<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 08 Jun 2026 00:28:22 +0530</lastBuildDate>
        <atom:link href="https://kannada.asianetnews.com/rss/vijayapura" rel="self" type="application/rss+xml"/>
        <item>
            <title><![CDATA[ಬರ ಜಿಲ್ಲೆ ಹಣೆಪಟ್ಟಿ ಹೊಂದಿದ್ದ ಜಿಲ್ಲೆಯಲ್ಲಿ ನೀರಾವರಿ ಕ್ರಾಂತಿ; ಕೋಟಿ ಸಸಿಗಳನ್ನು ನೆಟ್ಟ ಕನಸುಗಾರ]]></title>
            <link>https://kannada.asianetnews.com/karnataka-districts/irrigation-revolution-in-a-vijayapura-district-labeled-as-drought-prone-mrq/articleshow-45gqg6n</link>
            <guid isPermaLink="true">https://kannada.asianetnews.com/karnataka-districts/irrigation-revolution-in-a-vijayapura-district-labeled-as-drought-prone-mrq/articleshow-45gqg6n</guid>
            <pubDate>Sun, 07 Jun 2026 05:22:43 +0530</pubDate>
            <description><![CDATA[ಸಚಿವರಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಎಂ.ಬಿ. ಪಾಟೀಲರು, ತಾವು ಈ ಹಿಂದೆ ನೀರಾವರಿ ಸಚಿವರಾಗಿದ್ದಾಗ ಮಾಡಿದ ಕೆಲಸಗಳಿಂದ ಜಿಲ್ಲೆ ಹಸಿರಾಗಿದೆ ಎಂದು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಕೈಗಾರಿಕೆಗಳನ್ನು ತರುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ktfnmrva9dzmea1qye7h2swd,imgname-mb-patil-1780789961578.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ: &lt;/strong&gt;ಸಿದ್ದರಾಮಯ್ಯನವರ ಅವಧಿಯಲ್ಲಿ ನೀರಾವರಿ ಸಚಿವನಾಗಿ ಸಾಕಷ್ಟು ಕೆಲಸ ಮಾಡಿ, ಜಿಲ್ಲೆಗೆ, ರೈತರಿಗೆ ನೀರು ಕೊಡುವ ಕೆಲಸ ಮಾಡಿದ್ದೇನೆ. ಹೀಗಾಗಿಯೇ ಇಂದು ವಿಜಯಪುರ ಜಿಲ್ಲೆ ಹಸಿರಿನಿಂದ ಕಂಗೊಳಿಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಿದ್ದೇನೆ ಎಂದು ಬೃಹತ್&zwnj; ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;&lt;p&gt;ಡಿ.ಕೆ.ಶಿವಕುಮಾರ್&zwnj; ಸಂಪುಟದಲ್ಲಿ ಸಚಿವರಾಗಿ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಹಿನ್ನೆಲೆ ನಗರದ ಪಾಟೀಲ ಗಾರ್ಡೆನಿಯಾದಲ್ಲಿ ನಾನಾ ಸಂಸ್ಥೆಗಳು, ನಾಗರಿಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಭೂಮಿಗೆ ಒಂದು ಬೊಗಸೆ ನೀರು ಕೊಡಿ, ಇದು ಅಮೆರಿಕದ ಕ್ಯಾಲಿಫೋರ್ನಿಯಾ ಮೀರಿಸುತ್ತದೆ ಎಂದು ಸಿದ್ಧೇಶ್ವರ ಶ್ರೀಗಳು 30 ವರ್ಷಗಳ&zwnj; ಹಿಂದೆ ಕಾರ್ಯಕ್ರಮವೊಂದರಲ್ಲಿ ನನಗೆ ಹೇಳಿದ್ದರು. ಇಂದು ಕ್ಯಾಲಿಫೋರ್ನಿಯಾ ದ್ರಾಕ್ಷಿ ನಮ್ಮ&zwnj; ಜಿಲ್ಲೆಗೆ ಬಂದಿದ್ದು, ಸಿದ್ಧೇಶ್ವರ ಶ್ರೀಗಳ ಆಶಯ ಈಡೇರಿಸಿದಂತಾಗಿದ್ದು, ನನಗೆ ಸಂತಸವಾಗಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಪಂಚ ನದಿಗಳು ಹರಿದರೂ ಕುಡಿಯಲು ನೀರು ಇರಲಿಲ್ಲ&lt;/strong&gt;&lt;/h2&gt;&lt;p&gt;ಬರ ಜಿಲ್ಲೆ, ಹಿಂದುಳಿದ ಜಿಲ್ಲೆ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದ ಈ ಜಿಲ್ಲೆಗೆ ಬ್ರಿಟಿಷರ ಕಾಲದಲ್ಲಿಯೇ ರಾಜಸ್ಥಾನದ ಜೈಸಲ್ಮೇರ ಹಾಗೂ ಕರ್ನಾಟಕದಲ್ಲಿ ವಿಜಯಪುರ ತೀವ್ರವಾದ ಬರ ಪ್ರದೇಶ ಎಂದು ಘೋಷಣೆ ಮಾಡಿ, ಬರ ನಿವಾರಣೆ ಕೇಂದ್ರ ಸ್ಥಾಪಿಸಲಾಗಿತ್ತು. ಇಲ್ಲಿನ ಜನರು ಹೃದಯ ಶ್ರೀಮಂತಿಕೆಯ ಹೊಂದಿದ್ದು, ಇಂದಿರಾಗಾಂಧಿ, ನಿಜಲಿಂಗಪ್ಪ ಅವರನ್ನು ಬಂಗಾರದಲ್ಲಿ ತೂಗಿದವರು ನಮ್ಮ&zwnj; ಜಿಲ್ಲೆಯ ಜನರು. ಪಂಚ ನದಿಗಳು ಹರಿದರೂ ಕುಡಿಯಲು ನೀರು ಇರಲಿಲ್ಲ ಎಂದರು.&lt;/p&gt;&lt;p&gt;ಮೂರು ವರ್ಷಗಳ ಹಿಂದೆ ಕೈಗಾರಿಕೆ ಮಂತ್ರಿಯಾದ ಮೇಲೆ ಕೆ.ಎಸ್.ಡಿ.ಎಲ್ ಎರಡನೇ ಕಾರ್ಖಾನೆ ಇಟ್ಟಂಗಿಹಾಳದಲ್ಲಿ ತಂದಿದ್ದು, ಫುಡ್ ಪ್ರೊಸೆಸಿಂಗ್ ಕಾರ್ಖಾನೆ, ಕೊಕಾ ಕೋಲಾ ತಯಾರಿಕೆ ಯುನಿಟ್, ಸುಜಲಾನ್ ಕಂಪನಿಗಳು ಶೀಘ್ರ ಜಿಲ್ಲೆಗೆ ಬರಲಿವೆ. ಇದರ ಜೊತೆಗೆ ಹೈನುಗಾರಿಕೆಗೆ ಪ್ರೋತ್ಸಾಹ ಕೊಡುವ ಸಲುವಾಗಿ ಬಿಎಲ್&zwnj;ಡಿಇ ಸಂಸ್ಥೆಯಿಂದಲೇ ಪ್ರತಿ ವರ್ಷ 50 ಲಕ್ಷದಂತೆ ಅಕ್ಷಯಕಲ್ಪದವರೊಂದಿಗೆ ಸೇರಿ ಪೈಲಟ್ ಪ್ರೊಜೆಕ್ಟ್ ಯೋಜನೆ ಆರಂಭಿಸಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;ನನಗೆ ಬೆಂಬಲಿಸಿದ ಎಐಸಿಸಿ, ಕೆಪಿಸಿಸಿ ನಾಯಕರಿಗೆಲ್ಲ ಧನ್ಯವಾದ ಅರ್ಪಿಸುತ್ತೇನೆ. ಎಲ್ಲ ಅಭಿಮಾನಿಗಳಿಗೂ, ಕಾರ್ಯಕರ್ತರಿಗೂ, ಮತದಾರರಿಗೂ ಹಾಗೂ ಹಿರಿಯರಿಗೂ, ತಮಗೆಲ್ಲರಿಗೂ ಅಭಿನಂದನೆ ಎಂದರು.&lt;/p&gt;&lt;h3&gt;&lt;strong&gt;ಕೋಟಿ ಸಸಿಗಳನ್ನು ನೆಟ್ಟ ಕನಸುಗಾರ&lt;/strong&gt;&lt;/h3&gt;&lt;p&gt;ಎಂ.ಬಿ. ಪಾಟೀಲರು ಅತ್ಯುತ್ತಮ ಕನಸುಗಾರರಾಗಿದ್ದು, ರಾಜಕೀಯದಲ್ಲಿ ತಮ್ಮನ್ನೇ ಸಮರ್ಪಣೆ ಮಾಡಿಕೊಂಡು, ಇಡಿ ಜಿಲ್ಲೆಯ ಅಭಿವೃದ್ಧಿ ಮಾಡಿದ್ದಾರೆ.ಸತತ ಬರದ ನಾಡಾದ ನನ್ನ ಕ್ಷೇತ್ರದಲ್ಲಿ ನೀರಾವರಿ ಮಾಡಿ, ಜಿಲ್ಲೆಯನ್ನು ನಂದನವನವನ್ನಾಗಿ ಮಾಡುವ ಯೋಜನೆ ಹಾಕಿಕೊಂಡು ಎರಡು ಕೋಟಿ ಸಸಿಗಳನ್ನು ನೆಟ್ಟಿದ್ದಾರೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.&lt;/p&gt;&lt;p&gt;ಎಂ.ಬಿ. ಪಾಟೀಲರು ಇರದಿದ್ದರೆ ಈ ಜಿಲ್ಲೆಯ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲ, ಅಷ್ಟು ಹದಗೆಡುತ್ತಿತ್ತು. ಹಾಗಾಗಿ ನನ್ನ ಸಂಪೂರ್ಣ ಸಹಕಾರ ಎಂ.ಬಿ. ಪಾಟೀಲರಿಗೆ ಇದ್ದು, ಅವರ ಹೆಗಲಿಗೆ ಹೆಗಲು ಕೊಟ್ಟು ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.&lt;/p&gt;&lt;p&gt;ಈ ವೇಳೆ ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಮಡಿವಾಳಪ್ಪ ಕರಡಿ, ಡಾ.ಗಂಗಾಧರ ಸಂಬಣ್ಣಿ, ಸಂಗು ಸಜ್ಜನ, ವಿ&zwnj;.ಎನ್. ಬಿರಾದಾರ, ವಿ.ಸಿ. ನಾಗಠಾಣ, ಡಾ.ಕಂಠೀರವ ಕುಲ್ಲೊಳ್ಳಿ, ಸಿದ್ರಾಮಪ್ಪ ಉಪ್ಪಿನ, ಬಸನಗೌಡ ಹರನಾಳ, ಡಾ.ಬಿ.ಎಸ್. ಪಾಟೀಲ, ಎಸ್.ವಿ. ಪಾಟೀಲ, ಶಂಕರಗೌಡ ಸವನಳ್ಳಿ, ಹಾಸಿಂಪೀರ ವಾಲಿಕಾರ ಇದ್ದರು.------&lt;/p&gt;&lt;h3&gt;&lt;strong&gt;ಇನ್ನೂ ಹೆಚ್ಚಿನ ಕೆಲಸ ಮಾಡುವೆ&lt;/strong&gt;&lt;/h3&gt;&lt;p&gt;ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ನನಗೆ ಕೈಗಾರಿಕೆ ಸಚಿವನಾಗಿ ಮುಂದುವರಿಯಲು ಅವಕಾಶ ಸಿಕ್ಕಿದೆ. ಈಗಾಗಲೇ ಕೈಗಾರಿಕೆ ಇಲಾಖೆಯಲ್ಲಿ ತಳಮಟ್ಟದಿಂದ ಕೆಲಸ ಮಾಡಲಾಗಿದೆ, ಇನ್ನೂ ಹೆಚ್ಚಿನ ಕೆಲಸ ಮಾಡುತ್ತೆನೆ. ಬೇರೆ ಇಲಾಖೆ ತೆಗೆದುಕೊಂಡಿದ್ದರೆ ಮತ್ತೆ ತಳಮಟ್ಟದಿಂದ ಕೆಲಸ ಆರಂಭಿಸಿಬೇಕಿತ್ತು. ನೀರಾವರಿ ಖಾತೆ&zwnj; ಸಿಕ್ಕಿದ್ದಕ್ಕೆ ಸಚಿವ ರಾಮಲಿಂಗ&zwnj; ರೆಡ್ಡಿ ಬೇಸರ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರನ್ನು ನಾಯಕರಾದ ಸೋನಿಯಾ ಗಾಂಧಿ, ರಾಹುಲ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮನವೊಲಿಸುವ ಕೆಲಸ ಮಾಡುತ್ತಾರೆ ಎಂದರು.&lt;/p&gt;&lt;p&gt;------------&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/irrigation-revolution-in-a-vijayapura-district-labeled-as-drought-prone-mrq/articleshow-45gqg6n"/>
        </item>
        <item>
            <title><![CDATA[95 ಲಕ್ಷ ಅಭಿವೃದ್ಧಿಯ ಮೂರು ಸಮುದಾಯ ಭವನಗಳ ಕಾಮಗಾರಿಗಳಿಗೆ ಶಾಸಕ ಯತ್ನಾಳ ಭೂಮಿಪೂಜೆ]]></title>
            <link>https://kannada.asianetnews.com/karnataka-districts/vijayapura-mla-basanagouda-patil-performs-bhoomi-pooja-for-rs-95-lakh-development-works-mrq/articleshow-4g4gwaf</link>
            <guid isPermaLink="true">https://kannada.asianetnews.com/karnataka-districts/vijayapura-mla-basanagouda-patil-performs-bhoomi-pooja-for-rs-95-lakh-development-works-mrq/articleshow-4g4gwaf</guid>
            <pubDate>Mon, 25 May 2026 05:25:02 +0530</pubDate>
            <description><![CDATA[ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ₹95 ಲಕ್ಷ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಧಾರ್ಮಿಕ ದತ್ತಿ ಇಲಾಖೆ ಮತ್ತು ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ನಗರದ ಹಲವೆಡೆ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksddd5etvebmd7qa7cvzzh7t,imgname-cc-1779640473050.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ: ನ&lt;/strong&gt;ಗರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ₹ 95 ಮೊತ್ತದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಭೂಮಿಪೂಜೆ ನೆರವೇರಿಸಿದರು.&lt;/p&gt;&lt;h2&gt;&lt;strong&gt;ಮೂರು ಸಮುದಾಯ ಭವನಗಳ ಕಾಮಗಾರಿ&lt;/strong&gt;&lt;/h2&gt;&lt;p&gt;ನಗರದ ವಾರ್ಡ್ ನಂ.2 ರಲ್ಲಿನ ಶಿವಬಸಪ್ಪ ಗದ್ದುಗೆ ದೇವಸ್ಥಾನದ ಹತ್ತಿರ ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹ 10 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹ 15 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಹಾಗೂ ದರ್ಗಾದ ಕರಿಸಿದ್ದೇಶ್ವರ ದೇವಸ್ಥಾನ ಹತ್ತಿರ 2025-26ನೇ ಸಾಲಿನ&zwnj; ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹ 70 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪ್ರತಿ ಭೂಮಿಪೂಜೆ ಬಳಿಕ ಸಾರ್ವಜನಿಕರ ಅಹವಾಲು ಆಲಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದಾಳಿಕೋರರ ಕೇಸ್&zwnj; ವಾಪಸ್ ಮೂಲಕ ಸರ್ಕಾರ ಯಾವ ಸಂದೇಶ ನೀಡುತ್ತಿದೆ: ಸಿ.ಟಿ.ರವಿ ಪ್ರಶ್ನೆ&lt;/strong&gt;&lt;/p&gt;&lt;p&gt;ಈ ವೇಳೆ ಪಾಲಿಕೆ ಮೇಯರ್&zwnj; ಎಂ.ಎಸ್.ಕರಡಿ, ಹಾಲುಮತ ಸಮಾಜದ ಅಧ್ಯಕ್ಷ ಮಲ್ಲು ಯಾದವಾಡ, ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ, ಮುಖಂಡರಾದ ಭೀಮನಗೌಡ ಪಾಟೀಲ, ಸಾಯಬಣ್ಣ ಭೋವಿ, ಶಂಕರ ಬಾಲದಂಡಿ, ಈರಣ್ಣ ವಾಡೆದ ಇತರರು ಉಪಸ್ಥಿತರಿದ್ದರು.&lt;/p&gt;&lt;p&gt;------------&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ರಾಜ್ಯದಲ್ಲಿ 20 ಹೊಸ ಜಿಟಿಟಿಸಿ ಕೇಂದ್ರ ಸ್ಥಾಪನೆ: ಸಚಿವ ಶರಣ ಪ್ರಕಾಶ್&zwnj; ಪಾಟೀಲ್&zwnj; ಘೋಷಣೆ&lt;/strong&gt;&lt;/p&gt;&lt;p&gt;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/vijayapura-mla-basanagouda-patil-performs-bhoomi-pooja-for-rs-95-lakh-development-works-mrq/articleshow-4g4gwaf"/>
        </item>
        <item>
            <title><![CDATA[ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು! ತಕರಾರಿನಲ್ಲಿದ್ದ ಜಮೀನು ಖರೀದಿ, ಒಂದೇ ಕುಟುಂಬದ 6 ಜನರ ಕೊಲೆ!]]></title>
            <link>https://kannada.asianetnews.com/crime/six-shot-dead-near-chadchan-vijayapur-over-property-dispute-rav/articleshow-4ww3b4w</link>
            <guid isPermaLink="true">https://kannada.asianetnews.com/crime/six-shot-dead-near-chadchan-vijayapur-over-property-dispute-rav/articleshow-4ww3b4w</guid>
            <pubDate>Sat, 30 May 2026 08:22:21 +0530</pubDate>
            <description><![CDATA[ವಿಜಯಪುರದ ಚಡಚಣ ತಾಲೂಕಿನ ಗೋವಿಂದಪುರದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಆರು ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 15 ವರ್ಷಗಳ ಹಿಂದಿನ ಹಗೆತನಕ್ಕೆ ಕಾರಣವಾಗಿದ್ದ ವಿವಾದಿತ ಜಮೀನನ್ನು ಖರೀದಿಸಿದ್ದೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvcm37hay5bqc9nd0fvvmxd,imgname-----------------------2026-05-30t081437.836-1780109413617.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಶಿಕಾಂತ ಮೆಂಡೆಗಾರ&lt;/strong&gt;&lt;/p&gt;&lt;p&gt;&lt;strong&gt;ವಿಜಯಪುರ (ಮೇ.30):&lt;/strong&gt; ಹೆಣ್ಣು, ಹೊನ್ನು, ಮಣ್ಣಿಗಾಗಿ ಹಗೆತನಕ್ಕೆ ಬಿದ್ದ ಅದೆಷ್ಟೋ ಪ್ರತಿಷ್ಠಿತ ಮನೆತನಗಳೇ ಮಣ್ಣಲ್ಲಿ ಮಣ್ಣಾಗಿ ಹೋಗಿವೆ. ಅದರಂತೆ ಜಮೀನಿನ ಬದುವೊಂದರ ವಿಚಾರವಾಗಿ ಕಳೆದ 4 ದಶಕಗಳ ಹಿಂದೆ ಭೀಮಾತೀರದಲ್ಲಿನ ಚಡಚಣದಲ್ಲಿ ಭೈರಗೊಂಡ-ಚಡಚಣ ಕುಟುಂಬಗಳ ಮದ್ಯೆ ಶುರುವಾಗಿದ್ದ ಹತ್ಯಾಕಾಂಡಗಳು ಸಾಲು, ಸಾಲು ಹೆಣಗಳು ಬಿದ್ದರೂ ಇನ್ನೂ ನಿಂತಿಲ್ಲ. ಈ ಎರಡು ಕುಟುಂಬಗಳ ಮಧ್ಯ ಶುರುವಾದ ವ್ಯಾಜ್ಯ ದಿನಗಳುರಿಳಿದಂತೆ ತಲೆಗಳುರುಳಿ ಅನೇಕ ಕುಟುಂಬಗಳ ಸಮಾಧಿಯನ್ನೇ ಕಟ್ಟಿವೆ. ಈ ಹಿಂದೆ ಅಲೋಕಕುಮಾರ ಅವರು ಉತ್ತರ ವಲಯ ಐಜಿಪಿ ಇದ್ದಾಗ ಇದೆಲ್ಲವೂ ಇಲ್ಲಿಗೆ ನಿಲ್ಲಬೇಕೆಂದು ಹಗೆತನದ ಕುಟುಂಬಳನ್ನೆಲ್ಲ ಒಂದುಗೂಡಿಸುವ ಪ್ರಯತ್ನ ಮಾಡಿದರೂ ಅಷ್ಟೆನೂ ಸಫಲತೆ ಕಂಡಿಲ್ಲ. ಆದರೆ, ಇಂದು ನಡೆದ ಭಯಾಕನ 6 ಜನರ ಹತ್ಯೆಯ ಘಟನೆ ಮತ್ತೆ ಭೀಮಾತೀರದ ಕ್ರೌರ್ಯ ಮೆರೆದಿದೆ.&lt;/p&gt;&lt;h2&gt;ಬೆಚ್ಚಿ ಬೀಳಿಸಿದ ಕೊಲೆ:&lt;/h2&gt;&lt;p&gt;ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಜಮೀನಿನಲ್ಲಿ ಭೀಕರ ಕೊಲೆ ನಡೆದಿದ್ದು, ಆರು ಜನರು ಕೊಲೆಯಾಗಿದ್ದಾರೆ. ದುಂಡಪ್ಪ ನಿರಾಳೆ (65), ಸಹೋದರರಾದ ಶಿವಪುತ್ರ ನಿರಾಳೆ (58), ಚಂದ್ರಕಾಂತ ನಿರಾಳೆ(55) ಶಿವಪುತ್ರನ ಮಕ್ಕಳಾದ ರಾಹುಲ ನಿರಾಳೆ(25), ಸಮರ್ಥ ನಿರಾಳೆ(23)ಶಿವರ ಸಹಚರ ಶಬ್ಬೀರ ಅತ್ತಾರ(45) ಕೊಲೆಯಾಗಿದ್ದಾರೆ. ಇವರ ಜೊತೆಯಲ್ಲಿದ್ದ ಅರವಿಂದ ಕಟಗೆ ಹಾಗೂ ಜೆಸಿಬಿ ಆಪರೇಟರ್ ಸಂದೀಪ ಮಾನೆ ಗಾಯಗೊಂಡಿದ್ದು, ವಿಜಯಪುರ ನಗರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.&lt;/p&gt;&lt;h3&gt;ಚಡಚಣ ಜಮೀನು ವಿವಾದ, ಕೊಲೆ ಘಟನೆ ಹಿನ್ನೆಲೆ:&lt;/h3&gt;&lt;p&gt;ಈ ಹಿಂದೆ 2015ರಲ್ಲಿ ಚಡಚಣ ತಾಲೂಕಿನ ಗೋವಿಂದಪುರದ ನಿವಾಸಿ ಶಿವಾನಂದ ತಳವಾರ ಎಂಬಾತ ತೇಲಿ ಮನೆತನದ ಹುಡುಗಿಯನ್ನು ಅಪಹರಿಸಿಕೊಂಡು ಹೋಗಿದ್ದ. ಇದರಿಂದ ಕುಪಿತಗೊಂಡ ತೇಲಿ ಮನೆತನದ ಶಶಿಕಾಂತ ತೇಲಿ, ಪ್ರಶಾಂತ ತೇಲಿ, ಕಾಮನಿಂಗ ತೇಲಿ, ಮಹಾದೇವ ತೇಲಿ ಸೇರಿಕೊಂಡು ಶಿವಾನಂದ ತಳವಾರ ಎಂಬಾತನನ್ನು ಕೊಲೆ ಮಾಡಿದ್ದು, ಜೈಲು ಶಿಕ್ಷೆಯನ್ನೂ ಅನುಭವಿಸಿದ್ದಾರೆ. ಈ ಸಮಯದಲ್ಲಿ ತೇಲಿ ಮನೆತನದವರು ಗೋವಿಂದಪೂರದಲ್ಲಿನ ಜಮೀನು ಬಿಟ್ಟು ಬೇರೆಡೆ ನೆಲೆಸಿದ್ದು, ಅಂದಿನಿಂದ ಈ ಜಮೀನು ಖಾಲಿ ಬಿದ್ದಿತ್ತು. ಸದರಿಯವರಿಗೆ ಸೇರಿದ ಜಮೀನು ಉಳಿಮೆ ಇಲ್ಲದೇ ಹಾಗೇ ಉಳಿದಿತ್ತು.&lt;/p&gt;&lt;p&gt;ಜಮೀನು ಖರೀದಿಸಿ ಕೊಲೆಯಾದರಾ?&lt;/p&gt;&lt;p&gt;ಕಳೆದ 15 ವರ್ಷಗಳ ಹಿಂದೆ ಹೆಣ್ಣೊಂದರ ವಿಚಾರದಲ್ಲಿ ತೇಲಿ ಹಾಗೂ ತಳವಾರ ಕುಟುಂಬಗಳ ಮಧ್ಯ ಮೂಡಿದ್ದ ವೈಷ್ಯಮ್ಯ ಇಂದು ಸ್ಫೋಟಗೊಂಡಿದೆ. ಜಮೀನಿನ ಕುರಿತು ತಕರಾರು ಇದೆಂದು ಹೇಳಿದ್ದರೂ ಅದೇ ಜಮೀನು ಖರೀದಿಸಿ ಉಳುಮೆಗೆ ಮುಂದಾಗಿದ್ದರಿಂದ ತಳವಾರ ಕುಟುಂಬದವರು ಕುಪಿತಗೊಂಡು ಅವರ ಕಡೆಯವರೇ ಕೊಲೆ ಮಾಡಿಸಿರಬಹುದು ಎಂದು ಶಂಕಿಸಲಾಗಿದೆ. 15 ವರ್ಷಗಳ ಹಿಂದೆ ನಡೆದ ಘಟನೆಯಿಂದ ಬೀಳು ಬಿದ್ದಿದ್ದ ಜಮೀನು ಖರೀದಿಸಿದ ನಿರಾಳೆ ಕುಟುಂದವರು ಉಸಿರು ಚೆಲ್ಲಿದ್ದಾರೆ. ಸುಮಾರು 15 ವರ್ಷಗಳಿಂದ ಉಳುಮೆ ಮಾಡದೆ ತಕರಾರಿನಲ್ಲೇ ಇದ್ದ ಈ 15 ಎಕರೆ ಜಮೀನನ್ನು ನಿರಾಳೆ ಕುಟುಂಬಸ್ಥರು ಖರೀದಿ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ತಕರಾರು ತೆಗೆದಿದ್ದ ಕುಟುಂಬಸ್ಥರೇ ಹಗೆತನ ಸಾಧಿಸಿ ಈ ಆರು ಜನರನ್ನು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಈಗಾಗಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳ ಬಂಧನವಾದ ಬಳಿಕಷ್ಟೆ ನಿಖರ ಮಾಹಿತಿ ದೊರೆಯಲಿದೆ.&lt;/p&gt;&lt;p&gt;ಪೊಲೀಸ್ ಬಂದೋಬಸ್ತ್: ಕೊಲೆಯಾದ ಘಟನಾ ಸ್ಥಳಕ್ಕೆ ಸೋಕೋ ತಂಡ, ಬೆರಳು ಮುದ್ರೆ ತಂಡ ಭೇಟಿ ನೀಡಿ, ಪರಿಶೀಲನೆ ಕೈಕೊಂಡಿದ್ಧಾರೆ. ಮುಂಜಾಗೃತಾ ಕ್ರಮವಾಗಿ ಪೊಲೀಸ್ ಹಿರಿಯ ಅಧಿಕಾರಿಗಳು, ಚಡಚಣ ಠಾಣೆ ಪೊಲೀಸರು ಹಾಗೂ ಮೂರು ಡಿಎಆರ್&zwnj; ತಂಡಗಳು ಹಾಗೂ 4 ಕೆಎಸ್&zwnj;ಆರ್&zwnj;ಪಿ ತಂಡಗಳನ್ನು ನಿಯೋಜಿಸಲಾಗಿದೆ.&lt;/p&gt;&lt;p&gt;ಪ್ರಾಥಮಿಕ ಮಾಹಿತಿಯಂತೆ ಸದರಿ ಘಟನೆಯಲ್ಲಿ ಈ ಹಿಂದೆ ನಡೆದ ಚಡಚಣ ಠಾಣೆಯ ಕ್ರೈಂ ಸಂಖ್ಯೆ: 156/2015 ಯು/ಎಸ್&zwnj; 302 ಐಪಿಸಿ ಪ್ರಕರಣದಲ್ಲಿನ ಗೋವಿಂದಪುರ ನಿವಾಸಿ, ದೂರುದಾರ ಕಲ್ಲನಗೌಡ ತಂ.ಈಶ್ವರಗೌಡ ಪಾಟೀಲನ ಈತನ ಕಡೆಯವರು ಇರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತು ತನಿಖೆ ಮುಂದುವರೆದಿದೆ.&lt;/p&gt;&lt;p&gt;-ಲಕ್ಷ್ಮಣ ನಿಂಬರಗಿ, ವಿಜಯಪುರ ಎಸ್ಪಿ.&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/crime/six-shot-dead-near-chadchan-vijayapur-over-property-dispute-rav/articleshow-4ww3b4w"/>
        </item>
        <item>
            <title><![CDATA[Vijayapur: ಅವೇಶದಿಂದ ತಂದೆಯ ಪೆಟ್ರೋಲ್ ಬಂಕ್ ನಾಶಗೊಳಿಸಿದ ಮಗ; ಎಲ್ಲಾ ಪೀಸ್ ಪೀಸ್]]></title>
            <link>https://kannada.asianetnews.com/karnataka-districts/vijayapur-son-destroyed-her-father-s-petrol-pump-in-a-fit-of-rage-nalatwad-muddebihal-mrq/articleshow-51262wa</link>
            <guid isPermaLink="true">https://kannada.asianetnews.com/karnataka-districts/vijayapur-son-destroyed-her-father-s-petrol-pump-in-a-fit-of-rage-nalatwad-muddebihal-mrq/articleshow-51262wa</guid>
            <pubDate>Thu, 21 May 2026 07:39:46 +0530</pubDate>
            <description><![CDATA[ನಾಲತವಾಡದಲ್ಲಿ ಮಾಲೀಕನ ಪುತ್ರನೇ ತನ್ನ ತಂದೆಯ ಪೆಟ್ರೋಲ್ ಬಂಕ್ ಅನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾನೆ. ಈ ಘಟನೆಯಿಂದಾಗಿ ಸ್ಥಳೀಯ ವಾಹನ ಸವಾರರು ಪೆಟ್ರೋಲ್, ಡೀಸೆಲ್&zwnj;ಗಾಗಿ ಪರದಾಡುವಂತಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks44q3h185h71vgnmp4tkce7,imgname-petrol-1779329371681.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ: &lt;/strong&gt;ಮಾಲೀಕನ ಪುತ್ರನೇ ಪೆಟ್ರೋಲ್ ಬಂಕ್&zwnj;ನ್ನು ಸಂಪೂರ್ಣ ನಾಶಗೊಳಿಸಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ. ಅತ್ತ ಘಟನೆ ಹಿನ್ನೆಲೆ ಸ್ಥಳೀಯ ವಾಹನ ಸವಾರರು ಪೆಟ್ರೋಲ್, ಡಿಸೇಲ್&zwnj;ಗೆ ಪರದಾಡುವಂತಾಗಿದೆ.&lt;/p&gt;&lt;p&gt;ಸಂಗಣ್ಣ ಸಂಗಮ ಅವರಿಗೆ ಸೇರಿದ ಪಟ್ಟಣದ ನಾರಾಯಣಪೂರ ರಸ್ತೆಯ ಪವಾಡ ಬಸವೇಶ್ವರ ಇಂಡಿಯಲ್ ಆಯಿಲ್ ಬಂಕ್&zwnj;ನಲ್ಲಿ ಪುತ್ರ ಮುತ್ತಣ್ಣ ಎಂಬುವನಿಂದಲೇ ಈ ಘಟನೆ ನಡೆದಿದೆ. ರಾತ್ರಿ ಏಕಾಏಕಿ ನುಗ್ಗಿ ತನ್ನ ಆವೇಶ ಪ್ರದರ್ಶಿಸಿದ ಬಂಕ್&zwnj;ನ ಪುತ್ರ, ತೈಲ ಸರಬರಾಜು ಮಾಡುವ ಪೆಟ್ರೋಲ್ ಇಂಜಿನ್, ಗನ್, ಕಚೇರಿಯ ದಾಖಲೆಗಳು, ಲ್ಯಾಪ್&zwnj;ಟ್ಯಾಪ್ ಹಾಗೂ ಸಿಸಿ ಕ್ಯಾಮರಾಗಳನ್ನು ಮನಬಂದಂತೆ ದ್ವಂಸಗೊಳಸಿದ್ದಲ್ಲದೇ ಅಲ್ಲಲ್ಲಿ ನಿಲ್ಲಿಸಲಾಗಿದ್ದ ಹಲವು ವಾಹನಗಳಿಗೂ ಹಾನಿ ಮಾಡಿದ್ದಾನೆ.&lt;/p&gt;&lt;p&gt;ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿದಂತೆ ಮುದ್ದೇಬಿಹಾಳ ಸಿಪಿಐ ಮಹ್ಮದ ಫಶೀವುದ್ದಿನ್ ಹಾಗೂ ಪಿಎಸ್&zwnj;ಐ ಸಂಜಯ ತಿಪ್ಪಾರಡ್ಡಿ ಬಂಕ್&zwnj;ನ ಧ್ವಂಸ ಸ್ಥಳಕ್ಕೆ ಭೇಟಿ ನೀಡಿ ಸಿಬ್ಬಂದಿ ವಿವರ ಪಡೆದುಕೊಂಡಿದ್ದು, ಘಟನೆ ನಡೆಸಿದ ಮುತ್ತಣ್ಣ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ತೈಲ ಭರಿಸಲು ಪರದಾಟ&lt;/strong&gt;&lt;/h2&gt;&lt;p&gt;ಪಟ್ಟಣದಲ್ಲಿ ಒಂದೇ ಬಂಕ್ ಇರುವ ಪರಿಣಾಮ ವಾಹನಗಳ ಮಾಲೀಕರು ದೂರದ ಹಿರೇಮುರಾಳ ಹಾಗೂ ನಾರಾಯಣಪೂರ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಸಂಪೂರ್ಣ ಹಾನಿಯಾದ ಹಿನ್ನೆಲೆ ಶೀಘ್ರವೇ ದುರಸ್ತಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಸದ್ಯ ಸ್ಥಳೀಯರೂ ಸೇರಿದಂತೆ ಸುತ್ತಲಿನ ಗ್ರಾಮದ ರೈತರು ಟ್ರ್ಯಾಕ್ಟರ್, ಟಂಟಂ ಬೈಕ್ ಹಾಗೂ ಲಾರಿಗಳಿಗೆ ತೈಲ ಭರಿಸಲು ಪರದಾಡುವಂತಾಗಿದೆ.&lt;/p&gt;&lt;p&gt;ಘಟನೆ ಗಮನಿಸಿದ ಸ್ಥಳೀಯ ಹಲವು ವ್ಯಾಪಾರಿಗಳು ಬೇರೆ ಕಡೆಯಿಂದ ಪೆಟ್ರೋಲ್-ಡಿಸೇಲ್ ತಂದು ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಬಂಕ್&zwnj;ನ ದರಕ್ಕಿಂತಲೂ ₹30ಗಳ ಹೆಚ್ಚಿಗೆ ಸುಲಿಗೆ ಮಾಡಿ ವಾಹನಗಳಿಗೆ ತೈಲ ಮಾರುತ್ತಿದ್ದು, ಈ ಮೊದಲೇ ಕಳೆದೆರಡು ದಿನಗಳಿಂದ ದುಬಾರಿಯಾಗಿದ್ದ ತೈಲ ದರ ಖಾಸಗಿ ಮಾರಾಟಗಾರರ ಹೆಚ್ಚಿನ ದರ ಬಿಗ್ ಶಾಕ್ ನೀಡಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಂಪಿಯ ಉತ್ಖನನದಲ್ಲಿ ಭಗ್ನಗೊಂಡ 2 ಆಳ್ವರ್&zwnj; ವಿಗ್ರಹ, ಮೂರು ಪ್ರತಿಷ್ಠಾನ ಪೀಠ ಪತ್ತೆ&lt;/strong&gt;&lt;/p&gt;&lt;h3&gt;&lt;strong&gt;ಶೀಘ್ರವೇ ದುರಸ್ತಿಗೊಳಿಸಿ ವಾಹನ ಮಾಲೀಕರ ಪರದಾಟ ತಪ್ಪಿಸಬೇಕು; ಒತ್ತಾಯ&lt;/strong&gt;&lt;/h3&gt;&lt;p&gt;ಸುಮಾರು ಜನಸಂಖ್ಯೆ ಹೊಂದಿರುವ ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಿಗೆ ಪೆಟ್ರೋಲ್ ಡಿಜೈಲ್ ಅವಶ್ಯಕತೆ ಇದೆ, ರೈತರಿಗೂ ಸಹ ತಮ್ಮ ವಾಹನಗಳಿಗೆ ನಿತ್ಯ ತೈಲದ ಅವಶ್ಯವಿದೆ. ಈಗಾಗಲೇ ತೈಲ ಖರೀದಿಗೆ ದೂರದ ಬಂಕ್&zwnj;ಗಳಿಗೆ ಮುಖ ಮಾಡಿದ್ದು, ಈ ಸಂಕಷ್ಟ ತಪ್ಪಿಸಲು ಸಂಬಂಧಿಸಿದ ಮಾಲೀಕರು ಹಾಗೂ ತೈಲ ಕಂಪನಿಯವರು ಶೀಘ್ರವೇ ದುರಸ್ತಿಗೊಳಿಸಿ ವಾಹನ ಮಾಲೀಕರ ಪರದಾಟ ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಶಾಲಾ ಮಕ್ಕಳಿಗೆ ಗುಡ್&zwnj;ನ್ಯೂಸ್&zwnj;: ಶಾಲಾರಂಭಕ್ಕೂ ಮುನ್ನವೇ ಕೈ ಸೇರಲಿವೆ ಪಠ್ಯಪುಸ್ತಕಗಳು!&lt;/strong&gt;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/vijayapur-son-destroyed-her-father-s-petrol-pump-in-a-fit-of-rage-nalatwad-muddebihal-mrq/articleshow-51262wa"/>
        </item>
        <item>
            <title><![CDATA[ಅಮೆರಿಕ ಒಪ್ಪಿಗೆ ಪಡೆದು ರಷ್ಯಾದಿಂದ ತೈಲ ಖರೀದಿ? ಮೋದಿ ವಿರುದ್ಧ ಎಂ.ಬಿ.ಪಾಟೀಲ ವಾಗ್ದಾಳಿ]]></title>
            <link>https://kannada.asianetnews.com/karnataka-districts/mb-patil-slams-modi-government-russia-oil-petrol-price-gvd/articleshow-546l174</link>
            <guid isPermaLink="true">https://kannada.asianetnews.com/karnataka-districts/mb-patil-slams-modi-government-russia-oil-petrol-price-gvd/articleshow-546l174</guid>
            <pubDate>Sun, 17 May 2026 00:27:59 +0530</pubDate>
            <description><![CDATA[&lt;p&gt;ಭಾರತ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದು ಸಂಕೇತವಾಗಿದೆ. ನಮ್ಮದು ಸ್ವತಂತ್ರ್ಯ ರಾಷ್ಟ್ರ. ಏನು ಮಾಡಬೇಕು ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ದೌರ್ಭಾಗ್ಯ ಎಂದು ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kgy42qmrkgmp4k79214j7f3e,imgname-----------------------2026-02-08t132518.821-1770537442968.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮೇ.17): &lt;/strong&gt;ಭಾರತ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದು ಸಂಕೇತವಾಗಿದೆ. ನಮ್ಮದು ಸ್ವತಂತ್ರ್ಯ ರಾಷ್ಟ್ರ. ಏನು ಮಾಡಬೇಕು ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ದೌರ್ಭಾಗ್ಯ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;&lt;p&gt;ರಷ್ಯಾದಿಂದ ತೈಲ ಖರೀದಿಗೆ ಅಮೆರಿಕಾದ ಒಪ್ಪಿಗೆ ಕೇಳುತ್ತಿರುವ ಪಿಎಂ ಮೋದಿ ಎಂಬ ಆರೋಪದ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುರಿತು ಇದೇ ಮೋದಿ ಅವರು ಸಿಎಂ ಆಗಿದ್ದಾಗ ಟೀಕೆ ಮಾಡುತ್ತಿದ್ದರು. ನೆಹರು, ಇಂದಿರಾ, ನರಸಿಂಹರಾಯರು ಮನಮೋಹನಸಿಂಗ್ ಅವರು ಭಾರತಕ್ಕೆ ಉತ್ತಮ ಆರ್ಥಿಕ ವ್ಯವಸ್ಥೆ ಮಾಡಿದ್ದರು. ಕಚ್ಚಾ ತೈಲದ ದರ ಏರಿದಾಗ ತೈಲ ಬೆಲೆ ಏರಬೇಕು, ಕಡಿಮೆಯಾದಾಗ ದರ ಇಳಿಯಬೇಕು. ಆದರೆ, ಬಿಜೆಪಿ ಕಾಲದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಿದ್ದಾಗ ತೈಲ ಬೆಲೆ ಏರಿಕೆಯಾಗಿದ್ದು ಯಾಕೆ? ಇವರು ಹಿಂದು ಮುಸಲ್ಮಾನ ಎಂದು ಮಾತನಾಡಿ ಬಾರಾಖೂನ್ ಮಾಫ್ ಮಾಡಿಕೊಂಡು ಹೊರಟಿದ್ದಾರೆ ಎಂದು ದೂರಿದರು.&lt;/p&gt;&lt;p&gt;ತೈಲಗಳ ಟ್ಯಾಕ್ಸ್&zwnj; ಅನ್ನು ಕೇಂದ್ರ ಕಡಿಮೆ ಮಾಡಿದೆ. ರಾಜ್ಯ ಸರ್ಕಾರವೂ ಕಡಿಮೆ ಮಾಡಬೇಕೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಚ್ಚಾತೈಲ ಬೆಲೆ ಕಡಿಮೆಯಿದ್ದಾಗ ಪೆಟ್ರೋಲ್ ಡಿಸೇಲ್ ಬೆಲೆ ಕಡಿಮೆ ಮಾಡಿಲ್ಲ. ಲಕ್ಷಾಂತರ ಕೋಟಿ ಹಣ ಸಂಗ್ರಹ ಮಾಡಿದ್ದಾರೆ. ₹56 ಲಕ್ಷ ಕೋಟಿ ಹಣ ದರ ಏರಿಕೆಯಿಂದ ಗಳಿಸಿದ್ದಾರೆಂದು ಸುರ್ಜೆವಾಲಾ ಹೇಳಿದ್ದಾರೆ. ಆ ಹಣ ಜನೋಪಯೋಗಿ ಕೆಲಸಕ್ಕೆ ಬಳಕೆ ಮಾಡಿದ್ದಾರಾ? ಪಾಕಿಸ್ತಾನ ಬಾಂಗ್ಲಾದೇಶ ಬರ್ಮಾದಲ್ಲಿ ತೈಲ ಬೆಲೆ ಕಡಿಮೆ ಇದ್ದಾಗ ನಮ್ಮಲ್ಲಿ ದರ ಹೆಚ್ಚಿತ್ತು. ಭಾರತದ ಜಿಡಿಪಿ ದರಕ್ಕಿಂತ ಬಾಂಗ್ಲಾದೇಶದ ಜಿಡಿಪಿ ದರ ಉತ್ತಮವಾಗಿದೆ. ನಾವೆಲ್ಲ ಅವರಿಗಿಂತ ಕಡೆಯಾಗಿದ್ದೇವೆ.&lt;/p&gt;&lt;p&gt;ಜನರನ್ನು ಮರಳು ಮಾಡುತ್ತಿದ್ದಾರೆ. ಕರೋನಾ ಬಂದಾಗ ತಮಟೆ ಬಡೆಯೋದಕ್ಕೆ ಹಚ್ಚಿದ್ದರು. ಮೇಲಾಗಿ ಮೋದಿ ಅವರು ವಿಶ್ವಗುರು ಎಂದು ಲೇವಡಿ ಮಾಡಿದರು. ಭ್ರಷ್ಟಾಚಾರದ ಬಗ್ಗೆ ಮೋದಿ ಮಾತನಾಡುತ್ತಾರೆ. ಆದರೆ, ಬೇರೆಯದ್ದೇ ಮಾಡುತ್ತಾರೆ. ಪಶ್ಚಿಮ ಬಂಗಾಳ, ಅಸ್ಸಾಂ ಸಿಎಂ ಬಗ್ಗೆ ಮೋದಿ ಹಿಂದೆ ಏನೆಲ್ಲಾ ಮಾತನಾಡಿದ್ದರು. ಅಶೊಕ ಚವ್ಹಾಣ, ಅಜೀತ್ ಪವಾರ ಬಗ್ಗೆ ಮೋದಿ ಏನೆಲ್ಲಾ ಮಾತನಾಡಿದ್ದರು. ಎಲ್ಲವನ್ನು ವಾಷಿಂಗ್ ಮಷೀನ್ ನಲ್ಲಿ ಹಾಕಿ ಶುಭ್ರ ಮಾಡುತ್ತಾರೆಂದು ಟಾಂಗ್ ಕೊಟ್ಟರು.&lt;/p&gt;&lt;h2&gt;&lt;strong&gt;ಇರಾನ್ ಜೊತೆಗೆ ನಮ್ಮ ಸಾಮ್ಯತೆಯಿತ್ತು&lt;/strong&gt;&lt;/h2&gt;&lt;p&gt;ಮನಮೋಹನಸಿಂಗ್ ಪ್ರಧಾನಿ ಇದ್ದಾಗ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು. ಪೆಟ್ರೋಲ್, ಡಿಸೇಲ್, ಅನಿಲ ಸಿಲೆಂಡರ್ ಹಾಗೂ ಅಡುಗೆ ಎಣ್ಣೆ ದರ ಕಡಿಮೆಯಿದ್ದವು. ಮೋದಿ ಅವರ ಅಧಿಕಾರದಲ್ಲಿ ಎಲ್ಲ ದರಗಳು ಏರಿಕೆಯಾಗಿವೆ. ಈಗ ಯುದ್ಧದ ನೆಪವಿದೆ, ಆದರೆ, ಯುದ್ದ ಆರಂಭವಾಗದ ಮುಂಚೆಯೇ ದರ ಏರಿಕೆಯಾಗಿದೆ. ವಿದೇಶಾಂಗ ನೀತಿ, ಮೋದಿ ಅವರ ವೈಯುಕ್ತಿಕ ನೀತಿಯಾಗಿದೆ. ನೆಹರು ಕಾಲದಿಂದ ವಾಜಪೇಯಿ ಅವರ ಕಾಲದ ವರೆಗೆ ಪ್ಯಾಲಿಸ್ತೇನ್, ಇರಾನ್ ಜೊತೆಗೆ ನಮ್ಮ ಸಾಮ್ಯತೆಯಿತ್ತು. ಪ್ರಧಾನಿ ಯಾವುದಾದರೂ ದೇಶಕ್ಕೆ ಹೋಗಿ ಏನೆನೋ ಮಾತನಾಡುತ್ತಾರೆ. ಮೋದಿ ಫಾದರ್ ಲ್ಯಾಂಡ್, ಮದರ್ ಲ್ಯಾಂಡ್ ಎಂದೆಲ್ಲ ಮಾತಾಡಿದರು. ಇರಾನ್ ಭಾರತ ಕುರಿತು ಗೌರವ ನೀಡಿದೆ. ಭಾರತದ ಬಗ್ಗೆ ಅಮೇರಿಕಾ ಮಾತನಾಡಿದಾಗ ಇರಾನ್ ಭಾರತದ ಪರ ಗೌರವದ ಮಾತನಾಡಿದೆ. ಇದೆಲ್ಲಾ ಮೋದಿ ಅವರಿಗೆ, ಅವರ ಅಂಧ ಭಕ್ತರಿಗೆ ಯಾವಾಗ ಗೊತ್ತಾಗುತ್ತದೆಯೋ ಎಂದು ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mb-patil-slams-modi-government-russia-oil-petrol-price-gvd/articleshow-546l174"/>
        </item>
        <item>
            <title><![CDATA[ಕರ್ನಾಟಕದಿಂದ ಸೋಲಾಪುರ ಮಾರ್ಗವಾಗಿ ಹೋಗುವ ಹಲವು ರೈಲು ಸಂಚಾರ ನಿರ್ಬಂಧ, ಜೂ. 5ರಿಂದ10ರವರೆಗೆ ಹಲವು ಟ್ರೈನ್ ರದ್ದು!]]></title>
            <link>https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep</link>
            <guid isPermaLink="true">https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep</guid>
            <pubDate>Fri, 05 Jun 2026 12:14:53 +0530</pubDate>
            <description><![CDATA[ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್&zwnj;ನಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಯಿಂದಾಗಿ ಕೇಂದ್ರ ರೈಲ್ವೆಯು ಜೂನ್ 5 ರಿಂದ 10 ರವರೆಗೆ ಹಲವು ರೈಲುಗಳ ಸಂಚಾರವನ್ನು ನಿರ್ಬಂಧಿಸಿದೆ. ಈ ಅವಧಿಯಲ್ಲಿ ಕೆಲವು ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ ಹಾಗೂ ಸೋಲಾಪುರ-ಕಲಬುರಗಿ ವಿಶೇಷ ರೈಲು ರದ್ದತಿಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks4rgymmydvxhdywfct5zw88,imgname-indian-railways--2--1779350141588.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್&zwnj;ನಲ್ಲಿ ಮೇಲ್ದರ್ಜೆ ಕಾಮಗಾರಿಗೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಇಂಟರ್&zwnj;ಲಾಕಿಂಗ್&zwnj;ನ್ನು ನಿಯೋಜಿಸಲು ಪೂರ್ವ-ಇಂಟರ್&zwnj;ಲಾಕಿಂಗ್ ಅಲ್ಲದ ಮತ್ತು ಇಂಟರ್&zwnj;ಲಾಕಿಂಗ್ ಅಲ್ಲದ ಕೆಲಸದಿಂದಾಗಿ ಜೂನ್ 5ರಿಂದ 10ರವರೆಗೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಹಲವು ರೈಲುಗಳ ಮೇಲೆ ಸಂಚಾರ ನಿರ್ಬಂಧ ವಿಧಿಸಿದೆ.&lt;/p&gt;&lt;h2&gt;ನಿಯಂತ್ರಣ ಯಾವ ರೈಲುಗಳ ಮೇಲೆ ?&lt;/h2&gt;&lt;p&gt;ಜೂನ್&zwnj; 5 ರಂದು ರೈಲು ಸಂಖ್ಯೆ 11311 ಸೋಲಾಪುರ-ಹಾಸನ ಎಕ್ಸ್&zwnj;ಪ್ರೆಸ್ ಹಾಗೂ ರೈಲು ಸಂಖ್ಯೆ 17308 ಬಾಗಲಕೋಟೆ- ಮೈಸೂರು ಬಸವಾ ಎಕ್ಸ್&zwnj;ಪ್ರೆಸ್ ಸಂಚಾರದ ಮೇಲೆ 45 ನಿಮಿಷಗಳ ನಿಯಂತ್ರಣವಿರಲಿದೆ. ಜೂ. 8 ರಂದು ರೈಲು ಸಂಖ್ಯೆ 18520 ಎಲ್&zwnj;ಟಿಟಿ ಮುಂಬೈ- ವಿಶಾಖಪಟ್ಟಣ ಎಕ್ಸ್&zwnj;ಪ್ರೆಸ್ಜೂ 2 ಗಂಟೆ, ರೈಲು ಸಂಖ್ಯೆ 01465 ಸೋಲಾಪುರ-ಕಲಬುರಗಿ ವಿಶೇಷ 1 ಗಂಟೆ 30 ನಿಮಿಷ, ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್&zwnj;ಪ್ರೆಸ್ 30 ನಿಮಿಷ, ರೈಲು ಸಂಖ್ಯೆ 11301 ಸಿಎಸ್&zwnj;ಎಂಟಿ ಮುಂಬೈ-ಕೆಎಸ್&zwnj;ಆರ್ ಬೆಂಗಳೂರು ಉದ್ಯಾನ ಎಕ್ಸ್&zwnj;ಪ್ರೆಸ್ 30 ನಿಮಿಷ ನಿಯಂತ್ರಣದಲ್ಲಿರಲಿವೆ.&lt;/p&gt;&lt;p&gt;ಜೂನ್&zwnj; 9 ರಂದು ರೈಲು ಸಂಖ್ಯೆ 16382 ಕನ್ಯಾಕುಮಾರಿ-ಪುಣೆ ಎಕ್ಸ್&zwnj;ಪ್ರೆಸ್ 1 ಗಂಟೆ 15 ನಿಮಿಷ, ರೈಲು ಸಂಖ್ಯೆ 11020 ಭುವನೇಶ್ವರ- ಸಿಎಸ್&zwnj;ಎಂಟಿ ಮುಂಬೈ ಎಕ್ಸ್&zwnj;ಪ್ರೆಸ್ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.&lt;/p&gt;&lt;h2&gt;ಕೆಲವು ರೈಲು ಮಾರ್ಗ ಬದಲಾವಣೆ:&lt;/h2&gt;&lt;p&gt;ರೈಲು ಸಂಖ್ಯೆ 57662 ವಿಜಯಪುರ-ರಾಯಚೂರು ಪ್ಯಾಸೆಂಜರ್ ಜೂ. 5 ರಿಂದ 10 ರ ವರೆಗೆ ವಿಜಯಪುರ-ಹೋಟ್ಗಿ-ವಾಡಿ ಮಾರ್ಗ, ರೈಲು ಸಂಖ್ಯೆ 57661 ರಾಯಚೂರು-ವಿಜಯಪುರ ಪ್ಯಾಸೆಂಜರ್ ವಾಡಿ-ಹೋಟ್ಗಿ-ವಿಜಯಪುರ ಮೂಲಕ ಮಾರ್ಗ ಬದಲಾವಣೆ ಮಾಡಲಾಗುತ್ತದೆ.&lt;/p&gt;&lt;p&gt;ಕೆಳಗಿನ ರೈಲುಗಳನ್ನು ನಿರ್ದಿಷ್ಟಪಡಿಸಿದಂತೆ ಮರುಹೊಂದಿಸಲಾಗುತ್ತದೆ. ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್&zwnj;ಪ್ರೆಸ್ ಜೂ. 10 ರಂದು 2 ಗಂಟೆ 20 ನಿಮಿಷಗಳ ಕಾಲ ಮತ್ತು ರೈಲು ಸಂಖ್ಯೆ 11301 ಸಿಎಸ್&zwnj;ಎಂಟಿ ಮುಂಬೈ-ಕೆಎಸ್&zwnj;ಆರ್ ಬೆಂಗಳೂರು ಉದ್ಯಾನ ಎಕ್ಸ್&zwnj;ಪ್ರೆಸ್ 2 ಗಂಟೆ 15 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.&lt;/p&gt;&lt;p&gt;ರೈಲು ಸಂಖ್ಯೆ 01465 ಸೋಲಾಪುರ- ಕಲಬುರಗಿ ಮತ್ತು ರೈಲು ಸಂಖ್ಯೆ 01466 ಕಲಬುರಗಿ- ಸೋಲಾಪುರ ಈ ರೈಲು ಜೂ. 10 ರಂದು ರದ್ದು ಮಾಡಲಾಗಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.&lt;/p&gt;]]></content:encoded>
            <category>vijayapura</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep"/>
        </item>
        <item>
            <title><![CDATA[ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!]]></title>
            <link>https://kannada.asianetnews.com/karnataka-districts/bhima-river-sand-mining-nexus-the-real-reason-behind-vijayapura-nirale-family-massacre-gdp-videoshow-8znxize</link>
            <guid isPermaLink="true">https://kannada.asianetnews.com/karnataka-districts/bhima-river-sand-mining-nexus-the-real-reason-behind-vijayapura-nirale-family-massacre-gdp-videoshow-8znxize</guid>
            <pubDate>Wed, 03 Jun 2026 10:58:23 +0530</pubDate>
            <description><![CDATA[ವಿಜಯಪುರದ ಭೀಮಾತೀರದಲ್ಲಿ ನಡೆದ ನಿರಾಳೆ ಕುಟುಂಬದ ಆರು ಜನರ ಹತ್ಯಾಕಾಂಡಕ್ಕೆ ಜಮೀನು ವ್ಯಾಜ್ಯ ಕಾರಣವೆಂದು ಭಾವಿಸಲಾಗಿತ್ತು. ಆದರೆ, ಈ ಕೊಲೆಗಳ ಹಿಂದೆ ಭೀಮಾ ನದಿಯ ಮರಳು ದಂಧೆಯ ಹಿಡಿತ ಸಾಧಿಸುವ ಕೋಟಿ ಕೋಟಿ ಹಣದ ದುರಾಸೆ ಇದೆ ಎಂಬ ಹೊಸ ಸತ್ಯ ಇದೀಗ ಚರ್ಚೆಯಾಗುತ್ತಿದೆ.]]></description>
            <media:content url="https://geo.dailymotion.com/player/x1tbu.html?video=xacvo3u" medium="video" height="768" width="1024"/>
            <content:encoded><![CDATA[&lt;p&gt;ವಿಜಯಪುರ ಜಿಲ್ಲೆಯಲ್ಲಿ ಜಮೀನು ವ್ಯಾಜ್ಯಕ್ಕೆ ಬರೊಬ್ಬರಿ ಅರ್ಧ ಡಜನ್&zwnj; ಹೆಣಬಿದ್ದಿದ್ದ ಕಥೆಯನ್ನ ನಾವು ಈ ಹಿಂದೆ ಹೇಳಿದ್ವಿ.. ಭೀಮಾತೀರದಲ್ಲಿ ನಡೆದಿದ್ದ ಹತ್ಯಾಕಾಂಡವನ್ನ ಕಂಡು ಆವತ್ತು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಚಡಚಣ ಪಟ್ಟಣದ ಪ್ರತಿಷ್ಟಿತ ನಿರಾಳೆ ಕುಟುಂಬದ ಸದಸ್ಯರನ್ನ ಅಟ್ಟಾಡಿಸಿ ಕೊಚ್ಚಿಹಾಕಿದ್ದ ಹಂತಕರು ಇವತ್ತು ಖಾಕಿ ಬಲೆಗೆ ಬಿದ್ದಿದ್ದಾರೆ. ಆದ್ರೆ 25 ಎಕರೆ ಜಮೀನಿಗೆ ಈ ಕೊಲೆಗಳು ನಡೆದಿದ್ವು ಅಂತ ಎಲ್ಲರೂ ಅಂದುಕೊಂಡಿದ್ರು.. ಆದ್ರೆ ಈಗ ಕೇಳಿ ಬರ್ತಿರೋ ಅದೊಂದು ಕಾರಣ ಮಾತ್ರ ಮತ್ತೆ ಭೀಮಾತೀರದ ಮಂದಿಯನ್ನ ಕಕ್ಕಾಬಿಕ್ಕಿಯಾಗೋ ಹಾಗೇ ಮಾಡಿದೆ. ಅಷ್ಟಕ್ಕೂ ಆ ಕಾರಣವೇನು..? ಭೀಮಾತೀರದ ಗ್ಯಾಂಗ್​ಸ್ಟರ್​​ಗಳ ಕಣ್ಣು ಕುಕ್ಕುತ್ತಿರುವ ಆ ಹೊಸ ದಂಧೆ ಯಾವುದು..? ನಿರಾಳೆ ಕುಟುಂಬದ ಸಾವುಗಳ ಹಿಂದಿನ ಅಸಲಿ ಕಥೆಯೇ ಇವತ್ತಿನ ಎಫ್​​.ಐ.ಆರ್&lt;/p&gt;&lt;p&gt;ಒಂದು ಜಮೀನಿಗಾಗಿ ಒಂದು ಇಡೀ ಕುಟುಂಬವನ್ನೆ ಮುಗಿಸಿದ್ರು ಅಂದ್ರೆ ಅದು ಸುಮ್ಮನೆನಾ? ಅಷ್ಟಕ್ಕು ೬ ಹೆಣಗಳನ್ನ ಕೆಡವುವಂತ ಕರಾಳತೆ ಆ ಜಮೀನಿನಲ್ಲಿ ಏನಿತ್ತು.? ಅನ್ನೋ ಪ್ರಶ್ನೆಗಳ ನಡುವೆಯೇ ಈಗ ಭೀಮಾತೀರದ ಜನ ಮರಳು ದಂಧೆಯ ವಾಸನೆ ಬರ್ತಿದೆ ಎನ್ತಿದ್ದಾರೆ. ಹಾಗಾದ್ರೆ ಏನದು ಮರಳು ದಂಧೆ..? ಒಂದು ಪ್ರತಿಷ್ಟಿತ ಮನೆತನದ ೬ ಜನರನ್ನ ಅನಾಯಾಸವಾಗಿ ಕೊಂದು ಹಾಕ್ತಾರೆ ಅಂದ್ರೆ ಇದರಲ್ಲೀ ಏನೋ ಮಸಲತ್ತಿದೆ ಅನ್ನೋದನ್ನ ಸಾಮಾನ್ಯರಿಗೂ ಅರ್ಥವಾಗುತ್ತೆ. ಭಯಾನಕ ಹತ್ಯೆಯ ಹಿಂದೆ ಹೆಣ್ಣು-ಮಣ್ಣು ಬಿಟ್ಟು ಮರಳು ದಂಧೆಯ ಒಡೆತನದ ಮಾತುಗಳು ಕೇಳಿ ಬರ್ತಿವೆ. ಹೌದು.. ಇದೇ ಭೀಮಾ ನದಿಯ ಮಹರಾಷ್ಟ್ರದ ಭಾಗದಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ.. ಆದ್ರೆ ಕರ್ನಾಟಕ ಭಾಗದಲ್ಲಿ ಇನ್ನೂ ಸಹ ಸರ್ಕಾರ ಒಪ್ಪಿಗೆ ನೀಡಿಲ್ಲ.. ಆದ್ರೆ ಇಲ್ಲಿ ಒಂದಿಲ್ಲೊಂದು ದಿನ ಗಣಿಗಾರಿಕೆ ನಡೆಯುತ್ತೆ ಅನ್ನೋದು ಭೀಮಾತೀರದ ಗ್ಯಾಂಗ್​​ಸ್ಟರ್​ಗಳ ನಂಬಿಕೆ.. ಹೀಗಾಗೇ ಕೋಟಿ ಕೋಟಿ ಹಣದ ದುರಾಸೆಯೆ ಈ ದುರಂತಕ್ಕೆ ಕಾರಣ ಅಂತಾ ಭೀಮಾತೀರದ ಮಂದಿ ಮಾತನಾಡ್ತಿದ್ದಾರೆ&lt;/p&gt;]]></content:encoded>
            <category>vijayapura</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bhima-river-sand-mining-nexus-the-real-reason-behind-vijayapura-nirale-family-massacre-gdp-videoshow-8znxize"/>
        </item>
        <item>
            <title><![CDATA[ಸಿದ್ಧೇಶ್ವರ ಸ್ವಾಮೀಜಿಗಳ ಆಶಯದಂತೆ ಕೆಲಸ ಮಾಡುವೆ: ಸಚಿವ ಎಂ.ಬಿ.ಪಾಟೀಲ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/mb-patil-visits-siddheshwar-swamiji-ashram-vijayapura-gvd/articleshow-chx79ep</link>
            <guid isPermaLink="true">https://kannada.asianetnews.com/karnataka-districts/mb-patil-visits-siddheshwar-swamiji-ashram-vijayapura-gvd/articleshow-chx79ep</guid>
            <pubDate>Sun, 07 Jun 2026 00:27:36 +0530</pubDate>
            <description><![CDATA[&lt;p&gt;ನನ್ನ ಜೀವನವಿಡೀ ಸಿದ್ಧೇಶ್ವರ ಸ್ವಾಮೀಜಿಗಳ ಆಶಯದಂತೆ ಕೆಲಸ ಮಾಡುತ್ತೇನೆ. ಸಿದ್ಧೇಶ್ವರ ಸ್ವಾಮೀಜಿ ಆಶೀರ್ವಾದದಿಂದ ಜನಸೇವೆ, ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ ಎಂದು ಬೃಹತ್&zwnj; ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktf0n3y3xhwft20p9a2d9gvd,imgname-hh-1780767952835.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಜೂ.07): &lt;/strong&gt;ನನ್ನ ಜೀವನವಿಡೀ ಸಿದ್ಧೇಶ್ವರ ಸ್ವಾಮೀಜಿಗಳ ಆಶಯದಂತೆ ಕೆಲಸ ಮಾಡುತ್ತೇನೆ. ಸಿದ್ಧೇಶ್ವರ ಸ್ವಾಮೀಜಿ ಆಶೀರ್ವಾದದಿಂದ ಜನಸೇವೆ, ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಅವರ ಕಿವಿಮಾತು ಚಾಚೂ ತಪ್ಪದೆ ಪಾಲಿಸುತ್ತ ರಾಜ್ಯದ ಅಭಿವೃದ್ಧಿಗೆ ಸಮಯ ಮೀಸಲಿಟ್ಡಿದ್ದೇನೆ. ಶ್ರೀಗಳ ಆಶೀರ್ವಾದ ನನಗೆ ಕಾಯಕ ಮಾಡಲು ಸ್ಫೂರ್ತಿಯಾಗಿದ್ದು, ಈಗ ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ನನಗೆ ಸಂತೃಪ್ತಿ ಇದೆ ಎಂದು ಬೃಹತ್&zwnj; ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;&lt;p&gt;ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ&zwnj; ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ&zwnj;ರು ನೇರವಾಗಿ ನಗರದ ಸಿದ್ಧೇಶ್ವರ ಸ್ವಾಮೀಜಿಗಳ ಜ್ಞಾನಯೋಗಾಶ್ರಮಕ್ಕೆ ತೆರಳಿ ಪೂಜೆ ಸಲ್ಲಿಸಿ ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ಮಾತನಾಡಿದರು. ಜ್ಞಾನಯೋಗಾಶ್ರಮದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸಚಿವರನ್ನು ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸಿದ್ಧೇಶ್ವರ ಸ್ವಾಮೀಜಿಯವರು ರಚಿಸಿದ ಮೊದಲ ಕೃತಿ&zwnj; ವಚನ ಚಿಂತನ ನೀಡಿ ಆಶೀರ್ವದಿಸಿದ ಬಸವಲಿಂಗ ಸ್ವಾಮೀಜಿ, 21 ವರ್ಷಗಳ ಹಿಂದೆ ಸಿದ್ಧೇಶ್ವರ ಸ್ವಾಮೀಜಿಗಳು ಇದೇ ದಿನದಂದು 9 ಜನರಿಗೆ ಸನ್ಯಾಸ ದೀಕ್ಷೆ ನೀಡಿದ್ದರು. ಇದೇ ದಿನ ಸಚಿವರು ಆಶ್ರಮಕ್ಕೆ ಭೇಟಿ ನೀಡಿದ ಯೋಗಾಯೋಗ ಬಂದಿದೆ.&lt;/p&gt;&lt;p&gt;ನನ್ನ ಜೀವಮಾನದಲ್ಲಿ ಬೇಸಿಗೆಯಲ್ಲೂ ಹಳ್ಳಗಳು ತುಂಬಿ ಹರಿಯುತ್ತಿರುವುದನ್ನು ಕಂಡು ಸಂತಸವಾಗಿದೆ. ಇದಕ್ಕೆ ಸಚಿವ ಎಂ.ಬಿ. ಪಾಟೀಲ ಅವರು ಕೈಗೊಂಡಿರುವ ನೀರಾವರಿ ಯೋಜನೆಗಳು ಕಾರಣವಾಗಿವೆ. ಸಚಿವರು ಸಿದ್ಧೇಶ್ವರ ಸ್ವಾಮೀಜಿಗಳ ಮಾತನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಅಪ್ಪಟ ಭಕ್ತರಾಗಿದ್ದಾರೆ. ಶ್ರೀಗಳು ಹೇಳಿದಂತೆ ಎಂ.ಬಿ. ಪಾಟೀಲರು ಜನಮನದಲ್ಲಿ ಯಾವಾಗಲೂ ಜಲಸಂಪನ್ಮೂಲ ಸಚಿವರಾಗಿ ಉಳಿದಿದ್ದಾರೆ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ವ್ಯಕ್ತಿತ್ವ ಅವರಾಗಿದ್ದು, ಇನ್ನೂ ಉನ್ನತ ಸ್ಥಾನಕ್ಕೇರಲಿ ಎಂದು ಹಾರೈಸಿದರು.&lt;/p&gt;&lt;p&gt;ಅಮೃತಾನಂದ ಸ್ವಾಮೀಜಿ ಬಾಲಗಾಂವ, ಹರ್ಷಾನಂದ ಸ್ವಾಮೀಜಿ, ಪ್ರಸಾದ ಸ್ವಾಮೀಜಿ, ಜಗನು ಮಹಾರಾಜ, ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮುಖಂಡರಾದ ಸಂಗು ಸಜ್ಜನ, ವಿ.ಸಿ.ನಾಗಠಾಣ, ಮಲ್ಲಿಕಾರ್ಜುನ ಹಳ್ಳದ, ಪಿ.ಎಸ್. ಬಿರಾದಾರ, ಘನಶ್ಯಾಮ ತೋಶ್ನಿವಾಲ, ಶಿವಾನಂದ ಸಂಖ, ವಿಠ್ಠಲಗೌಡ ಬಿರಾದಾರ ಇತರರು ಉಪಸ್ಥಿತರಿದ್ದರು. ನಂತರ ಸಚಿವರು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಆವರಣದಲ್ಲಿರುವ ಸಂಸ್ಥೆಯ ದಿ. ಶ್ರೀ ಬಿ. ಎಂ. ಪಾಟೀಲ, ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಸಮಾದಿ, ಬಂಥನಾಳ ಶಿವಯೋಗಿಗಳ ದೇವಸ್ಥಾನ ಹಾಗೂ 770 ಅಮರಗಣಂಗಳ ಲಿಂಗದ ಗುಡಿಗೆ ತೆರಳಿ ನಮನ ಸಲ್ಲಿಸಿದರು.&lt;/p&gt;&lt;h2&gt;&lt;strong&gt;ಆಶೀರ್ವಾದ ಪಡೆದು ಧನ್ಯನಾಗಿದ್ದೇನೆ&lt;/strong&gt;&lt;/h2&gt;&lt;p&gt;ಸಾರ್ವಜನಿಕ ಜೀವನದಲ್ಲಿ ಸದಾ ನನ್ನ ಬೆನ್ನುತಟ್ಟಿ ಪ್ರೋತ್ಸಾಹಿಸುತ್ತ, ಮಾರ್ಗದರ್ಶನ ನೀಡಿದ ಮಹಾನ್ ಸಂತ, ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಗಳು ನಡೆದಾಡಿದ ಪುಣ್ಯಭೂಮಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗುರುಗಳ ಆಶೀರ್ವಾದ ಪಡೆದು ಧನ್ಯನಾಗಿದ್ದೇನೆ. ಬೆಂಗಳೂರಿನಿಂದ ಬಂದು ನೇರವಾಗಿ ಆಶ್ರಮಕ್ಕೆ ಮೊದಲ ಭೇಟಿ ನೀಡಿದ್ದೇನೆ. ಶ್ರೀಗಳು ಮತ್ತು ಬಸವಾದಿ ಶರಣರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಜೀವನಪೂರ್ತಿ ಶ್ರೀಗಳ ಆಶಯದಂತೆ ನಡೆಯುತ್ತೇನೆ.-ಎಂ.ಬಿ. ಪಾಟೀಲ ಬೃಹತ್&zwnj; ಮತ್ತು ಮಧ್ಯಮ ಕೈಗಾರಿಕೆ ಸಚಿವರು&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mb-patil-visits-siddheshwar-swamiji-ashram-vijayapura-gvd/articleshow-chx79ep"/>
        </item>
        <item>
            <title><![CDATA[ಗಮನಿಸಿ, ಮೇ 20 ರಿಂದ ಜೂನ್ 2ರವರೆಗೆ ಮಂಗಳೂರಿನಿಂದ ಹೊರಡುವ ಎಲ್ಲಾ ರೈಲುಗಳ ಸಂಚಾರ ಮಾರ್ಗದಲ್ಲಿ ಭಾರೀ ಬದಲಾವಣೆ!]]></title>
            <link>https://kannada.asianetnews.com/state/mangaluru-train-service-changes-and-diversions-important-update-for-passengers-gdp/articleshow-crgr4np</link>
            <guid isPermaLink="true">https://kannada.asianetnews.com/state/mangaluru-train-service-changes-and-diversions-important-update-for-passengers-gdp/articleshow-crgr4np</guid>
            <pubDate>Tue, 19 May 2026 14:30:18 +0530</pubDate>
            <description><![CDATA[ನೈಋತ್ಯ ರೈಲ್ವೆಯ ತಿರುವನಂತಪುರಂ ವಿಭಾಗದಲ್ಲಿ ಹಳಿ ನಿರ್ವಹಣೆ ಹಿನ್ನೆಲೆ, ಹಲವು ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳೂರು-ವಿಜಯಪುರ ಎಕ್ಸ್&zwnj;ಪ್ರೆಸ್ ಭಾಗಶಃ ರದ್ದಾಗಿದ್ದು, ಅಂತ್ಯೋದಯ ಮತ್ತು ಮಾವೇಲಿ ಎಕ್ಸ್&zwnj;ಪ್ರೆಸ್ ಸೇರಿದಂತೆ ಇತರ ರೈಲುಗಳನ್ನು ಬೇರೆ ಮಾರ್ಗದಲ್ಲಿ ಓಡಿಸಲಾಗುವುದು ಅಥವಾ ನಿರ್ಬಂಧಿಸಲಾಗುವುದು.]]></description>
            <media:content url="https://static.asianetnews.com/images/w-1280,h-720,format-jpg,imgid-01krz88fbv14wssd5ty2r0k3xs,imgname-2-1779165314427.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ನೈಋತ್ಯ ರೈಲ್ವೆಯ ತಿರುವನಂತಪುರಂ ವಿಭಾಗದಲ್ಲಿ ವಿವಿಧ ದಿನಗಳಲ್ಲಿ ಹಳಿ ನಿರ್ವಹಣಾ ಕಾರ್ಯಗಳಿಗೆ ಅನುಕೂಲವಾಗುವಂತೆ, ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್&zwnj;ನಿಂದ ಮೇ 20ರಂದು ಹೊರಡುವ ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ - ವಿಜಯಪುರ ಎಕ್ಸ್&zwnj;ಪ್ರೆಸ್ ಪ್ರಯಾಣವನ್ನು ಬಾಗಲಕೋಟೆಯಲ್ಲಿ ಅಲ್ಪಾವಧಿಗೆ ಸ್ಥಗಿತಗೊಳಿಸಲಾಗುವುದು. ಈ ರೈಲು ಸೇವೆಯನ್ನು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.&lt;/p&gt;&lt;h2&gt;ವಿಜಯಪುರ ಮತ್ತು ಬಾಗಲಕೋಟೆ ನಡುವೆ ಭಾಗಶಃ ರದ್ದು&lt;/h2&gt;&lt;p&gt;ಮೇ 21 ರಂದು ವಿಜಯಪುರದಿಂದ ಹೊರಡುವ ರೈಲು ಸಂಖ್ಯೆ 17377 ವಿಜಯಪುರ - ಮಂಗಳೂರು ಸೆಂಟ್ರಲ್ ಎಕ್ಸ್&zwnj;ಪ್ರೆಸ್ ಪ್ರಯಾಣವು ಸಂಜೆ 5ಗಂಟೆಗೆ ಬಾಗಲಕೋಟೆಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ಈ ರೈಲು ಸೇವೆಯನ್ನು ವಿಜಯಪುರ ಮತ್ತು ಬಾಗಲಕೋಟೆ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.&lt;/p&gt;&lt;p&gt;ತಿರುವನಂತಪುರಂ ಉತ್ತರದಿಂದ ಮೇ 28 ಮತ್ತು 30ರಂದು ಹೊರಡುವ ರೈಲು ಸಂಖ್ಯೆ 16355 ತಿರುವನಂತಪುರಂ ಉತ್ತರ - ಮಂಗಳೂರು ಜಂಕ್ಷನ್ ಅಂತ್ಯೋದಯ ಎಕ್ಸ್&zwnj;ಪ್ರೆಸ್ ಅನ್ನು ಆಲಪ್ಪುಳ ಮತ್ತು ಎರ್ನಾಕುಲಂ ಜಂಕ್ಷನ್&zwnj;ನಲ್ಲಿ ನಿಲುಗಡೆಗಳನ್ನು ಬಿಟ್ಟು ಕೊಟ್ಟಾಯಂ ಮೂಲಕ ಓಡಿಸಲಾಗುತ್ತದೆ. ಚೆಂಗನ್ನೂರು, ಕೊಟ್ಟಾಯಂ ಮತ್ತು ಎರ್ನಾಕುಲಂ ಪಟ್ಟಣದಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ.&lt;/p&gt;&lt;h2&gt;ಮಾವೇಲಿ ಎಕ್ಸ್&zwnj;ಪ್ರೆಸ್ ರೈಲು&lt;/h2&gt;&lt;p&gt;ಮೇ 29 ರಂದು ಹೊರಡುವ ಮಂಗಳೂರು ಸೆಂಟ್ರಲ್ - ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್&zwnj;ಪ್ರೆಸ್ ರೈಲು, ಆಲಪ್ಪುಳ, ಅಂಬಲಪ್ಪುಳ ಮತ್ತು ಹರಿಪಾಡ್&zwnj;ನಲ್ಲಿ ನಿಲುಗಡೆಗಳನ್ನು ಬಿಟ್ಟು ಕೊಟ್ಟಾಯಂ ಮೂಲಕ ಓಡಿಸಲಾಗುತ್ತದೆ. ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಶ್ಶೇರಿ, ತಿರುವಲ್ಲಾ ಮತ್ತು ಚೆಂಗನ್ನೂರ್&zwnj;ನಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ.&lt;/p&gt;&lt;p&gt;ಮೇ 29 ರಂದು ಹೊರಡುವ ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಿಂದ ವಾರಕ್ಕೆ ಎರಡು ಬಾರಿ ಪ್ರಯಾಣಿಸುವ ರೈಲು ಸಂಖ್ಯೆ 22207 ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಸೂಪರ್&zwnj;ಫಾಸ್ಟ್ ಎಕ್ಸ್&zwnj;ಪ್ರೆಸ್ ಅನ್ನು ಎರ್ನಾಕುಲಂ ಜಂಕ್ಷನ್ ಮತ್ತು ಆಲಪ್ಪುಳದಲ್ಲಿ ನಿಲುಗಡೆಗಳನ್ನು ಬಿಟ್ಟು ಕೊಟ್ಟಾಯಂ ಮೂಲಕ ಓಡಿಸಲಾಗುತ್ತದೆ. ಎರ್ನಾಕುಲಂ ಟೌನ್, ಕೊಟ್ಟಾಯಂ ಮತ್ತು ಚೆಂಗನ್ನೂರಿನಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ.&lt;/p&gt;&lt;h2&gt;40 ನಿಮಿಷಗಳ ಕಾಲ ನಿರ್ಬಂಧ&lt;/h2&gt;&lt;p&gt;ಮಂಗಳೂರು ಸೆಂಟ್ರಲ್ ನಿಂದ ಮೇ 27, 28, 30 ಮತ್ತು ಜೂನ್ 1, 2ರಂದು ಹೊರಡುವ ರೈಲು ಸಂಖ್ಯೆ 16603 ಮಂಗಳೂರು ಸೆಂಟ್ರಲ್ - ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್&zwnj;ಪ್ರೆಸ್, ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿರ್ಬಂಧಿಸಲಾಗುತ್ತದೆ.&lt;/p&gt;&lt;p&gt;ರೈಲು ಸಂಖ್ಯೆ 16356 ಮಂಗಳೂರು ಜಂಕ್ಷನ್ - ತಿರುವನಂತಪುರಂ ಉತ್ತರ ಎರಡು ವಾರಗಳ ಅಂತ್ಯೋದಯ ಎಕ್ಸ್&zwnj;ಪ್ರೆಸ್, ಮೇ 29ರಂದು ಮಂಗಳೂರು ಜಂಕ್ಷನ್&zwnj;ನಿಂದ ಪ್ರಾರಂಭವಾಗಲಿದ್ದು, ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿರ್ಬಂಧಿಸಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.&lt;/p&gt;]]></content:encoded>
            <category>vijayapura</category>
            <dc:creator>Gowthami K</dc:creator>
            <atom:link href="https://kannada.asianetnews.com/state/mangaluru-train-service-changes-and-diversions-important-update-for-passengers-gdp/articleshow-crgr4np"/>
        </item>
        <item>
            <title><![CDATA[ಸಿಂದಗಿ-ಇಂಡಿ-ಲಚ್ಯಾಣ-ಸೋಲಾಪುರಕ್ಕೆ ಕೊನೆಗೂ ಆರಂಭವಾದ ಬಸ್; ಯಶವಂತಗೌಡ ಪಾಟೀಲರು ಚಾಲನೆ]]></title>
            <link>https://kannada.asianetnews.com/karnataka-districts/sindagi-indi-lachyana-solapur-bus-service-finally-started-mla-yashwanth-gowda-patil-green-flag-mrq/articleshow-e2ii24d</link>
            <guid isPermaLink="true">https://kannada.asianetnews.com/karnataka-districts/sindagi-indi-lachyana-solapur-bus-service-finally-started-mla-yashwanth-gowda-patil-green-flag-mrq/articleshow-e2ii24d</guid>
            <pubDate>Sat, 23 May 2026 05:08:05 +0530</pubDate>
            <description><![CDATA[&lt;p&gt;ಇಂಡಿ ತಾಲೂಕಿನ ಲಚ್ಯಾಣ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಸಿಂದಗಿ-ಇಂಡಿ-ಲಚ್ಯಾಣ ಮೂಲಕ ಸೋಲಾಪುರಕ್ಕೆ ಹೋಗುವ ಹೊಸ ಬಸ್ ಸೇವೆಗೆ ಶಾಸಕ ಯಶವಂತಗೌಡ ಪಾಟೀಲರು ಚಾಲನೆ ನೀಡಿದರು. ಈ ಬಸ್ಸು ಸಿದ್ದಲಿಂಗೇಶ್ವರ ಭಕ್ತರಿಗೆ, ವ್ಯಾಪಾರಸ್ಥರಿಗೆ ಮತ್ತು ನೌಕರರಿಗೆ ಅನುಕೂಲವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks90kzg9qy27rw18j6s0nr2h,imgname-indi-solapur-bus-1779492847113.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ:&lt;/strong&gt; ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಿದ್ದಲಿಂಗೇಶ್ವರ ಭಕ್ತರ ವ್ಯಾಪಾರಸ್ಥರ ನೌಕರರ ಬಹುದಿನಗಳ ಬೇಡಿಕೆಗೆ ಶಾಸಕ ಯಶವಂತಗೌಡ ಪಾಟೀಲರು ಸ್ಪಂದಿಸಿ ಸಿಂದಗಿಯಿಂದ ಇಂಡಿ ಲಚ್ಯಾಣ ಮೂಲಕ ಸೋಲಾಪುರಕ್ಕೆ ಹೋಗುವ ಬಸ್ಸಿಗೆ ಚಾಲನೆ ನೀಡಿದರು.&lt;/p&gt;&lt;h2&gt;&lt;strong&gt;ಬಸ್ ಸಮಯ&lt;/strong&gt;&lt;/h2&gt;&lt;p&gt;ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ, ಸೋಲಾಪುರ ಮತ್ತು ಮಹಾರಾಷ್ಟ್ರದ ವಿವಿಧ ಕಡೆಯಿಂದ ಬರುವ ಭಕ್ತರಿಗೆ ಈ ಬಸ್ಸು ಅನುಕೂಲವಾಗುತ್ತದೆ. ಸಿಂದಗಿಯಿಂದ ಮಧ್ಯಾಹ್ನ 2 ಗಂಟೆಗೆ ಬಿಟ್ಟು, ಇಂಡಿಯಿಂದ 3.45ಕ್ಕೆ ಬಿಡುವ ಬಸ್ಸು ಲಚ್ಯಾಣ 4 ಗಂಟೆಗೆ, ಅಹಿರಸಂಗ, ಭೈರುಣಗಿ, ಭತಗುಣಕಿ, ಹಲಸಂಗಿ, ಧೂಳಖೇಡ ಮಾರ್ಗವಾಗಿ ಸೋಲಾಪುರ ತಲುಪುವದು. ಸೋಲಾಪುರದಿಂದ ಸಂಜೆ 7 ಗಂಟೆಗೆ ಬಿಡುವ ಬಸ್ಸು ಇದೇ ಮಾರ್ಗದಲ್ಲಿ ಇಂಡಿಯಿಂದ ಸಿಂದಗಿ ಹೋಗಲಿದೆ ಎಂದು ಮಾಹಿತಿ ನೀಡಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿ ಕಂದಾಯ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ಮಹಾದೇವಪ್ಪ ಏವೂರ, ಘಟಕ ವ್ಯವಸ್ಥಾಪಕ ನಡುವಿನಮನಿ ಮತ್ತಿತರಿದ್ದರು.&lt;/p&gt;]]></content:encoded>
            <category>vijayapura</category>
            <dc:creator>Asianetnews Kannada Stories</dc:creator>
            <atom:link href="https://kannada.asianetnews.com/karnataka-districts/sindagi-indi-lachyana-solapur-bus-service-finally-started-mla-yashwanth-gowda-patil-green-flag-mrq/articleshow-e2ii24d"/>
        </item>
        <item>
            <title><![CDATA[Sadhana samavesha: 3 ವರ್ಷಗಳ ಸಾಧನೆಯಲ್ಲ, 300 ವೈಫಲ್ಯಗಳ ಸಾಧನೆ: ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ]]></title>
            <link>https://kannada.asianetnews.com/politics/mp-ramesh-jigajinagi-criticized-on-congress-govt-sadhana-convention-rav/articleshow-grxk1b3</link>
            <guid isPermaLink="true">https://kannada.asianetnews.com/politics/mp-ramesh-jigajinagi-criticized-on-congress-govt-sadhana-convention-rav/articleshow-grxk1b3</guid>
            <pubDate>Wed, 20 May 2026 08:30:18 +0530</pubDate>
            <description><![CDATA[&lt;p&gt;ಸಂಸದ ರಮೇಶ ಜಿಗಜಿಣಗಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತವನ್ನು ಸಾಧನೆಯಲ್ಲ, ಬದಲಿಗೆ 300 ವೈಫಲ್ಯಗಳ ಸರಮಾಲೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳು, ಭ್ರಷ್ಟಾಚಾರ, ಮತ್ತು ಮಹಿಳೆಯರ ಅಸುರಕ್ಷತೆಯಂತಹ ವಿಷಯಗಳ ಬಗ್ಗೆ ಅವರು ತೀವ್ರ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-a5ddb568-95ff-4b20-9dfd-fa87a4de8ad6,imgname-image.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮೇ.20) &lt;/strong&gt;ರಾಜ್ಯ ಕಾಂಗ್ರೆಸ್ ಸರ್ಕಾರದ್ದು ಮೂರು ವರ್ಷಗಳ ಸಾಧನೆಯಲ್ಲ. ಅದು 300 ವೈಫಲ್ಯಗಳ ಸಾಧನೆಯಾಗಿದೆ. ಇವರ ಸರ್ಕಾರದಲ್ಲಿನ 300 ವೈಫಲ್ಯಗಳ ಸರಮಾಲೆಯನ್ನೇ ಪೋಣಿಸಿ ನಾನು ಸಿಎಂ ಸಿದ್ರಾಮಣ್ಣನ ಕೊರಳಿಗೆ ಹಾರ ಹಾಕುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ವ್ಯಂಗ್ಯವಾಡಿದರು.&lt;/p&gt;&lt;p&gt;ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ವರ್ಷಗಳಲ್ಲಿ ಅವರು ಏನು ಸಾಧನೆ ಮಾಡಿದ್ದಾರೆ? ಒಂದೆಡೆ ಮಹಿಳೆಯರಿಗೆ ಗ್ಯಾರಂಟಿ ಕೊಟ್ಟು, ಅವರ ಗಂಡಂದಿರ ಜೇಬಿನಿಂದ ಕಿತ್ತುಕೊಂಡಿದ್ದಾರೆ. ನಿಮಗೆ ನಿಭಾಯಿಸುವ ತಾಕತ್ ಇದ್ದರೆ ಗ್ಯಾರಂಟಿ ಕೊಡಬೇಕು. ತಾಕತ್ ಇಲ್ಲದಿದ್ದರೆ ಮಾಡಬಾರದು. ಇವರ ಸರ್ಕಾರದಲ್ಲಿ ಬರಿ ಭ್ರಷ್ಟಾಚಾರವೇ ತುಂಬಿ ತುಳುಕುತ್ತಿದೆ ಎಂದು ದೂರಿದರು. ಜಗತ್ತಿನಲ್ಲಿ ಈಗ ಯುದ್ಧ ಆರಂಭವಾಗಿದ್ದು, ಅದರಿಂದ ಕೆಲ ಸಮಸ್ಯೆಗಳು ಎದುರಾಗಿವೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಜನತೆ ಇತಿಹಾಸವನ್ನೇ ನಿರ್ಮಿಸಿದರು, ಇದೆಲ್ಲ ಮೋದಿ ಅವರ ಅಭಿವೃದ್ಧಿಯಿಂದ ಸಾಧ್ಯವಾಗಿದೆ ಎಂದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ಕಾಸುಗೌಡ ಬಿರಾದಾರ, ಸಂಜೀವ ಐಹೊಳೆ, ಈರಣ್ಣ ರಾವೂರ, ವಿಜಯ ಜೋಶಿ ಇದ್ದರು.&lt;/p&gt;&lt;p&gt;ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆಯಿಲ್ಲ. ಎಲ್ಲೆಂದರಲ್ಲಿ ಕಳ್ಳತನ, ದರೋಡೆಗಳು ನಡೆದಿವೆ. ಇವರ ಮೂರು ವರ್ಷದ ಸಾಧನೆ ಶೂನ್ಯವಾಗಿದ್ದು, ಶಾಸಕರಿಗೆ ಅನುದಾನವೇ ಕೊಟ್ಟಿಲ್ಲ. ಕೇಂದ್ರದಿಂದ ಮೋದಿಯವರು ಕೊಟ್ಟಿರುವ ರಸ್ತೆಗಳಿಗೆ ಕಾಂಗ್ರೆಸ್&zwnj;ನವರು ಭೂಮಿಪೂಜೆ ಮಾಡಿ, ತಮ್ಮ ಸರ್ಕಾರದ ರಸ್ತೆ ಎಂದು ಹೇಳುತ್ತಾರೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಪರವಾಗಿದ್ದೇವೆ ಎಂದು ಹೇಳಿ, ಅವರೆಲ್ಲರಿಗೆ ಮೀಸಲಿದ್ದ ಹಣವನ್ನೇ ಎತ್ತಿಹಾಕಿದ್ದಾರೆ. ಹಣ ನುಂಗಿದ ಕೆಲ ಮಂತ್ರಿಗಳೇ ಜೈಲಿಗೆ ಹೋಗಿದ್ದಾರೆ. ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿಯನ್ನೇ ಮರೆತಿರುವ ಇವರು ತಮ್ಮ ತಮ್ಮ ಶಕ್ತಿ ಪ್ರದರ್ಶನದಲ್ಲೇ ಕಾಲಹರಣ ಮಾಡುತ್ತಿದ್ದಾರೆ.&lt;/p&gt;&lt;p&gt;&lt;strong&gt;-ರಮೇಶ ಜಿಗಜಿಣಗಿ ಸಂಸದ, ವಿಜಯಪುರ&lt;/strong&gt;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/mp-ramesh-jigajinagi-criticized-on-congress-govt-sadhana-convention-rav/articleshow-grxk1b3"/>
        </item>
        <item>
            <title><![CDATA[Breaking: ವಿಜಯಪುರದಲ್ಲಿ ಮತ್ತೆ ಭಾರೀ ಸ್ಫೋಟದ ಸದ್ದು ಬೆನ್ನಲ್ಲೇ ಭೂಕಂಪನ ಅನುಭವ!]]></title>
            <link>https://kannada.asianetnews.com/karnataka-districts/breaking-earthquake-felt-in-vijayapura-right-after-loud-explosion-sound-rav/articleshow-h028uxe</link>
            <guid isPermaLink="true">https://kannada.asianetnews.com/karnataka-districts/breaking-earthquake-felt-in-vijayapura-right-after-loud-explosion-sound-rav/articleshow-h028uxe</guid>
            <pubDate>Tue, 19 May 2026 12:49:01 +0530</pubDate>
            <description><![CDATA[&lt;p&gt;ವಿಜಯಪುರ ಜಿಲ್ಲೆಯ ತಿಕೋಟ ಭಾಗದಲ್ಲಿ ಇಂದು ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕ. ಭಾರೀ ಶಬ್ಧದೊಂದಿಗೆ ಭೂಮಿ ನಡುಗಿದ ಅನುಭವವಾದ ಕಾರಣ, ಹಲವು ಗ್ರಾಮಗಳ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಈ ಭಾಗದಲ್ಲಿ ಪದೇಪದೆ ಭೂಕಂಪನ ಸಂಭವಿಸುತ್ತಿರುವುದು ಜನರಲ್ಲಿ ಭಯ ಮೂಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krzh83e4vn26q4kg8zm96670,imgname-----------------------2026-05-19t123305.388-1779174739396.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮೇ.19)&lt;/strong&gt;: ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆತಂಕ ಮತ್ತೆ ಜನರನ್ನು ಬೆಚ್ಚಿಬೀಳಿಸಿದೆ. ಇಂದು ಬೆಳಿಗ್ಗೆ ತಿಕೋಟ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ.&lt;/p&gt;&lt;p&gt;ಸುಮಾರು ಬೆಳಿಗ್ಗೆ 11.26ರ ವೇಳೆಗೆ ಏಕಾಏಕಿ ಭಾರೀ ಶಬ್ಧ ಕೇಳಿಬಂದಿದ್ದು, ಅದರ ಬೆನ್ನಲ್ಲೇ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ತಮಗಾದ ಅನುಭವ ಹಂಚಿಕೊಂಡಿದ್ದಾರೆ. ಸ್ಪೋಟದ ರೀತಿಯಲ್ಲಿ ಶಬ್ಧ ಕೇಳಿಬಂದ ಬಳಿಕ ಕೆಲ ಕ್ಷಣಗಳ ಕಾಲ ಕಂಪನ ಅನುಭವವಾಗಿದೆ ಎನ್ನಲಾಗಿದೆ.&lt;/p&gt;&lt;h2&gt;ಎಲ್ಲೆಲ್ಲಿ ಭೂಕಂಪನದ ಅನುಭವ?&lt;/h2&gt;&lt;p&gt;ತಿಕೋಟ ತಾಲೂಕಿನ ಘೋಣಸಗಿ, ಕಳ್ಳವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಟ್ಟಿ ಹಾಗೂ ಮಲಕನದೇವರಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಕಂಪನ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವದಿಂದ ಜನರು ತಕ್ಷಣ ಮನೆಗಳಿಂದ ಹೊರಗೆ ಓಡಿ ಬಂದು ಆತಂಕದಲ್ಲಿ ಕಾಲ ಕಳೆದರು. ಯಾವುದೇ ಹಾನಿ ಸಂಭವಿಸಿರುವ ಬಗ್ಗೆ ಇನ್ನಷ್ಟೇ ಮಾಹಿತಿ ಇಲ್ಲ.&lt;/p&gt;&lt;p&gt;ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ವರ್ಷಗಳಿಂದ ಆಗಾಗ ಭೂಕಂಪನದ ಅನುಭವವಾಗುತ್ತಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ತಿಂಗಳಲ್ಲೂ ಈ ರೀತಿಯ ಕಂಪನಗಳು ಸಂಭವಿಸಿದ್ದವು. ಆದರೆ ಪದೇಪದೆ ಈ ಭಾಗದಲ್ಲಿ ಭೂಕಂಪನ ಅನುಭವಗಳಾಗುತ್ತಿರುವ ಹಿನ್ನೆಲೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲೇ ದಿನದೂಡುವಂತಾಗಿದೆ.&lt;/p&gt;]]></content:encoded>
            <category>vijayapura</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/breaking-earthquake-felt-in-vijayapura-right-after-loud-explosion-sound-rav/articleshow-h028uxe"/>
        </item>
        <item>
            <title><![CDATA[ನನಗೆ ಸಚಿವ ಸ್ಥಾನ ತಪ್ಪಿಸಲು ಷಡ್ಯಂತ್ರ: ಶಾಸಕ ಸಿ.ಎಸ್.ನಾಡಗೌಡ ಸ್ಫೋಟಕ ಆರೋಪ]]></title>
            <link>https://kannada.asianetnews.com/politics/cs-nadagouda-cabinet-reshuffle-minister-post-congress-statement-gvd/articleshow-k94gx2s</link>
            <guid isPermaLink="true">https://kannada.asianetnews.com/politics/cs-nadagouda-cabinet-reshuffle-minister-post-congress-statement-gvd/articleshow-k94gx2s</guid>
            <pubDate>Sat, 16 May 2026 22:58:27 +0530</pubDate>
            <description><![CDATA[&lt;p&gt;ಸಂಪುಟ ಪುನರ್&zwnj;ರಚನೆ ಬಂದಾಗ ಉತ್ತರ ಕರ್ನಾಟಕದಲ್ಲಿ ಅಪ್ಪಾಜಿ ನಾಡಗೌಡ, ಎಚ್.ಕೆ.ಪಾಟೀಲ ಅವರ ಹೆಸರು ಮುನ್ನೆಲೆಗೆ ಬರುತ್ತದೆ. ಆದರೆ, ಇಲ್ಲಿವರೆಗೂ ನಮಗೆ ಸಿಗಬೇಕಾದ ಗೌರವ ಸ್ಥಾನ ಸಿಕ್ಕಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7xhs6xx2x67qmnj7rtqt8x3,imgname-dvvd-1760854580157.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮುದ್ದೇಬಿಹಾಳ (ಮೇ.16): &lt;/strong&gt;ಸಂಪುಟ ಪುನರ್&zwnj;ರಚನೆ ಬಂದಾಗ ಉತ್ತರ ಕರ್ನಾಟಕದಲ್ಲಿ ಅಪ್ಪಾಜಿ ನಾಡಗೌಡ, ಎಚ್.ಕೆ.ಪಾಟೀಲ ಅವರ ಹೆಸರು ಮುನ್ನೆಲೆಗೆ ಬರುತ್ತದೆ. ಆದರೆ, ಇಲ್ಲಿವರೆಗೂ ನಮಗೆ ಸಿಗಬೇಕಾದ ಗೌರವ ಸ್ಥಾನ ಸಿಕ್ಕಿಲ್ಲ. ಇದರಿಂದ ನೋವಾಗಿದೆ. ಈ ಬಾರಿ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಯಾವ ಕೋಟಾದಲ್ಲಿ ನಮಗೆ ಸಚಿವ ಸ್ಥಾನ ಸಿಗಬೇಕು ಅದು ಸಿಕ್ಕಿಲ್ಲ. ಇದು ಬೇಸರ ಸಂಗತಿ. ಕಳೆದ 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ನಿಷ್ಠನಾಗಿ ಪಕ್ಷದ ಶಕ್ತಿಗೆ ಶ್ರಮಿಸಿದ್ದೇನೆ.&lt;/p&gt;&lt;p&gt;ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ. ಇವರು ಹೇಳಿದಂತೆ ಕೇಳಿಕೊಂಡು ಬಿದ್ದಿರುತ್ತಿದ್ದಾರೆ ಎಂಬ ಮನೋಭಾವ ಮೂಡುತ್ತಿದೆ. ಕಾಂಗ್ರೆಸ್ ಪಕ್ಷದ ಕೇಂದ್ರದ ಎಲ್ಲ ವರಿಷ್ಠರ ಬಗ್ಗೆ ಅಪಾರಗೌರವ ಹೊಂದಿದ್ದೇನೆ. ಕಾಂಗ್ರೆಸ್&zwnj;ನಲ್ಲಿರುವ ಪ್ರಾಮಾಣಿಕರನ್ನು ಗೌರವಿಸುವ ಕೆಲಸವಾಗಬೇಕು. ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಹೌದು. ಹಿರಿಯ ಶಾಸಕರು ಇದ್ದರೂ ಗೌರವ ಸ್ಥಾನಮಾನ ಸಿಗುತ್ತಿಲ್ಲ. ಈ ಬಗ್ಗೆ ಮತಕ್ಷೇತ್ರದ ಕಾರ್ಯಕರ್ತರು ಹಾಗೂ ಜನರಲ್ಲೂ ನೋವಿದೆ ಎಂದರು.&lt;/p&gt;&lt;p&gt;ಹೈಕ್&zwnj;ಮಾಂಡ ಬಗೆಹರಿಸಲಿ:ಮುಖ್ಯಮಂತ್ರಿ ಬದಲಾವಣೆ ಗೊಂದಲವನ್ನು ಹೈಕಮಾಂಡ್ ನಿವಾರಿಸಬೇಕು. ಸಿದ್ದರಾಮಯ್ಯ ನಾಯಕತ್ವ ಒಪ್ಪಿದ್ದೇನೆ. ಶಾಸಕರಲ್ಲಿ ಇರುವ ವೈಮನಸು ನಿವಾರಿಸುವತ್ತ ಹೈಕಮಾಂಡ್ ಗಮನ ಹರಿಸಬೇಕು. ಡಿ.ಕೆ.ಶಿವಕುಮಾರ ನಾವು ಒಟ್ಟಿಗೆ ರಾಜಕಾರಣ ಆರಂಭಿಸಿದ್ದೇವೆ. ಡಿಕೆಶಿ ನಮಗೂ ಆಪ್ತರೆ, ಹೈಕಮಾಂಡ್ ವಿರುದ್ಧ ಯಾರೂ ಹೋಗುವುದಿಲ್ಲ ಎಂದರು.&lt;/p&gt;&lt;p&gt;ಕಾಂಗ್ರೆಸ್&zwnj;ಗೆ ತನ್ನದೆಯಾದ ಇತಿಹಾಸ ಇದೆ. ಆದರೆ, ಇದೀಗ ಕೆಲವರಿಗೆ ಸಚಿವ ಸ್ಥಾನ ನೀಡುತ್ತೀರಿ. ಅವರು ಹೇಳಿದವರಿಗೆ ಸ್ಥಾನ ನೀಡುತ್ತಿರಿ. ಹೀಗೆ ಮಾಡುವುದರಿಂದ ಪಕ್ಷಕ್ಕೆ ದಕ್ಕೆಉಂಟಾಗುತ್ತಿದೆ. ತಮ್ಮ ಹಿಂಬಾಲಕರಿಗೆ ಅಧಿಕಾರ ಕೊಡಿಸಲು ಷಡ್ಯಂತ್ರ ಮಾಡುತ್ತಾರೆ. ಕಾಂಗ್ರೆಸ್ಸಿಗರಿಂದಲೇ ಕಾಂಗ್ರೆಸ್&zwnj;ಗೆ ದಕ್ಕೆಯಾಗುತ್ತಿದೆ. ಇದು ಆಂತರಿಕ ಬೇಗುದಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಪಕ್ಷ ಗಮನ ಹರಿಸಬೇಕು. ಮೂಲ ಕಾಂಗ್ರೆಸ್ಸಿಗರಿಗೆ ಗೌರವ ಕೊಡುವ ಕೆಲಸವಾಗಬೇಕು. ಹಿರಿತನಕ್ಕೆ ತಕ್ಕಂತೆ ಸ್ಥಾನಮಾನ ಸಿಗದಿರುವುದು ನೋವಿನ ಸಂಗತಿ ಎಂದರು.&lt;/p&gt;&lt;p&gt;ನಮ್ಮ ಕಾಂಗ್ರೆಸ್ಸಿನ ಕೆಲವರು ನನಗೆ ಸಚಿವ ಸ್ಥಾನ ದೊರಕಬಾರದು ಎಂಬುದರ ಬಗ್ಗೆ ಬಹುದೊಡ್ಡ ಲಾಭಿ ನಡೆಸಿ ನನಗೆ ಮಂತ್ರಿ ಸ್ಥಾನ ಸಿಗದಂತೆ ನೋಡಿಕೊಳ್ಳುವ ಮೂಲಕ ಬಹುದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದು ಈಗಲೇ ನಿಲ್ಲಬೇ.ಕು ನಾನು ಕೂಡ ರಾಜಕೀಯದ ಎಲ್ಲ ತಿರುವುಗಳನ್ನು ಕಂಡಿದ್ದೇನೆ ಅನುಭವ ಹೊಂದಿದ್ದೇನೆ. ನಮಗೂ ರಾಜಕಾರಣ ಮಾಡಲು ಬರುತ್ತದೆ ಎಂಬುದು ತೋರಿಸಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.&lt;/p&gt;&lt;h2&gt;&lt;strong&gt;ಸಿದ್ರಾಮಯ್ಯನವರ ಕುರ್ಚಿ ಗಟ್ಟಿಯಾಗಿದೆ&lt;/strong&gt;&lt;/h2&gt;&lt;p&gt;ಸದ್ಯ ಮುಖ್ಯಮಂತ್ರಿ ಸಿದ್ರಾಮಯ್ಯನವರ ಕುರ್ಚಿ ಗಟ್ಟಿಯಾಗಿದೆ. ಆದರೆ, ಕೆಲವರಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಶಾಸಕಾಂಗ ಪಕ್ಷದಲ್ಲಿಯೂ ಈ ಬಗ್ಗೆ ಚರ್ಚೆಗೆ ಬಂದಿಲ್ಲ. ಹಾಗಾಗಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲವೂ ಸರಿ ಇದೆ. ನಾನು ನಾಯಕ ನಾಗಬೇಕು ಎಂಬುದು ಎಲ್ಲರ ಆಸೆ ಆಗಿರುತ್ತದೆ. ಅದು ತಪ್ಪಲ್ಲ. ಆದರೆ, ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತಿರ್ಮಾನಿಸುತ್ತದೆ.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/cs-nadagouda-cabinet-reshuffle-minister-post-congress-statement-gvd/articleshow-k94gx2s"/>
        </item>
        <item>
            <title><![CDATA[BREAKING: ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಮುಂದಿನ 3 ಗಂಟೆ 'ಯಲ್ಲೋ ಅಲರ್ಟ್'; ಹಾಸನಕ್ಕೆ ಆರೆಂಜ್ ಅಲರ್ಟ್]]></title>
            <link>https://kannada.asianetnews.com/gallery/bengaluru-urban/karnataka-rain-alert-bengaluru-yellow-alert-hassan-orange-alert-weather-update-san-lzi7va4</link>
            <guid isPermaLink="true">https://kannada.asianetnews.com/gallery/bengaluru-urban/karnataka-rain-alert-bengaluru-yellow-alert-hassan-orange-alert-weather-update-san-lzi7va4</guid>
            <pubDate>Mon, 25 May 2026 18:03:58 +0530</pubDate>
            <description><![CDATA[ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಹತ್ವದ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಹಾಸನಕ್ಕೆ 'ಆರೆಂಜ್ ಅಲರ್ಟ್' ಮತ್ತು ಇತರೆ 6 ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krzxjj84544nkh17j6s99v9v,imgname-karnataka-rain-alert-1779187665156.jpg" type="image/jpeg" height="390" width="690"/>
            <content:encoded><![CDATA[ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಹತ್ವದ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಹಾಸನಕ್ಕೆ 'ಆರೆಂಜ್ ಅಲರ್ಟ್' ಮತ್ತು ಇತರೆ 6 ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.&lt;img&gt;&lt;p&gt;ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.&lt;/p&gt;&lt;img&gt;&lt;p&gt;ರಾಜಧಾನಿ ಬೆಂಗಳೂರು ನಗರದಲ್ಲಿ ಮುಂದಿನ 3 ಗಂಟೆಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, 'ಯಲ್ಲೋ ಅಲರ್ಟ್' (Yellow Alert) ಘೋಷಿಸಲಾಗಿದೆ. ಕಚೇರಿ ಮುಗಿಸಿ ಮನೆಗೆ ಮರಳುವ ಐಟಿ ಉದ್ಯೋಗಿಗಳು ಹಾಗೂ ವಾಹನ ಸವಾರರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಕೇವಲ ಸಾಧಾರಣ ಮಳೆಯಷ್ಟೇ ಅಲ್ಲದೆ, ಗಂಟೆಗೆ ಭಾರಿ ವೇಗದಲ್ಲಿ ಬೀಸಲಿರುವ ಸುಂಟರಗಾಳಿ ಹಾಗೂ ಗುಡುಗು-ಮಿಂಚಿನ ಸಹಿತ ವರುಣ ಆರ್ಭಟಿಸಲಿದ್ದಾನೆ. ಹೀಗಾಗಿ ಸಾರ್ವಜನಿಕರು ಮರಗಳ ಕೆಳಗೆ ಹಾಗೂ ದುರ್ಬಲ ಕಟ್ಟಡಗಳ ಬಳಿ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.&lt;/p&gt;&lt;img&gt;&lt;p&gt;ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಹಾಸನ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಅತ್ಯಂತ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆಯು ಹಾಸನಕ್ಕೆ ಕಟ್ಟುನಿಟ್ಟಿನ 'ಆರೆಂಜ್ ಅಲರ್ಟ್' (Orange Alert) ಜಾರಿಗೊಳಿಸಿದೆ. ಇಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.&lt;/p&gt;&lt;img&gt;&lt;p&gt;ಬೆಂಗಳೂರು ನಗರದ ಜೊತೆಗೆ ರಾಜ್ಯದ ಪ್ರಮುಖ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ರಾಮನಗರ, ಚಾಮರಾಜನಗರ ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಗಳಿಗೂ ಮುಂದಿನ 3 ಗಂಟೆಗಳ ಕಾಲ 'ಯಲ್ಲೋ ಅಲರ್ಟ್' ನಿಯೋಜಿಸಲಾಗಿದೆ. ಈ ಜಿಲ್ಲೆಗಳಲ್ಲೂ ದಿಢೀರ್ ಮಳೆ ಸುರಿಯುವ ಸಾಧ್ಯತೆ ಇದೆ.&lt;/p&gt;&lt;img&gt;&lt;p&gt;ಮುಂದಿನ 3 ಗಂಟೆಗಳ ಅವಧಿ ಅತ್ಯಂತ ನಿರ್ಣಾಯಕವಾಗಿದ್ದು, ಆಯಾ ಜಿಲ್ಲಾಡಳಿತಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಅಲರ್ಟ್ ಆಗಿವೆ. ತಗ್ಗು ಪ್ರದೇಶದ ಜನರಿಗೆ ಮತ್ತು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಕೋರಿದೆ.&lt;/p&gt;]]></content:encoded>
            <category>vijayapura</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/bengaluru-urban/karnataka-rain-alert-bengaluru-yellow-alert-hassan-orange-alert-weather-update-san-lzi7va4"/>
        </item>
        <item>
            <title><![CDATA[ಭೀಮಾತೀರದಲ್ಲಿ ರಕ್ತದೋಕುಳಿ: ವಿಜಯಪುರದಲ್ಲಿ ಆಸ್ತಿ ವಿವಾದಕ್ಕೆ  6 ಜನರ ಭೀಕರ ಹ*ತ್ಯೆ!]]></title>
            <link>https://kannada.asianetnews.com/karnataka-districts/vijayapura-bhimateera-6-killed-firing-property-dispute-chadachan-govindpur-san/articleshow-mdtcsxz</link>
            <guid isPermaLink="true">https://kannada.asianetnews.com/karnataka-districts/vijayapura-bhimateera-6-killed-firing-property-dispute-chadachan-govindpur-san/articleshow-mdtcsxz</guid>
            <pubDate>Fri, 29 May 2026 19:19:34 +0530</pubDate>
            <description><![CDATA[&lt;p&gt;ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವ್ಯಾಜ್ಯವು ಭೀಕರ ಸ್ವರೂಪ ಪಡೆದಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವಿನ ಆಸ್ತಿ ವಿವಾದವು ಗುಂಡಿನ ದಾಳಿ ಹಾಗೂ ಮಾರಕಾಸ್ತ್ರಗಳ ಬಳಕೆಗೆ ಕಾರಣವಾಗಿ, ಒಂದೇ ಕುಟುಂಬದ ಆರು ಮಂದಿ ಬರ್ಬರವಾಗಿ ಹತ್ಯೆಯಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksszffedx8mp0bxbdpqrmx48,imgname-vijayapura-bhima-teera-murders-1780062076365.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮೇ.29): &lt;/strong&gt;ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ನರಮೇಧ ನಡೆದಿದ್ದು, ಇಡೀ ಭೀಮಾತೀರ ಮತ್ತೊಮ್ಮೆ ರಕ್ತಸಿಕ್ತವಾಗಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಎದುರಾಳಿಗಳು ನಡೆಸಿದ ದಿಢೀರ್ ಫೈರಿಂಗ್ ಹಾಗೂ ಮಾರಕಾಸ್ತ್ರಗಳ ದಾಳಿಗೆ ಬರೋಬ್ಬರಿ ಆರು ಜನ ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ಈ ಘಟನೆಯಿಂದಾಗಿ ಇಡೀ ಜಿಲ್ಲೆ ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.&lt;/p&gt;&lt;h2&gt;&lt;strong&gt;ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವಿನ ಜಮೀನು ವ್ಯಾಜ್ಯ!&lt;/strong&gt;&lt;/h2&gt;&lt;p&gt;ಗೋವಿಂದಪುರ ಗ್ರಾಮದ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಕಳೆದ ಕೆಲವು ಸಮಯದಿಂದ ಜಮೀನಿಗೆ ಸಂಬಂಧಿಸಿದಂತೆ ತೀವ್ರ ಆಸ್ತಿ ವಿವಾದ ನಡೆದುಕೊಂಡು ಬಂದಿತ್ತು. ಇಂದು ಈ ವಿವಾದ ವಿಕೋಪಕ್ಕೆ ತಿರುಗಿದ್ದು, ಗೊಳಗಿ ಕುಟುಂಬದ ಸದಸ್ಯರು ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ಬಂದೂಕಿನಿಂದ ಗುಂಡಿನ ಸುರಿಮಳೆಗೈದಿದ್ದಾರೆ ಎನ್ನಲಾಗಿದೆ. ಗೊಳಗಿ ಕುಟುಂಬದವರ ಈ ಭೀಕರ ದಾಳಿಗೆ ನಿರಾಳೆ ಕುಟುಂಬದ ಪ್ರಮುಖರು ಹಾಗೂ ಅವರ ಬೆಂಬಲಿಗರು ಸೇರಿ ಒಟ್ಟು ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ, ಶಬ್ಬಿರ್ ನದಾಫ್ (ಇವರೊಂದಿಗೆ ಮತ್ತೊಬ್ಬರ ಹತ್ಯೆಯಾಗಿದ್ದು, ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ).&lt;/p&gt;&lt;h2&gt;&lt;strong&gt;ಸ್ಥಳಕ್ಕೆ ಧಾವಿಸಿದ ಪೊಲೀಸ್ ಪಡೆ, ಗ್ರಾಮದಲ್ಲಿ ಬಿಗಿಬಂದೋಬಸ್ತ್!&lt;/strong&gt;&lt;/h2&gt;&lt;p&gt;ಒಂದೇ ಗ್ರಾಮದ ಆರು ಜನರ ಭೀಕರ ಹತ್ಯೆಯಿಂದಾಗಿ ಭೀಮಾತೀರದಾದ್ಯಂತ ಹಳೇ ಹಗೆತನದ ನೆರಳು ಮತ್ತೆ ಆವರಿಸಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ದಂಡು ಸಶಸ್ತ್ರ ಪಡೆಗಳೊಂದಿಗೆ ಗೋವಿಂದಪುರ ಗ್ರಾಮಕ್ಕೆ ಧಾವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮುಂದಿನ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಇಡೀ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಗೆ ಕಾರಣವೇನು?&lt;/strong&gt;&lt;/h2&gt;&lt;p&gt;ಒಟ್ಟು 25 ಏಕರೆ ಜಮೀನಿನ ವಿವಾದ ಇದಾಗಿದ್ದು, ಪ್ರತಿ ಏಕರೆಗೆ 15 ಲಕ್ಷದಂತೆ ನಿರಾಳೆ ಕುಟುಂಬ ಖರೀದಿ ಮಾಡಿತ್ತು. ಪಕ್ಕಾ ಜಮೀನು ಮೌಲ್ಯ ಬಂದು 25 ಲಕ್ಷ ಇತ್ತು. ಆದರೆ, ನಿರಾಳೆ ಕುಟುಂಬ 15 ಲಕ್ಷಕ್ಕೆ ಖರೀದಿ ಮಾಡಿತ್ತು.ಈ ಜಮೀನು ಪಕ್ಕದಲ್ಲಿಯೇ ಅಪ್ಪುಗೌಡ ಗೊಳಗಿ ಜಮೀನು ಕೂಡ ಇತ್ತು. ನಿರಾಳೆ ಕುಟುಂಬ ಖರೀದಿಸಿದ ಜಮೀನು ಮೇಲೆ ಅಪ್ಪುಗೌಡ ಗೊಳಗಿ ಕಣ್ಣಿಟ್ಟಿದ್ದ. ಆ ಜಮೀನು ಖರೀದಿ ಮಾಡದಂತೆ ನಿರಾಳೆ ಕುಟುಂಬಕ್ಕೆ ಅಪ್ಪುಗೌಡ ಗೊಳಗಿ ಧಮ್ಕಿ ಹಾಕಿದ್ದ. ಇದನ್ನು ಮೀರಿ 25 ಏಕರೆ ಜಮೀನನ್ನು ನಿರಾಳೆ ಕುಟುಂಬ ಖರೀದಿ ಮಾಡಿತ್ತು. ಪಕ್ಕದ&zwnj; ಜಮೀನು ಹೋಯ್ತಲ್ಲ ಎಂದು ಇಡೀ ನಿರಾಳೆ ಕುಟುಂಬವನ್ನೆ ಗೊಳಗಿ ಕುಟುಂಬ ಸರ್ವನಾಶ ಮಾಡಿದೆ.&lt;/p&gt;&lt;p&gt;ನಿರಾಳೆ ಚಡಚಣ ಮೂಲದವರು, ಗೊಳಗಿ ಗೋವಿಂದಪುರ ಗ್ರಾಮದವರು. ಚಡಚಣ ಊರಲ್ಲಿ ನಿರಾಳೆ ಫ್ಯಾಮಿಲಿ ಕೂಡು ಕುಟುಂಬ ಹೊಂದಿತ್ತು. ಒಂದೆ ಮನೆಯಲ್ಲಿ 30ಕ್ಕೂ ಅಧಿಕ ಜನ ವಾಸವಿದ್ದರು. ಚಡಚಣದ ಶ್ರೀಮಂತ ಕುಟುಂಬ ಪೈಕಿ ಒಂದಾಗಿತ್ತು. ಹತ್ಯೆಯಾಗಿರುವ ಚಂದು ನಿರಾಳೆ ತಾಲೂಕು ಪಂಚಾಯಿಸಿ ಮಾಜಿ ಸದಸ್ಯ ಕೂಡ ಆಗಿದ್ದ.&lt;/p&gt;&lt;h2&gt;&lt;strong&gt;10ಕ್ಕೂ ಅಧಿಕ ಜನರಿಂದ ಕೃತ್ಯ&lt;/strong&gt;&lt;/h2&gt;&lt;p&gt;ಅಪ್ಪುಗೌಡ ಗೊಳಗಿ ಸೇರಿ 10ಕ್ಕಿಂತ ಅಧಿಕ ಜನರಿಂದ ನಿರಾಳೆ ಕುಟುಂಬಸ್ಥರನ್ನು ಹತ್ಎ ಮಾಡಲಾಗಿದೆ. ಕಬ್ಬು ಕತ್ತರಿಸುವ ಕತ್ತಿಯಿಂದ ಹತ್ಯೆ ಮಾಡಲಾಗಿದೆ. ತೇಲಿ ಕುಟುಂಬಕ್ಕೆ ಸೇರಿದ 25 ಏಕರೆ ಜಮೀನನ್ನು 1 ವರ್ಷದ ಹಿಂದೆಯೇ ಮಾರಾಟ ಮಾಡಲಾಗಿತ್ತು. 15 ವರ್ಷಗಳಿಂದ ತೇಲಿ ಕುಟುಂಬಕ್ಕೂ ಗೊಳಗಿ ಕುಟುಂಬಕ್ಕೂ ಈ ಕುರಿತಾಗಿ ವಿವಾದವಿತ್ತು. ತೇಲಿ ಕುಟುಂಬದಿಂದ ಕಡಿಮೆ ದರಕ್ಕೆ 25 ಏಕರೆ ಜಮೀನನ್ನು ನಿರಾಳೆ ಕುಟುಂಬ ಖರೀದಿ ಮಾಡಿತ್ತು. ನಿರಾಳೆ ಕುಟುಂಬ ಕಡಿಮೆ ದರಕ್ಕೆ ತೇಲಿ ಕುಟುಂಬದಿಂದ 25 ಏಕರೆ ಖರೀದಿ ಮಾಡಿದ್ದಕ್ಕೆ ಗೊಳಗಿ ಕುಟುಂಬಕ್ಕೆ ಸಿಟ್ಟಾಗಿತ್ತು. ಇದೇ ಕಾರಣಕ್ಕೆ ನಿರಾಳೆ ಕುಟುಂಬಸ್ಥರನ್ನ ಅಟ್ಟಾಡಿಸಿ ಹೊಡೆದು ಗೊಳಗಿ ಕುಟುಂಬ ಹತ್ಯೆ ಮಾಡಿದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>vijayapura</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/vijayapura-bhimateera-6-killed-firing-property-dispute-chadachan-govindpur-san/articleshow-mdtcsxz"/>
        </item>
        <item>
            <title><![CDATA[ಸಿದ್ದರಾಮಯ್ಯನವರದ್ದು ಅತಿಯಾಯ್ತು: ಸರ್ಕಾರದ ವಿರುದ್ಧ ಶಾಸಕ ಬಸನಗೌಡ ಯತ್ನಾಳ ವಾಗ್ದಾಳಿ]]></title>
            <link>https://kannada.asianetnews.com/karnataka-districts/mla-basanagouda-patil-yatnal-on-siddaramaiah-at-vijayapura-gvd/articleshow-n2i1f8y</link>
            <guid isPermaLink="true">https://kannada.asianetnews.com/karnataka-districts/mla-basanagouda-patil-yatnal-on-siddaramaiah-at-vijayapura-gvd/articleshow-n2i1f8y</guid>
            <pubDate>Sat, 23 May 2026 18:57:15 +0530</pubDate>
            <description><![CDATA[&lt;p&gt;ಮುಸ್ಲಿಮರ ಮೇಲಿನ ಕೇಸ್&zwnj;ಗಳನ್ನು ವಾಪಸ್ ತೆಗೆದುಕೊಂಡಂತೆ ಹಿಂದೂಗಳ ಮೇಲಿನ ಕೇಸ್&zwnj;ಗಳನ್ನು ವಾಪಸ್ ತೆಗೆದುಕೊಳ್ಳಲಿ. ಈ ಮೂಲಕ ಜಾತ್ಯಾತೀತ ಎಂದು ಎಲ್ಲರನ್ನೂ ನೋಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kbss6zvzn7qfx1dt5x2zk214,imgname-rgffgfgf-1765023121279.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮೇ.23):&lt;/strong&gt; ಸಿದ್ದರಾಮಯ್ಯನವರದ್ದು ಅತಿಯಾಯ್ತು. ಮುಸ್ಲಿಮರ ಮೇಲಿನ ಕೇಸ್&zwnj;ಗಳನ್ನು ವಾಪಸ್ ತೆಗೆದುಕೊಂಡಂತೆ ಹಿಂದೂಗಳ ಮೇಲಿನ ಕೇಸ್&zwnj;ಗಳನ್ನು ವಾಪಸ್ ತೆಗೆದುಕೊಳ್ಳಲಿ. ಈ ಮೂಲಕ ಜಾತ್ಯಾತೀತ ಎಂದು ಎಲ್ಲರನ್ನೂ ನೋಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಕಲಬುರಗಿ ಜಿಲ್ಲೆ ಆಳಂದದ ಲಾಡ್ಲೆ ಮಷಾಕ ದರ್ಗಾ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕೇ ವರ್ಷಕ್ಕೆ ಪ್ರಕರಣವನ್ನು ಹಿಂಪಡೆದ ಸರ್ಕಾರದ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 8 ಪ್ರಕರಣಗಳನ್ನು ಕ್ಯಾಬಿನೆಟ್&zwnj;ನಲ್ಲಿ ಸರ್ಕಾರ ಹಿಂಪಡೆದಿದ್ದು, ಇದು ಸಿದ್ದರಾಮಯ್ಯರ ಅತಿರೇತಕದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;p&gt;ಇಟಲಿ ಪ್ರಧಾನಿ ಮೆಲೋನಿಗೆ ಪ್ರಧಾನಿ ಮೋದಿ ಮೆಲೋಡಿ ಚಾಕೋಲೇಟ್ ನೀಡಿದ ವಿಚಾರವಾಗಿ ಕಾಂಗ್ರೆಸ್ ನಾಯಕರಿಂದ ವಿರೋಧ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಯತ್ನಾಳ ಟೀಕೆ ಮಾಡಿದರು. ರಾಹುಲ್ ಗಾಂಧಿ ಜೋಕರ್&zwnj;, ತಲೆನೂ ಇಲ್ಲಾ ಡಿಗ್ನಿಫೈ ಇಲ್ಲ. ಮೋದಿ ಅವರು ಪಾರ್ಲೆ ಕಂಪನಿ ಚಾಕೊಲೇಟ್ ಕೊಟ್ಟಿದ್ದು ತಪ್ಪಲ್ಲ. ರಾಜೀವ್ ಗಾಂಧಿಯಂತೆ ಇಂಡಿಯನ್ ನೇವಿ ಹಡಗಿನಲ್ಲಿ ದೇಶದ್ರೋಹಿಗಳ ಜೊತೆ ಪಾರ್ಟಿ ಮಾಡಿಲ್ಲ. ಗಾಂಧಿ ಹ*ತ್ಯೆಯಾದಾಗ ನೆಹರು ನಮ್ಮ ಮನೆಯಲ್ಲಿ ನನ್ನ ತಾಯಿ ಜೊತೆಗಿದ್ದ ಎಂದು ಮೌಂಟ್ ಬ್ಯಾಟನ್ ಮಗಳು ಬರೆದಿದ್ದಾಳೆ ಎಂದು ಟೀಕಿಸಿದರು.&lt;/p&gt;&lt;p&gt;ಸಂಸತ್ತಿಗೆ ಹೇಗೆ ಬರಬೇಕೆಂದು ರಾಹುಲ್ ಗಾಂಧಿಗೆ ಗೊತ್ತಿಲ್ಲ. ಎಂತೆಂಥ ಮಹಾನ್ ವ್ಯಕ್ತಿಗಳು ಆಗಿ ಹೋಗಿದ್ದಾರೆ. ಪಟೇಲ್ ಶಾಸ್ತ್ರಿಯವರಂತ ಮಹಾನ್ ವ್ಯಕ್ತಿಗಳು ಆಗಿ ಹೋಗಿದ್ದಾರೆ.ದೇಶದ ಪ್ರಾಡೆಕ್ಟ್ ಆಗಿರುವ ಪಾರ್ಲೆಯನ್ನು ಇಟಲಿ ಪ್ರಧಾನಿಗೆ ಕೊಟ್ಟಿದ್ದಾರೆ. ಇಟಲಿ ಪ್ರಧಾನಿಯೇ ಮೋದಿ ಪರಿಶ್ರಮಿ ಎಂದಿದ್ದಾರೆ. ಶರದ್ ಪವಾರ ಸಹ ಮೋದಿ ಪರ ಮಾತನಾಡಿದ್ದಾರೆ. ಪ್ರಧಾನಿ ಮೋದಿ ವಿದೇಶ ಪ್ರವಾಸ ಅಪಮಾನ ಮಾಡಬಾರದು ಎಂದಿದ್ದಾರೆ. ದೇಶಕ್ಕೆ ಅನಕೂಲವಾಗಲೆಂದು ವಿದೇಶ ಪ್ರವಾಸ ಮಾಡುತ್ತಿದ್ದಾರೆ. ಚೋಳರ ಕಾಲದ ಕುರುಹು ಇಟಲಿಯಲ್ಲಿ ಪತ್ತೆ ಆಗಿದೆ, ಮೋದಿಗೆ ಚೋಳ ರಾಜನ ಇತಿಹಾಸ ಕುರಿತು ಮಾಹಿತಿ ನೀಡಿದ್ದಾರೆ. ಇಟಲಿಯಲ್ಲಿ ಚೋಳ ರಾಜ ಕಟ್ಟಿದ ದೇವಾಲಯವಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ದೇಶದ್ರೋಹದ ಪಕ್ಷ&lt;/strong&gt;&lt;/h2&gt;&lt;p&gt;ದೇಶದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಚಲನ ವಿಚಾರವಾಗಿ ಪ್ರತಿಕ್ರಿಯಿಸಿ, ತಾಂತ್ರಿಕವಾಗಿ ಏನನ್ನಾದರೂ ಮಾಡಬಹುದು. ಕಾಕ್ರೋಚ್&zwnj; ಪಾರ್ಟಿ ವ್ಯವಸ್ಥಿತವಾಗಿ ದೇಶವನ್ನು ಅತಂತ್ರ ಮಾಡಬೇಕೆಂಬುದಿದೆ. ಪ್ರಧಾನಿ ಮೋದಿಯವರನ್ನು ಕೆಳಗಿಳಿಸೋ ಉದ್ದೇಶವಾಗಿದೆ. ಭಾರತ ಜಗತ್ತಿನ ಶಕ್ತಿಶಾಲಿ ರಾಷ್ಟ್ರವಾಗೋದನ್ನು ತಡೆಯಬೇಕೆಂಬ ಉದ್ದೇಶವಿದೆ. ರಾಹುಲ್ ಗಾಂಧಿ ಚೀನಾದ ಏಜೆಂಟ್ ರೀತಿ ಇದ್ದಾನೆ. ಪಾಕಿಸ್ತಾನ ಪರ ಮಾತನಾಡಿದ್ದಾನೆ. ಕಾಂಗ್ರೆಸ್ ದೇಶದ್ರೋಹದ ಪಕ್ಷವಾಗಿದೆ. ಎಡಪಂಥೀಯರು ಕಮ್ಯುನಿಷ್ಟರಿಗೆ ದೇಶದ ಬೆಳವಣಿಗೆ ನೋಡಲು ಆಗುತ್ತಿಲ್ಲ. ಕಾಕ್ರೋಚ್&zwnj; ಜನತಾ ಪಾರ್ಟಿಗೆ ಪಾಕಿಸ್ತಾನದವರು ಸದಸ್ಯರಾದರೆ ಭಾರತಕ್ಕೇನು ಸಂಬಂಧ?, ಪಾಕಿಸ್ತಾನದಲ್ಲೇ ತಿನ್ನೋಕೆ ಆಹಾರವಿಲ್ಲ. ಪಾಕಿಸ್ತಾನದಲ್ಲಿನ ಪ್ರದೇಶಗಳಿಗೆ ಹಿಂದೂಗಳ ಹೆಸರು ಇಡುತ್ತಿದ್ದಾರೆ. ವರ್ಡ್ ಹೆರಿಟೇಜ್ ನ ಹಣ ಹೊಡೆಯೋಕೆ ಪಾಕ್ ನಲ್ಲಿ ಹಿಂದೂ ಹೆಸರು ಇಡುತ್ತಿದ್ದಾರೆ ಎಂದು ಆರೋಪಿಸಿದರು.&lt;/p&gt;&lt;p&gt;ರಾಜ್ಯ ಬಿಜೆಪಿ ಅಧ್ಯಕ್ಷ ಬದಲಾವಣೆ ವಿಚಾರವಾಗಿ ಮಾತನಾಡಿ, ರಾಜ್ಯ ಬಿಜೆಪಿ ಬೆಳವಣಿಗೆ ಕುರಿತು ಮಾಹಿತಿ ಕಲೆ ಹಾಕಲು ಕೇಂದ್ರ ಬಿಜೆಪಿ ಇಬ್ಬರು ವೀಕ್ಷಕರು ರಾಜ್ಯಕ್ಕೆ ಆಗಮನವಾಗಿದೆ. ರಾಜ್ಯಕ್ಕೆ ಆಗಮಿಸಿದ ವೀಕ್ಷಕರು 35 ಜನರ ಜೊತೆಗೆ ಮಾತನಾಡಿದ್ದಾರೆ, ಹಾಗೆ ಮಾಡಬಾರದು. ಹಾಲಿ ಶಾಸಕರು, ಸಂಸದರನ್ನು ಮಾತನಾಡಿಸಬೇಕು. ಎಲ್ಲರ ಅಭಿಪ್ರಾಯ ಪಡೆದು ಸರ್ವೇ ಮಾಡಬೇಕು ಎಂದರು.&lt;/p&gt;&lt;p&gt;ಪಶ್ಚಿಮ ಬಂಗಾಲದಲ್ಲಿ ಮತ್ತೊಮ್ಮೆ ಮಮತಾ ಬ್ಯಾನರ್ಜಿ ಸಿಎಂ ಆಗಿದ್ದರೆ ಬಾಂಗ್ಲಾದ ಭಾಗ ಆಗುತ್ತಿತ್ತು. ಮುಸ್ಲಿಂ ತುಷ್ಟೀಕರಣ ಪಶ್ಚಿಮ ಬಂಗಾಲದಲ್ಲಿ ಹೆಚ್ಚಾಗಿ ಹಿಂದೂಗಳ ಮೇಲೆ ದಬ್ಬಾಳಿಕೆ, ಮಹಿಳೆಯರ ಮೇಲೆ ಅತ್ಯಾ*ಚಾರ ನಡೆಸಿದ್ದರು. ಅದೇ ರೀತಿ ಕರ್ನಾಟಕದಲ್ಲಿಯೂ ಆಗುತ್ತಿದೆ. ಇಲ್ಲಿ ಸಿದ್ದರಾಮಯ್ಯನವರದ್ದು ಅತೀಯಾಯ್ತು. ಕೇಂದ್ರ ಸಚಿವರ ಕಾರಿನ ಮೇಲೆ ಕಲ್ಲು ತೂರಿದವರನ್ನು, ಕೆಜೆ ಹಳ್ಳಿ ಡಿಜೆ ಹಳ್ಳಿ ಗಲಾಟೆ ಮಾಡಿದವರ ಕೇಸ್ ವಾಪಸ್ ತೆಗೆದುಕೊಂಡರೆ ಹೇಗೆ?. ಇದರಿಂದ ರಾಜ್ಯದಲ್ಲಿ ಅರಾಜಕತೆ ಆಗುತ್ತದೆ. ಮುಂದಿನ 2028ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ನ್ನು ಬುಡಸಮೇತ ಕಿತ್ತೊಗೆಯುತ್ತಾರೆ.- ಬಸನಗೌಡ ಪಾಟೀಲ ಯತ್ನಾಳ, ಶಾಸಕ&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mla-basanagouda-patil-yatnal-on-siddaramaiah-at-vijayapura-gvd/articleshow-n2i1f8y"/>
        </item>
        <item>
            <title><![CDATA[Nidagundi tragedy: ವಿಜಯಪುರದಲ್ಲಿ ಬೆಚ್ಚಿಬೀಳಿಸುವ ದುರಂತ; ಮನೆಯ ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!]]></title>
            <link>https://kannada.asianetnews.com/gallery/karnataka-districts/shocking-tragedy-in-vijayapura-roof-of-house-collapses-woman-buried-alive-navggd7</link>
            <guid isPermaLink="true">https://kannada.asianetnews.com/gallery/karnataka-districts/shocking-tragedy-in-vijayapura-roof-of-house-collapses-woman-buried-alive-navggd7</guid>
            <pubDate>Thu, 21 May 2026 11:53:41 +0530</pubDate>
            <description><![CDATA[&lt;p&gt;ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮನಕಲುಕುವ ಘಟನೆ ನಡೆದಿದೆ. ಹಳೆಯ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಜೀವಂತ ಸಮಾಧಿಯಾಗಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks4k0czje22j0n7ng5bb79g0,imgname-----------------------2026-05-21t114857.310-1779344356338.jpg" type="image/jpeg" height="390" width="690"/>
            <content:encoded><![CDATA[&lt;p&gt;ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮನಕಲುಕುವ ಘಟನೆ ನಡೆದಿದೆ. ಹಳೆಯ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಜೀವಂತ ಸಮಾಧಿಯಾಗಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಪಟ್ಟಣದ ಗೌರೀಶ್ವರ ದೇವಸ್ಥಾನ ಸಮೀಪ ಈ ದುರ್ಘಟನೆ ನಸುಕಿನ ಜಾವ ಸಂಭವಿಸಿದೆ. ಮೃತರನ್ನು ಮಹಾದೇವಿ ವಾರದ ಎಂದು ಗುರುತಿಸಲಾಗಿದೆ. ಮೊನ್ನೆ ಸುರಿದ ಭಾರೀ ಮಳೆಯಿಂದ ಹಳೆಯ ಮನೆ ಸಂಪೂರ್ಣ ನೆನೆದು ದುರ್ಬಲಗೊಂಡಿತ್ತು ಎನ್ನಲಾಗಿದೆ.&amp;nbsp;&lt;/p&gt;&lt;img&gt;&lt;p&gt;ರಾತ್ರಿ ಮನೆಯಲ್ಲಿ ಮಲಗಿದ್ದ ಮಹಾದೇವಿ ಅವರಿಗೆ ಅಪಾಯ ಕಾದಿದೆ ಎನ್ನುವುದೇ ಗೊತ್ತಿರಲಿಲ್ಲ. ಆದರೆ ನಸುಕಿನ ಜಾವ ಏಕಾಏಕಿ ಮನೆಯ ಮೇಲ್ಚಾವಣಿ ಭಾರೀ ಸದ್ದಿನೊಂದಿಗೆ ಕುಸಿದಿದೆ. ಕ್ಷಣಾರ್ಧದಲ್ಲೇ ಮಹಾದೇವಿ ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.&lt;/p&gt;&lt;img&gt;&lt;p&gt;ಇನ್ನೊಂದೆಡೆ ಮನೆಯ ಹೊರಭಾಗದಲ್ಲಿ ಮಲಗಿದ್ದ ಪತಿ ಶಿವಾನಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಒಳಗಿನಿಂದ ಕೇಳಿಬಂದ ಭೀಕರ ಸದ್ದಿಗೆ ಓಡಿಬಂದಾಗ ಮನೆ ಮಣ್ಣಿನ ರಾಶಿಯಾಗಿದ್ದ ದೃಶ್ಯ ಕಂಡು ಪತಿ ಆಘಾತಕ್ಕೊಳಗಾಗಿದ್ದಾರೆ..&lt;/p&gt;&lt;img&gt;&lt;p&gt;ಇನ್ನೂ ರಾಜ್ಯದಲ್ಲಿ ಅದೆಷ್ಟೋ ಕುಟುಂಬಗಳು ಮೊದಲ ತಲೆಮಾರಿನ ಮಣ್ಣಿನ ಮಾಳಿಗೆಯ ಮನೆಗಳಲ್ಲಿ ಜೀವ ಭಯದ ನಡುವೆ ಬದುಕುತ್ತಿವೆ. ಮಳೆ ಬಂದರೆ ಗೋಡೆ ಕುಸಿಯುವ ಭೀತಿ, ಗಾಳಿ ಬೀಸಿದರೆ ಮೇಲ್ಚಾವಣಿ ಹಾರಿ ಹೋಗುವ ಆತಂಕ.&lt;/p&gt;&lt;img&gt;&lt;p&gt;ಸರ್ಕಾರ ಇಂತಹ ಬಡ ಕುಟುಂಬಗಳನ್ನು ಗುರುತಿಸಿ ವಸತಿ ಯೋಜನೆಯಡಿ ಸುರಕ್ಷಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರೆ, ಮಹಾದೇವಿಯಂತಹ ಅಮಾಯಕ ಜೀವಗಳನ್ನು ಉಳಿಸಬಹುದಿರಲಿಲ್ಲವೇ?&lt;/p&gt;&lt;img&gt;&lt;p&gt;ಸದ್ಯಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸ್ ಠಾಣೆ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾದೇವಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ&lt;/p&gt;]]></content:encoded>
            <category>vijayapura</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/shocking-tragedy-in-vijayapura-roof-of-house-collapses-woman-buried-alive-navggd7"/>
        </item>
        <item>
            <title><![CDATA[ಸಿದ್ದರಾಮಯ್ಯ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಯತೀಂದ್ರ ಭಾವನಾತ್ಮಕ ಹೇಳಿಕೆ]]></title>
            <link>https://kannada.asianetnews.com/karnataka-districts/yathindra-siddaramaiah-says-no-one-can-fill-siddaramaiah-place-vijayapura-gvd/articleshow-nmo26dp</link>
            <guid isPermaLink="true">https://kannada.asianetnews.com/karnataka-districts/yathindra-siddaramaiah-says-no-one-can-fill-siddaramaiah-place-vijayapura-gvd/articleshow-nmo26dp</guid>
            <pubDate>Mon, 08 Jun 2026 00:28:17 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಿದ್ಧಾಂತದ ಮೇಲೆ ರಾಜಕಾರಣ ಮಾಡಿಕೊಂಡು ಬಂದವರು. ಶೋಷಿತ ಸಮಾಜಗಳಿಗೆ ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವ ಸಂವಿಧಾನದ ಆಶಯಗಳ ಕನಸುಗಾರ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kb5brg7t1mngzy1n2w63mkte,imgname-----------------------2025-11-28t192152.441-1764337926394.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಜೂ.08):&lt;/strong&gt; ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಿದ್ಧಾಂತದ ಮೇಲೆ ರಾಜಕಾರಣ ಮಾಡಿಕೊಂಡು ಬಂದವರು. ಶೋಷಿತ ಸಮಾಜಗಳಿಗೆ ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವ ಸಂವಿಧಾನದ ಆಶಯಗಳ ಕನಸುಗಾರ. ಬೇರೆ ಯಾರೂ ಅವರ ಸ್ಥಾನ ತುಂಬಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.&lt;/p&gt;&lt;p&gt;ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಜಿಲ್ಲಾ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ಲೋಕಮಾತಾ ಅಹಲ್ಯಾಬಾಯಿ ಹೊಳ್ಕರ್&zwnj; 301ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಹಲ್ಯಾಬಾಯಿ ಹೊಳ್ಕರ್&zwnj; ಅವರನ್ನು ರಾಜಮಾತೆ ಎಂದು ಕರೆಯುತ್ತೇವೆ. ಅವರು ಸಾಮಾನ್ಯರಲ್ಲ ಅಪ್ರತಿಮ ಹೋರಾಟಗಾರ್ತಿ, ಶ್ರೇಷ್ಠ ಮಹಿಳೆ. ನಮ್ಮ ಸಮಾಜದ ಭವಿಷ್ಯ ಭದ್ರವಾಗಿರಬೇಕಾದರೆ, ನಾವು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸಬೇಕು.&lt;/p&gt;&lt;p&gt;ಯಾವುದೇ ಸಮಾಜ ಬೆಳೆಯಬೇಕಾದರೆ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಮೂರನ್ನು ಅವಶ್ಯವಾಗಿ ಮಾಡಬೇಕು. ಕಷ್ಟವಾದರೂ ಪರವಾಗಿಲ್ಲ, ನಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ಆ ಮಕ್ಕಳು ಉನ್ನತ ಹುದ್ದೆ ಪಡೆದು ತನ್ನ ಕುಟುಂಬ ಜೊತೆಗೆ ಇಡೀ ಸಮಾಜವನ್ನೇ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ.ಜಿಲ್ಲೆಯಲ್ಲಿ 2.5 ಲಕ್ಷ ಕುರುಬ ಸಮುದಾಯ ಇದ್ದರೂ ಒಬ್ಬರೇ ಒಬ್ಬರು ಶಾಸಕರಾಗದೆ ಇರುವುದು ದುರಂತ. ನಾವು ಜಾಗೃತರಗಿ, ಎಲ್ಲ ಕ್ಷೇತ್ರದಲ್ಲೂ ಬೆಳವಣಿಗೆ ಕಾಣಬೇಕು. ನಾವು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.&lt;/p&gt;&lt;h2&gt;&lt;strong&gt;ಬೆಳೆದಾಗಲೇ ಸಾಧ್ಯ&lt;/strong&gt;&lt;/h2&gt;&lt;p&gt;ಮಹಿಳಾ ಆಯೋಗದ ರಾಜ್ಯಾಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಮಾತನಾಡಿ, ಹೆಣ್ಣುಮಕ್ಕಳಿಗೆ ಬಹಳಷ್ಟು ಜವಾಬ್ದಾರಿ ಇರುತ್ತೆ. ಡಾ.ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಅವರ ಪ್ರತಿಬಿಂಬವಾಗಿದ್ದೀರಿ. ಯಾವುದೇ ಸಮಾಜ ಮುಂದೆ ಸಾಗಬೇಕಾದರೆ ಆ ಸಮಾಜದ ಹೆಣ್ಮಕ್ಕಳು ಬೆಳೆದಾಗಲೇ ಸಾಧ್ಯ. ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಜಯಪುರದಲ್ಲಿ ರಾಜಮಾತೆ ಅಹಲ್ಯಾಬಾಯಿ ಹೊಳ್ಕರ್&zwnj; ಅವರ ಪ್ರತಿಮೆ ನಿರ್ಮಿಸಿರುವುದು ಹೆಮ್ಮೆಯಾಗಿದೆ. ಯಾರಲ್ಲಿ ಮಾತೃ ಹೃದಯ ಇರುತ್ತದೆಯೋ ಅವರು ರಾಜಕೀಯದಲ್ಲಿ ಭವಿಷ್ಯ ಕಟ್ಟುಕೊಳ್ಳುತ್ತಾರೆ. ಡಾ.ಯತೀಂದ್ರ ಅವರಲ್ಲಿ ಆ ಗುಣ ಇದೆ ಎಂದರು.&lt;/p&gt;]]></content:encoded>
            <category>vijayapura</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/yathindra-siddaramaiah-says-no-one-can-fill-siddaramaiah-place-vijayapura-gvd/articleshow-nmo26dp"/>
        </item>
        <item>
            <title><![CDATA[ಜೂನ್ 1ರಿಂದ ಯಶವಂತಪುರ-ವಿಜಯಪುರ ನಡುವೆ ಹೊಸ ಎಕ್ಸ್‌ಪ್ರೆಸ್‌; ಗದಗ ಬೈಪಾಸ್ ಮೂಲಕ ನೇರ ಪ್ರಯಾಣ]]></title>
            <link>https://kannada.asianetnews.com/gallery/karnataka-districts/indian-railways-new-bi-weekly-express-train-service-between-yeshwanthpur-and-vijayapura-to-start-from-june-1-mrq-tmlg01x</link>
            <guid isPermaLink="true">https://kannada.asianetnews.com/gallery/karnataka-districts/indian-railways-new-bi-weekly-express-train-service-between-yeshwanthpur-and-vijayapura-to-start-from-june-1-mrq-tmlg01x</guid>
            <pubDate>Sat, 30 May 2026 08:21:50 +0530</pubDate>
            <description><![CDATA[&lt;p&gt;ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್&zwnj; ರೈಲು ಸಂಚಾರ ಜೂನ್ 1 ರಿಂದ ಆರಂಭವಾಗಿದೆ. ಗದಗ, ಬಾದಾಮಿ, ಬಾಗಲಕೋಟೆ ಮೂಲಕ ಸಂಚರಿಸುವ ಈ ರೈಲಿನ ಸಮಯ ಬದಲಾವಣೆಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksvc9j6ygjnf658hrwpack5n,imgname-indian-railways--1780109068510.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್&zwnj; ರೈಲು ಸಂಚಾರ ಜೂನ್ 1 ರಿಂದ ಆರಂಭವಾಗಿದೆ. ಗದಗ, ಬಾದಾಮಿ, ಬಾಗಲಕೋಟೆ ಮೂಲಕ ಸಂಚರಿಸುವ ಈ ರೈಲಿನ ಸಮಯ ಬದಲಾವಣೆಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.&lt;/p&gt;&lt;img&gt;&lt;p&gt;ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್&zwnj; ರೈಲು ಪ್ರಾರಂಭಕ್ಕೆ ರೈಲ್ವೆ ಇಲಾಖೆ ನನ್ನ ಪ್ರಸ್ತಾವನೆ ಮೇರೆಗೆ ಅನುಮೋದಿಸಿ ಜೂ. 1ರಿಂದ ಆರಂಭಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಕುರಿತು ಪ್ರಕಟಣೆ ನೀಡಿರುವ, ವಿಜಯಪುರ ನಾಗರಿಕರ ಅತಿ ಬೇಡಿಕೆಯಾಗಿದ್ದ ಈ ವಿಶೇಷ ರೈಲು ಯಶವಂತಪುರ ಹಾಗೂ ವಿಜಯಪುರದ ಮಧ್ಯೆ ನೇರವಾಗಿ ಸಂಪರ್ಕಿಸಲಿದೆ. ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಬೈಪಾಸ್ ಮುಖಾಂತರ ಈ ರೈಲು ಸಂಚರಿಸಲಿದೆ. ಇದು ವಿಜಯಪುರ - ಬಾಗಲಕೋಟೆ ಜಿಲ್ಲೆಯ ಭಾಗದ ಜನರಿಗೆ ಸೂಪರ್ ಫಾಸ್ಟ್ ರೈಲಿನ ರೀತಿ ಕೆಲಸ ಮಾಡಲಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಶವಂತಪುರ-ಗದಗ ಬೈಪಾಸ್-ವಿಜಯಪುರ ರೈಲಿಗೆ ವಿರೋಧ; 500 ರೂಪಾಯಿ ಯಾರ್ ಕೊಡ್ತಾರೆ ಸ್ವಾಮಿ?&lt;/strong&gt;&lt;/p&gt;&lt;img&gt;&lt;p&gt;ಪ್ರತಿ ಶನಿವಾರ ಮತ್ತು ಸೋಮವಾರ ರೈಲು ಸಂಖ್ಯೆ 06577 ಯಶವಂತಪುರ-ವಿಜಯಪುರ ಹಾಗೂ ಪ್ರತಿ ಭಾನುವಾರ ಹಾಗೂ ಮಂಗಳವಾರ ರೈಲು ಸಂಖ್ಯೆ 06578 ವಿಜಯಪುರ-ಯಶವಂತಪುರ ನಡುವೆ ಈ ವಿಶೇಷ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹೊಸಪೇಟೆ ಮಾರ್ಗವಾಗಿ ಚಲಿಸುವ ಯಶವಂತಪುರ-ವಿಜಯಪುರ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ&lt;/strong&gt;&lt;/p&gt;&lt;img&gt;&lt;p&gt;ಈ ರೈಲಿನ ಸ್ವಲ್ಪ ಸಮಯದ ಬದಲಾವಣೆ ಮಾಡಿ ಯಶವಂತಪುರಕ್ಕೆ ಬೆಳಗ್ಗೆ 5.30-6.30 ಗಂಟೆಯ ಮಧ್ಯೆ ತಲುಪುವ ರೀತಿ ಆದರೆ ಹಾಗೂ ಬಾಗಲಕೋಟೆಗೆ 5.00-5.30 ಗಂಟೆಗೆ ತಲುಪುವ ರೀತಿ ಆದರೆ ಈ ರೈಲಿಗೆ ಅತ್ಯಂತ ದೊಡ್ಡ ಯಶಸ್ಸು ದೊರೆಯುತ್ತದೆ ಎಂದು ಪ್ರಯಾಣಿಕರು ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ರೈಲು ಪ್ರಯಾಣ ಆರಂಭಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಬೆಂಗಳೂರಿನಿಂದ ಬೆಳಗಾವಿಗೆ ಟಿಕೆಟ್ ಸಿಗ್ತಿಲ್ಲವಾ? ಇಲ್ಲಿವೆ ಸ್ಪೆಷಲ್ ರೈಲುಗಳ ಡಿಟೈಲ್ಸ್&lt;/strong&gt;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/indian-railways-new-bi-weekly-express-train-service-between-yeshwanthpur-and-vijayapura-to-start-from-june-1-mrq-tmlg01x"/>
        </item>
        <item>
            <title><![CDATA[ಭೀಕರ ಬರಗಾಲದಲ್ಲೂ ಕಾಂಗ್ರೆಸ್ಸಿಗರಂತೆ ಪ್ರಧಾನಿ ಮೋದಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ: ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ]]></title>
            <link>https://kannada.asianetnews.com/politics/pm-modi-did-not-get-gold-thulabhara-like-congressmen-mp-ramesh-jigajinagi-rav/articleshow-w3u2psd</link>
            <guid isPermaLink="true">https://kannada.asianetnews.com/politics/pm-modi-did-not-get-gold-thulabhara-like-congressmen-mp-ramesh-jigajinagi-rav/articleshow-w3u2psd</guid>
            <pubDate>Sun, 17 May 2026 07:52:51 +0530</pubDate>
            <description><![CDATA[&lt;p&gt;ಪ್ರಧಾನಿ ಮೋದಿ ಚಿನ್ನದ ಖರೀದಿ ಮಿತಿಗೊಳಿಸಲು ಕರೆ ನೀಡಿದ್ದನ್ನು ಸಂಸದ ರಮೇಶ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹೆಸರಲ್ಲಿ ಕಾಂಗ್ರೆಸ್ ನಾಯಕರು ಚಿನ್ನದ ತುಲಾಭಾರ ಮಾಡಿಸಿಕೊಂಡಿದ್ದನ್ನು ಸ್ಮರಿಸಿದ ಅವರು, ಕೋವಿಡ್&zwnj;ನಂತಹ ಸಂಕಷ್ಟವನ್ನು ಮೋದಿ ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k02j9za3md60e5gkvz2msb5y,imgname-dbdb-1752432966979.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯಪುರ (ಮಾ.17): &lt;/strong&gt;ದೇಶದ ಹೆಸರು ಹೇಳಿ ಕಾಂಗ್ರೆಸ್&zwnj;ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.&lt;/p&gt;&lt;p&gt;ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್&zwnj;ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸ ಬಿಜೆಪಿ ಮಾಡಿಲ್ಲ. ಕೋವಿಡ್&zwnj;ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.&lt;/p&gt;&lt;p&gt;ಅಂತಾರಾಷ್ಟ್ರೀಯ ಮಟ್ಟದ ವಿದ್ಯಮಾನಗಳು ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ವೆಚ್ಚ ಕಡಿತದ ಜೊತೆಯಲ್ಲಿ ಪೆಟ್ರೋಲ್-ಡಿಸೇಲ್ ವಾಹನಗಳ ಬಳಕೆ ತಗ್ಗಿಸಲು ಮತ್ತು ಚಿನ್ನಾಭರಣ ಖರೀದಿ ಮಿತಗೊಳಿಸಲು ಕರೆ ನೀಡಿದ್ದಾರೆ ವಿನಃ ಕಾಂಗ್ರೆಸ್&zwnj;ನಂತೆ ದೇಶದ ಹೆಸರಲ್ಲಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ ಎಂದರು. ದೇಶದ ಆರ್ಥಿಕತೆ ಕುಸಿದಿದೆ ಎಂದು ಕಾಂಗ್ರೆಸ್&zwnj;ನಂತೆ ಬಿಜೆಪಿ ಎಂದೂ ಕೈಚೆಲ್ಲಿ ಕುಳಿತಿಲ್ಲ. ತುರ್ತು ಪರಿಸ್ಥಿತಿ ಹೇರಿಲ್ಲ. ಭೀಕರ ಬರದಲ್ಲೂ ದೇಶದ ಹೆಸರಲ್ಲಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ. ದೇಣಿಗೆ ಕೇಳಿಲ್ಲ. ರಕ್ಷಣಾ ನಿಧಿ ಸಂಗ್ರಹಿಸಿಲ್ಲ. 1962ರಲ್ಲಿ ಭಾರತ ಚೀನಾ ಯುದ್ಧದ ಸಂದರ್ಭದಲ್ಲಿ ಪಂಡಿತ ಜವಾಹರಲಾಲ್ ನೆಹರು ಅವರ ವಿವೇಚನಾ ರಹಿತ ನಿರ್ಧಾರದಿಂದಾಗಿ ಭಾರತ ಸೋಲುಕಂಡಿತ್ತು. ಪರಿಣಾಮ ದೊಡ್ಡ ಪ್ರಮಾಣದಲ್ಲಿ ರಕ್ಷಣಾ ನಿಧಿ ಸಂಗ್ರಹಿಸಲು ಮುಂದಾಗಿತ್ತು.&lt;/p&gt;&lt;p&gt;1963ರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ರಾಜ್ಯಾದ್ಯಂತ ಸಂಚರಿಸಿ ರಕ್ಷಣಾ ನಿಧಿ ಸಂಗ್ರಹಿಸಿ ಕೊಡುವುದಾಗಿ ವಾಗ್ದಾನ ಮಾಡಿದ್ದರು. ಪರಿಣಾಮ ವಿಜಯಪುರದಲ್ಲಿ ಕೆ.ಬಿ.ಚೌಧರಿ ಸಂಸದರಾಗಿದ್ದಾಗ ವಿಜಯಪುರದಲ್ಲಿ ಜು.2ರಂದು ಇಂದಿರಾಗಾಂಧಿ ಹಾಗೂ ಎಸ್.ನಿಜಲಿಂಗಪ್ಪ ಅವರಿಗೆ ಜನ ಚಿನ್ನದಿಂದ ತುಲಾಭಾರ ನೆರವೇರಿಸಿದ್ದರು. ಆಗ ಜಿಲ್ಲೆಯಲ್ಲಿ ಭೀಕರ ಬರಗಾಲವಿತ್ತು. ಆದರೂ ನಮ್ಮ ಜನ ಉದಾರ ಮನೋಭಾವದವರು. ದೇಶಕ್ಕಾಗಿ ಮೈಮೇಲಿನ ಚಿನ್ನಾಭರಣವನ್ನೇ ರಕ್ಷಣಾ ನಿಧಿಗೆ ಅರ್ಪಿಸಿದ್ದರು. ಆದರೆ, ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರಿಂದ ನಯಾಪೈಸೆ ನಿಧಿ ಸಂಗ್ರಹಿಸಿಲ್ಲ ಎಂದು ಅವರು ದೂರಿದರು.&lt;/p&gt;&lt;p&gt;ಪೆಟ್ರೋಲ್-ಡಿಸೇಲ್ ಕೊರತೆ ಉಂಟಾಗಿಲ್ಲ. ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತಗೊಳಿಸಿಲ್ಲ. ಎಂಥದ್ದೇ ಬಿಕ್ಕಟ್ಟು ಎದುರಾದರೂ ದೇಶವನ್ನು ಪ್ರಧಾನಿ ಮೋದಿಜಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ವಿನಃ ಜನರಿಗೆ ತೊಂದರೆಯಾಗಲು ಬಿಟ್ಟಿಲ್ಲ. ಕೊರೋನಾ ಸಂದರ್ಭದಲ್ಲಿ ಮೋದಿ ಬದಲು ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ದೇಶಕ್ಕೆ ದೊಡ್ಡ ತೊಂದರೆಯಾಗುತ್ತಿತ್ತು. ಆದರೆ, ಮೋದಿಜಿ ಅಂತಹ ಕಠಿಣ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಿದರು, ಕೊರೊನಾ ವಿರುದ್ಧ ಜನತೆಯ ವಿಶ್ವಾಸದೊಂದಿಗೆ ಹೋರಾಡಿದರು ಎಂದು ಜಿಗಜಿಣಗಿ ಹೇಳಿದ್ದಾರೆ.&lt;/p&gt;&lt;p&gt;ಈಗ ಕೊಲ್ಲಿ ರಾಷ್ಟ್ರಗಳ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬೆನ್ನಿಗೆ ದೇಶದ ಜನ ನಿಲುತ್ತಿರುವುದನ್ನು ಸಹಿಸಲಾಗದ ಕಾಂಗ್ರೆಸ್ಸಿಗರು ಹೊಟ್ಟೆಕಿಚ್ಚಿನಿಂದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಮೋದಿ ಚಪ್ಪಾಳೆ ತಟ್ಟಿ, ಗಂಟೆ ಭಾರಿಸಿ ಎಂದಿದ್ದು ಕರೋನಾ ವಾರಿಯರ್ಸ್&zwnj;ರನ್ನು ಅಭಿನಂದಿಸುವುದಕ್ಕೋಸ್ಕರವೇ ವಿನಃ ಅಸಹಾಯಕತೆಯಿಂದಲ್ಲ. ಹಾಗೆ ಅಸಹಾಯಕತೆಯಿಂದ ಜನರಿಂದ ಚಿನ್ನದ ತುಲಾಭಾರ ನೆರವೇರಿಸಿಕೊಳ್ಳಲು. ರಕ್ಷಣಾ ನಿಧಿ ಸಂಗ್ರಹಿಸಲು ಇದು ಅಸಮರ್ಥ ಕಾಂಗ್ರೆಸ್ ಆಡಳಿತಾವಧಿಯಲ್ಲ. ಬದಲಾಗಿ ಸದೃಢ ಭಾರತದ ಸದೃಢ ನಾಯಕ ಮೋದಿ ಆಡಳಿತ ಎಂಬುದು ನೆನಪಿರಲಿ.&lt;/p&gt;&lt;p&gt;&lt;strong&gt;-ರಮೇಶ ಜಿಗಜಿಣಗಿ, ಸಂಸದ ವಿಜಯಪುರ&lt;/strong&gt;&lt;/p&gt;]]></content:encoded>
            <category>vijayapura</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/pm-modi-did-not-get-gold-thulabhara-like-congressmen-mp-ramesh-jigajinagi-rav/articleshow-w3u2psd"/>
        </item>
    </channel>
</rss>
