‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮದಲ್ಲಿದೆ. ಇನ್ನೊಂದೆಡೆ ಚಿತ್ರದ ಗೆಲುವಿನ ಓಟ ಮುಂದುವರಿದಿದೆ. ಈ ಖುಷಿಗೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿನ ಪ್ರಸನ್ನ ಥಿಯೇಟರ್‌ನಲ್ಲಿ ಸಂಭ್ರಮಾಚಾರಣೆ ನಡೆಸಿತು. 

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮದಲ್ಲಿದೆ. ಇನ್ನೊಂದೆಡೆ ಚಿತ್ರದ ಗೆಲುವಿನ ಓಟ ಮುಂದುವರಿದಿದೆ. ಈ ಖುಷಿಗೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿನ ಪ್ರಸನ್ನ ಥಿಯೇಟರ್‌ನಲ್ಲಿ ಸಂಭ್ರಮಾಚಾರಣೆ ನಡೆಸಿತು. ಈ ವೇಳೆ ಮಾತನಾಡಿದ ನಟ ಗಣೇಶ್‌, ‘ಸಿನಿಮಾದ ಯಶಸ್ಸಿನ ಸಿಂಹಪಾಲು ನಿರ್ದೇಶಕ ಶ್ರೀನಿವಾಸರಾಜು ಅವರಿಗೆ ಸೇರಬೇಕು’ ಎನ್ನುತ್ತಾ ತಾನು ತೊಟ್ಟ ಜಾಕೆಟ್‌ನ ಕಥೆ ಹೇಳಿದರು. 

Add Asianetnews Kannada as a Preferred SourcegooglePreferred

‘ಇತ್ತೀಚೆಗೆ ಈ ಚಿತ್ರದ ವಿಶೇಷ ಪ್ರದರ್ಶನಕ್ಕಾಗಿ ದುಬೈಗೆ ಹೋಗಿದ್ದೆವು. ಆ ವೇಳೆ ಶಾಪಿಂಗ್‌ ನಲ್ಲಿ ಒಂದು ಜಾಕೆಟ್ ಕಣ್ಣಿಗೆ ಬಿತ್ತು. ಅದರ ಮೇಲೆ ಜಿಎಫ್‌ ಎಂದು ಬರೆದಿತ್ತು. ಕೂಡಲೇ ಜೊತೆಗಿದ್ದ ರಂಗಾಯಣ ರಘು ಈ ಜಾಕೆಟ್ ತೆಗೆದಿಟ್ಟುಕೋ ಅಂದರು. ಯಾಕೆ ಅಂದರೆ, ಜಿಎಫ್‌ ಅಂದರೆ ಗೋಲ್ಡನ್ ಫ್ಯಾನ್ಸ್. ನಮ್ಮ ಸಿನಿಮಾದ 25ನೇ ದಿನದ ಸೆಲೆಬ್ರೇಶನ್‌ಗೆ ಈ ಜಾಕೆಟ್ ತೊಟ್ಟುಕೊಂಡು ಬರಬೇಕು. ಗೆಲುವನ್ನು ಅಭಿಮಾನಿಗಳಿಗೆ ಅರ್ಪಿಸಬೇಕು ಎಂದುಬಿಟ್ಟರು. ಹಾಗೆ ಈ ಜಾಕೆಟ್‌ ತೊಟ್ಟು ಬಂದಿದ್ದೇನೆ’ ಎಂದರು.

ನಿರ್ದೇಶಕ ಶ್ರೀನಿವಾಸ ರಾಜು, ‘ನನ್ನ ಸಿನಿಮಾ ಗೆಲುವಿಗೆ ಮೂರು ಮುಖ್ಯ ಪಿಲ್ಲರ್‌ಗಳು ಕಾರಣ. ಮೊದಲನೆಯದು ಚಿತ್ರರಸಿಕರು ಹಾಗೂ ಮಾಧ್ಯಮದವರು, ಎರಡನೆಯದು ನಾಯಕ ಗಣೇಶ್ ಹಾಗೂ ಮೂರನೆಯದು ಚಿತ್ರಕ್ಕೆ ಆರು ಹಿಟ್ ಹಾಡುಗಳನ್ನು ಕೊಟ್ಟ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ. ಈ ಗೆಲುವನ್ನು ನನ್ನ ಇಡೀ ತಂಡಕ್ಕೆ ಅರ್ಪಿಸುತ್ತೇನೆ’ ಎಂದರು.

ಗಣೇಶ್ ವಿತ್ ಅಜಿತ್: ಕೃಷ್ಣಂ ಪ್ರಣಯ ಸಖಿ ಸಕ್ಸಸ್‌ನಲ್ಲಿ ಗೋಲ್ಡನ್ ಸ್ಟಾರ್‌

ನನ್ನ ಅಭಿಮಾನಿಗಳು ಚಿನ್ನದ ಮನುಷ್ಯರು: ಅಭಿಮಾನಿಗಳು ನನಗೆ ಗೋಲ್ಡನ್‌ ಸ್ಟಾರ್‌ ಪಟ್ಟ ಕೊಟ್ಟಿದ್ದಾರೆ. ಆ 14ರಂದು 21 ಪೇಯ್ಡ್‌ ಪ್ರೀಮಿಯರ್‌ ಶೋಗಳು ಹೌಸ್‌ ಫುಲ್‌ ಆಗಿದ್ದು ನೋಡಿದರೆ ನಿಜವಾದ ಗೋಲ್ಡನ್‌ ಹೀರೋಗಳು ನನ್ನ ಅಭಿಮಾನಿಗಳು. ನಿರ್ಮಾಪಕರನ್ನು ಅನ್ನದಾತರು ಎಂದು ಡಾ ರಾಜ್‌ಕುಮಾರ್‌ ಕರೆದಂತೆ ನಾನು ನನ್ನ ಅಭಿಮಾನಿಗಳನ್ನು ಇನ್ನು ಮುಂದೆ ‘ಚಿನ್ನದ ಅಭಿಮಾನಿಗಳು’ ಅಂತ ಕರೆಯುತ್ತೇನೆ ಎಂದು ಘೋಷಿಸುತ್ತಿದ್ದೇನೆ.