Asianet Suvarna News Asianet Suvarna News

ಸೂರ್ಯ-ಚಂದ್ರ, ಬೆಟ್ಟ-ಗುಡ್ಡ ಶಾಶ್ವತವೇ ಹೊರತು ಸನಾತನ ಧರ್ಮವಲ್ಲ: ನಟ ಚೇತನ್‌

ಸನಾತನ ಹಿಂದೂ ಧರ್ಮವನ್ನು ಉಳಿಸುತ್ತಿರುವುದೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಆರೋಪಿಸಿದ್ದಾರೆ.

Actor Chetan Ahimsa Reaction On Sanatana Dharma gvd
Author
First Published Sep 9, 2023, 3:41 PM IST

ತುಮಕೂರು (ಸೆ.09): ಸನಾತನ ಹಿಂದೂ ಧರ್ಮವನ್ನು ಉಳಿಸುತ್ತಿರುವುದೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸನಾತನ ಧರ್ಮವನ್ನು ಬೆಳೆಸುತ್ತಿರುವ ಮತ್ತು ಉಳಿಸುತ್ತಿರುವ ಪಕ್ಷಗಳೆಂದರೆ ಕಾಂಗ್ರೆಸ್ ಮತ್ತು ಬಿಜೆಪಿ ಎಂದು ಆಪಾದಿಸಿದರು. ಸನಾತನ ಧರ್ಮದ ವಿವಾದದ ಕುರಿತು ದೇಶಾದ್ಯಂತ ವ್ಯಾಪಕವಾದ ಚರ್ಚೆ ನಡೆಯುತ್ತಿದೆ. ರಾಜಾರಾಮ್ ಮೋಹನ ರಾಯ್ ಸನಾತನ ಧರ್ಮವನ್ನು ಹಿಂದೂ ಧರ್ಮವೆಂದು ಕರೆದರು. 

ಅದಕ್ಕೂ ಮೊದಲು ವೈದಿಕ ಧರ್ಮ, ವರ್ಣಾಶ್ರಮ ಧರ್ಮ, ಬ್ರಾಹ್ಮಣ ಧರ್ಮ ಮತ್ತು ಸನಾತನ ಧರ್ಮ ಎಂದು ಕರೆಯುತ್ತಿದ್ದರು. ಸನಾತನ ಧರ್ಮ ಎಂಬ ಪದ ಸಂಸ್ಕೃತ ಮತ್ತು ಪಾಲಿಯಿಂದ ಬಂದಿದೆ. ಸನಾತನ ಅಂದರೆ ಶಾಶ್ವತ ಎಂಬ ಅರ್ಥವಿದೆ. ಆದರೆ ನನ್ನ ಪ್ರಕಾರ ಸೂರ್ಯ-ಚಂದ್ರ, ಬೆಟ್ಟ-ಗುಡ್ಡ ಇವುಗಳೇ ಶಾಶ್ವತವೇ ಹೊರತು ಸನಾತನ ಧರ್ಮವಲ್ಲ ಎಂದು ಹೇಳಿದರು. ಅಸಮಾನತೆ ಪಕ್ಷಗಳು ತಮಿಳುನಾಡಿನಲ್ಲಿ ಇಲ್ಲ. ಅವುಗಳು ಕರ್ನಾಟಕದಲ್ಲಿವೆ. ಪೆರಿಯಾರ್ ಚಳವಳಿ ತಮಿಳುನಾಡಿಗಿಂತ ಹೆಚ್ಚಾಗಿ ನಮ್ಮ ರಾಜ್ಯಕ್ಕೆ ಅಗ್ಯತವಿದೆ ಎಂದು ಪ್ರತಿಪಾದಿಸಿದರು. 

ಸಂಘರ್ಷವಾದರೂ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ: ಸಂಸದ ಪ್ರತಾಪ್ ಸಿಂಹ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಡೆಂಘೀ, ಮಲೇರಿಯ ಮತ್ತು ಕೊರೋನಾ ರೋಗವಿದ್ದಂತೆ. ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇದು ಸಂವಿಧಾನ ನೀಡಿರುವ ಸ್ವಾತಂತ್ರ್ಯ. ಆದರೆ ಉದಯನಿಧಿ ಸ್ಟಾಲಿನ್ ಅವರ ತಲೆಯನ್ನು ತೆಗೆಯಬೇಕು ಎಂದು ಸ್ವಾಮೀಜಿಯೊಬ್ಬರು ಕರೆ ನೀಡಿರುವುದನ್ನು ಖಂಡಿಸುತ್ತೇನೆ ಎಂದರು. ವಾಕ್ ಸ್ವಾತಂತ್ರ್ಯ ಇರಬೇಕು. ಸನಾತನ ಧರ್ಮದ ಬಗ್ಗೆ ಚರ್ಚೆಯಾಗಬೇಕು. ಆಗ ಮಾತ್ರವೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪ್ರಜಾಪ್ರಭುತ್ವ ಎತ್ತಿಹಿಡಿಯಬೇಕು ಅಂದರೆ ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು ಎಂದು ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೊತೆ ಮೈತ್ರಿ: ಜಿ.ಟಿ.ದೇವೇಗೌಡ

ಸನಾತನ ಧರ್ಮವನ್ನು ಮಲೇರಿಯಾ, ಡೆಂಘೀಗೆ ಹೋಲಿಸಿರುವುದು ಪ್ರಶ್ನಾರ್ಹ. ಧರ್ಮ ಎಂದಾಗ ಸಂವಿಧಾನದ 25ನೇ ವಿಧಿ ಯಾವುದೇ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ. ಸನಾತನ ಹಿಂದೂ ಧರ್ಮ ಆಗಿರಬಹುದು, ಇಸ್ಲಾಂ, ಕ್ರೈಸ್ತ ಧರ್ಮವಾಗಿರಬಹುದು. ಜೈನ-ಬೌದ್ಧ ಧರ್ಮವಾಗಿರಬಹುದು. ಸಿಖ್, ನವಯಾನ ಧರ್ಮವಾಗಿರಬಹುದು. ಬಸವಣ್ಣನವರ ಲಿಂಗಾಯತ ಧರ್ಮವಾಗಿರಬಹುದು. ಇದನ್ನು ಆಚರಿಸಬಹುದು. ಆದರೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಅಂದರೆ ಅದಕ್ಕೇನು ಅರ್ಥ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಾಗಣ್ಣ ಇತರರಿದ್ದರು.

Follow Us:
Download App:
  • android
  • ios