ಸ್ಯಾಂಡಲ್‌ವುಡ್‌ ನಟ ಉಪೇಂದ್ರ ಅವರು ಖಾಸಗಿ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದೆ. ಅಂಬೇಡ್ಕರ್‌ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ಅಂಬೇಡ್ಕರ್‌ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಅವರ ಹೇಳಿಕೆಯನ್ನು ಖಂಡಿಸಿದ್ದೂ ಅಲ್ಲದೇ, ಪ್ರಜಾಕೀಯ ಪಕ್ಷವನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಉಪೇಂದ್ರ ಕ್ಷಮೆ ಯಾಚಿಸುವ ಮೂಲಕ ಪ್ರಕರಣವನ್ನು ತಿಳಿಗೊಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ನಟ ಉಪೇಂದ್ರ : ತರಕಾರಿ ಖರೀದಿಸಿ ಉಚಿತ ಹಂಚಿಕೆ 

ಯೂಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉಪೇಂದ್ರ, ‘ಯಾರೋ ಒಬ್ರು ಒಬ್ಬ ರಾಂಗ್‌ ಆಗಿ ಹೇಳಿದ್ದಾರೆ. ಹಿಸ್ಟರಿ ಗೊತ್ತಿಲ್ಲದವರು ಹಿಸ್ಟರಿ ಕ್ರಿಯೇಟ್‌ ಮಾಡಕ್ಕಾಗಲ್ಲ ಅಂತ. ಹಿಸ್ಟರಿ ಗೊತ್ತಿರಬೇಕಾಗಿಲ್ಲ. ಅದೇ ಕ್ರಿಯೇಟ್‌ ಆಗುತ್ತೆ. ನಾವು ಕ್ರಿಯೇಟ್‌ ಮಾಡೋದಲ್ಲ ಹಿಸ್ಟರೀನ. ಇತಿಹಾಸ ನಿರ್ಮಾಣ ಆಗುವ ಸತ್ಯ ಅಲ್ಲಿದ್ದರೆ ಅದಾಗುತ್ತೆ’ ಅಂದಿದ್ದರು.

"

ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲಿಕ್ಕೆ ಆಗುವುದಿಲ್ಲ ಎಂಬ ಹೇಳಿಕೆ ಅಂಬೇಡ್ಕರ್‌ ಅವರದ್ದು. ಅದನ್ನು ಖಂಡಿಸುವ ಮೂಲಕ ಉಪೇಂದ್ರ, ಆ ವಿಚಾರಧಾರೆಗೆ ಅಪಚಾರ ಎಸಗಿದ್ದಾರೆ ಎಂದು ಅಂಬೇಡ್ಕರ್‌ ಅಭಿಮಾನಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಿಗೇ, ‘ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂಬ ವಿಚಾರ ಡಾ. ಅಂಬೇಡ್ಕರ್‌ ಅವರದ್ದು ಅಂತ ತಿಳಿದಿರಲಿಲ್ಲ. ಯಾರೋ ಇಂಗ್ಲೀಷ್‌ನವರ ಬರಹ ಎಂದು ತಿಳಿದು ತಪ್ಪು ಮಾತನಾಡಿದ್ದೆ. ದಯವಿಟ್ಟು ಕ್ಷಮಿಸಿ’ ಎಂದು ಉಪೇಂದ್ರ ತಮ್ಮ ಟ್ವೀಟರ್‌ ಮೂಲಕ ಕ್ಷಮೆ ಯಾಚಿಸಿದ್ದಾರೆ.

Scroll to load tweet…