ನಟ ಕಿಚ್ಚ ಸುದೀಪ್ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಪ್ರಶಸ್ತಿ ಸ್ವೀಕರಿಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ತಮ್ಮ ಸಮರ್ಪಣೆ ಪ್ರಶಸ್ತಿಗಳ ನಿರೀಕ್ಷೆಯಿಲ್ಲದೆ ಮುಂದುವರಿಯಲಿದೆ ಎಂದಿದ್ದಾರೆ.

ಬೆಂಗಳೂರು (ಜ.23): ರಾಜ್ಯ ಸರ್ಕಾರದಿಂದ ಕೊಡಲಾಗುವ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯಲ್ಲಿ ಕಿಚ್ಚ ಸುದೀಪ ಅವರನ್ನು 2019ನೇ ಸಾಲಿನ 'ಅತ್ಯುತ್ತಮ ನಟ ಪ್ರಶಸ್ತಿ'ಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ, ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ ಎಂದು ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಗೌರವದ ವಿಷಯವಾಗಿದೆ. ಮತ್ತು ಈ ಗೌರವಕ್ಕಾಗಿ ತೀರ್ಪುಗಾರರಿಗೆ ನಾನು ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ, ನಾನು ಹೇಳಬೇಕಾದ್ದಾದರೆ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಲು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಇದು ನಾನು ಹೃದಯಪೂರ್ವಕವಾಗಿ ಪಾಲಿಸಲು ಉದ್ದೇಶಿಸಿರುವ ವೈಯಕ್ತಿಕ ಕಾರಣಗಳಿಗಾಗಿ ಇದೀಗ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಯನ್ನು ಪಡೆಯದಿರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.

ತಮ್ಮ ಕಲೆಯಲ್ಲಿ ತಮ್ಮನ್ನೇ ತೊಡಗಿಸಿಕೊಂಡ ಅನೇಕ ಅರ್ಹ ನಟರಿದ್ದಾರೆ. ಈ ಪ್ರತಿಷ್ಠಿತ ಮನ್ನಣೆಯನ್ನು ನಾನು ಶ್ಲಾಘಿಸುತ್ತೇನೆ. ಆದರೆ, ಈ ಪ್ರಶಸ್ತಿಯನ್ನು ನಾನು ಸ್ವೀಕರಿಸುವುದಕ್ಕಿಂತ, ಅರ್ಹ ಒಬ್ಬರು ಪ್ರಶಸ್ತಿ ಪಡೆಯುವುದನ್ನು ನೋಡುವುದು ನನಗೆ ಸಂತೋಷವನ್ನು ನೀಡುತ್ತದೆ. ಜನರನ್ನು ರಂಜಿಸುವ ನನ್ನ ಸಿನಿಮಾದ ಕೆಲಸ ಯಾವಾಗಲೂ ಪ್ರಶಸ್ತಿಗಳ ನಿರೀಕ್ಷೆಯಿಲ್ಲದೆ ಸಾಗುತ್ತಾ ಬಂದಿದೆ. ಮತ್ತು ತೀರ್ಪುಗಾರರ ಈ ಪ್ರಶಂಸೆಯು ತನ್ನನ್ನು ಸಿನಿಮಾದಲ್ಲಿ ಇನ್ನಷ್ಟು ಶ್ರೇಷ್ಠವಾಗಿಸಿಕೊಳ್ಳಲು ಶ್ರಮಿಸುವುದನ್ನು ಮುಂದುವರೆಸಲು ಗಮನಾರ್ಹ ಉತ್ತೇಜನ ನೀಡುತ್ತದೆ.

ಇದನ್ನೂ ಓದಿ: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ, ದರ್ಶನ್‌ ಸಿನಿಮಾಗೂ ಅವಾರ್ಡ್!

Scroll to load tweet…

2019ನೇ ಸಾಲಿನ ವಾರ್ಷಿಕ ಚಲಚಿತ್ರ ಪ್ರಶಸ್ತಿಯ ಅತ್ಯುತ್ತಮ ನಟ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ಪ್ರತಿಯೊಬ್ಬ ತೀರ್ಪುಗಾರರ ಸದಸ್ಯರಿಗೂ ನಾನು ಕೃತಜ್ಞನಾಗಿದ್ದೇನೆ. ಏಕೆಂದರೆ ಈ ಮನ್ನಣೆಯು ಸ್ವತಃ ನನ್ನ ಪ್ರತಿಫಲವಾಗಿದೆ. ನನ್ನ ನಿರ್ಧಾರದಿಂದ ತೀರ್ಪುಗಾರರು ಮತ್ತು ರಾಜ್ಯ ಸರ್ಕಾರಕ್ಕೆ ನೋವುಂಟಾಗುವುದಾದರೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ತೀರ್ಮಾನವನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ಸಾಗಲು ನನ್ನನ್ನು ಬೆಂಬಲಿಸುತ್ತೀರಿ ಎಂದು ನಂಬುತ್ತಿದ್ದೇನೆ.

ಇದನ್ನೂ ಓದಿ: ಭಾರತದ ಹಾಲಿ ಟಾಪ್-10 ಹೀರೋಗಳ ಪಟ್ಟಿ ಬಿಡುಗಡೆ; ಕನ್ನಡದ ಯಶ್, ರಿಷಭ್, ಸುದೀಪ್‌ಗೆ ಸ್ಥಾನವಿದೆಯೇ?

ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದು ಕಿಚ್ಚ ಸುದೀಪ ಅವರು ಬರೆದುಕೊಂಡಿದ್ದಾರೆ.