Asianet Suvarna News Asianet Suvarna News

KGF Yash: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ನಟ ಯಶ್ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ್ದಾರೆ. ಜೊತೆಗೆ ನಿರ್ಮಾಪಕ ವಿಜಯ್ ಕಿರಂಗದೂರು ಸಹ ಶ್ರೀಕೃಷ್ಣನ ದರ್ಶನವನ್ನು ಪಡೆದಿದ್ದಾರೆ.

Kannada Actor Yash Visited Udupi Sri Krishna Mutt gvd
Author
Bangalore, First Published Feb 6, 2022, 1:08 PM IST

ಉಡುಪಿ (ಫೆ.06): 'ಕೆಜಿಎಫ್​ 2' (KGF 2) ಬಹುನಿರೀಕ್ಷಿತ ಪ್ಯಾನ್​ ಇಂಡಿಯಾ ಸಿನಿಮಾ. ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿದ್ದು ಉಳಿದಿರುವ ಎಡಿಟಿಂಗ್​ ಸಲುವಾಗಿ ಕೆಲವು ದಿನಗಳಿಂದ ಕುಂದಾಪುರದಲ್ಲಿರುವ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basruru) ಅವರ ಮನೆಯಲ್ಲಿ ಇಡೀ ಚಿತ್ರತಂಡ ಬೀಡುಬಿಟ್ಟಿದೆ. ಈ ಮಧ್ಯೆ ಯಶ್ (Yash) ದೇಗುಲ ದರ್ಶನ ಮಾಡುತ್ತಿದ್ದು, ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ (Sri Krishna Mutt) ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ್ದಾರೆ. ನಟ ಯಶ್ ಜೊತೆಗೆ ನಿರ್ಮಾಪಕ ವಿಜಯ್ ಕಿರಂಗದೂರು (Vijay Kiragandur) ಸಹ ಶ್ರೀಕೃಷ್ಣನ ದರ್ಶನವನ್ನು ಪಡೆದಿದ್ದಾರೆ. 

ಬಳಿಕ ಕೊಲ್ಲೂರು ಕುಂಬಾಶಿ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದೇಗುಲದಲ್ಲಿ ರಾಕಿ ಭಾಯ್​ ಜೊತೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಹಾಗಾಗಿ ಅಭಿಮಾನಿಗಳ (Fans) ಸೆಲ್ಫಿಗೆ (Selfie) ಯಶ್ ಅವಕಾಶ ಮಾಡಿಕೊಟ್ಟರು. ಈ ಹಿಂದೆ ಕೊಲ್ಲೂರು, ಅನೆಗುಡ್ಡೆ ದೇವಾಲಯಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಜೊತೆ ಯಶ್ ಭೇಟಿ ನೀಡಿದ್ದರು. ಶುಕ್ರವಾರದಂದು ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿತ್ತು. ತಮ್ಮ ನೆಚ್ಚಿನ ನಟ ರಾಕಿಂಗ್​ ಸ್ಟಾರ್​ ಯಶ್​ ಅವರನ್ನು ಭೇಟಿ ಮಾಡಬೇಕೆಂದು ಸೆಲ್ಫಿ ತೆಗೆದುಕೊಳ್ಳಬೇಕು ಎಂದು ಫ್ಯಾನ್ಸ್​ ಮುಗಿಬಿದ್ದಿದ್ದರು.

KGF Yash: 'ಕೆಜಿಎಫ್‌ 2' ಚಿತ್ರದ ಡಬ್ಬಿಂಗ್‌ ಮುಗಿಸಿದ ಶ್ರೀನಿಧಿ ಶೆಟ್ಟಿ

ಅಭಿಮಾನಿಗಳಿಗೆ ಬೇಸರವಾಗಬಾರದು ಎಂಬ ಕಾರಣಕ್ಕೆ ಸರತಿಸಾಲಿನಲ್ಲಿ ಬಂದವರಿಗೆ ರಾಕಿ ಭಾಯ್​ ಜೊತೆ ಸೆಲ್ಫಿಗೆ ಅವಕಾಶ ಮಾಡಿಕೊಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಸಖತ್ ವೈರಲ್ (Viral) ಆಗಿತ್ತು. ಇತ್ತೀಚೆಗಷ್ಟೇ 'ಕೆಜಿಎಫ್ 2' ಚಿತ್ರದ ಡಬ್ಬಿಂಗ್ ಮುಗಿಸಿದ್ದೇನೆ ಎಂದು ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ (SriNidhi Shetty) ಸೋಷಿಯಲ್‌ ಮೀಡಿಯಾದಲ್ಲಿ ತಿಳಿಸಿದ್ದರು. ಜೊತೆಗೆ ‘ಈ ಚಿತ್ರಕ್ಕೆ ಹೃದಯಪೂರ್ವಕವಾಗಿ ಕೆಲಸ ಮಾಡಿದ್ದೇನೆ’ ಎಂದು ಬರೆದುಕೊಂಡು ಡಬ್ಬಿಂಗ್ (Dubbing) ಮಾಡುತ್ತಿರುವ ಪೋಟೋಗಳನ್ನು ಹಂಚಿಕೊಂಡಿದ್ದರು. 

Kannada Actor Yash Visited Udupi Sri Krishna Mutt gvd

ಯಶ್​ ಅವರ ಹುಟ್ಟುಹಬ್ಬಕ್ಕೆ 'ಕೆಜಿಎಫ್ 2' ಚಿತ್ರದ ಹೊಸ ಪೋಸ್ಟರ್​ವೊಂದು ರಿಲೀಸ್​ ಆಗಿತ್ತು. 'ಡೇಂಜರ್​ ಆಹೆಡ್' ಎಂಬ ಬರಹ ಬರೆದು ಪೋಸ್ಟರ್​ ರಿಲೀಸ್​ ಮಾಡಲಾಗಿತ್ತು. ಯಶ್​ 'ಕೆಜಿಎಫ್ 2' ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಇಡೀ ಚಿತ್ರತಂಡ ಇತ್ತೀಚೆಗೆ ಕೊಲ್ಲೂರಿನ ಮೂಕಾಂಬಿಕಾ ದೇವಿಯ ಆಶೀರ್ವಾದ ಪಡೆದು ಬಂದಿದೆ. ಪ್ರಧಾನ ಮಂತ್ರಿ ರಮಿಕಾ ಸೇನ್​ ಆಗಿ ರವೀನಾ ಟಂಡನ್​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರಿಂದ ಸ್ಫೂರ್ತಿ ಪಡೆದಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇದು ಇಂದಿರಾ ಗಾಂಧಿಯಿಂದ ಸ್ಫೂರ್ತಿ ಪಡೆದ ಪಾತ್ರವಲ್ಲ ಎನ್ನುವ ಸ್ಪಷ್ಟನೆ ರವೀನಾ ಕಡೆಯಿಂದ ಬಂದಿದೆ.

"

ಇನ್ನು ರವಿ ಬಸ್ರೂರ್ ಸಂಗಿತ ಸಂಯೋಜನೆ ಚಿತ್ರಕ್ಕಿದ್ದು, ಪ್ರಕಾಶ್ ರಾಜ್ (Prakash Raj), ಬಾಲಿವುಡ್ ನಟ ಸಂಜಯ್ ದತ್ (Sanjay Dutt), ತೆಲುಗು ನಟ ರಾವ್ ರಮೇಶ್ (Rao Ramesh) ಸೇರಿದಂತೆ ದೊಡ್ಡ ತಾರಾಬಳಗ ಚಿತ್ರಕ್ಕಿದೆ. 'ಕೆಜಿಎಫ್ 2'​ ಸಿನಿಮಾ ಏಪ್ರಿಲ್​ 14ಕ್ಕೆ ವಿಶ್ವದಾದ್ಯಾಂತ‌ ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತೆರೆ ಕಾಣಲಿದ್ದು, ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು (Vijay Kiragandur) ನಿರ್ಮಿಸಿದ್ದಾರೆ. ಈ ಹಿಂದೆ 2021ರ ಜುಲೈ 16 ಕ್ಕೆ 'ಕೆಜಿಎಫ್ 2' ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಕೊರೋನಾದಿಂದ ಇದು ಸಾಧ್ಯವಾಗಿರಲಿಲ್ಲ. 
 

Follow Us:
Download App:
  • android
  • ios