'ಬಂಗಾರದ ಮನುಷ್ಯ' ಉದ್ಯಾನ ಉದ್ಘಾಟಿಸಿದ ದುನಿಯಾ ವಿಜಯ್; ಅಣ್ಣಾವ್ರ ಪುತ್ಥಳಿ ಹೇಗಿದೆ ನೋಡಿ
ಚಿತ್ರದುರ್ಗದ ಹಿರಿಯೂರಿನಲ್ಲಿ 'ಬಂಗಾರದ ಮನುಷ್ಯ' ಉದ್ಯಾನ ಉದ್ಘಾಟನೆ ಮಾಡಿದ ದುನಿಯಾ ವಿಜಯ್...
ನಟ ದುನಿಯಾ ವಿಜಯ್ ಚಿತ್ರದುರ್ಗದ ಹಿರಿಯೂರಿನಲ್ಲಿ ಉದ್ಯಾನವನ್ನು ಉದ್ಘಾಟಿಸಿದ್ದಾರೆ. ಎಪಿಎಂಸಿ ಅವರಣದ ಮುಖ್ಯದ್ವಾರದಲ್ಲಿರುವ ಪುತ್ಥಳಿಗೆ 'ಬಂಗಾರದ ಮನುಷ್ಯ' ಉದ್ಯಾನವೆಂದು ನಾಮಕರಣ ಮಾಡಲಾಗಿದೆ.
ಜೊಮ್ಯಾಟೋ ಬಾಯ್ ಕಾಮರಾಜ್ ಪರ ನಿಂತ ದುನಿಯಾ ವಿಜಯ್; ಅನ್ಯಾಯ ಆಗಬಾರದು!
ಡಾ.ರಾಜ್ಕುಮಾರ್ರನ್ನು ಹೋಲುವ ಬಂಡಿ ಓಡಿಸುತ್ತಿರುವ ರೈತ ಪುತ್ಥಳಿಯೊಂದು ಸುಮಾರು ವರ್ಷಗಳಿಂದ ಇತ್ತು. ಅದರ ಜೊತೆಗೆ ನಾಯಿ, ಹಾಲು ಕುಡಿಯುತ್ತಿರುವ ಹಸುವಿನ ಪುತ್ಥಳಿಯೂ ಇತ್ತು. ಬಿಸಿಲು, ಗಾಳಿ ಮಳೆಯಿಂದ ಪುತ್ಥಳಿ ಬೀಳುವ ಹಂತಕ್ಕೆ ಬಂದಿತ್ತು. ಡಾ.ರಾಜ್ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಪ್ರಸನ್ನ ಪ್ರತಿಮೆಗೆ ಹೊಸ ರೂಪ ನೀಡುವ ಮೂಲಕ ರಾಜಣ್ಣನಿಗೆ ಗೌರವ ಸಲ್ಲಿಸಿದ್ದಾರೆ.
'ಈ ಪುತ್ಥಳಿಗೆ ಮೂಲ ರೂಪ ಕೊಡಿಸಿರುವ ಪ್ರತನ್ನ ಅವರು ಡಾ.ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ರೈತರ ಬದುಕು ಬಾಡದಂತೆ ನೋಡಿಕೊಳ್ಳಬೇಕೆಂಬ ಸಂದೇಶವನ್ನೂ ಈ ಮೂಲಕ ಸಾರಿದ್ದಾರೆ,' ಎಂದು ದುನಿಯಾ ವಿಜಯ್ ಮಾತನಾಡಿದ್ದಾರೆ. ಪುತ್ಥಳಿಗೆ ಹೊಸ ರೂಪ ತಂದು ಕೊಟ್ಟ ಕಲಾವಿದ ಸಂಗಮೇಶ್ ಇಂಥ ಜನಪರ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ದುನಿಯಾ ವಿಜಯ್ ಹೇಳಿದ್ದಾರೆ.