<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 07 Jun 2026 06:15:18 +0530</lastBuildDate>
        <atom:link href="https://kannada.asianetnews.com/rss/vijayanagara" rel="self" type="application/rss+xml"/>
        <item>
            <title><![CDATA[ಬೆಂಗಳೂರಿನಿಂದ ಹಂಪಿಗೆ ನೇರ ಪಲ್ಲಕ್ಕಿ ಬಸ್; ಒಂದು ದಿನದ ಟ್ರಿಪ್‌ಗೆ ಬೆಸ್ಟ್ ಆಯ್ಕೆ]]></title>
            <link>https://kannada.asianetnews.com/gallery/travel/direct-ksrtc-pallakki-bus-from-bengaluru-to-hampi-via-hosapete-chitradurga-best-option-for-a-day-trip-mrq-260uevd</link>
            <guid isPermaLink="true">https://kannada.asianetnews.com/gallery/travel/direct-ksrtc-pallakki-bus-from-bengaluru-to-hampi-via-hosapete-chitradurga-best-option-for-a-day-trip-mrq-260uevd</guid>
            <pubDate>Sat, 09 May 2026 11:09:46 +0530</pubDate>
            <description><![CDATA[&lt;p&gt;ಬೆಂಗಳೂರಿನಿಂದ ಹಂಪಿಗೆ ಪ್ರವಾಸ ಯೋಜಿಸುತ್ತಿರುವವರಿಗೆ ಕೆಎಸ್&zwnj;ಆರ್&zwnj;ಟಿಸಿ ನೇರ ಬಸ್ ಸೌಲಭ್ಯವನ್ನು ಒದಗಿಸಿದೆ. ರಾತ್ರಿ ಬೆಂಗಳೂರಿನಿಂದ ಹೊರಡುವ ಈ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್, ಮರುದಿನ ಬೆಳಗ್ಗೆ ಹಂಪಿ ತಲುಪಲಿದ್ದು, ಅದರ ಸಮಯ, ದರ ಮತ್ತು ಬುಕ್ಕಿಂಗ್ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5kdzktqecff2t9pdrew7e8,imgname-hampi-pallakki-bus-1778304614010.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನಿಂದ ಹಂಪಿಗೆ ಪ್ರವಾಸ ಯೋಜಿಸುತ್ತಿರುವವರಿಗೆ ಕೆಎಸ್&zwnj;ಆರ್&zwnj;ಟಿಸಿ ನೇರ ಬಸ್ ಸೌಲಭ್ಯವನ್ನು ಒದಗಿಸಿದೆ. ರಾತ್ರಿ ಬೆಂಗಳೂರಿನಿಂದ ಹೊರಡುವ ಈ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್, ಮರುದಿನ ಬೆಳಗ್ಗೆ ಹಂಪಿ ತಲುಪಲಿದ್ದು, ಅದರ ಸಮಯ, ದರ ಮತ್ತು ಬುಕ್ಕಿಂಗ್ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.&lt;/p&gt;&lt;img&gt;&lt;p&gt;ಬೇಸಿಗೆ ರಜೆಗೆ ಹಂಪಿಗೆ ಹೋಗಲು ಬಯಸುತ್ತಿದ್ದೀರಾ? ಬೆಂಗಳೂರು ನಗರದಿಂದ ನೇರ ಬಸ್ ಸೌಲಭ್ಯವಿದೆ. ರಾತ್ರಿ ಬೆಂಗಳೂರಿನಿಂದ ಹೊರಟರೆ ಬೆಳಗ್ಗೆ ಹಂಪಿ ತಲುಪುಬಹುದು. ಇಡೀ ದಿನವೆಲ್ಲಾ ಹಂಪಿ ವೈಭೋಗ ನೋಡಿ ಸಂಜೆ ಇದೇ ಬಸ್&zwnj;ನಿಂದ ಮತ್ತೆ ಬೆಂಗಳೂರಿಗೆ ಬರಬಹುದಾಗಿದೆ. ಈ ಬಸ್ ಟೈಮಿಂಗ್, ದರ ಸೇರಿದಂತೆ ಇನ್ನುಳಿದ ಎಲ್ಲಾ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.&lt;/p&gt;&lt;img&gt;&lt;p&gt;ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಪ್ರತಿದಿನ ರಾತ್ರಿ 10.59ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣದಿಂದ ತನ್ನ ಪ್ರಯಾಣ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 6ಕ್ಕೆ ಹೊಸಪೇಟೆ ಮತ್ತು 6.30ರ ವೇಳೆಗೆ ಹಂಪಿಯನ್ನು ತಲುಪಲಿದೆ. ಈ ಬಸ್ ವಾರದ ಏಳು ದಿನವೂ ಸಂಚರಿಸುತ್ತದೆ. ಒಂದು ಟಿಕೆಟ್ ಬೆಲೆ 832 ರೂ. ಆಗಿದೆ.&lt;/p&gt;&lt;img&gt;&lt;p&gt;ಮೆಜೆಸ್ಟಿಕ್&zwnj;ನ ಬಿಎಸ್ ಟರ್ಮಿನಲ್ 1ರಿಂದ ಪ್ರಯಾಣ ಆರಂಭಿಸುವ ಈ ಬಸ್, ನವರಂಗ ಪಾರ್ಕ್, ಯಶವಂತಪುರ ಗೋವರ್ಧನ್ ಥಿಯೇಟರ್, ಗೊರಗುಂಟೆಪಾಳ್ಯ ಕೆಎಲ್&zwnj;ಟಿ ಡೆಂಟಲ್ ಕಾಲೇಜ್, ಜಾಲಹಳ್ಳಿ ಕ್ರಾಸ್ ಮತ್ತು ನೆಲಮಂಗಲ ಕುಣಿಗಲ್ ಬೈಪಾಸ್&zwnj;ನಲ್ಲಿ ನಿಲುಗಡೆಯನ್ನು ಹೊಂದಿದೆ. ಚಿತ್ರದುರ್ಗ, ಕೂಡ್ಲಗಿ ಮಾರ್ಗವಾಗಿ ಹಂಪಿಯನ್ನು ತಲುಪುತ್ತದೆ.&lt;/p&gt;&lt;img&gt;&lt;p&gt;ಹಂಪಿ ನಿಲ್ದಾಣದಿಂದ ರಾತ್ರಿ 8 ಗಂಟೆಗೆ ಪ್ರಯಾಣ ಆರಂಭಿಸುವ ಪಲ್ಲಕ್ಕಿ ಬಸ್ ಹೊಸಪೇಟೆ ನಿಲ್ದಾಣದಲ್ಲಿ ನಿಲುಗಡೆಯನ್ನು ಹೊಂದಿದೆ. 8.30ಕ್ಕೆ ಹೊಸಪೇಟೆಯಿಂದ ಹೊರಟ ಬಸ್ ಮರುದಿನ ಬೆಳಗಿನ ಜಾವ 4.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣ ತಲುಪಲಿದೆ. ಇಲ್ಲಿಂದ ಶಾಂತಿನಗರ ನಿಲ್ದಾಣ ತಲುಪಿ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸುತ್ತದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗೋವಾ ಟ್ರಿಪ್&zwnj;ಗೆ ಹೋಗಬೇಕಾದ್ರೆ ಹುಡುಗಿಯರು ಮಾಡಬೇಕು ಸ್ಮಾರ್ಟ್&zwnj; ಪ್ಲಾನಿಂಗ್! ಇಲ್ಲಿದೆ ಟಿಪ್ಸ್&lt;/strong&gt;&lt;/p&gt;&lt;img&gt;&lt;p&gt;ಪ್ರಯಾಣಿಕರು ಕೆಎಸ್&zwnj;ಆರ್&zwnj;ಟಿಸಿ ವೆಬ್&zwnj;ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಈ ಬಸ್ ಹೊರತುಪಡಿಸಿದ್ರೆ ಪ್ರಯಾಣಿಕರು ಹೊಸಪೇಟೆಗೆ ತೆರಳಿ ಅಲ್ಲಿಂದ ಹಂಪಿಗೆ ಹೋಗಬಹುದಾಗಿ. ಬೆಂಗಳೂರಿನಿಂದ ಹೊಸಪೇಟೆಗೆ ಹಲವು ಸಾರಿಗೆ ಬಸ್&zwnj;ಗಳಿವೆ. ಹೆಚ್ಚಿನ ಮಾಹಿತಿಗಾಗಿ ಸಾರಿಗೆ ಸಂಸ್ಥೆಯ ವೆಬ್&zwnj;ಸೈಟ್&zwnj;ಗೆ &lt;strong&gt;https://ksrtc.in/&lt;/strong&gt; ಭೇಟಿ ನೀಡಿ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್&zwnj;ಪ್ರೆಸ್ ಯಾವಾಗ? ಸಂಸದರ ಉತ್ತರ ಏನು?&lt;/strong&gt;&lt;/p&gt;]]></content:encoded>
            <category>vijayanagara</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/travel/direct-ksrtc-pallakki-bus-from-bengaluru-to-hampi-via-hosapete-chitradurga-best-option-for-a-day-trip-mrq-260uevd"/>
        </item>
        <item>
            <title><![CDATA[DK Shivakumar: ತಣ್ಣಗಾಯ್ತು ಮೈಲಾರ ಲಿಂಗೇಶ್ವರನ ಮುನಿಸು, ನನಸಾಯ್ತು ಡಿಕೆಶಿ ಸಿಎಂ ಕನಸು!]]></title>
            <link>https://kannada.asianetnews.com/politics/mylara-lingeshwara-s-wrath-over-dk-shivakumar-s-dream-of-becoming-karnataka-cm-comes-true-rav/articleshow-2vggfyi</link>
            <guid isPermaLink="true">https://kannada.asianetnews.com/politics/mylara-lingeshwara-s-wrath-over-dk-shivakumar-s-dream-of-becoming-karnataka-cm-comes-true-rav/articleshow-2vggfyi</guid>
            <pubDate>Tue, 02 Jun 2026 08:27:37 +0530</pubDate>
            <description><![CDATA[&lt;p&gt;2018ರಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ಹಾರಿಸಿ ದೋಷಕ್ಕೆ ಒಳಗಾಗಿದ್ದ ಡಿ.ಕೆ. ಶಿವಕುಮಾರ್, ಬಳಿಕ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದರು. ಈಗ ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆ ಈ ಘಟನೆ ಮತ್ತೆ ಮುನ್ನೆಲೆಗೆ ಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt33yfgyzprdrwczy62rq5rc,imgname-----------------------2026-06-02t082206.456-1780368752158.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೂವಿನಹಡಗಲಿ (ಜೂ.2):&lt;/strong&gt; ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ(DK Shivakumar) ಅವರು 2018 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಮೈಲಾರದ ಮೈಲಾರಲಿಂಗೇಶ್ವರ(Mylaralingeshwar) ಸುಕ್ಷೇತ್ರಕ್ಕೆ ಹೆಲಿಕಾಪ್ಟರ್&zwnj;ನಲ್ಲಿ ಆಗಮಿಸಿದ್ದ ಸಂದರ್ಭದಲ್ಲಿ ದೇವಾಲಯದ ಗೋಪುರದ ಮೇಲೆ ಹಾಯ್ದು ಬಂದಿದ್ದರಿಂದ ದೋಷ ಉಂಟಾಗಿದೆ ಎಂದು ಹೇಳಿ ಬಳಿಕ ದೇವಾಲಯಕ್ಕೆ ಬೆಳ್ಳಿಯ ಹೆಲಿಕಾಪ್ಟರ್&zwnj; ಕಾಣಿಕೆಯಾಗಿ ನೀಡಿ ದೋಷ ಪರಿಹಾರ ಮಾಡಿಕೊಂಡಿದ್ದರು.&lt;/p&gt;&lt;h2&gt;ಮೈಲಾರ ಲಿಂಗೇಶ್ವರನ ಕೋಪಕ್ಕೆ ಗುರಿಯಾಗಿದ್ದ ಡಿಕೆ!&lt;/h2&gt;&lt;p&gt;ಇದೀಗ ಮುಖ್ಯಮಂತ್ರಿಯಾಗುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಮೈಲಾರ ಲಿಂಗೇಶ್ವರನ ಕೋಪಕ್ಕೆ ಗುರಿಯಾಗಿದ್ದ ಡಿ.ಕೆ. ಶಿವಕುಮಾರ ಅವರು ದೋಷ ಪರಿಹಾರ ಮಾಡಿಕೊಂಡಿರುವ ಪ್ರಸಂಗ ಮುನ್ನೆಲೆಗೆ ಬಂದಿದೆ.&lt;/p&gt;&lt;p&gt;2018ರಲ್ಲಿ ಸಚಿವರಾಗಿದ್ದ ಡಿ.ಕೆ. ಶಿವಕುಮಾರ ಹೆಲಿಕಾಪ್ಟರ್&zwnj;ನಲ್ಲಿ ಮೈಲಾರಲಿಂಗೇಶ್ವರ ಮೈಲಾರ ಸುಕ್ಷೇತ್ರಕ್ಕೆ ಬಂದಿದ್ದರು. ಆ ಕಾಪ್ಟರ್&zwnj; ದೇವಸ್ಥಾನದ ಗೋಪುರದ ಮೇಲೆ ಹಾಯ್ದು ಬಂದಿದ್ದು, ಕಾರ್ಣಿಕ ಹೇಳುವ ಡೆಂಕಣ ಮರಡಿಯ ಪಕ್ಕದ ಜಮೀನು ಹಾಗೂ ದೇವಸ್ಥಾನದ ಗೋಪುರದ ಮೇಲೆ ಹೆಲಿಕಾಪ್ಟರ್&zwnj; ಹಾರಿ ಹೋಗಿತ್ತು. ಇದರಿಂದ ದೋಷ ಉಂಟಾಗಿದೆ. ಪರಿಹಾರಕ್ಕಾಗಿ ದೇವರಿಗೆ ಹರಕೆ ಹೊತ್ತು ಕನಸು ನನಸು ಮಾಡಿಕೊಳ್ಳಬೇಕೆಂದು ಡಿ.ಕೆ. ಶಿವಕುಮಾರ್ ಅವರಿಗೆ ಮನವರಿಕೆ ಮಾಡಲಾಯಿತು.&lt;/p&gt;&lt;p&gt;ಈ ದೋಷದಿಂದ ಡಿ.ಕೆ. ಶಿವಕುಮಾರ ಅವರು ಹಲವು ಕಷ್ಟ ನಷ್ಟ ಅನುಭವಿಸುವಂತೆ ಆಗಿತ್ತು. ತೊಂದರೆ, ಆತಂಕವೂ ಎದುರಾಗಿತ್ತು. ಜೈಲುವಾಸವನ್ನೂ ಅನುಭವಿಸಬೇಕಾಯಿತು. ಈ ಪ್ರಮಾದದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್, 2020ರ ಡಿಸೆಂಬರ್&zwnj; 18ರಂದು ಮತ್ತೆ ಮೈಲಾರಕ್ಕೆ ಭೇಟಿ ನೀಡಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್&zwnj;(Venkappaiah wadeyar) ಸಲಹೆಯಂತೆ ಪೂಜೆ ಸಲ್ಲಿಸಿದ್ದರು. ದೇವಸ್ಥಾನಕ್ಕೆ ಒಂದು ಕೆಜಿ ತೂಕದ ಬೆಳ್ಳಿಯ ಹೆಲಿಕಾಪ್ಟರ್&zwnj;ನ್ನು ತಪ್ಪು ಕಾಣಿಕೆಯನ್ನಾಗಿ ದೇಣಿಗೆ ನೀಡಿದ್ದರು. ಸಂಕಷ್ಟ ಪರಿಹಾರಕ್ಕೆ ಬೆಳ್ಳಿಯ ಹೆಲಿಕಾಪ್ಟರನ್ನೇ ಕಾಣಿಕೆಯಾಗಿ ಅರ್ಪಿಸಿದ್ದರು. ಮೈಲಾರ ಲಿಂಗೇಶ್ವರನ ಆಶೀರ್ವಾದದಿಂದಲೇ ಡಿ.ಕೆ. ಶಿವಕುಮಾರಗೆ ಸಿಎಂ ಪಟ್ಟ ಪಾಪ್ತಿಯಾಗಿದೆ ಎಂದು ಭಕ್ತರು ಹೇಳಿಕೊಳ್ಳುತ್ತಿದ್ದಾರೆ.&lt;/p&gt;&lt;p&gt;ರೆಡ್ಡಿಗೂ ಸಂಕಷ್ಟ: ಹಿಂದೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಜನಾರ್ದನ ರೆಡ್ಡಿ ಕೂಡ ಮೈಲಾರ ಲಿಂಗೇಶ್ವರ ದೇವಸ್ಥಾನದ ಮೇಲೆ ಹೆಲಿಕಾಪ್ಟರ್&zwnj;ನಲ್ಲಿ ಬಂದಿದ್ದರು ಎಂಬ ಕಾರಣಕ್ಕೆ ಸಾಲು ಸಾಲು ಸಂಕಷ್ಟ ಅನುಭವಿಸಿದ್ದರು.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/mylara-lingeshwara-s-wrath-over-dk-shivakumar-s-dream-of-becoming-karnataka-cm-comes-true-rav/articleshow-2vggfyi"/>
        </item>
        <item>
            <title><![CDATA[ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ]]></title>
            <link>https://kannada.asianetnews.com/karnataka-districts/two-more-alvar-idols-23-meter-long-stone-canal-discovered-in-hampi-mrq/articleshow-8egnqek</link>
            <guid isPermaLink="true">https://kannada.asianetnews.com/karnataka-districts/two-more-alvar-idols-23-meter-long-stone-canal-discovered-in-hampi-mrq/articleshow-8egnqek</guid>
            <pubDate>Mon, 25 May 2026 07:44:30 +0530</pubDate>
            <description><![CDATA[ಹೊಸಪೇಟೆಯ ಹಂಪಿಯ ಹಜಾರರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸುತ್ತಿರುವ ಉತ್ಖನನದಲ್ಲಿ, ಮತ್ತೆರಡು ಆಳ್ವರ್ ವಿಗ್ರಹಗಳು, ಬೃಹತ್ ಕಲ್ಲಿನ ಕಾಲುವೆ ಮತ್ತು ಪ್ರಾಣಿಗಳ ಕಲ್ಲಿನ ಚಿತ್ರಗಳು ಪತ್ತೆಯಾಗಿವೆ. ಈ ಹಿಂದೆ ಎರಡು ಆಳ್ವರ್ ವಿಗ್ರಹಗಳು ದೊರೆತಿದ್ದು, ಈ ಪ್ರದೇಶದಲ್ಲಿ ಮತ್ತಷ್ಟು ಐತಿಹಾಸಿಕ ಅವಶೇಷಗಳು ಸಿಗುವ ನಿರೀಕ್ಷೆಯಲ್ಲಿ ಉತ್ಖನನ ಮುಂದುವರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kseegf4ph4kcbtbrhnnc0njt,imgname-hampi-1779675184278.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ:&lt;/strong&gt; ಹಂಪಿಯ ಹಜಾರರಾಮ ದೇವಸ್ಥಾನದ ಸಮೀಪದಲ್ಲಿ ಕಳೆದ ಕೆಲವು ದಿನಗಳಿಂದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯವರು ಉತ್ಖನನ ಕಾರ್ಯ ನಡೆಸುತ್ತಿದ್ದು, ಈಗ ಮತ್ತೆ ಹಂಪಿಯಲ್ಲಿ ಭಗ್ನಗೊಂಡಿರುವ ಪುರಾತನ ಕಾಲದ ಮತ್ತೆರಡು ಆಳ್ವರ್&zwnj; ವಿಗ್ರಹಗಳು ಮತ್ತು ಪುರಾತನ ಕಾಲದ ಐಹಿಹಾಸಿಕ ಬೃಹತ್&zwnj; ಕಲ್ಲಿನ ಕಾಲುವೆ, ದೇವಸ್ಥಾನದ ಮುಂದಿನ ಮೆಟ್ಟಿಲು ಬಳಿ ಎರಡು ಬದಿಯಲ್ಲಿರುವ ಪ್ರಾಣಿಯ ಕಲ್ಲಿನ ಚಿತ್ರ ಪತ್ತೆಯಾಗಿವೆ.&lt;/p&gt;&lt;h2&gt;&lt;strong&gt;ಮತ್ತಷ್ಟು ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗುವ ಸಾಧ್ಯತೆ&lt;/strong&gt;&lt;/h2&gt;&lt;p&gt;ಕಳೆದ ಮೂರು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಪುರಾತನ ಕಾಲದ ಎರಡು ಆಳ್ವರ್&zwnj; ವಿಗ್ರಹಗಳು, ಆನೆಯ ವಿಗ್ರಹಗಳು ದೊರೆತಿದ್ದವು. ಈಗ ಮತ್ತೆರಡು ಆಳ್ವರ್&zwnj; ವಿಗ್ರಹಗಳು, ಪುರಾತನ ಕಾಲದ ಕಲ್ಲಿನ ಕಾಲುವೆ, ದೇವಸ್ಥಾನದ ಮುಂದಿನ ಮೆಟ್ಟಿಲು ಅಕ್ಕಪಕ್ಕದಲ್ಲಿರುವ ಪ್ರಾಣಿಯ ಕಲ್ಲಿನ ಚಿತ್ರ ಪತ್ತೆಯಾಗಿರುವುದರಿಂದ ಈ ಪ್ರದೇಶದಲ್ಲಿ ಮತ್ತಷ್ಟು ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಬಹುದು ಎಂಬ ಕಾರಣಕ್ಕೆ ಉತ್ಖನನ ಕಾರ್ಯವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯವರು ಮುಂದುವರಿಸಿದ್ದಾರೆ.&lt;/p&gt;&lt;p&gt;ತಮಿಳುನಾಡಿನ ಒಂದು ಭಕ್ತಿ ಪಂಥದವರಾಗಿರುವ 11 ಆಳ್ವರ್&zwnj; ಸಂತರು, ವೈಷ್ಣವ ಭಕ್ತಿ ಪರಂಪರೆಯ ಪ್ರಭಾವ ವಿಜಯನಗರ ಸಾಮ್ರಾಜ್ಯದಲ್ಲಿ ಬಹಳ ಗಾಢವಾಗಿತ್ತು. ಈಗ ಇದೇ ಪ್ರದೇಶದಲ್ಲಿ ಪುರಾತನ ಕಾಲದ ಒಟ್ಟು ನಾಲ್ಕು ಆಳ್ವರ್&zwnj; ವಿಗ್ರಹಗಳು ಪತ್ತೆಯಾಗಿವೆ. ಮತ್ತಷ್ಟು ವಿಗ್ರಹಗಳು ಇದೇ ಪ್ರದೇಶದಲ್ಲಿ ಇರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.&lt;/p&gt;&lt;h3&gt;&lt;strong&gt;ಕಲ್ಲಿನ ಕಾಲುವೆಗಳು ಪತ್ತೆ&lt;/strong&gt;&lt;/h3&gt;&lt;p&gt;ವಿಜಯನಗರ ಅರಸರ ಕಾಲದ ಕಲ್ಲಿನ ಕಾಲುವೆಗಳು ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಪತ್ತೆಯಾಗುತ್ತಿವೆ. ಈ ಕಲ್ಲಿನ ಕಾಲುವೆಗಳಿಂದ ಮಳೆಗಾಲದಲ್ಲಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದ ಮಳೆ ನೀರು ಸರಾಗವಾಗಿ ಹರಿದು ಹೋಗಲು ಮತ್ತು ದೇವಸ್ಥಾನದ ಗರ್ಭಗುಡಿಯಿಂದ ದೇವಸ್ಥಾನದ ಹೊರಭಾಗಕ್ಕೆ ದೇವರ ಮೂರ್ತಿಗಳ ಅಭಿಷೇಕದ ಪವಿತ್ರ ನೀರು ಹೊರಗಡೆ ಸಾಗಿಸಲು ಈ ಕಲ್ಲಿನ ಕಾಲುವೆ ಬಳಸುತ್ತಿರಬಹುದು ಎಂದು ಇತಿಹಾಸಕಾರರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;&lt;p&gt;ಅನೇಕ ವರ್ಷಗಳಿಂದ ಮಣ್ಣಿನಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ ಈ ಅಪರೂಪದ ಸುಮಾರು 23 ಮೀಟರ್&zwnj; ಉದ್ದದ ಕಲ್ಲಿನ ಕಾಲುವೆ ಪತ್ತೆಯಾಗಿದ್ದು, ಇದೇ ರೀತಿಯಲ್ಲಿ ದೇವಸ್ಥಾನದ ಮುಂದಿನ ಮೆಟ್ಟಿಲು ಅಕ್ಕಪಕ್ಕದಲ್ಲಿರುವ ಕಲ್ಲಿನ ಪ್ರಾಣಿಯ ಚಿತ್ರವಿರುವ ಶಿಲೆಯೊಂದು ಸಹ ಪತ್ತೆಯಾಗಿವೆ.&lt;/p&gt;&lt;p&gt;ಹಜಾರ ರಾಮ ದೇವಸ್ಥಾನದ ಸಮೀಪದಲ್ಲಿ ನಿರಂತರವಾಗಿ ಉತ್ಖನನ ಕಾರ್ಯ ನಡೆಯುತ್ತಿರುವುದರಿಂದ ವಿಜಯನಗರ ಅರಸರ ಕಾಲದ ಭಗ್ನಗೊಂಡಿರುವ ಪುರಾತನ ಕಾಲದ ವಿಗ್ರಹಗಳು, ಕಲ್ಲಿನ ಕಾಲುವೆ, ಆಳ್ವರ್&zwnj; ವಿಗ್ರಗಳು ಇನ್ನಿತರ ವಸ್ತುಗಳು ಪತ್ತೆಯಾಗುತ್ತಿರುವುದರಿಂದ ಹಜಾರ ರಾಮ ದೇವಸ್ಥಾನದ ಬಳಿ ಇನ್ನಷ್ಟು ದಿನಗಳ ಕಾಲ ಉತ್ಖನನ ಕಾರ್ಯ ನಡೆಸಲಾಗುತ್ತದೆ. ಉತ್ಖನನದಲ್ಲಿ ಮತ್ತೇನಾದರೂ ಸಿಗಬಹುದು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಪುರಾತತ್ವ ಅಧೀಕ್ಷಕ ಕೆ. ರಾಮಕೃಷ್ಣ ರೆಡ್ಡಿ ತಿಳಿಸಿದರು.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/two-more-alvar-idols-23-meter-long-stone-canal-discovered-in-hampi-mrq/articleshow-8egnqek"/>
        </item>
        <item>
            <title><![CDATA[ಹಗರಿಬೊಮ್ಮನಹಳ್ಳಿ ಜಲಾಶಯಕ್ಕೆ ಜೀವಕಳೆ ತಂದ ಕೃತ್ತಿಕಾ ಮಳೆ; ಗರಿಗೆದರಿದ ಕೃಷಿ ಚಟುವಟಿಕೆಗಳು]]></title>
            <link>https://kannada.asianetnews.com/karnataka-districts/rain-brings-life-to-hagaribommanahalli-malavi-reservoir-agricultural-activities-starts-mrq/articleshow-a6v3u74</link>
            <guid isPermaLink="true">https://kannada.asianetnews.com/karnataka-districts/rain-brings-life-to-hagaribommanahalli-malavi-reservoir-agricultural-activities-starts-mrq/articleshow-a6v3u74</guid>
            <pubDate>Mon, 25 May 2026 10:37:56 +0530</pubDate>
            <description><![CDATA[ಶನಿವಾರ ರಾತ್ರಿ ಸುರಿದ ಧಾರಾಕಾರ ಕೃತ್ತಿಕಾ ಮಳೆಗೆ ಹಗರಿಬೊಮ್ಮನಹಳ್ಳಿ ಜಲಾಶಯಕ್ಕೆ ನೀರು ಹರಿದು ಬಂದಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಸಜ್ಜೆ ಮತ್ತು ಜೋಳ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಜಲಾಶಯದ ಗೇಟ್ ಬಳಿ ಉಳಿದಿರುವ ಮಣ್ಣು ಆತಂಕಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kserbgnzzfazz8xetj78n3n5,imgname-dam-1779685507775.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ:&lt;/strong&gt; ಶನಿವಾರ ರಾತ್ರಿ ಧಾರಾಕಾರವಾಗಿ ಸುರಿದ ಸಿಡಿಲಬ್ಬರದ ಕೃತ್ತಿಕಾ ಮಳೆಗೆ ತಾಲೂಕಿನ ಹಗರಿಬೊಮ್ಮನಹಳ್ಳಿ ಜಲಾಶಯ ಜೀವಕಳೆ ಪಡೆದಿದೆ. ತಾಲೂಕಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ವರ್ಷದ ಮೊದಲ ಮಳೆಗೆ ತಾಲೂಕಿನ ಬಹುತೇಕ ಹಳ್ಳ- ಕೊಳ್ಳಗಳು ತುಂಬಿ ಹರಿದಿವೆ. ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳಿಗೆ ರೆಕ್ಕೆಪುಕ್ಕ ಮೂಡಿವೆ. ಬಿಸಿಲಿನ ಬೇಗೆಗೆ ದಣಿದಿದ್ದ ಜನತೆಗೆ ತಂಪಿನ ಸಿಂಚನವಾಗಿದೆ.&lt;/p&gt;&lt;p&gt;ಇಟಗಿಯ ಕುಪ್ಪಿ ಹಳ್ಳ ಮತ್ತು ಮಾಲವಿ ಗ್ರಾಮದ ಬಳಿ ಇರುವ ರಾಮನಹಳ್ಳ ತುಂಬಿ ಹರಿದ ಪರಿಣಾಮವಾಗಿ ಜಲಾಶಯಕ್ಕೆ ಸಾಕಷ್ಟು ನೀರು ಹರಿದು ಬಂದಿದೆ. ಸೋಮವಾರದಿಂದ ಪ್ರಾರಂಭವಾಗುವ ರೋಹಿಣಿ ಮಳೆ ಹೀಗೆಯೇ ಸುರಿದರೆ ಜಲಾಶಯ ಯಾವುದೇ ಕ್ಷಣದಲ್ಲಾದರೂ ಭರ್ತಿಯಾಗುತ್ತದೆ ಎಂದು ಅಚ್ಚುಕಟ್ಟು ಪ್ರದೇಶದ ರೈತರು ಅಭಿಪ್ರಾಯಪಡುತ್ತಾರೆ.&lt;/p&gt;&lt;h2&gt;&lt;strong&gt;ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ನೀರು&lt;/strong&gt;&lt;/h2&gt;&lt;p&gt;ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕಣ್ತುಂಬಿಕೊಳ್ಳಲು ಬರುತ್ತಿರುವ ಯುವಕರು ಸೆಲ್ಫಿಯೊಂದಿಗೆ ಸಂಭ್ರಮಿಸುತ್ತಿದ್ದಾರೆ. ಮಳೆಯಿಂದಾಗಿ ಸಜ್ಜೆ ಮತ್ತು ಜೋಳದ ಬಿತ್ತನೆಗೆ ಸಜ್ಜಾಗಿರುವ ರೈತರು ಭೂಮಿಯನ್ನು ಹದ ಮಾಡಿಕೊಳ್ಳುತ್ತಿರುವುದು ತಾಲೂಕಿನಾದ್ಯಂತ ಸಾಮಾನ್ಯವಾಗಿದೆ.&lt;/p&gt;&lt;p&gt;ಜಲಾಶಯದ ನೂತನ ಕ್ರಸ್ಟಗೇಟ್ ಅಳವಡಿಕೆ ಕಾಮಗಾರಿ ಇತ್ತೀಚಿಗೆ ಮುಗಿದಿದ್ದು, ಆದರೆ, ಕಾಮಗಾರಿ ವೇಳೆಯಲ್ಲಿ ಜಲಾಶಯದ ಗೇಟ್ ಅಳವಡಿಕೆ ಕಾಮಗಾರಿಗೆ ಪೂರಕವಾಗಿ ಗೇಟ್ ಬಳಿ ಹಾಕಲಾಗಿದ್ದ ಗರಸು ಮಣ್ಣನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಜಲಾಶಯದಲ್ಲಿ ಎರಡು ಟಿಎಂಸಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಉಲವತ್ತಿಯ ಪ್ರಗತಿಪರ ಕೃಷಿಕ ಕರಡಿ ರಾಮಣ್ಣ ಆತಂಕ ವ್ಯಕ್ತಪಡಿಸುತ್ತಾರೆ.&lt;/p&gt;&lt;h3&gt;&lt;strong&gt;ಎಲ್ಲಿ, ಎಷ್ಟು ಮಳೆಯಾಗಿದೆ?&lt;/strong&gt;&lt;/h3&gt;&lt;p&gt;ಮಾಲವಿ ಮಳೆ ಮಾಪನ ಕೇಂದ್ರದಲ್ಲಿ ಗರಿಷ್ಠ 79.2ಮಿ.ಮೀ., ಹಗರಿಬೊಮ್ಮನಹಳ್ಳಿ ಕೇಂದ್ರದಲ್ಲಿ 76.6 ಮಿ.ಮೀ., ಹಂಪಸಾಗರ ಕೇಂದ್ರದಲ್ಲಿ 23.2 ಮಿ.ಮೀ., ತಂಬ್ರಹಳ್ಳಿ ಕೇಂದ್ರದಲ್ಲಿ ಕನಿಷ್ಠ 14.6 ಮಿ.ಮೀ. ಮಳೆ ದಾಖಲಾಗಿದೆ.&lt;/p&gt;&lt;p&gt;ಮಳೆಯಿಂದಾಗಿ ಚೀಲಗೋಡು ಗ್ರಾಮದಲ್ಲಿ ಉತ್ತಂಗಿ ಶಿವರಾಜ ಅವರಿಗೆ ಸೇರಿರುವ ಒಂದು ಆಕಳು ಸಿಡಿಲಿನಿಂದ ಮೃತ ಹೊಂದಿರುತ್ತದೆ ಮತ್ತು ಮಾಲವಿ ಗ್ರಾಮದಲ್ಲಿ ಕೆ. ಎಂ. ಈರಮ್ಮನವರಿಗೆ ಸೇರಿರುವ ಮನೆಗೆ ಭಾಗಶ ಹಾನಿಯಾಗಿದೆ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rain-brings-life-to-hagaribommanahalli-malavi-reservoir-agricultural-activities-starts-mrq/articleshow-a6v3u74"/>
        </item>
        <item>
            <title><![CDATA[ಹೊಸಪೇಟೆಯ ಹೊಲದಲ್ಲಿ ಅಡಗಿದ್ದ ಹೊಯ್ಸಳರ ಕಾಲದ ರಹಸ್ಯ;  15 ಅಡಿ ಎತ್ತರದ ಶಾಸನ ಪತ್ತೆ]]></title>
            <link>https://kannada.asianetnews.com/karnataka-districts/donation-inscription-from-the-hoysala-period-has-been-discovered-in-gundlavaddigeri-village-in-hosapete-taluk-mrq/articleshow-d8kdghu</link>
            <guid isPermaLink="true">https://kannada.asianetnews.com/karnataka-districts/donation-inscription-from-the-hoysala-period-has-been-discovered-in-gundlavaddigeri-village-in-hosapete-taluk-mrq/articleshow-d8kdghu</guid>
            <pubDate>Sun, 07 Jun 2026 06:15:07 +0530</pubDate>
            <description><![CDATA[&lt;p&gt;ಹೊಸಪೇಟೆ ತಾಲೂಕಿನ ಗುಂಡ್ಲವದ್ದಿಗೇರಿ ಗ್ರಾಮದಲ್ಲಿ ಹೊಯ್ಸಳರ ಕಾಲದ ಅಪ್ರಕಟಿತ ದಾನ ಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಹೊಯ್ಸಳ ನರಸಿಂಹ ಚಕ್ರವರ್ತಿಯ ಕಾಲದಲ್ಲಿ ಸ್ಥಳೀಯ ಆಡಳಿತಗಾರ ಕಾಸಿಗೌಡನು ಕೆರೆ ನಿರ್ಮಿಸಿ, ಬಡಗಿಯೊಬ್ಬನಿಗೆ ಭೂಮಿಯನ್ನು ದಾನ ನೀಡಿದ ವಿವರಗಳನ್ನು ಒಳಗೊಂಡಿದೆ. ಇದು ಜಿಲ್ಲೆಯಲ್ಲಿ ಹೊಯ್ಸಳರ ಆಳ್ವಿಕೆಯ ಕುರುಹುಗಳನ್ನು ದೃಢಪಡಿಸುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktfrcrhefjqkwejqxpbcxcs6,imgname-hampi-1780792844846.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ: &amp;nbsp;&lt;/strong&gt;ಹೊಸಪೇಟೆ ತಾಲೂಕಿನ ಗುಂಡ್ಲವದ್ದಿಗೇರಿ ಗ್ರಾಮದ ಚಂದ್ರಯ್ಯ ಸ್ವಾಮಿ ಅವರ ಹೊಲವೊಂದರಲ್ಲಿದ್ದ ಹೊಯ್ಸಳ ಕಾಲದ ಅಪ್ರಕಟಿತ ದಾನ ಶಾಸನ ಪತ್ತೆಯಾಗಿದೆ.&lt;/p&gt;&lt;p&gt;ಈ ಶಾಸನವನ್ನು ತುಮಕೂರು ಶಶಿಕುಮಾರ ನಾಯಕ ಮಾರ್ಗದರ್ಶನದಲ್ಲಿ ಗುಂಡ್ಲವದ್ದಿಗೆರೆ ಗ್ರಾಮದ ಗೌರವ ಶಿಕ್ಷಕರಾದ ಮಂಕಾಳಪ್ಪ, ಮಲ್ಲನಗೌಡ, ಗಂಗಾಧರ ಸಹಕಾರದಿಂದ ವಿಜಯನಗರ ತಿರುಗಾಟ ಸಂಶೋಧನಾ ತಂಡದ ಸದಸ್ಯರಾದ ಡಾ.ಗೋವಿಂದ, ಪ್ರೊ.ತಿಪ್ಪೇಸ್ವಾಮಿ, ಡಾ.ಕೃಷ್ಣೇಗೌಡ, ಇಸ್ಮಾಯಿಲ್ ಸಿದ್ದಿಕ್, ಅಶೋಕ ತಲೇಖಾನ್ ಪತ್ತೆ ಹಚ್ಚಿದ್ದಾರೆ.&lt;/p&gt;&lt;h2&gt;&lt;strong&gt;15 ಸಾಲುಗಳುಳ್ಳ ಶಾಸನ ಎಂಟು ಅಡಿ ಎತ್ತರದ ಶಾಸನ&lt;/strong&gt;&lt;/h2&gt;&lt;p&gt;ಈ ಶಾಸನವು ಗ್ರಾನೈಟ್ ಕಲ್ಲಿನಲ್ಲಿ ಬರೆಯಲಾಗಿದೆ. 15 ಸಾಲುಗಳುಳ್ಳ ಶಾಸನ ಎಂಟು ಅಡಿ ಎತ್ತರವಾಗಿದ್ದು, ಒಂದೂವರೆ ಅಡಿ ಅಗಲವಾಗಿದೆ. ಮೊದಲ ಸಾಲಿನಲ್ಲೇ ರಾಜನ ಹೆಸರನ್ನು ನಮೂದಿಸಲಾಗಿದೆ. ಹೊಯ್ಸಳರ ನರಸಿಂಹ ಚಕ್ರವರ್ತಿಯ ಕಾಲಾವಧಿಯಲ್ಲಿ ಗುಂಡ್ಲವದ್ದಿಗೆರೆಯನ್ನು ಕಾಸಿಗೌಡನು ಆಳ್ವಿಕೆ ನಡೆಸುತ್ತಿದ್ದ. ಆತ ಒಂದು ಕೆರೆ ಕಟ್ಟಿಸಿದುದಲ್ಲದೇ ದೇಗುಲಕ್ಕೆ ಜಾಗಟೆ, ಕೊಳಗ ನೀಡಿರುವ ಕುರಿತಾಗಿದೆ. ಇದರಿಂದ ಜಿಲ್ಲೆಯಲ್ಲಿ ಹೊಯ್ಸಳ ಅರಸರ ಆಳ್ವಿಕೆ ಇತ್ತೆಂದು ತಿಳಿದುಬರುತ್ತದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಎಚ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.&lt;/p&gt;&lt;p&gt;ಈ ದಾನ ಶಾಸನದಲ್ಲಿ ವಿಶೇಷವಾಗಿ ಬಡಗೇರರ ವೃತ್ತಿ ಉಲ್ಲೇಖವಿದೆ. ಕಾಸಿಗೌಡನು ಸಂಣಯನ ಮಗನಾದ ಬಡಗಿ ನಾಗಭೋಜನಿಗೆ ಹೊಲವೊಂದನ್ನು ದಾನ ನೀಡಿರುವ ವಿವರವಿದೆ. ಶಾಸನದಲ್ಲಿ ಸರ್ವಮಾನ್ಯ ಹೊಲ ಎಂದಿರುವುದರಿಂದ ಯಾವುದೇ ರೀತಿಯ ತೆರಿಗೆ ಕಟ್ಟುವಂತಿರಲಿಲ್ಲ ಎಂದು ತಿಳಿಯುತ್ತದೆ.&lt;/p&gt;&lt;p&gt;ಜೊತೆಗೆ ಸೂರ್ಯ, ಚಂದ್ರ, ನಕ್ಷತ್ರ ಇರುವವರೆಗೂ ಶಾಸನ ಇರಲಿ ಎಂದು ಶಾಪಾಶಯವು, ಹಾಗೆ ದಾನ ನೀಡುವುದನ್ನು ತಪ್ಪಿಸಬಾರದೆಂಬ ಸಾಲುಗಳು ಶಾಸನದಲ್ಲಿ ಬರೆಸಲಾಗಿದೆ. ಇದೇ ರೀತಿ ಕಾಕುಬಾಳು ಕ್ರಾಸ್ ನ ಗುಂಡ್ಲವದ್ದಿಗೆರೆಯ ಚಂದ್ರಪ್ಪನವರ ಹೊಲವೊಂದರಲ್ಲಿ ಕುಂಬಾರ ಪೊನ್ನಿಮಯ್ಯನ ಮಗ ಯಂಕಬಿಯನ ಹೆಸರಲ್ಲಿ ಕಟ್ಟಿಸಿದ ಕೆರೆ ಎಂಬ ಅಪ್ರಕಟಿತ ದಾನ ಶಾಸನವನ್ನು ವಿಜಯನಗರ ತಿರುಗಾಟ ಸಂಶೋಧನಾ ತಂಡವು ಈ ಹಿಂದೆ ಪತ್ತೆ ಮಾಡಲಾಗಿತ್ತು. ಆ ಶಾಸನದಲ್ಲಿ ಕುಂಬಾರರ ವೃತ್ತಿ ಪ್ರಸ್ತಾಪಿಸಲಾಗಿದೆ.&lt;/p&gt;&lt;h3&gt;&lt;strong&gt;ಕೆರೆ, ದೇವಸ್ಥಾನದ ಮಾಹಿತಿ&lt;/strong&gt;&lt;/h3&gt;&lt;p&gt;ಈ ಶಾಸನದಲ್ಲಿ ಬಡಗೇರರ ವೃತ್ತಿಯನ್ನು ಉಲ್ಲೇಖಿಸಲಾಗಿದೆ. ಶಾಸನ ಇರುವ ಅನತಿ ದೂರದಲ್ಲಿಯೇ ಕೆರೆಯ ಕುರುಹು ಇದೆ. ಇದರಿಂದ ಆಗ ಮಳೆ ನೀರು ಪೋಲಾಗದಂತೆ ಕೆರೆಗಳನ್ನು ನಿರ್ಮಿಸಿರಬಹುದು. ಗ್ರಾಮದಲ್ಲಿ ಅತ್ಯಂತ ಸುಂದರವಾದ ಈಶ್ವರ ದೇಗುಲವೊಂದಿದೆ. ಬಹುಶಃ ಶಾಸನದಲ್ಲಿ ತಿಳಿಸಿದಂತೆ ಗಂಟೆ, ಜಾಗಟೆಯನ್ನು ಇದೇ ದೇವಾಲಯಕ್ಕೆ ದಾನ ನೀಡಿರಬೇಕು. ಇದರ ರಚನೆ ಗಮನಿಸಿದರೆ ಹೊಯ್ಸಳ ಕಾಲಾವಧಿಯ ಗುಡಿ ಇರಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಹಿರಿಯ ಶ್ರೇಣಿ ಸಹಾಯಕ ಪ್ರಾಧ್ಯಾಪಕ ಡಾ.ಗೋವಿಂದ ತಿಳಿಸಿದ್ದಾರೆ.&lt;/p&gt;&lt;p&gt;ಈ ಶಾಸನವು ಹೊಲವೊಂದರಲ್ಲಿ ಬಿಸಿಲು ಗಾಳಿ ಮಳೆಯಿಂದ ರಕ್ಷಣೆ ಇಲ್ಲದೇ ಇರುವುದರಿಂದ ಅಕ್ಷರಗಳು ಸವೆದು ಹೋಗಿವೆ. ಮುಂಬರುವ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯು ಇಂತಹ ನಿರ್ಲಕ್ಷಿತ ಶಾಸನಗಳ ರಕ್ಷಣೆ ಮಾಡಬೇಕೆಂದು ಡಾ. ಕೃಷ್ಣೇಗೌಡ ತಿಳಿಸಿದ್ದಾರೆ.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/donation-inscription-from-the-hoysala-period-has-been-discovered-in-gundlavaddigeri-village-in-hosapete-taluk-mrq/articleshow-d8kdghu"/>
        </item>
        <item>
            <title><![CDATA[ವಿಜಯನಗರ: ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರವೆಸಗಿದ  ಆಸ್ಪತ್ರೆ  ನೌಕರ!]]></title>
            <link>https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</link>
            <guid isPermaLink="true">https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</guid>
            <pubDate>Sat, 09 May 2026 09:59:34 +0530</pubDate>
            <description><![CDATA[ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ, ಗ್ರೂಪ್ &lsquo;ಡಿ&rsquo; ನೌಕರನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ನಂಬಿಸಿ, ಕ್ವಾರ್ಟರ್ಸ್&zwnj;ಗೆ ಕರೆದೊಯ್ದು ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr5fw7c89a7qp4hbqykppja9,imgname-vijayanagara-hospital-assault-case-1778300886406.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ &lt;/strong&gt;ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು.&lt;/p&gt;&lt;h2&gt;ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರ&lt;/h2&gt;&lt;p&gt;ಆರೋಪಿಯು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್&zwnj;ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;ಪೋಕ್ಸೋ ಅಡಿ ಪ್ರಕರಣ ದಾಖಲು&lt;/h2&gt;&lt;p&gt;ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.&lt;/p&gt;&lt;p&gt;ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಗೆ ಅಗತ್ಯ ಚಿಕಿತ್ಸೆ ಹಾಗೂ ಮನೋವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>vijayanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132"/>
        </item>
        <item>
            <title><![CDATA[ಮೀಸಲಾತಿ ವಿಚಾರದಲ್ಲಿ ಸರ್ಕಾರಗಳ ಬೇಜವಾಬ್ದಾರಿ ಸಲ್ಲದು: ವಿ.ಎಸ್.ಉಗ್ರಪ್ಪ ಅಸಮಾಧಾನ]]></title>
            <link>https://kannada.asianetnews.com/karnataka-districts/vs-ugrappa-slams-government-over-reservation-issue-gvd/articleshow-ezbth92</link>
            <guid isPermaLink="true">https://kannada.asianetnews.com/karnataka-districts/vs-ugrappa-slams-government-over-reservation-issue-gvd/articleshow-ezbth92</guid>
            <pubDate>Sun, 24 May 2026 18:53:39 +0530</pubDate>
            <description><![CDATA[&lt;p&gt;ಮೀಸಲಾತಿ ಸರಿಯಾಗಿ ಜಾರಿಯಾಗದಿದ್ದರಿಂದ ಶೋಷಿತ ವರ್ಗಗಳಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ವಿವಿಧ ಸಮುದಾಯಗಳನ್ನು ಎಸ್&zwnj;ಸಿ, ಎಸ್&zwnj;ಟಿಗೆ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpr67ffh0z73tkgzy6p2nsh6,imgname-bll-1776780819953.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ (ಮೇ.24):&lt;/strong&gt; ಮೀಸಲಾತಿ ಸರಿಯಾಗಿ ಜಾರಿಯಾಗದಿದ್ದರಿಂದ ಶೋಷಿತ ವರ್ಗಗಳಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ವಿವಿಧ ಸಮುದಾಯಗಳನ್ನು ಎಸ್&zwnj;ಸಿ, ಎಸ್&zwnj;ಟಿಗೆ ಸೇರಿಸುವ ರಾಜಕೀಯ ಘೋಷಣೆಗಳನ್ನು ಹೇಳಲಾಗುತ್ತಿದೆ. ಎಸ್ಸಿ, ಎಸ್ಟಿ ಪಟ್ಟಿಗೆ ಹೊಸಬರನ್ನು ಸೇರ್ಪಡೆ ಮಾಡುವುದು ಯಾರಪ್ಪನ ಆಸ್ತಿಯಲ್ಲ. ಈಗಾಗಲೇ ಇರುವವರಿಗೇ ತಟ್ಟೆಯಲ್ಲಿ ಅನ್ನವಿಲ್ಲ.&lt;/p&gt;&lt;p&gt;ಇನ್ನು ಹೊಸಬರನ್ನು ಸೇರಿಸುವ ಮುನ್ನ ಆಯಾ ಸಮಾಜಗಳ ಕುಲಶಾಸ್ತ್ರ ಅಧ್ಯಯನ ನಡೆಯಬೇಕು. ಸರ್ಕಾರ ಎಲ್ಲರ ಸ್ಥಿತಿಗತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಹೇಳಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿ, ತಟ್ಟೆಗೆ ಅನ್ನ ಇಟ್ಟಂತೆ ಮಾಡಿದ್ದ ಸರ್ಕಾರಗಳು, ಈಗ ಅದಕ್ಕೆ ತಡೆಯಾಜ್ಞೆ ಬರುವಂತೆ ಮಾಡಿ ನಮ್ಮ ಬದುಕಿನ ಜೊತೆ ಆಟವಾಡುತ್ತಿರುವುದು ಸರಿಯಲ್ಲ ಎಂದರು.&lt;/p&gt;&lt;p&gt;ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ನಾಗಮೋಹನ್ ದಾಸ್ ಸಮಿತಿ ವರದಿ ಆಧರಿಸಿ ಮೀಸಲಾತಿ ಹೆಚ್ಚಿಸಲಾಯಿತು. ಇದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಮಾರ್ಚ್ 23ರಂದು 2023ರ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಇದುವರೆಗೆ ಕೇಂದ್ರದಿಂದ ಯಾವುದೇ ಉತ್ತರವಿಲ್ಲ. ಪ್ರಸ್ತುತ ಈ ಶೇ.56 ಮೀಸಲಾತಿಗೆ ಕೋರ್ಟ್ ಸ್ಟೇ ನೀಡಿದ್ದರೂ ಸರ್ಕಾರದ ಅಡ್ವೊಕೇಟ್ ಜನರಲ್ ಸರಿಯಾಗಿ ವಾದ ಮಂಡಿಸಿಲ್ಲ.&lt;/p&gt;&lt;h2&gt;&lt;strong&gt;ಬೇಜವಾಬ್ದಾರಿ ಮಾಡುತ್ತಿರುವುದು ಸರಿಯಲ್ಲ&lt;/strong&gt;&lt;/h2&gt;&lt;p&gt;ಪ್ರಸ್ತುತ 56 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಸರಿಯಾಗಿ ಜಾರಿ ಮಾಡಿದರೆ ಎಸ್&zwnj;ಸಿ, ಎಸ್&zwnj;ಟಿ, ಒಬಿಸಿ ಇವರಿಗೆಲ್ಲ ಉದ್ಯೋಗ ಸಿಗುತ್ತದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಬೇಜವಾಬ್ದಾರಿ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದರು. ಪ್ರಧಾನಿ, ಮುಖ್ಯಮಂತ್ರಿ ಕೇವಲ ಓಟಿಗಾಗಿ ಸಂವಿಧಾನ ರಕ್ಷಣೆಯ ಮಾತುಗಳನ್ನಾಡುತ್ತಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ನಮ್ಮ ಜೀವನದೊಂದಿಗೆ ಆಟವಾಡುವುದನ್ನು ನಿಲ್ಲಿಸಬೇಕು ಎಂದರು.&lt;/p&gt;&lt;p&gt;2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 101 ಪರಿಶಿಷ್ಟ ಜಾತಿಗಳು (ಶೇ.17.01) ಹಾಗೂ ತಳವಾರ, ಪರಿವಾರ ಸೇರಿದಂತೆ 51 ಪರಿಶಿಷ್ಟ ಪಂಗಡಗಳು (ಶೇ.7) ಇದ್ದು, ಒಬಿಸಿ ಶೇ.32 ಇದ್ದಾರೆ. ಎಸ್&zwnj;ಸಿ, ಎಸ್&zwnj;ಟಿ, ಒಬಿಸಿ ಸೇರಿ ಒಟ್ಟು ಶೋಷಿತ ವರ್ಗಗಳ ಜನಸಂಖ್ಯೆ 4 ಕೋಟಿಗಿಂತ ಹೆಚ್ಚಿದ್ದಾರೆ. ಆದರೆ, ರಾಜ್ಯದಲ್ಲಿ ಸದ್ಯ 3.5 ಲಕ್ಷಕ್ಕೂ ಹೆಚ್ಚು ಸುಳ್ಳು ಜಾತಿ ಪ್ರಮಾಣಪತ್ರಗಳು ಸೃಷ್ಟಿಯಾಗಿವೆ ಎಂದು ಕಾರ್ಯಾಂಗದ ವೈಫಲ್ಯದ ವಿರುದ್ಧ ಉಗ್ರಪ್ಪ ಸಿಡಿಮಿಡಿಗೊಂಡರು.&lt;/p&gt;]]></content:encoded>
            <category>vijayanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/vs-ugrappa-slams-government-over-reservation-issue-gvd/articleshow-ezbth92"/>
        </item>
        <item>
            <title><![CDATA[ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ಸಿನಲ್ಲಿ ಅಲ್ಲೋಲ-ಕಲ್ಲೋಲ: ಬಿ.ವೈ.ವಿಜಯೇಂದ್ರ]]></title>
            <link>https://kannada.asianetnews.com/karnataka-districts/bjp-by-vijayendra-congress-crisis-karnataka-election-result-gvd/articleshow-ffyl4di</link>
            <guid isPermaLink="true">https://kannada.asianetnews.com/karnataka-districts/bjp-by-vijayendra-congress-crisis-karnataka-election-result-gvd/articleshow-ffyl4di</guid>
            <pubDate>Thu, 30 Apr 2026 17:36:33 +0530</pubDate>
            <description><![CDATA[&lt;p&gt;ದಾವಣಗೆರೆ, ಬಾಗಲಕೋಟೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ಸಿನಲ್ಲಿ ಅಲ್ಲೋಲ- ಕಲ್ಲೋಲ ಉಂಟಾಗಲಿದ್ದು, ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jmnqcdpsg1cbah0dwne1eere,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ (ಏ.30):&lt;/strong&gt; ದಾವಣಗೆರೆ, ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ. ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ಸಿನಲ್ಲಿ ಅಲ್ಲೋಲ- ಕಲ್ಲೋಲ ಉಂಟಾಗಲಿದ್ದು, ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ರಾಜ್ಯದಲ್ಲಿ ಕುಡಿವ ನೀರು ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿವೆ. ಆದರೆ ರಾಜ್ಯದ ನಾಯಕರು ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಗಮನ ನೀಡದೇ ಪದೇಪದೇ ದೆಹಲಿಗೆ ದಂಡಯಾತ್ರೆಯಲ್ಲಿ ಬ್ಯುಸಿ ಇದ್ದಾರೆ.&lt;/p&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರಿಂದ ದೆಹಲಿ ದಂಡಯಾತ್ರೆ ಶುರುವಾಗಿದೆ. ಸಿದ್ದರಾಮಯ್ಯ ಬಣ ದೆಹಲಿಗೆ ಭೇಟಿ ನೀಡುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಆಪ್ತರು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಇದು ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಅಸ್ಥಿರ ವಾತಾವರಣಕ್ಕೆ ಸಾಕ್ಷಿ ಎಂದರು. ರಾಜ್ಯದಲ್ಲಿ ಬಿಜೆಪಿಯನ್ನು ಬೇರು ಮಟ್ಟದಿಂದ ಸಂಘಟಿಸಿದ ಬಿ.ಎಸ್. ಯಡಿಯೂರಪ್ಪ ಅವರಿಗೆ ಪಕ್ಷ ಎಲ್ಲವನ್ನೂ ನೀಡಿ, ಗೌರವಿಸಿದೆ. ಅವರಿಗೆ ಈಗಲೂ ಅದೇ ಗೌರವವಿದೆ.&lt;/p&gt;&lt;p&gt;ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬದ್ಧರಿದ್ದೇವೆ ಎಂದು ಹೇಳಿದರು. ಚಿತ್ರದುರ್ಗದಲ್ಲಿ ನಡೆಯುವ ಬಿಎಸ್&zwnj;ವೈ ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.&lt;/p&gt;&lt;p&gt;ದಸರಾ ಮಾದರಿಯಲ್ಲಿ ಅರ್ಥಪೂರ್ಣವಾಗಿ ಪುರಪ್ರವೇಶ ಕಾರ&zwj;್ಯಕ್ರಮ ನಡೆಯಲಿದೆ. ಕಾರ&zwj;್ಯಕ್ರಮದಲ್ಲಿ ರಾಜ್ಯದ ಎಲ್ಲ ಸಮಾಜದ ಗಣ್ಯರು ಸೇರಿ ಹಲವರು ಭಾಗಿಯಾಗಲಿದ್ದಾರೆ. ಮೇ 9 ರಂದು ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ&zwj;್ಯಕ್ರಮ ನಡೆಯಲಿದೆ. 11:30ಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆ. ರಾಜ್ಯದ ಪ್ರತೀ ಜಿಲ್ಲೆಯ ಗ್ರಾಮಗಳಿಂದ ಸುಮಾರು 10 ಲಕ್ಷ ಜನರು ಕಾರ&zwj;್ಯಕ್ರಮಕ್ಕೆ ಬರಲಿದ್ದಾರೆ ಎಂದರು.&lt;/p&gt;&lt;p&gt;ಮಾಜಿ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ಸ್ಫೋಟಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಮತ್ತೆ ಅಹಿಂದ ಸಮಾವೇಶದ ಕಾರ್ಡ್&zwnj; ಬಳಸುತ್ತಿದ್ದಾರೆ. ​ಸಿದ್ದರಾಮಯ್ಯ ಅವರ ಅಧಿಕಾರಕ್ಕೆ ಯಾವಾಗ ಕಂಟಕ ಬರುತ್ತದೆಯೋ, ಆಗ ಅವರಿಗೆ ಅಹಿಂದ ಸಮಾವೇಶ ನೆನಪಾಗುತ್ತದೆ. ದೆಹಲಿಯಲ್ಲಿ ಯಾವ ಪುರುಷಾರ್ಥಕ್ಕೆ ಅಹಿಂದ ಸಮಾವೇಶ ಮಾಡುತ್ತಾರೆ ಎಂದು ಅವರು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ವಾಸ್ತವದಲ್ಲಿ ಜನರಿಗೆ ಮೋಸ&lt;/strong&gt;&lt;/h2&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ''ಏಕ್ ದಿನ್ ಕಾ, ದೋ ದಿನ್ ಕಾ'', ದಸ್&zwnj; ದಿನ್ ಕಾ ಸುಲ್ತಾನ್. ಇಂದೋ ನಾಳೆಯೋ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮೀಸಲಾತಿ ಸಕ್ಸಸ್ ಆಗಿದೆ ಎಂದು ಪ್ರಿಯಾಂಕ್ ಖರ್ಗೆ ಸಿಹಿ ಹಂಚುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಜನರಿಗೆ ಮೋಸವಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪರ ವಾದಿಸಲು ವಕೀಲರು ದೆಹಲಿಯಿಂದ ಬಂದಿದ್ದರು. ಆದರೆ, ಒಳ&zwnj;ಮೀಸಲಾತಿ ಕುರಿತ ಹೈಕೋರ್ಟ್&zwnj; ವಿಚಾರಣೆಗೆ ಸರ್ಕಾರದ ಪರ ವಕೀಲರೇ ಹಾಜರಾಗಿಲ್ಲ. ಪರಿಣಾಮ ಎಸ್ಸಿ, ಎಸ್ಟಿ ಜನಾಂಗಕ್ಕೆ ಅನ್ಯಾಯವಾಗಿದೆ. ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ನನ್ನ ಮಾವ. ಅವರಾದರೂ ಸತ್ಯವನ್ನು ಹೇಳಬೇಕು ಎಂದು ತಾಕೀತು ಮಾಡಿದರು. ಬಳ್ಳಾರಿಯಲ್ಲಿ ರಸ್ತೆ ಅಗಲೀಕರಣ ನೆಪವೊಡ್ಡಿ ಕೆಲವು ಪ್ರಭಾವಿಗಳು ಹಲವಾರು ಮರಗಳನ್ನು ಕಡಿದಿದ್ದಾರೆ. ಇದರ ವಿರುದ್ಧ ಖಾಸಗಿ ದೂರು ದಾಖಲಿಸುವುದಾಗಿ ಅವರು ಹೇಳಿದರು.&lt;/p&gt;]]></content:encoded>
            <category>vijayanagara</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bjp-by-vijayendra-congress-crisis-karnataka-election-result-gvd/articleshow-ffyl4di"/>
        </item>
        <item>
            <title><![CDATA[ತುಂಗಭದ್ರಾ ಡ್ಯಾಂ ಬಳಿ ಟ್ರ್ಯಾಕ್ಟರ್ ದುರಂತ, ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ]]></title>
            <link>https://kannada.asianetnews.com/karnataka-districts/death-toll-rises-in-tractor-accident-near-tungabhadra-dam-in-karnataka-s-koppal-vijayanagara-gdp/articleshow-ggodops</link>
            <guid isPermaLink="true">https://kannada.asianetnews.com/karnataka-districts/death-toll-rises-in-tractor-accident-near-tungabhadra-dam-in-karnataka-s-koppal-vijayanagara-gdp/articleshow-ggodops</guid>
            <pubDate>Fri, 15 May 2026 21:09:51 +0530</pubDate>
            <description><![CDATA[ಕೊಪ್ಪಳದ ಮುನಿರಾಬಾದ್ ಬಳಿ ತುಂಗಭದ್ರಾ ಸೇತುವೆಯಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಸದಸ್ಯರು ಈ ದುರಂತದಲ್ಲಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krp4j47740j74h3srbtxpkcg,imgname-tractor-accident-near-tungabhadra-dam-1778859446503.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಪ್ಪಳ/ವಿಜಯನಗರ:&lt;/strong&gt; ಜಿಲ್ಲೆಯ ಮುನಿರಾಬಾದ್ ಸಮೀಪ ತುಂಗಭದ್ರಾ ಡ್ಯಾಂ ಬಳಿ ಸಂಭವಿಸಿದ ಭೀಕರ ಟ್ರ್ಯಾಕ್ಟರ್ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮಾಯಾ (16) ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿ ಕೂಡ್ಲಿಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ ಎಂದು ತಿಳಿದುಬಂದಿದೆ.&lt;/p&gt;&lt;p&gt;ಈ ದುರ್ಘಟನೆಯಲ್ಲಿ ಈಗಾಗಲೇ ಆರು ಮಂದಿ ಮೃತಪಟ್ಟಿದ್ದು, ಮಾಯಾ ಸಾವಿನೊಂದಿಗೆ ಒಟ್ಟು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾಯಾಳಿಗೆ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಆಕೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ.&lt;/p&gt;&lt;h2&gt;ಗಾಯಾಳುಗಳಿಗೆ ಮುಂದುವರೆದ ಚಿಕಿತ್ಸೆ&lt;/h2&gt;&lt;p&gt;ಅಪಘಾತದಲ್ಲಿ ಗಾಯಗೊಂಡ ಇತರರಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಮೊದಲು ದಾಖಲಾದ 9 ಮಂದಿಯಲ್ಲಿ ಒಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೀಗ 8 ಮಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿರುವುದರಿಂದ ವೈದ್ಯರು ವಿಶೇಷ ಗಮನ ಹರಿಸಿದ್ದಾರೆ.&lt;/p&gt;&lt;h2&gt;ಸಿಎಂ ಸಿದ್ದರಾಮಯ್ಯ ಸಂತಾಪ&lt;/h2&gt;&lt;p&gt;ಇನ್ನು ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, &quot;ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ದುರಂತ ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.&lt;/p&gt;&lt;p&gt;ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.&quot; ಎಂದಿದ್ದಾರೆ&lt;/p&gt;&lt;h2&gt;ಘಟನೆ ಹಿನ್ನೆಲೆ&lt;/h2&gt;&lt;p&gt;ಟ್ರ್ಯಾಕ್ಟರ್&zwnj;ನಲ್ಲಿ ಒಟ್ಟು 19 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಸೇತುವೆಯಿಂದ ಕೆಳಗೆ ಬಿದ್ದು ದುರಂತ ಸಂಭವಿಸಿತ್ತು. ಒಂದು ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಒಟ್ಟು 7 ಮಂದಿ ಮೃತಪಟ್ಟಿದ್ದು ಎಲ್ಲರೂ ಒಂದೇ ಕುಟುಂಬದ ಸದಸ್ಯರು. ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾಂತೇಶ್, ಮಾಯಾ (16) ಹಾಗೂ ಗೌರಮ್ಮ ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮ ಮತ್ತು ಭೈರದೇರಗುಡ್ಡ ಗ್ರಾಮದ ನಿವಾಸಿಗಳಾಗಿದ್ದಾರೆ.&lt;/p&gt;&lt;p&gt;ಹುಲಿಗೆಮ್ಮ ದೇವಸ್ಥಾನಕ್ಕೆಂದು ಕುಟುಂಬದವರೆಲ್ಲ ಬ್ಯಾಟಿ ( ದೇವರು) ಮಾಡಲು ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ.ಕೃಷಿ ಚಟುವಟಿಕೆಗಾಗಿ ಬಳಕೆಯಾಗಬೇಕಾದ ವಾಹನದಲ್ಲಿ ಮನುಷ್ಯರನ್ನು ಹೊತ್ತೊಯ್ದು ಈಗ ಈ ದುರಂತ ನಡೆದಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ದುರಂತ ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ&hellip; pic.twitter.com/63q7VpZaAi&lt;/p&gt;&lt;p&gt;&mdash; Siddaramaiah (@siddaramaiah) May 15, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/death-toll-rises-in-tractor-accident-near-tungabhadra-dam-in-karnataka-s-koppal-vijayanagara-gdp/articleshow-ggodops"/>
        </item>
        <item>
            <title><![CDATA[ವಿಜಯನಗರದಲ್ಲಿ ಇನ್ನೂ ಜೀವಂತ ಕರಾಳ ಜೀತ ಪದ್ಧತಿ, ಎನ್‌ಜಿಒ ಸಂಸ್ಥೆ ನೆರವಿನಿಂದ ಒಡಿಶಾದ 37 ಜೀವಗಳಿಗೆ ಮುಕ್ತಿ!]]></title>
            <link>https://kannada.asianetnews.com/gallery/karnataka-districts/karnataka-news-37-odisha-migrant-workers-rescued-from-bonded-labour-in-vijayanagara-district-gdp-gi6t0az</link>
            <guid isPermaLink="true">https://kannada.asianetnews.com/gallery/karnataka-districts/karnataka-news-37-odisha-migrant-workers-rescued-from-bonded-labour-in-vijayanagara-district-gdp-gi6t0az</guid>
            <pubDate>Fri, 15 May 2026 17:56:07 +0530</pubDate>
            <description><![CDATA[&lt;p&gt;ವಿಜಯನಗರದ ನಂದಿಬಂಡಿ ಗ್ರಾಮದಲ್ಲಿ ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37ಕಾರ್ಮಿಕರನ್ನು ಜಿಲ್ಲಾಡಳಿತವು 'ಸ್ಪಂದನ' ಎನ್&zwnj;ಜಿಒ ನೀಡಿದ ಮಾಹಿತಿಯ ಮೇರೆಗೆ ರಕ್ಷಿಸಿದೆ. ಮುಂಗಡ ಹಣ ನೀಡಿ ಕರೆತಂದು, ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರಿಗೆ ಕಳುಹಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krnrsrhrawn5s1ytben10hnk,imgname-odisha-migrant-workers-rescued-1778847113784.jpg" type="image/jpeg" height="390" width="690"/>
            <content:encoded><![CDATA[&lt;p&gt;ವಿಜಯನಗರದ ನಂದಿಬಂಡಿ ಗ್ರಾಮದಲ್ಲಿ ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37ಕಾರ್ಮಿಕರನ್ನು ಜಿಲ್ಲಾಡಳಿತವು 'ಸ್ಪಂದನ' ಎನ್&zwnj;ಜಿಒ ನೀಡಿದ ಮಾಹಿತಿಯ ಮೇರೆಗೆ ರಕ್ಷಿಸಿದೆ. ಮುಂಗಡ ಹಣ ನೀಡಿ ಕರೆತಂದು, ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರಿಗೆ ಕಳುಹಿಸಲಾಗಿದೆ.&lt;/p&gt;&lt;img&gt;&lt;p&gt;ವಿಜಯನಗರ: ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಮಂದಿ ಅಂತರ್&zwnj;ರಾಜ್ಯ ಕೂಲಿ ಕಾರ್ಮಿಕರನ್ನು ವಿಜಯನಗರ ಜಿಲ್ಲಾಡಳಿತ ರಕ್ಷಿಸಿ, ಸುರಕ್ಷಿತವಾಗಿ ಅವರ ತವರೂರುಗಳಿಗೆ ಕಳುಹಿಸಿದ ಘಟನೆ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ &lsquo;ಸ್ಪಂದನ&rsquo; ಎಂಬ ಎನ್&zwnj;ಜಿಒ ಸಂಸ್ಥೆಯಿಂದ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರ ಮಾರ್ಗದರ್ಶನದಲ್ಲಿ ಸಹಾಯಕ ಆಯುಕ್ತ ವಿವೇಕಾನಂದ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿತು. ನಂದಿಬಂಡಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಜೀತ ಪದ್ಧತಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಪತ್ತೆಹಚ್ಚಿ ರಕ್ಷಿಸಲಾಯಿತು.&lt;/p&gt;&lt;img&gt;&lt;p&gt;ಸುಮಾರು ಆರು ತಿಂಗಳ ಹಿಂದೆ ಒಡಿಶಾ ರಾಜ್ಯದ ಬಲಂಗೀರ್ ಮತ್ತು ನವರಂಗಪುರ ಜಿಲ್ಲೆಗಳಿಂದ ಪ್ರತಿ ಕುಟುಂಬಕ್ಕೆ ₹40,000 ಮುಂಗಡ ಹಣ ನೀಡಿ ಕಾರ್ಮಿಕರನ್ನು ಇಲ್ಲಿ ಕರೆತರಲಾಗಿತ್ತು. ಆರಂಭದಲ್ಲಿ ಆರು ತಿಂಗಳು ಮಾತ್ರ ಕೆಲಸ ಮಾಡಿಸುವುದಾಗಿ ಭರವಸೆ ನೀಡಿದ ಮಾಲೀಕರು, ಕೆಲಸದ ಆಧಾರದ ಮೇಲೆ ಸಮರ್ಪಕ ವೇತನ ನೀಡುವುದಾಗಿ ಹೇಳಿದ್ದರು. ಆದರೆ, ವಾಸ್ತವದಲ್ಲಿ ವಾರಪೂರ್ತಿ ದುಡಿದರೂ ಕೇವಲ ₹500 ಮಾತ್ರ ನೀಡಲಾಗುತ್ತಿತ್ತು ಎಂದು ಕಾರ್ಮಿಕರು ಆರೋಪಿಸಿದ್ದಾರೆ.&lt;/p&gt;&lt;p&gt;ಕಾರ್ಮಿಕರು ತಮ್ಮ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತವರು ರಾಜ್ಯಕ್ಕೆ ಹಿಂತಿರುಗಲು ಮುಂದಾದಾಗ ಬೆದರಿಕೆ ಹಾಕಲಾಗುತ್ತಿತ್ತು. ಹೊರಗಿನ ಜಗತ್ತಿನ ಸಂಪರ್ಕವನ್ನು ಸಂಪೂರ್ಣ ಕಡಿತಗೊಳಿಸುವ ಉದ್ದೇಶದಿಂದ ಸೆಕ್ಯೂರಿಟಿ ಗಾರ್ಡ್&zwnj;ಗಳನ್ನು ನೇಮಿಸಲಾಗಿತ್ತು ಎಂಬ ಅಂಶವೂ ಬೆಳಕಿಗೆ ಬಂದಿದೆ.&lt;/p&gt;&lt;img&gt;&lt;p&gt;ಕಾರ್ಮಿಕರನ್ನು ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿ, ಕೇವಲ ನಾಲ್ಕು ಅಡಿ ಅಗಲದ ಸಣ್ಣ ಶೆಡ್&zwnj;ಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಮೂಲಭೂತ ಸೌಕರ್ಯಗಳೇ ಇಲ್ಲದ ಪರಿಸ್ಥಿತಿಯಲ್ಲಿ 10 ಮಕ್ಕಳು, 11 ಮಹಿಳೆಯರು ಮತ್ತು 16 ಪುರುಷರು ಸೇರಿ ಒಟ್ಟು 37 ಮಂದಿ ಬದುಕುತ್ತಿದ್ದರು.&lt;/p&gt;&lt;img&gt;&lt;p&gt;ಸ್ಪಂದನ ಸಂಸ್ಥೆಯ ಸದಸ್ಯ ಹೃದಯ ರಾಜ್ ನೀಡಿದ ಮಾಹಿತಿಯ ಮೇರೆಗೆ ಜಿಲ್ಲಾಡಳಿತ ತಂಡ ದಾಳಿ ನಡೆಸಿ ಕಾರ್ಮಿಕರನ್ನು ರಕ್ಷಿಸಿತು. ರಕ್ಷಿಸಲಾದವರನ್ನು ಅಗತ್ಯ ಸೌಲಭ್ಯಗಳೊಂದಿಗೆ ಸುರಕ್ಷಿತವಾಗಿ ಒಡಿಶಾ ರಾಜ್ಯಕ್ಕೆ ರೈಲಿನ ಮೂಲಕ ಕಳುಹಿಸಲಾಯಿತು. ಈ ಪ್ರಕರಣ ಸಂಬಂಧ ಇಟ್ಟಿಗೆ ಭಟ್ಟಿ ಮಾಲೀಕರಾದ ಶ್ರೀನಿವಾಸ್, ಮಹಾದೇವ ರಾವ್ ಹಾಗೂ ವೆಂಕಟ ಪ್ರಸಾದ್ ವಿರುದ್ಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್&zwnj;ಐಆರ್ ದಾಖಲಾಗಿದೆ. ಜೀತ ಪದ್ಧತಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಘಟನೆ ಬೆಳಕಿಗೆ ಬಂದ ಬಳಿಕ ಜಿಲ್ಲಾಡಳಿತವು ಇಂತಹ ಅನಧಿಕೃತ ಚಟುವಟಿಕೆಗಳ ಮೇಲೆ ಹೆಚ್ಚುವರಿ ನಿಗಾವಹಿಸಿದೆ. ಅಂತರ್&zwnj;ರಾಜ್ಯ ಕಾರ್ಮಿಕರ ಶೋಷಣೆಯನ್ನು ತಡೆಗಟ್ಟಲು ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಘಟನೆ ಜೀತ ಪದ್ಧತಿಯಂತಹ ಅಮಾನವೀಯ ವ್ಯವಸ್ಥೆಗಳು ಇನ್ನೂ ಕೆಲವೆಡೆ ಮುಂದುವರಿಯುತ್ತಿರುವುದನ್ನು ತೋರಿಸುತ್ತಿದ್ದು, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಜಾಗೃತಿ ಮತ್ತು ಕಾನೂನು ಕ್ರಮಗಳ ಅಗತ್ಯತೆಯನ್ನು ಒತ್ತಿ ಹೇಳುತ್ತದೆ.&lt;/p&gt;]]></content:encoded>
            <category>vijayanagara</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/karnataka-news-37-odisha-migrant-workers-rescued-from-bonded-labour-in-vijayanagara-district-gdp-gi6t0az"/>
        </item>
        <item>
            <title><![CDATA[ಹಂಪಿಯ  ಉತ್ಖನನದಲ್ಲಿ ಭಗ್ನಗೊಂಡ 2 ಆಳ್ವರ್‌ ವಿಗ್ರಹ, ಮೂರು ಪ್ರತಿಷ್ಠಾನ ಪೀಠ ಪತ್ತೆ]]></title>
            <link>https://kannada.asianetnews.com/gallery/karnataka-districts/vijayanagar-2-broken-alvar-idols-three-foundation-stones-found-in-hampi-excavation-mrq-izhl9iv</link>
            <guid isPermaLink="true">https://kannada.asianetnews.com/gallery/karnataka-districts/vijayanagar-2-broken-alvar-idols-three-foundation-stones-found-in-hampi-excavation-mrq-izhl9iv</guid>
            <pubDate>Thu, 21 May 2026 07:27:04 +0530</pubDate>
            <description><![CDATA[&lt;p&gt;ಹಂಪಿಯ ಹಜಾರರಾಮ ದೇಗುಲದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸಿದ ಉತ್ಖನನದಲ್ಲಿ, ಭಗ್ನಗೊಂಡ ಪುರಾತನ ಆಳ್ವರ್ ವಿಗ್ರಹಗಳು ಮತ್ತು ಪೀಠಗಳು ಪತ್ತೆಯಾಗಿವೆ. 1565ರ ತಾಳಿಕೋಟೆ ಕದನದ ನಂತರ ನಡೆದ ದಾಳಿಗೆ ಸಾಕ್ಷಿಯಾಗಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks43s9nkhx25g3t1dbxe28v2,imgname-hampi--1--1779328394931.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಂಪಿಯ ಹಜಾರರಾಮ ದೇಗುಲದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸಿದ ಉತ್ಖನನದಲ್ಲಿ, ಭಗ್ನಗೊಂಡ ಪುರಾತನ ಆಳ್ವರ್ ವಿಗ್ರಹಗಳು ಮತ್ತು ಪೀಠಗಳು ಪತ್ತೆಯಾಗಿವೆ. 1565ರ ತಾಳಿಕೋಟೆ ಕದನದ ನಂತರ ನಡೆದ ದಾಳಿಗೆ ಸಾಕ್ಷಿಯಾಗಿವೆ.&lt;/p&gt;&lt;img&gt;&lt;p&gt;ಹೊಸಪೇಟೆ: ಹಂಪಿಯ ಹಜಾರರಾಮ ದೇಗುಲ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯಿಂದ ಕಳೆದ ಕೆಲ ದಿನಗಳಿಂದ ಉತ್ಖನನ ನಡೆಯುತ್ತಿದ್ದು, ಭಗ್ನಗೊಂಡಿರುವ ಪುರಾತನ ಕಾಲದ ಎರಡು ಆಳ್ವರ್ (ತಮಿಳುನಾಡಿನ ಒಂದು ಭಕ್ತಿ ಪಂಥದವರು ಕೆತ್ತಿದ ವಿಗ್ರಹ), ವಿಗ್ರಹ ಪ್ರತಿಷ್ಠಾಪನೆ ಮಾಡುವ ಮೂರು ಪೀಠಗಳು ಪತ್ತೆಯಾಗಿವೆ.&lt;/p&gt;&lt;img&gt;&lt;p&gt;ಕಳೆದ ಮೂರು ದಿನಗಳ ಹಿಂದೆ ಕಲ್ಲಿನ ಚಾವಣಿ, ಆನೆಯ ವಿಗ್ರಹಗಳು ಪತ್ತೆ ಆಗಿದ್ದವು. 1565ರ ತಾಳಿಕೋಟೆ ಕದನದಲ್ಲಿ ವಿಜಯನಗರ ಅರಸರು ಪರಾಭವಗೊಂಡರು. ನಂತರ ಬಹುಮನಿ ಸುಲ್ತಾನರ ಆಕ್ರಮಣಕ್ಕೆ ತುತ್ತಾಗಿ ಸಾವಿರಾರು ವಿಗ್ರಹಗಳು, ದೇವರ ಮೂರ್ತಿಗಳ ಶಿರಚ್ಛೇದನಗೊಳಿಸಿ, ನಾಶಪಡಿಸಲಾಯಿತು. ಬಳಿಕ ಈಗ ನಡೆಯುತ್ತಿರುವ ಉತ್ಖನನದಲ್ಲಿ ವಿಗ್ರಹಗಳು ಪತ್ತೆಯಾಗುತ್ತಿವೆ.&lt;/p&gt;&lt;img&gt;&lt;p&gt;ಈಗ ದೊರೆತ ಮೂರ್ತಿಗಳು ಆಳ್ವರ್ ಮೂರ್ತಿಗಳಾಗಿವೆ. ಸುಮಾರು 11 ಜನ ಆಳ್ವರ್&zwnj; ಸಂತರು ವೈಷ್ಣವ ಮತ ಪ್ರಚಾರಕರಾಗಿದ್ದರು. ಹಂಪಿ ಪ್ರದೇಶದಲ್ಲಿ ವೈಷ್ಣವ ಪರಂಪರೆಯ ಪ್ರಭಾವ ಬಹಳ ಗಾಢವಾಗಿತ್ತು. ವಿಶೇಷವಾಗಿ ವಿಜಯನಗರ ಕಾಲದಲ್ಲಿ ವೈಷ್ಣವ ಸಂಪ್ರದಾಯ, ವಿಷ್ಣು ಭಕ್ತಿ ಮತ್ತು ಆಳ್ವರ್&zwnj;ಗಳ ಭಕ್ತಿಗೀತೆಗಳಿಗೆ ಹೆಚ್ಚಿನ ಗೌರವ ಇತ್ತು ಎಂದು ಇತಿಹಾಸಕಾರರು ಹೇಳಿದ್ದಾರೆ.&lt;/p&gt;&lt;img&gt;&lt;p&gt;ಉತ್ಖನನದ ವೇಳೆ ದೊರೆತ ವಿಗ್ರಹಗಳನ್ನು ನೋಡಿದರೆ ಅಂದಿನ ದಾಳಿಯ ಭೀಕರತೆಯನ್ನು ತಿಳಿಯಬಹುದು. ಇನ್ನೂ ಹೆಚ್ಚಿನ ಮಟ್ಟದಲ್ಲಿ ದೊರೆಯುವ ವಿಗ್ರಹಗಳಿಂದ ಮತ್ತು ಕುರುಹುಗಳಿಂದ ವಿಜಯನಗರ ಸಾಮ್ರಾಜ್ಯದ ವೈಭವ, ಶ್ರೀಮಂತಿಕೆಯನ್ನು ತಿಳಿಯಬಹುದು ಎಂದು ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ವಿರೂಪಾಕ್ಷಿ ಹೇಳುತ್ತಾರೆ.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/vijayanagar-2-broken-alvar-idols-three-foundation-stones-found-in-hampi-excavation-mrq-izhl9iv"/>
        </item>
        <item>
            <title><![CDATA[5 States Assembly Election Results 2026: ತಮಿಳುನಾಡು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು: ಬಿ. ಶ್ರೀರಾಮುಲು]]></title>
            <link>https://kannada.asianetnews.com/politics/5-states-assembly-election-results-2026-clear-victory-for-bjp-in-all-states-except-tamil-nadu-says-b-sriramulu-rav/articleshow-k54egwx</link>
            <guid isPermaLink="true">https://kannada.asianetnews.com/politics/5-states-assembly-election-results-2026-clear-victory-for-bjp-in-all-states-except-tamil-nadu-says-b-sriramulu-rav/articleshow-k54egwx</guid>
            <pubDate>Mon, 04 May 2026 09:14:01 +0530</pubDate>
            <description><![CDATA[&lt;p&gt;5 States Assembly Election Results 2026 ಮಾಜಿ ಸಚಿವ ಬಿ. ಶ್ರೀರಾಮುಲು ಅವರು, ತಮಿಳುನಾಡು ಹೊರತುಪಡಿಸಿ ಉಳಿದೆಡೆ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಗಳ ಬಗ್ಗೆಯೂ ಪ್ರಸ್ತಾಪಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jnwakwxt1hr4mmnrd9xknkc0,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಂಪ್ಲಿ (ಮೇ.4): &lt;/strong&gt;ತಮಿಳುನಾಡು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟವಾದ ಗೆಲುವು ಸಿಗಲಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ರಾಜಕೀಯ ಪರಿಸ್ಥಿತಿಯ ಬಗ್ಗೆ ವಿವರವಾಗಿ ಅಭಿಪ್ರಾಯ ಹಂಚಿಕೊಂಡರು.&lt;/p&gt;&lt;p&gt;ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭಾರೀ ಹಣ ವ್ಯಯ ಮಾಡಿದ್ದರೂ ಜನರಲ್ಲಿ ಬಿಜೆಪಿ ಪರ ಹವಾ ಇದೆ. ದಾವಣಗೆರೆಯಲ್ಲಿ ಎರಡರಿಂದ ಮೂರು ಸಾವಿರ ಮತಗಳ ಅಂತರದಲ್ಲಿ, ಬಾಗಲಕೋಟೆಯಲ್ಲಿ ಸುಮಾರು ಐದು ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ವಾಣಿಜ್ಯ ಅನಿಲದ ದರ ಏರಿಕೆ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. ಜಾಗತಿಕ ಪರಿಸ್ಥಿತಿಗಳ ಪರಿಣಾಮವಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.&lt;/p&gt;&lt;p&gt;ಇರಾನ್, ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯ ಸಮಯದಲ್ಲೇ ದರ ಏರಿಕೆ ಮಾಡಬೇಕಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಅದು ತಡವಾಗಿದೆ ಎಂದರು.&lt;/p&gt;&lt;p&gt;ರಾಜ್ಯ ರಾಜಕೀಯದಲ್ಲಿ ವೇಗವಾದ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ವದಂತಿಗಳು ಕೇಳಿಬರುತ್ತಿವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಸಾಧ್ಯತೆಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.&lt;/p&gt;&lt;p&gt;ತುಂಗಭದ್ರಾ ಜಲಾಶಯದ ಗೇಟ್&zwnj;ಗಳ ದುರಸ್ತಿ ಕಾರ್ಯದಿಂದ ರೈತರು ಒಂದು ಹಂಗಾಮಿನ ಬೆಳೆ ಕಳೆದುಕೊಂಡಿದ್ದಾರೆ. ಹಾನಿಗೊಳಗಾದ ರೈತರಿಗೆ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಜಲಾಶಯದ ಗೇಟ್&zwnj;ಗಳಿಗೆ ಸಂಬಂಧಿಸಿದ ಹಳೆಯ ಚೈನ್&zwnj;ಗಳು ಇನ್ನು ಬದಲಾಯಿಸದಿರುವುದು ಆತಂಕಕಾರಿ ವಿಷಯ. ಅವು ನೀರಿನ ಒತ್ತಡ ತಾಳದೆ ಮುರಿದು ಬೀಳುವ ಸಾಧ್ಯತೆ ಇದ್ದು, ಇದರಿಂದ ಮತ್ತೊಂದು ಬೆಳೆ ಹಾನಿಯಾಗುವ ಭೀತಿ ಇದೆ. ತಕ್ಷಣವೇ ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.&lt;/p&gt;&lt;p&gt;ಮೇ 9ರಂದು ಚಿತ್ರದುರ್ಗನಲ್ಲಿ ನಡೆಯಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಭಿನಂದನಾ ಸಮಾರಂಭಕ್ಕೆ ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಇದು 2028ರ ವಿಧಾನಸಭಾ ಚುನಾವಣೆಗೆ ಒಗ್ಗಟ್ಟಿನ ವೇದಿಕೆಯಾಗಿ ಪರಿಣಮಿಸಲಿದೆ ಎಂದರು.&lt;/p&gt;&lt;p&gt;ಇದೇ ವೇಳೆ ಜಾತಿ ಸಮೀಕ್ಷೆಯ ನಂತರ ಕ್ಷೇತ್ರ ಪುನರ್ವಿಂಗಡಣೆ ಸಾಧ್ಯತೆ ಎದುರಾಗಬಹುದು ಎಂದರು.&lt;/p&gt;&lt;p&gt;ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಹಾಗೂ ಬಿಜೆಪಿ ಮುಖಂಡರಿದ್ದರು.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/5-states-assembly-election-results-2026-clear-victory-for-bjp-in-all-states-except-tamil-nadu-says-b-sriramulu-rav/articleshow-k54egwx"/>
        </item>
        <item>
            <title><![CDATA[ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ; ಜೊತೆಯಾಗಿಯೇ ಇಬ್ಬರ ಅಂತ್ಯಕ್ರಿಯೆ]]></title>
            <link>https://kannada.asianetnews.com/karnataka-districts/vijayanagar-gadag-sister-also-has-heart-attack-after-hearing-news-of-her-brother-s-death-both-are-cremated-together-mrq/articleshow-lakd8er</link>
            <guid isPermaLink="true">https://kannada.asianetnews.com/karnataka-districts/vijayanagar-gadag-sister-also-has-heart-attack-after-hearing-news-of-her-brother-s-death-both-are-cremated-together-mrq/articleshow-lakd8er</guid>
            <pubDate>Tue, 02 Jun 2026 08:13:00 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಅನಾರೋಗ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ಚಿಕಿತ್ಸೆ ಕೊಡಿಸಿ ಮರಳುತ್ತಿದ್ದ ತಮ್ಮ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಈ ಸುದ್ದಿ ಕೇಳಿದ ಆಘಾತಕ್ಕೆ ಅಕ್ಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt338n0exf5h3cdgm6q7gwnk,imgname-death-1780368036878.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ/ಗದಗ: &lt;/strong&gt;ಅನಾರೋಗ್ಯದಿಂದ ಬಳಲುತ್ತಿದ್ದ ತನಗೆ (ಸಹೋದರಿ) ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಮರಳಿ ತೆರಳುವಾಗ ಬೈಕ್&zwnj; ಅಪಘಾತದಲ್ಲಿ ಸಹೋದರ ಮೃತಪಟ್ಟ ಘಟನೆಯ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತವಾಗಿ ಮೃತಪಟ್ಟ ದಾರುಣ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.&lt;/p&gt;&lt;p&gt;ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಮ್ಮ (48) ಮೃತ ಮಹಿಳೆ. ಇವರ ತಮ್ಮ ನಿಂಗಪ್ಪ ಇಲ್ಲಿನ ಜೆಸ್ಕಾಂ ಕಚೇರಿಯ ಲೈನ್&zwnj;ಮ್ಯಾನ್&zwnj; ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗದಗ: 101 ವರ್ಷ ಹಳೆಯ ಅಪರೂಪದ ಔಷಧಿ ಗುಣದ ಮಡ್ಡಿ ಮರ ಪತ್ತೆ; ಮಧುಮೇಹ ನಿಯಂತ್ರಣಕ್ಕೆ ರಾಮಬಾಣ&lt;/strong&gt;&lt;/p&gt;&lt;h2&gt;&lt;strong&gt;ಅಪಘಾತದಲ್ಲಿ ತಮ್ಮನ ಸಾವು&lt;/strong&gt;&lt;/h2&gt;&lt;p&gt;ಮಲ್ಲಮ್ಮ ಅನಾರೋಗ್ಯದಿಂದಾಗಿ ಕಳೆದೊಂದು ವಾರದಿಂದ ರಜೆ ಪಡೆದಿದ್ದರು. ಅವರನ್ನು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬೂದಿಹಾಳದಲ್ಲಿ ಬಿಟ್ಟು ಬರುವಾಗ ತಾಲೂಕಿನ ಕಾಗನೂರು ಬಳಿ ನಿಂಗಪ್ಪನ ಬೈಕ್&zwnj;ಗೆ ನಾಯಿಯೊಂದು ಅಡ್ಡ ಬಂದು ಬೈಕ್ ಅಪಘಾತವಾಗಿ ಅಸುನೀಗಿದರು. ಸಹೋದರ ಮೃತಪಟ್ಟ ಸುದ್ದಿ ತಿಳಿದ ಕೂಡಲೇ ಮಲ್ಲಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರ ಅಂತ್ಯಕ್ರಿಯೆ ಬೂದಿಹಾಳದಲ್ಲಿ ಭಾನುವಾರ ನಡೆಯಿತು.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Gadag: ಅಪಾಯದಂಚಿನ ಮಾರ್ಗ: ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ&lt;/strong&gt;&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/vijayanagar-gadag-sister-also-has-heart-attack-after-hearing-news-of-her-brother-s-death-both-are-cremated-together-mrq/articleshow-lakd8er"/>
        </item>
        <item>
            <title><![CDATA[ರಾಜ್ಯದಲ್ಲಿ ಮಳೆ ಅಬ್ಬರ: ರಾಯಚೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು, ವಿಜಯನಗರದಲ್ಲಿ ಪಪ್ಪಾಯಿ ಬೆಳೆ ನಾಶ!]]></title>
            <link>https://kannada.asianetnews.com/karnataka-districts/karnataka-rain-havoc-raichur-lightning-death-vijayanagara-papaya-crop-loss-sat/articleshow-n5vhd0s</link>
            <guid isPermaLink="true">https://kannada.asianetnews.com/karnataka-districts/karnataka-rain-havoc-raichur-lightning-death-vijayanagara-papaya-crop-loss-sat/articleshow-n5vhd0s</guid>
            <pubDate>Sun, 17 May 2026 18:23:55 +0530</pubDate>
            <description><![CDATA[ರಾಜ್ಯದ ಹಲವೆಡೆ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯು ತೀವ್ರ ಹಾನಿಯನ್ನುಂಟುಮಾಡಿದೆ. ರಾಯಚೂರು ಜಿಲ್ಲೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟರೆ, ವಿಜಯನಗರ ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ರೈತ ದಂಪತಿಯ ಮೂರು ಎಕರೆ ಪಪ್ಪಾಯಿ ಬೆಳೆ ಸಂಪೂರ್ಣ ನಾಶವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krtztbercysg2xknpx78hc1t,imgname-karnataka-rain--1--1779022245336.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು/ವಿಜಯನಗರ: ರಾ&lt;/strong&gt;ಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮಳೆ ಅನಾಹುತಗಳಿಗೆ ಓರ್ವ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರೆ, ವಿಜಯನಗರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ರೈತರ ವರ್ಷದ ಶ್ರಮವೆಲ್ಲಾ ಮಣ್ಣು ಪಾಲಾಗಿದೆ.&lt;/p&gt;&lt;h3&gt;&lt;strong&gt;ರಾಯಚೂರು: ಸಿಡಿಲು ಬಡಿತಕ್ಕೆ ಕರಿಯಪ್ಪ ಸಾವು&lt;/strong&gt;&lt;/h3&gt;&lt;p&gt;ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಕೋಮಲಾಪುರ್ ಗ್ರಾಮದಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಗೆನ್ನಾಕಿಹಾಳ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮದ ಜಮೀನಿನಲ್ಲಿ ಟ್ರಾಕ್ಟರ್&zwnj;ಗೆ ಗೊಬ್ಬರ ತುಂಬುವ ಕೆಲಸದಲ್ಲಿ ನಿರತರಾಗಿದ್ದಾಗ ಈ ದುರಂತ ಸಂಭವಿಸಿದೆ. ಕರಿಯಪ್ಪ ಅವರೊಂದಿಗೆ ಕೆಲಸ ಮಾಡುತ್ತಿದ್ದ ಬಸವರಾಜ್ ಎಂಬುವವರಿಗೂ ಸಿಡಿಲು ಬಡಿದಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;h2&gt;&lt;strong&gt;ರೈತ ದಂಪತಿಯ ಬಾಳಲ್ಲಿ ಬಿರುಗಾಳಿ&lt;/strong&gt;&lt;/h2&gt;&lt;p&gt;ಮತ್ತೊಂದೆಡೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಮಳೆ ಹಾನಿ ತೀವ್ರವಾಗಿದೆ. ತಾಲ್ಲೂಕಿನ ಕೆಂಗಲಹಟ್ಟಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಪಪ್ಪಾಯಿ ಬೆಳೆ ಸಂಪೂರ್ಣ ನೆಲಸಮವಾಗಿದೆ. ರೈತ ದಂಪತಿಗಳಾದ ಸೀತಮ್ಮ ಮತ್ತು ಜಿ.ಎಸ್. ದೊಡ್ಡಪ್ಪ ಅವರಿಗೆ ಸೇರಿದ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ 200ಕ್ಕೂ ಹೆಚ್ಚು ಪಪ್ಪಾಯಿ ಗಿಡಗಳು ಧರೆಗುರುಳಿವೆ.&lt;/p&gt;&lt;p&gt;ಈ ರೈತ ದಂಪತಿ ಸುಮಾರು 6 ತಿಂಗಳ ಹಿಂದೆ 3 ಲಕ್ಷ ರೂಪಾಯಿ ಸಾಲ-ಸೋಲ ಮಾಡಿ ಪಪ್ಪಾಯಿ ಬೆಳೆ ಹಾಕಿದ್ದರು. ಇನ್ನೇನು ಮೂರು ತಿಂಗಳಲ್ಲಿ ಬೆಳೆ ಕೈಗೆ ಬರಬೇಕಿತ್ತು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಪ್ರಕೃತಿ ಮುನಿಸು ಭಾರಿ ಆಘಾತ ನೀಡಿದೆ. 'ಬೆಳೆದಿದ್ದ ಗಿಡಗಳು ಮಣ್ಣು ಪಾಲಾಗಿರುವುದನ್ನು ಕಂಡು ನಮಗೆ ದಿಕ್ಕು ತೋಚದಂತಾಗಿದೆ ಎಂದು ದಂಪತಿ ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ:&lt;/strong&gt;&lt;/h3&gt;&lt;p&gt;ಸಿಡಿಲು ಬಡಿತಕ್ಕೆ ಬಲಿಯಾದ ಕರಿಯಪ್ಪ ಅವರ ಕುಟುಂಬಕ್ಕೆ ಹಾಗೂ ಬೆಳೆ ಕಳೆದುಕೊಂಡು ಕಂಗಾಲಾಗಿರುವ ವಿಜಯನಗರದ ರೈತ ದಂಪತಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮುಂಗಾರು ಪೂರ್ವ ಮಳೆ (Pre-monsoon rain) ತೀವ್ರಗೊಳ್ಳುತ್ತಿರುವುದರಿಂದ ರೈತರು ಹೊಲಗದ್ದೆಗಳಲ್ಲಿ ಕೆಲಸ ಮಾಡುವಾಗ ಹವಾಮಾನದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;]]></content:encoded>
            <category>vijayanagara</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-rain-havoc-raichur-lightning-death-vijayanagara-papaya-crop-loss-sat/articleshow-n5vhd0s"/>
        </item>
        <item>
            <title><![CDATA[ವಿಜಯನಗರ: ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು 6 ಮಂದಿ ಸಾವು, ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ, 5ಲಕ್ಷ ರೂ ಪರಿಹಾರ]]></title>
            <link>https://kannada.asianetnews.com/gallery/karnataka-districts/many-killed-in-tragic-tractor-crash-at-munirabad-near-tungabhadra-dam-in-vijayanagara-gdp-pzi835g</link>
            <guid isPermaLink="true">https://kannada.asianetnews.com/gallery/karnataka-districts/many-killed-in-tragic-tractor-crash-at-munirabad-near-tungabhadra-dam-in-vijayanagara-gdp-pzi835g</guid>
            <pubDate>Fri, 15 May 2026 19:52:09 +0530</pubDate>
            <description><![CDATA[&lt;p&gt;ಹೊಸಪೇಟೆ ಸಮೀಪದ ಮುನಿರಾಬಾದ್&zwnj;ನಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krnyatvvcfr0rzestagb610x,imgname-vijayanagara-road-accident-1778852916091.jpg" type="image/jpeg" height="390" width="690"/>
            <content:encoded><![CDATA[&lt;p&gt;ಹೊಸಪೇಟೆ ಸಮೀಪದ ಮುನಿರಾಬಾದ್&zwnj;ನಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ.&amp;nbsp;&lt;/p&gt;&lt;img&gt;&lt;p&gt;ವಿಜಯನಗರ: ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್&zwnj; ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮನಕಲಕುವಂತಿದೆ. ಟ್ರ್ಯಾಕ್ಟರ್&zwnj;ನಲ್ಲಿ ಒಟ್ಟು 19 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸರ್ಕಾರದಿಂದ ಇದೀಗ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.&lt;/p&gt;&lt;img&gt;&lt;p&gt;ಮೃತರಲ್ಲಿ ಒಂದೇ ಕುಟುಂಬದ ಸದಸ್ಯರು ಸೇರಿದಂತೆ ಮಹಿಳೆಯರು ಮತ್ತು ಒಂದು ವರ್ಷದ ಮಗು ಸೇರಿರುವುದು ದುರ್ಘಟನೆಯ ಗಂಭೀರತೆಯನ್ನು ಹೆಚ್ಚಿಸಿದೆ. ಮೃತಪಟ್ಟ 6 ಮಂದಿ ಗುರುತು ಪತ್ತೆಯಾಗಿದ್ದು, ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾಂತೇಶ್ ಹಾಗೂ ಗೌರಮ್ಮ ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇನ್ನು ಈ ಟ್ರ್ಯಾಕ್ಟರ್ ಅಪಘಾತದಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಮಹಾಲಕ್ಷ್ಮೀ ಎಂಬಾಕೆ ಪಾರಾಗಿದ್ದಾರೆ. ಆದರೆ ಆಕೆಯ ತಾಯಿ ಗೀತಾ ಹಾಗೂ ಸಹೋದರ ಭರತ್ ಮೃತಪಟ್ಟಿದ್ದಾರೆ. ಇವರು ಕೂಡ್ಲಿಗಿ ತಾಲೂಕಿನ ಭೈರದೇರಗುಡ್ಡ ಗ್ರಾಮದವರು.&lt;/p&gt;&lt;img&gt;&lt;p&gt;ಹುಲಿಗೆಮ್ಮ ದೇವಸ್ಥಾನಕ್ಕೆ ಬ್ಯಾಟಿ ( ದೇವರು) ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲತಃ ಕೃಷಿ ಚಟುವಟಿಕೆಗಾಗಿ ಬಳಕೆಯಾಗಬೇಕಾದ ವಾಹನವಾಗಿದ್ದು, ಇದರಲ್ಲಿ ಹೆಚ್ಚು ಸಂಖ್ಯೆಯಲ್ಲಿ ಪ್ರಯಾಣಿಸುವುದು ಅಪಾಯಕಾರಿ ಆದರೂ ಈ ವಾಹನದಲ್ಲಿ 19 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ&lt;/p&gt;&lt;img&gt;&lt;p&gt;ಹೊಸಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರ ಎದುರು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಮ್ಮವರನ್ನು ಕಳೆದುಕೊಂಡ ನೋವಿನಲ್ಲಿ ಕುಟುಂಬ ಸದಸ್ಯರು ಒಬ್ಬರನ್ನೊಬ್ಬರು ಅಪ್ಪಿಕೊಂಡು ರೋದಿಸುತ್ತಿರುವ ದೃಶ್ಯಗಳು ಮನಕಲಕುವಂತಿವೆ. ಶವಾಗಾರದ ಎದುರು ತಂದೆ, ಮಗನ ಆಕ್ರಂದನ ಹೇಳ ತೀರದು. ಹೆಂಡತಿ, ಮಗನನ್ನ ಕಳೆದುಕೊಂಡ ಗಂಡ ಮಲ್ಲೇಶ್ ಹಾಗೂ ಮತ್ತೊರ್ವ ಮಗ ಶವಾಗಾರದ ಎದುರು ಒಬ್ಬರಿಗೊಬ್ಬರು ತಬ್ಬಿ ಕೊಂಡು ರೋಧಿಸ್ತಿರುವುದು ಅಲ್ಲಿ ನೆರೆದಿದ್ದವರ ಕಣ್ಣಲ್ಲೂ ನೀರು ತರಿಸಿತು&lt;/p&gt;&lt;img&gt;&lt;p&gt;ಘಟನೆಯ ಮಾಹಿತಿ ತಿಳಿದ ತಕ್ಷಣ ಬಳ್ಳಾರಿ ವಲಯ ಐಜಿಪಿ ಡಾ. ಹರ್ಷಾ ಹಾಗೂ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳ್ಳಾರಿ ವಲಯ ಐಜಿಪಿ ಡಾ. ಹರ್ಷಾ ಗಾಯಾಳುಗಳ ಆರೋಗ್ಯ&zwnj; ವಿಚಾರಣೆ ನಡೆಸಿ ಘಟನೆ ಬಗ್ಗೆ ಮಾಹಿತಿ ಪಡೆದರು. ಹೊಸಪೇಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಪ್ಪಳ ಎಸ್ಪಿ ಎಲ್.&zwnj;ಅರಸಿದ್ದಿ, ವಿಜಯನಗರ ಎಸ್ಪಿ ಜಾಹ್ನವಿ ಕೂಡ ಭೇಟಿ ನೀಡಿದರು.&lt;/p&gt;&lt;img&gt;&lt;p&gt;ಟಿಬಿ ಡ್ಯಾಂ ಬಳಿ ಟ್ರ್ಯಾಕ್ಟರ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಸರ್ಕಾರಿ&zwnj; ಆಸ್ಪತ್ರೆಗೆ ಸಂಸದ ತುಕಾರಾಂ ಭೇಟಿ ಗಾಯಗೊಂಡವರ ಆರೋಗ್ಯ&zwnj; ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಮಾತಾಡಿದ ಸಂಸದ ತುಕಾರಾಂ ಸಿಎಂ ಸಿದ್ದರಾಮಯ್ಯ ಅವರ ಬಳಿ ಮಾತಾಡಿದ್ದೇನೆ. ಮೃತ ಪ್ರತಿಯೊಬ್ಬರ ಕುಟುಂಬಕ್ಕೂ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ ಗಾಯಾಳುಗಳ ವೆಚ್ಚವನ್ನ ನಾನೇ ಸಂಪೂರ್ಣವಾಗಿ ಬರಿಸುತ್ತೇನೆ ಎಂದರು.&amp;nbsp;&lt;/p&gt;&lt;img&gt;&lt;p&gt;ಇದೇ ವೇಳೆ ಘಟನೆ ಬಗ್ಗೆಯೂ ಮಾಹಿತಿ ನೀಡಿದ ಅವರು, &amp;nbsp;ಸಂಡೂರಿನಿಂದ ಕೂಡ್ಲಿಗಿ ಬಂದು ಅಲ್ಲಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಗಾಡಿ ಗುದ್ದಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರ್ಯಾಕ್ಟರ್ ಡ್ರೈವರ್ ಸಹಿತ ಆರು ಜನ ಸಾವನ್ನಪ್ಪಿದ್ದಾರೆ. 19 ಜನ ಟ್ರ್ಯಾಕ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು . ಅಷ್ಟೇ ಅಲ್ಲದೇ ಟ್ರ್ಯಾಕ್ಟರ್ ಇರುವುದು ಕೃಷಿ ಚಟುವಟಿಕೆ ಬಳಕೆಗೆ. ಜನಸಾಮಾನ್ಯರು ಈ ಬಗ್ಗೆ ಅರಿತುಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸ್, RTO ಸಭೆ ಕರೆದು ಸೂಚನೆ ನೀಡಲಾಗುವುದು ಎಂದರು. ಈ ಘಟನೆ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್&zwnj;ಗಳನ್ನು ಪ್ರಯಾಣಿಕರ ಸಾಗಣೆಗೆ ಬಳಸುವುದು ಎಷ್ಟು ಅಪಾಯಕಾರಿಯಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ದುರ್ಘಟನೆ ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಒತ್ತಿ ಹೇಳುತ್ತದೆ.&lt;/p&gt;]]></content:encoded>
            <category>vijayanagara</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/many-killed-in-tragic-tractor-crash-at-munirabad-near-tungabhadra-dam-in-vijayanagara-gdp-pzi835g"/>
        </item>
        <item>
            <title><![CDATA[ಹಂಪಿ ದೇಗುಲದ ಲಕ್ಷ್ಮೀ ಆನೆ ಸ್ಥಳಾಂತರ ವಿರೋಧಿಸಿ ಭಕ್ತರಿಂದ ಪ್ರತಿಭಟನೆ]]></title>
            <link>https://kannada.asianetnews.com/karnataka-districts/vijayanagara-devotees-protest-against-relocation-of-lakshmi-elephant-at-hampi-virupaksheshwara-temple-mrq/articleshow-qcr7h6s</link>
            <guid isPermaLink="true">https://kannada.asianetnews.com/karnataka-districts/vijayanagara-devotees-protest-against-relocation-of-lakshmi-elephant-at-hampi-virupaksheshwara-temple-mrq/articleshow-qcr7h6s</guid>
            <pubDate>Wed, 27 May 2026 07:38:31 +0530</pubDate>
            <description><![CDATA[ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ 'ಲಕ್ಷ್ಮಿ' ಆನೆಯನ್ನು ಅನಾರೋಗ್ಯದ ಕಾರಣ ನೀಡಿ ಸ್ಥಳಾಂತರಿಸುವುದನ್ನು ವಿರೋಧಿಸಿ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಹೊಸ ಹಂಪಿಯ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kskjr2a6xperq3g4s7c8fz4k,imgname-hampi--1--1779847399750.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ:&lt;/strong&gt; ವಿಶ್ವ ವಿಖ್ಯಾತ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಸೇರಿದ ಸುಮಾರು 42 ವರ್ಷದ &lsquo;ಲಕ್ಷ್ಮಿ&rsquo; ಹೆಸರಿನ ಆನೆಯನ್ನು ಅನಾರೋಗ್ಯದ ನೆಪ ಹೇಳಿ ಕೋಲಾರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ ಸ್ಥಳೀಯರು, ಭಕ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆಯವರು 3 ತಿಂಗಳ ಕಾಲ ಚಿಕಿತ್ಸೆಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಹೇಳುತ್ತಿರುವುದು ನೆಪಮಾತ್ರ. ಇಲ್ಲಿಂದ ಆನೆಯನ್ನು ಸ್ಥಳಾಂತರಿಸಿದರೆ ಅದು ವಾಪಸಾಗಲ್ಲ. ಯಾವುದೇ ಕಾರಣಕ್ಕೂ ಆನೆಯನ್ನು ಸ್ಥಳಾಂತರ ಮಾಡಲು ಬಿಡುವುದಿಲ್ಲ ಎಂದು ಹಂಪಿ, ಕಮಲಾಪುರ, ಕಡ್ಡಿರಾಂಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಒಂದು ವೇಳೆ ಆನೆಗೆ ಅನಾರೋಗ್ಯದವಿದ್ದರೆ ಹಂಪಿಯಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು. ಚಿಕಿತ್ಸೆ ಬಳಿಕ ಆನೆಯನ್ನು ವಾಪಸ್&zwnj; ಕರೆತರಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಮರಳಿ ಹಂಪಿಗೆ&lt;/strong&gt;&lt;/h2&gt;&lt;p&gt;ಆನೆಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಸೂಕ್ತ ಚಿಕಿತ್ಸೆಗೆ ಕೋಲಾರದಲ್ಲಿರುವ ಆನೆ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಲಾಗುತ್ತಿದೆ. ಗುಣಮುಖವಾದ ನಂತರ ಪುನಃ ಹಂಪಿಗೆ ಕರೆ ತರಲಾಗವುದು. ಯಾರು ಕೂಡ ಈ ಬಗ್ಗೆ ಗಾಬರಿಯಾಗುವುದು ಬೇಡ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ತಿಳಿಸಿದ್ದಾರೆ.&lt;/p&gt;&lt;h3&gt;&lt;strong&gt;ಹೊಸ ಹಂಪಿಯಲ್ಲಿ ಚಿರತೆ ಪ್ರತ್ಯಕ್ಷ&lt;/strong&gt;&lt;/h3&gt;&lt;p&gt;ವಿಶ್ವವಿಖ್ಯಾತ ಹಂಪಿಯ ಪ್ರದೇಶದ ಹೊಸ ಹಂಪಿಯ ಮನೆಗಳ ಮುಂದೆ ಚಿರತೆ ಪ್ರತ್ಯಕ್ಷವಾಗಿ ಓಡಾಟದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೋಮವಾರ ರಾತ್ರಿ 12 ಗಂಟೆಗೆ ಸೆರೆಯಾದ ಬಗ್ಗೆ ವರದಿಯಾಗಿದೆ.ಹಂಪಿಯ ಜನತಾ ಪ್ಲಾಟ್&zwnj;ನಲ್ಲಿ ಈ ಹಿಂದೆಯೂ ಚಿರತೆ ಕಾಣಿಸಿಕೊಂಡಿತ್ತು. ಕಳೆದ ಮೂರು ತಿಂಗಳ ಹಿಂದೆ ನಡೆದ ಹಂಪಿ ಉತ್ಸವದಲ್ಲೂ ವಿರೂಪಾಕ್ಷೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿತ್ತು.&lt;/p&gt;&lt;p&gt;&amp;nbsp;ಹಂಪಿ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಕಾಡು ಇಲ್ಲದ ಕಾರಣ ಮತ್ತು ಕೆಲವೊಂದು ಬೆಟ್ಟ ಗುಡ್ಡಗಳಲ್ಲಿ ಸಹ ಚಿರತೆ ಆಹಾರ ಹುಡುಕುಲು ಆಗದೇ ಸುತ್ತಮುತ್ತಲಿನ ಗ್ರಾಮಗಳತ್ತ ಆಹಾರಕ್ಕಾಗಿ ಬರುತ್ತವೆ. ಆದರೂ ಕಮಲಾಪುರ, ಹಂಪಿ ಪ್ರದೇಶದಲ್ಲಿ ಚಿರತೆಯನ್ನು ಬಂಧಿಸಿಲು ಬೋನುಗಳನ್ನು ಇಡಲಾಗಿದೆ ಎಂದು ಅರಣ್ಯಇಲಾಖೆಯ ಅಧಿಕಾರಿಗಳು ತಿಳಿಸಿದರು.&lt;/p&gt;&lt;p&gt;&amp;nbsp;&lt;/p&gt;&lt;p&gt;ಹಂಪಿ ಉತ್ಖನನ: ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆ#Hampihttps://t.co/NMtgnh2xyR pic.twitter.com/bx0SZCHJ0n&lt;/p&gt;&lt;p&gt;&mdash; Asianet Suvarna News (@AsianetNewsSN) May 20, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/vijayanagara-devotees-protest-against-relocation-of-lakshmi-elephant-at-hampi-virupaksheshwara-temple-mrq/articleshow-qcr7h6s"/>
        </item>
        <item>
            <title><![CDATA[ಹಂಪಿ ಉತ್ಖನನ: ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆ]]></title>
            <link>https://kannada.asianetnews.com/karnataka-districts/hampi-excavation-stone-ceiling-of-ancient-temple-rare-elephant-artwork-discovered-mrq/articleshow-tbotmgx</link>
            <guid isPermaLink="true">https://kannada.asianetnews.com/karnataka-districts/hampi-excavation-stone-ceiling-of-ancient-temple-rare-elephant-artwork-discovered-mrq/articleshow-tbotmgx</guid>
            <pubDate>Sun, 17 May 2026 07:44:06 +0530</pubDate>
            <description><![CDATA[&lt;p&gt;ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯ ಹಜಾರ ರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸಿದ ಉತ್ಖನನದಲ್ಲಿ ವಿಜಯನಗರ ಕಾಲದ ಪುರಾತನ ದೇವಾಲಯದ ಕಲ್ಲಿನ ಚಾವಣಿ ಮತ್ತು ಅಪರೂಪದ ಆನೆಯ ಕಲಾಕೃತಿಗಳು ಪತ್ತೆಯಾಗಿವೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krsvchk6ynngtk48a87a7tgr,imgname-hampi-1778984044134.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ: &lt;/strong&gt;ವಿಶ್ವವಿಖ್ಯಾತ ಹಂಪಿಯ ಹಜಾರ ರಾಮ ದೇವಸ್ಥಾನ ಸಮೀಪ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸುತ್ತಿರುವ ಉತ್ಖನನದ ಸಂದರ್ಭದಲ್ಲಿ ವಿಜಯನಗರ ಕಾಲದ ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆಯಾಗಿವೆ. ಹಜಾರರಾಮ ​ದೇವಸ್ಥಾನದ ದಕ್ಷಿಣ ದ್ವಾರದ ಗೋಡೆಯ ಭಾಗದಲ್ಲಿ ಜೀರ್ಣೋದ್ಧಾರ ಕೆಲಸ ನಡೆಯುತ್ತಿದ್ದು, ಉತ್ಖನನದಲ್ಲಿ ಪುರಾತನ ದೇವಾಲಯದ ಚಾವಣಿ, ಸುಂದರವಾದ ಆನೆಯ ಕಲಾಕೃತಿ ಬೆಳಕಿಗೆ ಬಂದಿದೆ.&lt;/p&gt;&lt;p&gt;1565ರ ಯುದ್ಧದ ಸಮಯದಲ್ಲಿ ಹಾನಿಗೊಳಗಾಗಿದ್ದ ಅನೇಕ ಸ್ಮಾರಕಗಳ ಅವಶೇಷಗಳು ಈಗ ಒಂದೊಂದಾಗಿ ಹಂಪಿಯಲ್ಲಿ ಪತ್ತೆಯಾಗುತ್ತಿದ್ದು, ಅಂದಿನ ಕಾಲದ ಶ್ರೀಮಂತ ಕಲೆಗೆ ಇವು ಜೀವಂತ ಸಾಕ್ಷಿಯಾಗಿವೆ. ಪುರಾತನ ದೇವಾಲಯದ ಕಲ್ಲಿನ ಚಾವಣಿ ಮತ್ತು ಆನೆಯ ಕಲಾಕೃತಿ ಪತ್ತೆಯಾಗುತ್ತಿದ್ದಂತೆ ಎಎಸ್ಐ ಹಂಪಿ ವೃತ್ತದ ಪುರಾತತ್ವ ಅಧೀಕ್ಷಕ ಕೆ. ರಾಮಕೃಷ್ಣ ರೆಡ್ಡಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.&lt;/p&gt;&lt;p&gt;ಇಡೀ ದೇವಾಲಯವೇ ಮಣ್ಣಿನೊಳಗೆ ಸುಸ್ಥಿತಿಯಲ್ಲಿರುವ ಸಾಧ್ಯತೆಯಿದೆ. ಅನೇಕ ಶತಮಾನಗಳ ಹಿಂದಿನ ದೇವಾಲಯವಾಗಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.&lt;/p&gt;&lt;h2&gt;&lt;strong&gt;4.30 ಮೀಟರ್&zwnj; ಉದ್ದ ಮತ್ತು 4.25 ಮೀಟರ್&zwnj; ಅಗಲ&lt;/strong&gt;&lt;/h2&gt;&lt;p&gt;ಈ ದೇವಾಲಯವು ಅಂದಾಜು 4.30 ಮೀಟರ್&zwnj; ಉದ್ದ ಮತ್ತು 4.25 ಮೀಟರ್&zwnj; ಅಗಲವಿದ್ದು, ಈ ದೇವಾಲಯವು ಇಟ್ಟಿಗೆಯಿಂದ ನಿರ್ಮಿಸಿದ ಶಿಖರ ಮತ್ತು ಗರ್ಭಗೃಹದ ಮೇಲ್ಭಾಗ ಗೋಚರಿಸುತ್ತಿದೆ. ಸುಮಾರು 10 ಅಡಿಗೂ ಹೆಚ್ಚು ಎತ್ತರದ ಗೋಡೆಗಳು ಮಣ್ಣಿನೊಳಗೆ ಸುರಕ್ಷಿತವಾಗಿರಬಹುದು. ಈ ದೇವಾಲಯವು ಜೈನ ಧರ್ಮಕ್ಕೆ ಸಂಬಂಧಿಸಿದ್ದಿರಬಹುದು ಎಂದು ಅಧಿಕಾರಿಗಳು ಊಹಿಸಿದ್ದಾರೆ. ಹಂಪಿ&zwnj; ಇತಿಹಾಸ&zwnj; ಅಧ್ಯಯನಕ್ಕೆ ಇದು ಹೆಚ್ಚಿನ&zwnj;&zwnj; ಮಹತ್ವ&zwnj; ಪಡೆದಿದೆ. ಈ ಶಿಲ್ಪಗಳನ್ನು ಸಂರಕ್ಷಿಸಿ, ಜೀರ್ಣೋದ್ಧಾರ ಮಾಡಲಾಗುವುದು ಎಂದು ಅವರು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿಗೆ ಸಂಬಂಧಿಸಿದ ವಿಶೇಷ ಸುದ್ದಿ; ಗ್ರಾಮಸ್ಥರು ತಿಳಿದುಕೊಳ್ಳಲೇಬೇಕಾದ ನ್ಯೂಸ್&lt;/strong&gt;&lt;/p&gt;&lt;h3&gt;&lt;strong&gt;ಐತಿಹಾಸಿಕ ಸ್ಮಾರಕಗಳು&lt;/strong&gt;&lt;/h3&gt;&lt;p&gt;ಹಂಪಿಯಲ್ಲಿ ಪ್ರಸ್ತುತ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯು ಕೈಗೊಂಡಿರುವ ಉತ್ಖನನ ಮತ್ತು ಜೀರ್ಣೋದ್ಧಾರ ಕಾರ್ಯವು ವೈಜ್ಞಾನಿಕ ಮತ್ತು ವ್ಯವಸ್ಥಿತವಾಗಿ ನಡೆಯುತ್ತಿದೆ. ಮಣ್ಣಿನಲ್ಲಿ ಅಡಗಿರುವ ಐತಿಹಾಸಿಕ ಸ್ಮಾರಕಗಳು ಬೆಳಕಿಗೆ ಬರುತ್ತಿವೆ. ಇದರಿಂದ ವಿಜಯನಗರ ಸಾಮ್ರಾಜ್ಯದ ಗತ ವೈಭವದ ಪುಟಗಳು ಮತ್ತೆ ತೆರೆದುಕೊಳ್ಳಲಿವೆ ಎಂದು ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ವಿರುಪಾಕ್ಷಿ ಮಾಹಿತಿ ನೀಡಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರಿನಿಂದ ಹಂಪಿಗೆ ನೇರ ಪಲ್ಲಕ್ಕಿ ಬಸ್; ಒಂದು ದಿನದ ಟ್ರಿಪ್&zwnj;ಗೆ ಬೆಸ್ಟ್ ಆಯ್ಕೆ&lt;/strong&gt;&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hampi-excavation-stone-ceiling-of-ancient-temple-rare-elephant-artwork-discovered-mrq/articleshow-tbotmgx"/>
        </item>
        <item>
            <title><![CDATA[21 ಲಕ್ಷದ ಲಿಫ್ಟ್ ಇದ್ದೂ ಪ್ರಯೋಜನವಿಲ್ಲ: ವೃದ್ಧರನ್ನು ಹೆಗಲ ಮೇಲೆ ಹೊತ್ತು ಸಾಗುವ ದುಸ್ಥಿತಿ!]]></title>
            <link>https://kannada.asianetnews.com/karnataka-districts/lift-built-for-senior-citizens-at-the-huvinahadagali-sub-registration-office-but-it-is-not-yet-available-for-use-mrq/articleshow-toty1to</link>
            <guid isPermaLink="true">https://kannada.asianetnews.com/karnataka-districts/lift-built-for-senior-citizens-at-the-huvinahadagali-sub-registration-office-but-it-is-not-yet-available-for-use-mrq/articleshow-toty1to</guid>
            <pubDate>Sat, 30 May 2026 10:27:30 +0530</pubDate>
            <description><![CDATA[ಹೂವಿನಹಡಗಲಿಯ ಉಪ ನೋಂದಣಿ ಕಚೇರಿಯಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ನಿರ್ಮಿಸಿದ ಲಿಫ್ಟ್ ಉದ್ಘಾಟನೆಯಾದರೂ ಬಳಕೆಗೆ ಲಭ್ಯವಾಗಿಲ್ಲ. ಗುತ್ತಿಗೆದಾರರು ಲಿಫ್ಟ್&zwnj;ನ ಕೀಲಿಯನ್ನು ಇನ್ನೂ ಹಸ್ತಾಂತರಿಸದ ಕಾರಣ, ವಯೋವೃದ್ಧರನ್ನು ಹೊತ್ತುಕೊಂಡು ಮೆಟ್ಟಿಲು ಹತ್ತುವ ಸಂಕಷ್ಟ ಮುಂದುವರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvkq2zwfyb2cvsbe831man1,imgname-hoovina-hadagali-1780116851708.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ: &lt;/strong&gt;ಹೂವಿನಹಡಗಲಿಯ ಕಂದಾಯ ಇಲಾಖೆಯ 2ನೇ ಮಹಡಿಯ ಉಪ ನೋಂದಣಿ ಕಚೇರಿಗೆ ನಿರ್ಮಿಸಿದ್ದ ಲಿಫ್ಟ್&zwnj;ನ ಕೀ ಇಲ್ಲದೇ ವಯಸ್ಸಾಗಿರುವ ವ್ಯಕ್ತಿಗಳನ್ನು ಹೊತ್ತುಕೊಂಡು ಹೋಗುವ ಸ್ಥಿತಿ ಇನ್ನು ಬದಲಾಗಿಲ್ಲ.&lt;/p&gt;&lt;h2&gt;&lt;strong&gt;ಲಿಫ್ಟ್&zwnj; ಕೀ ನೀಡದ ಗುತ್ತಿಗೆದಾರ!&lt;/strong&gt;&lt;/h2&gt;&lt;p&gt;ಹೌದು, ಉಪ ನೋಂದಣಾಧಿಕಾರಿ ಕಚೇರಿಗೆ ಹಿರಿಯ ನಾಗರಿಕರು, ಅಂಗವಿಕಲರು ಮೆಟ್ಟಲು ಹತ್ತಿಕೊಂಡು ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನರಿತ ಶಾಸಕ ಕೃಷ್ಣನಾಯ್ಕ ಪುರಸಭೆ ನಗರೋತ್ಥಾನ ಯೋಜನೆಯ ಉಳಿಕೆಯ ₹21 ಲಕ್ಷ ಅನುದಾನದಲ್ಲಿ ಹೊಸ ಲಿಫ್ಟ್&zwnj; ನಿರ್ಮಿಸಿ ಚಾಲನೆ ನೀಡಿದ್ದರು. ಆದರೆ ಲಿಫ್ಟ್&zwnj; ನಿರ್ಮಾಣ ಗುತ್ತಿಗೆ ಪಡೆದ ಗುತ್ತಿಗೆದಾರರ ಈವರೆಗೂ ಉಪ ನೋಂದಣಾಧಿಕಾರಿಗೆ ಕೀಲಿ ನೀಡಿಲ್ಲ.&lt;/p&gt;&lt;p&gt;ಲಿಫ್ಟ್ ಇಲ್ಲದ ಕಾರಣ ಸಾರ್ವಜನಿಕರು ವಯಸ್ಸಾಗಿರುವ ವ್ಯಕ್ತಿಯನ್ನು ಪಾಲಕರು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಚಾಲನೆ ನೀಡಿದ್ದರೂ ಇನ್ನು ಲಿಫ್ಟ್&zwnj; ಕೆಲಸ ಮಾಡುತ್ತಿಲ್ಲ. ಈ ಲಿಫ್ಟ್&zwnj;ನ ಕೀ ನಮಗೆ ನೀಡುವಂತೆ ಶಾಸಕರು ತಿಳಿಸಿದ್ದಾರೆ. ಆದರೆ ಗುತ್ತಿಗೆದಾರರು ನಮಗೆ ನೀಡಿಲ್ಲ ಎನ್ನುತ್ತಾರೆ ಉಪ ನೋಂದಣಾಧಿಕಾರಿ ನಾಗೇಂದ್ರಪ್ಪ.&lt;/p&gt;&lt;h3&gt;&lt;strong&gt;ಪುರಸಭೆ ಅಧಿಕಾರಿಗಳು ಏನ್ ಹೇಳ್ತಾರೆ?&lt;/strong&gt;&lt;/h3&gt;&lt;p&gt;ಲಿಫ್ಟ್&zwnj; ಕಾಮಗಾರಿ ಮಾಡಿರುವ ಗುತ್ತಿಗೆದಾರರು ಉಪ ನೋಂದಣಾಧಿಕಾರಿಗೆ ಪತ್ರ ಬರೆದು ನಂತರದಲ್ಲಿ ಅವರಿಗೆ ಹಸ್ತಾಂತರಿಸುವ ಕೆಲಸ ಬಾಕಿ ಇದೆ. ಕೀ ಕೊಡಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಹನುಮಂತಪ್ಪ ಹೇಳಿದರು.&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/lift-built-for-senior-citizens-at-the-huvinahadagali-sub-registration-office-but-it-is-not-yet-available-for-use-mrq/articleshow-toty1to"/>
        </item>
        <item>
            <title><![CDATA[ತುಂಗಭದ್ರಾ ಡ್ಯಾಂಗೆ ಆಯ್ತು ಹೊಸ ಗೇಟ್: ನವಲಿ ಸಮಾನಾಂತರ ಜಲಾಶಯದ ಕನಸು ನನಸಾಗುವುದೇ?]]></title>
            <link>https://kannada.asianetnews.com/karnataka-districts/when-will-the-navali-parallel-reservoir-proposed-in-the-2026-27-budget-be-constructed-mrq/articleshow-w9x9tq1</link>
            <guid isPermaLink="true">https://kannada.asianetnews.com/karnataka-districts/when-will-the-navali-parallel-reservoir-proposed-in-the-2026-27-budget-be-constructed-mrq/articleshow-w9x9tq1</guid>
            <pubDate>Sun, 03 May 2026 15:41:59 +0530</pubDate>
            <description><![CDATA[&lt;p&gt;ತುಂಗಭದ್ರಾ ಜಲಾಶಯಕ್ಕೆ 33 ಹೊಸ ಕ್ರಸ್ಟ್&zwnj; ಗೇಟ್&zwnj;ಗಳನ್ನು ಅಳವಡಿಸಿ ಸುಭದ್ರಗೊಳಿಸಲಾಗಿದೆ. ಆದರೆ, 30 ಟಿಎಂಸಿಗೂ ಹೆಚ್ಚು ಹೂಳು ತುಂಬಿರುವುದರಿಂದ, ರೈತರು ಪರ್ಯಾಯವಾದ ನವಲಿ ಸಮಾನಾಂತರ ಜಲಾಶಯ ಯೋಜನೆಗಾಗಿ ಕಾಯುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j52v50k9f192ew0r77zd7ccs,imgname-tung.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಿ.ಕೆ. ನಾಗರಾಜ&lt;/strong&gt;&lt;/p&gt;&lt;p&gt;&lt;strong&gt;ಹೊಸಪೇಟೆ: &lt;/strong&gt;ತುಂಗಭದ್ರಾ ಜಲಾಶಯವು ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ರೈತರ ಜೀವನಾಡಿಯಾಗಿದೆ. ಜಲಾಶಯ 75 ವರ್ಷ ಹಳೆಯದಾಗಿದ್ದು, ಈ ಜಲಾಶಯಕ್ಕೆ ಈಗ 33 ಕ್ರಸ್ಟ್&zwnj; ಗೇಟ್&zwnj;ಗಳನ್ನು ಹೊಸದಾಗಿ ಅಳವಡಿಕೆಯಾಗುವ ಮೂಲಕ ಜಲಾಶಯವು 50-60 ವರ್ಷಗಳ ಸುಭದ್ರವಾಗಲಿವೆ. ಆದರೆ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಯಾವಾಗ? ಎನ್ನುವ ಪ್ರಶ್ನೆ ಈ ಭಾಗದ ರೈತರದ್ದಾಗಿದೆ.&lt;/p&gt;&lt;p&gt;75 ವರ್ಷಗಳ ಹಿಂದೆ ನಿರ್ಮಾಣವಾದ ತುಂಗಭದ್ರಾ ಜಲಾಶಯ 2024ರ ವರೆಗೆ ಗಟ್ಟಿಮುಟ್ಟಾಗಿತ್ತು. ಆದರೆ 2024ರ ಆಗಸ್ಟ್&zwnj; 10ರ ರಾತ್ರಿ ಜಲಾಶಯದ 19ನೇ ಕ್ರಸ್ಟ್&zwnj;ಗೇಟ್&zwnj;ನ ಚೈನ್ ತುಂಡರಿಸಿಕೊಂಡು ನೀರಿನಲ್ಲಿ ಕೊಚ್ಚಿಕೊಂಡು ಹೋಗಿತ್ತು. 60-70 ಟಿಎಂಸಿ ನೀರು ನದಿ ಪಾಲಾಗಿತ್ತು. ಅವಘಡ ನಡೆದಾಗ ಜಲಾಶಯದ ಭದ್ರತೆ ಬಗ್ಗೆ ಆತಂಕ ಮೂಡಿತ್ತು.&lt;/p&gt;&lt;p&gt;ತಕ್ಷಣವೇ ರಾಜ್ಯ ಸರ್ಕಾರ ಜಲಾಶಯ ತಜ್ಞರು, ತುಂಗಭದ್ರಾ ಮಂಡಳಿಯ ಅಧಿಕಾರಿಗಳು ನಿರಂತರವಾಗಿ ಶ್ರಮಿಸಿದ ಫಲವಾಗಿ ಜಲಾಶಯದ ಎಲ್ಲ 33 ಹಳೆಯ ಕ್ರಸ್ಟ್ ಗೇಟ್&zwnj;ಗಳನ್ನು ಬದಲಾಯಿಸಿ ಹೊಸ ಕ್ರಸ್ಟ್ ಗೇಟ್&zwnj; ಅಳವಡಿಸುವ ಮೂಲಕ ರೈತರಲ್ಲಿ ಸಂತಸ ಮೂಡಿಸಿದ್ದಾರೆ.&lt;/p&gt;&lt;h2&gt;&lt;strong&gt;30 ಟಿಎಂಸಿ ಹೂಳು&lt;/strong&gt;&lt;/h2&gt;&lt;p&gt;ಆದರೆ, ಜಲಾಶಯದಲ್ಲಿ ಈಗ ಕೇವಲ 10.629 ಟಿಎಂಸಿ ನೀರು ಉಳಿದಿದೆ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ. ಜಲಾಶಯದಲ್ಲಿ ಈಗಾಗಲೇ 30 ಟಿಎಂಸಿಗಿಂತ ಹೆಚ್ಚು ಹೂಳು ತುಂಬಿಕೊಂಡಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿರುವುದರಿಂದ ಇದಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ಯೋಜನೆ ನಿರ್ಮಿಸುವ ಬಗ್ಗೆ ಅನೇಕ ವರ್ಷಗಳಿಂದ ಈ ಭಾಗದ ರೈತರು, ಪ್ರಗತಿಪರ ಹೋರಾಟಗಾರರು ಹೋರಾಟ ನಡೆಸುತ್ತಾ ಬಂದಿದ್ದಾರೆ.&lt;/p&gt;&lt;p&gt;ಆದರೆ ಹಿಂದಿನ ಸರ್ಕಾರಗಳು, ಈಗಿನ ಸರ್ಕಾರ ನವಲಿ ಜಲಾಶಯ ಯೋಜನೆ ಬಗ್ಗೆ ಡಿಪಿಆರ್&zwnj; ಸಿದ್ಧವಾಗಿದೆ ಎಂದು ಹೇಳುತ್ತಾ ಬರುತ್ತಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣ, ತುಂಗಭದ್ರಾ ಮಂಡಳಿ ಅನುಮತಿ ಬೇಕಿರುವುದರಿಂದ ಯೋಜನೆ ನಿಧಾನವಾಗಿದೆ ಎಂದು ರಾಜಕಾರಣಿಗಳು ಹೇಳುತ್ತಿದ್ದಾರೆ. ನವಲಿ ಸಮಾನಾಂತರ ಜಲಾಶಯ ಯೋಜನೆ ಇನ್ನೂ ಕಾಗದದಲ್ಲೇ ಇದೆ. ಕೆಲಸ ಮಾತ್ರ ನೆಲಮಟ್ಟದಿಂದ ಆರಂಭವಾಗಿಲ್ಲ.&lt;/p&gt;&lt;h3&gt;&lt;strong&gt;ನವಲಿ ಯೋಜನೆಗೆ ಡಿಸಿಎಂ ಬೆಂಬಲ&lt;/strong&gt;&lt;/h3&gt;&lt;p&gt;ಸಿಎಂ ಸಿದ್ದರಾಮಯ್ಯ 2026-27ನೇ ಬಜೆಟ್&zwnj;ನಲ್ಲಿ ನವಲಿ ಸಮಾನಾಂತರ ಜಲಾಶಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್&zwnj; ಕೂಡ ನವಲಿ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ ಮೇನಲ್ಲಿ ಅಂತ್ಯ, 3 ರಾಜ್ಯಗಳಿಂದ 54 ಕೋಟಿ ವೆಚ್ಚ, ಕರ್ನಾಟಕದ ಪಾಲೆಷ್ಟು?&lt;/strong&gt;&lt;/p&gt;&lt;p&gt;ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್&zwnj; ಈ ಮೊದಲು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಕ್ರಸ್ಟ್&zwnj; ಗೇಟ್&zwnj; ಅಳವಡಿಸುವ ಕಾರ್ಯ ವೀಕ್ಷಿಸಿದ್ದರು. ಈಗ ಕ್ರಸ್ಟ್&zwnj; ಗೇಟ್&zwnj; ಅಳವಡಿಕೆ ಪೂರ್ಣಗೊಂಡಿರುವುದರಿಂದ ವೀಕ್ಷಣೆಗೆ ಭಾನುವಾರ ಮತ್ತೆ ಜಲಾಶಯಕ್ಕೆ ಆಗಮಿಸುತ್ತಿರುವುದರಿಂದ ನವಲಿ ಸಮಾನಾಂತರ ಜಲಾಶಯದ ಯೋಜನೆ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರದಿಂದ ಘೋಷಿಸಬಹುದು ಎನ್ನುವುದು ರೈತರ ಆಶಾಭಾವನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್&zwnj;ಗಳ ಅಳವಡಿಕೆ ಕಾರ್ಯ ಯಶಸ್ವಿ&lt;/strong&gt;&lt;/p&gt;]]></content:encoded>
            <category>vijayanagara</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/when-will-the-navali-parallel-reservoir-proposed-in-the-2026-27-budget-be-constructed-mrq/articleshow-w9x9tq1"/>
        </item>
        <item>
            <title><![CDATA[ವಿಜಯನಗರದ ಅಪರೂಪದ ಶಾಸನ ಹಂಪಾದೇವನಹಳ್ಳಿ ಮತ್ತೆ, ಶ್ರೀಕೃಷ್ಣದೇವರಾಯನ ಮರೆತ ಅಧ್ಯಾಯ ಮತ್ತೆ ಮರುಕಳಿಸಿತು]]></title>
            <link>https://kannada.asianetnews.com/karnataka-districts/rare-16th-century-vijayanagara-inscription-discovered-in-karnataka-koppal-district-gdp/articleshow-y1k33p4</link>
            <guid isPermaLink="true">https://kannada.asianetnews.com/karnataka-districts/rare-16th-century-vijayanagara-inscription-discovered-in-karnataka-koppal-district-gdp/articleshow-y1k33p4</guid>
            <pubDate>Thu, 07 May 2026 12:55:42 +0530</pubDate>
            <description><![CDATA[ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿಯಲ್ಲಿ 16ನೇ ಶತಮಾನಕ್ಕೆ ಸೇರಿದ ವಿಜಯನಗರ ಸಾಮ್ರಾಜ್ಯದ ಅಪರೂಪದ, ಅಪ್ರಕಟಿತ ಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಗ್ರಾಮವನ್ನು 'ಕೃಷ್ಣರಾಯಪುರ' ಎಂದು ಮರುನಾಮಕರಣ ಮಾಡಿ ದಾನ ನೀಡಿದ ಬಗ್ಗೆ ಉಲ್ಲೇಖಿಸಿದ್ದು, ಇದು ಶ್ರೀಕೃಷ್ಣದೇವರಾಯರ ಕಾಲದ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr0mve1r320kbnddjsqyh505,imgname-rare-16th-century-vijayanagara-inscription-discovered-in-karnataka-s-koppal-district-1778138331192.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಂಪ್ಲಿ: &lt;/strong&gt;ವಿಜಯನಗರ ಸಾಮ್ರಾಜ್ಯದ ಇತಿಹಾಸಕ್ಕೆ ಮತ್ತೊಂದು ಮಹತ್ವದ ಪುರಾವೆ ಸೇರ್ಪಡೆಯಾಗಿದ್ದು, ತಾಲೂಕಿನ ಹಂಪಾದೇವನಹಳ್ಳಿಯಲ್ಲಿ 16ನೇ ಶತಮಾನದ ಅಪರೂಪದ ಶಾಸನವೊಂದು ಪತ್ತೆಯಾಗಿದೆ. ಗ್ರಾಮದ ಪಶ್ಚಿಮ ಭಾಗದಲ್ಲಿರುವ ನಾರಿಹಳ್ಳ ದಂಡೆಯ ಸಮೀಪ ಈ ಅಪ್ರಕಟಿತ ಶಾಸನ ಬೆಳಕಿಗೆ ಬಂದಿದ್ದು, ಇತಿಹಾಸ ಸಂಶೋಧಕರು ಹಾಗೂ ಇತಿಹಾಸಾಸಕ್ತರಲ್ಲಿ ಭಾರೀ ಕುತೂಹಲ ಮೂಡಿಸಿದೆ.&lt;/p&gt;&lt;p&gt;ಈ ಐತಿಹಾಸಿಕ ಶಾಸನವನ್ನು ಕೊಪ್ಪಳ ತಾಲೂಕಿನ ಹಿಟ್ನಾಳ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ಕೆ. ಅಂಜಿನಯ್ಯ ಪತ್ತೆಹಚ್ಚಿದ್ದು, ಅದರ ಪ್ರಾಥಮಿಕ ಅಧ್ಯಯನ ಹಾಗೂ ಓದು ಕಾರ್ಯವನ್ನು ನಡೆಸಿದ್ದಾರೆ. ಕನ್ನಡ ಲಿಪಿಯಲ್ಲಿ ಕೆತ್ತಲಾಗಿರುವ ಈ ಶಾಸನವು ವಿಜಯನಗರ ಸಾಮ್ರಾಜ್ಯದ ಸುವರ್ಣಯುಗವನ್ನು ಪ್ರತಿಬಿಂಬಿಸುತ್ತಿದ್ದು, ವಿಶೇಷವಾಗಿ ಸಾಮ್ರಾಟ ಶ್ರೀಕೃಷ್ಣದೇವರಾಯರ ಕಾಲಘಟ್ಟಕ್ಕೆ ಸೇರಿದದ್ದಾಗಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;h2&gt;ಹಂಪಾದೇವನಹಳ್ಳಿ - ಕೃಷ್ಣರಾಯಪುರ&lt;/h2&gt;&lt;p&gt;ಶಾಸನದ ವಿಷಯವಸ್ತು ಅತ್ಯಂತ ಮಹತ್ವದ್ದಾಗಿದ್ದು, ಹಂಪಾದೇವನಹಳ್ಳಿಯನ್ನು &ldquo;ಕೃಷ್ಣರಾಯಪುರ&rdquo; ಎಂದು ಮರುನಾಮಕರಣ ಮಾಡಿ ದಾನ ನೀಡಿರುವ ಉಲ್ಲೇಖ ಅದರಲ್ಲಿ ಕಂಡುಬಂದಿದೆ. ಇದು ವಿಜಯನಗರ ಸಾಮ್ರಾಜ್ಯದ ಆಡಳಿತ ವ್ಯವಸ್ಥೆ, ಗ್ರಾಮಗಳ ಮರುನಾಮಕರಣ ಪದ್ಧತಿ ಹಾಗೂ ಧಾರ್ಮಿಕ-ಸಾಮಾಜಿಕ ದಾನಧರ್ಮಗಳ ಬಗ್ಗೆ ಅಮೂಲ್ಯ ಮಾಹಿತಿಯನ್ನು ಒದಗಿಸುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ.&lt;/p&gt;&lt;p&gt;ಶಾಸನದ ಮೇಲ್ಭಾಗದಲ್ಲಿ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಇದು ಆ ಕಾಲದ ಶಾಸನಗಳಲ್ಲಿ ಸಾಮಾನ್ಯವಾಗಿ ಕಾಣಸಿಗುವ ಶಾಶ್ವತತೆಯ ಸಂಕೇತವಾಗಿದೆ. ಕೆಳಭಾಗದಲ್ಲಿ ವಿಷ್ಣುವಿನ ವಾಮನ ಅವತಾರದ ಸುಂದರ ಶಿಲ್ಪಾಕೃತಿಯನ್ನು ಕೆತ್ತಲಾಗಿರುವುದು ವಿಶೇಷ ಆಕರ್ಷಣೆಯಾಗಿದೆ. ಈ ಶಿಲ್ಪಕಲೆಯು ವಿಜಯನಗರ ಕಾಲದ ಕಲಾತ್ಮಕ ವೈಭವ ಮತ್ತು ಧಾರ್ಮಿಕ ನಂಬಿಕೆಗಳನ್ನು ಪ್ರತಿಬಿಂಬಿಸುತ್ತದೆ.&lt;/p&gt;&lt;h2&gt;ವಿಜಯನಗರ ಕಾಲದ ಇತಿಹಾಸ ಅಧ್ಯಯನ&lt;/h2&gt;&lt;p&gt;ಸುಮಾರು ಐದು ಅಡಿ ಎತ್ತರದ ಈ ಗ್ರಾನೈಟ್ ಶಿಲಾಶಾಸನವು ಉತ್ತಮ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಇತಿಹಾಸ ಅಧ್ಯಯನಕ್ಕೆ ಮಹತ್ವದ ಬೆಳವಣಿಗೆಯಾಗಿದೆ. ವಿಜಯನಗರ ಕಾಲದ ಭಾಷೆ, ಆಡಳಿತ, ಧಾರ್ಮಿಕ ಆಚರಣೆಗಳು ಹಾಗೂ ಶಿಲ್ಪಕಲೆಯ ಕುರಿತು ಇನ್ನಷ್ಟು ಅಧ್ಯಯನ ನಡೆಸಲು ಈ ಶಾಸನ ನೆರವಾಗಲಿದೆ ಎಂದು ಇತಿಹಾಸ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;p&gt;ಶಾಸನ ಪತ್ತೆ ಕಾರ್ಯದಲ್ಲಿ ಗ್ರಾಮದ ಯುವಕರೂ ಪ್ರಮುಖ ಪಾತ್ರವಹಿಸಿದ್ದಾರೆ. ಕರಿಬಸವ, ಉಮೇಶ್ ಮತ್ತು ಪ್ರವೀಣ್ ಸೇರಿದಂತೆ ಸ್ಥಳೀಯ ಯುವಕರು ಸ್ಥಳ ಗುರುತಿಸುವುದು ಹಾಗೂ ಮಾಹಿತಿ ಸಂಗ್ರಹಣೆಯಲ್ಲಿ ಸಹಕರಿಸಿದ್ದು, ಅವರ ಪ್ರಯತ್ನಕ್ಕೂ ಪ್ರಶಂಸೆ ವ್ಯಕ್ತವಾಗಿದೆ.&lt;/p&gt;&lt;p&gt;ಒಟ್ಟಾರೆ, ಹಂಪಾದೇವನಹಳ್ಳಿಯಲ್ಲಿ ಪತ್ತೆಯಾದ ಈ ಅಪರೂಪದ ಶಾಸನವು ವಿಜಯನಗರ ಸಾಮ್ರಾಜ್ಯದ ವೈಭವವನ್ನು ಮತ್ತೊಮ್ಮೆ ಸ್ಮರಿಸುವಂತೆ ಮಾಡಿದ್ದು, ರಾಜ್ಯದ ಪುರಾತತ್ವ ಹಾಗೂ ಇತಿಹಾಸ ಅಧ್ಯಯನ ಕ್ಷೇತ್ರಕ್ಕೆ ಹೊಸ ಅಧ್ಯಾಯವನ್ನು ಸೇರಿಸಿದೆ.&lt;/p&gt;]]></content:encoded>
            <category>vijayanagara</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-16th-century-vijayanagara-inscription-discovered-in-karnataka-koppal-district-gdp/articleshow-y1k33p4"/>
        </item>
    </channel>
</rss>
