<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 28 Apr 2026 08:51:34 +0530</lastBuildDate>
        <atom:link href="https://kannada.asianetnews.com/rss/yadgir" rel="self" type="application/rss+xml"/>
        <item>
            <title><![CDATA[ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ  ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ!]]></title>
            <link>https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na</link>
            <guid isPermaLink="true">https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na</guid>
            <pubDate>Fri, 17 Apr 2026 12:03:57 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಸುರಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್&zwnj;ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd28gy82ct386kxm2tnn8g5,imgname-yadagiri-accident-news-1776407561160.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಭಯಾನಕ ಅಪಘಾತದಲ್ಲಿ ಕನಿಷ್ಠ 6 ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಕಾರು ಮತ್ತು ಖಾಸಗಿ ಬಸ್ ನಡುವಿನ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಅಪಘಾತದ ಭೀಕರತೆ ಎಷ್ಟಿದೆ ಎಂದರೆ ಮೃತರ ತಲೆಬುರುಡೆಗಳು ಕಾರಿನಲ್ಲಿ ಕಾಣಿಸಿದೆ.&lt;/p&gt;&lt;h2&gt;ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್&lt;/h2&gt;&lt;p&gt;ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಏಸಿ ಬಸ್ ಮತ್ತು ಯಾದಗಿರಿಯಿಂದ ರಾಯಚೂರಿನ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡು ಸಜೀವ ದಹನಗೊಂಡಿದ್ದಾರೆ. ಕಾರು ಸಂಪೂರ್ಣವಾಗಿ ಕರಕಲಾಗಿದ್ದು, ಅದರಲ್ಲಿದ್ದ 6 ಮಂದಿ ಸ್ಥಳದಲ್ಲೇ &amp;nbsp;ಭಸ್ಮವಾಗಿದ್ದಾರೆ. ಬಸ್&zwnj;ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.&lt;/p&gt;&lt;h2&gt;ಬಸ್&zwnj;ಗೂ ವ್ಯಾಪಿಸಿದ ಬೆಂಕಿ&lt;/h2&gt;&lt;p&gt;ಅಪಘಾತದ ಹೊಡೆತಕ್ಕೆ ಬಸ್&zwnj;ಗೂ ಬೆಂಕಿ ತಗುಲಿದ್ದು, ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯರು ಹಾಗೂ ತಕ್ಷಣ ಆಗಮಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾದರು. ಆದರೆ ಕಾರು ಅಪ್ಪಚ್ಚಿಯಾಗಿ &amp;nbsp;ಡೋರ್ ಓಪನ್ &amp;nbsp;ಆಗಲೇ ಇಲ್ಲ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಹರಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿ ನಂದಿಸಿದ ನಂತರ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಆರಂಭಿಸಲಾಗಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸುರಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣವನ್ನು ತಿಳಿಯುವ ಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;ಈ ದುರಂತದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮತ್ತೆ ಖಾಸಗಿ ಬಸ್ ಅಪಘಾತದ ಭೀತಿ ಮೂಡಿಸಿದೆ. ರಸ್ತೆ ಸುರಕ್ಷತೆ ಕುರಿತು ಪ್ರಶ್ನೆಗಳು ಮತ್ತೆ ಉದ್ಭವಿಸಿವೆ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/horrific-bus-car-collision-in-yadagiri-shantapura-cross-many-burnt-alive-gdp/articleshow-21hf9na"/>
        </item>
        <item>
            <title><![CDATA[ಯಾದಗಿರಿ: ಸುರಪುರ ಬಳಿ ಬೈಕ್‌ಗೆ ಕ್ರೂಸರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು]]></title>
            <link>https://kannada.asianetnews.com/gallery/state/yadgir-cruiser-collides-with-bike-in-surapura-two-bikers-died-on-spot-388uv7z</link>
            <guid isPermaLink="true">https://kannada.asianetnews.com/gallery/state/yadgir-cruiser-collides-with-bike-in-surapura-two-bikers-died-on-spot-388uv7z</guid>
            <pubDate>Thu, 12 Mar 2026 14:05:53 +0530</pubDate>
            <description><![CDATA[&lt;p&gt;&lt;strong&gt;Surapur bike cruiser collision: &amp;nbsp;&lt;/strong&gt;ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkgj7cz9ky1rzyrvhzxe57kf,imgname-yadagiri-accident--2--1773303739369.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;Surapur bike cruiser collision: &amp;nbsp;&lt;/strong&gt;ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಯಾದಗಿರಿ: ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ &zwnj;ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.&lt;/p&gt;&lt;img&gt;&lt;p&gt;ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಗುದ್ದಿರುವ ರಭಸಕ್ಕೆ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ಇತ್ತ ಬೈಕ್&zwnj;ಗೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ ರಸ್ತೆ ಬದಿ ಪಲ್ಟಿಯಾಗಿದ್ದು ಕ್ರೂಸರ್ ವಾಹನದಲ್ಲಿದ್ದವರಿಗೂ ಹಲವರಿಗೆ ಗಂಭೀರ ಗಾಯಗಳಾಗಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ರಾಮನಗರ: ಅತ್ತೆ ಸೊಸೆ ಜಗಳ: 19 ವರ್ಷದ ಗರ್ಭಿಣಿ ಸೊಸೆ ಸಾವಿಗೆ ಶರಣು&lt;/strong&gt;&lt;/p&gt;&lt;img&gt;&lt;p&gt;ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತಪಟ್ಟವರನ್ನು ಗೋಗಿ ಮೂಲದವರು ಎಂದು ಗುರುತಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮ&lt;/strong&gt;ಡಿಕೇರಿಯ ಭಾಗಮಂಡಲದಲ್ಲಿ ಲೀವಿಂಗ್ ಟುಗೆದರ್ ಜೋಡಿಯ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ&lt;/p&gt;&lt;img&gt;&lt;p&gt;ಅಪಘಾತ ಸ್ಥಳಕ್ಕೆ ಕೆಂಭಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಬೀದರ್: ಶಾಲಾ ಕಟ್ಟಡದಿಂದ ಜಿಗಿದು 10ನೇ ಕ್ಲಾಸ್ ಬಾಲಕಿ ಸಾವಿಗೆ ಶರಣು&lt;/p&gt;]]></content:encoded>
            <category>yadgir</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/yadgir-cruiser-collides-with-bike-in-surapura-two-bikers-died-on-spot-388uv7z"/>
        </item>
        <item>
            <title><![CDATA[ರಾಜ್ಯದಲ್ಲಿ ಮಳೆ ಆರ್ಭಟ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮುಂಡರಗಿ ಟವರ್ ಢಮಾರ್, ಯಾದಗಿರಿ ಸಿಡಿಲಿಗೆ 50 ಕುರಿ ಬಲಿ!]]></title>
            <link>https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah</link>
            <guid isPermaLink="true">https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah</guid>
            <pubDate>Mon, 27 Apr 2026 20:15:43 +0530</pubDate>
            <description><![CDATA[&lt;p&gt;ಹವಾಮಾನ ಇಲಾಖೆಯು ಕರ್ನಾಟಕದ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗದಲ್ಲಿ ಬಿರುಗಾಳಿಗೆ ಮೊಬೈಲ್ ಟವರ್ ಕುಸಿದುಬಿದ್ದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq7pcmhj9phzabq7y5zf6te3,imgname-karnataka-rain-orange-alert-1777301082673.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಗದಗ/ಯಾದಗಿರಿ (ಏ.27): ರಾ&lt;/strong&gt;ಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಒಟ್ಟು ಎಂಟು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಯಾವ ಯಾವ ಜಿಲ್ಲೆಗಳಲ್ಲಿ ಮಳೆ?&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದ ಎರಡು ಪ್ರತ್ಯೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ:&lt;/p&gt;&lt;p&gt;&lt;strong&gt;ಹೆಚ್ಚಿನ ತೀವ್ರತೆಯ ಮಳೆ (ಗಂಟೆಗೆ 40-50 ಕಿ.ಮೀ ವೇಗದ ಗಾಳಿ):&lt;/strong&gt;&lt;/p&gt;&lt;p&gt;ಚಿಕ್ಕಮಗಳೂರು, ಹಾಸನ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದ್ದು, ಗುಡುಗು ಸಹಿತ ಮಿಂಚಿನ ಅಬ್ಬರ ಜೋರಾಗಿರಲಿದೆ.&lt;/p&gt;&lt;p&gt;&lt;strong&gt;ಸಾಧಾರಣ ಮಳೆ (ಗಂಟೆಗೆ 30-40 ಕಿ.ಮೀ ವೇಗದ ಗಾಳಿ):&lt;/strong&gt;&lt;/p&gt;&lt;p&gt;ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.&lt;/p&gt;&lt;p&gt;ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಧಾರಾಕಾರ ಮಳೆ ಮತ್ತು ಬಿರುಗಾಳಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗ ಜಿಲ್ಲೆಯಲ್ಲಿ ಬೃಹತ್ ಮೊಬೈಲ್ ಟವರ್ ನೆಲಕ್ಕಪ್ಪಳಿಸಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.&lt;/p&gt;&lt;h2&gt;&lt;strong&gt;ಯಾದಗಿರಿ: ಕುರಿಗಾಹಿಗಳ ಬದುಕು ಬೀದಿಗೆ&lt;/strong&gt;&lt;/h2&gt;&lt;p&gt;ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ ರೈತರು ತತ್ತರಿಸಿದ್ದಾರೆ. ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು ಮಲ್ಲಪ್ಪ, ಆಶಪ್ಪ, ಜಾಲ್ಲಪ್ಪ, ಲಕ್ಸಮಪ್ಪ ಮತ್ತು ಹನುಮಂತ ಎಂಬ ರೈತರಿಗೆ ಸೇರಿದ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ತಮ್ಮ ಜೀವನಾಧಾರವಾಗಿದ್ದ ಕುರಿಗಳ ಮಾರಣಹೋಮ ಕಂಡು ಕುರಿಗಾಹಿಗಳು ಕಣ್ಣೀರು ಹಾಕುತ್ತಿದ್ದಾರೆ. ನೊಂದ ರೈತರಿಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದಾರೆ.&lt;/p&gt;&lt;h2&gt;&lt;strong&gt;ಗದಗ: ಗಾಳಿ ಮಳೆಗೆ ಉರುಳಿದ ಮೊಬೈಲ್ ಟವರ್&lt;/strong&gt;&lt;/h2&gt;&lt;p&gt;ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಜಾಗೃತಿ ಸರ್ಕಲ್ ಬಳಿ ಬಿರುಗಾಳಿ ಮಳೆಯ ರಭಸಕ್ಕೆ ಏರ್&zwnj;ಟೆಲ್ ಮೊಬೈಲ್ ಟವರ್&zwnj;ವೊಂದು ಬಿಲ್ಡಿಂಗ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಸವಣೂರು ಎಂಬುವವರಿಗೆ ಸೇರಿದ ಕಟ್ಟಡದ ಮೇಲೆ ಈ ಟವರ್ ಅಳವಡಿಸಲಾಗಿತ್ತು. ಅದೃಷ್ಟವಶಾತ್ ಟವರ್ ಬೀಳುವ ಸಮಯದಲ್ಲಿ ಜನಸಂಚಾರ ವಿರಳವಾಗಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h2&gt;&lt;strong&gt;ಸಂಭವನೀಯ ಹಾನಿಗಳು:&lt;/strong&gt;&lt;/h2&gt;&lt;ul&gt; &lt;li&gt;ಈ ಹಠಾತ್ ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳು ಎದುರಾಗಬಹುದು ಎಂದು ಇಲಾಖೆ ಎಚ್ಚರಿಸಿದೆ:&lt;/li&gt; &lt;li&gt;ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು.&lt;/li&gt; &lt;li&gt;ರಸ್ತೆಗಳಲ್ಲಿ ಸಣ್ಣಪುಟ್ಟ ಸಂಚಾರ ದಟ್ಟಣೆ ಹಾಗೂ ಮರಗಳ ಕೊಂಬೆಗಳು ಮುರಿದು ಬೀಳುವ ಸಾಧ್ಯತೆಯಿದೆ.&lt;/li&gt; &lt;li&gt;ದುರ್ಬಲವಾದ ಕಟ್ಟಡಗಳು ಅಥವಾ ಕಚ್ಚಾ ಮನೆಗಳಿಗೆ ಹಾನಿಯಾಗಬಹುದು.&lt;/li&gt; &lt;li&gt;ವಿಶೇಷವಾಗಿ ರೈತರು ಕೊಯ್ಲು ಮಾಡಿ ತೆರೆದ ಜಾಗದಲ್ಲಿಟ್ಟಿರುವ ಬೆಳೆಗಳಿಗೆ ಹಾನಿಯಾಗುವ ಸಂಭವವಿದೆ.&lt;/li&gt; &lt;li&gt;ಸಾರ್ವಜನಿಕರಿಗೆ ಸೂಚನೆಗಳು:&lt;/li&gt; &lt;li&gt;ಮಳೆಯ ಸಮಯದಲ್ಲಿ ಸುರಕ್ಷಿತವಾಗಿರಲು ಹವಾಮಾನ ಇಲಾಖೆಯು ಕೆಲವು ಕ್ರಮಗಳನ್ನು ಸೂಚಿಸಿದೆ:&lt;/li&gt; &lt;li&gt;ಮಳೆಯ ಸಂದರ್ಭದಲ್ಲಿ ಮನೆಯೊಳಗೆ ಇರಿ, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ.&lt;/li&gt; &lt;li&gt;ಸಾಧ್ಯವಾದರೆ ಪ್ರಯಾಣವನ್ನು ಮುಂದೂಡಿ. ಒಂದು ವೇಳೆ ಪ್ರಯಾಣಿಸುವುದು ಅನಿವಾರ್ಯವಾದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ.&lt;/li&gt; &lt;li&gt;ಗುಡುಗು ಸಿಡಿಲು ಇರುವಾಗ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.&lt;/li&gt; &lt;li&gt;ಮನೆಯಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್&zwnj;ಪ್ಲಗ್ (Unplug) ಮಾಡಿ.&lt;/li&gt; &lt;li&gt;ಜಲಮೂಲಗಳಿಂದ (ಕೆರೆ, ನದಿ) ತಕ್ಷಣ ಹೊರಬನ್ನಿ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಿ.&lt;/li&gt; &lt;li&gt;ರೈತರು ತಮ್ಮ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡಿ.&lt;/li&gt; &lt;li&gt;ಮುಂದಿನ ಮೂರು ಗಂಟೆಗಳ ಕಾಲ ಈ ಜಿಲ್ಲೆಗಳ ಜನರು ಜಾಗರೂಕರಾಗಿರಬೇಕು ಎಂದು ಹವಾಮಾನ ಇಲಾಖೆಯ ಕರ್ತವ್ಯನಿರತ ಅಧಿಕಾರಿಗಳು ತಿಳಿಸಿದ್ದಾರೆ.&lt;/li&gt;&lt;/ul&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah"/>
        </item>
        <item>
            <title><![CDATA[ಅಯ್ಯೋ ಮಲ್ಲಿಕಾರ್ಜುನ ಮುತ್ಯಾ.., ಜಾಮೀನು ನಿರೀಕ್ಷೆಯಲ್ಲಿದ್ದ ನಿಮಗೆ, ಕೋರ್ಟ್ ಮತ್ತೆ ಶಾಕ್ ಕೊಡ್ತಾ!]]></title>
            <link>https://kannada.asianetnews.com/karnataka-districts/yadgiri-mallikarjun-mutya-pocso-case-bail-rejected-court-update-sat/articleshow-49c7sgq</link>
            <guid isPermaLink="true">https://kannada.asianetnews.com/karnataka-districts/yadgiri-mallikarjun-mutya-pocso-case-bail-rejected-court-update-sat/articleshow-49c7sgq</guid>
            <pubDate>Mon, 09 Mar 2026 18:22:10 +0530</pubDate>
            <description><![CDATA[&lt;p&gt;ಅಪ್ರಾಪ್ತ ಬಾಲಕಿಯೊಂದಿಗಿನ ಅನುಚಿತ ವರ್ತನೆ ಹಾಗೂ ಪೋಕ್ಸೋ ಪ್ರಕರಣದ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸಿದೆ. ಸಾಕ್ಷ್ಯನಾಶ ಮಾಡುವ ಸಾಧ್ಯತೆಯಿದೆ ಎಂಬ ಸರ್ಕಾರಿ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjcnem5jp1k6b6dk2t8eqd0f,imgname-yadgir-mallikarjun-muthya-1772099162289.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಮಾ.09): ಕ&lt;/strong&gt;ಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ.&lt;/p&gt;&lt;h2&gt;&lt;strong&gt;ಜಾಮೀನು ಅರ್ಜಿ ತಿರಸ್ಕಾರ:&lt;/strong&gt;&lt;/h2&gt;&lt;p&gt;ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ, ಪರಾರಿ ಆಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಮುತ್ಯಾಗೆ ಶಾಕ್ ಆಗಿದೆ.&lt;/p&gt;&lt;h2&gt;&lt;strong&gt;ಸರ್ಕಾರಿ ವಕೀಲರ ಪ್ರಬಲ ವಾದ:&lt;/strong&gt;&lt;/h2&gt;&lt;p&gt;ವಿಚಾರಣೆ ವೇಳೆ ಸರ್ಕಾರಿ ವಕೀಲರು ಮುತ್ಯಾನಿಗೆ ಜಾಮೀನು ನೀಡದಂತೆ ಅತ್ಯಂತ ಪ್ರಬಲವಾದ ವಾದ ಮಂಡಿಸಿದರು. 'ಅಪ್ರಾಪ್ತ ಬಾಲಕಿಯೊಂದಿಗೆ ನಡೆಸಿರುವ ಅನುಚಿತ ವರ್ತನೆಯು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆರೋಪಿಯು ಪ್ರಭಾವಿಯಾಗಿದ್ದು, ಸಾಕ್ಷ್ಯನಾಶ ಮಾಡುವ ಅಥವಾ ಸಂತ್ರಸ್ತೆಯ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ' ಎಂದು ಸರ್ಕಾರಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದರು.&lt;/p&gt;&lt;h2&gt;&lt;strong&gt;ಏನಿದು ಪ್ರಕರಣ?:&lt;/strong&gt;&lt;/h2&gt;&lt;p&gt;ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ರಾಜ್ಯಾದ್ಯಂತ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ಈ ಮುತ್ಯಾನಿಂದ ಹಲವು ಬಾಲಕಿಯರ ಮೇಲೆ ದೈಹಿಕ ಕಿರುಕುಳ ನಡೆಯುವ ಸಾಧ್ಯತೆಯಿದ್ದು, ಕೂಡಲೇ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಸಂಘಟನೆಗಳು ಆಗ್ರಹಿಸಿದ್ದವು. ರಾಜ್ಯ ಮಹಿಳಾ ಆಯೋಗವು ಕೂಡ ಬಾಲಕಿಗೆ ಕಿರುಕುಳ ನೀಡಿದ ಮುತ್ಯಾನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿತ್ತು. ಇದರ ಬೆನ್ನಲ್ಲಿಯೇ ಜಿಲ್ಲಾ ಪೊಲೀಸರು ಮುತ್ಯಾನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್&zwnj;ಐಆರ್ ದಾಖಲಿಸಿದ್ದರು. ಭಕ್ತವಲಯದಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿಯ ಮೇಲೆ ಇಂತಹ ಗಂಭೀರ ಆರೋಪ ಬಂದಿರುವುದು ಜಿಲ್ಲಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು.&lt;/p&gt;&lt;p&gt;ಸದ್ಯ ಜಾಮೀನು ಅರ್ಜಿ ವಜಾಗೊಂಡಿರುವುದು ಮುತ್ಯಾನ ಬೆಂಬಲಿಗರಲ್ಲಿ ನಿರಾಸೆ ಮೂಡಿಸಿದೆ.&amp;nbsp;&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/yadgiri-mallikarjun-mutya-pocso-case-bail-rejected-court-update-sat/articleshow-49c7sgq"/>
        </item>
        <item>
            <title><![CDATA[ಯಾದಗಿರಿ: ರಸ್ತೆಬದಿ ನವಜಾತ ಗಂಡು ಶಿಶು ಶವಪತ್ತೆ: ತಡರಾತ್ರಿ ಎಸೆದು ಹೋಗಿರುವ ಶಂಕೆ]]></title>
            <link>https://kannada.asianetnews.com/state/dead-body-of-newborn-baby-found-on-the-roadside-in-gurumithakal-town-yadgir/articleshow-5nob1gm</link>
            <guid isPermaLink="true">https://kannada.asianetnews.com/state/dead-body-of-newborn-baby-found-on-the-roadside-in-gurumithakal-town-yadgir/articleshow-5nob1gm</guid>
            <pubDate>Fri, 27 Mar 2026 11:24:25 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದಲ್ಲಿ ರಸ್ತೆ ಬದಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಾಮಾಜಿಕ ಕಳಂಕಕ್ಕೆ ಅಂಜಿ ಮಗುವನ್ನು ಎಸೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmpxa3zbwy7jdhh2v1cewfhy,imgname-newborn-deadbody-found-in-roadside--2--1774590431210.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ರಸ್ತೆ ಬದಿ ನವಜಾತ ಶಿಶುವಿನ ಶವ ಪತ್ತೆ&lt;/strong&gt;&lt;/h2&gt;&lt;p&gt;ಯಾದಗಿರಿ: ಬೆಳ್ಳಂಬೆಳಗ್ಗೆ ರಸ್ತೆ ಬದಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆಯ ಗುರಮಿಠಲ್ ಪಟ್ಟಣದ ಉಪ್ಪರಗಡ್ಡಾ ಬಡಾವಣೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನವಜಾತ ಶಿಶು ಶವ ಕಂಡು ಆತಂಕಗೊಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಹುಟ್ಟಿದ ಕೂಡಲೇ ಮಗುವನ್ನು ತಂದು ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಅಪರಿಚಿತರು ಬೇರೆ ಎಲ್ಲಿಂದಲೂ ಬಂದು ತಡರಾತ್ರಿ ಮಗುವನ್ನು ಇಲ್ಲಿ ಬಿಸಾಕಿ ಹೋಗಿರುವ ಅನುಮಾನ ವ್ಯಕ್ತವಾಗಿದೆ.&lt;/p&gt;&lt;h3&gt;&lt;strong&gt;ರಾತ್ರಿ ತಿಪ್ಪೆಯಲ್ಲಿ ಎಸೆದು ಹೋಗಿರುವ ಶಂಕೆ&lt;/strong&gt;&lt;/h3&gt;&lt;p&gt;ರಾತ್ರಿ ತಿಪ್ಪೆಯಲ್ಲಿ ಒದ್ದಾಡಿ ಮಗು ಸಾವನಪ್ಪಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಇಂತಹ ಎರಡನೇ ಪ್ರಕರಣ ಇದಾಗಿದೆ. ಬಹುಶಃ ಅನೈತಿಕ ಸಂಬಂಧದ ಹಿನ್ನೆಲೆ ಮಗು ಜನಿಸಿರಬಹುದು. ಹೀಗಾಗಿ ಸಾಮಾಜಿಕ ಕಳಂಕಕ್ಕೆ ಅಂಜಿ ಮಗುವನ್ನು ಎಸೆದು ಹೋಗಿರುವ ಅನುಮಾನ ವ್ಯಕ್ತವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ 10 ರೂ ಇಳಿಸಿದ ಕೇಂದ್ರ ಸರ್ಕಾರ: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ನಿರಾಳ&lt;/strong&gt;&lt;/p&gt;&lt;p&gt;ಮೃತಪಟ್ಟ ಮಗು ಗಂಡು ಮಗುವಾಗಿದೆ. ಅನೈತಿಕ ಸಂಬಂಧ ಅಥವಾ ಅಪ್ರಾಪ್ತ ಬಾಲಕಿ ಗರ್ಭಧಾರಣೆಯಿಂದ ಕೃತ್ಯ ನಡೆದಿರಬಹುದು ಎನ್ನಲಾಗುತ್ತಿದೆ. ಹೀಗಾಗಿ ಗರ್ಭಪಾತ ಮಾಡಿ ಮಗುವನ್ನು ಎಸೆದು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆ ರವಾನಿಸಲಾಗಿದೆ.&lt;/p&gt;&lt;p&gt;ಒಟ್ಟಿನಲ್ಲಿ ಮಗು ಬೇಕು ಎಂದವರಿಗೆ ಎಷ್ಟು ಔಷಧಿ ಮಾಡಿದರೂ ಈ ಕಾಲದಲ್ಲಿ ಮಕ್ಕಳಾಗುತ್ತಿಲ್ಲ, ಆದರೆ ಮಗು ಬೇಡ ಎಂದವರಿಗೆ ಭಗವಂತ ಕರೆದು ಕರೆದು ಕೊಡುತ್ತಾನೆ. ಇತ್ತ ಹೀಗೆ ಸುಲಭವಾಗಿ ಮಕ್ಕಳಾಗುವವರು ಹೀಗೆ ಮಕ್ಕಳ ಮೌಲ್ಯ ತಿಳಿಯದೇ ಅನಾಚಾರ ಮಾಡ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ನಿರ್ಮಾಣವಾದರೂ ಉದ್ಘಾಟನೆಯಾಗದ ಲಿಫ್ಟ್ : ಫ್ಲಾಟ್ ಫಾರ್ಮಿಂದ ಹೊರಗೆ ಬರಲು ಪಡಬಾರದ ಕಷ್ಟಪಟ್ಟ ಕಾಲಿಲ್ಲದ ಯುವಕ&lt;/p&gt;]]></content:encoded>
            <category>yadgir</category>
            <dc:creator>Anusha Kb</dc:creator>
            <atom:link href="https://kannada.asianetnews.com/state/dead-body-of-newborn-baby-found-on-the-roadside-in-gurumithakal-town-yadgir/articleshow-5nob1gm"/>
        </item>
        <item>
            <title><![CDATA[ಮಗನ ಮಾನಗೇಡಿ ಕೆಲಸಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ: ಮನನೊಂದು ನದಿಗೆ ಹಾರಿದ ತಾಯಿ]]></title>
            <link>https://kannada.asianetnews.com/state/mother-jumps-into-river-after-sons-shameful-act-made-her-family-social-bycott/articleshow-72ykne7</link>
            <guid isPermaLink="true">https://kannada.asianetnews.com/state/mother-jumps-into-river-after-sons-shameful-act-made-her-family-social-bycott/articleshow-72ykne7</guid>
            <pubDate>Sun, 15 Mar 2026 23:21:23 +0530</pubDate>
            <description><![CDATA[&lt;p&gt;ಮಗ ಮಾಡಿದ ಅವಾಂತರಕ್ಕೆ ಇಲ್ಲಿ ತಾಯಿಯೊಬ್ಬರು ಪ್ರಾಣ ಬಿಟ್ಟಿದ್ದಾರೆ. ಮಗ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿ ಕಿರುಕುಳ ನೀಡಿದ್ದರಿಂದ ಆ ಯುವಕನ ತಾಯಿ ಮನನೊಂದು ನದಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kks9djy6k9kqekjywm41nxz5,imgname-yadagiri-suicide-1773596494790.jpg" type="image/jpeg" height="390" width="690"/>
            <content:encoded><![CDATA[&lt;p&gt;ಯಾದಗಿರಿ: ಗರ್ಭಿಣಿಯೊಬ್ಬಳ ಜೊತೆ ತಮ್ಮ ಪುತ್ರ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ, ಕುಟುಂಬವೊಂದಕ್ಕೆ ಅಲ್ಲಿನ ಸಮುದಾಯದ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ, ತೀವ್ರವಾಗಿ ನೊಂದ ಆ ಯುವಕನ ತಾಯಿಯೊಬ್ಬರು, ನದಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್&zwnj; ಕಂ ಬ್ಯಾರೇಜಿನಲ್ಲಿ ಶನಿವಾರ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.&lt;/p&gt;&lt;p&gt;ಯಾದಗಿರಿಯ ಗಿರಿನಗರದ ನಿವಾಸಿ 42 ವರ್ಷದ ಕಮಲಮ್ಮ ಸಾವಿಗೆ ಶರಣಾದ ಮಹಿಳೆ. ಈ ಮಹಿಳೆಯ ಪುತ್ರ ಎರ್ರಿಸ್ವಾಮಿ ಎಂಬಾತ ಅದೇ ಸಮುದಾಯದ ಗರ್ಭಿಣಿಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ, ಕಮಲಮ್ಮ ಕುಟುಂಬಸ್ಥರಿಗೆ ಕೆಲವು ತಿಂಗಳುಗಳ ಹಿಂದೆ ಶಿಳ್ಳೆಕ್ಯಾತ ಸಮುದಾಯದ ಮುಖಂಡರು 10 ವರ್ಷಗಳ ಕಾಲ ಸಾಮಾಜಿಕ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ.&lt;/p&gt;&lt;p&gt;ಇಲ್ಲಿಂದ ಮನೆ ಖಾಲಿ ಮಾಡಿಕೊಂಡು ಹೋಗಬೇಕು, ಯಾರ ಜೊತೆಯೂ ಮಾತನಾಡಕೂಡದು ಹಾಗೂ ಯಾರಾದರೂ ಮಾತನಾಡಿದರೆ ಅವರಿಗೂ ಕೂಡ 10 ವರ್ಷಗಳ ಸಾಮಾಜಿಕ ಬಹಿಷ್ಕಾರ ಹಾಕುವುದಾಗಿ ಎಚ್ಚರಿಸಿದ್ದರು ಎಂದು ದೂರಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಇತ್ತೀಚೆಗೆ ಸಮುದಾಯದ ಮುಖಂಡರು ಕಮಲಮ್ಮ ಹಾಗೂ ಕುಟುಂಬಕ್ಕೆ ಮತ್ತಷ್ಟೂ ಕಿರುಕುಳ ನೀಡುತ್ತಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆ: ಶಿವಮೊಗ್ಗದಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ&lt;/strong&gt;&lt;/p&gt;&lt;p&gt;ಮೀನುಗಾರಿಕೆ ಹಾಗೂ ಮೀನು ಮಾರಾಟ ಮಾಡಲೂ ಕೂಡ ಸಮುದಾಯದ ಮುಖಂಡರು ಅವಕಾಶ ಮಾಡಿಕೊಡದೇ ಇದ್ದಿದ್ದರಿಂದ ಸಂಕಷ್ಟಕ್ಕೀಡಾಗಿದ್ದ ಕಮಲಮ್ಮ ಈ ಘಟನೆಯಿಂದ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ. ಪುತ್ರನ ಅನೈತಿಕ ಸಂಬಂಧದ ಹಿನ್ನೆಲೆ, 50 ಸಾವಿರ ರು.ಗಳ ದಂಡ ಹಾಗೂ ಸಾಮಾಜಿಕ ಬಹಿಷ್ಕಾರದ ಹಾಕಿದ್ದರಿಂದ, ನಾವು ಬದುಕುವುದು ಹೇಗೆ ಎಂದು ನೊಂದಿದ್ದ ಕಮಲಮ್ಮ, ಸಂಬಂಧಿಕರ ಊರಾದ ಜೋಳದಡಗಿ ಗ್ರಾಮಕ್ಕೆ ಹೋಗಿದ್ದಾರೆ. ಅಲ್ಲಿ ಈ ಬಗ್ಗೆ ನೊಂದುಕೊಂಡು, ಸಮೀಪದ ಭೀಮಾ ನದಿಯ ಬ್ರಿಡ್ಜ್ ಕಂ ಬ್ಯಾರೇಜಿಗೆ ತೆರಳಿ, ಸೇತುವೆ ಮೇಲೆ ಮಾಂಗಲ್ಯ ಇಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.&lt;/p&gt;&lt;p&gt;ಮಾಹಿತಿ ಅರಿತ ವಡಗೇರಾ ಪೊಲೀಸರು, ಸ್ಥಳೀಯರ ಸಹಾಯದಿಂದ ನದಿಯಲ್ಲಿನ ಶವ ಹೊರ ತೆಗೆದಿದ್ದಾರೆ. ಬಳಿಕ ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಯಿಮ್ಸ್) ಆಸ್ಪತ್ರೆಯ ಶವಗಾರಕ್ಕೆ ಶವ ಸ್ಥಳಾಂತರಿಸಿ, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ, ವಡಗೇರಾ ಪೊಲೀಸ್ ಠಾಣೆಯಲ್ಲಿ ಬಿಎನ್&zwnj;ಎಸ್ 108 ಸೆಕ್ಷನ್&zwnj;ನಡಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ಇನ್ನೂ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸ್&zwnj; ಮೂಲಗಳು ತಿಳಿಸಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಕಾಫಿ ಕುಡಿಯುತ್ತಾ ತನ್ನ ಸಾವಿನ ವದಂತಿಗೆ ಪ್ರತಿಕ್ರಿಯಿಸಿದ ಇಸ್ರೇಲ್ ಪ್ರಧಾನಿ ನೇತನ್ಯಾಹು&amp;nbsp;&lt;/p&gt;&lt;p&gt;&lt;strong&gt;ವಿಶೇಷ ಮನವಿ:&lt;/strong&gt;&lt;/p&gt;&lt;p&gt;ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:&lt;/p&gt;&lt;p&gt;Sahai Helpline - 080 2549 7777&lt;/p&gt;]]></content:encoded>
            <category>yadgir</category>
            <dc:creator>Anusha Kb</dc:creator>
            <atom:link href="https://kannada.asianetnews.com/state/mother-jumps-into-river-after-sons-shameful-act-made-her-family-social-bycott/articleshow-72ykne7"/>
        </item>
        <item>
            <title><![CDATA[ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!]]></title>
            <link>https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd</link>
            <guid isPermaLink="true">https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd</guid>
            <pubDate>Fri, 17 Apr 2026 13:36:19 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ಸುರಪುರ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd7knr6ry08qs6jy7peng04,imgname-yadagiri-accident-1776413169412.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ/ರಾಯಚೂರು : &lt;/strong&gt;ನಿನ್ನೆ ಅಂದರೆ ಎಪ್ರಿಲ್ 16ರಂದು ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆಂದು ಹೊರಟ್ಟಿದ್ದ ಚಿಕ್ಕಮಗಳೂರು ಮತ್ತು ಹಾಸನದ 8 ಮಂದಿ ಕುಟುಂಬದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಕಹಿ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ದುರಂತ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು.&lt;/p&gt;&lt;h2&gt;ಬೆಳಗ್ಗೆ ನಡೆದ ಭೀಕರ ಅಪಘಾತ&lt;/h2&gt;&lt;p&gt;ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.&lt;/p&gt;&lt;h2&gt;ಒಂದೇ ಕುಟುಂಬದ 6 ಮಂದಿ ಸಜೀವ ದಹನ&lt;/h2&gt;&lt;p&gt;ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ.&lt;/p&gt;&lt;h2&gt;ಇಬ್ಬರಿಗೆ ಗಂಭೀರ ಗಾಯ&lt;/h2&gt;&lt;p&gt;ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ&lt;/p&gt;&lt;h2&gt;ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ&lt;/h2&gt;&lt;p&gt;ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್&zwnj;ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;h2&gt;ಭೀಕರ ದೃಶ್ಯ &ndash; ಕಾರು ಭಸ್ಮ&lt;/h2&gt;&lt;p&gt;ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು.&lt;/p&gt;&lt;h2&gt;ತನಿಖೆ ಆರಂಭ&lt;/h2&gt;&lt;p&gt;ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/yadagiri-bus-car-collision-raichuru-family-returning-from-temple-visit-burnt-alive-on-the-spot-gdp/articleshow-7k94qpd"/>
        </item>
        <item>
            <title><![CDATA[ಕಾಂಗ್ರೆಸ್‌ನಿಂದಲೇ ದಲಿತ ವಿರೋಧಿ ಚಟುವಟಿಕೆಗಳು: ಮಾಜಿ ಸಚಿವ ರಾಜುಗೌಡ ವಾಗ್ದಾಳಿ]]></title>
            <link>https://kannada.asianetnews.com/politics/bjp-defends-constitution-rajugouda-attack-congress-kembhavi-gvd/articleshow-dzhn9fz</link>
            <guid isPermaLink="true">https://kannada.asianetnews.com/politics/bjp-defends-constitution-rajugouda-attack-congress-kembhavi-gvd/articleshow-dzhn9fz</guid>
            <pubDate>Mon, 09 Mar 2026 23:02:40 +0530</pubDate>
            <description><![CDATA[&lt;p&gt;ಕೇವಲ ಓಟಿನ ಆಸೆಗಾಗಿ ಬಿಜೆಪಿಯನ್ನು ದಲಿತ ವಿರೋಧಿ ಪಕ್ಷ ಎಂದು ಬಿಂಬಿಸುತ್ತಿರುವ ಕಾಂಗ್ರೆಸ್&zwnj;ಗೆ ಈ ಬಗ್ಗೆ ಮಾತನಾಡಲು ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ನರಸಿಂಹನಾಯಕ (ರಾಜುಗೌಡ) ತೀವ್ರ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g5pxg38qcdphs3bcxd0857cf,imgname-rajugouda.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೆಂಭಾವಿ (ಮಾ.09):&lt;/strong&gt; ಭಾರತೀಯ ಜನತಾ ಪಕ್ಷ ಶಿಸ್ತಿನ, ತತ್ವ ಸಿದ್ಧಾಂತದ, ಸಂವಿಧಾನ ಬದ್ಧವಾದ ಪಕ್ಷ. ಡಾ. ಬಿ. ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ಬಿಜೆಪಿ ಪಕ್ಷ ಮಾಡುತ್ತಿದೆ. ಕೇವಲ ಓಟಿನ ಆಸೆಗಾಗಿ ಬಿಜೆಪಿಯನ್ನು ದಲಿತ ವಿರೋಧಿ ಪಕ್ಷ ಎಂದು ಬಿಂಬಿಸುತ್ತಿರುವ ಕಾಂಗ್ರೆಸ್&zwnj;ಗೆ ಈ ಬಗ್ಗೆ ಮಾತನಾಡಲು ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ನರಸಿಂಹನಾಯಕ (ರಾಜುಗೌಡ) ತೀವ್ರ ವಾಗ್ದಾಳಿ ನಡೆಸಿದರು.&lt;/p&gt;&lt;p&gt;ನಗನೂರ ಗ್ರಾಮದ ಬಿಜೆಪಿ ಪಕ್ಷದ ಹಿರಿಯ ಮುಖಂಡ ರಾಜಶೇಖರ ಗೂಗಲ್ ಅವರು ನೂತನವಾಗಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮೀಸಲಾತಿಯಲ್ಲಿ ಶೇ.7ರಷ್ಟು ಹೆಚ್ಚಿಗೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಮಾನತೆಯ ನ್ಯಾಯ ಒದಗಿಸಿದೆ. ಊಟದ ತಟ್ಟೆಯಲ್ಲಿ ಮಣ್ಣು ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದ್ದು, ವಿನಾಕಾರಣ ಮೀಸಲಾತಿ ವಿಷಯದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮೊದಲು ತಮ್ಮಲ್ಲಿರುವ ಗೊಂದಲಗಳನ್ನು ನಿವಾರಿಸಿಕೊಳ್ಳಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.&lt;/p&gt;&lt;p&gt;ದೇಶ ಕಾಯುವ ಸೈನಿಕರಂತೆ ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು ಪಕ್ಷ ಕಟ್ಟುವ ಕೆಲಸ ಮಾಡಬೇಕು. ವಿಜಯೇಂದ್ರ ಅವರ ಅದ್ಯಕ್ಷತೆಯಲ್ಲಿ ನಮ್ಮ ಪಕ್ಷ ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ರಾಜ್ಯ ಸರ್ಕಾರವನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದೆ. ಪಕ್ಷ ಮತ್ತಷ್ಟು ಸದೃಢವಾಗಬೇಕಿದ್ದರೆ ಮತ್ತು ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದ್ದರೆ ಕಾರ್ಯಕರ್ತರು ಹಗಲಿರುಳು ಪಕ್ಷಕ್ಕಾಗಿ ದುಡಿಯಬೇಕು ಎಂದು ಕರೆ ನೀಡಿದರು.&lt;/p&gt;&lt;h2&gt;&lt;strong&gt;ನೀರೊದಗಿಸುವ ಬಹುದೊಡ್ಡ ಕೆಲಸ&lt;/strong&gt;&lt;/h2&gt;&lt;p&gt;ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ಮಾತನಾಡಿ, ಬಿಜೆಪಿ ಪಕ್ಷಕ್ಕೆ ತನ್ನದೆ ಆದ ಮಹತ್ವದ ತತ್ವ ಸಿದ್ಧಾಂತದ ತಳಹದಿ ಇದ್ದು, ಅದರ ಮೇಲೆ ನಾವೆಲ್ಲ ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಸುರಪುರ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಜ್ವಲಂತ ಸಮಸ್ಯೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ರಾಜುಗೌಡರು ನಿವಾರಿಸಿ ಅಲ್ಲಿನ ಜನತೆಗೆ ದಿನದ 24 ಗಂಟೆ ನೀರೊದಗಿಸುವ ಬಹುದೊಡ್ಡ ಕೆಲಸ ಮಾಡಿದ್ದಾರೆ ಆದರೆ ಅನುಕಂಪ ಅವರ ಸೋಲಿಗೆ ಮುಖ್ಯಕಾರಣವಾಗಿದ್ದು, ಈ ಬಾರಿ ಅವರನ್ನು ಗೆಲ್ಲಿಸಲು ಎಲ್ಲ ಕಾರ್ಯಕರ್ತರು ಪಣ ತೊಡಬೇಕೆಂದು ಕರೆ ನೀಡಿದರು.&lt;/p&gt;&lt;p&gt;ಸನ್ಮಾನ ಸ್ವೀಕರಿಸಿದ ಮಾತನಾಡಿದ ಬಿಜೆಪಿ ಪಕ್ಷದ ನೂತನ ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ರಾಜಶೇಖರ ಗೂಗಲ್&zwnj;, ಗ್ರಾಮೀಣ ಪ್ರದೇಶದ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಬಹುದೊಡ್ಡ ಹುದ್ದೆ ನೀಡಿದೆ. ಈ ಕಾರ್ಯಕ್ಕೆ ಮಾಜಿ ಸಚಿವ ರಾಜುಗೌಡರೇ ಮುಖ್ಯ ಕಾರಣರಾಗಿದ್ದು, ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಇನ್ನಷ್ಟೂ ಬಲಪಡಿಸುವ ಕೆಲಸ ಮಾಡುವುದಾಗಿ ಹೇಳಿದರು.&lt;/p&gt;&lt;p&gt;ದಾಸೋಹ ಮಠದ ಶ್ರೀ ಶರಣಪ್ಪ ಶರಣರು ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು, ಡಾ. ಚಂದ್ರಶೇಖರ ಸುಬೇದಾರ, ಶಿವರಾಜ ದೇಶಮುಖ, ಮಲ್ಲನಗೌಡ ಏವೂರ, ಚಂದ್ರು ಯಾಳಗಿ, ಅಡಿವೆಪ್ಪ ಜಾಕಾ, ದೇವೇಂದ್ರಪ್ಪ ಕೊನೇರ, ಶಂಕರ ನಾಯಕ, ಸಣ್ಣದೇಸಾಯಿ ದೇರಗೋನಾಲ, ಪರಶುರಾಮ ಕುರಕುಂದಿ, ಭೀಮಣ್ಣ ಬೇವಿನಹಳ್ಳಿ, ಶಾಂತಣ್ಣ ಚನ್ನೂರ, ಮಲ್ಲಿಕಾರ್ಜುನ ಶಾಕಾ, ಮಾಣಿಕರೆಡ್ಡಿ ದೇಶಪಾಂಡೆ ಇದ್ದರು. ಮೌನೇಶ ಹಯ್ಯಾಳಕರ್ ನಿರೂಪಣೆ ಮಾಡಿದರು, ಸಂಗಣ್ಣ ವಣಕ್ಯಾಳ ಸ್ವಾಗತಿಸಿ, ಮಲ್ಲಣ್ಣ ದೇಸಾಯಿ ವಂದಿಸಿದರು.&lt;/p&gt;]]></content:encoded>
            <category>yadgir</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/bjp-defends-constitution-rajugouda-attack-congress-kembhavi-gvd/articleshow-dzhn9fz"/>
        </item>
        <item>
            <title><![CDATA[ಲೋಕಾಯುಕ್ತ ಬಲೆಗೆ ಬಿತ್ತು ಮತ್ತೊಂದು ಖಾಕಿ: ಆ್ಯಕ್ಸಿಡೆಂಟ್ ವಾಹನ ಬಿಡುಗಡೆಗೆ ಲಂಚ ಕೇಳಿ ಸಿಕ್ಕಿಬಿದ್ದ ನಾಗೇಶ್!]]></title>
            <link>https://kannada.asianetnews.com/karnataka-districts/yadgiri-traffic-police-head-constable-nagesh-arrested-by-lokayukta-for-bribe-sat/articleshow-euygav6</link>
            <guid isPermaLink="true">https://kannada.asianetnews.com/karnataka-districts/yadgiri-traffic-police-head-constable-nagesh-arrested-by-lokayukta-for-bribe-sat/articleshow-euygav6</guid>
            <pubDate>Thu, 23 Apr 2026 17:00:07 +0530</pubDate>
            <description><![CDATA[&lt;p&gt;ಯಾದಗಿರಿಯಲ್ಲಿ ಅಪಘಾತಕ್ಕೀಡಾದ ವಾಹನವನ್ನು ಬಿಡುಗಡೆ ಮಾಡಲು 13,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಟ್ರಾಫಿಕ್ ಹೆಡ್ ಕಾನ್&zwnj;ಸ್ಟೆಬಲ್ ನಾಗೇಶ್, ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ. ಡಿವೈಎಸ್&zwnj;ಪಿ ಇನಾಂದಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpx0m4hz2k0zpje3hkq6qhrj,imgname-karnataka-police-arrested-by-lokayukta-1776942715455.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಏ.23): ಲಂ&lt;/strong&gt;ಚಬಾಕ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸುವುದನ್ನು ಮುಂದುವರಿಸಿದ್ದಾರೆ. ಇದೀಗ ಯಾದಗಿರಿಯಲ್ಲಿ ಕರ್ತವ್ಯದ ಹೆಸರಿನಲ್ಲಿ ಜನರಿಂದ ಹಣ ಸುಲಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್ ಕಾನ್&zwnj;ಸ್ಟೆಬಲ್ ಒಬ್ಬರು ಹಣ ಪಡೆಯುವಾಗ ರೆಡ್&zwnj; ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಯಾದಗಿರಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್&zwnj;ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪೇದೆ. ಘಟನೆಯ ಹಿನ್ನೆಲೆ ಹೀಗಿದೆ: ಅಣಯ್ಯ ರಾಠೋಡ್ ಎಂಬುವವರ ವಾಹನವು ಈ ಹಿಂದೆ ಅಪಘಾತಕ್ಕೀಡಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವಾಹನವನ್ನು ಕಾನೂನುಬದ್ಧವಾಗಿ ಬಿಡುಗಡೆ ಮಾಡಿಕೊಡಲು ಅಣಯ್ಯ ಅವರು ಠಾಣೆಗೆ ಅಲೆದಾಡುತ್ತಿದ್ದರು.&lt;/p&gt;&lt;h2&gt;&lt;strong&gt;13 ಸಾವಿರಕ್ಕೆ ಬೇಡಿಕೆ:&lt;/strong&gt;&lt;/h2&gt;&lt;p&gt;ವಾಹನ ಬಿಡುಗಡೆ ಮಾಡಲು ಸಹಾಯ ಮಾಡುವಂತೆ ಅಣಯ್ಯ ಅವರು ಹೆಡ್ ಕಾನ್&zwnj;ಸ್ಟೆಬಲ್ ನಾಗೇಶ್ ಅವರನ್ನು ಸಂಪರ್ಕಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ನಾಗೇಶ್ 13,000 ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಕಷ್ಟದಲ್ಲಿದ್ದ ಅಣಯ್ಯ ಅವರಿಗೆ ಲಂಚ ನೀಡಲು ಇಷ್ಟವಿರಲಿಲ್ಲ. ಭ್ರಷ್ಟ ವ್ಯವಸ್ಥೆಗೆ ಪಾಠ ಕಲಿಸಲು ನಿರ್ಧರಿಸಿದ ಅಣಯ್ಯ, ಕೂಡಲೇ ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದರು.&lt;/p&gt;&lt;h3&gt;&lt;strong&gt;ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೇದೆ:&lt;/strong&gt;&lt;/h3&gt;&lt;p&gt;ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಸ್ಕೆಚ್ ಹಾಕಿದರು. ಅದರಂತೆ ಇಂದು ಯಾದಗಿರಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲೇ ಅಣಯ್ಯ ಅವರಿಂದ ನಾಗೇಶ್ 13,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಅಧಿಕಾರಿಗಳು ನಾಗೇಶ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಲಂಚದ ಹಣದೊಂದಿಗೆ ನಾಗೇಶ್ ಸಿಕ್ಕಿಬಿದ್ದಿರುವುದರಿಂದ ಇಡೀ ಪೊಲೀಸ್ ಇಲಾಖೆಗೆ ಮುಜುಗರವುಂಟಾಗಿದೆ.&lt;/p&gt;&lt;h3&gt;&lt;strong&gt;ಕಾರ್ಯಾಚರಣೆ ತಂಡ:&lt;/strong&gt;&lt;/h3&gt;&lt;p&gt;ಈ ಯಶಸ್ವಿ ಕಾರ್ಯಾಚರಣೆಯು ಲೋಕಾಯುಕ್ತ ಡಿವೈಎಸ್&zwnj;ಪಿ ಇನಾಂದಾರ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಇನ್ಸ್&zwnj;ಪೆಕ್ಟರ್ ಸಿದ್ದರಾಯ ಬಳ್ಳೋರ್ಗಿ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಸದ್ಯ ಲೋಕಾಯುಕ್ತ ಪೊಲೀಸರು ನಾಗೇಶ್ ಅವರನ್ನು ವಶಕ್ಕೆ ಪಡೆದಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಹೆಚ್ಚಿದ ಲೋಕಾಯುಕ್ತ ಕಾರ್ಯಾಚರಣೆ:&lt;/strong&gt;&lt;/h2&gt;&lt;p&gt;ಯಾದಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದೆ. ಪೊಲೀಸ್ ಇಲಾಖೆಯಲ್ಲೇ ಇರುವ ಇಂತಹ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತುತ್ತಿರುವುದು ಬದಲಾವಣೆಯ ಮುನ್ಸೂಚನೆಯಾಗಿದೆ. ವಾಹನ ಬಿಡುಗಡೆಗೆ ಲಂಚ ಕೇಳಿ ಈಗ ಜೈಲು ಹಾದಿ ಹಿಡಿದಿರುವ ನಾಗೇಶ್ ಪ್ರಕರಣವು ಇತರೆ ಭ್ರಷ್ಟ ಸಿಬ್ಬಂದಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/yadgiri-traffic-police-head-constable-nagesh-arrested-by-lokayukta-for-bribe-sat/articleshow-euygav6"/>
        </item>
        <item>
            <title><![CDATA[ಮಲ್ಲಿಕಾರ್ಜುನ ಮುತ್ಯಾ ಕೇಸ್ ರದ್ದು ಮಾಡದಿದ್ದರೆ ಯಾದಗಿರಿ ಬಂದ್; ಜಿಲ್ಲಾಡಳಿತಕ್ಕೆ 2 ದಿನಗಳ ಗಡುವು ಕೊಟ್ಟ ಭಕ್ತರು]]></title>
            <link>https://kannada.asianetnews.com/karnataka-districts/mallikarjuna-mutya-pocso-case-devotees-gave-yadgir-bandh-warning-and-protest-to-dc-2-day-deadline-sat/articleshow-f3nozh5</link>
            <guid isPermaLink="true">https://kannada.asianetnews.com/karnataka-districts/mallikarjuna-mutya-pocso-case-devotees-gave-yadgir-bandh-warning-and-protest-to-dc-2-day-deadline-sat/articleshow-f3nozh5</guid>
            <pubDate>Fri, 27 Feb 2026 13:40:45 +0530</pubDate>
            <description><![CDATA[ಪೋಕ್ಸೋ ಪ್ರಕರಣ ಎದುರಿಸುತ್ತಿರುವ ವಿವಾದಿತ ಮಲ್ಲಿಕಾರ್ಜುನ ಮುತ್ಯಾ ಪರವಾಗಿ ನಿಂತಿರುವ ಅವರ ಭಕ್ತರು, ಇದು ಕಪೋಲಕಲ್ಪಿತ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. ಎರಡು ದಿನಗಳಲ್ಲಿ ಪ್ರಕರಣವನ್ನು ರದ್ದುಗೊಳಿಸದಿದ್ದರೆ 'ಯಾದಗಿರಿ ಬಂದ್' ನಡೆಸುವುದಾಗಿ ಜಿಲ್ಲಾಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kjf2bbdntnhtdnjyd6q1fnjh,imgname-mallikarjuna-mutya-1772179795380.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಫೆ.27): ಅ&lt;/strong&gt;ಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೋಕ್ಸೋ (POCSO) ಪ್ರಕರಣ ಎದುರಿಸುತ್ತಿರುವ ವಿವಾದಿತ 'ಪವಾಡ ಪುರುಷ' ಮಲ್ಲಿಕಾರ್ಜುನ ಮುತ್ಯಾ ಪರವಾಗಿ ಈಗ ಅವರ ಭಕ್ತ ಸಾಗರ ದನಿಯೆತ್ತಿದೆ. ಮುತ್ಯಾ ವಿರುದ್ಧ ದಾಖಲಾಗಿರುವ ಪ್ರಕರಣವು ಕಪೋಲಕಲ್ಪಿತ ಮತ್ತು ಷಡ್ಯಂತ್ರ ಎಂದು ಆರೋಪಿಸಿರುವ ಭಕ್ತರು, ಎರಡು ದಿನದೊಳಗೆ ಕೇಸ್ ರದ್ದುಗೊಳಿಸದಿದ್ದರೆ 'ಯಾದಗಿರಿ ಬಂದ್' ಮಾಡುವುದಾಗಿ ಜಿಲ್ಲಾಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಶ್ರೀಮಠದಲ್ಲಿ ಭಕ್ತರ ಬೃಹತ್ ಸಭೆ:&lt;/strong&gt;&lt;/h2&gt;&lt;p&gt;ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ಅವರ ಶ್ರೀಮಠದಲ್ಲಿ ಇಂದು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಭಕ್ತರು ತುರ್ತು ಸಭೆ ನಡೆಸಿದರು. ಈ ವೇಳೆ ಮುತ್ಯಾ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ ಭಕ್ತರು, ಪ್ರಕರಣದ ಹಾದಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ನಂತರ ಮಾತನಾಡಿದ ಭಕ್ತರು, &lsquo;ನಮ್ಮ ಅಪ್ಪಾಜಿಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ಅವರ ಹೆಸರನ್ನು ಹಾಳು ಮಾಡಲು ವಿಡಿಯೋವನ್ನು ತಿರುಚಲಾಗಿದೆ&rsquo; ಎಂದು ಆಕ್ರೋಶ ಹೊರಹಾಕಿದರು.&lt;/p&gt;&lt;h2&gt;&lt;strong&gt;ಮಕ್ಕಳ ಆಯೋಗ ಮತ್ತು ಅಧಿಕಾರಿಗಳ ವಿರುದ್ಧ ಕಿಡಿ:&lt;/strong&gt;&lt;/h2&gt;&lt;p&gt;ಸಭೆಯಲ್ಲಿ ಪಾಲ್ಗೊಂಡಿದ್ದ ಶ್ರೀಮಠದ ಭಕ್ತೆ ಲಲಿತಾ ಅನಪೂರ ಅವರು ಮಾತನಾಡಿ, 'ಮುತ್ಯಾ ಅವರ ವಿಡಿಯೋವನ್ನು ಎಡಿಟ್ ಮಾಡಿ ತಿರುಚಲಾಗಿದೆ. ಮಗು ವಿಡಿಯೋದಲ್ಲಿ ನಗುತ್ತಿರುವುದು ಕಾಣುತ್ತಿದೆ. ಬಾಲಕಿಯ ತಂದೆ-ತಾಯಿಯೇ ಮಠಕ್ಕೆ ಬಂದು ಇದು ಆಶೀರ್ವಾದದ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದಾರೆ. ಹೀಗಿದ್ದರೂ ಮಕ್ಕಳ ಆಯೋಗದವರು ತರಾತುರಿಯಲ್ಲಿ ಕೇಸ್ ದಾಖಲಿಸಿರುವುದು ಸರಿಯಲ್ಲ. ಈ ಪ್ರಕರಣವನ್ನು ನಿಭಾಯಿಸುವಲ್ಲಿ ಯಾದಗಿರಿ ಎಸ್ಪಿ ಮತ್ತು ಡಿಸಿ ಅವರು ಸಂಪೂರ್ಣವಾಗಿ ಎಡವಿದ್ದಾರೆ' ಎಂದು ದೂರಿದರು. ಅಲ್ಲದೆ, 'ಬಾಲಕಿಯ ಮುಖ ತೋರಿಸಿ ವಿಡಿಯೋ ಬಹಿರಂಗಪಡಿಸಿದ ಮಕ್ಕಳ ಆಯೋಗದ ಸದಸ್ಯರೇ ಈ ಪ್ರಕರಣದಲ್ಲಿ ಮೊದಲ ಆರೋಪಿಗಳಾಗಬೇಕು. ಅವರು ಮಗುವಿನ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ' ಎಂದು ಗಂಭೀರ ಆರೋಪ ಮಾಡಿದರು.&lt;/p&gt;&lt;h2&gt;&lt;strong&gt;ಜಿಲ್ಲಾಡಳಿತಕ್ಕೆ 2 ದಿನಗಳ ಅಂತಿಮ ಗಡುವು:&lt;/strong&gt;&lt;/h2&gt;&lt;p&gt;ಮತ್ತೋರ್ವ ಭಕ್ತ ಮಹಾದೇವಪ್ಪ ಮಾತನಾಡಿ, 'ಮುತ್ಯಾ ಅವರ ಏಳಿಗೆಯನ್ನು ಸಹಿಸದವರು ಮಕ್ಕಳ ಆಯೋಗದ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ. ತೆಲಂಗಾಣ ಮತ್ತು ಆಂಧ್ರಪ್ರದೇಶದಿಂದಲೂ ಅಪಾರ ಭಕ್ತರು ಈ ಮಠಕ್ಕೆ ಬರುತ್ತಾರೆ. ಭಕ್ತರು ದಂಗೆ ಏಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಎರಡು ದಿನದೊಳಗೆ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ನಾವು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಮತ್ತು ಇಡೀ ಜಿಲ್ಲೆಯನ್ನು ಬಂದ್ ಮಾಡುತ್ತೇವೆ' ಎಂದು ಎಚ್ಚರಿಸಿದ್ದಾರೆ.&lt;/p&gt;&lt;h2&gt;&lt;strong&gt;ಪ್ರಕರಣಕ್ಕೆ ಹೊಸ ತಿರುವು:&lt;/strong&gt;&lt;/h2&gt;&lt;p&gt;ಇತ್ತೀಚೆಗಷ್ಟೇ ಸಂತ್ರಸ್ತ ಬಾಲಕಿಯ ಪೋಷಕರು ಸೊಲ್ಲಾಪುರದಿಂದ ವಿಡಿಯೋ ಬಿಡುಗಡೆ ಮಾಡಿ, ಮುತ್ಯಾ ಅವರು ನಮ್ಮ ಮಗಳಿಗೆ ಆಶೀರ್ವಾದ ಮಾಡುತ್ತಿದ್ದರು, ಅಶ್ಲೀಲವಾಗಿ ವರ್ತಿಸಿಲ್ಲ ಎಂದು ಹೇಳಿಕೆ ನೀಡಿದ್ದರು. ಪೋಷಕರ ಈ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡಿರುವ ಭಕ್ತರು ಈಗ ಕಾನೂನು ಹೋರಾಟದ ಜೊತೆಗೆ ಬೀದಿ ಹೋರಾಟಕ್ಕೂ ಸಜ್ಜಾಗಿದ್ದಾರೆ. ಸದ್ಯ ಮುತ್ಯಾ ಪರವಾಗಿ ಭಕ್ತರು ಒಗ್ಗಟ್ಟಾಗುತ್ತಿರುವುದು ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಿಸಿದೆ.&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mallikarjuna-mutya-pocso-case-devotees-gave-yadgir-bandh-warning-and-protest-to-dc-2-day-deadline-sat/articleshow-f3nozh5"/>
        </item>
        <item>
            <title><![CDATA[ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ: ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!]]></title>
            <link>https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu</link>
            <guid isPermaLink="true">https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu</guid>
            <pubDate>Thu, 05 Mar 2026 09:50:36 +0530</pubDate>
            <description><![CDATA[&lt;p&gt;ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಿರಿಯ ಇಂಜಿನಿಯರ್&zwnj;ಗಳು ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjy381nnqke8cyy0q71zy4e9,imgname-karnataka-lokayukta-raid-1772684052148.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮಾ.05): ರಾ&lt;/strong&gt;ಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್&zwnj;ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಜಾಲಾಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ಹಾಸನದಲ್ಲಿ ಜೀಪ್ ಏರಿ ಒಳಹೋದ ಅಧಿಕಾರಿಗಳು!&lt;/strong&gt;&lt;/h2&gt;&lt;p&gt;ಇಂದಿನ ದಾಳಿಯ ಅತ್ಯಂತ ರೋಚಕ ಘಟನೆ ನಡೆದದ್ದು ಹಾಸನದಲ್ಲಿ. ಹಾಸನ ಮಹಾನಗರ ಪಾಲಿಕೆಯ ಎಎಇ (AEE) ಸತ್ಯನಾರಾಯಣ ಅವರ ರವೀಂದ್ರ ನಗರದ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್&zwnj;ಪಿ ಸುರೇಶ್ ನೇತೃತ್ವದ ತಂಡ ದಾಳಿ ಮಾಡಿದಾಗ, ಅಧಿಕಾರಿ ಬಾಗಿಲು ತೆಗೆಯಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ಚಾಣಾಕ್ಷತನ ಮೆರೆದರು. ಠಾಣೆಯ ಜೀಪ್ ಅನ್ನು ಮನೆಯ ಗೋಡೆಗೆ ಅಂಟಿಸಿ ನಿಲ್ಲಿಸಿ, ಅದರ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿ ಸತ್ಯನಾರಾಯಣ ಅವರಿಗೆ ಶಾಕ್ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ವಿಜಯಪುರದಲ್ಲಿ ಶಾಲೆಯ ಮೇಲೂ ದಾಳಿ!&lt;/strong&gt;&lt;/h2&gt;&lt;p&gt;ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆ.ಬಿ.ಜೆ.ಎನ್.ಎಲ್ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ (ಗೊಡಬಂಡಿ) ಅವರ ಮೇಲೆ ನಡೆದ ದಾಳಿ ಕೂಡ ಗಮನಾರ್ಹವಾಗಿದೆ. ಪ್ರಕಾಶ್ ಅವರ ಇಂಡಿ ಕಚೇರಿ, ನಿವಾಸದ ಜೊತೆಗೆ ಬೆಂಗಳೂರಿನ ಮಹದೇವಪುರದಲ್ಲಿರುವ ಮನೆ ಹಾಗೂ ಬೀದರ್&zwnj;ನ ಹುಮನಾಬಾದ್&zwnj;ನಲ್ಲಿರುವ ಮನೆಯ ಮೇಲೆಯೂ ದಾಳಿ ನಡೆದಿದೆ. ವಿಶೇಷವೆಂದರೆ, ಇವರ ಪತ್ನಿಯ ಹೆಸರಿನಲ್ಲಿರುವ ಶಾಲೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ಚೀಫ್ ಇಂಜಿನಿಯರ್ ಬೆವರಿಳಿಸಿದ ಲೋಕಾ&lt;/strong&gt;&lt;/h2&gt;&lt;p&gt;ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (KRDCL) ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ್ ಅವರ ಮೇಲೆ ಬೆಂಗಳೂರು, ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಇವರ ಸಹೋದರ ಭೀಮಸಿಂಗ್ ನಾಯಕ್ ಬಾಗಲಕೋಟೆಯಲ್ಲಿ ಎಎಸ್&zwnj;ಐ (ASI) ಆಗಿ ಕೆಲಸ ಮಾಡುತ್ತಿದ್ದು, ಅವರ ಮನೆಯ ಮೇಲೆಯೂ ದಾಳಿ ಮಾಡಲಾಗಿದೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿರುವ ವಸಂತ ನಾಯಕ್ ಅವರ ಮನೆಯಲ್ಲಿ ಬೆಲೆಬಾಳುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ರಾಜ್ಯದ ವಿವಿಧೆಡೆ ದಾಳಿಗೆ ಒಳಗಾದ ಅಧಿಕಾರಿಗಳ ಪಟ್ಟಿ:&lt;/strong&gt;&lt;/h2&gt;&lt;p&gt;&lt;strong&gt;ಯಾದಗಿರಿ: &lt;/strong&gt;ವೀರೇಶ್ ಹಿರೇಮಠ (ಜೆಸ್ಕಾಂ ಉಪ ವಿದ್ಯುತ್ ಪರಿವೀಕ್ಷಕ) - ಯಾದಗಿರಿ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ.&lt;/p&gt;&lt;p&gt;&lt;strong&gt;ಮಂಡ್ಯ: &lt;/strong&gt;ಎಸ್. ಸತೀಶ್ (ಎಎಇ, ಪಿಡಬ್ಲ್ಯೂಡಿ) - ಬಂದಿಗೌಡ ಬಡಾವಣೆಯ ಮನೆ ಸೇರಿದಂತೆ 4 ಕಡೆ ದಾಳಿ.&lt;/p&gt;&lt;p&gt;&lt;strong&gt;ಗದಗ: &lt;/strong&gt;ಎಂ.ಕೆ. ಸುರಕೋಡ್ (ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ) - ಗದಗ ನಗರದ ವಿಶ್ವೇಶ್ವರ ಬಡಾವಣೆ ಸೇರಿ 6 ಕಡೆ ರೇಡ್.&lt;/p&gt;&lt;p&gt;&lt;strong&gt;ಮೈಸೂರು: &lt;/strong&gt;ಆಸಿಫ್ ಇಕ್ಬಾಲ್ ಹುಸೇನ್ (ಎಎಇ, ನಗರ ನೀರು ಸರಬರಾಜು ಮಂಡಳಿ) - ಶಿವಾಜಿ ರಸ್ತೆ ನಿವಾಸ ಮತ್ತು ಸರಸ್ವತಿಪುರಂ ಕಚೇರಿ ಮೇಲೆ ದಾಳಿ.&lt;/p&gt;&lt;p&gt;&lt;strong&gt;ಬೆಂಗಳೂರು: &lt;/strong&gt;ಆರ್. ಶಶಿಧರ್ (ಸಿಇಒ, ರೈತ ಸೇವಾ ಸಹಕಾರ ಸಂಘ, ಯಲಹಂಕ) ಮತ್ತು ಹೆಚ್.ಸಿ. ಇಂದ್ರೇಶ್ (ಸಹಾಯಕ ಪ್ರಾಧ್ಯಾಪಕ, ಪಶುವೈದ್ಯಕೀಯ ಕಾಲೇಜು, ಹೆಬ್ಬಾಳ).&lt;/p&gt;]]></content:encoded>
            <category>yadgir</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu"/>
        </item>
        <item>
            <title><![CDATA[ನೋಂದಾಯಿಸಿದ್ದ ಯಾದಗಿರಿಯ 3000 ಗರ್ಭಿಣಿಯರು ಪತ್ತೆಯೇ ಇಲ್ಲ; ಆರೋಗ್ಯ ಇಲಾಖೆಯೇ ಶಾಕ್]]></title>
            <link>https://kannada.asianetnews.com/karnataka-districts/3000-registered-pregnant-women-missing-in-yadagiri-district-health-department-shocked-mrq/articleshow-gpltxor</link>
            <guid isPermaLink="true">https://kannada.asianetnews.com/karnataka-districts/3000-registered-pregnant-women-missing-in-yadagiri-district-health-department-shocked-mrq/articleshow-gpltxor</guid>
            <pubDate>Tue, 28 Apr 2026 08:51:28 +0530</pubDate>
            <description><![CDATA[&lt;p&gt;ಯಾದಗಿರಿ ಜಿಲ್ಲೆಯಲ್ಲಿ ನೋಂದಣಿಯಾದ 30,000ಕ್ಕೂ ಹೆಚ್ಚು ಗರ್ಭಿಣಿಯರಲ್ಲಿ 3,000ಕ್ಕೂ ಅಧಿಕ ಮಂದಿಯ ಹೆರಿಗೆಯ ಮಾಹಿತಿ ಲಭ್ಯವಿಲ್ಲದಿರುವುದು ಸಾವಿರಾರು ಭ್ರೂಣಹತ್ಯೆಗಳ ಅನುಮಾನಕ್ಕೆ ಕಾರಣವಾಗಿದೆ. ಕನ್ನಡಪ್ರಭ ವರದಿಯ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯಮಟ್ಟದ ಸಮಿತಿ ರಚಿಸಿ ತನಿಖೆ ನಡೆಸುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq91npebkakk5kbr4rvgnq3m,imgname-pregnant-1777346468299.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಆನಂದ್&zwnj; ಎಂ. ಸೌದಿ&lt;/strong&gt;&lt;/p&gt;&lt;p&gt;&lt;strong&gt;ಯಾದಗಿರಿ:&lt;/strong&gt; ಭ್ರೂಣಹತ್ಯೆಗಳ ಮಾಹಿತಿ ಯಾದಗಿರಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವಂತಿದ್ದು, ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000ಕ್ಕೂ ಹೆಚ್ಚು ಮಂದಿಗೆ ಹೆರಿಗೆಯಾದ ಬಗ್ಗೆ ಮಾಹಿತಿಯೇ ಸಿಗುತ್ತಿಲ್ಲ. ಕಳೆದ 1 ವರ್ಷದಲ್ಲಿ (2024-25) ಸದ್ದಿಲ್ಲದೆ ಸಾವಿರಕ್ಕೂ ಹೆಚ್ಚು ಭ್ರೂಣಹತ್ಯೆಗಳು ನಡೆದಿದ್ದು, ಆರೋಗ್ಯ ಇಲಾಖೆಗೇ ಆಘಾತ ಮೂಡಿಸಿದೆ.&lt;/p&gt;&lt;p&gt;ಈ ಹಿಂದೆ ಮಾ.18ರಂದು &lsquo;ಯಾದಗಿರಿ ಜಿಲ್ಲೆಯಲ್ಲಿ 7 ತಿಂಗಳಲ್ಲಿ 30 ಹೆಣ್ಣು ಭ್ರೂಣಹತ್ಯೆ&rsquo; ಶೀರ್ಷಿಕೆಯಡಿ ಕನ್ನಡಪ್ರಭದಲ್ಲಿ ಪ್ರಕಟಗೊಂಡ ವಿಶೇಷ ವರದಿ ಸಂಚಲನ ಮೂಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆರೋಗ್ಯ ಇಲಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ತನಿಖೆಗೆ ಆದೇಶಿಸಿದ್ದರು. ಐವರು ವೈದ್ಯಾಧಿಕಾರಿಗಳನ್ನೊಳಗೊಂಡ ರಾಜ್ಯಮಟ್ಟದ ಸಮಿತಿಯೊಂದನ್ನು ರಚಿಸಿ ಯಾದಗಿರಿಯಷ್ಟೇ ಅಲ್ಲ, ಈ ಬಗ್ಗೆ ರಾಜ್ಯವ್ಯಾಪಿ ಎಲ್ಲ ಜಿಲ್ಲೆಗಳಲ್ಲೂ ಗಂಭೀರವಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು.&lt;/p&gt;&lt;p&gt;&lsquo;ಕನ್ನಡಪ್ರಭ&rsquo; ವರದಿ ಆಧರಿಸಿ, ಆರೋಗ್ಯ ಸಚಿವ ದಿನೇಶ ಗುಂಡೂರಾವ್&zwnj; ಅವರ ನೇತೃತ್ವದಲ್ಲಿ ಮಾ.25ರಂದು ಮಧ್ಯಾಹ್ನ ನಡೆದ ಹಿರಿಯ ಅಧಿಕಾರಿಗಳನ್ನೊಳಗೊಂಡ ವೀಡಿಯೋ ಕಾನ್ಫೆರೆನ್ಸ್&zwnj; ಸಭೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿನ ಈ ಆಘಾತಕಾರಿ ಅಂಶ ಬಯಲಾಗಿತ್ತು. &lsquo;ಕನ್ನಡಪ್ರಭ&rsquo;ಕ್ಕೆ ಲಭ್ಯವಾದ, ಸಭೆಯಲ್ಲಿ ಮಂಡಿಸಲಾದ ಕಟ್ಟುನಿಟ್ಟಿನ ಗೌಪ್ಯ ವರದಿಯಲ್ಲಿನಂತೆ 2025ರ ಏಪ್ರಿಲ್&zwnj;ನಿಂದ ನವೆಂಬರ್&zwnj;ವರೆಗಿನ 7 ತಿಂಗಳಲ್ಲಿ ಒಟ್ಟು 652 ಗರ್ಭಪಾತ ಪ್ರಕರಣಗಳು ಇಲಾಖೆಯಲ್ಲೇ ವರದಿಯಾಗಿವೆ. ಗರ್ಭಪಾತದ ರಾಜ್ಯದ ಸರಾಸರಿ ವರದಿ ಶೇ.5.24 ರಷ್ಟಿದ್ದರೆ, ಯಾದಗಿರಿ ಜಿಲ್ಲೆಯದ್ದು ಶೇ.3.16 ರಷ್ಟಿದೆ.&lt;/p&gt;&lt;h2&gt;&lt;strong&gt;1329 ಗರ್ಭಪಾತ&lt;/strong&gt;&lt;/h2&gt;&lt;p&gt;ಹಾಗೆಯೇ, 2024-25ರ ಸಾಲಿನಲ್ಲಿ ನೋಂದಣಿ ಮಾಡಿಸಿದ್ದ 31,435 ಗರ್ಭಿಣಿಯರ ಪೈಕಿ, 26,584 ಜೀವಂತ ಹೆರಿಗೆಗಳಾಗಿದ್ದು, 188 ಶಿಶು ಮರಣಗಳು ಸಂಭವಿಸಿವೆ. ಇನ್ನೂ 207 ಹೆರಿಗೆಗಳು ಆಗಬೇಕಿದ್ದು, 1329 ಗರ್ಭಪಾತಗಳಾಗಿವೆ. ಅಚ್ಚರಿಯೆಂದರೆ, ಇವೆಲ್ಲಗಳ ಸೇರಿಸಿದಾಗ ಆಗುವ 28,308 ಪ್ರಕರಣಗಳಲ್ಲಿ ಇನ್ನೂ 3,127ರಷ್ಟು ಹೆರಿಗೆಯ ವಿವರಗಳೇ ಸಿಗುತ್ತಿಲ್ಲ. ಈ ಗರ್ಭಿಣಿಯರಿಗೆ ನಂತರದಲ್ಲಿ ಹೆರಿಗೆಯಾಯಿತೇ? ಶಿಶುಗಳು ಜೀವಂತವಿವೆಯೇ? ಅಥವಾ ಮೃತಪಟ್ಟವೇ? ಯಾಕೆ? ಏನು? ಎಂಬ ಅನೇಕ ಅಂಶಗಳಿಗೆ ಉತ್ತರ ಸಿಕ್ಕಿಲ್ಲ.&lt;/p&gt;&lt;h3&gt;&lt;strong&gt;ನಕಲಿ ತಾಯಿ ಕಾರ್ಡ್&zwnj; ಸೃಷ್ಟಿ&lt;/strong&gt;&lt;/h3&gt;&lt;p&gt;&lsquo;ಹೆಣ್ಣು&rsquo; ಶಿಶು ಎಂಬ ಕಾರಣಕ್ಕೆ ಅನೇಕರು ಸದ್ದಿಲ್ಲದೆ ಅಬಾರ್ಷನ್&zwnj; ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಸಭೆಯಲ್ಲಿ ಚರ್ಚೆಗಳಾಗಿವೆ ಎಂದು &lsquo;ಕನ್ನಡಪ್ರಭ&rsquo;ಕ್ಕೆ ಬಲ್ಲ ಮೂಲಗಳು ತಿಳಿಸಿವೆ. ಹರ್ಷ ಗುಪ್ತಾ ಅವರ ಸೂಚನೆಯಂತೆ ರಚಿಸಲಾಗಿದ್ದ ರಾಜ್ಯಮಟ್ಟದ ಸಮಿತಿ ಏ.6ರಿಂದ ಏ.10ರವರೆಗೆ ಜಿಲ್ಲೆಯಲ್ಲಿ ಸಂಚರಿಸಿ ಮಾಹಿತಿ ಸಂಗ್ರಹಿಸಿದೆ. ಕೆಲವು ಕಡೆಗಳಲ್ಲಿ ಸಮಿತಿಗೆ ದೊರೆತ ಮಾಹಿತಿಗಳು ಅವರನ್ನೂ ಬೆಚ್ಚಿ ಬೀಳಿಸಿವೆ ಎನ್ನಲಾಗಿದೆ. ಟಾರ್ಗೆಟ್&zwnj; ರೀಚ್&zwnj;ಗಾಗಿ ತಾಯಿ ಕಾರ್ಡ್&zwnj;ಗಳನ್ನೂ ಸಹ ನಕಲಿ ಸೃಷ್ಟಿಸಲಾಗುತ್ತಿದೆ ಎಂಬ ಮಾತುಗಳು ಇಲಾಖೆಯಲ್ಲೇ ಕೇಳಿ ಬರುತ್ತಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಭ್ರೂಣ ಲಿಂಗ ಪತ್ತೆಕೋರರ ಮಾಹಿತಿ ಕೊಟ್ರೆ ₹1 ಲಕ್ಷ ಬಹುಮಾನ! ಮಹತ್ವದ ಘೋಷಣೆ&lt;/strong&gt;&lt;/p&gt;&lt;p&gt;&lt;strong&gt;ಗರ್ಭಪಾತ ತಡೆಗೆ ಕ್ರಮ&lt;/strong&gt;&lt;/p&gt;&lt;p&gt;ಗರ್ಭಪಾತ ಪ್ರಕರಣಗಳ ಕುರಿತು ರಾಜ್ಯಮಟ್ಟದ ಸಮಿತಿ ಜಿಲ್ಲೆಗೆ ಬಂದು ಮಾಹಿತಿ ಸಂಗ್ರಹಿಸಿದೆ. ಇಷ್ಟರಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ತಂಡ ತಮಗೆ ತಿಳಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದೇನೆ. ನಕಲಿ ವೈದ್ಯರು ಹಾಗೂ ಗರ್ಭಪಾತ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್&zwnj; ಅಧಿಕಾರಿ ನೇಮಕ: ಸಚಿವ ದಿನೇಶ್&zwnj; ಗುಂಡೂರಾವ್&zwnj;&lt;/strong&gt;&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/3000-registered-pregnant-women-missing-in-yadagiri-district-health-department-shocked-mrq/articleshow-gpltxor"/>
        </item>
        <item>
            <title><![CDATA[ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೋಗೆ ವಿದ್ಯುತ್ ತಂತಿ ತಗುಲಿ ಬೆಂಕಿ: ನಡುರಸ್ತೆಯಲ್ಲಿ ಧಗಧಗ]]></title>
            <link>https://kannada.asianetnews.com/gallery/state/yadgir-bolero-carrying-dry-fodder-catches-fire-after-electric-wire-touchs-gxqgqph</link>
            <guid isPermaLink="true">https://kannada.asianetnews.com/gallery/state/yadgir-bolero-carrying-dry-fodder-catches-fire-after-electric-wire-touchs-gxqgqph</guid>
            <pubDate>Mon, 20 Apr 2026 12:39:45 +0530</pubDate>
            <description><![CDATA[ಯಾದಗಿರಿ ಜಿಲ್ಲೆಯ ವಡಗೇರಾ ಬಳಿ, ಒಣ ಹುಲ್ಲು ಸಾಗಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpmv3jpt2zpc3knaszms5bar,imgname-vehicle-caught-fire--5--1776668494554.jpg" type="image/jpeg" height="390" width="690"/>
            <content:encoded><![CDATA[ಯಾದಗಿರಿ ಜಿಲ್ಲೆಯ ವಡಗೇರಾ ಬಳಿ, ಒಣ ಹುಲ್ಲು ಸಾಗಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.&lt;img&gt;&lt;p&gt;ಯಾದಗಿರಿ: ಚಲಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೊಲೆರೋ ವಾಹನ ನಡುರಸ್ತೆಯಲ್ಲಿ ಧಗಧಗನೇ ಹತ್ತಿ ಉರಿದಂತಹ ಭಯಾನಕ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಬಳಿ ನಡೆದಿದೆ.&lt;/p&gt;&lt;img&gt;&lt;p&gt;ನಡುರಸ್ತೆಯಲ್ಲಿ ಬೆಂಕಿಗಾಹುತಿಯಾದ ಲಾರಿ ಭತ್ತದ ಹುಲ್ಲು ತುಂಬಿಕೊಂಡು ತುಂಬಿಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕೂಡಲೇ ಬೊಲೆರೋ ವಾಹನದಲ್ಲಿದ್ದ ಚಾಲಕ ಸೇರಿ ಮೂವರು ವಾಹನದಿಂದ ಹೊರಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಬೆಂಕಿಯ ಕೆನ್ನಾಲಿಗೆಗ ಬೊಲೆರೋ ವಾಹನ ಸುಟ್ಟು ಕರಲಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಈ ಬೊಲೆರೋ ವಾಹನ ಸೂಗೂರಿನಿಂದ ದೇವದುರ್ಗದ ಕಡೆಗೆ ಒಣ ಹುಲ್ಲು ತುಂಬಿಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.&lt;/p&gt;&lt;img&gt;&lt;p&gt;ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಬೋರ್&zwnj;ವೆಲ್&zwnj;ಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದ್ದು, ಬೊಲೆರೋ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿರುವುದರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&amp;nbsp;&lt;/strong&gt;&lt;/p&gt;&lt;p&gt;ತನಗೆ ಆರೈಕೆ ಮಾಡುತ್ತಿರುವ 43 ವರ್ಷದ ವ್ಯಕ್ತಿಯ ದತ್ತು ಪಡೆಯಲು ಹೈಕೋರ್ಟ್ ಮೊರೆ ಹೋದ 90 ವರ್ಷದ ವೈದ್ಯರು&lt;/p&gt;]]></content:encoded>
            <category>yadgir</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/yadgir-bolero-carrying-dry-fodder-catches-fire-after-electric-wire-touchs-gxqgqph"/>
        </item>
        <item>
            <title><![CDATA[ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ]]></title>
            <link>https://kannada.asianetnews.com/karnataka-districts/who-is-mallikarjun-mutya-viral-video-turns-popular-godman-into-absconding-figure-police-launch-search-videoshow-gz5moxh</link>
            <guid isPermaLink="true">https://kannada.asianetnews.com/karnataka-districts/who-is-mallikarjun-mutya-viral-video-turns-popular-godman-into-absconding-figure-police-launch-search-videoshow-gz5moxh</guid>
            <pubDate>Fri, 27 Feb 2026 15:45:37 +0530</pubDate>
            <description><![CDATA[ಉತ್ತರ ಕರ್ನಾಟಕದಲ್ಲಿ ದೇವಮಾನವನೆಂದು ಪೂಜಿಸಲ್ಪಡುತ್ತಿದ್ದ ಮಲ್ಲಿಕಾರ್ಜುನ ಮುತ್ಯಾ, ಒಂದು ವಿಡಿಯೋ ವೈರಲ್ ಆದ ನಂತರ ಭೂಗತರಾಗಿದ್ದಾರೆ. ಈ ವಿಡಿಯೋದಿಂದಾಗಿ ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಅವರ ಹಿನ್ನೆಲೆ ಮತ್ತು ಈ ವಿವಾದದ ಹಿಂದಿನ ಕಾರಣಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.]]></description>
            <media:content url="https://geo.dailymotion.com/player/x1tbu.html?video=xa0u196" medium="video" height="768" width="1024"/>
            <content:encoded><![CDATA[&lt;p&gt;&amp;nbsp;ಅವರು ಆ ಭಾಗದ ದೇವಮಾನವ ಅನ್ನಿಸಿಕೊಂಡವರು.. ಏನೇ ಕಷ್ಟ ಬಂದರೂ ಆ ದೇವಮಾನವನನ್ನ ನೆನಪಿಸಿಕೊಂಡ್ರೆ ಸಾಕು.. ಕಷ್ಟವೆಲ್ಲಾ ದೂರವಾಗುತ್ತೆ ಅಂತ ನಂಬ್ತಾರೆ.. ವಾಹನ, ಮನೆ, ಸೈಟು ಏನ್​ ತಗೊಂಡ್ರು ಮೊದಲು ಆತನದ್ದೇ ಮೂಜೆ.. ಕಷ್ಟ ಸುಖಗಳಿಗೂ ಅವರೇ ಪರಿಹಾರ.. &amp;nbsp;ಆದ್ರೆ ಇವತ್ತು ಇದೇ ದೇವಮಾನವ ಅಪ್​ಸ್ಕಾಂಡ್​​ ಆಗಿದ್ದಾರೆ.. ಪೊಲೀಸರು ಆತನಿಗಾಗಿ ಇನ್ನಿಲ್ಲದಂತೆ ಹುಡುಕಾಡುತ್ತಿದ್ದಾರೆ.. ಯಸ್​​.. ನಾವು ಮಾತನ್ನಾಡುತ್ತಿರೋದು ಮಲ್ಲಿಕಾರ್ಜುನ ಮುತ್ಯಾ ಬಗ್ಗೆ.. ಈತನದ್ದೇ ಒಂದು ವಿಡಿಯೋ ವೈರಲ್​ ಆಗಿ ಇವತ್ತು ಅವರು &amp;nbsp;ಭೂಗತನ್ನಾಗೋದಕ್ಕೆ ಕಾರಣವಾಗಿಬಿಟ್ಟಿದೆ.. ಅಷ್ಟಕ್ಕೂ ಯಾವುದು ಆ ವಿಡಿಯೋ..? ಆ ಮುತ್ಯಾನ ಹಿನ್ನಲೆಯಾದ್ರೂ ಏನು..? ಅನ್ನೋ ಕಂಪ್ಲೀಟ್​​ ಡಿಟೇಲ್ಸ್ &amp;nbsp;ಇಲ್ಲಿದೆ.&lt;/p&gt;&lt;p&gt;ಕಳೆದೆರಡು ವರ್ಷದಿಂದ.. ಇಂಥಹ ವಿಡಿಯೋಗಳು ಸಖತ್​​ ವೈರಲ್​ ಆಗಿದ್ವು.. ಬಿಲ್ಡಪ್​​ ಸಾಂಗ್ಸ್​​.. ದೇವರ ಹಾಡುಗಳನ್ನ ಹಾಕೊಂಡು ಒಬ್ಬ ಯುವಕ ಓಡಾಡೋ ರೀಲ್ಸ್​​ಗಳವು.. ಆ ವಿಡಿಯೋವನ್ನ ನೋಡಿದ್ದ ದಕ್ಷಿಣ ಭಾಗದ ಜನ ನೆಗ್ಲೆಕ್ಟ್​​ ಮಾಡಿದ್ರು.. ಆದ್ರೆ ಉತ್ತರ ಕರ್ನಾಟಕದ ಜನ ಮಾತ್ರ ಒಂದು ಕ್ಷಣ ಆ ಯುವಕನನ್ನ ನೆನಪಿಸಿಕೊಂಡು ನಮ್ಮ ಕಷ್ಟಗಳನ್ನ ದೂರ ಮಾಡು ಮುತ್ಯಾ ಅಂತ ಪ್ರಾರ್ಥಿಸಿದ್ರು.. ಅಷ್ಟು ಭಕ್ತಿ.. ನಂಬಿಕೆ ಆ ಯುವಕನ ಮೇಲೆ.. ಅಂದಹಾಗೆ ಆತನ ಹೆಸರು ಮಲ್ಲಿಕಾರ್ಜುನ ಮುತ್ಯಾ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/who-is-mallikarjun-mutya-viral-video-turns-popular-godman-into-absconding-figure-police-launch-search-videoshow-gz5moxh"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>yadgir</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ರಾಜ್ಯದ ಜನತೆಗೆ ಅಲರ್ಟ್: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ!]]></title>
            <link>https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc</link>
            <guid isPermaLink="true">https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc</guid>
            <pubDate>Tue, 24 Mar 2026 20:43:56 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmc4fptfwz060wyzsnqeqzh5,imgname-rain-1774228855631.jpg" type="image/jpeg" height="390" width="690"/>
            <content:encoded><![CDATA[ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.&lt;img&gt;&lt;p&gt;ಕರ್ನಾಟಕದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಈ ಕೆಳಗಿನ ಪ್ರಮುಖ ಸೂಚನೆಗಳನ್ನು ನೀಡಿದೆ.&lt;/p&gt;&lt;img&gt;&lt;p&gt;ರಾಜ್ಯದ ಆರು ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕರಾವಳಿ ಮತ್ತು ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಿರಲಿದೆ.&lt;/p&gt;&lt;img&gt;&lt;p&gt;ಈ ಜಿಲ್ಲೆಗಳಲ್ಲಿ ಕೇವಲ ಮಳೆ ಮಾತ್ರವಲ್ಲದೆ, ಜೋರಾದ ಗಾಳಿಯೊಂದಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ತಿಳಿಸಲಾಗಿದೆ.&lt;/p&gt;&lt;img&gt;&lt;p&gt;ಮಳೆಯ ಸಮಯದಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ಹೊರಗಡೆ ಓಡಾಡಬಾರದು. ವಿಶೇಷವಾಗಿ ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಮತ್ತು ವಿದ್ಯುತ್ ಕಂಬಗಳು ಅಥವಾ ತಂತಿಗಳ ಬಳಿ ಹೋಗಬಾರದು ಎಂದು ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಹವಾಮಾನ ಬದಲಾವಣೆಯ ಈ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.&lt;/p&gt;&lt;p&gt;&lt;/p&gt;]]></content:encoded>
            <category>yadgir</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc"/>
        </item>
        <item>
            <title><![CDATA[ಯಾದಗಿರಿ ಖಾಸಗಿ ಬಸ್ ಅಗ್ನಿ ದುರಂತ: 20 ಜೀವ ಉಳಿಸಿದ ಆಪದ್ಬಾಂಧವ ಉಮೇಶ್ ಬಿರಾದಾರ್ ಕಥೆ]]></title>
            <link>https://kannada.asianetnews.com/gallery/karnataka-districts/yadagiri-private-bus-car-fire-tragedy-the-story-of-umesh-biradar-a-rescuer-who-saved-20-lives-mrq-rwbngvb</link>
            <guid isPermaLink="true">https://kannada.asianetnews.com/gallery/karnataka-districts/yadagiri-private-bus-car-fire-tragedy-the-story-of-umesh-biradar-a-rescuer-who-saved-20-lives-mrq-rwbngvb</guid>
            <pubDate>Sun, 19 Apr 2026 12:36:10 +0530</pubDate>
            <description><![CDATA[ಯಾದಗಿರಿಯಲ್ಲಿ ನಡೆದ ಖಾಸಗಿ ಬಸ್ ಮತ್ತು ಕಾರ್ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಇದೇ ಬಸ್&zwnj;ನಲ್ಲಿದ್ದ ಪ್ರಯಾಣಿಕ ಉಮೇಶ ಬಿರಾದಾರ್, ತಮ್ಮ ಪ್ರಾಣ ಪಣಕ್ಕಿಟ್ಟು ಬಸ್&zwnj;ನಲ್ಲಿದ್ದ 20 ಜನರನ್ನು ಹಾಗೂ ಕಾರಿನಲ್ಲಿದ್ದ ಏಕೈಕ ಬಾಲಕನನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpj8mgdxa6n6mznad334feb1,imgname-yadagiri-accident--2--1776582017469.jpg" type="image/jpeg" height="390" width="690"/>
            <content:encoded><![CDATA[ಯಾದಗಿರಿಯಲ್ಲಿ ನಡೆದ ಖಾಸಗಿ ಬಸ್ ಮತ್ತು ಕಾರ್ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಇದೇ ಬಸ್&zwnj;ನಲ್ಲಿದ್ದ ಪ್ರಯಾಣಿಕ ಉಮೇಶ ಬಿರಾದಾರ್, ತಮ್ಮ ಪ್ರಾಣ ಪಣಕ್ಕಿಟ್ಟು ಬಸ್&zwnj;ನಲ್ಲಿದ್ದ 20 ಜನರನ್ನು ಹಾಗೂ ಕಾರಿನಲ್ಲಿದ್ದ ಏಕೈಕ ಬಾಲಕನನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.&lt;img&gt;&lt;p&gt;ಯಾದಗಿರಿ: ಖಾಸಗಿ ಸ್ಲೀಪರ್&zwnj; ಬಸ್&zwnj; ಹಾಗೂ ಕಾರು ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನೊಳಗಿದ್ದ 10 ಜನರ ಪೈಕಿ, ಒಂದೇ ಕುಟುಂಬದ 9 ಜನರು ದುರ್ಮರಣಕ್ಕೀಡಾಗಿದ್ದಾರೆ. ಈ ವೇಳೆ, ಇಡೀ ದುರಂತದಲ್ಲಿ ಉಳಿದ ಏಕೈಕ ಬಾಲಕ ಸೇರಿದಂತೆ ಬಸ್&zwnj;ನೊಳಗಿದ್ದ 20 ಜನರನ್ನು ರಕ್ಷಿಸುವ ಮೂಲಕ ಸಹ ಪ್ರಯಾಣಿಕ ಉಮೇಶ ಬಿರಾದಾರ್&zwnj; ಅವರು ಆಪದ್ಬಾಂಧವರಂತೆ ಕಾರ್ಯ ನಿರ್ವಹಿಸಿದ್ದಾರೆ.&lt;/p&gt;&lt;img&gt;&lt;p&gt;ಉಮೇಶ ಬಿರಾದಾರ್&zwnj; ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್&zwnj;ನ ಒಳಗಿದ್ದರು. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ವಿಭಾಗದಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕುಡಿಯುವ ನೀರು ಪೂರೈಕೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ವಿಶೇಷ ಸಭೆಯಲ್ಲಿ ತಮ್ಮ ಮೇಲಧಿಕಾರಿಗಳ ಜೊತೆ ಪಾಲ್ಗೊಂಡು, ಗುರುವಾರ ಸಂಜೆ ಖಾಸಗಿ ಬಸ್&zwnj; ಮೂಲಕ ಕಲಬುರಗಿಗೆ ಅವರು ಬರುತ್ತಿದ್ದರು.&lt;/p&gt;&lt;img&gt;&lt;p&gt;ಯಾದಗಿರಿಯ ಈ ಭೀಕರ ಅಪಘಾತದಲ್ಲಿ ಪ್ರತ್ಯಕ್ಷದರ್ಶಿಯಷ್ಟೇ ಅಲ್ಲ, ತಮ್ಮದೇ ಜೀವ ಪಣಕ್ಕಿಟ್ಟು ಉಳಿದವರ ಜೀವ ರಕ್ಷಿಸಿದ ಆಪತ್ಬಾಂಧವ. ಅಂದಿನ ಕರಾಳ ಘಟನೆಯ ಬಗ್ಗೆ ತಮ್ಮನ್ನು ಸಂಪರ್ಕಿಸಿದ &quot;ಕನ್ನಡಪ್ರಭ&quot;ದೊಂದಿಗೆ ಅವರು ಮಾತನಾಡಿದ್ದಾರೆ.&lt;/p&gt;&lt;img&gt;&lt;p&gt;ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದ್ದ ಕಾರಿನೊಳಗೆ ಸಿಲುಕಿದವರ ಉಸಿರು ನಿಂತಿರುವ ಲಕ್ಷಣಗಳು ಗೋಚರಿಸಿದ್ದ ಬೆನ್ನಲ್ಲೇ, ಮಗು ಅಳುತ್ತಿರುವ (10 ವರ್ಷದ ವಿರಾಟ್ ಅಪಘಾತದಲ್ಲಿ ಬದುಕುಳಿದ ಏಕೈಕ ಬಾಲಕ) ಶಬ್ದ ಕೇಳಿ, ಹರಸಾಹಸ ಪಟ್ಟು ಸ್ಥಳೀಯರ ನೆರವಿನೊಂದಿಗೆ ಹೊರಗೆ ತೆಗೆದರು. ಅಷ್ಟರಲ್ಲಾಗಲೇ, ಬೆಂಕಿಯ ಕೆನ್ನಾಲಿಗೆಗಳು ಎಲ್ಲೆಡೆ ಆವರಿಸಿಕೊಳ್ಳತೊಡಗಿದಾಗ, ಅಪಾಯ ಲೆಕ್ಕಿಸದೆ ಮಗುವನ್ನು ಎತ್ತಿಕೊಂಡು ಬಂದ ಉಮೇಶ, ಆ್ಯಂಬುಲೆನ್ಸ್&zwnj; ಮೂಲಕ ಆಸ್ಪತ್ರೆಗೆ ಕಳುಹಿಸುವವರೆಗೆ ಜವಾಬ್ದಾರಿ ಹಾಗೂ ಮಾನವೀಯತೆ ಮೆರೆದಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ!&lt;/strong&gt;&lt;/p&gt;&lt;img&gt;&lt;p&gt;ರಾಯಚೂರು ಜಿಲ್ಲೆ ಪಕ್ಕದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಿಣಿ ಸಮೀಪದ ಶಾಂತಪುರ ಕ್ರಾಸ್&zwnj; ಬಳಿ ಸಂಭವಿಸಿದ ಕಾರು - ಖಾಸಗಿ ಬಸ್ ನಡುವಿನ ಅಪಘಾತದಲ್ಲಿ ಉಂಟಾದ ಬೆಂಕಿಯಿಂದ ಮೃತಪಟ್ಟ ಒಂದೇ ಕುಟುಂಬದ 9 ಜನರ ಅಂತ್ಯಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭಾವುಕರಾಗಿದ್ದರು. ಕಳೆದ ಮೂರು ದಶಕಗಳಿಂದ ಕೃಷ್ಣ ನಾಯಕ ಅವರ ಒಟನಾಡವಿದ್ದು, ಇಡೀ ಕುಟುಂಬವೇ ಅಪಘಾತದಲ್ಲಿ ಮೃತಪಟ್ಟಿರುವುದು ತೀವ್ರ ನೋವುಂಟು ಮಾಡಿದೆ. ಮೃತರಿಗೆ ಭಗವಂತ ಶಾಂತಿ ಕರುಣಿಸಲಿ, ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಾದಗಿರಿ: ಚಾಲಕನಿಂದಲೇ ಸರ್ಕಾರಿ ಬಸ್ ಕಳ್ಳತನ! ಕುಡಿದ ಮತ್ತಿನಲ್ಲಿ KKRTC ಬಸ್ ಎಸ್ಕೇಪ್&zwnj; ಮಾಡಿದ ಕಿಲಾಡಿ&lt;/strong&gt;&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/yadagiri-private-bus-car-fire-tragedy-the-story-of-umesh-biradar-a-rescuer-who-saved-20-lives-mrq-rwbngvb"/>
        </item>
        <item>
            <title><![CDATA[ಮಲ್ಲಿಕಾರ್ಜುನ ಮುತ್ಯಾ  ವಿರುದ್ಧ ಪೋಕ್ಸೊ ತನಿಖೆಗೆ ಹೈಕೋರ್ಟ್ ತಡೆ, ನಿಟ್ಟುಸಿರು ಬಿಟ್ಟ ಭಕ್ತರು]]></title>
            <link>https://kannada.asianetnews.com/state/karnataka-high-court-stays-pocso-investigation-against-mallikarjun-mutya-rav/articleshow-t3xh49e</link>
            <guid isPermaLink="true">https://kannada.asianetnews.com/state/karnataka-high-court-stays-pocso-investigation-against-mallikarjun-mutya-rav/articleshow-t3xh49e</guid>
            <pubDate>Sat, 21 Mar 2026 06:22:57 +0530</pubDate>
            <description><![CDATA[&lt;p&gt;ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ಪೀಠ ತಡೆ ನೀಡಿದೆ. ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ತಡೆಯಾಜ್ಞೆಯಿಂದ ಮುತ್ಯಾ ಹಾಗೂ ಅವರ ಭಕ್ತರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km6xf7wehqrn85x8v3djk5h6,imgname----------------------2--1774053728141.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಮಾ.21):&lt;/strong&gt; ಬಾಲಕಿ ಜೊತೆಗೆ ಅನುಚಿತ ವರ್ತನೆ ಆರೋಪದಡಿ ಯಾದಗಿರಿ ಜಿಲ್ಲೆಯ ಮಹಲ್&zwnj; ರೋಜಾದ ಚಾಂಗ್&zwnj;ದೇವ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣದ ತನಿಖೆಗೆ ಹೈಕೋರ್ಟ್&zwnj;ನ ಕಲಬುರಗಿ ವಿಭಾಗೀಯ ಪೀಠ ತಡೆ ನೀಡಿ ಆದೇಶ ಹೊರಡಿಸಿದೆ.&amp;nbsp;&lt;/p&gt;&lt;p&gt;ಪ್ರಕರಣ ದಾಖಲಾದ ಬಳಿಕ ವಿಚಾರಣೆಗೆ ತಡೆ ನೀಡುವಂತೆ ಮಲ್ಲಿಕಾರ್ಜುನ ಮುತ್ಯಾ&zwnj; ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿರುವ ಹೈಕೋರ್ಟ್ ತನಿಖೆಗೆ ತಡೆ ನೀಡಿದ್ದು, ತಾತ್ಕಾಲಿಕ ರಿಲೀಫ್&zwnj;ನಿಂದ ಮುತ್ಯಾ ಹಾಗೂ ಭಕ್ತರ ವಲಯದಲ್ಲಿ ನಿಟ್ಟುಸಿರು ಮೂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಲಕಿ ಜೊತೆಗಿನ ವರ್ತನೆಯ ದೃಶ್ಯಗಳು ವೈರಲ್&zwnj; ಆದ ಬಳಿಕ ಶಹಾಪುರ ಸಿಡಿಪಿಓ ಫೆ.25ರಂದು ನೀಡಿದ ದೂರಿನ ಮೇರೆಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.&lt;/p&gt;&lt;p&gt;ಪ್ರಕರಣದ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಮುತ್ಯಾ ಪರ ವಕೀಲರು, ನಂತರ ವಾಪಸ್ ಪಡೆದು, ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾ.9ರಂದು ಬೇಲ್&zwnj; ಅರ್ಜಿ ತಿರಸ್ಕೃತಗೊಳಿಸಿದ ಕೋರ್ಟ್&zwnj; ತನಿಖೆಗೆ ಎಸ್ಪಿಗೆ ಸೂಚಿಸಿತ್ತು. ಅದರನ್ವಯ, ಶಹಾಪುರ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದರು.&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-high-court-stays-pocso-investigation-against-mallikarjun-mutya-rav/articleshow-t3xh49e"/>
        </item>
        <item>
            <title><![CDATA[Mallikarjuna Mutya: ಬಾಲಕಿ ಜೊತೆ ಅನುಚಿತ ವರ್ತನೆ; ಕೊನೆಗೂ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ]]></title>
            <link>https://kannada.asianetnews.com/karnataka-districts/yadagir-inappropriate-behavior-with-minor-investigation-underway-against-mallikarjuna-mutya/articleshow-twelkfs</link>
            <guid isPermaLink="true">https://kannada.asianetnews.com/karnataka-districts/yadagir-inappropriate-behavior-with-minor-investigation-underway-against-mallikarjuna-mutya/articleshow-twelkfs</guid>
            <pubDate>Fri, 06 Mar 2026 04:29:43 +0530</pubDate>
            <description><![CDATA[&lt;p&gt;ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದಡಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಹಲ್&zwnj; ರೋಜಾದ ಚಾಂಗ್&zwnj;ದೇವ ಮಠದ ಪೀಠಾಧಿಪತಿ ಮಲ್ಲಿಕಾರ್ಜುನ ಮುತ್ಯಾ, ಕೊನೆಗೂ ಶಹಾಪುರ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk03a2tq2gj45tasgy1j0bd0,imgname----------------------71--1772751227735.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಯಾದಗಿರಿ (ಮಾ.6): &lt;/strong&gt;ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದಡಿ, ಪೋಕ್ಸೋ ಪ್ರಕರಣದಲ್ಲಿ ಆರೋಪಿ ಆಗಿರುವ ಮಹಲ್&zwnj; ರೋಜಾದ ಚಾಂಗ್&zwnj;ದೇವ ಮಠದ ಪೀಠಾಧಿಪತಿ ಮಲ್ಲಿಕಾರ್ಜುನ &lsquo;ಮುತ್ಯಾ&rsquo; ಕೊನೆಗೂ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.&lt;/p&gt;&lt;p&gt;ಬುಧವಾರ (ಮಾ.4) ರಾತ್ರಿ ಶಹಾಪುರ ಪೊಲೀಸ್&zwnj; ಠಾಣೆಗೆ ಬಂದ ಅವರನ್ನು, ಗುರುವಾರ (ಮಾ.5) ಮತ್ತೆ ಹಾಜರಾಗುವಂತೆ ನೋಟಿಸ್&zwnj; ಮೂಲಕ ಸೂಚಿಸಲಾಗಿತ್ತು. ಗುರುವಾರ ಠಾಣೆಗೆ ಬಂದ ಅವರನ್ನು ತನಿಖಾಧಿಕಾರಿ ಶರಣಗೌಡ ನ್ಯಾಮನವರ್&zwnj; 4 ತಾಸು ವಿಚಾರಣೆ ನಡೆಸಿದ್ದಾರೆ.&lt;/p&gt;&lt;p&gt;ಇದಕ್ಕೂ ಮುನ್ನ, ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಮುತ್ಯಾ ಬಳಸುತ್ತಿರುವ ಮೊಬೈಲ್&zwnj; ಹಾಗೂ ಮಠದ ಆವರಣದಲ್ಲಿನ ಮೂರು ಸಿಸಿಟಿವಿಗಳು- ಹಾರ್ಡ್&zwnj;ಡಿಸ್ಕ್&zwnj;ಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.&lt;/p&gt;&lt;p&gt;ಪೋಕ್ಸೋ ಕೇಸ್&zwnj; ದಾಖಲಾದ ದಿನದಿಂದ ಅಜ್ಞಾತಸ್ಥಳದಲ್ಲಿದ್ದ ಮಲ್ಲಿಕಾರ್ಜುನ ಮುತ್ಯಾ, ವಿಚಾರಣೆಗೆ ಹಾಜರಾಗುವುದಾಗಿ ಹೇಳಿ, ವಿಡಿಯೋ ರಿಲೀಸ್&zwnj; ಮಾಡಿದ್ದಾದರೂ, ಪ್ರಕರಣ ರದ್ದು ಕೋರಿ ಹೈಕೋರ್ಟಿ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದರಿಂದ, ಹೈಕೋರ್ಟ್&zwnj;ನಲ್ಲಿ ಸಲ್ಲಿಸಿದ್ದ ಅರ್ಜಿ ವಾಪಸ್&zwnj; ಪಡೆದಿದ್ದರು. ಮಾ.6ರಂದು ಈ ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಯಲಿದೆ.&lt;/p&gt;&lt;p&gt;ಮುತ್ಯಾ ಪೊಲೀಸರೆದುರು ವಿಚಾರಣೆಗೆ ಹಾಜರಾದ ಸುದ್ದಿ ಹಬ್ಬಿದ ಬೆನ್ನಲ್ಲೇ, ಗುರವಾರ ಮಧ್ಯಾಹ್ನದಿಂದಲೇ ಭಕ್ತರು- ಬೆಂಬಲಿಗರು, ರಾಜಕೀಯ ಪ್ರಮುಖರು ಠಾಣೆಯೆದುರು ತಂಡೋಪತಂಡವಾಗಿ ಜಮಾಯಿಸತೊಡಗಿದ್ದರು.&lt;/p&gt;&lt;p&gt;ಯಾವುದೇ ತಪ್ಪು ಮಾಡಿಲ್ಲ&lt;/p&gt;&lt;p&gt;ಪೊಲೀಸರ ವಿಚಾರಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಮುತ್ಯ, &lsquo;ನಾನ್ಯಾವುದೇ ತಪ್ಪು ಮಾಡಿಲ್ಲ. ನಾನು ಕಾನೂನನ್ನು ಗೌರವಿಸುತ್ತೇನೆ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ&rsquo; ಎಂದರು.&lt;/p&gt;]]></content:encoded>
            <category>yadgir</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/yadagir-inappropriate-behavior-with-minor-investigation-underway-against-mallikarjuna-mutya/articleshow-twelkfs"/>
        </item>
        <item>
            <title><![CDATA[ಯಾದಗಿರಿ: ಚಾಲಕನಿಂದಲೇ ಸರ್ಕಾರಿ ಬಸ್ ಕಳ್ಳತನ! ಕುಡಿದ ಮತ್ತಿನಲ್ಲಿ KKRTC ಬಸ್ ಎಸ್ಕೇಪ್‌ ಮಾಡಿದ ಕಿಲಾಡಿ]]></title>
            <link>https://kannada.asianetnews.com/karnataka-districts/yadgiri-kkrtc-bus-theft-by-dismissed-driver-mahipal-reddy-saidapur-police-case-san/articleshow-ypu79ha</link>
            <guid isPermaLink="true">https://kannada.asianetnews.com/karnataka-districts/yadgiri-kkrtc-bus-theft-by-dismissed-driver-mahipal-reddy-saidapur-police-case-san/articleshow-ypu79ha</guid>
            <pubDate>Sat, 21 Mar 2026 17:07:47 +0530</pubDate>
            <description><![CDATA[&lt;p&gt;ಯಾದಗಿರಿಯ ಸೈದಾಪುರದಲ್ಲಿ, ಕೆಕೆಆರ್&zwnj;ಟಿಸಿಯಿಂದ ವಜಾಗೊಂಡಿದ್ದ ಮಾಜಿ ಚಾಲಕ ಮಹಿಪಾಲರೆಡ್ಡಿ ಎಂಬಾತ ಕುಡಿದ ಮತ್ತಿನಲ್ಲಿ ಸರ್ಕಾರಿ ಬಸ್ಸನ್ನೇ ಕದ್ದೊಯ್ದಿದ್ದಾನೆ. ಬಸ್ಸನ್ನು ತನ್ನ ಸ್ವಗ್ರಾಮದ ದೇವಸ್ಥಾನದ ಮುಂದೆ ನಿಲ್ಲಿಸಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km82s0d60m7vy54ep11a69m5,imgname-screenshot-2026-03-21-170050-1774092845478.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಯಾದಗಿರಿ (ಮಾ.21):&lt;/strong&gt; ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ಕೆಕೆಆರ್&zwnj;ಟಿಸಿ (KKRTC) ಸಂಸ್ಥೆಗೆ ಶಾಕ್ ನೀಡುವಂತಹ ಘಟನೆಯೊಂದು ನಡೆದಿದೆ. ಸಂಸ್ಥೆಯಿಂದಲೇ ವಜಾಗೊಂಡಿದ್ದ ಮಾಜಿ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಲ್ಲಿದ್ದ ಸರ್ಕಾರಿ ಬಸ್ಸನ್ನೇ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬಸ್ಸನ್ನು ಮಹಿಪಾಲರೆಡ್ಡಿ ಎಂಬ ಮಾಜಿ ಚಾಲಕ ಕದ್ದೊಯ್ದಿದ್ದಾನೆ. ಈತ ಬಸ್ಸನ್ನು ಚಲಾಯಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬಸ್ ಕಳ್ಳತನ ಮಾಡಿದ ಈತ, ಅದನ್ನು ತನ್ನ ಸ್ವಗ್ರಾಮವಾದ ರಾಚನಳ್ಳಿಯ ದೇವಸ್ಥಾನದ ಮುಂದೆ ತಂದು ನಿಲ್ಲಿಸಿದ್ದಾನೆ.&lt;/p&gt;&lt;h2&gt;&lt;strong&gt;ಯಾರು ಈ ಮಹಿಪಾಲರೆಡ್ಡಿ?&lt;/strong&gt;&lt;/h2&gt;&lt;p&gt;ಮಹಿಪಾಲರೆಡ್ಡಿ ಈ ಹಿಂದೆ ಕೆಕೆಆರ್&zwnj;ಟಿಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಈತನ ವಿರುದ್ಧ ಪ್ರಯಾಣಿಕರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ (ಜೇಬಿಗೆ ಇಳಿಸಿಕೊಳ್ಳುತ್ತಿದ್ದ) ಗಂಭೀರ ಆರೋಪಗಳಿದ್ದವು. ಇಂತಹ ಹಲವು ದೂರುಗಳ ಹಿನ್ನೆಲೆಯಲ್ಲಿ ಸಂಸ್ಥೆಯು ಈತನನ್ನು ಸೇವೆಯಿಂದ ವಜಾಗೊಳಿಸಿತ್ತು. ಕೆಲಸ ಹೋದ ಸಿಟ್ಟೋ ಅಥವಾ ಕುಡಿದ ಮತ್ತಿನ ಅವಾಂತರವೋ, ಈತ ಈಗ ಬಸ್ಸನ್ನೇ ಕದ್ದು ಸುದ್ದಿಯಾಗಿದ್ದಾನೆ.&lt;/p&gt;&lt;h2&gt;&lt;strong&gt;ಪೊಲೀಸ್ ದೂರು ದಾಖಲು&lt;/strong&gt;&lt;/h2&gt;&lt;p&gt;ತಮ್ಮ ಬಸ್ ನಾಪತ್ತೆಯಾಗಿರುವುದನ್ನು ಕಂಡು ಬೆಚ್ಚಿಬಿದ್ದ ಕೆಕೆಆರ್&zwnj;ಟಿಸಿ ಅಧಿಕಾರಿಗಳು ಕೂಡಲೇ ತನಿಖೆ ನಡೆಸಿ ಬಸ್ ಪತ್ತೆ ಮಾಡಿದ್ದಾರೆ. ಸದ್ಯ ಮಹಿಪಾಲರೆಡ್ಡಿ ವಿರುದ್ಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>yadgir</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/yadgiri-kkrtc-bus-theft-by-dismissed-driver-mahipal-reddy-saidapur-police-case-san/articleshow-ypu79ha"/>
        </item>
    </channel>
</rss>
