<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 07 Apr 2026 12:49:11 +0530</lastBuildDate>
        <atom:link href="https://kannada.asianetnews.com/rss/vijayapura" rel="self" type="application/rss+xml"/>
        <item>
            <title><![CDATA[Karnataka Budget: ಆಲಮಟ್ಟಿ ಸಂತ್ರಸ್ತರಿಗೆ ಬಂಪರ್ ಪರಿಹಾರ, ಮೇಕೆದಾಟುಗೆ ವೇಗ; ರಾಜ್ಯ ನೀರಾವರಿ ಕ್ಷೇತ್ರಕ್ಕೆ ಬಜೆಟ್ ಆನೆಬಲ!]]></title>
            <link>https://kannada.asianetnews.com/state/karnataka-budget-2026-mekedatu-irrigation-projects-almatti-compensation-updates-san/articleshow-19gsk3w</link>
            <guid isPermaLink="true">https://kannada.asianetnews.com/state/karnataka-budget-2026-mekedatu-irrigation-projects-almatti-compensation-updates-san/articleshow-19gsk3w</guid>
            <pubDate>Fri, 06 Mar 2026 11:47:29 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್&zwnj;ನಲ್ಲಿ, ಮೇಕೆದಾಟು, ಎತ್ತಿನಹೊಳೆ, ಮತ್ತು ಭದ್ರಾ ಮೇಲ್ದಂಡೆ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ವೇಗ ನೀಡುವ ಘೋಷಣೆ ಮಾಡಲಾಗಿದೆ. ಮೇಕೆದಾಟು ಯೋಜನೆಗೆ ಕಾನೂನು ಜಯ ಸಿಕ್ಕಿರುವುದನ್ನು ಪ್ರಸ್ತಾಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwssj1r1aympn8nh3k9kz0md,imgname-almatti-1748917356289.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮಾ.6): &lt;/strong&gt;&quot;ನದಿಗಳು ನಮ್ಮ ಸಂಸ್ಕೃತಿಯ ಜೀವವಾಹಿನಿ&quot; ಎಂಬ ಪೂರ್ಣಚಂದ್ರ ತೇಜಸ್ವಿಯವರ ನುಡಿಗಳೊಂದಿಗೆ ಜಲಸಂಪನ್ಮೂಲ ವಲಯದ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಬಹುನಿರೀಕ್ಷಿತ ನೀರಾವರಿ ಯೋಜನೆಗಳಿಗೆ ವೇಗ ನೀಡುವ ಘೋಷಣೆ ಮಾಡಿದ್ದಾರೆ. ವಿಶೇಷವಾಗಿ ತಮಿಳುನಾಡಿನ ಕಾನೂನು ತಕರಾರುಗಳ ನಡುವೆಯೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸಿಕ್ಕಿರುವ ಕಾನೂನು ಜಯವನ್ನು ಬಜೆಟ್&zwnj;ನಲ್ಲಿ ಎತ್ತಿ ತೋರಿಸಲಾಗಿದೆ.&lt;/p&gt;&lt;h2&gt;&lt;strong&gt;ಮೇಕೆದಾಟು ಯೋಜನೆಗೆ ಸಿಕ್ಕಿತು 'ಜಯದ' ವೇಗ&lt;/strong&gt;&lt;/h2&gt;&lt;p&gt;ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಕರ್ನಾಟಕಕ್ಕೆ ಸಂದ ಮಹತ್ವದ ಜಯ ಎಂದು ಸಿಎಂ ಹೇಳಿದ್ದಾರೆ. ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿ (DPR) ಅನ್ನು ಶೀಘ್ರವೇ ಸಿದ್ಧಪಡಿಸಲಾಗುವುದು. ಅರಣ್ಯ ಪ್ರದೇಶದ ಬಳಕೆ ಮತ್ತು ಯೋಜನಾ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ತಕ್ಷಣವೇ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ.&lt;/p&gt;&lt;h2&gt;&lt;strong&gt;ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆ&lt;/strong&gt;&lt;/h2&gt;&lt;p&gt;ಎತ್ತಿನಹೊಳೆ: ಎರಡನೇ ಹಂತದ ಬಾಕಿ ಇರುವ 18.73 ಕಿ.ಮೀ ಕಾಲುವೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ನೀರು ಸಂಗ್ರಹಕ್ಕಾಗಿ ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಬಳಿ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಾಣವಾಗಲಿದೆ.&lt;/p&gt;&lt;p&gt;ಭದ್ರಾ ಮೇಲ್ದಂಡೆ: ಕೇಂದ್ರ ಸರ್ಕಾರ ಘೋಷಿತ 5,300 ಕೋಟಿ ರೂ. ನೀಡದಿದ್ದರೂ, ರಾಜ್ಯ ಸರ್ಕಾರವೇ 11,343 ಕೋಟಿ ರೂ. ವೆಚ್ಚ ಭರಿಸಿದೆ. 2027ರ ವೇಳೆಗೆ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ.&lt;/p&gt;&lt;h2&gt;&lt;strong&gt;ಉತ್ತರ ಕರ್ನಾಟಕದ ನೀರಾವರಿಗೆ ಬಂಪರ್&lt;/strong&gt;&lt;/h2&gt;&lt;p&gt;ಆಲಮಟ್ಟಿ ಎತ್ತರ (UKP Stage-III): ಅಣೆಕಟ್ಟನ್ನು 524.256 ಮೀಟರ್&zwnj;ಗೆ ಎತ್ತರಿಸುವ ಕಾಮಗಾರಿಯಿಂದ ಸಂತ್ರಸ್ತರಾಗುವ ರೈತರಿಗೆ ಬಂಪರ್ ಪರಿಹಾರ ಘೋಷಿಸಲಾಗಿದೆ. ಖುಷ್ಕಿ ಜಮೀನಿಗೆ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ 40 ಲಕ್ಷ ರೂ. ನಿಗದಿಪಡಿಸಲಾಗಿದ್ದು, ಈ ವರ್ಷವೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ.&lt;/p&gt;&lt;p&gt;ಮಹದಾಯಿ: ಕಳಸಾ-ಬಂಡೂರಾ ಯೋಜನೆಗೆ ಕೇಂದ್ರದಿಂದ ಅರಣ್ಯ ತೀರುವಳಿ ವಿಳಂಬವಾಗುತ್ತಿರುವುದಕ್ಕೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದು, ಅನುಮತಿ ಸಿಕ್ಕ ಕೂಡಲೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದಾರೆ.&lt;/p&gt;&lt;p&gt;ತುಂಗಭದ್ರಾ ಗೇಟ್ ಬದಲಾವಣೆ: ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಮುಂಗಾರು ಪೂರ್ವದಲ್ಲೇ ಬದಲಿಸಲಾಗುವುದು. ಹೂಳಿನ ಸಮಸ್ಯೆ ನೀಗಿಸಲು ಕೊಪ್ಪಳದ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಆಂಧ್ರ ಮತ್ತು ತೆಲಂಗಾಣದೊಂದಿಗೆ ಚರ್ಚಿಸಲಾಗುವುದು.&lt;/p&gt;&lt;h2&gt;&lt;strong&gt;ಇತರೆ ಪ್ರಮುಖ ಘೋಷಣೆಗಳು&lt;/strong&gt;&lt;/h2&gt;&lt;p&gt;&lt;strong&gt;ಉಡುತೊರೆಹಳ್ಳ ಯೋಜನೆ:&lt;/strong&gt; ಚಾಮರಾಜನಗರದ ಹನೂರಿನಲ್ಲಿ 12 ಸಾವಿರ ಎಕರೆಗೆ ನೀರುಣಿಸಲು 490 ಕೋಟಿ ರೂ. ಮೊತ್ತದ ಯೋಜನೆ.&lt;/p&gt;&lt;p&gt;&lt;strong&gt;ಬಾಬಾ ನಗರ ಜಲಾಶಯ:&lt;/strong&gt; ವಿಜಯಪುರ ಜಿಲ್ಲೆಯ ತುಬಚಿ-ಬಬಲೇಶ್ವರ ಯೋಜನೆಯಡಿ 0.67 ಟಿ.ಎಂ.ಸಿ ಸಾಮರ್ಥ್ಯದ ಜಲಾಶಯ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆ.&lt;/p&gt;&lt;p&gt;ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳಡಿ ಪೂರ್ಣಗೊಳ್ಳುವ ಹಂತದಲ್ಲಿನ 12 ನೀರಾವರಿ ಯೋಜನೆಗಳು, 22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದಿದ್ದಾರೆ. ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ 8,045 ಕೋಟಿ ರೂ. ಮೊತ್ತದ 75 ನೀರಾವರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು. ರಾಜ್ಯದ ಕಾಡಾ ಪ್ರಾಧಿಕಾರದಡಿ ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆಯಡಿ ಬರುವ 4,745 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ Pressurised Piped Network ಪದ್ಧತಿಯನ್ನು ಅಳವಡಿಸಿ ನೀರಾವರಿ ವ್ಯವಸ್ಥೆಯನ್ನು ಆಧುನೀಕರಿಸಲಾಗುವುದು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Santosh Naik</dc:creator>
            <atom:link href="https://kannada.asianetnews.com/state/karnataka-budget-2026-mekedatu-irrigation-projects-almatti-compensation-updates-san/articleshow-19gsk3w"/>
        </item>
        <item>
            <title><![CDATA[ನಮ್ಮ ಸರ್ಕಾರ ಇದ್ದಿದ್ರೆ ₹5000 ಕೊಡ್ತಿದ್ವಿ: ಎಚ್‌ಡಿ ಕುಮಾರಸ್ವಾಮಿ]]></title>
            <link>https://kannada.asianetnews.com/state/hd-kumaraswamy-criticizes-congress-guarantees-5000-rupees-promise-jds-convention-san/articleshow-1ov0gy4</link>
            <guid isPermaLink="true">https://kannada.asianetnews.com/state/hd-kumaraswamy-criticizes-congress-guarantees-5000-rupees-promise-jds-convention-san/articleshow-1ov0gy4</guid>
            <pubDate>Sat, 28 Feb 2026 08:58:32 +0530</pubDate>
            <description><![CDATA[&lt;p&gt;ವಿಜಯಪುರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ₹2 ಸಾವಿರ ನೀಡಿ, ತೆರಿಗೆಗಳ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು,&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh4e3cpb1nh2cfx2c6c52gr,imgname-hd-kumaraswamy-1772249091477.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಫೆ.28): &lt;/strong&gt;ಮಹಿಳೆಯರು 5 ಗ್ಯಾರಂಟಿಗಳ ಪೈಕಿ ₹2 ಸಾವಿರಕ್ಕೆ ಮರುಳಾಗುತ್ತಿದ್ದಿರಿ. ಒಂದು ವೇಳೆ ನಾವು ಅಧಿಕಾರದಲ್ಲಿ ಇದ್ದಿದ್ದರೆ ₹5 ಸಾವಿರ ಕೊಡುತ್ತಿದ್ದೇವು. ₹2 ಸಾವಿರ ಕೊಟ್ಟಂತೆ ಮಾಡಿ, ನಿಮ್ಮ ಮೇಲೆ ತೆರಿಗೆ ಹಾಕಿ ಬದುಕು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್&zwnj; ಸರ್ಕಾರದ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ.&lt;/p&gt;&lt;p&gt;ನಗರದ ಸಿಂದಗಿ ಬೈಪಾಸ್ ರಸ್ತೆ ಬಳಿ ಶುಕ್ರವಾರ ನಡೆದ ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬ ಹಾಗೂ ಕಿತ್ತೂರು ಕರ್ನಾಟಕ ಬೃಹತ್ ಜನತಾ ಸಮಾವೇಶದಲ್ಲಿ ಅವರು ಮಾತನಾಡಿ, ಸರ್ಕಾರವು ಎರಡೂವರೆ ವರ್ಷದಲ್ಲಿ ವಸ್ತುಗಳ ಖರೀದಿಗೆ ಹಾಕಿದ ಟ್ಯಾಕ್ಸ್, ಮದ್ಯಕ್ಕೆ ಹಾಕಿದ ತೆರಿಗೆಯನ್ನು ನೀವು ಲೆಕ್ಕ ಹಾಕಿ. ಆ ತೆರಿಗೆ ದುಡ್ಡನ್ನು ನಿಮ್ಮ ಮನೆ ಯಜಮಾನರು ಸರ್ಕಾರಕ್ಕೆ ನೀಡಬೇಕು. ಆಸ್ತಿ ನೋಂದಣಿ, ವಿದ್ಯುತ್ ದರ ಏರಿಕೆ ಸೇರಿದ ಹಲವು ವಿಷಯಗಳಿವೆ ಎಂದು ಹೇಳಿದರು.&lt;/p&gt;&lt;p&gt;ರಾಜ್ಯದಲ್ಲಿ ಲೂಟಿ ಹೊಡೆಯಲಾಗುತ್ತಿದೆ. ಈ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರ ಕಮಿಷನ್ ಆರೋಪ ಕೇಳಿ ಬಂದಿದೆ. ನನ್ನ ಅವಧಿಯಲ್ಲಿ ಎಂದಾದರೂ ಗುತ್ತಿಗೆದಾರರು ಆರೋಪ ಮಾಡಿದ್ದರಾ? ನನ್ನ ಅವಧಿಯಲ್ಲಿ ಗುತ್ತಿಗೆದಾರರಿಗೆ ಸಮಯಕ್ಕೆ ಸರಿಯಾಗಿ ಹಣ ನೀಡಲಾಗಿದೆ ಎಂದರು.&lt;/p&gt;&lt;h2&gt;&lt;strong&gt;ಸಾಲ ಮನ್ನಾ ಮಾಡುವಾಗ ನಿಮ್ಮ ಮೇಲೆ ಹೊರೆ ಹಾಕಿಲ್ಲ&lt;/strong&gt;&lt;/h2&gt;&lt;p&gt;ನಾನು ಸಾಲ ಮನ್ನಾ ಮಾಡುವಾಗ ನಿಮ್ಮ ಮೇಲೆ ಹೊರೆ ಹಾಕಿಲ್ಲ. ಗ್ಯಾರಂಟಿ ಹೊರೆಯಾಗಿದೆ ಎಂದು ಅವರೇ ಹೇಳುತ್ತಿದ್ದಾರೆ. ಹಳ್ಳಿಗಳಲ್ಲಿ ಚರಂಡಿ ಸಹಿತ ಚೆನ್ನಾಗಿಲ್ಲ, ನೀರು ಹರಿದುಕೊಂಡು ರಸ್ತೆ ಮೇಲೆ ಬರುತ್ತದೆ ಎಂದ ಅವರು, ಯಾವುದೇ ಸರ್ಕಾರಗಳು 50 ವರ್ಷಗಳಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಹಣ ನೀಡಲಿಲ್ಲ. ದೇವೇಗೌಡರು ₹20 ಸಾವಿರ ಕೋಟಿ ಅನುದಾನವನ್ನು ಯೋಜನೆಗೆ ನೀಡಿದರು. ಇದನ್ನು ಉತ್ತರ ಕರ್ನಾಟಕ ಜನ ಮರೆಯುವ ಹಾಗಿಲ್ಲ ಎಂದರು. ಕಾಂಗ್ರೆಸ್&zwnj; ಸರ್ಕಾರ ₹7 ಲಕ್ಷ 65 ಸಾವಿರ ಕೋಟಿ ಸಾಲ ಮಾಡಿದೆ. ಈಗ ಬಜೆಟ್ ಮಂಡನೆ ವೇಳೆ ಮತ್ತೆ ಸಾಲ ಮಾಡಲು ಹೊರಟಿದ್ದಾರೆ. ಈ ಸಾಲ ತೀರಿಸೋರು ಯಾರು? ಈ ಸಾಲವನ್ನು ನೀವೇ ತೀರಿಸಬೇಕು ಎಂದರು.&lt;/p&gt;&lt;p&gt;ಧಾರವಾಡದಲ್ಲಿ ಯುವಕರ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ನಾನು ಸಿಎಂ ಆಗಿದ್ದಾಗ 56 ಸಾವಿರ ಶಿಕ್ಷಕರ ನೇಮಕ ಮಾಡಿದ್ದೆ. ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ? ಎಂದು ಪ್ರಶ್ನಿಸಿದರು.&lt;/p&gt;&lt;p&gt;ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾದಗಿರಿ ಸಭೆಯಲ್ಲಿ &lsquo;ನಮಗೆ ಸಿಂಗಾಪುರ ಮಾಡಬೇಡಿ, ಮೈಸೂರು ಕನಕಪುರ ಕೆಲಸ ಮಾಡಿಕೊಡಿ&rsquo; ಎಂದಿದ್ದಾರೆ. ಕೆಲ ನಾಯಕರು ಉತ್ತರ ಕರ್ನಾಟಕ ಅಭಿವೃದ್ಧಿ ಆಗಿಲ್ಲ, ಪ್ರತ್ಯೇಕ ರಾಜ್ಯ ಕೊಡಿ ಎನ್ನುವವರನ್ನು ನಂಬಬೇಡಿ. ಇವರೆ ನಿಜವಾದ ಶತ್ರುಗಳು. ನಿಮ್ಮ ಕಲಬುರಗಿ ಭಾಗ ಯಾಕೆ ಅಭಿವೃದ್ಧಿಯಾಗಿಲ್ಲ? ನೀವು ಎಷ್ಟು ವರ್ಷ ಅಧಿಕಾರಲ್ಲಿದ್ದಿರಿ? ನಿಮ್ಮ ಮಗ ಅಧಿಕಾರದಲ್ಲಿದ್ದಾರೆ, ಆದರೂ ಯಾಕೆ ಅಭಿವೃದ್ಧಿ ಮಾಡಿಲ್ಲ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಿದರೆ ಮುಗಿತಾ ಏನು ಅಭಿವೃದ್ಧಿ ಮಾಡಿದ್ದಿರಿ ಎಂದು ಪ್ರಶ್ನಿಸಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/hd-kumaraswamy-criticizes-congress-guarantees-5000-rupees-promise-jds-convention-san/articleshow-1ov0gy4"/>
        </item>
        <item>
            <title><![CDATA[ವಿಜಯಪುರ ನಗರಕ್ಕೆ ಆಗಮಿಸಿದ ಯಡೂರಿನಿಂದ  ಶ್ರೀಶೈಲಕ್ಕೆ ತೆರಳುತ್ತಿರುವ ನಂದಿಸೇನೆ ರಥಯಾತ್ರೆ]]></title>
            <link>https://kannada.asianetnews.com/karnataka-districts/nandisena-rath-yatra-proceeding-from-yadur-to-srisailam-enters-vijayapura-city-mrq/articleshow-1v2657l</link>
            <guid isPermaLink="true">https://kannada.asianetnews.com/karnataka-districts/nandisena-rath-yatra-proceeding-from-yadur-to-srisailam-enters-vijayapura-city-mrq/articleshow-1v2657l</guid>
            <pubDate>Mon, 09 Mar 2026 11:26:34 +0530</pubDate>
            <description><![CDATA[ಯಡೂರಿನಿಂದ ಶ್ರೀಶೈಲದವರೆಗೆ ಸಾಗುತ್ತಿರುವ ನಂದಿಸೇನೆ ರಥಯಾತ್ರೆಯು ವಿಜಯಪುರ ನಗರಕ್ಕೆ ಆಗಮಿಸಿತು. ಜೋಡೆತ್ತಿನ ಕೃಷಿಕರ ಮಹತ್ವದ ಬಗ್ಗೆ ಜನಜಾಗೃತಿ ಮೂಡಿಸುವುದು ಮತ್ತು ಅವರಿಗೆ ಮಾಸಿಕ ₹11,000 ಪ್ರೋತ್ಸಾಹ ಧನ ನೀಡಬೇಕೆಂದು ಒತ್ತಾಯಿಸುವುದು ಈ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kk8jg38arj6v80bbzz9bf26d,imgname-srishaila--1773035588874.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ:&lt;/strong&gt; ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ವೀರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಿದ ನಂದಿಸೇನೆ ರಥಯಾತ್ರೆ ವಿಜಯಪುರ ನಗರಕ್ಕೆ ಅಗಮಿಸಿತು. ಶ್ರೀರಾಮನವಮಿ ಉತ್ಸವ ಸಮಿತಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ನಗರಕ್ಕೆ ಸ್ವಾಗತಿಸಿ ಬೀಳ್ಕೊಡಲಾಯಿತು.&lt;/p&gt;&lt;h2&gt;&lt;strong&gt;ನಂದಿ ಸೇನೆ ರಥಯಾತ್ರೆಯ ಮೂಲ ಉದ್ದೇಶ&lt;/strong&gt;&lt;/h2&gt;&lt;p&gt;ಸಮಾಜ ಸೇವಕ ಉಮೇಶ ವಂದಾಲ ಮಾತನಾಡಿ, ಯಡೂರದಿಂದ ಶ್ರೀಶೈಲದ ವರೆಗೆ ಜರಗುತ್ತಿರುವ ನಂದಿ ಸೇನೆ ರಥಯಾತ್ರೆಯ ಮೂಲ ಉದ್ದೇಶ ಜೋಡೆತ್ತಿನ ಕೃಷಿಕರ ಮೇಲೆ ದೇಶದ ಭವಿಷ್ಯ ನಿಂತಿದೆ ಎಂಬುವುದರ ಕುರಿತು ಜನಜಾಗೃತಿ ಮೂಡಿಸುವುದಾಗಿದೆ. ನಂದಿ ಕೃಷಿಕರ ಶ್ರಮಕ್ಕೆ ತಕ್ಕ ಬೆಲೆ ನೀಡುವ ಯೋಜನೆಗಳು ಜಾರಿ ಮಾಡುವ ಅವಶ್ಯಕತೆಯಿದೆ. ನಂದಿ ಸೇನೆ ಹಕ್ಕೊತ್ತಾಯದಂತೆ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು ₹11,000 ಪ್ರೋತ್ಸಾಹ ಧನ ನೀಡಬೇಕಾದ ಅವಶ್ಯಕತೆಯಿದೆ ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Bengaluru: ವಿಧಾನಸೌಧದ ಮುಂದೆ ಯುವತಿಯರ ಡಿಶುಂ ಡಿಶುಂ: ಮಹಿಳಾ ದಿನಾಚರಣೆಯಂದು ಶಕ್ತಿ ಪ್ರದರ್ಶನ&lt;/strong&gt;&lt;/p&gt;&lt;h3&gt;&lt;strong&gt;ನಂದಿ ಕೂಗು ಅಭಿಯಾನ&lt;/strong&gt;&lt;/h3&gt;&lt;p&gt;ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಎಸ್.ಜಿ.ನಾಡಗೌಡ, ನಿವೃತ್ತ ಕೃಷಿ ಅಧಿಕಾರಿ ಬಾಳಾಸಾಹೇಬ ಈಶ್ವರಗೊಂಡ&zwnj;, ನಂದಿ ಕೂಗು ಅಭಿಯಾನದ ರೂವಾರಿ ಬಸವರಾಜ ಬಿರಾದಾರ ಮಾತನಾಡಿದರು.&lt;/p&gt;&lt;p&gt;ಈ ವೇಳೆ ಶಿವಾನಂದ ಬುಯ್ಯಾರ, ಬಸವರಾಜ&zwnj; ಮಾಳಗೊಂಡ, ಅಭಿಷೇಕ ಬಿರಾದಾರ, ಬಸವರಾಜ ಕೋನರಡ್ಡಿ, ಅರವಿಂದ ಕವಲಗಿ, ಮಂಜುನಾಥ ಹಿರೇಮಠ, ಓಂಕಾರ ಅಥರ್ಗಾ, ಭಾರತಿ ಬುಯ್ಯಾರ, ದಾನಯ್ಯ ಹಿರೇಮಠ, ಸಚಿನ ಸವನಹಳ್ಳಿ, ಸಂಪತರಾವ ಕುಲಕರ್ಣಿ, ರಾಜು ಮುಚ್ಚಂಡಿ, ಅಶೋಕ ಪೆದ್ದಿ, ಅರ್ಜುನ ಕವಟೆಕರ, ಸಂಗಮೇಶ ಉಕ್ಕಲಿ ಭಾಗವಹಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;'ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ?' ಅಲ್ಪಸಂಖ್ಯಾತ ಅಭ್ಯರ್ಥಿ ಬೇಕೆಂದ ಜಮೀರ್&zwnj; ವಿರುದ್ಧ ಎಸ್&zwnj;ಎಸ್ ಮಲ್ಲಿಕಾರ್ಜುನ್ ಕಿಡಿ&lt;/strong&gt;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/nandisena-rath-yatra-proceeding-from-yadur-to-srisailam-enters-vijayapura-city-mrq/articleshow-1v2657l"/>
        </item>
        <item>
            <title><![CDATA[ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: ಕಣ್ಣುದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮರೆದ ಪೋಷಕರು]]></title>
            <link>https://kannada.asianetnews.com/india-news/vijayapura-brain-dead-in-accident-parents-donates-sons-eyes/articleshow-43io13u</link>
            <guid isPermaLink="true">https://kannada.asianetnews.com/india-news/vijayapura-brain-dead-in-accident-parents-donates-sons-eyes/articleshow-43io13u</guid>
            <pubDate>Thu, 26 Mar 2026 17:44:18 +0530</pubDate>
            <description><![CDATA[&lt;p&gt;&lt;strong&gt;Organ donation: &lt;/strong&gt;ವಿಜಯಪುರದಲ್ಲಿ ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಆಕಾಶ್ ಹರಿಜನ ಎಂಬ ಬಾಲಕನ ಸಾವಿನ ನೋವಿನಲ್ಲೂ, ಪೋಷಕರು ಅವನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದರು. ಆದರೆ, ಹಠಾತ್ ರಕ್ತದೊತ್ತಡ ಕುಸಿತದಿಂದಾಗಿ ಅಂತಿಮವಾಗಿ ಮಗನ ನೇತ್ರಗಳನ್ನು ಮಾತ್ರ ದಾನ ಮಾಡಲು ಸಾಧ್ಯವಾಯ್ತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmn0njd2chtqq0fynwr98x5p,imgname-vijayapur-organ-donation-1774526843298.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಮಗನ ಸಾವಿನಲ್ಲೂ ಸಾರ್ಥಕತೆ&lt;/strong&gt;&lt;/h2&gt;&lt;p&gt;ವಿಜಯಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಮಗನ ಸಾವಿನ ನೋವಿನಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕಳೆದ ಮಾರ್ಚ್ 22 ರಂದು ರಸ್ತೆ ಅಪಘಾತದಲ್ಲಿ ಆಕಾಶ ಹರಿಜನ ಎಂಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ ಆತನ ಮಿದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಮಗ ಇನ್ನು ಬದುಕಿ ಬರುವುದು ಸಾಧ್ಯವಿಲ್ಲ ಎಂದು ಅರಿತ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡುವುದಕ್ಕೆ ನಿರ್ಧರಿಸಿದರು. ಅದರಂತೆ ಆಕಾಶ್ ತಂದೆ ಮಲ್ಲಪ್ಪ ಹರಿಜನ ಹಾಗೂ ತಾಯಿ ಸುಜಾತ ಮಗನ ಅಂಗಾಂಗ ದಾನ ಮಾಡುವುದಕ್ಕೆ ಮುಂದಾಗಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;ಬೆಳಗಾವಿ: ಬಸ್&zwnj;ನಲ್ಲಿ ಸೀಟಿಗಾಗಿ ಓಟ, ಚಕ್ರದಡಿ ಸಿಲುಕಿದ ಕಂದಮ್ಮ: ಅಮ್ಮನ ಕೈನಿಂದ ಕೆಳಗೆ ಬಿದ್ದು ದುರಂತ&lt;/p&gt;&lt;h3&gt;&lt;strong&gt;ಸ್ವಇಚ್ಛೆಯಿಂದ ಮಗನ ಕಣ್ಣುಗಳ ದಾನ&lt;/strong&gt;&lt;/h3&gt;&lt;p&gt;ಆದರೆ ಹಠಾತ್ ರಕ್ತದೊತ್ತಡ ಕಡಿಮೆಯಾದ ಕಾರಣ ಇತರೆ ಅಂಗಾಂಗಗಳನ್ನು ದಾನ ಪಡೆಯಲು ವೈದ್ಯರಿಗೆ ಸಾಧ್ಯವಾಗಲಿಲ್ಲ. ಹೀಗಾಗಿ ಕೊನೆಯ ಕ್ಷಣದಲ್ಲಿ ಮಗನ ನೇತ್ರಗಳನ್ನು ದಾನ ಮಾಡುವುದಕ್ಕ ಬಾಲಕನ ತಂದೆ ತಾಯಿ ನಿರ್ಧರಿಸಿದರು. ಹೀಗಾಗಿ ವಿಜಯಪುರ ನಗರದ ಬಿಎಲ್&zwnj;ಡಿಇ ಆಸ್ಪತ್ರೆಯಲ್ಲಿ ನೇತ್ರದಾನ ಮಾಡಲಾಯ್ತು. ಸ್ವಯಂಪ್ರೇರಿತವಾಗಿ ಪೋಷಕರು ದಾನ ಮಾಡಿದ ನೇತ್ರಗಳನ್ನು ಪಡೆದ ವೈದ್ಯರು ಅಗತ್ಯ ಇರುವವರಿಗೆ ಅವುಗಳನ್ನು ಅಳವಡಿಸಲಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿಗಳು ಬಾಲಕನ ಕುಟುಂಬಕ್ಕೆ ಧನ್ಯವಾದ ಹೇಳಿದ್ದು, ಬಾಲಕನ ಪಾರ್ಥಿವ ಶರೀರಕ್ಕೆ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಡ್ಯ ಕುರುಬರ ಸಂಘದಲ್ಲಿ ಹೈಡ್ರಾಮಾ: ಕುರುಬರ ಸಂಘದ ಜಿಲ್ಲಾಧ್ಯಕ್ಷ, ಸಿದ್ದು ಆಪ್ತನಿಗೆ ಮಸಿ ಎರಚಿ ಆಕ್ರೋಶ&lt;/strong&gt;&lt;/p&gt;]]></content:encoded>
            <category>vijayapura</category>
            <dc:creator>Anusha Kb</dc:creator>
            <atom:link href="https://kannada.asianetnews.com/india-news/vijayapura-brain-dead-in-accident-parents-donates-sons-eyes/articleshow-43io13u"/>
        </item>
        <item>
            <title><![CDATA[ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ]]></title>
            <link>https://kannada.asianetnews.com/state/vijayapura-indi-mother-self-death-with-three-children-well-incident-miragi-village-san/articleshow-4ikcwo3</link>
            <guid isPermaLink="true">https://kannada.asianetnews.com/state/vijayapura-indi-mother-self-death-with-three-children-well-incident-miragi-village-san/articleshow-4ikcwo3</guid>
            <pubDate>Thu, 26 Mar 2026 22:50:42 +0530</pubDate>
            <description><![CDATA[ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ, ರಾಜಶ್ರೀ ಎಂಬ ತಾಯಿ ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಊರಲ್ಲಿಲ್ಲದ ವೇಳೆ ಈ ದುರಂತ ಸಂಭವಿಸಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmnj9ha1qfqwdnsqh5036j70,imgname-vijayapura-child-death-1774545323329.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.26): &lt;/strong&gt;ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಸಂಸಾರದ ಸುಂದರ ಬದುಕಿನ ಆಸೆಗಳನ್ನೆಲ್ಲಾ ಮಣ್ಣುಪಾಲು ಮಾಡಿ, ಹೂವಿನಂತಹ ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣಾಗಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.&lt;/p&gt;&lt;p&gt;ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬಾಕೆಯೇ ಆ*ತ್ಮಹ*ತ್ಯೆ ಮಾಡಿಕೊಂಡ ದುರ್ದೈವಿ ತಾಯಿ. ಈಕೆಯೊಂದಿಗೆ ಆಕೆಯ ಪುಟ್ಟ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಕೇವಲ ಒಂದು ವರ್ಷದ ಹಸುಳೆ ಸಂತೋಷ್ ಕೂಡ ಬಾವಿಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. ಇಂದು ಸಾಯಂಕಾಲದ ವೇಳೆಗೆ ಈ ಕೃತ್ಯ ನಡೆದಿದ್ದು, ಮೊದಲು ಮಕ್ಕಳನ್ನು ಬಾವಿಗೆ ಎಸೆದ ರಾಜಶ್ರೀ, ನಂತರ ತಾನೂ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾಳೆ.&lt;/p&gt;&lt;h2&gt;&lt;strong&gt;ಪತಿ ಊರಲ್ಲಿಲ್ಲದ ವೇಳೆ ದುರಂತ&lt;/strong&gt;&lt;/h2&gt;&lt;p&gt;ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ವೃತ್ತಿ ನಿಮಿತ್ತ ಅವರು ಊರಿನಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ಸಂಜೆ ಮನೆಗೆ ಬಂದಾಗ ಅಥವಾ ಅಕ್ಕಪಕ್ಕದವರು ಗಮನಿಸಿದಾಗ ಈ ಭೀಕರ ದೃಶ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ನಿಗೂಢವಾಗಿ ಉಳಿದ ಸಾವಿನ ಕಾರಣ&lt;/strong&gt;&lt;/h2&gt;&lt;p&gt;ಮೂರು ಮಕ್ಕಳೊಂದಿಗೆ ಈಕೆ ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಕುಟುಂಬದಲ್ಲಿ ಕಲಹವಿತ್ತೇ ಅಥವಾ ಬೇರೆ ಯಾವುದಾದರೂ ಮಾನಸಿಕ ಒತ್ತಡವಿತ್ತೇ ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ. ವಿಷಯ ತಿಳಿದ ಕೂಡಲೇ ಇಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;p&gt;ಪತಿ ಹಾಗೂ ರಾಜಶ್ರೀ ಅವರ ತವರು ಮನೆಯವರು ಬಂದ ಬಳಿಕ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Santosh Naik</dc:creator>
            <atom:link href="https://kannada.asianetnews.com/state/vijayapura-indi-mother-self-death-with-three-children-well-incident-miragi-village-san/articleshow-4ikcwo3"/>
        </item>
        <item>
            <title><![CDATA[ಬಂಗಾರದಂತಹ ಭೂಮಿ ಯಾರೂ ಮಾರಾಟ ಮಾಡಬೇಡಿ: ಸಚಿವ ಎಂ.ಬಿ.ಪಾಟೀಲ ರೈತರಿಗೆ ಮನವಿ]]></title>
            <link>https://kannada.asianetnews.com/karnataka-districts/mb-patil-advice-farmers-not-to-sell-land-vijayapura-gvd/articleshow-5xevhaf</link>
            <guid isPermaLink="true">https://kannada.asianetnews.com/karnataka-districts/mb-patil-advice-farmers-not-to-sell-land-vijayapura-gvd/articleshow-5xevhaf</guid>
            <pubDate>Mon, 16 Mar 2026 19:09:12 +0530</pubDate>
            <description><![CDATA[&lt;p&gt;ಭೂಮಿ ಮಾರಾಟ ಮಾಡಿದರೆ ಮತ್ತೆ ಖರೀದಿಸಲು ಸಾಧ್ಯವಿಲ್ಲ. ಭೂಮಿ ಬಂಗಾರವಿದ್ದಂತೆ. ಅದನ್ನು ಯಾರೂ ಮಾರಾಟ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jpyd7a850hpkd6dfs6mk86ej,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.16): &lt;/strong&gt;ಭೂಮಿ ಬಂಗಾರವಿದ್ದಂತೆ. ಅದನ್ನು ಯಾರೂ ಮಾರಾಟ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ತಿಕೋಟಾ ತಾಲೂಕಿನ ರಾಂಪೂರ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ನೂತನ ಅಂಗನವಾಡಿ ಕಟ್ಡಡ, ಕ್ರೀಡಾ ಸಲಕರಣೆ, ಎಪಿಎಂಸಿ ಗೋದಾಮು ಉದ್ಘಾಟನೆ ಹಾಗೂ ಚಂದ್ರಗಿರಿ ಘಟಿವಾಳೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ವಿವಿಧ ಕಟ್ಟಡ ಶಂಕುಸ್ಥಾಪನೆಯ ಕಾರ್ಯಕ್ರಮದ ಸಸಿಗೆ ನೀರು ಉಣಿಸುವದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.&lt;/p&gt;&lt;p&gt;ಕುಡಿಯಲು ನೀರಿನ ಕೊರತೆ ಇದ್ದ ಈ ಭಾಗದಲ್ಲಿ ಕಳೆದ ಒಂದು ದಶಕದಲ್ಲಿ ನೀರಾವರಿಯಿಂದಾಗಿ ಅಂತರ್ಜಲ ವೃದ್ಧಿಯಾಗಿದೆ. ರೈತರು ಕೃಷಿ, ತೋಟಗಾರಿಕೆಯಲ್ಲಿ ತೊಡಗುವ ಮೂಲಕ ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ಈಗ ಬಾಬಾನಗರ ಬಳಿ ಜಲಾಶಯ ಕಟ್ಟಲಾಗುವುದು. ಇದರಿಂದ ಈಗಾಗಲೇ ಹೆಚ್ಚಾಗಿರುವ ಭೂಮಿಯ ಬೆಲೆ ಮತ್ತಷ್ಟು ಹೆಚ್ಚಾಗಲಿದೆ. ಬಂಗಾರ ಖರೀದಿ ಮಾಡಬಹುದು. ಆದರೆ, ಭೂಮಿ ಮಾರಾಟ ಮಾಡಿದರೆ ಮತ್ತೆ ಖರೀದಿಸಲು ಸಾಧ್ಯವಿಲ್ಲ.&lt;/p&gt;&lt;p&gt;ಹೀಗಾಗಿ ರೈತರು ತಮ್ಮ ಅಮೂಲ್ಯವಾದ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಸಚಿವರು ರೈತರಿಗೆ ಕಿವಿಮಾತು ಹೇಳಿದರು. ಇಲ್ಲಿನ ಮಠದ ಜೀರ್ಣೋದ್ಧಾರ ಬಹಳ ದಿನಗಳ ಬೇಡಿಕೆಯಾಗಿತ್ತು. ಗ್ರಾಮದ ಸಾರ್ವಜನಿಕರ ಆಸೆಯಂತೆ 20 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಕ್ಕಾಗಿ ಕ್ರಮ ವಹಿಸಲಾಗುವುದು. ಮಠದ ಹತ್ತಿರ 2025-26ನೇ ಸಾಲಿನ ವಾರ್ಷಕ ಕ್ರಿಯಾ ಯೋಜನೆಯಡಿಲ್ಲಿ ಸುಮಾರು 20.55 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಗೋದಾಮು ಈ ಗೋದಾಮು ಅನ್ಯ ಕರ್ತವ್ಯಕ್ಕೂ ಬಳಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.&lt;/p&gt;&lt;p&gt;ಸುಸಜ್ಜಿತಗವಾದ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದ್ದು, ಜಪಾನಿನ ಕ್ರೋನ್ಸ್ ಕಂಪನಿಯವರು ಸಿಎಸ್.ಆರ್ ಅನುದಾನದಡಿ ಆಟದ ಮೈದಾನ ನಿರ್ಮಾಣ ಮಕ್ಕಳಿಗಾಗಿ ಕ್ರೀಡಾ ಸಲಕರಣೆ ನಿಡಿದ್ದಾರೆ. ಮತಕ್ಷೇತ್ರದ ಎಲ್ಲ ಸರಕಾರಿ ಶಾಲೆಗಳಲ್ಲಿ ಸಿಎಸ್&zwnj;ಆರ್ ಅನುದಾನದಲ್ಲಿ ಕ್ರೀಡಾ ಸಲಕರಣೆ, ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ನೀರು ಕೊಟ್ಟ ಎಂ.ಬಿ. ಪಾಟೀಲರನ್ನು ನೆನಪಿಟ್ಟುಕೊಳ್ಳುವುದು ನಿಮ್ಮ ಜವಾಬ್ದಾರಿ. 3600 ಕೋಟಿ ರೂ. ನೀಡಿ, ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಅತೀ ಎತ್ತರದ ಪ್ರದೇಶಕ್ಕೆ ನೀರು ಕೊಟ್ಟಿದ್ದೇನೆ. ಎಲ್ಲರ ಆಶೀರ್ವಾದದಿಂದ ನೀರು ಕೊಟ್ಟಿದ್ದೇವೆ.&lt;/p&gt;&lt;h2&gt;&lt;strong&gt;ಈಗ ಎಲ್ಲ ಸಮೃದ್ಧಿ&lt;/strong&gt;&lt;/h2&gt;&lt;p&gt;ನೀರು ಕೊಟ್ಟಿದ್ದನ್ನು ಒಂದೆರೆಡು ದಿನ ನೆನಪಿನಲ್ಲಿಟ್ಟಿಕೊಳ್ಳುವುದಲ್ಲ. ಅದನ್ನು ಸಾವಿರಾರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವಂಥದ್ದು ಎಂದರು. ನಾಲ್ಕೈದು ಜಿಲ್ಲೆಗಳ ಅನುದಾನ ತಿಕೋಟಾ ತಾಲೂಕಿಗೆ ತಂದ ಹಿರಿಮೆ ಈ ಬಾಗದಲ್ಲಿ ನೀರಾವರಿ ಒಳಪಟ್ಟಿದ್ದರಿಂದ ಈಗ ಎಲ್ಲ ಸಮೃದ್ಧಿಯಾಗಿದೆ ನಾಲ್ಕೈದು ಜಿಲ್ಲೆಗಳಿಗೆ ಕೊಡುವ ಅನುದಾನವನ್ನು ಕೇವಲ ತಿಕೋಟಾ ತಾಲೂಕಿಗೆ ಕೊಡಿಸಿದ್ದೇನೆ. ಜೊತೆಗೆ ಎರಡು ಮಿನಿ ವಿಧಾನಸೌಧವನ್ನು ಕೊಡಿಸಿದ್ದೇನೆ ಎಂದ ಅವರು, ತನ್ಮೂಲಕ ಈ ಭಾಗದ ರೈತರಿಗೂ ಸಾಕಷ್ಟು ಸಮೃದ್ದಿಯಾಗಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ಶ್ರೀಗುರು ಘಟಿವಾಳೇಶ್ವರ ಮಠದ ಶ್ರೀ ವಿದ್ಯಾನಂದ ಓಂಕಾರಯ್ಯ ಪೂಜಾರಿ, ಕಾರ್ಯಕ್ರಮದಲ್ಲಿ ಆಶಿರ್ವವಚನ ನೀಡಿದರು. ಶ್ರೀಗಳಾದ ನಿಜಗುಣಯ್ಯ ಚಂದ್ರಯ್ಯ ಹಿರೇಮಠ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗುರುಗೌಡ ದಾಶ್ಯಾಳ, ತಹಸೀಲ್ದಾರ ಸುರೇಶ ಚವಲರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸಿಡಿಪಿಓ ಎಸ್.ಸಿ.ಮ್ಯಾಗೇರಿ, ತಾಪಂ ಇಒ ಬಸವಂತರಾಯಗೌಡ ಬಿರಾದಾರ, ಎಪಿಎಂಸಿ ಜಂಟಿ ನಿರ್ದೇಶಕ ಅಲ್ಲಾಭಕ್ಷ, ತಾಪಂ ಮಾಜಿ ಅಧ್ಯಕ್ಷ ಸಿದ್ದು ಬೆಳಗಾವಿ, ಮುಖಂಡರಾದ ಭಾಗೀರಥಿ ತೇಲಿ, ಶ್ರೀಶೈಲ ತುಳಜನ್ನವರ, ಸಾಹೇಬಗೌಡ ಕೆಂಪವಾಡ, ರಾಜು ಬೀಳೂರ, ಬಸವರಾಜ ಬೀಳೂರ, ಮಲ್ಲಪ್ಪ ಹೊನವಾಡ, ವಿಜಯಾನಂದ ಹಿರೇಮಠ, ಗ್ರಾಮದ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಮಕ್ಕಳು ಉಪಸ್ಥಿತರಿದ್ದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mb-patil-advice-farmers-not-to-sell-land-vijayapura-gvd/articleshow-5xevhaf"/>
        </item>
        <item>
            <title><![CDATA[ದಾವಣಗೆರೆಯಲ್ಲಿ ಕೊನೆಕ್ಷಣ ಏನಾದರೂ ಆಗಬಹುದು: ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ: ಯತ್ನಾಳ್]]></title>
            <link>https://kannada.asianetnews.com/state/davangere-by-election-yatnal-said-no-wonder-if-bjp-gave-ticket-to-shamanur-family/articleshow-cnobbw2</link>
            <guid isPermaLink="true">https://kannada.asianetnews.com/state/davangere-by-election-yatnal-said-no-wonder-if-bjp-gave-ticket-to-shamanur-family/articleshow-cnobbw2</guid>
            <pubDate>Thu, 19 Mar 2026 14:07:32 +0530</pubDate>
            <description><![CDATA[&lt;p&gt;ಬಸವನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ದಾವಣಗೆರೆಯಲ್ಲಿ ಶಾಮನೂರು ಕುಟುಂಬದೊಂದಿಗೆ ಬಿಜೆಪಿ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದು, ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಾದರೂ ಅಚ್ಚರಿಯಿಲ್ಲ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kj4nkrdvr7qnva2vvbe0j7w9,imgname-br-patil-yatnal--2--1771830895035.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ನಾನು ಅಭ್ಯರ್ಥಿ ಹಾಕುವ ಬಗ್ಗೆ ಕಾದು ನೋಡುತ್ತೇನೆ: ಯತ್ನಾಳ್&lt;/strong&gt;&lt;/h2&gt;&lt;p&gt;ವಿಜಯಪುರ: ರಾಜ್ಯದಲ್ಲಿ ಬಾಗಲಕೋಟೆ, ದಾವಣಗೆರೆ ಈ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ, ಹಿಂದೂ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.&lt;/p&gt;&lt;h2&gt;&lt;strong&gt;ದಾವಣಗೆರೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯಾದರು ಅಚ್ಚರಿಯಿಲ್ಲ&lt;/strong&gt;&lt;/h2&gt;&lt;p&gt;ಬಿಜೆಪಿಯವರು ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ನಾನು ಅಭ್ಯರ್ಥಿ ಹಾಕುವ ಬಗ್ಗೆ ಕಾದು ನೋಡುತ್ತೇನೆ. ವಿಜಯೇಂದ್ರ ಎಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದಾನೆ ಅನ್ನೋದನ್ನ ಚೆಕ್ ಮಾಡ್ತೇವೆ. ದಾವಣಗೆರೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯಾದರು ಅಚ್ಚರಿಯಿಲ್ಲ, ಏಕೆಂದರೆ ಶಾಮನೂರು ಕುಟುಂಬದ ಜೊತೆಗೆ ವಿಜಯೆಂದ್ರಗೆ ಹೊಂದಾಣಿಕೆ ಇದೆ. ದಾವಣಗೆರೆಯಲ್ಲಿ ಬಿಜೆಪಿ ಪರ ವಿಜಯೇಂದ್ರ ಕೆಲಸ ಮಾಡ್ತಾರೋ ಇಲ್ಲೋ ಗೊತ್ತಿಲ್ಲ.&lt;/p&gt;&lt;h3&gt;&lt;strong&gt;ಶಾಮನೂರು ಕುಟುಂಬಕ್ಕೆ &zwnj;ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ&lt;/strong&gt;&lt;/h3&gt;&lt;p&gt;ಯಡಿಯೂರಪ್ಪ ಹಾಗೂ ಶಾಮನೂರು ಕುಟುಂಬಗಳು ಬಹಿರಂಗವಾಗಿಯೇ ಹೊಂದಾಣಿಕೆಯಿಂದ ಇದೆ. ಬಿಜೆಪಿ ಪರ ಅಪ್ಪ ಮಗ ಕೆಲಸ ಮಾಡುವ ಬಗ್ಗೆ ನನಗೆ ಅನುಮಾನವಿದೆ. ಹೊಂದಾಣಿಕೆ ಮಾಡಿಕೊಂಡು ಇವರು ಕೊನೆ ಕ್ಷಣದಲ್ಲಿ ಶಾಮನೂರು ಕುಟುಂಬಕ್ಕೆ &zwnj;ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿಯ ಹಿರಿಯ ಮುಖಂಡ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಚಿಕ್ಕಮಗಳೂರು: ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಕಾಡಾನೆಗಳ ಅಪರೂಪದ ದೃಶ್ಯ&lt;/strong&gt;&lt;/p&gt;&lt;p&gt;ಒಂದು ವೇಳೆ ಕಾಂಗ್ರೆಸ್ ಮುಸ್ಲಿಂಮರಿಗೆ ಟಿಕೆಟ್ ನೀಡಿದರೆ, ಬಿಜೆಪಿಯವರು ಶಾಮನೂರು ಮಗನಿಗೆ ಟಿಕೆಟ್ ನೀಡಿದರು ಆಶ್ಚರ್ಯವಿಲ್ಲ. ನನಗೆ ಈ ಬಗ್ಗೆ 100%. ಮಾಹಿತಿ ಇದೆ ಎಂದು ಯತ್ನಾಳ್ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಯಾರನ್ನು ಹಾಳು ಮಾಡ್ತೇಕು ಅಂತಾ ಈ ಅಪ್ಪ ಮಗ ಯೋಚನೆ ಮಾಡ್ತಾರೆ. ಯಡಿಯೂರಪ್ಪ ಕುಟುಂಬ ಹಲ್ಕಾ ರಾಜಕಾರಣ ಮಾಡೋದನ್ನ ಬಿಡಬೇಕು ಎಂದು ಯಡಿಯೂರಪ್ಪ ಕುಟುಂಬದವರ ವಿರುದ್ಧ ಬಸವನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.&lt;/p&gt;&lt;p&gt;ನಂತರ ಬಾಗಲಕೋಟ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಆಯ್ಕೆಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಚರಂತಿಮಠ ಕುಟುಂಬದ ಜೊತೆಗೆ ನಮಗೆ ಒಳ್ಳೆಯ ಸಂಬಂಧ ಇದೆ. ನಾನು ಅಲ್ಲಿ ಅಭ್ಯರ್ಥಿ ಹಾಕುವ ಬಗ್ಗೆ ಇನ್ನೂ ಚಿಂತನೆ ನಡೆಸಬೇಕಷ್ಟೇ ಎಂದ ಹೇಳಿದ್ದಾರೆ.&lt;/p&gt;&lt;p&gt;&lt;strong&gt;ಬಾಗಲಕೋಟೆ ಅಭ್ಯರ್ಥಿ ವೀರಣ್ಣ ಚರಂತಿಮಠ ಹೇಳಿದ್ದೇನು?&lt;/strong&gt;&lt;/p&gt;&lt;p&gt;ಇದಕ್ಕೂ ಮೊದಲು ಬಾಗಲಕೋಟೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ವೀರಣ್ಣ ಚರಂತಿಮಠ, ಯುಗಾದಿ ಹಬ್ಬದ ದಿನವೇ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಘೋಷಣೆ ಮಾಡಿದ್ದಕ್ಕೆ ರಾಜ್ಯ &amp;amp; ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಹೇಳ್ತೇನೆ. ಮಾರ್ಚ್ 23ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಬೀಳೂರು ಗುರುಬಸವ ದೇವಸ್ಥಾನದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ. ಹಿಂದುತ್ವ ಮತ್ತು ಅಭಿವೃದ್ಧಿ ಎರಡು ದೃಷ್ಠಿಕೋನ ಇಟ್ಟುಕೊಂಡು ಜನರ ಮುಂದೆ ಹೋಗ್ತೇವೆ. ಕಳೆದ ಬಾರಿ ಕೆಲವು ಕಾರಣದಿಂದ ಸೋಲಾಗಿದೆ. ಈ ಬಾರಿ ಹಾಗಾಗೋದಿಲ್ಲ, ಎಲ್ಲವನ್ನ ಸರಿಪಡಿಸಿಕೊಂಡು ಗೆಲುವು ಕಾಣುತ್ತೇವೆ. ಈ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರು ಬರಲಿದ್ದಾರೆ. ಹಿಂದುತ್ವದ ಅಜೆಂಡಾ ಇರೋದ್ರಿಂದ ಯತ್ನಾಳ್ ಅವರು ಬಂದರೂ ಬರಬಹುದು. ಈಗಾಗಲೇ ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಅವರು ಎಂಎಲ್ಸಿ ಆದವರು, ಅವರಿಗೆ ಕ್ಷೇತ್ರ ಪರಿಚಯ ಚೆನ್ನಾಗಿದೆ. ನಮ್ಮ ವೈಯಕ್ತಿಕ ಸಂಬಂಧದ ಮೇಲೆ ಅವರು ಬಂದು ಪ್ರಚಾರ ಮಾಡಬಹುದು. ಪಕ್ಷವನ್ನ ಬಿಟ್ಟು ಹೋದವರ ಕರೆತರುವ ಕೆಲಸ ನಡಿತಿದೆ. ಇದನ್ನ ಮಾಜಿ ಸಚಿವ ಗೋವಿಂದ ಕಾರಜೋಳ ಮಾಡ್ತಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಗೆಲುವು ಸಾಧಿಸುತ್ತೇವೆ ಎಂದು ಬಾಗಲಕೋಟೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವೀರಣ್ಣ ಚರಂತಿಮಠ ಹೇಳಿಕೆ ನೀಡಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಸಿಗ್ತಿದ್ದಂತೆ ಹಮಾಲಿಯಾಗಿದ್ದ ತಂದೆಯ ನೆನೆದು ಭಾವುಕರಾದ ಶ್ರೀನಿವಾಸ್ ದಾಸಕರಿಯಪ್ಪ&lt;/strong&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Anusha Kb</dc:creator>
            <atom:link href="https://kannada.asianetnews.com/state/davangere-by-election-yatnal-said-no-wonder-if-bjp-gave-ticket-to-shamanur-family/articleshow-cnobbw2"/>
        </item>
        <item>
            <title><![CDATA[ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ: ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!]]></title>
            <link>https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu</link>
            <guid isPermaLink="true">https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu</guid>
            <pubDate>Thu, 05 Mar 2026 09:50:36 +0530</pubDate>
            <description><![CDATA[&lt;p&gt;ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಿರಿಯ ಇಂಜಿನಿಯರ್&zwnj;ಗಳು ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjy381nnqke8cyy0q71zy4e9,imgname-karnataka-lokayukta-raid-1772684052148.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮಾ.05): ರಾ&lt;/strong&gt;ಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್&zwnj;ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಜಾಲಾಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ಹಾಸನದಲ್ಲಿ ಜೀಪ್ ಏರಿ ಒಳಹೋದ ಅಧಿಕಾರಿಗಳು!&lt;/strong&gt;&lt;/h2&gt;&lt;p&gt;ಇಂದಿನ ದಾಳಿಯ ಅತ್ಯಂತ ರೋಚಕ ಘಟನೆ ನಡೆದದ್ದು ಹಾಸನದಲ್ಲಿ. ಹಾಸನ ಮಹಾನಗರ ಪಾಲಿಕೆಯ ಎಎಇ (AEE) ಸತ್ಯನಾರಾಯಣ ಅವರ ರವೀಂದ್ರ ನಗರದ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್&zwnj;ಪಿ ಸುರೇಶ್ ನೇತೃತ್ವದ ತಂಡ ದಾಳಿ ಮಾಡಿದಾಗ, ಅಧಿಕಾರಿ ಬಾಗಿಲು ತೆಗೆಯಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ಚಾಣಾಕ್ಷತನ ಮೆರೆದರು. ಠಾಣೆಯ ಜೀಪ್ ಅನ್ನು ಮನೆಯ ಗೋಡೆಗೆ ಅಂಟಿಸಿ ನಿಲ್ಲಿಸಿ, ಅದರ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿ ಸತ್ಯನಾರಾಯಣ ಅವರಿಗೆ ಶಾಕ್ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ವಿಜಯಪುರದಲ್ಲಿ ಶಾಲೆಯ ಮೇಲೂ ದಾಳಿ!&lt;/strong&gt;&lt;/h2&gt;&lt;p&gt;ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆ.ಬಿ.ಜೆ.ಎನ್.ಎಲ್ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ (ಗೊಡಬಂಡಿ) ಅವರ ಮೇಲೆ ನಡೆದ ದಾಳಿ ಕೂಡ ಗಮನಾರ್ಹವಾಗಿದೆ. ಪ್ರಕಾಶ್ ಅವರ ಇಂಡಿ ಕಚೇರಿ, ನಿವಾಸದ ಜೊತೆಗೆ ಬೆಂಗಳೂರಿನ ಮಹದೇವಪುರದಲ್ಲಿರುವ ಮನೆ ಹಾಗೂ ಬೀದರ್&zwnj;ನ ಹುಮನಾಬಾದ್&zwnj;ನಲ್ಲಿರುವ ಮನೆಯ ಮೇಲೆಯೂ ದಾಳಿ ನಡೆದಿದೆ. ವಿಶೇಷವೆಂದರೆ, ಇವರ ಪತ್ನಿಯ ಹೆಸರಿನಲ್ಲಿರುವ ಶಾಲೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ಚೀಫ್ ಇಂಜಿನಿಯರ್ ಬೆವರಿಳಿಸಿದ ಲೋಕಾ&lt;/strong&gt;&lt;/h2&gt;&lt;p&gt;ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (KRDCL) ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ್ ಅವರ ಮೇಲೆ ಬೆಂಗಳೂರು, ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಇವರ ಸಹೋದರ ಭೀಮಸಿಂಗ್ ನಾಯಕ್ ಬಾಗಲಕೋಟೆಯಲ್ಲಿ ಎಎಸ್&zwnj;ಐ (ASI) ಆಗಿ ಕೆಲಸ ಮಾಡುತ್ತಿದ್ದು, ಅವರ ಮನೆಯ ಮೇಲೆಯೂ ದಾಳಿ ಮಾಡಲಾಗಿದೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿರುವ ವಸಂತ ನಾಯಕ್ ಅವರ ಮನೆಯಲ್ಲಿ ಬೆಲೆಬಾಳುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ರಾಜ್ಯದ ವಿವಿಧೆಡೆ ದಾಳಿಗೆ ಒಳಗಾದ ಅಧಿಕಾರಿಗಳ ಪಟ್ಟಿ:&lt;/strong&gt;&lt;/h2&gt;&lt;p&gt;&lt;strong&gt;ಯಾದಗಿರಿ: &lt;/strong&gt;ವೀರೇಶ್ ಹಿರೇಮಠ (ಜೆಸ್ಕಾಂ ಉಪ ವಿದ್ಯುತ್ ಪರಿವೀಕ್ಷಕ) - ಯಾದಗಿರಿ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ.&lt;/p&gt;&lt;p&gt;&lt;strong&gt;ಮಂಡ್ಯ: &lt;/strong&gt;ಎಸ್. ಸತೀಶ್ (ಎಎಇ, ಪಿಡಬ್ಲ್ಯೂಡಿ) - ಬಂದಿಗೌಡ ಬಡಾವಣೆಯ ಮನೆ ಸೇರಿದಂತೆ 4 ಕಡೆ ದಾಳಿ.&lt;/p&gt;&lt;p&gt;&lt;strong&gt;ಗದಗ: &lt;/strong&gt;ಎಂ.ಕೆ. ಸುರಕೋಡ್ (ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ) - ಗದಗ ನಗರದ ವಿಶ್ವೇಶ್ವರ ಬಡಾವಣೆ ಸೇರಿ 6 ಕಡೆ ರೇಡ್.&lt;/p&gt;&lt;p&gt;&lt;strong&gt;ಮೈಸೂರು: &lt;/strong&gt;ಆಸಿಫ್ ಇಕ್ಬಾಲ್ ಹುಸೇನ್ (ಎಎಇ, ನಗರ ನೀರು ಸರಬರಾಜು ಮಂಡಳಿ) - ಶಿವಾಜಿ ರಸ್ತೆ ನಿವಾಸ ಮತ್ತು ಸರಸ್ವತಿಪುರಂ ಕಚೇರಿ ಮೇಲೆ ದಾಳಿ.&lt;/p&gt;&lt;p&gt;&lt;strong&gt;ಬೆಂಗಳೂರು: &lt;/strong&gt;ಆರ್. ಶಶಿಧರ್ (ಸಿಇಒ, ರೈತ ಸೇವಾ ಸಹಕಾರ ಸಂಘ, ಯಲಹಂಕ) ಮತ್ತು ಹೆಚ್.ಸಿ. ಇಂದ್ರೇಶ್ (ಸಹಾಯಕ ಪ್ರಾಧ್ಯಾಪಕ, ಪಶುವೈದ್ಯಕೀಯ ಕಾಲೇಜು, ಹೆಬ್ಬಾಳ).&lt;/p&gt;]]></content:encoded>
            <category>vijayapura</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu"/>
        </item>
        <item>
            <title><![CDATA[ನವಜಾತ ಶಿಶುವನ್ನು ಕಸದ ತೊಟ್ಟಿಯಲ್ಲಿ ಎಸೆದ ಪಾಪಿ ತಾಯಿ, ಮಗುವನ್ನು ಕಿತ್ತು ತಿಂದ ನಾಯಿ!]]></title>
            <link>https://kannada.asianetnews.com/state/newborn-baby-abandoned-killed-by-dogs-vijayapura-talikoti-crime-news-san/articleshow-hw38gya</link>
            <guid isPermaLink="true">https://kannada.asianetnews.com/state/newborn-baby-abandoned-killed-by-dogs-vijayapura-talikoti-crime-news-san/articleshow-hw38gya</guid>
            <pubDate>Sat, 28 Mar 2026 20:23:24 +0530</pubDate>
            <description><![CDATA[ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ, ಹೆತ್ತ ತಾಯಿಯೊಬ್ಬಳು ತನ್ನ ಒಂದು ದಿನದ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದಿದ್ದಾಳೆ. ನಾಯಿಗಳು ಮಗುವನ್ನು ಎಳೆದಾಡಿ ಕೊಂದಿದ್ದು, ಈ ಅಮಾನುಷ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmteqy1amqy5qhjm9waet24g,imgname-vijayapura-child-death-1774709372970.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.28): &lt;/strong&gt;ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಹೆತ್ತ ತಾಯಿಯೇ ತನ್ನ ನವಜಾತ ಶಿಶುವನ್ನು ಕಸದ ತೊಟ್ಟಿಯಲ್ಲಿ ಎಸೆದು ಹೋದ ಅಮಾನುಷ ಘಟನೆ ವರದಿಯಾಗಿದೆ.&lt;/p&gt;&lt;p&gt;ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಲಿಂಗಾಯತ ಕೈಲಾಸಧಾಮದ ಬಳಿ ಈ ಘಟನೆ ನಡೆದಿದೆ. ಜನಿಸಿ ಕೇವಲ ಒಂದು ದಿನವಾಗಿದ್ದ ಹಸುಗೂಸನ್ನು ಪಾಪಿ ತಾಯಿಯೊಬ್ಬಳು ಕಸದ ತೊಟ್ಟಿಯ ಬಳಿ ಬಿಸಾಡಿ ಹೋಗಿದ್ದಾಳೆ. ದುರದೃಷ್ಟವಶಾತ್, ಅಲ್ಲಿಗೆ ಬಂದ ನಾಯಿಗಳು ಶಿಶುವನ್ನು ಎಳೆದಾಡಿ ಕಚ್ಚಿ ಕೊಂದಿವೆ. ಬೆಳಿಗ್ಗೆ ಕಸದ ತೊಟ್ಟಿಯ ಬಳಿ ಶಿಶುವಿನ ಶವ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.&lt;/p&gt;&lt;h2&gt;&lt;strong&gt;ನಾಯಿ ದಾಳಿಯಿಂದ ಛಿದ್ರವಾದ ದೇಹ&lt;/strong&gt;&lt;/h2&gt;&lt;p&gt;ಮಗು ಜನಿಸಿದ ತಕ್ಷಣವೇ ಅಥವಾ ಒಂದು ದಿನದ ಬಳಿಕ ಇಲ್ಲಿ ತಂದು ಎಸೆದಿರಬಹುದು ಎಂದು ಶಂಕಿಸಲಾಗಿದೆ. ನಾಯಿಗಳ ದಾಳಿಯಿಂದಾಗಿ ಮಗುವಿನ ದೇಹ ಛಿದ್ರಗೊಂಡಿದ್ದು, ಸ್ಥಳದಲ್ಲಿ ಭೀಬತ್ಸ ದೃಶ್ಯ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ತಾಳಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಎಸೆದು ಹೋದವರು ಯಾರು? ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆ ಪಟ್ಟಣದ ಜನರಲ್ಲಿ ತೀವ್ರ ಆಕ್ರೋಶ ಮತ್ತು ವಿಷಾದಕ್ಕೆ ಕಾರಣವಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Santosh Naik</dc:creator>
            <atom:link href="https://kannada.asianetnews.com/state/newborn-baby-abandoned-killed-by-dogs-vijayapura-talikoti-crime-news-san/articleshow-hw38gya"/>
        </item>
        <item>
            <title><![CDATA[ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಭಾಗ್ಯ: ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಿಗಲಿದೆ ಬೂಸ್ಟ್!]]></title>
            <link>https://kannada.asianetnews.com/state/karnataka-new-food-parks-shivamogga-vijayapura-agri-processing-boost-san/articleshow-iug4fxm</link>
            <guid isPermaLink="true">https://kannada.asianetnews.com/state/karnataka-new-food-parks-shivamogga-vijayapura-agri-processing-boost-san/articleshow-iug4fxm</guid>
            <pubDate>Mon, 06 Apr 2026 16:50:22 +0530</pubDate>
            <description><![CDATA[&lt;p&gt;ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್&zwnj; ಪಾರ್ಕ್&zwnj;ಗಳು ಶೀಘ್ರದಲ್ಲೇ ಸ್ಥಾಪನೆಯಾಗಲಿವೆ. ನಬಾರ್ಡ್ ನೆರವಿನೊಂದಿಗೆ, ಈ ಪಾರ್ಕ್&zwnj;ಗಳು ಸ್ಥಳೀಯ ಕೃಷಿ ಉತ್ಪನ್ನಗಳಾದ ಹಣ್ಣು, ತರಕಾರಿ, ಮತ್ತು ಹಾಲು ಸಂಸ್ಕರಣೆಗೆ ಆದ್ಯತೆ ನೀಡಲಿವೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knh83e445pjxj3vyqa8n4w1g,imgname-19bgfood-park-1775474161796.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.6): &lt;/strong&gt;ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್&zwnj; ಪಾರ್ಕ್&zwnj; ಶೀಘ್ರದಲ್ಲೇ ತಲೆಯೆತ್ತಲಿವೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿಗಳು (DPR) ಮುಂದಿನ 10-15 ದಿನಗಳಲ್ಲಿ ಅಂತಿಮಗೊಳ್ಳುವ ನಿರೀಕ್ಷೆಯಿದೆ ಎಂದು 'ಫುಡ್ ಕರ್ನಾಟಕ ಲಿಮಿಟೆಡ್' ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಶಿವಮೊಗ್ಗದಲ್ಲಿ ಪ್ರಸ್ತಾವಿತ ಫುಡ್ ಪಾರ್ಕ್ 87.6 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ. ಇನ್ನು ವಿಜಯಪುರದಲ್ಲಿನ ಪಾರ್ಕ್ ಸುಮಾರು 75 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರಲಿದೆ. ಪ್ರಸ್ತುತ ಈ ಯೋಜನೆಗಳಿಗೆ ಆರ್ಥಿಕ ಅನುಮೋದನೆಗಾಗಿ ವರದಿ ಸಿದ್ಧಪಡಿಸಲಾಗುತ್ತಿದ್ದು, ನಬಾರ್ಡ್&zwnj;ನ (NABARD) ಆಹಾರ ಸಂಸ್ಕರಣಾ ನಿಧಿಯಡಿ ಧನಸಹಾಯ ಪಡೆಯಲು ಸರ್ಕಾರ ಉದ್ದೇಶಿಸಿದೆ.&lt;/p&gt;&lt;p&gt;ಪ್ರತಿ ಜಿಲ್ಲೆಯಲ್ಲೂ ಒಂದು ಫುಡ್ ಪಾರ್ಕ್ ಸ್ಥಾಪಿಸುವ ಯೋಜನೆಯನ್ನು ರಾಜ್ಯ ಸರ್ಕಾರ 2022ರಲ್ಲೇ ಘೋಷಿಸಿತ್ತು. ಆದರೆ, ಕೆಐಎಡಿಬಿ (KIADB) ಮತ್ತು ಕೃಷಿ ಇಲಾಖೆಯಿಂದ ಭೂಮಿ ಹಂಚಿಕೆಯಲ್ಲಿ ಉಂಟಾದ ವಿಳಂಬದಿಂದಾಗಿ ಈ ಯೋಜನೆಗಳು ತಡವಾಗಿದ್ದವು. ಈ ಹಿಂದೆ ಬೆಂಗಳೂರಿನ ಸಮೀಪವೂ ಇಂತಹ ಯೋಜನೆ ಹಮ್ಮಿಕೊಳ್ಳಲಾಗಿತ್ತು, ಆದರೆ ಭೂಮಿ ಸಿಗದ ಕಾರಣ ಅದನ್ನು ಕೈಬಿಡಲಾಗಿತ್ತು.&lt;/p&gt;&lt;h2&gt;&lt;strong&gt;ಸ್ಥಳೀಯ ಬೇಡಿಕೆಗೆ ಆದ್ಯತೆ&lt;/strong&gt;&lt;/h2&gt;&lt;p&gt;ಫುಡ್ ಕರ್ನಾಟಕ ಲಿಮಿಟೆಡ್&zwnj;ನ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, &quot;ಸ್ಥಳೀಯವಾಗಿ ಸಿಗುವ ಕಚ್ಚಾ ವಸ್ತುಗಳು ಮತ್ತು ಬೇಡಿಕೆಗೆ ಅನುಗುಣವಾಗಿ ಈ ಪಾರ್ಕ್&zwnj;ಗಳನ್ನು ವಿನ್ಯಾಸಗೊಳಿಸಲಾಗುತ್ತಿದೆ. ಇಲ್ಲಿ ಹಣ್ಣು ಮತ್ತು ತರಕಾರಿಗಳಿಗಾಗಿ ಕೋಲ್ಡ್ ಸ್ಟೋರೇಜ್ (ಶೈತ್ಯಾಗಾರ), ಹಾಲು ಪ್ಯಾಕೇಜಿಂಗ್ ಘಟಕಗಳು, ಬೇಕರಿ ಘಟಕಗಳು ಮತ್ತು ವೈನ್ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ,&quot; ಎಂದು ತಿಳಿಸಿದರು. ಈ ಪ್ಲಾಟ್&zwnj;ಗಳನ್ನು ಕೇವಲ ಕೃಷಿ ಸಂಸ್ಕರಣಾ ಉದ್ದೇಶಗಳಿಗಾಗಿ ಮಾತ್ರ ಬಳಸುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದೂ ಅವರು ಹೇಳಿದರು.&lt;/p&gt;&lt;h2&gt;&lt;strong&gt;ಕರ್ನಾಟಕದಲ್ಲಿ ಸದ್ಯದ ಸ್ಥಿತಿ&lt;/strong&gt;&lt;/h2&gt;&lt;p&gt;ಕರ್ನಾಟಕದಲ್ಲಿ ಪ್ರಸ್ತುತ ಎಂಟು ಫುಡ್&zwnj; ಪಾರ್ಕ್&zwnj; ಹೊಂದಿದ್ದು, ಅವುಗಳಲ್ಲಿ ಐದು ಕಾರ್ಯನಿರ್ವಹಿಸುತ್ತಿವೆ, 740 ಎಕರೆಗಳಲ್ಲಿ ಹರಡಿಕೊಂಡಿವೆ. ಮಾಲೂರಿನಲ್ಲಿ (87 ಎಕರೆ) 22 ಘಟಕಗಳನ್ನು ಹಂಚಿಕೆ ಮಾಡಲಾಗಿದೆ, ಆದರೆ ಕೇವಲ 14 ಚಾಲನೆಯಲ್ಲಿವೆ, ಬಾಗಲಕೋಟೆಯಲ್ಲಿ (100 ಎಕರೆ) 18 ಘಟಕಗಳಿವೆ, ಕೇವಲ ಆರು ಕಾರ್ಯನಿರ್ವಹಿಸುತ್ತಿವೆ, ಹಿರಿಯೂರಿನಲ್ಲಿ (106+ ಎಕರೆ) ಎಂಟು ಚಾಲನೆಯಲ್ಲಿರುವ ಘಟಕಗಳಿವೆ ಮತ್ತು ಜೇವರ್ಗಿಯಲ್ಲಿ (105 ಎಕರೆ) ಏಳು ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಮೆಗಾ ಫುಡ್&zwnj; ಪಾರ್ಕ್&zwnj; ಪೈಕಿ, ತುಮಕೂರಿನ ಇಂಡಿಯಾ ಫುಡ್ ಪಾರ್ಕ್ (110 ಎಕರೆ) ಗರಿಷ್ಠವಾಗಿ ಕಾರ್ಯನಿರ್ವಹಿಸುತ್ತಿದೆ, ಆದರೆ ಮಂಡ್ಯದಲ್ಲಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ (60 ಎಕರೆ) ಇನ್ನೂ ನಿರ್ಮಾಣ ಹಂತದಲ್ಲಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Santosh Naik</dc:creator>
            <atom:link href="https://kannada.asianetnews.com/state/karnataka-new-food-parks-shivamogga-vijayapura-agri-processing-boost-san/articleshow-iug4fxm"/>
        </item>
        <item>
            <title><![CDATA[ಮಹಿಳೆ ವಿಚಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿಗೆ ಹಲ್ಲೆ ಆರೋಪ; ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ಕೋರ್ಟ್‌ನಿಂದ ಬ್ರೇಕ್!]]></title>
            <link>https://kannada.asianetnews.com/state/panchamasali-jaya-mrutyunjaya-swamiji-obtains-court-stay-against-defamatory-reports-sat/articleshow-izanlag</link>
            <guid isPermaLink="true">https://kannada.asianetnews.com/state/panchamasali-jaya-mrutyunjaya-swamiji-obtains-court-stay-against-defamatory-reports-sat/articleshow-izanlag</guid>
            <pubDate>Sat, 07 Mar 2026 20:06:18 +0530</pubDate>
            <description><![CDATA[&lt;p&gt;ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಅವಮಾನಕಾರಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಆಧಾರರಹಿತ ಸುದ್ದಿ ಪ್ರಕಟಿಸಿದ ಮಾಧ್ಯಮಗಳ ವಿರುದ್ಧ ಸ್ವಾಮೀಜಿ ಕಾನೂನು ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk4bk834cedst505rw9asxf2,imgname-jaya-mrutyunjaya-swamiji-1772894134369.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ/ಬೆಂಗಳೂರು (ಮಾ.07): ಕೂ&lt;/strong&gt;ಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಅವಮಾನಕಾರಿಯಾಗಿ ವರದಿ ಪ್ರಸಾರ ಮಾಡುವುದಕ್ಕೆ ಬೆಂಗಳೂರಿನ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಆಧಾರರಹಿತ ಸುದ್ದಿಗಳ ವಿರುದ್ಧ ಸ್ವಾಮೀಜಿ ಕಾನೂನು ಹೋರಾಟ ಆರಂಭಿಸಿದ್ದು, ಈಗ ಅವರಿಗೆ ತಾತ್ಕಾಲಿಕ ಜಯ ಸಿಕ್ಕಂತಾಗಿದೆ.&lt;/p&gt;&lt;h2&gt;&lt;strong&gt;ಘಟನೆಯ ಹಿನ್ನೆಲೆ ಏನು?&lt;/strong&gt;&lt;/h2&gt;&lt;p&gt;ಕಳೆದ ಫೆಬ್ರವರಿ 12 ರಂದು ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದ ಬಳಿ ಸ್ವಾಮೀಜಿ ಅವರ ಮೇಲೆ ಹಲ್ಲೆ ನಡೆದಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳಲ್ಲಿ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯರ ವಿಚಾರವಾಗಿ ಹಲ್ಲೆಯಾಗಿದೆ ಎಂಬ ಆಧಾರರಹಿತ ಮಾತುಗಳು ಹರಿದಾಡಿದ್ದವು. ಓರ್ವ ಮಹಿಳೆ ಮತ್ತು ಆಕೆಯ ಜೊತೆಗಿದ್ದ ಕೆಲವರು ಶ್ರೀಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಲಾಗಿತ್ತು. ಈ ವರದಿಗಳಲ್ಲಿ ಸ್ವಾಮೀಜಿಯವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಪರೋಕ್ಷವಾಗಿ ಅವರ ನಡವಳಿಕೆಯ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿತ್ತು.&lt;/p&gt;&lt;h2&gt;&lt;strong&gt;ನ್ಯಾಯಾಲಯದ ಮೆಟ್ಟಿಲೇರಿದ ಶ್ರೀಗಳು:&lt;/strong&gt;&lt;/h2&gt;&lt;p&gt;ಈ ಹಲ್ಲೆಯ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದ ಸ್ವಾಮೀಜಿ, ನೇರವಾಗಿ ಕಾನೂನಿನ ಮೊರೆ ಹೋಗಿದ್ದರು. &quot;ನಾನು ಪಂಚಮಸಾಲಿ ಸಮಾಜದ ಆಧ್ಯಾತ್ಮಿಕ ಗುರು ಹಾಗೂ ಪೀಠಾಧಿಪತಿಯಾಗಿದ್ದೇನೆ. ಸಮಾಜದಲ್ಲಿ ನನಗೊಂದು ಗೌರವವಿದೆ. ಆದರೆ ಕೆಲವು ಮಾಧ್ಯಮಗಳು ಯಾವುದೇ ವಿಷಯವನ್ನು ದೃಢೀಕರಣ ಮಾಡದೆ ನನ್ನ ವಿರುದ್ಧ ಮಾನಹಾನಿಕರ ವರದಿಗಳನ್ನು ಪ್ರಕಟಿಸಿವೆ. ನಾನು ಅನೈತಿಕ ಹಾಗೂ ಅಕ್ರಮ ನಡವಳಿಕೆಯಲ್ಲಿ ಭಾಗಿಯಾಗಿದ್ದೇನೆ ಎಂಬಂತೆ ಬಿಂಬಿಸಲಾಗಿದೆ&quot; ಎಂದು ಬೆಂಗಳೂರಿನ 30 ನೇ ಹೆಚ್ಚುವರಿ ಸಿಸಿ ಹಾಗೂ ಎಸ್&zwnj;ಜೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.&lt;/p&gt;&lt;h2&gt;&lt;strong&gt;ನ್ಯಾಯಾಲಯದ ಆದೇಶವೇನು?&lt;/strong&gt;&lt;/h2&gt;&lt;p&gt;ಸ್ವಾಮೀಜಿಯವರು ಸಲ್ಲಿಸಿದ ಅರ್ಜಿ, ಅಫಿಡವಿಟ್ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನ್ಯಾಯಾಧೀಶರು, ಸ್ವಾಮೀಜಿಯವರ ವಿರುದ್ಧ ಮಾನಹಾನಿಕರ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಯಾವುದೇ ರೀತಿಯ ಅವಮಾನಕಾರಿ ವಿಷಯಗಳನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಅಥವಾ ವಿತರಿಸುವುದಕ್ಕೆ ಮಧ್ಯಂತರ-ಏಕಪಕ್ಷೀಯ ತಾತ್ಕಾಲಿಕ ತಡೆಯಾಜ್ಞೆ ನೀಡಿ ನ್ಯಾಯಾಲಯ ಆದೇಶಿಸಿದೆ.&lt;/p&gt;&lt;h2&gt;&lt;strong&gt;ಏಳು ದಿನಗಳ ಗಡುವು:&lt;/strong&gt;&lt;/h2&gt;&lt;p&gt;ನ್ಯಾಯಾಲಯವು ಈ ತಡೆಯಾಜ್ಞೆಯನ್ನು ನೀಡುವ ಸಂದರ್ಭದಲ್ಲಿ ಒಂದು ಪ್ರಮುಖ ಷರತ್ತನ್ನು ವಿಧಿಸಿದೆ. ತಡೆಯಾಜ್ಞೆ ನೀಡಿದ ಮುಂದಿನ 7 ದಿನಗಳ ಒಳಗಾಗಿ ಸ್ವಾಮೀಜಿಯವರು ಈ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್ ಜಾರಿಗೆ ಪೂರಕವಾದ ದೂರುಗಳು, ಸಾಕ್ಷಿಗಳು ಮತ್ತು ಹೆಚ್ಚಿನ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ಒಂದು ವೇಳೆ ಈ ದಾಖಲೆಗಳನ್ನು ನೀಡಲು ವಿಫಲರಾದಲ್ಲಿ, ತಾತ್ಕಾಲಿಕವಾಗಿ ನೀಡಲಾಗಿರುವ ಈ ತಡೆಯಾಜ್ಞೆಯು ತನ್ನಿಂದ ತಾನೇ ರದ್ದಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.&lt;/p&gt;&lt;p&gt;ಸದ್ಯಕ್ಕೆ ಈ ತಡೆಯಾಜ್ಞೆಯಿಂದಾಗಿ ಸ್ವಾಮೀಜಿಯವರಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಮಾಧ್ಯಮಗಳು ಹಾಗೂ ವ್ಯಕ್ತಿಗಳು ಇನ್ನು ಮುಂದೆ ಸ್ವಾಮೀಜಿಯವರ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಪೋಸ್ಟ್&zwnj;ಗಳನ್ನು ಹಾಕುವಂತಿಲ್ಲ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.&lt;/p&gt;]]></content:encoded>
            <category>vijayapura</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/panchamasali-jaya-mrutyunjaya-swamiji-obtains-court-stay-against-defamatory-reports-sat/articleshow-izanlag"/>
        </item>
        <item>
            <title><![CDATA['ಎಣ್ಣೆ ಕೊಡಿಸ್ತಿನಂದ್ರೆ ಕೆಳಗಿಳ್ತೀನಿ..' ಕುಡಿಯಲು ಹಣವಿಲ್ಲದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ 'ಕಿಂಗ್ ಕಾಂಗ್' ಕುಡುಕ!]]></title>
            <link>https://kannada.asianetnews.com/karnataka-districts/high-drama-in-vijayapura-drunk-man-climbs-mobile-tower-demanding-money-for-liquor/articleshow-kcqg5x5</link>
            <guid isPermaLink="true">https://kannada.asianetnews.com/karnataka-districts/high-drama-in-vijayapura-drunk-man-climbs-mobile-tower-demanding-money-for-liquor/articleshow-kcqg5x5</guid>
            <pubDate>Sat, 28 Mar 2026 11:48:32 +0530</pubDate>
            <description><![CDATA[ವಿಜಯಪುರ ಜಿಲ್ಲೆಯ ಕೋಟ್ಯಾಳ ಗ್ರಾಮದಲ್ಲಿ ಶ್ರೀಶೈಲ್ ಎಂಬ ಮದ್ಯವ್ಯಸನಿಯೊಬ್ಬ ಕುಡಿಯಲು ಹಣಕ್ಕಾಗಿ ಪದೇ ಪದೇ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದಿದ್ದಾನೆ. ಟವರ್ ಮೇಲಿಂದ ಮದ್ಯ ಕೊಡಿಸುವಂತೆ ಬೇಡಿಕೆಯಿಟ್ಟು, ಕೆಳಗಿಳಿಸಲು ಬಂದ ಪೊಲೀಸರು ಮತ್ತು ಸಾರ್ವಜನಿಕರನ್ನು ಹೈರಾಣಾಗಿಸಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmsh4y3d3aezz1whd22gxymj,imgname----------------------67--1774678341741.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.28): &lt;/strong&gt;ವಿಜಯಪುರ (ಮಾ.28): ಕುಡುಕನೊಬ್ಬ ಬೃಹತ್ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಮದ್ಯ ವ್ಯಸನಿಯ ಹುಚ್ಚಾಟ ಸಾರ್ವಜನಿಕರನ್ನು ಹೈರಾಣಾಗಿಸಿದೆ. ಕೋಟ್ಯಾಳ ಗ್ರಾಮದವನೇ ಶ್ರೀಶೈಲ್ ಎಂಬಾತ ಕುಡಿಯಲು ಹಣವಿಲ್ಲದಾಗೆಲ್ಲ ಮೊಬೈಲ್ ಟವರ್ ಏರಿ ಕುಳಿತು ಮದ್ಯ ಕೊಡಿಸುವಂತೆ ಡಿಮ್ಯಾಂಡ್ ಮಾಡುವ ಮನೆಹಾಳ ಉಪಾಯ ಹುಡುಕಿಕೊಂಡಿದ್ದಾನೆ.&lt;/p&gt;&lt;h2&gt;ಟವರ್ ಹತ್ತುವುದೆಂದರೆ ಕುಡುಕನಿಗೆ ಸಲೀಸು!&lt;/h2&gt;&lt;p&gt;ಶ್ರೀಶೈಲ್ ಟವರ್ ಹತ್ತುತ್ತಿರುವುದು ಇದೇ ಮೊದಲಲ್ಲ. ಕಳೆದ ಎರಡು ವರ್ಷಗಳಲ್ಲಿ ಈತ ಈಗಾಗಲೇ ಎರಡು ಬಾರಿ ಟವರ್ ಏರಿ ಹುಚ್ಚಾಟ ಮೆರೆದಿದ್ದಾನೆ. ಟವರ್ ಮೇಲೆ ನಿಂತು ಸಿನಿಮಾ ಸ್ಟೈಲ್&zwnj;ನಲ್ಲಿ 'ಕಿಂಗ್ ಕಾಂಗ್' ರೀತಿ ಪೋಸ್ ಕೊಡುತ್ತಾ ಗ್ರಾಮಸ್ಥರಿಗೆ ಆತಂಕ ಸೃಷ್ಟಿಸುತ್ತಾನೆ. ಇನ್ನೇನು ಕೆಳಗೆ ಬಿಳಲಿದ್ದಾನೋ ಎಂಬ ಆತಂಕದಿಂದ ಕೆಳಗಿದ್ದವರ ಎದೆಬಡಿತ ಹೆಚ್ಚಿಸುತ್ತಾನೆ.&lt;/p&gt;&lt;h3&gt;ಮದ್ಯಕ್ಕಾಗಿ ಬ್ಲಾಕ್&zwnj;ಮೇಲ್ ಮಾಡ್ತಾನೆ ಕುಡುಕ!&lt;/h3&gt;&lt;p&gt;ಈ ಕುಡುಕನ ಬೇಡಿಕೆ ಕೇಳಿ ಪೊಲೀಸರೇ ದಂಗಾಗಿದ್ದಾರೆ. 'ನನಗೆ ಕುಡಿಯೋ ಎಣ್ಣೆ ಬೇಕು. ಎಣ್ಣೆ ಕೊಡಿಸೋದಾದ್ರೆ ಕೆಳಗಿಳ್ತೇನೆ ಇಲ್ಲಂದ್ರೆ ಇಲ್ಲ' ಎಂದು ಟವರ್ ಮೇಲಿಂದಲೇ ಪಟ್ಟು ಹಿಡಿತಾನಂತೆ ಆಸಾಮಿ. ಈ ರೀತಿ ಪದೇಪದೆ ಕುಡಿಯೋಕೆ ಹಣವಿಲ್ಲದಾಗ ಟವರ್ ಏರುವ ಪ್ರಯತ್ನ ಮಾಡ್ತಿರೋದ್ರಿಂದ ಊರಿನ ಜನರಿಗೂ ಇದು ದೊಡ್ಡ ತಲೆನೋವಾಗಿದ್ದಾನೆ.&lt;/p&gt;&lt;h3&gt;ಕೆಳಗಿಳಿಸಲು ಪೊಲೀಸರು ಹರಸಾಹಸ&lt;/h3&gt;&lt;p&gt;ವಿಷಯ ತಿಳಿಯುತ್ತಿದ್ದಂತೆ ತಿಕೋಟಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೆಳಗಿಳಿಯುವಂತೆ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಕುಡುಕನ ಈ 'ಹೈಡ್ರಾಮಾ' ನೋಡಲು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಈ ರೀತಿ ಕ್ಷುಲ್ಲಕ ಕಾರಣಕ್ಕೆ ಟವರ್ ಏರಿ ಕುಳಿತುಕೊಳ್ಳುವ ಕುಡುಕರಿಗೆ ಏನು ಹೇಳಬೇಕು?&lt;/p&gt;]]></content:encoded>
            <category>vijayapura</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/high-drama-in-vijayapura-drunk-man-climbs-mobile-tower-demanding-money-for-liquor/articleshow-kcqg5x5"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>vijayapura</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ವಿಜಯನಗರ ಜಿಲ್ಲೆಯ ರೌಡಿ ಶೀಟರ್‌ಗಳ ಬೆವರಿಳಿಸಿದ ಖಡಕ್ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ !]]></title>
            <link>https://kannada.asianetnews.com/karnataka-districts/vijayanagara-sp-s-jahnavi-cracks-down-on-rowdy-sheeters-220-offenders-parade-in-police-action-gdp/articleshow-mz0a1h9</link>
            <guid isPermaLink="true">https://kannada.asianetnews.com/karnataka-districts/vijayanagara-sp-s-jahnavi-cracks-down-on-rowdy-sheeters-220-offenders-parade-in-police-action-gdp/articleshow-mz0a1h9</guid>
            <pubDate>Wed, 18 Mar 2026 17:42:21 +0530</pubDate>
            <description><![CDATA[ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರು, 220 ರೌಡಿಶೀಟರ್&zwnj;ಗಳಿಗೆ ಪರೇಡ್ ನಡೆಸಿ, ಅಪರಾಧ ಚಟುವಟಿಕೆಗಳನ್ನು ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುಧಾರಣೆಗೆ ಅವಕಾಶವಿದ್ದು, ಸಮಾಜದಲ್ಲಿ ಗೌರವಯುತ ಜೀವನ ನಡೆಸುವಂತೆ ಸಲಹೆ ನೀಡಿದ ಅವರು, ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01km0ddsz56xzr3ecayfw569yv,imgname-vijayanagara-sp-jahnavi-1773835577317.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ:&lt;/strong&gt; ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯ ರೌಡಿಶೀಟರ್&zwnj;ಗಳಿಗೆ ಎಚ್ಚರಿಕೆ ನೀಡುವ ಸಲುವಾಗಿ ಭಾರೀ ಪ್ರಮಾಣದಲ್ಲಿ ರೌಡಿ ಪರೇಡ್ ಆಯೋಜಿಸಿ, ಅಪರಾಧಿಗಳಿಗೆ ಬೆವರಿಳಿಸಿದ್ದಾರೆ.&lt;/p&gt;&lt;h2&gt;220 ರೌಡಿಶೀಟರ್&zwnj;ಗಳು ಈ ಪರೇಡ್&zwnj;ನಲ್ಲಿದ್ದರು&lt;/h2&gt;&lt;p&gt;ವಿಜಯನಗರ ಜಿಲ್ಲೆಯ ವಿವಿಧ ಭಾಗಗಳಿಂದ ಒಟ್ಟು 21 ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಸೇರಿದ ಸುಮಾರು 220 ರೌಡಿಶೀಟರ್&zwnj;ಗಳು ಈ ಪರೇಡ್&zwnj;ನಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಎಸ್ಪಿ ಎಸ್. ಜಾಹ್ನವಿ ಅವರು ಎಲ್ಲರಿಗೂ ಸ್ಪಷ್ಟ ಎಚ್ಚರಿಕೆ ನೀಡಿದ್ದು, ಇನ್ನುಮುಂದೆ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.&lt;/p&gt;&lt;p&gt;ಅಪರಾಧ ಚಟುವಟಿಕೆಗಳಿಂದ ದೂರವಿದ್ದು, ಸತ್ಯನಿಷ್ಠ ಜೀವನ ನಡೆಸುವಂತೆ ಅವರು ಸಲಹೆ ನೀಡಿದರು. ಪ್ರತಿಯೊಬ್ಬರಿಗೂ ಸುಧಾರಣೆಗೆ ಅವಕಾಶ ಪ್ರತಿದಿನವೂ ಇರುತ್ತದೆ. ಆ ಅವಕಾಶವನ್ನು ಬಳಸಿಕೊಂಡು ಒಳ್ಳೆಯ ಮಾರ್ಗದಲ್ಲಿ ನಡೆದು, ಸಮಾಜದಲ್ಲಿ ಗೌರವಪೂರ್ಣ ಜೀವನ ಕಟ್ಟಿಕೊಳ್ಳಿ ಎಂದು &amp;nbsp;ಹೇಳಿದರು.&lt;/p&gt;&lt;h2&gt;ಹಳೆಯ ಚಟುವಟಿಕೆಗಳನ್ನು ಮುಂದುವರಿಸಿದರೆ ಕಠಿಣ ಕ್ರಮದ ಎಚ್ಚರಿಕೆ&lt;/h2&gt;&lt;p&gt;ಇನ್ನೂ, ಯಾರಾದರೂ ತಮ್ಮ ಹಳೆಯ ಚಟುವಟಿಕೆಗಳನ್ನು ಮುಂದುವರಿಸಿದರೆ, ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು. ಪೊಲೀಸರ ನಿಗಾವನ್ನು ಮತ್ತಷ್ಟು ಬಲಪಡಿಸಲಾಗುತ್ತಿದ್ದು, ಅಪರಾಧಿಗಳಿಗೆ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ತಿಳಿಸಿದರು.&lt;/p&gt;&lt;p&gt;ಈ ರೌಡಿ ಪರೇಡ್ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ತೀವ್ರ ಕ್ರಮ ಕೈಗೊಂಡಿರುವುದು ಸ್ಪಷ್ಟವಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ.&lt;/p&gt;]]></content:encoded>
            <category>vijayapura</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/vijayanagara-sp-s-jahnavi-cracks-down-on-rowdy-sheeters-220-offenders-parade-in-police-action-gdp/articleshow-mz0a1h9"/>
        </item>
        <item>
            <title><![CDATA[ನಾನು ಸಿಎಂ ಆದರೆ ಯೋಗಿ ಸ್ಟೈಲ್ ಆಡಳಿತ, ಮುಸ್ಲಿಮರ ಬಗ್ಗೆ ಯತ್ನಾಳ್ ಹೊಸ ರಾಜಕೀಯ ಬಾಂಬ್!]]></title>
            <link>https://kannada.asianetnews.com/politics/karnataka-politics-yatnal-says-i-will-govern-in-yogi-style-if-i-become-cm-rav/articleshow-opzgwev</link>
            <guid isPermaLink="true">https://kannada.asianetnews.com/politics/karnataka-politics-yatnal-says-i-will-govern-in-yogi-style-if-i-become-cm-rav/articleshow-opzgwev</guid>
            <pubDate>Thu, 02 Apr 2026 12:41:19 +0530</pubDate>
            <description><![CDATA[&lt;p&gt;ಸಚಿವ ಎಂ.ಬಿ. ಪಾಟೀಲ್ ಅವರ ಸವಾಲಿಗೆ ತಿರುಗೇಟು ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾನು ಮುಖ್ಯಮಂತ್ರಿಯಾದರೆ ಉತ್ತರ ಪ್ರದೇಶದ ಯೋಗಿ ಮಾದರಿ ಆಡಳಿತ ನೀಡುವುದಾಗಿ ಹೇಳಿದ್ದಾರೆ. ತಮ್ಮ ಮೊದಲ ಸಂಪುಟ ಸಭೆಯಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದುಹಾಕುವುದಾಗಿ ಸ್ಫೋಟಕ ಹೇಳಿಕೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn6gb15wm6kksfbhqgx43f0d,imgname----------------------42--1775113700539.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಏ.2): &lt;/strong&gt;ದಾವಣಗೆರೆ-ಬಾಗಲಕೋಟೆ ಉಪಚುನಾವಣಾ ಕಣ ಕಾವೇರುತ್ತಿದೆ. ಈ ನಡುವೆ ಸಚಿವ ಎಂ.ಬಿ. ಪಾಟೀಲ್ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ಮುಂದುವರಿದಿದೆ.'ಯತ್ನಾಳ್&zwnj;ಗೆ ಸ್ವಾಭಿಮಾನವಿದ್ದರೆ ಬಿಜೆಪಿಯನ್ನು ಸೋಲಿಸಲಿ' ಎಂಬ ಸಚಿವರ ಸವಾಲಿಗೆ ಯತ್ನಾಳ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದರು.&lt;/p&gt;&lt;h2&gt;ಬಿಜೆಪಿ ಸೇರುವ ಅವಶ್ಯಕತೆ ನನಗಿಲ್ಲ: ಯತ್ನಾಳ್&lt;/h2&gt;&lt;p&gt;ಇಂದು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್ ಅವರು, ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ನಾನು ಯಾರ ಮುಂದೆಯೂ ಹೋಗಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಬೇಡುವುದಿಲ್ಲ. ಹನುಮ ಜಯಂತಿಯ ಈ ಪವಿತ್ರ ದಿನದಂದು ಆಂಜನೇಯನ ಸಾಕ್ಷಿಯಾಗಿ ಹೇಳುತ್ತೇನೆ, ಒಂದು ದಿನ ಅವರೇ(ಬಿಜೆಪಿ) ಅಪ್ಪ-ಮಕ್ಕಳನ್ನು (ಯಡಿಯೂರಪ್ಪ ಕುಟುಂಬ) ಕೈಬಿಟ್ಟು ನನ್ನನ್ನು ಕರೆಯುತ್ತಾರೆ. ನಾನು ನಾಟಕವಾಡಿ ಪಕ್ಷದಲ್ಲಿ ಇರುವವನಲ್ಲ ಎಂದು ಗುಡುಗಿದರು.&lt;/p&gt;&lt;h3&gt;ನಾನು ಅಧಿಕಾರಕ್ಕೆ ಬಂದರೆ ಯೋಗಿ ಮಾದರಿ ಆಡಳಿತ ನಡೆಸ್ತೇನೆ&lt;/h3&gt;&lt;p&gt;ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಯತ್ನಾಳ್ ಅವರು, 'ಒಂದು ವೇಳೆ ನಾನು ಮುಖ್ಯಮಂತ್ರಿಯಾದರೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಮಾದರಿಯಲ್ಲೇ ಆಡಳಿತ ನಡೆಸುತ್ತೇನೆ. ನನ್ನ ಮೊದಲ ಸಂಪುಟ ಸಭೆಯಲ್ಲೇ ಮುಸ್ಲಿಂ ಸಮುದಾಯವನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ. ಅವರ ಬದಲಿಗೆ ನಿಜವಾದ ಅಲ್ಪಸಂಖ್ಯಾತರಾದ ಮರಾಠರು, ಬ್ರಾಹ್ಮಣರು ಮತ್ತು ಕ್ಷತ್ರಿಯರಿಗೆ ಆ ಸ್ಥಾನಮಾನ ನೀಡುತ್ತೇನೆ' ಎಂದು ಸ್ಫೋಟಕ ಹೇಳಿಕೆ ನೀಡಿದರು.&lt;/p&gt;&lt;p&gt;&lt;strong&gt;ಎಂ.ಬಿ. ಪಾಟೀಲ್&zwnj;ಗೆ ಯತ್ನಾಳ್ ಸವಾಲ್&lt;/strong&gt;&lt;/p&gt;&lt;p&gt;ಸಚಿವ ಎಂ.ಬಿ. ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, 'ನನಗೆ ಸ್ವಾಭಿಮಾನದ ಪಾಠ ಮಾಡುವ ಎಂ.ಬಿ. ಪಾಟೀಲ್ ಮೊದಲು ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದನ್ನು ನಿಲ್ಲಿಸಲಿ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿಯೇ ರಾತ್ರಿ ಹೊತ್ತು ಮುಸುಕು ಹಾಕಿಕೊಂಡು ಬಂದು ಪಾಟೀಲ್ ವಿರುದ್ಧ ಪ್ರಚಾರ ಮಾಡುತ್ತಾನೆ. ಇಂತಹ ಪರಿಸ್ಥಿತಿಯಲ್ಲಿರುವ ಪಾಟೀಲರಿಗೆ ನನ್ನ ಬಗ್ಗೆ ಮಾತನಾಡುವ ಹಕ್ಕಿಲ್ಲ' ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;&lt;strong&gt;ಬಾಗಲಕೋಟೆಯಲ್ಲಿ ಚರಂತಿಮಠ ಪರ ಪ್ರಚಾರ&lt;/strong&gt;&lt;/p&gt;&lt;p&gt;ವೀರಣ್ಣ ಚರಂತಿಮಠ ಅವರು ನನ್ನ ಆತ್ಮೀಯ ಸ್ನೇಹಿತರು. ಬಾಗಲಕೋಟೆಯ ಬಿಜೆಪಿ ಕಾರ್ಯಕರ್ತರು ನನ್ನನ್ನು ಪ್ರಚಾರಕ್ಕೆ ಆಹ್ವಾನಿಸಿದ್ದಾರೆ. ಹಾಗಾಗಿ ನಾನು ಅವರ ಪರವಾಗಿ ಪ್ರಚಾರಕ್ಕೆ ತೆರಳುತ್ತಿದ್ದೇನೆ ಎಂದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/karnataka-politics-yatnal-says-i-will-govern-in-yogi-style-if-i-become-cm-rav/articleshow-opzgwev"/>
        </item>
        <item>
            <title><![CDATA[ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ, ಮಹಿಳಾ ಆಯೋಗಕ್ಕೆ ದೂರು]]></title>
            <link>https://kannada.asianetnews.com/state/basavajaya-mruthyunjaya-swamiji-sexual-harassment-allegations-counter-complaint-3-crore-rs-blackmail-claim-surfaces-gdp/articleshow-qlyxe11</link>
            <guid isPermaLink="true">https://kannada.asianetnews.com/state/basavajaya-mruthyunjaya-swamiji-sexual-harassment-allegations-counter-complaint-3-crore-rs-blackmail-claim-surfaces-gdp/articleshow-qlyxe11</guid>
            <pubDate>Tue, 07 Apr 2026 12:49:03 +0530</pubDate>
            <description><![CDATA[ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಸ್ವಾಮೀಜಿ ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್&zwnj;ಮೇಲ್ ಮಾಡುತ್ತಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01gh9e470ee4sat6gzmbadpk5y,imgname-basavajaya-mruthyunjaya-swamiji.jpg" type="image/jpeg" height="390" width="690"/>
            <content:encoded><![CDATA[&lt;p&gt;ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರಮುಖ ನಾಯಕ, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವ ಪ್ರಕರಣ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ.&lt;/p&gt;&lt;p&gt;ಮಹಿಳೆ ನೀಡಿದ ದೂರಿನ ಪ್ರಕಾರ, ಸ್ವಾಮೀಜಿ ತಮ್ಮ ಮೇಲೆ ಅಸಭ್ಯ ವರ್ತನೆ ತೋರಿದ್ದು, ಬೆತ್ತಲೆ ವಿಡಿಯೋ ಕಾಲ್ ಮಾಡುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪಗಳು ಹೊರಬಿದ್ದ ತಕ್ಷಣವೇ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಸ್ವಾಮೀಜಿ ಕಡೆಯಿಂದಲೂ ಪ್ರತಿದೂರು ದಾಖಲಾಗಿರುವುದು ಗಮನಾರ್ಹ ಸಂಗತಿಯಾಗಿದೆ.&lt;/p&gt;&lt;h2&gt;ಸ್ವಾಮೀಜಿ ಪ್ರತಿದೂರು&lt;/h2&gt;&lt;p&gt;ಇನ್ನೊಂದೆಡೆ, ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್&zwnj;ಐಆರ್ ದಾಖಲಿಸಿಕೊಂಡಿದ್ದಾರೆ. ಸ್ವಾಮೀಜಿ ತಮ್ಮ ದೂರಿನಲ್ಲಿ, ಸಂಬಂಧಿತ ಮಹಿಳೆ ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಪರಿಚಯವಾದ ನಂತರ ಆಕೆ ತನ್ನ ಬಳಿ ಹಣಕಾಸಿನ ನೆರವು ಕೇಳುತ್ತಾ ಬಂದಿದ್ದು, ಕ್ರಮೇಣ ಹಣಕ್ಕಾಗಿ ಒತ್ತಡ ಹೇರುತ್ತಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳು ಸಂಪೂರ್ಣ ಸುಳ್ಳು ಎಂದು ತಳ್ಳಿ ಹಾಕಿರುವ ಅವರು, ಕೆಲವು ರಾಜಕೀಯ ವ್ಯಕ್ತಿಗಳ ಪ್ರಚೋದನೆಯಿಂದ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.&lt;/p&gt;&lt;h2&gt;3 ಕೋಟಿಗೆ ಮಹಿಳೆ ಬೇಡಿಕೆ&lt;/h2&gt;&lt;p&gt;ಹಣ ನೀಡಲು ನಿರಾಕರಿಸಿದ ಬಳಿಕ, ಆ ಮಹಿಳೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬ್ಲಾಕ್&zwnj;ಮೇಲ್ ಮಾಡಲು ಯತ್ನಿಸಿದ್ದಾಳೆ ಎಂದು ಸ್ವಾಮೀಜಿ ಹೇಳಿದ್ದಾರೆ. ಅಲ್ಲದೆ, ತಾವು ಮಠಕ್ಕೆ ತೆರಳುತ್ತಿದ್ದ ವೇಳೆ ತಮ್ಮ ಕಾರನ್ನು ಅಡ್ಡಗಟ್ಟಿ ಹಣದ ಬೇಡಿಕೆ ಇಟ್ಟಿದ್ದಳು ಹಾಗೂ ಹಣ ನೀಡದಿದ್ದಕ್ಕೆ ಹಲ್ಲೆ ನಡೆಸಿದ್ದಾಳೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಮೂರು ಕೋಟಿ ರೂಪಾಯಿ ಹಣ ನೀಡದಿದ್ದರೆ ತಮ್ಮ ವಿರುದ್ಧ ಅಪಪ್ರಚಾರ ಮಾಡುವುದಾಗಿ ಮಹಿಳೆ ಬೆದರಿಕೆ ಹಾಕಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ತಿಳಿಸಿದ್ದಾರೆ.&amp;nbsp;&lt;/p&gt;&lt;p&gt;ಮಹಿಳೆ ಬೆಂಗಳೂರು ಕಮಿಷನರ್ ಗೆ ಇ ಮೇಲ್ ಮೂಲಕ ದೂರು ನೀಡಿದ್ದಾರೆ. ಮಹಿಳಾ ಆಯೋಗಕ್ಕೆ ಒಬ್ಬ ವ್ಯಕ್ತಿ ಬಂದು ದೂರು ನೀಡಿದ್ದಾನೆ. ದೂರು ಸ್ವೀಕಾರ ಮಾಡಿದ ಮಹಿಳಾ ಆಯೋಗ ಬಳಿಕ ಮಹಿಳೆ ಹೆಸರು ,ದೂರವಾಣೆ ಸಂಖ್ಯೆ ಸರಿಯಾಗಿ ಕೊಡುವಂತೆ ವ್ಯಕ್ತಿಗೆ ಕೇಳಿದೆ. ನಂತರ ಆ ವ್ಯಕ್ತಿ ಬೇರೆ ದೂರವಾಣೆ ಸಂಖ್ಯೆ ನೀಡಿ ತೆರಳಿದ್ದಾರೆ. ಈ ಬಗ್ಗೆ ಸತ್ಯಾತ್ಯತೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಮಹಿಳಾ ಆಯೋಗದ ಉನ್ನತ ಮೂಲಗಳ ಮಾಹಿತಿ ನೀಡಿದೆ.&lt;/p&gt;&lt;h2&gt;ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?&lt;/h2&gt;&lt;p&gt;ನಾನು Basava Jaya Mrutyunjaya Swamiji ಅವರ ಭಕ್ತೆಯಾಗಿದ್ದೆ. ವರು ನನ್ನನ್ನು ಮಠಕ್ಕೆ ಕರೆಸಿ &ldquo;ಪ್ರಸಾದ ಕೊಡುತ್ತೇನೆ&rdquo; ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ.ಆದ್ದರಿಂದ, ಮೇಲ್ಕಂಡ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ FIR ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ. ಎಂದು ಬೆಂಗಳೂರಿನ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.&lt;/p&gt;&lt;p&gt;ಒಟ್ಟಾರೆ, ಪರಸ್ಪರ ವಿರುದ್ಧ ಆರೋಪ-ಪ್ರತ್ಯಾರೋಪಗಳಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಸತ್ಯಾಸತ್ಯತೆ ತಿಳಿಯಲು ಸಮಗ್ರ ತನಿಖೆ ಅಗತ್ಯವಾಗಿದೆ.&lt;/p&gt;]]></content:encoded>
            <category>vijayapura</category>
            <dc:creator>Gowthami K</dc:creator>
            <atom:link href="https://kannada.asianetnews.com/state/basavajaya-mruthyunjaya-swamiji-sexual-harassment-allegations-counter-complaint-3-crore-rs-blackmail-claim-surfaces-gdp/articleshow-qlyxe11"/>
        </item>
        <item>
            <title><![CDATA[ಯತ್ನಾಳಗೆ ಸ್ವಾಭಿಮಾನ ಇದ್ದರೆ ಬಿಜೆಪಿ ಅಭ್ಯರ್ಥಿ ಸೋಲಿಸಿ ತೋರಿಸಲಿ: ಸಚಿವ ಎಂ.ಬಿ.ಪಾಟೀಲ ಸವಾಲ್]]></title>
            <link>https://kannada.asianetnews.com/politics/mb-patil-vs-yatnal-vijayendra-bjp-leadership-bypoll-karnataka-gvd/articleshow-xupkil4</link>
            <guid isPermaLink="true">https://kannada.asianetnews.com/politics/mb-patil-vs-yatnal-vijayendra-bjp-leadership-bypoll-karnataka-gvd/articleshow-xupkil4</guid>
            <pubDate>Tue, 31 Mar 2026 23:26:35 +0530</pubDate>
            <description><![CDATA[&lt;p&gt;ಬಿಜೆಪಿಯಿಂದ ಅಮಾನತ್ತಾಗಿರೋ ಯತ್ನಾಳಗೆ ಸ್ವಾಭಿಮಾನ, ಮಾರ್ಯಾದೆ ಇದ್ದರೇ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ತೋರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸವಾಲ್ ಹಾಕಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jpyd7a850hpkd6dfs6mk86ej,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.31): &lt;/strong&gt;ಬಿಜೆಪಿಯಿಂದ ಅಮಾನತ್ತಾಗಿರೋ ಯತ್ನಾಳಗೆ ಸ್ವಾಭಿಮಾನ, ಮಾರ್ಯಾದೆ ಇದ್ದರೇ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ತೋರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸವಾಲ್ ಹಾಕಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲ ಘೋಷಣೆ, ಚರಂತಿಮಠ ಪ್ರಚಾರ ಮಾಡೋದಾಗಿ ಹೇಳಿರೋ ಯತ್ನಾಳ ಕುರಿತು ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ&zwnj; ನೇತೃತ್ವದಲ್ಲಿ ಚುನಾವಣೆ ಮಾಡುತ್ತಾರೆಂದರೇ ವಿಜಯೇಂದ್ರ ಉಳಿಸೋ ಕೆಲಸ ಮಾಡುತ್ತಾರೆಂದರೆ ಮಾಡಲಿ. ಯತ್ನಾಳ ಏನೇ ಮಾಡಿದರೂ ನಾವೇ ಗೆಲ್ಲುತ್ತೇವೆ.&lt;/p&gt;&lt;p&gt;ಯತ್ನಾಳ ಒಂದೆಡೆ ವಿಜಯೇಂದ್ರ ಯಡಿಯೂರಪ್ಪ ಎಂದು ಹೇಳುತ್ತಾರೆ. ಈಗ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಉಪಚುನಾವಣೆ ನಡೆಯುತ್ತಿದೆ. ದಾವಣಗೆರೆ ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಿಶ್ಚಿತವಾಗಿ ಬದಲಾಗುತ್ತಾರೆ. ವಿಜಯೇಂದ್ರ ಬದಲಾವಣೆ ಆಗೋದು ಯತ್ನಾಳಗೆ ಬೇಕಾಗಿದೆಯೋ?, ಇಲ್ಲವೋ? ಅವರು ಅರ್ಥ ಮಾಡಿಕೊಳ್ಳಲಿ. ಯತ್ನಾಳ ಉದ್ದೇಶ ವಿಜಯೇಂದ್ರ ಉಳಿಸೊದಿದೆಯಾ?. ಮತ್ಯಾಕೆ ಮಾತು ಮಾತಿಗೆ ಯಡಿಯೂರಪ್ಪ, ಯಡಿಯುರಪ್ಪ ಮಗಾ ಎಂದು ಮಾತನಾಡಬೇಕು ಎಂದು ಪ್ರಶ್ನಿಸಿದರು.&lt;/p&gt;&lt;p&gt;ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಉಪಚುನಾವಣೆ ವಿಜಯೇಂದ್ರಗೆ ಅಳಿವು, ಉಳಿವಿನ ಪ್ರಶ್ನೆಯಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದರೇ ವಿಜಯೇಂದ್ರನನ್ನು ಬಿಜೆಪಿ ಅಧ್ಯಕ್ಷನನ್ನಾಗಿ ಮುಂದುವರಿಸುತ್ತಾರೆ. ಇಲ್ಲದಿದ್ದರೇ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುತ್ತಾರೆ. ಹಾಗಾಗಿ ಯತ್ನಾಳ ಅವರಿಗೆ ವಿಜಯೇಂದ್ರನನ್ನ ತೆಗೆಸಬೇಕಾ ಅಥವಾ ಅಧ್ಯಕ್ಷನನ್ನಾಗಿ ಮುಂದುವರಿಸಬೇಕಾ ಎಂದು ಪ್ರಶ್ನಿಸಿದರು.&lt;/p&gt;&lt;p&gt;ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದರೆ ವಿಜಯೇಂದ್ರಗೆ ಕ್ರೆಡಿಟ್ ಹೋಗುತ್ತದೆ. ಯತ್ನಾಳ, ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾತನಾಡುತ್ತಾರೆ. ಈಗ ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ವಿಜಯೇಂದ್ರನನ್ನು ಬಿಜೆಪಿ ಅಧ್ಯಕ್ಷರ ಸ್ಥಾನದಿಂದ ತೆಗೆಯೋಕೆ ಉಪಚುನಾವಣೆಗಳು ಯತ್ನಾಳಗೆ ಅವಕಾಶವಿದ್ದಂತೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸೋತರೆ ವಿಜಯೇಂದ್ರನನ್ನು ತೆಗೆಯುತ್ತಾರೆ ಎಂದು ಭವಿಷ್ಯ ನುಡಿದರು.&lt;/p&gt;&lt;p&gt;ಯತ್ನಾಳ ವಿಜಯೇಂದ್ರ ಉಳಿಸೋ ಕೆಲಸ ಮಾಡುವುದಾರೆ ಪ್ರಚಾರ ಮಾಡಲಿ. ಉಪಚುನಾವಣೆಯಲ್ಲಿ ಪ್ರಚಾರ ಮಾಡಿ ವಾಪಸ್ ಬಿಜೆಪಿ ಹೋಗುವ ಪ್ಲಾನ್ ಯತ್ನಾಳಗಿದೆ. ಈ ಮೂಲಕ ವಾಪಸ್ ಬಿಜೆಪಿಗೆ ಹೋಗಲು ಯತ್ನಾಳ ಪ್ರಯತ್ನ ಮಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ನಾನು ಪ್ರಚಾರ ಮಾಡಿದ್ದೇನೆ. ಹಾಗಾಗಿ ವಾಪಸ್ ತಗೊಳ್ಳಿ ಎಂದು ಬಿಜೆಪಿ ಮುಖಂಡರಿಗೆ ಯತ್ನಾಳ ಕೈ ಒಡ್ಡುತ್ತಾರೆ ಎಂದು ಲೇವಡಿ ಮಾಡಿದರು.&lt;/p&gt;&lt;h2&gt;&lt;strong&gt;ಕಾಂಗ್ರೆಸ್&zwnj;ಗೆ ಲಿಂಗಾಯತರಷ್ಟೇ ಅಲ್ಲ, ಇತರ ಸಮುದಾಯದ ಬೆಂಬಲವೂ ಇದೆ&lt;/strong&gt;&lt;/h2&gt;&lt;p&gt;ಎಚ್.ವೈ.ಮೇಟಿ ನಿಧನದ ಕಾರಣ ಉಪಚುನಾವಣೆ ಎದುರಾಗಿದ್ದು, ಮೇಟಿ ಪುತ್ರ ಉಮೇಶಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್&zwnj;ಗೆ ಲಿಂಗಾಯತರಷ್ಟೇ ಅಲ್ಲ ಇತರ ಸಮುದಾಯದ ಬೆಂಬಲವೂ ಇದೆ. ಮೇಟಿಯವರ ಕುಟುಂಬಕ್ಕೆ ಅನುಕಂಪವೂ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬಾಗಲಕೋಟೆ ನಗರ ಕ್ಷೇತ್ರದ ಉಪಚುನಾವಣೆ ವಿಚಾರಕ್ಕೆ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ನಿನ್ನೆ ಬಾಗಲಕೋಟೆಯಲ್ಲಿ ಲಿಂಗಾಯತ ಮುಖಂಡರ ಸಭೆ ನಡೆಸಲಾಗಿದೆ ಎಂಬ ವಿಚಾರದ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡಿ, ನಿನ್ನೆ ಲಿಂಗಾಯತರಷ್ಟೇ ಅಲ್ಲ ಅಲ್ಪಸಂಖ್ಯಾತ ಮುಖಂಡರ ಸಭೆಯನ್ನು ಮಾಡಿದ್ದೇವೆ. ಹಲವಾರು ಗ್ರಾಮಗಳಲ್ಲಿ ಮತಯಾಚನೆ ಮಾಡಲಾಗಿದೆ. ಜನರ ಬೆಂಬಲ ಕಾಂಗ್ರೆಸ್ ಪರವಾಗಿದೆ, ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mb-patil-vs-yatnal-vijayendra-bjp-leadership-bypoll-karnataka-gvd/articleshow-xupkil4"/>
        </item>
        <item>
            <title><![CDATA[ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ನೂರಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ]]></title>
            <link>https://kannada.asianetnews.com/politics/mp-ramesh-jigajinagi-bjp-election-victory-prediction-gvd/articleshow-y7dqb1k</link>
            <guid isPermaLink="true">https://kannada.asianetnews.com/politics/mp-ramesh-jigajinagi-bjp-election-victory-prediction-gvd/articleshow-y7dqb1k</guid>
            <pubDate>Sun, 08 Mar 2026 17:54:46 +0530</pubDate>
            <description><![CDATA[&lt;p&gt;ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಸಂಸದ ರಮೇಶ ಜಿಗಜಿಣಗಿ ಭವಿಷ್ಯ ನುಡಿದರು. ಜನರ ಒಲವು ಬಿಜೆಪಿಯ ಮೇಲೆ ಎಂದಿಗೂ ಕಡಿಮೆಯಾಗಿಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k02j9za3md60e5gkvz2msb5y,imgname-dbdb-1752432966979.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.08):&lt;/strong&gt; ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಸಂಸದ ರಮೇಶ ಜಿಗಜಿಣಗಿ ಭವಿಷ್ಯ ನುಡಿದರು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಒಲವು ಬಿಜೆಪಿಯ ಮೇಲೆ ಎಂದಿಗೂ ಕಡಿಮೆಯಾಗಿಲ್ಲ. ಆದರೆ ಕಾಂಗ್ರೆಸ್&zwnj;ನವರು ಈ ಹಿಂದಿನ ಚುನಾವಣೆಯಲ್ಲಿ ಜನರನ್ನು ಗ್ಯಾರಂಟಿ ಹೆಸರಿನಲ್ಲಿ ಯಾಮಾರಿಸುವ ಪ್ರಯತ್ನ ಮಾಡಿದರು.&lt;/p&gt;&lt;p&gt;ಆದರೆ ಈಗ ಗ್ಯಾರಂಟಿಗಳನ್ನೇ ಸರಿಯಾಗಿ ನೀಡುತ್ತಿಲ್ಲ, ಕೇವಲ ಕುರ್ಚಿ ಕಾದಾಟದಲ್ಲಿಯೇ ನಿರತವಾಗಿರುವುದು ಜನರಿಗೆ ಬೇಸರ ತರಿಸಿದೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸುವುದು ನಿಶ್ಚಿತ ಎಂದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಕಾರ್ಯಕರ್ತರ ತ್ಯಾಗ ಬಲಿದಾನದಿಂದ ಬಿಜೆಪಿ ಇಂದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಉತ್ತರ ಕರ್ನಾಟಕ ಭಾಗದಿಂದ ಮೂವರು ನಾಯಕರನ್ನು ಮುಖ್ಯಮಂತ್ರಿ ಮಾಡಿದ್ದೇ ಬಿಜೆಪಿ.&lt;/p&gt;&lt;h2&gt;&lt;strong&gt;ದೊಡ್ಡ ಪಡೆಯೇ ಇದೆ&lt;/strong&gt;&lt;/h2&gt;&lt;p&gt;ಬಿಜೆಪಿ ಸಮಗ್ರ ಕರ್ನಾಟಕ ಹಾಗೂ ಸಮಗ್ರ ಭಾರತದ ಪ್ರಗತಿಯನ್ನು ಬಯಸುವ ಶ್ರೇಷ್ಠ ಚಿಂತನೆಯ ಪಕ್ಷವಾಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕಾರ್ಯಕರ್ತರು ಮನಸು ಮಾಡಿದರೆ ಏನೆಲ್ಲ ಮಾಡಲು ಸಾಧ್ಯ, ಬಿಜೆಪಿಗೆ ಸಮರ್ಪಣಾ ಮನೋಭಾವ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.&lt;/p&gt;&lt;p&gt;ಸಭೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕ ರಮೇಶ ಭೂಸನೂರ, ಮುಖಂಡರಾದ ವಿಜುಗೌಡ ಪಾಟೀಲ, ಮಳುಗೌಡ ಪಾಟೀಲ, ಉಮೇಶ ಕಾರಜೋಳ, ಡಾ.ಸುರೇಶ ಬಿರಾದಾರ, ಕಾಸುಗೌಡ ಬಿರಾದಾರ, ಈರಣ್ಣ ರಾವೂರ, ಸಂಜಯ ಪಾಟೀಲ ಕನಮಡಿ, ಸಂಜೀವ ಐಹೊಳಿ, ವಿವೇಕಾನಂದ ಡಬ್ಬಿ, ಗೋಪಾಲ ಘಟಕಾಂಬಳೆ, ಸಾಬು ಮಾಶ್ಯಾಳ, ಅನೀಲ ಜಮಾದಾರ, ರಜನಿ ಸಂಬಣ್ಣಿ, ಸ್ವಪ್ನಾ ಕಣಮುಚನಾಳ, ವಿಜಯಕುಮಾರ ಕುಡಿಗನೂರ ಪಾಲ್ಗೊಂಡಿದ್ದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mp-ramesh-jigajinagi-bjp-election-victory-prediction-gvd/articleshow-y7dqb1k"/>
        </item>
        <item>
            <title><![CDATA[ವಿದ್ಯುತ್ ಖರೀದಿಗೆ ಸಕ್ಕರೆ ಕಾರ್ಖಾನೆಗಳ ಜೊತೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ]]></title>
            <link>https://kannada.asianetnews.com/karnataka-districts/sugar-factory-power-purchase-agreement-shivanand-patil-statement-gvd/articleshow-ymi2l0m</link>
            <guid isPermaLink="true">https://kannada.asianetnews.com/karnataka-districts/sugar-factory-power-purchase-agreement-shivanand-patil-statement-gvd/articleshow-ymi2l0m</guid>
            <pubDate>Wed, 18 Mar 2026 16:24:23 +0530</pubDate>
            <description><![CDATA[&lt;p&gt;ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್&zwnj; ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gf6kvpgsxmhn5gbam33z36tg,imgname-shivanand-patil.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.18): &lt;/strong&gt;ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್&zwnj; ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.&lt;/p&gt;&lt;p&gt;ವಿಧಾನಪರಿಷತ್ತಿನಲ್ಲಿ ಮಂಗಳವಾರ ರವಿಕುಮಾರ ಹಾಗೂ ಇತರ ಸದಸ್ಯರು ನಿಯಮ 330ರ ಅಡಿಯಲ್ಲಿ ನೀಡಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಸಕ್ಕರೆಯ ಎಂಎಸ್&zwnj;ಪಿ ದರ ಹೆಚ್ಚಳ ಮಾಡಿದರೆ ಸಕ್ಕರೆ ಕಾರ್ಖಾನೆಗಳು ಹಾಗೂ ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚೆ ಮಾಡಲಾಗಿದೆ.&lt;/p&gt;&lt;p&gt;ಸಕ್ಕರೆ ಕಾರ್ಖಾನೆಗಳ ಮಾಲೀಕರ ಬೇಡಿಕೆಗಳಲ್ಲಿ ಎರಡು ಬೇಡಿಕೆಗಳು ಮಾತ್ರ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರಲಿವೆ. ವಿದ್ಯುತ್&zwnj; ಖರೀದಿ ಒಪ್ಪಂದ ಮತ್ತು ನೀರಿನ ತೆರಿಗೆ ಬೇಡಿಕೆಗಳನ್ನು ಪರಿಗಣಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು. ಕೇಂದ್ರ ಸರ್ಕಾರ ಸಕ್ಕರೆ ರಫ್ತು ಮಾಡಲು ಅವಕಾಶ ನೀಡಬೇಕು. ಎಥೆನಾಲ್&zwnj; ದರ ಪರಿಷ್ಕರಣೆ ಹಾಗೂ ಉತ್ಪಾದನಾ ಪ್ರಮಾಣಕ್ಕೆ ಅನುಗುಣವಾಗಿ ಹಂಚಿಮೆ ಮಾಡಬೇಕು.&lt;/p&gt;&lt;h2&gt;&lt;strong&gt;ಗ್ರಾಹಕರಿಗೂ ಅನುಕೂಲ&lt;/strong&gt;&lt;/h2&gt;&lt;p&gt;ಈ ಬೇಡಿಕೆಗಳಿಗೆ ಕೇಂದ್ರ ಸ್ಪಂದಿಸಿದರೆ ಕಬ್ಬು ಬೆಳೆಗಾರರ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಕ್ಕರೆಗೆ ಎಲ್&zwnj;ಪಿಜಿ ರೀತಿ ಗೃಹ ಬಳಕೆಗೆ ಬೇರೆ ಹಾಗೂ ವಾಣಿಜ್ಯ ಬಳಕೆಗೆ ಬೇರೆ ದರ ನಿಗದಿಪಡಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿದರೆ ಗ್ರಾಹಕರಿಗೂ ಅನುಕೂಲ, ಕಬ್ಬು ಬೆಳೆಗಾರರ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದರು.&lt;/p&gt;&lt;p&gt;ರಾಜ್ಯದಲ್ಲಿ ಸತತ ಎರಡು ವರ್ಷ ಕಬ್ಬು ಬೆಳೆಗಾರರಿಗೆ ಪೂರ್ಣ ಪ್ರಮಾಣದಲ್ಲ ಹಣ ಪಾವತಿ ಮಾಡಲಾಗಿದೆ. ಈ ವರ್ಷ ಇನ್ನೂ ಕ್ರಷಿಂಗ್&zwnj; ನಡೆದಿದ್ದು, ಈ ಬಾರಿಯೂ ಪೂರ್ಣ ಪ್ರಮಾಣದಲ್ಲಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಅತಿ ಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ಮೂರು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಕಬ್ಬಿನ ಬಿಲ್&zwnj; ಪಾವತಿ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಇನ್ನೂ ರೈತರ ಕಬ್ಬಿನ ಬಿಲ್&zwnj; ಬಾಕಿ ಇದೆ ಎಂದು ಸಚಿವರು ವಿಧಾನಪರಿಷತ್ತಿಗೆ ತಿಳಿಸಿದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/sugar-factory-power-purchase-agreement-shivanand-patil-statement-gvd/articleshow-ymi2l0m"/>
        </item>
        <item>
            <title><![CDATA[ಮೀಸಲಾತಿ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್‌ ಕುಮ್ಮಕ್ಕು: ಸಂಸದ ಕಾರಜೋಳ ಆರೋಪ]]></title>
            <link>https://kannada.asianetnews.com/politics/mp-govind-karjol-accuses-congress-over-reservation-issue-gvd/articleshow-zoocwue</link>
            <guid isPermaLink="true">https://kannada.asianetnews.com/politics/mp-govind-karjol-accuses-congress-over-reservation-issue-gvd/articleshow-zoocwue</guid>
            <pubDate>Thu, 05 Mar 2026 17:38:17 +0530</pubDate>
            <description><![CDATA[&lt;p&gt;ಮೀಸಲಾತಿ ಪ್ರಮಾಣ ಶೇ.50ಕ್ಕೆ ಏರಿಕೆಯಾಗುತ್ತಿದೆ ಎಂದು ಪ್ರಶ್ನಿಸಿ ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ವ್ಯಕ್ತಿಗಳು ಕಾನೂನಾತ್ಮಕ ಹೋರಾಟ ನಡೆಸಲು ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ggdhkn8akrw19gf8h434eqdv,imgname-govinda-karjola.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.05): &lt;/strong&gt;ಮೀಸಲಾತಿ ಪ್ರಮಾಣ ಶೇ.50ಕ್ಕೆ ಏರಿಕೆಯಾಗುತ್ತಿದೆ ಎಂದು ಪ್ರಶ್ನಿಸಿ ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ವ್ಯಕ್ತಿಗಳು ಕಾನೂನಾತ್ಮಕ ಹೋರಾಟ ನಡೆಸಲು ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡಿದೆ. ಆ ಮೂಲಕ ದಲಿತರಿಗೆ ಕಾಂಗ್ರೆಸ್ ಸರ್ಕಾರ ವಿಶ್ವಾಸದ್ರೋಹ ಮಾಡಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಗಂಭೀರವಾಗಿ ಆರೋಪಿಸಿದರು.&lt;/p&gt;&lt;p&gt;ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ.ನಾಗಮೋಹನ್ ದಾಸ್ ವರದಿ ಆಧರಿಸಿ ಈ ಹಿಂದೆಯೇ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಿದೆ. ಆದರೆ ಇದರಿಂದ ಸಂವಿಧಾನದ ಶೇ.50 ರಷ್ಟು ಮೀಸಲಾತಿ ಮೀರಬಾರದು ಎಂಬ ಇಂದಿರಾ ಸಹಾನಿ ಪ್ರಕರಣದ ತೀರ್ಪು ಉಲ್ಲೇಖಿಸಿ ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ವ್ಯಕ್ತಿಗಳು ಕೋರ್ಟ್&zwnj;ಗೆ ಹೋಗಲು ರಾಜ್ಯ ಸರ್ಕಾರವೇ ಕುಮ್ಮಕ್ಕು ನೀಡಿದೆ ಎಂದರು.&lt;/p&gt;&lt;p&gt;ಅಲ್ಲಿ ಅಡ್ವೋಕೇಟ್ ಜನರಲ್ ಸಹ ಸರ್ಕಾರ ಮೀಸಲಾತಿ ಪ್ರಮಾಣ ಏರಿಕೆಯ ಬಗ್ಗೆ ಸರ್ಕಾರ ಬದ್ಧತೆ ಬಗ್ಗೆ ಹೇಳಿಕೆ ನೀಡಿಲ್ಲ. ಬದಲಾಗಿ ಶೇ.50 ರಷ್ಟು ಮೀಸಲಾತಿ ಮೀರುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಇದು ಮೋಸವಲ್ಲದೇ ಮತ್ತೇನು? ಡಾ.ಬಿ.ಆರ್.ಅಂಬೇಡ್ಕರ ಅವರೇ ಜನಸಂಖ್ಯೆ ಅಧಿಕವಾಗಿದ್ದರೆ ಮೀಸಲಾತಿ ಪ್ರಮಾಣ ಏರಿಕೆ ಮಾಡಲು ಡಾ.ಬಿ.ಅರ್.ಅಂಬೇಡ್ಕರ್&zwnj; ಅವರು ಸಂವಿಧಾನದಲ್ಲಿ ಅವಕಾಶ ನೀಡಿದ್ದಾರೆ. ಪೂನಾ ಒಪ್ಪಂದದ ಆಧರಿಸಿ ಮೀಸಲಾತಿ ಪ್ರಮಾಣ ಏರಿಕೆ ಮಾಡುವ ಅವಕಾಶವಿದೆ. ಆದರೆ ಇದನ್ನು ಕೋರ್ಟ್&zwnj;ಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೇ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.&lt;/p&gt;&lt;p&gt;ಒಳ ಮೀಸಲಾತಿ ಸಮರ್ಪಕ ಜಾರಿಯಾಗಿಲ್ಲ. ಡಾ.ಎಚ್.ಸಿ.ಮಹಾದೇವಪ್ಪ, ತಿಮ್ಮಾಪೂರ, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಮೊದಲಾದವರು ಕುಳಿತುಕೊಂಡು ಖಾಜಿ ನ್ಯಾಯ ಮಾದರಿಯಲ್ಲಿ ತಾವೇ ತಾವೇ ಹಂಚಿಕೊಂಡಂತೆ ಒಂದು ರೀತಿ ಮೀಸಲಾತಿ ತಮ್ಮ ಪಿತ್ರಾರ್ಜಿತ ಆಸ್ತಿ ಎಂದು ಈ ಸಚಿವರು ತಿಳಿದುಕೊಂಡಿದ್ದಾರೆ. ದಲಿತ ವರ್ಗಕ್ಕೆ ದೊಡ್ಡ ಅನ್ಯಾಯ ಮಾಡಿದ್ದು, ಇವರ&zwj;್ಯಾರು ಸಚಿವ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಈ ಸಚಿವರ ದಲಿತ ವಿರೋಧಿ ನೀತಿಯ ಆಟ ಏನಾದರೂ ಡಾ.ಬಿ.ಆರ್. ಅಂಬೇಡ್ಕರ ಅವರು ನೋಡಿದ್ದರೆ ನೋವಿನಿಂಧ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಕಾರಜೋಳ ಹೇಳಿದರು. ಒಂದೇ ವರ್ಗದ ಕಲ್ಯಾಣಕ್ಕಾಗಿ ಡಾ.ಅಂಬೇಡ್ಕರ ಅವರು ಮೀಸಲಾತಿ ಜಾರಿಗೊಳಿಸಿಲ್ಲ, ಎಲ್ಲ ದಲಿತ ಸಮುದಾಯಗಳಿಗೆ ಅನುಕೂಲವಾಗಲು ಈ ಮೀಸಲಾತಿ ವ್ಯವಸ್ಥೆಯನ್ನು ರೂಪಿಸಿದ್ದಾರೆ ಎಂದರು.&lt;/p&gt;&lt;h2&gt;ಸರ್ವಪಕ್ಷ ಸಭೆ ಕರೆಯಿರಿ&lt;/h2&gt;&lt;p&gt;ಈಗ ಕೇವಲ ಒಳ ಮೀಸಲಾತಿ ಕೋರ್ಟ್&zwnj;ನಲ್ಲಿದೆ ಎಂಬ ಸಬೂಬು ಹೇಳುತ್ತಾ ರಾಜ್ಯ ಸರ್ಕಾರ ಮುಂದೆ ಸಾಗಿದೆ. ಕಾಂಗ್ರೆಸ್&zwnj;ನ ಈ ನಡೆ ದಲಿತ ಬಾಂಧವರು ಸಹಿಸುವುದಿಲ್ಲ. ಕೂಡಲೇ ಸಿದ್ಧರಾಮಯ್ಯ ಅವರು ಸರ್ವಪಕ್ಷಗಳ ಸಭೆ ಕರೆದು ಈ ಸಮಸ್ಯೆಯನ್ನು ಬಗೆಹರಿಸಿದರೆ ಒಳ್ಳೆಯದು. ಇಲ್ಲವಾದರೆ ಜನರು ನಿಮ್ಮನ್ನು ಹೊರಗೆ ಓಡಾಡಲು ಸಹ ಬಿಡುವುದಿಲ್ಲ ಎಂದು ಗುಡುಗಿದರು. ಈ ಅನ್ಯಾಯವನ್ನು ಸರ್ಕಾರ ಸರಿಪಡಿಸದೇ ಹೋದರೆ ಹೋರಾಟ ಅನಿವಾರ್ಯ. ರಾಜಸ್ತಾನದಲ್ಲಿ ಮಾದರಿ ಹೋರಾಟ ರೂಪಿಸಿ 29 ಸಾವಿರ ಹಳ್ಳಿಗಳಿಂದಲೂ ಹೋರಾಟಗಾರರನ್ನು ಕಯಿಸಿ ಸರ್ಕಾರದ ಧೋರಣೆಯನ್ನು ಖಂಡಿಸಲಾಗುವುದು ಎಂದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mp-govind-karjol-accuses-congress-over-reservation-issue-gvd/articleshow-zoocwue"/>
        </item>
    </channel>
</rss>
