Asianet Suvarna News Asianet Suvarna News

ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ವಸಿಷ್ಠ ಸಿಂಹ!

ರಕ್ತದಾನ ಮಾಡಿ ಜೀವ ಉಳಿಸಿ, ಎಂದು ಹೇಳುವ ಮೂಲಕ ನಟ ವಸಿಷ್ಠ ಸಿಂಹ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ. 

Kannada actor Vasishta Simha urges youngsters to donate blood vcs
Author
Bangalore, First Published May 10, 2021, 11:08 AM IST

ಕೊರೋನಾ ಲಸಿಕೆ ಹಾಕಿಸಿ ಕೊಳ್ಳುವ ಮುನ್ನ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಬಹು ದಿನಗಳಿಂದ ಪ್ರಜ್ಞಾವಂತರು ಹೇಳುತ್ತಿದ್ದಾರೆ. ನಟ ವಸಿಷ್ಠ ಸಿಂಹ ಈ ಮಾತನ್ನು ನಿಜ ಮಾಡಿದ್ದಾರೆ. ಕೊರೋನಾ ವ್ಯಾಕ್ಸಿನ್ ಪಡೆಯುವ ಮುನ್ನ ರಕ್ತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ರಾಜ್ಯದಲ್ಲಿ ಕಡಿಮೆಯಾದ ಬ್ಲಡ್‌ ಡೊನೆಟ್‌: 'ಕೋವಿಡ್ ಲಸಿಕೆಗೂ ಮುನ್ನ ರಕ್ತದಾನ ಮಾಡಿ ಜೀವ ಉಳಿಸಿ' 

ಕೊರೋನಾ ಲಸಿಕೆ ಪಡೆದು ತಿಂಗಳ ಕಾಲ ರಕ್ತದಾನ ಮಾಡವಂತಿಲ್ಲ. ಆ ಕಾರಣ ಕೊರೋನಾ ರೋಗಿಗಳಿಗೆ ರಕ್ತದ ಅಭಾವ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಸಿಷ್ಠ ಸಿಂಹ ಹಾಗೂ ಕೆಪಿಟಿಸಿಎಲ್ ನೌಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಟಿ ಆರ್ ರಾಮು ಕೃಷ್ಣಯ್ಯ ರಕ್ತದಾನ ಶಬಿರ ಅಯೋಜಿಸಿದ್ದರು.

ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಕಿರುತೆರೆ ನಟಿ ಯಮುನಾ ಶ್ರೀನಿಧಿ! 

ಮೇ.9 ನಡೆದ ರಕ್ತದಾನ ಶಬಿರದಲ್ಲಿ ಅನೇಕರು ಭಾಗಿಯಾಗಿದ್ದರು. 18 ವರ್ಷದ ಮೇಲ್ಪಟ್ಟವರು ರಕ್ತದಾನ ಮಾಡುವಂತೆ ವಸಿಷ್ಠ ಜಾಗೃತಿ ಮೂಡಿಸಿದ್ದಾರೆ.  ಕೆಲವು ದಿನಗಳ ಹಿಂದೆ ಕಿರುತೆರೆ ನಟಿ ಯಮುನಾ ಶ್ರೀನಿಧಿ ತಮ್ಮ ಹುಟ್ಟುಹಬ್ಬದ ದಿನ ರಕ್ತದಾನ ಮಾಡಿದ್ದರು. ಈ ಸಮಯದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ವೈದ್ಯರ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು.

 

 
 
 
 
 
 
 
 
 
 
 
 
 
 
 

A post shared by Vasishta N Simha (@imsimhaa)

Follow Us:
Download App:
  • android
  • ios