<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 12 Jun 2026 20:12:11 +0530</lastBuildDate>
        <atom:link href="https://kannada.asianetnews.com/rss/uttara-kannada" rel="self" type="application/rss+xml"/>
        <item>
            <title><![CDATA[ಇನ್ಮುಂದೆ ಮದುವೆ ದಿಬ್ಬಣಗಳ ಫೋಟೋ, ವಿಡಿಯೋ ಚಿತ್ರೀಕರಣ ಮಾಡಲ್ಲ: ಫೋಟೋಗ್ರಾಫರ್ಸ್ ನಿರ್ಧಾರ]]></title>
            <link>https://kannada.asianetnews.com/karnataka-districts/karwar-photographers-association-decide-not-to-take-photos-or-videos-of-weddings-from-now-on-mrq/articleshow-0i42wwp</link>
            <guid isPermaLink="true">https://kannada.asianetnews.com/karnataka-districts/karwar-photographers-association-decide-not-to-take-photos-or-videos-of-weddings-from-now-on-mrq/articleshow-0i42wwp</guid>
            <pubDate>Sun, 07 Jun 2026 05:32:19 +0530</pubDate>
            <description><![CDATA[&lt;p&gt;ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇನ್ನು ಮುಂದೆ ಮದುವೆ ದಿಬ್ಬಣದ (ಬಾರಾತ್) ಚಿತ್ರೀಕರಣ ಮಾಡದಿರಲು ನಿರ್ಧರಿಸಿದೆ. ತಡರಾತ್ರಿ, ಭದ್ರತಾ ಸಮಸ್ಯೆಗಳು ಮತ್ತು ಅನುಚಿತ ವರ್ತನೆಯ ಕಾರಣಗಳಿಂದ ಈ ತೀರ್ಮಾನ ಕೈಗೊಂಡಿದ್ದು, ಕೇವಲ ಮದುವೆ ಹಾಲ್&zwnj;ನಲ್ಲಿ ಮಾತ್ರ ಚಿತ್ರೀಕರಣ ನಡೆಸುವುದಾಗಿ ಸ್ಪಷ್ಟಪಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktfp2gzetm85s3rwdq66fnfk,imgname-photographers-1780790412270.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ:&lt;/strong&gt; ಮದುವೆ ಸಮಾರಂಭಗಳಲ್ಲಿ ಮದುಮಗನ ಮನೆಗೆ ಸಾಗುವ ದಿಬ್ಬಣದ (ಬಾರಾತ್) ಫೋಟೋ ಹಾಗೂ ವಿಡಿಯೋ ಚಿತ್ರೀಕರಣವನ್ನು ಇನ್ನು ಮುಂದೆ ಮಾಡದಿರಲು ಕಾರವಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿರ್ಧಾರ ಕೈಗೊಂಡಿದೆ.&lt;/p&gt;&lt;p&gt;ಶನಿವಾರ ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಸದಸ್ಯರು ಮಾತನಾಡಿ, ಛಾಯಾಗ್ರಾಹಕರು ಎದುರಿಸುತ್ತಿರುವ ಭದ್ರತಾ ಸಮಸ್ಯೆಗಳು ಹಾಗೂ ಸಮಯದ ಅಭಾವದ ಕುರಿತು ತಮ್ಮ ಅಳಲು ತೋಡಿಕೊಂಡರು.&lt;/p&gt;&lt;h2&gt;&lt;strong&gt;ಯಾಕೆ ಈ ನಿರ್ಧಾರ?&lt;/strong&gt;&lt;/h2&gt;&lt;p&gt;ಕಾರವಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಂತಾನ್ ಫರ್ನಾಂಡೀಸ್, ಈಚಿನ ದಿನಗಳಲ್ಲಿ ಮದುವೆ ದಿಬ್ಬಣ ಕಾರ್ಯಕ್ರಮಗಳು ತಡರಾತ್ರಿ ವರೆಗೂ ಮುಂದುವರಿಯುತ್ತಿವೆ. ಇದರಿಂದಾಗಿ ಫೋಟೋಗ್ರಾಫರ್&zwnj;ಗಳು ಯಾವುದೇ ಸಮಯದ ಮಿತಿಯಿಲ್ಲದೆ, ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅಲ್ಲದೆ, ತಡರಾತ್ರಿಯ ದಿಬ್ಬಣಗಳಲ್ಲಿ ಕೆಲವೆಡೆ ಫೋಟೋಗ್ರಾಫರ್&zwnj;ಗಳು ಹಾಗೂ ವಿಡಿಯೋಗ್ರಾಫರ್&zwnj;ಗಳೊಂದಿಗೆ ಕೆಲವರು ಅತ್ಯಂತ ಅನುಚಿತವಾಗಿ ವರ್ತಿಸಿದ ಘಟನೆಗಳು ನಡೆದಿವೆ. ಕೆಲವು ಸಂದರ್ಭಗಳಲ್ಲಿ ಲಕ್ಷಾಂತರ ರು. ಬೆಲೆಬಾಳುವ ಕ್ಯಾಮೆರಾಗಳನ್ನು ಕಸಿದುಕೊಳ್ಳುವ ಹಾಗೂ ಹಾನಿ ಮಾಡುವ ಯತ್ನಗಳು ನಡೆದಿವೆ ಎಂದು ಅಸೋಸಿಯೇಷನ್ ಸದಸ್ಯರು ತೀವ್ರ ಆತಂಕ ವ್ಯಕ್ತಪಡಿಸಿದರು&zwnj;.&lt;/p&gt;&lt;p&gt;ಇನ್ನು ಮುಂದೆ ಕೇವಲ ಮದುವೆ ಹಾಲ್&zwnj;ನಲ್ಲಿ ಮಾತ್ರ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ನಡೆಸಲಾಗುವುದು. ತಡರಾತ್ರಿ ನಡೆಯುವ ಮದುಮಗನ ದಿಬ್ಬಣ ಕಾರ್ಯಕ್ರಮಗಳಿಗೆ ಚಿತ್ರೀಕರಣಕ್ಕೆ ತೆರಳದಿರಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.&lt;/p&gt;&lt;h3&gt;&lt;strong&gt;ಫೋಟೋಗ್ರಫಿ ಸೇವೆಗಳ ದರ ಏರಿಕೆ&lt;/strong&gt;&lt;/h3&gt;&lt;p&gt;ಫೋಟೋಗ್ರಫಿ ಸೇವೆಗಳ ದರ ಏರಿಕೆ ಮಾಡುತ್ತಿರುವ ಕುರಿತು ಮಾಹಿತಿ ನೀಡಿದ ಸಂಘದ ಮುಖಂಡರು, ಪಾಸ್&zwnj;ಪೋರ್ಟ್ ಸೈಜ್ ಫೋಟೋ ಸೇರಿದಂತೆ ವಿವಿಧ ಫೋಟೋಗ್ರಫಿ ಸೇವೆಗಳ ದರವನ್ನು ಶೀಘ್ರದಲ್ಲೇ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.&lt;/p&gt;&lt;p&gt;ಸಂಘದ ಉಪಾಧ್ಯಕ್ಷ ರವಿ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಅನಂತ ಪೈ, ಕಾರ್ಯದರ್ಶಿ ಜಯಪ್ರಕಾಶ್ ಗೋಸಾವಿ ಹಾಗೂ ಸದಸ್ಯರಾದ ಅನಿಲ್ ನಾಯ್ಕ, ಮನೋಜ ನಾಯ್ಕ, ಪ್ರಮೋದ ನಾಯ್ಕ ಮತ್ತಿತರರು ಇದ್ದರು.&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/karwar-photographers-association-decide-not-to-take-photos-or-videos-of-weddings-from-now-on-mrq/articleshow-0i42wwp"/>
        </item>
        <item>
            <title><![CDATA[ಹಿಂದೂ ಸಂಘಟನೆಗಳಿಂದ ಇಂದು ಭಟ್ಕಳ ಬಂದ್, ಮಧ್ಯಾಹ್ನ ಸಂಪೂರ್ಣ ಸ್ಥಬ್ದವಾಗಲಿದೆ ಪಟ್ಟಣ]]></title>
            <link>https://kannada.asianetnews.com/karnataka-districts/bhatkal-bandh-called-by-hindu-organizations-today-normal-life-likely-to-be-disrupted/articleshow-0r3iugv</link>
            <guid isPermaLink="true">https://kannada.asianetnews.com/karnataka-districts/bhatkal-bandh-called-by-hindu-organizations-today-normal-life-likely-to-be-disrupted/articleshow-0r3iugv</guid>
            <pubDate>Fri, 05 Jun 2026 10:47:08 +0530</pubDate>
            <description><![CDATA[&lt;p&gt;ಮುರಿನ ಕಟ್ಟೆ ಧ್ವಂಸ ಪ್ರಕರಣ ಸಂಬಂಧ ಹಿಂದೂ ಸಂಘಟನೆಗಳು ಕೆರಳಿದೆ. ಅನ್ಯ ಕೋಮಿನ ಸಮುದಾಯದ ಉದ್ರಿಕ್ತರು ಮುರಿನ ಕಟ್ಟೆ ಧ್ವಂಸಗೊಳಿಸಿರುವುದು ಹಾಗೂ ಕಟ್ಟೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಬಂದ್ ನಡೆಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt4fx7s6ms92fcqvcbg4pprg,imgname-bhatkal-murinakatte-reconstruction-1780414848806.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಟ್ಕಳ (ಜೂ.05)&lt;/strong&gt; ಹಿಂದೂಗಳ ಶ್ರದ್ಧಾ ಕೇಂದ್ರವಾಗಿದ್ದ ಮುರಿನ ಕಟ್ಟೆ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಇಂದು ಭಟ್ಕಲ್ ಬಂದ್ ನಡೆಸಲಾಗುತ್ತಿದೆ. ಹಿಂದೂ ಸಂಘಟನೆಗಳು ಈಗಾಗಲೇ ಬಂದ್&zwnj;ಗೆ ಕೆರೆ ನೀಡಿದ್ದಾರೆ. ಆಟೋ ಚಾಲಕರು ಹಾಗೂ ಅಂಗಡಿ ಮಾಲೀಕರಿಂದ ಬಂದ್&zwnj;ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಇಂದು ಮಧ್ಯಾಹ್ನ ಭಟ್ಕಲ್ ಸಂಪೂರ್ಣ ಸ್ಥಬ್ಧವಾಗಲಿದೆ. ಈ ಮೂಲಕ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.&lt;/p&gt;&lt;h2&gt;ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ&lt;/h2&gt;&lt;p&gt;ಇಂದು (ಜೂ.05) ಮಧ್ಯಾಹ್ನ 3 ಗಂಟೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಸುಮಾರು 10 ಸಾವಿರ ಕ್ಕಿಂತ ಹೆಚ್ಚು ಜನರನ್ನ ಸೇರುವ ಸಾಧ್ಯತೆ ಇದೆ. ಮುಂಜಾನೆ ಎಂದಿನಂತಿದ್ದ ಭಟ್ಕಳ ಇದೀಗ ನಿಧಾನವಾಗಿ ಸ್ಥಬ್ದವಾಗುತ್ತಿದೆ. ಮಧ್ಯಾಹ್ನ ವೇಳೆಗೆ ಸಂಪೂರ್ಣ ಸ್ಥಬ್ದವಾಗಲಿದೆ. ಈ ಪ್ರತಿಭಟನೆಯಲ್ಲಿ ಮುರಿನ ಕಟ್ಟೆ ವಿಚಾರವಾಗಿ ಹಿಂದೂ ಕಾರ್ಯಕರ್ಯರ ಮೇಲೆ ದಾಖಲಾದ ಸುಳ್ಳು ಕೇಸ್ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.&lt;/p&gt;&lt;h2&gt;ಮದ್ಯ ಮಾರಾಟ ಬಂದ್&lt;/h2&gt;&lt;p&gt;ಹಿಂದೂಗಳ ಮೇಲಿನ ದೌರ್ಜನ್ಯ ಮರುಕಳಿಸದಂತೆ ಒತ್ತಾಯಿಸಲಾಗುತ್ತದೆ. ವಿಶೇಷ ಪೊಲೀಸ್ ಪಡೆ ಸೇರಿದಂತೆ ಹೆಚ್ಚುವರಿ ಪೊಲೀಸರ ನಿಯೋಜನೆ&zwnj; ಮಾಡಲಾಗಿದೆ. ಭಟ್ಕಳ ಬಂದ್ ಹಿನ್ನೆಲೆ ಇಂದು ಭಟ್ಕಳದಲ್ಲಿ ಮಧ್ಯ ಮಾರಾಟ ನಿಷೇಧ ಮಾಡಲಾಗಿದೆ. ಮಧ್ಯ ಮಾರಾಟ ಮಾಡದಂತೆ ಆದೇಶ ಹೊರಡಿಸಲಾಗಿದೆ. ಉರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾರಿಂದ ಈ ಆದೇಶ ನೀಡಿದ್ದಾರೆ.&lt;/p&gt;&lt;p&gt;ರಾಷ್ಟ್ರೀಯ ಹೆದ್ದಾರಿ ಅಗಲಿಕರಣಕ್ಕಾಗಿ ಹಿಂದೂಗಳ ಭಕ್ತಿಯ ಕೇಂದ್ರವಾಗಿದ್ದ ಮುರಿನ ಕಟ್ಟೆ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಅಭಿವೃದ್ಧಿ ಹಾಗೂ ಅನಿವಾರ್ಯ ಕಾರಣಗಳಿಂದ ಸ್ಥಳಾಂತರಕ್ಕೆ ಹಿಂದೂ ಮುಖಂಡರು ಒಪ್ಪಿಕೊಂಡಿದ್ದರು. ಇದರಂತೆ ಹೆದ್ದಾರಿ ಪಕ್ಕದಲ್ಲಿ ಮುರಿನ ಕಟ್ಟೆ ನಿರ್ಮಾಣ ಮಾಡಲಾಗಿತ್ತು. ಆದರೆ ಅನ್ಯ ಕೋಮಿನ ಉದ್ರಿಕ್ತರು ಈ ಮುರಿನ ಕಟ್ಟೆ ಧ್ವಂಸಗೊಳಿಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿತ್ತು. ಘಟನೆ ಸಂಬಂಧ ಪ್ರಶ್ನಿಸಿ, ಬೀದಿಗಿಳಿದ ಹೋರಾಟ ನಡೆಸಿದ ಹಿಂದೂಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದು ಹಿಂದೂ ಸಂಘಟನೆಗಳನ್ನು ಮತ್ತಷ್ಟು ಕೆರಳಿಸಿದೆ.&lt;/p&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನಗರದ ರಂಗಿನಕಟ್ಟೆ ಸಮೀಪ ಇದ್ದ ಮೂರಿನಕಟ್ಟೆಯನ್ನ ಕಳೆದ ರವಿವಾರ ಕೆಲ ಕಿಡಗೇಡಿ ಮುಸ್ಲಿಮರು ಧ್ವಂಸಮಾಡಿದ್ದು ಈ ಪ್ರಕರಣದ ಕೆಲ ಅರೋಪಿಗಳನ್ನು ಈಗಾಲೇ ಪೊಲೀಸ್ರು ಬಂಧಿಸಿದ್ದಾರೆ. ಇತ್ತೀಚೆಗೆ ಅದೇ ಸ್ಥಳದಲ್ಲಿ ಮುರಿನಕಟ್ಟೆ ಪುನರ್ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಇಂದು ಭಟ್ಕಳದಲ್ಲಿ ವಿಪಕ್ಷ ನಾಯಕ ಆರ್. ಅಶೋಕ ಅವರ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>uttara-kannada</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/bhatkal-bandh-called-by-hindu-organizations-today-normal-life-likely-to-be-disrupted/articleshow-0r3iugv"/>
        </item>
        <item>
            <title><![CDATA[ಕೊಂಕಣ ರೈಲ್ವೆ ಅಭಿವೃದ್ಧಿಗೆ ಕೇಂದ್ರದಿಂದ 7000ಕೋಟಿ ಅನುದಾನಕ್ಕೆ ಯತ್ನ, ಕಾರವಾರ-ಮಡಗಾಂವ್ ರೈಲು ವೇಳಾಪಟ್ಟಿ ಪರಿಷ್ಕರಣೆ]]></title>
            <link>https://kannada.asianetnews.com/gallery/karnataka-districts/konkan-railway-development-overhaul-mp-kageri-pushes-for-rs7000-crore-grant-karwar-madgaon-express-made-permanent-gdp-6q982vh</link>
            <guid isPermaLink="true">https://kannada.asianetnews.com/gallery/karnataka-districts/konkan-railway-development-overhaul-mp-kageri-pushes-for-rs7000-crore-grant-karwar-madgaon-express-made-permanent-gdp-6q982vh</guid>
            <pubDate>Fri, 12 Jun 2026 16:00:10 +0530</pubDate>
            <description><![CDATA[&lt;p&gt;ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊಂಕಣ ರೈಲ್ವೆ ಮಾರ್ಗದ ಅಭಿವೃದ್ಧಿಗಾಗಿ ₹7,000 ಕೋಟಿ ಅನುದಾನ ಪಡೆಯುವ ಪ್ರಯತ್ನಗಳ ಬಗ್ಗೆ ತಿಳಿಸಿದ್ದಾರೆ. ಕಾರವಾರ-ಮಡಗಾಂವ್ ರೈಲು ಸೇವೆಯನ್ನು ಶಾಶ್ವತಗೊಳಿಸಲಾಗಿದ್ದು, ಕಾರವಾರ ನಿಲ್ದಾಣದಲ್ಲಿ ಮಹಿಳೆಯರಿಗಾಗಿ 'ಪಿಂಕ್ ಬಬಲ್' ಸೌಲಭ್ಯವನ್ನು ಉದ್ಘಾಟಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktxjh02qh1nd6z7g0wgpn2qq,imgname-vishweshwar-hegde-kageri--4--1781256454231.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊಂಕಣ ರೈಲ್ವೆ ಮಾರ್ಗದ ಅಭಿವೃದ್ಧಿಗಾಗಿ ₹7,000 ಕೋಟಿ ಅನುದಾನ ಪಡೆಯುವ ಪ್ರಯತ್ನಗಳ ಬಗ್ಗೆ ತಿಳಿಸಿದ್ದಾರೆ. ಕಾರವಾರ-ಮಡಗಾಂವ್ ರೈಲು ಸೇವೆಯನ್ನು ಶಾಶ್ವತಗೊಳಿಸಲಾಗಿದ್ದು, ಕಾರವಾರ ನಿಲ್ದಾಣದಲ್ಲಿ ಮಹಿಳೆಯರಿಗಾಗಿ 'ಪಿಂಕ್ ಬಬಲ್' ಸೌಲಭ್ಯವನ್ನು ಉದ್ಘಾಟಿಸಲಾಗಿದೆ.&lt;/p&gt;&lt;img&gt;&lt;p&gt;ಕಾರವಾರ: ಕೊಂಕಣ ರೈಲ್ವೆ ಮಾರ್ಗದ ಸಮಗ್ರ ಮೂಲಸೌಕರ್ಯ ಸುಧಾರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೇಂದ್ರ ಹಣಕಾಸು ಸಚಿವಾಲಯದ ಮಟ್ಟದಲ್ಲಿ ಸುಮಾರು ₹7,000 ಕೋಟಿ ಅನುದಾನವನ್ನು ಪಡೆಯಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಕಾರವಾರ ತಾಲ್ಲೂಕಿನ ಶಿರವಾಡ ರೈಲು ನಿಲ್ದಾಣದಲ್ಲಿ ಕಾರವಾರ&ndash;ಮಡಗಾಂವ್ ರೈಲಿನ ಶಾಶ್ವತ ಸೇವೆಗೆ ಹಸಿರು ನಿಶಾನೆ ತೋರಿಸಿ ಸ್ವಾಗತಿಸಿದ ಬಳಿಕ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರವಾರ ಘಟಕವು ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ಸುಮಾರು ₹1 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ 'ಪಿಂಕ್ ಬಬಲ್' (Pink Bubble) ಪ್ರತ್ಯೇಕ ಆಸನ ಹಾಗೂ ವಿಶ್ರಾಂತಿ ಸೌಲಭ್ಯವನ್ನು ಅವರು ಉದ್ಘಾಟಿಸಿದರು.&lt;/p&gt;&lt;img&gt;&lt;p&gt;ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಸ್ತುತ 85ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ. ಆದರೆ, ಇದಕ್ಕಿಂತ ಮುಂಚಿತವಾಗಿ ರೈಲು ನಿಲ್ದಾಣಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಬೇಕಿದೆ. ಹಿರಿಯ ನಾಗರಿಕರು ಮತ್ತು ದಿವ್ಯಾಂಗ (ಅಂಗವಿಕಲ) ಪ್ರಯಾಣಿಕರು ಸುಲಭವಾಗಿ ಒಂದು ಪ್ಲಾಟ್&zwnj;ಫಾರ್ಮ್&zwnj;ನಿಂದ ಮತ್ತೊಂದಕ್ಕೆ ತೆರಳಲು ಅನುಕೂಲವಾಗುವಂತೆ ಕಾರವಾರ ರೈಲು ನಿಲ್ದಾಣದಲ್ಲಿ ಶೀಘ್ರದಲ್ಲೇ ಎರಡು ಲಿಫ್ಟ್&zwnj;ಗಳನ್ನು ಅಳವಡಿಸಲಾಗುವುದು ಎಂದು ಸಂಸದರು ಭರವಸೆ ನೀಡಿದರು. ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಿಲ್ದಾಣಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮಂಗಳೂರು, ಉಡುಪಿ ಮತ್ತು ಉತ್ತರ ಕನ್ನಡದ ಸಂಸದರು ಜಂಟಿಯಾಗಿ ಪ್ರಯತ್ನ ನಡೆಸುತ್ತಿರುವುದಾಗಿ ಅವರು ತಿಳಿಸಿದರು.&lt;/p&gt;&lt;img&gt;&lt;p&gt;ರೈಲ್ವೆ ಸಂಪರ್ಕ ವಿಸ್ತರಣೆಯ ಕುರಿತು ಮಾತನಾಡಿದ ಕಾಗೇರಿ ಅವರು, ತಾಳಗುಪ್ಪ-ಸಿರ್ಸಿ-ಹುಬ್ಬಳ್ಳಿ ಮತ್ತು ಹೊನ್ನಾವರ-ತಾಳಗುಪ್ಪ ನಡುವೆ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಈಗಾಗಲೇ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯು ಸಹ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದರು.&lt;/p&gt;&lt;p&gt;ಪ್ರಸ್ತುತ ಕುಮಟಾ ಮತ್ತು ಗೋಕರ್ಣ ರೈಲು ನಿಲ್ದಾಣಗಳಲ್ಲಿ ಎರಡನೇ ಪ್ಲಾಟ್&zwnj;ಫಾರ್ಮ್ ನಿರ್ಮಾಣ ಸೇರಿದಂತೆ ಒಟ್ಟು ₹10 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿವೆ. ಇದರೊಂದಿಗೆ ಮುರುಡೇಶ್ವರ ಮತ್ತು ಭಟ್ಕಳ ರೈಲು ನಿಲ್ದಾಣಗಳಲ್ಲೂ ಪ್ರಯಾಣಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ವಿವರಿಸಿದರು.&lt;/p&gt;&lt;img&gt;&lt;p&gt;ಕಾರವಾರ ಮತ್ತು ಗೋವಾ ಭಾಗದ ಸಾರ್ವಜನಿಕರು, ಪ್ರವಾಸಿಗರು ಹಾಗೂ ದಿನನಿತ್ಯದ ಕಾರ್ಮಿಕರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಿ, ಈ ಹಿಂದೆ ವಿಶೇಷ/ತಾತ್ಕಾಲಿಕ ಶಟಲ್ ಮಾದರಿಯಲ್ಲಿ ಚಲಿಸುತ್ತಿದ್ದ ಕಾರವಾರ-ಮಡಗಾಂವ್ ರೈಲನ್ನು ಶಾಶ್ವತ ಸೇವೆಯನ್ನಾಗಿ ಪರಿವರ್ತಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಮಡಗಾಂವ್ ನಿಲ್ದಾಣದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ಕಾಯಂ ರೈಲು ಸೇವೆಗೆ ಹಸಿರು ನಿಶಾನೆ ತೋರಿದ್ದಾರೆ.&lt;/p&gt;&lt;p&gt;ಈ ಹಿಂದೆ ವಿಶೇಷ ರೈಲು ಸಂಖ್ಯೆ 01595/01596 ಆಗಿ ಸಂಚರಿಸುತ್ತಿದ್ದ ಈ ರೈಲು, ಇನ್ನುಮುಂದೆ ನಿಯಮಿತ ದೈನಂದಿನ ಎಕ್ಸ್&zwnj;ಪ್ರೆಸ್ ಆಗಿ 10109/10110 ಮಡಗಾಂವ್ - ಕಾರವಾರ - ಮಡಗಾಂವ್ ಎಕ್ಸ್&zwnj;ಪ್ರೆಸ್ ಹೆಸರಿನಲ್ಲಿ ಹೊಸ ಸಂಖ್ಯೆಗಳ ಅಡಿಯಲ್ಲಿ ಚಲಿಸಲಿದೆ.&lt;/p&gt;&lt;h3&gt;ಪರಿಷ್ಕೃತ ವೇಳಾಪಟ್ಟಿ:&lt;/h3&gt;&lt;p&gt;ರೈಲು ಸಂಖ್ಯೆ 10110 (ಕಾರವಾರ-ಮಡಗಾಂವ್): ಪ್ರತಿದಿನ ಬೆಳಿಗ್ಗೆ 8:30ಕ್ಕೆ ಕಾರವಾರದಿಂದ ಹೊರಟು, ಬೆಳಿಗ್ಗೆ 9:45ಕ್ಕೆ ಮಡಗಾಂವ್ ತಲುಪುತ್ತದೆ.&lt;/p&gt;&lt;p&gt;ರೈಲು ಸಂಖ್ಯೆ 10109 (ಮಡಗಾಂವ್-ಕಾರವಾರ): ಪ್ರತಿದಿನ ಸಂಜೆ 4:30ಕ್ಕೆ ಮಡಗಾಂವ್&zwnj;ನಿಂದ ಹೊರಟು, ಸಂಜೆ 5:45ಕ್ಕೆ ಕಾರವಾರ ತಲುಪುತ್ತದೆ.&lt;/p&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ರೈಲಿಗೆ ಕೆನಕೋನಾ ನಿಲ್ದಾಣದಲ್ಲಿ ವಾಣಿಜ್ಯ ನಿಲುಗಡೆಯನ್ನು ಕಲ್ಪಿಸಲಾಗಿದೆ.&lt;/p&gt;&lt;img&gt;&lt;p&gt;ಮಹಿಳಾ ಪ್ರಯಾಣಿಕರು ರೈಲು ಬರುವವರೆಗೆ ಸುರಕ್ಷಿತ ಮತ್ತು ಸುಸಜ್ಜಿತ ವಾತಾವರಣದಲ್ಲಿ ನಿರಾಳವಾಗಿ ಕಾಯಲು 'ಪಿಂಕ್ ಬಬಲ್' ಆಸನ ವ್ಯವಸ್ಥೆ ಸಹಕಾರಿಯಾಗಲಿದೆ. ಮಹಿಳೆಯರ ಸುರಕ್ಷತೆಗಾಗಿ ಈ ಆಸನಗಳ ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮಹಿಳೆಯರಿಗೆ ತೊಂದರೆ ನೀಡುವ ಕಿಡಿಗೇಡಿಗಳ ವಿರುದ್ಧ ರೈಲ್ವೆ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಗೇರಿ ಎಚ್ಚರಿಸಿದರು.&lt;/p&gt;&lt;img&gt;&lt;p&gt;ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೊಂಕಣ ರೈಲ್ವೆಯ ಪ್ರಧಾನ ಮುಖ್ಯ ಎಂಜಿನಿಯರ್ ಎಲ್. ಪ್ರಕಾಶ್, ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಪಿ. ಚಿತ್ರಸೇನ್, ವಿಭಾಗೀಯ ಸಂಕೇತ ಮತ್ತು ದೂರಸಂಪರ್ಕ ಎಂಜಿನಿಯರ್ ಸುದರ್ಶನ್ ರೆಡ್ಡಿ, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಜಿ.ಡಿ. ಮೀನಾ, ಸಾರ್ವಜನಿಕ ಸಂಪರ್ಕ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್, ಜಿಪಂ ಉಪಕಾರ್ಯದರ್ಶಿ ಎಂ.ಎಸ್. ಅಲ್ಲಾಭಕ್ಷ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>uttara-kannada</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/konkan-railway-development-overhaul-mp-kageri-pushes-for-rs7000-crore-grant-karwar-madgaon-express-made-permanent-gdp-6q982vh"/>
        </item>
        <item>
            <title><![CDATA[Bhatkal: ಮುರಿನ್‌ಕಟ್ಟೆ ಧ್ವಂಸ ಪ್ರಕರಣ, ಹಿಂದೂ ಸಂಘಟನೆಗಳಿಂದ ನಾಳೆ ಭಟ್ಕಳ ಬಂದ್‌]]></title>
            <link>https://kannada.asianetnews.com/karnataka-districts/bhatkal-bandh-tomorrow-murinakatte-demolition-protest-liquor-ban-san/articleshow-7rrp1gr</link>
            <guid isPermaLink="true">https://kannada.asianetnews.com/karnataka-districts/bhatkal-bandh-tomorrow-murinakatte-demolition-protest-liquor-ban-san/articleshow-7rrp1gr</guid>
            <pubDate>Thu, 04 Jun 2026 20:53:27 +0530</pubDate>
            <description><![CDATA[ಭಟ್ಕಳದ ಐತಿಹಾಸಿಕ ಮುರಿನಕಟ್ಟೆ ಧ್ವಂಸ ಪ್ರಕರಣವನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಬಂದ್&zwnj;ಗೆ ಕರೆ ನೀಡಿವೆ. ಬೃಹತ್ ಪ್ರತಿಭಟನಾ ರ&zwj;್ಯಾಲಿ ಆಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಮದ್ಯ ಮಾರಾಟ ನಿಷೇಧಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kt9kg9k4am1jc46q43nmf0m0,imgname-bhatkal-murin-katte--1780586391140.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ/ಭಟ್ಕಳ (ಜೂ.4):&lt;/strong&gt; ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಐತಿಹಾಸಿಕ ಮುರಿನಕಟ್ಟೆ ಧ್ವಂಸ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ದೊಡ್ಡ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಕರಣವನ್ನು ಖಂಡಿಸಿ ಹಿಂದೂ ಸಂಘಟನೆಗಳು ನಾಳೆ (ಶುಕ್ರವಾರ) ಭಟ್ಕಳ ಬಂದ್&zwnj;ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಹಿಂದೂ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಭಟ್ಕಳದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸ್ಥಳೀಯ ಆಟೋ ಚಾಲಕರು ಹಾಗೂ ವರ್ತಕರು (ಅಂಗಡಿ ಮಾಲೀಕರು) ಬಂದ್&zwnj;ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದು, ನಾಳೆ ದಿನವಿಡೀ ವ್ಯಾಪಾರ-ವಹಿವಾಟು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಂದ್ ಯಶಸ್ವಿಗೊಳಿಸಲು ಹಿಂದೂ ಕಾರ್ಯಕರ್ತರು ಭಟ್ಕಳದ ಹಳ್ಳಿ ಹಳ್ಳಿಗಳಲ್ಲಿ ಈಗಾಗಲೇ ಸರಣಿ ಸಭೆಗಳನ್ನು ನಡೆಸಿ ಸಾರ್ವಜನಿಕರ ಬೆಂಬಲ ಕೋರಿದ್ದಾರೆ.&lt;/p&gt;&lt;h2&gt;&lt;strong&gt;ಮಧ್ಯಾಹ್ನ 3ಕ್ಕೆ ಬೃಹತ್ ಪ್ರತಿಭಟನೆ: 10 ಸಾವಿರ ಜನ ಸೇರುವ ಸಾಧ್ಯತೆ&lt;/strong&gt;&lt;/h2&gt;&lt;p&gt;ಕಳೆದ ವಾರವಷ್ಟೇ ಭಾರತೀಯ ಜನತಾ ಪಾರ್ಟಿ (BJP) ನಡೆಸಿದ್ದ ಪ್ರತಿಭಟನೆಗಿಂತಲೂ ಮಿಗಿಲಾದ ಬೃಹತ್ ಜನಾಕ್ರೋಶ ಪ್ರದರ್ಶನಕ್ಕೆ ಹಿಂದೂ ಸಂಘಟನೆಗಳು ಮಾಸ್ಟರ್ ಪ್ಲಾನ್ ರೂಪಿಸಿವೆ. ನಾಳೆ ಮಧ್ಯಾಹ್ನ 3 ಗಂಟೆಗೆ ಭಟ್ಕಳ ನಗರದಲ್ಲಿ ಬೃಹತ್ ಪ್ರತಿಭಟನಾ ರ&zwj;್ಯಾಲಿ ನಡೆಯಲಿದ್ದು, ಸುಮಾರು 10 ಸಾವಿರಕ್ಕೂ ಅಧಿಕ ಜನಸ್ತೋಮ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;h2&gt;&lt;strong&gt;ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು&lt;/strong&gt;&lt;/h2&gt;&lt;p&gt;ಮುರಿನಕಟ್ಟೆ ಧ್ವಂಸ ಪ್ರಕರಣದ ಬಳಿಕ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ 'ಸುಳ್ಳು ಮೊಕದ್ದಮೆಗಳನ್ನು' ತಕ್ಷಣವೇ ಹಿಂಪಡೆಯಬೇಕು. ಭಟ್ಕಳ ಭಾಗದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ದಮನಕಾರಿ ನೀತಿಗಳು ಮರುಕಳಿಸದಂತೆ ಸೂಕ್ತ ರಕ್ಷಣೆ ನೀಡಬೇಕು ಎನ್ನುವ ಬೇಡಿಕೆ ಇಡಲಾಗಿದೆ.&lt;/p&gt;&lt;h2&gt;&lt;strong&gt;ಡಿಸಿ ಲಕ್ಷ್ಮಿ ಪ್ರಿಯಾ ಆದೇಶ: ಹದ್ದಿನ ಕಣ್ಣಿಟ್ಟ ಪೊಲೀಸ್ ಪಡೆ&lt;/strong&gt;&lt;/h2&gt;&lt;p&gt;ಭಟ್ಕಳ ಬಂದ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ನಾಳೆ ಭಟ್ಕಳ ತಾಲೂಕಿನಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಪರಿಸ್ಥಿತಿ ಕೈಮೀರದಂತೆ ತಡೆಯಲು ಭಟ್ಕಳದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯ ಪೊಲೀಸರೊಂದಿಗೆ ಹೆಚ್ಚುವರಿ ಪೊಲೀಸ್ ಪಡೆ ಹಾಗೂ ವಿಶೇಷ ಪೊಲೀಸ್ ತುಕಡಿಗಳನ್ನು (KSRP/DAR) ಸೂಕ್ಷ್ಮ ಪ್ರದೇಶಗಳಲ್ಲಿ ಮೊಕ್ಕಾಂ ಹೂಡುವಂತೆ ಮಾಡಲಾಗಿದ್ದು, ಇಡೀ ಭಟ್ಕಳ ಸದ್ಯ ಪೊಲೀಸರ ಹದ್ದಿನ ಕಣ್ಣಿನ ಕಾವಲಿನಲ್ಲಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>uttara-kannada</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/bhatkal-bandh-tomorrow-murinakatte-demolition-protest-liquor-ban-san/articleshow-7rrp1gr"/>
        </item>
        <item>
            <title><![CDATA[ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಗೆ ರೆಡ್ ಅಲರ್ಟ್, ಬೆಂಗಳೂರು ಸೇರಿ ಹಲವೆಡೆ 7 ದಿನ ಭಾರೀ ಮಳೆ ಎಚ್ಚರಿಕೆ!]]></title>
            <link>https://kannada.asianetnews.com/state/karnataka-weather-forecast-june-2026-monsoon-heavy-rain-alert-bengaluru-sat/articleshow-8a1oyv2</link>
            <guid isPermaLink="true">https://kannada.asianetnews.com/state/karnataka-weather-forecast-june-2026-monsoon-heavy-rain-alert-bengaluru-sat/articleshow-8a1oyv2</guid>
            <pubDate>Mon, 08 Jun 2026 16:26:06 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktgqqeds6ahmpz9rzv1c532g,imgname-karnataka-rain-red-alert--6--1780825700793.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜೂ.08): ರಾ&lt;/strong&gt;ಜ್ಯದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದ್ದು, ಮುಂದಿನ ಒಂದು ವಾರ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ 'ಅತಿ ಭಾರೀ ಮಳೆ'ಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.&lt;/p&gt;&lt;h3&gt;&lt;strong&gt;ಮುಂಗಾರು ಪಯಣ ಮತ್ತು ಹವಾಮಾನ ವೈಪರೀತ್ಯ:&lt;/strong&gt;&lt;/h3&gt;&lt;p&gt;ಜೂನ್ 8 ರ ವೇಳೆಗೆ ನೈಋತ್ಯ ಮುಂಗಾರು ಅರಬ್ಬಿ ಸಮುದ್ರ, ಮಹಾರಾಷ್ಟ್ರ, ಕರ್ನಾಟಕದ ಬಹುತೇಕ ಭಾಗಗಳು, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಪ್ರವೇಶಿಸಿದೆ. ಮುಂದಿನ 2-3 ದಿನಗಳಲ್ಲಿ ಇದು ಇಡೀ ರಾಜ್ಯವನ್ನು ಆವರಿಸುವ ಪೂರಕ ವಾತಾವರಣವಿದೆ. ಇದರ ಜೊತೆಗೆ ಪೂರ್ವ ಉತ್ತರ ಪ್ರದೇಶ ಮತ್ತು ಅರಬ್ಬಿ ಸಮುದ್ರದ ಮೇಲ್ಭಾಗದಲ್ಲಿ ಉಂಟಾಗಿರುವ ವಾಯು ಚಂಡಮಾರುತದ ಪರಿಚಲನೆಯು ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ.&lt;/p&gt;&lt;h2&gt;&lt;strong&gt;ಕರಾವಳಿ ಕರ್ನಾಟಕಕ್ಕೆ ಭಾರೀ ಮಳೆ ಸೂಚನೆ:&lt;/strong&gt;&lt;/h2&gt;&lt;p&gt;ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಅತ್ಯಂತ ಭಾರೀ ಮಳೆಯಾಗುವ (Extremely Heavy Rain) ಸಾಧ್ಯತೆಯಿದೆ. ಜೂನ್ 10 ಮತ್ತು 11 ರಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಮೀನುಗಾರರು ಮತ್ತು ಸಮುದ್ರ ತೀರದ ನಿವಾಸಿಗಳು ಜಾಗರೂಕರಾಗಿರಲು ತಿಳಿಸಲಾಗಿದೆ. ಇಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.&lt;/p&gt;&lt;h3&gt;&lt;strong&gt;ಉತ್ತರ ಮತ್ತು ದಕ್ಷಿಣ ಒಳನಾಡು:&lt;/strong&gt;&lt;/h3&gt;&lt;p&gt;ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.&lt;/p&gt;&lt;p&gt;ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಜೂನ್ 14 ರವರೆಗೆ ಉತ್ತಮ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.&lt;/p&gt;&lt;h3&gt;&lt;strong&gt;ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?&lt;/strong&gt;&lt;/h3&gt;&lt;p&gt;ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಬಿರುಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ.&lt;/p&gt;&lt;h3&gt;&lt;strong&gt;ತಾಪಮಾನದಲ್ಲಿ ಬದಲಾವಣೆ ಇಲ್ಲ:&lt;/strong&gt;&lt;/h3&gt;&lt;p&gt;ಮಳೆಯ ಅಬ್ಬರದ ನಡುವೆಯೂ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳವರೆಗೆ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್&zwnj;ನಷ್ಟು ಕಡಿಮೆಯಾಗಿದೆ.&lt;/p&gt;&lt;p&gt;ಒಟ್ಟಾರೆಯಾಗಿ, ಜೂನ್ ತಿಂಗಳ ಆರಂಭದಲ್ಲೇ ಮುಂಗಾರು ಚುರುಕಾಗಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಆದರೆ, ಭಾರೀ ಮಳೆಯ ಮುನ್ನೆಚ್ಚರಿಕೆ ಇರುವ ಜಿಲ್ಲೆಗಳಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-weather-forecast-june-2026-monsoon-heavy-rain-alert-bengaluru-sat/articleshow-8a1oyv2"/>
        </item>
        <item>
            <title><![CDATA[ಭಟ್ಕಳ: ಕಳಿನಡ ದುರಂತದಲ್ಲಿ ಸಾವು ಕಂಡ ಕುಟುಂಬದ ಸದಸ್ಯನಿಗೆ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸಿದ ಶಾಸಕ ಮಂಕಾಳ ವೈದ್ಯ]]></title>
            <link>https://kannada.asianetnews.com/karnataka-districts/mankal-vaidya-provides-cooperative-bank-job-to-bhatkal-tragedy-victim-family-san/articleshow-b5yrdhx</link>
            <guid isPermaLink="true">https://kannada.asianetnews.com/karnataka-districts/mankal-vaidya-provides-cooperative-bank-job-to-bhatkal-tragedy-victim-family-san/articleshow-b5yrdhx</guid>
            <pubDate>Sat, 06 Jun 2026 17:33:42 +0530</pubDate>
            <description><![CDATA[&lt;p&gt;ಭಟ್ಕಳದ ನದಿ ದುರಂತದಲ್ಲಿ 11 ಮಂದಿಯನ್ನು ಕಳೆದುಕೊಂಡ ಕುಟುಂಬಕ್ಕೆ ಶಾಸಕ ಮಂಕಾಳ ವೈದ್ಯ ಆಸರೆಯಾಗಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನದಂದು, ಆ ಕುಟುಂಬದ ಸದಸ್ಯರೊಬ್ಬರಿಗೆ ಸಹಕಾರಿ ಬ್ಯಾಂಕ್&zwnj;ನಲ್ಲಿ ಉದ್ಯೋಗ ಕೊಡಿಸುವುದರ ಜೊತೆಗೆ, ಮೃತರ ನೆನಪಿಗಾಗಿ ಸಸಿಗಳನ್ನು ನೆಟ್ಟು ಮಾನವೀಯತೆ ಮೆರೆದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktecvs7aja6ykxz871zxtny5,imgname-mankal-vaidya-bhatkal-mla-1780747199722.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಟ್ಕಳ (ಜೂ.6):&lt;/strong&gt; ಕಳೆದ ತಿಂಗಳು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಇತಿಹಾಸದಲ್ಲಿ ಹಿಂದೆಂದೂ ಆಗದಂಥ ದುರ್ಘಟನೆ ನಡೆದಿತ್ತು. ಕಳಿನಡ ಹೆಕ್ಕಲು ಹೋಗಿ ಹೊಳೆಗೆ ಇಳಿದಿದ್ದ ಒಂದೇ ಕುಟುಂಬದ 11 ಮಂದಿ ವೆಂಕಟಾಪುರ ನದಿಯ ಆಳ ಅಂದಾಜಿಸಲು ಆಗದೆ ಸಾವು ಕಂಡಿದ್ದರು. ತಟ್ಟಿಹಕ್ಕಲ ಪ್ರದೇಶದಲ್ಲಿ ನಡೆದಿದ್ದ ಘಟನೆಗೆ ಪ್ರಧಾನಿ, ರಾಷ್ಟ್ರಪತಿ ಆದಿಯಾಗಿ ಎಲ್ಲರೂ ಮರುಕ ವ್ಯಕ್ತಪಡಿಸಿದ್ದರು. ಆ ಹಂತದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಸರ್ಕಾರದ ವತಿಯಿಂದ ಹಾಗೂ ಮೀನುಗಾರಿಕಾ ಇಲಾಖೆ ವತಿಯಿಂದ ದೊಡ್ಡ ಮಟ್ಟದ ಸಹಾಯ ಹಸ್ತ ಚಾಚಿದ್ದರು. ಒಂದೊಂದು ಕುಟುಂಬಕ್ಕೆ ಅಂದಾಜು 16 ಲಕ್ಷ ರೂಪಾಯಿಗಿಂತಲೂ ಹೆಚ್ಚಿನ ಪರಿಹಾರ ದೊರಕಿಸಿಕೊಡುವಲ್ಲಿ ಶ್ರಮವಹಿಸಿದ್ದರು.&lt;/p&gt;&lt;p&gt;ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಾಸಕ ಮಂಕಾಳ ವೈದ್ಯ, ಜೂನ್&zwnj;.5 ರಂದು ತಮ್ಮ ಹುಟ್ಟುಹಬ್ಬದ ದಿನ ದುರಂತದಲ್ಲಿ ಸಾವು ಕಂಡ ಕುಟುಂಬದ ಸದಸ್ಯರೊಬ್ಬನಿಗೆ ಭಟ್ಕಳದ ಸಹಕಾರಿ ಬ್ಯಾಂಕ್&zwnj;ನಲ್ಲಿ ಕೆಲಸ ದೊರಕಿಸಿಕೊಡುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.&lt;/p&gt;&lt;p&gt;ಇದನ್ನು ಸೋಶಿಯಲ್&zwnj; ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದು, 'ನನ್ನ ಹುಟ್ಟು ಹಬ್ಬದ ದಿನದಂದು 11 ಜನ ಮೃತಪಟ್ಟ ಆ ಕುಟುಂಬದ ಒಬ್ಬನಿಗೆ ನಮ್ಮದೇ ಹಿತೈಷಿ ಬ್ಯಾಂಕ್ ಆದ ಗುರುಕೃಪಾ ಸಹಕಾರಿ ಭಟ್ಕಳ ಬ್ಯಾಂಕ್ ನವರು ಅವರ ಸಂಸ್ಥೆಯಲ್ಲಿ ಒಂದು ಕೆಲಸವನ್ನ ಇಂದು ನನ್ನ ಕೈಯಿಂದ ಹಸ್ತಾಂತರಿಸಿದರು. ಇದು ನನಗೆ ಅತ್ಯಂತ ಸಂತೋಷವಾದ ಕ್ಷಣವಾಗಿದ್ದು, ಈ ಗುರುಕೃಪ ಸಹಕಾರಿ ಬ್ಯಾಂಕಿಗೆ ಅನಂತ ಅನಂತ ಧನ್ಯವಾದಗಳು ತಿಳಿಸುತ್ತಿದ್ದೇನೆ. ಇಂತಹ ಪುಣ್ಯದ ಕಾರ್ಯಕ್ಕೆ ಮನಸ್ಸು ಮಾಡಿ ಅವರಿಗೆ ಕೆಲಸ ಕೊಡಿಸಲು ಮುಂದಾದ ಎಲ್ಲಾ ನಿರ್ದೇಶಕ ಅಧ್ಯಕ್ಷರು,ಪದಾಧಿಕಾರಿಗಳಿಗೆ ಅದೆಷ್ಟು ನಮನಗಳನ್ನು ಸಲ್ಲಿಸಿದರು ಕಡಿಮೆ.&lt;/p&gt;&lt;p&gt;ಹೀಗೆ ತಾಲೂಕಿನಲ್ಲಿರುವಂತಹ ಬ್ಯಾಂಕುಗಳಲ್ಲಿ ಉಳಿದವರಿಗೂ ಕೆಲಸ ಕೊಡಿಸಬೇಕೆನ್ನುವ ನನ್ನ ಕನಸಿಗೆ ನಾವೆಲ್ಲರೂ ಜೊತೆಯಾಗಿ ಒಮ್ಮತದಿಂದ ಪಕ್ಷ ಭೇದ ಮರೆತು ಒಗ್ಗಟ್ಟಾಗಬೇಕಿದೆ. ಈ ಬಾರಿ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ತಮಗಾದ ಸಹಾಯವನ್ನು ಆ ಕುಟುಂಬಕ್ಕೆ ಮಾಡಿ ಎನ್ನುವ ಮಾತನ್ನು ನಿಜವಾಗಲೂ ಅರ್ಥಪೂರ್ಣವಾಗಿ ಮಾಡಿದ ನಿಮಗೆ ನನ್ನ ಹೃದಯ ಅಂತರಾಳದಿಂದ ಅಭಿನಂದಿಸುತ್ತಿದ್ದೇನೆ .ನಿಮ್ಮ ಬ್ಯಾಂಕಿಗೆ ಮತ್ತಷ್ಟು ಶಕ್ತಿ ಸಿಗಲಿ ಇನ್ನಷ್ಟು ಶ್ರೇಯೋಭಿವೃದ್ಧಿ ಆಗಲಿ ' ಎಂದು ಬರೆದುಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಮೃತರ ನೆನಪಿಗೆ ಅವರ ಹೆಸರಲ್ಲೇ ಸಸಿ ನೆಟ್ಟ ಮಂಕಾಳ ವೈದ್ಯ&lt;/strong&gt;&lt;/h2&gt;&lt;p&gt;ದುರಂತದ ಕಾರಣಕ್ಕಾಗಿ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋದಿಲ್ಲ ಎಂದಿದ್ದ ಸಚಿವ ಮಂಕಾಳ ವೈದ್ಯ, ಜನ್ಮದಿನದಂದು ಶಿರಾಲಿಯ ಜನತಾ ವಿದ್ಯಾಲಯ ಕ್ಯಾಂಪಸ್&zwnj;ನಲ್ಲಿ11 ಜನರ ಮೃತರ ಹೆಸರಿನಲ್ಲಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿಸಿಕೊಂಡರು.&lt;/p&gt;&lt;p&gt;&amp;nbsp;&lt;/p&gt;&amp;nbsp;&amp;nbsp;&amp;nbsp;&amp;nbsp;View this post on Instagram&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&amp;nbsp;&lt;p&gt;A post shared by Mankal S Vaidya (@mankalsvaidya_official)&lt;/p&gt;&lt;p&gt;&amp;nbsp;&lt;/p&gt;&lt;p&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>uttara-kannada</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/mankal-vaidya-provides-cooperative-bank-job-to-bhatkal-tragedy-victim-family-san/articleshow-b5yrdhx"/>
        </item>
        <item>
            <title><![CDATA[ಅಂಕೋಲಾ ಬಳಿ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ ಪಲ್ಟಿ, ಆಂಧ್ರ ಮೂಲದ ಪ್ರಯಾಣಿಕ ಸಾವು]]></title>
            <link>https://kannada.asianetnews.com/karnataka-districts/seabird-bus-accident-ankola-nh-52-one-dead-20-injured-bellary-to-goa-san/articleshow-begdoay</link>
            <guid isPermaLink="true">https://kannada.asianetnews.com/karnataka-districts/seabird-bus-accident-ankola-nh-52-one-dead-20-injured-bellary-to-goa-san/articleshow-begdoay</guid>
            <pubDate>Sat, 30 May 2026 12:33:15 +0530</pubDate>
            <description><![CDATA[ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvts61vt5dbbk26h2g35qkt,imgname-seabird-bus-accident-1780124260411.jpeg" type="image/jpeg" height="390" width="690"/>
            <content:encoded><![CDATA[&lt;p&gt;ಕಾರವಾರ/ಅಂಕೋಲಾ (ಮೇ.30): ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್&zwnj; ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳ್ಳಾರಿಯಿಂದ ಪ್ರವಾಸಿಗರನ್ನು ಹೊತ್ತು ಗೋವಾಕ್ಕೆ ತೆರಳುತ್ತಿದ್ದ &lsquo;ಸೀಬರ್ಡ್&rsquo; (Sea Bird) ಸಂಸ್ಥೆಗೆ ಸೇರಿದ ಬಸ್, ರಾಷ್ಟ್ರೀಯ ಹೆದ್ದಾರಿ 52 ರ ಅಂಕೋಲಾ - ಯಲ್ಲಾಪುರ ರಸ್ತೆಯ ಕಂಚಿನಬಾಗಿಲು ತಲುಪುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ನೇರ ಕಾರಣ ಎನ್ನಲಾಗುತ್ತಿದ್ದು, ಬಸ್ಸು ಹೆದ್ದಾರಿಗೆ ಸಂಪೂರ್ಣವಾಗಿ ಅಡ್ಡಲಾಗಿ ಪಲ್ಟಿಯಾಗಿದೆ. ದುರಂತದ ಸಮಯದಲ್ಲಿ ಬಸ್&zwnj;ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.&lt;/p&gt;&lt;p&gt;ಬಸ್ ಪಲ್ಟಿಯಾದ ಭೀಕರತೆಗೆ ಆಂಧ್ರಪ್ರದೇಶ ಮೂಲದ ಶರಣಯ್ಯ (42) ಎಂಬ ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್&zwnj;ನಲ್ಲಿದ್ದ ಉಳಿದ 36 ಪ್ರಯಾಣಿಕರ ಪೈಕಿ 20 ಜನರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ತಕ್ಷಣವೇ ಎಲ್ಲ ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ವಿಜ್ಞಾನ ಸಂಸ್ಥೆ (KRIMS - ಕ್ರಿಮ್ಸ್) ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕಲ್ಪಿಸಲಾಗಿದೆ.&lt;/p&gt;&lt;p&gt;ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸ್ತಬ್ಧಗೊಂಡ ಸಂಚಾರ!&lt;/p&gt;&lt;p&gt;ಭಾರೀ ಗಾತ್ರದ ಸೀಬರ್ಡ್ ಬಸ್ ರಾಷ್ಟ್ರೀಯ ಹೆದ್ದಾರಿ 52 ರ ಮಧ್ಯದಲ್ಲೇ ಅಡ್ಡವಾಗಿ ಬಿದ್ದಿದ್ದರಿಂದ ಅಂಕೋಲಾ-ಯಲ್ಲಾಪುರ ರಸ್ತೆಯ ಸಂಪೂರ್ಣ ವಾಹನ ಸಂಚಾರ ಗಂಟೆಗಟ್ಟಲೆ ಸ್ಥಗಿತಗೊಂಡಿತ್ತು. ಹೆದ್ದಾರಿಯ ಎರಡೂ ಬದಿಗಳಲ್ಲಿ ಕಿಲೋಮೀಟರ್&zwnj;ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಭೀಕರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಅಂಕೋಲಾ ಪೊಲೀಸರು ಕ್ರೇನ್ ಬಳಸಿ ಬಸ್ಸನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಿ, ಟ್ರಾಫಿಕ್ ಸುಗಮಗೊಳಿಸಲು ಹರಸಾಹಸ ಪಟ್ಟರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>uttara-kannada</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/seabird-bus-accident-ankola-nh-52-one-dead-20-injured-bellary-to-goa-san/articleshow-begdoay"/>
        </item>
        <item>
            <title><![CDATA[ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ; ಮೈಕ್ ಮುಂದೆಯೇ ಸಾವು]]></title>
            <link>https://kannada.asianetnews.com/karnataka-districts/uttara-kannada-honnavara-religious-scholar-abdul-latif-madani-dies-of-heart-attack-while-giving-call-to-prayer-azan-mrq/articleshow-e3rghuk</link>
            <guid isPermaLink="true">https://kannada.asianetnews.com/karnataka-districts/uttara-kannada-honnavara-religious-scholar-abdul-latif-madani-dies-of-heart-attack-while-giving-call-to-prayer-azan-mrq/articleshow-e3rghuk</guid>
            <pubDate>Wed, 10 Jun 2026 08:56:57 +0530</pubDate>
            <description><![CDATA[ಹೊನ್ನಾವರದ ಮಸೀದಿಯೊಂದರಲ್ಲಿ ಆಝಾನ್ ನೀಡುತ್ತಿದ್ದ ವೇಳೆ ಬಂಟ್ವಾಳ ಮೂಲದ ಧರ್ಮಗುರು ಅಬ್ದುಲ್ ಲತೀಫ್ ಮದನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆಯ ನಮಾಝ್&zwnj;ಗೆ ಬಾಂಗ್ ಕೊಡುತ್ತಿದ್ದಾಗ ಅವರು ಮೈಕ್ ಮುಂದೆಯೇ ಕುಸಿದು ಬಿದ್ದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktqs0nce2ddj3hadhk25awws,imgname-abdul-latif-madani-1781061932430.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ:&lt;/strong&gt; ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಬಂಟ್ವಾಳ (Bantwal, Uttara Kannada) ಮೂಲದ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಮಂಗಳವಾರ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ, ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತರು.&lt;/p&gt;&lt;p&gt;&amp;nbsp;ಸಂಜೆ ಸುಮಾರು 4 ಗಂಟೆಯ ನಮಾಜ್ ಸಮಯಕ್ಕೆ ಸರಿಯಾಗಿ ಹೊನ್ನಾವರದ ಮಸೀದಿಯಲ್ಲಿ ಅಬ್ದುಲ್ ಲತೀಫ್ ಮದನಿ ಆಝಾನ್ ನೀಡುತ್ತಿದ್ದರು. ಈ ವೇಳೆ ಅವರಿಗೆ ದಿಢೀರನೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಪರಿಣಾಮವಾಗಿ ಅವರು ಮೈಕ್ ಮುಂದೆಯೇ ಸ್ಥಳದಲ್ಲೇ ಕುಸಿದು ಕೊನೆಯುಸಿರೆಳೆದಿದ್ದಾರೆ. ಮೃತ ಅಬ್ದುಲ್ ಲತೀಫ್ ಮದನಿ ಕಳೆದ ಒಂದು ವರ್ಷದಿಂದ ಈ ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿದ್ದರು.&lt;/p&gt;&lt;h2&gt;&lt;strong&gt;ಸಾವಿನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ&lt;/strong&gt;&lt;/h2&gt;&lt;p&gt;ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಬ್ದುಲ್ ಲತೀಫ್ ಮದನಿ ಅವರ ನಿಧನಕ್ಕೆ ಮುಹಿದ್ದೀನ್ ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಂತಾಪ ಸೂಚಿಸಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/uttara-kannada-honnavara-religious-scholar-abdul-latif-madani-dies-of-heart-attack-while-giving-call-to-prayer-azan-mrq/articleshow-e3rghuk"/>
        </item>
        <item>
            <title><![CDATA[ಚೆಕ್ ಬೌನ್ಸ್ ಪ್ರಕರಣ: ಸ್ವತಃ ವಾದಿಸಿ ಹೈಕೋರ್ಟ್‌ನಲ್ಲೂ ಗೆಲುವು ಸಾಧಿಸಿದ 85 ವರ್ಷದ ನಿವೃತ್ತ ಯೋಧ]]></title>
            <link>https://kannada.asianetnews.com/karnataka-districts/retired-army-man-wins-cheque-bounce-case-without-lawyer-karwar-gvd/articleshow-ela5pbg</link>
            <guid isPermaLink="true">https://kannada.asianetnews.com/karnataka-districts/retired-army-man-wins-cheque-bounce-case-without-lawyer-karwar-gvd/articleshow-ela5pbg</guid>
            <pubDate>Thu, 11 Jun 2026 22:28:30 +0530</pubDate>
            <description><![CDATA[&lt;p&gt;ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ 85 ವರ್ಷದ ನಿವೃತ್ತ ಯೋಧರೊಬ್ಬರು ವಕೀಲರ ಸಹಾಯವಿಲ್ಲದೆ ಸ್ವತಃ ತಾವೇ ವಾದ ಮಂಡಿಸಿ, ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗೆ ಸೋಲಿನ ರುಚಿ ತೋರಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktvr32qhdttzfbarsgvbtjf2,imgname-ch-1781195180785.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ (ಜೂ.11): &lt;/strong&gt;ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ 85 ವರ್ಷದ ನಿವೃತ್ತ ಯೋಧರೊಬ್ಬರು ವಕೀಲರ ಸಹಾಯವಿಲ್ಲದೆ ಸ್ವತಃ ತಾವೇ ವಾದ ಮಂಡಿಸಿ, ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗೆ ಸೋಲಿನ ರುಚಿ ತೋರಿಸಿದ್ದಾರೆ. ಬರೋಬ್ಬರಿ 11 ವರ್ಷಗಳ ಸುದೀರ್ಘ ಕಾನೂನು ಹೋರಾಟದಲ್ಲಿ ಈ ಇಳಿವಯಸ್ಸಿನ ಸೇನಾನಿಗೆ ಅಂತಿಮ ಜಯ ಸಿಕ್ಕಿದೆ. ಕಾರವಾರದ ಕೋಡಿಬಾಗದ ನಿವಾಸಿ ಹಾಗೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಶೋಕ್ ದತ್ತಾತ್ರಯ ಜೋಶಿ (85) ಅವರೇ ನ್ಯಾಯಕ್ಕಾಗಿ ಹೋರಾಡಿ ಗೆದ್ದ ಛಲವಾದಿ.&lt;/p&gt;&lt;p&gt;ಗೋವಾದ ಪೊಂಡಾ ಮೂಲದ ಸುರಕ್ಷಾ ಇಂಡಿಯಾದ ಸಂಸ್ಥಾಪಕ ಸಂತೋಷ್ ಬಾಲಚಂದ್ರ ಕಾಮತ್ ಎಂಬವರು 2013-14ನೇ ಸಾಲಿನಲ್ಲಿ ಅಶೋಕ್ ಜೋಶಿ ಅವರಿಂದ ₹2 ಲಕ್ಷ ಕೈಗಡ ಸಾಲ ಪಡೆದಿದ್ದರು. ಈ ಹಣವನ್ನು ಮರಳಿಸಲು 2015ರಲ್ಲಿ ₹2 ಲಕ್ಷ ಮುಖಬೆಲೆಯ ಚೆಕ್ ನೀಡಿದ್ದರು. ಆದರೆ, ಬ್ಯಾಂಕ್&zwnj;ನಲ್ಲಿ ಹಣವಿಲ್ಲದೆ ಆ ಚೆಕ್ ಬೌನ್ಸ್ ಆಗಿತ್ತು. ಹಣ ಮರುಪಾವತಿಸದ ಸಂತೋಷ್ ಕಾಮತ್ ವಿರುದ್ಧ ಅಶೋಕ್ ಜೋಶಿ ಕಾರವಾರದ ಸಿವಿಲ್ ಜಡ್ಜ್ ಮತ್ತು ಜೆಎಂಎಫ್&zwnj;ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.&lt;/p&gt;&lt;p&gt;ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು 28-10-2024ರಂದು ಸಂತೋಷ್ ಕಾಮತ್ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದಲ್ಲದೆ, ಅಶೋಕ್ ಅವರಿಗೆ ₹3,63,800 ಪಾವತಿಸುವಂತೆ ಆದೇಶಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿ ಸಂತೋಷ್ ಕಾಮತ್, ಕಾರವಾರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ 24-04-2025ರಂದು ನ್ಯಾಯಾಲಯ ಈ ಮೇಲ್ಮನವಿಯನ್ನು ವಜಾಗೊಳಿಸಿತ್ತು.&lt;/p&gt;&lt;h2&gt;&lt;strong&gt;ತೀರ್ಪನ್ನು ಎತ್ತಿಹಿಡಿದಿದೆ&lt;/strong&gt;&lt;/h2&gt;&lt;p&gt;ಇದರ ಹೊರತಾಗಿಯೂ ಪಟ್ಟು ಬಿಡದ ಆರೋಪಿ, ಧಾರವಾಡದ ಹೈಕೋರ್ಟ್ ಪೀಠದಲ್ಲಿ ಮೇಲ್ಮನವಿ ದಾಖಲಿಸಿದ್ದರು. ಜೂ. 5ರಂದು ವಿಚಾರಣೆ ನಡೆಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ಆರೋಪಿಯ ಅರ್ಜಿಯನ್ನು ವಜಾಗೊಳಿಸಿ, ಕೆಳಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ವಿಶೇಷವೆಂದರೆ, 85ರ ಇಳಿವಯಸ್ಸಿನಲ್ಲೂ ಅಶೋಕ್ ದತ್ತಾತ್ರಯ ಜೋಶಿ ಯಾವುದೇ ವಕೀಲರನ್ನು ನೇಮಿಸಿಕೊಳ್ಳದೆ, ಕೆಳಹಂತದ ನ್ಯಾಯಾಲಯದಿಂದ ಹಿಡಿದು ಹೈಕೋರ್ಟ್&zwnj;ವರೆಗೆ ಎಲ್ಲಾ ನ್ಯಾಯಾಲಯಗಳಲ್ಲೂ ತಾವೇ ಖುದ್ದಾಗಿ ವಾದ ಮಂಡಿಸಿ ನ್ಯಾಯ ಪಡೆದುಕೊಂಡಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/retired-army-man-wins-cheque-bounce-case-without-lawyer-karwar-gvd/articleshow-ela5pbg"/>
        </item>
        <item>
            <title><![CDATA[ಕಾರವಾರ-ಹಳಗಾ ಸಾರಿಗೆ ಬಸ್ ಉಳಗಾ ವರೆಗೆ ವಿಸ್ತರಿಸಲು ಆಗ್ರಹ: ಡಿಪೋ ಮ್ಯಾನೇಜರ್‌ಗೆ ಮನವಿ]]></title>
            <link>https://kannada.asianetnews.com/karnataka-districts/demand-to-extend-karwar-halaga-transport-bus-to-ulaga-appeal-to-depot-manager-mrq/articleshow-gtgk2kz</link>
            <guid isPermaLink="true">https://kannada.asianetnews.com/karnataka-districts/demand-to-extend-karwar-halaga-transport-bus-to-ulaga-appeal-to-depot-manager-mrq/articleshow-gtgk2kz</guid>
            <pubDate>Tue, 09 Jun 2026 07:46:01 +0530</pubDate>
            <description><![CDATA[ಕಾರವಾರದಿಂದ ಹಳಗಾಕ್ಕೆ ಸಂಚರಿಸುವ ಸಾರಿಗೆ ಬಸ್ಸನ್ನು ನೆರೆಯ ಉಳಗಾ ಗ್ರಾಮದವರೆಗೂ ವಿಸ್ತರಿಸಬೇಕೆಂದು ಹಳಗಾ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಕುರಿತು ಸಾರಿಗೆ ಇಲಾಖೆಯ ಡಿಪೋ ಮ್ಯಾನೇಜರ್&zwnj;ಗೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಾರ್ಗ ವಿಸ್ತರಿಸಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktn2j8sgbxsed35pj44jf2dd,imgname-karwar-halaga-1780971283248.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ:&lt;/strong&gt; ಕಾರವಾರದಿಂದ ಹಳಗಾ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್ಸನ್ನು ನೆರೆಯ ಉಳಗಾ ಗ್ರಾಮದವರೆಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಹಳಗಾ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸೋಮವಾರ ಕಾರವಾರ ಸಾರಿಗೆ ಬಸ್ ಡಿಪೋ ಮ್ಯಾನೇಜರ್&zwnj;ಗೆ ಮನವಿ ಸಲ್ಲಿಸಿದರು.&lt;/p&gt;&lt;h2&gt;&lt;strong&gt;ಕೇವಲ 2 ಕಿಮೀ ದೂರದಲ್ಲಿರುವ ಉಳಗಾ ಗ್ರಾಮ&lt;/strong&gt;&lt;/h2&gt;&lt;p&gt;ಪ್ರಸ್ತುತ ಕಾರವಾರ ಬಸ್ ನಿಲ್ದಾಣದಿಂದ ಪ್ರತಿದಿನ ಮುಂಜಾನೆ 6.30ಕ್ಕೆ ಹಾಗೂ ಮಧ್ಯಾಹ್ನ 2.15ಕ್ಕೆ ಹೊರಡುವ ಬಸ್, ಹಣಕೋಣಜೂಗ ಮಾರ್ಗವಾಗಿ ಹಳಗಾ ಗ್ರಾಮಕ್ಕೆ ತಲುಪುತ್ತಿದೆ. ಆದರೆ, ಈ ಬಸ್ ಸೇವೆ ಕೇವಲ ಹಳಗಾ ಗ್ರಾಮಕ್ಕೆ ಮಾತ್ರ ಸೀಮಿತವಾಗಿದೆ. ಇದರಿಂದಾಗಿ ಹಳಗಾದಿಂದ ಕೇವಲ 2 ಕಿಮೀ ದೂರದಲ್ಲಿರುವ ಉಳಗಾ ಗ್ರಾಮದ ವಿದ್ಯಾರ್ಥಿಗಳು ಹಾಗೂ ದಿನನಿತ್ಯ ಕೆಲಸ ಕಾರ್ಯಗಳಿಗೆ ಓಡಾಡುವ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮದ ಮುಖಂಡ ಕುಮಾರ್ ನಾಯ್ಕ್ ಅಧಿಕಾರಿಗಳಿಗೆ ವಿವರಿಸಿದರು.&lt;/p&gt;&lt;p&gt;ಸಾರ್ವಜನಿಕರ ಹಿತದೃಷ್ಟಿಯಿಂದ ಈ ಬಸ್ ಮಾರ್ಗವನ್ನು ತಕ್ಷಣವೇ ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದರು.&lt;/p&gt;&lt;h3&gt;&lt;strong&gt;ಅಗತ್ಯ ಕ್ರಮದ ಭರವಸೆ&lt;/strong&gt;&lt;/h3&gt;&lt;p&gt;ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿ, ಮನವಿ ಸ್ವೀಕರಿಸಿದ ಕಾರವಾರ ಡಿಪೋ ಮ್ಯಾನೇಜರ್ ಸೌಮ್ಯಾ ನಾಯ್ಕ ಸಕಾರಾತ್ಮಕವಾಗಿ ಸ್ಪಂದಿಸಿದರು. ಕೂಡಲೇ ಈ ಮಾರ್ಗವನ್ನು ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬೇಡಿಕೆಯಂತೆ ಬಸ್ ಸೇವೆಯನ್ನು ಉಳಗಾವರೆಗೂ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.&lt;/p&gt;&lt;p&gt;ಗ್ರಾಮದ ಪ್ರಮುಖರಾದ ಮನೋಜ್ ನಾಯ್ಕ್, ಯೋಗೇಶ್ ನಾಯ್ಕ್, ಉದಯ್ ನಾಯ್ಕ್ ಸೇರಿದಂತೆ ಹಲವು ಗ್ರಾಮಸ್ಥರು ಇದ್ದರು.&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/demand-to-extend-karwar-halaga-transport-bus-to-ulaga-appeal-to-depot-manager-mrq/articleshow-gtgk2kz"/>
        </item>
        <item>
            <title><![CDATA[ಕುಸಿದ ಕಡವಾಡದ 60 ವರ್ಷ ಹಳೆಯ ಐತಿಹಾಸಿಕ ಸೇತುವೆ;  ಮೀನುಗಾರರ ಬದುಕಿನ ಆಸರೆ ಈ ಸೇತುವೆ]]></title>
            <link>https://kannada.asianetnews.com/karnataka-districts/uttara-kannada-a-60-year-old-bridge-has-collapsed-in-kadawada-village-in-karwar-mrq/articleshow-h1y9mxn</link>
            <guid isPermaLink="true">https://kannada.asianetnews.com/karnataka-districts/uttara-kannada-a-60-year-old-bridge-has-collapsed-in-kadawada-village-in-karwar-mrq/articleshow-h1y9mxn</guid>
            <pubDate>Wed, 10 Jun 2026 08:41:56 +0530</pubDate>
            <description><![CDATA[ಕಾರವಾರದ ಕಡವಾಡ ಗ್ರಾಮದಲ್ಲಿ 60 ವರ್ಷಗಳ ಇತಿಹಾಸವಿದ್ದ, ರಾಮಕೃಷ್ಣ ಹೆಗಡೆಯವರಿಂದ ಉದ್ಘಾಟನೆಗೊಂಡಿದ್ದ ಹಳೆಯ ಸೇತುವೆಯು ಬಿರುಗಾಳಿ ಮಳೆಗೆ ಕುಸಿದು ಬಿದ್ದಿದೆ. ವಾಹನ ಸಂಚಾರಕ್ಕೆ ಮುಚ್ಚಿದ್ದರೂ, ಈ ಸೇತುವೆಯು ನೂರಾರು ಸ್ಥಳೀಯ ಮೀನುಗಾರ ಕುಟುಂಬಗಳ ಜೀವನೋಪಾಯಕ್ಕೆ ಪ್ರಮುಖ ಆಧಾರವಾಗಿತ್ತು.]]></description>
            <media:content url="https://static.asianetnews.com/images/w-1280,h-720,format-jpg,imgid-01ktqr1swn1a5fpam5hcr6g3sk,imgname-kadavada-bridge-1781060921237.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ: &lt;/strong&gt;ತಾಲೂಕಿನ ಕಡವಾಡ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಾಗೂ ಸುಮಾರು ಆರು ದಶಕಗಳ ಸುದೀರ್ಘ ಇತಿಹಾಸ ಹೊಂದಿದ್ದ ಹಳೆಯ ಸೇತುವೆ ಸೋಮವಾರ ರಾತ್ರಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಕುಸಿದು ಬಿದ್ದಿದೆ.&lt;/p&gt;&lt;h2&gt;&lt;strong&gt;1964ರಲ್ಲಿ ₹69 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೇತುವೆ&lt;/strong&gt;&lt;/h2&gt;&lt;p&gt;ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಕಾಲದಲ್ಲಿ ಕಡವಾಡ ಪ್ರಮುಖ ವ್ಯಾಪಾರ ವಹಿವಾಟಿನ ಕೇಂದ್ರವಾಗಿತ್ತು. ಸೇತುವೆಗಳಿರದ ಆ ಕಾಲದಲ್ಲಿ ಕಡವಾಡ ಹಾಗೂ ಸುಂಕೇರಿಗೆ ಹೋಗಿ ಬರಲು ದೋಣಿಗಳೇ ಆಸರೆಯಾಗಿದ್ದವು. ಜನರ ಈ ಕಷ್ಟವನ್ನು ಅರಿತ ಅಂದಿನ ಹಣಕಾಸು ಸಚಿವರಾಗಿದ್ದ ದಿ. ರಾಮಕೃಷ್ಣ ಹೆಗಡೆ 1964ರಲ್ಲಿ ₹69 ಲಕ್ಷ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ, ಉದ್ಘಾಟಿಸಿದ್ದರು. ಅಂದಿನಿಂದ ಈ ಸೇತುವೆ ಕಡವಾಡ ಭಾಗದ ಜನರ ದೈನಂದಿನ ಸಂಚಾರಕ್ಕೆ ಪ್ರಮುಖ ಸಂಪರ್ಕ ಮಾರ್ಗವಾಗಿತ್ತು.&lt;/p&gt;&lt;p&gt;ಕಾಲಕ್ರಮೇಣ ಸೇತುವೆ ದುರ್ಬಲಗೊಂಡು ಜೀರ್ಣಾವಸ್ಥೆ ತಲುಪಿದ ಹಿನ್ನೆಲೆಯಲ್ಲಿ, ನೂತನ ಸೇತುವೆ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇದರ ಮೇಲೆ ವಾಹನ ಹಾಗೂ ಸಾರ್ವಜನಿಕ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೂ, ಕಡವಾಡ ಭಾಗದ ಮೀನುಗಾರರ ಪಾಲಿಗೆ ಈ ಸೇತುವೆ ಇನ್ನೂ ಜೀವಂತ ನೆನಪಿನ ಹಾಗೂ ಬದುಕಿನ ಆಸರೆಯ ತಾಣವಾಗಿಯೇ ಉಳಿದುಕೊಂಡಿತ್ತು.&lt;/p&gt;&lt;p&gt;ಮಳೆಯ ಪರಿಣಾಮ ಸೇತುವೆಯ ಮಧ್ಯಭಾಗ ಸಂಪೂರ್ಣವಾಗಿ ಕುಸಿದು ಜಲಸಮಾಧಿಯಾಗಿದ್ದು, ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆಯ ಉಳಿದ ಭಾಗಗಳೂ ಕುಸಿಯುವ ಅಪಾಯವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕರು ಹಾಗೂ ಮೀನುಗಾರರು ಸೇತುವೆ ಬಳಿ ತೆರಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.&lt;/p&gt;&lt;h3&gt;&lt;strong&gt;ನೂರಾರು ಕುಟುಂಬಗಳ ತೊಂದರೆ&lt;/strong&gt;&lt;/h3&gt;&lt;p&gt;ಸೇತುವೆಯ ಕೆಳಗೆ 54 (ಗಾಲಿ) ಭಾಗಗಳಿದ್ದು, ಕಾಳಿ ನದಿಯ ಮೇಲ್ಭಾಗದಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ ಮೀನುಗಾರಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿತ್ತು. ಪ್ರತಿದಿನ ನೀರಿನ ಇಳಿತದ ಸಮಯದಲ್ಲಿ, ಸಂಜೆಯಾಗುತ್ತಿದ್ದಂತೆ ಇಲ್ಲಿನ ನೂರಕ್ಕೂ ಅಧಿಕ ಕುಟುಂಬದ ಮೀನುಗಾರರು ಸಿಗಡಿ ಹಿಡಿದು ಮಾರಾಟ ಮಾಡಿ ಜೀವನೋಪಾಯ ನಡೆಸುತ್ತಿದ್ದರು. ಮಳೆಗಾಲದಲ್ಲಿಯೂ ಇಲ್ಲಿ ಮೀನುಗಾರರ ಚಟುವಟಿಕೆ ಬಿರುಸಿನಿಂದ ಸಾಗುತ್ತಿತ್ತು.&lt;/p&gt;&lt;p&gt;ಸೇತುವೆ ಮೇಲೆ ಸಂಚಾರ ಮುಚ್ಚಿದ್ದರೂ ಮೀನುಗಾರರ ಬದುಕಿಗೆ ಅದು ಅತಿದೊಡ್ಡ ಆಸರೆಯಾಗಿತ್ತು. ಹಲವು ಕುಟುಂಬಗಳ ದಿನನಿತ್ಯದ ಜೀವನ ಈ ಸೇತುವೆ ಸುತ್ತಲೇ ಸಾಗುತ್ತಿತ್ತು ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/uttara-kannada-a-60-year-old-bridge-has-collapsed-in-kadawada-village-in-karwar-mrq/articleshow-h1y9mxn"/>
        </item>
        <item>
            <title><![CDATA[ಶಾಲಾ ಆರಂಭ 15 ನಿಮಿಷ ಮುಂದೂಡಿ, ಮುಕ್ತಾಯದ ಸಮಯದಲ್ಲಿ ಬದಲಾವಣೆ ಬೇಡ; ಶಿಕ್ಷಕರ ಮನವಿ]]></title>
            <link>https://kannada.asianetnews.com/karnataka-districts/uttara-kannada-delay-school-start-time-by-15-minutes-appeal-from-primary-school-teachers-association-mrq/articleshow-h8vybu3</link>
            <guid isPermaLink="true">https://kannada.asianetnews.com/karnataka-districts/uttara-kannada-delay-school-start-time-by-15-minutes-appeal-from-primary-school-teachers-association-mrq/articleshow-h8vybu3</guid>
            <pubDate>Thu, 11 Jun 2026 07:50:05 +0530</pubDate>
            <description><![CDATA[&lt;p&gt;ಶಾಲಾ ಆರಂಭದ ಸಮಯವನ್ನು 15 ನಿಮಿಷಗಳ ಕಾಲ ಮುಂದೂಡಿ, ಆದ್ರೆ ಶಾಲಾ ಮುಕ್ತಾಯದ ಸಮಯದಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktt7c4qfe9htwrep4vwzwv42,imgname-school-time-changing-request-1781144097519.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ: &lt;/strong&gt;ಉತ್ತರ ಕನ್ನಡ ಜಿಲ್ಲೆಯ ವಿಶಿಷ್ಟ ಭೌಗೋಳಿಕ ಪರಿಸ್ಥಿತಿ ಹಾಗೂ ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶಾಲೆಗಳ ಆರಂಭದ ಸಮಯವನ್ನು 15 ನಿಮಿಷ ಮುಂದೂಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.&lt;/p&gt;&lt;h2&gt;&lt;strong&gt;ಬಸ್&zwnj;ಗಳ ಅಲಭ್ಯತೆ&lt;/strong&gt;&lt;/h2&gt;&lt;p&gt;ಜಿಲ್ಲೆಯ ಬಹುತೇಕ ತಾಲೂಕುಗಳು ಗುಡ್ಡಗಾಡು ಹಾಗೂ ದುರ್ಗಮ ಪ್ರದೇಶಗಳಿಂದ ಕೂಡಿವೆ. ಹಲವು ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾದ ಸಾರಿಗೆ ಹಾಗೂ ಸಂಪರ್ಕ ವ್ಯವಸ್ಥೆಯ ಕೊರತೆಯಿದೆ. ಬಸ್&zwnj;ಗಳ ಅಲಭ್ಯತೆಯಿಂದಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಅರಿತು, ಶಾಲಾ ಆರಂಭದ ವೇಳೆಯಲ್ಲಿ ತುಸು ಬದಲಾವಣೆ ಮಾಡುವಂತೆ ಸಂಘದ ಪದಾಧಿಕಾರಿಗಳು ಮನವಿಯಲ್ಲಿ ಕೋರಿದ್ದಾರೆ.&lt;/p&gt;&lt;p&gt;ಪ್ರಸ್ತುತ 1ರಿಂದ 8ನೇ ತರಗತಿವರೆಗಿನ ಶಾಲೆಗಳು ಬೆಳಗ್ಗೆ 9.30ಕ್ಕೆ ಆರಂಭವಾಗಿ, ಸಂಜೆ 4.30ಕ್ಕೆ ಮುಕ್ತಾಯಗೊಳ್ಳುತ್ತಿವೆ. ಶಾಲಾ ಮುಕ್ತಾಯದ ಸಮಯದಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ, ಆದರೆ, ಶಾಲಾ ಆರಂಭದ ಸಮಯವನ್ನು ಮಾತ್ರ ಬೆಳಗ್ಗೆ 9.30ರ ಬದಲು 9.45ಕ್ಕೆ ನಿಗದಿಪಡಿಸುವಂತೆ ಶಿಕ್ಷಕರು ವಿನಂತಿಸಿದ್ದಾರೆ.&lt;/p&gt;&lt;h3&gt;&lt;strong&gt;ಶನಿವಾರ ಸಮಯದಲ್ಲಿ ಬದಲಾವಣೆ ಬೇಡವಂತೆ&lt;/strong&gt;&lt;/h3&gt;&lt;p&gt;ಇನ್ನು ಶನಿವಾರದ ಶಾಲಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂದು ಸಂಘ ಸ್ಪಷ್ಟಪಡಿಸಿದೆ. ಪ್ರಸ್ತುತ ಶನಿವಾರದಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.40ರವರೆಗೆ ನಡೆಯುತ್ತಿರುವ ತರಗತಿಗಳನ್ನು ಯಥಾಸ್ಥಿತಿಯಲ್ಲಿಯೇ ಮುಂದುವರಿಸಬೇಕು.&lt;/p&gt;&lt;p&gt;ಆದರೆ, ಶಿಕ್ಷಣ ಇಲಾಖೆಯ ಕರ್ತವ್ಯ ಆ್ಯಪ್&zwnj;ನಲ್ಲಿ ಶನಿವಾರದ ಶಾಲಾ ಅವಧಿಯನ್ನು ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಎಂದು ತಪ್ಪಾಗಿ ನಮೂದಿಸಲಾಗಿದೆ. ಅದನ್ನು ವಾಸ್ತವಿಕ ವೇಳಾಪಟ್ಟಿಗೆ ಅನುಗುಣವಾಗಿ ತಕ್ಷಣವೇ ಪರಿಷ್ಕರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ; ಮೈಕ್ ಮುಂದೆಯೇ ಸಾವು&lt;/strong&gt;&lt;/p&gt;&lt;p&gt;ಶಿಕ್ಷಕರ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ, ಶಿಕ್ಷಕರ ಸಂಘದ ಈ ಬೇಡಿಕೆ ನ್ಯಾಯಸಮ್ಮತವಾಗಿದೆ. ಈ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.&lt;/p&gt;&lt;p&gt;ಸಂಘದ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ, ಪ್ರಧಾನ ಕಾರ್ಯದರ್ಶಿ ಮಂಜುನಾಥ ನಾಯಕ ಮತ್ತಿತರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕುಸಿದ ಕಡವಾಡದ 60 ವರ್ಷ ಹಳೆಯ ಐತಿಹಾಸಿಕ ಸೇತುವೆ; ಮೀನುಗಾರರ ಬದುಕಿನ ಆಸರೆ ಈ ಸೇತುವೆ&lt;/strong&gt;&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/uttara-kannada-delay-school-start-time-by-15-minutes-appeal-from-primary-school-teachers-association-mrq/articleshow-h8vybu3"/>
        </item>
        <item>
            <title><![CDATA[Sirsi Hostel: ದೊಡ್ಡಪ್ಪನ ಮಗನಿಂದ ಗರ್ಭಿಣಿಯಾದ 15ರ ಬಾಲಕಿ; ಹಾಸ್ಟೆಲ್‌ನಲ್ಲಿ ಹೆರಿಗೆ ಮಾಡಿಕೊಂಡು, ಕಿಟಕಿಯಲ್ಲಿ ಎಸೆದಳು!]]></title>
            <link>https://kannada.asianetnews.com/karnataka-districts/sirsi-todadagadde-govt-hostel-minor-girl-gives-girl-baby-birth-throws-infant-out-window-dead/articleshow-l6gk2v9</link>
            <guid isPermaLink="true">https://kannada.asianetnews.com/karnataka-districts/sirsi-todadagadde-govt-hostel-minor-girl-gives-girl-baby-birth-throws-infant-out-window-dead/articleshow-l6gk2v9</guid>
            <pubDate>Fri, 12 Jun 2026 20:12:06 +0530</pubDate>
            <description><![CDATA[&lt;p&gt;ಶಿರಸಿಯ ಸರ್ಕಾರಿ ಹಾಸ್ಟೆಲ್&zwnj;ನಲ್ಲಿ, 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಹೊರಗೆಸೆದಿದ್ದಾಳೆ. ಈ ಘೋರ ಕೃತ್ಯದಿಂದ ನವಜಾತ ಶಿಶು ಮೃತಪಟ್ಟಿದ್ದು, ಬಾಲಕಿ ತನ್ನ ಸಂಬಂಧಿಕನ ಮೇಲೆ ಅತ್ಯಾ**ಚಾರದ ಆರೋಪ ಮಾಡಿದ್ದಾಳೆ. ಈ ಘಟನೆ ಹಾಸ್ಟೆಲ್&zwnj;ನ ಸುರಕ್ಷತಾ ವೈಫಲ್ಯವನ್ನು ಬಯಲು ಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kty3w3hk7bwv3gqk6z385xar,imgname-sisri-hostel-girl-gave-birt-in-toilet-1781274644019.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ (ಜೂ.12): ಉ&lt;/strong&gt;ತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಕ್ಷರಶಃ ಎದೆನಡುಗಿಸುವ ಮತ್ತು ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಹಾಸ್ಟೆಲ್&zwnj;ನಲ್ಲಿ (Sisri Government girls Hostel) ಉಳಿದುಕೊಂಡಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್&zwnj;ನ ಶೌಚಾಲಯದಲ್ಲೇ (Hostel Toilet) ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ಆ ನವಜಾತ ಶಿಶುವನ್ನು ಕಿಟಿಕಿಯಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ. ಕಿಟಿಕಿಯಿಂದ ಕೆಳಕ್ಕೆ ಬಿದ್ದ ಪರಿಣಾಮ ಶಿಶು ಸ್ಥಳದಲ್ಲೇ ಮೃತಪಟ್ಟಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಶಿರಸಿಯ ತೋಡದಗದ್ದೆ ಬಳಿ ಇರುವ ಸರ್ಕಾರಿ ಹಾಸ್ಟೆಲ್&zwnj;ನಲ್ಲಿ (Todadagadde govt Hostel) ಈ ಘಟನೆ ಸಂಭವಿಸಿದೆ. ಬಾಲಕಿಯು ಯಾರಿಗೂ ತಿಳಿಯದಂತೆ ಹಾಸ್ಟೆಲ್&zwnj;ನ ಟಾಯ್ಲೆಟ್&zwnj;ನಲ್ಲಿ ತಾನೇ ಹೆರಿಗೆ ಮಾಡಿಕೊಂಡಿದ್ದಾಳೆ. ಹೆರಿಗೆಯಾದ ನಂತರ ಗಾಬರಿಗೊಂಡ ಬಾಲಕಿ ಅಥವಾ ವಿಷಯ ಮರೆಮಾಚುವ ಉದ್ದೇಶದಿಂದ ಹಸುಗೂಸನ್ನು ಕಿಟಿಕಿಯಿಂದ ಹೊರಗೆ ಎಸೆದಿದ್ದಾಳೆ ಎನ್ನಲಾಗಿದೆ.&lt;/p&gt;&lt;p&gt;ಈ ವಿಚಾರ ಯಾರಿಗೂ ತಿಳಿದಿರಲಿಲ್ಲ. ಆದರೆ, ಹಾಸ್ಟೆಲ್ ಸಮೀಪ ಕಸ ಆರಿಸುವವರಿಗೆ ಮೃತ ಶಿಶುವಿನ ಶವ ಕಂಡುಬಂದಾಗ ವಿಷಯ ಹೊರಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದಾಗ ಹಾಸ್ಟೆಲ್&zwnj;ನಲ್ಲಿದ್ದ ಅಪ್ರಾಪ್ತ ಬಾಲಕಿಯೇ ಈ ಕೃತ್ಯ ಎಸಗಿರುವುದು ಬಯಲಾಗಿದೆ.&lt;/p&gt;&lt;h2&gt;&lt;strong&gt;ಬಾಲಕಿಯ ಗಂಭೀರ ಆರೋಪ:&lt;/strong&gt;&lt;/h2&gt;&lt;p&gt;ಪೊಲೀಸರ ವಿಚಾರಣೆಯ ವೇಳೆ ಬಾಲಕಿಯು ನೀಡಿರುವ ಹೇಳಿಕೆ ಮತ್ತಷ್ಟು ಆಘಾತಕಾರಿಯಾಗಿದೆ. ತನ್ನ ದೊಡ್ಡಪ್ಪನ ಮಗನೇ ತನ್ನ ಮೇಲೆ ಅತ್ಯಾ**ಚಾರವೆಸಗಿದ್ದು, ಇದರಿಂದಾಗಿ ತಾನು ಗರ್ಭಧರಿಸಿದ್ದಾಗಿ ಬಾಲಕಿ ಆರೋಪಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಗರ್ಭಕ್ಕೆ ಕಾರಣವಾದವನ ಮೇಲೆ ಅತ್ಯಾ**ಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳ ಭೇಟಿ:&lt;/strong&gt;&lt;/h3&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಶಿರಸಿ ತಹಶೀಲ್ದಾರ್ ಪಟ್ಟರಾಜ್ ಗೌಡ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್&zwnj;ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆರಿಗೆಯಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.&lt;/p&gt;&lt;p&gt;ಈ ಘಟನೆಯು ಸರ್ಕಾರಿ ಹಾಸ್ಟೆಲ್&zwnj;ಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಅವರ ಆರೋಗ್ಯದ ಮೇಲೆ ನಿಗಾ ಇಡುವಲ್ಲಿನ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದರೂ ಹಾಸ್ಟೆಲ್ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/sirsi-todadagadde-govt-hostel-minor-girl-gives-girl-baby-birth-throws-infant-out-window-dead/articleshow-l6gk2v9"/>
        </item>
        <item>
            <title><![CDATA[ಉತ್ತರ ಕನ್ನಡ ಜಿಲ್ಲಾದ್ಯಂತ ವಾಟರ್ ಸ್ಪೋರ್ಟ್ಸ್, ಬೋಟಿಂಗ್ ನಿಷೇಧ: ಕಾರಣವೇನು?]]></title>
            <link>https://kannada.asianetnews.com/karnataka-districts/uttara-kannada-water-sports-ban-during-monsoon-gvd/articleshow-ngsrpga</link>
            <guid isPermaLink="true">https://kannada.asianetnews.com/karnataka-districts/uttara-kannada-water-sports-ban-during-monsoon-gvd/articleshow-ngsrpga</guid>
            <pubDate>Mon, 01 Jun 2026 22:56:03 +0530</pubDate>
            <description><![CDATA[&lt;p&gt;ಎಲ್ಲ ರೀತಿಯ ಜಲಸಾಹಸ ಕ್ರೀಡೆ ಹಾಗೂ ನೀರು ಆಧಾರಿತ ಮನರಂಜನಾ ಚಟುವಟಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt20wrrkxdsfxcrvkz5v13j0,imgname-vj-1780331995923.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾರವಾರ (ಜೂ.01):&lt;/strong&gt; ಮುಂಬರುವ ನೈಋತ್ಯ ಮುಂಗಾರು ಮಳೆಗಾಲದ ಹಿನ್ನೆಲೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಜೀವ ರಕ್ಷಣೆಯ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾದ್ಯಂತ ಜೂ. 1ರಿಂದ ಆ. 31, 2026ರ ವರೆಗೆ ಎಲ್ಲ ರೀತಿಯ ಜಲಸಾಹಸ ಕ್ರೀಡೆ ಹಾಗೂ ನೀರು ಆಧಾರಿತ ಮನರಂಜನಾ ಚಟುವಟಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಮಳೆಗಾಲದ ಅವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ನದಿಗಳಲ್ಲಿ ನೀರಿನ ಹರಿವು ದಿಢೀರನೆ ಹೆಚ್ಚಾಗುತ್ತದೆ. ಹಠಾತ್ ಪ್ರವಾಹ ಹಾಗೂ ಸಮುದ್ರದಲ್ಲಿ ಬಲವಾದ ಅಲೆಗಳು ಏಳುವುದರಿಂದ, ಪ್ರವಾಸಿಗರು ನೀರಿಗಿಳಿದರೆ ಪ್ರಾಣಹಾನಿ ಸಂಭವಿಸುವ ತೀವ್ರ ಅಪಾಯವಿರುತ್ತದೆ. ಈ ಹಿನ್ನೆಲೆ ಮೇ 13ರಂದು ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ, ಯಾವುದೇ ಅನಾಹುತಗಳನ್ನು ತಪ್ಪಿಸುವ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 33 ಮತ್ತು 34ರ ಅನ್ವಯ ಕಾಳಿ ಸೇರಿದಂತೆ ಜಿಲ್ಲೆಯ ನದಿಗಳಲ್ಲಿ ನಡೆಯುವ ರಿವರ್&zwnj;ರ್&zwj;ಯಾಫ್ಟಿಂಗ್, ನದಿ, ಜಲಾಶಯ, ಹಿನ್ನೀರು, ಅಳಿವೆ ಹಾಗೂ ಇತರ ಒಳನಾಡು ಜಲಮೂಲಗಳಲ್ಲಿ ಬೋಟಿಂಗ್, ಸಮುದ್ರದಲ್ಲಿ ನಡೆಯುವ ಜೆಟ್ ಸ್ಕೀಯಿಂಗ್, ಕಯಾಕಿಂಗ್, ಬನಾನಾ ರೈಡ್, ಪ್ಯಾರಾಸೈಲಿಂಗ್, ಸ್ಪೀಡ್ ಬೋಟ್ ರೈಡ್&zwnj;ನಂತಹ ಕ್ರೀಡೆಗಳು, ಸ್ಕೂಬಾ ಡೈವಿಂಗ್ ಮತ್ತು ಅದಕ್ಕೆ ಸಂಬಂಧಿಸಿದ ನೀರಿನೊಳಗಿನ ಸಾಹಸ ಚಟುವಟಿಕೆ ಹಾಗೂ ಕರಾವಳಿ ಪ್ರದೇಶಗಳಲ್ಲಿ ನಡೆಯುವ ಎಲ್ಲ ಸಮುದ್ರಾಧಾರಿತ ಪ್ರವಾಸೋದ್ಯಮ ಮತ್ತು ಮನರಂಜನಾ ಆಟಗಳನ್ನು ಮುಂದಿನ ಮೂರು ತಿಂಗಳ ಕಾಲ ನಿರ್ಬಂಧಿಸಲಾಗಿದೆ.&lt;/p&gt;&lt;p&gt;ಜಿಲ್ಲಾಡಳಿತದ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲೆಯ ಎಲ್ಲ ಸಹಾಯಕ ಆಯುಕ್ತರು, ತಹಸೀಲ್ದಾರ್&zwnj;ಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಪ್ರವಾಸೋದ್ಯಮ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಕಠಿಣ ಕ್ರಮ ಜರುಗಿಸಲಾಗುವುದು&lt;/strong&gt;&lt;/h2&gt;&lt;p&gt;ಒಂದು ವೇಳೆ ಆದೇಶವನ್ನು ಉಲ್ಲಂಘಿಸಿ ಪ್ರವಾಸಿಗರನ್ನು ನೀರಿಗಿಳಿಸುವ ಪ್ರವಾಸೋದ್ಯಮ ಸೇವಾ ಪೂರೈಕೆದಾರರು, ಏಜೆನ್ಸಿಗಳು ಅಥವಾ ಯಾವುದೇ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60ರ ಅಡಿಯಲ್ಲಿ ಹಾಗೂ ಇತರ ಕಾನೂನುಗಳನ್ವಯ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.&lt;/p&gt;]]></content:encoded>
            <category>uttara-kannada</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/uttara-kannada-water-sports-ban-during-monsoon-gvd/articleshow-ngsrpga"/>
        </item>
        <item>
            <title><![CDATA[ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್: ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೂ ಜಲಕಂಟಕ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ]]></title>
            <link>https://kannada.asianetnews.com/gallery/karnataka-districts/gokarna-mahabaleshwara-temple-rain-alert-atmalinga-sparsha-darshana-stopped-sat-qouapyl</link>
            <guid isPermaLink="true">https://kannada.asianetnews.com/gallery/karnataka-districts/gokarna-mahabaleshwara-temple-rain-alert-atmalinga-sparsha-darshana-stopped-sat-qouapyl</guid>
            <pubDate>Mon, 08 Jun 2026 16:19:06 +0530</pubDate>
            <description><![CDATA[ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ, ಗೋಕರ್ಣದ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ನೀರು ನುಗ್ಗುವ ಸಾಧ್ಯತೆಯಿಂದ ಭಕ್ತರಿಗೆ ಆತ್ಮಲಿಂಗ ಸ್ಪರ್ಶ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktkd8f843dkwyznvw120saws,imgname-gokarna-mahabaleshwara-temple-rain-alert-1780915387652.jpg" type="image/jpeg" height="390" width="690"/>
            <content:encoded><![CDATA[ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ, ಗೋಕರ್ಣದ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ನೀರು ನುಗ್ಗುವ ಸಾಧ್ಯತೆಯಿಂದ ಭಕ್ತರಿಗೆ ಆತ್ಮಲಿಂಗ ಸ್ಪರ್ಶ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.&lt;img&gt;&lt;p&gt;ಕಾರವಾರ (ಜೂ.08): ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾನೆಯಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನದಿಗಳು ಹಾಗೂ ಹೊಳೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.&lt;/p&gt;&lt;img&gt;&lt;p&gt;ಆತ್ಮಲಿಂಗ ದರ್ಶನ ಸ್ಥಗಿತ&lt;/p&gt;&lt;p&gt;ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಾಲಯಕ್ಕೂ ಜಲಕಂಟಕ ಎದುರಾಗಿದೆ. ನಿರಂತರ ಮಳೆಯಿಂದ ದೇವಾಲಯದ ಗರ್ಭಗುಡಿಗೆ ನೀರು ನುಗ್ಗುವ ಸಾಧ್ಯತೆ ಕಂಡುಬಂದಿರುವುದರಿಂದ ದೇವಾಲಯ ಆಡಳಿತ ಉಸ್ತುವಾರಿ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಭಕ್ತರು ನೇರವಾಗಿ ಆತ್ಮಲಿಂಗವನ್ನು ಸ್ಪರ್ಶಿಸಿ ದರ್ಶನ ಪಡೆಯುವ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.&lt;/p&gt;&lt;img&gt;&lt;p&gt;ದೇವಾಲಯದ ಆಡಳಿತದ ಆದೇಶದಂತೆ, ಮುಂದಿನ ಸೂಚನೆ ಬರುವವರೆಗೆ ಆತ್ಮಲಿಂಗ ಸ್ಪರ್ಶ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬದಲಾಗಿ ಭಕ್ತರು ದೇವಾಲಯದ ನಂದಿ ಮಂಟಪದಿಂದಲೇ ಆತ್ಮಲಿಂಗದ ದರ್ಶನ ಪಡೆಯಬಹುದಾಗಿದೆ. ಭಕ್ತರ ಸುರಕ್ಷತೆ ಹಾಗೂ ದೇವಾಲಯದ ಒಳಭಾಗದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೇವಾಲಯ ಮೂಲಗಳು ತಿಳಿಸಿವೆ.&lt;/p&gt;&lt;img&gt;&lt;p&gt;ಅನಗತ್ಯ ಪ್ರಯಾಣ ಮುಂದೂಡಿ&lt;/p&gt;&lt;p&gt;ಗೋಕರ್ಣಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಮುಂಗಾರು ಮಳೆಯ ತೀವ್ರತೆಯಿಂದಾಗಿ ದೇವಾಲಯ ಆಡಳಿತ ಭಕ್ತರಿಗೆ ಎಚ್ಚರಿಕೆ ನೀಡಿದ್ದು, ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡಲು ಸೂಚಿಸಿದೆ. ಸಮುದ್ರ ತೀರ ಪ್ರದೇಶಗಳಲ್ಲೂ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಪ್ರವಾಸಿಗರು ಹಾಗೂ ಸ್ಥಳೀಯರು ಜಾಗರೂಕರಾಗಿರಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ತಗ್ಗು ಪ್ರದೇಶದ ನಿವಾಸಿಗಳು, ಮೀನುಗಾರರು ಹಾಗೂ ಪ್ರವಾಸಿಗರು ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಂಗಾರು ಅಬ್ಬರದ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ಎಚ್ಚರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/gokarna-mahabaleshwara-temple-rain-alert-atmalinga-sparsha-darshana-stopped-sat-qouapyl"/>
        </item>
        <item>
            <title><![CDATA[ಜಿಲ್ಲಾಡಳಿತದಿಂದ ಭಟ್ಕಳದ 'ಮುರಿನಕಟ್ಟೆ' ಮರು ನಿರ್ಮಾಣ; ಹಿಂದು-ಮುಸ್ಲಿಂ ಮುಖಂಡರ ಒಮ್ಮತದ ನಿರ್ಧಾರ!]]></title>
            <link>https://kannada.asianetnews.com/karnataka-districts/bhatkal-murinakatte-reconstruction-nh-66-dc-lakshmi-priya-hindu-muslim-consensus-sat/articleshow-r32g5ge</link>
            <guid isPermaLink="true">https://kannada.asianetnews.com/karnataka-districts/bhatkal-murinakatte-reconstruction-nh-66-dc-lakshmi-priya-hindu-muslim-consensus-sat/articleshow-r32g5ge</guid>
            <pubDate>Tue, 02 Jun 2026 21:10:53 +0530</pubDate>
            <description><![CDATA[&lt;p&gt;ಭಟ್ಕಳದಲ್ಲಿ ದಶಕದಿಂದ ವಿವಾದಕ್ಕೆ ಕಾರಣವಾಗಿದ್ದ 'ಮುರಿನಕಟ್ಟೆ' ಮರುನಿರ್ಮಾಣಕ್ಕೆ ಜಿಲ್ಲಾಡಳಿತದ ಮಧ್ಯಸ್ಥಿಕೆಯಿಂದ ಎರಡೂ ಸಮುದಾಯಗಳು ಒಪ್ಪಿಗೆ ಸೂಚಿಸಿವೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯ ಭಾಗವಾಗಿ, ಹೆದ್ದಾರಿ ಮಿಡಿಯನ್&zwnj;ನಲ್ಲೇ ಈ ಕಟ್ಟೆಯನ್ನು ಮರುನಿರ್ಮಿಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt4fx7s6ms92fcqvcbg4pprg,imgname-bhatkal-murinakatte-reconstruction-1780414848806.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಉತ್ತರ ಕನ್ನಡ (ಜೂ.02): ಉ&lt;/strong&gt;ತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಳೆದೊಂದು ದಶಕದಿಂದ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ಭಾರಿ ವಿವಾದ ಮತ್ತು ಸಂಘರ್ಷಕ್ಕೆ ಕಾರಣವಾಗಿದ್ದ 'ಮುರಿನಕಟ್ಟೆ' (ಅಮ್ಮನವರ ಹೊರೆ ಇಳಿಸುವ ಸ್ಥಳ) ಮರುನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರ ನೇತೃತ್ವದಲ್ಲಿ ನಡೆದ ಸರಣಿ ಸಭೆಗಳ ಫಲವಾಗಿ, ಎರಡೂ ಸಮುದಾಯಗಳ ಮುಖಂಡರು ಒಮ್ಮತಕ್ಕೆ ಬಂದಿದ್ದು, ಮರುನಿರ್ಮಾಣ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.&lt;/p&gt;&lt;h3&gt;&lt;strong&gt;ಏನಿದು ಮುರಿನಕಟ್ಟೆ ವಿವಾದ?&lt;/strong&gt;&lt;/h3&gt;&lt;p&gt;ಭಟ್ಕಳ ನಗರದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಕಾಮಗಾರಿ ಆರಂಭವಾದಾಗಿನಿಂದ ಮುರಿನಕಟ್ಟೆ ವಿಚಾರ ಅತ್ಯಂತ ಸೂಕ್ಷ್ಮವಾಗಿತ್ತು. ಸ್ಥಳೀಯ ಹಿಂದೂ ಸಮುದಾಯದ ನಂಬಿಕೆಯಂತೆ, ಗ್ರಾಮ ದೇವತೆ ಮಾರಿಯಮ್ಮನ 'ಹೊರೆ'ಯನ್ನು (ಪಲ್ಲಕ್ಕಿ ಅಥವಾ ಕಾಣಿಕೆ) ಈ ಕಟ್ಟೆಯ ಮೇಲೆ ಇರಿಸುವುದು ಪುರಾತನ ಸಂಪ್ರದಾಯ. ಆದರೆ, ರಸ್ತೆ ಅಗಲೀಕರಣದ ವೇಳೆ ಈ ಕಟ್ಟೆಯನ್ನು ತೆರವುಗೊಳಿಸಬೇಕಾದ ಅನಿವಾರ್ಯತೆ ಎದುರಾದಾಗ ಭಾರಿ ಪ್ರತಿಭಟನೆಗಳು ನಡೆದಿದ್ದವು. ಮುಸ್ಲಿಂ ಸಮುದಾಯದ ವ್ಯಾಪಾರ ಮಳಿಗೆಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ಸಮೀಪವಿದ್ದ ಈ ಜಾಗದ ವಿಚಾರದಲ್ಲಿ ಈ ಹಿಂದೆ ಹಲವಾರು ಬಾರಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.&lt;/p&gt;&lt;h2&gt;&lt;strong&gt;ಜಿಲ್ಲಾಡಳಿತದ ಸೌಹಾರ್ದಯುತ ಹೆಜ್ಜೆ:&lt;/strong&gt;&lt;/h2&gt;&lt;p&gt;ಈ ಸೂಕ್ಷ್ಮತೆಯನ್ನು ಅರಿತ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು, ಭಟ್ಕಳದ ಎರಡೂ ಸಮುದಾಯದ ಹಿರಿಯ ನಾಗರಿಕರು ಮತ್ತು ಪ್ರಮುಖ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. 'ಅಭಿವೃದ್ಧಿಯೂ ಬೇಕು, ಸೌಹಾರ್ದತೆಯೂ ಬೇಕು' ಎಂಬ ಉದ್ದೇಶದೊಂದಿಗೆ ನಡೆದ ಈ ಸಭೆಯಲ್ಲಿ, ಮುರಿನಕಟ್ಟೆಯನ್ನು ಶಾಶ್ವತವಾಗಿ ಮರುನಿರ್ಮಾಣ ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ಹೆದ್ದಾರಿ ಮಿಡಿಯನ್&zwnj;ನಲ್ಲೇ ಮರುನಿರ್ಮಾಣ:&lt;/strong&gt;&lt;/h2&gt;&lt;p&gt;ಜಿಲ್ಲಾಡಳಿತದ ಪ್ರಕಟಣೆಯಂತೆ, ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ಯಾವುದೇ ತೊಂದರೆಯಾಗದಂತೆ ವೈಜ್ಞಾನಿಕವಾಗಿ ಸ್ಥಳ ಗುರುತಿಸಲಾಗಿದೆ. ಈಗಿರುವ ರಸ್ತೆಯ ಮಿಡಿಯನ್ (ರಸ್ತೆ ವಿಭಾಜಕ) ಗಾಗಿ ಲಭ್ಯವಿರುವ ಜಾಗದಲ್ಲೇ ಮುರಿನಕಟ್ಟೆಯನ್ನು ಮರುನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ಭಟ್ಕಳ ತಾಲೂಕು ಆಡಳಿತದ ಸಹಯೋಗದೊಂದಿಗೆ ಈ ಕಾಮಗಾರಿ ನಡೆಯಲಿದೆ.&lt;/p&gt;&lt;h2&gt;&lt;strong&gt;ಶಾಂತಿ ಮತ್ತು ಅಭಿವೃದ್ಧಿಗೆ ಆದ್ಯತೆ:&lt;/strong&gt;&lt;/h2&gt;&lt;p&gt;ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು, 'ನಗರದ ಹಿರಿಯ ಮುಖಂಡರ ಸಲಹೆಯಂತೆ ಸೂಕ್ತ ಪರ್ಯಾಯ ಸ್ಥಳವನ್ನು ಗುರುತಿಸಲಾಗಿದೆ. ಎಲ್ಲರ ಒಪ್ಪಿಗೆಯ ಮೇರೆಗೆ ಕಾಮಗಾರಿ ಆರಂಭಿಸಲು ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ. ಈ ನಿರ್ಧಾರದಿಂದಾಗಿ ಭಟ್ಕಳದಲ್ಲಿ ವರ್ಷಗಳಿಂದ ಹೊಗೆಯಾಡುತ್ತಿದ್ದ ಕೋಮು ಸಂಘರ್ಷದ ಕಿಡಿ ಆರಿ, ಅಭಿವೃದ್ಧಿ ಕಾಮಗಾರಿಗೆ ವೇಗ ಸಿಕ್ಕಂತಾಗಿದೆ. ಜಿಲ್ಲಾಡಳಿತದ ಈ ನಡೆಯನ್ನು ಭಟ್ಕಳದ ನಾಗರಿಕರು ಮತ್ತು ಪರಿಸರವಾದಿಗಳು ಸ್ವಾಗತಿಸಿದ್ದಾರೆ. ಇದು ಕೇವಲ ಒಂದು ಕಟ್ಟೆಯ ಮರುನಿರ್ಮಾಣವಲ್ಲ, ಬದಲಾಗಿ ಭಟ್ಕಳದ ಸೌಹಾರ್ದತೆಯ ಮರುಸ್ಥಾಪನೆ ಎಂದು ವಿಶ್ಲೇಷಿಸಲಾಗುತ್ತಿದೆ.&lt;/p&gt;]]></content:encoded>
            <category>uttara-kannada</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bhatkal-murinakatte-reconstruction-nh-66-dc-lakshmi-priya-hindu-muslim-consensus-sat/articleshow-r32g5ge"/>
        </item>
        <item>
            <title><![CDATA[ಇಂದಿನಿಂದ ಮೂರು ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ]]></title>
            <link>https://kannada.asianetnews.com/gallery/karnataka-districts/heavy-rains-in-these-8-districts-of-the-state-for-three-days-from-today-red-alert-declared-mrq-v26aqc9</link>
            <guid isPermaLink="true">https://kannada.asianetnews.com/gallery/karnataka-districts/heavy-rains-in-these-8-districts-of-the-state-for-three-days-from-today-red-alert-declared-mrq-v26aqc9</guid>
            <pubDate>Mon, 08 Jun 2026 05:50:54 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8 ರಿಂದ 10ರವರೆಗೆ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಲು ಎಚ್ಚರಿಸಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktgqqeds6ahmpz9rzv1c532g,imgname-karnataka-rain-red-alert--6--1780825700793.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8 ರಿಂದ 10ರವರೆಗೆ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಲು ಎಚ್ಚರಿಸಿದೆ.&amp;nbsp;&lt;/p&gt;&lt;img&gt;&lt;p&gt;ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8ರಿಂದ 10ರವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ಉಡುಪಿ, ಹಾವೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೂ.8ರಿಂದ 10ರ ವರೆಗೆ ಭಾರಿ ಮಳೆಯಾಗಲಿದೆ.&lt;/p&gt;&lt;img&gt;&lt;p&gt;ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಇಲಾಖೆ ಎಚ್ಚರಿಸಿದೆ. ಜೂ.8ರಿಂದ 10ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂ.8 ಮತ್ತು 9ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;p&gt;ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂ.10ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;img&gt;&lt;p&gt;ಕರಾವಳಿ ಹಾಗೂ ಸಮುದ್ರದಲ್ಲಿ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಭಾನುವಾರ ಬೆಳಗ್ಗೆ 8-30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅತ್ಯಧಿಕ 8 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾ, ದಕ್ಷಿಣ ಕನ್ನಡದ ಶಕ್ತಿನಗರ, ಕೊಡಗಿನ ಸೋಮವಾರಪೇಟೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ.&lt;/p&gt;&lt;img&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ ತಲಾ 6 ಸೆಂ.ಮೀ. ಮಳೆಯಾಗಿದ್ದರೆ, ವಿಜಯಪುರದ ಬಿ. ಬಾಗೇವಾಡಿ, ರಾಯಚೂರಿನ ಗಬ್ಬೂರು ಹಾಗೂ ಕಲಬುರಗಿಯ ಸುಲೆಪೇಟೆಯಲ್ಲಿ ತಲಾ 5 ಸೆಂ.ಮೀ. ಮಳೆ ಬಿದ್ದಿದೆ. ಉತ್ತರ ಕನ್ನಡದ ಗೇರುಸೊಪ್ಪ ಮತ್ತು ಗೋಕರ್ಣ, ಧಾರವಾಡದ ಹುಬ್ಬಳ್ಳಿ ಮತ್ತು ಕಲಘಟಗಿ, ಮಂಗಳೂರು ವಿಮಾನ ನಿಲ್ದಾಣ ಹಾಗೂ ಚಿತ್ರದುರ್ಗದ ರಾಮಪುರದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/heavy-rains-in-these-8-districts-of-the-state-for-three-days-from-today-red-alert-declared-mrq-v26aqc9"/>
        </item>
        <item>
            <title><![CDATA[ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!]]></title>
            <link>https://kannada.asianetnews.com/karnataka-districts/uttara-kannada-high-court-bench-dispute-karwar-lawyers-reject-integration-with-proposed-mangaluru-bench-gdp/articleshow-v58augx</link>
            <guid isPermaLink="true">https://kannada.asianetnews.com/karnataka-districts/uttara-kannada-high-court-bench-dispute-karwar-lawyers-reject-integration-with-proposed-mangaluru-bench-gdp/articleshow-v58augx</guid>
            <pubDate>Fri, 05 Jun 2026 13:58:38 +0530</pubDate>
            <description><![CDATA[ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸುವುದನ್ನು ಕಾರವಾರ ವಕೀಲರ ಸಂಘ ತೀವ್ರವಾಗಿ ವಿರೋಧಿಸಿದೆ. ಭೌಗೋಳಿಕವಾಗಿ ಧಾರವಾಡವೇ ಹತ್ತಿರವಾಗಿದ್ದು, ಇಲ್ಲವಾದರೆ ಜಿಲ್ಲೆಯ ಮಧ್ಯಭಾಗವಾದ ಹೊನ್ನಾವರದಲ್ಲಿ ಹೊಸ ಪೀಠ ಸ್ಥಾಪಿಸಬೇಕೆಂದು ಆಗ್ರಹಿಸಿದೆ. ಬೇಡಿಕೆ ಈಡೇರದಿದ್ದರೆ ತೀವ್ರ ಹೋರಾಟದ ಎಚ್ಚರಿಕೆಯನ್ನೂ ಸಂಘ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktbe8gkkcxpa84c6vttwdmy3,imgname-mangaluru--1--1780648002163.jpg" type="image/jpeg" height="390" width="690"/>
            <content:encoded><![CDATA[&lt;p&gt;&amp;nbsp;ಕಾರವಾರ: ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆಗೆ ಕಾರವಾರದ ಜಿಲ್ಲಾ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠಕ್ಕೆ ಸೇರಿಸಬಾರದು. ಪ್ರಸ್ತುತ ನಾವಿರುವ ಧಾರವಾಡ ಪೀಠದ ವ್ಯಾಪ್ತಿಯಲ್ಲೇ ನಮ್ಮನ್ನು ಮುಂದುವರಿಸಬೇಕು, ಇಲ್ಲದಿದ್ದರೆ ಜಿಲ್ಲೆಯ ಭೌಗೋಳಿಕ ಮಧ್ಯವರ್ತಿ ಪ್ರದೇಶದಲ್ಲೇ ಹೊಸ ಪೀಠವನ್ನು ಸ್ಥಾಪಿಸಬೇಕು ಎಂದು ಸಂಘವು ಸರ್ಕಾರ ಹಾಗೂ ಹೈಕೋರ್ಟ್&zwnj;ಗೆ ದೃಢವಾಗಿ ಆಗ್ರಹಿಸಿದೆ.&lt;/p&gt;&lt;p&gt;ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ವಕೀಲ ನಾಗರಾಜ ನಾಯಕ ಅವರು, ಸರ್ಕಾರದ ಏಕಪಕ್ಷೀಯ ಆಲೋಚನೆಗಳ ವಿರುದ್ಧ ಅಸಮಾಧಾನ ಹೊರಹಾಕಿದರು. ಕರಾವಳಿ ಎಂದರೆ ಕೇವಲ ಮಂಗಳೂರು ಮಾತ್ರವಲ್ಲ, ಕಾರವಾರದವರೆಗೂ ಕರಾವಳಿ ತೀರ ಹರಡಿಕೊಂಡಿದೆ ಎಂಬುದನ್ನು ಸರ್ಕಾರ ಮರೆಯಬಾರದು. ಕೇವಲ ಮಂಗಳೂರಿಗೆ ಮಾತ್ರ ಇಂತಹ ದೊಡ್ಡ ಪ್ರಾತಿನಿಧ್ಯ ನೀಡಿದರೆ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಭಾರಿ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.&lt;/p&gt;&lt;h2&gt;ಧಾರವಾಡವೇ ಹತ್ತಿರ, ಮಂಗಳೂರು ಭೌಗೋಳಿಕವಾಗಿ ತುಂಬಾ ದೂರ!&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಹಾಗೂ ವಕೀಲರಿಗೆ ಭೌಗೋಳಿಕವಾಗಿ ಧಾರವಾಡ ಪೀಠ ಅತ್ಯಂತ ಸುಲಭ ಹಾಗೂ ಹತ್ತಿರದ ಮಾರ್ಗವಾಗಿದೆ. ಕಾರವಾರದಿಂದ ಧಾರವಾಡ ಕೇವಲ ೧೭೪ ಕಿಲೋಮೀಟರ್ ಅಂತರದಲ್ಲಿದೆ. ಆದರೆ ಮಂಗಳೂರು ಜಿಲ್ಲೆಯ ಜನರಿಗೆ ಅತ್ಯಂತ ಸುದೀರ್ಘ ಮತ್ತು ಕಷ್ಟಕರವಾದ ಪ್ರಯಾಣದ ದೂರದಲ್ಲಿದೆ. ಈ ಭೌಗೋಳಿಕ ಸತ್ಯವನ್ನು ಕಡೆಗಣಿಸಿ, ಕೇವಲ ಕರಾವಳಿ ಜಿಲ್ಲೆ ಎಂಬ ಹಣೆಪಟ್ಟಿಯಡಿ ಮಂಗಳೂರು ಪೀಠಕ್ಕೆ ನಮ್ಮನ್ನು ಜೋಡಿಸಿದರೆ ಸಾರ್ವಜನಿಕರಿಗೆ ಮತ್ತು ಕಕ್ಷಿದಾರರಿಗೆ ತೀವ್ರ ಅನಾನುಕೂಲವಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.&lt;/p&gt;&lt;h2&gt;ಅಂಕಿ-ಅಂಶಗಳಲ್ಲೂ ಉತ್ತರ ಕನ್ನಡವೇ ಮುಂಚೂಣಿ&amp;nbsp;&lt;/h2&gt;&lt;p&gt;ನ್ಯಾಯಾಂಗ ಇಲಾಖೆಯ ಅಂಕಿ-ಸಂಖ್ಯೆಗಳನ್ನು ಗಮನಿಸಿದರೂ ಉತ್ತರ ಕನ್ನಡ ಜಿಲ್ಲೆಯು ದಕ್ಷಿಣ ಕನ್ನಡ ಮತ್ತು ಉಡುಪಿಗಿಂತ ಹೆಚ್ಚು ಅರ್ಹತೆಯನ್ನು ಹೊಂದಿದೆ. ಉಡುಪಿ ಜಿಲ್ಲೆಯಲ್ಲಿ ಕೇವಲ 4 ವಕೀಲರ ಸಂಘಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ವಕೀಲರ ಸಂಘಗಳಿವೆ. ಆದರೆ, ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ಬರೋಬ್ಬರಿ 11 ವಕೀಲರ ಸಂಘಗಳು ಸಕ್ರಿಯವಾಗಿವೆ.&lt;/p&gt;&lt;p&gt;ಜಿಲ್ಲೆಯಲ್ಲಿ ದಾಖಲಾಗುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ಸಂಖ್ಯೆಯೂ ಸಹ ನೆರೆಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗಿಂತ ಗಣನೀಯವಾಗಿ ಹೆಚ್ಚಾಗಿದೆ. ಹೀಗಾಗಿ, ನೂತನ ಹೈಕೋರ್ಟ್ ಪೀಠವನ್ನು ಪಡೆಯಲು ಭೌಗೋಳಿಕವಾಗಿ ಹಾಗೂ ತಾಂತ್ರಿಕವಾಗಿ ಉತ್ತರ ಕನ್ನಡ ಜಿಲ್ಲೆಯೇ ಹೆಚ್ಚು ಅರ್ಹವಾಗಿದೆ ಎಂದು ವಕೀಲರು ಸ್ಪಷ್ಟಪಡಿಸಿದರು.&lt;/p&gt;&lt;h2&gt;&lsquo;ಹೊನ್ನಾವರ&rsquo; ಮಧ್ಯವರ್ತಿ ಕೇಂದ್ರವಾಗಿ ಅತ್ಯಂತ ಸೂಕ್ತ&lt;/h2&gt;&lt;p&gt;&amp;nbsp;ಒಂದು ವೇಳೆ ಕರಾವಳಿ ಭಾಗಕ್ಕೆ ಹೊಸ ಪೀಠವನ್ನು ಸ್ಥಾಪಿಸುವುದೇ ಸರ್ಕಾರದ ಉದ್ದೇಶವಾಗಿದ್ದರೆ, ಅದಕ್ಕೆ ಜಿಲ್ಲೆಯ ಹೊನ್ನಾವರ ಅತ್ಯಂತ ಸೂಕ್ತವಾದ ಜಾಗವಾಗಿದೆ. ಹೊನ್ನಾವರವು ಇಡೀ ಜಿಲ್ಲೆಗೆ ಮಧ್ಯವರ್ತಿ ಪ್ರದೇಶವಾಗಿದ್ದು, ಎಲ್ಲ ತಾಲೂಕಿನ ಜನರಿಗೂ ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ.&lt;/p&gt;&lt;p&gt;ಇದಲ್ಲದೆ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದಕ್ಕೆ ಶಿವಮೊಗ್ಗ ಜಿಲ್ಲೆಯಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಶಿವಮೊಗ್ಗದಿಂದ ಹೊನ್ನಾವರಕ್ಕೆ ಕೇವಲ &amp;nbsp;160 ಕಿಲೋಮೀಟರ್ ಅಂತರವಿರುವುದರಿಂದ, ಇಲ್ಲಿ ಪೀಠ ಸ್ಥಾಪಿಸಿದರೆ ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡದ ಎಲ್ಲಾ ಜನರಿಗೂ ಅತ್ಯಂತ ಅನುಕೂಲವಾಗಲಿದೆ. ಒಂದು ವೇಳೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯವಾಗದಿದ್ದರೆ, ವಾರದಲ್ಲಿ ಕನಿಷ್ಠ ಮೂರು ದಿನ ಕಾರ್ಯನಿರ್ವಹಿಸುವ ಸಂಚಾರಿ ಪೀಠ (Circuit Bench) ವನ್ನಾದರೂ ಹೊನ್ನಾವರದಲ್ಲಿ ಆರಂಭಿಸಬೇಕು ಎಂದು ಒತ್ತಾಯಿಸಿದರು.&lt;/p&gt;&lt;h2&gt;ತೀವ್ರ ಸ್ವರೂಪದ ಜನಪರ ಹೋರಾಟದ ಎಚ್ಚರಿಕೆ&lt;/h2&gt;&lt;p&gt;ಈ ಮಹತ್ವದ ವಿಷಯದ ಕುರಿತು ಜಿಲ್ಲಾ ವಕೀಲರ ಸಂಘವು ಈಗಾಗಲೇ ಸರ್ವಾನುಮತದ ನಿರ್ಣಯವನ್ನು ಕೈಗೊಂಡಿದ್ದು, ಶೀಘ್ರದಲ್ಲೇ ಅದನ್ನು ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡಲು ಸಿದ್ಧತೆ ನಡೆಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲಾ ಸ್ಥಳೀಯ ಜನಪ್ರತಿನಿಧಿಗಳನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲಾಗುವುದು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ, ಇದನ್ನು ಇಡೀ ಜಿಲ್ಲೆಯ ಜನಪರ ಹೋರಾಟವಾಗಿ ರೂಪಿಸಲಾಗುವುದು ಎಂದು ಸಂಘವು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.&lt;/p&gt;&lt;p&gt;ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಭಾಗ್ವತ್, ಕಾರ್ಯದರ್ಶಿ ಚರಣ್ ನಾಯ್ಕ ಸೇರಿದಂತೆ ಪ್ರಮುಖ ವಕೀಲರಾದ ದಿಯಾ ಭಟ್, ಶುಭಾ ಗಾಂವ್ಕರ್, ರಾಜೇಶ ಆಚಾರಿ, ಅನಾಮಿಕಾ ರಾಣೆ, ಅಶೋಕ್ ಕುಮಾರ ಮುಂತಾದ ಹಿರಿಯ ಮತ್ತು ಕಿರಿಯ ವಕೀಲರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>uttara-kannada</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/uttara-kannada-high-court-bench-dispute-karwar-lawyers-reject-integration-with-proposed-mangaluru-bench-gdp/articleshow-v58augx"/>
        </item>
        <item>
            <title><![CDATA[ಕರಾವಳಿಗೆ ಖುಷಿ, ಸೂರತ್-ಮಂಗಳೂರು ಸ್ಪೆಷಲ್ ರೈಲು ಶಾಶ್ವತ  ಸೇವೆಗೆ ಪರಿವರ್ತಿಸಿದ ರೈಲ್ವೆ ಇಲಾಖೆ, ಗೋವಾ ಈಗ ಹತ್ತಿರ!]]></title>
            <link>https://kannada.asianetnews.com/karnataka-districts/western-railway-regularizes-surat-mangaluru-special-into-permanent-bi-weekly-express-train-check-route-and-timings-gdp/articleshow-x0fhv66</link>
            <guid isPermaLink="true">https://kannada.asianetnews.com/karnataka-districts/western-railway-regularizes-surat-mangaluru-special-into-permanent-bi-weekly-express-train-check-route-and-timings-gdp/articleshow-x0fhv66</guid>
            <pubDate>Tue, 02 Jun 2026 17:31:21 +0530</pubDate>
            <description><![CDATA[ಪಶ್ಚಿಮ ರೈಲ್ವೆಯು ಸೂರತ್ ಮತ್ತು ಮಂಗಳೂರು ನಡುವಿನ ವಿಶೇಷ ಎಕ್ಸ್&zwnj;ಪ್ರೆಸ್ ರೈಲನ್ನು ಶಾಶ್ವತ ವಾರಕ್ಕೆ ಎರಡು ಬಾರಿಯ ಸೇವೆಗೆ ಪರಿವರ್ತಿಸಿದೆ. ಜೂನ್ 2026 ರಿಂದ ನಿಯಮಿತ ಸಂಚಾರ ಆರಂಭಿಸಲಿರುವ ಈ ರೈಲು, ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಕರಾವಳಿ ಭಾಗದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01gxacphd5f0g2e36jgxnae9tb,imgname-otpz5z75-1680754820517.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು:&lt;/strong&gt; ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಕರಾವಳಿ ಭಾಗದ ನಡುವೆ ಸಂಚರಿಸುವ ರೈಲ್ವೆ ಪ್ರಯಾಣಿಕರಿಗೆ ಪಶ್ಚಿಮ ರೈಲ್ವೆಯು (Western Railway) ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ದೀರ್ಘಕಾಲದಿಂದ ಇದ್ದ ಪ್ರಯಾಣಿಕರ ಅತಿಯಾದ ಬೇಡಿಕೆಯನ್ನು ಪರಿಗಣಿಸಿ, ಸೂರತ್ ಮತ್ತು ಮಂಗಳೂರು ನಡುವೆ ಸಂಚರಿಸುತ್ತಿದ್ದ &quot;ವಿಶೇಷ ಎಕ್ಸ್&zwnj;ಪ್ರೆಸ್&quot; ರೈಲನ್ನು ಇನ್ಮುಂದೆ ಶಾಶ್ವತ ವಾರಕ್ಕೆ ಎರಡು ಬಾರಿಯ (Bi-weekly) ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನಾಗಿ ಪರಿವರ್ತಿಸಲು ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.&lt;/p&gt;&lt;p&gt;ಇದುವರೆಗೆ ಕೇವಲ ರಜೆ ಹಾಗೂ ಹಬ್ಬದ ದಿನಗಳ ವಿಶೇಷ ರೈಲಾಗಿ ಓಡುತ್ತಿದ್ದ ಈ ಸೇವೆಯನ್ನು ಈಗ ರದ್ದುಗೊಳಿಸುವ ಬದಲು ಕಾಯಂ ಗೊಳಿಸಲಾಗಿದ್ದು, ಜೂನ್ 3, 2026 ರಿಂದ ಈ ರೈಲು ತನ್ನ ನಿಯಮಿತ ಹಾಗೂ ನಿಗದಿತ ವೇಳಾಪಟ್ಟಿಯೊಂದಿಗೆ ಹಳಿಗಳ ಮೇಲೆ ಓಡಲು ಪ್ರಾರಂಭಿಸಲಿದೆ. ಇದು ನಾಲ್ಕು ರಾಜ್ಯಗಳ ನಡುವಿನ ಕನೆಕ್ಟಿವಿಟಿಯನ್ನು ಮತ್ತಷ್ಟು ಬಲಪಡಿಸಲಿದೆ.&lt;/p&gt;&lt;h2&gt;ರೈಲು ಸಂಚಾರದ ದಿನಗಳು ಮತ್ತು ವೇಳಾಪಟ್ಟಿ (Train Timings &amp;amp; Schedule)&lt;/h2&gt;&lt;p&gt;ಈ ರೈಲು ಇನ್ಮುಂದೆ ಎರಡೂ ದಿಕ್ಕುಗಳಿಂದ ವಾರಕ್ಕೆ ಎರಡು ದಿನಗಳ ಕಾಲ ನಿಯಮಿತವಾಗಿ ಸಂಚರಿಸಲಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ:&lt;/p&gt;&lt;p&gt;&lt;strong&gt;ಸೂರತ್&zwnj;ನಿಂದ ಮಂಗಳೂರಿಗೆ (ರೈಲು ಸಂಖ್ಯೆ: 19057) &lt;/strong&gt;ನಿಯಮಿತ ಸೇವೆ ಜೂನ್ 03, 2026 ರಿಂದ ಆರಂಭವಾಗಿದೆ. ಈ ರೈಲು ಪ್ರತಿ ವಾರದ ಬುಧವಾರ ಮತ್ತು ಭಾನುವಾರ ಸೂರತ್&zwnj;ನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ಮಂಗಳೂರಿನಿಂದ ಸೂರತ್&zwnj;ಗೆ (ರೈಲು ಸಂಖ್ಯೆ: 19058) &lt;/strong&gt;ಹಿಂತಿರುಗುವ ಪ್ರಯಾಣವು ಜೂನ್ 04, 2026 ರಿಂದ ಆರಂಭವಾಗಿದೆ. ಈ ರೈಲು ಪ್ರತಿ ವಾರದ ಗುರುವಾರ ಮತ್ತು ಸೋಮವಾರ ಮಂಗಳೂರಿನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ಕೊಂಕಣ ರೈಲ್ವೆ ಮಾರ್ಗದ ಪ್ರಮುಖ ನಿಲ್ದಾಣಗಳು (Stoppages &amp;amp; Route)&lt;/strong&gt;&lt;/p&gt;&lt;p&gt;ಈ ಎಕ್ಸ್&zwnj;ಪ್ರೆಸ್ ರೈಲು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದ ಪ್ರಸಿದ್ಧ ವಾಣಿಜ್ಯ, ಪ್ರವಾಸಿ ಮತ್ತು ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುತ್ತಾ ಸಾಗಲಿದ್ದು, ಪ್ರಮುಖ ನಿಲುಗಡೆಗಳ ಪಟ್ಟಿ ಈ ಕೆಳಗಿನಂತಿದೆ:&lt;/p&gt;&lt;p&gt;ಗುಜರಾತ್ ಮತ್ತು ಮಹಾರಾಷ್ಟ್ರ ಭಾಗ: ಸೂರತ್, ಉದ್ನಾ, ವಲ್ಸಾದ್, ವಾಪಿ, ಪಾಲ್ಘರ್, ವಸಾಯಿ ರಸ್ತೆ, ಭಿವಂಡಿ ರಸ್ತೆ, ಪನ್ವೇಲ್, ಪೆನ್, ರೋಹಾ, ಮಂಗಾಂವ್, ಖೇಡ್, ಚಿಪ್ಲುನ್, ಸವಾರ್ದಾ, ಸಂಗಮೇಶ್ವರ ರಸ್ತೆ, ರತ್ನಗಿರಿ, ರಾಜಾಪುರ ರಸ್ತೆ, ವೈಭವ್ವಾಡಿ ರಸ್ತೆ, ಕಂಕವ್ಲಿ, ಕುಡಾಲ್, ಸಾವಂತವಾಡಿ ರಸ್ತೆ.&lt;/p&gt;&lt;p&gt;&lt;strong&gt;ಗೋವಾ ಮತ್ತು ಉತ್ತರ ಕನ್ನಡ ಭಾಗ: &lt;/strong&gt;ಕರ್ಮಾಲಿ, ಥಿವಿಮ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರ್ಡೇಶ್ವರ, ಭಟ್ಕಳ.&lt;/p&gt;&lt;p&gt;&lt;strong&gt;ಉಡುಪಿ ಮತ್ತು ಮಂಗಳೂರು ಭಾಗ: &lt;/strong&gt;ಮೂಕಾಂಬಿಕಾ ರಸ್ತೆ ಬೈಂದೂರು (ಕೊಲ್ಲೂರು ಭಕ್ತರಿಗೆ ಅನುಕೂಲ), ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್ ಮತ್ತು ಮಂಗಳೂರು.&lt;/p&gt;&lt;h2&gt;ಪ್ರಯಾಣಿಕರಿಗೆ ಸಿಗಲಿರುವ ದೊಡ್ಡ ರಿಲೀಫ್ ಏನು?&lt;/h2&gt;&lt;p&gt;&lt;strong&gt;ವಿಶೇಷ ರೈಲುಗಳ ಮೇಲಿನ ಅವಲಂಬನೆ ಮುಕ್ತಿ:&lt;/strong&gt; ಇದುವರೆಗೆ ಹಬ್ಬ ಅಥವಾ ಬೇಸಿಗೆ ರಜೆಯ ಸಂದರ್ಭದಲ್ಲಿ ಮಾತ್ರ ಘೋಷಣೆಯಾಗುತ್ತಿದ್ದ ವಿಶೇಷ ರೈಲುಗಳಿಗಾಗಿ ಪ್ರಯಾಣಿಕರು ಕಾಯಬೇಕಾಗುತ್ತಿತ್ತು. ಆದರೆ ಈಗ ಇದು ಕಾಯಂ ಆಗಿರುವುದರಿಂದ ಸಾರ್ವಜನಿಕರು ಹಲವು ತಿಂಗಳುಗಳ ಮುಂಚಿತವಾಗಿಯೇ ತಮ್ಮ ಪ್ರಯಾಣವನ್ನು ವ್ಯವಸ್ಥಿತವಾಗಿ ಪ್ಲಾನ್ ಮಾಡಿಕೊಳ್ಳಬಹುದು.&lt;/p&gt;&lt;p&gt;&lt;strong&gt;ಜನದಟ್ಟಣೆಗೆ ಬ್ರೇಕ್: &lt;/strong&gt;ಮುಂಬೈ ಮತ್ತು ಗೋವಾ ಮಾರ್ಗವಾಗಿ ಮಂಗಳೂರಿಗೆ ಬರುವ ಇತರ ರೈಲುಗಳಲ್ಲಿ ಸದಾ ಕಾಲ ಇರುವ ಭಾರಿ ವೇಟಿಂಗ್ ಲಿಸ್ಟ್ ಸಮಸ್ಯೆಗೆ ಈ ರೈಲು ದೊಡ್ಡ ಪರಿಹಾರ ನೀಡಲಿದೆ. ಅಲ್ಲದೆ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರಾವಳಿ ಮೂಲದ ಉದ್ಯಮಿಗಳಿಗೆ, ಉದ್ಯೋಗಿಗಳಿಗೆ ಮತ್ತು ಕೊಲ್ಲೂರು, ಮುರ್ಡೇಶ್ವರ, ಗೋಕರ್ಣಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಇದು ಅತ್ಯಂತ ಆರಾಮದಾಯಕ ಹಾಗೂ ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯಾಗಲಿದೆ.&lt;/p&gt;&lt;p&gt;ಈ ಮಾರ್ಗದ ಟಿಕೆಟ್ ಬುಕ್ಕಿಂಗ್ ಶೀಘ್ರದಲ್ಲೇ ರೈಲ್ವೆ ಕೌಂಟರ್ ಹಾಗೂ ಐಆರ್&zwnj;ಸಿಟಿಸಿ (IRCTC) ವೆಬ್&zwnj;ಸೈಟ್&zwnj;ನಲ್ಲಿ ಲಭ್ಯವಾಗಲಿದ್ದು, ಪ್ರಯಾಣಿಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.&lt;/p&gt;]]></content:encoded>
            <category>uttara-kannada</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/western-railway-regularizes-surat-mangaluru-special-into-permanent-bi-weekly-express-train-check-route-and-timings-gdp/articleshow-x0fhv66"/>
        </item>
    </channel>
</rss>
