<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 12 Aug 2026 23:02:49 +0530</lastBuildDate>
        <atom:link href="https://kannada.asianetnews.com/rss/uttara-kannada" rel="self" type="application/rss+xml"/>
        <item>
            <title><![CDATA[‘ದಾನ ನಾಶ ಮಾಡಿದರೆ ಅಪಾರ ಪಾಪ’ ಕ್ರಿ.ಶ 800 ರ ಅಪರೂಪದ ಶಾಸನ ಪತ್ತೆ: ಕರಾವಳಿ ಇತಿಹಾಸಕ್ಕೆ ಸಿಕ್ಕಿತು ಹೊಸ ಬೆಳಕು!]]></title>
            <link>https://kannada.asianetnews.com/karnataka-districts/rare-800-ad-kannada-inscription-found-in-honnavar-reveals-coastal-karnataka-early-history-gdp/articleshow-17ga0dc</link>
            <guid isPermaLink="true">https://kannada.asianetnews.com/karnataka-districts/rare-800-ad-kannada-inscription-found-in-honnavar-reveals-coastal-karnataka-early-history-gdp/articleshow-17ga0dc</guid>
            <pubDate>Tue, 11 Aug 2026 15:13:40 +0530</pubDate>
            <description><![CDATA[ಹೊನ್ನಾವರದ ಕಡಗೇರಿ ಗ್ರಾಮದಲ್ಲಿ ಪತ್ತೆಯಾದ ಕ್ರಿ.ಶ 800ರ ಶಾಸನವು ಕರಾವಳಿ ಕರ್ನಾಟಕದ ಆರಂಭಿಕ ಕನ್ನಡ ಲಿಪಿ, ಹಳೆಗನ್ನಡ ಭಾಷೆ, ಮತ್ತು ದೇವಾಲಯದ ಆಡಳಿತದ ಬಗ್ಗೆ ಬೆಳಕು ಚೆಲ್ಲುತ್ತದೆ. ಈ ಶಾಸನವು ದಾನ ವ್ಯವಸ್ಥೆ, ಕೃಷಿ ಆದಾಯ ಮತ್ತು ಅಂದಿನ ಸಾಮಾಜಿಕ ನಿಯಮಗಳನ್ನು ತಿಳಿಸುವ ಪ್ರಮುಖ ಐತಿಹಾಸಿಕ ದಾಖಲೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzr38jh89zyvxb569wpenv9c,imgname-kadageri-inscription-1786441386535.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ: &lt;/strong&gt;ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡಗೇರಿ ಗ್ರಾಮದ ವರಾಹವಿಷ್ಣುಮೂರ್ತಿ (Varahavishnumurthy Temple) ದೇವಾಲಯದ ಎದುರಿಗಿರುವ ಶಾಸನಶಿಲೆಯು ಕ್ರಿಶ ಸುಮಾರು 800ರ ಕಾಲದ್ದಾಗಿದ್ದು, (800 AD Halegannada inscription) ಕರಾವಳಿ ಕರ್ನಾಟಕದ ಆರಂಭಿಕ ಕನ್ನಡ ಲಿಪಿ (Kannada script evolution), ಹಳೆಗನ್ನಡ ಭಾಷೆ, ದೇವಾಲಯದ ಆಡಳಿತ, ಕೃಷಿ ಆದಾಯ ಹಾಗೂ ಧರ್ಮದಾನದ ವ್ಯವಸ್ಥೆಯನ್ನು ತಿಳಿಸುವ ಅಪರೂಪದ ದಾಖಲೆಯಾಗಿದೆ ಎಂದು ಅಂಕೋಲಾದ ಇತಿಹಾಸ ಸಂಶೋಧಕ ಶ್ಯಾಮಸುಂದರ ಗೌಡ ತಿಳಿಸಿದ್ದಾರೆ.&lt;/p&gt;&lt;h2&gt;ದಾನವ್ಯವಸ್ಥೆಯ ಸ್ವರೂಪ ಸ್ಪಷ್ಟ&lt;/h2&gt;&lt;p&gt;ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಸನವನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಹಾಗೂ ಅದರ ಛಾಯಾಚಿತ್ರಗಳನ್ನು ಹಲವು ಬಾರಿ ಅವಲೋಕಿಸಿ ಪ್ರೊ. ಜಿ.ಕೆ. ದೇವರಾಜ ಸ್ವಾಮಿ ಅವರ ಜೊತೆಸೇರಿ ಸಿದ್ಧಪಡಿಸಿದ ಪಾಠದ ಆಧಾರದ ಮೇಲೆ ಲಿಪಿ, ಭಾಷೆ, ಶಿಲ್ಪ ಮತ್ತು ವಿಷಯ ವಸ್ತುಗಳನ್ನು ಪ್ರತ್ಯೇಕವಾಗಿ ಅಧ್ಯಯನ ಮಾಡಲಾಗಿದೆ. ಈ ಎಲ್ಲ ಸಾಕ್ಷ್ಯಗಳನ್ನು ಪರಸ್ಪರ ಹೋಲಿಸಿದಾಗ ಶಾಸನದ ಕಾಲ, ಅದರ ಧಾರ್ಮಿಕ ಉದ್ದೇಶ ಹಾಗೂ ದಾನವ್ಯವಸ್ಥೆಯ ಸ್ವರೂಪ ಸ್ಪಷ್ಟವಾಗುತ್ತದೆ ಎಂದಿದ್ದಾರೆ.&lt;/p&gt;&lt;h2&gt;ಕಪಿಲೆ ಗೋವುಗಳನ್ನು ದಾನ ಮಾಡಿದ ಪುಣ್ಯ&lt;/h2&gt;&lt;p&gt;ಶಾಸನದ ಫಲಶ್ರುತಿಯಲ್ಲಿ ದಾನವನ್ನು ಕಾಯುವವರಿಗೆ ಸಾವಿರ ಕಪಿಲೆ ಗೋವುಗಳನ್ನು ದಾನ ಮಾಡಿದ ಪುಣ್ಯ ದೊರೆಯುತ್ತದೆ; ದಾನವನ್ನು ಹಾಳುಮಾಡುವವರಿಗೆ ಗೋವುಗಳನ್ನು ಕದ್ದ ಪಾಪ ತಗಲುತ್ತದೆ ಎಂದು ಹೇಳಲಾಗಿದೆ. ಇದು ಸಾಮಾನ್ಯ ನೀತಿವಾಕ್ಯವಲ್ಲ. ದಾನದ ಆದಾಯವನ್ನು ಬೇರೆಡೆಗೆ ತಿರುಗಿಸುವುದು, ನಿಗದಿತ ಸೇವೆಯನ್ನು ನಿಲ್ಲಿಸುವುದು ಅಥವಾ ಲಿಖಿತ ನಿಯಮ ಬದಲಿಸುವುದರ ವಿರುದ್ಧ ನೀಡಿದ ಕಠಿಣ ಎಚ್ಚರಿಕೆಯಾಗಿದೆ ಎಂದು ತಿಳಿಸಿದ್ದಾರೆ.&lt;/p&gt;&lt;h2&gt;ದಾನಶಾಸನವಲ್ಲ, ಆರಂಭಿಕ ಕನ್ನಡ ಲಿಪಿಯ ವಿಕಾಸ&lt;/h2&gt;&lt;p&gt;ಕಡಗೇರಿ ಶಾಸನವು (Kadageri inscription) ಕೇವಲ ಒಂದು ದೇವಾಲಯದ ದಾನಶಾಸನವಲ್ಲ. ಆರಂಭಿಕ ಕನ್ನಡ ಲಿಪಿಯ ವಿಕಾಸ, ಹಳೆಗನ್ನಡದ ವ್ಯಾಕರಣ, ಕರಾವಳಿಯ ಕೃಷಿ ಅಳತೆಗಳು, ಬೆಳೆಪಾಲು, ಭೂಮಿ ಮತ್ತು ಹಣದ ದಾನ, ದೇವಾಲಯದ ನಿತ್ಯಸೇವೆ, ಸ್ವಾಧ್ಯಾಯ, ಸ್ಥಳೀಯ ಅಧಿಕಾರಿಗಳು ಹಾಗೂ ಪಟ್ಟೆಗಾರರ ಆಡಳಿತ ವನ್ನು ಒಂದೇ ದಾಖಲೆಯ ಮೂಲಕ ತಿಳಿಸುತ್ತದೆ. ಮೊದಲ ಸಹಸ್ರಮಾನದ ಉತ್ತರ ಕನ್ನಡ (uttara kannada) ಜಿಲ್ಲೆಯ ಇತಿಹಾಸವನ್ನು ಕಟ್ಟುವಲ್ಲಿ ಈ ಶಾಸನ ಪ್ರಮುಖ ಆಧಾರವಾಗಿದೆ ಎಂದು ಶ್ಯಾಮಸುಂದರ ಗೌಡ ವಿವರಿಸಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-800-ad-kannada-inscription-found-in-honnavar-reveals-coastal-karnataka-early-history-gdp/articleshow-17ga0dc"/>
        </item>
        <item>
            <title><![CDATA[ಸಚಿವರ ಪಟ್ಟಿಯಲ್ಲಿದ್ದರೂ ಕೊನೇ ಕ್ಷಣದಲ್ಲಿ ಮಂಕಾಳ್‌ ವೈದ್ಯಗೆ ಕೈತಪ್ಪಿದ ಮಂತ್ರಿಗಿರಿ, ಕರಾವಳಿಯಲ್ಲಿ ಸಿಡಿದೆದ್ದ ಮೀನುಗಾರರ ಸಮುದಾಯ!]]></title>
            <link>https://kannada.asianetnews.com/karnataka-districts/mankal-vaidya-dropped-from-karnataka-cabinet-fishermen-protest-san/articleshow-1uw9epc</link>
            <guid isPermaLink="true">https://kannada.asianetnews.com/karnataka-districts/mankal-vaidya-dropped-from-karnataka-cabinet-fishermen-protest-san/articleshow-1uw9epc</guid>
            <pubDate>Mon, 03 Aug 2026 15:56:27 +0530</pubDate>
            <description><![CDATA[&lt;p&gt;ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದ ಸಚಿವರ ಪಟ್ಟಿಯಲ್ಲಿದ್ದ ಶಾಸಕ ಮಂಕಾಳು ವೈದ್ಯ ಅವರ ಹೆಸರನ್ನು ಕೊನೆ ಕ್ಷಣದಲ್ಲಿ ಕೈಬಿಡಲಾಗಿದ್ದು, ಇದನ್ನು ಎಐಸಿಸಿ 'ಟೈಪಿಂಗ್ ಮಿಸ್ಟೇಕ್' ಎಂದು ಸಮಜಾಯಿಷಿ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz3jddhrbahmg05a853mw9pf,imgname-mankal-vaidya-minister-1785752630840.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.3)&lt;/strong&gt;: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕ್ಷಣಗಣನೆ ನಡುವೆಯೇ ಕಾಂಗ್ರೆಸ್ ಹೈಕಮಾಂಡ್&zwnj;ಗೆ ಭಾರಿ ಮುಜುಗರ ಉಂಟುಮಾಡುವ ಅಚ್ಚರಿಯ ಬೆಳವಣಿಗೆ ನಡೆದಿದೆ. ಕಾಂಗ್ರೆಸ್&zwnj; ಹೈಕಮಾಂಡ್&zwnj; ಪ್ರಕಟಿಸಿದ್ದ 20 ನೂತನ ಸಚಿವರ ಅಧಿಕೃತ ಪಟ್ಟಿಯಲ್ಲಿ ಶಾಸಕ ಮಂಕಾಳು ವೈದ್ಯ ಅವರ ಹೆಸರು ಇತ್ತಾದರೂ, ಕೊನೆಯ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಎಐಸಿಸಿ (AICC), ಇದು ಕೇವಲ &quot;ಟೈಪಿಂಗ್ ಮಿಸ್ಟೇಕ್&quot; (Typing Error) ಎಂದು ಸಮಜಾಯಿಷಿ ನೀಡಿದೆ. ತಿದ್ದುಪಡಿ ಮಾಡಿದ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರನ್ನು ಕೈಬಿಟ್ಟು, ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.&lt;/p&gt;&lt;p&gt;ಈ ದಿಢೀರ್&zwnj; ಬೆಳವಣಿಗೆಯಿಂದ ಅಸಮಾಧಾನಗೊಂಡ ಮಂಕಾಳು ವೈದ್ಯ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆಗೆ ಯತ್ನಿಸಿದರೂ, ಡಿಕೆಶಿ ಭೇಟಿ ಸಾಧ್ಯವಾಗಲಿಲ್ಲ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವೈದ್ಯ, &quot;ನಾನು ಸಿಎಂ ಅವರನ್ನು ಭೇಟಿ ಮಾಡಲು ಬಂದಿದ್ದೆ, ಅವರು ಸಿಗಲಿಲ್ಲ. ಮತ್ತೊಮ್ಮೆ ಬಂದು ಭೇಟಿಯಾಗುತ್ತೇನೆ&quot; ಎಂದು ತೆರಳಿದರು. ಇನ್ನೊಂದೆಡೆ, ಸಚಿವ ಸ್ಥಾನ ಸಿಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದರಿಂದಲೇ ಹೈಕಮಾಂಡ್&zwnj; ಕೊನೆ ಕ್ಷಣದಲ್ಲಿ ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಿದೆ ಎನ್ನಲಾಗುತ್ತಿದೆ.&lt;/p&gt;&lt;h2&gt;&lt;strong&gt;ಸೋಷಿಯಲ್ ಮೀಡಿಯಾ ಕಿಚ್ಚು: ಮೀನುಗಾರ ಸಮುದಾಯದ ಆಕ್ರೋಶ!&lt;/strong&gt;&lt;/h2&gt;&lt;p&gt;ಕೊನೆಯ ಕ್ಷಣದಲ್ಲಿ ಮಂಕಾಳು ವೈದ್ಯ ಅವರ ಹೆಸರು ಕೈಬಿಡುತ್ತಿದ್ದಂತೆ 'X' (ಟ್ವಿಟರ್) ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಕರಾವಳಿಯ ಮೀನುಗಾರ ಸಮುದಾಯದ ಜನರು ಕಾಂಗ್ರೆಸ್&zwnj; ನಿರ್ಧಾರದ ವಿರುದ್ಧ ಸೋಷಿಯಲ್&zwnj; ಮೀಡಿಯಾದಲ್ಲಿ ಅಭಿಯಾನವೇ ಆರಂಭಿಸಿದ್ದಾರೆ.&lt;/p&gt;&lt;p&gt;&quot;ಕರ್ನಾಟಕ ರಾಜ್ಯದ ಮೀನುಗಾರ ಸಮುದಾಯದವರಿಗೆ ಮಾಡಿದ ಅನ್ಯಾಯ&quot;: ಟ್ವಿಟರ್&zwnj;ನಲ್ಲಿ #INJUSTICEFORFISHERIESCOMMUNITY ಹಾಗೂ #JusticeForUttaraKannada ಹ್ಯಾಶ್&zwnj;ಟ್ಯಾಗ್&zwnj;ಗಳು ತೀವ್ರವಾಗಿ ಟ್ರೆಂಡ್ ಆಗುತ್ತಿವೆ.&lt;/p&gt;&lt;h2&gt;&lt;strong&gt;ಉಗ್ರ ಹೋರಾಟದ ಎಚ್ಚರಿಕೆ:&lt;/strong&gt;&lt;/h2&gt;&lt;p&gt;&quot;ಮೀನುಗಾರ ಸಮುದಾಯದ ಶಾಸಕರಾದ ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ನೀಡಲೇಬೇಕು. ಅವರು ಸಚಿವರಾಗಿದ್ದಾಗ ಮೀನುಗಾರಿಕೆ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಇಡೀ ಕರಾವಳಿ ಭಾಗದ ಮೀನುಗಾರರು ಉಗ್ರ ಹೋರಾಟ ನಡೆಸುತ್ತೇವೆ&quot; ಎಂದು ಅಭಿಮಾನಿಗಳು ಹಾಗೂ ಬೆಂಬಲಿಗರು ಹೈಕಮಾಂಡ್&zwnj;ಗೆ ಎಚ್ಚರಿಕೆ ರವಾನಿಸಿದ್ದಾರೆ.&lt;/p&gt;&lt;p&gt;'ಮೀನುಗಾರ ಬಾಳಲ್ಲಿ ಹೊಸ ಕಿರಣವನ್ನು ತಂದು ಅವರ ಬದುಕಿಗೆ ಬೆಳಕಾದ ಶ್ರೀ ಮಾಂಕಾಳ್ ಎಸ್ ವೈದ್ಯ ಅವರಿಗೆ ಸಚಿವ ಸ್ಥಾನ ನೀಡಲೇಬೇಕು' ಎಂದು ಸಂಕೇತ್&zwnj; ನಾಯ್ಕ್&zwnj; ಎನ್ನುವವರು ಟ್ವೀಟ್&zwnj; ಮಾಡಿದ್ದಾರೆ.&lt;/p&gt;&lt;p&gt;'ಮೀನುಗಾರ ಸಮುದಾಯದ ಶಾಸಕರಾದ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ನೀಡಬೇಕು. ಈ ಹಿಂದೆ ಸಚಿವರಾಗಿದ್ದಾಗ ಮೀನುಗಾರ ಸಮಾಜಕ್ಕೆ ಅವರ ಕೊಡುಗೆ, ಮೀನುಗಾರಿಕೆ ಕ್ಷೇತ್ರದಲ್ಲಿ ಅವರ ಸಾಧನೆ ಅಪಾರ ಅವರಿಗೆ ಸಚಿವ ಸ್ಥಾನ ನೀಡದೆ ಇದ್ದಲ್ಲಿ ಕರಾವಳಿ ಭಾಗದ ಸಮಸ್ತ ಮೀನುಗಾರರು ಉಗ್ರ ಹೊರಾಟವನ್ನು ನಡೆಸುತ್ತೇವೆ' ಎಂದು ಉತ್ತರ ಕನ್ನಡ ಮೀನುಗಾರರ ಸಂಘ ಎಚ್ಚರಿಸಿದೆ.&lt;/p&gt;&lt;p&gt;ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಅಧಿಕೃತ 'X' ಖಾತೆಗಳನ್ನು ಟ್ಯಾಗ್ ಮಾಡಿ, ಮೀನುಗಾರ ಸಮುದಾಯಕ್ಕೆ ಆದ ಅನ್ಯಾಯವನ್ನು ಸರಿಪಡಿಸುವಂತೆ ನೆಟ್ಟಿಗರು ಕಠಿಣವಾಗಿ ತಗೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;#InjusticeForUttaraKannada#UttaraKannada #MankalVaidyaForUttaraKannada #MankalVaidya@INCIndia @kharge @RahulGandhi @kcvenugopalmp @rssurjewala @INCKarnataka @DKShivakumar pic.twitter.com/IM2Nqn8rlb&lt;/p&gt;&lt;p&gt;&mdash; Shreepad Gouda (@ShreepadGobe6) August 3, 2026&lt;/p&gt;&lt;p&gt;&lt;/p&gt;]]></content:encoded>
            <category>uttara-kannada</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/mankal-vaidya-dropped-from-karnataka-cabinet-fishermen-protest-san/articleshow-1uw9epc"/>
        </item>
        <item>
            <title><![CDATA[School Holiday: ರಾಜ್ಯದಲ್ಲಿ ಭಾರೀ ಮಳೆ ಆರ್ಭಟ, ಈ ಜಿಲ್ಲೆಗಳ ಕೆಲವು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ!]]></title>
            <link>https://kannada.asianetnews.com/karnataka-districts/shivamogga-uttara-kannada-school-holiday-heavy-rain-august-3-2026/articleshow-340kxbd</link>
            <guid isPermaLink="true">https://kannada.asianetnews.com/karnataka-districts/shivamogga-uttara-kannada-school-holiday-heavy-rain-august-3-2026/articleshow-340kxbd</guid>
            <pubDate>Sun, 02 Aug 2026 21:42:36 +0530</pubDate>
            <description><![CDATA[ಕರ್ನಾಟಕದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳಲ್ಲಿ ಆಗಸ್ಟ್ 3ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz1kz6q8q04x5gj0w58c6ngp,imgname-shivamogga-uttara-kannada-school-holiday-1785687153384.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ (Karnataka) ಮಲೆನಾಡು (Malnad) ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ (Students) ಸುರಕ್ಷತೆಯನ್ನು (Safety) ಗಮನದಲ್ಲಿಟ್ಟುಕೊಂಡು ಶಿವಮೊಗ್ಗ (Shivamogga) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಗಳ ಕೆಲವು ತಾಲೂಕುಗಳಲ್ಲಿ ಆಗಸ್ಟ್ 3ರಂದು (ಸೋಮವಾರ) ಶಾಲೆ-ಕಾಲೇಜುಗಳಿಗೆ (Schools &amp;amp; Colleges) ರಜೆ (Holiday) ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಸಾಗರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ&lt;/strong&gt;&lt;/h2&gt;&lt;p&gt;ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagar) ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕು ಆಡಳಿತವು ರಜೆ ಘೋಷಿಸಿದೆ.&lt;/p&gt;&lt;p&gt;ಸಾಗರ ತಹಶೀಲ್ದಾರ್ (Tahsildar) ಡಾ. ಪ್ರತಿಭಾ (Dr. Prathibha) ಅವರು ಹೊರಡಿಸಿರುವ ಆದೇಶದಂತೆ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools), ಪ್ರೌಢಶಾಲೆಗಳು (High Schools), ಪದವಿ ಪೂರ್ವ ಕಾಲೇಜುಗಳು (PU Colleges), ಡಿಪ್ಲೊಮಾ ಕಾಲೇಜುಗಳು (Diploma Colleges) ಹಾಗೂ ಐಟಿಐ (ITI) ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೂ ರಜೆ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆ ಜಿಲ್ಲಾಡಳಿತ (District Administration) ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ (Deputy Commissioner) ಲಕ್ಷ್ಮೀ ಪ್ರಿಯಾ (Lakshmi Priya) ಅವರು ಹೊರಡಿಸಿರುವ ಆದೇಶದಂತೆ ದಾಂಡೇಲಿ (Dandeli) ಹಾಗೂ ಜೋಯಿಡಾ (Joida) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools) ಮತ್ತು ಪ್ರೌಢಶಾಲೆಗಳಿಗೆ (High Schools) ಆಗಸ್ಟ್ 3ರಂದು ರಜೆ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಸುರಕ್ಷತೆಗೆ ಮೊದಲ ಆದ್ಯತೆ&lt;/strong&gt;&lt;/h2&gt;&lt;p&gt;ನಿರಂತರ ಮಳೆ (Continuous Rain), ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹಾಗೂ ಗುಡ್ಡ ಪ್ರದೇಶಗಳಲ್ಲಿ (Hilly Areas) ಭೂಕುಸಿತದ (Landslide) ಆತಂಕ ಇರುವ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪೋಷಕರು (Parents) ಹಾಗೂ ಸಾರ್ವಜನಿಕರು ಜಿಲ್ಲಾಡಳಿತ (District Administration) ಮತ್ತು ಹವಾಮಾನ ಇಲಾಖೆ (Weather Department) ನೀಡುವ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/shivamogga-uttara-kannada-school-holiday-heavy-rain-august-3-2026/articleshow-340kxbd"/>
        </item>
        <item>
            <title><![CDATA[ಪಟ್ಟಣಕ್ಕೆ ಲಗ್ಗೆ ಇಟ್ಟ ಪ್ಲಾಸಿಕ್ ಗೊಂಬೆಗಳು; ಕೈಗೆಟುವ ದರದಲ್ಲಿ ಮಾರಾಟ, ಬೆಲೆ ಎಷ್ಟು?]]></title>
            <link>https://kannada.asianetnews.com/karnataka-districts/plastic-dolls-sold-at-low-prices-by-rajasthan-based-traders-in-mundagoda-town-mrq/articleshow-3g64suu</link>
            <guid isPermaLink="true">https://kannada.asianetnews.com/karnataka-districts/plastic-dolls-sold-at-low-prices-by-rajasthan-based-traders-in-mundagoda-town-mrq/articleshow-3g64suu</guid>
            <pubDate>Sun, 02 Aug 2026 07:45:57 +0530</pubDate>
            <description><![CDATA[&lt;p&gt;ರಾಜಸ್ಥಾನದ ಅಲೆಮಾರಿ ಕುಟುಂಬಗಳು ಬೀಡುಬಿಟ್ಟಿದ್ದು, ಕೈಗೆಟುಕುವ ದರದಲ್ಲಿ ಗಾಳಿ ತುಂಬುವ ಪ್ಲಾಸ್ಟಿಕ್ ಗೊಂಬೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಕುದುರೆ, ನವಿಲು, ಆನೆಯಂತಹ ಆಕರ್ಷಕ ಗೊಂಬೆಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ, ಮಕ್ಕಳಿಂದ ಹಿಡಿದು ಪಾಲಕರವರೆಗೂ ಎಲ್ಲರೂ ಖರೀದಿಗೆ ಮುಗಿಬೀಳುತ್ತಿದ್ದು, ವ್ಯಾಪಾರ ಜೋರಾಗಿ ನಡೆಯುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz03pk6ez3htzw3favn23cvv,imgname-gombe-1785636539598.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ:&lt;/strong&gt; ಗೊಂಬೆಗಳೆಂದರೆ ಯಾವ ಮಕ್ಕಳಿಗೆ ಇಷ್ಟವಾಗುವುದಿಲ್ಲ ಹೇಳಿ? ಯಾವುದಾದರೂ ಜಾತ್ರೆಗೆ ಹೋದರೆ ನನಗೆ ಆ ಗೊಂಬೆ ಬೇಕು ಈ ಗೊಂಬೆ ಬೇಕು ಎಂದು ಮಕ್ಕಳು ಪಾಲಕರಿಗೆ ಕಾಡುವುದು ಸಹಜ. ಈಗ ಗಾಳಿ ತುಂಬುವ ಪ್ಲಾಸಿಕ್ ಗೊಂಬೆ ಮಾರಾಟಗಾರರು ಪಟ್ಟಣಕ್ಕೆ ಲಗ್ಗೆ ಇಟ್ಟಿದ್ದು, ಎಲ್ಲೆಂದರಲ್ಲಿ ಕಾಣ ಸಿಗುತ್ತಿವೆ.&lt;/p&gt;&lt;p&gt;ಪಟ್ಟಣದ ಶಿವಾಜಿ ಸರ್ಕಲ್, ಬಸ್ ನಿಲ್ದಾಣ ಸೇರಿ ಸುತ್ತಮುತ್ತ ಎತ್ತ ನೋಡಿದರೂ ಗೊಂಬೆ ವ್ಯಾಪಾರಸ್ಥರೇ ಕಾಣುತ್ತಿದ್ದಾರೆ. ವ್ಯಾಪಾರ ಕೂಡ ಜೋರಾಗಿಯೇ ನಡೆದಿದೆ. ಕನಿಷ್ಠ ದರದಲ್ಲಿ ಕುದುರೆ, ನವಿಲು, ಕೋಳಿ, ಆನೆ, ಜೀಬ್ರಾ, ಹೀಗೆ ತರ ತರಹದ ಗಾಳಿ ತುಂಬಿದ ಗೊಂಬೆಗಳನ್ನು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಅಥವಾ ಜಾತ್ರೆಗಳಿಗೆ ಹೋದರೆ ₹100 ಕ್ಕೆ ಸಿಗುವ ಗೊಂಬೆಗಳು ಇಲ್ಲಿ ₹50ಕ್ಕೆ ಸಿಗುತ್ತಿರುವುದರಿಂದ ಗ್ರಾಹಕರು ಕೂಡ ಗೊಂಬೆ ಖರೀದಿಸುವಲ್ಲಿ ಹಿಂದೆ ಬೀಳುತ್ತಿಲ್ಲ.&lt;/p&gt;&lt;h2&gt;&lt;strong&gt;ಸುಮಾರು 15-20 ಕುಟುಂಬಗಳು&lt;/strong&gt;&lt;/h2&gt;&lt;p&gt;ರಾಜಸ್ಥಾನದಿಂದ ಅಲೆಮಾರಿ ಜನಾಂಗದ ಸುಮಾರು 15-20 ಕುಟುಂಬಗಳು 4-5 ಮಹಿಂದ್ರಾ ಪಿಕಪ್ ವಾಹನದಲ್ಲಿ ಗೊಂಬೆಗಳನ್ನು ಹೊತ್ತು ಇಲ್ಲಿಗೆ ಬಂದಿದ್ದು, ಪಟ್ಟಣದ ಶಿವಾಜಿ ಸರ್ಕಲ್, ಬಸ್ ನಿಲ್ದಾಣ, ಬಸವನ ಬೀದಿ ಸುತ್ತ ಹತ್ತಾರು ಕಡೆ ಗೊಂಬೆ ಮಾರಾಟ ಮಾಡುತ್ತಿದ್ದಾರೆ. ದಿನಕ್ಕೆ ಒಬ್ಬೊಬ್ಬರು ಕನಿಷ್ಠ 100ಕ್ಕೂ ಅಧಿಕ ಗೊಂಬೆಗಳನ್ನು ಮಾರಾಟ ಮಾಡುತ್ತಿದ್ದಾರೆ.&lt;/p&gt;&lt;p&gt;ಗೊಂಬೆ ಮಾತ್ರವಲ್ಲದೇ ಸಂಜೆಯಾಗುತ್ತಿದ್ದಂತೆ ಗಾಳಿ ತುಂಬಿದ ಬಾಲ್, ದೀಪದ ಬಲೂನ್ ಕೂಡ ಮಾರಾಟ ಮಾಡುತ್ತಾರೆ. ಇದು ನೋಡುಗರಿಗೆ ಆಕರ್ಷಣೀಯ ಹಾಗೂ ಬೆಲೆ ಕೂಡ ಕಡಿಮೆಯಾಗಿದ್ದರಿಂದ ನೋಡಿದ ತಕ್ಷಣ ಜನ ಇವುಗಳನ್ನು ಖರೀದಿಸಲು ಮುಂದಾಗುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಆಗಸ್ಟ್ 5ಕ್ಕೆ ಕಾರಂತ ಬಡಾವಣೆ ನಿವೇಶನಕ್ಕೆ ಅರ್ಜಿ; ಬೆಲೆ ಎಷ್ಟು? ಮಧ್ಯಮ ವರ್ಗಕ್ಕೆ ಸಿಗುತ್ತಾ?&lt;/strong&gt;&lt;/p&gt;&lt;p&gt;ಬೇರೆ ಯಾವುದೇ ಉದ್ಯೋಗವಿಲ್ಲದ ಕಾರಣ ಗೊಂಬೆ ವ್ಯಾಪಾರವೇ ನಮ್ಮ ಜೀವನಕ್ಕೆ ಆಧಾರವಾಗಿದೆ. ಇತರ ಭಾಗಗಳಿಗೆ ಹೋಲಿಸಿದರೆ ಪಟ್ಟಣದಲ್ಲಿ ವ್ಯಾಪಾರ ಚೆನ್ನಾಗಿದೆ. ಗೊಂಬೆಯ ವ್ಯಾಪಾರಕ್ಕೆ ಜನರಿಂದ ಸ್ಪಂದನೆ ಸಿಗುತ್ತಿದೆ. 2-3 ದಿನ ಇಲ್ಲಿ ವ್ಯಾಪಾರ ಮಾಡಿ ಬಳಿಕ ಬೇರೆಡೆಗೆ ತೆರಳುತ್ತೇವೆ ಎನ್ನುತ್ತಾರೆ ಗೊಂಬೆ ವ್ಯಾಪಾರಸ್ಥ ರಾಮಪ್ರಸಾದ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರಿಗರೇ ಗುಡ್&zwnj;ನ್ಯೂಸ್: ಸಸಿ ನೆಡಲು ಜಾಗ ಇದೆಯಾ? ಪಾಲಿಕೆಯ ಈ ನಂಬರ್&zwnj;ಗೆ ವಾಟ್ಸಪ್ ಮಾಡಿ ಸಾಕು&lt;/strong&gt;&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/plastic-dolls-sold-at-low-prices-by-rajasthan-based-traders-in-mundagoda-town-mrq/articleshow-3g64suu"/>
        </item>
        <item>
            <title><![CDATA[ಕಮಲಾಕರ್‌ ಭಟ್‌ಗೆ ಮತ್ತೆ ಬಿಗ್‌ ಶಾಕ್..‌ ವಸಂತ್‌ ನಾಯ್ಕ್-ಸುಚಿತ್ರ ಕೇಸ್‌ನಲ್ಲಿ ಬಿಗ್‌ ಅಪ್‌ಡೇಟ್ಸ್‌..!]]></title>
            <link>https://kannada.asianetnews.com/uttara-kannada/another-blow-to-astrologer-kamalakar-bhat-court-denies-bail-in-vasanth-naik-and-suchitra-case-gkn/articleshow-4g0upfx</link>
            <guid isPermaLink="true">https://kannada.asianetnews.com/uttara-kannada/another-blow-to-astrologer-kamalakar-bhat-court-denies-bail-in-vasanth-naik-and-suchitra-case-gkn/articleshow-4g0upfx</guid>
            <pubDate>Fri, 31 Jul 2026 10:24:43 +0530</pubDate>
            <description><![CDATA[&lt;p&gt;ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದ್ದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ, ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಜನ ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿಯನ್ನು ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kh44c9g8wrk9xm30ag3bvbbs,imgname-7-1770739082760.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ: &lt;/strong&gt;ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದ್ದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ, ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಜನ ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿಯನ್ನು ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಇದರೊಂದಿಗೆ, ಕಳೆದ ಆರು ತಿಂಗಳಿಂದ ಜೈಲು ಪಾಲಾಗಿರುವ ಆರೋಪಿಗಳಿಗೆ ನ್ಯಾಯಾಲಯದಿಂದ ಯಾವುದೇ ಸಮಾಧಾನ ಸಿಕ್ಕಿಲ್ಲ. ಸದ್ಯ ಕಮಲಾಕರ್ ಭಟ್ ಹಾಗೂ ಇತರೆ ಆರೋಪಿಗಳು ಕಾರವಾರದ ಜೈಲಿನಲ್ಲಿದ್ದಾರೆ.&lt;/p&gt;&lt;h2&gt;&lt;strong&gt;ಶಿರಸಿ ನ್ಯಾಯಾಲಯದ ಮಹತ್ವದ ಆದೇಶ&lt;/strong&gt;&lt;/h2&gt;&lt;p&gt;ಕಳೆದ ಫೆಬ್ರವರಿ ತಿಂಗಳಲ್ಲಿ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ವಸಂತ್ ನಾಯ್ಕ್ ಅವರ ಭೀಕರ ಹತ್ಯೆ ನಡೆದಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪೈಕಿ ಎಂಟು ಜನರನ್ನು ಪೊಲೀಸರು ಬಂಧಿಸಿದ್ದರು. ಇವರಲ್ಲಿ ಒಬ್ಬರು ತಲೆಮರೆಸಿಕೊಂಡಿದ್ದರೆ, ಮತ್ತೊಬ್ಬರಿಗೆ ಈಗಾಗಲೇ ಬೇಲ್ ಲಭ್ಯವಾಗಿದೆ. ಉಳಿದ ಏಳು ಜನ ಆರೋಪಿಗಳಾದ ಕಮಲಾಕರ್ ಭಟ್, ಸುಚಿತ್ರಾ, ಲೋಕನಾಥ್, ಮೊಹಮ್ಮದ್ ಮೆಹಫೂಜ್, ಮೊಹಮ್ಮದ್ ಫೈಸಲ್, ಇರ್ಫಾನ್ ಹಾಗೂ ಆಕಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಶಿರಸಿಯ ನ್ಯಾಯಾಲಯವು, ಎಲ್ಲರ ಅರ್ಜಿಯನ್ನು ತಿರಸ್ಕರಿಸಿದೆ.&lt;/p&gt;&lt;p&gt;&lt;img&gt;&lt;/p&gt;&lt;h2&gt;&lt;strong&gt;ಕಮಲಾಕರ್ ಭಟ್&zwnj;ಗೆ ಎರಡು ಪ್ರಕರಣಗಳ ಬಿಸಿ!&lt;/strong&gt;&lt;/h2&gt;&lt;p&gt;ಖ್ಯಾತ ಜ್ಯೋತಿಷಿ ಎಂದು ಕರೆಸಿಕೊಳ್ಳುತ್ತಿದ್ದ ಕಮಲಾಕರ್ ಭಟ್ ವಿರುದ್ಧ ಕೇವಲ ಹತ್ಯೆ ಪ್ರಕರಣ ಮಾತ್ರವಲ್ಲದೆ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ (POCSO) ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ. ಹೀಗಾಗಿ ಕಮಲಾಕರ್ ಭಟ್ ಸದ್ಯ ಎರಡು ಪ್ರಮುಖ ನ್ಯಾಯಾಲಯಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಆರೋಪಿಯು ಜಾಮೀನು ಕೋರಿ ಎರಡೂ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಶಿರಸಿ ನ್ಯಾಯಾಲಯವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯನ್ನು ಕಟ್ಟುನಿಟ್ಟಾಗಿ ವಜಾಗೊಳಿಸಿದ್ದು, ಆರೋಪಿಗಳು ಜೈಲಿನಲ್ಲೇ ಮುಂದುವರಿಯಬೇಕಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/uttara-kannada/another-blow-to-astrologer-kamalakar-bhat-court-denies-bail-in-vasanth-naik-and-suchitra-case-gkn/articleshow-4g0upfx"/>
        </item>
        <item>
            <title><![CDATA[ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತರಿಗೆ ಬಿಗ್ ಶಾಕ್: ಇನ್ಮುಂದೆ ಗಣೇಶನ ಮೂರ್ತಿ ಮುಟ್ಟಿ ಪೂಜೆ ಮಾಡುವಂತಿಲ್ಲ!]]></title>
            <link>https://kannada.asianetnews.com/karnataka-districts/gokarna-mahaganapati-temple-bans-sparsha-darshana-to-protect-ancient-idol-sat/articleshow-4pegg6c</link>
            <guid isPermaLink="true">https://kannada.asianetnews.com/karnataka-districts/gokarna-mahaganapati-temple-bans-sparsha-darshana-to-protect-ancient-idol-sat/articleshow-4pegg6c</guid>
            <pubDate>Thu, 23 Jul 2026 13:09:55 +0530</pubDate>
            <description><![CDATA[ಗೋಕರ್ಣದ ಪ್ರಸಿದ್ಧ ಮಹಾಗಣಪತಿ ದೇವಸ್ಥಾನದಲ್ಲಿ, ಪ್ರಾಚೀನ ಶಿಲಾ ಮೂರ್ತಿಯ ಸವೆತವನ್ನು ತಡೆಯಲು ಮುಜರಾಯಿ ಇಲಾಖೆಯು ಸ್ಪರ್ಶ ದರ್ಶನವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ಹೊಸ ನಿಯಮದ ಅಡಿಯಲ್ಲಿ, ಭಕ್ತರು ಇನ್ನು ಮುಂದೆ ಗಣಪತಿ ಮೂರ್ತಿಯನ್ನು ಮುಟ್ಟಿ ಪೂಜೆ ಸಲ್ಲಿಸುವಂತಿಲ್ಲ ಮತ್ತು 'ಕೊಟ್ಟೆ ಕಣಜ'ದಂತಹ ವಿಶೇಷ ಸೇವೆಗಳನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ky6yn9dptk2tyqnjsc4k7vhf,imgname-gokarna-ganesh-temple--1--1784792393142.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ (ಜು.23): ಉ&lt;/strong&gt;ತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಪುರಾಣ ಪ್ರಸಿದ್ಧ ಗೋಕರ್ಣದ ಮಹಾಗಣಪತಿ ದೇವಸ್ಥಾನಕ್ಕೆ (Gokarna Mahaganapati Temple) ಭೇಟಿ ನೀಡುವ ಭಕ್ತರಿಗೆ ಮುಜರಾಯಿ ಇಲಾಖೆಯು (Muzrai Department) ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ದೇವಸ್ಥಾನದಲ್ಲಿರುವ ಪ್ರಾಚೀನ ಶಿಲಾ ಮೂರ್ತಿ (Ancient Stone Idol) ಸವಕಳಿಯಾಗುತ್ತಿರುವ ಹಿನ್ನೆಲೆಯಲ್ಲಿ, ಇನ್ಮುಂದೆ ಗಣಪತಿ ಮೂರ್ತಿಯನ್ನು ಮುಟ್ಟಿ ಪೂಜೆ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಭಕ್ತರಿಗೆ ಗಣೇಶನ ಸ್ಪರ್ಶ ದರ್ಶನವನ್ನು (Sparsha Darshana) ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.&lt;/p&gt;&lt;h2&gt;&lt;strong&gt;ಮೂರ್ತಿಗೆ ಹಾನಿಯಾಗುತ್ತಿರುವುದೇಕೆ?&lt;/strong&gt;&lt;/h2&gt;&lt;p&gt;ಗೋಕರ್ಣದ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ (Mahabaleshwara Temple) 'ಆತ್ಮಲಿಂಗ' ದರ್ಶನ ಪಡೆಯುವ ಮುನ್ನ, ಭಕ್ತರು ಮೊದಲು ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಈ ಐತಿಹಾಸಿಕ ದ್ವಿಭುಜ ಗಣಪತಿಗೆ (Two-armed Ganesha) ಪೂಜೆ ಸಲ್ಲಿಸುವುದು ಅನಾದಿ ಕಾಲದ ವಾಡಿಕೆ. ಆದರೆ, ಪ್ರತಿನಿತ್ಯ ಸಾವಿರಾರು ಭಕ್ತರು ಮೂರ್ತಿಯನ್ನು ಸ್ಪರ್ಶಿಸಿ ಪೂಜೆ ಮಾಡುತ್ತಿದ್ದರಿಂದ, ಗಣಪತಿಯ ಶಿಲಾ ಮೂರ್ತಿಯ ಕೈ, ಭುಜ ಹಾಗೂ ಎದೆ ಭಾಗವು (Chest and Shoulder parts) ತೀವ್ರವಾಗಿ ಸವಕಳಿಯಾಗುತ್ತಿದೆ (Erosion).&lt;/p&gt;&lt;h2&gt;&lt;strong&gt;ದತ್ತಿ ಇಲಾಖೆಯ ಕಟ್ಟುನಿಟ್ಟಿನ ಕ್ರಮ:&lt;/strong&gt;&lt;/h2&gt;&lt;p&gt;ಈ ಪುರಾತನ ಮೂರ್ತಿಯ ಸಂರಕ್ಷಣೆ (Idol Protection) ಅತ್ಯಗತ್ಯವಾಗಿರುವುದರಿಂದ, ನಿನ್ನೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ (Assistant Commissioner) ಸುಧಾ ತಳವಾರ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಕಠಿಣ ನಿರ್ಣಯ ಕೈಗೊಳ್ಳಲಾಗಿದೆ. ಈ ಹೊಸ ನಿಯಮದ ಪ್ರಕಾರ, ಭಕ್ತರಿಗೆ ಸ್ಪರ್ಶ ದರ್ಶನ ಹಾಗೂ ಮೂರ್ತಿಯನ್ನು ಮುಟ್ಟಿ ಮಾಡುವ ವಿಶೇಷ ಪೂಜಾ ಸೇವೆಗಳನ್ನು (Pooja Sevas) ತಕ್ಷಣದಿಂದಲೇ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ.&lt;/p&gt;&lt;h2&gt;&lt;strong&gt;ವಿಶೇಷ ಸೇವೆಗಳೂ ಸ್ಥಗಿತ :&lt;/strong&gt;&lt;/h2&gt;&lt;p&gt;ಕೇವಲ ಸಾಮಾನ್ಯ ದಿನಗಳಲ್ಲಷ್ಟೇ ಅಲ್ಲದೆ, ಮುಂಬರುವ ಸಂಕಷ್ಟಿ (Sankashti) ಹಾಗೂ ಗಣೇಶ ಚತುರ್ಥಿ (Ganesh Chaturthi) ಹಬ್ಬದ ಸಂದರ್ಭದಲ್ಲೂ ಇದೇ ಕಟ್ಟುನಿಟ್ಟಿನ ನಿಯಮ ಮುಂದುವರಿಯಲಿದೆ. ಭಕ್ತರು ದೂರದಿಂದಲೇ ದೇವರ ದರ್ಶನ ಪಡೆಯಬೇಕು. ಇದಲ್ಲದೇ, ಮಹಾಗಣಪತಿಗೆ ಅತ್ಯಂತ ವಿಶೇಷವಾಗಿ ನಡೆಯುತ್ತಿದ್ದ ಪ್ರಸಿದ್ಧ 'ಕೊಟ್ಟೆ ಕಣಜ' (Kotte Kanaja) ಹಾಗೂ 'ಸಕ್ಕರೆ ಕಣಜ' (Sakkare Kanaja) ಸೇವೆಗಳನ್ನು ಸಹ ಮೂರ್ತಿಯ ರಕ್ಷಣೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ (Suspended) ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/gokarna-mahaganapati-temple-bans-sparsha-darshana-to-protect-ancient-idol-sat/articleshow-4pegg6c"/>
        </item>
        <item>
            <title><![CDATA[Bhatkal: ಆನಂದ ಆಶ್ರಮ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ Business Day 2026 ಸಂಭ್ರಮ]]></title>
            <link>https://kannada.asianetnews.com/uttara-kannada/bhatkal-anand-ashram-pu-college-organises-business-day-2026-san/articleshow-9zd09p2</link>
            <guid isPermaLink="true">https://kannada.asianetnews.com/uttara-kannada/bhatkal-anand-ashram-pu-college-organises-business-day-2026-san/articleshow-9zd09p2</guid>
            <pubDate>Wed, 22 Jul 2026 21:51:02 +0530</pubDate>
            <description><![CDATA[&lt;p&gt;ಭಟ್ಕಳದ ಆನಂದ ಆಶ್ರಮ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಉದ್ಯಮಶೀಲತೆ ಮತ್ತು ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು 'ಬಿಸಿನೆಸ್ ಡೇ 2026' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky5a0n832ttrrvc636d97tbz,imgname-anand-ashram-pu-college-to-host--business-day-2026-bhatkal-1784737191171.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಟ್ಕಳ, ಉತ್ತರ ಕನ್ನಡ(ಜು.22): &lt;/strong&gt;ಇಲ್ಲಿನ ಪ್ರಸಿದ್ಧ ಆನಂದ ಆಶ್ರಮ ಸಂಯೋಜಿತ ಪದವಿ ಪೂರ್ವ ಕಾಲೇಜಿನ (Anand Ashram PU College) ವತಿಯಿಂದ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಜುಲೈ 23ರ ಗುರುವಾರದಂದು 'ಬಿಸಿನೆಸ್ ಡೇ 2026' (Business Day 2026) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. &quot;ಯೋಚಿಸಿ, ಯೋಜಿಸಿ, ಕಾರ್ಯರೂಪಕ್ಕಿಳಿಸಿ, ಯಶಸ್ವಿಯಾಗಿ&quot; (Think. Plan. Act. Succeed.) ಎಂಬ ಧೈಯವಾಕ್ಯದೊಂದಿಗೆ ಆಯೋಜಿಸಲಾಗಿರುವ ಈ ಸಮ್ಮೇಳನವು ಕಾಲೇಜಿನ ಹೈಸ್ಕೂಲ್ ಸಭಾಂಗಣದಲ್ಲಿ ಬೆಳಿಗ್ಗೆ 9:30ಕ್ಕೆ ಚಾಲನೆಗೊಳ್ಳಲಿದೆ.&lt;/p&gt;&lt;h2&gt;&lt;strong&gt;ವಿದ್ಯಾರ್ಥಿಗಳಿಂದ ಬಿಸಿನೆಸ್ ಸ್ಟಾಲ್&zwnj;ಗಳ ಪ್ರದರ್ಶನ&lt;/strong&gt;&lt;/h2&gt;&lt;p&gt;ಯುವ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲ ವ್ಯವಹಾರಿಕ ಕಲ್ಪನೆಗಳನ್ನು ಪ್ರದರ್ಶಿಸಲು ಸ್ಟಾಲ್&zwnj;ಗಳನ್ನು ಆಯೋಜಿಸಲಿದ್ದಾರೆ. &quot;ಇಂದಿನ ನಾವೀನ್ಯತೆ, ನಾಳೆಯ ಪ್ರೇರಣೆ&quot; ಎಂಬ ಉದ್ದೇಶದೊಂದಿಗೆ ನಡೆಯುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಉದ್ಯಮಶೀಲತೆಯ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಬೆಳೆಸಿಕೊಳ್ಳಲು ಉತ್ತಮ ವೇದಿಕೆಯಾಗಲಿದೆ.&lt;/p&gt;&lt;p&gt;ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಉದ್ಘಾಟನಾ ಭಾಷಣವನ್ನು ಆನಂದ ಆಶ್ರಮ ಸಂಸ್ಥೆಯ ಮ್ಯಾನೇಜರ್ ಆದ ಸಿಸ್ಟರ್ ಲೂಸಿ ಡಿಸೋಜಾ (Sr Lucy Dsouza) ನೆರವೇರಿಸಲಿದ್ದಾರೆ. ಆನಂದ ಆಶ್ರಮ ಸಂಸ್ಥೆಯ ಕ್ಯಾಂಪಸ್ ಇನ್&zwnj;ಚಾರ್ಜ್ ಹಾಗೂ ಅನಿಮೇಟರ್ ಆದ ಸಿಸ್ಟರ್ ಅನಿತಾ ಪಿಂಟೋ (Sr Anitha Pinto) ಅವರು ಪ್ರಾರ್ಥನೆ ಮತ್ತು ಆಶೀರ್ವಚನ ನೀಡಲಿದ್ದಾರೆ. ಕಲಿಕೆ, ನಾಯಕತ್ವ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಈ ವಿಶೇಷ ಆಚರಣೆಯಲ್ಲಿ ಭಾಗವಹಿಸುವಂತೆ ಕಾಲೇಜು ಆಡಳಿತ ಮಂಡಳಿಯು ಸರ್ವರನ್ನೂ ಆತ್ಮೀಯವಾಗಿ ಆಹ್ವಾನಿಸಿದೆ.&lt;/p&gt;&lt;p&gt;&lt;/p&gt;&lt;p&gt;&lt;/p&gt;]]></content:encoded>
            <category>uttara-kannada</category>
            <dc:creator>Santosh Naik</dc:creator>
            <atom:link href="https://kannada.asianetnews.com/uttara-kannada/bhatkal-anand-ashram-pu-college-organises-business-day-2026-san/articleshow-9zd09p2"/>
        </item>
        <item>
            <title><![CDATA[ಕೊಂಕಣ ರೈಲ್ವೆಯಲ್ಲಿ ಕಳ್ಳರ ಕಾಟ: ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರ ಜೀವಕ್ಕೆ ಆಪತ್ತು!]]></title>
            <link>https://kannada.asianetnews.com/karnataka-districts/security-crisis-on-konkan-railway-robberies-in-matsyagandha-and-mangaluru-express-passengers-demand-rpf-action-gdp/articleshow-dei67wc</link>
            <guid isPermaLink="true">https://kannada.asianetnews.com/karnataka-districts/security-crisis-on-konkan-railway-robberies-in-matsyagandha-and-mangaluru-express-passengers-demand-rpf-action-gdp/articleshow-dei67wc</guid>
            <pubDate>Thu, 23 Jul 2026 10:14:37 +0530</pubDate>
            <description><![CDATA[&lt;p&gt;ಮಂಗಳೂರಿನಿಂದ ಗೋವಾ, ಮಹಾರಾಷ್ಟ್ರವನ್ನು ಸಂಪರ್ಕಿಸುವ ಕೊಂಕಣ ರೈಲು ಮಾರ್ಗದಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ಪ್ರಯಾಣಿಕರ ಸುರಕ್ಷತೆ ಸಂಪೂರ್ಣವಾಗಿ ಹದಗೆಟ್ಟಿದೆ. ಮತ್ಸ್ಯಗಂಧ ಮತ್ತು ಮಂಗಳೂರು ಎಕ್ಸ್&zwnj;ಪ್ರೆಸ್&zwnj;ಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದ್ದು, ಟಿಟಿಇ ಮೇಲೆಯೂ ಹಲ್ಲೆ ನಡೆದಿದೆ. ಇದರಿಂದ ಆತಂಕಗೊಂಡ ಪ್ರಯಾಣಿಕರು ಸಿಸಿಟಿವಿ ಅಳವಡಿಕೆ ಮತ್ತು ಗಸ್ತು ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky6mbhwbbbz3kkh9dv4grwkc,imgname-konkan-railway--1--1784781588363.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೂಲ್ಕಿ: &lt;/strong&gt;ಮಂಗಳೂರಿನಿಂದ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಕೊಂಕಣ ರೈಲು ಮಾರ್ಗದಲ್ಲಿ ಈಗ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಯಾಣಿಕರ ನೆಮ್ಮದಿ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಮಾರ್ಗದಲ್ಲಿ ಚಲಿಸುವ ಪ್ರಮುಖ ರೈಲುಗಳಾದ ಮತ್ಸ್ಯಗಂಧ ಎಕ್ಸ್&zwnj;ಪ್ರೆಸ್ (12619/12620) ಮತ್ತು ಮಂಗಳೂರು ಎಕ್ಸ್&zwnj;ಪ್ರೆಸ್ (12133/12134) ರೈಲುಗಳಲ್ಲಿ ಕುಟುಂಬ ಸಮೇತ ನೆಮ್ಮದಿಯಿಂದ ಪ್ರಯಾಣಿಸುವುದು ಈಗ ಗಗನಕುಸುಮವಾಗಿದೆ. ಒಮ್ಮೆ ರೈಲು ಹತ್ತಿದರೆ ಸಾಕು, ಸುರಕ್ಷಿತವಾಗಿ ತಲುಪಬೇಕಾದ ಸ್ಥಳ ತಲುಪುತ್ತೇವೆಯೋ ಇಲ್ಲವೋ ಎಂಬ ಆತಂಕ ಸಾರ್ವಜನಿಕರನ್ನು ಕಾಡತೊಡಗಿದೆ.&lt;/p&gt;&lt;p&gt;ಕಳೆದ ಕೇವಲ ಎರಡು ತಿಂಗಳ ಅವಧಿಯಲ್ಲಿ ಈ ರೈಲುಗಳಲ್ಲಿ ಸಾಲು ಸಾಲು ಕಳವು ಘಟನೆಗಳು ಸಂಭವಿಸಿದ್ದು, ಕಷ್ಟಪಟ್ಟು ದುಡಿದ ಹಣದಲ್ಲಿ ಮಾಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡು ಹಲವಾರು ಮಹಿಳಾ ಪ್ರಯಾಣಿಕರು ಕಣ್ಣೀರು ಹಾಕುವಂತಾಗಿದೆ.&lt;/p&gt;&lt;h2&gt;ಸರಣಿ ಅಪರಾಧ ಘಟನೆಗಳು&lt;/h2&gt;&lt;p&gt;30 ಲಕ್ಷದ ಚಿನ್ನಾಭರಣ ಕಳವು! ಇತ್ತೀಚೆಗೆ ನಡೆದ ಪ್ರಮುಖ ಪ್ರಕರಣವೊಂದರಲ್ಲಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಲಲಿತಾ ಸಾಲ್ಯಾನ್ ಎಂಬ ಮಹಿಳೆಯ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದಾರೆ. ಈ ಘಟನೆ ನಡೆದು 50 ದಿನಗಳು ಕಳೆದಿದ್ದರೂ, ಇದುವರೆಗೆ ಕಳ್ಳರ ಸಣ್ಣ ಸುಳಿವನ್ನು ಹಿಡಿಯಲು ಸಹ ರೈಲ್ವೆ ಪೊಲೀಸ್ ಇಲಾಖೆಗೆ ಸಾಧ್ಯವಾಗಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;p&gt;ತಡೆಯಲು ಹೋದ ಟಿಟಿಇ ಮೇಲೆಯೇ ಚಾಕು ದಾಳಿ! ರೈಲುಗಳಲ್ಲಿ ಕಳ್ಳರ ಜಾಲ ಎಷ್ಟು ವ್ಯವಸ್ಥಿತವಾಗಿ ಮತ್ತು ಹುಂಬತನದಿಂದ ಕಾರ್ಯನಿರ್ವಹಿಸುತ್ತಿದೆ ಎಂದರೆ, ಅವರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಜುಲೈ 15ರಂದು ನಡೆದ ಮತ್ತೊಂದು ಭೀಕರ ಪ್ರಕರಣದಲ್ಲಿ, ರೈಲಿನಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಕಳ್ಳನೊಬ್ಬನನ್ನು ಹಿಡಿಯಲು ಹೋದ ಟಿಟಿಇ (TTE) ಹಾಗೂ ಮಂಜುನಾಥ್ ಪೂಜಾರಿ ಎಂಬ ಪ್ರಯಾಣಿಕರ ಮೇಲೆಯೇ ದುಷ್ಕರ್ಮಿಗಳು ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯು ರೈಲಿನಲ್ಲಿ ಪ್ರಯಾಣಿಕರ ಜೀವಕ್ಕೆ ಯಾವುದೇ ರಕ್ಷಣೆ ಇಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ.&lt;/p&gt;&lt;p&gt;ನಾಗರಿಕರ ತೀವ್ರ ಆಕ್ರೋಶ ಮತ್ತು ಪ್ರಶ್ನೆಗಳು ಪ್ರಸ್ತುತ ರೈಲುಗಳಲ್ಲಿ ಬ್ಯಾಗ್ ಹಾಗೂ ಒಡವೆಗಳು ಕಳುವಾಗುತ್ತಿವೆ. ಆದರೆ, ರೈಲ್ವೆ ಅಧಿಕಾರಿಗಳ ಈ ನಿರಂತರ ನಿರ್ಲಕ್ಷ್ಯ ಹೀಗೆಯೇ ಮುಂದುವರಿದರೆ, ಮುಂದಿನ ದಿನಗಳಲ್ಲಿ ಕುಟುಂಬದ ಹೆಣ್ಣುಮಕ್ಕಳು ಅಥವಾ ವಯಸ್ಸಾದ ಪೋಷಕರ ಜೀವಕ್ಕೆ ಅಪಾಯ ಎದುರಾದರೆ ಅದಕ್ಕೆ ಯಾರು ಹೊಣೆ? ಇನ್ನೂ ಎಷ್ಟು ಜೀವಗಳು ಅಪಾಯಕ್ಕೆ ಸಿಲುಕಿದ ನಂತರ ಇಲಾಖೆ ಎಚ್ಚೆತ್ತುಕೊಳ್ಳುತ್ತದೆ? ಎಂದು ಸಾರ್ವಜನಿಕರು ತೀವ್ರವಾಗಿ ಪ್ರಶ್ನಿಸುತ್ತಿದ್ದಾರೆ.&lt;/p&gt;&lt;p&gt;&lt;strong&gt;ಪ್ರಯಾಣಿಕರ ಪ್ರಮುಖ ಬೇಡಿಕೆಗಳು:&lt;/strong&gt; ರೈಲ್ವೆ ಇಲಾಖೆಯು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಿರುವ ಪ್ರಯಾಣಿಕರು ಮತ್ತು ನಾಗರಿಕರು ಕೆಲವು ಪ್ರಮುಖ ರಕ್ಷಣಾತ್ಮಕ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:&lt;/p&gt;&lt;p&gt;&lt;strong&gt;ಕಡ್ಡಾಯ ಸಿಸಿಟಿವಿ ಅಳವಡಿಕೆ: &lt;/strong&gt;ಪ್ರತಿಯೊಂದು ರೈಲು ಬೋಗಿಯಲ್ಲೂ (Coaches) ಕಡ್ಡಾಯವಾಗಿ ಹೈ-ಡೆಫಿನಿಷನ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.&lt;/p&gt;&lt;p&gt;&lt;strong&gt;ಆರ್&zwnj;ಪಿಎಫ್ ಗಸ್ತು ಹೆಚ್ಚಳ&lt;/strong&gt;: ವಿಶೇಷವಾಗಿ ರಾತ್ರಿ ವೇಳೆಯಲ್ಲಿ ರೈಲುಗಳಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಯ ಗಸ್ತು (Patrolling) ವ್ಯವಸ್ಥೆಯನ್ನು ತೀವ್ರಗೊಳಿಸಬೇಕು.&lt;/p&gt;&lt;p&gt;&lt;strong&gt;ಕಠಿಣ ಶಿಕ್ಷೆ ಮತ್ತು ವಸೂಲಾತಿ: &lt;/strong&gt;ಕಳವು ಮತ್ತು ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಕಳುವಾದ ಒಡವೆ-ವಸ್ತುಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸಬೇಕು.&lt;/p&gt;&lt;p&gt;ಸುರಕ್ಷಿತ ಪ್ರಯಾಣವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಆದ್ದರಿಂದ, ಇದುವರೆಗೆ ಕುಂಭಕರ್ಣ ನಿದ್ದೆಯಲ್ಲಿರುವ ರೈಲ್ವೆ ಆಡಳಿತ ಮಂಡಳಿಯು ತಕ್ಷಣವೇ ಎಚ್ಚೆತ್ತುಕೊಂಡು, ಪ್ರಯಾಣಿಕರ ಜೀವ ಮತ್ತು ಜೀವಾಳದ ಭದ್ರತೆಗೆ ಮೊದಲ ಆದ್ಯತೆ ನೀಡಬೇಕೆಂದು ಕರಾವಳಿಯ ನಾಗರಿಕರು ಜಂಟಿಯಾಗಿ ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/security-crisis-on-konkan-railway-robberies-in-matsyagandha-and-mangaluru-express-passengers-demand-rpf-action-gdp/articleshow-dei67wc"/>
        </item>
        <item>
            <title><![CDATA[ಕಳ್ಳತನವನ್ನೂ ಮಾಡಿದ್ರು, ಟೀ ಮಾಡ್ಕೊಂಡು ಕುಡಿದು ಹೋದ್ರು: ಶಿರಸಿಯಲ್ಲಿ ಕೈಚಳಕ ತೋರಿಸಿದ ಕೂಲ್ ಕಳ್ಳರು]]></title>
            <link>https://kannada.asianetnews.com/gallery/crime/theft-and-tea-break-cool-thieves-steal-and-drink-tea-in-sirsi-suh-gfghhng</link>
            <guid isPermaLink="true">https://kannada.asianetnews.com/gallery/crime/theft-and-tea-break-cool-thieves-steal-and-drink-tea-in-sirsi-suh-gfghhng</guid>
            <pubDate>Thu, 30 Jul 2026 14:41:27 +0530</pubDate>
            <description><![CDATA[&lt;p&gt;Theft and tea break cool thieves steal and drink tea in Sirsi ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಡೆದಿರುವ ಕಳ್ಳತನ ಪ್ರಕರಣವೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kys41jx4g2yf8rqzmnyaz5mq,imgname-theft-and-tea-break-cool-thieves-steal-and-drink-tea-in-sirsi-1785402018724.jpg" type="image/jpeg" height="390" width="690"/>
            <content:encoded><![CDATA[&lt;p&gt;Theft and tea break cool thieves steal and drink tea in Sirsi ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಡೆದಿರುವ ಕಳ್ಳತನ ಪ್ರಕರಣವೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.&lt;/p&gt;&lt;img&gt;&lt;p&gt;ಸಾಮಾನ್ಯವಾಗಿ ಕಳ್ಳರು ಮನೆಗೆ ನುಗ್ಗಿ ಚಿನ್ನ, ಹಣ ದೋಚಿಕೊಂಡು ಸದ್ದಿಲ್ಲದೆ ಪರಾರಿಯಾಗುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಡೆದಿರುವ ಕಳ್ಳತನ ಪ್ರಕರಣವೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳ್ಳತನಕ್ಕೆ ಬಂದ ಖದೀಮರು ಚಿನ್ನ, ಹಣ ದೋಚಿದ ಬಳಿಕ ಮನೆಯಲ್ಲಿ ಗ್ಯಾಸ್ ಆನ್ ಮಾಡಿ, ಸ್ವತಃ ಟೀ ಮಾಡಿಕೊಂಡು ಕುಡಿದು ಬಳಿಕ ಆರಾಮವಾಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ!&lt;/p&gt;&lt;img&gt;&lt;p&gt;ಮುಂಡಗೋಡ ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ ಎನ್ನಲಾಗಿದ್ದು, ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರು ಮನೆಗಳನ್ನು ಕಳ್ಳರು ಗುರಿಯಾಗಿಸಿಕೊಂಡಿದ್ದಾರೆ. ಪಟ್ಟಣದ ಹಳೂರು ಮಾರಿಕಾಂಬಾ ನಗರದಲ್ಲಿ ರಾತ್ರಿ ವೇಳೆ ಸತತವಾಗಿ ಎರಡು ಮನೆಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದ್ದು, ಈ ಪೈಕಿ ಒಂದು ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.&lt;/p&gt;&lt;img&gt;&lt;p&gt;ಮಾರಿಕಾಂಬಾ ನಗರದ ನಿವಾಸಿ ಬಾಷಾ ಮರಗಡಿ ಅವರ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯಲ್ಲಿದ್ದ ಸುಮಾರು 2.5 ಗ್ರಾಂ ಚಿನ್ನ ಹಾಗೂ ₹3,000 ನಗದನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಇಷ್ಟಕ್ಕೇ ಸುಮ್ಮನಾಗದ ಖದೀಮರು, ಮನೆಯಲ್ಲಿದ್ದ ಹುಂಡಿಯನ್ನೂ ಒಡೆದು ಅದರಲ್ಲಿದ್ದ ಹಣವನ್ನೂ ದೋಚಿದ್ದಾರೆ. ಇದೇ ವೇಳೆ ಶಂಕರ ಕುರುಬರ ಎಂಬುವವರ ಅಂಗಡಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕೂಡ ವರದಿಯಾಗಿದೆ.&lt;/p&gt;&lt;img&gt;&lt;p&gt;ಈ ಕಳ್ಳತನ ಪ್ರಕರಣದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ವಿಚಾರವೆಂದರೆ ಕಳ್ಳರ ವಿಚಿತ್ರ ವರ್ತನೆ. ಕಳ್ಳತನ ಮಾಡಿದ ಮನೆಯೊಂದರಲ್ಲಿ ಖದೀಮರು ಸ್ವತಃ ಟೀ ಮಾಡಿಕೊಂಡು ಕುಡಿದಿದ್ದಾರೆ ಎನ್ನಲಾಗಿದೆ. ಅಂದರೆ, ಚಿನ್ನ, ಹಣ ದೋಚಿದ ಬಳಿಕ ಅವಸರದಲ್ಲಿ ಓಡಿಹೋಗುವ ಬದಲು ಮನೆಯಲ್ಲೇ ಟೀ ಮಾಡಿಕೊಂಡು ಕುಡಿದು, ಬಳಿಕ ಆರಾಮವಾಗಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.&lt;/p&gt;&lt;img&gt;&lt;p&gt;ಪಟ್ಟಣದಲ್ಲಿ ಸರಣಿ ಕಳ್ಳತನದ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಸುಳಿವು ಪತ್ತೆಹಚ್ಚಲು ಶ್ವಾನದಳದ ಮೂಲಕವೂ ಶೋಧ ಕಾರ್ಯ ನಡೆಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಕಳ್ಳತನದ ಘಟನೆಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಜನರು ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Sushma Hegde</dc:creator>
            <atom:link href="https://kannada.asianetnews.com/gallery/crime/theft-and-tea-break-cool-thieves-steal-and-drink-tea-in-sirsi-suh-gfghhng"/>
        </item>
        <item>
            <title><![CDATA[School Holiday: ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡ ಹಾಗೂ ಜೊಯಿಡಾದಲ್ಲಿ ಶಾಲಾ-ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ!]]></title>
            <link>https://kannada.asianetnews.com/karnataka-districts/heavy-rain-school-college-holiday-declared-in-dakshina-kannada-and-joida-uttara-kannada-sat/articleshow-gic9ah9</link>
            <guid isPermaLink="true">https://kannada.asianetnews.com/karnataka-districts/heavy-rain-school-college-holiday-declared-in-dakshina-kannada-and-joida-uttara-kannada-sat/articleshow-gic9ah9</guid>
            <pubDate>Thu, 23 Jul 2026 08:45:50 +0530</pubDate>
            <description><![CDATA[&lt;p&gt;ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉತ್ತರ ಕನ್ನಡದ ಜೊಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwwzr70s73d09r1aphzdjvb6,imgname-----------------------2026-07-07t055621.952-1783384251417.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ/ ದಕ್ಷಿಣ ಕನ್ನಡ (ಜು.23): ರಾ&lt;/strong&gt;ಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವರುಣನ ಅಬ್ಬರ (Heavy Rain) ಮುಂದುವರೆದಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ (Dakshina Kannada District) ಹಾಗೂ ಉತ್ತರ ಕನ್ನಡದ ಜೊಯಿಡಾ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (School and College Holiday) ಇಂದು (ಜು.23ರ ಗುರುವಾರ) ಘೋಷಿಸಿ ಆಯಾ ಜಿಲ್ಲಾ ಹಾಗೂ ತಾಲೂಕು ಆಡಳಿತಗಳು ಅಧಿಕೃತ ಆದೇಶ ಹೊರಡಿಸಿವೆ.&lt;/p&gt;&lt;h2&gt;&lt;strong&gt;ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಜೆ (Dakshina Kannada Holiday):&lt;/strong&gt;&lt;/h2&gt;&lt;p&gt;ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ (Meteorological Department) ಎಚ್ಚರಿಕೆ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi), ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (PUC Colleges) ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (Deputy Commissioner) ದರ್ಶನ್ ಎಚ್.ವಿ. (Darshan H.V.) ಅವರು ಅಧಿಕೃತ ಆದೇಶ (Official Order) ಹೊರಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಉತ್ತರ ಕನ್ನಡದ ಜೊಯಿಡಾದಲ್ಲಿ ಶಾಲೆಗಳಿಗೆ ರಜೆ (Joida Taluk Holiday):&lt;/strong&gt;&lt;/h2&gt;&lt;p&gt;ಇತ್ತ ಮಲೆನಾಡು ಹಾಗೂ ಕರಾವಳಿ ಬೆಸೆದಿರುವ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಕಾಳಿ ನದಿ ತೀರದ ಜೊಯಿಡಾ ತಾಲೂಕಿನಲ್ಲಿ (Joida Taluk) ನಿರಂತರ ಮಳೆಯಾಗುತ್ತಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಇರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ (Primary Schools) ಹಾಗೂ ಪ್ರೌಢಶಾಲೆಗಳಿಗೆ (High Schools) ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜೊಯಿಡಾ ತಹಶೀಲ್ದಾರ್ (Tahsildar) ಮಂಜುನಾಥ ಮುನ್ನೊಳಿ ಅವರು ಈ ಆದೇಶವನ್ನು ಪ್ರಕಟಿಸಿದ್ದಾರೆ.&lt;/p&gt;&lt;p&gt;&lt;strong&gt;ಜಿಲ್ಲಾಡಳಿತಗಳ ಕಟ್ಟುನಿಟ್ಟಿನ ಸೂಚನೆ (Safety Guidelines):&lt;/strong&gt;&lt;/p&gt;&lt;p&gt;ಮಳೆಯಿಂದಾಗಿ ನದಿ, ತೊರೆಗಳು ಉಕ್ಕಿ ಹರಿಯುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ನೀರಿನ ಹತ್ತಿರ, ಕೆರೆ-ಕುಂಟೆಗಳ ಬಳಿ ಆಟವಾಡಲು ಬಿಡದಂತೆ ಎಚ್ಚರಿಕೆ ವಹಿಸಬೇಕು. ಮಳೆಗಾಲದ (Monsoon Season) ಸಂದರ್ಭದಲ್ಲಿ ಅಪಾಯಕಾರಿ ಸ್ಥಳಗಳಿಗೆ, ಪ್ರವಾಸಿ ತಾಣಗಳಿಗೆ ತೆರಳದಂತೆ ಜಿಲ್ಲಾಡಳಿತಗಳು (District Administration) ಸಾರ್ವಜನಿಕರಲ್ಲಿ ಮನವಿ ಮಾಡಿವೆ. ಅಲ್ಲದೆ, ಮಳೆಯಿಂದಾಗಿ ನಷ್ಟವಾದ ಶೈಕ್ಷಣಿಕ ಅವಧಿಯನ್ನು ಮುಂದಿನ ರಜಾ ದಿನಗಳಲ್ಲಿ ಹೆಚ್ಚುವರಿ ತರಗತಿಗಳನ್ನು (Extra Classes) ನಡೆಸುವ ಮೂಲಕ ಸರಿದೂಗಿಸುವಂತೆ ಶಿಕ್ಷಣ ಇಲಾಖೆ (Education Department) ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/heavy-rain-school-college-holiday-declared-in-dakshina-kannada-and-joida-uttara-kannada-sat/articleshow-gic9ah9"/>
        </item>
        <item>
            <title><![CDATA[ಯಕ್ಷರಂಗದ ನಗುವಿನ ಚಕ್ರವರ್ತಿ ಶ್ರೀಧರ ಭಟ್ ಕಾಸರಕೋಡ್ ನಿಧನ; ಅಭಿಮಾನಿಗಳು ಕಣ್ಣೀರು]]></title>
            <link>https://kannada.asianetnews.com/karnataka-districts/uttara-kananda-yakshagana-artist-comedy-emperor-shridhar-bhat-kasaragod-passes-away-today-mrq/articleshow-kd35niy</link>
            <guid isPermaLink="true">https://kannada.asianetnews.com/karnataka-districts/uttara-kananda-yakshagana-artist-comedy-emperor-shridhar-bhat-kasaragod-passes-away-today-mrq/articleshow-kd35niy</guid>
            <pubDate>Fri, 31 Jul 2026 18:10:10 +0530</pubDate>
            <description><![CDATA[ಯಕ್ಷಗಾನದ ಹಾಸ್ಯ ಚಕ್ರವರ್ತಿ ಎಂದು ಖ್ಯಾತರಾಗಿದ್ದ ಶ್ರೀಧರ ಭಟ್ ಕಾಸರಕೋಡ್ (52) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂರುವರೆ ದಶಕಗಳ ಕಾಲ ಯಕ್ಷರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು, ಗುಂಡಬಾಳ, ಮಂದಾರ್ತಿ, ಸಾಲಿಗ್ರಾಮ, ಜಲವಳ್ಳಿ ಮೇಳಗಳಲ್ಲಿ ಹಾಸ್ಯಕಲಾವಿದರಾಗಿ ಜನಪ್ರಿಯರಾಗಿದ್ದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kyw2qmes7cjbc0w0ej8d42vr,imgname-sridhar-bhat-kasaragod-1785501307353.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಾರವಾರ:ಯಕ್ಷರಂಗದ ಅಪ್ರತಿಮ ಹಾಸ್ಯ ಚಕ್ರವರ್ತಿ ಎಂದು ಜನಮನ್ನಣೆ ಪಡೆದಿದ್ದ ಯಕ್ಷಗಾನ ಕಲಾವಿದ ಶ್ರೀಧರ ಭಟ್ ಕಾಸರಕೋಡ್ (52) ಅವರು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಧರ್ ಭಟ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಹೋಗುವಾಗ ಮಾರ್ಗ ಮದ್ಯೆ&zwnj; ನಿಧನ ಹೊಂದಿದ್ದಾರೆ.&lt;/p&gt;&lt;h2&gt;&lt;strong&gt;ಯಕ್ಷರಂಗದಲ್ಲಿ ಮೂರುವರೆ ದಶಕ&lt;/strong&gt;&lt;/h2&gt;&lt;p&gt;ಶ್ರೀಧರ ಭಟ್ ಕಾಸರಕೋಡ್ ಅವರು ಸಹಜ ಹಾಸ್ಯ, ತಾಳ್ಮೆ, ಸಮಯಪ್ರಜ್ಞೆ ಹೊಂದಿದ್ದ ಇವರು, ಪ್ರೇಕ್ಷಕರೊಂದಿಗೆ ಒಡನಾಟ ಹೊಂದಿರುವ ಕಲಾವಿದರಾಗಿದ್ದರು. ಶ್ರೀಧರ್ ಭಟ್ ಅವರು ಜೋಕುಮಾರ ಸ್ವಾಮಿ, ಅಜ್ಜಿಯ ಪಾತ್ರ, ಸೂತ್ರಧಾರಿ ಸೇರಿದಂತೆ ಅನೇಕ ಪಾತ್ರಗಳಿಂದ ಮೂರುವರೆ ದಶಕಗಳ ಕಾಲ ಯಕ್ಷಗಾನ ಪ್ರಿಯರನ್ನು ರಂಜಿಸಿದ್ದಾರೆ.&lt;/p&gt;&lt;p&gt;ಶ್ರೀಧರ ಭಟ್ ಅವರು ಗುಂಡಬಾಳ, ಮಂದಾರ್ತಿ, ಸಾಲಿಗ್ರಾಮ, ಜಲವಳ್ಳಿ ಮೇಳದಲ್ಲಿ ಹಾಸ್ಯಕಲಾವಿದರಾಗಿದ್ದರು. ಇನ್ನಿತರ ಹವ್ಯಾಸಿ ಮೇಳಗಳಲ್ಲಿ ಅತಿಥಿ ಕಲಾವಿದರಾಗಿ ವೇಷ ಧರಿಸಿ ಉತ್ತಮ ಕಲಾವಿದರೆನಿಸಿಕೊಂಡಿದ್ದರು. ಮೂಲತಃ ಕಾಸರಕೋಡಿನವರಾಗಿ, ಪ್ರಸುತ್ತ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿಯಲ್ಲಿ ವಾಸವಾಗಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಕ್ಷಗಾನ ಕಲಾವಿದರ ಬಗ್ಗೆ ನಾಲಿಗೆ ಹರಿಬಿಟ್ಟ ಮಹೇಶ್ ಶೆಟ್ಟಿ ತಿಮರೋಡಿ; ಆಡಿಯೋ ಆಧರಿಸಿ ಮಹಿಳಾ ಠಾಣೆಯಲ್ಲಿ ಎಫ್&zwnj;ಐಆರ್!&lt;/strong&gt;&lt;/p&gt;&lt;p&gt;ಮೃತರು ಪತ್ನಿ ,ಇರ್ವರು ಪುತ್ರರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರಿಗೆ ಯಕ್ಷಗಾನ ಕಲಾವಿದರಾದ ವಿದ್ಯಾದರ ಜಲವಳ್ಳಿ, ಶಿವಾನಂದ ಹೆಗಡೆ ಕೆರೆಮನೆ, ಶಂಕರ ಹೆಗಡೆ ನಿಲ್ಕೋಡ್, ಕಲಾ ಪೋಷಕರಾದ ಶಿವಾನಂದ ಹೆಗಡೆ ಕಡತೋಕಾ, ರಾಜು ಭಂಡಾರಿ, ನಾಗರಾಜ ಹೆಗಡೆ ಖಾಸ್ಕಂಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ&lt;/strong&gt;&lt;/p&gt;]]></content:encoded>
            <category>uttara-kannada</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/uttara-kananda-yakshagana-artist-comedy-emperor-shridhar-bhat-kasaragod-passes-away-today-mrq/articleshow-kd35niy"/>
        </item>
        <item>
            <title><![CDATA[ಮುಗಿಯದ ಶಿರಸಿ ಹಾವೇರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ; ಪ್ರತಿನಿತ್ಯ ತೊಂದರೆ]]></title>
            <link>https://kannada.asianetnews.com/karnataka-districts/the-public-is-facing-daily-problems-due-to-the-incomplete-work-on-the-sirsi-haveri-national-highway-mrq/articleshow-kpo0cvm</link>
            <guid isPermaLink="true">https://kannada.asianetnews.com/karnataka-districts/the-public-is-facing-daily-problems-due-to-the-incomplete-work-on-the-sirsi-haveri-national-highway-mrq/articleshow-kpo0cvm</guid>
            <pubDate>Tue, 04 Aug 2026 07:16:01 +0530</pubDate>
            <description><![CDATA[&lt;p&gt;ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಅಪೂರ್ಣ ಕಾಮಗಾರಿಯಿಂದಾಗಿ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚಿನ ಮಳೆಯಿಂದ ಸೋಮನಹಳ್ಳಿ ರಸ್ತೆ ಬಂದ್ ಆಗಿದ್ದು, ರಸ್ತೆ ಪಕ್ಕದ ನಿವಾಸಿಗಳು ಅಪಘಾತ, ಆರೋಗ್ಯ ಸಮಸ್ಯೆ ಹಾಗೂ ಪ್ರವಾಹದ ಭೀತಿಯಲ್ಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz56x0jjjeefpegjkw8pkryv,imgname-sirsi-haveri-1785807667794.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಂಕರ ಜಿ. ಜಾವೂರ&lt;/strong&gt;&lt;/p&gt;&lt;p&gt;&lt;strong&gt;ಶಿರಸಿ: &lt;/strong&gt;ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಮುಗಿಯುವ ವರೆಗೂ ಜನರ ಗೋಳು ಮುಗಿಯುವಂತೆ ಕಾಣುತ್ತಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಸೋಮನಹಳ್ಳಿ ರಸ್ತೆ ಮಾರ್ಗ ಬಂದ್&zwnj; ಆಗಿತ್ತು.&lt;/p&gt;&lt;p&gt;ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರು ನಿತ್ಯ ಹಲವಾರು ರೀತಿಯ ಸಮಸ್ಯೆ ಎದುರಿಸುತ್ತಲೇ ಇದ್ದಾರೆ. ನಿತ್ಯ ಅಪಘಾತಗಳು ಸಂಭವಿಸುತ್ತಲೇ ಇದೆ. ಹಲವರು ಕೈ-ಕಾಲು ಮುರಿದುಕೊಂಡಿದ್ದಾರೆ. ಈ ಮಾರ್ಗದಲ್ಲಿ ಪ್ರಯಾಣಿಸುವವರ ಸಂಕಷ್ಟ ಒಂದೆಡೆಯಾದರೆ ರಸ್ತೆ ಅಕ್ಕಪಕ್ಕದ ನಿವಾಸಿಗಳು ಬೇರೆ ಬೇರೆ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಗೌಡಳ್ಳಿ ನಿವಾಸಿಗಳಿಂದ ಮನವಿ ಸಲ್ಲಿಕೆ&lt;/strong&gt;&lt;/h2&gt;&lt;p&gt;ರಸ್ತೆ ಸರಿಪಡಿಸುವಂತೆ ಹಾಗೂ ನೀರು ಸರಾಗವಾಗಿ ಹರಿದು ಹೋಗಲು ಸಿಡಿ ನಿರ್ಮಾಣ ಮಾಡಬೇಕೆಂದು ಗೌಡಳ್ಳಿ ನಿವಾಸಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಾಗೂ ಸ್ಥಳೀಯ ಸಂಸದರಿಗೆ ಈಗಾಗಲೇ ಮನವಿ ಮಾಡಿದ್ದಾರೆ. ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಸೋಮನಹಳ್ಳಿ ಪ್ರವೇಶ ಮಾಡುವ ರಸ್ತೆಯಲ್ಲಿ ನೀರು ತುಂಬಿತ್ತು. ಸ್ಥಳೀಯರು ಬೇರೆ ಮಾರ್ಗದ ಮೂಲಕ ತಮ್ಮ ದಿನನಿತ್ಯದ ವ್ಯವಹಾರಗಳನ್ನು ನಡೆಸಬೇಕಾಯಿತು.&lt;/p&gt;&lt;p&gt;ಅಕಸ್ಮಾತ್ ಇನ್ನೂ ಹೆಚ್ಚಿನ ಮಳೆಯಾಗಿ ನೀರಿನ ಪ್ರಮಾಣ ಹೆಚ್ಚಾದರೆ ರಸ್ತೆ ಕೊರೆದು, ರಸ್ತೆ ಪಕ್ಕದಲ್ಲಿರುವ ಮನೆಗಳಿಗೆ ಹಾನಿ ಆಗುವ ಸಾಧ್ಯತೆ ಇದೆ. ಈಗಾಗಲೇ ನಿವಾಸಿಗಳು ಜೀವ ಭಯದಲ್ಲಿಯೇ ರಾತ್ರಿ ನಿದ್ರೆ ಇಲ್ಲದೆ ಕಳೆಯುವಂತಾಗಿದೆ. ಅತಿ ಶೀಘ್ರವಾಗಿ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.&lt;/p&gt;&lt;p&gt;ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದ ಮನೆಗಳು ಜವಳು ಹಿಡಿಯುತ್ತಿವೆ. ಇದರಿಂದ ಮನೆಯಲ್ಲಿ ತಂಪು ಹೆಚ್ಚಾಗಿ, ಮೈ ಕೈ ನೋವು, ಶೀತ ಮತ್ತು ನೆಗಡಿಯಂತಹ ಕಾಯಿಲೆಗಳು ವೃದ್ಧರು, ದುರ್ಬಲರಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದ ನಿವಾಸಿಗಳು ದೂರಿದ್ದಾರೆ.&lt;/p&gt;&lt;p&gt;ಯಾವೊಬ್ಬ ಅಧಿಕಾರಿಯಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಜನರಿಗೆ ಸಂಕಷ್ಟ ಎದುರಾದಾಗ ಸಂಕಷ್ಟಕ್ಕೆ ಸ್ಪಂದಿಸಲು ಯಾರೂ ಬರುವುದಿಲ್ಲ ಎಂದು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ.&lt;/p&gt;&lt;p&gt;ಮುಂದಿನ ದಿನಗಳಲ್ಲಿ ಶಿರಸಿ - ಹಾವೇರಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಇಲ್ಲಿನ ಸ್ಥಳೀಯ ನಿವಾಸಿಗಳು ಸೇರಿಕೊಂಡು ಪ್ರತಿಭಟನೆ ಮಾಡುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;h3&gt;&lt;strong&gt;ಸಿಡಿ ನಿರ್ಮಾಣ&lt;/strong&gt;&lt;/h3&gt;&lt;p&gt;ಮಳೆಗಾಲ ಇರುವುದರಿಂದ ಆ ಸ್ಥಳದಲ್ಲಿ ಸಿಡಿ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಮಳೆಯ ಪ್ರಮಾಣ ಕಡಿಮೆಯಾದ ನಂತರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಡಿ ನಿರ್ಮಾಣ ಮಾಡಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಿ ಕೊಡುತ್ತೇವೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹೇಳಿದರು.&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/the-public-is-facing-daily-problems-due-to-the-incomplete-work-on-the-sirsi-haveri-national-highway-mrq/articleshow-kpo0cvm"/>
        </item>
        <item>
            <title><![CDATA[School Holiday Declare: ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಆದೇಶ ಹೊರಡಿಸಿದ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳು!]]></title>
            <link>https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g</link>
            <guid isPermaLink="true">https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g</guid>
            <pubDate>Sun, 02 Aug 2026 23:10:40 +0530</pubDate>
            <description><![CDATA[ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಆಯ್ದ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz1rv26za6zwc62ygmsz1c1j,imgname-school-holiday-declare-1785692260575.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ (Karnataka) ಕರಾವಳಿ (Coastal Karnataka) ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ (Heavy Rain) ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ (Dakshina Kannada) ಮತ್ತು ಚಿಕ್ಕಮಗಳೂರು (Chikkamagaluru) ಶಿವಮೊಗ್ಗ, ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಕೆಲವು ಪ್ರದೇಶಗಳಲ್ಲಿ ಪಿಯುಸಿ (PUC) ಕಾಲೇಜುಗಳಿಗೆ ರಜೆ (School Holiday) ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ರಜೆ&lt;/strong&gt;&lt;/h2&gt;&lt;p&gt;ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (Deputy Commissioner) ದರ್ಶನ್ ಎಚ್.ವಿ. (Darshan H.V.) ಅವರು ಆದೇಶ ಹೊರಡಿಸಿದ್ದಾರೆ. ಮಂಗಳೂರು (Mangaluru) ಉಪವಿಭಾಗದ ಮಂಗಳೂರು, ಉಳ್ಳಾಲ (Ullal), ಮೂಡಬಿದಿರೆ (Moodbidri), ಬಂಟ್ವಾಳ (Bantwal) ಹಾಗೂ ಮುಲ್ಕಿ (Mulki) ತಾಲೂಕುಗಳಲ್ಲಿ ಅಂಗನವಾಡಿಯಿಂದ ಹೈಸ್ಕೂಲ್ (High School) ವರೆಗೆ ರಜೆ ಘೋಷಿಸಲಾಗಿದೆ.&lt;/p&gt;&lt;p&gt;ಇನ್ನೊಂದೆಡೆ ಪುತ್ತೂರು (Puttur) ಉಪವಿಭಾಗದ ಪುತ್ತೂರು, ಬೆಳ್ತಂಗಡಿ (Belthangady), ಕಡಬ (Kadaba) ಹಾಗೂ ಸುಳ್ಯ (Sulya) ತಾಲೂಕುಗಳಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು (PUC) ವರೆಗೆ ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿಯಲ್ಲೂ ರಜೆ&lt;/strong&gt;&lt;/h2&gt;&lt;p&gt;ಕಾಫಿನಾಡು (Coffee Land) ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪ (Koppa) ಹಾಗೂ ಶೃಂಗೇರಿ (Sringeri) ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ (Primary School) ಮತ್ತು ಪ್ರೌಢಶಾಲೆಗಳಿಗೆ (High School) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ (Deputy Commissioner) ಭನ್ವರ್ ಸಿಂಗ್ ಮೀನಾ (Bhanwar Singh Meena) ಆದೇಶ ಹೊರಡಿಸಿದ್ದಾರೆ.&lt;/p&gt;&lt;h3&gt;&lt;strong&gt;ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿವು&lt;/strong&gt;&lt;/h3&gt;&lt;p&gt;ನಿರಂತರ ಮಳೆಯ ಪರಿಣಾಮ ತುಂಗಾ ನದಿ (Tunga River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು (Public) ಹಾಗೂ ಪ್ರವಾಸಿಗರು (Tourists) ನದಿ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆಯ (Weather Department) ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಸಾಗರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ&lt;/strong&gt;&lt;/h2&gt;&lt;p&gt;ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagar) ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕು ಆಡಳಿತವು ರಜೆ ಘೋಷಿಸಿದೆ.&lt;/p&gt;&lt;p&gt;ಸಾಗರ ತಹಶೀಲ್ದಾರ್ (Tahsildar) ಡಾ. ಪ್ರತಿಭಾ (Dr. Prathibha) ಅವರು ಹೊರಡಿಸಿರುವ ಆದೇಶದಂತೆ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools), ಪ್ರೌಢಶಾಲೆಗಳು (High Schools), ಪದವಿ ಪೂರ್ವ ಕಾಲೇಜುಗಳು (PU Colleges), ಡಿಪ್ಲೊಮಾ ಕಾಲೇಜುಗಳು (Diploma Colleges) ಹಾಗೂ ಐಟಿಐ (ITI) ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೂ ರಜೆ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆ ಜಿಲ್ಲಾಡಳಿತ (District Administration) ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ (Deputy Commissioner) ಲಕ್ಷ್ಮೀ ಪ್ರಿಯಾ (Lakshmi Priya) ಅವರು ಹೊರಡಿಸಿರುವ ಆದೇಶದಂತೆ ದಾಂಡೇಲಿ (Dandeli) ಹಾಗೂ ಜೋಯಿಡಾ (Joida) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools) ಮತ್ತು ಪ್ರೌಢಶಾಲೆಗಳಿಗೆ (High Schools) ಆಗಸ್ಟ್ 3ರಂದು ರಜೆ ಘೋಷಿಸಲಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g"/>
        </item>
        <item>
            <title><![CDATA[ಹುಬ್ಬಳ್ಳಿ ಆಂಕೋಲಾ ನಡುವೆ ₹18,424 ಕೋಟಿ ವೆಚ್ಚದ ಹೊಸ ರೈಲ್ವೆ ಯೋಜನೆ; ಬರೋಬ್ಬರಿ 57 ಸುರಂಗ ನಿರ್ಮಾಣ]]></title>
            <link>https://kannada.asianetnews.com/gallery/karnataka-districts/hubballi-ankola-railway-line-revived-govt-issues-notification-for-163-km-double-line-with-57-tunnels-ptu4n6o</link>
            <guid isPermaLink="true">https://kannada.asianetnews.com/gallery/karnataka-districts/hubballi-ankola-railway-line-revived-govt-issues-notification-for-163-km-double-line-with-57-tunnels-ptu4n6o</guid>
            <pubDate>Tue, 11 Aug 2026 11:14:34 +0530</pubDate>
            <description><![CDATA[&lt;p&gt;ದಶಕಗಳ ಕನಸಾದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಪರಿಷ್ಕೃತ ರೂಪದಲ್ಲಿ ಮರುಚಾಲನೆ ನೀಡಲಾಗಿದ್ದು, 163 ಕಿ.ಮೀ. ಉದ್ದದ ವಿದ್ಯುದೀಕೃತ ಜೋಡಿ ಮಾರ್ಗಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಪಶ್ಚಿಮ ಘಟ್ಟದ ಪರಿಸರ ಹಾನಿ ತಗ್ಗಿಸಲು 57 ಸುರಂಗ ಪ್ರಸ್ತಾಪಿಸಲಾಗಿದ್ದು, ಅರಣ್ಯ ಇಲಾಖೆಯ ಅನುಮತಿಗಳು ಬೇಕಾಗಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzqm7mtqtrh1gz16gh0by5ep,imgname-hubballi-ankola-train-double-track-new-project-1786425627468.jpg" type="image/jpeg" height="390" width="690"/>
            <content:encoded><![CDATA[&lt;p&gt;ದಶಕಗಳ ಕನಸಾದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಪರಿಷ್ಕೃತ ರೂಪದಲ್ಲಿ ಮರುಚಾಲನೆ ನೀಡಲಾಗಿದ್ದು, 163 ಕಿ.ಮೀ. ಉದ್ದದ ವಿದ್ಯುದೀಕೃತ ಜೋಡಿ ಮಾರ್ಗಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಪಶ್ಚಿಮ ಘಟ್ಟದ ಪರಿಸರ ಹಾನಿ ತಗ್ಗಿಸಲು 57 ಸುರಂಗ ಪ್ರಸ್ತಾಪಿಸಲಾಗಿದ್ದು, ಅರಣ್ಯ ಇಲಾಖೆಯ ಅನುಮತಿಗಳು ಬೇಕಾಗಿವೆ.&lt;/p&gt;&lt;img&gt;&lt;p&gt;&lt;strong&gt;ಉತ್ತರ ಕನ್ನಡ (ಆ.11): ಉ&lt;/strong&gt;ತ್ತರ ಕನ್ನಡದ ದಶಕಗಳ ಕನಸಾಗಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಪರಿಷ್ಕೃತ ರೂಪದಲ್ಲಿ ಬಂದಿದ್ದು, 163 ಕಿಮೀ ಉದ್ದದ ಜೋಡಿ ರೈಲು ಮಾರ್ಗ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.&lt;/p&gt;&lt;p&gt;ಹಳೆಯ ಏಕಹಳಿ ಯೋಜನೆಗೆ ಬದಲಾಗಿ ಇದೀಗ ವಿದ್ಯುದೀಕೃತ ಬ್ರಾಡಗೇಜ್ ಡಬಲ್&zwnj;ಲೈನ್ ನಿರ್ಮಾಣದ ಪರಿಷ್ಕೃತ ಪ್ರಸ್ತಾವನೆ ರೂಪಿಸಲಾಗಿದೆ. ಸುಮಾರು ₹18,424 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಪಶ್ಚಿಮ ಘಟ್ಟದ ಪರಿಸರಕ್ಕೆ ಹಾನಿ ಕಡಿಮೆ ಮಾಡುವ ಉದ್ದೇಶದಿಂದ 57 ಸುರಂಗಗಳನ್ನು ನಿರ್ಮಿಸುವ ಪ್ರಸ್ತಾವವಿದೆ. ಒಟ್ಟು 163 ಕಿಮೀ ಉದ್ದದ ಈ ಯೋಜನೆಗೆ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸರ್ಕಾರಿ, ಖಾಸಗಿ ಮತ್ತು ಅರಣ್ಯ ಭೂಮಿ ಒಳಗೊಳ್ಳಲಿದೆ.&lt;/p&gt;&lt;img&gt;&lt;p&gt;&lt;strong&gt;ಅಧಿಸೂಚನೆ ಹೊರಡಿಸಲಾದ ಗ್ರಾಮಗಳ ವಿವರ:&lt;/strong&gt;&lt;/p&gt;&lt;p&gt;ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ನಗರಪಾಲಿಕೆ, ಬಿಂದಾಳ, ಗಬ್ಬೂರ, ಹಳಿಯಾಳ, ಕೊಟಗೊಂಡ ಹುಣಶಿ, ಅಜ್ಜನಪುರ, ಬುಡರಸಿಂಗಿ, ಮಾವನೂರ, ಗಿರಿಯಾಲ, ಕಾತನೂರ, ಚನ್ನಾಪುರ, ರಾಮಾಪುರ ಹಾಗೂ ಚಾವರಗುಡ್ಡ. ಕಲಘಟಗಿ ತಾಲೂಕಿನ ಚಳಮಟ್ಟಿ, ಮಿಶ್ರಿಕೋಟಿ, ಉಗ್ಗಿನಕೇರಿ, ಕಾಮಧೇನು, ಹಾರೋಗೇರಿ, ರಾಮನಾಳ, ದಾಸ್ತಿಕೊಪ್ಪ, ಮಡ್ಕಿಹೊನ್ನಿಹಳ್ಳಿ, ಬೆಂಡಿಗೇರಿ, ಕಲಘಟಗಿ, ಮಚ್ಚಾಪುರ, ಗಳಗಿನಕಟ್ಟಿ, ದೇವಿಕೊಪ್ಪ, ಜುಂಜನಬೈಲ್, ತಂಬೂರ ಹಾಗೂ ಸಂಗಟಿಕೊಪ್ಪ.&lt;/p&gt;&lt;img&gt;&lt;p&gt;ಉತ್ತರ ಕನ್ನಡದಲ್ಲಿ ಯಲ್ಲಾಪುರ ತಾಲೂಕಿನ ಹೊಸಳ್ಳಿ, ಕಿರವತ್ತಿ, ಕೋಳಿಕೇರಿ, ರಾಮನಕೊಪ್ಪ, ಕನ್ನಡಗಲ್, ಸಹಸ್ರಳ್ಳಿ, ಕೊಂಡೆಮನೆ, ಯಲ್ಲಾಪುರ, ಚಂದಗುಳಿ, ಸಬಗೇರಿ, ಗೋಪದಮನೆ, ಹಿತ್ತಲಕಾರಗದ್ದೆ, ಇಡಗುಂದಿ, ಜೋಗದಮನೆ, ಕೊಮ್ಮಾಡಿ, ಅರಬೈಲ್, ತೆಲಂಗಾರ, ವಜ್ರಳ್ಳಿ, ಹೊನ್ನಗದ್ದೆ, ಅಂಬಾಗಾವ, ಗುಳ್ಳಾಪುರ, ಕೊಡ್ಲಗದ್ದೆ, ಕಳಚೆ ಹಾಗೂ ಮಾವಿನಮನೆ. ಅಂಕೋಲಾ ತಾಲೂಕಿನ ಸುಂಕಸಾಳ, ಕಟ್ಟಿನಹಕ್ಕಲ, ಹೆಬ್ಬುಳ, ಕವಳಳ್ಳಿ, ಅಗಸೂರ, ಹೆಗ್ಗಾರಮಕ್ಕಿಗದ್ದೆ, ಅಡ್ಲೂರ, ನವಗದ್ದೆ, ಬೊಗ್ರಿಬೈಲ, ಅಲಗೇರಿ, ಶಿರಕುಳಿ, ಬಾಳೆಗುಳಿ, ಶೆಡಗೇರಿ, ಹೊಸಗದ್ದೆ, ಬೋಳೆ ಹಾಗೂ ಅಂಕೋಲಾ.&lt;/p&gt;&lt;img&gt;&lt;p&gt;ಆದರೆ ಹೊಸ ಅಧಿಸೂಚನೆ ಬಂದಿರುವುದರಿಂದ ತಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದರ್ಥವಲ್ಲ. ಅರಣ್ಯ, ವನ್ಯಜೀವಿ ಹಾಗೂ ಇತರ ಅಗತ್ಯ ಅನುಮತಿಗಳು ಇನ್ನೂ ದೊರೆಯಬೇಕಿದೆ. ಆದರೂ ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ ಹೊಸ ರೂಪದಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವುದು ಉತ್ತರ ಕನ್ನಡದ ಪಾಲಿಗೆ ಮಹತ್ವದ ಬೆಳವಣಿಗೆಯಾಗಿದೆ. ಅಧಿಸೂಚನೆ ಹೊರಡಿಸಿರುವುದರಿಂದ ಈ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎನ್ನುವುದು ಸ್ಪಷ್ಟವಾಗಿದೆ. ಈ ಯೋಜನೆ ಜಾರಿಯಾಗಲಿದೆ ಎಂದು ನಾನು ಹಿಂದಿನಿಂದ ಹೇಳುತ್ತಾ ಬಂದಿದ್ದೇನೆ. ಈ ರೈಲ್ವೇ ಮಾರ್ಗಕ್ಕೆ ಇನ್ನೂ ಹಲವು ಪರವಾನಿಗೆ ಬೇಕಾಗಲಿದೆ ಎನ್ನುತ್ತಾರೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ.&lt;/p&gt;&lt;img&gt;&lt;p&gt;&lt;strong&gt;ಜಾರ್ಜ್&zwnj; ಫರ್ನಾಂಡಿಸ್ ಸಂತಸ:&lt;/strong&gt;&lt;/p&gt;&lt;p&gt;ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕೆ ಅಧಿಸೂಚನೆ ಹೊರಡಿಸಿರುವುದು ಸಂತಸಕರ ಸಂಗತಿ ಎಂದು ಉತ್ತರಕನ್ನಡ ಜಿಲ್ಲಾ ರೈಲ್ವೆ ಸೇವಾ ಸೇವಾ ಸಮಿತಿ ಅಧ್ಯಕ್ಷ ಜಾರ್ಜ್&zwnj; ಫರ್ನಾಂಡಿಸ್ ತಿಳಿಸಿದ್ದಾರೆ. ಬಹುಕಾಲದಿಂದ ಈ ರೈಲ್ವೆ ಮಾರ್ಗಕ್ಕಾಗಿ ಜಿಲ್ಲೆಯ ಜನತೆ ಕಂಡ ಕನಸು ಈಗ ಮೊಳಕೆಯೊಡೆಯುತ್ತಿದೆ. ರೈಲ್ವೆ ಮಾರ್ಗಕ್ಕಾಗಿ ಪ್ರಯತ್ನಿಸುತ್ತಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಂಬಂಧಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ವರದಿ- ವಸಂತಕುಮಾರ್ ಕತಗಾಲ&lt;/strong&gt;&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/hubballi-ankola-railway-line-revived-govt-issues-notification-for-163-km-double-line-with-57-tunnels-ptu4n6o"/>
        </item>
        <item>
            <title><![CDATA[ಇನ್ನೂ ಎಷ್ಟು ದಿನ ಮಳೆ ಸುರಿಯುತ್ತೆ..? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?]]></title>
            <link>https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</link>
            <guid isPermaLink="true">https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</guid>
            <pubDate>Mon, 03 Aug 2026 10:52:13 +0530</pubDate>
            <description><![CDATA[&lt;p&gt;ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತಗೊಂಡಿದ್ದು, ಬಂಟ್ವಾಳದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೂ ಕಾರ್ಕಳದಲ್ಲಿ ಕಿರು ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz313w30f1gdqv7pkgfgntfd,imgname-rain--1--1785734492255.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು/ಕಾರವಾರ: &lt;/strong&gt;ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಇಂದು ಆರೆಂಜ್ ಅಲರ್ಟ್, ನಾಳೆ ಎಲ್ಲೋ ಅಲರ್ಟ್&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ನಾಳೆಯಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ.&lt;/p&gt;&lt;h2&gt;&lt;strong&gt;ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ಕೋಟೆ ಕೆರೆ ತುಂಬಿ ಹರಿಯುತ್ತಿದ್ದು, ನೀರು ರಸ್ತೆಗೆ ನುಗ್ಗಿದೆ. ಹಲವು ಬಡಾವಣೆಗಳು ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಬರಲಾರದ ಸ್ಥಿತಿ ನಿರ್ಮಾಣವಾಗಿದೆ.&lt;/p&gt;&lt;p&gt;ಇತ್ತ ದಾಂಡೇಲಿಯಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಗೆ ಮಸಿದಿಗಲ್ಲಿಯ ಯುಸೂಫ್ ಶೇಖ್ ಎಂಬುವವರ ಮನೆ ಕುಸಿದಿದೆ. ಮನೆಯಲ್ಲಿದ್ದ ಇಬ್ಬರು ವೃದ್ಧರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;h2&gt;&lt;strong&gt;ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು&lt;/strong&gt;&lt;/h2&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಎಎಂಆರ್ (AMR) ಡ್ಯಾಂನಿಂದ ನೀರನ್ನು ಹೊರಬಿಡಲಾಗುತ್ತಿದ್ದು, ನೇತ್ರಾವತಿ ನದಿ ತೀರದ ಜನರಲ್ಲಿ ಆತಂಕ ಶುರುವಾಗಿದೆ. ಬಂಟ್ವಾಳದ ಅಲಡ್ಕ, ಬೋಗೋಡಿ, ನಂದಾವರ, ಗೂಡಿನಬಳಿ ಸೇರಿದಂತೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.&lt;/p&gt;&lt;h2&gt;&lt;strong&gt;ಸಂಪರ್ಕ ಕಡಿತಗೊಳಿಸಿದ ಕಿರು ಸೇತುವೆ&lt;/strong&gt;&lt;/h2&gt;&lt;p&gt;ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾದ ಕಾರಣ ಇಲ್ಲಿನ ಕಿರು ಸೇತುವೆಯೊಂದು ಮುಳುಗಡೆಯಾಗಿದ್ದು, ಸ್ಥಳೀಯ ಗ್ರಾಮಸ್ಥರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಹೊಳೆ-ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸದ್ಯ ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ನದಿ ಪಾತ್ರದ ಜನರು ಹಾಗೂ ಗುಡ್ಡಗಾಡು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;]]></content:encoded>
            <category>uttara-kannada</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn"/>
        </item>
        <item>
            <title><![CDATA[Shocking incident in Bhatkal: ಭಟ್ಕಳದಲ್ಲಿ ರೌಡಿಗಳ ಅಟ್ಟಹಾಸ! ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಚಾಕು ಇರಿತ!]]></title>
            <link>https://kannada.asianetnews.com/karnataka-districts/uttara-kannada-rowdy-sheeters-stabbed-police-personnel-late-at-night-rav/articleshow-sm5mupy</link>
            <guid isPermaLink="true">https://kannada.asianetnews.com/karnataka-districts/uttara-kannada-rowdy-sheeters-stabbed-police-personnel-late-at-night-rav/articleshow-sm5mupy</guid>
            <pubDate>Sun, 09 Aug 2026 12:21:30 +0530</pubDate>
            <description><![CDATA[ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರೌಡಿಶೀಟರ್&zwnj;ಗಳ ನಡುವಿನ ಜಗಳ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಈ ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಆರೋಪಿಗಳಾದ ರೌಡಿಶೀಟರ್&zwnj;ಗಳ ವಿರುದ್ಧ ಪ್ರಕರಣ ದಾಖಲಿಸಿ, ಕೆಲವರನ್ನು ವಶಕ್ಕೆ ಪಡೆಯಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzjmga0gcm5t1brm7aqzhj75,imgname-----------------------2026-08-09t121452.761-1786258139152.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಾರವಾರ, ಉತ್ತರಕನ್ನಡ (ಆ.9): ರಾಜ್ಯಾದ್ಯಂತ ಪುಂಡರ ಹಾವಳಿ ಮಿತಿಮೀರಿದೆ ಈ ಮೊದಲು ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿದ್ದ ರೌಡಿಶೀಟರ್&zwnj;ಗಳು ಇದೀಗ ನೇರ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗುತ್ತಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.&lt;/p&gt;&lt;h2&gt;ಪೊಲೀಸ್ ಸಿಬ್ಬಂದಿಗೆ ಚಾಕು ಇರಿದ ರೌಡಿಶೀಟರ್&zwnj;ಗಳು!&lt;/h2&gt;&lt;p&gt;ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು. ರಾತ್ರಿವೇಳೆ ರೌಡಿಶೀಟರ್&zwnj;ಗಳ ಮಧ್ಯೆ ನಡೆದ ಜಗಳಕ್ಕೆ ಸಂಬಂಧಿಸಿದದಂತೆ ಸ್ಥಳಕ್ಕೆ ಬಂದಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಪುಂಡರು ಏಕಾಏಕಿ ಚಾಕುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಚಾಕು ಇರಿತಕ್ಕೊಳಗಾದ ಪೊಲೀಸರಿಗೆ ಗಂಭೀರ ಗಾಯಗೊಂಡಿದ್ದು ಸ್ಥಳೀಯರ ಸಹಾಯದಿಂದ ಮಂಗಳೂರಿನ ಆದರ್ಶ ಹಾಸ್ಪೆಟಲ್ ಗೆ ದಾಖಲಿಸಲಾಗಿದೆ.&lt;/p&gt;&lt;h3&gt;ಪೊಲೀಸರಿಗೆ ಚಾಕು ಇರಿದು ರೌಡಿಗಳು ಎಸ್ಕೇಪ್!&lt;/h3&gt;&lt;p&gt;ತಡರಾತ್ರಿ ರೌಡಿಶೀಟರ್ ರಾಜು, ಅವನ ಗುಂಪು ಮನೋಜ್ ಎಂಬುವವನ ನಡುವೆ ಯಾವುದೋ ಕಾರಣಕ್ಕೆ ಜಗಳ ನಡೆದಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ಆಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸ್ ಸಿಬ್ಬಂದಿ ಹವಾಲ್ದಾರ ಸಂಗಪ್ಪ,ಕಾನಸ್ಟೇಬಲ್ ವಿನಾಯಕ್ ಶಟ್ಟಿ ಸ್ಥಳಕ್ಕೆ ಬಂದಿದ್ದಾರೆ. ಬಂದ ವೇಳೆ ರೌಡಿಶೀಟರ್&zwnj;ಗಳು ಜಗಳ ಮುಂದುವರಿಸಿದ್ದರು ಎನ್ನಲಾಗಿದೆ.&lt;/p&gt;&lt;p&gt;ರೌಡಿಗಳ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಸಿಬ್ಬಂದಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಕೋಪಗೊಂಡು ಹವಾಲ್ದಾರ್ ಸಂಗಪ್ಪಗ ಹಾಗೂ ಕಾನ್ಸ್&zwnj;ಟೇಬಲ್ ಗೆ ಚಾಕುವಿನಿಂದ ಇರಿದಿದ್ದಾರೆ. ಆದರೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರಿಗೆ ಚಾಕು ಇರಿಯುತ್ತಿದ್ದಂತೆ ರೌಡಿಗಳು ಸ್ಥಳದಿಂದ ಕಾಲ್ಕಿತ್ತು ಪರಾರಿಯಾಗಿದ್ದಾರೆ. ಇತ್ತ ಗಾಯಗೊಂಡ ಪೊಲೀಸರನ್ನು ಸ್ಥಳೀಯರು ಮಂಗಳೂರಿನ ಆದರ್ಶ ಹಾಸ್ಪಿಟಲ್&zwnj;ಗೆ ದಾಖಲಿಸಿದ್ದಾರೆ.&lt;/p&gt;&lt;p&gt;&lt;strong&gt;ಪ್ರಕರಣ ದಾಖಲು&lt;/strong&gt;&lt;/p&gt;&lt;p&gt;ಪೊಲೀಸ್ ಸಿಬ್ಬಂದಿಗೆ ಚಾಕು ಇರಿದ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆರೋಪಿಗಳಾದ ರಾಜು, ರಿತೀಕ್, ಮದನ್ ನಾಯ್ಕ್, ಯೋಗೇಶ್, ದರ್ಶನ್ ಎಂಬ ನಾಲ್ವರು ರೌಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ರೌಡಿಶೀಟರ್&zwnj;ಗಳಾದ ರಾಜು, ಮನೋಜ್ ಎಂಬುವವರನ್ನ ವಶಕ್ಕೆ ಪಡೆದಿರುವ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.&lt;/p&gt;&lt;p&gt;ತಡರಾತ್ರಿ ನಡೆದ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪೊಲೀಸರ ಮೇಲೆಯೇ ಈ ರೀತಿ ದಾಳಿ ಮಾಡುವ ರೌಡಿಗಳು ಇನ್ನು ಸಾಮಾನ್ಯ ಜನರ ಪರಿಸ್ಥಿತಿ ಹೇಗೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರು ರೌಡಿಶೀಟರ್&zwnj;ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/uttara-kannada-rowdy-sheeters-stabbed-police-personnel-late-at-night-rav/articleshow-sm5mupy"/>
        </item>
        <item>
            <title><![CDATA[ಭಾರತೀಯ ರೈಲ್ವೆಯೊಂದಿಗೆ ಕೊಂಕಣ್‌ ರೈಲ್ವೆ ವಿಲೀನಕ್ಕೆ ವಿಘ್ನ: ಗೋವಾ ಒಪ್ಪಿಗೆ, ಮಹಾರಾಷ್ಟ್ರ, ಕರ್ನಾಟಕದಿಂದ ಕಂಡಿಷನ್!]]></title>
            <link>https://kannada.asianetnews.com/karnataka-districts/centre-seeks-konkan-railway-ownership-states-reluctant-san/articleshow-w5fnbmk</link>
            <guid isPermaLink="true">https://kannada.asianetnews.com/karnataka-districts/centre-seeks-konkan-railway-ownership-states-reluctant-san/articleshow-w5fnbmk</guid>
            <pubDate>Wed, 12 Aug 2026 23:02:40 +0530</pubDate>
            <description><![CDATA[&lt;p&gt;ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL) ಅನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt3n5qcdeknrs04fxpwy231v,imgname-konkan-railway-1780386815373.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನವದೆಹಲಿ (ಆ.12):&lt;/strong&gt; ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಹಾಗೂ ರೈಲ್ವೆ ಜಾಲದ ಸಾಮರ್ಥ್ಯ ವಿಸ್ತರಣೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಲು 'ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್' (KRCL) ಅನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಈ ವಿಲೀನ ಪ್ರಕ್ರಿಯೆಗೆ ಪಾಲುದಾರ ರಾಜ್ಯಗಳಿಂದ ನಿರೀಕ್ಷಿತ ಸಹಕಾರ ಸಿಗುತ್ತಿಲ್ಲ. ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ (ಆಗಸ್ಟ್ 12) ಲೋಕಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಕೊಂಕಣ ರೈಲ್ವೆಯಲ್ಲಿ ಪಾಲುದಾರಿಕೆ ಹೊಂದಿರುವ ರಾಜ್ಯಗಳ ಪೈಕಿ ಗೋವಾ ಸರ್ಕಾರ ಮಾತ್ರವೇ ತನ್ನ ಶೇರುಗಳನ್ನು ಉಚಿತವಾಗಿ ರೈಲ್ವೆ ಸಚಿವಾಲಯಕ್ಕೆ ವರ್ಗಾಯಿಸಲು ಸಮ್ಮತಿಸಿದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಆದರೆ, ಮಹಾರಾಷ್ಟ್ರ ಸರ್ಕಾರವು ತಾವು ಹೂಡಿಕೆ ಮಾಡಿರುವ ಬಂಡವಾಳವನ್ನು (Share Capital) ಮರಳಿಸುವಂತೆ ಪಟ್ಟು ಹಿಡಿದಿದ್ದರೆ, ಕರ್ನಾಟಕ ಸರ್ಕಾರವು ವಿವಿಧ ರೀತಿಯ ಎಕ್ಸಿಟ್ (ಹೊರನಡೆಯುವ) ಆಯ್ಕೆಗಳನ್ನು ನೀಡುವಂತೆ ಕೋರಿದೆ.&lt;/p&gt;&lt;h2&gt;&lt;strong&gt;ಕೊಂಕಣ ರೈಲ್ವೆಯ ಪಾಲುದಾರಿಕೆ ಮತ್ತು ಪ್ರಸ್ತುತ ಸ್ಥಿತಿ&lt;/strong&gt;&lt;/h2&gt;&lt;p&gt;ಮಹಾರಾಷ್ಟ್ರದ ರೋಹಾದಿಂದ ಕರ್ನಾಟಕದ ತೋಕೂರ್&zwnj;ವರೆಗೆ ಮುಂಬೈ ಮತ್ತು ಮಂಗಳೂರನ್ನು ಸಂಪರ್ಕಿಸುವ 739 ಕಿಲೋಮೀಟರ್ ಉದ್ದದ ಕರಾವಳಿ ರೈಲು ಮಾರ್ಗದ ನಿರ್ಮಾಣಕ್ಕಾಗಿ 1990ರಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್&zwnj; ಅನ್ನು ಸ್ಥಾಪಿಸಲಾಯಿತು. ಪ್ರಸ್ತುತ ಈ ಸಂಸ್ಥೆಯಲ್ಲಿ ಐದು ಪ್ರಮುಖ ಪಾಲುದಾರರಿದ್ದಾರೆ. ರೈಲ್ವೆ ಸಚಿವಾಲಯ (ಕೇಂದ್ರ): ಶೇ. 66.79 ಪಾಲು ಹೊಂದಿದ್ದರೆ, ಮಹಾರಾಷ್ಟ್ರ ಸರ್ಕಾರ ಶೇ. 14.91, ಕರ್ನಾಟಕ ಸರ್ಕಾರ ಶೇ. 10.17, ಗೋವಾ ಸರ್ಕಾರ ಶೇ. 4.07 ಹಾಗೂ ಕೇರಳ ಸರ್ಕಾರ ಶೇ. 4.07 ಪಾಲು ಹೊಂದಿದೆ.&lt;/p&gt;&lt;p&gt;ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, &quot;ಕೊಂಕಣ ರೈಲ್ವೆಯ ಮೂಲಸೌಕರ್ಯಗಳಿಗೆ ಸುಮಾರು 30 ವರ್ಷಗಳಾಗಿದ್ದು, ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರೈಲುಗಳ ಸಂಚಾರ ಸಾಮರ್ಥ್ಯವನ್ನು ಹೆಚ್ಚಿಸಲು ಬೃಹತ್ ಪ್ರಮಾಣದ ಬಂಡವಾಳದ ಅಗತ್ಯವಿದೆ. ಸುರಂಗಗಳ ನವೀಕರಣ, ಹಳೆಯ ಆಸ್ತಿಗಳ ಬದಲಿ ವ್ಯವಸ್ಥೆ ಸೇರಿದಂತೆ ತುರ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭಾರಿ ಹಣದ ಅಗತ್ಯವಿದೆ&quot; ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಸಚಿವಾಲಯ ನೀಡಿದ ಪ್ರಸ್ತಾವನೆ ಏನು?&lt;/strong&gt;&lt;/h2&gt;&lt;p&gt;ಈ ಹಣಕಾಸಿನ ಅಗತ್ಯವನ್ನು ಪೂರೈಸಲು ರೈಲ್ವೆ ಸಚಿವಾಲಯವು ಎಲ್ಲ ಪಾಲುದಾರ ರಾಜ್ಯಗಳಿಗೆ ಎರಡು ಆಯ್ಕೆಗಳನ್ನು ನೀಡಿತ್ತು. ತಮಗೆ ಇರುವ ಶೇರುಗಳಿಗೆ ಅನುಗುಣವಾಗಿ ಅಗತ್ಯವಿರುವ ಬಂಡವಾಳ ವೆಚ್ಚವನ್ನು (Capex) ಭರಿಸುವುದು ಅಥವಾ ತಮ್ಮ ಶೇರುಗಳನ್ನು ಭಾರತೀಯ ರೈಲ್ವೆ ಸಚಿವಾಲಯಕ್ಕೆ ಬಿಟ್ಟುಕೊಡುವುದು. ಆದರೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ (Indian Railways) ಸಂಪೂರ್ಣವಾಗಿ ವಿಲೀನಗೊಳಿಸಬೇಕಾದರೆ, ಅದು ಶೇ. 100ರಷ್ಟು ಕೇಂದ್ರ ಸರ್ಕಾರದ ಮಾಲೀಕತ್ವದ ಸಂಸ್ಥೆಯಾಗುವುದು ಕಡ್ಡಾಯವಾಗಿದೆ. ಕಾನೂನಾತ್ಮಕ, ಕಾರ್ಪೊರೇಟ್ ಮತ್ತು ಆಡಳಿತಾತ್ಮಕ ಅನುಮೋದನೆಗಳೊಂದಿಗೆ ಪಾಲುದಾರ ಶೇರುದಾರರ ಒಪ್ಪಂದಕ್ಕೆ ಬದ್ಧವಾಗಿ ಈ ಪ್ರಕ್ರಿಯೆ ನಡೆಯಬೇಕಿದೆ.&lt;/p&gt;&lt;h2&gt;&lt;strong&gt;ಅಭಿವೃದ್ಧಿ ಕಾಮಗಾರಿಗಳ ಪ್ರಗತಿ&lt;/strong&gt;&lt;/h2&gt;&lt;p&gt;ಕೊಂಕಣ ರೈಲ್ವೆಯ 739 ಕಿಲೋಮೀಟರ್ ವ್ಯಾಪ್ತಿಯಲ್ಲಿ ರೋಹಾ-ವೀರ್ ಹಾಗೂ ಮಡಗಾಂವ್-ಮಜೋರ್ಡಾ ನಡುವಿನ ಸುಮಾರು 55 ಕಿಲೋಮೀಟರ್ ಮಾರ್ಗದ ದ್ವಿಪಥ (Doubling) ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಉಳಿದಂತೆ ಸಾಮರ್ಥ್ಯ ಹೆಚ್ಚಿಸಲು ಗುರುತಿಸಲಾದ 263 ಕಿಲೋಮೀಟರ್ ಮಾರ್ಗವನ್ನು ದ್ವಿಪಥಗೊಳಿಸಲು ಅಗತ್ಯವಿರುವ ಸಾಧ್ಯತಾ ಸಮೀಕ್ಷೆಗೆ (Feasibility Survey) ಅನುಮೋದನೆ ನೀಡಲಾಗಿದೆ. ಅಲ್ಲದೆ, ಪ್ರಯಾಣಿಕರ ಸೌಲಭ್ಯಗಳು, ಆಸ್ತಿಗಳ ನವೀಕರಣ, ಸುರಕ್ಷತೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ KRCLನ ಮೂರನೇ ಆರ್ಥಿಕ ಪುನರ್ರಚನೆಗೆ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/centre-seeks-konkan-railway-ownership-states-reluctant-san/articleshow-w5fnbmk"/>
        </item>
        <item>
            <title><![CDATA[ಕಾರವಾರ ಕದಂಬ ನೌಕಾನೆಲೆಯಲ್ಲಿ ಐಎನ್‌ಎಸ್ ಮಾಲವನ್‌ ಕಾರ್ಯಾಚರಣೆ: ನೌಕೆಗೆ ಬಲ ತುಂಬಿದ AM/NS ಇಂಡಿಯಾ ಉಕ್ಕು!]]></title>
            <link>https://kannada.asianetnews.com/karnataka-districts/ins-malvan-anti-submarine-warship-joins-indian-navy-commissioned-at-karwar-powered-by-am-ns-india-special-steel-gdp/articleshow-wat9er3</link>
            <guid isPermaLink="true">https://kannada.asianetnews.com/karnataka-districts/ins-malvan-anti-submarine-warship-joins-indian-navy-commissioned-at-karwar-powered-by-am-ns-india-special-steel-gdp/articleshow-wat9er3</guid>
            <pubDate>Thu, 06 Aug 2026 16:10:02 +0530</pubDate>
            <description><![CDATA[ಭಾರತೀಯ ನೌಕಾಪಡೆಯ ಬಲ ಹೆಚ್ಚಿಸಲು 'ಮೇಕ್ ಇನ್ ಇಂಡಿಯಾ' ಅಭಿಯಾನದಡಿ ನಿರ್ಮಿಸಲಾದ ಅತ್ಯಾಧುನಿಕ 'ಐಎನ್&zwnj;ಎಸ್ ಮಾಲವನ್&zwnj;' ಯುದ್ಧನೌಕೆಯು ಕಾರವಾರದ ಕದಂಬ ನೌಕಾನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಜಲಾಂತರ್ಗಾಮಿ ನಿರೋಧಕ ಸಾಮರ್ಥ್ಯ ಹೊಂದಿರುವ ಈ ನೌಕೆಗೆ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಸಂಸ್ಥೆಯು ಸಂಪೂರ್ಣ ದೇಶೀಯವಾಗಿ ತಯಾರಿಸಿದ ವಿಶೇಷ ನೇವಿ-ಗ್ರೇಡ್ ಉಕ್ಕನ್ನು ಪೂರೈಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ky40ymy67fzx3j1yj6xv1atg,imgname-ins-malvan-warship-commissioned-1784694133702.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಭಾರತೀಯ ನೌಕಾಪಡೆಯ ಬಲವನ್ನು ಮತ್ತಷ್ಟು ಹೆಚ್ಚಿಸುವ ಅತ್ಯಾಧುನಿಕ 'ಐಎನ್&zwnj;ಎಸ್ ಮಾಲವನ್&zwnj;' (INS Malvan) ಯುದ್ಧನೌಕೆಯು ಕರ್ನಾಟಕದ ಕಾರವಾರದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿದೆ. ಕೇಂದ್ರ ಸರ್ಕಾರದ 'ಮೇಕ್ ಇನ್ ಇಂಡಿಯಾ' ಹಾಗೂ 'ಆತ್ಮನಿರ್ಭರ್ ಭಾರತ್' ಅಭಿಯಾನದಡಿ ನಿರ್ಮಾಣಗೊಂಡಿರುವ ಈ ನೌಕೆಯ ಶೇಕಡಾ 100ರಷ್ಟು ವಿಶೇಷ ನೇವಿ-ಗ್ರೇಡ್ ಉಕ್ಕನ್ನು ಪ್ರಸಿದ್ಧ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (AM/NS India) ಪೂರೈಸಿದೆ. ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ಈ ಯುದ್ಧನೌಕೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.&lt;/p&gt;&lt;h2&gt;ಐಎನ್&zwnj;ಎಸ್ ಮಾಲವನ್&zwnj; ಯುದ್ಧನೌಕೆಯ ಪ್ರಮುಖ ವೈಶಿಷ್ಟ್ಯಗಳು&lt;/h2&gt;&lt;p&gt;&lt;strong&gt;ಜಲಾಂತರ್ಗಾಮಿ ನಿರೋಧಕ ಸಾಮರ್ಥ್ಯ: &lt;/strong&gt;ಕೊಚ್ಚಿನ್ ಶಿಪ್&zwnj;ಯಾರ್ಡ್ ಲಿಮಿಟೆಡ್&zwnj; ಸಂಸ್ಥೆಯು ನಿರ್ಮಿಸಿರುವ ಈ ಯುದ್ಧನೌಕೆಯು ಪ್ರಮುಖವಾಗಿ ಜಲಾಂತರ್ಗಾಮಿ ನಿರೋಧಕ (Anti-Submarine Warfare) ತಂತ್ರಜ್ಞಾನವನ್ನು ಹೊಂದಿದೆ.&lt;/p&gt;&lt;p&gt;&lt;strong&gt;ಕಡಲ ಕಣ್ಗಾವಲು: &lt;/strong&gt;ಸಮುದ್ರದ ಆಳದಲ್ಲಿ ಶತ್ರುಗಳ ಜಲಾಂತರ್ಗಾಮಿ ನೌಕೆಗಳನ್ನು ಪತ್ತೆಹಚ್ಚಿ ಹೊಡೆದುರುಳಿಸುವುದು ಮತ್ತು ಕರಾವಳಿ ತೀರದ ಕಣ್ಗಾವಲು ನಡೆಸುವುದು ಇದರ ಮುಖ್ಯ ಕಾರ್ಯವಾಗಿದೆ.&lt;/p&gt;&lt;p&gt;&lt;strong&gt;ದೇಶೀಯ ತಂತ್ರಜ್ಞಾನ: &lt;/strong&gt;ಈ ನೌಕೆಯ ನಿರ್ಮಾಣದಲ್ಲಿ ಶೇಕಡಾ 80ಕ್ಕೂ ಹೆಚ್ಚು ದೇಶೀಯ ಬಿಡಿಭಾಗಗಳು ಹಾಗೂ ವಸ್ತುಗಳನ್ನು ಬಳಸಲಾಗಿದ್ದು, ಇದು 'ವಿಕಸಿತ ಭಾರತ'ದ ಗುರಿಗೆ ಭಾರಿ ವೇಗ ನೀಡಿದೆ.&lt;/p&gt;&lt;p&gt;&lt;strong&gt;'ಮಾಹೆ' ಸರಣಿಯ ನೌಕೆ:&lt;/strong&gt; ಭಾರತೀಯ ನೌಕಾಪಡೆಗಾಗಿ ನಿರ್ಮಿಸಲಾಗುತ್ತಿರುವ ಒಟ್ಟು 8 'ಮಾಹೆ' ಸರಣಿಯ ಸಣ್ಣ ಜಲಾಂತರ್ಗಾಮಿ ನಿರೋಧಕ ಯುದ್ಧನೌಕೆಗಳಲ್ಲಿ ಐಎನ್&zwnj;ಎಸ್ ಮಾಲವನ್&zwnj; ಎರಡನೆಯದ್ದಾಗಿದೆ.&lt;/p&gt;&lt;h2&gt;ಗುಜರಾತ್&zwnj;ನಿಂದ ಪೂರೈಕೆಯಾದ ವಿಶೇಷ 'ನೇವಿ-ಗ್ರೇಡ್' ಸ್ಟೀಲ್&lt;/h2&gt;&lt;p&gt;ಯುದ್ಧನೌಕೆಗಳ ನಿರ್ಮಾಣಕ್ಕೆ ಸಾಮಾನ್ಯ ಉಕ್ಕನ್ನು ಬಳಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಗುಜರಾತ್&zwnj;ನ ಹಜೀರಾದಲ್ಲಿರುವ ಎಎಂ/ಎನ್ಎಸ್ ಇಂಡಿಯಾ ಉತ್ಪಾದನಾ ಘಟಕದಲ್ಲಿ ಅತ್ಯುನ್ನತ ಗುಣಮಟ್ಟದ 'ನೇವೆಲ್-ಗ್ರೇಡ್' ಸ್ಟೀಲ್ ಅನ್ನು ಪ್ರತ್ಯೇಕವಾಗಿ ತಯಾರಿಸಿ ಪೂರೈಸಲಾಗಿದೆ.&lt;/p&gt;&lt;p&gt;ಈ ಸಾಧನೆಯ ಬಗ್ಗೆ ಮಾತನಾಡಿದ ಎಎಂ/ಎನ್ಎಸ್ ಇಂಡಿಯಾದ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಹಾಗೂ ಉಪಾಧ್ಯಕ್ಷ ರಂಜನ್ ಧರ್, &quot;ಭಾರತದ ರಕ್ಷಣಾ ವಲಯವು ದೇಶೀಯ ಉತ್ಪಾದನೆ ಮತ್ತು ಸ್ವಾವಲಂಬನೆಯಿಂದ ಹೇಗೆ ಬಲಗೊಳ್ಳುತ್ತಿದೆ ಎಂಬುದಕ್ಕೆ ಐಎನ್&zwnj;ಎಸ್ ಮಾಲವನ್&zwnj; ಅತ್ಯುತ್ತಮ ಉದಾಹರಣೆಯಾಗಿದೆ. ನೌಕಾಪಡೆಗೆ ಅಗತ್ಯವಿರುವ ಅತ್ಯುನ್ನತ ಗುಣಮಟ್ಟದ ಉಕ್ಕನ್ನು ಪೂರೈಸಿ, ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಭಾಗಿಯಾಗಿರುವುದು ನಮಗೆ ಹೆಮ್ಮೆಯ ವಿಷಯ&quot; ಎಂದು ಹರ್ಷ ವ್ಯಕ್ತಪಡಿಸಿದರು.&lt;/p&gt;&lt;h2&gt;ರಾಷ್ಟ್ರೀಯ ಯೋಜನೆಗಳಿಗೂ ಎಎಂ/ಎನ್&zwnj;ಎಸ್ ಕೊಡುಗೆ&lt;/h2&gt;&lt;p&gt;ನೌಕಾಪಡೆಗಾಗಿ ತಯಾರಾಗುತ್ತಿರುವ 'ಮಾಹೆ' ಸರಣಿಯ ಎಲ್ಲಾ 8 ಯುದ್ಧನೌಕೆಗಳಿಗೂ ಎಎಂ/ಎನ್ಎಸ್ ಇಂಡಿಯಾ ಕಂಪನಿಯೇ ಸಂಪೂರ್ಣ ಉಕ್ಕನ್ನು ಪೂರೈಸುತ್ತಿದೆ. ಇದಕ್ಕೂ ಮುನ್ನ ಭಾರತೀಯ ನೌಕಾಪಡೆಯ ಹೆಮ್ಮೆಯ ಐಎನ್&zwnj;ಎಸ್ ವಿಶಾಖಪಟ್ಟಣಂ ಹಾಗೂ ಐಎನ್&zwnj;ಎಸ್ ಸೂರತ್ ಯುದ್ಧನೌಕೆಗಳಿಗೂ ಈ ಸಂಸ್ಥೆಯೇ ಉಕ್ಕು ನೀಡಿತ್ತು.&lt;/p&gt;&lt;p&gt;ಕೇವಲ ರಕ್ಷಣಾ ವಲಯ ಮಾತ್ರವಲ್ಲದೆ, ದೇಶದ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೂ ಸಂಸ್ಥೆ ಕೊಡುಗೆ ನೀಡಿದೆ:&lt;/p&gt;&lt;p&gt;&lt;strong&gt;ಜಮ್ಮು-ಕಾಶ್ಮೀರ: &lt;/strong&gt;ವಿಶ್ವದ ಅತಿ ಎತ್ತರದ 'ಚೀನಾಬ್ ರೈಲ್ವೇ ಸೇತುವೆ' ಹಾಗೂ 'ಅಂಜಿಕಾಡ್ ರೈಲ್ವೇ ಸೇತುವೆ'.&lt;/p&gt;&lt;p&gt;&lt;strong&gt;ಅಸ್ಸಾಂ: &lt;/strong&gt;ಬೋಗಿಬೀಲ್ ಸೇತುವೆ.&lt;/p&gt;&lt;p&gt;&lt;strong&gt;ಇತರ ಯೋಜನೆಗಳು: &lt;/strong&gt;ಭಾರತೀಯ ನ್ಯೂಟ್ರಿನೋ ವೀಕ್ಷಣಾಲಯ (INO) ಯೋಜನೆ.&lt;/p&gt;&lt;h2&gt;ಪರಿಸರ ಸ್ನೇಹಿ 'ಗ್ರೀನ್ ಸ್ಟೀಲ್' ಮಾನ್ಯತೆ&lt;/h2&gt;&lt;p&gt;ಆರ್ಸೆಲರ್ ಮಿತ್ತಲ್ ಮತ್ತು ನಿಪ್ಪಾನ್ ಸ್ಟೀಲ್ ಸಂಸ್ಥೆಗಳ ಜಂಟಿ ಉದ್ಯಮವಾಗಿರುವ ಎಎಂ/ಎನ್ಎಸ್ ಇಂಡಿಯಾ, ಭಾರತದಲ್ಲಿ ವಾರ್ಷಿಕ 90 ಲಕ್ಷ ಟನ್ ಕಚ್ಚಾ ಉಕ್ಕು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಆಂಧ್ರಪ್ರದೇಶದಲ್ಲೂ ವಾರ್ಷಿಕ 82 ಲಕ್ಷ ಟನ್ ಸಾಮರ್ಥ್ಯದ ನೂತನ ಸ್ಟೀಲ್ ಪ್ಲಾಂಟ್ ಅನ್ನು ಸ್ಥಾಪಿಸುತ್ತಿದೆ. ವಿಶೇಷವೆಂದರೆ, ಕೇಂದ್ರ ಉಕ್ಕು ಸಚಿವಾಲಯದಿಂದ ಪರಿಸರ ಸ್ನೇಹಿ 'ಗ್ರೀನ್ ಸ್ಟೀಲ್ ಪ್ರಮಾಣಪತ್ರ' ಪಡೆದ ದೇಶದ ಏಕೈಕ ಸ್ಟೀಲ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/ins-malvan-anti-submarine-warship-joins-indian-navy-commissioned-at-karwar-powered-by-am-ns-india-special-steel-gdp/articleshow-wat9er3"/>
        </item>
        <item>
            <title><![CDATA[ಕರ್ನಾಟಕದಲ್ಲಿ ಬರಗಾಲ ಕಾರ್ಮೋಡದ ನಡುವೆ ಕಾಣಿಸಿಕೊಂಡ ಬಿಳಿ ಕಾಗೆ; ಅಪಾಯವೋ, ಅದೃಷ್ಟವೋ?]]></title>
            <link>https://kannada.asianetnews.com/uttara-kannada/lucky-sign-or-nature-rarity-white-crow-spotted-in-uttara-kannada-yellapur-suh/articleshow-x40xx3c</link>
            <guid isPermaLink="true">https://kannada.asianetnews.com/uttara-kannada/lucky-sign-or-nature-rarity-white-crow-spotted-in-uttara-kannada-yellapur-suh/articleshow-x40xx3c</guid>
            <pubDate>Fri, 24 Jul 2026 12:21:26 +0530</pubDate>
            <description><![CDATA[&lt;p&gt;ಕಾಗೆಗೂ ಜ್ಯೋತಿಷ್ಯಕ್ಕೂ ಅವಿನಾಭಾವ ಸಂಬಂಧವಿದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ನ್ಯಾಯ ನೀಡುವ ದೇವರು ಎಂದು ಪ್ರಸಿದ್ಧಿ ಪಡೆದಿರುವ ಶನಿದೇವರ ವಾಹನ ಕಾಗೆ ಎಂದು ಧಾರ್ಮಿಕ ನಂಬಿಕೆಗಳಲ್ಲಿ ಹೇಳಲಾಗುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky9e6jvrb09fr1k1dp53kzm1,imgname-lucky-sign-or-nature-rarity-white-crow-spotted-in-uttara-kannada-yellapur-1784875797368.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ: &lt;/strong&gt;ಕಾಗೆಗೂ ಜ್ಯೋತಿಷ್ಯಕ್ಕೂ ಅವಿನಾಭಾವ ಸಂಬಂಧವಿದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ನ್ಯಾಯ ನೀಡುವ ದೇವರು ಎಂದು ಪ್ರಸಿದ್ಧಿ ಪಡೆದಿರುವ ಶನಿದೇವರ ವಾಹನ ಕಾಗೆ ಎಂದು ಧಾರ್ಮಿಕ ನಂಬಿಕೆಗಳಲ್ಲಿ ಹೇಳಲಾಗುತ್ತದೆ. ಇದೇ ಕಾರಣಕ್ಕೆ ಕಾಗೆಗೆ ಸಂಬಂಧಿಸಿದಂತೆ ಹಲವು ರೀತಿಯ ನಂಬಿಕೆಗಳು ಮತ್ತು ಆಚರಣೆಗಳು ನಮ್ಮ ಸಮಾಜದಲ್ಲಿವೆ.&lt;/p&gt;&lt;p&gt;ಆದರೆ ಸಾಮಾನ್ಯವಾಗಿ ಕಪ್ಪು ಬಣ್ಣದಲ್ಲಿ ಕಾಣಿಸುವ ಕಾಗೆ ಬಿಳಿ ಬಣ್ಣದಲ್ಲಿದ್ದರೆ? ಇಂತಹ ದೃಶ್ಯ ಬಹಳ ಅಪರೂಪ. ಇದೀಗ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಸ್ತೆಯಲ್ಲಿ ಅಪರೂಪದ ಬಿಳಿ ಕಾಗೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭಾರೀ ಕುತೂಹಲ ಮೂಡಿಸಿದೆ.&lt;/p&gt;&lt;h2&gt;ಮೊದಲಿಗೆ ಪಾರಿವಾಳ ಎಂದುಕೊಂಡಿದ್ದರು!&lt;/h2&gt;&lt;p&gt;ಯಲ್ಲಾಪುರದ ರಸ್ತೆಯಲ್ಲಿ ಬಿಳಿ ಬಣ್ಣದ ಪಕ್ಷಿಯೊಂದು ಕಾಣಿಸಿಕೊಂಡಾಗ, ಅದನ್ನು ನೋಡಿದ ಕೆಲವರು ಮೊದಲಿಗೆ ಪಾರಿವಾಳ ಎಂದು ಭಾವಿಸಿದ್ದರು. ಆದರೆ ಹತ್ತಿರದಿಂದ ಗಮನಿಸಿದಾಗ ಅದು ಪಾರಿವಾಳವಲ್ಲ, ಬದಲಾಗಿ ಅಪರೂಪದ ಬಿಳಿ ಕಾಗೆ ಎಂಬುದು ತಿಳಿದುಬಂದಿದೆ. ಸಾಮಾನ್ಯ ಕಪ್ಪು ಕಾಗೆಗಿಂತ ಸಂಪೂರ್ಣ ವಿಭಿನ್ನವಾಗಿ ಕಾಣುವ ಈ ಬಿಳಿ ಕಾಗೆ ಇದೀಗ ಸ್ಥಳೀಯರ ಗಮನ ಸೆಳೆದಿದೆ. ಇದರ ಫೋಟೋಗಳು ಮತ್ತು ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.&lt;/p&gt;&lt;h2&gt;ಬಿಳಿ ಕಾಗೆ ಕಾಣಿಸಿಕೊಳ್ಳುವುದು ಏಕೆ ಅಪರೂಪ?&lt;/h2&gt;&lt;p&gt;ವೈದ್ಯಕೀಯ ಮತ್ತು ವೈಜ್ಞಾನಿಕ ವಿವರಣೆಗಳ ಪ್ರಕಾರ, ಕಾಗೆಗಳ ಸಂತಾನೋತ್ಪತ್ತಿಯಲ್ಲಿ ಅಪರೂಪದ ಆನುವಂಶಿಕ ಬದಲಾವಣೆಗಳಿಂದಾಗಿ ಕೆಲವೊಮ್ಮೆ ಬಿಳಿ ಬಣ್ಣದ ಕಾಗೆಗಳು ಹುಟ್ಟುತ್ತವೆ. ದೇಹದಲ್ಲಿ ಮೆಲನಿನ್ ಎಂಬ ವರ್ಣದ್ರವ್ಯದ ಕೊರತೆ ಉಂಟಾದಾಗ ಕೆಲವು ಕಾಗೆಗಳು ಬಿಳಿಯಾಗಿ ಕಾಣಿಸಿಕೊಳ್ಳಬಹುದು. ಇಂತಹ ಕಾಗೆಗಳನ್ನು ಸಾಮಾನ್ಯವಾಗಿ ಅಲ್ಬಿನೋ ಅಥವಾ ಲ್ಯೂಸಿಸಂನಂತಹ ಸ್ಥಿತಿಗಳಿಗೆ ಸಂಬಂಧಿಸಿದ ಪಕ್ಷಿಗಳೆಂದು ಪರಿಗಣಿಸಲಾಗುತ್ತದೆ. ಇವುಗಳಲ್ಲಿ ಕೆಲವಕ್ಕೆ ಬಿಳಿ ಅಥವಾ ತಿಳಿ ಬಣ್ಣದ ದೇಹದ ಜೊತೆಗೆ ಗುಲಾಬಿ ಬಣ್ಣದ ಕಾಲುಗಳು ಅಥವಾ ಇತರ ವಿಭಿನ್ನ ಲಕ್ಷಣಗಳು ಕಂಡುಬರಬಹುದು. ಇಂತಹ ಬಿಳಿ ಕಾಗೆಗಳು ಪ್ರಕೃತಿಯಲ್ಲಿ ಅತ್ಯಂತ ಅಪರೂಪವಾಗಿ ಕಾಣಿಸಿಕೊಳ್ಳುವುದರಿಂದಲೇ ಯಲ್ಲಾಪುರದಲ್ಲಿ ಕಂಡುಬಂದಿರುವ ಈ ಕಾಗೆ ಇದೀಗ ಎಲ್ಲರ ಗಮನ ಸೆಳೆದಿದೆ.&lt;/p&gt;&lt;h2&gt;ಬಿಳಿ ಕಾಗೆಗಳಿಗೆ ದೃಷ್ಟಿ ಸಮಸ್ಯೆ ಇರುತ್ತದೆಯೇ?&lt;/h2&gt;&lt;p&gt;ಕೆಲವು ತಜ್ಞರ ಅಭಿಪ್ರಾಯಗಳ ಪ್ರಕಾರ, ವರ್ಣದ್ರವ್ಯದ ಕೊರತೆಯೊಂದಿಗೆ ಹುಟ್ಟುವ ಅಲ್ಬಿನೋ ಪಕ್ಷಿಗಳಲ್ಲಿ ದೃಷ್ಟಿ ಸಮಸ್ಯೆಗಳು ಕಂಡುಬರುವ ಸಾಧ್ಯತೆ ಇದೆ. ಇವುಗಳಿಗೆ ಮಂದ ದೃಷ್ಟಿ ಅಥವಾ ಇತರ ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ಅಲ್ಲದೆ, ಇಂತಹ ವಿಭಿನ್ನ ಬಣ್ಣದ ಕಾಗೆಗಳು ತಮ್ಮ ಗುಂಪಿನಲ್ಲಿ ಸಹಜವಾಗಿ ಬೆರೆಯಲು ಕಷ್ಟಪಡಬಹುದು ಎಂಬ ಅಭಿಪ್ರಾಯವೂ ಇದೆ. ಕೆಲವು ಸಂದರ್ಭಗಳಲ್ಲಿ ಸಾಮಾನ್ಯ ಕಪ್ಪು ಕಾಗೆಗಳು ಅವುಗಳನ್ನು ದೂರ ಓಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ. ಇದರಿಂದಾಗಿ ಇಂತಹ ಬಿಳಿ ಕಾಗೆಗಳು ಕಾಡಿನಲ್ಲಿ ಬದುಕುಳಿಯುವುದು ಕಷ್ಟವಾಗಬಹುದು ಎಂಬ ಅಭಿಪ್ರಾಯವೂ ಇದೆ.&lt;/p&gt;&lt;h2&gt;ಜ್ಯೋತಿಷ್ಯದಲ್ಲಿ ಕಾಗೆಗೆ ವಿಶೇಷ ಸ್ಥಾನ&lt;/h2&gt;&lt;p&gt;ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಕಾಗೆಯನ್ನು ಪಿತೃಗಳ ಸಂಕೇತ ಎಂದೂ ಪರಿಗಣಿಸಲಾಗುತ್ತದೆ. ಶನಿದೇವರ ವಾಹನವಾಗಿರುವ ಕಾಗೆಗೆ ವಿಶೇಷ ಮಹತ್ವವಿದೆ ಎಂಬ ನಂಬಿಕೆಯೂ ಇದೆ. ಕಾಗೆ ಮನೆಗೆ ಬರುವುದು, ಕಾಗೆಯ ಕೂಗು, ಕಾಗೆಯ ವರ್ತನೆ ಸೇರಿದಂತೆ ಹಲವು ವಿಚಾರಗಳನ್ನು ಜನರು ಶುಭ-ಅಶುಭ ಸೂಚನೆಗಳೊಂದಿಗೆ ಜೋಡಿಸುತ್ತಾರೆ. ಕೆಲವರು ಕಾಗೆಯ ದರ್ಶನವನ್ನು ಒಳ್ಳೆಯ ಸುದ್ದಿಯ ಸಂಕೇತವೆಂದು ಪರಿಗಣಿಸಿದರೆ, ಇನ್ನು ಕೆಲವರು ಅದನ್ನು ಎಚ್ಚರಿಕೆಯ ಸೂಚನೆ ಎಂದು ನಂಬುತ್ತಾರೆ.&lt;/p&gt;&lt;h2&gt;ಹಾಗಾದರೆ ಬಿಳಿ ಕಾಗೆ ಕಾಣಿಸಿಕೊಂಡರೆ ಏನರ್ಥ ಎಂಬ ಪ್ರಶ್ನೆ ಇದೀಗ ಹಲವರಲ್ಲಿ ಮೂಡಿದೆ.&lt;/h2&gt;&lt;p&gt;&lt;strong&gt;ಬಿಳಿ ಕಾಗೆ ಅದೃಷ್ಟದ ಸಂಕೇತವೇ? ಅಪಾಯದ ಮುನ್ಸೂಚನೆಯೇ?&lt;/strong&gt;&lt;/p&gt;&lt;p&gt;ಬಿಳಿ ಕಾಗೆಯ ಬಗ್ಗೆ ಸಾಮಾಜಿಕ ಮತ್ತು ಜ್ಯೋತಿಷ್ಯ ನಂಬಿಕೆಗಳಲ್ಲಿ ಹಲವು ರೀತಿಯ ಅಭಿಪ್ರಾಯಗಳಿವೆ. ಕೆಲವರು ಇದನ್ನು ಅತ್ಯಂತ ಅಪರೂಪದ ಪಕ್ಷಿಯಾಗಿರುವುದರಿಂದ ಶುಭದ ಸಂಕೇತ ಎಂದು ಭಾವಿಸುತ್ತಾರೆ. ಮತ್ತೊಂದೆಡೆ, ಕೆಲವು ಜ್ಯೋತಿಷಿಗಳ ಅಭಿಪ್ರಾಯದ ಪ್ರಕಾರ ಬಿಳಿ ಕಾಗೆಯ ಕಾಣಿಸಿಕೊಳ್ಳುವಿಕೆಯನ್ನು ಅಶುಭ ಅಥವಾ ಮುಂಬರುವ ಸಮಸ್ಯೆಗಳ ಸೂಚನೆ ಎಂದು ಪರಿಗಣಿಸಲಾಗುತ್ತದೆ. ಇಂತಹ ನಂಬಿಕೆಗಳ ಪ್ರಕಾರ, ಬಿಳಿ ಕಾಗೆ ಕಾಣಿಸಿಕೊಂಡ ನಂತರ ದೇಶ ಅಥವಾ ಸಮಾಜದಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಸಂಭವಿಸಬಹುದು ಎಂಬ ಮಾತುಗಳೂ ಕೇಳಿಬರುತ್ತವೆ. ಹಿಂದೆ ತಮಿಳುನಾಡಿನ ತಿರುಪತ್ತೂರು ಪ್ರದೇಶದಲ್ಲಿ ಬಿಳಿ ಕಾಗೆಯೊಂದು ಕಾಣಿಸಿಕೊಂಡಾಗ, ನಂತರ ರಾಜಕೀಯ ಬದಲಾವಣೆ ಸಂಭವಿಸಲಿದೆ ಎಂಬ ರೀತಿಯ ಚರ್ಚೆಗಳು ನಡೆದಿದ್ದವು ಎಂದು ಕೆಲವು ಮಾಧ್ಯಮ ವರದಿಗಳು ಮತ್ತು ಜ್ಯೋತಿಷ್ಯ ನಂಬಿಕೆಗಳಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;p&gt;ಇದೇ ರೀತಿಯಾಗಿ, ಕೆಲವು ಜ್ಯೋತಿಷಿಗಳು ಬಿಳಿ ಕಾಗೆಯ ಕಾಣಿಸಿಕೊಳ್ಳುವಿಕೆಯನ್ನು ದೇಶಕ್ಕೆ ಎದುರಾಗಬಹುದಾದ ಸವಾಲುಗಳಿಗೆ ಸಂಬಂಧಿಸಿ ವ್ಯಾಖ್ಯಾನಿಸಿದ್ದಾರೆ. ವಿದೇಶಿ ರಾಷ್ಟ್ರಗಳಿಂದ ಸಮಸ್ಯೆಗಳು ಎದುರಾಗಬಹುದು ಎಂಬಂತಹ ಭವಿಷ್ಯವಾಣಿಗಳನ್ನೂ ಕೆಲವರು ಮಾಡಿರುವುದುಂಟು. ಆದರೆ ಇವೆಲ್ಲವೂ ಜ್ಯೋತಿಷ್ಯ ಮತ್ತು ಜನಪದ ನಂಬಿಕೆಗಳ ಆಧಾರಿತ ಹೇಳಿಕೆಗಳಾಗಿದ್ದು, ಇವುಗಳಿಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂಬುದನ್ನು ಗಮನಿಸಬೇಕು.&lt;/p&gt;]]></content:encoded>
            <category>uttara-kannada</category>
            <dc:creator>Sushma Hegde</dc:creator>
            <atom:link href="https://kannada.asianetnews.com/uttara-kannada/lucky-sign-or-nature-rarity-white-crow-spotted-in-uttara-kannada-yellapur-suh/articleshow-x40xx3c"/>
        </item>
        <item>
            <title><![CDATA[ಸಚಿವ ಸ್ಥಾನ ಅನುಭವಿಸಿದ ಹಿರಿಯರೇ ಮಂತ್ರಿ ಸ್ಥಾನ ತಪ್ಪಿಸುವ ಕೆಲ್ಸ ಮಾಡಿದ್ದಾರೆ -ಉ.ಕನ್ನಡ ಕಾಂಗ್ರೆಸ್‌ನ ಅಸಲಿ ಸತ್ಯ ಬಿಚ್ಚಿಟ್ಟ ಸೈಲ್]]></title>
            <link>https://kannada.asianetnews.com/politics/seniors-who-held-posts-behind-denial-of-ministerial-berths-in-north-karnataka-congress-said-satish-sail-gkn/articleshow-xlohilq</link>
            <guid isPermaLink="true">https://kannada.asianetnews.com/politics/seniors-who-held-posts-behind-denial-of-ministerial-berths-in-north-karnataka-congress-said-satish-sail-gkn/articleshow-xlohilq</guid>
            <pubDate>Thu, 06 Aug 2026 15:14:38 +0530</pubDate>
            <description><![CDATA[&lt;p&gt;ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಲು ಶಾಸಕರ ನಡುವಿನ ಒಗ್ಗಟ್ಟಿನ ಕೊರತೆಯೇ ಕಾರಣ ಎಂದು ಶಾಸಕ ಸತೀಶ್ ಸೈಲ್ ಆರೋಪಿಸಿದ್ದಾರೆ. ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ ಮತ್ತು ಮಂಕಾಳು ವೈದ್ಯರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ಇತ್ತ ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಮೀನುಗಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzb7bmm7pnt9c13rqscfs7gx,imgname-r-v-deshapande-satish-sail-mankalu-vaodya-1786009473670.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ: &lt;/strong&gt;ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ. ಈ ಆಂತರಿಕ ಭಿನ್ನಮತವೇ ಜಿಲ್ಲೆಗೆ ಸಚಿವ ಸ್ಥಾನ ತಪ್ಪಲು ಮುಖ್ಯ ಕಾರಣ ಎಂದು ಕಾರವಾರ ಶಾಸಕ ಸತೀಶ್ ಸೈಲ್ ನೇರವಾಗಿ ಆರೋಪಿಸಿದ್ದಾರೆ. ಆ ಮೂಲಕ ಜಿಲ್ಲಾ ಕಾಂಗ್ರೆಸ್&zwnj;ನಲ್ಲಿನ ಅಸಮಾಧಾನ ಸ್ಫೋಟಗೊಂಡಿದೆ.&lt;/p&gt;&lt;p&gt;ಕಾರವಾರದಲ್ಲಿ ಮಾತನಾಡಿದ ಸತೀಶ್ ಸೈಲ್, ಜಿಲ್ಲೆಯ ಹಿರಿಯ ಶಾಸಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಶಾಸಕರಲ್ಲಿ ಒಗ್ಗಟ್ಟಿಲ್ಲದ ಕಾರಣ ನಮಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಸಚಿವ ಸ್ಥಾನ ಅನುಭವಿಸಿದ ಹಿರಿಯರು, ಕಿರಿಯ ಶಾಸಕರಿಗೆ ಮಂತ್ರಿ ಸ್ಥಾನ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಹಾಗೂ ಮಂಕಾಳು ವೈದ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.&lt;/p&gt;&lt;h2&gt;&lt;strong&gt;ನನಗೆ ಸಿಗಬೇಕಿದ್ದ ಸ್ಥಾನ ತಪ್ಪಿಸಿದರು&lt;/strong&gt;&lt;/h2&gt;&lt;p&gt;ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಕಳೆದ ಬಾರಿಯೇ ಮುಖ್ಯಮಂತ್ರಿಗಳು ನನಗೆ ಆಶ್ವಾಸನೆ ನೀಡಿದ್ದರು. ಮೊದಲು ಮೀನುಗಾರ ಸಮುದಾಯದ ಮಂಕಾಳು ವೈದ್ಯ ಅವರಿಗೆ ಸ್ಥಾನ ನೀಡಿ, ಬಳಿಕ ನನ್ನನ್ನು ಮಂತ್ರಿ ಮಾಡುತ್ತೇನೆ ಎಂದಿದ್ದರು. ಆದರೆ ಈಗ ಜಿಲ್ಲೆಯ ಯಾರಿಗೂ ಸ್ಥಾನ ಸಿಕ್ಕಿಲ್ಲ. ನನಗೆ ಮಂತ್ರಿ ಸ್ಥಾನ ತಪ್ಪಿಸಿದ ಜಿಲ್ಲೆಯ ಶಾಸಕರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಮಾರ್ಮಿಕವಾಗಿ ನುಡಿದರು.&lt;/p&gt;&lt;h2&gt;&lt;strong&gt;ಆರ್.ವಿ. ದೇಶಪಾಂಡೆ ಬಗ್ಗೆ ಚಾಟಿ&lt;/strong&gt;&lt;/h2&gt;&lt;p&gt;ಕಾಂಗ್ರೆಸ್ ಪಕ್ಷವು ಆರ್.ವಿ. ದೇಶಪಾಂಡೆ ಅವರಿಗೆ ಕಳೆದ 40 ವರ್ಷಗಳಿಂದ ಅಧಿಕಾರ ನೀಡಿದೆ. ಮಂಕಾಳು ವೈದ್ಯ ಅವರು ಕೂಡ ಸಚಿವರಾಗಿ ಕೆಲಸ ಮಾಡಿದ್ದಾರೆ. ಆದರೆ ಈ ಬಾರಿ ಜಿಲ್ಲೆಗೆ ಸಂಪೂರ್ಣ ಅನ್ಯಾಯವಾಗಿದೆ. ಒಗ್ಗಟ್ಟಿನ ಕೊರತೆಯಿಂದಾಗಿ ಜಿಲ್ಲೆಯ ಹಿತಾಸಕ್ತಿ ಬಲಿಯಾಗಿದೆ ಎಂಬುದು ಸೈಲ್ ಅವರ ಮಾತಿನ ಸಾರಾಂಶವಾಗಿತ್ತು.&lt;/p&gt;&lt;h2&gt;&lt;strong&gt;ಭಟ್ಕಳದಲ್ಲಿ ಮಂಕಾಳು ವೈದ್ಯ ಪರ ಮೀನುಗಾರರ ಆಕ್ರೋಶ&lt;/strong&gt;&lt;/h2&gt;&lt;p&gt;ಇತ್ತ ಕಾರವಾರ ಶಾಸಕರು ಹಿರಿಯರ ವಿರುದ್ಧ ಕಿಡಿಕಾರುತ್ತಿದ್ದರೆ, ಅತ್ತ ಭಟ್ಕಳದಲ್ಲಿ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಮೀನುಗಾರ ಸಮುದಾಯ ಭಾರಿ ಆಕ್ರೋಶ ವ್ಯಕ್ತಪಡಿಸಿದೆ. ಹೈಕಮಾಂಡ್ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಇದ್ದರೂ, ಕೊನೆ ಕ್ಷಣದಲ್ಲಿ ಕೈಬಿಟ್ಟಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಭಟ್ಕಳದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಮೊಗೇರ ಸಮಾಜ, ಮೀನುಗಾರಿಕೆ ಸಹಕಾರಿ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;p&gt;ಮೀನುಗಾರ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಮತ್ತು ಕೂಡಲೇ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜಿಲ್ಲೆಯ ಇಬ್ಬರು ಪ್ರಬಲ ಶಾಸಕರ ನಡುವಿನ ಈ ಶೀತಲ ಸಮರ ಮತ್ತು ಮೀನುಗಾರರ ಪ್ರತಿಭಟನೆ ಈಗ ಉತ್ತರ ಕನ್ನಡ ಕಾಂಗ್ರೆಸ್&zwnj;ನಲ್ಲಿ ದೊಡ್ಡ ಸಂಚಲನ ಮೂಡಿಸಿದೆ.&lt;/p&gt;]]></content:encoded>
            <category>uttara-kannada</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/politics/seniors-who-held-posts-behind-denial-of-ministerial-berths-in-north-karnataka-congress-said-satish-sail-gkn/articleshow-xlohilq"/>
        </item>
    </channel>
</rss>
