‘ಶಿವಾಜಿ ಸುರತ್ಕಲ್ 2’ಗೆ ಹಿರಿಯ ದಕ್ಷಿಣ ಭಾರತೀಯ ನಟ ಎಂ ನಾಸರ್ ಅವರ ಎಂಟ್ರಿಯಾಗಿದೆ. ಅವರು ಈ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆ, ನಿವೃತ್ತ ಐಜಿ ವಿಜಯೇಂದ್ರ ಸುರತ್ಕಲ್ ಪಾತ್ರ ನಿರ್ವಹಿಸಲಿದ್ದಾರೆ.
‘ಶಿವಾಜಿ ಸುರತ್ಕಲ್ 2’ಗೆ (Shivaji Surathkal 2) ಹಿರಿಯ ದಕ್ಷಿಣ ಭಾರತೀಯ ನಟ ಎಂ ನಾಸರ್ (Nasser M) ಅವರ ಎಂಟ್ರಿಯಾಗಿದೆ. ಅವರು ಈ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆ, ನಿವೃತ್ತ ಐಜಿ ವಿಜಯೇಂದ್ರ ಸುರತ್ಕಲ್ ಪಾತ್ರ ನಿರ್ವಹಿಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ (Akash Srivatsa), ‘ರಮೇಶ್ ಅರವಿಂದ್ ಹಾಗೂ ನಾಸರ್ ಇಬ್ಬರೂ ಹಿರಿಯ ನಿರ್ದೇಶಕ ಕೆ ಬಾಲಚಂದರ್ (K.Balachander) ಗರಡಿಯಲ್ಲಿ ಬೆಳೆದವರು. ಕಳೆದ 25 ವರ್ಷಗಳಿಂದ ಸ್ನೇಹಿತರು. ಅವರಿಬ್ಬರೂ ಮೊದಲ ಬಾರಿ ಈ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದಾರೆ.
ನಾಸರ್ ಅವರ ಪಾತ್ರ ‘ಶಿವಾಜಿ ಸುರತ್ಕಲ್ 1’ನಲ್ಲಿ ಇರಲಿಲ್ಲ. ಜೊತೆಗೆ ಅಲ್ಲಿ ಗಂಡ ಹೆಂಡತಿಯ ಸಮಸ್ಯೆ ಮುಖ್ಯವಾಗಿತ್ತು. ಆದರೆ ಇಲ್ಲಿ ಪರಸ್ಪರ ಮಾತು ಬಿಟ್ಟಿರುವ ತಂದೆ ಮಗನ ವಿಚಾರ ಮುಖ್ಯವಾಗಲಿದೆ. ಈ ಭಾಗದ ಕಥೆ ನೈಜ ಜೀವನಕ್ಕೆ ಹತ್ತಿರವಾಗಿದೆ. ಮೂರು ಲುಕ್ಗಳಲ್ಲಿ ನಾಸರ್ ಅವರು ಕಾಣಿಸಿಕೊಳ್ಳಲಿದ್ದಾರೆ’ ಎಂದಿದ್ದಾರೆ. ಈಗಾಗಲೇ ಚಿತ್ರ 10 ದಿನಗಳ ಶೂಟಿಂಗ್ ಮುಗಿಸಿದ್ದು ಇನ್ನೂ ನಲವತ್ತು ದಿನಗಳ ಚಿತ್ರೀಕರಣ ಬಾಕಿ ಇದೆ.
ಶಿವಾಜಿ ಸುರತ್ಕಲ್ ಭಾಗ 3 ಕೂಡ ಬರಬಹುದು: ಆಕಾಶ್ ಶ್ರೀವತ್ಸ
'ಶಿವಾಜಿ ಸುರತ್ಕಲ್ 2' ಚಿತ್ರದಲ್ಲೂ ರಮೇಶ್ ಅರವಿಂದ್ ಅವರೊಂದಿಗೆ ರಾಧಿಕಾ ನಾರಾಯಣ್ (Radhika Narayan), ರಾಘು ರಾಮನಕೊಪ್ಪ, ವಿದ್ಯಾಮೂರ್ತಿ ಸೇರಿದಂತೆ ಮೊದಲ ಪಾರ್ಟ್ನಲ್ಲಿ ಇದ್ದ ಕಲಾವಿದರೇ ಈ ಚಿತ್ರತಂಡದಲ್ಲಿದೆ. ಡಿಸಿಪಿ ದೀಪಾ ಕಾಮತ್ ಎಂಬ ಪಾತ್ರವನ್ನು ಮೇಘನಾ ಗಾಂವ್ಕರ್ (Meghana Gaonkar) ನಿಭಾಯಿಸಲಿದ್ದು, ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ ಡಿಸಿಪಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಹಾಗೂ 'ಮಗಳು ಜಾನಕಿ' ಧಾರಾವಾಹಿ ನಟ ರಾಕೇಶ್ ಮಯ್ಯ (Rakesh Mayya) ಟ್ರೇನಿಂಗ್ ಮುಗಿಸಿ ಕೆಲಸಕ್ಕೆ ಸೇರಿರುವ ಪೋಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕೆ ಹಲವು ಶೇಡ್ಗಳಿದ್ದು ಚಿತ್ರದುದ್ದಕ್ಕೂ ಪ್ರಾಮುಖ್ಯತೆ ವಹಿಸುವ ಪಾತ್ರವಾಗಿದೆ.
ಈ ಚಿತ್ರದಲ್ಲಿ ರಫ್ ಅ್ಯಂಡ್ ಟಫ್ ಪೋಲೀಸ್ ಅಧಿಕಾರಿ ಪಾತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ವಿನಾಯಕ ಜೋಷಿ (Vinayak Joshi) ಅವರು ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಇವರ ಪಾತ್ರ ಚಿತ್ರದ ಕಥೆಗೆ ಮಹತ್ವದ ತಿರುವು ನೀಡುತ್ತದೆಯಂತೆ. ನಕುಲ್ ಭಯಂಕರ್ (Nakul Bhayankar) ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಈ ಹಿಂದೆ 'ಕನ್ನಡ್ ಗೊತ್ತಿಲ್ಲ' , 'ಲವ್ ಮಾಕ್ಟೇಲ್ 2' ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. 'ಶಿವಾಜಿ ಸುರತ್ಕಲ್ 2' ಚಿತ್ರದ ಚಿತ್ರೀಕರಣ ಡಿಸೆಂಬರ್ ತಿಂಗಳಲ್ಲಿ ಶುರುವಾಗಲಿದ್ದು, ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. 'ಶಿವಾಜಿ ಸುರತ್ಕಲ್ 2' ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ.
Ramesh Aravind: ಸರಳವಾಗಿ ನಡೆದ 'ಶಿವಾಜಿ ಸುರತ್ಕಲ್ 2' ಚಿತ್ರದ ಮುಹೂರ್ತ
ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕಾಶ್ ಶ್ರಿವತ್ಸ (Akash Srivatsa) ಅವರು ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆ.ಎನ್. ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. 'ಶಿವಾಜಿ ಸುರತ್ಕಲ್' ಮೊದಲ ಪಾರ್ಟ್ಗೆ 'ದಿ ಕೇಸ್ ಆಫ್ ರಣಗಿರಿ ರಹಸ್ಯ' (The Case of Ranagiri Rahasya) ಎಂಬ ಟ್ಯಾಗ್ಲೈನ್ ಇತ್ತು. ಈಗ ಎರಡನೇ ಪಾರ್ಟ್ಗೆ 'ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ' (The Mysterious Case of Mayavi) ಎಂಬ ಟ್ಯಾಗ್ಲೈನ್ ಇದೆ. ಹಲವು ಗೆಟಪ್ಗಳಲ್ಲಿ ರಮೇಶ್ ಅರವಿಂದ್ ಕಾಣಿಸಿಕೊಳ್ಳಲಿದ್ದಾರೆ.
