<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 14 May 2026 21:03:36 +0530</lastBuildDate>
        <atom:link href="https://kannada.asianetnews.com/rss/yadgir" rel="self" type="application/rss+xml"/>
        <item>
            <title><![CDATA[ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ  ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ!]]></title>
            <link>https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na</link>
            <guid isPermaLink="true">https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na</guid>
            <pubDate>Fri, 17 Apr 2026 12:03:57 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಸುರಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್&zwnj;ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd28gy82ct386kxm2tnn8g5,imgname-yadagiri-accident-news-1776407561160.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಭಯಾನಕ ಅಪಘಾತದಲ್ಲಿ ಕನಿಷ್ಠ 6 ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಕಾರು ಮತ್ತು ಖಾಸಗಿ ಬಸ್ ನಡುವಿನ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಅಪಘಾತದ ಭೀಕರತೆ ಎಷ್ಟಿದೆ ಎಂದರೆ ಮೃತರ ತಲೆಬುರುಡೆಗಳು ಕಾರಿನಲ್ಲಿ ಕಾಣಿಸಿದೆ.&lt;/p&gt;&lt;h2&gt;ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್&lt;/h2&gt;&lt;p&gt;ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಏಸಿ ಬಸ್ ಮತ್ತು ಯಾದಗಿರಿಯಿಂದ ರಾಯಚೂರಿನ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡು ಸಜೀವ ದಹನಗೊಂಡಿದ್ದಾರೆ. ಕಾರು ಸಂಪೂರ್ಣವಾಗಿ ಕರಕಲಾಗಿದ್ದು, ಅದರಲ್ಲಿದ್ದ 6 ಮಂದಿ ಸ್ಥಳದಲ್ಲೇ &amp;nbsp;ಭಸ್ಮವಾಗಿದ್ದಾರೆ. ಬಸ್&zwnj;ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.&lt;/p&gt;&lt;h2&gt;ಬಸ್&zwnj;ಗೂ ವ್ಯಾಪಿಸಿದ ಬೆಂಕಿ&lt;/h2&gt;&lt;p&gt;ಅಪಘಾತದ ಹೊಡೆತಕ್ಕೆ ಬಸ್&zwnj;ಗೂ ಬೆಂಕಿ ತಗುಲಿದ್ದು, ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯರು ಹಾಗೂ ತಕ್ಷಣ ಆಗಮಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾದರು. ಆದರೆ ಕಾರು ಅಪ್ಪಚ್ಚಿಯಾಗಿ &amp;nbsp;ಡೋರ್ ಓಪನ್ &amp;nbsp;ಆಗಲೇ ಇಲ್ಲ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಹರಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿ ನಂದಿಸಿದ ನಂತರ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಆರಂಭಿಸಲಾಗಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸುರಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣವನ್ನು ತಿಳಿಯುವ ಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;ಈ ದುರಂತದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮತ್ತೆ ಖಾಸಗಿ ಬಸ್ ಅಪಘಾತದ ಭೀತಿ ಮೂಡಿಸಿದೆ. ರಸ್ತೆ ಸುರಕ್ಷತೆ ಕುರಿತು ಪ್ರಶ್ನೆಗಳು ಮತ್ತೆ ಉದ್ಭವಿಸಿವೆ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na"/>
        </item>
        <item>
            <title><![CDATA[ರಾಜ್ಯದಲ್ಲಿ ಮಳೆ ಆರ್ಭಟ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮುಂಡರಗಿ ಟವರ್ ಢಮಾರ್, ಯಾದಗಿರಿ ಸಿಡಿಲಿಗೆ 50 ಕುರಿ ಬಲಿ!]]></title>
            <link>https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah</link>
            <guid isPermaLink="true">https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah</guid>
            <pubDate>Mon, 27 Apr 2026 20:15:43 +0530</pubDate>
            <description><![CDATA[&lt;p&gt;ಹವಾಮಾನ ಇಲಾಖೆಯು ಕರ್ನಾಟಕದ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗದಲ್ಲಿ ಬಿರುಗಾಳಿಗೆ ಮೊಬೈಲ್ ಟವರ್ ಕುಸಿದುಬಿದ್ದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq7pcmhj9phzabq7y5zf6te3,imgname-karnataka-rain-orange-alert-1777301082673.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಗದಗ/ಯಾದಗಿರಿ (ಏ.27): ರಾ&lt;/strong&gt;ಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಒಟ್ಟು ಎಂಟು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಯಾವ ಯಾವ ಜಿಲ್ಲೆಗಳಲ್ಲಿ ಮಳೆ?&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದ ಎರಡು ಪ್ರತ್ಯೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ:&lt;/p&gt;&lt;p&gt;&lt;strong&gt;ಹೆಚ್ಚಿನ ತೀವ್ರತೆಯ ಮಳೆ (ಗಂಟೆಗೆ 40-50 ಕಿ.ಮೀ ವೇಗದ ಗಾಳಿ):&lt;/strong&gt;&lt;/p&gt;&lt;p&gt;ಚಿಕ್ಕಮಗಳೂರು, ಹಾಸನ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದ್ದು, ಗುಡುಗು ಸಹಿತ ಮಿಂಚಿನ ಅಬ್ಬರ ಜೋರಾಗಿರಲಿದೆ.&lt;/p&gt;&lt;p&gt;&lt;strong&gt;ಸಾಧಾರಣ ಮಳೆ (ಗಂಟೆಗೆ 30-40 ಕಿ.ಮೀ ವೇಗದ ಗಾಳಿ):&lt;/strong&gt;&lt;/p&gt;&lt;p&gt;ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.&lt;/p&gt;&lt;p&gt;ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಧಾರಾಕಾರ ಮಳೆ ಮತ್ತು ಬಿರುಗಾಳಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗ ಜಿಲ್ಲೆಯಲ್ಲಿ ಬೃಹತ್ ಮೊಬೈಲ್ ಟವರ್ ನೆಲಕ್ಕಪ್ಪಳಿಸಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.&lt;/p&gt;&lt;h2&gt;&lt;strong&gt;ಯಾದಗಿರಿ: ಕುರಿಗಾಹಿಗಳ ಬದುಕು ಬೀದಿಗೆ&lt;/strong&gt;&lt;/h2&gt;&lt;p&gt;ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ ರೈತರು ತತ್ತರಿಸಿದ್ದಾರೆ. ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು ಮಲ್ಲಪ್ಪ, ಆಶಪ್ಪ, ಜಾಲ್ಲಪ್ಪ, ಲಕ್ಸಮಪ್ಪ ಮತ್ತು ಹನುಮಂತ ಎಂಬ ರೈತರಿಗೆ ಸೇರಿದ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ತಮ್ಮ ಜೀವನಾಧಾರವಾಗಿದ್ದ ಕುರಿಗಳ ಮಾರಣಹೋಮ ಕಂಡು ಕುರಿಗಾಹಿಗಳು ಕಣ್ಣೀರು ಹಾಕುತ್ತಿದ್ದಾರೆ. ನೊಂದ ರೈತರಿಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದಾರೆ.&lt;/p&gt;&lt;h2&gt;&lt;strong&gt;ಗದಗ: ಗಾಳಿ ಮಳೆಗೆ ಉರುಳಿದ ಮೊಬೈಲ್ ಟವರ್&lt;/strong&gt;&lt;/h2&gt;&lt;p&gt;ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಜಾಗೃತಿ ಸರ್ಕಲ್ ಬಳಿ ಬಿರುಗಾಳಿ ಮಳೆಯ ರಭಸಕ್ಕೆ ಏರ್&zwnj;ಟೆಲ್ ಮೊಬೈಲ್ ಟವರ್&zwnj;ವೊಂದು ಬಿಲ್ಡಿಂಗ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಸವಣೂರು ಎಂಬುವವರಿಗೆ ಸೇರಿದ ಕಟ್ಟಡದ ಮೇಲೆ ಈ ಟವರ್ ಅಳವಡಿಸಲಾಗಿತ್ತು. ಅದೃಷ್ಟವಶಾತ್ ಟವರ್ ಬೀಳುವ ಸಮಯದಲ್ಲಿ ಜನಸಂಚಾರ ವಿರಳವಾಗಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h2&gt;&lt;strong&gt;ಸಂಭವನೀಯ ಹಾನಿಗಳು:&lt;/strong&gt;&lt;/h2&gt;&lt;ul&gt; &lt;li&gt;ಈ ಹಠಾತ್ ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳು ಎದುರಾಗಬಹುದು ಎಂದು ಇಲಾಖೆ ಎಚ್ಚರಿಸಿದೆ:&lt;/li&gt; &lt;li&gt;ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು.&lt;/li&gt; &lt;li&gt;ರಸ್ತೆಗಳಲ್ಲಿ ಸಣ್ಣಪುಟ್ಟ ಸಂಚಾರ ದಟ್ಟಣೆ ಹಾಗೂ ಮರಗಳ ಕೊಂಬೆಗಳು ಮುರಿದು ಬೀಳುವ ಸಾಧ್ಯತೆಯಿದೆ.&lt;/li&gt; &lt;li&gt;ದುರ್ಬಲವಾದ ಕಟ್ಟಡಗಳು ಅಥವಾ ಕಚ್ಚಾ ಮನೆಗಳಿಗೆ ಹಾನಿಯಾಗಬಹುದು.&lt;/li&gt; &lt;li&gt;ವಿಶೇಷವಾಗಿ ರೈತರು ಕೊಯ್ಲು ಮಾಡಿ ತೆರೆದ ಜಾಗದಲ್ಲಿಟ್ಟಿರುವ ಬೆಳೆಗಳಿಗೆ ಹಾನಿಯಾಗುವ ಸಂಭವವಿದೆ.&lt;/li&gt; &lt;li&gt;ಸಾರ್ವಜನಿಕರಿಗೆ ಸೂಚನೆಗಳು:&lt;/li&gt; &lt;li&gt;ಮಳೆಯ ಸಮಯದಲ್ಲಿ ಸುರಕ್ಷಿತವಾಗಿರಲು ಹವಾಮಾನ ಇಲಾಖೆಯು ಕೆಲವು ಕ್ರಮಗಳನ್ನು ಸೂಚಿಸಿದೆ:&lt;/li&gt; &lt;li&gt;ಮಳೆಯ ಸಂದರ್ಭದಲ್ಲಿ ಮನೆಯೊಳಗೆ ಇರಿ, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ.&lt;/li&gt; &lt;li&gt;ಸಾಧ್ಯವಾದರೆ ಪ್ರಯಾಣವನ್ನು ಮುಂದೂಡಿ. ಒಂದು ವೇಳೆ ಪ್ರಯಾಣಿಸುವುದು ಅನಿವಾರ್ಯವಾದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ.&lt;/li&gt; &lt;li&gt;ಗುಡುಗು ಸಿಡಿಲು ಇರುವಾಗ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.&lt;/li&gt; &lt;li&gt;ಮನೆಯಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್&zwnj;ಪ್ಲಗ್ (Unplug) ಮಾಡಿ.&lt;/li&gt; &lt;li&gt;ಜಲಮೂಲಗಳಿಂದ (ಕೆರೆ, ನದಿ) ತಕ್ಷಣ ಹೊರಬನ್ನಿ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಿ.&lt;/li&gt; &lt;li&gt;ರೈತರು ತಮ್ಮ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡಿ.&lt;/li&gt; &lt;li&gt;ಮುಂದಿನ ಮೂರು ಗಂಟೆಗಳ ಕಾಲ ಈ ಜಿಲ್ಲೆಗಳ ಜನರು ಜಾಗರೂಕರಾಗಿರಬೇಕು ಎಂದು ಹವಾಮಾನ ಇಲಾಖೆಯ ಕರ್ತವ್ಯನಿರತ ಅಧಿಕಾರಿಗಳು ತಿಳಿಸಿದ್ದಾರೆ.&lt;/li&gt;&lt;/ul&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah"/>
        </item>
        <item>
            <title><![CDATA[8 ವರ್ಷ ಪ್ರೀತಿ, 3 ಗರ್ಭಪಾತ, 35 ಲಕ್ಷ; ಮಹಿಳಾ ಪೇದೆಯಿಂದ ಯಾದಗಿರಿ PSIಗೆ ಲವ್ ದೋಖಾ ಆರೋಪ?]]></title>
            <link>https://kannada.asianetnews.com/gallery/karnataka-districts/8-years-of-love-3-abortions-35-lakhs-raichur-rural-police-station-female-constable-accuses-yadgir-psi-of-love-fraud-mrq-4yuhl4q</link>
            <guid isPermaLink="true">https://kannada.asianetnews.com/gallery/karnataka-districts/8-years-of-love-3-abortions-35-lakhs-raichur-rural-police-station-female-constable-accuses-yadgir-psi-of-love-fraud-mrq-4yuhl4q</guid>
            <pubDate>Wed, 06 May 2026 09:05:57 +0530</pubDate>
            <description><![CDATA[&lt;p&gt;ಇಂಟಲಿಜೆನ್ಸ್PSI ವಿರೇಶ್ ಆಲೂರು, 8 ವರ್ಷಗಳಿಂದ ಪ್ರೀತಿಸುತ್ತಿದ್ದ ಮಹಿಳಾ ಪೇದೆ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುಟುಂಬಕ್ಕೆ 35 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಇದೀಗ ಬೇರೊಬ್ಬರೊಂದಿಗೆ ಮದುವೆ ನಿಶ್ಚಯವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqxn6cpcy110z4395y33mv0v,imgname-yadagiri-psi-love-dokha--4--1778038026956.jpg" type="image/jpeg" height="390" width="690"/>
            <content:encoded><![CDATA[&lt;p&gt;ಇಂಟಲಿಜೆನ್ಸ್PSI ವಿರೇಶ್ ಆಲೂರು, 8 ವರ್ಷಗಳಿಂದ ಪ್ರೀತಿಸುತ್ತಿದ್ದ ಮಹಿಳಾ ಪೇದೆ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುಟುಂಬಕ್ಕೆ 35 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಇದೀಗ ಬೇರೊಬ್ಬರೊಂದಿಗೆ ಮದುವೆ ನಿಶ್ಚಯವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ತನಗೆ ಮಹಿಳಾ ಪೇದೆಯಿಂದ ಮೋಸವಾಗಿದೆ ಎಂದು ಯಾದಗಿರಿ ಜಿಲ್ಲೆಯ ಶಹಾಪುರ ಠಾಣೆಯಲ್ಲಿ ಇಂಟಲಿಜೆನ್ಸ್ ಪಿಎಸ್&zwnj;ಐ ವಿರೇಶ್ ಆಲೂರು ಮಾಧ್ಯಮಗಳ ಮುಂದೆ ಗಂಭೀರ ಆರೋಪ ಮಾಡಿದ್ದಾರೆ. ನಾವಿಬ್ಬರು ಕಳೆದ ಎಂಟು ವರ್ಷಗಳಿಂದ ಸಂಬಂಧದಲ್ಲಿದ್ದು, ಇದೀಗ ಜಾತಿ ಕಾರಣ ನೀಡಿ ನನ್ನನ್ನು ದೂರ ಮಾಡ್ತಿದ್ದಾರೆ ಎಂದು ವಿರೇಶ್ ಆರೋಪಿಸಿದ್ದಾರೆ. ಮೇ 7ರಂದು ರಾಯಚೂರಿನಲ್ಲಿ ಮಹಿಳಾ ಪೇದೆಯ ಮದುವೆ ನಡೆಯಲಿದೆ.&lt;/p&gt;&lt;img&gt;&lt;p&gt;ವೀರೇಶ್ ಆಲೂರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡದ ಮೂಲ ನಿವಾಸಿಯಾಗಿದ್ದು, ಮಹಿಳಾ ಪೇದೆ ಸುಮಾ (ಹೆಸರು ಬದಲಾಯಿಸಲಾಗಿದೆ) ವಿಜಯಪುರ ಜಿಲ್ಲೆಯ ಆಲ್&zwnj;ಮೇಲ್ ತಾಲೂಕಿನ ಬಳಗಾನೂರಿನವರು. ಎಂಟು ವರ್ಷದ ಹಿಂದೆ ಸಿಂದಗಿಯ ಶ್ರೀ ಮಾತಾ ಕೋಚಿಂಗ್ ಸೆಂಟರ್&zwnj;ನಲ್ಲಿ ವಿರೇಶ್ ಆಲೂರು ಅವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಸುಮಾ ಪರಿಚಯವಾಗಿತ್ತು.&lt;/p&gt;&lt;img&gt;&lt;p&gt;ಮೊದಲಿಗೆ ಪರಿಚಯ, ಬಳಿಕ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಇದಾದ ಮೇಲೆ ಇಬ್ಬರ ನಡುವೆ ಹಲವು ಬಾರಿ ದೈಹಿಕ ಸಂಪರ್ಕ ನಡೆದಿದೆ. ರಾಯಚೂರಿನ ಬಾಲಮರೆಮ್ಮ ಟೆಂಪಲ್ ನಲ್ಲಿ ಹಾರ ಬದಲಿಸಿಕೊಂಡು ಗಂಡ ಹೆಂಡತಿಯಂತೆ ಒಂದೇ ರೂಮಿನಲ್ಲಿ ಸಂಸಾರ ನಡೆಸಿದ್ದೇವೆ. ಬಳಿಕ ಆರೋಗ್ಯ ಸಮಸ್ಯೆಯ ಕಾರಣ ನೀಡಿ ಮೂರು ಬಾರಿ ಸುಮಾ ಗರ್ಭಪಾತ ಮಾಡಿಸಿಕೊಂಡಿದ್ದಾಳೆ ಎಂದು ವಿರೇಶ್ ಆರೋಪಿಸುತ್ತಾರೆ.&lt;/p&gt;&lt;img&gt;&lt;p&gt;ಮೊದಲಿಗೆ ಸುಮಾಗೆ ಎಸ್&zwnj;ಡಿಎ ಹುದ್ದೆಗೆ ಆಯ್ಕೆ ಕೊಪ್ಪಳದಲ್ಲಿ ಡ್ಯೂಟಿ ಇತ್ತು.ಇತ್ತ ಪ್ರೊಬೇಷನರಿ ಪಿಎಸ್&zwnj;ಐ ಆಗಿ ಹೊಸಪೇಟೆಯಲ್ಲಿ ನನ್ನ ಕೆಲಸವಿತ್ತು. ಕೊಪ್ಪಳದಲ್ಲಿ ಇಬ್ಬರೂ ಒಂದೇ ರೂಮಿನಲ್ಲಿ 3 ವರ್ಷ ವಾಸವಾಗಿದ್ದೀವಿ. ಎಸ್&zwnj;ಡಿಎ ಹುದ್ದೆ ಬಿಟ್ಟು ಪೇದೆ&zwnj; ಹುದ್ದೆಗೆ ಸುಮಾ ಆಯ್ಕೆಯಾಗಿ ಸದ್ಯ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಡ್ಯೂಟಿಯಲ್ಲಿದ್ದಾರೆ. ರಾಯಚೂರಿನಲ್ಲೂ 3 ವರ್ಷ&zwnj; ಒಂದೇ ರೂಮಿನಲ್ಲಿದ್ದೀವಿ. ಬೆಂಗಳೂರಿಗೆ ವರ್ಗಾವಣೆಯಾದ್ರೂ ರಾಯಚೂರಿಗೆ ಬಂದು ಹೋಗುತ್ತಿದ್ದೆ ಎಂದು ಹೇಳುತ್ತಾರೆ ವಿರೇಶ್.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಾಸನದಲ್ಲಿ ಘೋರ ಕೃತ್ಯ: ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಖಾಸಗಿ ಭಾಗಕ್ಕೆ ಒದ್ದು ಹತ್ಯೆ&lt;/strong&gt;&lt;/p&gt;&lt;img&gt;&lt;p&gt;ಸುಮಾ ಕುಟುಂಬಕ್ಕೆ 35 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದು, ಈ ಹಣದಿಂದಲೇ ಮನೆ ಕಟ್ಟಿಸಿಕೊಂಡಿದ್ದಾರೆ. ಆಕೆಯ ತಮ್ಮನಿಗೂ ಟ್ರಾಕ್ಟರ್ ಕೊಡಿಸಿದ್ದೇನೆ. ಮದುವೆ ವಿಷಯ ಬಂದಾಗ ಜಾತಿ ಕಾರಣ ನೀಡಲಾಗುತ್ತಿದೆ. ನನಗೆ ಸುಮಾ ಬೇಕು ಎಂದು ವಿರೇಶ್ ಹೇಳುತ್ತಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಸುಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;2ನೇ ಸಂಸಾರ ಪೋಷಿಸುವ ವ್ಯಕ್ತಿ ತನ್ನ ತಾಯಿ ಪೋಷಣೆ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ&lt;/strong&gt;&lt;/p&gt;]]></content:encoded>
            <category>yadgir</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/8-years-of-love-3-abortions-35-lakhs-raichur-rural-police-station-female-constable-accuses-yadgir-psi-of-love-fraud-mrq-4yuhl4q"/>
        </item>
        <item>
            <title><![CDATA[ಯಾದಗಿರಿ: ರಸ್ತೆಬದಿ ನವಜಾತ ಗಂಡು ಶಿಶು ಶವಪತ್ತೆ: ತಡರಾತ್ರಿ ಎಸೆದು ಹೋಗಿರುವ ಶಂಕೆ]]></title>
            <link>https://kannada.asianetnews.com/state/dead-body-of-newborn-baby-found-on-the-roadside-in-gurumithakal-town-yadgir/articleshow-5nob1gm</link>
            <guid isPermaLink="true">https://kannada.asianetnews.com/state/dead-body-of-newborn-baby-found-on-the-roadside-in-gurumithakal-town-yadgir/articleshow-5nob1gm</guid>
            <pubDate>Fri, 27 Mar 2026 11:24:25 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದಲ್ಲಿ ರಸ್ತೆ ಬದಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಾಮಾಜಿಕ ಕಳಂಕಕ್ಕೆ ಅಂಜಿ ಮಗುವನ್ನು ಎಸೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmpxa3zbwy7jdhh2v1cewfhy,imgname-newborn-deadbody-found-in-roadside--2--1774590431210.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ರಸ್ತೆ ಬದಿ ನವಜಾತ ಶಿಶುವಿನ ಶವ ಪತ್ತೆ&lt;/strong&gt;&lt;/h2&gt;&lt;p&gt;ಯಾದಗಿರಿ: ಬೆಳ್ಳಂಬೆಳಗ್ಗೆ ರಸ್ತೆ ಬದಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆಯ ಗುರಮಿಠಲ್ ಪಟ್ಟಣದ ಉಪ್ಪರಗಡ್ಡಾ ಬಡಾವಣೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನವಜಾತ ಶಿಶು ಶವ ಕಂಡು ಆತಂಕಗೊಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಹುಟ್ಟಿದ ಕೂಡಲೇ ಮಗುವನ್ನು ತಂದು ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಅಪರಿಚಿತರು ಬೇರೆ ಎಲ್ಲಿಂದಲೂ ಬಂದು ತಡರಾತ್ರಿ ಮಗುವನ್ನು ಇಲ್ಲಿ ಬಿಸಾಕಿ ಹೋಗಿರುವ ಅನುಮಾನ ವ್ಯಕ್ತವಾಗಿದೆ.&lt;/p&gt;&lt;h3&gt;&lt;strong&gt;ರಾತ್ರಿ ತಿಪ್ಪೆಯಲ್ಲಿ ಎಸೆದು ಹೋಗಿರುವ ಶಂಕೆ&lt;/strong&gt;&lt;/h3&gt;&lt;p&gt;ರಾತ್ರಿ ತಿಪ್ಪೆಯಲ್ಲಿ ಒದ್ದಾಡಿ ಮಗು ಸಾವನಪ್ಪಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಇಂತಹ ಎರಡನೇ ಪ್ರಕರಣ ಇದಾಗಿದೆ. ಬಹುಶಃ ಅನೈತಿಕ ಸಂಬಂಧದ ಹಿನ್ನೆಲೆ ಮಗು ಜನಿಸಿರಬಹುದು. ಹೀಗಾಗಿ ಸಾಮಾಜಿಕ ಕಳಂಕಕ್ಕೆ ಅಂಜಿ ಮಗುವನ್ನು ಎಸೆದು ಹೋಗಿರುವ ಅನುಮಾನ ವ್ಯಕ್ತವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ 10 ರೂ ಇಳಿಸಿದ ಕೇಂದ್ರ ಸರ್ಕಾರ: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ನಿರಾಳ&lt;/strong&gt;&lt;/p&gt;&lt;p&gt;ಮೃತಪಟ್ಟ ಮಗು ಗಂಡು ಮಗುವಾಗಿದೆ. ಅನೈತಿಕ ಸಂಬಂಧ ಅಥವಾ ಅಪ್ರಾಪ್ತ ಬಾಲಕಿ ಗರ್ಭಧಾರಣೆಯಿಂದ ಕೃತ್ಯ ನಡೆದಿರಬಹುದು ಎನ್ನಲಾಗುತ್ತಿದೆ. ಹೀಗಾಗಿ ಗರ್ಭಪಾತ ಮಾಡಿ ಮಗುವನ್ನು ಎಸೆದು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆ ರವಾನಿಸಲಾಗಿದೆ.&lt;/p&gt;&lt;p&gt;ಒಟ್ಟಿನಲ್ಲಿ ಮಗು ಬೇಕು ಎಂದವರಿಗೆ ಎಷ್ಟು ಔಷಧಿ ಮಾಡಿದರೂ ಈ ಕಾಲದಲ್ಲಿ ಮಕ್ಕಳಾಗುತ್ತಿಲ್ಲ, ಆದರೆ ಮಗು ಬೇಡ ಎಂದವರಿಗೆ ಭಗವಂತ ಕರೆದು ಕರೆದು ಕೊಡುತ್ತಾನೆ. ಇತ್ತ ಹೀಗೆ ಸುಲಭವಾಗಿ ಮಕ್ಕಳಾಗುವವರು ಹೀಗೆ ಮಕ್ಕಳ ಮೌಲ್ಯ ತಿಳಿಯದೇ ಅನಾಚಾರ ಮಾಡ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ನಿರ್ಮಾಣವಾದರೂ ಉದ್ಘಾಟನೆಯಾಗದ ಲಿಫ್ಟ್ : ಫ್ಲಾಟ್ ಫಾರ್ಮಿಂದ ಹೊರಗೆ ಬರಲು ಪಡಬಾರದ ಕಷ್ಟಪಟ್ಟ ಕಾಲಿಲ್ಲದ ಯುವಕ&lt;/p&gt;]]></content:encoded>
            <category>yadgir</category>
            <dc:creator>Anusha Kb</dc:creator>
            <atom:link href="https://kannada.asianetnews.com/state/dead-body-of-newborn-baby-found-on-the-roadside-in-gurumithakal-town-yadgir/articleshow-5nob1gm"/>
        </item>
        <item>
            <title><![CDATA[ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!]]></title>
            <link>https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd</link>
            <guid isPermaLink="true">https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd</guid>
            <pubDate>Fri, 17 Apr 2026 13:36:19 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಸುರಪುರ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd7knr6ry08qs6jy7peng04,imgname-yadagiri-accident-1776413169412.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ/ರಾಯಚೂರು : &lt;/strong&gt;ನಿನ್ನೆ ಅಂದರೆ ಎಪ್ರಿಲ್ 16ರಂದು ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆಂದು ಹೊರಟ್ಟಿದ್ದ ಚಿಕ್ಕಮಗಳೂರು ಮತ್ತು ಹಾಸನದ 8 ಮಂದಿ ಕುಟುಂಬದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಕಹಿ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ದುರಂತ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು.&lt;/p&gt;&lt;h2&gt;ಬೆಳಗ್ಗೆ ನಡೆದ ಭೀಕರ ಅಪಘಾತ&lt;/h2&gt;&lt;p&gt;ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.&lt;/p&gt;&lt;h2&gt;ಒಂದೇ ಕುಟುಂಬದ 6 ಮಂದಿ ಸಜೀವ ದಹನ&lt;/h2&gt;&lt;p&gt;ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ.&lt;/p&gt;&lt;h2&gt;ಇಬ್ಬರಿಗೆ ಗಂಭೀರ ಗಾಯ&lt;/h2&gt;&lt;p&gt;ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ&lt;/p&gt;&lt;h2&gt;ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ&lt;/h2&gt;&lt;p&gt;ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್&zwnj;ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;h2&gt;ಭೀಕರ ದೃಶ್ಯ &ndash; ಕಾರು ಭಸ್ಮ&lt;/h2&gt;&lt;p&gt;ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು.&lt;/p&gt;&lt;h2&gt;ತನಿಖೆ ಆರಂಭ&lt;/h2&gt;&lt;p&gt;ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd"/>
        </item>
        <item>
            <title><![CDATA[ಶಿವಮೊಗ್ಗ, ಮಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆರಾಯ: ವಿಮಾನ ಲ್ಯಾಂಡಿಂಗ್ ಸಮಸ್ಯೆ, ಮನೆಗಳು ವಿನಾಶ!]]></title>
            <link>https://kannada.asianetnews.com/gallery/state/karnataka-rain-updates-flights-circle-in-mangaluru-sky-due-to-rain-heavy-destruction-in-yadgir-b493qdn</link>
            <guid isPermaLink="true">https://kannada.asianetnews.com/gallery/state/karnataka-rain-updates-flights-circle-in-mangaluru-sky-due-to-rain-heavy-destruction-in-yadgir-b493qdn</guid>
            <pubDate>Thu, 14 May 2026 21:03:29 +0530</pubDate>
            <description><![CDATA[&lt;p&gt;ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮುಂಗಾರು ಪೂರ್ವ ಮಳೆಯು ಹಾನಿ ಮಾಡಿದೆ. ಮಂಗಳೂರಿನಲ್ಲಿ ವಿಮಾನ ಸಂಚಾರ ವ್ಯತ್ಯಯ, ಯಾದಗಿರಿಯಲ್ಲಿ ಮನೆಗಳಿಗೆ ಹಾನಿ ಹಾಗೂ ಹಲವೆಡೆ ವಿದ್ಯುತ್ ಕಡಿತದಂತಹ ಅವಾಂತರ ಸೃಷ್ಟಿಸಿದೆ. ಎಲ್ಲಿ ಏನೇನು ಹಾನಿಯಾಗಿದೆ ತಿಳಿಯಲು ಓದಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krkhh7vdmgmzcqbvbwd34hj9,imgname-karnataka-rain-update-1778772385645.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮುಂಗಾರು ಪೂರ್ವ ಮಳೆಯು ಹಾನಿ ಮಾಡಿದೆ. ಮಂಗಳೂರಿನಲ್ಲಿ ವಿಮಾನ ಸಂಚಾರ ವ್ಯತ್ಯಯ, ಯಾದಗಿರಿಯಲ್ಲಿ ಮನೆಗಳಿಗೆ ಹಾನಿ ಹಾಗೂ ಹಲವೆಡೆ ವಿದ್ಯುತ್ ಕಡಿತದಂತಹ ಅವಾಂತರ ಸೃಷ್ಟಿಸಿದೆ. ಎಲ್ಲಿ ಏನೇನು ಹಾನಿಯಾಗಿದೆ ತಿಳಿಯಲು ಓದಿ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು/ಮಂಗಳೂರು: &lt;/strong&gt;ಕಳೆದ ಕೆಲವು ದಿನಗಳಿಂದ ಸುಡುತ್ತಿರುವ ಬಿಸಿಲಿನಿಂದ ಬೆಂದು ಹೋಗಿದ್ದ ಕರ್ನಾಟಕದ ಜನತೆಗೆ ವರುಣದೇವ ತಂಪೆರೆದಿದ್ದಾನೆ. ಆದರೆ, ರಾಜ್ಯದ ಹಲವೆಡೆ ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಒಂದೆಡೆ ಮಳೆ ಖುಷಿ ನೀಡಿದರೆ, ಮತ್ತೊಂದೆಡೆ ಅಪಾರ ಹಾನಿ ಉಂಟುಮಾಡಿದೆ. ವಿಶೇಷವಾಗಿ ಮಂಗಳೂರು, ಯಾದಗಿರಿ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ರೌದ್ರಾವತಾರ ಕಂಡುಬಂದಿದೆ.&lt;/p&gt;&lt;img&gt;&lt;p&gt;ಕರಾವಳಿ ನಗರಿ ಮಂಗಳೂರಿನಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ರನ್ ವೇ ಸರಿಯಾಗಿ ಕಾಣಿಸದ ಹಿನ್ನೆಲೆಯಲ್ಲಿ ಎರಡು ವಿಮಾನಗಳು ಇಳಿಯಲಾಗದೆ ವಿಟ್ಲ ಸಮೀಪದ ಆಕಾಶದಲ್ಲಿ ಸುದೀರ್ಘ ಕಾಲ ಸುತ್ತಾಡುತ್ತಿವೆ. ಇದರಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.&lt;/p&gt;&lt;img&gt;&lt;p&gt;ಯಾದಗಿರಿ ಜಿಲ್ಲೆಯಾದ್ಯಂತ ಭಾರಿ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಯಾದಗಿರಿ ನಗರ, ಶಹಾಪುರ ಮತ್ತು ಸುರಪುರ ತಾಲೂಕುಗಳಲ್ಲಿ ವರುಣನ ಆರ್ಭಟ ಜೋರಾಗಿತ್ತು. ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ಬಿರುಗಾಳಿಯ ರಭಸಕ್ಕೆ ಮನೆಗಳ ಮೇಲ್ಛಾವಣಿಯ ತಗಡುಗಳು ನೂರಾರು ಅಡಿ ದೂರಕ್ಕೆ ಹಾರಿ ಹೋಗಿವೆ.&amp;nbsp;&lt;/p&gt;&lt;img&gt;&lt;p&gt;ಯಾದಗಿರಿ ಜಿಲ್ಲೆಯಾದ್ಯಂತ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಸಮವಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ಮಳೆ ತಂಪು ನೀಡಿದೆಯಾದರೂ, ಬಡ ಕುಟುಂಬಗಳ ಆಸ್ತಿಪಾಸ್ತಿಗೆ ಹಾನಿಯಾಗಿರುವುದು ನೋವು ತಂದಿದೆ.&lt;/p&gt;&lt;img&gt;&lt;p&gt;ಶಿವಮೊಗ್ಗದಲ್ಲಿ ಹಲವು ದಿನಗಳ ಸುದೀರ್ಘ ಕಾಯುವಿಕೆಯ ನಂತರ ಮಳೆರಾಯ ಧರೆಗಿಳಿದಿದ್ದಾನೆ. ಸಂಜೆ 6 ಗಂಟೆಯ ಸುಮಾರಿಗೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಳೆ ತಂಪಾಗಿದೆ. ಆದರೆ, ದಿಢೀರ್ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಯಿತು.&lt;/p&gt;&lt;img&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಭಾರಿ ಮಳೆಯಾಗುತ್ತಿದೆ. ಸಂಜೆ 7 ಗಂಟೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿಯ ಜನರಿಗೆ ಸೆಕೆಯಿಂದ ಮುಕ್ತಿ ಸಿಕ್ಕಿದೆ. ಜಿಲ್ಲೆಯ ಹೊನ್ನಾವರ ಮತ್ತು ಕುಮಟಾ ತಾಲೂಕುಗಳಲ್ಲೂ ಮೋಡಕವಿದ ವಾತಾವರಣವಿದ್ದು, ರಾತ್ರಿಯ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ, ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಗುಡುಗು ಸಿಡಿಲಿನ ಸಂದರ್ಭದಲ್ಲಿ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-rain-updates-flights-circle-in-mangaluru-sky-due-to-rain-heavy-destruction-in-yadgir-b493qdn"/>
        </item>
        <item>
            <title><![CDATA[ಲೋಕಾಯುಕ್ತ ಬಲೆಗೆ ಬಿತ್ತು ಮತ್ತೊಂದು ಖಾಕಿ: ಆ್ಯಕ್ಸಿಡೆಂಟ್ ವಾಹನ ಬಿಡುಗಡೆಗೆ ಲಂಚ ಕೇಳಿ ಸಿಕ್ಕಿಬಿದ್ದ ನಾಗೇಶ್!]]></title>
            <link>https://kannada.asianetnews.com/karnataka-districts/yadgiri-traffic-police-head-constable-nagesh-arrested-by-lokayukta-for-bribe-sat/articleshow-euygav6</link>
            <guid isPermaLink="true">https://kannada.asianetnews.com/karnataka-districts/yadgiri-traffic-police-head-constable-nagesh-arrested-by-lokayukta-for-bribe-sat/articleshow-euygav6</guid>
            <pubDate>Thu, 23 Apr 2026 17:00:07 +0530</pubDate>
            <description><![CDATA[&lt;p&gt;ಯಾದಗಿರಿಯಲ್ಲಿ ಅಪಘಾತಕ್ಕೀಡಾದ ವಾಹನವನ್ನು ಬಿಡುಗಡೆ ಮಾಡಲು 13,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಟ್ರಾಫಿಕ್ ಹೆಡ್ ಕಾನ್&zwnj;ಸ್ಟೆಬಲ್ ನಾಗೇಶ್, ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ. ಡಿವೈಎಸ್&zwnj;ಪಿ ಇನಾಂದಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpx0m4hz2k0zpje3hkq6qhrj,imgname-karnataka-police-arrested-by-lokayukta-1776942715455.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಏ.23): ಲಂ&lt;/strong&gt;ಚಬಾಕ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸುವುದನ್ನು ಮುಂದುವರಿಸಿದ್ದಾರೆ. ಇದೀಗ ಯಾದಗಿರಿಯಲ್ಲಿ ಕರ್ತವ್ಯದ ಹೆಸರಿನಲ್ಲಿ ಜನರಿಂದ ಹಣ ಸುಲಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್ ಕಾನ್&zwnj;ಸ್ಟೆಬಲ್ ಒಬ್ಬರು ಹಣ ಪಡೆಯುವಾಗ ರೆಡ್&zwnj; ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಯಾದಗಿರಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್&zwnj;ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪೇದೆ. ಘಟನೆಯ ಹಿನ್ನೆಲೆ ಹೀಗಿದೆ: ಅಣಯ್ಯ ರಾಠೋಡ್ ಎಂಬುವವರ ವಾಹನವು ಈ ಹಿಂದೆ ಅಪಘಾತಕ್ಕೀಡಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವಾಹನವನ್ನು ಕಾನೂನುಬದ್ಧವಾಗಿ ಬಿಡುಗಡೆ ಮಾಡಿಕೊಡಲು ಅಣಯ್ಯ ಅವರು ಠಾಣೆಗೆ ಅಲೆದಾಡುತ್ತಿದ್ದರು.&lt;/p&gt;&lt;h2&gt;&lt;strong&gt;13 ಸಾವಿರಕ್ಕೆ ಬೇಡಿಕೆ:&lt;/strong&gt;&lt;/h2&gt;&lt;p&gt;ವಾಹನ ಬಿಡುಗಡೆ ಮಾಡಲು ಸಹಾಯ ಮಾಡುವಂತೆ ಅಣಯ್ಯ ಅವರು ಹೆಡ್ ಕಾನ್&zwnj;ಸ್ಟೆಬಲ್ ನಾಗೇಶ್ ಅವರನ್ನು ಸಂಪರ್ಕಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ನಾಗೇಶ್ 13,000 ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಕಷ್ಟದಲ್ಲಿದ್ದ ಅಣಯ್ಯ ಅವರಿಗೆ ಲಂಚ ನೀಡಲು ಇಷ್ಟವಿರಲಿಲ್ಲ. ಭ್ರಷ್ಟ ವ್ಯವಸ್ಥೆಗೆ ಪಾಠ ಕಲಿಸಲು ನಿರ್ಧರಿಸಿದ ಅಣಯ್ಯ, ಕೂಡಲೇ ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದರು.&lt;/p&gt;&lt;h3&gt;&lt;strong&gt;ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೇದೆ:&lt;/strong&gt;&lt;/h3&gt;&lt;p&gt;ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಸ್ಕೆಚ್ ಹಾಕಿದರು. ಅದರಂತೆ ಇಂದು ಯಾದಗಿರಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲೇ ಅಣಯ್ಯ ಅವರಿಂದ ನಾಗೇಶ್ 13,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಅಧಿಕಾರಿಗಳು ನಾಗೇಶ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಲಂಚದ ಹಣದೊಂದಿಗೆ ನಾಗೇಶ್ ಸಿಕ್ಕಿಬಿದ್ದಿರುವುದರಿಂದ ಇಡೀ ಪೊಲೀಸ್ ಇಲಾಖೆಗೆ ಮುಜುಗರವುಂಟಾಗಿದೆ.&lt;/p&gt;&lt;h3&gt;&lt;strong&gt;ಕಾರ್ಯಾಚರಣೆ ತಂಡ:&lt;/strong&gt;&lt;/h3&gt;&lt;p&gt;ಈ ಯಶಸ್ವಿ ಕಾರ್ಯಾಚರಣೆಯು ಲೋಕಾಯುಕ್ತ ಡಿವೈಎಸ್&zwnj;ಪಿ ಇನಾಂದಾರ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಇನ್ಸ್&zwnj;ಪೆಕ್ಟರ್ ಸಿದ್ದರಾಯ ಬಳ್ಳೋರ್ಗಿ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಸದ್ಯ ಲೋಕಾಯುಕ್ತ ಪೊಲೀಸರು ನಾಗೇಶ್ ಅವರನ್ನು ವಶಕ್ಕೆ ಪಡೆದಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಹೆಚ್ಚಿದ ಲೋಕಾಯುಕ್ತ ಕಾರ್ಯಾಚರಣೆ:&lt;/strong&gt;&lt;/h2&gt;&lt;p&gt;ಯಾದಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದೆ. ಪೊಲೀಸ್ ಇಲಾಖೆಯಲ್ಲೇ ಇರುವ ಇಂತಹ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತುತ್ತಿರುವುದು ಬದಲಾವಣೆಯ ಮುನ್ಸೂಚನೆಯಾಗಿದೆ. ವಾಹನ ಬಿಡುಗಡೆಗೆ ಲಂಚ ಕೇಳಿ ಈಗ ಜೈಲು ಹಾದಿ ಹಿಡಿದಿರುವ ನಾಗೇಶ್ ಪ್ರಕರಣವು ಇತರೆ ಭ್ರಷ್ಟ ಸಿಬ್ಬಂದಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/yadgiri-traffic-police-head-constable-nagesh-arrested-by-lokayukta-for-bribe-sat/articleshow-euygav6"/>
        </item>
        <item>
            <title><![CDATA[ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ: 1 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್!]]></title>
            <link>https://kannada.asianetnews.com/gallery/karnataka-districts/yadagiri-district-gurumitkal-cpi-veeranna-lokayukta-arrested-for-accepting-a-bribe-of-rs-1-lakh-mrq-frm90zc</link>
            <guid isPermaLink="true">https://kannada.asianetnews.com/gallery/karnataka-districts/yadagiri-district-gurumitkal-cpi-veeranna-lokayukta-arrested-for-accepting-a-bribe-of-rs-1-lakh-mrq-frm90zc</guid>
            <pubDate>Sat, 09 May 2026 08:46:21 +0530</pubDate>
            <description><![CDATA[&lt;p&gt;Corruption&quot; ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್&zwnj;. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5bckk41gs6k430mwmf7qkf,imgname-cpi-veeranna-doddamani-1778296180324.jpg" type="image/jpeg" height="390" width="690"/>
            <content:encoded><![CDATA[&lt;p&gt;Corruption&quot; ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್&zwnj;. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.&lt;/p&gt;&lt;img&gt;&lt;p&gt;ಸುಮಾರು 1 ಲಕ್ಷ ರೂಪಾಯಿ ಪಡೆಯುತ್ತಿರುವ ಸಂದರ್ಭದಲ್ಲಿ ಗುರುಮಠಕಲ್ ಸಿಪಿಐ ವೀರಣ್ಣ ಎಸ್&zwnj;. ದೊಡ್ಡಮನಿ ಎಂಬವರನ್ನು ಲೋಕಾಯಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ವೀರಣ್ಣ ದೊಡ್ಡಮನಿ ಬೇಡಿಕೆ ಇರಿಸಿರುವ ಆರೋಪ ಕೇಳಿ ಬಂದಿದೆ.&lt;/p&gt;&lt;img&gt;&lt;p&gt;ವೀರಣ್ಣ ಎಸ್.ದೊಡ್ಡಮನಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಆರೋಪಿಸಿ ಆನಂದ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶುಕ್ರವಾರ ರಾತ್ರಿ ಗುರುಮಠಕಲ್ ಪಟ್ಟಣದ ಸಿಪಿಐ ಕ್ವಾಟರ್ಸ್&zwnj;ನಲ್ಲಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.&lt;/p&gt;&lt;img&gt;&lt;p&gt;ಸದ್ಯ ಲೋಕಾಯುಕ್ತ ಪೊಲೀಸರು ವೀರಣ್ಣ ಎಸ್. ದೊಡ್ಡಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್&zwnj;ಪಿ ಜೆ.ಹೆಚ್. ಇನಾಮದಾರ, ಪಿಐ ಸಿದ್ದರಾಯ ಬೆಳ್ಳೂರಗಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.&lt;/p&gt;]]></content:encoded>
            <category>yadgir</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/yadagiri-district-gurumitkal-cpi-veeranna-lokayukta-arrested-for-accepting-a-bribe-of-rs-1-lakh-mrq-frm90zc"/>
        </item>
        <item>
            <title><![CDATA[ನೋಂದಾಯಿಸಿದ್ದ ಯಾದಗಿರಿಯ 3000 ಗರ್ಭಿಣಿಯರು ಪತ್ತೆಯೇ ಇಲ್ಲ; ಆರೋಗ್ಯ ಇಲಾಖೆಯೇ ಶಾಕ್]]></title>
            <link>https://kannada.asianetnews.com/karnataka-districts/3000-registered-pregnant-women-missing-in-yadagiri-district-health-department-shocked-mrq/articleshow-gpltxor</link>
            <guid isPermaLink="true">https://kannada.asianetnews.com/karnataka-districts/3000-registered-pregnant-women-missing-in-yadagiri-district-health-department-shocked-mrq/articleshow-gpltxor</guid>
            <pubDate>Tue, 28 Apr 2026 08:51:28 +0530</pubDate>
            <description><![CDATA[&lt;p&gt;ಯಾದಗಿರಿ ಜಿಲ್ಲೆಯಲ್ಲಿ ನೋಂದಣಿಯಾದ 30,000ಕ್ಕೂ ಹೆಚ್ಚು ಗರ್ಭಿಣಿಯರಲ್ಲಿ 3,000ಕ್ಕೂ ಅಧಿಕ ಮಂದಿಯ ಹೆರಿಗೆಯ ಮಾಹಿತಿ ಲಭ್ಯವಿಲ್ಲದಿರುವುದು ಸಾವಿರಾರು ಭ್ರೂಣಹತ್ಯೆಗಳ ಅನುಮಾನಕ್ಕೆ ಕಾರಣವಾಗಿದೆ. ಕನ್ನಡಪ್ರಭ ವರದಿಯ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯಮಟ್ಟದ ಸಮಿತಿ ರಚಿಸಿ ತನಿಖೆ ನಡೆಸುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq91npebkakk5kbr4rvgnq3m,imgname-pregnant-1777346468299.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಆನಂದ್&zwnj; ಎಂ. ಸೌದಿ&lt;/strong&gt;&lt;/p&gt;&lt;p&gt;&lt;strong&gt;ಯಾದಗಿರಿ:&lt;/strong&gt; ಭ್ರೂಣಹತ್ಯೆಗಳ ಮಾಹಿತಿ ಯಾದಗಿರಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವಂತಿದ್ದು, ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000ಕ್ಕೂ ಹೆಚ್ಚು ಮಂದಿಗೆ ಹೆರಿಗೆಯಾದ ಬಗ್ಗೆ ಮಾಹಿತಿಯೇ ಸಿಗುತ್ತಿಲ್ಲ. ಕಳೆದ 1 ವರ್ಷದಲ್ಲಿ (2024-25) ಸದ್ದಿಲ್ಲದೆ ಸಾವಿರಕ್ಕೂ ಹೆಚ್ಚು ಭ್ರೂಣಹತ್ಯೆಗಳು ನಡೆದಿದ್ದು, ಆರೋಗ್ಯ ಇಲಾಖೆಗೇ ಆಘಾತ ಮೂಡಿಸಿದೆ.&lt;/p&gt;&lt;p&gt;ಈ ಹಿಂದೆ ಮಾ.18ರಂದು &lsquo;ಯಾದಗಿರಿ ಜಿಲ್ಲೆಯಲ್ಲಿ 7 ತಿಂಗಳಲ್ಲಿ 30 ಹೆಣ್ಣು ಭ್ರೂಣಹತ್ಯೆ&rsquo; ಶೀರ್ಷಿಕೆಯಡಿ ಕನ್ನಡಪ್ರಭದಲ್ಲಿ ಪ್ರಕಟಗೊಂಡ ವಿಶೇಷ ವರದಿ ಸಂಚಲನ ಮೂಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆರೋಗ್ಯ ಇಲಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ತನಿಖೆಗೆ ಆದೇಶಿಸಿದ್ದರು. ಐವರು ವೈದ್ಯಾಧಿಕಾರಿಗಳನ್ನೊಳಗೊಂಡ ರಾಜ್ಯಮಟ್ಟದ ಸಮಿತಿಯೊಂದನ್ನು ರಚಿಸಿ ಯಾದಗಿರಿಯಷ್ಟೇ ಅಲ್ಲ, ಈ ಬಗ್ಗೆ ರಾಜ್ಯವ್ಯಾಪಿ ಎಲ್ಲ ಜಿಲ್ಲೆಗಳಲ್ಲೂ ಗಂಭೀರವಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು.&lt;/p&gt;&lt;p&gt;&lsquo;ಕನ್ನಡಪ್ರಭ&rsquo; ವರದಿ ಆಧರಿಸಿ, ಆರೋಗ್ಯ ಸಚಿವ ದಿನೇಶ ಗುಂಡೂರಾವ್&zwnj; ಅವರ ನೇತೃತ್ವದಲ್ಲಿ ಮಾ.25ರಂದು ಮಧ್ಯಾಹ್ನ ನಡೆದ ಹಿರಿಯ ಅಧಿಕಾರಿಗಳನ್ನೊಳಗೊಂಡ ವೀಡಿಯೋ ಕಾನ್ಫೆರೆನ್ಸ್&zwnj; ಸಭೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿನ ಈ ಆಘಾತಕಾರಿ ಅಂಶ ಬಯಲಾಗಿತ್ತು. &lsquo;ಕನ್ನಡಪ್ರಭ&rsquo;ಕ್ಕೆ ಲಭ್ಯವಾದ, ಸಭೆಯಲ್ಲಿ ಮಂಡಿಸಲಾದ ಕಟ್ಟುನಿಟ್ಟಿನ ಗೌಪ್ಯ ವರದಿಯಲ್ಲಿನಂತೆ 2025ರ ಏಪ್ರಿಲ್&zwnj;ನಿಂದ ನವೆಂಬರ್&zwnj;ವರೆಗಿನ 7 ತಿಂಗಳಲ್ಲಿ ಒಟ್ಟು 652 ಗರ್ಭಪಾತ ಪ್ರಕರಣಗಳು ಇಲಾಖೆಯಲ್ಲೇ ವರದಿಯಾಗಿವೆ. ಗರ್ಭಪಾತದ ರಾಜ್ಯದ ಸರಾಸರಿ ವರದಿ ಶೇ.5.24 ರಷ್ಟಿದ್ದರೆ, ಯಾದಗಿರಿ ಜಿಲ್ಲೆಯದ್ದು ಶೇ.3.16 ರಷ್ಟಿದೆ.&lt;/p&gt;&lt;h2&gt;&lt;strong&gt;1329 ಗರ್ಭಪಾತ&lt;/strong&gt;&lt;/h2&gt;&lt;p&gt;ಹಾಗೆಯೇ, 2024-25ರ ಸಾಲಿನಲ್ಲಿ ನೋಂದಣಿ ಮಾಡಿಸಿದ್ದ 31,435 ಗರ್ಭಿಣಿಯರ ಪೈಕಿ, 26,584 ಜೀವಂತ ಹೆರಿಗೆಗಳಾಗಿದ್ದು, 188 ಶಿಶು ಮರಣಗಳು ಸಂಭವಿಸಿವೆ. ಇನ್ನೂ 207 ಹೆರಿಗೆಗಳು ಆಗಬೇಕಿದ್ದು, 1329 ಗರ್ಭಪಾತಗಳಾಗಿವೆ. ಅಚ್ಚರಿಯೆಂದರೆ, ಇವೆಲ್ಲಗಳ ಸೇರಿಸಿದಾಗ ಆಗುವ 28,308 ಪ್ರಕರಣಗಳಲ್ಲಿ ಇನ್ನೂ 3,127ರಷ್ಟು ಹೆರಿಗೆಯ ವಿವರಗಳೇ ಸಿಗುತ್ತಿಲ್ಲ. ಈ ಗರ್ಭಿಣಿಯರಿಗೆ ನಂತರದಲ್ಲಿ ಹೆರಿಗೆಯಾಯಿತೇ? ಶಿಶುಗಳು ಜೀವಂತವಿವೆಯೇ? ಅಥವಾ ಮೃತಪಟ್ಟವೇ? ಯಾಕೆ? ಏನು? ಎಂಬ ಅನೇಕ ಅಂಶಗಳಿಗೆ ಉತ್ತರ ಸಿಕ್ಕಿಲ್ಲ.&lt;/p&gt;&lt;h3&gt;&lt;strong&gt;ನಕಲಿ ತಾಯಿ ಕಾರ್ಡ್&zwnj; ಸೃಷ್ಟಿ&lt;/strong&gt;&lt;/h3&gt;&lt;p&gt;&lsquo;ಹೆಣ್ಣು&rsquo; ಶಿಶು ಎಂಬ ಕಾರಣಕ್ಕೆ ಅನೇಕರು ಸದ್ದಿಲ್ಲದೆ ಅಬಾರ್ಷನ್&zwnj; ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಸಭೆಯಲ್ಲಿ ಚರ್ಚೆಗಳಾಗಿವೆ ಎಂದು &lsquo;ಕನ್ನಡಪ್ರಭ&rsquo;ಕ್ಕೆ ಬಲ್ಲ ಮೂಲಗಳು ತಿಳಿಸಿವೆ. ಹರ್ಷ ಗುಪ್ತಾ ಅವರ ಸೂಚನೆಯಂತೆ ರಚಿಸಲಾಗಿದ್ದ ರಾಜ್ಯಮಟ್ಟದ ಸಮಿತಿ ಏ.6ರಿಂದ ಏ.10ರವರೆಗೆ ಜಿಲ್ಲೆಯಲ್ಲಿ ಸಂಚರಿಸಿ ಮಾಹಿತಿ ಸಂಗ್ರಹಿಸಿದೆ. ಕೆಲವು ಕಡೆಗಳಲ್ಲಿ ಸಮಿತಿಗೆ ದೊರೆತ ಮಾಹಿತಿಗಳು ಅವರನ್ನೂ ಬೆಚ್ಚಿ ಬೀಳಿಸಿವೆ ಎನ್ನಲಾಗಿದೆ. ಟಾರ್ಗೆಟ್&zwnj; ರೀಚ್&zwnj;ಗಾಗಿ ತಾಯಿ ಕಾರ್ಡ್&zwnj;ಗಳನ್ನೂ ಸಹ ನಕಲಿ ಸೃಷ್ಟಿಸಲಾಗುತ್ತಿದೆ ಎಂಬ ಮಾತುಗಳು ಇಲಾಖೆಯಲ್ಲೇ ಕೇಳಿ ಬರುತ್ತಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಭ್ರೂಣ ಲಿಂಗ ಪತ್ತೆಕೋರರ ಮಾಹಿತಿ ಕೊಟ್ರೆ ₹1 ಲಕ್ಷ ಬಹುಮಾನ! ಮಹತ್ವದ ಘೋಷಣೆ&lt;/strong&gt;&lt;/p&gt;&lt;p&gt;&lt;strong&gt;ಗರ್ಭಪಾತ ತಡೆಗೆ ಕ್ರಮ&lt;/strong&gt;&lt;/p&gt;&lt;p&gt;ಗರ್ಭಪಾತ ಪ್ರಕರಣಗಳ ಕುರಿತು ರಾಜ್ಯಮಟ್ಟದ ಸಮಿತಿ ಜಿಲ್ಲೆಗೆ ಬಂದು ಮಾಹಿತಿ ಸಂಗ್ರಹಿಸಿದೆ. ಇಷ್ಟರಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ತಂಡ ತಮಗೆ ತಿಳಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದೇನೆ. ನಕಲಿ ವೈದ್ಯರು ಹಾಗೂ ಗರ್ಭಪಾತ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್&zwnj; ಅಧಿಕಾರಿ ನೇಮಕ: ಸಚಿವ ದಿನೇಶ್&zwnj; ಗುಂಡೂರಾವ್&zwnj;&lt;/strong&gt;&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/3000-registered-pregnant-women-missing-in-yadagiri-district-health-department-shocked-mrq/articleshow-gpltxor"/>
        </item>
        <item>
            <title><![CDATA[ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೋಗೆ ವಿದ್ಯುತ್ ತಂತಿ ತಗುಲಿ ಬೆಂಕಿ: ನಡುರಸ್ತೆಯಲ್ಲಿ ಧಗಧಗ]]></title>
            <link>https://kannada.asianetnews.com/gallery/state/yadgir-bolero-carrying-dry-fodder-catches-fire-after-electric-wire-touchs-gxqgqph</link>
            <guid isPermaLink="true">https://kannada.asianetnews.com/gallery/state/yadgir-bolero-carrying-dry-fodder-catches-fire-after-electric-wire-touchs-gxqgqph</guid>
            <pubDate>Mon, 20 Apr 2026 12:39:45 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ವಡಗೇರಾ ಬಳಿ, ಒಣ ಹುಲ್ಲು ಸಾಗಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpmv3jpt2zpc3knaszms5bar,imgname-vehicle-caught-fire--5--1776668494554.jpg" type="image/jpeg" height="390" width="690"/>
            <content:encoded><![CDATA[ಯಾದಗಿರಿ ಜಿಲ್ಲೆಯ ವಡಗೇರಾ ಬಳಿ, ಒಣ ಹುಲ್ಲು ಸಾಗಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.&lt;img&gt;&lt;p&gt;ಯಾದಗಿರಿ: ಚಲಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೊಲೆರೋ ವಾಹನ ನಡುರಸ್ತೆಯಲ್ಲಿ ಧಗಧಗನೇ ಹತ್ತಿ ಉರಿದಂತಹ ಭಯಾನಕ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಬಳಿ ನಡೆದಿದೆ.&lt;/p&gt;&lt;img&gt;&lt;p&gt;ನಡುರಸ್ತೆಯಲ್ಲಿ ಬೆಂಕಿಗಾಹುತಿಯಾದ ಲಾರಿ ಭತ್ತದ ಹುಲ್ಲು ತುಂಬಿಕೊಂಡು ತುಂಬಿಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕೂಡಲೇ ಬೊಲೆರೋ ವಾಹನದಲ್ಲಿದ್ದ ಚಾಲಕ ಸೇರಿ ಮೂವರು ವಾಹನದಿಂದ ಹೊರಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಬೆಂಕಿಯ ಕೆನ್ನಾಲಿಗೆಗ ಬೊಲೆರೋ ವಾಹನ ಸುಟ್ಟು ಕರಲಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಈ ಬೊಲೆರೋ ವಾಹನ ಸೂಗೂರಿನಿಂದ ದೇವದುರ್ಗದ ಕಡೆಗೆ ಒಣ ಹುಲ್ಲು ತುಂಬಿಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.&lt;/p&gt;&lt;img&gt;&lt;p&gt;ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಬೋರ್&zwnj;ವೆಲ್&zwnj;ಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದ್ದು, ಬೊಲೆರೋ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿರುವುದರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&amp;nbsp;&lt;/strong&gt;&lt;/p&gt;&lt;p&gt;ತನಗೆ ಆರೈಕೆ ಮಾಡುತ್ತಿರುವ 43 ವರ್ಷದ ವ್ಯಕ್ತಿಯ ದತ್ತು ಪಡೆಯಲು ಹೈಕೋರ್ಟ್ ಮೊರೆ ಹೋದ 90 ವರ್ಷದ ವೈದ್ಯರು&lt;/p&gt;]]></content:encoded>
            <category>yadgir</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/yadgir-bolero-carrying-dry-fodder-catches-fire-after-electric-wire-touchs-gxqgqph"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ರಾಜ್ಯದ ಜನತೆಗೆ ಅಲರ್ಟ್: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ!]]></title>
            <link>https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc</link>
            <guid isPermaLink="true">https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc</guid>
            <pubDate>Tue, 24 Mar 2026 20:43:56 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmc4fptfwz060wyzsnqeqzh5,imgname-rain-1774228855631.jpg" type="image/jpeg" height="390" width="690"/>
            <content:encoded><![CDATA[ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.&lt;img&gt;&lt;p&gt;ಕರ್ನಾಟಕದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಈ ಕೆಳಗಿನ ಪ್ರಮುಖ ಸೂಚನೆಗಳನ್ನು ನೀಡಿದೆ.&lt;/p&gt;&lt;img&gt;&lt;p&gt;ರಾಜ್ಯದ ಆರು ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕರಾವಳಿ ಮತ್ತು ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಿರಲಿದೆ.&lt;/p&gt;&lt;img&gt;&lt;p&gt;ಈ ಜಿಲ್ಲೆಗಳಲ್ಲಿ ಕೇವಲ ಮಳೆ ಮಾತ್ರವಲ್ಲದೆ, ಜೋರಾದ ಗಾಳಿಯೊಂದಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ತಿಳಿಸಲಾಗಿದೆ.&lt;/p&gt;&lt;img&gt;&lt;p&gt;ಮಳೆಯ ಸಮಯದಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ಹೊರಗಡೆ ಓಡಾಡಬಾರದು. ವಿಶೇಷವಾಗಿ ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಮತ್ತು ವಿದ್ಯುತ್ ಕಂಬಗಳು ಅಥವಾ ತಂತಿಗಳ ಬಳಿ ಹೋಗಬಾರದು ಎಂದು ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಹವಾಮಾನ ಬದಲಾವಣೆಯ ಈ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.&lt;/p&gt;&lt;p&gt;&lt;/p&gt;]]></content:encoded>
            <category>yadgir</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc"/>
        </item>
        <item>
            <title><![CDATA[ಉತ್ತರ ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಬೆಳಗಾವಿ - ಚರ್ಲಪಲ್ಲಿ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಖಾಯಂ!]]></title>
            <link>https://kannada.asianetnews.com/gallery/state/indian-railways-good-news-to-north-karnataka-belagavi-charlapalli-weekly-express-train-regularised-sat-nnqhq4r</link>
            <guid isPermaLink="true">https://kannada.asianetnews.com/gallery/state/indian-railways-good-news-to-north-karnataka-belagavi-charlapalli-weekly-express-train-regularised-sat-nnqhq4r</guid>
            <pubDate>Thu, 14 May 2026 20:21:50 +0530</pubDate>
            <description><![CDATA[&lt;p&gt;ಉತ್ತರ ಕರ್ನಾಟಕ ಮತ್ತು ತೆಲಂಗಾಣ ನಡುವಿನ ಸಂಪರ್ಕವನ್ನು ಬಲಪಡಿಸಲು, ಚರ್ಲಪಲ್ಲಿ &ndash; ಬೆಳಗಾವಿ ನಡುವೆ ಸಂಚರಿಸುತ್ತಿದ್ದ ವಿಶೇಷ ವಾರಕ್ಕೊಮ್ಮೆ ಎಕ್ಸ್&zwnj;ಪ್ರೆಸ್ ರೈಲನ್ನು ರೈಲ್ವೆ ಮಂಡಳಿ ಖಾಯಂಗೊಳಿಸಿದೆ. ಈ ರೈಲು (17075/17076) ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ ಮಾರ್ಗವಾಗಿ ಸಂಚರಿಸಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krkf4pgtkqtym9st7j84f764,imgname-belagavi-charlapalli-weekly-express-train-1778769877529.jpg" type="image/jpeg" height="390" width="690"/>
            <content:encoded><![CDATA[&lt;p&gt;ಉತ್ತರ ಕರ್ನಾಟಕ ಮತ್ತು ತೆಲಂಗಾಣ ನಡುವಿನ ಸಂಪರ್ಕವನ್ನು ಬಲಪಡಿಸಲು, ಚರ್ಲಪಲ್ಲಿ &ndash; ಬೆಳಗಾವಿ ನಡುವೆ ಸಂಚರಿಸುತ್ತಿದ್ದ ವಿಶೇಷ ವಾರಕ್ಕೊಮ್ಮೆ ಎಕ್ಸ್&zwnj;ಪ್ರೆಸ್ ರೈಲನ್ನು ರೈಲ್ವೆ ಮಂಡಳಿ ಖಾಯಂಗೊಳಿಸಿದೆ. ಈ ರೈಲು (17075/17076) ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ ಮಾರ್ಗವಾಗಿ ಸಂಚರಿಸಲಿದೆ.&lt;/p&gt;&lt;img&gt;&lt;p&gt;ಬೆಳಗಾವಿ/ಹುಬ್ಬಳ್ಳಿ (ಮೇ 14): ಉತ್ತರ ಕರ್ನಾಟಕದ ಜನತೆಗೆ ತೆಲಂಗಾಣ ರಾಜಧಾನಿ ಹೈದರಾಬಾದ್ ಸಮೀಪದ ಚರ್ಲಪಲ್ಲಿಗೆ ಸಂಚರಿಸಲು ಈಗ ರೈಲ್ವೆ ಇಲಾಖೆಯು ಸುಗಮ ಹಾದಿ ಮಾಡಿಕೊಟ್ಟಿದೆ. ಇದುವರೆಗೆ ವಿಶೇಷ ರೈಲಾಗಿ ಸಂಚರಿಸುತ್ತಿದ್ದ ಚರ್ಲಪಲ್ಲಿ &ndash; ಬೆಳಗಾವಿ &ndash; ಚರ್ಲಪಲ್ಲಿ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್&zwnj;ಪ್ರೆಸ್ ರೈಲನ್ನು (Weekly Express) ರೈಲ್ವೆ ಮಂಡಳಿಯು ಅಧಿಕೃತವಾಗಿ ಖಾಯಂಗೊಳಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದಾಗಿ ಉಭಯ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಗೊಂಡಿದೆ.&lt;/p&gt;&lt;img&gt;&lt;p&gt;ರೈಲ್ವೆ ಇಲಾಖೆಯ ಮಾಹಿತಿಯ ಪ್ರಕಾರ, ರೈಲು ಸಂಖ್ಯೆ 17075 (ಚರ್ಲಪಲ್ಲಿ - ಬೆಳಗಾವಿ) ಮೇ 16, 2026 ರಿಂದ ಜಾರಿಗೆ ಬರುವಂತೆ ವಾರಕ್ಕೊಮ್ಮೆ ಸಂಚರಿಸಲಿದೆ. ಹಾಗೆಯೇ, ರೈಲು ಸಂಖ್ಯೆ 17076 (ಬೆಳಗಾವಿ - ಚರ್ಲಪಲ್ಲಿ) ಮೇ 17, 2026 ರಿಂದ ಖಾಯಂ ಆಗಿ ಸಂಚರಿಸಲಿದೆ. ಈ ರೈಲು ಒಟ್ಟು 24 ಬೋಗಿಗಳನ್ನು (Coaches) ಹೊಂದಿರಲಿದ್ದು, ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ಈ ರೈಲು ಕರ್ನಾಟಕದ ಪ್ರಮುಖ ನಗರಗಳಾದ ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಮತ್ತು ಲೋಂಡಾ ಮಾರ್ಗವಾಗಿ ಸಂಚರಿಸುತ್ತದೆ. ಅಲ್ಲದೆ, ಧಾರ್ಮಿಕ ಕೇಂದ್ರವಾದ ಮಂತ್ರಾಲಯಕ್ಕೂ ಈ ರೈಲಿನ ಸಂಪರ್ಕ ಇರುವುದರಿಂದ ಭಕ್ತಾದಿಗಳಿಗೆ ಭಾರಿ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ಚರ್ಲಪಲ್ಲಿಯಿಂದ ಬೆಳಗಾವಿಗೆ (17075): ಸಂಜೆ 4:00 ಗಂಟೆಗೆ ಚರ್ಲಪಲ್ಲಿಯಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.&lt;/p&gt;&lt;p&gt;ಬೆಳಗಾವಿಯಿಂದ ಚರ್ಲಪಲ್ಲಿಗೆ (17076): ಮಧ್ಯಾಹ್ನ 1:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 08:45ಕ್ಕೆ ಚರ್ಲಪಲ್ಲಿ ತಲುಪಲಿದೆ.&lt;/p&gt;&lt;img&gt;&lt;p&gt;ಬೆಳಗಾವಿ, ಧಾರವಾಡ ಮತ್ತು ಹುಬ್ಬಳ್ಳಿ ಭಾಗದ ಜನರು ಹೈದರಾಬಾದ್ ಕಡೆಗೆ ಹೋಗಲು ಈ ರೈಲು ಅತ್ಯಂತ ಸಹಕಾರಿಯಾಗಿದೆ. ಅದರಲ್ಲೂ ವಾರಾಂತ್ಯದಲ್ಲಿ ಸಂಚರಿಸುವವರಿಗೆ ಇದು ವರದಾನವಾಗಲಿದೆ. ವ್ಯಾಪಾರಸ್ಥರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಈ ರೈಲಿನ ಖಾಯಂ ಸೇವೆಯಿಂದಾಗಿ ನಿರಂತರವಾಗಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ದೊರೆಯಲಿದೆ.&lt;/p&gt;&lt;p&gt;ಪ್ರಯಾಣಿಕರು ರೈಲಿನ ಹೆಚ್ಚಿನ ವಿವರಗಳು ಮತ್ತು ನಿಖರವಾದ ವೇಳಾಪಟ್ಟಿಗಾಗಿ ಅಧಿಕೃತ ವೆಬ್&zwnj;ಸೈಟ್ www.enquiry.indianrail.gov.in ಅಥವಾ NTES ಆಪ್ ಅನ್ನು ಬಳಸಬಹುದು. ನೈಋತ್ಯ ರೈಲ್ವೆಯ ಈ ಜನಸ್ನೇಹಿ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railways-good-news-to-north-karnataka-belagavi-charlapalli-weekly-express-train-regularised-sat-nnqhq4r"/>
        </item>
        <item>
            <title><![CDATA[ಯಾದಗಿರಿ ಖಾಸಗಿ ಬಸ್ ಅಗ್ನಿ ದುರಂತ: 20 ಜೀವ ಉಳಿಸಿದ ಆಪದ್ಬಾಂಧವ ಉಮೇಶ್ ಬಿರಾದಾರ್ ಕಥೆ]]></title>
            <link>https://kannada.asianetnews.com/gallery/karnataka-districts/yadagiri-private-bus-car-fire-tragedy-the-story-of-umesh-biradar-a-rescuer-who-saved-20-lives-mrq-rwbngvb</link>
            <guid isPermaLink="true">https://kannada.asianetnews.com/gallery/karnataka-districts/yadagiri-private-bus-car-fire-tragedy-the-story-of-umesh-biradar-a-rescuer-who-saved-20-lives-mrq-rwbngvb</guid>
            <pubDate>Sun, 19 Apr 2026 12:36:10 +0530</pubDate>
            <description><![CDATA[ಯಾದಗಿರಿಯಲ್ಲಿ ನಡೆದ ಖಾಸಗಿ ಬಸ್ ಮತ್ತು ಕಾರ್ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಇದೇ ಬಸ್&zwnj;ನಲ್ಲಿದ್ದ ಪ್ರಯಾಣಿಕ ಉಮೇಶ ಬಿರಾದಾರ್, ತಮ್ಮ ಪ್ರಾಣ ಪಣಕ್ಕಿಟ್ಟು ಬಸ್&zwnj;ನಲ್ಲಿದ್ದ 20 ಜನರನ್ನು ಹಾಗೂ ಕಾರಿನಲ್ಲಿದ್ದ ಏಕೈಕ ಬಾಲಕನನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpj8mgdxa6n6mznad334feb1,imgname-yadagiri-accident--2--1776582017469.jpg" type="image/jpeg" height="390" width="690"/>
            <content:encoded><![CDATA[ಯಾದಗಿರಿಯಲ್ಲಿ ನಡೆದ ಖಾಸಗಿ ಬಸ್ ಮತ್ತು ಕಾರ್ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಇದೇ ಬಸ್&zwnj;ನಲ್ಲಿದ್ದ ಪ್ರಯಾಣಿಕ ಉಮೇಶ ಬಿರಾದಾರ್, ತಮ್ಮ ಪ್ರಾಣ ಪಣಕ್ಕಿಟ್ಟು ಬಸ್&zwnj;ನಲ್ಲಿದ್ದ 20 ಜನರನ್ನು ಹಾಗೂ ಕಾರಿನಲ್ಲಿದ್ದ ಏಕೈಕ ಬಾಲಕನನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.&lt;img&gt;&lt;p&gt;ಯಾದಗಿರಿ: ಖಾಸಗಿ ಸ್ಲೀಪರ್&zwnj; ಬಸ್&zwnj; ಹಾಗೂ ಕಾರು ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನೊಳಗಿದ್ದ 10 ಜನರ ಪೈಕಿ, ಒಂದೇ ಕುಟುಂಬದ 9 ಜನರು ದುರ್ಮರಣಕ್ಕೀಡಾಗಿದ್ದಾರೆ. ಈ ವೇಳೆ, ಇಡೀ ದುರಂತದಲ್ಲಿ ಉಳಿದ ಏಕೈಕ ಬಾಲಕ ಸೇರಿದಂತೆ ಬಸ್&zwnj;ನೊಳಗಿದ್ದ 20 ಜನರನ್ನು ರಕ್ಷಿಸುವ ಮೂಲಕ ಸಹ ಪ್ರಯಾಣಿಕ ಉಮೇಶ ಬಿರಾದಾರ್&zwnj; ಅವರು ಆಪದ್ಬಾಂಧವರಂತೆ ಕಾರ್ಯ ನಿರ್ವಹಿಸಿದ್ದಾರೆ.&lt;/p&gt;&lt;img&gt;&lt;p&gt;ಉಮೇಶ ಬಿರಾದಾರ್&zwnj; ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್&zwnj;ನ ಒಳಗಿದ್ದರು. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ವಿಭಾಗದಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕುಡಿಯುವ ನೀರು ಪೂರೈಕೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ವಿಶೇಷ ಸಭೆಯಲ್ಲಿ ತಮ್ಮ ಮೇಲಧಿಕಾರಿಗಳ ಜೊತೆ ಪಾಲ್ಗೊಂಡು, ಗುರುವಾರ ಸಂಜೆ ಖಾಸಗಿ ಬಸ್&zwnj; ಮೂಲಕ ಕಲಬುರಗಿಗೆ ಅವರು ಬರುತ್ತಿದ್ದರು.&lt;/p&gt;&lt;img&gt;&lt;p&gt;ಯಾದಗಿರಿಯ ಈ ಭೀಕರ ಅಪಘಾತದಲ್ಲಿ ಪ್ರತ್ಯಕ್ಷದರ್ಶಿಯಷ್ಟೇ ಅಲ್ಲ, ತಮ್ಮದೇ ಜೀವ ಪಣಕ್ಕಿಟ್ಟು ಉಳಿದವರ ಜೀವ ರಕ್ಷಿಸಿದ ಆಪತ್ಬಾಂಧವ. ಅಂದಿನ ಕರಾಳ ಘಟನೆಯ ಬಗ್ಗೆ ತಮ್ಮನ್ನು ಸಂಪರ್ಕಿಸಿದ &quot;ಕನ್ನಡಪ್ರಭ&quot;ದೊಂದಿಗೆ ಅವರು ಮಾತನಾಡಿದ್ದಾರೆ.&lt;/p&gt;&lt;img&gt;&lt;p&gt;ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದ್ದ ಕಾರಿನೊಳಗೆ ಸಿಲುಕಿದವರ ಉಸಿರು ನಿಂತಿರುವ ಲಕ್ಷಣಗಳು ಗೋಚರಿಸಿದ್ದ ಬೆನ್ನಲ್ಲೇ, ಮಗು ಅಳುತ್ತಿರುವ (10 ವರ್ಷದ ವಿರಾಟ್ ಅಪಘಾತದಲ್ಲಿ ಬದುಕುಳಿದ ಏಕೈಕ ಬಾಲಕ) ಶಬ್ದ ಕೇಳಿ, ಹರಸಾಹಸ ಪಟ್ಟು ಸ್ಥಳೀಯರ ನೆರವಿನೊಂದಿಗೆ ಹೊರಗೆ ತೆಗೆದರು. ಅಷ್ಟರಲ್ಲಾಗಲೇ, ಬೆಂಕಿಯ ಕೆನ್ನಾಲಿಗೆಗಳು ಎಲ್ಲೆಡೆ ಆವರಿಸಿಕೊಳ್ಳತೊಡಗಿದಾಗ, ಅಪಾಯ ಲೆಕ್ಕಿಸದೆ ಮಗುವನ್ನು ಎತ್ತಿಕೊಂಡು ಬಂದ ಉಮೇಶ, ಆ್ಯಂಬುಲೆನ್ಸ್&zwnj; ಮೂಲಕ ಆಸ್ಪತ್ರೆಗೆ ಕಳುಹಿಸುವವರೆಗೆ ಜವಾಬ್ದಾರಿ ಹಾಗೂ ಮಾನವೀಯತೆ ಮೆರೆದಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ!&lt;/strong&gt;&lt;/p&gt;&lt;img&gt;&lt;p&gt;ರಾಯಚೂರು ಜಿಲ್ಲೆ ಪಕ್ಕದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಿಣಿ ಸಮೀಪದ ಶಾಂತಪುರ ಕ್ರಾಸ್&zwnj; ಬಳಿ ಸಂಭವಿಸಿದ ಕಾರು - ಖಾಸಗಿ ಬಸ್ ನಡುವಿನ ಅಪಘಾತದಲ್ಲಿ ಉಂಟಾದ ಬೆಂಕಿಯಿಂದ ಮೃತಪಟ್ಟ ಒಂದೇ ಕುಟುಂಬದ 9 ಜನರ ಅಂತ್ಯಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭಾವುಕರಾಗಿದ್ದರು. ಕಳೆದ ಮೂರು ದಶಕಗಳಿಂದ ಕೃಷ್ಣ ನಾಯಕ ಅವರ ಒಟನಾಡವಿದ್ದು, ಇಡೀ ಕುಟುಂಬವೇ ಅಪಘಾತದಲ್ಲಿ ಮೃತಪಟ್ಟಿರುವುದು ತೀವ್ರ ನೋವುಂಟು ಮಾಡಿದೆ. ಮೃತರಿಗೆ ಭಗವಂತ ಶಾಂತಿ ಕರುಣಿಸಲಿ, ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಾದಗಿರಿ: ಚಾಲಕನಿಂದಲೇ ಸರ್ಕಾರಿ ಬಸ್ ಕಳ್ಳತನ! ಕುಡಿದ ಮತ್ತಿನಲ್ಲಿ KKRTC ಬಸ್ ಎಸ್ಕೇಪ್&zwnj; ಮಾಡಿದ ಕಿಲಾಡಿ&lt;/strong&gt;&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/yadagiri-private-bus-car-fire-tragedy-the-story-of-umesh-biradar-a-rescuer-who-saved-20-lives-mrq-rwbngvb"/>
        </item>
        <item>
            <title><![CDATA[ಮಲ್ಲಿಕಾರ್ಜುನ ಮುತ್ಯಾ  ವಿರುದ್ಧ ಪೋಕ್ಸೊ ತನಿಖೆಗೆ ಹೈಕೋರ್ಟ್ ತಡೆ, ನಿಟ್ಟುಸಿರು ಬಿಟ್ಟ ಭಕ್ತರು]]></title>
            <link>https://kannada.asianetnews.com/state/karnataka-high-court-stays-pocso-investigation-against-mallikarjun-mutya-rav/articleshow-t3xh49e</link>
            <guid isPermaLink="true">https://kannada.asianetnews.com/state/karnataka-high-court-stays-pocso-investigation-against-mallikarjun-mutya-rav/articleshow-t3xh49e</guid>
            <pubDate>Sat, 21 Mar 2026 06:22:57 +0530</pubDate>
            <description><![CDATA[&lt;p&gt;ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಪೀಠ ತಡೆ ನೀಡಿದೆ. ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ತಡೆಯಾಜ್ಞೆಯಿಂದ ಮುತ್ಯಾ ಹಾಗೂ ಅವರ ಭಕ್ತರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km6xf7wehqrn85x8v3djk5h6,imgname----------------------2--1774053728141.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಮಾ.21):&lt;/strong&gt; ಬಾಲಕಿ ಜೊತೆಗೆ ಅನುಚಿತ ವರ್ತನೆ ಆರೋಪದಡಿ ಯಾದಗಿರಿ ಜಿಲ್ಲೆಯ ಮಹಲ್&zwnj; ರೋಜಾದ ಚಾಂಗ್&zwnj;ದೇವ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣದ ತನಿಖೆಗೆ ಹೈಕೋರ್ಟ್&zwnj;ನ ಕಲಬುರಗಿ ವಿಭಾಗೀಯ ಪೀಠ ತಡೆ ನೀಡಿ ಆದೇಶ ಹೊರಡಿಸಿದೆ.&amp;nbsp;&lt;/p&gt;&lt;p&gt;ಪ್ರಕರಣ ದಾಖಲಾದ ಬಳಿಕ ವಿಚಾರಣೆಗೆ ತಡೆ ನೀಡುವಂತೆ ಮಲ್ಲಿಕಾರ್ಜುನ ಮುತ್ಯಾ&zwnj; ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿರುವ ಹೈಕೋರ್ಟ್ ತನಿಖೆಗೆ ತಡೆ ನೀಡಿದ್ದು, ತಾತ್ಕಾಲಿಕ ರಿಲೀಫ್&zwnj;ನಿಂದ ಮುತ್ಯಾ ಹಾಗೂ ಭಕ್ತರ ವಲಯದಲ್ಲಿ ನಿಟ್ಟುಸಿರು ಮೂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಲಕಿ ಜೊತೆಗಿನ ವರ್ತನೆಯ ದೃಶ್ಯಗಳು ವೈರಲ್&zwnj; ಆದ ಬಳಿಕ ಶಹಾಪುರ ಸಿಡಿಪಿಓ ಫೆ.25ರಂದು ನೀಡಿದ ದೂರಿನ ಮೇರೆಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.&lt;/p&gt;&lt;p&gt;ಪ್ರಕರಣದ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಮುತ್ಯಾ ಪರ ವಕೀಲರು, ನಂತರ ವಾಪಸ್ ಪಡೆದು, ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾ.9ರಂದು ಬೇಲ್&zwnj; ಅರ್ಜಿ ತಿರಸ್ಕೃತಗೊಳಿಸಿದ ಕೋರ್ಟ್&zwnj; ತನಿಖೆಗೆ ಎಸ್ಪಿಗೆ ಸೂಚಿಸಿತ್ತು. ಅದರನ್ವಯ, ಶಹಾಪುರ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದರು.&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-high-court-stays-pocso-investigation-against-mallikarjun-mutya-rav/articleshow-t3xh49e"/>
        </item>
        <item>
            <title><![CDATA[ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?]]></title>
            <link>https://kannada.asianetnews.com/karnataka-districts/karnataka-psi-files-complaint-over-love-dispute-with-former-woman-constable-gdp-videoshow-tbvaht8</link>
            <guid isPermaLink="true">https://kannada.asianetnews.com/karnataka-districts/karnataka-psi-files-complaint-over-love-dispute-with-former-woman-constable-gdp-videoshow-tbvaht8</guid>
            <pubDate>Thu, 07 May 2026 14:47:31 +0530</pubDate>
            <description><![CDATA[ಪೊಲೀಸ್ ಸಬ್ ಇನ್ಸ್​​ಪೆಕ್ಟರ್ ಒಬ್ಬರು, ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಲೇಡಿ ಕಾನ್ಸ್​​ಟೇಬಲ್ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆಕೆ ಬೇರೊಬ್ಬರೊಂದಿಗೆ ಮದುವೆಯಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಕೋರಿ ಪಿಎಸ್ಐ ಮತ್ತೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.]]></description>
            <media:content url="https://geo.dailymotion.com/player/x1tbu.html?video=xa8e0gq" medium="video" height="768" width="1024"/>
            <content:encoded><![CDATA[&lt;p&gt;ಆತ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್​​.. ಕಷ್ಟಪಟ್ಟು ಓದಿ ಆ ಹುದ್ದೆಗೇರಿದ್ರು.. ಕ್ರೈಂ ಆಗಲಿ.. ಮೋಸವಾಗಲಿ.. ಕಳ್ಳತನವಾಗಲಿ.. ಆ ಭಾಗದ ಜನ ಈತನ ಬಳಿಯೇ ಬರ್ತಿದ್ರು.. ಪ್ರತೀ ನಿತ್ಯ ಹತ್ತಾರು ಮಂದಿಯ ಕಷ್ಟ ಆಲಿಸುತ್ತಿದ್ದ ಇದೇ ಪೊಲೀಸಪ್ಪ ಇವತ್ತು ತಾನೇ ನ್ಯಾಯ ಕೊಡಿಸಿ ಅಂತ ಮತ್ತೊಂದು ಪೊಲೀಸ್​​ ಠಾಣೆ ಏರಿದ್ದಾನೆ.. ಇನ್ನೂ ಆತನಿಗೆ ಮೋಸವಾಗಿರೋದು ತನ್ನದೇ ಠಾಣೆಯಲ್ಲಿ ಒಂದು ಸಮಯದಲ್ಲಿ ಕೆಲಸ ಮಾಡ್ತಿದ್ದ ಲೇಡಿ ಕಾನ್ಸ್​​ಟೇಬಲ್​ನಿಂದ.. ಆ ಲೇಡಿ ಕಾನ್ಸ್​ಟೇಬಲ್​ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ರಂತೆ.. ಅಷ್ಟಕ್ಕೂ ಆ ಲೇಡಿ ಕಾನ್ಸ್​​ಟೇಬಲ್​ ಯಾರು..? ಇವರ ಪ್ರೀತಿ ಹುಟ್ಟಿದ್ದೇಗೆ..? ಆಕೆ ಮಾಡಿದ ಮೋಸ ಎಂಥದ್ದು..? ಒಂದು ಪೊಲೀಸ್​​ ಲವ್​ ಸ್ಟೋರಿಯ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್​​&lt;/p&gt;&lt;p&gt;ಇವತ್ತು ಪೊಲೀಸಪ್ಪನ ಲವ್​ ಸ್ಟೋರಿ ಬೀದಿಗೆ ಬಂದಿದೆ.. ನಾಳೆ ಆ ಹೆಣ್ಣುಮಗಳ ಮದುವೆ.. &amp;nbsp;ಮದುವೆ ನಿಲ್ಲಿಸಿ ಅಂತ ಪಿಎಸ್​​ಐ ಠಾಣೆ ಮೆಟ್ಟಿಲ್ಲೇರಿದ್ದಾರೆ.. ಮುಂದೆ ಏನ್ಮಾಡಬೇಕು ಅನ್ನೋದನ್ನ ಕಾನೂನು ಹೆಳುತ್ತೆ.. ಆದ್ರೆ ಒಬ್ಬ ಹೆಣ್ಣುಮಗಳು ನೀನು ಬೇಡ ಅಂತ ತಿರಸ್ಕರಿಸಿ ಹೊಸ ದಾರಿಯನ್ನ ಹಿಡಿದಿದ್ದಾಳೆ.. ಅವಳ ಪಾಡಿಗೆ ಅವಳನ್ನ ಬಿಟ್ರೆ ಒಳ್ಳೆದು..&amp;nbsp;&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-psi-files-complaint-over-love-dispute-with-former-woman-constable-gdp-videoshow-tbvaht8"/>
        </item>
        <item>
            <title><![CDATA[Koh-i-Noor: ಕೋಹಿನೂರ್ ವಾಪಸ್‌ ಕೊಡಿ: ಬ್ರಿಟನ್‌ ರಾಜನಿಗೆ ನ್ಯೂಯಾರ್ಕ್‌ ಮೇಯರ್‌ ಕೋರಿಕೆ]]></title>
            <link>https://kannada.asianetnews.com/gallery/state/mamdani-says-he-would-ask-king-charles-to-return-kohi-noor-rav-ucetrch</link>
            <guid isPermaLink="true">https://kannada.asianetnews.com/gallery/state/mamdani-says-he-would-ask-king-charles-to-return-kohi-noor-rav-ucetrch</guid>
            <pubDate>Fri, 08 May 2026 11:59:16 +0530</pubDate>
            <description><![CDATA[&lt;p&gt;ವಿಶ್ವಪ್ರಸಿದ್ಧ ಕೋಹಿನೂರ್&zwnj; ವಜ್ರವನ್ನು ಭಾರತಕ್ಕೆ ಹಿಂತಿರುಗಿಸಬೇಕೆಂಬ ಒತ್ತಾಸೆಯ ದನಿ ಇದೀಗ ವಿಶ್ವದೆಲ್ಲೆಡೆ ಪ್ರತಿಧ್ವನಿಸುತ್ತಿದೆ. ಕೋಹಿನೂರ್&zwnj; ಕುರಿತು, ಅಮೆರಿಕದ ನ್ಯೂಯಾರ್ಕ್&zwnj;ನ ಮೇಯರ್&zwnj;, ಪ್ರಭಾವಿ ಯುವ ರಾಜಕಾರಣಿ ಜೋಹ್ರನ್&zwnj; ಮಮ್ದಾನಿಯ ಇತ್ತೀಚಿನ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr33585wq4h6s0gxyzw58ej1,imgname-whatsapp-image-2026-05-08-at-11.01.02-am-1778220441788.jpeg" type="image/jpeg" height="390" width="690"/>
            <content:encoded><![CDATA[&lt;p&gt;ವಿಶ್ವಪ್ರಸಿದ್ಧ ಕೋಹಿನೂರ್&zwnj; ವಜ್ರವನ್ನು ಭಾರತಕ್ಕೆ ಹಿಂತಿರುಗಿಸಬೇಕೆಂಬ ಒತ್ತಾಸೆಯ ದನಿ ಇದೀಗ ವಿಶ್ವದೆಲ್ಲೆಡೆ ಪ್ರತಿಧ್ವನಿಸುತ್ತಿದೆ. ಕೋಹಿನೂರ್&zwnj; ಕುರಿತು, ಅಮೆರಿಕದ ನ್ಯೂಯಾರ್ಕ್&zwnj;ನ ಮೇಯರ್&zwnj;, ಪ್ರಭಾವಿ ಯುವ ರಾಜಕಾರಣಿ ಜೋಹ್ರನ್&zwnj; ಮಮ್ದಾನಿಯ ಇತ್ತೀಚಿನ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ&lt;/p&gt;&lt;img&gt;&lt;p&gt;ಯಾದಗಿರಿ : ವಿಶ್ವಪ್ರಸಿದ್ಧ ಕೋಹಿನೂರ್&zwnj; ವಜ್ರವನ್ನು ಭಾರತಕ್ಕೆ ಹಿಂತಿರುಗಿಸಬೇಕೆಂಬ ಒತ್ತಾಸೆಯ ದನಿ ಇದೀಗ ವಿಶ್ವದೆಲ್ಲೆಡೆ ಪ್ರತಿಧ್ವನಿಸುತ್ತಿದೆ. ಕೋಹಿನೂರ್&zwnj; ಕುರಿತು, ಅಮೆರಿಕದ ನ್ಯೂಯಾರ್ಕ್&zwnj;ನ ಮೇಯರ್&zwnj;, ಪ್ರಭಾವಿ ಯುವ ರಾಜಕಾರಣಿ ಜೋಹ್ರನ್&zwnj; ಮಮ್ದಾನಿಯ ಇತ್ತೀಚಿನ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುಂಬೈ ಮೂಲದ ಮೊಹ್ಮದ್&zwnj; ಮಮ್ದಾನಿ ಹಾಗೂ ಭಾರತೀಯ ಚಲನಚಿತ್ರರಂಗದ ಪ್ರಸಿದ್ಧ ನಿರ್ಮಾಪಕಿ ಮೀರಾ ನಾಯರ್&zwnj; ಪುತ್ರ ಜೋಹ್ರನ್&zwnj; ಮಮ್ದಾನಿ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.&lt;/p&gt;&lt;img&gt;&lt;p&gt;9/11 ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಲು ನ್ಯೂಯಾರ್ಕ್&zwnj;ಗೆ ಬುಧವಾರ ಬ್ರಿಟನ್&zwnj; ರಾಜ ಚಾರ್ಲ್ಸ್ ಆಗಮಿಸಿದ್ದರು. ಈ ವೇಳೆ, ಅಲ್ಲಿನ ಮೇಯರ್&zwnj; ಜೋಹ್ರನ್&zwnj; ಮಮ್ದಾನಿ ಭೇಟಿ ನಿಗದಿಯಾಗಿತ್ತು. ಭೇಟಿಗೂ ಮುನ್ನ, ಮಾಧ್ಯಗಳೊಂದಿಗೆ ಮಾತನಾಡಿದ ಮಮ್ದಾನಿ, &quot;ನಾನು ರಾಜನೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅವಕಾಶ ಸಿಕ್ಕರೆ, ಕೋಹಿನೂರ್ ವಜ್ರವನ್ನು ಹಿಂದಿರುಗಿಸುವಂತೆ ಕೇಳುತ್ತೇನೆ.&quot; ಎಂದು ಹೇಳಿದ್ದರು&lt;/p&gt;&lt;img&gt;&lt;p&gt;ನಂತರದಲ್ಲಿ ಅವರಿಬ್ಬರು ಈ ವಿಷಯದ ಬಗ್ಗೆ ಚರ್ಚೆ ನಡೆಸಿದರೋ ಅಥವಾ ಇಲ್ಲವೋ ಸ್ಪಷ್ಟವಾಗಿಲ್ಲವಾದರೂ, ಆದರೆ, ವಜ್ರ ಹಿಂತಿರುಗಿಸುವ ಕುರಿತು ಮಮ್ದಾನಿ ಹೇಳಿಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;img&gt;&lt;p&gt;ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಗ್ರಾಮದ ಕೃಷ್ಣಾ ನದಿಯಲ್ಲಿ ಕೋಹಿನೂರ್&zwnj; ವಜ್ರ ಸಿಕ್ಕ ಐತಿಹ್ಯದ ದಾಖಲೆಗಳಿವೆ. ಬ್ರಿಟಿಷ್&zwnj; ಪ್ರವಾಸಿಗ, ಲೇಖಕ ರಾಬರ್ಟ್&zwnj; ಸೀವೆಲ್&zwnj; ಬರೆದ &quot;ಎ ಫಾರಗಟನ್&zwnj; ಎಂಪಾಯರ್&zwnj;- ವಿಜಯನಗರ&quot; ಹಾಗೂ ವಿಲಿಯಂ ಡೇಲಿಂಪ್ಲ್&zwnj; ಮತ್ತು ಅನಿತಾ ಆನಂದ್&zwnj; ಅವರ 2017ರಲ್ಲಿ ಪ್ರಕಟವಾದ &quot; ಕೋಹಿನೂರ್&zwnj; : ದ ಹಿಸ್ಟರಿ ಆಫ್&zwnj; ವರ್ಲ್ಡ್&zwnj; ಮೋಸ್ಟ್&zwnj; ಇನ್&zwnj;ಫೇಮಸ್ ಡೈಮಂಡ್&zwnj;&quot; ಪುಸ್ತಕದಲ್ಲಿ ಈ ಬಗ್ಗೆ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಇತಿಹಾಸ ಸಂಶೋಧಕರಾಗಿದ್ದ ಶಹಾಪುರದ ದಿ. ಭಾಸ್ಕರರಾವ್&zwnj; ಮುಡಬೂಳ್&zwnj; ಅವರು ಈ ಬಗ್ಗೆ ದಾಖಲೆಗಳ ಸಂಗ್ರಹಕ್ಕೆ ಪ್ರಯತ್ನಿಸಿದ್ದರು. ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್&zwnj; ಗೋಯಲ್&zwnj; ಅವರು, ಅಂದಿನ ಎಚ್ಕೆಡಿಬಿ ಕಾರ್ಯದರ್ಶಿಯಾಗಿದ್ದ ವೇಳೆ ಇಲ್ಲಿನ ಸರ್ವೆ ನಂ.337 ಹಾಗೂ 342ರಲ್ಲಿನ ಒಟ್ಟು 8 ಎಕರೆ 19 ಗುಂಟೆ ಪ್ರದೇಶವನ್ನು ಸಂರಕ್ಷಿತ ಸ್ಥಳವೆಂದು ಗುರುತಿಸಿದ್ದರಲ್ಲದೆ, ಪ್ರವಾಸೋದ್ಯಮ ಇಲಾಖೆಯ ಮೂಲಕ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಿದ್ದರು. ಇಲ್ಲಿನ ಉತ್ಕೃಷ್ಟ ಮರಳಿಗೆ ಕನ್ನ ಹಾಕುತ್ತಿದ್ದವರ ತಡೆದು, ಇಲ್ಲಿ ಮರಳು ಗಣಿಗಾರಿಕೆ ನಿಷೇಧ ಹೇರಿ ಆದೇಶಿಸಲಾಗಿದೆ&lt;/p&gt;&lt;img&gt;&lt;p&gt;ಕೋಹ್&zwnj;-ಎ-ನೂರ್&zwnj;&quot;, ಪರ್ಷಿಯನ್&zwnj; ಭಾಷೆಯಲ್ಲಿನ ಈ ಪದದ ಅರ್ಥ ಬೆಳಕಿನ ಪರ್ವತ (ಕೋಹ್&zwnj; ಅಂದರೆ ಪರ್ವತ, ನೂರ್&zwnj; ಅಂದರೆ ಬೆಳಕು). ವಿಶ್ವದಲ್ಲಿನ ಅತಿ ದೊಡ್ಡ ಕತ್ತರಿಸಿದ ವಜ್ರಗಳಲ್ಲೊಂದು.&lt;/p&gt;&lt;img&gt;&lt;p&gt;105.6 ಕ್ಯಾರೆಟ್ ತೂಕದ, ಒಂದು ಕೋಳಿ ಮೊಟ್ಟೆಯಷ್ಟು ಗಾತ್ರದ ಕೋಹಿನೂರ್&zwnj; ವಜ್ರವನ್ನು 1849ರಲ್ಲಿ ಬ್ರಿಟಿಷರು ಸಿಖ್ ಸಾಮ್ರಾಜ್ಯದ 10 ವರ್ಷದ ಮಹಾರಾಜ ದುಲೀಪ್&zwnj; ಸಿಂಗ್&zwnj; ಅವರಿಂದ ಪಡೆಯಲಾಗಿತ್ತು. ಕಾಕತೀಯರು ಹಾಗೂ ಮೊಗಲರ ನಂತರ ಸಿಖ್&zwnj; ದೊರೆಗಳ ವಶದಲ್ಲಿತ್ತು. ಒಪ್ಪಂದವೊಂದಕ್ಕೆ ಸಹಿ ಹಾಕುವ ವೇಳೆ ದುಲೀಪ್&zwnj; ಸಿಂಗ್&zwnj;ರಿಂದ ಪಡೆದು, ವಿಕ್ಟೋರಿಯಾ ರಾಣಿಗೆ ಒಪ್ಪಿಸಲಾಗಿತ್ತು.&lt;/p&gt;&lt;img&gt;&lt;p&gt;ಸದ್ಯ, ಕೋಹಿನೂರ್&zwnj; ವಜ್ರ ಬ್ರಿಟನ್&zwnj; ರಾಜಮನೆತನದ ಎಲಿಜೆಬೆತ್&zwnj; ರಾಣಿ ಕಿರೀಟದಲ್ಲಿ ಅಳವಡಿಸಲಾಗಿದ್ದು, ಲಂಡನ್ ಟವರ್&zwnj;ನಲ್ಲಿರುವ ಕ್ರೌನ್ ಜುವೆಲ್ಸ್ ಮ್ಯೂಸಿಯಂನಲ್ಲಿ ಪ್ರದರ್ಶನದಲ್ಲಿದೆ. 2002ರಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಸಾರ್ವಜನಿಕವಾಗಿ ವಜ್ರ ಕೊನೆಯ ಬಾರಿ ಕಂಡುಬಂದಿತ್ತು.&lt;/p&gt;&lt;img&gt;&lt;p&gt;ಬ್ರಿಟನ್ ಪ್ರಧಾನಿಯಾಗಿದ್ದ ಡೇವಿಡ್&zwnj; ಕೆಮರೂನ್&zwnj; 2010ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ, ಕೋಹಿನೂರ್ ವಜ್ರವನ್ನು ಭಾರತಕ್ಕೆ ಹಿಂದಿರುಗಿಸುವ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಆಗ, ಇದಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದ ಡೇವಿಡ್&zwnj;, ಬ್ರಿಟನ್&zwnj;ನಲ್ಲಿ ಗ್ರೀಸ್, ಈಜಿಪ್ಟ್ ಮುಂತಾದವು ಸೇರಿದಂತೆ ವಿವಿಧ ರಾಷ್ಟ್ರಗಳ ಅನೇಕ ವಸ್ತುಗಳನ್ನು ಸಂಗ್ರಹಿಸಲ್ಪಟ್ಟಿವೆ. ಒಂದು ವಸ್ತುವನ್ನು ಹಿಂದಿರುಗಿಸಿದರೆ, ಭಾರತ ಮಾತ್ರವಲ್ಲ ಇತರ ದೇಶಗಳೂ ಅದೇ ಬೇಡಿಕೆಯನ್ನು ಮುಂದಿಡುತ್ತವೆ ಎಂದಿದ್ದರು.&lt;/p&gt;&lt;img&gt;&lt;p&gt;ಇನ್ನು, 2016ರಲ್ಲಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆಯ ವೇಳೆ, ಸ್ನೇಹಪೂರ್ವಕವಾಗಿ ಕೋಹಿನೂರ್&zwnj; ವಜ್ರ ವಾಪಸ್&zwnj; ಪಡೆಯಲಾಗುವುದು ಎಂದು ಸರ್ಕಾರದ ಪರ ವಕೀಲರು ಸುಪ್ರೀಂಕೋರ್ಟಿಗೆ ತಿಳಿಸಿದ್ದರು. ಆದರೆ, ಮ್ಯೂಸಿಯಂ ಕಾಯ್ದೆ ಪ್ರಕಾರ ವಸ್ತುಗಳನ್ನು ಹಿಂತಿರುಗಿಸುವುದು ಕಷ್ಟಕರ ಎಂದು ಬ್ರಿಟನ್&zwnj; ಸ್ಪಷ್ಟಪಡಿಸಿತ್ತು. ಸದ್ಯ, ಮಮ್ದಾನಿ ಅವರ ಹೇಳಿಕೆ ಮತ್ತೇ ಈ ವಿಚಾರವನ್ನು ಜಾಗತಿಕ ಮಟ್ಟದಲ್ಲಿ ಮುಂದಿಟ್ಟಂತಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/state/mamdani-says-he-would-ask-king-charles-to-return-kohi-noor-rav-ucetrch"/>
        </item>
        <item>
            <title><![CDATA[ಬೀದರ್‌ನ ಬಾನಿಗೆ ಮರಳಿದ ಲೋಹದ ಹಕ್ಕಿ! ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್]]></title>
            <link>https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</link>
            <guid isPermaLink="true">https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</guid>
            <pubDate>Fri, 01 May 2026 16:39:34 +0530</pubDate>
            <description><![CDATA[ಸ್ಥಗಿತಗೊಂಡಿದ್ದ ಬೀದರ್&zwnj;-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಈ ಸೇವೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ಅನುದಾನ ಒದಗಿಸಲಾಗುತ್ತಿದ್ದು, ಇದು ಜಿಲ್ಲೆಯ ಸಂಪರ್ಕ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhkkstz3m20dc86284nr8mz,imgname-star-air-bidar-flights--1--1777633716063.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್&zwnj; ಜಿಲ್ಲೆಗೆ ಮಹತ್ವದ ಬೆಳವಣಿಗೆಯಾಗಿ, ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮತ್ತೆ ಆರಂಭಗೊಳ್ಳಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬೀದರ್&zwnj;&ndash;ಬೆಂಗಳೂರು ನಡುವೆ ಕಾರ್ಯನಿರ್ವಹಿಸುತ್ತಿದ್ದ ವಿಮಾನ ಸೇವೆ ಪುನರಾರಂಭವಾಗಲಿದ್ದು, ಟರ್ಮಿನಲ್ ಕಾರ್ಯಾಚರಣೆಗಳು ಮತ್ತೆ ಚೇತರಿಸಿಕೊಳ್ಳಲು ದಾರಿ ಸುಗಮವಾಗಿದೆ.&lt;/p&gt;&lt;p&gt;ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಸಂಬಂಧ ಮನವಿ ಸಲ್ಲಿಸಿದ್ದರು. ಅವರ ಪ್ರಸ್ತಾವನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು, ಬೀದರ್&zwnj;ನ ನಾಗರಿಕ ವಿಮಾನಯಾನ ಸೇವೆಗೆ ಅಗತ್ಯ ಅನುದಾನ ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.&lt;/p&gt;&lt;h2&gt;ವಿಮಾನಯಾನ ಸಂಸ್ಥೆ ಎದುರಿಸುವ ನಷ್ಟವನ್ನು ಭರಿಸಲು VGF ವ್ಯವಸ್ಥೆಯಡಿ ಅನುದಾನ&lt;/h2&gt;&lt;p&gt;ಈ ನಿರ್ಧಾರದ ಭಾಗವಾಗಿ, ವಿಮಾನಯಾನ ಸಂಸ್ಥೆಗಳು ಎದುರಿಸುವ ನಷ್ಟವನ್ನು ಭರಿಸಲು Viability Gap Funding (VGF) ವ್ಯವಸ್ಥೆಯಡಿ ಅನುದಾನ ನೀಡಲಾಗುತ್ತದೆ. ಈ ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ಭರಿಸಲಾಗುವುದು. ಇದರಿಂದ ವಿಮಾನ ಸೇವೆ ನಿರಂತರವಾಗಿ ಕಾರ್ಯನಿರ್ವಹಿಸಲು ಸಹಾಯವಾಗಲಿದ್ದು, ಜಿಲ್ಲೆಯ ಸಂಪರ್ಕ ವ್ಯವಸ್ಥೆಗೆ ಮಹತ್ವದ ಉತ್ತೇಜನ ದೊರೆಯಲಿದೆ.&lt;/p&gt;&lt;p&gt;ಇತ್ತೀಚೆಗೆ, ನಾಗರಿಕ ವಿಮಾನಯಾನ ಸೇವೆಯನ್ನು ನಿರ್ವಹಿಸುತ್ತಿದ್ದ ಸ್ಟಾರ್ ಏರ್ ಸಂಸ್ಥೆಯು ಸರ್ಕಾರದೊಂದಿಗೆ ಮಾಡಿಕೊಂಡಿದ್ದ ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಿಂದ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಕಳೆದ ವರ್ಷ ಸರ್ಕಾರವು ಕೆಕೆಆರ್&zwnj;ಡಿಬಿ ನಿಧಿಯಿಂದ ಸುಮಾರು 13 ಕೋಟಿ ರೂಪಾಯಿ ಅನುದಾನವನ್ನು ನೀಡಿತ್ತು. ಇದೀಗ ಹೊಸ ಅವಧಿಗೆ ಸ್ಟಾರ್ ಏರ್ ಸಂಸ್ಥೆಯು 20 ಕೋಟಿ ರೂಪಾಯಿಗಿಂತ ಹೆಚ್ಚು ಅನುದಾನ ಬೇಡಿಕೆ ಇಟ್ಟಿದ್ದುದಾಗಿ ಮೂಲಗಳು ತಿಳಿಸಿವೆ.&lt;/p&gt;&lt;p&gt;ಸಚಿವ ಈಶ್ವರ ಖಂಡ್ರೆ ಅವರ ಸತತ ಪ್ರಯತ್ನದ ಫಲವಾಗಿ ಸರ್ಕಾರ ಮತ್ತೆ ಅನುದಾನ ನೀಡಲು ಸಮ್ಮತಿಸಿರುವುದರಿಂದ, ಬೀದರ್&zwnj;ನಲ್ಲಿ ವಿಮಾನ ಸೇವೆ ಪುನರಾರಂಭವಾಗುವುದು ಖಚಿತವಾಗಿದೆ. ಈ ಕ್ರಮದಿಂದ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ವಲಯಗಳಿಗೆ ಮಹತ್ತರ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.&lt;/p&gt;&lt;h2&gt;ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಅನುಕೂಲ&lt;/h2&gt;&lt;p&gt;ಇದರಿಂದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಸಹ ಹೆಚ್ಚಿನ ಅನುಕೂಲ ಸಿಗಲಿದೆ, ಏಕೆಂದರೆ ಅವರು ಕೂಡ ಬೀದರ್ ವಿಮಾನ ನಿಲ್ದಾಣವನ್ನು ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಒಟ್ಟಿನಲ್ಲಿ, ಈ ನಿರ್ಧಾರ ಉತ್ತರ ಕರ್ನಾಟಕ ಭಾಗದ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.&lt;/p&gt;&lt;p&gt;ಬೀದರ್&zwnj; &ndash; ಬೆಂಗಳೂರು ನಡುವೆ ಮತ್ತೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗಲಿದ್ದು, ಸರ್ಕಾರಕ್ಕೆ ಹಾಗೂ ಕೆಕೆಆರ್&zwnj;ಡಿಬಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಹಾಗೂ ಬೀದರ್ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ.&lt;/p&gt;&lt;p&gt;- ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1"/>
        </item>
        <item>
            <title><![CDATA[ಯಾದಗಿರಿ: ಅಕ್ಕ-ಭಾವ ಜೊತೆ ಹೋಟೆಲ್‌ಗೆ ಬಂದವನು.. ಎರಡು ದಿನದ ಬಳಿಕ ಶವವಾಗಿ ಪತ್ತೆ! ಸಿಸಿಟಿವಿಯಲ್ಲಿ ಕೊಲೆ ರಹಸ್ಯ ಬಯಲು!]]></title>
            <link>https://kannada.asianetnews.com/gallery/karnataka-districts/hyderabad-man-mysterious-death-in-yadgir-private-hotel-murder-mystery-revealed-on-cctv-ybn4iqk</link>
            <guid isPermaLink="true">https://kannada.asianetnews.com/gallery/karnataka-districts/hyderabad-man-mysterious-death-in-yadgir-private-hotel-murder-mystery-revealed-on-cctv-ybn4iqk</guid>
            <pubDate>Thu, 14 May 2026 13:08:32 +0530</pubDate>
            <description><![CDATA[&lt;p&gt;ಯಾದಗಿರಿ ನಗರದ ಖಾಸಗಿ ಹೋಟೇಲ್ ನಲ್ಲಿ ತಂಗಿದ್ದ ವ್ಯಕ್ತಿ ಅನುಮಾನಸ್ಪಾದ ರೀತಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆ ಅದೇ ಹೋಟೆಲ್&zwnj;ನಲ್ಲಿದ್ದ ಸಂಬಂಧಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಯಾದಗಿರಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಬಯಲಿಗೆ ಬಂದಿದ್ದು ಹೇಗೆ?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krjpjvakbzay6twswa5vtj3j,imgname-----------------------2026-05-14t130513.437-1778744126803.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಾದಗಿರಿ ನಗರದ ಖಾಸಗಿ ಹೋಟೇಲ್ ನಲ್ಲಿ ತಂಗಿದ್ದ ವ್ಯಕ್ತಿ ಅನುಮಾನಸ್ಪಾದ ರೀತಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆ ಅದೇ ಹೋಟೆಲ್&zwnj;ನಲ್ಲಿದ್ದ ಸಂಬಂಧಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಯಾದಗಿರಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಬಯಲಿಗೆ ಬಂದಿದ್ದು ಹೇಗೆ?&lt;/p&gt;&lt;img&gt;&lt;p&gt;ಯಾದಗಿರಿ ನಗರದಲ್ಲಿ ನಡೆದಿರುವ ಒಂದು ನಿಗೂಢ ಸಾವು ಸ್ಥಳೀಯ ಜನರನ್ನು ಬೆಚ್ಚಿಬೀಳಿಸಿದೆ. ಆ ಖಾಸಗಿ ಹೋಟೆಲ್&zwnj;ನ ಒಂದು ರೂಂ&hellip; ಎರಡು ದಿನಗಳಿಂದ ಬಾಗಿಲೇ ತೆರೆಯಲಿಲ್ಲ&hellip; ಒಳಗಿದ್ದ ವ್ಯಕ್ತಿ ಹೊರಗೂ ಬರಲಿಲ್ಲ&hellip; ಸಿಬ್ಬಂದಿಗೆ ಅನುಮಾನ ಶುರುವಾಯ್ತು. ಕೊನೆಗೆ ರೂಂ ಬಾಗಿಲು ತಟ್ಟಿದರೂ ಒಳಗಿನಿಂದ ಸಣ್ಣ ಪ್ರತಿಕ್ರಿಯೆಯೂ ಇಲ್ಲ. ಕೊನೆಗೆ ಬಾಗಿಲು ತೆರೆಯುತ್ತಿದ್ದಂತೆ ಕಂಡ ದೃಶ್ಯಕ್ಕೆ ಹೋಟೆಲ್ ಸಿಬ್ಬಂದಿ ಬೆಚ್ಚಿಬಿದ್ದರು.&lt;/p&gt;&lt;img&gt;&lt;p&gt;ಆಂಧ್ರಪ್ರದೇಶದ ಹೈದರಾಬಾದ್&zwnj;ನ ವಿನಾಯಕನಗರ ನಿವಾಸಿ ಲಕ್ಷ್ಮಣರಾವ್ (51) ಎಂದು ಗುರುತಿಸಲಾಗಿರುವ ವ್ಯಕ್ತಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೊದಲಿಗೆ ಇದು ಸಹಜ ಸಾವು ಅನ್ನಿಸಿತಾದರೂ ಆದರೆ ಪೊಲೀಸರ ಪ್ರಾಥಮಿಕ ತನಿಖೆ ಶುರುವಾಗುತ್ತಿದ್ದಂತೆಯೇ ಭಯಾನಕ ಸತ್ಯ ಹೊರಬಿದ್ದಿದೆ.&lt;/p&gt;&lt;img&gt;&lt;p&gt;ಮೃತ ಲಕ್ಷ್ಮಣರಾವ್ ಅವರನ್ನು ಅವರ ಅಕ್ಕ ಸಜ್ಜಾ ವರಲಕ್ಷ್ಮಿ ಹಾಗೂ ಭಾವ ಸಜ್ಜಾ ವೆಂಕಟರತ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಪಾತಕರು ಮೂರು ದಿನಗಳ ಹಿಂದೆ ಇದೇ ಖಾಸಗಿ ಹೋಟೆಲ್&zwnj;ನಲ್ಲಿ ತಂಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಒಟ್ಟಾರೆ ಈ ಮೂವರು ನಡುವೆ ಏನೋ ನಡೆದಿದೆ ಎನ್ನಲಾಗಿದೆ. ಅನಂತರ ಅಕ್ಕ-ಭಾವ ಮಾತ್ರ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.&lt;/p&gt;&lt;img&gt;&lt;p&gt;ಪೊಲೀಸ್ ಮೂಲಗಳ ಪ್ರಕಾರ, ಲಕ್ಷ್ಮಣರಾವ್ ಅವರನ್ನು ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ರೂಂ ಬಿಟ್ಟಿದ್ದು ಮತ್ತೆ ವಾಪಸ್ ಆಗಿಲ್ಲ. ಆದರೆ ಇತ್ತ ರೂಮ್&zwnj;ನಲ್ಲಿದ್ದ ಮೃತದೇಹ ಎರಡು ದಿನಗಳ ಕಾಲ ಅದೇ ರೂಂನಲ್ಲಿ ಬಿದ್ದಿದೆ.&lt;/p&gt;&lt;img&gt;&lt;p&gt;ಯಾದಗಿರಿ ನಗರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲೇ ಇದು ಕೊಲೆ ಎಂಬುದು ಬಹುತೇಕ ಖಚಿತವಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಇದೀಗ ಆರೋಪಿಗಳಾದ ಅಕ್ಕ ಹಾಗೂ ಭಾವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>yadgir</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/hyderabad-man-mysterious-death-in-yadgir-private-hotel-murder-mystery-revealed-on-cctv-ybn4iqk"/>
        </item>
        <item>
            <title><![CDATA[ಯಾದಗಿರಿ: ಚಾಲಕನಿಂದಲೇ ಸರ್ಕಾರಿ ಬಸ್ ಕಳ್ಳತನ! ಕುಡಿದ ಮತ್ತಿನಲ್ಲಿ KKRTC ಬಸ್ ಎಸ್ಕೇಪ್‌ ಮಾಡಿದ ಕಿಲಾಡಿ]]></title>
            <link>https://kannada.asianetnews.com/karnataka-districts/yadgiri-kkrtc-bus-theft-by-dismissed-driver-mahipal-reddy-saidapur-police-case-san/articleshow-ypu79ha</link>
            <guid isPermaLink="true">https://kannada.asianetnews.com/karnataka-districts/yadgiri-kkrtc-bus-theft-by-dismissed-driver-mahipal-reddy-saidapur-police-case-san/articleshow-ypu79ha</guid>
            <pubDate>Sat, 21 Mar 2026 17:07:47 +0530</pubDate>
            <description><![CDATA[&lt;p&gt;ಯಾದಗಿರಿಯ ಸೈದಾಪುರದಲ್ಲಿ, ಕೆಕೆಆರ್&zwnj;ಟಿಸಿಯಿಂದ ವಜಾಗೊಂಡಿದ್ದ ಮಾಜಿ ಚಾಲಕ ಮಹಿಪಾಲರೆಡ್ಡಿ ಎಂಬಾತ ಕುಡಿದ ಮತ್ತಿನಲ್ಲಿ ಸರ್ಕಾರಿ ಬಸ್ಸನ್ನೇ ಕದ್ದೊಯ್ದಿದ್ದಾನೆ. ಬಸ್ಸನ್ನು ತನ್ನ ಸ್ವಗ್ರಾಮದ ದೇವಸ್ಥಾನದ ಮುಂದೆ ನಿಲ್ಲಿಸಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km82s0d60m7vy54ep11a69m5,imgname-screenshot-2026-03-21-170050-1774092845478.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಮಾ.21):&lt;/strong&gt; ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ಕೆಕೆಆರ್&zwnj;ಟಿಸಿ (KKRTC) ಸಂಸ್ಥೆಗೆ ಶಾಕ್ ನೀಡುವಂತಹ ಘಟನೆಯೊಂದು ನಡೆದಿದೆ. ಸಂಸ್ಥೆಯಿಂದಲೇ ವಜಾಗೊಂಡಿದ್ದ ಮಾಜಿ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಲ್ಲಿದ್ದ ಸರ್ಕಾರಿ ಬಸ್ಸನ್ನೇ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬಸ್ಸನ್ನು ಮಹಿಪಾಲರೆಡ್ಡಿ ಎಂಬ ಮಾಜಿ ಚಾಲಕ ಕದ್ದೊಯ್ದಿದ್ದಾನೆ. ಈತ ಬಸ್ಸನ್ನು ಚಲಾಯಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬಸ್ ಕಳ್ಳತನ ಮಾಡಿದ ಈತ, ಅದನ್ನು ತನ್ನ ಸ್ವಗ್ರಾಮವಾದ ರಾಚನಳ್ಳಿಯ ದೇವಸ್ಥಾನದ ಮುಂದೆ ತಂದು ನಿಲ್ಲಿಸಿದ್ದಾನೆ.&lt;/p&gt;&lt;h2&gt;&lt;strong&gt;ಯಾರು ಈ ಮಹಿಪಾಲರೆಡ್ಡಿ?&lt;/strong&gt;&lt;/h2&gt;&lt;p&gt;ಮಹಿಪಾಲರೆಡ್ಡಿ ಈ ಹಿಂದೆ ಕೆಕೆಆರ್&zwnj;ಟಿಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಈತನ ವಿರುದ್ಧ ಪ್ರಯಾಣಿಕರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ (ಜೇಬಿಗೆ ಇಳಿಸಿಕೊಳ್ಳುತ್ತಿದ್ದ) ಗಂಭೀರ ಆರೋಪಗಳಿದ್ದವು. ಇಂತಹ ಹಲವು ದೂರುಗಳ ಹಿನ್ನೆಲೆಯಲ್ಲಿ ಸಂಸ್ಥೆಯು ಈತನನ್ನು ಸೇವೆಯಿಂದ ವಜಾಗೊಳಿಸಿತ್ತು. ಕೆಲಸ ಹೋದ ಸಿಟ್ಟೋ ಅಥವಾ ಕುಡಿದ ಮತ್ತಿನ ಅವಾಂತರವೋ, ಈತ ಈಗ ಬಸ್ಸನ್ನೇ ಕದ್ದು ಸುದ್ದಿಯಾಗಿದ್ದಾನೆ.&lt;/p&gt;&lt;h2&gt;&lt;strong&gt;ಪೊಲೀಸ್ ದೂರು ದಾಖಲು&lt;/strong&gt;&lt;/h2&gt;&lt;p&gt;ತಮ್ಮ ಬಸ್ ನಾಪತ್ತೆಯಾಗಿರುವುದನ್ನು ಕಂಡು ಬೆಚ್ಚಿಬಿದ್ದ ಕೆಕೆಆರ್&zwnj;ಟಿಸಿ ಅಧಿಕಾರಿಗಳು ಕೂಡಲೇ ತನಿಖೆ ನಡೆಸಿ ಬಸ್ ಪತ್ತೆ ಮಾಡಿದ್ದಾರೆ. ಸದ್ಯ ಮಹಿಪಾಲರೆಡ್ಡಿ ವಿರುದ್ಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>yadgir</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/yadgiri-kkrtc-bus-theft-by-dismissed-driver-mahipal-reddy-saidapur-police-case-san/articleshow-ypu79ha"/>
        </item>
    </channel>
</rss>
