ಅಭಿಮಾನಿಗಳ ಮಾತಿಗೆ ಕಿವಿಗೊಡಬೇಡಿ; ಜನತೆಗೆ ದರ್ಶನ್ ಮನವಿ
ಮಂಡ್ಯದಲ್ಲಿ ಜೋರಾಗಿದೆ ಸುಮಲತಾ-ನಿಖಿಲ್ ಕುಮಾರಸ್ವಾಮಿ ಪರ-ವಿರೋಧ ವಾಕ್ಸಮರ | ಅಭಿಮಾನಿಗಳ ಮಾತಿಗೆ ತಲೆಕೆಡಿಸಿಕೊಳ್ಳಬೇಡಿ; ದರ್ಶನ್ ಮನವಿ
ಬೆಂಗಳೂರು (ಮಾ. 27): ಮಂಡ್ಯ ಲೋಕಸಭಾ ಅಖಾಡದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾಗೆ ಯಶ್, ದರ್ಶನ್ ಬೆಂಬಲ ನೀಡುತ್ತಿರುವುದಕ್ಕೆ ದರ್ಶನ್, ಯಶ್ ಫ್ಯಾನ್ಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಟೀಕೆ, ಪ್ರತಿಟೀಕೆಗಳು ನಡೆಯುತ್ತಿವೆ. ಇದು ಇಷ್ಟಕ್ಕೆ ಸೀಮಿತವಾಗಿದ್ದರೆ ಸುಮ್ಮನಾಗಬಹುದಿತ್ತು. ಆದರೆ ಇದು ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದು ಬೇಸರದ ಸಂಗತಿ.
ಯಶ್, ದರ್ಶನ್ ಜೋಡೆತ್ತುಗಳಲ್ಲ ಕಳ್ಳೆತ್ತುಗಳು ಎಂದು ಕಾಮೆಂಟ್ ಮಾಡಿದ್ದು ಯಶ್, ದರ್ಶನ್ ಅಭಿಮಾನಿಗಳನ್ನು ಕೆರಳಿಸಿದೆ. ಸಿಎಂ ಮೇಲೆ ಟ್ರೋಲ್ ಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ದರ್ಶನ್ ಟ್ವೀಟ್ ಮಾಡಿ ಜನರಿಗೆ ಮನವಿ ಮಾಡಿದ್ದಾರೆ.
Con: ವಿಡಿಯೋ ಗಳಾಗಲಿ ಮಾಡುವ ಗೋಜಿಗೆ ಹೋಗಬೇಡಿ. ಅವೆಲ್ಲದಕ್ಕೂ ಕಿವಿ ಕೊಡದೆ ಶಾಂತಿ ಕಾಪಾಡಿಕೊಂಡು ಆರಾಮಾಗಿರಬೇಕಾಗಿ ನಿಮ್ಮ ನಲ್ಮೆಯ ದಾಸನ ಕಳಕಳಿಯ ವಿನಂತಿ pic.twitter.com/aZKMMtLKH3
— Darshan Thoogudeepa (@dasadarshan) March 27, 2019
" ಚುನಾವಣೆ ಸಂದರ್ಭದಲ್ಲಿ ಇವೆಲ್ಲಾ ಮಾಮೂಲು. ನಾನು ಇದಕ್ಕೆಲ್ಲಾ ಬೇಸರ ಮಾಡಿಕೊಳ್ಳುವುದಿಲ್ಲ. ನನ್ನ ಅಭಿಮಾನಿಗಳು ಸಹ ಏನೇ ಹೇಳಿದ್ರು ಅದರ ವಿರುದ್ಧ ಪೋಸ್ಟ್ ಮಾಡುವುದಾಗಲಿ, ವಿಡಿಯೋ ಮಾಡುವುದಾಗಲಿ ಮಾಡಬೇಡಿ. ಶಾಂತಿ ಕಾಪಾಡೋಣ‘ ಎಂದು ಜನತೆಯನ್ನು ಮನವಿ ಮಾಡಿದ್ದಾರೆ.