ್&zwnj;ವರ್ಲ್ಡ್&zwnj;ಗೆ ಪ್ರವೇಶ ಪಡೆದಿದ್ದ. ಅಲ್ಪಾವಧಿಯಲ್ಲೇ ಕುಖ್ಯಾತ ಗ್ಯಾಂಗ್&zwnj;ಸ್ಟರ್ ಛೋಟಾ ರಾಜನ್ ಆಪ್ತ ಬಳಗ ಸೇರಿದ ಆತ, ಗ್ಯಾಂಗ್&zwnj;ನ ಪ್ರಮುಖ 'ಶಾರ್ಪ್ ಶೂಟರ್' ಆಗಿ ಗುರುತಿಸಿಕೊಂಡ. ಮಾರ್ಚ್ 2011ರಲ್ಲಿ ಮುಂಬೈನ ಗೋರೆಗಾಂವ್&zwnj;ನಲ್ಲಿ 75 ವರ್ಷದ ಬೇಕರಿ ಮಾಲೀಕ ಅಂಗಾರ ಪೂಜಾರಿಯನ್ನು ಹಫ್ತಾ ವಸೂಲಿಗಾಗಿ ಭೀಕರವಾಗಿ ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಈತನ ಹೆಸರು ದೇಶಾದ್ಯಂತ ಸದ್ದು ಮಾಡಿತ್ತು.&lt;/p&gt;&lt;h2&gt;&lt;strong&gt;2013ರಲ್ಲಿ ಕಣ್ಮರೆ &ndash; 'ಸತ್ತಿದ್ದಾನೆ' ಎಂದೇ ಭಾವಿಸಲಾಗಿತ್ತು!&lt;/strong&gt;&lt;/h2&gt;&lt;p&gt;2011ರ ಬಳಿಕ ಯಾವುದೇ ಅಪರಾಧ ಕೃತ್ಯಗಳಲ್ಲಿ ಕಾಣಿಸಿಕೊಳ್ಳದೆ ಸೈಲೆಂಟ್ ಆಗಿದ್ದ ಹೇಮಂತ್ ಪೂಜಾರಿ, 2013ರಲ್ಲಿ ವಿದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಅಥವಾ ಹತ್ಯೆಯಾಗಿದ್ದಾನೆ ಎಂಬ ಸುದ್ದಿಗಳು ಹರಿದಾಡಿದ್ದವು. ಭಾರತೀಯ ತನಿಖಾ ಸಂಸ್ಥೆಗಳ ಕಣ್ಣಿಗೂ ಬೀಳದೆ ಆತ ಸಂಪೂರ್ಣ ಕಣ್ಮರೆಯಾಗಿದ್ದ. ಆದರೆ ಬರೋಬ್ಬರಿ 11 ವರ್ಷಗಳ ನಂತರ, ಉಡುಪಿಯ ಮುದರಂಗಡಿ ಶೂಟೌಟ್ ಮೂಲಕ 'HP' ಹೆಸರು ಮತ್ತೆ ಮುನ್ನೆಲೆಗೆ ಬಂದಿರುವುದು ಕರಾವಳಿ ಉದ್ಯಮಿಗಳಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಈ ಆಡಿಯೋದ ನೈಜತೆ ದೃಢಪಟ್ಟರೆ, ಭಾರತೀಯ ಭೂಗತ ಜಗತ್ತಿನ ಕರಾಳ ಇತಿಹಾಸದಲ್ಲಿ ಇದೊಂದು ಮತ್ತೊಂದು ದೊಡ್ಡ ತಿರುವು ಪಡೆಯಲಿದೆ.&lt;/p&gt;]]></content:encoded>
            <category>udupi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mumbai-underworld-gangster-hemant-poojary-hp-alive-udupi-mudarangadi-david-murder-audio/articleshow-u6t5xfq"/>
        </item>
        <item>
            <title><![CDATA[ಮೃತ ಕಾನ್‌ಸ್ಟೇಬಲ್ ಅರ್ಜುನ್ ಶಂಕರ್ ಕುಟುಂಬಕ್ಕೆ 1.45 ಕೋಟಿ ರೂಪಾಯಿ ವಿಮೆ ಹಸ್ತಾಂತರ]]></title>
            <link>https://kannada.asianetnews.com/karnataka-districts/udupi-rs-1-point-45-crore-insurance-handed-over-to-family-of-deceased-constable-arjun-shankar-nellur-mrq/articleshow-v0e5oxv</link>
            <guid isPermaLink="true">https://kannada.asianetnews.com/karnataka-districts/udupi-rs-1-point-45-crore-insurance-handed-over-to-family-of-deceased-constable-arjun-shankar-nellur-mrq/articleshow-v0e5oxv</guid>
            <pubDate>Thu, 06 Aug 2026 05:47:40 +0530</pubDate>
            <description><![CDATA[ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಡುಪಿ ಜಿಲ್ಲಾ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಅವರ ಕುಟುಂಬಕ್ಕೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1.45 ಕೋಟಿ ರೂಪಾಯಿ ವಿಮಾ ಚೆಕ್ ಹಸ್ತಾಂತರಿಸಲಾಯಿತು. ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಈ ಸೌಲಭ್ಯವನ್ನು ಒದಗಿಸಲಾಗಿದ್ದು, ಇದರ ಸದುಪಯೋಗ ಪಡೆಯಲು ಇತರೆ ಸಿಬ್ಬಂದಿಗೆ ಕರೆ ನೀಡಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kza6mspnab131xd4neajeyfm,imgname-udupi-constable-1785975170773.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ:&lt;/strong&gt; ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಕುಟುಂಬಕ್ಕೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1,45,00,000 ರು. ಮೊತ್ತದ ವಿಮಾ ಚೆಕ್ ಹಸ್ತಾಂತರಿಸಲಾಯಿತು.&lt;/p&gt;&lt;p&gt;2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಸಿ.ಎಸ್.ಪಿ. ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ ಅರ್ಜುನ ನೆಲ್ಲೂರ ಹಾವೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು.&lt;/p&gt;&lt;h2&gt;&lt;strong&gt;ವೈಯಕ್ತಿಕ ಅಪಘಾತ ವಿಮೆಯ ಚೆಕ್&zwnj; ಹಸ್ತಾಂತರ&lt;/strong&gt;&lt;/h2&gt;&lt;p&gt;ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಟೇಟ್&zwnj; ಬ್ಯಾಂಕ್ ಆಫ್&zwnj; ಇಂಡಿಯಾದ ಪ್ರಾದೇಶಿಕ ಪ್ರಬಂಧಕರಾದ ಬಿ. ಪ್ರಕಾಶ್ ಅಡಿಗ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಉಪಸ್ಥಿತಿಯಲ್ಲಿ ಈ ವೈಯಕ್ತಿಕ ಅಪಘಾತ ವಿಮೆಯ ಚೆಕ್&zwnj; ಹಸ್ತಾಂತರಿಸಿದರು.&lt;/p&gt;&lt;p&gt;ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಯವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ನೀಡಲಾಗುತ್ತದೆ. ಇಂಥ ವಿಮಾ ಯೋಜನೆಗಳು ಎಲ್ಲ ಎಸ್&zwnj;.ಬಿ.ಐ. ಶಾಖೆಗಳಲ್ಲಿ ಲಭ್ಯವಿದ್ದು ಇದರ ಸದುಪಯೋಗವನ್ನು ಪೊಲೀಸ್ ಇಲಾಖೆಯ ಸಿಬ್ಬಂದಿ ಪಡೆದುಕೊಳ್ಳಬೇಕು ಎಂದು ಪ್ರಕಾಶ ಅಡಿಗ ವಿನಂತಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸಚಿವನಾಗಿ ಮೊದಲ ಭೇಟಿಯಲ್ಲೇ 'ಕೊಡಗಿನ ಮೂಲ ಸಮಸ್ಯೆ' ಪರಿಹಾರಕ್ಕೆ ಕೈಹಾಕಿದ ಪಿ.ಎಂ. ನರೇಂದ್ರಸ್ವಾಮಿ!&lt;/strong&gt;&lt;/p&gt;&lt;p&gt;ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಕೀಳಂಜೆ ಶ್ರೀಕೃಷ್ಣರಾಜ ಭಟ್, ಮಲ್ಪೆ ಶಾಖೆ ವ್ಯವಸ್ಥಾಪಕ ರಾಜೇಶ್ ಗಂಗೊಳ್ಳಿ ಮತ್ತು ಇತರ ಅಧಿಕಾರಿಗಳಾದ ಶ್ರೀನಿವಾಸ್, ಪ್ರಣವ್ ಪೈ, ತನ್ಮಯ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮೃತ ಪೇದೆ ಕುಟುಂಬಸ್ಥರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Viral: ಒಂದೇ ಒಂದು ವಿಡಿಯೋ, ಬಿಎಂಟಿಸಿ ಚಾಲಕ ಸಸ್ಪೆಂಡ್! ವಿಡಿಯೋ ನೋಡಿ ಶಾಕ್&zwnj; ಆದ ಬೆಂಗಳೂರಿನ ಜನ!&lt;/strong&gt;&lt;/p&gt;]]></content:encoded>
            <category>udupi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/udupi-rs-1-point-45-crore-insurance-handed-over-to-family-of-deceased-constable-arjun-shankar-nellur-mrq/articleshow-v0e5oxv"/>
        </item>
        <item>
            <title><![CDATA[ಕರ್ನಾಟಕದ ಕೆಲವೆಡೆ ಭಾರಿ ಮಳೆ, ರಾಜ್ಯ ಈ ಜಿಲ್ಲೆಯ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಣೆ]]></title>
            <link>https://kannada.asianetnews.com/karnataka-districts/heavy-rain-in-parts-of-karnataka-schools-and-colleges-in-udupi-declared-holiday-tomorrow/articleshow-vvp814g</link>
            <guid isPermaLink="true">https://kannada.asianetnews.com/karnataka-districts/heavy-rain-in-parts-of-karnataka-schools-and-colleges-in-udupi-declared-holiday-tomorrow/articleshow-vvp814g</guid>
            <pubDate>Fri, 24 Jul 2026 21:14:45 +0530</pubDate>
            <description><![CDATA[&lt;p&gt;ಕರ್ನಾಟಕ ಹಲವು ಜಿಲ್ಲೆಗಳು ಬರಗಾಲ ಪರಿಸ್ಥಿತಿ ಎದುರಿಸುತ್ತಿದ್ದರೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಬಳಿಕ ಉಡುಪಿಯಲ್ಲಿ ಮಳೆಯಾಗುತ್ತಿದೆ. ಪರಿಣಾಮ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwexq061yhgxbwyeqwt28hj8,imgname-karnataka-rain-school-holiday-1782912352449.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉಡುಪಿ (ಜು.24) &lt;/strong&gt;ಕರ್ನಾಟಕದ ಹಲವು ಜಿಲ್ಲೆಗಳು ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಉತ್ತಮ ಮಳೆಯಾಗುತ್ತಿದ್ದ ಹಲವು ಜಿಲ್ಲೆಗಳು ಮಳೆ ಕೊರತೆ ಎದುರಿಸಿದೆ. ಇನ್ನು ದಕ್ಷಿಣ ಕನ್ನಡದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಆದರೆ ಕೊಡಗು, ಉಡುಪಿಯಲ್ಲಿ ಮಳೆ ಕೊರತೆ ಕಂಡುಬಂದಿತ್ತು. ಇದೀಗ ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಮುನ್ನಚ್ಚೆರಿಕಾ ಕ್ರಮವಾಗಿ ನಾಳೆ (ಜುಲೈ 25) ಉಡುಪಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.&lt;/p&gt;&lt;h2&gt;ಜಿಲ್ಲಾಧಿಕಾರಿ ಮಹತ್ವದ ಘೋಷಣೆ&lt;/h2&gt;&lt;p&gt;ನಾಳೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಸಭೆ ಸೇರಿದ ಉಡುಪಿ ಜಿಲ್ಲಾಧಿಕಾರಿ ಸ್ವೂರಪ ಟಿಕೆ, ಮಹತ್ವದ ಘೋಷಣೆ ಮಾಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಡಿಪ್ಲೋಮೋ, ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.&lt;/p&gt;&lt;h2&gt;ದಕ್ಷಿಣ ಕನ್ನಡಲ್ಲಿ ಭಾರಿ ಮಳೆ&lt;/h2&gt;&lt;p&gt;ದಕ್ಷಿಣ ಕನ್ನಡದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಇಂದು (ಜುಲೈ.24) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತ ಅಂಗನವಾಡಿಯಿಂದ ಪಿಯುಸಿ ವರೆಗೆ ಇಂದು ರಜೆ ಘೋಷಣೆ ಮಾಡಲಾಗಿತ್ತು .ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಆದೇಶ ನೀಡಿದ್ದರು.&lt;/p&gt;&lt;h2&gt;ಉತ್ತರ ಕನ್ನಡದಲ್ಲೂ ಭಾರಿ ಮಳೆ&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಪ್ರಮುಖವಾಗಿ ಸಿದ್ದಾಪುರ, ಶಿರಸಿ ಹಾಗೂ ಜೊಯಿಡಾ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು (ಜು.24) ಭಾರಿ ಮಳೆಯಾಗುತಿದ್ದ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗೆ ರಜೆ ಘೋಷಿಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹಲೆವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಕ್ಕಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.&lt;/p&gt;&lt;p&gt;ಭಾರಿ ಮಳೆಗೆ ಕಾರವಾರದ ಮುದುಗ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ಬಂಡೆ ಕಲ್ಲುಗಳು, ಮಣ್ಣು ಹೆದ್ದಾರಿಗೆ ಬಿದ್ದಿದೆ. ಈ ಪ್ರದೇಶದಲ್ಲಿ ಸಂಚಾರಕ್ಕೆ ನಿರ್ಬಂಧ ಇರುವ ಕಾರಣ ಯಾವುದೇ ಸಮಸ್ಯೆ ಆಗಿಲ್ಲ. ಇನ್ನು ಜೋಯಿಡಾದಲ್ಲಿ ಮಳೆ ಅಬ್ಬರಕ್ಕೆ ಮನೆಯ ಮೇಲೆ ಅಡಕೆ ಮರ ಬಿದ್ದು ಹಾನಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಕುಂಬಾರವಾಡದ ಕಾತೇಲಿಯಲ್ಲಿ ಘಟನೆ ನಡೆದಿದೆ.&lt;/p&gt;&lt;p&gt;&lt;/p&gt;]]></content:encoded>
            <category>udupi</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/heavy-rain-in-parts-of-karnataka-schools-and-colleges-in-udupi-declared-holiday-tomorrow/articleshow-vvp814g"/>
        </item>
        <item>
            <title><![CDATA[ಭಾರತೀಯ ರೈಲ್ವೆಯೊಂದಿಗೆ ಕೊಂಕಣ್‌ ರೈಲ್ವೆ ವಿಲೀನಕ್ಕೆ ವಿಘ್ನ: ಗೋವಾ ಒಪ್ಪಿಗೆ, ಮಹಾರಾಷ್ಟ್ರ, ಕರ್ನಾಟಕದಿಂದ ಕಂಡಿಷನ್!]]></title>
            <link>https://kannada.asianetnews.com/karnataka-districts/centre-seeks-konkan-railway-ownership-states-reluctant-san/articleshow-w5fnbmk</link>
            <guid isPermaLink="true">https://kannada.asianetnews.com/karnataka-districts/centre-seeks-konkan-railway-ownership-states-reluctant-san/articleshow-w5fnbmk</guid>
            <pubDate>Wed, 12 Aug 2026 23:02:40 +0530</pubDate>
            <description><![CDATA[&lt;p&gt;ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL) ಅನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt3n5qcdeknrs04fxpwy231v,imgname-konkan-railway-1780386815373.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನವದೆಹಲಿ (ಆ.12):&lt;/strong&gt; ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಹಾಗೂ ರೈಲ್ವೆ ಜಾಲದ ಸಾಮರ್ಥ್ಯ ವಿಸ್ತರಣೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಲು 'ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್' (KRCL) ಅನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಈ ವಿಲೀನ ಪ್ರಕ್ರಿಯೆಗೆ ಪಾಲುದಾರ ರಾಜ್ಯಗಳಿಂದ ನಿರೀಕ್ಷಿತ ಸಹಕಾರ ಸಿಗುತ್ತಿಲ್ಲ. ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ (ಆಗಸ್ಟ್ 12) ಲೋಕಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಕೊಂಕಣ ರೈಲ್ವೆಯಲ್ಲಿ ಪಾಲುದಾರಿಕೆ ಹೊಂದಿರುವ ರಾಜ್ಯಗಳ ಪೈಕಿ ಗೋವಾ ಸರ್ಕಾರ ಮಾತ್ರವೇ ತನ್ನ ಶೇರುಗಳನ್ನು ಉಚಿತವಾಗಿ ರೈಲ್ವೆ ಸಚಿವಾಲಯಕ್ಕೆ ವರ್ಗಾಯಿಸಲು ಸಮ್ಮತಿಸಿದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಆದರೆ, ಮಹಾರಾಷ್ಟ್ರ ಸರ್ಕಾರವು ತಾವು ಹೂಡಿಕೆ ಮಾಡಿರುವ ಬಂಡವಾಳವನ್ನು (Share Capital) ಮರಳಿಸುವಂತೆ ಪಟ್ಟು ಹಿಡಿದಿದ್ದರೆ, ಕರ್ನಾಟಕ ಸರ್ಕಾರವು ವಿವಿಧ ರೀತಿಯ ಎಕ್ಸಿಟ್ (ಹೊರನಡೆಯುವ) ಆಯ್ಕೆಗಳನ್ನು ನೀಡುವಂತೆ ಕೋರಿದೆ.&lt;/p&gt;&lt;h2&gt;&lt;strong&gt;ಕೊಂಕಣ ರೈಲ್ವೆಯ ಪಾಲುದಾರಿಕೆ ಮತ್ತು ಪ್ರಸ್ತುತ ಸ್ಥಿತಿ&lt;/strong&gt;&lt;/h2&gt;&lt;p&gt;ಮಹಾರಾಷ್ಟ್ರದ ರೋಹಾದಿಂದ ಕರ್ನಾಟಕದ ತೋಕೂರ್&zwnj;ವರೆಗೆ ಮುಂಬೈ ಮತ್ತು ಮಂಗಳೂರನ್ನು ಸಂಪರ್ಕಿಸುವ 739 ಕಿಲೋಮೀಟರ್ ಉದ್ದದ ಕರಾವಳಿ ರೈಲು ಮಾರ್ಗದ ನಿರ್ಮಾಣಕ್ಕಾಗಿ 1990ರಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್&zwnj; ಅನ್ನು ಸ್ಥಾಪಿಸಲಾಯಿತು. ಪ್ರಸ್ತುತ ಈ ಸಂಸ್ಥೆಯಲ್ಲಿ ಐದು ಪ್ರಮುಖ ಪಾಲುದಾರರಿದ್ದಾರೆ. ರೈಲ್ವೆ ಸಚಿವಾಲಯ (ಕೇಂದ್ರ): ಶೇ. 66.79 ಪಾಲು ಹೊಂದಿದ್ದರೆ, ಮಹಾರಾಷ್ಟ್ರ ಸರ್ಕಾರ ಶೇ. 14.91, ಕರ್ನಾಟಕ ಸರ್ಕಾರ ಶೇ. 10.17, ಗೋವಾ ಸರ್ಕಾರ ಶೇ. 4.07 ಹಾಗೂ ಕೇರಳ ಸರ್ಕಾರ ಶೇ. 4.07 ಪಾಲು ಹೊಂದಿದೆ.&lt;/p&gt;&lt;p&gt;ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, &quot;ಕೊಂಕಣ ರೈಲ್ವೆಯ ಮೂಲಸೌಕರ್ಯಗಳಿಗೆ ಸುಮಾರು 30 ವರ್ಷಗಳಾಗಿದ್ದು, ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರೈಲುಗಳ ಸಂಚಾರ ಸಾಮರ್ಥ್ಯವನ್ನು ಹೆಚ್ಚಿಸಲು ಬೃಹತ್ ಪ್ರಮಾಣದ ಬಂಡವಾಳದ ಅಗತ್ಯವಿದೆ. ಸುರಂಗಗಳ ನವೀಕರಣ, ಹಳೆಯ ಆಸ್ತಿಗಳ ಬದಲಿ ವ್ಯವಸ್ಥೆ ಸೇರಿದಂತೆ ತುರ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭಾರಿ ಹಣದ ಅಗತ್ಯವಿದೆ&quot; ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಸಚಿವಾಲಯ ನೀಡಿದ ಪ್ರಸ್ತಾವನೆ ಏನು?&lt;/strong&gt;&lt;/h2&gt;&lt;p&gt;ಈ ಹಣಕಾಸಿನ ಅಗತ್ಯವನ್ನು ಪೂರೈಸಲು ರೈಲ್ವೆ ಸಚಿವಾಲಯವು ಎಲ್ಲ ಪಾಲುದಾರ ರಾಜ್ಯಗಳಿಗೆ ಎರಡು ಆಯ್ಕೆಗಳನ್ನು ನೀಡಿತ್ತು. ತಮಗೆ ಇರುವ ಶೇರುಗಳಿಗೆ ಅನುಗುಣವಾಗಿ ಅಗತ್ಯವಿರುವ ಬಂಡವಾಳ ವೆಚ್ಚವನ್ನು (Capex) ಭರಿಸುವುದು ಅಥವಾ ತಮ್ಮ ಶೇರುಗಳನ್ನು ಭಾರತೀಯ ರೈಲ್ವೆ ಸಚಿವಾಲಯಕ್ಕೆ ಬಿಟ್ಟುಕೊಡುವುದು. ಆದರೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ (Indian Railways) ಸಂಪೂರ್ಣವಾಗಿ ವಿಲೀನಗೊಳಿಸಬೇಕಾದರೆ, ಅದು ಶೇ. 100ರಷ್ಟು ಕೇಂದ್ರ ಸರ್ಕಾರದ ಮಾಲೀಕತ್ವದ ಸಂಸ್ಥೆಯಾಗುವುದು ಕಡ್ಡಾಯವಾಗಿದೆ. ಕಾನೂನಾತ್ಮಕ, ಕಾರ್ಪೊರೇಟ್ ಮತ್ತು ಆಡಳಿತಾತ್ಮಕ ಅನುಮೋದನೆಗಳೊಂದಿಗೆ ಪಾಲುದಾರ ಶೇರುದಾರರ ಒಪ್ಪಂದಕ್ಕೆ ಬದ್ಧವಾಗಿ ಈ ಪ್ರಕ್ರಿಯೆ ನಡೆಯಬೇಕಿದೆ.&lt;/p&gt;&lt;h2&gt;&lt;strong&gt;ಅಭಿವೃದ್ಧಿ ಕಾಮಗಾರಿಗಳ ಪ್ರಗತಿ&lt;/strong&gt;&lt;/h2&gt;&lt;p&gt;ಕೊಂಕಣ ರೈಲ್ವೆಯ 739 ಕಿಲೋಮೀಟರ್ ವ್ಯಾಪ್ತಿಯಲ್ಲಿ ರೋಹಾ-ವೀರ್ ಹಾಗೂ ಮಡಗಾಂವ್-ಮಜೋರ್ಡಾ ನಡುವಿನ ಸುಮಾರು 55 ಕಿಲೋಮೀಟರ್ ಮಾರ್ಗದ ದ್ವಿಪಥ (Doubling) ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಉಳಿದಂತೆ ಸಾಮರ್ಥ್ಯ ಹೆಚ್ಚಿಸಲು ಗುರುತಿಸಲಾದ 263 ಕಿಲೋಮೀಟರ್ ಮಾರ್ಗವನ್ನು ದ್ವಿಪಥಗೊಳಿಸಲು ಅಗತ್ಯವಿರುವ ಸಾಧ್ಯತಾ ಸಮೀಕ್ಷೆಗೆ (Feasibility Survey) ಅನುಮೋದನೆ ನೀಡಲಾಗಿದೆ. ಅಲ್ಲದೆ, ಪ್ರಯಾಣಿಕರ ಸೌಲಭ್ಯಗಳು, ಆಸ್ತಿಗಳ ನವೀಕರಣ, ಸುರಕ್ಷತೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ KRCLನ ಮೂರನೇ ಆರ್ಥಿಕ ಪುನರ್ರಚನೆಗೆ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.&lt;/p&gt;]]></content:encoded>
            <category>udupi</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/centre-seeks-konkan-railway-ownership-states-reluctant-san/articleshow-w5fnbmk"/>
        </item>
    </channel>
</rss>
